SENSEX
NIFTY
GOLD
USD/INR

Weather

16    C
... ...View News by News Source

ಹೊಸಪೇಟೆ: ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ

 ವಿಜಯನಗರ: ಹೊಸಪೇಟೆಯ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಕೆ ಎಂ ಹಾಲಪ್ಪ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬ್ರಿಟೀಷರ ಕಪಿಮುಷ್ಟಿಯಿಂದ ದಾಸ್ಯ ಮುಕ್ತಗೊಳಿಸಿ, ಭಾರತವನ್ನು ವಿಶ್ವಗುರುವಿನ ಮಟ್ಟಕ್ಕೆ ತಲುಪಲು ಅಡಿಪಾಯ ಹಾಕಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಂಕ 28 ಡಿಸೆಂಬರ್ 1885 ರಲ್ಲಿ ದಾದಾ ಬಾಯಿ ನವರೋಜಿ ಹಾಗೂ ಇನ್ನಿತರ ಮಹಾನ್ ನಾಯಕರಿಂದ ಸ್ಥಾಪಿತವಾದ ಕಾಂಗ್ರೆಸ್ ಪಕ್ಷ ಬರಬರುತ್ತಾ, ಈಸ್ಟ್ ಇಂಡಿಯಾ ಆಡಳಿತ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮ ಎಂಬ ಜನಾಂದೋಲನಕ್ಕೆ ಕರೆಕೊಟ್ಟಿತ್ತು. ಕಾಂಗ್ರೆಸ್ ಪಕ್ಷದ ಲಕ್ಷಾಂತರ ಮಹಾನ್ ನಾಯಕರ ತ್ಯಾಗ ಬಲಿದಾನಗಳಿಂದ ಭಾರತ ಬ್ರಿಟೀಷರ ದಬ್ಬಾಳಿಕೆಯಿಂದ ಬಿಡುಗಡೆಗೊಂಡರೂ ಭಾರತದ ಸುವರ್ಣ ಯುಗವನ್ನು ಮರು ಸ್ಥಾಪಿಸಲು ಕಾಂಗ್ರೆಸ್ ಪಕ್ಷವೇ ಮುನ್ನುಡಿ ಬರೆಯಿತು ಎಂದು ಅವರು ಹೇಳಿದರು. ದೇಶದ ಪ್ರಥಮ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ದೇಶದ ಬಗೆಗಿನ ದೂರದೃಷ್ಟಿ ಅವರನ್ನು ಪಂಚವಾರ್ಷಿಕ ಯೋಜನೆಯನ್ನು ದೇಶಕ್ಕೆ ಅರ್ಪಿಸುವಂತೆ ಪ್ರೇರೇಪಿಸಿತು. ಈ ಮೂಲಕ ಭಾರತಕ್ಕೆ ಅತಿಮುಖ್ಯ ಮತ್ತು ಪ್ರಮುಖವಾಗಿ ಬೇಕಾಗಿದ್ದ ಮೂಲಭೂತ ಸೌಕರ್ಯಗಳ ಅನುಷ್ಟಾನಕ್ಕೆ ಮುಂದಾದರು ಎಂದು ಅವರು ಹೇಳಿದರು. ಸಂವಿಧಾನದ ಆಶಯಗಳೇ ಕಾಂಗ್ರೆಸ್ ಪಕ್ಷದ ಗುರಿ ಮತ್ತು ಧ್ಯೇಯವಾಗಿದೆ ಮುಂದಿನ ದಿನಗಳಲ್ಲಿ ಎಲ್ಲರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಕೆ.ರಮೇಶ, ಸೇವಾದಳ ಜಿಲ್ಲಾ ಸಂಘಟಕ ಬಿ.ಮಾರೆಣ್ಣ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮನ್ನೆಳ್ಳಪ್ಪ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಣ್ಣದ ಮನೆ ಸೋಮಶೇಖರ್, ಪಧವಿಧರರ ವಿಭಾಗದ ಜಿಲ್ಲಾಧ್ಯಕ್ಷ ವಿಜಯಕುಮಾರ್, ಅಸಂಘಟಿತ ಕಾರ್ಮಿಕರ ವಿಭಾಗದ ವೆಂಕಟೇಶ್ವರಲು, ಗೋವಿಂದಪ್ಪ , ಅಂತೋಣಿ ದಾಸ್, ಸೇವಾದಳ ನಾಗರಾಜ್, ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ನಾಯಕ, ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಕಾರ್ಯದರ್ಶಿ ಭಾಸ್ಕರ, ಮುಖಂಡರಾದ ತಾರಾ ಭಾಷ, ಚಿತ್ತವಾಡ್ಗೆಪ್ಪ, ಪೀರಾ ಸಾಬ್ , ಖಾಜಾ ನಾಗಮ್ಮ , ರುಕ್ಸಾನ, ಜಾಹೀದಾ, ಪರ್ವಿನ್, ಆಶಾ ಬಾನು, ಗಂಗಮ್ಮ, ಉಮಾ, ದಾನಮ್ಮ, ಲಕ್ಷ್ಮೀ ಮತ್ತಿತರರು ಇದ್ದರು

ವಾರ್ತಾ ಭಾರತಿ 29 Dec 2025 12:21 am

ಕಲಬುರಗಿ | ಇಂಡಿಯನ್ ರಾಯಲ್ ಅಕಾಡೆಮಿ ಪ್ರಶಸ್ತಿಗಳ ಪ್ರದಾನ; ರಾಷ್ಟ್ರೀಯ ಕಲಾ ಪ್ರದರ್ಶನ

ಕಲಬುರಗಿ: ಯುವಕರೇ ನಮ್ಮ ದೇಶದ ಭವಿಷ್ಯ. ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ನಮ್ಮ ಪ್ರದೇಶದಲ್ಲಿ ಹಲವು ಸಾಮ್ರಾಜ್ಯಗಳ ಆಳ್ವಿಕೆಯಲ್ಲಿ ಕಲೆ ಮತ್ತು ಸಂಸ್ಕೃತಿ ಪ್ರಮುಖ ಪಾತ್ರ ವಹಿಸಿವೆ. ಈ ಪರಂಪರೆಯನ್ನು ಮುಂದುವರಿಸಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಹೇಳಿದರು. ಅವರು ರವಿವಾರ ಇಲ್ಲಿನ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ವತಿಯಿಂದ ಆಯೋಜಿಸಲಾದ ಏಕದಿನ ರಾಷ್ಟ್ರೀಯ ಕಲಾ ಪ್ರದರ್ಶನ ಹಾಗೂ 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೊಪಗಾರ್ ಮಾತನಾಡಿ, ಕನ್ನಡ ಭವನದ ಆವರಣದಲ್ಲಿ ಶೀಘ್ರದಲ್ಲೇ ಕಲಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪ್ಪಿ ಅವರು, ಪರಿಷತ್ ಸಾಹಿತ್ಯಕ್ಕೆ ಮಾತ್ರ ಸೀಮಿತವಲ್ಲ. ಸಾಹಿತ್ಯದ ಜೊತೆಗೆ ಕಲಾವಿದರು ಹಾಗೂ ಇತರೆ ಕ್ಷೇತ್ರಗಳ ಸಾಧಕರನ್ನೂ ಉತ್ತೇಜಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಧ್ಯಕ್ಷ ರಹಮಾನ್ ಪಟೇಲ್ ಅವರು, ಕಳೆದ ಎರಡು ದಶಕಗಳಿಂದ ರಾಯಲ್ ಅಕಾಡೆಮಿ ಕಲೆ ಹಾಗೂ ಕಲಾವಿದರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ. ಸಮರ್ಪಿತ ಸಂಸ್ಥೆಗಳಿಗೆ ಸರ್ಕಾರದ ಸಂಸ್ಥೆಗಳು ಆರ್ಥಿಕ ಬೆಂಬಲ ನೀಡಬೇಕು ಎಂದು ಹೇಳಿದರು. ಪರಿಷತ್ ಕಾರ್ಯದರ್ಶಿ ಶಿವರಾಜ್ ಅಂಡಗಿ, ಬಹಮನಿ ಫೌಂಡೇಶನ್ ಅಧ್ಯಕ್ಷ ರಿಜ್ವಾನ್-ಉರ್-ರಹ್ಮಾನ್ ಸಿದ್ದೀಖಿ ಹಾಗೂ ವರ್ಲ್ಡ್ವೈಡ್ ಆರ್ಟ್ ಮೂವ್‌ಮೆಂಟ್ ಅಧ್ಯಕ್ಷ ಜಯಂತ್ ಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರದರ್ಶನ ಮತ್ತು ಪ್ರಶಸ್ತಿಗಳು: ದೇಶದ ವಿವಿಧ ಭಾಗಗಳಿಂದ ಬಂದ ಸುಮಾರು ಐವತ್ತು ಪ್ರಶಸ್ತಿ ವಿಜೇತ ಕಲಾಕೃತಿಗಳು ಚಿತ್ರಕಲೆ, ರೇಖಾಚಿತ್ರಗಳು ಮತ್ತು ಗ್ರಾಫಿಕ್ ಆರ್ಟ್ ಸೇರಿ ಪ್ರದರ್ಶನಕ್ಕಿಡಲಾಗಿತ್ತು. ಐದು ಕಲಾವಿದರಿಗೆ ಅವರ ಸೃಜನಶೀಲತೆಗೆ 10,000 ನಗದು ಬಹುಮಾನ ನೀಡಲಾಯಿತು. ಇಪ್ಪತ್ತು ಅತ್ಯುತ್ತಮ ಕಲಾಕೃತಿಗಳಿಗೆ ಚಿನ್ನದ ಪದಕಗಳನ್ನು ಹಾಗೂ ಇನ್ನೂ ಇಪ್ಪತ್ತು ಕಲಾಕೃತಿಗಳಿಗೆ ಮೆರುಗು ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು.  

ವಾರ್ತಾ ಭಾರತಿ 29 Dec 2025 12:08 am

ತಳವಾರ ಸಮಾಜಕ್ಕೆ ಎಸ್.ಟಿ ಪ್ರಮಾಣ ಪತ್ರ | ರಾಜಕೀಯ ಮುಖಂಡರಿಂದ ಸುಳ್ಳು ಹೇಳಿಕೆ: ನಂದಕುಮಾರ್ ಮಾಲಿಪಾಟೀಲ್ ಆರೋಪ

ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ನಾಯಕ, ವಾಲ್ಮೀಕಿ, ಬೇಡ ಸಮುದಾಯದಲ್ಲಿರುವ ತಳವಾರ ಹಾಗೂ ಪರಿವಾರ ಜಾತಿಗಳನ್ನು ಎಸ್‌ಟಿ ಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಕೆಲ ರಾಜಕೀಯ ಮುಖಂಡರು, ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಹೇಳಿ, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕರ ಸಂಘದ ವಿಭಾಗಿ ಅಧ್ಯಕ್ಷ ನಂದಕುಮಾರ್ ಮಾಲಿಪಾಟೀಲ್ ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿ.24 ರಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು, ನಾಯ್ಕಡ್, ನಾಯಕದ ತಳವಾರ, ಪರಿವಾರ ಜಾತಿಗೆ ಸೇರಿದ ವ್ಯಕ್ತಿಗಳಿಗೆ ಮಾತ್ರ ಎಸ್.ಟಿ ಪ್ರಮಾಣ ಪತ್ರ ನೀಡಬೇಕೇ ಹೊರತು ಹಿಂದುಳಿದ ವರ್ಗದಲ್ಲಿರುವ ತಳವಾರ ಜಾತಿಗೆ ಎಸ್.ಟಿ ಪ್ರಮಾಣ ಪತ್ರಗಳನ್ನು ನೀಡಬಾರದು ಎಂದು ಸರಕಾರದ ಹಿಂದಿನ ಎಲ್ಲಾ ಆದೇಶಗಳನ್ನು ಉಲ್ಲೇಖಿಸಿ ಸ್ಪಷ್ಟೀಕರಣ ನೀಡಿದ್ದಾರೆ, ಆದರೆ ಇದನ್ನೇ ಬಂಡವಾಳವನ್ನು ಇಟ್ಟುಕೊಂಡು ಕೆಲಸ ಕೋಲಿ ಸಮಾಜದ ರಾಜಕೀಯ ಮುಖಂಡರು, ಹಿಂದುಳಿದ ವರ್ಗದ ತಳವಾರಗೆ ಎಸ್. ಟಿ ಪ್ರಮಾಣ ಕೊಡಿಸಿದ್ದೇನೆಂದು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಹಾಗಾಗಿ ಕಲಬುರಗಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ವ್ಯಾಪ್ತಿಯಲ್ಲಿ ಬರುವ ಕೋಲಿ, ಕಬ್ಬಲಿಗ, ಬೆಸ್ತ ಜನಾಂಗದವರಿಗೆ ಯಾವುದೇ ಕಾರಣಕ್ಕೂ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡಬಾರದು, ಈ ಕುರಿತು ಸುಳ್ಳು ವದಂತಿಗಳಿಗೆ ಅಧಿಕಾರಿಗಳು ಕಿವಿ ಕೊಡಬಾರದೆಂದು ಒತ್ತಾಯಿಸಿದರು. ಒಂದು ವೇಳೆ ಹಿಂದುಳಿದ ತಳವಾರ ಜಾತಿಗೆ ಈ. ಟಿ ಪ್ರಮಾಣ ಪತ್ರ ನೀಡಿದರೆ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಶರಣು ಸುಬೇದಾರ್, ಶ್ರವಣ್ ಕುಮಾರ್ ನಾಯಕ್, ಬಾಬುರಾವ್ ಬಡಿಗೇರ್, ಗುರಣ ಬಡಿಗೇರ್, ಮಾರುತಿ ಜಮಾದಾರ್, ಭೀಮರಾವ್ ದೊರೆ, ರಾಮು ನಾಯಕ್, ನಾಗರಾಜ್ ದೊರೆ ಜೇವರ್ಗಿ ಹಾಜರಿದ್ದರು.

ವಾರ್ತಾ ಭಾರತಿ 28 Dec 2025 11:59 pm

ಸ್ಮೃತಿ ಮಂದಾನ 10 ಸಾವಿರ ಪ್ಲಸ್! ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಯಾರೂ ಇಲ್ಲ ಇವರಷ್ಟು ಫಾಸ್ಟ್!

Smriti Mandhana New Milestone- ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಅವರು ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅತಿ ವೇಗವಾಗಿ 10,000 ಅಂತಾರಾಷ್ಟ್ರೀಯ ರನ್‌ಗಳನ್ನು ಪೂರೈಸಿದ ಮಹಿಳಾ ಕ್ರಿಕೆಟರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇದಕ್ಕಾಗಿ ಅವರು ತೆಗೆದುಕೊಂಡದ್ದು ಕೇವಲ 281 ಇನ್ನಿಂಗ್ಸ್‌ ಮಾತ್ರ. ಇದೀಗ ಅವರು ಮಹಿಳಾ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿ ದಾಟಿದ ವಿಶ್ವದ ನಾಲ್ಕನೇ ಮಹಿಳಾ ಆಟಗಾರ್ತಿ ಮತ್ತು ಎರಡನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ವಿಜಯ ಕರ್ನಾಟಕ 28 Dec 2025 11:58 pm

ಕಮಲಾಪುರ: ಮೂವರು ಸಾಧಕರಿಗೆ 'ಕಳ್ಳಿಮಠದ ಕಲ್ಪವೃಕ್ಷ' ಪ್ರಶಸ್ತಿ ಪ್ರದಾನ

ಕಲಬುರಗಿ: ಕಮಲಾಪುರ ತಾಲ್ಲೂಕಿನ ಮಹಾಗಾಂವ ಸೇರಿದಂತೆ ಸುತ್ತಲಿನ ಗ್ರಾಮಗಳ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಳ್ಳಿಮಠದ ಕೊಡುಗೆ ಅಪಾರವಾಗಿದೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು. ಮಹಾಗಾಂವ ವಿರೂಪಾಕ್ಷ ಶಿವಾಚಾರ್ಯ 46 ನೇ ಪುಣ್ಯಸ್ಮರಣೆ ನಿಮಿತ್ತ ಗುರುವಾರ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಈ ಹಿಂದಿನ ಗುರುಲಿಂಗ ಶಿವಾಚಾರ್ಯರು ತಾವು ಕಂತಿ ಭೀಕ್ಷೆ ಮಾಡಿ ಬಡ ಮಕ್ಕಳಿಗೆ ಊಟ ಮಾಡಿಸಿ ತಮ್ಮ ಮಠದಲ್ಲಿ ಉಚಿತ ಶಿಕ್ಷಣ ನೀಡಿದ ಅನೇಕರು ಇಂದು ತಮ್ಮ ಜೀವನ ರೂಪಿಸಿಕೊಂಡಿದ್ದಾರೆ. ನಮ್ಮ ಭಾಗದ ಸಾಂಸ್ಕೃತಿಕ, ಶೈಕ್ಷಣಿಕ ಪ್ರಗತಿಯೊಂದಿಗೆ ಧಾರ್ಮಿಕ, ನೈತಿಕ ಮೌಲ್ಯಗಳನ್ನು ಬಿತ್ತಿದ್ದಾರೆ ಎಂದರು. ಮಾಜಿ ಎಂಎಲ್ಸಿ ಅಮರನಾಥ ಪಾಟೀಲ ಮಾತನಾಡಿ, ಮಠಗಳು, ಮಠಾಧೀಶರು ಸಮಾಜೋದ್ಧಾರದ ಕಾರ್ಯದಲ್ಲಿ ತೊಡಗಿರಬೇಕು. ಕಳ್ಳಿಮಠ ಹಿಂದಿನಿಂದಲೂ ಈ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು. ಸಾಹಿತಿ ಶರಣಬಸಪ್ಪ ವಡ್ಡನಕೇರಿ, ಶಾಂತಾಬಾಯಿ ಮುಗಳಿ, ಅರುಣಾದೇವಿ ಹತ್ತಿ ಅವರಿಗೆ 'ಕಳ್ಳಿಮಠದ ಕಲ್ಪವೃಕ್ಷ' ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಕ ಅಂಬಾರಾಯ ಮಡ್ಡೆಯವರ ಸಂಪಾದನೆಯ 'ಮಹಾಗಾಂವ ಕಳ್ಳಿಮಠ ಶ್ರೀಗಳ ಭಜನಾಪದಗಳು' ಪುಸ್ತಕ ಬಿಡುಗಡೆ ಮಾಡಲಾಯಿತು. ಬಬಲಾದ ಗುರುಪಾದಲಿಂಗ ಶಿವಯೋಗಿ, ಪಾಳಾದ ಗುರುಮೂರ್ತಿ ಶಿವಾಚಾರ್ಯ, ಕಳ್ಳಿಮಠದ ವಿರೂಪಾಕ್ಷ ದೇವರು, ಅಮಿನಗಡದ ಶಿವಾನಂದ ಶಿವಾಚಾರ್ಯ, ಮಂಗಲಗಿಯ ಶಾಂತ ಸೋಮನಾಥ ಶಿವಾಚಾರ್ಯ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಜಿಪಂ ಮಾಜಿ ಅಧ್ಯಕ್ಷ ಶಿವಪ್ರಭು ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ ಪಸಾರ, ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಮುಖಂಡರಾದ ಜಯಶ್ರೀ ಮತ್ತಿಮಡು, ಮಲ್ಲಿಕಾರ್ಜುನ ಮರತೂರ, ಪಿಕೆಪಿಎಸ್ ಅಧ್ಯಕ್ಷ ರಾಜಶೇಖರ ಚಿಂಚೋಳಿ, ಸಾಹಿತಿ ಮಲ್ಲಮ್ಮ ಕಾಳಗಿ, ಕಸ್ತೂರಿಬಾಯಿ ಮಾಲಿಪಾಟೀಲ, ಶಿವರಾಜ ಅಂಡಗಿ, ಶ್ರೀಕಾಂತ ಪಾಟೀಲ, ಎಮ್.ಸಿ.ಕೋರಿಶೆಟ್ಟಿ, ಸಿದ್ದಲಿಂಗಯ್ಯ ಕಳ್ಳಿಮಠ, ಶಿವಯೋಗಿ ಕಳ್ಳಿಮಠ ಮತ್ತಿತರರು ಹಾಜರಿದ್ದರು,

ವಾರ್ತಾ ಭಾರತಿ 28 Dec 2025 11:52 pm

ಕಾಂಗ್ರೆಸ್‌ ಒಂದು ಸಿದ್ಧಾಂತ; ಶಕ್ತಿ ಕುಂದಿರಬಹುದು, ಮೂಳೆಯಲ್ಲʼ: ಮಲ್ಲಿಕಾರ್ಜುನ್‌ ಖರ್ಗೆ

ಕಾಂಗ್ರೆಸ್ ಎಂದಿಗೂ ಸಾಯುವುದಿಲ್ಲ, ಸಿದ್ಧಾಂತಗಳು ಶಾಶ್ವತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದರು. ಅಧಿಕಾರದಲ್ಲಿಲ್ಲದಿದ್ದರೂ ಸಂವಿಧಾನ, ಜಾತ್ಯತೀತ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಧರ್ಮದ ಹೆಸರಿನಲ್ಲಿ ಮತ ಕೇಳದೆ, ಕೋಮುದ್ವೇಷ ಬಿತ್ತದೆ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ ಎಂದು ಖರ್ಗೆ ಹೇಳಿದರು.

ವಿಜಯ ಕರ್ನಾಟಕ 28 Dec 2025 11:51 pm

ಕನ್ನಡ ಆತ್ಮಗೌರವದ ಪ್ರತೀಕ: ಸಾಹಿತಿ ಡಾ.ಎನ್. ಎಂ.ತಳವಾರ

ಕಲಬುರಗಿ: ಕನ್ನಡ ಭಾಷೆ ನಮ್ಮ ರಾಜ್ಯದ ನಮ್ಮೆಲ್ಲರ ಆತ್ಮಗೌರವದ ಹೆಮ್ಮೆಯ ಪ್ರತೀಕ. ಕನ್ನಡ ಎಂಬುದು ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ನಡುವೆ ಅವಿನಾಭಾವ ಸಂಬಂಧವಿದೆ ಎಂದು ಸಾಹಿತಿ ಡಾ.ಎನ್. ಎಂ.ತಳವಾರ ಹೇಳಿದರು. ಸಿದ್ದಲಿಂಗೇಶ್ವರ ಪ್ರಕಾಶನ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ಭಾಷೆಗಳನ್ನು ಮಾತನಾಡುವವರು ಇದ್ದಾರೆ. ಆದರೆ, ಬೇರೆ ಭಾಷೆಯವರಿಗಿರುವ ಭಾಷಾಭಿಮಾನ ಕನ್ನಡಿಗರಲ್ಲಿ ಇಲ್ಲ. ಭಾಷೆಯ ಕುರಿತು ಮೊದಲು ಪ್ರೀತಿ, ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ವಿಕಾಸ ಅಕಾಡೆಮಿಯ ಬಸವರಾಜ ಪಾಟೀಲ ಸೇಡಂ ಅವರು ಮಾತನಾಡಿ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಸಮೃದ್ಧ ಪರಂಪರೆ ಇದೆ. ಜಗತ್ತಿನ ಲ್ಲಿರುವ ಸುಮಾರು ಆರು ಸಾವಿರ ಭಾಷೆಗಳಲ್ಲಿ ಕನ್ನಡ ವಿಶಿಷ್ಟವಾದ ಭಾಷೆ. ಕನ್ನಡ ನಾಡಿನಲ್ಲಿ ಪರಭಾಷಿಗರ ಸಂಖ್ಯೆ ಹೆಚ್ಚುತ್ತಿದ್ದು, ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಕಾಶಕ ಡಾ.ಬಸವರಾಜ ಕೊನೇಕ ಮಾತನಾಡಿ ಇಂಗ್ಲೀಷ್ ಭಾಷೆಯ ವ್ಯಾಮೋಹ ಹೆಚ್ಚಾಗಿರುತ್ತಿರುವುದು ಸರಿಯಲ್ಲ. ಇದರ ಹುಚ್ಚು ಬಿಡಬೇಕು, ಕನ್ನಡ ಪದ ಸಂಪತ್ತಿನೆಡೆಗೆ ಆಕರ್ಷಿತವಾದರೆ ಅದರ ಒಳ ಅರಿವು ತಿಳಿದರೆ ಕನ್ನಡ ಪದ ಸಂಪತ್ತಿನ ಘನತೆ ತಿಳಿಯುತ್ತದೆ ಆ ನಿಟ್ಟಿನಲ್ಲಿ ನಮ್ಮ ಪ್ರಕಾಶನ ಸಂಸ್ಥೆ ಕಳೆದ ನಲ್ವತೆಂಟು ವರ್ಷಗಳಿಂದ ಕನ್ನಡ ಪುಸ್ತಕ ಪ್ರಕಟಿಸುವುದರ ಮೂಲಕ ಕನ್ನಡ ಸೇವೆ ಮಾಡುತ್ತಿರುವುದಕ್ಕೆ ತಮ್ಮೆಲ್ಲರ ಸಹಕಾರದಿಂದ ಸಾಧ್ಯವಾಯಿತು ಎಂದರು. ಸಲಹಾ ಸಮಿತಿಯ ಡಾ. ಗವಿಸಿದ್ದಪ್ಪ ಪಾಟೀಲ,ಪ್ರೊ.ಶಿವರಾಜ ಪಾಟೀಲ, ಡಾ.ಮೀನಾಕ್ಷಿ ಬಾಳಿ,ಡಾ.ಜಯದೇವಿ ಗಾಯಕವಾಡ, ಡಾ. ಚಿ.ಸಿ ನಿಂಗಣ್ಣ, ಡಾ. ಶರಣಬಸಪ್ಪ ವಡ್ಡನಕೇರಿ, ಡಾ.ಕಾವ್ಯಶ್ರೀ ಮಹಾಗಾಂವಕರ, ಸoಗಮನಾಥ ರೇವತಗಾoವ್, ಡಾ.ಶಾಂತಪ್ಪ ಡಂಬಳ, ಗಂಗಾಧರ ದೇಸಾಯಿ, ಬಸವರಾಜ ಪಾಟೀಲ ರಾಜನಾಳ, ಸಿ.ಎಸ್.ಮಾಲಿಪಾಟೀಲ ಡಾ.ಸಿದ್ದಪ್ಪ ಹೊಸಮನಿ, ಡಾ.ಶ್ರೀಶೈಲ ನಾಗರಾಳ, ಸಿದ್ದಲಿಂಗ ಕೊನೇಕ್, ಶರಣು ಕೊನೇಕ, ಡಾ.ರಾಜಕುಮಾರ ಮಾಳಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 11:47 pm

ಮಂಗಳೂರು| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಮಾಸಿಕ ಸಭೆ : ವೆನ್‌ಲಾಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ ಆರೋಪ

ಮಂಗಳೂರು: ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆ ಮಾಡುತ್ತಿಲ್ಲ. ಬೆಡ್‌ಗೆ ನಂಬ್ರ ಇಲ್ಲ, ರೋಗಿಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿ ತೆಗದುಕೊಳ್ಳದೆ ಬೇಜವ್ದಾರಿಯುತವಾಗಿ, ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ದಲಿತ ಮುಖಂಡ ಮುಕೇಶ್ ದೂರಿದರು. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಡಿಸಿಪಿ ಮಿಥುನ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ(ಎಸ್ಸಿ-ಎಸ್ಟಿ) ಕುಂದುಕೊರತೆ ಮಾಸಿಕ ಸಭೆಯಲ್ಲಿ ಆಸ್ಪತ್ರೆಯ ಅವ್ಯವಸ್ಥೆಯ ಗಮನ ಸೆಳೆದರು. ಆಸ್ಪತ್ರೆಯಲ್ಲಿರುವ ಆಯುಷ್ಮಾನ್ ನೋಂದಣಿ ಕೇಂದ್ರದ ನೆರವು ಪಡೆಯಲು ಹೋದವರನ್ನು ಸತಾಯಿಸಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾನು ಸ್ವತ: ಅನುಭವಿಸಿದ ಕಷ್ಟವನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು. ತನ್ನ ತಾಯಿಯನ್ನು ನ.3ರಂದು ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಆಯುಷ್ಮಾನ್ ಕಾರ್ಡ್‌ನ್ನು ತೆಗೆದುಕೊಳ್ಳದೆ ಸರಕಾರಿದಿಂದ ಸಿಗುವ ಸೌಲಭ್ಯ ಸಿಗದಂತೆ ಮಾಡಿದ್ದಾರೆ. ಫೈಲ್ ನೀಡದೆ ಸತಾಯಿಸುತ್ತಿದ್ದಾಗ ಡಿಸಿಪಿ ಅವರ ಮಧ್ಯಪ್ರವೇಶದಿಂದಾಗಿ ಫೈಲ್ ದೊರೆಯಿತು. ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಯಾಕೆ ಇಂತಹ ಕಷ್ಟ? ಎಂದು ಪ್ರಶ್ನಿಸಿದರು. ಎರಡನೇ ಮಹಡಿಯಲ್ಲಿರುವ ಆಸ್ಪತ್ರೆಗಳ ಮೂರು ವಾರ್ಡ್‌ಗಳಲ್ಲಿ ಸುಮಾರು 100ರಿಂದ 150 ಬೆಡ್‌ಗಳಿದ್ದರೂ, ಎಲ್ಲ ಬೆಡ್‌ಗಳ ಫೈಲ್‌ಗಳು ಒಂದೇ ಕೌಂಟರ್‌ನಲ್ಲಿದೆ. ಬೆಡ್‌ಗೆ ನಂಬರ್‌ ಇಲ್ಲದ ಕಾರಣದಿಂದಾಗಿ ಯಾವ ಹೆಸರಿನ ರೋಗಿ ಯಾವ ನಂಬರ್‌ ಬೆಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ವಿಚಾರ ಗೊತ್ತಾಗುತ್ತಿಲ್ಲ. ರೋಗಿಯ ಹೆಸರು ಕರೆದು ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಹೆಸರಿನ ಇಬ್ಬರು ರೋಗಿಗಳು ಇದ್ದರೆ ಒಬ್ಬ ರೋಗಿಗೆ ನೀಡಬೇಕಾದ ಇಂಜೆಕ್ಷನ್ ಮತ್ತು ಔಷಧವನ್ನು ಇನ್ನೊಬ್ಬರಿಗೆ ನೀಡುವ ಪರಿಸ್ಥಿತಿ ಇದೆ ಆತಂಕ ವ್ಯಕ್ತಪಡಿಸಿದರು. ಈ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆದರೂ ಸಮಸ್ಯೆ ಸರಿಯಾಗಿಲ್ಲ ಎಂದು ದಲಿತ ಮುಖಂಡ ಮುಕೇಶ್ ಅಸಮಾಧಾನ ವ್ಯಕ್ತಡಿಸಿದರು. ದಲಿತರ ಕುಂದುಕೊರತೆ ದೂರುಗಳಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ(ಡಿಸಿಆರ್‌ಇ)ಸರಿಯಾದ ಸ್ಪಂದನ ನೀಡುತ್ತಿಲ್ಲ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಸಭೆಯ ಪಾಲನಾ ವರದಿ ಮಂಡನೆ ವೇಳೆ ಮಾತನಾಡಿದ ದಲಿತ ಮುಖಂಡ ಆನಂದ ಅವರು ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ವಿಚಾರವನ್ನು ಹನಿಟ್ರ್ಯಾಪ್ ಎಂದು ಜಾಲತಾಣಗಳಲ್ಲಿ ಬಿಂಬಿಸಲಾಗಿದೆ. ಅದು ಹನಿಟ್ರ್ಯಾಪ್ ಅಲ್ಲ ಎಂದು ಉಡುಪಿ ಎಸ್ಪಿಯೇ ಹೇಳಿಕೆ ನೀಡಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಯುವತಿಯೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿ ಅಪಪ್ರಚಾರ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ನ್ಯಾಯಕೋರಿ ಡಿಸಿಆರ್‌ಇ ಮೊರೆ ಹೋದರೆ ಸರಿಯಾದ ಸ್ಪಂದನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಸಿಆರ್‌ಇ ಅಧೀಕ್ಷಕರು ಕಚೇರಿಯಲ್ಲಿ ಇರುವುದಿಲ್ಲ. ಯಾವಾಗಲೂ ಎಸ್‌ಐಟಿ ತನಿಖೆಯಲ್ಲಿದ್ದೇನೆ ಎನ್ನುತ್ತಿದ್ದಾರೆ. ಡಿಸಿಆರ್‌ಇನಲ್ಲಿ ಹುದ್ದೆಗಳು ಖಾಲಿ ಇದ್ದು, ಪೂರ್ಣ ನೇಮಕಾತಿ ವಿನಃ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ದಲಿತರಿಗೆ ನ್ಯಾಯ ಸಿಗಬೇಕಾದರೆ ಪೂರ್ಣಕಾಲಿಕೆ ಅಧಿಕಾರಿಗಳ ನೇಮಿಸಬೇಕು. ಹಳೆ ಡಿಸಿ ಕಚೇರಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು ಈ ವೇಳೆ ಮಾತನಾಡಿದ ಡಿಸಿಪಿ ಮಿಥುನ್, ಖಾಲಿ ಹುದ್ದೆ ಭರ್ತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆಯಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ: ಪಣಂಬೂರು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಗಳು ನಾಗರಿಕ ಸ್ನೇಹಿ ಆಗದೆ ಅಲ್ಲಿನ ಅಧಿಕಾರಿಗಳು ಬೇಕಾಬಿಟ್ಟಿ ಕಾರುಭಾರು ನಡೆಸುತ್ತಿದ್ದಾರೆ. ಎಸಿಪಿ ಶ್ರೀಕಾಂತ್ ಮತ್ತು ಇನ್‌ಸ್ಪೆಕ್ಟರ್ ಸಂದೇಶ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಠಾಣೆಗೆ ದೂರು ನೀಡಲು ಆಗಮಿಸುವವರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಪೊಲೀಸ್ ಆಯುಕ್ತರು, ಡಿಸಿಪಿ ಅವರ ಬಗ್ಗೆ ಒಳ್ಳೆಯ ಹೆಸರು ಇದೆ. ಆದರೆ ಇವರ ಹೆಸರನ್ನು ಕೆಲವು ಅಧಿಕಾರಿಗಳ ಕೆಡಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ವರ್ಗಾವಣೆಗೊಳಿಸಬೇಕು ಎಂದು ದಲಿತ ಮುಖಂಡೆ ಸುಮತಿ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಮಿಥುನ್, ಈ ಆರೋಪಗಳ ಕುರಿತಂತೆ ಇಲಾಖೆಯಿಂದ ಸತ್ಯಾಂಶ ತಿಳಿಯಲಾಗುವುದು. ಪೊಲೀಸ್ ಠಾಣೆಗಳು ನಾಗರಿಕ ಸ್ನೇಹಿಯಾಗಿ ಇರಬೇಕಾಗಿದ್ದು, ಯಾವುದೇ ಕಾರಣಕ್ಕೂ ನಾಗರಿಕರ ದೂರು ವ್ಯಕ್ತವಾಗದಂತೆ ನೋಡಿಕೊಳ್ಳಬೇಕು. ಹಾಗೇನಾದರೂ ಕಂಡುಬಂದರೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಬಹುದು ಎಂದರು. ಅಂಬೇಡ್ಕರ್ ಸರ್ಕಲ್ ನಿರ್ಮಾಣವಾಗದಿರುವ ವಿಚಾರದ ಬಗ್ಗೆ ಚಂದ್ರ ಕುಮಾರ್ ಗಮನ ಸೆಳೆದರು. ಮುಖಂಡರಾದ ಗಿರೀಶ್ ಕುಮಾರ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು. ದಕ್ಷಿಣ ಎಸಿಪಿ ವಿಜಯಕ್ರಾಂತಿ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 28 Dec 2025 11:43 pm

ಸಾಲದ ಹಣ ಮರಳಿ‌ಸದ ಆರೋಪ : ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲು

ಬೀದರ್ : ವಿಧಾನಸಭೆ ಚುನಾವಣೆ ವೇಳೆ ನೀಡಿದ 99 ಲಕ್ಷ ರೂ. ಹಣವನ್ನು ಮರಳಿ ನೀಡಲಿಲ್ಲ ಎಂದು ಆರೋಪದಲ್ಲಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರದ ಜೈ ಶಂಕರ್ ಕಾಲೋನಿಯ ನಿವಾಸಿ ಸಂಜುಕುಮಾರ್ ಸುಗುರೆ ಎಂಬವರು ದೂರು ನೀಡಿದ್ದು, ಬೆಂಗಳೂರಿನ ಎ.ಸಿ.ಜೆ.ಎಂ ನ್ಯಾಯಾಲಯ ಆದೇಶದ ಮೇರೆಗೆ ಶನಿವಾರ ಬಸವಕಲ್ಯಾಣದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಶರಣು ಸಲಗರ್ ಅವರು 2023ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಚುನಾವಣೆಯ ತಯಾರಿಯಲ್ಲಿದ್ದಾಗ ಜನವರಿ 2023 ರಿಂದ ಫೆಬ್ರವರಿ 2023 ರ ಎರಡನೇ ವಾರದವರೆಗೆ ಸಲಗರ್ ಅವರಿಗೆ ಸಂಜುಕುಮಾರ್ ಸುಗುರೆ ಅವರು ಒಟ್ಟು 99 ಲಕ್ಷ ರೂ. ಮುಂಗಡವಾಗಿ ಸಾಲ ನೀಡಿದ್ದರು. ಶರಣು ಸಲಗರ್ ಅವರು ಈ ಸಾಲವನ್ನು 6 ತಿಂಗಳಲ್ಲಿ ಮರುಪಾವತಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಸಾವಲವನ್ನು ಮರುಪಾವತಿ ಮಾಡಲಿಲ್ಲ ಎಂದು ದೂರಲ್ಲಿ ಆರೋಪಿಸಲಾಗಿದೆ. ಈ ಹಿಂದೆಯೂ ಹಲವಾರು ಬಾರಿ ದೂರುದಾರರಿಂದ ಹಣ ಪಡೆದಿದ್ದ ಸಲಗರ್ ಆ ಹಣವನ್ನು ವಾಪಸ್ ಮರಳಿಸಿದ್ದರು. ಅದೇ ನಂಬಿಕೆಯ ಮೇಲೆ ದೂರುದಾರರು ಈ ಸಾಲವನ್ನು ನೀಡಿದ್ದರು. ದೂರುದಾರ ಹಾಗೂ ಆರೋಪಿಯು ದೂರದ ಸಂಬಂಧಿಗಳಾಗಿದ್ದು, ಇದೇ ನಂಬಿಕೆಯ ಮೇಲೆ ಹಣದ ಸಹಾಯ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಹಲವು ದಿನಗಳು ಕಳೆದರೂ ವಾಪಸ್ ಹಣ ನೀಡದೇ ಸತಾಯಿಸಲಾಗಿತ್ತು. ಬಳಿಕ ಸೆ. 14 ರಂದು ಹಿರಿಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶರಣು ಸಲಗರ್ ಹಣ ನೀಡಲು ಒಪ್ಪಿಕೊಂಡು ಚೆಕ್ ನೀಡಿದ್ದಾರೆ. ಆದರೆ, ಚೆಕ್ ಬ್ಯಾಂಕ್ ಗೆ ಹಾಕಿದಾಗ ಖಾತೆ ಮುಚ್ಚಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ದೂರಲಾಗಿದೆ. ಕೊಟ್ಟ ಹಣ ಮರುಪಾವತಿಗಾಗಿ ಕೇಳಲು ಶರಣು ಸಲಗರ್ ಅವರ ಮನೆಗೆ ಹೋದ ಸುಗೂರೆ ಅವರ ಪತ್ನಿ ಹಾಗೂ ಪುತ್ರನಿಗೆ ಹಣ ನೀಡದೇ ತಮ್ಮ ಪತ್ನಿ ಹಾಗೂ ಪುತ್ರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ, ಜೀವ ಬೇದರಿಕೆ ಹಾಕಿದ್ದಾರೆ. ಆರೋಪಿ ಸ್ಥಾನದಲ್ಲಿ ಇರುವ ಶಾಸಕ ಶರಣು ಸಲಗರ್, ಮೋಸ ಮಾಡುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ 74, 109, 314(4), 318, 351 ಮತ್ತು 352 ಬಿ. ಎನ್. ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ವಾರ್ತಾ ಭಾರತಿ 28 Dec 2025 11:36 pm

ಮಂಗಳೂರು: ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಪಕ್ಷ ರಾಷ್ಟ್ರ ನಿರ್ಮಾಣದಲ್ಲಿ ನಿರ್ವಹಿಸಿದ ಪಾತ್ರ ಅನನ್ಯ. ಸ್ವಾತಂತ್ರ್ಯದ ಬಳಿಕ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಕಾಂಗ್ರೆಸ್ ಇಂದಿಗೂ ಬಡವರು, ಶೋಷಿತರು, ಅವಕಾಶ ವಂಚಿತರು ಸೇರಿದಂತೆ ದೇಶದ ನಾಗರಿಕರ ಧ್ವನಿಯಾಗಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಆಶಯಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಮಹನೀಯರ ತ್ಯಾಗ, ಬಲಿದಾನ ಸ್ಮರಣೀಯ ಎಂದು ಹೇಳಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿಎಂ ಧನಂಜಯ, ನಿಗಮ ಅಧ್ಯಕ್ಷರಾದ ಶಾಲೆಟ್ ಪಿಂಟೊ, ವಿಶ್ವಾಸ್ ಕುಮಾರ್ ದಾಸ್, ಮಮತಾ ಗಟ್ಟಿ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಕೆ.ಅಶ್ರಫ್, ಡಿಸಿಸಿ ಉಪಾಧ್ಯಕ್ಷರಾದ ಟಿ.ಹೊನ್ನಯ್ಯ, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಡೆನ್ನಿಸ್ ಡಿಸಿಲ್ವ, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರುಗಳಾದ ಎಸ್.ಅಪ್ಪಿ, ಅಬ್ಬಾಸ್ ಅಲಿ, ಮನೋರಾಜ್ ರಾಜೀವ್, ಮನಪಾ ಮಾಜಿ ಸದಸ್ಯ ನವೀನ್ ಡಿಸೋಜಾ, ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಕಾಸ್ ಶೆಟ್ಟಿ, ಟಿ.ಕೆ.ಸುಧೀರ್, ಲಕ್ಷ್ಮೀ ನಾಯರ್, ಶಬೀರ್ ಸಿದ್ದಕಟ್ಟೆ, ಇ.ಕೆ.ಹುಸೈನ್, ಸಮೀರ್ ಮುಡಿಪು, ಮುಖಂಡರಾದ ಭಾಸ್ಕರ್ ರಾವ್, ಸತೀಶ್ ಪೆಂಗಲ್, ಮೋಹನ್ ದಾಸ್ ಕೊಟ್ಟಾರಿ, ರವಿ ಪೂಜಾರಿ, ಉದಯ್ ಕುಂದರ್, ಮಲ್ಲಿಕಾರ್ಜುನ ಕೋಡಿಕಲ್, ನೀತು, ಅನಿತಾ, ಫಯಾಝ್ ಅಮ್ಮೆಮ್ಮಾರ್, ಸಮರ್ಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 11:34 pm

ಗಡಿ ಗ್ರಾಮಗಳಲ್ಲಿ ಕನ್ನಡ ಕಲಿಕಾ ತರಗತಿಗಳ ಅವಧಿ ವಿಸ್ತರಿಸಬೇಕು: ಕುಪೇಂದ್ರ ಎಸ್. ಹೊಸಮನಿ

ಮೂರು ತಿಂಗಳ ಕನ್ನಡ ಕಲಿಕಾ ತರಗತಿಗಳ ಸಮಾರೋಪ ಸಮಾರಂಭ

ವಾರ್ತಾ ಭಾರತಿ 28 Dec 2025 11:27 pm

ಮಂಗಳೂರು| ಭಾರತ ಸೇವಾದಳ ವತಿಯಿಂದ ಸೇವಾದಳ ಸಪ್ತಾಹ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಭಾರತ ಸೇವಾದಳ ವತಿಯಿಂದ ರವಿವಾರ ನಗರದ ತೋಟ ಬೆಂಗ್ರೆಯಲ್ಲಿರುವ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವಾದಳ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ರಾಮಕೃಷ್ಣ ಅವರು ವಹಿಸಿದ್ದರು. ಅತಿಥಿಗಳಾಗಿ ಬೆಂಗ್ರೆ ಮಹಾಜನ ಅಧ್ಯಕ್ಷ ಸಂಜಯ್ ಸುವರ್ಣ, ಭಾರತ ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯಾನ್, ಜಿಲ್ಲಾ ಸಂಘಟಕ ಮಂಜೇಗೌಡ, ಸದಸ್ಯ ಸುನಿಲ್ ದೇವಾಡಿಗ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮೀ ಸ್ವಾಗತಿಸಿ, ಸಹ ಶಿಕ್ಷಕಿ ಅಶ್ವಿನಿ ವಂದಿಸಿದರು. ಶಾಲೆಯ ವಿದ್ಯಾರ್ಥಿಗಳಿಗೆ ಸೇವಾದಳದ ಸಪ್ತಾಹ ಪ್ರಯುಕ್ತ ಯೋಗಾಸನ ಸ್ಪರ್ಧೆ ನಡೆಯಿತು. ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 28 Dec 2025 11:26 pm

Operation Sindoor ವೇಳೆ ‘ಬಂಕರ್‌ ನಲ್ಲಿ ಅಡಗಿಕೊಳ್ಳುವಂತೆʼ ಸಲಹೆ ನೀಡಲಾಗಿತ್ತು: ಬಹಿರಂಗಪಡಿಸಿದ ಪಾಕ್‌ ಅಧ್ಯಕ್ಷ ಆಸಿಫ್ ಅಲಿ ಝರ್ದಾರಿ

ಲಾಹೋರ್: ಈ ವರ್ಷದ ಮೇ ತಿಂಗಳಲ್ಲಿ ಭಾರತವು ‘ಆಪರೇಷನ್ ಸಿಂಧೂರ್’ ಆರಂಭಿಸಿದ ವೇಳೆ ತಮಗೆ “ಬಂಕರ್‌ ನಲ್ಲಿ ಅಡಗಿಕೊಳ್ಳಿ” ಎಂಬ ಸಲಹೆ ನೀಡಲಾಗಿತ್ತು ಎಂದು ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಝರ್ದಾರಿ ಬಹಿರಂಗಪಡಿಸಿದರು. ಡಿ.27, 2007ರಂದು ರಾವಲ್ಪಿಂಡಿಯಲ್ಲಿ ನಡೆದ ಗುಂಡು ಮತ್ತು ಬಾಂಬ್ ದಾಳಿಯಲ್ಲಿ ಹತ್ಯೆಗೀಡಾದ ತಮ್ಮ ಪತ್ನಿ ಹಾಗೂ ಮಾಜಿ ಪ್ರಧಾನಿ ಬೆನ್ ಝೀರ್ ಭುಟ್ಟೋ ಅವರ 18ನೇ ಸಂಸ್ಮರಣೆಯ ಅಂಗವಾಗಿ ಸಿಂಧ್ ಪ್ರಾಂತ್ಯದ ಲರ್ಕಾನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಈ ವಿವರಗಳನ್ನು ನೀಡಿದರು. “ನನ್ನ ಮಿಲಿಟರಿ ಕಾರ್ಯದರ್ಶಿ ಬಂದು ‘ಸರ್, ಯುದ್ಧ ಆರಂಭವಾಗಿದೆ’ ಎಂದರು. ಬಂಕರ್‌ ಗೆ ತೆರಳುವಂತೆ ಸಲಹೆ ನೀಡಿದರು. ಆದರೆ, ನಾಯಕರು ಬಂಕರ್‌ ಗಳಲ್ಲಿ ಸಾಯುವುದಿಲ್ಲ. ಯುದ್ಧಭೂಮಿಯಲ್ಲೇ ಸಾಯುತ್ತಾರೆ ಎಂದು ನಾನು ಸ್ಪಷ್ಟಪಡಿಸಿದೆ,” ಎಂದು ಝರ್ದಾರಿ ಹೇಳಿದರು. ಪಹಲ್ಗಾಮ್‌ ನಲ್ಲಿ 26 ನಾಗರಿಕರು ಸಾವಿಗೀಡಾದ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು. ಇದರಿಂದ ಎರಡೂ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ತೀವ್ರ ಸಶಸ್ತ್ರ ಸಂಘರ್ಷ ನಡೆದಿತ್ತು. ಮೇ 10ರಂದು ಕದನ ವಿರಾಮ ಒಪ್ಪಂದದೊಂದಿಗೆ ಪರಿಸ್ಥಿತಿ ಶಮನಗೊಂಡಿತ್ತು. ಮೇ ತಿಂಗಳ ಸಂಘರ್ಷದ ಸಂದರ್ಭದಲ್ಲಿ “ಭಾರತಕ್ಕೆ ಸೂಕ್ತ ಉತ್ತರ ನೀಡಲಾಗಿದೆ” ಎಂದ ಝರ್ದಾರಿ, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಶ್ಲಾಘಿಸಿದರು. ಜನರಲ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಹುದ್ದೆಗೆ ಏರಿಸುವ ನಿರ್ಧಾರದಲ್ಲಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಪಾತ್ರವಿದೆ ಎಂದೂ ಅವರು ಹೇಳಿದರು. ಈ ಸಂದರ್ಭದಲ್ಲಿ ಝರ್ದಾರಿಯವರ ಪುತ್ರ ಹಾಗೂ ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಝರ್ದಾರಿ ಇದ್ದರು.

ವಾರ್ತಾ ಭಾರತಿ 28 Dec 2025 11:16 pm

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗಿಲ್ವ, ಕಚೇರಿಗೆ ಅಲೆದಾಡ್ಬೇಡಿ; ಈ ಸಹಾಯವಾಣಿಗೆ ಕರೆ ಮಾಡಿ ಸಾಕು

ಬೆಂಗಳೂರು ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದರೆ ಇನ್ನು ಚಿಂತೆಯಿಲ್ಲ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು '181' ಸಹಾಯವಾಣಿ ಸಂಖ್ಯೆಯನ್ನು ತೆರೆದಿದ್ದು, ಇದರ ಮೂಲಕ ಫಲಾನುಭವಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಬಹುದು. ತಾಂತ್ರಿಕ ದೋಷ, ಇ-ಕೆವೈಸಿ, ತೆರಿಗೆ ಪಾವತಿ ಮುಂತಾದ ಕಾರಣಗಳಿಂದ ಹಣ ಬರದಿದ್ದರೆ, ಸಹಾಯವಾಣಿಗೆ ಕರೆ ಮಾಡಿ ನಿಖರ ಮಾಹಿತಿ ಪಡೆಯಬಹುದು.

ವಿಜಯ ಕರ್ನಾಟಕ 28 Dec 2025 11:10 pm

ಪಾಕ್ ಗೆ ತಲೆನೋವಾಗಿರುವ ಭಾರತದ `ನೋ ಹ್ಯಾಂಡ್ ಶೇಕ್' ಅಭಿಯಾನ: ಜಗಮೊಂಡ ಮೊಹ್ಸಿನ್ ನಖ್ವಿಯಿಂದ ಮತ್ತೆ ಕೊಂಕು!

Mohsin Khan On Handshake Issue- ಕ್ರೀಡೆಯಿಂದ ರಾಜಕೀಯವನ್ನು ದೂರವಿಡಲು ಪಾಕಿಸ್ತಾನ ಬದ್ಧವಾಗಿದ್ದು ಭಾರತ ಕೈಜೋಡಿಸಲು ಮುಂದೆ ಬರದಿದ್ದರೆ ನಾವೂ ಆಸಕ್ತಿ ತೋರಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB)ಯ ಮುಖ್ಯಸ್ಥ ಮೊಹ್ಸಿನ್ ನಖ್ವಿ ಸ್ಪಷ್ಟಪಡಿಸಿದ್ದಾರೆ. ಪಹಲ್ಗಾಮ್ ದುರ್ಘಟನೆಯನ್ನು ವಿರೋಧಿಸಿ ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್ ವೇಳೆ ನೋ ಹ್ಯಾಂಡ್ ಶೇಖ್ ಅಭಿಯಾನವನ್ನು ಪ್ರಾರಂಭಿಸಿತ್ತು. ಅದನ್ನ ಮಹಿಳಾ ತಂಡ ಮತ್ತು ಅಂಡರ್ 19 ತಂಡವೂ ಮುಂದುವರಿಸಿದ್ದು ಪಾಕಿಸ್ತಾನದ ಮುಜುಗರಕ್ಕೆ ಕಾರಣವಾಗಿತ್ತು. ಇದೀಗ ಇತ್ತೀಚೆಗೆ U19 ಏಷ್ಯಾ ಕಪ್ ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ನಡುವೆ ನಡೆದ ಘಟನೆಗಳು ಮತ್ತು ಟ್ರೋಫಿ ವಿತರಣಾ ವಿವಾದವನ್ನು ನಖ್ವಿ ಉಲ್ಲೇಖಿಸಿ ಮಾತನಾಡಿದ್ದಾರೆ.

ವಿಜಯ ಕರ್ನಾಟಕ 28 Dec 2025 11:06 pm

ಉಳ್ಳಾಲ| ರಿಕ್ಷಾ ಕಳ್ಳತನ: ಆರೋಪಿಯ ಬಂಧನ

ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ: ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13ರಂದು ರಾತ್ರಿ ನಿಲ್ಲಿಸಿದ್ದರು. ಈ ರಿಕ್ಷಾವು ಕಳವಾಗಿದ್ದು, ಈ ಘಟನೆ ಡಿ.14 ರಂದು ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಡಿ.19ರಂದು ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾರ್ತಾ ಭಾರತಿ 28 Dec 2025 11:06 pm

ಸುನ್ನತ್ ಜಮಾಅತ್‌ನ ಆಶಯ, ಆದರ್ಶಗಳನ್ನು ಪಾಲಿಸೋಣ: ಜಿಫ್ರಿ ಮುತ್ತುಕೋಯ ತಂಙಳ್

ಮಂಗಳೂರಿನಲ್ಲಿ ಸಮಸ್ತ ಶತಾಬ್ದಿ ಸಂದೇಶ ಯಾತ್ರೆಯ ಸಮಾರೋಪ ಸಮಾರಂಭ

ವಾರ್ತಾ ಭಾರತಿ 28 Dec 2025 10:55 pm

Australiaದ ಬೋಂಡಿ ಬೀಚ್ ಗುಂಡಿನ ದಾಳಿ | ಧೈರ್ಯದಿಂದ ಮುನ್ನುಗ್ಗಿ ಗಾಯಾಳುಗಳಿಗೆ ನೆರವಾದ ಹೈದರಾಬಾದ್ ಮೂಲದ ಮುಹಮ್ಮದ್ ರಹ್ಮತ್ ಪಾಷಾ

ಹೈದರಾಬಾದ್/ಸಿಡ್ನಿ: ಆಸ್ಟ್ರೇಲಿಯಾದ ಬೋಂಡಿ ಬೀಚ್ ನಲ್ಲಿ ಇತ್ತೀಚೆಗೆ ನಡೆದ ಗುಂಡಿನ ದಾಳಿ ಸಂದರ್ಭದಲ್ಲಿ, ತೆಲಂಗಾಣ ಮೂಲದ ಯುವಕನೊಬ್ಬ ಧೈರ್ಯವಾಗಿ ಮುನ್ನುಗ್ಗಿ ಗಾಯಾಳುಗಳಿಗೆ ನೆರವಾಗಿರುವುದು ಬೆಳಕಿಗೆ ಬಂದಿದೆ. ಹೈದರಾಬಾದ್‌ ನ 37 ವರ್ಷದ ಮುಹಮ್ಮದ್ ರಹ್ಮತ್ ಪಾಷಾ, ದಾಳಿ ನಡೆಯುತ್ತಿದ್ದರೂ ಸ್ಥಳದಲ್ಲೇ ಉಳಿದುಕೊಂಡು ಗಾಯಗೊಂಡವರಿಗೆ ಸಹಾಯ ಮಾಡಿದ್ದಾರೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಮೂಲದವರಾದ ರಹ್ಮತ್ ಪಾಷಾ, ಈ ಹಿಂದೆ ಹೈದರಾಬಾದ್ ನ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿ ವಾಸವಾಗಿದ್ದರು. ಘಟನೆ ನಡೆದ ದಿನ ಸಂಜೆ ಏಳು ಗಂಟೆಯ ನಂತರ ಬೀಚ್‌ ಫ್ರಂಟ್‌ ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮೊದಲಿಗೆ ಪಟಾಕಿ ಸಿಡಿದ ಶಬ್ದವೆಂದು ಭಾವಿಸಿದ ಶಬ್ದಗಳು ಕೇಳಿಬಂದವು. ಆದರೆ ಕ್ಷಣಾರ್ಧದಲ್ಲಿ ಜನರು ಕಿರುಚುತ್ತಾ ಬೀಳಲು ಆರಂಭಿಸಿದಾಗ ಗುಂಡಿನ ದಾಳಿ ನಡೆಯುತ್ತಿದೆಎಂಬುದು ಸ್ಪಷ್ಟವಾಯಿತು. ಮುಹಮ್ಮದ್ ರಹ್ಮತ್ ಪಾಷಾ ನೀಡಿದ ಮಾಹಿತಿಯಂತೆ, ದಾಳಿಕೋರ ಅವರ ಮುಂದೆಯೇ ನಿಂತು ಗುಂಡು ಹಾರಿಸುತ್ತಿದ್ದನು. ತನ್ನ ಜೀವಕ್ಕೂ ಅಪಾಯವಿದ್ದರೂ, ಕಾಲಿಗೆ ಗುಂಡು ತಗುಲಿ ಸಹಾಯಕ್ಕಾಗಿ ಕೂಗುತ್ತಿದ್ದ ವೃದ್ಧ ಮಹಿಳೆಗೆ ನೆರವಾಗಲು ರಹ್ಮತ್ ಮುಂದಾದರು. ಆಕೆಯ ಪಕ್ಕದಲ್ಲೇ ಕುಳಿತು ಸಮಾಧಾನಪಡಿಸುತ್ತಾ ತುರ್ತು ಸೇವೆಗಳು ಸ್ಥಳಕ್ಕೆ ಆಗಮಿಸುವವರೆಗೂ ಅವರು ಜೊತೆಗಿದ್ದರು. ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಆಗಮಿಸಿದ ನಂತರ, ಗಾಯಾಳುಗಳನ್ನು ಸ್ಟ್ರೆಚರ್‌ ಗಳಲ್ಲಿ ಹಾಗೂ ಆಂಬ್ಯುಲೆನ್ಸ್‌ ಗಳಿಗೆ ಸ್ಥಳಾಂತರಿಸಲು ಮುಹಮ್ಮದ್ ರಹ್ಮತ್ ಪಾಷಾ ಸಹಕರಿಸಿದರು. ಆ ಕ್ಷಣ ಘಟನಾ ಸ್ಥಳದಲ್ಲಿ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜನರು ಭೀತಿಯಿಂದ ಎಲ್ಲಾ ದಿಕ್ಕುಗಳಲ್ಲೂ ಓಡಾಡುತ್ತಿದ್ದರು ಎಂದು ಅವರು ವಿವರಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುವೊಬ್ಬರು ನಂತರ ಮೃತಪಟ್ಟರು ಎಂದು ಪಾಷಾ ʼವಾರ್ತಾಭಾರತಿʼಗೆ ತಿಳಿಸಿದ್ದಾರೆ. 2019ರಲ್ಲಿ ಶೆಫ್ ತರಬೇತಿಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದ ಮೂರು ಮಕ್ಕಳ ತಂದೆಯಾದ ಮುಹಮ್ಮದ್ ರಹ್ಮತ್ ಪಾಷಾ, ಈ ಘಟನೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ ಎಂದು ಹೇಳಿದ್ದಾರೆ. ದಾಳಿಯ ಬಳಿಕ ಅವರು ಕೆಲಸಕ್ಕೆ ಮರಳಿಲ್ಲ. ಆ ಕ್ಷಣ ಉಂಟಾದ ಆಘಾತಕ್ಕೆ ಪಾಷಾ ನಿದ್ರಾ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಘಟನೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದ ಕೋಮು ನಿಂದನೆ ಹಾಗೂ ವಲಸೆ ವಿರೋಧಿ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಮುಹಮ್ಮದ್ ರಹ್ಮತ್ ಪಾಷಾ, ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ತಮ್ಮ ಸುತ್ತಮುತ್ತಲಿನ ಜನರಿಂದ ಬೆಂಬಲ ವ್ಯಕ್ತವಾಗಿದ್ದು, ಹೈದರಾಬಾದ್‌ ನಲ್ಲಿರುವ ಕುಟುಂಬವು ಅವರು ಶೀಘ್ರದಲ್ಲೇ ಸುರಕ್ಷಿತವಾಗಿ ಮನೆಗೆ ಮರಳುವ ನಿರೀಕ್ಷೆಯಲ್ಲಿದೆ.

ವಾರ್ತಾ ಭಾರತಿ 28 Dec 2025 10:46 pm

ಕೋಗಿಲು ಬಡಾವಣೆಯಲ್ಲಿದ್ದ ಮನೆಗಳ ತೆರವು; ʻನಿರಾಶ್ರಿತರಿಗೆ ನಾಳೆ ಸಿಹಿ ಸುದ್ದಿ ಸಿಗಲಿದೆ: ಜಮೀರ್‌ ಭರವಸೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳು ಸೋಮವಾರ ಸಿಹಿ ಸುದ್ದಿ ನೀಡುವ ಭರವಸೆ ಇದೆ ಎಂದು ವಸತಿ ಸಚಿವರು ತಿಳಿಸಿದ್ದಾರೆ. ಕೇರಳದ ರಾಜಕಾರಣಿಗಳು ರಾಜಕೀಯ ಲಾಭಕ್ಕಾಗಿ ಬಡವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.

ವಿಜಯ ಕರ್ನಾಟಕ 28 Dec 2025 10:44 pm

ಮರ್ಯಾದೆಗೇಡು ಹತ್ಯೆ ತಡೆಗೆ ಕಾಯ್ದೆ ರಚನೆ : ಸಿಎಂ ಸಿದ್ದರಾಮಯ್ಯ

ಜನರಾಜ್ಯೋತ್ಸವ-2025 ಕಾರ್ಯಕ್ರಮ

ವಾರ್ತಾ ಭಾರತಿ 28 Dec 2025 10:42 pm

ಮಂಗಳೂರು| ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ

ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ. ಡಿ.25ರಂದು ಸಂಜೆ 6.30ಕ್ಕೆ ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದರು. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ರವಿವಾರ ಬೆಳಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. ಈತನಿಂದ ಕಳವು ಮಾಡಲಾದ 32 ಗ್ರಾಂ ಚಿನ್ನದ ಕರಿಮಣಿ ಸರ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಇಲೆಕ್ಟ್ರಿಕ್ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.

ವಾರ್ತಾ ಭಾರತಿ 28 Dec 2025 10:40 pm

ಮಂಗಳೂರು| ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆ ಯಶಸ್ವಿ: ರೈಲ್ವೇ ಘಾಟ್‌ನಲ್ಲಿ ವಿದ್ಯುದ್ದೀಕರಣ ಪೂರ್ಣ

ಮಂಗಳೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗವು ರವಿವಾರ ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಘಾಟ್ ಭಾಗದ ಸಂಪೂರ್ಣ ವಿದ್ಯುದೀಕರಣವನ್ನು ಸಾಧಿಸಿದೆ. ಇದು ಪ್ರದೇಶದ ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಮೈಲಿಗಲ್ಲಾಗಿದೆ. ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿದೆ. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ತೀಕ್ಷ್ಣ ವಕ್ರಗಳು ಇರುವುದರ ಜೊತೆಗೆ, ಭೂಕುಸಿತಗಳಿಗೆ ಹೆಚ್ಚು ಒಳಪಡುವ ಪ್ರದೇಶವಾಗಿರುವುದರಿಂದ, ವಿದ್ಯುದೀಕರಣ ಕಾರ್ಯವು ಅತ್ಯಂತ ಸಂಕೀರ್ಣವಾಗಿತ್ತು. ಎರಡು ವರ್ಷದಲ್ಲಿ ಪೂರ್ಣ:ವಿದ್ಯುದೀಕರಣ ಕಾರ್ಯವು 2023 ಡಿ.1 ರಂದು ಆರಂಭಗೊಂಡು, 93.55ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ಯೋಜನೆಯಡಿ ಮಾರ್ಗದೊಳಗೆ ಐದು ಸ್ವಿಚಿಂಗ್ ಸ್ಟೇಷನ್‌ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿಮೀ ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್‌ಗೆ ಮಿತಿಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ವಿಭಾಗದಲ್ಲಿರುವ 57 ಸುರಂಗಗಳಲ್ಲಿ, ಮೇಲ್ಮೈ ವಿದ್ಯುತ್ ಸಾಧನಗಳ ಅಳವಡಿಕೆಗೆ 419 ಮುಖ್ಯ ಬ್ರಾಕೆಟ್‌ಗಳು ಮತ್ತು 419 ಹೆಚ್ಚುವರಿ (ಸ್ಪೇರ್) ಬ್ರಾಕೆಟ್‌ಗಳನ್ನು ಒದಗಿಸಲಾಗಿದೆ. ಸುರಂಗಗಳ ಲೈನ್ಡ್ ಹಾಗೂ ಅನ್ಲೈನ್ಡ್ ಭಾಗಗಳಿಗೆ ಸಂಬಂಧಿಸಿದಂತೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಸವಿಸ್ತಾರವಾದ ಭೌಗೋಳಿಕ ಸಮೀಕ್ಷೆಗಳನ್ನು ನಡೆಸಲಾಗಿದೆ. ಪ್ರತಿಯೊಂದು ಬ್ರಾಕೆಟ್ ಸ್ಥಳದಲ್ಲಿಯೂ ಬೋಲ್ಟ್‌ಗಳ ಸಮರ್ಪಕ ಗ್ರೌಟಿಂಗ್ ಮತ್ತು ದೀರ್ಘಕಾಲೀನ ಸ್ಥಿರತೆಯನ್ನು ಖಚಿತಪಡಿಸಲು ಪುಲ್-ಔಟ್ ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರೀ ಸವಾಲನ್ನು ಎದುರಿಸಿದ ರೈಲ್ವೇ: 830 ಮೀಟರ್‌ವರೆಗೆ ವಿಸ್ತರಿಸಿರುವ ತೀವ್ರ ಏರುಗುಡ್ಡಗಳು ಇರುವುದರಿಂದ, ಮೇಲ್ಮೈ ವಿದ್ಯುತ್ ವ್ಯವಸ್ಥೆಯ ಒತ್ತಡ ಮತ್ತು ಸ್ಥಿರತೆಯನ್ನು ಕಾಪಾಡಲು ವಿಶೇಷ ಉಪಕರಣಗಳು ಮತ್ತು ಬಲಿಷ್ಠ ಇಂಜಿನಿಯರಿಂಗ್ ವಿನ್ಯಾಸಗಳನ್ನು ಅಳವಡಿಸಲಾಗಿದೆ. ಮಳೆಗಾಲದಲ್ಲಿ ಆಗಾಗ ಸಂಭವಿಸಿದ ಭೂಕುಸಿತಗಳು, ಮಣ್ಣಿನ ಕೊಚ್ಚಿಹೋಗುವಿಕೆ ಹಾಗೂ ಶಿಲಾಪಾತಗಳು ಕಾರ್ಯಾಚರಣೆಗೆ ಸವಾಲಾಗಿತ್ತು. ಇದಕ್ಕೆ ಹೆಚ್ಚುವರಿಯಾಗಿ, ತೀವ್ರ ಏರುಗುಡ್ಡಗಳು ಮತ್ತು ಸುರಕ್ಷತಾ ಸೌಲಭ್ಯಗಳಿಗೆ ಅಗತ್ಯವಾದ ಸ್ಥಳದ ಕೊರತೆಯಿಂದ, ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ಕಾರ್ಯಾಚರಣೆಯ ಅವಧಿಯಲ್ಲಿ ಕಠಿಣ ಸುರಕ್ಷತಾ ಹಾಗೂ ಕಾರ್ಯಾಚರಣಾ ನಿರ್ಬಂಧಗಳನ್ನು ವಿಧಿಸಿದ್ದರು. ಈ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ನಿರಂತರ ಹಾಗೂ ಸುರಕ್ಷಿತ ರೈಲು ಸಂಚಾರವನ್ನು ದೃಢಪಡಿಸುವ ಜೊತೆಗೆ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸುವುದು ದೊಡ್ಡ ಸವಾಲಾಗಿತ್ತು. ವಿದ್ಯುದೀಕರಣ ಕಾರ್ಯ ಮತ್ತು ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆ ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ಸಂಪೂರ್ಣ ಘಾಟ್ ವಿಭಾಗವು ಈಗ ವಿದ್ಯುತ್ ಚಾಲನೆಗೆ ಸಂಪೂರ್ಣವಾಗಿ ಸಿದ್ಧವಾಗಿದೆ. ಇದರಿಂದ ಸ್ವಚ್ಛ, ಶಕ್ತಿಸಮರ್ಥ ಮತ್ತು ವೆಚ್ಚದ ದೃಷ್ಟಿಯಿಂದ ಪರಿಣಾಮಕಾರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸುತ್ತದೆ. ಈ ಸಾಧನೆ ಭಾರತೀಯ ರೈಲ್ವೆಯ ಶೇಕಡಾ 100 ವಿದ್ಯುದೀಕರಣ ಗುರಿಯ ಮಹತ್ವದ ಹೆಜ್ಜೆಯಾಗಿದ್ದು, ಕಠಿಣ ಭೌಗೋಳಿಕ ಪರಿಸ್ಥಿತಿಗಳಲ್ಲೂ ಸತತ, ಪರಿಸರ ಸ್ನೇಹಿ ಮತ್ತು ಸ್ಥಿರ ರೈಲು ಮೂಲಸೌಕರ್ಯ ನಿರ್ಮಾಣದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 28 Dec 2025 10:33 pm

'ನಾನು ಭಾರತೀಯ, ಬಿಟ್ಬಿಡಿʼ ಎಂದ್ರು ಬಿಡದ ದುಷ್ಕರ್ಮಿಗಳು; ಚೀನಾದವ ಎಂದು ಹಲ್ಲೆ, ವಿದ್ಯಾರ್ಥಿ ಸಾವು

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿಗೆ ಒಳಗಾಗಿದ್ದ ತ್ರಿಪುರಾದ ಎಂಬಿಎ ವಿದ್ಯಾರ್ಥಿ ಅಂಜೆಲ್‌ ಚಕ್ಮಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚೀನಿ ಪ್ರಜೆ ಎಂದು ತಪ್ಪಾಗಿ ಭಾವಿಸಿ ಸ್ಥಳೀಯರು ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ವಿಜಯ ಕರ್ನಾಟಕ 28 Dec 2025 10:21 pm

ಉಡುಪಿ| ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ (12) ಎಂದು ಗುರುತಿಸಲಾಗಿದೆ. ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದ ಸಮನ್ವಿಗೆ  ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್‌ನಲ್ಲಿ ಮಾತಾನಾಡುತ್ತಿದ್ದಳು. ಈ ವೇಳೆ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿದ್ದರು. ಇದೇ ಚಿಂತೆಯಲ್ಲಿ ಸಮನ್ವಿ ಮನೆಯ ಬೆಡ್‌ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮನೆಯವರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಸಮನ್ವಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Dec 2025 10:19 pm

ಕುಂದಾಪುರ| ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂದಾವರ ಗ್ರಾಮದಲ್ಲಿ ನಡೆದಿದೆ. ಬಸವ ಪೂಜಾರಿ(85)  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಡಿ.27ರಂದು ರಾತ್ರಿ ಬಸವ ಪೂಜಾರಿ ಮನೆಯಲ್ಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Dec 2025 10:14 pm

ಕುಂದಾಪುರ| ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತ್ಯು

ಕುಂದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಉಸಿರಾಟದ ತೊಂದರೆಯಿಂದ ಕುಸಿದು ಬಿದ್ದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊರ್ಗಿ ಗ್ರಾಮದ ಸಂದೀಪ(30) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆ ಬಳಿಕವೂ ಪ್ರತಿನಿತ್ಯ ಮದ್ಯ ಸೇವಿಸುತಿದ್ದ ಇವರು, ಡಿ.27ರಂದು ಸಂಜೆ ಕೆಲಸ ಮಾಡುತ್ತಿದ್ದ ತೋಟದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Dec 2025 10:09 pm

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ವಾಪಸ್‌ : ಸಿಎಂ ಸಿದ್ದರಾಮಯ್ಯ ಘೋಷಣೆ

ಜನರಾಜ್ಯೋತ್ಸವ-2025 ಕಾರ್ಯಕ್ರಮ

ವಾರ್ತಾ ಭಾರತಿ 28 Dec 2025 10:08 pm

ಉಡುಪಿ| ರೈಲಿನಲ್ಲಿ ಮಹಿಳೆಯ ಬ್ಯಾಗ್‌ನಲ್ಲಿದ್ದ 45.80ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ವರದಿಯಾಗಿದೆ. ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಬಳಿ ಇರಿಸಿ ರಾತ್ರಿ ಮಲಗಿದ್ದರು. ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ ರೈಲು ನಿಲ್ದಾಣ ಬಳಿ ಹೆಲ್ಮೀನಾ ಅವರ ಮಗಳು ಬ್ಯಾಗ್ ನೋಡಿದಾಗ ಅದರಲ್ಲಿದ್ದ 45,80,000ರೂ. ಮೌಲ್ಯದ 408 ಗ್ರಾಂ ಚಿನ್ನದ ಆಭರಣಗಳು ಹಾಗೂ 15,000ರೂ. ನಗದು ಕಳವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Dec 2025 10:06 pm

ಡಾ.ನಿರ್ಮಲ ಕುಮಾರಿ ಕಾಂಚೀಪುರಂ ವಿವಿ ಕಾನೂನು ಡೀನ್ ಆಗಿ ನೇಮಕ

ಉಡುಪಿ, ಡಿ.೨೮: ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ನಿರ್ದೇಶಕಿ ಪ್ರೊ.(ಡಾ.)ನಿರ್ಮಲ ಕುಮಾರಿ ಕಾಂಚೀಪುರಂನ ಚಂದ್ರಶೇಖರ ಸರಸ್ವತಿ ವಿಶ್ವವಿದ್ಯಾಲಯದ ಕಾನೂನು ಡೀನ್ ಆಗಿ ನೇಮಕಗೊಂಡಿದ್ದಾರೆ. ನಿರ್ಮಲ ಕುಮಾರಿ ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ.ಮತ್ತು ಎಲ್ಎಲ್ಎಂ ವಿದ್ಯಾಭ್ಯಾಸ ಮುಗಿಸಿ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಅಧ್ಯಾಪಕ ವೃತ್ತಿ ಪ್ರಾರಂಭಿಸಿದ್ದರು. ಕಾಲೇಜಿನಲ್ಲಿ ಶಿವಾಜಿ ಶೆಟ್ಟಿ ಅಣಕು ನ್ಯಾಯಾಲಯ ಸ್ಪರ್ಧೆಗಳನ್ನು 2007  ಮತ್ತು 2015ರಿಂದ ಪ್ರತಿವರ್ಷವೂ ಸಂಯೋಜಕರಾಗಿ ನಿರ್ವಹಿಸಿದ್ದರು. ಪ್ರಾಂಶುಪಾಲರಾಗಿದ್ದಾಗ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಇಂಡಿಯಾ ಟುಡೆ ಪ್ರಕಾರ ಭಾರತದಲ್ಲೇ ಅತ್ಯಂತ ಕಡಿಮೆ ಶುಲ್ಕ ಪಡೆದು ಅತ್ಯುತ್ತಮ ವಿದ್ಯಾಭ್ಯಾಸ ಸಲ್ಲಿಸುವ ಕಾಲೇಜು ಎಂಬ ಶೀರ್ಷಿಕೆ ಯಡಿಯಲ್ಲಿನ ಸರ್ವೆಯಯಲ್ಲಿ ಪ್ರಥಮ ಸ್ಥಾನ ಪಡೆದಿತ್ತು.

ವಾರ್ತಾ ಭಾರತಿ 28 Dec 2025 10:01 pm

ʼಕಾಂಗ್ರೆಸ್ ಒಂದು ಸಿದ್ಧಾಂತʼ; ಸಿದ್ಧಾಂತಗಳು ಎಂದಿಗೂ ಸಾಯುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ,ಡಿ.28: ಕಾಂಗ್ರೆಸ್ ಒಂದು ಸಿದ್ಧಾಂತವಾಗಿದೆ ಮತ್ತು ಸಿದ್ಧಾಂತಗಳು ಎಂದಿಗೂ ಸಾಯುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್‌ ನ 140ನೇ ಸಂಸ್ಥಾಪನಾ ದಿನವಾದ ರವಿವಾರ ಪಕ್ಷದ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ,‘‘ಸಂಸ್ಥಾಪನಾ ದಿನವಾದ ಇಂದು ‘ಕಾಂಗ್ರೆಸ್ ಅಂತ್ಯಗೊಂಡಿದೆ’ ಎಂದು ಹೇಳುವವರಿಗೆ ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ನಾನು ಬಯಸುತ್ತೇನೆ. ನಮ್ಮ ಶಕ್ತಿ ಕಡಿಮೆಯಾಗಿರಬಹುದು, ಆದರೆ ನಮ್ಮ ಬೆನ್ನುಮೂಳೆ ಈಗಲೂ ನೇರವಾಗಿದೆ ಎಂದು ನಾನು ಅವರಿಗೆ ಹೇಳಬಯಸುತ್ತೇನೆ. ನಾವು ಸಂವಿಧಾನದೊಂದಿಗೆ, ಜಾತ್ಯತೀತತೆಯೊಂದಿಗೆ ಮತ್ತು ಬಡವರ ಹಕ್ಕುಗಳೊಂದಿಗೆ ರಾಜಿ ಮಾಡಿಕೊಂಡಿಲ್ಲ. ನಾವು ಅಧಿಕಾರದಲ್ಲಿ ಇಲ್ಲದಿರಬಹುದು, ಆದರೆ ನಾವು ಚೌಕಾಶಿಗಿಳಿಯುವುದಿಲ್ಲ’’ ಎಂದು ಹೇಳಿದರು. ಕಾಂಗ್ರೆಸ್ ಎಂದಿಗೂ ಧರ್ಮದ ಹೆಸರಿನಲ್ಲಿ ಮತಗಳನ್ನು ಕೇಳಿಲ್ಲ, ಪಕ್ಷವು ಮಂದಿರ-ಮಸೀದಿ ಹೆಸರಿನಲ್ಲಿ ಎಂದಿಗೂ ದ್ವೇಷವನ್ನು ಹರಡಲಿಲ್ಲ ಎಂದು ಅವರು ಪ್ರತಿಪಾದಿಸಿದರು. ಕಾಂಗ್ರೆಸ್ ಜನರನ್ನು ಒಗ್ಗೂಡಿಸುತ್ತದೆ, ಬಿಜೆಪಿ ವಿಭಜಿಸುತ್ತದೆ. ಕಾಂಗ್ರೆಸ್ ಧರ್ಮವನ್ನು ಕೇವಲ ನಂಬಿಕೆಯಾಗಿ ಉಳಿಸಿಕೊಂಡಿದೆ. ಆದರೆ ಕೆಲವರು ಧರ್ಮವನ್ನು ರಾಜಕೀಯವನ್ನಾಗಿ ಪರಿವರ್ತಿಸಿದ್ದಾರೆ. ಇಂದು ಬಿಜೆಪಿಯ ಬಳಿ ಅಧಿಕಾರವಿದೆ, ಆದರೆ ಅವರ ಬಳಿ ಸತ್ಯವಿಲ್ಲ. ಆದ್ದರಿಂದ ಕೆಲವೊಮ್ಮೆ ಮಾಹಿತಿಗಳನ್ನು ಮರೆಮಾಚಲಾಗುತ್ತದೆ,ಕೆಲವೊಮ್ಮೆ ಜನಗಣತಿಯನ್ನು ಸ್ಥಗಿತಗೊಳಿಸಲಾಗುತ್ತದೆ,ಕೆಲವೊಮ್ಮೆ ಸಂವಿಧಾನವನ್ನು ಬದಲಿಸುವ ಮತುಗಳನ್ನಾಡಲಾಗುತ್ತದೆ. ಇಂದು ಇತಿಹಾಸದ ಬಗ್ಗೆ ಭಾಷಣ ಬಿಗಿಯುತ್ತಿದ್ದವರ ಪೂರ್ವಜರು ಇತಿಹಾಸದಿಂದ ಪಲಾಯನ ಮಾಡುತ್ತಿದ್ದರು ಎಂದು ಖರ್ಗೆ ಹೇಳಿದರು. 2025 ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ ಅಧ್ಯಕ್ಷತೆಯ ಶತಾಬ್ದಿ, ಸಂವಿಧಾನ ಅಂಗೀಕಾರದ 75ನೇ ವರ್ಷ ಮತ್ತು ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯಾಗಿದೆ. 2026 ದಾಧಾಭಾಯಿ ನವರೋಜಿಯವರ 200ನೇ ವರ್ಷಾಚರಣೆ, ಸರೋಜಿನಿ ನಾಯ್ಡು ಅವರ ಕಾಂಗ್ರೆಸ್ ಅಧ್ಯಕ್ಷತೆಯ ಶತಾಬ್ದಿ ಮತ್ತು 1925ರಲ್ಲಿ ಕಾನ್ಪುರ ಕಾಂಗ್ರೆಸ್ ಅಧಿವೇಶನದಲ್ಲಿ ಮೊದಲ ಸಲ ಹಾಡಲಾಗಿದ್ದ ‘ಝಂಡಾ ಉಂಚಾ ರಹೇ ಹಮಾರಾ’ ಗೀತೆಯ ಶತಮಾನೋತ್ಸವವೂ ಆಗಿದೆ ಎಂದು ಹೇಳಿದರು. ಭಾರತದಂತೆಯೇ ಅನೇಕ ದೇಶಗಳು ಸ್ವಾತಂತ್ರ ಗಳಿಸಿದ್ದವು. ಆದರೆ ಅವುಗಳಲ್ಲಿ ಕೆಲವು ವಿಫಲಗೊಂಡಿವೆ, ಇನ್ನು ಕೆಲವು ಸರ್ವಾಧಿಕಾರಿ ಆಳ್ವಿಕೆಗೆ ಒಳಪಟ್ಟಿವೆ. ಭಾರತದಲ್ಲಿ ಮಾತ್ರ ಪ್ರಜಾಪ್ರಭುತ್ವವು ಜ್ವಲಂತವಾಗಿದೆ. ಕಾಂಗ್ರೆಸ್‌ ನ ಮಹಾನ್ ನಾಯಕರಿಂದಾಗಿ ಭಾರತವು ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವಾಗಿದೆ ಎಂದು ಖರ್ಗೆ ಹೇಳಿದರು.

ವಾರ್ತಾ ಭಾರತಿ 28 Dec 2025 9:59 pm

Mann Ki Baat: ದುಬೈನ ʼಕನ್ನಡ ಪಾಠ ಶಾಲೆʼಗೆ ಪ್ರಧಾನಿ ಮೋದಿ ಶ್ಲಾಘನೆ

ಹೊಸದಿಲ್ಲಿ: ʼಮನ್ ಕಿ ಬಾತ್ʼ ನಲ್ಲಿ ಪ್ರಧಾನಿ ಮೋದಿ ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಮಾತೃಭಾಷಾ ಪ್ರೇಮವನ್ನು ವಿಶೇಷವಾಗಿ ಶ್ಲಾಘಿಸಿದರು. ದುಬೈನಲ್ಲಿ ವಾಸವಾಗಿರುವ ಕನ್ನಡ ಕುಟುಂಬಗಳು ‘ನಮ್ಮ ಮಕ್ಕಳು ತಂತ್ರಜ್ಞಾನ ಜಗತ್ತಿನಲ್ಲಿ ಬೆಳೆಯುತ್ತಿದ್ದಾರೆ, ಆದರೆ ಅವರು ತಮ್ಮ ಭಾಷೆಯಿಂದ ದೂರವಾಗುತ್ತಿದ್ದಾರೆಯೇ ಎಂಬ ಮಹತ್ವದ ಪ್ರಶ್ನೆಯನ್ನು ತಮಗೆ ತಾವೇ ಕೇಳಿಕೊಂಡಿದ್ದವು. ಈ ಚಿಂತನೆಯಿಂದ ಹುಟ್ಟಿದ್ದೇ ‘ಕನ್ನಡ ಪಾಠಶಾಲೆ’. ಇಲ್ಲಿ ಮಕ್ಕಳಿಗೆ ಕನ್ನಡದಲ್ಲಿ ಓದಲು, ತಿಳಿದುಕೊಳ್ಳಲು, ಬರೆಯಲು ಮತ್ತು ಮಾತನಾಡಲು ಕಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಫಿಜಿಯಲ್ಲಿ ಭಾರತೀಯ ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಪ್ರಶಂಸನೀಯ ಕಾರ್ಯ ನಡೆಯುತ್ತಿದೆ. ಹೊಸ ಪೀಳಿಗೆಯನ್ನು ತಮ್ಮ ಮಾತೃಭಾಷೆ ತಮಿಳಿನೊಂದಿಗೆ ಸಂಪರ್ಕಿಸಲು ವಿವಿಧ ಮಟ್ಟಗಳಲ್ಲಿ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಕಳೆದ ತಿಂಗಳು ಫಿಜಿಯ ರಾಕಿರಾಕಿ ಪ್ರದೇಶದಲ್ಲಿಯ ಶಾಲೆಯೊಂದು ಮೊದಲ ಬಾರಿಗೆ ತಮಿಳು ದಿನವನ್ನು ಆಚರಿಸಿದೆ. ಇದು ಮಕ್ಕಳಿಗೆ ತಮ್ಮ ಹೆಮ್ಮೆಯನ್ನು ತಮ್ಮದೇ ಭಾಷೆಯಲ್ಲಿ ಬಹಿರಂಗವಾಗಿ ವ್ಯಕ್ತಪಡಿಸಲು ವೇದಿಕೆಯನ್ನು ಒದಗಿಸಿತ್ತು ಎಂದರು.

ವಾರ್ತಾ ಭಾರತಿ 28 Dec 2025 9:55 pm

Kogilu Eviction Row | ಕೇರಳ ಚುಣಾವಣೆಗಾಗಿ ರಾಜ್ಯದ ಹಿತಾಸಕ್ತಿ ಬಲಿ ಕೊಡುತ್ತಿರುವ ಕಾಂಗ್ರೆಸ್: ವಿಜಯೇಂದ್ರ

ಬೆಂಗಳೂರು: ಯಲಹಂಕ ವಲಯದ ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವುಗೊಳಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮವು ಅಂತಾರಾಜ್ಯ ಮಟ್ಟದಲ್ಲಿ ಚರ್ಚೆಯಾಗಿದೆ. ಈ ನಡೆಯನ್ನು ರಾಜ್ಯದ ಸಿಎಂ, ಡಿಸಿಎಂ ನಾಯಕರು ಸಮರ್ಥಿಸಿಕೊಂಡರು. ಅದರ ಬೆನ್ನಲ್ಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಈ ಮೂಲಕ ಕೇರಳ ಚುನಾವಣೆ ಪೂರ್ವದಲ್ಲಿ

ಒನ್ ಇ೦ಡಿಯ 28 Dec 2025 9:51 pm

ದೇವಾಡಿಗ ಸಮಾಜದ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಂಸದ ಬಿ.ವೈ.ರಾಘವೇಂದ್ರ

ಬೈಂದೂರು: ದೇವರಿಗೆ ತಲುಪುವ ಹಲವು ಯೋಜನೆಗಳು ದೇವರ ಸೇವೆ ಮಾಡುವ ದೇವಾಡಿಗ ಸಮಾಜಕ್ಕೆ ಸಿಗದಿದ್ದು ಮುಂದಿನ ದಿನಗಳಲ್ಲಿ ದೇವಾಡಿಗರ ಸಮಾಜ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡ ಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಉಪ್ಪುಂದ ಮಾತ್ರಶ್ರೀ ಸಭಾಭವನದಲ್ಲಿ ರವಿವಾರ ನಡೆದ ಉಪ್ಪುಂದ ದೇವಾಡಿಗರ ಸಂಘದ ದಶಮ ಸಂಭ್ರಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸಮ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ದೇವಾಡಿಗ ಸಮಾಜ ಬಾಂಧವರ ಭಾಂದವ್ಯ ಮರೆಯಲಾಗದು, ಸಮಾಜ ಅಭಿವೃದ್ಧಿಗೆ ಜೊತೆಯಾಗಿ ಇರುತ್ತೇನೆ ಎಂದು ತಿಳಿಸಿದರು. ವಿಶ್ವ ದೇವಾಡಿಗ ಮಹಾಮಂಡಲ ಅಧ್ಯಕ್ಷ ಧರ್ಮಪಾಲ ದೇವಾಡಿಗ ಮಾತನಾಡಿ, ಮುಂದಿನ ದಿನಗಳಲ್ಲಿ ದೇವಾಡಿಗರ ಅಭಿವೃದ್ಧಿಗೆ ನಿಗಮ ಮಂಡಳಿ ರಚನೆ ಆಗಬೇಕು. ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಬಾರ್ಕೂರು ಶ್ರೀಏಕನಾಥೇಶ್ವರಿ ದೇವಸ್ಥಾನದ ವಿಶ್ವಸ್ಥ ಅಣ್ಣಯ್ಯ ಶೇರಿಗಾರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಟ್ಟಡದ ನಿಧಿ ಬಿಡುಗಡೆಗೊಳಿಸಲಾಯಿತು. ಬೈಂದೂರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ್ ಶೆಟ್ಟಿ, ಬಾರ್ಕೂರು ಶ್ರೀಏಕನಾಥೇಶ್ವರಿ ದೇವಸ್ಥಾನದ ವಿಶ್ವಸ್ಥ ಎಚ್. ಮೋಹನದಾಸ್, ಮಂಗಳೂರು ಎಸ್.ಡಿ.ಎಂ. ಕಾಲೇಜು ನಿರ್ದೇಶಕ ಕಂಕನಾಡಿ ಡಾ.ದೇವರಾಜ್ ದೇವಾಡಿಗ, ಬೆಂಗಳೂರು ದೇವಾಡಿಗ ಸಂಘದ ಅಧ್ಯಕ್ಷ ರಮೇಶ ದೇವಾಡಿಗ ವಂಡ್ಸೆ, ಮಂಗಳೂರು ಕೆ.ಆರ್.ಡಿ.ಎಸ್., ಉಪಾಧ್ಯಕ್ಷ ಎಂ.ಎಚ್.ಕರುಣಾಕರ ದೇವಾಡಿಗ, ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಆಲೂರು ರಘುರಾಮ ದೇವಾಡಿಗ, ಏಕನಾಥೇಶ್ವರಿ ದೇವಸ್ಥಾನದ ಕಾರ್ಯದರ್ಶಿ ಗಣೇಶ್ ದೇವಾಡಿಗ, ಮುಧೋಳ ಬಾಬು ದೇವಾಡಿಗ, ಉದ್ಯಮಿಗಳಾದ ನಾಗರಾಜ್ ಡಿ.ಪಡುಕೋಣೆ, ಹರೀಶ್ ದೇವಾಡಿಗ ಹಾಡಿಮನೆ, ಸಂಘದ ಗೌರವಾಧ್ಯಕ್ಷ ಬಿ.ಎ.ಮಂಜು ದೇವಾಡಿಗ, ಯು.ಎ. ಮಂಜು ದೇವಾಡಿಗ, ಇಂಜಿನಿಯರ್ ಮಂಜುನಾಥ ದೇವಾಡಿಗ, ಪ್ರಮೀಳಾ ದೇವಾಡಿಗ, ಕೃಷ್ಣ ದೇವಾಡಿಗ ಬೈಂದೂರು, ಸುಶೀಲಾ ದೇವಾಡಿಗ, ಗೌರಿ ದೇವಾಡಿಗ, ಪ್ರಿಯದರ್ಶಿನಿ ದೇವಾಡಿಗ, ಜಗದೀಶ ದೇವಾಡಿಗ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ರವೀಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಗೌರವಾಧ್ಯಕ್ಷ ಜನಾರ್ದನ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ರಾಮಕೃಷ್ಣ ದೇವಾಡಿಗ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ದೇವಾಡಿಗ ಮತ್ತು ಶ್ರೀಲತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸುಧಾಕರ ದೇವಾಡಿಗ ವಂದಿಸಿದರು.

ವಾರ್ತಾ ಭಾರತಿ 28 Dec 2025 9:50 pm

Mann Ki Baat: 2025ರ ಕೊನೆಯ ಸಂಚಿಕೆಯಲ್ಲಿ ಯುವಜನರ ಮೇಲೆ ಗಮನ ಕೇಂದ್ರೀಕರಿಸಿದ ಮೋದಿ; ವಾಯುಮಾಲಿನ್ಯದ ಮಾತೇ ಇಲ್ಲ!

ಹೊಸದಿಲ್ಲಿ,ಡಿ.28: ತಂತ್ರಜ್ಞಾನ ಚಾಲಿತ ಜಗತ್ತಿನಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಭಾರತದ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಒತ್ತಿ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ರವಿವಾರ 2025ನೇ ಸಾಲಿನ ‘ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ವಿದಾಯ ಹೇಳಿದರು. 129ನೇ ಸಂಚಿಕೆಯಲ್ಲಿ ಪ್ರಸಕ್ತ ವರ್ಷದ ಪ್ರಮುಖ ಬೆಳವಣಿಗೆಗಳನ್ನು ಪ್ರತಿಬಿಂಬಿಸಿದ ಅವರು ನವೀನತೆ, ಸಂಸ್ಕೃತಿ ಮತ್ತು ಸಾರ್ವಜನಿಕ ಆರೋಗ್ಯ ಇವು ಹೊಸವರ್ಷದಲ್ಲಿ ಗಮನ ಸೆಳೆಯುವ ಕ್ಷೇತ್ರಗಳಾಗಲಿವೆ ಎಂದರು. ತ್ವರಿತ ತಾಂತ್ರಿಕ ಬದಲಾವಣೆಯ ನಡುವೆ ಮಾನವೀಯ ವೌಲ್ಯಗಳನ್ನು ಕಳೆದುಕೊಳ್ಳುವುದರ ವಿರುದ್ಧ ಎಚ್ಚರಿಕೆ ನೀಡಿದ ಪ್ರಧಾನಿ, ‘ಇಂದಿನ ಜೀವನವು ತಂತ್ರಜ್ಞಾನ ಆಧಾರಿತವಾಗುತ್ತಿದೆ ಮತ್ತು ಶತಮಾನಗಳಲ್ಲಿ ಸಂಭವಿಸುತ್ತಿದ್ದ ಬದಲಾವಣೆಗಳು ಕೆಲವೇ ವರ್ಷಗಳಲ್ಲಿ ಸಂಭವಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಕೆಲವೊಮ್ಮೆ, ರೋಬಾಟ್‌ ಗಳು ಮನುಷ್ಯರ ಸ್ಥಾನವನ್ನು ಆಕ್ರಮಿಸಲಿವೆಯೇ ಎಂದು ಕೆಲವರು ಕಳವಳ ವ್ಯಕ್ತಪಡಿಸುತ್ತಿದ್ದಾರೆ ’ ಎಂದರು. ಸಾಂಸ್ಕೃತಿಕ ಬೇರುಗಳೊಂದಿಗೆ ಸಂಬಂಧವನ್ನು ಕಾಯ್ದುಕೊಳ್ಳುವುದು ಮಾನವ ಅಭಿವೃದ್ಧಿಗೆ ಅಗತ್ಯವಾಗಿದೆ ಎಂದು ಹೇಳಿದರು. ಭಾರತದ ಯುವ ಜನಸಂಖ್ಯೆ ದೇಶದ ಅತಿದೊಡ್ಡ ಭರವಸೆಯ ಮೂಲವಾಗಿದೆ ಎಂದು ಹೇಳಿದ ಅವರು,ರಾಷ್ಟ್ರೀಯ ಯುವದಿನ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜ.12ರಂದು ವಿಕಸಿತ ಭಾರತ ಯುವ ನಾಯಕರ ಸಂವಾದದ ಎರಡನೇ ಆವೃತ್ತಿಯನ್ನು ನಡೆಸಲಾಗುವುದು ಎಂದು ಪ್ರಕಟಿಸಿದರು. ಸಾರ್ವಜನಿಕ ಆರೋಗ್ಯಕುರಿತಂತೆ, ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳಂತಹ (ಯುಟಿಐ) ರೋಗಗಳ ವಿರುದ್ಧ ಆ್ಯಂಟಿಬಯಾಟಿಕ್‌ ಗಳ ಪರಿಣಾಮಕಾರಿತ್ವ ಕಡಿಮೆಯಾಗುತ್ತಿದೆ ಎಂದು ಎಚ್ಚರಿಕೆಯನ್ನು ನೀಡಿರುವ ಐಸಿಎಂಆರ್ ವರದಿಗಳನ್ನು ಬೆಟ್ಟು ಮಾಡಿದ ಮೋದಿ,ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯಾಟಿಕ್‌ ಗಳನ್ನು ಬಳಸದಂತೆ ಜನರನ್ನು ಆಗ್ರಹಿಸಿದರು. ಆ್ಯಂಟಿಬಯಾಟಿಕ್‌ ಗಳ ವಿವೇಚನಾರಹಿತ ಬಳಕೆಯು ಅವುಗಳ ಪರಿಣಾಮಕಾರಿತ್ವವನ್ನು ದುರ್ಬಲಗೊಳಿಸುತ್ತದೆ ಎಂದು ಕಿವಿಮಾತನ್ನು ಹೇಳಿದರು. ಆದಾಗ್ಯೂ, ಅವರು ತನ್ನ 30 ನಿಮಿಷಗಳಿಗೂ ಹೆಚ್ಚು ಕಾಲದ ಭಾಷಣದಲ್ಲಿ ರಾಷ್ಟ್ರ ರಾಜಧಾನಿಯನ್ನು ಕಾಡುತ್ತಿರುವ ತೀವ್ರ ವಾಯುಮಾಲಿನ್ಯವನ್ನು ಉಲ್ಲೇಖಿಸುವ ಗೋಜಿಗೆ ಹೋಗಲಿಲ್ಲ. ‘ಮನ್ ಕಿ ಬಾತ್’ ಪ್ರಸಾರ ಆರಂಭಗೊಳ್ಳುತ್ತಿದ್ದಂತೆ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಇತ್ತೀಚಿನ ಭಾರತ ಭೇಟಿ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ಗೆಲುವಿನ ಚಿತ್ರಗಳು ಸೇರಿದಂತೆ 2025ರ ಪ್ರಮುಖ ದೃಶ್ಯಾವಳಿಗಳು ಪರದೆಯ ಮೇಲೆ ಕಾಣಿಸಿಕೊಳ್ಳತೊಡಗಿದ್ದವು. ಮೋದಿ 2025ನ್ನು ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರೀಯ ವಿಶ್ವಾಸವನ್ನು ಬಲಗೊಳಿಸಿದ ವರ್ಷ ಎಂದು ಬಣ್ಣಿಸಿದರು. ರಾಷ್ಟ್ರೀಯ ಭದ್ರತೆ ಕುರಿತಂತೆ ಮೋದಿ, ಈ ವರ್ಷ ‘ಆಪರೇಷನ್ ಸಿಂಧೂರ ’ ಪ್ರತಿಯೊಬ್ಬ ಭಾರತೀಯನ ಹೆಮ್ಮೆಯ ಸಂಕೇತವಾಯಿತು. ಇಂದಿನ ಭಾರತವು ತನ್ನ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ ಎನ್ನುವುದನ್ನು ಜಗತ್ತು ಸ್ಪಷ್ಟವಾಗಿ ನೋಡಿದೆ ಎಂದು ಹೇಳಿದರು. ಇತ್ತೀಚಿನ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿಸ್ತೃತ ಚರ್ಚೆಗಳಿಗೆ ನಾಂದಿ ಹಾಡಿದ್ದ ‘ವಂದೇ ಮಾತರಂ’ ಗೀತೆ 150 ವರ್ಷಗಳನ್ನು ಪೂರೈಸಿದ್ದನ್ನೂ ಅವರು ಉಲ್ಲೇಖಿಸಿದರು. ಈ ವರ್ಷವು ಮಹಾಕುಂಭದೊಂದಿಗೆ ಆರಂಭಗೊಂಡು ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣದೊಂದಿಗೆ ಸಂಪನ್ನಗೊಂಡಿದ್ದನ್ನು ಮೆಲುಕು ಹಾಕಿದ ಪ್ರಧಾನಿ, ಇವೆರಡೂ ನಂಬಿಕೆ, ಸಂಸ್ಕೃತಿ ಮತ್ತು ರಾಷ್ಟ್ರೀಯ ಅನನ್ಯತೆಯನ್ನು ಒಟ್ಟುಗೂಡಿಸಿದ ಕ್ಷಣಗಳಾಗಿದ್ದವು ಎಂದು ಬಣ್ಣಿಸಿದರು. ‘ಇದು 2025ರಲ್ಲಿ ಮನ್ ಕಿ ಬಾತ್‌ ನ ಕೊನೆಯ ಸಂಚಿಕೆ. 2026ರಲ್ಲಿ ನಾವು ಮತ್ತೆ ಭೇಟಿಯಾಗುತ್ತೇವೆ. ಹೊಸ ಸಂಚಿಕೆಗಳು,ಹೊಸ ವಿಷಯಗಳೊಂದಿಗೆ ನಾವು ಇದೇ ಉತ್ಸಾಹ,ಶಕ್ತಿ ಮತ್ತು ಒಗ್ಗಟ್ಟಿನ ಭಾವನೆಯೊಂದಿಗೆ ಮರಳುತ್ತೇವೆ’ ಎಂದು ಪ್ರಸಾರದ ಅಂತ್ಯದಲ್ಲಿ ಹೇಳಿದ ಮೋದಿ, ಚಳಿಗಾಲದಲ್ಲಿ ಆರೋಗ್ಯವನ್ನು ಕಾಯ್ದುಕೊಳ್ಳುವಂತೆ ಜನರನ್ನು ಆಗ್ರಹಿಸಿದರು. 

ವಾರ್ತಾ ಭಾರತಿ 28 Dec 2025 9:50 pm

ಜ.18ರಂದು 114 ಜೋಡಿಗಳ ಸಾಮೂಹಿಕ‌ ವಿವಾಹ: ಮಾನ್ವಿಯಲ್ಲಿ ಪೂರ್ವ ಸಿದ್ಧತೆ ಸಭೆ

ಮಾನ್ವಿ: ಜನವರಿ 18 ರಂದು ಸಮಾಜ ಸೇವಕ, ಗುತ್ತೇದಾರ ಸೈಯದ್ ಅಕ್ಬರ್ ಪಾಶ ಹುಸೇನಿ ಅವರಿಂದ ನಡೆಯಲಿರುವ 114 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ನಿಮಿತ್ತ ಇಂದು ಪೂರ್ವಭಾವಿ ಸಭೆ ಮಾನ್ವಿ ನಗರದ ಕುಬಾ ಮಸೀದಿಯಲ್ಲಿ ನಡೆಯಿತು. ಸಭರಯಲ್ಲಿ ಸುಮಾರು 114 ವಧು, ವರ ಮತ್ತು ಅವರ ಕುಟುಂಬದ ಮುಖ್ಯಸ್ಥರು ಭಾಗವಹಿಸಿದ್ದರು. ವಧು ವರರಿಗೆ ಮದುವೆಯ ದಿನ ಧರಿಸಬಹುದಾದ ಹೊಸ ಬಟ್ಟೆಗಳನ್ನು ಮತ್ತು ಐಡಿ ಕಾರ್ಡ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ  ಮಾತನಾಡಿದ ಅಕ್ಬರ್ ಪಾಶ ಅವರು, ಮದುವೆ ಹೆಸರಲ್ಲಿ ಆಗುವ ಅನಗತ್ಯ ಖರ್ಚುಗಳನ್ನು ತಡೆಯುವುದು ಮತ್ತು ಸಾಮೂಹಿಕ ವಿವಾಹದ ಮೂಲಕ ಬಡವರ ಮದುವೆ ಹೊರೆಯನ್ನು ನೀಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂತಹ ಸಮಾಜಮುಖಿ ಕೆಲಸ ಮಾಡಲು ಯೋಚಿಸಿದಾಗ ಸಮಾಜದ ಮುಖಂಡರ ಹಾಗೂ ವಧು ವರರಿಂದ ಇಷ್ಟು ದೊಡ್ಡಮಟ್ಟದ ಬೆಂಬಲ ಸಿಗುತ್ತೆ ಎಂದು ಕೊಂಡಿರಲಿಲ್ಲ. 101 ಮದುವೆ ಮಾಡಬೇಕು ಎಂದು ಕೊಂಡಿದ್ದೆವು, ಇದೀಗ 118 ಜೋಡಿಗಳು ನೋಂದಣಿ ಮಾಡಿಕೊಂಡಿದ್ದನ್ನು ಕಂಡರೆ ಜನರಿಗೆ ಇಂತಹ ಕಾರ್ಯಕ್ರಮದ ತೀರಾ ಅವಶ್ಯಕತೆ ಇತ್ತು ಎಂದೆನಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯಲ್ಲಿ ವಿವಿಧ ಧಾರ್ಮಿಕ ಗುರುಗಳು ಮತ್ತು ಮುಖಂಡರುಗಳು ವಿವಾಹದ ಮಹತ್ವ ಮತ್ತು ಸುಖಕರ ದಾಂಪತ್ಯದ ಜವಾಬ್ದಾರಿಗಳು ಮತ್ತು ದಂಪತಿಗಳ ಹಕ್ಕುಗಳ ಕುರಿತು ಮಾರ್ಗದರ್ಶನ ನೀಡಿದರು. ಜನವರಿ 18 ರಂದು ನಡೆಯುವ ಸಾಮೂಹಿಕ ವಿವಾಹ ಅಚ್ಚುಕ್ಕಟ್ಟಾಗಿ ನಿರ್ವಹಿಸಿ ಎಲ್ಲಾ ಜೋಡಿಗಳಿಗೂ ಶುಭ ಹಾರೈಸೋಣ ಎಂದರು. ಸಭೆಯಲ್ಲಿ ಮುಫ್ತಿ ಜೀಶಾನ್ ಸಾಬ್, ಸೈಯದಗ ಸಜ್ಜಾದೆ ನಶೀನ್ ಹುಸೇನಿ, ಶೇಕ್ ಫರೀದ್ ಉಮ್ರಿ, ಸೈಯ್ಯದ್ ಖಾಲಿದ್ ಖಾದ್ರಿ, ಎಂ ಎ ಎಚ್ ಮುಖೀಮ್, ಆಮಿರ್ ಸುಹೇಲ್ ಸಿದ್ದಿಖಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಬಾಗಯ್ಯ ನಾಯಕ, ಅಬ್ದುಲ್ ರೆಹ್ಮಾನ್ ಸಾಬ್, ಎಲ್ಲಾ ತಾಲೂಕುಗಳ ಖಾಜಿಗಳು, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 9:42 pm

ಭಾರತ-ಚೀನಾ ಗಡಿಯಲ್ಲಿ ನಾರಿ ಶಕ್ತಿ: ಕಾವಲಿಗೆ ITBP ಮಹಿಳಾ ಯೋಧರು ಸಜ್ಜು

ಹೊಸದಿಲ್ಲಿ,ಡಿ.28: ಭಾರತದ ಮಹಿಳಾ ಭದ್ರತಾ ಸಿಬ್ಬಂದಿ ಭಾರತ-ಚೀನಾ ಗಡಿಯಲ್ಲಿ ಮುಂಚೂಣಿಯ ಪಾತ್ರವನ್ನು ನಿರ್ವಹಿಸಲು ಸಜ್ಜಾಗಿದ್ದು,ಇಂಡೋ-ಟಿಬೆಟನ್ ಗಡಿ ಪೋಲಿಸ್ (ITBP ) ವಾಸ್ತವಿಕ ನಿಯಂತ್ರಣ ರೇಖೆಯ (LOC) ಬಳಿ 32 ಗಡಿ ಪೋಸ್ಟ್‌ ಗಳಲ್ಲಿ ವಿಶೇಷ ಮಹಿಳಾ ಬ್ಯಾರಕ್‌ ಗಳನ್ನು ನಿರ್ಮಿಸಲು ಯೋಜಿಸುತ್ತಿದೆ. ಇದು ಲಡಾಖ್, ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ, ಸಿಕ್ಕಿಂ ಮತ್ತು ಉತ್ತರಾಖಂಡದ ಮುಂಚೂಣಿ ಸ್ಥಳಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲು ಅವಕಾಶವನ್ನು ಒದಗಿಸುತ್ತದೆ. ITBP ಚೀನಾದೊಂದಿಗಿನ ಭಾರತದ ಗಡಿಯ ರಕ್ಷಣೆಯ ಹೊಣೆಗಾರಿಕೆಯನ್ನು ಹೊಂದಿರುವ ಸಶಸ್ತ್ರ ಪೋಲಿಸ್ ಪಡೆಯಾಗಿದೆ. ಸುದ್ದಿಸಂಸ್ಥೆಗೆ ಲಭ್ಯವಾಗಿರುವ ಅಧಿಕೃತ ದಾಖಲೆಗಳ ಪ್ರಕಾರ, ITBP ಇದೇ ಮೊದಲ ಬಾರಿಗೆ 32 ಬಾರ್ಡರ್ ಔಟ್-ಪೋಸ್ಟ್‌ ಗಳಲ್ಲಿ ಮಹಿಳಾ ಬ್ಯಾರಕ್‌ ಗಳನ್ನು ನಿರ್ಮಿಸಲಿದೆ. ಪ್ರತಿಯೊಂದು ಬ್ಯಾರಕ್ ಡಾರ್ಮಿಟರಿಗಳು ಹಾಗೂ ಇಬ್ಬರು ಮತ್ತು ಮೂವರು ಹಂಚಿಕೊಳ್ಳಬಹುದಾದ ರೂಮ್‌ಗಳನ್ನು ಹೊಂದಿರಲಿದ್ದು,ಸುಮಾರು 30 ಮಹಿಳಾ ಸಿಬ್ಬಂದಿಗಳಿಗೆ ವಸತಿ ಸೌಲಭ್ಯವನ್ನು ಒದಗಿಸಲಿವೆ. ಅಧಿಕಾರಿಗಳಿಗೆ ಪ್ರತ್ಯೇಕ ವಸತಿಗಳನ್ನು ಒದಗಿಸಲಾಗುವುದು. ಬ್ಯಾರಕ್‌ ಗಳು ಸಂಪೂರ್ಣ ಸುಸಜ್ಜಿತ ಅಡಿಗೆ ಮನೆ ಮತ್ತು ಆಧುನಿಕ ಶೌಚಾಲಯ ಸೌಲಭ್ಯಗಳೊಂದಿಗೆ ಕೇಂದ್ರ ಭೋಜನ ಸ್ಥಳವನ್ನು ಒಳಗೊಂಡಿರುತ್ತವೆ. ಬ್ಯಾರಕ್‌ ಗಳ ವಿನ್ಯಾಸವು ಎಲ್‌ಎಸಿಯಲ್ಲಿನ ಕಠಿಣ ಹವಾಮಾನ ಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಗರಿಷ್ಠ ಸೌರ ಶಾಖ ಬಳಕೆ ಮತ್ತು ಬಲವಾದ ಗಾಳಿಯ ವಿರುದ್ಧ ರಕ್ಷಣೆಯನ್ನು ಕೇಂದ್ರೀಕರಿಸಿದೆ. ಪ್ರಸ್ತುತ ITBP ಸುಮಾರು 4,000 ಮಹಿಳಾ ಸಿಬ್ಬಂದಿಗಳನ್ನು ಹೊಂದಿದ್ದು,ಈ ವಿತ್ತವರ್ಷದಲ್ಲಿ ಇನ್ನೂ 1,375 ಮಹಿಳಾ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಯೋಜಿಸಿದೆ.

ವಾರ್ತಾ ಭಾರತಿ 28 Dec 2025 9:38 pm

ಬ್ರೆಟ್ ಲೀಗೆ ವಿಕೆಟ್ ಪಡೆಯುವುದಕ್ಕಿಂತಲೂ 160 ಕಿಮೀ ವೇಗದ ಬೌಲಿಂಗೇ ಮುಖ್ಯವಾಗಿತ್ತಂತೆ! ಯಾಕೆ ಗೊತ್ತಾ?

Brett Lee On His Bowling Speed- ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹಾಲ್ ಆಫ್ ಫೇಮ್‌ಗೆ ಸೇರಿಸಲಾಗಿದೆ. ತನಗೆ ವಿಕೆಟ್ ಗಳಿಸುವುದಕ್ಕಿಂತಲೂ 160 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವುದೇ ಬಾಲ್ಯದಿಂದಲೂ ತನ್ನ ಏಕೈಕ ಗುರಿಯಾಗಿತ್ತು ಎಂದು ಅವರು ಹೇಳಿದ್ದಾರೆ. ವೈಯಕ್ತಿಕ ದಾಖಲೆಗಳಿಗಿಂತ ಈ ವೇಗ ತಲುಪುವುದೇ ಮುಖ್ಯವಾಗಿತ್ತು. 2003ರ ವಿಶ್ವಕಪ್ ಗೆಲುವು ಮತ್ತು ಸತತ 16 ಟೆಸ್ಟ್ ಪಂದ್ಯಗಳ ಗೆಲುವು ತಮ್ಮ ಜೀವನದ ಅವಿಸ್ಮರಣೀಯ ಕ್ಷಣಗಳು ಎಂದು ಅವರು ನೆನಪಿಸಿಕೊಂಡಿದ್ದಾರೆ.

ವಿಜಯ ಕರ್ನಾಟಕ 28 Dec 2025 9:37 pm

ಜ. 2 ರಿಂದ 90 ದಿನಗಳ ಮಧ್ಯಸ್ಥಿಕೆ ಅಭಿಯಾನ : ನ್ಯಾ. ಪ್ರಕಾಶ್ ಅರ್ಜುನ್ ಬನಸೋಡೆ

ಬೀದರ್ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಸಂಯುಕ್ತಾಶ್ರಯದಲ್ಲಿ ಬೀದರ್ ಜಿಲ್ಲಾದ್ಯಂತ ಜ.2 ರಿಂದ 90 ದಿನ ಮಧ್ಯಸ್ಥಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಅರ್ಜುನ್ ಬನಸೋಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಅಭಿಯಾನವು ಆರಂಭವಾಗಲಿದ್ದು, ಅದರಲ್ಲಿ ಬಾಕಿ ಇರುವ ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಲಯದ ಪ್ರಕರಣಗಳು ಮೋಟಾರ್ ಅಪಘಾತ, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಭೂ ಸ್ವಾಧಿನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ, ನ್ಯಾಯಾಲಯಗಳಿಂದ ಪ್ರಕರಣಗಳನ್ನು ವರ್ಗಾಯಿಸಿಕೊಂಡು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ್ ಅಥವಾ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಿ 90 ದಿನಗಳ ಮಧ್ಯಸ್ಥಿಕೆ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.

ವಾರ್ತಾ ಭಾರತಿ 28 Dec 2025 9:29 pm

ಕಲಬುರಗಿ: ಸಾಹಿತ್ಯ ಕ್ಷೇತ್ರದ ಸಾಧಕರಿಗೆ ರಾಷ್ಟ್ರಕವಿ ಕುವೆಂಪು ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಜೈಕನ್ನಡಿಗರ ರಕ್ಷಣಾ ವೇದಿಕೆಯ ವತಿಯಿಂದ 121ನೇ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನ ಆಚರಣೆ ಹಾಗೂ ರಾಷ್ಟ್ರಕವಿ ಕುವೆಂಪುರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನಡೆಯಿತು. ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಡಾ. ಸಂಗೀತಾ ಎಮ್. ಹಿರೇಮಠ, ಮಂಗಳಾ ವಿ. ಕಪರೆ, ಅನಿತಾ ಬಡಿಗೇರ, ಅಂಬುಜಾ ಎಮ್.ಡಿ, ಎ.ಕೆ.ರಾಮೇಶ್ವರ, ಎಸ್.ಎಲ್. ಪಾಟೀಲ, ಅಮೃತ ಡಿ. ದೊಡ್ಡಮನಿ, ಪರೋಷೋತ್ತಮ ಕುಲಕರ್ಣಿ ಅವರುಗಳಿಗೆ ರಾಷ್ಟ್ರಕವಿ ಕುವೆಂಪುರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಜೈ ಸುರೇಶ ಮಾಲಿಕ್, ಹಜರತ್ ಬಾಬುಶಾ ಸಾಹೇಬ್ ದಾದಾಪೀರ್ ಗೋಟುರ್, ಪೂಜ್ಯ ಗುರುರಾಜೇಂದ್ರ ಶಿವಯೋಗಿಗಳು ವಹಿಸಿದ್ದರು. ರಾಜ್ಯಾಧ್ಯಕ್ಷರಾದ ಸಚಿನ್ ಫರಹತಾಬಾದ, ಸಹಾರ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಎಂ.ಡಿ. ಸಿದ್ದಿಕ್, ಸುರೇಶ ಬಡಿಗೇರ, ದಕ್ಷಿಣ ಕಾಂಗ್ರೆಸ್ ಮುಖಂಡ ನೀಲಕಂಠರಾವ ಮುಲಗೆ, ಕಾಂಗ್ರೆಸ್ ಮುಖಂಡ ರಾಜೀವ ಜಾನೆ, ಧೂಳಪ್ಪ ದೊಡ್ಡಮನಿ, ಪಂಚ ಗ್ಯಾರೆಂಟಿಯ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಕಟ್ಟಿಮನಿ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೆಕ್ ಬಾಲಾಜಿ, ಮುಖಂಡ ಗೀರಿಶ ಬೋರೆ, ಮಾಜಿ ತಾಲೂಕಾ ಪಂಚಾಯತಿ ಸದಸ್ಯ ಜೈಭೀಮ್ ಹುಡುಗಿ, ರಾಜಕುಮಾರ್ ಆರ್., ಡಾ. ಅಣ್ಣಪ್ಪಾ ಎಸ್.ಜಿ., ನ್ಯಾಯವಾದಿ ಶ್ರೀನಿವಾಸ ವಿಶ್ವಕರ್ಮ, ಸುರೇಶ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ, ಶಿವಕುಮಾರ ಯಾದವ, ಪಿಂಟು ಜಮಾದಾರ, ಹುಲಿಕಂಠ, ಮಲ್ಲು, ದರ್ಶನ, ಶ್ರೀಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 9:24 pm

Kerala | ಪರಿಶಿಷ್ಟ ಜಾತಿಯ ಮಹಿಳೆಯನ್ನು ಮಲಪ್ಪುರಂ ZP ಉಪಾಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದ ಮುಸ್ಲಿಂ ಲೀಗ್

ಮಲಪ್ಪುರಂ: ಮಲಪ್ಪುರಂ ಜಿಲ್ಲಾ ಪಂಚಾಯತಿಗೆ ಪರಿಶಿಷ್ಟ ಜಾತಿಯ ಮಹಿಳೆಯನ್ನು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜಕೀಯ ಅಚ್ಚರಿಗೆ ಕಾರಣವಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಎ.ಪಿ.ಸ್ಮಿಜಿ ಮಲಪ್ಪುರಂ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಅವರು ಮಲಪ್ಪುರಂ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಎ.ಪಿ. ಉನ್ನಿಕೃಷ್ಣನ್ ಅವರ ಪುತ್ರಿಯಾಗಿದ್ದಾರೆ. ವೃತ್ತಿಯಲ್ಲಿ ವಕೀಲೆಯಾಗಿರುವ ಸ್ಮಿಜಿ ಅವರ ಹೆಸರನ್ನು ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷ ಸ್ಥಾನಕ್ಕೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ರಾಜ್ಯಾಧ್ಯಕ್ಷ ಸೈಯದ್ ಸಾದಿಕಾಲಿ ಶಿಹಾಬ್ ತಂಙಳ್ ಪ್ರಕಟಿಸಿದರು. ಮಲಪ್ಪುರಂ ಜಿಲ್ಲಾ ಪಂಚಾಯತಿಯ ತನಲೂರ್ ವಿಭಾಗದಿಂದ ಸ್ಮಿಜಿ ಅವರು 6,852 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು. ಮತ್ತೊಂದೆಡೆ ಎಲ್ಲ 35 ವಿಭಾಗಗಳಲ್ಲಿ ಗೆಲುವು ಸಾಧಿಸುವ ಮೂಲಕ, ಅವಿರೋಧವಾಗಿ ಮಲಪ್ಪುರಂ ಜಿಲ್ಲಾ ಪಂಚಾಯತಿಯ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯುಡಿಎಫ್ ವತಿಯಿಂದ ಪಿ.ಎ.ಜಬ್ಬಾರ್ ಹಾಜಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ವಾರ್ತಾ ಭಾರತಿ 28 Dec 2025 9:22 pm

ಬೆಂಗಳೂರಿನಲ್ಲಿದೆ ಮೂರು ಡ್ರಗ್ಸ್‌ ಫ್ಯಾಕ್ಟರಿ; ಮಹಾರಾಷ್ಟ್ರ ಪೊಲೀಸರಿಂದ 55.88 ಕೋಟಿ ರೂ. ಬೆಲೆಯ MDMA ಜಪ್ತಿ

ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿದ್ದಾರೆ. 55.88 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ರಾಜಸ್ತಾನ ಮೂಲದ ಕಿಂಗ್‌ಪಿನ್‌ಗಳು ಇಲ್ಲಿ ಕಾರ್ಖಾನೆ ನಡೆಸುತ್ತಿದ್ದರು. ಈ ವಿಚಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಗೃಹ ಸಚಿವರು ಮಹಾರಾಷ್ಟ್ರ ಪೊಲೀಸರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಬೆಂಗಳೂರು ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯ ಕರ್ನಾಟಕ 28 Dec 2025 9:18 pm

ಕಳವಳಕಾರಿ ಹಂತಕ್ಕೆ ತಲುಪಿದ ದಿಲ್ಲಿ ವಾಯು ಮಾಲಿನ್ಯ: ಅಕುಮ್ಸ್ ಫಾರ್ಮಾ ಹಣಕಾಸು ಮುಖ್ಯಸ್ಥರಿಂದ ರಾಜೀನಾಮೆ

ಹೊಸದಿಲ್ಲಿ: ದಿಲ್ಲಿಯಲ್ಲಿನ ವಾಯು ಮಾಲಿನ್ಯ ಕಳವಳಕಾರಿ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ನನ್ನ ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ ಎಂದು ಅಕುಮ್ಸ್ ಡ್ರಗ್ಸ್ ಆ್ಯಂ ಡ್ ಫಾರ್ಮಾಸ್ಯೂಟಿಕಲ್ಸ್ ಲಿಮಿಟೆಡ್ ನ ಹಣಕಾಸು ವಿಭಾಗದ ಮುಖ್ಯಸ್ಥ ರಾಜ್ ಕುಮಾರ್ ಬಾಫ್ನಾ ಹೇಳಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಸಿಬ್ಬಂದಿ ಹುದ್ದೆಗೆ ಡಿಸೆಂಬರ್ 31, 2025ರಿಂದ ಅನ್ವಯವಾಗುವಂತೆ ರಾಜ್ ಕುಮಾರ್ ಬಾಫ್ನಾ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತನ್ನ ಶಾಸನಾತ್ಮಕ ಫೈಲಿಂಗ್ ನಲ್ಲಿ ಅಕುಮ್ಸ್ ಡ್ರಗ್ಸ್ ಆ್ಯಂಡ್ ಫಾರ್ಮಾಸ್ಯೂಟಿಕಲ್ಸ್ ಲಿಮಿಟೆಡ್ ತಿಳಿಸಿದೆ. ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಲಾಗಿದ್ದು, ಅದೇ ದಿನ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದೂ ಸಂಸ್ಥೆ ಹೇಳಿದೆ. ಇದಕ್ಕೂ ಮುನ್ನ, ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಸುಮೀತ್ ಸೂದ್ ಅವರನ್ನುದ್ದೇಶಿಸಿ ಬರೆದಿರುವ ಪತ್ರದಲ್ಲಿ, “ದಿಲ್ಲಿಯಲ್ಲಿ ವಾಯು ಮಾಲಿನ್ಯದ ಮಟ್ಟದ ಕಾರಣಕ್ಕೆ ನನ್ನನ್ನು ಆದಷ್ಟು ಶೀಘ್ರವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು. ಈ ಪ್ರಕ್ರಿಯೆಯಲ್ಲಿ ನನಗೇನಾದರೂ ನೆರವು ದೊರೆಯಬಹುದೇ ಎಂಬುದನ್ನು ದಯವಿಟ್ಟು ತಿಳಿಸಿ” ಎಂದು ರಾಜ್ ಕುಮಾರ್ ಬಾಫ್ನಾ ಮನವಿ ಮಾಡಿದ್ದಾರೆ. ಈ ಪತ್ರಕ್ಕೆ ಪ್ರತಿಯಾಗಿ ರಾಜ್ ಕುಮಾರ್ ಬಾಫ್ನಾರ ರಾಜೀನಾಮೆ ಪತ್ರವನ್ನು ಅನುಮೋದಿಸಿರುವ ಸುಮೀತ್ ಸೂದ್, “ಸಂಸ್ಥೆಯು ಡಿಸೆಂಬರ್ 31, 2025ರಂದು ರಾಜ್ ಕುಮಾರ್ ಬಾಫ್ನಾರನ್ನು ಔಪಚಾರಿಕವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಲಿದೆ. ನಮಗೆ ನಿಮ್ಮ ನಿರ್ಧಾರದ ಬಗ್ಗೆ ವಿಷಾದವಿದ್ದರೂ, ನಿಮ್ಮ ಆರೋಗ್ಯ ಸಮಸ್ಯೆಯ ಕಾರಣಕ್ಕೆ ನಾವು ನಿಮ್ಮ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ. ಈ ನಡುವೆ, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿನ ವಾಯು ಗುಣಮಟ್ಟ ಮತ್ತಷ್ಟು ವಿಷಮಿಸಿದ್ದು, ಅತಿಯಾದ ಚಳಿ ಹಾಗೂ ಉಸಿರುಗಟ್ಟಿಸುವ ವಾತಾವರಣದಿಂದ ದಿಲ್ಲಿ ನಿವಾಸಿಗಳು ತೀವ್ರ ಸಮಸ್ಯೆಗೊಳಗಾಗಿದ್ದಾರೆ.

ವಾರ್ತಾ ಭಾರತಿ 28 Dec 2025 9:18 pm

ವೈಜ್ಞಾನಿಕ ಜಾಗೃತಿಯ ನಡುವೆಯೂ ಮೂಢನಂಬಿಕೆ ಉಳಿದಿರುವುದು ಚಿಂತಾಜನಕ: ಕಾಶಿನಾಥ ಗುತ್ತೇದಾರ ಕಳವಳ

ಚಿತ್ತಾಪುರ: ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ನಿರಂತರ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ, ಜನರಲ್ಲಿ ಬೇರೂರಿರುವ ಮೂಢನಂಬಿಕೆಗಳು ಇನ್ನೂ ಹೋಗದಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಅಧ್ಯಕ್ಷ ಕಾಶಿನಾಥ ಗುತ್ತೇದಾರ ಹೇಳಿದರು. ಪಟ್ಟಣದ ಬಜಾಜ್ ಕಲ್ಯಾಣ ಮಂಟಪದ ಸಭಾಭವನದಲ್ಲಿ ನಡೆದ ಪರಿಷತ್ತಿನ ನೂತನ ಪದಾಧಿಕಾರಿಗಳಿಗೆ ಗೌರವ ಸಮಾರಂಭ ಹಾಗೂ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪವಾಡ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಅವರು ರಾಜ್ಯದಾದ್ಯಂತ ಜನಮನದಲ್ಲಿ ಸ್ಥಾನ ಪಡೆದಿದ್ದು, ಸಂಘಟನೆ ಕಟ್ಟುವ ಮೊದಲು ಜನರಲ್ಲಿ ವೈಜ್ಞಾನಿಕ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ. ಇಂತಹ ಪ್ರಯತ್ನಗಳು ಸಮಾಜದಲ್ಲಿ ತಾರ್ಕಿಕ ಚಿಂತನೆ ಬೆಳೆಸಲು ಸಹಕಾರಿಯಾಗಿವೆ ಎಂದರು. ಚಿತ್ತಾಪುರದಲ್ಲಿ ಕಳೆದ ಮೂರು ವರ್ಷಗಳಿಂದ ಪರಿಷತ್ತಿನ ವತಿಯಿಂದ ಬಸವ ಪಂಚಮಿ ಆಚರಣೆಯನ್ನು ವಿಭಿನ್ನ ರೀತಿಯಲ್ಲಿ ನಡೆಸಲಾಗುತ್ತಿದ್ದು, ಹಾಲನ್ನು ಪೋಲು ಮಾಡದೆ ಬಡ ಮಕ್ಕಳಿಗೆ ಹಂಚುವ ಮೂಲಕ ಮೌಢ್ಯ ಮುಕ್ತ ಸಮಾಜ-ನಮ್ಮ ನಡೆ ವಿಜ್ಞಾನದ ಕಡೆ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ತಲುಪಿಸಲಾಗಿದೆ. ಮೌಢ್ಯ ವಿರೋಧಿ ಅಭಿಯಾನ, ಸಾರ್ವಜನಿಕ ಉಪನ್ಯಾಸಗಳು ಹಾಗೂ ಚರ್ಚಾ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನಗಳು ನಡೆದರೂ, ಮೂಢನಂಬಿಕೆಗಳು ಇನ್ನೂ ಸಮಾಜದಲ್ಲಿ ಗಟ್ಟಿಯಾಗಿ ಬೇರೂರಿರುವುದು ಚಿಂತನೆಗೆ ಕಾರಣವಾಗಿದೆ ಎಂದು ಹೇಳಿದರು. ಪರಿಷತ್ತಿನ ನೂತನ ಕಾರ್ಯಕಾರಿಣಿಯಲ್ಲಿ ವೈದ್ಯರು, ಶಿಕ್ಷಕರು ಹಾಗೂ ವಿವಿಧ ಸಮುದಾಯಗಳ ಪ್ರಗತಿಪರರು ಸೇರಿರುವುದು ಶ್ಲಾಘನೀಯವಾಗಿದ್ದು, ಇಂತಹ ವೈವಿಧ್ಯಮಯ ತಂಡದಿಂದ ವೈಜ್ಞಾನಿಕ ಚಿಂತನೆ ಸಮಾಜದ ಎಲ್ಲ ವರ್ಗಗಳಿಗೆ ತಲುಪುವ ವಿಶ್ವಾಸವಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಭೆಯ ಅಧ್ಯಕ್ಷತೆ ವಹಿಸಿ ಶಾಂತಕುಮಾರ ಮಳಖೇಡ ಮಾತನಾಡಿ, ಜನರಲ್ಲಿ ವೈಜ್ಞಾನಿಕತೆಯ ಅರಿವು ಮೂಡಿಸುವುದು ನಮ್ಮ ಕರ್ತವ್ಯವಾಗಿದೆ. ಮೂಢನಂಬಿಕೆ ಕಂಡಾಗ ಖಂಡಿಸುವ ಮನೋಭಾವ ಬೆಳೆಸಬೇಕಿದೆ. ಪರಿಷತ್ತಿನ ವತಿಯಿಂದ ಇನ್ನಷ್ಟು ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಸೋಮಶೇಖರ ಕಲಶೆಟ್ಟಿ, ಮೊಹೀನ ಸಾತನೂರ್, ಡೇವಿಡ್ ಸ್ಯಾಮುಯೆಲ್, ಚಂದ್ರಶೇಖರ ಶೇರಿ ಸೇರಿದಂತೆ ಇತರ ಪದಾಧಿಕಾರಿಗಳು ಮಾತನಾಡಿದರು. ಸಭೆಯಲ್ಲಿ ಡಾ. ಸಂತೋಷಕುಮಾರ ಯಲ್ಲೇರಿ, ಸಾಬಣ್ಣ ಕಲಬುರ್ಗಿ, ಶ್ರೀದೇವಿ ಬೆಣ್ಣಿ, ಸುಜಾತಾ ದಂಡೋತಿ, ರವಿಶಂಕರ ಬುರ್ಲಿ, ಸುರೇಶ ಬೆನಕನಹಳ್ಳಿ, ಜಗನ್ನಾಥ ಮುಡಬೂಳಕರ, ಉಮಾಕಾಂತ ಸೇರಿದಂತೆ ಹಲವರು ಇದ್ದರು. ವಿರೂಪಾಕ್ಷರುದ್ರ ಬೆಣ್ಣಿ ನಿರೂಪಿಸಿದರು. ಅನಂತನಾಗ ದೇಶಪಾಂಡೆ ಸ್ವಾಗತಿಸಿದರು. ಜಗದೇವ ಕುಂಬಾರ ವಂದಿಸಿದರು.

ವಾರ್ತಾ ಭಾರತಿ 28 Dec 2025 9:13 pm

ಕಲಬುರಗಿ: ಹಿರಿಯ ಸಾಹಿತಿ ಡಾ.ಲಕ್ಷ್ಮಣ ಕೌಂಟೆ ರಚಿತದ ʼನೀಲ ಗಂಗಾʼ ಪುಸ್ತಕ ಅವಲೋಕನ

ಕಲಬುರಗಿ: ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ಹಿರಿಯ ಸಾಹಿತಿ ಡಾ.ಲಕ್ಷ್ಮಣ ಕೌಂಟೆ ರಚಿಸಿದ ನೀಲಗಂಗಾ ಎಂಬ ಕಾದಂಬರಿ ಪುಸ್ತಕದ ಪರಿಚಯ ಕಾರ್ಯಕ್ರಮ ಶನಿವಾರ ಇಲ್ಲಿನ ಸಂಘದ ಕಚೇರಿಯಲ್ಲಿ ನಡೆಯಿತು. ನಗರದ ನೂತನ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ.ಮಲ್ಲಿನಾಥ ತಳವಾರ ಅವರು ಪುಸ್ತಕದ ಅವಲೋಕನ ಮಾಡುತ್ತ' 12ನೇ ಶತಮಾನದ ಶರಣರ ಜೀವನ ಆಧಾರಿತ ಕುರಿತು ಅನೇಕರು ಕಾದಂಬರಿಗಳು ರಚಿಸಿದ್ದಾರೆ, ಆದರೆ ಡಾ.ಲಕ್ಷ್ಮಣ ಕೌಂಟೆಯವರ ನೀಲಗಂಗಾ ಕಾದಂಬರಿಯು 12ನೇ ಶತಮಾನ ಮತ್ತು 21ನೇ ಶತಮಾನದ ವಿಚಾರ ಮತ್ತು ಆಚಾರಗಳು ಮುಖಾಮುಖಿಯಾಗಿವೆ. ಅಂದಿನ ಮಡಿವಂತಿಕೆ ಮತ್ತು ಮೌಢ್ಯದ ಕುರಿತು ಶರಣರ ಧೋರಣೆ ಇಂದಿಗೂ ಉಳಿದುಕೊಂಡಿವೆ. ನೀಲಾಂಬಿಕೆ ಗಂಗಾಂಬಿಕೆಯರ ಗೆಳತನ ಮತ್ತು ತ್ಯಾಗವು ಪ್ರಸ್ತುತವಾಗಿವೆ ಮತ್ತು ಆದರ್ಶವಾಗಿವೆ ಎಂದು ಹೇಳಿದರು.ಅವರು ಮುಂದುವರಿದು ಈ ಕೃತಿಯು ಮೌಲಿಕವಾಗಿದೆ,ಭಾಷೆ,ವಸ್ತು ಮತ್ತು ಶೈಲಿ ಕಾದಂಬರಿ ಹೆಣೆಯುವ ತಂತ್ರ ಚೆನ್ನಾಗಿ ಬಳಸಿಕೊಂಡಿದ್ದಾರೆ' ಎಂದರು. ಕೃತಿಯ ಲೇಖಕರಾದ ಡಾ.ಲಕ್ಷ್ಮಣ ಕೌಂಟೆಯವರು ಪುಸ್ತಕದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು. ಡಾ.ಗವಿಸಿದ್ದಪ್ಪ ಪಾಟೀಲ್ ಈ ಕಾದಂಬರಿ ಕುರಿತು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಅಪ್ಪಾರಾವ ಅಕ್ಕೋಣಿಯವರು ಅಧ್ಯಕ್ಷೀಯ ಮಾತನಾಡಿದರು. ವೇದಿಕೆ ಮೇಲೆ ಡಾ.ಸ್ವಾಮಿರಾವ ಕುಲಕರ್ಣಿ ಉಪಸ್ಥಿತರಿದ್ದರು. ಪ್ರೊ.ಶೋಭದೇವಿ ಚೆಕ್ಕಿ ಪ್ರಾರ್ಥನೆ ಗೀತೆ ಹಾಡಿದರು, ಡಾ.ವಿಜಯಕುಮಾರ ಪರುತೆಯವರು ಕಾರ್ಯಕ್ರಮದ ಸಂಚಾಲನೆ ಮಾಡಿದರು. ಬಿ.ಎಚ್.ನಿರಗುಡಿ, ವಿಜಯಕುಮಾರ ರೋಣದ್, ವೀರಭದ್ರಪ್ಪ ಗುರಮಿಠಕಲ್, ಸಿದ್ಧರಾಮ ಸರಸಂಬಿ, ಎಸ್.ವಿ.ಹತ್ತಿ,ಡಾ.ಜಯದೇವಿ ಗಾಯಕವಾಡ್, ಡಾ.ಚಿ.ಸಿ.ನಿಂಗಣ್ಣ,ಎಸ್.ಎಸ್.ಪಾಟೀಲ್, ಡಾ.ರಾಜಕುಮಾರ ಮಾಳಗೆ, ಡಾ.ಚಿದಾನಂದ ಕುಡ್ಡನ್, ಪ್ರೊ.ಲಿಂಗಪ್ಪ ಗೋನಾಲ ಮತ್ತು ಡಾ.ಸಿದ್ಧರಾಮಯ್ಯ ಮಠ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 9:02 pm

ಸಕಲೇಶಪುರ - ಸುಬ್ರಹ್ಮಣ್ಯ 55 KM ರೈಲ್ವೆ ಮಾರ್ಗದ ವಿದ್ಯುದೀಕರಣ ಯಶಸ್ವಿ; ಮಂಗಳೂರು ಬೆಂಗಳೂರು ವಂದೇ ಭಾರತ್ ರೈಲು ಶೀಘ್ರ!

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದೆ. ಭಾನುವಾರ ವಿದ್ಯುತ್ ಲೋಕೊಮೋಟಿವ್‌ನ ಯಶಸ್ವಿ ಪ್ರಯೋಗಾತ್ಮಕ ಚಾಲನೆಯು ವಂದೇ ಭಾರತ್ ರೈಲು ಸಂಚಾರಕ್ಕೆ ಅನುಕೂಲ ಕಲ್ಪಿಸಿದೆ. ಈ ತಾಂತ್ರಿಕವಾಗಿ ಸವಾಲಿನ ವಿಭಾಗದಲ್ಲಿ 57 ಸುರಂಗಗಳು ಮತ್ತು 258 ಸೇತುವೆಗಳಿದ್ದು, ₹93.55 ಕೋಟಿ ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡಿದೆ.

ವಿಜಯ ಕರ್ನಾಟಕ 28 Dec 2025 8:43 pm

ಶಿಕ್ಷಣವನ್ನು ಕೆಲವರ ಸ್ವತ್ತಾಗಿಸಲು ಸರ್ಕಾರ ಹುನ್ನಾರ ನಡೆಸಿದೆ: ತುಳಜಾರಾಮ

ಕಲಬುರಗಿ: ಈಶ್ವರಚಂದ್ರ ವಿದ್ಯಾಸಾಗರ್, ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯಂತಹವರ ಆಶಯವಾದ ಸಾರ್ವಜನಿಕ ಶಿಕ್ಷಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೆಪಿಎಸ್ - ಮ್ಯಾಗ್ನೆಟ್ ಯೋಜನೆಯ ಹೆಸರಲ್ಲಿ ವ್ಯಾಪಾರಕ್ಕಿಟ್ಟಿದೆ ಎಂದು ಎಐಡಿಎಸ್ಒ ಸಂಘಟನೆಯ ಜಿಲ್ಲಾ ಅಧ್ಯಕ್ಷ ತುಳಜಾರಾಮ ಅಭಿಪ್ರಾಯ ವ್ಯಕ್ತಪಡಿಸಿದರು. ಶಹಾಬಾದ್ ನ ಎಐಡಿಎಸ್ಒ ಕಚೇರಿಯಲ್ಲಿ ಸಂಘಟನೆಯ 72ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಪಿಎಸ್ - ಮ್ಯಾಗ್ನೆಟ್ ಯೋಜನೆಯ ಮೂಲಕ ದುಡಿಯುವ ವರ್ಗದ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರದಿಂದ ಶಿಕ್ಷಣವನ್ನು ಖಾಸಗಿಯವರ ಮಡಿಲಿಗೆ ಹಾಕಲಾಗುತ್ತಿದೆ. ರಾಜ್ಯದಲ್ಲಿ 40,000 ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮೂಲಕ ಶಾಶ್ವತವಾಗಿ ಬಡ ಮಕ್ಕಳಿಗಿರುವ ಜ್ಞಾನದ ಬಾಗಿಲನ್ನು ಮುಚ್ಚಿ, ಶಿಕ್ಷಣದಿಂದ ಸಂಪೂರ್ಣವಾಗಿ ವಂಚಿತರನ್ನಾಗಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು. ಕ್ರಾಂತಿಕಾರಿಗಳ ಹೋರಾಟ, ಸಂಘರ್ಷಗಳ ಫಲವಾಗಿ ದೊರೆತ ಈ ಶಿಕ್ಷಣದ ಹಕ್ಕನ್ನು ಕಸಿದು, ಕೇವಲ ಕೆಲವೇ ಜನರ ಸ್ವತ್ತಾಗಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ. ಯಾವುದೇ ಕಾರಣಕ್ಕೂ ಸರಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಎಂದು ಕೆಪಿಎಸ್ - ಮ್ಯಾಗ್ನೆಟ್ ಯೋಜನೆಯನ್ನು ಧಿಕ್ಕರಿಸುವಂತಾಗಿದೆ. ರಾಜ್ಯದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಾರ್ವಜನಿಕ ಶಿಕ್ಷಣವನ್ನು ಉಳಿಸಲು ಮುಂಬರಬೇಕು ಎಂದು ಕೆರೆ ನೀಡಿದರು. ಸಂಘಟನೆಯ ಜಿಲ್ಲಾ ಖಜಾಂಚಿ ಸ್ಪೂರ್ತಿ ಗುರುಜಲಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾಬು ಪವರ್ , ದೇವರಾಜ , ಅಜಯ್ ಗುರುಜಲಕರ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಸೃಷ್ಟಿ , ಬೃಂದಾ , ಬಿಂದು ಮತ್ತು ವಿದ್ಯಾರ್ಥಿಗಳಾದ ಅಂಬಿಕಾ, ಪ್ರಜ್ವಲ್, ಪ್ರಶಾಂತ್ , ಭೀಮಾಶಂಕರ ಸೇರಿದಂತೆ ಹಲವರು ಇದ್ದರು.  

ವಾರ್ತಾ ಭಾರತಿ 28 Dec 2025 8:42 pm

ಕಲಬುರಗಿ: ಹೊಸ ವರ್ಷದ ಪ್ರಯುಕ್ತ ಮುಂಬೈ– ಹೈದರಾಬಾದ್ ನಡುವೆ ವಿಶೇಷ ರೈಲು ಸಂಚಾರ

ಕಲಬುರಗಿ: ಹೊಸ ವರ್ಷದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆಯು ಡಿ. 28 ಮತ್ತು 29 ರಂದು ಮುಂಬೈ ಮತ್ತು ಹೈದರಾಬಾದ್ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ಮಧ್ಯ ರೈಲ್ವೆ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಟಿಟಿ ಮುಂಬೈ–ಹೈದರಾಬಾದ್: ರೈಲು ಸಂಖ್ಯೆ 07458 ಹೈದರಾಬಾದ್–ಎಲ್ಟಿಟಿ ಮುಂಬೈ ಡಿ. 28 ರಂದು ಭಾನುವಾರ ಸಂಜೆ 5.30ಕ್ಕೆ ಹೈದರಾಬಾದ್ನಿಂದ ಹೊರಟು, ಮರುದಿನ ಬೆಳಗ್ಗೆ 10.40 ಗಂಟೆಗೆ ಎಲ್ಟಿಟಿ ಮುಂಬೈ ತಲುಪಲಿದೆ. ಎಲ್ಟಿಟಿ 07459 ಮುಂಬೈ–ಹೈದರಾಬಾದ್ ವಿಶೇಷ ರೈಲು ಸೋಮವಾರ 29 ರಂದು ಮಧ್ಯಾಹ್ನ 3.20 ಗಂಟೆಗೆ ಎಲ್ಟಿಟಿ ಮುಂಬೈಯಿಂದ ಹೊರಟು, ಮರುದಿನ ಬೆಳಗ್ಗೆ 9.00 ಗಂಟೆಗೆ ಹೈದರಾಬಾದ್ ತಲುಪಲಿದ್ದು, ಬೇಗಂಪೇಟೆ, ಲಿಂಗಂಪಳ್ಳಿ, ವಿಕಾರಾಬಾದ್, ತಂಡೂರು, ವಾಡಿ, ಕಲಬುರಗಿ, ಸೋಲಾಪುರ, ಕಲ್ಯಾಣ ಹಾಗೂ ಪುಣೆ ನಿಲ್ದಾಣಗಳಿಗೆ ತಲುಪಲಿದೆ ಎಂದು ತಿಳಿಸಲಾಗಿದೆ. ಟಿಕೆಟ್ ಬುಕ್ಕಿಂಗ್: ಹೊಸ ವರ್ಷದ ಪ್ರಯುಕ್ತ ವಿಶೇಷ ಶುಲ್ಕದೊಂದಿಗೆ ಈ ವಿಶೇಷ ರೈಲುಗಳ ಟಿಕೆಟ್ಗಳನ್ನು ಎಲ್ಲಾ ಕಂಪ್ಯೂಟರೈಸ್ಡ್ ಕಾಯ್ದಿರಿಕೆ ಕೇಂದ್ರಗಳು ಹಾಗೂ www.irctc.co.in ವೆಬ್ಸೈಟ್ ನಲ್ಲಿ ಪಡೆಯಬಹುದು. (Unreserved) ಕೋಚ್ಗಳ ಟಿಕೆಟ್ಗಳನ್ನು ರೈಲ್ವೆ ನಿಲ್ದಾಣದ ಬುಕ್ಕಿಂಗ್ ಕೌಂಟರ್ ಗಳು ಮತ್ತು UTS ಆಪ್ ಮೂಲಕ ಪಡೆಯಬಹುದಾಗಿದ್ದು, ಪ್ರಯಾಣಿಕರು ಟಿಕೆಟ್ಗಳೊಂದಿಗೆ ಪ್ರಯಾಣಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.

ವಾರ್ತಾ ಭಾರತಿ 28 Dec 2025 8:32 pm

ಉಡುಪಿ ಎಸ್ಪಿ ಕಚೇರಿಯಲ್ಲಿ ದಲಿತರ ಕುಂದುಕೊರತೆ ಸಭೆ : ಡಿಸಿ ವರ್ಗಾವಣೆ ನಿರ್ಣಯಕ್ಕೆ ದಲಿತ ಮುಖಂಡರಿಂದ ಆಗ್ರಹ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ದಲಿತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದಲಿತ ದೌರ್ಜನ್ಯ ನಡೆದ ಸ್ಥಳಕ್ಕೆ ಭೇಟಿ ಕೊಡುತ್ತಿಲ್ಲ. ಹಾಗಾಗಿ ಅವರ ವರ್ಗಾವಣೆಗೆ ನಿರ್ಣಯ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಛೇರಿಯಲ್ಲಿ ಶನಿವಾರ ಕರೆಯಲಾದ ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಆಗ್ರಹ ಕೇಳಿಬಂತು. ದಲಿತರ ಮನೆ ಬಿದ್ದು ಸೂರಿಲ್ಲದೆ ಹೆಬ್ರಿ ಅಂಬೇಡ್ಕರ್ ಭವನದಲ್ಲಿ ಕಳೆದ ಹಲವು ತಿಂಗಳುಗಳಿಂದ ಬದುಕು ಸಾಗಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಈವರೆಗೆ ಬಡ ದಲಿತ ಕುಟುಂಬವನ್ನು ಭೇಟಿ ಮಾಡಿ, ಪುರ್ನವಸತಿ ಕಲ್ಪಿಸಿಲ್ಲ. ಸಾಕಷ್ಟು ಭೂಮಿ ಸಮಸ್ಯೆಗಳಿದ್ದರೂ ಪರಿಹರಿಸುತ್ತಿಲ್ಲ. ಜಿಲ್ಲಾಡಳಿತ ದಲಿತರ ಪಾಲಿಗೆ ಸಂಪೂರ್ಣ ನಿಷ್ಕ್ರೀಯವಾಗಿದೆಂದು ದಲಿತ ಮುಖಂಡರು ಆರೋಪಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಕೂಡ ಯಾವುದೇ ಸಮಸ್ಯೆಗಳಿಗೆ ಸ್ಪಂಧಿಸುತ್ತಿಲ್ಲ. ಜಿಲ್ಲಾ ಸಹಕಾರ ಸಂಘದ ಅಧಿಕಾರಿ ತಮ್ಮನ್ನು ಭೇಟಿಯಾಗುವವರು ಸಂಜೆ 3.30 ರಿಂದ 5.30ರ ಒಳಗೆ ಭೇಟಿಯಾಗಬೇಕೆಂದು ನಾಮಫಲಕವನ್ನೇ ಹಾಕಿ ಬಿಟ್ಟಿದ್ದಾರೆ ಎಂದು ಮುಖಂಡರು ದೂರಿದರು. ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ತನಿಖಾಧಿಕಾರಿ ತೀರಾ ನಿರ್ಲಕ್ಷ ವಹಿಸಿ ಬಿ ರಿಪೋರ್ಟ್ ಹಾಕುತ್ತಿದ್ದಾರೆ. ಕೊರಗ ಸಮೂದಾಯದವರು ತಮಗಾದ ಅನ್ಯಾಯಕ್ಕೆ ಹತ್ತು ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದರೂ ಅವರ ಸಮಸ್ಯೆ ಬಗೆಹರಿಸುವತ್ತ ಆಸಕ್ತಿ ತೋರಿಸುತ್ತಿಲ್ಲ ಎಂದು ದಲಿತ ಮುಖಂಡರು ಆರೋಪಿಸಿದರು. ದಲಿತರ ಮೇಲಿನ ದೌರ್ಜನ್ಯಕ್ಕಾಗಿ ಆರಂಭಿಸಲಾದ ವಿಶೇಷ ಪೊಲೀಸ್ ಠಾಣೆಯು ಸರಿಯಾಗಿ ಕಾರ್ಯಾಚರಿಸುತ್ತಿಲ್ಲ ಮತ್ತು ಅಲ್ಲಿ ಅವಶ್ಯಕ ಸಿಬ್ಬಂದಿಗಳ ನೇಮಕ ಇನ್ನೂ ಮಾಡಿಲ್ಲ. ಈ ಎಲ್ಲ ಕಾರಣಗಳಿಂದ ಜಿಲ್ಲಾಧಿಕಾರಿಯವರ ವರ್ಗಾವಣೆಗೆ ಈ ಸಭೆಯಲ್ಲಿ ನಿರ್ಣಯ ಕೈಗೊಂಡು ಸರಕಾರಕ್ಕೆ ಕಳುಹಿಸಬೇಕೆಂದು ದಲಿತ ಮುಖಂಡರು ಆಗ್ರಹಿಸಿದರು. ಸಭೆಯಲ್ಲಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು, ದಲಿತ ಮುಖಂಡರಾದ ಉದಯ ಕುಮಾರ್ ತಲ್ಲೂರು, ಜಯನ್ ಮಲ್ಪೆ, ವಿಶ್ವನಾಥ್ ಪೇತ್ರಿ, ಸಂಜೀವ ಬಳ್ಕೂರು, ರಮೇಶ್ ಕೋಟ್ಯಾನ್, ಶ್ಯಾಮ ಸುಂದರ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಚಂದ್ರ ಆಲ್ತಾರು, ಮಂಜುನಾಥ ಬಾಳ್ಕುದ್ರು, ಸುರೇಶ ಬಾರ್ಕೂರು, ವಡ್ಡರ್ಸೆ ಶ್ರೀನಿವಾಸ್ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 8:26 pm

ಕಾರ್ಕಳ| ಶಗುನ್ ಎಸ್ ವರ್ಮಗೆ ಜೈನ ಸಮುದಾಯದಿಂದ ಸನ್ಮಾನ

ಕಾರ್ಕಳ : ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್ ಶಿಪ್ 15ರ ಭಾರತ ತಂಡದಲ್ಲಿ ಸ್ಥಾನ ಪಡೆದ ಕರ್ನಾಟಕದ ಏಕೈಕ ಆಟಗಾರ್ತಿ ಶಗುನ್ ಎಸ್ ವರ್ಮ ಹೆಗ್ಡೆಯವರನ್ನು ಕಾರ್ಕಳ ಜೈನ ಮಠದ ಪರವಾಗಿ ಆಡಳಿತ ಸಮಿತಿಯು ಸನ್ಮಾನಿಸಿ ಗೌರವಿಸಿತು.  ಜೈನ ಸಮಾಜದ ಹಿರಿಯರು ಹಾಗೂ ರಾಜ್ಯ ಸಹಕಾರಿ ಮಾರುಕಟ್ಟೆ ಸಮಿತಿ ಮತ್ತು ಎಸ್. ಸಿ. ಡಿ. ಸಿ. ಸಿ. ಬ್ಯಾಂಕಿನ ಅಧ್ಯಕ್ಷರಾಗಿರುವ ಕಾರ್ಕಳದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಲಲಿತಕೀರ್ತಿ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮದಲ್ಲಿ ಆಶೀರ್ವಚಿಸಿದ ಲಲಿತಕೀರ್ತಿ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಯುವ ಪ್ರತಿಭೆಗಳನ್ನು ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಂದ ಅವರನ್ನು ಮತ್ತಷ್ಟು ಉತ್ತೇಜಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.   ಹಿರಿಯರಾದ ಅನಂತರಾಜ್ ಪೂವನಿ, ಮೋಹನ್ ಪಡಿವಾಳ್, ಅಂಡರ್ ಮಹಾವೀರ ಹೆಗ್ಡೆ, ಮಹಾವೀರ ಹೆಗ್ಡೆ, ಎನ್. ಪ್ರಭಾತ್, ಧನಕೀರ್ತಿ ಕಡಂಬ, ಹಿರಿಯ ನ್ಯಾಯವಾದಿ ಸನತ್ ಕುಮಾರ್ ಜೈನ್, ಅಶೋಕ್ ಎಚ್ ಎಮ್, ವಿನಯ ಅರಿಗ ಮತ್ತಿತರರು ಉಪಸ್ಥಿತರಿದ್ದರು. ವರ್ಧಮಾನ್ ಶಾಲೆಯ ಸಂಚಾಲಕಿ ಶಶಿಕಲಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 28 Dec 2025 8:19 pm

ಕಾರಟಗಿ: 3ನೇ ಹಂತದ ಜಲಜಾಗೃತಿ - ಜನಜಾಗೃತಿ ಪಾದಯಾತ್ರೆ

ಕಲುಷಿತ ನೀರಿನಿಂದ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ: ರಾಜಶ್ರೀ ಚೌಧರಿ

ವಾರ್ತಾ ಭಾರತಿ 28 Dec 2025 8:18 pm

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ

ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ಶನಿವಾರ ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೆನರಾ ಬ್ಯಾಂಕ್ ಮಣಿಪಾಲ ಇದರ ಜನರಲ್ ಮ್ಯಾನೇಜರ್ ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿ ಕೆ. ರಾಮ ನಾಯ್ಕ್ ಅವರು, ಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾರ್ಜನೆಗೈದು ಸಮಾಜದಲ್ಲಿ ಮುನ್ನೆಲೆಗೆ ಬಂದರೆ ಅದೇ ನಿಜವಾದ ಕೊಡುಗೆ ಎಂದು ನುಡಿದರು. ತಾವು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ದಿನಗಳನ್ನು ನೆನಪಿಸಿಕೊಂಡು ಸಂಸ್ಥಾಪಕರನ್ನು ಅವರು ಸ್ಮರಿಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನತಾ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ಸಾಯ ಕೃಷ್ಣ ಭಟ್ ಹಾಗೂ ವಾರಣಾಶಿ ಸುಬ್ರಾಯ ಭಟ್ ಅವರು ದೂರದರ್ಶಿತ್ವ ಹೊಂದಿದ್ದರು. ಅವರಿಂದ ಸ್ಥಾಪನೆಯಾದ ಈ ವಿದ್ಯಾಸಂಸ್ಥೆ ಇಂದು ಖ್ಯಾತಿ ಪಡೆಯುತ್ತಿರುವುದು ಅಭಿಮಾನದ ವಿಷಯ ಎಂದು ಹೇಳಿದರು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣ್ಣಮೂರ್ತಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರು. ಜನತಾ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಅತಿಥಿಗಳನ್ನು ಪರಿಚಯಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರಾಮ ನಾಯ್ಕ್ ಕೆ ಅವರನ್ನು ಸನ್ಮಾನಿಸಲಾಯಿತು. ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ ಎಂ. ಸನ್ಮಾನ ಪತ್ರ ವಾಚಿಸಿದರು. ದತ್ತಿನಿಧಿಯ ವರದಿಯನ್ನು ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ವಾಚಿಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಆಡಳಿತ ಮಂಡಳಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್. ಎಸ್., ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ., ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರಾದ ದಿ. ವಾರಣಾಶಿ ಸುಬ್ರಾಯ ಭಟ್ ಹಾಗೂ ದಿ. ಸಾಯ ಕೃಷ್ಣ ಭಟ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ದತ್ತಿನಿಧಿ ಬಹುಮಾನಗಳು, ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಅಧ್ಯಾಪಕ ವೃಂದದ ಸುಗುಣ ರೈ, ಕುಸುಮಾವತಿ, ಅಪೂರ್ವ, ದಿವ್ಯ, ಮಂಜುಶ್ರೀ, ಗೀತಾಕುಮಾರಿ, ಸದಾನಂದ ರೈ ಅವರು ಬಹುಮಾನ ವಿಜೇತರ ವಿವರ ವಾಚಿಸಿದರು. ದಿ| ಪಾರ್ವತಿ ಅಮ್ಮ ಹಾಗೂ ಅವರ ಮಗ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿ| ನಾರಾಯಣ ಜೋಶಿ ಚವರ್ಕಾಡು ಅವರ ಸ್ಮರಣಾರ್ಥ ಅವರ ಪತ್ನಿ ಸರೋಜಾ ನಾರಾಯಣ ಜೋಶಿ ಅವರಿಂದ ಸಿಹಿತಿಂಡಿ ವಿತರಣೆ ನಡೆಯಿತು. ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸ್ಫೂರ್ತಿ ಗೀತೆ ಹಾಡಿದರು. ಜನತಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶೀನಪ್ಪ ನಾಯ್ಕ್ ಹಾಗೂ ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್. ವಂದಿಸಿದರು.

ವಾರ್ತಾ ಭಾರತಿ 28 Dec 2025 8:13 pm

ಕಲಾವಿದರ ಪ್ರತಿಭೆಗೆ ಹೆಚ್ಚು ಅವಕಾಶ ಲಭಿಸಲಿ: ಶಾಸಕ ವೇಣುಗೋಪಾಲ ನಾಯಕ

ಸುರಪುರ: ಈ ಭಾಗದ ಅನೇಕ ಜನ ಪ್ರತಿಭಾವಂತ ಕಲಾವಿದರಿಗೆ ಇನ್ನು ಹೆಚ್ಚು ಅವಕಾಶಗಳನ್ನ ಮುಂದಿನ ದಿನಗಳಲ್ಲಿ ನೀಡುವಲ್ಲಿ ಶ್ರಮಿಸುತ್ತೇನೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಕಲಾವಿದ ಹನುಮಂತ ಈರಗೊಟ ಅವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಜಾನಪದ ಕಲೆ, ಸಂಸ್ಕೃತಿ ಮೇಲೆ ಜನರಿಗೆ ಹೆಚ್ಚು ಆಸಕ್ತಿ ಬರುತ್ತಿದ್ದು ಇಂತಹ ಕಲೆ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ನಾನು ನಿರಂತರವಾಗಿ ಶ್ರಮಿಸುತ್ತೇನೆ. ನಮ್ಮ ಭಾಗದ ಮೂಲ ಕಲಾವಿದರಿಗೆ ಸರ್ಕಾರ ಮಟ್ಟದಲ್ಲಿ ಗುರುತಿಸಲು ಶ್ರಮ ವಹಿಸುತ್ತೇನೆ ಎಂದು ಶಾಸಕರು ಹೇಳಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚನ್ನಬಸಪ್ಪ ಮುಧೋಳ ಮಾತನಾಡಿ, ನರಸಿಂಗಪೇಟ್ ಪರಿಸರಕ್ಕೆ ಜಾನಪದದ ಹಿನ್ನೆಲೆ ಇದೆ. ಇಲ್ಲಿ ಮೊಹರಂ ಸಂಭ್ರಮ, ಭಜನಾ ಸಂಭ್ರಮ,ಜಾನಪದ ಹಾಡುಗಳ ದೊಡ್ಡ ಸುಗ್ಗಿಯೇ ನಡೆಯುತ್ತದೆ. ಇಂತ ಒಬ್ಬ ಮೂಲ ದೇಶೀ ಪ್ರತಿಭೆ ಕಲಾವಿದನನ್ನು ಅಕಾಡೆಮಿ ಗುರುತಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಮ್ಮ ಸುರಪುರ ತಾಲೂಕಿನ ಅನೇಕ ಕಲಾವಿದರಿಗೆ ಸರಕಾರದ ವಿವಿಧ ಅಕಾಡೆಮಿಗಳ ವಾರ್ಷಿಕ ಮತ್ತು ಗೌರವ ಪ್ರಶಸ್ತಿಗಳು ಲಭಿಸುತ್ತಿರುವುದು ತುಂಬಾ ಉತ್ತಮ ಬೆಳವಣಿಗೆ ಮುಂದಿನ ದಿನಗಳಲ್ಲಿ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿಶ್ವವಿದ್ಯಾಲಯದ ದತ್ತಿ ಗೌರವ ಪ್ರಶಸ್ತಿಗಳು ಕೂಡ ಈ ಭಾಗದ ಕಲಾವಿದರಿಗೆ ಲಭಿಸಲಿ. ಇಂತಹ ಮೂಲ ಕಲಾವಿದರನ್ನು ಪರಿಚಯಿಸುವ ಪುಸ್ತಕಗಳು ಅಕಾಡೆಮಿ ಮತ್ತು ಪ್ರಸಾರಂಗಗಳ ಮೂಲಕ ಎಂದು ಆಶಯ ವ್ಯಕ್ತಪಡಿಸಿದರು. ಕುಂಬಾರಪೇಟದ ಶರಣಯ್ಯ ಮುತ್ಯ ಸಾನಿದ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾನಪದ ಅಕಾಡೆಮಿ ಸದಸ್ಯ ಶಿವಮೂರ್ತಿ ತನಿಖೆದರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಭಾಚಿಮಟ್ಟಿ ನಗರಸಭ ಸದಸ್ಯ ಜುಮ್ಮಣ್ಣ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ಅಬ್ದುಲ ಗಫಾರಿ ನಗನೂರಿ, ರಂಗನಗೌಡ ದೇವಿಕೇರಿ,ಬೀರಲಿಂಗಪ್ಪ ಬಾದ್ಯಾಪೂರ, ಷಣ್ಮುಖಯ್ಯ ಸ್ವಾಮಿ,ಶರಣಪ್ಪ ಮುಧೋಳ, ದೇವಪ್ಪ ಮುಧೋಳ, ಸೂಗಪ್ಪ ಗೊಬ್ಬುರ, ಅಕ್ಷಯ ಶೆಠ, ಶರಣಪ್ಪ ಹಂಗರಗಿ, ಸೇರಿದಂತೆ ಇತರರಿದ್ದರು, ಇದೇ ಸಂದರ್ಭದಲ್ಲಿ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಹನುಮಂತ ಈರಗೊಟ ದಂಪತಿಗಳಿಗೆ ವಿಶೇಷವಾಗಿ ಸನ್ಮಾನಿಸಲಾಯಿತು, ಬಸವರಾಜ ತನಿಕೆದಾರ ಪ್ರಾರ್ಥಿಸಿದರು ಕಾರ್ಯಕ್ರಮವನ್ನು ಬಸವಣ್ಣಪ್ಪ ಹಂಗರಗಿ ನಿರೂಪಿಸಿ ವಂದಿಸಿದರು,

ವಾರ್ತಾ ಭಾರತಿ 28 Dec 2025 8:10 pm

Bengaluru | ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯ ಹಿಂಬಾಲಿಸಿ ಕಿರುಕುಳ; ಮೂವರ ಬಂಧನ

ಬೆಂಗಳೂರು : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಮೂವರನ್ನು ಇಲ್ಲಿನ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ 18 ವರ್ಷದ ಓರ್ವ ಗ್ಯಾರೇಜ್ ಕೆಲಸ ಮಾಡುತ್ತಿದ್ದು, 19 ವರ್ಷದ ಇತರ ಇಬ್ಬರು ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24ರಂದು ದ್ವಿಚಕ್ರ ವಾಹನದಲ್ಲಿ ಜಯನಗರ ಮೆಟ್ರೋ ನಿಲ್ದಾಣದಿಂದ ಬಿಟಿಎಂ ಲೇಔಟ್ ಕಡೆಗೆ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಆರೋಪಿಗಳು ಕಿರುಕುಳ ನೀಡಿದ್ದರು. ಘಟನೆಯ ವಿಡಿಯೋವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಫೋನ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಯುವತಿಯನ್ನು ಪತ್ತೆ ಹಚ್ಚಿ ಆಕೆಯ ದೂರಿನ ಆಧಾರದ ಮೇಲೆ ಎಸ್.ಜಿ.ಪಾಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‍ಎಸ್)ಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿತ್ತು. ಸದ್ಯ, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 28 Dec 2025 8:06 pm

MGNREGA ಯೋಜನೆ ಬದಲಾವಣೆ ವಿರೋಧಿಸಿ ರಾಜ್ಯದ ಪ್ರತಿ ಪಂಚಾಯಿತಿಯಿಂದಲೂ ಹೋರಾಟ ಆರಂಭ : ಡಿ.ಕೆ.ಶಿವಕುಮಾರ್

ಬೆಂಗಳೂರು : ಮ-ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಟ್ಟಿರುವುದು ಹಾಗೂ ಇತರೆ ಬದಲಾವಣೆ ಮಾಡಿರುವ ಕೇಂದ್ರ ಸರಕಾರದ ಕ್ರಮ ವಿರೋಧಿಸಿ ಜ.5ರಿಂದ ರಾಜ್ಯದ ಪ್ರತಿ ಪಂಚಾಯಿತಿಂದಲೂ ಬೃಹತ್ ಹೋರಾಟ ಆರಂಭಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರವಿವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಮ-ನರೇಗಾ ಹೆಸರು ಬದಲಾವಣೆ ವಿರೋಧಿಸಿ ಜ.5ರಿಂದ ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು. ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150ರಿಂದ200 ಇದ್ದು, ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು. ಇದರ ಉಸ್ತುವಾರಿಗೆ ಜಿ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವೀಕ್ಷಕರನ್ನು ನೇಮಿಸಲಾಗುತ್ತದೆ ಎಂದು ಅವರು ಹೇಳಿದರು. ಎರಡು ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ ಎಂದರು. ಅಂದು ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಎಐಸಿಸಿ ಅಧಿವೇಶನ ಹೇಗೆ ನಡೆಯಿತು ಎನ್ನುವ ಕುರಿತಾದ ಗಾಂಧಿ ಭಾರತ ಪುಸ್ತಕವನ್ನು ರೂಪಿಸಿದ್ದೇನೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಲಭ್ಯವಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಇದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ. ಜತೆಗೆ, ಇದರ ನೆನಪಿಗೆ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ. ಈಗಾಗಲೇ 70 ಕಾಂಗ್ರೆಸ್ ಕಚೇರಿಗಳು ನಿರ್ಮಾಣವಾಗಿವೆ. ಬೆಂಗಳೂರಿನಲ್ಲೂ ಎರಡು ಕಚೇರಿಗಳ ನಿರ್ಮಾಣ ಮಾಡಲಾಗುವುದು. ಒಂದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇನ್ನೊಂದು ಕಚೇರಿ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಒಂದು ಜಿಲ್ಲಾ ಕಚೇರಿ ಇನ್ನೊಂದು ರಾಜ್ಯ ಕಚೇರಿ. ಮೈಸೂರಿನಲ್ಲಿಯೂ ಸಹ ದೊಡ್ಡ ಕಚೇರಿ ನಿರ್ಮಾಣ ಮಾಡಲಾಗುವುದು. ಇದರ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಹೀಗೆ, ಎಲ್ಲ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರು ಅಡಿಪಾಯ ಹಾಕಲು ಕಾಯಲು ಹೋಗಬೇಡಿ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ವರ್ಚುಯಲ್ ಆಗಿ ಎಲ್ಲ ಕಾಂಗ್ರೆಸ್ ಭವನಗಳ ಅಡಿಪಾಯಗಳಿಗೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲ ತಯಾರಿಗಳನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಗ್ಯಾರಂಟಿ ಯೋಜನೆ ಅನುಷ್ಟಾ ನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಎಐಸಿಸಿ ಕಾರ್ಯದರ್ಶಿ ನಿವೇದಿತಾ ಆಳ್ವಾ, ಎಐಸಿಸಿ ಜಂಟಿ ಕಾರ್ಯದರ್ಶಿ ಡಾ.ಪಾಲಕ್ ವರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ, ಮಾಜಿ ಸಂಸದ ಪ್ರೊ.ರಾಜೀವ್ ಗೌಡ ಸೇರಿದಂತೆ ಪ್ರಮುಖರಿದ್ದರು. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಜಿ ರಾಮ್ ಜಿ ಅಸಾಧ್ಯ..! ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದಲ್ಲಿ ಬಡವರಿಗೆ ಉದ್ಯೋಗ ನೀಡುವ ಮ-ನರೇಗಾ ಯೋಜನೆ ತಂದಿತ್ತು. ಕೇಂದ್ರ ಬಿಜೆಪಿ ಸರಕಾರ ಈ ಯೋಜನೆಯನ್ನು ಹತ್ಯೆ ಮಾಡಲು ಮುಂದಾಗಿದೆ. ಈ ಯೋಜನೆಯಲ್ಲಿ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿಕೊಳ್ಳುವ ಬದಲಾವಣೆ ತಂದಿದ್ದಾರೆ. ನೂತನ ತಿದ್ದುಪಡಿ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. -ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ. ಅಲೆಗ್ಸಾಂಡರ್ ಶಾಶ್ವತವಲ್ಲ, ಬಿಜೆಪಿ ಯಾವ ಲೆಕ್ಕ? : ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ?.ಅದು ಅಲ್ಲದೆ, ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದು ಯಾವ ಲೆಕ್ಕ?. -ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ.

ವಾರ್ತಾ ಭಾರತಿ 28 Dec 2025 8:03 pm

ಹೊಸ ವರ್ಷಕ್ಕೆ ಸಜ್ಜಾದ ಕರಾವಳಿ ಪ್ರವಾಸಿ ತಾಣ; ದೇವಸ್ಥಾನ, ಬೀಚ್‌ಗಳಲ್ಲಿ ಜನ ಜಾತ್ರೆ, ಟ್ರಾಫಿಕ್‌ ಹೆಚ್ಚಳ

ಹೊಸ ವರ್ಷಕ್ಕೆ ಇನ್ನು ಮೂರು ದಿನ ಬಾಕಿ ಇರುವ ಮುನ್ನವೇ ಕರಾವಳಿ ಕರ್ನಾಟಕ ನೂತನ ವರ್ಷ ಬರಮಾಡಿಕೊಳ್ಳಲು ಸಜ್ಜಾಗಿದೆ. ಪ್ರವಾಸಿ ತಾಣಗಳು, ದೇವಸ್ಥಾನಗಳು, ಬೀಚ್‌ಗಳಲ್ಲಿ ಜನಸಾಗರವೇ ಹರಿದುಬಂದಿದೆ. ಕ್ರಿಸ್‌ಮಸ್ ರಜೆಯಲ್ಲಿದ್ದವರು ಹೊಸ ವರ್ಷವನ್ನು ಕರಾವಳಿಯಲ್ಲೇ ಆಚರಿಸಲು ಬಂದಿದ್ದಾರೆ. ಕರಾವಳಿ ಉತ್ಸವ, ಪಿಲಿಕುಳ ಪರ್ಬ, ಬೀಚ್‌ಗಳ ಕಾರ್ಯಕ್ರಮಗಳು ಜನರನ್ನು ಸೆಳೆಯುತ್ತಿವೆ. ನಗರದಲ್ಲಿ ವಿವಾಹ ಕಾರ್ಯಕ್ರಮಗಳಿಂದಾಗಿ ಟ್ರಾಫಿಕ್‌ ಜಾಮ್‌ ಕೂಡ ಕಂಡುಬಂದಿದೆ. ಬಸ್‌ಗಳಲ್ಲೂ ಪ್ರಯಾಣಿಕರ ಓಡಾಟ ಹೆಚ್ಚಾಗಿದೆ.

ವಿಜಯ ಕರ್ನಾಟಕ 28 Dec 2025 7:59 pm

ಯಾದಗಿರಿಯಲ್ಲಿ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

ಸಮ್ಮೇಳನಾಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಅವರ ಮೆರವಣಿಗೆ

ವಾರ್ತಾ ಭಾರತಿ 28 Dec 2025 7:58 pm

ಉಳ್ಳಾಲ| ಕೇರಳ ಯಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆ

ಉಳ್ಳಾಲ : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸಂಸ್ಥೆಯ  ಶತಮಾನೋತ್ಸವದ ಅಂಗವಾಗಿ 'ಮನುಷ್ಯರೊಂದಿಗೆ' ಎಂಬ ಧ್ಯೇಯದಡಿ ಕೇರಳ ಮುಸ್ಲಿಮ್ ಜಮಾಅತ್ ವತಿಯಿಂದ ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಇಬ್ರಾಹಿಮ್ ಖಲೀಲ್ ಅಲ್ ಬುಖಾರಿ ಕಡಲುಂಡಿ ತಂಙಳ್ ನೇತೃತ್ವದಲ್ಲಿ ಜ.1ರಂದು ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಆರಂಭಗೊಳ್ಳಲಿರುವ ಕೇರಳ ಯಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆ ಉಳ್ಳಾಲ ದರ್ಗಾ ಕಚೇರಿಯಲ್ಲಿ ರವಿವಾರ ನಡೆಯಿತು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಮಾತನಾಡಿ,‌ ಉಳ್ಳಾಲ ಝಿಯಾರತ್ ನೊಂದಿಗೆ ಈ ಕೇರಳ ಯಾತ್ರೆ ಆರಂಭಗೊಳ್ಳುವುದರಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಉಳ್ಳಾಲ ಇನ್ಸ್ಪೆಕ್ಟರ್ ವಿರೂಪಾಕ್ಷ, ದರ್ಗಾ ಕೋಶಾಧಿಕಾರಿ ನಾಝೀಮ್ ಮುಕಚೇರಿ, ಕಾರ್ಯದರ್ಶಿ ಇಸಾಕ್, ಸದಸ್ಯರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 7:54 pm

ಪೋಷಕರು ಮಕ್ಕಳಿಗೆ ಶಿಕ್ಷಣವನ್ನು ನೀಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು: ಝಕರಿಯ ಜೋಕಟ್ಟೆ

ಕೊಣಾಜೆ: ಪೋಷಕರು ಮಕ್ಕಳಿಗೆ ಆಸ್ತಿ ಮಾಡಿಡುವ ಬದಲು ಅವರಿಗೆ ಸರಿಯಾದ ಶಿಕ್ಷಣವನ್ನು ನೀಡಬೇಕು. ಅವಾಗ ಮಕ್ಕಳು ನೈತಿಕತೆಯಲ್ಲಿ ಮುಂದೆ ಸಾಗುತ್ತಾರೆ ಮಾತ್ರವಲ್ಲದೇ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಮೂಡಿ ಬರುತ್ತಾರೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಝಕರಿಯ ಜೋಕಟ್ಟೆ ಅಭಿಪ್ರಾಯ ಪಟ್ಟರು. ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ಪ್ರತಿಭೋತ್ಸವದ ಪ್ರತಿಭಾ ಪುರಸ್ಕಾರದಲ್ಲಿ ಸಾಧಕರನ್ನು ಅಭಿನಂದಿಸಿ ಮಾತನಾಡಿದ ಝಕರಿಯ ಜೋಕಟ್ಟೆ, ಹಿಂದಿನ ಕಾಲದಲ್ಲಿ ವಿದ್ಯೆ ಇಲ್ಲದೆಯೂ ಸ್ವಂತ ಬುದ್ದಿವಂತಿಕೆಯಲ್ಲಿ ಎಂಟು ಸಾವಿರ ಮಂದಿಗೆ ಉದ್ಯೋಗ ಕೊಟ್ಟು ಅವರ ಮನೆಯನ್ನು ಬೆಳಗಿಸುವ ಕಾರ್ಯ ಆಗಿದೆ. ಆದರೆ ಇಂದು ವಿದ್ಯೆ ಇಲ್ಲದೇ ಯಾವುದೇ ಸಾಧನೆ ಅಸಾಧ್ಯ , ವಿದ್ಯೆ ವ್ಯಕ್ತಿಯನ್ನು ಸುಸಂಸ್ಕೃತರನ್ನಾಗಿ ಮಾಡುವುದಲ್ಲದೇ ಸಮಾಜದಲ್ಲಿ ನಾವು ಹೇಗೆ ಬದುಕಬೇಕು ಎಂಬುದನ್ನು ಕಲಿಸಿ ಕೊಡುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ವಿದ್ಯಾವಂತರಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಾಮಾಜಿಕ, ಧಾರ್ಮಿಕ ಮುಂದಾಳು ಪಿಲಿಕಳ ಗುತ್ತು ರವಿ ರೈ ಫಜೀರು ಇವರು ವಾರ್ಷಿಕೋತ್ಸವವು ಸಂಸ್ಥೆಗಳ ಇರುವಿಕೆಯನ್ನು ಗುರುತಿಸಿಕೊಳ್ಳುವುದರ ಜೊತೆಗೆ ಮಕ್ಕಳ ಪ್ರತಿಭೆಗಳನ್ನು ಅಭಿವ್ಯಕ್ತ ಗೊಳಿಸಲು ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡುತ್ತವೆ ಎಂದರು. ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಕಡೆಂಜ ಸೋಮಶೇಖರ್ ಚೌಟ ವಹಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯ ಜೋಕಟ್ಟೆ ಇವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಅಥಿತಿಗಳಾಗಿ ಸಮಾಜ ಸೇವಕರಾದ ಕಡೆಂಜ ಅಶೋಕ್ ಕುಮಾರ್ ಚೌಟ , ಝಕರಿಯ ಮಲಾರ್, ಆಡಳಿತ ಮಂಡಳಿಯ ಸದಸ್ಯರು ಕಡೆಂಜ ಉದಯಕುಮಾರ್ ಚೌಟ, ಕಲ್ಲಾಯಿ ದುರ್ಗಾಪ್ರಸಾದ್ ರೈ , ನಿವೃತ್ತ ಮುಖ್ಯ ಶಿಕ್ಷಕರುಗಳಾದ ಯಶೋಧ, ನಥಾನಿಯಲ್ ಎಡ್ವರ್ಡ್ ಐಮನ್, ರಾಧಾಕೃಷ್ಣ ರೈ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಅಬ್ದುಲ್ ಮಜೀದ್, ರಾಜ್ಯ ಮಟ್ಟದ ತರಬೇತುದಾರರು ರಫೀಕ್ ಮಾಸ್ಟರ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹಿನಿ ಮುಂತಾದವರು ಉಪಸ್ಥಿತರಿದ್ದರು. ಅನುದಾನಿತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪ್ರೇಮಲತಾ ಸ್ವಾಗತಿಸಿ, ಶಿಕ್ಷಕ ರವಿಶಂಕರ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ತ್ಯಾಗಮ್ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 28 Dec 2025 7:47 pm

ಚಿಕಿತ್ಸೆ ಸಿಗದೆ ಭಾರತೀಯ ಸಾವು; ಕೆನಡಾದ ಆರೋಗ್ಯ ವ್ಯವಸ್ಥೆಯನ್ನು ಅಸಮರ್ಥ 'DMV' ಇಲಾಖೆಗೆ ಹೋಲಿಸಿದ ಮಸ್ಕ್‌

ಕೆನಡಾದ ಎಡ್ಮಂಟನ್‌ನಲ್ಲಿ 44 ವರ್ಷದ ಭಾರತೀಯ ಮೂಲದ ವ್ಯಕ್ತಿ ಪ್ರಶಾಂತ್ ಶ್ರೀಕುಮಾರ್ ಚಿಕಿತ್ಸೆಗಾಗಿ ಎಂಟು ಗಂಟೆಗಳ ಕಾಲ ಕಾಯುತ್ತಾ ಸಾವನ್ನಪ್ಪಿದ ಘಟನೆಯನ್ನು ತಂತ್ರಜ್ಞಾನ ದಿಗ್ಗಜ ಎಲೋನ್ ಮಸ್ಕ್ ತೀವ್ರವಾಗಿ ಖಂಡಿಸಿದ್ದಾರೆ. ಕೆನಡಾದ ಸರ್ಕಾರಿ ಆರೋಗ್ಯ ವ್ಯವಸ್ಥೆಯು ಅಮೆರಿಕದ ಅತ್ಯಂತ ನಿಧಾನಗತಿಯ ಮೋಟಾರು ವಾಹನ ಇಲಾಖೆ ಯಂತೆಯೇ ಅಸಮರ್ಥ ಎಂದು ಟೀಕೆ ಮಾಡಿದ್ದಾರೆ.

ವಿಜಯ ಕರ್ನಾಟಕ 28 Dec 2025 7:44 pm

Hunsuru | ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾದ ಮುಸುಕುದಾರಿಗಳು!

ಮೈಸೂರು : ಹಾಡಹಗಲೇ ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಣಸೂರು ಟೌನ್ ನಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ಹುಣಸೂರು ಟೌನ್ ಬಸ್ ನಿಲ್ದಾಣದ ಬಳಿ ಇರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ಶೋರಂನಲ್ಲಿ ಈ ಘಟನೆ ನಡೆದಿದ್ದು, ಸುಮಾರು 5 ಕೆ.ಜಿ. ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ರವಿವಾರ ಮಧ್ಯಾಹ್ನ 1.30 ರ ಸಮಯದಲ್ಲಿ 5 ಜನ ಮುಸುಕುದಾರಿಗಳ ತಂಡ ಚಿನ್ನದ ಅಂಗಡಿಯ ಒಳಗೆ ನುಗ್ಗಿದೆ. ಏಕಾಏಕಿ ಒಬ್ಬ ಮುಸುಕುದಾರಿ ಗನ್ ತೋರಿಸಿ ಅಂಗಡಿ ಮಾಲೀಕ ಸೇರಿದಂತೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿಗೂ ಹೆದರಿಸಿದ್ದಾನೆ. ಇನ್ನು ನಾಲ್ಕು ಮಂದಿ ಮುಸುಕುದಾರಿಗಳ ತಂಡ ತಮ್ಮ ಬ್ಯಾಗ್ ಗಳಿಗೆ ಚಿನ್ನಾಭರಣ ತುಂಬಿಕೊಂಡು ಸಿನಿಮೀಯ ರೀತಿಯಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಎರಡು ಬೈಕ್ ಗಳಲ್ಲಿ ಬಂದ ಗುಂಪು ಕೃತ್ಯ ಎಸಗಿದೆ. ದರೋಡೆಕೋರರನ್ನು ಸಿಬ್ಬಂದಿಗಳು ಹಿಂಬಾಲಿಸಿದ್ದಾರೆ. ಆದರೆ ದುಷ್ಕರ್ಮಿಗಳನ್ನ ಹಿಡಿಯಲು ಸಾಧ್ಯವಾಗಿಲ್ಲ. ದರೋಡೆ ನಡೆಸಿದ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು 5 ಕೆ.ಜಿ. ಚಿನ್ನಾಭರಣ ದೋಚಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ತನಿಖೆ ಚುರುಕು ಗೊಳಿಸಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Dec 2025 7:38 pm

ಸಣ್ಣಪುಟ್ಟ ಭಾಷೆಗಳಿಗೆ ಇಂಗ್ಲಿಷ್, ಹಿಂದಿಯಿಂದ ಆತಂಕ: ಬಿ.ಎಂ.ಬಶೀರ್ ಕಳವಳ

ಕುಂದಾಪುರದಲ್ಲಿ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ಉದ್ಘಾಟನೆ

ವಾರ್ತಾ ಭಾರತಿ 28 Dec 2025 7:34 pm

ದೇಶದ ರಕ್ಷಣೆ ಕುರಿತು ಬ್ಯಾರೀಸ್ ಸಂಸ್ಥೆಯ ಚಿಂತನೆ ಶ್ಲಾಘನೀಯ: ಜಯಪ್ರಕಾಶ್ ಹೆಗ್ಡೆ

ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ‘ರಕ್ಷಣಾ ವಲಯದಲ್ಲಿ ವೃತ್ತಿ ಅವಕಾಶಗಳು -ತಯಾರಿ’ ಕಾರ್ಯಾಗಾರ

ವಾರ್ತಾ ಭಾರತಿ 28 Dec 2025 7:28 pm

ಬೆಂಗಳೂರಿನಲ್ಲಿ ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ; ವಿವಿಧೆಡೆ ಸಂಗ್ರಹಿಸಲಾಗಿದ್ದ 1.20 ಕೋಟಿ ಮೌಲ್ಯದ ಮಾದಕ ವಸ್ತು ವಶ

58 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂಬುದು ಸತ್ಯಕ್ಕೆ ದೂರ : ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

ವಾರ್ತಾ ಭಾರತಿ 28 Dec 2025 7:21 pm

ಬೆಂಗಳೂರು ಜಲಮಂಡಳಿ ಕಾವೇರಿ ನೀರಿನ ಬಿಲ್ ಬಾಕಿ ಉಳಿಸಿಕೊಂಡವರಿಗೆ OTS ಯೋಜನೆ; ಅಸಲು ಪಾವತಿಸಿದ್ರೆ ಬಡ್ಡಿ ಸಂಪೂರ್ಣ ಮನ್ನಾ!

ಕಾವೇರಿ ನೀರಿನ ಬಿಲ್ ಬಾಕಿದಾರರಿಗೆ ಬಂಪರ್ ಆಫರ್ ನೀಡಲಾಗಿದ್ದು, ಬಡ್ಡಿ ಮತ್ತು ದಂಡವನ್ನು ಸಂಪೂರ್ಣ ಮನ್ನಾ ಮಾಡುವ 'ಒನ್ ಟೈಮ್ ಸೆಟಲ್‌ಮೆಂಟ್' ಯೋಜನೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಅಸಲು ಮೊತ್ತವನ್ನು ಪಾವತಿಸಿದರೆ, ಬಾಕಿ ಮೊತ್ತವನ್ನು ಶೇ.100 ರಷ್ಟು ಮನ್ನಾ ಮಾಡಲಾಗುತ್ತದೆ.

ವಿಜಯ ಕರ್ನಾಟಕ 28 Dec 2025 7:20 pm

ಕೃತಕ ಬುದ್ಧಿಮತ್ತೆ ಕೇಂದ್ರ ಉದ್ಘಾಟಿಸಿದ ಅದಾನಿ: ಯುವಕರಿಂದ ಎಐ ತಂತ್ರಜ್ಞಾನ ಅಭಿವೃದ್ಧಿಗೆ ಕರೆ

ಭಾರತವು ತನ್ನ ತಂತ್ರಜ್ಞಾನ ಪ್ರಯಾಣದಲ್ಲಿ ನಿರ್ಣಾಯಕ ಹಂತವನ್ನು ಪ್ರವೇಶಿಸುತ್ತಿದೆ. ಇಲ್ಲಿ ಕೃತಕ (Artificial Intelligence) ಬುದ್ಧಿಮತ್ತೆಯು ಆರ್ಥಿಕ ಬೆಳವಣಿಗೆ, ರಾಷ್ಟ್ರೀಯ ಸಾಮರ್ಥ್ಯ ಮತ್ತು ಕೆಲಸ ಸೃಷ್ಟಿ ಭವಿಷ್ಯವನ್ನು ರೂಪಿಸುತ್ತದೆ ಎಂದು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿದ್ಯಾ ಪ್ರತಿಷ್ಠಾನ ಶರದ್‌ಪವಾರ್ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI

ಒನ್ ಇ೦ಡಿಯ 28 Dec 2025 6:58 pm

ಬೈಂದೂರಿನಲ್ಲಿ ಕಿಶೋರ ಯಕ್ಷಗಾನ ಕಾರ್ಯಕ್ರಮ ಉದ್ಘಾಟನೆ

ಬೈಂದೂರು: ಬೈಂದೂರಿನ ನಾಲ್ಕು ಶಾಲೆಗಳ ಕಿಶೋರ ಯಕ್ಷಗಾನ ಪ್ರದರ್ಶನ ಶನಿವಾರ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ರಂಗಮಂಟಪದಲ್ಲಿ ಉದ್ಘಾಟನೆಗೊಂಡಿತು. ಹಿರಿಯರಾದ ವಿಶ್ವೇಶ್ವರ ಅಡಿಗರು ಮಾತನಾಡಿ, ಯಕ್ಷಗಾನ ಸುಂದರ ವೇಷಭೂಷಣ, ಕುಣಿತ, ಅಭಿನಯ, ಮಾತುಗಾರಿಕೆ ಎಲ್ಲವನ್ನೂ ಒಳಗೊಂಡ ಪರಿಪೂರ್ಣ ಕಲಾಪ್ರಕಾರ. ವಿದ್ಯಾರ್ಥಿಗಳು ಇದರಲ್ಲಿ ತರಬೇತಿ ಪಡೆಯುವದರಿಂದ ಅವರ ಸರ್ವಾಂಗೀಣ ಪ್ರಗತಿಯಾಗುತ್ತದೆ ಎಂದರು. ಕಾರ್ಯಕ್ರಮವನ್ನು ಜಗನ್ನಾಥ ಶೆಟ್ಟಿ ನಾಕಟ್ಟೆ ಉದ್ಘಾಟಿಸಿದರು. ಜಯಾನಂದ ಹೋಬಳಿದಾರ್ ಅಧ್ಯಕ್ಷತೆ ವಹಿಸಿದ್ದರು. ಉಮೇಶ ಬಿ., ಸತೀಶ ಶೆಟ್ಟಿ, ನಾಗೇಂದ್ರ ದೇವಾಡಿಗ, ಶಾಲಾ ಉಪ ಪ್ರಾಂಶುಪಾಲ ಪದ್ಮನಾಭ, ನಾರಾಯಣ ಎಂ.ಹೆಗಡೆ ಮುಖ್ಯ ಅತಿಥಿಗಳಾಗಿದ್ದರು. ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರೇಶ ಬಟವಾಡಿ ಸ್ವಾಗತಿಸಿದರು. ಪ್ರಭಾಕರ ಎಸ್. ವಂದಿಸಿದರು. ಅಧ್ಯಾಪಕ ರವೀಂದ್ರ ಕಾರ್ಯಕ್ರಮ ನಿರೂಪಿಸಿದರು. ಯಕ್ಷಗುರು ನರಸಿಂಹ ತುಂಗ ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆ ಕಂಬದಕೋಣೆ ಇಲ್ಲಿಯ ವಿದ್ಯಾರ್ಥಿಗಳಿಂದ ಪ್ರಶಾಂತ್ ಮಯ್ಯ ನಿರ್ದೇಶನದಲ್ಲಿ ’ಸುಧನ್ವಾರ್ಜುನ’, ಬೈಂದೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಉಪ್ಪುಂದ ಗಣೇಶ್ ನಿರ್ದೇಶನದಲ್ಲಿ ’ರತ್ನಾವತಿ ಕಲ್ಯಾಣ’ ಪ್ರಸಂಗ ಪ್ರಸ್ತುತಗೊಂಡಿತು.

ವಾರ್ತಾ ಭಾರತಿ 28 Dec 2025 6:58 pm

ಉಡುಪಿ| ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ

ಉಡುಪಿ: ಉದ್ಯಾವರ ಗ್ರಾಮದ ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಲೆನ್ ಫೆರ್ನಾಂಡಿಸ್ ಉದ್ಯಾವರ(64) ರವಿವಾರ ಹೃದಯಾಘಾತದಿಂದ ನಿಧನರಾದರು. ಉದ್ಯಾವರ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಹೆಲೆನ್ ಫೆರ್ನಾಂಡಿಸ್ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆ. ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸದಸ್ಯೆಯಾಗಿದ್ದು, ಹಲವಾರು ಹುದ್ದೆಗಳನ್ನು ಸಕ್ರಿಯವಾಗಿ ನಿಭಾಯಿಸಿದ್ದಾರೆ. ಪ್ರಸ್ತುತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಹೆಲೆನ್ ಫೆರ್ನಾಂಡಿಸ್ ಉದ್ಯಾವರ ಚರ್ಚಿನ ವಿವಿಧ ಸಂಘ-ಸಂಸ್ಥೆಗಳಲ್ಲಿ ಮತ್ತು ವಿಶೇಷವಾಗಿ ಪಾಲನ ಮಂಡಳಿಯಲ್ಲಿಯೂ ಸೇವೆ ಸಲ್ಲಿಸಿದ್ದರು. ಮೃತರು ಮೂವರು ಪುತ್ರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

ವಾರ್ತಾ ಭಾರತಿ 28 Dec 2025 6:54 pm

ಉಡುಪಿ| ಬಿಜೆಪಿ ಹಿರಿಯ ಮುಖಂಡ ದಿ.ಸೋಮಶೇಖರ್ ಭಟ್ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

ಉಡುಪಿ: ಬಿಜೆಪಿ ಹಿರಿಯ ಮುಖಂಡ ದಿವಂಗತ ಎಂ. ಸೋಮಶೇಖರ್ ಭಟ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರವಿವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಸೋಮಶೇಖರ್ ಭಟ್ ರವರ ಧರ್ಮಪತ್ನಿ ಶಾರದಾ ಭಟ್, ಪುತ್ರರಾದ ಚಿತ್ತರಂಜನ್ ಭಟ್, ವಲ್ಲಭ ಭಟ್, ನಗರಸಭಾ ಸದಸ್ಯೆ ರಶ್ಮಿ ಸಿ.ಭಟ್ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 6:45 pm

ಜಿಲ್ಲಾ- ತಾಲ್ಲೂಕು ಪಂಚಾಯತಿ ಚುನಾವಣೆ ದಿನಾಂಕ: ಪ್ರಿಯಾಂಕ್ ಖರ್ಗೆಗೆ ಮಹತ್ವದ ಸೂಚನೆ ನೀಡಿದ ಡಿಕೆ ಶಿವಕುಮಾರ್

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳು ಮುಂದಿನ 2 ರಿಂದ 3 ತಿಂಗಳೊಳಗೆ ನಡೆಯಲಿವೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಈಗಿನಿಂದಲೇ ತಯಾರಿ ಆರಂಭಿಸಬೇಕು. ಬೂತ್ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳ ನಿರ್ಮಾಣ ಕಾರ್ಯವೂ ನಡೆಯುತ್ತಿದೆ.

ವಿಜಯ ಕರ್ನಾಟಕ 28 Dec 2025 6:33 pm

ಮಂಗಳೂರು ಬೀಚ್ ಉತ್ಸವ: ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಮಂಗಳೂರು(ಡಿ.28): ತಣ್ಣೀರುಬಾವಿ ಬೀಚ್‍ನಲ್ಲಿ ಕರಾವಳಿ ಉತ್ಸವದ ಪ್ರಯುಕ್ತ ಜನವರಿ 3 ಮತ್ತು 4ರಂದು ಬೀಚ್ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಆಹಾರ ಮತ್ತು ಇತರ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಮಳಿಗೆಗಳಲ್ಲಿ ವ್ಯಾಪಾರ ನಡೆಸಲು ಆಸಕ್ತಿಯುಳ್ಳ ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಬಯಸುವರು ಡಿಸೆಂಬರ್ 31ರ ಸಂಜೆ 5 ಗಂಟೆಯೊಳಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 09644020343/ 9900924713 ಸಂಪರ್ಕಿಸಬಹುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 28 Dec 2025 6:16 pm

ಮೂರು ವರ್ಷದಿಂದ ಪ್ರೀತಿಸಿ ಮದುವೆಯಾದ ಪುಣೆ ಜೋಡಿ; 24 ಗಂಟೆಯಲ್ಲೇ ಡಿವೋರ್ಸ್‌; ಅಸಲಿ ಕಾರಣ ಏನು?

ಪ್ರೇಮ ವಿವಾಹವಾದ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೇವಲ 24 ಗಂಟೆಯೊಳಗೆ ವಿಚ್ಛೇದನ ಪಡೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಾಸದ ಸ್ಥಳ ಮತ್ತು ವೃತ್ತಿಜೀವನದ ಹೊಂದಾಣಿಕೆಯ ಕೊರತೆಯಿಂದಾಗಿ ಈ ವೈದ್ಯೆ ಮತ್ತು ಇಂಜಿನಿಯರ್ ಜೋಡಿ ಕಾನೂನುಬದ್ಧವಾಗಿ ಬೇರ್ಪಟ್ಟಿದ್ದಾರೆ. ಮೂರು ವರ್ಷ ಪ್ರೀತಿಸಿದರು ಸಹ ಇಬ್ಬರು ಪರಸ್ಪರ ಈ ಬಗ್ಗೆ ಮಾತನಾಡಿಕೊಳ್ಳದೆ ಇರುವುದು ಅಚ್ಚರಿಯನ್ನುಂಟು ಮಾಡಿದೆ ಎಂದು ವಕೀಲರು ಹೇಳಿದ್ದಾರೆ.

ವಿಜಯ ಕರ್ನಾಟಕ 28 Dec 2025 6:07 pm

ಆಪರೇಷನ್ ಸಿಂಧೂರ್: ಬಂಕರ್‌ನಲ್ಲಿ ಅಡುವಂತೆ ಅಧ್ಯಕ್ಷ ಜರ್ದಾರಿಗೆ ಸಲಹೆ ನೀಡಿದ್ದನ್ನು, ನೂರ್ ಖಾನ್ ವಾಯುನೆಲೆ ಧ್ವಂಸವಾಗಿದ್ದನ್ನು ಒಪ್ಪಿಕೊಂಡ ಪಾಕ್‌!

ಭಾರತೀಯ ಸಶಸ್ತ್ರ ಪಡೆಗಳ 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯಿಂದ ಪಾಕಿಸ್ತಾನ ತತ್ತರಿಸಿದೆ. ತನ್ನ ಪ್ರಮುಖ ನೂರ್ ಖಾನ್ ವಾಯುನೆಲೆಯ ಮೇಲೂ ದಾಳಿ ನಡೆದಿರುವುದನ್ನು ಪಾಕಿಸ್ತಾನ ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ. ದಾಳಿಗೆ ಹೆದರಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿಗೆ ಬಂಕರ್‌ಗೆ ತೆರಳುವಂತೆ ಸಲಹೆ ನೀಡಲಾಗಿತ್ತು. ಭಾರತದ 80 ಡ್ರೋನ್ ದಾಳಿಗಳಿಂದ ಪಾಕಿಸ್ತಾನದ ಮಿಲಿಟರಿ ನೆಲೆಗಳಿಗೆ ಹಾನಿಯಾಗಿದೆ.

ವಿಜಯ ಕರ್ನಾಟಕ 28 Dec 2025 5:59 pm

ವಿವಿಎಸ್ ಲಕ್ಷ್ಮಣ್ ರನ್ನು ಸಂಪರ್ಕಿಸಿದ್ದ ಬಿಸಿಸಿಐ! ಇದು ಗೌತಮ್ ಗಂಭೀರ್ ಸ್ಥಾನ ಅಲುಗಾಡುತ್ತಿರುವ ಸೂಚನೆಯೇ?

Team India Head Coach-ಭಾರತ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ಭವಿಷ್ಯ ಈಗ ಅನಿಶ್ಚಿತವಾಗಿದೆ. ಟೀಂ ಇಂಡಿಯಾ ಪೋಸ್ಟರ್ ಬಾಯ್ ಎಂದೇ ಬಿಂಬಿತರಾಗಿದ್ದ ಶುಭಮನ್ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ನಿರ್ಧಾರ ತೀವ್ರ ಗೊಂದಲಕ್ಕೆ ಕಾರಣವಾಗಿದ್ದು. ಆಟಗಾರರು ತಮ್ಮ ಸ್ಥಾನದ ಬಗ್ಗೆ ಅಸುರಕ್ಷಿತ ಭಾವನೆ ಹೊಂದಿದ್ದಾರೆ. ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡದ ಕಳಪೆ ಪ್ರದರ್ಶನವೂ ಗಂಭೀರ್ ಅವರ ವಿರುದ್ಧ ಟೀಕೆಗೆ ಕಾರಣವಾಗಿದೆ. ಹೀಗಾಗಿ ಟಿ20 ವಿಶ್ವಕಪ್ ಬಳಿಕ ಬಿಸಿಸಿಐ ಗಂಭೀರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 28 Dec 2025 5:56 pm

ವಿಟ್ಲ: ವಿಟ್ಠಲ ಪ್ರೌಢಶಾಲೆಯಲ್ಲಿ ಅಮೃತ ಸೌಧದ ಶಿಲಾ ಪೂಜನ ಕಾರ್ಯಕ್ರಮ

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದ ಅಮೃತ ಮಹೋತ್ಸವದ ಯೋಜನೆಯ ಅಮೃತ ಸೌಧದ ಶಿಲಾ ಪೂಜನ ಕಾರ್ಯಕ್ರಮ ವಿಟ್ಠಲ ಪ್ರೌಢಶಾಲೆಯಲ್ಲಿ ರವಿವಾರ ನಡೆಯಿತು. ಅಮೃತ ಸೌಧದ ಶಿಲಾನ್ಯಾಸ ಕಾರ್ಯಕ್ರಮ ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ ಭಟ್ ಇವರ ಪೌರೋಹಿತ್ಯದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಒಶಿಮಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಇದರ ಅಧ್ಯಕ್ಷರು  ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೂಡೂರು ರಾಮಚಂದ್ರ ಭಟ್ ವಹಿಸಿದ್ದರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ, ಮೈಸೂರು ಎಸ್ ಎಲ್ ವಿ ಬುಕ್ಸ್ ಇಂಡಿಯಾ ಮಾಲಕ ದಿವಾಕರ್ ದಾಸ್ ನೇರ್ಲಾಜೆ, ಬಂಟ್ವಾಳ ಪ್ರಭಾಕರ ರಾವ್ ಫೌಂಡೇಶನ್ ಪ್ರತಿನಿಧಿ ವಿಟ್ಲ ಮಂಗೇಶ್ ಭಟ್ ಇವರು ಭಾಗವಹಿಸಿದ್ದರು. ನ್ಯಾಯ ಮೂರ್ತಿ ರಾಜೇಶ್ ರೈ ಕಲ್ಲಂಗಳ ಅಮೃತ ಸೌಧದ ವಿಜ್ಞಾಪನಾ ಪತ್ರ ಅನಾವರಣಗೊಳಿಸಿದರು. ಈ ವೇಳೆ ವಿಟ್ಠಲ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಶಂಕರನಾರಾಯಣ ಪ್ರಸಾದ್, ಉಪಾಧ್ಯಕ್ಷ ಸುಬ್ರಾಯ ಪೈ, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ರವಿಪ್ರಕಾಶ್, ಕೌನ್ಸಿಲ್ ಸದಸ್ಯರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ಸ್ವಾಗತಿಸಿದರು. ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ ವಂದಿಸಿದರು. ಅಧ್ಯಾಪಕ ರಾಜಶೇಖರ್‌ ನಿರೂಪಿಸಿದರು. 

ವಾರ್ತಾ ಭಾರತಿ 28 Dec 2025 5:50 pm

Bengaluru | ಹೊಸವರ್ಷ ಸಂಭ್ರಮಾಚರಣೆಯ ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ : ಜಿ.ಪರಮೇಶ್ವರ್‌

ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಗರದಲ್ಲಿ ಹೊಸ ಸಂಭ್ರಮಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ 14 ಸಾವಿರ ಪೊಲೀಸರು, 2500 ಟ್ರಾಫಿಕ್ ಪೊಲೀಸರು, 88 ಕೆಎಸ್ಆರ್‌ಪಿ ಪ್ಲಟೂನ್ಸ್, 21 ಸಿಎಆರ್, 266 ಹೋಯ್ಸಳ ವಾಹನ, 250 ಕೋಬ್ರ ವಾಹನಗಳನ್ನು ನಿಯೋಜಿಸಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದು. ಸಿವಿಲ್ ಡಿಫೆನ್ಸ್, ಹೋಮ್ ಗಾರ್ಡ್ಸ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ವಿವರಿಸಿದರು. ಹೊಸ ವರ್ಷದ ಆಚರಣೆಯಲ್ಲಿ ಹೆಚ್ಚಿನ ಜನ ಭಾಗವಹಿಸುತ್ತಿದ್ದಾರೆ. ಕಳೆದ ವರ್ಷ 8 ಲಕ್ಷಕ್ಕೂ ಹೆಚ್ಚು ಜನರು ಸಂಭ್ರಮಾಚರಣೆಗಳಲ್ಲಿ ಭಾಗವಹಿಸಿದ್ದರು. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ. ಹಿಂದಿನ‌ ವರ್ಷದ ಅನುಭವದ ಮೇಲೆ ಈ ಸ್ಥಳಗಳನ್ನು ಗುರುತಿಸಲಾಗಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎಂದು ಅಂದಾಜಿಸಲಾಗಿದ್ದು, ಸುಮಾರು 10 ಲಕ್ಷಕ್ಕು ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎಂದರು. ಜನರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಅನುವು ಮಾಡಿಕೊಡಲಾಗುವುದು. ಬಾರ್ ಆ್ಯಂಡ್ ರೆಸ್ಟೋರೆಂಟ್, ಮೆಟ್ರೋ ಕಾರಿಡಾರ್, ಮನಸಂರಜನಾ ಸ್ಥಳಗಳಲ್ಲಿ ಹೆಚ್ಚಿನ ರೀತಿಯಲ್ಲಿ ಯುವಕ-ಯುವತಿಯರು ಸೇರುತ್ತಾರೆ. ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವಶ್ಯಕತೆ ಇರುವ ಸ್ಥಳಗಳಲ್ಲಿ ವಾಚ್ ಟವರ್, 180 ಕಡೆ ಫೋಕಸ್ ಲೈಟ್‌ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಆ್ಯಕ್ಸಿಸ್ ಕಂಟ್ರೋಲ್, ವಾಹನ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಟ್ಯಾಕ್ಸಿಗಳು ಸಿಗುವುದಿಲ್ಲ. ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 250 ಕಡೆ ತಾತ್ಕಲಿಕವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಜನದಟ್ಟಣೆಯ ಮೇಲೆ ಡ್ರೋನ್ ಕ್ಯಾಮೆರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ ಎಂದು ತಿಳಿಸಿದರು. ಮಹಿಳಾ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು. ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳ ಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.‌ ಡಿಜಿಪಿ ಅವರು 15 ಅಂಶಗಳ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ ಎಂದರು. ಹೆಚ್ಚಿನ ಭದ್ರೆತೆಗೆ ಒತ್ತು ನೀಡಲಾಗಿದೆ. ಇದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ, ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗಮನ ಹರಿಸಲಾಗಿದೆ. ಮುಖಚರ್ಯೆ ಗುರುತಿಸುವ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ.‌ ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಫೇಸ್‌ ರೆಕಾಗ್ನೈಸೇಷನ್ ಎಐ ಕ್ಯಾಮೆರಾದಿಂದ ಗೊತ್ತಾಗಲಿದೆ. ಅಂಥವರು ಕಂಡು ಬಂದರೆ ಕೂಡಲೇ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಕಳೆದ ಐದು ದಿನದಿಂದ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2854 ಸವಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು. ಹೀಟ್ ಮ್ಯಾಪ್: ಆಂಬುಲೆನ್ಸ್, ವಾಹನಗಳು, ಟ್ರಾಫಿಕ್ ಸಮಸ್ಯೆ ಸೇರಿದಂತೆ ಜನಗಳಿಗೆ ಮಾಹಿತಿ ಸಿಗಲು ಕ್ಯೂಆರ್ ಕೋಡ್ ಪರಿಚಯಿಸಲಾಗಿದೆ. ಕ್ಯೂಆರ್ ಕೋಡ್ ಮೂಲಕ ಮಾಹಿತಿ ಪಡೆಯಬಹುದು‌. ಇದೇ ಮೊದಲ ಬಾರಿಗೆ 'ಹೀಟ್ ಮ್ಯಾಪ್' ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ‌. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ‌. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾವಹಿಸಲಾಗುತ್ತದೆ. ಇದನ್ನು ಆಧರಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಜನರ ದಟ್ಟಣೆ ನಿಯಂತ್ರಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕರಿಗೆ ಮನವಿ: ಹೊಸ ವರ್ಷವನ್ನು ಜವಾಬ್ದಾರಿಯಿಂದ ಸಂಭ್ರಮಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ನಿಮ್ಮ ಮನೆಯ ಯುವಕರು, ಮನೆಯಿಂದ ಹೊರ ಹೋದ ಬಳಿಕ ವಾಪಸ್ ಮನೆಗೆ ಬರುವವರೆಗೂ ಅವರ ಬಗ್ಗೆ ನಿಗಾವಹಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ , ಜಂಟಿ ಪೊಲೀಸ್ ಆಯುಕ್ತರುಗಳಾದ ರಮೇಶ್ ಬಾನೋಥ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Dec 2025 5:36 pm

ಉಸ್ಮಾನ್‌ ಹಾದಿ ಹತ್ಯೆ ಕೇಸ್;‌ ಮೇಘಲಾಯ ಗಡಿ ಮೂಲಕ ಭಾರತಕ್ಕೆ ನುಸುಳಿದ ಇಬ್ಬರು ಶಂಕಿತರು

ಬಾಂಗ್ಲಾದೇಶದ ಪ್ರಭಾವಿ ಹೋರಾಟಗಾರ ಮತ್ತು ಶೇಖ್‌ ಹಸೀನಾ ಅವರು ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ಉಸ್ಮಾನ್‌ ಹಾದಿಯವರನ್ನು ಹತ್ಯೆ ಮಾಡಲಾಗಿತ್ತು. ಅವರ ತಲೆಗೆ ಗುಂಡು ಹಾರಿಸಿದ ಇಬ್ಬರು ಪ್ರಮುಖ ಶಂಕಿತರು ಮೇಘಾಲಯದ ಗಡಿಯ ಮೂಲಕ ಭಾರತಕ್ ಬಂದು ತಲೆ ಮರೆಸಿಕೊಂಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು ಮಾಹಿತಿ ನೀಡಿದ್ದಾರೆ. ಅವರನ್ನು ಬಂಧಿಸಿ ಹಸ್ತಾಂತರಿಸುವಂತೆ ಬಾಂಗ್ಲಾ ಸರ್ಕಾರವು ಭಾರತೀಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ

ವಿಜಯ ಕರ್ನಾಟಕ 28 Dec 2025 4:58 pm

ಛೂ ಬಾಣ – ಪಿ. ಮೊಹಮ್ಮದ್ ಕಾರ್ಟೂನ್

ವಾರ್ತಾ ಭಾರತಿ 28 Dec 2025 4:54 pm

ಗ್ರೇಟರ್‌ ಬೆಂಗಳೂರು ಪಾಲಿಕೆಗಳ ಚುನಾವಣೆ ಕಾಂಗ್ರೆಸ್‌ ಸಿದ್ಧತೆ; ಟಿಕೆಟ್ ಆಕಾಂಕ್ಷಿಗಳ ಅರ್ಜಿ ಬಿಡುಗಡೆ; ಯಾರಿಗೆಷ್ಟು ಶುಲ್ಕ?

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಮಹಿಳೆಯರಿಗೆ 25 ಸಾವಿರ ರೂ. ಶುಲ್ಕ ಇರಲಿದೆ. ವಿದ್ಯಾರ್ಥಿ ಚುನಾವಣೆ ನಡೆಸಲು ಹೊಸ ಸಮಿತಿ ರಚನೆ ಮಾಡಲಾಗಿದೆ.

ವಿಜಯ ಕರ್ನಾಟಕ 28 Dec 2025 4:47 pm

ತನ್ನ ವಿಕೆಟ್ ಎಗರಿಸಿದ ವಿಶಾಲ್ ಜೈಸ್ವಾಲ್ ಗೆ ಚೆಂಡಿನ ಮೇಲೆ ಆಟೋಗ್ರಾಫ್ ನೀಡಿದ ವಿರಾಟ್ ಕೊಹ್ಲಿ ಹೇಳಿದ್ದೇನು?

Vishal Jayswal On Virat Kohli- ವಿಜಯ ಹಜಾರೆ ಟ್ರೋಫಿ 2025 ಟೂರ್ನಿಯಲ್ಲಿ ವಿಶ್ವವಿಖ್ಯಾತ ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡಿದ ಗುಜರಾತ್‌ನ ಯುವ ಬೌಲರ್ ವಿಶಾಲ್ ಜೈಸ್ವಾಲ್ಸಂ ಬಹಳ ಸಂಭ್ರಮದಲ್ಲಿದ್ದಾರೆ. ಪಂದ್ಯದ ಬಳಿಕ ವಿರಾಟ್ ಕೊಹ್ಲಿ ನೀಡಿದ ಪ್ರೋತ್ಸಾಹ ಮತ್ತು ಸಲಹೆಗಳು ವಿಶಾಲ್ ಜೈಸ್ವಾಲ್ ಅವರಿಗೆ ಸ್ಫೂರ್ತಿಯಾಗಿದೆ. ತಾಯಿಯ ಬೆಂಬಲದಿಂದ ಕಠಿಣ ಸವಾಲುಗಳನ್ನು ಎದುರಿಸಿ ಯಶಸ್ಸು ಕಂಡಿರುವ ಜೈಸ್ವಾಲ್ ತಮ್ಮ ರಾಜ್ಯದವರೇ ಆಗಿರುವ ಆಲ್ರೌಂಡರ್ ಅಕ್ಷರ್ ಪಟೇಲ್ ಅವರ ಮಾರ್ಗದರ್ಶನವನ್ನೂ ನೆನಪಿಸಿಕೊಂಡಿದ್ದಾರೆ.

ವಿಜಯ ಕರ್ನಾಟಕ 28 Dec 2025 4:40 pm

BSNL: ದಿನಕ್ಕೆ 7 ರೂಪಾಯಿ ಸಾಕು: ದಿನಕ್ಕೆ 2GB ಡೇಟಾ + ವರ್ಷಪೂರ್ತಿ ಅನ್ಲಿಮಿಟೆಡ್ ಟಾಕ್ ಟೈಮ್

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್ ಫೋನ್ ಬಳಕೆದಾರರಿಗೆ ಅತಿದೊಡ್ಡ ಚಿಂತೆಯೆಂದರೆ ಅದು ಮೊಬೈಲ್ ರೀಚಾರ್ಜ್ ದರ. ಖಾಸಗಿ ಟೆಲಿಕಾಂ ಕಂಪನಿಗಳು ತಮ್ಮ ಸುಂಕದ ದರಗಳನ್ನು ಹೆಚ್ಚಿಸಿದ ನಂತರ, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಪ್ರತಿ ತಿಂಗಳು ರೀಚಾರ್ಜ್ ಮಾಡಿಸುವುದು ಹಲವರಿಗೆ ಹೊರೆಯಾಗಿ ಪರಿಣಮಿಸಿದೆ. ಅನೇಕರು ಕಡಿಮೆ ಬೆಲೆಯಲ್ಲಿ ಹೆಚ್ಚಿನ ದಿನಗಳ ವ್ಯಾಲಿಡಿಟಿ (Validity) ಮತ್ತು ಇಂಟರ್ನೆಟ್ ಸೌಲಭ್ಯ ನೀಡುವ ಯೋಜನೆಯ ಹುಡುಕಾಟದಲ್ಲಿದ್ದಾರೆ. ಅಂತಹ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ (BSNL) ಅಚ್ಚರಿಯ ಆಯ್ಕೆಯೊಂದನ್ನು ಮುಂದಿಟ್ಟಿದೆ. ಈ ಯೋಜನೆಯ ... Read more The post BSNL: ದಿನಕ್ಕೆ 7 ರೂಪಾಯಿ ಸಾಕು: ದಿನಕ್ಕೆ 2GB ಡೇಟಾ + ವರ್ಷಪೂರ್ತಿ ಅನ್ಲಿಮಿಟೆಡ್ ಟಾಕ್ ಟೈಮ್ appeared first on Karnataka Times .

ಕರ್ನಾಟಕ ಟೈಮ್ಸ್ 28 Dec 2025 4:37 pm

ಜಾಗತಿಕ ಚರ್ಚೆಗೆ ಕಾರಣವಾದ ಸೊಮಾಲಿಲ್ಯಾಂಡ್ ಬಗ್ಗೆ ನಿಮಗೆಷ್ಟು ಗೊತ್ತು? ವಿಶ್ವಸಂಸ್ಥೆಯಿಂದ ತುರ್ತು ಸಭೆ

ಇಸ್ರೇಲ್ ನಿಂದ ನೂತನವಾಗಿ ಸ್ವತಂತ್ರ ದೇಶದ ಮಾನ್ಯತೆ ಪಡೆದ ಸೊಮಾಲಿಲ್ಯಾಂಡ್ ಜಾಗತಿಕವಾಗಿ ಕಳೆದ ಹಲವು ಘಂಟೆಗಳಿಂದ ಸುದ್ದಿಯಲ್ಲಿದೆ. ಇಸ್ರೇಲ್‌ ದೇಶದ ಈ ಕ್ರಮವನ್ನು ಕೆಲವು ದೇಶಗಳು ವಿರೋಧಿಸಿವೆ. ಚರ್ಚೆಯಲ್ಲಿರುವ ಈ ಸೊಮಾಲಿಲ್ಯಾಂಡ್ ಯಾವುದಿದು? ಎಲ್ಲಿಯ ದೇಶ, ಇಸ್ರೇಲ್‌ನ ಮನ್ನಣೆ ಜಾಗತಿಕ ಪ್ರತಿಕ್ರಿಯೆಯನ್ನು ಏಕೆ ಹುಟ್ಟುಹಾಕಿದೆ ಎಂಬುದರ ವಿವರ ಇಲ್ಲಿದೆ. ದಶಕಗಳ ಹಿಂದೆ 1991ರಂದು ಸೊಮಾಲಿಯಾದಿಂದ ಬೇರ್ಪಟ್ಟ ಪ್ರದೇಶವಾದ

ಒನ್ ಇ೦ಡಿಯ 28 Dec 2025 4:28 pm

ಶಿಕ್ಷಣವು ಅಂಕಗಳಿಗೆ ಸೀಮಿತವಾಗದೆ ಜೀವನ ಮೌಲ್ಯಗಳು ಸಿಗುವಂತಾಗಬೇಕು: ಪ್ರೊ.ಗಣೇಶ್ ಸಂಜೀವ್

ಕೊಣಾಜೆ: ಪ್ರತಿಯೊಬ್ಬರಲ್ಲೂ ಪ್ರತಿಭೆಗಳಿರುತ್ತವೆ. ಪ್ರತಿಭೆಗಳನ್ಬು ಅವಕಾಶಗಳನ್ನಾಗಿ ಮಾಡುವ ಚಾಕಚಕ್ಯತೆ ನಮ್ಮಲ್ಲಿರಬೇಕು. ಶಿಕ್ಷಣವು ಅಂಕಗಳಿಗೆ ಮಾತ್ರವಲ್ಲ ಜ್ಞಾನ ಹಾಗೂ ಜೀವನದ ಮೌಲ್ಯಗಳನ್ನು ಬೆಳೆಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಮಂಗಳೂರು ವಿವಿ ಕುಲಸಚಿವರಾದ ಪ್ರೊ.ಗಣೇಶ್ ಸಂಜೀವ್ ಅವರು ಹೇಳಿದರು. ಕೊಣಾಜೆ ವಿಶ್ವಮಂಗಳ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ.ಗಣೇಶ್ ಸಂಜೀವ್, ಮಕ್ಕಳು ಸಾಧನೆ ಮಾಡಿದಾಗ ಪಾಲಕರು ಮಾತ್ರವಲ್ಲ ಶಿಕ್ಷಕರೂ ಸಂತಸಪಡುತ್ತಾರೆ. ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಗೌರವ ನೀಡುವ ಮನೋಭಾವನೆ, ನಾಯಕತ್ವ ಗುಣವನ್ನು ಹಾಗೂ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವ ಜವಬ್ಧಾರಿ ಶಿಕ್ಷಕರದ್ದಾಗಿದೆ ಎಂದು ಹೇಳಿದರು.   ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರಘುರಾಜ್ ಕದ್ರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂದು ಎಷ್ಟೋ ಜನರು ಶಿಕ್ಷಣಕ್ಕೆ ಸೀಮಿತವಾಗಿ ಹೋಗುತ್ತಿರುವುದನ್ನು ಕಾಣುತ್ತೇವೆ. ಸಮಾನತೆ, ಸಾಮರಸ್ಯ, ಮಾನವೀಯತೆಯ ಮನೋಭಾವಗಳು ಶಿಕ್ಷಣದ ಮೂಲಕ ಸಿಗುವಂತಾಗಲಿ ಎಂದು ಹೇಳಿದರು. ವಿಶ್ವಮಂಗಳ ಆಡಳಿತ ಅಧ್ಯಕ್ಷರಾದ ಪ್ರೊ.ಜಗದೀಶ್ ಪ್ರಸಾದ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ನಾರಾಯಣ ಗುರು, ಬಸವಣ್ಣ ,ಗಾಂಧೀಜಿಯವರಂತಹ ಮಹಾತ್ಮರ ಆದರ್ಶ ತತ್ವಗಳನ್ನು ತಿಳಿಯಪಡಿಸುವ ಕಾರ್ಯ ಅಗತ್ಯವಾಗಿ ಆಗಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಚಿತ್ರನಟಿ ವಂಶಿ ರತ್ನಕುಮಾರ್, ತೃಷಾ‌ ಹಾಗೂ ಫಾತಿಮತ್ ನಿಶಾ ಅವರನ್ನು ಶೈಕ್ಷಣಿಕ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿದ ವಿಭಾಗಗಳ ಮುಖ್ಯಸ್ಥರಾದ ಶೋಭಾವತಿ ಬಿ, ಪ್ರಿಯಾ ಎನ್, ಹಂಸಗೀತ ಅವರು ವಾರ್ಷಿಕ‌ ವರದಿ ಮಂಡಿಸಿದರು. ಸಿಂಡಿಕೇಟ್ ಸದಸ್ಯರಾದ ಅಚ್ಯುತ ಗಟ್ಟಿ, ಕಾರ್ಯದರ್ಶಿ ಡಾ.ಗೋವಿಂದ ರಾಜು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೀವ್ ನಾಯ್ಜ್ ಮೊದಲಾದವರು ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿಮಾ ಡಿ ಶೆಟ್ಟಿ ಸ್ಬಾಗತಿಸಿದರು. ಕೋಶಾಧಿಕಾರಿ ಸುಬ್ಬ ನಾಯ್ಕ್ ಅವರು ವಂದಿಸಿದರು. ಮಾನ್ವಿ ಎಸ್ ಹಾಗೂ ಮಹಮ್ಮದ್ ಝಹೀದ್ ನಿರೂಪಿಸಿದರು.

ವಾರ್ತಾ ಭಾರತಿ 28 Dec 2025 4:23 pm

Udupi | ಎಕೆಎಂಎಸ್ ಬಸ್ ಮಾಲಕ ಸೈಫ್ ಹತ್ಯೆ ಪ್ರಕರಣ; 6 ಮಂದಿ ಆರೋಪಿಗಳ ವಿರುದ್ಧ ʼಕೋಕಾʼ ಪ್ರಕರಣ ದಾಖಲು

ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ(ಸೆಕ್ಷನ್ 3 ಕೋಕಾ ಆ್ಯಕ್ಟ್)ನಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದ ಆರೋಪಿಗಳಾದ ಉಡುಪಿ ಮಿಷನ್ ಕಂಪೌಂಡ್ ಬಳಿ ನಿವಾಸಿ ಮುಹಮ್ಮದ್ ಫೈಸಲ್ ಖಾನ್(27), ಕರಂಬಳ್ಳಿಯ ಮುಹಮ್ಮದ್ ಶರೀಫ್(37), ಕೃಷ್ಣಾಪುರದ ಅಬ್ದುಲ್ ಶುಕೂರ್(43), ಫೈಸಲ್ ಖಾನ್ ಪತ್ನಿ ರಿಧಾ ಶಭನಾ(27), ಮಾಲಿ ಮುಹಮ್ಮದ್ ಸಿಯಾನ್(31) ಎಂಬವರು ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಕ್ಷನ್ 3 ಕೋಕಾ ಕಾಯಿದೆಯನ್ನು ತಲೆಮರೆಸಿಕೊಂಡ ಆರೋಪಿ ಸೇರಿದಂತೆ ಎಲ್ಲಾ 6 ಆರೋಪಿಗಳ ವಿರುದ್ಧವೂ ಅಳವಡಿಸಲಾಗಿದೆ. ಯಾವುದೇ ಪ್ರಕರಣಕ್ಕೆ ಸೆಕ್ಷನ್ 3 ಕೋಕಾ ಕಾಯಿದೆಯನ್ನು ಅಳವಡಿಸಿದಾಗ ಆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳ ಅಕ್ರಮ ಸಂಪಾದನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ವಾರ್ತಾ ಭಾರತಿ 28 Dec 2025 4:02 pm

ಸರ್ಕಾರದಿಂದ ಪಡೆದ 250 ಕೋಟಿ ರೂ. ಭೂಮಿ ಇನ್ಫೋಸಿಸ್ ಮಾರಾಟ ಆರೋಪ! ಅಂದಿನ CFO ಮೋಹನ್‌ ದಾಸ್‌ ಪೈ ಪ್ರತಿಕ್ರಿಯೆ

ಇನ್ಫೋಸಿಸ್‌ ಕರ್ನಾಟಕ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದು ಖಾಸಗಿ ಸಂಸ್ಥೆಗೆ ದುಬಾರಿ ದರಕ್ಕೆ ಮಾರಾಟ ಮಾಡಿದೆ ಎಂಬ ಆರೋಪಕ್ಕೆ ಮೋಹನ್‌ ದಾಸ್‌ ಪೈ ಸ್ಪಷ್ಟನೆ ನೀಡಿದ್ದಾರೆ. ಈ ಭೂಮಿಯನ್ನು ಮಾರುಕಟ್ಟೆಯಿಂದಲೇ ಖರೀದಿಸಲಾಗಿತ್ತು, ಸರ್ಕಾರದಿಂದ ರಿಯಾಯಿತಿ ಪಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಸಂಸದ ಕೆ.ವಿ.ಆರ್. ಕೃಷ್ಣಮೂರ್ತಿ ಅವರು ಈ ಮಾರಾಟದ ಬಗ್ಗೆ ಪ್ರಶ್ನಿಸಿ, ಹಣವನ್ನು ಸರ್ಕಾರಕ್ಕೆ ಹಿಂದಿರುಗಿಸಬೇಕು ಎಂದು ವಾದಿಸಿದ್ದಾರೆ.

ವಿಜಯ ಕರ್ನಾಟಕ 28 Dec 2025 3:59 pm

ಹೊಸ ವರ್ಷದ ಸಂದೇಶದ ರೂಪದಲ್ಲಿ ಬರುತ್ತಿದೆ APK ಫೈಲ್, ತೆರೆಯುವಾಗ ಜಾಗ್ರತೆ!

ಈ ಹೊಸ ವರ್ಷದಲ್ಲಿ ದುರುದ್ದೇಶಪೂರಿತ Apk ಫೈಲ್‌ ನಿಂದ ಎಚ್ಚರವಾಗಿರಿ. ಹೊಸ ವರ್ಷದ ಸಂದೇಶ ಅಥವಾ ಫೋಟೋಗಳು ಇರುವ ಎಪಿಕೆ ಫೈಲ್‌ ಗಳನ್ನು ತೆರೆದಲ್ಲಿ ನಿಮ್ಮ ಫೋನ್ ಅನ್ನು ದುರುಳರ ಕೈಗೆ ಕೊಟ್ಟೀರಿ ಜೋಕೆ! ಹೊಸ ವರ್ಷದ ಸಂದೇಶ ಅಥವಾ ಫೋಟೋಗಳು ಇರುವ ಎಪಿಕೆ ಫೈಲ್‌ ಗಳನ್ನು ತೆರೆದಲ್ಲಿ ನಿಮ್ಮ ಫೋನ್ ಅನ್ನು ದುರುಳರ ಕೈಗೆ ಕೊಟ್ಟೀರಿ ಜೋಕೆ! ಸಂದೇಶದಲ್ಲಿ ಲಗತ್ತಿಸಿರಬಹುದಾದ ಎಪಿಕೆ ಫೈಲ್ ತೆರೆಯದಿರಿ. ನಿಮಗೆ ಮೇಲ್ನೋಟಕ್ಕೆ ಹೊಸ ವರ್ಷದ ಶುಭಾಶಯದ ವಾಟ್ಸ್‌ ಆ್ಯಪ್ ಸಂದೇಶವಾಗಿ ಕಾಣಬಹುದು. ಸಂದೇಶದಲ್ಲಿ ಒಂದು ಎಪಿಕೆ ಫೈಲ್ ಲಗತ್ತಿಸಲಾಗಿರುತ್ತದೆ ಮತ್ತು ಡೌನ್‌ಲೋಡ್ ಮಾಡುವಂತೆ ಆಮಿಷ ಒಡ್ಡಲಾಗಿರುತ್ತದೆ. ನಿಮಗಾಗೇ ಪ್ರತ್ಯೇಕವಾಗಿ ರೂಪಿಸಿದ ಶುಭಾಶಯಗಳನ್ನು ಸ್ನೇಹಿತರು ಮತ್ತು ಸಂಬಂಧಿಕರಿಂದ ಹಂಚಿಕೊಳ್ಳುವುದು ಸಾಮಾನ್ಯ ವಿಚಾರ. ಆದರೆ ಈ ಎಪಿಕೆ ಫೈಲ್ ಅನ್ನು ನೀವು ಡೌನ್‌ಲೋಡ್ ಮಾಡಿದರೆ ಗಂಟೆಗಳೊಳಗೆ, ಅನುಮಾನಾಸ್ಪದ ಚಟುವಟಿಕೆ ಫೋನ್‌ ನಲ್ಲಿ ಕಾಣಿಸಬಹುದು. ತಮ್ಮಷ್ಟಕ್ಕೆ ನಿಮ್ಮ ಮೊಬೈಲ್‌ ನಲ್ಲಿರುವ ಆ್ಯಪ್ ಗಳು ತೆರೆದುಕೊಳ್ಳಬಹುದು. ಸಂಪರ್ಕ ಸಂಖ್ಯೆಗಳಿಗೆ ದುರುಳರು ಪ್ರವೇಶ ಪಡೆಯುತ್ತಾರೆ. ಮತ್ತು ಕೆಲವು ಪ್ರಕರಣಗಳಲ್ಲಿ ಅನಧಿಕೃತ ಬ್ಯಾಂಕ್ ವ್ಯವಹಾರಗಳೂ ಸಂಭವಿಸಬಹುದು. ಹಬ್ಬದ ಸಂದರ್ಭದಲ್ಲಿ ಹೆಚ್ಚಾಗುವ APK ಫೈಲ್‌ಗಳು ಸೈಬರ್ ತಜ್ಞರು ಹೇಳುವ ಪ್ರಕಾರ ಈ ದುರುದ್ದೇಶಪೂರಿತ ಎಪಿಕೆ ಫೈಲ್‌ಗಳನ್ನು ಕಳುಹಿಸುವ ಮೂಲಕ ಸದ್ದೇ ಇಲ್ಲದೆ ನಿಮ್ಮ ಫೋನ್‌ ಅನ್ನು ದುರುಳರು ನಿಯಂತ್ರಿಸಲು ಆರಂಭಿಸುತ್ತಾರೆ. ಹಬ್ಬದ ಸಂದರ್ಭದಲ್ಲಿ ಇಂತಹ ಸಂದೇಶಗಳು ಹೆಚ್ಚಾಗುತ್ತವೆ. ಜನರು ಅಪರಿಚಿತ ಲಿಂಕ್‌ ಗಳನ್ನು ಕ್ಲಿಕ್ ಮಾಡುವುದು ಹೆಚ್ಚಾಗಿರುತ್ತದೆ. ಅಥವಾ ಫೈಲ್‌ಗಳನ್ನು ಗಮನಿಸದೆ ಡೌನ್‌ಲೋಡ್ ಮಾಡಿರುತ್ತಾರೆ. ಈ ಕುರಿತಂತೆ ಹೈದರಾಬಾದ್ ಪೊಲೀಸರು ಇತ್ತೀಚೆಗೆ ಎಚ್ಚರಿಕೆಯ ಸಲಹೆಯನ್ನು ನೀಡಿದ್ದಾರೆ.” ವಂಚಕರು ವಾಟ್ಸ್‌ಆ್ಯಪ್, ಎಸ್‌ಎಂಎಸ್ ಮತ್ತು ಇಮೇಲ್‌ಗಳ ಮೂಲಕ ಹಬ್ಬದ ಸಂದರ್ಭದಲ್ಲಿ ಜನರನ್ನು ಮರಳುಗೊಳಿಸಲು ಪ್ರಯತ್ನಿಸುತ್ತಾರೆ. ಅಮಾಯಕ ಆನ್‌ಲೈನ್ ಬಳಕೆದಾರರನ್ನು ಗುರಿಯಾಗಿಸಿ ಈ ಸಂದೇಶಗಳನ್ನು ಕಳುಹಿಸಲಾಗುತ್ತದೆ ಮತ್ತು ಹಣಕಾಸು ಮತ್ತು ವೈಯಕ್ತಿಕ ಡಾಟಾ ಕದಿಯಲಾಗುತ್ತಿದೆ” ಎಂದು ಪೊಲೀಸರು ಎಚ್ಚರಿಸಿದ್ದಾರೆ. APK ಫೈಲ್ ಎಂದರೇನು? ಒಂದು ಆಂಡ್ರ್ಯಾಡ್ ಪ್ಯಾಕೇಜ್ ಕಿಟ್ ಅಥವಾ ಎಪಿಕೆ ಫೈಲ್ ಅನ್ನು ನಿಮ್ಮ ಸ್ಮಾರ್ಟ್‌ ಫೋನ್‌ ಗಳು ಮುಖ್ಯವಾಗಿ ಆಂಡ್ರಾಯ್ಡ್ ಫೋನ್‌ಗಳಲ್ಲಿ ಅಪ್ಲಿಕೇಶನ್‌ ಗಳನ್ನು ಇನ್‌ ಸ್ಟಾಲ್ ಮಾಡಲು ಬಳಸಲಾಗುತ್ತದೆ. ಮುಖ್ಯವಾಗಿ ವಿಂಡೋಸ್ ಕಂಪ್ಯೂಟರ್‌ನಲ್ಲಿ ಬಳಸಲಾಗುವ .exe ಫೈಲ್‌ ನಂತೆಯೇ ಇರುತ್ತದೆ. ಅಪ್ಲಿಕೇಶನ್‌ ಕಾರ್ಯನಿರ್ವಹಿಸಲು ಬೇಕಾಗಿರುವುದೆಲ್ಲವೂ ಅದರಲ್ಲಿರುತ್ತದೆ. ಎಲ್ಲವನ್ನೂ ಒಂದೇ ಪ್ಯಾಕ್‌ ನಲ್ಲಿ ಕೊಡಲಾಗಿರುತ್ತದೆ. ಸಾಮಾನ್ಯವಾಗಿ ಆ್ಯಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್‌ ನಿಂದ ಡೌನ್‌ಲೋಡ್ ಮಾಡಲಾಗುತ್ತದೆ. ಆದರೆ ಎಪಿಕೆ ಫೈಲ್‌ ಗಳನ್ನು ಇತರ ವೆಬ್‌ ತಾಣಗಳು ಅಥವಾ ಹಂಚಿಕೊಳ್ಳುವ ತಾಣಗಳಾದ ವಾಟ್ಸ್‌ಆ್ಯಪ್, ಎಸ್‌ಎಂಎಸ್ ಅಥವಾ ಇಮೇಲ್ ಮೂಲಕವೂ ಕಳುಹಿಸಬಹುದು. ಇದನ್ನು ಸೈಡ್ ಲೋಡಿಂಗ್ ಎಂದು ಕರೆಯುತ್ತಾರೆ. ಅಪಾಯಕಾರಿ ಸೈಡ್ ಲೋಡಿಂಗ್ ಸೈಡ್‌ಲೋಡಿಂಗ್ ಕೆಲವೊಮ್ಮೆ ಉತ್ತಮವಾಗಿದ್ದರೂ, ಅಪಾಯಕಾರಿ. ಎಪಿಕೆ ಫೈಲ್‌ಗಳು ಅಪರಿಚಿತ ಅಥವಾ ವಿಶ್ವಾಸಾರ್ಹವಲ್ಲದ ಮೂಲದಿಂದ ಬಂದಲ್ಲಿ ಅದರಲ್ಲಿ ಮಾಲ್ವರೆಗಳು ಇರಬಹುದು ಮತ್ತು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು. ನಿಮ್ಮ ಫೋನಿಗೆ ಪ್ರವೇಶ ಪಡೆಯಬಹುದು ಮತ್ತು ಹಣಕಾಸು ನಷ್ಟವೂ ಸಂಭವಿಸಬಹುದು. ಹೀಗಾಗಿ ಎಪಿಕೆ ಫೈಲ್‌ ಗಳನ್ನು ಡೌನ್‌ಲೋಡ್ ಮಾಡುವಾಗ ಅವು ವಿಶ್ವಾಸಾರ್ಹ ಮೂಲವೇ ಎಂದು ಗಮನಿಸಬೇಕು. ಅಪರಿಚಿತ ಸಂದೇಶಗಳು ಅಥವಾ ಲಿಂಕ್ ಮೂಲಕ ಬಂದಲ್ಲಿ ಅದನ್ನು ಅಲಕ್ಷಿಸಬೇಕು. ಪರಿಚಿತರಿಂದಲೇ ಖೆಡ್ಡಾ ಬಹಳಷ್ಟು ಬಾರಿ ಎಪಿಕೆ ಫೈಲ್‌ ಗಳು ಪರಿಚಿತರಿಂದಲೇ ಬರಬಹುದು. ಆರಂಭದಲ್ಲಿ ಹ್ಯಾಪಿ ನ್ಯೂ ಇಯರ್ ಎನ್ನುವ ಸಂದೇಶ ಬರಬಹುದು. ನಂತರ ಕ್ಲಿಕ್ ಮಾಡಿದರೆ ನಿಮಗಾಗಿ ವಿಶೇಷ ಗ್ರೀಟಿಂಗ್ ಎಂದು ಇರಬಹುದು. ಕೆಲವೊಮ್ಮೆ ಸಹೋದ್ಯೋಗಿ, ದೂರದ ಸಂಬಂಧಿಕರು ಅಥವಾ ಸ್ನೇಹಿತರ ಕಡೆಯಿಂದಲೂ ಬರಬಹುದು. ಯಾವುದೇ ಪ್ರಕರಣಗಳಲ್ಲಿ ದಾಳಿಕೋರರು ಲಿಂಕ್ ಹರಡಲು ವಾಟ್ಸ್‌ಆ್ಯಪ್ ಬಳಸುವುದೇ ಹೆಚ್ಚು. ಹೀಗಾಗಿ ವಿಶ್ವಾಸಾರ್ಹ ಮೂಲವೆಂದು ತಿಳಿದು ಡೌನ್‌ಲೋಡ್ ಮಾಡುವ ಅಪಾಯ ಹೆಚ್ಚಾಗಿರುತ್ತದೆ. ಹೊಸ ವರ್ಷದ ಶುಭಾಶಯ ಎನ್ನುವ ಸಂದೇಶ ಬಂದ ನಂತರ ಅದರಲ್ಲಿ ಸಂದೇಶ ನೋಡಲು ಆ್ಯಪ್ ಇರುತ್ತದೆ. ಅದನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡುವುದಿಲ್ಲ. ಬದಲಾಗಿ ಎಪಿಕೆ ಫೈಲ್ ಆಗಿರುತ್ತದೆ. ಅದು ನಿಮ್ಮನ್ನು ಜಾಲಕ್ಕೆ ಬೀಳಿಸುವ ತಂತ್ರವಾಗಿದೆ. ಸರ್ಕಾರದ ಹೆಸರಿನಲ್ಲೂ ಎಪಿಕೆ ಇತ್ತೀಚೆಗೆ ವಾಟ್ಸ್‌ಆ್ಯಪ್ನಲ್ಲಿ ಪ್ರಸಾರ ಮಾಡಲಾಗುತ್ತಿರುವ ಎಪಿಕೆ ಫೈಲ್‌ಗಳನ್ನು ಸರ್ಕಾರದಿಂದ ಬಂದಿರುವ ರೀತಿಯಲ್ಲಿ ಕಳುಹಿಸಲಾಗುತ್ತಿದೆ. RTO ಚಲನ್.ಎಪಿಕೆ, SBI ಯೋಜನಾ.ಎಪಿಕೆ ಅಥವಾ ಕಿಸಾನ್‌ಯೋಜನಾ.ಎಪಿಕೆ ಎಂಬ ಹೆಸರಿನಲ್ಲಿ ಕಳುಹಿಸಲಾಗುತ್ತಿದೆ. ಜನರು ಭಯ ಅಥವಾ ಆಸೆಯಿಂದ ಟ್ರಾಫಿಕ್ ಚಲನ್ ಅಥವಾ ಸರ್ಕಾರದ ಯೋಜನೆಗಳ ಕುರಿತಾದ ಸಂದೇಶ ಎಂದುಕೊಂಡು ಎಪಿಕೆಯನ್ನು ಕ್ಲಿಕ್ ಮಾಡುತ್ತಾರೆ. ಆದರೆ ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಕಳುಹಿಸಿರುವ ಸಂದೇಶ ಹೊಸದಾಗಿದೆ. ವಂಚಕರು ಹೊಸ ಕಾರ್ಯತಂತ್ರವನ್ನು ರೂಪಿಸಿದ್ದಾರೆ. ಅದರಲ್ಲಿ ಹೊಸ ವರ್ಷದ ಗಿಫ್ಟ್‌.ಎಪಿಕೆ, ಕ್ರಿಸ್ಮಸ್ ಗ್ರೀಟಿಂಗ್.ಎಪಿಕೆ ಅಥವಾ ಲಾಸ್ಟ್‌ ಇಯರ್‌ ನ್ಯೂಯಿರ್ ಪಾರ್ಟಿ ಪಿಕ್ಸ್‌.ಎಪಿಕೆ ಮೊದಲಾಗಿ ಕಳುಹಿಸುತ್ತಿದ್ದಾರೆ. ಫೈಲ್ ಹೆಸರುಗಳನ್ನು ಸ್ಮರಣೀಯ ವೀಡಿಯೋ ಅಥವಾ ಫೋಟೋ ಎನ್ನುವಂತೆ ಕಾಣುವ ರೀತಿಯಲ್ಲಿ ಕಳುಹಿಸಲಾಗುತ್ತಿದೆ. ಹೆಸರುಗಳು ಬದಲಾಗಿದ್ದರೂ ಅದರಲ್ಲಿರುವ ಮಾಲ್ವರೆ ಒಂದೇ ಆಗಿರುತ್ತದೆ. ಒಮ್ಮೆ ಇನ್‌ ಸ್ಟಾಲ್ ಮಾಡಿದರೆ ನಿಮ್ಮ ಫೋನ್ ನಿಯಂತ್ರಣ ದುರುಳರ ಕೈಗೆ ಹೊರಟು ಹೋಗಲಿದೆ. ವೈಯಕ್ತಿಕ ಡಾಟಾದಿಂದ ಹಣಕಾಸು ವಿವರಗಳವರೆಗೆ ಎಲ್ಲವೂ ಬಹಿರಂಗವಾಗಿಬಿಡುತ್ತದೆ.

ವಾರ್ತಾ ಭಾರತಿ 28 Dec 2025 3:54 pm

ಹಳೇ ಪ್ರೀತಿಯೇ ಗಾನವಿ ಆತ್ಮಹ್ಮತ್ಯೆಗೆ ಕಾರಣವಾಯ್ತಾ?; ಸೂರಜ್ ಕುಟುಂಬಸ್ಥರು ಹೇಳಿದ್ದಿಷ್ಟು

ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಗಾನವಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿತ್ತು. ಆಕೆಯ ಕುಟುಂಬಸ್ಥರು ಸೂರಜ್‌ ವರದಕ್ಷಿಣೆ ಕಿರುಕುಳ ನೀಡಿದ್ದರು. ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿದ್ದ ಗಾನವಿ ಪತಿ ಸೂರಜ್ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ಗಾನವಿ ಕುಟುಂಬದ ವಿರುದ್ಧವೇ ದೂರು ದಾಖಲಾಗಿದೆ. ಗಾನವಿಗಿದ್ದ ಹಳೆಯ ಪ್ರೇಮ ಸಂಬಂಧವೇ ಈ ಎಲ್ಲಾ ದುರಂತಗಳಿಗೆ ಕಾರಣ ಎನ್ನುವುದು ಬಯಲಾಗಿದೆ.

ವಿಜಯ ಕರ್ನಾಟಕ 28 Dec 2025 3:46 pm

ಪ್ರಧಾನಿ ಮೋದಿ ಸಂಪುಟದೊಂದಿಗೆ ಸಮಾಲೋಚಿಸದೆ ಮನರೇಗಾವನ್ನು ರದ್ದುಗೊಳಿಸಿದ್ದಾರೆ: ರಾಹುಲ್ ಗಾಂಧಿ ಆರೋಪ

ಹೊಸದಿಲ್ಲಿ,ಡಿ.28: ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬಂಟಿಯಾಗಿ ಮನರೇಗಾವನ್ನು ನಾಶಗೊಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು, ಸಂಪುಟದೊಂದಿಗೆ ಸಮಾಲೋಚಿಸದೆ ಕಾಯ್ದೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮನರೇಗಾ ಕೇವಲ ಒಂದು ಯೋಜನೆಯಾಗಿರಲಿಲ್ಲ, ಅದು ದುಡಿಯುವ ಹಕ್ಕನ್ನು ಆಧರಿಸಿದ್ದ ಪರಿಕಲ್ಪನೆಯಾಗಿತ್ತು. ಮನರೇಗಾ ಮೂಲಕ ದೇಶದ ಕೋಟ್ಯಂತರ ಜನರಿಗೆ ಕನಿಷ್ಠ ವೇತನವನ್ನು ಖಚಿತಗೊಳಿಸಲಾಗಿತ್ತು. ಪಂಚಾಯತ್ ರಾಜ್‌ನಲ್ಲಿ ನೇರ ರಾಜಕೀಯ ಸಹಭಾಗಿತ್ವ ಮತ್ತು ಹಣಕಾಸು ಬೆಂಬಲಕ್ಕೆ ಮನರೇಗಾ ಮಾರ್ಗವಾಗಿತ್ತು. ಪ್ರಧಾನಿಯವರು ತನ್ನ ಸಂಪುಟದೊಂದಿಗೆ ಸಮಾಲೋಚಿಸದೆ ಮತ್ತು ಈ ವಿಷಯವನ್ನು ಅಧ್ಯಯನ ಮಾಡದೆ ಏಕಾಂಗಿಯಾಗಿ ಅದನ್ನು ನಾಶಗೊಳಿಸುತ್ತಿದ್ದಾರೆ ಎಂದು ಹೇಳಿದರು. ಮನರೇಗಾವನ್ನು ರದ್ದುಗೊಳಿಸುವ ಮೂಲಕ ಮೋದಿ ಸರಕಾರವು ಹಕ್ಕುಗಳ ಪರಿಕಲ್ಪನೆ ಮತ್ತು ಒಕ್ಕೂಟ ರಚನೆಯ ಮೇಲೆ ದಾಳಿ ನಡೆಸುತ್ತಿದೆ. ಅದು ರಾಜ್ಯಗಳಿಂದ ಹಣವನ್ನು ಕಿತ್ತುಕೊಳ್ಳುತ್ತಿದೆ. ಇದು ಅಧಿಕಾರ ಮತ್ತು ಹಣಕಾಸಿನ ಕೇಂದ್ರೀಕರಣವಾಗಿದ್ದು, ದೇಶಕ್ಕೆ ಮತ್ತು ಬಡವರಿಗೆ ಹಾನಿಯನ್ನುಂಟು ಮಾಡುತ್ತದೆ. ಪ್ರಧಾನಿ ಕಚೇರಿಯು ಸಚಿವರು ಅಥವಾ ಸಂಪುಟದೊಂದಿಗೆ ಸಮಾಲೋಚಿಸದೇ ನೇರವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದು ದೇಶದಲ್ಲಿ ‘ಒನ್-ಮ್ಯಾನ್ ಶೋ’ ನಡೆಯುತ್ತಿದೆ ಎನ್ನುವುದನ್ನು ತೋರಿಸಿದೆ ಎಂದು ಹೇಳಿದರು. ಮನರೇಗಾ ರದ್ದತಿಯಿಂದ ಗೌತಮ್‌ ಅದಾನಿಯಂತಹ ಕೆಲವೇ ಬಂಡವಾಳಶಾಹಿಗಳಿಗೆ ಲಾಭವಾಗಲಿದೆ ಎಂದು ಹೇಳಿದ ರಾಹುಲ್ ಗಾಂಧಿ, ಬಡವರಿಂದ ಹಣವನ್ನು ಕಿತ್ತುಕೊಳ್ಳುವುದು ಮತ್ತು ಅದನ್ನು ಅದಾನಿಯಂತಹ ವ್ಯಕ್ತಿಗಳಿಗೆ ನೀಡುವುದು ಮನರೇಗಾ ರದ್ದತಿಯ ಉದ್ದೇಶವಾಗಿದೆ ಎಂದು ಹೇಳಿದರು.

ವಾರ್ತಾ ಭಾರತಿ 28 Dec 2025 3:34 pm

ಕರುಳಿನ ಆರೋಗ್ಯಕ್ಕೆ ಉತ್ತಮ ಸಕ್ಕರೆ ಯಾವುದು?

ಎಲ್ಲಾ ಆರೋಗ್ಯ ತಜ್ಞರು ಸಕ್ಕರೆ ಸೇವನೆಯನ್ನು ಕಡಿಮೆಗೊಳಿಸಬೇಕು ಎಂದೇ ಸಲಹೆ ನೀಡಿದ್ದಾರೆ. ರುಚಿಗಾಗಿ ಬಳಸುವ ಸಕ್ಕರೆ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸಬಹುದು ಮತ್ತು ದೀರ್ಘಕಾಲೀನ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ವಯಸ್ಕರು ಮತ್ತು ಮಕ್ಕಳು ಸಕ್ಕರೆ ಸೇವನೆ ಪ್ರಮಾಣವನ್ನು ಪ್ರತಿದಿನ 58 ಗ್ರಾಂಗಳಷ್ಟು ಅಥವಾ 14 ಚಮಚ ಅಥವಾ ಶೇ 5ರಿಂದ ಶೇ 10ರಷ್ಟು ಒಟ್ಟು ಕ್ಯಾಲರಿಗೆ ಸೀಮಿತಗೊಳಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಎಲ್ಲಾ ಆರೋಗ್ಯ ತಜ್ಞರು ಸಕ್ಕರೆ ಸೇವನೆಯನ್ನು ಕಡಿಮೆಗೊಳಿಸಬೇಕು ಎಂದೇ ಸಲಹೆ ನೀಡುತ್ತಾರೆ. ರುಚಿಗಾಗಿ ಬಳಸುವ ಸಕ್ಕರೆ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸಬಹುದು ಮತ್ತು ದೀರ್ಘಕಾಲೀನ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು! ಆದರೆ ಸಂಸ್ಕರಿತ ಸಕ್ಕರೆಯ ಬಳಕೆ ಬದಲಿಸಿದಲ್ಲಿ ಸಿಹಿಯನ್ನು ತೊಡೆದು ಹಾಕಿದ್ದೀರಿ ಎಂದು ಅರ್ಥವಲ್ಲ. ನಿಮ್ಮ ಸಿಹಿಯ ಬಯಕೆಗೆ ನೈಸರ್ಗಿಕವಾಗಿ ಬೇಕಾದಷ್ಟು ಆರೋಗ್ಯಕರ ಬದಲಿಗಳು ಸಿಗುತ್ತವೆ. ಬೆಂಗಳೂರಿನ ಸಿಎಂಐ ಆಸ್ಪತ್ರೆಯಲ್ಲಿ ವೈದ್ಯಕೀಯ ಜಠರಕರುಳಿನಶಾಸ್ತ್ರ (ಗ್ಯಾಸ್ಟ್ರೋಎಂಟರಾಲಜಿ) ಸಲಹಾತಜ್ಞರಾದ ಡಾ ಅನುಪಮ ಎನ್‌ಕೆ ಹೇಳುವ ಪ್ರಕಾರ,” ಜಠರಕರುಳಿನತಜ್ಞರ ದೃಷ್ಟಿಕೋನದಲ್ಲಿ ಸಿಹಿ ಮುಖ್ಯವಾಗಿ ಜೀರ್ಣಕ್ರಿಯೆ, ಕರುಳಿನ ಆರೋಗ್ಯ, ಆಮ್ಲೀಯತೆ, ಹೊಟ್ಟೆ ಉಬ್ಬುವುದು ಮತ್ತು ದೀರ್ಘಕಾಲೀನ ಕರುಳಿನ ಸಮತೋಲನ ತಪ್ಪಿಸುವಲ್ಲಿ ಪರಿಣಾಮ ಬೀರುವುದು ಆಗಿರುತ್ತದೆ. ಯಾವುದೇ ಸಿಹಿ ಸಂಪೂರ್ಣ ಹಾನಿಕರವಲ್ಲ. ಆದರೆ ಮಧ್ಯಮ ಪ್ರಮಾಣದಲ್ಲಿ ಸೇವಿಸುವುದು ಮುಖ್ಯವಾಗುತ್ತದೆ.” ಜಠರಕರುಳಿಗೆ ಯಾವ ಸಿಹಿ ಉತ್ತಮ? ವೈಟ್ ಶುಗರ್ (ಬಿಳಿ ಸಕ್ಕರೆ) ಕರುಳಿನ ಆರೋಗ್ಯದ ಮೇಲೆ ಅತಿ ಕೆಟ್ಟ ಪರಿಣಾಮ ಬೀರುತ್ತದೆ. ಅದು ಬಹಳ ಸಂಸ್ಕರಿತ ಆಹಾರ ಮತ್ತು ಹಾನಿಕರ ಕರುಳಿನ ಬ್ಯಾಕ್ಟೀರಿಯಕ್ಕೆ ನೆಲೆ ನೀಡುತ್ತದೆ. ಅದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಸಿಡಿಟಿ, ಗ್ಯಾಸ್ ಮತ್ತು ಉರಿಯೂತ ಹೆಚ್ಚಾಗಬಹುದು. ನಿಯಮಿತವಾಗಿ ಸೇವಿಸುವುದಿಂದ ಆಸಿಡ್ ರಿಫ್ಲಕ್ಸ್ ಹೆಚ್ಚಾಗಬಹುದು, ಕರುಳಿನ ಉರಿಯೂತದ ಲಕ್ಷಣಗಳೂ ಮತ್ತು ಫ್ಯಾಟಿ ಲಿವರ್ ರೋಗಕ್ಕೆ ಕಾರಣವಾಗಬಹುದು. ಬ್ರೌನ್ ಶುಗರ್ (ಕಂದು ಸಕ್ಕರೆ)ಯು ವೈಟ್ ಶುಗರ್‌ನಿಂದ ಸ್ವಲ್ಪ ಮಟ್ಟಿಗೆ ಉತ್ತಮ. ಅದು ಕರುಳಿನಲ್ಲಿ ಸಂಸ್ಕರಿತ ಸಕ್ಕರೆಯಂತೆಯೇ ಪರಿಣಾಮ ಬೀರುತ್ತದೆ. ಹೊಟ್ಟೆ ಉಬ್ಬರಿಸುವಿಕೆ ಮತ್ತು ಆಮ್ಲೀಯತೆ ತರುತ್ತದೆ. ಸಣ್ಣ ಪ್ರಮಾಣದಲ್ಲಿರುವ ಖನಿಜಗಳಿಂದ ಜೀರ್ಣಾಂಗ ವ್ಯವಸ್ಥೆಯ ರಕ್ಷಣೆಯಾಗದು. ಬೆಲ್ಲ ಕಡಿಮೆ ಸಂಸ್ಕರಿತ ಆಹಾರ ಮತ್ತು ಸಕ್ಕರೆಗಿಂತ ಬೇಗನೆ ಜೀರ್ಣವಾಗುತ್ತದೆ. ಸಣ್ಣ ಪ್ರಮಾಣದಲ್ಲಿ ಬಳಸಿದರೆ ಕರುಳಿನ ಚಲನೆಗಳಿಗೆ ನೆರವಾಗಬಹುದು. ಆದರೆ ಅತಿಯಾಗಿ ಸೇವಿಸಿದರೆ ಗ್ಯಾಸ್, ಬೇಧಿ ಮತ್ತು ಆಮ್ಲೀಯತೆಗೆ ಕಾರಣವಾಗಬಹುದು. ಮುಖ್ಯವಾಗಿ ಸೂಕ್ಷ್ಮ ಹೊಟ್ಟೆಗಳಿದ್ದವರಿಗೆ ಸಮಸ್ಯೆ ಕಂಡುಬರಬಹುದು. ಜೇನುತುಪ್ಪವನ್ನು ಸಣ್ಣ ಪ್ರಮಾಣದಲ್ಲಿ ಸೇವಿಸಿದರೆ ಉತ್ತಮ. ಅದರಲ್ಲಿರುವ ಬ್ಯಾಕ್ಟೀರಿಯವಿರೋಧಿ ತತ್ವಗಳು ಕರುಳಿನ ಸಮಸ್ಯೆ ಗುಣಪಡಿಸಲು ನೆರವಾಗಬಹುದು. ಆದರೆ ಅತಿಯಾದರೆ ಅಧಿಕ ಫ್ರಕ್ಟೋಸ್ ಇರುವುದರಿಂದ ಹೊಟ್ಟೆ ಉಬ್ಬರಿಸುವಿಕೆ, ಬೇಧಿ, ರಿಫ್ಲಕ್ಸ್ ಕಂಡುಬರಬಹುದು. ಎರೊಥ್ರಿಟಾಲ್ ಅನ್ನು ಮುಖ್ಯವಾಗಿ ಸಣ್ಣ ಕರುಳಿನಲ್ಲಿ ಹೀರಿಕೊಳ್ಳುವುದರಿಂದ ಕರುಳಿನ ಆರೋಗ್ಯಕ್ಕೆ ಸುರಕ್ಷಿತ. ಸಕ್ಕರೆ ಆಲ್ಕೋಹಾಲ್‌ಗಿಂತ ಕಡಿಮೆ ಗ್ಯಾಸ್ ತರುತ್ತದೆ. ಹಾಗಿದ್ದರೂ ದೊಡ್ಡ ಪ್ರಮಾಣದಲ್ಲಿ ಸೇವಿಸಿದರೆ ಸೂಕ್ಷ್ಮ ಹೊಟ್ಟೆಯಿರುವವರಿಗೆ ಅಹಿತಕರ ಭಾವನೆ ತರಬಹುದು. ಸ್ಟೆವಿಯಾ (ಮಧುವಂತ) ರಕ್ತದ ಸಕ್ಕರೆ ಪ್ರಮಾಣದ ಮೇಲೆ ಹಾನಿ ತರದು. ಜೀರ್ಣಕ್ರಿಯೆಗೆ ಉತ್ತಮ. ಆದರೆ ಸಂಸ್ಕರಿತ ಸ್ಟೆವಿಯ ಉತ್ಪನ್ನಗಳಿಂದ ಹೊಟ್ಟೆ ಉಬ್ಬರಿಸಬಹುದು ಅಥವಾ ವಾಕರಿಕೆಯ ಅನುಭವವಾಗಬಹುದು. ಮಾಂಕ್ ಫ್ರುಟ್ ಅನ್ನು ಕರುಳಿನ ಆರೋಗ್ಯಕ್ಕೆ ಉತ್ತಮ ಎಂದು ಪರಿಗಣಿಸಲಾಗುತ್ತದೆ. ಅದು ಕರುಳಿನಲ್ಲಿ ಹುದುಗುವುದಿಲ್ಲ. ಹೊಟ್ಟೆ ಉಬ್ಬರಿಸುವುದಿಲ್ಲ. ಆಮ್ಲೀಯತೆ ಹೆಚ್ಚಿಸುವುದಿಲ್ಲ. ಐಬಿಎಸ್ ಇದ್ದ ಮಂದಿಗೂ ಉತ್ತಮವಾಗಿರುತ್ತದೆ.

ವಾರ್ತಾ ಭಾರತಿ 28 Dec 2025 3:28 pm