SENSEX
NIFTY
GOLD
USD/INR

Weather

22    C
...

Kalaburagi | ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಇರಬೇಕು: ಡಾ.ಸಿ.ಸೋಮಶೇಖರ

ಕಲಬುರಗಿ: ಓದು ನಿರಂತರವಾದರೆ ಜ್ಞಾನ ಮತ್ತು ಪರೀಕ್ಷೆ ಫಲಿತಾಂಶ ಉತ್ತಮವಾಗುತ್ತದೆ. ಸಾಧನೆಗೆ ಬಡತನ ಅಡ್ಡಿ ಬರಬಾರದು, ಜ್ಞಾನದ ಹಸಿವು ಮಕ್ಕಳಲ್ಲಿ ಇದ್ದಾಗ ಜೀವನ ಯಶಸ್ವಿಯಾಗುತ್ತದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಹೇಳಿದರು. ಸೋಮವಾರ ನಗರದ ಸತ್ಯಂ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಓದಿನ ಕಡೆ ಗಮನ ಕೊಟ್ಟು ಹೆಚ್ಚು ಅಂಕಗಳನ್ನು ಪಡೆಯುವಲ್ಲಿ ಹಾಗೂ ಯಶಸ್ವಿಯಾಗಲು ಶಿಕ್ಷಕರ ಶ್ರಮ ಅವಶ್ಯಕತೆ ಇದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಬಿ.ಎಚ್. ನಿರಗುಡಿ, ವಿದ್ಯಾರ್ಥಿಗಳು ಸತತ ಅಭ್ಯಾಸ ಮಾಡಿ ಗುರಿ ಮುಟ್ಟುವ ಕಡೆ ಪ್ರಯತ್ನ ಮಾಡಬೇಕು, ಮೊಬೈಲ್ ನಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗುರೂಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕಲ್ಯಾಣರಾವ ಶೀಲವಂತ ಅವರು ಮಾತನಾಡುತ್ತಾ, ಮಕ್ಕಳು ತರಗತಿಯಲ್ಲಿ ಉಪನ್ಯಾಸಕರು ಹೇಳಿದ ವಿಷಯಗಳನ್ನು ಸರಿಯಾಗಿ ಮನನ ಮಾಡಿಕೊಂಡು ಓದಿದಾಗ ನಮ್ಮ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದರು. ದಿಶಾ ಪಿಯು ಕಾಲೇಜಿನ ಅಧ್ಯಕ್ಷರಾದ ಶಿವಾನಂದ ಖಜೂರಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕರಾದ ಮಹೇಶ್ ಗಡಗಿ, ಸಂತೋಷ ಪಿಳ್ಳೆ , ಕಾಶೀನಾಥ್ ಪಂಚಾಳ, ಸಚ್ಚಿದಾನಂದ ಪಾಟೀಲ್, ರೂಪಾ ಕುಲಕರ್ಣಿ, ರಾಜೇಶ್ವರಿ ಸಾಲಿಮಠ, ನಿರ್ಮಲಾ ಕಣ್ಮುಸೆ, ವಿಶ್ವಜೋತಿ ಮಠ, ಡಾ.ಸುಲೋಚನಾ ಅಂಕಲಗಿ ಇದ್ದರು. ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ಯಾಡ್, ಫೈಲ್, ಪೆನ್ನು ನೀಡಲಾಯಿತು.

ವಾರ್ತಾ ಭಾರತಿ 17 Feb 2026 10:45 pm

ಮಾನ್ಯತೆ ನವೀಕರಣ ಆಗದ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಸ್ಯೆ ಇಲ್ಲ : ಮಧು ಬಂಗಾರಪ್ಪ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಮಾನ್ಯತೆ ನವೀಕರಣ ಆಗದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತಾ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.31ರವರೆಗೆ ವಿಸ್ತರಣೆ ಆಗಿರುವುದರಿಂದ ಈ ಅವಧಿಯಲ್ಲಿ ಶಾಲೆಗೆ ಮಾನ್ಯತೆಯಿದೆ ಎಂದೇ ಭಾವಿಸಲಾಗುತ್ತದೆ ಎಂದರು. ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ಸದನ ಸಮಿತಿ ಅಧ್ಯಯನ ನಡೆಸುತ್ತಿದ್ದು, ಈ ಸಮಿತಿಯಿಂದ ಅಂತಿಮವಾಗಿ ಕೊಡುವ ವರದಿಯನ್ನು ನಾವು ಸ್ವೀಕರಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯದಲ್ಲಿ 12 ಸಾವಿರಕ್ಕೂ ಅಧಿಕ ಖಾಸಗಿ ಶಾಲೆಗಳಿದ್ದರೂ, ಸುಮಾರು 7 ಸಾವಿರ ಶಾಲೆಗಳು ಮಾತ್ರ ಅರ್ಜಿ ಸಲ್ಲಿಸಿವೆ. ಉಳಿದಂತೆ ಶಾಲೆಗಳು ಪುಟ್ಟಣ್ಣ ಸಮಿತಿಯ ವರದಿ ಸಲ್ಲಿಕೆಯಾದ ಬಳಿಕವೇ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದರು.

ವಾರ್ತಾ ಭಾರತಿ 17 Feb 2026 10:42 pm

Kalaburagi | ಕಳ್ಳತನ ಆರೋಪಿಗಳ ಬಂಧನ ; 26 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ : ಡಾ.ಶರಣಪ್ಪ ಎಸ್.ಡಿ.

ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಮತ್ತು ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ಇತರೆ ಕಡೆಗಳಲ್ಲಿ ದಾಖಲಾಗಿದ್ದ ಸುಲಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಏಳು ಆರೋಪಿಗಳನ್ನು ಬಂಧಿಸಿ ಅವರಿಂದ ಚಿನ್ನಾಭರಣ, ವಾಹನಗಳು ಸೇರಿದಂತೆ ಒಟ್ಟಾರೆ 26.11 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. ವಿಶ್ವವಿದ್ಯಾಲಯ ಠಾಣಾ ವ್ಯಾಪ್ತಿಯ ಮೊದಲ ಕಾರ್ಯಾಚರಣೆಯಲ್ಲಿ ಎಂ.ಎಸ್.ಕೆ ಮಿಲ್ ಜಿಲನಾಬಾದ್ ನಿವಾಸಿಗಳಾದ ಇಮ್ರಾನ್ ಶೇಖ್, ಮುಹಮ್ಮದ್ ಸಮೀರ್, ಮುಹಮ್ಮದ್ ಇಮ್ತಿಯಾಜ್ ಹಾಗೂ ರುಕ್ಮೋದ್ಧಿನ ಬಾಬಾ ಎಂಬಾತರನ್ನು ವಶಕ್ಕೆ ಪಡೆದು ಅವರಿಂದ 12.25 ಲಕ್ಷ ರೂ. ಮೌಲ್ಯದ 40 ಗ್ರಾಂ ಚಿನ್ನ, ಒಂದು ಪಲ್ಸರ್ ಬೈಕ್ ಹಾಗೂ ಕ್ರಿಟಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅದೇ ಠಾಣೆಯ ಮತ್ತೊಂದು ಮನೆಗಳ್ಳತನ ಪ್ರಕರಣದಲ್ಲಿ ಚುನ್ನಾಭಟ್ಟಿಯ ನಿವಾಸಿ ಮುಹಮ್ಮದ್ ಝಮೀರ್ ಬಸೀರಮಿಯಾ ಎಂಬಾತನನ್ನು ವಶಕ್ಕೆ ಪಡೆದು ಆತನಿಂದ 40 ಗ್ರಾಂ ಬಂಗಾರ, 40 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ 66 ಸಾವಿರ ರೂ. ನಗದು ಹೀಗೆ ಒಟ್ಟು 6.66 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣದಲ್ಲಿ ಕೆಸರಟಗಿ ನಿವಾಸಿಗಳಾದ ಆಕಾಶ ಬಾಳಿ ಹಾಗೂ ನಾಗರಾಜ್ ಪಾಟೀಲ್ ಎಂಬಾತರನ್ನು ವಶಕ್ಕೆ ಪಡೆದು ಅವರಿಂದ 7.20 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮತ್ತು ಪಲ್ಸರ್ ಎನ್.ಎಸ್ ಬೈಕ್ ಸೇರಿ ಒಟ್ಟು 26,11,000 ರೂ. ಮೌಲ್ಯದ ಮಾಲು ಅನ್ನು ಜಪ್ತಿ ಮಾಡಲಾಗಿದೆ ಎಂದು ವಿವರಿಸಿದರು. ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ : ಅಶೋಕ ನಗರದ ದತ್ತ ನಗರದ ನಿವಾಸಿ ಕೀರ್ತಮ್ಮ ಎಂಬ ವೃದ್ಧೆ ತರಕಾರಿ ತರಲು ಹೋದಾಗ, ಬೈಕ್ ಮೇಲೆ ಬಂದ ಇಬ್ಬರು ಅಪರಿಚಿತರು ಡಾಕ್ಟರ್ ಶ್ರೀನಿವಾಸ ಅವರ ಮನೆ ಎಲ್ಲಿದೆ? ಎಂದು ವಿಳಾಸ ಕೇಳುವ ನೆಪ ಮಾಡಿದ್ದರು. ಮೊಬೈಲ್‌ನಲ್ಲಿ ಫೋಟೋ ತೋರಿಸುವ ಸೋಗಿನಲ್ಲಿ ವೃದ್ಧೆಯ ಕೊರಳಲ್ಲಿದ್ದ 38 ಗ್ರಾಂ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು. ಈ ಸಂಬಂಧ ತನಿಖೆ ನಡೆಸಿದ ಅಶೋಕ ನಗರ ಪೊಲೀಸರು ಕೆಸರಟಗಿ ನಿವಾಸಿಗಳಾದ ಆಕಾಶ ಮತ್ತು ನಾಗರಾಜ ಎಂಬ ಇಬ್ಬರು ಯುವಕರನ್ನು ಬಂಧಿಸಿ, ಅವರಿಂದ 7.20 ಲಕ್ಷ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ ಎಂದರು. ಅಂತರರಾಜ್ಯ ಸುಲಿಗೆಕೋರರ ಮೇಲೆ 'ಕೋಕಾ' ಪ್ರಯೋಗ: ಬಂಧಿತ ಆರೋಪಿಗಳಾದ ಇಮ್ರಾನ್ ಶೇಖ್ (12 ಪ್ರಕರಣ), ಇಮ್ಮಿಯಾಜ್ (13), ಸಮೀರ್ (11) ಹಾಗೂ ರುಕ್ಕೋದ್ದಿನ್ ಮೇಲೆ ಕರ್ನಾಟಕ ಹಾಗೂ ತೆಲಂಗಾಣದ ಜಹೀರಾಬಾದ್ ಸೇರಿದಂತೆ ವಿವಿಧೆಡೆ ಹತ್ತಾರು ದರೋಡೆ ಪ್ರಕರಣಗಳಿವೆ. ಈ ಗ್ಯಾಂಗ್ ಸಿಸಿಟಿವಿ ಇಲ್ಲದ ಕಡೆಗಳಲ್ಲೇ ಕೃತ್ಯವೆಸಗುತ್ತಿತ್ತು. ಅಂತರರಾಜ್ಯ ಗ್ಯಾಂಗ್‌ನ ಸರಣಿ ಅಪರಾಧಗಳನ್ನು ಪರಿಗಣಿಸಿ, ಇವರ ಮೇಲೆ ಕಠಿಣ 'ಕೋಕಾ' ಕಾಯ್ದೆ ಅಳವಡಿಸಲು ಕಲಬುರಗಿ ಪೊಲೀಸರು ನಿರ್ಧರಿಸಿದ್ದಾರೆ. ಪೊಲೀಸ್ ತಂಡಕ್ಕೆ ಶ್ಲಾಘನೆ : ಕಲಬುರಗಿ ನಗರದ ವಿಶ್ವವಿದ್ಯಾಲಯ ಮತ್ತು ಅಶೋಕ ನಗರ ಠಾಣೆಯ ಜಂಟಿ ಕಾರ್ಯಾಚರಣೆಯಲ್ಲಿ ಕುಖ್ಯಾತ ಸುಲಿಗೆಕೋರರನ್ನು ಬಂಧಿಸಿದ ಡಿಸಿಪಿ ಪ್ರವೀಣ ನಾಯಕ್, ಎಸಿಪಿಗಳಾದ ಬಸವೇಶ್ವರ ಹೀರಾ, ಶರಣಬಸಪ್ಪ ಸುಬೇದಾರ ಮಾರ್ಗದರ್ಶನದಲ್ಲಿ ಪಿ.ಐ ಚಂದ್ರಶೇಖರ ತಿಗಡಿ ಹಾಗೂ ಸತೀಶ್ ಕಣಿಮೇಶ್ವರ್ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಎಎಸ್ಐ ಸೈಯದ್ ಗೌಸ್ ಸೇರಿದಂತೆ ಇತರೆ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಿದ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಪ್ರಶಂಸನಾ ಪತ್ರ ವಿತರಿಸಿದರು.

ವಾರ್ತಾ ಭಾರತಿ 17 Feb 2026 10:42 pm

Bengaluru | 21.50 ಕೋಟಿ ಮೌಲ್ಯದ ಗಾಂಜಾ ಜಪ್ತಿ : ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 15 ಜನರನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಅಮೃತಹಳ್ಳಿ, ಹೆಬ್ಬಗೋಡಿ, ಜೆ.ಬಿ.ನಗರ, ಶೇಷಾದ್ರಿಪುರಂ, ಮಹಾಲಕ್ಷ್ಮೀಲೇಔಟ್ ಮತ್ತು ಗೋವಿಂದಪುರ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ಮಾದಕ ವಸ್ತುಗಳಾದ ಹೈಡ್ರೋ ಗಾಂಜಾ, ಗಾಂಜಾ, ಎಂಡಿಎಂಎ, ಕೊಕೇನ್ ಸೇರಿ ವಿವಿಧ ಬಗೆಯ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿಗಳನ್ನಾಧಾರಿಸಿ ಠಾಣೆಗಳಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡು ಸ್ಥಳಗಳ ಮೇಲೆ ದಾಳಿ ಮಾಡಿ, ಮೂವರು ವಿದೇಶಿ ಪ್ರಜೆಗಳು ಹಾಗೂ 12 ಮಂದಿ ಹೊರರಾಜ್ಯದ ಮಾದಕ ವಸ್ತು ಮಾರಾಟಗಾರರು ಒಳಗೊಂಡಂತೆ ಒಟ್ಟು 15 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಮಾದಕ ವಸ್ತುಗಳಾದ 9 ಕೆಜಿ 460 ಗ್ರಾಂ ಹೈಡ್ರೋ ಗಾಂಜಾ, 30 ಕೆಜಿ ಗಾಂಜಾ, 5 ಕೆಜಿ 677 ಗ್ರಾಂ ಎಂಡಿಎಂಎ, 131 ಗ್ರಾಂ ಕೊಕೇನ್, 462 ಮಿಲಿ ಹ್ಯಾಶಿಷ್‌ ಆಯಿಲ್, 1 ಕಾರು, 1 ದ್ವಿಚಕ್ರ ವಾಹನ, 4 ಮೊಬೈಲ್ ಫೋನ್‍ಗಳು ಮತ್ತು 24,500 ರೂ. ನಗದನ್ನು ವಶಪಡಿಸಿಕೊಂಡಿದ್ದು, ಎನ್‍ಸಿಬಿ ಪ್ರಕಾರ, ಇವುಗಳ ಒಟ್ಟು ಮೌಲ್ಯ 10.59 ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಮಾರುಕಟ್ಟೆ ಮೌಲ್ಯ 21.50 ಕೋಟಿ ರೂ.ಗಳಾಗಿವೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ವಿದೇಶಿ ಮತ್ತು ಹೊರರಾಜ್ಯದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದ್ದು, ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

ವಾರ್ತಾ ಭಾರತಿ 17 Feb 2026 10:40 pm

Bengaluru | ಆಸ್ತಿ ವಿಚಾರವಾಗಿ ತಂದೆಯ ಹತ್ಯೆ

ಬೆಂಗಳೂರು : ಆಸ್ತಿ ವಿಚಾರವಾಗಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ ಮುನಿಕೃಷ್ಣ(66) ಎಂಬುವರು ಕೊಲೆಯಾಗಿರುವ ತಂದೆ ಎಂದು ಗುರುತಿಸಲಾಗಿದ್ದು, ಪುತ್ರ ಮೋಹನ್ ಕುಮಾರ್ ಈ ಕೃತ್ಯವೆಸಗಿರುವುದಾಗಿ ಗೊತ್ತಾಗಿದೆ. ಮುನಿಕೃಷ್ಣ ಅವರು ಸ್ವಂತ ದುಡಿಮೆಯಿಂದ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಮಾಡಿದ್ದು, ಬಾಡಿಗೆ ಬರುತ್ತಿದೆ. ಕೆಲವು ಆಸ್ತಿಯ ವಿಲ್ ಅನ್ನು ಮೊಮಕ್ಕಳ ಹೆಸರಿಗೆ ಮಾಡಿದ್ದಾರೆ. ಇದೇ ವಿಚಾರಕ್ಕೆ ಪುತ್ರ ಮೋಹನ್ ಕುಮಾರ್ ಕಳೆದ ಕೆಲವು ದಿನಗಳಿಂದ ತಂದೆ ಜೊತೆ ಜಗಳವಾಡುತ್ತಿದ್ದನು. ಆಸ್ತಿ ಹಂಚಿಕೆ ವಿಚಾರವಾಗಿ ಶನಿವಾರ ಮತ್ತೆ ತಂದೆ ಜೊತೆ ಮೋಹನ್‍ಕುಮಾರ್ ಜಗಳವಾಡಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ರಾಡ್‍ನಿಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ತಲೆಗೆ ಗಂಭೀರ ಪೆಟ್ಟಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಂಗಳವಾರ ಬೆಳಗ್ಗೆ ಮುನಿಕೃಷ್ಣಪ್ಪ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಮಗ ತಲೆಮರೆಸಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಠಾಣೆ ಪೊಲೀಸರು ಕೊಲೆ ಪ್ರಕರಣದಾಖಲಿಸಿಕೊಂಡು ಆರೋಪಿ ಮೋಹನ್‍ಕುಮಾರ್‍ಗಾಗಿ ಶೋಧ ನಡೆಸುತ್ತಿದ್ದಾರೆ.

ವಾರ್ತಾ ಭಾರತಿ 17 Feb 2026 10:37 pm

ಬಜೆಟ್ ನಲ್ಲಿ ಅಫಜಲಪುರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ: ಶಿವಕುಮಾರ ನಾಟೀಕಾರ

ಅಫಜಲಪುರ: ತಾಲೂಕಿನ ಅತನೂರ ಗ್ರಾಮದ ನಡುವೆ ಕೈಗಾರಿಕಾ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂಬಂತೆ ಸೇರಿದಂತೆ ಅಫಜಲಪುರಕ್ಕೆ ಅನೇಕ ಯೋಜನೆಗಳನ್ನು ಘೋಷಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಆಗ್ರಹಿಸಿದ್ದಾರೆ. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸೂರತ್, ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ ಅತನೂರ ಹತ್ತಿರ ಇರುವ ಜಂಕ್ಷನ್ ನ ಪಕ್ಕದಲ್ಲಿ ಲಾಜಿಸ್ಟಿಕ್ ಹಾಗೂ ಟ್ರಾನ್ಸ್ಪೋರ್ಟ್ ಉದ್ಯೋಗ ವ್ಯಾಪಾರವನ್ನು ಬೆಳೆಯುವ ರೀತಿಯಲ್ಲಿ ಯೋಜನೆ ರೂಪಿಸಬೇಕು, ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಸಚಿವ ರಾಮಲಿಂಗಾರೆಡ್ಡಿ ಗಾಣಗಾಪುರಕ್ಕೆ ಬಂದು ಭಕ್ತರಿಂದ ನಿರ್ಮಾಣವಾಗುತ್ತಿರುವ ದಾಸೋಹ ಭವನ ಉದ್ಘಾಟನೆ ಮಾಡಿದ್ದಾರೆ. ಹೊರೆತು ರಾಜ್ಯ ಸರ್ಕಾರದಿಂದ ಯಾವುದೇ ಬಜೆಟ್ ಘೋಷಣೆ ಮಾಡದೆ ವಾಪಸ್ಸಾಗಿರುವುದು ಖಂಡನೀಯವಾಗಿದೆ. ಹಾಗಾಗಿ ಮಾ.6ರಂದು ನಡೆಯಲಿರುವ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಈ ಎರಡು ಯೋಜನೆಗಳು ಘೋಷಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಬೇಸಿಗೆಯ ದಿನದಲ್ಲಿ ಭೀಮಾ ನದಿಗೆ ನೀರಿನ ಸಮಸ್ಯೆಯನ್ನು ಎದುರಾಗಬಹುದು, ಹಾಗಾಗಿ ಮುಂಜಾಗೃತ ಅಂಗವಾಗಿ ಭೀಮಾ ನದಿಯ ಅಣೆಕಟ್ಟು, ಬ್ಯಾರೇಜ್ ಗಳಿಗೆ ಇಂಡಿ ಶಾಖಾ ಕಾಲುವೆಗಳಿಂದ ಕಾಲುವೆ ಮುಖಾಂತರ ನೀರು ತುಂಬಿಸಬೇಕು. ಅಮರ್ಜಾ ನದಿ ಹಾಗೂ ಬೋರಿಹಳ್ಳ ಎರಡು ಪುನಶ್ಚೇತನಗೊಳಿಸಿ ಅವುಗಳಿಗೆ ನೀರು ತುಂಬಿಸುವ ಯೋಜನೆಯನ್ನು ರೂಪಿಸಬೇಕು ಎಂದು ಹೇಳಿದರು. ಸ್ಥಳೀಯ ಶಾಸಕರು ಅಧಿಕಾರಕ್ಕೆ ಏರಿದ 8 ವರ್ಷಗಳಲ್ಲಿ ಒಂದೇ ಒಂದು ಕೆರೆಗೆ ನೀರು ಹರಿಸಿಲ್ಲ. ನೂರಾರು ಕೋಟಿ ಹಣ ಖರ್ಚಾದರೂ ಕೆರೆಗಳಿಗೆ ಒಂದು ಹನಿ ನೀರು ಕೂಡ ಬಿದ್ದಿಲ್ಲ. ಶಾಸಕರು ಸರಕಾರದಿಂದ ವಿಶೇಷ ಅನುದಾನವನ್ನು ತಂದು ಯಾವ ಅಭಿವೃದ್ಧಿ ಕೆಲಸವನ್ನು ಮಾಡಲು ಸಾಧ್ಯವಾಗಿಲ್ಲ. ಕೇವಲ ಮಗನಿಗೆ ಅಧಿಕಾರ ಕೊಡುವುದರಲ್ಲಿ ಮಗ್ನರಾಗಿದ್ದಾರೆ ಎಂದು ಹರಿಹಾಯ್ದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಸಿಂಗೆ, ರಾಜಕುಮಾರ ಉಕ್ಕಲಿ,ಮರೇಪ್ಪ ಜಮಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕಿನಲ್ಲಿ ಶಾಸಕರು ಮತ್ತು ಅವರ ಪುತ್ರ ಸೇರಿಕೊಂಡು ಸರಕಾರದಿಂದ ಬಂದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಲೂಟಿ ಮಾಡುತ್ತಿದ್ದಾರೆ. ಊಟಿ ಹೊಡೆದ ಹಣದಿಂದ ಅಕ್ರಮ ಆಸ್ತಿ ಮಾಡಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸಿದರೆ ಇಬ್ಬರು ಜೈಲಿಗೆ ಹೋಗುತ್ತಾರೆ. -ಶಿವಕುಮಾರ ನಾಟೀಕಾರ, (ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ)

ವಾರ್ತಾ ಭಾರತಿ 17 Feb 2026 10:35 pm

Bengaluru | ಕಸದ ರಾಶಿಯಲ್ಲಿ ನವಜಾತು ಶಿಶುವಿನ ಮೃತದೇಹ ಪತ್ತೆ

ಬೆಂಗಳೂರು : ಇಲ್ಲಿನ ಸುಬ್ರಹಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಸದ ಗುಡ್ಡೆಯಲ್ಲಿ ನವಜಾತು ಶಿಶು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಸಂಜೆ 7.50 ರ ಸುಮಾರಿನಲ್ಲಿ ಉತ್ತರಹಳ್ಳಿ ಪೂರ್ಣಪ್ರಜ್ಞಾ ಲೇಔಟ್ ಅಪಾರ್ಟ್‍ಮೆಂಟ್ ಹಿಂಭಾಗದ ಖಾಲಿ ಜಾಗದ ಮೈದಾನದಲ್ಲಿ ಹುಡುಗರು ಆಟವಾಡುತ್ತಿದ್ದರು. ಆ ಸಂದರ್ಭದಲ್ಲಿ ಮೈದಾನಲ್ಲಿದ್ದ ಕಸದ ಗುಡ್ಡೆ ಬಳಿ ಮಗು ಮೃತಪಟ್ಟಿರುವ ಸ್ಥಿತಿಯನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ನವಜಾತ ಶಿಶು ಮೃತಪಟ್ಟಿರುವುದು ಕಂಡು ಬಂದಿದೆ. ನವಜಾತ ಶಿಶುವನ್ನು ಬಿಸಾಡಿ ಹೋಗಿರುವ ಪೋಷಕರನ್ನು ಪತ್ತೆ ಮಾಡಿ ಅವರುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವಕನೋರ್ವ ಸುಬ್ರಹಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನವಜಾತ ಶಿಶುವಿನ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಾರ್ತಾ ಭಾರತಿ 17 Feb 2026 10:34 pm

Kalaburagi | ಕೇಂದ್ರ ಕಾರಾಗೃಹದಲ್ಲಿ ಯೋಗ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಆರ್ಟ್ ಆಫ್ ಲಿವಿಂಗ್ ಶಾಖೆ ಕಲಬುರಗಿ ಇವರುಗಳ ಸಹಯೋಗದೊಂದಿಗೆ “ಪ್ರಿಸನ್ ಸ್ಮಾರ್ಟಕೋರ್ಸ್ ಅಡಿ” ಒಂದು ವಾರದವರೆಗೆ ಬ್ಯಾರಕ್ ಸಂಖ್ಯೆ 5 ರಿಂದ 7ರ ವರೆಗಿನ ಒಟ್ಟು 116 ಬಂದಿಗಳಿಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ 3ನೇ ತಂಡದ ಯೋಗ ತರಬೇತಿ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧೀಕ್ಷಕರಾದ ರಾಕೇಶ್ ಕಾಂಬಳೆ ಅವರು ಸೋಮವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಲಬುರಗಿ ಆರ್ಟ ಆಫ್ ಲಿವಿಂಗ್ ವ್ಯವಸ್ಥಾಪಕ ಆಡಳಿತಾಧಿಕಾರಿ ದತ್ತಾತ್ರೇಯ ಚಿಂಚೂರ ಹಾಗೂ ಸಹಾಯಕ ಅಧೀಕ್ಷಕ ಚನ್ನಪ್ಪ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಜೈಲರ್ ಗಳಾದ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್, ಪುಂಡಲೀಕ ಟಿ.ಕೆ., ಶ್ಯಾಮ ಬಿದ್ರಿ ಹಾಗೂ ಕಾರಾಗೃಹದ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕ ನಾಗರಾಜ ಮುಲಗೆ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 17 Feb 2026 10:32 pm

Kalaburagi | ಢೋಹರ ಕಕ್ಕಯ್ಯನವರ ಜಾತ್ರಾ ಮಹೋತ್ಸವ : ಸನ್ಮಾನ ಸಮಾರಂಭ

ಕಲಬುರಗಿ: ನಗರದ ಜಗತ್ ಬಡಾವಣೆಯ ಶರಣ ಢೋಹರ ಕಕ್ಕಯ್ಯನವರ 34ನೇ ಜಾತ್ರಾ ಮಹೋತ್ಸವ ಅಂಗವಾಗಿ ಪಲ್ಲಕ್ಕಿ ಉತ್ಸವ, ಭವ್ಯ ಮೆರವಣಿಗೆ, ಸರಕಾರಿ ಹಾಗೂ ಅರೆ ಸರಕಾರಿ, ನಿವೃತ್ತ ನೌಕರರಿಗೆ, ಹಿರಿಯ ನಾಗರಿಕರಿಕರಿಗೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಭಿಷೇಕ್ ಅಲ್ಲಂಪ್ರಭು ಪಾಟೀಲ್, ಟ್ರಸ್ಟ್ ಅಧ್ಯಕ್ಷ ಸಾಯಬಣ್ಣ ಹೊಳ್ಕರ್, ಸುನೀತಾ ರಮೇಶ್ ಕಟಕೆ, ಶಂಕರ್ ಕೊಡ್ಲಾ, ಕಾಶಿರಾಯ ನಂದೂರಕರ್, ರುದ್ರಪ್ಪ ಹೋಳಕುಂದಾ, ರಮೇಶ ಹೋಸಮನಿ, ಶಿವಶರಣಪ್ಪ ಅಮೃತಪ್ಪ ಕೋಳಾರ್, ಸತೀಶ ಇಂಗಳೆ, ಗಣಪತಿ ಧರ್ಮಣ್ಣ ಜೋಗದ ನಾಕರ್, ಪ್ರೊ. ಭೀಮಣ್ಣ ಬೋನಾಳ, ಅನಿಲಕುಮಾರ ಸಾವಳಕರ್, ಲಿಂಗೋಜಿ ಗಾಜರೆ, ಮೋತಿಲಾಲ್ ಕಟಕೆ, ಡಾ. ಅಮೃತಾ ಕಟಕೆ, ರಮೇಶ ಗಾಯಧನಕರ್, ಮಾರುತಿ ಶೇರಖಾನೆ, ಧೋಂಡಿಬಾ ಜೋಗದ ನಾಕರ್, ಅಮೃತ ಹೋಟ್ಕರ್, ನಾರಾಯಣ ಗಾಯದನಕರ್, ವಿಜಯಕುಮಾರ್ ಗಾಜರೆ, ರಮೇಶ ಗಾಯದನಕರ್, ಶ್ರೀಮಂತ ಇಂಗಳೆ, ರಾಜಕುಮಾರ ಜೋಗಧನಕರ್, ಬಾಬುರಾವ ಕಟಕೆ, ಸುಭಾಷ ಗಾಯದನಕರ್, ಸಾಯಬಣ್ಣ ಗಾಜರೆ, ಕೃಷ್ಣ ಮಸಾಜಿ ಹೋಳಕರ್, ಸುಭಾಶಚಂದ್ರ ತ್ರಿಮುಖೆ, ಅನಿಲಕುಮಾರ ಸಾವಳಕರ, ಗಣಪತಿ ಕಾವಳೆ, ದೇವಿಂದ್ರ ಧಡಕೆ, ರಾಘವೇಂದ್ರ ಹೋಳಕರ್, ಮಲ್ಲಿಕಾರ್ಜುನ್ ಖರಟಮಲ್, ಅಮೃತ ಜಗದೆ, ಅರ್ಜುನ್ ಸೋನಕವಡೆ, ಸಂತೋಷ ಸೋನಾವಣೆ, ಡಾ.ಸಂತೋಷ ಕಟಕೆ, ನಾಗರಾಜ ಶೇರಖಾನೆ, ಸೂರ್ಯಕಾಂತ ಸಾವಳಕರ್, ಶಿವಾಜಿ ಜೋಗಧನಕರ್, ಕಮಲಾಬಾಯಿ ಹೋಳಕರ್, ಶೇಷಾಬಾಯಿ ಗಾಯದನಕರ್, ಸೀಮಾ ಗಾಜರೆ, ಸುಮಿತ್ರಾಬಾಯಿ ಹೊಟ್ಕರ್, ಪದ್ಮನಿ ಕಟಕೆ ಸೇರಿದಂತೆ ಟ್ರಸ್ಟ್ ನ ಸದಸ್ಯರು, ಪದಾಧಿಕಾರಿಗಳು, ಬಡಾವಣೆಯ ಮುಖoಡರು, ಮಹಿಳೆಯರು ಇದ್ದರು.

ವಾರ್ತಾ ಭಾರತಿ 17 Feb 2026 10:30 pm

ಬಾಂಗ್ಲಾದೇಶ| ವಿದಾಯ ಭಾಷಣದಲ್ಲಿ ‘ಈಶಾನ್ಯ ಭಾರತ’ದ ವಿವಾದ ಕೆದಕಿದ ಯೂನುಸ್

ಢಾಕಾ,ಫೆ.17: ತನ್ನ ನೇತೃತ್ವದ ಮಧ್ಯಂತರ ಸರಕಾರವು ದೇಶದ ಸಾರ್ವಭೌಮತೆಯನ್ನು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹಾಗೂ ವಿದೇಶಾಂಗ ನೀತಿಯ ಘನತೆಯನ್ನು ಕೊನೆಗೂ ಮರುಸ್ಥಾಪಿಸುವಲ್ಲಿ ಸಫಲವಾಗಿದೆ ಎಂದು ಹೇಳಿದ್ದಾರೆ. ಬಾಂಗ್ಲಾದ ಮುಖ್ಯ ಸಲಹೆಗಾರರಾಗಿ ತನ್ನ ಅಧಿಕಾರಾವಧಿಯ ಕೊನೆಯ ದಿನವಾದ ಸೋಮವಾರ ಮೊಹಮ್ಮದ್ ಯೂನುಸ್ ಅವರು ಟಿವಿಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು. ತನ್ನ 25 ನಿಮಿಷಗಳ ಭಾಷಣದಲ್ಲಿ ಯೂನಸ್ ಅವರು ಈಶಾನ್ಯ ಭಾರತವನ್ನು ಪ್ರಸ್ತಾಪಿಸುವ ಮೂಲಕ ವಿವಾದಕ್ಕೆ ಗ್ರಾಸವಾಗಿದ್ದಾರೆ. ಭಾರತದ ಏಳು ರಾಜ್ಯಗಳು. ನೇಪಾಳ ಹಾಗೂ ಭೂತಾನ್ ಸೇರಿದಂತೆ ಈಶಾನ್ಯ ಪ್ರಾಂತ್ಯಗಳಿಗೆ ಅಪಾರವಾದ ಆರ್ಥಿಕ ಸಮೃದ್ಧಿಯನ್ನು ಒದಗಿಸುವ ಅಗಾಧ ಸಾಮರ್ಥ್ಯವನ್ನು ಬಾಂಗ್ಲಾ ಹೊಂದಿದೆ ಎಂದರು. ‘‘ಆರ್ಥಿಕ ವಲಯಗಳು, ವ್ಯಾಪಾರ ಒಪ್ಪಂದಗಳು ಹಾಗೂ ಸುಂಕರಹಿತ ಮಾರುಕಟ್ಟೆಗಳ ಲಭ್ಯತೆಯ ಮೂಲಕ ಈ ಪ್ರಾಂತ್ಯವು ಜಾಗತಿಕ ಉತ್ಪಾದನಾ ಕೇಂದ್ರವಾಗುವ ನಿಟ್ಟಿನಲ್ಲಿ ಭದ್ರವಾದ ತಳಹದಿಯನ್ನು ಹಾಕಲಾಗುವುದು ಎಂದರು. ನಮ್ಮ ಮುಕ್ತ ಸಮುದ್ರವು ಕೇವಲ ಭೌಗೋಳಿಕ ಸೀಮಾ ರೇಖೆ ಮಾತ್ರವಲ್ಲ, ಜಾಗತಿಕ ಆರ್ಥಿಕತೆಯೊಂದಿಗೆ ಸಂಪರ್ಕಿಸಲು ಬಾಂಗ್ಲಾದೇಶವು ಮುಕ್ತದ್ವಾರವಾಗಿದೆ ಎಂದರು. ಭಾರತದೊಂದಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಹೊಂದಿರುವ ನಿಕಟ ಬಾಂಧವ್ಯವನ್ನು ಪರೋಕ್ಷವಾಗಿ ಉಲ್ಲೇಖಿಸಿದ ಅವರು, ಇಂದಿನ ಬಾಂಗ್ಲಾವು ಆತ್ಮವಿಶ್ವಾಸದಿಂದ ಕೂಡಿದೆ, ಸಕ್ರಿಯವಾಗಿದೆ ಮತ್ತು ಸ್ವಾತಂತ್ರ್ಯ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಜವಾಬ್ದಾರಿಯಿಂದ ವರ್ತಿಸಿದೆ ಎಂದರು. ಭಾಷಣಕ್ಕೆ ಮುನ್ನ ಯೂನಸ್ ಅವರು ತನ್ನ ಕಾರ್ಯಾಲಯದಲ್ಲಿ ಆಯೋಜಿಸಲಾದ ಸಂಕ್ಷಿಪ್ತ ವಿದಾಯಕೂಟದಲ್ಲಿ ಪಾಲ್ಗೊಂಡರು. ತನ್ನೊಂದಿಗೆ ಕೆಲಸ ಮಾಡಿದ ಅಧಿಕಾರಿಗಳ ಬಗ್ಗೆ ಹೆಚ್ಚೇನೂ ಪ್ರಸ್ತಾಪಿಸದ ಅವರು, ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಬೆಂಲ ನೀಡಿದವರೆಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಿದರು.

ವಾರ್ತಾ ಭಾರತಿ 17 Feb 2026 10:30 pm

ವಾಡಿ | ಸಂತ ಸೇವಾಲಾಲ್‌ ಮಹಾರಾಜರ ಆದರ್ಶಗಳನ್ನು ಅಳವಡಿಸಿಕೊಳ್ಳಿ: ವಿಠ್ಠಲ ಮಹಾರಾಜ

ಸಂತ ಸೇವಾಲಾಲ್‌ ಮಹಾರಾಜರ 287ನೇ ಜಯಂತಿ ಕಾರ್ಯಕ್ರಮ

ವಾರ್ತಾ ಭಾರತಿ 17 Feb 2026 10:28 pm

T20 World Cup 2026: ಟಿ20 ವಿಶ್ವಕಪ್‌ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡ ಔಟ್

T20 World Cup 2026: ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯ ಮಳೆಯಿಂದ ರದ್ದಾದ ಕಾರಣ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬಿದ್ದಿದೆ. ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಈ ಪಂದ್ಯ ನಿರಂತರ ಮಳೆ ಹಿನ್ನೆಲೆ ರದ್ದುಗೊಂಡಿದ್ದು, ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಯಿತು.

ಒನ್ ಇ೦ಡಿಯ 17 Feb 2026 10:28 pm

ಇಂದೋರ್‌ ದುರಂತ| ಮಧ್ಯಪ್ರದೇಶ ವಿಧಾನಸಭೆ ಹೊರಗೆ ‘ಕಲುಷಿತ’ ನೀರಿನ ಬಾಟ್ಲಿಗಳೊಂದಿಗೆ ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

ಭೋಪಾಲ್‌,ಫೆ.17: ಕಾಂಗ್ರೆಸ್ ಶಾಸಕರು ಇಂದೋರಿನಲ್ಲಿ ಇತ್ತೀಚಿಗೆ ಕಲುಷಿತ ನೀರಿನ ಸೇವನೆಯಿಂದ ಸಂಭವಿಸಿದ್ದ ಸಾವುಗಳ ಕುರಿತು ಮಂಗಳವಾರ ಮಧ್ಯಪ್ರದೇಶ ವಿಧಾನಸಭಾ ಆವರಣದಲ್ಲಿ ‘ಕಲುಷಿತ’ ನೀರಿನ ಬಾಟ್ಲಿಗಳೊಂದಿಗೆ ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಉಮಂಗ್ ಸಿಂಘಾರ್ ಅವರ ನೇತೃತ್ವದಲ್ಲಿ ಕಲುಷಿತ ನೀರಿನ ಬಾಟ್ಲಿಗಳು ಮತ್ತು ಫಲಕಗಳನ್ನು ಹಿಡಿದುಕೊಂಡು ಮಹಾತ್ಮ ಗಾಂಧಿಯವರ ಪ್ರತಿಮೆಯ ಮುಂದೆ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದ ಕಾಂಗ್ರೆಸ್ ಶಾಸಕರು ಘೋಷಣೆಗಳನ್ನು ಕೂಗಿ ಸಂತ್ರಸ್ತ ಕುಟುಂಬಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಘಾರ್, ಇಂದೋರಿನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರಿನ ಸೇವನೆಯಿಂದ 35 ಜನರು ಮೃತಪಟ್ಟಿದ್ದಾರೆ. ಸರಕಾರವು ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಭಗೀರಥಪುರ ಪ್ರದೇಶವನ್ನು ಒಳಗೊಂಡಿರುವ ಇಂದೋರ್‌-1 ವಿಧಾನಸಭಾ ಕೇತ್ರದ ಶಾಸಕರಾಗಿರುವ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಷ ವಿಜಯವರ್ಗೀಯ ಅವರು ನೈತಿಕ ಕಾರಣಗಳಿಂದ ತಕ್ಷಣವೇ ರಾಜೀನಾಮೆ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯಾದ್ಯಂತ ಸಾರ್ವಜನಿಕರಿಗೆ ಕಲುಷಿತ ನೀರಿನ ಪೂರೈಕೆಯು ಗಂಭೀರ ಕಳವಳದ ವಿಷಯವಾಗಿದೆ ಎಂದ ಅವರು, ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ದೃಢವಾದ, ಪರಿಣಾಮಕಾರಿ ಕ್ರಮಗಳಿಗಾಗಿ ಆಗ್ರಹಿಸಿದರು.

ವಾರ್ತಾ ಭಾರತಿ 17 Feb 2026 10:25 pm

ಮಂಗಳೂರು: ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನಾಚರಣೆ

ಮಂಗಳೂರು, ಫೆ.17: ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಹಾಗೂ ಅತ್ತಾವರದ ಕೆಎಂಸಿ ಆಸ್ಪತ್ರೆಯ ಮಕ್ಕಳ ವಿಭಾಗದ ಸಹಯೋಗದಲ್ಲಿ ಪರಿಣಾಮದ ಪ್ರದರ್ಶನ: ಸವಾಲಿನಿಂದ ಬದಲಾವಣೆಯತ್ತ ಧ್ಯೇಯದೊಂದಿಗೆ ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನಾಚರಣೆಯನ್ನು ಮಂಗಳವಾರ ಅತ್ತಾವರ ಕೆ ಎಂಸಿ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಎಂಸಿ ಮಂಗಳೂರಿನ ಡೀನ್ ಡಾ| ಬಿ. ಉಣ್ಣಿಕೃಷ್ಣನ್ ಅವರು ಮಕ್ಕಳ ಕ್ಯಾನ್ಸರ್ ನ ಲಕ್ಷಣಗಳ ಬಗ್ಗೆ ಪೋಷಕರು ಎಚ್ಚರವಹಿಸಬೇಕು. ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದಲ್ಲಿ ಮಕ್ಕಳ ಕ್ಯಾನ್ಸರ್ ತ್ವರಿತವಾಗಿ ಸಂಪೂರ್ಣ ಗುಣಪಡಿಸಲು ಸಾಧ್ಯವಿದೆ.ಮಕ್ಕಳಲ್ಲಿ ರಕ್ತದ ಕ್ಯಾನ್ಸರ್(ಲುಕೇಮಿಯಾ) ಅಧಿಕವಾಗಿ ಕಂಡುಬರುತ್ತಿದೆ. ಪೋಷಕರು ಹಾಗೂ ಸಮಾಜದಲ್ಲಿ ಈ ಕುರಿತ ಜಾಗೃತಿಯ ಕೊರತೆ ಇದೆ. ಈ ಬಗ್ಗೆ ಪೋಷಕರು ಜಾಗೃತರಾಗಬೇಕು. ಮಕ್ಕಳ ಕ್ಯಾನ್ಸರ್ ವಿರುದ್ಧ ಕೆ ಎಂಸಿ ಆಸ್ಪತ್ರೆ ಸಮರ ನಡೆಸುತ್ತಿದ್ದು, ಶೇ. 80ರಷ್ಟು ಮಕ್ಕಳು ಸಂಪೂರ್ಣ ಗುಣಮುಖರಾಗಿದ್ದಾರೆ. ಉಚಿತ ಚಿಕಿತ್ಸೆ ಒದಗಿಸಲು ಅನೇಕ ದಾನಿಗಳು ಮುಂದಾಗುತ್ತಿದ್ದು, ಅವರ ನೆರವಿನಿಂದ ಮಕ್ಕಳ ಜೀವನದಲ್ಲಿ ಹೊಸ ಅಧ್ಯಯ ಆರಂಭವಾಗುತ್ತಿದೆ ಎಂದರು. ಡಾ| ಹರ್ಷ ಪ್ರಸಾದ್ ಎಲ್. ಮಾತನಾಡಿ, ಹೆಚ್ಚಿನ ಬಾಲ್ಯದ ಕ್ಯಾನ್ಸರ್ ಗುಣಪಡಿಸ ಬಹುದಾಗಿದೆ. ಜಾಗತಿಕವಾಗಿ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಗುಣಪಡಿಸುವ ಪ್ರಮಾಣ ಶೇ. 60–70 ರಷ್ಟಿದ್ದರೆ, ಹಿಂದುಳಿದ ರಾಷ್ಟ್ರಗಳಲ್ಲಿ ಇದು ಶೇ. 30 ರಷ್ಟಿದೆ. ಕ್ಯಾನ್ಸರ್ ಕುಟುಂಬಗಳ ಮೇಲೆ ಮಾನಸಿಕ ಮತ್ತು ಆರ್ಥಿಕ ಒತ್ತಡವನ್ನು ಹೇರುತ್ತದೆ. ಇದರ ವಿರುದ್ಧದ ಹೋರಾಟಕ್ಕೆ ಲ್ಯಾಂಡ್ ಟ್ರೇಡ್ಸ್ ಸಂಸ್ಥೆಯ ನಿರಂತರ ಬೆಂಬಲವಾಗಿದೆ ಎಂದರು.ಮಿಮಿಕ್ರಿಯೊಂದಿಗೆ ನಟ ವಿಸ್ಮಯ್ ವಿನಾಯಕ್ ಅವರು ಮಕ್ಕಳಿಗೆ ಮನೋರಂಜನೆ ನೀಡಿದರು.ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸಾಧಕಿ ರೆಮೊನಾ ಇವೆಟ್ಟಾ ಪಿರೇರಾ, ಮಾಹೆ ಶಿಕ್ಷಣ ಆಸ್ಪತ್ರೆಯ ಡಾ| ಸುಧಾಕರ್ ಕಂತಿಪುಡಿ, ಡಾ| ದೀಪಕ್ ಮಾಟಿ ಮತ್ತಿತರರು ಉಪಸ್ಥಿತರಿದ್ದರು. ಲ್ಯಾಂಡ್ ಟ್ರೇಡ್ಸ್ ನ ಮುಖ್ಯ ಹಣಕಾಸು ಅಧಿಕಾರಿ ಶಮೀಳಾ ಅವರು ವಿದ್ಯಾರ್ಥಿಗಳಿಗೆ 'ಹೋಪ್' ಸ್ಕಾಲರ್ ಶಿಪ್ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳ ಚಿಕಿತ್ಸೆಗೆ ವಿವಿಧ ದಾನಿಗಳು ನೆರವು ವಿತರಿಸಿದರು. ಕನ್ಸಲ್ವೆಂಟ್ ಪೀಡಿಯಾಟ್ರಿಕ್ ಹೆಮೆಟಾಲಜಿಸ್ಟ್ ಡಾ| ಹರ್ಷಪ್ರಸಾದ್ ಎಲ್. ಸ್ವಾಗತಿಸಿದರು. ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ| ಸುಚೇತಾ ರಾವ್ ವಂದಿಸಿದರು. 'ವಿದ್ಯಾ ಸಂಕಲ್ಪ' ಲೋಕಾರ್ಪಣೆ: ಲ್ಯಾಂಡ್ ಟ್ರೇಡ್ಸ್ ನ ಸಾಮಾಜಿಕ ಜವಾಬ್ದಾರಿ ನಿಧಿಯ ಭಾಗವಾಗಿ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ನೆರವಾಗಲು ಹೋಪ್ ಸ್ಕಾಲರ್ ಶಿಪ್ ವಿತರಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾ ಸಂಕಲ್ಪ ವೆಬ್ ಸೈಟ್ ಬಿಡುಗಡೆಗೊಳಿಸಲಾಯಿತು. ದ.ಕ. ಜಿಲ್ಲೆಯ ಯಾವುದೇ ಕ್ಯಾನ್ಸರ್ ಪೀಡಿತ ಮಕ್ಕಳು 'ವಿದ್ಯಾ ಸಂಕಲ್ಪ' ದ ಹೊಸ ವೆಬ್‌ಸೈಟ್ (vidyasankalp.org) ಮೂಲಕ ಅರ್ಜಿ ಸಲ್ಲಿಸಬಹುದು. ಅವುಗಳನ್ನು ಪರಿಶೀಲನೆ ನಡೆಸಿ ಅಗತ್ಯ ನೆರವನ್ನು ವಿತರಿಸಲಾ ಗುವುದು. ಹಿಂದಿನ ಸಾಲಿನಲ್ಲಿ ಹೋಪ್ ಸ್ಕಾಲರ್ ಶಿಪ್ ಮೂಲಕ 40 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗಿದೆ. ಪ್ರಸಕ್ತ 118 ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗಿದೆ. ಇದರೊಂದಿಗೆ ಬದನಾಜೆ ಸರಕಾರಿ ಶಾಲೆಯಲ್ಲಿ ಡಿಜಿಟಲ್ ಕ್ಲಾಸ್ ರೂಂ ಹಾಗೂ ಪಾಣಾಜೆ ಶಾಲೆಗೆ ಕಂಪ್ಯೂಟರ್ ಲ್ಯಾಬ್ ನಿರ್ಮಿಸಿಕೊಡಲಾಗಿದ್ದು, ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತ ವಿನಿಯೋಗಿಸಲಾಗಿದೆ ಎಂದು ಲ್ಯಾಂಡ್ ಟ್ರೇಡ್ಸ್ ನ ವ್ಯವಸ್ಥಾಪಕ ನಿರ್ದೇಶಕ ಕೆ. ಶ್ರೀನಾಥ್ ಹೆಬ್ಬಾರ್ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Feb 2026 10:23 pm

ಅವಧಿ ಮೀರಿ ಧ್ವನಿವರ್ಧಕ ಬಳಕೆ: ಪ್ರಕರಣ ದಾಖಲು

ಬ್ರಹ್ಮಾವರ, ಫೆ.17: ಹಂದಾಡಿ ಗ್ರಾಮದ ಗಾಂಧಿ ಮೈದಾನದಲ್ಲಿ ಜನಸೇವಾ ಟ್ರಸ್ಟ್ ವತಿಯಿಂದ ಫೆ.14ರಂದು ನಡೆದ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕವನ್ನು ಬಳಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಕ್ರಮದಲ್ಲಿ ಸಂಜೆ 6ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕವನ್ನು ಬಳಸುವಂತೆ ಷರತ್ತನ್ನು ವಿಧಿಸಲಾಗಿತ್ತು. ಆದರೂ ಕೂಡ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕವನ್ನು ಬಳಸಿ ಪರವಾನಗಿ ಯಲ್ಲಿ ವಿಧಿಸಿದ ಷರತ್ತನ್ನು ಉಲ್ಲಂಘನೆ ಮಾಡಲಾಗಿದೆ ಎಂದು ದೂರಲಾಗಿದೆ. ಈ ಮೂಲಕ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ವ್ಯತಿರಿಕ್ತವಾಗಿ ನಡೆದುಕೊಂಡು, ಕಾನೂನು ಉಲ್ಲಂಘಿಸಿರುವ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ನೀಡಿದ ವರದಿಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 17 Feb 2026 10:17 pm

ಪ್ರವಾಸಕ್ಕೆ ತೆರಳಿದ್ದ ಯುವಕ ಮೃತ್ಯು

ಉಡುಪಿ, ಫೆ.17: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ(33) ಎಂದು ಗುರುತಿಸಲಾಗಿದೆ. ಪ್ರವಾಸದ ವೇಳೆ ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವಾರ್ತಾ ಭಾರತಿ 17 Feb 2026 10:16 pm

ಹರ್ಯಾಣ| ವ್ಯಾಲೆಂಟೈನ್ ಡೇ ಭೋಜನದ ಬಳಿಕ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಚಾರ್ಟರ್ಡ್ ಅಕೌಂಟಂಟ್

ಚಂಡಿಗಡ,ಫೆ.17: ಹರ್ಯಾಣದ ಜಝ್ಝರ್ ಜಿಲ್ಲೆಯ ಬಹದೂರ್‌ಗಡದಲ್ಲಿ ಯುವದಂಪತಿಯ ವ್ಯಾಲೆಂಟೈನ್ ದಿನದ ಸಂಜೆಯು ಆಘಾತಕಾರಿ ಮತ್ತು ಕ್ರೂರ ಹತ್ಯೆಯಲ್ಲಿ ಪರ್ಯವಸಾನಗೊಂಡಿದೆ. ಆ ಸಂಜೆ ಪತ್ನಿಯೊಂದಿಗೆ ಹಿಸಾರ್‌ನಲ್ಲಿ ವ್ಯಾಲೆಂಟೈನ್ ದಿನವನ್ನು ಆಚರಿಸಿದ್ದ ಅಂಶುಲ್ ಧವನ್ ನಂತರ ತಾವು ವಾಸವಾಗಿದ್ದ ಗುರುಗ್ರಾಮಕ್ಕೆ ಮರಳುತ್ತಿರುವಾಗ ದಾರಿ ಮಧ್ಯೆ ಜಝ್ಝರ್‌ನಲ್ಲಿ ಆಕೆಯನ್ನು ಕೊಲೆ ಮಾಡಿದ್ದು, ಪೋಲಿಸರನ್ನು ದಾರಿ ತಪ್ಪಿಸಲು ಢಕಾಯಿತಿಯ ಸುಳ್ಳು ಕಥೆಯನ್ನು ಹೆಣೆದಿದ್ದ. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಮೆಹಕ್ (27) ಕೊಲೆಯ ಹಿಂದಿನ ನಿಗೂಢತೆಯನ್ನು ಪೊಲೀಸರು ಕೇವಲ 18 ಗಂಟೆಗಳಲ್ಲಿ ಭೇದಿಸಿದ್ದಾರೆ. ಆರಂಭದಲ್ಲಿ ಢಕಾಯಿತಿ ಎಂಬಂತೆ ಕಂಡು ಬಂದಿದ್ದ ಪ್ರಕರಣ ಶೀಘ್ರವೇ ಚಾರ್ಟರ್ಡ್ ಅಕೌಂಟಂಟ್ ಆಗಿರುವ ಧವನ್ ನಡೆಸಿದ ಕ್ರೂರ ಹತ್ಯೆ ಎನ್ನುವುದು ಬೆಳಕಿಗೆ ಬಂದಿದ್ದು,ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಹಂಸಿ ನಿವಾಸಿ ಮೆಹಕ್ ಮತ್ತು ಹಿಸಾರ್ ನಿವಾಸಿ ಧವನ್ ಮದುವೆ ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ನಡೆದಿದ್ದು, ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದಳು. ಗುರುಗ್ರಾಮದಲ್ಲಿ ಕೆಲಸ ಮಾಡುತ್ತಿರುವ ಧವನ್ ರವಿವಾರ ರಾತ್ರಿ 11 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಮಾಡಿ ಅಪರಿಚಿತ ದುಷ್ಕರ್ಮಿಗಳು ತಮ್ಮನ್ನು ದೋಚಲು ಪ್ರಯತ್ನಿಸಿದ್ದರು ಮತ್ತು ತನ್ನ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದ. ತನಿಖೆಯನ್ನು ಆರಂಭಿಸಿದ ಅಧಿಕಾರಿಗಳು ಆತನ ಹೇಳಿಕೆಗಳು ಪರಸ್ಪರ ತಾಳೆಯಾಗುತ್ತಿಲ್ಲ ಎನ್ನುವುದನ್ನು ಗಮನಿಸಿದ್ದರು. ತನ್ನ ಕಥೆಯನ್ನು ಪದೇ ಪದೇ ಬದಲಿಸುತ್ತಿದ್ದ ಧವನ್ ದುಷ್ಕರ್ಮಿಗಳ ಬಗ್ಗೆ ವಿವರಿಸಲೂ ಸಾಧ್ಯವಾಗಿರಲಿಲ್ಲ. ಇದು ಪೊಲೀಸರ ಶಂಕೆಯನ್ನು ಇನ್ನಷ್ಟು ಹೆಚ್ಚಿಸಿತ್ತು. ತೀವ್ರ ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಂದಿದ್ದು ತಾನೇ ಎಂದು ಧವನ್ ಒಪ್ಪಿಕೊಂಡಿದ್ದ. ಗುರುಗ್ರಾಮದ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಮೆಹಕ್‌ಳ ನೈತಿಕತೆಯನ್ನು ಧವನ್ ಶಂಕಿಸುತ್ತಿದ್ದು, ಇದು ಆಗಾಗ್ಗೆ ಅವರ ನಡುವೆ ಜಗಳಕ್ಕ ಕಾರಣವಾಗಿತ್ತು. ಮೆಹಕ್ ತಂದೆ ಕೃಷ್ಣ ಕಥುರಿಯಾ ಆರಂಭದಿಂದಲೇ ಅಳಿಯನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಧವನ್ ಬೆರಳಚ್ಚುಗಳು ಮೂಡುವುದನ್ನು ತಪ್ಪಿಸಲು ಹತ್ಯೆಯ ಸಮಯದಲ್ಲಿ ಕೈಗವುಸುಗಳನ್ನು ಧರಿಸಿದ್ದ. ಮೊದಲು ಮೆಹಕ್‌ಳನ್ನು ಉಸಿರುಗಟ್ಟಿಸಿದ್ದ ಬಳಿಕ ಆತ ನಂತರ ಕತ್ತರಿಯಿಂದ ಆಕೆಯ ಕತ್ತನ್ನು ಸೀಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 17 Feb 2026 10:14 pm

ಉಳ್ಳಾಲ: ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಿಟ್ ವಿತರಣೆ

ಉಳ್ಳಾಲ: ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಳೇಕಲ ಉಳ್ಳಾಲ ಇದರ ಆಶ್ರಯದಲ್ಲಿ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮ ಅಳೇಕಲದಲ್ಲಿರುವ ಟ್ರಸ್ಟ್ ನ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುಹಮ್ಮದ್ ತ್ವಾಹಾ ಹಾಜಿ ಅವರು ಕಿಟ್ ವಿತರಣೆ ಅಗತ್ಯತೆ ಮತ್ತು ಟ್ರಸ್ಟ್ ನ ಕಾರ್ಯ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಅಳೇಕಲ ಮದ್ರಸ ಮುಅಲ್ಲಿಂ ಅಶ್ರಫ್ ಅಹ್ಸನಿ ದುಆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಳ್ಳಾಲ ನಗರ ವ್ಯಾಪ್ತಿಯ 468 ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಕೆ ಎನ್ ಮೊಹಮ್ಮದ್, ಜೊತೆ ಕಾರ್ಯದರ್ಶಿ ಹಮೀದ್, ಸದಸ್ಯ ಅಶ್ರಫ್, ಅಝೀಝ್, ಮಾಜಿ ಕೌನ್ಸಿಲರ್ ಯು .ಎ.ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 10:14 pm

ಬೆಂಗಳೂರಿನ ಯಲಹಂಕದಲ್ಲಿ ದೇಶದಲ್ಲಿಅತಿ ದೊಡ್ಡ ರೈಲ್ವೆ ಮೆಗಾ ಕೋಚಿಂಗ್‌ ಟರ್ಮಿನಲ್‌ ಸ್ಥಾಪನೆ: ವಿ ಸೋಮಣ್ಣ

ಬೆಂಗಳೂರು ಯಲಹಂಕದಲ್ಲಿ ರೈಲ್ವೆ ಮೆಗಾ ಕೋಚಿಂಗ್‌ ಟರ್ಮಿನಲ್‌ ನಿರ್ಮಾಣ ಮಾಡುತ್ತಿದ್ದು, ಇದು ದೇಶದ ಅತಿ ದೊಡ್ಡದಾದ ಕೋಚಿಂಗ್‌ ಸೆಂಟರ್‌ ಆಗಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಜತೆಗೆ ಬೆಂಗಳೂರು ತುಮಕೂರು ನಡುವೆ 4 ಪಥದ ರೈಲು ಮಾರ್ಗಕ್ಕೆ ಡಿಪಿಆರ್ ಆಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ವಿಜಯ ಕರ್ನಾಟಕ 17 Feb 2026 10:11 pm

ಸರಕಾರಿ ಶಾಲೆಗಳ ಸೊತ್ತಿಗೆ ಕಿಡಿಗೇಡಿಗಳಿಂದ ಹಾನಿ: ಪ್ರಕರಣ ದಾಖಲು

ಕೋಟ, ಫೆ.17: ಕೆದೂರು ಸರಕಾರಿ ಫ್ರೌಡಶಾಲೆಗೆ ಫೆ.14ರಂದು ರಾತ್ರಿ ವೇಳೆ ನುಗ್ಗಿದ ಕಿಡಿಗೇಡಿಗಳು, ಶಾಲೆಗಳ ಸೊತ್ತುಗಳನ್ನು ಹಾನಿ ಎಸಗಿರುವ ಬಗ್ಗೆ ವರದಿಯಾಗಿದೆ. ಶಾಲಾ ಆವರಣಕ್ಕೆ ನುಗ್ಗಿದ ಕಿಡಿಗೇಡಿಗಳು ಶಾಲೆಯ ನೋಟೀಸ್ ಬೋರ್ಡ್‌ನ ಗಾಜು ಒಡೆದಿದ್ದು, ಒಂದು ತರಗತಿ ಕೋಣೆಗೆ ನುಗ್ಗಿ ಅಲ್ಲಿ ಗೋಡೆಗೆ ಅಳವಡಿಸಿರುವ ಬ್ಯಾನರ್‌ಗಳನ್ನು ಕೆಳಗೆ ಹಾಕಿದ್ದಾರೆನ್ನಲಾಗಿದೆ. ಅಲ್ಲದೆ ಆ ಕೋಣೆ ಯಲ್ಲಿ ಬೆಂಕಿ ಪೆಟ್ಟಿಗೆ ಹಾಗೂ ಟಿಶ್ಯೂ ಪೇಪರ್‌ಗಳು ಕೂಡ ಕಂಡುಬಂದಿದ್ದು, ಹುಡುಗರ ಶೌಚಾಲಯದಲ್ಲಿರುವ ನಳ್ಳಿಗಳನ್ನು ಕಿತ್ತು ಹಾಕಲಾಗಿದೆ. ಕೈ ತೊಳೆಯುವ ಸ್ಟೀಲ್ ಸಿಂಕನ್ನು ಕಿತ್ತು ಶಾಲೆಯ ಮಧ್ಯದ ಗ್ರೌಂಡ್ನಲ್ಲಿ ಬಿಸಾಡಿರುವುದಾಗಿ ಮುಖ್ಯೋಪಾಧ್ಯಾಯಿನಿ ಗೀತಾ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Feb 2026 10:07 pm

ಒಮಾನ್‌ ಹೊರತುಪಡಿಸಿ ಗಲ್ಫ್ ರಾಷ್ಟ್ರಗಳಲ್ಲಿ ಬುಧವಾರ(ಫೆ.18)ದಿಂದ ರಮಝಾನ್ ಉಪವಾಸ ಆರಂಭ

ಜಿದ್ದಾ,ಫೆ.17: ರಮಝಾನ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಒಮಾನ್ ಹೊರತುಪಡಿಸಿ ಗಲ್ಫ್ ರಾಷ್ಟ್ರಗಳಲ್ಲಿ ಬುಧವಾರ(ಫೆ.18)ದಿಂದ ರಮಝಾನ್ ಉಪವಾಸ ಆರಂಭವಾಗಲಿದೆ. ಸೌದಿ ಅರೇಬಿಯ, ಯುಎಇ, ಕುವೈತ್, ಬಹರೈನ್, ಖತರ್ ನಲ್ಲಿ ಚಂದ್ರದರ್ಶನವಾಗಿದ್ದು, ಅಲ್ಲಿ ಬುಧವಾರದಿಂದ ರಮಝಾನ್ ಉಪವಾಸ ಆರಂಭಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಒಮಾನ್ ನಲ್ಲಿ ಮಾತ್ರ ಗುರುವಾರ(ಫೆ.19)ದಿಂದ ರಮಝಾನ್ ಉಪವಾಸ ಆರಂಭವಾಗಲಿದೆ.

ವಾರ್ತಾ ಭಾರತಿ 17 Feb 2026 10:06 pm

ಮಂಗಳೂರು: ಬಿಲ್ಲವ ಸಂಘಟನೆಗಳಿಂದ ಫೆ.21ಕ್ಕೆ ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಉಡುಪಿ: ಮಂಗಳೂರು ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಶಿವಲಿಂಗ ಪ್ರತಿಷ್ಠಾಪನೆ ಮಾಡಿ ಸಮಾನತೆ, ಆತ್ಮಗೌರವ ಹಾಗೂ ಮಾನವೀಯತೆಯನ್ನು ಜಗತ್ತಿಗೆ ಸಾರಿದ 1912 ಫೆ.21ರ ಕ್ಷಣವನ್ನು ನೆನಪಿಸಿಕೊಳ್ಳಲು ಇದೇ ಫೆ.21ರಂದು ಬಿಲ್ಲವ ಸಮುದಾಯದ ಎಲ್ಲಾ ಸಂಘಟನೆಗಳು ಸೇರಿಕೊಂಡು ಕುದ್ರೋಳಿ ಕ್ಷೇತ್ರ ತೀರ್ಥಾಟನೆಯನ್ನು ಹಮ್ಮಿಕೊಂಡಿದೆ ಎಂದು ಕುದ್ರೋಳಿ ಶ್ರೀಗೋಕಣನಾಥ ಕ್ಷೇತ್ರಾಡಳಿತ ಸಮಿತಿಯ ಜಯರಾಮ್ ತಿಳಿಸಿದ್ದಾರೆ. ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಫೆ.21ರಂದು ನಮ್ಮ ನಡಿಗೆ-ಶ್ರೀಗುರುವಿನೆಡೆಗೆ ಎಂಬ ಸಂಕಲ್ಪದೊಂದಿಗೆ ಶ್ರೀಕುದ್ರೋಳಿ ಕ್ಷೇತ್ರ ತೀರ್ಥಾಟನೆಯನ್ನು ಹಮ್ಮಿಕೊಳ್ಳಲಾಗಿದೆ. ಗುರುಗಳ ಜ್ಞಾನದ ಸಂಕೇತವಾದ ಹಳದಿ ವಸ್ತ್ರಧಾರಣೆಯೊಂದಿಗೆ ಈ ಯಾತ್ರೆ ಸಮಾಜ ಜಾಗೃತಿಯ ಸಂಕಲ್ಪದೊಂದಿಗೆ ನಡೆಯಲಿದೆ ಎಂದರು. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ಶ್ರೀನಾರಾಯಣ ಗುರು ಸಂಘಗಳು ಹಾಗೂ ಬಿಲ್ಲವ ಸಮುದಾಯದ ವಿವಿಧ ಸಂಘಸಂಸ್ಥೆಗಳ ಸಹಭಾಗಿತ್ವದೊಂದಿಗೆ ತೀರ್ಥಾಟನೆ ನಡೆಯಲಿದೆ. ಗುರುಗಳು ಅಂದು ಶಿವಲಿಂಗವನ್ನು ರೈಲಿನ ಮೂಲಕ ಮಂಗಳೂರಿನ ರೈಲು ನಿಲ್ದಾಣಕ್ಕೆ ತಂದ ನೆನಪನ್ನು ಮಾಡಿಕೊಳ್ಳಲು ಫೆ.21ರ ಬೆಳಗ್ಗೆ 9ಗಂಟೆಗೆ ಮಂಗಳೂರು ರೈಲ್ವೆ ನಿಲ್ದಾಣದಿಂದ ತೀರ್ಥಾಟನೆಯನ್ನು ಟ್ಯಾಬ್ಲೋದೊಂದಿಗೆ ನೆಹರೂ ಮೈದಾನದವರೆಗೆ ನಡೆಸಲಾಗುವುದು. ಬಳಿಕ ಅಲ್ಲಿಂದ 9:30ಕ್ಕೆ ಶ್ರೀಕ್ಷೇತ್ರಕ್ಕೆ ಯಾತ್ರೆ ನಡೆಯಲಿದೆ ಎಂದು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ತುಳು ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಬಿಲ್ಲವ ಮುಖಂಡರಾದ ಬಿ.ಎಲ್.ಶಂಕರ ಪೂಜಾರಿ, ರಘುನಾಥ್ ಮಾಬೆಲ್, ಪ್ರತಾಪ್ ಕುಮಾರ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 10:02 pm

ದಿಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಬಹಿರಂಗ ಸಭೆಗಳಿಗೆ ಒಂದು ತಿಂಗಳು ನಿಷೇಧ

ಹೊಸದಿಲ್ಲಿ,ಫೆ.17: ದಿಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಬಹಿರಂಗ ಸಭೆಗಳು, ಮೆರವಣಿಗೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನೆಗಳನ್ನು ನಡೆಸುವುದನ್ನು ಫೆ.17ರಿಂದ ಒಂದು ತಿಂಗಳು ಕಾಲ ನಿಷೇಧಿಸಲಾಗಿದೆ. ವಿವಿಯ ಶಿಸ್ತುಪಾಲನಾ ಅಧಿಕಾರಿ ಪ್ರೊ.ಮನೋಜಕುಮಾರ್ ಅವರು ಮಂಗಳವಾರ ಹೊರಡಿಸಿರುವ ಆದೇಶವು ವಿದ್ಯಾರ್ಥಿಗಳು,ಅಧ್ಯಾಪಕರು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುತ್ತದೆ. ಕ್ಯಾಂಪಸ್‌ನಲ್ಲಿ ಅನಿರ್ಬಂಧಿತ ಬಹಿರಂಗ ಸಮಾವೇಶಗಳು ಸಂಚಾರಕ್ಕೆ ಅಡ್ಡಿ,ಮಾನವ ಜೀವಕ್ಕೆ ಬೆದರಿಕೆ ಮತ್ತು ಸಾರ್ವಜನಿಕ ಶಾಂತಿಭಂಗಕ್ಕೆ ಕಾರಣವಾಗಬಹುದು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕುಮಾರ್ ತನ್ನ ಆದೇಶದಲ್ಲಿ ತಿಳಿಸಿದ್ದಾರೆ. ಈ ಹಿಂದೆ ಹೆಚ್ಚಿನ ಸಂದರ್ಭಗಳಲ್ಲಿ ಪ್ರತಿಭಟನೆಗಳನ್ನು ನಿಯಂತ್ರಿಸಲು ಸಂಘಟಕರು ವಿಫಲಗೊಂಡಿದ್ದರು,ಪರಿಣಾಮವಾಗಿ ವಿವಿ ಕ್ಯಾಂಪಸ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯು ಹದಗೆಟ್ಟಿತ್ತು ಎಂದು ಆದೇಶವು ಬೆಟ್ಟು ಮಾಡಿದೆ. ಕೇಂದ್ರ ಗೃಹ ಸಚಿವಾಲಯದ ಅಧಿಸೂಚನೆಯ ಆಧಾರದಲ್ಲಿ ಸಹಾಯಕ ಪೋಲಿಸ್ ಆಯುಕ್ತರು ಡಿ.26,2025ರಂದು ಹೊರಡಿಸಿದ್ದ ಆದೇಶವನ್ನೂ ಕುಮಾರ್ ಉಲ್ಲೇಖಿಸಿದ್ದಾರೆ. ಈ ಆದೇಶದ ಪ್ರಕಾರ ಸಾರ್ವಜನಿಕ ಶಾಂತಿಯನ್ನು ಕದಡುವ ಅಥವಾ ಸುಗಮ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡುವ ಯಾವುದೇ ಬಹಿರಂಗ ಸಭೆ,ರ್ಯಾಲಿ, ಧರಣಿ,ಪ್ರತಿಭಟನೆ ಅಥವಾ ಇತರ ಯಾವುದೇ ಚಟುವಟಿಕೆಯನ್ನು ವಿವಿ ಕ್ಯಾಂಪಸ್‌ನೊಳಗೆ ನಿಷೇಧಿಸಲಾಗಿದೆ. ಇದೀಗ ಶಿಸ್ತುಪಾಲನಾ ಅಧಿಕಾರಿಗಳು ಹೊರಡಿಸಿರುವ ಆದೇಶವು ಈ ನಿರ್ಬಂಧಗಳನ್ನು ಪುನರುಚ್ಚರಿಸಿದ್ದು,ಒಂದು ತಿಂಗಳು ಕಾಲ ಜಾರಿಯಲ್ಲಿರುತ್ತದೆ. ಫೆ.13ರಂದು ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆ ಮತ್ತು ಕಂಟೆಂಟ್ ಕ್ರಿಯೇಟರ್ ಮೇಲೆ ನಡೆದಿದ್ದ ಹಲ್ಲೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ಉತ್ತರ ದಿಲ್ಲಿ ಡಿಸಿಪಿ ಮತ್ತು ದಿಲ್ಲಿ ವಿವಿ ಕುಲಪತಿಗಳಿಗೆ ನೋಟಿಸ್‌ಗಳನ್ನು ಹೊರಡಿಸಿತ್ತು. ಅದರ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ. ಎನ್‌ಎಚ್‌ಆರ್‌ಸಿ ಪ್ರಕಾರ ವಿಶ್ವವಿದ್ಯಾಲಯ ಧನಸಹಾಯ ಆಯೋಗವನ್ನು ಬೆಂಬಲಿಸಿ ನಡೆದಿದ್ದ ಮತ ಪ್ರದರ್ಶನದ ವರದಿಗಾರಿಕೆಯನ್ನು ಮಾಡುತ್ತಿದ್ದಾಗ ಗುಂಪೊಂದು ಪತ್ರಕರ್ತೆಯ ಮೇಲೆ ಹಲ್ಲೆ ನಡೆಸಿತ್ತು. ಪತ್ರಕರ್ತೆಯ ಜಾತಿಯಿಂದಾಗಿ ಗುಂಪು ಆಕೆಯನ್ನು ಗುರಿಯಾಗಿಸಿಕೊಂಡಿತ್ತು, ನಿಂದಿಸಿತ್ತು ಮತ್ತು ದೈಹಿಕ ಹಲ್ಲೆಯನ್ನು ನಡೆಸಿತ್ತು. ಜೊತೆಗೆ ಇನ್ನಷ್ಟು ಹಾನಿಯನ್ನುಂಟು ಮಾಡುವ ಬೆದರಿಕೆಯನ್ನು ಒಡ್ಡಿತ್ತು. ಪತ್ರಕರ್ತೆಯ ಘನತೆಗೆ ಕುಂದನ್ನುಂಟು ಮಾಡುವ ಪ್ರಯತ್ನವೂ ನಡೆದಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ. ಇದು ಜಾತಿ ಆಧಾರಿತ ಹಿಂಸಾಚಾರದ ಪ್ರಕರಣವಾಗಿದೆ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದೂ ಅವರು ಆರೋಪಿಸಿದ್ದಾರೆ. ಆದಾಗ್ಯೂ ಬೋಧಕ ವೃಂದದ ಕೆಲವರು ನಿಷೇಧ ಆದೇಶವನ್ನು ತೀವ್ರವಾಗಿ ಟೀಕಿಸಿದ್ದು, ಅದನ್ನು ತಕ್ಷಣ ಹಿಂದೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 17 Feb 2026 9:55 pm

ಉತ್ತರ ಕರ್ನಾಟಕದ ಎರಡು ಜಿಲ್ಲೆಗಳು ಸೇರಿದಂತೆ ರಾಜ್ಯದ ಒಂಬತ್ತು ಪ್ರಮುಖ ರಸ್ತೆಗಳ ಜವಾಬ್ದಾರಿ ಎನ್‌ಎಚ್‌ಎಐ ಹೆಗಲಿಗೆ

NHAI: ರಾಜ್ಯದ ಒಂಬತ್ತು ಪ್ರಮುಖ ರಸ್ತೆಗಳನ್ನು ರಾಜ್ಯ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಿಂದ ಹೊರತೆಗೆದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮತಿ ನೀಡಿದೆ. ಈ ಕ್ರಮದಿಂದ ರಾಜ್ಯದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ನಿರ್ವಹಣಾ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಥವಾಗಿ ನಡೆಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು, ಕೇರಳ

ಒನ್ ಇ೦ಡಿಯ 17 Feb 2026 9:42 pm

ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ

ಬ್ರಹ್ಮಾವರ, ಫೆ.17: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬ್ರಹ್ಮಾವರ ಗಜಾನನ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾವಾಣಿಯ ಶೇಷಗಿರಿ ಭಟ್, ಕೋಶಾಧಿಕಾರಿಯಾಗಿ ವಿಜಯವಾಣಿಯ ರವೀಂದ್ರ ಕೆ., ಕಾರ್ಯ ದರ್ಶಿಯಾಗಿ ಹರೀಶ್ ಕಿರಣ್ ತುಂಗ ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಬಂಡಿಮಠ ಶಿವರಾಮ ಆಚಾರ್ಯ, ಉದಯ ಆಚಾರ್ಯ, ಅಲ್ತಾರು ನಾಗರಾಜ್, ಪ್ರವೀಣ್ ವಿ., ಅನಂತ ನಾಯಕ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಸಹಕರಿಸಿದರು.

ವಾರ್ತಾ ಭಾರತಿ 17 Feb 2026 9:37 pm

ಸೂರತ್ - ಮಂಗಳೂರು ಜಂಕ್ಷನ್ ರೈಲಿನ ಸಂಚಾರ ಅವಧಿ ವಿಸ್ತರಣೆ

ಉಡುಪಿ, ಫೆ.17: ವಾರದಲ್ಲಿ ಎರಡು ಬಾರಿ ಸಂಚರಿಸುವ ರೈಲು ನಂ. 09057/09058 ಸೂರತ್- ಮಂಗಳೂರು ಜಂಕ್ಷನ್- ಸೂರತ್ ಎಕ್ಸ್‌ಪ್ರೆಸ್ ವಿಶೇಷ ರೈಲಿನ ಸಂಚಾರವನ್ನು ಸಮಯದ ಬದಲಾವಣೆಯೊಂಗಿಗೆ ಮಾರ್ಚ್ ಕೊನೆಯವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಸೂರತ್-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಫೆ.25-26ರವರೆಗೆ ಮಾತ್ರ ನಿಗದಿ ಯಾಗಿತ್ತು. ಇದೀಗ ಇದನ್ನು ಮಾ29-30ಕ್ಕೆ ವಿಸ್ತರಿಸಿದೆ. ಇದರೊಂದಿಗೆ ಮಾ.1ರಿಂದ (ಸೂರತ್‌ನಿಂದ) ಹಾಗೂ ಮಾ.2 (ಮಂಗಳೂರು ಜಂಕ್ಷನ್‌ನಿಂದ ) ಈ ರೈಲಿನ ಸಂಚಾರ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಈಗಿನ ಸಂಚಾರ ಸಮಯದಂತೆ ರೈಲು ನಂ.09057 ಸೂರತ್‌ನಿಂದ ಪ್ರತಿ ಬುಧವಾರ ಹಾಗೂ ರವಿವಾರದಂದು (ಮಾ.1, 4, 8, 11, 15, 18, 22, 25, 29) ರಾತ್ರಿ 7:35ಕ್ಕೆ ಹೊರಡಲಿದೆ. ಈ ರೈಲು ಮರುದಿಂ ಸಂಜೆ 7:45ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣ ತಲುಪಲಿದೆ. ಅದೇ ರೀತಿ ರೈಲು ನಂ. 09058 ಮಂಗಳೂರು ಜಂಕ್ಷನ್‌ನಿಂದ ಪ್ರತಿ ಗುರುವಾರ ಮತ್ತು ಸೋಮವಾರದಂದು (ಮಾ.2, 5, 9, 12, 16, 19, 23, 26, 30) ರಾತ್ರಿ 10:30ಕ್ಕೆ ಹೊರಡಲಿದ್ದು, ಮರುದಿನ ರಾತ್ರಿ 11:45ಕ್ಕೆ ಸೂರತ್ ನಿಲ್ದಾಣ ತಲುಪಲಿದೆ. ಈ ರೈಲಿಗೆ ಉಡ್ನಾ ಜಂಕ್ಷನ್, ವಲ್ಸಾಡ್, ವಾಪಿ, ಪಲ್ಗಾರ್, ವಾಸೈ ರೋಡ್, ಭಿವಂಡಿ ರೋಡ್, ಪನ್ವೇಲ್, ಪೆನ್, ರೋಹಾ, ಖೇಡ್, ಚಿಪ್ಳುಣ್, ಸರ್ವಾಡ, ಸಂಗಮೇಶ್ವರ ರೋಡ್, ರತ್ನಗಿರಿ, ರಾಜಪುರ ರೋಡ್, ವೈಭವವಾಡಿ ರೋಡ್, ಕಂಕವಲ್ಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರೋಡ್, ಥೀವಿಂ, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾಣಕೋನಾ, ಕಾರವಾರ, ಅಂಕೋಲ, ಗೋಕರ್ಣ ರೋಡ್, ಕುಮಟಾ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ ಹಾಗೂ ಸುರತ್ಕಲ್ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಾರ್ತಾ ಭಾರತಿ 17 Feb 2026 9:31 pm

ಮಾ.15ವರೆಗೆ ಅಸಂಘಟಿತ ವಲಯ ಕಾರ್ಮಿಕರ ನೊಂದಣಿ ಅಭಿಯಾನ

ಉಡುಪಿ : ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯಡಿ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸಲು ಜಿಲ್ಲೆಯಲ್ಲಿ ಈಗಾಗಲೇ ಪ್ರಾರಂಭಿಸಲಾ ಗಿರುವ ವಿಶೇಷ ನೋಂದಣಿ ಅಭಿಯಾನ ಮಾರ್ಚ್ 15ರವರೆಗೆ ನಡೆಯಲಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನೆಗೆ ಇಲಾಖಾ ಅಧಿಕಾರಿ ಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗೂ ಮೊದಲನೇ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ಅವರು ತಿಳಿಸಿದರು. ಆದರೆ ಆದಾಯ ತೆರಿಗೆ ಪಾವತಿದಾರರು, ಸಂಘಟಿತ ವಲಯದ ಕಾರ್ಮಿಕರು, ಇ.ಎಸ್.ಐ/ಪಿ.ಎಫ್ ಯೋಜನೆಗೆ ಒಳಪಟ್ಟವರು ಈ ಯೋಜನೆಗೆ ಅರ್ಹರಿರುವುದಿಲ್ಲ. ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕ ರನ್ನು ನೋಂದಣಿ ಮಾಡಿಸುವುದರೊಂದಿಗೆ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ ನೀಡಿದರು. ಅಸಂಘಟಿತ ಕಾರ್ಮಿಕರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ಕಾರ್ಮಿಕರಿಗೆ ಅವರ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರಕಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಅಸಂಘಟಿತ ಕಾರ್ಮಿಕರು ಹೆಚ್ಚೆಚ್ಚು ನೋಂದಾವಣೆ ಗೊಳ್ಳುವುದ ರೊಂದಿಗೆ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು. ಅಸಂಘಟಿತ ಕಾರ್ಮಿಕರು ಹೆಚ್ಚು ವಾಸಿಸುವ ಪ್ರದೇಶಗಳು, ಕಾರ್ಮಿಕರು ಸೇರುವಂತಹ ವಿವಿಧ ಇಲಾಖೆಗಳ ಸಭೆಗಳಲ್ಲಿ ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ನೋಂದಣಿ ಅಭಿಯಾನ ಯಶಸ್ವಿಗೊಳಿಸುವಂತೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ರ್ಕಾುಕ ಅಧಿಕಾರಿ ಜಿಲ್ಲಾ ರ್ಕಾುಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಧ ಜಿಲ್ಲಾ ಮಟ್ಟದ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ 7225 ಮಂದಿ ನೊಂದಣಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ವಿಶೇಷ ನೋಂದಣಿ ಅಭಿಯಾನದಡಿ ಜಿಲ್ಲೆಯಲ್ಲಿ 7275 ಕಾರ್ಮಿಕರನ್ನು ನೋಂದಾಯಿಸಲು ಗುರಿ ನಿಗದಿ ಪಡಿಸಿದ್ದು, ಯೋಜನೆ ಪ್ರಾರಂಭದಿಂದ ಈವರೆಗೆ 7225 ಮಂದಿ ಅಸಂಘಟಿತ ಕಾರ್ಮಿಕರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದಾರೆ ಎಂದರು. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ವಿಶೇಷ ನೋಂದಣಿ ಅಭಿಯಾನ ದಲ್ಲಿ ನೋಂದಣಿ ಮಾಡಿಕೊಳ್ಳುವು ದರೊಂದಿಗೆ ನಿಗದಿ ಪಡಿಸಿದ ಗುರಿ ಸಾಧನೆಗೆ ಮುಂದಾಗಬೇಕು ಎಂದ ಅವರು, ಮನೆಗೆಲಸ ನಿರ್ವಹಿಸುವ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು.

ವಾರ್ತಾ ಭಾರತಿ 17 Feb 2026 9:29 pm

ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

ಮಲ್ಪೆ, ಫೆ.17: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಕೇರಳ ರಾಜ್ಯದ ಇಡುಕಿ ಜಿಲ್ಲೆಯ ಮರಾಯು ಗ್ರಾಮದ ಆಲಿಫ್ ಇಸ್ಲಾಮ್(21) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಈ ಹಿಂದೆ 2025ರ ಡಿ.21ರಂದು ಗುಜರಾತ್ ರಾಜ್ಯದ ಹೀರೇಂದ್ರ ಕುಮಾರ್ (34) ಹಾಗೂ 2025ರ ನ.21ರಂದು ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇವರೆಲ್ಲ ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿ ಯನ್ನು ವಾಟ್ಸಾಪ್ ಹಾಗೂ ಫೇಸ್ ಬುಕ್ ಮೂಲಕ ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆ ಮಂದುವರಿ ಸಿದ ಪೊಲೀಸರು, ಐದನೇ ಆರೋಪಿ ಆಲಿಫ್ ಇಸ್ಲಾಮ್‌ನನ್ನು ಫೆ.16ರಂದು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಫೆ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತ ಈ ಪ್ರಕರಣದ ಐದನೇ ಆರೋಪಿಯಾಗಿದ್ದು, ಆರೋಪಿಗಳು ಗೌಪ್ಯ ಮಾಹಿತಿ ರವಾನಿಸಲು ಬಳಸಿಕೊಂಡಿರುವ ಫೇಸ್ ಬುಕ್ ಪೇಜ್‌ನ ಮಾಲಕನ ಬಂಧನ ಬಾಕಿ ಇದೆ. ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆಂದು ತಿಳಿದುಬಂದಿದೆ.

ವಾರ್ತಾ ಭಾರತಿ 17 Feb 2026 9:22 pm

ಕಾಂಗ್ರೆಸ್ ಸರ್ಕಾರದ್ದು 1000 ದಿನಗಳ ದುರಾಡಳಿತ: ಕನ್ನಡಿಗರಿಗೆ ಸಿಕ್ಕಿದ್ದು 'ಚಿಪ್ಪು', 16 ಅಂಶಗಳ ಪಟ್ಟಿ ಕೊಟ್ಟ ವಿ.ಸೋಮಣ್ಣ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನಗಳಾಗಿವೆ. ಈ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯನವರು ನಡೆಸಿರುವುದು ಕೇವಲ 'ದುರಾಡಳಿತ, ಭ್ರಷ್ಟ ಆಡಳಿತ, ಅಭಿವೃದ್ಧಿಹೀನ ಆಡಳಿತ'ವಷ್ಟೇ. ನುಡಿದಂತೆ ನಡೆಯುತ್ತೇವೆ ಎಂದು ಅಧಿಕಾರಕ್ಕೇರಿದ ಸಿದ್ದರಾಮಯ್ಯನವರು ಮಾಡಿದ್ದು, 'ಆತ್ಮರತಿ'ಯ ಆಡಳಿತ. ಕರುನಾಡು ಈ ಅವಧಿಯಲ್ಲಿ ಒಂದು ಸಮೃದ್ಧ ರಸ್ತೆ ಕಾಣಲಿಲ್ಲ, ಉತ್ತಮ ಮೂಲ ಸೌಕರ್ಯಗಳನ್ನೂ ಕಾಣಲಿಲ್ಲ ಎಂದು ರೈಲ್ವೆ ಖಾತೆ

ಒನ್ ಇ೦ಡಿಯ 17 Feb 2026 9:14 pm

ಸೋನಿಯಾ ಓಕೆ ಅಂದ್ರು, ರಾಹುಲ್ ಅಡ್ಡ ಬಂದ್ರು : ’ಕೈ’ ತೊರೆದ 12 ವರ್ಷದ ಹಿಂದಿನ ರಹಸ್ಯ ಬಿಚ್ಚಿಟ್ಟ ಹಿಮಂತ ಬಿಸ್ವಾ

Himanta Biswa Sarma Vs Rahul Gandhi : ಈಶಾನ್ಯ ಭಾಗದಲ್ಲಿ ಬಿಜೆಪಿ ಬೆಳೆಯಲು ಕಾರಣಕರ್ತರಲ್ಲಿ ಒಬ್ಬರಾದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಯಾವ ಕಾರಣಕ್ಕಾಗಿ ಕಾಂಗ್ರೆಸ್ ಪಾರ್ಟಿಯನ್ನು ತೊರೆಯಬೇಕಾಯಿತು ಎನ್ನುವ ವಿವರಣೆಯನ್ನು ನೀಡಿದ್ದಾರೆ. ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಂದಲೇ ಕಾಂಗ್ರೆಸ್ ತೊರೆಯುವಂತಾಯಿತು ಎಂದು ರಾಹುಲ್ ಹೇಳಿದ್ದಾರೆ.

ವಿಜಯ ಕರ್ನಾಟಕ 17 Feb 2026 9:10 pm

Yadgiri | ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಮೃತ್ಯು

ಯಾದಗಿರಿ:  ಖಾಸಗಿ ಶಾಲಾ ಬಸ್ ಹರಿದು ನಾಲ್ಕು ವರ್ಷದ ಬಾಲಕ ಮೃತಪಟ್ಟ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಗಾಜರಕೋಟ್ ಗ್ರಾಮದ ನಿವಾಸಿಯಾಗಿದ್ದ ಪುನೀತ್, ಸ್ಥಳೀಯ ವಿಸ್ಡಮ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪ್ರತಿದಿನದಂತೆ ಶಾಲಾ ಬಸ್ ವಿದ್ಯಾರ್ಥಿಗಳನ್ನು ಮನೆಗೆ ಬಿಡಲು ಬಂದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳನ್ನು ಕೆಳಗಿಳಿಸಿದ ನಂತರ ಚಾಲಕ ಮುನ್ನೆಚ್ಚರಿಕೆ ವಹಿಸದೆ ಬಸ್ ಅನ್ನು ರಿವರ್ಸ್ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಈ ವೇಳೆ ಬಸ್ ಹಿಂಭಾಗದಲ್ಲಿ ನಿಂತಿದ್ದ ಪುನೀತ್ ಹಿಂಬದಿ ಚಕ್ರದಡಿ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾರ್ತಾ ಭಾರತಿ 17 Feb 2026 9:04 pm

ಫೆ.28ರಂದು ಯೆನೆಪೋಯ ಪರಿಗಣಿತ ವಿ.ವಿ.ಯಲ್ಲಿ ರಾಷ್ಟ್ರೀಯ ಸಮ್ಮೇಳನ

ಮಂಗಳೂರು , ಫೆ.17: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ವಿಭಾಗದ ವತಿಯಿಂದ ಡಿಜಿಟಲ್ ಬೋಧನ ಕಲೆ ವಿಷಯದ ಬಗ್ಗೆ ಫೆ.28ರಂದು ಬೆಳಗ್ಗೆ 10ರಿಂದ ಸಂಸ್ಥೆಯ ಯೆಂಡೋರೆನ್ಸ್ ಸಭಾಂಗಣದಲ್ಲಿ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಲಕ್ಷ್ಮೀ ಮೆಮೋರಿಯಲ್ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲರಿಸ್ಸಾ ಮಾರ್ಥಾ ಸ್ಯಾಮ್ಸ್ ಮತ್ತು ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಶ್ವಿನಿ ದತ್ ಮುಖ್ಯ ಅತಿಥಿಗಳಾಗಿ ಆಗಮಿಸಲಿ ದ್ದಾರೆ. ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲೀನಾ ಕೆ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಈ ಸಮ್ಮೇಳನವು ಆನ್‌ಲೈನ್ ಮತ್ತು ಆಫ್‌ಲೈನ್ ಎರಡು ಮಾದರಿಗಳಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಅಧ್ಯಕ್ಷೆ ಡಾ. ಪ್ರಿಯಾ ರೇಷ್ಮಾ ಅರಾನ್ಹಾ ಮತ್ತು ಕಾರ್ಯದರ್ಶಿ ನಿತ್ಯಶ್ರೀ ಬಿ.ವಿ.ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Feb 2026 9:02 pm

ಮೇಘಾಲಯ ರಾಜ್ಯಕ್ಕೆ ಎಐಸಿಸಿ ವೀಕ್ಷಕರಾಗಿ ಜೆ. ಆರ್. ಲೋಬೊ

ಮಂಗಳೂರು, ಫೆ.17: ದೇಶದ ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮೇಘಾಲಯ ರಾಜ್ಯಕ್ಕೆ ಎಐಸಿಸಿ ವೀಕ್ಷಕರಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ಅವರನ್ನು ನಿಯೋಜಿಸಿದೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಸಂಘಟನ್ ಸೃಜನ್ ಅಭಿಯಾನ್ ಕಾರ್ಯಕ್ರಮದ ಅನುಷ್ಠಾನ ಪ್ರಕ್ರಿಯೆ, ಸಮಿತಿಗಳ ಪುನರ್ ರಚನೆ ಕುರಿತು ಸಮಗ್ರ ವರದಿ ಯನ್ನು ಪಕ್ಷದ ವರಿಷ್ಠರಿಗೆ ತಲುಪಿಸುವುದು ಅವರ ಜವಾಬ್ದಾರಿಯಾಗಿರುತ್ತದೆ. ಫೆ.18ರಿಂದ 25ರ ವರೆಗೆ ಅವರು ಮೇಘಾಲಯದ ರೀ ಭೋಯ್ ಜಿಲ್ಲೆಯ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಸಭೆಗಳಲ್ಲಿ ಹಾಜರಾಗಲಿ ದ್ದಾರೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 17 Feb 2026 8:58 pm

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈಶ್ವರ್ ಖಂಡ್ರೆ ಅವರ ಕೊಡುಗೆ ಅಪಾರ : ಡಾ. ಬಸವಲಿಂಗ ಪಟ್ಟದೇವರು

ಭಾಲ್ಕಿ: ಸಚಿವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಕಷ್ಟಗಳನ್ನು ನಿಭಾಯಿಸುತ್ತಿದ್ದು, ಪ್ರದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಅಭಿಪ್ರಾಯಪಟ್ಟರು. ಪಟ್ಟಣದ ಚನ್ನಬಸವ ಆಶ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾದ ಈಶ್ವರ್ ಖಂಡ್ರೆ ಅವರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಖಂಡ್ರೆ ಅವರು ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಮಂತ್ರಿಯಾಗಿ ಸೇವೆ ಸಲ್ಲಿಸಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅನುಭವ ಮಂಟಪ ನಿರ್ಮಾಣಕ್ಕೂ ಅವರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ರಾಜಕೀಯ ಎಂದರೆ ಸಮಾಜ ಸೇವೆ ಎಂಬ ಸಂದೇಶವನ್ನು ತಮ್ಮ ತಂದೆಯಿಂದ ಪಡೆದಿದ್ದಾಗಿ ಹೇಳಿದರು. ಕ್ಷೇತ್ರದ ಜನರ ಆಶೀರ್ವಾದದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದೇನೆ. ಪ್ರಸ್ತುತ ಅರಣ್ಯ ಸಚಿವನಾಗಿ ಪರಿಸರ ಮತ್ತು ಪ್ರಕೃತಿ ಸಂರಕ್ಷಣೆಗೆ ಒತ್ತು ನೀಡುತ್ತಿದ್ದೇನೆ ಎಂದರು. ಭಾಲ್ಕಿ ಕ್ಷೇತ್ರದ ಗೌರವವನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಮನುಷ್ಯ ಮಾಡಿದ ಸೇವೆ ಶಾಶ್ವತವಾಗಿರುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ನೂತನ ಅನುಭವ ಮಂಟಪವನ್ನು 2027ರ ಮಾರ್ಚ್ ಒಳಗಾಗಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು, ಗೀತಾ ಈಶ್ವರ್ ಖಂಡ್ರೆ, ಅಭಿನಂದನಾ ಸಮಾರಂಭದ ಅಧ್ಯಕ್ಷ ರಾಜಶೇಖರ್ ಅಷ್ಟೂರೆ, ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ, ದೀಪಕ್ ಸೇರಿದಂತೆ ಅನೇಕರು ಇದ್ದರು.  

ವಾರ್ತಾ ಭಾರತಿ 17 Feb 2026 8:57 pm

ಹುಮನಾಬಾದ್ | ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಹುಮನಾಬಾದ್ : ತಾಲೂಕಿನ ದುಬಲಗುಂಡಿ ಗ್ರಾಮದ ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಮದನಿ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಹೆಚ್ ಕೆ ಡಿ ಇ ಟಿ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಿತು. ಶಿಬಿರದಲ್ಲಿ 80ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ತಮ್ಮ ಹಲ್ಲಿನ ಪರೀಕ್ಷೆ ಮಾಡಿಸಿಕೊಂಡರು. ವಿದ್ಯಾರ್ಥಿಗಳಿಗೆ ಹಲ್ಲು ಸ್ವಚ್ಛತೆ ಹಾಗೂ ಆರೋಗ್ಯವಾಗಿಡುವ ವಿಧಾನದ ಕುರಿತು ದಂತ ವೈದ್ಯಕೀಯ ವಿದ್ಯಾರ್ಥಿಗಳು ತಿಳಿಸಿದರು. ಗ್ರಾಮದ ಸುಮಾರು 30ಕ್ಕೂ ಹೆಚ್ಚು ಜನ ಶಿಬಿರದಲ್ಲಿ ಪಾಲ್ಗೊಂಡು ಹಲ್ಲಿನ ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನ ಅಧ್ಯಕ್ಷೆ ಮುಫ್ತಿ ತೌಸಿಫ್ ಖಾನ್, ಡಾ.ಸಂದೀಪ್, ಸ್ಥಳೀಯ ನಿವಾಸಿಗಳಾದ ಇರ್ಫಾನ್, ಸೈಯದ್ ಆಸೀಫ್ ಹಾಗೂ ಜಾವೀದ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 8:53 pm

‘ಆನ್‍ಲೈನ್ ಸುರಕ್ಷತೆ ಹಾಗೂ ಚಿಣ್ಣರ ರಕ್ಷಣೆ: ಕರ್ನಾಟಕ, ಫ್ರಾನ್ಸ್ ಚರ್ಚೆ’ | ನಾವೀನ್ಯತೆ, ಕೌಶಲ ಮತ್ತು ವೈಮಾಂತರಿಕ್ಷ ವಲಯಗಳಲ್ಲಿ ಸಹಯೋಗ ಹೆಚ್ಚಿಸಲು ಒಲವು

ಬೆಂಗಳೂರು : ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಫ್ರಾನ್ಸ್ ಜೊತೆಗಿನ ಸಹಕಾರ ಬಲಪಡಿಸಲು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮಂಗಳವಾರ ಬೆಂಗಳೂರಿನಲ್ಲಿ ಫ್ರಾನ್ಸ್‌ ನ ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ವ್ಯವಹಾರ ಸಚಿವೆ ಆ್ಯನ್ ಲಿ ಹೆನಾಫ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ನಾವೀನ್ಯತೆ, ಕೌಶಲ, ಕೃತಕ ಬುದ್ಧಿಮತ್ತೆ (ಎಐ), ವೈಮಾಂತರಿಕ್ಷ ಮತ್ತು ರಕ್ಷಣಾ ಉತ್ಪಾದನೆ, ನವೋದ್ಯಮ ಮತ್ತು ಡಿಜಿಟಲ್ ಆಡಳಿತದಲ್ಲಿ ಪರಸ್ಪರ ಸಹಯೋಗ ವಿಸ್ತರಿಸುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು. ಫ್ರಾನ್ಸ್‌ ನಲ್ಲಿ ಕುಶಲ ಎಂಜಿನಿಯರ್‍ಗಳು ಮತ್ತು ತಂತ್ರಜ್ಞಾನ ವೃತ್ತಿಪರರ ಹೆಚ್ಚುತ್ತಿರುವ ಅಗತ್ಯದ ವಿವರಗಳನ್ನು ಹಂಚಿಕೊಂಡ ಫ್ರಾನ್ಸ್ ನಿಯೋಗವು, ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನಗಳಲ್ಲಿ ಕರ್ನಾಟಕದ ಜೊತೆಗೆ ಕೆಲಸ ಮಾಡಲು ತೀವ್ರ ಆಸಕ್ತಿ ವ್ಯಕ್ತಪಡಿಸಿತು. ಭಾರತದಲ್ಲಿ ಸೇವೆ ಹಾಗೂ ವಹಿವಾಟು ವಿಸ್ತರಿಸಲು ಉದ್ದೇಶಿಸಿರುವ ಫ್ರಾನ್ಸ್ ಕಂಪನಿಗಳಿಗೆ ಬೆಂಗಳೂರು ಮಹಾದ್ವಾರ ಆಗಲಿದೆ. ಪ್ಯಾರಿಸ್ ನಮ್ಮ ನವೋದ್ಯಮಗಳ ಪಾಲಿಗೆ ಫ್ರಾನ್ಸ್ ಮತ್ತು ಯುರೋಪ್ ಒಕ್ಕೂಟದ ಮಾರುಕಟ್ಟೆ ಪ್ರವೇಶಿಸಲು ಮಹಾದ್ವಾರ ಆಗಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಫ್ರಾನ್ಸ್ ಸರಕಾರದ ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ವ್ಯವಹಾರಗಳ ಸಚಿವೆ ಆ್ಯನ್ ಲಿ ಹೆನಾಫ್ ಮಾತನಾಡಿ, ಡಿಜಿಟಲ್ ಜಗತ್ತಿನಲ್ಲಿ ಮಕ್ಕಳ ರಕ್ಷಣೆಗೆ ಆದ್ಯತೆ ನೀಡುವುದು ಹಾಗೂ ಸುರಕ್ಷತೆ ಬಲಪಡಿಸುವುದು ಸದ್ಯದ ತುರ್ತು ಅಗತ್ಯವಾಗಿದೆ. ತಂತ್ರಜ್ಞಾನವು ಸಮಾಜಕ್ಕೆ ಪ್ರಯೋಜನ ನೀಡುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವೀನ್ಯತೆ, ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಸಂಯೋಜಿಸುವ ಮೂಲಕ ಜವಾಬ್ದಾರಿಯುತ, ವಿಶ್ವಾಸಾರ್ಹ ಮತ್ತು ಕೃತಕ ಜಾಣ್ಮೆ ಕ್ಷೇತ್ರಗಳಲ್ಲಿ ನಾವು ಕರ್ನಾಟಕದ ಜೊತೆ ಸಹಯೋಗದಿಂದ ಕೆಲಸ ಮಾಡುವ ಅವಕಾಶಗಳನ್ನು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್. ಮತ್ತು ಇಲಾಖೆಯ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 8:52 pm

ಎಲ್ಲರ ಕಾಲೆಳೆಯುತ್ತೆ ಕಾಲ; ಮಿಚೆಲ್ ಮಾರ್ಷ್ 2023ರ ವಿಶ್ವಕಪ್ ಮೇಲೆ ಕಾಲಿಟ್ಟದ್ದಕ್ಕೇ ಸೋಲುತ್ತಿದೆಯೇ ಆಸ್ಟ್ರೇಲಿಯಾ?

Australia Team Downfall After 2023 World Cup-ಗೆಲುವಿನೊಂದಿಗೆ ವಿನಯತೆ ಬರಬೇಕು, ದುರಂಹಕಾರವಲ್ಲ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರ ವರ್ತನೆಯನ್ನು ಹಿಂದಿನಿಂದಿಲೂ ಗಮನಿಸುತ್ತಾ ಬಂದವರಿಗೆ ಅವರೆಂತಹಾ ದುರಂಹಂಕಾರಿಗಳು ಎಂಬುದು ಚೆನ್ನಾಗಿ ಗೊತ್ತು. 2023ರ ವಿಶ್ವಕಪ್ ನ ಮೇಲೆ ಮಿಚೆಲ್ ಮಾರ್ಷ್ ಕಾಲಿಟ್ಟಾಗಲೇ ಇವರ ವರ್ತನೆ ಜಗತ್ತಿನ ಕಣ್ಣು ಕೆಂಪಗಾಗಿಸಿತ್ತು. ಅಂದೇ ಈ ವಿಶ್ವಶ್ರೇಷ್ಠ ತಂಡದ ಪತನ ಶುರುವಾಯಿತಾ? ಇದೀಗ ಐಸಿಸಿ ಟಿ20 ವಿಶ್ವಕಪ್ ನ ಗುಂಪು ಹಂತದಿಂದಲೇ ಆಸ್ಟ್ರೇಲಿಯಾ ತಂಡ ಹೊರಬಿದ್ದಿರುವಾಗ ಸಾಮಾಜಿಕ ಜಾಲತಾಣದಲ್ಲಿ ಹೀಗೊಂದು ಮಾತು ಕೇಳಿ ಬರುತ್ತಿದೆ.

ವಿಜಯ ಕರ್ನಾಟಕ 17 Feb 2026 8:52 pm

ಹುಲಸೂರ್ | ಸಂಘಟಿತ ಶಕ್ತಿಯಿಂದಲೇ ನೌಕರರ ಹಕ್ಕುಗಳನ್ನು ರಕ್ಷಿಸಬಹುದು : ಸಿ.ಎಸ್‌.ಷಡಾಕ್ಷರಿ

ಹುಲಸೂರ್: ನೌಕರರ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟಿತ ಶಕ್ತಿಯಿಂದಲೇ ಹಕ್ಕುಗಳನ್ನು ರಕ್ಷಿಸಬಹುದು ಎಂದು ಸಿ.ಎಸ್. ಷಡಾಕ್ಷರಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ನೌಕರರು ಎದುರಿಸುತ್ತಿರುವ ಸೇವಾ ಭದ್ರತೆ, ಪದೋನ್ನತಿ, ವೇತನ ಮತ್ತು ಕಲ್ಯಾಣ ಯೋಜನೆಗಳ ಕುರಿತಂತೆ ವಿವರಿಸಿದರು. ನೌಕರರು ತಮ್ಮ ಜವಾಬ್ದಾರಿ, ನಡೆನುಡಿ ಮತ್ತು ಕಾರ್ಯಪದ್ಧತಿಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಶಿಕ್ಷಕರು ಸೇರಿದಂತೆ ಅನೇಕ ನೌಕರರು ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಉಲ್ಲೇಖಿಸಿ, ಸಮಯಪಾಲನೆ ಮತ್ತು ಕರ್ತವ್ಯನಿಷ್ಠೆ ಅಗತ್ಯ ಎಂದು ತಿಳಿಸಿದರು. ಶಿಸ್ತು, ನಿಷ್ಠೆ ಮತ್ತು ಹೊಣೆಗಾರಿಕೆಯಿಂದ ಸೇವೆ ಸಲ್ಲಿಸಿದಾಗ ಆಡಳಿತದ ಮೇಲೆ ಜನರ ವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಾಸಕ ಶರಣು ಸಲಗರ್ ಮಾತನಾಡಿ, ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಂತರ ಜನರ ಆಶೀರ್ವಾದದಿಂದ ಶಾಸಕರಾಗಿ ಆಯ್ಕೆಯಾಗಿದ್ದೇನೆ. ಸರ್ಕಾರಿ ನೌಕರರಿಗೆ ರಕ್ಷಣೆ ನೀಡುವುದು ಶಾಸಕರ ಕರ್ತವ್ಯವಾಗಿದೆ. ಒಳ್ಳೆಯ ಭಾವನೆಯೊಂದಿಗೆ ಸಂಪರ್ಕಿಸಿದವರಿಗೆ ಸಹಕರಿಸಬೇಕು. ಸಮಸ್ಯೆ ಇದ್ದಲ್ಲಿ ದೂರು ಸಲ್ಲಿಸಬೇಕು ಎಂದು ಹೇಳಿದರು. ಸಂಘದ ತಾಲ್ಲೂಕಾಧ್ಯಕ್ಷ ನಾಗರಾಜ್ ಹಾವಣ್ಣ ನೂತನ ತಾಲ್ಲೂಕಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗಳು ಆರಂಭವಾಗಬೇಕು ಎಂದು ಒತ್ತಾಯಿಸಿದರು. ಕಾರ್ಯಾಲಯ ಸ್ಥಾಪನೆಯಿಂದ ಸಂಘಟನಾ ಚಟುವಟಿಕೆಗಳು ಪರಿಣಾಮಕಾರಿಯಾಗಲಿವೆ ಎಂದರು. ದಿವ್ಯ ಸಾನಿಧ್ಯ ವಹಿಸಿದ್ದ ಶಿವಾನಂದ ಸ್ವಾಮೀಜಿ ಅವರು, ಸೇವಾ ಮನೋಭಾವ ಮತ್ತು ಪ್ರಾಮಾಣಿಕತೆ ಅಗತ್ಯವೆಂದು ತಿಳಿಸಿದರು. ಈ ವೇಳೆ ತಹಶೀಲ್ದಾರ್ ಶಿವಾನಂದ ಮೇತ್ರೆ, ರಾಜ್ಯ ಪರಿಷತ್ ಸದಸ್ಯ ಭೀಮಾಶಂಕರ್ ಅಡೆಪ್ಪಾ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಗಿರಿಗೌಡ, ಎಸ್. ಬಸವರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಾರಾಣಿ ಭೋಸ್ಲೆ, ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಸೂರ್ಯಕಾಂತ್ ಬಿರಾದಾರ್, ಸಹಾಯಕ ಆಯುಕ್ತ ಪ್ರಕಾಶ್ ಕುದುರೆ, ತಾಲೂಕು ಪಂಚಾಯತ್ ಇಓ ಮಹಾದೇವ್ ಜಮ್ಮು, ಸಂಘಟನೆಯ ಕಾರ್ಯದರ್ಶಿ ಶಿವರಾಜ್ ಮಾಶೆಟ್ಟಿ, ರಾಜಕುಮಾರ್ ಶೆಟ್ಟೆಪ್ಪ, ಧರ್ಮೇಂದ್ರ ಭೋಸ್ಲೆ, ಜಗನ್ನಾಥ್ ಡಗೆ, ಸಂದೀಪ್ ಬಿರಾದಾರ್, ಬಾಲಾಜಿ ಪಾಟೀಲ್, ಸುಭಾಷ್ ಕಾಮಶೆಟ್ಟಿ, ನಾಗರಾಜ್ ಬಿರಾದಾರ್ ಹಾಗೂ ಪ್ರಶಾಂತ್ ಚಾರ್ಲಾ ಸೇರಿದಂತೆ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಸರ್ಕಾರಿ ನೌಕರರು, ನಿವೃತ್ತ ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

ವಾರ್ತಾ ಭಾರತಿ 17 Feb 2026 8:51 pm

ಬಾಂಗ್ಲಾದೇಶ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ, ಭಾರತದ ಸ್ಪೀಕರ್ ಭಾಗಿ | Bangladesh Election

ಭಾರತದ ನೆರೆಯ ದೇಶ ಹಾಗೂ ಭಾರತವೇ ಮುಂದೆ ನಿಂತು ಪಾಕಿಸ್ತಾನಕ್ಕೆ ಸರಿಯಾಗಿ ಪೆಟ್ಟು ಕೊಟ್ಟು ಸ್ವಾತಂತ್ರ್ಯ ಕೊಡಿಸಿದ ದೇಶ ಬಾಂಗ್ಲಾದೇಶಕ್ಕೆ ಇಂದು ಹೊಸ ಪ್ರಧಾನಿಯ ಆಗಮನ ಆಗಿದೆ. ಕಳೆದ ಕೆಲ ವರ್ಷಗಳಿಂದ ಭಾರತ ಹಾಗೂ ಬಾಂಗ್ಲಾದೇಶ ನಡುವೆ ದೊಡ್ಡ ಕಿಚ್ಚು ಹೊತ್ತಿಕೊಂಡು, ಸಂಬಂಧವೇ ಹಾಳಾಗಿ ಹೋಗಿತ್ತು. ಅದರಲ್ಲೂ ಇನ್ನೇನು ಬಾಂಗ್ಲಾ ಹಂಗಾಮಿ ಸರ್ಕಾರ ಭಾರತವನ್ನ ದೂರ ಮಾಡಿ

ಒನ್ ಇ೦ಡಿಯ 17 Feb 2026 8:46 pm

ಮಾನ್ವಿ | ಫೆ.28ರಂದು 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು ನುಡಿ ಜಾತ್ರೆಗೆ ಸರ್ವರಿಗೂ ಸ್ವಾಗತ : ಶರಣಬಸವ ನೀರಮಾನ್ವಿ

ವಾರ್ತಾ ಭಾರತಿ 17 Feb 2026 8:46 pm

ಜಮೀನಿಗೆ ಪ್ರಸ್ತುತ ಮಾರುಕಟ್ಟೆ ಮೌಲ್ಯ ನಿಗದಿ ಪಡಿಸಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ

ರಾಷ್ಟ್ರೀಯ ಹೆದ್ದಾರಿ 169 ಭೂಸ್ವಾಧೀನ ಪ್ರಕ್ರಿಯೆ

ವಾರ್ತಾ ಭಾರತಿ 17 Feb 2026 8:44 pm

ಮಾನ್ವಿ | 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಬಸವಪ್ರಭು ಪಾಟೀಲ್ ಆಯ್ಕೆ

ಮಾನ್ವಿ : ಮಾನ್ವಿ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಡಾ.ಬಸವಪ್ರಭು ಪಾಟೀಲ್ ಇವರನ್ನು ತಾಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಶರಣಬಸವ ನೀರಮಾನ್ವಿ ತಿಳಿಸಿದ್ದಾರೆ. ಫೆ.28 ರಂದು ನೀರಮಾನ್ವಿ ಗ್ರಾಮದ ಶ್ರೀಸಿದ್ದಾರೂಢ ಮಠದ ಮೈದಾನದಲ್ಲಿ ನಡೆಯುವ 11ನೇ ಮಾನ್ವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಡಾ.ಬಸವಪ್ರಭು ಪಾಟೀಲ್ ಇವರನ್ನು ಆಯ್ಕೆ ಮಾಡಿರುವುದು ಸಾಹಿತ್ಯಿಕ ಬಳಗದಲ್ಲಿ ತುಂಬಾ ಹರ್ಷವನ್ನುಂಟು ಮಾಡಿದೆ ಎಂದರು. ಫೆ.28 ರಂದು ನಡೆಯುವ 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು ನುಡಿಯ ಜಾತ್ರೆಯಾಗಿದ್ದು, ಕನ್ನಡ ಪ್ರೇಮಿಗಳು ಕನ್ನಡ ಅಭಿಮಾನಿಗಳು ಎಲ್ಲಾರು ಒಗ್ಗೂಡಿ ಸಮ್ಮೇಳನ ಯಶಸ್ಸಿಗೆ ಶ್ರಮಿಸಬೇಕಿದೆ ಎಂದು ಶರಣಬಸವ ನೀರಮಾನ್ವಿ ಮನವಿ ಮಾಡಿದ್ದಾರೆ. ಸಭೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿಗಳು ಲಕ್ಷ್ಮಣ ಜಾನೇಕಲ್, ಜಿ.ಎಸ್. ಬಾಲಾಜಿಸಿಂಗ್ ಮಾನ್ವಿ, ಗೌರವಕೋಶ್ಯಾಧ್ಯಕ್ಷ ಮನೋಜ್ ಕುಮಾರ ಮಿಶ್ರಾ, ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಮತರ, ಸಬ್ಬಲಿ ಶಿಕ್ಷಕರು ಮಾನ್ವಿ, ಮಹಾಂತೇಶ ಗುಜ್ಜಲ್ ಪೋತ್ನಾಳ, ಶಿವಕುಮಾರ ಜಗ್ಗಿ ಮಾನ್ವಿ, ರವಿಶರ್ಮ ಮಾನ್ವಿ, ಮಹಿಳಾ ಪ್ರತಿನಿಧಿಗಳಾದ ಗಿರಿಜಾ ವಸ್ತ್ರದ್ ಶಿಕ್ಷಕಿ ಮಾನ್ವಿ, ಅಂಬಮ್ಮ ಪ್ರತಾಪ್‌ಸಿಂಗ್ ಸಾಹಿತಿ ಮಾನ್ವಿ, ರಾಮು ಹೊಳೆಯಪ್ಪನವರ್ ಮಾನ್ವಿ, ಪ್ರೀತಮ್ ಕೊಡ್ಲಿ ಮಾನ್ವಿ, ಜೆ. ಆಂಜನೇಯ್ಯನಾಯಕ ನೀರಮಾನ್ವಿ, ಜೆ.ಪಿ. ಅಮರೇಶ ಮಾನ್ವಿ ನಿವೃತ್ತ ಶಿಕ್ಷಕರು,  ಸೈಯ್ಯದ್ ಮಿನಾಜ್ ಉಲ್ ಹಸನ್ ಮಾನ್ವಿ, ಶ್ರೀಕಾಂತ ಪಾಟೀಲ್ ಗೂಳಿ ಮಾನ್ವಿ, ಸುಜಾತ ಶ್ರೀನಿವಾಸ, ಸಿದ್ಧಾರ್ಥ ಪಿಯು ಕಾಲೇಜ್, ಈರಣ್ಣ ಮರ್ಲಟ್ಟಿ, ಗಾಂಧೀ ಪದವಿ ಕಾಲೇಜ್, ಸುರೇಶ ಕುರ್ಡಿ ಮಾನ್ವಿ, ಹಿರೇಕೊಟ್ನೆಕಲ್ ಹೋಬಳಿ ಘಟಕ ಅಧ್ಯಕ್ಷರು ಹನುಮಂತಪ್ಪ ಕೊಟ್ನೆಕಲ್ ಇದ್ದರು.

ವಾರ್ತಾ ಭಾರತಿ 17 Feb 2026 8:43 pm

Raichur | ಬೊಮ್ಮನಾಳದಲ್ಲಿ ಚರ್ಚ್ ಹೆಬ್ಬಾಗಿಲು ಅನಾವರಣ

ಶಿಕ್ಷಣದಲ್ಲಿ ಕ್ರೈಸ್ತ ಸಮುದಾಯದ ಕೊಡುಗೆ ಶ್ಲಾಘನೀಯ : ಆಯುಕ್ತ ಬಿ. ವೆಂಕಟಸಿಂಗ್

ವಾರ್ತಾ ಭಾರತಿ 17 Feb 2026 8:39 pm

ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕ್ರಮ : ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಅಪ್ರಾಪ್ತ ಮಕ್ಕಳ ಕೈಗೆ ವಾಹನಗಳನ್ನು ನೀಡಿ ಚಾಲನೆ ಮಾಡಲು ಅವಕಾಶ ಕಲ್ಪಿಸಿದರೆ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‍ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿಗೆ ಹೊಸಕೋಟೆ ಹಾಗೂ ನೆಲಮಂಗಲದ ಬಳಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳು ನಡೆದಿವೆ. ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಬಹುತೇಕ ಅಪ್ರಾಪ್ತರು. ಹೀಗಾಗಿ, ಪೋಷಕರು ತಮ ಮಕ್ಕಳು ಎಲ್ಲಿಗೆ ಹೋಗುತ್ತಾರೆ ಎಂಬುವುದರ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು. ಅಪ್ರಾಪ್ತರು ವಾಹನ ಚಾಲನೆ ಮಾಡುವುದು ನಿಯಮ ಉಲ್ಲಂಘನೆಯಾಗುತ್ತದೆ. ಈ ಬಗ್ಗೆ ನಮ್ಮ ಪೊಲೀಸರು ಈಗಾಗಲೇ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಅರಿವು ಮೂಡಿಸುತ್ತಿದ್ದರೂ ಸಹ ಅಪ್ರಾಪ್ತರು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಇದೀಗ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದೇವೆ. ಯಾರೇ ಅಪ್ರಾಪ್ತರು ಸಿಕ್ಕಿಬಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ವಾರ್ತಾ ಭಾರತಿ 17 Feb 2026 8:39 pm

ರಾಜ್ಯ ಬಜೆಟ್ | ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು: 2026-27ನೆ ಸಾಲಿನ ರಾಜ್ಯ ಬಜೆಟ್ ಸಂಬಂಧ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳ ಕುರಿತು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಝಮೀರ್ ಅಹ್ಮದ್ ಖಾನ್, ರಹೀಂ ಖಾನ್, ಡಿ.ಸುಧಾಕರ್, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಶಾಸಕರಾದ ತನ್ವೀರ್ ಸೇಠ್, ಕನೀಝ್ ಫಾತಿಮಾ, ಯಾಸೀರ್ ಅಹ್ಮದ್ ಖಾನ್ ಪಠಾಣ್, ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಬಲ್ಕೀಸ್ ಬಾನು, ಐವನ್ ಡಿ’ಸೋಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 8:35 pm

ದೇವದುರ್ಗ | ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಡೆಗಟ್ಟಲು ಪಿಡಿಒಗಳಿಗೆ ಶಾಸಕಿ ಕರೆಮ್ಮ ಕಟ್ಟುನಿಟ್ಟಿನ ಸೂಚನೆ

ದೇವದುರ್ಗ: ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ಪದೇಪದೇ ಸೂಚನೆ ನೀಡಿದರೂ ಕಾರ್ಯನಿರ್ವಹಿಸದ ಪಿಡಿಒಗಳು ಇಲ್ಲಿಂದ ಜಾಗ ಖಾಲಿ ಮಾಡಬೇಕು ಎಂದು ಶಾಸಕಿ ಕರೆಮ್ಮ ಎಚ್ಚರಿಕೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ದೇವದುರ್ಗ ಹಾಗೂ ಅರಕೇರಾ ತಾಲೂಕುಗಳ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪಲಕನಮರಡಿ ಗ್ರಾಪಂ ವ್ಯಾಪ್ತಿಯ 11 ಹಳ್ಳಿಗಳಿಗೆ ನೀರು ಪೂರೈಸುವ ಯೋಜನೆಯಡಿ ಕೆಲವೇ ಗ್ರಾಮಗಳಿಗೆ ಮಾತ್ರ ನೀರು ಸರಬರಾಜಾಗುತ್ತಿರುವುದನ್ನು ಪ್ರಶ್ನಿಸಿ ಪಿಡಿಒಗೆ ತರಾಟೆಗೆ ತೆಗೆದುಕೊಂಡರು. ಕೆಲವು ಗ್ರಾಪಂ ವ್ಯಾಪ್ತಿಯಲ್ಲಿ ಸ್ವಂತ ಹಣದಲ್ಲಿ ಬೋರವೆಲ್‌ ತೋಡಿಸಿದ್ದರೂ ಮೋಟರ್ ಅಳವಡಿಸಿ ನೀರು ಪೂರೈಸಲು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಪಂ ಸಿಇಒಗೆ ಪತ್ರ ಬರೆಯುವಂತೆ ತಾಪಂ ಇಒಗೆ ಸೂಚಿಸಿದರು. ಗ್ರಾಮಸಭೆಗಳಲ್ಲಿ ಜನರ ಸಮಸ್ಯೆಗಳು ಕೇಳಿಬರುತ್ತಿರುವುದರಿಂದ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದರೆ ಮುಲ್ಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಅನುದಾನ ತರುವುದಾಗಿ ತಿಳಿಸಿ, ಸರ್ಕಾರಿ ಜಾಗಗಳನ್ನು ಕಾಯ್ದಿರಿಸುವಂತೆ ಸೂಚಿಸಿದರು. ತಾಂಡಾ, ದೊಡ್ಡಿ, ಗುಡ್ಡಗಾಡು ಪ್ರದೇಶಗಳ ಹಳ್ಳಿಗಳಿಗೆ ಸಮರ್ಪಕ ನೀರು ಪೂರೈಸುವ ಕ್ರಮ ಕೈಗೊಳ್ಳಬೇಕು. ಗಲಗ ಗ್ರಾಮದಲ್ಲಿ ರಸ್ತೆ ಮೇಲೆ ಗಲೀಜು ನೀರು ಹರಿಯುತ್ತಿರುವ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಿದರು. ಆಕಳಕುಂಪಿ ಹಾಗೂ ಸಿಗೇರದೊಡ್ಡಿಯಲ್ಲಿ ವಾರದೊಳಗೆ ನೀರಿನ ಸಮಸ್ಯೆ ನಿವಾರಣೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಕಲುಷಿತ ನೀರು ಪೂರೈಕೆಯಿಂದ ಹಿಂದೆ ಸಂಭವಿಸಿದ ದುರಂತಗಳನ್ನು ಉಲ್ಲೇಖಿಸಿ, ಟ್ಯಾಂಕ್‌ಗಳ ಸ್ವಚ್ಛತೆ ಹಾಗೂ ಗ್ರಾಮೀಣ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ರಸ್ತೆ ಪಕ್ಕ ತಿಪ್ಪಿಗುಂಡಿಗಳಿಂದ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲು ಸೂಚಿಸಿದರು. ಜಲ ನಿರ್ಮಲ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಅಪೂರ್ಣವಾಗಿರುವುದನ್ನು ಸರಿಪಡಿಸಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು. ಸಭೆಯಲ್ಲಿ ಜಿಪಂ ಯೋಜನೆ ನಿರ್ದೇಶಕ ಶರಣ ಬಸವ ಕೆಸರರಹಟ್ಟಿ, ತಹಶೀಲ್ದಾರ ನಾಗಮ್ಮ ಕಟ್ಟಿಮನಿ, ತಾಪಂ ಇಒ ಬಸವರಾಜ ಹಟ್ಟಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 8:33 pm

ಎಸ್‍ಐಆರ್ ಲೋಪದೋಷಗಳನ್ನು ಸರಿಪಡಿಸಲು ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮನವಿ

ಬೆಂಗಳೂರು : ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್)ಯಲ್ಲಿನ ಲೋಪ-ದೋಷಗಳನ್ನು ಸರಿಪಡಿಸಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗವು ಮನವಿ ಮಾಡಿದೆ. ಮಂಗಳವಾರ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಪತ್ರ ಸಲ್ಲಿಸಿದ ನಿಯೋಗವು, ‘ಜಿಬಿಎ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು. ಅರ್ಹ ಮತದಾರರನ್ನು ತಪ್ಪಾಗಿ ಪಟ್ಟಿಯಿಂದ ಅಳಿಸಿದ್ದರೆ ಅವರನ್ನು ಮರು ಸೇರ್ಪಡೆ ಮಾಡಬೇಕು. ಒಂದೇ ಮನೆಯಲ್ಲಿನ ಸದಸ್ಯರು ವಿವಿಧ ಮತಗಟ್ಟೆಗಳಲ್ಲಿದ್ದರೆ ಅವರ ಹೆಸರುಗಳನ್ನು ಸರಿಪಡಿಸಬೇಕು. ಈ ಕುರಿತು ಪರಿಶೀಲನೆಗೆ ಚುನಾವಣಾಧಿಕಾರಿಗಳ ಜತೆಗೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರಿಗೂ ಅವಕಾಶ ಕಲ್ಪಿಸಬೇಕು ಎಂದು ಕೋರಿದೆ. ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಈ ಹಿಂದೆ ಚುನಾವಣಾ ಆಯೋಗ ಸಿದ್ಧಪಡಿಸಿದ ಮತದಾರರ ಪಟ್ಟಿಯ ಆಧಾರದಲ್ಲಿ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡಲು ಮುಂದಾಗಿದ್ದು, ಆ ಮತದಾರರ ಪಟ್ಟಿಯಲ್ಲಿ ಲೋಪದೋಷಗಳಾಗಿವೆ. ಒಂದೇ ಮನೆಯ ಮತದಾರರನ್ನು ಬೇರೆ-ಬೇರೆ ಬೂತ್‍ಗಳಿಗೆ ಹಾಕಲಾಗಿದೆ. ಮತದಾರರ ಮ್ಯಾಪಿಂಗ್ ಸರಿಯಾಗಿ ಮಾಡಿಲ್ಲ’ ಎಂದು ಆಕ್ಷೇಪಿಸಿದರು. ಈ ಕುರಿತು ಪರಿಶೀಲನೆಗೆ ಬಿಎಲ್‍ಎಗಳನ್ನು ಕರೆದುಕೊಂಡು ಹೋಗಿ, ಮನೆ, ರಸ್ತೆ ಹಾಗೂ ಮತದಾರರನ್ನೂ ಸರಿಯಾದ ರೀತಿಯಲ್ಲಿ ಮ್ಯಾಪಿಂಗ್ ಮಾಡಿಸಬೇಕು. ಆ ಮೂಲಕ ಈ ಹಿಂದಿನ ಮತದಾರರ ಪಟ್ಟಿಯಲ್ಲಾಗಿರುವ ಲೋಪದೋಷವನ್ನು ಸರಿಪಡಿಸಬೇಕು ಎಂದು ಶಿವಕುಮಾರ್ ಮನವಿ ಮಾಡಿದರು. ಶುದ್ದ ಮತದಾರರ ಪಟ್ಟಿ ಅಗತ್ಯ: ಎಲ್ಲ ರಾಜಕೀಯ ಪಕ್ಷಗಳನ್ನು ಸೇರಿಸಿ ನ್ಯಾಯಬದ್ಧವಾಗಿ ಮತದಾರರ ಪಟ್ಟಿ ಪರಿಷ್ಕರಿಣೆ ಮಾಡಬೇಕು. ಈ ಹಿಂದೆ ಎಸ್‍ಐಆರ್ ಮಾಡುವ ವೇಳೆ ದುರುಪಯೋಗ ಮಾಡಲಾಗಿದೆ. ಕೆಲವು ಕಡೆಗಳಲ್ಲಿ ಫಾರಂ ನಂ-7 ಕೊಟ್ಟು ಹೆಸರುಗಳನ್ನು ಅಳಿಸಲಾಗಿದೆ. ಇಂತಹ ಎಲ್ಲ ಲೋಪಗಳನ್ನು ಸರಿಪಡಿಸಬೇಕು. ಜಿಬಿಎ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಪರಿಶುದ್ಧ ಮತದಾರರ ಪಟ್ಟಿ ಮಾಡಬೇಕು ಎಂದು ಅವರು ಕೋರಿದರು. ಕೆಲವು ಕಡೆಗಳಲ್ಲಿ ಬಿಎಲ್‍ಎಗಳು ಒಂದೇ ಮನೆಯ ಮತಗಳನ್ನು ಎರಡು ಬೂತ್‍ಗಳಿಗೆ ವಿಭಾಗ ಮಾಡಿಸಿದ್ದಾರೆ. ಇನ್ನು ಕೆಲವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲಾಗಿದೆ. ಎರಡು-ಮೂರು ಕಡೆಗಳಲ್ಲಿ ಮತದಾರ ಮಾಡಿದ ಪ್ರಕರಣಗಳಿದ್ದು, ಈ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ರಾಜ್ಯ ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ. ಕೇಂದ್ರ ಚುನಾವಣಾ ಆಯೋಗದ ಎಸ್‍ಐಆರ್‍ಗೂ ರಾಜ್ಯ ಚುನಾವಣಾ ಆಯೋಗದ ಎಸ್‍ಐಆರ್ ನಡುವೆ ತಿಕ್ಕಾಟ ಆಗುವ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ ಎಂದು ಅವರು ನುಡಿದರು. ನಿಯೋಗದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕರಾದ ರಿಝ್ವಾನ್ ಅರ್ಶದ್, ಎ.ಸಿ.ಶ್ರೀನಿವಾಸ್, ಪರಿಷತ್ ಸದಸ್ಯರಾದ ಪುಟ್ಟಣ್ಣ, ಶ್ರೀನಿವಾಸ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 17 Feb 2026 8:29 pm

Raichur | ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ನ್ಯಾ.ಎಚ್.ಎ.ಸಾತ್ವಿಕ್

ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

ವಾರ್ತಾ ಭಾರತಿ 17 Feb 2026 8:28 pm

ಬೀದಿ ವ್ಯಾಪಾರಿಗಳ ಹಕ್ಕುಪ್ರಾಪ್ತಿಗೆ ಹೋರಾಟ ಅನಿವಾರ್ಯ : ಬಿ.ಕೆ ಇಮ್ತಿಯಾಝ್

ಉಳ್ಳಾಲ : ಬೀದಿಬದಿ ವ್ಯಾಪಾರದ ಕಾನೂನನ್ನು ಅನುಷ್ಠಾನ ಮಾಡದೆ ಅವರ ಮೇಲೆ ಬುಲ್ದೊಜರ್ ದಾಳಿ ಮಾಡಿರು ವುದು ದುರ್ಬಲ ವರ್ಗಗಳ ಮೇಲೆ ಆಡಳಿತ ವ್ಯವಸ್ಥೆಯು ನ್ಯಾಯ ಮತ್ತು ಸಹಾನುಭೂತಿಯ ನಿರಾಕರಣೆಯ ಸಂಕೇತ ಎಂದು ಸಿಐಟಿಯು ಸಂಯೋಜಿತ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ ಹಾಗೂ ಸಿಐಟಿಯು ಉಳ್ಳಾಲ ತಾಲೂಕು ಸಮಿತಿ ಇದರ ಆಶ್ರಯದಲ್ಲಿ ಬೀದಿ ಬದಿ ವ್ಯಾಪಾರಿಗಳ ಬದುಕುವ ಹಕ್ಕಿಗಾಗಿ, ಬೀದಿ ಬದಿ ವ್ಯಾಪಾರದ ಕಾನೂನು ರಕ್ಷಣೆಗೆ ಆಗ್ರಹಿಸಿ ಕುತ್ತಾರ್ ಖಾಸಗಿ ಸಭಾಂಗಣದಲ್ಲಿ ನಡೆದ ಬೀದಿ ಬದಿ ವ್ಯಾಪಾರಸ್ಥರ ಉಳ್ಳಾಲ ತಾಲೂಕು ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಗೂಡಂಗಡಿಗಳಲ್ಲಿ ಚಾ ಕುಡಿದು ಜಾಲತಾಣದಲ್ಲಿ ರೀಲ್ಸ್ ಹಾಕಿ ಪ್ರಚಾರ ಪಡೆಯುವ ಶಾಸಕರು, ಮಂತ್ರಿಗಳು ಬೀದಿ ವ್ಯಾಪಾರಿಗಳ ಮೇಲೆ ದಾಳಿ ನಡೆಯುವ ಕಷ್ಟದ ಕಾಲದಲ್ಲಿ ಕಣ್ಮರೆ ಆಗುತ್ತಾರೆ.ಇಂತಹ ಸಂಕಷ್ಟದ ಕಾಲದಲ್ಲಿ ಬೀದಿ ವ್ಯಾಪಾರಿಗಳ ಹಕ್ಕುಪ್ರಾಪ್ತಿಗೆ ಹೋರಾಟ ಅನಿವಾರ್ಯ ಎಂದು ಅವರು ಹೇಳಿದರು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಮಗೆ ಕಷ್ಟ ಬಂದಾಗ ಮಾತ್ರ ಕಾನೂನು ನೆನಪಾಗುತ್ತದೆ. ಕಷ್ಟ ಇದೆ ಎಂದು ರಸ್ತೆ ಯಲ್ಲಿ ವ್ಯಾಪಾರ ಮಾಡಲು ಶುರು ಮಾಡುತ್ತೇವೆ. ಇದಕ್ಕೆ ಸರ್ಕಾರ ಅಡ್ಡಿ ಪಡಿಸುವುದು ಸರಿಯಲ್ಲ. ದಾಳಿ ಮಾಡಿ ಕೊಂಡು ಹೋದ ವಸ್ತುಗಳನ್ನು ವಾಪಸ್ ನೀಡಬೇಕು ಎಂಬ ನಿಯಮ ಇದೆ.ಆದರೆ ದಾಳಿ ನಡೆಸಿದ ಅಧಿಕಾರಿಗಳು ವಸ್ತುಗಳನ್ನು ವಾಪಸ್ ನೀಡದೇ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬೀದಿ ಬದಿ ವ್ಯಾಪಾರ ಮಾಡುವ ಮುಸ್ಲಮಾನರು ದೇವಸ್ಥಾನಕ್ಕೆ ಬರಬಾರದು ಎಂದು ಬೋರ್ಡ್ ಹಾಕಿದರು. ಇದು ಯಾವ ನ್ಯಾಯ, ಬೀದಿ ಬದಿ ವ್ಯಾಪಾರದ ನಡುವೆ ಧರ್ಮ ದ ಗೋಡೆ ಕಟ್ಟಿ ಆಕ್ಷೇಪ ಮಾಡುವುದು ಎಷ್ಟು ಸರಿ, ಇದರ ವಿರುದ್ಧ ನಾವು ಹೋರಾಟ ಮಾಡಿದ ಕಾರಣ ಬೀದಿ ಬದಿ ವ್ಯಾಪಾರಿಗಳ ನಡುವೆ ಧರ್ಮದ ಗೋಡೆ ಕಟ್ಟುವುದು ನಿಂತಿದೆ ಎಂದರು. ತಾಲೂಕು ಅಧ್ಯಕ್ಷ ವಿನಾಯಕ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಮುಜಾಫರ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಸಂತೋಷ ಆರ್.ಎಸ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಅಹ್ಮದ್ ಸಲೀಮ್ ಕೋಟೆಕಾರ್ ಸ್ವಾಗತಿಸಿ, ಖಲಂದರ್ ವಂದಿಸಿದರು. ಐದು ನಿರ್ಣಯಗಳ ಅಂಗೀಕಾರ ಉಳ್ಳಾಲ ತಾಲೂಕಿನ ಬೀದಿಬದಿ ವ್ಯಾಪಾರಿಗಳ ಸಮಗ್ರ ಸಮೀಕ್ಷೆ ನಡೆಸಿ ಐಡಿ ಕಾರ್ಡ್, ಪ್ರಮಾಣ ಪತ್ರ ವಿತರಿಸಬೇಕು. ಬೀದಿ ವ್ಯಾಪಾರದ ಕಾನೂನಿನ ವಿರುದ್ಧವಾಗಿ ಬುಲ್ದೊಜರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಉಳ್ಳಾಲ ನಗರಸಭೆ ಸೋಮೇಶ್ವರ ಪುರಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್ ಅದೀನದಲ್ಲಿ ಆದ್ಯತೆಯಲ್ಲಿ ಬೀದಿ ವ್ಯಾಪಾರ ವಲಯ ಸ್ಥಾಪಿಸಬೇಕು. ಉಳ್ಳಾಲ, ಸೋಮೇಶ್ವರ ಬೀಚ್, ಹರೇಕಳ ಸೇರಿದಂತೆ ನದಿ ಮತ್ತು ಸಮುದ್ರ ವಿಹಾರಿಗಳಿಗೆ ಅನುಕೂಲ ಆಗುವಂತೆ ಬೀದಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು.

ವಾರ್ತಾ ಭಾರತಿ 17 Feb 2026 8:27 pm

ಉತ್ತರ ಪ್ರದೇಶ ಎಸ್‌ಐಆರ್‌| ಎಸ್‌ಪಿ ಬೆಂಬಲಿಗರ ಹೆಸರನ್ನು ಅಳಿಸಲಾಗಿದೆ: ಅಖಿಲೇಶ್‌ ಯಾದವ್‌ ಆರೋಪ

ಲಕ್ನೋ,ಫೆ.17: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲೇಶ್‌ ಯಾದವ್‌, ಈ ವಿಷಯದಲ್ಲಿ ಯಾವ ನಿಯಮಗಳಡಿ ಎಫ್‌ಐಆರ್‌ಗಳನ್ನು ದಾಖಲಿಸಬೇಕು ಎನ್ನುವುದನ್ನು ಸ್ಪಷ್ಟಪಡಿಸುವಂತೆ ನಾನು ಚುನಾವಣಾ ಆಯೋಗವನ್ನು ಕೇಳಿಕೊಳ್ಳುವುದಾಗಿ ತಿಳಿಸಿದ್ದಾರೆ. ಚುನಾವಣಾ ಆಯೋಗವು ಈವರೆಗೆ ಕ್ರಮವನ್ನೇಕೆ ತೆಗೆದುಕೊಂಡಿಲ್ಲ ಎಂದು ಕೇಳಿದ ಅಖಿಲೇಶ್‌ ಯಾದವ್‌, ವಿಧಾನಸಭೆಯ ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಎಸ್‌ಪಿ ಈ ವಿಷಯವನ್ನು ಪ್ರಸ್ತಾಪಿಸಲಿದೆ ಎಂದರು. ಮತದಾರರ ಪಟ್ಟಿಗಳಿಂದ ಎಸ್‌ಪಿ ಬೆಂಬಲಿಗರ ಹೆಸರುಗಳನ್ನು ಕಾನೂನುಬಾಹಿರವಾಗಿ ಅಳಿಸಲಾಗುತ್ತಿದೆ ಮತ್ತು ಚುನಾವಣಾ ಆಯೋಗವು ಪಕ್ಷಕ್ಕೆ ‘ಅತ್ಯಲ್ಪ’ಮಾಹಿತಿಯನ್ನು ನೀಡಿದೆ ಎಂದು ಆರೋಪಿಸಿದರು. ಸಕಲ್ದಿಹಾ ಪಟ್ಟಣದಲ್ಲಿ ಎಸ್‌ಪಿ ಶಾಸಕರ ಹೆಸರಿನಲ್ಲಿ ನಕಲಿ ಸಹಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಬಳಿಕ 16 ಮತದಾರರ ಹೆಸರುಗಳನ್ನು ಅಳಿಸಲಾಗಿದ್ದು, ಇವರೆಲ್ಲ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರಾಗಿದ್ದಾರೆ ಎಂದು ತಿಳಿಸಿದರು. ಕನೌಜ್‌ನಲ್ಲಿ ಮೂರು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಬಿಜೆಪಿ ನಾಯಕರೋರ್ವರು ಹೇಳಿಕೊಂಡಿದ್ದಾರೆ ಎಂದು ಯಾದವ್‌ ಆರೋಪಿಸಿದರು. ಅವರು ಕನೌಜ್ ಸಂಸದರಾಗಿದ್ದಾರೆ. ರಾಜ್ಯದಲ್ಲಿ ಕರಡು ಮತದಾರರ ಪಟ್ಟಿಯನ್ನು ಜ.6ರಂದು ಪ್ರಕಟಿಸಲಾಗಿದ್ದು, 2.8 ಕೋಟಿ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಂತಿಮ ಮತದಾರರ ಪಟ್ಟಿಯು ಎ.10ರಂದು ಪ್ರಕಟಗೊಳ್ಳಲಿದೆ.

ವಾರ್ತಾ ಭಾರತಿ 17 Feb 2026 8:26 pm

Raichur | ಕೇಂದ್ರ ತಂಡದ ಅಧಿಕಾರಿಗಳಿಂದ ನರೇಗಾ ಕಾಮಗಾರಿ ಪರಿಶೀಲನೆ

ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂಡದ ಅಧಿಕಾರಿ ಕುಮುದ್ ದುಬೆ ಅವರು ಫೆ.16ರಂದು ಪರಿಶೀಲಿಸಿದರು. ಮೊದಲು ಚಂದ್ರಬಂಡಾ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಿ ಕಾಮಗಾರಿ ಕಡತಗಳು, ನೋಂದಣಿಗಳು ಹಾಗೂ ಎನ್‌ಎಂಎಂಎಸ್ ಹಾಜರಾತಿ ವಿವರಗಳನ್ನು ಪರಿಶೀಲಿಸಿದರು. ನಂತರ ಅರಿಸಿಗೇರಾ ತಾಂಡದಲ್ಲಿನ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿದರು. ನಾಗನದೊಡ್ಡ ಗ್ರಾಮದಲ್ಲಿರುವ ಸಾಮಾಜಿಕ ಅರಣ್ಯದಲ್ಲಿ ಕಂದಕ ಬದು ನಿರ್ಮಾಣ, ದನದ ಕೊಟ್ಟಿಗೆ ಹಾಗೂ ಚಿಂತಲಕುಂಟ ಅಮೃತ ಸರೋವರ ಕೆರೆ ಕಾಮಗಾರಿಗಳನ್ನು ಪರಿಶೀಲಿಸಲಾಯಿತು. ಚಂದ್ರಬಂಡಾ ಗ್ರಾಮದ ಕೀರಾಕುಂಟ ಅಮೃತ ಸರೋವರ ಕೆರೆ ಕಾಮಗಾರಿ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಡಗಂದೊಡ್ಡಿ ಗ್ರಾಮದ ಮೆಟಲ್ ರಸ್ತೆ ನಿರ್ಮಾಣ ಕಾಮಗಾರಿಯನ್ನೂ ವೀಕ್ಷಿಸಲಾಯಿತು. ಕುರಬದೊಡ್ಡಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರ ಎನ್‌ಎಂಎಂಎಸ್ ಹಾಜರಾತಿ, ಉದ್ಯೋಗ ಚೀಟಿ ಹಾಗೂ ಕೆಲಸದ ಪ್ರಮಾಣವನ್ನು ಪರಿಶೀಲಿಸಿದರು. ಬಳಿಕ ಕಟ್ಲಟ್ಕೂರು ಗ್ರಾಮದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಸಹಾಯಕ ನಿರ್ದೇಶಕರು ಹನುಮಂತ, ಪಂಚಾಯತ ಅಭಿವೃದ್ಧಿ ಅಧಿಕಾರಿ, ಡಿಪಿಎಮ್, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು ಸೇರಿದಂತೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇದ್ದರು.

ವಾರ್ತಾ ಭಾರತಿ 17 Feb 2026 8:24 pm

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ನಂಬಿದರೆ ಅದು ಸುಳ್ಳು : ಕೆ.ಎನ್.ರಾಜಣ್ಣ

ಬೆಂಗಳೂರು : ರಾಜ್ಯದಲ್ಲಿ ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಮಂಗಳವಾರ ನಗರದ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಬರೆಯಲಿದ್ದಾರೆ. ಆದರೆ, ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ನಂಬಿದರೆ ಅದು ಸುಳ್ಳು ಎಂದು ನುಡಿದರು. ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿ, ಸದುದ್ದೇಶದಿಂದ ಮಾಡುವ ವಿದೇಶ ಪ್ರವಾಸಕ್ಕೆ ಹೋಗಿ ಬರಲಿ. ಅದನ್ನು ತಪ್ಪು ಎನ್ನುವುದು ಸರಿಯಲ್ಲ. ವಿದೇಶದಲ್ಲಿ ನಮಗೆ ಒಳ್ಳೆಯದಾಗುವ ಕೆಲವು ಸಂಗತಿಗಳು ಇರುತ್ತವೆ. ಅದನ್ನು ತಿಳಿದುಕೊಂಡು ಬಂದು ಇಲ್ಲಿ ಅಳವಡಿಸಿಕೊಂಡರೆ ಒಳ್ಳೆಯದೇ ಅಲ್ಲವೇ ಎಂದು ಕೇಳಿದರು.

ವಾರ್ತಾ ಭಾರತಿ 17 Feb 2026 8:21 pm

ತಣ್ಣೀರುಬಾವಿ : ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಮಂಗಳೂರು : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕು ಪ್ರದರ್ಶನ ಮಂಗಳವಾರ ಯಶಸ್ವಿಯಾಗಿ ನಡೆಸಲಾಯಿತು. ಅಣುಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳದ ಕಾರ್ಯ, ಅವಘಡ ಸಂಭವಿಸಿದ ಸಂದರ್ಭದಲ್ಲಿ ವಾಹನದಟ್ಟಣೆ ಅಥವಾ ಜನದಟ್ಟಣೆ ನಿಯಂತ್ರಣ ಹಾಗೂ ಅವಘಡದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸುವ ವಿಧಾನಗಳನ್ನು ಮತ್ತು ತುರ್ತು ಆರೋಗ್ಯ ಸೇವೆಗಳು ಹೇಗಿರಬೇಕು ಎಂಬುದನ್ನು ಪ್ರದರ್ಶಿಸಲಾಯಿತು. ಆಫ್ ಸೈಟ್ ಅಣುಕು ಪ್ರದರ್ಶನ ದಲ್ಲಿ ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು, 11 ಆ್ಯಂಬುಲೆನ್ಸ್ ವಾಹನಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗಳು, ವೈದ್ಯರು ಸೇರಿದಂತೆ ವಿವಿಧ ಇಲಾಖೆಗಳಿಂದ 100ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ನೈಜ ಘಟನೆಯನ್ನು ಬಿಂಬಿಸುತ್ತಿದ್ದ ಈ ಅಣುಕು ಪ್ರದರ್ಶನದಲ್ಲಿ ಕೈಗಾರಿಕಾ ಘಟಕದಲ್ಲಿ ಕಾಲ್ಪನಿಕ ಅನಿಲ ಸೋರಿಕೆ ಪರಿಸ್ಥಿತಿಯನ್ನು ಸೃಷ್ಟಿಸಲಾಯಿತು. ಅವಘಡದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಣಾ ಪಡೆ ರಕ್ಷಿಸಿ, ತಕ್ಷಣ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ಹತ್ತಿರದ ಆಸ್ಪತ್ರೆಗೆ ಸ್ಟ್ರೆಚರ್ ಮೇಲೆ ತೆಗೆದುಕೊಂಡು ಹೋಗಿ ರಕ್ಷಿಸುವಂತೆ ಸಾಗಿಸುವ ಪ್ರದರ್ಶನ ನೀಡಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರಾಥಮಿಕಚಿಕಿತ್ಸಾ ವಿಧಾನಗಳನ್ನು ತೋರಿಸಿಕೊಟ್ಟರು. ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ‌್ಯ, ಕಾರ್ಖಾನೆಗಳ ಉಪನಿರ್ದೇಶಕ ರಾಜೇಶ್ ಮಿಶ್ರಕೋಟಿ, ಎನ್‌ಡಿಆರ್‌ಎಫ್ ಮುಖ್ಯಸ್ಥ ಅಜಯ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.    

ವಾರ್ತಾ ಭಾರತಿ 17 Feb 2026 8:13 pm

ಆಧಾರ್ ಸೇವಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಆಧಾರ್ ಸೇವಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಈ ಕೆಳಗಿನಂತೆ ಮಾಹಿತಿ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು: https://csc.gov.in/ask ಆಧಾರ್ ಸೇವಾ ಕೇಂದ್ರದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಐಟಿಐ ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು. ► ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-02-2026 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2026 ► ಶೈಕ್ಷಣಿಕ ಅರ್ಹತೆ ಆಧಾರ್ ಸೇವಾ ಕೇಂದ್ರದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಐಟಿಐ ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು. ►ಹುದ್ದೆಗಳ ವಿವರ: ಆಧಾರ್ ಮೇಲ್ವಿಚಾರಕರು/ಆಪರೇಟರ್ ಕರ್ನಾಟಕ: 34 ಉತ್ತರ ಪ್ರದೇಶ: 35 ಮಧ್ಯಪ್ರದೇಶ: 27 ಮಹಾರಾಷ್ಟ್ರ: 25 ಕೇರಳ: 17 ರಾಜಸ್ಥಾನ: 16 ಅಸ್ಸಾಂ: 11 ಪಂಜಾಬ್: 11 ತೆಲಂಗಾಣ: 10 ಛತ್ತೀಸ್ಗಢ: 09 ಆಂಧ್ರಪ್ರದೇಶ: 07 ಬಿಹಾರ: 07 ಹರಿಯಾಣ: 07 ಪಶ್ಚಿಮ ಬಂಗಾಳ: 07 ಗುಜರಾತ್: 06 ಜಾರ್ಖಂಡ್: 05 ಉತ್ತರಾಖಂಡ: 04 ಒಡಿಶಾ: 03 ತಮಿಳುನಾಡು: 03 ಸಿಕ್ಕಿಂ: 02 ಚಂಡೀಗಢ, ಹಿಮಾಚಲ ಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ಪುದುಚೇರಿ, ಮೇಘಾಲಯ, ಲಡಾಖ್: ತಲಾ 1 ಹುದ್ದೆ ಕರ್ನಾಟಕದಲ್ಲಿ ಎಲ್ಲಿದೆ ಉದ್ಯೋಗ? ಕರ್ನಾಟಕದಲ್ಲಿ ಬೆಂಗಳೂರು ಗ್ರಾಮೀಣ – 1, ಬೀದರ್- 1, ಚಿಕ್ಕಬಳ್ಳಾಪುರ- 1, ಗದಗ- 2, ಹಾಸನ- 1, ಹಾವೇರಿ- 3, ಕೋಲಾರ- 3, ಮಂಡ್ಯ- 1, ಉಡುಪಿ- 2, ಉತ್ತರ ಕನ್ನಡ- 1, ಯಾದಗಿರಿ- 1, ಬಾಗಲಕೋಟೆ- 2, ವಿಜಯನಗರ-5, ಬೆಳಗಾವಿ- 5, ಚಿತ್ರದುರ್ಗ- 1, ತುಮಕೂರುಗಳಲ್ಲಿ 2 ಹುದ್ದೆಗಳಿವೆ. ವಯೋಮಿತಿ: ಆಧಾರ್ ಸೇವಾ ಕೇಂದ್ರದ ಅಧಿಸೂಚನೆಯ ಪ್ರಕಾರ (ದಿನಾಂಕ 01-01.2026 ಗೆ ಅನ್ವಯವಾಗುವಂತೆ) ಅಭ್ಯರ್ಥಿಯು ಕನಿಷ್ಠ 18 ವರ್ಷ ಆಗಿರಬೇಕು. ನಿಯಮಾನುಸಾರ ವಯೋಮಾನ ಸಡಿಲಿಕೆ ಇದೆ. ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಆಧಾರ್ ಸೇವಾ ಕೇಂದ್ರದ ಮಾನದಂಡಗಳ ಪ್ರಕಾರ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ: https://career.csccloud.in/job-post/MTE1OA==

ವಾರ್ತಾ ಭಾರತಿ 17 Feb 2026 8:13 pm

ಬೆಂಗಳೂರು ಮೈಸೂರು ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್‌ ರೈಲು; ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು ಮೈಸೂರು ಮಾರ್ಗದ ಬಿಡದಿ ಬಳಿ ಗೂಡ್ಸ್‌ ರೈಲು ಹಳಿ ತಪ್ಪಿದೆ. ಇದರಿಂದ ಹಲವ ರೈಲುಗಳ ಓಡಾಟದಲ್ಲಿ ವ್ಯತ್ಯಯವಾಗಿದೆ. ಇನ್ನು ರೈಲುಗಳು ಗಂಟೆಗಟ್ಟಲೆ ನಿಲ್ದಾಣಗಳಲ್ಲಿ ನಿಂತಿದ್ದು, ಪ್ರಯಾಣಿಕರು ಕಾದು ಬೇಸತ್ತರು. ಸಂಜೆ ವೇಳೆಗೆ ಘಟನೆ ನಡೆದಿದ್ದು, ಕೆಲ ಸಮಯದಲ್ಲಿಯೇ ರೈಲ್ವೆ ಕ್ರಮಕೈಗೊಂದಿದೆ.

ವಿಜಯ ಕರ್ನಾಟಕ 17 Feb 2026 8:09 pm

ಆಧುನಿಕ ತಂತ್ರಜ್ಞಾನ ಛಾಯಾಗ್ರಹಕರಿಗೆ ಸವಾಲು: ಎಸ್ಪಿ ಹರಿರಾಂ ಶಂಕರ್

ಹಿರಿಯಡಕ, ಫೆ.16: ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿ ಕೊಳ್ಳಬೇಕಾಗಿದೆ. ಇಂದಿನ ಎಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬ ದೊಂದಿಗೆ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಇಲಾಖೆಯಿಂದ ಅಗತ್ಯ ಸಹಾಯವನ್ನು ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ. ಹಿರಿಯಡಕದ ರಜತ ರಶ್ಮಿ ಸಭಾಭವನದಲ್ಲಿ ಶನಿವಾರ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಉಡುಪಿ ವಲಯದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ನಿಕಟಪೂರ್ವ ಅಧ್ಯಕ್ಷ ಸುಧೀರ್ ಎಂ.ಶೆಟ್ಟಿ ನಿಯೋಜಿತ ಅಧ್ಯಕ್ಷ ದಿವಾಕರ್ ಹಿರಿಯಡಕ ಅವರಿಗೆ ಉಡುಪಿ ವಲಯದ ಎರಡು ವರ್ಷದ ಜವಾಬ್ದಾರಿ ಯನ್ನು ಹಸ್ತಾಂತರಿಸಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಾಳ ಉಪಸ್ಥಿತರಿದ್ದರು. ಛಾಯಾಗ್ರಹಣ ಮತ್ತು ಸಂಘಟನೆಗೆ ನೀಡಿದ ಸೇವೆಯನ್ನು ಪರಿಗಣಿಸಿ ಚಂದ್ರಶೇಖರ್ ಹಿರಿಯಡಕ ಮತ್ತು ಗಣೇಶ್ ಕೊರಂಗ್ರಪಾಡಿ ಅವರನ್ನು ಸನ್ಮಾನಿಸಲಾಯಿತು. ಎರಡು ವರ್ಷ ಜಿಲ್ಲಾ ಮತ್ತು ವಲಯಕ್ಕಾಗಿ ದುಡಿದ ದಯಾನಂದ ಬಂಟ್ವಾಳ, ನವೀನ್ ರೈ ಪಂಜಳ, ಕರುಣಾಕರ ಕಾನಂಗಿ, ಸುಧೀರ್ ಎಂ. ಶೆಟ್ಟಿ, ರಮೇಶ್ ಭಟ್ ಎಲ್ಲೂರು ಹಾಗೂ ಪ್ರವೀಣ್ ಕೊರೆಯ ಇವರನ್ನು ಗೌರವಿಸಲಾಯಿತು. ಛಾಯಾ ಸುರಕ್ಷ ನಿಧಿಯಿಂದ ಚಿಕಿತ್ಸೆಗಾಗಿ ಶ್ರೀಧರ ಉಪ್ಪೂರು ಹಾಗೂ ಪೂರ್ಣಿಮಾ ಶೆಟ್ಟಿ ಅವರಿಗೆ ಧನಸಹಾಯ, ನವೀನ್ ಬಳ್ಳಾಲ್ ಕೊಡ ಮಾಡಿದ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಚ್‌ಪಿಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್‌ನ ಹರಿಪ್ರಸಾದ್ ರೈ, ಉದ್ಯಮಿ ಪಳ್ಳಿ ನಟರಾಜ ಹೆಗ್ಡೆ, ಜಿಲ್ಲಾ ಸಂಚಾಲಕ ಗೋಪಾಲ್ ಸುಳ್ಯ, ಪ್ರಧಾನ ಕಾರ್ಯದರ್ಶಿ ಅಜಯ್ ಮಂಗಳೂರು, ಎಸ್‌ಕೆಪಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ ವಾಸುದೇವ ರಾವ್, ಜಿಲ್ಲಾ ಉಪಾಧ್ಯಕ್ಷರಾದ ದತ್ತಾತ್ರೇಯ ಕಾರ್ಕಳ, ದೇವರಾಜ್ ಶೆಟ್ಟಿ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪ್ರಕಾಶ್ ಕೊಡಂಕೂರು, ಉಡುಪಿ ವಲಯ ಗೌರವಾಧ್ಯಕ್ಷ ನವೀನ್ ಚಂದ್ರ ಬಳ್ಳಾಲ್, ನಿಯೋಜಿತ ಗೌರವಾಧ್ಯಕ್ಷ ಯು.ಕೆ.ಭಾಸ್ಕರ್ ಉಪಸ್ಥಿತರಿದ್ದರು. ನಿಕಟ ಪೂರ್ವ ಅಧ್ಯಕ್ಷ ಸುಧೀರ್ ಎಂ. ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಘವೇಂದ್ರ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಡೊಂಡೇರಂಗಡಿ ವಂದಿಸಿದರು.

ವಾರ್ತಾ ಭಾರತಿ 17 Feb 2026 8:03 pm

ಮುಂದಿನ 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ : ಎಂ.ಬಿ.ಪಾಟೀಲ್‌

ವೇಮಗಲ್ ಹೆಲಿಕಾಪ್ಟರ್ ಜೋಡಣೆ ಘಟಕಕ್ಕೆ ಚಾಲನೆ

ವಾರ್ತಾ ಭಾರತಿ 17 Feb 2026 8:02 pm

ಉಚಿತ ನೇತ್ರ ತಪಾಸಣೆ - ಕನ್ನಡಕ ವಿತರಣಾ ಕಾರ್ಯಕ್ರಮ

ಉಡುಪಿ, ಫೆ.17: ಕೊಡವೂರು ಕಂಬಳಕಟ್ಟ ಯುವ ಬಂಟರ ಸಂಘ, ಮಂಗಳೂರು ಜೆಎಸ್‌ಡಬ್ಲ್ಯೂ ಫೌಂಡೇಶನ್, ಲಯನ್ಸ್ ಕ್ಲಬ್ ಉಡುಪಿ- ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ ರವಿವಾರ ಆದಿವುಡುಪಿ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ನಾವು ನಮ್ಮ ವಾಹನದ ತಪಾಸಣೆಯನ್ನು ಕ್ರಮಬದ್ದವಾಗಿ ಮಾಡುವ ರೀತಿ ದೇಹವೆಂಬ ವಾಹನಕ್ಕೆ ನಿಯಮಿತವಾದ ತಪಾಸಣೆಯ ಅಗತ್ಯತೆ ಇದೆ. ಅದರ ಭಾಗವಾಗಿ ಈ ಕಣ್ಣಿನ ಪರೀಕ್ಷೆಯು ಪ್ರಮುಖ ಪಾತ್ರವಹಿಸುತ್ತದೆ ಎಂದರು. ಬಹುಮುಖ ಪ್ರತಿಭೆ ವಿದ್ಯಾರ್ಥಿ ಅಮೋಘ್ ಎಸ್.ರಾವ್ ಕಂಬಳಕಟ್ಟ ಅವರನ್ನು ಸನ್ಮಾನಿಸಲಾಯಿತು. ಸುಮಾರು 150ಕ್ಕೂ ಅಧಿಕ ಶಿಬಿರಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಗಳಿಗೆ ಉಚಿತ ವಾಗಿ ಕನ್ನಡಕ ವಿತರಿಸಲಾಯಿತು. ಯುವಬಂಟರ ಸಂಘ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕೆ. ಅಧ್ಯಕ್ಷತೆ ವಹಿಸಿದ್ದರು. ಜೆಎಸ್‌ಡಬ್ಲ್ಯೂ ವ್ಯಾಪಾರ ಅಭಿವೃದ್ಧಿ ಮಾರ್ಕೆಟಿಂಗ್ ಜನರಲ್ ಮ್ಯಾನೇಜರ್ ದಿಲೀಪ್ ಶೆಟ್ಟಿ, ಉಪ ವ್ಯವಸ್ಥಾಪಕ ಪ್ರದೀಪ್ ಕೆ.ಆರ್., ಲಯನ್ ಪ್ರಾಂತ್ಯ ಅಧ್ಯಕ್ಷ ಎಂಜೆಎಫ್ ಅರುಣ್ ಕುಮಾರ್ ಶೆಟ್ಟಿ, ಆದಿಉಡುಪಿ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಟಿ.ಕೆ.ಗಣೇಶ್ ರಾವ್, ಲಯನ್ಸ್ ಕ್ಲಬ್ ಉಡುಪಿ-ಚೇತನದ ಅಧ್ಯಕ್ಷ ಸಂತೋಷ್ ಶೆಟ್ಟಿ ಪಂಚರತ್ನ, ಇಂಡಿಯಾ ವಿಷನ್ ಸಂಸ್ಥೆಯ ವೈದ್ಯರಾದ ಡಾ.ಶಿಲ್ಪಾ, ಡಾ.ಸ್ವಾತಿ, ಯುವಬಂಟರ ಸಂಘದ ಗೌರವಾಧ್ಯಕ್ಷೆ ಅಶ್ವಿನಿ ಶೆಟ್ಟಿ ಸಂತೆಕಟ್ಟೆ ಉಪಸ್ಥಿತರಿದ್ದರು. ಪುಷ್ಪರಾಜ್ ಶೆಟ್ಟಿ ಕೆ. ಆದಿಉಡುಪಿ ಸ್ವಾಗತಿಸಿದರು. ಸುರೇಶ್ ಶೆಟ್ಟಿ ಕಂಬಳಕಟ್ಟ ವಂದಿಸಿದರು. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 17 Feb 2026 8:02 pm

5.50 ಲಕ್ಷ ರೂ ಬದಲು 55 ಸಾವಿರ ರೂ ಜಮಾ ಮಾಡಿದ ಬ್ಯಾಂಕಿಗೆ ದಂಡ!

ಬ್ಯಾಂಕಿಗೆ ನೀಡಿದ್ದು 5.50 ಲಕ್ಷ ರೂ. ಮೊತ್ತದ ಚೆಕ್‌ ಆದರೆ ಜಮಾ ಆಗಿದ್ದು ಬರೀ 55 ಸಾವಿರ ರೂ. ಮಾತ್ರ. ಸೇವಾ ನ್ಯೂನತೆ ಎಸಗಿದ್ದ ಕರ್ನಾಟಕ ಬ್ಯಾಂಕಿಗೆ ಬಿತ್ತು ದಂಡ! ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದ ಬಿ.ಎಂ. ನಾಗರಾಜ್‌ ಎಂಬುವವರು ಕರ್ನಾಟಕ ಬ್ಯಾಂಕ್‌ನಲ್ಲಿ ಚೆಕ್ ನೀಡಿದ್ದರು. ಆದರೆ ಸಿಬ್ಬಂದಿಗಳು ಸೇವಾ ನ್ಯೂನತೆ ಎಸಗಿದ್ದಾರೆ. ಏನಿದು ಪ್ರಕರಣ? ಇಲ್ಲಿದೆ ನೋಡಿ.

ವಿಜಯ ಕರ್ನಾಟಕ 17 Feb 2026 8:00 pm

ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಿ: ರತ್ನಕುಮಾರ್

ಉಡುಪಿ, ಫೆ.16: ನಮ್ಮ ಕರಾವಳಿ ಭಾಗದ ಶೈಕ್ಷಣಿಕ ಸಾಧನೆಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚು ಯುವಜನಾಂಗವನ್ನು ಸಿದ್ಧಪಡಿಸುವಲ್ಲಿ ದಾರಿಯಾಗಬೇಕು. ಹೆಚ್ಚೆಚ್ಚು ಜನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಬೇಕು. ಅದರೆ ಅಂಕ ಗಳಿಸಿಕೊಳ್ಳುವದಕ್ಕೆ ಮಾತ್ರ ಸೀಮಿತರಾಗದೆ ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕು. ಎನ್‌ಎಸ್‌ಎಸ್ ಶಿಬಿರಗಳು ಇದಕ್ಕೆ ಸಹಕಾರಿಯಾಗಿದೆ ಎಂದು ಉಡುಪಿ ಎಸ್‌ವಿಎಚ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್ ಹೇಳಿದ್ದಾರೆ. ಉಡುಪಿ ಎಂಜಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ಇನ್ನಂಜೆಯ ಎಸ್‌ವಿಚ್ ಶಿಕ್ಷಣ ಸಂಸ್ಥೆಯಲ್ಲಿ ನಡೆಸಿದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡುತಿದ್ದರು. ಸಮಾರೋಪ ಉಪನ್ಯಾಸ ಮಾಡಿದ ಎಂಜಿಎಂ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಎಂ.ಚನ್ನ ಪೂಜಾರಿ, ಇನ್ನಂಜೆ ಗ್ರಾಮದ ಸಮಗ್ರ ಅರ್ಥವ್ಯವಸ್ಥೆಯ ಚಿತ್ರಣವನ್ನು ಅಂಕಿ-ಅಂಶಗಳ ಸಮೇತ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಕೃಷಿ ಪ್ರಧಾನ ವ್ಯವಸ್ಥೆ ಆರ್ಥಿಕತೆ ಮತ್ತು ಪರಿಸರ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂಬ ಸಂಗತಿಗೆ ಹೆಚ್ಚಿನ ಗಮನ ನೀಡಬೇಕಿದೆ ಎಂದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲ ಡಾ.ಎಂ.ವಿಶ್ವನಾಥ ಪೈ, ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಮಾಲತಿ ದೇವಿ ಎ., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ.ವೀರಾ ಐಡಾ ಪಿಂಟೋ, ಐಕ್ಯುಎಸಿ ಸಂಯೋಜಕಿ ಪ್ರೊ.ಶೈಲಜಾ ಎಚ್., ಎಂಜಿಎಂ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಎಸ್‌ವಿಎಚ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜೇಂದ್ರ ಪ್ರಭು, ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ರೇಖಾ ಎನ್.ಚಂದ್ರ, ಸಹಶಿಬಿರಾಧಿಕಾರಿ ಸುರಭಿ ನಾಯ್ಕ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿನಿ ಅಶ್ವಿಭಾ ಸ್ವಾಗತಿಸಿದರು. ಅನಘಾ ವಂದಿಸಿದರು. ಸಾತ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 17 Feb 2026 8:00 pm

ಯಾವುದೇ ಪ್ರಾಣಿ ತನ್ನದೇ ದೇಹದ ಭಾಗವನ್ನು ತಿನ್ನುವುದನ್ನು ನೋಡಿದ್ದೀರಾ?

ಕೆಲವು ಪ್ರಾಣಿಗಳು ಅಪಾಯದಿಂದ ತಪ್ಪಿಸಿಕೊಳ್ಳಲು ತಮ್ಮದೇ ಅಂಗವನ್ನು ಕತ್ತರಿಸಿ ಎಸೆಯುತ್ತವೆ. ಹಲ್ಲಿಗಳಿಂದ ತೊಡಗಿ ಜೇಡಗಳವರೆಗೆ ಇಂತಹ ಸ್ವಯಂ ಭಕ್ಷತೆಯು ಕಂಡುಬರುತ್ತದೆ. ಯಾವುದೇ ಪ್ರಾಣಿ ತನ್ನದೇ ದೇಹದ ಭಾಗವನ್ನು ತಿನ್ನುವುದನ್ನು ನೋಡಿದ್ದೀರಾ? ಅದು ಅಸಂಬದ್ಧ ಮತ್ತು ಭಯಾನಕವೆನಿಸಿದರೂ ಕಾಡಿನಲ್ಲಿ ಕೆಲವು ಪ್ರಾಣಿಗಳು ತಮ್ಮ ದೇಹದ ಭಾಗಗಳನ್ನು ತಿನ್ನುತ್ತವೆ. ಕೆಲವೊಮ್ಮೆ ಇವು ಪೋಷಕಾಂಶಗಳನ್ನು ಮರಳಿ ಪಡೆಯಲು ಬದುಕುಳಿಯುವ ತಂತ್ರವಾಗಿದೆ. ಕೆಲವೊಮ್ಮೆ ಖನಿಜಗಳನ್ನು ಮರುಬಳಕೆ ಮಾಡಲು ಬಳಸುತ್ತವೆ. ಆದರೆ ಕೆಲವು ಪ್ರಾಣಿಗಳು ಅಪಾಯದಿಂದ ತಪ್ಪಿಸಿಕೊಳ್ಳಲು ತಮ್ಮದೇ ಅಂಗವನ್ನು ಕತ್ತರಿಸಿ ಎಸೆಯುತ್ತವೆ. ಹಲ್ಲಿಗಳಿಂದ ತೊಡಗಿ ಜೇಡಗಳವರೆಗೆ ಇಂತಹ ಸ್ವಯಂ ಭಕ್ಷತೆಯು ಕಂಡುಬರುತ್ತದೆ. - ಆಕ್ಟೋಪಸ್ ಆಕ್ಟೋಪಸ್ನಲ್ಲಿ ಮುಖ್ಯವಾಗಿ ಆಕ್ಟಫೋಪಸ್ ವಲ್ಗರಿಸ್ ಮತ್ತು ಸಂಬಂಧಿತ ಪ್ರಬೇಧಗಳನ್ನು ಬಂಧನದಲ್ಲಿಟ್ಟರೆ ಅವು ಬಹಳ ಒತ್ತಡವನ್ನು ಎದುರಿಸುತ್ತವೆ. ಹೀಗಾಗಿ ತಮ್ಮದೇ ಕೈಗಳನ್ನು ಕಚ್ಚುವುದು ಅಥವಾ ಕತ್ತರಿಸುವುದು ಮಾಡುತ್ತವೆ. ಅದೇ ರೀತಿ ಕೆಲವು ನರವೈಜ್ಞಾನಿಕ ಪರಿಸ್ಥಿತಿಗಳು ಅಥವಾ ಪರಭಕ್ಷಕದಿಂದ ತಪ್ಪಿಸಿಕೊಳ್ಳಲು ಅಥವಾ ಸೋಂಕು ಹರಡುವುದನ್ನು ತಡೆಯಲು ಕೂಡ ಹೀಗೆ ತನ್ನ ಅಂಗವನ್ನು ಕತ್ತರಿಸುತ್ತದೆ. ಅಕ್ಟೋಪಸ್ಗಳು ಮೊಟ್ಟೆಗಳನ್ನು ಇಟ್ಟ ನಂತರ ಅವುಗಳ ಹಾರ್ಮೋನುಗಳಲ್ಲಿ ಬದಲಾವಣೆಯಾಗುತ್ತವೆ. ಕೆಲವೊಮ್ಮೆ ಇದು ಸ್ವಯಂ ವಿನಾಶಕಾರಿ ಪ್ರಚೋದಕವನ್ನು ಸಕ್ರಿಯಗೊಳಿಸಬಹುದು ಮತ್ತು ತಮ್ಮದೇ ಕೈಯನ್ನು ಕತ್ತರಿಸಿಕೊಳ್ಳುವಂತೆ ಮಾಡಬಹುದು. - ಹಲ್ಲಿಗಳು ಅನೇಕ ವಿಧದ ಹಲ್ಲಿಗಳು ದಾಳಿಯನ್ನು ಎದುರಿಸಿದಾಗ ತನ್ನ ಬಾಲಗಳನ್ನು ಕತ್ತರಿಸುತ್ತವೆ. ಆದರೆ ಆತಂಕ ದೂರವಾದ ಮೇಲೆ ತಮ್ಮದೇ ಬಾಲವನ್ನು ತಿನ್ನುತ್ತವೆ. ಕಳೆದು ಹೋದ ಕೊಬ್ಬು, ಪೌಷ್ಠಿಕಾಂಶ ಮತ್ತು ಕ್ಯಾಲ್ಸಿಯಂ ಪಡೆಯಲು ಹೀಗೆ ಮಾಡುತ್ತವೆ. ಇಂತಹ ನಡವಳಿಕೆ ಹಲ್ಲಿಗಳು ಮತ್ತು ರೆಡ್-ಟೈಲ್ಡ್ ಸ್ಕಿಂಕ್ ಜಾತಿಯ ಹಲ್ಲಿಗಳಲ್ಲಿ ಹೆಚ್ಚು ಕಂಡುಬರುತ್ತವೆ. ಕೆಲವೊಮ್ಮೆ ತಮ್ಮ ಶೇ 20ರಷ್ಟು ಸಂಗ್ರಹಿತ ಶಕ್ತಿಯನ್ನು ಅವು ಹೀಗೆ ಪಡೆಯುತ್ತವೆ. ಮುಖ್ಯವಾಗಿ ಆಹಾರದ ಕೊರತೆ ಇದ್ದಾಗ ಅಥವಾ ಒತ್ತಡ ಎದುರಾದಾಗ ಹೀಗೆ ಮಾಡುತ್ತವೆ. - ಜೇಡಗಳು ಕೆಲವು ಜೇಡದ ಪ್ರಬೇಧಗಳಾದ ಕಪ್ಪು ಲೇಸ್-ವೀವರ್, ಡೆಸರ್ಟ್ ಸ್ಪೈಡರ್ ಮತ್ತು ಸೋಷಿಯಲ್ ಸ್ಟೆಗೊಡಿಫಸ್ ಜೇಡಗಳಲ್ಲಿ ತಾಯಿ ತಮ್ಮ ಮರಿಗಳನ್ನು ಉಳಿಸಲು ತ್ಯಾಗ ಮಾಡುತ್ತದೆ. ಮೊಟ್ಟೆ ಒಡೆದು ಮರಿಯಾದಾಗ ಜೇಡದ ಮರಿಗಳು ತಾಯಿಯ ದ್ರವರೂಪದ ದೇಹದಿಂದ ಆಹಾರ ಪಡೆಯುತ್ತವೆ. ಇದರಿಂದ ಅಗತ್ಯವಿರುವ ಪ್ರೊಟೀನ್ ಪಡೆಯುತ್ತವೆ. ಶೇ 30ರಷ್ಟು ಪೋಷಕಾಂಶವನ್ನು ಮರಿಗಳು ಹೀಗೆ ಪಡೆಯುತ್ತವೆ. ಅನೇಕ ಜೇಡಗಳು ಗಾಯಗೊಂಡ ಅಥವಾ ಕತ್ತರಿಸಲ್ಪಟ್ಟ ಕಾಲುಗಳನ್ನು ತಿನ್ನುತ್ತವೆ. ತ್ಯಾಜ್ಯವಾಗುವ ಬದಲಾಗಿ ಮುರಿದ ಕಾಲಿನಿಂದ ಪ್ರಮುಖ ಪ್ರೊಟೀನ್ಗಳು, ಖನಿಜಗಳನ್ನು ಪಡೆಯುತ್ತವೆ. - ಕಠಿಣ ಚರ್ಮಿಗಳು ಕಠಿಣ ಚರ್ಮಿಗಳಾದ ಏಡಿ, ಕಡಲೇಡಿಗಳು ಮತ್ತು ಸಿಗಡಿಗಳು ಕೂಡ ತಮ್ಮದೇ ದೇಹದ ಭಾಗಗಳನ್ನು ತಿನ್ನುತ್ತವೆ. ತಮ್ಮ ಬಾಹ್ಯಕವಚವನ್ನು ಹೊರ ಹಾಕಿದ ತಕ್ಷಣ ಈ ಜೀವಿಗಳು ಅವುಗಳನ್ನು ತಿನ್ನುವ ಮೂಲಕ ಕ್ಯಾಲ್ಸಿಯಂ ಮತ್ತು ಖನಿಜಗಳನ್ನು ಮರಳಿಪಡೆಯುತ್ತವೆ. ಜೊತೆಗೆ ಈ ಜೀವಿಗಳು ತಮ್ಮದೇ ಜಾತಿಯ ಇತರ ಜೀವಿಗಳ ಮೇಲೆ ದಾಳಿ ಮಾಡಿ ಅವುಗಳ ಬಾಹ್ಯ ಕವಚಗಳನ್ನು ತಿನ್ನುತ್ತವೆ. ತಮ್ಮದೇ ಕವಚವನ್ನು ಬಿಡಿಸುವುದು ಕಷ್ಟವಾದ ಕಾರಣ ಹೀಗೆ ಮಾಡುತ್ತವೆ. - ಕಪ್ಪೆಗಳು ಮತ್ತು ನೆಲಗಪ್ಪೆಗಳು ಕಪ್ಪೆಗಳೂ ಸಹ ತನ್ನದೇ ದೇಹವನ್ನು ಕಡಿಯುವ ಮೂಲಕ ಪೌಷ್ಠಿಕಾಂಶಗಳನ್ನು ಸೇವಿಸಲು ಬಯಸುತ್ತವೆ. ಕಪ್ಪೆಗಳು ಮತ್ತು ಮರಿಗಪ್ಪೆಗಳು ನಿಯಮಿತವಾಗಿ ಪ್ರೊಟೀನ್ಗಳನ್ನು ನವೀಕರಿಸಲು ತಮ್ಮದೇ ಚರ್ಮವನ್ನು ಹೊರಗೆಸೆಯುತ್ತವೆ ಮತ್ತು ತಿನ್ನುತ್ತವೆ. ಚರ್ಮದ ಮೈಕ್ರೋಬಯಾಮ್ಗೂ ಇದರಿಂದ ನೆರವಾಗುತ್ತದೆ. ತಾವು ನಡೆದ ದಾರಿಯ ಕುರುಹನ್ನು ಕಳೆಯುವಂತೆ ಮಾಡುತ್ತವೆ. ಈ ನಡವಳಿಕೆಯು ರೋಗಕಾರಕಗಳ ವಿರುದ್ಧ ಸ್ವಯಂ ಪ್ರತಿರಕ್ಷಣೆಯಲ್ಲೂ ಸಹಾಯ ಮಾಡಬಹುದು. ಈ ಉಭಯಚರಗಳು ನರಭಕ್ಷಕತೆಯಲ್ಲಿ ತೊಡಗುತ್ತವೆ ಎಂದು ತಿಳಿದುಬಂದಿದೆ. - ಹಾವುಗಳು ವೈಜ್ಞಾನಿಕವಾಗಿ ಔರೊಬೊರೊಸ್ ಎಂದು ಕರೆಯಲಾಗುವ ಈ ನಡವಳಿಕೆಯು ಹಾವುಗಳಲ್ಲಿ ಅತ್ಯಂತ ವಿರಳವಾಗಿದೆ. ಈವರೆಗೂ ಸೆರೆಯಲ್ಲಿರುವ ಹಾವುಗಳಲ್ಲಿ ಮಾತ್ರ ಇಂತಹ ವರ್ತನೆ ವರದಿಯಾಗಿದೆ. ಸೆರೆಯಲ್ಲಿರುವ ಈ ಸರೀಸೃಪಗಳು ತೀವ್ರ ಒತ್ತಡಕ್ಕೆ ಒಳಗಾದಾಗ ಮೆದುಳು ಕಾರ್ಯನಿರ್ವಹಿಸುವುದು ನಿಲ್ಲಿಸುತ್ತದೆ. ಉದಾಹರಣೆಗೆ ತಾಪಮಾನ ಹೆಚ್ಚಾದಾಗ ತಮ್ಮದೇ ಆದ ಬಾಲಗಳನ್ನು ಸಂಭಾವ್ಯ ಬೇಟೆಯೆಂದು ತಪ್ಪಾಗಿ ಭಾವಿಸಿ ಅವುಗಳ ಮೇಲೆ ದಾಳಿ ಮಾಡುತ್ತವೆ. ಅದೇ ರೀತಿ ಗಾರ್ಟರ್ ಹಾವುಗಳು, ಕ್ಯಾಲಿಫೋರ್ನಿಯ ಕಿಂಗ್ ಸ್ನೇಕ್ಗಳು ಮತ್ತು ಕಾರ್ನ್ ಹಾವುಗಳಂತಹ ಕೆಲವು ಸೆರೆಯಲ್ಲಿರುವ ಹಾವುಗಳು ಸಾಂದರ್ಭಿಕವಾಗಿ ಪೌಷ್ಠಿಕಾಂಶದ ಪ್ರಯೋಜನಗಳನ್ನು ಪಡೆಯಲು ಮತ್ತು ವಾಸನೆಯ ಹಾದಿಗಳನ್ನು ಕಡಿಮೆ ಮಾಡಲು ಉದುರಿದ ಚರ್ಮವನ್ನು ಸೇವಿಸಬಹುದು. ಕೃಪೆ: indianexpress.com

ವಾರ್ತಾ ಭಾರತಿ 17 Feb 2026 7:56 pm

ಕರ್ನಾಟಕದಲ್ಲಿ ಗ್ಯಾರಂಟಿ ಸರ್ಕಾರದ ಯಶಸ್ವಿ 1000 ದಿನಗಳು: 5 ಗ್ಯಾರಂಟಿಗಳಿಂದ ನನಸಾದ ಕೋಟಿ ಕನಸುಗಳು

ಕರ್ನಾಟಕದಲ್ಲಿ ನವ ನಿರ್ಮಾಣದ ಸಂಕಲ್ಪದೊಂದಿಗೆ ಅಸ್ತಿತ್ವಕ್ಕೆ ಬಂದ ಗ್ಯಾರಂಟಿ ಸರ್ಕಾರವು ಇದೀಗ ಯಶಸ್ವಿ 1000 ದಿನಗಳನ್ನು ಪೂರೈಸಿದೆ. 'ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ' ಎಂಬ ಮುಖ್ಯಮಂತ್ರಿಗಳ ಮಾತಿನಂತೆ, ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿವೆ. ಗೃಹಲಕ್ಷ್ಮಿ: ಯಜಮಾನಿಯರಿಗೆ ಆರ್ಥಿಕ ಸ್ವಾತಂತ್ರ್ಯ ರಾಜ್ಯದ 1.24 ಕೋಟಿ

ಒನ್ ಇ೦ಡಿಯ 17 Feb 2026 7:50 pm

ಮಸ್ಕಿ | ಅಕ್ರಮ ಮರಳು ಸಾಗಣೆ: ಟಿಪ್ಪರ್ ಜಪ್ತಿ, ಇಬ್ಬರ ವಿರುದ್ದ ಪ್ರಕರಣ ದಾಖಲು

ಮಸ್ಕಿ: ಸರಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪಟ್ಟಣದ ಬಳಗಾನೂರ ವೃತ್ತದ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಂಧನೂರು ಕಡೆಯಿಂದ ಮಸ್ಕಿ ಪಟ್ಟಣದತ್ತ ಸಾಗುತ್ತಿದ್ದ ಟಿಪ್ಪರ್‌ನಲ್ಲಿ ಸುಮಾರು 16 ಕ್ಯೂಬಿಕ್ ಮೀಟರ್ ಸರಕಾರದ ಸ್ವತ್ತಾದ ಮರಳನ್ನು ಪರವಾನಿಗೆ ಪಡೆಯದೆ ಹಾಗೂ ನಂಬರ್ ಪ್ಲೇಟ್ ಇಲ್ಲದೆ ತುಂಬಿಕೊಂಡು ವೇಗವಾಗಿ ಚಲಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಈ ವೇಳೆ ಮಸ್ಕಿ ಪೊಲೀಸ್ ಠಾಣೆ ಪಿಎಸ್‌ಐ ಕೆ. ರಂಗಯ್ಯ ಹಾಗೂ ಸಿಬ್ಬಂದಿ ವಾಹನವನ್ನು ತಡೆದು ಪರಿಶೀಲನೆ ನಡೆಸಿ ಟಿಪ್ಪರ್ ಅನ್ನು ಜಪ್ತಿ ಮಾಡಿದ್ದಾರೆ. ಟಿಪ್ಪರ್ ಮಾಲೀಕ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಮರಳು ಸಾಗಣೆಯ ವಿರುದ್ಧ ಕಾನೂನು ಕ್ರಮ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 17 Feb 2026 7:38 pm

Explained: 43 ವರ್ಷದಿಂದ ಕರ್ನಾಟಕದಲ್ಲಿ ಯಾರನ್ನೂ ಗಲ್ಲಿಗೇರಿಸಿಲ್ಲ! ಹಂಪಿ ಕೇಸ್ ಅಪರಾಧಿಗಳ ಕಥೆ ಏನು? ಏನಿದು ಮರಣ ದಂಡನೆ ರಹಸ್ಯ?

Karnataka Death Penalty History : ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹಂಪಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಂಗಾವತಿಯ ಸೆಷನ್ಸ್‌ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಕೇವಲ ಒಂದೇ ವರ್ಷದಲ್ಲಿ ವಿಚಾರಣೆ ಪೂರ್ಣಗೊಳಿಸಿ, ನೀಡಿರುವ ತೀರ್ಪು ಈಗ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಮರಣ ದಂಡನೆಯನ್ನು ವಿಧಿಸಿದ್ದೇನೋ ಆಗಿದೆ. ಆದರೆ, 43 ವರ್ಷದಿಂದ ಕರ್ನಾಟಕದಲ್ಲಿ ಯಾರನ್ನೂ ಗಲ್ಲಿಗೇರಿಸಿಲ್ಲ ಎಂಬ ಮಾಹಿತಿ ಕೂಡ ಸತ್ಯ. ಇದರ ಜೊತೆ ಗಲ್ಲು ಶಿಕ್ಷೆ ಯಾವ ರೀತಿ ಆಗುತ್ತೆ, ಹಂತಗಳೇನು? ಅಪರಾಧಿಗಳಿಗೆ ಏನೆಲ್ಲಾ ಕಾನೂನು ಆಯ್ಕೆಗಳಿವೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ವಿಜಯ ಕರ್ನಾಟಕ 17 Feb 2026 7:36 pm

ಮಾನ್ವಿ | ರೈತ ಮುಖಂಡ ಎಂ.ಪ್ರಕಾಶ ಮೇಲೆ ಹಲ್ಲೆ: ಆರೋಪಿಗಳನ್ನು ತಕ್ಷಣ ಬಂಧಿಸಲು ವಿರೇಶನಾಯಕ ಆಗ್ರಹ

ಮಾನ್ವಿ: ತಾಲೂಕಿನ ಅಮರೇಶ್ವರ ಕ್ಯಾಂಪಿನಲ್ಲಿ ರೈತ ಮುಖಂಡ ಎಂ. ಪ್ರಕಾಶ ಅವರ ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಕೊಲೆಗೆ ಯತ್ನಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಯುವ ಮುಖಂಡ ವಿರೇಶನಾಯಕ ಅಮರೇಶ್ವರ ಕ್ಯಾಂಪ್ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರೇಶ್ವರ ಕ್ಯಾಂಪಿನ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2025ನೇ ಸಾಲಿನಲ್ಲಿ ನಡೆದಿದ್ದ ಭ್ರಷ್ಟಾಚಾರ, ನಕಲಿ ಸದಸ್ಯರ ನೋಂದಣಿ ಹಾಗೂ 30 ವರ್ಷಗಳಿಂದ ಎಸ್.ಸಿ./ಎಸ್.ಟಿ. ಸದಸ್ಯರಿಲ್ಲದಿರುವ ಬಗ್ಗೆ ಎಂ. ಪ್ರಕಾಶ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರು. ಅವರ ಪ್ರಯತ್ನದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸದಸ್ಯತ್ವ ದೊರಕುವಂತೆ ಕ್ರಮ ಕೈಗೊಳ್ಳಲಾಗಿತ್ತು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಹಳೆಯ ದ್ವೇಷ ಇಟ್ಟುಕೊಂಡು ಫೆ.13ರಂದು ಸಂಜೆ 6.30ಕ್ಕೆ ಹಾಲು ಹಾಕಲು ಸಂಘಕ್ಕೆ ಬಂದಿದ್ದ ಎಂ. ಪ್ರಕಾಶ ಮೇಲೆ ಆರು ಮಂದಿ ಸೇರಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಮೂರು ದಿನಗಳಾದರೂ ಎಲ್ಲಾ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆಗೊಳಗಾದ ಎಂ. ಪ್ರಕಾಶ ಅವರಿಗೆ ನ್ಯಾಯ ಒದಗಿಸಿ, ಆರೋಪಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು. ಇಲ್ಲವಾದಲ್ಲಿ ರೈತರೊಂದಿಗೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿರೇಶನಾಯಕ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಾರ್ಜುನ ನಾಯಕ, ಮೌನೇಶನಾಯಕ, ನಾಗೇಂದ್ರ ಪ್ರಸಾದ್, ವಿಜಯಕುಮಾರ ಕೊಟ್ನೆಕಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 7:35 pm

ಸುಳ್ಳಿನ ಗ್ಯಾರಂಟಿಗಳೆ ಕಾಂಗ್ರೆಸ್‌ ಸಾಧನೆ ; ಮಾಜಿ ಸಂಸದ ಪ್ರತಾಪ್‌ ಸಿಂಹ ಟೀಕೆ

ರಾಜ್ಯದಲ್ಲಿ ಗ್ಯಾರಂಟಿ ವಾತಾವರಣ ಸೃಷ್ಟಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸುಳ್ಳಿನ ಗ್ಯಾರಂಟಿಗಳೇ ಸಿದ್ದರಾಮಯ್ಯ ಸರಕಾರದ 1000 ದಿನಗಳ ಸಾಧನೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಈಗ ಗ್ಯಾರಂಟಿಗಳಿಗೆ ಕೊಡಲು ಹಣವಿಲ್ಲ. ಸರ್ಕಾರ ಹಗರಣಗಳಲ್ಲಿ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.

ವಿಜಯ ಕರ್ನಾಟಕ 17 Feb 2026 7:34 pm

ಕರ್ನಾಟಕ | 20 ವರ್ಷದಲ್ಲಿ 500 ಲಘು ಹೆಲಿಕಾಪ್ಟರ್ ತಯಾರಿಕೆ, ಹೊಸ ಘಟಕ ಲೋಕಾರ್ಪಣೆ: ಎಂಬಿ ಪಾಟೀಲ್

ಕೋಲಾರ: ಮುಂದಿನ ಎರಡು ದಶಕಗಳಲ್ಲಿ ಕರ್ನಾಟಕದಲ್ಲಿ ಎಚ್125 ದರ್ಜೆಯ 500 ಲಘು ಹೆಲಿಕಾಪ್ಟರ್ ಸಿದ್ಧವಾಗಲಿವೆ. ಇಲ್ಲಿನ ನೂತನ ಘಟಕವು ರಾಜ್ಯದಲ್ಲಿ ಕಾರ್ಯಾರಂಭ ಮಾಡುತ್ತಿರುವುದು ಐತಿಹಾಸಿಕ ಸಾಧನೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಕೋಲಾರದ ವೇಮಗಲ್ ನಲ್ಲಿ ನಡೆದ ನೂತನ ಘಟಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು

ಒನ್ ಇ೦ಡಿಯ 17 Feb 2026 7:33 pm

ನಾಯಂಡಹಳ್ಳಿ ನಿಲ್ದಾಣದಲ್ಲಿ 4 ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಕೇಂದ್ರ ಸಚಿವ ಸೋಮಣ್ಣ ಚಾಲನೆ

ಬೆಂಗಳೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳವಾರ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 16215/16216 ಮೈಸೂರು-ಕೆಎಸ್‍ಆರ್ ಬೆಂಗಳೂರು-ಮೈಸೂರು ಚಾಮುಂಡಿ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 17307/17308 ಮೈಸೂರು-ಬಾಗಲಕೋಟೆ-ಮೈಸೂರು ಬಸವ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16235/16236 ತೂತ್ತುಕುಡಿ-ಮೈಸೂರು-ತೂತ್ತುಕುಡಿ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16535/16536 ಮೈಸೂರು-ಪಂಢರಪುರ-ಮೈಸೂರು ಗೋಲ್‍ಗುಂಬಝ್ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿ.ಸೋಮಣ್ಣ, ಈ ಎಕ್ಸ್‌ಪ್ರೆಸ್ ರೈಲುಗಳಿಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ನಿಲುಗಡೆಯನ್ನು ಒದಗಿಸುವ ಮೂಲಕ ನಾಯಂಡಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇದರಿಂದ ಪ್ರತಿದಿನ ಸಂಚರಿಸುವ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು. ಸುರಕ್ಷತೆಯನ್ನು ಸುಧಾರಿಸಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕೇಂದ್ರ ಸರಕಾರವು ರಸ್ತೆ ಕೆಳ ಸೇತುವೆಗಳು ಮತ್ತು ರಸ್ತೆ ಮೇಲ್ಸೇತುವೆಗಳ ನಿರ್ಮಾಣದ ಮೂಲಕ ಲೆವೆಲ್ ಕ್ರಾಸಿಂಗ್ ಗೇಟ್‍ಗಳನ್ನು ತೆಗೆದು ಹಾಕಲು ಆದ್ಯತೆ ನೀಡುತ್ತಿದೆ. ಭಾರತೀಯ ರೈಲ್ವೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ ಎಂದು ಅವರು ಹೇಳಿದರು. 2026-27ನೆ ಸಾಲಿನ ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,748 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ರಾಜ್ಯದಲ್ಲಿ 52,950 ಕೋಟಿ ರೂ.ಮೌಲ್ಯದ ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಬೆಂಗಳೂರು ಕಂಟೋನ್ಮೆಂಟ್ ಮತ್ತು ವೈಟ್‍ಫೀಲ್ಡ್ ನಡುವಿನ ಚತುಷ್ಪಥ ಕಾಮಗಾರಿ ವೇಗವಾಗಿ ನಡೆಯುತ್ತಿದೆ ಎಂದು ಸೋಮಣ್ಣ ತಿಳಿಸಿದರು. ನಂತರ, ವಿಜಯನಗರ ಮತ್ತು ಪಾದರಾಯನಪುರ ನಡುವೆ ಪುನರ್ ನಿರ್ಮಿಸಿದ ರಸ್ತೆ ಮೇಲ್ಸೇತುವೆಯನ್ನು ಉದ್ಘಾಟಿಸಿದ ಸೋಮಣ್ಣ, ಭಾರತ ಸರಕಾರವು 14 ಕೋಟಿ ರೂ. ವೆಚ್ಚದಲ್ಲಿ ಈ ರಸ್ತೆ ಮೇಲ್ಸೇತುವೆಯನ್ನು ನಿರ್ಮಿಸಿದೆ. ಈ ಸೇತುವೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಸಂಪರ್ಕವನ್ನು ಸುಧಾರಿಸುವ ಮೂಲಕ ಗೋರಿಪಾಳ್ಯ, ವಿಜಯನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವನಿ ವೈಷ್ಣವ್ ನೇತೃತ್ವದಲ್ಲಿ ಭಾರತೀಯ ರೈಲ್ವೆಯು ಪ್ರಗತಿಪಥದಲ್ಲಿ ಮುಂದುವರಿಯುತ್ತಿದೆ. ಯಲಹಂಕದ ಬಳಿ ಮೆಗಾ ಕೋಚಿಂಗ್ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲಾಗುವುದು, ಇದು ದೇಶದ ಅತಿದೊಡ್ಡ ಟರ್ಮಿನಲ್‍ಗಳಲ್ಲಿ ಒಂದಾಗಲಿದೆ ಎಂದು ಅವರು ಮಾಹಿತಿ ನೀಡಿದರು. ವಸತಿ ಝಮೀರ್ ಅಹ್ಮದ್ ಖಾನ್ ಮಾತನಾಡಿ, ಈ ರಸ್ತೆ ಮೇಲ್ಸೇತುವೆಯನ್ನು ಪೂರ್ಣಗೊಳಿಸುವ ಮೂಲಕ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಸೋಮಣ್ಣನವರಿಗೆ ಧನ್ಯವಾದಗಳನ್ನು ತಿಳಿಸಿದರು. ಸಂಸದ ಪಿ.ಸಿ.ಮೋಹನ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಆಶುತೋμï ಕುಮಾರ್ ಸಿಂಗ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ ಪುರಿಯಾ ಮತ್ತು ಇತರ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 7:30 pm

Abhishek Sharma: ವಿಶ್ವದ ನಂ.1 ಟಿ20 ಸ್ಟಾರ್ ಆಟಗಾರ ಅಭಿಷೇಕ್ ಶರ್ಮಾ ಎರಡು ಬಾರಿ ಡಕೌಟ್‌, ರವಿಶಾಸ್ತ್ರಿ ಬೆಂಬಲ

Abhishek Sharma: ಕೊಲಂಬೊದ ಆರ್‌.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡದ ಟಿ20 ವಿಶ್ವಕಪ್ 2026 ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಆದರೆ, ಇದೀಗ ಕಾಡುವ ಪ್ರಶ್ನೆ ಏನೆಂದರೆ. ಈ ಮ್ಯಾಚ್‌ನಲ್ಲಿ ಭಾರತ ತಂಡದ ಸ್ಟಾರ್ ಓಪನರ್ ನಾಲ್ಕು ಬಾಲ್‌ ಆಡಿ ಕ್ಯಾಚ್ ನೀಡಿ ಶೂನ್ಯಕ್ಕೆ ಡಕ್‌ಔಟ್‌ ಆದ ವಿಚಾರ ಇದೀಗ ಚರ್ಚೆಯಲ್ಲಿದೆ.

ಒನ್ ಇ೦ಡಿಯ 17 Feb 2026 7:29 pm

Channarayapatna | ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ; ಇಬ್ಬರು ಮೃತ್ಯು

ಹಾಸನ : ಸ್ಕೂಟರ್‌-ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡೇರಿ ಕಾವಲು ಗೇಟ್ ಸಮೀಪ ನಡೆದಿದೆ. ಮೃತರನ್ನು ಮತ್ತಿಘಟ್ಟ ಗ್ರಾಮದ ರಮೇಶ್ (23) ಹಾಗೂ ಎಂ. ಹೊನ್ನೇನಹಳ್ಳಿ ಗ್ರಾಮದ ಪುರುಷೋತ್ತಮ್ (26) ಎಂದು ಗುರುತಿಸಲಾಗಿದೆ. ರಮೇಶ್ ಹಾಗೂ ಕಿರಣ್ ಎಂಬವರು ಸ್ಕೂಟರ್‌ ನಲ್ಲಿ ಬರುತ್ತಿದ್ದ ವೇಳೆ, ಎದುರು ದಿಕ್ಕಿನಿಂದ ವೇಗವಾಗಿ ಬಂದ ಪುರುಷೋತ್ತಮ್ ಚಾಲನೆ ಮಾಡುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ರಮೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಪುರುಷೋತ್ತಮ್ ಕೂಡ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಕೂಟರ್‌ ನಲ್ಲಿದ್ದ ಕಿರಣ್‌ ಗೂ ಗಂಭೀರ ಗಾಯಗಳಾಗಿದ್ದು, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರೀಸಾವೆ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಾರ್ತಾ ಭಾರತಿ 17 Feb 2026 7:23 pm

ದ.ಕ., ಉಡುಪಿ ಜಿಲ್ಲೆಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಉಡುಪಿ: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Feb 2026 7:16 pm

ಗುರುವಾರದಿಂದ ರಮಳಾನ್ ಪ್ರಾರಂಭ: ಶೈಖುನಾ ಖಾಝಿ ಮಾಣಿ ಉಸ್ತಾದ್

ಮಂಗಳೂರು: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಳಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Feb 2026 7:16 pm

'ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ: ಸಚಿವರ ಹೇಳಿಕೆಗೆ ಡಿಕೆ ಸುರೇಶ್ ಟಾಂಗ್

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರುವ ಲಕ್ಷಣಗಳು ಕಂಡು ಬರುತ್ತಿವೆ. ಸ್ವಪಕ್ಷ ಕಾಂಗ್ರೆಸ್‌ನಲ್ಲೇ ನಾಯಕರ ಪರಸ್ಪರ ಹೇಳಿಕೆಗಳು ಹೆಚ್ಚು ಸುದ್ದು ಮಾಡುತ್ತಿವೆ. 'ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು, ಬೀದಿ ನಾಯಿಗಳಲ್ಲ' ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಹೇಳಿದ್ದಾರೆ. ಇದು ಮೂಲ ಕಾಂಗ್ರೆಸ್ಸಿಗರ ಪರ ಹಾಗೂ ವಲಸೆ ಬಂದವರ ವಿರುದ್ಧದ ಹೇಳಿಕೆ

ಒನ್ ಇ೦ಡಿಯ 17 Feb 2026 7:04 pm

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ‘ನಮ್ಮ ಸರಸ್ ಮೇಳ-2026’

ಸ್ವ-ಸಹಾಯ ಮಹಿಳೆಯರ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ

ವಾರ್ತಾ ಭಾರತಿ 17 Feb 2026 7:03 pm

ಇಶಾನ್ ಕಿಶನ್ ಮದ್ವೆಗೆ ಮನೆಯಲ್ಲಿ ಸಮ್ಮತಿ: ಗರ್ಲ್ ಫ್ರೆಂಡ್ ಅದಿತಿ ಹುಂಡಿಯಾ ಬಗ್ಗೆ ತಾತನಿಂದಲೇ ಮಾಹಿತಿ!

Ishan Kishan And Aditi Hundia In Relationship- ಭಾರತ ಟಿ20 ತಂಡದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶಾನ್ ವಿಶ್ವಕಪ್ ಟೂರ್ನಿಯಲ್ಲಿ ಮಿಂಚುತ್ತಿದ್ದಂತೆ ಅವರ ವೈಯಕ್ತಿಕ ವಿಚಾರಗಳ ಬಗ್ಗೆಯುೂ ಬಹಿರಂಗವಾಗಿ ಚರ್ಚೆಯಾಗುತ್ತಿದೆ. ಅವರ ಬಹುಕಾಲದ ಗೆಳತಿ ಅದಿತಿ ಹುಂಡಿಯಾ ಜೊತೆಗಿನ ಪ್ರೇಮ ವಿಚಾರ ಮುನ್ನಲೆಗೆ ಬಂದಿದೆ. ಅವರ ತಾತ ಅನುರಾಗ್ ಪಾಂಡೆ ಅವರೇ ಅದಿತಿಯ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಮಕ್ಕಳಿಷ್ಟವೇ ನಮ್ಮಿಷ್ಟ ಎಂದಿರುವುದು ಬಹುತೇಕ ವಿವಾಹಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತೆಯೇ.

ವಿಜಯ ಕರ್ನಾಟಕ 17 Feb 2026 6:59 pm

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಚಿದಂಬರ ಬೈಕಂಪಾಡಿ ಆಯ್ಕೆ

ಬಂಟ್ವಾಳ : ಮಾರ್ಚ್ 27 ಮತ್ತು 28 ರಂದು ಬಿ.ಸಿ. ರೋಡಿನ ಸ್ಪ ರ್ಶ ಕಲಾ ಮಂದಿರದಲ್ಲಿ ನಡೆಯುವ 28 ನೆಯ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂಪಿ ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತ, ಲೇಖಕರಾದ ಚಿದಂಬರ ಬೈಕಂಪಾಡಿಯವರು ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ್ದಾರೆ. ಕನ್ನಡದ ಮಹತ್ವದ ಕವಿಯಾಗಿ ಗುರುತಿಸಿಕೊಂಡಿರುವ ಇವರು ಬೇಗುದಿ, ವಾಸ್ತವದ ಲೆಕ್ಕಾಚಾರ, ಕಪ್ಪು ಹುಡುಗ ಇತ್ಯಾದಿ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ತುಳು ಪ್ರೇಮ ಗೀತೆಗಳು ಇವರ ಧ್ವನಿ ಸುರುಳಿ. ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಇದು ಮುಂಗಾರು’ ಕೃತಿ ಪತ್ರಿಕೋದ್ಯಮದ ಬಗ್ಗೆಗಿನ ಕೃತಿ. ಹಿರಿಯ ಪತ್ರಕರ್ತರಾದ ವಡ್ಡರ್ಸೆಯವರ ಒಡನಾಡಿಯಾಗಿ ಹತ್ತು ವರ್ಷ ಕಾಲ ಮುಂಗಾರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿ ಅವರ ಆಶಯಗಳಿಗೆ ಜೀವ ತುಂಬಿದ್ದರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಮೃತ ವಾರಪತ್ರಿಕೆಯಲ್ಲಿ 2 ವರ್ಷ, ದಿವ್ಯವಾಣಿ ವಾರಪತ್ರಿಕೆಯಲ್ಲಿ 3 ವರ್ಷ, ಮುಂಗಾರು ದಿನಪ್ರತಿಕೆ 10 ವರ್ಷ ಮುಖ್ಯ ವರದಿಗಾರರಾಗಿ, ಕನ್ನಡಪ್ರಭ ದಿನಪತ್ರಿಕೆಯಲ್ಲಿ 15 ವರ್ಷ ಪ್ರಧಾನ ವರದಿಗಾರರಾಗಿ ‘ಬಿಂಬದ್ವನಿ’ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಹೀಗೆ ಹತ್ತು ಹಲವು ಮಜಲುಗಳಲ್ಲಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿ ತಮ್ಮ ವೈಚಾರಿಕ, ಚಿಂತನಪೂರ್ಣ ಹಾಗೂ ಸಾಮಾಜಿಕ ಕಳಕಳಿಯ ವರದಿ ಮತ್ತು ಲೇಖನಗಳ ಮೂಲಕ ಕನ್ನಡ ಮಾಧ್ಯಮ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಮುಂಗಾರು ಎನ್ನುವ ಪತ್ರಿಕೋದ್ಯಮದ ಕುರಿತ ಪುಸ್ತಕ, ಪ.ಗೋ ಪ್ರಪಂಚ – ಪತ್ರಿಕೋದ್ಯಮ ಕುರಿತ ಪುಸ್ತಕ, ರಾಜಕೀಯ ಒಳಸುಳಿಗಳು ಲೇಖನಗಳು ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹಲವು ಕೃತಿ ಹೊರತಂದಿದ್ದಾರೆ. ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕಾರಗೊಂಡ ಬೈಕಂಪಾಡಿಯವರು ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ಪತ್ರಕರ್ತ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಖಿಲ ಭಾರತ ಆಕಾಶವಾಣಿ ವಾರ್ಷಿಕ ಪ್ರಶಸ್ತಿ ಬೈಕಂಪಾಡಿಯವರ 'ಬೆಂಗರೆ' ಬಾನುಲಿ ಸಾಕ್ಷರೂಪಕಕ್ಕೆ ಒಲಿದು ಬಂದಿದೆ. ಬನ್ನಂಜೆ ರಾಮಾ ಚಾರ್ಯ ಪತ್ರಿಕೋದ್ಯಮ ಪ್ರಶಸ್ತಿ ಪತ್ರಿಕೋದ್ಯಮ ಕ್ಷೇತ್ರದ ಇನ್ ಲ್ಯಾಂಡ್ ಅವಾರ್ಡ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅವಾರ್ಡ್, ಡಾ. ಕೋಟ ಶಿವರಾಮ ಕಾರಂತ ಪ್ರಶಸ್ತಿ ಮುಂತಾದ ಗೌರವಕ್ಕೆ ಪಾತ್ರರಾದ ಬೈಕಂಪಾಡಿಯವರು 2025ನೇ ಸಾಲಿನ ಪತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪಡೆದಿದ್ದಾರೆ.

ವಾರ್ತಾ ಭಾರತಿ 17 Feb 2026 6:58 pm

ಸೌದಿ ಅರೇಬಿಯಾದಲ್ಲಿ ಚಂದ್ರ ದರ್ಶನ: ಬುಧವಾರದಿಂದ ರಮಝಾನ್‌ ಉಪವಾಸ ಆರಂಭ

ಜಿದ್ದಾ: ಚಂದ್ರ ದರ್ಶನವಾದ ಹಿನ್ನೆಲೆ ಸೌದಿ ಅರೇಬಿಯಾದಲ್ಲಿ ಬುಧವಾರದಿಂದ(ಫೆ.18) ರಿಂದ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು gulfnews ವರದಿ ಮಾಡಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಸಾಮಾನ್ಯವಾಗಿ 29 ಅಥವಾ 30 ದಿನಗಳಾಗಿರುತ್ತವೆ. ತಿಂಗಳ ಆರಂಭ ಮತ್ತು ಅಂತ್ಯವು ಚಂದ್ರನ ಮೇಲೆ ಅವಲಂಬಿತವಾಗಿರುತ್ತದೆ, ಅದಕ್ಕಾಗಿಯೇ ರಂಝಾನ್ ಅನ್ನು ವಾರ್ಷಿಕವಾಗಿ ಯಾವುದೇ ನಿರ್ದಿಷ್ಟ ದಿನಗಳಲ್ಲಿ ಆಚರಿಸಲಾಗುವುದಿಲ್ಲ. #BreakingNews Live updates: #India to announce first day of Ramadan on Wednesday Ramadan 2026 in UAE: Crescent moon sighting and announcements worldwide https://t.co/0KhIReaWxJ pic.twitter.com/WWj9HWophf — Gulf News (@gulf_news) February 17, 2026

ವಾರ್ತಾ ಭಾರತಿ 17 Feb 2026 6:57 pm

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ

ಪಿಯುಸಿ ಪರೀಕ್ಷೆಗೆ 7 ಲಕ್ಷ, ಎಸೆಸೆಲ್ಸಿ ಪರೀಕ್ಷೆಗೆ 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ವಾರ್ತಾ ಭಾರತಿ 17 Feb 2026 6:55 pm

ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಜೀವನ ಗುಣಮಟ್ಟ ಸುಧಾರಣೆ: ಸಚಿವ ಶಿವರಾಜ್ ಎಸ್.ತಂಗಡಗಿ

ಕೊಪ್ಪಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಹೆಣ್ಣು‌ಮಕ್ಕಳು ಸ್ವಾಭಿಮಾನದಿಂದ‌ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ನಗರದ ಮಧುಶ್ರೀ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಗ್ಯಾರಂಟಿ‌ ಕಾರ್ಯಾಗಾರ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಮನೆಯಲ್ಲೂ ನೆಮ್ಮದಿ ವಾತಾವರಣ ನಿರ್ಮಾಣವಾಗಿದ್ದರೆ, ಅದು ಗ್ಯಾರಂಟಿ ಯೋಜನೆಯಿಂದ ಮಾತ್ರ ಎಂದು‌ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ‌ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ‌ ನಮ್ಮ‌‌ ಸರ್ಕಾರ‌ ನೀಡಿರುವ ಗ್ಯಾರಂಟಿ ಯೋಜನೆಯಿಂದ ಬಿಜೆಪಿಯವರಿಗೆ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಯೋಜನೆ ಹೀಗೆ ಮುಂದುವರೆದರೆ ರಾಜ್ಯದಲ್ಲಿ‌ ಅವರಿಗೆ ಭವಿಷ್ಯವಿಲ್ಲ ಎಂದು ಗೊತ್ತು. ಹೀಗಾಗಿ ಗ್ಯಾರಂಟಿ‌ ಯೋಜನೆಯಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಇಲ್ಲ- ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಬಿಜೆಪಿಗೆ ವೋಟ್ ನೀಡಿದ ಮಹಿಳೆಯರಿಗೂ ಗ್ಯಾರಂಟಿ : ನಮಗೆ ರಾಜ್ಯದ ಹೆಣ್ಣು ಮಕ್ಕಳ ಮೇಲೆ‌‌ ನಂಬಿಕೆ ಮತ್ತು ವಿಶ್ವಾಸ ಹೆಚ್ಚಿದೆ.‌ ನಾವು ಕಾಂಗ್ರೆಸ್ ಗೆ ಮತ ನೀಡಿದವರಿಗೆ ಮಾತ್ರ ಗ್ಯಾರಂಟಿ ಯೋಜನೆ‌ ಕೊಟ್ಟಿದ್ದೆವೆಯೇ? ಬಿಜೆಪಿಗೆ ಮತ ಹಾಕಿದವರಿಗೂ ಗ್ಯಾರಂಟಿ‌ ಯೋಜನೆ ತಲುಪಿದೆಯಲ್ಲ.‌ ಈ ಬಗ್ಗೆ ನೀವು ಕೂಡ ನಿಮ್ಮ‌ ನೆರೆ ಹೊರೆಯವರಿಗೆ ಜಾಗೃತಿ ಮೂಡಿಸಬೇಕು ಎಂದರು. ಬಿಜೆಪಿಗರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ, ಬ್ಯಾಂಕ್ ನಲ್ಲಿ ಶೂನ್ಯ ಖಾತೆ ತೆಗೆಯಿರಿ, ಪ್ರತಿ ಮಹಿಳೆಯರ ಖಾತೆಗೆ ತಲಾ‌‌ ಹದಿನೈದು ಲಕ್ಷ ರೂ. ಹಣ ಹಾಕುತ್ತೇವೆ ಎಂದು ಭರವಸೆ ನೀಡಿದ್ದರು.‌‌ ಮಹಿಳೆಯರು ಮುಗಿಬಿದ್ದು, ಖಾತೆ ತೆರೆದರು. ಆದರೆ ಕೇಂದ್ರ ಸರ್ಕಾರದಿಂದ ಮಹಿಳೆಯರ ಖಾತೆಗೆ ಹಣ ಬರಲಿಲ್ಲ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ‌ ರಾಜ್ಯ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕುವ ಕೆಲಸ ಮಾಡುತ್ತಿದೆ ಎಂದರು. ಬಿಜೆಪಿಯಿಂದ ಯೋಜನೆಗೆ ಕುತ್ತು : ಗ್ಯಾರಂಟಿ ‌ಯೋಜನೆಯಿಂದ ಮಹಿಳೆಯರ ಜೀವನ ಗುಣಮಟ್ಟ ಸುಧಾರಣೆ ಮಾಡಿದೆ.‌ ಬಿಜೆಪಿ ಪಕ್ಷ ರಾಜ್ಯದಲ್ಲಿ‌ ಅಧಿಕಾರಕ್ಕೆ ಬಂದರೆ, ಗ್ಯಾರಂಟಿ ಯೋಜನೆಗೆ ಕುತ್ತು ಬರಲಿದೆ. ಕಾಂಗ್ರೆಸ್ ಮತ್ತೊಮ್ಮೆ‌‌ ಅಧಿಕಾರಕ್ಕೆ ಬಂದರೆ ನಿಮ್ಮ ಖಾತೆಗೆ ಹಣ ಬರುವುದು ಮುಂದುವರೆಯಲಿದೆ ಎಂದು‌‌ ಹೇಳಿದರು. ಕೇಂದ್ರ‌ ಸರ್ಕಾರದ್ದು ಎಲ್ಲವೂ ಹಣ ವ್ಯಯಿಸದ ಯೋಜನೆಗಳಾಗಿವೆ. ಸ್ವಚ್ಛ ಭಾರತ ಯೋಜನೆ, ಪೊರಕೆಯೂ ನಮ್ಮದೆ, ಕಸವೂ ನಮ್ಮದೆ, ಕಸ ಬಳಿಯುವವರು ಕೂಡ ನಾವೇ. ಯೋಜನೆ ಮಾತ್ರ ಕೇಂದ್ರದ್ದು. ಇನ್ನು ಬೇಟಿ‌ ಬಚಾವೋ-ಬೇಟಿ ಪಡಾವೋ ಯೋಜನೆ ಬಗ್ಗೆ ಪ್ರತಿಕ್ರಿಯಿಸಿ, ಮಕ್ಕಳು ನಮ್ಮದ್ದು, ಯೋಜನೆ ಮಾತ್ರ ಅವರದ್ದು ಎಂದು ವ್ಯಂಗ್ಯವಾಡಿದರು. ಬಿಜೆಪಿಯವರಿಗೆ ಬಡವರು ನೆಮ್ಮದಿಯಾಗಿ ಬದುಕುವುದು ಇಷ್ಟವಿಲ್ಲ.‌ ಹೀಗಾಗಿ ಯುಪಿಎ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ‌ ಗಾಂಧಿ ಉದ್ಯೋಗ ಖಾತ್ರಿಯ ಯೋಜನೆಯ ಹೆಸರು ಬದಲಾಯಿಸಿ, ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಅವರು‌‌ ಯೋಜನೆಗಳನ್ನು ನೀಡುವುದು ಕೇವಲ ಉಳ್ಳವರಿಗೆ ಮಾತ್ರ. ಅವರ ಕಣ್ಣಿಗೆ ಕಾಣುವುದು ಕೇವಲ ಅಂಬಾನಿ, ಅದಾನಿ ಮಾತ್ರ ‌ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ‌ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಮೆಹರೋಜ್ ಖಾನ್, ಸಂಸದ ರಾಜಶೇಖರ್ ಹಿಟ್ನಾಳ್, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಉಪಾಧ್ಯಕ್ಷ  ಮಹರೋಜ್ ಖಾನ್, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಸಿಇಓ‌ ವರ್ಣಿತ್‌ ನೇಗಿ‌ ಹಾಗೂ‌ ‌ಇನ್ನಿತರರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 17 Feb 2026 6:51 pm

ಇಮ್ರಾನ್ ಖಾನ್ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಿ: ಗಾವಸ್ಕರ್, ಕಪಿಲ್ ದೇವ್ ಸೇರಿದಂತೆ 14 ಮಾಜಿ ಕ್ರಿಕೆಟಿಗರಿಂದ ಪಾಕ್ ಸರಕಾರಕ್ಕೆ ಮನವಿ

ಹೊಸದಿಲ್ಲಿ: ಸುನಿಲ್ ಗಾವಸ್ಕರ್ ಮತ್ತು ಕಪಿಲ ದೇವ್ ಸೇರಿದಂತೆ 14 ಅಂತರರಾಷ್ಟ್ರೀಯ ಕ್ರಿಕೆಟ್ ಮಾಜಿ ನಾಯಕರು ಮಂಗಳವಾರ ಜಂಟಿ ಹೇಳಿಕೆಯೊಂದನ್ನು ಹೊರಡಿಸಿದ್ದು,ಮಾಜಿ ಪ್ರಧಾನಿ ಹಾಗೂ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಅವರಿಗೆ ತಕ್ಷಣವೇ ಸೂಕ್ತ ವೈದ್ಯಕೀಯ ಚಿಕಿತ್ಸೆ ಲಭ್ಯವಾಗಿಸುವಂತೆ ಮತ್ತು ಬಂಧನದಲ್ಲಿ ಅವರೊಂದಿಗೆ ಗೌರವದಿಂದ ನಡೆದುಕೊಳ್ಳುವಂತೆ ಪಾಕ್ ಸರಕಾರವನ್ನು ಆಗ್ರಹಿಸಿದ್ದಾರೆ. ಖಾನ್ ಅವರ ದೃಷ್ಟಿಯು ತೀವ್ರವಾಗಿ ಕ್ಷೀಣಿಸುತ್ತಿದೆ ಎಂಬ ವರದಿಗಳು ಮತ್ತು ಕಳೆದ ಎರಡೂವರೆ ವರ್ಷಗಳಿಂದ ಅವರ ಬಂಧನ ಸ್ಥಿತಿಗಳ ಕುರಿತು ಮಾಜಿ ನಾಯಕರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮೈಕೇಲ್ ಅಥರ್ಟನ್, ಅಲನ್ ಬಾರ್ಡರ್, ಮೈಕೇಲ್ ಬ್ರಿಯರ್ಲಿ, ಗ್ರೆಗ್ ಚಾಪೆಲ್, ಇಯಾನ್ ಚಾಪೆಲ್, ಬೆಲಿಂಡಾ ಕ್ಲರ್ಕ್, ಸುನಿಲ್ ಗಾವಸ್ಕರ್, ಡೇವಿಡ್ ಗ್ರೋವರ್, ಕಿಮ್ ಹ್ಯೂಸ್, ನಾಸಿರ್ ಹುಸೇನ್, ಕ್ಲೈವ್ ಲಾಯ್ಡ್, ಕಪಿಲ್ ದೇವ್,‌ ಸ್ಟಿಫನ್ ವಾ ಮತ್ತು ಜಾನ್ ರೈಟ್ ಅವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ. ಕ್ರೀಡೆಗೆ ಖಾನ್ ಅವರ ಕೊಡುಗೆಯನ್ನು ಎತ್ತಿ ತೋರಿಸಿರುವ ಈ ನಾಯಕರು,ಅವರು 1992ರ ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ್ದನ್ನು ನೆನಪಿಸಿದ್ದಾರೆ. ‘ನಮ್ಮಲ್ಲಿ ಹಲವರು ಅವರ ವಿರುದ್ಧ ಆಡಿದ್ದೇವೆ, ಕ್ರಿಕೆಟ್ ಮೈದಾನವನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ ಅಥವಾ ಅವರ ಸರ್ವತೋಮುಖ ಪ್ರತಿಭೆ, ವರ್ಚಸ್ಸು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಆದರ್ಶವಾಗಿಟ್ಟುಕೊಂಡು ಬೆಳೆದಿದ್ದೇವೆ. ಅವರು ಕ್ರಿಕೆಟ್ ಲೋಕವು ಕಂಡಿರುವ ಅತ್ಯುತ್ತಮ ಸವ್ಯಸಾಚಿಗಳು ಮತ್ತು ನಾಯಕರಲ್ಲಿ ಒಬ್ಬರಾಗಿದ್ದಾರೆ’ ಎಂದು ಹೇಳಿಕೆಯು ತಿಳಿಸಿದೆ. ಪಾಕಿಸ್ತಾನದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಿಯಾಗಿ ಖಾನ್ ಅವರ ಅಧಿಕಾರಾವಧಿಯನ್ನು ಉಲ್ಲೇಖಿಸಿರುವ ಹೇಳಿಕೆಯು, ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅವರು ಮಾನವೀಯ ಚಿಕಿತ್ಸೆಗೆ ಅರ್ಹರಾಗಿದ್ದಾರೆ ಎಂದು ಒತ್ತಿ ಹೇಳಿದೆ. ಖಾನ್ ಅವರಿಗೆ ತಜ್ಞ ವೈದ್ಯರಿಂದ ತಕ್ಷಣ ಚಿಕಿತ್ಸೆ, ನಿಯಮಿತ ಕುಟುಂಬ ಭೇಟಿಗಳು ಸೇರಿದಂತೆ ಮಾನವೀಯ ವಾತಾವರಣ, ಅನಗತ್ಯ ವಿಳಂಬವಿಲ್ಲದೆ ಕಾನೂನು ಪ್ರಕ್ರಿಯೆಗಳ ನ್ಯಾಯಯುತ ಮತ್ತು ಪಾರದರ್ಶಕ ಲಭ್ಯತೆಯನ್ನು ಖಚಿತಪಡಿಸುವಂತೆ ಮಾಜಿ ಕ್ರಿಕೆಟ್ ನಾಯಕರು ಪಾಕ್ ಸರಕಾರವನ್ನು ಆಗ್ರಹಿಸಿದ್ದಾರೆ. ಖಾನ್ ಅವರ ಬಲಗಣ್ಣಿನ ದೃಷ್ಟಿಯು ತೀವ್ರವಾಗಿ ಕ್ಷೀಣಿಸುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ವೈದ್ಯರ ತಂಡವೊಂದು ಫೆ.15ರಂದು ಅವರ ತಪಾಸಣೆಯನ್ನು ನಡೆಸಿದೆ. ವೈದ್ಯಕೀಯ ತಪಾಸಣೆಯನ್ನು ನಡೆಸಿದ ರೀತಿಯನ್ನು ಅವರ ಪಕ್ಷವು ಪ್ರಶ್ನಿಸಿದೆ. ಫೆ.16ರ ಮೊದಲು 73ರ ಹರೆಯದ ಖಾನ್ ಅವರ ವಿವರವಾದ ವೈದ್ಯಕೀಯ ತಪಾಸಣೆಗೆ ಸರ್ವೋಚ್ಚ ನ್ಯಾಯಾಲಯವು ಆದೇಶಿಸಿತ್ತು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಬಹುದು ಎಂದು ಅಧಿಕಾರಿಗಳು ಸೂಚಿಸಿದ್ದರಾದರೂ ಬದಲಿಗೆ ವೈದ್ಯರು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿಯೇ ಅವರ ತಪಾಸಣೆ ನಡೆಸಿದ್ದರು. ಖಾನ್ ಅವರ ವಾಸಸ್ಥಿತಿಗಳನ್ನು ತಿಳಿದುಕೊಳ್ಳಲು ನ್ಯಾಯಾಲಯದ ನಿರ್ದೇಶನಗಳ ಮೇರೆಗೆ ಜೈಲಿನಲ್ಲಿ ಅವರನ್ನು ಭೇಟಿಯಾಗಿದ್ದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್‌ನ ವಕೀಲರು, ತನ್ನ ಬಲಗಣ್ಣಿನಲ್ಲಿ ಶೇ.85ರಷ್ಟು ದೃಷ್ಟಿಯನ್ನು ಕಳೆದುಕೊಂಡಿರುವುದಾಗಿ ಮಾಜಿ ಪ್ರಧಾನಿ ತಿಳಿಸಿದ್ದಾರೆ ಎಂದು ವರದಿ ಮಾಡಿದ್ದರು. ಕಳೆದ ತಿಂಗಳು ಇಸ್ಲಾಮಾಬಾದ್‌ನ ಪಾಕಿಸ್ತಾನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾನ್ ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಖಾನ್ ಕುಟುಂಬದ ಸದಸ್ಯರು, ಖಾಸಗಿ ವೈದ್ಯರು ಮತ್ತು ಪಕ್ಷದ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ನಡೆದ ವೈದ್ಯಕೀಯ ತಪಾಸಣೆಯು ಸ್ವೀಕಾರಾರ್ಹವಲ್ಲ ಎಂದು ತೆಹ್ರೀಕ್-ಎ-ಇನ್ಸಾಫ್ ಹೇಳಿದೆ.

ವಾರ್ತಾ ಭಾರತಿ 17 Feb 2026 6:50 pm

ಕುಕನೂರು | ಜಾತ್ರಾ ಮಹೋತ್ಸವದ ಅಂಗವಾಗಿ 21 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

ಕುಕನೂರು : ತಾಲೂಕಿನ ಕುದುರೆಮೋತಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ 21 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ ಮಹಾಂತ ಮಹಾಸ್ವಾಮಿ ಅವರು, ಪರಸ್ಪರ ಸೌಹಾರ್ದ, ಸಹಿಷ್ಣುತೆ ಮತ್ತು ಹೊಂದಾಣಿಕೆಯಿಂದ ಬದುಕುವುದೇ ನಿಜವಾದ ಭಾವೈಕ್ಯತೆ ಎಂದು ಹೇಳಿದರು. ಜಾತಿ-ಧರ್ಮ ಬೇಧವಿಲ್ಲದೆ ಗ್ರಾಮದಲ್ಲಿ ಎಲ್ಲರೂ ಸಹೋದರತ್ವದಿಂದ ಜೀವನ ನಡೆಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜಿ.ಪಂ. ಮಾಜಿ ಸದಸ್ಯ ಈರಪ್ಪ ಕುಡುಗುಂಟಿ ಮಾತನಾಡಿ, ವೀರಶೈವ ಮಠಗಳು ಸಮಾಜದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಕಾಪಾಳಿಗಳು. ಅವುಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಕಳಕಪ್ಪ ಕಂಬಳಿ ಅವರು, ದಾಂಪತ್ಯದಲ್ಲಿ ಸಮಾನತೆ ಮತ್ತು ಹೊಂದಾಣಿಕೆ ಮುಖ್ಯವೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಹಾದೇವ ಮಹಾಸ್ವಾಮಿಗಳು, ಬಸವಲಿಂಗ ಶಿವಾಚಾರ್ಯರು, ಗುರು ಸಿದ್ದೇಶ್ವರ ಶಿವಾಚಾರ್ಯರು, ಗುರು ಶಾಂತವೀರ ಶಿವಾಚಾರ್ಯರು ಹಾಗೂ ಹಜರತ್ ನಿಜಾಮುದ್ದೀನ್ ದರ್ಗಾದ ಅಶ್ರಫ್ ಗುರುಗಳು ದಿವ್ಯ ಸಾನಿಧ್ಯವಹಿಸಿದ್ದರು. ಶ್ರೀನಾಥ ರೆಡ್ಡಿ, ಮಲ್ಲನಗೌಡ ಕೋನನಗೌಡ್ರು, ಅಶೋಕ ತೋಟದ, ಬಸವರಾಜ ರಾಜೂರ, ಅಯ್ಯನಗೌಡ ಕೆಂಚಮ್ಮನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 6:45 pm

ನಿಮಿಷಗಳಲ್ಲಿ ಹೆಲ್ತ್ ರಿಪೋರ್ಟ್ ವಿಶ್ಲೇಷಿಸಿ, ಫಲಿತಾಂಶವನ್ನು ನೀಡುವ ಜಿಯೋ ಆರೋಗ್ಯ ಎಐ; ಇಲ್ಲಿದೆ ಎಐ ಕ್ಲಿನಿಕ್ ಮಾಡೆಲ್

ನವದೆಹಲಿ: ನಿಮಿಷಗಳಲ್ಲಿ 'ಹೆಲ್ತ್ ರಿಪೋರ್ಟ್' ವಿಶ್ಲೇಷಣೆ ಮಾಡಿ, ಅದರ ಫಲಿತಾಂಶವನ್ನು ಕೈಗಿಡುವ ಎಐ ಆಧಾರಿತ ಕ್ಲಿನಿಕ್ ಮಾದರಿ ಇಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಗಮನ ಸೆಳೆಯುತ್ತಿದೆ. ಅಂದ ಹಾಗೆ ಇದರ ಪ್ರದರ್ಶನ ಇರುವುದು ಜಿಯೋ ಪೆವಿಲಿಯನ್‌ನಲ್ಲಿ. ಅಲ್ಲಿ ಪ್ರದರ್ಶಿಸಲಾದ ಜಿಯೋ ಆರೋಗ್ಯ ಎಐ, ಪ್ರಾಥಮಿಕ ಆರೋಗ್ಯ ಕ್ಷೇತ್ರದಲ್ಲಿ ಎಐ-ಆಧಾರಿತ ಕ್ಲಿನಿಕ್ ಮಾದರಿಯನ್ನು ಪರಿಚಯಿಸಿದೆ. ಈ ಎಐ-ಚಾಲಿತ

ಒನ್ ಇ೦ಡಿಯ 17 Feb 2026 6:44 pm

ಕಾನೂನುಬಾಹಿರವಾಗಿ 31 ನಿವೇಶನ ಪಡೆದುಕೊಂಡ ಕಾಂಗ್ರೆಸ್ ! ನ್ಯಾಯಾಲಯದ ಕದ ತಟ್ಟೋ ಎಚ್ಚರಿಕೆ ಕೊಟ್ಟ ಛಲವಾದಿ

ಕಾನೂನುಬಾಹಿರವಾಗಿ 31 ನಿವೇಶನಗಳನ್ನು ಕಾಂಗ್ರೆಸ್ ಪಕ್ಷ ಪಡೆದುಕೊಂಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಇವೆಲ್ಲವೂ ಸರಕಾರಿ ದಾಖಲೆಗಳು, ನಾವ್ಯಾರೂ ಸೃಷ್ಟಿಸಿದ್ದಲ್ಲ. ಅವರಿಂದ ಪಡೆದ ದಾಖಲೆಗಳಿವು ಎಂದು ಪ್ರದರ್ಶಿಸಿದರು. ಕಾನೂನು ಇಲಾಖೆ ಇದನ್ನು ಪರಿಶೀಲಿಸಲಿ. ಈ ಎಲ್ಲ ನಿವೇಶನಗಳನ್ನು ಸರಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ಭೂಕಬಳಿಕೆ ಮಾಡಿ ಮುಡಾದಲ್ಲಿ ಸಿಕ್ಕಿ ಬಿದ್ದಿದ್ದರು. ಅವರು ಜೈಲಿಗೆ ಹೋಗುವುದು ಗ್ಯಾರಂಟಿ ಆದಾಗ ನಿವೇಶನಗಳನ್ನು ವಾಪಸ್ ಕೊಟ್ಟಿದ್ದರು. ಈ ಭೂಕಬಳಿಕೆಯಿಂದ ನೀವು ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ ಎಂದು ಎಚ್ಚರಿಸಿದರು. ಅದರಿಂದ ತಪ್ಪಿಸಿಕೊಳ್ಳಲು ಕೂಡಲೇ ನಿವೇಶನಗಳನ್ನು ವಾಪಸ್ ಕೊಡಿ ಎಂದು ಒತ್ತಾಯಿಸಿದರು.

ವಿಜಯ ಕರ್ನಾಟಕ 17 Feb 2026 6:42 pm

ಬಜೆಟ್ ಅಧಿವೇಶನದಲ್ಲೇ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ಆಗ್ರಹ

ಬೆಂಗಳೂರು : ರಾಜ್ಯ ಸರಕಾರ ‘ರೋಹಿತ್ ವೇಮುಲ ಕಾಯ್ದೆ’ ಕರಡನ್ನು ಸಾರ್ವಜನಿಕ ಚರ್ಚೆಗೆ ಕೂಡಲೇ ಬಿಡುಗಡೆಗೊಳಿಸಿ, ಬಜೆಟ್ ಅಧಿವೇಶನದಲ್ಲಿ ಕಾಯ್ದೆಯನ್ನು ಜಾರಿಗೊಳಿಸಬೇಕು ಎಂದು ‘ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಆಗ್ರಹಿಸಿದೆ. ಮಂಗಳವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ದಸಂಸ ಹಿರಿಯ ಹೋರಾಟಗಾರರಾದ ಮಾವಳ್ಳಿ ಶಂಕರ್, ಪ್ರಾಧ್ಯಾಪಕರಾದ ಹುಲಿಕುಂಟೆ ಮೂರ್ತಿ, ಬಸವರಾಜ ಕೌತಾಳ್, ಡಾ.ಆಶ್ನಾಸಿಂಗ್, ವಿದ್ಯಾರ್ಥಿ ಮುಖಂಡರಾದ ಲೇಖಾ, ರಾಹುಲ್, ವಕೀಲ ವಿನಯ್ ಶ್ರೀನಿವಾಸ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇಂದಿಗೂ ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳ ಮತ್ತು ಪ್ರಾಧ್ಯಾಪಕರ ಗೌರವ, ಆತ್ಮವಿಶ್ವಾಸ, ವ್ಯಕ್ತಿತ್ವಗಳ ಮೇಲೆ ದಾಳಿಗಳಾಗುತ್ತಿವೆ. ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚುತ್ತಿರುವ ಕೇಸರಿಕರಣದಿಂದ ಬ್ರಾಹ್ಮಣ್ಯದ ಬೇರುಗಳು ಇನ್ನಷ್ಟು ಬಲಗೊಳ್ಳುತ್ತಿವೆ. ಪಠ್ಯಕ್ರಮ, ಬೋಧನ ವಿಧಾನಗಳಲ್ಲಿ ಧರ್ಮನಿರಪೇಕ್ಷ ಮೌಲ್ಯಗಳು, ವೈಜ್ಞಾನಿಕ ಮನೋಭಾವಗಳು ಕುಂಟಿತಗೊಳ್ಳುತ್ತಿವೆ ಎಂದು ಹೋರಾಟಗಾರು ತಿಳಿಸಿದರು. ಎನ್‍ಇಪಿ, ನೀಟ್, ಸಿಇಟಿ, ವಿಕಸಿತ ಭಾರತ ಶಿಕ್ಷಣ ಅಧಿಷ್ಠಾನ ಮಸೂದೆ ಮೂಲಕ ಯುಜಿಸಿ ವ್ಯವಸ್ಥೆಯನ್ನು ವಿಲೀನಗೊಳಿಸುವ ಇತ್ತೀಚಿನ ಪ್ರಯತ್ನಗಳೆಲ್ಲವೂ ವಿದ್ಯಾರ್ಥಿಗಳ ಸಾಮಥ್ರ್ಯವನ್ನು ಅವರ ಜಾತಿಯ ಆಧಾರದ ಮೇಲೆ ನಿರ್ಧರಿಸುವ ಚೌಕಟ್ಟನ್ನು ನಿರ್ಮಿಸಿವೆ. ಎಸ್‍ಸಿ, ಎಸ್‍ಟಿ ದೌರ್ಜನ್ಯ ತಡೆ ಕಾಯಿದೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ. ಕಾಂಗ್ರೆಸ್ ಪಕ್ಷ 2024ರ ಚುನಾವಣಾ ಪೂರ್ವದಲ್ಲಿ ಬಿಡುಗಡೆಗೊಳಿಸಿದ ಪ್ರಣಾಳಿಕೆಯಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸುವ ಭರವಸೆ ನೀಡಿತ್ತು ಎಂದು ಅವರು ಮಾಹಿತಿ ನೀಡಿದರು. ರಾಹುಲ್ ಗಾಂಧಿ ಕರೆಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯು ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ತಾರತಮ್ಯವನ್ನು ಎದುರಿಸುತ್ತಿರುವ ಲಕ್ಷಾಂತರ ದಲಿತ, ಆದಿವಾಸಿ ವಿದ್ಯಾರ್ಥಿಗಳು, ಬೋಧಕರು ಮತ್ತು ಸಿಬ್ಬಂದಿಗಳಲ್ಲಿ ಸಮಾನ ಬದುಕಿನ ಹೊಸ ಭರವಸೆಯನ್ನು ಮೂಡಿಸಿತ್ತು. 2026ರ ಜನವರಿಯಲ್ಲಿ ರಾಜ್ಯ ಸರಕಾರ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ರಾಹುಲ್ ಗಾಂಧಿ ಸಾರ್ವಜನಿಕವಾಗಿ ತಿಳಿಸಿದ್ದರು ಹೋರಾಟಗಾರರು ನುಡಿದರು. ಆದರೆ ಇದುವರೆಗೆ ಯಾವುದೇ ಕರಡನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡುಗಡೆ ಮಾಡಿಲ್ಲ ಮತ್ತು ಕಾಯ್ದೆಯನ್ನು ಜಾರಿಮಾಡಲು ವೇಳಾಪಟ್ಟಿ ಘೋಷಿಸಿಲ್ಲ. ಈ ವಿಳಂಬವು ರಾಜ್ಯಾದ್ಯಂತ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ. ಉನ್ನತ ಶಿಕ್ಷಣದಲ್ಲಿನ ರಚನಾತ್ಮಕ ಜಾತಿ ಆಧಾರಿತ ತಾರತಮ್ಯವನ್ನು ಹೋಗಲಾಡಿಸಲು 2026ರ ಯುಜಿಸಿ ಈಕ್ವಿಟಿ ನಿಯಮಗಳು ಸೇರಿದಂತೆ ಅಸ್ತಿತ್ವದಲ್ಲಿರುವ ನಿಯಂತ್ರಣ ಕ್ರಮಗಳು ಸಾಕಾಗುವುದಿಲ್ಲ. ಪ್ರತ್ಯೇಕ ‘ರೋಹಿತ್ ವೇಮುಲ ಕಾಯ್ದೆ’ ತುರ್ತಾಗಿ ಜಾರಿಯಾಗಬೇಕಾಗಿದೆ ಎಂದು ಅವರು ವಿಶ್ಲೇಷಿಸಿದರು. ಆದುದರಿಂದ ಸಿದ್ದರಾಮಯ್ಯ ಮಧ್ಯೆ ಪ್ರವೇಶಿಸಿ ಕೊಟ್ಟ ಮಾತಿನಂತೆ ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸುವಂತೆ ಸೂಚಿಸಬೇಕು ಮತ್ತು ಅದನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಘೋಷಿಸಬೇಕು. ಸಾರ್ವಜನಿಕ ಸಮಾಲೋಚನೆಗಾಗಿ ಕಾಯ್ದೆಯ ಕರಡನ್ನು ಬಿಡುಗಡೆ ಮಾಡಬೇಕು. ವಿಧಾನಸಭೆಯಲ್ಲಿ ಮಂಡಿಸಲು ಮತ್ತು ಅಂಗೀಕರಿಸಲು ಸ್ಪಷ್ಟವಾದ ವೇಳಾಪಟ್ಟಿಯನ್ನು ಘೋಷಿಸಬೇಕು. ರೋಹಿತ್ ವೇಮುಲಾ ಕಾಯ್ದೆಯನ್ನು ಶಾಸನಬದ್ಧವಾಗಿ ಜಾರಿಗೊಳಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ವಾರ್ತಾ ಭಾರತಿ 17 Feb 2026 6:40 pm

ಕುಕನೂರು | ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಎಸ್‌ಡಿಎಂಸಿ ಮನವಿ

ಕುಕನೂರು : ಇಲ್ಲಿನ ವಾರ್ಡ್ ನಂ. 8ರಲ್ಲಿ ಬರುವ ಡಾ. ಅಂಬೇಡ್ಕರ್‌ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಕಾಳಿ ಅವರ ನೇತೃತ್ವದಲ್ಲಿ ಮಂಗಳವಾರ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಬಿ. ನಾಗೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಶಾಲೆಯಲ್ಲಿ ಆಟದ ಮೈದಾನ, ವರ್ಗದ ಕೋಣೆ, ಶೌಚಾಲಯ ಸೇರಿದಂತೆ ಹಲವು ಸೌಲಭ್ಯಗಳ ಕೊರತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್‌ ಸದಸ್ಯ ಬಾಲರಾಜ್ ಗಾಳಿ ಹಾಗೂ ಮುಖಂಡ ಮಹಾಂತೇಶ್ ಹೂಗಾರ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Feb 2026 6:38 pm

ಹೊಸದಾಗಿ ಮ್ಯಾಪಿಂಗ್ ಮಾಡಿ ಮತದಾರರ ಪಟ್ಟಿ ಸಿದ್ಧಪಡಿಸಿ : ಡಿಕೆಶಿ ನೇತೃತ್ವದ ನಿಯೋಗ ಮನವಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು ನ್ಯಾಯಬದ್ಧವಾಗಿ ಮಾಡುವಂತೆ ಇಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ವಿಜಯ ಕರ್ನಾಟಕ 17 Feb 2026 6:38 pm

‘ಒಳಮೀಸಲಾತಿ ಮಸೂದೆಗೆ ಅನುಮೋದನೆ ನೀಡಿ’; ರಾಜ್ಯಪಾಲರಿಗೆ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದ ನಿಯೋಗ ಮನವಿ

ಬೆಂಗಳೂರು : ಒಳ ಮೀಸಲಾತಿ ಮಸೂದೆ ಅಂಗೀಕರಸಿ, ಅನುಮೋದನೆ ನೀಡುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕರು ಹಾಗೂ ಸಮುದಾಯ ಮುಖಂಡರ ನಿಯೋಗವು ಮಂಗಳವಾರ ಲೋಕ ಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ತು ಅಂಗೀಕರಿಸಿದ ಒಳ ಮೀಸಲಾತಿ ಮಸೂದೆಗೆ ನಿಮ್ಮಿಂದ ಆದಷ್ಟು ಬೇಗ ಅನುಮೋದನೆ ನೀಡಬೇಕೆಂದು ನಾವು, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಹಿರಿಯ ನಾಯಕರು ಗೌರವದಿಂದ ವಿನಂತಿಸುತ್ತೇವೆ ಎಂದು ನಿಯೋಗವು ರಾಜ್ಯಪಾಲರಿಗೆ ಕೋರಿತು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಬೆಂಬಲದೊಂದಿಗೆ ಎರಡೂ ಸದನಗಳು ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ತತ್ವಗಳಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ 101 ಒಳ ಸಮುದಾಯಗಳಲ್ಲಿ ಮೀಸಲಾತಿ ಕಲ್ಪಿಸಲು ಈ ಮಸೂದೆ ಸಹಾಯವಾಗಲಿದ್ದು, ಮಸೂದೆಗೆ ಆದಷ್ಟು ಬೇಗ ಒಪ್ಪಿಗೆ ನೀಡಬೇಕೆಂದು ಮನವಿ ಪತ್ರದ ಮುಖೇನ ನಿಯೋಗವು ರಾಜ್ಯಪಾಲರಿಗೆ ವಿನಂತಿಸಿತು.

ವಾರ್ತಾ ಭಾರತಿ 17 Feb 2026 6:36 pm

Kalaburagi | ಶಾಲೆಯ ಆವರಣದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬಾಸ್ಕೋ ಶಾಲೆ ಆವರಣದ ಬಾವಿಯಲ್ಲಿ ಬಿದ್ದು 9ನೇ ತರಗತಿ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಬೆಳಕಿಗೆ ಬಂದಿದೆ. ಚಿಂಚೋಳಿ ತಾಲೂಕಿನ ಸಾಸರಗಾಂವ್ ಮೂಲದ ಗುರು ನಾಗಪ್ಪ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಶಾಲೆಯಿಂದ ನಾಪತ್ತೆಯಾಗಿದ್ದ ಆತ, ಮಂಗಳವಾರ ಶಾಲಾ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಕುರಿತು ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಎರಡು ದಿನಗಳ ಹಿಂದೆ ವಿದ್ಯಾರ್ಥಿ ಶಾಲೆಯ ಬೈಕ್ ತೆಗೆದುಕೊಂಡು ಹೋಗಿ ಗೋಡೆಗೆ ಢಿಕ್ಕಿ ಹೊಡೆದಿದ್ದಾನೆ ಎಂಬ ಮಾಹಿತಿ ಇದೆ. ಢಿಕ್ಕಿಯಿಂದ ಬೈಕ್ ಹಾನಿಗೊಳಗಾಗಿದ್ದು, ದುರಸ್ತಿ ವೆಚ್ಚ ಭರಿಸುವಂತೆ ಒತ್ತಾಯ ಮಾಡಲಾಗಿತ್ತು ಎನ್ನಲಾಗಿದೆ. ಈ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ ಎಂದರು. ಈ ಕುರಿತು ಮೃತನ ಪಾಲಕರು ನೀಡಿದ ದೂರಿನ ಬಳಿಕ ಸೂಕ್ತ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

ವಾರ್ತಾ ಭಾರತಿ 17 Feb 2026 6:35 pm

ಡಾ.ಎಚ್.ಸಿ.ಮಹದೇವಪ್ಪ ಇದೀಗ ನಮ್ಮ ಹೈಕಮಾಂಡ್‍ನ ಭಾಗ : ಡಿ.ಕೆ.ಶಿವಕುಮಾರ್

‘ನನ್ನ ಮತ್ತು ಸಿಎಂ ನಡುವೆ ಗುಟ್ಟಿನ ವ್ಯವಹಾರ ನಡೆದಿಲ್ಲ’

ವಾರ್ತಾ ಭಾರತಿ 17 Feb 2026 6:31 pm

ಸರಕಾರದಿಂದಲೇ ಭೂ ಕಬಳಿಕೆ : ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು : ರಾಜ್ಯ ಸರಕಾರವು ಬಡವರಿಗೆ ಮನೆ, ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮಂಗಳವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರವೇ ಭೂ ಕಬಳಿಕೆಯಲ್ಲಿ ನಿರತವಾಗಿದೆ. ಜಿಲ್ಲೆ, ತಾಲೂಕು, ಮಂಡಲ, ಪಂಚಾಯಿತಿ ಸೇರಿದಂತೆ ಎಲ್ಲ ಕಡೆ ಪಕ್ಷದ ಕಚೇರಿಗೆ ನಿವೇಶನ ಪಡೆಯಲು ಅಧಿಕಾರ ಇಲ್ಲ. ಕಾನೂನು ಉಲ್ಲಂಘಿಸಿ ಅದು ಪಕ್ಷದ ಕಚೇರಿ ನಿರ್ಮಾಣಕ್ಕೆ ಲೀಸ್‍ಗೆ ನಿವೇಶನ ಪಡೆಯಲು ಮುಂದಾಗಿದೆ ಎಂದು ದೂರಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಕ್ಷದ ಕಚೇರಿಗೆ ಪಡೆದುಕೊಂಡಿರುವ ಎಲ್ಲ ನಿವೇಶನಗಳನ್ನು ಸರಕಾರ ವಾಪಸ್ ಪಡೆಯಬೇಕು. ಸಿಎಂ ಭೂಕಬಳಿಕೆ ಮಾಡಿ ಮುಡಾದಲ್ಲಿ ಸಿಕ್ಕಿ ಬಿದ್ದಿದ್ದರು. ಅವರು ಜೈಲಿಗೆ ಹೋಗುವುದು ಗ್ಯಾರಂಟಿ ಆದಾಗ ನಿವೇಶನಗಳನ್ನು ವಾಪಸ್ ಕೊಟ್ಟಿದ್ದರು. ಈ ಭೂಕಬಳಿಕೆಯಿಂದ ನೀವು ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಅವರು ಎಚ್ಚರಿಸಿದರು. ಸರಕಾರದ ದ್ರೋಹ : ಎಸ್‍ಸಿಪಿ, ಟಿಎಸ್‍ಪಿ ವಿಚಾರದಲ್ಲಿ ನಮ್ಮ ಹೋರಾಟ ನಡೆದಿದೆ. ಕಾಯ್ದೆ ತಂದಿದ್ದು ಸಿದ್ದರಾಮಯ್ಯನವರೇ. ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದೆಂದು ಕಾಯ್ದೆ ತಂದಿದ್ದರು. ಮೂರು ವರ್ಷಗಳಲ್ಲಿ 39ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆಬಳಸಿದ್ದಾರೆ. ಇದು ಎಸ್‍ಸಿ-ಎಸ್‍ಟಿ ವರ್ಗದವರಿಗೆ ಕಾಂಗ್ರೆಸ್ ಸರಕಾರ ದ್ರೋಹ ಮಾಡಿದೆ ಎಂದು ಟೀಕಿಸಿದರು.

ವಾರ್ತಾ ಭಾರತಿ 17 Feb 2026 6:26 pm