ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರು ಚಿರಸ್ಥಾಯಿಯಾಗಿ ಉಳಿಯಲು ರಾಜ್ಯದಲ್ಲಿರುವ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಮತ್ತು ಇತರೆ ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ‘ರಾಷ್ಟ್ರಪಿತ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ’ ಎಂದು ನಾಮಕರಣ ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಮನವಿ ಮಾಡಿದ್ದಾರೆ. ಶನಿವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ‘ಮಹಾತ್ಮ ಗಾಂಧಿಯವರು ವಿಶ್ವಕಂಡು ಅರಿಯದ ವಿಶಿಷ್ಟ ಅಸ್ತ್ರಗಳಾದ ‘ಸತ್ಯಾಗ್ರಹ, ಅಹಿಂಸಾ ಚಳುವಳಿ’ ಮೂಲಕ ಸೂರ್ಯ ಮುಳುಗದ ಸಾಮ್ರಾಜ್ಯದ ಬ್ರಿಟಿಷರನ್ನು ಭಾರತದಿಂದ ತೊಲಗಿಸಿ ಭಾರತಾಂಬೆಯನ್ನು ಸ್ವತಂತ್ರಗೊಳಿಸಿದ ಸ್ವಾತಂತ್ರ್ಯ ಚಳುವಳಿಯ ಮಹಾನ್ ಸೇನಾನಿ’ ಎಂದು ಬಣ್ಣಿಸಿದ್ದಾರೆ. ‘ಗಾಂಧೀಜಿಯ ಹೋರಾಟ, ತ್ಯಾಗ, ಬಲಿದಾನ, ವೈಚಾರಿಕತೆಗಳನ್ನು ಗೌರವಯುತವಾಗಿ ಪರಿಗಣಿಸಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಸೃಷ್ಟಿಸುವ ಕಾರಣದಿಂದ ‘ಮನರೇಗಾ’ ಕಾಯ್ದೆ ಮಾಡಿ ನಿರುದ್ಯೋಗ-ಬಡತನ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಕಾಯ್ದೆ ಮಾಡಿ ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ. ಇದು ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿಗೆ ಪೂರಕವಾಗಿದೆ’ ಎಂದು ಅವರು ತಿಳಿಸಿದ್ದಾರೆ. ಆದರೆ, 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ನೇತೃತ್ವದ ಸರಕಾರ ಈ ಯೋಜನೆಗೆ ಅನುದಾನ ನೀಡದೆ ಈ ಕಾರ್ಯಕ್ರಮ ನಿರೀಕ್ಷೆಯ ಮಟ್ಟ ಮುಟ್ಟುತ್ತಿಲ್ಲ. ಇತ್ತೀಚೆಗೆ ಸದರಿ ಕಾಯ್ದೆಗೆ ತಿದ್ದುಪಡಿಗಳನ್ನು ತಂದು, ಗಾಂಧಿಯವರ ಹೆಸರನ್ನು ಕಾಯ್ದೆಯಿಂದ ಕೈಬಿಟ್ಟು ‘ವಿಕಸಿತ ಭಾರತ ಜಿರಾಮ್ಜಿ’ ಎಂದು ಕಾಯ್ದೆ ಮಾಡಿ ಗಾಂಧಿಯವರಿಗೆ ಅಪಮಾನ ಮಾಡಿರುತ್ತಾರೆ ಎಂದು ಉಗ್ರಪ್ಪ ಆಕ್ಷೇಪಿಸಿದ್ದಾರೆ. ಅಲ್ಲದೆ, ಇದು ಸಂವಿಧಾನ ಅನುಚ್ಛೇದ 51ಎ ಇತರ ಪ್ರಕ್ರಿಯೆಗಳಿಗೆ ವಿರುದ್ಧವಾಗಿರುತ್ತದೆ. ಇದನ್ನು ಭಾರತದ ಯಾವೊಬ್ಬ ಪ್ರಜೆಯೂ ಸಹಿಸುವುದಿಲ್ಲ. ಇದು ಮಹಾತ್ಮ ಗಾಂಧಿ ಸಿದ್ಧಾಂತವನ್ನು ಅಳಿಸಿ, ನಾಥೋರಾಮ್ ಗೋಡ್ಸೆ ಸಿದ್ಧಾಂತಕ್ಕೆ ಮಹತ್ವ ನೀಡುವ ಬಿಜೆಪಿ ಮತ್ತು ಆರೆಸ್ಸೆಸ್ನ ಗುಪ್ತ ಕಾರ್ಯಸೂಚಿಯಾಗಿರುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಗಾಂಧಿಯವರ ವಿಚಾರಧಾರೆಯಲ್ಲಿ ಪೂರ್ಣ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷದ ಸರಕಾರ ಸೂಕ್ತ ಉತ್ತರವನ್ನು ಮೋದಿ ಸರಕಾರ ಮತ್ತು ಗೋಡ್ಸೆವಾದಿಗಳಿಗೆ ನೀಡಬೇಕಾಗಿರುತ್ತದೆ. ಆದುದರಿಂದ ಜನಮಾನಸದಲ್ಲಿ ಸರ್ವಕಾಲಿಕವಾಗಿರುವ ಗಾಂಧಿ ವಿಚಾರಧಾರೆ ಉಳಿಸುವ ನಿಟ್ಟಿನಲ್ಲಿ ಗ್ರಾ.ಪಂ. ಮತ್ತು ಇತರೆ ಸ್ಥಳೀಯ ಸಂಸ್ಥೆಗಳು ಕಚೇರಿಗಳಿಗೆ ‘ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ’ ಎಂದು ನಾಮಕರಣ ಮಾಡಬೇಕು ಎಂದು ಅವರು ಕೋರಿದ್ದಾರೆ.
ಅಬಕಾರಿ ಇಲಾಖೆಯ 2,500 ಕೋಟಿ ರೂ ಅಸ್ಸಾಂ, ಕೇರಳ ಚುನಾವಣೆಗೆ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ
ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿರುವ ವಿರೋಧ ಪಕ್ಷ ಬಿಜೆಪಿ, ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿ ಆಗ್ರಹಿಸಿದೆ. ಅಬಕಾರಿ ಇಲಾಖೆಯಿಂದ ಲೂಟಿ ಮಾಡಿದ ಹಣವನ್ನು ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಅಸ್ಸಾಂ, ಕೇರಳ ಮತ್ತು ತಮಿಳುನಾಡಿಗೆ ರವಾನಿಸುತ್ತಿದೆ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಸಾಧ್ಯತೆ- ಬಿಜೆಪಿ ಶಾಸಕ ಸುಳಿವು?
ರಾಜ್ಯಪಾಲರ ಭಾಷಣ ವಿಚಾರವಾಗಿ ಬಿಜೆಪಿ ಶಾಸಕ ಸುರೇಶ್ ಗೌಡ ಕಾಂಗ್ರೆಸ್ ನಾಯಕರ ವರ್ತನೆಗೆ ಕಿಡಿಕಾರಿದ್ದಾರೆ. ಇದು ಮುಂದುವರಿದರೆ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಮ್ ಜಿ ಯೋಜನೆ ವಿರೋಧಿಸಿ ಅಧಿವೇಶನ ಕರೆದಿತ್ತು. ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ 5 ಸಾವಿರ ಕೋಟಿ ಹಣವನ್ನು ಕಾಂಗ್ರೆಸ್ ಸರ್ಕಾರ ನುಂಗಿ ನೀರು ಕುಡಿದಿದೆ ಎಂದು ಆರೋಪಿಸಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ ಎಂದು ಹೇಳಿದ್ದಾರೆ.
ಯಾದಗಿರಿ | ಮಕ್ಕಳ ಸಮಗ್ರ ಬೆಳವಣಿಗೆಗೆ ಪಾಠದ ಜೊತೆಗೆ ಕಲೆ, ಸಂಸ್ಕೃತಿ ಅಗತ್ಯ : ಮಲ್ಲೇಶ್ ನಾಯಕ್
ನೀಲಹಳ್ಳಿ ಗ್ರಾಮದಲ್ಲಿ ಬಾಲಮೇಳ ಕಾರ್ಯಕ್ರಮ
ಕಲಬುರಗಿ | ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ಬೆಸ್ಟ್ ಎಜುಕೇಶನ್ ಸೊಸೈಟಿ ಪ್ರಶಸ್ತಿ ಪ್ರದಾನ
ಕಲಬುರಗಿ: ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶನಿವಾರ ನಡೆದ 27ನೇ ಐಎಸ್ಟಿಇ ರಾಜ್ಯ ಮಟ್ಟದ ಪ್ರಾಧ್ಯಾಪಕರ ಸಮಾವೇಶದಲ್ಲಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗುವ ಪ್ರತಿಷ್ಠಿತ ಐಎಸ್ಟಿಇ “ಬೆಸ್ಟ್ ಎಜುಕೇಶನ್ ಸೊಸೈಟಿ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರಿಗೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಡಾ.ಅವ್ವಾಜಿ, ಈ ಪ್ರಶಸ್ತಿಯನ್ನು ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಲಿಂಗೈಕ್ಯ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ಅರ್ಪಿಸುವುದಾಗಿ ಹೇಳಿದರು. ಅವರು ಶಿಕ್ಷಣ ಸಂಸ್ಥೆಗಳ ಸರಪಳಿಯನ್ನು ಸ್ಥಾಪಿಸುವ ಮೂಲಕ ಮತ್ತು ಉತ್ತರ ಕರ್ನಾಟಕದ ಮೊದಲ ಖಾಸಗಿ ವಿಶ್ವವಿದ್ಯಾಲಯವಾದ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಈ ಪ್ರದೇಶದ ಜನರ ಶೈಕ್ಷಣಿಕ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಸ್ಥಾಪಿಸುವ ಜವಾಬ್ದಾರಿಯನ್ನು ಸಹ ಅಪ್ಪಾಜಿಯವರು ವಹಿಸಿದ್ದರು. ನಂತರ ಇದನ್ನು ಗುಲಬರ್ಗಾ ವಿಶ್ವವಿದ್ಯಾಲಯವಾಗಿ ಮೇಲ್ದರ್ಜೆಗೇರಿಸಲಾಯಿತು. ಇದು ಮೊದಲ ಬಾರಿಗೆ ಉನ್ನತ ಶಿಕ್ಷಣದ ಮಾರ್ಗಗಳನ್ನು ಈ ಪ್ರದೇಶದ ಜನರ ಮನೆ ಬಾಗಿಲಿಗೆ ತಂದಿತು ಎಂದರು. ಈ ಪ್ರಶಸ್ತಿಯು ಡಾ.ಅಪ್ಪಾಜಿಯವರ ಜೀವಮಾನದ ಸಾಧನೆಯನ್ನು ಮತ್ತು ಅವರ ಕನಸನ್ನು ನನಸಾಗಿಸಲು ಸಹಾಯ ಮಾಡಿದ ಶಿಕ್ಷಣ ಸಂಸ್ಥೆಗಳ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಸಮರ್ಪಣೆ ಮತ್ತು ನಿಮ್ಮೆಲ್ಲರ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಡಾ.ಅವ್ವಾಜಿ ಹೇಳಿದರು. ಐಎಸ್ಟಿಇ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಸುರೇಶ್ ಡಿ. ಎಸ್. ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶವನ್ನು ಪ್ರಮುಖ ಶೈಕ್ಷಣಿಕ ಕೇಂದ್ರವನ್ನಾಗಿ ಪರಿವರ್ತಿಸಲು ಡಾ.ಅಪ್ಪಾಜಿ ಅವರು ಮಾಡಿದ ಅವಿಶ್ರಾಂತ ಪ್ರಯತ್ನಗಳಿಗಾಗಿ ಅವರಿಗೆ ಗೌರವ ಸಲ್ಲಿಸಿದರು ಮತ್ತು ಡಾ.ಅವ್ವಾಜಿಯವರು ಡಾ.ಅಪ್ಪಾಜಿಯವರ ಪರಂಪರೆಯನ್ನು ಮುಂದುವರೆಸುತ್ತಿದ್ದಾರೆಂದರು. ಈ ಸಂದರ್ಭದಲ್ಲಿ ಐಎಸ್ಟಿಇ ರಾಷ್ಟ್ರೀಯ ಅಧ್ಯಕ್ಷ ಡಾ. ಪ್ರತಾಪ್ಸಿನ್ಹ ಕಾಕಾಸಾಹೇಬ ದೇಸಾಯಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ಸ್ವಾಗತಿಸಿದರು. ಪುಣೆಯ ಎಂಐಟಿಯ ಪ್ರೊ. ವೀರೇಂದ್ರ ವೀರಭದ್ರ ಶೆಟ್ಟಿ ಮತ್ತು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಓರುಗಂಟಿ ಆಂಜನೇಯುಲು ವಿಶೇಷ ಉಪನ್ಯಾಸ ನೀಡಿದರು.
2026ರ ಐಪಿಎಲ್ ತಯಾರಿ ಶುರು ಮಾಡಿದ ಮಹೇಂದ್ರ ಸಿಂಗ್ ಧೋನಿ: ಅಭ್ಯಾಸದ ವಿಡಿಯೋ ವೈರಲ್! ಈ ಬಾರಿಯೂ ಕಣಕ್ಕೆ?
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಮಹೇಂದ್ರ ಸಿಂಗ್ ಧೋನಿ ಸಿಹಿ ಸುದ್ದಿ ನೀಡಿದ್ದಾರೆ. ಐಪಿಎಲ್ ಆರಂಭಕ್ಕೆ ಇನ್ನು ಎರಡು ತಿಂಗಳು ಬಾಕಿ ಇರುವ ಮುನ್ನ ಧೋನಿ ನೆಟ್ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಧೋನಿ, ಮುಂಬರುವ ಐಪಿಎಲ್ 2026ರ ಋತುವಿಗಾಗಿ ಸಜ್ಜಾಗುತ್ತಿದ್ದಾರೆ. ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಧೋನಿ ತಮ್ಮ ಬ್ಯಾಟಿಂಗ್ ಅಭ್ಯಾಸವನ್ನು ಅಧಿಕೃತವಾಗಿ ಆರಂಭಿಸಿದ್ದು, ಈ ವಿಡಿಯೋ ಈಗ ವೈರಲ್ ಆಗಿದೆ.
ಏಳು ದಿನಗಳ ಸ್ವತಂತ್ರ ಟಿಕೆಟ್ ಬಸ್ ಪ್ರಯಾಣ ಪುನರಾರಂಭಕ್ಕೆ ಸರಕಾರಕ್ಕೆ ಒತ್ತಾಯ
ಕಲಬುರಗಿ ಹವ್ಯಾಸಿ ಪ್ರವಾಸಿ ಮಾರ್ಗದರ್ಶಿ ಬಳಗದಿಂದ ಮನವಿ
2026ರಲ್ಲಿ ಮಾರುತಿ, ಟಾಟಾ, ಮಹೀಂದ್ರಾದಿಂದ ಬರಲಿವೆ 30ಕ್ಕೂ ಹೆಚ್ಚು ಹೊಸ ಕಾರುಗಳು! ಸಾಲು ಸಾಲು ಬಿಡುಗಡೆಗೆ ಸಜ್ಜು
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಗಳಾದ ಮಾರುತಿ ಸುಜುಕಿ, ಟಾಟಾ ಮೋಟರ್ಸ್ ಮತ್ತು ಮಹೀಂದ್ರಾ 2026ರಲ್ಲಿ 30ಕ್ಕೂ ಹೆಚ್ಚು ಹೊಸ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿವೆ. ಇದು ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಸಂಖ್ಯೆಯಾಗಿದೆ. ಕಳೆದ ವರ್ಷ ಜಾರಿಯಾದ ತೆರಿಗೆ ಕಡಿತದ ಲಾಭ ಮತ್ತು ಹೆಚ್ಚಿದ ಬೇಡಿಕೆಯೇ ಇದಕ್ಕೆ ಪ್ರಮುಖ ಕಾರಣ. ಈ ಬಾರಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಮಾರುತಿ ಇ-ವಿಟಾರಾ, ಟಾಟಾ ಸಿಯೆರಾ ಇವಿ ಮತ್ತು ವಿನ್ಫಾಸ್ಟ್ನ ಎಂಪಿವಿಗಳು ಪ್ರಮುಖ ಆಕರ್ಷಣೆಯಾಗಿವೆ.
ವಾಡಿ | ಖಾರದಪುಡಿ ಎರಚಿ 5 ಲಕ್ಷ ರೂ. ದರೋಡೆ
ವಾಡಿ: ಬೈಕ್ನಲ್ಲಿ ಸಾಗುತ್ತಿದ್ದ ಇಬ್ಬರ ಮೇಲೆ ಮುಸುಕುಧಾರಿಗಳು ಖಾರದ ಪುಡಿ ಎರಚಿ 5 ಲಕ್ಷ ರೂ. ಹಣ ದೋಚಿದ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಬೆಳಿಗ್ಗೆ ನಡೆದಿದೆ. ಅಲಹಳ್ಳಿಯ ಜ್ಯೋತಿ ವೈನ್ಶಾಪ್ ಮ್ಯಾನೇಜರ್ ಬಾಪರೆಡ್ಡಿ ನಾಚವಾರ ಹಾಗೂ ಯಂಕಪ್ಪ ಕಟ್ಟಿಮನಿ ಅವರು 5 ಲಕ್ಷ ರೂ. ಹಣವನ್ನು ತೆಗೆದುಕೊಂಡು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಲಾಡ್ಲಾಪುರ ಹತ್ತಿರ ಮುಸುಕುಧಾರಿಗಳಿಬ್ಬರು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ಚಾಕು ತೋರಿಸಿ ಹಣ ಇರುವ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಹಿತಿ ಪಡೆದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅದ್ದೂರು ಶ್ರೀನಿವಾಸಲು, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಪಿ.ಎಸ್. ಹೊನ್ನಂಜೆಕರ, ವಾಡಿ ಪಿಎಸ್ಐ ತಿರುಮಲೇಶ ಕೆ ಹಾಗೂ ರೇಣುಕಾ ಉಡಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾನು ಮೂರು ಬಾರಿ ಸೋತಿದ್ರು, 2028ಕ್ಕೆ ಕುಮಾರಣ್ಣನ ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ: ನಿಖಿಲ್ ಕುಮಾರಸ್ವಾಮಿ
ಹಾಸನ : ನಾನು ಮೂರು ಬಾರಿ ಸೋತಿದ್ದರು ಕೂಡ ಧೃತಿಗೆಡುವುದಿಲ್ಲ. 2028ಕ್ಕೆ ಕುಮಾರಣ್ಣನ ಈ ರಾಜ್ಯದ ಮುಖ್ಯಮಂತ್ರಿ ಮಾಡೋದೆ ನಮ್ಮ ಗುರಿ. ಪಕ್ಷಕ್ಕಾಗಿ ನಾನು ಯಾವ ತ್ಯಾಗಕ್ಕೂ ನಾನು ಸಿದ್ದನಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹಾಸನದ ಜನತಾ ಸಮಾವೇಶದಲ್ಲಿ ಗುಡುಗಿದರು. ಹಾಸನದ ಬಿ.ಜಿ.ಎಸ್.ಕೆ ಬಡಾವಣೆಯಲ್ಲಿ ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಅಂಗಾವಗಿ ಆಯೋಜಿಸಿದ್ದ ಜನತಾ ಸಮಾವೇಶದಲ್ಲಿ
ಮದುವೆಯಾಗಿ ವರ್ಷ ತುಂಬುವುದರೊಳಗೆ ಸಿಹಿ ಸುದ್ದಿ ಹಂಚಿಕೊಂಡ ಡಾಲಿ ಧನಂಜಯ್!
ಕನ್ನಡ ನಟ ಧನಂಜಯ್ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಡಾಲಿ ಧನಂಜಯ್ ತಂದೆ ಆಗುತ್ತಿದ್ದಾರೆ. ಇದು ಖಂಡಿತ ಗಾಸಿಪ್ ಅಲ್ಲ! ಸ್ವತಃ ಧನಂಜಯ್ ರಿವೀಲ್ ಮಾಡಿದ್ದಾರೆ ನೋಡಿ…
ಸೌದಿ ಅರೇಬಿಯಾ| ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಅಕ್ಬರ್ ಅಲಿ ಇಬ್ರಾಹಿಂ ಮರು ಆಯ್ಕೆ
ಜುಬೈಲ್: ಸೌದಿ ಅರೇಬಿಯಾದ ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್ (AQWA KSA) ಇದರ 40ನೇ ವಾರ್ಷಿಕ ಮಹಾಸಭೆಯು ಜುಬೈಲ್ ನ ಸಾಫ್ರೋನ್ ರೆಸ್ಟೋರೆಂಟ್ ನಲ್ಲಿ ಶುಕ್ರವಾರ ನಡೆಯಿತು. ಸಂಸ್ಥೆಯ ಅಧ್ಯಕ್ಷರಾದ ಅಕ್ಬರ್ ಅಲಿ ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಮಾಸ್ಟರ್ ಉಮ್ಮರ್ ಅಬ್ದುಲ್ಲಾ ಮತ್ತು ಮೊಹಮ್ಮದ್ ಅಮಾದ್ ಅವರು ಕಿರಾಅತ್ ಪಠಿಸುವ ಮೂಲಕ ವಾರ್ಷಿಕ ಮಹಾಸಭೆಯನ್ನು ಆರಂಭಿಸಲಾಯಿತು. ಸ್ವಾಗತ ಮತ್ತು ಆಸನ ಸ್ವೀಕಾರ ಕಾರ್ಯಕ್ರಮವನ್ನು ಅಬ್ದುಲ್ ಕರೀಮ್ ಅವರು ನೆರವೇರಿಸಿ ಕೊಟ್ಟರು. ಸಂಸ್ಥೆಯ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಎಂ.ಇಸ್ಮಾಯಿಲ್ ಅಬ್ದುಲ್ಲಾ ವಾಚಿಸಿದರು. ಸಂಸ್ಥೆಯ ವಾರ್ಷಿಕ ಆಯವ್ಯಯವನ್ನು ಶಮೀಮ್ ಮೊಹಮ್ಮದ್ ಮಂಡಿಸಿದರು. 2026-27ನೇ ಸಾಲಿನ ಪದಾಧಿಕಾರಿಗಳನ್ನು ನೇಮಿಸಲು ಚುನಾವಣಾಧಿಕಾರಿಯಾಗಿ ಅಶ್ರಫ್ ಬೆಂಗಳೂರು ಅವರು ಸಹಕರಿಸಿದರು. ಈ ಸಂದರ್ಭದಲ್ಲಿ ಮೂಳೂರು ಜಮಾತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಅನ್ವರ್ ಹುಸೇನ್ ಅವರನ್ನು ಸನ್ಮಾನಿಸಲಾಯಿತು. ಈ ಬಾರಿಯ ಇಫ್ತಾರ್ ಕೂಟವನ್ನು ಫೆ.27ರಂದು ಜುಬೈಲ್ ನಲ್ಲಿ ಮಾಡುವುದೆಂದು ತೀರ್ಮಾನಿಸಲಾಯಿತು. ಫ್ಯಾಮಿಲಿ ಗೆಟ್ ಟುಗೆದರ್ ಮೇ 7ರಂದು ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಿ, ಇದರ ಸಂಪೂರ್ಣ ಉಸ್ತುವಾರಿ ಯನ್ನು ಅಶಿಲ್ ಅಕ್ಬರ್ ಮತ್ತು ಮೊಹಮ್ಮದ್ ಹುಸೇನ್ ತೀರ್ಥಹಳ್ಳಿ ಅವರಿಗೆ ನೀಡಲಾಯಿತು. ವಾರ್ಷಿಕ ಮಹಾಸಭೆಯ ಕಾರ್ಯಕ್ರಮದ ನಿರೂಪಣೆಯನ್ನು ಅಬ್ದುಲ್ ಕರೀಮ್ ನೆರವೇರಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇಸ್ಮಾಯಿಲ್ ಅಬ್ದುಲ್ಲಾ ವಂದಿಸಿದರು. ನೂತನ ಪದಾಧಿಕಾರಿಗಳು:- ಅಧ್ಯಕ್ಷರಾಗಿ ಅಕ್ಬರ್ ಅಲಿ ಇಬ್ರಾಹಿಂ, ಉಪಾಧ್ಯಕ್ಷರಾಗಿ ಜುಬೈಲ್ ವಲಯ-ಅಮಾನ್ ಮುರಾದ್ ಅಲಿ, ದಮ್ಮಾಮ್ ಮತ್ತು ಕೋಬರ್ ವಲಯ -ತಸ್ಮೀರ್ ತಾಜು, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಇಸ್ಮಾಯಿಲ್ ಅಬ್ದುಲ್ಲಾ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ವಹಾಬ್, ಕೋಶಾಧಿಕಾರಿಯಾಗಿ ಶಮೀಮ್ ಮೊಹಮ್ಮದ್, ಜೊತೆ ಕೋಶಾಧಿಕಾರಿಯಾಗಿ ಸದರುದ್ದೀನ್ ಆಜಬ್ಬ, ಲೆಕ್ಕ ಪರಿಶೋಧಕರಾಗಿ ಮೊಹಮ್ಮದ್ ಅಲಿ, ಗೌರವ ಅಧ್ಯಕ್ಷರಾಗಿ ಮೊಹಮ್ಮದ್ ಸಿದ್ದೀಕ್ ಶಂಶುದ್ದೀನ್, ಹಿರಿಯ ಸಲಹೆಗಾರರಾಗಿ ಅಬ್ದುಲ್ ಕರೀಮ್, ಅಬ್ದುಲ್ ಅಂಖಾಲಿಕ್, ಅಬ್ದುಲ್ ಅಝೀಝ್, ಹಾರಿಸ್ ಯೂಸುಫ್, ಸಂಸ್ಥೆಯ ಊರಿನ ಪ್ರತಿನಿಧಿಯಾಗಿ ಮುರಾದ್ ಅಲಿ ಅವರನ್ನು ನೇಮಕ ಮಾಡಲಾಯಿತು.
ಸ್ತಬ್ಧವಾಗಿದೆ ಕಾಡಿನ ಹಾದಿ: ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ, ಪ್ರವಾಸೋದ್ಯಮ ನಂಬಿದ್ದವರ ಬದುಕು ಅಯೋಮಯ!
ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಸ್ಥಗಿತಗೊಂಡಿದೆ. ಸ್ಥಳೀಯ ರೈತರ ಮೇಲೆ ಹುಲಿ ಹಾಗೂ ಕಾಡು ಪ್ರಾಣಿಗಳ ದಾಳಿಯ ಹಿನ್ನೆಲೆಯಲ್ಲಿ ಸಫಾರಿ ಸ್ಥಗಿತಗೊಳಿಸಲಾಗಿದೆ. ಇದರಿಂದ ಪ್ರವಾಸೋದ್ಯಮ ನಂಬಿದ್ದವರ ಬದುಕು ಅಯೋಮಯವಾಗಿದೆ. ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಇದೀಗ ಸಫಾರಿ ಸ್ಥಗಿತಗೊಂಡ ಪರಿಣಾಮ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಆದಷ್ಟು ಶೀಘ್ರದಲ್ಲಿ ಸಫಾರಿ ಆರಂಭಿಸಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ. ಜೊತೆಗೆ ಕಾಡು ಪ್ರಾಣಿಗಳಿಂದ ಆಗುವ ದಾಳಿಯಿಂದ ರಕ್ಷಣೆ ನೀಡಿ ಎಂಬ ಬೇಡಿಕೆ ಸ್ಥಳೀಯ ರೈತರದ್ದು.
ಅತ್ಯಾಚಾರವನ್ನು ಸಣ್ಣ ಘಟನೆ ಎಂದ ರಾಜಶೇಖರ ಹಿಟ್ನಾಳ್ ವಿರುದ್ಧ ಆಕ್ರೋಶ: ಉಚ್ಚಾಟನೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಇವತ್ತು ಕರ್ನಾಟಕವೇ ದೇಶದ ಮುಂದೆ ತಲೆತಗ್ಗಿಸುವ ಕೆಲಸವನ್ನು ರಾಜಶೇಖರ ಹಿಟ್ನಾಳ್ ಅವರು ಮಾಡಿದ್ದಾರೆ. ಮೊದಲು ಅವರು ಕ್ಷಮೆ ಕೇಳಬೇಕು. ಕರ್ನಾಟಕದ ಗೌರವ ಹರಾಜಾಗಿದೆ; ಕಾಂಗ್ರೆಸ್ ಪಕ್ಷ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು. ಅವರನ್ನು ಉಚ್ಚಾಟಿಸಿದರೆ ನಿಮ್ಮ ಪಕ್ಷ ಮಹಿಳೆಯರಿಗೆ ಗೌರವ ಕೊಡುತ್ತದೆ; ಇಂಥ ವಿಷಯದಲ್ಲಿ ಗಂಭೀರತೆ ಹೊಂದಿದೆ ಎಂದು ತಿಳಿಸಬಹುದು. ಇಲ್ಲವಾದರೆ, ನಿಮ್ಮ ಯೋಗ್ಯತೆ ಅಷ್ಟೇ ಎಂಬುದನ್ನು ನಾವು ಹೇಳಲೇಬೇಕಾಗುತ್ತದೆ ಎಂದು ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
Siddaramaiah: ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕಿದ್ರಾ ? : ಸಿದ್ದರಾಮಯ್ಯ
ಹುಬ್ಬಳ್ಳಿ: ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ.ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ
ತಿರುವನಂತಪುರಂ: ಒಂದು ವೇಳೆ ಕೇರಳದಲ್ಲಿ ಬಿಜೆಪಿಯೇನಾದರೂ ಅಧಿಕಾರಕ್ಕೆ ಬಂದರೆ, ಶಬರಿಮಲೆ ದೇವಸ್ಥಾನಕ್ಕೆ ಆಗಿರುವ ಚಿನ್ನದ ನಷ್ಟವನ್ನು ಪರಿಶೀಲಿಸಲಾಗುವುದು ಹಾಗೂ ಇದಕ್ಕೆ ಜವಾಬ್ದಾರರಾಗಿರುವವರನ್ನು ಜೈಲಿಗೆ ಕಳಿಸಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಹಾಗೂ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಲು ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಆಗಮಿಸಿದ್ದರು. ಬಳಿಕ, ತಿರುವನಂತಪುರಂನಲ್ಲಿ ಬಿಜೆಪಿ-ಎನ್ಡಿಎ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಒಂದು ವೇಳೆ ಬಿಜೆಪಿಯೇನಾದರೂ ಕೇರಳದಲ್ಲಿ ಸರಕಾರ ರಚಿಸಿದರೆ, ಶಬರಿಮಲೆ ದೇವಸ್ಥಾನದ ಚಿನ್ನ ನಷ್ಟದ ಕುರಿತು ಪರಿಶೀಲಿಸಲಾಗುವುದು ಹಾಗೂ ಆರೋಪಿಗಳನ್ನು ಜೈಲಿಗೆ ಹಾಕಲಾಗುವುದು. ಇದು ಮೋದಿಯ ಗ್ಯಾರಂಟಿ” ಎಂದು ಭರವಸೆ ನೀಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಪಕ್ಷವು ಮುಸ್ಲಿಂ ಲೀಗ್ ಮಾವೋಯಿಸ್ಟ್ ಕಾಂಗ್ರೆಸ್ ಆಗಿದೆ” ಎಂದು ಲೇವಡಿ ಮಾಡಿದ್ದಾರೆ. ತಿರುವನಂತಪುರಂ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿರುವ ಜಯವನ್ನು ಉಲ್ಲೇಖಿಸಿದ ಅವರು, “ಈ ವಿಜಯವು ಕೇರಳವನ್ನು ವಿಕಸಿತ ಕೇರಳವನ್ನಾಗಿಸುವ ನಿರ್ಣಯವಾಗಿದೆ. ಈ ವಿಜಯವು ಕೇರಳವನ್ನು ಭ್ರಷ್ಟಾಚಾರ, ಎಲ್ಡಿಎಫ್, ಯುಡಿಎಫ್ ನಿಂದ ಮುಕ್ತಗೊಳಿಸುವ ವಿಜಯವಾಗಿದೆ” ಎಂದು ಅವರು ಬಣ್ಣಿಸಿದ್ದಾರೆ.
Iran vs Israel: ಯುದ್ಧ ನಡೆದರೆ ಗೆಲ್ಲುವವರು ಯಾರು? ಇರಾನ್-ಇಸ್ರೇಲ್ ರಕ್ಷಣಾ ಶಕ್ತಿ-ಸಾಮರ್ಥ್ಯ ಎಷ್ಟಿದೆ?
ಎರಡು ವರ್ಷಗಳ ಹಿಂದೆ ಅಮೆರಿಕದ ಮಿತ್ರ ರಾಷ್ಟ್ರಇಸ್ರೇಲ್ ಹಾಗೂ ಪ್ಯಾಲೆಸ್ಟೀನಿಯನ್ ಇರಾನ್ ಬೆಂಬಲಿತ ಉಗ್ರಗಾಮಿ ಗುಂಪು ಹಮಾಸ್ ಮಧ್ಯ ಯುದ್ಧ ಆರಂಭವಾದ ಬಳಿಕ ಇರಾನ್ ಮತ್ತು ಇಸ್ರೇಲ್ ದೇಶಗಳ ನಡುವೆ ಸಂಘರ್ಷ, ಉದ್ವಿಘ್ನತೆ ಹೆಚ್ಚಾಯಿತು. ಅಂದಿನಿಂದ ಯುದ್ಧದ ಭೀತಿ ಮುಂದುವರಿದಿದೆ. ಯಾವುದೇ ಕ್ಷಣದಲ್ಲಾದರೂ ಯುದ್ಧ ನಡೆಯುವ ಸ್ಥಿತಿ ಅಲ್ಲಿದೆ. ಒಂದು ವೇಳೆ ಯುದ್ಧ ನಡೆದರೆ ಯಾವ ದೇಶ
ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿ.ಎಂ.ಸಿದ್ದರಾಮಯ್ಯ
►ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು, ಇದಕ್ಕಾಗಿ ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ►ಹುಬ್ಬಳ್ಳಿ: 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ
ಘಟನೆಗೆ ಹುಡುಗರ ರೀಲ್ಸ್ ಚಿತ್ರೀಕರಣ ಕಾರಣ : ಎಸ್ಪಿ ಸುಮನ್ ಡಿ. ಫನ್ನೆಕರ್
ಟೆನಿಸ್ ರಂಗದಲ್ಲಿ ಯಾರೂ ಮಾಡಿರದ ದಾಖಲೆ ಮಾಡಿದ ನೊವಾಕ್ ಜೊಕೊವಿಕ್
ಸರ್ಬಿಯಾದ ಟೆನಿಸ್ ದಿಗ್ಗಜ ನೊವಾಕ್ ಜೊಕೊವಿಕ್ ಅವರು ಆಸ್ಟ್ರೇಲಿಯನ್ ಓಪನ್ನಲ್ಲಿ 400ನೇ ಗ್ರ್ಯಾಂಡ್ ಸ್ಲಾಂ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಟೆನಿಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರರಾಗಿದ್ದಾರೆ. ಜೊಕೊವಿಕ್ ಅವರು ಈವರೆಗೆ 430ಕ್ಕೂ ಹೆಚ್ಚು ಗ್ರ್ಯಾಂಡ್ ಸ್ಲಾಂ ಪಂದ್ಯಗಳನ್ನು ಆಡಿದ್ದಾರೆ. ನೆದರ್ಲೆಂಡಿನ ಬೊಟಿಕ್ ವ್ಯಾನ್ ಡಿ ಝಾಂಡ್ ಕಲ್ಪ್ ವಿರುದ್ಧ ಅವರು ಈ ಮಹತ್ವದ ಗೆಲುವು ದಾಖಲಿಸಿದರು.
ರೆಂಜಾಡಿ| ಸೇತುವೆ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ
ಕೊಣಾಜೆ: ಬೆಳ್ಮ ಗ್ರಾಮದ ರೆಂಜಾಡಿಯಲ್ಲಿರುವ ಸೇತುವೆ ಗ್ರಾಮದ ಪ್ರಮುಖ ಸಂಪರ್ಕ ಸೇತುವೆಯಾಗಿದೆ. ತಂದೆ ಯು.ಟಿ. ಫರೀದ್ ಅವರು ಶಾಸಕರಾಗಿದ್ದಾಗ ಇಲ್ಲಿ ಸೇತುವೆ ನಿರ್ಮಿಸಿ ದ್ವೀಪದಂತಹ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಿದ್ದರು. ಇದೀಗ 50 ವರ್ಷದ ಶಿಥಿಲಾವಸ್ಥೆಯಲ್ಲಿದ್ದ ಈ ಸೇತುವೆಯನ್ನು ಪುನರ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದು ಶಿಲಾನ್ಯಾಸವೂ ನಡೆದಿದೆ. ಆದಷ್ಡು ಶೀಘ್ರದಲ್ಲಿ ಸುಸಜ್ಜಿತ ಸೇತುವೆ ಮುಂದಿನ ಭವಿಷ್ಯಕ್ಕೆ ಪೂರಕ ವಾಗಿ ನಿರ್ಮಾಣವಾಗಲಿ ಎಂದು ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ಅವರು ಬೆಳ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ರೆಂಜಾಡಿ ಎಂಬಲ್ಲಿ ಒಂದು ಕೋಟಿ ಐವತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಯಾವುದೇ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಹಕಾರ ಇದ್ದರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು. ಮಸೀದಿಯ ಖತೀಬರಾದ ತಾಜುದ್ದೀನ್ ರಝಾ ಅಮ್ಜದಿ ಅವರು ದುವಾ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮೂಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಬೆಳ್ಮ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಹೇಮಾವತಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್ ಗಟ್ಟಿ , ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಡಿ ಬೋಳಿಯಾರ್, ಮಾಜಿ ಅಧ್ಯಕ್ಷ ಯೂಸೂಫ್, ಬೆಳ್ಮ ಪಂಚಾಯತ್ ನ ಸದಸ್ಯರಾದ ಸತ್ತಾರ್, ಯೂಸೂಪ್ , ಇಬ್ರಾಹಿಂ, ಹನೀಫ್, ಇಕ್ಭಾಲ್, ರಝಾಕ್ , ಕೋರ್ದಬ್ಬು ದೇವಸ್ಥಾನದ ಗುರಿಕಾರರು ನಾಗಪ್ಪ ,ಮುಖಂಡರಾದ ಎನ್ ಎಸ್ ನಾಸೀರ್ ನಡುಪದವು , ಹಸನ್ ಕಾನಕೆರೆ , ರವಿರಾಜ್ , ಕಬೀರ್, ರೆಂಜಾಡಿ ಮಸೀದಿಯ ಅಧ್ಯಕ್ಷರಾದ ಹನೀಫ್ , ಗುತ್ತಿಗೆದಾರ ಮಹಮ್ಮದ್ ಸರ್ಫ್ರಾಝ್ ಶಾಲಿಮಾರ್ ಮೊದಲಾದವರು ಉಪಸ್ಥಿತರಿದ್ದರು.
ಕೊಹ್ಲಿ-ರೋಹಿತ್ ಕಾರಣಕ್ಕೆ ಬಿಸಿಸಿಐ ವಾರ್ಷಿಕ ಗುತ್ತಿಗೆ ಪದ್ಧತಿಯಲ್ಲಿ ಮಹತ್ವದ ಬದಲಾವಣೆ, ಏನಿದು ಚೇಂಜ್?
ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಟೆಸ್ಟ್ ಮತ್ತು ಟಿ20 ಕ್ರಿಕೆಟ್ನಿಂದ ನಿವೃತ್ತರಾಗಿ, ಕೇವಲ ಏಕದಿನ ಕ್ರಿಕೆಟ್ಗೆ ಸೀಮಿತವಾಗಿರುವುದರಿಂದ ಬಿಸಿಸಿಐ ತನ್ನ ವಾರ್ಷಿಕ ಗುತ್ತಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ವಾರ್ಷಿಕ 7 ಕೋಟಿ ರೂ. ವೇತನ ನೀಡುವ ಅತ್ಯುನ್ನತ 'ಎ-ಪ್ಲಸ್' ದರ್ಜೆಯನ್ನು ರದ್ದುಗೊಳಿಸಲು ಮಂಡಳಿ ನಿರ್ಧರಿಸಿದೆ. ಈ ದರ್ಜೆಗೆ ಸೇರಲು ಆಟಗಾರರು ಮೂರೂ ಮಾದರಿಯ ಕ್ರಿಕೆಟ್ ಆಡುವುದು ಕಡ್ಡಾಯವಾಗಿದೆ.
ರಾಯಚೂರು | ಬೈಕ್ ವಿಚಾರಕ್ಕೆ ಜಗಳ; ಯುವಕನ ಹತ್ಯೆ : ಆರೋಪಿಗಳ ಬಂಧನ
ರಾಯಚೂರು: ಬೈಕ್ ವಿಚಾರಕ್ಕೆ ಉಂಟಾದ ಗಲಾಟೆಯಿಂದ ಸ್ನೇಹಿತರೇ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಮಾವಿನ ಕೆರೆ ಬಳಿಯ ದತಾರ್ ಲೇಔಟ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ರಾತ್ರಿ ಸುಮಾರು 10.30ರ ವೇಳೆಗೆ ಜಹಿರಾಬಾದ್ ಬಡಾವಣೆಯ ನಿವಾಸಿಗಳಾದ ರಾಜು ಹಾಗೂ ಬಸವರಾಜ ಎಂಬ ಯುವಕರು, ಅದೇ ಬಡಾವಣೆಯ ನಿವಾಸಿ ವಿಶಾಲ್ (24) ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಆರೋಪಿ ರಾಜು, ವಿಶಾಲ್ ಬಳಿ ಬೈಕ್ ಕೇಳಿದ್ದು, ವಿಶಾಲ್ ನೀಡಲು ನಿರಾಕರಿಸಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಶುಕ್ರವಾರ ರಾತ್ರಿ ರಾಜು, ವಿಶಾಲ್ಗೆ ಮಾವಿನ ಕೆರೆ ಬಳಿ ಬರಲು ಕರೆಸಿಕೊಂಡಿದ್ದಾನೆ. ಆ ಸ್ಥಳದಲ್ಲಿ ರಾಜು ಹಾಗೂ ಬಸವರಾಜ ಸೇರಿಕೊಂಡು ವಿಶಾಲ್ ಜೊತೆ ಜಗಳವಾಡಿದ್ದು, ಮಾತಿನ ಚಕಮಕಿ ತೀವ್ರಗೊಂಡಿದೆ. ಈ ವೇಳೆ ರಾಜು ವಿಶಾಲ್ನ ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಚಾಕುವಿನಿಂದ ಮನಬಂದಂತೆ ಇರಿದ ಪರಿಣಾಮ ವಿಶಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳ ಬಂಧನ : ಘಟನೆ ಕುರಿತು ಮೃತನ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ರಾಜು ಹಾಗೂ ಬಸವರಾಜರನ್ನು ಪೊಲೀಸರು ಬಂಧಿಸಿದ್ದಾರೆ. ಮುಂದಿನ ಕ್ರಮವಾಗಿ ಆರೋಪಿಗಳನ್ನು ನ್ಯಾಯಾಂಗಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ರಾತ್ರಿ ಗಸ್ತು ವೇಳೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆಯ ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು. ನಂತರ ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶಾಂತವೀರ, ಸಿಪಿಐ ಉಮೇಶ್ ಕಾಂಬ್ಳೆ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿದ್ದರು.
ಭದ್ರತಾ ಕಾರಣಗಳನ್ನು ಮುಂದಿಟ್ಟು ಭಾರತದಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದ್ದರಿಂದ, 2026ರ ಟಿ20 ವಿಶ್ವಕಪ್ನಿಂದ ಹೊರಬಿದ್ದಿದೆ. ಈ ಅವಕಾಶವನ್ನು ಸ್ಕಾಟ್ಲೆಂಡ್ ಪಡೆದುಕೊಂಡಿದೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟೂರ್ನಿಗೆ ಐಸಿಸಿ ಬಾಂಗ್ಲಾದೇಶದ ವಾದವನ್ನು ಒಪ್ಪದೆ, ತಂಡಕ್ಕೆ ಮುಜುಗರ ತಂದಿದೆ.
'ತೊಂದರೆಗೊಳಗಾದ ಪ್ರದೇಶಗಳು' ಎಂದು ಗೊತ್ತುಪಡಿಸುವ ಕಾಯ್ದೆ ಅಂಗೀಕರಿಸಲು ರಾಜಸ್ಥಾನ ನಿರ್ಧಾರ: ಏನಿದು ಕಾಯ್ದೆ?
ರಾಜಸ್ಥಾನ ಸರ್ಕಾರವು ಜನಸಂಖ್ಯಾ ಅಸಮತೋಲನ ಮತ್ತು ಅನುಚಿತ ಸಮೂಹೀಕರಣ ಎಂದು ಕರೆಯುವುದನ್ನು ತಡೆಯಲು ಕೆಲವು ವಲಯಗಳನ್ನು ತೊಂದರೆಗೊಳಗಾದ ಪ್ರದೇಶಗಳು ಎಂದು ಗೊತ್ತುಪಡಿಸುವ ಮಸೂದೆಯನ್ನು ಪರಿಚಯಿಸಲು ನಿರ್ಧರಿಸಿದೆ. ಮಸೂದೆ ಇನ್ನೂ ಸಾರ್ವಜನಿಕವಾಗದೇ ಇದ್ದರೂ, ಇದನ್ನು ಈಗಾಗಲೇ ಗುಜರಾತ್ನಲ್ಲಿ ಮೂರು ದಶಕಗಳಿಂದ ಜಾರಿಯಲ್ಲಿರುವ ಗುಜರಾತ್ ಸ್ಥಿರಾಸ್ತಿ ವರ್ಗಾವಣೆ ನಿಷೇಧ ಮತ್ತು ತೊಂದರೆಗೊಳಗಾದ ಪ್ರದೇಶಗಳಲ್ಲಿನ ಆವರಣದಿಂದ ಬಾಡಿಗೆದಾರರನ್ನು ಹೊರಹಾಕುವುದರಿಂದ ರಕ್ಷಣೆಗಾಗಿ ನಿಬಂಧನೆ ಕಾಯ್ದೆ, 1991 ರೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಕ್ರಮವಾಗಿ ರಾಜಸ್ಥಾನ ಕಾನೂನು ಸಚಿವರು ಪ್ರಸ್ತಾವಿತ ರಾಜಸ್ಥಾನ ಸ್ಥಿರಾಸ್ತಿ ವರ್ಗಾವಣೆ ನಿಷೇಧ ಮತ್ತು ತೊಂದರೆಗೊಳಗಾದ ಪ್ರದೇಶಗಳಲ್ಲಿನ ಆವರಣದಿಂದ ಬಾಡಿಗೆದಾರರ ರಕ್ಷಣೆಗಾಗಿ ನಿಬಂಧನೆ ಮಸೂದೆ, 2026 ಅನ್ನು ರೂಪಿಸಿದ್ದಾರೆ. ಆದಾಗ್ಯೂ, ಕಾನೂನು ತಜ್ಞರು ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತರು ಗುಜರಾತ್ ಶಾಸನದ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಬಹಳ ಹಿಂದಿನಿಂದಲೂ ಕಳವಳ ವ್ಯಕ್ತಪಡಿಸಿದ್ದಾರೆ. ಗುಜರಾತ್ ಹೈಕೋರ್ಟ್ ಕೂಡ ಕಾನೂನಿನಡಿಯಲ್ಲಿ ಕಾರ್ಯಾಂಗದ ಅತಿಕ್ರಮಣವನ್ನು ತಡೆಯಲು ಆಗಾಗ್ಗೆ ಮಧ್ಯಪ್ರವೇಶಿಸಿದ್ದು, ಖಾಸಗಿ ಆಸ್ತಿ ವಹಿವಾಟುಗಳಲ್ಲಿ ಹಸ್ತಕ್ಷೇಪ ಮಾಡುವ ರಾಜ್ಯದ ಅಧಿಕಾರದ ವ್ಯಾಪ್ತಿಯನ್ನು ಸಂಕುಚಿತಗೊಳಿಸಿದೆ. ►ಗುಜರಾತ್ ತೊಂದರೆಗೊಳಗಾದ ಪ್ರದೇಶಗಳ ಕಾಯ್ದೆ ಎಂದರೇನು? ಕೋಮು ಗಲಭೆಗಳ ನಂತರ 1991 ರಲ್ಲಿ ಜಾರಿಗೆ ತರಲಾದ ಗುಜರಾತ್ ತೊಂದರೆಗೊಳಗಾದ ಪ್ರದೇಶಗಳ ಕಾಯ್ದೆಯನ್ನು ಮೂಲತಃ ಸಂಕಷ್ಟದಲ್ಲಿನ ಮಾರಾಟ ವನ್ನು ತಡೆಗಟ್ಟಲು ರೂಪಿಸಲಾಯಿತು. ಇದು ಸಾಮಾನ್ಯವಾಗಿ ಕೋಮು ಗಲಭೆಯ ಸಮಯದಲ್ಲಿ ಹಿಂಸಾಚಾರ ಅಥವಾ ಬೆದರಿಕೆಯ ಭಯದಿಂದಾಗಿ ಒಬ್ಬ ವ್ಯಕ್ತಿಯು ಮಾರುಕಟ್ಟೆ ದರಕ್ಕಿಂತ ಕಡಿಮೆ ಮೌಲ್ಯಕ್ಕೆ ತನ್ನ ಆಸ್ತಿಯನ್ನು ಮಾರಾಟ ಮಾಡಬೇಕಾಗಿ ಬಂದಾಗ ಸಂಭವಿಸುತ್ತದೆ. ಕಾಯ್ದೆಯಡಿಯಲ್ಲಿ ಕೋಮು ಗಲಭೆ ಅಥವಾ ಗುಂಪು ಗಲಭೆಯ ಇತಿಹಾಸದಿಂದಾಗಿ ರಾಜ್ಯ ಸರ್ಕಾರವು ನಿರ್ದಿಷ್ಟ ಪ್ರದೇಶವನ್ನು ತೊಂದರೆಗೊಳಗಾದ ಪ್ರದೇಶ ಎಂದು ಘೋಷಿಸಬಹುದು. ಒಂದು ಪ್ರದೇಶಕ್ಕೆ ಅಧಿಸೂಚನೆ ಹೊರಡಿಸಿದ ನಂತರ, ಆ ವಲಯದಲ್ಲಿ ಸ್ಥಿರ ಆಸ್ತಿ - ಮನೆಗಳು, ಅಂಗಡಿಗಳು ಅಥವಾ ಭೂಮಿ ವರ್ಗಾವಣೆಗೆ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಅಗತ್ಯವಿರುತ್ತದೆ. ಜಿಲ್ಲಾಧಿಕಾರಿಯ ಅನುಮೋದನೆಯಿಲ್ಲದೆ, ಯಾವುದೇ ಮಾರಾಟ ಅಥವಾ ವರ್ಗಾವಣೆಯನ್ನು ಅನೂರ್ಜಿತವೆಂದು ಪರಿಗಣಿಸಲಾಗುತ್ತದೆ. ಮಾರಾಟವು ಒಪ್ಪಿಗೆಯಿಂದ ಕೂಡಿದೆ, ಬಲವಂತದಿಂದ ನಡೆಸಲಾಗುತ್ತಿಲ್ಲ ಎಂದು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಔಪಚಾರಿಕ ವಿಚಾರಣೆಯನ್ನು ನಡೆಸಬೇಕು. ದುರ್ಬಲ ಜನರು ತಮ್ಮ ಮನೆಗಳನ್ನು ಮಾರಾಟ ಮಾಡುವಂತೆ ಒತ್ತಾಯಿಸುವುದನ್ನು ತಡೆಯುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ ಎಂದು ಹೇಳುತ್ತದೆ. ಆದಾಗ್ಯೂ, ತಜ್ಞರು ಇದು ವಾಸ್ತವವಾಗಿ ಸರ್ಕಾರಕ್ಕೆ ಅವರ ಹಿನ್ನೆಲೆಯ ಆಧಾರದ ಮೇಲೆ ಯಾರು ಎಲ್ಲಿ ವಾಸಿಸುತ್ತಾರೆ ಎಂಬುದನ್ನು ನಿಯಂತ್ರಿಸುವ ಅಧಿಕಾರವನ್ನು ನೀಡುತ್ತದೆ ಎಂದು ಆತಂಕ ವ್ಯಕ್ತಪಡಿಸುತ್ತಾರೆ. ನಿರ್ದಿಷ್ಟ ಪ್ರದೇಶಗಳಲ್ಲಿ ಆಸ್ತಿಯನ್ನು ಖರೀದಿಸಲು ಯಾರಿಗೆ ಅವಕಾಶವಿದೆ ಎಂಬುದನ್ನು ನಿರ್ಧರಿಸುವ ಮೂಲಕ, ರಾಜ್ಯವು ವಿವಿಧ ಸಮುದಾಯಗಳು ಸ್ವಾಭಾವಿಕವಾಗಿ ಒಟ್ಟಿಗೆ ವಾಸಿಸುವುದನ್ನು ಮತ್ತು ಬೆರೆಯುವುದನ್ನು ತಡೆಯುತ್ತದೆ. ಇದು ಭಾರತದಲ್ಲಿ ಸಂವಿಧಾನದ ವಿಧಿ 19(1)(e)- ಪ್ರತಿಯೊಬ್ಬ ನಾಗರಿಕನು ದೇಶದಲ್ಲಿ ಎಲ್ಲಿಯಾದರೂ ವಾಸಿಸುವ ಮತ್ತು ನೆಲೆಸುವ ಹಕ್ಕು, ವಿಧಿ15- ಧರ್ಮ, ಜನಾಂಗ, ಜಾತಿ ಲಿಂಗ ಮತ್ತು ಹುಟ್ಟಿದ ಸ್ಥಳದ ಆಧಾರದ ಮೇಲೆ ರಾಜ್ಯವು ಜನರ ವಿರುದ್ಧ ತಾರತಮ್ಯ ಮಾಡುವಂತಿಲ್ಲ ಎಂಬ ನಿಯಮವನ್ನು ಉಲ್ಲಂಘಿಸುತ್ತದೆ ಎಂದು ವಿಮರ್ಶಕರು ವಾದಿಸುತ್ತಾರೆ. ►ಕಾನೂನು ಸವಾಲುಗಳು ಗುಜರಾತ್ ಹೈಕೋರ್ಟ್ನಲ್ಲಿ ಜನರು ಈ ಕಾನೂನನ್ನು ಪ್ರಶ್ನಿಸಿದ್ದಾರೆ. ಕೆಲವು ವರ್ಷಗಳಿಂದ ಅಂತಿಮ ನಿರ್ಧಾರಕ್ಕಾಗಿ ಕಾಯುತ್ತಿರುವ ಎರಡು ಪ್ರಮುಖ ಕಾನೂನು ಅರ್ಜಿಗಳು ಇವೆ. 2021 ರ ಆರಂಭದಲ್ಲಿ ಮತ್ತು 2022 ರ ಕೊನೆಯಲ್ಲಿ ಸಲ್ಲಿಸಿದ ಈ ಅರ್ಜಿಗಳನ್ನು ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ರಾಜ್ಯದ ಅತ್ಯುನ್ನತ ಶ್ರೇಣಿಯ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾರೆ. ಸಾಮಾಜಿಕ-ಧಾರ್ಮಿಕ ಸಂಘಟನೆಯ ಗುಜರಾತ್ ವಿಭಾಗವಾದ ಜಮಿಯತ್ ಉಲಮಾ-ಎ-ಹಿಂದ್ ಗುಜರಾತ್, 2024 ರಲ್ಲಿ ಕಾಯ್ದೆಯ ಕಾರ್ಯಾಚರಣೆಗೆ ಮಧ್ಯಂತರ ತಡೆಯಾಜ್ಞೆ ಕೋರಿತು. ಈ ಕಾಯ್ದೆ ನಾಗರಿಕರಿಗೆ ಕಿರುಕುಳ ನೀಡಲು ಬಳಸಲಾಗುತ್ತಿದೆ ಎಂದು ಅದು ವಾದಿಸಿತು. ಆದಾಗ್ಯೂ, ಗುಜರಾತ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿತು. ಈ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಯಿತು, ಇದು ಮಧ್ಯಂತರ ಹಂತದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು. ಬದಲಿಗೆ ಅರ್ಜಿದಾರರು ಪ್ರಕರಣದ ಆರಂಭಿಕ ವಿಚಾರಣೆ ಮತ್ತು ಇತ್ಯರ್ಥಕ್ಕಾಗಿ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ನಿರ್ದೇಶಿಸಿತು. 2020 ರಲ್ಲಿ, ಗುಜರಾತ್ ಸರ್ಕಾರವು ಜಿಲ್ಲಾಧಿಕಾರಿಗೆ ಆಸ್ತಿ ಮಾರಾಟವನ್ನು ನಿರ್ಬಂಧಿಸಲು ಹೆಚ್ಚಿನ ಅಧಿಕಾರವನ್ನು ನೀಡಲು ಕಾನೂನನ್ನು ನವೀಕರಿಸಿತು. ಇದರಲ್ಲಿ ಅವರು ಕಾನೂನುಬದ್ಧವಾಗಿ ವ್ಯಾಖ್ಯಾನಿಸಲು ಕೆಲವು ಗೊಂದಲದ ಪದಗಳನ್ನು ಬಳಸಿದರು. ಉದಾಹರಣೆಗೆ proper clustering,ಅಂದರೆ, ಒಂದೇ ಸಮುದಾಯದ ಜನರು ಒಟ್ಟಿಗೆ ಇರುವುದನ್ನು ಖಚಿತಪಡಿಸಿಕೊಳ್ಳುವುದು. ಜನಸಂಖ್ಯಾ ಸಮತೋಲನ- ನೆರೆಹೊರೆಯಲ್ಲಿ ಧರ್ಮಗಳು ಅಥವಾ ಗುಂಪುಗಳ ಸಮತೋಲನವನ್ನು ಒಂದೇ ರೀತಿ ಇಟ್ಟುಕೊಳ್ಳುವುದು. ಧ್ರುವೀಕರಣ- ವಿಭಿನ್ನ ಗುಂಪುಗಳ ನಡುವೆ ಉದ್ವಿಗ್ನತೆಯನ್ನು ಉಂಟುಮಾಡಬಹುದಾದರೆ ಮಾರಾಟವನ್ನು ತಡೆಯುವುದು. ಅರ್ಜಿದಾರರು ಈ ಪದಗಳು ಸಮಸ್ಯಾತ್ಮಕವಾಗಿವೆ ಎಂದು ನ್ಯಾಯಾಲಯಕ್ಕೆ ಯಶಸ್ವಿಯಾಗಿ ಮನವರಿಕೆ ಮಾಡಿಕೊಟ್ಟರು. ಸರ್ಕಾರವು ಈ ನಿರ್ದಿಷ್ಟ ಹೊಸ ಅಧಿಕಾರಗಳನ್ನು ಬಳಸುವುದನ್ನು ತಡೆಯಲು ನ್ಯಾಯಾಲಯವು ಮಧ್ಯಪ್ರವೇಶಿಸಿತು. ಜನವರಿ 2021 ರಲ್ಲಿ, ಗುಜರಾತ್ ಹೈಕೋರ್ಟ್ ಈ ನಿರ್ದಿಷ್ಟ ತಿದ್ದುಪಡಿಗಳ ಕಾರ್ಯಾಚರಣೆ ತಡೆಹಿಡಿದು, ಈ ಹೊಸ, ವಿಶಾಲ ಅಧಿಕಾರಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಅಧಿಸೂಚನೆಗಳನ್ನು ಹೊರಡಿಸುವುದನ್ನು ತಡೆಯಿತು. ಮಧ್ಯಂತರ ತಡೆಯಾಜ್ಞೆ ಇಂದಿಗೂ ಮುಂದುವರೆದಿದೆ. ►ಒಪ್ಪಿಗೆ ಮತ್ತು ನ್ಯಾಯಯುತ ಮಾರುಕಟ್ಟೆ ಮೌಲ್ಯ ತೊಂದರೆಗೊಳಗಾದ ಪ್ರದೇಶಗಳ ಕಾಯ್ದೆಯ ಪ್ರಕಾರ, ಜಿಲ್ಲಾಧಿಕಾರಿ ಮತ್ತು ರಾಜ್ಯ ಸರ್ಕಾರದ ಮೇಲ್ಮನವಿಯಲ್ಲಿನ ನಿರ್ಧಾರವೇ ಅಂತಿಮ ಮತ್ತು ನಿರ್ಣಾಯಕವಾಗಿರುತ್ತದೆ. ಇದನ್ನು ಯಾವುದೇ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದಿಲ್ಲ. ಆದಾಗ್ಯೂ, ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ಹೈಕೋರ್ಟ್ಗಳು ಮೂಲಭೂತ ಹಕ್ಕುಗಳು ಅಥವಾ ನೈಸರ್ಗಿಕ ನ್ಯಾಯದ ತತ್ವಗಳನ್ನು ಉಲ್ಲಂಘಿಸುವ ಆಡಳಿತಾತ್ಮಕ ಕ್ರಮಗಳನ್ನು ಪರಿಶೀಲಿಸಲು ಅಧಿಕಾರವನ್ನು ಹೊಂದಿರುವುದರಿಂದ, ಕಾನೂನಿನ ವ್ಯಾಪ್ತಿಯನ್ನು ಮೀರಿ ಜಿಲ್ಲಾಧಿಕಾರಿಗಳು ಹೊರಡಿಸಿದ ಆದೇಶಗಳನ್ನು ಪರಿಶೀಲಿಸಲು ಗುಜರಾತ್ ಹೈಕೋರ್ಟ್ಗೆ ಪದೇ ಪದೇ ಅರ್ಜಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಯ ಅಧಿಕಾರವು ಮಾರಾಟಗಾರನು ತನ್ನ ಸ್ವಂತ ಇಚ್ಛೆಯಿಂದ ಮಾರಾಟ ಮಾಡುತ್ತಿದ್ದಾರೆಯೇ ಮತ್ತು ನ್ಯಾಯಯುತ ಬೆಲೆಯನ್ನು ಪಡೆಯುತ್ತಿದ್ದಾರೆಯೇ ಎಂದು ಪರಿಶೀಲಿಸುವುದಕ್ಕೆ ಕಟ್ಟುನಿಟ್ಟಾಗಿ ಸೀಮಿತವಾಗಿದೆ. ಅಂದರೆ ನೆರೆಹೊರೆಯವರು ಆಕ್ಷೇಪಿಸುತ್ತಾರೆ ಅಥವಾ ಸರ್ಕಾರವು ಸಂಭಾವ್ಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಭಯದಿಂದ ಮಾರಾಟವನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ ಉದಾಹರಣೆಗೆ, ಮಾರ್ಚ್ 2020 ರಲ್ಲಿ ನ್ಯಾಯಾಲಯವು ನಿರ್ಧರಿಸಿದ ಪ್ರಕರಣದಲ್ಲಿ, ಹಿಂದೂ ಮಾರಾಟಗಾರರು ವಡೋದರಾದಲ್ಲಿ ಮುಸ್ಲಿಂ ಖರೀದಿದಾರರಿಗೆ ಅಂಗಡಿಯನ್ನು ಮಾರಾಟ ಮಾಡಿದ್ದರು. ಸಂಭಾವ್ಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಉಲ್ಲೇಖಿಸುವ ಪೊಲೀಸ್ ವರದಿಯನ್ನು ಅವಲಂಬಿಸಿ ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದರು. ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಪೊಲೀಸ್ ವಿಚಾರಣೆಯು ತೊಂದರೆಗೊಳಗಾದ ಪ್ರದೇಶಗಳ ಕಾಯ್ದೆಯ ನಿಬಂಧನೆಗಳಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವುದಿಲ್ಲ ಎಂದು ತೀರ್ಪು ನೀಡಿತು. ಆಸ್ತಿಯನ್ನು ನ್ಯಾಯಯುತ ಮೌಲ್ಯದಲ್ಲಿ ಮತ್ತು ಒಪ್ಪಿಗೆಯೊಂದಿಗೆ ಮಾರಾಟ ಮಾಡಲಾಗಿದೆ ಎಂಬುದು ನಿರ್ವಿವಾದ. ವಿಚಾರಣೆಯ ವ್ಯಾಪ್ತಿಯು ಮುಕ್ತ ಒಪ್ಪಿಗೆ ಮತ್ತು ನ್ಯಾಯಯುತ ಮೌಲ್ಯದ್ದಾಗಿರುವಾಗ, ಅಂತಹ ಮಾರಾಟದ ಸಂದರ್ಭದಲ್ಲಿ ನೆರೆಹೊರೆಯವರ ಪಾತ್ರವು ಅಪ್ರಸ್ತುತವಾಗುತ್ತದೆ ಎಂದು ಹೇಳಿದೆ. ಆಗಸ್ಟ್ 2023 ರಲ್ಲಿ ಮತ್ತೊಂದು ಆದೇಶದಲ್ಲಿ ಇದನ್ನು ಪುನರುಚ್ಚರಿಸಲಾಯಿತು. ಅಂತರಧರ್ಮದ ಆಸ್ತಿ ಮಾರಾಟವನ್ನು ವಿರೋಧಿಸುವ ನೆರೆಹೊರೆಯವರು ಅದನ್ನು ಅನುಮತಿಸುವ ನ್ಯಾಯಾಧೀಶರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠವು ಮೇಲ್ಮನವಿಯನ್ನು ವಜಾಗೊಳಿಸಿ ನೆರೆಹೊರೆಯವರ ಮೇಲೆ 25,000 ರೂ.ಗಳ ದಂಡವನ್ನು ವಿಧಿಸಿತು. ಸಮುದಾಯದ ಬಲದ ಆಧಾರದ ಮೇಲೆ ಆಕ್ಷೇಪಣೆಗಳನ್ನು ಸ್ವೀಕರಿಸುವ ಮೂಲಕ ಡೆಪ್ಯುಟಿ ಕಲೆಕ್ಟರ್ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ. ಖರೀದಿದಾರ ಮತ್ತು ಮಾರಾಟಗಾರನ ನಡುವಿನ ಖಾಸಗಿ ಒಪ್ಪಂದವನ್ನು ತಡೆಯಲು ನೆರೆಹೊರೆಯವರಿಗೆ ಯಾವುದೇ ಅಧಿಕಾರವಿಲ್ಲ ಎಂದು ನ್ಯಾಯಾಲಯ ದೃಢಪಡಿಸಿತು.
ನುಡಿದಂತೆ ನಡೆದವರು ನಾವು, ಸುಳ್ಳಿನ ಸರಮಾಲೆ ಹೆಣೆಯುವವರು ಬಿಜೆಪಿ: ವಿಪಕ್ಷಗಳ ವಿರುದ್ಧ ಸಿದ್ದರಾಮಯ್ಯ ಕಿಡಿ
ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು. ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಉಡುಪಿ, ಜ.24: ಉಡುಪಿ ಶೀರೂರು ಮಠದ ವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯದ ಪ್ರಯುಕ್ತ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ವಿವಿಧ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ’ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ ರಾಜಾಂಗಣದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಹಿಲ್ಲೂರು ರಾಮಕೃಷ್ಣ ಹೆಗಡೆ, ಪರಮೇಶ್ವರ ಭಂಡಾರಿ ಕರ್ಕಿ, ಶಶಾಂಕ ಆಚಾರ್ಯ, ಶಿವಾನಂದ ಕೋಟ, ಮುಮ್ಮೇಳದಲ್ಲಿ ಬಳ್ಕೂರು ಕೃಷ್ಣ ಯಾಜಿ(ಋತುಪರ್ಣ), ಕೊಂಡದಕುಳಿ ರಾಮಚಂದ್ರ ಹೆಗಡೆ(ನಳ ಮಹಾರಾಜ), ಅಶೋಕ್ ಭಟ್ ಸಿದ್ಧಾಪುರ(ಶನಿ), ಚಪ್ಪರಮನೆ ಶ್ರೀಧರ ಹೆಗಡೆ(ಹಾಸ್ಯ) ಮೂರೂರು ಸುಬ್ರಹ್ಮಣ್ಯ ಹೆಗಡೆ(ದಮಯಂತಿ), ಮುಗ್ವಾ ಗಣೇಶ್ ನಾಯ್ಕ, ವಿನಯ್ ಬೇರೊಳ್ಳಿ, ನಿರಂಜನ ಜಾಗ್ನಳ್ಳಿ, ದೀಪಕ್ ಕುಂಕಿ ಪಾತ್ರ ನಿರ್ವಹಿಸಿದರು. ಶೀರೂರು ಮಠದ ಹೊರೆಕಾಣಿಕೆ ಸಮಿತಿಯ ಸಂಚಾಲಕ ಸುಪ್ರಸಾದ ಶೆಟ್ಟಿ ಬೈಕಾಡಿ ಸ್ವಾಗತಿಸಿದರು. ಪ್ರದರ್ಶನದ ಬಳಿಕ ಎಲ್ಲ ಕಲಾವಿದರಿಗೆ ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಸ್ವಾಮೀಜಿ ಅನುಗ್ರಹ ಮಂತ್ರಾ ಕ್ಷತೆ, ಕೃಷ್ಣನ ಮೂರ್ತಿ ನೀಡಿ ಆಶೀರ್ವದಿಸಿದರು.
ಜ.28: ವಿಶೇಷ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳಿಂದ ರಾಜ್ಯಮಟ್ಟದ ಸಾರ್ವತ್ರಿಕ ಮುಷ್ಕರ
ಉಡುಪಿ, ಜ.24: ರಾಜ್ಯದ ವಿಶೇಷ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಶು ಕೇಂದ್ರೀತ ಯೋಜನೆಯಡಿಯಲ್ಲಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಜ.28ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರ್ವತ್ರಿಕ ಮುಷ್ಕರವನ್ನು ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ಅಧ್ಯಕ್ಷೆ ಡಾ.ಕಾಂತಿ ಹರೀಶ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘ ಹಾಗೂ ಉಡುಪಿ ಜಿಲ್ಲಾ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘಗಳ ನೇತೃತ್ವದಲ್ಲಿ ನಡೆ ಯುವ ಈ ಮುಷ್ಕರದಲ್ಲಿ ರಾಜ್ಯದ ಎಲ್ಲ 180 ಶಿಶು ಕೇಂದ್ರೀತ ಯೋಜನೆಯಡಿಯಲ್ಲಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳು ಕೈಜೋಡಿಸಲಿವೆ ಎಂದರು. ಪ್ರಮುಖ ಬೇಡಿಕೆಗಳು: ಸಮಾನ ಕೆಲಸಕ್ಕೆ ಸಮಾನ ವೇತನ ಎಂಬಂತೆ ಶಿಶು ಕೇಂದ್ರೀತ ಯೋಜನೆಯಡಿಯಲ್ಲಿ ಅನುದಾನ ಪಡೆಯುತ್ತಿರುವ ವಿಶೇಷ ಶಾಲೆಗಳ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬಂದಿಗಳಿಗೆ 1982 ಅನುದಾನಕ್ಕೆ ಬರುವ ಸಿಬ್ಬಂದಿಗಳಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಜಾರಿಗೊಳಿಸಬೇಕು. ಈ ಹಿಂದೆ ವಿಧಾನಸಭಾ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ರಾಜ್ಯದ ವಿಶೇಷ ಶಾಲೆಗಳ ಅನುದಾನವನ್ನು ಶೇ.40ಕ್ಕೇರಿಕೆ ಮಾಡಿ ಸರಕಾರಕ್ಕೆ ನೀಡಿರುವ ಪ್ರಸ್ತಾವನೆಯನ್ನು ಕೂಡಲೇ ಮಂಜೂರು ಮಾಡಬೇಕು. ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶದ ಪ್ರಕಾರ ರಾಜ್ಯದ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರಿಗೆ ಪೂರ್ಣ ಪ್ರಮಾಣದ ಆರ್ಥಿಕ ಸೌಲಭ್ಯ ಒದಗಿಸಬೇಕು. ಶಿಶು ಕೇಂದ್ರೀತ ಸಹಾಯಧನ ಯೋಜನೆಗೆ ಸಂಬಂಧಿಸಿ ದಂತೆ ಇರುವ ಮಾರ್ಗದರ್ಶಿಯನ್ನು ಪ್ರತಿ 5 ವರ್ಷಕ್ಕೊಮ್ಮೆ ಪುನರ್ ರಚಿಸಿ ಆಯ್ದ ವಿಶೇಶ ಶಾಲೆಗಳ ಪರಿಣತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ವಿಶೇಷ ಶಾಲೆಗಳಿಗೆ ಇಲಾಖೆ ನೀಡುವ ಅನುದಾನವನ್ನು ಪ್ರತಿವರ್ಷ ಎರಡು ಕಂತು ಗಳಲ್ಲಿ ನೀಡಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘದ ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಜಿಲ್ಲಾಧ್ಯಕ್ಷ ಎಚ್.ರವೀಂದ್ರ, ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್, ಯೂನಸ್, ದಿಲ್ದಾರ್, ಕೌಸರ್ ಉಪಸ್ಥಿತರಿದ್ದರು. ‘ಏಳು ವಿಶೇಷ ಮಕ್ಕಳಿಗೆ ಒಬ್ಬರು ಅನುಪಾತದಂತೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿರುವ ಶಿಶು ಕೇಂದ್ರೀತ ಯೋಜನೆಯಡಿ ಯಲ್ಲಿ ಅನುದಾನ ಪಡೆಯುತ್ತಿರುವ 180 ವಿಶೇಷ ಶಾಲೆಗಳಲ್ಲಿ 3500 ಶಿಕ್ಷಕರು ಹಾಗೂ 2500ರೂ. ಶಿಕ್ಷಕೇತರರು ದುಡಿಯುತ್ತಿದ್ದು, ಇವರಲ್ಲಿ ಶಿಕ್ಷಕರಿಗೆ 20ಸಾವಿರ ರೂ., ಸಹಾಯಕರಿಗೆ 13ಸಾವಿರ ರೂ., ಅಡುಗೆ ಕೆಲಸದವರಿಗೆ 12ಸಾವಿರ ರೂ. ಗೌರವಧನ ನೀಡಲಾಗುತ್ತದೆ. ಆದರೆ ಸರಕಾರ ಅನುದಾನವು ಸಮಯಕ್ಕೆ ಸರಿಯಾಗಿ ಬಾರದ ಕಾರಣ ಇವರಿಗೆ ವೇತನ ವಿಳಂಬವಾಗುತ್ತಿದೆ’ -ಡಾ.ಕಾಂತಿ ಹರೀಶ್, ರಾಜ್ಯಾಧ್ಯಕ್ಷರು.
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಾಗೂ ಅವರ ಹಕ್ಕುಗಳ ರಕ್ಷಣೆಗಾಗಿ ಇರುವ ಕಾರ್ಯಕ್ರಮಗಳು, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿಗಾಗಿ
America Vs Iran : ಮಧ್ಯಪ್ರಾಚ್ಯ ಭಾಗದಲ್ಲಿ ಯುದ್ದದ ಕಾರ್ಮೋಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂತಾರಾಷ್ಟ್ರೀಯ ಮೂಲಗಳ ಪ್ರಕಾರ ಬಲಾಢ್ಯ, ಅಮೆರಿಕಾದ ಯುದ್ದ ನೌಕೆ, ಅಬ್ರಹಾಂ ಲಿಂಕನ್, ಇರಾನ್ ಗಡಿಯತ್ತ ನುಗ್ಗುತ್ತಿದೆ. ನಮ್ಮ ತಂಟೆಗೆ ಬಂದರೆ, ಮುಂದೆ ಯುದ್ದವೇ ನಮ್ಮ ಅಸ್ತ್ರ ಎಂದು ಇರಾನ್ ಎಚ್ಚರಿಕೆ ನೀಡಿದೆ. ಆದರೆ, ಇದ್ಯಾವುದಕ್ಕೂ ಅಮೆರಿಕಾ ಕ್ಯಾರೇ ಎನ್ನುತ್ತಿಲ್ಲ.
ಬೆಂಗಳೂರು: ರಾಜ್ಯದ ಸಾವಿರಾರು ಸರ್ಕಾರಿ ಶಾಲಾ ಶಿಕ್ಷಕರು ದೀರ್ಘಕಾಲದಿಂದ ನಿರೀಕ್ಷಿಸುತ್ತಿದ್ದ ಬಡ್ತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯಾಗುವ ಕಾಲ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರವು ಶಿಕ್ಷಕರ ಬಡ್ತಿ ನಿಯಮಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಈ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಏರಲು ಸಮಾನ ಅವಕಾಶ ಕಲ್ಪಿಸಲು ಮುಂದಾಗಿದೆ. ಈ ಸಂಬಂಧ
ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆ
ಮಂಗಳೂರು: ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತು. ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ ಸಭೆಯನ್ನು ಸ್ವಾಗತಿಸಿ, ಜೆಪ್ಪುವಿನ ಸಿಎಸ್ಐ ಕಾಂತಿ ಚರ್ಚ್ನ ಪಾಸ್ಟರ್ ಗೇಬ್ರಿಯಲ್ ರೋನಿತ್, ಸಿಎಸ್ಐ ಸೇಂಟ್ ಪೌಲ್ಸ್ ಚರ್ಚ್ನ ವಂ| ಬಿನು ಸಿ. ಜಾನ್ ಹಾಗೂ ರೊಸಾರಿಯೊ ಕ್ಯಾಥೆಡ್ರಲ್ನ ಫಾ. ವಲೇರಿಯನ್ ಫೆರ್ನಾಂಡಿಸ್ ಅವರೊಂದಿಗೆ ಪ್ರಾರ್ಥನಾ ಸೇವೆಯನ್ನು ನಡೆಸಿಕೊಟ್ಟರು. ಕ್ರಿಶ್ಚಿಯನ್ ಸಮುದಾಯಗಳ ನಡುವಿನ ಏಕತೆ ಮತ್ತು ಸಾಮರಸ್ಯವನ್ನು ಸಂಕೇತಿಸುವ ದೀಪ ಬೆಳಗಿಸುವುದರೊಂದಿಗೆ ಪ್ರಾರ್ಥನಾ ಸೇವೆಗೆ ಉದ್ಘಾಟನೆ ನೀಡಲಾಯಿತು. ರೊಸಾರಿಯೊ ಕ್ಯಾಥೆಡ್ರಲ್ ಚರ್ಚ್ ನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಿರಿಲ್ ರೊಸಾರಿಯೊ, ಕಾರ್ಯದರ್ಶಿ ಐಡಾ ಫುರ್ಟಾಡೊ, 21 ಆಯೋಗಗಳ ಸಂಯೋಜಕ ಆಲ್ಡ್ರಿನ್ ವಾಜ್, ಎಕ್ಯುಮೆನಿಸಂ ಆಯೋಗದ ಸಂಚಾಲಕಿ ಮೇರಿ ಎ. ಡಿಸೋಜಾ ಸೇರಿದಂತೆ ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್ಐ ಕಾಂತಿ ಚರ್ಚ್ ಮತ್ತು ಮಂಗಳೂರಿನ ಸಿಎಸ್ಐ ಸೇಂಟ್ ಪೌಲ್ಸ್ ಚರ್ಚ್ನ ಪಾಲನಾ ಮಂಡಳಿಯ ಸದಸ್ಯರು ಪ್ರಾರ್ಥನಾ ಸೇವೆಯಲ್ಲಿ ಭಾಗವಹಿಸಿದ್ದರು.
ಮೈಲಾರ ಲಿಂಗೇಶ್ವರ ಜಾತ್ರೆ: ಫೆಬ್ರವರಿ 4ಕ್ಕೆ ಮೈಲಾರ ಕಾರ್ಣಿಕೋತ್ಸವ, ರಾಜಕಾರಣದ ದಿಕ್ಸೂಚಿ ಆಗುತ್ತಾ ಭವಿಷ್ಯವಾಣಿ!
ಹೂವಿನ ಹಡಗಲಿ: ಜನವರಿ ತಿಂಗಳು ಬಂತೆಂದರೆ ಉತ್ತರ ಕರ್ನಾಟಕದ ಅನೇಕ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲಿ ವಿಜೃಂಭಣೆಯ ಜಾತ್ರೆಗಳು ನಡೆಯುತ್ತವೆ. ಈಗಾಗಲೇ ಹಾವೇರಿ, ಕೊಪ್ಪಳದ ವಿಶೇಷ ಜಾತ್ರೆಗಳು ಜರುಗಿವೆ. ಪ್ರತಿ ವರ್ಷ ಭಾರತ ಹುಣ್ಣಿಮೆ ವೇಳೆ ಆರಂಭವಾಗುವ ರಾಜ್ಯದ ಸುಪ್ರಸಿದ್ಧ ಜಾತ್ರೆ ವಿಜಯನಗರ ಜಿಲ್ಲೆ, ಹೂವಿನ ಹಡಗಲಿ ತಾಲೂಕಿನ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿ ಜಾತ್ರೆಗೆ ದಿನಗಣನೆ ಶುರುವಾಗಿದೆ.
2024-25ರಲ್ಲಿ 71 ದೇಶಭ್ರಷ್ಟರು ವಿದೇಶಗಳಲ್ಲಿ ಪತ್ತೆ; ಕಳೆದ 12 ವರ್ಷಗಳಲ್ಲಿ ಅತ್ಯಂತ ಹೆಚ್ಚು: ವರದಿ
ಹೊಸದಿಲ್ಲಿ: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿರುವ 71 ದೇಶಭ್ರಷ್ಟರು 2024-25ರಲ್ಲಿ ವಿದೇಶಗಳಲ್ಲಿ ಪತ್ತೆಯಾಗಿದ್ದು, ಇದು ಕಳೆದ 12 ವರ್ಷಗಳಲ್ಲಿ ಅತ್ಯಂತ ಹೆಚ್ಚು ಎಂದು ಸರಕಾರಿ ದತ್ತಾಂಶಗಳು ತೋರಿಸಿವೆ ಎಂದು thehindu.com ವರದಿ ಮಾಡಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) 2024-25ರ ವಾರ್ಷಿಕ ವರದಿಯ ಪ್ರಕಾರ ಸಿಬಿಐ ಭಾರತಕ್ಕೆ ಬೇಕಾಗಿರುವ 71 ಜನರು ವಿದೇಶಗಳಲ್ಲಿರುವುದನ್ನು ಪತ್ತೆ ಹಚ್ಚಿದೆ ಮತ್ತು ಆ ವರ್ಷ 27 ದೇಶಭ್ರಷ್ಟರು ಭಾರತಕ್ಕೆ ಮರಳಿದ್ದಾರೆ. ಹಿಂದಿನ ವರ್ಷಗಳ ಡಿಒಪಿಟಿ ವರದಿಗಳ ಪ್ರಕಾರ ಕಳೆದ ದಶಕದಲ್ಲಿ ವಿದೇಶಗಳಲ್ಲಿ ಪತ್ತೆಯಾಗಿದ್ದ ದೇಶಭ್ರಷ್ಟರ ಸಂಖ್ಯೆ 15 (2013)ಮತ್ತು 42 (2015)ರ ನಡುವೆ ಇತ್ತು. ಕಳೆದ ವರ್ಷ ಇಂತಹವರ ಸಂಖ್ಯೆ 71ಕ್ಕೇರಿದೆ. ವಾರ್ಷಿಕವಾಗಿ ಭಾರತಕ್ಕೆ ಹಸ್ತಾಂತರಿಸಲ್ಪಟ್ಟ ಅಥವಾ ಗಡಿಪಾರುಗೊಂಡ ದೇಶಭ್ರಷ್ಟರ ಸಂಖ್ಯೆ 5 ಮತ್ತು 29ರ ನಡುವೆ ಇದ್ದು, ಅತ್ಯಧಿಕ ಸಂಖ್ಯೆಯ ದೇಶಭ್ರಷ್ಟರನ್ನು 2023ರಲ್ಲಿ ಭಾರತಕ್ಕೆ ಒಪ್ಪಿಸಲಾಗಿತ್ತು. ವಿದೇಶಾಂಗ ಸಚಿವಾಲಯವು ಡಿ.19,2025ರಂದು ಸಂಸತ್ತಿನಲ್ಲಿ ನೀಡಿದ ಉತ್ತರದ ಪ್ರಕಾರ ಭಾರತವು 48 ದೇಶಗಳೊಂದಿಗೆ ಹಸ್ತಾಂತರ ಒಪ್ಪಂದಗಳು ಮತ್ತು 12 ದೇಶಗಳೊಂದಿಗೆ ಹಸ್ತಾಂತರ ವ್ಯವಸ್ಥೆಗಳನ್ನು ಹೊಂದಿದೆ. ಭಾರತವು ಭ್ರಷ್ಟಾಚಾರದ ವಿರುದ್ಧ ವಿಸ್ವಸಂಸ್ಥೆಯ ನಿರ್ಣಯದಂತಹ ಬಹುಪಕ್ಷೀಯ ನಿರ್ಣಯಗಳೊಂದಿಗೂ ಗುರುತಿಸಿಕೊಂಡಿದೆ. ಇವು ಈ ನಿರ್ಣಯಗಳೊಂದಿಗೆ ಗುರುತಿಸಿಕೊಂಡಿರುವ ಇತರ ದೇಶಗಳಿಂದ ದೇಶಭ್ರಷ್ಟರನ್ನು ಮರಳಿ ತರಲು ಕಾನೂನು ಬೆಂಬಲವಾಗಿ ಕಾರ್ಯ ನಿರ್ವಹಿಸುತ್ತವೆ. ಕಳೆದ ಐದು ವರ್ಷಗಳಲ್ಲಿ ಭಾರತವು 137 ಹಸ್ತಾಂತರ ಮನವಿಗಳನ್ನು ವಿದೇಶಗಳಿಗೆ ಸಲ್ಲಿಸಿದೆ. 134 ಮನವಿಗಳು ಸ್ವೀಕೃತವಾಗಿದ್ದರೂ ಈ ಪೈಕಿ 125 ಮನವಿಗಳು ಇನ್ನೂ ವಿದೇಶಿ ಸರಕಾರಗಳ ಬಳಿ ಬಾಕಿಯುಳಿದಿವೆ. ಮೂರು ಮನವಿಗಳು ತಿರಸ್ಕೃತಗೊಂಡಿವೆ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿತ್ತು. ಕಳೆದ ಐದು ವರ್ಷಗಳಲ್ಲಿ ದೇಶದಿಂದ ಪರಾರಿಯಾಗಿದ್ದ 25 ಜನರನ್ನು ಯಶಸ್ವಿಯಾಗಿ ಭಾರತಕ್ಕೆ ಹಸ್ತಾಂತರಿಸಿಕೊಳ್ಳಲಾಗಿದೆ ಎಂದೂ ಅದು ತಿಳಿಸಿದೆ. ಸಿಬಿಐನ ಜಾಗತಿಕ ಕಾರ್ಯಾಚರಣೆಗಳ ಕೇಂದ್ರವು ವಿದೇಶಿ ಕಾನೂನು ಜಾರಿ ಸಂಸ್ಥೆಗಳ ಸಹಕಾರದೊಂದಿಗೆ ಇಂಟರ್ಪೋಲ್ ಮೂಲಕ ಅಪೇಕ್ಷಿತ ಕ್ರಿಮಿನಲ್ಗಳು ಮತ್ತು ದೇಶಭ್ರಷ್ಟರನ್ನು ಪತ್ತೆ ಹಚ್ಚುತ್ತದೆ. ಅಪೇಕ್ಷಿತ ಅಪರಾಧಿಗಳು ಇರುವ ಸ್ಥಳವನ್ನು ಖಚಿತಪಡಿಸಿಕೊಂಡ ಬಳಿಕ ಅವರನ್ನು ಭಾರತಕ್ಕೆ ಮರಳಿ ಕರೆತರಲು ಸಿಬಿಐ ಸಂಬಂಧಿತ ಕಾನೂನು ಜಾರಿ ಸಂಸ್ಥೆಗಳು,ಸಂಬಂಧಿತ ದೇಶಗಳಲ್ಲಿಯ ಇಂಟರ್ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ,ಗೃಹ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಗಳೊಂದಿಗೆ ಸಮನ್ವಯ ಸಾಧಿಸುತ್ತದೆ ಎಂದು ವರದಿಯು ತಿಳಿಸಿದೆ. 2024-25ರ ಅವಧಿಯಲ್ಲಿ 74 ಲೆಟರ್ಸ್ ರೊಗೇಟರಿ ಅಥವಾ ನ್ಯಾಯಾಂಗ ವಿನಂತಿಗಳನ್ನು ವಿದೇಶಿ ಸರಕಾರಗಳಿಗೆ ಕಳುಹಿಸಲಾಗಿತ್ತು. ಈ ಪೈಕಿ 54 ಸಿಬಿಐ ಪ್ರಕರಣಗಳಿಗೆ ಹಾಗೂ 20 ರಾಜ್ಯ ಮತ್ತು ಕೇಂದ್ರ ಕಾನೂನು ಜಾರಿ ಸಂಸ್ಥೆಗಳಿಗೆ ಸಂಬಂಧಿಸಿದ್ದವು. 2024-25ರಲ್ಲಿ 42 ನ್ಯಾಯಾಂಗ ವಿನಂತಿಗಳು ಸಂಪೂರ್ಣವಾಗಿ ಕಾರ್ಯಗತಗೊಂಡಿದ್ದವು. 2025,ಮಾ.31ಕ್ಕೆ ಇತರ ದೇಶಗಳಲ್ಲಿ ಒಟ್ಟು 533 ನ್ಯಾಯಾಂಗ ಮನವಿಗಳು ಬಾಕಿಯಿದ್ದವು ಎಂದೂ ವರದಿ ತಿಳಿಸಿದೆ.
ʼವಿಬಿ-ಜಿ ರಾಮ್ ಜಿʼ ಜಾರಿ ಮಾಡಲು ನಾವು ಬಿಡುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ
ಹುಬ್ಬಳ್ಳಿ: 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ
ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟದ ವ್ಯವಸ್ಥೆ
ಹುಬ್ಬಳ್ಳಿ: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಮನೆ ಹಂಚಿಕೆಯ ಕಾರ್ಯಕ್ರಮವು ಸರಿಸುಮಾರು ಎರಡು ಲಕ್ಷಕ್ಕೂ ಅಧಿಕ ಜನಸ್ತೋಮ ಸಾಕ್ಷಿಯಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಕಲ್ಪಿಸಲಾದ ಆಹಾರ ವ್ಯವಸ್ಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಭಾರೀ ಜನಸಂದಣಿ ನಡುವೆಯೂ ಬಂದವರಿಗೆ ರುಚಿಕರವಾದ, ಶುಚಿ ಹಾಗೂ ಶಿಸ್ತುಬದ್ಧ ಆಹಾರ ಉಣಬಡಿಸಲಾಯಿತು. ಇದನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಹಿನ್ನೆಲೆ 1.35 ಲಕ್ಷಕ್ಕೂ
ʼಹೋಂವರ್ಕ್ʼ ಮಾಡಿಲ್ಲ ಎಂದು ಪುತ್ರಿಯನ್ನೇ ಹತ್ಯೆಗೈದ ತಂದೆ!
ಫರೀದಾಬಾದ್: ಹೋಂವರ್ಕ್ ಮಾಡದಿದ್ದಕ್ಕೆ ವ್ಯಕ್ತಿಯೋರ್ವ ತನ್ನ ನಾಲ್ಕು ವರ್ಷದ ಪುತ್ರಿಯನ್ನೇ ಥಳಿಸಿ ಹತ್ಯೆಗೈದ ಘಟನೆ ಫರೀದಾಬಾದ್ ನಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆರೋಪಿಯ ಪತ್ನಿ ನೀಡಿದ ದೂರನ್ನು ಆಧರಿಸಿ, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೃಷ್ಣ ಜೈಸ್ವಾಲ್ (31) ಎಂದು ಗುರುತಿಸಲಾಗಿದೆ. ದೈನಂದಿನ ಮನೆಪಾಠದಲ್ಲಿ ತನ್ನ ಪುತ್ರಿಯು 50ರ ಸಂಖ್ಯೆಯವರೆಗೆ ಬರೆಯಲು ವಿಫಲವಾಗಿದ್ದರಿಂದ ಕುಪಿತಗೊಂಡಿರುವ ಆರೋಪಿ ಕೃಷ್ಣ ಜೈಸ್ವಾಲ್ ಆಕೆಯನ್ನು ಮನ ಬಂದಂತೆ ಥಳಿಸಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಳಿಕ, ಈ ಕುರಿತು ಬಾಲಕಿಯ ತಾಯಿ ನೀಡಿದ ದೂರನ್ನು ಆಧರಿಸಿ ಸೆಕ್ಟರ್ 58 ಠಾಣೆಯ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನಗರ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ. ಉತ್ತರ ಪ್ರದೇಶದ ಖೇರಾಟಿಯಾ ಗ್ರಾಮದ ನಿವಾಸಿಯಾದ ಕೃಷ್ಣ ಜೈಸ್ವಾಲ್, ಫರೀದಾಬಾದ್ ನ ಬಾಡಿಗೆ ಮನೆಯೊಂದರಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದ ಎನ್ನಲಾಗಿದೆ. ಕೃಷ್ಣ ಜೈಸ್ವಾಲ್ ಹಾಗೂ ಆತನ ಪತ್ನಿಯಿಬ್ಬರೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯು ಉದ್ಯೋಗಕ್ಕೆ ತೆರಳಿದಾಗ, ಬೆಳಗ್ಗೆ ಮನೆಯಲ್ಲೇ ಉಳಿದುಕೊಳ್ಳುತ್ತಿದ್ದ ಕೃಷ್ಣ ಜೈಸ್ವಾಲ್, ತನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಹಾಗೂ ತನ್ನ ಪುತ್ರಿಯ ವ್ಯಾಸಂಗದ ಮೇಲೆ ನಿಗಾ ವಹಿಸುತ್ತಿದ್ದ ಎನ್ನಲಾಗಿದೆ. ಜನವರಿ 21ರಂದು ಈ ಘಟನೆ ನಡೆದಿದ್ದು, ಕೃಷ್ಣ ಜೈಸ್ವಾಲ್ ತನ್ನ ಪುತ್ರಿಗೆ ಒಂದರಿಂದ 50ರವರೆಗೆ ಅಂಕಿಗಳನ್ನು ಬರೆಯುವಂತೆ ಸೂಚಿಸಿದ್ದಾನೆ. ಆದರೆ, ಬಾಲಕಿಗೆ ಬರೆಯಲು ಸಾಧ್ಯವಾಗದಿದ್ದಾಗ ಕೋಪಗೊಂಡ ಆತ, ಪುತ್ರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ. ಪತ್ನಿಯು ಸಂಜೆ ಮನೆಗೆ ಮರಳಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಮನೆಯಲ್ಲಿ ಬಾಲಕಿಯು ಮೃತ ಸ್ಥಿತಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣವೇ ಕೃಷ್ಣ ಜೈಸ್ವಾಲ್ ಪತ್ನಿ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. “ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆಗಾಗಿ ಆರೋಪಿಯನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ” ಎಂದು ಫರೀದಾಬಾದ್ ಪೊಲೀಸರೊಬ್ಬರು ತಿಳಿಸಿದ್ದಾರೆ.
ಸಿರುಗುಪ್ಪ | ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾಗಬೇಕು : ರಾಜೇಶ್
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ
Donald Trump: ಕೆನಡಾ ವಿರುದ್ಧ ಮತ್ತೆ ಗುಡುಗಿದ ಡೊನಾಲ್ಡ್ ಟ್ರಂಪ್, ಚೀನಾ ವಿಚಾರ ಪ್ರಸ್ತಾಪ ಮಾಡಿದ್ದು ಏಕೆ?
ಅಮೆರಿಕ ಅಧ್ಯಕ್ಷರ ಕೋಪ ಕೆನಡಾ ಮೇಲೆ ನೆಟ್ಟಿದ್ದು, ಪದೇ ಪದೇ ಅಮೆರಿಕದ ನೇರೆ ದೇಶದ ನಿರ್ಧಾರಗಳ ಬಗ್ಗೆ ಬೇಸರ ಹೊರ ಹಾಕುತ್ತಿದ್ದಾರೆ. ಹಲವು ದಿನಗಳಿಂದ ಡೊನಾಲ್ಡ್ ಟ್ರಂಪ್ ಮತ್ತು ಕೆನಡಾ ಮಧ್ಯೆ ಕಿರಿಕ್ ನಡೆಯುತ್ತಲೇ ಇದೆ. ಯಾವಾಗ ಟ್ರಂಪ್ ಅವರು ಕೆನಡಾ ಕೂಡ ಅಮೆರಿಕದ ಭಾಗ ಎನ್ನುತ್ತಾ, ಅದನ್ನು ಬಿಂಬಿಸುವ ರೀತಿ ನಕ್ಷೆ ಪ್ರದರ್ಶನ ಮಾಡಿದರೋ ಅಲ್ಲಿಂದ
ರದ್ದಾಗುತ್ತಾ ಭಾರತದ ಮೇಲಿನ 25% ಸುಂಕ? ಮಹತ್ವದ ಸುಳಿವು ನೀಡಿದ ಅಮೆರಿಕದ ಟ್ರೆಷರಿ ಕಾರ್ಯದರ್ಶಿ
ಅಮೆರಿಕದ ಟ್ರೆಷರಿ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರು ದಾವೋಸ್ನಲ್ಲಿ ಮಹತ್ವದ ಹೇಳಿಕೆ ನೀಡಿದ್ದು, ಭಾರತದ ಮೇಲಿನ ಶೇ. 25ರಷ್ಟು ಸುಂಕವನ್ನು ತೆಗೆದುಹಾಕುವ ಬಗ್ಗೆ ಸುಳಿವು ನೀಡಿದ್ದಾರೆ. ಅಮೆರಿಕದ ಸುಂಕದ ಭಯದಿಂದ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಗಣನೀಯವಾಗಿ ಕಡಿಮೆ ಮಾಡಿದೆ, ಇದು ಅಮೆರಿಕಕ್ಕೆ ಸಿಕ್ಕ ಯಶಸ್ಸು ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಭಾರತ ಸಂಸ್ಕರಿಸಿದ ರಷ್ಯಾ ತೈಲವನ್ನೇ ಯುರೋಪ್ ರಾಷ್ಟ್ರಗಳು ಖರೀದಿಸುತ್ತಿರುವುದನ್ನು ಅವರು 'ಮೂರ್ಖತನ' ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ. ಕಾಂಗ್ರೆಸ್ ಎಂದರೆ ಕಮಿಷನ್, ಕರಪ್ಶನ್, ಲೂಟಿ ಎಂದು ಮಾತನಾಡುತ್ತಿದ್ದೆವು. ಕಾಂಗ್ರೆಸ್ ಇದೀಗ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಅಧಿಕಾರವೊಂದಿದ್ದರೆ ಸಾಕು; ಏನು ಬೇಕಾದರೂ ಮಾಡಬಹುದು. ಹೇಗೆ ಬೇಕಾದರೂ ಮೆರೆಯಬಹುದು ಎಂಬ ದುರ್ನಡತೆಯನ್ನು ಮೈಗೂಡಿಸಿಕೊಂಡಂತೆ ಕಾಣುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೊರದೇಶದಿಂದ ಪ್ರವಾಸಕ್ಕಾಗಿ ಬಂದ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಇದೊಂದು ದೊಡ್ಡ ವಿಷಯವಾಗಿತ್ತು. ಇದು ಕೇವಲ ರಾಷ್ಟ್ರೀಯ ವಿಚಾರವಲ್ಲ; ಅಂತರರಾಷ್ಟ್ರೀಯ ವಿಚಾರ. ಇದನ್ನು ಗೌರವಾನ್ವಿತ ಎಂಪಿ (ಸಂಸದ) ರಾಜಶೇಖರ ಹಿಟ್ನಾಳ್ ಅವರು ಎಷ್ಟು ಕೇವಲವಾಗಿ ಹೇಳಿದ್ದಾರೆಂದರೆ, ಅದೊಂದು ಸಣ್ಣ (ಮೈನರ್) ಘಟನೆಯಂತೆ. ಈ ಕಾಂಗ್ರೆಸ್ಸಿನ ಸಂಸ್ಕೃತಿ ಎಂಥದ್ದೆಂದು ಗೊತ್ತಾಯಿತಲ್ಲವೇ? ಎಂದು ಪ್ರಶ್ನಿಸಿದರು. ಇಷ್ಟೊಂದು ನೀಚತನಕ್ಕೆ ಅಧಿಕಾರ ನಡೆಸುವವರು ಇಳಿದರೆ ಏನೆನ್ನಬೇಕು? ಒಬ್ಬರು ಮಹಿಳೆಯ ಮೇಲೆ ಆಗಿರುವ ಅತ್ಯಾಚಾರವನ್ನೇ ನಾವು ಖಂಡಿಸಬೇಕು. ಅದು ಸಣ್ಣ ವಿಷಯ ಎಂದು ಯಾರೂ ಭಾವಿಸಬಾರದು. ಅದರಲ್ಲೂ ಅವರನ್ನು ಕೊಲೆ ಮಾಡಿದ ಘಟನೆ; ಎಷ್ಟೊಂದು ನೀಚತನದಿಂದ ಕಾಂಗ್ರೆಸ್ಸಿನವರು ಈ ಮಾತುಗಳನ್ನು ಆಡಿದ್ದಾರೆಂದರೆ, ಅವರ ನೀಚತನಕ್ಕೆ ಜನರು ಉತ್ತರ ಕೊಡಬೇಕಿದೆ. ಬುದ್ಧಿ ಕಲಿಸುವ ಕೆಲಸ ಮಾಡಲೇಬೇಕಾಗಿದೆ ಎಂದು ಮನವಿ ಮಾಡಿದರು. ಇವತ್ತು ಕರ್ನಾಟಕವೇ ದೇಶದ ಮುಂದೆ ತಲೆತಗ್ಗಿಸುವ ಕೆಲಸವನ್ನು ರಾಜಶೇಖರ ಹಿಟ್ನಾಳ್ ಅವರು ಮಾಡಿದ್ದಾರೆ. ಮೊದಲು ಅವರು ಕ್ಷಮೆ ಕೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದರು. ಅವರನ್ನು ಉಚ್ಚಾಟಿಸಿದರೆ ನಿಮ್ಮ ಪಕ್ಷ ಮಹಿಳೆಯರಿಗೆ ಗೌರವ ಕೊಡುತ್ತದೆ. ಇಂಥ ವಿಷಯದಲ್ಲಿ ಗಂಭೀರತೆ ಹೊಂದಿದೆ ಎಂದು ತಿಳಿಸಬಹುದು. ಇಲ್ಲವಾದರೆ, ನಿಮ್ಮ ಯೋಗ್ಯತೆ ಅಷ್ಟೇ ಎಂಬುದನ್ನು ನಾವು ಹೇಳಲೇಬೇಕಾಗುತ್ತದೆ ಎಂದು ನುಡಿದರು. ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವ ಎನ್.ಮಹೇಶ್ ಅವರು ಭಾಗವಹಿಸಿದ್ದರು.
2026ರ ಟಿ20 ವಿಶ್ವಕಪ್: ಪಂದ್ಯದ ಗತಿಯನ್ನೇ ಬದಲಿಸಬಲ್ಲ 'ಅದೃಶ್ಯ' 12ನೇ ಆಟಗಾರ; ಪಂದ್ಯದ ಮೇಲೆ ಇಬ್ಬನಿಯ ಪರಿಣಾಮ ಏನು?
ಟಿ-20 ವಿಶ್ವಕಪ್ನಲ್ಲಿ ಇಬ್ಬನಿ ಒಂದು ನಿರ್ಣಾಯಕ ಅಂಶವಾಗಲಿದೆ. ಸಂಜೆಯ ಪಂದ್ಯಗಳಲ್ಲಿ, ಇಬ್ಬನಿಯ ಕಾರಣದಿಂದಾಗಿ ಚೆಂಡು ಜಾರುವ ಸಾಧ್ಯತೆ ಹೆಚ್ಚಿದ್ದು, ಇದು ಬ್ಯಾಟಿಂಗ್ಗೆ ಹೆಚ್ಚು ಸಹಕಾರಿಯಾಗಲಿದೆ. ಹೀಗಾಗಿ, ಟಾಸ್ ಗೆಲ್ಲುವ ತಂಡಕ್ಕೆ ಗೆಲುವಿನ ಸಾಧ್ಯತೆಗಳು ಹೆಚ್ಚಾಗುತ್ತವೆ. ಈ 'ಅದೃಶ್ಯ ಪ್ರತಿಸ್ಪರ್ಧಿಯ' ಪರಿಣಾಮವನ್ನು ಕಡಿಮೆ ಮಾಡಲು, ಪಂದ್ಯಗಳ ಆರಂಭಿಕ ಸಮಯವನ್ನು ಬದಲಾಯಿಸುವ ಬಗ್ಗೆ ತಜ್ಞರು ಚಿಂತಿಸಿದ್ದಾರೆ. ಈ ಬಾರಿ 'ಅದೃಶ್ಯ 12ನೇ ಆಟಗಾರ' ಯಾರಿಗೆ ಕೈ ಹಿಡಿಯುತ್ತಾನೆ ಎಂಬುದು ಕುತೂಹಲ ಕೆರಳಿಸಿದೆ.
ಹೊಸದಿಲ್ಲಿ: ಕಳೆದ ವರ್ಷ ಅಮೆರಿಕದ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ (ಯುಎಸ್ ಎಸ್ಇಸಿ) ಹೊರಡಿಸಿದ್ದ ಸಮನ್ಸ್ಗಳನ್ನು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಔಪಚಾರಿಕವಾಗಿ ಜಾರಿಗೊಳಿಸಲು ಕಾನೂನು ಮತ್ತು ನ್ಯಾಯ ಸಚಿವಾಲಯವು ನಿರಾಕರಿಸಿತ್ತು. ಶಾಯಿಯ ಸಹಿ ಮತ್ತು ಅಧಿಕೃತ ಮುದ್ರೆ ಇಲ್ಲದ್ದು ಹಾಗೂ ಸಮನ್ಸ್ ಜಾರಿಗೊಳಿಸಲು ತಾಂತ್ರಿಕ ಆಕ್ಷೇಪಣೆ;ಇವುಗಳನ್ನು ಅದು ತನ್ನ ನಿರಾಕರಣೆಗೆ ಕಾರಣಗಳನ್ನಾಗಿ ಉಲ್ಲೇಖಿಸಿತ್ತು. ನ್ಯೂಯಾರ್ಕ್ ನ್ಯಾಯಾಲಯದ ದಾಖಲೆಗಳು ಇದನ್ನು ಬಹಿರಂಗಗೊಳಿಸಿವೆ ಎಂದು indianexpress.com ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್ಇಸಿ ಅಂತರರಾಷ್ಟ್ರೀಯ ನಿಯಮಗಳನ್ನು ಬದಿಗೊತ್ತಿ ಅದಾನಿಗಳಿಗೆ ಇಮೇಲ್ ಮೂಲಕ ಸಮನ್ಸ್ ಜಾರಿಗೊಳಿಸಲು ನ್ಯಾಯಾಲಯದ ಅನುಮತಿಯನ್ನು ಕೋರಿದೆ. ಈ ಸುದ್ದಿ ಶುಕ್ರವಾರ ಭಾರತೀಯ ಶೇರು ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರಿದ್ದು,Indian Express ಯ ವರದಿಯಂತೆ ಅದಾನಿ ಗ್ರೂಪ್ ಕಂಪನಿಗಳ ಶೇರುಗಳು ಶೇ.14.6ರವರೆಗೂ ಕುಸಿದಿದ್ದವು. ಸಚಿವಾಲಯದ ನಿಲುವು ಮತ್ತು ಹೇಗ್ ನಿರ್ಣಯಕ್ಕೆ ಅನುಗುಣವಾಗಿ ಮೊದಲ ಬಾರಿ ಸಮನ್ಸ್ ಹೊರಡಿಸಿದ ಬಳಿಕ ವ್ಯರ್ಥವಾಗಿರುವ ಸಮಯವನ್ನು ಗಮನಿಸಿದರೆ ಭಾರತವು ಸಮನ್ಸ್ ಜಾರಿಗೊಳಿಸುತ್ತದೆ ಎಂದು ತಾನು ನಿರೀಕ್ಷಿಸಿಲ್ಲ ಎಂದು ಎಸ್ಇಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದೆ. ಭಾರತ ಸರಕಾರದೊಂದಿಗಿನ ಸಂವಹನದ ಪ್ರತಿಗಳನ್ನು ಅದು ಅರ್ಜಿಯೊಂದಿಗೆ ಲಗತ್ತಿಸಿದೆ. ಸಚಿವಾಲಯವು ಮೇ 2025 ಮತ್ತು ಡಿಸೆಂಬರ್ 2025ರಲ್ಲಿ; ಹೀಗೆ ಎರಡು ಬಾರಿ ಅದಾನಿಗಳಿಗೆ ಎಸ್ಇಸಿ ಸಮನ್ಸ್ ಜಾರಿಗೊಳಿಸಲು ನಿರಾಕರಿಸಿತ್ತು. ನವಂಬರ್ 2024ರಲ್ಲಿ ದಾಖಲಿಸಿರುವ ದೂರಿನಲ್ಲಿ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರು 2021ರ ಅದಾನಿ ಗ್ರಿನ್ ಎನರ್ಜಿಯ ಸಾಲ ಬಾಂಡ್ಗಳ ಯೋಜನೆಗೆ ಸಂಬಂಧಿಸಿದಂತೆ ಸುಳ್ಳು ಮತ್ತು ದಾರಿ ತಪ್ಪಿಸುವ ಜಾಹೀರಾತುಗಳ ಮೂಲಕ ಯುಎಸ್ ಸೆಕ್ಯೂರಿಟಿ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಮೆರಿಕದ ನ್ಯಾಯ ಇಲಾಖೆಯು ಲಂಚದ ಆರೋಪದಲ್ಲಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಸಂಬಂಧಿತ ಆರು ಸಂಸ್ಥೆಗಳ ವಿರುದ್ಧ ದೋಷಾರೋಪಣೆ ಮಾಡಿದ ಬಳಿಕ ಅದಾನಿ ಗ್ರೂಪ್ 600 ಮಿಲಿಯನ್ ಡಾಲರ್ಗಳ ಬಾಂಡ್ ವಿತರಣೆ ಯೋಜನೆಯನ್ನು ಹಿಂದೆಗೆದುಕೊಂಡಿತ್ತು. ಕ್ರಿಮಿನಲ್ ಪ್ರಕರಣದ ಹೊರತಾಗಿ ಸೆಕ್ಯೂರಿಟಿಸ್ ಕಾನೂನುಗಳ ಉಲ್ಲಂಘನೆ ಆರೋಪದಲ್ಲಿ ಸಿವಿಲ್ ಮೊಕದ್ದಮೆಯನ್ನು ಎಸ್ಇಸಿ ಮುಂದುವರಿಸಿದೆ. ಫೆ.2025ರಲ್ಲಿ ಎಸ್ಇಸಿ ಹೇಗ್ ನಿರ್ಣಯದಡಿ ಅದಾನಿಗಳಿಗೆ ಸಮನ್ಸ್ ಜಾರಿಗೊಳಿಸಲು ನೆರವಾಗುವಂತೆ ವಿಧ್ಯುಕ್ತ ಮನವಿಯನ್ನು ಕಾನೂನು ಸಚಿವಾಲಯಕ್ಕೆ ಸಲ್ಲಿಸಿತ್ತು. ಸಮನ್ಸ್ ಜೊತೆಗೆ ಲಗತ್ತಿಸಿರುವ ಪತ್ರದಲ್ಲಿ ಶಾಯಿಯಿಂದ ಮಾಡಿದ ಸಹಿಯಿಲ್ಲ,ಅಗತ್ಯ ಫಾರಮ್ಗಳ ಮೇಲೆ ಅಧಿಕೃತ ಮುದ್ರೆಯಿಲ್ಲ. ಹೀಗಾಗಿ ದಾಖಲೆಗಳು/ವಿನಂತಿಯನ್ನು ದೃಢೀಕರಿಸಲು ಸಾಧ್ಯವಿಲ್ಲ. ಆದ್ದರಿಂದ ಅಗತ್ಯ ಕ್ರಮಕ್ಕಾಗಿ ದಾಖಲೆಗಳನ್ನು ನಿಮಗೆ ಹಿಂದಿರುಗಿಸಲಾಗುತ್ತದೆ ಎಂದು ಸಚಿವಾಲಯವು ಎಸ್ಇಸಿ ಮನವಿಗೆ ತನ್ನ ಉತ್ತರದಲ್ಲಿ ತಿಳಿಸಿತ್ತು. ನಂತರ ಅದೇ ತಿಂಗಳು ದಾಖಲೆಗಳನ್ನು ಮರುಸಲ್ಲಿಸಿದ್ದ ಎಸ್ಇಸಿ ಹೇಗ್ ನಿರ್ಣಯದಡಿ ಇಂತಹ ಔಪಚಾರಿಕತೆಗಳು ಕಡ್ಡಾಯವಲ್ಲ ಎಂದು ವಾದಿಸಿತ್ತು. ಡಿಸೆಂಬರ್ನಲ್ಲಿ ಕಾನೂನು ಸಚಿವಾಲಯವು ಅಮೆರಿಕದ ಕಾನೂನನ್ನು ಉಲ್ಲೇಖಿಸಿ ಸಮನ್ಸ್ ಜಾರಿಗೆ ಮತ್ತೊಮ್ಮೆ ನಿರಾಕರಿಸಿತ್ತು. ಅದಾನಿ ಗ್ರೂಪ್ ತನ್ನ ವಿರುದ್ಧ ಎಸ್ಇಸಿ ಆರೋಪಗಳನ್ನು ನಿರಾಧಾರವೆಂದು ಪದೇ ಪದೇ ತಿರಸ್ಕರಿಸಿದ್ದು,ಸಾಧ್ಯವಿರುವ ಎಲ್ಲ ಕಾನೂನು ಮಾರ್ಗಗಳನ್ನು ಬಳಸಿಕೊಳ್ಳುವುದಾಗಿ ಹೇಳಿದೆ. ಶುಕ್ರವಾರ ರಾತ್ರಿ ಶೇರು ವಿನಿಮಯ ಕೇಂದ್ರಗಳಿಗೆ ಸಲ್ಲಿಸಿದ ಹೇಳಿಕೆಯಲ್ಲಿ ಅದಾನಿ ಗ್ರೀನ್,ಕಂಪನಿಯು ಈ ಪ್ರಕ್ರಿಯೆಯಲ್ಲಿ ಕಕ್ಷಿಯಲ್ಲ ಮತ್ತು ಅದರ ವಿರುದ್ಧ ಅಮೆರಿಕದ ವಿದೇಶಿ ಭ್ರಷ್ಟಾಚಾರ ಕಾಯ್ದೆಯ ಉಲ್ಲಂಘನೆ ಆರೋಪವನ್ನು ಹೊರಿಸಲಾಗಿಲ್ಲ. ಎಸ್ಇಸಿ ಪ್ರಕ್ರಿಯೆಯಗಳು ಸಿವಿಲ್ ಸ್ವರೂಪದ್ದಾಗಿವೆ ಎಂದು ತಿಳಿಸಿದೆ.
ಆಪರೇಷನ್ ಸಿಂಧೂರ್ ಕುರಿತ ನಿಲುವಿಗೆ ಕ್ಷಮೆಯಾಚಿಸುವುದಿಲ್ಲ: ಸಂಸದ ಶಶಿ ತರೂರ್
“ಕಾಂಗ್ರೆಸ್ ಪಕ್ಷದ ನಿಲುವನ್ನು ಉಲ್ಲಂಘಿಸಿಲ್ಲ”
ಪತ್ನಿ ಹೆಸರಲ್ಲಿ ‘ಮೆಲಾನಿಯಾ’ ಚಿತ್ರ ನಿರ್ಮಿಸಿದ ಡೊನಾಲ್ಡ್ ಟ್ರಂಪ್! ಜ. 30ರಂದು ವಿಶ್ವದಾದ್ಯಂತ ಬಿಡುಗಡೆ!
ಡೊನಾಲ್ಡ್ ಟ್ರಂಪ್ ಅವರ ಪತ್ನಿ ಮೆಲಾನಿಯಾ ಟ್ರಂಪ್ ಕುರಿತಾದ ಹೊಸ ಸಾಕ್ಷ್ಯಚಿತ್ರವೊಂದು ಬಿಡುಗಡೆಯಾಗಲಿದೆ. 2021ರಲ್ಲಿ ಅಧಿಕಾರ ಕಳೆದುಕೊಂಡ ನಂತರ ಟ್ರಂಪ್ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಅವರನ್ನು ಮತ್ತೆ ಚುನಾವಣೆಗೆ ಸಿದ್ಧಪಡಿಸುವಲ್ಲಿ ಮೆಲಾನಿಯಾ ಅವರ ಮಹತ್ವದ ಪಾತ್ರವನ್ನು ಈ ಚಿತ್ರ ಅನಾವರಣಗೊಳಿಸುತ್ತದೆ. ಖುದ್ದು ಮೆಲಾನಿಯಾ ಅವರೇ ನಿರ್ಮಿಸಿರುವ ಈ ಚಿತ್ರವು 27 ದೇಶಗಳಲ್ಲಿ ಪ್ರದರ್ಶನಗೊಳ್ಳಲಿದೆ.
Holidays: ಲಾಂಗ್ ವೀಕೆಂಡ್ ಮೋಜು, ಪ್ರವಾಸಿಗರು ಇಷ್ಟಪಟ್ಟು ಬುಕ್ ಮಾಡಿದ ತಾಣಗಳಿವು
ಇದೇ ಜನವರಿ 26ರಂದು ಸೋಮವಾರ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಅಂದು ಸಹ ಒಂದು ದಿನ ರಜೆ ಇರಲಿದ್ದು, ಶನಿವಾರ, ಭಾನುವಾರ ಸೇರಿ ಒಟ್ಟು ಮೂರು ದಿನ ಲಾಂಗ್ ವೀಕೆಂಡ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ರಜಾ ದಿನಗಳ ಮಸ್ತಿಗೆ ಜನರು ಅನೇಕ ಸ್ಥಳಗಳಿಗೆ ಭೇಟಿ ನೀಡಲು ಪ್ಲಾನ್ ಮಾಡಿದ್ದಾರೆ. ಯಾವೆಲ್ಲ ಸ್ಥಳಗಳು ಹೆಚ್ಚು ಹೆಚ್ಚು ಬುಕ್ ಆಗಿವೆ ಎಂದು
ರೇವಣ್ಣ ಕುಟುಂಬವನ್ನು ಮುಗಿಸಲು ಹೊರಟವರು ರಾಜ್ಯದಲ್ಲಿ ಏನೇನು ಮಾಡ್ತಿದ್ದಾರೆ ನಾನು ಹೇಳಲಾ? ಎಚ್ಡಿಡಿ ಕಿಡಿ
ಹಾಸನದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ. ರೇವಣ್ಣ ಕುಟುಂಬವನ್ನು ಮುಗಿಸಲು ಹೊರಟಿರುವ ಆಡಳಿತಗಾರರ ವಿರುದ್ಧ ಎಚ್ಡಿಡಿ ಕಿಡಿ ಕಾರಿದ್ದಾರೆ. ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆಗೂಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ಎಚ್ಡಿಡಿ ಹೇಳಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಜನರ ಪಕ್ಷವಾಗಿದೆ.
ಡಿಕೆಶಿ ಕನಸಿನ ’ಸಿಎಂ’ ಪಟ್ಟದ ಬಗ್ಗೆ ಕೋಡಿಶ್ರೀ ಭವಿಷ್ಯ: ಅಡ್ಡಗೋಡೆ ಮೇಲಿನ ದೀಪದ ಹಿಂದೆ ಅಡಗಿದೆಯೇ ಗಾದಿ ಸೀಕ್ರೆಟ್?
DK Shivakumar will become CM or not ? ಅರಸೀಕೆರೆ ಕೋಡಿಮಠ ಸಂಸ್ಥಾನದ ಕೋಡಿಮಠದ ಶ್ರೀಗಳು, ಮಕರ ಸಂಕ್ರಾಂತಿಯ ನಂತರ ಭವಿಷ್ಯ ನುಡಿಯುವುದಾಗಿ ಹೇಳಿದ್ದರು. ಆದರೆ, ಸಂಕ್ರಾಂತಿಯ ಆಸುಪಾಸಿನಲ್ಲಿ ಅವರು ಹೇಳಿದ ಭವಿಷ್ಯ ಎಲ್ಲೂ ವರದಿಯಾಗಿಲ್ಲ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಭವಿಷ್ಯದ ಬಗ್ಗೆ ಕೋಡಿಶ್ರೀಗಳು ಏನು ಒನ್ ಲೈನರ್’ನಲ್ಲಿ ಹೇಳಿದ್ದರು?
ಕ್ಷಯರೋಗ ಪತ್ತೆ ಯಶಸ್ವಿಯಲ್ಲಿ ಕೊಪ್ಪಳಕ್ಕೆ ರಾಜ್ಯದಲ್ಲೇ ಪ್ರಥಮ ಸ್ಥಾನ: ಶೇ.92% ರೋಗಿಗಳಿಗೆ ಯಶಸ್ವಿ ಚಿಕಿತ್ಸೆ
ಕ್ಷಯರೋಗಿಗಳ ಪತ್ತೆಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಕಾರ್ಯತಂತ್ರ ಯೋಜನೆ ಅನ್ವಯ 'ಕ್ಷಯ ಮುಕ್ತ ಕರ್ನಾಟಕ' ಗುರಿ ಸಾಧನೆಗೆ ಶ್ರಮಿಸಲಾಗುತ್ತಿದೆ. ಶಾಲೆ, ಕಾಲೇಜು, ಕಾರ್ಖಾನೆಗಳಲ್ಲಿ ಜಾಗೃತಿ ಮೂಡಿಸಿ, ಅತ್ಯಾಧುನಿಕ ಯಂತ್ರಗಳ ಸಹಾಯದಿಂದ ಹೆಚ್ಚಿನ ಪರೀಕ್ಷೆ ನಡೆಸಿ, ಶೇ.92ರಷ್ಟು ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. 13 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತವಾಗಿ ಘೋಷಣೆಗೆ ಸಿದ್ಧವಾಗಿವೆ.
ಸದನದಲ್ಲಿ ಶಿಸ್ತು ರೂಪಿಸಲು ಕಾಲೇಜು ಕಲಿಸಿದ ಪಾಠ ನೆರವಾಗಿದೆ : ಸ್ಪೀಕರ್ ಯು.ಟಿ.ಖಾದರ್
ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ
ಬಳ್ಳಾರಿ ಮಾಡೆಲ್ ಹೌಸ್ಗೆ ಬೆಂಕಿ: ಭರತ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಗಂಭೀರ ಆರೋಪ; ಸಿಬಿಐ ತನಿಖೆಗೆ ಪಟ್ಟು
ಬಳ್ಳಾರಿಯ ಲೇಔಟ್ ಒಂದರ ಮಾಡೆಲ್ ಹೌಸ್ಗೆ ಬೆಂಕಿ ಬಿದ್ದ ಘಟನೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಶಾಸಕ ಭರತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭರತ್ ರೆಡ್ಡಿ ಅವರ ಕುಮ್ಮಕ್ಕಿನಿಂದಲೇ ಅವರ ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ರೆಡ್ಡಿ ಆರೋಪಿಸಿದ್ದಾರೆ. ಮೂರು ತಿಂಗಳ ಹಿಂದೆ ಇದೇ ಜಾಗದಲ್ಲಿ ಕಳ್ಳತನ ನಡೆದಾಗ ಬಂಧಿತರಾದವರನ್ನು ಎಎಸ್ಪಿ ರವಿ ಮತ್ತು ಭರತ್ ರೆಡ್ಡಿ ಬಿಡುಗಡೆ ಮಾಡಿಸಿದ್ದರು, ಅವರೇ ಈಗ ಈ ಕೃತ್ಯ ಎಸಗಿದ್ದಾರೆ ಎಂದಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿರುವ ಜನಾರ್ದನ ರೆಡ್ಡಿ, ಮಂಗಳವಾರ ಸದನದಲ್ಲಿ ಈ ವಿಷಯ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.
₹13,070 ಕೋಟಿ ಹೂಡಿಕೆ ವಾಗ್ದಾನಕ್ಕೆ ದಾವೋಸ್ನಲ್ಲಿ ಅಧಿಕೃತ ಮುದ್ರೆ: ಎಂಬಿ ಪಾಟೀಲ
ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಒಪ್ಪಂದ ಮಾಡಿಕೊಳ್ಳುವುದಕ್ಕೆ ಅಮೆರಿಕದ ವೈಮಾಂತರಿಕ್ಷ ಕಂಪನಿ ವೊಯೆಜರ್ ಟೆಕ್ನಾಲಜೀಸ್, ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ವಾಸ್ಟ್ ಸ್ಪೇಸ್ ಕಂಪನಿ ಆಸಕ್ತಿ ವ್ಯಕ್ತಪಡಿಸಿವೆ. ಯುಎಇ ಮೂಲದ ಬಹುರಾಷ್ಟ್ರೀಯ ಉದ್ಯಮ ಸಮೂಹವಾಗಿರುವ ಕ್ರೆಸೆಂಟ್ ಎಂಟರ್ಪ್ರೈಸಿಸ್ , ರಾಜ್ಯದ ಉದ್ದಿಮೆ ಹಾಗೂ ಕಂಪನಿಗಳಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿದೆ. ರಾಜ್ಯದಲ್ಲಿನ ಉದ್ದಿಮೆ ಸ್ನೇಹಿ ಹಾಗೂ ನಾವೀನ್ಯತಾ ವ್ಯವಸ್ಥೆಯ ಸದ್ಬಳಕೆ ಮಾಡಿಕೊಳ್ಳಲು ಸ್ವಿಸ್ ಕಂಪನಿಗಳಿಗೆ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ತಿಳಿವಳಿಕೆಯ ಒಪ್ಪಂದ ಪತ್ರಕ್ಕೆ (ಎಂಒಯು) ಅಂಕಿತ ಹಾಕಲಾಗಿದೆ. ವಹಿವಾಟು ವಿಸ್ತರಣೆ ಕುರಿತು ರಾಜ್ಯ ಸರ್ಕಾರದ ಜೊತೆ ವಿಸ್ತೃತ ಯೋಜನಾ ಪ್ರಸ್ತಾವ ಹಂಚಿಕೊಳ್ಳುವುದಾಗಿ ನ್ಯಾಚುರಲ್ ಫೈಬರ್ ವೆಲ್ಡಿಂಗ್ (ಎನ್ಎಫ್ಡಬ್ಲ್ಯು ಅರ್ಥ್) ತಿಳಿಸಿದೆ ಎಂದು ಸಚಿವರು ವಿವರಿಸಿದ್ದಾರೆ.
ಸಹಕಾರ ಕಾಯ್ದೆ- ಆರ್ಬಿಐ ನಿಯಮಾವಳಿಗೂ ವ್ಯತ್ಯಾಸ; ಕಾನೂನು ತಜ್ಞರ ಜತೆ ಸಮಾಲೋಚನೆ ಅಗತ್ಯ : ಎಂ.ಎನ್.ರಾಜೇಂದ್ರ ಕುಮಾರ್
ರಾಜ್ಯ ಮಟ್ಟದ ಕಾರ್ಯದಕ್ಷತೆ ತರಬೇತಿ ಕಾರ್ಯಕ್ರಮ
ಚೀನಾ ಯುವತಿ ಕೈ ಹಿಡಿದ ಕಾಫಿನಾಡಿನ ಯುವಕ: ಸಂಪ್ರದಾಯಿಕ ಉಡುಗೆಯಲ್ಲಿ ಹಸೆಮಣೆ ಏರಿದ ಜೋಡಿ
ಚಿಕ್ಕಮಗಳೂರಿನಲ್ಲಿ ಅಪರೂಪದ ವಿವಾಹ ಜರುಗಿದೆ. ಚೀನಾದ ಯುವತಿ ಜೇಡ್ ಮತ್ತು ಕಾಫಿ ನಾಡಿನ ಯುವಕ ರೂಪಕ್ ಭಾರತೀಯ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದಲ್ಲಿ ಅಧ್ಯಯನ ಮಾಡುತ್ತಿದ್ದಾಗ ಇವರ ಪರಿಚಯ ಸ್ನೇಹವಾಗಿ, ಬಳಿಕ ಪ್ರೀತಿಗೆ ತಿರುಗಿತ್ತು. ಹಿಂದೂ ಸಂಪ್ರದಾಯದಂತೆ ನಡೆದ ಈ ವಿವಾಹಕ್ಕೆ ಹಲವು ಗಣ್ಯರು ಸಾಕ್ಷಿಯಾಗಿದ್ದರು. ದೇಶ, ಭಾಷೆ, ಮತದ ಭೇದ ಮೀರಿದ ಇವರ ಪ್ರೀತಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.
ವಿಮಾನ ಜೋಡಣೆಗೂ ಇಳಿದ ಅದಾನಿ, ವಿಶ್ವದ 3ನೇ ಅತಿದೊಡ್ಡ ವಿಮಾನ ತಯಾರಕ ಕಂಪನಿ ಎಂಬ್ರಾಯರ್ ಜೊತೆ ಒಪ್ಪಂದ
ಅದಾನಿ ಏರೋಸ್ಪೇಸ್ ಮತ್ತು ಬ್ರೆಜಿಲ್ನ ಎಂಬ್ರಾಯರ್ ಕಂಪನಿಗಳು ಮಹತ್ವದ ಒಪ್ಪಂದಕ್ಕೆ ಮುಂದಿನ ವಾರ ಸಹಿ ಹಾಕಲಿವೆ. ಈ ಒಪ್ಪಂದದ ಪ್ರಕಾರ, ಭಾರತದಲ್ಲಿ ವಾಣಿಜ್ಯ ವಿಮಾನಗಳ ಜೋಡಣಾ ಘಟಕವನ್ನು ಸ್ಥಾಪಿಸಲಾಗುತ್ತದೆ. ವಿಮಾನಗಳನ್ನು ಸ್ಥಳೀಯವಾಗಿಯೇ ಉತ್ಪಾದಿಸಬೇಕೆಂಬ ಸರ್ಕಾರದ ಒತ್ತಾಸೆಗೆ ಇದು ಮೊದಲ ದೊಡ್ಡ ಯಶಸ್ಸಾಗಿದೆ. ಮುಂದಿನ 20 ವರ್ಷಗಳಲ್ಲಿ ಭಾರತದಲ್ಲಿ ಸಣ್ಣ ಗಾತ್ರದ ವಿಮಾನಗಳಿಗೆ ಭಾರೀ ಬೇಡಿಕೆ ಬರಲಿದ್ದು, ಈ ಪಾಲುದಾರಿಕೆ ಅದಕ್ಕೆ ಪೂರಕವಾಗಿ ಕೆಲಸ ಮಾಡಲಿದೆ.
ಜಾರ್ಜಿಯಾದಲ್ಲಿ ಕೌಟುಂಬಿಕ ಕಲಹ ಮಾರಣಾಂತಿಕವಾಗಿ ಪರಿಣಮಿಸಿದ್ದು, ಭಾರತೀಯ ಮೂಲದ ವಿಜಯ್ ಕುಮಾರ್ ತನ್ನ ಪತ್ನಿ ಸೇರಿ ನಾಲ್ವರನ್ನು ಗುಂಡಿಟ್ಟು ಕೊಂದಿದ್ದಾನೆ. ಘಟನೆಯ ವೇಳೆ ಮಕ್ಕಳು ಸುರಕ್ಷಿತವಾಗಿದ್ದು, ಸಮಯೋಚಿತವಾಗಿ ಪೊಲೀಸರಿಗೆ ಕರೆ ಮಾಡಿ ಆರೋಪಿಯ ಬಂಧನಕ್ಕೆ ಸಹಾಯ ಮಾಡಿದ್ದಾರೆ. ಭಾರತೀಯ ರಾಯಭಾರ ಕಚೇರಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ; 2 ದಿನ ತುಂತುರು ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
ಬೆಂಗಳೂರಿನಲ್ಲಿ ಇಂದು ಮತ್ತೆ ನಾಳೆ(ಶನಿವಾರ, ಭಾನುವಾರ) ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಮುಂದಿನ ವಾರದಿಂದ ಬಿಸಿಲು ಮತ್ತು ಒಣ ಹವಾಮಾನ ಇರಲಿದೆ ಎನ್ನಲಾಗುತ್ತಿದೆ. ಕುದಿಸಿ ಆರಿಸಿದ ನೀರು, ಬಿಸಿ ಆಹಾರವನ್ನೇ ಸೇವಿಸಲು, ರಾತ್ರಿ ಮತ್ತು ಮುಂಜಾನೆ ದೇಹವನ್ನು ಬೆಚ್ಚವಾಗಿಡಲು ವೈದ್ಯರು ಸಲಹೆ ನೀಡಿದ್ದಾರೆ. ಅದರಲ್ಲೂ ಮಕ್ಕಳು ಮತ್ತು ವಯಸ್ಸಾದವರು ವೈದ್ಯರ ಸಲಹೆ ಪಾಲಿಸಲು ಎಚ್ಚರಿಕೆ ಕೊಡಲಾಗಿದೆ.
ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮತ್ತೆ ಸಂಘರ್ಷ ತಲೆದೋರಿದೆ. ರಾಜ್ಯಪಾಲರು ಸರ್ಕಾರದ ಭಾಷಣ ಓದಲು ನಿರಾಕರಿಸಿ ಹೊರನಡೆದಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಈ ಕ್ರಮವನ್ನು ಖಂಡಿಸಿದ್ದಾರೆ. ರಾಜ್ಯಪಾಲರ ಭಾಷಣ ಸಂಪ್ರದಾಯ ರದ್ದುಗೊಳಿಸಲು ಸಂವಿಧಾನ ತಿದ್ದುಪಡಿ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ. ಇದು ಬಿಜೆಪಿ ಅಲ್ಲದ ರಾಜ್ಯಗಳಲ್ಲಿ ನಡೆಯುತ್ತಿರುವ ವಿದ್ಯಮಾನವಾಗಿದೆ.
ಆರ್ಎಸ್ಎಸ್ ಬಿಜೆಪಿಯನ್ನು ನಿಯಂತ್ರಿಸುತ್ತಿದೆ, ಇದು ವಂಶಪಾರಂಪರ್ಯಕ್ಕಿಂತ ದೊಡ್ಡದು: ಡಿಎಂಕೆ ನಾಯಕ ಅಣ್ಣಾದೊರೈ
ತಮಿಳುನಾಡಿನಲ್ಲಿ ರಾಜಕೀಯ ಕಾವು ಏರಿದೆ. ಪ್ರಧಾನಿ ಮೋದಿ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರೆ, ಡಿಎಂಕೆ ನಾಯಕ ಅಣ್ಣಾದೊರೈ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಆರ್ಎಸ್ಎಸ್ನಿಂದ ನಿಯಂತ್ರಿಸಲ್ಪಡುತ್ತಿದ್ದು, ಇದು ವಂಶಪಾರಂಪರ್ಯಕ್ಕಿಂತ ಕೆಟ್ಟದ್ದು ಎಂದು ಆರೋಪಿಸಿದ್ದಾರೆ. ಎನ್ಡಿಎ ತಮಿಳುನಾಡಿಗೆ ದ್ರೋಹ ಬಗೆದಿದೆ ಎಂದೂ ಹೇಳಿದ್ದಾರೆ.
ಹುಬ್ಬಳ್ಳಿ: ಖಾಸಗಿ ಹೋಟೆಲ್ನಲ್ಲಿ ಮಲ್ಲಿಕಾರ್ಜುನ ಖರ್ಗೆ–ಸಿದ್ದರಾಮಯ್ಯ ಭೇಟಿ
ಹುಬ್ಬಳ್ಳಿ: ವಸತಿ ಇಲಾಖೆಯ ಆಯೋಜನೆಯಲ್ಲಿ ನಡೆಯುತ್ತಿರುವ ಐತಿಹಾಸಿಕ 42,345 ಮನೆಗಳ ವಿತರಣಾ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಧಾರವಾಡ ಜಿಲ್ಲಾಡಳಿತದಿಂದ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು. ನಂತರ, ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲಿನಲ್ಲಿ ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಜಮೀರ್ ಅಹಮದ್ ಖಾನ್, ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
Gold Safety: ಚಿನ್ನ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದೀರಾ? ಹಾಗಾದರೆ ತಪ್ಪದೇ ಈ ಸುದ್ದಿ ಓದಿ...
ಚಿನ್ನದ ಬೆಲೆ ಆಕಾಶ ತಲುಪಿದ್ದು, ನೋಡ ನೋಡುತ್ತಲೇ ಚಿನ್ನ ಹಾಗೂ ಬೆಳ್ಳಿಗೆ ಭಾರಿ ಡಿಮ್ಯಾಂಡ್ ಬಂದುಬಿಟ್ಟಿದೆ. ಚಿನ್ನದ ಬೆಲೆ ಇನ್ನೂ ಹೆಚ್ಚಾಗುತ್ತೆ, ಅಲ್ಲದೆ ಕೆಲವೇ ದಿನಗಳಲ್ಲಿ ಬಂಗಾರದ ಬೆಲೆಯು ಪ್ರತಿ 10 ಗ್ರಾಂಗೆ 1,70,000 ರೂಪಾಯಿಗೆ ತಲುಪಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ಎಲ್ಲಾ ಚರ್ಚೆಗಳ ನಡುವೆ ಹೊಸ ಚಿಂತೆ ಶುರುವಾಗಿದೆ. ಅದು ಏನೆಂದರೆ ಬಹುತೇಕರು
ಪ್ರತಿಭಟನಾಕಾರರ ಮೇಲಿನ ಇರಾನ್ನ ದಮನಕಾರಿ ಕ್ರಮ ಖಂಡಿಸುವ UNHRC ನಿರ್ಣಯದ ವಿರುದ್ಧ ಮತ ಚಲಾಯಿಸಿದ ಭಾರತ
ಹೊಸದಿಲ್ಲಿ: ಸರಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ಇರಾನ್ ನಡೆಸಿದ ದಮನಕಾರಿ ಕ್ರಮವನ್ನು ಖಂಡಿಸುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ನಿರ್ಣಯದ ವಿರುದ್ಧ ಭಾರತ ಮತ ಚಲಾಯಿಸಿರುವ ಬಗ್ಗೆ scroll.in ವರದಿ ಮಾಡಿದೆ. ಇರಾನ್ನ ಕ್ರೂರ ದಬ್ಬಾಳಿಕೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸುವ ನಿರ್ಣಯವನ್ನು 47 ಸದಸ್ಯರ ಮಂಡಳಿಯು ಅಂಗೀಕರಿಸಿದೆ. ಮಂಡಳಿಯ 25 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, 14 ಸದಸ್ಯರು ಮತದಾನದಿಂದ ದೂರ ಉಳಿದರು. ಭಾರತ ಮತ್ತು ಚೀನಾ ಸೇರಿದಂತೆ ಏಳು ರಾಷ್ಟ್ರಗಳು ನಿರ್ಣಯಕ್ಕೆ ವಿರೋಧವನ್ನು ವ್ಯಕ್ತಪಡಿಸಿವೆ. ಹೆಚ್ಚುತ್ತಿರುವ ಹಣದುಬ್ಬರ ಮತ್ತು ಆರ್ಥಿಕ ಸಂಕಷ್ಟವನ್ನು ಖಂಡಿಸಿ ಇರಾನ್ ನಲ್ಲಿ ಡಿಸೆಂಬರ್ 28 ರಂದು ಪ್ರತಿಭಟನೆ ಪ್ರಾರಂಭವಾಗಿದ್ದವು. 100 ಕ್ಕೂ ಹೆಚ್ಚು ಪಟ್ಟಣಗಳಿಗೆ ಪ್ರತಿಭಟನೆ ವಿಸ್ತರಿಸಿತ್ತು. ಮಂಡಳಿಯು ತನ್ನ ನಿರ್ಣಯದಲ್ಲಿ ಸಾವಿರಾರು ಜನರ ಪ್ರಾಣ ಹಾನಿಗೆ ಕಾರಣವಾದ ಶಾಂತಿಯುತ ಪ್ರತಿಭಟನೆಗಳ ಹಿಂಸಾತ್ಮಕ ದಮನವನ್ನು ಖಂಡಿಸುತ್ತದೆ ಎಂದು ಹೇಳಿದೆ. ಮಾನವ ಹಕ್ಕುಗಳನ್ನು ಗೌರವಿಸಲು, ರಕ್ಷಿಸಲು ಇರಾನ್ ಸರಕಾರವನ್ನು ಒತ್ತಾಯಿಸಿದೆ. ಕಾನೂನುಬಾಹಿರ ಹತ್ಯೆಗಳು, ಬಲವಂತದ ಕಣ್ಮರೆ ಮತ್ತು ಪ್ರತಿಭಟನಾಕಾರರ ಬಂಧನಗಳನ್ನು ಕೊನೆಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ಣಯದಲ್ಲಿ ಇರಾನ್ಗೆ ಆಗ್ರಹಿಸಿದೆ. ಪ್ರತಿಭಟನೆಯಲ್ಲಿ ಕನಿಷ್ಠ 5,002 ಮಂದಿ ಮೃತಪಟ್ಟಿದ್ದು ಇದರಲ್ಲಿ 4,716 ಪ್ರತಿಭಟನಾಕಾರರು, 203 ಮಂದಿ ಸರಕಾರಕ್ಕೆ ಸಂಬಂಧಿಸಿದವರು, 43 ಮಕ್ಕಳು, 40 ಮಂದಿ ನಾಗರಿಕರು ಸೇರಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿ 26,800 ಮಂದಿಯನ್ನು ಬಂಧಿಸಲಾಗಿದೆ ಎಂದು ಅಮೆರಿಕಾ ಮೂಲದ `ಹ್ಯೂಮನ್ ರೈಟ್ಸ್ ಆಕ್ಟಿವಿಸ್ಟ್ಸ್ ನ್ಯೂಸ್ ಏಜೆನ್ಸಿ' ಹೇಳಿದೆ.
ಗುಡಿಹಳ್ಳಿ-ಕಬ್ಬಳ್ಳಿ: ಗುಂಡಿಗಳಾಗಿ ಮಾರ್ಪಟ್ಟ ರಸ್ತೆ
ತಿಂಗಳೊಳಗೆ ರಸ್ತೆ ದುರಸ್ಥಿ ಮಾಡುವುದಾಗಿ ಹೇಳಿ ನಾಪತ್ತೆಯಾದ ಇಂಜಿನಿಯರ್!
ವಿದೇಶಿ ವಿನಿಮಯ ನಿಧಿ ಒಂದೇ ವಾರದಲ್ಲಿ ₹1.3 ಲಕ್ಷ ಕೋಟಿ ಏರಿಕೆ, ₹76.57 ಲಕ್ಷ ಕೋಟಿಗೆ ಜಂಪ್
ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜನವರಿ 16ಕ್ಕೆ ಅಂತ್ಯಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ನಿಧಿಯು 14.17 ಶತಕೋಟಿ ಡಾಲರ್ ಏರಿಕೆಯಾಗಿ, 701.36 ಶತಕೋಟಿ ಡಾಲರ್ಗೆ ತಲುಪಿದೆ. ವಿದೇಶಿ ಕರೆನ್ಸಿ ಆಸ್ತಿಗಳು 9.65 ಶತಕೋಟಿ ಡಾಲರ್ ಮತ್ತು ಚಿನ್ನದ ಮೀಸಲು 4.62 ಶತಕೋಟಿ ಡಾಲರ್ ಹೆಚ್ಚಳವಾಗಿರುವುದು ಈ ಏರಿಕೆಗೆ ಮುಖ್ಯ ಕಾರಣವಾಗಿದೆ. ಇದೇ ವೇಳೆ, ಎಸ್ಡಿಆರ್ ಮತ್ತು ಐಎಂಎಫ್ ಮೀಸಲುಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ.
ಸ್ವಾತಂತ್ರ್ಯ ಬಂದು 77 ವರ್ಷ ಕಳೆದರೂ ವಿದ್ಯುತ್ ಸಂಪರ್ಕವಿಲ್ಲದ ರಾಮನಾಯಕ ದೊಡ್ಡಿ
ಲಿಂಗಸಗೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 77ವರ್ಷ ಕಳೆದರೂ ದೇಶದ ಹಲವು ಹಳ್ಳಿಗಳಿಗೆ ಇನ್ನೂ ಮೂಲಭೂತ ಸೌಕರ್ಯ ಸಿಕ್ಕಿಲ್ಲ. ಇದಕ್ಕೆ ಲಿಂಗಸಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮನಾಯಕ ದೊಡ್ಡಿಯೂ ಹೊರತಾಗಿಲ್ಲ. ರಾಮನಾಯಕ ದೊಡ್ಡಿಯಲ್ಲಿ 60ಕ್ಕೂ ಹೆಚ್ಚು ಕುಟುಂಬದ ಇನ್ನೂರು ಮಂದಿ ನೆಲೆಸಿದ್ದು, ಇಲ್ಲಿಯವರೆಗೆ ವಿದ್ಯುತ್ ಸಂಪರ್ಕ ಕೂಡ ಸಿಕ್ಕಿಲ್ಲ. ಹಳ್ಳಿಗರು ಸಂಜೆ ಆಗುತ್ತಲೇ ಮೇಣದ ಬತ್ತಿಗಳು ಮತ್ತು ಎಣ್ಣೆ ದೀಪಗಳ ಮೊರೆ ಹೋಗುತ್ತಾರೆ. ಇದು ನಮ್ಮ ದೈನಂದಿನ ಜೀವನದ ಕ್ರಮ. ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಹಲವು ಬಾರಿ ಗ್ರಾಪಂಗೆ ಮನವಿ ಮಾಡಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. ವಿದ್ಯುತ್ ಸಂಪರ್ಕ ಇಲ್ಲದಿದ್ದರೂ ಮೀಟರ್ ಅಳವಡಿಕೆ: ದೊಡ್ಡಿಗೆ ವಿದ್ಯುತ್ ಸಂಪರ್ಕ ಇಲ್ಲ. ಆದರೂ ವಿದ್ಯುತ್ ಮೀಟರ್ ಅಳವಡಿಕೆಯ ಗುತ್ತಿಗೆ ಪಡೆದ ಜೆಸ್ಕಾಂ ಗುತ್ತಿಗೆದಾರ ಮನೆಗಳಿಗೆ ಮೀಟರ್ ಅಳವಡಿಸಿ ಕೈತೊಳೆದುಕೊಂಡಿರುವುದು ಮಾತ್ರ ಅಶ್ಚರ್ಯವಾದರೂ ಸತ್ಯ ಸಂಗತಿ. ಅಂಗನವಾಡಿ ಹಾಗೂ ಶಾಲೆ ಸೌಕರ್ಯವಿಲ್ಲ: 200 ಜನ ವಾಸ ಮಾಡುವ ರಾಮನಾಯಕನ ದೊಡ್ಡಿಯ ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಅಂಗನವಾಡಿ ಇಲ್ಲ. ನಮ್ಮ ಮಕ್ಕಳು ಶಾಲೆ ಕಲಿಯಲು 2 ಕಿ.ಮೀ. ದೂರದ ಹೊನ್ನಹಳ್ಳಿಗೆ ಹೋಗಬೇಕು. ಆದ್ದರಿಂದ ಹಲವಾರು ಮಕ್ಕಳು ಅನಕ್ಷರಸ್ಥರಾಗುವಂತಾಗಿದೆ ಎನ್ನುವುದು ಇಲ್ಲಿನ ಪೋಷಕರ ದೂರಾಗಿದೆ. ರಸ್ತೆ ಸೌಕರ್ಯ ಕಾಣದಂತಾಗಿದೆ ನಮ್ಮ ಸ್ಥಿತಿ: ಮೂಲಭೂತ ಸೌಕರ್ಯವಾದ ರಸ್ತೆ ಸೌಲಭ್ಯವೂ ದೊಡ್ಡಿ ನಮಗಿಲ್ಲ. ಜಮೀನುಗಳ ಕಾಲುದಾರಿಯೇ ಈ ದೊಡ್ಡಿಯ ಜನರಿಗೆ ಮುಖ್ಯರಸ್ತೆಯಾಗಿದೆ. ನಮ್ಮ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ 7 ಕಿ.ಮೀ.ದೂರದ ಲಿಂಗಸುಗೂರಿಗೆ ನಡೆದುಕೊಂಡೇ ಹೋಗಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶುದ್ಧ ಕುಡಿಯುವ ನೀರು ನಮ್ಮ ಕನಸು: ರಾಮನಾಯಕನ ದೊಡ್ಡಿಯಲ್ಲಿ ಶುದ್ಧ ಕುಡಿಯುವ ನೀರು ಸಿಗುವುದು ನಮಗೆ ಕನಸಿನ ಮಾತೇ ಸರಿ. ಕಳೆದ 4-5 ತಿಂಗಳುಗಳ ಹಿಂದೆ ತಾಲೂಕು ಪಂಚಾಯತ್ ವತಿಯಿಂದ ಕೊಳವೆ ಬಾವಿ ಕೊರೆಯಿಸಿ ನೀರಿನ ಗುಮ್ಮಿ (ಸಿಸ್ಟರ್ನ್) ಅಳವಡಿಸಲಾಗಿದೆ. ಆದರೆ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ನೀರಿನ ಗುಮ್ಮಿ ಹನಿ ನೀರು ಕಂಡಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು. ಜಾಣ ಕುರುಡರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಚುನಾವಣೆ ಬಂದಾಗ ಮಾತ್ರ ಈ ದೊಡ್ಡಿಗೆ ಬರುವಜನಪ್ರತಿನಿಧಿಗಳು, ಮತ್ತೆ ಚುನಾವಣೆ ಬರುವವರೆಗೂ ಇತ್ತಕಡೆ ಸುಳಿಯುವುದಿಲ್ಲ. ಅದರಂತೆ ಅಧಿಕಾರಿಗಳೂ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಇನ್ನು ಲಿಂಗಸುಗೂರು ಮೀಸಲು ಕ್ಷೇತ್ರವಾಗಿ 20 ವರ್ಷಗಳಾಗುತ್ತ ಬಂತು. 12 ವರ್ಷ ಶಾಸಕರಾಗಿರುವವರು ಈ ಕ್ಷೇತ್ರವನ್ನು ಮಾದರಿ ಮಾಡುತ್ತೇನೆಂದು ಹೇಳುತ್ತಾರೆೆ. ಆದರೆ ಇಲ್ಲಿಯ ಜನ ‘ನಮಗೆ ಮೂಲಭೂತ ಸೌಲಭ್ಯ ಕಲ್ಪಿಸಿ, ಅಷ್ಟೇ ಸಾಕು’ ಎನ್ನುತ್ತಾರೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಎಚ್ಚೆತ್ತುಕೊಂಡು ರಾಮನಾಯಕ ದೊಡ್ಡಿಗೆ ವಿದ್ಯುತ್, ರಸ್ತೆ, ಅಂಗನವಾಡಿ, ಶಾಲೆಯು ಸೇರಿ ಮೂಲಸೌಲಭ್ಯ ಕಲ್ಪಿಸಬೇಕಿದೆ. ಲಿಂಗಸಗೂರು ತಾಲೂಕಿನಿಂದ ಕೂಗಳತೆ ದೂರದಲ್ಲಿರುವ ರಾಮನಾಯಕನ ದೊಡ್ಡಿ ವಿದ್ಯುತ್ ಸಂಪರ್ಕ, ರಸ್ತೆ, ಕುಡಿಯುವ ನೀರು, ಅಂಗನವಾಡಿ, ಶಾಲೆ ಸೇರಿ ಇತರ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದೇವೆ. ಶಾಸಕರು ಹಾಗೂ ಅಧಿಕಾರಿಗಳು ಇನ್ನಾದರೂ ಕಣ್ತೆರೆದು ನಮಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ ಅನುಕೂಲ ಮಾಡಿಕೊಡಲು ಇಚ್ಛಾಶಕ್ತಿ ಪ್ರದರ್ಶಿಸಬೇಕು. -ರಾಮು ನಾಯಕ, ರಾಮನಾಯಕನ ದೊಡ್ಡಿಯ ನಿವಾಸಿ
ಕೊಪ್ಪಳ ಜಿಲ್ಲಾಸ್ಪತ್ರೆಗೆ ಬೇಕಿದೆ ಇಂದಿರಾ ಕ್ಯಾಂಟೀನ್
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಇಂದಿರಾ ಕ್ಯಾಂಟೀನ್ನ ಅವಶ್ಯಕತೆ ಇದೆ. ಇಂದಿರಾ ಕ್ಯಾಂಟೀನ್ ಪ್ರಾರಂಭವಾದರೆ ಬಡಜನರಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಜಿಲ್ಲಾಸ್ಪತ್ರೆಗೆ ನಿರಂತರವಾಗಿ ರೋಗಿಗಳು ಬರುತ್ತಾರೆ. ಬರುವ ಬಡ ರೋಗಿಗಳ ಕುಟುಂಬದವರು, ರೋಗಿಗಳ ಸಹಾಯಕರು ಕೂಡ ಬಂದು ದಿನಗಟ್ಟಲೆ ಇಲ್ಲೇ ಇರಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಅವರು ಬೇರೆ ಕಡೆ ಹೋಗಿ ಊಟ ಮಾಡುವಷ್ಟು ಸಮಯವಾಗಲಿ ಅಥವಾ ಹಣವಾಗಲಿ ಅವರ ಬಳಿ ಇರುವುದಿಲ್ಲ, ಆಸ್ಪತ್ರೆಗೆ ಬರುವ ಬಹುತೇಕ ಜನರು ಬಡವರೇ ಆಗಿರುತ್ತಾರೆ. ಅದರಲ್ಲೂ ದೂರದ ಊರಿನಿಂದ ಬರುವವರೇ ಹೆಚ್ಚಾಗಿರುವುದರಿಂದ ಇಂದಿರಾ ಕ್ಯಾಂಟೀನ್ನ ಅವಶ್ಯಕತೆ ಎದ್ದು ಕಾಣುತ್ತಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರಕಾರ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯೋಜನೆಯು ನೂರಾರು ಬಡ ಜನರ ಹೊಟ್ಟೆಯ ಹಸಿವನ್ನು ನೀಗಿಸಲಿದೆ. ಬಡ ರೋಗಿಗಳಿಗೆ ಆಸ್ಪತ್ರೆಯ ವತಿಯಿಂದ ಊಟೋಪಚಾರದ ವ್ಯವಸ್ಥೆ ಇದ್ದು, ರೋಗಿಗಳ ಜೊತೆ ಬಂದವರಿಗೆ ಯಾವುದೇ ವ್ಯವಸ್ಥೆ ಇಲ್ಲ ಎಂಬ ದೂರು ಕೇಳಿಬಂದಿದೆ. ಕೊಪ್ಪಳ ಜಿಲ್ಲಾಸ್ಪತ್ರೆಯು ಸುಮಾರು 250 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ನೂರು ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕೂಡ ಇರುವುದರಿಂದ ಕ್ಯಾಂಟೀನ್ ಬೇಡಿಕೆ ಹೆಚ್ಚಾಗಿದೆ. ಇಲ್ಲಿಂದ ಸ್ವಲ್ಪ ದೂರದಲ್ಲೇ ಜಿಲ್ಲಾಧಿಕಾರಿ ಮತ್ತು ಜಿಪಂ ಕಾರ್ಯಾಲಯಗಳು ಕೂಡ ಇರುವುದರಿಂದ ನಿತ್ಯ ರೈತರು, ಕೂಲಿ ಕಾರ್ಮಿಕರು, ಬಡವರು ಹಾಗೂ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುತ್ತಾರೆ. ಇವರಲ್ಲಿ ಹೆಚ್ಚಿನ ವರಿಗೆ 150-200ರೂ. ಕೊಟ್ಟು ಆಹಾರ ತಿನ್ನುವಷ್ಟು ಸಾಧ್ಯವಾಗುವುದಿಲ್ಲ. ಸದ್ಯ ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಇಂದಿರಾಕ್ಯಾಂಟೀನ್ ಮಾತ್ರ ಇದ್ದು, ಇನ್ನೊಂದು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಒಂದು ಒಂದು ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕ. ಆ ಮೂಲಕ ಸರಕಾರ ಬಡಜನರ ಹಸಿವು ನೀಗಿಸುವ ಕಾರ್ಯವನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಾಡಬೇಕು. -ಎಂ.ಕೃಷ್ಣವಂಶಿ, ಸ್ಥಳೀಯ ನಿವಾಸಿ
Bengaluru Commuters: ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಬೆಂಗಳೂರು ಜನರ ಡಿಮ್ಯಾಂಡ್ ಇದು, ಸರ್ಕಾರ ಒಪ್ಪುತ್ತಾ?
ಬೆಂಗಳೂರು ಮಹಾನಗರದಲ್ಲಿ ಬೈಕ್ ಟ್ಯಾಕ್ಸಿ ಅಬ್ಬರ ಮತ್ತೆ ಶುರುವಾಗುತ್ತಿದೆ, ಬೈಕ್ ಟ್ಯಾಕ್ಸಿಗೆ ಈಗ ಅನುಮತಿ ಸಿಕ್ಕ ನಂತರ ಪ್ರಯಾಣಿಕರು ಖುಷಿಯಾಗಿದ್ದಾರೆ. ಆದರೆ ಆಟೋ ಹಾಗೂ ಕ್ಯಾಬ್ ಚಾಲಕರು ಈ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಒಬ್ಬರೇ ಪ್ರಯಾಣಿಸುವಾಗ, ಕಡಿಮೆ ದೂರದ ಪ್ರಯಾಣಕ್ಕೆ ಬೈಕ್ ಟ್ಯಾಕ್ಸಿ ಅವಲಂಬಿಸಿರುವ ಲಕ್ಷಾಂತರ ದೈನಂದಿನ ಪ್ರಯಾಣಿಕರು ತಮ್ಮ ದಿನನಿತ್ಯದ ಕಾರ್ಯ ನಡೆಸುತ್ತಿದ್ದಾರೆ.
13,070 ಕೋಟಿ ಹೂಡಿಕೆ ವಾಗ್ದಾನಕ್ಕೆ ದಾವೋಸ್ನಲ್ಲಿ ಅಧಿಕೃತ ಮುದ್ರೆ: ಎಂ.ಬಿ.ಪಾಟೀಲ
ಬೆಂಗಳೂರು: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ಸಮಾವೇಶವು, ವೈಮಾಂತರಿಕ್ಷ, ಆಹಾರ ಸಂಸ್ಕರಣೆ, ಡೇಟಾ ಕೇಂದ್ರ, ಡಿಜಿಟಲ್ ಮೂಲಸೌಲಭ್ಯ, ಶುದ್ಧ ಇಂಧನ, ಅತ್ಯಾಧುನಿಕ ತಯಾರಿಕೆ ಮತ್ತಿತರ ವಲಯಗಳಲ್ಲಿನ ಹೂಡಿಕೆ, ವಿಸ್ತರಣೆ ಮತ್ತು ಪಾಲುದಾರಿಕೆಗಳಲ್ಲಿ ಕರ್ನಾಟಕವು ಮುಂಬರುವ ದಿನಗಳಲ್ಲಿ ಭಾರಿ ಮುನ್ನಡೆ ಸಾಧಿಸಲು ಚಿಮ್ಮು ಹಲಗೆಯಾಗಿ ಪರಿಣಮಿಸಿದ್ದು, 13,070 ಕೋಟಿ ಹೂಡಿಕೆ ವಾಗ್ದಾನಕ್ಕೆ ಅಧಿಕೃತ ಮುದ್ರೆ
'ದೇಶಭಕ್ತಿಯಲ್ಲಿ ನಾವು ಯಾರಿಗೂ ಕಡಿಮೆ ಇಲ್ಲ': ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ವಿರುದ್ಧ ಸ್ಟಾಲಿನ್ ವಾಗ್ದಾಳಿ
ಹೊಸದಿಲ್ಲಿ: ಅಧಿವೇಶನದ ಆರಂಭದಲ್ಲಿ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ಸಾಂವಿಧಾನಿಕ ಸಂಪ್ರದಾಯಗಳನ್ನು ದುರ್ಬಲಗೊಳಿಸಿದ್ದಾರೆ ಮತ್ತು ತಮ್ಮ ಹುದ್ದೆಗೆ ಕಳಂಕ ತಂದಿದ್ದಾರೆ ಎಂದು ರಾಜ್ಯಪಾಲ ಆರ್. ಎನ್. ರವಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದರು. ಕೋಟ್ಯಂತರ ಜನರಿಂದ ಆಯ್ಕೆಯಾದ ಈ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಗೆ ಧಕ್ಕೆ ಮಾಡಿದ್ದಾರೆ” ಎಂದು ಸ್ಟಾಲಿನ್ ವಿಧಾನಸಭೆಯಲ್ಲಿ ಹೇಳಿದರು. ದೇಶಭಕ್ತಿಯಲ್ಲಿ ನಾವು ಯಾರಿಗೂ ಕಡಿಮೆ ಇಲ್ಲ ಮತ್ತು ಯಾರೂ ನಮಗೆ ದೇಶ ಭಕ್ತಿಯನ್ನು ಕಲಿಸುವ ಅಗತ್ಯವಿಲ್ಲ. ರಾಷ್ಟ್ರಗೀತೆಯ ಮೇಲಿನ ಗೌರವವು ರಾಜ್ಯದ ರಾಜಕೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದರು. ರಾಜ್ಯಪಾಲರ ವರ್ತನೆ ತಮಗೆ ನೋವನ್ನುಂಟು ಮಾಡಿದೆ. ರಾಜ್ಯಪಾಲರು ಸರಕಾರದ ವಿರುದ್ಧ ವರ್ತಿಸುತ್ತಿದ್ದಾರೆ. ನಾನು ರಾಷ್ಟ್ರ ಮತ್ತು ರಾಷ್ಟ್ರಗೀತೆಯ ಬಗ್ಗೆ ಆಳವಾದ ಗೌರವವನ್ನು ಹೊಂದಿರುವ ವ್ಯಕ್ತಿ ಎಂದು ಸ್ಟಾಲಿನ್ ಹೇಳಿದರು. ತಮಿಳುನಾಡು ವಿಧಾನಸಭೆಯಲ್ಲಿ ಕಲಾಪದ ಆರಂಭದಲ್ಲಿ ತಮಿಳು ಥಾಯ್ ವಳ್ತು(Tamil Thai Vazhthu) ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡುವುದು ಸಂಪ್ರದಾಯವಾಗಿತ್ತು ಎಂದು ಸ್ಟಾಲಿನ್ ಹೇಳಿದರು. ತಮಿಳುನಾಡು ಇತರ ರಾಜ್ಯಗಳಿಗಿಂತ ಹೆಚ್ಚು ಅಭಿವೃದ್ಧಿ ಹೊಂದಿದೆ. ಇದಕ್ಕೆ ಕಾರಣ ನಮ್ಮ ಯೋಜನೆಗಳು. ಈ ಸರಕಾರದ ಮಟ್ಟಿಗೆ ಹೇಳುವುದಾದರೆ, ಸಾಧನೆಯ ಮೇಲೆ ಸಾಧನೆಯನ್ನು ಸೃಷ್ಟಿಸುವುದು ದ್ರಾವಿಡ ಮಾದರಿ ಸರಕಾರದ ವಿಶಿಷ್ಟ ಲಕ್ಷಣವಾಗಿದೆ ಎಂದು ಸ್ಟಾಲಿನ್ ಹೇಳಿದರು.
ಮುದ್ದೇಬಿಹಾಳ ನಗರಸಭೆ ಆಗುವುದು ಯಾವಾಗ?
ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೇಂದ್ರ ಇಂದು ಕೇವಲ ಸಾಮಾನ್ಯ ಪಟ್ಟಣವಲ್ಲ. ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ, ವ್ಯಾಪಾರ-ವಹಿವಾಟಿನ ವಿಸ್ತರಣೆ, ಶಿಕ್ಷಣ, ಆರೋಗ್ಯ, ಸಾರಿಗೆ ಕ್ಷೇತ್ರಗಳ ಬೆಳವಣಿಗೆ, ಬ್ಯಾಂಕ್ಗಳು, ಮಾರುಕಟ್ಟೆಗಳು ಹಾಗೂ ಸರಕಾರಿ ಕಚೇರಿಗಳ ವ್ಯವಸ್ಥೆಯಿಂದ ಹೊಂದಿದ ಪಟ್ಟಣ ಈಗಾಗಲೇ ನಗರ ಸ್ವರೂಪ ಪಡೆದುಕೊಂಡಿದೆ. ಆದರೂ ಆಡಳಿತಾತ್ಮಕವಾಗಿ ಇನ್ನೂ ಪುರಸಭೆ ಸ್ಥಾನಮಾನಕ್ಕೆ ಸೀಮಿತವಾಗಿರುವುದು ಯಾಕೆ? ಎಂಬ ಪ್ರಶ್ನೆ ಇಲ್ಲಿನ ಜನರನ್ನು ಕಾಡುತ್ತಿದೆ. ರಾಜ್ಯ ಸರಕಾರದ ನಿಯಮಾವಳಿಗಳ ಪ್ರಕಾರ ನಿರ್ದಿಷ್ಟ ಜನಸಂಖ್ಯೆ, ಆದಾಯ ಮೂಲಗಳು, ವ್ಯಾಪಾರ ಚಟುವಟಿಕೆಗಳು ಹಾಗೂ ಮೂಲಸೌಕರ್ಯಗಳ ಮಾನದಂಡಗಳನ್ನು ಪೂರೈಸಿದರೆ ಪಟ್ಟಣವನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಬಹುದು. ಈ ಎಲ್ಲ ಮಾನದಂಡಗಳನ್ನು ಮುದ್ದೇಬಿಹಾಳ ಹೊಂದಿದ್ದು, ಬಹಳ ಹಿಂದೆಯೇ ನಗರಸಭೆಯಾಗಬೇಕಿತ್ತು ಎನ್ನುವುದು ಕೇವಲ ಜನಾಭಿಪ್ರಾಯವಲ್ಲ, ವಾಸ್ತವವೂ ಹೌದು. ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನ ಸಂಚಾರ ಹೆಚ್ಚುತ್ತಿದೆ. ವ್ಯಾಪಾರ ವಹಿವಾಟು ತಾಲೂಕು ಮಟ್ಟವನ್ನು ಮೀರಿ ಜಿಲ್ಲಾ ಮಟ್ಟದಂತಾಗಿದೆ. ಖಾಸಗಿ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಬ್ಯಾಂಕ್ಗಳು ಹಾಗೂ ಸುತ್ತಮುತ್ತಲ ಗ್ರಾಮಗಳ ಜನಸಂಚಾರ ಮುದ್ದೇಬಿಹಾಳ ಪಟ್ಟಣವನ್ನು ಪ್ರಮುಖ ಕೇಂದ್ರಬಿಂದುವಾಗಿಸಿದೆ. ಆದರೆ ಇನ್ನೊಂದೆಡೆ ಚರಂಡಿ ವ್ಯವಸ್ಥೆಯ ಅವ್ಯವಸ್ಥೆ, ಮುಖ್ಯ ಬಜಾರಿನಲ್ಲಿ ರಸ್ತೆ ಅಗಲೀಕರಣದ ಕೊರತೆ, ವೈಜ್ಞಾನಿಕ ಕಸ ನಿರ್ವಹಣೆಯ ಅಭಾವ, ಉದ್ಯಾನಗಳ ಕೊರತೆ, ಬೀದಿ ದೀಪಗಳ ಸಮಸ್ಯೆ ಮತ್ತು ಸಮರ್ಪಕ ಕುಡಿಯುವ ನೀರಿನ ಕೊರತೆ ಜನರನ್ನು ಪ್ರತಿದಿನವೂ ಬೆಂಬಿಡದೆ ಕಾಡುತ್ತಿದೆ. ಮುದ್ದೇಬಿಹಾಳಕ್ಕೆ ನಗರಸಭೆ ಸ್ಥಾನಮಾನ ದೊರೆತರೆ ಸರಕಾರದಿಂದ ಹೆಚ್ಚಿನ ಅನುದಾನ, ವಿಶೇಷ ಯೋಜನೆಗಳು ಹಾಗೂ ನಗರಾಭಿವೃದ್ಧಿ ನಿಧಿಗಳ ಲಭ್ಯತೆ ಸಿಗಲಿದೆ. ಪುರಸಭೆ ಪಟ್ಟದಿಂದ ಹೊರಬಂದರೆ ಪಟ್ಟಣದ ಯುವಜನರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಿ ಸಿಗುವುದರಿಂದ ಒಟ್ಟಾರೆ ಅಭಿವೃದ್ಧಿಗೆ ಹೊಸ ದಿಕ್ಕು ತೋರಿದಂತಾಗುತ್ತದೆ. ಸ್ಥಳೀಯ ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ನಿಯಮಿತ ಅಧ್ಯಕ್ಷ ಸಿ.ಎಸ್. ನಾಡಗೌಡ ಅಪ್ಪಾಜಿ ಅವರು ಮುದ್ದೇಬಿಹಾಳವನ್ನು ನಗರಸಭೆಯನ್ನಾಗಿಸಲು ಮೊದಲ ಬಾರಿಗೆ ಧ್ವನಿ ಎತ್ತಿದವರು. ಅವರ ಪ್ರಯತ್ನದಿಂದ ಹಲವು ಯೋಜನೆಗಳು ಪಟ್ಟಣಕ್ಕೆ ಬಂದಿವೆ. ಇದೇ ವೇಳೆ, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯನ್ನು ವಿಜಯಪುರ ಕ್ಕಿಂತ ಮುದ್ದೇಬಿಹಾಳದಲ್ಲೇ ಸ್ಥಾಪಿಸಬೇಕು ಎಂಬ ಜನರ ಆಗ್ರಹವೂ ಕೇಳಿಬರುತ್ತಿದೆ. ಬಿದರಕುಂದಿ, ಕುಂಟೋಜಿ, ಶಿರೋಳ, ಹಡಲಗೇರಿ ಸೇರಿ ಇನ್ನೂ ಕೆಲವು ಸುತ್ತಮುತ್ತಲ ಗ್ರಾಮಗಳನ್ನು ಮುದ್ದೇಬಿಹಾಳ ಪಟ್ಟಣಕ್ಕೆ ಸೇರಿಸಿದರೆ ಜನಸಂಖ್ಯೆ, ವ್ಯಾಪ್ತಿ ಹಾಗೂ ಸಂಪನ್ಮೂಲಗಳ ದೃಷ್ಟಿಯಿಂದ ಮುದ್ದೇಬಿಹಾಳದ ನಗರಸಭೆ ಸ್ಥಾನಮಾನ ಪಡೆಯುವ ಅರ್ಹತೆ ಮತ್ತಷ್ಟು ಬಲವಾಗುತ್ತದೆ. ಹಾಗಿದ್ದರೂ ನಗರಸಭೆ ಯಾಕೆ ಈ ಪ್ರಕ್ರಿಯೆಗೆ ಮುಂದಾಗುತ್ತಿಲ್ಲ ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ನಗರಸಭೆ ಸ್ಥಾನಮಾನ ಸಿಗದಿರುವುದಕ್ಕೆ ಕಾರಣ ಯಾರು?. ಇದು ಜನಪ್ರತಿನಿಧಿಗಳ ನಿರ್ಲಕ್ಷ್ಯವೇ?. ಅಧಿಕಾರಿಗಳ ಉದಾಸೀನವೇ? ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ? ಎಂಬುದು ಪ್ರಶ್ನೆ ಜನರಲ್ಲಿ ಮೂಡಿದೆ. ಕೆಲಕಾಲ ಈ ವಿಷಯವನ್ನು ಮುನ್ನೆಲೆಗೆ ತಂದ ಬಳಿಕ ಮರೆತುಬಿಡುವ ಸಂಸ್ಕೃತಿಯೇ ಮುದ್ದೇಬಿಹಾಳದ ಅಭಿವೃದ್ಧಿಗೆ ಶಾಪವಾಗುತ್ತಿದೆ ಎಂದು ಪ್ರಗತಿಪರ ಸಂಘಟನೆಗಳು ಆರೋಪಿಸುತ್ತಿವೆ. ಮುದ್ದೇಬಿಹಾಳ ನಗರಸಭೆ ವಿಚಾರದಲ್ಲಿ ನಾಗರಿಕರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳು, ಪತ್ರಕರ್ತರು ಹಾಗೂ ಜನಪ್ರತಿನಿಧಿಗಳು ಒಂದೇ ಧ್ವನಿಯಲ್ಲಿ ಮಾತನಾಡಿದಾಗ ಮಾತ್ರ ರಾಜ್ಯ ಸರಕಾರದ ಗಮನ ಸೆಳೆಯಲು ಸಾಧ್ಯ ಎನ್ನುವುದು ಅವರ ಜನಾಭಿಪ್ರಾಯ. ವಿಜಯಪುರ ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿ.ಮೀ ದೂರದಲ್ಲಿರುವ ಮುದ್ದೇಬಿಹಾಳ ಪಟ್ಟಣವು ವ್ಯಾಪಾರ, ಶಿಕ್ಷಣ ಹಾಗೂ ಸಾರಿಗೆ ದೃಷ್ಟಿಯಿಂದ ಮಹತ್ವ ಹೊಂದಿದೆ. ಪಟ್ಟಣದ ಅಭಿವೃದ್ಧಿಗೆ ವಿವಿಧ ಅವಧಿಗಳಲ್ಲಿ ಜನಪ್ರತಿನಿಧಿಗಳು ಹಲವು ಭರವಸೆಗಳನ್ನು ನೀಡಿದ್ದಾರೆ. ಹಿಂದಿನ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಮುದ್ದೇಬಿಹಾಳಕ್ಕೆ ಆರ್ಟಿಒ ಹಾಗೂ ಎಸಿ ಕಚೇರಿ ಮಂಜೂರು ಮಾಡುವುದಾಗಿ ಹೇಳಿದ್ದರು. ಆ ಸಂದರ್ಭದಲ್ಲಿ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿ ಅವರು ಆರ್ಟಿಒ ಕಚೇರಿ ಮಂಜೂರಾತಿ ಮಾಡಿದ್ದರು. ಆದರೆ ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಈಗಿನ ಶಾಸಕ ಸಿ.ಎಸ್. ನಾಡಗೌಡರ ಪ್ರಯತ್ನದಿಂದ ಕೃಷಿ ಸಂಶೋಧನಾ ಕೇಂದ್ರಕ್ಕೆ ಮಂಜೂರಾತಿ ದೊರೆತಿದ್ದರೂ, ಅದಿನ್ನೂ ಕಾರ್ಯಾರಂಭ ಮಾಡಿಲ್ಲ. ಜನಸಂಖ್ಯೆ ಆಧಾರದ ಮೇಲೆ ನಗರ ಪೊಲೀಸ್ ಠಾಣೆ, ಎಸಿ ಕಚೇರಿ ಹಾಗೂ ಗ್ರಾಮೀಣ ಬಸ್ ನಿಲ್ದಾಣ ಮುದ್ದೇಬಿಹಾಳಕ್ಕೆ ಅಗತ್ಯವಿದೆ. ಶಾಸಕರು ವಿಶೇಷ ಕಾಳಜಿಯಿಂದ ಮಂಜೂರು ಮಾಡಿಸಿದರೆ ಮುದ್ದೇಬಿಹಾಳ ಪಟ್ಟಣ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂಬುದು ಜನರ ಆಶಯ.
ದಕ್ಷಿಣ ಗೆಲ್ಲಲು ಮೊಳಗಿದ ಪ್ರಧಾನಿ ಮೋದಿ ಕಹಳೆ
ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮತ್ತು ತಮಿಳುನಾಡು ಚುನಾವಣೆಗಳಿಗೆ ಪ್ರಚಾರ ಆರಂಭಿಸಿದ್ದಾರೆ. ಉಭಯ ರಾಜ್ಯಗಳ ಆಡಳಿತಾರೂಢ ಪಕ್ಷಗಳ ಭ್ರಷ್ಟಾಚಾರ, ಹಿಂದೂ ವಿರೋಧಿ ಧೋರಣೆ ಮತ್ತು ಅಪರಾಧಗಳ ಬಗ್ಗೆ ಅವರು ಟೀಕಿಸಿದ್ದಾರೆ. ಕೇರಳದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರದ ಭ್ರಷ್ಟಾಚಾರ, ಮಾಫಿಯಾ ಮತ್ತು ಅಪರಾಧಗಳ ಬಗ್ಗೆ ಮೋದಿ ಆರೋಪಿಸಿದ್ದಾರೆ. ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಾಪುರ: ಖಾಸಗಿ ಬಸ್- ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಮೃತ್ಯು
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶನಿವಾರ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ಶನಿವಾರ ಬೆಳಿಗ್ಗೆ ಆಹಾರ ವಸ್ತುಗಳನ್ನು ಖರೀದಿಸಿ ಬೈಕಿನಲ್ಲಿ ತಲ್ಲೂರು ಮೂಲಕ ಸೌಕೂರು ಕಡೆಗೆ ಮರಳುತ್ತಿದ್ದಾಗ ಘಟನೆ ನಡೆದಿದೆ. ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ವೊಂದನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಇನ್ನೊಂದು ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಪಾದಯಾತ್ರೆ ಕೈಗೊಂಡಿದ್ದ ಭಕ್ತನ ಮೇಲೆ ದಾಳಿ ನಡೆಸಿ ಬಲಿಪಡೆದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ಈ ಭಾಗದ ಜನರಲ್ಲಿ ಹಾಗೂ ಭಕ್ತರಲ್ಲಿ ಮನೆಮಾಡಿದ್ದ ಆತಂಕಕ್ಕೆ ಸದ್ಯ ತೆರೆ ಬಿದ್ದಂತಾಗಿದೆ. ಗುರುವಾರ ತಡರಾತ್ರಿ ನಡೆದ ರೋಚಕ ಕಾರ್ಯಾಚರಣೆಯಲ್ಲಿ ಚಿರತೆಯನ್ನು ಅರವಳಿಕೆ ನೀಡಿ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಲ್ಯಾಂಡ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದು, ಇದಕ್ಕೆ ಎನೂ ಬೇಕಾದರೂ ಮಾಡತ್ತೇನೆ ಎಂದು ಹಠಕ್ಕೆ ಬಿದ್ದಿದ್ದಾರೆ ಎಂದು ಎಲ್ಲರಿಗೂ ಗೊತ್ತೇ ಇರುವ ವಿಚಾರ. ಅಂತಯೇ ತಂತ್ರಜ್ಞಾನ ಯುಗದಲ್ಲಿ AIಯನ್ನು ಸಾಫ್ಟ್ ಪವರ್ ಆಗಿ ಹೇಗೆ ಬಳಕೆ ಮಾಡಬೇಕು ಎಂಬ ನೈಪುಣ್ಯತೆಯಲ್ಲಿ ಜಾಗತಿಕ ನಾಯಕರ ಪಟ್ಟಿಯಲ್ಲಿ ಟ್ರಂಪ್ ಮುನ್ನಲೆಯಲ್ಲಿದ್ದಾರೆ. ಆದರೆ, ನೈಪುಣ್ಯತೆ ಹಾಗೂ ಹಂಬಲ ಮಾತ್ರವಲ್ಲ, ಇದರೊಂದಿಗೆ ಕೊಂಚ ಸಾಮಾನ್ಯ ಜ್ಞಾನವೂ ಇರಬೇಕು. ಇದರಲ್ಲಿ ಎಡವಿದ ಟ್ರಂಪ್ ಆಡಳಿತ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಟ್ರೋಲಿಗರ ಆಹಾರವಾಗುತ್ತಿದೆ.
ಇಶಾನ್ ಕಿಶನ್ ವಿರುದ್ಧ ಸಿಟ್ಟಾಗಿದ್ದಕ್ಕೆ ಕಾರಣ ಬಿಚ್ಚಿಟ್ಟ ಸೂರ್ಯಕುಮಾರ್ ಯಾದವ್!
ರಾಯ್ಪುರ್: ಇಲ್ಲಿನ ಶಹೀದ್ ವೀರ್ ನಾರಾಯಣ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನ್ಯೂಝಿಲೆಂಡ್ ವಿರುದ್ಧದ ಎರಡನೆ ಟಿ-20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ ರನ್ನು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮನಸಾರೆ ಕೊಂಡಾಡಿದ್ದಾರೆ. ಇದೇ ವೇಳೆ, ಪವರ್ ಪ್ಲೇ ಅವಧಿಯಲ್ಲಿ ನನಗೆ ಬ್ಯಾಟಿಂಗ್ ಗೆ ಅವಕಾಶ ನೀಡದೆ ಇದ್ದುದರಿಂದ, ನಾನು ಇಶಾನ್ ಕಿಶನ್ ಮೇಲೆ ಸಿಟ್ಟಾಗಿದ್ದೆ ಎಂಬ ಸಂಗತಿಯನ್ನು ಸೂರ್ಯಕುಮಾರ್ ಯಾದವ್ ಒಪ್ಪಿಕೊಂಡಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ನ್ಯೂಝಿಲೆಂಡ್ ತಂಡ, ನಿಗದಿತ 20 ಓವರ್ ಗಳಲ್ಲಿ 208 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತ್ತು. ಈ ಮೊತ್ತವನ್ನು ಬೆನ್ನತ್ತಿದ ಭಾರತ ತಂಡ, ಕೇವಲ 6 ರನ್ ಗಳಿಸುವಷ್ಟರಲ್ಲಿ ಆರಂಭಿಕ ಆಟಗಾರರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್, ನ್ಯೂಝಿಲೆಂಡ್ ಬೌಲರ್ ಗಳನ್ನು ಕಂಗೆಡಿಸಿದರು. ಕೇವಲ 32 ಬಾಲ್ ಗಳಲ್ಲಿ 76 ರನ್ ಸಿಡಿಸಿದ ಇಶಾನ್ ಕಿಶನ್, ಪಂದ್ಯವನ್ನು ನ್ಯೂಝಿಲೆಂಡ್ ಹಿಡಿತದಿಂದ ಕಿತ್ತುಕೊಂಡರು. ಇದಲ್ಲದೆ, ಸೂರ್ಯಕುಮಾರ್ ಯಾದವ್ ಅವರೊಂದಿಗಿನ ಜೊತೆಯಾಟದಲ್ಲಿ ಕೇವಲ ಎಂಟು ಓವರ್ ಗಳಲ್ಲಿ 122 ರನ್ ಗಳಿಸುವ ಮೂಲಕ ಪಂದ್ಯಕ್ಕೆ ದೊಡ್ಡ ತಿರುವು ನೀಡಿದರು. ಪಂದ್ಯ ಮುಕ್ತಾಯಗೊಂಡ ಬಳಿಕ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸೂರ್ಯಕುಮಾರ್ ಯಾದವ್, “ಮಧ್ಯಾಹ್ನ ಇಶಾನ್ ಕಿಶನ್ ಊಟ ಮಾಡಿದ್ದರೋ ಇಲ್ಲವೊ ನನಗೆ ತಿಳಿಯದು. ಆದರೆ, ಬ್ಯಾಟಿಂಗ್ ಮಾಡುತ್ತಿರುವ ತಂಡವೊಂದು ಕೇವಲ 6 ರನ್ ಗೆ 2 ವಿಕೆಟ್ ಕಳೆದುಕೊಂಡ ಬಳಿಕ, ಪವರ್ ಪ್ಲೇನಲ್ಲಿ 60 ಚಿಲ್ಲರೆ ರನ್ ಗಳಿಸಿದ್ದನ್ನು ನಾನಂತೂ ಎಂದೂ ನೋಡಿಲ್ಲ. ಆದರೆ, ನಮ್ಮ ಬ್ಯಾಟರ್ ಗಳು ಇದೇ ರೀತಿ ಆಡಬೇಕಿದೆ. ಆತ ನನಗೆ ಪವರ್ ಪ್ಲೇನಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡದೆ ಇದ್ದುದರಿಂದ ಕೋಪಗೊಂಡಿದ್ದೆ. ಆದರೆ, ನಾನು ಸಿಟ್ಟನ್ನು ಹಿಡಿತದಲ್ಲಿಟ್ಟುಕೊಳ್ಳುವಲ್ಲಿ ಯಶಸ್ವಿಯಾದೆ” ಎಂದು ಲಘು ಹಾಸ್ಯದ ಧಾಟಿಯಲ್ಲಿ ಹೇಳಿದರು.
Gold Rate Today: ಮತ್ತೆ ದುಬಾರಿಯಾದ ಚಿನ್ನ, ಇಂದಿನ ದರಪಟ್ಟಿ ಇಲ್ಲಿದೆ
ಚಿನ್ನದ ಮಾರುಕಟ್ಟೆಯಲ್ಲಿ ಇಂದು ಮತ್ತೆ ಬೆಲೆ ಏರಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಶಾಕ್ ನೀಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್, 22 ಕ್ಯಾರೆಟ್ ಹಾಗೂ 18 ಕ್ಯಾರೆಟ್ ಚಿನ್ನದ ದರಗಳಲ್ಲಿ ಏರಿಕೆ ದಾಖಲಾಗಿದೆ. ನಿನ್ನೆಗಿಂತ ಇಂದಿನ ದರದಲ್ಲಿ ಪ್ರತಿಗ್ರಾಂಗೆ ನೂರಾರು ರೂಪಾಯಿ ಹೆಚ್ಚಳವಾಗಿದ್ದು, ಮದುವೆ ಮತ್ತು ಹೂಡಿಕೆ ಉದ್ದೇಶದ ಖರೀದಿದಾರರು ಚಿಂತೆಯಲ್ಲಿದ್ದಾರೆ. ಜನವರಿ 24ರಂದು ಬೆಂಗಳೂರಿನಲ್ಲಿ ಚಿನ್ನದ ದರಗಳಲ್ಲಿ ಮತ್ತೆ
ಹುಬ್ಬಳ್ಳಿಯಲ್ಲಿ ಮನೆ ಹಂಚಿಕೆ ಕಾರ್ಯಕ್ರಮಕ್ಕೂ ಮುನ್ನ ಅವಘಡ; ಸಿಎಂ, ಜಮೀರ್ ಕಟೌಟ್ ಬಿದ್ದು ನಾಲ್ವರಿಗೆ ಗಾಯ
ಹುಬ್ಬಳ್ಳಿಯ ಮಂಟೋರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮನೆ ವಿತರಣೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕಾಗಿ ಸಿದ್ಧತೆ ನಡೆದಿತ್ತು. ಈ ವೇಳೆ ಬೃಹತ್ ಕಟೌಟ್ಗಳು ಮುರಿದು ಬಿದ್ದಿವೆ. ಈ ಘಟನೆಯಲ್ಲಿ ಮನೆ ಕೇಳಲು ಬಂದಿದ್ದ ಮಹಿಳೆಯೂ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಾಹನ ಚಾಲಕರಿಗೆ ನಿಯಮಿತ ಕಣ್ಣಿನ ತಪಾಸಣೆ ಅನಿವಾರ್ಯ : ದೀಪಕ್
ವಿಶೇಷ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
ಅಮೆರಿಕದ ಸಂಭಾವ್ಯ ದಾಳಿಯ ಎಚ್ಚರಿಕೆಯಿಂದ ಡೆನ್ಮಾರ್ಕ್, ತನ್ನ ಗ್ರೀನ್ಲ್ಯಾಂಡ್ ಪ್ರದೇಶದಲ್ಲಿ ಸೇನೆಯನ್ನು ಉನ್ನತ ಸನ್ನದ್ಧತೆಯಲ್ಲಿರಿಸಿದೆ. ಶತ್ರುಗಳ ಮೇಲೆ ಗುಂಡು ಹಾರಿಸಲು ಸಿದ್ಧವಿದ್ದ ಸೇನೆಗೆ, 'ಆರ್ಕ್ಟಿಕ್ ಎಂಡ್ಯೂರೆನ್ಸ್' ಕಾರ್ಯಾಚರಣೆಯಡಿ ಸೈನಿಕರು ಮತ್ತು ಯುದ್ಧೋಪಕರಣಗಳನ್ನು ರವಾನಿಸಲಾಯಿತು. ಟ್ರಂಪ್ ಅವರ ಹೇಳಿಕೆಯ ನಂತರ ಪರಿಸ್ಥಿತಿ ತಿಳಿಗೊಂಡಿತು, ನ್ಯಾಟೋ ಮಿತ್ರರಾಷ್ಟ್ರಗಳ ಬೆಂಬಲವೂ ದೊರಕಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು: ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಪಡೆದ ಖಾದರ್ ಅವರಿಗೆ ಸನ್ಮಾನ
ಚಿಕ್ಕಮಗಳೂರು: ಇತ್ತೀಚೆಗೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ ಖಾದರ್ ಅವರಿಗೆ ಚಿಕ್ಕಮಗಳೂರು ಬದ್ರಿಯಾ ಜುಮ್ಮಾ ಮಸೀದಿಯ ಸಮಿತಿಯ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಸಿ.ಎಸ್. ಖಲಂದರ್ ಹಾಜಿ, ಕಾರ್ಯದರ್ಶಿ ಮೊಹಮ್ಮದ್ ಇಸ್ಮಾಯಿಲ್, ಮಸೀದಿಯ ಖತೀಬ್ ಶರೀಫ್ ಸಖಾಫಿ, ಹಿರಿಯರಾದ ಕೆ. ಮೊಹಮ್ಮದ್, ಬಿ.ಎಸ್. ಮೊಹಮ್ಮದ್, ಅಬ್ದುಲ್ಲ ಹಾಜಿ, ಇಂಪಲ್ ನಾಸಿರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಾಮರಾಜನಗರ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
ಚಾಮರಾಜನಗರ: ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಬಂಡಳ್ಳಿ ಗ್ರಾಮದ ಜಯಲಕ್ಷ್ಮಿ ಅವರಿಗೆ ಸೇರಿದ ಮನೆಯಲ್ಲಿ ಶನಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಮನೆಯಲ್ಲಿದ್ದ ಬಹುತೇಕ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದ 8 ತಿಂಗಳ ಮಗು ಯಾವುದೇ ಅಪಾಯವಿಲ್ಲದೆ ಪಾರಾಗಿದೆ. ಮನೆಗೆ ಬೆಂಕಿ ಕಾಣಿಸಿಕೊಂಡ ತಕ್ಷಣವೇ ನೆರೆಹೊರೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಬೆಂಕಿಯ ತೀವ್ರತೆಯಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.
Gold Price: ಚಿನ್ನದ ಬೆಲೆ 1,58,620 ರೂಪಾಯಿ, ಕೇಂದ್ರ ಬಜೆಟ್ನಲ್ಲಿ ಬಂಗಾರದ ಬೆಲೆ ಇಳಿಕೆಗೆ ಸಿಗುತ್ತಾ ಬೆಂಬಲ?
ಚಿನ್ನ ಚಿನ್ನ, ಎಲ್ಲಿ ಕೇಳಿದರೂ &ನೋಡಿದರೂ ಬರೀ ಬಂಗಾರದ ಬೆಲೆಯ ಬಗ್ಗೆ ಚರ್ಚೆ ಜೋರಾಗಿದೆ. ಯಾಕಂದ್ರೆ ಇದೀಗ ಚಿನ್ನದ ಬೆಲೆ ಅಷ್ಟು ದೊಡ್ಡ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಕೂಡ ಆಕಾಶ ಮುಟ್ಟುತ್ತಿದೆ. ನೋಡ ನೋಡುತ್ತಲೇ ಚಿನ್ನದ ಬೆಲೆ ಬರೋಬ್ಬರಿ 1,58,620 ರೂಪಾಯಿ ಪ್ರತಿ 10 ಗ್ರಾಂಗೆ ತಲುಪಿದ್ದು, ಬಡವರು ಹಾಗೂ
ಬಳ್ಳಾರಿ ಮಾಡಲ್ ನಿವಾಸಕ್ಕೆ ಬೆಂಕಿ ಪ್ರಕರಣ ; ಎಸ್ಪಿ ಪ್ರತಿಕ್ರಿಯಿಸಿದ್ಹೀಗೆ
ಬಳ್ಳಾರಿಯ ಜಿ-ಸ್ಕ್ವಾಯರ್ ಲೇಔಟ್ನಲ್ಲಿರುವ ಮಾಡೆಲ್ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸಿಗರೇಟ್ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.
ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿಲ್ಲಿ NEET/CET ಕ್ರ್ಯಾಶ್ ಕೋರ್ಸ್ ಕುರಿತು ಮಾಹಿತಿ ಕಾರ್ಯಾಗಾರ
ಬಂಟ್ವಾಳ: MEIF ಹಾಗೂ ಯೆನೆಪೋಯ ಕಾಲೇಜಿನ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ NEET/CET ಕ್ರ್ಯಾಶ್ ಕೋರ್ಸ್ಗಳ ಕುರಿತು ಮಾಹಿತಿ ಉಪನ್ಯಾಸ ಕಾರ್ಯಕ್ರಮ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಯೆನೆಪೋಯ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು ಹಾಗೂ ನಿರ್ದೇಶಕರು, YCAL Bahrain (Yenepoya Center for Advanced Learning) ಸಂಸ್ಥೆಯ ಸಿನಾನ್ ಝಕರಿಯ ಅವರು ಆಗಮಿಸಿದ್ದರು. ಅವರು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ NEET/CET ಪರೀಕ್ಷೆಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಜೊತೆಗೆ MEIF ಹಾಗೂ ಯೆನೆಪೋಯ ಕಾಲೇಜಿನ ಸಹಭಾಗಿತ್ವದಲ್ಲಿ ನಡೆಯುವ ಉಚಿತ NEET/CET ಕ್ರ್ಯಾಶ್ ಕೋರ್ಸ್ ಮತ್ತು ಅದರ ಉಚಿತ ಸೀಟ್ ಹಂಚಿಕೆ ಕುರಿತು ವಿವರಿಸಿದರು. ಈ ಮಾಹಿತಿ ಮತ್ತು ವಿವರಣಾತ್ಮಕ ಕಾರ್ಯಕ್ರಮವು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹಳ ಉಪಯುಕ್ತವಾಗಿದ್ದು, NEET/CET ಕೋರ್ಸ್ಗಳಿಗೆ ಸಂಬಂಧಿಸಿದ ತಮ್ಮ ಗೊಂದಲಗಳನ್ನು ಚರ್ಚಿಸಿ ಸ್ಪಷ್ಟ ಪರಿಹಾರವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಅನುಗ್ರಹ ಮಹಿಳಾ ಕಾಲೇಜಿನ ಖಜಾಂಜಿ ಹೈದರ್ ಅಲಿ, ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತಾ ಬಿ. ಡಿ., ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಥಮ ಪಿಯುಸಿ PCMB ವಿದ್ಯಾರ್ಥಿನಿ ನುಹಾ ಮರ್ಯಮ್ ಕಿರಾಅತ್ ಪಠಿಸಿದರು. ವಿಜ್ಞಾನ ವಿಭಾಗದ ಉಪನ್ಯಾಸಕಿ ಕವಿತಾ ಕುಮಾರಿ ಕೆ. ಅವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಬಳ್ಳಾರಿಯಲ್ಲಿ ನಿಲ್ಲದ ಸಂಘರ್ಷ: ಜನಾರ್ದನ ರೆಡ್ಡಿ ಮಾಡೆಲ್ ಹೌಸ್ಗೆ ಬೆಂಕಿ ಇದೀಗ ಬಿಜೆಪಿಗೆ ಸಿಕ್ಕ ಹೊಸ ಅಸ್ತ್ರ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಆರಂಭಗೊಂಡ ರಾಜಕೀಯ ಸಂಘರ್ಷ ಸದ್ಯ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಈ ನಡುವೆ ಬಳ್ಳಾರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮಾಡೆಲ್ ಹೌಸ್ಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆ ಇದೀಗ ಬಿಜೆಪಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ನಡುವೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಇದು ಭರತ್ ರೆಡ್ಡಿಯದ್ದೇ ಕೃತ್ಯ ಎಂದು ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅರೋಪ ಮಾಡಿದ್ದಾರೆ.
T-20 World Cup 2026: ಬಿಸಿಸಿಐಗೆ ಸೆಡ್ಡು ಹೊಡೆದ ಬಾಂಗ್ಲಾಗೆ ಕೋಟಿ ಕೋಟಿ ನಷ್ಟ
T-20 World Cup 2026 Bangladesh: ಫೆಬ್ರವರಿ 7ರಿಂದ ಟಿ-20 ವಿಶ್ವಪ್ ಆರಂಭ ಆಗಲಿದೆ. ಈ ಟೂರ್ನಿಯಿಂದ ಬಾಂಗ್ಲಾ ತಂಡ ಹಿಂದೆ ಸರಿದಿದೆ. ಇದರಿಂದ ಬಾಂಗ್ಲಾದೇಶಕ್ಕೆ ಕೋಟಿ.. ಕೋಟಿ ನಷ್ಟವಾಗಲಿದೆ. ಹಾಗಾದ್ರೆ, ಎಷ್ಟು ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತನ್ನ 2026 ಟಿ-20 ವಿಶ್ವಕಪ್ ಗ್ರೂಪ್
ಅಮೆರಿಕ| ಪತ್ನಿ ಮತ್ತು ಮೂವರು ಸಂಬಂಧಿಕರನ್ನು ಗುಂಡಿಕ್ಕಿ ಹತ್ಯೆಗೈದ ಭಾರತೀಯ ಮೂಲದ ವ್ಯಕ್ತಿ
ನ್ಯೂಯಾರ್ಕ್: ಅಮೆರಿಕದ ಜಾರ್ಜಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅವರ ಮೂವರು ಸಂಬಂಧಿಕರನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈ ವಿಷಯವು ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ್ದಾಗಿದ್ದು, ಆರೋಪಿ ವಿಜಯ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ, ಮೂವರು ಮಕ್ಕಳು ಮನೆಯೊಳಗೆ ಕ್ಲೋಸೆಟ್ನಲ್ಲಿ ಅಡಗಿ ಕುಳಿತುಕೊಂಡಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಕುಮಾರ್ ಪತ್ನಿ ಮೀಮು ಡೋಗ್ರಾ (43), ಗೌರವ್ ಕುಮಾರ್ (33), ನಿಧಿ ಚಂದರ್ (37) ಮತ್ತು ಹರೀಶ್ ಚಂದರ್ (38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಟ್ಲಾಂಟಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ಕುರಿತು ಪ್ರತಿಕ್ರಿಯಿಸಿ, ಮೃತರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದೆ. ಬ್ರೂಕ್ ಐವಿ ಕೋರ್ಟ್ನ 1000 ಬ್ಲಾಕ್ನಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಶುಕ್ರವಾರ ಬೆಳಗಿನ ಜಾವ 2.30ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದಾಗ ನಾಲ್ವರ ಮೃತದೇಹ ಪತ್ತೆಯಾಗಿತ್ತು ಎಂದು ವರದಿಯಾಗಿದೆ.
ಪರವಾನಗಿ ಪಡೆದ ಪಿಸ್ತೂಲ್ ಹೇಗೆ ಕೆಲಸ ಮಾಡುತ್ತೆ ಎಂದು ನೋಡಲು ಮ್ಯಾಂಗ್ರೋವ್ ಪ್ರದೇಶಕ್ಕೆ ಗುಂಡು ಹಾರಿಸಿದೆ. ಗಾಳಿ ಬಲವಾಗಿ ಬೀಸುತ್ತಿದ್ದ ಕಾರಣ ಗುಂಡು ವಸತಿ ಕಟ್ಟಡದ ಮೇಲೆ ಬಿದ್ದಿದೆ ಎಂದು ಬಂಧಿತ ನಟ ಕಮಾಲ್ ರಶೀದ್ ಖಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರವಾನಗಿ ಪಡೆದ ಬಂದೂಕಿನಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಅದೇ ಕಟ್ಟಡದಲ್ಲಿ ಬಾಲಿವುಡ್ನ ಬರಹಾಗಾರ ಮತ್ತು ಮಾಡೆಲ್ ಇದ್ದರು ಎನ್ನಲಾಗುತ್ತಿದೆ.
ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಕಟೌಟ್; ಮಹಿಳೆ ಸೇರಿ ಮೂವರಿಗೆ ಗಾಯ
ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ಸಹಯೋಗದಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಗಾಯಗೊಂಡವರು ಕಟೌಟ್ ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಾದ ಬ್ಯಾಹಟ್ಟಿ ಗ್ರಾಮದ ನಿವಾಸಿಗಳಾದ ಶಂಕರ್ ಹಡಪದ (32) ಮತ್ತು ಮಂಜುನಾಥ ವರ್ಣೇಕರ್ (33) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗಂಗಾಧರ ನಗರದ ನಿವಾಸಿ ಶಾಂತಾ (60)ಅವರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ ಮೂವರಲ್ಲಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತೊಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಮಂಟೂರ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ಗಳನ್ನು ಅಳವಡಿಸಲಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಅವರ ಕಟೌಟ್ ನಂತರ, ಮುಖ್ಯಮಂತ್ರಿ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಫೋಟೋಗಳಿದ್ದ ಎರಡು ಕಟೌಟ್ಗಳು ಒಂದರ ಮೇಲೆ ಒಂದು ಬಿದ್ದು, ಅವುಗಳ ಕೆಳಗಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಟೌಟ್ಗಳು ಸುಮಾರು 30–35 ಅಡಿ ಎತ್ತರವಾಗಿದ್ದು, ಅವುಗಳಿಗೆ ಆಧಾರವಾಗಿ ಕಟ್ಟಿಗೆಗಳನ್ನು ಅಳವಡಿಸಲಾಗಿತ್ತು. ಕಟೌಟ್ ಬಿದ್ದ ವೇಳೆ ಕಟ್ಟಿಗೆಗಳು ದೇಹಕ್ಕೆ ಚುಚ್ಚಿ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಟೌಟ್ ಬಿದ್ದ ಸ್ಥಳದಿಂದ ಕೇವಲ ಕೆಲವೇ ಅಡಿಗಳ ದೂರದಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರು ನಿಂತಿದ್ದರು. ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಭದ್ರತೆ ಹಾಗೂ ಕಾರ್ಯಕ್ರಮದ ಆಯೋಜನೆಯಲ್ಲಿ ನಡೆದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಕುಸಿದ ಕಟೌಟ್ ಅನ್ನು ತೆರವುಗೊಳಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯಕ್ರಮ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.
ಏರುತ್ತಲೇ ಇರುವ ಚಿನ್ನ; ಸಂಕಷ್ಟದಲ್ಲಿ ಅಸಂಘಟಿತ ಆಭರಣ ತಯಾರಕರು
ಭಾರತದಲ್ಲಿ ಚಿನ್ನ-ಬೆಳ್ಳಿ ದರದ ಏರಿಳಿತದಿಂದಾಗಿ ದೇಶದ ಸ್ಥಳೀಯ ಆಭರಣ ತಯಾರಕರು ಮತ್ತು ಚಿನ್ನದ ಕರಕುಶಲಕಾರರು ಶೇ 45ರಷ್ಟು ಪ್ರಮಾಣದ ವ್ಯವಹಾರ ಕುಸಿತ ಎದುರಿಸುತ್ತಿದ್ದಾರೆ. ಭಾರತದಲ್ಲಿ ಚಿನ್ನದ ದರ ಏರು ಹಾದಿಯಲ್ಲಿ ಮುಂದುವರೆದಿದೆ. ಗುರುವಾರ ಹಠಾತ್ ಕುಸಿದಿದ್ದ ಚಿನ್ನದ ದರ ಶುಕ್ರವಾರ ಮಾರುಕಟ್ಟೆ ಆರಂಭವಾಗುತ್ತಲೇ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಈ ಏರಿಕೆ ಶನಿವಾರವೂ ಮುಂದುವರಿದಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ ರೂ. 15,862 ಆಗಿದೆ. ಸ್ಥಳೀಯ ಬೇಡಿಕೆ, ಪೂರೈಕೆ ಹಾಗೂ ರಾಜ್ಯ ತೆರಿಗೆಗಳ ಪ್ರಕಾರ ಚಿನ್ನದ ಬೆಲೆ ಕಾಲಕಾಲಕ್ಕೆ ಬದಲಾಗುತ್ತವೆ. ಮಂಗಳೂರಿನಲ್ಲಿ ಇಂದಿನ ಚಿನ್ನದ ದರವೆಷ್ಟು? ಶನಿವಾರ ಜನವರಿ 24ರಂದು ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,862 (+147) ರೂ. ಗೆ ಏರಿಕೆ ಕಂಡಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,540 (+135) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,897 (+111) ರೂ. ಬೆಲೆಗೆ ತಲುಪಿದೆ. ದೇಶದಲ್ಲಿ ಇಂದು ಚಿನ್ನದ ದರ ಹೀಗಿದೆ ಭಾರತದಲ್ಲಿ ಇಂದು 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ರೂ. 15,862 ಆಗಿದೆ. ನಿನ್ನೆ ಮಾರುಕಟ್ಟೆ ಕೊನೆಗೊಂಡಾಗ ರೂ. 15,715 ಕ್ಕೆ ತಲುಪಿತ್ತು. ಹೀಗಾಗಿ ಇಂದಿನ ಏರಿಕೆ ರೂ. 147 ಆಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ರೂ. 14,540 ಆಗಿದ್ದು, ನಿನ್ನೆ ರೂ. 14,405 ಇತ್ತು. ಹೀಗಾಗಿ ಇಂದಿನ ಏರಿಕೆ ರೂ. 135 ಆಗಿದೆ. ಇಂದು 18 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ರೂ. 11,897 ಆಗಿದ್ದು, ನಿನ್ನೆ ರೂ. 11,786 ಇತ್ತು. ಹೀಗಾಗಿ ಇಂದಿನ ಏರಿಕೆ ರೂ. 111 ಆಗಿದೆ. ಸಂಕಷ್ಟದಲ್ಲಿರುವ ಆಭರಣ ತಯಾರಕರು ʼಮನಿ ಕಂಟ್ರೋಲ್ʼ ವರದಿಯ ಪ್ರಕಾರ ಭಾರತದಲ್ಲಿ ಚಿನ್ನ-ಬೆಳ್ಳಿ ದರದ ಏರಿಳಿತದಿಂದಾಗಿ ದೇಶದ ಸ್ಥಳೀಯ ಆಭರಣ ತಯಾರಕರು ಮತ್ತು ಚಿನ್ನದ ಕರಕುಶಲಕಾರರು ಶೇ 45ರಷ್ಟು ಪ್ರಮಾಣದ ವ್ಯವಹಾರ ಕುಸಿತ ಎದುರಿಸುತ್ತಿದ್ದಾರೆ. ಚಿನ್ನದ ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಗ್ರಾಹಕರು ಖರೀದಿಯಿಂದ ಹಿಂದೆ ಸರಿಯುತ್ತಿರುವುದು ಇದಕ್ಕೆ ಮುಖ್ಯ ಕಾರಣ ಎಂದು ವರದಿ ಹೇಳಿದೆ. ದೀಪಾವಳಿ ಬಳಿಕ ಪರಿಸ್ಥಿತಿ ಇನ್ನಷ್ಟು ಕೆಟ್ಟಿದೆ. ವಿವಾಹದಂತಹ ತುರ್ತು ಸ್ಥಿತಿ ಹೊರತುಪಡಿಸಿ ಯಾರೂ ಚಿನ್ನ ಖರೀದಿಸುತ್ತಿಲ್ಲ. ಭಾರತದಲ್ಲಿ 3 ಲಕ್ಷದಿಂದ 3.5 ಲಕ್ಷದವರೆಗೆ ಸಣ್ಣ ಮತ್ತು ಮಧ್ಯಮ ಮಟ್ಟದ ಸ್ವತಂತ್ರ ಅಂಗಡಿಗಳಿವೆ. ಇವುಗಳು ವ್ಯಾಪಾರದ ಶೇ 60-65ರಷ್ಟು ಪಾಲು ಹೊಂದಿವೆ. ಇವರು ಗ್ರಾಹಕರು ಹೇಳಿದ ರೀತಿಯಲ್ಲಿ ವಿನ್ಯಾಸ ರಚಿಸಿಕೊಡುತ್ತಿದ್ದರೂ, ಇತ್ತೀಚೆಗೆ ವ್ಯವಹಾರವೇ ಕುಸಿದಿದೆ. ವರದಿಯ ಪ್ರಕಾರ, ಮಾರುಕಟ್ಟೆಯ ಸುಮಾರು ಶೇ 53ರಷ್ಟು ಪಾಲು ಹೊಂದಿರುವ ಅಸಂಘಟಿತ ವಲಯದ ಆಭರಣ ತಯಾರಕರು ನೇರವಾಗಿ ಸಂಗ್ರಹ ಖರೀದಿ, ಹಣಕಾಸು ರಕ್ಷಣೆಯ ಕೊರತೆ ಮತ್ತು ಸೀಮಿತ ನಗದು ಸಂಪನ್ಮೂಲಗಳ ಕಾರಣದಿಂದ ತೀವ್ರ ಒತ್ತಡಕ್ಕೆ ಬಿದ್ದಿದ್ದಾರೆ. ಆದರೆ ಸಂಘಟಿತ ಮತ್ತು ದೊಡ್ಡ ಬ್ರಾಂಡೆಡ್ ಮಳಿಗೆಗಳು ಲಾಭ ಮಾಡಿಕೊಳ್ಳುತ್ತಿವೆ. ವರದಿಯ ಪ್ರಕಾರ, 18 ಕ್ಯಾರೆಟ್ ಮತ್ತು ಸ್ಟಡೆಡ್ ಆಭರಣಗಳತ್ತ ಗ್ರಾಹಕರ ಒಲವು ಹೆಚ್ಚಾಗುತ್ತಿದೆ. ಟೈಟನ್ ಕಂಪನಿಯ ತನಿಷ್ಕ್ 9 ಕ್ಯಾರೆಟ್ ಚಿನ್ನದ ಆಭರಣ ಪರಿಚಯಿಸುವ ಮೂಲಕ ಮೂರನೇ ತ್ರೈಮಾಸಿಕದಲ್ಲಿ ಶೇ 40ರಿಂದ 50ರಷ್ಟು ಮಾರಾಟ ವೃದ್ಧಿಸಿಕೊಂಡಿದೆ.

22 C