ಉಡುಪಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ
ಉಡುಪಿ, ನ.28: ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ತಾನು ನೀಡಿದ ಪ್ರಥಮ ಭೇಟಿಯ ವೇಳೆ ಉಡುಪಿಯ ಜನತೆ ತನಗೆ ನೀಡಿದ ಆತ್ಮೀಯ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಸಂದೇಶವನ್ನು ನೀಡಿದ್ದಾರೆ. ಎಕ್ಸ್ನಲ್ಲಿ ಬನ್ನಂಜೆಯಿಂದ ಕಲ್ಸಂಕದವರೆಗೆ ನಡೆದ ರೋಡ್ ಶೋನ ಸುಮಾರು ಎರಡು ನಿಮಿಷಗಳ ವಿಡಿಯೋದೊಂದಿಗೆ ಅವರು ಬರೆದ ಕೃತಜ್ಞತಾ ಸಂದೇಶದಲ್ಲಿ ‘ಭಕ್ತಿ, ಕಲಿಕೆ ಮತ್ತು ಸಂಪ್ರದಾಯಕ್ಕೆ ಹೆಸರಾದ ಸ್ಥಳ ಉಡುಪಿಗೆ ಭೇಟಿ ನೀಡಿದ್ದು ಸಂತೋಷವಾಯಿತು. ಉಡುಪಿಯಲ್ಲಿ ನನಗೆ ದೊರೆತ ಸ್ವಾಗತ ಸದಾ ನೆನಪಿನಲ್ಲಿ ಉಳಿಯುತ್ತದೆ. ಜನತೆಗೆ ನನ್ನ ಕೃತಜ್ಞತೆಗಳು’ ಎಂದು ಅವರು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಹರ್ಯಾಣ | ವಿವಿಯಲ್ಲಿ ಮುಟ್ಟಿನ ಪುರಾವೆ ಕೇಳಿದ ಆರೋಪ; ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
ಹೊಸದಿಲ್ಲಿ, ನ. 28: ಹರ್ಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನೈರ್ಮಲ್ಯ ಕಾರ್ಮಿಕರಿಗೆ ಮುಟ್ಟಾಗಿರುವುದನ್ನು ಗುಪ್ತಾಂಗದ ಫೊಟೊಗಳ ಮೂಲಕ ಸಾಬೀತುಪಡಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಯ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರಕಾರ ಹಾಗೂ ಇತರರ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನಾ ಹಾಗೂ ಆರ್. ಮಹಾದೇವನ್ ಅವರ ಪೀಠ ಕೇಂದ್ರ ಸರಕಾರ ಹಾಗೂ ಇತರರಿಗೆ ನೋಟಿಸು ಜಾರಿ ಮಾಡಿದೆ. ‘‘ಇದು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡುತ್ತಾರೆ. ಈ ಸುದ್ದಿ ಕೇಳಿದ ಬಳಿಕ ಅವರು ಕೂಡ ಮುಟ್ಟಿನ ರಜೆಗೆ ಪುರಾವೆ ಕೇಳಬಹುದು ಎಂದು ನಾನು ಭಾವಿಸಿದೆ’’ ಎಂದು ನ್ಯಾಯಮೂರ್ತಿ ನಾಗರತ್ನ ಅಭಿಪ್ರಾಯಿಸಿದ್ದಾರೆ. ‘‘ಇದು ವ್ಯಕ್ತಿಗಳ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ಅನುಪಸ್ಥಿತಿಯಿಂದ ಕೆಲವು ಭಾರವಾದ ಕೆಲಸಗಳನ್ನು ಮಾಡಲು ಸಾಧ್ಯವಾಗದೇ ಇದ್ದರೆ, ಬೇರೆಯವರನ್ನು ನಿಯೋಜಿಸಬಹುದಿತ್ತು. ಈ ಅರ್ಜಿಯಿಂದ ಏನಾದರೂ ಒಳ್ಳೆಯದು ಆಗುತ್ತದೆ ಎಂದು ನಾವು ಭಾವಿಸುತ್ತೇವೆ’’ ಎಂದು ಅವರು ಹೇಳಿದ್ದಾರೆ. ವಿಚಾರಣೆ ಸಂದರ್ಭ ಸುಪ್ರೀಂ ಕೋರ್ಟ್ ಬಾರ್ ಅಸೋಶಿಯೇಷನ್ (ಎಸ್ಸಿಬಿಎ) ಅಧ್ಯಕ್ಷ ಹಾಗೂ ಹಿರಿಯ ವಕೀಲ ವಿಕಾಸ್ ಸಿಂಗ್, ಇದು ತುಂಬಾ ಗಂಭೀರವಾದ ಕ್ರಿಮಿನಲ್ ಪ್ರಕರಣ. ಇದು ಗಮನ ಹರಿಸಬೇಕಾದ ವಿಚಾರ ಎಂದು ಹೇಳಿದ್ದಾರೆ. ಅನಂತರ ಪೀಠ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತು. ಈ ಆರೋಪದ ಕುರಿತು ವಿಸ್ತೃತ ತನಿಖೆ ನಡೆಸುವಂತೆ ಕೇಂದ್ರ ಸರಕಾರ ಹಾಗೂ ಹರ್ಯಾಣ ಸರಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿ ಕೋರಿತ್ತು.
ನಾಪತ್ತೆಯಾದ ಎಂಡೋಸಲ್ಫಾನ್ ನ ನೂರಾರು ಬ್ಯಾರಲ್ ಗಳನ್ನು ಪತ್ತೆ ಹಚ್ಚಿ: ಸಿಪಿಸಿಬಿಗೆ ಎನ್ಜಿಟಿ ನಿರ್ದೇಶನ
ಹೊಸದಿಲ್ಲಿ, ನ. 28: ಕೇರಳದಲ್ಲಿ ನಿಷೇಧಿತ ಕೀಟನಾಶಕ ಎಂಡೋಸಲ್ಫಾನ್ ನ ನೂರಾರು ಬ್ಯಾರಲ್ ಗಳು ನಾಪತ್ತೆಯಾಗಿರುವ ಕುರಿತು ತನಿಖೆ ನಡೆಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ), ಕೇರಳ ತೋಟಗಾರಿಕೆ ನಿಗಮ (ಪಿಸಿಕೆ) ಹಾಗೂ ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಎಸ್ಪಿಸಿಬಿ)ಗೆ ನಿರ್ದೇಶಿಸಿದೆ. ಅಲ್ಲದೆ, ಜನವರಿ ಮೊದಲ ವಾರದ ಒಳಗೆ ವಿಸ್ತೃತ ವರದಿ ಸಲ್ಲಿಸುವಂತೆ ಅದು ನಿರ್ದೇಶಿಸಿದೆ. ಎಂಡೋಸಲ್ಫಾನ್ ಅತ್ಯಂತ ವಿಷಕಾರಿ ಕೀಟ ನಾಶಕವಾಗಿದ್ದು, ಇದು ಆನುವಂಶಿಕ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ. ಆದುದರಿಂದ ಈ ಕೀಟನಾಶಕವನ್ನು ಸುಪ್ರೀಂ ಕೋರ್ಟ್ 2011ರಲ್ಲಿ ನಿಷೇಧಿಸಿದೆ. ಸಿಪಿಸಿಬಿ 2024 ಜನವರಿ 1ರಂದು ಸಲ್ಲಿಸಿದ ತನ್ನ ಮೊದಲ ವರದಿಯಲ್ಲಿ ಕೇರಳದಲ್ಲಿ 278 ಬ್ಯಾರಲ್ ಎಂಡೋಸಲ್ಫಾನ್ ಇದೆ ಎಂದು ಹೇಳಿತ್ತು. ಆದರೆ, ಅದಕ್ಕೆ ಕೇವಲ 20 ಬ್ಯಾರಲ್ ಎಂಡೋಸಲ್ಫಾನ್ ಅನ್ನು ಪತ್ತೆ ಹಚ್ಚಲು ಹಾಗೂ ವಶಪಡಿಸಲು ಸಾಧ್ಯವಾಗಿತ್ತು. ಆದರೆ, ಅನಂತರ 2025 ಜುಲೈ 16ರಂದು ಬಿಡುಗಡೆ ಮಾಡಿದ ವರದಿಯಲ್ಲಿ ಸಿಪಿಸಿಬಿ, ಕೇವಲ 69 ಬ್ಯಾರೆಲ್ ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿತ್ತು. ಈ ಬ್ಯಾರಲ್ ಗಳ ಎಂಡೋಸಲ್ಫಾನ್ ಅನ್ನು ದಹನದ ಮೂಲಕ ವಿಲೇವಾರಿ ಮಾಡಲು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿತ್ತು. ಈ ಭಿನ್ನ ಅಭಿಪ್ರಾಯದ ಹಿನ್ನೆಲೆಯಲ್ಲಿ ಪರಸರ ಹೋರಾಟಗಾರ ಹಾಗೂ ಅರ್ಜಿದಾರ ರವೀಂದ್ರನಾಥ್ ಶ್ಯಾನ್ಭೋಗ್ ಎನ್ಜಿಟಿ ಮುಂದೆ ಪ್ರಶ್ನೆ ಎತ್ತಿದ್ದರು. ಸಿಪಿಸಿಬಿ ಪತ್ತೆ ಹಚ್ಚಿರುವ ಬ್ಯಾರಲ್ ಗಳ ಸಂಖ್ಯೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು. ಕೇರಳ-ಕರ್ನಾಟಕದ ಗುಡ್ಡಗಾಡು ಪ್ರದೇಶಗಳಲ್ಲಿ ಎಂಡೋಸಲ್ಪಾನ್ ಅನ್ನು ಅವೈಜ್ಞಾನಿಕವಾಗಿ ಹಾಗೂ ಅಕ್ರಮವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದರು. ನಾಪತ್ತೆಯಾದ ಎಂಡೋಸಲ್ಫಾನ್ ನ ಎಲ್ಲಾ ಬ್ಯಾರಲ್ ಗಳನ್ನು ಪತ್ತೆ ಹಚ್ಚುವಂತೆ ಹಾಗೂ ಎಂಡೋಸಲ್ಫಾನ್ ನ ಎಲ್ಲಾ ಕುರುಹನ್ನು ನಾಶಪಡಿಸುವಂತೆ ಶ್ಯಾನ್ ಭೋಗ್ ಅವರು ಸಿಪಿಸಿಬಿ ಹಾಗೂ ಸಂಬಂಧಿತ ಸಂಸ್ಥೆಗಳನ್ನು ಆಗ್ರಹಿಸಿದ್ದರು.
ಸುಳ್ಯ | ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು
ಸುಳ್ಯ : ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಸಂಪಾಜೆಯ ಚೌಕಿ ಬಳಿ ಗುರುವಾರ ಸಂಭವಿಸಿದೆ. ಮೂಲತಃ ಚೆಂಬು ಗ್ರಾಮದ ಉಂಬಳೆ ನಿವಾಸಿ ಆಗಿರುವ ಪ್ರಸ್ತುತ ಸಂಪಾಜೆಯ ಚೌಕಿ ಬಳಿಯ ಕಮಲ (85) ತನ್ನ ಮನೆಯ ಮಹಡಿಯಿಂದ ಇಳಿದುಕೊಂಡು ಬರುತ್ತಿರುವಾಗ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಓರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಈ ಕುರಿತು ಕಲ್ಲುಗುಂಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟರ್ಕಿ ಸಂಸತ್ತಿನಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ವಿದೇಶಾಂಗ ಸಚಿವ
ಅಂಕಾರ, ನ.28: ಟರ್ಕಿಯ ಸಂಸತ್ತಿನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ದಕ್ಷಿಣ ಏಶ್ಯಾದ ಪ್ರಾದೇಶಿಕ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಿದ್ದ ಸಂದರ್ಭ ವಿದೇಶಾಂಗ ಸಚಿವ ಹಕಾನ್ ಫಿದಾನ್ ಕಾಶ್ಮೀರದ ವಿಷಯ ಪ್ರಸ್ತಾಪಿಸಿದ್ದು ` ಮಾತುಕತೆ ಮತ್ತು ಅಂತರಾಷ್ಟ್ರೀಯ ಕಾನೂನಿನ ಆಧಾರದಲ್ಲಿ ಇದನ್ನು ಪರಿಹರಿಸಬೇಕು' ಎಂದಿದ್ದಾರೆ. ಸಂಸತ್ತಿನ ಯೋಜನೆ ಮತ್ತು ಅನುದಾನ ಸಮಿತಿಯ ಎದುರು ಟರ್ಕಿ ವಿದೇಶಾಂಗ ಇಲಾಖೆಯ 2026ರ ಬಜೆಟ್ ಮಂಡಿಸಿದ ಬಳಿಕ ಮಾಡಿದ ಭಾಷಣದಲ್ಲಿ ಕಾಶ್ಮೀರದ ಬಗ್ಗೆ ಸಚಿವ ಫಿದಾನ್ ಅಪ್ರಸ್ತುತ ಉಲ್ಲೇಖ ಮಾಡಿದ್ದಾರೆ. ` ಈ ಪ್ರದೇಶದಲ್ಲಿನ ಬಿಕ್ಕಟ್ಟುಗಳು, ವಿಶೇಷವಾಗಿ ಕಾಶ್ಮೀರ ಬಿಕ್ಕಟ್ಟನ್ನು ಅಂತರಾಷ್ಟ್ರೀಯ ಕಾನೂನು ಮತ್ತು ಮಾತುಕತೆಯ ಮೂಲಕ ಪರಿಹರಿಸಬೇಕು ಎಂದು ನಾವು ಒತ್ತಿಹೇಳುತ್ತಿದ್ದೇವೆ. ಮೇ ತಿಂಗಳಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉಲ್ಬಣವು ಈ ಪ್ರದೇಶದಲ್ಲಿನ ಸಂಘರ್ಷವನ್ನು ಮಾತುಕತೆಯ ಮೂಲಕ ಪರಿಹರಿಸುವ ಪ್ರಾಮುಖ್ಯತೆಯನ್ನು ಮತ್ತೊಮ್ಮೆ ಜಾಹೀರು ಪಡಿಸಿದೆ' ಎಂದವರು ಪ್ರತಿಪಾದಿಸಿದ್ದಾರೆ. ಫಿದಾನ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆ ` ಪಾಕಿಸ್ತಾನದ ಸಾರ್ವಭೌಮತ್ವವನ್ನು ಉಲ್ಲಂಘಿಸಿ ಭಾರತ ನಡೆಸಿದ್ದ ಅಪ್ರಚೋದಿತ ಆಕ್ರಮಣ ಮತ್ತು ಅಮಾಯಕ ಪ್ರಜೆಗಳ ಹತ್ಯೆಯ ವಿರುದ್ಧ ಟರ್ಕಿಯು ಪಾಕಿಸ್ತಾನದೊಂದಿಗೆ ಒಗ್ಗಟ್ಟು ಪ್ರದರ್ಶಿಸಿದೆ. ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ಬಗ್ಗೆ ಫಿದಾನ್ ಕಳವಳ ವ್ಯಕ್ತಪಡಿಸಿದ್ದು ನಿಕಟ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ಪರಾಮರ್ಶಿಸಲು ಉಭಯ ದೇಶಗಳ ಸಚಿವರೂ ಸಮ್ಮತಿಸಿದ್ದಾರೆ' ಎಂದು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ನವ ಭಾರತ ಯಾರಿಗೂ ತಲೆ ಬಾಗದು; ಶಾಂತಿ ವಿಷಯದಲ್ಲಿ ರಾಜಿ ಇಲ್ಲ : ಪ್ರಧಾನಿ ಮೋದಿ
ಉಡುಪಿ, ನ.28: ಇದು ನವ ಭಾರತ. ನಾವು ಯಾರ ಮುಂದೂ ತಲೆ ಬಾಗಿಸುವುದಿಲ್ಲ ಹಾಗೂ ದೇಶದ ಶಾಂತಿ ಮತ್ತು ಸ್ಥಿರತೆಯ ವಿಷಯದಲ್ಲಿ ಯಾರೊಂದಿಗೂ ರಾಜಿಯೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಘೋಷಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆದಿರುವ ಬೃಹತ್ ಗೀತೋತ್ಸವದ ಅಂಗವಾಗಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಶ್ರೀಕೃಷ್ಣ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಭಗವದ್ಗೀತೆಯ ಧರ್ಮೋಪದೇಶ ನೀಡಿದ್ದಾನೆ. ಸತ್ಯ ಹಾಗೂ ಶಾಂತಿಯ ಪುನರ್ ಸ್ಥಾಪನೆಗೆ ಅತ್ಯಾಚಾರಿಗಳನ್ನು ಶಿಕ್ಷಿಸುವುದು ಮುಖ್ಯ ಎಂಬುದನ್ನು ಗೀತೆ ನಮಗೆ ಬೋಧಿಸುತ್ತದೆ. ಇದು ನಮ್ಮ ಇಂದಿನ ರಾಷ್ಟ್ರೀಯ ಭದ್ರತಾ ನೀತಿಯೂ ಹೌದು ಎಂದವರು ಹೇಳಿದರು. ಕೆಂಪು ಕೋಟೆಯಿಂದ ತಾನು ಘೋಷಿಸಿದ ಮಿಷನ್ ಸುದರ್ಶನ್ ಚಕ್ರದ ಕುರಿತು ವಿವರಿಸಿದ ಪ್ರಧಾನಿ, ಇದನ್ನು ಸಹ ಕೃಷ್ಣನ ಗೀತೆಯ ಸಂದೇಶದಂತೆ ರೂಪಿಸಲಾಗಿದೆ. ದೇಶದ ಪ್ರಮುಖ ತಾಣಗಳು, ಕೈಗಾರಿಕೆಗಳು ಹಾಗೂ ಇತರ ಸಾರ್ವಜನಿಕ ಕ್ಷೇತ್ರಗಳ ಸುತ್ತಲೂ ಬಲವಾದ ಭದ್ರತಾ ಕೋಟೆಯನ್ನು ನಿರ್ಮಿಸಿ ಯಾವುದೇ ಶತ್ರು ಇದರತ್ತ ಬೊಟ್ಟು ತೋರಿಸಿದರೆ ಭಾರತದ ಸುದರ್ಶನ ಚಕ್ರ ಅದನ್ನು ಸರ್ವನಾಶ ಮಾಡುತ್ತದೆ ಎಂದರು. ಇದಕ್ಕಾಗಿ ನರೇಂದ್ರ ಮೋದಿ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕ್ಷಿಪ್ರಗತಿಯಲ್ಲಿ ಭಾರತ ನೀಡಿದ ಆಪರೇಷನ್ ಸಿಂಧೂರ ಪ್ರತಿದಾಳಿಯ ಉದಾಹರಣೆ ನೀಡಿದರು. ಇದು ದೇಶದ ನವಭಾರತ. ನಾವು ಯಾವುದೇ ಆಕ್ರಮಣವನ್ನು ಸಹಿಸುವುದಿಲ್ಲ ಎಂಬುದಕ್ಕೆ ಇದು ಸ್ಪಷ್ಟ ಉತ್ತರವಾಗಿದೆ ಎಂದರು. ಈ ದಾಳಿಯಲ್ಲಿ ಕರ್ನಾಟಕದವರೂ ಬಲಿಯಾಗಿದ್ದಾರೆ ಎಂದರು. ‘ಹಿಂದೆಲ್ಲಾ ಇಂಥ ದಾಳಿಗಳಾದಾಗ ಸರಕಾರ ಸುಮ್ಮನೆ ಕುಳಿತಿರುತ್ತಿತ್ತು. ಆದರೆ ಇದು ನವ ಭಾರತ, ನಾವು ಯಾರಿಗೂ ತಲೆಬಾಗುವುದಿಲ್ಲ. ದೇಶದ ಪ್ರಜೆಗಳ ರಕ್ಷಣೆಯ ಕರ್ತವ್ಯದಿಂದ ಎಂದೂ ವಿಮುಖರಾಗುವುದಿಲ್ಲ. ಭಾರತಕ್ಕೆ ಶಾಂತಿಯನ್ನು ಹೇಗೆ ಸ್ಥಾಪಿಸಬೇಕು ಹಾಗೂ ದೇಶದ ಪ್ರಜೆಗಳನ್ನು ಹೇಗೆ ರಕ್ಷಿಸಬೇಕು ಎಂಬುದು ಚೆನ್ನಾಗಿ ಗೊತ್ತಿದೆ.’ ಎಂದರು. ನಾವು ವಸುದೈವ ಕುಟುಂಬಕಂನ್ನು ನಂಬುತ್ತೇವೆ. ಇದೇ ವೇಳೆ ಧರ್ಮೋ ರಕ್ಷತಿ ರಕ್ಷಿತ: ಎಂಬುದನ್ನು ಅರಿತಿದ್ದೇವೆ. ನಮ್ಮ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆ ಹಿಂದೆಯೂ ಗೀತೆಯ ಸಂದೇಶವಿದೆ. ಒಂದು ಲಕ್ಷ ಕಂಠಗಳು ಸೇರಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸುವುದು ದಿವ್ಯ ಅನುಭೂತಿಯನ್ನು ನೀಡುತ್ತದೆ. ಇದು ಭಾರತದ ಭವ್ಯ ನಾಗರೀಕತೆಯನ್ನು, ಸಜೀವ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುತ್ತದೆ ಎಂದು ಹೇಳಿದರು. ನಾನು ಕೇವಲ ಮೂರು ದಿನಗಳ ಹಿಂದೆ ಭೇಟಿ ನೀಡಿದ ಅಯೋಧ್ಯೆಗೂ, ಉಡುಪಿ ನಡುವೆ ಸಂಬಂಧವಿದೆ ಎಂದ ಪ್ರದಾನಿ ಮೋದಿ, ನ.25ರಂದು ರಾಮ ಜನ್ಮಭೂಮಿ ಮಂದಿರದಲ್ಲಿ ತಾನು ಧರ್ಮಧ್ವಜವನ್ನು ಸ್ಥಾಪಿಸಿದ್ದೇನೆ. ಉಡುಪಿಯೂ ಸೇರಿದಂತೆ ದೇಶದ ವಿವಿಧೆಡೆಗಳ ಅಸಂಖ್ಯಾತ ಭಕ್ತರು ಇದಕ್ಕೆ ಸಾಕ್ಷಿಯಾಗಿದ್ದಾರೆ. ರಾಮ ಜನ್ಮಭೂಮಿ ಹೋರಾಟದಲ್ಲಿ ಉಡುಪಿಯ ಅದರಲ್ಲೂ ವಿಶೇಷವಾಗಿ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿಯವರ ಪಾತ್ರವನ್ನು ಸ್ಮರಿಸಿಕೊಂಡರು. ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮ ಮಂದಿರದಲ್ಲಿ ಭವ್ಯ ಧ್ವಾರವೊಂದಕ್ಕೆ ಜಗದ್ಗುರು ಮಧ್ವಾಚಾರ್ಯರ ಹೆಸರಿಡಲಾಗಿದೆ. ಮಧ್ವಾಚಾರ್ಯರ ಉಡುಪಿ ಹಾಗೂ ದೇಶಕ್ಕೆ ‘ಶ್ರೇಷ್ಠ ಹೆಮ್ಮೆ’ಯ ವಿಷಯವಾಗಿದ್ದಾರೆ. ಅವರು ಕರ್ನಾಟಕದ ಆಧ್ಯಾತ್ಮಿಕ ಪರಂಪರೆಗೆ ಪ್ರಮುಖ ಕೊಂಡಿಯಾಗಿದ್ದು, ರಾಮಮಂದಿರದ ಧ್ವಾರಕ್ಕೆ ಅವರ ಹೆಸರನ್ನಿಟ್ಟಿರುವುದು ಅವರಿಗೆ ನೀಡುವ ಗೌರವವಾಗಿದೆ ಎಂದರು. ದ್ವೈತ ಮತದ ಸಂಸ್ಥಾಪಕರಾದ ಮಧ್ವಾಚಾರ್ಯರು ಕರ್ನಾಟಕದ ಹರಿದಾಸ ಪರಂಪರೆಗೆ ಸ್ಪೂರ್ತಿಯ ಸೆಲೆಯಾಗಿದ್ದರು. ಇವರಿಂದ ಸ್ಪೂರ್ತಿ ಪಡೆದ ಪುರಂದರದಾಸರು ಹಾಗೂ ಕನಕದಾಸರು ಸರಳ ಕನ್ನಡದಲ್ಲಿ ಭಕ್ತಿ ಸಂದೇಶವನ್ನು ಜನತೆಗೆ ತಲುಪಿಸಿದರು. ದಾಸರ ಪದಗಳು ಕರ್ನಾಟಕದ ಪ್ರತಿ ಮನೆ-ಮನಗಳಿಗೂ ತಲುಪಿಸಿದ್ದು, ಈಗಿನ ಯುವ ಮನಸ್ಸುಗಳಲ್ಲಿ ಪ್ರತಿಧ್ವನಿ ಸುತ್ತಿದೆ ಎಂದರು. ಕನಕದಾಸರು ಕೃಷ್ಣನ ದರ್ಶನ ಮಾಡಿದ ಆ ಸಣ್ಣ ಕಿಂಡಿಯಲ್ಲಿ (ಕನಕನ ಕಿಂಡಿ) ಕೃಷ್ಣನನ್ನು ನೋಡಿದಾಗ ನನಗೆ ಆತನ ಭಕ್ತಿಯ ಆಳ ತಿಳಿಯಿತು ಎಂದು ನರೇಂದ್ರ ಮೋದಿ ಭಾವುಕತೆಯಿಂದ ನುಡಿದರು. ಕನಕದಾಸರಿಗೆ ಪುಷ್ಪಾರ್ಚನೆ; ಕಿಂಡಿಗೆ ಕನಕ ಕವಚ ಅರ್ಪಣೆ ರೋಡ್ ಶೋ ಬಳಿಕ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರಥಬೀದಿಯಲ್ಲಿ ಕನಕ ಗೋಪುರದ ಎದುರಿಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಅಲ್ಲೇ ಎದುರಿಗಿರುವ ಕನಕ ಗೋಪುರದ ಕನಕದಾಸರು ಕೃಷ್ಣನ ದರ್ಶನ ಮಾಡಿದ ಕನಕನ ಕಿಂಡಿಗೆ ಹೊದಿಸಿರುವ ಕನಕ ಕವಚವನ್ನು ಉದ್ಘಾಟಿಸಿದರು. ಬಳಿಕ ಮಠದೊಳಗೆ ತೆರಳಿದ ಮೋದಿ, ಗರ್ಭಗುಡಿಯ ಎದುರಿನ ತೀರ್ಥ ಮಂಟಪಕ್ಕೆ ಹೊದಿಸಿರುವ ಚಿನ್ನದ ಕವಚವನ್ನೂ ಅನಾವರಣಗೊಳಿಸಿದರು. ಬಳಿಕ ಕನಕ ಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿದರು. ಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪ್ರಧಾನಮಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ವಿಶೇಷ ಹೆಲಿಕಾಪ್ಟರ್ನಲ್ಲಿ ಆದಿಉಡುಪಿ ಹೆಲಿಪ್ಯಾಡ್ ಬಂದ ಪ್ರಧಾನಿ, ರೋಡ್ಶೋ ಮೂಲಕ 11:40ರ ಸುಮಾರಿಗೆ ಕೃಷ್ಣ ಮಠಕ್ಕೆ ಆಗಮಿಸಿದರು. ಅಲ್ಲಿ ಸುಮಾರು 40ನಿಮಿಷಗಳ ಕಾಲ ಇದ್ದ ಅವರು 12:20ಕ್ಕೆ ವೇದಿಕೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದರು.
ಏಶ್ಯ ಪವರ್ ಇಂಡೆಕ್ಸ್ | ಪ್ರಮುಖ ಶಕ್ತಿಯ ಸ್ಥಾನಕ್ಕೇರಿದ ಭಾರತ
ಹೊಸದಿಲ್ಲಿ,ನ.28: 2025ರ ಸಾಲಿನ ಏಶ್ಯ ಶಕ್ತಿ ಸೂಚ್ಯಂಕದಲ್ಲಿ ಭಾರತವು ಪ್ರಮುಖ ಶಕ್ತಿಯ ಸ್ಥಾನಮಾನವನ್ನು ಪಡೆದುಕೊಂಡಿದೆ. ಸೂಚ್ಯಂಕದಲ್ಲಿ ಅಮೆರಿಕ ಹಾಗೂ ಚೀನಾ ಕ್ರಮವಾಗಿ ಮೊದಲ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಭಾರತವು 40 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಿಶೇಷವಾಗಿ ಆರ್ಥಿಕ ಬೆಳವಣಿಗೆ ಹಾಗೂ ಮಿಲಿಟರಿ ಸಾಮರ್ಥ್ಯದ ಆಧಾರದಲ್ಲಿ ಭಾರತಕ್ಕೆ ಈ ಸ್ಥಾನ ದೊರೆತಿದೆ. ಆಸ್ಟ್ರೇಲಿಯ ಮೂಲದ ಚಿಂತನಸಂಸ್ಥೆಯಾದ ‘ಲೊವಿ ಇನ್ಸ್ಟಿಟ್ಯೂಟ್’ ಪ್ರತಿ ವರ್ಷ ಏಶ್ಯದ ಶಕ್ತಿ ಸೂಚ್ಯಂಕವನ್ನು ಬಿಡುಗಡೆಗೊಳಿಸುತ್ತಿದ್ದ್ದು,2025ರಲ್ಲಿ 40 ಅಂಕವನ್ನು ಪಡೆಯುವ ಮೂಲಕ ಭಾರತವು ಮೊದಲ ಬಾರಿಗೆ ಪ್ರಮುಖ ಶಕ್ತಿ ಎನಿಸಿಕೊಂಡಿದೆ. 2024ರ ಏಶ್ಯ ಶಕ್ತಿ ಸೂಚ್ಯಂಕಲ್ಲಿ ಭಾರತ 38.1 ಅಂಕಗಳನ್ನು ಗಳಿಸಿ ಮಧ್ಯಮ ಶಕ್ತಿಯೆನಿಸಿಕೊಂಡಿತ್ತು. ಈ ಸಲ ಅದು 0.9ರಷ್ಟು ಅಂಕಗಳನ್ನು ಹೆಚ್ಚಿಸಿಕೊಂಡಿದೆ. ಆಸ್ಟ್ರೇಲಿಯ ಸೇರಿದಂತೆ ಏಶ್ಯ-ಪೆಸಿಫಿಕ್ ಪ್ರದೇಶದ 27 ದೇಶಗಳ ಶಕ್ತಿಯ ಸಮೀಕ್ಷೆಯನ್ನು ನಡೆಸಿ ಲೋವಿ ಸಂಸ್ಥೆಯು ಈ ಸೂಚ್ಯಂಕವನ್ನು ಪ್ರಕಟಿಸುತ್ತದೆ. 100 ಅಂಕಗಳ ಪೈಕಿ ಅಮೆರಿಕವು 81.7 ಅಂಕಗಳನ್ನು ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, 73.7 ಅಂಕಗಳೊಂದಿಗೆ ಚೀನಾವು ಎರಡನೇ ಸ್ಥಾನ ಗಳಿಸಿದೆ. 38.8 ಅಂಕಗಳನ್ನು ಗಳಿಸಿರುವ ಜಪಾನ್ ದೇಶವು ನಾಲ್ಕನೇ ಸ್ಥಾನದಲ್ಲಿದೆ. ಅಮೆರಿಕವು ಪಾಶ್ಚಿಮಾತ್ಯ ರಾಷ್ಟ್ರವಾಗಿದ್ದರೂ, ಏಶ್ಯಖಂಡದಲ್ಲಿ ಅದು ಗಾಢವಾದ ಪ್ರಭಾವವನ್ನು ಹೊಂದಿದೆ.ಒಂದು ದೇಶದ ಸೇನಾ ಸಾಮರ್ಥ್ಯ, ರಕ್ಷಣಾ ಜಾಲ, ಆರ್ಥಿಕ ಸಾಮರ್ಥ್ಯ, ಅಂತಾರಾಷ್ಟ್ರೀಯ ಬಾಂಧವ್ಯಗಳು, ರಾಜತಾಂತ್ರಿಕ ಪ್ರಭಾವ, ಸಾಂಸ್ಕೃತಿಕ ಪ್ರಭಾವ,ಸಂಪನ್ಮೂಲ ಹಾಗೂ ಬಿಕ್ಕಟ್ಟಿನಿಂದ ಹೊರಬರುವ ಸಾಮರ್ಥ್ಯ ಇವುಗಳನ್ನು ಆಧರಿಸಿ ಸೂಚ್ಯಂಕದಲ್ಲಿ ಅದರ ಸ್ಥಾನಮಾನವನ್ನು ಗುರುತಿಸಲಾಗುತ್ತದೆ. ಲೊವಿ ಸೂಚ್ಯಂಕದಲ್ಲಿ 70ಕ್ಕಿಂತ ಅಧಿಕ ಅಂಕಗಳನ್ನು ಹೊಂದುವ ದೇಶಗಳಿಗೆ ಸೂಪರ್ ಪವರ್ ಸ್ಥಾನ, 40ರಿಂದ70ರೊಳಗೆ ಅಂಕ ಪಡೆದಿರುವ ದೇಶಗಳಿಗೆ ಪ್ರಮುಖ ಶಕ್ತಿ (ಮೇಜರ್ ಪವರ್) ಯ ಸ್ಥಾನ ನೀಡಲಾಗುತ್ತದೆ. ಹತ್ತಕ್ಕಿಂತ ಅಧಿಕ ಅಂಕ ಹೊಂದಿರುವ ದೇಶಗಳಿಗೆ ಮಧ್ಯಮ ಶಕ್ತಿ ಹಾಗೂ 10ಕ್ಕಿಂತ ಕಡಿಮೆ ಅಂಕ ಹೊಂದಿರುವ ದೇಶಗಳಿಗೆ ಅಲ್ಪಶಕ್ತಿ (ಮೈನರ್ ಪವರ್) ದೇಶಗಳೆಂದು ಗುರುತಿಸಲಾಗುತ್ತದೆ. 2025ರ ಸಾಲಿನಲ್ಲಿ ಭಾರತದ ಆರ್ಥಿಕ ಹಾಗೂ ಸೇನಾ ಸಾಮರ್ಥ್ಯಗಳೆರಡೂ ಅಧಿಕಗೊಂಡಿದೆ ಎಂದು ಲೊವಿ ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಭಾರತದ ಸೇನಾ ಸಾಮರ್ಥ್ಯವೂ ಗಣನೀಯವಾಗಿ ಸುಧಾರಣೆಗೊಂಡಿದೆ ಎಂದಿದೆ. ಆದರೆ ಅದರ ರಕ್ಷಣಾ ಜಾಲದಲ್ಲಿ ಅದು 11 ರ್ಯಾಂಕ್ ನಲ್ಲಿದ್ದು, ಹಿಂದಿನ ಆವೃತ್ತಿಗಿಂತ ಈ ಸಲ ಇಳಿಕೆಯನ್ನು ಕಂಡಿದೆ. ರಕ್ಷಣಾ ಜಾಲದಲ್ಲಿ ಫಿಲಿಪ್ಪೀನ್ಸ್ ಹಾಗೂ ಥೈಲ್ಯಾಂಡ್ ದೇಶಗಳು ಭಾರತವನ್ನು ಹಿಂದಿಕ್ಕಿವೆ. ಆದಾಗ್ಯೂ ರಾಜತಾಂತ್ರಿಕ ಬಾಂಧವ್ಯ ಹಾಗೂ ರಕ್ಷಣಾ ಜಾಲದಲ್ಲಿ ಭಾರತವು ಸುಧಾರಣೆಯನ್ನು ಕಂಡಿಲ್ಲವೆಂದು ಲೊವಿ ಇನ್ಸ್ಟಿಟ್ಯೂಟ್ ಹೇಳಿದೆ. ಆರ್ಥಿಕ ಸಾಮರ್ಥ್ಯ ಹಾಗೂ ಭವಿಷ್ಯದ ಸಂಪನ್ಮೂಲ ಮಾನದಂಡಗಳಲ್ಲಿ ಭಾರತವು ತೃತೀಯ ಸ್ಥಾನ ಗಳಿಸಿದೆ. ಆರ್ಥಿಕ ಸಾಮರ್ಥ್ಯದಲ್ಲಿ ಅದು ಜಪಾನನ್ನು ಹಿಂದಿಕ್ಕಿದೆ.
ಪುನೀತ್ ಕೆರೆಹಳ್ಳಿಗೆ ಸನ್ಮಾನ ಮಾಡಿದ ಸಂತೋಷ್ ಹೆಗ್ಡೆ; ಭಾರೀ ಟೀಕೆ ವ್ಯಕ್ತ! ಕ್ಷಮೆ ಕೋರಿದ ನಿವೃತ್ತಿ ನ್ಯಾಯಮೂರ್ತಿಗಳು
ಖಾಸಗಿ ಕಾರ್ಯಕ್ರಮವೊಂದರಲ್ಲಿ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸನ್ಮಾನ ಮಾಡಿದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವು. ಟೀಕೆ ವ್ಯಕ್ತವಾದ ಬಳಿಕ ಸಂತೋಷ್ ಹೆಗ್ಡೆ ಕ್ಷಮೆಯಾಚಿಸಿದರು. ಪುನೀತ್ ಕೆರೆಹಳ್ಳಿ ಕೊಲೆ ಆರೋಪ ಎದುರಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಅವರು ತಿಳಿಸಿದರು.
ಬಿಹಾರ | ಮಹಿಳಾ ರೋಜ್ಗಾರ್ ಯೋಜನೆಯ 10 ಲಕ್ಷ ಫಲಾನುಭವಿಗಳಿಗೆ 1 ಸಾವಿರ ಕೋಟಿ ರೂ. ಬಿಡುಗಡೆ
ಸ್ವಉದ್ಯೋಗಕ್ಕಾಗಿ ಪ್ರತಿ ಮಹಿಳೆಗೆ ತಲಾ 10 ಸಾವಿರ ರೂ. ವಿತರಣೆ
ನ. 29ರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ - ಡಿಕೆಶಿ ಭೇಟಿ; ಕುತೂಹಲ ಕೆರಳಿಸಿದ ಬೆಳವಣಿಗೆ - ಹೈಕಮಾಂಡ್ ಸೂಚನೆ ಮೇರೆಗೆ ಸಭೆ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಸಂದರ್ಭದಲ್ಲೇ ನ. 29ರಂದು ಬೆಳಗ್ಗೆ 9.30ರ ಸುಮಾರಿಗೆ ಡಿಕೆಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಒಂದು ಮೂಲದ ಪ್ರಕಾರ, ಈ ಭೇಟಿಯು ಹೈಕಮಾಂಡ್ ಸೂಚನೆಯಂತೆ ಏರ್ಪಾಟಾಗಿದೆ. ಹಾಗಾಗಿ, ಇದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಪಾಕಿಸ್ತಾನ | ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಗೆ ಅನುಮತಿ ಕೋರಿ ಸಹೋದರಿಯಿಂದ ಅರ್ಜಿ
ಲಾಹೋರ್, ನ.28: ಅಡಿಯಾಲಾ ಜೈಲಿನಲ್ಲಿ ಬಂಧನದಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ರನ್ನು ಭೇಟಿಯಾಗಲು ಅನುಮತಿ ನಿರಾಕರಿಸುವ ಮೂಲಕ ಜೈಲಿನ ಸೂಪರಿಂಟೆಂಡೆಂಟ್ ಹಾಗೂ ಇತರರು ನ್ಯಾಯಾಂಗ ನಿಂದನೆ ಎಸಗಿದ್ದಾರೆಂದು ಆರೋಪಿಸಿ ಇಮ್ರಾನ್ ಖಾನ್ ಅವರ ಸಹೋದರಿ ಅಲೀಮಾ ಖಾನ್ ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ದಾಖಲಿಸಿದ್ದಾರೆ. ಖೈಬರ್ ಪಖ್ತೂಂಕ್ವಾದ ಮುಖ್ಯಮಂತ್ರಿ ಸೊಹೈಲ್ ಅಫ್ರಿದಿ ಸೇರಿದಂತೆ ಪಾಕಿಸ್ತಾನ್ ತೆಹ್ರೀಕೆ ಇನ್ಸಾಫ್(ಪಿಟಿಐ) ಪಕ್ಷದ ಹಲವಾರು ನಾಯಕರು ಈ ಸಂದರ್ಭ ಹಾಜರಿದ್ದರು. ಇಮ್ರಾನ್ ರನ್ನು ಭೇಟಿಯಾಗಲು ಅನುಮತಿ ನೀಡುವಂತೆ ಜೈಲಿನ ಸೂಪರಿಂಟೆಂಡೆಟ್, ಬೆರೂಮಿ ಪೊಲೀಸ್ ಠಾಣೆಯ ಅಧಿಕಾರಿ, ಪಾಕಿಸ್ತಾನದ ಆಂತರಿಕ ಇಲಾಖೆಯ ಕಾರ್ಯದರ್ಶಿ ಮತ್ತು ಪಂಜಾಬ್ ಪ್ರಾಂತೀಯ ಸರಕಾರದ ಗೃಹ ಇಲಾಖೆಯ ಕಾರ್ಯದರ್ಶಿಗೆ ಸೂಚಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಹಲವು ವಾರಗಳಿಂದ ಲಿಖಿತ ಕೋರಿಕೆ ಸಲ್ಲಿಸಿದರೂ ಇಮ್ರಾನ್ ಖಾನ್ ರನ್ನು ಭೇಟಿಯಾಗಲು ಕುಟುಂಬದವರಿಗೆ ಅವಕಾಶ ನಿರಾಕರಿಸುವ ಮೂಲಕ ಜೈಲು ಅಧಿಕಾರಿಗಳು ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ. ಇಮ್ರಾನ್ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಕಳವಳಗೊಂಡಿರುವುದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಈ ಮಧ್ಯೆ, ಇಮ್ರಾನ್ ಖಾನ್ ಅವರು ಜೈಲಿನಲ್ಲಿಯೇ ಮೃತಪಟ್ಟಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿರುವ ಪಾಕಿಸ್ತಾನದ ಆಂತರಿಕ ಸಚಿವ ತಲಾಲ್ ಚೌಧರಿ ` ಇಮ್ರಾನ್ ಆರೋಗ್ಯವಾಗಿದ್ದಾರೆ ಮತ್ತು ಯಾವುದೇ ಕೈದಿಗಳಿಗೆ ಲಭ್ಯವಿಲ್ಲದ ವೈಯಕ್ತಿಕ ಬಾಣಸಿಗನಂತಹ ಸೌಲಭ್ಯಗಳನ್ನು ಆನಂದಿಸುತ್ತಿದ್ದಾರೆ' ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ.
ಕ್ರಿಕೆಟ್ ಆಡಿದರೆ ಪಾರ್ಶ್ವವಾಯುಗೆ ಒಳಗಾಗಬಹುದು ಎಂದು ಅಭಿಷೇಕ್ ರೆಡ್ಡಿಗೆ ವೈದ್ಯರು ಎಚ್ಚರಿಕೆ ನೀಡಿದ್ದರು!
ಎರಡು ಬಾರಿ ಶಸ್ತ್ರಚಿಕಿತ್ಸೆ; ವರ್ಷಗಳ ಕಾಲ ಆಸ್ಪತ್ರೆಯಲ್ಲಿದ್ದ ಕ್ರಿಕೆಟರ್
ಟಿ20 ಕ್ರಿಕೆಟ್ ನಲ್ಲಿ 10ನೇ ಬಾರಿ ಸೊನ್ನೆ ಸುತ್ತಿದ ಬಾಬರ್ ಆಝಂ
ರಾವಲ್ಪಿಂಡಿ, ನ.28: ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಗುರುವಾರ ರಾತ್ರಿ ಶ್ರೀಲಂಕಾ ತಂಡದ ವಿರುದ್ಧ ಟಿ20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಮತ್ತೊಮ್ಮೆ ಶೂನ್ಯಕ್ಕೆ ಔಟಾದರು. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಹೆಚ್ಚು ಬಾರಿ ಸೊನ್ನೆ ಸುತ್ತಿದ್ದ ತಮ್ಮದೇ ದೇಶದ ಉಮರ್ ಅಕ್ಮಲ್ ಹಾಗೂ ಸಯೀಮ್ ಅಯ್ಯೂಬ್ ಅವರ ಅನಪೇಕ್ಷಿತ ದಾಖಲೆಯನ್ನು ಸರಿಗಟ್ಟಿದ್ದಾರೆ. 31ರ ವಯಸ್ಸಿನ ಬಾಬರ್ ಈಗ ನಡೆಯುತ್ತಿರುವ ತ್ರಿಕೋನ ಸರಣಿಯಲ್ಲಿ ಶ್ರೀಲಂಕಾ ತಂಡದ ವಿರುದ್ಧ ಆಡಿರುವ ಆರನೇ ಪಂದ್ಯದಲ್ಲಿ ಎರಡು ಎಸೆತಗಳನ್ನು ಎದುರಿಸಿದ್ದರೂ ರನ್ ಖಾತೆ ತೆರೆಯದೆ ಔಟಾದರು. ಗೆಲ್ಲಲು 185 ರನ ಗುರಿ ಪಡೆದಿದ್ದ ಪಾಕಿಸ್ತಾನ ತಂಡವು ಬಾಬರ್ ರಿಂದ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿತ್ತು. ಆದರೆ ಅವರು ದುಷ್ಮಂತ ಚಾಮೀರ ಬೌಲಿಂಗ್ ನಲ್ಲಿ ನಾಲ್ಕನೇ ಓವರ್ ನ ಕೊನೆಯ ಎಸೆತದಲ್ಲಿ ಎಲ್ಬಿಡಬ್ಲ್ಯು ಬಲೆಗೆ ಬಿದ್ದರು. ಬಾಬರ್ ಟಿ20 ಕ್ರಿಕೆಟ್ ನಲ್ಲಿ 10ನೇ ಬಾರಿ ಶೂನ್ಯ ಸಂಪಾದಿಸಿದರು. ಈ ಮೂಲಕ ಪಾಕಿಸ್ತಾನದ ಉಮರ್ ಅಕ್ಮಲ್ ಹಾಗೂ ಸಯೀಮ್ ಅಯ್ಯೂಬ್ ಅವರೊಂದಿಗೆ ಸ್ಥಾನ ಹಂಚಿಕೊಂಡರು. ಜಾಗತಿಕ ಮಟ್ಟದಲ್ಲಿ ಶ್ರೀಲಂಕಾದ ಮಾಜಿ ನಾಯಕ ದಸುನ್ ಶನಕ ಟಿ20 ಕ್ರಿಕೆಟ್ ನಲ್ಲಿ ಅತ್ಯಂತ ಹೆಚ್ಚು 15 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಆರು ಆಟಗಾರರು 13 ಬಾರಿ ಶೂನ್ಯಕ್ಕೆ ಔಟಾಗಿದ್ದು, ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ತನ್ನ ವೃತ್ತಿಜೀವನದಲ್ಲಿ 12 ಬಾರಿ ಶೂನ್ಯ ಸಂಪಾದಿಸಿದ್ದರು. ►ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಪಾಕಿಸ್ತಾನದ ಆಟಗಾರರು ಸಯೀಮ್ ಅಯ್ಯೂಬ್-10 ಉಮರ್ ಅಕ್ಮಲ್-10 ಬಾಬರ್ ಆಝಂ-10 ಶಾಹೀದ್ ಅಫ್ರಿದಿ-8 ಕಮ್ರಾನ್ ಅಕ್ಮಲ್-7 ಮುಹಮ್ಮದ್ ನವಾಝ್-7 ಮುಹಮ್ಮದ್ ಹಫೀಝ್-7
ಏಶ್ಯ ಕಪ್ ಗೆ ಭಾರತದ ಅಂಡರ್-19 ಕ್ರಿಕೆಟ್ ತಂಡ ಪ್ರಕಟ; ಆಯುಷ್ ಮ್ಹಾತ್ರೆ ನಾಯಕ, ವಿಹಾನ್ ಮಲ್ಹೋತ್ರಾ ಉಪ ನಾಯಕ
ಹೊಸದಿಲ್ಲಿ, ನ.28: ದುಬೈನಲ್ಲಿ ಡಿಸೆಂಬರ್ 12ರಿಂದ 21ರ ತನಕ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಶ್ಯಕಪ್ ಟೂರ್ನಿಗಾಗಿ ಬಿಸಿಸಿಐನ ಜೂನಿಯರ್ ಕ್ರಿಕೆಟ್ ಸಮಿತಿಯು ಶುಕ್ರವಾರ 15 ಸದಸ್ಯರನ್ನು ಒಳಗೊಂಡ ಭಾರತದ ಅಂಡರ್-19 ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಆಯುಷ್ ಮ್ಹಾತ್ರೆ ನಾಯಕನಾಗಿ ನೇಮಕಗೊಂಡಿದ್ದು, ವಿಹಾನ್ ಮಲ್ಹೋತ್ರಾ ಉಪ ನಾಯಕನಾಗಿ ಆಯ್ಕೆಯಾಗಿದ್ದಾರೆ. ಎಲ್ಲರ ಕಣ್ಣು ಯುವ ಆಟಗಾರ ವೈಭವ್ ಸೂರ್ಯವಂಶಿ ಮೇಲೆ ನೆಟ್ಟಿದೆ. ಎಮರ್ಜಿಂಗ್ ಏಶ್ಯ ಕಪ್ ನಲ್ಲಿ ಭಾರತ ‘ಎ’ ತಂಡ ಫೈನಲ್ ಗೆ ತಲುಪುವಲ್ಲಿ ವಿಫಲವಾಗಿದ್ದರೂ ವೈಭವ್ ಬ್ಯಾಟಿಂಗ್ ವೈಭವದಿಂದ ಮಿಂಚಿದ್ದರು. ಎಸಿಸಿ ಪುರುಷರ ಅಂಡರ್-19 ಏಶ್ಯ ಕಪ್ ಟೂರ್ನಿಯನ್ನು ಏಕದಿನ ಮಾದರಿಯಲ್ಲಿ ಆಡಲಾಗುತ್ತಿದೆ. ಮುಂಬೈ ಬ್ಯಾಟರ್ ಆಯುಷ್ ಮ್ಹಾತ್ರೆ ಸದ್ಯ ಉತ್ತಮ ಫಾರ್ಮ್ನಲ್ಲಿರದಿದ್ದರೂ ನಾಯಕನಾಗಿ ಆಯ್ಕೆಯಾಗಿದ್ದಾರೆ. 2025ರ ಆವೃತ್ತಿಯ ಐಪಿಎಲ್ನಲ್ಲಿ ಋತುರಾಜ್ ಗಾಯಕ್ವಾಡ್ ಬದಲಿಗೆ ಚೆನ್ನೈ ತಂಡದ ಪರ ಆಡಿದ್ದ ಆಯುಷ್ ಗಮನಾರ್ಹ ಪ್ರದರ್ಶನ ನೀಡಿದ್ದರು. ಇಂಗ್ಲೆಂಡ್ ಕ್ರಿಕೆಟ್ ಪ್ರವಾಸದ ವೇಳೆ ನಾಲ್ಕು ಏಕದಿನ ಪಂದ್ಯಗಳಲ್ಲಿ ಕೇವಲ 27 ರನ್ ಗಳಿಸಿದ್ದರು. ಆದರೆ ಎರಡು ಪಂದ್ಯಗಳ ಯೂತ್ ಟೆಸ್ಟ್ನಲ್ಲಿ 340 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡಿದ್ದರು. ಆಸ್ಟ್ರೇಲಿಯದಲ್ಲಿ ನಡೆದ 3 ಏಕದಿನ ಪಂದ್ಯಗಳಲ್ಲಿ ಕೇವಲ 10 ರನ್ ಗಳಿಸಿದ್ದರು. ಗುರುವಾರ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ ವಿದರ್ಭ ವಿರುದ್ಧ 110 ಎಸೆತಗಳಲ್ಲಿ ಔಟಾಗದೆ 53 ರನ್ ಗಳಿಸುವುದರೊಂದಿಗೆ ಮುಂಬೈ ತಂಡಕ್ಕೆ ಏಳು ವಿಕೆಟ್ ಗಳ ಗೆಲುವು ತಂದುಕೊಟ್ಟಿದ್ದರು. ಭಾರತ ಹಾಗೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡಗಳ ನಡುವಿನ ಗ್ರೂಪ್ ಪಂದ್ಯವು ಡಿಸೆಂಬರ್ 14ರಂದು ಎಸಿಸಿ ಅಕಾಡೆಮಿಯಲ್ಲಿ ನಡೆಯಲಿದೆ. ಭಾರತದ ಯುವ ತಂಡವು ಭಾರೀ ನಿರೀಕ್ಷೆಗಳೊಂದಿಗೆ ಪಂದ್ಯಾವಳಿಯನ್ನು ಪ್ರವೇಶಿಸಲಿದೆ. ‘ಎ’ ಗುಂಪಿನಲ್ಲಿರುವ ಭಾರತ ತಂಡವು ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯವನ್ನಾಡುವ ಮೊದಲು ಡಿ.12ರಂದು ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಕ್ವಾಲಿಫೈಯರ್ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ‘ಎ’ ಗುಂಪಿನಲ್ಲಿರುವ ಇನ್ನೆರಡು ಕ್ವಾಲಿಫೈಯರ್ ತಂಡಗಳು ಯಾವುದೆಂದು ಇನ್ನೂ ನಿರ್ಧಾರವಾಗಿಲ್ಲ. ‘ಬಿ’ ಗುಂಪಿನಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಹಾಗೂ ಒಂದು ಕ್ವಾಲಿಫೈಯರ್ ತಂಡವಿದೆ. ಏಶ್ಯ ಕಪ್ ಪಂದ್ಯಾವಳಿಯು ಡಿಸೆಂಬರ್ 12ರಂದು ಆರಂಭವಾಗಲಿದ್ದು, ಡಿ.21ರಂದು ಕೊನೆಯ ಪಂದ್ಯ ನಡೆಯಲಿದೆ. ಅಂಡರ್-19 ಮಟ್ಟದ ಟೂರ್ನಿಯಲ್ಲಿ ಈ ತನಕ ಭಾರತ ತಂಡವು ಪ್ರಾಬಲ್ಯ ಸಾಧಿಸುತ್ತಾ ಬಂದಿದೆ. ಇತ್ತೀಚೆಗೆ ಅಸ್ಥಿರ ಪ್ರದರ್ಶನ ನೀಡುತ್ತಿರುವ ಭಾರತ ತಂಡವು ಈ ಬಾರಿ ಪ್ರಾದೇಶಿಕ ಮಟ್ಟದಲ್ಲಿ ತನ್ನ ಪಾರಮ್ಯವನ್ನು ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. ►ಏಶ್ಯ ಕಪ್ ಟೂರ್ನಿಗೆ ಭಾರತದ ಅಂಡರ್-19 ತಂಡ ಆಯುಷ್ ಮ್ಹಾತ್ರೆ(ನಾಯಕ), ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ(ಉಪ ನಾಯಕ), ವೇದಾಂತ್ ತ್ರಿವೇದಿ, ಅಭಿಜ್ಞ ಕುಂಡು(ವಿಕೆಟ್ಕೀಪರ್), ಹರ್ವಂಶ್ ಸಿಂಗ್(ವಿಕೆಟ್ ಕೀಪರ್), ಯುವರಾಜ್ ಗೋಹಿಲ್, ಕನಿಷ್ಕ ಚೌಹಾಣ್, ಖಿಲನ್ ಎ.ಪಟೇಲ್, ನಮನ್ ಪುಷ್ಪಕ್, ಡಿ.ದೀಪೇಶ್, ಹೆನಿಲ್ ಪಟೇಲ್, ಕಿಶನ್ ಕುಮಾರ ಸಿಂಗ್, ಉದ್ದವ್ ಮೋಹನ್, ಆ್ಯರೊನ್ ಜಾರ್ಜ್. ಮೀಸಲು ಆಟಗಾರರು : ರಾಹುಲ್ ಕುಮಾರ್, ಹೇಮಚುಡೇಶನ್, ಬಿ.ಕೆ. ಕಿಶೋರ್, ಆದಿತ್ಯ ರಾವುತ್. ಅಂಡರ್-19 ಏಶ್ಯ ಕಪ್ ಗ್ರೂಪ್ ಗಳು: ಗ್ರೂಪ್ ಎ : ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ 1, ಕ್ವಾಲಿಫೈಯರ್ 3 ಗ್ರೂಪ್ ಬಿ : ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ, ಕ್ವಾಲಿಫೈಯರ್ 2
ಯಾದಗಿರಿ| ಭೀಮಾ ಸೇತುವೆ ಕಾಮಗಾರಿ ಆಮೆಗತಿ: ಆಡಳಿತದ ನಿರ್ಲಕ್ಷ್ಯಕ್ಕೆ ಉಮೇಶ್ ಕೆ ಮುದ್ನಾಳ ಆಕ್ರೋಶ
ಯಾದಗಿರಿ: ಜಿಲ್ಲೆಯ ಜೀವನಾಡಿ ಎಂದೇ ಕರೆಯುವ ರಾಜ್ಯ ಹೆದ್ದಾರಿ, ಭೀಮಾ ನದಿಯ ಸೇತುವೆ ಮಾರ್ಗದಲ್ಲಿ ರಸ್ತೆ ಕಾಮಗಾರಿ ಸದ್ಯ ಆಮೆಗತಿಯಲ್ಲಿ ನಡೆಯುತ್ತಿದ್ದು ಹೊಸ ರೈಲು ಸೇತುವೆ ಮತ್ತು ಗುರುಸಣಗಿ ಬ್ರಿಜ್-ಬ್ಯಾರೇಜ್ ರಸ್ತೆ ಸಂಪೂರ್ಣವಾಗಿ ಹಾಳಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಉಮೇಶ್ ಕೆ. ಮುದ್ನಾಳ, ಹಳೆಯ ಸೇತುವೆ ದುರಸ್ತಿಯೇ ಗಂಟಲು ಹಿಡಿದಂತೆ ನಡೆದಿದೆ. ಕೃಷ್ಣ ಮೇಲ್ದಂಡೆ ಯೋಜನೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಭಾರವಾದ ವಾಹನಗಳು ಸಂಚಾರಕ್ಕೆ ನಿರ್ಬಂಧ ಹೇರುವಲ್ಲಿ ವಿಫಲವಾಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿದ್ದು, ಜಿಲ್ಲಾಡಳಿತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಗುತ್ತಿಗೆದಾರರಿಗೆ ರಾತ್ರಿ-ಹಗಲು 24 ಗಂಟೆ ನಿರಂತರವಾಗಿ ಕಾಮಗಾರಿ ನಡೆಸಿ ಬೇಗನೆ ಪೂರ್ಣಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು. ಕಾಮಗಾರಿ ತ್ವರಿತಗೊಳಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ನಾಗರೆಡ್ಡಿಗೌಡ ಹತ್ತಿಕುಣಿ, ದೇವಣ್ಣಗೌಡ ಪಾಟೀಲ್ ಮಲ್ಲಬಾದಿ, ಮಹಾಂತಪ್ಪ ಜಾಗಟೆ ದೋರನಹಳ್ಳಿ, ಈರಣ್ಣ ಗೌಡ ಪೋಲಿಸ್ ಪಾಟೀಲ್ ಹಳಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ಸಾವಿರ ಅಂಗನವಾಡಿಗಳಲ್ಲಿ ಎಲ್ಕೆಜಿ-ಯುಕೆಜಿ, ಅಕ್ಕ ಪಡೆ ಸಹಿತ ಮೂರು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
‘ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ’
ಕೊಪ್ಪಳ| ಅಶೋಕ ವೃತ್ತಕ್ಕೆ ವಾಹನ ಢಿಕ್ಕಿ: ಕಳಚಿ ಬಿದ್ದ ಕಲ್ಲುಗಳು
ಕೊಪ್ಪಳ: ನಗರದ ಹೃದಯ ಭಾಗದಲ್ಲಿ ಇರುವ ಐತಿಹಾಸಿಕ ಅಶೋಕ ವೃತ್ತಕ್ಕೆ ಅಪರಿಚಿತ ವಾಹನ ಢಿಕ್ಕಿಯಾಗಿ ವೃತ್ತದ ಸುತ್ತಲಿನ ಭಾಗದ ಕಟ್ಟಡದ ಕಲ್ಲುಗಳು ಮುರಿದು ಬಿದ್ದಿವೆ. ಇದು ವರ್ಷದಲ್ಲಿ ಎರಡನೇ ಬಾರಿ ನಡೆದ ಘಟನೆಯಾಗಿದೆ. ಇದೇ ಅಶೋಕ ವೃತ್ತದಿಂದ ನಗರದ ಹೋರಾಟಗಳು, ಮೆರವಣಿಗೆಗಳು, ಜಾಥಾಗಳು ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮಗಳು ಪ್ರಾರಂಭವಾಗುತ್ತದೆ. ಬಹಳ ಕಾಲದ ಹಿಂದೆ ಸ್ಥಾಪಿತವಾಗಿದ್ದ ವೀರಸ್ಥಂಭ ವಾಹನಗಳ ಅಪಘಾತಕ್ಕೆ ಗುರಿಯಾಗಿ ಶಿಥಿಲ ಹಂತಕ್ಕೆ ತಲುಪಿತ್ತು. ಆದ್ದರಿಂದ ಕಳೆದ ವರ್ಷವಷ್ಟೇ ಈ ವೃತ್ತವನ್ನು ಸುಮಾರು 39 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿ ನವೀಕರಿಸಲಾಗಿತ್ತು. ನವೀಕರಿಸಿದ ಕೆಲ ತಿಂಗಳ ನಂತರ ವಾಹನ ಢಿಕ್ಕಿಯಾಗಿ ಸುತ್ತಲಿನ ಭಾಗಗಳು ಮುರಿದು ಬಿದಿದ್ದವು. ಇದೀಗ ಮತ್ತೆ ವಾಹನ ಡಿಕ್ಕಿಯಾಗಿ ವೃತ್ತದ ಕಲ್ಲುಗಳು ಬಿದ್ದಿವೆ ಎಂದು ಹೇಳಲಾಗುತ್ತಿದೆ. ನವೀಕೃತ ವೃತ್ತ ಉದ್ಘಾಟನೆಯಾಗಿ ಎರಡು ವರ್ಷಗಳೂ ಕಳೆದಿಲ್ಲ. ಅಶೋಕ ಸ್ತಂಭದ ಕೆಳಗಿನ ಕಟ್ಟೆಯ ಕಲ್ಲುಗಳು ಕಳಚಿ ಬಿದ್ದಿವೆ. ಸರ್ಕಲ್ ನಿರ್ಮಾಣಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿದೆ. ಆದರೆ ಪದೇ ಪದೇ ಈ ರೀತಿ ಯಾಗುತ್ತಿರುವುದರಿಂದ ಅಶೋಕ್ ವೃತ್ತಕ್ಕೆ ಸೂಕ್ತ ರಕ್ಷಣೆ ನೀಡಬೇಕಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮುನ್ನಾರ್ ಬಳಿಯ 120 ಅಡಿ ಎತ್ತರದ ಸ್ಕೈ ಡೈನಿಂಗ್ ರೆಸ್ಟೋರಂಟ್ ನಲ್ಲಿ ಸಿಕ್ಕಿಹಾಕಿಕೊಂಡ ಪ್ರವಾಸಿಗಳು!
ಮುನ್ನಾರ್,ನ.28: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ಗಿರಿಧಾಮದ ಬಳಿಯ ಅನಚ್ಚಾಲ್ ನ ಸ್ಕೈ ಡೈನಿಂಗ್ ರೆಸ್ಟೋರಂಟ್ ನಲ್ಲಿ ನಾಲ್ವರು ಪ್ರವಾಸಿಗಳು ಸೇರಿದಂತೆ ಐವರು ಸಿಕ್ಕಿಹಾಕಿಕೊಂಡಿದ್ದ ಘಟನೆ ಶುಕ್ರವಾರ ಸಂಭವಿಸಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿಗಳು ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ವರದಿಗಳ ಪ್ರಕಾರ ಅಪರಾಹ್ನ 1:30ರ ಸುಮಾರಿಗೆ ಈ ಘಟನೆ ಸಂಭವಿಸಿತ್ತು. ಕ್ರೇನ್ ನಲ್ಲಿ ತಾಂತ್ರಿಕ ದೋಷವುಂಟಾದ ಬಳಿಕ ಕಣ್ಣೂರಿನ ನಾಲ್ವರು ಸದಸ್ಯರ ಕುಟುಂಬ ಮತ್ತು ರೆಸ್ಟೋರಂಟ್ ನ ಮಹಿಳಾ ಸಿಬ್ಬಂದಿ ಆಗಸದಲ್ಲಿ ಅತಂತ್ರರಾಗಿದ್ದರು. ಗಿರಿಧಾಮದಲ್ಲಿಯ ಅನಚ್ಚಾಲ್ ಗ್ರಾಮದ ವಿಹಂಗಮ ನೋಟವನ್ನು ಆಸ್ವಾದಿಸಲು ಅತಿಥಿಗಳನ್ನು ಕ್ರೇನ್ ಮೂಲಕ ನೆಲದಿಂದ 120 ಅಡಿ ಎತ್ತರಕ್ಕೆ ಏರಿಸಲಾಗಿದ್ದು,ಅಲ್ಲಿ ಅವರಿಗೆ ಭೋಜನ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಆದರೆ ಕ್ರೇನ್ ನ ಹೈಡ್ರಾಲಿಕ್ ವ್ಯವಸ್ಥೆ ಕೆಲಸ ಮಾಡುವುದನ್ನು ನಿಲ್ಲಿಸಿದ್ದರಿಂದ ಅವರನ್ನು ಕೆಳಕ್ಕೆ ಇಳಿಸಲು ಸಾಧ್ಯವಾಗಿರಲಿಲ್ಲ. ಮುನ್ನಾರ್ ನಿಂದ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿಗಳು ಹಗ್ಗಗಳ ಮೂಲಕ ಮೊದಲು ಇಬ್ಬರು ಮಕ್ಕಳು ಮತ್ತು ತಾಯಿಯನ್ನು,ನಂತರ ತಂದೆಯನ್ನು ಮತ್ತು ಕೊನೆಯದಾಗಿ ಮಹಿಳಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಕೆಳಕ್ಕಿಳಿಸಿದರು. ಅನಚ್ಚಾಲ್ ನಲ್ಲಿ ಇತ್ತೀಚಿಗೆ ಸ್ಥಾಪನೆಯಾಗಿರುವ ಸದರ್ನ್ ಸ್ಕೈಸ್ ಎರೋಡೈನಾಮಿಕ್ಸ್ ಗಿರಿಧಾಮದ ಎತ್ತರದ ಸಾಹಸ ಪ್ರವಾಸೋದ್ಯಮವನ್ನು ಅನುಭವಿಸಲು ಪ್ರವಾಸಿಗಳಿಗೆ ಹೊಸ ಅವಕಾಶಗಳನ್ನು ಒದಗಿಸಿದೆ.
ಗೋವಾ | 77 ಅಡಿ ಎತ್ತರದ ಶ್ರೀರಾಮ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಪಣಐ,ನ.28: ದಕ್ಷಿಣ ಗೋವಾದ ಕಾಣಕೋಣ ಬಳಿಯ ಪರ್ತಗಾಳಿಯಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದ 550ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಠದ ಆವರಣದಲ್ಲಿ ಸ್ಥಾಪಿಸಲಾಗಿರುವ 77 ಅಡಿ ಎತ್ತರದ ಶ್ರೀರಾಮನ ಕಂಚಿನ ವಿಗ್ರಹವನ್ನು ಶುಕ್ರವಾರ ಅನಾವರಣಗೊಳಿಸಿದರು. ಮೋದಿ ಮಠದ ಆವರಣದಲ್ಲಿ ನಿರ್ಮಿಸಲಾಗಿದ್ದ ವಿಶೇಷ ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಗುಜರಾತಿನ ಏಕತಾ ವಿಗ್ರಹವನ್ನು ವಿನ್ಯಾಸಗೊಳಿಸಿದ್ದ ಶಿಲ್ಪಿ ರಾಮ ಸುತಾರ್ ಅವರು ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾದ ಪಿಡಬ್ಲ್ಯುಡಿ ಸಚಿವ ದಿಗಂಬರ ಕಾಮತ್ ಹೇಳಿದರು. ಇದು ವಿಶ್ವದಲ್ಲಿಯೇ ಶ್ರೀರಾಮನ ಅತ್ಯಂತ ಎತ್ತರದ ಪ್ರತಿಮೆಯಾಗಿದೆ ಎಂದೂ ಅವರು ತಿಳಿಸಿದರು. ಮಠದ ಸಂಪ್ರದಾಯಗಳ 550ನೇ ವರ್ಷಾಚರಣೆಯ ಸಂಭ್ರಮಗಳ ಅಂಗವಾಗಿ ನ.27ರಿಂದ ಡಿ.7ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. 370 ವರ್ಷಗಳ ಹಿಂದೆ ಪರ್ತಗಾಳಿ ಗ್ರಾಮದಲ್ಲಿ ಶ್ರೀಮಠದ ಆವರಣ ನಿರ್ಮಾಣಗೊಂಡಿತ್ತು.
ಕಲಬುರಗಿ| ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಚಾಲನೆ
ಕಲಬುರಗಿ: ಕ್ರೀಡಾಕೂಟ ಕೇವಲ ಸೋಲು-ಗೆಲುವಿಗೆ ಸೀಮಿತವಾಗಿಲ್ಲ. ಅದು ಆರೋಗ್ಯದ ದೃಷ್ಠಿಯಿಂದಲು ಮತ್ತು ವೃತ್ತಿಯಲ್ಲಿ ಸ್ಥಿರತೆ ಕಾಪಾಡಲು ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇಳಿದರು. ಶುಕ್ರವಾರ ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಕ್ರೀಡಾಕೂಟ-2025ಕ್ಕೆ ಚಾಲನೆ ನೀಡಿ ಮಾತನಾಡಿದ ಬಿ.ಫೌಝಿಯಾ ತರನ್ನುಮ್, ದಿನದ 24 ಗಂಟೆ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಗಳು ಒತ್ತಡದ ಮಧ್ಯೆಯು ಕ್ರೀಡಾಕೂಟದಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿರುವುದು ನಿಜಕ್ಕೂ ಸಂತೋಷದ ವಿಷಯ. ಸರಕಾರಿ ನೌಕರರು, ಪೊಲೀಸರ ಮೇಲೆ ಜನರ ನಿರೀಕ್ಷೆ ಹೆಚ್ಚಿದೆ. ಅದರಂತೆ ಕಾರ್ಯನಿರ್ವಹಿಸಲು ದೈಹಿಕ ಮತ್ತು ಮಾನಸಿಕವಾಗಿ ಸಾರ್ವಜನಿಕರ ಸೇವಕರಾದ ನಾವು ಸದಾ ಸದೃಢವಾಗಿರಬೇಕಿದೆ ಎಂದರು. ಒತ್ತಡದ ಮಧ್ಯೆ ಪೊಲೀಸ್ ಸಿಬ್ಬಂದಿಗಳು ಕ್ರೀಡಾ ತರಬೇತಿ ಪಡೆದು, ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಅತ್ಯುತ್ತಮ ನಡೆಯಾಗಿದೆ. ಕ್ರೀಡಾಸ್ಫೂರ್ತಿಯೊಂದಿಗೆ ಆಟವಾಡಿ, ಗೆಲುವು ಸಾಧಿಸಬೇಕು. ವೃತ್ತಿ ಜೀವನದ ಜೊತೆಗೆ ವೈಯಕ್ತಿಕ ಜೀವನದತ್ತಲೂ ಗಮನ ಹರಿಸಬೇಕು. ಪೊಲೀಸರ ಕುಟುಂಬದವರಿಗೆ ಆಟೋಟ ಸ್ಪರ್ಧೆ ಏರ್ಪಡಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು. ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಎಸ್.ಪಿ. ಮಹೇಶ್ ಮೇಘಣ್ಣನವರ್ ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಶಹಾಬಾದ್ ಡಿ.ವೈ.ಎಸ್.ಪಿ ಶಂಕರಗೌಡ ಪಾಟೀಲ್ ಅವರು ವಂದಿಸಿದರು. ಕಳೆದ ಆರು ವರ್ಷದ ಕ್ರೀಡಾಕೂಟದಲ್ಲಿ ಸರ್ವಶ್ರೇಷ್ಠ ಕ್ರೀಡಾಪಟು ಉದಯಕುಮಾರ ಕ್ರೀಡಾಜ್ಯೋತಿ ಬೆಳಗಿಸಿದರು. ಪರೇಡ್ ಕಮಾಂಡರ್ ಡಿ.ಎ.ಆರ್ ಘಟಕದ ಆರ್.ಪಿ.ಐ ಮಲ್ಲಯ್ಯ ಆರ್. ಕವಾಯತು ಮುನ್ನಡೆಸಿದರು. ಆರ್.ಎಸ್.ಐ ರವಿ ಪೊಲೀಸ್ ಪಾಟೀಲ್ ನಾಯಕತ್ವದ ಡಿ.ಎ.ಆರ್ ಘಟಕ, ಆರ್.ಎಸ್.ಐ. ಸಂತೋಷ ನಾಯಕತ್ವದ ಆಳಂದ ಉಪವಿಭಾಗ, ಪಿ.ಎಸ್.ಐ ಸಿದ್ಧಲಿಂಗ ನಾಯಕತ್ವದ ಶಹಾಬಾದ್ ಉಪ ವಿಭಾಗ, ಪಿ.ಎಸ್.ಐ ಚಿದಾನಂದ ಕಾಶಪ್ಪಗೋಳ ನಾಯಕತ್ವದ ಚಿಂಚೋಳಿ ಉಪ ವಿಭಾಗ, ಪಿ.ಎಸ್.ಐ ಶ್ರೀಶೈಲ ಅಂಬಾಟಿ ನಾಯಕತ್ವದ ಗ್ರಾಮೀಣ ಉಪ ವಿಭಾಗ, ಪಿ.ಎಸ್.ಐ ಇಂದುಮತಿ ಪಾಟೀಲ್ ನಾಯಕತ್ವದ ಮಹಿಳಾ ವಿಭಾಗಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದೆ. ನವೆಂಬರ್ 30ಕ್ಕೆ ಸಮಾರೋಪ ಮತ್ತು ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ.
ಉತ್ತರ ಪ್ರದೇಶ | ಬಲಿಯಾದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿಗೈದ ದುಷ್ಕರ್ಮಿಗಳು
ಬಲಿಯಾ,ನ.28: ಅಪರಿಚಿತ ದುಷ್ಕರ್ಮಿಗಳು ಇಲ್ಲಿಯ ಗದ್ವಾರ್ ನಲ್ಲಿರುವ ಭೀಮರಾವ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿಯನ್ನುಂಟು ಮಾಡಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿತ್ತು ಎಂದು ಪೋಲಿಸರು ಶುಕ್ರವಾರ ತಿಳಿಸಿದರು. ಅಧಿಕಾರಿಗಳ ಪ್ರಕಾರ ಗದ್ವಾರ್-ನಾಗ್ರಾ ರೋಡ್ ನಲ್ಲಿಯ ರಾಮಪುರ ಅಸ್ಲಿ ಗ್ರಾಮದಲ್ಲಿ ಸ್ಥಾಪಿತ ಪ್ರತಿಮೆಯ ಕೈಬೆರಳು ಮುರಿದಿರುವುದು ಬುಧವಾರ ರಾತ್ರಿ ಪತ್ತೆಯಾಗಿತ್ತು. ಇದು ಈ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗಳನ್ನು ಗುರಿಯಾಗಿಸಿಕೊಂಡು ಧ್ವಂಸದ ಐದನೇ ಘಟನೆಯಾಗಿದ್ದು, ಗ್ರಾಮಸ್ಥರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉಪ ವಿಭಾಗಾಧಿಕಾರಿ ರವಿಕುಮಾರ್ ಮತ್ತು ಹಿರಿಯ ಪೋಲಿಸ್ ಹಾಗೂ ಆಡಳಿತಾತ್ಮಕ ಅಧಿಕಾರಿಗಳು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಸ್ಥರು ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ,ರಕ್ಷಣಾತ್ಮಕ ಗಡಿ ಗೋಡೆಯನ್ನು ನಿರ್ಮಿಸುವಂತೆ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಆಗ್ರಹಿಸಿ ಐದು ಅಂಶಗಳ ಅಹವಾಲನ್ನು ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ ಅಧಿಕಾರಿಗಳು,ಶಾಂತಿಯನ್ನು ಕಾಯ್ದುಕೊಳ್ಳುವಂತೆ ಕೋರಿಕೊಂಡಿದ್ದಾರೆ. ಹಾನಿಗೀಡಾದ ಪ್ರತಿಮೆಯನ್ನು ದುರಸ್ತಿ ಮಾಡಲಾಗಿದೆ ಮತ್ತು ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರಿಸ್ಥಿತಿಯು ಶಾಂತಿಯುತವಾಗಿದ್ದು,ನಿಯಂತ್ರಣದಲ್ಲಿದೆ ಎಂದು ಪೋಲಿಸರು ತಿಳಿಸಿದರು. ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ಬೈಂದೂರು | ಎಲ್ಲೂರು ಕಂಬಳ : ವಿಜೇತ ತಂಡಗಳಿಗೆ ಬಹುಮಾನ ವಿತರಣೆ
ಬೈಂದೂರು, ನ.28: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕುಡೂರು ಮನೆಯವರ ಯಜಮಾನಿಕೆಯ ಎಲ್ಲೂರು ಕಂಬಳ ಗುರುವಾರ ಸಂಜೆ ವೈಭವದಿಂದ ನಡೆಯಿತು. ಜಿಲ್ಲೆಯ ಹಿರಿಯ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಮಾರ್ಗದರ್ಶನದಲ್ಲಿ ನಡೆದ ಕಂಬಳ ಮಹೋತ್ಸವಕ್ಕೆ ಕುಡೂರು ಮನೆಯ ಯಜಮಾನ ರಾಮ ಕಿಶನ್ ಹೆಗ್ಡೆ ಕೋಣದ ಮಾಲಕರಿಗೆ ತಾಂಬೂಲ ಗೌರವ ನೀಡುವ ಮೂಲಕ ಚಾಲನೆ ನೀಡಿದರು. ಶಾಸಕ ಗುರುರಾಜ್ ಗಂಟಿಹೊಳೆ, ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ರಾಮ್ರತನ್ ಹೆಗ್ಡೆ, ಅನುಪಮಾ ಎಸ್.ಶೆಟ್ಟಿ, ಪ್ರೀತಮ್ ಎಸ್.ರೈ, ಶ್ರೀಶಾ ರೈ, ವೈಷ್ಣಮಿ ಆರ್.ಹೆಗ್ಡೆ, ಸರ್ಜಿತ್ ಶೆಟ್ಟಿ ಕುಡೂರು, ಮೋಹನ್ದಾಸ್ ಶೆಟ್ಟಿ ಕುಡೂರು, ಎಂ.ಆರ್.ಶೆಟ್ಟಿ, ಎಂ.ರಘುರಾಮ್ ಶೆಟ್ಟಿ ಉಪಸ್ಥಿತರಿದ್ದರು. ಉಡುಪಿ ಹಾಗೂ ಕಾರವಾರ ಜಿಲ್ಲೆಯ 48 ಜೊತೆ ಕೋಣಗಳು, ಕಂಬಳ ಗದ್ದೆಯಲ್ಲಿ ಓಟ ನಡೆಸಿದ್ದವು. ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಮಂಗಳೂರು ವಿವಿ ಕುಂದಾಪುರ ಕನ್ನಡ ಅಧ್ಯಯನ ಪೀಠದ ಸದಸ್ಯ ರಾಜೇಶ್ ಕೆ.ಸಿ., ಬೈಂದೂರು ರೈತ ಸಂಘದ ಅಧ್ಯಕ್ಷ ಎನ್.ದೀಪಕುಮಾರ ಶೆಟ್ಟಿ, ರಾಜ್ಯ ಕಂಬಳ ಅಸೋಸಿಯೇಶನ್ ಸದಸ್ಯ ವಿಕ್ರಂ ವೆಂಕಟ ಪೂಜಾರಿ, ಬೈಂದೂರು ಕಂಬಳ ಸಮಿತಿ ಅಧ್ಯಕ್ಷ ಮಂಜುನಾಥ ಪೂಜಾರಿ ಸಸಿಹಿತ್ಲು, ಕಾರ್ಯದರ್ಶಿ ಸುರ್ಧೀ ದೇವಾಡಿಗ, ಕೋಶಾಧಿಕಾರಿ ಭರತ್ ಕೊಠಾರಿ, ಪರಮೇಶ್ವರ ಭಟ್ ಬೊಳಂಬಳ್ಳಿ, ನಿವೃತ್ತ ಮುಖ್ಯ ಶಿಕ್ಷಕ ರತ್ನಾಕರ್ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚುಚ್ಚಿ ನಾರಾಯಣ ಶೆಟ್ಟಿ, ಉದ್ಯಮಿ ಸತೀಶ್ ಶೆಟ್ಟಿ ಅರೆ ಶಿರೂರು, ಗಣಪ ಗಂಗನಾಡು, ಶಿವರಾಂ ಶೆಟ್ಟಿ ಎಲ್ಲೂರು, ರವಿ ಹೋಬಳಿರ್ದಾ , ಆನಂದ್ ನಾಯ್ಕ್ ಸಣ್ಣಮನೆ, ಕುಮಾರ ನಾಯ್ಕ್, ಗೌಡ ಅಣ್ಣಪ್ಪ ಮರಾಠಿ ಎಲ್ಲೂರು ಉಪಸ್ಥಿತರಿದ್ದರು. ಬಹುಮಾನ ವಿತರಣೆ : ಕಂಬಳ ಉತ್ಸವದ ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು. ಹಲಗೆ : ಪ್ರ- ಶ್ರೀಸ್ವಾಮಿಧಾಮ ಹೊಳೆಕಟ್ಟು ಕುಂಭಾಶಿ ಕೋಣಗಳು, ತೆಕ್ಕಟ್ಟೆ ಸುಧೀರ್ ದೇವಾಡಿಗ(ಸವಾರಿಗ), ದ್ವಿ- ದಿ.ಶುಕ್ರ ಪೂಜಾರಿ ಮೊಳೆಬೈಲ್ ಕೋಣಗಳು, ಭರತ್ ಶಿರೂರು ಮುದ್ದುಮನೆ(ಸವಾರಿಗ). ಹಗ್ಗ ಹಿರಿಯ: ಪ್ರ-ದಿ.ವೆಂಕಟ ಪೂಜಾರಿ ಸಸಿಹಿತ್ಲು ಎ ಕೋಣಗಳು, ಮಂಜುನಾಥ ಗೌಡ ಬೈಂದೂರು(ಸವಾರಿಗ). ದ್ವಿತೀಯ- ದಿ.ವೆಂಕಟ ಪೂಜಾರಿ ಸಸಿಹಿತ್ಲು ಬಿ ಕೋಣಗಳು, ಮಂಜುನಾಥ ಗೌಡ ಬೈಂದೂರು (ಸವಾರಿಗ). ಹಗ್ಗ ಕಿರಿಯ : ಪ್ರ- ದುರ್ಗಾ ಫ್ರೆಂಡ್ಸ್ ಕಂಚಿಕಾನ್ ಕೋಣಗಳು, ಮಂಜುನಾಥ್ ಗೌಡ ಬೈಂದೂರು(ಸವಾರಿಗ). ದ್ವಿ- ಗಿರಿಜಾ ರೋಡ್ಲೈನ್ಸ್ ಗಾಡಿ ಕೂಸ ಪೂಜಾರಿ ಕೋಟ ಕೋಣಗಳು, ಮಂಜುನಾಥ್ ಗೌಡ ಬೈಂದೂರು(ಸವಾರಿಗ). ಹಗ್ಗ ಅತಿ ಕಿರಿಯ: ಪ್ರ- ಶ್ರೀಸ್ಕಂದ ಆರ್ವಿಕ್ ಪ್ರದೀಪ್ ಉಳ್ಳೂರು ಕಂದಾವರ ಕೋಣಗಳು, ಹರೀಶ್ ಪೂಜಾರಿ ಬೈಂದೂರು(ಸವಾರಿಗ). ದ್ವಿ- ಶಂಕು ಮಹಾಸತಿ ಸಂಕಡಗುಂಡಿ ಶಿರೂರು ಕೋಣಗಳು, ಶಂಕರ್ ದೇವಾಡಿಗ ನಾಗೂರು(ಸವಾರಿಗ), ತೃ- ಸುಜಿತ್ ಸುಪ್ರೀತ್ ಗಣಪ ಗಂಗನಾಡು ಕೋಣಗಳು, ವಿಶ್ವನಾಥ್ ದೇವಾಡಿಗ ಬೈಂದೂರು(ಸವಾರಿಗ).
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನ
ಬೆಂಗಳೂರು: ಹಿರಿಯ ಪತ್ರಕರ್ತ ಅ.ಚ.ಶಿವಣ್ಣ (84) ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಪತ್ನಿ ಇಂದಿರಾ, ಪುತ್ರ ವಿಕ್ಟೋರಿಯಾ ಆಸ್ಪತ್ರೆಯ ತಜ್ಞ ವೈದ್ಯ ಡಾ.ದೀಪಕ್ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರು ಹಾಗೂ ಸಹೋದ್ಯೋಗಿಗಳನ್ನು ಶ್ರೀಯುತರು ಅಗಲಿದ್ದಾರೆ. ಮಾಧ್ಯಮ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದ ಶಿವಣ್ಣ, ತಮ್ಮ ಮನೆಯಲ್ಲೇ ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. 1941ರ ಡಿಸೆಂಬರ್ 10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಸಮೀಪದ ಅರಳುಮಲ್ಲಿಗೆ ಗ್ರಾಮದಲ್ಲಿ ಜನಿಸಿದ ಶಿವಣ್ಣ ಅವರು, ಶಿಕ್ಷಣವನ್ನು ಅಭ್ಯಾಸ ಮಾಡಿದ ಬಳಿಕ ದೇವನಹಳ್ಳಿ ತಾಲೂಕು ವಿಜಯಪುರ, ಅಲ್ಲಿಂದ ಬೆಂಗಳೂರಿಗೆ ಆಗಮಿಸಿ ‘ಲೋಕವಾಣಿ’ ಪತ್ರಿಕೆ ಮೂಲಕ ಪತ್ರಕರ್ತರಾಗಿ ಮಾಧ್ಯಮ ಕ್ಷೇತ್ರಕ್ಕೆ ಕಾಲಿಟ್ಟರು. ಲೋಕವಾಣಿಯಲ್ಲಿ ವರದಿಗಾರರಾಗಿ, ಚಲನಚಿತ್ರ ವಿಮರ್ಶಕರಾಗಿ ಸೇವೆ ಸಲ್ಲಿಸಿದ ಶಿವಣ್ಣ, ಪ್ರಧಾನ ವರದಿಗಾರರಾಗಿ ಕಾರ್ಯನಿರ್ವಹಿಸಿ ಅಲ್ಲಿಂದ ಸಂಜೆವಾಣಿ ಪತ್ರಿಕೆಯಲ್ಲಿ ಸುಧೀರ್ಘ 26 ವರ್ಷಗಳ ಕಾಲ ಮುಖ್ಯವರದಿಗಾರರಾಗಿ ಕೆಲಸ ನಿರ್ವಹಿಸಿದ್ದಾರೆ. ಅಲ್ಲದೆ, ಬೆಂಗಳೂರು ಪ್ರೆಸ್ಕ್ಲಬ್, ಬೆಂಗಳೂರು ವರದಿಗಾರರ ಕೂಟಕ್ಕೆ ಹೊಸರೂಪ ನೀಡುವಲ್ಲಿಯೂ ಅವರ ಮಹತ್ವದ್ದು ಎಂದು ಹೇಳಲಾಗಿದೆ. ಶಿವಣ್ಣ ಅವರ ಮಾಧ್ಯಮ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ 1992ರಲ್ಲಿ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಕೆಂಪೇಗೌಡ ಪ್ರಶಸ್ತಿ(1999), ಕನ್ನಡ ಸಾಹಿತ್ಯ ಪರಿಷತ್ತಿನ ಕಿಡಿ ಶೇಷಪ್ಪ ಪ್ರಶಸ್ತಿ(1999), ಬೆಂಗಳೂರು ಪ್ರೆಸ್ಕ್ಲಬ್ ಪ್ರಶಸ್ತಿ ಹಾಗೂ ಕಾರ್ಯನಿರತ ಪತ್ರ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಪ್ರಶಸ್ತಿ, ಎಸ್.ವಿ.ಜಯಾಶೀಲರಾವ್ ಪ್ರಶಸ್ತಿ, ಅ.ನ.ಕೃ ಪ್ರಶಸ್ತಿಗಳು ಅವರಿಗೆ ಸಂದಿವೆ.
ಉತ್ತರ ಕನ್ನಡದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 40ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಮುಂಡಗೋಡದ ಪಿಎಂಶ್ರೀ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದು ಬೆಳಕಿಗೆ ಬಂದಿದೆ. ಸದ್ಯ ವಿದ್ಯಾರ್ಥಿಗಳು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಇರುವುದೇ ಕಾರಣ ಎಂದು ಮಕ್ಕಳ ಪೋಷಕರು ಆರೋಪಿಸಿದ್ದು, ಅಡುಗೆ ಕೋಣೆಯ ಸ್ವಚ್ಛತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.
ಉಡುಪಿ | ಬೀಡಿ ಕಾರ್ಮಿಕರ ಸಮಸ್ಯೆಯ ಕುರಿತು ಸಚಿವರಿಂದ ಸಭೆ
ಉಡುಪಿ, ನ.28: ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ಬೀಡಿ ಕಾರ್ಮಿಕರ ಸಮಸ್ಯೆಯ ಕುರಿತು ಸಭೆ ನಡೆಯಿತು. 2018ರಿಂದ 2024 ರವರಗಿನ ಬಾಕಿ ಉಳಿಸಿರುವ ವೇತನ, 1.4.2024 ರಿಂದ ಜಾರಿಯಾಗಬೇಕಿದ್ದ ಸರಕಾರ ಆದೇಶಿರುವ ಕಾನೂನು ಬದ್ದ ಕನಿಷ್ಟ ಕೂಲಿ ಜಾರಿಗೆ ಆಗ್ರಹಿಸಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಾರ್ಮಿಕರು ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದ ಪರಿಣಾಮವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಬೆಂಗಳೂರು ವಿಕಾಸ ಸೌಧದಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದರು. ಮಾಲಕರ ಸಂಘದ ಪ್ರತಿನಿಧಿಗಳು ಆಹ್ವಾನದ ಹೊರತಾಗಿಯು ಸಭೆಯಲ್ಲಿ ಭಾಗವಹಿಸಲಿಲ್ಲ. ಕಾರ್ಮಿಕರನ್ನು ಪ್ರತಿನಿಧಿಸಿ ಸಭೆಯಲ್ಲಿ ಭಾಗವಹಿಸಿದ ಸಿಐಟಿಯು ನಾಯಕರು ಮಾಲಕರು ಸರಕಾರದ ಆದೇಶ ಜಾರಿಗೊಳಿಸದೆ ಕಾರ್ಮಿಕರಿಗೆ ನಡೆಸಿರುವ ಬಾಕಿ ವೇತನ, ಕನಿಷ್ಟ ಕೂಲಿ ವಂಚನೆಯನ್ನು ವಿವರವಾಗಿ ಸಭೆಗೆ ಮಂಡಿಸಿದರು, ನ್ಯಾಯ ಒದಗಿಸುವಂತೆ ಸಚಿವರಲ್ಲಿ ವಿನಂತಿಸಿದರು. ಕಾರ್ಮಿಕ ನಾಯಕರು ನೀಡಿದ ಅಂಕಿ ಅಂಶಗಳನ್ನು ಒಳಗೊಂಡ ವಿವರವಾದ ಮಾಹಿತಿಯನ್ನು ಪಡೆದ ಸಚಿವರು, ಅವುಗಳ ಆಧಾರದಲ್ಲಿ ಬೀಡಿ ಉದ್ಯಮದ ಸಮಗ್ರ ಮಾಹಿತಿಗಳನ್ನು ಕಲೆ ಹಾಕುವಂತೆ, ಅವುಗಳ ಆಧಾರದಲ್ಲಿ ಮಾಲಕರಿಗೆ ಪತ್ರ ರವಾನಿಸುವಂತೆ, ಡಿಸೆಂಬರ್ ತಿಂಗಳ ಮಧ್ಯ ಭಾಗದಲ್ಲಿ ಮತ್ತೊಂದು ಸುತ್ತಿನ ಉನ್ನತ ಮಟ್ಟದ ಸಭೆಗೆ ಸಮಯ ನಿಗದಿ ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ನ.29ರಂದು ಮಂಗಳೂರಿನಲ್ಲಿ ನಡೆಯುವ ಬೀಡಿ ಕಾರ್ಮಿಕರ ಪ್ರತಿಭಟನಾ ಸಭೆಗೆ ತೆರಳಿ ಕಾರ್ಮಿಕರೊಂದಿಗೆ ಮಾತನಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಕಾರ್ಮಿಕ ಮುಖಂಡರ ನೇತೃತ್ವವನ್ನು ಸಿಐಟಿಯು ರಾಜ್ಯ ಅಧ್ಯಕ್ಷ ಮೀನಾಕ್ಷಿ ಸುಂದರಂ ವಹಿಸಿದ್ದರು. ಬೀಡಿ ಕಾರ್ಮಿಕರ ರಾಜ್ಯ ಫೆಡರೇಷನ್ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸೈಯ್ಯದ್ ಮುಜೀಬ್, ಜಿಲ್ಲಾ ಪ್ರಮುಖರಾದ ಸುಕುಮಾರ್ ತೊಕ್ಕೊಟ್ಟು, ಬಿ.ಎಂ.ಭಟ್, ಮುನೀರ್ ಕಾಟಿಪಳ್ಳ, ಕವಿರಾಜ್ ಕಾಂಚನ್ ಉಡುಪಿ, ಫಾರೂಕ್ ಮಡಂಜೋಡಿ, ಧನಂಜಯ ಪಟ್ರಮೆ ಉಪಸ್ಥಿತರಿದ್ದರು.
ಕಲಬುರಗಿ| ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಬೇಕೆಂದು ಅಭಿಮಾನಿಗಳಿಂದ ವಿಶೇಷ ಪೂಜೆ
ಕಲಬುರಗಿ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಮುಂದುವರಿಯಬೇಕೆಂದು ಸಿದ್ದರಾಮಯ್ಯನವರ ಅಭಿಮಾನಿಗಳು ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ 101 ತೆಂಗಿನಕಾಯಿ ಸಿಡಿಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಹಾಂತೇಶ್ ಕೌಲಗಿ, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಿನಿಂದ ರಾಜ್ಯದ ಜನರಿಗೆ ಸಾಕಷ್ಟು ಜನಪರ ಯೋಜನೆ ನೀಡಿದ್ದಾರೆ. ಘೋಷಿಸಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಹಾಗಾಗಿ ಐದು ವರ್ಷ ಅವರೇ ಸಿಎಂ ಆಗಿ ಮುಂದುವರೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ರೇವಣಸಿದ್ದಪ್ಪಾ ಸಾತನೂರ, ಸಾಯಬಣ್ಣಾ ಹೇಳವರ, ಕುಮಾರ್ ಯಾದವ್, ಶರಣು ಬಿ. ಹೋನ್ನಗೇಜೆ, ಚಂದ್ರಶೇಖರ ಗೊಂದಳಿ, ಭೀಮಶ್ಯಾ ಖನ್ನಾ, ಮರೆಪ್ಪ ಹಳ್ಳಿ, ಎ.ಬಿ.ಹೊಸಮನಿ, ಅರ್ಜುನ ಗೊಬ್ಬರ, ಸಂಜುಕುಮಾರ ಜವಳಕರ, ನಿಂಗಪ್ಪಾ ಹೆರೂರ, ಡಾ.ಬಿ.ಟಿ.ಪೂಜಾರಿ, ಶರಣು ಕನಗೊಂಡ, ಭೈಲಪ್ಪಾ ನೆಲೋಗಿ, ಪರಮೇಶ್ವರ ಆಲಗೂಡ, ಶರಣು ಬೇಲೂರ, ಲಕ್ಷ್ಮಣ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಡುಪಿ | ದೇಶಕ್ಕಾಗಿ ‘ನವ ಸಂಕಲ್ಪ’ಕ್ಕೆ ಪ್ರತಿ ಭಾರತೀಯನಿಗೂ ಪ್ರಧಾನಿ ಕರೆ
► ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ ನರೇಂದ್ರ ಮೋದಿ ► ಪುತ್ತಿಗೆ ಮಠದಿಂದ ‘ಭಾರತ ಭಾಗ್ಯ ವಿಧಾತ’ ಬಿರುದು, ಸನ್ಮಾನ
2ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.8.2ಬೆಳವಣಿಗೆ; ಪ್ರಧಾನಿ ಮೋದಿ ಹರ್ಷ
ಭಾರತದ ಆರ್ಥಿಕತೆಯು ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 8.2 ರಷ್ಟು ಪ್ರಗತಿ ಸಾಧಿಸುವ ಮೂಲಕ, ಕಳೆದ ಆರು ತ್ರೈಮಾಸಿಕಗಳಲ್ಲೇ ಗರಿಷ್ಠ ಬೆಳವಣಿಗೆಯನ್ನು ದಾಖಲಿಸಿದೆ. ಜಿಎಸ್ಟಿ ದರ ಕಡಿತದ ನಿರೀಕ್ಷೆಯಲ್ಲಿ ಕಾರ್ಖಾನೆಗಳು ಉತ್ಪಾದನೆಯನ್ನು ಹೆಚ್ಚಿಸಿರುವುದು ಈ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇದು ಸರ್ಕಾರದ ನೀತಿಗಳ ಫಲ ಎಂದು ಬಣ್ಣಿಸಿದ್ದಾರೆ.
'ಒಕ್ಕಲಿಗರು ಕೂಡ ಹಿಂದುಳಿದ ಸಮುದಾಯದವರೇ' - ಡಿಕೆ ಶಿವಕುಮಾರ್ : ನಿರ್ಣಾಯಕ ಹಂತದಲ್ಲಿ ಜಾತಿ ಅಸ್ತ್ರ ಪ್ರಯೋಗ ಯಾಕಾಗಿ?
DK Shivakumar's Caste Crad : ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು. ಅಂಗನವಾಡಿ ಕಾರ್ಯಕರ್ತೆಯರು ನಿಮ್ಮ ಸ್ವಂತ ಮಕ್ಕಳಿಗೂ ಸಮಯ ನೀಡದೆ, ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತ್ಯಾಗಮೂರ್ತಿಗಳು ನೀವು. ಒಕ್ಕಲಿಗ ಸಮುದಾಯದವರೂ ಹಿಂದುಳಿದ ವರ್ಗದವರೇ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾಯಕತ್ವ ಬದಲಾವಣೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ. ಶುಕ್ರವಾರ ನಗರದ ಅರಮನೆ ಮೈದಾನದ ಬಳಿ ಸುದ್ದಿಗಾರರು ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಬಯಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು. ‘ನೀವು ಹಾಗೂ ಮುಖ್ಯಮಂತ್ರಿ ದಿಲ್ಲಿಗೆ ಹೋಗುತ್ತೀರಾ?’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ನಾನು ದಿಲ್ಲಿಗೆ ಹೋಗಬಹುದು. ಅಲ್ಲಿ ನನಗೆ ಸಾಕಷ್ಟು ಕೆಲಸಗಳಿವೆ. ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನಾನು ಸಂಸದರನ್ನು ಭೇಟಿ ಮಾಡಬೇಕಿದೆ’ ಎಂದು ತಿಳಿಸಿದರು. ದೇವರ ಕೃಪೆಯಿಂದ ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆತಿದ್ದು, ಈ ಯೋಜನೆ ಪರಿಷ್ಕೃತ ಡಿಪಿಆರ್ ಸಿದ್ಧತೆಗೆ ಸೂಚಿಸಿದ್ದೇವೆ. ಮಹದಾಯಿ, ಕೃಷ್ಣಾ, ಎತ್ತಿನಹೊಳೆ ಸೇರಿದಂತೆ ನಮ್ಮ ಸಾಕಷ್ಟು ಯೋಜನೆಗಳ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡುವುದಿದೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ಮಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು. ಮೆಕ್ಕೆಜೋಳ ವಿಚಾರವಾಗಿ ಮನವಿ: ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರಕಾರ ಬೆಂಬಲ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ 2400 ರೂ. ಬೆಲೆ ನಿಗದಿ ಮಾಡಿರುವುದು ಕೇಂದ್ರ ಸರಕಾರ. ಮಾರುಕಟ್ಟೆಯಲ್ಲಿ ಸಿಗುತ್ತಿರುವುದು 1600 ರಿಂದ 1800 ರೂ.ಮಾತ್ರ. ಕೇಂದ್ರ ಸರಕಾರ ರೈತರಿಗೆ ನೆರವು ನೀಡುತ್ತಿಲ್ಲ. ಹೀಗಾಗಿ ನಾವು ಹೋಗಿ ಮನವಿ ಸಲ್ಲಿಸಬೇಕಿದೆ. ನಾವು ಎಲ್ಲ ಕಾರ್ಖಾನೆ ಮಾಲಕರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಕೇಂದ್ರ ಸರಕಾರ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದರು. ದಿಲ್ಲಿಗೆ ಹೋದಾಗ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, ಅದು ದಿಲ್ಲಿಯಲ್ಲಿರುವ ನಮ್ಮ ಪಾಲಿನ ದೇವಾಲಯ. ದಿಲ್ಲಿ ಕಚೇರಿ ನಮಗೆ ಮಾರ್ಗದರ್ಶನ ನೀಡಲಿದೆ ಎಂದು ತಿಳಿಸಿದರು. ನನ್ನ ಸಮುದಾಯ ಕಾಂಗ್ರೆಸ್: ನಿಮ್ಮನ್ನು ಮುಖ್ಯಮಂತ್ರಿ ಮಾಡುವಂತೆ ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ ಎಂದರು. ನಿಮ್ಮ ಮುಂಬೈ ಭೇಟಿಯನ್ನು ಬಿಜೆಪಿ ಬೇರೆ ರೀತಿ ಅರ್ಥೈಸುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಬಿಜೆಪಿಯ ಅರ್ಥಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಆತ್ಮೀಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಲು ಮುಂಬೈಗೆ ಹೋಗಿದ್ದೆ. ಅನೇಕ ವಿಚಾರಗಳಲ್ಲಿ ಅವರು ನನಗೆ ಸಹಾಯ ಮಾಡಿದ್ದಾರೆ. ಒಂದು ಗಂಟೆ ಅಲ್ಲಿದ್ದು, ವಾಪಸ್ಸಾಗಿದ್ದೇನೆ ಎಂದು ತಿಳಿಸಿದರು.
ಸಾದಿಕ್ ನಗರದಲ್ಲಿ ಹೊಸ ಮಸೀದಿ ವಿವಾದ - ಅಖಾಡಕ್ಕೆ ಪ್ರಮೋದ್ ಮುತಾಲಿಕ್ ಎಂಟ್ರಿ
ಚಿತ್ರದುರ್ಗದ ಸಾದಿಕ್ ನಗರ ಬಡಾವಣೆಯಲ್ಲಿ ಮಸೀದಿ ನಿರ್ಮಾಣ ವಿವಾದ ಸೃಷ್ಟಿಸಿದೆ. ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿಯಮಾನುಸಾರ ನಿರ್ಮಾಣವಾಗಿದೆ ಎಂದು ಮುಸ್ಲಿಂ ಸಮುದಾಯ ಹೇಳಿದೆ. ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕೂಡ ಈ ಬಗ್ಗೆ ಕಿಡಿಕಾರಿದ್ದಾರೆ. ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಕಾದು ನೋಡಬೇಕಿದೆ.
ಇಸ್ರೇಲ್–ಫೆಲೆಸ್ತೀನ್ ವಿವಾದ | ಯುಎನ್ ತನಿಖಾ ಆಯೋಗಕ್ಕೆ ಭಾರತೀಯ ನ್ಯಾಯಶಾಸ್ತ್ರಜ್ಞ ಎಸ್. ಮುರಳೀಧರ್ ನೇತೃತ್ವ
ಜೆರುಸಲೇಂ/ಹೊಸದಿಲ್ಲಿ: ಇಸ್ರೇಲ್ ಹಾಗೂ ಆಕ್ರಮಿತ ಫೆಲೆಸ್ತೀನ್ ಪ್ರದೇಶದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗಳ ಪರಿಶೀಲನೆಗಾಗಿ ವಿಶ್ವಸಂಸ್ಥೆ ರಚಿಸಿರುವ ಪ್ರಮುಖ ಅಂತರರಾಷ್ಟ್ರೀಯ ವಿಚಾರಣಾ ಆಯೋಗಕ್ಕೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಜಾಗತಿಕ ರಾಜಕೀಯದ ಅತ್ಯಂತ ಸೂಕ್ಷ್ಮ ವಿಚಾರವಾಗಿರುವ ಇಸ್ರೇಲ್–ಫೆಲೆಸ್ತೀನ್ ಸಂಘರ್ಷದ ಹಿನ್ನಲೆಯಲ್ಲಿ ಈ ಕ್ರಮ ಜಾಗತಿಕ ಮಟ್ಟದಲ್ಲಿ ಗಮನಸೆಳೆದಿದೆ. 2021ರಲ್ಲಿ ರಚಿಸಲ್ಪಟ್ಟ ಮೂರು ಸದಸ್ಯರ ಆಯೋಗವು ಇದೀಗ ಇಸ್ರೇಲ್ ಗಾಝಾದಲ್ಲಿ ಕೈಗೊಂಡ ಸೇನಾ ಚಟುವಟಿಕೆಗಳು, ವಸಾಹತು ಚಟುವಟಿಕೆಗಳು ಮತ್ತು ಫೆಲೆಸ್ತೀನಿಯರ ಮೇಲಿನ ದೌರ್ಜನ್ಯಗಳ ಕುರಿತು ವಿಸ್ತೃತ ಪರಿಶೀಲನೆ ನಡೆಸಲಿದೆ. ಮುರಳೀಧರ್ ಅವರು ಬ್ರೆಝಿಲ್ ನ ಕಾನೂನು ತಜ್ಞ ಪಾಲೊ ಸೆರ್ಗಿಯೊ ಪಿನ್ಹೀರೊ ಅವರ ನಂತರ ಆಯೋಗದ ನೇತೃತ್ವ ವಹಿಸಲಿದ್ದಾರೆ. ಕಳೆದ ವರ್ಷ ವಿಶ್ವಸಂಸ್ಥೆ ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡಿತ್ತು. ಅಕ್ಟೋಬರ್ 7, 2023ರ ಹಮಾಸ್ ದಾಳಿಯ ನಂತರ ಗಾಝಾದಲ್ಲಿ ಇಸ್ರೇಲ್ ಕೈಗೊಂಡ ಕ್ರಮಗಳು, ಶಸ್ತ್ರಾಸ್ತ್ರ ಪೂರೈಕೆ, ವಸಾಹತು ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಆಯೋಗವು ಮಾನವ ಹಕ್ಕುಗಳ ಮಂಡಳಿ ಹಾಗೂ ಸಾಮಾನ್ಯ ಸಭೆಗೆ ವರದಿ ಸಲ್ಲಿಸಬೇಕಿದೆ. 2025ರ ಸೆಪ್ಟೆಂಬರ್ ನಲ್ಲಿ ಆಯೋಗವು ಸಲ್ಲಿಸಿದ್ದ ವರದಿ, ಗಾಝಾದಲ್ಲಿ ಇಸ್ರೇಲ್ ಫೆಲೆಸ್ತೀನಿಯರ ಮೇಲೆ ನರಮೇಧ ನಡೆಸಿದೆ ಎಂದು ಗಂಭೀರ ಆರೋಪ ಮಾಡಿತ್ತು. ಇಸ್ರೇಲ್ ಈ ವರದಿಯನ್ನು ತೀವ್ರವಾಗಿ ತಳ್ಳಿ ಹಾಕಿದ್ದು, ಅದು ರಾಜಕೀಯ ಉದ್ದೇಶಿತ ಎಂದು ಪ್ರತಿಕ್ರಿಯಿಸಿತ್ತು. ನ್ಯಾಯಮೂರ್ತಿ ಎಸ್. ಮುರಳೀಧರ್ ಯಾರು? ಮದುರೈ ಹೈಕೋರ್ಟ್ನಲ್ಲಿ ವಕಾಲತ್ತು ಆರಂಭಿಸಿ, ನಂತರ ದಿಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಸೇವೆ ಸಲ್ಲಿಸಿದ ಮುರಳೀಧರ್, ದಿಟ್ಟ ಹಾಗೂ ಪ್ರಗತಿಪರ ತೀರ್ಪುಗಳಿಗೆ ಹೆಸರಾದವರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿಯೂ ಅವರು ಮಹತ್ವದ ಪಾತ್ರ ವಹಿಸಿದ್ದರು. 2006ರಲ್ಲಿ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಅವರು, 2021ರಲ್ಲಿ ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಭಡ್ತಿ ಹೊಂದಿದರು. 2019ರಲ್ಲಿ ಸಲಿಂಗಕಾಮ ಅಪರಾಧವಲ್ಲ ಎಂದು ಸೆಕ್ಷನ್ 377 ರದ್ದು ಮಾಡಿದ ಐತಿಹಾಸಿಕ ತೀರ್ಪು ನೀಡಿದ್ದರು. 2020ರಲ್ಲಿ ದಿಲ್ಲಿ ಗಲಭೆ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರಕರಣಗಳ ವಿಚಾರದಲ್ಲಿ ಪೊಲೀಸರ ನಿರ್ಲಕ್ಷ್ಯವನ್ನು ಪ್ರಶ್ನಿಸಿದ ಕೆಲವೇ ಗಂಟೆಗಳಲ್ಲೇ ಅವರ ವರ್ಗಾವಣೆ ಆದೇಶ ಹೊರಬಿದ್ದಿದ್ದು, ದೇಶದ ಕಾನೂನು ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. 2023ರಲ್ಲಿ ನಿವೃತ್ತಿಯಾದ ಬಳಿಕ ಅವರು ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾಗಿ ಮರಳಿದ್ದರು. ಅಕ್ಟೋಬರ್ 10ರಿಂದ ಜಾರಿಗೆ ಬಂದಿದ್ದ ಇಸ್ರೇಲ್ ಫೆಲೆಸ್ತೀನ್ ನಡುವಿನ ದುರ್ಬಲ ಕದನ ವಿರಾಮದ ನಡುವೆಯೂ, ಗಾಝಾದ ಪರಿಸ್ಥಿತಿ ಗೊಂದಲವಾಗಿಯೇ ಮುಂದುವರಿದಿದೆ. ಈ ಹಿನ್ನಲೆಯಲ್ಲಿ, ನ್ಯಾಯಮೂರ್ತಿ ಮುರಳೀಧರ್ ನೇತೃತ್ವದ ಆಯೋಗ ನೀಡಲಿರುವ ಮುಂದಿನ ವರದಿ ವಿಶ್ವಸಂಸ್ಥೆಯಲ್ಲಿಯೂ, ಜಾಗತಿಕ ರಾಜಕೀಯ ವೇದಿಕೆಯಲ್ಲಿಯೂ ಪ್ರಮುಖ ಚರ್ಚೆಗೆ ಕಾರಣವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಉಡುಪಿ | ಮೋದಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೈರು!
ಶ್ರೀಕೃಷ್ಣ ಮಠದ ಕನಕಕಿಂಡಿಗೆ ಸ್ವರ್ಣ ಕವಚದ ಸೇವೆ ನೀಡಿದ್ದ ಮಧ್ವರಾಜ್
ಕುರ್ಚಿ ಕಿತ್ತಾಟ ಮುಂದುವರೆದರೆ ರಾಜ್ಯ ಅಲ್ಲೋಲ ಕಲ್ಲೋಲ: ಬಸವರಾಜ ಬೊಮ್ಮಾಯಿ
ಹಾವೇರಿ: ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಇದೇ ರೀತಿ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ-ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ. ಕಪ್ಪು ಕುದುರೆ ರೇಸ್ಗೆ ಬರುವ ಸಾಧ್ಯತೆ ಇದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈಗ ಕಾಣದಿರುವ ಕುದುರೆ ಕಾಣಬಹುದು. ಫೋಟೊದಲ್ಲಿ ಇರುವ ಕುದುರೆ ಓಡುವುದಿಲ್ಲ. ರಾಜ್ಯದಲ್ಲಿ ಏನಾದರೂ ಆಗಬಹುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿಸೆಂಬರ್ 8ರ ವರೆಗೂ ಸಮಯ ಇದೆ. ಅಂತಹ ಸಂದರ್ಭ ಬಂದರೆ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸಂಗ ಬರಬಹುದು ಎಂದರು. ಕುದುರೆ ವ್ಯಾಪಾರ ಮಾಡುವುದು ಬಿಜೆಪಿಯವರ ಕೆಲಸ ಕಾಂಗ್ರೆಸ್ನವರ ಕೆಲಸ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸರಾಜ ಬೊಮ್ಮಾಯಿ, ಕಾಂಗ್ರೆಸ್ವರು 1969 ರಿಂದಲೆ ಕುದುರೆ ವ್ಯಾಪಾರ ಆರಂಭ ಮಾಡಿದ್ದಾರೆ. ಆಗ ಜಾರಕಿಹೊಳಿ ಇನ್ನೂ ರಾಜಕಾರಣದಲ್ಲಿಯೆ ಇರಲಿಲ್ಲ, ಕಾಂಗ್ರೆಸ್ ಇತಿಹಾಸ ತೆಗೆದು ನೋಡಿದರೆ ಗೊತ್ತಾಗಲಿದೆ ಎಂದು ತಿರುಗೇಟು ನೀಡಿದರು. ಮಹಾರಾಷ್ಟ್ರದ ಎಲ್ಲ ಶಾಸಕರನ್ನು ಡಿ.ಕೆ.ಶಿವಕುಮಾರ್ ಕರೆದುಕೊಂಡು ಬಂದು ವಿಲಾಸ್ ರಾವ್ ದೇಶಮುಖ ಅವರನ್ನು ಕಂಟೋಲ್ ನಲ್ಲಿ ಇಟ್ಟುಕೊಂಡಿದ್ದು ಗೊತ್ತಿಲ್ಲವೇ? ಎಂದು ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಸರಕಾರದಲ್ಲಿ ದುಡ್ಡಿಲ್ಲ: ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರಕಾರ ಕೇಂದ್ರದ ಕಡೆಗೆ ಬೆರಳು ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೆಕ್ಕೆಜೋಳ ವಿಚಾರದಲ್ಲಿ ಸುಮ್ಮನೆ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಮುಖ್ಯಮಂತ್ರಿ 10 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ಆದೇಶ ಮಾಡಿದ್ದಾರೆ. ಯಾಕೆ ಖರೀದಿ ಮಾಡುತ್ತಿಲ್ಲ. ಯಾಕೆ ಎಜೆನ್ಸಿ ನಿಗದಿ ಮಾಡಿಲ್ಲ. ಯಾಕೆ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದರು. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಕೇಂದಕ್ಕೆ ನಿಯೋಗ ತೆಗೆದುಕೊಂಡು ಹೋಗುವ ಕುರಿತು ಸಚಿವ ಶಿವಾನಂದ ಪಾಟೀಲರು ಹೇಳಿರುವ ಮಾತಿಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ನಿಯೋಗ ತೆಗೆದುಕೊಂಡು ಹೋಗಿ ಏನು ಮಾಡುವುದು. ಅವರು ಮೊದಲು ಖರೀದಿ ಆರಂಭಿಸಿಲಿ, ನಾನು ಅವರ ಜಾಗದಲ್ಲಿ ಇದ್ದಿದ್ದರೆ ಆ ಕೆಲಸ ಮಾಡುತ್ತಿದ್ದೆ ಎಂದು ಹೇಳಿದರು.
ಶೀಘ್ರದಲ್ಲಿಯೇ ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್
ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ಎಲ್ಲ ಬೆಳವಣಿಗೆಗಳನ್ನು ಕಾಂಗ್ರೆಸ್ ಹೈಕಮಾಂಡ್ನ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿಯೇ ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಲಾಬಿಗಳು ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಅವೆಲ್ಲ ಇರುವುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪರಿಹಾರ ಹುಡುಕಲಿದ್ದಾರೆ ಎಂದು ತಿಳಿಸಿದರು. ಸ್ವಾಮೀಜಿಗಳ ಸಹಿತ ಅನೇಕರು ಡಿ.ಕೆ ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯ ಪರ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಜೊತೆಗೆ ನಿಂತವರು, ಬಿಜೆಪಿಗೆ ಬೆಂಬಲ ನೀಡಿದವರು ಕಾಂಗ್ರೆಸ್ ಪಕ್ಷಕ್ಕೆ ಉಪದೇಶ ನೀಡುತ್ತಿರುವುದು ಸ್ವಾಗತಾರ್ಹ ಎಂದು ಉಲ್ಲೇಖಿಸಿದರು.
ಈ ವರ್ಷದ ಬಜೆಟ್ ನಲ್ಲಿ 95000ಕೋಟಿ ರೂ. ಮೀಸಲು: ಮಹತ್ವ ಮಾಹಿತಿ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 28: ಸಮಾಜದಲ್ಲಿ ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಈ ವರ್ಷದ ಬಜೆಟ್ ನಲ್ಲಿ 95000ಕೋಟಿ ರೂ. ಗಳನ್ನು ಮಹಿಳಾ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. ಲಿಂಗ ತಾರಾತಮ್ಯ ಹೋಗಲಾಡಿಸಲು ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
Adani Group: ಆಸ್ಟ್ರೇಲಿಯಾದಲ್ಲಿ ಅದಾನಿ ಗ್ರೂಪ್ಗೆ ಭರ್ಜರಿ ಗೆಲುವು, ವಿರೋಧಿಗಳಿಗೆ ಸೋಲು!
ಅದಾನಿ ಗ್ರೂಪ್ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನ ಹಲವು ದೇಶಗಳಲ್ಲಿ ತಮ್ಮ ಉದ್ಯಮಗಳನ್ನು ಬೆಳೆಸುತ್ತಿದ್ದು, ಜಾಗತಿಕವಾಗಿ ಭಾರತದ ಉದ್ಯಮ ವಲಯವನ್ನ ಗುರುತಿಸಿಕೊಳ್ಳಲು ಸಹಾಯಕವಾಗಿ ನಿಂತಿದೆ. ಇದೇ ರೀತಿ ಆಸ್ಟ್ರೇಲಿಯಾದಲ್ಲಿ ಕೂಡ ಅದಾನಿ ಗ್ರೂಪ್ ಬಹುದೊಡ್ಡ ಉದ್ಯಮಗಳನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದು, ಆದರೆ ಇದಕ್ಕೆ ಕೆಲವರಿಂದ ಅಡೆತಡೆ ಎದುರಾಗಿತ್ತು. ಆದರೆ ಆ ಎಲ್ಲಾ ಅಡೆತಡೆ ಮಾಡುವವರಿಗೆ ಇದೀಗ ಕ್ವೀನ್ಸ್ಲ್ಯಾಂಡ್ನ ಸುಪ್ರೀಂ ಕೋರ್ಟ್
ಯಾದಗಿರಿ | ವಡಗೇರಾ, ದೋರನಹಳ್ಳಿ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ: ಸಚಿವ, ಶಾಸಕರಿಗೆ ಸನ್ಮಾನ
ಯಾದಗಿರಿ: ಜಿಲ್ಲೆಯ ವಡಗೇರಾ, ದೋರನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೆ ಏರಿಸಿದ್ದರ ಹಿಂದೆ ಸಚಿವರಾದ ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ ಖರ್ಗೆ, ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರ ಶ್ರಮ ಅಪಾರವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಮರೆಪ್ಪ ಬಿಳ್ಹಾರ್ ಹೇಳಿದ್ದಾರೆ. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮರೆಪ್ಪ ಬಿಳ್ಹಾರ್, ಕಳೆದ ವಿಧಾನಸಭಾ ಚುನಾವಣೆ ವೇಳೆ ಎರಡು ಕಡೆ ಪ್ರಚಾರಕ್ಕೆ ಹೋದ ವೇಳೆ ಈ ಬೇಡಿಕೆಗಳ ಬಗ್ಗೆ ಜನರು ಮನವಿ ಸಲ್ಲಿಸಿದ್ದರು. ಅದರಂತೆಯೇ ಶಾಸಕರಾದ ಪಾಟೀಲ್ ಅವರು ಸಚಿವರು, ಡಿಸಿಎಂ, ಸಿಎಂ ಅವರ ಸಹಕಾರದಿಂದ ಒಂದೇ ತಿಂಗಳಲ್ಲಿ ಮಹತ್ವದ ಕೆಲಸಗಳು ಮಾಡಿದ್ದಾರೆ. ಆದ್ದರಿಂದ ಸಚಿವರು, ಶಾಸಕರನ್ನು ಭೇಟಿ ಮಾಡಿ ದೋರನಹಳ್ಳಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡು ಅವರನ್ನು ಸನ್ಮಾನಿಸಲಾಗುವುದು ಎಂದು ಮರೆಪ್ಪ ಹೇಳಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಾರೆಡ್ಡಿ, ರಾಘವೇಂದ್ರ ಮನಸಗಲ್, ಶಿವರಾಜ್, ಶರಣು ಪಡಶೇಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲೊಂದು ಪ್ರೇಮ ವಿವಾಹ - 'ಅಯ್ಯೋ ಹುಡುಗ ಕಪ್ಪಗಿದ್ದಾನೆ' ಎಂದು ಟೀಕಿಸಿದವರಿಗೆ ತಿರುಗೇಟು ನೀಡಿದ ವರ
ಮಧ್ಯಪ್ರದೇಶದ ರಿಷಭ್ ರಾಜಪೂತ್ ಮತ್ತು ಶೋನಲಿ ಚೌಕ್ಸೆ 11 ವರ್ಷಗಳ ನಂತರ ವಿವಾಹವಾದರು. ಅವರ ವಿವಾಹದ ಚಿತ್ರಗಳು ವೈರಲ್ ಆದ ನಂತರ, ವರನ ಕಪ್ಪು ಚರ್ಮದ ಬಣ್ಣದ ಬಗ್ಗೆ ಆನ್ಲೈನ್ನಲ್ಲಿ ಟೀಕೆಗಳು ಬಂದವು. ಹಣಕ್ಕಾಗಿ ಮದುವೆಯಾದರು ಎಂಬ ಆರೋಪಗಳು ಕೇಳಿಬಂದವು. ಆದರೆ ದಂಪತಿ ಈ ಟೀಕೆಗಳನ್ನು ಲೆಕ್ಕಿಸದೆ ತಮ್ಮ ಸಂತೋಷವನ್ನು ಆನಂದಿಸುತ್ತಿದ್ದಾರೆ. ವರ ರಿಷಭ್ ತಾನು ಜೀವನಪೂರ್ತಿ ಇಂತಹ ತಾರತಮ್ಯವನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ.
ಕಲಬುರಗಿ| ಬೀದಿ ನಾಯಿಗಳ ಸ್ಥಳಾಂತರ; ಪಾಲಿಕೆ, ಶಾಸಕರ ವಿರುದ್ಧ ಪ್ರತಿಭಟನೆ
ಕಲಬುರಗಿ: ನಗರದ ಬೀದಿ ನಾಯಿಗಳನ್ನು ಹೊರವಲಯದ ಉದನೂರ ಗ್ರಾಮದ ಸಮೀಪ ಸ್ಥಳಾಂತರಿಸುತ್ತಿರುವುದನ್ನು ಖಂಡಿಸಿ, ಉದನೂರ ಗ್ರಾಮಸ್ಥರು ರಸ್ತೆ ತಡೆ ನಡೆಸಿ, ದಕ್ಷಿಣ ಮತಕ್ಷೇತ್ರದ ಶಾಸಕ, ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಅಧಿಕಾರಿಗಳಿಗೆ ಘೇರಾವ್ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು. ಉದನೂರು ಗ್ರಾಮಕ್ಕೆ ಬೀದಿ ನಾಯಿಗಳ ಸ್ಥಳಾಂತರಕ್ಕೆ ಶಾಸಕರು, ಮಹಾಪೌರರ ಕುಮ್ಮಕ್ಕಿದೆ. ಹಾಗಾಗಿ ಯಾವುದೇ ತರಹದ ನಾಯಿಗಳನ್ನು ಗ್ರಾಮದಲ್ಲಿ ಬಿಡಬಾರದು. ಒಂದು ವೇಳೆ ತಂದು ಬಿಟ್ಟರೆ ಮುಂದಿನ ಸಮಸ್ಯೆಗಳಿಗೆ ನೀವೇ ಹೊಣೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಮಕ್ಕೆ ಬಂದಿದ್ದ ನಾಯಿಗಳಿರುವ ವಾಹನವನ್ನು ಪ್ರತಿಭಟನಾಕಾರರು ತಡೆದಿದ್ದಾರೆ. ಈ ಸಂದರ್ಭದಲ್ಲಿ ಶಿವಪುತ್ರಪ್ಪ ಮಾಲಿಪಾಟೀಲ್, ಶಾಂತಕುಮಾರ್ ಬಿರಾದಾರ, ರವಿ ಪಾಟೀಲ್, ವಿಶ್ವನಾಥ್ ಪಾಟೀಲ್, ಹನಮಂತ್ರಾಯ ಕಪನೂರ, ಹಜರತ್ ಸಾಬ್, ಶುಭಾಷ್ ಚಂದ್ರ ಮುಲಗೆ, ವಿಠಲ ಚವಾಣ್, ಬಸವರಾಜ, ಸತೀಶ್, ಮಲ್ಲಿಕಾರ್ಜುನ್, ಶಿವಪುತ್ರಪ್ಪ ಪಾಟೀಲ್, ಬಿಮಣ್ಣ ಶೇರಿಕರ, ರೇವಣಸಿದ್ಧ ದುದನಿ, ಪ್ರಸನ್ನ ಸೇರಿಕರ್, ಮಾಂತೇಶ್ ಪಾಟೀಲ್, ಶರಣು, ಗುಂಡು ಪೂಜಾರಿ, ಗುಂಡು ದೇವಣ್ಣ್ಣ ಗಾವ್, ಜೈಭಿಮು ಕೊರಲ್ಳಿ, ರಾಣಪ್ಪ ಕೋರಳ್ಳಿ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು, ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
ಉಡುಪಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ಶೋ; ಸಾವಿರಾರು ಜನರಿಂದ ಪುಷ್ಪವೃಷ್ಠಿ
ಉಡುಪಿ, ನ.28: ಉಡುಪಿಗೆ ಶುಕ್ರವಾರ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಪುಷ್ಪವೃಷ್ಠಿಯ ಮಾಡಿ ಪ್ರಧಾನಿಯನ್ನು ಸ್ವಾಗತಿಸಿದರು. ಬೆಳಗ್ಗೆ 11ಗಂಟೆಗೆ ಎರಡು ಬೆಂಗಾವಲು ಹೆಲಿಕಾಪ್ಟರ್ ನೊಂದಿಗೆ ಆದಿಉಡುಪಿ ಹೆಲಿಪ್ಯಾಡ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸ್ವಾಗತಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಜರಿದ್ದರು. ಅಲ್ಲಿಂದ ರಸ್ತೆ ಮೂಲಕ ಆಗಮಿಸಿದ ಮೋದಿ, ಬೆಳಗ್ಗೆ 11.10ಕ್ಕೆ ಸುಮಾರು 30 ವಾಹನಗಳೊಂದಿಗೆ ರೋಡ್ ಶೋ ಆರಂಭಿಸಿದರು. ಬನ್ನಂಜೆ ನಾರಾಯಣಗುರು ವೃತ್ತದಿಂದ ಆರಂಭಗೊಂಡ ರೋಡ್ ಶೋ, ಬನ್ನಂಜೆ, ಶಿರಿಬೀಡು, ಸಿಟಿ ಬಸ್ ನಿಲ್ದಾಣ, ಕಲ್ಸಂಕದವರೆಗೆ ನಡೆಯಿತು. ಅಲ್ಲಿಂದ ನೇರವಾಗಿ ಪ್ರಧಾನಿ ಶ್ರೀಕೃಷ್ಣ ಮಠಕ್ಕೆ ತೆರಳಿದರು. ರೋಡ್ ಶೋನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಹಸ್ರಾರು ಮಂದಿ ಅಭಿಮಾನಿಗಳು, ಮೋದಿಗೆ ಪುಷ್ಪವೃಷ್ಠಿಗೈದರು. ನೆರೆದಿದ್ದ ಜನರು ಮೋದಿ ಮೋದಿ ಎಂಬ ಘೋಷಣೆಗಳನ್ನು ಕೂಗುತ್ತ ಪ್ರಧಾನಿಯನ್ನು ಕಂಡು ಸಂಭ್ರಮಿಸಿದರು. ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ಬನ್ನಂಜೆ, ಕಾಟನ್ ಕಿಂಗ್ ಶೋರೂಮ್ ಬಳಿ, ಸಿಟಿ ಬಸ್ ನಿಲ್ದಾಣದ ಹರ್ಷ ಶೋರೂಂ ಬಳಿ ವೇದಿಕೆಗಳನ್ನು ನಿರ್ಮಿಸಿ, ನೃತ್ಯ, ಯಕ್ಷಗಾನ, ಹುಲಿ ವೇಷ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ರೋಡ್ಶೋ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಗ್ಗೆ 9ಗಂಟೆ ವೇಳೆ ಸಂಪೂರ್ಣ ವಾಹನ ಹಾಗೂ ಜನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಅಲ್ಲದೆ ಬಾಂಬ್ ನಿಷ್ಕ್ರೀಯ ದಳ, ಪೊಲೀಸರು, SPG(ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರ ಬ್ಯಾಗ್ ಸಹಿತ ಸಂಪೂರ್ಣ ತಪಾಸಣೆ ನಡೆಸಿದರು. ಎಲ್ಲ ಕಡೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 1.25ರ ಸುಮಾರಿಗೆ ವಾಪಾಸ್ಸು ತೆರಳಿದರು. ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬೆಳಗ್ಗೆ 7ಗಂಟೆಯಿಂದಲೇ ನಗರಕ್ಕೆ ವಾಹನ ಸಂಚಾರ ನಿರ್ಬಂಧ ವಿಧಿಸಿದ್ದರಿಂದ ನಗರದಲ್ಲಿ ವಾಹನ ಹಾಗೂ ಜನ ಸಂಚಾರ ತೀರಾ ವಿರಳವಾಗಿತ್ತು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗಂಟೆಗಟ್ಟಲೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು. ►ಪೊಲೀಸರೊಂದಿಗೆ ಮಾತಿನ ಚಕಮಕಿ : ಬಿಗಿ ಭದ್ರತೆ ಮಧ್ಯೆಯೂ ಬಿಜೆಪಿ ಕಾರ್ಯಕರ್ತರು ಬನ್ನಂಜೆಯಲ್ಲಿ ನಿರ್ಮಿಸಿದ ವೇದಿಕೆ ಸಮೀಪ ನೀರಿನ ಕ್ಯಾನ್ ಸರಬರಾಜು ಮಾಡುತ್ತಿದ್ದ ವಿಚಾರದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಕಾರ್ಯಕರ್ತರಿಗೆ ಪೊಲೀಸರ ಜೊತೆ ಸಹಕರಿಸುವಂತೆ ಸೂಚಿಸಿದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು, ನೀರಿನ ಕ್ಯಾನ್ ಹಾಗೂ ಟೇಬಲ್ಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಲಾಯಿತು.
ಕೊಪ್ಪಳ| ಕಿರ್ಲೋಸ್ಕರ್ನಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಕೊಪ್ಪಳ: ಕಿರ್ಲೋಸ್ಕರ್ ಕಾರ್ಖಾನೆಯಿಂದ ವಿವಿಧ ಸಾಧಕರಿಗೆ ಸನ್ಮಾನಿಸುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಕಂಪೆನಿಯ ಹಾಲ್ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭದಲ್ಲಿ ಶರಣಪ್ಪಜಿರ್ ಹೂಗಾರರವರಿಂದ ಕನ್ನಡದ ಪ್ರಾಮುಖ್ಯತೆ ಮತ್ತು ಕನ್ನಡದ ಅನುಷ್ಠಾನದ ಬಗ್ಗೆ ಉಪನ್ಯಾಸ ನೀಡಲಾಯಿತು. ಪದ್ಮಶ್ರೀ ಪುರಸ್ಕೃತ ಶ್ರೀಮತಿ ಬೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅನೇಕ ದೇಶಗಳಲ್ಲಿ ತೊಗಲುಗೊಂಬೆ ಆಟವನ್ನು ಪ್ರದರ್ಶನ ಮಾಡಿ ನಮ್ಮ ದೇಶದಲ್ಲಿ ಅಳಿದು ಹೋಗುತ್ತಿರುವ ಪ್ರಾಚೀನ ಕಲೆ, ಸಂಸ್ಕೃತಿ, ಪರಂಪರೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡ ಹೋಗಿದ್ದರಿಂದ ಅವರನ್ನು ಸನ್ಮಾನಿಸಿ ಜೊತೆಗೆ ತೊಗಲುಗೊಂಬೆಗಳ ಉನ್ನತಿಕರಣಕ್ಕೆ ಕಂಪೆನಿಯಿಂದ ಧನಸಹಾಯ ನೀಡಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಎಂ.ಜಿ ನಾಗರಾಜ್ ವಹಿಸಿದ್ದರು. ಅತಿಥಿಗಳಾಗಿ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾದ ಡಾ. ಪಿ ನಾರಾಯಣ ಮತ್ತು ಕಿರ್ಲೋಸ್ಕರ್ ಫೆರಸ್ ಕಾರ್ಮಿಕ ಸಂಘದ ಉಪಾಧ್ಯಕ್ಷರಾದ ಶರಣಪ್ಪ.ಬಿ ಆಗಮಿಸಿದ್ದರು. ಪ್ರಾಸ್ತಾವಿಕ ಭಾಷಣವನ್ನುಡಾ. ಪಿ. ನಾರಾಯಣರವರು ಮಾಡಿದರು. ಎಮ್.ಎಮ್ ನಾಡಿಗೇರ್ ನಿರೂಪಿಸಿದರು.
\Maize Rate: ಮೆಕ್ಕೆಜೋಳ ಖರೀದಿಗೆ ಮಾರ್ಕೆಟಿಂಗ್ ಫೆಡರೇಷನ್ಗೆ ದುಡ್ಡು ಕೊಡಿ''
ಕರ್ನಾಟಕ ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿಸಲು ಮಾರ್ಕೆಟಿಂಗ್ ಫೆಡರೇಷನ್ಗೆ ದುಡ್ಡು ಕೊಟ್ಟು ಖರೀದಿಗೆ ಸೂಚನೆ ನೀಡಿದರೆ ಅವರು ಖರೀದಿ ಆರಂಭಿಸುತ್ತಾರೆ. ನಿಮ್ಮನ್ನು ಕುರ್ಚಿಯಲ್ಲಿ ಕೂಡಿಸಿದ ರೈತರ ಬದುಕು ಸಂಕಷ್ಟದಲ್ಲಿದೆ. ರೈತರ ಉಳಿಸಲು ನೀವು ಈ ಕೆಲಸ ಮಾಡಬೇಕು. ಕುರ್ಚಿ ವ್ಯವಹಾರ ಆ ಮೇಲೆ ಮಾಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ
WPL 2026 Auction- ಆಟಗಾರ್ತಿಯರ ಮರುಖರೀದಿ ತಂತ್ರದಲ್ಲಿ ಸಕ್ಸಸ್: MI ತಂಡದ ಮ್ಯಾನೇಜ್ ಮೆಂಟ್ ಫುಲ್ ಖುಷ್
Mumbai Indians Womens Team- ಮಹಿಳಾ ಪ್ರೀಮಿಯರ್ ಲೀಗ್-2026ರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡವು ತಮ್ಮ ಹಿಂದಿನ ಚಾಂಪಿಯನ್ ತಂಡದ ಆಟಗಾರ್ತಿಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮರಳಿ ಪಡೆದುಕೊಂಡಿದೆ. ಅಮೆಲಿಯಾ ಕೆರ್, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್, ಸಜನಾ ಮತ್ತು ಸಂಸ್ಕೃತಿ ಗುಪ್ತಾ ಅವರ ಮರಳುವಿಕೆಯಿಂದ ತಂಡವು ಸಂತಸಗೊಂಡಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಾಯಕಿ ಹರ್ಮನ್ಪ್ರೀತ್ ಕೌರ್ ಮಾಲಕಿ ನೀತಾ ಅಂಬಾನಿ ಅವರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಹಳೇ ಆಟಗಾರ್ತಿಯರೊಂದಿಗೆ ಹೊಸ ಪ್ರತಿಭೆಗಳ ಸೇರ್ಪಡೆ ಯಾಗಿದ್ತಂದು ತಂಡವು ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದೆ.
ಸ್ವಘೋಷಿತ ಗೋರಕ್ಷಕ, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಮಾಧ್ಯಮ ಸಂಘದಿಂದ ಸನ್ಮಾನ!
►ಪ್ರಶಸ್ತಿ ಪ್ರದಾನ ಮಾಡಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ವ್ಯಾಪಕ ಅಸಮಾಧಾನ►ವಿವಾದದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಸಂತೋಷ್ ಹೆಗ್ಡೆ
ʻಸಿಎಂ ಬದಲಾವಣೆ ವಿಚಾರದಲ್ಲಿಅತಿಶಯೋಕ್ತಿ ಚರ್ಚೆ, ಯಾರಿಗೂ ಪ್ರಯೋಜನವಿಲ್ಲದ್ದುʼ: ಕೃಷ್ಣ ಬೈರೇಗೌಡ
ನಾಯಕತ್ವ ಬದಲಾವಣೆ ಬಗ್ಗೆ ಕರ್ನಾಟಕದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಿಲ್ಲ. ಇದೊಂದು ಅತಿಶಿಯೋಕ್ತಿ ಚರ್ಚೆ. ನನಗೆ ಕೈತುಂಬಾ ಸಂಬಳ ಕೊಟ್ಟಿದ್ದಾರೆ. ಕೆಲಸ ಮಾಡೋದು ಮಾಡ್ತೇನೆ. ರಾಜಕೀಯದ ಬಗ್ಗೆ ಪೂರ್ತಿ ಚರ್ಚೆ ಬೇಡ ಎನ್ನುತ್ತಿಲ್ಲ. ಉಪಯೋಗ ಇಲ್ಲದ ವಿಚಾರದ ಬಗ್ಗೆ ನಾನು ಮಾತಾಡಲ್ಲ. ಎಲ್ಲದಕ್ಕೂ ಮಿತಿ ಇರಲಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹಾಸನದಲ್ಲಿ ಹೇಳಿದರು.
ಮಂಗಳೂರು | ಎಂಆರ್ಪಿಎಲ್ನಲ್ಲಿ ಸಂವಿಧಾನ ದಿನಾಚರಣೆ
ಮಂಗಳೂರು, ನ.28: ಎಂಆರ್ಪಿಎಲ್ನ ಕಾನೂನು ವಿಭಾಗದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಎನ್.ಕೆ.ಸುಧೀಂದ್ರ ರಾವ್ ಮಾತನಾಡಿ, ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ನ ಮಹತ್ವವನ್ನು ವಿವರಿಸಿದರು. ನಾಗರಿಕರು ತಮ್ಮ ಮೂಲಭೂತ ಕರ್ತವ್ಯಗಳನ್ನು ಪೂರೈಸಿದರೆ ಮಾತ್ರ ಈ ಹಕ್ಕುಗಳು ಅರ್ಥಪೂರ್ಣವಾಗಲು ಸಾಧ್ಯ ಎಂದವರು ಹೇಳಿದರು. ಈ ಸಂದರ್ಭ ನ್ಯಾ. ಸುಧೀಂದ್ರ ರಾವ್ ಅವರು, ಎಂಆರ್ಪಿಎಲ್ನ ಕಾನೂನು ತಂಡವು ಸಂಗ್ರಹಿಸಿದ ಎರಡು ಕಾನೂನು ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂಆರ್ಪಿಎಲ್ (ರಿಫೈನರಿ) ನಿರ್ದೇಶಕ ನಂದಕುಮಾರ್ ವಿ. ಪಿಳ್ಳೈ, ಭಾರತೀಯ ಸಂವಿಧಾನವು ಜಗತ್ತಿನ ಅತ್ಯುತ್ತಮ ಅಭ್ಯಾಸಗಳಿಂದ ಪ್ರೇರಿತವಾದ ಜೀವಂತ ದಾಖಲೆ ಎಂದು ಬಣ್ಣಿಸಿದರು. ಹಿರಿಯ ಅಧಿಕಾರಿ ಗಣೇಶ್ ಎಸ್. ಭಟ್ ಸೇರಿದಂತೆ ಇತರ ಅಧಿಕಾರಿಗಳು, ನೌಕರರು ಭಾಗವಹಿಸಿದ್ದರು. ಜಿಜಿಎಂ (ಎಚ್ಆರ್) ಕೃಷ್ಣ ಹೆಗಡೆ ಮಿಯಾರ್ ಸ್ವಾಗತಿಸಿ, ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಮುಖ ಅಂಶಗಳ ಬಗ್ಗೆ ಮಾತನಾಡಿದರು. ಸಂವಿಧಾನ ಪೀಠಿಕೆಯನ್ನು ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಜಿಜಿಎಂ (ಟಿಎಸ್) ಸತ್ಯನಾರಾಯಣ ಎಚ್.ಸಿ., ಇಡಿ (ಮಾರುಕಟ್ಟೆ ಮತ್ತು ಎಎಂಪಿ, ಬಿಡಿ) ದೀಪಕ್ ಪ್ರಭಾಕರ್ ಪಿ., ಇಡಿ (ರಿಫೈನರಿ) ಎನ್. ಆನಂದ ಕುಮಾರ್ ಅವರು ಓದಿದರು. ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಲಾದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜಿಎಂ (ಕಾನೂನು) ಪ್ರಫುಲ್ ಮೋಹನ್ ವಂದಿಸಿದರು. ಕವಿತಾ ಕಾರ್ಯಕ್ರಮ ನಿರೂಪಿಸಿದರು.
ನಬಾರ್ಡ್ ಕೋಳಿ ಸಾಕಣೆ ಸಹಾಯಧನ ಯೋಜನೆ: ಕೋಳಿ ಫಾರಂ ಸ್ಥಾಪನೆಗೆ ಶೇ. 33ರಷ್ಟು ಸಬ್ಸಿಡಿ: ಅರ್ಜಿ ಸಲ್ಲಿಕೆ ಹೇಗೆ?
ರೈತರಿಗೆ ಆದಾಯವನ್ನು ತಂದುಕೊಡುವ ಜೀವನೋಪಾಯ ಕ್ರಮಗಳಲ್ಲಿ ಕೋಳಿ ಸಾಕಣೆಯೂ ಒಂದು. ಕೋಳಿ ಸಾಕರಣೆಯನ್ನು ಉತ್ತೇಜಿಸಲು ಸರ್ಕಾರದಿಂದಲೂ ಬೆಂಬಲ ನೀಡಲಾಗುತ್ತಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಭಾರತದಾದ್ಯಂತ ಕೋಳಿ ಸಾಕಾಣಿಕೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ನಬಾರ್ಡ್ ನೇರವಾಗಿ ವ್ಯಕ್ತಿಗಳಿಗೆ ಸಾಲ ಅಥವಾ ಸಬ್ಸಿಡಿಗಳನ್ನು ನೀಡುವುದಿಲ್ಲವಾದರೂ, ಇದು ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಪುನರ್ಧನ ಮತ್ತು ಸಬ್ಸಿಡಿ ವಿತರಣಾ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ರಾಷ್ಟ್ರೀಯ ಜಾನುವಾರು ಮಿಷನ್ ಮತ್ತು ಪೌಲ್ಟ್ರಿ ವೆಂಚರ್ ಕ್ಯಾಪಿಟಲ್ ಫಂಡ್ನಂತಹ ಯೋಜನೆಗಳ ಮೂಲಕ ನಬಾರ್ಡ್ ಸಾಲ ನೀಡುವ ಬ್ಯಾಂಕುಗಳ ಮೂಲಕ ರೈತರಿಗೆ ಅಗತ್ಯ ಹಣಕಾಸಿನ ನೆರವು ತಲುಪುವುದನ್ನು ಖಚಿತಪಡಿಸುತ್ತದೆ.
Donald Trump: ಡೊನಾಲ್ಡ್ ಟ್ರಂಪ್ ಹೊಸ ವಲಸೆ ನೀತಿ, ತೃತೀಯ ಜಗತ್ತಿನ ದೇಶಗಳು ಅಂದ್ರೆ ಯಾವುವು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರಗಳು ಒಂದಲ್ಲ ಒಂದು ರೀತಿಯಲ್ಲಿ ಜಗತ್ತಿನಾದ್ಯಂತ ಈಗ ತಲ್ಲಣ ಸೃಷ್ಟಿ ಮಾಡುತ್ತಿವೆ. ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಕೈಗೊಂಡಿರುವ ನಿರ್ಧಾರಗಳ ಪೈಕಿ ತೆರಿಗೆ ಹೇರಿಕೆ ವಿಚಾರ ಭಾರಿ ದೊಡ್ಡ ಕಲಹಕ್ಕೆ ಕಾರಣವಾಗಿ, ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳ ನಡುವೆಯೇ ದೊಡ್ಡ ಕಲಹಕ್ಕೆ ವೇದಿಕೆ ಸೃಷ್ಟಿ ಮಾಡಿತ್ತು. ಈ ತಿಕ್ಕಾಟ ಮುಗಿದ
`ಹೀಗ್ ಆಡಿದ್ರೆ ಹೇಗಣ್ಣಾ?': ಕೆಎಲ್ ರಾಹುಲ್ ಕಳಪೆ ಆಟಕ್ಕೆ ಅನಿಲ್ ಕುಂಬ್ಳೆ ಬಳಿಕ ರಾಬಿನ್ ಉತ್ತಪ್ಪ ಅಸಮಾಧಾನ
Robin Uthappa On KL Rahul- ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿ ಟೆಸ್ಟ್ ನಲ್ಲಿ ಕೆಎಲ್ ರಾಹುಲ್ ಅವರು ಕೆಟ್ಟದಾಗಿ ಬೌಲ್ಡ್ ಆದಾಗ ಭಾರತ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸರಣಿಯಲ್ಲಿನ ಕಳಪೆ ಪ್ರದರ್ಶನಕ್ಕೆ ಮತ್ತೊಬ್ಬ ಕನ್ನಡಿಗ ರಾಬಿನ್ ಉತ್ತಪ್ಪ ಅವರು ಟೀಕೆ ಮಾಡಿದ್ದಾರೆ. ಮುಂದಿನ ಸರಣಿಯಲ್ಲೂ ಕೆಎಲ್ ರಾಹುಲ್ ಅವರು ಇದೇ ರೀತಿಯ ಪ್ರದರ್ಶನ ಮುಂದುವರಿಸಿದರೆ ತಂಡದ ಮ್ಯಾನೇಜ್ ಮೆಂಟ್ ತಾಳ್ಮೆ ಕಳೆದುಕೊಳ್ಳಬಹುದು ಎಂದು ಎಚ್ಚರಿಕೆ ಸಹ ನೀಡಿದ್ದಾರೆ.
ಮಂಗಳೂರು | ಬ್ಯಾರಿ ಅಕಾಡಮಿಯಿಂದ ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಮಂಗಳೂರು, ನ.28: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.14ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಭಾಷಾಂತರ ಮತ್ತು ಪದವಿ ವಿದ್ಯಾರ್ಥಿಗಳಿಗೆ ವಿಷಯಾಧಾರಿತ ಭಾಷಣ ಸ್ಪರ್ಧೆ ಏರ್ಪಡಿಸಿದೆ. ಭಾಷಾಂತರ (ಕನ್ನಡದಿಂದ ಬ್ಯಾರಿಗೆ ಅಥವಾ ಬ್ಯಾರಿಯಿಂದ ಕನ್ನಡಕ್ಕೆ) ಮತ್ತು ವಿಷಯಾಧಾರಿತ ಭಾಷಣ ಸ್ಪರ್ಧೆಯ ವಿಜೇತರಿಗೆ 3,000 ರೂ., 2,000 ರೂ. ಮತ್ತು 1,000 ರೂ. ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ನಿಗದಿಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಬ್ಯಾರಿ ಅಕಾಡಮಿಯಿಂದ ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧೆಯು ಡಿ.13ರಂದು ಅಪರಾಹ್ನ 3ಕ್ಕೆ ಸೂರಲ್ಪಾಡಿ ಮಸೀದಿ ಬಳಿಯ ಅಲ್ ಖೈರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಭಾಷಾಂತರ ಸ್ಪರ್ಧೆಗೆ 150 ಪದಗಳ ಬರಹಕ್ಕೆ 30 ನಿಮಿಷ ಕಾಲಾವಕಾಶ ನೀಡಲಾಗುವುದು. ಭಾಷಣಕ್ಕೆ ನೀಡಲಾಗುವ ವಿಷಯಗಳನ್ನು ಆಯ್ಕೆ ಮಾಡಿ ತಯಾರಿಗೆ 30 ನಿಮಿಷ ಮತ್ತು ಭಾಷಣಕ್ಕೆ 5 ನಿಮಿಷ ಕಾಲಾವಕಾಶ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಣಿಗೆ ಡಿ.10ರ ಒಳಗೆ ಸಲೀಂ ಹಂಡೇಲ್ (ಮೊ.ಸಂ.9902194315) ಅಥವಾ ಖಲಂದರ್ ಬೀವಿ (ಮೊ.ಸಂ. 8197879889) ಅವರನ್ನು ಸಂಪರ್ಕಿಸಬಹುದು ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯವರಿಗೆ ಭರ್ಜರಿ ಗುಡ್ ನ್ಯೂಸ್: 3 ಮಹತ್ವದ ಯೋಜನೆಗಳಿಗೆ ಸಿದ್ದರಾಮಯ್ಯ ಚಾಲನೆ!
ಬೆಂಗಳೂರು, ನವೆಂಬರ್ 28: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕನಸಿನ ಯೋಜನೆಗಳಾದ ಅಕ್ಕ ಪಡೆ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅದ್ದೂರಿ ಸಮಾರಂಭದಲ್ಲಿ ಚಾಲನೆ ನೀಡಿದರು. ಅರಮನೆ ಮೈದಾನದಲ್ಲಿ ಶುಕ್ರವಾರ ಮಹಿಳಾ
ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಬ್ಯಾಂಕ್ಗೆ ಚಾಲನೆ; ಜತೆಗೆ 2 ಹೊಸ ಯೋಜನೆಗಳ ಲೋಕಾರ್ಪಣೆ; ಯಾವೆಲ್ಲಾ? ಅನುಕೂಲವೇನು?
ಕರ್ನಾಟಕ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಸಹಕಾರ ಸಂಘ, ಮಹಿಳೆಯರ ರಕ್ಷಣೆಗಾಗಿ ಅಕ್ಕಪಡೆ ಮತ್ತು ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಳಿಗೆ ಚಾಲನೆ ನೀಡಿದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ 50 ವರ್ಷಗಳ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ.
ಕಾಟಿಪಳ್ಳ | ಸುಸಜ್ಜಿತ ಆಸ್ಪತ್ರೆ, ಒಳಚರಂಡಿ ನಿರ್ಮಿಸಲು ಸರ್ವ ಧರ್ಮೀಯರ ಸೌಹಾರ್ದ ಸಮಿತಿ ಮನವಿ
ಮಂಗಳೂರು, ನ.28: ನವ ಮಂಗಳೂರು ಬಂದರು ನಿರ್ಮಾಣಕ್ಕಾಗಿ ತನ್ನೆಲ್ಲಾ ಆಸ್ತಿಪಾಸ್ತಿಗಳನ್ನು ತ್ಯಾಗಗೈದು ಕಾಟಿಪಳ್ಳ ಪುನರ್ನಿವೇಶನ ಕಾಲನಿಯಲ್ಲಿ ವಾಸವಾಗಿರುವ ಗ್ರಾಮಸ್ಥರಿಗೆ 50 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಟ್ಟಡ ಮತ್ತು ಒಳಚರಂಡಿ ಕಾಮಗಾರಿಗಳನ್ನು ಬಂದರು ಪ್ರಾಧಿಕಾರದ ವತಿಯಿಂದ ನಿರ್ಮಿಸಲು ಕಾಟಿಪಳ್ಳದ ಸರ್ವ ಧರ್ಮೀಯರ ಸೌಹಾರ್ದ ಸಮಿತಿ ಮನವಿ ಮಾಡಿದೆ. ನವಮಂಗಳೂರು ಬಂದರು ಪ್ರಾಧಿಕಾರವು ಇದೀಗ ತನ್ನ ಸುವರ್ಣ ಮಹೋತ್ಸವ ಸಂಭ್ರಮವನ್ನು ಹೊಸದಿಲ್ಲಿ ಹಾಗೂ ಪಣಂಬೂರಿನಲ್ಲಿ ಆಚರಿಸಿದೆ. ಪ್ರಾಧಿಕಾರವು ಅಮದು ಮತ್ತು ರಫ್ತು, ವ್ಯವಹಾರಗಳಲ್ಲಿ ಅತೀ ಕಡಿಮೆ ಅವಧಿಯಲ್ಲಿ ದೇಶದ ಬೃಹತ್ ಬಂದರು ಪ್ರಾಧಿಕಾರಗಳಲ್ಲಿ ನಾಲ್ಕನೇ ಸ್ನಾನಕ್ಕೇರಿದೆ. ಪ್ರಸಕ್ತ ವರ್ಷದಲ್ಲಿ ಸುಮಾರು 600 ಕೋ. ರೂ. ಲಾಭವನ್ನುಗಳಿಸಿ ಮುನ್ನಡೆಯುತ್ತಿದೆ. ಆದರೆ ಇದಕ್ಕೆಲ್ಲಾ ಕಾರಣಕರ್ತರಾದ ಪಣಂಬೂರು, ಬೈಕಂಪಾಡಿ ಮತ್ತು ಆಸುಪಾಸಿನ ಗ್ರಾಮಸ್ಥರು ತನ್ನ ಮನೆ ಮಠ ಹೊಲ ಗದ್ದೆಗಳ ಸಹಿತ ಬದುಕಿನ ಸರ್ವಸ್ವವನ್ನೂ ತ್ಯಾಗಗೈದು ಸರಕಾರ ನೀಡಿದ ಸೈಟಿನಲ್ಲಿ ಮನೆ ಮಾಡಿಕೊಂಡು ವಾಸವಾಗಿರುವುದನ್ನು ಗಮನಿಸಬೇಕಿದೆ. ಎಲ್ಲವನ್ನೂ ತ್ಯಾಗಗೈದು ಸುಮಾರು 65 ವರ್ಷಗಳು ಸಂದರೂ ಕಾಟಿಪಳ್ಳ ಪ್ರದೇಶದಲ್ಲಿ ಕನಿಷ್ಠ ಸೌಲಭ್ಯಗಳಿಗೂ ಅಂಗಲಾಚುವ ಪರಿಸ್ಥಿತಿ ಇದೆ. ಬಂದರು ಪ್ರಾಧಿಕಾರದ ಸಿಎಸ್ಆರ್ ನಿಧಿಗಳು ರಾಜ್ಯದ ಬೇರೆ ಬೇರೆ ಮೂಲಗಳಿಗೆ ಹಾಗೂ ಇತರ ರಾಜ್ಯಗಳಿಗೆ ಹಂಚಿ ಹೋದರೂ ಬಂದರು ನಿರ್ಮಾಣಕ್ಕಾಗಿ ತನ್ನ ಆಸ್ತಿಪಾಸ್ತಿಗಳನ್ನು ಕಳಕೊಂಡು ಕಾಟಿಪಳ್ಳ ಗ್ರಾಮದಲ್ಲಿ ನೆಲೆಯೂರಿರುವ ಸಂತ್ರಸ್ತರಿಗೆ ಯಾವುದೇ ಯೋಜನೆಗಳು ಬಂದರು ಪ್ರಾಧಿಕಾರದಿಂದ ನಿರ್ಮಾಣವಾಗದಿರುವುದು ವಿಪರ್ಯಾಸ. ಹಾಗಾಗಿ ಕಾಟಿಪಳ್ಳ ಗ್ರಾಮದಲ್ಲಿ ನಿರ್ವಸಿತರ ಆರೋಗ್ಯ ರಕ್ಷಣೆಗಾಗಿ, ತುರ್ತು ಸೇವೆ ನೀಡಲು 50 ಹಾಸಿಗೆಗಳ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ, ಕಾಟಿಪಳ್ಳ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಅಗತ್ಯವಿರುವ ನಿಧಿಯನ್ನು ನವಮಂಗಳೂರು ಬಂದರು ಪ್ರಾಧಿಕಾರದಿಂದ ಬಿಡುಗಡೆಗೊಳಿಸಬೇಕು ಎಂದು ಸಮಿತಿಯ ಅಧ್ಯಕ್ಷ ಎಂ. ಅಬ್ದುಲ್ ಖಯ್ಯೂಮ್, ಗೌರವಾಧ್ಯಕ್ಷ ಫಾ. ಸಂತೋಷ್ ಲೋಬೋ, ಸಂಚಾಲಕ ವಿಠಲ ಶೆಟ್ಟಿಗಾರ್ ಒತ್ತಾಯಿಸಿದ್ದಾರೆ.
Karnataka Next CM: ಸಿದ್ದರಾಮಯ್ಯ ಅಭಿಮಾನಿಗಳಿಂದ ಈಡುಗಾಯಿ ಒಡೆದು ಪೂಜೆ! ಡಿಕೆಶಿ ಪರ ನಂಜಾವಧೂತ ಶ್ರೀ..
ಬೆಂಗಳೂರು, ನವೆಂಬರ್ 28: ಕರ್ನಾಟಕದ ಸಿಎಂ ಸ್ಥಾನ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಯಿಂದ ದೇಶವೇ ರಾಜ್ಯ ರಾಜಕಾರಣದತ್ತ ತಿರುಗಿ ನೋಡುವಂತಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಸ್ವಾಮೀಜಿಗಳು ನಿಂತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಬೇಕೆಂದು ರಾಜ್ಯದ ವಿವಿಧ ಕಡೆಗಳಲ್ಲಿ ದೇವಸ್ಥಾನಗಳಲ್ಲಿ ಸಿದ್ದರಾಮಯ್ಯನವರ ಅಭಿಮಾನಿಗಳು ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದು ಕಂಡು ಬಂತು.
‘ಕಾರ್ಪೊರೇಟ್ ಕಂಪನಿ ಕೆಲಸ ಬಿಟ್ಟು ಆಟೋ ಓಡಿಸ್ತಿದ್ದೇನೆ, ಸ್ವತಂತ್ರ್ಯವಾಗಿದ್ದೇನೆ’ - ಬೆಂಗಳೂರು ಯುವಕನ ವಿಡಿಯೋ ವೈರಲ್
ಕಾರ್ಪೊರೇಟ್ ಕಂಪನಿಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದ ಉದ್ಯೋಗಿಯೊಬ್ಬ ತನ್ನ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿ ಆಟೋ ಓಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಕಾರ್ಪೊರೇಟ್ ಲೈಫ್ ಬಿಟ್ಟು ಈಗ ಸ್ವತಂತ್ರ್ಯ ಜೀವನ ಸಾಗಿಸುತ್ತಿರುವುದಾಗಿ ಆತ ಹೇಳಿದ್ದಾನೆ. ನಾಳೆಗಳಿಗಾಗಿ ನನ್ನನ್ನು ತಯಾರು ಮಾಡಿಕೊಳ್ಳುತ್ತಿದ್ದೇನೆ. ನಿಶ್ಚಿಂತೆಯ ಸ್ವತಂತ್ರ್ಯ ಜೀವನ ನನ್ನದಾಗಿದೆ. ಹಣವೊಂದೇ ಜೀವನದಲ್ಲಿ ಮುಖ್ಯವಲ್ಲ. ಚಿಕ್ಕ ಚಿಕ್ಕ ಖುಷಿಗಳೂ ಮುಖ್ಯವಾಗಿವೆ” ಎಂದಿದ್ದಾನೆ.
ನಂದಿನಿ ನದಿ ಮಾಲಿನ್ಯ ಪ್ರಕರಣ | ಸುರತ್ಕಲ್ ಎಸ್ಟಿಪಿ ಮೇಲ್ದರ್ಜೆಗೇರಿಸಲು ಅಂದಾಜುಪಟ್ಟಿಗೆ ಸೂಚನೆ: ದಿನೇಶ್ ಗುಂಡೂರಾವ್
ಮಂಗಳೂರು, ನ. 28: ಸುರತ್ಕಲ್ ಮದ್ಯದಲ್ಲಿರುವ ಒಳಚರಂಡಿ ನೀರು ಸಂಸ್ಕರಣಾ ಘಟಕ (ಎಸ್ಟಿಪಿ) ಹಳೆಯ ತಂತ್ರಜ್ಞಾನದಿಂದ ಕೂಡಿದ್ದು, ಹಲವು ನ್ಯೂನ್ಯತೆಗಳಿವೆ. ಅದನ್ನು ಮೇಲ್ದರ್ಜೆಗೇರಿಸಲು ಅಂದಾಜು ಪಟ್ಟಿ ತಯಾರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪಡೀಲ್ನ ಪ್ರಜಾಸೌಧದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆಯ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ಅಧಿಕಾರಗಳ ಜತೆ ಬೆಳಗ್ಗೆ ನಂದಿನಿ ನದಿ ನೀರು ಮಾಲಿನ್ಯದ ಬಗ್ಗೆ ಚರ್ಚೆ ನಡೆಸಲಾಗಿದೆ. ಎಸ್ಟಿಪಿ ಜನರೇಟರ್ ಸಮಸ್ಯೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತವಾದಾಗ ತೊಂದರೆಯಾಗುತ್ತಿದೆ. ಹೊಸ ಜನರೇಟರ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಫೆಬ್ರವರಿಯೊಳಗೆ ಜನರೇಟರ್ ವ್ಯವಸ್ಥೆ ಆಗಲಿದೆ. ಅಲ್ಲಿಯವರೆಗೆ ಬಾಡಿಗೆ ಆಧಾರದಲ್ಲಿ ಜನರೇಟರ್ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ಎಸ್ಟಿಪಿಯನ್ನು ಮೇಲ್ದರ್ಜೆಗೇರಿಸಲು ಅಂದಾಜು ಪಟ್ಟಿ ತಯಾರಿಸಿದ ಬಳಿಕ ನಗರಾಭಿವೃದ್ಧಿ ಸಚಿವರ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವುದಾಗಿ ಸಚಿವರು ಹೇಳಿದರು. ಜಿಲ್ಲೆಯಲ್ಲಿ ಈ ಬಾರಿಯ ಕರಾವಳಿ ಉತ್ಸವವನ್ನು ಅದ್ದೂರಿಯಿಂದ ನಡೆಸಲು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಗಿದೆ. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಸರ್ಫಿಂಗ್, ಬೀಚ್ ಉತ್ಸವದ ಜತೆ ಕರಾವಳಿ ಉತ್ಸವ ನಡೆಸಲು ತಯಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಮೆಕ್ಕೆಜೋಳ ಸಮಸ್ಯೆ ಕುರಿತಂತೆ ಮುಖ್ಯಮಂತ್ರಿ ನೀಡಿರುವ ಪತ್ರ ನೀಡಲಾಗಿದ್ದು, ಅವರು ಸ್ವೀಕರಿಸಿದ್ದಾರೆ. ಅವರಿಂದ ಸ್ಪಂದನೆಯ ನಿರೀಕ್ಷೆ ಇದೆ ಎಂದು ಅವರು ಹೇಳಿದರು. ರಾಜ್ಯದ ರೈತರು ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಟನ್ಗೆ 2,400 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ ಪಡಿತರ ವ್ಯವಸ್ಥೆಯಲ್ಲಿ ಉಪಯೋಗಿಸುವುದಾದರೆ ಮಾತ್ರವೇ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಮೆಕ್ಕೆಜೋಳ ಪಡಿತರ ವ್ಯವಸ್ಥೆಯಲ್ಲಿ ವಿತರಣೆಯಾಗುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಅದಕ್ಕಾಗಿ ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಆಗ್ರಹಿಸಲಾಗಿದೆ. ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ ಸೇರಿದಂತೆ ಇತರರು ಈ ವಿಷಯದಲ್ಲಿ ರಾಜ್ಯ ಸರಕಾರವನ್ನು ದೂರುತ್ತಿದ್ದಾರೆ. ಕೇಂದ್ರ ಸರಕಾರ ಬೆಂಬಲ ಬೆಲೆ ನೀಡುವುದು. ಈ ಬಗ್ಗೆ ಜೋಶಿಯವರು ರಾಜಕಾರಣ ಮಾಡುವ ಬದಲು ಬೆಳೆಗಾರರ ಹಿತರಕ್ಷಣೆ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಗಮನ ಸೆಳೆಯಬೇಕಿದೆ ಎಂದವರು ಹೇಳಿದರು. ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ಅಭಯ ಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಖಂಡರಾದ ಮಿಥುನ್ ರೈ, ಮಮತಾ ಗಟ್ಟಿ, ಸದಾಶಿವ ಉಳ್ಳಾಲ್, ಶಶಿಧರ ಹೆಗ್ಡೆ, ಶಕುಂತಳಾ ಶೆಟ್ಟಿ, ಅಪ್ಪಿ, ಪದ್ಮರಾಜ್, ಭಾಸ್ಕರ್, ಸಂತೋಷ್ ಕುಮಾರ್, ಪ್ರವೀಣ್ ಚಂದ್ರ ಆಳ್ವ ಮೊದಲಾದರು ಉಪಸ್ಥಿತರಿದ್ದರು. ಸಿಎಂ ಬದಲಾವಣೆ ಕುರಿತಾದ ಚರ್ಚೆಯ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ, ಈ ವಿಚಾರದಲ್ಲಿ ಯಾವುದೇ ಅಭಿಪ್ರಾ ಯ ನೀಡಲು ಬಯಸುವುದಿಲ್ಲ. ಎಐಸಿಸಿ ಅಧ್ಯಕ್ಷರು ಈಗಾಗಲೇ ಅದನ್ನು ಸುಸೂತ್ರವಾಗಿ ಬಗೆಹರಿಸುವುದಾಗಿ ಹೇಳಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಿಎಂ ಸ್ಥಾನಕ್ಕಾಗಿ ಪಟ್ಟು: ನನಗೆ ಯಾವ ಆತುರವೂ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ಯಾಕೆ?
ಬೆಂಗಳೂರು, ನವೆಂಬರ್ 28: ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಪಡೆದುಕೊಳ್ಳಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾನಾ ಪ್ರಯತ್ನ ಹಾಗೂ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ನನಗೆ ಯಶಸ್ವಿ ಸಿಗಲಿದೆ ಎಂಬ ವಿಶ್ವಾಸದಲ್ಲಿ ಇದ್ದಾರೆ. ಇತ್ತ ಡಿ ಕೆ ಶಿವಕುಮಾರ್ ಬಣದವರು ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಬೀಸಿದ್ದು, ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ
ಸುರತ್ಕಲ್ | ಜನರಲ್ ಸ್ಟೋರ್ ಮಾಲಕ ಕಾಣೆ
ಮಂಗಳೂರು, ನ.28: ಸುರತ್ಕಲ್ ಇಡ್ಯದ ಅಲ್ ಶಿಫಾ ಜನರಲ್ ಸ್ಟೋರ್ ಮಾಲಕ ಶೇಖಬ್ಬ (61)ಎಂಬವರು ನವೆಂಬರ್ 27ರಿಂದ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂದಿನಂತೆ ಬೆಳಗ್ಗೆ ತನ್ನ ಮನೆ ಸಮೀಪದ ಜನರಲ್ ಸ್ಟೋರ್ ನ ಬಾಗಿಲು ತೆರೆಯಲು ಹೋಗಿದ್ದರು. ಆದರೆ ಅವರು ತನ್ನ ಸ್ಟೋರ್ಗೂ ಹೋಗದೆ, ಮನೆಗಳೂ ಮರಳಿ ಬಾರದೆ ಕಾಣೆಯಾಗಿರುವುದಾಗಿ ಶೇಖಬ್ಬರ ಸಹೋದರ ಅಬ್ದುಲ್ ಖಾದರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 5.9 ಅಡಿ ಎತ್ತರದ, ಸಾಧಾರಣ ಶರೀರದ ಇವರು ಕನ್ನಡ, ಬ್ಯಾರಿ, ತುಳು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ಕೆಂಪುಬಣ್ಣದ ಟೀಶರ್ಟ್ ಮತ್ತು ಗ್ರೇ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಇವರನ್ನು ಕಂಡವರು ಸುರತ್ಕಲ್ ಠಾಣೆ (0824-2220540) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಂ (0824-2220800/9480802321)ಗೆ ಮಾಹಿತಿ ನೀಡಲು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
Mangaluru | ಡಿ.3ರಂದು ಕೊಣಾಜೆಯಲ್ಲಿ ಐತಿಹಾಸಿಕ ಸಂವಾದ, ಸರ್ವಮತ ಸಮ್ಮೇಳನದ ಶತಮಾನೋತ್ಸವ
ಮಂಗಳೂರು, ನ.28: ವರ್ಕಳದ ಶಿವಗಿರಿ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಹಭಾಗಿತ್ವದಲ್ಲಿ ಡಿ.3ರಂದು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಕ್ಯಾಂಪಸ್ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ, ಗುರುವಿನ ಮಹಾ ಸಮಾಧಿ ಶತಾಬ್ಧಿ ಮತ್ತು ಸರ್ವಮತ ಸಮ್ಮೇಳನ ಶತಮಾನೋತ್ಸವ ನಡೆಯಲಿದೆ. ಸರ್ವ ಧರ್ಮಗಳು ಮತ್ತು ಸರ್ವ ಸಮುದಾಯಗಳ ಜನರನ್ನೂ ಒಳಗೊಳ್ಳುವ ರೀತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಆಶೀರ್ವಚನ ನೀಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸ್ಪೀಕರ್ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸುವರು. ಲೋಕಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಸಿ. ವೇಣುಗೋಪಾಲ್ ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಸಂದೇಶದ ಪ್ರಧಾನ ಭಾಷಣ ಮಾಡುವರು. ಶಿವಗಿರಿ ಮಠದ ಕಾರ್ಯದರ್ಶಿ ಸ್ವಾಮೀಜಿ ಶುಭಾಂಗಾನಂದ ಪರಿನಿರ್ವಾಣ ಸಂದೇಶ ಭಾಷಣ ನೀಡುವರು. ಶಿವಗಿರಿ ಮಠದ ಶಾರದಾನಂದ, ಸ್ವಾಮಿ ರಿತಾಂಭರಾನಂದ, ಸ್ವಾಮಿ ಆಸಂಗಾನಂದ ಗಿರಿ, ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ಜಿತಕಾನಂದಜಿ ಮಹಾರಾಜ ಉಪಸ್ಥಿತರಿರುವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬಿಜೇಶ್ ಚೌಟ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಪಾಣಕ್ಕಾಡ್ ಮುನಾವರ್ ಅಲಿ ತಂಞಳ್, ಮಂಗಳೂರು ಬಿಷಪ್ ಡಾ.ಪೀಟರ್ ಪಾಲ್ ಸಲ್ಡಾನ, ಬೆಳ್ತಂಗಡಿ ಬಿಷಪ್ ಜೇಮ್ಸ್ ಪಟ್ಟೆರಿಲ್, ಬ್ರಹ್ಮಕುಮಾರಿ ವೀಣಾ ಬೆಹನ್ಜಿ, ಗೋಕುಲಂ ಗ್ರೂಪ್ ಅಧ್ಯಕ್ಷ ಗೋಕುಲ್, ಗೋಪಾಲನ್, ಕೆ.ಜಿ. ಬಾಬು ರಾಜ್ ಬಹರೇನ್, ರಾಜಧಾನಿ ಗ್ರೂಪ್ ಅಧ್ಯಕ್ಷ ಡಾ.ಬಿಜು ರಮೇಶ್, ಮೆಡಿಮಿಕ್ಸ್ ಅಧ್ಯಕ್ಷ ಎ.ವಿ.ಅನೂಪ್, ಕೇರಳದ ಮಾಜಿ ಡಿಜಿಪಿ ಟಿ.ಪಿ.ಸೆನ್ಕುಮಾರ್, ಶಾಸಕರಾದ ವಿ.ಸುನಿಲ್ ಕುಮಾರ್, ಉಮಾನಾಥ ಎ.ಕೋಟ್ಯಾನ್ ಮತ್ತು ಕೊಣಾಜೆ ಗ್ರಾಪಂ ಅಧ್ಯಕ್ಷೆ ಗೀತಾ ಡಿ. ಕುಂದರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸರ್ವಮತ ಸಮ್ಮೇಳನ : ಅಂದು ಮಧ್ಯಾಹ್ನ 2ರಿಂದ 4ರವರೆಗೆ ಸರ್ವಮತ ಸಮ್ಮೇಳನ ನಡೆಯಲಿದೆ. ಖ್ಯಾತ ಸಂಸ್ಕೃತಿ ಚಿಂತಕ ಗಣೇಶ ದೇವಿ ಸಮ್ಮೇಳನ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಮತ್ತು ಕಾರ್ಯಕ್ರಮದ ಕೇಂದ್ರ ಸಮಿತಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅಧ್ಯಕ್ಷತೆ ವಹಿಸುವರು. ಶಿವಗಿರಿ ಮಠದ ಸ್ವಾಮಿ ರಿತಾಂಭರಾನಂದ ಸರ್ವಮತ ಸಂದೇಶ ಭಾಷಣ ನೀಡುವರು ಎಂದು ಕಾರ್ಯಕ್ರಮ ಆಯೋಜನೆಯ ಕೇಂದ್ರ ಸಮಿತಿ ಸಂಚಾಲಕ ಪಿ.ವಿ.ಮೋಹನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕನಕನ ಕಿಂಡಿಯಿಂದ ದರ್ಶನ ಮಾಡಿ, ನಾಟಕ ಮಾಡುವಂತಿದ್ದರೆ ಯಾಕಾದ್ರೂ ಬರ್ತಾರಾ: ಪ್ರಿಯಾಂಕ್ ಖರ್ಗೆ
Priyank Kharge on Modi Visit to Udupi : ಉಡುಪಿ ಕೃಷ್ಣಮಠದ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಲ್ಲಿಂದ, ಗೋವಾದ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಮೋದಿಯವರ ಕಾರ್ಯಕ್ರಮದ ಬಗ್ಗೆ ಕರ್ನಾಟಕ ಐಟಿಬಿಟಿ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಖಾರವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಮಂಗಳೂರು | ಎನ್ಎಂಪಿಎ ಪಿಂಚಣಿದಾರರ ಭವಿಷ್ಯ ಸುರಕ್ಷಿತ : ಡಾ.ಅಕ್ಕರಾಜು
ಮಂಗಳೂರು : ತನ್ನ ಸ್ಥಾಪನೆಯ 50 ವರ್ಷ ಪೂರೈಸಿರುವ ನವಮಂಗಳೂರು ಪ್ರಾಧಿಕಾರವು ಈ ವರ್ಷ 46.01 ದಶಲಕ್ಷ ಮೆಟ್ರಿಕ್ ಟನ್ ಸಾಮಗ್ರಿಗಳನ್ನು ನಿರ್ವಹಿಸುವುದರ ಮೂಲಕ ದಾಖಲೆ ನಿರ್ಮಿಸಿದ್ದು, 2019ರಲ್ಲಿ ತೆರಿಗೆ ಕಳೆದು 137 ಕೋಟಿ ರೂ. ಲಾಭಗಳಿಸಿದ್ದರೆ, ಈ ವರ್ಷ ತೆರಿಗೆ ಕಳೆದು 390 ಕೋಟಿ ರೂ. ಲಾಭಗಳಿಸಿದೆ. ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಬಂದರು ಪ್ರಾಧಿಕಾರದ ಎಲ್ಲ ಪಿಂಚಣಿದಾರರ ಭವಿಷ್ಯವೂ ಇಲ್ಲಿ ಸುರಕ್ಷಿತವಾಗಿದೆ. ಪೆನ್ಷನ್ ಫಂಡಿನ ಹಣ ಸಂಪೂರ್ಣ ತುಂಬಿಸಲಾಗಿದ್ದು, ಪಿಂಚಣಿದಾರರಿಗೆ ಮತ್ತು ಕುಟುಂಬ ಪಿಂಚಣಿದಾರರಿಗೆ ಅತ್ಯುತ್ತಮ ವೈದ್ಯಕೀಯ ಸವಲತ್ತನ್ನು ನೀಡಲಾಗುತ್ತಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ.ವೆಂಕಟ ರಮಣ ಅಕ್ಕರಾಜು ಹೇಳಿದರು. ಪಣಂಬೂರಿನಲ್ಲಿ ನವಮಂಗಳೂರು ಬಂದರು ಪಿಂಚಣಿದಾರರ ಕಲ್ಯಾಣ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿ ಅವರು ಮಾತಾಡಿದರು. ಸಂಘದ ನೂತನ ನಾಮ ಫಲಕವನ್ನು ಅನಾವರಣಗೊಳಿಸಿ ಮಾತನಾಡಿದ ಬಂದರು ಪ್ರಾಧಿಕಾರದ ಉಪಾಧ್ಯಕ್ಷೆ ಎಸ್.ಶಾಂತಿ ಅವರು, ಅಧ್ಯಕ್ಷರ ಮಾರ್ಗದರ್ಶನದಲ್ಲಿ ಪಿಂಚಣಿದಾರರ ಹಿತರಕ್ಷಣೆಯ ಕಾರ್ಯ ಸಮರ್ಪಕವಾಗಿ ಸಾಗುತ್ತಿದ್ದು, ಇದು ಹೀಗೆಯೇ ಮುಂದುವರಿಯಲಿದೆ ಎಂದು ಭರವಸೆ ನೀಡಿದರು ಸಂಘದ ಅಧ್ಯಕ್ಷ ಬಿ ಸದಾಶಿವ ಶೆಟ್ಟಿಗಾರ್ರವರ ಅಧ್ಯಕ್ಷತೆಯಲ್ಲಿ ನೆರವೇರಿದ ಸಮಾರಂಭದಲ್ಲಿ ಬಂದರು ಪ್ರಾಧಿಕಾರದ ಕಾರ್ಯದರ್ಶಿ ಜಿಜೊ ಥಾಮಸ್, ಮುಖ್ಯ ಆರ್ಥಿಕ ಸಲಹೆಗಾರ ವೀರ ರಾಘವನ್, ಚೀಫ್ ಇಂಜಿನಿಯರ್ ಸಿವಿಲ್ ಎಸ್. ಬಿ.ಲಗ್ವಾಂಕರ್, ಚೀಫ್ ಇಂಜಿನಿಯರ್ ಮೆಕ್ಯಾನಿಕಲ್ ದೀಪಕ್ ರತ್, ಮುಖ್ಯ ವೈದ್ಯಾಧಿಕಾರಿ ಡಾ.ಸುರೇಖ ಎನ್.ಹೊಸ್ಕೇರಿ, ಸೀನಿಯರ್ ಡೆಪ್ಯುಟಿ ಸೆಕ್ರೆಟರಿ ಕೃಷ್ಣ ಬಾಪಿ ರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ಹೆಚ್. ಆರ್. ದಿನೇಶ್ ಆಚಾರ್ ಸ್ವಾಗತಿಸಿದರು. ಸದಸ್ಯೆ ಶ್ರೀದೇವಿ ರಾವ್ ಧನ್ಯವಾದ ಸಲ್ಲಿಸಿದರು. ಕಲಾವತಿ ಮತ್ತು ಶ್ರೀದೇವಿ ರಾವ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಸಮಾರಂಭದ ಕಾರ್ಯಕ್ರಮ ನಿರೂಪಣೆಯನ್ನು ಸಂಘದ ಉಪಾಧ್ಯಕ್ಷ ಬಿ.ಎ.ಮುಹಮ್ಮದ್ ಅಲಿ ಕಮ್ಮರಡಿ ನೆರವೇರಿಸಿದರು.
ಬೆಂಗಳೂರು ಗ್ರಾಮಾಂತರದ 2 ಪೊಲೀಸ್ ಠಾಣೆಗಳು ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಗೆ ಸೇರ್ಪಡೆ! ಕಾರಣವೇನು?
ಬೆಂಗಳೂರಿನ ಹೊರವಲಯದಲ್ಲಿದ್ದ ರಾಜಾನುಕುಂಟೆ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗಳನ್ನು ಇದೀಗ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ ಸೇರಿಸಲಾಗಿದೆ. ಈ ಆದೇಶದೊಂದಿಗೆ ನಗರದ ಒಟ್ಟು ಪೊಲೀಸ್ ಠಾಣೆಗಳ ಸಂಖ್ಯೆ 116ಕ್ಕೆ ಏರಿಕೆಯಾಗಿದೆ. ಅಪರಾಧಗಳ ಹೆಚ್ಚಳ ಮತ್ತು ಜನಸಂದಣಿಯ ಕಾರಣದಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಪುರುಷರ ಎಲೈಟ್ ಸೈಕ್ಲಿಂಗ್ಗಾಗಿ ಆಯ್ಕೆ ಟ್ರಯಲ್ಸ್ ಘೋಷಣೆ; ಎರಡು ತಂಡಗಳೊಂದಿಗೆ ಸಜ್ಜಾಗಿದೆ ಭಾರತ
CFI Announcement- ಭಾರತೀಯ ಸೈಕ್ಲಿಂಗ್ ಒಕ್ಕೂಟ ಇದೀಗ 2026ರ ಬಜಾಜ್ ಪುಣೆ ಗ್ರ್ಯಾಂಡ್ ಟೂರ್ಗಾಗಿ ಪುರುಷರ ಎಲೈಟ್ ರೈಡರ್ಗಳ ಆಯ್ಕೆ ಟ್ರಯಲ್ಸ್ ಘೋಷಣೆ ಮಾಡಿದೆ. ಒಡಿಶಾದ ಸಂಬಲ್ಪುರದಲ್ಲಿ ರಾಷ್ಟ್ರೀಯ ಚಾಂಪಿಯನ್ಶಿಪ್ ನಡೆಯಲಿದೆ. ಅದಕ್ಕಾಗಿ ಆಯ್ಕೆಯಾದ ಕ್ರೀಡಾಪಟುಗಳನ್ನು ಪುಣೆಯಲ್ಲಿ ಅಂತಿಮವಾಗಿ ಮೌಲ್ಯಮಾಪನ ಮಾಡಲಾಗುತ್ತದೆ. ಇದು ಭಾರತೀಯ ಸೈಕ್ಲಿಂಗ್ನ ಗುಣಮಟ್ಟವನ್ನು ಹೆಚ್ಚಿಸಲಿದೆ. ಉದಯೋನ್ಮುಖರಿಗೆ ಇದು ಉತ್ತಮ ಅವಕಾಶವಾಗಿದ್ದು ಈ ಕೂಟವು ಪುಣೆ ಮತ್ತು ಭಾರತದ ಹೆಸರನ್ನು ಜಾಗತಿಕ ಕ್ಯಾಲೆಂಡರ್ನಲ್ಲಿ ಮತ್ತಷ್ಟು ಎತ್ತರಕ್ಕೆ ಏರಿಸಲಿದೆ.
ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್ ಬೆಳಗಾಮಿ ನಿಧನ
ಬೆಂಗಳೂರು: ಖ್ಯಾತ ಉರ್ದು ಕವಿ ಅಝೀಝುದ್ದೀನ್ ಅಝೀಝ್ ಬೆಳಗಾಮಿ(71) ಅವರಿಗೆ ಶುಕ್ರವಾರ ನಿಧನರಾಗಿದ್ದಾರೆ. ಅಝೀಝ್ ಬೆಳಗಾಮಿ ತಮ್ಮ ವಿಶಿಷ್ಟ ಧ್ವನಿ, ನಾತ್ ಕಾವ್ಯ, ಚಿಂತನಾಶೀಲ ದೃಷ್ಟಿಕೋನ ಹಾಗೂ ಬಹುಮುಖ ಸಾಹಿತ್ಯ ಸೇವೆಗಳ ಮೂಲಕ ದೇಶ ಮತ್ತು ವಿದೇಶಗಳಲ್ಲಿ ಪ್ರಸಿದ್ಧರಾಗಿದ್ದರು. ಇವರ ಅಗಲಿಕೆಯು ಉರ್ದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದ ಅಝೀಝ್ ಬೆಳಗಾಮಿ, ಬೋಧನೆ, ಬರವಣಿಗೆ, ಪ್ರಕಟಣೆ ಮತ್ತು ಪ್ರಸಾರ ಸೇರಿದಂತೆ ಬಹುಮುಖ ವೃತ್ತಿಜೀವನವನ್ನು ಹೊಂದಿದ್ದರು. ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದ ಅವರು, ಉರ್ದು ಸಾಹಿತ್ಯ ಮತ್ತು ಕಾವ್ಯಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಝಂಜೀರ್-ಎ-ದಸ್ತ್-ಒ-ಪಾ ಎಂಬ ಪುಸ್ತಕ ಮತ್ತು ಹರ್ಫ್-ಒ-ಸೌತ್ ಮತ್ತು ಸುಕೂನ್ ಕೆ ಲಮ್ಹೋಂಕಿ ತಾಝ್ಗಿ ಎಂಬ ಎರಡು ಕವನ ಸಂಕಲನಗಳು ಪ್ರಕಟವಾಗಿವೆ. ಕೇರಳದಲ್ಲಿ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಅಲ್ಲಾಮಾ ಇಕ್ಬಾಲ್ ಅವರ ಕವಿತೆಗಳ ಆಡಿಯೋ ಸೀಡಿಗೆ ಅಝೀಝ್ ಬೆಳಗಾಮಿ ಧ್ವನಿ ನೀಡಿದ್ದರು. ಇದಲ್ಲದೇ, ಆಲ್ ಇಂಡಿಯಾ ರೇಡಿಯೋ ಮತ್ತು ಬೆಂಗಳೂರಿನ ದೂರದರ್ಶನ ಕೇಂದ್ರದ ಜೊತೆ ದೀರ್ಘಕಾಲದ ಸಂಬಂಧವನ್ನು ಅಝೀಝ್ ಬೆಳಗಾಮಿ ಹೊಂದಿದ್ದರು. ಅಲ್ಲದೆ, ವಿವಿಧ ಕ್ಷೇತ್ರಗಳ 50ಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಸಂದರ್ಶನವನ್ನು ಮಾಡಿದ್ದರು. ಬೆಂಗಳೂರಿನ ಮಸ್ಜಿದೆ ಖಾದ್ರಿಯಾದಲ್ಲಿ ಇಶಾ ನಮಾಝ್ ನಂತರ ನಮಾಝೆ ಜನಾಝ ನೆರವೇರಲಿದ್ದು, ಖುದ್ದೂಸ್ ಸಾಹೇಬ್ ಖಬರಸ್ತಾನ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
\CM, DCM ಕುರ್ಚಿ ಕಿತ್ತಾಟದಲ್ಲಿ ಡಾರ್ಕ್ ಹಾರ್ಸ್ ರೇಸ್ಗೆ ಬರುವ ಸಾಧ್ಯತೆ''
Karnataka CM Tussle: ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ. ಡಾರ್ಕ್ ಹಾರ್ಸ್
ಯಾದಗಿರಿ| ರಾಜ್ಯದ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯಲಿ: ಭೀಮರಾಯ ಭಂಡಾರಿ ಆಗ್ರಹ
ಯಾದಗಿರಿ: ರಾಜ್ಯದಲ್ಲಿ ಮುಖ್ಯ ಮಂತ್ರಿಗಳಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯಬೇಕು. ಬದಲಾವಣೆಯ ಅನಿವಾರ್ಯತೆ ಎದುರಾದರೇ ಸಚಿವರಾದ ಡಾ.ಪರಮೇಶ್ವರ್, ಸತೀಶ ಜಾರಕಿಹೊಳಿ ಅವರಲ್ಲಿ ಯಾರನ್ನಾದರೂ ಸಿಎಂ ಮಾಡಬೇಕೆಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಿಂಹ ಘರ್ಜನೆ ಸಂಘಟನೆ ಅಧ್ಯಕ್ಷ ಭೀಮರಾಯ ಭಂಡಾರಿ ಹೇಳಿದರು. ಶುಕ್ರವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೀಮರಾಯ ಭಂಡಾರಿ, ಈಗ ರಾಜ್ಯದಲ್ಲಿ ತಲೆದೊರಿರುವ ಸಿಎಂ ಸ್ಥಾನದ ಬಿಕ್ಕಟ್ಟಿಗೆ ಎಐಸಿಸಿ ಅಧ್ಯಕ್ಷರೇ ನೇರ ಹೊಣೆಯಾಗಿದ್ದಾರೆ. ಅವರು ಮನಸ್ಸು ಮಾಡಿದರೆ ಇಷ್ಟೇಲ್ಲ ಗದ್ದಲ ಆಗುತ್ತೇಲೇ ಇರಲಿಲ್ಲ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ. ಅಲ್ಲರೂ ಸಿಎಂ ಸ್ಥಾನದ ಬದಲಾವಣೆ ಗುಂಗಿನಲ್ಲಿಯೇ ಇದ್ದಾರೆಂದು ಆರೋಪಿಸಿದರು. ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗೆ ಜನಪರ ಇರುವ ಸಿಎಂ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಯಾಕೆ? ಹೀಗೆ ಯಾರೊದೋ ಮಾತು ಕೇಳಿ ಸಿಎಂ ಬದಲಾವಣೆಗೆ ಕಾಂಗ್ರೆಸ್ ಪಕ್ಷದ ವರಿಷ್ದರು ಮುಂದಾಗಬಾರದೆಂದು ಭೀಮರಾಯ ಭಂಡಾರಿ ಆಗ್ರಹಿಸಿದರು. ಈ ವೇಳೆ ಸಂಘಟನೆ ಪದಾಧಿಕಾರಿಗಳಾದ ಮರಿಲಿಂಗಪ್ಪ ಬಂಡೆ, ಮಲ್ಲಪ್ಪ ಪೂಜಾರಿ ಗಡ್ಡೆಸೂಗುರು ಉಪಸ್ಥಿತರಿದ್ದರು.
ಸಿಎಂ ಸ್ಥಾನಕ್ಕೆ ಹಕ್ಕು ಪ್ರತಿಪಾದಿಸಲು ಡಿಕೆಶಿಯಿಂದ ಪ್ರಮುಖ 5 ಅಸ್ತ್ರಗಳ ಬಳಕೆ! ಹೈಕಮಾಂಡ್ ಮುಂದೆ ಮಂಡಿಸಲು ಸಿದ್ಧತೆ
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಡಿ.ಕೆ. ಶಿವಕುಮಾರ್ ಮತ್ತು ಅವರ ಬೆಂಬಲಿಗರು ಹೈಕಮಾಂಡ್ ಮುಂದೆ ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿದ್ದಾರೆ. ಪಕ್ಷ ನಿಷ್ಠೆ, ಕೆಪಿಸಿಸಿ ಅಧ್ಯಕ್ಷರಾಗಿ ಸಂಘಟನೆ, 2023ರ ಚುನಾವಣಾ ಗೆಲುವಿನಲ್ಲಿ ಪಾತ್ರ, ಅಧಿಕಾರ ಹಂಚಿಕೆ ಒಪ್ಪಂದ, ಮತ್ತು ಒಕ್ಕಲಿಗ ಸಮುದಾಯಕ್ಕೆ ಮನ್ನಣೆ ನೀಡುವಂತೆ ಅವರು ವಾದ ಮಂಡಿಸುತ್ತಿದ್ದಾರೆ. ಹೈಕಮಾಂಡ್ ಸೂಚನೆಗಳನ್ನು ಪಾಲಿಸಿರುವುದಾಗಿ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರದ ದ್ವಾರಕ್ಕೆ 'ಮಧ್ವಾಚಾರ್ಯ'ರ ಹೆಸರು; ಕರ್ನಾಟಕಕ್ಕೆ ಹೆಮ್ಮೆಯ ವಿಷಯ ಎಂದ ಮೋದಿ
ಲಕ್ಷ ಕಂಠ ಗೀತಾ ಪಾರಾಯಣ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು, ಉಡುಪಿಗೆ ಭೇಟಿ ನೀಡುವುದು ಭಾರಿ ಇಷ್ಟದ ಕಾರ್ಯ ಎಂದರು. ಜೊತೆಗೆ ಅಯೋಧ್ಯೆ ರಾಮಮಂದಿರದ ದ್ವಾರವೊಂದಕ್ಕೆ ಮಧ್ವಾಚಾರ್ಯರ ಹೆಸರಿಟ್ಟಿರುವುದಾಗಿ ಹೇಳಿದರು. ಈಗಿರುವ ಹೊಸ ಭಾರತ ಉಗ್ರರಿಗೆ ಮತ್ತವರ ಪೋಷಕರಿಗೆ ತಕ್ಕ ಪಾಠ ಕಲಿಸುತ್ತಿದೆ ಎಂದು ಎಚ್ಚರಿಕೆ ಕೊಟ್ಟರು. ಮಧ್ವಾಚಾರ್ಯ, ಕನಕದಾಸ, ಪುರಂದರ ದಾಸರನ್ನು ಕನ್ನಡದಲ್ಲೇ ನೆನದರು.
ಆರ್ ಸಿಬಿ ಮಾರಾಟ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ಐಪಿಎಲ್ ನ ಮತ್ತೊಂದು ತಂಡ ಮಾರಾಟಕ್ಕೆ ರೆಡಿ! ಯಾವುದದು?
Harsh Goenka Tweet- ಇಂಡಿಯನ್ ಪ್ರೀಮಿಯರ್ ಲೀಗ್ ನ ಹರಾಜು ಪ್ರಕ್ರಿಯೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಇದೀಗ ಹೀಗೊಂದು ಸುದ್ದಿ ಕೇಳಿ ಬಂದಿದೆ. ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಬಳಿರ ಮತ್ತೊಂದು ಐಪಿಎಲ್ ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ. ಆರ್ಸಿಬಿ ಮಾಲೀಕರು ಫ್ರಾಂಚೈಸಿಯನ್ನು ಮಾರಾಟ ಮಾಡಲು 2 ಬಿಲಿಯನ್ ಯುಎಸ್ ಡಾಲರ್ ಬೇಡಿಕೆ ಇಟ್ಟಿದ್ದಾರೆ. ಉದ್ಘಾಟನಾ ಐಪಿಎಲ್ ಚಾಂಪಿಯನ್ ಆಗಿದ್ದ ರಾಜಸ್ಥಾನ ರಾಯಲ್ಸ್ ಗೆ ಎಷ್ಟು ದರ ನಗದಿಪಡಿಸಲಾಗಿದೆ ಎಂದು ಮಾತ್ರ ತಿಳಿದು ಬಂದಿಲ್ಲ.
ಸಂಪಾದಕೀಯ | ಬ್ರಾಹ್ಮಣ ವಧು-ದಲಿತ ವರ: ಜಾತಿಯ ಶಾಪಕ್ಕೆ ಪರಿಹಾರವೆ?
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಆರ್ಸಿಬಿ ನಾಯಕಿ ತಂದೆ ದಿಢೀರ್ ಸಾವು &ಬದುಕಿನ ಹೋರಾಟ, ಭಾವಿ ಗಂಡನಿಂದನೇ ಮಹಾನ್ ಮೋಸ ಆಗಿದ್ದಾ... Smriti Mandhana
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ನಾಯಕಿ... 7 ಕೋಟಿ ಕನ್ನಡಿಗರ ಮನೆ ಮಗಳು... ಹೀಗೆ ಕನ್ನಡಿಗರ ಮನೆಗೆ ಮೊದಲ ಬಾರಿಗೆ ಐಪಿಎಲ್ ಕಪ್ ಗೆಲ್ಲಿಸಿ ಕೊಟ್ಟಿದ್ದ ಸ್ಮೃತಿ ಮಂಧಾನ ಜೀವನ ಅಲ್ಲೋಲ ಕಲ್ಲೋಲ ಆಗಿ ಹೋಗಿದೆ. ಸ್ಮೃತಿ ಮಂಧಾನ ಮದುವೆ ದಿಢೀರ್ ನಿಂತು ಹೋದ ನಂತರ ಭಾರಿ ದೊಡ್ಡ ಸಂಚಲನ ಕೂಡ ಸೃಷ್ಟಿಯಾಗಿದೆ. ಸ್ಮೃತಿ ಮಂಧಾನ ಅಭಿಮಾನಿಗಳು
ಅಮೆರಿಕಾದಲ್ಲಿ H-1B ವೀಸಾಗಳ ಸಂಖ್ಯೆಯನ್ನು 65,000 ದಿಂದ 130,000 ಕ್ಕೆ ಹೆಚ್ಚಿಸಲು ಅಮೆರಿಕದ ಡೆಮಾಕ್ರಟಿಕ್ ಪಕ್ಷದ ಸಂಸದರಾದ ರಾಜಾ ಕೃಷ್ಣಮೂರ್ತಿ ಅವರು HIRE ಕಾಯ್ದೆಯನ್ನು ಮಂಡಿಸಿದ್ದಾರೆ. ಇದು ಅಮೆರಿಕಾದ ತಂತ್ರಜ್ಞಾನ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿನ ಪ್ರತಿಭಾನ್ವಿತರ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ದೇಶೀಯ STEM ಶಿಕ್ಷಣಕ್ಕೂ ಹೆಚ್ಚಿನ ಅನುದಾನ ನೀಡಲಾಗುತ್ತದೆ. ಇತ್ತೀಚೆಗೆ H-1B ವೀಸಾ ವಂಚನೆ ಆರೋಪಗಳು ಕೇಳಿಬಂದಿವೆ.
ತೃತೀಯ ಜಗತ್ತಿನ ದೇಶಗಳಿಂದ ಅಮೆರಿಕಾಗೆ ವಲಸೆ ಶಾಶ್ವತವಾಗಿ ಸ್ಥಗಿತ : ಡೊನಾಲ್ಡ್ ಟ್ರಂಪ್ ಘೋಷಣೆ
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಅಮೆರಿಕದ ವಲಸೆ ನೀತಿಯನ್ನು ಬಿಗಿಗೊಳಿಸುವುದಾಗಿ ಘೋಷಿಸಿದ್ದಾರೆ. ಎಲ್ಲಾ ತೃತೀಯ ಜಗತ್ತಿನ ದೇಶಗಳಿಂದ ಬರುವ ವಲಸಿಗರನ್ನು ಶಾಶ್ವತವಾಗಿ ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಇದು ದೇಶದೊಳಗಿನ ವ್ಯವಸ್ಥೆಗಳನ್ನು ಸುಧಾರಿಸುವ, ಅಕ್ರಮ ವಲಸೆಯನ್ನು ತಡೆಯುವ ಪ್ರಮುಖ ಗುರಿಯನ್ನು ಹೊಂದಿದೆ. ಶ್ವೇತಭವನದ ಬಳಿ ಅಫ್ಘಾನ್ ಪ್ರಜೆಯೊಬ್ಬರು ಇಬ್ಬರು ರಾಷ್ಟ್ರೀಯ ಗಾರ್ಡ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ಕುರಿತು ಟ್ರೂತ್ ಸೋಶಿಯಲ್ ನಲ್ಲಿ ಪೋಸ್ಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನಾನು ಎಲ್ಲಾ ತೃತೀಯ ವಿಶ್ವ ದೇಶಗಳಿಂದ ಬರುವ ವಲಸೆಯನ್ನು ಶಾಶ್ವತವಾಗಿ ನಿಲ್ಲಿಸುತ್ತೇನೆ. ಅಮೆರಿಕದ ವ್ಯವಸ್ಥೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇದು ಬೇಕು. ಜೋ ಬಿಡೆನ್ ಅವರ ಆಟೊಪೆನ್ ಸಹಿ ಮಾಡಿದವರು ಸೇರಿದಂತೆ ಲಕ್ಷಾಂತರ ಬಿಡೆನ್ರ ಅಕ್ರಮ ಪ್ರವೇಶಗಳನ್ನು ಕೊನೆಗೊಳಿಸುತ್ತೇನೆ. ಅಮೆರಿಕಕ್ಕೆ ಲಾಭವಿಲ್ಲದವರನ್ನು, ನಮ್ಮ ದೇಶವನ್ನು ಪ್ರೀತಿಸಲು ಆಗದವರನ್ನು ದೇಶದಿಂದ ಹೊರಗೆ ಕಳುಹಿಸುತ್ತೇನೆ ಎಂದು ಹೇಳಿದರು. ನಮ್ಮ ದೇಶದ ನಾಗರಿಕರಲ್ಲದವರಿಗೆ ಎಲ್ಲಾ ಫೆಡರಲ್ ಪ್ರಯೋಜನಗಳು ಮತ್ತು ಸಬ್ಸಿಡಿಗಳನ್ನು ಕೊನೆಗೊಳಿಸುತ್ತೇನೆ, ದೇಶದ ಶಾಂತಿಯನ್ನು ಹಾಳುಮಾಡುವ ವಲಸಿಗರನ್ನು ಹೊರಹಾಕುತ್ತೇನೆ ಮತ್ತು ಸಾರ್ವಜನಿಕ ಶುಲ್ಕ, ಭದ್ರತಾ ಅಪಾಯ ಅಥವಾ ಪಾಶ್ಚಿಮಾತ್ಯ ನಾಗರಿಕತೆಗೆ ಹೊಂದಿಕೆಯಾಗದ ಯಾವುದೇ ವಿದೇಶಿ ಪ್ರಜೆಯನ್ನು ಗಡೀಪಾರು ಮಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
BMTC ನೈಸ್ ರಸ್ತೆಯಲ್ಲಿ AC ಬಸ್ ಸೇವೆ ಆರಂಭ; ಮೆಟ್ರೋಗಿಂತಲೂ ವೇಗದ ಸಂಚಾರ! ಎಲ್ಲಿಂದ ಎಲ್ಲಿಗೆ? ವೇಳಾಪಟ್ಟಿ ಏನು?
ಬೆಂಗಳೂರಿನಲ್ಲಿ ಬಿಎಂಟಿಸಿ ನೈಸ್ ರಸ್ತೆಯಲ್ಲಿ ಎಸಿ ಬಸ್ ಸೇವೆ ಆರಂಭಿಸಲಿದೆ. ಮಾದಾವರದಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ 7 ಎಸಿ ಬಸ್ಗಳು 110 ರೂ. ದರದಲ್ಲಿ 30 ನಿಮಿಷಕ್ಕೊಂದು ಸಂಚರಿಸಲಿವೆ. ಈ ಬಸ್ಗಳು ಮೆಟ್ರೋಗಿಂತಲೂ ವೇಗವಾಗಿ, ಕೇವಲ 1 ಗಂಟೆ 30 ನಿಮಿಷದಲ್ಲಿ ತಲುಪಲಿವೆ.
ಹಾಂಗ್ಕಾಂಗ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಂತ್ರಸ್ತರ ನೆರವಿಗಾಗಿ ಕೆ-ಪಾಪ್ ಸೆಲೆಬ್ರಿಟಿಗಳು ಮತ್ತು ಸಂಸ್ಥೆಗಳು ದೊಡ್ಡ ಮೊತ್ತದ ದೇಣಿಗೆ ನೀಡುತ್ತಿವೆ. ಹೈಬ್ ಸೇರಿದಂತೆ ಹಲವು ಪ್ರಮುಖ ಕೆ-ಪಾಪ್ ಸಂಸ್ಥೆಗಳು ಲಕ್ಷಾಂತರ ಡಾಲರ್ಗಳನ್ನು ನೀಡಿದ್ದು, i-dle ಮತ್ತು ಜಾಕ್ಸನ್ ವಾಂಗ್ ಅವರೂ ಸಹಾಯಹಸ್ತ ಚಾಚಿದ್ದಾರೆ. ಈ ದೇಣಿಗೆಗಳು ಪುನಶ್ಚೇತನ ಕಾರ್ಯಗಳಿಗೆ ನೆರವಾಗಲಿವೆ ಎಂದು ತಿಳಿದು ಬಂದಿದೆ.
ಕೋಟ್ಯಂತರ ರೈತರಿಗೆ ಅನುಕೂಲ ಕಲ್ಪಿಸಿರುವ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಕೆಲವು ಬದಲಾವಣೆಗಳನ್ನು ಮಾಡಿದೆ. ಸದ್ಯದ ಪ್ರಮುಖ ಪರಿಷ್ಕರಣೆಯೆಂದರೆ, 2026ರ ಮುಂಗಾರು ಹಂಗಾಮಿನಿಂದ ಜಾರಿಗೆ ಬರುವಂತೆ, ಕಾಡು ಪ್ರಾಣಿಗಳ ದಾಳಿಯಿಂದಾದ ಹಾನಿ (ಸ್ಥಳೀಯ ಅಪಾಯವೆಂದು) ಮತ್ತು ಭತ್ತದ ಗದ್ದೆ ಜಲಾವೃತವಾಗುವುದರಿಂದಾದ ನಷ್ಟವನ್ನು ವಿಮಾ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ. ಈ ಬದಲಾವಣೆಯು ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಿರುವ ಮತ್ತು ಪ್ರವಾಹ ಪೀಡಿತ ಕರಾವಳಿ ರಾಜ್ಯಗಳ ರೈತರಿಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ. ಈ ಕುರಿತಾದ ವಿವರಗಳು ಇಲ್ಲಿವೆ.
ಡಿ. 4 ರಂದು ಭಾರತಕ್ಕೆ ಭೇಟಿ ನೀಡಲಿರುವ ರಶ್ಯ ಅಧ್ಯಕ್ಷ ಪುಟಿನ್
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಕ್ರೆಮ್ಲಿನ್ ಉಲ್ಲೇಖಿಸಿ ರಷ್ಯಾದ ಅಧಿಕೃತ ಸುದ್ದಿಸಂಸ್ಥೆಗಳು ಶುಕ್ರವಾರ ವರದಿ ಮಾಡಿದೆ. ಈ ಮಾಹಿತಿಯನ್ನು ಭಾರತದ ವಿದೇಶಾಂಗ ಸಚಿವಾಲಯವೂ ಅಧಿಕೃತವಾಗಿ ದೃಢಪಡಿಸಿದೆ. ಭೇಟಿಯ ಸಂದರ್ಭದಲ್ಲಿ ಪುಟಿನ್ ಅವರು ಹೊಸದಿಲ್ಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿ ಅವರ ಗೌರವಾರ್ಥವಾಗಿ ಔತಣಕೂಟವನ್ನು ಆಯೋಜಿಸಲಿದ್ದಾರೆ. ವಾರ್ಷಿಕ ಶೃಂಗಸಭೆಯ ಭಾಗವಾಗಿ ನಡೆಯುವ ಈ ಮಾತುಕತೆಯಲ್ಲಿ ಭಾರತ–ರಷ್ಯಾ ಸಂಬಂಧಗಳ ಪ್ರಗತಿ, ಭದ್ರತಾ ಸಹಕಾರ, ಆರ್ಥಿಕ-ವಾಣಿಜ್ಯ ವ್ಯವಹಾರಗಳು, ಇಂಧನ ಹಾಗೂ ಬಾಹ್ಯಾಕಾಶ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿನ ಪಾಲುದಾರಿಕೆಯನ್ನು ಬಲಪಡಿಸುವ ವಿಚಾರಗಳು ಚರ್ಚೆಯಾಗಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಬಗ್ಗೆ ಎರಡು ದೇಶಗಳ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಿದ್ದಾರೆ. “ಈ ಭೇಟಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖವಾಗಲಿದೆ” ಎಂದು ಸಚಿವಾಲಯವು ಹೇಳಿಕೆಯಲ್ಲಿದೆ. ರಷ್ಯಾ ಅಧ್ಯಕ್ಷ ಪುಟಿನ್ 2021ರಲ್ಲಿ ಕೊನೆಯ ಬಾರಿ ಭಾರತಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅವರು ಕಳೆದ ವರ್ಷದ ಜುಲೈನಲ್ಲಿ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಾಸ್ಕೋಗೆ ಭೇಟಿ ನೀಡಿದ್ದರು.
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತೀವ್ರ ಏಕಾಂತದ ಬಂಧನದಲ್ಲಿರಿಸಿ, ಕುಟುಂಬಕ್ಕೆ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು, ಅವರ ಕಿರಿಯ ಪುತ್ರ ಖಾಸಿಮ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. ಇದು ಪಾಕಿಸ್ತಾನದ ರಾಜಕೀಯದಲ್ಲಿ ಆತಂಕದ ವಾತಾವರಣಕ್ಕೆ ಕಾರಣವಾಗಾದೆ. ಸಾಮಾಜಿಕ ಜಾಲತಾಣ X ನಲ್ಲಿ ಬರೆದ ಪೋಸ್ಟ್ ನಲ್ಲಿ ಖಾಸಿಮ್ ಅವರು, 845 ದಿನಗಳಿಂದ ಬಂಧನದಲ್ಲಿರುವ ತಂದೆಯ ಸ್ಥಿತಿ ಏನೆಂದು ಕುಟುಂಬಕ್ಕೂ ಮಾಹಿತಿಯಿಲ್ಲ. ಅವರು ಜೀವಂತವಿರುವುದಕ್ಕೆ ಪುರಾವೆ ಕೊಡಿ ಎಂದು ಅವರು ಆಗ್ರಹಿಸಿದ್ದಾರೆ. ಖಾಸಿಮ್ ಅವರು ಹೇಳುವಂತೆ, ಇಮ್ರಾನ್ ಖಾನ್ ಅವರನ್ನು ಕಳೆದ ಆರು ವಾರಗಳಿಂದ ಡೆತ್ ಸೆಲ್ ಎನ್ನುವ ಗರಿಷ್ಠ ಭದ್ರತಾ ಏಕಾಂತ ಕೊಠಡಿಯಲ್ಲಿ ಇರಿಸಲಾಗಿದ್ದು, ಕುಟುಂಬ ಭೇಟಿಗೂ ಅವಕಾಶ ನೀಡಿಲ್ಲ. ಸಹೋದರಿಯರಿಗೂ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ. ಫೋನ್ ಕರೆಗಳಿಲ್ಲ. ಅವರು ಜೀವಂತವಿರುವುದಕ್ಕೆ ಪುರಾವೆಗಳಿಲ್ಲ. ನಾವು ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ,” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.“ ಇದು ಭದ್ರತಾ ಕ್ರಮವಲ್ಲ. ಅವರ ನಿಜವಾದ ಸ್ಥಿತಿಯನ್ನು ಮರೆಮಾಚಲು ಕೈಗೊಂಡಿರುವ ಉದ್ದೇಶಿತ ಪ್ರಯತ್ನ,” ಎಂದು ಖಾಸಿಮ್ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಂದೆಯ ಸುರಕ್ಷತೆಗೆ ಸರ್ಕಾರ ಮತ್ತು ಆಡಳಿತವನ್ನು ಕಾನೂನುಬದ್ಧ, ನೈತಿಕ ಮತ್ತು ಅಂತರರಾಷ್ಟ್ರೀಯವಾಗಿ ಹೊಣೆಗಾರರನ್ನಾಗಿ ಮಾಡುವುದಾಗಿ ಅವರು ಎಚ್ಚರಿಸಿದ್ದಾರೆ. ಈ ವಿಚಾರವಾಗಿ ಅಂತರರಾಷ್ಟ್ರೀಯ ಮಧ್ಯಪ್ರವೇಶಕ್ಕೆ ಮನವಿ ಮಾಡಿದ ಖಾಸಿಮ್, ಜಾಗತಿಕ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ಅಂತರರಾಷ್ಟ್ರೀಯ ಸಮುದಾಯವು ತುರ್ತಾಗಿ ಮಧ್ಯಪ್ರವೇಶಿಸಿ, ಜೀವಂತವಿರುವುದಕ್ಕೆ ಪುರಾವೆ ಬಿಡುಗಡೆ ಮಾಡಬೇಕು. ನ್ಯಾಯಾಲಯದ ಆದೇಶದಂತೆ ಕುಟುಂಬ ಭೇಟಿ, ಏಕಾಂತ ಬಂಧನ ಅಂತ್ಯ ಮತ್ತು ರಾಜಕೀಯ ಕಾರಣಗಳಿಂದ ಬಂಧಿತರಾಗಿರುವ ತಮ್ಮ ತಂದೆಯ ಬಿಡುಗಡೆಗಾಗಿ ಒತ್ತಾಯಿಸಬೇಕೆಂದು ಆಗ್ರಹಿಸಿದ್ದಾರೆ. ಪಿಟಿಐ ಪಕ್ಷವೂ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕುಟುಂಬ ಪ್ರವೇಶ ತಡೆಯುವಿಕೆಯಿಂದ ವದಂತಿಗಳಿಗೆ ಅವಕಾಶ ಸಿಕ್ಕಿದೆ ಎಂದು ಆರೋಪಿಸಿದೆ. ಇಮ್ರಾನ್ ಖಾನ್ ಜೈಲಿನಲ್ಲೇ ಕೊಲ್ಲಲ್ಪಟ್ಟಿದ್ದಾರೆ ಎನ್ನುವ ಸುಳ್ಳು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೆ, ಸರ್ಕಾರ ಇದನ್ನು ಸಂಪೂರ್ಣ ಸುಳ್ಳು ಎಂದು ತಳ್ಳಿ ಹಾಕಿದೆ. ಅಡಿಯಾಲಾ ಜೈಲಿನ ಹೊರಗೆ ಇಮ್ರಾನ್ ಅವರ ಮೂವರು ಸಹೋದರಿಯರು ಮತ್ತು ಪಿಟಿಐ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಉದ್ವಿಗ್ನತೆ ಹೆಚ್ಚಿತು. ನಂತರ ಸಾವಿರಾರು ಬೆಂಬಲಿಗರು ಸೇರಿಕೊಂಡಿದ್ದು, ಕುಟುಂಬ ಭೇಟಿ ಅನುಮತಿಸುವಂತೆ ಆಗ್ರಹಿಸಿದರು. ಜೈಲು ಆಡಳಿತ ಅಲೀಮಾ ಖಾನ್ ಅವರಿಗೆ ಭೇಟಿ ಅನುಮತಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು. ವದಂತಿಗಳನ್ನು ತಳ್ಳಿ ಹಾಕಿದ ಜೈಲು ಆಡಳಿತ, ಇಮ್ರಾನ್ ಖಾನ್ ಅಡಿಯಾಲಾ ಜೈಲಿನಲ್ಲೇ ಇದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಅಗತ್ಯವಿರುವ ವೈದ್ಯಕೀಯ ಸೇವೆಗಳು ಲಭ್ಯವಿವೆ ಎಂದು ತಿಳಿಸಿದೆ. ಪಿಟಿಐ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗಿದೆ ಎಂದು ರಕ್ಷಣಾ ಸಚಿವ ಆಸಿಫ್ ಖ್ವಾಜಾ ಹೇಳಿದ್ದಾರೆ. “ಇಮ್ರಾನ್ ಅವರಿಗೆ ಫೈವ್ ಸ್ಟಾರ್ ಹೊಟೇಲ್ ನಲ್ಲೂ ಸಿಗದ ಸೌಲಭ್ಯಗಳು, ವಿಶೇಷ ಊಟ, ಟಿವಿ, ವ್ಯಾಯಾಮೋಪಕರಣ, ವೆಲ್ವೆಟ್ ಹಾಸಿಗೆ ಎಲ್ಲವನ್ನೂ ನೀಡಲಾಗಿದೆ,” ಎಂದು ಅವರು ಹೇಳಿದ್ದಾರೆ.
ಗ್ರಾಮ ಪಂಚಾಯತ್: ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು: ಬಿಗ್ ಅಪ್ಡೇಟ್
ಹಾಸನ, ನವೆಂಬರ್ 28: ಮುಖ್ಯಮಂತ್ರಿ ಕಾರ್ಯಕ್ರಮದ ಹೆಸರಿನಲ್ಲಿ ದುಂದು ವೆಚ್ಚ ಮಾಡುವಂತಿಲ್ಲ. ಸಮಯವನ್ನು ವ್ಯರ್ಥಗೊಳಿಸುವಂತಿಲ್ಲ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಕಡ್ಡಾಯವಾಗಿ ಹಕ್ಕುಪತ್ರ, ಕ್ರಯಪತ್ರ, ಹಾಗೂ ಇ-ಸ್ವತ್ತು ಮಾಡಿ ಕೊಡ ತಕ್ಕದ್ದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧ ಶುಕ್ರವಾರ ಹಾಸನದಲ್ಲಿ ನಡೆದ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ
ಮಂಗಳೂರು | 'ಕರಾವಳಿ ಉತ್ಸವ': ಜಿಲ್ಲಾ ಉಸ್ತುವಾರಿ ಸಚಿವರಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಮಂಗಳೂರು: ಮಂಗಳೂರಿನಲ್ಲಿ ಡಿಸೆಂಬರ್ ನಲ್ಲಿ ನಡೆಸಲು ಉದ್ದೇಶಿಸಿರುವ 'ಕರಾವಳಿ ಉತ್ಸವ'ದ ಪೂರ್ವಭಾವಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿಂದು ಮಂಗಳೂರಿನ ವಿಮಾನ ನಿಲ್ದಾಣದ ಸಭಾಂಗದಲ್ಲಿ ಜರುಗಿತು. ಪ್ರತಿ ವರ್ಷದಂತೆ ಈ ಬಾರಿಯೂ ಕರಾವಳಿ ಉತ್ಸವಕ್ಕೆ ವಿಶ್ವಾದ್ಯಂತ ಸಾವಿರಾರು ಜನ ಬರುವ ನಿರೀಕ್ಷೆ ಇರುವುದರಿಂದ ಯಾವುದೇ ಕೊರತೆಯಾಗದಂತೆ ಅಗತ್ಯ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಸೂಕ್ತ ತಯಾರಿ ಮಾಡಿಕೊಂಡು ಯಶಸ್ವಿಯಾಗಿ ಉತ್ಸವ ನಡೆಸಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಅಹಿತಕರ ಘಟನೆಗಳಾಗದಂತೆ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದೆ. ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್.ವಿ.ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕರ್ಬಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಹೋದರನ ಪರ ಅಖಾಡಕ್ಕೆ ಇಳಿಯಲು ಹೊರಟ ಡಿಕೆ ಸುರೇಶ್! ದೆಹಲಿ ವಿಮಾನ ಏರಿದ ಮಾಜಿ ಸಂಸದ
ನಾಯಕತ್ವ ಬದಲಾವಣೆ ಚರ್ಚೆ ಕರ್ನಾಟಕದಲ್ಲಿ ಜೋರಾಗಿದೆ. ಮಲ್ಲಿಕಾರ್ಜುನ್ ಖರ್ಗೆಯವರ ಸೂಚನೆಗೂ ಮೀರಿ ಟ್ವಿಟರ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡು ಪರೋಕ್ಷವಾಗಿ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಅವರ ಪರವಾಗಿ ಸಹೋದರ ಡಿಕೆ ಸುರೇಶ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೂ ದೆಹಲಿಯಿಂದ ಬುಲಾವ್ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಂಗಳೂರು, ನ.28: ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ತೆರಳಿದರು. ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾಗೆ ತೆರಳಿದರು. ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ.ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಯನ್ನು ಬೀಳ್ಕೊಟ್ಟರು.
ಮೂಡುಬಿದಿರೆ: ಮಾಡದಂಗಡಿ ಅಂಗನವಾಡಿಯಲ್ಲಿ ಎಲ್.ಕೆ.ಜಿ , ಯು.ಕೆ.ಜಿ. ಪ್ರಾರಂಭ
ಮೂಡುಬಿದಿರೆ : ಇಂದಿನಿಂದ ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಗೊಳ್ಳಲಿರುವ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳ ಪೈಕಿ ಮೂಡುಬಿದಿರೆ ವಲಯದ ಮಾಡದಂಗಡಿ ಅಂಗನವಾಡಿಗೆ ಮಂಜೂರಾದ ಈ ತರಗತಿಯನ್ನು ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಶಾಲಾಕ್ಷಿ ಅವರು ಶುಕ್ರವಾರ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯ ಶ್ರೀಧರ ಬಂಗೇರ ಅವರು ಮಾತನಾಡಿ, ಸರಕಾರದ ಈ ಯೋಜನೆ ಮತ್ತು ಇಲಾಖೆಯ ಸುವರ್ಣ ಸಂಭ್ರಮದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಕಾರ್ಯದರ್ಶಿ ಶೇಖರ್, ಪತ್ರಕರ್ತ ಅಶ್ರಫ್ ವಾಲ್ಪಾಡಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಮೀಮಾ,ಮಾಡದಂಗಡಿ ಶಾಲಾ ಶಿಕ್ಷಕಿ ರಶ್ಮಿ ಎಂ.ಎಸ್, ಆಶಾ ಕಾರ್ಯಕರ್ತರಾದ ಕವಿತಾ, ಪ್ರಮೀಳಾ, ಪಂಚಾಯತ್ ಸಿಬ್ಬಂದಿ ಸೌಮ್ಯ,ಅಂಗನವಾಡಿ ಸಹಾಯಕರಾದ ವೇದಾವತಿ ,ಜಯ ಮತ್ತು ವಿದ್ಯಾರ್ಥಿಗಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸುನೀತಾ ಅವರು ಸ್ವಾಗತಿಸಿ ವಂದಿಸಿದರು.
‘ವಿಕ್ಟೋರಿಯಾ’ ಎಂಬ ಅವ್ಯವಸ್ಥೆಯುಳ್ಳ ಸರಕಾರಿ ಆಸ್ಪತ್ರೆ
ದಾಖಲಾತಿ ವಿಳಂಬ, ಸಕಾಲಕ್ಕೆ ಸಿಗದ ಚಿಕಿತ್ಸಾ ವರದಿ, ಸಿಬ್ಬಂದಿಯ ಉಡಾಫೆ
ರಾಯಚೂರು: ತುರ್ವಿಹಾಳ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿ
ರಾಯಚೂರು: ವಿವಿಧ ಕಾರಣಕ್ಕೆ ತೆರವಾಗಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗವು ತುರ್ವಿಹಾಳ ಪಟ್ಟಣ ಪಂಚಾಯ್ತಿ ಸೇರಿ ಇತರೆ ನಗರ ಸ್ಥಳೀಯ ಸಂಸ್ಥೆಗಳ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯತಿ ತೆರವಾಗಿದ್ದ 4 ಸ್ಥಾನಗಳಿಗೆ ಹಾಗೂ ಹೊಸದಾಗಿ ರಚನೆಯಾಗಿದ್ದ ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿಪಡಿಸಿದೆ. ತುರ್ವಿಹಾಳ ಪಟ್ಟಣ ಪಂಚಾಯತಿಯ 4 ಸ್ಥಾನಗಳಿಗೆ ಡಿಸೆಂಬರ್ 21ಕ್ಕೆ ಚುನಾವಣೆ ನಡೆಸಲು ದಿನಾಂಕ ನಿಗದಿ ಪಡಿಸಿದೆ.ಡಿ.2ಕ್ಕೆ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಡಿಸೆಂಬರ್ 9 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು,ಡಿಸೆಂಬರ್ 10 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.ಡಿಸೆಂಬರ್ 12 ರಂದು ಉಮೇದುವಾರಿಕೆ ಹಿಂಪಡೆದುಕೊಳ್ಳಲಬಹುದಾಗಿದೆ. ಡಿಸೆಂಬರ್ 21 ರಂದು ಮತದಾನ ಅವಶ್ಯ ವಿದ್ದರೆ ಮತದಾನ ನಡೆಸಲು ಅಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆಯನ್ನಯ ನಡೆಸಲು ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಮರು ಮತದಾನಕ್ಕೆ ಅವಶ್ಯಕತೆ ಇದ್ದಲ್ಲಿ ಡಿಸೆಂಬರ್ 23 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಸಬಹುದಾಗಿದೆ.ಡಿಸೆಂಬರ್ 24 ರಂದು ಮತಗಳ ಏಣಿಕೆಯನ್ನು ತಾಲೂಕು ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ನೀತಿ ಸಂಹಿತೆಯು ಚುನಾವಣಾ ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಚುನಾವಣಾ ಎಣಿಕೆ ಮುಕ್ತಾಯದವರೆಗೆ ಸ್ಥಳೀಯ ಸಂಸ್ಥೆಗಳ ವಾರ್ಡ್ಗಳಲ್ಲಿ ಮಾತ್ರ ಜಾರಿಯಲ್ಲಿರುತ್ತದೆ. ವಿಧಾನಸಭೆವಾರು ತಯಾರಿಸಿದ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ತಯಾರಿಸಲಾದ ಮತದಾರರ ಪಟ್ಟಿಯಂತೆ ಚುನಾವಣಾ ನಡೆಯಲಿದೆ. ಚುನಾವಣಾ ಕಾರ್ಯಕ್ಕೆ ನಿಯೋಜಿಸಿದ ಚುನಾವಣಾ ಅಧಿಕಾರಿಗಳು ಮತ್ತು ಸಹಾಯಕ ಚುನಾವಣಾ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವುದು, ಚುನಾವಣೆಗೆ ಸಂಬಂಧ ಪಟ್ಟ ಎಲ್ಲಾ ಅಗತ್ಯ ಮಾಹಿತಿಯನ್ನು ನೀಡಲಾಗಿದೆ. ಉಮೇದುವಾರಿಕೊಯೊಂದಿಗೆ ಸಲ್ಲಿಸುವ ಅಭ್ಯರ್ಥಿಗಳು ಹಿನ್ನೆಲೆ, ಚರಾಸ್ತಿ, ಸ್ಥಿರಾಸ್ತಿ , ವಿದ್ಯಾರ್ಹತೆ ಸೇರಿದಂತೆ ಇತರೇ ಮಾಹಿತಿ ಸಲ್ಲಿಸಬೇಕಾಗಿದೆ.ನೀತಿ ಸಂಹಿತೆ ಉಲ್ಲಂಘನೆಯಾಗಿದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾ ಚುನಾವಣಾ ಅಧಿಕಾರಿಗೆ ತಿಳಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ರಾಯಚೂರು| ನಗರಕ್ಕೆ ಮೂಲಸೌಕರ್ಯ ಒದಗಿಸಲು ಶಾಸಕರ ಜೊತೆ ಆಯುಕ್ತರು ಚರ್ಚೆ
ರಾಯಚೂರು: ನಗರದಲ್ಲಿ ಇರುವ ಸಮಸ್ಯೆಗಳ ಕುರಿತು ಮತ್ತು ನಗರದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಸಭೆ ನಡೆಸಿ ಚರ್ಚಿಸಿದರು. ಮುಖ್ಯವಾಗಿ ನಗರದಲ್ಲಿ ಖಾತಾ ನೀಡುವಲ್ಲಿ ಎದುರಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ನಗರದ ವಿವಿಧ ವಾರ್ಡ್ಗಳಲ್ಲಿ ಪಾಲಿಕೆಯಿಂದ ಕಂದಾಯ ಅದಾಲತ್ ನಡೆಸಲಾಗುತ್ತಿದ್ದು, ಆದರೆ ಖಾತಾ ನೀಡುವಲ್ಲಿ ತಾಂತ್ರಿಕ ಸಮಸ್ಯೆಗಳ ಎದುರಾಗುತ್ತಿದ್ದು, ತೆರಿಗೆ ಬಾಕಿ ಬಿಟ್ಟು ಇನ್ನಿತರ ಪಾಲಿಕೆಯ ವ್ಯಾಪ್ತಿಯ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಶಿವರಾಜ ಪಾಟೀಲ್ ತಿಳಿಸಿದ್ದಾರೆ. ಇದೀಗ ಕೆರೆ ಪ್ರದೇಶ, ಕೋಟೆ ಪ್ರದೇಶದಲ್ಲಿ ವಾಸಿಸುವ ಜನರು ತೆರಿಗೆ ಪಾವತಿ ಮಾಡುತ್ತಾ ಬಂದಿದ್ದು, ಅಂತಹ ಜನರಿಗೆ ಹೊಸದಾಗಿ ಕಟ್ಟಡ ಪರವಾನಿಗೆ ನೀಡಬಾರದು ಆದರೆ ಖಾತಾ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಸಭೆಯಲ್ಲಿ ಜುಬಿನ್ ಮಹೋಪಾತ್ರ ಮಾತನಾಡಿ, ಜನರಲ್ಲಿ ಅವರ ನಿವೇಶನ ಅಥವಾ ಆಸ್ತಿಗಳ ಹಳೆಯ ನೊಂದಾಯಿತ ದಾಖಲೆಗಳಿದ್ದರೆ ಖಾತಾ ನೀಡಲು ಯಾವುದೇ ತೊಂದರೆಯಿಲ್ಲ. ಇದಲ್ಲದೇ ಮೈಸೂರು ಮಹಾನಗರ ಪಾಲಿಕೆ ಹಾಗೂ ರಾಯಚೂರು ಮಹಾನಗರ ಪಾಲಿಕೆ ಸ್ವಚ್ಛ ಶಹರ್ ಜೋಡೋ ಒಪ್ಪಂದ ಮಾಡಿಕೊಂಡು, ನಗರದಲ್ಲಿ ಸ್ವಚ್ಛತೆ ನಿರ್ವಹಣೆಗೆ ಮೈಸೂರು ಮಹಾನಗರ ಪಾಲಿಕೆಯಿಂದ ಸಹಕಾರ ಪಡೆಯಲಾಗುತ್ತಿದೆ ಎಂದು ತಿಳಿಸಿದರು. ಸಭೆಯ ನಂತರ ಭೇಟಿಯಾದ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಡಾ.ಶಿವರಾಜ ಪಾಟೀಲ್, ಆಯುಕ್ತರ ಬಳಿ ನಗರದ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಖ್ಯವಾಗಿ ಕಂದಾಯ ಅದಾಲತ್ ವಾರ್ಡ್ಗಳಲ್ಲಿ ನಡೆಯುತ್ತಿದ್ದು, ಸಾರ್ವಜನಿಕರು ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಆಯುಕ್ತರು ನೀಡಿದ್ದಾರೆ. ಕಂದಾಯ ಅದಾಲತ್ ಸಮಯದಲ್ಲಿ ಅಧಿಕಾರಿಗಳು ತಮ್ಮ ಮನೆಗೆ ಬಂದಾಗ ಅವರ ಬಳಿ ಮಹಾನಗರ ಪಾಲಿಕೆಯ ಯಾವುದೇ ಸಮಸ್ಯೆಯಿದ್ದರೂ ತಿಳಿಸಬೇಕು. ಎಲ್ಲಾ ವಾರ್ಡುಗಳಲ್ಲಿ ಕಂದಾಯ ಅದಾಲತ್ ಮುಗಿದ ನಂತರ ಆಯುಕ್ತರೊಂದಿಗೆ ಅವುಗಳನ್ನು ಚರ್ಚಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲು ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಕೋಟೆ ಪ್ರದೇಶದಲ್ಲಿ 200 ಮೀಟರ್ ಅಂತರದ ವ್ಯಾಪ್ತಿಯಲ್ಲಿರುವ ಕಟ್ಟಡಗಳನ್ನು ಒಡೆಯಲು ಇದ್ದ ನಿಯಮ ಹಾಗೂ ಕೋಟೆ ಎತ್ತರಕ್ಕಿಂತ ಹೆಚ್ಚಿನ ಎತ್ತರದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಬಾರದೆಂಬ ನಿಯಮವನ್ನು ಸಡಿಲಿಕೆ ಮಾಡಲು ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿಗಳು ಒಪ್ಪಿಗೆ ನಿಡಿದ್ದು, ಸಿಯಾತಲಾಬ್ ಬಡಾವಣೆಯಲ್ಲಿ ನೀಡಲಾದ ಹಕ್ಕುಪತ್ರಗಳಿಗೆ ಖಾತಾ ನೀಡುವ ವಿಷಯದ ಕುರಿತೂ ಕೂಡ ಚರ್ಚಿಸಲಾಗಿದ್ದು, ಅವುಗಳಿಗೆ ಖಾತಾ ನೀಡಲು ಸಹ ಆಯುಕ್ತರು ಭರವಸೆಯನ್ನು ನೀಡಿದ್ದಾರೆ. ಸ್ವಚ್ಛತೆಗೆ ಸಂಬಂಧಿಸಿದಂತೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಮುಖ್ಯರಸ್ತೆಗಳಲ್ಲಿ ಬೀದಿ ದೀಪಗಳನ್ನು ವಾರದೊಳಗೆ ಅಳವಡಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಮುಖರಾದ ರವೀಂದ್ರ ಜಲ್ದಾರ್, ವೈ.ಗೋಪಾಲರೆಡ್ಡಿ, ಕಡಗೋಲ ಆಂಜನೇಯ್ಯ, ಇ.ಶಶಿರಾಜ, ಎನ್.ಕೆ.ನಾಗರಾಜ, ನರಸಪ್ಪ ಯಕ್ಲಾಸಪೂರ, ಭೀಮರೆಡ್ಡಿ, ಎಸ್.ಸಂಜೀವರೆಡ್ಡಿ ಸೇರಿದಂತೆ ಅನೇಕರಿದ್ದರು.
ಕಾಂಗ್ರೆಸ್ ಪಕ್ಷದಲ್ಲಿನ ಅಧಿಕಾರ ಹಂಚಿಕೆ ವಿಚಾರಕ್ಕೆ ಜಾತಿ ಸಂಘರ್ಷ ಉಂಟಾಗುತ್ತಿರುವುದು ದುರದೃಷ್ಟಕರ: ಎಚ್.ವಿಶ್ವನಾಥ್
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿನ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ ಸಂಘರ್ಷ ಉಂಟಾಗುತ್ತಿರುವುದು ದುರದೃಷ್ಟಕರ. ಇದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ನೇರಕಾರಣ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಒಳಬೇಗುದಿ ಪ್ರಾರಂಭವಾಗಿದೆ. ಪಕ್ಷಗಳ ನಡುವೆ ಸಂಘರ್ಷ ಆಗಲಿ ಆದರೆ, ಜಾತಿಗಳ ನಡುವೆ ಸಂಘರ್ಷ ಸರಿಯಲ್ಲ, ವಚನಭ್ರಷ್ಟ ಆದ ಸಂದರ್ಭದಲ್ಲಿ ಏನೆಲ್ಲಾ ಮಾತುಬರುತ್ತದೆ. ಒಂದು ಕಡೆ ಒಕ್ಕಲಿಗ ಸಮುದಾಯದ ನಿರ್ಮಲಾನಂದನಾಥಸ್ವಾಮಿ ಮಾತನಾಡಿದರೆ ಮತ್ತೊಂದೆಡೆ ಕಾಗಿನೆಲೆ ಸ್ವಾಮೀಜಿ ಮಾತನಾಡುತ್ತಾರೆ. ಇದು ಜಾತಿಗಳ ನಡುವಿನ ಸಂಘರ್ಷ ಎಂದು ಹೇಳಿದರು. ಸಿದ್ಧರಾಮಯ್ಯ ವಚನಭ್ರಷ್ಟ ಆಗಿದ್ದರಿಂದಲೇ ಇಂತಹ ಹೇಳಿಕೆಗಳು ಬರುತ್ತಿರುವುದು. ಯತೀಂದ್ರ ಸಿದ್ಧರಾಮಯ್ಯ ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ಲಘುವಾಗಿ ಮಾತನಾಡಿರುವುದು ಸರಿಯಲ್ಲ, ಸಿದ್ಧರಾಮಯ್ಯ ಪರ ಯತೀಂದ್ರ ಬಿಟ್ಟರೆ ಬೇರೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದರು. ಸಿದ್ಧರಾಮಯ್ಯ ಅಹಿಂದ ನಾಯಕ ಎಂದು ಹೇಳಿಕೊಂಡೆ ಅಹಿಂದ ಸಮುದಾಯವರನ್ನು ಮುಗಿಸಿಬಿಟ್ಟರು. ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡ ಬಂದವರನ್ನು ಮುಗಿಸಿದರು, ಅಹಿಂದ ನಾಯಕರಿಗೆ ಪೆಟ್ಟುಕೊಟ್ಟು ಪ್ರಭಾವಿ ನಾಯಕರಾದರು. ಬಾದಾಮಿಯಲ್ಲಿ ಬಿ.ಬಿ.ಚಿಮ್ಮನಕಟ್ಟಿಗೆ ಟಿಕೆಟ್ ತಪ್ಪಿಸಿ ಆತನನ್ನು ಮುಗಿಸಿದರು. 2014 ರಲ್ಲಿ ಪ್ರತಾಪ್ ಸಿಂಹನಿಗೆ ಸಪೋರ್ಟ್ ಮಾಡಿ ನನ್ನ ಸೋಲಿಗೆ ಕಾರಣರಾದರು, ಯಡಿಯೂರಪ್ಪ ಪುತ್ರ ವಿಜಯೇಂದ್ರನ ವಿರುದ್ಧ ಕುರುಬ ಸಮುದಾಯದ ಹುಡುಗನಿಗೆ ಟಿಕೆಟ್ ತಪ್ಪಿಸಿ ವಿಜಯೇಂದ್ರ ಗೆಲುವಿಗೆ ಸಹಕರಿಸಿದರು.ಇವರು ಯಾವ ಅಹಿಂದ ನಾಯಕ? ಕೃತಜ್ಞತೆಯೇ ಇಲ್ಲದ ಹೀನ ನಾಯಕ ಎಂದು ವಾಗ್ದಾಳಿ ನಡೆಸಿದರು. 1978 ರ ಲೋಕಸಭೆಯಲ್ಲಿ ಸೋತ ನಿಮಗೆ 1983 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬೆಂಬಲ ನೀಡಿದ್ದು, ಮಾಜಿ ಶಾಸಕ ಕೆಂಪೀರೇಗೌಡ, ಜಿ.ಟಿ.ದೇವೇಗೌಡ, ಮಾವಿನಹಳ್ಳಿ ಸಿದ್ಧೇಗೌಡ, ನಂತರ ನೀವು ಸಚಿವರಾಗಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ರಾಮಕೃಷ್ಣ ಹೆಗಡೆ ಕಾರಣರಾದರು. 1994 ರಲ್ಲಿ ನಿಮ್ಮನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಎಚ್.ಡಿ.ದೇವೇಗೌಡರು, ಬಹಳಷ್ಟು ರೀತಿ ಒಕ್ಕಲಿಗ ಸಮುದಾಯ ಕುರುಬ ಸಮುದಾಯಕ್ಕೆ ಸಹಾಮಾಡಿದೆ ಎಂದು ಹೇಳಿದರು. ನಿಮ್ಮನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಡಿ.ಕೆ.ಶಿವಕುಮಾರ್ ಐದು ಪುಟಗಳ ಪತ್ರ ಬರೆದಿದ್ದಾರೆ. ಎಸ್.ಎಂ.ಕೃಷ್ಣ, ಬಿ.ಎಲ್.ಶಂಕರ್ ಸಪೋಟ್೯ ಮಾಡಿದ್ದಾರೆ. ಈಗ ಅಂತಹ ಡಿ.ಕೆ.ಶಿವಕುಮಾರ್ ಅವರಿಗೆ ಕೈ ಕೊಡುವುದು ಒಳ್ಳೆಯದಲ್ಲ ಸಿದ್ಧರಾಮಯ್ಯ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಕಟ್ಟರ್ ಕಾಂಗ್ರೆಸ್ಸಿಗ, ಅವರಿಗೆ ಅಧಿಕಾರ ಹಸ್ತಾಂತರ ಆಗಬೇಕು, ಅಧಿಕಾರದ ಹಪಾಹಪಿತನದಿಂದ ಹೊರ ಬಂದು ಅವರಿಗೆ ಅಧಿಕಾರ ಕೊಡಿ ಎಂದು ಎಚ್.ವಿಶ್ವನಾಥ್ ಒತ್ತಾಯಿಸಿದರು. ಕೊಟ್ಟ ಮಾತಿನಂತೆ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡಿ, ಎರಡೂವರೆ ವರ್ಷದ ನಂತರ ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡುತ್ತೇನೆ ಎಂದು ಹೇಳಿಲ್ಲ ಎಂದು ಚಾಮುಂಡಿ ಬೆಟ್ಟಕ್ಕೆ ಬಂದು ಹೇಳು ನೋಡೋಣ ಎಂದು ಸವಾಲು ಹಾಕಿದರು. ಡಿ.ಕೆ.ಶಿವಕುಮಾರ್ ರನ್ನು ಸಿಎಂ ಮಾಡಿ ಎಂದು ಸೋನಿಯಾ ಗಾಂಧಿಗೆ ಪತ್ರ ಬರೆಯಲ್ಲ: ಎಚ್.ವಿಶ್ವನಾಥ್ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಏನು ಬರೆಯಲ್ಲ ಮಾತಿನಲ್ಲೇ ಒತ್ತಾಯ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀವು ಪತ್ರ ಬರೆಯುತ್ತೀರ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನೇನು ಪತ್ರ ಬರೆದು ಒತ್ತಾಯ ಮಾಡಲ್ಲ, ಮಾತಿನಲ್ಲೇ ಮತ್ತು ಮಾಧ್ಯಮಗಳ ಮೂಲಕ ಒತ್ತಾಯ ಮಾಡುತ್ತೇನೆ. ಗುಪ್ತಚರ ಇಲಾಖೆ ಇದೆ.ಕೆಲವು ಮಾಹಿತಿದಾರರಿಂದ ಅವರೇ ಇಲ್ಲಿನ ಆಗುಹೋಗುಗಳನ್ನು ತರಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಅಂಡರ್ 19 ಏಷ್ಯಾಕಪ್ ನಲ್ಲೂ ಭಾರತದ ಬಣದಲ್ಲೇ ಪಾಕ್!; ಆಯುಷ್ ಮ್ಹಾತ್ರೆ ಬಳಗದಲ್ಲಿ ವೈಭವ್ ಸೂರ್ಯವಂಶಿಯೇ ಆಕರ್ಷಣೆ
India Team For U19 Asia Cup- ಭಾರತ ಮತ್ತು ಪಾಕಿಸ್ತಾನ ತಂಡಗಳು ಪದೇ ಪದೇ ಒಂದೇ ಬಣದಲ್ಲಿ ಮುಖುಮುಖುಯಾಗುತ್ತಿವೆ. ಈ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೇೋಫಿ, ಏಷ್ಯಾ ಕಪ್, ರೈಸಿಂಗ್ ಏಷ್ಯಾ ಕಪ್ ಬಳಿಕ ಇದೀಗ ಅಂಡರ್ 19 ವಿಶ್ವಕಪ್ ನಲ್ಲೂ ಒಂದೇ ಬಣದಲ್ಲಿವೆ. ದುಬೈನಲ್ಲಿ ಡಿಸೆಂಬರ್ 12 ರಿಂದ ಆರಂಭವಾಗಲಿದ್ದು ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆಯುಷ್ ಮ್ಹಾತ್ರೆ ತಂಡದ ನಾಯಕರಾಗಿದ್ದು 14 ವರ್ಷದ ವೈಭವ್ ಸೂರ್ಯವಂಶಿ ಪ್ರಮುಖ ಆಕರ್ಷಣೆಯಾಗಿದ್ದಾರೆ.
ಬೆಂಗಳೂರು ನ28: ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆಯ ಪ್ರಮಾಣ ಕಡಿಮೆಯಾಗಿ ವಿದ್ಯಮಾನಗಳನ್ನು ಅಂತಃಕರಣದಿಂದ ಕಾಣುವ ಪ್ರಮಾಣವೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಪತ್ರಕರ್ತೆಯರ ಸಂಘ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಶ್ರೀ ಸಿದ್ದರಾಮಯ್ಯ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ವನ್ನು ಉದ್ಘಾಟಿಸಿ ಸುಶೀಲ ಸುಬ್ರಮಣ್ಯ ಮತ್ತು ಎಂ.ಎಚ್.ನೀಳಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆಯ ಪ್ರಮಾಣ ಕಡಿಮೆ ಆಗುತ್ತದೆ. ಏಕೆಂದರೆ, ಅಭಿವ್ಯಕ್ತಿ ಎನ್ನುವುದು ಮಹಿಳೆಯರ ಚೈತನ್ಯದಲ್ಲಿಯೇ ಇದೆ. ಪತ್ರಕರ್ತೆಯರು ಸಹಜವಾಗಿ ಅಭಿವ್ಯಕ್ತಿಗೊಂಡಷ್ಟು ಸಮಾಜ ಸ್ವಾಸ್ಥವಾಗಿರುತ್ತದೆ ಎಂದರು. ಪತ್ರಕರ್ತೆಯರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲೇ ನಾನೊಂದು ಮಾತು ಹೇಳಿದ್ದೆ, ಇಡೀ ವಿಶ್ವಕ್ಕೆ ಕೋವಿಡ್ ಆವರಿಸಿದಾಗ ಈ ಸಂದರ್ಭವನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸಿದ್ದು ಮಹಿಳಾ ಅಧ್ಯಕ್ಷರು ಇರುವ ದೇಶಗಳು ಮಾತ್ರ ಎಂದು ಸ್ಮರಿಸಿದರು. ಇವತ್ತಿನವರೆಗೂ ಯುದ್ಧವನ್ನು ರೋಚಕವಾಗಿ, ವಿಜ್ರಂಭಿಸಿ ಬರೆದ ಪತ್ರಕರ್ತೆಯನ್ನು ನಾನು ನೋಡಿಲ್ಲ. ಹೀಗಾಗಿ ಪತ್ರಕರ್ತೆಯರ ಅಭಿವ್ಯಕ್ತಿ ಹೆಚ್ಚೆಚ್ಚು ಸಮಾಜಮುಖಿ ಆಗಿರುತ್ತದೆ ಎಂದರು. ಆರಂಭದಲ್ಲಿ ಬೆರಳೆಣಿಕೆಯಷ್ಟು ಪತ್ರಕರ್ತೆಯರು ಇದ್ದರು. ಈಗ ಅವರ ಸಂಖ್ಯೆ ಸಮಾಧಾನಕರ ಮಟ್ಟದಲ್ಲಿ ಹೆಚ್ಚಳಗೊಂಡಿದೆ. ಕನ್ನಡ ಪತ್ರಿಕೋದ್ಯಮವನ್ನು ಕಟ್ಟಿ ಬೆಳೆಸುವಲ್ಲಿ ಪತ್ರಕರ್ತೆಯರು ಸಮ ಸಮವಾದ ಶ್ರಮವನ್ನು ಹಾಕಿದ್ದಾರೆ. ಪತ್ರಕರ್ತೆಯರು ಇತ್ತೀಚಿನ ದಿನಗಳಲ್ಲಿ ಪುರವಣಿ, ಪಾಕ್ಷಿಕ, ಮಾಸಿಕಗಳಿಗೆ ಸೀಮಿತಗೊಳ್ಳುತ್ತಿದ್ದಾರೆ. ಎಲ್ಲ ವಿಭಾಗಗಳಲ್ಲೂ ಅದರಲ್ಲಿಯೂ ರಾಜಕೀಯ ವರದಿಗಾರಿಕೆಯಲ್ಲಿ ಮುದ್ರಣ ಕ್ಷೇತ್ರದ ಪತ್ರಕರ್ತೆಯರ ಸಂಖ್ಯೆ ಹೆಚ್ಚಳಗೊಳ್ಳಬೇಕಿದೆ. ನಾನು ಮುದ್ರಣ ಮಾಧ್ಯಮದಿಂದ ಬಂದವನಾಗಿ ಈ ಮಾತನ್ನು ಪುನರ್ ಉಚ್ಚರಿಸಲು ಇಷ್ಟಪಡುತ್ತೇನೆ. ರಾಜಕೀಯ ವಿಡಂಬನೆಗಳ ಮೂಲಕ ರಾಜಕಾರಣಿಗಳನ್ನು ತಿದ್ದುವ ಅವಕಾಶಗಳನ್ನು ಪತ್ರಕರ್ತೆಯರು ಕೇಳಿ ಪಡೆದುಕೊಳ್ಳಬೇಕು. ತಮ್ಮ ಸಾಮರ್ಥ್ಯವನ್ನು ಅರಿತು ತಮಗೇನು ಬೇಕು ಎಂಬುದನ್ನು ಕೇಳಿ ಪಡೆದುಕೊಳ್ಳುವುದಕ್ಕೆ ಪತ್ರಕರ್ತೆಯರು ಎಂದಿಗೂ ಹಿಂಜರಿಯಬಾರದು ಎಂದರು. ಕುಟುಂಬದೊಳಗೆ ಇರುವ ರಾಜಕಾರಣವನ್ನು ಬಹಳ ಚೆನ್ನಾಗಿ ಅರಿತ ಮಹಿಳೆಯರು ಪತ್ರಕರ್ತೆಯರಾದರೆ, ಅದರಲ್ಲೂ ರಾಜಕೀಯ ವಿಶ್ಲೇಷಕಿಯರಾದರೆ ರಾಜಕೀಯ ಸೂಕ್ಷ್ಮಗಳನ್ನು, ಒಳಸುಳಿಗಳನ್ನು ಇತರರಿಗಿಂತ ಸಶಕ್ತವಾಗಿ ಅಂದಾಜು ಮಾಡಬಲ್ಲರು. ಮಹಿಳೆಯರು ಒಂದು ದೇಶದ ಚುಕ್ಕಾಣಿ ಹಿಡಿದು ಯುದ್ಧಗಳಿಗೆ ಕರೆ ಕೊಟ್ಟ ಉದಾಹರಣೆ ಇಲ್ಲ. ಆದರೆ, ಎದುರಾದ ಯುದ್ಧವನ್ನು ದಿಟ್ಟತನದಿಂದ ಸಮರ್ಥವಾಗಿ ನಿರ್ವಹಿಸಿದ ಉದಾಹರಣೆಗಳು ಕಿತ್ತೂರು ರಾಣಿ ಚನ್ನಮ್ಮನಿಂದ ಇಂದಿರಾಗಾಂಧಿ ಅವರ ವರೆಗೂ ಇದೆ ಎಂದರು. ಮಹಿಳೆಯರಿಗಿರುವ ಈ ಕೌಶಲವನ್ನು ಪತ್ರಿಕಾರಂಗ ಸಶಕ್ತವಾಗಿ ಬಳಸಿಕೊಳ್ಳಬೇಕಿದೆ. ರಾಜಕೀಯ ವರದಿಗಾರಿಕೆ, ವಿಡಂಬನಾ ಶೈಲಿ ಬರಹ, ವ್ಯಂಗಚಿತ್ರ ರಚನೆಗಳಲ್ಲಿ ರಾಜ್ಯದಾದ್ಯಂತ ಇರುವ ಪತ್ರಕರ್ತೆಯರ ಪ್ರತಿಭೆಯನ್ನು ಒರಗೆ ಹಚ್ಚುವಂತಾಗಬೇಕು. ಇದಕ್ಕೆ ಕರ್ನಾಟಕ ಪತ್ರಕರ್ತೆಯರ ಸಂಘವೇ ರಾಜ್ಯಮಟ್ಟದಲ್ಲಿ ಪ್ರತಿಭಾ ಅನ್ವೇಷಣೆ ಮಾಡುವಂತಾಗಲಿ. ಆ ಮೂಲಕ ರಾಜ್ಯಕ್ಕೆ ರಾಜಕೀಯ ವಿಶ್ಲೇಷಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಸಿಗುವಂತಾಗಲಿ ಎಂದು ಕರೆ ನೀಡಿದರು. ಪತ್ರಕರ್ತೆಯರನ್ನು ಆರ್ಥಿಕ ಹಾಗೂ ಮಾಧ್ಯಮ, ರಾಜಕೀಯ ಸಲಹೆಗಾರರನ್ನಾಗಿ ಹೆಚ್ಚಿನ ಸಂಖ್ಯೆಯಲ್ಲಿ ನೋಡಲು ಇಷ್ಟಪಡುತ್ತೇನೆ. ಇಲ್ಲ ಎಂಬ ಹಳಹಳಿಕೆ ಬಿಡಿ. ಇರುವ ಒಗ್ಗಟ್ಟಿನಲ್ಲಿಯೇ ಅವಕಾಶಗಳನ್ನು ಪಡೆದುಕೊಳ್ಳಿ. ಮಹಿಳೆಯರಿಗಿರುವ ಒಳನೋಟ ಗಾಢವಾದ್ದದ್ದು. ಈ ಒಳನೋಟಗಳು ಸಾಮಾಜಿಕ, ಅರ್ಥಿಕ ಹಾಗೂ ರಾಜಕೀಯ ಕ್ಷೇತ್ರಗಳ ಅಭಿವೃದ್ದಿಗೆ ವಿಶಿಷ್ಡ ಸಂರಚನೆ ಒದಗಿಸಬಲ್ಲದು ಎಂದರು. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಧ್ಯಮ ಅಕಾಡೆಮಿಗೆ ಪತ್ರಕರ್ತೆಯನ್ನೇ ಆಯ್ಕೆ ಮಾಡಿದೆ. ಪತ್ರಕರ್ತೆಯರ ಅಹವಾಲುಗಳಿಗೆ ಸರ್ಕಾರ ಸದಾ ಕಿವಿಯಾಗುತ್ತಿದೆ. ರಾಜ್ಯದಾದ್ಯಂತ ಇರುವ ಎಲ್ಲ ಮಾಧ್ಯಮಗಳಲ್ಲಿ ಕೆಲಸ ಮಾಡುವ ಪತ್ರಕರ್ತೆಯರನ್ನು ಒಗ್ಗೂಡಿಸುವುದು ಸುಲಭದ ಕೆಲಸವಲ್ಲ. ಕರ್ನಾಟಕ ಪತ್ರಕರ್ತೆಯರ ಸಂಘ ಈ ಕೆಲಸ ಮಾಡಿರುವುದು ಶ್ಲಾಘನೀಯ. ಪತ್ರಕರ್ತೆಯರ ಸಂಖ್ಯೆ ಹೆಚ್ಚಲಿ ಎಂದು ಹಾರೈಸಿದರು. ಸುದ್ದಿ ಹುಡುಕಿಕೊಂಡು ಹೋಗುವ ಪರಿಪಾಠ ಇಲ್ಲವಾಗಿ ಸುದ್ದಿಯೇ ಹುಡುಕಿಕೊಂಡು ಬರಲಿ ಎನ್ನುವ ಮನಸ್ಥಿತಿ ಪತ್ರಿಕಾ ವೃತ್ತಿಗೆ ಅಪಾಯ ತಂದೊಡ್ಡುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾಜಕ್ಕೆ ಶಾಪವಾಗಬಾರದು ಎಂದರು. ಹಿರಿಯ ಪತ್ರಕರ್ತೆ ಪೂರ್ಣಿಮಾ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ವಿಶೇಷ ಉಪನ್ಯಾಸ ನೀಡಿದ ಪುಷ್ಪಾ ಗಿರಿಮಾಜಿ, ಪತ್ರಕರ್ತೆಯರ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಸಂಘದ ಪ್ರಧಾನ ಕಾರ್ಯದರ್ಶಿ ಮಂಜುಳಾ ಕಡಕೋಳ ಮತ್ತು ಪ್ರಶಸ್ತಿ ಪುರಸ್ಕೃತ ಸುಶೀಲಾ ಸುಬ್ರಮಣ್ಯ ಮತ್ತು ಎಂ.ಎಚ್.ನೀಳಾ ಅವರು ಉಪಸ್ಥಿತರಿದ್ದರು. ಪ್ರಶಸ್ತಿಗೆ ಘನತೆ ತಂದ ನೀಳಾ ಮತ್ತು ಸುಶೀಲ ಸುಬ್ರಮಣ್ಯ: ಕೆ.ವಿ.ಪಿ ಇವತ್ತು ಪ್ರಶಸ್ತಿ ಪುರಸ್ಕೃತರಾಗುತ್ತಿರುವ ಇಬ್ಬರು ಸಾಧಕಿಯರು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದ್ದಾರೆ. 40 ವರ್ಷಗಳಿಂದ ಏಕಾಂಗಿಯಾಗಿ ಆರ್ಥಿಕ ವಿಚಾರ ಹಾಗೂ ವಿಶ್ಲೇಷಣೆಗಳನ್ನು ಒಳಗೊಂಡ ಸದರನ್ ಎಕನಮಿಸ್ಟ್ ಪತ್ರಿಕೆಯನ್ನು ಹೊರತರುತ್ತಿರುವ ಹಿರಿಯ ಚೇತನ ಸುಶೀಲಾ ಸುಬ್ರಹ್ಮಣ್ಯ ಅವರದ್ದು 91ರ ಏರು ವಯಸ್ಸು. ಅಧ್ಯಯನ ಕೇಂದ್ರ, ಪುಸ್ತಕ ಪ್ರಕಟಣೆಯಲ್ಲಿ ತೊಡಗಿರುವ ಸುಶೀಲಾ ಅವರ ಲವಲವಿಕೆ, ಜೀವನ ಪ್ರೀತಿ, ವೃತ್ತಿ ಬದ್ದತೆ ಸದಾ ಆದರ್ಶನೀಯ. ಇವರಿಗೆ ಮುಖ್ಯಮಂತ್ರಿ ದತ್ತಿ ಪ್ರಶಸ್ತಿ ನೀಡುವ ಮೂಲಕ ಪ್ರಶಸ್ತಿಗೊಂದು ಕಳೆ ಬಂದಿದೆ. ಹಾಗೆಯೇ ಪ್ರಜಾವಾಣಿಯ ನೀಳಾ ಎಂ ಎಚ್ ಚಿಕ್ಕಮಗಳೂರಿನ ಜಿಲ್ಲಾ ವರದಿಗಾರ್ತಿಯಾಗಿದ್ದುಕೊಂಡು ನಕ್ಸಲ್ಪೀಡಿತ ಪ್ರದೇಶಗಳಿಗೆ ತೆರಳಿ ಬಹು ಸೂಕ್ಷ್ಮ ವರದಿ ನೀಡುವುದು ಸಣ್ಣ ವಿಚಾರವಲ್ಲ. ಅದು 25 ವರ್ಷಗಳ ಹಿಂದೆ. ಜನರ ಆಶೋತ್ತರವನ್ನು ಅರಿತು, ಸ್ಥಾಪಿತ ಹಿತಾಸಕ್ತಿಗಳ ವಿರುದ್ದ ಬರೆಯುವುದು ಪ್ರವಾಹದ ವಿರುದ್ಧ ಈಜಿದಂತೆ. ಅವರ ವೃತ್ತಿಬದ್ಧತೆಯೂ ಕಿರಿಯ ಪತ್ರಕರ್ತೆಯರಿಗೆ ಮಾದರಿಯಾಗಿದೆ ಕೆವಿಪಿ ನುಡಿದರು.

19 C