SENSEX
NIFTY
GOLD
USD/INR

Weather

19    C
... ...View News by News Source

ಜಾನಪದ ಸಾಹಿತ್ಯಕ್ಕೆ ಸಮಾಜ ಒಗ್ಗೂಡಿಸುವ ಶಕ್ತಿಯಿದೆ : ಡಾ.ಸಿ.ಎನ್.ಮಂಜುನಾಥ್

ʼನಾಡೋಜ ಎಚ್.ಎಲ್.ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ ಸಮಾರಂಭ

ವಾರ್ತಾ ಭಾರತಿ 18 Nov 2025 1:10 am

ಸಾಮಾಜಿಕ ಜಾಲತಾಣದಲ್ಲಿ ಜಾತಿಗಣತಿ ವರದಿಯ ನಕಲಿ ಅಂಕಿಅಂಶಗಳು ಪ್ರಕಟ; ದೂರು ದಾಖಲು

ಬೆಂಗಳೂರು : ಸಾಮಾಜಿಕ ಜಾಲತಾಣವಾದ ವಾಟ್ಸ್‌ಆ್ಯಪ್ ಗ್ರೂಪಿನಲ್ಲಿ 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂದು ಕೆಲವೊಂದು ನಕಲಿ ಅಂಕಿ ಅಂಶಗಳನ್ನು ಪ್ರಕಟಿಸಿ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025ರಿಂದ ಪ್ರಾರಂಭಿಸಿ ದಿನಾಂಕ: 31.10.2025ರವರೆಗೆ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಸಾರ್ವಜನಿಕರಿಗೆ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ದಿನಾಂಕ:30.11.2025ರವರೆಗೆ ಅವಕಾಶ ನೀಡಲಾಗಿದೆ. ಅದರಂತೆ ಸಮೀಕ್ಷೆ ಕಾರ್ಯ ಇನ್ನೂ ಪ್ರಗತಿಯಲ್ಲಿರುತ್ತದೆ. ಈ ಸಂಬಂಧ ಸಮೀಕ್ಷೆಯಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಯಾವುದೇ ವ್ಯಕ್ತಿಗೆ ಮಾಹಿತಿಯನ್ನುಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಲಾಗುವುದೆಂದು ಆಯೋಗವು ಹೈಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಅದರಂತೆ ಆಯೋಗದ ವತಿಯಿಂದ ಗೌಪ್ಯತೆಯನ್ನು ಕಾಪಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಒಂದು ಮೊಬೈಲ್ ಸಂಖ್ಯೆಯಿಂದ 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ಲಿಂಗಾಯಿತರು-65 ಲಕ್ಷ, ಒಕ್ಕಲಿಗರು-60 ಲಕ್ಷ, ಕುರುಬರು-45 ಲಕ್ಷ, ಈಡಿಗರು-15 ಲಕ್ಷ, ಪರಿಶಿಷ್ಟ ಪಂಗಡ-40.45 ಲಕ್ಷ ವಿಶ್ವಕರ್ಮ-15 ಲಕ್ಷ, ಬೆಸ್ತರು-15 ಲಕ್ಷ, ಬ್ರಾಹ್ಮಣರು-14 ಲಕ್ಷ, ಗೊಲ್ಲರು-10 ಲಕ್ಷ, ಮುಸ್ಲಿಮರು-60 ಲಕ್ಷ, ಕ್ರೈಸ್ತರು-12 ಲಕ್ಷ, ಸವಿತಾ ಸಮಾಜ -5 ಲಕ್ಷ, ಗೊಲ್ಲರು - 10ಲಕ್ಷ, ಕುಂಬಾರ -5 ಲಕ್ಷ ಮತ್ತು ಮಡಿವಾಳ -6 ಲಕ್ಷ ಇತರ ಎಂದು ಗ್ರೂಪ್ ಗೆ ಶೇರ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಮೀಕ್ಷೆಯ ದತ್ತಾಂಶಗಳನ್ನು ಸಂಗ್ರಹಿಸುವ ಹಂತದಲ್ಲಿರುವಾಗ ಈ ರೀತಿ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿಯನ್ನು ನೀಡಿ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುತ್ತಿರುವುದರ ಬಗ್ಗೆ ಹಾಗೂ ಈ ವಿಷಯದ ಸತ್ಯತೆಯ ಬಗ್ಗೆ ಪರಿಶೀಲಿಸುವುದು ಅವಶ್ಯವಿರುತ್ತದೆ. ಆದ ಕಾರಣ ಆರೋಪಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ವಾರ್ತಾ ಭಾರತಿ 18 Nov 2025 12:59 am

ಎಸ್‍ಐಆರ್ ಹೆಸರಿನಲ್ಲಿ ರಕ್ತರಹಿತ ಜನಾಂಗೀಯ ಹತ್ಯೆ ಮಾಡಲಾಗುತ್ತಿದೆ : ಪರಕಾಲ ಪ್ರಭಾಕರ್

‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್‍ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ

ವಾರ್ತಾ ಭಾರತಿ 18 Nov 2025 12:48 am

ಬೆಂಗಳೂರಿಗೆ ಜರ್ಮನಿಯ ಬವೇರಿಯಾ ಪಾರ್ಲಿಮೆಂಟ್ ಸಭಾಧ್ಯಕ್ಷರ ನೇತೃತ್ವದ ನಿಯೋಗದ ಭೇಟಿ

ಬೆಂಗಳೂರು : ಜರ್ಮನಿ ದೇಶದ ಬವೇರಿಯಾ ರಾಜ್ಯದ ಪಾರ್ಲಿಮೆಂಟಿನ ಸಭಾಧ್ಯಕ್ಷರಾದ ಇಲ್ಸೆ ಐಗ್ನರ್ ಅವರ ನೇತೃತ್ವದ ನಿಯೋಗವು ಸೋಮವಾರ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಸೌಜನ್ಯಯುತ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲಿನಿ ರಜನೀಶ್, ಉತ್ತಮ ಸಂಸದೀಯ ವ್ಯವಸ್ಥೆ ಹಾಗೂ ಅಭಿವೃದ್ಧಿ ವಿಷಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ಎರಡು ವರ್ಷಗಳ ಹಿಂದೆ ಜಾರಿಗೆ ತಂದಿರುವ ‘ಗ್ಯಾರಂಟಿ’ ಯೋಜನೆಗಳಿಂದ ಆಗಿರುವ ಗುಣಾತ್ಮಕ ಬದಲಾವಣೆಗಳ ಬಗ್ಗೆ ವಿವರಿಸಿದರು. ಸಮಾನತೆ ಪ್ರಜಾಪ್ರಭುತ್ವದ ಜೀವಾಳ : ಭಾರತ ಮತ್ತು ಜರ್ಮನಿ ಎರಡೂ ಪ್ರಜಾಪ್ರಭುತ್ವ ರಾಷ್ಟ್ರ ಗಳಾಗಿವೆ. ಸಮಾನತೆಯು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಬಡವರಿಗೆ ಎಲ್ಲ ಮೂಲಸೌಲಭ್ಯ ಒದಗಿಸುವ ಮೂಲಕ ಘನತೆಯ ಬದುಕು ಕಲ್ಪಿಸುವುದು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಆಶಯವಾಗಿದೆ ಎಂದು ಶಾಲಿನಿ ರಜನೀಶ್ ಹೇಳಿದರು. ಜರ್ಮನಿ ದೇಶದ ಬವೇರಿಯಾ ರಾಜ್ಯದ ಸಂಸತ್ತಿನ ಸಭಾಧ್ಯಕ್ಷರಾದ ಇಲ್ಸೆ ಐಗ್ನರ್ ಅವರ ನೇತೃತ್ವದ ಹದಿನಾಲ್ಕು ಜನರ ನಿಯೋಗದ ಸದಸ್ಯರು ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ವಾರ್ತಾ ಭಾರತಿ 18 Nov 2025 12:45 am

ಮೈಶುಗರ್‌ ಮಾಜಿ ಅಧ್ಯಕ್ಷರ ವಿರುದ್ಧದ ಉಪ ಲೋಕಾಯುಕ್ತ ತನಿಖೆ; ಸರಕಾರದ ಆದೇಶ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಸರಕಾರಿ ಸಂಸ್ಥೆ ಅಥವಾ ಸಾರ್ವಜನಿಕ ವಲಯದ ಉದ್ಯಮಕ್ಕೆ ರಾಜಕಾರಣಿಯನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರವು ಸದಾ ಕಂಪನಿಯ ಕಾರ್ಮಿಕರ ದುಃಖವನ್ನು ಹೆಚ್ಚಿಸುವುದಲ್ಲದೆ ಸಾರ್ವಜನಿಕ ಹಿತಾಸಕ್ತಿಗೆ ಹಾನಿಯನ್ನುಂಟು ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, 2008ರಿಂದ 2012ರವರೆಗೆ ಮೈಶುಗರ್‌ ಕಂಪನಿಯ ಅಧ್ಯಕ್ಷರಾಗಿದ್ದ ನಾಗರಾಜಪ್ಪ ಅವಧಿಯಲ್ಲಿ 127 ಕೋಟಿ ನಷ್ಟದ ಬಗ್ಗೆ ಉಪ ಲೋಕಾಯುಕ್ತ ತನಿಖೆಗೆ ಆದೇಶಿಸಿರುವುದನ್ನು ರದ್ದುಪಡಿಸಲು ನಿರಾಕರಿಸಿದೆ. ಮೈಸೂರು ಸಕ್ಕರೆ ಕಾರ್ಖಾನೆ ಲಿಮಿಟೆಡ್‌ (ಮೈಶುಗರ್‌ ಕಂಪನಿ) ಅಧ್ಯಕ್ಷರಾಗಿದ್ದಾಗ ನಡೆದ ಆರ್ಥಿಕ ಅಕ್ರಮಗಳನ್ನು ಪರಿಶೀಲಿಸಲು ರಾಜ್ಯ ಸರಕಾರ ತನಿಖೆಯನ್ನು ಉಪ ಲೋಕಾಯುಕ್ತಕ್ಕೆ ವಹಿಸಿದ್ದನ್ನು ಪ್ರಶ್ನಿಸಿ 80 ವರ್ಷದ ಮಂಡ್ಯದ ನಾಗರಾಜಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್‌ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್‌ ನಾಯಕ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಸರಕಾರಿ ಸಂಸ್ಥೆ ಅಥವಾ ಸಾರ್ವಜನಿಕ ವಲಯದ ಉದ್ಯಮದ ಅಧ್ಯಕ್ಷ ಹುದ್ದೆಗೆ ಉತ್ತಮ ಜ್ಞಾನವುಳ್ಳ ಹಾಗೂ ವೃತ್ತಿಪರ ಶ್ರೇಷ್ಠತೆ ಹೊಂದಿರುವ ಅರ್ಹ ವ್ಯಕ್ತಿಗಳನ್ನು ಮಾತ್ರ ಸರಕಾರ ನೇಮಿಸಬೇಕು. ಯಾವುದೇ ವೃತ್ತಿಪರ ಅರ್ಹತೆ ಮತ್ತು ವಿಷಯಜ್ಞಾನವಿಲ್ಲದ ಅರ್ಜಿದಾರರನ್ನು ರಾಜಕೀಯ ಕಾರಣಗಳಿಗಾಗಿ ಏಷ್ಯಾದ ಅತಿದೊಡ್ಡ ಸಕ್ಕರೆ ಕಾರ್ಖಾನೆಗಳಲ್ಲಿ ಒಂದಾದ ಸಂಸ್ಥೆಗೆ ಅಧ್ಯಕ್ಷರನ್ನಾಗಿ ನೇಮಿಸುವ ಕೆಟ್ಟ ನಿರ್ಧಾರವನ್ನು ಸರಕಾರ ಕೈಗೊಂಡಿದ್ದು, ಇದು ಅವರ ಅಧಿಕಾರಾವಧಿಯಲ್ಲಿ 127 ಕೋಟಿ ರೂ. ನಷ್ಟಕ್ಕೆ ಕಾರಣವಾಗಿದೆ ಎಂದಿರುವ ಹೈಕೋರ್ಟ್, ಮೈಶುಗರ್‌ ಅಧ್ಯಕ್ಷ ರಾಗಿ ಅರ್ಜಿದಾರರು ಕೈಗೊಂಡಿರುವ ಕ್ರಮಗಳು, ನಡಾವಳಿಕೆಗಳನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಎಲ್ಲ ಸಂವಿಧಾನದತ್ತ ಅಧಿಕಾರ ಸರಕಾರಕ್ಕೆ ಇದೆ ಎಂದು ಆದೇಶಿಸಿದೆ. ನಷ್ಟ ವಸೂಲಿ ಸರಕಾರದ ವಿವೇಚನೆಗೆ: ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಪ ಲೋಕಾಯುಕ್ತರು ನೀಡಿರುವ ವರದಿಯಲ್ಲಿ ಯಾವುದೇ ದೋಷ ನಮಗೆ ಕಂಡುಬಂದಿಲ್ಲ. ಮೈಶುಗರ್‌ ಅಧ್ಯಕ್ಷರಾಗಿ ಅರ್ಜಿದಾರರು ತೆಗೆದುಕೊಂಡ ನಿರ್ಧಾರಗಳಿಂದ ಉಂಟಾದ ನಷ್ಟವನ್ನು ಸರಿದೂಗಿಸಿಕೊಳ್ಳಲು ಅಥವಾ ವಸೂಲಿ ಮಾಡಲು ಸೂಕ್ತ ಕ್ರಮ ಕೈಗೊಳ್ಳುವ ಶಿಫಾರಸುಗಳನ್ನು ಸರಕಾರಕ್ಕೆ ವಿವೇಚನೆಗೆ ಬಿಡಲಾಗಿದೆ ಮತ್ತು ಸರಕಾರವು ವರದಿಯಲ್ಲಿನ ಶಿಫಾರಸುಗಳನ್ನು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ. ಪ್ರಕರಣವೇನು? ಅರ್ಜಿದಾರ ನಾಗರಾಜಪ್ಪ ಅವರು ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರ ಮತ್ತು ಕೃಷಿಕರಾಗಿ ಕೆಲಸ ಮಾಡುತ್ತಿದ್ದೆನೆಂದು ಹೇಳಿಕೊಂಡಿದ್ದಾರೆ. ಅವರು ಎಲ್ಲಿಯೂ ಅಂತಹ ದೊಡ್ಡ ಸಕ್ಕರೆ ಕಂಪನಿಯನ್ನು ನಡೆಸಲು ಯಾವುದೇ ಅಗತ್ಯ ಅನುಭವ ಅಥವಾ ಅರ್ಹತೆಯನ್ನು ಅಥವಾ ಯಾವುದೇ ಕಂಪನಿಯನ್ನು ನಡೆಸಿದ ನಿರ್ವಹಣಾ ಅನುಭವವನ್ನು ಹೊಂದಿಲ್ಲ. ಆದರೂ, ರಾಜ್ಯ ಸರಕಾರವು ಅವರನ್ನು 2008ರ ಅಕ್ಟೋಬರ್ 1 ರಂದು ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ಮೈಶುಗರ್‌ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆನಂತರ, ಅವರನ್ನು 2012ರ ಡಿಸೆಂಬರ್‌ ನಲ್ಲಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಆಗ ಶಾಸಕರಾಗಿದ್ದ ಎಂ. ಶ್ರೀನಿವಾಸ್‌ 2012 ರಲ್ಲಿ ನಾಗರಾಜಪ್ಪ ವಿರುದ್ಧ ಅಂದಿನ ಮುಖ್ಯಮಂತ್ರಿಗೆ ದೂರು ಸಲ್ಲಿಸಿ, ನಾಗರಾಜಪ್ಪ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಗಂಭೀರ ಅಕ್ರಮಗಳು, ದುರ್ನಡತೆ ಮತ್ತು ದುಷ್ಕತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಜತೆಗೆ, ಅವರ ಅವಧಿಯಲ್ಲಿ ಮೈಶುಗರ್‌ಗೆ ನೂರಾರು ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದರು. ರಾಜ್ಯ ಸರಕಾರ 2014ರಲ್ಲಿ ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತರಿಗೆ ಆದೇಶ ನೀಡಿತ್ತು. ಉಪಲೋಕಾಯುಕ್ತರು ನಾಗರಾಜಪ್ಪ ವಿರುದ್ಧದ ಎಲ್ಲ ದಾಖಲೆಗಳು ಹಾಗೂ ವಿವರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಸಮಗ್ರ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ನಾಗರಾಜಪ್ಪ ಹೈಕೋರ್ಟ್‌ ಮೊರೆ ಹೋಗಿದ್ದರು.

ವಾರ್ತಾ ಭಾರತಿ 18 Nov 2025 12:39 am

ಜಾತಿ ಗಣತಿ ಬಗ್ಗೆ ಮಾಹಿತಿ ವಾಟ್ಸ್ ಆ್ಯಪ್ ನಲ್ಲಿ ಸುಳ್ಳು ಮಾಹಿತಿ - ಹಿಂದುಳಿದ ವರ್ಗಗಳ ಆಯೋಗದಿಂದ ದೂರು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸುಳ್ಳು ಅಂಕಿಅಂಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ ದಯಾನಂದ್​ ಅವರು ಹೈಗ್ರೌಂಡ್ಸ್​ ಠಾಣೆಗೆ ದೂರು ನೀಡಿದ್ದಾರೆ. ಸಮೀಕ್ಷೆ ಇನ್ನೂ ಪ್ರಗತಿಯಲ್ಲಿದ್ದು, ಗೌಪ್ಯತೆ ಕಾಪಾಡಲಾಗುತ್ತಿದೆ. ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಈ ಕೃತ್ಯದ ಬಗ್ಗೆ ತನಿಖೆ ನಡೆಸಲು ಕೋರಲಾಗಿದೆ.

ವಿಜಯ ಕರ್ನಾಟಕ 18 Nov 2025 12:19 am

Udupi | ಅಂಬಲಪಾಡಿ ಪ್ಲೈಓವರ್ ಕೆಳಗಡೆ ವಾಹನ ಸಂಚಾರ ಆರಂಭ

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಆದೇಶದಂತೆ ಇಂದಿನಿಂದ ಅಂಬಲಪಾಡಿ ಜಂಕ್ಷನ್‌ನ ಪ್ಲೈ ಓವರ್ ಕೆಳಗಡೆ ತಾತ್ಕಾಲಿಕವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅದರಂತೆ ಬೆಳಗ್ಗೆಯಿಂದ ಪ್ಲೈಓವರ್‌ನ ಕೆಳಗಡೆ ಒಂದು ಬದಿಯಲ್ಲಿ ಅಂಬಲಪಾಡಿ ಕಡೆಯಿಂದ ಬ್ರಹ್ಮಗಿರಿ ಕಡೆ ಹಾಗೂ ಬ್ರಹ್ಮಗಿರಿ ಕಡೆಯಿಂದ ಅಂಬಲಪಾಡಿ ಕಡೆಗೆ ವಾಹನಗಳು ಸಂಚಾರ ಆರಂಭಿಸಿವೆ. ಈ ತಾತ್ಕಾಲಿಕ ಅನುಮತಿಯನ್ನು ನ.30ರವರೆಗೆ ಕಲ್ಪಿಸಲಾಗಿದ್ದು, ಅಲ್ಲಿಯವರೆಗೆ ವಾಹನ ಗಳು ಈ ಮಾರ್ಗವನ್ನು ಬಳಸಬಹುದಾಗಿದೆ. ಇದರಿಂದ ಕರಾವಳಿ ಬೈಪಾಸ್ ಬಳಿ ವಾಹನ ದಟ್ಟನೆ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.

ವಾರ್ತಾ ಭಾರತಿ 18 Nov 2025 12:03 am

ವಿಜಯಲಕ್ಷ್ಮಿ ಶಿಬರೂರುಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕೋಟ: ಅನ್ಯಾಯ ಆದಾಗ ಪ್ರತಿಯೊಬ್ಬರು ಸೆಟೆದು ನಿಲ್ಲಬೇಕು. ಸ್ವಾರ್ಥ ಹೆಡಿತನ ಬಿಟ್ಟು, ಭ್ರಷ್ಟರ ದುಷ್ಟರ ಆರ್ಭಟಕ್ಕೆ ಕಡಿವಾಣ ಹಾಕಲು ನಿಷ್ಕಲ್ಮಶ ಹೋರಾಟ ಮಾಡಬೇಕು. ಮೌನ ವಹಿಸದೆ ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸದ್ಭಾವನಾ -2025 ಶೀರ್ಷಿಕೆಯಡಿ ಕೋಟದ ಗಾಂಧಿ ಮೈದಾನದಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಅವರು ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ನೈತಿಕತೆ, ಸತ್ಯದ ಪರವಾಗಿ ಹೋರಾಟ ಮಾಡುವ ಪತ್ರಕರ್ತರು ಈ ನಾಡಿನಲ್ಲಿ ಕಾರ್ಯಾಚರಿಸಲು ಸಿದ್ಧರಾಗಿದ್ದಾರೆ. ಪ್ರಸ್ತುತ ಪತ್ರಕರ್ತರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ಅದೇ ನೀವು ವೀಕ್ಷಕರಾಗಿ ಓದುಗರಾಗಿ ನಿಮ್ಮ ಪಾತ್ರ ಏನೆಂಬುವುದನ್ನು ಮನಗಾಣ ಬೇಕಾಗಿದೆ ಎಂದರು. ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಪಂಚವರ್ಣ ವಿಶೇಷ ಪುರಸ್ಕಾರವನ್ನು ರಥಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ಅವರಿಗೆ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ ಪ್ರದಾನ ಮಾಡಿದರು. ಇದೇ ವೇಳೆ ಮಾಸ್ಟರ್ ಅಥ್ಲೆಟಿಕ್ ಪಟು ಅಶ್ವಿನಿ ಅರಳಿ, ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ, ನಿರೂಪಕಿ ಕೋಟ ರೇವತಿ ಶೆಟ್ಟಿ ಬೆಂಗಳೂರು ಅವರನನು ಅಭಿನಂದಿಸಲಾಯಿತು. ಬನ್ನಾಡಿ ಪದ್ದು ಆಚಾರ್ ಸ್ಮರಣಾರ್ಥ ಅಶಕ್ತ, ಆರೋಗ್ಯ ನಿಧಿ ವಿತರಣೆ, ಸಂತೋಷ್ ಕುಮಾರ್ ಕೋಟ ಇವರ ನೆನಪಿನಲ್ಲಿ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ಶೈಕ್ಷಣಿಕ ದತ್ತಿನಿಧಿ, ವಿದ್ಯಾರ್ಥಿಗಳಿಗೆ ಪುನಿತ್ ರಾಜ್ ಕುಮಾರ್ ವಿದ್ಯಾನಿಧಿಯನ್ನು ವಿತರಿಸಲಾಯಿತು. ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ಆರೋಗ್ಯ ಪರಿಕರ, ಕೋಟದ ಸೇವಾಸಂಗಮ ಶಿಶುಮಂದಿರಕ್ಕೆ ಸಮವಸ್ತ್ರ ಹಸ್ತಾಂತರಿಸಲಾಯಿತು. ಬೆಂಗಳೂರು ಕ್ಯಾಪ್ಸ್ ಫೌಂಡೇಶನ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಸಮಾಜ ಶೀರ್ಷಿಕೆಯಡಿ ಒಂದು ಸಾವಿರ ಬಟ್ಟೆ ಕೈಚೀಲಗಳನ್ನು ಕ್ಯಾಪ್ಸ್ ಫೌಂಡೇಶನ್ ಮುಖ್ಯಸ್ಥ ಸಿಎ ಚಂದ್ರಶೇಖರ ಶೆಟ್ಟಿ, ಕೋಟ ಸಿ ಎ ಬ್ಯಾಂಕ್ ಸಿಇಓ ಶರತ್ ಕುಮಾರ್ ಶೆಟ್ಟಿ ಅವರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಕೋಟ ಸಹಕಾರಿ ವ್ಯಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಅಭಿನಂದನಾ ನುಡಿಗಳನ್ನಾಡಿದರು. ಮುಂಬೈ ಓಎನ್‌ಜಿಸಿ ನಿವೃತ್ತ ಪ್ರಬಂಧಕ ಬನ್ನಾಡಿ ನಾರಾಯಣ ಆಚಾರ್ ಶುಭಶಂಸನೆಗೈದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಬಡಾಮನೆ ರತ್ನಾಕರ ಶೆಟ್ಟಿ, ಉದ್ಯಮಿ ಶಂಕರ್ ಹೆಗ್ಡೆ, ಕುಂದಾಪುರ ಮಾತಾ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಕಾಶ್ ಸಿ.ತೋಳಾರ್, ಯಡಾಡಿ ಮತ್ಯಾಡಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ, ಗುತ್ತಿಗೆದಾರ ಗುಂಡ್ಮಿ ಅವಿನಾಶ್ ಶೆಟ್ಟಿ ಬೆಂಗಳೂರು, ಸೃಷ್ಠಿ ಇಂಜಿನಿಯರ್ ಮುಖ್ಯಸ್ಥ ಜಯರಾಜ್ ವಿ.ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ್ ಹೊಳ್ಳ, ಸಾಂಸ್ಕೃತಿಕ ಚಿಂತಕ ರಶಿರಾಜ್ ಸಾಸ್ತಾನ, ಸಾಮಾಜಿಕ ಕಾರ್ಯಕರ್ತ ಕೆ.ದಿನೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಎಚ್.ಕುಂದರ್, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಕೋಟ ರೇವತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ವಂದಿಸಿದರು. ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸಹಕರಿಸಿದರು.

ವಾರ್ತಾ ಭಾರತಿ 18 Nov 2025 12:00 am

ರಾಣಿ ಅಬ್ಬಕ್ಕ ತುಳುವರ ಸ್ವಾಭಿಮಾನಕ್ಕೆ ಸಂಕೇತ: ಭಾಸ್ಕರ ರೈ ಕುಕ್ಕುವಳ್ಳಿ

ಬಂಟ್ವಾಳ: ತುಳುನಾಡನ್ನು ಆಳಿದ 26 ಪ್ರಮುಖ ಜೈನ ರಾಜ-ರಾಣಿಯರಲ್ಲಿ 12ನೆಯವಳಾದ ಅಬ್ಬಕ್ಕ ಉಳ್ಳಾಲದಲ್ಲಿ ಸ್ವತಂತ್ರ ರಾಜಸತ್ತೆಯನ್ನು ನಡೆಸಿದವಳು. ಧರ್ಮ ನಿರಪೇಕ್ಷ ಆಡಳಿತ, ರಾಜಕೀಯ ನೈಪುಣ್ಯ, ಯುದ್ಧ ತಂತ್ರ ಮತ್ತು ಸ್ವಾತಂತ್ರ್ಯಪ್ರಿಯತೆಯ ಮೂಲಕ ರಾಷ್ಟ್ರದ ಗಮನಸೆಳೆದಿದ್ದ ಅವಳು ಪರಕೀಯ ಪೋರ್ಚುಗೀಸರಿಗೆ ಸಿಂಹ ಸ್ವಪ್ನವಾಗಿದ್ದಳು. ತುಳುನಾಡಿಗರ ಸ್ವಾಭಿಮಾನದ ಸಂಕೇತವಾಗಿದ್ದ ಅಬ್ಬಕ್ಕ ರಾಣಿ ವಿದೇಶೀ ಶಕ್ತಿಗಳಿಗೆ ತಲೆಬಾಗದೆ ನಾಡ ರಕ್ಷಣೆಗಾಗಿ ಆತ್ಮಾರ್ಪಣೆ ಮಾಡಿದ ದಿಟ್ಟ ಮಹಿಳೆ ಎಂದು ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ರೈ ಕುಕುವಳ್ಳಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಕೆನರಾ ಇಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ಬಂಟ್ವಾಳ ಬೆಂಜನಪದವು ಸಹಯೋಗದಲ್ಲಿ ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಸೆಮಿನಾರ್ ಹಾಲಿನಲ್ಲಿ ನಡೆದ 85ನೇ ಎಸಳಿನ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಉಪನ್ಯಾಸ ನೀಡಿದರು. ಪ್ರಾಧ್ಯಾಪಕ ಡಾ.ವಾದಿರಾಜ ಗೋಪಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ್ ಎಚ್.ಆರ್. ಅಧ್ಯಕ್ಷತೆ ವಹಿಸಿದ್ದರು. ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಪರೀಕ್ಷಾ ನಿಯಂತ್ರಕ ಡೀನ್ ಡಾ. ಉದಯಕುಮಾರ್ ಕೆ. ಶೆಣೈ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕಿ ಲಕ್ಷ್ಮಿ ಹೆಗ್ಡೆ ಪ್ರಾರ್ಥನೆ ಹಾಡಿದರು. ವಾಣಿ ಯು.ಎಚ್. ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಸತೀಶ್ ಹೆಗ್ಡೆ ವಂದಿಸಿದರು. ಶಿಲ್ಪಾಬಿ. ಸಹಕರಿಸಿದರು.

ವಾರ್ತಾ ಭಾರತಿ 17 Nov 2025 11:57 pm

ಮಂಗಳೂರು| ವರದಕ್ಷಿಣೆ ಕಿರುಕುಳ: ಇಬ್ಬರಿಗೆ ಶಿಕ್ಷೆ

ಮಂಗಳೂರು: ಹೆಚ್ಚುವರಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ವಿವಾಹಿತೆಗೆ ಕಿರುಕುಳ ನೀಡಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಆರೋಪಿಗಳಾದ ಪ್ರವೀಣ್ ಕುಮಾರ್ ಮತ್ತು ಲಲಿತಾ ಎಂಬವರಿಗೆ 6 ತಿಂಗಳ ಸಜೆ ಹಾಗೂ 6 ಸಾವಿರ ರೂ. ದಂಡ ವಿಧಿಸಿ 3ನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ. 2016ರ ಎ.11ರಂದು ಪ್ರವೀಣ್ ಕುಮಾರ್‌ರೊಂದಿಗೆ ತನ್ನ ಮದುವೆಯಾಗಿತ್ತು. ಕೆಲದಿನದ ಬಳಿಕ ಗಂಡ ಪ್ರವೀಣ್ ಕುಮಾರ್ ಮತ್ತು ಅತ್ತೆ ಲಲಿತಾ 2 ಲಕ್ಷ ರೂ. ನಗದು, 10 ಲಕ್ಷದ ರೂ. ಮೌಲ್ಯದ ಚಿನ್ನಾಭರಣಗಳನ್ನು ತರಬೇಕು ಎಂದು ಒತ್ತಾಯಿಸಿ ಹಲ್ಲೆಗೈದಿದ್ದರು. 2017ರ ಸೆ.11ರಂದು ರಾತ್ರಿ 10:30ಕ್ಕೆ ಗಂಡ ಮತ್ತು ಅತ್ತೆ ಮನೆಯಲ್ಲಿ ಮಲಗದಂತೆ ಮಾನಸಿಕ ಹಿಂಸೆ ನೀಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹಲ್ಲೆಗೊಳಗಾದ ಮಹಿಳೆ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. 3ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಸುರೇಶ್ ಎಸ್. ವಿಚಾರಣೆ ನಡೆಸಿ ನ.14ರಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯ ಅಂದಿನ ಠಾಣಾಧಿಕಾರಿ ಸಿದ್ದನಗೌಡ ಭಜಂತ್ರಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಶನ್ ಪರವಾಗಿ ಸರಕಾರಿ ಸಹಾಯಕ ಅಭಿಯೋಜಕಿ ಗೀತಾ ರೈ ವಾದಿಸಿದ್ದರು.

ವಾರ್ತಾ ಭಾರತಿ 17 Nov 2025 11:54 pm

ಬಿಹಾರ ಎನ್‌ಡಿಎ ಗೆಲುವು: ಮಹಾಮಾನವ್ ಹೈ ತೋ ಸಬ್ ಕುಚ್ ಮುಮ್ಕಿನ್ ಹೈ ಎಂದ ನಟ ಕಿಶೋರ್

Bihar NDA Victory: ಬಿಹಾರ ವಿಧಾನಸಭೆ ಚುನಾವಣೆ 2025ರ ಫಲಿತಾಂಶದ ಬಗ್ಗೆ ನಟ ಕಿಶೋರ್ ಕುಮಾರ್ (Kishore Kumar Huli) ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಬರಹವು ಪರ - ವಿರೋಧ ಚರ್ಚೆಗೆ ಕಾರಣವಾಗಿದೆ. ಈಚೆಗೆ ಅವರು ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಹೇಳಿಕೆಗೆ ನಟ ಕಿಶೋರ್ ಅವರು ರಿಯಾಕ್ಟ್ ಮಾಡಿದ್ದು ಸಹ ಭಾರೀ ಚರ್ಚೆಗೆ ಕಾರಣವಾಗಿತ್ತು.

ಒನ್ ಇ೦ಡಿಯ 17 Nov 2025 11:54 pm

ಭಯೋತ್ಪಾದಕ ಸಂಪರ್ಕದ ಶಂಕೆ | ಅನಂತ್‌ನಾಗ್‌ ನಲ್ಲಿ ರೋಹ್ಟಕ್ ನ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ವಶಕ್ಕೆ ಪಡೆದು ವಿಚಾರಣೆ: ಆರೋಪ ನಿರಾಕರಿಸಿದ ಕುಟುಂಬ

ಹೊಸದಿಲ್ಲಿ: ರೋಹ್ಟಕ್ ಮೂಲದ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ಅವರನ್ನು ʼವೈಟ್ ಕಾಲರ್ʼ ಭಯೋತ್ಪಾದಕ ಸಂಪರ್ಕದ ಶಂಕೆಯಿಂದ ಜಮ್ಮು–ಕಾಶ್ಮೀರ ಗುಪ್ತಚರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬ ಸದಸ್ಯರು ಯಾವುದೇ ಆರೋಪಗಳಿಗೆ ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು Hindustan Times ವರದಿ ಮಾಡಿದೆ. ಶನಿವಾರ ಅನಂತ್‌ ನಾಗ್‌ ನ ಮಲಕ್‌ ನಾಗ್ ಪ್ರದೇಶದಲ್ಲಿರುವ ಹಾಸ್ಟೆಲ್‌ ಗೆ ತನಿಖಾಧಿಕಾರಿಗಳು ಭೇಟಿ ನೀಡಿ ಪ್ರಿಯಾಂಕಾ ಅವರನ್ನು ವಿಚಾರಣೆಗೆ ಕರೆದೊಯ್ದಿದ್ದರು. ಬಳಿಕ ಅವರನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತ ವಿವರಗಳನ್ನು ರೋಹ್ಟಕ್‌ ನ ಪತ್ರಕರ್ತರೊಂದಿಗೆ ಜನತಾ ಕಾಲೋನಿಯಲ್ಲಿನ ನಿವಾಸದಲ್ಲಿ ಮಾಹಿತಿ ಹಂಚಿಕೊಂಡ ಅವರ ಸಹೋದರ ಭರತ್ ಶರ್ಮಾ, “ಪ್ರಿಯಾಂಕಾ 2023ರಿಂದ ರಜೆ ತೆಗೆದುಕೊಂಡು ಅನಂತ್‌ ನಾಗ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದಾರೆ. ಶನಿವಾರ ರಾತ್ರಿ 9 ಗಂಟೆಗೆ ವೀಡಿಯೊ ಕಾಲ್ ವೇಳೆ ಹೊರಗಿನ ಅಧಿಕಾರಿಗಳು ಹಾಸ್ಟೆಲ್‌ಗೆ ಬಂದಿರುವುದನ್ನು ಅವರು ತಿಳಿಸಿದ್ದರು. ಬಳಿಕ ಸಂಪರ್ಕ ಕಡಿತಗೊಂಡಿತು,” ಎಂದರು. ನಂತರ ಭಿವಾನಿಯ ವೈದ್ಯರಾದ ಡಾ. ಅನಿರುದ್ಧ್ ಶರ್ಮಾ - ಡಾ.ಪ್ರಿಯಾಂಕಾ ಅವರ ಸೋದರ ಮಾವ ಕರೆಮಾಡಿ, ವಿಚಾರಣೆಗಾಗಿ ತನಿಖಾಧಿಕಾರಿಗಳು ಅವರನ್ನು ಕರೆದುಕೊಂಡು ಹೋಗಿದ್ದಾರೆಂದು ತಿಳಿಸಿದ್ದರು. ರಾತ್ರಿ ತಡವಾಗಿ ಪ್ರಿಯಾಂಕಾ ಮತ್ತೆ ಕುಟುಂಬಕ್ಕೆ ಕರೆಮಾಡಿ, ತನಿಖಾಧಿಕಾರಿಗಳು ತಮ್ಮ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದರು. ಭಯೋತ್ಪಾದನಾ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಅದೀಲ್ ಅಹ್ಮದ್ ರಾಥರ್‌ರೊಂದಿಗೆ ಹೊಂದಿರುವ ‘ಸಂಪರ್ಕದ’ ಕುರಿತ ಪ್ರಶ್ನೆಗಳೇ ವಿಚಾರಣೆಯ ಕೇಂದ್ರಬಿಂದು ಎಂದು ತಿಳಿದು ಬಂದಿದೆ. “ಅದೀಲ್ ಅದೇ ವಿಭಾಗದ ಸೀನಿಯರ್ ವೈದ್ಯ. ಸಹೋದ್ಯೋಗಿಯಾಗಿ ಪರಿಚಯವಿತ್ತು ಅಷ್ಟೇ. ಯಾವುದೇ ದೇಶವಿರೋಧಿ ಸಂಬಂಧವಿಲ್ಲ ಎಂಬುದನ್ನು ಪ್ರಿಯಾಂಕಾ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ,” ಎಂದು ಭರತ್ ನುಡಿದರು. ಕಾಲೇಜಿನ ಹಾಸ್ಟೆಲ್‌ ಬಿಟ್ಟು ಪ್ರಿಯಾಂಕ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನುವ ಸಾಮಾಜಿಕ ಜಾಲತಾಣದ ಸುಳ್ಳು ವರದಿಗಳನ್ನು ಅವರು ತೀವ್ರವಾಗಿ ಖಂಡಿಸಿದರು. “ಶಿಕ್ಷಣಕ್ಕಾಗಿ ಮಾತ್ರ ಅವರು ಅನಂತ್‌ನಾಗ್‌ಗೆ ತೆರಳಿದ್ದರು. ಅಗತ್ಯವಿದ್ದರೆ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಅವರು ಸಿದ್ಧರಾಗಿದ್ದಾರೆ,” ಎಂದರು. ಪ್ರಿಯಾಂಕಾ ಸೋಣಿಪತ್‌ ನ ಖಾನ್‌ಪುರ್ ಕಲಾನ್‌ ನಲ್ಲಿರುವ ಭಗತ್ ಫೂಲ್ ಸಿಂಗ್ ಮಹಿಳಾ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದರು. ಅವರ ತಂದೆ ಸತೀಶ್ ಶರ್ಮಾ ಮೆಹಮ್ ಸಕ್ಕರೆ ಗಿರಣಿಯಲ್ಲಿ ಭದ್ರತಾ ಸಿಬ್ಬಂದಿ, ತಾಯಿ ಗೃಹಿಣಿ. 2019ರಲ್ಲಿ ಎಂಬಿಬಿಎಸ್ ಮುಗಿಸಿದ ಅವರು, 2021ರಲ್ಲಿ ಭಿವಾನಿ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ.ಅನಿರುದ್ಧ್ ಕೌಶಿಕ್ ಅವರನ್ನು ವಿವಾಹವಾಗಿದ್ದರು. ನಂತರ 2023ರಲ್ಲಿ ಅನಂತ್‌ನಾಗ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ಪ್ರವೇಶ ಪಡೆದರು. ತನಿಖೆಯ ಭಾಗವಾಗಿ ಗುರುಗ್ರಾಮದ ಎಸ್‌ಟಿಎಫ್ ಕೂಡ ಭಿವಾನಿಯಲ್ಲಿರುವ ಪ್ರಿಯಾಂಕಾ ಅವರ ಅತ್ತೆಯ ಮನೆಗೆ ಭೇಟಿ ನೀಡಿ ಕುಟುಂಬದೊಂದಿಗೆ ಮಾತುಕತೆ ನಡೆಸಿದೆ. ಪ್ರಕರಣದ ತನಿಖೆ ಮುಂದುವರಿಯುತ್ತಿದೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 17 Nov 2025 11:51 pm

‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಮನವಿ

ಬೆಂಗಳೂರು : ಸಾಲಿಡಾರಿಟಿ ಯೂತ್ ಮೂವ್‍ಮೆಂಟ್‍ನ ಪ್ರತಿನಿಧಿ ಮಂಡಳಿಯು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ಮೂಲಕ ನವೋದ್ಯಮಗಳನ್ನು ಉತ್ತೇಜಿಸಲು 2025-26ನೇ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾದ ‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಯ ಅನುದಾನವನ್ನು ಹೆಚ್ಚಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ. ಈ ಯೋಜನೆಗೆ ಕೆಎಂಡಿಸಿಯು 5 ಕೋಟಿ ರೂ.ಮೀಸಲಿಟ್ಟಿದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿರುವುದರಿಂದ ಲಭ್ಯವಿರುವ ಅನುದಾನ ಸಾಕಾಗುವುದಿಲ್ಲ. ಹೆಚ್ಚಿನ ಸ್ಟಾರ್ಟ್‌ ಅಪ್‍ಗಳಿಗೆ ಬೆಂಬಲ ಒದಗಿಸಲು ಹೆಚ್ಚುವರಿ 5ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಶದ್ ಅವರಿಗೆ ಮನವಿ ಸಲ್ಲಿಸಲಾಯಿತು. ಅನುದಾನ ವೃದ್ಧಿಯಿಂದ ಅಲ್ಪಸಂಖ್ಯಾತ ಸಮುದಾಯದ ಹೊಸ ಉದ್ಯಮಗಳು ಬೆಳೆದು, ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗುವ ಸಾಧ್ಯತೆಯಿದೆ. ಇದರ ಫಲಶ್ರುತಿ ರಾಜ್ಯ ಸರಕಾರದ ಅಭಿವೃದ್ಧಿ ದೃಷ್ಟಿಕೋನಕ್ಕೆ ಪೂರಕವಾಗಲಿದೆ. ಈ ಸಂದರ್ಭದಲ್ಲಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್ ತೀರ್ಥಹಳ್ಳಿ, ಸುಹೈಲ್ ಮಸೂಲ್ದಾರ್ ಮತ್ತಿತರರು ಉಪಸ್ಥಿತರಿದ್ದರೆಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 17 Nov 2025 11:51 pm

ಕಾಟಿಪಳ್ಳ ಕೆಎಂವೈಎ ದಮಾಮ್ ವತಿಯಿಂದ ಸನ್ಮಾನ

ದಮಾಮ್: ಕಾಟಿಪಳ್ಳ ಮುಸ್ಲಿಂ ಯೂತ್ ಅಸೋಸಿಯೇಶನ್ ದಮಾಮ್ ವತಿಯಿಂದ ಜುಬೈಲ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪುರಸ್ಕೃತ ಹಾಜಿ ಝಕರಿಯ ಜೋಕಟ್ಟೆ ಮುಝೈನ್, ಪ್ರೊ.ಯು.ಟಿ. ಇಫ್ತಿಕಾರ್ ಫರೀದ್, ಇನಾಯತ್ ಅಲಿ ಅವರನ್ನು ಸನ್ಮಾನಿಸಲಾಯಿತು. ಕೆಎಂವೈಎ ದಮಾಮ್ ಅಧ್ಯಕ್ಷ ಮುಸ್ತಫ ಆರಗ ಅಧ್ಯಕ್ಷತೆ ವಹಿಸಿದರು. ಮಾಜಿ ಅಧ್ಯಕ್ಷ ಪಿ.ಎಂ. ಮನ್ಸೂರ್, ಕೆಎಂವೈಎ ರಿಯಾದ್ ಅಧ್ಯಕ್ಷ ಪಿ.ಎಸ್.ಅಬ್ದುಲ್ ಅಝೀಝ್, ನಝೀರ್ ಅಲ್ ಬಾತಿನ್, ಶಫೀಖ್ ಟೇಬಲ್ ಫೋರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಕಾಟಿಪಳ್ಳ ಕೆಎಂವೈಎ ನಡೆದು ಬಂದ 37 ವರ್ಷಗಳ ಹಾದಿಯ ಬಗ್ಗೆ ವಿವರಿಸಿದರು. ಸೈಫುಲ್ಲ ಮುಹ್ಯಿದ್ದೀನ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 17 Nov 2025 11:46 pm

ಬೆಂಗಳೂರಿನ ಸವಾರರ ಗಮನಕ್ಕೆ; ಅರಮನೆ ಮೈದಾನ ಸುತ್ತಮುತ್ತಲಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಹಿನ್ನೆಲೆ ಬೆಳಗ್ಗೆ 7 ಗಂಟೆಯಿಂದ ಸಂಜೆ 4ರವರೆಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ರಾಜಕೀಯ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 80 ಸಾವಿರಕ್ಕೂ ಹೆಚ್ಚು ಮಂದಿ ಇಲ್ಲಿ ಸೇರಲಿರುವ ಹಿನ್ನೆಲೆ ಸಂಚಾರದಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಿರುವಂತೆ ಕಾಯ್ದುಕೊಳ್ಳಲು ಅರಮನೆ ಮೈದಾನದ ಸುತ್ತಮುತ್ತಲಿನ ರಸ್ತೆಯಲ್ಲಿ ವಾಹನ ನಿಲುಗಡೆ ಮತ್ತು ಸಂಚಾರ ನಿರ್ಬಂಧಿಸಲಾಗಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಸಂಚಾರ ಪೊಲೀಸರು ಟ್ವೀಟ್‌ ಹಂಚಿಕೊಂಡಿದ್ದಾರೆ.

ವಿಜಯ ಕರ್ನಾಟಕ 17 Nov 2025 11:41 pm

ಬೈಂದೂರು | ಇಸ್ಪೀಟು ಜುಗಾರಿ: ಆರು ಮಂಂದಿ ಬಂಧನ

ಬೈಂದೂರು: ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಬೈಂದೂರು ಪೊಲೀಸರು ನ.16ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಪಡುವರಿ ಗ್ರಾಮದ ಶೇಖರ(36) ಭಟ್ಕಳದ ಹರೀಶ್ ನಾಯ್ಕ್(42), ದೇವಂದ್ರ ಜಟ್ಟಪ್ಪ ನಾಯ್ಕ್(38), ಅಶೋಕ ವೆಂಕಟೇಶ ನಾಯ್ಕ್(42), ನಾಗಪ್ಪ ಗೊವೀಂದ ನಾಯ್ಕ್(45), ಶಿರೂರು ಗ್ರಾಮದ ದಿನಕರ(32) ಬಂಧಿತ ಆರೋಪಿಗಳು. ಬಂಧಿತರಿಂದ 24010ರೂ. ನಗದು, ನಾಲ್ಕು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Nov 2025 11:38 pm

ನುಸ್ರತುಲ್ ಇಸ್ಲಾಂ ಸಮಿತಿಯ ನೂತನ ಸಮಿತಿ ಆಯ್ಕೆ

ಉಳ್ಳಾಲ:ಕುಂಡೂರು ಜುಮಾ ಮಸೀದಿಯ ಅಂಗ ಸಂಸ್ಥೆಯಾದ ನುಸ್ರತುಲ್ ಇಸ್ಲಾಂ ಸಮಿತಿಯ ಮಹಾ ಸಭೆಯು ರವಿವಾರ ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಎಸ್ ಮುಹಮ್ಮದ್ ರಫೀಕ್ ಅಂಬ್ಲಮೊಗರು, ಕಾರ್ಯದರ್ಶಿಯಾಗಿ ಅಶ್ರಫ್ ಎಸ್ .ಎಮ್.ಕೋಶಾಧಿಕಾರಿಯಾಗಿ ಅಬೂಬಕ್ಕರ್ ಬೀಡಿ, ಲೆಕ್ಕ ಪರಿಶೋಧಕರಾಗಿ ಸಿದ್ದೀಕ್ ಎಸ್ ರಾಝ್ , ಉಪಾಧ್ಯಕ್ಷರಾಗಿ ಹಂಝ ಮದಕ, ಜತೆ ಕಾರ್ಯದರ್ಶಿಯಾಗಿ ರಿಝ್ವಾನ್, ಪ್ರಧಾನ ಸಲಹೆಗರರಾಗಿ ಅಬುಸಾಲಿ ಎಸ್.ಬಿ. ಹಾಗೂ 17 ಮಂದಿಯನ್ನು ನೂತನ ಕಾರ್ಯಕಾರಿ ಸಮಿತಿ ಸದಸ್ಯ ರನ್ನಾಗಿ ಆಯ್ಕೆ ಮಾಡಲಾಯಿತು.

ವಾರ್ತಾ ಭಾರತಿ 17 Nov 2025 11:35 pm

ಮಲ್ಪೆ| ನಿಷೇಧಿತ ಭಾದ್ರಗಡ ದ್ವೀಪಕ್ಕೆ ಪ್ರವೇಶ: ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು

ಮಲ್ಪೆ: ನಿಷೇಧಿತ ಭಾದ್ರಗಡ ದ್ವೀಪಕ್ಕೆ ಗಾಳ ಹಾಕಲು ಬೋಟಿನಲ್ಲಿ ತೆರಳಿದ್ದ ಎಂಟು ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ ವಡಾಬಾಂಡೇಶ್ವರದ ನಿವಾಸಿ ಶೇಖರ್ ಕುಂದರ್ ಎಂಬವರ ಮಾಲಕತ್ವದ ದೋಣಿಯಲ್ಲಿ ಭಟ್ಕಳದ ನಿವಾಸಿಗಳಾದ ಮೊಹಮ್ಮದ್ ಹುಸೈನ್ ಮಲ್ಬಾರಿ, ರೋಶನ್ ಜಮೀರ್, ಮೊಹಮ್ಮದ್ ಅನ್ಸಾರ್ ಬಶೀರಾ, ಅಬು ಸನಾನ್, ಅಣ್ಣಪ್ಪ ಮಂಜುನಾಥ ದೇವಾಡಿಗ, ಮೊಹಮ್ಮದ್ ಫೈಜಾನ್ ಶೇಖ್ ಹಾಗೂ ಮಹಮ್ಮದ್ ಜಾವೇದ್ ಅಹ್ಮದ್ ಎಂಬವರು ನಿರ್ಬಂಧಿತ ಭಾದ್ರಗಡ ದ್ವೀಪಕ್ಕೆ ನ.14ರಂದು ಸಂಜೆ ಹೋಗಿ ವಾಪಾಸ್ಸು ಬಂದಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಲ್ಪೆ ಬಂದರು ಉಪ ಸಂರಕ್ಷಣಾಧಿಕಾರಿ ಅಂತೋನಿ ಫೆಲಿಕ್ಸ್ ಪರಂಬಿಲ್ ನೀಡಿದ ದೂರಿನಂತೆ ಈ ಎಂಟು ಮಂದಿ ದ್ವೀಪಕ್ಕೆ ತೆರಳಿ ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘಿಸಿ ಅತಿಕ್ರಮ ಪ್ರವೇಶ ಮಾಡಿ ಅಪರಾಧ ಎಸಗಿರುವುದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Nov 2025 11:33 pm

ಮಲ್ಪೆ: ವಾಹನ ಸಹಿತ ಚಾಲಕ ನಾಪತ್ತೆ

ಮಲ್ಪೆ: ಚಾಲಕನೋರ್ವ ವಾಹನ ಸಹಿತ ನಾಪತ್ತೆಯಾಗಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಬ್ರಹ್ಮಾವರ ಕೋಡಿ ಗ್ರಾಮದ ತಿರ್ಥೇಶ್ ಎಂಬವರು 2 ತಿಂಗಳ ಹಿಂದೆ ಕೆಎ 47 ಎ 2766 ನಂಬರಿನ ಅಶೋಕ್ ಲೈಲಾಂಡ್ ಬಾಡಾ ದೋಸ್ತ್ ವಾಹನವನ್ನು ಖರೀದಿಸಿದ್ದು ವಾಹನಕ್ಕೆ ಚಿಕ್ಕಮಂಗಳೂರಿನ ಕಯುಂ ಪಾಷಾ ಎಂಬಾತನನ್ನು ಚಾಲಕನಾಗಿ ಕೆಲಸಕ್ಕೆ ನೇಮಿಸಿಕೊಂಡಿದ್ದರು. ನ.15ರಂದು ಸಂಜೆ ವಾಹನವನ್ನು ಮಲ್ಪೆ ಬಂದರಿನ ಬಳಿ ಇರುವ ಮತ್ಸ್ಯ ಸಿರಿ ಕಾಂಪ್ಲೆಕ್ಸ್ ಎದುರು ನಿಲ್ಲಿಸಿದ ತೀರ್ಥೆಶ್, ವಾಹನದ ಬೀಗವನ್ನು ಕಯುಂ ಪಾಷಾನಿಗೆ ಕೊಟ್ಟು ಅಲ್ಲಿಂದ ಹೋಗಿದ್ದರು. ನ.16ರಂದು ಬೆಳಗ್ಗೆ ಬಂದು ನೋಡಿದಾಗ ಚಾಲಕ ವಾಹನ ಸಹಿತ ನಾಪತ್ತೆಯಾಗಿರುವುದು ಕಂಡುಬಂತು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Nov 2025 11:23 pm

ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾ ಆಗ್ರಹ; ಭಾರತ ಹೇಳಿದ್ದೇನು?​

ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರತಿಭಟನೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಢಾಕಾದ ನ್ಯಾಯಮಂಡಳಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಶೇಖ್‌ ಹಸೀನಾರಿಗೆ ಮರಣದಂಡನೆ ವಿಧಿಸಿದೆ. ಪದಚ್ಯುತಿಯ ನಂತರ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾರನ್ನು ತಕ್ಷಣವೇ ಹಸ್ತಾಂತರಿಸಿ ಎಂದು ಬಾಂಗ್ಲಾದೇಶ ಸರ್ಕಾರ ಭಾರತವನ್ನು ಒತ್ತಾಯಿಸಿದೆ. ಈ ಬಗ್ಗೆ ಭಾರತ ಪ್ರತಿಕ್ರಿಯಿಸಿದ್ದು, ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಬದ್ಧವಾಗಿದೆ ಎಂದು ಹೇಳಿದೆ.

ವಿಜಯ ಕರ್ನಾಟಕ 17 Nov 2025 11:17 pm

ಕಾರ್ಕಳ | ಮಕ್ಕಳಿಗೆ ಬಸ್ಕಿ ಹೊಡೆಸಿ, ಜನಿವಾರ ತೆಗೆಸಿದ ಆರೋಪ: ದೈಹಿಕ ಶಿಕ್ಷಕ ವಜಾ

ಕಾರ್ಕಳ: ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸಿ, ಜನಿವಾರ ತೆಗೆಸಿದ ಆರೋಪದಡಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ನ.17ರಂದು ನಡೆದಿದೆ. ಮೂಲತಃ ಕಲಬುರಗಿ ನಿವಾಸಿ, ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್.‌ ಮಕಾಂದರ್‌ ವಜಾಗೊಂಡ ಶಿಕ್ಷಕ. ಇವರು 2025ರ ಜೂನ್ ತಿಂಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ವೃತ್ತಿಗೆ ಅತಿಥಿ ಶಿಕ್ಷಕರಾಗಿ ಸೇರ್ಪಡೆಗೊಂಡಿದ್ದು, ವಿದ್ಯಾರ್ಥಿಗಳಿಗೆ 200 ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುವುದು ಸಹಿತ ಮೊದಲಾದ ಶಿಕ್ಷೆಗಳನ್ನು ನೀಡುತ್ತಿದ್ದರು ಎಂದು ಮಕ್ಕಳು, ಪೋಷಕರು ಆರೋಪಿಸಿದ್ದಾರೆ. ಮಕ್ಕಳ ದೂರಿನ ಮೇರೆಗೆ ಪೋಷಕರು, ಊರವರು ಶಾಲೆಗೆ ಆಗಮಿಸಿ ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡರು. ಈ ಹಿನ್ನೆಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನನ್ನು ಪ್ರಾಂಶುಪಾಲರು ಶಾಲಾ ಕರ್ತವ್ಯದಿಂದ ವಜಾಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ವಾರ್ತಾ ಭಾರತಿ 17 Nov 2025 11:03 pm

ಕಾರ್ಪೊರೇಟ್ ಉದ್ಯೋಗಿಗಳೇ ಹುಷಾರು! ಕಂಪನಿ ಲ್ಯಾಪ್ ಟಾಪ್ 300 ಸೆಕೆಂಡ್ ಬಳಕೆಯಾಗಿಲ್ಲ ಅಂದ್ರೆ ಕಂಪನಿಗೆ ಗೊತ್ತಾಗುತ್ತೆ!

ಕಾರ್ಪೊರೇಟ್ ಕಂಪನಿಗಳ ಉದ್ಯೋಗಿಗಳೇ ಎಚ್ಚರ. ನಿಮ್ಮ ಕಂಪನಿಯ ಲ್ಯಾಪ್ ಟಾಪ್ ನಲ್ಲಿ ನೀವು ಕೆಲಸ ಮಾಡುತ್ತಿದ್ದರೆ, ನಿಮ್ಮ ಚಟುವಟಿಕೆಗಳನ್ನು ಕಂಪನಿ ಗಮನಿಸಲಿದೆ. ಕೀಬೋರ್ಡ್ ಮೇಲೆ ಬೆರಳು ಹತ್ತಿರದ 300 ಸೆಕೆಂಡ್ ಗಳು ಅಥವಾ ಲ್ಯಾಪ್ ಟಾಪ್ 15 ನಿಮಿಷ ಬಳಸದಿದ್ದರೆ, ನೀವು ಕೆಲಸದಲ್ಲಿಲ್ಲ ಎಂದು ಗುರುತಿಸಲಾಗುತ್ತದೆ. ಕಾಗ್ನಿಝೆಂಟ್ ಕಂಪನಿಯಲ್ಲಿ ಈ 'ProHance' ತಂತ್ರಜ್ಞಾನ ಜಾರಿಯಾಗಿದೆ. ಇದು ಉದ್ಯೋಗಿಗಳ ನಿಷ್ಠೆ ಮತ್ತು ಶ್ರದ್ಧೆಯನ್ನು ಅಳೆಯಲು ಸಹಾಯ ಮಾಡುತ್ತದೆ.

ವಿಜಯ ಕರ್ನಾಟಕ 17 Nov 2025 10:53 pm

ಕೊಂಕಣಿ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ 2025ನೇ ಸಾಲಿನಲ್ಲಿ ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) ಕೊಂಕಣಿ ಜಾನಪದ ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರಶಸ್ತಿಯು 50,000 ರೂ. ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ ಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಸಾಧಕರು ನೇರವಾಗಿ ಅಥವಾ ಸಂಘ ಸಂಸ್ಥೆಗಳು/ಸಾರ್ವಜನಿಕರು ಸಾಧಕರ ಹೆಸರು ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪುಸ್ತಕ ಬಹುಮಾನ: ಕೊಂಕಣಿ ಅಕಾಡಮಿಯು 2025ರ ಕ್ಯಾಲೆಂಡರ್ ವರ್ಷದಲ್ಲಿ (2025 ಜನವರಿ 1 ರಿಂದ ಡಿಸೆಂಬರ್ 31) ಪ್ರಕಟಿತವಾದ ಕೊಂಕಣಿ ಕವನ, ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ಅಧ್ಯಯನ/ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು 25,000 ರೂ.ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ-2025 ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಪುಸ್ತಕ ಬಹುಮಾನ -2025 ಎಂದು ಕಡ್ಡಾಯವಾಗಿ ಬರೆದು, ರಿಜಿಸ್ಟ್ರಾರ್ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ, ಮಹಾನಗರ ಪಾಲಿಕಾ ಕಟ್ಟಡ, ಲಾಲ್‌ಬಾಗ್, ಮಂಗಳೂರು 575003ಕ್ಕೆ 2026ರ ಜನವರಿ 2ರೊಳಗೆ ಕಳುಹಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 17 Nov 2025 10:42 pm

ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಚಟುವಟಿಕೆಗೆ ನಿರ್ಬಂಧ; ಸರಕಾರದ ಆದೇಶದ ಮೇಲಿನ ತಡೆಯಾಜ್ಞೆ ಅರ್ಜಿದಾರರಿಗಷ್ಟೇ ಸೀಮಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು/ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿದಾರರಿಗೆ ಮಾತ್ರ ಸೀಮಿತಗೊಳಿಸಲು ನಿರಾಕರಿಸಿರುವ ಹೈಕೋರ್ಟ್, ಮಧ್ಯಂತರ ಆದೇಶ ಎಲ್ಲರಿಗೂ ಅನ್ವಯಿಸಲಿದೆ ಎಂದು ಸ್ಪಷ್ಟಪಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಟ್ರಸ್ಟ್ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಸೋಮವಾರ ವಿಚಾರಣೆ ನಡೆಸಿತು. ರಾಜ್ಯ ಸರಕಾರದ ಪರ ಹಾಜರಾದ ಅಡ್ವೋಕೇಟ್​ ಜನರಲ್​ ಕೆ. ಶಶಿಕಿರಣ್ ಶೆಟ್ಟಿ ಅವರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರಲ್ಲದೆ, ಸರಕಾರದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿದಾರರಿಗೆ ಮಾತ್ರ ಸೀಮಿತವಾಗಿ ಅನ್ವಯಿಸಿ ಆದೇಶಿಸಬೇಕೆಂದು ಕೋರಿದರು. ಈ ಮನವಿಯನ್ನು ತಳ್ಳಿ ಹಾಕಿದ ನ್ಯಾಯಪೀಠ, ಸರಕಾರದ ಆದೇಶಕ್ಕೆ ತಡೆ ನೀಡಿ ಅಕ್ಟೋಬರ್ 28ರಂದು ಹೊರಡಿಸಲಾಗಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ನವೆಂಬರ್ 6ರಂದು ವಜಾಗೊಳಿಸಿದೆ. ಈ ಮೂಲಕ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಎತ್ತಿ ಹಿಡಿದಿದೆ. ಇದೀಗ, ಅಡ್ವೊಕೇಟ್ ಜನರಲ್ ಅವರು ಮಧ್ಯಂತರ ಆದೇಶವನ್ನು ಅರ್ಜಿದಾರರಿಗೆ ಮಾತ್ರ ಸೀಮಿತಗೊಳಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಸರಕಾರದ ಆದೇಶದಿಂದ ಭಾರತೀಯ ಸಂವಿಧಾನದ ಅಧ್ಯಾಯ III ರ ಉಲ್ಲಂಘನೆಯಾಗಿದೆ. ಅಂದರೆ ಪರಿಚ್ಛೇದ 19(1) (ಎ) ಮತ್ತು (ಬಿ) ಅಡಿಯಲ್ಲಿನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ, ಸರಕಾರ ಹೊರಡಿಸಿರುವ ಆದೇಶವನ್ನು ಅರ್ಜಿದಾರರಿಗೆ ಸೀಮಿತಗೊಳಿಸಿ, ಇತರರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅನುಮತಿಸಲಾಗದು ಎಂದು ಸ್ಪಷ್ಟಪಡಿಸಿತು. ಜತೆಗೆ, ಅರ್ಜಿಗೆ ಸಂಬಂಧಿಸಿದಂತೆ ಸರಕಾರ ಆಕ್ಷೇಪಣೆಗಳನ್ನು ಸಲ್ಲಿಸಿದಲ್ಲಿ, ವಿಚಾರಣೆ ನಡೆಸಿ ಇತ್ಯರ್ಥಪಡಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿತು. ಆಗ ಅಡ್ವೋಕೇಟ್​ ಜನರಲ್​ ಅವರು, ಆಕ್ಷೇಪಣೆ ಸಲ್ಲಿಸಲು 4 ವಾರ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ 4 ವಾರ ಕಾಲಾವಕಾಶ ನೀಡಿ, ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತಲ್ಲದೆ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ವಾರ್ತಾ ಭಾರತಿ 17 Nov 2025 10:39 pm

ಮತಪಟ್ಟಿಯನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಿದರೆ, ಒಂದೇ ವಾರದಲ್ಲಿ ಮತಗಳ್ಳತನ ಸಾಬೀತು ಪಡಿಸುತ್ತೇವೆ: ಚುನಾವಣಾ ಆಯೋಗಕ್ಕೆ ಕೇರಳ ಕಾಂಗ್ರೆಸ್ ಸವಾಲು

ತಿರುವನಂತಪುರಂ: ಇತ್ತೀಚೆಗೆ ಪ್ರಕಟಗೊಂಡ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ಆರೋಪಗಳು ಕೇಳಿ ಬಂದಿವೆ. ಇದರ ಬೆನ್ನಿಗೇ, “ಮತಪಟ್ಟಿಯನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಿದರೆ, ಒಂದೇ ವಾರದಲ್ಲಿ ನಾವು ಮತಗಳ್ಳತನವನ್ನು ಸಾಬೀತುಪಡಿಸುತ್ತೇವೆ. ನಿಮಗೆ ಈ ಸವಾಲು ಸ್ವೀಕರಿಸಲು ಸಾಧ್ಯವೆ?” ಎಂದು ಚುನಾವಣಾ ಆಯೋಗಕ್ಕೆ ಕೇರಳ ಕಾಂಗ್ರೆಸ್ ಸವಾಲು ಹಾಕಿದೆ. ಈ ಪೋಸ್ಟ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, “ಆತ್ಮೀಯರೇ, ನಿಮ್ಮ ಅಜ್ಞಾನವನ್ನು ಪ್ರದರ್ಶಿಸಬೇಡಿ. 2019ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಅಭ್ಯರ್ಥಿಗಳಿಗೆ ಮುದ್ರಿತ ಮತಪಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತದೆ. ಹೀಗಾಗಿ ನೀವು ಡಿಜಿಟಲ್ ಮತಪಟ್ಟಿಯನ್ನು ಹಕ್ಕಿನಂತೆ ಕೇಳಲು ಸಾಧ್ಯವಿಲ್ಲ. ಮತಪತ್ರಗಳಿಗೆ ಹೋಗಲು ಬಯಸುವ ನೀವು, ಡಿಜಿಟಲ್ ಮತಪಟ್ಟಿಯನ್ನು ಬಯಸುತ್ತಿರುವುದು ಸೋಜಿಗವಾಗಿದೆ” ಎಂದು ಪಲ್ಲವಿ ಸಿ.ಟಿ. ಎಂಬ ಬಳಕೆದಾರರೊಬ್ಬರು ಟೀಕಿಸಿದ್ದಾರೆ. “ತುಂಬಾ ವಿದ್ಯಾವಂತರ ರಾಜ್ಯ! ಮತಪಟ್ಟಿ ಈಗಾಗಲೇ ಲಭ್ಯವಿದೆ. ಅದನ್ನು ನಿಮ್ಮೊಂದಿಗೆ ಹಂಚಿಕೊಂಡೂ ಆಗಿದೆ. ನಿಮ್ಮ ಏಜೆಂಟ್ ಗಳು ಅದಕ್ಕೆ ಸಹಿಯನ್ನೂ ಮಾಡಿದ್ದಾರೆ. ಅಪಹಾಸ್ಯದ ಚಟುವಟಿಕೆಗಳನ್ನು ನಿಲ್ಲಿಸಿ, ಒಂದಿಷ್ಟು ಕೆಲಸ ಮಾಡಿ” ಎಂದು ಎಟರ್ನಲ್ ಆಪ್ಟಿಮಿಸ್ಟ್ ಎಂಬ ಮತ್ತೊಬ್ಬ ಬಳಕೆದಾರರು ಛೇಡಿಸಿದ್ದಾರೆ. “ಮತಪಟ್ಟಿಯನ್ನು ಡಿಜಟಲೀಕರಿಸಿ ಹಾಗೂ ಎಲ್ಲ ಏಕ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆಗೊಳಿಸಿ. ನಂತರದ್ದು ಇತಿಹಾಸವಾಗಲಿದೆ! ನಿಮಗೆ ಬೆನ್ನು ಮೂಳೆ ಇದ್ದರೆ ಇದನ್ನು ಮಾಡಿ ಜ್ಞಾನೇಶ್” ಎಂದು ವಿ.ಜೆ.ಪೌಲ್ ಎಂಬ ಮತ್ತೊಬ್ಬ ಬಳಕೆದಾರರು ಸವಾಲು ಹಾಕಿದ್ದಾರೆ. ಮೆಷಿನ್‌ ಗಳು ಓದಲು ಆಗುವಂತಹ ಮಾದರಿಯ ಮತಪಟ್ಟಿಗಳು ಸಾರ್ವಜನಿಕರಿಗೆ ಲಭ್ಯವಾಗುವ ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇಂತಹ ಮತಪಟ್ಟಿ ಬಿಡುಗಡೆಯಿಂದ ಮತದಾರರ ಖಾಸಗಿತನಕ್ಕೆ ತೀವ್ರ ಧಕ್ಕೆಯಾಗಲಿದೆ ಎಂದು ಈ ಹಿಂದಿನ ತೀರ್ಪನ್ನು ಉಲ್ಲೇಖಿಸಿ ನಿಯೋಜಿತ ಮುಖ್ಯಂ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ. ಜೋಯ್ ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಬಿಹಾರ ಮತಪಟ್ಟಿಗಳು ಚುನಾವಣಾ ಆಯೋಗದ ಅಂತರ್ಜಾಲ ತಾಣದಲ್ಲಿ ಪಿಡಿಎಫ್ ಮಾದರಿಯಲ್ಲಿ ಲಭ್ಯವಿದ್ದು, ಅದನ್ನು ಬಳಸಿಕೊಳ್ಳಿ ಹಾಗೂ ನಿಮಗೆ ಬೇಕಾದ ಮಾದರಿಯಲ್ಲಿ ಅದನ್ನು ಬಳಸಿಕೊಳ್ಳಿ ಎಂದು ರವಿಕುಮಾರ್ ಎಂಬ ನಾಲ್ಕನೆ ಬಳಕೆದಾರರು ಸಲಹೆ ನೀಡಿದ್ದಾರೆ.

ವಾರ್ತಾ ಭಾರತಿ 17 Nov 2025 10:39 pm

ಅಡಿಕೆ ಕುರಿತಂತೆ ಕ್ಯಾಂಪ್ಕೊ ಅಧ್ಯಕ್ಷರ ಹೇಳಿಕೆಗೆ ಯೆನೆಪೊಯ ವಿವಿ ಸ್ಪಷ್ಟನೆ

ಮಂಗಳೂರು: ಅಡಿಕೆ ಕುರಿತಂತೆ ಯೆನೆಪೊಯ ಡೀಮ್ಡ್ ವಿವಿಯ ಸಂಶೋಧನಾ ಕೇಂದ್ರದ ಒಬ್ಬ ಅಧ್ಯಾಪಕರನ್ನು ಉಲ್ಲೇಖಿಸಿ ಕ್ಯಾಂಪ್ಕೊ ಅಧ್ಯಕ್ಷರು ನೀಡಿರುವ ಹೇಳಿಕೆಗೆ ಯೆನೆಪೊಯ ಡೀಮ್ಡ್ ವಿವಿ ಸ್ಪಷ್ಟನೆ ನೀಡಿದೆ. ಅಡಿಕೆಯಲ್ಲಿ in vitro ಕ್ಯಾನ್ಸರ್ ವಿರೋಧಿ ಶಕ್ತಿಯ ಸಾಧ್ಯತೆಗಳ ಕುರಿತು ನಡೆಸಲಾಗುತ್ತಿರುವ ಅಧ್ಯಯನಕ್ಕೆ ಸಂಬಂಧಿಸಿದಂತೆ ಅಧ್ಯಾಪಕರನ್ನು ವಿಚಾರಣೆ ನಡೆಸಿದಾಗ ಕ್ಯಾಂಪ್ಕೊ ಅಧ್ಯಕ್ಷರೊಂದಿಗೆ ನಡೆದ ಅನೌಪಚಾರಿಕ ಮಾತುಕತೆಯಲ್ಲಿ ಈ ಪ್ರಾಥಮಿಕ ಅಧ್ಯಯನ ವರದಿಯನ್ನು ಹಂಚಿಕೊಂಡಿರುವುದಾಗಿ ತಿಳಿಸಿದ್ದಾರೆ. ಸಂಶೋಧನೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಅತೀ ಕಡಿಮೆ ಮಾದರಿಗಳ ಮೇಲೆ ನಡೆದಿರುವುದರಿಂದ ಅಡಿಕೆಗೆ ಕ್ಯಾನ್ಸರ್ ವಿರೋಧಿ ಗುಣಗಳಿವೆ ಎಂಬ ತೀರ್ಮಾನಕ್ಕೆ ಬರಲು ಇದು ಸಾಕ್ಷ್ಯಸಮ್ಮತವಾಗುವುದಿಲ್ಲ ಎಂಬುದು ತಿಳಿದುಬಂದಿದೆ. ಈ ವರದಿಯ ಆಧಾರದಲ್ಲಿ ಕ್ಯಾಂಪ್ಕೊ ಅಧ್ಯಕ್ಷರು ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಯೆನೆಪೊಯ ಡೀಮ್ಡ್ ವಿವಿ ಒಪ್ಪಿಗೆ ನೀಡಿಲ್ಲ. ಸಂಶೋಧನೆಗೆ ಬಳಸಿರುವ ಮಾದರಿ ಸಂಖ್ಯೆಯು ಅತಿ ಕಡಿಮೆಯದ್ದಾಗಿದೆ. ಹಾಗಾಗಿ ಆ ವರದಿಯ ಮೇಲೆ ಯಾವುದೇ ನಂಬಿಕೆ ಇಲ್ಲ. ಕ್ಯಾಂಪ್ಕೊ ಅಧ್ಯಕ್ಷರು ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡುವ ಮೊದಲು ನಮ್ಮ ಪೂರ್ವಾನುಮತಿ ಪಡೆದಿಲ್ಲ. ಕ್ಯಾಂಪ್ಕೋ ಅಧ್ಯಕ್ಷರ ಹೇಳಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಯೆನೆಪೊಯ ಡೀಮ್ಡ್ ವಿವಿ ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದೆ.

ವಾರ್ತಾ ಭಾರತಿ 17 Nov 2025 10:25 pm

ಅಮೆರಿಕನ್ನರು ದೈಹಿಕ ಸವಾಲಿನ ಕೆಲಸ ಮಾಡಲು ಸಾಧ್ಯವಿಲ್ಲ: ಎಲಾನ್ ಮಸ್ಕ್

ವಾಷಿಂಗ್ಟನ್, ನ.17: ಅಮೆರಿಕಾದಲ್ಲಿ ದೈಹಿಕ ಶ್ರಮವನ್ನು ಬೇಡುವ ಕೆಲಸವನ್ನು ನಿರ್ವಹಿಸುವ ಸಾಮರ್ಥ್ಯವಿರುವ ವ್ಯಕ್ತಿಗಳ ಗಮನಾರ್ಹ ಕೊರತೆಯಿದೆ ಎಂದು ಹೇಳಿರುವ ಎಲಾನ್ ಮಸ್ಕ್ , ಎಚ್-1ಬಿ ವೀಸಾದ ಕುರಿತ ಚರ್ಚೆ ನಡೆಯುತ್ತಿರುವ ನಡುವೆಯೇ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅಮೆರಿಕನ್ನರು ಸಾಮಾನ್ಯವಾಗಿ ಇಂತಹ ಕೆಲಸಗಳಿಗೆ ತರಬೇತಿ ಪಡೆಯಲು ಬಯಸುವುದಿಲ್ಲ ಎಂದು ಮಸ್ಕ್ ಸಾಮಾಜಿಕ ಮಾಧ್ಯಮ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೋರ್ಡ್ ಕಂಪನಿಯು 5000 ಮೆಕ್ಯಾನಿಕಲ್ ಹುದ್ದೆಗೆ ಭರ್ತಿ ಮಾಡಿಕೊಳ್ಳಲು ಕಷ್ಟಪಡುತ್ತಿದೆ ಎಂದು ಫೋರ್ಡ್ ಸಿಇಒ ಜಿಮ್ ಫಾರ್ಲೆ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ವಾರ್ತಾ ಭಾರತಿ 17 Nov 2025 10:22 pm

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪಾರ್ವತಿ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದ್ದು, ಅವರ ಸ್ಥಿತಿ ಮೇಲ್ವಿಚಾರಣೆಯಲ್ಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 17 Nov 2025 10:16 pm

ನ.23: 23 ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ: ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನ.23ರ ರವಿವಾರ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್ ಆ್ಯಂಡ್ ಟ್ರೈನಿಂಗ್ ರಿಸರ್ಚ್ ಸೆಂಟರ್ ಸಭಾಂಗಣದಲ್ಲಿ ಸಂಜೆ 4:30ಕ್ಕೆ ನಡೆಯಲಿದೆ ಎಂದು ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದು, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ.ಜಿ.ಶಂಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಎಂ.ರಾಘವೇಂದ್ರ ಭಟ್ ಶುಭಾಶಂಸನೆ ಮಾಡಲಿದ್ದಾರೆ. ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಯಕ್ಷ ವಿದ್ಯಾಪೋಷಕ್‌ನ 62 ಮಂದಿ ವಿದ್ಯಾರ್ಥಿಗಳಿಗೆ 7,11,500ರೂ. ಸಹಾಯಧನವನ್ನು ವಿತರಿಸಲಿದ್ದಾರೆ ಎಂದವರು ಹೇಳಿದರು. ಈ ಬಾರಿ ಯಕ್ಷಗಾನದ 23 ಮಂದಿ ಹಿರಿಯ ಕಲಾವಿದರಿಗೆ ಯಕ್ಷಗಾನ ಕಲಾರಂಗದ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ಪ್ರಶಸ್ತಿಯೊಂದಿಗೆ ತಲಾ 20,000 ರೂ. ನಗದು ನೀಡಲಾಗುತ್ತದೆ. ಸಂಸ್ಥೆಯೊಂದಿಗೆ ಶ್ರೀವಿಶ್ವೇಶತೀರ್ಥ ಪ್ರಶಸ್ತಿಯೊಂದಿಗೆ ನೀಡುವ 1,00,000ರೂ. ನಗದನ್ನು ಈ ಬಾರಿ ಬೆಂಗಳೂರಿನ ಯಕ್ಷಕಲಾ ಅಕಾಡೆಮಿ ಸಂಸ್ಥೆಗೆ ನೀಡಿ ಗೌರವಿಸಲಾಗುವುದು. ಅದೇ ರೀತಿ ಯಕ್ಷಚೇತನ ಪ್ರಶಸ್ತಿಯನ್ನು ಸಂಸ್ಥೆಯ ಕಾರ್ಯದರ್ಶಿ ಮುರಲಿ ಕಡೆಕಾರ್ ಇವರಿಗೆ ಪ್ರದಾನ ಮಾಡಲಾಗುವುದು ಎಂದು ಎಂ.ಗಂಗಾಧರ ರಾವ್ ತಿಳಿಸಿದರು. ಸಮಾರಂಭಕ್ಕೆ ಅಪರಾಹ್ನ 1:30ರಿಂದ 4:30ರವರೆಗೆ ಬಡಗುತಿಟ್ಟಿನ ಕಲಾವಿದರಿಂದ ‘ತಾಮ್ರಧ್ವಜ ಕಾಳಗ’ ಯಕ್ಷಗಾನ ಪ್ರಸ್ತುತಗೊಳ್ಳಲಿದೆ ಎಂದೂ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಮುರಲಿ ಕಡೆಕಾರ್, ಉಪಾಧ್ಯಕ್ಷ ರಾದ ಎಸ್.ವಿ.ಭಟ್, ವಿ.ಜಿ.ಶೆಟ್ಟಿ, ಕೋಶಾಧಿಕಾರಿ ಪ್ರೊ.ಕೆ.ಸದಾಶಿವ ರಾವ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದರು. 2025ನೇ ಸಾಲಿನ ಯಕ್ಷಗಾನ ಕಲಾರಂಗ ಪ್ರಶಸ್ತಿ ವಿಜೇತರು ಡಾ.ಬಿ.ಬಿ.ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ-ಸುಬ್ರಹ್ಮಣ್ಯ ಚಿಟ್ಟಾಣಿ, ಪ್ರೊ.ಬಿ.ವಿ. ಆಚಾರ್ಯ ಪ್ರಶಸ್ತಿ-ಕಕ್ಕುಂಜೆ ಗೋಪಾಲ ಬಳೆಗಾರ, ನಿಟ್ಟೂರು ಸುಂದರ ಶೆಟ್ಟಿ, ಮಹೇಶ್ ಡಿ.ಶೆಟ್ಟಿ ಪ್ರಶಸ್ತಿ-ಕೊಡೇರಿ ಕೃಷ್ಣ, ಬಿ.ಜಗಜ್ಜೀವನದಾಸ ಶೆಟ್ಟಿ ಪ್ರಶಸ್ತಿ- ಕಲ್ಲಗುಡ್ಡೆ ಲಕ್ಷ್ಮಣ ಪೂಜಾರಿ, ಕೆ.ವಿಶ್ವಜ್ಞ ಶೆಟ್ಟಿ ಪ್ರಶಸ್ತಿ- ರಾದಾಕೃಷ್ಣ ಭಟ್ ಸೂರನಕೇರಿ. ಕುತ್ಪಾಡಿ ಆನಂದ ಗಾಣಿಗ ಪ್ರಶಸ್ತಿ- ಸುರೇಶ ಉಪ್ಪೂರ, ಭಾಗವತ ನಾರ್ಣಪ್ಪ ಉಪ್ಪೂರ ಪ್ರಶಸ್ತಿ- ಕೃಷ್ಣಯ್ಯ ಬಿ.ಆಚಾರ್ ಬಿದ್ಕಲ್‌ಕಟ್ಟೆ, ಮಾರ್ವಿ ರಾಮಕೃಷ್ಣ ಹೆಬ್ಬಾರ, ಮಾರ್ವಿ ವಾದಿರಾಜ ಹೆಬ್ಬಾರ ಪ್ರಶಸ್ತಿ- ಮನೋಹರ ರಾವ್ ಕೆ.ಜಿ. ಸೀತೂರು, ಶಿರಿಯಾರ ಮಂಜು ನಾಯ್ಕ ಪ್ರಶಸ್ತಿ- ಪ್ರಭಾಕರ ಶೆಟ್ಟಿ ಮಡಾಮಕ್ಕಿ, ಕೋಟ ವೈಕುಂಠ ಪ್ರಶಸ್ತಿ- ವಿಷ್ಣು ಮಂಜಪ್ಪ ಆಚಾರಿ ಬಳಕೂರು. ಪಡಾರು ನರಸಿಂಹ ಶಾಸ್ತ್ರ ಪ್ರಶಸ್ತಿ- ಲಕ್ಷ್ಮೀನಾರಾಯಣ ಸಂಪ, ಕಡಿಯಾಳಿ ಸುಬ್ರಾಯ ಉಪಾಧ್ಯ ಪ್ರಶಸ್ತಿ- ಸಂಜೀವ ಶೆಟ್ಟಿ ಆಜ್ರಿಹರ, ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ- ಸುಣ್ಣಂಬಳ ವಿಶ್ವೇಶ್ವರ ಭಟ್, ಐರೋಡಿ ರಾಮ ಗಾಣಿಗ ಪ್ರಶಸ್ತಿ-ಸುರೇಶ್ ರಾವ್ ಬಾರ್ಕೂರು, ಮಾನ್ಯ ತಿಮ್ಮಯ್ಯ ಪ್ರಶಸ್ತಿ- ಅಪ್ಪಯ್ಯ ಮಣಿಯಾಣಿ. ಎಚ್.ಪರಮೇಶ್ವರ ಐತಾಳ್ ಪ್ರಶಸ್ತಿ- ಕೃಷ್ಣಮೂರ್ತಿ ಉರಾಳ, ಕಡಂದೇಲು ಪುರುಷೋತ್ತಮ ಭಟ್ ಪ್ರಶಸ್ತಿ- ರಾಮ ಕೇಶವ ಗೌಡ ಗುಣವಂತೆ, ಕಡತೋಕಾ ಕೃಷ್ಣ ಭಾಗವತ ಪ್ರಶಸ್ತಿ- ಕಡಬ ರಾಮಚಂದ್ರ ರೈ, ಬಿ.ಪಿ.ಕರ್ಕೇರಾ ಪ್ರಶಸ್ತಿ- ಉಮೇಶ ಮೊಲಿ ಮೂರುಕಾವೇರಿ, ಕೆ.ಮನೋಹರ ಪ್ರಶಸ್ತಿ- ಶಿವಣ್ಣ ಶೆಟ್ಟಿ ಸರಪಾಡಿ, ಆರ್.ಕೆ.ರಮೇಶ ರಾವ್ ಪ್ರಶಸ್ತಿ- ಮೋಹನ ನಾಯ್ಕ್ ಕೂಜಳ್ಳಿ. ಕೋಳ್ಯೂರುರಾಮಚಂದ್ರ ರಾವ್ ಗೌರವಾರ್ಥ ಪ್ರಶಸ್ತಿ- ಬಲಿಪ ವಿಶ್ವೇಶ್ವರ ಭಟ್, ಪ್ರಭಾವತಿ ವಿ.ಶೆಣೈ, ಯು.ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ- ಮಹಾಬಲ ಭಟ್, ಭಾಗಮಂಡಲ. ಶ್ರೀವಿಶ್ವೇಶತೀರ್ಥ ಪ್ರಶಸ್ತಿ- ಬೆಂಗಳೂರಿನ ಯಕ್ಷಕಲಾ ಅಕಾಡೆಮಿ, ಯಕ್ಷ ಚೇತನ ಪ್ರಶಸ್ತಿ- ಮುರಲಿ ಕಡೆಕಾರ್.

ವಾರ್ತಾ ಭಾರತಿ 17 Nov 2025 10:13 pm

ಭಾರೀ ಮಳೆಗೆ ಬೆಳೆ ಹಾನಿ; 2136 ಕೋಟಿ ರೂ.ಗಳ ಪರಿಹಾರಕ್ಕೆ ಮೋದಿ ಭೇಟಿಯಾದ ಸಿದ್ದರಾಮಯ್ಯ!

ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ವರ್ಷ

ಒನ್ ಇ೦ಡಿಯ 17 Nov 2025 10:04 pm

Bengaluru | ಅಪ್ಪನ ಮೇಲಿನ ಹಲ್ಲೆಗೆ ಪ್ರತೀಕಾರ : ವ್ಯಕ್ತಿಯ ಹತ್ಯೆ

ಬೆಂಗಳೂರು : ತನ್ನ ತಂದೆಯ ಮೇಲೆ ಹಲ್ಲೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಮಗನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಇಲ್ಲಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಹಲ್ಲೆಗೊಳಗಾಗಿದ್ದ ನಾರಾಯಣಸ್ವಾಮಿ(55) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಆರೋಪಿ ಅಜಯ್ ಎಂಬಾತನನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ನವೆಂಬರ್ 11ರಂದು ಅಜಯ್ ತಂದೆ ಮುನಿವೆಂಕಟಪ್ಪ ಮತ್ತು ನಾರಾಯಣಸ್ವಾಮಿ ಇಬ್ಬರೂ ಕುಡಿದ ಅಮಲಿನಲ್ಲಿ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ ನಾರಾಯಣಸ್ವಾಮಿ ತನ್ನ ತಂದೆ ಮೇಲೆ ಹಲ್ಲೆ ಮಾಡಿದ್ದನ್ನು ಕಂಡ ಅಜಯ್ ಆಕ್ರೋಶಗೊಂಡಿದ್ದ. ಅದರ ಪ್ರತೀಕಾರವಾಗಿ ನಾರಾಯಣಸ್ವಾಮಿಗೆ ತೀವ್ರವಾಗಿ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಅವರು ನ.16ರಂದು ಮೃತಪಟ್ಟಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿರುವುದಾಗಿ ತಿಳಿದುಬಂದಿದೆ.

ವಾರ್ತಾ ಭಾರತಿ 17 Nov 2025 9:59 pm

ಶಾಸಕರ ಅನರ್ಹತೆ ಪ್ರಕರಣ | ತೆಲಂಗಾಣ ಸ್ಪೀಕರ್‌ ಗೆ ನ್ಯಾಯಾಂಗ ನಿಂದನೆ ನೋಟಿಸ್

ಹೊಸದಿಲ್ಲಿ, ನ. 17: ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರಗೊಂಡ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯ 10 ಶಾಸಕರ ಅನರ್ಹತೆಗೆ ಸಂಬಂಧಿಸಿ ನೀಡಿದ ನಿರ್ದೇಶನವನ್ನು ಅನುಸರಿಸದೇ ಇರುವುದಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತೆಲಂಗಾಣ ಸ್ಪೀಕರ್‌ ಗೆ ನ್ಯಾಯಾಂಗ ನಿಂದನೆ ನೋಟಿಸು ಜಾರಿ ಮಾಡಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯ 10 ಶಾಸಕರ ಅನರ್ಹತೆಯನ್ನು ಮೂರು ತಿಂಗಳ ಒಳಗೆ ನಿರ್ಧರಿಸುವಂತೆ ವಿಧಾನ ಸಭಾ ಸ್ಪೀಕರ್‌ ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್‌ ನ ಪೀಠ ಜುಲೈ 31ರಂದು ನಿರ್ದೇಶಿಸಿತ್ತು. ತನ್ನ ಹಿಂದಿನ ನಿರ್ದೇಶನಗಳನ್ನು ಅನುಸರಿಸದೇ ಇರುವುದು ‘‘ಅತ್ಯಂತ ಗಂಭೀರ ರೀತಿಯ ನ್ಯಾಯಾಂಗ ನಿಂದನೆ’’ ಎಂದು ಸಿಜೆಐ ನೇತೃತ್ವದ ಪೀಠ ಹೇಳಿತು. ಅನಂತರ ಅದು ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳಿಗೆ ಸಂಬಂಧಿಸಿ ಸ್ಪೀಕರ್ ಹಾಗೂ ಇತರರಿಗೆ ನೋಟಿಸು ಜಾರಿ ಮಾಡಿತು. ಆದರೆ, ಪೀಠ ಮುಂದಿನ ಆದೇಶದ ವರೆಗೆ ತನ್ನ ಮುಂದೆ ಖುದ್ದು ಹಾಜಾರಾಗುವುದರಿಂದ ತೆಲಂಗಾಣ ಸ್ಪೀಕರ್ ಹಾಗೂ ಇತರರಿಗೆ ವಿನಾಯತಿ ನೀಡಿತು. ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಇನ್ನೂ 8 ವಾರಗಳು ಕಾಲಾವಕಾಶ ಕೋರಿ ಸ್ಪೀಕರ್ ಅವರ ಕಚೇರಿಯ ಪರವಾಗಿ ಸಲ್ಲಿಸಿದ ಪ್ರತ್ಯೇಕ ಅರ್ಜಿಯ ಕುರಿತಂತೆ ಕೂಡ ಪೀಠ ನೋಟಿಸು ಜಾರಿ ಮಾಡಿತು.

ವಾರ್ತಾ ಭಾರತಿ 17 Nov 2025 9:59 pm

ಕಲಬುರಗಿ | ಜಿಲ್ಲಾಧಿಕಾರಿಗಳಿಂದ ಮಾಡಬೂಳ ಪ್ರಾಣಿ ಸಂಗ್ರಹಾಲಯದ ಕಾಮಗಾರಿ ವೀಕ್ಷಣೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಸೋಮವಾರ ಕಾಳಗಿ ತಾಲೂಕಿನ ಮಾಡಬೂಳನಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಾಣದ‌ ಹಂತದಲ್ಲಿರುವ ಮಾಡಬೂಳ ಪ್ರಾಣಿ‌ ಸಂಗ್ರಹಾಲಯದ ಕಾಮಗಾರಿ ಪರಿಶೀಲಿಸಿದರು. ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ ಅವರೊಂದಿಗೆ ಕಾಮಗಾರಿ ಸ್ಥಳ ಪರಿಶೀಲಿಸಿದ ಅವರು, ನಿಗದಿತ ಸಿವಿಲ್ ಕಾಮಗಾರಿ ಕೆಲಸಗಳನ್ನು ಕಾಲಮಿತಿಯಲ್ಲಿಯೇ ಪೂರ್ಣಗೊಳಿಸಬೇಕು. ಪ್ರಾಣಿ, ಪಕ್ಷಿಗಳಿಗೆ ಪೂರಕವಾದ ವಾತಾವರಣ ಇಲ್ಲಿ ಸೃಷ್ಠಿಸಬೇಕು ಎಂದು ಅರಣ್ಯ ಅಧಿಕಾರಿಗಳಿಗೆ‌ ಸೂಚಿಸಿದರು. ಇದಕ್ಕೂ ಮುನ್ನ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ನಬಾರ್ಡ್ ಅನುದಾನದಿಂದ ನಿರ್ಮಿಸಲಾಗಿರುವ ಆಗ್ರೋ ಪ್ರೊಸೆಸಿಂಗ್ ಕೇಂದ್ರವನ್ನು ವೀಕ್ಷಿಸಿದರು. ಸ್ಥಳದಲ್ಲಿದ್ದ ರೈತರೊಂದಿಗೆ ಸಂವಾದ ನಡೆಸಿ ಎಫ್.ಪಿ.ಓ ಸದ್ಬಳಕೆ ಮಾಡಿಕೊಳ್ಳುವಂತೆ ರೈತರಿಗೆ ತಿಳಿ ಹೇಳಿದರು. ನಂತರ ಸರ್ಕಾರಿ ಪ್ರೌಢ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ನೀಡಲಾಗುತ್ತಿರುವ ರುಚಿ-ಶುಚಿಯಾದ ಊಟ, ವಸತಿ ಕುರಿತು ಮಕ್ಕಳಿಂದ ಮಾಹಿತಿ ಪಡೆದರು. ಕೋಡ್ಲಿ ನಾಡ ಕಚೇರಿಗೂ ಭೇಟಿ ನೀಡಿದ ಡಿ.ಸಿ. ಅವರು, ಕಾಲಮಿತಿಯಲ್ಲಿಯೇ ಅರ್ಜಿ ವಿಲೇವಾರಿ ಮಾಡಬೇಕೆಂದು ಎ.ಜೆ.ಎಸ್.ಕೆ ಸಿಬ್ಬಂದಿಗಳಿಗೆ ಸೂಚಿಸಿದರು. ಇದಲ್ಲದೆ‌ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳೊಂದಿಗೆ ಚರ್ಚಿಸಿ ಅಲ್ಲಿ ನೀಡಲಾಗುತ್ತಿರುವ ಔಷದೋಪಚಾರದ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾಳಗಿ ತಹಶೀಲ್ದಾರ್‌ ಕಚೇರಿಯ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯ ವೀಕ್ಷಿಸಿದರು. ಈ ವೇಳೆ ಕಾಳಗಿ ಗ್ರೇಡ್-1 ತಹಶೀಲ್ದಾರ್‌ ಪೃಥ್ವಿರಾಜ ಪಾಟೀಲ್‌, ತಾಲೂಕು ಪಂಚಾಯತ್ ಇ.ಓ ಬಸಲಿಂಗಪ್ಪ‌ ಡಿಗ್ಗಿ, ನಬಾರ್ಡ್ ಅಧಿಕಾರಿ ಲೋಹಿತ್ ಸೇರಿದಂತೆ ಇತರೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.    

ವಾರ್ತಾ ಭಾರತಿ 17 Nov 2025 9:54 pm

ಪ್ರಧಾನಿ ಮೋದಿ ಅವರ ಉಡುಪಿ ಭೇಟಿ ಇನ್ನೂ ದೃಢಪಟ್ಟಿಲ್ಲ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ: ಇದೇ ನ.28ರಂದು ಉಡುಪಿಗೆ ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿ ಇನ್ನೂ ದೃಢಪಟ್ಟಿಲ್ಲ. ಜಿಲ್ಲಾಡಳಿತಕ್ಕೆ ಇನ್ನೂ ಅವರು ಬರುವ ಬಗ್ಗೆ ಸ್ಪಷ್ಟ ಮಾಹಿತಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಕರಾವಳಿ ಅಭಿವೃದ್ಧಿ ಮಂಡಳಿಯಿಂದ ಜಿ.ಪಂ. ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ಸರಕಾರ ಕೇಳಿದ ವರದಿಯನ್ನು ಜಿಲ್ಲಾಡಳಿತದಿಂದ ಕಳುಹಿಸಲಾಗಿದೆ. ಇದಕ್ಕೆ ಈವರೆಗೆ ಯಾವುದೇ ದೃಢೀಕರಣ ಬಂದಿಲ್ಲ ಎಂದು ಸ್ವರೂಪ ಟಿ.ಕೆ. ತಿಳಿಸಿದರು.

ವಾರ್ತಾ ಭಾರತಿ 17 Nov 2025 9:53 pm

ಕೆಂಪುಕೋಟೆ ಬಳಿ ಸ್ಫೋಟಕ್ಕೆ ಒಂದು ವಾರ: ಮೃತರ ಸಂಖ್ಯೆ 15ಕ್ಕೇರಿಕೆ

ಗ್ರಾಹಕರಿಗಾಗಿ ಕಾದಿರುವ ಚಾಂದಿನಿ ಚೌಕ್ ಮಾರುಕಟ್ಟೆ

ವಾರ್ತಾ ಭಾರತಿ 17 Nov 2025 9:52 pm

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಅನಾರೋಗ್ಯ; ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಿಂದ ಮರಳಿದ ಕೂಡಲೇ ಸಿಎಂ ಆಸ್ಪತ್ರೆಗೆ ತೆರಳಿ ಪತ್ನಿಯ ಆರೋಗ್ಯ ವಿಚಾರಿಸಲಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯುನಲ್ಲಿ ನಿಗಾವಹಿಸಲಾಗಿದೆ.

ವಿಜಯ ಕರ್ನಾಟಕ 17 Nov 2025 9:47 pm

ನ.18ರಂದು ಹಿದಾಯ ಫೌಂಡೇಶನ್ ಮಹಿಳಾ ಘಟಕದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಮಂಗಳೂರು: ಹಿದಾಯ ಫೌಂಡೇಶನ್ ಮಂಗಳೂರು ಇದರ ಮಹಿಳಾ ಘಟಕದ ವತಿಯಿಂದ ಯೆನೆಪೊಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಸಹಯೋಗದಲ್ಲಿ ನ.18ರಂದು ಅತ್ತಾವರ ಆ್ಯಪಲ್ ಮಾರ್ಟ್ ಮುಂಭಾಗದಲ್ಲಿರುವ ಎಪಿಸೆಂಟ್‌ನಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30 ರತನಕ ಮಹಿಳೆಯರಿಗೆ ಉಚಿತ ವೈದ್ಯಕೀಯ ತಪಾಸಣಾ ಶಬಿರ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷೆ ಜಮೀಲಾ ಖಾದರ್ ವಹಿಸಲಿದ್ದಾರೆ. ಶಿರಿನ್ ಬಾವ ಉದ್ಘಾಟಿಸಲಿದ್ದಾರೆ. ಯೆನೆಪೊಯ ವಿವಿಯ ಡೈರೆಕ್ಟರ್ ಡಾ.ಅಶ್ವಿನಿ ಎಸ್. ಶೆಟ್ಟಿ ಭಾಗವಹಿಸಲಿದ್ದಾರೆ. ಡಾ. ಆಯೆಷಾ ಸಫೂರ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಸಲಿದ್ದಾರೆ. ಈ ಶಿಬಿರದಲ್ಲಿ ಮೆಮೊಗ್ರಫಿ ಪರೀಕ್ಷೆ, ಕಣ್ಣಿನ ಪರೀಕ್ಷೆ, ಬಿಪಿ, ಶುಗರ್ ಪರೀಕ್ಷೆ ನಡೆಯಲಿದೆ. ಶಿಬಿರವನ್ನು ಮಹಿಳೆಯರಿಗಾಗಿ ಮಾತ್ರ ಏರ್ಪಡಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 17 Nov 2025 9:45 pm

ಮಹಾರಾಷ್ಟ್ರ: ಪಾಲ್ಘರ್ ನಲ್ಲಿ ಇಬ್ಬರು ಸಾಧುಗಳು ಸೇರಿ ಮೂವರ ಹತ್ಯೆ ಪ್ರಕರಣ | ಆರೋಪಿ ಕಾಶಿನಾಥ್ ಚೌಧರಿಯ ಬಿಜೆಪಿ ಸೇರ್ಪಡೆಗೆ ತಡೆ

ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ರಾಜ್ಯ ಘಟಕದಿಂದ ತುರ್ತು ಕ್ರಮ

ವಾರ್ತಾ ಭಾರತಿ 17 Nov 2025 9:40 pm

ಮಾಧ್ಯಮಗಳು ಜನರ ವಿಶ್ವಾಸಗಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು : ಸ್ಪೀಕರ್ ಯು.ಟಿ.ಖಾದರ್

ʼರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ಸಂವಾದ ಕಾರ್ಯಕ್ರಮ

ವಾರ್ತಾ ಭಾರತಿ 17 Nov 2025 9:38 pm

ಭಾರತೀಯರಿಗೆ ವೀಸಾ-ಮುಕ್ತ ಪ್ರವೇಶ ಕೊನೆಗೊಳಿಸಿದ ಇರಾನ್

ಟೆಹ್ರಾನ್, ನ.17: ಸಾಮಾನ್ಯ ಪಾಸ್‍ಪೋರ್ಟ್ ಹೊಂದಿರುವ ಭಾರತೀಯ ಪ್ರಜೆಗಳಿಗೆ ತನ್ನ ಏಕಮುಖ ವೀಸಾ ವಿನಾಯಿತಿಯನ್ನು ಅಮಾನುತುಗೊಳಿಸುವುದಾಗಿ ಇರಾನ್ ಘೋಷಿಸಿದೆ. ನವೆಂಬರ್ 22ರಿಂದ, ಭಾರತೀಯ ಪ್ರಯಾಣಿಕರು ವೀಸಾ ಇಲ್ಲದೆ ದೇಶವನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಮತ್ತು ಪ್ರಯಾಣ ಹಾಗೂ ಪ್ರವೇಶ ಎರಡಕ್ಕೂ ಮುಂಚಿತವಾಗಿ ವೀಸಾ ಪಡೆಯಬೇಕಿದೆ. ಈ ಹಿಂದಿನ ನೀತಿಯು ಕೆಲವು ನಿರ್ದಿಷ್ಟ ಪರಿಸ್ಥಿತಿಗಳಲ್ಲಿ ವೀಸಾ ಇಲ್ಲದೆಯೇ ಇರಾನ್ ಅನ್ನು ಪ್ರವೇಶಿಸಲು ಭಾರತದ ಪ್ರವಾಸಿಗರಿಗೆ ಅವಕಾಶ ನೀಡಿತ್ತು. ಇದು ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಏಶ್ಯಾದ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಬಲಪಡಿಸುವ ಇರಾನಿನ ವ್ಯಾಪಕ ಪ್ರಯತ್ನದ ಭಾಗವಾಗಿತ್ತು. ಇದೀಗ ಸಾಮಾನ್ಯ ಪಾಸ್‍ಪೋರ್ಟ್ ಹೊಂದಿರುವ ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಪ್ರಯಾಣಿಸುವ ಮೊದಲು ವೀಸಾವನ್ನು ಪಡೆಯುವುದು ಅಗತ್ಯವಾಗಿದೆ.

ವಾರ್ತಾ ಭಾರತಿ 17 Nov 2025 9:36 pm

ಮಂಗಳೂರು| ವಕೀಲರಿಗೆ ನಿಂದನೆ ಆರೋಪ: ಇನ್‌ಸ್ಪೆಕ್ಟರ್ ವಿರುದ್ಧ ದೂರು

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆಗೆ ತೆರಳಿದ ತನ್ನನ್ನು ಇನ್‌ಸ್ಪೆಕ್ಟರ್ ನಿಂದಿಸಿದ್ದಾರೆ ಎಂದು ವಕೀಲ ನಿತಿನ್ ಕುತ್ತಾರ್ ಅಖಿಲ ಭಾರತ ವಕೀಲರ ಒಕ್ಕೂಟದ ನಿಯೋಗದ ಸಮ್ಮುಖ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನ.15ರಂದು ಕೌಟುಂಬಿಕ ವಿಚಾರವಾಗಿ ಕಕ್ಷಿದಾರರ ಪರವಾಗಿ ಠಾಣೆಗೆ ತೆರಳಿದಾಗ ಇನ್‌ಸ್ಪೆಕ್ಟರ್ ಬಾಲಕೃಷ್ಣ ಕಕ್ಷಿದಾರರೊಂದಿಗೆ ಅನುಚಿತವಾಗಿ ವರ್ತಿಸಿ ಅವರ ಬಳಿ ಇರುವ ಮಗುವಿನ ಚಿನ್ನ ಈಗಲೇ ಠಾಣೆಗೆ ತಂದುಕೊಡಬೇಕು.ಇಲ್ಲದಿದ್ದಲ್ಲಿ ಪ್ರಕರಣ ದಾಖಲಿಸಿ, ಜೈಲಿಗೆ ಹಾಕುತ್ತೇನೆ ಎಂದಿದ್ದಾರೆ. ಅಲ್ಲದೆ ತನ್ನನ್ನು ಏಕವಚನದಲ್ಲಿ ನಿಂದಿಸಿ ನಿನ್ನ ಹೋರಾಟ ಹೊರಗೆ ಇರಲಿ, ಒದ್ದು ಬಿಡುತ್ತೇನೆ ಎಂದು ಬೆದರಿಸಿದ್ದಾರೆ. ತಾನು ಪೊಲೀಸ್ ಕಮಿಷನರ್‌ಗೆ ದೂರು ನೀಡುತ್ತೇನೆ ಎಂದಾಗಲೂ ಮತ್ತೆ ಅದೇ ರೀತಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಮಿಷನರ್‌ಗೆ ದೂರು ಸಲ್ಲಿಸಿದ ನಿಯೋಗದಲ್ಲಿ ಹಿರಿಯ ವಕೀಲ ರಾಮಚಂದ್ರ ಬಬ್ಬುಕಟ್ಟೆ, ಸದಸ್ಯರಾದ ಸುನಂದಾ ಕೊಂಚಾಡಿ, ಮನೋಜ್ ವಾಮಂಜೂರು, ಚರಣ್ ಶೆಟ್ಟಿ, ಹಸೈನಾರ್ ಗುರುಪುರ ಹಾಜರಿದ್ದರು.

ವಾರ್ತಾ ಭಾರತಿ 17 Nov 2025 9:35 pm

ಕಲಬುರಗಿ | ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯಿಂದ ದಿಟ್ಟ ಹೆಜ್ಜೆ : ಬಸವರಾಜ್ ಶೆಟ್ಟಿ

ಕಲಬುರಗಿ: ಪ್ರಸಕ್ತ ವರ್ಷದ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಕೈಗೊಂಡಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಆ ದಿಟ್ಟ ಹೆಜ್ಜೆಗಳನ್ನು ಅನುಪಾಲನೆ ಮಾಡುವ ಅಗತ್ಯವಿದೆ ಎಂದು ಕಲಬುರಗಿ ಡಯಟ್ ಉಪನಿರ್ದೇಶಕರಾದ ಬಸವರಾಜ್ ಶೆಟ್ಟಿ ಹೇಳಿದರು. ಅವರು ಶನಿವಾರ ಶಹಾಬಾದ್‌ ನಗರದ ಸೇಂಟ್ ಥಾಮಸ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಆಯೋಜಿಲಾದ ವಿಷಯವಾರು ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ವರ್ಷ ಫಲಿತಾಂಶದಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ಅಲ್ಲದೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಬೇಕು. ಸಿ ಹಾಗೂ ಎನ್‍ಸಿ ವಿದ್ಯಾರ್ಥಿಗಳಿಗೆ 40 ಅಂಕಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗಿದ್ದು, ಅದನ್ನು ನಿಮ್ಮ ನಿಮ್ಮ ಶಾಲೆಯಲ್ಲಿ ಅನುಷ್ಠಾನಗೊಳಿಸಿದರೆ ಫಲಿತಾಂಶ ಬರಲು ಸಾಧ್ಯ ಎಂದು ಹೇಳಿದರು. ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಎಲ್ಲಾ ಶಿಕ್ಷಕರು ಫಲಿತಾಂಶ ಸುಧಾರಣೆಗಾಗಿ ಅನೇಕ ಅಂಶಗಳನ್ನು ಅನುಪಾಲನೆ ಮಾಡುತ್ತ ಬಂದಿದ್ದೀರಿ. ಸದ್ಯ ಸಿ ಹಾಗೂ ಎನ್‍ಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ ನಿಮ್ಮ ಶಾಲೆಯ ಫಲಿತಾಂಶ ನೂರಕ್ಕೆ ನೂರು ಬರಲಿದೆ. ಈ ಕಾರ್ಯಾಗಾರದಲ್ಲಿ ಎಲ್ಲಾ ವಿಷಯಗಳ ಬಗ್ಗೆ ನೀಲಿ ನಕ್ಷೆ, ಪ್ರಶ್ನೆಪತ್ರಿಕೆಗಳ ವಿನ್ಯಾಸ, ಸಂಭವನೀಯ ಪ್ರಶ್ನೆಗಳ ಬಗ್ಗೆ ತಿಳಿ ಹೇಳಲಾಗುವುದು. ಇದನ್ನು ಮನಗಂಡು ಶಾಲೆಯಲ್ಲಿ ಅನುಷ್ಠಾನ ಮಾಡತಕ್ಕದ್ದು. ಕಳೆದ ಬಾರಿ ಶೇ.40 ಫಲಿತಾಂಶ ಬಂದಿದ್ದು, ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ತರುವ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕಲಬುರಗಿ ಡಯಟ್‍ನ ಉಪನ್ಯಾಸಕರಾದ ಡಾ.ಲಿಂಗರಾಜ ಮೂಲಿಮನಿ, ಪ್ರಕಾಶ ನಾಯ್ಕೋಡಿ, ಸುಮಂಗಲಾ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ವೇದಿಕೆಯ ಮೇಲಿದ್ದರು. ಆರು ವಿಷಯಗಳ ತಾಲೂಕಿನ ಎಲ್ಲಾ ಶಿಕ್ಷಕರಿಗೆ ವಿಶೇಷವಾಗಿ ಪ್ರೋಜೆಕ್ಟರ್ ಮೂಲಕ ಸಂಪನ್ಮೂಲ ವ್ಯಕ್ತಿಗಳಿಂದ ಹೇಳಿಕೊಡಲಾಯಿತು. ಇಸಿಓ ಅಬ್ಬಿಗೇರಿ ಶರಣಪ್ಪ ನಿರೂಪಿಸಿದರು, ಸುಜಾತಾ ಹಿರೇಮಠ ಪ್ರಾರ್ಥಿಸಿದರು, ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ಸ್ವಾಗತಿಸಿದರು, ಇಸಿಓ ರವೀಂದ್ರ ಸ್ವಾಗತಿಸಿದರು.

ವಾರ್ತಾ ಭಾರತಿ 17 Nov 2025 9:35 pm

ಮೇಖ್ರಿ ಸರ್ಕಲ್‌ನಲ್ಲಿ ಕಾರಿನ ಮೇಲತ್ತಿ ವ್ಯಕ್ತಿಯ ಹುಚ್ಚಾಟ; ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರಿನ ಮೇಖ್ರಿ ವೃತ್ತದ ಬಳಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಮೈಸೂರು ಮೂಲದ ಮ್ಯಾನೇಜರ್ ಒಬ್ಬರು ಕಾರಿನ ಮೇಲೆ ಹತ್ತಿ ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾರೆ. ತಡೆಯಲು ಬಂದ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಕೊನೆಗೆ ಸ್ಥಳೀಯರು ಮ್ಯಾನೇಜರ್‌ಅನ್ನು ಕಟ್ಟಿಹಾಕಿ ಥಳಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸವಾರರು ಕಷ್ಟ ಅನುಭವಿಸಿದರು.

ವಿಜಯ ಕರ್ನಾಟಕ 17 Nov 2025 9:34 pm

ಕಾಂಗೋ | ತಾಮ್ರದ ಗಣಿಯಲ್ಲಿ ಸೇತುವೆ ಕುಸಿದು ಕನಿಷ್ಠ 32 ಮಂದಿ ಮೃತ್ಯು

ಕಿನ್ಷಾಸ, ನ.17: ಆಗ್ನೇಯ ಕಾಂಗೋದ ತಾಮ್ರದ ಗಣಿಯಲ್ಲಿ ಸೇತುವೆಯೊಂದು ಕುಸಿದು ಕನಿಷ್ಠ 32 ಮಂದಿ ಸಾವನ್ನಪ್ಪಿದ್ದು ಇತರ 20 ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಲುಲಾಬಾ ಪ್ರಾಂತದ ಕಲಾಂಡೊ ಪ್ರದೇಶದಲ್ಲಿ ದುರಂತ ಸಂಭವಿಸಿದೆ. ಗಣಿ ಕಾರ್ಮಿಕರು ಮತ್ತು ಗಣಿಗೆ ಭದ್ರತೆ ಒದಗಿಸಿದ್ದ ಸೇನಾ ಸಿಬ್ಬಂದಿ ನಡುವೆ ಘರ್ಷಣೆಯ ಬಳಿಕ ಸೇನಾ ಸಿಬ್ಬಂದಿ ಗುಂಡಿನ ದಾಳಿಯಿಂದ ಆತಂಕಗೊಂಡ ಗಣಿ ಕಾರ್ಮಿಕರು ಕಿರಿದಾದ ಸೇತುವೆಯ ಮೂಲಕ ಧಾವಿಸಿದಾಗ ಸೇತುವೆ ಕುಸಿದು ದುರಂತ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಘಟನೆಯ ಬಗ್ಗೆ ಸ್ಥಳೀಯ ಮಾನವ ಹಕ್ಕುಗಳ ಸಮಿತಿ ಕಳವಳ ವ್ಯಕ್ತಪಡಿಸಿದ್ದು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿದೆ.

ವಾರ್ತಾ ಭಾರತಿ 17 Nov 2025 9:34 pm

ಕಬ್ಬಿನ ಬೆಲೆ ನಿಗದಿಪಡಿಸುವ ಅಧಿಕಾರ ರಾಜ್ಯಗಳಿಗೆ ನೀಡುವಂತೆ ಪ್ರಧಾನಿಗೆ ಮುಖ್ಯಮಂತ್ರಿ ಮನವಿ

ಹೊಸದಿಲ್ಲಿ : ಕಬ್ಬಿನ ಬೆಲೆ ನಿಗದಿಪಡಿಸುವ ಅಥವಾ ಅನುಮೋದಿಸುವ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡುವುದು, ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಿಸುವುದು ಹಾಗೂ ಎಥನಾಲ್ ಖರೀದಿಯನ್ನು ಖಚಿತಪಡಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಿದರು. ಸೋಮವಾರ ಪ್ರಧಾನಿಯನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಅವರು, ಕಬ್ಬು ಬೆಳೆಗಾರರಿಗೆ ತುರ್ತು ಆರ್ಥಿಕ ನೆರವು ನೀಡಲು ಮತ್ತು ಹೆಚ್ಚಿನ ನಿವ್ವಳ ದರವನ್ನು ಖಚಿತಪಡಿಸಲು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ನಮ್ಮ ಅಧಿಸೂಚನೆಯ ಪ್ರಕಾರ, ಕಾರ್ಖಾನೆಗಳು ಆರಂಭದಲ್ಲಿ ಒಪ್ಪಿಕೊಂಡಿದ್ದ ಬೆಲೆಯ ಮೇಲೆ ಪ್ರತಿಟನ್‍ಗೆ ಹೆಚ್ಚುವರಿ 100 ರೂ.ಗಳನ್ನು ದ್ವಿತೀಯ ಕಂತಾಗಿ ನೀಡುವುದು ಕಡ್ಡಾಯವಾಗಿದೆ ಎಂದು ಹೇಳಿದರು. ಇದರ ಅನುಷ್ಠಾನವನ್ನು ಸಾಧ್ಯವಾಗಿಸಲು ರಾಜ್ಯ ಸರಕಾರವು ಈ ಹೆಚ್ಚುವರಿ ಮೊತ್ತದ ಶೇ.50ರಷ್ಟು(ಪ್ರತಿ ಟನ್‍ಗೆ 50 ರೂ.) ರಾಜ್ಯದ ಖಜಾನೆಯಿಂದ ಭರಿಸುವುದಾಗಿ ಮತ್ತು ಪ್ರತಿ ಟನ್‍ಗೆ ಉಳಿದ 50 ರೂ.ಗಳನ್ನು ಕಾರ್ಖಾನೆಗಳು ಭರಿಸಬೇಕೆಂದು ನಿರ್ಧರಿಸಲಾಗಿದೆ ಎಂದು ಪ್ರಧಾನಿಯ ಗಮನ ಸೆಳೆದರು. ಈ ಕ್ರಮವು ಶೇ.10.25ರಷ್ಟು ಇಳುವರಿ ಮೇಲೆ ಪ್ರತಿ ಟನ್‍ಗೆ 3,200 ರೂ. ಮತ್ತು ಶೇ.11.25ರಷ್ಟು ಇಳುವರಿ ಮೇಲೆ ಪ್ರತಿ ಟನ್‍ಗೆ 3,300 ರೂ. ನಿವ್ವಳ ಬೆಲೆಯನ್ನು (ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ) ದೃಢಪಡಿಸಿದೆ. ರಾಜ್ಯದ ಅನುದಾನ ಬಳಸಿಕೊಂಡ ಈ ನಿರ್ಣಾಯಕ ಕ್ರಮವು ಎದುರಾದ ಸಂಕಷ್ಟವನ್ನು ತಾತ್ಕಾಲಿಕವಾಗಿ ನಿವಾರಿಸಿದ್ದು, ಸದ್ಯಕ್ಕೆ ಕಬ್ಬು ಬೆಳೆಗಾರರ ಪ್ರತಿಭಟನೆಗಳನ್ನು ನಿಲ್ಲಿಸಿದೆ ಎಂದು ಅವರು ಹೇಳಿದರು. ಆದಾಗ್ಯೂ, ನಮ್ಮ ಸರಕಾರದ ಆದೇಶವು ಅತ್ಯಗತ್ಯ ಪರಿಹಾರ ಒದಗಿಸಿದರೂ ಅದು ಬೆಲೆ ಅಂತರವನ್ನು ಸಂಪೂರ್ಣವಾಗಿ ನಿವಾರಿಸಿಲ್ಲ. ಏಕೆಂದರೆ, ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ ಪ್ರತಿ ಕೆ.ಜಿಗೆ 31 ರೂ.ರಲ್ಲಿ ಸ್ಥಗಿತಗೊಂಡಿರುವುದೇ ಸಕ್ಕರೆ ಕಾರ್ಖಾನೆಗಳು ಈ ನಿಗದಿತ ಬೆಲೆಯನ್ನು ರೈತರಿಗೆ ನೀಡಲು ಸಾಧ್ಯವಾಗದಿರಲು ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆ: ಸಕ್ಕರೆಯ ಕನಿಷ್ಠ ಬೆಂಬಲ ಬೆಲೆ(ಎಂ.ಎಸ್.ಪಿ)ಯನ್ನು ತಕ್ಷಣ ಪರಿಷ್ಕರಿಸುವುದು ಈ ಸಂಕಷ್ಟಕ್ಕೆ ಅತ್ಯಂತ ಪರಿಣಾಮಕಾರಿ ಪರಿಹಾರ. ಇದರಿಂದ ಕಾರ್ಖಾನೆಗಳಲ್ಲಿ ಹಣದ ಹರಿವು ತಕ್ಷಣ ಸುಧಾರಿಸಿ, ಕೇಂದ್ರ ಅಥವಾ ರಾಜ್ಯದ ಸಹಾಯಧನದ ಅವಶ್ಯಕತೆ ಇಲ್ಲದೆ ರೈತರಿಗೆ ಅಗತ್ಯ ಬೆಲೆ ಪಾವತಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಎಥನಾಲ್ ಖರೀದಿಯ ಖಚಿತತೆ : ರಾಜ್ಯದ ಸಕ್ಕರೆ ಆಧಾರಿತ ಡಿಸ್ಟಿಲರಿಗಳಿಂದ ಎಥನಾಲ್ ಖರೀದಿ ಮಂಜೂರಾತಿಯನ್ನು ಹೆಚ್ಚಿಸಿ ದೃಢಪಡಿಸಬೇಕು. ಇದರಿಂದ, ಕಾರ್ಖಾನೆಗಳಿಗೆ ಸ್ಥಿರ ಆದಾಯದ ಮೂಲ ಸಿಗುತ್ತದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಟಾವು ಮತ್ತು ಸಾಗಾಟ ವೆಚ್ಚದ ಅಧಿಸೂಚನೆ: ರಾಜ್ಯಗಳಿಗೆ ಕಬ್ಬಿನ ಬೆಲೆಯನ್ನು ನಿಗದಿಪಡಿಸಲು ಅಥವಾ ಅನುಮೋದಿಸಲು ಅಧಿಕಾರ ನೀಡುವಂತಹ ಕೇಂದ್ರ ಅಧಿಸೂಚನೆಯನ್ನು ಹೊರಡಿಸಬೇಕು. ಇದರಿಂದ ಕಟಾವು ಮತ್ತು ಸಾಗಾಟ ವೆಚ್ಚದ ಪಾರದರ್ಶಕತೆ ಸಾಧ್ಯವಾಗಿ, ರೈತರಿಗೆ ಎಫ್‍ಆರ್‍ಪಿ ಅಸಾಧ್ಯವಾಗದಂತೆ ನೋಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Nov 2025 9:33 pm

ದೇಶವನ್ನು ಜನರ ಗಣರಾಜ್ಯವಾಗಿ ಉಳಿಸಿಕೊಳ್ಳಲು ಎಸ್‍ಐಆರ್ ಅನ್ನು ವಿರೋಧಿಸಬೇಕು : ಶಿವಸುಂದರ್

‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್‍ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ

ವಾರ್ತಾ ಭಾರತಿ 17 Nov 2025 9:29 pm

ಯಾದಗಿರಿ | ಬೆಳೆ ಹಾನಿ; ಪರಿಹಾರ ಬಿಡುಗಡೆಗೆ ಸರಕಾರದ ವಿಳಂಬ ಖಂಡನೀಯ : ಚಂದ್ರಶೇಖರಗೌಡ ಮಾಗನೂರ

ಯಾದಗಿರಿ: ಜಿಲ್ಲೆಯಲ್ಲಿ ಸತತ ಮಳೆ ಮತ್ತು ಪ್ರವಾಹದಿಂದಾಗಿ 1.42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಗಳು ನಾಶವಾದರೂ, ಪರಿಹಾರ ಬಿಡುಗಡೆ ಮಾಡುವಲ್ಲಿ ಸರ್ಕಾರ ತೋರಿಸುತ್ತಿರುವ ವಿಳಂಬ ಮತ್ತು ನಿರ್ಲಕ್ಷ್ಯ ಖಂಡನೀಯ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ ಎಲ್ಲಾ ಹಾನಿ ಸಮೀಕ್ಷೆಗಳನ್ನು ಪೂರ್ಣಗೊಳಿಸಿ ತಿಂಗಳಾದರೂ, ಸರ್ಕಾರ ಇನ್ನೂ ಯಾವುದೇ ಮುಂದಾಳತ್ವ ತೋರದೇ ಕುಳಿತಿರುವುದು ಸ್ಪಷ್ಟವಾಗಿ ರೈತ ವಿರೋಧಿ ಮನೋಭಾವನೆ ಎಂದು ಹೇಳಿದರು. ಜಿಲ್ಲೆಯ ರೈತರಿಗೆ ವಿತರಿಸಬೇಕಾದ ಪರಿಹಾರ ಹಣ ಬಂದಿದೆ ಎಂದು ಹೇಳಲಾಗುತ್ತಿದೆ. ಆದರೆ ಯಾವೊಬ್ಬ ರೈತನ ಖಾತೆಗೆ ನಯಾ ಪೈಸೆಯೂ ಜಮಾ ಆಗಿಲ್ಲ. ಬೆಳೆ ಕಳೆದುಕೊಂಡ ಸಾವಿರಾರು ರೈತರು ಸಾಲದ ಬಾಧೆಯಿಂದಾಗಿ ದಿನನಿತ್ಯದ ಬದುಕಿನ ಹೋರಾಟದಲ್ಲಿದ್ದಾರೆ. ಆದರೆ ಸರ್ಕಾರಕ್ಕೆ ರೈತರ ಕಷ್ಟ ಗೋಚರಿಸದಂತೆ ಕಾಣುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರವಾಹದಿಂದ ಅತ್ಯಧಿಕ ಹಾನಿ ಯಾದಗಿರಿ ಜಿಲ್ಲೆಯಲ್ಲಿ ನಡೆದಿದ್ದರೂ, ಜಿಲ್ಲೆಯ ಮತಕ್ಷೇತ್ರಗಳ ಶಾಸಕರು ತಮಗೇ ಸೀಮಿತವಾದ ರಾಜಕೀಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರೈತರ ಸಮಸ್ಯೆಗಳನ್ನು ಸರ್ಕಾರದ ಮುಂದೆ ಜೋರಾಗಿ ಮಂಡಿಸಲು ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ವಾರ್ತಾ ಭಾರತಿ 17 Nov 2025 9:29 pm

ರಣಜಿ: ಚಂಡಿಗಡ ವಿರುದ್ಧ ಕರ್ನಾಟಕ 547/8 ಡಿಕ್ಲೇರ್

ಆರ್.ಸ್ಮರಣ್ ದ್ವಿಶತಕ, ಶ್ರೇಯಸ್ ಗೋಪಾಲ್, ಶಿಖರ್ ಶೆಟ್ಟಿ ಅರ್ಧಶತಕ

ವಾರ್ತಾ ಭಾರತಿ 17 Nov 2025 9:29 pm

ಸುರಪುರ | ಅಹಿಂದ ಘಟಕದ ಪದಾಧಿಕಾರಿಗಳ ನೇಮಕ

ಸುರಪುರ : ಸುರಪುರ ತಾಲೂಕು ಅಹಿಂದ ಘಟಕದ ಪದಾಧಿಕಾರಿಗಳನ್ನು ಪಟ್ಟಣದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಮುಖಂಡರು ಸಭೆ ನಡೆಸಿ, ಆಯ್ಕೆಗೊಳಿಸಲಾಗಿದೆ.  ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಮಲ್ಲಯ್ಯ ಕಮತಗಿ  ಹಾಗೂ ಅಹ್ಮದ್ ಪಠಾಣ್ ಮಾತನಾಡಿದರು. ಸಭೆಯಲ್ಲಿ ಮುಖಂಡರಾದ ಚಂದಪ್ಪ ಯಾದವ್, ವೆಂಕಟೇಶ ಹೊಸಮನಿ, ಬಸವರಾಜ ಮಾಲಿಪಾಟೀಲ, ಮೌನೇಶ ದೇವಡಿ, ಯಂಕಪ್ಪ ಪರಾಶಿ, ಗುರಪ್ಪ ದೇವರಗೋನಾಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.  ತಾಲೂಕು ಘಟಕದ ಪದಾಧಿಕಾರಿಗಳು : ಮಾನಪ್ಪ ಸೂಗೂರ (ಅಧ್ಯಕ್ಷ), ಶ್ರೀನಿವಾಸ ಪಾಟೀಲ್ (ಉಪಾಧ್ಯಕ್ಷ), ರಾಹುಲ್ ಹುಲಿಮನಿ (ಪ್ರ.ಕಾರ್ಯದರ್ಶಿ), ಮಡಿವಾಳಪ್ಪ ಬಿಜಾಸಪುರ, ನಿಂಗಣ್ಣ ಗೋನಾಲ,ಗುರಣ್ಣ ಸಾಹುಕಾರ (ಸಿದ್ದು), ವೆಂಕಣ್ಣ ಯಾದವ್ (ಕಾರ್ಯದರ್ಶಿಗಳು) ಹಾಗೂ ದಾವೂದ್ ಪಠಾಣ್ (ಖಜಾಂಚಿ) ಯಾಗಿ ನೇಮಕಗೊಳಿಸಲಾಯಿತು.

ವಾರ್ತಾ ಭಾರತಿ 17 Nov 2025 9:21 pm

ಮಂಡ್ಯದ ನಾಲೆಯಲ್ಲಿ ಸಿಲುಕಿ ಕಾಡಾನೆ ವೇದನೆ; ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಂಡ್ಯದ ಶಿವನಸಮುದ್ರಂ ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ನಾಲೆಯಲ್ಲಿ ಕಾಡಾನೆ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಆನೆಯನ್ನು ಹೊರತೆಗೆಯುವ ಕಾರ್ಯಾಚರಣೆ ವಿಫಲವಾಗಿದೆ. ಜಲಾಶಯಗಳಿಂದ ನೀರು ಹರಿವಿನ ಪ್ರಮಾಣ ತಗ್ಗಿಸಲು ಅರಣ್ಯ ಇಲಾಖೆ ಮನವಿ ಮಾಡಿದೆ.

ವಿಜಯ ಕರ್ನಾಟಕ 17 Nov 2025 9:20 pm

ಶಂಕಿತ ಉಗ್ರ ಜಾಲ ಪ್ರಕರಣ | ವಿಚಾರಣೆ ಬಳಿಕ ಹಣ್ಣಿನ ವ್ಯಾಪಾರಿ ಆತ್ಮಹತ್ಯೆ

ಶ್ರೀನಗರ, ನ. 17:ಶಂಕಿತ ಉಗ್ರ ಜಾಲ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಪೊಲೀಸರು ಕರೆದೊಯ್ದ ನಂತರ ಬೆಂಕಿ ಹಚ್ಚಿಕೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಹಣ್ಣಿ ನ ವ್ಯಾಪಾರಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಖಾಝಿಗುಂಡದದ ನಿವಾಸಿಯಾಗಿರುವ ಬಿಲಾಲ್ ಅಹ್ಮದ್ ವಾನಿ ತನ್ನ ಮನೆಯಲ್ಲಿ ಬೆಂಕಿ ಹಚ್ಚಿಕೊಂಡಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಶ್ರೀನಗರದ ಆಸ್ಪತ್ರೆಯಲ್ಲಿ ರವಿವಾರ ದಾಖಲಿಸಲಾಗಿತ್ತು. ಅವರು ಸೋಮವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿ ನಡೆಯುತ್ತಿರುವ ತನಿಖೆಯ ಸಂದರ್ಭ ಬಂಧಿಸಲಾದ ಆರೋಪಿಗಳಲ್ಲಿ ಒಬ್ಬನಾದ ಡಾ. ಅದೀಲ್ ಅಹ್ಮದ್ ರಾಥರ್‌ನ ನಿವಾಸದ ಸಮೀಪ ವಾಸಿಸುತ್ತಿರುವ ಬಿಲಾಲ್ ಅವರನ್ನು ಪೊಲೀಸರು ಶನಿವಾರ ವಿಚಾರಣೆಗೆ ಕರೆದಿದ್ದರು, ಅನಂತರ ಸಂಜೆ ವಾಪಸ್ ಕಳುಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಬಿಲಾಲ್ ಅವರ ಪುತ್ರ ಜಸ್ಬೀರ್ ಬಿಲಾಲ್ ಹಾಗೂ ಸಹೋದರ ನಬೀಲ್ ಅಹ್ಮದ್‌ ನನ್ನು ಪೊಲೀಸರು ವಿಚಾರಣೆಗಾಗಿ ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಬಿಲಾಲ್‌ನನ್ನು ಅನಂತರ ಪೊಲೀಸರು ಬಿಟ್ಟಿದ್ದರು. ಆದರೆ, ಅವರ ಪುತ್ರನನ್ನು ವಿಚಾರಣೆಗಾಗಿ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಒಣ ಹಣ್ಣಿನ ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿಯ ಸಾವಿನ ಕುರಿತು ಖಂಡನೆ ವ್ಯಕ್ತಪಡಿಸಿರುವ ಪಿಡಿಪಿ ವರಿಷ್ಠೆ ಹಾಗೂ ಮಾಜಿ ಮುಖ್ಯಮಂತ್ರಿ ಮೆಹಾಬೂಬ ಮುಫ್ತಿ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿದ್ದಾರೆ. ‘‘ಕೆಲವು ದಿನಗಳ ಹಿಂದೆ ಪೊಲೀಸರು ಪುತ್ರ ಜಾಸಿರ್ ಹಾಗೂ ಸಹೋದರ ನಬೀಲ್ ವಾನಿಯನ್ನು ವಶಕ್ಕೆ ತೆಗೆದುಕೊಂಡ ಬಳಿಕ ವಂಪೋರಾ ಖಾಝಿಗುಂಡದ ದುಃಖಿತ ತಂದೆ ಬಿಲಾಲ್ ವಾನಿ ಬೆಂಕಿ ಹಚ್ಚಿಕೊಂಡಿದ್ದಾರೆ. ಪುತ್ರ ಹಾಗೂ ಸಹೋದರನ ಬಗ್ಗೆ ಅವರು ಭಯಭೀತರಾಗಿದ್ದರು. ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಪೊಲೀಸರಲ್ಲಿ ವಿನಂತಿಸಿದರು. ಆದರೆ, ಅವರು ಅದಕ್ಕೆ ಅವಕಾಶ ನೀಡಲಿಲ್ಲ’’ ಎಂದು ಹೇಳಿದ್ದಾರೆ.

ವಾರ್ತಾ ಭಾರತಿ 17 Nov 2025 9:19 pm

ದಿಲ್ಲಿ ಸ್ಫೋಟ ಪ್ರಕರಣ | ಆರೋಪಿಯನ್ನು 10 ದಿನ ಎನ್‌ಐಎ ಕಸ್ಟಡಿಗೆ ನೀಡಿದ ದಿಲ್ಲಿ ನ್ಯಾಯಾಲಯ

ಹೊಸದಿಲ್ಲಿ, ನ. 17: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಅಮೀರ್ ರಶೀದ್ ಅಲಿಯನ್ನು ದಿಲ್ಲಿ ನ್ಯಾಯಾಲಯ ಸೋಮವಾರ 10 ದಿನ ಎನ್‌ಐಎ ಕಸ್ಟಡಿಗೆ ನೀಡಿದೆ. ಬಿಗಿ ಭದ್ರತೆಯ ನಡುವೆ ಆರೋಪಿಯನ್ನು ಪಟಿಯಾಲ ಹೌಸ್ ಕೋರ್ಟ್ ಸಂಕೀರ್ಣದಲ್ಲಿರುವ ಪ್ರಾಥಮಿಕ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ‘‘ನ್ಯಾಯಾಲಯ ಸಂಕೀರ್ಣದ ಸುತ್ತಮುತ್ತ ದಿಲ್ಲಿ ಪೊಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್)ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು’’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಗಲಭೆ ನಿಗ್ರಹ ತಂಡಗಳನ್ನು ಕೂಡ ನೇಮಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರವಿವಾರ ಬಂಧಿಸಿದೆ. ಕೆಂಪು ಕೋಟೆ ಸಮೀಪ ಸ್ಫೋಟಗೊಂಡ ಹುಂಡೈ ಐ 20 ಕಾರು ಈತನ ಹೆಸರಿನಲ್ಲಿ ನೋಂದಣಿಯಾಗಿದೆ. ದಿಲ್ಲಿಯ ಕೆಂಪು ಕೋಟೆ ಸಮೀಪ ಸ್ಫೋಟಕ ತುಂಬಿದ್ದ ಕಾರು ನವೆಂಬರ್ 10ರಂದು ಸ್ಫೋಟಗೊಂಡು 13 ಮಂದಿ ಸಾವನ್ನಪ್ಪಿದ್ದರು ಹಾಗೂ ಹಲವರು ಗಾಯಗೊಂಡಿದ್ದರು.

ವಾರ್ತಾ ಭಾರತಿ 17 Nov 2025 9:15 pm

ʼಸಂಪುಟ ಪುನರ್ ರಚನೆʼ | ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಚಿವ ಸಂಪುಟ ಪುನರ್ ರಚನೆ ಸಂಬಂಧ ಹೊಸದಿಲ್ಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸೋಮವಾರ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ಸಂಪುಟ ಪುನರ್ ರಚನೆ ವಿಚಾರ ಪ್ರಸ್ತಾಪಿಸಿದ್ದರು. ‘ಈ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ’ ಎಂದು ಸೂಚನೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಹೊಸದಿಲ್ಲಿಯಲ್ಲಿನ ಖರ್ಗೆ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ‘ಸಂಪುಟಕ್ಕೆ ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕು, ಯಾರನ್ನು ಸಂಪುಟದಿಂದ ಕೈಬಿಡಬೇಕು’ ಎಂಬುದು ಸೇರಿದಂತೆ ಸಂಪುಟ ಪುನರ್ ರಚನೆ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ‘ನ.20ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ ತುಂಬಲಿದೆ. ನಮ್ಮ ಪಕ್ಷದಿಂದ ಆಯ್ಕೆಯಾಗಿರುವ 140ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದು, ಎಲ್ಲರೂ ಸಮರ್ಥರಿದ್ದಾರೆ. ಈ ಸಂಬಂಧ ಖರ್ಗೆಯವರನ್ನು ಭೇಟಿ ಮಾಡಲಿದ್ದು, ಅವರು ಎಷ್ಟು ಬದಲಾವಣೆ ಮಾಡಲು ಸೂಚಿಸುತ್ತಾರೋ ಅಷ್ಟು ಬದಲಾವಣೆ ಮಾಡಲಾಗುವುದು’ ಎಂದು ಸಿದ್ದರಾಮಯ್ಯ, ಖರ್ಗೆ ಭೇಟಿಗೂ ಮೊದಲೇ ಪ್ರತಿಕ್ರಿಯೆ ನೀಡಿದರು. ‘ನಾಯಕತ್ವ ಬದಲಾವಣೆ’ ವಿಚಾರವಾಗಿ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಬದಲಾಗಿ ಸಂಪುಟ ಪುನಾರಚನೆಗೆ ಒತ್ತು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಯಕತ್ವ ಅಭಾದಿತ ಎಂಬ ಅಭಿಪ್ರಾಯ ಸಿದ್ದರಾಮಯ್ಯರ ಆಪ್ತ ಬಳಗದ ಅನಿಸಿಕೆಯಾಗಿದೆ. ಸಂಪುಟ ಪುನರ್ ರಚನೆ ಮಾಡಿದರೆ 10ರಿಂದ 12 ಮಂದಿ ಸಚಿವರನ್ನು ಕೈಬಿಟ್ಟು ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಮಧ್ಯೆ ಡಿಸೆಂಬರ್ 8ರಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಕಲಾಪವು ಆರಂಭವಾಗಲಿದ್ದು, ಅಧೀಶನಕ್ಕೆ ಸಚಿವರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸಂಪುಟ ಪುನಾರಚನೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೆಲ ಸಚಿವರು ಗೊಂದಲಕ್ಕೆ ಸಿಲುಕಿದ್ದಾರೆ. ಅಧಿವೇಶನಕ್ಕೂ ಮೊದಲೇ ಸಂಪುಟ ಪುನಾರಚನೆಯೋ ಅಥವಾ ನಂತರವೋ ಎಂಬುದು ಕುತೂಹಲ ಸೃಷ್ಟಿಸಿದೆ.

ವಾರ್ತಾ ಭಾರತಿ 17 Nov 2025 9:14 pm

ಫೆ. 1ರಿಂದ ಏರ್ ಇಂಡಿಯಾದಿಂದ ಭಾರತ-ಚೀನಾ ವಿಮಾನ ಪುನಾರಂಭ

ಹೊಸದಿಲ್ಲಿ, ನ. 17: ದಿಲ್ಲಿ ಹಾಗೂ ಶಾಂಘಾಯಿ ನಡುವೆ 2026 ಫೆಬ್ರವರಿ 1ರಿಂದ ನಿಲುಗಡೆ ರಹಿತ ವಿಮಾನಗಳ ಹಾರಾಟ ಪುನಾರಂಭವಾಗಲಿದೆ ಎಂದು ಏರ್ ಇಂಡಿಯಾ ಸೋಮವಾರ ಪ್ರಕಟಿಸಿದೆ. ಮುಂದಿನ ವರ್ಷ ಮುಂಬೈ ಹಾಗೂ ಶಾಂಘಾಯಿ ನಡುವೆ ನಿಲುಗಡೆ ರಹಿತ ವಿಮಾನಗಳನ್ನು ಆರಂಭಿಸುವ ಉದ್ದೇಶವನ್ನು ಕೂಡ ಏರ್ ಇಂಡಿಯಾ ಹೊಂದಿದೆ. ಪ್ರಾಧಿಕಾರದ ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ಏರ್ ಇಂಡಿಯಾ ಹೇಳಿದೆ.

ವಾರ್ತಾ ಭಾರತಿ 17 Nov 2025 9:11 pm

ಶೇಕ್ ಹಸೀನಾರನ್ನು ಹಸ್ತಾಂತರಿಸಲು ಭಾರತಕ್ಕೆ ಬಾಂಗ್ಲಾದೇಶ ಮನವಿ

ಹೊಸದಿಲ್ಲಿ: ಬಾಂಗ್ಲಾದೇಶದ ನ್ಯಾಯಮಂಡಳಿಯೊಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಿಗೇ, ಅವರನ್ನು ಹಸ್ತಾಂತರಿಸುವಂತೆ ಆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ. ಬಾಂಗ್ಲಾದೇಶವು ಭಾರತದೊಂದಿಗೆ ಗಡೀಪಾರು ಒಪ್ಪಂದವನ್ನು ಹೊಂದಿದೆ ಎಂಬುದಾಗಿ ಎಂದು ಪತ್ರವೊಂದರಲ್ಲಿ ನೆನಪಿಸಿರುವ ಸಚಿವಾಲಯವು, ಹಸೀನಾ ಬಾಂಗ್ಲಾದೇಶಕ್ಕೆ ಮರಳುವಂತೆ ನೋಡಿಕೊಳ್ಳುವುದು ಭಾರತದ ಬದ್ಧತೆಯಾಗಿದೆ ಎಂದು ಹೇಳಿದೆ. ‘‘ದೇಶವೊಂದರಲ್ಲಿ, ಮಾನವತೆಯ ವಿರುದ್ಧದ ಅಪರಾಧ ಪ್ರಕರಣದಲ್ಲಿ ದೋಷಿಯಾಗಿರುವ ವ್ಯಕ್ತಿಗಳಿಗೆ ಆಶ್ರಯ ನೀಡುವುದು ಅತ್ಯಂತ ಸ್ನೇಹವಿರೋಧಿ ಕ್ರಮವಾಗಿದೆ ಹಾಗೂ ಅದು ನ್ಯಾಯಕ್ಕೆ ವಿರುದ್ಧವಾಗಿದೆ’’ ಎಂದು ಪತ್ರದಲ್ಲಿ ಹೇಳಲಾಗಿದೆ. ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ.

ವಾರ್ತಾ ಭಾರತಿ 17 Nov 2025 9:08 pm

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ: ಭಾರತ ಹೇಳಿದ್ದೇನು ?

ಬಾಂಗ್ಲದೇಶದಲ್ಲಿ ಸೋಮವಾರ (ನವೆಂಬರ್ 17)ದಂದು ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಕಳೆದ ವರ್ಷ (2024ರ) ಬಾಂಗ್ಲದೇಶದಲ್ಲಿ ನಡೆದಿದ್ದ ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಇದೀಗ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಮರಣದಂಡನೆ ವಿಧಿಸಿದೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ವಿಚಾರದ

ಒನ್ ಇ೦ಡಿಯ 17 Nov 2025 9:07 pm

ಕುವೆಂಪು ವಿವಿಯಲ್ಲಿ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣ; ವಿದ್ಯಾರ್ಥಿಗಳು, ಪ್ರಗತಿಪರರು, ಚಿಂತಕರ ವ್ಯಾಪಕ ವಿರೋಧ

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ವತಿಯಿಂದ ನ.18ರಂದು ಕುವೆಂಪು ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಲಾಗಿರುವ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಪ್ರಗತಿಪರರು, ಚಿಂತಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ವಿವಿಯಲ್ಲಿ ಆಯೋಜನೆಗೊಂಡಿರುವ ಈ ಕಾರ್ಯಕ್ರಮಕ್ಕೆ ಸಾಹಿತಿಗಳು, ಸಿಂಡಿಕೇಟ್ ಸದಸ್ಯರು, ಲೇಖಕರು ಮತ್ತು ವಿವಿಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಅವರು ತಮ್ಮ ಅಧ್ಯಕ್ಷತೆಯಲ್ಲಿ ವಿವಿಯಲ್ಲಿ ವಿಚಾರ ಸಂಕಿರಣ ಅಯೋಜಿಸಿರುವುದನ್ನು ಸಮರ್ಥಿಸಿಕೊಂಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ವಿಚಾರ ಸಂಕಿರಣದ ಔಚಿತ್ಯವೇನು? ಈ ವಿಚಾರ ಸಂಕಿರಣದ ಔಚಿತ್ಯವನ್ನು ಪ್ರಶ್ನಿಸಿ, ಕುಲಪತಿಗೆ ಪತ್ರ ಬರೆದಿರುವ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಕೆ.ಪಿ.ಶ್ರೀಪಾಲ್, ವಿಚಾರ ಸಂಕಿರಣದಲ್ಲಿ ಬಹುತೇಕರು ಬಲಪಂಥೀಯ ಸಿದ್ಧಾಂತವನ್ನು ಪ್ರತಿಪಾದಿಸುವ ಹಾಗೂ ಸಂಘಪರಿವಾರದ ಬೇರೆ ಬೇರೆ ಕಾರ್ಯಕ್ರಮಗಳ ಹೆಸರಿನಲ್ಲಿ ವಿವಿಗಳಿಗೆ ಬರುತ್ತಿದ್ದು, ಇದೀಗ ಭಗವದ್ಗೀತೆಯ ಹೆಸರಲ್ಲಿ ಕುವೆಂಪು ವಿವಿಗೆ ಬರುತ್ತಿದ್ದಾರೆ. ಇವರೆಲ್ಲರೂ ಗಾಂಧಿ, ಬುದ್ಧ, ಬಸವಣ್ಣ, ಅಂಬೇಡ್ಕರ್ ನಿಲುವುಗಳನ್ನು ವಿರೋಧಿಸುವ ಸಂಸ್ಥೆಯಲ್ಲಿ ಸಕ್ರಿಯವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇಡೀ ದೇಶದ ವಿವಿಗಳನ್ನು ಒಂದೇ ಸಿದ್ಧಾಂತದ ಅಡಿಯಲ್ಲಿ ತಂದು, ವಿದ್ಯಾರ್ಥಿಗಳಿಗೆ ಸಂವಿಧಾನಕ್ಕಿಂತ ಹೆಚ್ಚಾಗಿ ಮನುಸ್ಮೃತಿಯನ್ನು ತಲೆಗೆ ತುಂಬಬೇಕು ಎಂಬ ಸಂಘಪರಿವಾರದ ತೀರ್ಮಾನದಂತೆ ಬೇರೆ ಬೇರೆ ಕಾರ್ಯಕ್ರಮಗಳ ಹೆಸರಿನಲ್ಲಿ ಬರುತ್ತಿದ್ದವರು ಈಗ ಭಗವದ್ಗೀತೆ ಹೆಸರಿನಲ್ಲಿ ವಿವಿಗಳಿಗೆ ಬರುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಚಾತುರ್ವರ್ಣ ವ್ಯವಸ್ಥೆಯ ಮೂಲವನ್ನು ಭಗವದ್ಗೀತೆಯಿಂದಲೇ ಸಮರ್ಥಿಸಲಾಗುತ್ತದೆ. ಇದು ನಾವು ಒಪ್ಪಿಕೊಂಡಿರುವ ಈ ದೇಶದ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿರುತ್ತದೆ. ಕೆಲವು ಸಿದ್ಧಾಂತಗಳನ್ನು ವಿವಿಗಳಿಗೆ ಸುಳಿಯದಂತೆ ನೋಡಿಕೊಳ್ಳುವುದು ಪ್ರಜ್ಞಾವಂತರಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದರಲ್ಲೂ ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಹೆಸರಿನ ವಿವಿಯಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಕಾರ್ಯಕ್ರಮಗಳು ನಡೆಯುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅಲ್ಲದೆ, ನ.18ರಂದು ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ರದ್ದುಪಡಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. ವಿವಿಯ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಿಗೂ ಶ್ರೀಪಾಲ್ ಪತ್ರ ಬರೆದಿದ್ದಾರೆ. ಲೇಖಕ ಹರ್ಷಕುಮಾರ್ ಕುಗ್ವೆ ಬಹಿರಂಗ ಪತ್ರ: ಲೇಖಕ ಹರ್ಷಕುಮಾರ್ ಕುಗ್ವೆ ಅವರು ಕುವೆಂಪು ವಿವಿ ಕುಲಪತಿಗೆ ಬಹಿರಂಗ ಪತ್ರ ಬರೆದಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಭಾರತದಲ್ಲಿ ಮನುಷ್ಯರೆಲ್ಲರಿಗೂ ಅತ್ಯಗತ್ಯವಾದ ಕೆಲವು ಮೂಲಭೂತ ತತ್ವಗಳ ನೆಲೆಯಲ್ಲಿ ಭಗವದ್ಗೀತೆ, ಮನುಸ್ಮೃತಿಯಂತಹ ಪಠ್ಯಗಳನ್ನು ವಿಶ್ಲೇಷಣೆಗೆ ಒಳಪಡಿಸಿರುವುದು ತಮಗೂ ತಿಳಿದಿರಬಹುದು. ಕುವೆಂಪು ವಿವಿಯಂತಹ ವಿಶ್ವ ವಿದ್ಯಾನಿಲಯ ಪ್ರಜಾಪ್ರಭುತ್ವ, ಸಂವಿಧಾನದ ಮೂಲ ತತ್ವಗಳ ನೆಲೆಯಲ್ಲಿ ಭಗವದ್ಗೀತೆ, ಮನುಸ್ಮೃತಿ, ವೇದ ಸಾಹಿತ್ಯ, ಪ್ರಾಚೀನ ಜ್ಞಾನ ಪರಂಪರೆ ಇತ್ಯಾದಿಗಳನ್ನು ಚರ್ಚಿಸಬೇಕೇ ಅಥವಾ ಈಗಾಗಲೇ ದೇಶವನ್ನು ಜಾತಿ ಮತ್ತು ಧರ್ಮಗಳ ಆಧಾರದಲ್ಲಿ ಹೇಗೆ ಒಡೆಯಬೇಕೆಂದು ನೀಲನಕ್ಷೆ ಇಟ್ಟುಕೊಂಡು ಹೊರಟಿರುವ ಜನರ ಮೂಲಕ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕೇ?. ಈ ಕುರಿತು ನಿಮ್ಮ ವಿವೇಚನೆ ಏನು ಎಂದು ಪ್ರಶ್ನಿಸಿದ್ದಾರೆ. ಭಗವದ್ಗೀತೆಯಾಗಲಿ, ಮನಸ್ಮೃತಿಯಾಗಲಿ. ವಿವಿಯಲ್ಲಿ ಚರ್ಚೆಯಾಗಬಾರದು ಎಂದೇನಿಲ್ಲ. ಆದರೆ, ಮುಕ್ತ ಚರ್ಚೆ ಎಂದರೆ ಅಲ್ಲಿ ಒಂದೇ ಐಡಿಯಾಲಜಿಯವರನ್ನು ಕರೆಸಿ ಭಾಷಣ ಕೊಡುವುದಲ್ಲ. ನಿಮಗೆ ಅಷ್ಟು ಆಸಕ್ತಿ ಇದ್ದರೆ ಭಗವದ್ಗೀತೆಯ ಕುರಿತು ಹಲವು ನೆಲೆಗಳಲ್ಲಿ ಚರ್ಚೆ ಇಟ್ಟುಕೊಳ್ಳಬಹುದಿತ್ತು. ಬಹಳ ಮುಖ್ಯವಾಗಿ ಅಂಬೇಡ್ಕರ್ ಅವರು ಚರ್ಚಿಸಿರುವ ನೆಲೆಯನ್ನು, ಗಾಂಧೀಜಿ ಚರ್ಚಿಸಿರುವ ನೆಲೆಯನ್ನೂ ಸೇರಿಸಿಕೊಳ್ಳಬಹುದಿತ್ತು. ಆದರೆ, ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಕ್ತ ಚಿಂತನೆಯ ಉದ್ದೇಶವಿರದೆ ಮನುವಾದಿ, ವರ್ಣಾಶ್ರಮ ಚಿಂತನೆಯನ್ನು ವಿವಿ ಆವರಣದಲ್ಲಿ ದಕ್ಕಿಸಿಕೊಳ್ಳುವ ಒಂದೇ ಅಜೆಂಡಾವಿರುವುದು ಸ್ಪಷ್ಟ. ಇದಕ್ಕೆ ನಮ್ಮ ವಿರೋಧವಿದೆ ಎಂಬುದನ್ನು ಈ ಮೂಲಕ ನಿಮಗೆ ತಿಳಿಸಲು ಬಯಸುತ್ತೇನೆ. ಈ ಕಾರ್ಯಕ್ರಮವನ್ನು ರದ್ದುಪಡಿಸಿ ಕಾರ್ಯಕ್ರಮದ ರೂಪುರೇಷೆಯನ್ನು ಪ್ರಜಾಸತ್ತಾತ್ಮಕವಾಗಿ ನಡೆಸಿ, ವಿವಿಯ ಬೇರೆ ಬೇರೆ ವಿಭಾಗಗಳನ್ನೂ ಒಳಗೊಂಡು ಹೊಸ ರೀತಿಯಲ್ಲಿ ನಿಜವಾದ ಮುಕ್ತ ಚರ್ಚೆಯನ್ನು ಮತ್ತೊಂದು ದಿನ ಆಯೋಜಿಸಬೇಕೆಂದು ಹರ್ಷಕುಮಾರ್ ಕುಗ್ವೆ ಆಗ್ರಹಿಸಿದ್ದಾರೆ. ಡಿಎಸ್‌ಎಸ್‌ನಿಂದ ತಮಟೆ ಚಳವಳಿಯ ಎಚ್ಚರಿಕೆ ನ.18ರಂದು ಆಯೋಜಿಸಿರುವ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ವಿಶ್ವ ಮಾನವ ಸಂದೇಶವನ್ನು ಬೋಧಿಸಿದ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ಸ್ಥಾಪನೆಯಾಗಿರುವ ವಿವಿಯಲ್ಲಿ ನಡೆಸಲು ಮುಂದಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವಿ ಕುಲಪತಿಯೇ ವಹಿಸಿಕೊಂಡಿರುವುದನ್ನು ಗಮನಿಸಿದರೆ ಇದು ಕುವೆಂಪುರವರ ಆದರ್ಶಗಳಿಗೆ ಮಾಡುತ್ತಿರುವ ಅಪಚಾರ ಮತ್ತು ಅಂಬೇಡ್ಕರ್ ರವರ ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರವಾಗಿದೆ ಎಂದು ಟೀಕಿಸಿದ್ದಾರೆ. ಸದರಿ ಕಾರ್ಯಕ್ರಮಕ್ಕೆ ಬರುವ ಸಂಪನ್ಮೂಲ ವ್ಯಕ್ತಿಗಳೆಲ್ಲರೂ ಬಲಪಂಥೀಯ ಸಿದ್ಧಾಂತವನ್ನು ಪ್ರತಿಪಾದಿಸುವ ಹಾಗೂ ಗಾಂಧಿ ಬಸವಣ್ಣ ಮತ್ತು ಅಂಬೇಡ್ಕರ್ ವಿಚಾರಗಳನ್ನು ವಿರೋಧಿಸುವ ಸಂಸ್ಥೆಯ ಸಕ್ರೀಯ ಸದಸ್ಯರಾಗಿದ್ದಾರೆ. ನ.18ರಂದು ನಡೆಯಲಿರುವ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು. ಒಂದು ವೇಳೆ ರದ್ದುಗೊಳಿಸದಿದ್ದರೆ ಸಮಿತಿಯ ವತಿಯಿಂದ ಪ್ರತಿಭಟನಾ ತಮಟೆ ಚಳವಳಿ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ವಾರ್ತಾ ಭಾರತಿ 17 Nov 2025 9:06 pm

ಸ್ವತಂತ್ರವಲ್ಲದ ನ್ಯಾಯಮಂಡಳಿ ನೀಡಿರುವ ಆದೇಶ: ಶೇಕ್ ಹಸೀನಾ

ಢಾಕಾ: ಬಾಂಗ್ಲಾದೇಶದ ನ್ಯಾಯಮಂಡಳಿಯೊಂದು ತನಗೆ ನೀಡಿರುವ ಮರಣ ದಂಡನೆಗೆ ಪ್ರತಿಕ್ರಿಯಿಸಿರುವ, ಆ ದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ‘‘ಜನರಿಂದ ಚುನಾಯಿತವಾಗದ ಸರಕಾರವೊಂದು ಸ್ಥಾಪಿಸಿದ ಹಾಗೂ ಉಸ್ತುವಾರಿ ವಹಿಸಿದ ಸ್ವತಂತ್ರವಲ್ಲದ ನ್ಯಾಯಮಂಡಳಿಯೊಂದು ನೀಡಿರುವ ಆದೇಶ ಇದಾಗಿದೆ’’ ಎಂದು ಅವರು ಹೇಳಿದ್ದಾರೆ. ‘‘ಈ ಆದೇಶವು ಪಕ್ಷಪಾತಿಯಾಗಿದೆ ಮತ್ತು ರಾಜಕೀಯ ಪ್ರೇರಿತವಾಗಿದೆ. ಬಾಂಗ್ಲಾದೇಶದ ಕೊನೆಯ ಚುನಾಯಿತ ಪ್ರಧಾನಿಯನ್ನು ನಿವಾರಿಸುವ ಹಾಗೂ ರಾಜಕೀಯ ಶಕ್ತಿಯಾಗಿ ಅವಾಮಿ ಲೀಗನ್ನು ನಾಶಪಡಿಸುವ ಕೊಲೆಗಡುಕ ಉದ್ದೇಶವನ್ನು ಮಧ್ಯಂತರ ಸರಕಾರದದಲ್ಲಿರುವ ತೀವ್ರವಾದಿ ವ್ಯಕ್ತಿಗಳು ಹೊಂದಿದ್ದಾರೆ. ಮರಣ ದಂಡನೆಯನ್ನು ವಿಧಿಸುವ ಈ ಅಸಹ್ಯಕರ ತೀರ್ಪು ಆ ಉದ್ದೇಶವನ್ನು ಹೊರಗೆಡವಿದೆ’’ ಎಂದು ಹೇಳಿಕೆಯೊಂದರಲ್ಲಿ ಹಸೀನಾ ಹೇಳಿದ್ದಾರೆ.

ವಾರ್ತಾ ಭಾರತಿ 17 Nov 2025 9:06 pm

ಪುತ್ರ ತೇಜಸ್ವಿ ಯಾದವ್, ಪುತ್ರಿ ರೋಹಿಣಿ ಆಚಾರ್ಯ ಜಗಳದ ಬಗ್ಗೆ ಲಾಲೂ ಪ್ರಸಾದ್ ಯಾದವ್ ಫಸ್ಟ್ ರಿಯಾಕ್ಷನ್!

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪಕ್ಷದ ಒಗ್ಗಟ್ಟು ಮತ್ತು ಕಾರ್ಯಕ್ಷಮತೆ ಸುಧಾರಣೆಗೆ ಒತ್ತು ನೀಡುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಕುಟುಂಬದೊಳಗಿನ ಸಮಸ್ಯೆಗಳನ್ನು ಕುಟುಂಬದಲ್ಲೇ ಬಗೆಹರಿಸಲಾಗುವುದು ಎಂದಿದ್ದಾರೆ. ಅವರ ಪುತ್ರಿ ರೋಹಿಣಿ ಆಚಾರ್ಯ ರಾಜಕೀಯದಿಂದ ನಿರ್ಗಮಿಸಿರುವುದಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಲಾಲು ಅವರ ಹೇಳಿಕೆ ಮಹತ್ವ ಪಡೆದಿದೆ. ಪಕ್ಷದ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ತೇಜಸ್ವಿ ಯಾದವ್ ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕ 17 Nov 2025 9:01 pm

ದಿಲ್ಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ: ಮತ್ತೊಬ್ಬ ಪ್ರಮುಖ ಶಂಕಿತ ಸಂಚುಕೋರನನ್ನು ಬಂಧಿಸಿದ ಎನ್ಐಎ

ಹೊಸ ದಿಲ್ಲಿ: ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಈ ಸ್ಫೋಟದಲ್ಲಿ 13 ಮಂದಿ ಮೃತಪಟ್ಟು, ಸುಮಾರು 30 ಮಂದಿ ಗಾಯಗೊಂಡಿದ್ದರು. ಆರೋಪಿ ಜಸೀರ್ ಬಿಲಾಲ್ ವಾನಿ ಅಕ ಡ್ಯಾನಿಶ್ ನನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಿಂದ ಬಂಧಿಸಲಾಗಿದೆ. ಬಂಧಿತ ಆರೋಪಿಯು ಅನಂತನಾಗ್ ಜಿಲ್ಲೆಯ ಕಾಝಿಗುಂಡ್ ನಿವಾಸಿಯಾಗಿದ್ದಾನೆ. ಕಾರ್ ಬಾಂಬ್ ಸ್ಫೋಟಕ್ಕೂ ಮುನ್ನ, ಆತ ಡ್ರೋನ್ ಗಳನ್ನು ಮಾರ್ಪಡಿಸುವ ಮೂಲಕ ಹಾಗೂ ರಾಕೆಟ್ ಗಳನ್ನು ತಯಾರಿಸಲು ಪ್ರಯತ್ನಿಸುವ ಮೂಲಕ ತಾಂತ್ರಿಕ ನೆರವು ಒದಗಿಸಿದ್ದ ಎಂದು ಆರೋಪಿಸಲಾಗಿದೆ. ಡ್ಯಾನಿಶ್ ಸಹ ಸಂಚುಕೋರನಾಗಿದ್ದು, ಕಾರ್ ಬಾಂಬ್ ದಾಳಿ ಯೋಜಿಸಲು ಶಂಕಿತ ಉಗ್ರಗಾಮಿ ಉಮರ್ ಉನ್ ನಬಿಯೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಿದ್ದ ಎಂದು ಸೋಮವಾರ ರಾಷ್ಟ್ರೀಯ ತನಿಖಾ ತಂಡ ಹೇಳಿದೆ. ಇದಕ್ಕೂ ಮುನ್ನ, ಸ್ಫೋಟದಲ್ಲಿ ಭಾಗಿಯಾಗಿದ್ದ ಕಾರಿನ ನೋಂದಣಿ ಹೊಂದಿದ್ದ ಅಮೀರ್ ರಶೀದ್ ಅಲಿ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿತ್ತು. ಆತ ಜಮ್ಮು ಮತ್ತು ಕಾಶ್ಮೀರದ ಪ್ಯಾಂಪೋರ್ ನ ಸಂಬೂರ ನಿವಾಸಿಯಾಗಿದ್ದು, ವೃತ್ತಿಯಲ್ಲಿ ವೈದ್ಯನಾಗಿದ್ದ ಶಂಕಿತ ಆರೋಪಿ ನಬಿಯೊಂದಿಗೆ ಕಾರ್ ಬಾಂಬ್ ಸ್ಫೋಟದ ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ. ಸೋಮವಾರ ಆತನನ್ನು ನ್ಯಾಯಾಲಯದ ಮುಂದೆ ರಾಷ್ಟ್ರೀಯ ತನಿಖಾ ದಳ ಹಾಜರುಪಡಿಸಿತು. ಬಳಿಕ, ಆತನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ಒಪ್ಪಿಸಲಾಯಿತು.

ವಾರ್ತಾ ಭಾರತಿ 17 Nov 2025 8:53 pm

ಮುಹಮ್ಮದ್ ಶಮಿ ಮೇಲೆ ನಂಬಿಕೆ ಇಡಿ: ಗಂಗುಲಿ ʼಗಂಭೀರʼ ಸಂದೇಶ

ಹೊಸದಿಲ್ಲಿ, ನ.17: ಭಾರತ ತಂಡವು ಅನುಭವಿ ವೇಗಿ ಮುಹಮ್ಮದ್ ಶಮಿ ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗುಲಿ ಹೇಳಿದ್ದಾರೆ. ಈ ಮೂಲಕ ಶಮಿ ಅವರು ಟೆಸ್ಟ್ ತಂಡಕ್ಕೆ ಮರಳಬೇಕೆಂಬ ತಮ್ಮ ಬೇಡಿಕೆಯನ್ನು ಮತ್ತೊಮ್ಮೆ ಮುಂದಿಟ್ಟಿದ್ದಾರೆ.    ಈಡನ್‌ ಗಾರ್ಡನ್ಸ್‌ನಲ್ಲಿ ನಾಟಕೀಯ ಬೆಳವಣಿಗೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವು 30 ರನ್‌ನಿಂದ ಸೋತ ನಂತರ ಗಂಗುಲಿ ಈ ಬೇಡಿಕೆ ಇಟ್ಟಿದ್ದಾರೆ. ಈ ಪಂದ್ಯದಲ್ಲಿ ಭಾರತದ ಕಳಪೆ ಬೌಲಿಂಗ್ ಬಹಿರಂಗವಾಗಿತ್ತು. ತ್ರಿವಳಿ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ, ಮುಹಮ್ಮದ್ ಸಿರಾಜ್ ಹಾಗೂ ಮುಹಮ್ಮದ್ ಶಮಿ ಅವರನ್ನು ನಂಬುವುದರಲ್ಲಿ ಪರಿಹಾರವಿದೆ ಎಂದು ಗಂಗುಲಿ ಸಲಹೆ ನೀಡಿದ್ದಾರೆ. ಶಮಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ನಲ್ಲಿ ಭಾರತದ ಪರ ಕೊನೆಯ ಟೆಸ್ಟ್ ಆಡಿದ್ದರು. ಚಾಂಪಿಯನ್ಸ್ ಟ್ರೋಫಿ ಹಾಗೂ ರಣಜಿ ಟ್ರೋಫಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಟೆಸ್ಟ್ ಕ್ರಿಕೆಟ್ ತಂಡದಿಂದ ಹೊರಗಿಡಲಾಗಿದೆ. ಈ ವರ್ಷದ ರಣಜಿಯಲ್ಲಿ 4 ಪಂದ್ಯಗಳಲ್ಲಿ 17 ವಿಕೆಟ್‌ ಗಳನ್ನು ಉರುಳಿಸಿರುವ ಶಮಿ ಅವರು ದೀರ್ಘಕಾಲದಿಂದ ಕಾಡುತ್ತಿರುವ ಗಾಯದಿಂದ ಸಂಪೂರ್ಣ ಫಿಟ್ ಆಗಿರುವಂತೆ ಕಂಡುಬಂದಿದ್ದಾರೆ. ‘‘ಬುಮ್ರಾ, ಸಿರಾಜ್ ಹಾಗೂ ಶಮಿ ಮೇಲೆ ನಂಬಿಕೆ ಇಡಬೇಕಾಗಿದೆ. ಈ ಟೆಸ್ಟ್ ತಂಡದಲ್ಲಿರುವ ಅರ್ಹತೆ ಶಮಿಗಿದೆ. ಶಮಿ ಹಾಗೂ ಸ್ಪಿನ್ನರ್‌ಗಳು ಗೌತಮ್ ಗಂಭೀರ್‌ ಗೆ ಪಂದ್ಯ ಗೆದ್ದುಕೊಡಬಲ್ಲರು’’ಎಂದು ‘ಸ್ಪೋರ್ಟ್ಸ್ ತಕ್’ಗೆ ಗಂಗುಲಿ ತಿಳಿಸಿದ್ದಾರೆ. ಭಾರತದ ಪಿಚ್ ತಯಾರಿಯ ಬಗ್ಗೆ ಕೋಚ್ ಗಂಭೀರ್‌ ಗೆ ತೀಕ್ಷ್ಣ ಸಂದೇಶವನ್ನು ರವಾನಿಸಿದ ಬಿಸಿಸಿಐ ಮಾಜಿ ಅಧ್ಯಕ್ಷ ಗಂಗುಲಿ, ಉತ್ತಮ ಬ್ಯಾಟಿಂಗ್ ಅಡಿಪಾಯವಿಲ್ಲದೆ ಭಾರತಕ್ಕೆ ಟೆಸ್ಟ್ ಪಂದ್ಯಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದರು. ‘‘ಉತ್ತಮ ಪಿಚ್‌ನಲ್ಲಿ ಆಡುವಾಗ ಬ್ಯಾಟರ್‌ಗಳು 350-400 ರನ್ ಗಳಿಸಲು ಸಾಧ್ಯವಾಗದಿದ್ದರೆ, ಟೆಸ್ಟ್ ಗೆಲ್ಲಲು ಸಾಧ್ಯವಿಲ್ಲ. ಉತ್ತಮ ಪಿಚ್‌ನಲ್ಲಿ ಆಡಲೇಬೇಕು. ತಮ್ಮ ಆಟಗಾರರ ಮೇಲೆ ನಂಬಿಕೆ ಇಡಬೇಕು. ಟೆಸ್ಟ್ ಪಂದ್ಯವನ್ನು ಐದು ದಿನಗಳಲ್ಲಿ ಗೆಲ್ಲಬೇಕೆ ಹೊರತು ಮೂರು ದಿನಗಳಲ್ಲಿ ಅಲ್ಲ’’ ಎಂದು ಗಂಗುಲಿ ಹೇಳಿದರು. ಗಂಗುಲಿ ಅವರು ಶಮಿ ಬೆಂಬಲಕ್ಕೆ ನಿಂತಿರುವುದು ಇದೇ ಮೊದಲಲ್ಲ. ಸರಣಿಗಿಂತ ಮೊದಲು 35ರ ಹರೆಯದ ಶಮಿ ಅವರನ್ನು ಸೇರ್ಪಡೆಗೊಳಿಸುವಂತೆ ಆಯ್ಕೆಗಾರರಿಗೆ ಗಂಗುಲಿ ಸಲಹೆ ನೀಡಿದ್ದರು. ಶಮಿ ಫಾರ್ಮ್ ಹಾಗೂ ಫಿಟ್ನೆಸ್ ಬಗ್ಗೆ ಮತ್ತೊಮ್ಮೆ ಮಾತನಾಡಿದ ಗಂಗುಲಿ, ‘‘ಶಮಿ ಅತ್ಯುತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಅವರು ಟೆಸ್ಟ್, ಏಕದಿನ ಹಾಗೂ ಟಿ-20 ಪಂದ್ಯಗಳಲ್ಲಿ ಏಕೆ ಆಡುತ್ತಿಲ್ಲ ಎಂಬ ಕಾರಣ ನನಗೆ ಕಾಣುತ್ತಿಲ್ಲ. ಅವರಲ್ಲಿ ಅಗಾಧ ಕೌಶಲ್ಯವಿದೆ’’ ಎಂದರು. ರಣಜಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹೊರತಾಗಿಯೂ ಶಮಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಆಯ್ಕೆಗಾರರು ಪ್ರಸಿದ್ಧ ಕೃಷ್ಣ ಹಾಗೂ ಆಕಾಶ ದೀಪ್‌ ಗೆ ಆದ್ಯತೆ ನೀಡಿದ್ದಾರೆ. 

ವಾರ್ತಾ ಭಾರತಿ 17 Nov 2025 8:48 pm

ಅಲ್ಕರಾಝ್‌ ಗೆ ಸೋಲುಣಿಸಿ ಎಟಿಪಿ ಫೈನಲ್ಸ್ ಕಿರೀಟ ಗೆದ್ದ ಜನ್ನಿಕ್ ಸಿನ್ನರ್

ಟುರಿನ್, ನ.17: ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್‌ರನ್ನು ಮಣಿಸಿದ ಎರಡನೇ ರ‍್ಯಾಂಕಿನ ಜನ್ನಿಕ್ ಸಿನ್ನರ್ ಸತತ ಎರಡನೇ ಬಾರಿ ಕಿಕ್ಕಿರಿದು ನೆರೆದಿದ್ದ ತವರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರತಿಷ್ಠಿತ ಎಟಿಪಿ ಫೈನಲ್ಸ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದ್ದಾರೆ. ರವಿವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಇಟಲಿಯ ಸಿನ್ನರ್ ಸ್ಪೇನ್‌ ನ ಅಲ್ಕರಾಝ್‌ರನ್ನು 7-6(7/4), 7-5 ಸೆಟ್‌ ಗಳ ಅಂತರದಿಂದ ಸದೆ ಬಡಿದರು. ಪುರುಷರ ಟೆನಿಸ್‌ ನಲ್ಲಿ ಪ್ರಾಬಲ್ಯ ಸಾಧಿಸುತ್ತಿರುವ ಉಭಯ ಆಟಗಾರರು ಈ ವರ್ಷ ಆರನೇ ಬಾರಿ ಮುಖಾಮುಖಿಯಾಗಿದ್ದಾರೆ. ಈ ವರ್ಷ ಎರಡನೇ ಬಾರಿ ಅಲ್ಕರಾಝ್‌ ಗೆ ಸೋಲುಣಿಸಿದ ಸಿನ್ನರ್ ತನ್ನ ತವರು ಇಟಲಿಯ ಅಭಿಮಾನಿಗಳ ಎದುರು ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡರು. ಸಿನ್ನರ್ ವಿಂಬಲ್ಡನ್ ಚಾಂಪಿಯನ್‌ ಶಿಪ್ ಫೈನಲ್‌ನಲ್ಲಿ ಅಲ್ಕರಾಝ್‌ ಗೆ ಸೋಲುಣಿಸಿದ್ದರು. ತನ್ನ ವೃತ್ತಿಜೀವನದಲ್ಲಿ ಪರಿಪೂರ್ಣ ಪ್ರದರ್ಶನವೊಂದನ್ನು ನೀಡಿದ ಸಿನ್ನರ್ 2025ರ ಋತುವಿಗೆ ಸರಿಯಾದ ಅಂತ್ಯ ಹಾಡಿದರು. 24ರ ಹರೆಯದ ಸಿನ್ನರ್ ಈಗಾಗಲೇ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್ ಚಾಂಪಿಯನ್‌ ಶಿಪ್‌ನಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದೀಗ ವರ್ಷಾಂತ್ಯದ ಎಟಿಪಿ ಫೈನಲ್ಸ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಮೂರು ತಿಂಗಳ ಅಮಾನತು ಬಳಿಕ ಬಲಿಷ್ಠವಾಗಿ ಪುಟಿದೆದ್ದಿರುವ ಸಿನ್ನರ್ ಪಾಲಿಗೆ ಇದು ಮಹತ್ವದ ಗೆಲುವಾಗಿದೆ. ಈ ಗೆಲುವಿನ ಮೂಲಕ ಒಳಾಂಗಣ ಪಂದ್ಯಗಳಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದಾರೆ. ಇದೀಗ ಸಿನ್ನರ್ ಒಳಾಂಗಣ ಹಾರ್ಡ್ ಕೋರ್ಟ್‌ಗಳಲ್ಲಿ ಸತತ 31 ಪಂದ್ಯಗಳನ್ನು ಗೆದ್ದಿದ್ದಾರೆ. 2023ರಲ್ಲಿ ಟುರಿನ್‌ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಕ್ ವಿರುದ್ಧ ಸೋತ ನಂತರ ಎಟಿಪಿ ಫೈನಲ್ಸ್‌ ನಲ್ಲಿ ಸತತ 10ನೇ ಗೆಲುವು ದಾಖಲಿಸಿದ್ದಾರೆ. ಆ ಸೋಲಿನ ನಂತರ ಸಿನ್ನರ್ ಎಟಿಪಿ ಫೈನಲ್ಸ್‌ ನಲ್ಲಿ ಸೆಟ್ ಕೈಚೆಲ್ಲಿಲ್ಲ. ಈ ಋತುವಿನಲ್ಲಿ 8 ಪ್ರಶಸ್ತಿಗಳು ಹಾಗೂ ಎರಡು ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿರುವ ಅಲ್ಕರಾಝ್ ಅವರು ‘‘ಇಂದು ನಾನು ಆಡಿರುವ ರೀತಿಯು ನಿಜವಾಗಿಯೂ ಖುಷಿಕೊಟ್ಟಿದೆ. ಕಳೆದ ಎರಡು ವರ್ಷಗಳಿಂದ ಒಳಾಂಗಣದಲ್ಲಿ ಸೋಲರಿಯದ ಆಟಗಾರನ ಎದುರು ಆಡಿದ್ದೇನೆ’’ ಎಂದರು. ‘‘ಇದೊಂದು ನನಗೆ ಅದ್ಭುತ ವರ್ಷವಾಗಿತ್ತು. ಈ ವರ್ಷ ನಾನು ಎಲ್ಲ ನಾಲ್ಕೂ ಗ್ರ್ಯಾನ್‌ ಸ್ಲಾಮ್ ಟೂರ್ನಿಗಳಲ್ಲಿ ಫೈನಲ್‌ ಗೆ ತಲುಪಿದ್ದೆ. ಇಲ್ಲಿಗೆ ಬಂದು ಫೈನಲ್ ಪಂದ್ಯವನ್ನು ಗೆದ್ದಿರುವುದು ಅದ್ಭುತ ಅನುಭವ ನೀಡಿದೆ’’ ಎಂದು ಸಿನ್ನರ್ ಸುದ್ದಿಗಾರರಿಗೆ ತಿಳಿಸಿದರು.

ವಾರ್ತಾ ಭಾರತಿ 17 Nov 2025 8:39 pm

ಉಡುಪಿ: ಹಿರಿಯ ನಾಗರಿಕರಿಗೆ ಕಾನೂನು ಅರಿವು ಕಾರ್ಯಾಗಾರ

ಮಕ್ಕಳಿಂದ ಜೀವನ ನಿರ್ವಹಣೆ ಪಡೆಯುವುದು ಪಾಲಕರ ಕಾನೂನುಬದ್ಧ ಹಕ್ಕು: ಪ್ರತೀಕ್ ಬಾಯಲ್

ವಾರ್ತಾ ಭಾರತಿ 17 Nov 2025 8:39 pm

IPL 2026 | ರಾಜಸ್ಥಾನ ರಾಯಲ್ಸ್ ಮುಖ್ಯ ಕೋಚ್ ಆಗಿ ಕುಮಾರ ಸಂಗಕ್ಕರ ನೇಮಕ

ಜೈಪುರ, ನ.17: 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಋತುವಿಗಿಂತ ಮೊದಲು ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಕುಮಾರ ಸಂಗಕ್ಕರ ಅವರನ್ನು ಮರು ನೇಮಕ ಮಾಡಲಾಗಿದೆ ಎಂದು ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ ದೃಢಪಡಿಸಿದೆ. ಸಂಗಕ್ಕರ 2021 ಹಾಗೂ 2024ರ ನಡುವೆ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. 2025ರ ಆವೃತ್ತಿಯ ಐಪಿಎಲ್‌ ಗೆ ರಾಹುಲ್ ದ್ರಾವಿಡ್ ಕಳೆದ ವರ್ಷ ಕೋಚ್ ಆಗಿ ನೇಮಕಗೊಂಡಾಗ ಸಂಗಕ್ಕರ ಅವರನ್ನು ಕ್ರಿಕೆಟ್ ನಿರ್ದೇಶಕ ಹುದ್ದೆಗೆ ಭಡ್ತಿ ನೀಡಲಾಗಿತ್ತು. ದ್ರಾವಿಡ್ ಆಗಸ್ಟ್‌ ನಲ್ಲಿ ರಾಜಸ್ಥಾನ ಫ್ರಾಂಚೈಸಿಯನ್ನು ತೊರೆದಿದ್ದಾರೆ. ರಾಯಲ್ಸ್ ತಂಡವು ಕೋಚಿಂಗ್ ಸಿಬ್ಬಂದಿ ವರ್ಗದಲ್ಲಿ ಇನ್ನೂ ಕೆಲವು ಬದಲಾವಣೆಗಳನ್ನು ಮಾಡಿದೆ. ವಿಕ್ರಂ ರಾಥೋರ್‌ ರನ್ನು ಸಹಾಯಕ ಕೋಚ್ ಆಗಿ ಭಡ್ತಿ ನೀಡಲಾಗಿದೆ.ಟ್ರೆವರ್ ಪೆನ್ನಿ ಹಾಗೂ ಸಿದ್ ಲಹಿರಿ ಕ್ರಮವಾಗಿ ಸಹಾಯಕ ಕೋಚ್ ಹಾಗೂ ಪರ್ಫಾಮೆನ್ಸ್ ಕೋಚ್ ಆಗಿ ಮರಳಿದ್ದಾರೆ. RAJASTHAN ROYALS EDIT FOR THE NEW HEAD COACH - It's Kumar Sangakkara. pic.twitter.com/zArm2V3VsR — Johns. (@CricCrazyJohns) November 17, 2025 2024ರಲ್ಲಿ ರಾಯಲ್ಸ್ ತಂಡವನ್ನು ಸೇರಿದ್ದ ಶೇನ್ ಬಾಂಡ್ ವೇಗದ ಬೌಲಿಂಗ್ ಕೋಚ್ ಆಗಿ ಮುಂದುವರಿದಿದ್ದಾರೆ. ರಾಯಲ್ಸ್ ತಂಡವು ದೀರ್ಘ ಕಾಲದಿಂದ ನಾಯಕನಾಗಿದ್ದ ಸ್ಯಾಮ್ಸನ್‌ ರನ್ನು ಟ್ರೇಡಿಂಗ್‌ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಬಿಟ್ಟುಕೊಟ್ಟು ರವೀಂದ್ರ ಜಡೇಜರನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡಿತ್ತು. ‘‘ಕುಮಾರ ಸಂಗಕ್ಕರ ಮುಖ್ಯ ಕೋಚ್ ಆಗಿ ಮರಳಿದ್ದಕ್ಕೆ ನಮಗೆ ತುಂಬಾ ಸಂತೋಷವಾಗಿದೆ. ಅವರಿಗೆ ತಂಡದ ಬಗ್ಗೆ ಅರಿವಿದೆ. ಅವರ ನಾಯಕತ್ವ ಹಾಗೂ ರಾಯಲ್ಸ್ ಸಂಸ್ಕೃತಿಯ ಬಗ್ಗೆ ಆಳವಾದ ತಿಳುವಳಿಕೆಯು ನಿರಂತರತೆ ಹಾಗೂ ಸ್ಥಿರತೆಯ ಸರಿಯಾದ ಸಮತೋಲನವನ್ನು ತರಲಿದೆ ಎಂದು ನಾವು ಭಾವಿಸಿದ್ದೇವೆ’’ ಎಂದು ರಾಜಸ್ಥಾನ ರಾಯಲ್ಸ್ ಮಾಲಕ ಮನೋಜ್ ಬದಾಲೆ ಹೇಳಿದ್ದಾರೆ.

ವಾರ್ತಾ ಭಾರತಿ 17 Nov 2025 8:34 pm

ಕರಾವಳಿಗೆ ಮೆಟ್ರೋ, ಉಡುಪಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ; ಕರಾವಳಿ ಅಭಿವೃದ್ಧಿ ಮಂಡಳಿ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ

ಉಡುಪಿ: ಹೊಸದಿಲ್ಲಿ, ಮುಂಬಯಿ, ಕೊಲ್ಕತ್ತಾ, ಬೆಂಗಳೂರು ಗಳಂಥ ಮಹಾನಗರಗಳಲ್ಲಿರುವ ಮೆಟ್ರೋ ರೈಲಿನ ವ್ಯವಸ್ಥೆ ಮಂಗಳೂರು, ಉಡುಪಿ ಹಾಗೂ ಮಣಿಪಾಲದ ನಡುವೆ ಸಂಚರಿಸಲು ಪ್ರಸ್ತಾವನೆ ಸಿದ್ಧಗೊಳ್ಳುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಸಾಧ್ಯತಾ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಎಂ.ಎ.ಗಫೂರ್ ಅಧ್ಯಕ್ಷತೆಯ ಕರಾವಳಿ ಅಭಿವೃದ್ಧಿ ಮಂಡಳಿ ಇದು ಕಾರ್ಯರೂಪಕ್ಕೆ ಬರಲು ಪ್ರಯತ್ನಿಸ ಲಿದೆ. ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಮೊದಲ ಸಾಮಾನ್ಯ ಸಭೆಯ ಬಳಿಕ ಕರೆದ ಪತ್ರಿಕಾಗೋಷ್ಠಿಯಲ್ಲಿ ಎಂ.ಎ.ಗಫೂರ್ ಅವರು ಈ ವಿಷಯ ತಿಳಿಸಿದರು. ಕೇಂದ್ರ ಸರಕಾರ ಕೇಳಿದ ಸಾಧ್ಯತಾ ವರದಿಯನ್ನು ನಾವು ಕೇಂದ್ರಕ್ಕೆ ಸಲ್ಲಿಸಿದ್ದೇವೆ. ಮೊದಲ ಹಂತದಲ್ಲಿ ಓವರ್ ಹೆಡ್ ಮೆಟ್ರೋ ಯೋಜನೆ ಮಂಗಳೂರು, ವಿಮಾನ ನಿಲ್ದಾಣ, ಉಡುಪಿ, ಮಣಿಪಾಲಗಳ ನಡುವೆ ಅನುಷ್ಠಾನಗೊಳ್ಳಲಿದ್ದು, ಎರಡನೇ ಹಂತದಲ್ಲಿ ಹೆಜಮಾಡಿ-ಕಾರ್ಕಳಗಳ ನಡುವೆ ಅದನ್ನು ವಿಸ್ತರಿಸಲಾಗುವುದು. ಮುಂದೆ ಮಣಿಪಾಲ-ಕುಂದಾಪುರ ಹಾಗೂ ಕೊಲ್ಲೂರು ನಡುವೆ ಇದು ವಿಸ್ತರಣೆಗೊಳ್ಳುವ ಪ್ರಸ್ತಾಪ ತಯಾರಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದ್ದರು. ಅದೇ ರೀತಿ ಕರಾವಳಿಗೆ ಅತಿಅಗತ್ಯವಾಗಿ ಬೇಕಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ್ನು ಪಡುಬಿದ್ರಿ ಸಮೀಪದ ನಂದಿಕೂರು ಆಸುಪಾಸಿನಲ್ಲಿ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸಭೆಗೆ ತಿಳಿಸಿದರು. ಎಲ್ಲೂರು-ಸಾಂತೂರು ಗ್ರಾಮಗಳಲ್ಲಿ ಯುಪಿಸಿಎಲ್ ಎರಡನೇ ಹಂತದ ವಿಸ್ತರಣೆಗೆಂದು ಕೆಐಡಿಬಿ ಸ್ವಾಧೀನಪಡಿಸಿಕೊಂಡ ಸುಮಾರು 900 ಎಕರೆ ಜಾಗವಿದ್ದು, ಅದರಲ್ಲಿ ಸುಮಾರು 50 ಎಕರೆ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆಎಸ್‌ಸಿಎ) ಸಹಯೋಗದಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಎಲ್ಲಾ ಆಧುನಿಕ ಸೌಕರ್ಯ ಗಳಿರುವ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಬಗ್ಗೆ ಕೆಎಸ್‌ಸಿಎ ಅಧ್ಯಕ್ಷರಾಗಿರುವ ರಘುರಾಮ ಭಟ್‌ರೊಂದಿಗೆ ಸಹ ಮಾತುಕತೆ ನಡೆಸಲಾಗಿದೆ. ಸದ್ಯ ಕೆಎಸ್‌ಸಿಎ ಚುನಾವಣೆಯಲ್ಲಿ ಅವರು ವ್ಯಸ್ತರಾಗಿರುವುದರಿಂದ ಚುನಾವಣೆ ಮುಗಿದ ಬಳಿಕ ಅವರನ್ನು ಇಲ್ಲಿಗೆ ಕರೆಸಿ ಅವರೊಂದಿಗೆ ಸಮಾಲೋಚಿಸಿದ ಬಳಿಕ ಸಮಗ್ರ ಚಿತ್ರಣ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ, ಅಲ್ಲದೇ ಸಂಸದರು ಮಂಡಳಿಯ ಸದಸ್ಯರಾಗಿರುವುದರಿಂದ ಮಂಡಳಿಯ ಮೂಲಕ ಕರಾವಳಿಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಸಾಧ್ಯವಾಗುವ ವಿಶ್ವಾಸವನ್ನು ಎಂ.ಎ.ಗಫೂರ್ ವ್ಯಕ್ತಪಡಿಸಿದರು. ನಮ್ಮೆಲ್ಲಾ ಯೋಜನೆ, ಪ್ರಸ್ತಾವಗಳನ್ನು ಸಿದ್ಧಪಡಿಸಿಕೊಂಡು ಮುಂಬರುವ ಬೆಳಗಾವಿ ಅಧಿವೇಶನದ ವೇಳೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಂಜೂರಾತಿಗೆ ಪ್ರಯತ್ನಿಸಲಾಗುವುದು. ಹಿಂದಿನ ಪ್ರಾಧಿಕಾರಕ್ಕೆ 40 ಕೋಟಿ ರೂ. ಅನುದಾನ ಬಂದಿತ್ತು. ಮಂಡಳಿಗೆ ಅದನ್ನು 250 ಕೋಟಿ ರೂ.ಗೆ ಹೆಚ್ಚಿಸಲು ಒತ್ತಾಯಿಸಲಾಗುವುದು. ಮಂಡಳಿಯ ವ್ಯಾಪ್ತಿಗೆ ಮೂರು ಜಿಲ್ಲೆಗಳ 19 ತಾಲೂಕುಗಳು ಸೇರ್ಪಡೆಗೊಂಡಿರುವುದರಿಂದ ಇದು ಅಗತ್ಯ ಎಂದರು. ಕರಾವಳಿಯ ಮೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ, ಕರಾವಳಿ ಪ್ರದೇಶದ ಅಭಿವೃದ್ಧಿಗಾಗಿ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಒಳಗೊಂಡಂತೆ ವಾರ್ಷಿಕ ಯೋಜನೆಗಳನ್ನು ಸಿದ್ಧಪಡಿಸಿ, ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳುವ ಮತ್ತು ಯೋಜನೆಯನ್ನು ಅನುಷ್ಠಾನಕ್ಕೆ ತರುವ ಮೇಲ್ವಿಚಾರಣೆಯನ್ನು ನಡೆಸುವ ಜವಾಬ್ದಾರಿ ಕರಾವಳಿ ಅಭಿವೃದ್ಧಿ ಮಂಡಳಿಗೆ ಇದೆ ಎಂದು ಗಫೂರ್ ತಿಳಿಸಿದರು. ರಾಜ್ಯ ಸರಕಾರ ಕರಾವಳಿ ಅಭಿವೃದ್ಧಿ ಮಂಡಳಿ ಅಧಿನಿಯಮ-2023ನ್ನು ರೂಪಿಸಿ ಅದರಡಿ ‘ಕರಾವಳಿ ಅಭಿವೃದ್ಧಿ ಮಂಡಳಿ’ಯನ್ನು ರಚಿಸಿದೆ. ಆದರೆ ಸರಕಾರ ಇದರ ನಿಯಮಾವಳಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಪ್ರಕ್ರಿಯೆ ನಡೆಯುತ್ತಿದೆ ಎಂದು ಗಫೂರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜ ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Nov 2025 8:33 pm

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

► ಮೇಕೆದಾಟು, ಮಹಾದಾಯಿ, ಕೃಷ್ಣಾ ನದಿ ನೀರು ಹಂಚಿಕೆ ಅಧಿಸೂಚನೆಗೆ ಮನವಿ► ಎನ್‍ಡಿಆರ್‌ಎಫ್ ಅಡಿ ಗರಿಷ್ಠ ನೆರವು, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೋರಿಕೆ

ವಾರ್ತಾ ಭಾರತಿ 17 Nov 2025 8:24 pm

ಉತ್ತರಾಖಂಡ | ಜನರಿಗೆ 3.37 ಕೋಟಿ ರೂ.ಗಳನ್ನು ವಂಚಿಸಿದ್ದ ಸೈಬರ್‌ ಗ್ಯಾಂಗ್ ಭೇದಿಸಿದ ಪೋಲಿಸರು

ನೈನಿತಾಲ್,ನ.17: ಜನರ ಫೋನ್‌ಗಳನ್ನು ಹ್ಯಾಕ್ ಮಾಡಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಲಪಟಾಯಿಸುತ್ತಿದ್ದ ಆರೋಪದಲ್ಲಿ ಪ್ರಮುಖ ಅಂತರರಾಜ್ಯ ಸೈಬರ್ ಅಪರಾಧ ಜಾಲದ ನಾಲ್ವರನ್ನು ಉತ್ತರಾಖಂಡ ಪೋಲಿಸರು ಬಂಧಿಸಿದ್ದಾರೆ. ಸಂತ್ರಸ್ತರ ಫೋನ್‌ಗಳನ್ನು ಪ್ರವೇಶಿಸಲು ಈ ಗ್ಯಾಂಗ್ ಸಾಮಾಜಿಕ ಮಾಧ್ಯಮಗಳಲ್ಲಿ ಲಿಂಕ್‌ ಗಳನ್ನು ಕಳುಹಿಸುತ್ತಿತ್ತು ಮತ್ತು ತಮ್ಮ ಗುರುತುಗಳನ್ನು ಮರೆಮಾಚಲು ನಕಲಿ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಳ್ಳುತ್ತಿತ್ತು ಎಂದು ಪೋಲಿಸರು ತಿಳಿಸಿದರು. ಪ್ರಾಥಮಿಕ ತನಿಖೆಯಲ್ಲಿ 3.37 ಕೋಟಿ ರೂ.ಗಳ ಅನುಮಾನಾಸ್ಪದ ವಹಿವಾಟು ಪತ್ತೆಯಾಗಿದೆ. ಶನಿವಾರ ವಾಹನ ತಪಾಸಣೆ ಸಂದರ್ಭದಲ್ಲಿ ದೋ ಗಾಂವ್‌ ನ ಭೇಡಿಯಾಪಖಡ್ ಎಂಬಲ್ಲಿ ಕಾರೊಂದನ್ನು ತಡೆದು ನಿಲ್ಲಿಸಿದ್ದ ಪೋಲಿಸರು ಅದರಲ್ಲಿ 11 ಫೋನ್‌ ಗಳು,ಒಂಭತ್ತು ಸಿಮ್ ಕಾರ್ಡ್‌ಗಳು,ಹಲವಾರು ಆಧಾರ್ ಮತ್ತು ಪಾನ್ ಕಾರ್ಡ್‌ ಗಳು,ಚೆಕ್ ಪುಸ್ತಕಗಳು,ಕ್ಯೂಆರ್ ಕೋಡ್‌ ಗಳು ಮತ್ತು ಅನೇಕ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್‌ ಗಳನ್ನು ಪತ್ತೆ ಹಚ್ಚಿದ್ದರು. ಕಾರಿನಲ್ಲಿ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳಿದ್ದು, ಅವರನ್ನು ವಿಚಾರಣೆಗೊಳಪಡಿಸಿದಾಗ ತಾವು ಸಂತ್ರಸ್ತ ವ್ಯಕ್ತಿಗಳ ಫೋನ್‌ ಗಳಿಗೆ ಕನ್ನ ಹಾಕಲು ಸಾಮಾಜಿಕ ಮಾಧ್ಯಮಗಳ ಮೂಲಕ ಎಪಿಕೆ ಫೈಲ್‌ಗಳನ್ನು ಕಳುಹಿಸುತ್ತಿದ್ದನ್ನು ಒಪ್ಪಿಕೊಂಡಿದ್ದಾರೆ. ರಾಜಸ್ಥಾನದ ಆಲ್ವಾರ್ ನಿವಾಸಿ ಶುಭಂ ಗುಪ್ತಾ, ಉತ್ತರ ಪ್ರದೇಶದ ಬುಲಂದಶಹರ್‌ ನ ಪಿಯೂಷ್ ಗೋಯಲ್ ಮತ್ತು ಘಾಜಿಯಾಬಾದ್‌ನ ರಿಷಭ್ ಕುಮಾರ್‌ ಹಾಗೂ ಹರ್ಯಾಣದ ಗುರುಗ್ರಾಮ ನಿವಾಸಿ ಮೋಹಿತ್ ರಾಠಿ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೋಲಿಸರು ತಿಳಿಸಿದರು. ಆರೋಪಿಗಳು ಬಳಸಿದ್ದ ಹಲವಾರು ದುಬಾರಿ ಬೆಲೆಗಳ ಸ್ಮಾರ್ಟ್‌ಫೋನ್‌ಗಳು ಮತ್ತು ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.

ವಾರ್ತಾ ಭಾರತಿ 17 Nov 2025 8:23 pm

ಕನಕಗಿರಿ | ಸರಕಾರಿ ಶಾಲೆ, ಪಿಯು ಕಾಲೇಜುಗಳ ವಿಲೀನದ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ

ಕನಕಗಿರಿ : 700 ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಪಂಚಾಯತಿಯಲ್ಲಿ ಬರುವ ಸುತ್ತಮುತ್ತಲಿನ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ 5,000 ಕ್ಕೂ ಹೆಚ್ಚು ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಎಸ್.ಎಫ್.ಐ ಸೋಮವಾರ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು. ಎಸ್.ಎಫ್.ಐ ರಾಜ್ಯ ಉಪಾಧ್ಯಕ್ಷ ಗ್ಯಾನೇಶ ಕಡಗದ್ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಸುಮಾರು 47,493 ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಮತ್ತು 1,319 ಪದವಿಪೂರ್ವ ಕಾಲೇಜುಗಳಿದೆ. 309 ಕರ್ನಾಟಕ ಪಬ್ಲಿಕ್ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ (19% ಕಡಿಮೆ) ಕುಸಿದಿದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು ಶೇ.46 ರಿಂದ ಶೇ.38ಕ್ಕೆ ಕುಸಿದಿರುತ್ತದೆ. ಆದರೆ ಖಾಸಗಿ ಅನುದಾನರಹಿತ ಶಾಲೆಗಳ ಪಾಲು 2015-16ರಲ್ಲಿ 36.3 ಲಕ್ಷ ವಿದ್ಯಾರ್ಥಿಗಳಿಂದ 2025-26ರಲ್ಲಿ 47 ಲಕ್ಷ ವಿದ್ಯಾರ್ಥಿಗಳಿಗೆ (29%) ಹೆಚ್ಚಾಗಿದೆ. 25-10-2021 ರ ಸುತ್ತೋಲೆ ಪ್ರಕಾರ CSR ನಿಧಿಯಲ್ಲಿ ಪ್ರಾರಂಭವಾಗುವ ಹೊಸ KPS ಶಾಲೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಸಂಪೂರ್ಣ ವೆಚ್ಚವನ್ನು ದಾನಿಗಳು / ಸಂಸ್ಥೆಗಳು ಬರಿಸಬೇಕು ಹಾಗೂ ಅಗತ್ಯ ಮೂಲಭೂತ ಸೌಕರ್ಯ ಮತ್ತು ಅತಿಥಿ ಶಿಕ್ಷಕರು ಮತ್ತು ಆಯಾಗಳನ್ನು ನೇಮಕ ಮಾಡಿಕೊಂಡು 2 ವರ್ಷಗಳ ಅವಧಿಗೆ ನಿಯಮಾನುಸಾರ ಗೌರವ ಸಂಭಾವನೆ ಪಾವತಿಸಲು ಸಿದ್ಧರಿರಬೇಕು ಎಂದು ಹೇಳಿದರು. ತಾಲೂಕು ಅಧ್ಯಕ್ಷ ಹನುಮೇಶ ಮ್ಯಾಗಡೆ ಮಾತನಾಡಿದರು. ನಂತರ ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರಗತಿಪರ ತಾಲೂಕು ಅಧ್ಯಕ್ಷ ಪಾಮಣ್ಣ ಅರಳಿಗನೂರು, ಬಸಯ್ಯ ಹಿರೇಮಠ, ರೈತ ಮುಖಂಡ ಮರಿಯಪ್ಪ ಸಾಲೋಣಿ, ತಾಲೂಕು ಉಪಾಧ್ಯಕ್ಷ ಮಾರುತಿ, ಸೇರಿದಂತೆ ಇತರರು ಇದ್ದರು.

ವಾರ್ತಾ ಭಾರತಿ 17 Nov 2025 8:23 pm

ರಾಜಸ್ಥಾನ | ಎಸ್‌ಐಆರ್ ಕೆಲಸದ ಒತ್ತಡದಿಂದ ಬಿಎಲ್‌ಒ ಆತ್ಮಹತ್ಯೆ

ಜೈಪುರ, ನ.17: ಬೂತ್ ಮಟ್ಟದ ಅಧಿಕಾರಿಯಾಗಿ (ಬಿಎಲ್‌ಒ) ಕಾರ್ಯ ನಿರ್ವಹಿಸುತ್ತಿದ್ದ ಸರಕಾರಿ ಶಾಲಾ ಶಿಕ್ಷಕರೋರ್ವರು ರವಿವಾರ ಇಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಕೆಲಸದ ತೀವ್ರ ಒತ್ತಡದಿಂದಾಗಿ ಅವರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಮೃತ ಮುಕೇಶ ಜಾಂಗಿಡ್ (45) ಅವರು ಜೈಪುರ ತಾಲೂಕಿನ ನಹ್ರಿ ಕಾ ಬಾಸ್‌ನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದು,ಅವರಿಗೆ ಬಿಎಲ್‌ಒ ಹೊಣೆಗಾರಿಕೆಯನ್ನೂ ವಹಿಸಲಾಗಿತ್ತು. ಪೋಲಿಸರ ಪ್ರಕಾರ ಜಾಂಗಿಡ್ ಜೈಪುರ-ಫುಲೇರಾ ರೈಲು ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿನ ಮಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾಂಗಿಡ್ ಕೆಲಸದ ಮತ್ತು ಮಾನಸಿಕ ಒತ್ತಡಗಳು ಹಾಗೂ ತನ್ನ ಮೇಲ್ವಿಚಾರಕರು ತನ್ನನ್ನು ಅಮಾನತುಗೊಳಿಸುವ ಸಾಧ್ಯತೆಯನ್ನು ಉಲ್ಲೇಖಿಸಿರುವ ಟಿಪ್ಪಣಿಯೊಂದನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಟಿಪ್ಪಣಿಯಲ್ಲಿಯ ವಿಷಯಗಳ ಆಧಾರದಲ್ಲಿ ಪೋಲಿಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಜಾಂಗಿಡ್ ಕಲ್ವಾರ್‌ನ ಧರ್ಮಪುರ ಗ್ರಾಮದ ನಿವಾಸಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎಂದು ಸೋದರ ಗಜಾನಂದ ತಿಳಿಸಿದ್ದಾರೆ. ಈ ಘಟನೆಯು ಶಿಕ್ಷಕರು ಮತ್ತು ಸರಕಾರಿ ನೌಕರರಲ್ಲಿ ಕಳವಳಗಳನ್ನು ಹುಟ್ಟುಹಾಕಿದೆ. ರಾಜ್ಯ,ಜಿಲ್ಲಾ ಮತ್ತು ಉಪವಿಭಾಗ ಮಟ್ಟದ ಅಧಿಕಾರಿಗಳು ಅತ್ಯಂತ ಹೆಚ್ಚು ಎಸ್‌ಐಆರ್ ನೋಂದಣಿಗಳನ್ನು ಮಾಡಿಸುವ ಮೂಲಕ ಮೇಲುಗೈ ಸಾಧಿಸಲು ಪ್ರಯತ್ನಿಸುತ್ತಿದ್ದು,ಇದು ಬಿಎಲ್‌ಒಗಳ ಮೇಲೆ ಹೆಚ್ಚಿನ ಹೊರೆಯನ್ನುಂಟು ಮಾಡುತ್ತಿದೆ ಎಂದು ಅಖಿಲ ರಾಜಸ್ಥಾನ ರಾಜ್ಯ ಕರ್ಮಚಾರಿ ಸಂಯುಕ್ತ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಪಿನ್ ಪ್ರಕಾಶ್ ಶರ್ಮಾ ಹೇಳಿದರು. ಅಧಿಕಾರಿಗಳು ಕೇವಲ ಸಂಖ್ಯೆಗಳ ಮೇಲೆ ಗಮನವನ್ನು ಕೇಂದ್ರೀಕರಿಸುವ ಬದಲು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದರು. ಪ್ರಕರಣದಲ್ಲಿ ಉಲ್ಲೇಖಿಸಲಾಗಿರುವ ಆಡಳಿತಾತ್ಮಕ ಒತ್ತಡದ ಕುರಿತು ಪ್ರತಿಕ್ರಿಯಿಸಿದ ಶರ್ಮಾ,ಬಿಎಲ್‌ಒಗಳಿಗೆ ಪರಿಹಾರ ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಅರ್ಧವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವಾಗ ಮತ್ತು ಶಾಲೆಗಳು ಶಿಕ್ಷಕರ ಕೊರತೆಯನ್ನು ಎದುರಿಸುತ್ತಿರುವಾಗ ಹೆಚ್ಚುವರಿ ಆಡಳಿತಾತ್ಮಕ ಕೆಲಸದ ಹೊರೆಗಳು ಮಕ್ಕಳ ಶಿಕ್ಷಣಕ್ಕೆ ಹಾನಿಯನ್ನುಂಟು ಮಾಡುತ್ತವೆ ಎಂದು ಶರ್ಮಾ ಎಚ್ಚರಿಕೆ ನೀಡಿದರು. ಇತ್ತೀಚಿಗೆ ಬಿಎಲ್‌ಒ ಆಗಿ ಹೆಚ್ಚುವರಿ ಹೊಣೆಯನ್ನು ನಿರ್ವಹಿಸುತ್ತಿದ್ದ ಕೇರಳದ ಪಯ್ಯಾನೂರಿನ ಸರಕಾರಿ ಶಾಲೆಯ ಜವಾನ ಅನೀಶ ಜಾರ್ಜ್ ಕೂಡ ಎಸ್‌ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ವಾರ್ತಾ ಭಾರತಿ 17 Nov 2025 8:20 pm

ಡಿ.19 ರಿಂದ ಜ.4ರವರೆಗೆ ಕರಾವಳಿ ಉತ್ಸವ: ದ.ಕ. ಜಿಲ್ಲಾಧಿಕಾರಿ

ಮಂಗಳೂರು: ಪ್ರಸಕ್ತ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮವು ಡಿಸೆಂಬರ್ 19 ರಿಂದ ಜನವರಿ 4ರವರೆಗೆ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್ ಹೇಳಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕರಾವಳಿ ಉತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕೃತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು. ಬೀಚ್ ಉತ್ಸವ, ಕಲಾ ಪರ್ಬ, ಚಿತ್ರಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಿಲ್ಲೆಯ ಎಲ್ಲಾ ಪ್ರಮುಖ ಬೀಚ್‌ಗಳಲ್ಲಿ ವೈವಿಧ್ಯಮಯ ಪ್ರತ್ಯೇಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಕರಾವಳಿ ಉತ್ಸವದಲ್ಲಿ ಪ್ರಾಮುಖ್ಯತೆ ನೀಡಲಾಗಿದೆ. ಪ್ರಮುಖವಾಗಿ ಬೀಚ್ ಫುಟ್‌ಬಾಲ್ ಮತ್ತು ವಾಲಿಬಾಲ್ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಡಿಸಿ ಹೇಳಿದರು. ಲಾಲ್‌ಬಾಗ್ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನವನ ಹಾಗೂ ಪ್ರಮುಖ ಬೀಚ್‌ಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಬೈಕ್ ಮತ್ತು ಕಾರು ಹಾಗೂ ಶ್ವಾನ ಪ್ರದರ್ಶನ ಆಯೋಜಿಸಲಾಗುವುದು. ಪಿಲಿಕುಳದಲ್ಲೂ ಕರಾವಳಿ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಹೇಳಿದರು. ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಿಗೆ ನವ ಮಂಗಳೂರು ಬಂದರಿನಲ್ಲಿ ಹಡಗು ವೀಕ್ಷಣೆ ಹಾಗೂ ಕೋಸ್ಟ್‌ಗಾರ್ಡ್ ನೌಕೆಗಳ ವೀಕ್ಷಣೆಗೆ ಅವಕಾಶ ನೀಡುವ ಕುರಿತು ಸಂಬಂಧಪಟ್ಟ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು ಎಂದು ಡಿಸಿ ತಿಳಿಸಿದರು. ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಎಚ್.ಎನ್., ಮಂಗಳೂರು ಕಂದಾಯ ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Nov 2025 8:19 pm

ಶಬರಿಮಲೆ ಸೀಸನ್ ಆರಂಭ : ರಾಜ್ಯ ಟ್ರಾವೆಲ್ಸ್ ಸಂಘ, ಕೇರಳ ಸಿಎಂಗೆ ಬರೆದ ಮನವಿ ಪತ್ರದಲ್ಲಿರುವ 2 ಅಂಶಗಳು ಏನು?

Letter to Kerala CM : ಶಬರಿಮಲೆ ಯಾತ್ರಾ ಸೀಸನ್ ಅವಧಿಯಲ್ಲಿ ಅಂತರರಾಜ್ಯ ಪ್ರವಾಸಿ ವಾಹನಗಳಿಗೆ ವಿಶೇಷ ತೆರಿಗೆ ವಿನಾಯತಿ ಹಾಗೂ ಸೌಲಭ್ಯ ವಿಸ್ತರಣೆಯ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಟ್ರಾವೆಲ್ಸ್ ಮಾಲೀಕರ ಸಂಘ, ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಮನವಿಯನ್ನು ಸಲ್ಲಿಸಿದೆ. ಮನವಿಯಲ್ಲಿ ಏನೇನಿದೆ?

ವಿಜಯ ಕರ್ನಾಟಕ 17 Nov 2025 8:12 pm

ಬೆಳ್ತಂಗಡಿ: ಮನ್‌‌ಶರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪ್ರದಾನ ಸಮಾರಂಭ

ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಅದರ ಪ್ರಯೋಜನ ಲಭಿಸುವಂತೆ ಮಾಡಿದ್ದೂ ಮಾತ್ರವಲ್ಲದೆ ಇವತ್ತು ರಾಜ್ಯ ಮಟ್ಟದ ರ‍್ಯಾಂಕ್ ವರೆಗೆ ಸಾಧನೆ ಮಾಡಿರುವುದು ಅಭಿನಂದನಾರ್ಹ ಎಂದು ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಹೇಳಿದರು. ನ. 15 ರಂದು ಗೇರುಕಟ್ಟೆಯ ಮನ್‌‌ಶರ್ ವಿದ್ಯಾಸಂಸ್ಥೆಯಲ್ಲಿ ನಡೆದ 5 ನೇ ಬ್ಯಾಚ್ ನ ಪದವಿ ಪ್ರದಾನ ಸಮಾರಂಭ ಹಾಗೂ ಕಳೆದ ಸಾಲಿನಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು. ಪದವಿ ನಂತರ ಉದ್ಯೋಗ ಪಡೆಯುವುದು, ಪಡೆದ ಉದ್ಯೋಗವನ್ನು ಪ್ರಮಾಣಿಕತೆಯಿಂದ ನಿರ್ವಹಿಸಿ, ಹೆತ್ತವರಿಗೆ ಕಲಿತ ವಿದ್ಯಾಸಂಸ್ಥೆಗೆ ಒಳ್ಳೆಯ ಹೆರಸನ್ನು ತರಬೇಕು ಎಂದರು. ಈ ಸಂದರ್ಭದಲ್ಲಿ ಪ್ಯಾರಾಮೆಡಿಕಲ್ ವಿಭಾಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಇತರ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು, ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ, ವಿದ್ಯಾರ್ಥಿ ಜೀವನಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮನ್‌ಶರ್ ಸಂಸ್ಥೆಯ ಸಯ್ಯಿದ್ ಉಮರ್ ಅಸ್ಸಖಾಫ್ ತಂಙಳ್ ಸಂಸ್ಥೆ ಭವಿಷ್ಯದ ಧ್ಯೇಯೋದ್ದೇಶ ಹೇಳಿದರು. ಉದ್ಘಾಟನೆಯನ್ನು ಸಯ್ಯಿದ್ ಅಬ್ದುಲ್ ರಹಿಮಾನ್ ಸಾದಾತ್ ತಂಙಳ್ ಬಾ ಅಲವಿ ನಿರ್ವಹಿಸಿದರು. ಯು.ಟಿ ಖಾದರ್ ಅವರು ಮನ್‌ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್, ಪ್ಯಾರ ಮೆಡಿಕಲ್ ಹಾಗು ಪಿ. ಯು. ಕಾಲೇಜಿನ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಮುಖ್ಯ ಅತಿಥಿಗಳಾಗಿ ಜನಪ್ರಿಯ ಆಸ್ಪತ್ರೆ ಹಾಗೂ ವಿದ್ಯಾಸಂಸ್ಥೆಯ ನಿರ್ದೇಶಕ ಡಾ. ಅಬ್ದುಲ್ ಬಶೀರ್, ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯ ಮುಖ್ಯಸ್ಥ ಡಾ. ಮುರಳಿಕೃಷ್ಣ ಇರ್ವತ್ರಾಯ, ಮಂಗಳೂರು ಭಾರತ್ ಇನ್ಫೋ-ಟೆಕ್ ಕಂಪೆನಿಯ ಚೇರ್ಮನ್ ಎಸ್. ಎಂ. ಮುಸ್ತಾಫಾ, ಮೀಫ್ ಉಪಾಧ್ಯಕ್ಷ ಸೂಡ ಅಧ್ಯಕ್ಷರಾದ ಕೆ. ಎಮ್. ಮುಸ್ತಾಫಾ, ಸಯ್ಯಿದ್ ಸಲಾಂ ತಂಙಳ್ ಪುಂಜಾಲಕಟ್ಟೆ ರವರು ಭಾಗವಹಿಸಿದ್ದರು. ವಕೀಲ ನೂರುದ್ದಿನ್ ಸಾಲ್ಮರ, ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ, ಪಂಚಾಯತ್ ಸದಸ್ಯ ಅಬ್ದುಲ್ ಕರೀಂ ಗೇರುಕಟ್ಟೆ, ಕಳಿಯ ಪಂಚಾಯತ್ ಪ್ರಭಾರ ಪಿಡಿಒ ಕುಂಞಿ, ಸಂಘಟಕ ಸಲೀಂ ಕನ್ಯಾಡಿ, ಉಪ್ಪಿನಂಗಡಿ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಖಲೀಲ್, ಜನಪ್ರಿಯ ಆಸ್ಪತ್ರೆಯ ಆಡಳಿತಾಧಿಕಾರಿ ಮನ್ಸೂರ್, ಪ್ಯಾರಾಮೆಡಿಕಲ್ ಅಲುಮಿನಿ ವಿದ್ಯಾರ್ಥಿ ನಾಯಕ ಸಫ್ವಾನ್, ರಿಝ್ವಾನ್, ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಪಿಆರ್‌ಒ ಗಣೇಶ್ ಭಾಗವಹಿಸಿದ್ದರು. ಸಂಸ್ಥೆಯ ಜನರಲ್ ಮ್ಯಾನೇಜರ್ ಹಾಗೂ ಪ್ಯಾರಾ ಮೆಡಿಕಲ್ ಪ್ರಾಂಶುಪಾಲ ಹೈದರ್ ಮರ್ದಾಳ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಝೀನತ್ ನಿರೂಪಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ ವಂದಿಸಿದರು.  

ವಾರ್ತಾ ಭಾರತಿ 17 Nov 2025 8:07 pm

ಕಡಲೆಕಾಯಿ ಪರಿಷೆಗೆ ಅದ್ಧೂರಿ ಚಾಲನೆ; ವಿದ್ಯಾರ್ಥಿಗಳು, ಮಕ್ಕಳಲ್ಲಿ ಸಂಭ್ರಮವೋ ಸಂಭ್ರಮ

ಬಸವನಗುಡಿ ದೊಡ್ಡಗಣಪತಿ ದೇವಾಲಯದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಆರಂಭವಾಗಿದೆ. ಇಂದು ಸಚಿವ ರಾಮಲಿಂಗಾರೆಡ್ಡಿ ಅಧಿಕೃತವಾಗಿ ಚಾಲನೆ ನೀಡಿದರು. ಐದು ದಿನಗಳವರೆಗೆ ನಡೆಯುವ ಈ ಪರಿಷೆಯಲ್ಲಿ ಭದ್ರತೆ, ಕುಡಿಯುವ ನೀರು, ಶೌಚಾಲಯದಂತಹ ಮೂಲಸೌಕರ್ಯ ಒದಗಿಸಲಾಗಿದೆ. ಪ್ಲಾಸ್ಟಿಕ್ ಮುಕ್ತ ಪರಿಷೆಗೆ ಆದ್ಯತೆ ನೀಡಲಾಗಿದೆ. ಇಂದಿನಿಂದ ಐದು ದಿನ ಪರಿಷೆ ನೋಡಲು ಅವಕಾಶ ಇರಲಿದೆ. ಈ ವರ್ಷ ಐದು ಲಕ್ಷಕ್ಕೂ ಮೀರಿ ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಸಚಿವ ರಾಮಲಿಂಗಾರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದರು.

ವಿಜಯ ಕರ್ನಾಟಕ 17 Nov 2025 8:06 pm

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು

ಹುಬ್ಬಳ್ಳಿ, ನ.17 : ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಪರಿಣಾಮ 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿದ್ದರು. ಈ ದುರಂತದಲ್ಲಿ ಕರ್ನಾಟಕದ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಹುಬ್ಬಳ್ಳಿ ನಗರದ ಗಣೇಶ ಪೇಟೆ ನಿವಾಸಿ ಅಬ್ದುಲ್ ಘನಿ ಶಿರಹಟ್ಟಿ (55) ಎಂದು ಗುರುತಿಸಲಾಗಿದೆ. ದುಬೈನ ಹೋಟೆಲ್‌ವೊಂದರಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ಘನಿ ಅವರು, ದುಬೈನಿಂದ ಸೌದಿಗೆ ಉಮ್ರಾಗೆ ತೆರಳಿದ್ದರು. ಆದರೆ, ಸೋಮವಾರ ನಡೆದ ಭೀಕರ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದವರು ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 17 Nov 2025 8:01 pm

ಸೋಷಿಯಲ್ ಮೀಡಿಯಾ ನಕಲಿ ಜಾಹೀರಾತು: ಸಾರ್ವಜನಿಕರು ಜಾಗೃತರಾಗಿರಲು ಗೃಹ ಸಚಿವಾಲಯ ಸಲಹೆ

ಮೋಸದ ಹೂಡಿಕೆ ಯೋಜನೆಗಳು, ನಕಲಿ ಉದ್ಯೋಗ ಆಫರ್ ಹಾಗೂ ವಿಸ್ತಾರವಾದ ಆನ್‌ಲೈನ್ ವಂಚನೆಗಳನ್ನು ಉತ್ತೇಜಿಸಲು ಬಳಸಲಾಗುವ ನಕಲಿ ಜಾಹೀರಾತುಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹೆಚ್ಚಾಗುತ್ತಿರುವ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ (MHA) ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಹಲವು ಬಾರಿ ಈ ಜಾಹೀರಾತುಗಳು ಬಳಕೆದಾರರನ್ನು ದಾರಿ ತಪ್ಪಿಸಲು ಡೀಪ್‌ಫೇಕ್ ವೀಡಿಯೊಗಳನ್ನು ಬಳಸುತ್ತಿವೆ. ಈ ವಂಚನೆಗಳು ದೇಶಾದ್ಯಂತ ಉದ್ಯೋಗ

ಒನ್ ಇ೦ಡಿಯ 17 Nov 2025 7:56 pm

ಬಳ್ಳಾರಿ | ಹಾಲುಮತ ಸಮಾಜದಿಂದ ಭಕ್ತ ಕನಕದಾಸರ ಭವ್ಯ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಹಾಲುಮತ ಸಮಾಜದಿಂದ ಭಕ್ತ ಕನಕದಾಸರ 535ನೇ ಜಯಂತ್ಯೋತ್ಸವ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಯ ಸಾಂಗತ್ರಯ ಪಾಠಶಾಲೆಯಿಂದ ಆರಂಭಗೊಂಡು ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ದಪ್ಪ ಗುಡಿವರೆಗೆ ತೆರಳಿ, ತದನಂತರ ಬೀರಲಿಂಗೇಶ್ವರ ಗುಡಿಹತ್ತಿರ ಸಮಾವೇಶಗೊಂಡಿತು. ತಾಷಾರಾಂಡೋಲ್, ಡೊಳ್ಳು ಮಂಗಳವಾದ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಪಾಲ್ಗೊಂಡಿದ್ದವು. ತಂಡದ ಡೊಳ್ಳು ಪ್ರದರ್ಶನ ಮೆರವಣಿಗೆ ಮೆರಗು ನೀಡುವ ಜೊತೆಗೆ ಜನರ ಆಕರ್ಷಣೆಗೆ ಪಾತ್ರರಾದರು. ಮೆರವಣಿಗೆಯದ್ದಕ್ಕೂ ಯುವಕರು ಕುಣಿದು ಸಂಭ್ರಮಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಕ್ತ ಕನಕದಾಸರ ಜಯಂತಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಜೆ.ಎನ್ ಗಣೇಶ, ಹಾಲುಮತ ಸಮಾಜದ ನಗರ ಘಟಕ ಅಧ್ಯಕ್ಷ ಕೆ.ವಸಂತಕುಮಾರ, ಉಪಾಧ್ಯಕ್ಷ ಕುರಿ ಸಿದ್ದಪ್ಪ, ಖಜಾಂಚಿ ಬಿ.ಶೇಖರ, ಮುಖಂಡರಾದ ಕೆ.ಯಮ್ಮನೂರಪ್ಪ, ಕೆ.ಹರಿನಾಥ, ಕುರಿ ಹುಸೇನಪ್ಪ, ನೆಲ್ಲೂಡಿ ವಿರೇಶಪ್ಪ ಶಿವಪುರ ರಮೇಶ ಮುತ್ತಣ ಬೀರಲಿಂಗ ವಿರುಪಣ್ಣ ಬಿ.ಲಕ್ಷ್ಮಣ, ಕುರಿ ಮಂಜುನಾಥ, ಬಳ್ಳಾಪುರ ಲಿಂಗಪ್ಪ, ಕೋಟ್ಟಾಲ್‌ಸುಧಾ, ಬಿಂಗಿ ವೆಂಕಟೇಶ ಕುಮಾರ, ಬಲಕುಂದಿ ರಾಜಶೇಖರ, ಕೆ.ರಂಗಪ್ಪ ಮೈಲಾರಿ ಯಲ್ಲಪ್ಪ, ಸೇರಿದಂತೆ ಅನೇಕರಿದ್ದರು.

ವಾರ್ತಾ ಭಾರತಿ 17 Nov 2025 7:53 pm

ವಿಜಯನಗರ | ಎರಡನೇ ಬೆಳೆಗೆ ನೀರು ಬಿಡುಗಡೆ ಮಾಡಲು 120 ಕಿಮೀ ಪಾದಯಾತ್ರೆ : ತುಂಗಭದ್ರಾ ಮಂಡಳಿಗೆ ರೈತರ ಮನವಿ

ವಿಜಯನಗರ (ಹೊಸಪೇಟೆ) : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡನೇ ಬೆಳೆಗೆ ನೀರು ಬಿಡುವುದಿಲ್ಲ, ಜನವರಿ ತಿಂಗಳವರೆಗೆ ಮಾತ್ರ ನೀರು ಬಿಡುತ್ತೇವೆ ಎಂಬ ತೀರ್ಮಾನವನ್ನು ರೈತರು ತೀವ್ರವಾಗಿ ವಿರೋಧಿಸಿದ್ದಾರೆ. ಹಿಂಗಾರು ಬೆಳೆಗಳಿಗೆ ಎಲ್​.ಎಲ್​.ಸಿ ಕಾಲುವೆಗೆ ಜನವರಿಯಿಂದ ಮಾರ್ಚ್ ತನಕ ನೀರು ಬಿಡಬೇಕು, ಜೊತೆಗೆ ಕ್ರಸ್ಟ್ ಗೆಟ್ ಅಳವಡಿಕೆ ತಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ನೂರಾರು ರೈತರು ಕರೂರು ಗ್ರಾಮದಿಂದ ತುಂಗಭದ್ರಾ ಮಂಡಳಿಯವರೆಗೆ ಸುಮಾರು 120 ಕಿಮೀ ಪಾದಯಾತ್ರೆ ನಡೆಸಿದರು. ಪಾದಯಾತ್ರೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಳ್ಳಾರಿ ಘಟಕ ನ.12 ರಿಂದ ಆರಂಭಿಸಿತ್ತು. ಕರೂರು, ಸಿರಿಗೇರಿ ಕ್ರಾಸ್, ಶಾನವಾಸಪುರ ಸೇರಿದಂತೆ 30ಕ್ಕೂ ಹೆಚ್ಚು ಹಳ್ಳಿಗಳನ್ನು ದಾಟಿಕೊಂಡು ಬಂದ ರೈತರು ನ.17ರಂದು ಮಂಡಳಿಗೆ ತಲುಪಿ ಮನವಿ ಸಲ್ಲಿಸಿದರು. ಈ ವೇಳೆ ರೈತ ಸಂಘದ ಕರೂರು ಘಟಕ ಅಧ್ಯಕ್ಷ ಆರ್.ಮಾಧವರೆಡ್ಡಿ ಮಾತನಾಡಿ, ರೈತರ ಹೆಸರನ್ನು ಹೇಳಿಕೊಂಡು ಕಾರ್ಖಾನೆಗಳಿಗೆ ನೀರು ಬಿಡುತ್ತಿದ್ದಾರೆ. ಎರಡನೇ ಬೆಳೆಗೆ ನೀರು ಕೊಡಬೇಡಿ ಎಂಬ ನಿರ್ಧಾರಕ್ಕೆ ರೈತರೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಜಲಾಶಯದಲ್ಲಿ 78 ಕ್ಯೂಸೆಕ್ಸ್ ನೀರು ಇದ್ದರೂ ನೀರು ಬಿಡುವುದಿಲ್ಲ ಎನ್ನುವುದು ನ್ಯಾಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಂಧ್ರ–ತೆಲಂಗಾಣಕ್ಕೆ ಹೋಲಿಸಿದರೆ ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಈ ನಾಲ್ಕು ಜಿಲ್ಲೆಗಳ 10 ಲಕ್ಷ ಎಕರೆ ಜಮೀನಿನ ಬದುಕೇ ತುಂಗಭದ್ರಾ ಜಲಾಶಯದ ಮೇಲೆ ನಿಂತಿದೆ. ಜಲಾಶಯದ ಕ್ರಸ್ಟ್ ಕಿತ್ತು ಹೋಗಿದ್ದರಿಂದ ಸಾವಿರಾರು ಕ್ಯೂಸೆಕ್ಸ್ ನೀರು ಸಮುದ್ರ ಪಾಲಾಗಿದೆ. ವರ್ಷಗಳಿಂದ ಗೇಟ್ ಅಳವಡಿಕೆ ವಿಳಂಬವಾಗಿದೆ ಎಂದರು. ಪಾದಯಾತ್ರೆಯಲ್ಲಿ ಜಾಗನೂರು ಮಲ್ಲಿಕಾರ್ಜುನರೆಡ್ಡಿ, ಕಾಳಿದಾಸ ಬಸವರಾಜಸ್ವಾಮಿ, ಲೇಪಾಕ್ಷಿ, ಪಂಪನಗೌಡ, ಸದಾಶಿವಪ್ಪ ಸೇರಿದಂತೆ ಅನೇಕ ರೈತರು ಭಾಗವಹಿಸಿದರು. ದಲಿತ ಹೋರಾಟಗಾರ ಕರಿಯಪ್ಪ ಗುಡಿಮನಿ, ವಸಂತ್ ರಾಜಕಾಳೆ ಹಾಗೂ ಕೆಆರ್‌ಎಸ್‌ ಪಕ್ಷದ ಪರ ಗಣೇಶ್ ಅವರು ರೈತರ ಬೇಡಿಕೆಗಳಿಗೆ ಬೆಂಬಲ ಸೂಚಿಸಿದರು. ಟಿ.ಬಿ. ಬೋರ್ಡ್ ಕಾರ್ಯದರ್ಶಿಗಳು ಮನವಿ ಸ್ವೀಕರಿಸಿ ಮಾತನಾಡಿ, ಸರ್ಕಾರ ನೀಡಿದ ಸೂಚನೆಯಂತೆ ನೀರು ಬಿಡುತ್ತೇವೆ. ನೀರು ಬ್ಯಾಂಕ್‌ನಲ್ಲಿರುವ ಹಣದಂತಿದೆ. ನೀವು ಬೇಕಾದಾಗ ಬಳಸಿಕೊಳ್ಳಬಹುದು. ಸರ್ಕಾರ ಹೇಳಿದರೆ ನೀರು ಬಿಡಲು ನಮ್ಮ ವಿರೋಧವಿಲ್ಲ. ಕ್ರೆಸ್ಟ್ ಗೇಟ್ ಅಳವಡಿಕೆಯನ್ನು ಡಿ.23ರಿಂದ ಆರಂಭಿಸಿ ಜೂ.20ರೊಳಗೆ ಪೂರ್ಣಗೊಳಿಸುವ ಯೋಜನೆಯಿದೆ. 40ಟಿ.ಎಂ.ನೀರು ಇದ್ದಾಗ ಗೇಟ್ ಅಳವಡಿಸುವುದಕ್ಕೂ ನೀರು ಬಿಡುವುದಕ್ಕೂ ಸಂಬಂಧವಿಲ್ಲ ಎಂದರು.

ವಾರ್ತಾ ಭಾರತಿ 17 Nov 2025 7:50 pm

ರಾಯಚೂರು ಏಮ್ಸ್ , ಪ್ರವಾಹ ಪರಿಹಾರ, ನೀರಾವರಿ - ಪ್ರಧಾನಿಗೆ ಸಿಎಂ ಐದು ಅಂಶಗಳ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ, ಮತ್ತು ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ಜಲ ಜೀವನ ಮಿಷನ್ ಯೋಜನೆಯಡಿ ಬಾಕಿ ಇರುವ ಕೇಂದ್ರದ ಅನುದಾನ ಬಿಡುಗಡೆಗೂ ಒತ್ತಾಯಿಸಿದರು.

ವಿಜಯ ಕರ್ನಾಟಕ 17 Nov 2025 7:49 pm

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ; ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ ಆಯ್ಕೆ

ಮಂಗಳೂರು: ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಯ ಮಹಾಸಭೆ ನಗರದ ಬೆಂದೂರು ಸಭಾಂಗಣದಲ್ಲಿ ನೆರವೇರಿತು. ಕ್ರೈಸ್ತ ಮುಖಂಡ ಹಾಗೂ ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇತರ ಪದಾಧಿಕಾರಿಗಳು: ಉಪಾಧ್ಯಕ್ಷ - ಲೆಸ್ಲಿ ರೇಗೊ, ಕಾರ್ಯದರ್ಶಿ ಎಲ್ರೊನ್ ರೊಡ್ರಿಗಸ್, ಜತೆ ಕಾರ್ಯದರ್ಶಿ ಜೇಮ್ಸ್ ಮಾಡ್ತಾ, ಕೋಶಾಧಿಕಾರಿ ನವೀನ್ ಲೋಬೊ ಹಾಗೂ ಮಾರ್ಸೆಲ್ ಮೊಂತೇರೊ, ರೊನಾಲ್ಡ್ ಗೋಮ್ಸ್, ಜೊಕಿಂ ಸ್ಟ್ಯಾನಿ ಆಲ್ವಾರಿಸ್, ವಿಲಿಯಮ್ ಡಿಸೋಜ, ನೆಲ್ಸನ್ ಮೊಂತೇರೊ ಮತ್ತು ಸುನೀಲ್ ವಾಸ್ ಸಮಿತಿ ಸದಸ್ಯರಾಗಿ ಆಯ್ಕೆಗೊಂಡರು. ಗಿಲ್ಬರ್ಟ್ ಡಿಸೋಜ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸಿದರು. ಕ್ರೈಸ್ತ ಸಮುದಾಯದ ಉದ್ಯಮಶೀಲತೆಯನ್ನು ಹೆಚ್ಚಿಸಲು ೧೯೯೯ ರಲ್ಲಿ ಆರಂಭಗೊಂಡ ರಚನಾ ಇದುವರೆಗೆ ಉದ್ಯಮಿಗಳನ್ನು ಬಲಪಡಿಸಲು ಹಾಗೂ ಯುವಜನತೆ ಉದ್ಯಮ ರಂಗಕ್ಕೆ ಬರಲು ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ರಚನಾ ಪ್ರಶಸ್ತಿಗಳ ಮೂಲಕ ಪ್ರೋತ್ಸಾಹ ನೀಡುತ್ತಿದೆ.

ವಾರ್ತಾ ಭಾರತಿ 17 Nov 2025 7:45 pm

Saudi Arabia | ಮದೀನಾದಲ್ಲಿ ಬಸ್ ದುರಂತ: ಜಿದ್ದಾದಲ್ಲಿನ ಕಾನ್ಸುಲೇಟ್ ನಲ್ಲಿ 24x7 ನಿಯಂತ್ರಣ ಕೊಠಡಿ ಪ್ರಾರಂಭ

ಜಿದ್ದಾ/ರಿಯಾದ್, ನ.17: ಸೌದಿ ಅರೇಬಿಯಾದ ಮದೀನಾ ಸಮೀಪ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸೋಮವಾರ ಬೆಳಗ್ಗಿನ ಜಾವ ಅಪಘಾತಕ್ಕೀಡಾಗಿ 45 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ಜಿದ್ದಾದಲ್ಲಿನ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ 24x7 ನಿಯಂತ್ರಣ ಕೊಠಡಿ ಸ್ಥಾಪಿಸಿದೆ. ಬಸ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಕಾನ್ಸುಲೇಟ್ ತೀವ್ರ ಸಂತಾಪ ಸೂಚಿಸಿದೆ. ತುರ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯ ಫೋನ್ ನಂಬರ್ ಗಳನ್ನು ಬಿಡುಗಡೆ ಮಾಡಲಾಗಿದ್ದು, 8002440003 (ಟೋಲ್ ಫ್ರೀ), 00966122614093, 00966126614276, ಮತ್ತು 00966556122301 (WhatsApp) ಸಂಖ್ಯೆಗಳು ಕಾರ್ಯನಿರ್ವಹಿಸುತ್ತಿದೆ ಎಂದು ಜಿದ್ದಾದ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಪ್ರಕಟನೆ ತಿಳಿಸಿದೆ. ಅಪಘಾತದ ಬಗ್ಗೆ ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ರಿಯಾದ್‌ನ ಭಾರತೀಯ ರಾಯಭಾರ ಕಚೇರಿ ಮತ್ತು ಜಿದ್ದಾದ ಕಾನ್ಸುಲೇಟ್ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಸಂಗ್ರಹಿಸುವ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯಾತ್ರಿಕರನ್ನು ಉಮ್ರಾಗೆ ಕರೆದೊಯ್ದ ನಿರ್ವಾಹಕರೊಂದಿಗೂ ಸಮನ್ವಯ ಮುಂದುವರಿದಿದೆ. ವಿವಿಧ ಆಸ್ಪತ್ರೆಗಳು ಮತ್ತು ಸ್ಥಳಗಳಲ್ಲಿ ಕಾನ್ಸುಲೇಟ್ ಸಿಬ್ಬಂದಿ ಹಾಗೂ ಭಾರತೀಯ ಸಮುದಾಯದ ಸ್ವಯಂಸೇವಕರ ತಂಡಗಳು ಕಾರ್ಯನಿರ್ವಹಿಸುತ್ತಿದೆ. ಅಪಘಾತದಿಂದ ಸಂತ್ರಸ್ತ ಕುಟುಂಬಗಳ ಮಾಹಿತಿ ಸಂಗ್ರಹಿಸಲು ಮತ್ತು ಅಗತ್ಯ ನೆರವು ಒದಗಿಸಲು ರಾಯಭಾರ ಕಚೇರಿ ಹಾಗೂ ಕಾನ್ಸುಲೇಟ್ ಅಧಿಕಾರಿಗಳು ತೆಲಂಗಾಣ ರಾಜ್ಯದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಜಿದ್ದಾದ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ತಿಳಿಸಿದೆ.

ವಾರ್ತಾ ಭಾರತಿ 17 Nov 2025 7:43 pm

ಆನ್‌ಲೈನ್ ಲೈಂಗಿಕ ಕಿರುಕುಳ ಜಾಲದಿಂದ ಜನರ ಹಣ ರಕ್ಷಿಸಿದ MHA ಮಾಸ್ಟರ್ ಪ್ಲ್ಯಾನ್

ಇಂದಿನ AI-ಚಾಲಿತ ಡಿಜಿಟಲ್ ಜಗತ್ತಿನಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (MHA) ಆನ್‌ಲೈನ್ ಲೈಂಗಿಕ ಕಿರುಕುಳ (Sextortion) ಮತ್ತು ಸಂಬಂಧಿತ ಸೈಬರ್ ಅಪರಾಧಗಳಿಂದ ಸಾರ್ವಜನಿಕರನ್ನು ರಕ್ಷಿಸಲು ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಮೂಲಕ, ಸಾಮಾಜಿಕ ಮಾಧ್ಯಮ, ಸಂದೇಶ ಅಪ್ಲಿಕೇಶನ್‌ಗಳು ಮತ್ತು ವೀಡಿಯೊ ಸಂವಹನ ವೇದಿಕೆಗಳ ಮೂಲಕ ಕಾರ್ಯನಿರ್ವಹಿಸುವ ಸಂಘಟಿತ ಸೈಬರ್ ಅಪರಾಧ

ಒನ್ ಇ೦ಡಿಯ 17 Nov 2025 7:30 pm

ಕರಾವಳಿಯ ಸರ್ವತೋಮುಖ ಅಭಿವೃದ್ಧಿಗೆ ಮಂಡಳಿ ಮೂಲಕ ಕ್ರಮ: ಎಂ.ಎ.ಗಫೂರ್

ಉಡುಪಿಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಪ್ರಥಮ ಸಭೆ

ವಾರ್ತಾ ಭಾರತಿ 17 Nov 2025 7:28 pm

ಆಫೀಸ್‌ನಲ್ಲಿ ಸಹೋದ್ಯೋಗಿಯನ್ನ ಲವ್‌ ಮಾಡಿದ್ರೆ ಕೆಲಸದಿಂದ ವಜಾ; ಕಂಪನಿಯ ಹೊಸ ರೂಲ್ಸ್‌ಗೆ ನೆಟ್ಟಿಗರು ದಂಗು

ಅಮೆರಿಕದ ಕಂಪನಿಯೊಂದು ತನ್ನ ಐದು ಬ್ರಾಂಚ್‌ನಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಉದ್ಯೋಗಿಗಳು ತಮ್ಮ ಸಹೋದ್ಯೋಗಿಗಳನ್ನು ಪ್ರೀತಿ ಮಾಡಿದರೆ, ಅಥವಾ ಪಾಲುದಾರಿಕೆ ಹೊಂದಿರುವ ಕಂಪನಿ ಉದ್ಯೋಗಿಗಳ ಜೊತೆ ಸಂಬಂಧ ಬೆಳೆಸಿದರೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗುವುದು ಎಂಬ ನಿಯಮ ತಂದಿದೆ ಈ ಬಗ್ಗೆ ಮ್ಯಾನೇಜರ್‌ ರೆಡ್ಡಿಟ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದು ಕೆಲಸದಿಂದ ಉದ್ಯೋಗಿಗಳನ್ನು ತೆಗೆದು ಹಾಕಲಿರುವ ಹೊಸ ತಂತ್ರ ಎಂದು ವ್ಯಂಗ್ಯವಾಡಿದ್ದಾರೆ.

ವಿಜಯ ಕರ್ನಾಟಕ 17 Nov 2025 7:23 pm

ಕಬ್ಬು ಬೆಳೆಗಾರರ ಅಸಲಿ ಸಮಸ್ಯೆಯನ್ನು ಪ್ರಧಾನಿಗೆ ಮನವರಿಕೆ ಮಾಡಿದ ಸಿದ್ದರಾಮಯ್ಯ - ಪ್ರಧಾನಿ ಮುಂದೆ ಸಿಎಂ 3 ಪ್ರಮುಖ ಬೇಡಿಕೆ

ರಾಜ್ಯ ಸರ್ಕಾರ ಕಬ್ಬಿನ ಬೆಂಬಲ ಬೆಲೆಯನ್ನು 3200 ರೂ.ಗಳಿಂದ 3300 ರೂ.ಗಳಿಗೆ ಏರಿಸಿದೆ. 100 ರೂ.ಗಳಲ್ಲಿ 50 ರೂ. ರಾಜ್ಯ ಸರ್ಕಾರ, 50 ರೂ. ಸಕ್ಕರೆ ಕಾರ್ಖಾನೆಗಳು ನೀಡಬೇಕು. ಸಕ್ಕರೆ ಕಾರ್ಖಾನೆಗಳು ಕೇಂದ್ರದ ಬೆಂಬಲ ಬೆಲೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದ್ದಾರೆ. ಸಕ್ಕರೆ ಎಂಎಸ್‌ಪಿ ಪರಿಷ್ಕರಣೆ, ಎಥನಾಲ್ ಖರೀದಿ ಹೆಚ್ಚಳ, ಕಬ್ಬಿನ ಬೆಲೆ ನಿಗದಿ ಅಧಿಕಾರ ರಾಜ್ಯಗಳಿಗೆ ನೀಡಲು ಮನವಿ ಮಾಡಿದ್ದಾರೆ.

ವಿಜಯ ಕರ್ನಾಟಕ 17 Nov 2025 7:22 pm

ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇಸ್ರಾ ಅವರ ಪುಸ್ತಕ ಬಿಡುಗಡೆ

ಸುಳ್ಯದ ಅರಂಬೂರು ಮೂಲದ ಯುವ ಬರಹಗಾರ್ತಿ ಆಯಿಷಾ ಬಶೀರ್ ಇಶ್ರಾ ಅವರ ಚೊಚ್ಚಲ ಕಾದಂಬರಿ ʼದಿ ಬಿಟ್ರಯಲ್ ಆಫ್ ದಿ ಕಿಂಗ್ಡಮ್ʼ ಅನ್ನು ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳವಾದ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. ಶಾರ್ಜಾ ಸರ್ಕಾರದ ಧಾರ್ಮಿಕ ಕಾರ್ಯಲಯದ ನಿರ್ದೇಶಕರು ಮತ್ತು ರಾಜ ವಂಶಸ್ಥರಾದ ಶೇಖ್ ಅಬ್ದುಲ್ಲಾ ಬಿನ್ ಮೊಹಮ್ಮದ್ ಅಲ್ ಖಾಸಿಮಿಯವರು ಪುಸ್ತಕ ಬಿಡುಗಡೆಗೊಳಿಸಿದರು. ಶಾರ್ಜಾ ಜೇಮ್ಸ್ ಮಿಲೇನಿಯಂ ಸ್ಕೂಲಿನ ಪ್ರಾಂಶುಪಾಲರಾದ ಲಿನಿ ಶಿವಪ್ರಸಾದ್ ಪ್ರಥಮ ಪ್ರತಿ ಸ್ವೀಕರಿಸಿದರು. ಸಯ್ಯದ್ ಪಾಣಕ್ಕಾಡ್ ಮುನವ್ವರಲಿ ಶಿಹಾಬ್ ತಂಙಳ್, ಯುಎಇಯ ಖ್ಯಾತ ಬರಹಗಾರ, ದಾರ್ ಅಲ್ ಯಾಸ್ಮಿನ್ ಪ್ರಕಾಶನದ ಮುಖ್ಯಸ್ಥ ಡಾ. ಮರಿಯಂ ಅಲ್ ಶೆಣಾಸಿ, ಕ್ಯಾಲಿಕಟ್ ಯೂನಿವರ್ಸಿಟಿಯ ವಿಶ್ರಾಂತ ಕುಲಪತಿ - ಇತಿಹಾಸಗಾರ ಡಾ. ಕೆ. ಕೆ. ಎನ್ ಕುರುಪ್, ಶಾರ್ಜಾದ ಉದ್ಯಮಿ ಶಂಸುದ್ದೀನ್ ಬಿನ್ ಮೊಹಮ್ಮದ್, ಶಾರ್ಜಾ ಇಂಡಿಯನ್ ಆಶೋಸಿಯೇಷನ್ ನ ಅಧ್ಯಕ್ಷರಾದ ನಿಝರ್ ತಳಂಗರ, ಸಿಲ್ವರ್ ಹೋಂ ರಿಯಲ್ ಎಸ್ಟೇಟ್ ನ ನಿರ್ದೇಶಕ ವಿ ಟಿ ಸಲೀಂ. ಮುನೀರ್ ಅಲ್ ವಫಾ, ಲಿಪಿ ಪಬ್ಲಿಕೇಷನ್ ನ ಎಂ.ಡಿ ಅಕ್ಬರ್ ಅಲಿ ಮೊದಲಾದವರು ಉಪಸ್ಥಿತರಿದ್ದರು. ಶಾರ್ಜಾ ಜೇಮ್ಸ್ ಮಿಲೇನಿಯಂ ಸ್ಕೂಲ್ ನ ವಿದ್ಯಾರ್ಥಿಯಾಗಿರುವ ಇಸ್ರಾ ತನ್ನ 8ನೇ ವಯಸ್ಸಿನಲ್ಲಿ ಸಣ್ಣ ಕಥೆಗಳ ಮತ್ತು ಕಾದಂಬರಿಯ ಎರಡು ಪುಸ್ತಕಗಳನ್ನು ಬರೆದು ಪ್ರಕಟಿಸುವ ಮೂಲಕ ಅತ್ಯಂತ ಕಿರಿಯ ಪ್ರಾಯದ ಬರಹಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಇವರು ಅರಂಬೂರಿನ ಬಶೀರ್ ಮತ್ತು ಹಸೀನಾ ದಂಪತಿಗಳ ಪುತ್ರಿ.

ವಾರ್ತಾ ಭಾರತಿ 17 Nov 2025 7:17 pm

ಬೀದರ್ | ಡಾ.ಅಬ್ದುಲ್ ಖದೀರ್‌ಗೆ ಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿ

ಬೀದರ್ : ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ 2022-23ನೇ ಸಾಲಿನ ಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ನೀಡಿದ ಅನುಪಮ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ. ಡಾ.ಅಬ್ದುಲ್ ಖದೀರ್ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಬೀದರ್‌ನಲ್ಲಿ 2024 ರಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮೊದಲ ಜಾಂಬೊರೇಟ್ ಮಾದರಿಯಾಗಿ ಸಂಘಟಿಸಿದ ಹಿರಿಮೆ ಅವರದ್ದಾಗಿದೆ. ಹಿಂದೆ ರಾಜ್ಯಮಟ್ಟದಲ್ಲಿ ಜಾಂಬೊರೇಟ್ ನಡೆಸಿಕೊಂಡು ಬರಲಾಗುತ್ತಿತ್ತು. ವಿಭಾಗಮಟ್ಟದಲ್ಲೂ ಕೂಡ ಜಾಂಬೊರೇಟ್ ಆಯೋಜನೆಗೆ ಡಾ.ಅಬ್ದುಲ್ ಖದೀರ್ ಅವರೇ ಕಾರಣರಾಗಿದ್ದಾರೆ. ಅವರಿಂದಾಗಿ ಈಗ ವಿಭಾಗಮಟ್ಟದಲ್ಲಿ ಕೂಡ ಜಾಂಬೊರೇಟ್‌ಗಳು ನಡೆಯುತ್ತಿವೆ. ಡಾ.ಅಬ್ದುಲ್ ಖದೀರ್ ಅವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಗೆ ಸದಾ ಸಹಕಾರ ನೀಡುತ್ತಾ ಬಂದಿದ್ದಾರೆ. ಉತ್ತರಪ್ರದೇಶದ ಲಕ್ನೋದ ರಾಜಭವನದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರ ಉಪಸ್ಥಿತಿಯಲ್ಲಿ ನ.26 ರಂದು ಮಧ್ಯಾಹ್ನ 3 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಡಾ.ಅಬ್ದುಲ್ ಖದೀರ್ ಅವರಿಗೆ ಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದಕ್ಕೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಮಲ್ಲೇಶ್ವರಿ ಜೂಜಾರೆ ಹಾಗೂ ಜಿಲ್ಲಾ ಮುಖ್ಯ ಆಯುಕ್ತೆ ಗುರಮ್ಮ ಸಿದ್ದಾರೆಡ್ಡಿ ಅವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Nov 2025 7:09 pm

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗೊತ್ತಿಲ್ಲ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಆದರೆ, ಚಳಿಗಾಲದ ಅಧಿವೇಶನಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಗೆ ಭೇಟಿ ನೀಡಿರುವ ಕುರಿತು ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಆಗಲಿದೆ ಎನ್ನುವುದು ನನಗೆ ಗೊತ್ತಿಲ್ಲ. ಸದ್ಯ ನಮ್ಮ ಮುಂದೆ ಇರುವ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಯಶಸ್ವಿಯಾಗಿ ನಡೆಯಬೇಕು. ಯಾವುದೇ ಸಮಸ್ಯೆ ಆಗದಂತೆ ಅಧಿವೇಶನ ನಡೆಸಬೇಕು ಎಂದರು. ಸದನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗಳು ನಡೆಯಬೇಕು. ಈ ಬಗ್ಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಜತೆಗೆ, ಬೆಳಗಾವಿಯಲ್ಲಿ ಸರಕಾರಿ ಪ್ರಕ್ರಿಯೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್ 8ರಿಂದ ಅಧಿವೇಶ ಆರಂಭಗೊಳ್ಳಲಿದೆ ಎಂದು ಖಾದರ್ ಉಲ್ಲೇಖಿಸಿದರು.

ವಾರ್ತಾ ಭಾರತಿ 17 Nov 2025 7:09 pm

ಉದ್ಯಮಿ ಕಿರುಕುಳ: ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ನಟಿಗೆ ಬೆಂಗಳೂರು ಪೊಲೀಸರಿಂದ ನೋಟಿಸ್‌!

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತ ಚಿತ್ರ ನಟಿಗೆ ವಿಚಾರಣೆಗೆ ಹಾಜರಾಗುವಂತೆ ಗೋವಿಂದರಾಜನಗರ ಪೊಲೀಸರು ನೋಟಿಸ್ ನೀಡಿದ್ದಾರೆ. ಉದ್ಯಮಿ ಅರವಿಂದ ವೆಂಕಟೇಶ್‌ರೆಡ್ಡಿ ವಿರುದ್ಧ ನಟಿ ದೂರು ನೀಡಿದ್ದು, ಕಿರುಕುಳ, ಮಾನಸಿಕ ಹಿಂಸೆ, ಫೋಟೋ ದುರ್ಬಳಕೆ, ಬೆದರಿಕೆ ಆರೋಪಗಳಿವೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ನಟಿಯಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

ವಿಜಯ ಕರ್ನಾಟಕ 17 Nov 2025 7:08 pm