ಅಧಿವೇಶನದಲ್ಲಿ ರೈತರ ಸಂಕಷ್ಟ ಸೇರಿ ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಿ : ವಿಜಯೇಂದ್ರ
ಬೆಂಗಳೂರು : ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು, ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟ, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ಶನಿವಾರ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ-ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ. ಪ್ರತಿಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು. ಆದು ಆಗುತ್ತಿಲ್ಲ ಎಂದು ಟೀಕಿಸಿದರು. ಸುವರ್ಣಸೌಧಕ್ಕೆ ಮುತ್ತಿಗೆ : ಡಿ.9ರಂದು ಸುಮಾರು 15ರಿಂದ 20 ಸಾವಿರ ರೈತರ ಜೊತೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನಿಸಿದೆ. ರೈತ ವಿರೋಧಿ ಕಾಂಗ್ರೆಸ್ ಸರಕಾರವನ್ನು ಬಡಿದೆಬ್ಬಿಸಲು ಮುಂದಾಗುತ್ತೇವೆ. ನಂತರ ಸದನದಲ್ಲೂ ಚರ್ಚಿಸುತ್ತೇವೆ. ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿನ ರೈತರಿಗೆ ಎಕರೆಗೆ 25ಸಾವಿರ ರೂ. ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು. ಕ್ಲೀನ್ಚಿಟ್ ಕೊಟ್ಟುಕೊಳ್ಳುವಿರಾ? : ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ ವಿಚಾರದಲ್ಲಿ ತಮ್ಮ ಸರಕಾರಕ್ಕೆ ಕ್ಲೀನ್ಚಿಟ್ ನೀಡುವ ಕೆಲಸ ಮಾಡಿದ್ದಾರೆ. ಬಿಜೆಪಿ ಸರಕಾರ ಇದ್ದಾಗ ಶೇ.40ರಷ್ಟು ಭ್ರಷ್ಟಾಚಾರದ ಆರೋಪ ಮಾಡಿದ್ದರು. ಕಾಂಗ್ರೆಸ್ ಸರಕಾರವೇ ರಚಿಸಿದ ತನಿಖಾ ಆಯೋಗ ಬಳಿಕ ಕ್ಲೀನ್ಚಿಟ್ ಕೊಟ್ಟಿದೆ. ನೀವು ಭ್ರಷ್ಟಾಚಾರದ ವಿಚಾರದಲ್ಲಿ ಸರಕಾರಕ್ಕೆ ಕ್ಲೀನ್ಚಿಟ್ ಕೊಟ್ಟುಕೊಳ್ಳುವಿರಾ? ಎಂದು ಅವರು ಪ್ರಶ್ನಿಸಿದರು.
ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿ ಮೃತಪಟ್ಟ ಪಾಕಿಸ್ತಾನಿ ವೀಡಿಯೊ ಬ್ಲಾಗರ್ ಪ್ಯಾರಿ ಮರಿಯಂ
ಲಾಹೋರ್: ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್ ಅಥವಾ ವೀಡಿಯೋ ಬ್ಲಾಗರ್ ಆಗಿದ್ದ ಪ್ಯಾರಿ ಮರಿಯಮ್ ಹೆರಿಗೆ ಸಮಯದಲ್ಲಿ ತೀವ್ರ ತೊಂದರೆಗಳಿಂದ ಬಳಲುತ್ತಿದ್ದು, ಲಾಹೋರ್ ನಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಸ್ವಲ್ಪ ಸಮಯದ ನಂತರ 26ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಪತಿ ಅಹ್ಸಾನ್ ಇನ್ಸ್ಟಾಗ್ರಾಮ್ ನಲ್ಲಿ ಮರಿಯಂ ಮೃತಪಟ್ಟ ವಿಷಯವನ್ನು ದೃಢಪಡಿಸಿದ್ದು, ನವಜಾತ ಶಿಶುಗಳು ಬದುಕಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡಿದ ಸುದ್ದಿಯನ್ನು ಅವರು ನಿರಾಕರಿಸಿದ್ದಾರೆ. (Screenshot of Ahsan Ali's statement on his wife's Instagram Stories.(Instagram) “ಇಬ್ಬರೂ ಪುಟ್ಟ ಪುತ್ರರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ದಯವಿಟ್ಟು ವದಂತಿಗಳಿಂದ ದೂರವಿರಿ ಮತ್ತು ನಮ್ಮ ಪ್ರೀತಿಯ ಮರಿಯಂಗಾಗಿ ಪ್ರಾರ್ಥಿಸಿ” ಎಂದು ಎಲ್ಲರಿಗೂ ಭರವಸೆ ನೀಡುವ ಉರ್ದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಮರಿಯಂ ನಿಧನವು ಪಾಕಿಸ್ತಾನದ ಪ್ರಭಾವಿಗಳು ಮತ್ತು ಅಭಿಮಾನಿಗಳ ಹೃದಯ ಒಡೆದಿದೆ. ಬ್ಲಾಗ್ ನಡೆಸುತ್ತಿರುವ ಇತರರಾದ ಫಾತಿಮಾ ಜಾಫರಿ ಮತ್ತು ಕೆನ್ ಡಾಲ್ ಮೊದಲಾದವರು ಮರಿಯಂ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ : ಲಯನ್ಸ್ ಸಂಸ್ಥೆಯಿಂದ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಬೆಂಬಲ
ಕೊಪ್ಪಳ: ಆಸೆ ಮಿತಿಮೀರಿ ಹಣವಿದ್ದರೂ ನೆಮ್ಮದಿಯ ನಿದ್ರೆ ಇಲ್ಲದಂತಾಗಿದೆ. ಭಾರತದಲ್ಲಿ ಮಾನವೀಯತೆಗೆ ಮೊದಲ ಆದ್ಯತೆ ಕೊಡಬೇಕು. ಇಲ್ಲವಾದರೆ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಹುಚ್ಚಾಟದಿಂದ ಅಭಿವೃದ್ಧಿ ಆಗಿ ನಾವೇ ಅಂಗವಿಕಲರಾದರೆ ಅಂತಹ ಅಭಿವೃದ್ಧಿಗೆ ಅರ್ಥವಿಲ್ಲ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಯನ್ಸ್ ಶ್ರೀನಿವಾಸ್ ಗುಪ್ತಾ ಹೇಳಿದರು. ನಗರಸಭೆ ಹತ್ತಿರ ನಡೆಯುತ್ತಿರುವ ಬಲ್ಡೋಟ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ ಸುಮಿ, ಎಕ್ಸಿಂಡಿಯಾ, ಹೊಸಪೇಟೆ ಸ್ಟೀಲ್ಸ್ ಇತರೆ ಮಾರಕ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆದಿರುವ ಅನಿರ್ದಿಷ್ಟಾವಧಿ ಧರಣಿಯ 37ನೇ ದಿನ ಕೊಪ್ಪಳ ಲಯನ್ಸ್ ಕ್ಲಬ್, ಸ್ವಾಮಿ ವಿವೇಕಾನಂದ ಶಾಲೆ ಮತ್ತು ಸ್ವಾಮಿ ವಿವೇಕಾನಂದ ಸಿಬಿಎಸ್ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ಮತ್ತು ಸಿಬ್ಬಂದಿ ಭಾಗವಹಿಸಿದರು. ಸಣ್ಣ ಗುಡಿ ಕೈಗಾರಿಕೆಗಳನ್ನು ತಂದರೆ ಒಳ್ಳೆಯದು ಹೊರತು ಈ ರೀತಿಯ ಕಾರ್ಖಾನೆಗಳಿಂದ ನಯಾಪೈಸೆ ಲಾಭವಿಲ್ಲ, ಕೊಪ್ಪಳ ಇಲ್ಲಿಯವರೆಗೆ ಬೆಳೆದದ್ದು ಇಲ್ಲಿನವರ ಶ್ರಮದಿಂದ ಹೊರತು ಕಾರ್ಖಾನೆಗಳಿಂದ ಅಲ್ಲವೇ ಅಲ್ಲ. ಹೋರಾಟಕ್ಕೆ ನಾವು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿ, ಹೆಚ್ಚಿನ ಮಹಿಳೆಯರನ್ನು ಸೇರಿಸೋಣ, ಇಂತಹ ಹೋರಾಟ ರೂಪಿಸಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದರು. ನಿವೃತ್ತ ಎಲ್ಐಸಿ ಅಧಿಕಾರಿ ವೆಂಕಟೇಶ್ ಶ್ಯಾನಬಾಗ್ ಮಾತನಾಡಿ, ನಮ್ಮ ಮುಂದಿನ ಪೀಳಿಗೆಗೆ ಗಾಳಿ ಕೊಡಿ ಎಂದು ಸರಕಾರವನ್ನು ಅಂಗಲಾಚುತ್ತಿದ್ದೇವೆ. ಪಂಚಭೂತಗಳಿಂದ ನಿರ್ಮಾಣ ಆದ ನಮ್ಮ ಶರೀರ ಈಗ ಕೆಡುತ್ತಿದೆ. ನಮ್ಮೂರಲ್ಲಿ ಇರುವ ಹಸಿರು ಗಿಡಮರಗಳು ಕೆಂಪಾಗಿ ನಮ್ಮ ಮಕ್ಕಳು ಪ್ರಶ್ನೆ ಮಾಡುವಂತೆ ಆಗುತ್ತದೆ ಎಂದು ಹೇಳಿದರು. ಲಯನ್ಸ್ ಕ್ಲಬ್ ಅಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿ ಮಾತನಾಡಿ, ಈಗಿರುವ ಕಾರ್ಖಾನೆಗಳ ಹೊಲಸು, ಧೂಳು, ವಿಷಾನಿಲ ನಿಭಾಯಿಸಲು ಸಾಧ್ಯವಿಲ್ಲದಾಗ ಮುಂದೆ ಆಧುನಿಕ ತಂತ್ರಜ್ಞಾನ ತರ್ತಿವಿ ಅದರಿಂದ ಮಾಲಿನ್ಯ ಆಗಲ್ಲ ಎನ್ನುವುದು ಕೇವಲ ಕಣ್ಣೊರೆಸುವ ತಂತ್ರ. ನಾವು ಯಾರನ್ನೂ ದೂಷಿಸದೇ ಹೋರಾಟ ಮಾಡೋಣ. ಎಲ್ಲರೂ ಇದರಲ್ಲಿ ಭಾಗವಹಿಸಬೇಕು. ಇದು ಸಮಾಜದ ಕರ್ತವ್ಯ ಎಂದು ಹೇಳಿದರು. ಈ ವೇಳೆ ಹೋರಾಟ ವೇದಿಕೆಯ ಮಂಜುನಾಥ ಜಿ. ಗೊಂಡಬಾಳ ಸೇರಿ ಅನೇಕರು ಮಾತನಾಡಿದರು. ಧರಣಿಯಲ್ಲಿ ಡಿ. ಎಂ. ಬಡಿಗೇರ, ಶರಣು ಗಡ್ಡಿ, ಪ್ರೊ. ಮನೋಹರ ದಾದ್ಮಿ, ಗುರುರಾಜ ಹಲಗೇರಿ, ಪಂಪಣ್ಣ ವಾರದ, ಸುಜಾತಾ ಹಲಗೇರಿ, ಜ್ಯೋತಿ ಅಗಡಿ, ಅಪರ್ಣ ಬಳ್ಳೊಳ್ಳಿ, ಸ್ಪೂರ್ತಿ ಮಾಗಿ, ಸಿ. ವಿ. ಜಡಿಯವರ, ಶಾಂತಯ್ಯ ಅಂಗಡಿ, ಮಹಾದೇವಪ್ಪ, ವಿ. ಬಿ. ಕಟ್ಟಿ, ವಿರೇಶ ಕೊಪ್ಪಳ, ಮಾರುತಿ, ರವಿ ಕಾಂತನವರ, ಪದ್ಮನಗೌಡ ಪಾಟೀಲ್, ಮುದಕಪ್ಪ ಹೊಸಮನಿ, ಎಸ್. ಬಿ. ರಾಜೂರ, ಎಫ್.ಎಸ್.ಜಾಲಿಹಾಳ, ಟಿ. ಆರ್. ಬೆಲ್ಲದ, ಜಿ. ಬಿ. ಪಾಟೀಲ್, ಎಸ್. ಕೆ. ಸಿದ್ನೆಕೊಪ್ಪ, ಸ್ವಾಮಿ ವಿವೇಕಾನಂದ ಸಿಬಿಎಸ್ ಶಾಲೆ ಮುಖ್ಯೋಪಾಧ್ಯಾಯ ಮಂಜುನಾಥ ಕೆ. ಕಂಡಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಗಳೂರು, ಡಿ.6: ಮಂಗಳೂರು ನಗರದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂ ಮಾರಾಟ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿದ್ದ ಐವರು ಆರೋಪಿಗಳಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ನ್ಯಾಯಾಲಯವು 12ರಿಂದ 14 ವರ್ಷಗಳ ಕಠಿಣ ಸಜೆ ವಿಧಿಸಿದೆ. ಆರೋಪಿಗಳಾದ ಬೆಂಗಳೂರು ವರ್ತೂರಿನ ಗುಂಟೂರ್ ಪಾಳ್ಯದ ಲುವಾಲ್ ಡೇನಿಯಲ್ ಜಸ್ಟಿನ್ ಬೌಲೊ ಅಲಿಯಾಸ್ ಡ್ಯಾನಿ, ಉಪ್ಪಳದ ಮುಹಮ್ಮದ್ ರಮೀಜ್ ಅಲಿಯಾಸ್ ಮುಹಮ್ಮದ್ ಮೀಜ್ , ಕಾಸರಗೋಡು ಕುನ್ನಿಲ್ನ ಮೊಯ್ದೀನ್, ಉಪ್ಪಳದ ಅಬ್ದುಲ್ ರವೂಪ್ ಮತ್ತು ಬೆಂಗಳೂರು ಮಡಿವಾಳದ ಸಬಿತಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಆರೋಪಿ ಲೋವೆಲ್ ಡೇನಿಯಲ್ ಜಸ್ಟಿನ್ ಬೌಲೋ ಅಲಿಯಾಸ್ ಡ್ಯಾನಿಗೆ ಎನ್ಡಿಪಿಎಸ್ ಆ್ಯಕ್ಟ್ 21, 21(ಸಿ) , 27(ಬಿ) ಪ್ರಕಾರ 12 ವರ್ಷ ಮತ್ತು 6 ತಿಂಗಳು ಕಠಿಣ ಸಜೆ ಮತ್ತು 1,35 ,000 ದಂಡ. ಮುಹಮ್ಮದ್ ರಮೀಜ್ಗೆ 14 ವರ್ಷ ಮತ್ತು 6 ತಿಂಗಳು 1,55,000 ದಂಡ. ಮೊಯಿದ್ದೀನ್ ರಶೀದ್ಗೆ 12 ವರ್ಷ ಮತ್ತು 6 ತಿಂಗಳು ಮತ್ತು 1,35,000 ದಂಡ. ಅಬ್ದುಲ್ ರವೂಫ್ಗೆ 13 ವರ್ಷ ಮತ್ತು 6 ತಿಂಗಳು ಕಠಿಣ ಸಜೆ 1,45,000 ದಂಡ. ಸಬಿತಾ ಅಲಿಯಾಸ್ ಚಿಂಚುಗೆ 12 ವರ್ಷ ಮತ್ತು 6 ತಿಂಗಳು 1, 35,000 ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ. 2022ರ , ಜೂ.6ರಂದು ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಮ್ಮ ತಂಡದೊಂದಿಗೆ ದಾಳಿ ನಡೆಸಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಐವರನ್ನು ಬಂಧಿಸಿ, ಅವರ ಬಳಿಯಿಂದ 125 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈ ಸಂಬಂಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಮಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರು (ಪಿಡಿಜೆ ) ಈ ವಿಷಯದಲ್ಲಿ ಎಲ್ಲಾ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ತೀರ್ಪು ನೀಡಿದೆ. ಮಂಗಳೂರಿನ ಎನ್ಡಿಪಿಎಸ್ ವಿಶೇಷ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಅವರು ಸರಕಾರದ ಪರ ವಾದಿಸಿದ್ದರು.
Winter Session: ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ ಹೇಳಿದ್ದೇನು?
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಜ್ಜಾಗುತ್ತಿದ್ದು, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಮುಂದಾಗಿದೆ. ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆ, ಕಾಂಗ್ರೆಸ್ ಆಡಳಿತ ವೈಫಲ್ಯ ಮತ್ತು ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ. ಆದರೆ ಸರ್ಕಾರ ಕಾಟಾಚಾರಕ್ಕಾಗಿ ಅಧಿವೇಶನ ನಡೆಸಲು ಮುಂದಾಗಿರುವಂತಿದೆ. ಕಾಂಗ್ರೆಸ್ ಸರ್ಕಾರದ ನಿರ್ಲಜ್ಜತನದ ವಿರುದ್ಧ ಡಿಸೆಂಬರ್
ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ಡಿಸೆಂಬರ್ 20ರಿಂದ ಆರಂಭಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶನಿವಾರ ಮುನಿರಾಬಾದ್ ನಲ್ಲಿ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟಗೇಟ್ ಅಳವಡಿಸುವ ಕುರಿತು ಕೆಎನ್ಎನ್ಎಲ್ ಅಧಿಕಾರಿಗಳು ಹಾಗೂ ತುಂಗಭದ್ರಾ ಮಂಡಳಿಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಶಿವರಾಜ ಎಸ್.ತಂಗಡಗಿ, ತುಂಗಭದ್ರಾ ಜಲಾಶಯವು ನಮ್ಮ ಭಾಗದ ಲಕ್ಷಾಂತರ ರೈತರ ಜೀವನಾಡಿಯಾಗಿದೆ. ಪ್ರಸ್ತುತ ಹಳೆಯದಾಗಿರುವ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಬದಲಾಯಿಸಲು 52 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಅದರಂತೆ ಪ್ರಸ್ತುತ ಕ್ರಸ್ಟ್ ಗೇಟ್ ಗಳ ಡಿಸ್ ಮೆಟಲಿಂಗ್ ಮತ್ತು ಇತರೆ ಕೆಲ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಇದಕ್ಕಾಗಿ ಗುತ್ತಿಗೆದಾರರು ಎರಡು ತಂಡಗಳನ್ನು ರಚಿಸಿ ಶೀಘ್ರವೇ ಕೆಲಸ ಮಾಡಿಸಬೇಕು. ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ಡಿಸೆಂಬರ್ 20ರಿಂದ ಆರಂಭಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ಕಾಮಗಾರಿಯು ಕಡ್ಡಾಯವಾಗಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕೆಂದು ಸೂಚನೆ ನೀಡಿದರು. ನಮ್ಮ ರೈತರು ಎರಡನೇ ಬೆಳೆಗೆ ನೀರನ್ನು ತ್ಯಾಗ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಅರಿತುಕೊಂಡು ಕೆಲಸ ಮಾಡಬೇಕು. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಸೇರಿ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಬದಲಾಯಿಸುವುದಾಗಿ ರೈತರಿಗೆ ಮಾತು ನೀಡಿದ್ದು, ಅದನ್ನು ಉಳಿಸಿಕೊಳ್ಳಬೇಕಿದೆ. 2026ರ ಮುಂಗಾರು ವೇಳೆ ಜಲಾಶಯದಲ್ಲಿ ನೀರು ಸಂಗ್ರಹವಾಗುತ್ತದೆ. ಮುಂಗಾರು ಬೆಳೆಗಳಿಗೆ ನೀರು ಒದಗಿಸಲು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೂಡ ನಮ್ಮ ಕರ್ತವ್ಯವಾಗಿದೆ. ಹಾಗಾಗಿ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ಮೇ ತಿಂಗಳೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಲು ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಳ್ಳಬೇಕು. ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕಾರ್ಯ ನಡೆಯುವ ಸ್ಥಳಕ್ಕೆ ಯಾರನ್ನು ಬಿಡಬಾರದು. ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳಾಗದಂತೆ ಕುಡಿಯುವ ನೀರು ಪೂರೈಕೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು. ಮೆ.ಹಾರ್ಡ್ ವೇರ್ ಟೂಲ್ಸ್ ಮತ್ತು ಮಷಿನರಿ ಪ್ರೇಜಕ್ಟ್ ಪ್ರೈ. ಲಿಮಿಟೆಡ್ ಕಂಪೆನಿಯ ಪ್ರತಿನಿಧಿಗಳು ಮಾತನಾಡಿ, ತಮ್ಮ ಸಂಸ್ಥೆಯಿಂದ ಪಶ್ಚಿಮ ಬಂಗಾಳದ ಪರಾಕ್ ಬ್ಯಾರೇಜ್ ಜಲಾಶಯದಲ್ಲಿ 124 ಗೇಟ್ ಗಳನ್ನು ಅಳವಡಿಸಿದ್ದು, ಇವುಗಳು ತುಂಗಭದ್ರಾ ಜಲಾಶಯದ ಗೇಟ್ ಗಳ ಗಾತ್ರದ್ದೆ ಆಗಿವೆ. ಇದಲ್ಲದೆ ಕೆ.ಆರ್.ಎಸ್. ಜಲಾಶಯ ಮತ್ತು ನಾರಾಯಣಪುರ ಡ್ಯಾಮಿನ ಗೇಟ್ ಗಳ ಅಳವಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಂಡಿದ್ದೇವೆ ಎಂದು ಹೇಳೀದ್ದಾರೆ. ಸಭೆಯಲ್ಲಿ ಮುನಿರಾಬಾದ್ ಕೇಂದ್ರ ವಲಯದ ಕಾರ್ಯಪಾಲಕ ಅಭಿಯಂತರರು ಪ್ರೀತಿ ಪತ್ತಾರ, ಟಿಬಿ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಚಂದ್ರಶೇಖರ್, ವಡ್ಡರ ಹಟ್ಟಿ ವಿಭಾಗದ ಕಾರ್ಯಪಾಲಕ ಅಭಿಯಂತರ ಎಂ.ಎಸ್ ಗೋಡೆಕರ್, ಮುನಿರಾಬಾದ್ ವಲಯದ ತಾಂತಿಕ್ರ ಸಹಾಕಯಕರಾದ ಯಲ್ಲಪ್ಪ, ವಿನಾಯಕ ಬಿ., ಬಸಪ್ಪ ಜಾನಕರ್, ಲಿಂಗರಾಜ್ ಹಾಗೂ ರಾಘವೇಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರಂರಾಜ್, ಸಹಾಯಕ ಇಂಜಿನಿಯರ್ ಹುಲಿರಾಜ್ ಮತ್ತು ಕಿರಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೆ ರೆಬೆಲ್ ಬಣ ಸಕ್ರಿಯವಾಗಿದೆ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಮಾಡಲೇ ಬೇಕು ಎಂದು ಮತ್ತೆ ಪಟ್ಟು ಹಿಡಿದಿದೆ. ಈ ಹಿಂದಿನಂತೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ಮಂಡಿಸದೆ ವರಿಷ್ಠರ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಿದೆ. ಇತ್ತ ಬಿವೈ ವಿಜಯೇಂದ್ರ ಬಿಜೆಪಿ ಚಟುವಟಿಕೆಗಳಲ್ಲಿ ಸಕ್ರಿಯವಾಗುತ್ತಿದ್ದಂತೆ ಅತ್ತ ಅವರ ವಿರುದ್ಧ ವರಿಷ್ಠರ ಗಮನ ಸೆಳೆಯುವ ಮಸಲತ್ತು ಜೋರಾಗಿ ನಡೆಯುತ್ತಿದೆ. ಆದರೆ ಈ ಬಾರಿ ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ? ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಎಚ್ಡಿಕೆ ಮನುವಾದಿಯಾಗಿದ್ದಾರೆ : ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶನಿವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೆ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ. ಆದರೆ, ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದು ಆಪಾದಿಸಿದರು. ಮನುವಾದಿ ಎಂದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಎಚ್ಡಿಕೆ ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವಂತೆ ಕೋರಿ ಕೇಂದ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದ ತಮ್ಮನ್ನು ಮನುವಾದಿ ಎಂದು ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಈ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ, ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವಂತೆ ಹೇಳಿದ್ದೇನೆ. ಆ ಬಗ್ಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರವನ್ನೂ ಬರೆದಿದ್ದೇನೆ. ನಾನೇನು ಮತಾಂತರ ಮಾಡಲಿಕ್ಕೆ ಈ ಹೇಳಿಕೆ ನೀಡಿಲ್ಲ. ಇಂದಿನ ಮಕ್ಕಳ ಬದುಕು, ಇವತ್ತಿನ ಸಮಾಜವನ್ನು ಸಿದ್ದರಾಮಯ್ಯ ನೇತೃತ್ವದಲ್ಲಿ ಯಾವ ರೀತಿ ಬೆಳೆಸುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿ ಹೇಳಿದ್ದೇನೆ ಎಂದರು. ತಂದೆ -ತಾಯಿ, ಅಣ್ಣ-ತಮ್ಮ ಕೊಲೆ ಮಾಡುವಂಥ ಕೆಟ್ಟ ವಾತಾವರಣ ನಿರ್ಮಾಣವಾಗಿದೆ. ಬದುಕಿನ ನಿಯಮಾವಳಿ ಕಲಿಸುವುದು ಸರ್ಕಾರದ ಕರ್ತವ್ಯ. ರಾಜ್ಯದಲ್ಲಿ ಕೆಟ್ಟ ಬೆಳವಣಿಗೆಗಳು ನಡೆಯುತ್ತಿದೆ. ಹಾಸನದಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡರು ಎಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಿನ ಸಮಾಜ ವೇಗವಾಗಿ ಬೆಳೆಯುತ್ತಿದೆ. ತಾಯಿ ಹೃದಯ ಅನ್ನುವುದಿಲ್ಲ. ನಾನು ಚಿಕ್ಕವನಾಗಿದ್ದಾಗ ನೋಡಿದ್ದ ಸಮಾಜ ಈಗಿಲ್ಲ. ಮನುಷ್ಯ ಸಂಬಂಧಗಳನ್ನು ಬಲಪಡಿಸಿ ಸಮಾಜವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅಗತ್ಯವೆಂದು ಹೇಳಿದ್ದೇನೆ ಎಂದು ಹೇಳಿದರು. ಸಿದ್ದರಾಮಯ್ಯ ತಲೆಯಲ್ಲಿ ಇರುವುದು ಸಮಾಜದಲ್ಲಿ ಘರ್ಷಣೆ ಉಂಟು ಮಾಡುವುದಷ್ಟೆ. ಕಳೆದ 10 ವರ್ಷದಿಂದ ಅಹಿಂದ ಹೆಸರಿನಲ್ಲಿ ಸಿದ್ದರಾಮಯ್ಯ ಮಜಾ ಮಾಡಿದ್ದಾರೆ. ಅವರಿಂದ ಅಹಿಂದಕ್ಕೆ ಸಿಕ್ಕ ಕೊಡುಗೆ ಏನು? ಅಹಿಂದ ಸಮಸ್ಯೆ ಎಷ್ಟು ಬಗೆ ಹರಿಸಿದ್ದಾರೆ? ಅಹಿಂದಲ್ಲಿ ಅನೇಕ ಸಣ್ಣ ಜಾತಿಗಳಿವೆ. ಆ ಸಮಾಜಗಳಿಗೆ ಅವರ ಕೊಡುಗೆ ಏನು? ಅವರು ಯಾರಿಗೆ ಆದ್ಯತೆ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.
Mangaluru | ಬಜಪೆ ಪಟ್ಟಣ ಪಂಚಾಯತ್ ನಿಂದ ಡಿ.9ರಂದು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಸಭೆ
ಮಂಗಳೂರು,ಡಿ.6: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸರಬರಾಜು ಮಾಡುವುದಕ್ಕಾಗಿ ಸ್ಥಳ ಗುರುತಿಸಲು ಮತ್ತು ಬೀದಿ ನಾಯಿಗಳಿಗೆ ಪುನರ್ವಸತಿ ಕೇಂದ್ರ ಕಲ್ಪಿಸುವ ಕುರಿತು ಚರ್ಚಿಸಲು ಡಿ.9ರಂದು ಅಪರಾಹ್ನ 3:30ಕ್ಕೆ ಬಜಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ. ಆಸಕ್ತ ಸಾರ್ವಜನಿಕರು ಮತ್ತು ಶ್ವಾನ/ಪ್ರಾಣಿಪ್ರಿಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಲು ಬಜಪೆ ಪಪಂ ಮುಖ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನೆಟ್ಫ್ಲಿಕ್ಸ್ ತೆಕ್ಕೆಗೆ ವಾರ್ನರ್ ಬ್ರದರ್ಸ್; ಐತಿಹಾಸಿಕ 82.7 ಶತಕೋಟಿ ಡಾಲರ್ ವ್ಯವಹಾರ
ನೆಟ್ಫ್ಲಿಕ್ಸ್ನಲ್ಲಿ ಗೇಮ್ ಆಫ್ ಥ್ರೋನ್ಸ್ ನೋಡುವ ಅವಕಾಶ?
Indian Railways: ಕ್ರಿಸ್ಮಸ್ ಪ್ರಯುಕ್ತ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ವಿಶೇಷ ರೈಲು, ನಿಲುಗಡೆ ವಿವರ
Special Trains: ಈ ವರ್ಷದ ಕ್ರಿಸ್ಮಸ್ ಹಾಗೂ ವರ್ಷಾಂತ್ಯದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿವಿಧ ಮಾರ್ಗದ ರೈಲುಗಳಿಗೆ ಬೇಡಿಕೆ ಸೃಷ್ಟಿಯಾಗಿದೆ. ಇದರೊಂದಿಗೆ ಭಾರತೀಯ ರೈಲ್ವೆಯು ವಿವಿಧ ರೂಟ್ನಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಬಿಡುಗಡೆ ಮಾಡಿದೆ. ಯಾವೆಲ್ಲ ರೈಲುಗಳು ಸಂಚರಿಸಲಿವೆ, ಸಮಯ, ವೇಳಾಪಟ್ಟಿ ವಿವರ ಇಲ್ಲಿದೆ. ನೈಋತ್ಯ ರೈಲ್ವೆಯು (SWR) ಹೆಚ್ಚುವರಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ವಿಶೇಷ ರೈಲು ಸೇವೆ
ಮಂಗಳೂರು | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲಸಿಕೆ ಹಾಕಿಸಲು ಮಾಹಿತಿ ನೀಡಲು ತಹಶೀಲ್ದಾರ್ ಸೂಚನೆ
ಮಂಗಳೂರು,ಡಿ.6: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು, ಜಲ್ಲಿ ಒಡೆಯುವ ಕಾರ್ಮಿಕರ ಮಕ್ಕಳು ಹಾಗೂ ಇತರ ವಲಸೆ ಪ್ರದೇಶಗಳಲ್ಲಿ ಮಕ್ಕಳನ್ನು ಗುರುತಿಸಿ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಸೂಚಿಸಿದರು. ಮಂಗಳೂರು ತಾಪಂ ಸಭಾಂಗಣದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಪಂಗಳ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕದ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಬೇಕು. ಕಾರ್ಮಿಕರ ಮಕ್ಕಳು ಪೋಲಿಯೋ ಲಸಿಕೆ ಹಾಕಿಸಿಕೊಳ್ಳಲು ಗುತ್ತಿಗೆದಾರರ ಸಂಘಗಳಿಗೆ ಮಾಹಿತಿ ನೀಡಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲು ಕ್ರಮ ವಹಿಸಬೇಕು ಎಂದು ಹೇಳಿದರು. ಶಾಲಾ, ಕಾಲೇಜುಗಳ ಮುಖ್ಯಸ್ಥರು ಶೈಕ್ಷಣಿಕ ಸಂಸ್ಥೆಗಳ 100 ಮೀ. ಅಂತರದ ಗಡಿಯನ್ನು ತಂಬಾಕು ಮುಕ್ತ ಪ್ರದೇಶ ಎಂದು ಘೋಷಿಸುವ ನಾಮಫಲಕ ಅಳವಡಿಸಬೇಕು. ಶಾಲಾ, ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಶಾಲಾ, ಕಾಲೇಜು ಮತ್ತು ಗ್ರಾಪಂ ಸಮನ್ವಯದೊಂದಿಗೆ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಕ್ರಮಜರುಗಿಸಬೇಕು ಎಂದು ರಮೇಶ್ ಬಾಬು ಹೇಳಿದರು. ಕೊಟ್ಪಾಕಾರ್ಯಾಚರಣೆಯಡಿ 2024ರ ಡಿಸೆಂಬರ್ ನಿಂದ 2025ರ ಜೂನ್ ವರೆಗೆ 87 ಪ್ರಕರಣಗಳು ದಾಖಲಾಗಿದೆ. 22,700 ರೂ. ದಂಡ ಸಂಗ್ರಹಿಸಲಾಗಿದೆ. ಕರ್ನಾಟಕದಲ್ಲಿ 2013-14ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬಾಲಸ್ವಾಸ್ಥ್ಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯಕ್ರಮದಡಿ 18 ವರ್ಷದೊಳಗಿನ ಮಕ್ಕಳ ವೈದ್ಯಕೀಯ ಪರೀಕ್ಷೆಯನ್ನು ನಡೆಸಲು ಮಂಗಳೂರು ತಾಲೂಕಿನಲ್ಲಿ 6 ಆರ್ಬಿಎಸ್ಕೆ ತಂಡಗಳು ಕಾರ್ಯನಿರ್ವಹಿಸುತ್ತಿದೆ. ಈ ತಂಡವು ಅಂಗನವಾಡಿ ಕೇಂದ್ರಗಳಲ್ಲಿನ 6 ವರ್ಷದೊಳಗಿನ ಮಕ್ಕಳು ಹಾಗೂ ಸರಕಾರಿ/ಸರಕಾರಿ ಅನುದಾನಿತ/ಸರಕಾರಿ ವಸತಿ ಶಾಲೆ/ಕಾಲೇಜುಗಳಲ್ಲಿನ 1-12ನೇ ತರಗತಿಯ ಮಕ್ಕಳಿಗೆ 40 ವಿಧದ ಆರೋಗ್ಯ ಸಮಸ್ಯೆಗಳಿಗೆ ತಪಾಸಣೆ, ಚಿಕಿತ್ಸಾ ಸೇವೆಗಳನ್ನು ಒದಗಿಸುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಮಾಹಿತಿ ನೀಡಿದರು.
ಮೇಕೆದಾಟು, ಎತ್ತಿನಹೊಳೆ ಯೋಜನೆ ಬಗ್ಗೆ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಹಾಸನ, ಡಿಸೆಂಬರ್ 06: ಎತ್ತಿನಹೊಳೆ ನೀರನ್ನು ನಾವು ಆಚೆ ತಂದಿದ್ದೇವೆ. ಈ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆಯಿಂದ ಕೆಲವು ತೊಡಕು ಎದುರಾಗಿದೆ. ಈ ಅಡಚಣೆ ಬಗೆಹರಿದ ಮೂರ್ನಾಲ್ಕು ತಿಂಗಳಲ್ಲಿ ತುಮಕೂರಿನವರೆಗೂ ಈ ನೀರನ್ನು ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಹಾಸನದಲ್ಲಿ ಶನಿವಾರ ನಡೆದ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಡಿಸಿಎಂ ಡಿ ಕೆ
ದ.ಕ.ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣ ಪತ್ತೆ : ಮುನ್ನೆಚ್ಚರ ವಹಿಸಲು ಸೂಚನೆ
ಮಂಗಳೂರು,ಡಿ.6 : ದ.ಕ. ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳಲ್ಲಿ ಕೆಲವು ಪ್ರಕರಣಗಳು ದಾಖಲಾಗುತ್ತಿದೆ. ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸುವುದು ಅಗತ್ಯವಾಗಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಚಿಕಿತ್ಸೆ ಪಡೆದು ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದು ದ.ಕ.ಜಿಲ್ಲಾ ಆರೋಗ್ಯ ಇಲಾಖೆ ಸೂಚಿಸಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ ಯಾವುದೇ ತೊಂದರೆ ಇಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೊಂದುತ್ತಾನೆ. ಪೌಷ್ಟಿಕ ಆಹಾರ ಸೇವನೆಯಿಂದ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸಿಕೊಳ್ಳುವುದೂ ಕೂಡ ರೋಗ ನಿಯಂತ್ರಣದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ಇಲಾಖೆ ತಿಳಿಸಿದೆ. ಚಿಕನ್ ಪಾಕ್ಸ್ ತೀವ್ರವಾದ ಸಾಂಕ್ರಾಮಿಕ ರೋಗವಾಗಿದೆ. ಇದು ವರಿಸೆಲ್ಲಾ ಜೋಸ್ಟರ್ ವೈರಸ್ನಿಂದ ಉಂಟಾಗುತ್ತದೆ. ಚಿಕನ್ ಪಾಕ್ಸ್ನಿಂದ ಚರ್ಮದ ಮೇಲಿನ ಗುಳ್ಳೆಗಳು ನೋವನ್ನು ಉಂಟು ಮಾಡುತ್ತದೆ. ಅದೇ ರೀತಿ ಕೆಮ್ಮು, ಜ್ವರ ಕೂಡ ಕಾಣಿಸಿಕೊಳ್ಳುತ್ತವೆ. ಚಿಕನ್ ಪಾಕ್ಸ್ ಸೋಂಕಿತ ವ್ಯಕ್ತಿಯ ಚರ್ಮ, ಉಸಿರು ಅಥವಾ ಸೀನಿದಾಗ ಬರುವ ದ್ರವದಿಂದ ಇತರರಿಗೆ ಹರಡುತ್ತದೆ. ವರಿಸೆಲ್ಲಾ - ಜೋಸ್ಟರ್ ವೈರಸ್ ದೇಹವನ್ನು ಪ್ರವೇಶಿಸಿದ ಮೇಲೆ 20ರಿಂದ 21 ದಿನಗಳ ನಂತರ ಚಿಕನ್ ಪಾಕ್ಸ್ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಇಡೀ ದೇಹದ ಮೇಲೆ ಕಾಣಿಸಿಕೊಳ್ಳುವ ಕೆಂಪು ಬಣ್ಣದ ಗುಳ್ಳೆಗಳೇ ಮೊದಲ ಮತ್ತು ಸಾಮಾನ್ಯ ಲಕ್ಷಣವಾಗಿದೆ. ಅದಲ್ಲದೆ ಗುಳ್ಳೆಗಳು ಮೂಡುವ ಹಂತದಲ್ಲಿಯೇ ವ್ಯಕ್ತಿ ದೇಹದಲ್ಲಿ ನೋವನ್ನು ಹೊಂದಿ ಅಸ್ವಸ್ಥತೆಗೆ ಒಳಗಾಗುತ್ತಾನೆ. ಇನ್ನು ಕೆಲವು ಸಾಮಾನ್ಯ ಲಕ್ಷಣಗಳೆಂದರೆ ಗಂಟಲು ಕೆರತ, ಹಸಿವು ಇಲ್ಲದಿರುವುದು, ತಲೆನೋವು, ಆಯಾಸ-ಸುಸ್ತು ಕಾಣಿಸಿಕೊಳ್ಳುತ್ತದೆ. ಒಂದು ಬಾರಿ ಚಿಕನ್ ಪಾಕ್ಸ್ ಕಾಣಿಸಿಕೊಂಡರೆ ಗುಣಮುಖರಾಗಲು ಸುಮಾರು 2 ವಾರಗಳ ಸಮಯ ಬೇಕಾಗುತ್ತದೆ ಎಂದು ತಿಳಿಸಿದೆ. ಮುಂಜಾಗ್ರತಾ ಕ್ರಮಗಳು : ಸೋಂಕಿತ ರೋಗಿಯ ಬೊಕ್ಕೆಗಳನ್ನು ಮುಟ್ಟಿದಾಗ ಕೈಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು. ಮನೆ, ಶಾಲೆ, ಕಿಂಡರ್ ಗಾರ್ಡನ್ ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಸೋಂಕಿತ ಮಕ್ಕಳ ಜೊತೆಗೆ ಹತ್ತಿರದ ಸಂಪರ್ಕ ಇಡಬಾರದು. ಸೋಂಕಿತ ಜಾಗ ಅಥವಾ ಮಕ್ಕಳ ಆಟಿಕೆಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು. ಅನಾರೋಗ್ಯವಿದ್ದರೆ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು. ವೈದ್ಯರನ್ನು ಸಂಪರ್ಕಿಸದೆ ಔಷಧ ತೆಗೆದುಕೊಳ್ಳಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಛೂ ಬಾಣ – ಪಿ. ಮೊಹಮ್ಮದ್ ಕಾರ್ಟೂನ್
ಕೊಣಾಜೆ | ತುಳುವೇತರರಿಗೆ ತುಳು ಶ್ರೀಮಂತಿಕೆ ತಿಳಿಯಲಿ: ಡಾ.ಪಾದೇಕಲ್ಲು
ಕೊಣಾಜೆ: ತುಳುವಿನ ಮೌಖಿಕ ಸಾಹಿತ್ಯದ ಕುರಿತು ಅಧ್ಯಯನ ನಡೆದಷ್ಟು ಪ್ರಾಚೀನ ತುಳು ಲಿಖಿತ ಸಾಹಿತ್ಯದ ಕುರಿತು ನಡೆದಿಲ್ಲ. ತುಳುಲಿಪಿಯಲ್ಲಿಯೇ ರಚನೆಗೊಂಡ ಮಹಾಭಾರತೊ, ಶ್ರೀಭಾಗವತೊ, ಶ್ರೀದೇವಿ ಮಹಾತ್ಮೆ, ಕಾವೇರಿ ಮೊದಲಾದ ಪಳಂತುಳು ಕೃತಿಗಳು ಲಭ್ಯವಾಗಿದ್ದು ಈ ಕುರಿತು ತುಳುನಾಡಿನಲ್ಲಿ ಹಾಗೂ ತುಳುವೇತರರಿಗೆ ತುಳುವಿನ ಈ ಶ್ರೀಮಂತಿಕೆಯನ್ನು ತಿಳಿಸುವ ಕೆಲಸ ಆಗಬೇಕಿದೆ ಎಂದು ತುಳು - ಕನ್ನಡ ವಿದ್ವಾಂಸರಾದ ಡಾ.ಪಾದೇಕಲ್ಲು ವಿಷ್ಣು ಭಟ್ ಹೇಳಿದರು. ಅವರು ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿವಿ ಕಾಲೇಜು ಮಂಗಳೂರು ಸಹಯೋಗದೊಂದಿಗೆ ನಡೆಸಿದ ಪಳಂತುಳು ಸಾಹಿತ್ಯದ ಸ್ವರೂಪ ಎಂಬ ವಿಷಯದ ಕುರಿತ ವೆಬಿನಾರ್ ಉಪನ್ಯಾಸ ಮಾಲಿಕೆಯಲ್ಲಿ ಉಪನ್ಯಾಸ ನೀಡಿದರು. ತುಳು ಅಕಾಡೆಮಿ, ತುಳುಪೀಠ ಜೊತೆ ಸೇರಿ ಕರ್ನಾಟಕದ ವಿಶ್ವವಿದ್ಯಾನಿಲಯಗಳಲ್ಲಿ ತುಳು ಭಾಷೆ ಸಾಹಿತ್ಯದ ಕುರಿತ ಉಪನ್ಯಾಸಗಳನ್ನು ಏರ್ಪಡಿಸಿ ತುಳುವೇತರರಿಗೆ ತುಳುವಿನ ಪ್ರಾಚೀನತೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಪಡಿಸಬೇಕು ಎಂದರು. ತಿಗಳಾರಿ ಲಿಪಿಯೇ ತುಳುಲಿಪಿ : ತುಳುವಿನ ಲಿಪಿಯ ಬಗ್ಗೆ ಬಹಳ ಚರ್ಚೆಗಳಿವೆ. ತಿಗಳಾರಿ ಲಿಪಿಯನ್ನೇ ನಾವು ತುಳುಲಿಪಿ ಎನ್ನುತ್ತಿರುವುದು. ಪ್ರಾಚೀನ ಕಾಲದಲ್ಲಿ ಈ ಲಿಪಿಯಲ್ಲಿಯೇ ಬರೆಯುತ್ತಿದ್ದೆವು. ಆದರೆ, ಕಾಲಾಂತರದಲ್ಲಿ ನಿತ್ಯದ ಬಳಕೆಯಲ್ಲಿ ಬಿದ್ದು ಹೋಗಿ ಮತ್ತೆ ಕನ್ನಡ ಲಿಪಿಯಲ್ಲಿಯೇ ಬರೆಯಲು ತೊಡಗಿದೆವು. ಆದರೆ ಹಳೆಯ ತುಳುವಿನ ಶಬ್ದರೂಪ, ಸಾಹಿತ್ಯ ಸ್ವರೂಪದ ಬಗ್ಗೆ ನಾಡಿನ ಗಮನ ಹರಿದಿಲ್ಲ ಎಂದರು. ಪಳಂತುಳುವಿನ ಸ್ವರೂಪವನ್ನು ಅರ್ಥ ಮಾಡಿಕೊಳ್ಳಲು ತುಳು ನಿಘಂಟು ಸಹಕಾರಿಯಾಗಿದೆ. ಸಿಕ್ಕಿದ ಏಕೈಕ ಪ್ರತಿಗಳನ್ನು ಮುಂದಿಟ್ಟುಕೊಂಡು ಪುಂಡೂರು ವೆಂಕಟರಾಜ ಪುಣಿಂಚತ್ತಾಯರು ಮಾಡಿದ ಗ್ರಂಥಸಂಪಾದನೆ ತುಳುವಿಗೆ ಸಂದ ಅಪೂರ್ವ ಕೊಡುಗೆ ಎಂದರು. ವಿವಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆಯವರು ಮಾತನಾಡಿ, ತುಳು ಸಾಹಿತ್ಯದ ಕುರಿತು ತಿಂಗಳಿಗೊಂದು ಕನ್ನಡದಲ್ಲಿ ಉಪನ್ಯಾಸವನ್ನು ಏರ್ಪಡಿಸಲಾಗುವುದು. ಇದರಿಂದಾಗಿ ತುಳುವರಿಗೂ, ತುಳುವೇತರರಿಗೂ ತುಳುವನ್ನು ತಲಪಿಸುವ ಪ್ರಯತ್ನ ಮಾಡಲಾಗುವುದು ಎಂದರು. ತುಳು ಪೀಠದ ಪ್ರಸಾದ್ ಅಂಚನ್ ವಂದಿಸಿದರು.
ನಮ್ಮದು ನುಡಿದಂತೆ ನಡೆದ ಸರಕಾರ; ಕೊಟ್ಟ ಮಾತಿನಂತೆ 142 ಭರವಸೆಗಳನ್ನು ಈಗಾಗಲೇ ಈಡೇರಿಸಿದೆ : ಡಿ.ಕೆ.ಶಿವಕುಮಾರ್
► ಮಾತು ನಿಧಾನವಾಗಿರಬೇಕು, ಕೆಲಸ ಪ್ರಧಾನವಾಗಿರಬೇಕು► ಹಾಸನದಲ್ಲಿ ಸರಕಾರದ ಸೇವೆಗಳ ಸಮರ್ಪಣಾ ಸಮಾವೇಶ
ಉಡುಪಿ | ಎಸ್ಸಿಡಿಸಿಸಿ ಬ್ಯಾಂಕ್ನಿಂದ ಪೊಲೀಸ್ ಇಲಾಖೆಗೆ ಹೊಸ ಜೀಪ್ ಹಸ್ತಾಂತರ
ಉಡುಪಿ, ಡಿ.6: ಪೊಲೀಸ್ ಇಲಾಖೆಯ ಮನವಿಗೆ ಸ್ಪಂದಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸ ಬೊಲೇರೋ ಜೀಪ್ನ್ನು ಕೊಡುಗೆಯಾಗಿ ನೀಡಿದ್ದು, ಇಂದು ಸಂಜೆ ಉಡುಪಿ ಎಸ್ಪಿ ಕಚೇರಿಯಲ್ಲಿ ವಾಹನದ ಹಸ್ತಾಂತರ ನಡೆಯಿತು. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು ನೂತನ ವಾಹನದ ಕೀಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಂ.ಎನ್.ರಾಜೇಂದ್ರಕುಮಾರ್, ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲೇ ಪೊಲೀಸ್ ಇಲಾಖೆ ಬಹಳಷ್ಟು ಸವಾಲುಗಳನ್ನು ಎದುರಿಸಿಕೊಂಡು ಕೆಲಸ ಮಾಡುತ್ತಿದೆ. ಪೊಲೀಸ್ ಇಲಾಖೆ ಎಲ್ಲರಿಗೂ ಬೇಕಾದ ಇಲಾಖೆ. ನಮ್ಮೆಲ್ಲರ ಸುರಕ್ಷತೆಯನ್ನು ನೋಡಿಕೊಳ್ಳುವುದು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸ್ ಇಲಾಖೆಯ ಬಹುದೊಡ್ಡ ಜವಾಬ್ದಾರಿ. ನಾವು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮನವಿಗೆ ಸ್ಪಂದಿಸಿ ಎರಡು ವಾಹನವನ್ನು ಒದಗಿಸಿದ್ದೇವೆ. ಅದೇ ರೀತಿ ಉಡುಪಿ ಎಸ್ಪಿಯವರ ಮನವಿಯನ್ನು ಸಂತೋಷದಿಂದ ಒಪ್ಪಿಕೊಂಡು ಇದೀಗ ಬೊಲೇರೋ ವಾಹನವನ್ನು ನೀಡಿದ್ದೇವೆ ಎಂದರು. ಇದಕ್ಕೆ ಮೊದಲು ನಡೆದ ಸರಳ ಸಮಾರಂಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಇಲಾಖೆಯ ಮನವಿಗೆ ಪೂರಕವಾಗಿ ಸ್ಪಂಧಿಸಿ ವಾಹನವೊಂದನ್ನು ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿ ಡಾ.ರಾಜೇಂದ್ರಕುಮಾರ್ ಅವರನ್ನು ಇಲಾಖೆಯ ವತಿಯಿಂದ ಸ್ಮರಣಿಕೆಗಳೊಂದಿಗೆ ಆತ್ಮೀಯವಾಗಿ ಸನ್ಮಾನಿಸಿತು. ಎಸ್ಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರಲ್ಲೊಬ್ಬರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಡಿವೈಎಸ್ಪಿ ಡಿ.ಟಿ ಪ್ರಭು, ಬ್ಯಾಂಕ್ನ ಹಿರಿಯ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಪೊಲೀಸ್ ಇಲಾಖೆಯ ಹಲವಾರು ವಾಹನಗಳು 15 ವರ್ಷಗಳನ್ನು ಪೂರೈಸಿದ್ದು, ಕೆಲ ವಾಹನಗಳು ದುರಸ್ತಿಯಲ್ಲಿ ಇರುವುದರಿಂದ ಇಲಾಖೆಗೆ ಕರ್ತವ್ಯ ನಿರ್ವಹಿಸಲು ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ತನ್ನ ಸಿಎಸ್ಆರ್ ಫಂಡ್ ಮೂಲಕ ವಾಹನ ಒದಗಿಸುವಂತೆ ಇಲಾಖೆ ಮನವಿ ಸಲ್ಲಿಸಿತ್ತು.
ಹೊಸದಿಲ್ಲಿ: ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್ಬಿಡಿಎಸ್ಎ) ಎನ್ಸಿಇಆರ್ಟಿ ಪುಸ್ತಕವನ್ನು ‘ ಲವ್ ಜಿಹಾದ್ ’ಪಿತೂರಿಯೊಂದಿಗೆ ತಳುಕು ಹಾಕಿದ್ದ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಐದು ಸುದ್ದಿವಾಹಿನಿಗಳಿಗೆ ಆದೇಶಿಸಿದೆ ಎಂದು scroll.in ವರದಿ ಮಾಡಿದೆ. ಹಳೆಯ ಎನ್ಸಿಇಆರ್ಟಿ ಮೂರನೇ ತರಗತಿಯ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲಿಯ ‘ಚಿಟ್ಟಿ ಆಯೀ ಹೈ’ ಶೀರ್ಷಿಕೆಯ ಅಧ್ಯಾಯದಲ್ಲಿನ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ಪ್ರತಿನಿಧಿಸಲಾಗಿದೆ ಎಂದು ಆರೋಪಿಸಿ ಇಂದ್ರಜಿತ್ ಘೋರ್ಪಡೆ ಮತ್ತು ಉತ್ಕರ್ಷ ಮಿಶ್ರಾ ಎನ್ನುವವರು ಎನ್ಬಿಡಿಎಸ್ಎಗೆ ದೂರು ಸಲ್ಲಿಸಿದ್ದರು. ರೀನಾ ಎಂಬ ಬಾಲಕಿ ಅಹ್ಮದ್ ಎಂಬ ಬಾಲಕನಿಗೆ ಬರೆದಿದ್ದ ಪತ್ರವನ್ನು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ಟಿವಿ ಚಾನೆಲ್ಗಳು ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ಬೆಟ್ಟು ಮಾಡಲಾಗಿತ್ತು. ಈ ಪತ್ರವನ್ನು ಕೇಂದ್ರವಾಗಿಟ್ಟುಕೊಂಡು ರೂಪಿಸಿದ್ದ ಕಾರ್ಯಕ್ರಮಗಳನ್ನು ಇಂಡಿಯಾ ಟಿವಿ,ನ್ಯೂಸ್ 18 ಮಧ್ಯಪ್ರದೇಶ/ಛತ್ತೀಸ್ಗಡ,ಝೀ ಮಧ್ಯಪ್ರದೇಶ/ಛತ್ತೀಸ್ಗಡ,ಝೀ ನ್ಯೂಸ್ ಮತ್ತು ಎಬಿಪಿ ನ್ಯೂಸ್ ಚಾನೆಲ್ಗಳು ಪ್ರಸಾರ ಮಾಡಿದ್ದವು. ವೀಡಿಯೊಗಳನ್ನು ತೆಗೆದುಹಾಕುವಂತೆ ತನ್ನ ಡಿ.2ರ ಆದೇಶದಲ್ಲಿ ಸೂಚಿಸಿರುವ ಎನ್ಬಿಡಿಎಸ್ಎ, ಎನ್ಸಿಇಆರ್ಟಿ ಅಧ್ಯಾಯದಲ್ಲಿ ಬಾಲಕಿಯು ಬೇರೆ ಧರ್ಮದ ಬಾಲಕನಿಗೆ ಪತ್ರ ಬರೆದಿದ್ದಾಳೆ ಎಂಬ ಮಾತ್ರಕ್ಕೆ ಅದನ್ನು ʼಲವ್ ಜಿಹಾದ್ʼ ಎಂದು ಬಣ್ಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಭಾರತವು ಜಾತ್ಯತೀತ ದೇಶವಾಗಿದೆ ಮತ್ತು ಅದು ಸಂವಿಧಾನದ ಆದೇಶವೂ ಆಗಿದೆ ಎಂದು ಆದೇಶದಲ್ಲಿ ಹೇಳಿರುವ ಎನ್ಬಿಡಿಎಸ್ಎ ಅಧ್ಯಕ್ಷ ನಿವೃತ್ತ ನ್ಯಾಯಾಧೀಶ ಎ.ಕೆ.ಸಿಕ್ರಿಯವರು, ಆದ್ದರಿಂದ ಟಿವಿ ಚಾನೆಲ್ಗಳು ಎನ್ಸಿಇಆರ್ಟಿ ಪುಸ್ತಕದಲ್ಲಿಯ ನಿರ್ದಿಷ್ಟ ಅಧ್ಯಾಯವನ್ನು ತಿರುಚಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ. ಲವ್ ಜಿಹಾದ್ಗೆ ಸಂಬಂಧಿಸಿದ ವರದಿಗಳಿಗಾಗಿ ಚಾನೆಲ್ಗಳನ್ನು ಇತ್ತೀಚಿಗೆ ಖಂಡಿಸಲಾಗಿದ್ದರೂ ಅವು ಸಂಪೂರ್ಣವಾಗಿ ವ್ಯಕ್ತಿನಿಷ್ಠ, ಅತ್ಯಂತ ಧ್ರುವೀಕರಣದ ಮತ್ತು ಪ್ರಚಾರವನ್ನು ಬಯಸುವ ಕೆಲವು ಗುಂಪುಗಳಿಂದ ಒತ್ತಾಯಿಸಲ್ಪಟ್ಟ ಸುದ್ದಿ ಕಥನವನ್ನು ಹೈಲೈಟ್ ಮಾಡಿವೆ ಎಂದು ದೂರುದಾರರು ಆರೋಪಿಸಿದ್ದರು. ವಾಹಿನಿಗಳು ಸುದ್ದಿ ಕಥನವನ್ನು ನಿರ್ವಹಿಸಿದ ರೀತಿಗೆ ಎನ್ಬಿಡಿಎಸ್ಎ ಅಸಮಾಧಾನ ವ್ಯಕ್ತಪಡಿಸಿದೆ. ಅಧ್ಯಾಯದಲ್ಲಿಯ ಪತ್ರದ ಬಗ್ಗೆ ಪೋಷಕರೋರ್ವರು ದೂರಿಕೊಂಡಿದ್ದರು ಮತ್ತು ತಾವು ದೂರಿನ ಬಗ್ಗೆ ವರದಿ ಮಾಡಿದ್ದೆವು ಎಂದು ಚಾನೆಲ್ಗಳು ಸಮರ್ಥಿಸಿಕೊಂಡಿದ್ದನ್ನು ಬೆಟ್ಟು ಮಾಡಿರುವ ಸಿಕ್ರಿ, ಸುದ್ದಿಯು ದೂರಿನ ವರದಿಗಾರಿಕೆಗಷ್ಟೇ ಸೀಮಿತವಾಗಿದ್ದರೆ ಬಹುಶಃ ಆಕ್ಷೇಪಣೆಗಳು ವ್ಯಕ್ತವಾಗುತ್ತಿರಲಿಲ್ಲ. ಬದಲಿಗೆ ಈ ದೂರನ್ನು ಚಾನೆಲ್ಗಳು ನಿರ್ದಿಷ್ಟ ನಿರೂಪಣೆಯೊಂದಿಗೆ ಚರ್ಚೆಯ ವಿಷಯವನ್ನಾಗಿ ಮಾಡಿದ್ದವು ಮತ್ತು ಹಾಗೆ ಮಾಡುವಾಗ ಇತರ ಯಾವುದೇ ಪೋಷಕರನ್ನು ಅವು ಸಂದರ್ಶಿಸಿರಲಿಲ್ಲ ಎಂದು ತನ್ನ ಆದೇಶದಲ್ಲಿ ಹೇಳಿದ್ದಾರೆ. ಕಾರ್ಯಕ್ರಮಗಳನ್ನು ರೂಪಿಸಿದ್ದ ರೀತಿಯು ವಸ್ತುನಿಷ್ಠತೆಯ ಕೊರತೆಯನ್ನು ಸ್ಪಷ್ಟವಾಗಿ ತೋರಿಸಿದೆ ಎಂದೂ ಅವರು ಹೇಳಿದ್ದಾರೆ. ತಮ್ಮ ವೆಬ್ಸೈಟ್ಗಳು, ಯೂಟ್ಯೂಬ್ ಚಾನೆಲ್ಗಳು ಮತ್ತು ಇತರ ಪ್ಲ್ಯಾಟ್ಫಾರ್ಮ್ಗಳಿಂದ ಆಕ್ಷೇಪಿತ ವೀಡಿಯೊಗಳನ್ನು ತೆಗೆದುಹಾಕುವಂತೆ ಈ ಐದು ಚಾನೆಲ್ಗಳಿಗೆ ಆದೇಶಿಸಿರುವ ಎನ್ಬಿಡಿಎಸ್ಎ, ಒಂದು ವಾರದೊಳಗೆ ಪಾಲನಾ ವರದಿಯನ್ನು ಸಲ್ಲಿಸುವಂತೆ ತಾಕೀತು ಮಾಡಿದೆ.
ಅಂಬೇಡ್ಕರ್ಗೆ ದ.ಕ. ಜಿಲ್ಲಾಡಳಿತದಿಂದ ಗೌರವ
ಮಂಗಳೂರು,ಡಿ.6: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ದ.ಕ. ಜಿಲ್ಲಾಡಳಿತದ ವತಿಯಿಂದ ಶನಿವಾರ ಗೌರವ ಸಲ್ಲಿಸಲಾಯಿತು. ನಗರದ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಎಚ್.ವಿ.ದರ್ಶನ್, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಪಂ ಸಿಇಒ ನರ್ವಾಡೆ ನಾಯಕ ಕಾರ್ಬಾರಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ, ದೇಶವು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣವಾಗಲು ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ. ಪ್ರತಿಯೊಬ್ಬ ನಾಗರಿಕರಿಗೂ ಜೀವಿಸಲು ಅಗತ್ಯವಾದ ಸ್ವಾತಂತ್ರ್ಯ ಮತ್ತು ಹಕ್ಕು ಒದಗಿಸಲು ಅವರು ಕಾರಣಕರ್ತರಾಗಿದ್ದಾರೆ. ಅವರ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿದರೆ ಉತ್ತಮ ನಾಗರಿಕರಾಗಬಹುದು ಎಂದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ.ಬಿ.ಎಸ್. ಹೇಮಲತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.
ಕಲಬುರಗಿ| ಬಾಬರಿ ಮಸೀದಿ ಧ್ವಂಸದ ವೀಡಿಯೊ ಹಂಚಿಕೊಂಡ ಪಾಲಿಕೆ ವ್ಯವಸ್ಥಾಪಕ: ಕ್ರಮಕ್ಕೆ ಆಗ್ರಹ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಕಚೇರಿಯ ವ್ಯವಸ್ಥಾಪಕ ಅಂಬಾದಾಸ್ ಖತಾಲ್ ಅವರು ಬಾಬರಿ ಮಸೀದಿ ಧ್ವಂಸ ಮಾಡುತ್ತಿರುವ ಪ್ರಚೋದನಕಾರಿ ಸ್ಟೇಟಸ್ ಹಂಚಿಕೊಂಡಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸ ಮಾಡಿರುವ ದೃಶ್ಯವಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಬನಾಯೆಂಗೆ ಮಂದಿರ ಎಂಬ ಹಾಡು ಇರುವುದು ಕೇಳಿಸುತ್ತಿದೆ. ಅದರಲ್ಲಿ ಹಿಂದೂ ಶೌರ್ಯ ದಿನ 1992ರ ಡಿಸೆಂಬರ್ 6 ಎಂದು ಬರೆಯಲಾಗಿದೆ. ಹೇಳಿದಂತೆ ಅಲ್ಲೇ ಮಂದಿರ ಮಾಡಿದ್ದೇವೆ ಎಂದು ವಾಟ್ಸಪ್ ಸ್ಟೇಟಸ್ನಲ್ಲಿ ಬರೆದುಕೊಂಡಿರುವುದು ಕಂಡು ಬಂದಿದೆ. ಈ ಕುರಿತ ವೀಡಿಯೊ ವೈರಲ್ ಬೆನ್ನಲ್ಲೆ ಅಲ್ಪಸಂಖ್ಯಾತ ಸಮುದಾಯದ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಪ್ರಚೋದನೆ ನೀಡಿದ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಮುಸ್ಲಿಂ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. ಈ ಕುರಿತು ಕೆಲ ಪಾಲಿಕೆ ಸದಸ್ಯರು, ಪಾಲಿಕೆಯ ಆಯುಕ್ತರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತ ಅವಿನಾಶ್ ಶಿಂಧೆ, ಪಾಲಿಕೆಯ ಅಧಿಕಾರಿ ಅಂಬಾದಾಸ್ ಅವರು ವಾಟ್ಸಾಪ್ ನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿರುವ ಬಗ್ಗೆ ನನಗೆ ಮಾಹಿತಿ ದೊರೆತಿದೆ. ಈ ಬಗ್ಗೆ ವಿವರಣೆ ಕೇಳಿ ಅಧಿಕಾರಿಗೆ ನೋಟಿಸ್ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕದ ಇತಿಹಾಸದಲ್ಲಿ ಕಾಂಗ್ರೆಸ್ ಸರಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ : ಸಿಎಂ ಸಿದ್ದರಾಮಯ್ಯ
► ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು► ಸರಕಾರದ ಸೇವೆಗಳ ಸಮರ್ಪಣಾ ಸಮಾವೇಶ
ಮಂಗಳೂರು,ಡಿ.6: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉಡುಪಿಗೆ ಆಗಮಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಅವರನ್ನು ಸ್ವಾಗತಿಸುವ ಪ್ರಮುಖರ ಪಟ್ಟಿಯಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಅವರ ಪತ್ನಿಗೆ ಪಕ್ಷದ ನಕಲಿ ಹುದ್ದೆ ಸೃಷ್ಟಿಸಿ ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬಿಜೆಪಿಯಿಂದ ಬಂಡಾಯ ಎದ್ದಿರುವ ಅರುಣ್ ಕುಮಾರ್ ಪುತ್ತಿಲ ಮತ್ತವರ ಪರಿವಾರವು ಸಾಮಾಜಿಕ ಜಾಲತಾಣಗಳ ತನ್ನ ಖಾತೆಯಲ್ಲಿ ಕಿಶೋರ್ ಕುಮಾರ್ ತನ್ನ ಪತ್ನಿಯನ್ನು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿಸುವುದಕ್ಕಾಗಿ ಪಕ್ಷದ ಮಹಿಳಾ ಮೋರ್ಚಾದ ದ.ಕ.ಜಿಲ್ಲಾ ಉಪಾಧ್ಯಕ್ಷೆ ಎಂದು ಬಿಂಬಿಸಿದ್ದಾರೆ. ಆಕೆ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯೇ ಅಲ್ಲ. ಜನಪ್ರತಿನಿಧಿಗಳು ತಮ್ಮ ಸಿಕ್ಕ ಅವಕಾಶವನ್ನು ಕಾರ್ಯಕರ್ತರಿಗೆ ಕೊಡಬೇಕೇ ವಿನಃ ಹೆಂಡತಿಯರಿಗೆ ಅಲ್ಲ ಎಂದು ವ್ಯಂಗ್ಯವಾಡಿದೆ. ಈಗಾಗಲೇ ಪ್ರಧಾನಿಯನ್ನು ಭೇಟಿ ಮಾಡಿದ ಎಂಎಲ್ಸಿ ಕಿಶೋರ್ ಕುಮಾರ್ ಅವರ ಪತ್ನಿಯ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದಕ್ಕೆ ಪ್ರತಿಯಾಗಿ ಪುತ್ತಿಲ ಪರಿವಾರವು ಎಂಎಲ್ಸಿ ಕಿಶೋರ್ ಕುಮಾರ್ ಮತ್ತು ಬಿಜೆಪಿ ಮುಖಂಡರು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದೆ. ಬಿಜೆಪಿಯು ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಪ್ರಮುಖ ಜವಾಬ್ದಾರಿ ನೀಡುತ್ತಾ ಬಂದಿದೆ. ಒಬ್ಬ ಕಾರ್ಯಕರ್ತನಾಗಿದ್ದ ತಾನೂ ಕೂಡ ಇದೀಗ ಜಿಲ್ಲೆಯ ಪ್ರಮುಖನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಮೋದಿಯ ಭೇಟಿಗಾಗಿಯೇ ಎಂಎಲ್ಸಿ ಕಿಶೋರ್ ಕುಮಾರ್ ಅವರ ಪತ್ನಿಗೆ ಬಿಜೆಪಿಯಲ್ಲಿ ನಕಲಿ ಹುದ್ದೆ ಸೃಷ್ಟಿಸಲಾಗಿದೆ ಎಂಬ ಪುತ್ತಿಲ ಪರಿವಾರದ ಆರೋಪಕ್ಕೆ ಜಿಲ್ಲೆಯ ಕೆಲವು ಬಿಜೆಪಿ ಪ್ರಮುಖರು ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ್ದಾರೆ. ರಾಜಕೀಯದಲ್ಲಿ ಅಂತಹ ಆರೋಪಗಳು ಸಹಜ. ಅದೆಲ್ಲಾ ದೊಡ್ಡ ವಿಷಯವೇ ಅಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸಿದ್ದಾರೆ. ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರು-ಉಡುಪಿಗೆ ಭೇಟಿ 8-9 ದಿನಗಳು ಕಳೆದರೂ ಬಿಜೆಪಿ-ಪುತ್ತಿಲ ಪರಿವಾರದ ಮಧ್ಯೆ ಆರೋಪ-ಪ್ರತ್ಯಾರೋಪ ಮುಂದುವರಿದಿದೆ.
10ನೇ ಬಾರಿ ಪ್ರಮಾಣ ವಚನ: ವಿಶ್ವ ದಾಖಲೆ ಪುಸ್ತಕದಲ್ಲಿ ನಿತೀಶ್ ಕುಮಾರ್ ಹೆಸರು ಸೇರ್ಪಡೆ
ಪಾಟ್ನಾ: ಸ್ವತಂತ್ರ ಭಾರತದಲ್ಲಿ ರಾಜ್ಯವೊಂದರ ಮುಖ್ಯಮಂತ್ರಿಯಾಗಿ 10ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಎಂದು ವಿಶ್ವ ದಾಖಲೆಗಳ ಪುಸ್ತಕವು (ಡಬ್ಲ್ಯುಬಿಆರ್) ಪಟ್ಟಿ ಮಾಡುವುದರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜಾಗತಿಕ ಮನ್ನಣೆಯನ್ನು ಪಡೆಯಲು ಸಜ್ಜಾಗಿದ್ದಾರೆ. ದಾಖಲೆಯ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕಾಗಿ ಡಬ್ಲ್ಯುಬಿಆರ್ ನಿತೀಶ್ ರನ್ನು ಅಭಿನಂದಿಸಿದೆ. ನಿತೀಶ್ 1947ರಿಂದ 2025ರವರೆಗಿನ ಅವಧಿಯಲ್ಲಿ ಹತ್ತು ಸಲ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ಅಭಿನಂದನಾ ಪತ್ರದಲ್ಲಿ ತಿಳಿಸಿರುವ ಡಬ್ಲ್ಯುಬಿಆರ್, ಈ ಮೈಲಿಗಲ್ಲು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮಾನದಂಡವೊಂದನ್ನು ಸ್ಥಾಪಿಸಿದ್ದು,ಇದು ನಾಯಕತ್ವದ ಅಪರೂಪದ ನಿರಂತರತೆಯನ್ನು ಪ್ರತಿಬಿಂಬಿಸುತ್ತದೆ. ಇದು ಅವರ ಬದ್ಧತೆ,ದೂರದೃಷ್ಟಿಯ ನಾಯಕತ್ವ ಮತ್ತು ಅವರ ಮೇಲೆ ಬಿಹಾರದ ಜನತೆಯ ಅಚಲ ನಂಬಿಕೆಯನ್ನು ಸೂಚಿಸುತ್ತದೆ. ಹತ್ತು ಬಾರಿ ರಾಜ್ಯವನ್ನು ಮುನ್ನಡೆಸುವುದು ಗಮನಾರ್ಹ ವೈಯಕ್ತಿಕ ಸಾಧನೆ ಮಾತ್ರವಲ್ಲ,ಅದು ಇಡೀ ದೇಶಕ್ಕೆ ಗೌರವದ ಕ್ಷಣವಾಗಿದೆ ಎಂದು ಹೇಳಿದೆ. ಆಡಳಿತ,ಅಭಿವೃದ್ಧಿ,ಸಮಾಜ ಕಲ್ಯಾಣ ಮತ್ತು ಆಡಳಿತಾತ್ಮಕ ಸ್ಥಿರತೆಯನ್ನು ಕಾಯ್ದುಕೊಳ್ಳುವಲ್ಲಿ ನಿತೀಶ್ ಅವರ ನಿರಂತರ ಪ್ರಯತ್ನಗಳು ದೇಶಾದ್ಯಂತ ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿವೆ ಹಾಗೂ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಳಿಗೆ ಪ್ರೇರಣೆ ನೀಡುವುದನ್ನು ಮುಂದುವರಿಸಲಿವೆ. ಅಪರೂಪದ ಸಾಧನೆಯ ಸಂಕೇತವಾಗಿ ಅವರ ಹೆಸರು ಡಬ್ಲ್ಯುಬಿಆರ್ ಪಟ್ಟಿಯಲ್ಲಿ ಸೇರ್ಪಡೆಗೊಂಡಿದೆ. ಅವರ ದಾಖಲೆಯ ಮೈಲಿಗಲ್ಲನ್ನು ಅಂಗೀಕರಿಸುವ ಅಧಿಕೃತ ಪ್ರಮಾಣ ಪತ್ರವನ್ನು ಸಂಸ್ಥೆಯು ಒದಗಿಸಲಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ನ.20ರಂದು ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಸಲ ಪ್ರಮಾಣ ವಚನ ಸ್ವೀಕರಿಸಿದ್ದರು.
ವಿಮಾನಗಳ ಹಾರಾಟ ರದ್ದಾಗಿದ್ದರೆ ಮರುಪಾವತಿ ಪಡೆಯೋದೇಗೆ?: ಇಲ್ಲಿವೆ ಪಾಲಿಸಬೇಕಾದ ಸರಳ ಮಾರ್ಗಗಳು
Flight Ticket Refund: ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ಪರಿಣಾಮ ಪ್ರಯಾಣಿಕರು ಏರ್ಪೋರ್ಟ್ಗಳಲ್ಲಿ ಈಗಲೂ ಕೂಡ ಪರದಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಕೆಟ್ ಬುಕ್ ಮಾಡಿರುವವರಿಗೆ ಮರುಪಾವತಿ ಮಾಡುವುದಾಗಿ ಇಂಡಿಗೋ ಘೋಷಣೆ ಮಾಡಿದೆ. ಹಾಗಾದ್ರೆ, ಇದನ್ನು ಪಡೆಯುವುದೇಗೆ ಹಾಗೂ ಪಾಲಿಸಬೇಕಾದ ವಿಧಾನಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಕಳೆದ ಕೆಲ
ಷೇರು ಮಾರುಕಟ್ಟೆಯ ಹೂಡಿಕೆದಾರರಿಗೆ ಮುಂದಿನ ವಾರ ಹಬ್ಬದೂಟ ಕಾದಿದೆ. ಪ್ರಾಥಮಿಕ ಮಾರುಕಟ್ಟೆಯಲ್ಲಿ ಬರೋಬ್ಬರಿ 11 ಹೊಸ ಐಪಿಒಗಳು ಚಂದಾದಾರಿಕೆಗಾಗಿ ತೆರೆಯುತ್ತಿದ್ದು, ಒಟ್ಟು 13,807 ಕೋಟಿ ರೂಪಾಯಿ ಬಂಡವಾಳ ಸಂಗ್ರಹದ ಗುರಿ ಹೊಂದಿವೆ. ಇದರಲ್ಲಿ ಬಹುನಿರೀಕ್ಷಿತ ವೇಕ್ಫಿಟ್, ಕೊರೊನಾ ರೆಮಿಡೀಸ್ ಮತ್ತು ಐಸಿಐಸಿಐ ಪ್ರುಡೆನ್ಶಿಯಲ್ ಎಎಂಸಿಯಂತಹ ಪ್ರಮುಖ ಕಂಪನಿಗಳು ಸೇರಿವೆ.
ಉಡುಪಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸನ್ಮಾನ
ಉಡುಪಿ, ಡಿ.6: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷೆ ಅನು ಸಿವರಾಮನ್ ಅವರನ್ನು ಶನಿವಾರ ಉಡುಪಿಯ ಪ್ರವಾಸಿ ಮಂದಿರದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣವರ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ.ಶೆಟ್ಟಿಗಾರ್, ಖಜಾಂಚಿ ಹಿಲ್ಡಾ ಕ್ಯಾಸ್ಟಲಿನೊ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ನಾಗರಾಜ್, ಗೀತಾ ಕೌಸಿಕ್, ಸಚಿನ್ ಶೆಟ್ಟಿ, ಗುರುಪ್ರಸಾದ್ ಜಿ.ಎಸ್., ದೀಪಕ್ ಕುಮಾರ್ ಪೂಜಾರಿ, ದೀಪಾ ಕೆ.ಶೆಟ್ಟಿ., ವಿನಯ ಸುವರ್ಣ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್ ಮತ್ತು ಮಂಗಳೂರಿನ ಜಿಲ್ಲಾ ಸರಕಾರಿ ವಕೀಲ ಎಂ.ಪಿ.ನೊರೋನಾ ಉಪಸ್ಥಿತರಿದ್ದರು.
ಭಾರತೀಯರು ಈ ವರ್ಷ ಗೂಗಲ್ ನಲ್ಲಿ ಅತಿ ಹೆಚ್ಚು ಹುಡುಕಾಡಿದ ವಿಷಯಗಳು ಯಾವುವು ಗೊತ್ತೆ?
ʼಮಹಾಕುಂಭʼದಿಂದ ʼಆಪರೇಶನ್ ಸಿಂಧೂರ್ʼ ವರೆಗೆ ಭಾರತೀಯರು ಕುತೂಹಲದಿಂದ ಹುಡುಕಿದ ವಿಷಯಗಳ ವಿವರ ಇಲ್ಲಿದೆ…
ಮಣಿಪಾಲ | ರಾಷ್ಟ್ರೀಯ ಕ್ರೀಡಾಡಳಿತ ಕಾರ್ಯಗಾರ
ಮಣಿಪಾಲ, ಡಿ.6: ಯಕ್ಷಿತ್ ಯುವ ಫೌಂಡೇಶನ್ ವತಿಯಿಂದ ‘ಸ್ಪೋರ್ಟ್ ಲೀಡರ್ಶಿಪ್ 101’ ಕಾರ್ಯಕ್ರಮವನ್ನು ಮಣಿಪಾಲದಲ್ಲಿ ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯಕ್ಷಿತ್ ಯುವ ಫೌಂಡೇಶನ್ ಸಂಸ್ಥಾಪಕ ಶ್ರೀಪಾದ ರವಿ ರಾವ್ ಮಾತನಾಡಿ, ಯುವಜನತೆಯೇ ಭಾರತದ ಕ್ರೀಡಾ ಭವಿಷ್ಯದ ಚಾಲಕಶಕ್ತಿ. ಪಾರದರ್ಶಕತೆ, ನೈತಿಕತೆ ಮತ್ತು ಉದ್ದೇಶಪೂರ್ಣ ನಾಯಕತ್ವದ ಮೂಲಕ ಮಾತ್ರ ದೇಶದ ಕ್ರೀಡಾ ವ್ಯವಸ್ಥೆ ಮುಂದಿನ ಹಂತಕ್ಕೆ ಸಾಗಬಹುದು ಎಂದು ಹೇಳಿದರು. ರೋಟರಿ ಕ್ಲಬ್ ಆಫ್ ಸಾಯಿಬರಕಟ್ಟೆ ಅಧ್ಯಕ್ಷ ಥಾಮಸ್, ಪತ್ರಕರ್ತ ಸಂತೋಷ್ ನಾಯ್ಕ್, ಫಾಲ್ಕನ್ ಫಿಟ್ನೆಸ್ ಸಂಸ್ಥಾಪಕ ಸುರಜ್ ಶೆಟ್ಟಿ ಉಪಸ್ಥಿತರಿದ್ದರು. ಭಾಗವಹಿಸಿದವರಿಗೆ ಫೌಂಡೇಶನ್ ಟ್ರಸ್ಟಿ ಸ್ವಪ್ನಿಲ್ ಪಾಟೀಲ್ ಪ್ರಮಾಣಪತ್ರಗಳನ್ನು ವಿತರಿಸಿದರು. ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ವೈಭವ್ ಆರ್.ಪಾಟೀಲ್ ವಂದಿಸಿದರು.
\ಡಿ.ಕೆ.ಶಿವಕುಮಾರ್ ಸಿಎಂ ಆದ್ರೆ ನನಗೆ ಸಚಿವ ಸ್ಥಾನವೇ ಬೇಡ\
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರ ಬೂದಿಮುಚ್ಚಿದ ಕೆಂಡವಾಗಿದೆ. ಇತ್ತೀಚೆಗೆ ಹೈಕಮಾಂಡ್ ಸೂಚನೆ ಮೇರೆಗೆ ಎರಡೆರಡು ಬಾರಿ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಸಿಎಂ ಕುರ್ಚಿ ಕದನಕ್ಕೆ ಬ್ರೇಕ್ ಹಾಕುವ ಕೆಲಸ ಮಾಡಿದ್ದರು. ಆದರೆ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ಹಲವರಿದ್ದಾರೆ. ಡಿಕೆಶಿ ಸಿಎಂ ಆದ್ರೆ ನಮಗೆಲ್ಲ ಸಚಿವ
ಉಡುಪಿ | ಡಾ.ಕಾತ್ಯಾಯಿನಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ ಪ್ರದಾನ
ಉಡುಪಿ, ಡಿ.6: ತುಮಕೂರಿನ ಗುಬ್ಬಿಯಲ್ಲಿ ಡಿ.5ರಂದು ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರ ವಿಮರ್ಶಾ ಕೃತಿ ಇರವಿನ ಅರಿವಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ -2023ನ್ನು ಪ್ರದಾನ ಮಾಡಲಾಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ.ಗಾಯತ್ರಿ, ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ | ವಿಶೇಷ ಚೇತನ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ: ಶ್ಯಾಮಲ ಸಿ.ಕೆ.
ಜಿಲ್ಲಾ ಮಟ್ಟದ ಬೋಚಿ ಸ್ಪರ್ಧೆ ಉದ್ಘಾಟನೆ
ಮಾತು ನಿಧಾನ, ಕಾಯಕ ಪ್ರಧಾನ : ಆರನೇ ಗ್ಯಾರಂಟಿ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ
Siddaramaiah government 6th guarantee : ಇದು ಅಭಿವೃದ್ಧಿಯ ಸರ್ಕಾರ. ಸರ್ವರಿಗೂ ಸಮಪಾಲು, ಸಮಬಾಳು, ಸರ್ವರಿಗೂ ನೆಮ್ಮದಿ, ಸರ್ವರಿಗೂ ಅಭಿವೃದ್ಧಿ ನೀಡುವ ಸರ್ಕಾರ ನಮ್ಮದು. ನಾವು ಒಂದು ನಿಮಿಷದಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದರೆ ಒಂದು ನಿಮಿಷದಲ್ಲಿ ಜನರ ಅಭಿವೃದ್ಧಿ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದು. ನಾವು ಅದರಂತೆ ಕೆಲಸ ಮಾಡುತ್ತಿದ್ದೇವೆ. ಭೂಮಿ ಗ್ಯಾರಂಟಿ ನಮ್ಮ ಆರನೇ ಗ್ಯಾರಂಟಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಉಡುಪಿ | ಕೃಷಿ ಯಂತ್ರೋಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ : ಶರ್ಮ
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಧರಣಿ
ಅಂಬೇಡ್ಕರ್ ಪ್ರತಿಮೆಗಳ ಸುತ್ತ ರಕ್ಷಣಾ ಗೋಡೆಗಳನ್ನು ನಿರ್ಮಿಸಲಾಗುವುದು: ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್
ಲಕ್ನೊ: ಅಂಬೇಡ್ಕರ್ ಪ್ರತಿಮೆಗಳನ್ನು ಹಾನಿಗೊಳಿಸುವುದನ್ನು ತಡೆಗಟ್ಟಲು ಅವುಗಳ ಸುತ್ತ ರಕ್ಷಣಾ ಗೋಡೆಗಳನ್ನು ನಿರ್ಮಿಸಲಾಗುವುದು ಎಂದು ಶನಿವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ತಿಳಿಸಿದ್ದಾರೆ. ಶನಿವಾರ ಲಕ್ನೊದಲ್ಲಿ ಆಯೋಜನೆಗೊಂಡಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಣಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಇಂದು ನಮ್ಮ ಸರಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಎಲ್ಲೆಲ್ಲ ಅಂಬೇಡ್ಕರ್ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆಯೊ, ಅಲ್ಲೆಲ್ಲ ಕೆಲವು ದುಷ್ಟ ಶಕ್ತಿಗಳು ಪದೇ ಪದೇ ಅವರ ಪ್ರತಿಮೆಗಳನ್ನು ಹಾನಿಗೊಳಿಸಲು ಮುಂದಾಗುತ್ತಿವೆ. ಅವರು ಆ ಪ್ರತಿಮೆಗಳಿಗೆ ಹಾನಿಯೆಸಗುವ ಕೆಟ್ಟ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರತಿಮೆಗಳನ್ನು ರಕ್ಷಿಸಲು ನಮ್ಮ ಸರಕಾರ ಅವುಗಳ ಸುತ್ತ ರಕ್ಷಣಾ ಗೋಡೆಯನ್ನು ನಿರ್ಮಿಸುವ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಅವರ ಪ್ರತಿಮೆಗಳ ಮೇಲೆ ಮೇಲ್ಚಾವಣಿ ಇಲ್ಲದಿದ್ದರೆ, ಅವುಗಳ ಮೇಲೆ ಛತ್ರಿಯನ್ನು ಅಳವಡಿಸಿ ಭಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಸುರಕ್ಷತೆ ಮತ್ತು ಗೌರವವನ್ನು ಖಾತರಿಗೊಳಿಸಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.
ಮಹಿಳಾ ಮೀಸಲಾತಿ: ಮಹತ್ವ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ
ಹಾಸನ, ಡಿಸೆಂಬರ್ 6: ಮಹಿಳಾ ಮೀಸಲಾತಿ ಬಗ್ಗೆ ನಮ್ಮ ಸರ್ಕಾರ ಮೊದಲಿನಿಂದಲೂ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ. ಮೀಸಲಾತಿ ಕೊಡಬೇಕು ಎಂದರೆ ತಕ್ಷಣ ಕೊಡಬೇಕು. ಕೇಂದ್ರ ಸರ್ಕಾರ ಇದನ್ನು ಏಕೆ ಮುಂದೂಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ
ಹೇಮಾವತಿ ಜಲಾಶಯದ ಬಳಿ ವಿಶ್ವದರ್ಜೆಯ ಬೃಹತ್ ಉದ್ಯಾನವನ ನಿರ್ಮಾಣ
ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಬಳಿ 700 ಎಕರೆ ಪ್ರದೇಶದಲ್ಲಿ ಸುಂದರ ಉದ್ಯಾನವನ ನಿರ್ಮಾಣವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದ್ದು, ಜನಪರ ಕಾರ್ಯಗಳು ಮುಂದುವರೆಯಲಿವೆ. ಎಲ್ಲರೂ ಮುಖ್ಯವಾಹಿನಿಗೆ ಬರಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಹಾಸನ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು.
ಮಂಗಳೂರು | ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ
ಮಂಗಳೂರು, ಡಿ.6: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬಾಬಾ ಸಾಹೇಬರು ಕೇವಲ ದಲಿತರ ಪರ ಹೋರಾಟಗಾರ ಅಲ್ಲ. ಈ ದೇಶದ ಪ್ರತಿಯೊಬ್ಬ ಅಸಹಾಯಕನ ಶೋಷಿತನ ಪರವಾಗಿ ಮಿಡಿದ ಮಹಾ ಮಾನವತಾವಾದಿ. ಅಂತಹ ಶ್ರೇಷ್ಠ ವ್ಯಕ್ತಿಯನ್ನು ಕಾಂಗ್ರೆಸ್ ಚುನಾವಣೆಯಲ್ಲಿ ಹೀನಾಯವಾಗಿ ಸೋಲುವಂತೆ ಮಾಡಿದ್ದು, ಈ ದೇಶದ ದುರಂತವಾಗಿದೆ. ಬಾಬಾ ಸಾಹೇಬರು ನಮಗೆ ನೀಡಿದ ಸರ್ವ ಶ್ರೇಷ್ಠ ಸಂವಿಧಾನದ ಹಾದಿಯಲ್ಲಿ ನಾವೆಲ್ಲರೂ ನಡೆಯೋಣ ಎಂದರು. ಬಿಜೆಪಿ ದ.ಕ.ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಮಹಾ ಮಾನವತಾವಾದಿ ಅಂಬೇಡ್ಕರ್ ಅವರ ಸಂವಿಧಾನದ ಆಶಯಕ್ಕೆ ತಕ್ಕಂತೆ ನಾವೆಲ್ಲರೂ ನಡೆದುಕೊಂಡರೆ ಅದುವೇ ಅವರಿಗೆ ನಾವು ನೀಡುವ ಶ್ರೇಷ್ಠ ಗೌರವವಾಗಿದೆ ಎಂದರು. ಸಂಸದ ಬ್ರಿಜೇಶ್ ಚೌಟ, ಬಿಜೆಪಿ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಮಾಜಿ ಮೇಯರ್ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ದಿವಾಕರ್ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ, ಬಿಜೆಪಿ ಪ್ರಮುಖರಾದ ಪೂರ್ಣಿಮಾ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ನಂದನ್ ಮಲ್ಯ, ವಸಂತ್ ಜೆ.ಪೂಜಾರಿ, ಮೋನಪ್ಪಭಂಡಾರಿ, ನಿತಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು, ಡಿ.6: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಉಡುಪಿ ಸರ್ಕ್ಯೂಟ್ ಹೌಸ್ನಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದೆ. ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರೂ ವಿಧಾನ ಪರಿಷತ್ ನ ಸದಸ್ಯರಾದ ಐವನ್ ಡಿಸೋಜ ರವರು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ಮನವಿಯನ್ನು ಸಲ್ಲಿಸಿದರು. ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವ ಕಾರ್ಯ ಬಹಳ ಮುಖ್ಯವಾಗಿದೆ. ಈದೀಗ ಸಾಮಾನ್ಯ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲು ಬಹಳ ಕಷ್ಟವಾಗಿದ್ದು, ಹಾಗೂ ಮಳೆಗಾಲದ ಸಂದರ್ಭದಲ್ಲಿ ದೂರದ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟವನ್ನು ಅನುಭವಿಸಬೇಕಾಗಿದೆ. ಅಲ್ಲದೆ ಕರಾವಳಿ ಭಾಗ ಉಡುಪಿ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ಈ ಭಾಗದ ಜನರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಮುಖ್ಯ ನ್ಯಾಯಮೂರ್ತಿಗಳಿಗೆ ವಿವರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿಸಿರುವುದರಿಂದ, ಮೊದಲಿಗೆ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸಲು ಒಪ್ಪಿಗೆ ನೀಡಬೇಕೆಂದು ವಿನಂತಿಸಿದರು. ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮನವೀಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಮಿತಿಯ ನಿಯೋಗದಲ್ಲಿ ಮಂಗಳೂರು ವಕೀಲ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ. ಮಂಗಳೂರಿನ ಪ್ರಧಾನ ಜಿಲ್ಲಾ ಸರಕಾರಿ ವಕೀಲ ಎಂ ಪಿ ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ. ಶೆಟ್ಟಿಗಾರ್, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್ ಶೆಟ್ಟಿ ಉಪಸ್ಥಿತರಿದ್ದರು.
ಕುಮಾರಸ್ವಾಮಿ ಮನುವಾದಿ ಎಂದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಎಚ್ಡಿಕೆ
ಇಲ್ಲಸಲ್ಲದ ಆರೋಪ ಮಾಡಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಕೆಲಸ ಆಗುತ್ತಿದೆ ಎಂದು ಶಾಸಕ ಯತೀಂದ್ರ ಹೇಳಿಕೆ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸಿದ್ದು ಹೀಗೆ; ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ನಡೆದು ಬಂದ ಹಿನ್ನೆಲೆ ಏನು? ಈ ಮಟ್ಟಕ್ಕೆ ಅವರು ಬರಲು ಯಾರು ಕಾರಣ? ಇವರಿಗೆ ಯಾರಿಂದ ತೊಂದರೆಯಾಗಿದೆ? ಅವೆಲ್ಲವನ್ನೂ ಸಹ ಅವರು ಹೇಳಬೇಕು. ಯತೀಂದ್ರ ನಿನ್ನೆ ಮೊನ್ನೆಯಷ್ಟೇ ಬಂದಿದ್ದಾರೆ, ಅವರಿಗೆ ಇತಿಹಾಸ ಗೊತ್ತಿಲ್ಲ ಎಂದು ಸಚಿವ ಎಚ್ಡಿ ಕುಮಾರಸ್ವಾಮಿ ಹೇಳಿದರು.
KAS Officers Transfer: ಮೂವರು ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
KAS Officers Transfer: ರಾಜ್ಯ ಸರ್ಕಾರವು ಆಗಾಗ ಮೇಜರ್ ಸರ್ಜರಿಯನ್ನು ಮಾಡುತ್ತಲಿತ್ತದೆ. ಹಾಗೆಯೇ ಇದೀಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮೂವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು, ಎಲ್ಲಿಗೆ ವರ್ಗಾವಣೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ರಾಜ್ಯ ಸರ್ಕಾರ ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ
IND Vs SA-ಹರಿಣಗಳಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಶಾಕ್ ನೀಡಿದ ಬಳಿಕ ಕುಲ್ದೀಪ್ ಯಾದವ್ ಮ್ಯಾಜಿಕ್!
Prasidh Krishna 4 Wickets Haul- ಅದ್ಭುತ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ ಅವರು ದಕ್ಷಿಣ ಆಫ್ರಿಕಾ ತಂಡದ ಬ್ಯಾಟಿಂಗ್ ಬೆನ್ನುಲುಬು ಮುರಿದರೆ, ಉಳಿದ ಕೆಲಸವನ್ನು ಸ್ಪಿನ್ನರ್ ಕುಲ್ದೀಪ್ ಯಾದವ್ ಅವರು ಯಶಸ್ವಿಯಾಗಿ ಮುಗಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 270 ರನ್ಗಳಿಗೆ ಆಲೌಟ್ ಆಯಿತು. ಪ್ರಸಿದ್ಧ್ ಕೃಷ್ಣ ಅವರು ಮ್ಯಾಥ್ಯೂ ಬ್ರೆಟ್ಝ್ಕಿ, ಐಡೆನ್ ಮಾರ್ಕ್ರಂ ಮತ್ತು ಕ್ವಿಂಟನ್ ಡಿ ಕಾಕ್ ಅವರ ವಿಕೆಟ್ ಗಳನ್ನು ಉರುಳಿಸಿದ್ದು ದಕ್ಷಿಣ ಆಫ್ರಿಕಾ ತಂಡದ ಪಾಲಿಗೆ ನುಂಗಲಾರದ ತುತ್ತಾಯಿತು.
ಮಾದಕ ವಸ್ತುವಿಗಾಗಿ ಬಡಿದಾಟ, ಕಾರವಾರ ಜೈಲಿನಲ್ಲಿ ಕೈದಿಗಳಿಂದಲೇ ಜೈಲರ್ ಮೇಲೆ ಹಲ್ಲೆ
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ವಿಚಾರವಾಗಿ ಇಬ್ಬರು ಕೈದಿಗಳು ಜೈಲರ್ ಸೇರಿ ಮೂವರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಜೈಲು ಸಿಬ್ಬಂದಿ ಕೈದಿಗಳನ್ನು ದಂಡಿಸಿದ್ದು, ಈ ಎರಡೂ ಘಟನೆಗಳ ವಿಡಿಯೋ ವೈರಲ್ ಆಗಿದೆ.
IPL 2026 RCB: ಆರ್ಸಿಬಿಗೆ ಯಾರೂ ಊಹಿಸದ ಸ್ಟಾರ್ ಆಲ್ರೌಂಡರ್ ಎಂಟ್ರಿ..
IPL 2026 RCB: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿಯು ಬಲಿಷ್ಠ ಪಂಜಾಬ್ ಕಿಂಗ್ಸ್ ಮಣಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿತು. ಇದೀಗ ಎಲ್ಲರ ಚಿತ್ತ 19ನೇ ಸೀಸನ್ನತ್ತ ನೆಟ್ಟಿದೆ. ಈಗಾಗಲೇ ಮಿನಿ ಹರಾಜಿಗೂ ಮುನ್ನ ತಂಡಗಳು ಕೆಲ ಆಟಗಾರರನ್ನು ಬಿಡುಗಡೆಗೊಳಿಸಿವೆ. ಇದರ ಬೆನ್ನಲ್ಲೇ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಲ್ರೌಂಡರ್ ಕೊಂಡುಕೊಳ್ಳಲು ಸಖತ್ ಪ್ಲಾನ್ ನಡೆಸಿದೆ. ಹಾಗಾದ್ರೆ
ಬೆಂಗಳೂರಿಂದ ಹೊರಡುವ ಮೂರು ರೈಲುಗಳಿಗೆ ಹೆಚ್ಚುವರಿ ಬೋಗಿ, ಎಸಿ ಕೋಚ್; ಮಂಗಳೂರು- ಮುಂಬೈ ರೈಲಿಗೂ ಹೆಚ್ಚುವರಿ ಕೋಚ್
ಇಂಡಿಗೋ ವಿಮಾನಗಳ ತಾಂತ್ರಿಕ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ದೂರದ ಪ್ರಯಾಣಕ್ಕೆ ಪರ್ಯಾಯ ಮಾರ್ಗ ಹುಡುಕುತ್ತಿರುವವರಿಗೆ ರೈಲ್ವೆ ಇಲಾಖೆ ನೆರವಾಗಿದೆ. ಹಲವು ರೈಲುಗಳಿಗೆ ಹೆಚ್ಚುವರಿ ಬೋಗಿಗಳು, ಎಸಿ ಕೋಚ್ಗಳನ್ನು ಅಳವಡಿಸಿ, ಹೆಚ್ಚಿನ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗಿದೆ. ಇದರಿಂದಾಗಿ ಸಾವಿರಾರು ಮಂದಿ ಸುರಕ್ಷಿತವಾಗಿ ತಮ್ಮ ಗಮ್ಯಸ್ಥಾನ ತಲುಪಲು ಸಾಧ್ಯವಾಗಿದೆ.
IND Vs SA- ಸದ್ದಿಲ್ಲದೆ ಸೌರವ್ ಗಂಗೂಲಿ ಅವರ ಅಪೂರ್ವ ಸಾಧನೆಯನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ!
ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮಾಜಿ ನಾಯಕ ಸೌರವ್ ಗಂಗೂಲಿ ಅವರ 308 ಏಕದಿನ ಪಂದ್ಯಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ರಾಂಚಿ ಮತ್ತು ರಾಯ್ಪುರದಲ್ಲಿ ಸತತ ಎರಡು ಶತಕಗಳನ್ನು ಬಾರಿಸಿರುವ ಕೊಹ್ಲಿ, ವಿಶಾಖಪಟ್ಟಣದಲ್ಲಿ ಮೂರನೇ ಶತಕದ ನಿರೀಕ್ಷೆಯಲ್ಲಿದ್ದಾರೆ. ಇದು ಸಾಧ್ಯವಾದರೆ, ಏಕದಿನ ಕ್ರಿಕೆಟ್ನಲ್ಲಿ ಸತತ ಮೂರು ಶತಕ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸಚಿನ್ ತೆಂಡೂಲ್ಕರ್, ಎಂ.ಎಸ್. ಧೋನಿ, ರಾಹುಲ್ ದ್ರಾವಿಡ್, ಮೊಹಮ್ಮದ್ ಅಜರುದ್ದೀನ್ ನಂತರದ ಸ್ಥಾನದಲ್ಲಿದ್ದಾರೆ.
ಇಂಡಿಗೊ ಅವ್ಯವಸ್ಥೆ: ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡುವಂತೆ ಕೇಂದ್ರ ಸರಕಾರ ಗಡುವು
ಹೊಸದಿಲ್ಲಿ: ಇಂಡಿಗೊ ವಿಮಾನಯಾನ ಸೇವೆಗಳಲ್ಲಿ ಅವ್ಯವಸ್ಥೆ ಮುಂದುವರಿದಿದೆ. ಈ ಮಧ್ಯೆ ವಿಮಾನ ರದ್ದತಿ ಮತ್ತು ಅಡಚಣೆಗಳಿಂದಾಗಿ ಬಾಕಿ ಇರುವ ಎಲ್ಲಾ ಪ್ರಯಾಣಿಕರಿಗೆ ಮರುಪಾವತಿಯನ್ನು ನೀಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಇಂಡಿಗೊ ವಿಮಾನಯಾನ ಸಂಸ್ಥೆಗೆ ಗಡುವು ವಿಧಿಸಿದೆ. ನಾಳೆ(ಡಿ.7) ರಾತ್ರಿ 8 ಗಂಟೆಯೊಳಗೆ ಎಲ್ಲಾ ಪ್ರಯಾಣಿಕರಿಗೆ ಮರುಪಾವತಿಯನ್ನು ಪೂರ್ಣಗೊಳಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಇಂಡಿಗೊ ಸಂಸ್ಥೆಗೆ ನಿರ್ದೇಶನ ನೀಡಿದೆ. ಕಳೆದ ಒಂದು ವಾರದಿಂದ ಸಾವಿರಾರು ಪ್ರಯಾಣಿಕರು ವಿಮಾನ ರದ್ದತಿ, ತಡೆ ಮತ್ತು ಇತರ ಸಮಸ್ಯೆಗಳಿಂದ ತೊಂದರೆಗೊಳಗಾಗಿದ್ದಾರೆ. ಅವರಿಗೆ ಹಣ ಮರುಪಾವತಿ, ಮರು ಕಾಯ್ದಿರಿಸುವಿಕೆ ಕೋರಿದ ನಂತರ ಈ ನಿರ್ದೇಶನವನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮಂಗಳೂರು | ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ :ಯುವರಾಜ್ಗೆ ಚಿನ್ನದ ಪದಕ
ಮಂಗಳೂರು, ಡಿ.6: ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ಅಥ್ಲೆಟಿಕ್ಸ್ನಲ್ಲಿ 200 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಡಿ.1ರಿಂದ 4ರವರೆಗೆ ಮಧ್ಯಪ್ರದೇಶದ ಇಂದೋರ್ನ ಎಮರಾಲ್ಡ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ನಡೆಯಿತು. ಯುವರಾಜ್ರ ಸಾಧನೆಗೆ ಪ್ರಾಂಶುಪಾಲ ಫಾ. ರೋಹನ್ ಡಿ ಆಲ್ಮೇಡಾ, ಉಪಪ್ರಾಂಶುಪಾಲ ಅಪರ್ಣಾ ಸುರೇಶ್, ಲಾರೆಲ್ ಡಿಸೋಜ, ಯುವರಾಜ್ರ ಹೆತ್ತವರಾದ ಧೀರಜ್ ಕೋಟ್ಯಾನ್ ಮತ್ತು ವೀಣಾ ಡಿ. ಕೋಟ್ಯಾನ್, ತರಬೇತುದಾರ ಭಕ್ಷಿತ್ ಸಾಲ್ಯಾನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Government Employees: ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ : ಸರ್ಕಾರದಿಂದ ಮಹತ್ವದ ಆದೇಶ!
ಬೆಂಗಳೂರು, ಡಿಸೆಂಬರ್ 06: ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆ ಮರು ಜಾರಿ ಒಂದು ಕಡೆಯಾದರೇ. ಇತ್ತ ನಿವೃತ್ತಿ ಹೊಂದುವ ರಾಜ್ಯ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ಕುರಿತು ರಾಜ್ಯ ಸರ್ಕಾರ ಮಹತ್ವ
ಮಂಗಳೂರು | ಸರ್ವ ಧರ್ಮಗಳ ಕ್ರಿಸ್ಮಸ್ ಆಚರಣೆ : ಪೂರ್ವಬಾವಿ ಸಭೆ
ಮಂಗಳೂರು, ಡಿ.6: ಸರ್ವಧರ್ಮಗಳ ಭಾವೈಕ್ಯದ ಸಂಗಮವಾದ ಕ್ರಿಸ್ಮಸ್ ಆಚರಣೆ ಬಗ್ಗೆ ಪೂರ್ವಬಾವಿ ಸಭೆಯು ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಇತ್ತಿಚೆಗೆ ನಡೆಯಿತು. ಕಳೆದ 10 ವರ್ಷಗಳಿಂದ ಕ್ರಿಸ್ಮಸ್, ದೀಪಾವಳಿ, ರಮಝಾನ್ ಹಬ್ಬಗಳನ್ನು ಅಚರಿಸುತ್ತಾ ಬರಲಾಗಿದೆ. ಸಮಾಜದ ಎಲ್ಲಾ ವರ್ಗಗಳ ಜನರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಬಾರಿ ಕ್ರಿಸ್ಮಸ್ ಹಬ್ಬವು ಡಿ.22ರಂದು ಅಪರಾಹ್ನ 3ರಿಂದ 10ರವರೆಗೆ ಜೆಪ್ಪುಸೈಂಟ್ ಅಂತೋನಿ ಆಶ್ರಮ ತೆರೆದ ಮೈದಾನದಲ್ಲಿ ನಡೆಯಲಿದೆ. ಈ ಹಬ್ಬದ ಪ್ರಯುಕ್ತ ಕ್ಯಾರಲ್ ಹಾಡುಗಳ ಸ್ಪರ್ಧೆ ಮತ್ತು ಕ್ರಿಸ್ಮಸ್ ಗೆ ಸಂಬಂಧಪಟ್ಟ ವಿವಿಧ ವಿನೋದಾವಳಿಗಳು ನಡೆಯಲಿದೆ ಎಂದರು. ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮದ ಸಂಚಾಲಕ ಬ್ರಿಷ್ಟನ್ ರೊಡ್ರಿಗಸ್, ಮಾಜಿ ಕಾರ್ಪೊರೇಟರ್ಗಳಾದ ಜೆ.ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಅಪ್ಪಿಲತಾ, ವಿಕಾಸ್ ಶೆಟ್ಟಿ, ಪಿಯೂಸ್ ಮೊಂತೆರೋ, ಸೇಸಮಕ್ಕ, ಸತೀಶ್ ಪೆಂಗಲ್, ವಿಜಯ್ ಅರಾನ್ಹ, ಟಿ.ಸಿ. ಗಣೇಶ್, ಜೇಮ್ಸ್ ಪ್ರವೀಣ್, ರಿತೇಶ್ ಶಕ್ತಿನಗರ, ಅನಂದ ಸೋನ್ಸ್ ಇಮ್ರಾನ್, ನೀತು ಡಿಸೋಜ, ಆಲ್ಸ್ಟೀನ್ ಡಿಕುನ್ಹ, ಡಿಂಪಲ್ ಉಪಸ್ಥಿತರಿದ್ದರು.
ಮಂಗಳೂರು ಮನಪಾ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಐವನ್ ಡಿಸೋಜಾ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ
ಮಂಗಳೂರು, ಡಿ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸಂವಾದ ಕಾರ್ಯಕ್ರಮವು ಶುಕ್ರವಾರ ಮನಪಾ ಸಭಾಂಗಣದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ನೇತೃತ್ವದಲ್ಲಿ ನಡೆಯಿತು. ನಗರ ಪಾಲಿಕೆ ಒಳಚರಂಡಿ ಅವ್ಯವಸ್ಥೆ, ಕುಡಿಯುವ ನೀರು, ಜನನ-ಮರಣ ಪತ್ರ, ಇ-ಖಾತ, ರಸ್ತೆ ಕಾಮಗಾರಿ, ಮೂಲಭೂತ ಸೌಕರ್ಯಗಳ ಬಗ್ಗೆ ಮನಪಾ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಮಾತನಾಡಿದ ಐವನ್ ಡಿಸೋಜ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಪ್ರಮುಖವಾಗಿ ಒಳಚರಂಡಿ ಸಮಸ್ಯೆ, ರಸ್ತೆ, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಅನುದಾನದ ಕೊರತೆಯಿದ್ದಲ್ಲಿ ಸರಕಾರದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಈ ಸಂದರ್ಭ ಪ್ರಮುಖರಾದ ಭಾಸ್ಕರ್ ಮೊಯಿಲಿ, ಶಶಿಧರ್ ಹೆಗ್ಡೆ, ಅಶ್ರಫ್ ಬಜಾಲ್, ಅಪ್ಪಿ, ನಾಗೇಂದ್ರ ಕುಮಾರ್ ಜೆ., ನವೀನ್ ಡಿಸೋಜ, ಭಾಸ್ಕರ ರಾವ್, ಝೀನತ್ ಶಂಶುದ್ದೀನ್, ಸತೀಶ್ ಪೆಂಗಲ್, ಕಿಶೋರ್ ಕುಮಾರ್ ಶೆಟ್ಟಿ, ಚೇತನ್ ಕುಮಾರ್, ಹೇಮಂತ್ ಗರೋಡಿ, ಸೇಸಮ್ಮಕ್ಕ, ಪದ್ಮನಾಭ ಪಣಿಕ್ಕರ್, ಪ್ರಕಾಶ್ ಸಾಲ್ಯಾನ್, ಜೇಮ್ಸ್ ಪ್ರವೀಣ್, ಸ್ಟ್ಯಾನಿ ಅಳ್ವಾರಿಸ್, ಸ್ಟ್ಯಾನಿ ಲೋಬೋ, ಸಮರ್ಥ ಭಟ್, ಹಬೀಬುಲ್ಲ, ಅನಿಲ್ ಲೋಬೋ ಜೆಪ್ಪು, ಅಲ್ಟಿನ್ ಡಿಕುನ್ಹ ಸಲಹೆ, ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಇಂಜಿನಿಯರ್ ನರೇಶ್ ಶೆಣೈ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಸ್ಪಂದಿಸುವುದಾಗಿ ತಿಳಿಸಿದರು.
ಬಿಜೆಪಿಯ ಗುರಿ ನೆಹರೂ ಅವರನ್ನು ಅಳಿಸುವುದಲ್ಲ, ನಾಶಮಾಡುವುದು : ಸೋನಿಯಾ ಗಾಂಧಿ
ಹೊಸದಿಲ್ಲಿ : ಬಿಜೆಪಿಯ ಗುರಿ ನೆಹರೂ ಅವರನ್ನು ಅಳಿಸುವುದಲ್ಲ, ನಾಶಮಾಡುವುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಜವಾಹರ್ ಭವನದಲ್ಲಿ ನೆಹರೂ ಸೆಂಟರ್ ಇಂಡಿಯಾ ಕಾರ್ಯಕ್ರಮದಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ನೆಹರೂ ಅವರ ಕೊಡುಗೆಗಳ ವಿಶ್ಲೇಷಣೆ ಮತ್ತು ಟೀಕೆ ಸ್ವಾಗತಾರ್ಹವಾದರೂ, ಅವರು ಬರೆದ ಮತ್ತು ಹೇಳಿದ್ದನ್ನು ಉದ್ದೇಶಪೂರ್ವಕವಾಗಿ ತಿರುಚುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದರು. ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ, ಬಿಜೆಪಿ ಅಥವಾ ಆರೆಸ್ಸೆಸ್ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ. ನೆಹರೂ ಅವರನ್ನು ದೂಷಿಸುವುದು ಇಂದಿನ ಆಡಳಿತ ವ್ಯವಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರ ಗುರಿ ನೆಹರೂ ಅವರನ್ನು ಅಳಿಸಿಹಾಕುವುದು ಮಾತ್ರವಲ್ಲ, ನಮ್ಮ ರಾಷ್ಟ್ರ ಯಾವ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬುನಾದಿಯ ಮೇಲೆ ನಿಂತಿದೆಯೋ ಆ ಬುನಾದಿಯನ್ನೇ ನಾಶ ಮಾಡುವುದು ಅವರ ಉದ್ದೇಶವಾಗಿದೆ ಎಂದು ಹೇಳಿದರು. ಬಾಬರಿ ಮಸೀದಿ ನಿರ್ಮಿಸಲು ನೆಹರೂ ಸಾರ್ವಜನಿಕ ಹಣವನ್ನು ಬಳಸಲು ಬಯಸಿದ್ದರು. ಆದರೆ ಆ ಕ್ರಮವನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ ತಡೆದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿ ವಿವಾದ ಸೃಷ್ಟಿಸಿದ ಕೆಲವೇ ದಿನಗಳಲ್ಲಿ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಈ ಹೇಳಿಕೆಯನ್ನು ಸುಳ್ಳು ಎಂದು ಕರೆದಿದೆ. ರಾಜನಾಥ್ ಸಿಂಗ್ ಧ್ರುವೀಕರಣಕ್ಕೆ ಉತ್ತೇಜನ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದೆ. ನೆಹರೂ ಅವರ ವಿರುದ್ಧದ ಯೋಜನೆಯ ಹಿಂದಿರುವ ಶಕ್ತಿಗಳು ಸ್ವಾತಂತ್ರ್ಯ ಹೋರಾಟದಲ್ಲಿ ಯಾವ ಪಾತ್ರವನ್ನೂ ವಹಿಸಿರಲಿಲ್ಲ. ಸಂವಿಧಾನ ರಚನೆಯಲ್ಲೂ ಭಾಗವಹಿಸಿರಲಿಲ್ಲ. ಇದು ಬಹಳ ಹಿಂದೆಯೇ ದ್ವೇಷದ ವಾತಾವರಣವನ್ನು ಸೃಷ್ಟಿಸಿದ ಸಿದ್ಧಾಂತವಾಗಿದ್ದು, ಅಂತಿಮವಾಗಿ ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾಯಿತು. ಗಾಂಧೀಜಿಯ ಹಂತಕರನ್ನು ಇಂದಿಗೂ ಅವರ ಅನುಯಾಯಿಗಳು ವೈಭವೀಕರಿಸುತ್ತಿದ್ದಾರೆ. ಇದು ಧರ್ಮಾಂದ ಮತ್ತು ಕ್ರೂರವಾಗಿ ಕೋಮುವಾದಿ ದೃಷ್ಟಿಕೋನವನ್ನು ಹೊಂದಿರುವ ಸಿದ್ಧಾಂತವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದರು. ನೆಹರೂ ಅಂತಹ ವ್ಯಕ್ತಿಗಳ ಜೀವನವನ್ನು ವಿಶ್ಲೇಷಿಸುವುದು ಮತ್ತು ಟೀಕಿಸುವುದು ಸಹಜ. ಆದರೆ ಇತಿಹಾಸವನ್ನು ಪುನಃ ಬರೆಯುವ, ಒರಟಾದ ಮತ್ತು ಸ್ವಾರ್ಥ ಪ್ರಯತ್ನದ ಮೂಲಕ ಅವರ ಪರಂಪರೆಯನ್ನು ಕೆಡವಲು ಪ್ರಯತ್ನಿಸುವ ವ್ಯವಸ್ಥಿತ ಪ್ರಯತ್ನವು ಸ್ವೀಕಾರಾರ್ಹವಲ್ಲ ಎಂದು ಸೋನಿಯಾ ಗಾಂಧಿ ಹೇಳಿದರು.
ವಿಮಾನಯಾನ ಬಿಕ್ಕಟ್ಟು: ಇಂಡಿಗೋಗೆ ಕೇಂದ್ರದ ಖಡಕ್ ಸೂಚನೆ, ವಿಮಾನ ದರಕ್ಕೂ ಕಡಿವಾಣ
ಇಂಡಿಗೋ ವಿಮಾನಗಳ ರದ್ದತಿಯಿಂದ ಉಂಟಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಲು ನಾಗರಿಕ ವಿಮಾನಯಾನ ಸಚಿವಾಲಯ ಗಡುವು ನೀಡಿದೆ. ಡಿಸೆಂಬರ್ 7ರ ಭಾನುವಾರ ರಾತ್ರಿ 8 ಗಂಟೆಯೊಳಗೆ ರದ್ದಾದ ವಿಮಾನಗಳ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಬೇಕು ಮತ್ತು ಲಗೇಜ್ಗಳನ್ನು 48 ಗಂಟೆಯೊಳಗೆ ಮನೆಗೆ ತಲುಪಿಸಬೇಕು ಎಂದು ಆದೇಶಿಸಿದೆ. ಇದೇ ವೇಳೆ, ಪ್ರಯಾಣಿಕರ ಸುಲಿಗೆಯನ್ನು ತಡೆಯಲು ವಿಮಾನ ಟಿಕೆಟ್ ದರಗಳ ಮೇಲೆ ಸರ್ಕಾರ ಮಿತಿ ಹೇರಿದೆ. ಡಿಸೆಂಬರ್ 15ರ ವೇಳೆಗೆ ಇಂಡಿಗೋ ಸೇವೆ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ.
viral video: ಕೆಎಸ್ಆರ್ಟಿಸಿ ಬಸ್ ಅನ್ನೇ ಬಾರ್ ಮಾಡಿಕೊಂಡ ಯುವಕರು, ಹೇಳೋರಿಲ್ಲ ಕೇಳೋರಿಲ್ಲ
ರಾಜ್ಯದ ಮೂಲೆ ಮೂಲೆಗೆ ಪ್ರಯಾಣಿಕರನ್ನು ಹೊತ್ತು ಸಾಗುವ ಕೆಎಸ್ಆರ್ಟಿಸಿ ಬಸ್ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಸ್ನಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸಬಾರದು ಎನ್ನುವ ನಿಯಮ ಇದೆ. ಆದರೆ ಕೆಲ ಪುಂಡ ಯುವಕರು ಸರ್ಕಾರಿ ಬಸ್ ಅನ್ನೇ ಬಾರ್ ಮಾಡಿಕೊಂಡಿದ್ದಾರೆ. ರಾಜಾರೋಷವಾಗಿ ಕೆಎಸ್ಆರ್ಟಿಸಿ ಬಸ್ನಲ್ಲೇ ಸ್ಟೈಲಾಗಿ ಮದ್ಯ ಸೇವಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಎಸ್ಆರ್ಟಿಸಿ ಬಸ್
ಹೈದರಾಬಾದ್ನಲ್ಲಿ 33.5 ಲಕ್ಷ ರೂ. ವೇತನದೊಂದಿಗೆ ವರ್ಕ್ ಫ್ರಂ ಹೋಂ ಸೌಲಭ್ಯ ಹೊಂದಿದ್ದ ಡೇಟಾ ಇಂಜಿನಿಯರ್, ಬೆಂಗಳೂರಿನಿಂದ 45.5 ಲಕ್ಷ ರೂ. ವೇತನದ ಆಫರ್ ಪಡೆದಿದ್ದಾರೆ. ಆದರೆ, ಬೆಂಗಳೂರಿನಲ್ಲಿ ನಿತ್ಯ ಕಚೇರಿಗೆ ಹೋಗಬೇಕಿರುವುದರಿಂದ ಅವರು ಗೊಂದಲಕ್ಕೊಳಗಾಗಿದ್ದಾರೆ. ಈ ಬಗ್ಗೆ ರೆಡಿಟ್ನಲ್ಲಿ ಕೇಳಿದ ಪ್ರಶ್ನೆಗೆ ಹಲವು ರೀತಿಯ ಸಲಹೆಗಳು ಬಂದಿವೆ.
KEA UGNEET: ಯುಜಿನೀಟ್ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ..
KEA UGNEET 2025: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) UGNEET2025 ಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದ್ದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶದ ತಾತ್ಕಾಲಿಕ ಸೀಟು ಹಂಚಿಕೆಗೆ ಹೈಕೋರ್ಟ್ ತಡೆ ನೀಡಿದೆ. ಮುಂದಿನ ಪ್ರಕ್ರಿಯೆಯ ಕುರಿತು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು
ಆದಿಚುಂಚನಗಿರಿ ಸ್ವಾಮೀಜಿಯವರಲ್ಲಿ ಬಹಿರಂಗ ಕ್ಷಮೆ ಯಾಚಿಸಿದ ಕುಮಾರಸ್ವಾಮಿ
ಮಂಡ್ಯ: ಜಾತಿಯ ಹೆಸರಿನಲ್ಲಿ ಧಾರ್ಮಿಕ ಕ್ಷೇತ್ರ ದುರುಪಯೋಗ ಪಡಿಸಿಕೊಳ್ಳುವುದು ಯಾವ ರಾಜಕಾರಣಿಗೂ ಶೋಭೆ ತರುವುದಿಲ್ಲ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯರು ಈ ವಿಚಾರವಾಗಿ ಇದೀಗ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗೆ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಮಂಡ್ಯದ ವಿ.ಸಿ. ಫಾರಂನಲ್ಲಿ ನಡೆದ ಕೃಷಿ ಮೇಳದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, , ನಮ್ಮ ನಿಷ್ಠೆ ಹೃದಯದಲ್ಲಿದೆ, ಅದನ್ನು ಹೊರಗೆ ತೋರಿಸಿಕೊಳ್ಳಬೇಕಾಗಿಲ್ಲ. ಪರಮಪೂಜ್ಯರಿಗೆ ನನ್ನಿಂದ ಏನಾದರೂ ಅಪಚಾರ ಆಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು. ವಾರದ ಹಿಂದೆ ಮಾಧ್ಯಮದೊಂದಿಗೆ ಮಾತನಾಡಿದ ಕುಮಾರಸ್ವಾಮಿ, ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗಲೂ, ಅಧಿಕಾರ ಕಳೆದುಕೊಂಡಾಗಲೂ ಯಾವುದೇ ಮಠಾಧೀಶರ ನೆರವು ಕೇಳಿರಲಿಲ್ಲ. ಮಠಾಧೀಶರ ಕೆಲಸವೇ ಬೇರೆ. ರಾಜ್ಯದಲ್ಲಿ ನಡೆಯುತ್ತಿರುವ ಜಾತೀಯ ರಾಜಕಾರಣದಿಂದ ರಾಜ್ಯಕ್ಕೆ ನಷ್ಟವಾಗುತ್ತದೆ ಹೊರತು ಯಾರಿಗೂ ಲಾಭವಿಲ್ಲ. ಇದು ಸಮಾಜಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದರು.
ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚು: ಸಾವಿರಾರು ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿ, 3.5ಲಕ್ಷ ಜನರ ಸ್ಥಳಾಂತರಕ್ಕೆ ಸೂಚನೆ
ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ನಲ್ಲಿ ದೊಡ್ಡ ಕಾಡ್ಗಿಚ್ಚು ಸಂಭವಿಸಿದೆ. ಸಾವಿರಾರು ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಫೆಗನ್ಸ್ ಬೇ ಮತ್ತು ವೋಯ್ ವೋಯ್ ಪ್ರದೇಶದ 350,000 ಕ್ಕೂ ಹೆಚ್ಚು ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸುಮಾರು 16 ಮನೆಗಳು ನಾಶವಾಗಿವೆ. ತಾಪಮಾನ 42 ಡಿಗ್ರಿ ಸೆಲ್ಸಿಯಸ್ಗೆ ಏರಿದೆ. ಪ್ರಧಾನಿ ಆಂಥೋನಿ ಅಲ್ಬನೀಸ್ ಸುರಕ್ಷತೆಗಾಗಿ ಸೂಚನೆ ಪಾಲಿಸಲು ಮನವಿ ಮಾಡಿದ್ದಾರೆ.
ಚರ್ಚೆಗೆ ಕಾರಣವಾಗಿದೆ ಸ್ಮೃತಿ ಮಂದಾನ ಇನ್ ಸ್ಟಾಗ್ರಾಂ ಪೋಸ್ಟ್; ಎಂಗೇಜ್ ಮೆಂಟ್ ರಿಂಗೇ ಮಿಸ್ಸಿಂಗ್!
Smriti Mandhana Engagement Ring-ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ತಮ್ಮ ವಿವಾಹ ಮುಂದೂಡಿಕೆಯ ನಂತರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಾಗ ಅಭಿಮಾನಿಗಳೆಲ್ಲಾ ಖುಷಿಪಟ್ಟರು. ಆದರೆ ಅವರ ನಿಶ್ಚಿತಾರ್ಥದ ಉಂಗುರ ಕಾಣಿಸದಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ. ವಿವಾಹದ ದಿನದಂದು ಸ್ಮೃತಿ ಅವರ ತಂದೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದಾಗ ವಿವಾಹ ಮುಂದೂಡಲ್ಪಟ್ಟಿತ್ತು. ಆದರೆ ವಿವಾಹದ ಮುಂದಿನ ದಿನಾಂಕ ಯಾವಾಗ ಎಂಬ ಬಗ್ಗೆ ಎರಡೂ ಕುಟುಂಬಗಳೂ ಈವರೆಗೂ ಯಾವ ಮಾಹಿತಿಯನ್ನೂ ನೀಡಿಲ್ಲ. ಈಗ ಸ್ಮೃತಿಯೂ ಆ ಬಗ್ಗೆ ಮಾತನಾಡಿಲ್ಲ.
ಚಿಂಚೋಳಿ| ಅತಿವೃಷ್ಟಿ ಹಾನಿ ಪರಿಹಾರ ಹಾಗೂ ನೀರಾವರಿ ಕಾಲುವೆಗಳ ದುರಸ್ತಿಗೆ ಆಗ್ರಹಿಸಿ ಕೆಪಿಆರ್ಎಸ್ ಪ್ರತಿಭಟನೆ
ಕಲಬುರಗಿ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಂದ ಬಲವಂತದ ಕರ ವಸೂಲಿಯನ್ನು ನಿಲ್ಲಿಸಬೇಕು ಮತ್ತು ನೀರಾವರಿ ಕಾಲುವೆಗಳ ಹೂಳೆತ್ತುವ ಕಾಮಗಾರಿಗೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (KPRS) ಶನಿವಾರ ಚಿಂಚೋಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಚಿಂಚೋಳಿ ತಾಲ್ಲೂಕು ಪಂಚಾಯತ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೈತ ಮುಖಂಡ ಶರಣಬಸಪ್ಪ ಮಮಶೆಟ್ಟಿ, ಅತಿವೃಷ್ಟಿಯಿಂದ ತೊಗರಿ, ಉದ್ದು, ಹೆಸರು, ಸೋಯಾ, ಮತ್ತು ಹತ್ತಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತಿಗಳು ಗ್ರಾಮೀಣ ಜನರಿಂದ ಬಲವಂತವಾಗಿ ಕರ ವಸೂಲಿ ಮಾಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು. ಕೇವಲ ಕಮರ್ಷಿಯಲ್ ತೆರಿಗೆಯನ್ನು ಮಾತ್ರ ಸಂಗ್ರಹಿಸಬೇಕು ಎಂದು ಒತ್ತಾಯಿಸಿದರು. ನೀರಾವರಿ ಕಾಲುವೆಗಳ ದುರಸ್ತಿ ಮತ್ತು ನೀರು ಮುಲ್ಲಾಮಾರಿ ಕೆಳದಂಡೆ ಯೋಜನೆಯ ಮುಖ್ಯ ಕಾಲುವೆಗಳು ಮತ್ತು ಮರಿ ಕಾಲುವೆಗಳು ಹೂಳು ತುಂಬಿ, ಗಿಡಗಂಟಿಗಳು ಬೆಳೆದು ಹಾಳಾಗಿವೆ. ತಕ್ಷಣವೇ ಕಾಲುವೆಗಳ ಹೂಳೆತ್ತಿ ದುರಸ್ತಿ ಮಾಡಬೇಕು. ಚಂದ್ರಂಪಳ್ಳಿ ಜಲಾಶಯದಿಂದ ಹಿಂಗಾರು ಬೆಳೆಗಳಾದ ತೊಗರಿ, ಜೋಳ, ಕುಸುಬಿ, ಕಡಲೆ ಇತ್ಯಾದಿಗಳಿಗೆ ತಕ್ಷಣ ನೀರು ಹರಿಸಬೇಕು ಎಂದರು. ಸಣ್ಣ ನೀರಾವರಿ ಕೆರೆಗಳು ಮತ್ತು ಕಾಲುವೆಗಳ ದುರಸ್ತಿಗಾಗಿ ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (MGNREGA) ಫಾರಂ ನಂ 6ಎ ಸಲ್ಲಿಸಿದ ಎಲ್ಲ ಕಾರ್ಮಿಕರಿಗೆ ತಕ್ಷಣ ಕೆಲಸ ನೀಡಬೇಕು. ಮಿರಿಯಾಣ, ನಾಗಾಇದಲಾಯಿ, ಸಾಲೆಬೀರನಹಳ್ಳಿ, ಕರಚಖೇಡ, ಕನಕಪುರ, ಶಾದಿಪುರ ಮತ್ತು ಚಂದನಕೇರಾ ಗ್ರಾಮ ಪಂಚಾಯತಿಗಳಲ್ಲಿ ಕೂಲಿಕಾರರಿಗೆ ತಕ್ಷಣ ಕೆಲಸ ಒದಗಿಸಬೇಕು ಹಾಗೂ ಉದ್ಯೋಗ ಚೀಟಿ ಇಲ್ಲದವರಿಗೆ ಸರಳವಾಗಿ ಹೊಸ ಚೀಟಿ ವಿತರಿಸಬೇಕು. ಚಂದ್ರಂಪಳ್ಳಿ ಅಭಿವೃದ್ಧಿ ಅನುದಾನ ಚಂದ್ರಂಪಳ್ಳಿ ಜಲಾಶಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರದಿಂದ ಬಂದ ಲಕ್ಷಾಂತರ ರೂಪಾಯಿ ಅನುದಾನ ಖರ್ಚಾಗಿದ್ದರೂ ಯಾವುದೇ ಅಭಿವೃದ್ಧಿ ಕಾಣುತ್ತಿಲ್ಲ. ಈ ಹಣ ದುರ್ಬಳಕೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಚಿಂಚೋಳಿ ಅಧ್ಯಕ್ಷರಾದ ಜಾಫರ್ ಖಾನ್, ಕಾರ್ಯದರ್ಶಿ ವೈಜಿನಾಥ ಸಾತಪ್ಪನೋರ, ಉಪಾಧ್ಯಕ್ಷರಾದ ಶಂಕ್ರಯ್ಯಾ ಸ್ವಾಮಿ ಸೇರಿದಂತೆ ಹಲವು ರೈತ ಮುಖಂಡರು ಮತ್ತು ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೋದಿಯವರ ಅಮೃತ್ ಕಾಲ್ ಕೇವಲ ಅಂಬಾನಿ, ಅದಾನಿಗೆ ಮಾತ್ರ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಆರೆಸ್ಸೆಸ್ ಗುರುದಕ್ಷಿಣೆ ಸ್ವೀಕರಿಸಿದ್ದಕ್ಕೆ ಲೆಕ್ಕ ಬೇಡವಾ?
ಸಂಪಾದಕೀಯ | ಭಾರತದ ವೈಮಾನಿಕ ಕ್ಷೇತ್ರದಲ್ಲಿ ತುರ್ತುಪರಿಸ್ಥಿತಿ!
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಸತತ 20 ಪಂದ್ಯಗಳ ಸೋಲಿನ ನಂತರ ಈ ವಿಚಾರದಲ್ಲಿ ಭಾರತಕ್ಕೆ ಭರ್ಜರಿ ಜಯ... Virat Kohli
ಭಾರತ ತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ, ಭಾರತ ತಂಡದ ಅಭಿಮಾನಿಗಳು ಕುಣಿದಾಡಿದ್ದಾರೆ. ಈ ಗೆಲುವು ಅಂತಿಂತಹ ಗೆಲುವು ಅಲ್ಲ, ಒಂದು ಕಡೆ ವಿರಾಟ್ ಕೊಹ್ಲಿ &ರೋಹಿತ್ ಶರ್ಮಾ ರಿಟರ್ನ್ ಆಗಿ ಭರ್ಜರಿ ಪ್ರದರ್ಶನ ತೋರಿಸುತ್ತಿರುವ ಸಮಯದಲ್ಲೇ ಮತ್ತೊಂದು ವಿಚಾರದಲ್ಲಿ ಭಾರತ ಈಗ ಇತಿಹಾಸ ನಿರ್ಮಾಣ ಮಾಡಿದೆ. ಕ್ರಿಕೆಟ್ ಆಟವನ್ನು ಪೂಜಿಸುವ &ಕ್ರಿಕೆಟ್ ಆಟಗಾರರಿಗೆ ದೇವರ
ಡಾ.ಅಂಬೇಡ್ಕರ್ ಮಹಾನ್ ಮಾನವತಾವಾದಿ: ಶಾಸಕ ಗೋಪಾಲಯ್ಯ
ಬೆಂಗಳೂರು ಡಿ.6: ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಅತ್ಯುನ್ನತ ಗ್ರಂಥವಾದ ಸಂವಿಧಾನವನ್ನು ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಅವರ ಚಿಂತನೆ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ ಗೋಪಾಲಯ್ಯ ನವರು ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡಿನ ಶಾಸಕರ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ ದಿನದಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಅಂಬೇಡ್ಕರ್ ರವರು ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನತೆ, ಹಕ್ಕು ಸಿಗಬೇಕು ಎಂದು ಹೋರಾಡಿದವರು. ಅಂಬೇಡ್ಕರ್ ಅವರ ಚಿಂತನೆ ಸಂವಿಧಾನ ಅವರ ಪುಸ್ತಕಗಳನ್ನು ಪ್ರತಿಯೊಬ್ಬರು ಓದಿ ಅಂಬೇಡ್ಕರ್ ಅವರನ್ನು ಅರಿತುಕೊಳ್ಳಬೇಕು. ಬಾಬಾ ಸಾಹೇಬರನ್ನು ಕಳೆದುಕೊಂಡು ಇಂದಿಗೆ 69 ವರ್ಷ ತುಂಬಿದೆ ಅವರನ್ನು ಸದಾ ಕಾಲ ಸ್ಮರಿಸಿಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿವಾರ್ಡ್ ಅಧ್ಯಕ್ಷ ಲೋಕೇಶ್, ನಿಸರ್ಗ ಜಗದೀಶ್, ನಾರಾಯಣ್ ಸ್ವಾಮಿ, ಹನುಮಂತು, ಅಂಬರೀಷ್ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕುಮಾರಸ್ವಾಮಿ ಪತ್ರ : ಸಿದ್ದರಾಮಯ್ಯ ರಿಯಾಕ್ಷನ್
ಬೆಂಗಳೂರು, ಡಿಸೆಂಬರ್ 06: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ
ಮೀಸಲಾತಿ ಬಗ್ಗೆ ಜನಪ್ರತಿನಿಧಿಗಳು ಮಾತನಾಡಿ: ವಿ.ಎಸ್. ಉಗ್ರಪ್ಪ
ಬೆಂಗಳೂರು, ಡಿ.6: ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಕೆಎಟಿನಲ್ಲಿ ಸೆಟ್ಸೈಡ್ ಹಾಗೂ ಹೈಕೋರ್ಟ್ ನಲ್ಲಿ ಸ್ಟೇ ಮಾಡಲಾಗಿದೆ. ಇದನ್ನು ನೋಡಿದರೆ ಎಸ್ಸಿ, ಎಸ್ಟಿ, OBC ಸಮುದಾಯಕ್ಕೆ ಅನ್ಯಾಯ ಆಗ್ತಿದೆ. ಇದಕ್ಕೆ ತಕ್ಷಣ ಕಾನೂನು ತಿದ್ದುಪಡಿ ತರಬೇಕು ಹಾಗೂ ಶೆಡ್ಯೂಲ್ 9ಗೆ ಸೇರಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮಾಜಿ ಸಂಸದರು ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು. ದೇಶದಲ್ಲಿ 40 ಕೋಟಿ ಎಸ್ಸಿ, ಎಸ್ಟಿ ಜನರಿದ್ದಾರೆ. ಇದನ್ನು ನೋಡಿದ್ರೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ನ್ಯಾಯಾಲಯಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದ ಜನರಿಗೆ ಅನ್ಯಾಯ ಆಗ್ತಿದೆ. ಅವರ ಬುದುಕಿನ ಜೊತೆಗೆ ಚೆಲ್ಲಾಟ ಆಡಲಾಗುತ್ತಿದೆ. ತಮಿಳುನಾಡಿನಲ್ಲಿ 69 % ಮೀಸಲಾತಿ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ 56 % ಮಾಡಲಾಗಿದೆ. ಆದರೆ ತಮಿಳುನಾಡಿನಲ್ಲಿ ಮಾಡಿದ ರೀತಿ ಕರ್ನಾಟಕದಲ್ಲೂ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9 ಗೆ ಸೇರಿಸಬೇಕಿತ್ತು. ಆದರೆ ಅದನ್ನು ಮಾಡಲಿಲ್ಲ. ಈಗ ಆ ಕೆಲಸ ಆಗಬೇಕು ಎಂದು ಉಗ್ರಪ್ಪ ಆಗ್ರಹಿಸಿದರು. 1992 ರ ಇಂದಿರಾ ಸಾಕಿ ಪ್ರಕರಣವನ್ನು ಮುಂದೆ ಇಟ್ಕೊಂಡು ಆಟ ಆಡಲಾಗ್ತಿದೆ. ಅದೇ ಪ್ರಕರಣದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಅವಕಾಶ ಇದೆ. ಈ ಕಾಯ್ದೆ ತಂದಾಗ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿ ಈಗ ಸಂಸದರಾಗಿದ್ದಾರೆ. ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್ ಕೇಂದ್ರ ಸರ್ಕಾರದಲ್ಲಿ ಇದ್ದಾರೆ. 17 ST ಶಾಸಕರು, 36 Sc ಶಾಸಕರು ಇದ್ದಾರೆ. ಆದರೆ ಯಾರೂ ಮೀಸಲು ಹೆಚ್ವಳದ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಹಿಂದೆ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಾಗ ಅನೇಕರಿಗೆ ಮೀಸಲಾತಿ ನೀಡುವ ಭರವಸೆ ನೀಡಿದ್ರು. ಆದರೆ ತರಾತುರಿಯಲ್ಲಿ ಮೇಲ್ವರ್ಗಕ್ಕೆ ಶೇ.10 ಮೀಸಲಾತಿ ನೀಡಿದರು. ಸುಪ್ರೀಂ ಕೋರ್ಟ್ ಕೂಡ ಅದನ್ನು ಎತ್ತಿ ಹಿಡಿಯುತ್ತೆ. ಆದರೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಸಾಮಾಜಿಕ ನ್ಯಾಯಕ್ಕೆ ಇದರಿಂದ ಈಗ ಪೆಟ್ಟು ಬಿದ್ದಿದೆ. ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ವ ಪಕ್ಷಗಳ ಸಭೆ ಕರೆಯಬೇಕು. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ಕಾನೂನು ಜಾರಿಗೊಳಿಸಿ ಅದನ್ನು ಶೆಡ್ಯೂಲ್ 9 ಗೆ ಸೇರಿಸಬೇಕು. ಮೀಸಲಾತಿ ಭಿಕ್ಷೆಯಲ್ಲಿ, ಅದು ತಳ ಸಮುದಾಯಗಳ ಹಕ್ಕು. ಆದರೆ ಅನ್ನ ತಿನ್ನಬೇಡಿ ಎಂದು ಕೈ ಕಟ್ಟಿ ಹಾಕಿದ್ದಾರೆ. ಇದಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ನ್ಯಾಯಾಲಯವೂ ಕಾರಣ ಎಂದು ಉಗ್ರಪ್ಪ ಆರೋಪಿಸಿದರು. SCP/TSP ಕಾಯ್ದೆಯನ್ನು ಹಿಂದೆ ಸಿದ್ದರಾಮಯ್ಯನವರೇ ಜಾರಿಗೆ ತಂದ್ರು, ಅದೇ ಆಧಾರದ ಮೇಲೆ ಬಜೆಟ್ ಅಲೋಕೇಷನ್ ಆಗ್ತಿದೆ. ಅಡಿಕ್ವೆಟ್ ಆಧಾರದ ಮೇಲೆ ಮೀಸಲಾತಿ ಜಾರಿಗೆ ತರಬೇಕಿತ್ತು. ಅದನ್ನು ಹಿಂದಿನ ಸರ್ಕಾರ ಮಾಡಿರಲಿಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಬಳಿ ಸರ್ವ ಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಮೀಸಲಾತಿ ಶೆಡ್ಯೂಲ್ 9 ಗೆ ಸೇರಿಸಬೇಕು. ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಅದಕ್ಕಾಗಿ ಒತ್ತಾಯಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು. ಅಧಿಕಾರ ಶಾಶ್ವತವಲ್ಲ, ದಯಮಾಡಿ ಎಲ್ಲ ಪಕ್ಷದಲ್ಲಿ ಇರುವ ರಾಜಕೀಯ ನಾಯಕರು ಇದರ ಬಗ್ಗೆ ಚರ್ಚೆ ನಡೆಸಬೇಕು. ಧ್ವನಿ ಎತ್ತಬೇಕು. ವಿಶೇಷವಾಗಿ ಬೊಮ್ಮಾಯಿ ಪ್ರಧಾನಿಗೆ ಇದರ ಬಗ್ಗೆ ಗಮನಕ್ಕೆ ತರಬೇಕು. ಇದರ ವಿಚಾರಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಇಡೀ ಎಸ್ಸಿ, ಎಸ್ಟಿ ಒಬಿಸಿ ಸಮುದಾಯ ಒಟ್ಟಾಗಿ ಬೀದಿಗಿಳಿಯಬೇಕಾಗುತ್ತದೆ ಎಂದು ಉಗ್ರಪ್ಪ ಎಚ್ಚರಿಕೆ ನೀಡಿದರು. ಸಂವಿಧಾನದ ಕಲಂ 341 ಪ್ರಕಾರ ಅಸ್ಪೃಶ್ಯರನ್ನು ಮೀಸಲಾತಿ ಅಡಿಯಲ್ಲಿ SC ಗೆ ಸೇರಿಸಬೇಕು. ಕಲಂ 342 ಅಡಿಯಲ್ಲಿ ನಿಯಮದ ಪ್ರಕಾರ ಬರುವವರನ್ನು ST ಗೆ ಸೇರಿಸಬೇಕು. ಆರ್ಥಿಕವಾಗಿ ಹಿಂದುಳಿದವರನ್ನು OBC ಅಡಿಯಲ್ಲಿ ಸೇರಿಸಬೇಕು. ನಾನು ಯಾರನ್ನೂ ವಿರೋಧಿಸುತ್ತಿಲ್ಲ. ಮಹರ್ಷಿ ವಾಲ್ಮೀಕಿ ನಮಗೆ ಅದನ್ನೇ ರಾಮಾಯಣದ ಮೂಲಕ ಸರ್ವ ವರ್ಗದ ಸಮ ಸಮಾಜದ ಪರಿಕಲ್ಪನೆ ನೀಡಿದ್ದು ಎಂದರು. ಯಾರನ್ನೂ ಎಸ್ಟಿಗೆ ಸೇರಿಸುವ ಬಗ್ಗೆ ವಿರೋಧ ಇಲ್ಲ. ಕುರುಬರು ಅಥವಾ ಯಾರನ್ನೇ ಸೇರಿಸಿದರೂ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ನಂತರ ಅದನ್ನು ಪರಿಶೀಲಿಸಿ ಸೇರಿಸಲಿ, ಆದರೆ ಸೇರಿಸುವಾಗ ಆ ಸಮುದಾಯಗಳಿಗೆ ಈಗಿರುವ ಮೀಸಲಾತಿಯನ್ನೂ ಜೊತೆಗೆ ತೆಗೆದುಕೊಂಡು ಬನ್ನಿ. ನಾನು ಇದನ್ನೇ ವಾಲ್ಮೀಕಿ ಜಯಂತಿ ದಿನ ಬಹಿರಂಗವಾಗಿ ಸಿದ್ದರಾಮಯ್ಯನವರ ಎದುರೇ ಹೇಳಿದ್ದೇನೆ ಎಂದು ಹೇಳಿದರು. ಕುರುಬರನ್ನು ಎಸ್ಟಿಗೆ ಸೇರಿಸಲು ಶಿಫಾರಸ್ಸು ಮಾಡಿದ್ದು ಸಿದ್ದರಾಮಯ್ಯ ಅಲ್ಲ, ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಿದ್ದಾಗಲೇ 1991 ರಲ್ಲಿ ಆರ್ಡಿನೆನ್ಸ್ ಆಯ್ತು. ಸೀರಿಯಲ್ ನಂಬರ್ 38 ಅಡಿಯಲ್ಲಿ ಎಸ್ಟಿಗೆ ಸೇರಿಸಲು ನಾಯಕರು ಹಾಗೂ ಕುರುಬರನ್ನು ಶಿಫಾರಸ್ಸು ಮಾಡಲಾಗಿತ್ತು. ಆದರೆ ಆಗ ನಾಯಕರಿಗೆ ಮಾತ್ರ ಎಸ್ಟಿ ಮೀಸಲಾತಿ ಸಿಕ್ಕಿತ್ತು. ಆದರೆ ಹಿಂದೆ ಬಸವರಾಜ್ ಬೊಮ್ಮಾಯಿ ಸರ್ಕಾರ ಇದನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ ಮೊದಲು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ article 15 ಹಾಗೂ 16 ಗೆ ತಿದ್ದುಪಡಿ ತಂದು ಶೆಡ್ಯೂಲ್ 9 ಗೆ ಸೇರಿಸಬೇಕು ಎಂದು ಉಗ್ರಪ್ಪ ಆಗ್ರಹಿಸಿದರು. ಈ ಸಮಸ್ಯೆಯಿಂದ ಈಗ ಯಾವ ನೇಮಕಾತಿಯೂ ಆಗ್ತಿಲ್ಲ. ಭಡ್ತಿಯನ್ನೂ ನೀಡಲಾಗ್ತಿಲ್ಲ. ಇದರಿಂದ ಸಾಕಷ್ಟು ಸಮಸ್ಯೆಯಾಗಿದೆ. ಇದರ ಬಗ್ಗೆ ಯಾರೂ ಮಾತನಾಡ್ತಿಲ್ಲ. ಈಗ ಈ ಬಗ್ಗೆ ಸರ್ಕಾರ ಸಮರ್ಥ ವಕೀಲರನ್ನು ಇಟ್ಟು ನ್ಯಾಯಾಲಯದಲ್ಲಿ ಕೂಡ ಇದಕ್ಕೆ ಪರಿಹಾರ ಕಂಡು ಹಿಡಿದು ಶೋಷಿತ ಸಮುದಾಯಗಳ ಹಿತ ಕಾಪಾಡಬೇಕು ಎಂದು ಉಗ್ರಪ್ಪ ಕಿಡಿ ಕಾರಿದರು. ರಾಮಾಯಣದ ಅಯೋಧ್ಯ ಖಾಂಡ ಸರಗ 100, ಶ್ಲೋಕ 21,22,23 ರಲ್ಲಿ ರಾಜ್ಯಭಾರ, ಎಲ್ಲ ವರ್ಗದ ರಕ್ಷಣೆ, ದಿನಗೂಲಿ, ಸಂಬಳ ಈ ಎಲ್ಲದರ ಬಗ್ಗೆಯೂ ಇದೆ. ದೇಶ ಹೇಗೆ ಉದ್ದಾರ ಆಗುತ್ತೆ ಎಂಬುದನ್ನು ಅದರಲ್ಲಿ ಎಲ್ಲವನ್ನೂ ಹೇಳಿದ್ದಾರೆ. ಆದರೆ ಈ ಎಸ್ಸಿ, ಎಸ್ಟಿ ಸಮುದಾಯದ ಜನಪ್ರತಿನಿಧಿಗಳು ಇದರ ಬಗ್ಗೆ ಮಾತನಾಡಬೇಕು. ನಮ್ಮವರೇ ಇದ್ದಾಗಲೇ ವಾಲ್ಮೀಕಿ ನಿಗಮದಲ್ಲಿ ಹಗರಣ ಆಯ್ತು. ಆದರೆ ಇದರಲ್ಲಿ ಬದ್ದತೆ ಬೇಕು ಎಂದರು. ಸಂಪುಟ ವಿಸ್ತರಣೆ: ಯಾರಿಗೆ ಹೇಳ್ಬೇಕೋ ಹೇಳಿದ್ದೇನೆ ಸಂಪುಟ ವಿಸ್ತರಣೆಯಲ್ಲಿ ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡಿದ್ದೇನೆ. ಆದರೆ ಹೈಕಮಾಂಡ್ ಇದರ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಾಗೆಲ್ಲ ಬೇರೆ ಸಮುದಾಯಗಳನ್ನು ದಿಕ್ಕು ತಪ್ಪಿಸಿದ್ದಾರೆ. ಈಗ ಇದರ ಬಗ್ಗೆ ತುಟಿ ಬಿಚ್ಚಬೇಕು ಎಂದು ಆಗ್ರಹಿಸಿದರು. ಮೀಸಲಾತಿ ವಿಚಾರವೇ ಬೇರೆ ಈ ಮೀಸಲಾತಿ ವಿಚಾರಕ್ಕೂ ನನ್ನ ವಯುಕ್ತಿಕ ರಾಜಕಾರಣಕ್ಕೂ ಸಂಬಂಧ ಇಲ್ಲ. ಹಿಂದೆ ಗಣಿ ಹಗರಣದ ಬಗ್ಗೆ ನಾನೇ ವರದಿ ತಯಾರಿಸಿದ್ದು. ಅದರ ಭಾಗವಾಗಿ ಯಡಿಯೂರಪ್ಪ ಜೈಲಿಗೆ ಹೋದ್ರು, ಬಳ್ಳಾರಿ ಗಣಿ ಹಗರಣದ ವಿರುದ್ಧ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದಾಗ ತಂದ ಕಾನೂನಿನ ಬಗ್ಗೆ ಈಗ ಬಿಜೆಪಿ ನಾಯಕರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು. ಕಾರ್ಯಧ್ಯಕ್ಷರಾದ ಎಂ. ನರಸಿಂಹಯ್ಯ, ಖಜಾಂಚಿ ಈ. ರಾಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಕೆ. ಸಣ್ಣಾನಾಯಕ್, ರಮೇಶ್ ಹಿರೇಜಂಬೂರು, ನಾಗರಾಜ್ ಗಾಣದ ಹುಣಸೆ, ಉಪ ಕುಲಪತಿ ಶ್ರೀರಾಮುಲು, ಕೆಂಪರಾಮಯ್ಯ, ಹನುಮಂತಯ್ಯ, ಭೀಮಪುತ್ರಿ ಸಾವಿತ್ರಿ ಉಪಸ್ಥಿತರಿದ್ದರು.
ಅನಿಲ್ ಅಂಬಾನಿಗೆ ಸೇರಿದ ಮತ್ತಷ್ಟು ಆಸ್ತಿ ಜಪ್ತಿ - ಈವರೆಗೆ ಮುಟ್ಟುಗೋಲಾದ ಆಸ್ತಿ 10 ಸಾವಿರ ಕೋಟಿ ರೂ.!
ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿಯವರಿಗೆ ಸೇರಿದ 1,120 ಕೋಟಿ ರೂ. ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಯೆಸ್ ಬ್ಯಾಂಕ್ಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 10,117 ಕೋಟಿ ರೂ. ಆಸ್ತಿ ಜಪ್ತಿ ಮಾಡಲಾಗಿದೆ. ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ತನ್ನ ಸ್ಪಷ್ಟನೆ ನೀಡಿದ್ದು, ಕೆಲವು ಆಸ್ತಿಗಳು ತಮ್ಮ ಗ್ರೂಪ್ಗೆ ಸೇರಿಲ್ಲ ಎಂದಿದೆ. ಕಂಪನಿ ತನ್ನ ಕಾರ್ಯನಿರ್ವಹಣೆ ಮುಂದುವರೆಸಿದೆ ಎಂದು ಕಂಪನಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಾ. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಸ್ಥಾಪನೆಗೆ ಜೀವನವಿಡೀ ಹೋರಾಡಿದರು : ಸಚಿವ ಈಶ್ವರ್ ಖಂಡ್ರೆ
ಬೀದರ್ : ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಸ್ಥಾಪನೆಗೆ ಜೀವನವಿಡೀ ಹೋರಾಡಿದರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಇಂದು ಡಾ. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದ ಬಳಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ಸಮಾಜದ ಪರಿವರ್ತನೆ, ಅನಿಷ್ಠ ಪದ್ಧತಿಗಳ ನಿರ್ಮೂಲನೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ಹೋರಾಟ ಮಾಡುವುದರ ಮೂಲಕ ಪ್ರಜಾಸತ್ತಾತ್ಮಕ ಭಾರತದ ನಿರ್ಮಾಣ ಮಾಡಿದ್ದಾರೆ. ಅವರು ಇಂದು ಭೌತಿಕವಾಗಿ ನಮ್ಮ ಮಧ್ಯ ಇಲ್ಲದಿದ್ದರೂ, ಅವರ ಆದರ್ಶ ಮತ್ತು ಚಿಂತನೆಗಳು ಯಾವಾಗಲೂ ನಮ್ಮಲ್ಲಿ ಇರುತ್ತವೆ. ಜಗತ್ತಿನಲ್ಲೇ ಅತ್ಯಂತ ದೊಡ್ಡ ಲಿಖಿತ ಸಂವಿಧಾನವನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನಮಗೆ ಕೊಟ್ಟಿದ್ದಾರೆ ಎಂದರು. ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ, ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಆಗಿವೆ. ಈ 75 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ವೈಜ್ಞಾನಿಕವಾಗಿ ನಾವು ಪ್ರಗತಿ ಕಂಡಿದ್ದೇವೆ. ನಮ್ಮ ಸಂವಿಧಾನದಿಂದ ಪ್ರತಿಯೊಬ್ಬ ಪ್ರಜೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾತಂತ್ರ್ಯ, ಮೂಲಭೂತ ಹಕ್ಕು, ವ್ಯಕ್ತಿ ಗೌರವ, ನ್ಯಾಯ ದೊರೆಯುವಂತಾಗಿದೆ ಎಂದು ಹೇಳಿದರು. ನಾವೆಲ್ಲರೂ ಸಂವಿಧಾನದ ಆಶಯಗಳು, ಮೌಲ್ಯಗಳು ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಾನವೀಯ ಸಂದೇಶಗಳು ಮತ್ತು ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮಾಜಿ ಸಚಿವ ಬಂಡೇಪ್ಪ ಖಾಶೆಂಪುರ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಬೀದರ್ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಸೂರ್ಯಕಾಂತ್ ನಾಗಮಾರಪಳ್ಳಿ, ಅನೀಲಕುಮಾರ್ ಬೆಲ್ದಾರ್ , ಬಾಬುರಾವ್ ಪಾಸ್ವಾನ್, ಈಶ್ವರಸಿಂಗ್ ಠಾಕೂರ್, ಪಂಡಿತ್ ಚಿದ್ರಿ, ಹಣಮಂತ್ ಮಲ್ಕಾಪುರ್ ಹಾಗೂ ವಿಸ್ಡಮ್ ಸಂಸ್ಥೆ ಅಧ್ಯಕ್ಷ ಎಂ.ಡಿ. ಆಸೀಫುದ್ದೀನ್ ಸೇರಿದಂತೆ ಇತರೆ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಂಡಿಗೋ ವಿಮಾನಗಳ ರದ್ದು: ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ ನೀಡಿದ ಭಾರತೀಯ ರೈಲ್ವೆ
Indian Railways Good News: ದೇಶಾದ್ಯಂತ ಕಳೆದ ಕೆಲ ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಇಂದು ಕೂಡ ಇದು ಮುಂದುವರೆದಿದೆ. ಪರಿಣಾಮ ಪ್ರಯಾಣಿಕರು ಈಗಲೂ ಹಲವಾರು ಏರ್ಪೋರ್ಟ್ಗಳಲ್ಲಿ ಯಾವುದೇ ಪರ್ಯಾಯ ದಾರಿ ಇಲ್ಲದೆ ಇಕ್ಕಟ್ಟಿಗೆ ಸಿಲುಕಿ ಪರದಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡ ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಆಗುವಂತಹ ಶುಭ ಸುದ್ದಿಯೊಂದನ್ನು ನೀಡಿದೆ. ಇಲ್ಲಿದೆ
ರೂಪಾಯಿ ಕುಸಿತದಿಂದ ಚಿನ್ನದ ಬೆಲೆಯ ಮೇಲೆ ಪರಿಣಾಮ!
ಮಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟು?
ದೇಶದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ 400ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟ ರದ್ದು
ಮುಂಬೈ: ಕಾಕ್ಪಿಟ್ ಸಿಬ್ಬಂದಿಗಳಿಗೆ ನ್ಯಾಯಾಲಯ ಕಡ್ಡಾಯಗೊಳಿಸಿರುವ ನೂತನ ವಿಮಾನ ಹಾರಾಟ ಅವಧಿ ಹಾಗೂ ಋತುಸ್ರಾವ ಅವಧಿಯ ವಿರಾಮ ಪದ್ಧತಿಯಿಂದ ತಾತ್ಕಾಲಿಕ ವಿನಾಯಿತಿ ಪಡೆದ ಮರು ದಿನವೇ ಶನಿವಾರದಂದು ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಂದ ಸುಮಾರು 400ಕ್ಕೂ ಹೆಚ್ಚು ಇಂಡಿಗೊ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಈ ವಿಮಾನಗಳ ಪೈಕಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 63 ನಿರ್ಗಮನ ಮತ್ತು 61 ಆಗಮನ ವಿಮಾನಗಳು ಸೇರಿ 124 ವಿಮಾನಗಳ ಹಾರಾಟ ರದ್ದಾಗಿದೆ ಹಾಗೂ ಮುಂಬೈ ವಿಮಾನ ನಿಲ್ದಾಣದಿಂದ 51 ನಿರ್ಗಮನ ಮತ್ತು 58 ಆಗಮನ ವಿಮಾನಗಳು ಸೇರಿ 109 ವಿಮಾನಗಳು ರದ್ದಾಗಿವೆ. ದಿಲ್ಲಿ ವಿಮಾನ ನಿಲ್ದಾಣದಲ್ಲಿ 54 ನಿರ್ಗಮನ ಮತ್ತು 52 ಆಗಮನ ವಿಮಾನಗಳು ಸೇರಿದಂತೆ 106 ವಿಮಾನಗಳ ಹಾರಾಟ ರದ್ದುಗೊಂಡಿದ್ದರೆ, ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಒಟ್ಟು 66 ವಿಮಾನಗಳು ರದ್ದುಗೊಂಡಿವೆ. ಇದಕ್ಕೂ ಮುನ್ನ, ಶುಕ್ರವಾರ ಒಂದೇ ದಿನ 1,000ಕ್ಕೂ ಹೆಚ್ಚು ಇಂಡಿಗೊ ವಿಮಾನಗಳು ರದ್ದುಗೊಂಡಿದ್ದವು. ಮೂರು ದಿನಗಳ ಕಾಲ ಈ ಗಂಭೀರ ಪರಿಸ್ಥಿತಿಯ ಕುರಿತು ಮೌನ ತಾಳಿದ್ದ ಇಂಡಿಗೊ ಸಿಇಒ ಪೀಟರ್ ಎಲ್ಬರ್ಸ್, ನಂತರ, ವಿಮಾನಗಳ ಹಾರಾಟ ವ್ಯತ್ಯಯದಿಂದ ತೀವ್ರ ತೊಂದರೆಗೀಡಾಗಿರುವ ಪ್ರಯಾಣಿಕರನ್ನು ವಿಡಿಯೊ ಸಂದೇಶದ ಮೂಲಕ ಕ್ಷಮೆ ಯಾಚಿಸಿದ್ದರು. ಈ ವಿಡಿಯೊ ಸಂದೇಶದಲ್ಲಿ ಶನಿವಾರ 1,000ಕ್ಕಿಂತ ಕಡಿಮೆ ವಿಮಾನಗಳು ಹಾರಾಟ ನಡೆಸುವ ಸಾಧ್ಯತೆ ಇದೆ ಎಂದೂ ಅವರು ಮಾಹಿತಿ ಹಂಚಿಕೊಂಡಿದ್ದರು.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಪ್ರವಾಸ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ಪುಟಿನ್ ಅವರ ಭಾರತ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡಿದೆ. ಅಮೆರಿಕವಂತೂ ಈ ಬೆಳವಣಿಗೆಯಿಂದ ಕಿರಿಕಿರಿ ಅನುಭವಿಸುತ್ತಿದೆ. ಆದರೆ ಅಮೆರಿಕದ ಗಾಯಕ್ಕೆ ಉಪ್ಪು ಸವರಿರುವ ಭಾರತದ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್, ಅಂತಾರಾಷ್ಟ್ರೀಯ ಸಂಬಂಧಗಳನ್ನು ನಿರ್ವಜಹಿಸುವ ಭಾರತದ ಸಾರ್ವಭೌಮತ್ವದ ಮೇಲೆ ಯಾರೂ ಕೂಡ ವೀಟೋ ಹೊಂದಿಲ್ಲ ಎಂದು ಸೂಚ್ಯವಾಗಿ ಹೇಳಿದ್ದಾರೆ. ಇಲ್ಲಿದೆ ಮಾಹಿತಿ.
ಸರಕಾರಿ ಇಲಾಖೆಗಳಲ್ಲಿ 63% ಭ್ರಷ್ಟಾಚಾರ ಆರೋಪ ಮಾಡಿರುವ ಉಪ ಲೋಕಾಯುಕ್ತರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಉಪ ಲೋಕಾಯುಕ್ತರಿಗೆ ಒಂದ್ ನಮಸ್ಕಾರ. ಉಪ ಲೋಕಾಯುಕ್ತರಾಗಿ ಅವರು ಏನ್ ಕೆಲಸ ಮಾಡ್ತಿದ್ದಾರೆ? ಅವರ ಜವಬ್ದಾರಿ ಏನು? ಮಾಧ್ಯಮ ಮುಂದೆ ಹೇಳಿಕೆ ನೀಡಲಷ್ಟೇ ಅವರಿಗೆ ಅಧಿಕಾರ ನೀಡಲಾಗಿದೆಯಾ? ಇಲ್ಲಾ ದಾಖಲೆಗಳನ್ನ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಲಿಕ್ಕೆ ಅಧಿಕಾರ ನೀಡಲಾಗಿದೆಯಾ? ಯಾರ ಕಾಲದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು ಅನ್ನೋದು ಬೇರೆ ಚರ್ಚೆ. ಭ್ರಷ್ಟಾಚಾರ ಗೊತ್ತಿದ್ದೂ ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ. ಹೀಗಾದರೆ ಪ್ರಯೋಜನವೇನು? ಎಂದು ಎಚ್ಡಿಕೆ ಅಭಿಪ್ರಾಯಪಟ್ಟರು.
ಹೊಸದಿಲ್ಲಿ: 68 ಕೋಟಿ ರೂಪಾಯಿ ಮೌಲ್ಯದ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿ ಟೆಂಡರ್ ಪಡೆದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ಇತರ 10 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ರಿಲಯನ್ಸ್ ಪವರ್ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಕುಮಾರ್ ಪಾಲ್, ರಿಲಯನ್ಸ್ ಎನ್ಯು ಬಿಇಎಸ್ಎಸ್ ಲಿಮಿಟೆಡ್ ಮತ್ತು ರೋಸಾ ಪವರ್ ಸಪ್ಲೈ ಕಂಪೆನಿ ಲಿಮಿಟೆಡ್, ರಿಲಯನ್ಸ್ ಗ್ರೂಪ್ ಕಾರ್ಯನಿರ್ವಾಹಕ ಅಧಿಕಾರಿ ಪುನೀತ್ ನರೇಂದ್ರ ಗಾರ್ಗ್, ಒಡಿಶಾ ಮೂಲದ ಕಂಪೆನಿ ಬಿಸ್ವಾಲ್ ಟ್ರೇಡ್ಲಿಂಕ್ ಪ್ರೈವೇಟ್ ಲಿಮಿಟೆಡ್, ಅದರ ಎಂಡಿ ಪಾಥ ಸಾರಥಿ ಬಿಸ್ವಾಲ್ ಮತ್ತು ಹಣಕಾಸು ಸಲಹೆಗಾರ ಅಮರ್ ನಾಥ್ ದತ್ತಾ ಹೆಸರನ್ನು ಪ್ರಾಸಿಕ್ಯೂಷನ್ ದೂರಿನಲ್ಲಿ ಉಲ್ಲೇಖಿಸಿದೆ. ತನಿಖಾ ಸಂಸ್ಥೆಯ ಪ್ರಕಾರ, ಬಯೋಥೇನ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್, ರವೀಂದರ್ ಪಾಲ್ ಸಿಂಗ್ ಚಾಧಾ ಮತ್ತು ಮನೋಜ್ ಭಯ್ಯಾಸಾಹೇಬ್, ಪೊಂಗ್ಡೆ ಕೂಡ ಆರೋಪಿಗಳಲ್ಲಿ ಸೇರಿದ್ದಾರೆ. ಶುಕ್ರವಾರ ದಿಲ್ಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಿಲಯನ್ಸ್ ಪವರ್ ಅಂಗ ಸಂಸ್ಥೆಯಾದ ರಿಲಯನ್ಸ್ ಎನ್ಯು ಬಿಇಎಸ್ಎಸ್ ಲಿಮಿಟೆಡ್ ಪರವಾಗಿ ಭಾರತೀಯ ಸೌರ ಇಂಧನ ನಿಗಮಕ್ಕೆ 68.2 ಕೋಟಿ ರೂ. ಮೌಲ್ಯದ ಬ್ಯಾಂಕ್ ಗ್ಯಾರಂಟಿ ನೀಡಿದ್ದು, ಅದು ನಕಲಿ ಎಂಬ ಆರೋಪ ಅಶೋಕ್ ಪಾಲ್ ಮೇಲಿದೆ. ಈ ಕಂಪನಿಯನ್ನು ಈ ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್ ಎಂದು ಕರೆಯಲಾಗುತ್ತಿತ್ತು. ಇದು ನಕಲಿ ಬ್ಯಾಂಕ್ ಗ್ಯಾರಂಟಿ ಎಂದು ರಿಲಯನ್ಸ್ ಗ್ರೂಪ್ ಅಧಿಕಾರಿಗಳಿಗೆ ಚೆನ್ನಾಗಿ ತಿಳಿದಿತ್ತು ಎಂದು ತನಿಖಾಧಿಕಾರಿಗಳು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಪುಟಿನ್ ಭಾರತ ಭೇಟಿಯಿಂದ ಭಾರತೀಯರಿಗೆ ಅನುಕೂಲ - ರಷ್ಯಾದಲ್ಲಿ ಶಾಸಕರಾಗಿರುವ ಬಿಹಾರ ಮೂಲದ ಅಭಯ್ ಕುಮಾರ್ ಅಭಿಮತ
ಪಾಟ್ನಾದಿಂದ ರಷ್ಯಾಕ್ಕೆ ವೈದ್ಯಕೀಯ ವ್ಯಾಸಂಗಕ್ಕೆ ತೆರಳಿದ್ದ ಅಭಯ್ ಕುಮಾರ್ ಸಿಂಗ್, ಇಂದು ರಷ್ಯಾದ ಕುರ್ಸ್ ನಗರದ ಶಾಸನಸಭೆಯಲ್ಲಿ 'ಡೆಪ್ಯುಟಾಟ್' ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಟಿನ್ ಪಕ್ಷದ ಸದಸ್ಯರಾಗಿರುವ ಇವರು, ಭಾರತೀಯ ರಾಜಕೀಯ ಸ್ಪರ್ಶವನ್ನು ರಷ್ಯಾದ ಚುನಾವಣಾ ಪ್ರಚಾರದಲ್ಲಿ ಅಳವಡಿಸಿ ಯಶಸ್ವಿಯಾಗಿದ್ದಾರೆ. ರಷ್ಯಾದಲ್ಲಿ ಭಾರತೀಯರಿಗೆ ಉದ್ಯೋಗಾವಕಾಶಗಳ ಬಗ್ಗೆಯೂ ಅವರು ಬೆಳಕು ಚೆಲ್ಲಿದ್ದಾರೆ.
ಸರ್ಕಾರಿ ಶಾಲಾ ಶಿಕ್ಷಕರಿಗೆ ವೇತನವಿಲ್ಲದೇ ಸಂಕಷ್ಟ: ತನ್ನ ₹19,94,200 ಸಂಬಳವನ್ನೇ ನೀಡಿದ HD ಕುಮಾರಸ್ವಾಮಿ
ಮಂಡ್ಯ, ಡಿಸೆಂಬರ್06: ಸುಮಾರು ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಇಲ್ಲಿನ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್ ಅನ್ನು ಶಾಲೆಯ
ಬಾಂಗ್ಲಾದೇಶಕ್ಕೆ ಗಡಿಪಾರಾಗಿದ್ದ ಗರ್ಭಿಣಿ ಮಹಿಳೆ, ಪುತ್ರ ಭಾರತಕ್ಕೆ ವಾಪಾಸ್
ಹೊಸದಿಲ್ಲಿ: ಪಶ್ಚಿಮ ಬಂಗಾಳದ ಗರ್ಭಿಣಿ ಮಹಿಳೆ ಮತ್ತು ಅವರ ಎಂಟು ವರ್ಷದ ಪುತ್ರನನ್ನು ಅಧಿಕಾರಿಗಳು ವಲಸಿಗರು ಎಂದು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ್ದರು. ಆದರೆ, ಶುಕ್ರವಾರ ಅವರನ್ನು ಭಾರತಕ್ಕೆ ಮರಳಿ ಕರೆತರಲಾಗಿದೆ. ಸುನಾಲಿ ಖಾತುನ್ ಎಂಬ ಮಹಿಳೆ ಮತ್ತು ಅವರ ಮಗ ಶಬೀರ್ ಮಹಾದಿಪುರ ಗಡಿ ಮೂಲಕ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿದ್ದಾರೆ. ಆ ಬಳಿಕ ಬಿರ್ಭೂಮ್ನಲ್ಲಿರುವ ಮನೆಗೆ ಪ್ರಯಾಣಿಸಲು ಸಾಧ್ಯವೇ ಎಂದು ನಿರ್ಧರಿಸಲು ಆಕೆಗೆ ಮಾಲ್ಡಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಖಾತುನ್ ಅವರ ಪತಿ ದಾನಿಶ್ ಇನ್ನೂ ಬಾಂಗ್ಲಾದೇಶದಲ್ಲಿದ್ದಾರೆ. ಕೇಂದ್ರ ಸರಕಾರ ಬುಧವಾರ ಸುಪ್ರೀಂ ಕೋರ್ಟ್ಗೆ, ಮಾನವೀಯತೆಯ ಆಧಾರದ ಮೇಲೆ ಖಾತುನ್ ಮತ್ತು ಅವರ ಮಗನನ್ನು ವಾಪಸ್ ಕರೆತರುವುದಾಗಿ ತಿಳಿಸಿತ್ತು. ಖಾತುನ್, ಅವರ ಪುತ್ರ ಮತ್ತು ಪತಿ ದಾನಿಶ್ ಅವರನ್ನು ಸೋಮವಾರ ಸಂಜೆ ಬಾಂಗ್ಲಾದೇಶದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಜೂನ್ನಲ್ಲಿ ಭಾರತೀಯ ಅಧಿಕಾರಿಗಳು ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿದ್ದರು. ಖಾತುನ್ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯವರು. ಖಾತುನ್, ಅವರ ಪತಿ ಮತ್ತು ಮಗನನ್ನು ಜೂನ್ 20ರಂದು ದಿಲ್ಲಿಯಲ್ಲಿ ಬಂಧಿಸಲಾಗಿತ್ತು. ನಂತರ ಮೂವರನ್ನೂ ಬಾಂಗ್ಲಾದೇಶಕ್ಕೆ ಕಳುಹಿಸಲಾಗಿತ್ತು. ಸೆಪ್ಟೆಂಬರ್ 26 ರಂದು ಕಲ್ಕತ್ತಾ ಹೈಕೋರ್ಟ್ ಆರು ಜನರ ವಿರುದ್ಧದ ಗಡಿಪಾರು ಆದೇಶವನ್ನು ರದ್ದುಗೊಳಿಸಿತ್ತು. ನಾಲ್ಕು ವಾರಗಳಲ್ಲಿ ಅವರನ್ನು ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರುವಂತೆ ನಿರ್ದೇಶಿಸಿತ್ತು. ಖಾತುನ್ ಅವರ ತಂದೆ ಭೋದು ಶೇಖ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಈ ಆದೇಶವನ್ನು ಅಂಗೀಕರಿಸಿತ್ತು.
ನಿರಂತರ 20 ಪಂದ್ಯಗಳ ಬಳಿಕ ಟೀಂ ಇಂಡಿಯಾಗೆ ಟಾಸ್ ಸಕ್ಸಸ್; ಕೆಎಲ್ ರಾಹುಲ್ ಮೊಗದಲ್ಲಿ ಖುಷಿಯೋ ಖುಷಿ!
India Toss Win After 20 Consecutive Loss-ನಿರಂತರ 20 ಏಕದಿನ ಪಂದ್ಯಗಳಲ್ಲಿ ಟಾಸ್ ಸೋಲಿನ ಕಹಿ ಅನುಭವಿಸಿರುವ ಭಾರತ ತಂಡ ಕೊನೆಗೂ ಟಾಸ್ ಜಯಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ರಾಂಚಿ ಮತ್ತು ರಾಯ್ಪುರದಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಟಾಸ್ ಸೋತಿದ್ದ ನಾಯಕ ಕೆಎಲ್ ರಾಹುಲ್ ಅವರು ಇದೀಗ ವಿಶಾಖಪಟ್ಟಣದಲ್ಲಿ ಗೆಲ್ಲುವ ಮೂಲಕ ನಗು ಬೀರಿದ್ದಾರೆ. 2023ರ ವಿಶ್ವಕಪ್ ಫೈನಲ್ ಪಂದ್ಯದಿಂದ ಆರಂಭವಾಗಿದ್ದ ಈ ಕೆಟ್ಟ ಅಭಿಯಾನ ಇದೀಗ ಮುಕ್ತಾಯಗೊಂಡಂತಾಗಿದೆ.
Holiday Special Trains: ಯಶವಂತಪುರದಿಂದ ಕರಾವಳಿ ಭಾಗಕ್ಕೆ 02 ವಿಶೇಷ ಎಕ್ಸ್ಪ್ರೆಸ್ ರೈಲು, ವೇಳಾಪಟ್ಟಿ
Christmas Holiday Special Trains: ಮುಂಬರಲಿರುವ ಕ್ರಿಸ್ಮಸ್ (ಡಿಸೆಂಬರ್ 25) ಹಾಗೂ ಹೊಸ ವರ್ಷದ (ಜನವರಿ 01) ಸಂಭ್ರಮಾಚರಣೆ ಪ್ರಯುಕ್ತ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಜೋಡಿ ವಿಶೇಷ ರೈಲುಗಳ ಸೇವೆ ಘೋಷಣೆ ಆಗಿದೆ. ಪ್ರಯಾಣಿಕರ ದಟ್ಟಣೆ ಅನುಗುಣವಾಗಿ ರೈಲುಗಳ ಕಾರ್ಯಾಚರಣೆಗೆ ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ರೈಲಿನ ಮಾರ್ಗ, ನಿಲುಗಡೆ, ಸಮಯ, ವೇಳಾಪಟ್ಟಿ ವಿವರ ಇಲ್ಲಿದೆ.
''ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ: ಡಿ.ಕೆ.ಶಿವಕುಮಾರ್
ಈ.ಡಿ. ಸಮನ್ಸ್ ಖಂಡನೀಯ
National Herald Case : ಡಿಕೆ ಸಹೋದರರಿಗೆ ’ಇಡಿ’ ಸಮನ್ಸ್ - ಅಸಲಿಯತ್ತು ಬಿಚ್ಚಿಟ್ಟ ಡಿಕೆ ಶಿವಕುಮಾರ್
ED Notice to DK Shivakumar : ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ, ಜಾರಿ ನಿರ್ದೇಶನಾಲಯ, ಡಿಕೆ ಶಿವಕುಮಾರ್ ಸಹೋದರರಿಗೆ ಸಮನ್ಸ್ ಜಾರಿ ಮಾಡಿದೆ. ಇದೊಂದು, ದ್ವೇಷದ ರಾಜಕಾರಣ ಮತ್ತು ಕಾನೂನಾತ್ಮಕವಾಗಿ ಇದಕ್ಕೆ ಯಾವ ರೀತಿ ಪ್ರತಿಕ್ರಿಯೆ ನೀಡಬೇಕು ಎನ್ನುವುದನ್ನು ಆಲೋಚಿಸುತ್ತಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.
ಗುಜರಾತ್ | ಆಪ್ ಶಾಸಕನ ಮೇಲೆ ಶೂ ಎಸೆದ ಕಾಂಗ್ರೆಸ್ ಕಾರ್ಯಕರ್ತ: ಆರೋಪಿಗೆ ಥಳಿತ
ಅಹಮದಾಬಾದ್: ವಿಶ್ವದರ್ ವಿಧಾನಸಭಾ ಕ್ಷೇತ್ರ ಆಪ್ ಶಾಸಕ ಗೋಪಾಲ್ ಇಟಾಲಿಯಾ ಮೇಲೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಶೂ ಎಸೆದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಜಾಮ್ನಗರದಲ್ಲಿ ಆಯೋಜನೆಗೊಂಡಿದ್ದ ಸಭೆಯೊಂದರಲ್ಲಿ ನಡೆದಿದೆ. ಜಾಮ್ನಗರದ ಟೌನ್ ಹಾಲ್ನಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಜಾಮ್ನಗರ್ ನಗರ ಪಾಲಿಕೆಯ ವಾರ್ಡ್ ನಂ. 12ರ ಕಾಂಗ್ರೆಸ್ ಕೌನ್ಸಿಲರ್ ಫೆಮಿದಾಬೆನ್ ಜುನೇಜಾ, ಅಸ್ಲಾಂ ಖಿಲ್ಜಿ ಹಾಗೂ ವಕೀಲ ಜನಾಬೆನ್ ಖಾಫಿ ಅವರು ತಮ್ಮ ಬೆಂಬಲಿಗರೊಂದಿಗೆ ಆಪ್ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ, ಸಭೆಯನ್ನುದ್ದೇಶಿಸಿ ಇಟಾಲಿಯಾ ಮಾತನಾಡಲು ಪ್ರಾರಂಭಿಸಿದಾಗ, ವೇದಿಕೆಯ ಸನಿಹವೇ ನೆಲದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಮೇಲೆದ್ದು ನಿಂತು ಅವರತ್ತ ಶೂ ಎಸೆದಿದ್ದಾನೆ. ಆದರೆ, ಅದರ ಎಸೆತದಿಂದ ತಪ್ಪಿಸಿಕೊಂಡ ಇಟಾಲಿಯಾ, ಸುರಕ್ಷಿತವಾಗಿ ಪಾರಾದರು. ಇದರ ಬೆನ್ನಿಗೇ, ವೇದಿಕೆಯ ಮೇಲಿದ್ದ ಆಪ್ ನಾಯಕರು ಆತನನ್ನು ಸೆರೆ ಹಿಡಿದು, ಆತನನ್ನು ಥಳಿಸಲು ಪ್ರಾರಂಭಿಸಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ತಮ್ಮ ವಶಕ್ಕೆ ಪಡೆದು, ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ, ಈ ಘಟನೆಯಲ್ಲಿ ಭಾಗಿಯಾದ ವ್ಯಕ್ತಿಯನ್ನು ಜಾಮ್ನಗರ್ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಛತ್ರಪಾಲ್ ಸಿನ್ಹ್ ಎಂದು ಗುರುತಿಸಲಾಗಿದೆ. ಈ ಘಟನೆಯ ಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿಯ ಕೈವಾಡವಿದೆ ಎಂದು ಆಪ್ ಆರೋಪಿಸಿದೆ. ಆದರೆ, ಈ ಘಟನೆಯನ್ನು ಖಂಡಿಸಿರುವ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಮಿತ್ ಚಾವ್ಡಾ, ಈ ಘಟನೆಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. A man threw a shoe at AAP MLA Gopal Italia during a meeting in Jamnagar, Gujarat, briefly causing chaos. Police quickly restrained him, restored order, and some chairs were damaged in the commotion. pic.twitter.com/ZYf5O48E9B — The Siasat Daily (@TheSiasatDaily) December 6, 2025
ಬಿಜೆಪಿ ನಾಯಕರು ಪ್ರತಿಪಕ್ಷದ ಹೊಣೆಗಾರಿಕೆ ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೊಣೆಗೇಡಿ ಮತ್ತು ದುರ್ಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಮಾರಕ. ದುರ್ಬಲ ವಿರೋಧ ಪಕ್ಷ ಇರುವುದರಿಂದ ಕಾಂಗ್ರೆಸ್ ಪಕ್ಷದ ಕೆಲವರಿಗೆ ಖುಷಿ ತಂದಿರಬಹುದು. ಆದರೆ ಹೊಣೆಗೇಡಿ ವಿರೋಧ ಪಕ್ಷದಿಂದಾಗಿ ಜನಸಾಮಾನ್ಯರ ದನಿ ಕ್ಷೀಣವಾಗುತ್ತದೆ. ಅಂತಿಮವಾಗಿ ಜನತಂತ್ರ ದುರ್ಬಲ ಎನಿಸಿಕೊಳ್ಳುತ್ತದೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕೃತ ವಿರೋಧ ಪಕ್ಷಕ್ಕೆ ಬಹು ದೊಡ್ಡ ಹೊಣೆಗಾರಿಕೆ ಇರುತ್ತದೆ. ಆಡಳಿತದಲ್ಲಿ ಇರುವ ಪಕ್ಷ ಎಡವಿದಾಗ ವಿರೋಧ ಪಕ್ಷ ಜನರ ದನಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಅಧಿಕೃತ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ ಬಹುತೇಕ ನಾಯಕರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಸಾಕಷ್ಟು ನಿದರ್ಶನಗಳಿವೆ. ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುವ ರಾಜಕಾರಣಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರಿಗಿಂತಲೂ ಹೆಚ್ಚು ಜ್ಞಾನ ಅನುಭವ ಇರಬೇಕಾಗುತ್ತದೆ. ಕರ್ನಾಟಕದ ರಾಜಕಾರಣದಲ್ಲಿ ಕೆಲವೊಂದು ಸಂದರ್ಭ ಹೊರತು ಪಡಿಸಿದರೆ ಅಧಿಕೃತ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಗಿಂತಲೂ ಹೆಚ್ಚು ಜನಪ್ರಿಯರಾಗಿದ್ದ ನಿದರ್ಶನಗಳಿವೆ. ಸದನದಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಲು ಎದ್ದು ನಿಂತರೆ, ಆಡಳಿತ ಪಕ್ಷದ ಮಂತ್ರಿಗಳು ತಡವರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ವಿರೋಧ ಪಕ್ಷದ ನಾಯಕ ಎಲ್ಲ ಇಲಾಖೆಗಳ ಬಗ್ಗೆ ಸಂಪೂರ್ಣ ತಯಾರಿಯೊಂದಿಗೆ ಸದನ ಪ್ರವೇಶಿಸಿದರೆ ಸರಕಾರದಲ್ಲಿ ಇರುವವರ ಎದೆಯಲ್ಲಿ ನಡುಕ ಶುರುವಾಗುತ್ತದೆ. ಕರ್ನಾಟಕದಲ್ಲಿ ದಾಖಲೆ ಅವಧಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಅಧಿಕೃತ ವಿರೋಧ ಪಕ್ಷದ ನಾಯಕರ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದರು. ವಿರೋಧ ಪಕ್ಷದ ನಾಯಕರ ಮಾತುಗಳಿಗೆ ಹೆಚ್ಚು ಮನ್ನಣೆ ನೀಡುತ್ತಿದ್ದರು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಎಚ್.ಡಿ. ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ದೇವೇಗೌಡರು ಸಂಪೂರ್ಣ ತಯಾರಿಯೊಂದಿಗೆ ಸದನಕ್ಕೆ ಬಂದು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದರು. ದೇವೇಗೌಡ, ಎ.ಕೆ. ಸುಬ್ಬಯ್ಯ, ಎಸ್. ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ ಅವರು ಯಶಸ್ವಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದವರು. ಜೆ.ಎಚ್. ಪಟೇಲರು ಮುಖ್ಯಮಂತ್ರಿಯಾಗಿದ್ದಾಗ ಮಲ್ಲಿಕಾರ್ಜುನ ಖರ್ಗೆಯವರು ವಿರೋಧ ಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರು. ನರೇಂದ್ರ ಮೋದಿಯವರು ಮೊದಲ ಬಾರಿಗೆ ಪ್ರಧಾನ ಮಂತ್ರಿಯಾದಾಗ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿಪಕ್ಷದ ನಾಯಕರಾಗಿ ದೇಶದ ಗಮನ ಸೆಳೆದಿದ್ದರು. ‘‘ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುವುದು’’ ಎಂಬ ಮಾತು ಚಾಲ್ತಿಗೆ ಬಂದಿದ್ದೇ ಅವರು ಪ್ರತಿಪಕ್ಷದಲ್ಲಿದ್ದು ಸರಕಾರದ ಕಾರ್ಯ ವೈಖರಿಯನ್ನು ಕಟುವಾಗಿ ಟೀಕಿಸಿದಾಗಲೇ. ಕೆಲ ಕಾಲ ಯಡಿಯೂರಪ್ಪ ಅವರೂ ಅಧಿಕೃತ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿ ನಾಡಿನ ಜನತೆಯ ಗಮನ ಸೆಳೆದಿದ್ದರು. ಕರ್ನಾಟಕದ ಸಂಸದೀಯ ಇತಿಹಾಸದಲ್ಲಿ ಅತ್ಯಂತ ದುರ್ಬಲ ವಿರೋಧ ಪಕ್ಷದ ನಾಯಕರೆಂದರೆ, ಜಗದೀಶ್ ಶೆಟ್ಟರ್ ಅವರು. 1999ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಸೋತಿದ್ದರು. ಇನ್ನೊಬ್ಬ ಹಿರಿಯ ಮುಖಂಡ ಬಿ.ಬಿ. ಶಿವಪ್ಪ ಗೆದ್ದಿದ್ದರು. ಅನಂತಕುಮಾರ್ ಮತ್ತು ಯಡಿಯೂರಪ್ಪ ತಮಗಿಂತಲೂ ಹಿರಿಯರಾದ ಬಿ.ಬಿ. ಶಿವಪ್ಪ ಅವರನ್ನು ಅಧಿಕೃತ ವಿರೋಧ ಪಕ್ಷದ ನಾಯಕನಾಗಲು ಬಿಡಲಿಲ್ಲ. ಅವರಿಬ್ಬರ ಹುನ್ನಾರ ದಿಂದ ಅತ್ಯಂತ ಕಿರಿಯನಾದ ಮತ್ತು ಅನನುಭವಿಯಾದ ಜಗದೀಶ್ ಶೆಟ್ಟರ್ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿ ಕೂರಿಸಲಾಗಿತ್ತು. ಆಗ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದರು. ಹಾಗೆ ನೋಡಿದರೆ, ಕೃಷ್ಣ ಅವರ ಅಧಿಕಾರವಧಿಯಲ್ಲಿ ಅತಿ ಹೆಚ್ಚು ಸಮಸ್ಯೆ ಸವಾಲುಗಳು ಎದುರಾಗಿದ್ದವು. ದುರ್ಬಲ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಅವರು ಒಮ್ಮೆಯೂ ಪರಿಣಾಮಕಾರಿಯಾಗಿ ಮಾತನಾಡಲೇ ಇಲ್ಲ. ಅವರ ಜ್ಞಾನ, ಅನುಭವ ಮತ್ತು ತಯಾರಿ ಅತ್ಯಂತ ದುರ್ಬಲವಾಗಿತ್ತು. ಸಮರ್ಥ ವಿರೋಧ ಪಕ್ಷದ ನಾಯಕನಾಗಿ ಕಾರ್ಯ ನಿರ್ವಹಿಸದವನು ಜನನಾಯಕನಾಗಿ ರೂಪುಗೊಳ್ಳಲಾರ ಎಂಬ ಮಾತಿಗೆ ಜಗದೀಶ್ ಶೆಟ್ಟರ್ ಬಹು ದೊಡ್ಡ ನಿದರ್ಶನ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಮೇಲೂ ಜನನಾಯಕನಾಗಲೇ ಇಲ್ಲ. ಈ ಹೊತ್ತಿಗೂ ಅವರು ಎರಡನೇ ದರ್ಜೆಯ ನಾಯಕರಾಗಿಯೇ ಉಳಿದಿದ್ದಾರೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಅವಧಿಗೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದವರು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ ಸಂಪೂರ್ಣ ತಯಾರಿಯೊಂದಿಗೆ ಸದನಕ್ಕೆ ಬರುತ್ತಿದ್ದರು. ಅವರ ವಾದ, ಪ್ರತಿಪಾದನೆ, ಮಾತನಾಡುವ ಶೈಲಿ, ವಿಚಾರ ಮಂಡಿಸುವ ರೀತಿ ಸದನದ ಘನತೆ ಗೌರವ ಹೆಚ್ಚಿಸುತ್ತಿತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿರಬಹುದು. ಆದರೆ, ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಬಜೆಟ್ ಮೇಲಿನ ಭಾಷಣವಂತೂ ಅಭ್ಯಾಸಪೂರ್ಣವಾಗಿರುತ್ತಿತ್ತು. ಸಿದ್ದರಾಮಯ್ಯ ಅವರಿಗೆ ಸಿದ್ದರಾಮಯ್ಯ ಅವರೇ ಸಾಟಿ ಎನ್ನುವಂತೆ ಕಾರ್ಯ ನಿರ್ವಹಿಸುತ್ತಿದ್ದರು. ವಿರೋಧ ಪಕ್ಷದ ನಾಯಕನೆಂದರೆ ಸರಕಾರದ ಕಾವಲುಗಾರ ಎಂಬುದನ್ನು ಸಾಬೀತುಪಡಿಸಿದ್ದರು. ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಕೆಲ ಕಾಲ ಎಚ್.ಡಿ. ಕುಮಾರ ಸ್ವಾಮಿ ವಿರೋಧ ಪಕ್ಷದ ನಾಯಕರಾಗಿದ್ದರು. ಕುಮಾರ ಸ್ವಾಮಿ ಹಿಟ್ ರನ್ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಯಾವುದನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತಿರಲಿಲ್ಲ. ಕುಮಾರ ಸ್ವಾಮಿಯವರಲ್ಲಿ ಸರಕಾರಿ ಮಾಹಿತಿ ಸಾಕಷ್ಟು ಬಂದು ಸೇರುತ್ತಿತ್ತು. ಆ ಎಲ್ಲ ಮಾಹಿತಿಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದರು. ಆದರೆ ಸಮರ್ಥ ವಿರೋಧ ಪಕ್ಷದ ನಾಯಕರಾಗಿ ಹೊರ ಹೊಮ್ಮಲೇ ಇಲ್ಲ. ಆಗ ಬಿಜೆಪಿ ಮತ್ತು ಕೆಜೆಪಿ ಒಂದಾದ ಮೇಲೆ ಮತ್ತೆ ಜಗದೀಶ್ ಶೆಟ್ಟರ್ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುವ ಅವಕಾಶ ಪಡೆದರು. ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಅನುಭವ ಹೊಂದಿದ್ದರೂ ಸಮರ್ಥ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಲೇ ಇಲ್ಲ. ಅತ್ಯಂತ ಉಡಾಫೆ ಮತ್ತು ದುರ್ಬಲ ವಿರೋಧ ಪಕ್ಷದ ನಾಯಕರನ್ನು ಹೊಂದಿದ್ದ ಸಿದ್ದರಾಮಯ್ಯ ಅವರು ನೀರು ಕುಡಿದಷ್ಟೇ ಸರಳವಾಗಿ ಐದು ವರ್ಷ ಪೂರೈಸಿದ್ದರು. ಈಗ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಎಂಬ ಅನನುಭವಿ ವ್ಯಕ್ತಿ ವಿರೋಧ ಪಕ್ಷದ ನಾಯಕರಾಗಿ ದೊರೆತಿದ್ದಾರೆ. ವಿರೋಧ ಪಕ್ಷದ ನಾಯಕ ದುರ್ಬಲನಾಗಿದ್ದು, ಬಿಜೆಪಿ ಪಕ್ಷದ ಅಧ್ಯಕ್ಷ ಸಮರ್ಥನಾಗಿದ್ದರೆ ಆಡಳಿತ ನಡೆಸುವ ಪಕ್ಷದವರು ಸದಾ ಆತಂಕದಲ್ಲಿ ಇರುತ್ತಾರೆ. ಈ ಬಾರಿ ಅಧಿಕೃತ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಬ್ಬರೂ ಅನನುಭವಿ ಮತ್ತು ದುರ್ಬಲ ನಾಯಕರಾಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಕಳೆದಿವೆ. ಸದನದ ಒಳಗೆ ಮತ್ತು ಹೊರಗೆ ವಿರೋಧ ಪಕ್ಷದ ನಾಯಕರಾಗಿರುವ ಆರ್. ಅಶೋಕ್ ಅವರು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲಿಲ್ಲ. ಬಜೆಟ್ ಅಧಿವೇಶನದಲ್ಲಂತೂ ಏನೇನೂ ತಯಾರಿಲ್ಲದೆ ಬಂದು ನಗೆಪಾಟಲಿಗೆ ಈಡಾದರು. ವಿತ್ತೀಯ ಕೊರತೆಯಂತಹ ಸರಳ ಸಾಮಾನ್ಯ ಅರ್ಥ ಶಾಸ್ತ್ರದ ಪರಿಭಾಷೆ ಆರ್. ಅಶೋಕ್ ಅವರ ತಿಳುವಳಿಕೆಯ ಆಚೆ ಇತ್ತು. ಆರೇಳು ಅವಧಿಗೆ ಸದನದ ಸದಸ್ಯರಾಗಿದ್ದ ಆರ್. ಅಶೋಕ್ ಅವರ ಬಜೆಟ್ ಮೇಲಿನ ಭಾಷಣ ಅತ್ಯಂತ ಕಳಪೆಯಾಗಿದ್ದು ಕಂಡು ಬಿಜೆಪಿ ಸದಸ್ಯರೇ ತಬ್ಬಿಬ್ಬು ಆಗಿದ್ದರು. ಯಾವುದೇ ಸರಕಾರ ಇರಲಿ, ಭ್ರಷ್ಟಾಚಾರ ಸಹಜವಾಗಿ ನೆಲೆ ನಿಂತಿರುತ್ತದೆ. ಹಾಗಂತ ವಿರೋಧ ಪಕ್ಷದವರು ಭ್ರಷ್ಟಾಚಾರ ಕಂಡೂ ಸುಮ್ಮನೆ ಇರಬೇಕು ಅಂತ ಹೇಳಲಾಗದು. ಭ್ರಷ್ಟಾಚಾರದ ಪ್ರಕರಣಗಳನ್ನು ದಾಖಲೆ ಸಮೇತ ಬಯಲು ಮಾಡಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ವಿರೋಧ ಪಕ್ಷದ ನಾಯಕರ ಮತ್ತು ಪ್ರತಿಪಕ್ಷಗಳ ಆದ್ಯ ಕರ್ತವ್ಯ. ಬಿಜೆಪಿ-ಜೆಡಿಸ್ ನಡುವೆ ಚುನಾವಣಾ ಮೈತ್ರಿ ಏರ್ಪಟ್ಟಿದ್ದರಿಂದ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಡಲು ಅವಕಾಶ ದೊರೆತಿದೆ. ವಾಲ್ಮೀಕಿ ನಿಗಮದ ಹಗರಣ ಸೇರಿ ಹಲವಾರು ಹಗರಣಗಳು ಹೊರ ಬಂದರೂ ಪ್ರತಿಪಕ್ಷಗಳು ಅದರಲ್ಲೂ ಅಧಿಕೃತ ವಿರೋಧ ಪಕ್ಷವಾಗಿರುವ ಬಿಜೆಪಿ ಗಂಭೀರ ಸ್ವರೂಪದ ಹೋರಾಟಗಳನ್ನು ರೂಪಿಸಲೇ ಇಲ್ಲ. ಸದ್ಯ ಮಾಧ್ಯಮಗಳು ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಬಿಜೆಪಿ-ಜೆಡಿಎಸ್ ಹೊಣೆಗೇಡಿಯಂತೆ ನಡೆದುಕೊಳ್ಳುತ್ತಿವೆ. ಸಿದ್ದರಾಮಯ್ಯ ಅವರ ಸರಕಾರದಲ್ಲಿ ಶಾಲಾ ಶಿಕ್ಷಣ ಸಂಪೂರ್ಣ ಕುಸಿದು ಹೋಗಿದೆ. ಸರಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಸರಕಾರಿ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಫಲವಾಗುತ್ತಿವೆ. ಕಳಪೆ ಗುಣಮಟ್ಟದ ಕಟ್ಟಡಗಳು, ಮೂಲಭೂತ ಸೌಕರ್ಯ ಇಲ್ಲದ ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳು, ಪ್ರಾಥಮಿಕ ಹಂತದಿಂದ ವಿಶ್ವವಿದ್ಯಾನಿಲಯಗಳವರೆಗೆ ಶಿಕ್ಷಕರ ಕೊರತೆ ಇದೆ. ಶಿಕ್ಷಕರ ಭರ್ತಿಗೆ ಸರಕಾರ ಗಂಭೀರ ಪ್ರಯತ್ನವೇ ಮಾಡುತ್ತಿಲ್ಲ. ಯಾವುದೇ ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ಸೌಕರ್ಯ ಕ್ಷೇತ್ರ ಸಮೃದ್ಧವಾಗಿರಬೇಕು. ಇನ್ನುಳಿದ ಸರಕಾರಿ ಇಲಾಖೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸಗಳು ಆಗುತ್ತಿಲ್ಲ. ಪೊಲೀಸ್ ಇಲಾಖೆ ಮತ್ತಷ್ಟು ಭ್ರಷ್ಟವಾಗಿದೆ. ಭ್ರಷ್ಟಾಚಾರವನ್ನು ಸಂಪೂರ್ಣ ತೊಡೆದು ಹಾಕಲು ಸಾಧ್ಯವಿಲ್ಲ. ಆದರೆ ಅದನ್ನು ಸಂಪೂರ್ಣ ನಿಯಂತ್ರಣಕ್ಕೆ ತರಬಹುದಲ್ಲ. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಕೋಟಿ ಕೋಟಿ ರೂ. ಅನುದಾನ ತಿಂದು ವಾಸ ಯೋಗ್ಯವಾಗಿಲ್ಲವೆಂದರೆ ವ್ಯವಸ್ಥೆ ಎಷ್ಟು ಕೆಟ್ಟಿರಬಹುದು. ಅಧಿಕೃತ ವಿರೋಧ ಪಕ್ಷದ ನಾಯಕರಾಗಿರುವ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪ್ರತಿ ನಿತ್ಯ ಜನಸಾಮಾನ್ಯರು ಎದುರಿಸುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.ಸರಕಾರಿ ಆಸ್ಪತ್ರೆಗಳು ಸಂಪೂರ್ಣ ಹಾಳಾಗಿ ಹೋಗಿವೆ. ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಮರೀಚಿಕೆಯಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಸಾವಿರಾರು ಕೋಟಿ ಹಣ ಖರ್ಚು ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿವೆ. ಆ ಕಟ್ಟಡಗಳಲ್ಲಿ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡುತ್ತಿಲ್ಲ. ಆರ್. ಅಶೋಕ್ ಆರೋಗ್ಯ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದವರು. ಅಲ್ಲಿಯ ಸಮಸ್ಯೆಗಳು ಅವರಿಗೆ ಚೆನ್ನಾಗಿ ಗೊತ್ತು. ಜನರ ದನಿಯಾಗಿ ಸದನದಲ್ಲಿ ಮಾತನಾಡುವ ಅವಕಾಶ ಅವರಿಗೆ ದೊರೆತಿದೆ. ಆರ್. ಅಶೋಕ್ ಒಮ್ಮೆಯೂ ಮಾಹಿತಿ ಸಂಗ್ರಹಿಸಿ ಅಧಿಕೃತ ದಾಖಲೆಗಳೊಂದಿಗೆ ಸದನದಲ್ಲಿ ವಿಚಾರ ಮಂಡಿಸಿದ ನಿದರ್ಶನ ಸಿಗುವುದಿಲ್ಲ. ವಿಜಯೇಂದ್ರಗೆ ಅನುಭವ ಸಾಲದು. ಕಾಂಗ್ರೆಸ್ ಪಕ್ಷವನ್ನು, ಸರಕಾರವನ್ನು ರಾಜಕೀಯವಾಗಿ ಎದುರಿಸುವ ಜಾಣ್ಮೆ ವಿಜಯೇಂದ್ರ ಅವರಲ್ಲಿ ಇಲ್ಲ. ಸಿ. ಟಿ. ರವಿ ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ರಾಗಿ ಕಾರ್ಯ ನಿರ್ವಹಿಸಿದವರು. ಕನಿಷ್ಠ ಪಕ್ಷ ಆ ಇಲಾಖೆಗಳ ಕಾರ್ಯ ವೈಖರಿ, ಅಲ್ಲಿಯ ಲೋಪಗಳನ್ನು ಎತ್ತಿ ತೋರಿಸುವ ಕೆಲಸವನ್ನೂ ಮಾಡುತ್ತಿಲ್ಲ. ನಾಲ್ಕು ವರ್ಷಗಳ ಕಾಲ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ಅನುಭವ ಇರುವ ಅಶ್ವಥ್ ನಾರಾಯಣ ಅವರು ಆ ಇಲಾಖೆ ಎದುರಿಸುತ್ತಿರುವ ಸಮಸ್ಯೆ ಸವಾಲು ಮತ್ತು ಪರಿಹಾರಗಳ ಬಗ್ಗೆ ರಚನಾತ್ಮಕ ಟೀಕೆ ಮಾಡಬಹುದು. ಆದರೆ ಅಶ್ವಥ್ ನಾರಾಯಣ ಅವರು ಕಿಯೋನಿಕ್ಸ್ ಸಂಸ್ಥೆಯಲ್ಲಿ ಕೆಲಸ ಮಾಡಿದ ಭ್ರಷ್ಟ ವೆಂಡರ್ ಪರ ವಕಾಲತ್ತು ವಹಿಸಿ ಮಾತನಾಡಿದರೇ ಹೊರತು ಒಟ್ಟಾರೆ ಐಟಿ ಬಿಟಿ ಇಲಾಖೆಯ ಕಾರ್ಯ ವೈಖರಿ ಬಗ್ಗೆ ಗಂಭೀರ ಟೀಕೆ ಟಿಪ್ಪಣಿ ಮಾಡಲೇ ಇಲ್ಲ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಯಾವ ಇಲಾಖೆಯ ಬಗ್ಗೆಯೂ ಕನಿಷ್ಠ ತಿಳುವಳಿಕೆ ಹೊಂದಿಲ್ಲ ಎಂಬುದು ಹಲವು ಬಾರಿ ರುಜುವಾತು ಮಾಡಿದ್ದಾರೆ. ಬೆಂಗಳೂರು ರಸ್ತೆಗಳು ಸಂಪೂರ್ಣ ಹಾಳಾಗಿವೆ. ಮಳೆಗಾಲದಲ್ಲಿ ಅರ್ಧ ಬೆಂಗಳೂರು ಮುಳುಗಿರುತ್ತದೆ. ಐಟಿ ಬಿಟಿ ಕಂಪೆನಿಗಳು ಹೈದರಾಬಾದ್ಗೆ ವಲಸೆ ಹೋಗುತ್ತಿವೆ. ಜವಾಬ್ದಾರಿಯುತ ವಿರೋಧ ಪಕ್ಷದ ನಾಯಕರಾಗಿ ಯಾವತ್ತೂ ಸದನದ ಒಳಗೆ ಮತ್ತು ಹೊರಗೆ ಗಂಭೀರ ಸ್ವರೂಪದ ಹೋರಾಟ ರೂಪಿಸಲೇ ಇಲ್ಲ. ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ತಾವು ಮಾಡಿದ್ದನ್ನೇ ಕಾಂಗ್ರೆಸ್ನವರು ಮಾಡುತ್ತಿದ್ದಾರೆ ಎಂಬ ಭಾವನೆ ಪ್ರತಿಪಕ್ಷದ ಪ್ರತೀ ನಾಯಕನಲ್ಲಿ ಮನೆ ಮಾಡಿದೆ. ಸರಕಾರದ ಕಾರ್ಯ ವೈಖರಿಯಿಂದ ಜನಸಾಮಾನ್ಯರು ಯಾವ ಬಗೆಯ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದು ಆರ್. ಅಶೋಕ್ ಗಮನಿಸಲೇ ಇಲ್ಲ. ವಿರೋಧ ಪಕ್ಷದ ನಾಯಕ ಎಂಬ ಗತ್ತಿನಲ್ಲಿ ತಿರುಗಾಡುತ್ತಿದ್ದಾರೆಯೇ ಹೊರತು ಆ ಸ್ಥಾನದ ಹೊಣೆಗಾರಿಕೆ ಅರಿತಿಲ್ಲ. ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕತೆ ತಮಗಿಲ್ಲ ಎಂಬಂತೆ ವಿಜಯೇಂದ್ರ ಮತ್ತು ಆರ್. ಅಶೋಕ್ ನಡೆದುಕೊಳ್ಳುತ್ತಿದ್ದಾರೆ. ರಾಜಕೀಯ ಲಾಭ ಮಾಡಿಕೊಳ್ಳುವ ಇರಾದೆಯೂ ಆ ಇಬ್ಬರೂ ನಾಯಕರಿಗೆ ಇಲ್ಲ. ಕಾಂಗ್ರೆಸ್ ಸರಕಾರ ತನ್ನ ಭಾರಕ್ಕೆ ತಾನೇ ಕುಸಿಯುತ್ತದೆ. ಅದರ ಲಾಭ ಅನಾಯಾಸವಾಗಿ ಬಿಜೆಪಿಗೆ ಆಗುತ್ತದೆ ಎಂಬ ಭಾವನೆ ಹೊಂದಿದ್ದಾರೆ. ‘‘ಕೊಟ್ಟ ಕುದುರೆಯನೇರದವರು ವೀರರೂ ಅಲ್ಲ ಧೀರರೂ ಅಲ್ಲ’’ ಎಂಬ ಅಲ್ಲಮಪ್ರಭುಗಳ ವಚನದ ಸಾಲು ಬಿಜೆಪಿ ಮಂದಿಗೆ ಹೆಚ್ಚು ಅನ್ವಯಿಸುತ್ತದೆ. ಆರ್. ಅಶೋಕ್, ವಿಜಯೇಂದ್ರ, ಸಿ.ಟಿ. ರವಿ, ಅಶ್ವಥ್ ನಾರಾಯಣ ಸೇರಿದಂತೆ ಬಿಜೆಪಿಯ ಹಲವು ಮುಖಂಡರಿಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿದೆ. ಪ್ರತಿಪಕ್ಷದ ಕೆಲಸಗಳು ಸಮರ್ಥವಾಗಿ ನಿಭಾಯಿಸದೆ ಅಧಿಕಾರದ ಗದ್ದುಗೆ ಏರುವ ಹಂಬಲ ಬಿಜೆಪಿ ನಾಯಕರಿಗಿದೆ. ಕರ್ನಾಟಕದ ಇತಿಹಾಸದಲ್ಲೇ ಇಂಥ ದುರ್ಬಲ ಪ್ರತಿಪಕ್ಷಗಳನ್ನು ಜನರು ಕಂಡಿಲ್ಲ. ಜೆಡಿಎಸ್ ಪಕ್ಷವನ್ನು ವಿಧಾನಸಭೆಯಲ್ಲಿ ಯಾರು ಪ್ರತಿನಿಧಿಸುತ್ತಿದ್ದಾರೆ ಎಂಬುದು ಜನತೆಗೆ ಗೊತ್ತಿಲ್ಲ. ಆರ್. ಅಶೋಕ್, ವಿಜಯೇಂದ್ರ ನಿತ್ಯ ಸುದ್ದಿ ಮಾಡುತ್ತಾರೆಯಾದರೂ ಆಳದ ಕಾಳಜಿ ಕಾಣುತ್ತಿಲ್ಲ. ಅತ್ಯಂತ ದುರ್ಬಲ ವಿರೋಧ ಪಕ್ಷದ ನಾಯಕ ಎಂಬ ಕುಖ್ಯಾತಿ ಆರ್. ಅಶೋಕ್ ಅವರಿಗೆ ಅಂಟಿದೆ. ಇದೇ ತಿಂಗಳ 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಮಾವೇಶಗೊಳ್ಳಲಿದೆ. ವಿವಿಧ ರೈತ ಸಂಘಟನೆಗಳು ಕ್ರಿಯಾಶೀಲವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿವೆ. ಆದರೆ ಅಧಿಕೃತ ವಿರೋಧ ಪಕ್ಷವಾಗಿರುವ ಬಿಜೆಪಿ ಒಂದು ಬಾರಿಯೂ ರೈತರ ಸಮಸ್ಯೆ ಕುರಿತು ದನಿ ಎತ್ತಲಿಲ್ಲ. ತೀವ್ರ ಹೋರಾಟ ರೂಪಿಸಲಿಲ್ಲ. ದೇವನಹಳ್ಳಿ ರೈತರ ಹೋರಾಟ, ಮೆಕ್ಕೆಜೋಳ ಬೆಂಬಲ ಬೆಲೆಗೆ ನಡೆಸಿದ ಹೋರಾಟ, ಕಬ್ಬು ಬೆಳೆಗಾರರು ನಡೆಸಿದ ಹೋರಾಟ- ಯಾವುದರಲ್ಲೂ ಬಿಜೆಪಿ ಜೆಡಿಎಸ್ ಕಾಳಜಿಯಿಂದ ಪಾಲ್ಗೊಳ್ಳಲಿಲ್ಲ. ಬಿಜೆಪಿಯಲ್ಲಿನ ಬಣ ರಾಜಕೀಯ ನಿತ್ಯದ ಗೋಳಾಗಿದೆ. ಜನಸಾಮಾನ್ಯರ ಸಮಸ್ಯೆಗೆ ಗಂಭೀರವಾಗಿ ಸ್ಪಂದಿಸುವ ಇರಾದೆಯೇ ಬಿಜೆಪಿ ನಾಯಕರಿಗಿಲ್ಲ ಎಂಬುದು ನೂರಾರು ಸಂದರ್ಭದಲ್ಲಿ ಸಾಬೀತಾಗಿದೆ. ಕೋಮು ಗಲಭೆ ಸಂದರ್ಭದಲ್ಲಿ ಮಾತ್ರ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟು ಪ್ರದರ್ಶಿಸಿ ತಮ್ಮ ಅಸ್ತಿತ್ವ ರುಜುವಾತುಪಡಿಸುತ್ತವೆ. ಕಳೆದ ಎರಡೂವರೆ ವರ್ಷಗಳಲ್ಲಿ ನಡೆದ ಸದನದ ಕಲಾಪಗಳು ಬಿಜೆಪಿಯ ನೈಜ ಕಾಳಜಿಯನ್ನು ಅನಾವರಣ ಮಾಡುತ್ತವೆ. ಬಿಜೆಪಿಯ ಉಚ್ಚಾಟಿತ ನಾಯಕ ಬಸನಗೌಡ ಯತ್ನಾಳ್ ತನ್ನ ಇರುವಿಕೆಯನ್ನು ದೊಡ್ಡದಾಗಿ ತೋರಿಸಿಕೊಳ್ಳಲು ಜೋಕರ್ ತರಹ ಸದ್ದು ಮಾಡಿದ್ದು ಬಿಟ್ಟರೆ ಬಿಜೆಪಿ ನಾಯಕರು ಪ್ರತಿಪಕ್ಷದ ಹೊಣೆಗಾರಿಕೆ ಸಮರ್ಥವಾಗಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೊಣೆಗೇಡಿ ಮತ್ತು ದುರ್ಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಮಾರಕ. ದುರ್ಬಲ ವಿರೋಧ ಪಕ್ಷ ಇರುವುದರಿಂದ ಕಾಂಗ್ರೆಸ್ ಪಕ್ಷದ ಕೆಲವರಿಗೆ ಖುಷಿ ತಂದಿರಬಹುದು. ಆದರೆ ಹೊಣೆಗೇಡಿ ವಿರೋಧ ಪಕ್ಷದಿಂದಾಗಿ ಜನಸಾಮಾನ್ಯರ ದನಿ ಕ್ಷೀಣವಾಗುತ್ತದೆ. ಅಂತಿಮವಾಗಿ ಜನತಂತ್ರ ದುರ್ಬಲ ಎನಿಸಿಕೊಳ್ಳುತ್ತದೆ. ಬಿ.ಎಸ್. ಯಡಿಯೂರಪ್ಪ ನಂತರ ಬಿಜೆಪಿಯಲ್ಲಿ ಜನನಾಯಕ ರೂಪುಗೊಳ್ಳದೆ ಇರುವುದಕ್ಕೆ ಮುಖ್ಯ ಕಾರಣ ಅವಕಾಶ ಪಡೆದ ನಾಯಕರು ತಮ್ಮ ಸಾಮರ್ಥ್ಯ ರುಜುವಾತು ಪಡಿಸಲು ಶ್ರಮ ಹಾಕದಿರುವುದು. ಆರ್. ಅಶೋಕ್ ಮತ್ತು ವಿಜಯೇಂದ್ರ ಅವರಿಗೆ ಜನನಾಯಕರಾಗಲು ಅವಕಾಶ ಒದಗಿ ಬಂದಿತ್ತು. ಜನರ ದನಿಯಾಗಿ ಹಗಲಿರುಳು ಆ ಇಬ್ಬರೂ ನಾಯಕರು ದುಡಿದಿದ್ದರೆ ಇಷ್ಟೊತ್ತಿಗೆ ಅವರಿಗೆ ಸಾರ್ವಜನಿಕ ಮಾನ್ಯತೆ ದೊರೆಯುತ್ತಿತ್ತು. ಯಾವ ಹೈಕಮಾಂಡ್ ಕೂಡಾ ವೋಟು ತರುವ ಸಾಮರ್ಥ್ಯ ಇರದ ದುರ್ಬಲ ನಾಯಕರನ್ನು ಹೆಚ್ಚು ಕಾಲ ಬೆಂಬಲಿಸುವುದಿಲ್ಲ. ಈ ಹೊತ್ತು ಸಿದ್ದರಾಮಯ್ಯ ತಮ್ಮ ಸಾಮರ್ಥ್ಯದಿಂದ ಕಾಂಗ್ರೆಸ್ ಹೈ ಕಮಾಂಡ್ಗೆ ಅನಿವಾರ್ಯ ಆಗಿದ್ದಾರೆ. ಯಡಿಯೂರಪ್ಪ ಕೂಡಾ ಬಿಜೆಪಿಗೆ ಅನಿವಾರ್ಯವಾಗಿದ್ದರು. ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಾಯಕ ಮಾತ್ರ ಜನಸಾಮಾನ್ಯರಿಗೆ ಮತ್ತು ಹೈ ಕಮಾಂಡ್ಗೆ ಬೇಕಾದ ಜನನಾಯಕನಾಗುತ್ತಾನೆ. ಆರ್. ಅಶೋಕ್ ಮತ್ತು ವಿಜಯೇಂದ್ರ ಅವರಂಥ ಹೊಣೆಗೇಡಿ ನಾಯಕರು ಜನರಿಗೆ ಮಾತ್ರವಲ್ಲ ಹೈಕಮಾಂಡ್ಗೂ ಹೊರೆಯಾಗುತ್ತಾರೆ.
ಕಲಬುರಗಿ: ಸರ್ಕಾರಿ ನೌಕರರ ಸಂಘದಿಂದ ಡಾ.ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
ಕಲಬುರಗಿ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದಿಂದ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ಬಳುಂಡಗಿ, ಜಿಲ್ಲಾ ಖಜಾಂಚಿ ಶ್ರೀಮಂತ ಪಟ್ಟೇದಾರ, ರಾಜ್ಯ ಪರಿಷತ್ ಸದಸ್ಯರಾದ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷರಾದ ಚಂದ್ರಕಾಂತ ಏರಿ, ಹಿರಿಯ ಉಪಾಧ್ಯಕ್ಷರಾದ ಎಂ. ಬಿ ಪಾಟೀಲ, ಸುರೇಶ ವಗ್ಗಿ, ಪ್ರಮುಖರಾದ ಕೃಷ್ಣಮಾಚಾರಿ, ವೀರಭದ್ರಯ್ಯ ಸ್ವಾಮಿ, ಸುನೀಲಕುಮಾರ ಚಾಂದೆ, ವೇದರಾಜ ವೇಸ್ಲಿ, ಸವಿತಾ ನಾಸಿ, ಪರಮೇಶ್ವರ ದೇಸಾಯಿ, ದೇವೇಂದ್ರಪ್ಪ ಗಣಮುಖಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸತೀಶ್ ಜಾರಕಿಹೊಳಿ ಭೇಟಿಯ ಅಚ್ಚರಿ ವಿಚಾರ ಬಿಚ್ಚಿಟ್ಟ ಡಾ. ಜಿ ಪರಮೇಶ್ವರ್
ಬೆಂಗಳೂರು, ಡಿಸೆಂಬರ್ 06: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದ್ದು, ಈ ಚರ್ಚೆಯ ನಡುವೆ ಹಲವು ನಾಯಕರು ಭೇಟಿಯಾಗುತ್ತಿರುವುದು ತೀವ್ರ ಕುತೂಹಲವನ್ನ ಹೆಚ್ಚಿಸಿದೆ. ಈ ನಡುವೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಸತೀಶ್ ಜಾರಕಿಹೊಳಿ ಅವರನ್ನ ಭೇಟಿ ಮಾಡಿದ್ದು, ಈ ಚರ್ಚೆಯ
ಕುಕ್ಕುಂದೂರು: ಡಿ.13ರಂದು ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಯ 42ನೇ ವಾರ್ಷಿಕೋತ್ಸವ
ವಾರ್ಷಿಕೋತ್ಸವದ ಬ್ಯಾನರ್ ಅನಾವರಣ
IMD Weather Forecast: ಈ ಭಾಗಗಳಲ್ಲಿ ಮುಂದಿನ ಎರಡು ದಿನ ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಎಡು ದಿನಗಳ ಕಾಲ ಈ ಭಾಗಗಳಲ್ಲಿ ಚಳಿಗಾಳಿ ನಡುವೆಯೇ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಅಂಕಿ- ಅಂಶಗಳೇ ಸಾಬೀತು ಮಾಡಿವೆ: ಜಿ ಪರಮೇಶ್ವರ್ ಸಮರ್ಥನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಅಂಕಿ- ಅಂಶಗಳೇ ಸಾಬೀತು ಮಾಡಿದ್ದಾವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಮಂಗಳವಾರ ನಡೆಯುವ ಸಿಎಲ್ಪಿ ಸಭೆಯಲ್ಲಿ ಸದನಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಚರ್ಚೆಗೆ ನಮ್ಮ ಪಕ್ಷದ ಶಾಸಕರು, ಸಚಿವರು ಯಾವ ರೀತಿ ಉತ್ತರಿಸಬೇಕು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ. ಅಲ್ಲಿ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆಯಾಗುವುದಿಲ್ಲ. ಈ ಬಗ್ಗೆ ನಿರೀಕ್ಷೆಯೂ ಇಟ್ಟುಕೊಳ್ಳಬೇಡಿ ಎಂದು ಹೇಳಿದರು.
ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ವಿವಾಹವು ಕುಟುಂಬದ ಆರೋಗ್ಯ ಸಮಸ್ಯೆಗಳಿಂದಾಗಿ ರದ್ದಾಗಿತ್ತು. ಇದಾದ ಬಳಿಕ ಸೈಲೆಂಟಾಗಿದ್ದಸ್ಮೃತಿ ಮಂದಾನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ತಮ್ಮ ಕ್ರಿಕೆಟ್ ಪ್ರಯಾಣದ ವಿಚಾರಗಳ ಕುರಿತು ಮಾತನಾಡುವ ಮೂಲಕ ಜಾಹೀರಾತೊಂದಕ್ಕೆ ಪ್ರಮೋಶನ್ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಸಕಲೇಶಪುರ : ಚಲಿಸುತ್ತಿದ್ದ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ಪಾರಾದ ದಂಪತಿ
ಸಕಲೇಶಪುರ: ಡಿ,6: ಚಲಿಸುತ್ತಿದ್ದ ಡಸ್ಟರ್ ಕಾರಿಗೆ ಬೆಂಕಿ ತಗುಲಿ ದಂಪತಿಗಳು ಪ್ರಾಣಾಪಾಯದಿಂದ ಪರಾಗಿರುವ ಘಟನೆ ತಾಲ್ಲೂಕಿನ ಮಂಜ್ರಾಬಾದ್ ದರ್ಗಾ ಸಮೀಪ ಶನಿವಾರ ನಡೆದಿದೆ. ಬೆಂಗಳೂರು ನಿವಾಸಿಗಳಾದ ನವೀನ್ (32) ಮತ್ತು ಮಾನಸ(28) ಅಪಾಯದಿಂದ ಪಾರಾದ ದಂಪತಿ. ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ, ಕಾರಿನ ಹಿಂದಿನ ಚಕ್ರ ಪಂಕ್ಚರ್ ಆಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದೆ. ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ತುರ್ತಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ವಾಹನ ಚಾಲಕ ಮತ್ತು ಮಾಲೀಕ ನವೀನ್, ನಾವು ಬೆಂಗಳೂರು ನಿವಾಸಿಗಳಾಗಿದ್ದು, ಧರ್ಮಸ್ಥಳಕ್ಕೆ ತೆರಳುತ್ತಿದ್ದೆವು. ಆಗ ಮಂಜ್ರಾಬಾದ್ ದರ್ಗಾ ಸಮೀಪ ಕಾರಿನ ಹಿಂದಿನ ಚಕ್ರ ಪಂಕ್ಚರ್ ಆಗಿ ವಾಹನ ನಿಯಂತ್ರಣ ತಪ್ಪಿ ಪಕ್ಕದ ಡಿವೈಡರ್ಗೆ ಢಿಕ್ಕಿ ಹೊಡೆದು ಇದ್ದಕ್ಕಿದ್ದಂತೆ ಬೆಂಕಿ ತಗಲಿಕೊಂಡಿತ್ತು. ವಾಹನದ ಹಿಂಭಾಗದಲ್ಲಿ ಇದ್ದ ಲಾರಿ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ. ತುರ್ತಾಗಿ ಅಗ್ನಿಶಾಮಕ ದಳದವರು ಬಂದರು ನಮಗೆ ಯಾವುದೇ ರೀತಿಯ ಗಾಯಗಳು ಸಂಭವಿಸಲಿಲ್ಲ ಎಂದು ಹೇಳಿದರು.

22 C