ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆದ ಸಿದ್ದರಾಮಯ್ಯ: ಕಾರಣ ಏನು?
ಬೆಂಗಳೂರು: ಮನರೇಗಾ ಯೋಜನೆಯ ಹೆಸರು ಹಾಗೂ ರೂಪುರೇಷೆ ಬದಲಿಸಿ ರೂಪಿಸಿರುವ ವಿಬಿ-ಜಿ ರಾಮ್ಜಿ ಕಾಯಿದೆಯು ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ ಜತೆಗೆ ರಾಜ್ಯ ಸರಕಾರಗಳಿಗೆ ಆರ್ಥಿಕ ಹೊರೆ ಹೆಚ್ಚಿಸಲಿದ್ದು, ಕಾಯಿದೆ ಅನುಷ್ಠಾನವನ್ನು ತಡೆಹಿಡಿಯಬೇಕು ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ
ಚಾಮರಾಜನಗರ: ಯಶಸ್ವಿ ಕಾರ್ಯಚರಣೆ; ನಂಜದೇವನಪುರದಲ್ಲಿ ಗಂಡು ಹುಲಿ ಸೆರೆ
ಚಾಮರಾಜನಗರ: ತಾಲೂಕಿನ ನಂಜೆದೇವನಪುರದಲ್ಲಿ 5 ಹುಲಿಗಳ ಕೂಂಬಿಂಗ್ ನಡೆದಿದ್ದು, ಮಂಗಳವಾರ ಮಧ್ಯರಾತ್ರಿ ಒಂದು ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯಾಧಿಕಾರಿಗಳ ಕೂಂಬಿಂಗ್ ವೇಳೆ ಮಂಗಳವಾರ ರಾತ್ರಿ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ. ನಂಜೆದೇವನಪುರದಲ್ಲಿ 5 ಹುಲಿಗಳ ಓಡಾಟದಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು. ಕಲ್ಪುರದಲ್ಲಿ ಕಳೆದ ತಿಂಗಳು ಕ್ಯಾಮರಾ ಟ್ರ್ಯಾಪ್ ನಲ್ಲಿ ಸೆರೆಯಾಗಿದ್ದ ಇದೇ ಗಂಡು ಹುಲಿಯನ್ನು ಮಂಗಳವಾರ ಮಧ್ಯರಾತ್ರಿ ಕೂಬಿಂಗ್ ನಡೆಸಿದ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಅರಳಿಕೆ ನೀಡಿ ಸೆರೆ ಹಿಡಿದ್ದಾರೆ.
ಡೊನಾಲ್ಡ್ ಟ್ರಂಪ್ಗೆ ಇಸ್ರೇಲ್ ಶಾಂತಿ ಪ್ರಶಸ್ತಿ; ಗೆಳೆಯನ ಆಸೆ ಈಡೇರಿಸಿದ ಬೆಂಜಮಿನ್ ನೆತನ್ಯಾಹು
ಜಾಗತಿಕ ಮಟ್ಟದಲ್ಲಿ ಶಾಂತಿ ಪ್ರಶಸ್ತಿಗಳನ್ನು ಪಡೆಯುವುದೆಂದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಎಲ್ಲಿಲ್ಲದ ಖುಷಿ. 2025ರ ನೊಬೆಲ್ ಶಾಂತಿ ಪ್ರಶಸ್ತಿ ಸಿಗದಿದಕ್ಕೆ ಕೋಪ ಮಾಡಿಕೊಂಡಿದ್ದ ಟ್ರಂಪ್ ಅವರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಮಾಧಾನ ಮಾಡಿದ್ದಾರೆ. ಟ್ರಂಪ್ಗೆ ಇಸ್ರೇಲ್ ಶಾಂತಿ ಪ್ರಶಸ್ತಿ ಘೋಷಿಸಿರುವ ನೆತನ್ಯಾಹು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ಅಮೆರಿಕ ಅಧ್ಯಕ್ಷರ ಪ್ರಯತ್ನಗಳನ್ನು ಗೌರವಿಸಿದ್ದಾರೆ. ಫಿಫಾ ಶಾಂತಿ ಪ್ರಶಸ್ತಿ ಪಡೆದ ಖುಷಿಯಲ್ಲಿದ್ದ ಟ್ರಂಪ್ ಇದೀಗ ಇಸ್ರೇಲ್ ಶಾಂತಿ ಪ್ರಶಸ್ತಿ ಪಡೆದು ಡಬಲ್ ಖುಷಿಯಲ್ಲಿದ್ದಾರೆ.
ಹೊಸ ವರ್ಷದ ಸಂಭ್ರಮಕ್ಕಾಗಿ ದಾವಣಗೆರೆಯಲ್ಲಿ 7 ಸಾವಿರ ಕೆಜಿಗೂ ಅಧಿಕ ಕೇಕ್ಗಳ ತಯಾರಿಕೆ ಮತ್ತು ಮಾರಾಟ ನಿರೀಕ್ಷಿಸಲಾಗಿದೆ. ನಗರದಲ್ಲಿ 5 ಸಾವಿರ ಕೆಜಿ ಕೇಕ್ ತಯಾರಾಗುತ್ತಿದ್ದು, ಆಹಾರ್ 2000, ಕೇಕ್ ವರ್ಲ್ಡ್, ರಾಕಿಂಗ್ಗಳಲ್ಲಿ ವಿಶೇಷ ಕೇಕ್ಗಳು ಲಭ್ಯ. ಈ ಬಾರಿ ರಸ್ತೆ ಕಾಮಗಾರಿಯಿಂದ ಕೇಕ್ ಮಾರಾಟ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಇದರೊಂದಿಗೆ 2 ಲಕ್ಷ ಲೀಟರ್ ಮದ್ಯ ಮಾರಾಟವಾಗುವ ನಿರೀಕ್ಷೆಯಿದೆ, ಆದರೆ ಬೆಲೆ ಏರಿಕೆಯಿಂದ ಮಾರಾಟ ಪ್ರಮಾಣ ನಿರೀಕ್ಷಿತ ಮಟ್ಟದಲ್ಲಿರುವುದಿಲ್ಲ ಎಂದು ಅಂದಾಜಿಸಲಾಗಿದೆ.
ಬೆಂಗಳೂರು, ಡಿ.30: ಸಿದ್ದರಾಮಯ್ಯ ಅವರ ಮೊದಲ ಅವಧಿ ಮತ್ತು ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಬರ ನಿರ್ವಹಣೆಗಾಗಿ ಮಾಡಿದ್ದ 5,791.47 ಕೋಟಿ ರೂ.ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ವಿವರಗಳೂ ಲೆಕ್ಕಪರಿಶೋಧನೆಗೆ ಸಲ್ಲಿಕೆಯಾಗಿಲ್ಲ. ಹಾಗೆಯೇ ಬರ ವೆಚ್ಚದ ಲೆಕ್ಕಪತ್ರಗಳ ಆಂತರಿಕ ಅಥವಾ ಬಾಹ್ಯ ಲೆಕ್ಕ ಪರಿಶೋಧನೆಗೆ ಸಿದ್ದರಾಮಯ್ಯ ಅವರ ಮೊದಲ ಅವಧಿ ಮತ್ತು ಜೆಡಿಎಸ್ ಪಾಲುದಾರಿಕೆಯ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರಕಾರವು ಯಾವುದೇ ವ್ಯವಸ್ಥೆಯನ್ನೇ ಮಾಡಿರಲಿಲ್ಲ. 2025ರ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕ ವಿಪತ್ತು ಕಾರ್ಯನಿರ್ವಹಣೆಗೆ ಸಂಬಂಧಿಸಿ ಸಿಎಜಿಯು ಮಂಡಿಸಿದ್ದ ವರದಿಯಲ್ಲಿ ಬರ ನಿರ್ವಹಣೆಗೆ ಮಾಡಿದ್ದ ಖರ್ಚು ವೆಚ್ಚದ ಅಂಕಿ ಅಂಶಗಳನ್ನೂ ದಾಖಲಿಸಿದೆ. ಈ ವರದಿಯ ಪ್ರತಿಯು he-file.inಗೆ ಲಭ್ಯವಾಗಿದೆ. ಬರಗಾಲದ ವೆಚ್ಚಗಳನ್ನು ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ರಾಜ್ಯ ಸರಕಾರವು ಮಾರ್ಗಸೂಚಿ ಮತ್ತು ಬರಗಾಲ ಕೈಪಿಡಿಯನ್ನೂ ಹೊರಡಿಸಿತ್ತು. ಅಲ್ಲದೇ ಬಳಕೆ ಪ್ರಮಾಣ ಪತ್ರಗಳು, ಆಂತರಿಕ ಮತ್ತು ಬಾಹ್ಯ ಲೆಕ್ಕ ಪರಿಶೋಧನೆ ಹೇಗೆ ಮಾಡಬೇಕು ಎಂದು ಸರಕಾರವು ಆದೇಶಿಸಿತ್ತು. ಈ ಆದೇಶದಂತೆ ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲುದಾರಿಕೆಯ ಸಮ್ಮಿಶ್ರ ಸರಕಾರದಲ್ಲಿ ಬರಗಾಲದ ವೆಚ್ಚಗಳನ್ನು ಲೆಕ್ಕ ಪರಿಶೋಧನೆಯನ್ನೇ ಮಾಡಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ಮೇಲ್ನೋಟಕ್ಕೆ ಕಂಡು ಬಂದಿದೆ. ಬರಗಾಲದ ವೆಚ್ಚಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯು ಸಿಎಜಿಗೆ ನೀಡಿರುವ ಮಾಹಿತಿ ಪ್ರಕಾರ 2017-18ರಿಂದ 2019-20ರವರೆಗೆ ರಾಜ್ಯದಲ್ಲಿ ಬರ ನಿರ್ವಹಣೆಗಾಗಿ 5,791.47 ಕೋಟಿ ರೂ. ವೆಚ್ಚ ಮಾಡಿತ್ತು. ಆದರೆ ಜಿಲ್ಲಾವಾರು ಬಿಡುಗಡೆ ಮಾಡಿದ್ದ ಅಥವಾ ವೆಚ್ಚವನ್ನು ಕಾಯ್ದಿರಿಸಿದ್ದ ವಸ್ತುಗಳ ವಿವರಗಳನ್ನು ಲೆಕ್ಕ ಪರಿಶೋಧನೆಗೆ ಸಲ್ಲಿಸಿಲ್ಲ. ಇದಲ್ಲದೇ ರಾಜ್ಯ ಸರಕಾರ ಮತ್ತು ನೋಡಲ್ ಇಲಾಖೆಯು ಖಾತೆಗಳು ಅಥವಾ ವೆಚ್ಚದ ಘಟನೆವಾರು ಅಂಕಿ ಸಂಖ್ಯೆಗಳ ಮಾಹಿತಿಯನ್ನೂ ನಿರ್ವಹಿಸುವುದಿಲ್ಲ ಎಂದು ಲೆಕ್ಕ ಪರಿಶೋಧನೆಯು ಗಮನಿಸಿದೆ. ಹಾಗೆಯೇ ಪರೀಕ್ಷಾ ತನಿಖೆಗೆ ಒಳಗಾದ ಯಾವುದೇ ಜಿಲ್ಲಾಡಳಿತಗಳು ಅಗತ್ಯವಾದ ಬಳಕೆ ಪ್ರಮಾಣ ಪತ್ರಗಳನ್ನು ಘಟನೆವಾರು ಅಥವಾ ಸ್ವೀಕರಿಸಿದ, ಖರ್ಚು ಮಾಡಿದ ಒಟ್ಟು ಮೊತ್ತಕ್ಕೆ ರಾಜ್ಯ ಸರಕಾರ, ನೋಡಲ್ ಇಲಾಖೆಗೆ ಸಲ್ಲಿಸಿಲ್ಲ. ಬರ ವೆಚ್ಚದ ಲೆಕ್ಕಪತ್ರಗಳ ಆಂತರಿಕ ಅಥವಾ ಬಾಹ್ಯ ಲೆಕ್ಕ ಪರಿಶೋಧನೆಗೆ ರಾಜ್ಯ ಸರಕಾರವು ವ್ಯವಸ್ಥೆಯನ್ನೇ ಮಾಡಲಿಲ್ಲ. ಬರ ಪರಿಹಾರಕ್ಕಾಗಿ ವೆಚ್ಚವನ್ನು ಸಿದ್ಧಪಡಿಸುವಲ್ಲಿ ಮತ್ತು ಮೇಲ್ವಿಚಾರಣೆ ಮಾಡುವಲ್ಲಿ ರಾಜ್ಯ ಸರಕಾರದ ಪ್ರಯತ್ನಗಳು ಅಸಮರ್ಪಕವಾಗಿದ್ದವು. ಹೀಗಾಗಿ ಬರ ನಿರ್ವಹಣೆಯು ಪರಿಣಾಮಕಾರಿಯಾಗಿರಲಿಲ್ಲ ಎಂದು ಸಿಎಜಿಯು ತನ್ನ ವರದಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ. ‘ಹೀಗಾಗಿ ಬರ ನಿರ್ವಹಣೆ, ಬರಗಾಲದಲ್ಲಿ ಮಾಡಿದ್ದ ವೆಚ್ಚಗಳು ಮತ್ತು ಹಣಕಾಸು ವಹಿವಾಟುಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರಕಾರವು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು,’ ಎಂದು ಸಿಎಜಿಯು ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ. 2018ರಲ್ಲಿ ರಾಜ್ಯದ 30 ಜಿಲ್ಲೆಗಳು ತೀವ್ರ ಬರಗಾಲಕ್ಕೆ ತುತ್ತಾಗಿದ್ದವು. ಒಟ್ಟು 28,046.95 ಕೋಟಿ ರೂ.ನಷ್ಟವಾಗಿತ್ತು. ಇದರಲ್ಲಿ ಹಿಂಗಾರು ಋತುವಿನಲ್ಲಿ 11,384.47 ಕೋಟಿ ರೂ., ಮುಂಗಾರು ಹಂಗಾಮು ಬೆಳೆ ನಷ್ಟದ ರೂಪದಲ್ಲಿ 16,662 ಕೋಟಿ ರೂ.ನಷ್ಟು ಅಂದಾಜು ನಷ್ಟವಾಗಿತ್ತು. 2019ರಲ್ಲಿ 49 ತಾಲೂಕುಗಳು ಬರಪೀಡಿತವಾಗಿದ್ದವು. ಆದರೆ ಈ ಅವಧಿಯಲ್ಲಿ ಎಷ್ಟು ಮೊತ್ತ ನಷ್ಟವಾಗಿತ್ತು ಎಂಬ ಬಗ್ಗೆ ಸಿಎಜಿ ವರದಿಯಲ್ಲಿ ವಿವರಗಳಿಲ್ಲ. ರಾಜ್ಯವು ಕಳೆದ 2001ರಿಂದ 2022ರವರೆಗೆ ಒಟ್ಟು 15 ವರ್ಷಗಳ ಕಾಲ ಬರಗಾಲದಿಂದ ಬಾಧಿತವಾಗಿತ್ತು. 2018ರಲ್ಲಿ ತೀವ್ರ ಬರಗಾಲದಿಂದ ಬಾಧಿತವಾಗಿದ್ದರೇ 2019ರಲ್ಲಿ ಬರದ ತೀವ್ರತೆಯು ತುಸು ಕಡಿಮೆಯಾಗಿತ್ತು. ಸಿಎಜಿಯು ಬೆಳಗಾವಿ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ, ಕಲಬುರಗಿ, ಕೊಡಗು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಬರಗಾಲದ ತೀವ್ರತೆ ಕುರಿತು ತನಿಖೆ ನಡೆಸಿತ್ತು. 2018ರಲ್ಲಿ ಮುಂಗಾರು ಹಂಗಾಮಿನಲ್ಲಿ 100 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದರೇ ಹಿಂಗಾರು ಹಂಗಾಮಿನಲ್ಲಿ ಈ ತಾಲೂಕುಗಳ ಸಂಖ್ಯೆಯು 156ಕ್ಕೇರಿತ್ತು. ಹೀಗಾಗಿ ಬರಗಾಲದ ಪರಿಣಾಮವು 2019ರ ಮುಂಗಾರ ಋತುವಿನವರೆಗೂ ಮುಂದುವರಿದಿತ್ತು. ಇದರಲ್ಲಿ ರಾಜ್ಯ ಸರಕಾರವು 49 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. 2013ರಿಂದ 2018ರವರೆಗೆ ಬರಗಾಲದಿಂದ ಕೃಷಿ, ತೋಟಗಾರಿಕೆ ವಲಯದಲ್ಲಿ ಒಟ್ಟಾರೆ 80,015.38 ಕೋಟಿ ರೂ.ನಷ್ಟವಾಗಿತ್ತು. 2013ರಲ್ಲಿ ಕೃಷಿ ವಲಯದಲ್ಲಿ 1,016.99 ಕೋಟಿ ರೂ., ತೋಟಗಾರಿಕೆಗೆ 702.30 ಕೋಟಿ ರೂ. ಸೇರಿ ಒಟ್ಟಾರೆ 1,719.29 ಕೋಟಿ ರೂ. ನಷ್ಟವಾಗಿತ್ತು. 2014ರಲ್ಲಿ ಕೃಷಿ ವಲಯದಲ್ಲಿ 2,706.17 ಕೋಟಿ ರೂ., ತೋಟಗಾರಿಕೆಯಲ್ಲಿ 882.90 ಕೋಟಿ ರೂ. ಸೇರಿ 3,589.07 ಕೋಟಿ ರೂ.ಯಷ್ಟು ನಷ್ಟವಾಗಿತ್ತು. 2015ರಲ್ಲಿ ಕೃಷಿ ವಲಯದಲ್ಲಿ 21,204.51 ಕೋಟಿ, ತೋಟಗಾರಿಕೆ ವಲಯದಲ್ಲಿ 1,164.70 ಕೋಟಿ ರೂ. ಸೇರಿ 22,369.21 ಕೋಟಿ ರೂ. ನಷ್ಟವಾಗಿತ್ತು. 2016ರಲ್ಲಿ ಕೃಷಿ ವಲಯದಲ್ಲಿ 22,533.58 ಕೋಟಿ ರೂ., ತೋಟಗಾರಿಕೆಯಲ್ಲಿ 1,757.28 ಕೋಟಿ ರೂ. ಸೇರಿ 24,290.86 ಕೋಟಿ ರೂ. ನಷ್ಟವಾಗಿದ್ದರೆ 2018ರಲ್ಲಿ ಕೃಷಿ ವಲಯಕ್ಕೆ 26,514.32 ಕೋಟಿ ರೂ., ತೋಟಗಾರಿಕೆಯಲ್ಲಿ 1,532.63 ಕೋಟಿ ಸೇರಿ 28,046.95 ಕೋಟಿ ರೂ.ಯಷ್ಟು ನಷ್ಟವಾಗಿತ್ತು ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ. ನಷ್ಟದ ಪ್ರಮಾಣವು ವರ್ಷದಿಂದ ವರ್ಷಕ್ಕೆ ಏರಿಕೆಯಾಗಿರುವುದು ದತ್ತಾಂಶಗಳಿಂದ ಕಂಡು ಬಂದಿದೆ. ರಾಜ್ಯ ಸರಕಾರವು ಅಭಿವೃದ್ಧಿಪಡಿಸಿದ್ದ ಪರಿಹಾರ ಎಂಬ ವಿಶೇಷ ಪೋರ್ಟಲ್ನ ಮೂಲಕ ಪರಿಹಾರ ವಿತರಿಸಿತ್ತು. 2018-19ನೇ ಸಾಲಿನಲ್ಲಿ ಬರಪೀಡಿತ ಭೂ ಮಾಲಕರಿಗೆ ಒಟ್ಟಾರೆ 1,625.39 ಕೋಟಿ ರೂ.ಆರ್ಥಿಕ ಪರಿಹಾರ ಪಾವತಿಯಾಗಿತ್ತು. ಕಳೆದ ಎರಡು ದಶಕಗಳಲ್ಲಿ ರಾಜ್ಯವು ಹೆಚ್ಚಿನ ವರ್ಷಗಳಲ್ಲಿ ಬರ ಪರಿಸ್ಥಿತಿ ಅನುಭವಿಸಿದೆ. ಅಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನ, ಮಳೆಯ ಪ್ರಾದೇಶಿಕ ಮತ್ತು ತಾತ್ಕಾಲಿಕ ವ್ಯತ್ಯಾಸದ ಬಗ್ಗೆ ರಾಜ್ಯಕ್ಕೆ ಮಾಹಿತಿ ಇತ್ತು. ಆದರೂ ರಾಜ್ಯ ಸರಕಾರವು ಬರ ನಿರ್ವಹಣೆಗಾಗಿ ಪ್ರದೇಶವಾರು ನಿರ್ದಿಷ್ಟ ಮಾರ್ಗಸೂಚಿಗಳನ್ನೇ ಹೊರತಂದಿರಲಿಲ್ಲ. ಅಲ್ಲದೇ ಮಾರ್ಗಸೂಚಿಗಳನ್ನು ಹೊರತರದಿರಲು ಯಾವುದೇ ಕಾರಣಗಳನ್ನೂ ಸಿಎಜಿಗೆ ಒದಗಿಸಿರಲಿಲ್ಲ. ಕೊರತೆಯ ಮುನ್ಸೂಚನೆ: ಬರ ಕೈಪಿಡಿ ಪ್ರಕಾರ ರಾಜ್ಯ ಸರಕಾರವು ಬರ ನಿರ್ವಹಣೆಯಲ್ಲಿ ಎಡವಿತ್ತು. ಮತ್ತು ವಾಸ್ತವವನ್ನು ಪ್ರತಿಬಿಂಬಿಸುವ ತೀಕ್ಷ್ಣಮತ್ತು ವಿಶ್ವಾಸಾರ್ಹ ವೀಕ್ಷಣಾ ದತ್ತಾಂಶಗಳ ಕೊರತೆ ಇತ್ತು. ಒಟ್ಟಾರೆ ರಾಜ್ಯದ ಹವಾಮಾನ ಮೇಲ್ವಿಚಾರಣೆ ವ್ಯವಸ್ಥೆಯೇ ನ್ಯೂನತೆಗಳಿಂದ ಕೂಡಿತ್ತು. ಅಲ್ಲದೇ ಬರ ಮೇಲ್ವಿಚಾರಣೆ ಕೋಶವನ್ನು ಸ್ಥಾಪಿಸಿದ್ದರೂ ಸಹ ಉಪಕರಣಗಳ ಕಾರ್ಯಕ್ಷಮತೆಯು ಕಳಪೆಯಿಂದ ಕೂಡಿತ್ತು. ಕಾರ್ಯವಿಧಾನವು ಕೊರತೆಯನ್ನು ಹೊಂದಿತ್ತು ಎಂದು ಸಿಎಜಿ ವರದಿಯಲ್ಲಿ ವಿಶ್ಲೇಷಿಸಲಾಗಿದೆ. ಬಿಕ್ಕಟ್ಟು ನಿರ್ವಹಣಾ ಯೋಜನೆಯೇ ಅಸ್ತಿತ್ವದಲ್ಲಿಲ್ಲ ಬರ ಕೈಪಿಡಿಯ ಪರಿಚ್ಛೇಧ 2.1.1ರ ಪ್ರಕಾರ ಬರ ನಿಗಾ ವ್ಯವಸ್ಥೆಯ ಜತೆಗೆ ಸೂಕ್ಷ್ಮ ಪ್ರದೇಶಗಳ ಬರ ನಿರ್ವಹಣೆಗಾಗಿ ಮಧ್ಯಮ ಮತ್ತು ದೀರ್ಘಕಾಲಿನ ಪ್ರದೇಶ, ನಿರ್ದಿಷ್ಟ ಯೋಜನೆಗಳನ್ನು ಸಿದ್ಧಪಡಿಸಬೇಕಿತ್ತು. ಇದಲ್ಲದೇ ಅಲ್ಪಾವಧಿಯಲ್ಲಿ ಬರವನ್ನು ಎದುರಿಸಲು ಬಿಕ್ಕಟ್ಟು ನಿರ್ವಹಣಾ ಯೋಜನೆಗಳನ್ನು ಎಚ್ಚರಿಕೆಯಿಂದ ರೂಪಿಸಬೇಕಿತ್ತು. ಮಳೆ, ಬಿತ್ತನೆ ಪ್ರಗತಿ, ದೂರ ಸಂವೇದಿಕೆ ಆಧಾರಿತ ಸಸ್ಯ ಸೂಚ್ಯಂಕಗಳು, ಮಣ್ಣಿನ ತೇವಾಂಶ ಆಧರಿತ ಸೂಚ್ಯಂಕಗಳು, ಜಲ ವಿಜ್ಞಾನ ಸೂಚ್ಯಂಕಗಳು ಇವುಗಳನ್ನು ಮೇಲ್ವಿಚಾರಣೆ ಮಾಡುವ ಸಲುವಾಗಿ ಬಿಕ್ಕಟ್ಟು ನಿರ್ವಹಣೆ ಯೋಜನೆ ರೂಪಿಸಬೇಕಿತ್ತು. ಆದರೆ ರಾಜ್ಯ ಸರಕಾರವು 2023-24ರವರೆಗೂ ಇಂತಹದ್ದೊಂದು ಬಿಕ್ಕಟ್ಟು ನಿರ್ವಹಣೆ ಯೋಜನೆಯನ್ನೇ ರೂಪಿಸಿರಲಿಲ್ಲ.
ಇತ್ತೀಚೆಗೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ತ್ರಿಪುರಾ ಮೂಲದ ಎಂಬಿಎ ವಿದ್ಯಾರ್ಥಿಯನ್ನು ಐವರು ಯುವಕರು ಇರಿದು ಕೊಂದಿದ್ದರು. ಜನಾಂಗೀಯ ದ್ವೇಷವೇ ಈ ಹತ್ಯೆಗೆ ಕಾರಣವೆನ್ನಲಾಗಿದೆ. ಆರಂಭದಲ್ಲಿ ವಿದ್ಯಾರ್ಥಿಯನ್ನು ‘ಚೀನೀ ಪ್ರಜೆ’ ಎಂದು ಐವರು ನಿಂದಿಸಿದ್ದು ಇದು ಸಂಘರ್ಷಕ್ಕೆ ಕಾರಣವಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಏಂಜೆಲ್ ಚಕ್ಮಾಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ವಿದ್ಯಾರ್ಥಿಯ ಸೋದರ ಮೈಕಲ್ ಮೇಲೆಯೂ ಗಂಭೀರ ಹಲ್ಲೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಏಂಜೆಲ್ ಚಕ್ಮಾ ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದೆಡೆ ಚೀನಾ, ಪಾಕಿಸ್ತಾನದಿಂದ ಆಕ್ರಮಿಸಲ್ಪಟ್ಟ ತನ್ನ ಭೂಮಿಯ ಮೇಲೆ ಭಾರತ ಹಕ್ಕು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಅಷ್ಟೇ ಅಲ್ಲ ಬಾಂಗ್ಲಾ, ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತರಿಗಾಗಿ ಮರುಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದಲ್ಲಿ ತನ್ನದೇ ಜನರ ಮೇಲೆ ನಡೆಯುತ್ತಿರುವ ಜನಾಂಗೀಯ ಹಲ್ಲೆ, ದೌರ್ಜನ್ಯಗಳನ್ನು ತಡೆಯಲು ವಿಫಲವಾಗುತ್ತಿದೆ. ನೆರೆಯ ಬಾಂಗ್ಲಾದಲ್ಲಿ ಹಿಂದೂ ಧರ್ಮೀಯನೊಬ್ಬನನ್ನು ದಂಗೆಯಲ್ಲಿ ಕೊಂದು ಹಾಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವ ಭಾರತವು ತನ್ನದೇ ದೇಶದಲ್ಲಿ ಪ್ರಾದೇಶಿಕ, ಧಾರ್ಮಿಕ, ಜಾತಿಯ ಭಿನ್ನತೆಯ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆಗಳನ್ನು ತಡೆಯುವಲ್ಲಿ ವಿಫಲವಾಗುತ್ತಿದೆ. ಕೆಲವೊಮ್ಮೆ ಈ ಹತ್ಯೆಗಳನ್ನು ಮೌನವಾಗಿ ಬೆಂಬಲಿಸುತ್ತಿದೆ. ಕಳೆದ ಒಂದು ದಶಕದಿಂದ ಈಶಾನ್ಯ ಭಾರತ ಅನುಭವಿಸುತ್ತಿರುವ ಪರಕೀಯತೆಯ ಬಗ್ಗೆ ಭಾರತ ದಿವ್ಯ ನಿರ್ಲಕ್ಷ್ಯವನ್ನು ವಹಿಸಿದೆ. ಈಶಾನ್ಯ ಭಾರತೀಯರು ಭಾರತದೊಳಗಿದ್ದೂ ಪರಕೀಯರಂತೆ ಬಾಳುತ್ತಿದ್ದಾರೆ. ‘ನಾವು ನೇಪಾಳಿಗರಲ್ಲ, ‘ನಾವು ಚೀನಿಯರಲ್ಲ’ ‘ನಾವು ಭಾರತೀಯರು’ ಎನ್ನುವುದನ್ನು ಭಾರತೀಯರಿಗೆ ಪದೇ ಪದೇ ನೆನಪಿಸುವುದು ಅವರಿಗೆ ಅನಿವಾರ್ಯವಾಗಿ ಬಿಟ್ಟಿದೆ. ‘ಏಳು ಸಹೋದರಿಯರು’ ಒಬ್ಬ ‘ಸಹೋದರನನ್ನು’ ಕಟ್ಟಿಕೊಂಡ ಈಶಾನ್ಯ ಭಾರತ, ಸುದ್ದಿಯಲ್ಲಿರುವುದು ಹಿಂಸೆ ಮತ್ತು ಬಡತನಕ್ಕಾಗಿ. ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ ಹೀಗೆ ಏಳು ಸಹೋದರಿಯರ ಜೊತೆಗೆ ಸಿಕ್ಕಿಂ ಏಕೈಕ ಸೋದರ. ನೂರಾರು ಬುಡಕಟ್ಟು ಸಮುದಾಯಗಳನ್ನು ಹೊಂದಿರುವ ಈ ಬೆಟ್ಟ ಗುಡ್ಡಗಳ ಪ್ರದೇಶ ಜನಾಂಗೀಯ ಸಂಘರ್ಷಗಳಿಗಾಗಿ ಸದಾ ಸುದ್ದಿಯಲ್ಲಿರುತ್ತವೆ. ಇವುಗಳ ನಡುವೆಯೇ ಈ ಪ್ರದೇಶದ ಜನತೆ ಯಾರಿಗೂ ಸಲ್ಲದವರಂತೆ ಬದುಕುತ್ತಿದ್ದಾರೆ. ಅರುಣಾಚಲ ಪ್ರದೇಶದ ಮೇಲೆ ಚೀನಾ ಹಕ್ಕು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಭಾರತ ಇದನ್ನು ಪ್ರತಿರೋಧಿಸುತ್ತಲೇ ಬಂದಿದೆ. ಆದರೆ ಅರುಣಾಚಲ ಪ್ರದೇಶದಲ್ಲಿ ಬದುಕುತ್ತಿರುವ ಜನರ ಬಗ್ಗೆ ಉಭಯ ದೇಶಗಳಿಗೂ ವಿಶೇಷ ಕಾಳಜಿಯಿಲ್ಲ. ಈ ಭಾಗದ ಜನರನ್ನು ಭಾರತದ ಹೃದಯ ಭಾಗ ಸ್ವೀಕರಿಸುವುದಕ್ಕೆ ಹಿಂದೇಟು ಹಾಕುತ್ತದೆ. ಚೀನೀ ಪ್ರಜೆಗಳು ಎಂದು ಅವರನ್ನು ಅನುಮಾನಿಸುತ್ತದೆ. ಅತ್ತ, ಚೀನಾದ ಸೈನಿಕರಿಗೂ ಈ ಜನರು ಬೇಕಾಗಿಲ್ಲ. ಆಗಾಗ ಇಲ್ಲಿನ ಜನರು ಸೈನಿಕರ ದಾಳಿಗೀಡಾಗುತ್ತಾರೆ. ಇದರ ವಿರುದ್ಧ ಭಾರತ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸುತ್ತಲೇ ಇದೆ. ಇದೇ ಸಂದರ್ಭದಲ್ಲಿ ಈಶಾನ್ಯ ಭಾರತೀಯರ ಮೇಲೆ ಭಾರತದೊಳಗಿರುವ ಜನರು ಎಸಗುತ್ತಿರುವ ದೌರ್ಜನ್ಯಗಳ ಬಗ್ಗೆ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ವರ್ತಿಸುತ್ತಿದೆ. ಅಸ್ಸಾಮಿನಲ್ಲಿ ಅಲ್ಪಸಂಖ್ಯಾತರೊಂದಿಗೆ ಅಲ್ಲಿನ ಸರಕಾರ ಹೇಗೆ ವರ್ತಿಸುತ್ತಿದೆ ಎನ್ನುವುದನ್ನು ನೋಡುತ್ತಿದ್ದೇವೆ. ಪರಕೀಯರು, ಒಳನುಸುಳುಕೋರರು ಎಂದು ಅಲ್ಲಿನ ವಲಸೆ ಕಾರ್ಮಿಕರ ಮೇಲೆ ನಿರಂತರ ದೌರ್ಜನ್ಯಗಳನ್ನು ಎಸಗಲಾಗುತ್ತಿದೆ. ಮುಸ್ಲಿಮರ ಮೇಲೆ ಬಹಿರಂಗವಾಗಿಯೇ ಅಲ್ಲಿನ ಸರಕಾರ ದ್ವೇಷ ಕಾರುತ್ತಿದೆ. ಮಣಿಪುರದಲ್ಲಿ ಕಳೆದೆರಡು ವರ್ಷಗಳಿಂದ ನಡೆಯುತ್ತಿರುವ ಹತ್ಯಾಕಾಂಡಗಳಿಗೆ ವಿಶ್ವ ಕಳವಳ ಪಡಿಸುತ್ತಾ ಬಂದಿದೆ. ಮೈತೈ ಮತ್ತು ಕುಕಿ ಜನರ ನಡುವೆ ಸರಕಾರವೇ ವಿಭಜನೆಯನ್ನು ತಂದಿಕ್ಕಿ ಅವರನ್ನು ಬಡಿದಾಡಿಸಿತು. ನೂರಾರು ಮನೆಗಳು, ಚರ್ಚುಗಳು ಧ್ವಂಸವಾದವು. ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆದವು. ಈಗಲೂ ಮಣಿಪುರ ಶಾಂತವಾಗಿಲ್ಲ. ಈ ಭಾಗದ ಜನರನ್ನು ಭಾರತೀಯರು ಸದಾ ಅನುಮಾನದ ಕಣ್ಣಿನಿಂದಲೇ ನೋಡುತ್ತಾರೆ. ತ್ರಿಪುರಾ ಮೂಲದ ವಿದ್ಯಾರ್ಥಿಯ ಮೇಲೆ ಉತ್ತರಾಖಂಡದಲ್ಲಿ ನಡೆದ ದಾಳಿಗೂ ಈ ಸಂಶಯವೇ ಕಾರಣ. ಭಾರತದೊಳಗಿರುವ ನಮ್ಮವರನ್ನೇ ಪರಕೀಯರನ್ನಾಗಿಸಿ ಅವರ ಮೇಲೆ ದಾಳಿಗಳನ್ನು ಸಂಘಟಿಸುತ್ತಿರುವ ನಮಗೆ, ನೆರೆಯ ಬಾಂಗ್ಲಾ, ಪಾಕಿಸ್ತಾನದಲ್ಲಿ ನಡೆಯುವ ಜನಾಂಗೀಯ ದ್ವೇಷದ ಬಗ್ಗೆ ಮಾತನಾಡಲು ನೈತಿಕತೆಯಿದೆಯೆ? ಈಶಾನ್ಯ ಭಾರತದಿಂದ ಬಂದ ಎಲ್ಲ ಕಾರ್ಮಿಕರೂ ಈ ಭಾಗದ ಜನರಿಗೆ ‘ಬಾಂಗ್ಲಾ ನುಸುಳುಕೋರರು’. ಈ ಭಾಗದ ಕಾರ್ಮಿಕರನ್ನು ತಮ್ಮ ತೋಟ, ಎಸ್ಟೇಟ್ಗಳಲ್ಲಿ ದುಡಿಸಿ ಬಳಿಕ ಅವರನ್ನು ಬಾಂಗ್ಲಾ ನುಸುಳುಕೋರರು ಎಂದು ಹೊರಗಟ್ಟುವುದು ಸಾಮಾನ್ಯವಾಗಿ ಬಿಟ್ಟಿದೆ. ಇತ್ತೀಚಿನ ದಿನಗಳಲ್ಲಿ ಜನಾಂಗೀಯ ಹತ್ಯೆಗಳು ಹೆಚ್ಚುತ್ತಿವೆ. ಅತ್ಯಂತ ಸುಶಿಕ್ಷಿತರ ನಾಡು ಎಂದು ಗುರುತಿಸಲ್ಪಟ್ಟ ಕೇರಳದಲ್ಲಿ ಛತ್ತೀಸ್ಗಡ ಮೂಲದ ಕಾರ್ಮಿಕನನ್ನು ಬಾಂಗ್ಲಾ ನುಸುಳುಕೋರನೆಂದು ಆರೋಪಿಸಿ ಅತ್ಯಂತ ಬರ್ಬರವಾಗಿ ಕೊಂದು ಹಾಕಲಾಯಿತು. ಕೊಂದವರೆಲ್ಲರೂ ಸಂಘಪರಿವಾರ ಕಾರ್ಯಕರ್ತರಾಗಿರುವುದು ಆಕಸ್ಮಿಕವಲ್ಲ. ಪಶ್ಚಿಮಬಂಗಾಳದ ಮುರ್ಷಿದಾಬಾದ್ನ ಜ್ಯುವೆಲ್ ರಾಣಾ ಎಂಬ 19 ವರ್ಷದ ವಲಸೆ ಕಾರ್ಮಿಕನನ್ನು ಒಡಿಶಾದ ಸಂಬಲ್ಪುರದಲ್ಲಿ ಗುಂಪೊಂದು ಭೀಕರವಾಗಿ ಥಳಿಸಿ ಕೊಂದು ಹಾಕಿತು. ‘ಬಾಂಗ್ಲಾ ನುಸುಳುಕೋರ’ ಎಂದು ಆರೋಪಿಸಿ ಗುಂಪು ಈ ಕೃತ್ಯ ಎಸಗಿದೆ. ಆದರೆ ಆತ ಪಶ್ಚಿಮಬಂಗಾಳದ ನಿವಾಸಿಯಾಗಿದ್ದ. ಆತನ ಸಹವರ್ತಿಗಳು ಕೂಡ ಈ ಸಂದರ್ಭದಲ್ಲಿ ಹಲ್ಲೆಗೀಡಾಗಿದ್ದರು. ಪಶ್ಚಿಮ ಬಂಗಾಳ, ಈಶಾನ್ಯ ಭಾರತದ ಕೂಲಿ ಕಾರ್ಮಿಕರನ್ನು ಇಂದು ಭಾರತದೊಳಗೇ ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳಲಾಗುತ್ತಿದೆ. ತಮ್ಮದೇ ದೇಶದಲ್ಲಿ ತಮಗೆ ರಕ್ಷಣೆ ಇಲ್ಲ ಎನ್ನುವ ಸ್ಥಿತಿಯಿದೆ. ಇಂದು ಕೂಲಿ ಅರಸಿಕೊಂಡು ಕಾರ್ಮಿಕರು ಇತರ ರಾಜ್ಯಗಳಿಗೆ ಹೋಗುವಂತಹ ವಾತಾವರಣವೇ ಇಲ್ಲ. ಅವರನ್ನು ಶೋಷಣೆ ಮಾಡುವುದು ಕೂಡ ಸುಲಭ. ಸಂಘಪರಿವಾರ ದ್ವೇಷದ ಬೀಜಗಳನ್ನು ಬಿತ್ತಿ ಎಲ್ಲರನ್ನೂ ಅನುಮಾನದ ಕಣ್ಣಿನಿಂದ ನೋಡುವಂತೆ ಮಾಡಿದೆ. ಈ ಜನಾಂಗೀಯ ದ್ವೇಷದ ನೇತೃತ್ವವನ್ನು ಸರಕಾರವೇ ಹೊತ್ತುಕೊಂಡಿದೆ. ಇತ್ತೀಚೆಗೆ ಗರ್ಭಿಣಿ ಯೊಬ್ಬರನ್ನು ಬಾಂಗ್ಲಾ ನಿವಾಸಿ ಎಂದು ಸರಕಾರವೇ ಗಡಿಪಾರು ಮಾಡಿತ್ತು. ಬಳಿಕ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಿ, ಆಕೆಯನ್ನು ಕರೆಸಿಕೊಂಡಿತು. ಚುನಾವಣಾ ಆಯೋಗ ನಡೆಸುತ್ತಿರುವ ನೂತನ ಮತದಾರರ ಪಟ್ಟಿ ಪರಿಷ್ಕರಣೆಯು ಈ ದೇಶದಲ್ಲಿ ‘ಲಕ್ಷಾಂತರ ಕೃತಕ ನುಸುಳುಕೋರರನ್ನು’ ಸೃಷ್ಟಿಸುವ ದುರುದ್ದೇಶವನ್ನು ಹೊಂದಿದೆ. ಮತದಾರರ ಪಟ್ಟಿಯಿಂದ ಹೊರ ಬಿದ್ದ ಲಕ್ಷಾಂತರ ಜನರ ಪೌರತ್ವ ಪ್ರಶ್ನೆಗೀಡಾಗುತ್ತದೆ. ಅಂತಿಮವಾಗಿ ಇವರೆಲ್ಲರನ್ನೂ ವಿದೇಶಿಗರು, ನುಸುಳುಕೋರರು ಎಂದು ವಿಭಜಿಸುವ ಪ್ರಯತ್ನ ನಡೆಯಲಿದೆ. ಭಾರತದ ಭವಿಷ್ಯವನ್ನು ಇದು ಇನ್ನಷ್ಟು ಅಪಾಯಕ್ಕೆ ತಳ್ಳಲಿದೆ. ಭಾರತದೊಳಗಿನ ಜನರಲ್ಲಿ ಪರಕೀಯತೆಯನ್ನು ಬಿತ್ತುವ ಪ್ರಯತ್ನವನ್ನು ಯಾರೇ ಮಾಡಿದರೂ ಅವರ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ. ಇಲ್ಲವಾದರೆ, ಭಾರತದ ಪ್ರತಿ ಊರು ಒಂದೊಂದು ಮಣಿಪುರವಾಗಿ ಪರಿವರ್ತನೆಗೊಳ್ಳಲಿದೆ.
ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಜನನ , ಮರಣ ನೋಂದಣಿ ಪ್ರಮಾಣ ಪತ್ರ 21 ದಿನದೊಳಗೆ ವಿತರಣೆಗೆ ಸೂಚನೆ
ಆರೋಗ್ಯ ಇಲಾಖೆಯು ಜನನ ಮತ್ತು ಮರಣ ನೋಂದಣಿಯನ್ನು 21 ದಿನದೊಳಗೆ ಕಡ್ಡಾಯಗೊಳಿಸಿದೆ. 2023ರ ತಿದ್ದುಪಡಿಯಂತೆ, ಇದು ಕಡ್ಡಾಯವಾಗಿದ್ದು, ಸಕಾಲದಲ್ಲಿ ಪ್ರಮಾಣಪತ್ರ ನೀಡದಿದ್ದರೆ ವೈದ್ಯಾಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಇದರಿಂದ ನಾಗರಿಕರು ಸೌಲಭ್ಯ ವಂಚಿತರಾಗುವುದನ್ನು ತಪ್ಪಿಸಿ, ಸಮರ್ಪಕ ಮಾಹಿತಿ ಲಭ್ಯವಾಗಲಿದೆ.
ಕ್ರಿಕೆಟ್ ಆಸ್ಟ್ರೇಲಿಯಾ ಟೆಸ್ಟ್-11 ತಂಡದಲ್ಲಿ ನಾಲ್ವರು ಭಾರತೀಯರಿಗೆ ಸ್ಥಾನ
ಸಿಡ್ನಿ: ಟೆಸ್ಟ್ ಕ್ರಿಕೆಟ್ ನಲ್ಲಿ ಹಲವು ಪ್ರಮುಖ ಕ್ಷಣಗಳಿಗೆ 2025 ಸಾಕ್ಷಿಯಾಗಿದೆ. ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಬಗ್ಗುಬಡಿದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆದ್ದಿದೆ. ಬಳಿಕ ಭಾರತದ ವಿರುದ್ಧ ತವರು ನೆಲದಲ್ಲೇ ಕ್ಲೀನ್ ಸ್ವೀಪ್ ಸಾಧಿಸಿತು. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸರಣಿಯಲ್ಲಿ ರನ್ ಹೊಳೆ ಹರಿಯಿತು. ಆ್ಯಷಸ್ ಸರಣಿಯನ್ನು ಆಸ್ಟ್ರೇಲಿಯಾ 3-1 ಅಂತರದಿಂದ ಗೆದ್ದಿತು. ಏತನ್ಮಧ್ಯೆ 2025ರಲ್ಲಿ ಹಲವು ಮಂದಿ ಆಟಗಾರರು ಗಮನಾರ್ಹ ಪ್ರದರ್ಶನ ನೀಡಿದ್ದು, ಕ್ರಿಕೆಟ್ ಆಸ್ಟ್ರೇಲಿಯಾ ತಂಡ ತನ್ನ ಟೆಸ್ಟ್ 11 ತಂಡವನ್ನು ಪ್ರಕಟಿಸಿದೆ. ವರ್ಷದಲ್ಲಿ 11 ಟೆಸ್ಟ್ ಗೆದ್ದಿರುವ ಆಸ್ಟ್ರೇಲಿಯಾದ ನಾಲ್ವರು ಆಟಗಾರರು ಈ ತಂಡದಲ್ಲಿ ಸೇರಿದ್ದಾರೆ. ಅಂತೆಯೇ ರವೀಂದ್ರ ಜಡೇಜಾ 12ನೇ ಆಟಗಾರನಾಗಿ ಸ್ಥಾನ ಪಡೆಯುವ ಮೂಲಕ ನಾಲ್ವರು ಭಾರತೀಯರು ಕೂಡಾ ತಂಡದಲ್ಲಿ ಹೆಸರಿಸಲ್ಪಟ್ಟಿದ್ದಾರೆ. ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾದ ತಲಾ ಇಬ್ಬರು ತಂಡದಲ್ಲಿದ್ದಾರೆ. ತಂಡದಲ್ಲಿ ಸ್ಥಾನ ಪಡೆದ ಭಾರತೀಯ ಆಟಗಾರರೆಂದರೆ ಶುಭ್ಮನ್ ಗಿಲ್, ಕೆ.ಎಲ್.ರಾಹುಲ್ ಹಾಗೂ ಜಸ್ಪ್ರೀತ್ ಬೂಮ್ರಾ. ಆಡುವ 11ರಲ್ಲಿ ಸ್ಥಾನ ಪಡೆಯುವ ಅವಕಾಶದಿಂದ ವಂಚಿತರಾಗಿರುವ ಜಡೇಜಾ ಅವರ ಸ್ಥಾನವನ್ನು ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಕಸಿದುಕೊಂಡಿದ್ದಾರೆ. ಗಿಲ್ 2025ರಲ್ಲಿ 16 ಇನಿಂಗ್ಸ್ ಗಳಿಂದ 983 ರನ್ ಗಳಿಸಿದ್ದು, ರಾಹುಲ್ 19 ಇನ್ನಿಂಗ್ಸ್ ಗಳಲ್ಲಿ 813 ರನ್ ಗಳಿಸಿದ್ದಾರೆ. ಬೂಮ್ರಾ 14 ಇನ್ನಿಂಗ್ಸ್ ಗಳಲ್ಲಿ 31 ವಿಕೆಟ್ ಕಿತ್ತಿದ್ದಾರೆ. ನಾಯಕರಾಗಿ ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವೂಮಾ ಆಯ್ಕೆಯಾಗಿದ್ದಾರೆ. ಭಾರತದ ವಿರುದ್ಧ ಗಣನೀಯ ಪ್ರದರ್ಶನ ನೀಡಿದ ಸೈಮನ್ ಹರ್ಮರ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಆಫ್ರಿಕನ್ ಆಟಗಾರ.
2026ರಲ್ಲೂ ಭಾರತ-ಪಾಕಿಸ್ತಾನ ಸಂಘರ್ಷ ಸಾಧ್ಯತೆ: ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ
ವಾಷಿಂಗ್ಟನ್: 2026ರಲ್ಲೂ ಭಾರತ ಮತ್ತು ಪಾಕಿಸ್ತಾನದ ನಡುವೆ ಸಶಸ್ತ್ರ ಸಂಘರ್ಷ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಅಮೆರಿಕದ ಚಿಂತಕ ಕೂಟವೊಂದು ಎಚ್ಚರಿಕೆ ನೀಡಿದೆ. ವಿದೇಶಿ ಸಂಪರ್ಕಗಳ ಮಂಡಳಿ ವರದಿ ಅಮೆರಿಕದ ವಿದೇಶಾಂಗ ನೀತಿಯ ತಜ್ಞರನ್ನು ಸಮೀಕ್ಷೆಗೆ ಗುರಿಪಡಿಸಿದೆ. ಟ್ರಂಪ್ ಆಡಳಿತ ಉಭಯ ದೇಶಗಳ ನಡುವಿನ ಸಂಘರ್ಷ ಶಮನಗೊಳಿಸಲು ಯತ್ನಿಸಿತ್ತು ಎಂದು ವಿವರಿಸಿದೆ. ಟ್ರಂಪ್ ಆಡಳಿತ ಹಲವು ಸಂಘರ್ಷಗಳನ್ನು ಅಂತ್ಯಗೊಳಿಸಲು ಶ್ರಮಿಸಿತ್ತು. ಇದರಲ್ಲಿ ಕಾಂಗೋ ಗಣರಾಜ್ಯ, ಗಾಝಾ ಪಟ್ಟಿ, ಉಕ್ರೇನ್ ಸೇರಿದ್ದು, ಭಾರತ ಹಾಗೂ ಪಾಕಿಸ್ತಾನ, ಕಾಂಬೋಡಿಯಾ ಮತ್ತು ಥಾಯ್ಲೆಂಡ್ ಸಂಘರ್ಷವೂ ಸೇರಿದೆ ಎಂದು ವರದಿ ಹೇಳಿದೆ. ಕಳೆದ ಮೇ ತಿಂಗಳಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಮೂರು ದಿನಗಳ ಸಂಘರ್ಷ ಏರ್ಪಟ್ಟಿತ್ತು. ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ ಬಳಿಕ ಈ ಸಂಷರ್ಘ ಏರ್ಪಟ್ಟಿತ್ತು. ಗಡಿಯಾಚೆಗಿನ ಉಗ್ರ ದಾಳಿಗಳು ಹೆಚ್ಚುವ ಸಾಧ್ಯತೆಯ ಹಿನ್ನೆಲೆಯಲ್ಲಿ 2026ರಲ್ಲಿ ಉಭಯ ದೇಶಗಳ ನಡುವೆ ಸಂಘರ್ಷ ಸಂಭವಿಸುವ ಸಾಧ್ಯತೆ ಇದೆ ಎಂದು ಸಿಎಫ್ಆರ್ ವರದಿ ಎಚ್ಚರಿಸಿದೆ.
ಅಣ್ಣನ ಮಗನ ಜೊತೆ ಮಗಳ ಮದುವೆ ಮಾಡಿಸಿದ ಅಸಿಮ್ ಮುನೀರ್; ಪಾಕ್ ಸೇನಾ ಮುಖ್ಯ ಕಚೇರಿಯಲ್ಲಿ ಭರ್ಜರಿ ದಾವತ್
ಪಾಕಿಸ್ತಾನದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಫ್) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಮಗಳ ಮದುವೆ ಮಾಡಿ ತಂದೆಯ ಜವಾಬ್ದಾರಿಯನ್ನು ಹೆಗಲ ಮೇಲಿಂದ ಕಳಚಿದ್ದಾರೆ. ತಮ್ಮ ಸಹೋದರ ಖಾಸಿಂ ಮುನೀರ್ ಅವರ ಪುತ್ರ ಕ್ಯಾ. ಅಬ್ದುಲ್ ರೆಹಮಾನ್ ಜೊತೆ, ಅಸಿಮ್ ಮುನೀರ್ ತಮ್ಮ ಮಗಳಾದ ಮಹ್ನೂರ್ ಅವರ ಮದುವೆ ಮಾಡಿಸಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯ ಕಚೇರಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಕಿಸ್ತಾನದ ಅನೇಕ ಗಣ್ಯುರು ಭಾಗಿಯಾಗಿದ್ದರು. ಇಲ್ಲಿದೆ ಹೆಚ್ಚಿನ ಮಾಹಿತಿ.
180 ಕಿ.ಮೀ. ವೇಗ ದಾಖಲಿಸಿದ ವಂದೇಭಾರತ್ ಸ್ಲೀಪರ್!
ಹೊಸದಿಲ್ಲಿ: ಕೋಟಾ ಮತ್ತು ನಗ್ದಾ ಸೆಕ್ಷನ್ ನಡುವೆ ವಂದೇಭಾರತ್ ಸ್ಲೀಪರ್ ರೈಲು 180 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ವಾಟರ್ ಟೆಸ್ಟ್ ನಡೆಸಿದ ವಿಡಿಯೊವನ್ನೂ ಶೇರ್ ಮಾಡಿದ್ದಾರೆ. ರೈಲ್ವೆ ಸುರಕ್ಷಾ ವಿಭಾಗದ ಆಯುಕ್ತರು ಇಂದು ವಂದೇ ಭಾರತ್ ಸ್ಲೀಪರ್ ಪರೀಕ್ಷಿಸಿದ್ದಾರೆ. ಕೋಟಾ ನಗ್ದಾ ಸೆಕ್ಷನ್ ಗಳ ನಡುವೆ ಇದು 180 ಕಿಲೋಮೀಟರ್ ವೇಗದಲ್ಲಿ ಚಲಿಸಿದೆ. ಈ ಹೊಸ ಪೀಳಿಗೆ ರೈಲು ವಾಟರ್ ಟೆಸ್ಟ್ನಲ್ಲೂ ತಾಂತ್ರಿಕ ವೈಶಿಷ್ಟಗಳನ್ನು ಪ್ರದರ್ಶಿಸಿದೆ ಎಂದು ವೈಷ್ಣವ್ ಎಕ್ಸ್ ಪೋಸ್ಟ್ ನಲ್ಲಿ ಬಣ್ಣಿಸಿದ್ದಾರೆ. ರೈಲು 182 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿರುವುದು ಮೊಬೈಲ್ ಸ್ಕ್ರೀನ್ ನಲ್ಲಿ ದಾಖಲಾಗಿದೆ. ಪ್ರತಿ ಬೋಗಿಯ ಮೇಲ್ಭಾಗದಲ್ಲಿ ನೀರು ತುಂಬಿದ ಲೋಟಗಳನ್ನು ಇಟ್ಟು ಪರೀಕ್ಷಿಸಲಾಗಿದ್ದು, ನೀರು ಚೆಲ್ಲದೇ ಇರುವುದು ರೈಲಿನ ಸ್ಥಿರತೆಯನ್ನು ಪ್ರತಿಬಿಂಬಿಸಿದೆ. ವಂದೇಭಾರತ್ ರೈಲು ಪ್ರಸ್ತುತ ಭಾರತೀಯ ರೈಲ್ವೆ ಜಾಲದಲ್ಲಿ ಸೆಮಿ ಹೈಸ್ಪೀಡ್ ರೈಲುಗಳಾಗಿ ಓಡುತ್ತಿದ್ದು, 180 ಕಿಲೋಮೀಟರ್ ವೇಗದಲ್ಲಿ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರಸ್ತುತ ಗರಿಷ್ಠ 160 ಕಿಲೋಮೀಟರ್ ವೇಗದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ರೈಲಿನ ಸರಾಸರಿ ವೇಗ, ರೈಲು ಹಳಿಯ ಭೌಗೋಳಿಕ ಅಂಶಗಳು, ನಿಲುಗಡೆ, ನಿರ್ವಹಣಾ ಕೆಲಸವನ್ನು ಅವಲಂಬಿಸಿದೆ ಎಂದು ರೈಲ್ವೆ ಸಚಿವಾಲಯದ ಹೇಳಿಕೆ ವಿವರಿಸಿತ್ತು. ಮುಂದಿನ ದಿನಗಳಲ್ಲಿ ವಂದೇಭಾರತ್ ಸ್ಲೀಪರ್ ರಾತ್ರಿ ಅವಧಿಯ ಪ್ರಯಾಣವನ್ನೇ ಬದಲಿಸಲಿದೆ; ಅದರ ವೇಗ, ಆರಾಮ ಮತ್ತು ಅತ್ಯಾಧುನಿಕ ಸೌಕರ್ಯಗಳನ್ನು ಇದು ದೂರದ ಪ್ರಯಾಣಿಕರಿಗೆ ಒದಗಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಿಸಿದೆ. Vande Bharat Sleeper tested today by Commissioner Railway Safety. It ran at 180 kmph between Kota Nagda section. And our own water test demonstrated the technological features of this new generation train. pic.twitter.com/w0tE0Jcp2h — Ashwini Vaishnaw (@AshwiniVaishnaw) December 30, 2025
Karnataka Weather: ವಾಯುಭಾರ ಕುಸಿತ, ರಾಜ್ಯದ 9 ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ
ರಾಜ್ಯದಲ್ಲಿ ಒಂದೆಡೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಹೊಸ ವರ್ಷದ ಹೊತ್ತಲ್ಲೇ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ವರ್ಷದ ಕೊನೆಯ ದಿನವಾದ ಇಂದು (ಡಿ.31) ಹಾಗೂ ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಈ ವಾಯುಭಾರ ಕುಸಿತವು ಈಗ
Explained: ಯಲಹಂಕದ ಕೋಗಿಲು ಅಕ್ರಮ ಲೇಔಟ್ 20 ವರ್ಷದ್ದಲ್ಲ, ಈಚೆಗೆ ಸೃಷ್ಟಿಯಾದದ್ದು!
ಯಲಹಂಕ ಹೋಬಳಿಯ ಕೋಗಿಲು ಬಂಡೆ ಕ್ವಾರಿ ಪ್ರದೇಶದಲ್ಲಿ 2018ರ ನಂತರ ಅಕ್ರಮ ಲೇಔಟ್ ತಲೆ ಎತ್ತಿದ್ದು, ಸ್ಥಳೀಯ ಮುಖಂಡರ ಕುಮ್ಮಕ್ಕಿನಿಂದ ಬಡವರು ಒತ್ತುವರಿ ಮಾಡಿ ಶೆಡ್, ಮನೆ ನಿರ್ಮಿಸಿಕೊಂಡಿದ್ದರು. 150ಕ್ಕೂ ಅಧಿಕ ಮನೆ ಧ್ವಂಸಗೊಂಡಿದ್ದು, 1007 ಜನ ಬಾಧಿತರಾಗಿದ್ದಾರೆ. ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ, ಸಂತ್ರಸ್ತರ ಬಳಿ ಇರುವ ದಾಖಲೆಗಳು ನಕಲಿ ಎಂದು ತಹಶೀಲ್ದಾರ್ ಹೇಳಿದ್ದಾರೆ.
ಭಯೋತ್ಪಾದಕ ದಾಳಿಯಿಂದಾಗಿ 2026ರಲ್ಲಿ ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಉಲ್ಬಣ; ಯುಎಸ್ ವರದಿಯಿಂದ ತಲ್ಲಣ!
2025ರಲ್ಲಿ ಭಾರತ-ಪಾಕಿಸ್ತಾನ ವರ್ಷವೀಡಿ ಪರಸ್ಪರ ಜಗಳವಾಡಿಕೊಂಡೇ ಇದ್ದವು. ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯು ಉಭಯ ದೇಶಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿತ್ತು. ಆದರೆ ಅಮೆರಿಕದ ಚಿಂತಕರ ಚಾವಡಿಯೊಂದು, 2026ರಲ್ಲೂ ಭಾರತ-ಪಾಕಿಸ್ತಾನ ನಡುವಿನ ಈ ಕಂದರ ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದಾಗಿ, ದಕ್ಷಿಣ ಏಷ್ಯಾದ ಎರಡು ಪ್ರಬಲ ರಾಷ್ಟ್ರಗಳ ನಡುವೆ ಮಿಲಿಟರಿ ಸಂಘರ್ಷ ಉಲ್ಬಣಗೊಳ್ಳಲಿದೆ ಎಂದು ವರದಿ ಅಂದಾಜಿಸಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.
ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿಗಳು ಮತ್ತು ಸದಸ್ಯರ 53 ಜನರ ತಂಡ ಇಂದೋರ್ ಅಧ್ಯಯನ ಪ್ರವಾಸದಿಂದ ಮರಳಿದೆ. ಈ ಪ್ರವಾಸದ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸ್ಪಷ್ಟನೆ ನೀಡುವಂತೆ ಸದಸ್ಯರು ಒತ್ತಾಯಿಸಿದರು. ಮೇಯರ್ ಮತ್ತು ಆಯುಕ್ತರು ಪ್ರವಾಸದ ಉದ್ದೇಶ, ಖರ್ಚು, ಮತ್ತು ಅನುಷ್ಠಾನದ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿಲ್ಲ. ಇದರಿಂದಾಗಿ ನಾಗರಿಕರು ನಿರಾಶೆಗೊಂಡಿದ್ದಾರೆ. ಇಂದೋರ್ ಮಾದರಿಯಲ್ಲಿ ವ್ಯವಸ್ಥೆ ಸುಧಾರಿಸಲು ಇಚ್ಛಾಶಕ್ತಿ ಬೇಕು ಎಂದು ಸದಸ್ಯರು ಅಭಿಪ್ರಾಯಪಟ್ಟರು. ಶ್ವಾನಗಳ ಪುನರ್ವಸತಿ ಕೇಂದ್ರ ನಿರ್ಮಾಣಕ್ಕೆ ಸಭೆ ಅನುಮೋದನೆ ನೀಡಿತು.
ಹೊಸ ವರ್ಷಾಚರಣೆಗೆ ಹಂಪಿ ಸಜ್ಜು: ಸುರ್ಯೋದಯ ವೀಕ್ಷಣೆಗೆ ಕಾತರ
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ. ವಿದೇಶಿ ಹಾಗೂ ದೇಶೀ ಪ್ರವಾಸಿಗರು ಹಂಪಿಯ ಸ್ಮಾರಕಗಳ ವೈಭವದೊಂದಿಗೆ ಗುಡ್ಡ, ಬೆಟ್ಟಗಳಲ್ಲಿ ಸೂರ್ಯೋದಯ, ಸೂರ್ಯಾಸ್ತ ವೀಕ್ಷಿಸಲು ಕಾತುರರಾಗಿದ್ದಾರೆ. ಹೋಟೆಲ್ಗಳು ಸಂಪೂರ್ಣ ಭರ್ತಿಯಾಗಿದ್ದು, ಪ್ರವಾಸಿಗರು ಪಕ್ಕದ ನಗರಗಳತ್ತ ಮುಖಮಾಡಿದ್ದಾರೆ.
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಜ.1 ರಿಂದ ಆರಂಭ, ಈ ಬಾರಿಯ ಅಜ್ಜನ ಜಾತ್ರೆಯ ವಿಶೇಷಗಳೇನು ಗೊತ್ತಾ?
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಜ.1ರಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. ತೆಪ್ಪೋತ್ಸವ, ಉಡಿ ತುಂಬುವ ಕಾರ್ಯಕ್ರಮ, ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ, ಕುಸ್ತಿ, ಕಬಡ್ಡಿ ಪಂದ್ಯಾವಳಿ, ರಕ್ತದಾನ ಶಿಬಿರ, ಕೃಷಿ ಮೇಳ ಹಾಗೂ ಫಲಪುಷ್ಪ ಪ್ರದರ್ಶನಗಳು ಜರುಗಲಿವೆ. ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಮಹಾರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
Shivamogga | ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ; 177 ಪ್ರಕರಣ ದಾಖಲು
ಶಿವಮೊಗ್ಗ : ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 177 ಪ್ರಕರಣ ದಾಖಲಿಸಲಾಗಿದೆ. ನವೆಂಬರ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 82 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ 76 ಜನ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ 27(ಬಿ) ಸೆಕ್ಷನ್ ಅಡಿ 74 ಪ್ರಕರಣಗಳು ದಾಖಲಿಸಲಾಗಿದೆ. ಅದೇ ರೀತಿ, ಮಾದಕ ವಸ್ತು ಗಾಂಜಾ ಮಾರಾಟ, ಸಾಗಾಟ ಹಾಗೂ ಹಸಿ ಗಾಂಜಾ ಬೆಳೆಯುತ್ತಿದ್ದ 12 ಜನ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ 8(ಸಿ), 20(ಬಿ), 20(ಎ) ಸೆಕ್ಷನ್ಗಳ ಅಡಿ 8 ಪ್ರಕರಣಗಳು ದಾಖಲಾಗಿವೆ. ನವೆಂಬರ್ ತಿಂಗಳಲ್ಲಿ ಒಟ್ಟು 4,91,500 ರೂ. ಮೌಲ್ಯದ 4 ಕೆಜಿ 476 ಗ್ರಾಂ ಒಣ ಗಾಂಜಾ, 370 ಗ್ರಾಂ ಹಸಿ ಗಾಂಜಾ ಹಾಗೂ 26 ಗ್ರಾಂ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಸಹ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಒಟ್ಟು 95 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ 90 ಜನ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ 27(ಬಿ) ಸೆಕ್ಷನ್ ಅಡಿ 86 ಪ್ರಕರಣಗಳು ದಾಖಲಾಗಿವೆ. ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸಾಗಾಟ ನಡೆಸುತ್ತಿದ್ದ 15 ಜನ ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯ 8(ಸಿ), 20(ಬಿ) ಸೆಕ್ಷನ್ಗಳ ಅಡಿ 9 ಪ್ರಕರಣಗಳು ದಾಖಲಿಸಲಾಗಿದೆ. ಡಿಸೆಂಬರ್ನಲ್ಲಿ ಒಟ್ಟು 4,51,500 ರೂ. ಮೌಲ್ಯದ 8 ಕೆಜಿ 969 ಗ್ರಾಂ ಒಣ ಗಾಂಜಾ ಅನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ನಿರ್ಮೂಲನಕ್ಕಾಗಿ ಮುಂದೆಯೂ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಎಸ್ಪಿ ಮಿಥುನ್ ಕುಮಾರ್ ಜಿ.ಕೆ. ತಿಳಿಸಿದ್ದಾರೆ.
ಸರಕಾರಿ ಜಾಗ ಒತ್ತುವರಿ ಆರೋಪ; ದಾವಣಗೆರೆ ಮಹಾನಗರ ಪಾಲಿಕೆಯಿಂದ ಮನೆಗಳ ತೆರವು ಕಾರ್ಯಾಚರಣೆ
ದಾವಣಗೆರೆ: ನಗರದ ಕೊಂಡಜ್ಜಿ ರಸ್ತೆಯಲ್ಲಿರುವ ವಿಜಯನಗರ ಬಡಾವಣೆಯಲ್ಲಿ ಸರಕಾರಿ ಜಾಗವನ್ನು ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ಬಂದೋಬಸ್ತಿನಲ್ಲಿ ಮಂಗಳವಾರ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸಿದರು. ಯಾವುದೇ ಸೂಚನೆ, ಕಾಲಾವಕಾಶ ನೀಡದೇ ತೆರವಿಗೆ ಮುಂದಾಗಿದ್ದಾರೆ ಎಂದು ಅಲ್ಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿ ಮಾತಿನ ಚಕಮಕಿ ನಡೆಸಿದ ಘಟನೆಯೂ ನಡೆಯಿತು. ಸುಮಾರು 25 ವರ್ಷಗಳ ಹಿಂದೆ ಕೊಂಡಜ್ಜಿ ರಸ್ತೆಯ ನಿವಾಸಿ ರಾಮಪ್ಪ ಗೌಡರು ಒಟ್ಟು 16 ಮನೆ ನಿರ್ಮಿಸಿದ್ದರು. ಈ ಮನೆಗಳನ್ನು ಪಾಲಿಕೆಯ ಪಾರ್ಕ್ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡರು. ಮೂರು ಮನೆಗಳನ್ನು ಒಡೆದು ಹಾಕಿದ ನಂತರ ಜಿಲ್ಲಾಧಿಕಾರಿಯವರು ಮನೆಗಳ ತೆರವಿಗೆ ಎರಡು ದಿನ ಕಾಲಾವಕಾಶ ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಮನೆಗಳ ತೆರವು ಕಾರ್ಯಾಚರಣೆ ಅರ್ಧಕ್ಕೆ ಕೈಬಿಟ್ಟರು. ‘ಯಾವುದೇ ನೋಟಿಸ್ ನೀಡದೆ ಏಕಾಏಕಿ ಮನೆಗಳನ್ನು ತೆರವುಗೊಳಿಸಿದ್ದಾರೆ. ಪೊಲೀಸರು ಮಹಿಳೆಯರನ್ನು ಮನೆಯಿಂದ ಹೊರಗೆ ಎಳೆದು ಹಾಕಿ ದೌರ್ಜನ್ಯ ಎಸಗಿದ್ದಾರೆ. ಮನೆಯ ಮಾಲಕರಿಗೆ ನೋಟೀಸ್ ನೀಡಿದ್ದಾರಂತೆ. ಆದರೆ, ಅವರು ನಮಗೆ ತಿಳಿಸಿಲ್ಲ. ಈಗ ನಮ್ಮ ಬದುಕು ಬೀದಿಗೆ ಬಂದಿದೆ’ ಎಂದು ನಿವಾಸಿಗಳು ಅಳಲು ತೋಡಿಕೊಂಡರು. ಮನೆ ಬಾಡಿಗೆದಾರ ನಿರಂಜನ್ ಮಾತನಾಡಿ, ದಾವಣಗೆರೆಯಲ್ಲಿ ಈ ರೀತಿ ಸರಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಸಾಕಷ್ಟು ಕಡೆ ಮನೆ ನಿರ್ಮಿಸಲಾಗಿದೆ. ಅಧಿಕಾರಿಗಳು ಅವರ ಮೇಲೂ ಕ್ರಮ ಕೈಗೊಳ್ಳಲಿ. ಇಲ್ಲಿ ನಾಲ್ಕು ಮನೆಗಳನ್ನು ಒಡೆದು ಹಾಕಿದರೆ ಸಾಲದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮನೆಗಳ ಮಾಲಕ ರಾಮಪ್ಪಗೌಡರು ಮಾತನಾಡಿ, ಅಧಿಕಾರಿಗಳು ನಮಗೆ ನೋಟೀಸ್ ಕೂಡ ನೀಡದೆ ಮನೆಗಳ ತೆರವಿಗೆ ಬಂದಿದ್ದಾರೆ. ಅಧಿಕಾರಿಗಳು ನೋಟೀಸ್ ನೀಡಿದ್ದೇವೆ ಎನ್ನುತ್ತಿದ್ದು, ಅದು ನೋಟೀಸ್ ಅಲ್ಲ. ಇ-ಸ್ವತ್ತು ಪತ್ರ. ಅದು ಹೇಗೆ ನೋಟೀಸ್ ಆಗಲು ಸಾಧ್ಯ? ಎಂದು ಪ್ರಶ್ನಿಸಿದರು. 25 ವರ್ಷಗಳ ಹಿಂದೆಯೇ ಮನೆಗಳನ್ನು ನಿರ್ಮಿಸಿದ್ದೇವೆ. ಹಿಂದೆ ಜಮೀನಾಗಿತ್ತು, ವಂಶ ಪಾರಂಪರ್ಯವಾಗಿ ನಮಗೆ ಬಂದಿದೆ. ಮನೆಗೆ ವಿದ್ಯುತ್ ಬಿಲ್, ನೀರಿನ ಬಿಲ್ ಸೇರಿದಂತೆ ಎಲ್ಲ ದಾಖಲೆಗಳನ್ನು ಕೊಟ್ಟು, ಕೆಲವೇ ತಿಂಗಳುಗಳ ಹಿಂದೆ ಕಂದಾಯ ಹಣವನ್ನು ಕಟ್ಟಿಸಿಕೊಂಡ ಅಧಿಕಾರಿಗಳು ಐದು ತಿಂಗಳಿನಿಂದ ಸರಕಾರಿ ಜಾಗ, ಪಾರ್ಕ್ ಜಾಗ ಎನ್ನುತ್ತಿದ್ದಾರೆ. -ರಾಮಪ್ಪಗೌಡ, ಮನೆಗಳ ಮಾಲಕ
ಅಂದರ್-ಬಾಹರ್ ಆಡುವುದು ಅಪರಾಧ; ಹೈಕೋರ್ಟ್ ಮೌಖಿಕ ಅಭಿಪ್ರಾಯ
ಬೆಂಗಳೂರು : ಇಸ್ಪೀಟ್ನಲ್ಲಿ ರಮ್ಮಿ ಕೌಶಲದ ಆಟ (ಸ್ಕಿಲ್ ಗೇಮ್) ಆಗಿದ್ದು, ಅಂದರ್-ಬಾಹರ್ ಮಾತ್ರ ಅಪರಾಧವಾಗುತ್ತದೆ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ. ಅಂದರ್-ಬಾಹರ್ ಆಟವಾಡುತ್ತಿದ್ದ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದರೆಯ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದು ಕೋರಿ ಪ್ರಕರಣದ 5 ಮತ್ತು 7ನೇ ಆರೋಪಿಗಳಾದ ಸಂತೋಷ್ ಮತ್ತು ಜಯರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಆರ್. ಬಾಲಕೃಷ್ಣ ವಾದ ಮಂಡಿಸಿ, ಅಂದರ್-ಬಾಹರ್ ಆಟವಾಡುತ್ತಿದ್ದ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ದೂರು ದಾಖಲಾಗಿದೆ. ಆದರೆ, ಅಂದರ್-ಬಾಹರ್ ಕೂಡ ರಮ್ಮಿಯಂತೆಯೇ ಕೌಶಲದ ಆಟವಾಡಿದೆ. ಇದರಿಂದ, ಕರ್ನಾಟಕ ಪೊಲೀಸ್ ಕಾಯ್ದೆ-1963 ಅಡಿ ಸೆಕ್ಷನ್ 79 ಮತ್ತು 80 ಅಡಿಯಲ್ಲಿ ಅರ್ಜಿದಾರರ ವಿರುದ್ಧ ಕ್ರಮ ಜರುಗಿಸಲು ಅವಕಾಶವಿಲ್ಲ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ರಮ್ಮಿ ಕೌಶಲದ ಆಟವಾಗಿದೆ. ರಮ್ಮಿ ಆಡಿದರೆ ಅದು ಅಪರಾಧವಾಗುತ್ತಿಲ್ಲ. ಅಂದರ್-ಬಾಹರ್ ಆಯ್ಕೆಯ ಆಟವಾಗಿದೆ. ಅಂದರ್-ಬಾಹರ್ ಆಡಿದರೆ ಅದು ಅಪರಾಧವಾಗುತ್ತದೆ ಎಂದು ಮೌಖಿಕವಾಗಿ ಹೇಳಿದರು. ಅದಕ್ಕೆ ಅರ್ಜಿದಾರರ ಪರ ವಕೀಲರು, ಅಂದರ್-ಬಾಹರ್ ಸಹ ಕೌಶಲದ ಆಟವಾಗಿದೆ. ಈ ಕುರಿತು ಹೈಕೋರ್ಟ್ ಸಮನ್ವಯ ಪೀಠ ಈ ಹಿಂದೆಯೇ ಆದೇಶ ಮಾಡಿದೆ. ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೂ; ಅವರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಜತೆಗೆ, ಪ್ರತಿವಾದಿಗಳಾದ ಮುಲ್ಕಿ ಠಾಣೆ ಪೊಲೀಸರು ಮತ್ತು ಪ್ರಕರಣದ ದೂರುದಾರರಾದ ಸಿಸಿಬಿ ಸಬ್ ಇನ್ಸ್ಪೆಕ್ಟರ್ ಕಬಲ್ ರಾಜ್ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಪ್ರಕರಣದ ಹಿನ್ನೆಲೆ: 2020ರ ಆಗಸ್ಟ್ 16ರಂದು ಅರ್ಜಿದಾರರು ಮತ್ತು ಇತರ ಆರೋಪಿಗಳು ಮಂಗಳೂರಿನ ಮುಲ್ಕಿ ಪಕ್ಷಿಕೆರೆ ಚರ್ಚ್ ಬಳಿಯ ಮೌಂಟ್ ವಿಲ್ಲಾ ಮನೆಯಲ್ಲಿ ಅಂದರ್-ಬಾಹರ್ ಆಟವಾಡುತ್ತಿದ್ದರು. ಈ ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಹಣ, ಮೊಬೈಲ್ ಮತ್ತು ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿದ್ದರು. ನಂತರ ಸಿಸಿಬಿ ಸಬ್ ಇನ್ಸ್ಪೆಕ್ಟರ್ ಕಬಲ್ ರಾಜ್ ಅವರು ನೀಡಿದ್ದ ದೂರು ಆಧರಿಸಿ ಅರ್ಜಿದಾರರೂ ಸೇರಿದಂತೆ ಒಟ್ಟು 14 ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಎಫ್ಐಆರ್ ದಾಖಲಿಸಿದ್ದರು. ಸದ್ಯ ಪ್ರಕರಣವನ್ನು ಮೂಡಬಿದರೆಯ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಬೆಂಗಳೂರು : ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿಗೆ ಜ.1ರ ಮಧ್ಯಾಹ್ನ 12ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಜೂ.22ರಿಂದ ಡಿ.24 ರವರೆಗೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ ಡಿ.23ರಂದು ಪ್ರಕಟಿಸಿ ಡಿ.25ರ ಸಂಜೆ 5ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ತಿಳಿಸಲಾಗಿತ್ತು. ಅದರಂತೆ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಡಿ.29ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ನು ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜ.1ರ ಮಧ್ಯಾಹ್ನ 12ಗಂಟೆಯೊಳಗೆ https://cetonline.karnataka.gov.in/kea/ ವೆಬ್ಸೈಟ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
ಧಾರವಾಡ : ಮರ್ಯಾದೆಗೇಡು ಹತ್ಯೆ ನಡೆದಂತಹ ಇನಾಂ ವೀರಾಪೂರ ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ, ರಕ್ಷಣೆ ನೀಡಬೇಕೆಂದು ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದರು. ಮಂಗಳವಾರ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದೊಂದಿಗೆ ಸಭೆ ಜರುಗಿಸಿ, ಇನಾಂ ವೀರಾಪೂರ ಗ್ರಾಮದಲ್ಲಿನ ದೌರ್ಜನ್ಯ, ಕೊಲೆ ಪ್ರಕರಣದ ಮಾಹಿತಿ ಪಡೆದು ಮಾತನಾಡಿದ ಅವರು, ಇದೊಂದು ಅಮಾನವೀಯ ಘಟನೆ. ಇಂತಹ ಮನಸ್ಥಿತಿಗಳಿಂದ ಸಾಮಾಜಿಕ ವ್ಯವಸ್ಥೆ ಹಾಳಾಗುತ್ತಿದೆ. ಈ ಘಟನೆಯಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಸರಕಾರಿ ಅಭಿಯೋಜಕರಿಗೆ ಅಗತ್ಯ ಸಹಕಾರ ನೀಡಬೇಕು ಎಂದರು. ಈಗಾಗಲೇ ದಾಖಲಿಸಿರುವ ಎಫ್.ಐ.ಆರ್. ಪ್ರಕಾರ ಎಲ್ಲರ ಬಂಧನವಾಗಬೇಕು. ಗ್ರಾಮದ ಸಾಮರಸ್ಯಕ್ಕೆ, ಸೌಹಾರ್ದತೆಗೆ ಧಕ್ಕೆ ಆಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಘಟನೆಯಲ್ಲಿ ಕಂದಾಯ, ಸಮಾಜ ಕಲ್ಯಾಣ ಇಲಾಖೆಗಳು ತಮ್ಮ ಕರ್ತವ್ಯ ನಿರ್ವಹಿಸಿವೆ. ಆದರೂ ಇನ್ನಷ್ಟು ತ್ವರೀತವಾಗಿ ಸ್ಪಂದಿಸಬೇಕಿತ್ತು ಎಂದು ಅವರು ಹೇಳಿದರು. ಗುಪ್ತವಾರ್ತೆಯ ವಿಭಾಗದ ಸಕಾಲಿಕ ಮಾಹಿತಿ ಕೊರತೆಯಿಂದ ದುರ್ಘಟನೆ ತಡೆಗಟ್ಟಲು ಸಾಧ್ಯವಾಗಿಲ್ಲ. ಘಟನೆ ನಂತರ ವಿವಿಧ ಇಲಾಖೆಗಳು ನಿರ್ವಹಿಸಿದ ಕಾರ್ಯಗಳ ಕುರಿತು, ನಿಯಮ ಪಾಲನೆ ಕುರಿತು ತನಿಖೆ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪಾರದರ್ಶಕವಾಗಿ ತನಿಖೆ ಮಾಡಿ, ವರದಿ ನೀಡಬೇಕು ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮಾತನಾಡಿ, ವಿವೇಕಾನಂದ ದೊಡ್ಡಮನಿ ಕುಟುಂಬದ ಬೇಡಿಕೆಗಳನ್ನು ಜಿಲ್ಲಾಡಳಿತ ಹಂತದಲ್ಲಿ ಈಡೇರಿಸಲಾಗಿದೆ. ಅವರ ಕೆಲವು ಬೇಡಿಕೆಗಳ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಶಾಂತಿ ಸಭೆ ಮಾಡಿ, ದೊಡ್ಡಮನಿ ಕುಟುಂಬವನ್ನು ಅವರ ಮನೆಗೆ ಸೇರಿಸಲಾಗಿದೆ ಎಂದು ತಿಳಿಸಿದರು. ಶಾಂತಿ, ಸೌಹಾರ್ದತೆಯಿಂದ ಎಲ್ಲರೂ ಇರುವುದಾಗಿ ಗ್ರಾಮಸ್ಥರು ಭರವಸೆ ನೀಡಿದ್ದಾರೆ. ಗ್ರಾಮದಲ್ಲಿ ಪೊಲೀಸ್ ಬಂದೊಬಸ್ತ್, ಕುಟುಂಬದವರಿಗೆ ಅಗತ್ಯ ಚಿಕಿತ್ಸೆ, ಕೌನ್ಸಿಲಿಂಗ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೆ 5 ಲಕ್ಷ ರೂ.ಪರಿಹಾರ ನೀಡಲಾಗಿದೆ. ಗ್ರಾಮ ಹಾಗೂ ಕುಟುಂಬಗಳ ಮೇಲೆ ಮುನ್ನೆಚರಿಕೆಯಾಗಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು, ಘಟನೆಯ ಕುರಿತು ಮತ್ತು ಆರೋಪಿತರ ಮೇಲೆ ಕೈಗೊಂಡ ಕ್ರಮಗಳ ಕುರಿತು ಸಚಿವರಿಗೆ ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಶುಭಾ ಪಿ., ಅವರು ಸ್ವಾಗತಿಸಿ, ಘಟನೆ ಕುರಿತು ಇಲಾಖೆ ಕೈಗೊಂಡ ಕ್ರಮಗಳನ್ನು ವಿವರಿಸಿದರು. ಸಭೆಯಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್, ತಹಶೀಲ್ದಾರ್ ಜೆ.ಬಿ.ಮಜ್ಜಗಿ, ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಡಿಸಿಆರ್ಇ ವಿಜಯಪುರ ಡಿವೈಎಸ್ಪಿ ಹಾಗೂ ಇನಾಂ ವೀರಾಪುರ ಗ್ರಾಮ ಪ್ರಕರಣದ ತನಿಖಾಧಿಕಾರಿ ಸಂದೀಪ್ಸಿಂಗ್ ಮುರಗೋಡ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಇನ್ಸ್ಪೆಕ್ಟರ್ ವೀರಭದ್ರಪ್ಪ ಕಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎಫ್ಐಆರ್ ರದ್ದು ಕೋರಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನಿಗೆ ಮನವಿ ಸರಿಯಲ್ಲ : ಹೈಕೋರ್ಟ್
ಬೆಂಗಳೂರು : ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಅವಕಾಶವಿದ್ದರೂ, ಆರೋಪಿಗಳು ನೇರವಾಗಿ ಹೈಕೋರ್ಟ್ಗೆ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿ, ಮಧ್ಯಂತರ ಜಾಮೀನು ಕೋರುವುದು ಸರಿಯಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಪರ ವಕೀಲರು ಎಫ್ಐಆರ್ ರದ್ದತಿಗೆ ಕೋರಿ ಸಲ್ಲಿಸಿದ ಅರ್ಜಿಗಳಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾತಿಗೆ ಮನವಿ ಮಾಡುವುದನ್ನು ಗಮನಿಸಿದ ನ್ಯಾಯಮೂರ್ತಿ ಅನಂತ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಅತಿಕ್ರಮ ಪ್ರವೇಶ ಸೇರಿ ಇನ್ನಿತರ ಜಾಮೀನು ಸಿಗಬಹುದಾದ ಪ್ರಕರಣಗಳಲ್ಲಿ ಆರೋಪಿಗಳು ಮೊದಲಿಗೆ ಹೈಕೋರ್ಟ್ಗೆ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸುತ್ತಾರೆ. ಆ ಅರ್ಜಿ ವಿಚಾರಣೆ ವೇಳೆ ಮಧ್ಯಂತರ ಜಾಮೀನು ಕೋರಿ ಆರೋಪಿಗಳ ಪರ ವಕೀಲರು ಮನವಿ ಮಾಡುತ್ತಾರೆ. ಇದು ಸರಿಯಾದ ಕ್ರಮವಲ್ಲ. ಜಾಮೀನು ಕೋರಿಕೆಗೆ ನಿರ್ದಿಷ್ಟ ಕಾರ್ಯ ವಿಧಾನ/ನಿಯಮಗಳ ಮತ್ತು ಪ್ರಕ್ರಿಯೆ ಇರುತ್ತದೆ. ಬಂಧನದ ಆತಂಕವಿದ್ದರೆ, ಮೊದಲಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿ, ವಿಚಾರಣಾ ನ್ಯಾಯಾಲಯದಿಂದಲೇ ಜಾಮೀನು ಪಡೆಯಬಹುದು ಎಂದು ಹೇಳಿತು. ಆನಂತರ ಹೈಕೋರ್ಟ್ನಲ್ಲಿ ಎಫ್ಐಆರ್ ರದ್ದತಿಗೆ ಕೋರುವ ಅವಕಾಶವಿರುತ್ತದೆ. ಜಾಮೀನು ಪಡೆಯಲು ಅವಕಾಶವಿದ್ದರೂ, ಎಫ್ಐಆರ್ ರದ್ದತಿ ಕೋರಿದ ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನು ಕೋರಲಾಗುತ್ತದೆ. ಆರೋಪಿಗಳಿಗೆ ವಕೀಲರು ನೀಡುವ ಭರವಸೆಯಿಂದ ಇಂತಹ ಬೆಳವಣಿಗೆಗಳು ನಡೆಯುತ್ತವೆ ಎಂದು ನ್ಯಾಯಾಲಯ ಮೌಖಿಕವಾಗಿ ನುಡಿಯಿತು. ಅಂತಿಮವಾಗಿ ಎಫ್ಐಆರ್ ರದ್ದು ಕೋರಿದ ಹಲವು ಅರ್ಜಿಗಳಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾತಿಗೆ ವಕೀಲರು ಮಾಡಿದ ಮನವಿಗೆ ಒಪ್ಪದ ನ್ಯಾಯಪೀಠ, ಅರ್ಜಿಯಲ್ಲಿರುವ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಕೆಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಕಿಮ್ ಜಾಂಗ್ ಉನ್ ಮತ್ತೊಂದು ಅಸ್ತ್ರ, ಸುಸ್ತಾಗಿ ಹೋಯ್ತಾ ದೊಡ್ಡಣ್ಣ ಅಮೆರಿಕ?
ಅಮೆರಿಕ ಇರಲಿ ಯುರೋಪ್ ಇರಲಿ, ಜಗತ್ತಿನ ಯಾವುದೇ ಶಕ್ತಿಶಾಲಿ ಎನಿಸಿಕೊಂಡ ದೇಶಕ್ಕೂ ಈ ಕಿಮ್ ಜಾಂಗ್ ಉನ್ ಹೆಸರು ಕೇಳಿದರೆ ಭಯ ಆಗದೆ ಇರಲಾರದು. ಇದಕ್ಕೆ ಕಾರಣ ಕಿಮ್ ಜಾಂಗ್ ಉನ್ ಇಟ್ಟಿರುವ ಹವಾ. ತನ್ನ ಬಳಿ ನ್ಯೂಕ್ಲಿಯರ್ ಅಸ್ತ್ರಗಳು ಇವೆ ಎಂದು ಹೇಳುತ್ತಲೇ ಜಗತ್ತಿನ ದೊಡ್ಡ ದೊಡ್ಡ ದೇಶಗಳನ್ನು ಭಯಪಡಿಸಿ, ತನ್ನ ಬೇಳೆ ಬೇಯಿಸಿಕೊಳ್ಳಲು ಕಿಮ್
ಆರ್ಸಿಬಿ ಅಭಿಮಾನಿಗಳಿಗೆ ದಿಢೀರ್ ಆಘಾತ, ಸ್ಟಾರ್ ಪ್ಲೇಯರ್ ಟೂರ್ನಿಯಿಂದ ಔಟ್... RCB Fans
ಆರ್ಸಿಬಿ ಅನ್ನೋದು ನಮ್ಮ ರಕ್ತದ ಕಣ ಕಣದಲ್ಲೂ ಬೆರೆತು ಹೋಗಿದೆ ಅನ್ನೋದು ಅಭಿಮಾನಿಗಳ ಮಾತು, ಆದರೆ ಇದೆಲ್ಲಾ ಅತಿರೇಕ ಅನ್ನೋರು ಕೂಡ ಇದ್ದಾರೆ. ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಇಡೀ ಜಗತ್ತಿನಲ್ಲೇ ಅತಿಹೆಚ್ಚು ಅಭಿಮಾನಿ ಬಳಗ ಹೊಂದಿದ ತಂಡವಾಗಿದೆ ಎಂಬುದು ಅಭಿಮಾನಿಗಳ ವಾದ. ಹೀಗೆಲ್ಲಾ ಕಣ ಕಣದಲ್ಲೂ ಆರ್ಸಿಬಿ ಅಂತಾ ಎದೆ ತಟ್ಟಿಕೊಂಡು ಹೇಳುವ ಅಭಿಮಾನಿಗಳು ಇದೀಗ
ವಿಜಯನಗರ | ಸಿರಿಧಾನ್ಯ, ಮರೆತು ಹೋದ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಬಳಸಿ : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ), :ಸಾರ್ವಜನಿಕರು ಸಿರಿಧಾನ್ಯಗಳು ಹಾಗೂ ಮರೆತು ಹೋದ ಪರಂಪರೆಯ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು. ನಗರದ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರದ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಂಗಳವಾರ ಮಾತನಾಡಿದರು. ಸಿರಿಧಾನ್ಯ ಹಾಗೂ ಪರಂಪರೆಯ ಖಾದ್ಯಗಳನ್ನು ದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚಾಗಿ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಇವುಗಳಲ್ಲಿ ಶಕ್ತಿಶಾಲಿ ಆ್ಯಂಟಿ ಆಕ್ಸಿಡೆಂಟ್ಗಳು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿರುವುದರಿಂದ ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿದಂತೆ ಹಲವು ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟಲು ಸಹಕಾರಿ ಆಗುತ್ತವೆ ಎಂದರು. ಸ್ಪರ್ಧೆಯಲ್ಲಿ ಭಾಗವಹಿಸಿದವರು ತಯಾರಿಸಿದ ವಿಭಿನ್ನ ಹಾಗೂ ರುಚಿಕರ ಆಹಾರಗಳನ್ನು ಪ್ರತಿ ಟೇಬಲ್ಗೆ ಭೇಟಿ ನೀಡಿ ರುಚಿ ನೋಡುವ ಅವಕಾಶ ದೊರೆತಿದ್ದು, ಅದು ನನಗೆ ಸಿಕ್ಕ ಭಾಗ್ಯ ಎಂದು ಹೇಳಿದರು. ಸ್ಪರ್ಧೆಯಲ್ಲಿ ತಯಾರಿಸಿದ ಆಹಾರಗಳ ಫೋಟೋಗಳನ್ನು ಸೇರಿಸಿ, ತಯಾರಿಕಾ ವಿಧಾನ ಹಾಗೂ ಬಳಸಿದ ಸಾಮಗ್ರಿಗಳ ವಿವರಣೆಯೊಂದಿಗೆ ಪುಸ್ತಕ ರೂಪದಲ್ಲಿ ಪ್ರಕಟಿಸಿದರೆ ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸಲಹೆ ನೀಡಿದರು. ಅಲ್ಲದೆ, ಆಹಾರ ತಯಾರಿಕಾ ವಿಡಿಯೋಗಳನ್ನು ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರಿಂದ ಜನರಿಗೆ ಮಾಹಿತಿ ಸಿಗುವುದರ ಜೊತೆಗೆ ಸ್ಪರ್ಧಾರ್ಥಿಗಳ ಪ್ರತಿಭೆಗೂ ವೇದಿಕೆ ದೊರೆಯಲಿದೆ ಎಂದರು. ಜಂಟಿ ಕೃಷಿ ನಿರ್ದೇಶಕ ಡಿ.ಟಿ. ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 2 ಲಕ್ಷ 45 ಸಾವಿರ ಎಕರೆ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆ ಬೆಳೆಯಲಾಗುತ್ತಿದ್ದು, ಅದರಲ್ಲಿ 2 ಲಕ್ಷ 21 ಸಾವಿರ ಎಕರೆ ಮುಸುಕಿನ ಜೋಳ, ಜೊತೆಗೆ ನವಣೆ, ಸಜ್ಜೆ ಮತ್ತು ರಾಗಿಯನ್ನು ಎಲ್ಲ ಋತುವಿನಲ್ಲಿಯೂ ಬೆಳೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ಜನರಿಗೆ ತಿಳಿಸಲು ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಜಿಲ್ಲೆಯ ಹೊಸಪೇಟೆ (15), ಕೂಡ್ಲಿಗಿ (06), ಹಡಗಲಿ (09), ಹಗರಿಬೊಮ್ಮನಹಳ್ಳಿ (04) ಮತ್ತು ಹರಪನಹಳ್ಳಿ (04) ತಾಲೂಕುಗಳಿಂದ ಒಟ್ಟು 38 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕ ನಯೀಮ್ ಪಾಷಾ, ಎಇಇಯು ಸುನೀತಾ, ಎಡಿಎ ನಾಜ್ನೀನ್ ನದಾಫ್, ಎಡಿಎ ವಿದ್ಯಾವತಿ, ಸ್ಪರ್ಧಾರ್ಥಿಗಳು ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಧಾರವಾಡ : ನಗರದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ ಗೇಟ್ ಎದುರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಂಡ ಘಟನೆ ಮಂಗಳವಾರ ನಡೆದಿದೆ. ಕೃಷಿ ವಿವಿ ಕುಲಪತಿ ಪಿ.ಎಲ್.ಪಾಟೀಲ್ ಅಧ್ಯಕ್ಷತೆಯಲ್ಲಿ ವಿವಿಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಚಿವರು, ಶಾಸಕರನ್ನು ಕರೆಯದೆ ಚಕ್ರವರ್ತಿ ಸೂಲಿಬೆಲೆಯನ್ನು ಕರೆದಿದ್ದು ಯಾಕೆ?. ಅವರೇನು ವಿಜ್ಞಾನಿನಾ ಎಂದು ಪ್ರಶ್ನಿಸಿದರು. ಇದೇ ವೇಳೆ ಮನವಿ ಸ್ವೀಕರಿಸಲು ಬಂದಿದ್ದ ಡೀನ್ ರನ್ನೂ ತರಾಟೆಗೆ ಪಡೆದ ಪ್ರತಿಭಟನಾಕಾರರು, ಕುಲಪತಿಯವರೇ ಬಂದು ನಮ್ಮ ಮನವಿ ಸ್ವೀಕರಿಸಬೇಕೆಂದು ಒತ್ತಾಯಿಸಿದರು. ಇದೇ ವೇಳೆ ಹಲವರು ವಿವಿ ಗೇಟ್ ಏರಿ ಪ್ರತಿಭಟನೆ ನಡೆಸಿದರು. ‘ಸಮಾಜದಲ್ಲಿ ಕೋಮು ಗಲಭೆಗೆ ಕಾರಣ ವಾಗುವಂತವರನ್ನು ಕರೆದು ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸಬಾರದು. ಅದರ ಬದಲು, ಕೃಷಿ ಸಾಧಕರನ್ನೋ, ವಿಜ್ಞಾನಿಗಳನ್ನೋ ಕರೆಸಬಹುದಿತ್ತು. ಸಿಂಡಿಕೇಟ್ ಸದಸ್ಯರಿಗೂ ತಿಳಿಸದೆ ಕುಲಪತಿಯವರು ಕಾರ್ಯಕ್ರಮ ಮಾಡಲು ಹೊರಟಿದ್ದಾರೆ’ ಎಂದು ದಲಿತ ಸಂಘಟನೆ ಮುಖಂಡರು ಆರೋಪಿಸಿದ್ದಾರೆ. ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮವನ್ನು ಕೃಷಿ ವಿವಿ ರದ್ದು ಗೊಳಿಸಿತ್ತು. ಆದರೂ, ಪ್ರತಿಭಟನೆ ಮುಂದುವರಿಸಿದ್ದರಿಂದ ಉಪನಗರ ಠಾಣೆಯ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ವಿಜಯನಗರ | ಹಂಪಿ ಉತ್ಸವದ ಲೋಗೋ ರಚಿಸಿ, ಬಹುಮಾನ ಗೆಲ್ಲಿ : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ 2026ರ ಹಂಪಿ ಉತ್ಸವಕ್ಕೆ ನೂತನ ಲೋಗೋ ರಚಿಸುವ ಕಲಾವಿದರಿಗೆ ಜಿಲ್ಲಾಡಳಿತದಿಂದ ಸೂಕ್ತ ಬಹುಮಾನ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ಅವರ ಸಮ್ಮತಿ ಪಡೆದು 2025–26ನೇ ಸಾಲಿನ ಹಂಪಿ ಉತ್ಸವವನ್ನು ಫೆ.13, 14 ಮತ್ತು 15, 2026 ರಂದು ಅದ್ದೂರಿಯಾಗಿ ಆಚರಿಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ಸವಕ್ಕೆ ಹೊಸ ಲೋಗೋ ವಿನ್ಯಾಸಗೊಳಿಸುವುದು ಅಗತ್ಯವಾಗಿದ್ದು, ಆಸಕ್ತ ಕಲಾವಿದರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಲೋಗೋ ವಿನ್ಯಾಸ ಮಾಡಲು ಆಸಕ್ತ ಕಲಾವಿದರು ತಮ್ಮ ಪ್ರಸ್ತಾವನೆಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾ ಕಚೇರಿಗೆ ಜ.8ರೊಳಗೆ ಸಲ್ಲಿಸಬೇಕು. ನಿಗದಿತ ಅವಧಿ ನಂತರ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಪ್ಪಳ | ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರಕಾರ ಕಣ್ಮುಚ್ಚಿ ಕುಳಿತಿದೆ: ಹೇಮಲತಾ ನಾಯಕ ಆರೋಪ
ಕೊಪ್ಪಳ: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು, ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು, ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ಮಂಗಳವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಕಾರ್ಖಾನೆ ಪತ್ತೆಯಾಗಿವೆ. 56 ಕೋಟಿ ರೂ. ಮೌಲ್ಯದ ಕಚ್ಛಾ ವಸ್ತು ದೊರೆತಿವೆ. ಮೂವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದರು. ರಾಜಧಾನಿಯಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕಿಲ್ಲವಾ ಅಥವಾ ಇವರೇ ಬೆಂಬಲ ನೀಡುತ್ತಿದ್ದಾರಾ ಎಂಬುದನ್ನು ಸ್ಪಷ್ಟಪಡಿಸಬೇಕು. ಶಾಲಾ ಮಕ್ಕಳ ಕೈಗೂ ಸುಲಭವಾಗಿ ಡ್ರಗ್ಸ್ ದೊರೆಯುತ್ತಿದೆ. ಮದ್ಯ ಮಾರಾಟ ಮಿತಿ ಮೀರಿದೆ. ಇದಕ್ಕೆ ಕಡಿವಾಣ ಹಾಕುವ ಬದಲು ಕುಡಿದು ಬಿದ್ದವರನ್ನು ಮನೆಗೆ ತಲುಪಿಸಲಾಗುವುದೆಂದು ಗೃಹ ಸಚಿವರು ಹೇಳಿರುವುದು ಲಜ್ಜೆಗೇಡಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳದಲ್ಲಿ ಶಿಲ್ಪಾ ಗ್ರಾಂಡ್ ಹೋಟೆಲ್ ಹಿಂಭಾಗ, ಹಿಟ್ನಾಳ, ಮುನಿರಾಬಾದ್ ಹೀಗೆ ಎಲ್ಲ ಕಡೆಗಳಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ ಪತ್ತೆಯಾದ ಡ್ರಗ್ಸ್ ಪ್ರಕರಣಗಳು, ವಶಪಡಿಸಿಕೊಂಡ ಗಾಂಜಾ ಮಾಹಿತಿಯನ್ನೂ ಸರಿಯಾಗಿ ನೀಡಿಲ್ಲ. ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪರಾಮರ್ಶಿಸದೇ ಸಚಿವರು ಉತ್ತರ ಕೊಡುವ ಭಂಡತನ ಪ್ರದರ್ಶಿಸುತ್ತಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲೂ ಡ್ರಗ್ಸ್ ಜಾಲ ಹಬ್ಬಿದೆ. ಹಲವು ಜಿಲ್ಲೆಗಳಲ್ಲೂ ಪೆಡ್ಲಿಂಗ್ ನಡೆಯುತ್ತಿದೆ. ಇದಕ್ಕೆಲ್ಲ ಕಡಿವಾಣ ಬೀಳುತ್ತಿಲ್ಲ ಎಂದು ಹೇಳಿದರು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಪ್ರಮುಖರಾದ ನೀಲಕಂಠಯ್ಯ ಹಿರೇಮಠ, ಮಹೇಶ ಅಂಗಡಿ, ಪ್ರಸಾದ ಗಾಳಿ ಇದ್ದರು.
ಶಹಾಬಾದ್ | ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಶಹಾಬಾದ್: ಕಟ್ಟೆಯ ಮೇಲೆ ಅನಾವಶ್ಯಕವಾಗಿ ಕಾಲ ಕಳೆಯುವ ಯುವಕರ ನಡುವೆ ಸಮಾಜಕ್ಕೆ ಶಿಕ್ಷಣ ಹಾಗೂ ಸಾಹಿತ್ಯವನ್ನು ಪಸರಿಸುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಅತ್ಯಂತ ಸಂತೋಷದಾಯಕ ಸಂಗತಿ ಎಂದು ಬರಹಗಾರ ಕೆ.ಎಂ. ವಿಶ್ವನಾಥ ಮರತೂರು ಹೇಳಿದರು. ನಗರದ ಜಗದಂಬಾ ದೇವಸ್ಥಾನದ ಸಭಾಂಗಣದಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ, ಯಾದಗಿರಿ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ, 2025ನೇ ಸಾಲಿನ ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದ ಅವರು, ಈ ಸಂಸ್ಥೆ ಪ್ರತಿ ವರ್ಷ ಎಲೆಯ ಮರೆಯ ಕಾಯಿಯಂತೆ ಇರುವ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಅಭಿನಂದನಾರ್ಹ ಕಾರ್ಯವಾಗಿದೆ ಎಂದರು. ವಿಭಿನ್ನ ಹಾಗೂ ವಿನೂತನ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಮುಂದುವರೆಸಲಿ ಎಂದು ಆಶಿಸಿದರು. ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಕಲ್ಲಿನ ನಾಡಿನಲ್ಲಿ ಶಿಕ್ಷಣ ಹಾಗೂ ಉದ್ಯೋಗ ಗಗನಕುಸುಮವಾಗಿರುವ ಸಂದರ್ಭದಲ್ಲಿ ಸಾಹಿತ್ಯದ ಚಿಲುಮೆಯನ್ನು ಹರಿಯುವಂತೆ ಮಾಡುವ ಕಾರ್ಯ ಗಿರಿಸಿರಿ ಸಂಸ್ಥೆಯಿಂದ ನಡೆಯುತ್ತಿದೆ. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸತ್ಕಾರ ಮಾಡುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ದಸಂಸ ಮುಖಂಡರಾದ ಸುರೇಶ ಮೆಂಗನ್ ಹಾಗೂ ಆರಕ್ಷಕ ನಿರೀಕ್ಷಕ ನಟರಾಜ ಲಾಡೆ ಮಾತನಾಡಿ, ಸಂಸ್ಥೆ ಇನ್ನಷ್ಟು ಬೆಳವಣಿಗೆ ಹೊಂದಿ ಸಮಾಜಮುಖಿ ಚಟುವಟಿಕೆಗಳನ್ನು ಮುಂದುವರೆಸಲಿ ಎಂದು ಶುಭ ಹಾರೈಸಿದರು. ಗಿರಿಸಿರಿ ಸಂಸ್ಥೆಯ ಅಧ್ಯಕ್ಷ ಮರಲಿಂಗ ಯಾದಗಿರಿ ಮಾತನಾಡಿದರು. ಹಲಕರ್ಟಿಯ ರಾಜಶೇಖರ್ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಕರ್ತ ಲೋಹಿತ್ ಕಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷ ಅಶೋಕ ಯಾದಗಿರಿ, ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್, ಬಾಲರಾಜ ಮಾಚನೂರ, ಪತ್ರಕರ್ತ ರಮೇಶ ಭಟ್ಟ, ಕಸಾಪ ತಾಲೂಕಾಧ್ಯಕ್ಷ ಶರಣಬಸಪ್ಪ ಕೋಬಾಳ, ಶರಣು ಪಗಲಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2025ನೇ ಸಾಲಿನ ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರದಾನ ಮಾಡಲಾಯಿತು. ಕವಿಗೋಷ್ಠಿಯನ್ನೂ ಆಯೋಜಿಸಲಾಗಿತ್ತು. ಶಿಕ್ಷಕ ಗಿರಿಮಲ್ಲಪ್ಪ ವಳಸಂಗ ಕಾರ್ಯಕ್ರಮ ನಿರೂಪಿಸಿದರು. ದುರ್ಗಷ್ಟ ಪೂಜಾರಿ ಸ್ವಾಗತಿಸಿ, ಅನಿಲಕುಮಾರ ಮೈನಾಳಕರ್ ವಂದಿಸಿದರು. ಕಾರ್ಯಕ್ರಮದಲ್ಲಿ ಯಲ್ಲಾಲಿಂಗ ಹೈಯ್ಯಾಳಕರ್, ಬಸವರಾಜ ಮಯೂರ, ಪರಶುರಾಮ ಛಲವಾದಿ, ಭರತ್ ಧನ್ನಾ, ಶಂಕರ ಜಾನಾ, ಭಿಮಯ್ಯ ಗುತ್ತೇದಾರ್, ಲಕ್ಷ್ಮೀಕಾಂತ ಕಂದಗೂಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕುಸಿದ ಭಾರತಕ್ಕೆ ಆಸರೆಯಾದ ನಾಯಕಿ ಹರ್ಮನ್ ಪ್ರೀತ್ ಕೌರ್; ಶ್ರೀಲಂಕಾ ವಿರುದ್ಧ ಟಿ20 ಸರಣಿ ಕ್ಲೀನ್ ಸ್ವೀಪ್
India W Vs Sri Lanka W- ಭಾರತ ಮಹಿಳಾ ತಂಡವು ಶ್ರೀಲಂಕಾ ತಂಡವನ್ನು 5ನೇ ಟಿ20 ಪಂದ್ಯದಲ್ಲೂ ಸೋಲಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ಲೀಪ್ ಮಾಡಿಕೊಂಡಿದೆ. ತಿರುವನಂತಪುರದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂದಾನ ಮತ್ತು ಜೆಮಿಮಾ ರೋಡ್ರಿಗಸ್ ಗೆ ವಿಶ್ರಾಂತಿ ನೀಡಲಾಗಿತ್ತು. ಈ ಹಂತದಲ್ಲಿ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರು ತಂಡಕ್ಕೆ ಆಸರೆಯಾದರು. ಅವರ ಸಮಯೋಚಿತ 68 ರನ್ಗಳ ಅರ್ಧಶತಕ ಮತ್ತು ಅರುಂಧತಿ ರೆಡ್ಡಿ ಅವರ ಆಲ್ರೌಂಡ್ ಆಟ ತಂಡದ ಗೆಲುವಿಗೆ ಕಾರಣವಾಯಿತು.
ಸಂಶೋಧನೆಗಳು ವಿಮರ್ಶಾತ್ಮಕವಾಗಿದ್ದರೆ ಉತ್ತಮ : ಪ್ರೊ.ವೀಣಾದೇವಿ
ಡಾ.ಮನೋಹನ್ ಸಿಂಗ್ ವಿಶ್ವವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ: ಹರ್ಷ ವ್ಯಕ್ತಪಡಿಸಿದ ಸಂಸದ ಬ್ರಿಜೇಶ್ ಚೌಟ
ಮಂಗಳೂರು: ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ. ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದ ವಿದುದ್ದೀಕರಣ ಕಾಮಗಾರಿ ಯೋಜನೆ ಪೂರ್ಣಗೊಂಡ ಬಗ್ಗೆ ಪ್ರಕ್ರಿಯಿಸಿರುವ ಅವರು, ಈ ರೈಲು ಮಾರ್ಗದ ವಿದುದ್ದೀಕರಣ ಕಾರ್ಯ ಪೂರ್ಣಗೊಂಡಿರುವುದರಿಂದ ಬೆಂಗಳೂರು ಹಾಗೂ ಮಂಗಳೂರು ನಡುವಿನ ರೈಲು ಸಂಪರ್ಕ ಜಾಲ ಮಟ್ಟಷ್ಟು ಸುಧಾರಣೆಯಾಗಲಿದ್ದು, ಪ್ರಯಾಣಿಕರ ಸಂಚಾರದ ಜತೆಗೆ ಮಂಗಳೂರಿಗೆ ಸರಕು ಸಾಗಣೆ ಜತೆಗೆ ಬಂದರು ಹಾಗೂ ವ್ಯಾಪಾರ ಚಟುವಟಿಕೆಗಳ ವೃದ್ಧಿಗೂ ಮತ್ತಷ್ಟು ಅನುಕೂಲ ಕಲ್ಪಿಸಲಿದೆ. ಆ ಮೂಲಕ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಅತ್ಯಂತ ಪ್ರಮುಖ ರೈಲ್ವೆ ಮೂಲಸೌಕರ್ಯ ಸುಧಾರಿಸುವ ಬೇಡಿಕೆ ಈಡೇರಿದೆ ತಮ್ಮ ಅವಿರತ ಪರಿಶ್ರಮದ ಫಲ ಹಾಗೂ ನಿರಂತರ ಫಾಲೋಅಪ್ ನಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆವರೆಗಿನ 55 ಕಿಮೀ. ರೈಲು ಮಾರ್ಗ ವಿದ್ಯುದ್ದೀಕರಣಗೊಂಡಿದೆ ಎಂದು ಸಂಸತ ವ್ಯಕ್ತಪಡಿಸಿದ್ದಾರೆ.
ಶಹಾಬಾದ್ | ಈ ನಾಡಿನ ಸಾಂಸ್ಕೃತಿಕ ರಾಯಭಾರಿ ಕುವೆಂಪು : ಮಲ್ಲಿನಾಥ ಪಾಟೀಲ
ಶಹಾಬಾದ್: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹಾನ್ ಸಾಹಿತಿ ಹಾಗೂ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಕುವೆಂಪು ಅವರನ್ನು ಕನ್ನಡ ಜನತೆ ಗುರುತಿಸಿದೆ ಎಂದು ಎಸ್.ಜಿ. ವರ್ಮಾ ಹಿಂದಿ ಶಾಲೆಯ ಮುಖ್ಯಗುರು ಮಲ್ಲಿನಾಥ ಪಾಟೀಲ ಹೇಳಿದರು. ಸೋಮವಾರ ನಗರದ ಎಸ್.ಜಿ. ವರ್ಮಾ ಹಿಂದಿ ಶಾಲೆಯಲ್ಲಿ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯದ ಶಾಶ್ವತ ನಾಯಕ ಕುವೆಂಪು ಎಂಬುದನ್ನು ಕನ್ನಡ ಮನಸ್ಸುಗಳು ಹೃದಯಪೂರ್ವಕವಾಗಿ ಅಂಗೀಕರಿಸಿದ್ದೇವೆ ಎಂದು ತಿಳಿಸಿದರು. ಕುವೆಂಪು ಅವರಿಗೆ ಬೇರೆ ಯಾವುದೇ ಸಾಹಿತಿಗೆ ಸಿಗದಂತಹ ಗೌರವ ಶ್ರೀಸಾಮಾನ್ಯರಿಂದ ದೊರೆತಿದ್ದು, ಅದು ಅವರು ಕರ್ನಾಟಕ ರತ್ನ, ರಾಷ್ಟ್ರಕವಿ ಸೇರಿದಂತೆ ಅನೇಕ ಬಿರುದುಗಳನ್ನು ಪಡೆದಿದ್ದಕ್ಕಾಗಿ ಮಾತ್ರವಲ್ಲ. ತಮ್ಮ ಸಾಹಿತ್ಯದಲ್ಲಿ ಹೃದಯವಂತಿಕೆ, ವಿಶಾಲ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿದ ಕಾರಣಕ್ಕಾಗಿ ಈ ಗೌರವ ಲಭಿಸಿದೆ ಎಂದು ಹೇಳಿದರು. ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲ ಸಾಹಿತಿಯಾಗಿರುವ ಕುವೆಂಪು ಅವರು, ಮೂಢನಂಬಿಕೆ ವಿರೋಧಿ ಸಾಹಿತ್ಯ ಕೃಷಿಯ ಮೂಲಕ ಇಡೀ ಜಗತ್ತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. 20ನೇ ಶತಮಾನದ ಶ್ರೇಷ್ಠ ಸಾಹಿತಿಯಾಗಿರುವ ಅವರು ಮಹಾನ್ ದಾರ್ಶನಿಕ ಹಾಗೂ ವೈಚಾರಿಕ ಕವಿಯಾಗಿದ್ದಾರೆ ಎಂದು ಮಲ್ಲಿನಾಥ ಪಾಟೀಲ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಸಾಬಣ್ಣ ಗುಡುಬಾ ಹಾಗೂ ದೈಹಿಕ ಶಿಕ್ಷಕ ಚನ್ನಬಸಪ್ಪ ಕೊಲ್ಲೂರ್ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರಾದ ರಮೇಶ ಜೋಗದನಕರ್, ಚಂದುಲಾಲ ಬಸೂದೆ, ಗೀತಾ ಸಿಪ್ಪಿ, ರಂಜಿತಾ ಹಿರೇಮಠ, ಭಾರತಿ ಚವ್ಹಾಣ, ಸುರೇಖಾ ಜಾಯಿ, ಶೋಭಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜ.3 ರಂದು ಐಎಂಎ - ಎಎಂಸಿ ಕ್ರಿಕೆಟ್: ಜಾವಗಲ್ ಶ್ರೀನಾಥ್ ಉದ್ಘಾಟನೆ
ಮಂಗಳೂರು ಡಿ. 30: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಐಎಂಎ - ಎಎಂಸಿ ಪ್ರೀಮಿಯರ್ ಲೀಗ್- 2026 ವಾರ್ಷಿಕ ಕ್ರಿಕೆಟ್ ಟೂರ್ನಮೆಂಟ್ ಜ.3ರಂದು ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ನಗರದ ವೆನ್ಲಾಕ್ ಆಸ್ಪತ್ರೆಯ ತಜ್ಞರಾದ ದಿ. ಡಾ. ಎಂ. ವಿ. ಶೆಟ್ಟಿ , ದಿ. ಡಾ. ಚೌಡಯ್ಯ ಕ್ರಿಕೆಟ್ ಬಗ್ಗೆ ಅತಿಯಾದ ಆಸಕ್ತಿ ಹೊಂದಿದ್ದು, ಇವರ ಸ್ಮರಣಾರ್ಥ ಈ ಕ್ರಿಕೆಟ್ ಟೂರ್ನಮೆಂಟ್ನ್ನು ಆಯೋಜಿಸಲಾಗುತ್ತದೆ. ಭಾರತ ಕ್ರಿಕೆಟ್ ತಂಡ ಮಾಜಿ ಬೌಲರ್ ಜಾವಗಲ್ ಶ್ರೀನಾಥ್ ಅವರು ಟೂರ್ನಮೆಂಟ್ನ್ನು ಅಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ ಚಾನ್ಸಲರ್ ಹಾಗೂ ತೇಜಸ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಎಂ. ಶಾಂತಾರಾಮ ಶೆಟ್ಟಿ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಟಿ. ಎ. ವೀರಭದ್ರಯ್ಯ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿ, ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ, ಕೋಶಾಧಿಕಾರಿ ಡಾ. ಜ್ಯೂಲಿಯನ್ ಸಲ್ಡಾನ ಹಾಗೂ ವೈದ್ಯಕೀಯ ತಜ್ಞರ ಸಂಘದ ಮಂಗಳೂರು ಶಾಖೆ ಅಧ್ಯಕ್ಷ ಡಾ. ಆನಂದ ಬಂಗೇರ, ಕಾರ್ಯದರ್ಶಿ ಡಾ. ಉಲ್ಲಾಸ ಶೆಟ್ಟಿ, ಕೋಶಾಧಿಕಾರಿ ಡಾ. ಗೋವಿಂದರಾಜ್ ಭಟ್ ಉಪಸ್ಥಿತರಿರುವರು. ಕ್ರಿಕೆಟ್ ಸಂದರ್ಭದಲ್ಲಿ ಮನರಂಜನಾ ಕಾರ್ಯಕ್ರಮದ ಅಂಗವಾಗಿ ಸಂಗೀತ, ಗಾಯನ ಮತ್ತು ಹುಲಿವೇಶ ಕುಣಿತವನ್ನು ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಕರ್ನಾಟಕದಲ್ಲಿ ಯುವ ಆಯೋಗದ ಸ್ಥಾಪನೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ
ಬೆಂಗಳೂರು : ರಾಜ್ಯದಲ್ಲಿ ಯುವ ಆಯೋಗವನ್ನು ಸ್ಥಾಪಿಸುವಂತೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಪ್ರಕಟನೆ ನೀಡಿರುವ ಅವರು, ಇದರಿಂದ ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಯುವ ಆಯೋಗಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಕೇರಳ, ಅಸ್ಸಾಂ, ಮಿಜೋರಾಂ ಮತ್ತು ಬಿಹಾರ ರಾಜ್ಯಗಳ ಅನುಭವಗಳು, ಯುವ ಆಯೋಗಗಳು ಯುವಕರ ಹಕ್ಕುಗಳ ರಕ್ಷಣೆ, ನೀತಿ ರೂಪಣೆ, ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಮಾದಕ ವ್ಯಸನ ವಿರೋಧಿ ಕ್ರಮಗಳು ಮತ್ತು ಮಾನಸಿಕ ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಇನ್ನೂ ಯುವ ಆಯೋಗ ಸ್ಥಾಪನೆಯಾಗದೆ ಇರುವುದು ಅತ್ಯಂತ ವಿಷಾದಕರ ಹಾಗೂ ಯುವಕರ ಮೇಲಿನ ಅನ್ಯಾಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಪ್ರಸ್ತುತ ಸರಕಾರವು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಯುವ ಆಯೋಗ ಸ್ಥಾಪಿಸುವುದಾಗಿ ಘೋಷಣೆ ಮಾಡಿತ್ತು. ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆಯ ಬೇಡಿಕೆಯೇನೆಂದರೆ, ಸರಕಾರವು ತನ್ನ ಚುನಾವಣಾ ಭರವಸೆಯನ್ನು ಕಾರ್ಯರೂಪಕ್ಕೆ ತಂದು ತಕ್ಷಣ ಯುವ ಆಯೋಗ ಸ್ಥಾಪನೆಯ ಅಧಿಸೂಚನೆಯನ್ನು ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಎರಡು ಕೋಟಿಗೂ ಅಧಿಕ ಯುವ ಜನಸಂಖ್ಯೆ ಇದೆ. ಇಂದು ಯುವಕರು ನಿರುದ್ಯೋಗ, ಶಿಕ್ಷಣದಲ್ಲಿನ ಅಸಮಾನತೆ, ಮಾದಕ ವಸ್ತುಗಳ ಹೆಚ್ಚುತ್ತಿರುವ ಬಳಕೆ, ಮಾನಸಿಕ ಒತ್ತಡ, ಆತ್ಮಹತ್ಯೆಗಳ ಆತಂಕಕಾರಿ ಪ್ರಕರಣಗಳು ಮತ್ತು ರಾಜಕೀಯ ಹಾಗೂ ಸಾಮಾಜಿಕ ಪ್ರತಿನಿಧಿತ್ವದ ಕೊರತೆ ಮುಂತಾದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯುವಜನಸಂಖ್ಯೆಯ ಪ್ರಮಾಣ ಮತ್ತು ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಕಷ್ಟವನ್ನು ಗಮನಿಸಿದರೆ, ಇನ್ನಷ್ಟು ವಿಳಂಬ ಅಸ್ವೀಕಾರಾರ್ಹ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಸಬಲ, ಸ್ವಾಯತ್ತ ಹಾಗೂ ಜವಾಬ್ದಾರಿಯುತ ಯುವ ಆಯೋಗ ಅನಿವಾರ್ಯವಾಗಿದೆ. ಇದು ರಾಜ್ಯದ ಯುವ ನೀತಿಯ ಉದ್ದೇಶಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ. ಯುವಕರ ಹಕ್ಕುಗಳ ರಕ್ಷಣೆ ಹಾಗೂ ಉಲ್ಲಂಘನೆಗಳ ತನಿಖೆ, ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಕುರಿತು ಶಿಫಾರಸುಗಳು, ಮಾನಸಿಕ ಆರೋಗ್ಯ, ವ್ಯಸನ ವಿರೋಧಿ ಕ್ರಮಗಳು ಮತ್ತು ಸಾಮಾಜಿಕ ಅನಿಷ್ಟಗಳ ವಿರುದ್ಧ ಪರಿಣಾಮಕಾರಿ ಕಾರ್ಯತಂತ್ರ, ಯುವಕರ ದೂರುಗಳ ಪರಿಹಾರಕ್ಕೆ ವ್ಯವಸ್ಥಿತ ಮತ್ತು ಪಾರದರ್ಶಕ ವ್ಯವಸ್ಥೆ, ಯುವಕರ ರಾಜಕೀಯ ಮತ್ತು ಸಾಮಾಜಿಕ ನಾಯಕತ್ವವನ್ನು ಉತ್ತೇಜಿಸುವ ಕ್ರಮಗಳು, ರಾಜ್ಯಮಟ್ಟದ ಆಯ್ಕೆಯಾದ ಸಂಸ್ಥೆಗಳು (ವಿಧಾನಸಭೆ/ವಿಧಾನಪರಿಷತ್) ಹಾಗೂ ವಿವಿಧ ನಾಮನಿರ್ದೇಶಿತ ಸಂಸ್ಥೆಗಳಲ್ಲಿ ಯುವಕರ ಪ್ರತಿನಿಧಿತ್ವವನ್ನು ಖಚಿತಪಡಿಸುವುದು, ಜೊತೆಗೆ ಕಾರ್ಪೋರೇಷನ್ಗಳು, ಬೋರ್ಡ್ಗಳು, ಸಮಿತಿಗಳು ಮತ್ತು ಇತರೆ ಸರ್ಕಾರಿ ಸಂಸ್ಥೆಗಳಲ್ಲಿ ಸಮರ್ಪಕ ಯುವ ಪ್ರತಿನಿಧಿತ್ವಕ್ಕಾಗಿ ಸ್ಪಷ್ಟ ಶಿಫಾರಸುಗಳು ಮತ್ತು ಕಾರ್ಯವಿಧಾನ ರೂಪಿಸುವುದು ಸೇರಿದಂತೆ ಪ್ರಸ್ತಾವಿತ ಯುವ ಆಯೋಗಕ್ಕೆ ಈ ಅಧಿಕಾರಗಳು ಮತ್ತು ಜವಾಬ್ದಾರಿಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು ಮತ್ತು ಶಾಸಕರು ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಲು ಯುವ ಆಯೋಗ ಸ್ಥಾಪನೆಯ ತುರ್ತು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ಎಲ್ಲೆಲ್ಲಿ ಸಂಚಾರ ನಿರ್ಬಂಧ, ಪಾರ್ಕಿಂಗ್ ವ್ಯವಸ್ಥೆ ಎಲ್ಲೆಲ್ಲಿ ಇರಲಿದೆ?
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಈಗಾಗಲೇ ಅದ್ದೂರಿಯಾಗಿ ಸಿದ್ಧತೆ ನಡೆಸಲಾಗುತ್ತಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲದ ರಸ್ತೆಗಳು ವಿದ್ಯುತ್ ಅಲಂಕಾರಗಳಿಂದ ಕಂಗೊಳಿಸುತ್ತಿವೆ. ಯುವ ಸಮೂಹ ಸೇರುವ ಸ್ಥಳಗಳಲ್ಲಿ ವಿಶೇಷ ಆಫರ್ಗಳು, ಡಿಜೆ ಪಾರ್ಟಿಗಳು ಆಯೋಜನೆಗೊಂಡಿವೆ. ಹೊಸವರ್ಷದ ದಿನ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ತಡೆಯಲು ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ. ಯಾವ್ಯಾವ ರಸ್ತೆಗಳಿಗೆ ಸಂಚಾರ ನಿರ್ಬಂಧ, ಎಲ್ಲೆಲ್ಲಿ ವಾಹನಗಳು ನಿಲ್ಲಿಸಬಾರದು ಎನ್ನುವ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.
ಚಿಂಚೋಳಿ | ಜೆಡಿಎಸ್ ಪಕ್ಷಕ್ಕೆ ಸಂಜೀವನ ಯಾಕಾಪೂರ್ ರಾಜೀನಾಮೆ
ಚಿಂಚೋಳಿ: ನನ್ನ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಚಿಂಚೋಳಿ ಮತಕ್ಷೇತ್ರದ ಹಿರಿಯ ಮುಖಂಡ ಸಂಜೀವನ ರಮೇಶ ಯಾಕಾಪೂರ ಹೇಳಿದ್ದಾರೆ. ಚಂದಾಪೂರ ಪಟ್ಟಣದ ಟಿಎಪಿಎಂಎಸ್ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಾನು ಜೆಡಿಎಸ್ ನಲ್ಲಿದ್ದಾಗ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಹಲವು ಜನಪರ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ, ಜನ ಪರಧ್ವನಿ ಎತ್ತಿದ್ದೇನೆ. ಕಳೆದ ಎರಡ್ಮೂರು ವರ್ಷಗಳಿಂದ ಚಿಂಚೋಳಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷ ಕಟ್ಟಿ ಬೆಳೆಸಿದ್ದೇನೆ, ಈಗ ನನ್ನಿಂದ ಸಾದ್ಯವಾಗದ ಕಾರಣದಿಂದ ಪಕ್ಷಕ್ಕೆ ನನ್ನಿಂದ ಯಾವುದೆ ಮುಜಗರ ಅಡ್ಡಿ ಆಗಬಾರದೆಂದು ಮನಗಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದೇವೆ. ಈಗಾಗಲೇ ನನ್ನ ರಾಜಿನಾಮೆ ಪತ್ರವನ್ನು ಕರ್ನಾಟಕ ಪ್ರದೇಶ ಜನತಾ ದಳ ರಾಜ್ಯ ಅಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ರವಾನಿಸಲಾಗಿದೆ ಎಂದರು. ಕಳೆದ 2023 ವಿಧಾನ ಸಭೆ ಚುನಾವಣೆಯಲ್ಲಿ ಚಿಂಚೋಳಿ ಮಿಸಲು ಕ್ಷೇತ್ರದಿಂದ ಜೆ.ಡಿ.ಎಸ್ ಪಕ್ಷದಿಂದ ಟಿಕೇಟ್ ನೀಡಿ ಅವಕಾಶ ಮಾಡಿಕೊಟ್ಟ ಜೆ.ಡಿ.ಎಸ್ ಪಕ್ಷದ ವರಿಷ್ಠರಾದ ಹೆಚ್.ಡಿ ದೇವೆಗೌಡರಿಗೆ ಹಾಗೂ ರಾಜ್ಯ ಅಧ್ಯಕ್ಷರಾದ ಹೆಚ್ ಡಿ ಕುಮಾರಸ್ವಾಮಿ ರವರಿಗೆ ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರಿಗೆ ಹಾಗೂ ತಾಲೂಕಿನ ಎಲ್ಲಾ ಮುಖಂಡರು ಕಾರ್ಯಕರ್ತರಿಗೆ ನಾನು ನನ್ನ ಧನ್ಯವಾದಗಳನ್ನು ಹೇಳುತ್ತೇನೆ, ಮುಂದಿನ ನಿರ್ಣಯವನ್ನು ನನ್ನ ಬೆಂಬಲಿಗರು ನನ್ನ ಹಿತೈಷಿಗಳನ್ನು ಹಾಗೂ ಮುಖಂಡರ ಸಭೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಈ ವೇಳೆ ವಿಷ್ಟಣುಕಾಂತ ಮೂಲಗೆ, ಗೌರಿಶಂಕರ ಸೂರವಾರ, ರಾಹುಲ ಯಾಕಾಪೂರ, ರಘವೀರ ದೇಸಾಯಿ, ಮಲ್ಲಿಕಾರ್ಜುರ್ನ ದೇಸಾಯಿ, ಮಲ್ಲಿಕಾರ್ಜುನ ಪೂಜಾರಿ, ಹಣಮಂತ ಕಟ್ಟಿ, ರೇವಣಸಿದ್ದಪ್ಪ ಬುಬುಲಿ, ಯಶವಂತ, ಚಂದ್ರಕಾಂತ ಧರಿ, ನಾಗೇಂದ್ರಪ್ಪ, ಬಸವರಾಜ, ಸೈಯದ್, ನಿಯಾಜ್ ಅಲಿ, ವೀರಾರೆಡ್ಡಿ, ಅಹ್ಮದ್ ಸೇರಿದಂತೆ ಇತರ ಮುಖಂಡರು ಸಾಮೂಹಿಕ ರಾಜಿನಾಮೆ ನೀಡಿದರು.
ಯಾದಗಿರಿ | ಮೂಢನಂಬಿಕೆ ಅಳಿಸಿ ವೈಜ್ಞಾನಿಕ ಮನೋಭಾವ ಬೆಳೆಸೋಣ : ಡಾ.ದಾಕ್ಷಾಯಣಿ ಎಸ್.ಅಪ್ಪ
ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಸಮಾರೋಪ
ಹೊಸ ವರ್ಷಾಚರಣೆ: ಮಾರ್ಗಸೂಚಿಗಳ ಕಡ್ಡಾಯವಾಗಿ ಪಾಲಿಸಲು ಪೊಲೀಸ್ ಆಯುಕ್ತರ ಆದೇಶ
ಮಂಗಳೂರು, ಡಿ.30: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಇಂತಿವೆ. *ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. *ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. *ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. *ನಗರದಾದ್ಯಂತ ಬಂದೋಬಸ್ತ್ ಕರ್ತವ್ಯ ಬಗ್ಗೆ ಪಿಸಿಆರ್ ವಾಹನಗಳು, ಹೈವೇಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್ ಪೋಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾ ಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆಎಸ್ಆರ್ಪಿ, ಎಸ್ಎಎಫ್ ಹಾಗೂ ಸಿಎಆರ್ಪಿ ತುಕಡಿಗಳನ್ನುನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆ ಕರೆ ಮಾಡಬಹುದು. 112ಸಂಖ್ಯೆಯು ಕರೆಗೆ ಲಭ್ಯವಾ ಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆಮಾಡ ಬಹುದಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.
ಮೂಡುಬಿದಿರೆ : ಅಂತಾರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನಾಲ್ವರು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಡಿಸೆಂಬರ್ 27 ರಿಂದ 29ರವರೆಗೆ ನಡೆದ ದಕ್ಷಿಣ ಏಷ್ಯಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಯಲಕ್ಷ್ಮಿ ಭಾರತ ಮಹಿಳಾ ತಂಡದ ನಾಯಕಿಯಾಗಿ ಸ್ಪರ್ಧೆಯಲ್ಲಿ ಪಾಲ್ಗೊಂಡು, ತಂಡವನ್ನು ಜಯಗಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅತಿಥೇಯ ಭಾರತವಲ್ಲದೆ ನೇಪಾಳ, ಶ್ರೀಲಂಕಾ ಹಾಗೂ ಭೂತಾನ್ ತಂಡಗಳು ಈ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಇದರ ಜೊತೆಗೆ, ಜನವರಿ 1ರಿಂದ 5, 2026ರವರೆಗೆ ನೇಪಾಳದ ಕಠ್ಮಂಡುವಿನ ಬಿರ್ಗುಂಜ್ನಲ್ಲಿ ನಡೆಯುವ ಇಂಡೋ-ನೇಪಾಳ ಬಾಲ್ ಬ್ಯಾಡ್ಮಿಂಟನ್ ಟೆಸ್ಟ್ ಸರಣಿಗೆ ಆಳ್ವಾಸ್ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಪ್ರಶಾಂತ್ ಹೆಚ್.ಜಿ., ಸಾವಿತ್ರಿ ರಮೇಶ್ ಕರಿಗಾರ್ ಮತ್ತು ಲಾಂಛನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಬಳ್ಳಾರಿ | ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಿಸಿ ನಾಗೇಂದ್ರ ಪ್ರಸಾದ್ ಕೆ.
ಬಳ್ಳಾರಿ,ಡಿ.30: ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ವಿಧಾನಪರಿಷತ್ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 3,302 ಮತದಾರರು ನೋಂದಣಿಯಾಗಿದ್ದಾರೆ. ಬಳ್ಳಾರಿ, ಬಳ್ಳಾರಿ ನಗರ, ಕಂಪ್ಲಿ, ಕುರುಗೋಡು, ಸಂಡೂರು, ಸಿರುಗುಪ್ಪ ಸೇರಿ ಬಳ್ಳಾರಿ ಜಿಲ್ಲೆಯಲ್ಲಿ ಗಂಡು-1,775, ಹೆಣ್ಣು-1,527 ಸೇರಿ ಒಟ್ಟು 3,302 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಅಂತಿಮ ಮತದಾರರ ಪಟ್ಟಿಯ ನಿರಂತರ ನೋಂದಣಿ ಪ್ರಕ್ರಿಯೆಯಾಗಿದ್ದು, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹರು ಅವಶ್ಯಕ ದಾಖಲೆಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ತಿಳಿಸಿದ್ದಾರೆ.
ಕೊರಗ ಸಮುದಾಯಕ್ಕೆ ಜಿಲ್ಲಾಡಳಿತ, ತಾಲೂಕು ಕಚೇರಿ, ಮನಪಾದಿಂದ ಮೋಸ: ಮುಖಂಡರ ಆರೋಪ
ಸುರತ್ಕಲ್ : ಇಲ್ಲಿನ ಗ್ರಾಮದ ಸರ್ವೆ ನಂಬರ್ 211-ಬಿ ಯಲ್ಲಿನ ಬಡ ಕೊರಗ ಕುಟುಂಬಗಳಿಗೆ ಎರಡೆರಡು ಬಾರಿ ಭೂಮಂಜೂರಾತಿ ಮಾಡುವ ಮೂಲಕ ಜಿಲ್ಲಾಡಳಿತ, ತಾಲೂಕು ಕಚೇರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೋಸ ಮಾಡಿದೆ ಎಂದು ಆರೋಪಿಸಿ ಕೊರಗ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಸುರತ್ಕಲ್ ವಲಯದ ವತಿಯಿಂದ ಸರ್ವೆ ನಂಬರ್ 211-ಬಿಯಲ್ಲಿನ ಬಡ ಕೊರಗ ಕುಟುಂಬಗಳಿಗೆ ಎರಡೆರಡು ಬಾರಿ ಭೂಮಂಜೂರಾತಿ ಮಾಡುವ ಮೂಲಕ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಇಂದು ಸುರತ್ಕಲ್ ನಾಡಕಚೇರಿ ಎದುರು ಪ್ರತಿಭಟನೆ ನಡೆಸಿದರು. 1981ರಲ್ಲಿ ಸುರತ್ಕಲ್ ಗ್ರಾಮ ಪಂಚಾಯತ್ ಆಗಿದ್ದ ಸಂದರ್ಭ ಸರ್ವೇ ನಂಬರ್ 211 ಬಿ ಮಧ್ಯ ಎಂಬಲ್ಲಿ ಕೊರಗ ಸಮುದಾಯದ ಸುನಾರು 31ಮಂದಿಗೆ 5ಸೆಂಟ್ಸ್ ನಂತೆ ನವೇಶನ ಮಂಜೂರಾತಿ ಮಾಡಲಾಗಿತ್ತು. ಅದರಂತೆ ಕೆಲವರು ಸರಕಾರದ ಸಹಾಯ ಧನ ಪಡೆದುಕೊಂಡು ಮನೆಗಳನ್ನು ನಿರ್ಮಿಸಿದ್ದರು. ಬಳಿಕ 2003ರಲ್ಲಿ ಮಹಾ ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಅದೇ 5ಸೆಂಟ್ಸ್ ನಿವೇಶದ ಬದಲಿಗೆ ಪ್ರತೀ ಕುಟುಂಬಕ್ಕೆ 1.25ಸೆಂಟ್ಸ್ ನಿವೇಶನ ಮಂಜೂರು ಮಾಡಿ ಹಕ್ಕುಪತ್ರ ನೀಡಿದ್ದಾರೆ. ಇದೇ ವಿಚಾರವಾಗಿ ಕೊರಗ ಸಮುದಾಯದ ಮುಖಂಡರು ಹಲವು ಬಾರಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಭೇಟಿ ಯಾಗಿ ಮನವಿಗಳನ್ನು ಸಲ್ಲಿಸಿದ್ದರು. ಅಲ್ಲದೆ, 2025ರ ಏಪ್ರಿಲ್ 15ರಂದು ತಹಶೀಲ್ದಾರ್ ಮತ್ತು ಮಹಾ ನಗರ ಪಾಲಿಕೆಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದು ಈ ವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಮನಪಾದ ನಿರ್ಲಕ್ಯ ಮತ್ತು ತಪ್ಪುಗಳಿಂದಾಗಿ ನಮ್ಮ ಮನೆಗಳನ್ನು ಸರಿಪಡಿಸುವುದಾಗಲೀ, ಹೊಸ ಮನೆಗಳ ನಿರ್ಮಾಣ ಮಾಡುವುದಾಗಲೀ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಕ್ಷಣ ನಮ್ಮ ಮನವಿಯನ್ನು ಪುರಸ್ಕರಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೊರಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸದಸ್ಯರಾದ ಶೇಖರ ವಾಮಂಜೂರು ಅವರು, ನಮ್ಮ ಸಮುದಾಯಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ತಪ್ಪುಗಳಿಂದಾಗಿ ನಮಗೆ ತೊಂದರೆಗಳಾಗುತ್ತಿದೆ. ನಮಗೆ ಕೈಗೆ ಬೆನ್ನೆ ಸವರಿ ಮುಂಗೈನೆಕ್ಕಿಸುವ ಕೆಲಸ ಅಧಿಕಾರಿಗಳು ಮಾಡುತ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಕೊಂಡುಹೋದರೆ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ನಮ್ಮನ್ನು ಅಲೆದಾಡಿಸುತ್ತಿದ್ದಾರೆ. ನಮ್ಮ ಬೇಡಿಕೆಗಳನ್ನು ಶೀಘ್ರ ನೆರವೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಪ್ರತಿಭಟನಾಕಾರರು ಸುರತ್ಕಲ್ ವಲಯದ ಉಪ ತಹಶೀಲ್ದಾರ್ ನವೀನ್ ಅವರಿಗೆ ಮನವಿಪತ್ರ ನೀಡಿ ತಮ್ಮ ಬೇಡಿಕೆಗಳನ್ನು ಅವರ ಮುಂದಿಟ್ಟರು. ಮನವಿ ಸ್ವೀಕರಿಸಿ ಮಾತನಾಡಿದ ಉಪತಹಶೀಲ್ದಾರ್ ಅವರು, ಕೊರಗ ಸಮುದಾಯದ ಸಮಸ್ಯೆಗಳನ್ನು ಕೂಲಂಕಷವಾಗಿ ವಿವರಿಸಿ ತಕ್ಷಣವೇ ಮನವಿಯನ್ನು ತಹಶೀಲ್ದಾರ್, ಜಿಲ್ಲಾಧಿಕಾರಿ ಗಳಿಗೆ ತಲುಪಿಸಲಾಗುವುದು. ಶೀಘ್ರವೇ ಮಧ್ಯ ಸಮುದಾಯದ ಕಾಲನಿಗೆ ಭೇಟಿ ನೀಡಿ ಪರಿಹಾರ ಯೋಜನೆಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು. ನಾವು 5ಸೆಂಟ್ಸ್ ನಿವೇಶನ ಹೊಂದಿದ್ದರೂ ಮನಪಾ ನಮಗೆ 1.25 ಸೆಂಟ್ಸ್ ನ ಹಕ್ಕುಪತ್ರ ನೀಡಿದೆ. ಇದು ಸುಳ್ಳಾದ ಹಕ್ಕು ಪತ್ರ. ಈ ಹಕ್ಕು ಪತ್ರದಿಂದ ನಮಗೆ ಹೊಸ ಮನೆ ನಿರ್ಮಾಣಕ್ಕೆ ತೊಂದರೆಯಾಗಿದೆ. ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸಲು 2ತಿಂಗಳ ಕಾಲಾವಕಾಶ ನೀಡುತ್ತಿದ್ದೇವೆ. ಆಬಳಿಕವೂ ನಮ್ಮ ಸಮಸ್ಯೆ ಪರಿಹಾರವಾಗದಿದ್ದಲ್ಲಿ ಸಮುದಾಯದ ಎಲ್ಲರೂ ಮಕ್ಕಳು ಮರಿಗಳೊಂದಿಗೆ ಮನಾಪ ಕಚೇರಿಯಲ್ಲೆ ಬಂದು ಕುಳಿತುಕೊಳ್ಳುತ್ತೇವೆ. - ಕರಿಯ ಕೆ., ಅಧ್ಯಕ್ಷ, ವಾಮಂಜೂರು ವಲಯ 1981ರಲ್ಲಿ ನೀಡಿದ್ದ 5ಸೆಂಟ್ಸ್ ನಿವೇಶನ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಯಾಕೆ 1.25 ಸೆಂಟ್ಸ್ ಆಯಿತು. ಅಧಿಕಾರಿಗಳು ಕಣ್ಣುಮುಚ್ಚಿ ಕೆಲಸ ಮಾಡುತ್ತಿದ್ದಾರಾ?. ಅಧಿಕಾರಿಗಳು ಕೊರಗ ಸಮುದಾಯ ವನ್ನು ಅವರ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆದು ಕೊಳ್ಳಲು ಅಲೆದಾಡಿಸುತ್ತಿದ್ದಾರೆ. ಅಧಿಕಾರಿಗಳು ಅವರನ್ನೂ ಮನುಷ್ಯರೆಂದು ಪರಿಗಣಿಸಿದಂತೆ ಇಲ್ಲ. ಹಾಗಾಗಿ ಅವರನ್ನು ಮನುಷ್ಯರಾಗಿ ಪರಿಗಣಿಸಿ ಅವರಜೊತೆ ನಿಂತು ಅವರ ಅಭಿವೃದ್ಧಿಗೆ ಶ್ರಮಿಸಬೇಕು. - ಶ್ರೀನಾಥ್ ಕುಲಾಲ್ ಕಾಟಿಪಳ್ಳ ಗೌರವ ಸಲಹೆಗಾರರು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ಆರೋಪ: ಸರ್ಜನ್ ವರದಿಯಂತೆ ಪ್ರಕರಣ ದಾಖಲು
ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝಬೇದ್(52) ಎಂಬವರು ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಡ್ರಿಪ್ಸ್ ಹಾಕಿದರು. ಈ ವೇಳೆ ವೈದ್ಯರು ಬಂದು ಪರಿಶೀಲಿಸುವಂತೆ ಝುಬೇದ ಅವರ ಮಗಳು ಮುಬೀನಾ ಕೇಳಿಕೊಂಡರು, ವೈದ್ಯರು ಬಂದಿರುವುದಿಲ್ಲ, ನಂತರ ಬಂದ ಡಾ.ನಾಗರತ್ನ ಕೂಡಲೇ ಆಪರೇಷನ್ ಮಾಡಬೇಕು, ಝುಬೇದ ಅವರ ಜೀವಕ್ಕೆ ಅಪಾಯ ಇದೆ ಎಂದು ಹೇಳಿದರು. ನಂತರ ಅವರನ್ನು ಆಸ್ಪತ್ರೆಯ ಥಿಯೇಟರ್ಗೆ ಕರೆದುಕೊಂಡು ಹೋಗಿದ್ದು, ನಂತರ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಆಪರೇಷನ್ ಥಿಯೇಟರ್ ಒಳಗಡೆ ಹೋಗಿದ್ದು, ನಂತರ ಹೊರಗಡೆ ಬಂದ ಡಾ.ರೆಹಮತ್ತುಲ್ಲಾ, ಝುಬೇದ ಮೃತಪಟ್ಟಿರುವುದಾಗಿ ತಿಳಿಸಿದರು. ಝಬೇದ್ ಅವರಿಗೆ ವೈದ್ಯಾಧಿಕಾರಿಯವರು ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡದೇ ಹಾಗೂ ಸರಿಯಾಗಿ ಪರೀಕ್ಷೆ ಮಾಡದೇ ನಿರ್ಲಕ್ಷತನದಿಂದ ಆಪರೇಷನ್ ಮಾಡಿರುವುದು ಎಂದು ಆರೋಪಿಸಿ ಮುಬೀನಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಮೃತ ಝಬೇದ್ ಅವರ ಮರಣದ ಬಗ್ಗೆ ಹಾಗೂ ವೈಧ್ಯಾಧಿಕಾರಿಯವರ ನಿರ್ಲಕ್ಷತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಕೋರಿಕೆ ಪತ್ರ ನೀಡಿದ್ದು ಈ ಬಗ್ಗೆ ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಎಚ್.ಅಶೋಕ ಪರಿಶೀಲನೆ ನಡೆಸಿ ವರದಿ ನೀಡಿದ್ದರು. ಈ ವರದಿಯಲ್ಲಿ ಆರೋಪಿ ವೈಧ್ಯಾಧಿಕಾರಿಗಳಾದ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಎಂಬವರು ಆಪರೇಶನ್ ಮಾಡುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು ಮತ್ತು ಸಾಕಷ್ಟು ಕಾಲಾವಕಾಶ ಇದ್ದರೂ ರೋಗಿಯ ಸ್ಥಿತಿಗತಿಯ ಬಗ್ಗೆ ರೋಗಿಗೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೇ ಇರುವುದು ಕಂಡು ಬಂದಿದೆ. ಅದೇ ರೀತಿ ರೋಗಿ ಆಪರೇಷನ್ ಆಗುವಾಗಲೇ ಮೃತಪಟ್ಟಿ ರುವುದು ವೈದ್ಯಾಧಿಕಾರಿಗಳ ಲಿಖಿತ ಹೇಳಿಕೆಯಿಂದ ದೃಡಪಟ್ಟಿದೆ. ಅದರಂತೆ ಶಸ್ತ್ರ ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷತನ ಮೇಲ್ಮೊಟಕ್ಕೆ ಕಂಡು ಬಂದಿರುವುದು ಈ ವರದಿ ಅಭಿಪ್ರಾಯ ಪಟ್ಟಿದೆ. ಅದರಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಜ.4ರಂದು 23ನೇ ಚಿತ್ರಸಂತೆ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದೆ. 'ಪ್ರಕೃತಿ' ವಿಷಯಾಧಾರಿತವಾಗಿ 22 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶಗಳ 1500ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಸುಮಾರು 4-5 ಲಕ್ಷ ಮಂದಿ ಭೇಟಿ ನೀಡಿ, 3 ಕೋಟಿ ರೂ. ವಹಿವಾಟು ನಡೆಸುವ ನಿರೀಕ್ಷೆ ಇದೆ.
ವಿಜಯನಗರ | ಗ್ರಾಹಕರ ಹಕ್ಕುಗಳ ಅರಿವು ಪ್ರತಿಯೊಬ್ಬರಿಗೂ ಅಗತ್ಯ: ಎನ್. ಸುಬ್ರಹ್ಮಣ್ಯ
ವಿಜಯನಗರ (ಹೊಸಪೇಟೆ), :ಭಾರತದಲ್ಲಿ ಗ್ರಾಹಕರ ಹಿತಾಸಕ್ತಿ ಕಾಪಾಡಲು ಮತ್ತು ವಂಚನೆಗಳನ್ನು ತಡೆಯಲು ಪರಿಣಾಮಕಾರಿ ಕಾನೂನು ವ್ಯವಸ್ಥೆ ಜಾರಿಯಲ್ಲಿದ್ದು, ಗ್ರಾಹಕರ ಹಕ್ಕುಗಳ ಕುರಿತು ಪ್ರತಿಯೊಬ್ಬ ನಾಗರಿಕರೂ ತಿಳಿದುಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಹೊಸಪೇಟೆ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆಹಾರ–ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಹಾಗೂ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ 1986ರಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ ಜಾರಿಗೆ ತರಲಾಗಿದ್ದು, ಇದರಲ್ಲಿ ಮೂರು ಹಂತದ ನ್ಯಾಯಾಂಗ ವ್ಯವಸ್ಥೆ ಅಸ್ತಿತ್ವದಲ್ಲಿದೆ. ಒಂದು ಕೋಟಿ ರೂಪಾಯಿ ವರೆಗೆ ಜಿಲ್ಲಾ ಗ್ರಾಹಕ ವೇದಿಕೆ, 1 ರಿಂದ 10 ಕೋಟಿ ರೂಪಾಯಿ ವರೆಗೆ ರಾಜ್ಯ ಗ್ರಾಹಕ ವೇದಿಕೆ ಹಾಗೂ 10 ಕೋಟಿಗೂ ಅಧಿಕ ಮೌಲ್ಯದ ಸರಕು–ಸೇವೆಗಳ ವಂಚನೆ ಪ್ರಕರಣಗಳಲ್ಲಿ ರಾಷ್ಟ್ರೀಯ ಗ್ರಾಹಕ ವೇದಿಕೆಗೆ ದೂರು ಸಲ್ಲಿಸಬಹುದು ಎಂದು ವಿವರಿಸಿದರು. ಈ ಕಾಯ್ದೆಯಡಿ ಗ್ರಾಹಕರಿಗೆ ಸುರಕ್ಷತೆಯ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆ ಮಾಡುವ ಹಕ್ಕು, ದೂರು ಸಲ್ಲಿಸುವ ಹಕ್ಕು, ಪರಿಹಾರ ಪಡೆಯುವ ಹಕ್ಕು ಹಾಗೂ ಗ್ರಾಹಕರ ಶಿಕ್ಷಣ ಸೇರಿದಂತೆ ಆರು ಮೂಲಭೂತ ಹಕ್ಕುಗಳನ್ನು ಒದಗಿಸಲಾಗಿದೆ. 2025ರ ವೇಳೆಗೆ 2019ರ ಹೊಸ ಗ್ರಾಹಕ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿದ್ದು, ಆನ್ಲೈನ್ ವ್ಯವಹಾರಗಳಲ್ಲಿ ವಂಚನೆಯಾದಲ್ಲಿ ಈ ಕಾಯ್ದೆಯಡಿ ದೂರು ಸಲ್ಲಿಸಬಹುದಾಗಿದೆ. ರೈತರು ಕೂಡ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಇತರೆ ಸರಕುಗಳಲ್ಲಿ ವಂಚನೆಯಾದರೆ ಗ್ರಾಹಕ ವೇದಿಕೆಯನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್ ಮಾತನಾಡಿ, ಎರಡನೇ ಮಹಾಯುದ್ಧದ ನಂತರ ಮಾನವ ಹಕ್ಕುಗಳ ರಕ್ಷಣೆಗೆ ಮಾನವ ಹಕ್ಕುಗಳ ಆಯೋಗ ಸ್ಥಾಪನೆಯಾಯಿತು. ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಹುಟ್ಟಿನಿಂದಲೇ ಪ್ರತಿಯೊಬ್ಬ ವ್ಯಕ್ತಿಗೂ ಮಾನವ ಹಕ್ಕುಗಳು ಲಭಿಸುತ್ತವೆ. ಉಲ್ಲಂಘನೆಯಾದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಗಳಿಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದರು. ವ್ಯಾಪಾರವನ್ನು ಕಾನೂನುಬದ್ಧವಾಗಿ ನಡೆಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಜಂಬಣ್ಣ ಹಾಗೂ ಎ.ಕರುಣನಿಧಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಶ್ರೀನಿವಾಸಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಆಹಾರ–ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರಿಯಾಜ್ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಮನೋಜ್ ಕುಮಾರ್ ಉಪಸ್ಥಿತರಿದ್ದರು.
ಕಂಪ್ಲಿ | ಸುಪ್ತ ಪ್ರತಿಭೆಗಳನ್ನು ಹೊರ ಹಾಕುವುದು ಪ್ರತಿಭಾ ಕಾರಂಜಿ ಉದ್ದೇಶ : ಇಸಿಒ ರೇವಣ್ಣ
ಕಂಪ್ಲಿ: ಮಕ್ಕಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರತರುವುದೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಿದೆ. ಸ್ಪರ್ಧೆಗಳ ನಿರ್ಣಾಯಕರು ಯಾವುದೇ ತಾರತಮ್ಯವಿಲ್ಲದೆ ಎಚ್ಚರಿಕೆಯಿಂದ ನೈಜ ಪ್ರತಿಭೆಯನ್ನು ಆಯ್ಕೆ ಮಾಡಬೇಕು ಎಂದು ಇಸಿಒ ರೇವಣ್ಣ ಹೇಳಿದರು. ತಾಲೂಕಿನ ಮೆಟ್ರಿ ಗ್ರಾಮದ ಮಹಾದೇವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮೆಟ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಸೋಲು–ಗೆಲುವಿನ ಬಗ್ಗೆ ಯೋಚಿಸದೇ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಕೀಳರಿಮೆಯಿಂದ ಅನೇಕ ಮಕ್ಕಳು ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲಾಗದೇ ಎಲೆಮರೆಯ ಕಾಯಿಯಂತೆ ಉಳಿದು ಬಿಡುತ್ತಾರೆ. ಆದ್ದರಿಂದ ಇಂತಹ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವುದು ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ಸಿಆರ್ಪಿ ಭೂಮೇಶ್ವರ ಮಾತನಾಡಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕಲಾತ್ಮಕ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ವಿಜೇತರಾದ ಎಲ್ಲ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ, ನಿರ್ದೇಶಕ ಎಚ್.ಪಿ. ಸೋಮಶೇಖರ, ಜಿಪಿಟಿ ಸಂಘದ ಕಾರ್ಯದರ್ಶಿ ನಿಂಗರಾಜ, ಮುಖ್ಯಗುರುಗಳಾದ ಡಿ. ಜಗದೀಶ, ದೊಡಬಸವ, ವಿರೇಶಮ್ಮ, ಸುಮಿತ್ರ, ನಿರ್ಮಲ, ಮಾಲಿಕ್, ಮಲ್ಲಿಕಾರ್ಜುನ ಸೇರಿದಂತೆ ಸಹ ಶಿಕ್ಷಕರು ರಾಜನಾಯ್ಕ, ಉಷಾರಾಣಿ, ಧನಲಕ್ಷ್ಮಿ, ಸರ್ವಮಂಗಳ, ಮಡಿವಾಳ, ಪಂಪನಗೌಡ, ನಾಗರಾಜ ಸೇರಿದಂತೆ ಅನೇಕ ಶಿಕ್ಷಕರು, ಸ್ಥಳೀಯ ಮುಖಂಡರು ಹಾಗೂ 13 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಂಪ್ಲಿ | ಮಕ್ಕಳಿಗೆ ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳು ಅಗತ್ಯ: ಸುಗ್ಗೆನಹಳ್ಳಿ ರಮೇಶ
ಕಂಪ್ಲಿ: ತಾಲೂಕಿನ ರಾಮಸಾಗರ ಕಾರ್ಯಕ್ಷೇತ್ರದ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ವತಿಯಿಂದ ತುಂಗಭದ್ರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಕ್ಕಳಿಗೆ ಶಿಕ್ಷಣ ಹಾಗೂ ಜೀವನ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುಗ್ಗೆನಹಳ್ಳಿ ರಮೇಶ ಅವರು, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳ ಕುರಿತು ಮಾಹಿತಿ ನೀಡಿದರು. ಇತ್ತೀಚಿನ ದಿನಮಾನಗಳಲ್ಲಿ ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳು ಕುಗ್ಗುತ್ತಿರುವುದು ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿಯಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಮಕ್ಕಳಲ್ಲಿ ಮೌಲ್ಯಗಳು, ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು. ಮಕ್ಕಳು ಗುರು–ಹಿರಿಯರಿಗೆ ಗೌರವ ನೀಡುವ ಗುಣ ಬೆಳೆಸಬೇಕು. ವಾಟ್ಸಾಪ್, ಫೇಸ್ಬುಕ್ ಸೇರಿದಂತೆ ಮೊಬೈಲ್ ಬಳಕೆಯನ್ನು ಮಕ್ಕಳಲ್ಲಿ ನಿಯಂತ್ರಿಸಬೇಕು. ಅದರಿಂದ ಅವರು ಅಧ್ಯಯನದ ಕಡೆ ಹೆಚ್ಚು ಗಮನಹರಿಸಬಹುದು ಎಂದು ಸಲಹೆ ನೀಡಿದರು. ನಂತರ ಸಮನ್ವಯಾಧಿಕಾರಿ ರೇಖಾ ಎಂ.ಬಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಗುರು ರಾಮಮೋಹನ್ ಎಸ್., ಎಸ್ಡಿಎಂಸಿ ಅಧ್ಯಕ್ಷ ಪ್ರಶಾಂತ, ಶಿಕ್ಷಕರು, ವಲಯದ ಮೇಲ್ವಿಚಾರಕಿ ಜಯಲಕ್ಷ್ಮಿ, ಸೇವಾ ಪ್ರತಿನಿಧಿ ಶೈಲಜಾ ರಮೇಶ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Tamilnadu| ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ವಾಪಸ್: ಸ್ಟಾಲಿನ್ ಸರಕಾರಕ್ಕೆ ಹಿನ್ನಡೆ
ಚೆನ್ನೈ: ರಾಜ್ಯ ಸರಕಾರಕ್ಕೆ ಕುಲಪತಿ ನೇಮಕಾಧಿಕಾರ ನೀಡುವ ಉದ್ದೇಶದ ತಮಿಳುನಾಡು ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ವಾಪಸ್ ಕಳುಹಿಸಿದ್ದಾರೆ. ಈ ಬೆಳವಣಿಗೆಯಿಂದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರಕಾರಕ್ಕೆ ರಾಜಕೀಯ ಹಿನ್ನಡೆ ಎದುರಾಗಿದೆ. ಏಪ್ರಿಲ್ 2022ರಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದ ಈ ಮಸೂದೆಯನ್ನು ರಾಷ್ಟ್ರಪತಿಯ ಅನುಮೋದನೆಗಾಗಿ ಕಳುಹಿಸಲಾಗಿತ್ತು. 168 ವರ್ಷಗಳ ಇತಿಹಾಸ ಹೊಂದಿರುವ ಮದ್ರಾಸ್ ವಿಶ್ವವಿದ್ಯಾಲಯ ಕಳೆದ ಎರಡು ವರ್ಷಗಳಿಗೂ ಅಧಿಕ ಕಾಲ ನಿಯಮಿತ ಕುಲಪತಿಯಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ನಿಯಂತ್ರಣವನ್ನು ರಾಜ್ಯ ಸರಕಾರದ ವಶಕ್ಕೆ ತರುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿತ್ತು. ಪ್ರಸ್ತಾವಿತ ತಿದ್ದುಪಡಿಯಂತೆ, ಪ್ರಸ್ತುತ ಎಕ್ಸ್–ಆಫಿಸಿಯೊ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯಪಾಲರಿಂದ ಕುಲಪತಿಯನ್ನು ನೇಮಿಸುವ ಮತ್ತು ತೆಗೆದುಹಾಕುವ ಅಧಿಕಾರವನ್ನು ರಾಜ್ಯ ಸರಕಾರಕ್ಕೆ ವರ್ಗಾಯಿಸುವಂತೆ ಮದ್ರಾಸ್ ವಿಶ್ವವಿದ್ಯಾಲಯ ಕಾಯ್ದೆಯನ್ನು ಬದಲಾಯಿಸಲು ಉದ್ದೇಶಿಸಲಾಗಿತ್ತು. ಆದರೆ ರಾಜ್ಯಪಾಲ ಆರ್.ಎನ್. ರವಿ ಅವರು, ಈ ಕ್ರಮವು ವಿಶ್ವವಿದ್ಯಾಲಯ ಅನುದಾನ ಆಯೋಗದ ನಿಯಮಾವಳಿ ಹಾಗೂ ಕುಲಪತಿ ನೇಮಕಾತಿಗೆ ಸಂಬಂಧಿಸಿದ ಸ್ಥಾಪಿತ ಮಾನದಂಡಗಳಿಗೆ ವಿರುದ್ಧವಾಗುವ ಸಾಧ್ಯತೆ ಇದೆ ಎಂಬ ಆಕ್ಷೇಪ ವ್ಯಕ್ತಪಡಿಸಿ ಮಸೂದೆಯನ್ನು ರಾಷ್ಟ್ರಪತಿಯ ಪರಿಗಣನೆಗೆ ಕಾಯ್ದಿರಿಸಿದ್ದರು. ಮಸೂದೆ ವಾಪಸ್ ಬಂದಿರುವ ಹಿನ್ನೆಲೆಯಲ್ಲಿ, ವಿಧಾನಸಭೆ ಪ್ರಸ್ತಾವಿತ ಶಾಸನವನ್ನು ಮರುಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದ 22 ವಿಶ್ವವಿದ್ಯಾಲಯಗಳಲ್ಲಿ ಮದ್ರಾಸ್ ವಿಶ್ವವಿದ್ಯಾಲಯ ಸೇರಿದಂತೆ ಸುಮಾರು 14 ಸಂಸ್ಥೆಗಳು ನಿಯಮಿತ ಕುಲಪತಿಗಳಿಲ್ಲದೆ ಸಂಚಾಲಕ ಸಮಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.
ಕಣ್ಣೂರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ
ಮಂಗಳೂರು: ಅಡ್ಯಾರ್ ಕಣ್ಣೂರಿನ ಕಣ್ಣೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಮಹಿಳಾ ಪಿಯು ಕಾಲೇಜ್ ಆಶ್ರಯದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘Knowledge Expo’ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವು ಡಿಸೆಂಬರ್ 25 ಮತ್ತು 26ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಸ್. ಮೊಹಮ್ಮದ್ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ಎಸ್. ಶಶಿಧರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ, ಸೃಜನಶೀಲತೆ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು. ಯಾಸಿರ್ ಕಲ್ಲಡ್ಕ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ವಿದ್ಯಾರ್ಥಿಗಳು ತಾವೇ ತಯಾರಿಸಿದ ವೈಜ್ಞಾನಿಕ ಮಾದರಿಗಳ ಪ್ರದರ್ಶನ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸಂಚಾಲಕ ರಿಯಾಝ್ ಅಹಮದ್ ಕಣ್ಣೂರು ಪ್ರಾಸ್ತಾವಿಕ ಭಾಷಣ ಮಾಡಿದರು. ವಿಜ್ಞಾನ ವಸ್ತು ಪ್ರದರ್ಶನಕ್ಕೆ ರಫೀಕ್ ಮಾಸ್ಟರ್ ಹಾಗೂ ಇಬ್ರಾಹಿಂ ಕಲೀಲ್ ಅವರು ತೀರ್ಪುಗಾರರಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್. ಉಮರಬ್ಬ ಹಾಗೂ ಟ್ರಸ್ಟೀ ಬಿ. ಮೊಹಮ್ಮದ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳನ್ನು Sciencia, Brain Freeze, Fairyland, Pathfinder ಮತ್ತು Transcend ಎಂಬ ಐದು ತಂಡಗಳಾಗಿ ವಿಭಜಿಸಿ, ತಾವೇ ತಯಾರಿಸಿದ ವಿವಿಧ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿದರು. ಪ್ರದರ್ಶನದಲ್ಲಿ Sciencia ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, Brain Freeze ತಂಡ ದ್ವಿತೀಯ ಸ್ಥಾನ ಗಳಿಸಿತು. ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿತಾರ್ ಅಬ್ದುಲ್ ಮಜೀದ್ ಸ್ವಾಗತ ಭಾಷಣ ಮಾಡಿದರು. ವಿದ್ಯಾರ್ಥಿನಿ ನುಹೈಮ ಕಿರಾಅತ್ ಪಠಿಸಿದರು. ಮುಖ್ಯ ಅಧ್ಯಾಪಕಿ ಸಂಶಾದ್ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿ ಜಯಲತಾ ಕಾರ್ಯಕ್ರಮವನ್ನು ನಿರೂಪಿಸಿದರು.
ಮಾನ್ವಿ | ರಸ್ತೆ ಅಪಘಾತದಲ್ಲಿ ನಿವೃತ್ತ ಉಪತಹಶಿಲ್ದಾರ್ ಸಿದ್ದಲಿಂಗಪ್ಪ ಮೃತ್ಯು
ಮಾನ್ವಿ : ಪಟ್ಟಣದ ಮಾನ್ವಿ–ಸಿಂಧನೂರು ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರವಾಹನ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯನಗರ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಸಿದ್ದಲಿಂಗಪ್ಪ (75) ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಿದ್ದಲಿಂಗಪ್ಪ ಅವರನ್ನು ತಕ್ಷಣವೇ ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದ್ವಿಚಕ್ರವಾಹನ ಸವಾರ ಯಾಸಿನ್ ಎಂಬವರ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಎ.ಎಸ್.ಐ. ಶಿವಲಿಂಗಪ್ಪ ಅವರು ಕೈಗೊಂಡಿದ್ದಾರೆ.
ಪಶ್ಚಿಮ ಬಂಗಾಳ| ಎಸ್ಐಆರ್ಗೆ ಸಂಬಂಧಿಸಿದ ವಿಚಾರಣೆ ಆತಂಕ: 82 ವರ್ಷದ ವೃದ್ಧ ಆತ್ಮಹತ್ಯೆ
ಕೋಲ್ಕತಾ, ಡಿ. 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಗೆ ಸಂಬಂಧಿಸಿದ ವಿಚಾರಣೆ ಬಗ್ಗೆ ಆತಂಕಗೊಂಡ 82 ವರ್ಷದ ವೃದ್ಧನೋರ್ವ ಚಲಿಸುತ್ತಿರುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಪಶ್ಚಿಮಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಡಿಸೆಂಬರ್ 16ರಂದು ಪ್ರಕಟವಾದ ಕರಡು ಮತದಾರರ ಪಟ್ಟಿಯಲ್ಲಿ 82 ವರ್ಷ ವಯಸ್ಸಿನ ದುರ್ಜನ್ ಮಾಝಿ ಅವರ ಹೆಸರು ಇರಲಿಲ್ಲ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರು ನೋಟಿಸು ಸ್ವೀಕರಿಸಿದ್ದರು. ಪಾರಾ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಕಚೇರಿಯಲ್ಲಿ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿತ್ತು ಎಂದು ಅವರ ಪುತ್ರ ಕನಲ್ ತಿಳಿಸಿದ್ದಾರೆ. ‘‘ನನ್ನ ತಂದೆಯ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇತ್ತು. ಆದರೆ, ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ’’ ಎಂದು ದಿನಗೂಲಿ ನೌಕರನಾಗಿರುವ ಕನಲ್ ಹೇಳಿದ್ದಾರೆ. ‘‘ನನ್ನ ತಂದೆ ಎಸ್ಐಆರ್ ಎಣಿಕೆ ನಮೂನೆಯನ್ನು ಸಲ್ಲಿಸಿದ್ದರು. ಆದರೆ, ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರಲಿಲ್ಲ. ಅವರ ಹೆಸರು 2002ರ ಮತದಾರರ ಪಟ್ಟಿಯಲ್ಲಿ ಇತ್ತು. ಅವರು ಡಿಸೆಂಬರ್ 26ರಂದು ನೋಟಿಸ್ ಸ್ವೀಕರಿಸಿದ್ದರು. ಅನಂತರ ಅವರು ಆಂತಕಿತರಾಗಿದ್ದರು’’ ಎಂದು ಕನಲ್ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ: ಪ್ರಧಾನಿಯ ಗಮನಸೆಳೆದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ
ಹೊಸದಿಲ್ಲಿ,ಡಿ.30: ಮಾಜಿ ಕಾಂಗ್ರೆಸ್ ಸಂಸದ ಅಧೀರ ರಂಜನ್ ಚೌಧರಿಯವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಭಾರತದ ಹಲವು ಭಾಗಗಳಲ್ಲಿ ಬಂಗಾಳಿ ಭಾಷಿಕ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ ಮತ್ತು ಹಿಂಸಾಚಾರವನ್ನು ಪ್ರಸ್ತಾವಿಸಿದರು. ಇಂತಹ ಘಟನೆಗಳನ್ನು ತಡೆಯುವಂತೆ ದೇಶದ ಎಲ್ಲ ಸರಕಾರಗಳಿಗೆ ಸೂಚಿಸುವಂತೆ ಪ್ರಧಾನಿಯವರನ್ನು ಆಗ್ರಹಿಸಿದ ಚೌಧರಿ,ಇಂತಹ ಹೆಚ್ಚಿನ ಘಟನೆಗಳು ಬಿಜಿಪಿ ಆಡಳಿತದ ರಾಜ್ಯಗಳಲ್ಲಿಯೇ ನಡೆಯುತ್ತಿವೆ ಎಂದು ಬೆಟ್ಟು ಮಾಡಿದರು. ‘ಡಿ.24ರಂದು ಒಡಿಶಾದ ಸಂಬಲ್ಪುರದಲ್ಲಿ ಭೀಕರ ಘಟನೆಯೊಂದು ನಡೆದಿದ್ದು,ನನ್ನ ಜಿಲ್ಲೆ ಮುರ್ಷಿದಾಬಾದ್ನ ಜುಯೆಲ್ ರಾಣಾ ಎಂಬ ಯುವಕನನ್ನು ಬಾಂಗ್ಲಾದೇಶಿ ನುಸುಳುಕೋರ ಎಂದು ಆರೋಪಿಸಿ ಹತ್ಯೆ ಮಾಡಲಾಗಿದೆ. ಆತನ ಜೊತೆಯಲ್ಲಿದ್ದ ಇತರ ಇಬ್ಬರು ವಲಸೆ ಕಾರ್ಮಿಕರು ಪಾರಾಗಿ ಜೀವವುಳಿಸಿಕೊಂಡಿದ್ದಾರೆ ’ಎಂದು ಚೌಧುರಿ ಮೋದಿಯವರಿಗೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ದೇಶದಲ್ಲಿ ವ್ಯಾಪಕ ತಾರತಮ್ಯವನ್ನು ಆರೋಪಿಸಿರುವ ಅವರು, ದೇಶದ ಉದ್ದಗಲಕ್ಕೂ ಹರಡಿರುವ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರು ವಿವಿಧ ರಾಜ್ಯಗಳಲ್ಲಿ,ನಿರ್ದಿಷ್ಟವಾಗಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೀವ್ರ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಬಂಗಾಳಿ ಕಾರ್ಮಿಕರ ಭಾಷೆಯಿಂದಾಗಿ ಅವರನ್ನು ಬಾಂಗ್ಲಾದೇಶಿಗಳೆಂದು ತಪ್ಪಾಗಿ ಗ್ರಹಿಸಿ ಗುರಿಯಾಗಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ವಲಸೆ ಕಾರ್ಮಿಕರು ದೇಶದ ಯಾವುದೇ ಭಾಗದಲ್ಲಿ ವಾಸವಿರುವ,ಕೆಲಸ ಮಾಡುವ,ಭೇಟಿ ನೀಡುವ ಹಕ್ಕು ಹೊಂದಿದ್ದಾರೆ ಎಂದು ಒತ್ತಿ ಹೇಳಿರುವ ಚೌಧುರಿ,ಕೇಂದ್ರವು ಅವರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಹೊಸದಿಲ್ಲಿ,ಡಿ.30: ಅಶ್ಲೀಲ, ಅಸಭ್ಯ, ಲೈಂಗಿಕ ದೃಶ್ಯಗಳು ಮತ್ತಿತರ ಕಾನೂನುಬಾಹಿರ ಕಂಟೆಂಟ್ಗಳ ವಿರುದ್ಧ ಕಾರ್ಯಾಚರಿಸಲು ವಿಫಲವಾದಲ್ಲಿ ಕಾನೂನು ಪರಿಣಾಮಗಳನ್ನು ಎದುರಿಸಬೇಕಾದೀತು ಎಂದು ಕೇಂದ್ರ ಸರಕಾರವು ಸಾಮಾಜಿಕ ಜಾಲತಾಣಗಳು ಸೇರಿದಂತೆ ಆನ್ಲೈನ್ ಪ್ಲಾಟ್ಫಾರ್ಮ್(ವೇದಿಕೆ)ಗಳಿಗೆ ಮಂಗಳವಾರ ಎಚ್ಚರಿಕೆಯನ್ನು ನೀಡಿದೆ. 2025ರ ಡಿಸೆಂಬರ್ 29ರಂದು ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಬಗ್ಗೆ ಸೂಚನಾ ಪತ್ರವೊಂದನ್ನು ಬಿಡುಗಡೆಗೊಳಿಸಿದ್ದು, ಅನುಸರಣಾ ಕಾರ್ಯಚೌಕಟ್ಟನ್ನು ತಕ್ಷಣವೇ ಪರಿಶೀಲಿಸುವಂತೆ ಸಾಮಾಜಿಕ ಮಾಧ್ಯಮಸಂಸ್ಥೆಗಳನ್ನು ಕೇಳಿಕೊಂಡಿದೆ. ಒಂದು ವೇಳೆ ವಿಫಲವಾದಲ್ಲಿ ಕಾನೂನು ಕ್ರಮ ಎದುರಿಸಬೇಕಾದೀತೆಂದು ಎಚ್ಚರಿಕೆ ನೀಡಿದೆ. ಆನ್ಲೈನ್ ಸಾಮಾಜಿಕ ಮಾಧ್ಯಮಸಂಸ್ಥೆಗಳು ಸ್ಥಳೀಯ ಅಧಿಕಾರಿಗಳನ್ನು ನೇಮಿಸಿ, ದೂರು ಬಂದ 72 ಗಂಟೆಗಳಲ್ಲಿ ವಿವಾದಾತ್ಮಕ ಅಶ್ಲೀಲ ಕಂಟೆಟ್ ಅನ್ನು ತೆಗೆದುಹಾಕಬೇಕೆಂದು ಸೂಚಿಸಿದೆ. 2021ರ ಐಟಿ ನಿಯಮಗಳ ಅಡಿಯಲ್ಲಿ ಮಧ್ಯವರ್ತಿಗಳು ತಮ್ಮ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಅಶ್ಲೀಲ, ಅಸಭ್ಯ, ಹಾಗೂ ಮಕ್ಕಳಿಗೆ ಅಪಾಯಕಾರಿಯಾದ ಯಾವುದೇ ಮಾಹಿತಿ ಮತ್ತಿತರ ಕಾನೂನುಬಾಹಿರ ವಿಷಯಗಳನ್ನು ಪ್ರಸಾರವಾಗದಂತೆ ತಡೆಯುವುದು ಅವುಗಳ ಕಾನೂನುಬದ್ಧ ಜವಾಬ್ದಾರಿಯಾಗಿದೆ ಎಂದು ಸೂಚನಾಪತ್ರ ತಿಳಿಸಿದೆ. ‘‘ಒಂದು ವೇಳೆ ಐಟಿ ಕಾಯ್ದೆ ಅಥವಾ ಐಟಿ ನಿಯಮಗಳ ಕಾನೂನುಗಳನ್ನು ಅನುಸರಿಸದೆ ಇದ್ದಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ, ಬಿಎನ್ಎಸ್ ಮತ್ತಿತರ ಅನ್ವಯಿಕ ಕ್ರಿಮಿನಲ್ ಕಾನೂನುಗಳಡಿ, ಸಂಬಂಧಪಟ್ಟ ಆನ್ಲೈನ್ ಪ್ಲಾಟ್ಫಾರ್ಮ್ಗಳು, ಸ್ಥಳೀಯ ಅಧಿಕಾರಿಗಳು ಹಾಗೂ ಅವುಗಳ ಬಳಕೆದಾರರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು’’ ಎಂದು ಸೂಚನಾ ಪತ್ರವು ತಿಳಿಸಿದೆ.
ಭೀಮಾ ಕೋರೇಗಾಂವ್ ವಿಜಯೋತ್ಸವ: ಉಡುಪಿಯಲ್ಲಿ ಜ.1ರಂದು ಪಂಜಿನ ಮೆರವಣಿಗೆ
ಉಡುಪಿ, ಡಿ.30: ದಲಿತರ ಸ್ವಾಭಿಮಾನದ ಪ್ರತೀಕ, ದಲಿತರ ಅಸ್ಮಿತೆಯ ಸಂಕೇತವಾಗಿರುವ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಜ.1ರಂದು ಸಂಜೆ 6ಗಂಟೆಗೆ ಉಡುಪಿಯಲ್ಲಿ ಆಚರಿಸಲಾಗುವುದು. ಉಡುಪಿಯ ಕೆಥೋಲಿಕ್ ಸೆಂಟರ್ನಿಂದ ಸರ್ವಿಸ್ ಬಸ್ ನಿಲ್ದಾಣದ ವರೆಗೆ ಪಂಜಿನ ಮೆರವಣಿಗೆ ನಡೆಸಿ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಆಚರಿಸಲಾಗುವುದು. ಎಲ್ಲಾ ಸ್ವಾಭಿಮಾನಿ ಚಳುವಳಿ ಗಾರರೂ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವದ ನಂಬರ್ 1 ಮ್ಯಾಗ್ನಸ್ ಕಾರ್ಲ್ಸನ್ ವಿಚಿತ್ರ ಎಡವಟ್ಟು! ಇಂಥದ್ದೊಂದು ಬ್ಲಂಡರ್ ಮಾಡಿದ ಬಳಿಕ ಗೆಲ್ಲೋದುಂಟಾ?
Magnus Carlsen Blunder- ಭಾರತದ ಅರ್ಜುನ್ ಎರಿಗೈಸಿ ಎದುರಿನ ಪಂದ್ಯದಲ್ಲಿ ಮೇಜು ಕುಟ್ಟಿ ಸುದ್ದಿ ಮಾಡಿದ್ದ ಮ್ಯಾಗ್ನಸ್ ಕಾರ್ಲ್ಸನ್ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. FIDE ವಿಶ್ವ ಬ್ಲಿಟ್ಜ್ ಚಾಂಪಿಯನ್ಶಿಪ್ 2025ರಲ್ಲಿ ಹೈಕ್ ಮಾರ್ಟಿರೋಸ್ಯಾನ್ ವಿರುದ್ಧದ ಪಂದ್ಯದಲ್ಲಿ ಗಡಿಯಾರದಲ್ಲಿ ಕೇವಲ ಎರಡು ಸೆಕೆಂಡು ಬಾಕಿ ಇರುವಾಗ ಆಕಸ್ಮಿಕವಾಗಿ ನಾಲ್ಕು ಕಾಯಿಗಳನ್ನು ಕೆಡವಿ ಹಾಕಿದ್ದರಿಂದ ಅವರು ಫೋರ್ಫೀಟ್ ನಿಯಮದಂತೆ ಪರಾಜಿತ ಎಂದು ಘೋಷಿಸಲಾಯಿತು. ಈ ಸೋಲು ಕಾರ್ಲ್ಸೆನ್ ಅವರ 14ನೇ ಸುತ್ತಿನ ಸ್ಪರ್ಧೆಯಲ್ಲಿ ಉಳಿಯುವ ಅವಕಾಶವನ್ನು ಕಡಿಮೆ ಮಾಡಿದೆ.
ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ವಾಟ್ಸಾಪ್ ಹ್ಯಾಕ್
ಉಡುಪಿ, ಡಿ.30: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ವರದಿಯಾಗಿದೆ. ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ ಗೂಗಲ್ ಪೇ ಮೂಲಕ ಹಣ ನೀಡುವಂತೆ ಸಂದೇಶಗಳು ಬರುತ್ತಿದೆ ಎನ್ನಲಾಗಿದೆ. ‘ನನ್ನ ವಾಟ್ಸಾಪ್ ಹ್ಯಾಕ್ ಆಗಿದ್ದು, ಯಾರು ಕೂಡ ಹಣ ನೀಡಬಾರದು ಎಂದು ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಭಾಲ್ಕಿ, ಡಿ.30: ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಗೋಲ್ಡನ್ ಸ್ಕಾಲರ್ಶಿಪ್ ಪ್ರವೇಶ ಪರೀಕ್ಷೆ ಯೋಜನೆ ಮುಂದುವರಿಸಿದ್ದು, ಜನವರಿ ತಿಂಗಳಲ್ಲಿ ಐದು ದಿವಸ ಪ್ರವೇಶ ಪರೀಕ್ಷೆ ನಡೆಯಲಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ನ ಅಧ್ಯಕ್ಷ, ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಯ 25ನೇ ವರ್ಷಾಚರಣೆ ಹಿನ್ನಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಗುರುಕುಲ ಗೊಲ್ಡನ್ ಸ್ಕಾಲರ್ಶಿಪ್ ಯೋಜನೆ ಪರಿಚಯಿಸಲಾಗಿತ್ತು. ಈ ಯೋಜನೆಗೆ ಮಕ್ಕಳು, ಪಾಲಕರು ಹೆಚ್ಚಿನ ಆಸಕ್ತಿ ತೋರುತ್ತಿರುವುದರಿಂದ ಗೊಲ್ಡನ್ ಸ್ಕಾಲರ್ಶಿಪ್ ಯೋಜನೆ ಹಾಗೆಯೇ ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು. ಈ ಯೋಜನೆ ಬಡವರು, ರೈತರು, ಕೂಲಿ ಕಾರ್ಮಿಕರ ಮಕ್ಕಳಿಗೆ ವರದಾನವಾಗಿದೆ. ಪ್ರತಿ ವರ್ಷ ನೂರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆದು ನೀಟ್ ಹಾಗೂ ಐಐಟಿಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಪೀಠಾಧಿಪತಿ ಗುರುಬಸವ ಪಟ್ಟದೇವರು ಮಾತನಾಡಿ, ಗಡಿಭಾಗದ ಬಡ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನಾಡೋಜ ಡಾ.ಬಸವಲಿಂಗ ಪಟ್ಟದೇವರ ಮಾರ್ಗದರ್ಶನದಲ್ಲಿ ಗುರುಕುಲ ಸ್ಕಾಲರ್ಶಿಪ್ ಯೋಜನೆ ಜಾರಿಗೆ ತಂದಿದ್ದೇವೆ. ಈ ಬಾರಿಯು ಚನ್ನಬಸವೇಶ್ವರ ಗುರುಕುಲದಲ್ಲಿ 2026-27ನೇ ಸಾಲಿನ ಪ್ರವೇಶಕ್ಕಾಗಿ ಜ.4, 10, 11, 18 ಮತ್ತು 25ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದ್ದೇವೆ. ಪ್ರಸ್ತುತ ಎಸೆಸೆಲ್ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯ ಬಸವರಾಜ್ ಮೊಳಕೀರೆ, ಆಡಳಿತಾಧಿಕಾರಿ ಮೋಹನ್ ರೆಡ್ಡಿ ಉಪಸ್ಥಿತರಿದ್ದರು.
ಮುಂದುವರೆದ ಕೊರಗರ ಧರಣಿ: ಗ್ಯಾರಂಟಿ ಸಮಿತಿ ಭೇಟಿ
ಉಡುಪಿ, ಡಿ.30: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ಕರ್ನಾಟಕ- ಕೇರಳ)ದ ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಭದ್ರತೆ, ನೇರ ನೇಮಕಾತಿಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 16ನೆ ದಿನವಾದ ಮಂಗಳವಾರವೂ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಧರಣಿನಿರತರ ಅಹವಾಲು ಆಲಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ತಾಲೂಕು ಸಮಿತಿ ಅಧ್ಯಕ್ಷೆ ಸುನೀತಾ ಶೆಟ್ಟಿ ಬ್ರಹ್ಮಾವರ, ಪ್ರಮುಖರಾದ ಪ್ರಶಾಂತ್ ಜತ್ತನ್, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಉಪಾಧ್ಯಕ್ಷ ಸತೀಶ್ ಜಪ್ತಿ, ಜಿಲ್ಲಾ ಸದಸ್ಯ ಮಂಜುನಾಥ ಕುಲಾಲ್, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸುಶೀಲಾ ನಾಡ ಮೊದಲಾದವರು ಉಪಸ್ಥಿತರಿದ್ದರು.
ವಾರಾಹಿ ಏತ ನೀರಾವರಿ ಯೋಜನೆ ಬಗ್ಗೆ ಸಿಎಂ, ಡಿಸಿಎಂ ಭೇಟಿ
ಕುಂದಾಪುರ, ಡಿ.30: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ನಡೆಸಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಮಗಾರಿ ಮುಂದು ವರೆಸುವುದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟ ಅವರು, ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದುಕೊಂಡು ಈಗಾಗಲೇ ಸೂಚಿತವಾಗಿರುವ ಪ್ರದೇಶಗಳಿಗೆ ನಿರೂಣಿಸಲು, ಆದ್ಯತೆಯ ನೆಲೆಯಲ್ಲಿ ಏತ ನೀರಾವರಿ ಯೋಜನೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು. ಮಾಜಿ ಶಾಸಕರ ಮನವಿಗೆ ಸಿಎಂ ಹಾಗೂ ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರದಲ್ಲೇ ವಾರಾಹಿ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಆಡಳಿತ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಹರೀಶ್ ತೋಳಾರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಲ್ಕು ತಿಂಗಳ ಬಳಿಕ ಶಾಸಕ ವೀರೇಂದ್ರ ಪಪ್ಪಿಗೆ ಬಿಡುಗಡೆ ಭಾಗ್ಯ; ಜೈಲಿನ ಬಳಿಯೇ ಹಾರ ಹಾಕಿ ಸ್ವಾಗತಿಸಿದ ಬೆಂಬಲಿಗರು
ಆನ್ಲೈನ್ ಬೆಟ್ಟಿಂಗ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಅವರಿಗೆ ಜಾಮೀನು ಮಂಜೂರಾಗಿದೆ. ಕಳೆದ ನಾಲ್ಕು ತಿಂಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು, ಇಂದು ಅಧಿಕೃತವಾಗಿ ಬಿಡುಗಡೆಯಾಗಿದ್ದಾರೆ. ಅವರ ಬೆಂಬಲಿಗರು ಹೂ ಹಾರಹಾಕಿ ಅವರಿಗೆ ಸ್ವಾಗತ ಕೋರಿದ್ದಾರೆ.
ಜ.3: ಸಾಧಕ ದೃಶಾ ಕೊಡಗುಗೆ ಸಾರ್ವಜನಿಕ ಅಭಿನಂದನೆ
ಉಡುಪಿ, ಡಿ.30:ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆಗಳ ಸಹಯೋಗದಲ್ಲಿ ಇದೇ ಜ.3ರಂದು ಸಂಜೆ 5:30ಕ್ಕೆ ನಗರದ ಹೊಟೇಲ್ ಶಾರದಾ ಇಂಟರ್ನೇಷನಲ್ ಸಭಾಂಗಣದಲ್ಲಿ ಸಾಧಕ ದೃಶಾ ಕೊಡಗು ಇವರಿಗೆ ‘ರಿವಾರ್ಡ್ ಟು ಅವಾರ್ಡ್’ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕ ಬಾಸುಮ ಕೊಡಗು ತಿಳಿಸಿದ್ದಾರೆ. ಇಂದಿಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೃಶಾ ಕೊಡಗು ಅವರು ಉಜ್ವಲ್ ಕಾಮತ್ ಅವರೊಂದಿಗೆ ‘ಹಿಂಸೆ ನಿಲ್ಲಿಸಿ’ ಎಂಬ ಘೋಷವಾಖ್ಯದೊಂದಿಗೆ ಮೂರು ರಾಜ್ಯಗಳಲ್ಲಿ ಮೂರು ಸಾವಿರ ಕಿ.ಮೀ. ಜಾಗೃತಿ ಬೈಕ್ ರ್ಯಾಲಿ ನಡೆಸಿದ್ದರು. ಅವರ ಈ ಸಾಧನೆಗಾಗಿ ಇತ್ತೀಚೆಗೆ ಇಂಡಿಯಾ ಬುಕ್ ಆಫ್ ರೆಕಾಡ್ಸ್ ಮತ್ತು ಏಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಜಾಗತಿಕ ದಾಖಲೆಯನ್ನು ಬರೆದರು. ಈ ಸಾಧನೆಗಾಗಿ ಅವರನ್ನು ಜ.3ರಂದುಇ ಸಾರ್ವಜನಿಕವಾಗಿ ಅಭಿನಂದಿಸ ಲಾಗುವುದು. ಅವರೊಂದಿಗೆ ಉಜ್ವಲ್ರನ್ನೂ ಸನ್ಮಾನಿಸಲಾಗುತ್ತಿದೆ ಎಂದು ಬಾಸುಮ ಕೊಡಗು ತಿಳಿಸಿದರು. ಕಾರ್ಯಕ್ರಮವನ್ನು ಲಯನ್ಸ್ ಜಿಲ್ಲೆ 317ಸಿಯ ರಂಜನ್ ಕಲ್ಕೂರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿಶಾಸಕ ಲಾಲಾಜಿ ಮೆಂಡನ್, ಉದ್ಯಮಿ ಲಂಚುಲಾಲ್ ಕೆ.ಎಸ್., ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್ ಹಾಗೂ ನಗರಾಭಿವೃದ್ಧಿ ಪ್ರಾದಿಕಾರದ ದಿನಕರ್ ಹೇರೂರು ಉಪಸ್ಥಿತರಿರುವರು ಎಂದರು. ಇವರೊಂದಿಗೆ 9 ವಿಶ್ವದಾಖಲೆ ಮಾಡಿದ ಮಂಗಳೂರಿನ ಆದಿಸ್ವರೂಪ ಅವರನ್ನೂ ಸನ್ಮಾನಿಸಲಾಗುತ್ತದೆ. ಸಭೆಯಲ್ಲಿ ಕಟ್ಟೆಮಾರ್ ಚಿತ್ರತಂಡ ಸಹ ಉಪಸ್ಥಿತವಿರುತ್ತದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜೇಸಿಐ ಉಡುಪಿ ಸಿಟಿ ಘಟಕಾಧ್ಯಕ್ಷೆ ಪಲ್ಲವಿ ಕೊಡಗು, ವೇದಿಕೆ ಅಧ್ಯಕ್ಷ ವಿನಯ ಆಚಾರ್ಯ ಮುಂಡ್ಕೂರು, ಸೋನಿ ಪ್ರಭುದನ್, ಸಂದೀಪ್ ಮಂಜಾ ಉಪಸ್ಥಿತರಿದ್ದರು.
ಬಾಳಿಗಾ ಆಸ್ಪತ್ರೆಯಲ್ಲಿ 35ನೇ ಮದ್ಯವ್ಯಸನ ವಿಮುಕ್ತಿ ಶಿಬಿರ
ಉಡುಪಿ, ಡಿ.30: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ 2026ರ ಜನವರಿ 1ರಿಂದ 10ರವರೆಗೆ 35ನೇ ಮದ್ಯವ್ಯಸನ ವಿಮುಕ್ತಿ ವಸತಿ ಶಿಬಿರ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ. ಮುಂಬಯಿಯ ಮಕಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಬಾರಿಯ ಮದ್ಯವ್ಯಸನ ಶಿಬಿರ ನಡೆಯಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಜ.1ರಂದು ಬೆಳಗ್ಗೆ 10:30ಕ್ಕೆ ಶಿಬಿರವನ್ನು ಸಮಾಜಸೇವಕ ವಿಶು ಶೆಟ್ಟಿ ಉದ್ಘಾಟಿಸಲಿದ್ದಾರೆ. ಶಿಬಿರದ ಸಮಾರೋಪ ಸಮಾರಂಭ ಜ.10ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ ಎಂದವರು ಹೇಳಿದರು. ಶಿಬಿರಕ್ಕೆ ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ. ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಮನೋರಂಜನೆ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದು ವಿವರಿಸಿದರು. ಚಿಕಿತ್ಸೆಯಲ್ಲಿ ಪ್ರತಿದಿನ ಅನಾಮಿಕ ಅಮಲಿಗಳ ಸದಸ್ಯರಿಂದ ಒಂದು ಗಂಟೆಯ ಚರ್ಚೆ ಮತ್ತು ಮದ್ಯ ವಿಮುಕ್ತ ಜೀವನ ನಡೆಸುವ ಬಗ್ಗೆ ಮಾಹಿತಿ ನೀಡಿ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ರಾತ್ರಿ 7ರ ನಂತರ ಪ್ರತಿದಿನ ಭಜನೆ ಮತ್ತು ಧಾರ್ಮಿಕ ವಿಚಾರಗಳ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿಬಿರ ಮುಗಿಸಿ ತೆರಳಿದ ಬಳಿಕವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿಸುತ್ತಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರು ಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು. ಜ.1ರ ಉದ್ಘಾಟನೆ ಸಮಾರಂಭದಲ್ಲಿ ಮದ್ಯವ್ಯಸನದಿಂದ ಮುಕ್ತರಾದ ಐವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರಕ್ಕೆ ಪುರುಷರಿಗೆ ಮಾತ್ರವಲ್ಲ, ಮಹಿಳೆಯರಿಗೂ ಅವಕಾಶವಿದೆ. ಮಹಿಳೆಯರಿಗಾಗಿ ಪ್ರತ್ಯೇಕ ವಾರ್ಡ್ನ್ನು ಪ್ರಾರಂಭಿಸಲಾಗಿದೆ ಎಂದವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ನಾಗರಾಜ ಮೂರ್ತಿ, ಡಾ. ಮಾನಸ್, ಡಾ.ದೀಪಕ್ ಮಲ್ಯ ಮತ್ತು ಪದ್ಮ ನಾಗರಾಜ್ ಉಪಸ್ಥಿತರಿದ್ದರು.
ಕುವೆಂಪು ‘ವಿಶ್ವ ಪ್ರಜ್ಞೆ’ ಕೇವಲ ಬರಹವಲ್ಲ; ನಮ್ಮ ಭಾವ ಮತ್ತು ಬದುಕು: ಡಾ.ಯೋಗೀಶ್ ಕೈರೋಡಿ
ಉಡುಪಿ, ಡಿ.30: ಕುವೆಂಪು ನಿಸರ್ಗದಲ್ಲಿ ದೇವರನ್ನೂ, ಸ್ವರ್ಗವನ್ನು ಕಂಡವರು. ಲೌಕಿಕ ಬದುಕಿನ ಅನುಭವದೊಳಗೆ ಅಧ್ಯಾತ್ಮವನ್ನು ಕಂಡವರು. ಜಾತೀಯತೆ, ಧಾರ್ಮಿಕ ಆಂಧಶ್ರದ್ದೆ, ಜಾಗತಿಕ ಬದುಕಿನ ಮಹಾಯುದ್ಧದ ಕಾಲಘಟ್ಟ ದಲ್ಲಿ ಬದುಕಿದ ರಸಋಷಿ ಪ್ರಸ್ತುತ ಕಾಲಕ್ಕೆ ಅನ್ವಯಿಸುವ ವಿಶ್ವ ಮಾನವ ಸಂದೇಶವನ್ನು ಜಾಗತಿಕವಾಗಿ ಬಿತ್ತರಿಸಿ ದವರು ಎಂದು ಮೂಡಬಿದರೆ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಯೋಗೀಶ್ ಕೈರೋಡಿ ಅಭಿಪ್ರಾಯ ಪಟ್ಟಿದ್ದಾರೆ. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಆಶ್ರಯದಲ್ಲಿ, ಐಕ್ಯೂಎಸಿ ಘಟಕದ ಸಹಯೋಗದಲ್ಲಿ ರಸಋಷಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು. ಜಗತ್ತು ಒಂದೇ ಎನ್ನವುದು ಆರ್ಥಿಕತೆಯ, ಅನ್ನದ ಪರಿಭಾಷೆಯಾದರೆ, ಕುವೆಂಪು ಕಟ್ಟಿದ ವಿಶ್ವಮಾನವ ಪರಿಕಲ್ಪನೆ ಭಾವನಾತ್ಮಕವಾಗಿದ್ದು, ಸರ್ವಕಾಲಕ್ಕೂ ಪ್ರಸ್ತುತವೆನಿಸಿದೆ. ಕುವೆಂಪು ಅವರ ಸಾಹಿತ್ಯವನ್ನು ಕೇವಲ ಓದಿದರೆ ಮಾತ್ರ ಸಾಲದ. ಅದು ನಮ್ಮ ಭಾವ ಮತ್ತು ಬದುಕಿನಲ್ಲಿ ಸ್ಥಿರವಾಗಿ ನಿಲ್ಲಬೇಕು ಎಂದು ಡಾ.ಯೋಗೀಶ್ ಕೈರೋಡಿ ತಿಳಿಸಿದರು. ಕುವೆಂಪು ಅವರ ಕುರಿತಂತೆ ಕನ್ನಡ ವಿಭಾಗದ ವಿದ್ಯಾರ್ಥಿಗಳಾದ ಸುಶ್ಮಿತಾ ಶೆಟ್ಟಿ , ಶ್ರೀಕೃಷ್ಣ ಜಿ.ಜಿ. ಹಾಗೂ ಪ್ರವೀಣ ಮಾತನಾಡಿದರು.ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿಲಾಯಿತು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಲಹೆಗಾರರಾದ ಡಾ. ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸಂದೇಶ್ ಎಂ.ವಿ, ದತ್ತ ಕುಮಾರ್, ಉಪನ್ಯಾಸಕರಾದ ಅರ್ಚನಾ, ಭವ್ಯ, ಶಾಲಿನಿ, ರಾಜೇಂದ್ರ, ಡಾ.ಮಹೇಶ್ ಕುಮಾರ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ್ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ರಾದ ರತ್ನಮಾಲಾ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಶ್ಮಿತಾಶೆಟ್ಟಿ ವಂದಿಸಿದರು. ಭಾರತಿ ಕಾರ್ಯಕ್ರಮ ನಿರೂಪಿಸಿದರು.
ಗಾಯದ ಹೊರತಾಗಿಯೂ ಇಂಗ್ಲೆಂಡ್ ಟಿ-20 ವಿಶ್ವಕಪ್ ತಂಡದಲ್ಲಿ ಆರ್ಚರ್ ಗೆ ಸ್ಥಾನ
ಲಂಡನ್, ಡಿ.30: ಗಾಯದ ಸಮಸ್ಯೆಯಿಂದಾಗಿ ಆ್ಯಶಸ್ ಟೆಸ್ಟ್ ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿರುವ ಹೊರತಾಗಿಯೂ ವೇಗದ ಬೌಲರ್ ಜೋಫ್ರಾ ಆರ್ಚರ್ಗೆ ಇಂಗ್ಲೆಂಡ್ ತಂಡವು ಟಿ-20 ವಿಶ್ವಕಪ್ ನ ಪ್ರಾಥಮಿಕ ತಂಡದಲ್ಲಿ ಸ್ಥಾನ ಕಲ್ಪಿಸಿದೆ. ಇಂಗ್ಲೆಂಡ್ ತಂಡವು ಶ್ರೀಲಂಕಾ ಪ್ರವಾಸ ಹಾಗೂ ಭಾರತ ಹಾಗೂ ಶ್ರೀಲಂಕಾದಲ್ಲಿ ಫೆಬ್ರವರಿ 7ರಿಂದ ಆರಂಭವಾಗಲಿರುವ ವಿಶ್ವಕಪ್ ಟೂರ್ನಮೆಂಟ್ ಗೆ ತಂಡಗಳನ್ನು ಮಂಗಳವಾರ ಪ್ರಕಟಿಸುವ ವೇಳೆ ಈ ಘೋಷಣೆ ಮಾಡಿದೆ. ಈ ತಿಂಗಳಾರಂಭದಲ್ಲಿ ಅಡಿಲೇಡ್ ನಲ್ಲಿ ನಡೆದಿದ್ದ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯದ ವೇಳೆ ಆರ್ಚರ್ಗೆ ಗಾಯವಾಗಿತ್ತು. ತನ್ನ ಚೇತರಿಕೆಯ ಯೋಜನೆಯ ಭಾಗವಾಗಿ ಶ್ರೀಲಂಕಾ ಪ್ರವಾಸದಲ್ಲಿ ಇಂಗ್ಲೆಂಡ್ ಆಡಲಿರುವ ಅಭ್ಯಾಸ ಪಂದ್ಯಗಳಿಂದ ವಂಚಿತರಾಗಲಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಇಂಗ್ಲೆಂಡ್ ತಂಡವು ತಲಾ ಮೂರು ಪಂದ್ಯಗಳ ಏಕದಿನ ಹಾಗೂ ಟಿ-20 ಅಂತರ್ರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಏಕದಿನ ಸರಣಿಯು ಜನವರಿ 22ರಂದು ಆರಂಭವಾಗಲಿದೆ. ಶ್ರೀಲಂಕಾ ಪ್ರವಾಸಕ್ಕೆ ಆರ್ಚರ್ ಬದಲಿಗೆ ವೇಗದ ಬೌಲರ್ ಬ್ರೆಂಡನ್ ಕಾರ್ಸ್ರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆ ಸಮಿತಿಯು 15 ಸದಸ್ಯರ ತಾತ್ಕಾಲಿಕ ವಿಶ್ವಕಪ್ ತಂಡದಲ್ಲಿ ಆರ್ಚರ್ಗೆ ಸ್ಥಾನ ನೀಡಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ತಂಡವನ್ನು ಹ್ಯಾರಿ ಬ್ರೂಕ್ ನಾಯಕನಾಗಿ ಮುನ್ನಡೆಸಲಿದ್ದಾರೆ. ವೇಗದ ಬೌಲರ್ ಜೋಶ್ ಟೊಂಗ್ ಶ್ರೀಲಂಕಾದ ಟಿ-20 ಹಾಗೂ ವಿಶ್ವಕಪ್ ತಂಡಗಳಲ್ಲಿ ಸ್ಥಾನ ಪಡೆಯುವ ಮೂಲಕ ಇದೇ ಮೊದಲ ಬಾರಿ ಟಿ-20 ಕ್ರಿಕೆಟಿಗೆ ಕರೆ ಪಡೆದಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ಇಂಗ್ಲೆಂಡ್ ತಂಡ : ಹ್ಯಾರಿ ಬ್ರೂಕ್(ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜಾಕ್ಸ್, ಜೆಮೀ ಓವರ್ಟನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಜೋಶ್ ಟೊಂಗ್, ಲ್ಯೂಕ್ ವುಡ್, ಬ್ರೆಂಡನ್ ಕಾರ್ಸ್. ವಿಶ್ವಕಪ್ಗೆ ಇಂಗ್ಲೆಂಡ್ ತಂಡ : ಹ್ಯಾರಿ ಬ್ರೂಕ್(ನಾಯಕ), ರೆಹಾನ್ ಅಹ್ಮದ್, ಟಾಮ್ ಬ್ಯಾಂಟನ್, ಜೇಕಬ್ ಬೆಥೆಲ್, ಜೋಸ್ ಬಟ್ಲರ್, ಬ್ರೆಂಡನ್ ಕಾರ್ಸ್, ಝ್ಯೆಕ್ ಕ್ರಾಲಿ, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜಾಕ್ಸ್, ಜೆಮೀ ಓವರ್ಟನ್, ಆದಿಲ್ ರಶೀದ್, ಜೋ ರೂಟ್, ಲ್ಯೂಕ್ ವುಡ್.
ಮಹಿಳೆಯರ ಟಿ-20 ರ್ಯಾಂಕಿಂಗ್ | ಶೆಫಾಲಿ ವರ್ಮಾಗೆ ಭಡ್ತಿ, ದೀಪ್ತಿ ಶರ್ಮಾ ನಂ.1 ಸ್ಥಾನ ಭದ್ರ
ಹೊಸದಿಲ್ಲಿ, ಡಿ.30: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಶ್ರೀಲಂಕಾ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಟಿ-20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಆರನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ. ಈ ಹಿಂದೆ ಟಿ-20 ಕ್ರಿಕೆಟ್ ನ ನಂ.1 ಬ್ಯಾಟರ್ ಆಗಿದ್ದ 21ರ ವಯಸ್ಸಿನ ಶೆಫಾಲಿ ಈಗ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಪರಿಣಾಮ ನಾಲ್ಕು ಸ್ಥಾನಗಳಲ್ಲಿ ಭಡ್ತಿ ಪಡೆದಿದ್ದಾರೆ. ಶೆಫಾಲಿ ಎರಡನೇ ಟಿ-20 ಪಂದ್ಯದಲ್ಲಿ ಕೇವಲ 34 ಎಸೆತಗಳಲ್ಲಿ ಔಟಾಗದೆ 69 ರನ್ ಗಳಿಸಿದ್ದರು. ಆನಂತರ ತಿರುವನಂತಪುರದಲ್ಲಿ ನಡೆದಿದ್ದ ಮೂರನೇ ಹಾಗೂ ನಾಲ್ಕನೇ ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದ್ದಾರೆ. ಅಗ್ರ ಸರದಿಯಲ್ಲಿ ಬಿರುಸಿನ ಬ್ಯಾಟಿಂಗ್ನ ಮೂಲಕ ಶೆಫಾಲಿ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಇನಿಂಗ್ಸ್ನ ಆರಂಭದಲ್ಲೇ ಶ್ರೀಲಂಕಾದ ಬೌಲರ್ ಗಳಿಗೆ ಒತ್ತಡ ಹೇರುತ್ತಿದ್ದಾರೆ. ಭಾರತ ತಂಡದ ಉಪ ನಾಯಕಿ ಸ್ಮತಿ ಮಂಧಾನ ಸರಣಿಯ ಆರಂಭದಲ್ಲಿ ರನ್ ಗಾಗಿ ಪರದಾಟ ನಡೆಸಿದ್ದರೂ ನಾಲ್ಕನೇ ಟಿ-20 ಪಂದ್ಯದಲ್ಲಿ 80 ರನ್ ಗಳಿಸಿದ್ದರು. ಮಂಧಾನ ಐಸಿಸಿ ರ್ಯಾಂಕಿಂಗ್ ನಲ್ಲಿ ತನ್ನ ಮೂರನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ವೇಳೆ, ಮಧ್ಯಮ ಸರದಿಯ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಒಂದು ಸ್ಥಾನ ಕೆಳ ಜಾರಿ 10ನೇ ರ್ಯಾಂಕಿಗೆ ತಲುಪಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅನುಭವಿ ಆಲ್ರೌಂಡರ್ ದೀಪ್ತಿ ಶರ್ಮಾ ಅವರು ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದೀಪ್ತಿ ವಿಶ್ವದ ನಂ.1 ಟಿ-20 ಬೌಲರ್ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಭಾರತದ ಇನ್ನೋರ್ವ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ ಎಂಟು ಸ್ಥಾನ ಮೇಲಕ್ಕೇರಿ ಆರನೇ ಸ್ಥಾನ ಹಂಚಿಕೊಂಡಿದ್ದಾರೆ. ರೇಣುಕಾ 3ನೇ ಟಿ-20 ಪಂದ್ಯದಲ್ಲಿ 21 ರನ್ಗೆ 4 ವಿಕೆಟ್ಗಳನ್ನು ಉರುಳಿಸಿ ಭಾರತ 8 ವಿಕೆಟ್ ಗಳಿಂದ ಜಯ ಸಾಧಿಸುವಲ್ಲಿ ನೆರವಾಗಿದ್ದಾರೆ. ಭಾರತದ ಯುವ ಎಡಗೈ ಸ್ಪಿನ್ನರ್ ಗಳು ಪರಿಣಾಮಕಾರಿ ಪ್ರದರ್ಶನ ನೀಡಿದ್ದಾರೆ. ಶ್ರೀಚರಣಿ 17 ಸ್ಥಾನಗಳಲ್ಲಿ ಭಡ್ತಿ ಪಡೆದು 52ನೇ ಸ್ಥಾನ ತಲುಪಿದರು. ವೈಷ್ಣವಿ ಶರ್ಮಾ 390 ಸ್ಥಾನಗಳಲ್ಲಿ ಭಡ್ತಿ ಪಡೆದು 124ನೇ ರ್ಯಾಂಕಿಗೆ ತಲುಪಿದ್ದಾರೆ. ವೈಷ್ಣವಿಗೆ ಇದು ಮೊದಲ ಅಂತರ್ರಾಷ್ಟ್ರೀಯ ಸರಣಿಯಾಗಿದೆ. 2026ರಲ್ಲಿ ಇಂಗ್ಲೆಂಡ್ ಹಾಗೂ ವೇಲ್ಸ್ನಲ್ಲಿ ನಡೆಯಲಿರುವ 2026ರ ಮಹಿಳೆಯರ ಟಿ-20 ವಿಶ್ವಕಪ್ಗೆ ತಯಾರಿ ನಡೆಸುತ್ತಿರುವ ಭಾರತ ತಂಡಕ್ಕೆ ವೈಷ್ಣವಿ ಪ್ರದರ್ಶನವು ಸಕಾರಾತ್ಮಕ ಅಂಶವಾಗಿದೆ. ಶ್ರೀಲಂಕಾದ ಆಟಗಾರ್ತಿಯರು ಸ್ವಲ್ಪ ಮಟ್ಟಿನ ಪ್ರಗತಿ ಸಾಧಿಸುತ್ತಿದ್ದು, ಆರಂಭಿಕ ಆಟಗಾರ್ತಿ ಹಸಿನಿ ಪೆರೇರ 22, 25 ಹಾಗೂ 33 ರನ್ ಗಳಿಸಿದ ನಂತರ 114 ಸ್ಥಾನಗಳಲ್ಲಿ ಮೇಲೇರಿ 71ನೇ ರ್ಯಾಂಕಿಗೆ ತಲುಪಿದ್ದಾರೆ. ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಆಲ್ರೌಂಡರ್ ಕವಿಶಾ ದಿಲ್ಹರಿ ಮೂರು ಸ್ಥಾನ ಮೇಲಕ್ಕೇರಿ 79ನೇ ರ್ಯಾಂಕಿಗೆ ತಲುಪಿದ್ದಾರೆ.
ನ್ಯೂಝಿಲ್ಯಾಂಡ್ ODI ಸರಣಿ | ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ ವಿಶ್ರಾಂತಿ ಪಡೆಯುವ ಸಾಧ್ಯತೆ
ಮುಂಬೈ, ಡಿ.30: ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಗೆ ಮಾನಸಿಕವಾಗಿ ಸಜ್ಜಾಗಲು ನ್ಯೂಝಿಲ್ಯಾಂಡ್ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಈ ಇಬ್ಬರು ಆಟಗಾರರು ಕಿವೀಸ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ‘‘ಬುಮ್ರಾ ಹಾಗೂ ಹಾರ್ದಿಕ್ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 11ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಟಿ-20 ಸರಣಿಗಾಗಿ ಜನವರಿ 3 ಅಥವಾ 4ರಂದು ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗುವುದು’’ ಎಂದು ಮೂಲಗಳು ತಿಳಿಸಿವೆ. ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ರನ್ನು ಏಕದಿನ ಸರಣಿಯ ತಂಡದಿಂದ ಹೊರಗಿಡುವ ಸಾಧ್ಯತೆಯಿದೆ. ಒಂದು ವೇಳೆ ಪಂತ್ರನ್ನು ಕೈಬಿಟ್ಟರೆ, ಇಶಾನ್ ಕಿಶನ್ ಎರಡು ವರ್ಷಗಳಿಗೂ ಅಧಿಕ ಸಮಯದ ನಂತರ ಏಕದಿನ ಕ್ರಿಕೆಟ್ ತಂಡಕ್ಕೆ ವಾಪಸಾಗಲಿದ್ದಾರೆ ಎಂದು ವರದಿಯಾಗಿದೆ.
U19 ವಿಶ್ವಕಪ್ ನಲ್ಲಿ ಮಿಂಚಲು ನವಿ ಮುಂಬೈ ಆಟಗಾರ ಅಭಿಜ್ಞಾನ್ ಸಜ್ಜು
ಮುಂಬೈ, ಡಿ.30: ಮುಂಬೈ ಸೀನಿಯರ್ ಕ್ರಿಕೆಟ್ ತಂಡದಲ್ಲಿ ಇನ್ನಷ್ಟೇ ಆಡಬೇಕಾಗಿರುವ 17ರ ವಯಸ್ಸಿನ ನವಿ ಮುಂಬೈ ಆಟಗಾರ ಅಭಿಜ್ಞಾನ್ ಕುಂಡು ಭಾರತದ ಅಂಡರ್-19 ತಂಡದಲ್ಲಿ ಮಿಂಚುತ್ತಿದ್ದಾರೆ. ಮುಂದಿನ ವರ್ಷ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಮಿಂಚುವ ಭರವಸೆ ಮೂಡಿಸಿದ್ದಾರೆ. ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತದ ಅಂಡರ್-19 ತಂಡದ ಉಪ ನಾಯಕನಾಗಿ ಮೇನಲ್ಲಿ ನೇಮಕಗೊಂಡಿದ್ದ ವಿಕೆಟ್ ಕೀಪರ್-ಬ್ಯಾಟರ್ ಅಭಿಜ್ಞಾನ್ 34 ಎಸೆತಗಳಲ್ಲಿ ಔಟಾಗದೆ 45 ರನ್ ಗಳಿಸಿ ಮೊದಲ ಯೂತ್ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಆರು ವಿಕೆಟ್ಗಳಿಂದ ಮಣಿಸುವಲ್ಲಿ ನೆರವಾಗಿದ್ದರು.ಆ ನಂತರ ಇಂಗ್ಲೆಂಡ್ ವಿರುದ್ಧದ ಮೊದಲ ಯೂತ್ ಟೆಸ್ಟ್ ಪಂದ್ಯದಲ್ಲಿ 95 ಎಸೆತಗಳಲ್ಲಿ 90 ರನ್ ಗಳಿಸಿದ್ದರು. ಎರಡನೇ ಟೆಸ್ಟ್ನಲ್ಲಿ ಕೇವಲ 46 ಎಸೆತಗಳಲ್ಲಿ 65 ರನ್ ಗಳಿಸಿ ಭಾರತ ತಂಡ ಡ್ರಾ ಸಾಧಿಸುವಲ್ಲಿ ನೆರವಾಗಿದ್ದರು. ಸೆಪ್ಟಂಬರ್ನಲ್ಲಿ ಬ್ರಿಸ್ಬೇನ್ನಲ್ಲಿ ನಡೆದಿದ್ದ ಯೂತ್ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಭಾರತ 3-0 ಅಂತರದಿಂದ ಜಯಶಾಲಿಯಾಗಲು ನೆರವಾಗಿದ್ದರು. 2 ಪಂದ್ಯಗಳಲ್ಲಿ 158ರ ಸರಾಸರಿಯಲ್ಲಿ 158 ರನ್ ಗಳಿಸಿದ್ದರು. ಲಕ್ನೊದಲ್ಲಿ ನಡೆದಿದ್ದ ಅಂಡರ್-19 ಚಾಲೆಂಜರ್ಸ್ ಟ್ರೋಫಿಯಲ್ಲಿ ಅವಳಿ ಶತಕಗಳನ್ನು ಗಳಿಸಿದ್ದ ಅಭಿಜ್ಞಾನ್ ‘ಸರಣಿಶ್ರೇಷ್ಠ’ ಪ್ರಶಸ್ತಿ ಪಡೆದಿದ್ದರು. ಇತ್ತೀಚೆಗೆ ದುಬೈನಲ್ಲಿ ನಡೆದಿದ್ದ ಅಂಡರ್-19 ಏಶ್ಯಕಪ್ನಲ್ಲಿ ಮಲೇಶ್ಯ ತಂಡದ ವಿರುದ್ಧ ದಾಖಲೆಯ ದ್ವಿಶತಕ(ಔಟಾಗದೆ 209 , 125 ಎಸೆತ, 9 ಸಿಕ್ಸರ್, 17 ಬೌಂಡರಿ)ಗಳಿಸಿದ್ದ ಅಭಿಜ್ಞಾನ್ ಕುಂಡು ಯೂತ್ ಏಕದಿನದಲ್ಲಿ ದ್ವಿಶತಕ ಗಳಿಸಿದ ಭಾರತದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ ಎನಿಸಿಕೊಂಡಿದ್ದರು. ಅಭಿಜ್ಞಾನ್ ಕುಂಡು 2026ರಲ್ಲಿ ಝಿಂಬಾಬ್ವೆ ಹಾಗೂ ನಮೀಬಿಯಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡ ನಂತರ ಭಾರತ ತಂಡವು ಜನವರಿ 15ರಂದು ಹರಾರೆಯಲ್ಲಿ ಅಮೆರಿಕದ ವಿರುದ್ಧ ಆಡುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
ಸಿಎಂ ಕುರ್ಚಿ ಕದನ: 'ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು'
ಬೆಂಗಳೂರು: ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಅದು ಸಿದ್ದರಾಮಯ್ಯನವರು ಅಂತ ಭಾವಿಸಿದ್ದೆವು. ಕರ್ನಾಟಕ ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು ಒಬ್ಬರು ದೆಹಲಿಯಲ್ಲಿ ಇದ್ದಾರೆ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯನವರು ಅವರ ಆದೇಶವನ್ನು ಪಾಲಿಸಲಿಕ್ಕೆ ಕರ್ನಾಟಕದಲ್ಲಿ ಸಿಎಂ ಸ್ಥಾನದಲ್ಲಿದ್ದಾರೆ ಎಂಬುದು ಈ ಮೂರು ದಿನದೊಳಗೆ ನಮಗೆ ಗೊತ್ತಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಇಂದು
ಕೋಗಿಲು ಪ್ರಕರಣ: ಅಧಿಕಾರಿಗಳಿಂದ ದಾಖಲೆಗಳ ಸಂಗ್ರಹ
ಬೆಂಗಳೂರು : ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಬೈಯ್ಯಪ್ಪನಹಳ್ಳಿಯ ರಾಜೀವ್ ಗಾಂಧಿ ನಿಗಮಗದ ವಸತಿ ಸಮುಚ್ಛಯದಲ್ಲಿ ನಿರ್ಮಿಸುತ್ತಿರುವ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೆ ಅಧಿಕಾರಿಗಳು ದಾಖಲೆಗಳ ಸಂಗ್ರಹದಲ್ಲಿ ತೊಡಗಿದ್ದಾರೆ. ಮಂಗಳವಾರ ಮನೆ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೋಗಿಲು ಬಡಾವಣೆ ಸಂತ್ರಸ್ತರಿಂದ ಜಿಲ್ಲಾಡಳಿತ, ಜಿಬಿಎ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಜಿಬಿಎ ಅಧಿಕಾರಿಗಳ ತಂಡ ಸಂಗ್ರಹಿಸುತ್ತಿದೆ. ಸಂಗ್ರಹಿಸಿದ ದಾಖಲೆಗಳನ್ನು ಕೋಗಿಲು ಸರಕಾರಿ ಶಾಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ನಡೆಸಿ, ಸಂತ್ರಸ್ತರಿಂದ ಮಾಹಿತಿ ಪಡೆದುಕೊಂಡರು. ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ. ಯಲಹಂಕ ತಹಶೀಲ್ದಾರ್ ಜಿ.ಎಸ್.ಶ್ರೇಯಸ್, ರಾಜೀವ್ ಗಾಂಧಿ ವಸತಿ ನಿಗಮದ ನಿರ್ದೇಶಕ ಪರಶುರಾಮ್, ಜಿಲ್ಲಾಧಿಕಾರಿ ಜಗದೀಶ್ ಸಹ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ‘185 ಮನೆಗಳಲ್ಲಿ 20 ಮನೆಯವರು ಬೇರೆಯವರು ಇದ್ದಾರೆ. ಅವರು ಕರ್ನಾಟಕದ ರಾಯಚೂರು, ಕಲಬುರಗಿ ಮೂಲದವರು. ಅವರೆಲ್ಲರೂ ಸ್ಥಳಿಯರಾ? ಮನೆ ಇದೆಯೇ? ಎಂಬುದನ್ನು ಪರಿಶೀಲಿಸಲಾಗುವುದು. ಆಶಾ ಕಾರ್ಯಕರ್ತೆಯರ ಬಳಿ ಇರುವ ದಾಖಲೆಗಳ ಮಾಹಿತಿ ಕಲೆ ಹಾಕಲಾಗುವುದು’ ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ. ‘ಎಷ್ಟು ವರ್ಷದಿಂದ ವಾಸ ಮಾಡುತ್ತಿದ್ದೀರಾ? ಉದ್ಯೋಗ ಏನು ಮಾಡುತ್ತಿದ್ದೀರಾ? ಮಕ್ಕಳು ಯಾವ ಶಾಲೆಗೆ ಹೋಗುತ್ತಿದ್ದಾರೆ? ಎಂಬ ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿದರು. ಅಲ್ಲದೇ ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ವಾಸ ದೃಢೀಕರಣ ಪತ್ರಗಳನ್ನು ಪರಿಶೀಲಿಸಿದರು. ಆಧಾರ್ ಕಾರ್ಡ್, ಗುರುತಿನ ಚೀಟಿ, ವಿದ್ಯುತ್ ಬಿಲ್ ಕೇಳಿ ಪಡೆದುಕೊಂಡರು ಎಂದು ಸಂತ್ರಸ್ತರು ತಿಳಿಸಿದರು. ‘ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಗಿಲು ಬಡಾವಣೆಯಲ್ಲಿ ಕಂದಾಯ ಇಲಾಖೆ, ಜಿಬಿಎ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಜಂಟಿ ಸರ್ವೆ ಮಾಡಲಾಗಿದೆ. ಮೂರು ತಂಡಗಳು ಮಾಡಿರುವ ಸರ್ವೆ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಮಾಹಿತಿಯನ್ನು ಕ್ರೂಢಿಕರಿಸಿ ಸರಕಾರಕ್ಕೆ ಸಲ್ಲಿಸಲಾಗುತ್ತದೆ’ -ಶ್ರೇಯಸ್, ತಹಶೀಲ್ದಾರ್ ಯಲಹಂಕ
ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಮನೆ ಕಟ್ಟಲು 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ: ಶಾಸಕ ಅಶೋಕ್ ರೈ
ವಿಟ್ಲ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಕಟ್ಟಲು ಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೆ 2.75 ಸೆಂಟ್ಸ್ ಜಾಗವನ್ನು ರಾಜ್ಯ ಸರಕಾರ ಮಂಜೂರು ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ವಿಟ್ಲ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಅಂದಿನ ರಾಜ್ಯ ಸರಕಾರ 1.38 ಸೆಂಟ್ಸ್ ಸ್ಥಳವನ್ನು ಮಂಜೂರು ಮಾಡಿತ್ತು. ಆದರೆ ಅದರಲ್ಲಿ ಮನೆ ಕಟ್ಟಲು ಅಸಾಧ್ಯ ವಾದ ಕಾರಣ ಮತ್ತು ಬ್ಯಾಂಕ್ ಸಾಲ ಆ ಜಾಗಗಳಿಗೆ ಮಂಜೂರಾಗದ ಕಾರಣ ಅರ್ಜಿದಾರರು ಅದನ್ನು ಬಿಟ್ಟಿದ್ದರು. ಈ ಬಗ್ಗೆ ಹಿಂದೆಯೂ ಧ್ವನಿ ಎತ್ತಿದ್ದೆ. ಶಾಸಕನಾದ ಬಳಿಕ ನಿರಂತರ ಕಂದಾಯ ಸಚಿವರ ಮೇಲೆ ಒತ್ತಡ ಹೇರಿ 94 ಸಿ ಮತ್ತು 94 ಸಿ ಸಿ ಅಡಿ 2.75 ಸೆಂಟ್ಸ್ ಸ್ಥಳ ಮಂಜೂರು ಮಾಡಿಸುವಲ್ಲಿ ಯಶಸ್ವಿ ಆಗಿದ್ದೇನೆ ಎಂದು ಹೇಳಿದರು. ಈ ಹಿಂದೆ ಇಕಾಖೆಯಿಂದ ತಿರಸ್ಕೃತ, 4,800 ರಷ್ಟು ಅರ್ಜಿಯ ಮರುಶೀಲನೆಗೆ ಒತ್ತಾಯಿಸಿದ್ದೇನೆ ಎಂದು ಶಾಸಕರು ಹೇಳಿದರು. 2015ರ ಮೊದಲು ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ ಮೂವರಿಗೆ ಸಕ್ರಮವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಲೇರಿದ್ದರು. ಇದೀಗ ನ್ಯಾಯಾಲಯದಲ್ಲಿ ಅವರಿಗೆ ಗೆಲುವು ದೊರಕಿದೆ. ಅವರಿಗೆ ಮತ್ತು ಅರ್ಜಿ ಸಲ್ಲಿಸಿದ ಸಲ್ಲಿಸುವ ಎಲ್ಲರಿಗೂ ಜಾಗ ಸಕ್ರಮ ಆಗಲಿದೆ. ಶಾಸಕನಿಗೆ ಅವರಿಗೆ ಸಹಕಾರ ನೀಡುವೆ ಎಂದು ಅವರು ಹೇಳಿದರು ಕಬಕ- ವಿಟ್ಲ ಚತುಷ್ಪಥ ರಸ್ತೆಗೆ ಮೊದಲ ಹಂತದಲ್ಲಿ ಹತ್ತು ಕೋಟಿ ರೂ. ಅನುದಾನ ಮಂಜೂರು ಆಗಿದೆ. ಶೀಘ್ರವಾಗಿ ಕಾರ್ಯ ಆರಂಭ ಆಗಲಿದೆ. ಹೆದ್ದಾರಿ ಇಲಾಖೆ ಅದರ ನಿರ್ವಹಣೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಶಾಸಕರು ಹೇಳಿದರು. ವಿಟ್ಲ ಸಮುದಾಯ ಆಸ್ಪತ್ರೆ ಹಿಂಬಡ್ತಿ ಹೊಂದುವ ಸಾಧ್ಯತೆಯನ್ನು ಸ್ಪಷ್ಟವಾಗಿ ನಿರಾಕರಿಸಿದ ಅವರು ಆಸ್ಪತ್ರೆಯ ಸಿಬ್ಬಂದಿ ಮತ್ತು ಮೂಲ ಸೌಕರ್ಯ ಹೆಚ್ಚಿಸಲಾಗುವುದು. ಡಯಾಲಿಸೀಸ್ ಕೇಂದ್ರ ವಿಟ್ಲದಲ್ಲಿ ಆರಂಭ ಆಗಲಿದೆ ಎಂದು ಅವರು ಹೇಳಿದರು. ವಿಟ್ಲಕ್ಕೆ ಅಗ್ನಿಶಾಮಕ ವಾಹನ ಮಂಜೂರು ಆಗಿದೆ. ಸ್ಥಳ ಗುರುತಿಸುವಿಕೆ ನಡೆದ ತಕ್ಷಣ ವಿಟ್ಲದಲ್ಲಿ ಅಗ್ನಿಶಾಮಕ ವಾಹನ ಕಾರ್ಯ ಆರಂಭ ಮಾಡಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ರೂಪಲೇಖಾ ಆಳ್ವ, ಪುತ್ತೂರು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ರೈ ಪೆರ್ನೆ, ವಿಟ್ಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.
Bengaluru | ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; ವ್ಯಕ್ತಿ ಮೃತ್ಯು
ಬೆಂಗಳೂರು : ನಗರದಲ್ಲಿರುವ ಕುಂದಲಹಳ್ಳಿ ಕಾಲನಿಯ ಅತಿಥಿ ಗೃಹವೊಂದರ(ಪಿಜಿ) ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಳ್ಳಾರಿ ಮೂಲದ ಅರವಿಂದ್(23) ಮೃತಪಟ್ಟಿದ್ದು, ಅವರು ಸಾಫ್ಟ್ ವೇರ್ ಸಂಸ್ಥೆಯಲ್ಲಿ ಸೀನಿಯರ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಪಿಜಿಯಲ್ಲಿದ್ದ ವೆಂಕಟೇಶ್, ವಿಶಾಲ್ ವರ್ಮಾ, ಸಿ.ವಿ. ಗೋಯಲ್ ಎಂಬುವರು ಗಾಯಗೊಂಡಿದ್ದಾರೆ.
ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಅಕ್ಷಮ್ಯ : ಆರ್.ಅಶೋಕ್
ಬೆಂಗಳೂರು : ಬೆಂಗಳೂರು ನಗರವು ಸೇರಿದಂತೆ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿಕ ಮಂದಿ ವಸತಿ ರಹಿತರು ಇದ್ದು, ಅವರಿಗೆ ವಸತಿ ಸೌಲಭ್ಯ ಕಲ್ಪಿಸುವುದನ್ನು ಬಿಟ್ಟು ಕಾಂಗ್ರೆಸ್ ಸರಕಾರ ಅಕ್ರಮ ವಲಸಿಗರಿಗೆ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಿರುವುದು ಅಕ್ಷಮ್ಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲಹಂಕ ಸಮೀಪದ ಕೋಗಿಲು ಬಡಾವಣೆಯಲ್ಲಿನ ಕಲ್ಲು ಕ್ವಾರಿ ಇತ್ತು. 2023ರ ವರೆಗೆ ಆ ಪ್ರದೇಶದಲ್ಲಿ ಯಾವುದೇ ರೀತಿಯ ಜನವಸತಿ ಇರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಆ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು. ಸ್ಥಳೀಯ ರಾಜಕೀಯ ಮುಖಂಡನೊಬ್ಬ ಪ್ರತಿ ಕುಟುಂಬದಿಂದ 4 ಲಕ್ಷದಿಂದ 5 ಲಕ್ಷ ರೂ.ಗಳಷ್ಟು ಹಣ ಪಡೆದುಕೊಂಡು, ಶೆಡ್ಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾನೆ. ಈ ಎಲ್ಲ ಮಾಹಿತಿ ಸರಕಾರಕ್ಕೆ ಇದೆ. ಯಾರೊ ಮಾಡಿದ ಅಕ್ರಮಕ್ಕೆ ಇದೀಗ ಸರಕಾರವೇ ರಾಜ್ಯದ ಜನತೆ ತೆರಿಗೆ ಹಣವನ್ನು ವೆಚ್ಚ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಅಶೋಕ್ ಟೀಕಿಸಿದರು. ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಕೋಗಿಲು ಬಡಾವಣೆಯ ಪ್ರದೇಶದಲ್ಲಿರುವ ಎಲ್ಲರ ಬಳಿಯೂ ಆಧಾರ್ ಕಾರ್ಡ್, ರೇಷನ್ ಕಾರ್ಡ್ಗಳಿವೆ. ಅವುಗಳನ್ನು ಅವರು ಹೇಗೆ ಪಡೆದುಕೊಂಡರು ಎಂದು ಪ್ರಶ್ನಿಸಿದ ಅಶೋಕ್, ದೇಶದ ಯಾವ ಭಾಗದಿಂದ ಅವರು ಇಲ್ಲಿಗೆ ಬಂದರು ಎಂಬುದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಸರಕಾರ ಈವರೆಗೂ ಹೋಗಿಲ್ಲ. ಹೀಗಾಗಿಯೇ ರಾಜ್ಯದಲ್ಲಿ ಅಕ್ರಮ ವಲಸಿಗರ ಸಮಸ್ಯೆ ಆರಂಭವಾಗಿದೆ ಎಂದು ಟೀಕಿಸಿದರು.
ಭುವನೇಶ್ವರ,ಡಿ.30: ವೈದ್ಯಕೀಯ ಚಿಕಿತ್ಸೆಗಾಗಿ ಭುವನೇಶ್ವರಕ್ಕೆ ಪ್ರಯಾಣಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳ ಗುರುತಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ ಕಾರಣ ಅವರನ್ನು ನಗರದ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಪೊಲೀಸ್ ದೃಢೀಕರಣಕ್ಕೊಳಪಡಿಸಿದ ಘಟನೆ ವರದಿಯಾಗಿದೆ. ಅಷ್ಟೇ ಅಲ್ಲದೆ, ಅವರಲ್ಲೊಬ್ಬರಿಗೆ ಚಿಕಿತ್ಸೆ ನೀಡಲಿದ್ದ ಆಸ್ಪತ್ರೆಯ ಆಡಳಿತ ಕೂಡ ತೊಂದರೆಗೆ ಸಿಲುಕಬಹುದೆಂಬ ಭೀತಿಯಿಂದ ರೋಗಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದೆ. ಮುಂಬೈನಿಂದ ವಿಮಾನದಲ್ಲಿ ಆಗಮಿಸಿದ್ದ ಇಬ್ಬರೂ ಆನಂತರ ಬಂದ ದಾರಿಯಲ್ಲೇ ವಾಪಸಾಗಬೇಕಾಯಿತು. ಇವರಿಬ್ಬರೂ ಸಹೋದರರಾಗಿದ್ದು, ಅವರಲ್ಲೊಬ್ಬರು ಚಾಲಕ ಹಾಗೂ ಇನ್ನೊಬ್ಬರು ಕಾರ್ಮಿಕ. ಇವರ ಪೈಕಿ ಹಿರಿಯ ಸಹೋದರ ಹೃದಯದ ತೊಂದರೆಯಿಂದ ಬಳಲುತ್ತಿದ್ದು, ಆತನ ಚಿಕಿತ್ಸೆಗಾಗಿ ಭುವನೇಶ್ವರದ ಖಾಸಗಿ ಆಸ್ಪತ್ರೆಗೆ ಆಗಮಿಸುವವರಿದ್ದರು. ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣ (ಬಿಜೆಐಎ)ದಲ್ಲಿ ಬಂದಿಳಿದ ಅವರನ್ನು ಕರೆತರಲು ಆ್ಯಂಬುಲೆನ್ಸನ್ನು ಕೂಡಾ ಆಸ್ಪತ್ರೆಯ ಆಡಳಿತ ಏರ್ಪಾಡು ಮಾಡಿತ್ತು. ಆದರೆ, ಸಂವಹನದ ಕೊರತೆಯಿಂದಾಗಿ ಅದು ತಲುಪಲಿಲ್ಲ. ಆ್ಯಂಬುಲೆನ್ಸ್ ಬಾರದ ಕಾರಣ ಸಹೋದರರು ಆಸ್ಪತ್ರೆಗೆ ತೆರಳಲು ಟ್ಯಾಕ್ಸಿಯೊಂದನ್ನು ಗೊತ್ತುಪಡಿಸಿದರು. ಟ್ಯಾಕ್ಸಿಯ ಚಾಲಕ,ಇವರಿಬ್ಬರ ರಾಷ್ಟ್ರೀಯತೆಯನ್ನು ಕೇಳಿದಾಗ ಅವರು ಬಾಂಗ್ಲಾದ ಪ್ರಜೆಗಳೆಂದು ತಿಳಿದುಬಂದಿತು. ಆತ ವಿಮಾನನಿಲ್ದಾಣದಲ್ಲಿದ್ದ ಇತರರನ್ನು ಎಚ್ಚರಿಸಿದ. ಸ್ಥಳೀಯರು ಜಮಾವಣೆಗೊಂಡು, ಪೊಲೀಸರಿಗೆ ಮಾಹಿತಿ ನೀಡಿದರು. ಇಬ್ಬರನ್ನೂ ಅಕ್ರಮ ವಲಸಿಗರೆಂಬ ಶಂಕೆಯಲ್ಲಿ ವಿಮಾನನಿಲ್ದಾಣದ ಪೊಲೀಸ್ಠಾಣೆಗೆ ಕೊಂಡೊಯ್ದು ವಿಚಾರಣೆಗೊಳಪಡಿಸಲಾಯಿತು ಪಾಸ್ಪೋರ್ಟ್, ವೀಸಾ ಸೇರಿದಂತೆ ಅವರ ಪ್ರಯಾಣ ದಾಖಲೆಗಳನ್ನು ಪರಿಶೀಲಿಸಿದಾಗ ಅವು ಅಧಿಕೃತವೆಂದು ದೃಢಪಟ್ಟಿತು. ಕೂಲಂಕಷ ಪರಿಶೀಲನೆಯ ಬಳಿಕ ಅವರನ್ನು ಬಿಡಲಾಯಿತು ಎಂದು ಪೊಲೀಸ್ಠಾಣೆಯ ಉಸ್ತುವಾರಿ ನಿರೀಕ್ಷಕ ರಬೀಂದ್ರನಾಥ್ ಮೆಹರ್ ತಿಳಿಸಿದ್ದಾರೆ. ಆದಾಗ್ಯೂ, ಬಾಂಗ್ಲಾದೇಶದಲ್ಲಿ ಇತ್ತೀಚಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಜನಾಕ್ರೋಶವುಂಟಾಗಿರುವುದರಿಂದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯ ಆಡಳಿತವು ನಿರಾಕರಿಸಿತು. ಬೇರೆ ದಾರಿಯಿಲ್ಲದೆ, ಈ ಸೋದರರು ಮುಂಬೈಗೆ ವಾಪಸಾಗಿದ್ದಾರೆಂದು ವರದಿಗಳು ತಿಳಿಸಿವೆ. ಡಿಸೆಂಬರ್ 24ರಂದು ಸಂಬಾಲ್ಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗನೆಂಬ ಶಂಕೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಪಶ್ಚಿಮಬಂಗಾಳದ ವಲಸೆ ಕಾರ್ಮಿಕನೊಬ್ಬನನ್ನು ಹತ್ಯೆಗೈದ ಕೆಲವು ದಿನಗಳ ಬಳಿಕ ಈ ಘಟನೆ ನಡೆದಿದೆ. ಸಂಭಾಲ್ಪುರದ ವಲಸೆ ಕಾರ್ಮಿಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದರು. ಆದರೆ ಆಸ್ತಿ ವಿವಾದಕ್ಕೆ ಸಂಬಂಧಿಸಿ ಆ ವ್ಯಕ್ತಿಯ ಮೇಲೆ ದಾಳಿ ನಡೆದಿದೆಯೇ ಹೊರತು,ಬಾಂಗ್ಲಾದ ಪ್ರಜೆಯೆಂಬ ಶಂಕೆಯಲ್ಲಿ ಅಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಮಾಜಿ ಉಪರಾಷ್ಟ್ರಪತಿ ಧನಕರ್ಗೆ ಇನ್ನೂ ಸಿಗದ ಸರಕಾರಿ ಬಂಗಲೆ!
ಹೊಸದಿಲ್ಲಿ,ಡಿ.30: ಉಪರಾಷ್ಟ್ರಪತಿ ಹುದ್ದೆಗೆ ಜುಲೈನಲ್ಲಿ ರಾಜೀನಾಮೆ ನೀಡಿದ್ದ ಜಗದೀಪ್ ಧನಕರ್ ಅವರಿಗೆ, ಈತನಕ ಅಧಿಕೃತ ನಿವಾಸ ನೀಡಲಾಗಿಲ್ಲವೆಂದು ಅವರ ನಿಕಟವರ್ತಿಗಳು ಮಂಗಳವಾರ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಆರೋಗ್ಯದ ಕಾರಣಗಳನ್ನು ನೀಡಿ, ಸಂಸತ್ನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ವಾರಗಳ ತರುವಾಯ, ಸೆಪ್ಟೆಂಬರ್ನಲ್ಲಿ ಅವರು ಅಧಿಕೃತ ನಿವಾಸವಾದ ಉಪರಾಷ್ಟ್ರಪತಿ ಭವನವನ್ನು ತೆರವುಗೊಳಿಸಿದ್ದರು. ಆನಂತರ ಅವರು ದಕ್ಷಿಣ ದಿಲ್ಲಿಯ ಛತ್ತರ್ಪುರ ಪ್ರದೇಶದಲ್ಲಿರುವ ಖಾಸಗಿ ಫಾರ್ಮ್ ಹೌಸ್ ಒಂದರಲ್ಲಿ ನೆಲೆಸಿದ್ದರು. ಛತ್ತರ್ಪುರದ ಗಡಾಯ್ಪುರ ಪ್ರದೇಶದಲ್ಲಿರುವ ಈ ಫಾಮ್ಹೌಸ್ ಐಎನ್ಎಲ್ಡಿ ನಾಯಕ ಅಭಯ್ ಚೌಟಾಲಾ ಅವರಿಗೆ ಸೇರಿದ್ದಾಗಿದೆ. ಆಗಸ್ಟ್ 22ರಂದು ಧನಕರ್ ಅವರು ಗೃಹ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯವರಿಗೆ ಪತ್ರ ಬರೆದು ಮಾಜಿ ಉಪರಾಷ್ಟ್ರಪತಿಯವರಿಗೆ ದೊರೆಯಬೇಕಾದ ಅಧಿಕೃತ ನಿವಾಸವನ್ನು ತನಗೆ ನೀಡುವಂತೆ ಕೋರಿದ್ದರು. ಆದಾಗ್ಯೂ, ಅವರಿಗೆ ದೊರೆಯಬೇಕಾದ ನಿವಾಸವನ್ನು ಈವರೆಗೆ ಒದಗಿಸಲಾಗಿಲ್ಲವೆಂದು ಎಂದು ಅವರ ಆಪ್ತರೊಬ್ಬರು ತಿಳಿಸಿದ್ದಾರೆ. ಮಾಜಿ ಉಪರಾಷ್ಟ್ರಪತಿಯಾಗಿ ಧನಕರ್ ಅವರು 2 ಲಕ್ಷ ರೂ. ಮಾಸಿಕ ಪಿಂಚಣಿ, ಟೈಪ್ 8 ಬಂಗಲೆ, ಓರ್ವ ಖಾಸಗಿ ಕಾರ್ಯದರ್ಶಿ, ಓರ್ವ ಹೆಚ್ಚುವರಿ ಆಪ್ತ ಕಾರ್ಯದರ್ಶಿ, ಓರ್ವ ಖಾಸಗಿ ಸಹಾಯಕ, ಓರ್ವ ವೈದ್ಯ, ಓರ್ವ ನರ್ಸಿಂಗ್ ಅಧಿಕಾರಿ ಹಾಗೂ ನಾಲ್ವರು ಖಾಸಗಿ ಪರಿಚಾರಕರನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ.
ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ
ಉಡುಪಿ, ಡಿ.30: ರಂಗಶಿಕ್ಷಣ ಮಕ್ಕಳ ಜೀವನ ಪರಿವರ್ತನೆಗೆ ನಾಂದಿ ಯಾಗಲಿದೆ. ಮಕ್ಕಳಲ್ಲಿ ಹುದುಗಿರುವ ಪ್ರತಿಭಾಶಕ್ತಿಯನ್ನು ಹೊರ ತರುವುದೇ ಈ ರಂಗಶಿಕ್ಷಣದ ಉದ್ದೇಶವಾಗಿದೆ. ನಮ್ಮ ಕನಸು ನನಸಾಗುತ್ತಿದೆ. 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ರಂಗಶಿಕ್ಷಣ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ರಂಗಶಿಕ್ಷಣವನ್ನು ಇನ್ನಷ್ಟು ಶಾಲೆಗಳಿಗೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ರಂಗಭೂಮಿ ಉಡುಪಿ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಂಗಳವಾರ ನಡೆದ ರಂಗಭೂಮಿ ರಂಗ ಶಿಕ್ಷಣ ಅಭಿಯಾನದ ಮಕ್ಕಳ ನಾಟಕೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಎಲ್ಲಾ ಕ್ಷೇತ್ರಗಳಲ್ಲಿಯೂ ನಿವೃತ್ತಿ ಎಂಬುದಿದೆ. ಆದರೆ ಕಲಾವಿದರಿಗೆ ನಿವೃತ್ತಿಯಿಲ್ಲ. ಮಕ್ಕಳಿಗೆ ರಂಗ ಶಿಕ್ಷಣ ನೀಡಿ ಅವರನ್ನು ನಾಡಿನ ಉತ್ತಮ ನಾಗರಿಕರನ್ನಾಗಿಸುವ ರಂಗಭೂಮಿಯ ಈ ಅಭಿಯಾನದಲ್ಲಿ ಸಂಘಸಂಸ್ಥೆಗಳು ಕೈ ಜೋಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಮುಖ್ಯ ಅತಿಥಿ ಅದಾನಿ ಪವರ್ನ ಎಜಿಎಂ ರವಿ ಜರೆ ಮಾತನಾಡಿ, ಕಳೆದ 6 ದಶಕಗಳಿಂದ ರಂಗಭೂಮಿಯ ಕಂಪನ್ನು ನಾಡಿನ ಉದ್ದಗಲಕ್ಕೂ ಪಸರಿಸಿದ ರಂಗಭೂಮಿ ಉಡುಪಿ ಸಂಸ್ಥೆ ಇದೀಗ ಮಕ್ಕಳನ್ನು ನಾಟಕದತ್ತ ಸೆಳೆಯಲು ರಂಗ ಶಿಕ್ಷಣವನ್ನು ಹಮ್ಮಿಕೊಂಡಿರುವುದು ಅಭಿನಂದನಾರ್ಹ. ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆಗೆ ಭವಿಷ್ಯದ ರಂಗಭೂಮಿ ಕಲಾವಿದರನ್ನು ಕೊಡುವ ಈ ರಂಗಶಿಕ್ಷಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಿದೆ ಎಂದರು. ಉದ್ಯಮಿ ಶ್ರೀಶ ನಾಯಕ್ ಪೆರಣಂಕಿಲ ಮಾತನಾಡಿ, ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳನ್ನು ನಾಟಕದತ್ತ ಸೆಳೆಯುವ ರಂಗಭೂಮಿ ಉಡುಪಿಯ ಪ್ರಯತ್ನ ಶ್ಲಾಘನೀಯ. ನಾಟಕದ ಮೂಲಕ ರಂಗಭೂಮಿ ಸಮಾಜವನ್ನು ಎಚ್ಚರಿಸುವ ಕಾರ್ಯ ನಡೆಸುತ್ತಿದೆ ಎಂದರು. ರಟಗಶಿಕ್ಷಣ ಯೋಜನೆಯ ಸಂಚಾಲಕ ವಿದ್ಯಾವಂತ ಆಚಾರ್ಯ ಸಮಾರೋಪ ಭಾಷಣ ಮಾಡಿದರು. ಅಲಯನ್ಸ್ ಜಿಲ್ಲಾ ಗವರ್ನರ್ ಸುನೀಲ್ ಸಾಲ್ಯಾನ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಂಗ ಶಿಕ್ಷಣ ಪಡೆದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ರಂಗಶಿಕ್ಷಣದ ಗುರುಗಳಿಗೆ ಗೌರವಾರ್ಪಣೆ ನಡೆಯಿತು. ಉದ್ಯಮಿ ಜಮಾಲುದ್ದೀನ್ ಅಬ್ಬಾಸ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಆರ್ಆರ್ಸಿ ನಿರ್ದೇಶಕ ಡಾ.ಜಗದೀಶ್ ಶೆಟ್ಟಿ, ರಂಗಭೂಮಿ ಉಡುಪಿಯ ಉಪಾಧ್ಯಕ್ಷರುಗಳಾದ ರಾಜಗೋಪಾಲ್ ಬಲ್ಲಾಳ್ ಹಾಗೂ ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪ್ರದೀಪಚಂದ್ರ ಕುತ್ಪಾಡಿ ಸ್ವಾಗತಿಸಿದರು. ರವಿರಾಜ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಅಮಿತಾಂಜಲಿ ಕಿರಣ್ ವಂದಿಸಿದರು. ಈ ಸಂದರ್ಭದಲ್ಲಿ ಉಡುಪಿ ಬೈಲಕೆರೆ ಶ್ರೀಅನಂತೇಶ್ವರ ಪ್ರೌಢಶಾಲೆಯ ಮಕ್ಕಳಿಂದ ’ಒಮ್ಮೆ ಸಿಕ್ಕರೆ’ ನಾಟಕ, ನಿಟ್ಟೂರು ಪ್ರೌಢಶಾಲಾ ಮಕ್ಕಳಿಂದ ’ಕತ್ತಲೆ ನಗರ ತಲೆಕೆಟ್ಟ ರಾಜ’, ಕುಂಜಿಬೆಟ್ಟು ಟಿಎ ಪೈ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಂದ ’ತಾರೆ’, ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಮಕ್ಕಳಿಂದ ’ಅಳಿಲು ರಾಮಾಯಣ ’ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ ’ಎಂಡ್ ಇಲ್ಲದ ಬಂಡ್ ಅವತಾರ’ ನಾಟಕಗಳು ಪ್ರದರ್ಶನಗೊಂಡವು. ಡಿ.29 ಹಾಗೂ 30ರಂದು ಎರಡು ದಿನಗಳ ಕಾಲ ನಡೆದ ಈ ನಾಟಕೋತ್ಸವದಲ್ಲಿ 11 ಶಿಕ್ಷಣ ಸಂಸ್ಥೆಗಳ 250ಕ್ಕೂ ಅಧಿಕ ಮಕ್ಕಳು ಭಾಗವಹಿಸಿ 11 ನಾಟಕಗಳನ್ನು ಪ್ರದರ್ಶಿಸಿದರು.
ನೂರು ದಿನ ಪೂರೈಸಿದ ಬೈಂದೂರು ರೈತರ ಧರಣಿ: ಜ.2ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆಗೆ ಸಜ್ಜು
ಬೈಂದೂರು, ಡಿ.30: ಪಟ್ಟಣ ಪ್ರದೇಶದ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ನೂರು ದಿನ ಪೂರೈಸಿದ್ದು, ಈವರೆಗೆ ಬೇಡಿಕೆಗಳು ಈಡೇರದ ಕಾರಣ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಸಂಘ ನಿರ್ಧರಿಸಿದೆ. ಮಂಗಳವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಈಗಾಗಲೇ ನಾಲ್ಕು ತಿಂಗಳಿಂದ ಸಾವಿರಾರು ರೈತರು ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಅಧಿವೇಶನದಲ್ಲೂ ಕೂಡ ಜನನಾಯಕರು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಪಕ್ಷಾತೀತವಾಗಿ ನಡೆಯುತ್ತಿ ರುವ ಈ ಹೋರಾಟಕ್ಕೆ ಜಿಲ್ಲೆಯ ಎಲ್ಲಾ ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದಾರೆ. ಈಗಾಗಲೇ ಎಲ್ಲಾ ವಿವರಗಳ ಪ್ರಸ್ತಾವನೆ ಸರಕಾರದ ಮುಂದಿದ್ದು ಅಧಿಕಾರಿಗಳ ಅನಗತ್ಯ ವಿಳಂಬದಿಂದಾಗಿ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಬೇಡಿಕೆಯ ಬಗ್ಗೆ ನಿರ್ಲಕ್ಷ ಸರಿಯಲ್ಲ. ಮುಂದಾಗುವ ಎಲ್ಲಾ ಸಮಸ್ಯೆಗಳಿಗೂ ಅಧಿಕಾರಿಗಳೆ ಕಾರಣ ಎಂದು ಆಕ್ರೋಷ ವ್ಯಕ್ತಪಡಿಸಿದರು. ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿರುವ ಜೊತೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲಾಗಿತ್ತು. ಬೆಳಗಾವಿ ಅಧಿವೇಶನ ಸೇರಿದಂತೆ ಬೆಂಗಳೂರಿನಲ್ಲೂ ಕೂಡ ವಿವಿಧ ಸಚಿವರು, ಅಧಿಕಾರಿಗಳನ್ನು ಭೇಟಿಯಾಗಿ ವಾಸ್ತವತೆ ತಿಳಿಸಲಾಗಿತ್ತು. ಸರಕಾರದ ಮಟ್ಟದಲ್ಲಿ ಅನಗತ್ಯ ವಿಳಂಬವಾಗಿರುವುದು ಸ್ಪಷ್ಟವಾಗಿದೆ. ಹೀಗಾಗಿ ಜ.2ರಂದು ಬೈಂದೂರಿನಲ್ಲಿ ಪ್ರತಿಭಟನೆ ಜಾಥಾ ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಹೋರಾಟದಲ್ಲಿರುವ ಪ್ರಮುಖರಾದ ಅರುಣ್ ಕುಮಾರ್ ಶಿರೂರು, ಸಮಾಜ ಸೇವಕ ಸುಬ್ರಹ್ಮಣ್ಯ ಬಿಜೂರು, ಮಹಾದೇವ ಪೂಜಾರಿ ಕಿಸ್ಮತ್ತಿ, ಕೇಶವ ಪೂಜಾರಿ, ಮಹಾದೇವ ಗೊಂಡ ಕಡ್ಕೆ, ಚಂದು ಮರಾಠಿ, ಮಂಜು ಗೊಂಡ, ನಾಗರಾಜ ಪೂಜಾರಿ ವಸ್ರೆ, ರಾಜು ಪೂಜಾರಿ ವಸ್ರೆ ಮೊದಲಾದವರು ಉಪಸ್ಥಿತರಿದ್ದರು.
Uttar Pradesh| SIRಗೆ ಕಾಲಾವಕಾಶ ವಿಸ್ತರಣೆ; ಮಾರ್ಚ್ 6ಕ್ಕೆ ಅಂತಿಮ ಪಟ್ಟಿ
ಲಕ್ನೋ: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು 2026ರ ಜನವರಿ 6ರಂದು ಹಾಗೂ ಅಂತಿಮ ಪಟ್ಟಿಯನ್ನು ಮಾರ್ಚ್ 6ರಂದು ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಈ ಹಿಂದೆ ಮೊದಲ ಮರುಹೊಂದಾಣಿಕೆಯ ಬಳಿಕ ಕರಡು ಪಟ್ಟಿಯನ್ನು ಡಿಸೆಂಬರ್ 31, 2025ರಂದು ಪ್ರಕಟಿಸುವುದಾಗಿ ಆಯೋಗ ಘೋಷಿಸಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕವನ್ನು ಮುಂದೂಡಲಾಗಿದೆ. ರಾಜ್ಯದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಹೇಳಿಕೆಯಲ್ಲಿ, ಜನವರಿ 6ರಿಂದ ಫೆಬ್ರವರಿ 6ರವರೆಗೆ ಮತದಾರರಿಂದ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ಅವಧಿಯಲ್ಲಿ ನೋಟಿಸ್ ಹಂತ, ಆಕ್ಷೇಪಣೆಗಳ ವಿಲೇವಾರಿ ಹಾಗೂ ಎಣಿಕೆ ನಮೂನೆಗಳ ಮೇಲಿನ ನಿರ್ಧಾರ ಪ್ರಕ್ರಿಯೆಗಳು ನಡೆಯಲಿದ್ದು, ಮಾರ್ಚ್ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮೊದಲು ಕರಡು ಪಟ್ಟಿಯ ಪ್ರಕಟಣೆಗೆ ಚುನಾವಣಾ ಆಯೋಗವು ಗಡುವು ಡಿಸೆಂಬರ್ 26 ಎಂದು ನಿಗದಿಪಡಿಸಿತ್ತು. ಈ ದಿನಾಂಕವನ್ನು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ ಮತ್ತು ಛತ್ತೀಸ್ಗಢ ರಾಜ್ಯಗಳಿಗೂ, ಅಂಡಮಾನ್–ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶಕ್ಕೂ ಅನ್ವಯಿಸಲಾಗಿತ್ತು. ಚುನಾವಣಾ ಆಯೋಗ ನವೆಂಬರ್ 4, 2025ರಂದು ಉತ್ತರ ಪ್ರದೇಶ ಸೇರಿದಂತೆ ಒಟ್ಟು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿತ್ತು.
Bengaluru | ಸುತ್ತಿಗೆಯಿಂದ ಹೊಡೆದು ಗಾರೆ ಕೆಲಸಗಾರನ ಭೀಕರ ಕೊಲೆ
ಬೆಂಗಳೂರು : ಸೋಮವಾರ ರಾತ್ರಿ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲಕ ಕಾರಣಕ್ಕೆ ಪಾನಮತ್ತ ಇಬ್ಬರು ಗಾರೆ ಕೆಲಸಗಾರರು ಮಾಡಿಕೊಂಡ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ದೀಪು ಮಂಡಲ್ ಎಂಬಾತ ದೀಪು ಸರ್ಕರ್(30) ಎಂಬುವವರನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಜೆಪಿ ನಗರದ 8ನೆ ಹಂತದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಗಾರೆ ಕೆಲಸಮಾಡಿಕೊಂಡು ಅಲ್ಲಿಯೇ ವಾಸಿಸುತ್ತಿದ್ದ ಇವರಿಬ್ಬರು ರಾತ್ರಿ-ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ದೀಪು ಮಂಡಲ್ ಆಕ್ರೋಶಗೊಂಡು ದೀಪು ಸರ್ಕರ್ ಗೆ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದಾನೆ. ಬೆಳಿಗ್ಗೆ ಕೆಲಸ ಮಾಡಲು ಇತರ ಕೆಲಸಗಾರರು ಬಂದು ನೋಡಿದಾಗ ಕೊಲೆ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಬಂಧನಕ್ಕೆ ಆರೋಪಿಯನ್ನು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಬಿಎಂಸಿ ಚುನಾವಣೆ ಸೀಟು ಹಂಚಿಕೆ ಕಸರತ್ತು: ಬಿಜೆಪಿ 137, ಶಿವಸೇನಾ 90 ಸ್ಥಾನಗಳಿಗೆ ಸ್ಪರ್ಧೆ
ಮುಂಬೈ,ಡಿ.30 : ಸಮಾಲೋಚನೆ ಹಾಗೂ ಮಾತುಕತೆಗಳ ಬಳಿಕ ಬಿಜೆಪಿಯು ಬೃಹನ್ಮುಂಬಯಿ ಮಹಾನಗರಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಸ್ಪರ್ಧಿಸಲು ಏಕನಾಥ ಶಿಂಧೆ ನೇತೃತ್ವದ ಶಿವಸೇನಾಗೆ 90 ಸ್ಥಾನಗಳನ್ನು ನೀಡಲು ಒಪ್ಪಿಕೊಂಡಿದೆ. ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಸ್ಪರ್ಧಿಸುವ ಯೋಜನೆಯನ್ನು ಹೊಂದಿದ್ದ ಬಿಜೆಪಿ ಈಗ 137 ಸ್ಥಾನಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದೆ. ಮಹಾಯುತಿ ಮೈತ್ರಿಕೂಟದ ಒಡಂಬಡಿಕೆಯಂತೆ ಬಿಜೆಪಿ ಹಾಗೂ ಶಿವಸೇನಾ ಪಕ್ಷಗಳು, ತಮ್ಮ ಪಾಲಿಗೆ ದೊರೆತಿರುವ ಸೀಟುಗಳ ಪೈಕಿ ಕೆಲವನ್ನು ಮಹಾಯುತಿ ಮೈತ್ರಿಕೂಟದ ಅಂಗಪಕ್ಷಗಳಿಗೆ ಬಿಟ್ಟುಕೊಡಲಿವೆ ಎಂದು ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಅಮಿತ್ ಸತಾಮ್ ತಿಳಿಸಿದ್ದಾರೆ. ‘‘ಬಿಎಂಸಿ ಚುನಾವಣೆಯಲ್ಲಿ ಉಭಯ ಪಕ್ಷಗಳೂ ಜಂಟಿಯಾಗಿ ಪ್ರಚಾರವನ್ನು ನಡೆಸಲಿವೆ.ಮುಂಬೈನ ಬಣ್ಣ ಬದಲಾಗುವುದಕ್ಕೆ ಬಿಡಲಾರೆವು. ಮುಂಬೈನ ಭದ್ರತೆ ಹಾಗೂ ಸುರಕ್ಷತೆಯೇ ನಮ್ಮ ಧ್ಯೇಯವಾಗಿದೆ. ಈಗಾಗಲೇ 200ಕ್ಕೂ ಅಧಿಕ ಸೀಟುಗಳಿಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವೇರ್ಪಟ್ಟಿದೆ. ಇನ್ನು ಕೇವಲ 27 ಸೀಟುಗಳಷ್ಟೇ ಬಾಕಿಯುಳಿದಿದ್ದು, ಅವುಗಳನ್ನು ಸೌಹಾರ್ದಯುತವಾಗಿ ವಿತರಿಸಲಾಗುವುದು ಎಂದರು. ಮಂಗಳವಾರದೊಳಗೆ ನಾಮಪತ್ರವನ್ನು ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ’’ ಎಂದು ಸತಾಮ್ ತಿಳಿಸಿದರು. ಬಿಜೆಪಿ- ಶಿವಸೇನಾ ಸೀಟು ಹಂಚಿಕೆಯ ಒಪ್ಪಂದ ಘೋಷಣೆಯಾದ ಬೆನ್ನಲ್ಲೇ ಮಹಾಯುತಿ ಮೈತ್ರಿಕೂಟದ ಅಂಗಪಕ್ಷವಾದ ಆರ್ಪಿಐ (ಎ)ನ ಅಧ್ಯಕ್ಷ, ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿಕೆಯೊಂದನ್ನು ನೀಡಿ ಬಿಜೆಪಿ ತಮ್ಮನ್ನು ವಂಚಿಸಿದೆಯೆಂದು ಆಪಾದಿಸಿದ್ದಾರೆ. ಸೀಟು ಹಂಚಿಕೆ ಕುರಿತ ಮಾತುಕತೆಗಾಗಿ ಸಂಜೆ 4 ಗಂಟೆಗೆ ಪಕ್ಷದ ಸದಸ್ಯರನ್ನುಕರೆಯಲಾಗಿತ್ತು. ಆದರೆ ಅವರೊಂದಿಗೆ ಯಾರೂ ಮಾತುಕತೆ ನಡೆಸಲಿಲ್ಲ. ಇದರಿಂದ ಪಕ್ಷದ ಕಾರ್ಯಕರ್ತರು ಅಸಂತೃಪ್ತಿಗೊಂಡಿದ್ದು, ಅವರು ಚುನಾವಣೆಯಲ್ಲಿ ವಿಭಿನ್ನವಾದ ನಿಲುವನ್ನು ಕೈಗೊಳ್ಳಲಿದ್ದಾರೆ ಮತ್ತು ಅವರ ನಿರ್ಧಾರವನ್ನು ತಾನು ಕೂಡಾ ಒಪ್ಪಿಕೊಳ್ಳುವುದಾಗಿ ಅಠವಳೆ ಹೇಳಿದ್ದಾರೆ. 110 ಸೀಟುಗಳನ್ನು ತನ್ನ ಪಕ್ಷಕ್ಕೆ ಬಿಟ್ಟುಕೊಡಬೇಕೆಂಬ ಏಕಕನಾಥ ಶಿಂಧೆ ಅವರ ಬೇಡಿಕೆಗೆ ವಿರುದ್ಧವಾಗಿ ಬಿಜೆಪಿ 50 ಸೀಟು ನೀಡಲು ಹೊರಟಿತ್ತು. ಆದರೆ ಶಿಂಧೆ, ಪಟ್ಟು ಸಡಿಲಿಸದ ಕಾರಣ, ಬಿಜೆಪಿ ತನ್ನ ಪಾಲಿನ ಕೋಟಾದ 13 ಸೀಟುಗಳು ಸೇರಿದಂತೆ ಒಟ್ಟು 90 ಸೀಟುಗಳನ್ನು ಶಿವಸೇನಾಗೆ ಬಿಟ್ಟುಕೊಡಬೇಕಾಯಿತು. ಅಲ್ಲದೆ, ತನ್ನ ಪಾಲಿನ ಕೋಟಾದಿಂದ ಉಳಿದ ಮಿತ್ರಪಕ್ಷಗಳಿಗೆ ಅದು ನೀಡಬೇಕಾಗಿದೆ’’ ಎಂದವರು ಹೇಳಿದರು.
ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ರಾಜ್ಯಕ್ಕೆ ಮಾದರಿ : ಸಚಿವ ಈಶ್ವರ್ ಖಂಡ್ರೆ
ಬೀದರ್ : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಬೀದರ್ ಜಿಲ್ಲಾ ಪೊಲೀಸ್ ಅಕ್ಕ ಪಡೆ ಈಗಾಗಲೇ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು. ಮಂಗಳವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಅಕ್ಕ ಪಡೆಗೆ ನಿಯೋಜಿಸಲಾದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ತರಬೇತಿ ಪಡೆದ ಎನ್ಎಸ್ಪಿ ಕೆಡೆಟ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಕ್ಕ ಪಡೆ, ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗುವ ಮೂಲಕ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷತೆ ಒದಗಿಸುತ್ತಿದೆ ಎಂದರು. ಸಮಾಜದಲ್ಲಿ ಸುರಕ್ಷತೆ ಮತ್ತು ಜಾಗೃತಿಯ ಕಿರು ಸೇತುವೆಯಾಗಿ ಅಕ್ಕ ಪಡೆ ಕಾರ್ಯನಿರ್ವಹಿಸುತ್ತಿದ್ದು, ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು. ಅಕ್ಕ ಪಡೆಯ ರಾಜ್ಯ ಸಲಹೆಗಾರ್ತಿ ಶೈನಿ ಪ್ರದೀಪ್ ಗುಂಟಿ ಅವರು ಮಾತನಾಡಿ, ಮಹಿಳೆಯರು ಸುರಕ್ಷತೆಯಾಗಿದ್ದರೆ ಜಿಲ್ಲೆ ಸುರಕ್ಷಿತವಾಗಿರುತ್ತದೆ ಎಂಬ ಆಲೋಚನೆಯಿಂದ ಅಕ್ಕ ಪಡೆ ರಚಿಸಿ, ಅದಕ್ಕೆ ವ್ಯವಸ್ಥಿತವಾಗಿ ಜಾರಿಯನ್ನು ಎಸ್ಪಿ ಅವರು ಮಾಡಿದ್ದಾರೆ. ಅಕ್ಕ ಪಡೆಯಿಂದ ಇಲ್ಲಿಯವರೆಗೆ ಎರಡು ಬಾಲ್ಯವಿವಾಹ ತಡೆಗಟ್ಟಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಚಂದ್ರಕಾಂತ್ ಪೂಜಾರಿ, ಡಿವೈಎಸ್ಪಿ ಎನ್.ಡಿ ಸನ್ನಿದಿ, ಸಿಪಿಐಗಳಾದ ವಿಜಯಕುಮಾರ್ ಬಾವಗೆ, ಪಾಲಾಕ್ಷಯ್ಯ ಹಿರೇಮಠ್, ಕೆ.ಎಂ.ಬಿರಾದಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ, ಮಕ್ಕಳ ಅಭಿವೃದ್ಧಿ ಅಧಿಕಾರಿ ಶಾರದಾ, ಕರ್ನಾಟಕ ಅಲ್ಪಸಂಖ್ಯಾತರ ಕಮಿಟಿಯ ಸದಸ್ಯ ಮಂದೀಪ್ ಕೌರ್, ಗುರುನಾನಕ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ರೇಷ್ಮಾ ಕೌರ್, ವೇಟರ್ನರಿ ಕಾಲೇಜಿನ ಡಿನ್ ಡಾ.ತಾಂದಳೆ, ಶಾಹಿನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಅಬ್ದುಲ್ ಖದಿರ್, ವಿಸ್ಡಮ್ ಕಾಲೇಜಿನ ಮುಖ್ಯಸ್ಥ ಸಲಾಹುದ್ದಿನ್, ಅಕ್ಕಮಹಾದೇವಿ ಮಹಿಳಾ ಕಾಲೇಜಿನ ಧನಲಕ್ಷ್ಮೀ ಪಾಟೀಲ್, ಶಾಹಿನ್ ಪದವಿ ಕಾಲೇಜಿನ ಪ್ರಾಂಶುಪಾಲೆ ಅಫ್ರಾ ಬೇಗಮ್ ಹಾಗೂ ಪಿಎಸ್ಐ ನಂದಿನಿ ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ
ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯುತ್ತದೆ. ಇದರೊಂದಿಗೆ ಆದಾಯವು ಹೆಚ್ಚಗುತ್ತದೆ ಈ ನಿಟ್ಟಿನಲ್ಲಿ ಅಧಿವೇಶನ ಸಂದರ್ಭದಲ್ಲಿ ಸರಕಾರಕ್ಕೆ ಮನವರಿಕೆ ಮಾಡಲಾಗಿದ್ದು ಈ ಬಗ್ಗೆ ಸರಕಾರ ಚಿಂತನೆ ಮಾಡಬೇಕಾಗಿದೆ ಮುಂದಿನ ದಿನಗಳಲ್ಲಿ ನಮ್ಮ ಸರಕಾರ ಬಂದರೆ ಈ ರೀತಿಯಲ್ಲಿ ಚಿಂತನೆ ಮಾಡಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಗೋಕುಲ ಇದರ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ಸಹಕಾರಿ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಸ್ವಂತ ಕಟ್ಟಡ ಇದ್ದಾಗ ಮಾತ್ರ ಸಾಧ್ಯ. ತನ್ನ ಶಾಸಕ ನಿಧಿಯಿಂದ ೫ ಲಕ್ಷ, ಒಕ್ಕೂಟದಿಂದ ಹಾಗೂ ದಾನಿಗಳ ಸಹಕಾರವನ್ನು ಬಳಸಿಕೊಂಡು ಇಂದು ಸ್ವಂತ ಕಟ್ಟಡ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಸಂಘವು ೫೦೦ ಲೀ ಹಾಲು ಸಂಗ್ರಹಿಸುವ ಗುರಿ ಇರಿಸಿಕೊಂಡಿರು ವುದು ಅಭಿವೃದ್ಧಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ಹೈನುಗಾರಿಕೆಗೆ ಹತ್ತಾರು ಸವಾಲುಗಳಿವೆ, ಇದರ ನಡುವೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಕೆಲಸ ಸರಕಾರ ಮಾಡುತ್ತಿದೆ, ಮಂಗಳೂರು ಒಕ್ಕೂಟವು ಎಲ್ಲಾ ಸಂಘಗಳಿಗೆ ಬೆನ್ನೆಲುಬಾಗಿ ನಿಂತುಕೊಂಡು ಸಹಕರಿಸುತ್ತಿರುವುದರಿಂದ ರಾಜ್ಯದಲ್ಲಿ ಮಾದರಿ ಒಕ್ಕೂಟವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಬಳಗವೂ ದೊಡ್ಡದಾಗಬೇಕು ಹೈನುಗಾರಿಕೆ ಯಿಂದ ವಿಮುಖರಾಗುತ್ತಿದ್ದೇವೆ ಎನ್ನುವ ಮಾತುಗಳು ಕೇಳಿಬರುತ್ತಿರುವ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ಮನೆಯಲ್ಲಿ ಗೋವನ್ನು ಸಾಕುವ ಪದ್ಧತಿ ಬೆಳೆಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಮರಾಯ ನಾಯಕ್ ವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ಸಂಘವು 500 ಲೀ ಹಾಲು ಸಂಗ್ರಹಿಸುವ ಗುರಿ ಇರಿಸಿಕೊಂಡಿದೆ ಇದಕ್ಕಾಗಿ ಹೈನುಗಾರರು ಸಹಕರಿಸುವಂತೆ ತಿಳಿಸಿದರು. ಕಟ್ಟಡಕ್ಕೆ ದೇಣಿಗೆ ನೀಡಿದ ಸರ್ವರಿಗೂ ಕೃತಜ್ಙತೆ ಸಲ್ಲಿಸಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಕೊಡವೂರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ಒಂದು ಹಂತದಲ್ಲಿ ಒಕ್ಕೂಟವು ಹಾಲಿನ ಸಂಗ್ರಹಣೆಯಲ್ಲಿ ಸುಮಾರು ೩.೪೦ಲಕ್ಷ ಲೀ ಸರಸರಿ ಕುಸಿತ ಕಂಡಿತ್ತು ಆದರೆ ಇತ್ತಿಚೇಗೆ ಸುಮಾರು ೪.೩೦ ಲಕ್ಷ ಲೀ ಸಂಗ್ರಹಣೆಯಲ್ಲಿ ಏರಿಕೆಯಾಗಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹೈನುಗಾರಿಕೆಗೆ ಹಾಗೂ ಸಹಕಾರಿ ಸಂಘಗಳ ಕಟ್ಟಡಕ್ಕೆ ಹೆಚ್ಚಿನ ಅನುದಾನಮ ನೀಡಿ ಪ್ರೊತ್ಸಾಹಿಸುತ್ತ ಬರುತ್ತಿರುವುದು ಅಭಿನಂದನೀಯವೆಂದರು. ದ. ಕ. ಹಾಲು ಉತ್ಪಾದಕರ ಒಕ್ಕೂಟವು ಇಡೀ ರಾಜ್ಯದಲ್ಲೇ ಹಾಲು ಉತ್ಪಾದಕರಿಗೆ ಅತೀ ಹೆಚ್ಚು ದರ ನೀಡಿ ಹೈನುಗಾರರನ್ನು ಪ್ರೋತ್ಸಾಹಿಸಿಸುತ್ತಿದೆ ಎಂದರು ದ.ಕ. ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಉಪಾಧ್ಯಕ್ಷರಾದ ಉದಯ ಎಸ್. ಕೋಟ್ಯಾನ್, ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಕೆ. ಶಿವಮೂರ್ತಿ, ಶ್ರೀಮತಿ ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್ ಡಿ., ಶೇಖರಣೆ ಮತ್ತು ತಾಂತ್ರಿಕ ವಿಭಾಗ ಉಪವ್ಯವಸ್ಥಾಪಕರಾದ ಡಾ| ಮಾಧವ್ ಐತಾಳ್, ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸಿರಿಯಣ್ಣ ಶೆಟ್ಟಿ, ಶ್ರೀ ಕ್ಷೇ. ಧ. ಗಾ.ಯೋಜನೆಯ ಮೇಲ್ವಿಚಾರಕರಾದ ಮಂಜುನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಪ್ರಸಾದ ಐಸಿರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸ್ಥಾಪಕ ಅಧ್ಯಕ್ಷ ರವಿ ಶೆಟ್ಟಿ ಸ್ವಾಗತಿಸಿ, ಸಂಘದ ನಿರ್ದೇಶಕಿ ಶಶಿಕಲ ಪ್ರಾರ್ಥಿಸಿದರು. ಕಾರ್ಯದರ್ಶಿ ಐಶ್ವರ್ಯ ವರದಿ ಮಂಡಿಸಿದರು. ಉಪಾಧ್ಯಕ್ಷರಾದ ರಘುನಾಥ ಶೆಟ್ಟಿ ವಂದಿಸಿದರು.
ಉತ್ತರಾಖಂಡ| ಕಮರಿಗೆ ಉರುಳಿದ ಬಸ್: 7 ಮಂದಿ ಮೃತ್ಯು, 11 ಜನರಿಗೆ ಗಾಯ
ಡೆಹ್ರಾಡೂನ್, ಡಿ. 30: ದ್ವಾರಾಹಾಟ್ನಿಂದ ರಾಮನಗರಕ್ಕೆ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ 100 ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಇತರ 11 ಮಂದಿ ಗಂಭೀರ ಗಾಯಗೊಂಡಿದ್ದಾರೆ. 19 ಮಂದಿ ಪ್ರಯಾಣಿಕರಿದ್ದ ಈ ಬಸ್ ಬಿಕಿಯಾಸೈಣ ಪ್ರದೇಶದ ಸಲ್ಪಾನ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿತು. ವಿನಾಯಕ್ ಹಾದು ಹೋದ ಬಳಿಕ ಬಸ್ ದುರಂತಕ್ಕೀಡಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಹಾಗೂ ಸ್ಥಳೀಯಾಡಳಿತ ಸೇರಿದಂತೆ ಪರಿಹಾರ ಮತ್ತು ರಕ್ಷಣಾ ತಂಡಗಳು ಕಡಿದಾದ ಭೂಪ್ರದೇಶವನ್ನು ದಾಟಿ ಘಟನಾ ಸ್ಥಳ ತಲುಪಿವೆ. ‘‘ಬಸ್ ರಸ್ತೆಯಿಂದ ಸ್ಕಿಡ್ ಆಯಿತು ಹಾಗೂ ಕಂದರಕ್ಕೆ ಬಿದ್ದು ಸೆಕೆಂಡ್ಗಳಲ್ಲಿ ಕಾಣೆಯಾಯಿತು. ಬಸ್ ಬಿದ್ದ ಸದ್ದು ಭಯಾನಕವಾಗಿತ್ತು’’ ಎಂದು ನಿವಾಸಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ಅಲ್ಮೋರಾ ಎಸ್ಪಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ.
ಭಾಲ್ಕಿ | ಅಂಗನವಾಡಿಗಳಿಗೆ ಮೊಟ್ಟೆ, ಹಾಲಿನ ಪುಡಿ ಸರಬರಾಜು ಸ್ಥಗಿತ: ಅಧಿಕಾರಿಗಳನ್ನು ಅಮಾನತುಗೊಳಿಸಲು ಆಗ್ರಹಿಸಿ ಧರಣಿ
ಭಾಲ್ಕಿ : ಕಳೆದ ಮೂರು–ನಾಲ್ಕು ತಿಂಗಳುಗಳಿಂದ ಭಾಲ್ಕಿ ತಾಲೂಕಿನ ಎಲ್ಲಾ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಹಾಗೂ ಹಾಲಿನ ಪುಡಿ ಸರಬರಾಜು ನಿಲ್ಲಿಸಿರುವುದನ್ನು ಖಂಡಿಸಿ, ಯುವ ಕ್ರಾಂತಿ ಸಂಘಟನೆಯ ವತಿಯಿಂದ ಭಾಲ್ಕಿಯ ಶಿಶು ಅಭಿವೃದ್ಧಿ ಇಲಾಖೆಯ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕಳೆದ ಜುಲೈ ಮತ್ತು ಆಗಸ್ಟ್ ತಿಂಗಳಿಂದಲೇ ಅಂಗನವಾಡಿ ಮಕ್ಕಳಿಗೆ ಪೋಷಕಾಂಶಯುಕ್ತ ಆಹಾರವಾಗಿರುವ ಮೊಟ್ಟೆ ಹಾಗೂ ಹಾಲಿನ ಪುಡಿ ನೀಡುವುದನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ನಿಲ್ಲಿಸಲಾಗಿದೆ. ಇದರಿಂದ ಅಧಿಕಾರಿಗಳು ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಂಘಟನೆ ಆರೋಪಿಸಿದೆ. ಅಂಗನವಾಡಿ ಮಕ್ಕಳ ಪೌಷ್ಠಿಕತೆ ಕಾಪಾಡುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದ್ದರೂ, ಸರಬರಾಜು ಸ್ಥಗಿತದಿಂದ ಮಕ್ಕಳು ಪೋಷಕಾಂಶದ ಕೊರತೆ ಎದುರಿಸುತ್ತಿದ್ದು, ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಒಂದು ತಿಂಗಳ ಹಿಂದೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಅಧಿಕಾರಿಗಳೂ ಈ ನಿರ್ಲಕ್ಷ್ಯದಲ್ಲಿ ಭಾಗಿಯಾಗಿರುವ ಶಂಕೆ ಮೂಡಿದೆ ಎಂದು ದೂರಲಾಗಿದೆ. ತಕ್ಷಣವೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಹಾಗೂ ಹಾಲಿನ ಪುಡಿ ಸರಬರಾಜು ಆರಂಭಿಸಬೇಕು. ಜೊತೆಗೆ ಹಲವು ತಿಂಗಳಿನಿಂದ ಪೌಷ್ಠಿಕ ಆಹಾರ ಸರಬರಾಜು ಮಾಡದಿರುವ ಹಿನ್ನಲೆಯಲ್ಲಿ ಸಂಭವಿಸಿರಬಹುದಾದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಸಂಘಟನೆ ಆಗ್ರಹಿಸಿದೆ. ವಿಳಂಬದ ಬಗ್ಗೆ ಸಮಗ್ರ ತನಿಖೆ ನಡೆಸಿ ಒಂದು ವಾರದೊಳಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಯುವ ಕ್ರಾಂತಿ ಸಂಘಟನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ಯುವ ಕ್ರಾಂತಿ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ್ ಭೂರೆ, ತಾಲ್ಲೂಕು ಅಧ್ಯಕ್ಷ ಬಲವಂತ್, ಕೆ.ಡಿ. ಗಣೇಶ್, ವಿನೋದ್ ಕಾರಮುಂಗೆ, ಕೈಲಾಸ್ ಪಾಟೀಲ್, ಪಪ್ಪುರಾಜ್ ಚತುರೆ, ಮಹೇಶ್ ಕಟ್ಟಿಮನಿ, ಸುಂದರ್ ಮೇತ್ರೆ, ಬಿಬಿಸೆನ ಬಿರಾದರ್, ಸಚಿನ್ ಶಿಂಧೆ, ಆನಂದ್ ತಳವಾಡೆ, ಸಿದ್ರಾಮ್ ಮೇತ್ರೆ ಹಾಗೂ ನರೇಂದ್ರ ಸೊಮಶೆಟ್ಟೆ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸರಕಾರದ ವತಿಯಿಂದಲೇ ‘ಆಂಬ್ಯುಲೆನ್ಸ್ ಸೇವೆ’ಗೆ ಸಿದ್ಧತೆ : ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಸರಕಾರದ ವತಿಯಿಂದಲೇ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆ ನಿರ್ವಹಣೆ ಮಾಡಲು ಆರೋಗ್ಯ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದ್ದು, ಸದ್ಯದಲ್ಲಿಯೇ ಸೇವೆ ಪ್ರಾರಂಭಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಪ್ರಸ್ತುತ 108 - ಆರೋಗ್ಯ ಕವಚ ಆಂಬುಲೆನ್ಸ್ ಸೇವೆಯನ್ನು ಒಡಂಬಡಿಕೆ ಮಾದರಿಯಲ್ಲಿ ನಿರ್ವಹಣೆ ಮಾಡುತ್ತಿದ್ದು, ಸೇವೆಯ ಕುರಿತು ಸಾರ್ವಜನಿಕರಿಂದ ಹಲವಾರು ಆಕ್ಷೇಪಣೆಗಳು, ಸಮಸ್ಯೆಗಳು ದಾಖಲಾಗಿವೆ. ಹೀಗಾಗಿ ಸರಕಾರವೇ ಆಂಬುಲೆನ್ಸ್ ಸೇವೆಯನ್ನು ನೀಡಲಿದೆ. ಅವಶ್ಯಕವಾದ ತಂತ್ರಜ್ಞಾನ, ಕಮಾಂಡ್ ಕಂಟ್ರೋಲ್ ಸೆಂಟರ್ ಬೇಕಾದ ಮಾನವ ಸಂಪನ್ಮೂಲ ಸೇರಿದಂತೆ ಎಲ್ಲ ಸಿದ್ಧತೆಗಳು ಅಂತಿಮ ಹಂತ ತಲುಪಿದೆ ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಒಟ್ಟಾರೆ 1,841 ಆಂಬ್ಯುಲೆನ್ಸ್ ಲಭ್ಯವಿದ್ದು, ಇದರಲ್ಲಿ 108-ಆರೋಗ್ಯ ಕವಚ ಕಾರ್ಯಕ್ರಮದಡಿಯಲ್ಲಿ ಒಟ್ಟು 715 ಆಂಬ್ಯುಲೆನ್ಸ್ ಗಳು ಹಾಗೂ ರಾಜ್ಯ ವಲಯದ 1,126 ಆಂಬ್ಯುಲೆನ್ಸ್ ಗಳು ಲಭ್ಯವಿದೆ. ಮಾನದಂಡಗಳನ್ವಯ ಹಾಲಿ ಜನಸಂಖ್ಯೆಗೆ 813 ಆಂಬ್ಯುಲೆನ್ಸ್ ಗಳು ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ. 108-ಆರೋಗ್ಯ ಕವಚ ನಿರ್ವಹಣೆಗೆ ವಾರ್ಷಿಕ 162.40 ಕೋಟಿ ರೂ. ಅನುದಾನ ಅಗತ್ಯವಿದ್ದು, ಸರಕಾರದಿಂದ 180 ಕೋಟಿ ರೂ.ಗಳ ಅನುದಾನವು 108-ಆರೋಗ್ಯ ಕವಚ ಲೆಕ್ಕ ಶೀರ್ಷಿಕೆಯಡಿಯಲ್ಲಿ ಅನುಮೋದನೆಯಾಗಿದೆ. ಹಾಲಿ ಇರುವ 108-ಆರೋಗ್ಯ ಕವಚ ಸೇವೆಯ ಸೇವಾದಾರರಿಂದ ಸರಕಾರ ವಹಿಸಿಕೊಳ್ಳುವ ಸಮಯದಲ್ಲಿ ಚಿಕ್ಕಪುಟ್ಟ ಸಮಸ್ಯೆಗಳು ಇದ್ದರೂ, ಸಾರ್ವಜನಿಕರ ಸೇವೆಗೆ ಯಾವ ಸಮಸ್ಯೆಯೂ ಇರುವುದಿಲ್ಲ. ಇದು ತುರ್ತು ಆರೋಗ್ಯ ಸೇವೆಯಾಗಿರುವುದಿರಂದ ಇಲಾಖೆಯು ಜಾಗರೂಕತೆಯಿಂದ ನಿರ್ವಹಣೆ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ದಿಲ್ಲಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು| 118 ವಿಮಾನಗಳ ಹಾರಾಟ ರದ್ದು
ಹೊಸದಿಲ್ಲಿ, ಡಿ.30: ದಿಲ್ಲಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ವಿಮಾನಗಳ ಹಾರಾಟಕ್ಕೆ ಮಂಗಳವಾರ ಕೂಡ ಅಡಚಣೆ ಉಂಟಾಯಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕನಿಷ್ಠ 118 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು. 130 ವಿಮಾನಗಳು ವಿಳಂಬವಾಗಿ ಹಾರಾಟ ನಡೆಸಿದವು. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರತಿದಿನ 1,300 ವಿಮಾನಗಳ ಹಾರಾಟ ನಡೆಯುತ್ತದೆ. ಆದರೆ, ಮಂಗಳವಾರ 60 ಆಗಮನ ಹಾಗೂ 58 ವಿಮಾನಗಳ ನಿರ್ಗಮನಗಳನ್ನು ರದ್ದುಗೊಳಿಸಲಾಗಿದೆ. 16 ವಿಮಾನಗಳ ಸಂಚಾರ ಪಥ ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಟ್ಟ ಮಂಜಿನ ಹಿನ್ನೆಲೆಯಲ್ಲಿ ಭಾರತದ ಹವಾಮಾನ ಇಲಾಖೆ (ಐಎಂಡಿ) ನಗರದಲ್ಲಿ ಬೆಳಗ್ಗೆ 9 ಗಂಟೆವರೆಗೆ ಯೆಲ್ಲೂ ಅಲರ್ಟ್ ಜಾರಿಗೊಳಿಸಿತ್ತು. ಸಫ್ದರ್ಜಂಗ್ನಲ್ಲಿ ಬೆಳಗ್ಗೆ 7.30ಕ್ಕೆ ದೃಗ್ಗೋಚರತೆ 100ರ ಮೀಟರ್ಗಳಷ್ಟಿತ್ತು. ನಂತರ ಬೆಳಗ್ಗೆ 8.30ರ ಹೊತ್ತಿಗೆ ದೃಗ್ಗೋಚರತೆ 200 ಮೀಟರ್ವರೆಗೆ ಸುಧಾರಿಸಿತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿಕ್ಷಣ, ಸಾಹಿತ್ಯದ ಶಕ್ತಿಯೊಂದಿಗೆ ಮಹಿಳೆಯರು ಸಶಕ್ತರಾಗಬೇಕು: ಶಕುಂತಲಾ ಶೆಟ್ಟಿ
ಬಲ್ಮಠ; ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಂಗಳೂರು,ಡಿ.30;ಮಹಿಳೆಯರು ಶಿಕ್ಷಣದ ಜೊತೆ ಸಾಹಿತ್ಯದ ಓದಿನೊಂದಿಗೆ ಇನ್ನಷ್ಟು ಸಶಕ್ತರಾಗಬೇಕು ಎಂದು ಮಾಜಿ ಶಾಸಕಿ ಹಾಗೂ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ನಗರದ ಬಲ್ಮಠ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಹಯೋಗದಲ್ಲಿ 116ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಓದುವ ಹವ್ಯಾಸ ಮುಂದುವರಿಸಬೇಕು.ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವನಿತಾ ದೇವಾಡಿಗ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಸಾಹಿತ್ಯ ಅಭಿರುಚಿಯ ಬಗ್ಗೆ ಉಪನ್ಯಾಸ ನೀಡಿದರುಹಾಗೂ ನಿವೃತ್ತ ಪ್ರಾಂಶುಪಾ ಲರಾದ ಪ್ರೊ.ಕೃಷ್ಣಮೂರ್ತಿ ಯವರು ಸಾಹಿತ್ಯ ಅಭಿರುಚಿಗೆ ಆಸಕ್ತಿ ಮುಖ್ಯ ಎಂದರು. ನಿವೃತ್ತ ಶಿಕ್ಷಕಿ ಲೇಖಕಿ ಸುಧಾನಾಗೇಶ್ ಕಾರ್ಯಕ್ರಮ ನಿರೂಪಿಸಿದರು ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಯಶೋಧರವರು ವಂದಿಸಿದರು.
ಬೆಂಗಳೂರಿನಲ್ಲಿ 5ನೇ ಮಹಡಿಯಿಂದ ಜಿಗಿದು ಬಯೋಕಾನ್ ಸಂಸ್ಥೆಯ ಉದ್ಯೋಗಿ ಆತ್ಮಹತ್ಯೆ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಉದ್ಯೋಗಿಯನ್ನು ಬನಶಂಕರಿ ಮೂಲದ ಅನಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಆ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.
ಬೀದರ್ | ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ ನಿರಂತರವಾಗಿ ನಡೆಯಬೇಕು : ಸುನೀಲಕುಮಾರ ಸಿಂಗಾರೆ
ಬೀದರ್ : ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಲ್ಲಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಜೊತೆಗೆ ಕನ್ನಡ ಭಾಷೆಯನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಚಾರ್ಯ ಸುನೀಲಕುಮಾರ್ ಸಿಂಗಾರೆ ಅವರು ಅಭಿಪ್ರಾಯಪಟ್ಟರು. ಮರಖಲ್ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಂಗ ತರಂಗ ಸಾಮಾಜಿಕಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಗಡಿಭಾಗದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವು, ಬೆಳವಣಿಗೆಗೆ ಶಾಲಾ ಹಂತದಲ್ಲಿಯೇ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡದ ಸೇವಕ ಕುಪೇಂದ್ರ ಎಸ್. ಹೊಸಮನಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಎಂ.ಪಿ. ಮುದಾಳೆ, ಕನ್ನಡ ಶಿಕ್ಷಕ ಪ್ರಕಾಶ್ ಎಸ್., ದೈಹಿಕ ಶಿಕ್ಷಕ ಮಹಾವೀರ್ ಹೋಳೋಳೆ, ಪದ್ಮಾವತಿ, ಸೈಯದ್ ಶಾಬಾದ್ ಅಲಿ, ರೇಣುಕಾ ಹಾಗೂ ರವಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿವಮೊಗ್ಗದಿಂದ ಹೊರಡುವ, ಆಗಮಿಸುವ ರೈಲುಗಳ ಸಂಚಾರದಲ್ಲಿ ಭಾರೀ ಬದಲಾವಣೆ; ಇಲ್ಲಿದೆ ಹೊಸ ವೇಳಾಪಟ್ಟಿ
ಹೊಸ ವರ್ಷದಿಂದ ಶಿವಮೊಗ್ಗದಿಂದ ಹೊರಡುವ ಮತ್ತು ಆಗಮಿಸುವ ರೈಲುಗಳ ಸಂಚಾರ ಮತ್ತು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ವಾರದ ಮೂರು ದಿನ ಸಂಚರಿಸುವ ಯಶವಂತಪುರ-ಶಿವಮೊಗ್ಗ ರಾತ್ರಿ ಎಕ್ಸ್ಪ್ರೆಸ್ ರೈಲಿನ ದಿನವನ್ನು ಬದಲಾಯಿಸಲಾಗಿದೆ. ಕೆಲವು ರೈಲುಗಳ ವೇಗವನ್ನು ಹೆಚ್ಚಿಸಲಾಗಿದೆ. ಹೊಸ ಸಂಚಾರದ ದಿನ ಮತ್ತು ವೇಳಾಪಟ್ಟಿಯ ವಿವರ ಇಲ್ಲಿದೆ.

20 C