SENSEX
NIFTY
GOLD
USD/INR

Weather

18    C
... ...View News by News Source

ಬಳ್ಳಾರಿ | ಮಹನೀಯರ ಜಯಂತಿಯನ್ನು ಅರ್ಥಪೂರ್ಣ ಆಚರಣೆಗೆ ನಿರ್ಧಾರ : ಮುಹಮ್ಮದ್ ಝುಬೇರ್ ಎನ್.

ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಝುಬೇರ್ ಎನ್. ಅವರು ತಿಳಿಸಿದರು. ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜ.19 ರಂದು ಮಹಾಯೋಗಿ ವೇಮನ ಜಯಂತಿ, ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ಹಾಗೂ ಜ.25 ರಂದು ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು. ಶಿವಶರಣರು ಅಥವಾ ದಾರ್ಶನಿಕರು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಅವರ ಜೀವನ ಹಾಗೂ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ. ಸರ್ಕಾರದ ಆದೇಶದಂತೆ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ ಅಥವಾ ಫಲಬುಟ್ಟಿ ನೀಡುವಂತಿಲ್ಲ, ಕೇವಲ ಪುಸ್ತಕ ನೀಡಲು ಮಾತ್ರ ಅವಕಾಶವಿದೆ, ಎಂದು ಎಡಿಸಿ ಸ್ಪಷ್ಟಪಡಿಸಿದರು. ಕಟ್ಟುನಿಟ್ಟಿನ ಸೂಚನೆಗಳು: ಬ್ಯಾನರ್ ಮತ್ತು ಡಿಜೆ: ಬ್ಯಾನರ್ ಅಳವಡಿಕೆಗೆ ಮಹಾನಗರ ಪಾಲಿಕೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮೆರವಣಿಗೆಯಲ್ಲಿ ಡಿಜೆ ಅಥವಾ ಹೆಚ್ಚಿನ ಶಬ್ದದ ಧ್ವನಿವರ್ಧಕಗಳ ಬಳಕೆಗೆ ಅವಕಾಶವಿಲ್ಲ. ಮೆರವಣಿಗೆ: ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು. ಉಪನ್ಯಾಸ: ಮಹನೀಯರ ಬದುಕಿನ ಕುರಿತು ಪರಿಣಿತರಿಂದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಬೇಕು. ಸೌಕರ್ಯ: ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆ ಕಾಪಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಡಿಡಿಪಿಯು ಮತ್ತು ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Jan 2026 11:23 pm

ಸಿರುಗುಪ್ಪ | ಜಾನಪದ ಸಾಹಿತ್ಯ ಜೀವನ ಮೌಲ್ಯಗಳ ಅಕ್ಷಯ ಪಾತ್ರೆ : ಸಿ.ಬಿ.ಚಿಲ್ಕರಾಗಿ

ಸಿರುಗುಪ್ಪ: ಜನಪದ ಸಾಹಿತ್ಯವು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಾಂಸ್ಕೃತಿಕ ಸಂರಕ್ಷಣೆ ಮತ್ತು ನೈತಿಕ ಶಿಕ್ಷಣದ ಪ್ರಬಲ ಮಾಧ್ಯಮವಾಗಿದೆ. ಆಧುನಿಕ ಜಗತ್ತಿನ ಜಂಜಾಟಗಳ ನಡುವೆ ಜನಪದ ಸಾಹಿತ್ಯವು ಮಾನವನಿಗೆ ಸಾತ್ವಿಕ ಪ್ರೇರಣೆ ನೀಡುತ್ತಿದೆ ಎಂದು ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿ.ಬಿ. ಚಿಲ್ಕರಾಗಿ ಹೇಳಿದರು. ತಾಲ್ಲೂಕಿನ ಸಿರಿಗೇರಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಸಂಯುಕ್ತ ಕಾಲೇಜಿನಲ್ಲಿ ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ‘ಜಾನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು’ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಉಪನ್ಯಾಸ ನೀಡಿದ ಉಪನ್ಯಾಸಕ ಚಾಂದ್ ಬಾಷಾ ಅವರು, ಜಾನಪದ ಸಾಹಿತ್ಯವು ಸತ್ಯ, ಸಹನೆ, ವಿನಯ ಹಾಗೂ ಕುಟುಂಬ ಮೌಲ್ಯಗಳ ಅಕ್ಷಯ ಪಾತ್ರೆಯಾಗಿದೆ. ತಾಯಿ-ತವರು ಪ್ರೀತಿ ಮತ್ತು ಮಾನವೀಯತೆಯನ್ನು ಮೌಖಿಕ ಪರಂಪರೆಯ ಮೂಲಕ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತಾ ಬಂದಿರುವ ಈ ಸಾಹಿತ್ಯವು ಇಂದಿಗೂ ಬದುಕಿನ ದಾರಿದೀಪವಾಗಿದೆ ಎಂದರು. ಜನಪದ ಸಾಹಿತ್ಯವು ಗಾದೆಗಳು, ಒಗಟುಗಳು, ಲಾಾವಣಿಗಳು ಹಾಗೂ ಬಯಲಾಟದಂತಹ ವಿಶಿಷ್ಟ ಪ್ರಕಾರಗಳ ಮೂಲಕ ಜೀವನದ ಕಠಿಣ ಪಾಠಗಳನ್ನು ಅತ್ಯಂತ ಸರಳವಾಗಿ ಸಾಮಾನ್ಯರಿಗೂ ಅರ್ಥವಾಗುವಂತೆ ತಿಳಿಸಿಕೊಡುತ್ತದೆ ಎಂದು ಅವರು ವಿವರಿಸಿದರು. ಬಳ್ಳಾರಿಯ ಚಕೋರ ಸಾಹಿತ್ಯ ವೇದಿಕೆಯ ಜಿಲ್ಲಾ ಸಂಚಾಲಕ ತಿಪ್ಪೇರುದ್ರ ಸಂಡೂರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಿವೃತ್ತ ವೈದ್ಯಾಧಿಕಾರಿ ಡಾ.ಟಿ.ಮೃತ್ಯುಂಜಯ ಸ್ವಾಮಿ ಅವರು ವಿಷಯದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಕವಿ ಅಬ್ದುಲ್ ಹೈ ತೋರಣಗಲ್ಲು, ಉಪನ್ಯಾಸಕರಾದ ಬಕಾಡೆ ಪಂಪಾಪತಿ, ನೆನೆಕ್ಕಿ ಹೊನ್ನೂರ ಸ್ವಾಮಿ, ಪ್ರಾಚಾರ್ಯ ಎಚ್. ಜಿ. ವಿಶ್ವನಾಥ ಗೌಡ, ನಿವೃತ್ತ ಮುಖ್ಯ ಶಿಕ್ಷಕ ಜೆ. ರಾಣಿಪ್ಪ, ಬಸವರಾಜ್, ನಿತಿನ್, ಈರಣ್ಣ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Jan 2026 11:18 pm

ಇನ್ನೊಂದು ತೈಲ ಟ್ಯಾಂಕರನ್ನು ವಶಪಡಿಸಿಕೊಂಡ ಅಮೆರಿಕ

ವಾಶಿಂಗ್ಟನ್, ಜ. 9: ವೆನೆಝುವೆಲಾ ವಿರುದ್ಧ ತನ್ನ ಒತ್ತಡ ಅಭಿಯಾನವನ್ನು ಅಮೆರಿಕ ಮುಂದುವರಿಸಿದ್ದು, ಕೆರಿಬಿಯನ್‌ ನಲ್ಲಿ ಇನ್ನೊಂದು ತೈಲ ಟ್ಯಾಂಕರನ್ನು ವಶಪಡಿಸಿಕೊಂಡಿದೆ. ತನ್ನ ಪಡೆಗಳು ಯಾವುದೇ ಪ್ರತಿರೋಧವಿಲ್ಲದೆ ‘ಒಲೀನಾ’ ಟ್ಯಾಂಕರನ್ನು ವಶಪಡಿಸಿಕೊಂಡಿವೆ ಎಂದು ಶುಕ್ರವಾರ ನೀಡಿದ ಹೇಳಿಕೆಯಲ್ಲಿ ಅಮೆರಿಕ ಸೇನೆಯ ದಕ್ಷಿಣ ಕಮಾಂಡ್ ತಿಳಿಸಿದೆ. ಆದರೆ, ತೈಲ ಟ್ಯಾಂಕರನ್ನು ಯಾಕೆ ವಶಪಡಿಸಿಕೊಳ್ಳಲಾಗಿದೆ ಎಂಬುದನ್ನು ಅದು ತಿಳಿಸಿಲ್ಲ. ಅಲ್ಲದೆ, ಟ್ಯಾಂಕರ್ ಎಸಗಿರುವ ಉಲ್ಲಂಘನೆಗಳ ವಿವರಗಳನ್ನೂ ನೀಡಿಲ್ಲ. ಹಿಂದೆ, ರಷ್ಯಾದ ತೈಲವನ್ನು ಸಾಗಿಸುತ್ತಿದ್ದ ಕಾರಣ ಈ ಟ್ಯಾಂಕರ್‌ಗೆ ಅಮೆರಿಕ ನಿಷೇಧ ವಿಧಿಸಿತ್ತು ಎಂದು ‘ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ. ರಷ್ಯಾ ಧ್ವಜ ಹೊಂದಿರುವ ‘ಮರಿನೇರ’ ತೈಲ ಟ್ಯಾಂಕರ್ ಸೇರಿದಂತೆ ಎರಡು ತೈಲ ಟ್ಯಾಂಕರ್‌ಗಳನ್ನು ಅಮೆರಿಕ ಪಡೆಗಳು ವಶಪಡಿಸಿಕೊಂಡ ಎರಡು ದಿನಗಳ ಬಳಿಕ ಈ ಕಾರ್ಯಾಚರಣೆ ನಡೆದಿದೆ. ವೆನೆಝುವೆಲಾ ಅಧ್ಯಕ್ಷ ನಿಕೊಲಸ್ ಮಡುರೊ ಅವರ ಅಪಹರಣದ ಬಳಿಕ, ನಿಷೇಧಿತ ತೈಲ ಟ್ಯಾಂಕರ್‌ಗಳ ಮೇಲಿನ ನಿರ್ಬಂಧವನ್ನು ಜಾರಿಗೊಳಿಸಲು ಅಮೆರಿಕ ಪಣತೊಟ್ಟಿದೆ.

ವಾರ್ತಾ ಭಾರತಿ 9 Jan 2026 11:11 pm

ವಿಜಯನಗರ | ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ : ಓರ್ವ ಮೃತ್ಯು

ವಿಜಯನಗರ (ಹೊಸಪೇಟೆ) : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆಯ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ನಡೆದಿದೆ. ಮೃತರನ್ನು ಹೊಸಪೇಟೆಯ ಎಂಪಿ ಪ್ರಕಾಶ ನಗರದ ನಿವಾಸಿ ಮಂಜುನಾಥ( 36) ಎಂದು ಗುರುತಿಸಲಾಗಿದೆ. ಕಾರು ಚಾಲಕ ರವಿ ಗಾಯಗೊಂಡಿದ್ದು, ಪ್ರಾಣ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ರೈಲ್ವೆ ಸ್ಟೇಷನ್ ಬಳಿ ಹೋಟೆಲ್ ನಲ್ಲಿ ಊಟ ಮುಗಿಸಿಕೊಂಡು ಮನೆಗೆ ಹೋಗುವಾಗ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ವಾರ್ತಾ ಭಾರತಿ 9 Jan 2026 11:11 pm

Himachal Pradesh | 500 ಅಡಿ ಆಳದ ಕಣಿವೆಗೆ ಉರುಳಿ ಬಿದ್ದ ಖಾಸಗಿ ಬಸ್: 12 ಮಂದಿ ಮೃತ್ಯು; 35 ಮಂದಿಗೆ ಗಾಯ

ಹೊಸದಿಲ್ಲಿ: ಶುಕ್ರವಾರ ಖಾಸಗಿ ಬಸ್‌ವೊಂದು ಕಣಿವೆಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ 500 ಅಡಿ ಆಳದ ಪ್ರಪಾತಕ್ಕೆ ಉರುಳಿದ ಪರಿಣಾಮ, 12 ಮಂದಿ ಮೃತಪಟ್ಟಿದ್ದು, ಕನಿಷ್ಠ 35 ಮಂದಿಗೆ ಗಾಯಗಳಾಗಿವೆ. ಈ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಗಢ ಮಾರ್ಗವಾಗಿ ಶಿಮ್ಲಾದಿಂದ ಕುಪ್ವಿಗೆ ತೆರಳುತ್ತಿದ್ದ ಬಸ್, ನಹಾನ್‌ ನಿಂದ ಸುಮಾರು 95 ಕಿಮೀ ದೂರದಲ್ಲಿರುವ ಹರಿಪುರ್ಧರ್ ಗ್ರಾಮದ ಬಳಿ ನಿಯಂತ್ರಣ ಕಳೆದುಕೊಂಡು ಪ್ರಪಾತಕ್ಕೆ ಪಲ್ಟಿಯಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವುದರಿಂದ, ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್‌ ನ ಒಟ್ಟಾರೆ ಆಸನ ಸಾಮರ್ಥ್ಯ 39 ಮಾತ್ರವಿದ್ದರೂ, ಆಸನ ಸಾಮರ್ಥ್ಯ ಮೀರಿ ಪ್ರಯಾಣಿಕರು ಇದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ತುರ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸುವುದಕ್ಕೂ ಮುನ್ನ, ಸ್ಥಳೀಯ ನಿವಾಸಿಗಳು ಹಾಗೂ ದಾರಿಹೋಕರು ಗಾಯಗೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಲು ನೆರವು ನೀಡುತ್ತಿರುವ ದೃಶ್ಯಾವಳಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಿರ್ಮೌರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶ್ಚಿಂತ್ ಸಿಂಗ್ ನೇಗಿ, “ಬಸ್ ಅಪಘಾತದಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ. ಅಪಘಾತದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. “ಅಪಘಾತದ ಸುದ್ದಿ ನನ್ನನ್ನು ತೀವ್ರವಾಗಿ ದುಃಖ ತಂದಿದೆ. ಅಪಘಾತದಲ್ಲಿ ತಮ್ಮ ಜೀವ ಕಳೆದುಕೊಂಡವರಿಗೆ ನನ್ನ  ಸಂತಾಪಗಳು. ದುಃಖಿತ ಕುಟುಂಬಗಳಿಗೆ ನನ್ನ ಸಂಪೂರ್ಣ ಸಹಾನುಭೂತಿ” ಎಂದು ಅವರು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಪಘಾತದ ಕುರಿತು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಕೂಡ ಸಂತಾಪ ವ್ಯಕ್ತಪಡಿಸಿದ್ದು, “ಈ ಅಪಘಾತ ತೀವ್ರ ಆಘಾತ ತಂದಿದೆ” ಎಂದು ಹೇಳಿದ್ದಾರೆ.

ವಾರ್ತಾ ಭಾರತಿ 9 Jan 2026 10:56 pm

ಬಳ್ಳಾರಿ ಬ್ಯಾನರ್ ಗಲಾಟೆ: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು

ಬೆಂಗಳೂರು : ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ಬ್ರೂಸ್‌ಪೇಟೆ ಠಾಣೆಯಲ್ಲಿ ಒಟ್ಟು 6 ಪ್ರಕರಣ ದಾಖಲಾಗಿವೆ. ಗನ್‌ಮ್ಯಾನ್‌ಗಳಾದ ಗುರುಚರಣ್‌ ಸಿಂಗ್‌, ಬಲ್ಜಿತ್ ಸಿಂಗ್‌ ಹಾಗೂ ಮಹೇಂದ್ರ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು. ಜ.5ರಂದು ಪ್ರಮುಖ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದೇಶ ಬೆನ್ನಲ್ಲೇ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್​​​ ಸಿಂಗ್​​ಗೆ ಸಂಬಂಧಿಸಿದ ಗನ್‌ನಿಂದಲೇ 12 ಎಂಎಂ ಬುಲೆಟ್ ಫೈರ್ ಮಾಡಿದ್ದಾನೆ. ಹೀಗಾಗಿ ಗುರುಚರಣ್​​ ಸಿಂಗ್ ಹೊರತು ಪಡಿಸಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ವಾರ್ತಾ ಭಾರತಿ 9 Jan 2026 10:53 pm

ಬೆಂಜಮಿನ್‌ ನೆತನ್ಯಾಹು ಅಪಹರಣಕ್ಕೆ ಪಾಕಿಸ್ತಾನ ಒತ್ತಾಯ; ಡೊನಾಲ್ಡ್ ಟ್ರಂಪ್‌ ಕಿಡ್ನ್ಯಾಪರ್‌ ಎಂದು ಮಿಸ್ಟೇಕ್‌ ಮಾಡಿಕೊಂಡ ಮೂರ್ಖರು!

ಮುಗ್ಧತೆ ಮತ್ತು ಮೂರ್ಖತನದ ನಡುವೆ ಒಂದು ತೆಳುವಾದ ವ್ಯತ್ಯಾಸವಿದೆ. ನೆರೆ ರಾಷ್ಟ್ರ ಪಾಕಿಸ್ತಾನವನ್ನು ಆಳುತ್ತಿರುವವರು ತಮ್ಮನ್ನು ತಾವು ಮುಗ್ಧರು ಎಂದು ಕರೆದುಕೊಂಡರೂ, ಅವರ ಮೂರ್ಖತನದ ಪರಿಚಯ ಮಾತ್ರ ಇಡೀ ಜಗತ್ತಿಗೆ ಇದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌ ಮರುಡೊ ಅವರನ್ನು ಅಪಹರಿಸಿದ್ದೇ ತಡ, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರನ್ನೂ ಕಿಡ್ಯ್ನಾಪ್‌ ಮಾಡುವಂತೆ ಪಾಕಿಸ್ತಾನ ಮನವಿ ಮಾಡಿದೆ. ಪಾಕ್‌ ರಕ್ಷಣಾ ಸಚಿವರ ಹೇಳಿಕೆ ನಗೆಪಾಟಲಿಗೆ ಗುರಿಯಾಗಿದೆ.

ವಿಜಯ ಕರ್ನಾಟಕ 9 Jan 2026 10:53 pm

I-PAC ಮೇಲೆ ED ದಾಳಿ ಖಂಡಿಸಿ ಮಮತಾ ಬೀದಿಗಿಳಿದು ಪ್ರತಿಭಟನೆ

ಕೋಲ್ಕತಾ, ಜ.9: ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿ ಹಾಗೂ ಅದರ ನಿರ್ದೇಶಕ ಪ್ರತೀಕ್ ಜೈನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧವನ್ನು ಖಂಡಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಶುಕ್ರವಾರ ಕೋಲ್ಕತಾದಲ್ಲಿ ನಡೆದ ಪ್ರತಿಭಟನಾ ರ‍್ಯಾಲಿಗೆ ನೇತೃತ್ವ ವಹಿಸಿದರು. ನಗರದ ವಿವಿಧ ಭಾಗಗಳಲ್ಲಿ ನಡೆದ ರ‍್ಯಾಲಿಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಂಡು, ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. I-PAC ಕಚೇರಿ ಹಾಗೂ ಪ್ರತೀಕ್ ಜೈನ್ ನಿವಾಸದ ಮೇಲೆ ನಡೆದ ದಾಳಿಯು ಪಕ್ಷದ ದತ್ತಾಂಶ ಮತ್ತು ಚುನಾವಣಾ ಕಾರ್ಯತಂತ್ರವನ್ನು ಗುರಿಯಾಗಿಟ್ಟುಕೊಂಡ ಕ್ರಮವಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ED ಕ್ರಮದ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ತಮ್ಮ ಕೆಲವು ನಾಯಕರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸಿದ್ದಾರೆ ಎಂದೂ ಪಕ್ಷವು ದೂರಿದೆ. ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಕ್ರಮವನ್ನು ಖಂಡಿಸಿ ಪಶ್ಚಿಮ ಬಂಗಾಳದಾದ್ಯಂತ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಪಕ್ಷವು ತಿಳಿಸಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ 2020ರ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ I-PAC ಸಂಬಂಧಿತ ತನಿಖೆ ನಡೆಯುತ್ತಿದೆ ಎಂದು ED ಈ ಮೊದಲು ಹೇಳಿಕೆ ನೀಡಿತ್ತು. I-PAC ತನ್ನ ವೆಬ್‌ಸೈಟ್‌ನಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಪಶ್ಚಿಮ ಬಂಗಾಳ ಸರ್ಕಾರವನ್ನು ತನ್ನ ಗ್ರಾಹಕರಾಗಿ ಉಲ್ಲೇಖಿಸಿದೆ. ಗೋವಾ ಚುನಾವಣೆಗೆ ಸಂಪರ್ಕ? ಕಲ್ಲಿದ್ದಲು ಕಳ್ಳಸಾಗಣೆ ಜಾಲದ ಕುರಿತು ED ನಡೆಸುತ್ತಿರುವ ತನಿಖೆಯಲ್ಲಿ, 2021–22ರ ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಪರಾಧ ಆದಾಯ ಬಳಕೆಯಾಗಿದೆ ಎಂಬ ಶಂಕೆಯನ್ನೂ ಪರಿಶೀಲಿಸಲಾಗುತ್ತಿದೆ ಎಂದು ತನಿಖಾ ಮೂಲಗಳು ತಿಳಿಸಿವೆ. ಕಳ್ಳಸಾಗಣೆಯಿಂದ ಗಳಿಸಲಾದ ಹಣವನ್ನು ಹವಾಲಾ ಮಾರ್ಗಗಳ ಮೂಲಕ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ತನಿಖೆಯ ಭಾಗವಾಗಿವೆ. ಗೋವಾ ಚುನಾವಣಾ ಅವಧಿಯಲ್ಲಿ I-PAC ಜೊತೆ ಕಾರ್ಯನಿರ್ವಹಿಸಿದ್ದ ಕೆಲವು ಸಂಸ್ಥೆಗಳ ಪಾತ್ರದ ಕುರಿತಾಗಿಯೂ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 10:50 pm

ಸೌಹಾರ್ದ ಸಮಾಜಕ್ಕಾಗಿ ಬದುಕಿದ ವಿನಯ ಹೆಗ್ಡೆ ಎಲ್ಲರಿಗೂ ಆದರ್ಶ: ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಸೌಹಾರ್ದ ಸಮಾಜಕ್ಕಾಗಿ ಬದುಕಿದ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯು ತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀ‌ರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ಅಗಲಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆಯವರಿಗೆ ಸಲ್ಲಿಸಿದ ಶ್ರದ್ದಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿನಯ ಹೆಗ್ಡೆ ಬಂಟ ಸಮಾಜಕ್ಕೆ ಮಾತ್ರವಲ್ಲ ಸಮಸ್ತ ಸಮಾಜಕ್ಕೆ ಮಹತ್ವನೀಡಿ,ಬಹುತೇಕ ರಿಗೆ ಉದ್ಯೋಗ ನೀಡಿ ಬದುಕು ನೀಡಿದವರು. ಸಮಾಜದ ಎಲ್ಲಾ ಜನರೊಂದಿಗೆ ಸೌಹಾರ್ದ ಪಪರಂಪರೆಯನ್ನು ಉಳಿಸಿಕೊಂಡು ಬಂದ ಅಪರೂಪದ ವ್ಯಕ್ತಿ. ಹೆಸರಿಗೆ ತಕ್ಕಂತೆ ವಿನಯ ವಂತ ಸಹೃದ ಯದ ವ್ಯಕ್ತಿ ಯಾಗಿ ದ್ದರು. ವಿನಯ ಹೆಗ್ಡೆಯವರ ಜೀವನ ಶೈಲಿ ನಮಗೆಲ್ಲರಿಗೂ ಮಾದರಿ. ಅವರಂತೆ ಇನ್ನೋರ್ವ ಬಂಟ ಇಲ್ಲ. ವಿನಯ ಹೆಗ್ಡೆಯವರ ನೆನಪು ನಮ್ಮ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ. ಅವರು ನಡೆದ ಹಾದಿಯಲ್ಲಿ ನಾವು ಮುನ್ನಡೆಯೋಣ ಎಂದರು. ಕರ್ನಲ್ ಶರಶ್ಚಂದ್ರ ಭಂಡಾರಿ ಮಾತನಾಡಿ ವಿನಯ ಹೆಗ್ಡೆಯವರ ಆದರ್ಶ ಜೀವನ ಒಳ್ಳೆಯ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸೋಣ. ಮಂಗಳೂರು ನಗರದಲ್ಲಿ ವಿನಯ ಹೆಗ್ಡೆಯವರ ಮೂರ್ತಿಯನ್ನು ಪ್ರತಿಷ್ಢಾಪಿಸಿ ಅವರ ಹೆಸರನ್ನು ರಸ್ತೆ ಮತ್ತು ಸರ್ಕಲ್ ಗೆ ಇಡೋಣ ಎಂದರು. ವಿದ್ಯಾಧರ ಶೆಟ್ಟಿ ಕೊಲ್ನಾಡ್ ಗುತ್ತು ಮಾತನಾಡಿ ವಿನಯ ಹೆಗ್ಡೆಯವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಅವರ ಸರಳ ಬದುಕಿನಲ್ಲಿ ಕೆಲಸದ ಬಗ್ಗೆ ಬದ್ದತೆಯನ್ನು ಕಾಣಬಹುದಿತ್ತು. ಬಂಟ ಸಮಾಜದಲ್ಲಿ ಅವರ ಜೀವನ ವ್ಯರ್ಥ ಆಗಲಿಲ್ಲ ಎಂದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಡಾ ಆಶಾ ಜ್ಯೋತಿ ರೈ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿದರು. ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನಿಟ್ಟೆ ಗುತ್ತು ರವಿರಾಜ ಶೆಟ್ಟಿ, ಶೆಡ್ಡೆ ಮಂಜುನಾಥ ಭಂಡಾರಿ, ಉಮೇಶ್ ರೈ ಪದವು ಮೇಗಿನ ಮನೆ, ಕೃಷ್ಣಪ್ರಸಾದ್ ರೈ, ಜಯರಾಮ ಸಾಂತಾ ಮೊದಲಾದವರು ಉಪಸ್ಥಿತರಿದ್ದರು.‌ ಕೆ ಪುರುಷೋತ್ತಮ‌ ಭಂಡಾರಿ ಅಡ್ಯಾರ್ ಕಾರ್ಯ ಕ್ರಮ‌ ನಿರ್ವಹಿಸಿದರು. ಕಾವು ಹೇಮನಾಥ ಶೆಟ್ಟಿ ವಂದಿಸಿದರು.

ವಾರ್ತಾ ಭಾರತಿ 9 Jan 2026 10:46 pm

ವೆನೆಝುವೆಲ ಅಧ್ಯಕ್ಷೆ ಭಾರೀ ಬೆಲೆ ತೆರಬೇಕಾಗಬಹುದು: ಟ್ರಂಪ್ ಬೆದರಿಕೆ

ಅಮೆರಿಕವು ವೆನೆಝುವೆಲವನ್ನು ಆಳುವುದು ಮತ್ತು ಅಲ್ಲಿನ ಬೃಹತ್ ತೈಲ ನಿಕ್ಷೇಪಗಳನ್ನು ಬಳಸುವುದು ಎಂದು ಮಡುರೊ ಅಪಹರಣದ ಬಳಿಕ ಟ್ರಂಪ್ ಹೇಳಿದ್ದರು. ಆದರೆ, ವೆನೆಝುವೆಲದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೋಡ್ರಿಗ್ಸ್‌ಗೆ ಸಹಕಾರ ನೀಡಲಾಗುವುದು ಎಂದು ಅಮೆರಿಕ ಸರಕಾರ ಬಳಿಕ ಹೇಳಿತು. ಆದರೂ, ಮಧ್ಯಂತರ ಸರಕಾರದ ನೀತಿಯನ್ನು ತಾನು ರೂಪಿಸುವುದಾಗಿ ಟ್ರಂಪ್ ಆಡಳಿತ ಹೇಳಿದೆ ಹಾಗೂ ಅಮೆರಿಕದ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಎರಡನೇ ಹಂತದ ಸೇನಾ ಕಾರ್ಯಾಚರಣೆಗಳನ್ನು ನಡೆಸುವ ಬೆದರಿಕೆಯನ್ನು ಅದು ಪದೇ ಪದೇ ಒಡ್ಡಿದೆ. ‘‘ಸರಿಯಾದುದನ್ನು ಅವರು (ವೆನೆಝುವೆಲದ ಮಧ್ಯಂತರ ಅಧ್ಯಕ್ಷೆ) ಮಾಡದಿದ್ದರೆ, ಅವರು ಭಾರೀ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ. ಬಹುಷಃ ಅದು ಮಡೊರೊ ತೆತ್ತ ಬೆಲೆಗಿಂತಲು ಹೆಚ್ಚಾಗಬಹುದು’’ ಎಂದು ‘ದ ಅಟ್ಲಾಂಟಿಕ್’ನ ರವಿವಾರದ ಸಂಚಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ಟ್ರಂಪ್ ಹೇಳಿದ್ದಾರೆ.

ವಾರ್ತಾ ಭಾರತಿ 9 Jan 2026 10:42 pm

ಯಾದಗಿರಿ | ವೆನೆಜುವೆಲಾ ಮೇಲೆ ಅಮೆರಿಕ ದಾಳಿ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಯಾದಗಿರಿ : ಅಮೆರಿಕನ್ ಸಾಮ್ರಾಜ್ಯಶಾಹಿಗಳು ವೆನೆಜುವೆಲಾ ದೇಶದ ಮೇಲೆ ನಡೆಸಿರುವ ಮಿಲಿಟರಿ ದಾಳಿಯನ್ನು ಖಂಡಿಸಿ, ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಂಘಟನಾ ಸಮಿತಿಯು ಇಂದು ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಪಕ್ಷದ ಕೇಂದ್ರ ಸಮಿತಿಯು ಜ.6 ರಿಂದ 12 ರವರೆಗೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಈ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ವಿಸ್ತೃತ ಸಮಿತಿ ಸದಸ್ಯ ಕಾ.ಕೆ.ಸೋಮಶೇಖರ್ ಅವರು, ಈ ದಾಳಿಯು ಕೇವಲ ವೆನೆಜುವೆಲಾದ ಮೇಲಷ್ಟೇ ಅಲ್ಲ, ಇಡೀ ಲ್ಯಾಟಿನ್ ಅಮೆರಿಕದ ಸಾರ್ವಭೌಮತ್ವದ ಮೇಲೆ ನಡೆದ ದಾಳಿಯಾಗಿದೆ. ವಿಶ್ವದ ಅತಿ ಹೆಚ್ಚು ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ಮೇಲೆ ತನ್ನ ಅಧಿಪತ್ಯ ಸ್ಥಾಪಿಸಲು ಅಮೆರಿಕ ಮಿಲಿಟರಿ ಬಲವನ್ನು ಬಳಸುತ್ತಿದೆ. ಸಂವಿಧಾನಿಕವಾಗಿ ಆಯ್ಕೆಯಾದ ನಾಯಕರನ್ನು ಕಡೆಗಣಿಸಿ, ತನ್ನ ಕೈಗೊಂಬೆ ಸರ್ಕಾರವನ್ನು ಸ್ಥಾಪಿಸಲು ಹೊರಟಿರುವುದು ಅಂತರಾಷ್ಟ್ರೀಯ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಗತ್ತಿನಾದ್ಯಂತ ಜನರು ಅಮೆರಿಕದ ಈ ಕ್ರೂರ ನಡೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಭಾರತ ಸರ್ಕಾರವು ಅಮೆರಿಕದ ವಿರುದ್ಧ ಕಠಿಣ ನಿಲುವು ತಳೆಯದೆ ಮೃದು ಧೋರಣೆ ಪ್ರದರ್ಶಿಸುತ್ತಿದೆ. ಇದು ಭಾರತದ ಸಾಮ್ರಾಜ್ಯಶಾಹಿ ವಿರೋಧಿ ಪರಂಪರೆಗೆ ವಿರುದ್ಧವಾದುದು ಎಂದು ಸೋಮಶೇಖರ್ ಟೀಕಿಸಿದರು. ಜಿಲ್ಲಾ ಕಾರ್ಯದರ್ಶಿ ಕಾ.ಶರಣಗೌಡ ಗೂಗಲ್ ಮಾತನಾಡಿ, ಈ ಅಪರಾಧ ಸದೃಶ ದಾಳಿಯ ವಿರುದ್ಧ ಎಲ್ಲಾ ಯುದ್ಧ ವಿರೋಧಿ ಮತ್ತು ಶಾಂತಿಪ್ರಿಯ ಜನರು ಎದ್ದು ನಿಲ್ಲಬೇಕು. ಅಮೆರಿಕನ್ ಸಾಮ್ರಾಜ್ಯಶಾಹಿ ಶಕ್ತಿಗಳು ಲ್ಯಾಟಿನ್ ಅಮೆರಿಕದಿಂದ ತಕ್ಷಣ ಹಿಂದೆ ಸರಿಯುವಂತೆ ಒತ್ತಾಯಿಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಪಕ್ಷದ ಸದಸ್ಯರಾದ ಡಿ.ಉಮಾದೇವಿ, ಜಮಾಲ್ ಸಾಬ್, ಶಿಲ್ಪಾ ಬಿ.ಕೆ., ಸುಭಾಷ್ ಚಂದ್ರ ಬಾವನೋರ್, ಭೀಮರೆಡ್ಡಿ ಹಿರೇಬಾನರ್, ನಾಗರಾಜ ಹೇರೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 9 Jan 2026 10:33 pm

ಅಂತರ್‌ರಾಷ್ಟ್ರೀಯ ನಿಯಮಗಳು ನನಗೆ ಅನ್ವಯಿಸುವುದಿಲ್ಲ: ಟ್ರಂಪ್

ವಾಶಿಂಗ್ಟನ್, ಜ. 9: ಅಂತರ್‌ರಾಷ್ಟ್ರೀಯ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವೆನೆಝುವೆಲದ ಅಧ್ಯಕ್ಷ ನಿಕೊಲಸ್ ಮಡುರೊ ಅವರನ್ನು ಅಪಹರಿಸಿದ ಬಳಿಕ, ಜಗತ್ತಿನಾದ್ಯಂತ ತಾನು ಅನುಸರಿಸುತ್ತಿರುವ ಆಕ್ರಮಣಕಾರಿ ನೀತಿಗಳನ್ನು ‘‘ನನ್ನ ನೈತಿಕತೆ’’ ಮಾತ್ರ ನಿಯಂತ್ರಿಸಬಲ್ಲದು ಎಂದು ಅವರು ಹೇಳಿದ್ದಾರೆ. ‘‘ನನಗೆ ಅಂತರ್‌ರಾಷ್ಟ್ರೀಯ ಕಾನೂನಿನ ಅಗತ್ಯವಿಲ್ಲ. ನಾನು ಜನರಿಗೆ ಹಾನಿ ಮಾಡುತ್ತಿಲ್ಲ’’ ಎಂದು ಗುರುವಾರ ‘ನ್ಯೂಯಾರ್ಕ್ ಟೈಮ್ಸ್’ನೊಂದಿಗೆ ಮಾತನಾಡಿದ ಅವರು ಹೇಳಿದರು. ನೀವು ಅಂತರ್‌ರಾಷ್ಟ್ರೀಯ ಕಾನೂನನ್ನು ಪಾಲಿಸಬೇಕಾಗುತ್ತದೆಯೇ ಎಂಬ ಪ್ರಶ್ನೆಗೆ ಟ್ರಂಪ್, ‘‘ಹೌದು’’ ಎಂದು ಉತ್ತರಿಸಿದರು. ಆದರೆ, ಅದು ಅಂತರ್‌ರಾಷ್ಟ್ರೀಯ ಕಾನೂನಿಗೆ ನೀವು ಕೊಡುವ ವ್ಯಾಖ್ಯೆಯನ್ನು ಅವಲಂಬಿಸುತ್ತದೆ ಎಂದು ಹೇಳಿದರು. ಶನಿವಾರ ಮುಂಜಾನೆ ಅಮೆರಿಕ ಸೇನೆಯು ವೆನೆಝುವೆಲದ ಮೇಲೆ ದಾಳಿ ನಡೆಸಿ ದೇಶದ ಅಧ್ಯಕ್ಷ ನಿಕೊಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕಕ್ಕೆ ಅಪಹರಿಸಿದೆ. ದಾಳಿಯ ವೇಳೆ, ರಾಜಧಾನಿ ಕ್ಯಾರಕಸ್ ಮತ್ತು ವೆನೆಝುವೆಲ ಸೇನಾ ನೆಲೆಗಳ ಮೇಲೆ ಬಾಂಬ್‌ಗಳನ್ನು ಹಾಕಿದೆ. ವೆನೆಝುವೆಲ ಅಧ್ಯಕ್ಷರ ಅಪಹರಣವು ವಿಶ್ವಸಂಸ್ಥೆ ಸನ್ನದಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವೀಕ್ಷಕರು ಹೇಳುತ್ತಾರೆ. ಯವುದೇ ದೇಶದ ಭೂಭಾಗ ಸಾರ್ವಭೌಮತೆ ಅಥವಾ ರಾಜಕೀಯ ಸ್ವಾತಂತ್ರ್ಯದ ವಿರುದ್ಧ ಬಲ ಪ್ರಯೋಗಿಸುವುದು ಅಥವಾ ಬಲಪ್ರಯೋಗದ ಬೆದರಿಕೆ ಹಾಕುವುದನ್ನು ಈ ಸನ್ನದು ನಿಷೇಧಿಸುತ್ತದೆ.

ವಾರ್ತಾ ಭಾರತಿ 9 Jan 2026 10:30 pm

ಮಂಗಳೂರು| ವೀಸಾ ನೀಡುವುದಾಗಿ ಹೇಳಿ ಹಣ ಪಡೆದು ವಂಚನೆ; ಪ್ರಕರಣ ದಾಖಲು

ಮಂಗಳೂರು, ಜ.9: ವೀಸಾ ನೀಡುವುದಾಗಿ ಹೇಳಿ ರೋಯನ್ ಆಲ್ವಿನ್ ಲೋಬೋ ಮತ್ತು ರಿಯೋನ್ ತೌರೋ ಎಂಬವರಿಂದ ಹಣ ಪಡೆದು ವಂಚಿಸಿರುವ ಸ್ಟ್ಯಾನಿ ಡಿಸೋಜ ಮತ್ತವರ ಪುತ್ರಿ ರೆಮಿ ಡಿಸೋಜ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃತ್ತಿಯಲ್ಲಿ ಚಾಲಕನಾಗಿರುವ ರೋಯನ್ ಆಲ್ವಿನ್ ಲೋಬೋ ಮತ್ತವರ ಅಕ್ಕನ ಮಗ ರಿಯೋನ್ ತೌರೋ ವಿದೇಶ ದಲ್ಲಿ ಕೆಲಸ ಹುಡುಕುತ್ತಿದ್ದರು. 2024ರ ಡಿಸೆಂಬರ್‌ನಲ್ಲಿ ಮೂಲ್ಕಿ ಕಿನ್ನಿಗೋಳಿಯ ಗುರುಗಳು ಯುರೋಪ್ ದೇಶದಲ್ಲಿ ಕೆಲಸಗಳಿದೆ. ಬೇಕಾದವರು ಉಡುಪಿಯಲ್ಲಿರುವ ಡೊನಾಲ್ಡ್ ಮಾಲಕತ್ವದ ಸುವಿಧಾ ಕೇಂದ್ರವನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಅದರಂತೆ ರೋಯನ್ ಆಲ್ವಿನ್ ಲೋಬೋ ಹಾಗೂ ರಿಯೋನ್ ತೌರೋ ಉಡುಪಿಗೆ ತೆರಳಿ ನೀಡಿದ ಸ್ಟ್ಯಾನಿ ಡಿಸೋಜರನ್ನು ಸಂಪರ್ಕಿಸಿದಾಗ ವೀಸಾ ಇದೆ ಎಂದಿದ್ದರು. ಅದರಂತೆ ಇಬ್ಬರಿಂದ 5 ಲಕ್ಷ ರೂ. ಪಡೆದು ವೀಸಾ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 10:25 pm

ಬೀದರ್ | ಫೆ.15ರವರೆಗೆ ‘ಕಲಿಕೆಯೇ ಕಲ್ಯಾಣ’ ಅಭಿಯಾನ : ಆಶಿಫ್

ಬೀದರ್ : ‘ಕಲಿಕೆಯೇ ಕಲ್ಯಾಣ’ ಅಭಿಯಾನ ಡಿ.15ರಿಂದ ಆರಂಭವಾಗಿದ್ದು, ಫೆ. 15ರವರೆಗೆ ಜರುಗಲಿದೆ ಎಂದು ಎಸ್‌ಐಒ ರಾಜ್ಯ ಕಾರ್ಯದರ್ಶಿ ಆಶಿಫ್ ಅವರು ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಝೆಶನ್‌ಆಫ್ ಇಂಡಿಯಾ ಸಂಘಟನೆಯು ಸೆಂಟರ್ ಫಾರ್ ಎಜುಕೇಷನಲ್ ರೀಸರ್ಚ್ ಅಂಡ್ ಅನಾಲಿಸಿಸ್ ಸಹಯೋಗದೊಂದಿಗೆ ಅಭಿಯಾನ ಜರುಗಲಿದೆ. ಶೇ.65 ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದಾರೆ. ಹಾಗೆಯೇ ಭಾಷೆಯ ಸಮಸ್ಯೆ ಪ್ರಮುಖವಾಗಿ ಕಾಡುತ್ತಿದೆ. ಶಿಕ್ಷಣಕ್ಕೆ ಬಡ ಜನರಿಗೆ ಸರಕಾರಿ ಶಾಲೆಗಳೇ ಆಧಾರವಾಗಿದ್ದು ಅಲ್ಲಿನ ಪ್ರಮುಖ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ ಎಂದು ತಿಳಿಸಿದರು. ಈ ವೇಳೆ ಎಸ್‌ಐಒ ಸಂಘಟನೆಯ ಬೀದರ್ ಯೂನಿಟ್ ಅಧ್ಯಕ್ಷ ಸಯ್ಯದ್ ಇಝಾನ್ ಅಹ್ಮದ್ ಹಾಗೂ ಆರಿಫೋದ್ದೀನ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Jan 2026 10:25 pm

ಶೀಘ್ರದಲ್ಲೇ ಬಾಂಗ್ಲಾದೇಶಕ್ಕೆ ಜೆಫ್-17 ತಂಡರ್ ಯುದ್ಧವಿಮಾನ ಪೂರೈಕೆ: ಪಾಕಿಸ್ತಾನ ಸೇನೆ ಘೋಷಣೆ

ಇಸ್ಲಾಮಾಬಾದ್, ಜ. 9: ಪಾಕಿಸ್ತಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಜೆಎಫ್-17 ತಂಡರ್’ ಯುದ್ಧವಿಮಾನಗಳನ್ನು ಬಾಂಗ್ಲಾದೇಶಕ್ಕೆ ಮಾರಾಟ ಮಾಡುವ ಒಪ್ಪಂದವೊಂದಕ್ಕೆ ಶೀಘ್ರವೇ ಸಹಿ ಹಾಕಲಾಗುವುದು ಎಂದು ಪಾಕಿಸ್ತಾನಿ ಸೇನೆ ಘೋಷಿಸಿದೆ. ಪಾಕಿಸ್ತಾನ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಶಲ್ ಝಹೀರ್ ಅಹ್ಮದ್ ಬಾಬರ್ ಸಿದು ಮತ್ತು ಬಾಂಗ್ಲಾದೇಶದ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಶಲ್ ಹಸನ್ ಮಹ್ಮೂದ್ ಖಾನ್ ನಡುವೆ ಮಾತುಕತೆ ನಡೆದ ಬಳಿಕ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನಿ ವಾಯುಪಡೆಯ ಸಮರ ದಾಖಲೆಯನ್ನು ಬಾಂಗ್ಲಾದೇಶದ ಏರ್ ಚೀಫ್ ಮಾರ್ಶಲ್ ಶ್ಲಾಘಿಸಿದರು ಹಾಗೂ ತನ್ನ ದೇಶದ ವಾಯುಪಡೆಯನ್ನು ಬಲಪಡಿಸಲು ಮತ್ತು ಕಣ್ಗಾವಲನ್ನು ಹೆಚ್ಚಿಸಲು ನೆರವು ನೀಡುವಂತೆ ಕೋರಿದರು ಎಂದು ಪಾಕಿಸ್ತಾನಿ ಸೇನೆಯ ಮಾಧ್ಯಮ ಘಟಕ ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ (ಐಎಸ್‌ಪಿಆರ್)ನ ಹೇಳಿಕೆಯೊಂದು ತಿಳಿಸಿದೆ. ಮಾತುಕತೆಯ ವೇಳೆ, ಸೂಪರ್ ಮುಶ್ಶಾಕ್ ತರಬೇತಿ ವಿಮಾನಗಳನ್ನು ಕ್ಷಿಪ್ರವಾಗಿ ಹಸ್ತಾಂತರಿಸಲಾಗುವುದು ಎಂಬ ಭರವಸೆಯನ್ನೂ ಬಾಂಗ್ಲಾದೇಶದ ವಾಯುಪಡೆಯ ಮುಖ್ಯಸ್ಥರಿಗೆ ನೀಡಲಾಯಿತು ಎಂದು ಹೇಳಿಕೆ ತಿಳಿಸಿದೆ. ‘ಸೂಪರ್ ಮುಶ್ಶಾಕ್’ ಹಗುರ, 2-3 ಆಸನಗಳ ಒಂಟಿ ಇಂಜಿನ್ ವಿಮಾನವಾಗಿದೆ. ಈ ವಿಮಾನವನ್ನು ಮುಖ್ಯವಾಗಿ ತರಬೇತಿ ಉದ್ದೇಶಕ್ಕೆ ಬಳಸಲಾಗುತ್ತದೆ. ಈ ವಿಮಾನವನ್ನು ಈಗಾಗಲೇ ಪೈಲಟ್ ತರಬೇತಿಗಾಗಿ ಅಝರ್‌ಬೈಜಾನ್, ತುರ್ಕಿಯೆ, ಇರಾನ್, ಇರಾಕ್ ಮುಂತಾದ ದೇಶಗಳು ಬಳಸುತ್ತಿವೆ.

ವಾರ್ತಾ ಭಾರತಿ 9 Jan 2026 10:24 pm

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಜ.9: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್‌ರಾಜ್ (43) ಎಂಬವರು ಕಳೆದ ಆಗಸ್ಟ್ 22ರಂದು ಅಪರಾಹ್ನ 12:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ. 5 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 9 Jan 2026 10:23 pm

ಯಾದಗಿರಿ | ನೀಲಹಳ್ಳಿಯಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್; ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ : ಉಮೇಶ ಮುದ್ನಾಳ

ಯಾದಗಿರಿ: ತಾಲ್ಲೂಕಿನ ಸೈದಾಪುರ ಸಮೀಪದ ನೀಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲೇ ಇರುವ ಶಿಥಿಲಗೊಂಡ ನೀರಿನ ಟ್ಯಾಂಕ್ ಯಾವುದೇ ಕ್ಷಣದಲ್ಲಿ ಕುಸಿಯುವ ಹಂತದಲ್ಲಿದ್ದು, ಇದನ್ನು ಕೂಡಲೇ ನೆಲಸಮಗೊಳಿಸಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಅವರು, ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ (RO Plant) ಹಾಗೂ ಪಾಚಿಗಟ್ಟಿ ಬೀಳುವ ಹಂತದಲ್ಲಿರುವ ಟ್ಯಾಂಕನ್ನು ವೀಕ್ಷಿಸಿದರು. ಬಳಿಕ ಗ್ರಾಮಸ್ಥರೊಂದಿಗೆ ದಿಢೀರ್ ಪ್ರತಿಭಟನೆ ನಡೆಸಿದ ಅವರು, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಯಾದಗಿರಿ-ಸೈದಾಪುರ ಮುಖ್ಯ ರಸ್ತೆ ಬಂದ್ ಮಾಡಿ ಜಿಲ್ಲಾಡಳಿತದ ವಿರುದ್ಧ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುಮಾರು 5,000 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ವರ್ಷಗಳ ಹಿಂದೆ ನಿರ್ಮಿಸಲಾದ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದೆ. ಸಿಮೆಂಟ್ ಕಿತ್ತು ಹೋಗಿದ್ದು, ಕಬ್ಬಿಣದ ರಾಡುಗಳು ಹೊರಬಂದಿವೆ. ಟ್ಯಾಂಕ್ ಪಕ್ಕದಲ್ಲೇ ಶಾಲೆಯಿದ್ದು, ಮಕ್ಕಳು ಹಾಗೂ ಸಾರ್ವಜನಿಕರು ಭಯದಲ್ಲೇ ಓಡಾಡುವಂತಾಗಿದೆ. ಅಲ್ಲದೆ, ಜೆಸ್ಕಾಂ ವಿದ್ಯುತ್ ತಂತಿಗಳು ಟ್ಯಾಂಕ್ ಮೇಲ್ಭಾಗದಲ್ಲೇ ಹಾದು ಹೋಗಿದ್ದು, ಟ್ಯಾಂಕ್ ಕುಸಿದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಅವರು ಆರೋಪಿಸಿದರು. ಕಳೆದ 4 ವರ್ಷಗಳಿಂದ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಿಲ್ಲದೆ ಕೆಟ್ಟು ನಿಂತಿದೆ. ಗ್ರಾಮದ ಚರಂಡಿಗಳು ತುಂಬಿ ಹೋಗಿದ್ದು, ಸೊಳ್ಳೆಗಳ ಕಾಟದಿಂದ ರೋಗರುಜಿನಗಳು ಹರಡುತ್ತಿವೆ. ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕೂಡಲೇ ನೂತನ ಟ್ಯಾಂಕ್ ನಿರ್ಮಾಣ ಮಾಡಬೇಕು ಮತ್ತು ಚರಂಡಿಗಳಿಗೆ ಬ್ಲೀಚಿಂಗ್ ಪೌಡರ್ ಸಿಂಪಡಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಶಂಕರ, ನರಸಪ್ಪ, ಸಿದ್ರಾಮ, ಪವನ, ಹಣಮಂತ, ಮಲ್ಲಪ್ಪ, ಬಾಲಪ್ಪ, ಶೇಖಪ್ಪ, ಮಲ್ಲೇಶಿ, ರಾಜಪ್ಪ, ನಾಗೇಶ, ಸೈದಪ್ಪ, ರಮೇಶ, ರಾಚಪ್ಪ, ನಾಗಪ್ಪ ಬನ್ನಪ್ಪ, ಉಸೇನಪ್ಪ, ಸಾಬರೆಡ್ಡಿ ಭೀಮಪ್ಪ. ಲಕ್ಷ್ಮೀ,  ಇಂದ್ರಮ್ಮ, ಸೋಲೊಚನಮ್ಮ, ಪದ್ಮಾವತಿ, ಮಲ್ಲಮ್ಮ, ಕಮಲಮ್ಮ, ಶ್ರೀದೇವಿ, ಸಂಗೀತಾ, ನಾಗಮ್ಮ, ತಾರಮ್ಮ, ಸುಶಿಲಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.  

ವಾರ್ತಾ ಭಾರತಿ 9 Jan 2026 10:20 pm

ಕರ್ನಾಟಕ ಗೂಂಡಾ ರಾಜ್ಯವಾಗಿದೆ: ನಳಿನ್‌ ಕುಮಾರ್ ಕಟೀಲ್ ಆರೋಪ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್‌ ಕುಮಾರ್, ಹುಬ್ಬಳ್ಳಿಯಲ್ಲಿ ಮಹಿಳೆ ಯೊಬ್ಬರನ್ನು ವಿವಸ್ತ್ರಗೊಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಸಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಸರಕಾರ ಬಂದಾಲೇ ಪಾಕಿಸ್ತಾನ ಪರ ಘೋಷಣೆ ಕೂಗಲಾಯಿತು, ವಿಜಯೋತ್ಸವದಲ್ಲಿ ಪಾಕಿಸ್ತಾನ ಧ್ವಜ ಹಾರಿತು, ಬೆಳಗಾವಿ ಯಲ್ಲಿ ಮುನಿಯೊಬ್ಬರ ಹತ್ಯೆ ಆಯಿತು. ಹಲ್ಲೆ ಗೂಂಡಾ ವರ್ತನೆಗಳು ಇಲ್ಲಿ ನಿತ್ಯ ನಿರಂತರವಾಗಿದೆ. ಹೀಗಾಗಿ ಇವರಿಂದ ಕರ್ನಾಟಕ ಗೂಂಡಾ ರಾಜ್ಯವಾಗಿದೆ ಎಂದರು. ರಾಜ್ಯದಲ್ಲಿ ಅತ್ಯಾಚಾರಗಳು ಜಾಸ್ತಿ ಆಗುತ್ತಿವೆ. ಕೆಡಿಪಿ ಸಭೆಯಲ್ಲಿ ನಮ್ಮ ಶಾಸಕರ ಮೇಲೆ ಕಾಂಗ್ರೆಸ್ ಶಾಸಕರು ಕೈ ಎತ್ತುತ್ತಾರೆ. ಬಳ್ಳಾರಿಯಲಿ ಗುಂಡು ಹೊಡೆಯುತ್ತಾರೆ. ಶಾಸಕರ ಸಹವರ್ತಿ ಅವರದ್ದೇ ಕಾರ್ಯಕರ್ತನನ್ನು ಕೊಲ್ಲು ತ್ತಾರೆ. ಇದು ಕಾಂಗ್ರೆಸ್ ಸರಕಾರದ ಮಾನಸಿಕತೆಯನ್ನು ತೋರಿಸುತ್ತದೆ. ಈ ಎಲ್ಲಾ ಕೃತ್ಯಗಳನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಮರ್ಥನೆ ಮಾಡುತ್ತಾರೆ ಎಂದರು. ರಾಮರಾಜ್ಯದ ಗಾಂಧಿಯ ಕನಸನ್ನು ಕಾಂಗ್ರೆಸ್ ನನಸಾಗಿಸಿಲ್ಲ, ಆದರೆ ಇದು ರಾವಣ ರಾಜ್ಯ. ಕರ್ನಾಟಕ ಲಂಕಾಪುರ ಆಗುತ್ತಿದೆ. ರಾವಣನು ಕೂಡ ಸಿದ್ದರಾಮಯ್ಯನಂತೆ ಬುದ್ದಿವಂತನಿದ್ದ. ರಾವಣ ಕೂಡ ಸಿದ್ದರಾಮಯ್ಯ ನವರಂತೆ ಅದ್ಭುತ ಜ್ಞಾನಿಯಾಗಿದ್ದ. ಹೀಗಾಗಿ ಸಿದ್ದರಾಮಯ್ಯರ ಹೆಸರು ಬದಲಾವಣೆಯಾಗುತ್ತಿದೆಯಾ ಎಂಬ ಸಂಶಯ ಎಂದರು. ಇದಕ್ಕೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಕೇಂದ್ರ ಸರಕಾರ ಜಾರಿಗೆ ತಂದಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ವಿಬಿ-ಜಿ.ರಾಮ್-ಜಿ) ಯೋಜನೆಯನ್ನು ಸಮರ್ಥಿಸಿ ಮಾತನಾಡಿದರು. ಇದರ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.

ವಾರ್ತಾ ಭಾರತಿ 9 Jan 2026 10:19 pm

ಸರಕಾರಿ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಮಾತ್ರಕ್ಕೆ ಸರಕಾರಿ ಉದ್ಯೋಗವು ಹಕ್ಕು ಆಗದು: ಸುಪ್ರೀಂಕೋರ್ಟ್

ಹೊಸದಿಲ್ಲಿ,ಜ.9: ಸಾರ್ವಜನಿಕ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಶುಕ್ರವಾರ ಮಹತ್ವದ ತೀರ್ಪು ನೀಡಿರುವ ಸರ್ವೋಚ್ಚ ನ್ಯಾಯಾಲಯವು, ಕೇವಲ ಸರಕಾರಿ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಅಥವಾ ತರಬೇತಿ ಪಡೆದಿರುವುದು ಸರಕಾರಿ ಹುದ್ದೆಗೆ ಸ್ವಯಂಚಾಲಿತವಾಗಿ ನೇಮಕಗೊಳ್ಳಬಹುದೆಂಬ ‘ಸಕ್ರಮವಾದ ನಿರೀಕ್ಷೆ’ಯನ್ನು ಸೃಷ್ಟಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ. ಆಯುರ್ವೇದಿಕ್ ನರ್ಸಿಂಗ್ ತರಬೇತಿ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಕಗೊಳಿಸಬೇಕೆಂಬ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಬದಿಗೊತ್ತಿದ ರಾಜೇಶ್ ಬಿಂದಾಲ್ ಹಾಗೂ ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠವು ಉತ್ತರಪ್ರದೇಶ ಸರಕಾರದ ನಿಲುವನ್ನು ಪುರಸ್ಕರಿಸಿದೆ. ಅಭ್ಯರ್ಥಿಗಳ ಸೀಮಿತ ಲಭ್ಯತೆ ಹಾಗೂ ಅಧಿಕ ಸಂಖ್ಯೆಯ ಹುದ್ದೆಗಳಿರುವ ಹಿನ್ನೆಲೆಯಲ್ಲಿ 20 ಸೀಟುಗಳ ಸರಕಾರಿ ಆಯುರ್ವೇದಿಕ್ ನರ್ಸಿಂಗ್ ಕೋರ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆದವರನ್ನು ಸ್ಟಾಫ್ ನರ್ಸ್‌ಗಳಾಗಿ ನೇಮಿಸಿಕೊಳ್ಳುವ ದೀರ್ಘಕಾಲದ ಪದ್ಧತಿಯನ್ನು ಉತ್ತರಪ್ರದೇಶದಲ್ಲಿ ಅನುಸರಿಲಾಗುತ್ತಿತ್ತು. 2011ರಲ್ಲಿ ಈ ನೀತಿಯನ್ನು ಬದಲಾಯಿಸಿದ ರಾಜ್ಯ ಸರಕಾರವು ಖಾಸಗಿ ಆಯುರ್ವೇದಿಕ್ ನರ್ಸಿಂಗ್ ಕೋರ್ಸ್‌ಗಳ ವಿದ್ಯಾರ್ಥಿಗಳನ್ನು ಕೂಡಾ ಸ್ಟಾಫ್ ನರ್ಸ್ ಆಗಿ ನೇಮಿಸುವುದಕ್ಕೆ ಅನುಮತಿ ನೀಡಿತ್ತು. ಇದರ ಪರಿಣಾಮವಾಗಿ ಅರ್ಹ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿ, ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಅಗತ್ಯವುಂಟಾಗಿತ್ತು. ಇದನ್ನು ಪ್ರಶ್ನಿಸಿದ ಅರ್ಜಿದಾರ ಅಭ್ಯರ್ಥಿಗಳು, ಸರಕಾರಿ ಶಿಕ್ಷಣ ಸಂಸ್ಥೆಗಳ ಪದವೀಧರರ ನೇಮಕಾತಿಯು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿಯಾಗಿರುವುದರಿಂದ, ಅಲ್ಲಿ ಶಿಕ್ಷಣ ಪಡೆದವರಿಗೆ ಸರಕಾರಿ ಉದ್ಯೋಗ ದೊರೆಯುವ ‘ಸಕ್ರಮ ನಿರೀಕ್ಷೆ’ಯನ್ನು ಹುಟ್ಟುಹಾಕುತ್ತದೆ‌. ಅಲ್ಲದೆ ಸರಕಾರಿ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವಾಗ ಐದು ವರ್ಷಗಳ ಸೇವಾ ಬಾಂಡ್ ಅನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ ಎಂದವರು ವಾದಿಸಿದ್ದರು. ಆದರೆ ಈ ವಾದಗಳನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ನೇಮಕಾತಿ ಕುರಿತ ಸಕ್ರಮ ನಿರೀಕ್ಷೆಯು ಓರ್ವನಿಗೆ ಇರುವ ಹಕ್ಕಲ್ಲವೆಂದು ಹೇಳಿದೆ. ಶಿಕ್ಷಣ ಸಂಸ್ಥೆಯಲ್ಲಿ ದಾಖಲಾಗುವಾಗ ಪಡೆದುಕೊಳ್ಳುವ ಐದು ವರ್ಷಗಳ ಕಡ್ಡಾಯ ಸೇವೆಯ ಬಾಂಡ್ ನಿಯಮವು ಸೇವೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾತ್ರವೇ ಅನ್ವಯಿಸುತ್ತದೆ ಹೊರತು ಅದು ನೇಮಕಾತಿಯ ಖಾತರಿಯನ್ನು ನೀಡುವುದಿಲ್ಲವೆಂದು ಸ್ಪಷ್ಟಪಡಿಸಿತು.

ವಾರ್ತಾ ಭಾರತಿ 9 Jan 2026 10:15 pm

ಯಾದಗಿರಿ | ಮನೆ ಹಂಚಿಕೆಯಲ್ಲಿ ಅಕ್ರಮ ಆರೋಪ : ಗುರುಸಣಗಿ ಕ್ರಾಸ್ ಬಳಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯು ತಾಲ್ಲೂಕಿನ ಗುರುಸಣಗಿ ಕ್ರಾಸ್ ಬಳಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿತು. ಟಿ.ವಡಿಗೇರಿ ಗ್ರಾಮ ಪಂಚಾಯಿತಿಯಲ್ಲಿ ಅರ್ಹ ಫಲಾನುಭವಿಗಳನ್ನು ಕಡೆಗಣಿಸಿ, ಯೋಗ್ಯವಲ್ಲದವರಿಗೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಕುರಿತು ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದರು. ಈ ವೇಳೆ ಮಾತನಾಡಿದ ಮುಖಂಡರು, ಈ ಅವ್ಯವಹಾರದ ಕುರಿತು ಕಳೆದ ಸೆ.18ರಂದು ತಾಲ್ಲೂಕು ಪಂಚಾಯತ್‌ ಎದುರು ಪ್ರತಿಭಟನೆ ನಡೆಸಲಾಗಿತ್ತು ಹಾಗೂ ಸೆ.22ರಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಅನಿವಾರ್ಯವಾಗಿ ನ್ಯಾಯಕ್ಕಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು. ಅಧಿಕಾರಿಗಳ ಕಣ್ಣೆದುರೇ ಭ್ರಷ್ಟಾಚಾರ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳದಂತೆ ತಡೆಯುತ್ತಿರುವ 'ಅದೃಶ್ಯ ಕೈ'ಗಳು ಯಾವುವು ಎಂದು ಪ್ರಶ್ನಿಸಿದ ಹೋರಾಟಗಾರರು, ನಿಜವಾದ ಬಡವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು. ಪಂಚಾಯತ್‌ ವ್ಯಾಪ್ತಿಯ ಗ್ರಾಮಗಳಲ್ಲಿ ಚರಂಡಿಗಳು ತುಂಬಿ ಗಬ್ಬು ನಾರುತ್ತಿದ್ದು, ಸೊಳ್ಳೆಗಳ ಕಾಟದಿಂದ ಜನ-ಜಾನುವಾರುಗಳು ರೋಗಗಳಿಗೆ ತುತ್ತಾಗುತ್ತಿವೆ. ಕೂಡಲೇ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮನೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಕಾರಣರಾದ ಪಿಡಿಒ (PDO) ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ವಜಾಗೊಳಿಸಬೇಕು. ಅರ್ಹ ಬಡ ಫಲಾನುಭವಿಗಳಿಗೆ ಯಾವುದೇ ಲಂಚವಿಲ್ಲದೆ ವಸತಿ ಸೌಲಭ್ಯ ಕಲ್ಪಿಸಬೇಕು. ಗ್ರಾಮಗಳಲ್ಲಿನ ಚರಂಡಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ತಕ್ಷಣ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ನೇತೃತ್ವ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ವಹಿಸಿದ್ದರು. ಜಿಲ್ಲಾಧ್ಯಕ್ಷ ಶರಣು ಮಂದರವಾಡ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಣ್ಣ ಎಸ್. ಚಿಂತಿ, ಪ್ರಭಾಕರರೆಡ್ಡಿ ಕೊಂಗಂಡಿ, ಭೀಮಣ್ಣ ನಾಯಕ್, ಮಲ್ಲಣ್ಣ ನೀಲಹಳ್ಳಿ, ಭೀಮರಾಯ ಲಿಂಗೇರಿ, ಬಾಲಾಜಿ ಟಿ.ವಡಗೇಯಆ, ಪಕೀರ ಅಹ್ಮದ್, ಭೀಮರಾಯ ಹಾಲಗೇರಾ, ಮೈಬೂಬ ಪಟೇಲ್, ಮಲ್ಲಲಪ್ಪ, ದೇವಿಂದ್ರಪ್ಪ ಸೇರಿದಂತೆ ನೂರಾರು ರೈತರು ಇದ್ದರು.

ವಾರ್ತಾ ಭಾರತಿ 9 Jan 2026 10:09 pm

ಕಳೆದ 10 ವರ್ಷಗಳಲ್ಲಿ ಮೋದಿ ಆಸ್ತಿ ಶೇ. 86ರಷ್ಟು ಹೆಚ್ಚಳ; ರಾಹುಲ್‌ ಗಾಂಧಿ ಆಸ್ತಿ ಎಷ್ಟು ಜಾಸ್ತಿಯಾಗಿದೆ ಗೊತ್ತೇ?

ಭಾರತೀಯ ಸಂಸದರ ಆಸ್ತಿ ಕಳೆದ ಹತ್ತು ವರ್ಷಗಳಲ್ಲಿ ಶೇ.400ರಷ್ಟು ಏರಿಕೆಯಾಗಿದೆ. ಎಡಿಆರ್ ವರದಿಯ ಪ್ರಕಾರ, ಸಂಸದರ ಸರಾಸರಿ ಆಸ್ತಿ ಶೇ.110ರಷ್ಟು ಹೆಚ್ಚಳವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ಶೇ.86ರಷ್ಟು ಬೆಳೆದಿದೆ. ರಾಹುಲ್ ಗಾಂಧಿ ಅವರ ಆಸ್ತಿ ಶೇ.117ರಷ್ಟು ಹೆಚ್ಚಾಗಿ 20.39 ಕೋಟಿ ರೂ. ತಲುಪಿದೆ. ಶಾಸಕರ ಆರ್ಥಿಕ ಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ.

ವಿಜಯ ಕರ್ನಾಟಕ 9 Jan 2026 9:57 pm

ಸಿದ್ದರಾಮಯ್ಯ ಅವರ ಸರಕಾರದಿಂದ ಜನಪರ ಆಡಳಿತ : ಶಾಸಕ ರಾಯರೆಡ್ಡಿ

ಕುಕನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ತಾಲ್ಲೂಕಿನ ಹರಿಶಂಕರ ಬಂಡಿ, ಚೆನ್ನಪ್ಪನಹಳ್ಳಿ, ಕೋನಾಪುರ, ಬಳಗೇರಿ, ರಾವಣಕಿ, ಬೂದುಗುಂಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸರ್ವ ಜನಾಂಗದ ಅಭಿವೃದ್ಧಿ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಬೇಕು–ಬೇಡಗಳನ್ನು ಅರಿತು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಪ್ರಸ್ತುತ 4.34 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ವಾರ್ಷಿಕ ಸುಮಾರು 30 ಸಾವಿರ ಕೋಟಿ ರೂ. ಆರ್ಥಿಕ ನೆರವು ತಲುಪುತ್ತಿದೆ. 1.69 ಕೋಟಿ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ಹಾಗೂ 98 ಲಕ್ಷ ಮಕ್ಕಳಿಗೆ ಶಿಕ್ಷಣದಡಿ ಉಚಿತ ಪಠ್ಯಪುಸ್ತಕ, ಬಟ್ಟೆ ಮತ್ತು ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಕೃಷಿ ಕ್ಷೇತ್ರಕ್ಕೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, 36 ಲಕ್ಷ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಜನಪರ ಯೋಜನೆಗಳಿಗೆ ಪ್ರತಿ ವರ್ಷ ಸುಮಾರು 1 ಲಕ್ಷ 12 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ರಾಯರೆಡ್ಡಿ ಹೇಳಿದರು. ಈ ಸಂದರ್ಭದಲ್ಲಿ ಚಿಕೇನಕೊಪ್ಪ, ಯಾರೇಹಂಚಿನಾಳ, ಮಂಡಳಿಗೇರಿ ರಸ್ತೆಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಯಂಕಣ್ಣ ಯಾರಾಶಿ, ಹನುಮಂತಗೌಡ ಪಾಟೀಲ್ ಚಂಡೂರ, ಕೇರಿಬಸಪ್ಪ ನಿಡಗುಂದಿ, ಮಂಜುನಾಥ್ ಕಡೆಮನಿ, ಪಂಚ ಗ್ಯಾರಂಟಿ ಯೋಜನೆ ತಾಲೂಕು ಘಟಕದ ಅಧ್ಯಕ್ಷ ಸಂಗಮೇಶ್ ಗುತ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಸಂತೋಷ ಪಾಟೀಲ್ ಬಿರಾದಾರ್, ತೋಟಗಾರಿಕೆ ಇಲಾಖೆ ಅಧಿಕಾರಿ ಲಿಂಗಾರೆಡ್ಡಿ, ಜೆಸ್ಕಾ, ಪಶುಪಾಲನೆ, ಶಿಕ್ಷಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.  

ವಾರ್ತಾ ಭಾರತಿ 9 Jan 2026 9:55 pm

ಕುಷ್ಟಗಿ | ಹನುಮಸಾಗರದಲ್ಲಿ ಸಂಭ್ರಮದ 'ಕಲಿಕಾ ಹಬ್ಬ'ಕ್ಕೆ ಚಾಲನೆ

ಕುಷ್ಟಗಿ : ಮಕ್ಕಳಿಗೆ ಪಠ್ಯಾಭ್ಯಾಸದ ಜೊತೆಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯಲ್ಲಿ ಆಸಕ್ತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹನುಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ ಹೇಳಿದರು. ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹನುಮಸಾಗರ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. (ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ) ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಸಮಾಜದ ಮನಸ್ಥಿತಿಯ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಓದದೇ ಉತ್ತೀರ್ಣರಾಗಬೇಕು, ದುಡಿಯದೇ ಹಣ ಗಳಿಸಬೇಕು ಎಂಬ ತಪ್ಪು ಮನೋಭಾವ ಸಮಾಜದಲ್ಲಿ ಬೆಳೆಯುತ್ತಿದೆ. ಆದರೆ, ಮಕ್ಕಳು ನಿರಂತರ ಅಭ್ಯಾಸ ಮತ್ತು ಕಠಿಣ ಶ್ರಮವನ್ನು ಮೈಗೂಡಿಸಿಕೊಂಡರೆ ಉನ್ನತ ಹುದ್ದೆಗಳು ತಾವಾಗಿಯೇ ಹುಡುಕಿ ಬರುತ್ತವೆ ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಸಿಆರ್‌ಪಿ ಲೆಂಕಪ್ಪ ವಾಲಿಕಾರ ಮಾತನಾಡಿ, ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನವನ್ನು ಬಲಪಡಿಸಲು ಈ ಕಲಿಕಾ ಹಬ್ಬ ಪೂರಕವಾಗಿದೆ. ಇಲ್ಲಿ ಕಥೆ ಹೇಳುವುದು, ಗಣಿತ ಚಟುವಟಿಕೆ, ಪರಿಸರ ಜಾಗೃತಿಯ ಛದ್ಮವೇಷ, ಪಾತ್ರಾಭಿನಯ ಸೇರಿದಂತೆ ಏಳು ಪ್ರಮುಖ ವಿಭಾಗಗಳಲ್ಲಿ ಒಟ್ಟು 70 ಚಟುವಟಿಕೆಗಳನ್ನು ನಡೆಸಲಾಗುವುದು. ವಿಜೇತ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ವಿವರ ನೀಡಿದರು. ಕಾರ್ಯಕ್ರಮದಲ್ಲಿ ಕೆಪಿಎಸ್ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಗೌರಮ್ಮ ತಳವಾರ ಹಾಗೂ ಉಮಾ ನಾಗೂರ, ತಾಲೂಕು ಉಪಾಧ್ಯಕ್ಷ ಯಲ್ಲನಗೌಡ ಪಾಟೀಲ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಮಲ್ಲಪ್ಪ ಕುಂಬಾರ, ಗಂಗಾಧರಪ್ಪ, ಬಸಪ್ಪ ಬಂಡಿವಡ್ಡರ, ಭಾರತಿ ದೇಸಾಯಿ, ಮೈಬೂಬ ಬಾಗವಾನ, ಚಂದಪ್ಪ ಹಕ್ಕಿ, ಸದಾಶಿವಯ್ಯ ಹಿರೇಮಠ, ಬಸವರಾಜ ವಡ್ಡರ, ಮೈಬೂಬ ಮೇಣೆದಾಳ, ರಾಜಕುಮಾರ ನಾಯಕ, ಮೈಬೂಬಸಾಬ ಕಂದಗಲ್, ಅಶೋಕ ಕಟ್ಟಿಮನಿ, ಮುಖಂಡ ಮುದಿಯಪ್ಪ ವಾಲ್ಮೀಕಿ ಸೇರಿದಂತೆ ಹನುಮಸಾಗರ ಕ್ಲಸ್ಟರ್ ವ್ಯಾಪ್ತಿಯ 11 ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.  

ವಾರ್ತಾ ಭಾರತಿ 9 Jan 2026 9:48 pm

ನರೇಂದ್ರ ಮೋದಿ ಕರೆ ಮಾಡಲಿಲ್ಲ ಎಂಬ ಯುಎಸ್‌ ಆರೋಪಕ್ಕೆ ಭಾರತ ತಿರುಗೇಟು; ಟ್ರಂಪ್‌ ಅವರೇ ಬ್ಯುಸಿ ರಿಂಗ್‌ ಆದರೂ ಕೇಳಿಸಿದಷ್ಟು!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಯಾವಾಗ ಅಂತಿಮಗೊಳ್ಳಲಿದೆ ಎಂಬುದರ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಈ ವಿಳಂಬಕ್ಕೆ ಅಮೆರಿಕ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೂಷಿಸಲು ಆರಂಭಿಸಿದೆ. ಪ್ರಧಾನಿ ಮೋದಿ ಅವರು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಿಲ್ಲ ಎಂಬ ಯುಎಸ್‌ ಣಿಜ್ಯ ಕಾರ್ಯದರ್ಶಿ ಹೊವಾರ್ಡ್‌ ಲುಟ್ನಿಕ್‌ ಹೇಳಿಕೆಯನ್ನು ಭಾರತ ಖಂಡಿಸಿದೆ. ಉನ್ನತ ಮಟ್ಟದ ರಾಜಕೀಯ ಸಂವಹನ ನಡೆಯುತ್ತಿಲ್ಲ ಎಂಬ ಆರೋಪ ಸುಳ್ಳು ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಸ್ಪಷ್ಟಪಡಿಸಿದ್ದಾರೆ.

ವಿಜಯ ಕರ್ನಾಟಕ 9 Jan 2026 9:47 pm

ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆಯ ಗ್ರಾಪಂಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

ಉಡುಪಿ, ಜ.9: ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ಯೊಂದಿಗೆ 25,000ರೂ. ಪ್ರೋತ್ಸಾಹಧನ ನೀಡಲು ಆದೇಶವಿದ್ದು, ಅದರಂತೆ 2024-25 ನೇ ಸಾಲಿನಲ್ಲಿ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574964ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 9 Jan 2026 9:47 pm

ಕೊಂಕಣ ರೈಲ್ವೆ: ಡಿಸೆಂಬರ್‌ನಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ 2.45 ಕೋಟಿ ರೂ. ದಂಡ ವಸೂಲಿ

ಉಡುಪಿ, ಜ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ಡಿಸೆಂಬರ್ ತಿಂಗಳಿನಲ್ಲಿ 2.45 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ್‌ನಲ್ಲಿ ಅದು 2.33 ಕೋಟಿ ರೂ.ಗಳನ್ನು ದಂಡವಾಗಿ ಸಂಗ್ರಹಿಸಿತ್ತು. ಡಿಸೆಂಬರ್ ತಿಂಗಳೊಂದರಲ್ಲೇ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆಸಿದ 998 ವಿಶೇಷ ಟಿಕೆಟ್ ತಪಾಸಣಾ ಕಾರ್ಯಾಚರಣೆಯಲ್ಲಿ ಒಟ್ಟು 43,896 ಮಂದಿ ಟಿಕೆಟ್ ರಹಿತ ಹಾಗೂ ಅನಧಿಕೃತವಾಗಿ ಸಂಚರಿಸುವವರನ್ನು ಪತ್ತೆ ಹಚ್ಚಿರುವ ಸಿಬ್ಬಂದಿಗಳು ಅವರಿಂದ 2.45 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದ್ದಾರೆ ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ. 2025ನೇ ಸಾಲಿನ ಇಡೀ ವರ್ಷದಲ್ಲಿ ಅಂದರೆ ಜನವರಿ ತಿಂಗಳಿನಿಂದ ಡಿಸೆಂಬರ್ ತಿಂಗಳ ಕೊನೆಯವರೆಗೆ ಒಟ್ಟು 8,481 ವಿಶೇಷ ಟಿಕೆಟ್ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದ್ದು, ಒಟ್ಟು 3,68,901 ಮಂದಿ ಟಿಕೆಟ್ ರಹಿತ ಹಾಗೂ ಅನಧಿಕೃತವಾಗಿ ಸಂಚರಿಸುವವರನ್ನು ಪತ್ತೆ ಹಚ್ಚಿ ಅವರಿಂದ ದಂಡದ ರೂಪದಲ್ಲಿ ಒಟ್ಟು 20.27 ಕೋಟಿ ರೂ. ಹಣವನ್ನು ರೈಲ್ವೆ ಖಜಾನೆಗೆ ಸಂಗ್ರಹಿಸಲಾಗಿದೆ ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೊಂಕಣ ರೈಲ್ವೆ ಮಾರ್ಗದಲ್ಲಿ ಈ ವಿಶೇಷ ಕಾರ್ಯಾಚರಣೆಯನ್ನು ರೈಲ್ವೆ ಅಧಿಕಾರಿಗಳು ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಗಳ ನೆರವಿನಿಂದ ರೈಲುಗಳಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ನಡೆಸಲಾಗುತ್ತಿದೆ. ಹೀಗಾಗಿ ಇದರಲ್ಲಿ ಸಂಚರಿಸುವ ಪ್ರಯಾಣಿಕರು ಅಧಿಕೃತವಾದ ಟಿಕೆಟ್ ಖರೀದಿಸಿ ಪ್ರಯಾಣಿಸುವಂತೆ ವಿನಂತಿಸಿದ್ದಾರೆ. ಈ ಮೂಲಕ ಕೆಆರ್‌ಸಿಎಲ್‌ನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಆಗುವ ಯಾವುದೇ ರೀತಿಯ ತೊಂದರೆಯನ್ನು ತಪ್ಪಿಸುವಂತೆ ರೈಲ್ವೆ ಅಧಿಕಾರಿಗಳು ವಿನಂತಿಸಿದ್ದಾರೆ. ಇನ್ನು ಮುಂದೆಯೂ ಕೊಂಕಣ ರೈಲ್ವೆಯ ಎಲ್ಲಾ ಮಾರ್ಗ ಗಳಲ್ಲೂ ಟಿಕೆಟ್ ತಪಾಸಣಾ ಪ್ರಕ್ರಿಯೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಾರ್ತಾ ಭಾರತಿ 9 Jan 2026 9:43 pm

ಕುಕನೂರು | ಆಡೂರ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಕುಕನೂರು: ತಾಲ್ಲೂಕಿನ ಆಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕುಕನೂರು ತಾಲ್ಲೂಕಿನ ಗ್ರಾಮೀಣ ಕ್ಲಸ್ಟರ್ ಮಟ್ಟದ ‘ಕಲಿಕಾ ಹಬ್ಬ’ವನ್ನು ಅತ್ಯಂತ ಸಂಭ್ರಮದಿಂದ ಆಯೋಜಿಸಲಾಯಿತು. ಮಕ್ಕಳ ಕಲಿಕಾ ಆಸಕ್ತಿ ಹಾಗೂ ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಹಬ್ಬವನ್ನು ‘ಕಲಿಕಾ ಚಿಟ್ಟೆ’ ಅನಾವರಣಗೊಳಿಸುವ ಮೂಲಕ ವಿಶಿಷ್ಟವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರೌಢಶಾಲಾ ಶಿಕ್ಷಕರ ವಿಭಾಗದ ರಾಜ್ಯ ಉಪಾಧ್ಯಕ್ಷ ಮಹೇಶ್ ಸಬರದ ಅವರು, ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಸುವಲ್ಲಿ ಶಿಕ್ಷಕರ ಶ್ರಮದ ಜೊತೆಗೆ ಪೋಷಕರ ಸಕ್ರಿಯ ಸಹಕಾರವೂ ಅತ್ಯಗತ್ಯ. ಶಿಕ್ಷಣವು ಕೇವಲ ಪಠ್ಯ ಪುಸ್ತಕಗಳಿಗೆ ಸೀಮಿತವಾಗದೆ, ಮಗುವಿನ ಜೀವನಕ್ಕೆ ದಾರಿದೀಪವಾಗಬೇಕು ಎಂದು ತಿಳಿಸಿದರು. ಪ್ರಾಥಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಮಾರುತಿ ತಳವಾರ್ ಮಾತನಾಡಿ, ಮಕ್ಕಳು ಇಂದಿನ ಮೊಬೈಲ್ ಗೀಳಿನಿಂದ ಹೊರಬರಬೇಕು. ತಂತ್ರಜ್ಞಾನವನ್ನು ಕೇವಲ ಶಿಕ್ಷಣದ ಪೂರಕ ಮಾಹಿತಿಗಾಗಿ ಮಾತ್ರ ಬಳಸಬೇಕು. ‘ಪ್ರಶ್ನೆಯು ಪ್ರಜ್ಞೆಯಾಗಲಿ’ ಎಂಬ ಧ್ಯೇಯದೊಂದಿಗೆ ಮಕ್ಕಳು ಜ್ಞಾನ ಸಂಪಾದನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ವೀರಣ್ಣ ಚೌಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿಆರ್‌ಪಿ ಪೀರ್‌ಸಾಬ್ ದಪ್ಪದಾರ್, ನಾಗರಾಜ ಚಲವಾದಿ, ಶರಣಪ್ಪ ತೊಂಡಿಹಾಳ, ವೀರೇಶ ಬಟಪ್ನಳ್ಳಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸಿದ್ದನಗೌಡ ರಬ್ಬನಗೌಡ, ಗ್ರಾ.ಪಂ ಉಪಾಧ್ಯಕ್ಷ ಕೋಟೇಶ್ ಗೊಂದಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 9 Jan 2026 9:42 pm

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಮಲಯಾಳಂ ಭಾಷೆಯನ್ನು ಹೇರುವ ಕ್ರಮಕ್ಕೆ ಅಸಮಾಧಾನ

ವಾರ್ತಾ ಭಾರತಿ 9 Jan 2026 9:42 pm

ಥಣಿಸಂದ್ರದ ಒತ್ತುವರಿ ತೆರವು ಪ್ರಕರಣ | ಪರಿಹಾರ ಪಡೆದು ಅಕ್ರಮವಾಗಿ ನಿವೇಶನಗಳ ಮಾರಾಟ : ಬಿಡಿಎ ಸ್ಪಷ್ಟನೆ

ಬೆಂಗಳೂರು : ನಗರದಲ್ಲಿರುವ ಥಣಿಸಂದ್ರದ ಒತ್ತುವರಿ ಭೂಮಿಯನ್ನು ಅರ್ಕಾವತಿ ಲೇಔಟ್‍ಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರವನ್ನು ಪಡೆದ ಭೂಮಾಲಕರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ. ಹೀಗಾಗಿ ಗುರುವಾರ(ಜ.8) ಥಣಿಸಂದ್ರದಲ್ಲಿ ಒತ್ತುವರಿಯನ್ನು ತೆರವು ಮಾಡಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸ್ಪಷ್ಟನೆ ನೀಡಿದೆ. ಈ ಬಗ್ಗೆ ಶುಕ್ರವಾರ ಬಿಡಿಎ ಪ್ರಕಟನೆ ಹೊರಡಿಸಿದ್ದು, ಅರ್ಕಾವತಿ ಲೇಔಟ್‍ಗಾಗಿ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ 2003ರ ಫೆ.3ರಂದು ಪೂರ್ವಭಾವಿ ಅಧಿಸೂಚನೆ ಮತ್ತು 2004ರ ಫೆ.23ರಂದು ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಂದು ಸುತ್ತಿನ ಒತ್ತುವರಿಯನ್ನು ತೆರವುಗೊಳಿಸಿ, ಆಸ್ತಿ ಒಡೆತನವನ್ನು 2004ರ ನ.10ರಂದು ಪಡೆಯಲಾಗಿದೆ. ಇದಕ್ಕೆ ಭೂಮಾಲಕರು ಪರಿಹಾರವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದೆ. 2014ರಲ್ಲಿ ಈ ಬಗ್ಗೆ ಹೈಕೋರ್ಟ್ ವಿವರವಾದ ಆದೇಶವನ್ನು ಹೊರಡಿಸಿದೆ. 2021ರಲ್ಲಿ ಅರ್ಕಾವತಿ ಲೇಔಟ್‍ಗೆ ಸಂಬಂಧಿಸಿ ಹೈಕೋರ್ಟ್ ಸಾಮಾನ್ಯ ಆದೇಶವನ್ನು ಹೊರಡಿಸಿದೆ. ಇದರ ಹೊರತಾಗಿಯೂ, ಭೂಮಾಲಕರು ಅಕ್ರಮವಾಗಿ ಮತ್ತು ವಂಚಿಸಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ. 33 ನಿವೇಶನಗಳ ಖರೀದಿದಾರರು ನ್ಯಾಯಾಲಯ ನೇಮಿಸಿದ ಕೇಶವನಾರಾಯಣ ಸಮಿತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಾಹಿತಿ ನೀಡಿದೆ. ಸಮಿತಿಯು ನೋಟಿಸ್ ನೀಡಿ, ವಿಚಾರಣೆ ನಡೆಸಿ, ಅವು ಅಕ್ರಮ ಎಂದು 2023 ಫೆ.16ರಂದು ಘೋಷಿಸಿ, ಬಿಡಿಎಗೆ ಒಡೆತನ ಪಡೆಯುವಂತೆ ನಿರ್ದೇಶನ ನೀಡಿದೆ. ನಿವೇಶನ ಮಾಲಕರು ಅಕ್ರಮವಾಗಿ ಶೆಡ್‍ಗಳನ್ನು ನಿರ್ಮಿಸಿದ್ದು, ಅಲ್ಲಿ ವಾಸಿಸುತ್ತಿರಲಿಲ್ಲ. ಬದಲಾಗಿ ಶೆಡ್‍ಗಳನ್ನು ಬಾಡಿಗೆಗೆ ನೀಡಿ ಬಾಡಿಗೆ ಪಡೆಯುತ್ತಿದ್ದರು ಎಂದು ಬಿಡಿಎ ಆರೋಪಿಸಿದೆ. ಹೀಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರವನ್ನೂ ಪಾವತಿಸಲಾಗಿದೆ. ನ್ಯಾಯಾಲಯ ಮತ್ತು ಪರಿಶೀಲನಾ ಸಮಿತಿಯಲ್ಲಿ ಬಿಡಿಎ ಪರವಾಗಿ ವಿಚಾರ ನಿರ್ಧಾರವಾಗಿದೆ. ನಿವೇಶನ ಮಾಲಕರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಭೂ ಮಾಲಕರು ಬಿಡಿಎಗೆ ಸೇರಿದ ಭೂಮಿಯಲ್ಲಿ ಅಕ್ರಮವಾಗಿ ಶೆಡ್‍ಗಳಿಂದ ಬಾಡಿಗೆ ಸಂಗ್ರಹಿಸುತ್ತಿದ್ದ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ ಎಂದು ಬಿಡಿಎ ಸ್ಪಷ್ಟಪಡಿಸಿದೆ.

ವಾರ್ತಾ ಭಾರತಿ 9 Jan 2026 9:34 pm

ಎಲ್.ಎಸ್. ನಾಯ್ಕ ಮುಂಡಳ್ಳಿ ನಿಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಹಿರಿಯ ಮುಖಂಡ ಹಾಗೂ ಹಿರಿಯ ಕಾಂಗ್ರೆಸ್ ಧುರೀಣ ಎಲ್.ಎಸ್. ನಾಯ್ಕ ಮುಂಡಳ್ಳಿ (85) ಅವರು ಶುಕ್ರವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳ ಕಾಲ ಸಕ್ರಿಯರಾಗಿದ್ದ ಅವರು, ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು, ಭಟ್ಕಳ ತಾಲೂಕು ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ನಾಮಧಾರಿ ಸಮಾಜದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ನಾಮಧಾರಿ ಸಮಾಜದ ಗುರುಮಠದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಗುರುಮಠದ ಪರಮ ಭಕ್ತರಾಗಿದ್ದ ಎಲ್.ಎಸ್. ನಾಯ್ಕ ಅವರು ನಿಚ್ಚಲಮಕ್ಕೀ ಶ್ರೀ ತಿರುಮಲ ವೆಂಕಟ್ರಮಣ ದೇವರಿಗೆ ಬೆಳ್ಳಿಯ ಪಾಲಕಿ ಹಾಗೂ ಶ್ರೀ ದೇವರಿಗೆ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ಕುಲಗುರುಗಳಾದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪರಮ ಶಿಷ್ಯರಾಗಿದ್ದ ಅವರು, ಭಟ್ಕಳದ ಕರಿಕಲ್ ಪ್ರದೇಶದಲ್ಲಿ ಶ್ರೀ ಗುರುಮಠದ ವತಿಯಿಂದ ಧ್ಯಾನ ಮಂದಿರ ನಿರ್ಮಾಣಕ್ಕೆ ಉಚಿತವಾಗಿ ಭೂಮಿಯನ್ನು ದಾನವಾಗಿ ನೀಡಿದ್ದರು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ಅನೇಕ ಬಡವರಿಗೆ ಸಹಾಯ ಹಸ್ತ ಚಾಚುತ್ತಾ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದರು. ಅವರ ಸಮಾಜಮುಖಿ ಸೇವೆಗಳು ಅವರಿಗೆ ಜನಮಾನಸದಲ್ಲಿ ಉತ್ತಮ ಗೌರವ ಮತ್ತು ಹೆಸರು ತಂದುಕೊಟ್ಟಿದ್ದವು. ಮೃತರು ಇಬ್ಬರು ಗಂಡು ಮಕ್ಕಳು ಹಾಗೂ ನಾಲ್ವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸಮಾಜದ ಮುಖಂಡರು, ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಸಾರ್ವಜನಿಕ ವಲಯದ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 9 Jan 2026 9:29 pm

ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು : ಇಲ್ಲಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು, 3 ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಶಾಲೆಯ ಇ-ಮೇಲ್‍ಗೆ ಕಿಡಿಗೇಡಿಗಳು ಶುಕ್ರವಾರ ಸಂದೇಶ ಕಳುಹಿಸಿದ್ದಾರೆ. ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬರುತ್ತಿದ್ದಂತೆ ಎಚ್ಚೆತ್ತ ಪ್ರಾಂಶುಪಾಲ ಪಿ.ಎಂ.ಪ್ರಕಾಶ್ ಅವರು ಸದಾಶಿವನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಈ ವೇಳೆ ಯಾವುದೇ ಆರ್‌ಡಿಎಕ್ಸ್ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ಖಚಿತವಾಗಿದೆ. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 9 Jan 2026 9:27 pm

ಐದನೇ ಆ್ಯಶಸ್ ಟೆಸ್ಟ್| ವಿರಾಟ್ ಕೊಹ್ಲಿ, ವಿವಿ ರಿಚರ್ಡ್ಸ್ ದಾಖಲೆ ಮುರಿದ ಟ್ರಾವಿಸ್ ಹೆಡ್

ಸಿಡ್ನಿ, ಜ.9: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಕೊನೆಗೊಂಡಿರುವ ಐದನೇ ಹಾಗೂ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಇಂಗ್ಲೆಂಡ್ ತಂಡವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ಮಿಂಚಿದ್ದಾರೆ. ಎಡಗೈ ಬ್ಯಾಟರ್ ಹೆಡ್ ಮೊದಲ ಇನಿಂಗ್ಸ್‌ನಲ್ಲಿ ಕೇವಲ 166 ಎಸೆತಗಳಲ್ಲಿ 163 ರನ್ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 29 ರನ್ ಗಳಿಸಿದ್ದರು. ಇದರೊಂದಿಗೆ ಪಂದ್ಯದಲ್ಲಿ ಒಟ್ಟು 192 ರನ್ ಗಳಿಸಿ ‘ಪಂದ್ಯಶ್ರೇಷ್ಠ’ ಪ್ರಶಸ್ತಿಗೆ ಭಾಜನರಾದರು. ಹೆಡ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 11ನೇ ಬಾರಿ ‘ಪಂದ್ಯಶ್ರೇಷ್ಠ’ ಪ್ರಶಸ್ತಿಗೆ ಆಯ್ಕೆಯಾದರು. ಈ ಮೂಲಕ ಟೆಸ್ಟ್‌ನಲ್ಲಿ ಗರಿಷ್ಠ ‘ಪಂದ್ಯಶ್ರೇಷ್ಠ’ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. ಕಳೆದ ವರ್ಷ ಟೆಸ್ಟ್ ಕ್ರಿಕೆಟಿಗೆ ವಿದಾಯ ಹೇಳಿರುವ ಕೊಹ್ಲಿ ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಮಾಲ್ಕಂ ಮಾರ್ಷಲ್, ಮ್ಯಾಥ್ಯೂ ಹೇಡನ್, ಕೆವಿನ್ ಪೀಟರ್ಸನ್, ಆರ್.ಅಶ್ವಿನ್, ಯೂನಿಸ್ ಖಾನ್, ವಿವಿ ರಿಚರ್ಡ್ಸ್, ಅನಿಲ್ ಕುಂಬ್ಳೆ ಹಾಗೂ ಸ್ಟುವರ್ಟ್ ಬ್ರಾಡ್ ಕೂಡ ಟೆಸ್ಟ್ ಕ್ರಿಕೆಟ್‌ನಲ್ಲಿ 10 ಬಾರಿ ‘ಪಂದ್ಯಶ್ರೇಷ್ಠ’ ಪ್ರಶಸ್ತಿ ಸ್ವೀಕರಿಸಿದ್ದರು. ಹೆಡ್ ಅವರು ಇಮ್ರಾನ್ ಖಾನ್, ರವೀಂದ್ರ ಜಡೇಜ, ಅರವಿಂದ ಡಿಸಿಲ್ವ, ರಂಗನ ಹೆರಾತ್, ಶಾನ್ ಪೊಲಾಕ್, ಕೇನ್ ವಿಲಿಯಮ್ಸನ್, ಗ್ಲೆನ್ ಮೆಕ್‌ಗ್ರಾತ್, ಡೇನಿಯಲ್ ವೆಟೋರಿ, ಅಲನ್ ಬಾರ್ಡರ್, ಶಿವನಾರಾಯಣ ಚಂದರ್‌ಪಾಲ್ ಹಾಗೂ ರಾಹುಲ್ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದರು. ದಕ್ಷಿಣ ಆಫ್ರಿಕಾದ ಲೆಜೆಂಡರಿ ಆಲ್‌ರೌಂಡರ್ ಜಾಕಸ್ ಕಾಲಿಸ್ 23 ಬಾರಿ ‘ಪಂದ್ಯಶ್ರೇಷ್ಠ’ ಪ್ರಶಸ್ತಿ ಗೆಲ್ಲುವುದರೊಂದಿಗೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಟ್ರಾವಿಸ್ ಹೆಡ್ ಅವರು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತನ್ನ ಚೊಚ್ಚಲ ಶತಕ ದಾಖಲಿಸಿದ್ದರು.

ವಾರ್ತಾ ಭಾರತಿ 9 Jan 2026 9:26 pm

ಆನ್‌ಲೈನ್ ಸಾಲದ ಹೆಸರಿನಲ್ಲಿ ವಂಚನೆ: ಪ್ರಕರಣ ದಾಖಲು

ಹೆಬ್ರಿ, ಜ.9: ಆನ್‌ಲೈನ್ ಸಾಲದ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ ಸೋಮೇಶ್ವರದ ಕೆಪ್ಲಿ ನಿವಾಸಿ ರಮೇಶ ಎಂಬವರಿಗೆ ಜ.2ರಂದು ಬಜಾಜ್ ಫೈನಾನ್ಸ್‌ನಿಂದ ರವಿ ಕುಮಾರ್ ಮಾತನಾಡುವುದಾಗಿ ಹೇಳಿ ಕರೆ ಮಾಡಿದ್ದು, ಶೇ.3ರ ಬಡ್ಡಿದರದಲ್ಲಿ ಆನ್‌ಲೈನ್ ಲೋನ್ ಕೋಡುವುದಾಗಿ ರಮೇಶ್ ಅವರನ್ನು ನಂಬಿಸಿದ್ದನು. 5 ವರ್ಷಕ್ಕೆ ಪ್ರತಿ ತಿಂಗಳು 6289ರೂ. ಹಣ ಪಾವತಿಸಲು ಬರುತ್ತದೆ ಎಂದು ನಂಬಿಸಿ ಬೇರೆ ಬೇರೆ ಕಾರಣ ಹೇಳಿ ಜ.2ರಿಂದ ಜ.5ರವರೆಗೆ ಹಂತ ಹಂತವಾಗಿ ಒಟ್ಟು 36 ಟ್ರಾಜೆಂಕ್ಷನ್ ಮೂಲಕ 2,19500ರೂ. ಹಣವನ್ನು ಹಾಕಿಸಿಕೊಂಡು ಮೋಸ ಮಾಡಿರುವುದಾಗಿ ದೂರಲಾಗಿದೆ.

ವಾರ್ತಾ ಭಾರತಿ 9 Jan 2026 9:24 pm

Explainer: ಪ್ರತಿಬಾರಿ ಪ.ಬಂಗಾಳಕ್ಕೆ ಕೇಂದ್ರ ತನಿಖಾ ತಂಡ ಕಾಲಿಟ್ಟಾಗ ಮಮತಾ ಬ್ಯಾನರ್ಜಿ ಬೀದಿಗಿಳಿಯುವುದೇಕೆ? ಟಿಎಂಸಿಗೇನು ಲಾಭ?

ಜಾರಿ ನಿರ್ದೇಶನಾಲಯದ ದಾಳಿಯ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ರಣತಂತ್ರ ಹೆಣೆದಿದ್ದಾರೆ. I-PAC ಕಚೇರಿಗೆ ಧಾವಿಸಿ ದಾಖಲೆಗಳನ್ನು ವಶಪಡಿಸಿಕೊಂಡು, ಬಿಜೆಪಿ ಮತ್ತು ಕೇಂದ್ರ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅವರ 'ರಸ್ತೆ ಹೋರಾಟಗಾರ್ತಿ' ವ್ಯಕ್ತಿತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಮುಂಬರುವ ಚುನಾವಣೆಗಳಿಗೆ ಟಿಎಂಸಿಗೆ ಹೊಸ ಉತ್ತೇಜನ ನೀಡಿದೆ.

ವಿಜಯ ಕರ್ನಾಟಕ 9 Jan 2026 9:23 pm

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್

‘ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ’

ವಾರ್ತಾ ಭಾರತಿ 9 Jan 2026 9:22 pm

ಸೋದರ ಸಂಬಂಧಿ ನಾನು ಮೃತಪಟ್ಟಿದ್ದೇನೆ ಎಂದು ಭಾವಿಸಿದ್ದರು: ಭಯಾನಕ ಘಟನೆ ನೆನಪಿಸಿದ ಜೆಮಿಮಾ ರೊಡ್ರಿಗ್ಸ್

ಹೊಸದಿಲ್ಲಿ, ಜ.9: ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಹಾಗೂ 2025ರ ಮಹಿಳೆಯರ ವಿಶ್ವಕಪ್ ವಿಜೇತ ತಂಡದ ಸದಸ್ಯೆ ಜೆಮಿಮಾ ರೊಡ್ರಿಗ್ಸ್, ತನ್ನ ಬಾಲ್ಯದ ಭಯಾನಕ ಘಟನೆಯೊಂದನ್ನು ನೆನಪಿಸಿಕೊಂಡರು. ಆ ಘಟನೆಯು ಕುಟುಂಬ ಸದಸ್ಯರಿಗೆ ಆಘಾತ ತಂದಿತ್ತು. ಘಟನೆ ನಡೆದಾಗ ನನಗೆ ಎಂಟು ವರ್ಷ ವಯಸ್ಸಾಗಿತ್ತು ಎಂದಿದ್ದಾರೆ. ತನ್ನ ಸಹೋದರ ಸಂಬಂಧಿಯೊಂದಿಗೆ ಚರ್ಚ್ ಕಾರ್ಯಕ್ರಮಕ್ಕಾಗಿ ಅಡಿಟೋರಿಯಂಗೆ ತೆರಳಿದ್ದೆ. ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಡಿಟೋರಿಯಂನ ಮೊದಲ ಮಹಡಿಯಿಂದ ಕೆಳಗೆ ಬಿದ್ದಿದ್ದೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದೆ ಎಂದು ಇತ್ತೀಚೆಗೆ ನೀಡಿರುವ ಸಂದರ್ಶನವೊಂದರಲ್ಲಿ ಜೆಮಿಮಾ ಹೇಳಿದ್ದಾರೆ. ‘‘ನಾವು ಚರ್ಚ್ ಕಾರ್ಯಕ್ರಮಕ್ಕಾಗಿ ಸಭಾಂಗಣಕ್ಕೆ ತೆರಳಿದ್ದಾಗ ಎಲ್ಲ ಮಕ್ಕಳು ಸಭಾಂಗಣದಲ್ಲಿ ಆಟವಾಡಲು ತೆರಳಿದರು. ವಯಸ್ಕರು ಸಭಾಂಗಣದ ಒಳಗಿದ್ದರು. ಮಕ್ಕಳೆಲ್ಲರೂ ಮೋಜಿಗಾಗಿ ಪರಸ್ಪರ ಚಪ್ಪಲ್ ಎಸೆಯುವ ಆಟ ಆಡಲು ಆರಂಭಿಸಿದ್ದೆವು. ನನ್ನ ಸೋದರ ಸಂಬಂಧಿ ಚಪ್ಪಲ್‌ವೊಂದನ್ನು ಎಸೆದಿದ್ದಳು. ನಾನು ಅದನ್ನು ಪಡೆಯಲು ಇನ್ನೊಂದು ಬದಿಗೆ ಜಿಗಿಯಲು ನಿರ್ಧರಿಸಿದಾಗ ಬಾಕ್ಸ್ ಮೇಲೆ ಕಾಲಿಟ್ಟೆ. ಮೊದಲ ಮಹಡಿಯಿಂದ ಕೆಳಗೆ ಬಿದ್ದೆ. ಕೆಳಗೆ ಯಾರೋ ಒಬ್ಬರು ಕುಳಿತು ಆಹಾರ ತಿನ್ನುತ್ತಿದ್ದರು. ನಾನು ಅವರ ತಲೆಯ ಮೇಲೆ ಬಿದ್ದೆ. ಆಗ ನನ್ನ ಸೋದರ ಸಂಬಂಧಿಗಳು ನಾನು ಮೃತಪಟ್ಟಿದ್ದೇನೆಂದು ಭಾವಿಸಿದ್ದರು’’ಎಂದು ಜೆಮಿಮಾ ಹೇಳಿದರು. 25ರ ವಯಸ್ಸಿನ ಜೆಮಿಮಾ ಅಕ್ಟೋಬರ್‌ನಲ್ಲಿ ನಡೆದಿದ್ದ ಮಹಿಳೆಯರ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್‌ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ 127 ರನ್ ಗಳಿಸಿ ಭಾರತ ತಂಡವು ಫೈನಲ್‌ಗೆ ತಲುಪುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಮಹಿಳೆಯರ ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡವು ಗರಿಷ್ಠ ರನ್ ಯಶಸ್ವಿಯಾಗಿ ಬೆನ್ನಟ್ಟುವಲ್ಲಿ ನೆರವಾಗಿದ್ದರು. 2026ರ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್‌ನಲ್ಲಿ(ಡಬ್ಲ್ಯುಪಿಎಲ್)ಜೆಮಿಮಾ ರೊಡ್ರಿಗ್ಸ್ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ನಾಯಕಿಯಾಗಿ ಮುನ್ನಡೆಸಲು ಸಜ್ಜಾಗಿದ್ದಾರೆ.

ವಾರ್ತಾ ಭಾರತಿ 9 Jan 2026 9:22 pm

ಶೀರೂರು ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯಿಂದ ವೈಭವದ ಪುರಪ್ರವೇಶ

ಉಡುಪಿ, ಜ.9: ಜ.18ರಂದು ನಡೆಯುವ ಶೀರೂರು ಪರ್ಯಾಯದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪುರಪ್ರವೇಶ ಕಾರ್ಯ ಕ್ರಮ ಶುಕ್ರವಾರ ವೈಭವಯುತವಾಗಿ ನಡೆಯಿತು. ಪರ್ಯಟನ ಬಳಿಕ ಶೀರೂರು ಮೂಲಮಠಕ್ಕೆ ಆಗಮಿಸಿದ ಸ್ವಾಮೀಜಿ, ಅಲ್ಲಿಂದ ಪಟ್ಟದ ದೇವರ ಸಮೇತ ಕಡಿಯಾಳಿಗೆ ಆಗಮಿಸಿ, ಅಲ್ಲಿ ಶ್ರೀಮಹಿಷ ಮರ್ದಿನಿ ದೇವರ ದರ್ಶನ ಪಡೆದರು. ಕಡಿಯಾಳಿ ನಿರ್ಮಿಸಲಾದ ವೇದಿಕೆಯಲ್ಲಿ ಸ್ವಾಮೀಜಿ, ಗಣ್ಯರ ಸಮ್ಮುಖದಲ್ಲಿ ಭವ್ಯ ಶೋಭಾಯಾತ್ರೆ ಯನ್ನು ವೀಕ್ಷಿಸಿದರು. ಕಡಿಯಾಳಿಯಿಂದ ಹೊರಟ ಪುರಪ್ರವೇಶ ಮೆರವಣಿಗೆ, ಕಲ್ಸಂಕ, ಸಿಟಿಬಸ್ ನಿಲ್ದಾಣ, ಹನುಮಾನ್ ವೃತ್ತ, ಕನಕದಾಸ ರಸ್ತೆ ಮೂಲಕ ಕೃಷ್ಣ ಮಠದ ರಥಬೀದಿ ತಲುಪಿತು. ಉಡುಪಿಯ ಸ್ಥಳೀಯ ಜಾನಪದ ತಂಡಗಳು, ವಿವಿಧ ಕಲಾತಂಡ, ಸಾಂಸ್ಕೃತಿಕ ತಂಡಗಳು ಹಾಗೂ ವಿಶೇಷ ಟ್ಯಾಬ್ಲೋಗಳು ಮೆರವಣಿಗೆಗೆ ಮೆರುಗು ನೀಡಿದವು. ನಂತರ ಸ್ವಾಮೀಜಿ ವಿಶೇಷ ಅಲಂಕೃತ ವಾಹನದಲ್ಲಿ ಪುರಪ್ರವೇಶ ಮಾಡಿದರು. ರಥಬೀದಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದ ಬಳಿಕ ಅವರು, ಶ್ರೀಚಂದ್ರಮೌಳೀಶ್ವರ, ಶ್ರೀ ಅನಂತೇಶ್ವರ ಹಾಗೂ ಶ್ರೀಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಮಠದಿಂದ ಶಿರೂರು ಸ್ವಾಮೀಜಿಯನ್ನು ಗೌರವಿಸ ಲಾಯಿತು. ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ತದನಂತರ ರಥಬೀದಿಯಲ್ಲಿ ಹಾಕಲಾದ ವೇದಿಕೆಯಲ್ಲಿ ಉಡುಪಿ ನಗರಸಭೆಯ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಶಿರೂರು ಸ್ವಾಮೀಜಿ ಅವರನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಪೌರ ಸಮ್ಮಾನ ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಸುವರ್ಣ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯ, ಕಾರ್ಯದರ್ಶಿ ಮೋಹನ್ ಭಟ್, ಕೋಶಾಧಿಕಾರಿ ಜಯ ಪ್ರಕಾಶ್ ಕೆದ್ಲಾಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Jan 2026 9:14 pm

ಗ್ರಾ.ಪಂ.ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್ ಸಂಖ್ಯೆ ಪ್ರದರ್ಶಿಸಲು ಪ್ರಿಯಾಂಕ್ ಖರ್ಗೆ ನಿರ್ದೇಶನ

ಬೆಂಗಳೂರು : ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಕಾಲ್ ಸೆಂಟರ್ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು. ಶುಕ್ರವಾರ ನಗರದಲ್ಲಿ ಇ-ಸ್ವತ್ತು ಸೌಲಭ್ಯವನ್ನು ಜಾರಿಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರು ಅವರು ಮಾತನಾಡಿದರು. ಇ-ಸ್ವತ್ತು ಬಗ್ಗೆ ಬರುವ ಯಾವುದೆ ದೂರುಗಳನ್ನು ಆದ್ಯತೆಯ ಮೇಲೆ ಪರಿಹರಿಸಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಗ್ರಾಮೀಣ ಜನರು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿದ್ದು, ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು. ಇ-ಸ್ವತ್ತು ತಂತ್ರಾಂಶದಲ್ಲಿನ ಕೆಲವು ಲೋಪಗಳ ಬಗ್ಗೆ ಕೆಲವು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. ತಂತ್ರಾಂಶವನ್ನು ಎನ್.ಐ.ಸಿ ಸಿದ್ಧಪಡಿಸಿದ್ದು ಲೋಪಗಳನ್ನು ಸರಿಪಡಿಸಲು ವಿಳಂಬವಾಯಿತು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ವಿಡಿಯೋ ಕಾನ್ಫರೆನ್ಸ್‌ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಯ ಕಾರ್ಯದರ್ಶಿ ಡಿ.ರಂದೀಪ್, ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 9 Jan 2026 9:13 pm

ಅಂಕಿತಾ ಭಂಡಾರಿ ಹತ್ಯೆ; ಏನಿದು ಪ್ರಕರಣ, ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿದ್ದು ಯಾಕೆ?

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ಹಿರಿಯ ಬಿಜೆಪಿ ನಾಯಕರೊಬ್ಬರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಂಕಿತಾ ಹತ್ಯೆಯಾಗಿ ಮೂರು ವರ್ಷಗಳ ನಂತರ ಹಾಗೂ ಪ್ರಕರಣದ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದ ಏಳು ತಿಂಗಳ ಬಳಿಕ ಈ ಆರೋಪಗಳು ಹೊರಬಿದ್ದಿದ್ದು, ಉತ್ತರಾಖಂಡದಾದ್ಯಂತ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ವಿರೋಧ ಪಕ್ಷಗಳು ಹಾಗೂ ನಾಗರಿಕ ಸಮಾಜ ಸಂಘಟನೆಗಳು ಇಡೀ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ. ಆಡಳಿತ ಪಕ್ಷ ಬಿಜೆಪಿಯ ಕೆಲ ಹಿರಿಯ ನಾಯಕರು ಸಿಬಿಐ ತನಿಖೆಯ ಬೇಡಿಕೆಯನ್ನು ಬೆಂಬಲಿಸಿದರೂ, ಪಕ್ಷದ ಆಡಳಿತ ಮಂಡಳಿ ಈ ಕುರಿತು ಯಾವುದೇ ಸ್ಪಷ್ಟ ಬದ್ಧತೆ ತೋರಿಸಿಲ್ಲ. ಏನಿದು ಪ್ರಕರಣ? 19 ವರ್ಷದ ಅಂಕಿತಾ ಭಂಡಾರಿ, ಋಷಿಕೇಶ ಸಮೀಪದ ವನಂತರಾ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಕೆಲಸಕ್ಕೆ ಸೇರಿ ಒಂದು ತಿಂಗಳೂ ಆಗಿರಲಿಲ್ಲ. ಸೆಪ್ಟೆಂಬರ್ 2022ರಲ್ಲಿ ಅವರು ನಾಪತ್ತೆಯಾಗಿದ್ದರು. ಆರು ದಿನಗಳ ಬಳಿಕ ಅವರ ಶವ ಕಾಲುವೆಯಲ್ಲಿ ಪತ್ತೆಯಾಯಿತು. ಐಪಿಎಸ್ ಅಧಿಕಾರಿ ರೇಣುಕಾ ದೇವಿ ನೇತೃತ್ವದ ವಿಶೇಷ ತನಿಖಾ ತಂಡ (SIT) ಪ್ರಕರಣದ ತನಿಖೆ ನಡೆಸಿತು. ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಅಪರಾಧ ಸ್ಥಳವನ್ನು ಮರುಸೃಷ್ಟಿಸಿ, ವಿಧಿವಿಜ್ಞಾನ ವಿಶ್ಲೇಷಣೆ ನಡೆಸಲಾಯಿತು. ಈ ತನಿಖೆಯಲ್ಲಿ ಅಂಕಿತಾಳನ್ನು ಹತ್ಯೆ ಮಾಡಿ ಕಾಲುವೆಗೆ ತಳ್ಳಲಾಗಿದೆ ಎಂಬುದು ಪತ್ತೆಯಾಯಿತು. ರೆಸಾರ್ಟ್‌ನ ಮಾಲೀಕ, ಬಿಜೆಪಿಯ ಮಾಜಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಹಾಗೂ ಅವರ ಸಹಚರರು ಈ ಕೊಲೆ ನಡೆಸಿದ್ದಾರೆ ಎಂದು ಎಸ್‌ಐಟಿ ತನಿಖೆಯಲ್ಲಿ ತಿಳಿದುಬಂದಿದೆ. ಲೈಂಗಿಕ ಸೇವೆಗಳನ್ನು ಒದಗಿಸಲು ಅಂಕಿತಾ ನಿರಾಕರಿಸಿದ್ದೇ ಕೊಲೆಗೆ ಕಾರಣ ಎಂದು ತನಿಖೆ ಹೇಳಿದೆ. ಜನವರಿ 30, 2023ರಂದು 500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳು 302 (ಕೊಲೆ), 354A (ಲೈಂಗಿಕ ಕಿರುಕುಳ), 201 (ಸಾಕ್ಷ್ಯ ನಾಶ) ಹಾಗೂ ಗ್ಯಾಂಗ್‌ಸ್ಟರ್ಸ್ ಕಾಯ್ದೆಯಡಿ ಆರೋಪಗಳನ್ನು ಪಟ್ಟಿ ಮಾಡಲಾಗಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಕೋಟ್ದ್ವಾರ್ ನ್ಯಾಯಾಲಯವು ಆರ್ಯ ಮತ್ತು ಅವರ ಇಬ್ಬರು ಸಹಚರರಾದ ಸೌರಭ್ ಭಾಸ್ಕರ್ ಹಾಗೂ ಅಂಕಿತ್ ಗುಪ್ತಾ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ತನಿಖೆಯ ಆರಂಭದಿಂದಲೇ ವಿಐಪಿ ಭಾಗಿಯಾಗಿರುವ ಬಗ್ಗೆ ವದಂತಿಗಳು ಹರಡಿದ್ದವು. ಆದರೆ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನಂತರ, ಇತ್ತೀಚೆಗೆ ಸೋರಿಕೆಯಾದ ಆಡಿಯೋ ಕಾರಣದಿಂದ ಊಹಾಪೋಹಗಳು ಹೆಚ್ಚಾಗಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. “ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಲಾಗಿದೆ. ಹೌದು, ಅದರಲ್ಲಿ ವಿಐಪಿ ಬಗ್ಗೆ ಉಲ್ಲೇಖವಿತ್ತು. ಆದರೆ ಅದು ವಿಐಪಿ ಕೊಠಡಿಗೆ ಸಂಬಂಧಪಟ್ಟದ್ದು. ಮೂವರು ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಿದ ಆಧಾರದ ಮೇಲೆ ನಾವು ಸಂಗ್ರಹಿಸಿದ ಮಾಹಿತಿ ಇದಾಗಿದೆ” ಎಂದು ತನಿಖೆಯ ಭಾಗವಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಘಟನೆಯ ನಂತರ ವನಂತರಾ ರೆಸಾರ್ಟ್ ಅನ್ನು ಭಾಗಶಃ ಕೆಡವಿ, ಅಂದಿನಿಂದ ಮುಚ್ಚಲಾಗಿದೆ. ಊರ್ಮಿಳಾ ಸನವಾರ್ ಹೇಳಿದ್ದೇನು? ಹರಿದ್ವಾರದ ಮಾಜಿ ಬಿಜೆಪಿ ಶಾಸಕ ಸುರೇಶ್ ರಾಥೋಡ್ ಅವರ ಎರಡನೇ ಪತ್ನಿ ಎಂದು ಹೇಳಿಕೊಳ್ಳುವ ಊರ್ಮಿಳಾ ಸನವಾರ್ ಕೆಲವು ವೀಡಿಯೊಗಳನ್ನು ಪೋಸ್ಟ್ ಮಾಡಿದ ನಂತರ ಹೊಸ ಪ್ರತಿಭಟನೆಗಳು ಭುಗಿಲೆದ್ದವು. ಆರಂಭದಲ್ಲಿ ಅವರು “ಗಟ್ಟು” ಎಂಬ ನಾಯಕನಿಗೆ “ಹೆಚ್ಚುವರಿ ಸೇವೆಗಳನ್ನು” ನೀಡಲು ನಿರಾಕರಿಸಿದ್ದಕ್ಕಾಗಿ ಅಂಕಿತಾಳನ್ನು ಕೊಲ್ಲಲಾಗಿದೆ ಎಂದು ಹೇಳುವ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ನಂತರ ಪೋಸ್ಟ್ ಮಾಡಿದ ಮತ್ತೊಂದು ವೀಡಿಯೊದಲ್ಲಿ, ತಮ್ಮ ಮತ್ತು ರಾಥೋಡ್ ನಡುವಿನ ಸಂಭಾಷಣೆಯ ಆಡಿಯೋವನ್ನು ಪ್ಲೇ ಮಾಡಿದ್ದಾರೆ. ಇದರಿಂದ ಉತ್ತರಾಖಂಡದ ಉಸ್ತುವಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ವಿರುದ್ಧ ಆರೋಪಗಳು ಕೇಳಿಬಂದವು. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಗೌತಮ್, ಸನವಾರ್ ಬಿಜೆಪಿಗೆ ಮಾನಹಾನಿ ಉಂಟುಮಾಡುತ್ತಿದ್ದು, ಆ ಆಡಿಯೋ ಕ್ಲಿಪ್‌ಗಳು ಎಐ ಮೂಲಕ ಸೃಷ್ಟಿಸಲ್ಪಟ್ಟವು ಎಂದು ಹೇಳಿದ್ದಾರೆ. ಐಟಿ ಕಾಯ್ದೆಯಡಿ ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಸನವಾರ್ ಮತ್ತು ರಾಥೋಡ್ ವಿರುದ್ಧ ಹರಿದ್ವಾರ ಹಾಗೂ ಡೆಹ್ರಾಡೂನ್‌ನಲ್ಲಿ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಸಿಬಿಐ ತನಿಖೆಗೆ ಒತ್ತಾಯಿಸಿದ ಕುಟುಂಬ ಸನವಾರ್ ಹೇಳಿಕೆಯ ನಂತರ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, ಅಂಕಿತಾ ಭಂಡಾರಿ ಅವರ ತಂದೆ, ತಮ್ಮ ಮಗಳನ್ನು “ವಿಐಪಿ” ಕಾರಣದಿಂದ ಕೊಲೆ ಮಾಡಲಾಗಿದೆ. ಆದರೆ ಆ ವ್ಯಕ್ತಿಯ ಗುರುತು ಇನ್ನೂ ಬಹಿರಂಗವಾಗಿಲ್ಲ ಎಂದು ಹೇಳಿದ್ದಾರೆ. ವಿಐಪಿಯನ್ನು ಬಂಧಿಸಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಸರ್ಕಾರವನ್ನು ಅವರು ಮನವಿ ಮಾಡಿದ್ದಾರೆ. ರಾಜಕೀಯ ಜಟಾಪಟಿ ಅಂಕಿತಾ ಕೊಲೆ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಎಸ್‌ಐಟಿ ತನಿಖೆಯಲ್ಲಿನ ಹಲವು “ಲೋಪದೋಷಗಳನ್ನು” ಪಕ್ಷ ಎತ್ತಿ ತೋರಿಸಿದ್ದು, ಬಿಜೆಪಿ ತನ್ನ ಹಿರಿಯ ನಾಯಕರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದೆ. ಅಂಕಿತಾ ಅವರ ಮೃತದೇಹ ಪತ್ತೆಯಾದ ನಂತರ ಸ್ಥಳೀಯ ಬಿಜೆಪಿ ಶಾಸಕಿ ರೇಣು ಬಿಶ್ತ್ ಅವರ ಆದೇಶದ ಮೇರೆಗೆ ಸಾಕ್ಷ್ಯಗಳನ್ನು “ನಾಶಪಡಿಸಲು” ರೆಸಾರ್ಟ್‌ನ ಕೆಲವು ಭಾಗಗಳನ್ನು ಕೆಡವಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಏತನ್ಮಧ್ಯೆ, ತಮ್ಮ ವಿರುದ್ಧದ ಆರೋಪಗಳು ಸುಳ್ಳು ಎಂದು ಹೇಳಿರುವ ದುಷ್ಯಂತ್ ಗೌತಮ್, ಅವು ನಿಜವೆಂದು ಸಾಬೀತಾದರೆ ತಮ್ಮ ರಾಜಕೀಯ ಮತ್ತು ಸಾಮಾಜಿಕ ಜೀವನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಸನವಾರ್–ರಾಥೋಡ್ ಯಾರು? ಊರ್ಮಿಳಾ ಸನವಾರ್ ಮತ್ತು ಸುರೇಶ್ ರಾಥೋಡ್ ಸುದ್ದಿಯಾಗಿರುವುದು ಇದೇ ಮೊದಲಲ್ಲ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಏಕರೂಪ ನಾಗರಿಕ ಸಂಹಿತೆಯಡಿ ಬಹುಪತ್ನಿತ್ವ ನಿಷೇಧವನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಥೋಡ್ ಅವರನ್ನು ಬಿಜೆಪಿ ಪಕ್ಷದಿಂದ ಹೊರಹಾಕಲಾಗಿತ್ತು. ಬಳಿಕ ರಾಥೋಡ್, ನಾವು ಮದುವೆಯಾಗಿಲ್ಲ; ಸಿನಿಮಾಕ್ಕಾಗಿ ಹೀಗೆ ಜತೆಯಾಗಿ ನಟಿಸಿದ್ದೇವೆ ಎಂದು ಹೇಳಿದ್ದರು. ತನಿಖೆಗೆ ಒತ್ತಾಯಿಸಿದ ಬಿಜೆಪಿ ನಾಯಕರು ಹರಿದ್ವಾರ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಯಾವುದೇ ನಾಯಕರು ಎಷ್ಟೇ ಹಿರಿಯರಾಗಿದ್ದರೂ ಗಂಭೀರ ಆರೋಪಗಳಿದ್ದರೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಹಿರಿಯ ಬಿಜೆಪಿ ನಾಯಕಿ ಹಾಗೂ ಮಾಜಿ ಸಚಿವೆ ವಿಜಯ ಬರ್ತ್ವಾಲ್ ಕೂಡ ಹೊಸ ತನಿಖೆಗೆ ಒತ್ತಾಯಿಸಿದ್ದಾರೆ. “ಉತ್ತರಾಖಂಡದಲ್ಲಿ ಇದು ನಡೆದಿರುವುದು ನಾಚಿಕೆಗೇಡಿನ ಸಂಗತಿ. ನಮ್ಮ ಹೆಣ್ಣುಮಕ್ಕಳ ಮೇಲೆ ಅನ್ಯಾಯ ಮುಂದುವರಿದರೆ, ನಾವು ದೇವಭೂಮಿಯ ನಿವಾಸಿಗಳೆಂದು ಕರೆದುಕೊಳ್ಳಲು ಸಾಧ್ಯವಿಲ್ಲ. ಆರೋಪಿಗಳಿಗೆ ಶಿಕ್ಷೆ ವಿಧಿಸಿದರೂ ಇನ್ನೂ ಹಲವು ಪ್ರಶ್ನೆಗಳು ಉಳಿದಿವೆ” ಎಂದು ಅವರು ಹೇಳಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಸನವಾರ್ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಅರಣ್ಯ ಸಚಿವ ಸುಬೋಧ್ ಉನಿಯಾಲ್ ಆರೋಪಗಳಿಗೆ ಪುರಾವೆ ತರುವಂತೆ ಹೇಳಿದ್ದಾರೆ. ಬಿಜೆಪಿ ರಾಜ್ಯಸಭಾ ಸಂಸದ ನರೇಶ್ ಬನ್ಸಾಲ್, ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ ಚಳುವಳಿ “ರಾಜಕೀಯ ಹಾಗೂ ಅರಾಜಕತಾವಾದಿ ಶಕ್ತಿಗಳ ಕೈಗೆ ಬೀಳುತ್ತಿದೆ” ಎಂದು ಟೀಕಿಸಿದ್ದಾರೆ. UKSSSC ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ನಡೆದ ಭಾರೀ ಪ್ರತಿಭಟನೆಗಳ ಬಳಿಕ, ಹೊಸ ಪ್ರತಿಭಟನೆಗಳು ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ತರುತ್ತಿವೆ. ಹೆಚ್ಚಿದ ವಲಸೆ ಮತ್ತು ನಿರುದ್ಯೋಗ ಬಿಕ್ಕಟ್ಟಿನ ಕುರಿತೂ ಜನರಲ್ಲಿ ಆಕ್ರೋಶವಿದೆ. ಏನಂತಾರೆ ಧಾಮಿ? ಅಂಕಿತಾ ಕೊಲೆ ಪ್ರಕರಣದ ತನಿಖೆಯಲ್ಲಿ ಯಾರನ್ನೂ ರಕ್ಷಿಸಿಲ್ಲ ಮತ್ತು ಮುಂದೆಯೂ ರಕ್ಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಧಾಮಿ ಹೇಳಿದ್ದಾರೆ. ಅಂಕಿತಾ ಅವರ ಪೋಷಕರನ್ನು ಭೇಟಿ ಮಾಡಿದ ಅವರು, ಆಕೆಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಪೌರಿಯಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜು ದೋಭ್ (ಶ್ರೀಕೋಟ್) ಅನ್ನು ‘ದಿವಂಗತ ಅಂಕಿತಾ ಭಂಡಾರಿ ಸರ್ಕಾರಿ ನರ್ಸಿಂಗ್ ಕಾಲೇಜು’ ಎಂದು ಮರುನಾಮಕರಣ ಮಾಡುವುದಾಗಿ ಅವರು ಘೋಷಿಸಿದ್ದಾರೆ. ಆದರೆ, ಪ್ರತಿಭಟನಾಕಾರರು ಈ ಭೇಟಿಯನ್ನು ತೋರಿಕೆಗೆ ಮಾಡಿದ ಕ್ರಮ ಎಂದು ಟೀಕಿಸಿದ್ದಾರೆ. ವಿರೋಧ ಪಕ್ಷದ ನಿಲುವೇನು? ಉತ್ತರಾಖಂಡದಲ್ಲಿ ಬಿಜೆಪಿಯ ಪ್ರಭಾವವನ್ನು ಕುಗ್ಗಿಸಲು ವಿರೋಧ ಪಕ್ಷಗಳು ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಕಾಂಗ್ರೆಸ್ ಸಣ್ಣ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಂಡರೆ, ಉತ್ತರಾಖಂಡ ಕ್ರಾಂತಿ ದಳದಂತಹ ಪಕ್ಷಗಳು 2027ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಸವಾಲು ನೀಡಬಹುದು ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಹಿರಿಯ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಾನಾ, “2027ರ ಚುನಾವಣೆಯ ಬಗ್ಗೆ ಪಕ್ಷಕ್ಕೆ ಭರವಸೆ ಇದೆ. ಆದರೆ INDIA ಮೈತ್ರಿಕೂಟದ ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತ್ರ ಕೈಜೋಡಿಸುತ್ತೇವೆ” ಎಂದು ಹೇಳಿದ್ದಾರೆ. ಅಂಕಿತಾ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕಾಂಗ್ರೆಸ್ “ನ್ಯಾಯ್ ಯಾತ್ರೆ” ಆರಂಭಿಸಲು ನಿರ್ಧರಿಸಿದ್ದು, ಮೇಣದಬತ್ತಿ ಪ್ರತಿಭಟನೆಗಳ ನಂತರ ಈ ಯಾತ್ರೆ ರಾಜ್ಯದಾದ್ಯಂತ 70 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರಲಿದೆ.

ವಾರ್ತಾ ಭಾರತಿ 9 Jan 2026 9:10 pm

ಜಯಮಾಲಾ ಅವರಿಗೆ ʼಡಾ.ರಾಜಕುಮಾರ್ ಪ್ರಶಸ್ತಿʼ, ಎಂ.ಎಸ್.ಸತ್ಯು ಅವರಿಗೆ ʼಪುಟ್ಟಣ್ಣ ಕಣಗಾಲ್ ಪ್ರಶಸ್ತಿʼ

ಬೆಂಗಳೂರು : ರಾಜ್ಯ ಸರಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ 2020 ಮತ್ತು 2021ನೆ ಸಾಲಿನ ಡಾ. ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟವಾಗಿದ್ದು, ಡಾ.ಜಯಮಾಲಾ, ಎಂ.ಎಸ್.ಸತ್ಯು ಸೇರಿದಂತೆ ಆರು ಮಂದಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟನೆ ಹೊರಡಿಸಿದ್ದು, ಡಾ. ರಾಜಕುಮಾರ್ ಪ್ರಶಸ್ತಿಗೆ ನಟಿ ಡಾ.ಜಯಮಾಲಾ(2020), ನಿರ್ಮಾಪಕ ಸಾ.ರಾ.ಗೋವಿಂದು(2021) ಆಯ್ಕೆಯಾಗಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕರಾದ ಎಂ.ಎಸ್.ಸತ್ಯು(2020), ಶಿವರುದ್ರಯ್ಯ(2021) ಆಯ್ಕೆಯಾಗಿದ್ದಾರೆ. ಡಾ.ವಿಷ್ಣುವರ್ಧನ್ ಪ್ರಶಸ್ತಿಗೆ ಛಾಯಾಗ್ರಾಹಕ ಪ್ರಗತಿ ಅಶ್ವತ್ಥನಾರಾಯಣ(2020), ನಟ ಸುಂದರರಾಜ್(2021) ಆಯ್ಕೆಯಾಗಿದ್ದಾರೆ ಎಂದಿದ್ದಾರೆ.

ವಾರ್ತಾ ಭಾರತಿ 9 Jan 2026 9:08 pm

ಚಂದ್ರಗೌಡ ಗೋಳಿಕೆರೆಗೆ ಎಂ.ಎಂ.ಹೆಗ್ಡೆ ಪ್ರಶಸ್ತಿ

ಉಡುಪಿ, ಜ.9: ಕುಂದಾಪುರದ ನ್ಯಾಯವಾದಿ ಎಂ. ಎಂ. ಹೆಗ್ಡೆ ಪ್ರತಿಷ್ಠಾನ ಕೊಡಮಾಡುವ 2026ನೇ ಸಾಲಿನ ಎಂ.ಎಂ.ಹೆಗ್ಡೆ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಚಂದ್ರಗೌಡ ಗೋಳಿಕೆರೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಯನ್ನು ಜ.25ರಂದು ನಡೆಯುವ ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರದಾನ ಮಾಡಲಾಗು ವುದು ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪುರ ತಾಲೂಕಿನ ಇಡೂರುಕುಂಞ್ಞಡಿ ಗೋಳಿಕೆರೆ ಎಂಬಲ್ಲಿ ಜನಿಸಿದ ಚಂದ್ರಗೌಡರು ಬಾಲ್ಯದಲ್ಲೇ ಯಕ್ಷಗಾನ ದತ್ತ ಆಕರ್ಷಿತರಾಗಿ ಐದನೇ ತರಗತಿಯಲ್ಲಿರುವಾಗ ವಿದ್ಯಾಭ್ಯಾಸಕ್ಕೆ ತಿಲಾಂಜಲಿ ನೀಡಿ ಕಮಲಶಿಲೆ ಮಹಾಬಲ ದೇವಾಡಿಗರಿಂದ ಯಕ್ಷಗಾನ ಶಿಕ್ಷಣ ಪಡೆದು ಮಾರಣಕಟ್ಟೆ ಮೇಳಕ್ಕೆ ಪಾದಾರ್ಪಣೆ ಮಾಡಿದ್ದರು. ಬಳಿಕ ಹಾಲಾಡಿ ಮೇಳದಲ್ಲಿ ಸೇವೆ ಸಲ್ಲಿಸಿದ ಇವರು ಪ್ರಸ್ತುತ ಮಾರಣಕಟ್ಟೆ ಮೇಳದಲ್ಲಿ ತಮ್ಮ ಕಲಾಸೇವೆ ಮುಂದುವರಿಸಿದ್ದಾರೆ. ಗತ್ತು-ಗಾಂಭೀರ್ಯದ ರಂಗನಡೆ, ಮುಖದಲ್ಲಿ ರಾಜಕಳೆ ಹಾಗೂ ಶ್ರುತಿಬದ್ಧ ಮಾತುಗಾರಿಕೆ ಯಿಂದ ರಂಗಸ್ಥಳದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಕಂಸ, ಹಿರಣ್ಯಕಶಿಪು, ರಾವಣ, ಕರ್ಣ, ಆಂಜನೇಯ, ಕೌರವ, ಭಸ್ಮಾಸುರ ಮೂಕಾಸುರ, ಆಂಜನೇಯ ಮುಂತಾದ ಪಾತ್ರಗಳಿಂದ ಇವರು ಪ್ರಸಿದ್ಧರಾಗಿದ್ದಾರೆ.

ವಾರ್ತಾ ಭಾರತಿ 9 Jan 2026 9:07 pm

ಅಮೆರಿಕ ವಶಪಡಿಸಿಕೊಂಡ ತೈಲ ಟ್ಯಾಂಕರ್‌ನಲ್ಲಿ ಮೂವರು ಭಾರತೀಯ ಸಿಬ್ಬಂದಿ ಇದ್ದರು: ರಶ್ಯ ಮಾಹಿತಿ

ಮಾಸ್ಕೊ, ಜ. 9: ಅಮೆರಿಕ ಬುಧವಾರ ವಶಪಡಿಸಿಕೊಂಡಿರುವ ರಶ್ಯ ತೈಲ ಟ್ಯಾಂಕರ್‌ನಲ್ಲಿ ಮೂವರು ಭಾರತೀಯರು ಸೇರಿದಂತೆ ಒಟ್ಟು 28 ಮಂದಿ ಸಿಬ್ಬಂದಿ ಇದ್ದರು ಎಂದು ರಶ್ಯ ಅಧಿಕೃತವಾಗಿ ಪ್ರಕಟಿಸಿದೆ. ರಶ್ಯ ಧ್ವಜವಿದ್ದ ಮರಿನೆರಾ ತೈಲ ಟ್ಯಾಂಕರನ್ನು ಕೆರಿಬಿಯನ್ ಸಮುದ್ರದಿಂದ ಹಿಂಬಾಲಿಸುತ್ತಾ ಬಂದ ಅಮೆರಿಕದ ನೌಕಾಪಡೆ ಉತ್ತರ ಅಟ್ಲಾಂಟಿಕ್‌ನಲ್ಲಿ ವಶಪಡಿಸಿಕೊಂಡಿದೆ ಎಂದು ರಶ್ಯಾದ ಸಾರಿಗೆ ಸಚಿವಾಲಯ ಹೇಳಿದೆ. ವೆನೆಝುವೆಲಾ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ ಈ ಟ್ಯಾಂಕರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಮೆರಿಕನ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ‘ಬೆಲ್ಲಾ 1’ ಎಂಬ ಹೆಸರಿನ ಈ ತೈಲ ಸಾಗಾಣಿಕೆ ಹಡಗನ್ನು ಖಾಸಗಿ ವ್ಯಾಪಾರಿಯೊಬ್ಬರು ಬಾಡಿಗೆಗೆ ಪಡೆದಿದ್ದು, ಗಯಾನಾ ಧ್ವಜದಡಿ ಕಾರ್ಯಾಚರಣೆ ಮಾಡುತ್ತಿತ್ತು. ಇದರಲ್ಲಿ 28 ಮಂದಿ ಸಿಬ್ಬಂದಿ ಇದ್ದರು. ಅವರಲ್ಲಿ ಜಾರ್ಜಿಯಾದ ಆರು ಮಂದಿ, ಉಕ್ರೇನ್‌ನ 17 ಮಂದಿ, ಭಾರತದ ಮೂವರು ಹಾಗೂ ಇಬ್ಬರು ರಶ್ಯನ್ ಪ್ರಜೆಗಳು ಸೇರಿದ್ದಾರೆ ಎಂದು ಸಾರಿಗೆ ಇಲಾಖೆ ವಿವರಿಸಿದೆ. ನಿರ್ಬಂಧಿತ ಟ್ಯಾಂಕರ್‌ಗಳ ನಿಷೇಧವನ್ನು ಉಲ್ಲಂಘಿಸಿದ ಆರೋಪದಲ್ಲಿ ಮತ್ತು ಹಡಗನ್ನು ಏರಲು ಅಮೆರಿಕದ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಮಾಡಿದ ಪ್ರಯತ್ನಗಳಿಗೆ ಪ್ರತಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಹಡಗನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ. ಅಮೆರಿಕದ ಸೇನೆ ಹಾಗೂ ಕರಾವಳಿ ಕಾವಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಟ್ಯಾಂಕರ್ ವಶಪಡಿಸಿಕೊಂಡಿದೆ ಎಂದು ಇಬ್ಬರು ಅಮೆರಿಕನ್ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ‘ರಾಯ್ಟರ್ಸ್’ ವರದಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಅಮೆರಿಕನ್ ಪಡೆಗಳು ರಶ್ಯಾದ ಹಡಗು ವಶಪಡಿಸಿಕೊಂಡಿರುವುದು ಇದೇ ಮೊದಲು. ವೆನೆಝುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಕಳೆದ ಶನಿವಾರ ವಶಕ್ಕೆ ಪಡೆದ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ.

ವಾರ್ತಾ ಭಾರತಿ 9 Jan 2026 9:04 pm

ಮುಳಿಯ ಪ್ರಶಸ್ತಿಗೆ ಡಾ.ಗಿರಿಜಾ ಶಾಸ್ತ್ರಿ ಆಯ್ಕೆ

ಉಡುಪಿ, ಜ.9: ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸರಾದ ಮುಳಿಯ ತಿಮ್ಮಪ್ಪಯ್ಯ ಅವರ ನೆನಪಿನಲ್ಲಿ ನೀಡಲಾಗುವ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ಗೆ ಈ ಬಾರಿ ಕನ್ನಡದ ಪ್ರಸಿದ್ಧ ಬರಹಗಾರ್ತಿ ಡಾ. ಗಿರಿಜಾ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು 25000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.17 ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಡಾ.ಗಿರಿಜಾಶಾಸ್ತ್ರಿ ಅವರು ಮೈಸೂರಿನ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದವರು. ಕನ್ನಡ ಮತ್ತು ಇಂಗ್ಲಿಷ್‌ ನಲ್ಲಿ ಸ್ನಾತಕೋತ್ತರ ಪದವೀಧರೆ ಯಾಗಿದ್ದು, ’ಕನ್ನಡ ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ’ ಎಂಬ ಮಹಾ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪಡೆದಿದ್ದಾರೆ. ಗಿರಿಜಾಶಾಸ್ತ್ರಿ ಬರಹ ಎಲ್ಲಾ ಪ್ರಕಾರಗಳಲ್ಲಿ ಮೂಡಿದ್ದು, ವಿಶೇಷವಾಗಿ ಕತೆ, ಪ್ರಬಂಧ, ಅನುವಾದ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿವೆ. ಸಂಶೋಧಕರಾಗಿ ಪ್ರಬಂಧಗಳನ್ನು ಇವರು ಬರೆದಿದ್ದಾರೆ. ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ, ಮಾನಸಿಯ ಲೋಕ, ವೇಶ್ಯಾ ಸಂಕಥನ ಇವರ ಮುಖ್ಯ ಸಂಶೋಧನಾ ಪ್ರಬಂಧಗಳು. ಕವನ ಸಂಕಲನಗಳಲ್ಲದೇ ಹಲವಾರು ವಿಮರ್ಶಾ ಲೇಖನಗಳನ್ನು ಬರೆದಿದ್ದಾರೆ. ಸಂಪಾದಕರಾಗಿ, ಅನುವಾದಕ ರಾಗಿ, ವಿಮರ್ಶಕರಾಗಿ ಹಲವಾರು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಇವರಿಗೆ ಹರಿಹರ ಶ್ರೀ ಪ್ರಶಸ್ತಿ, ಸಂಕ್ರಮಣ ಪ್ರಶಸ್ತಿ, ಸುಶೀಲ ಶೆಟ್ಟಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ವಿಶಿಷ್ಟ ಲೇಖಕಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಮಾನ ಗೌರವಗಳು ಸಂದಿವೆ.

ವಾರ್ತಾ ಭಾರತಿ 9 Jan 2026 9:03 pm

ಜಾಗತಿಕ ಸಂಸ್ಥೆಗಳಿಂದ ಹೊರ ನಡೆದ ಅಮೆರಿಕ; ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದೇಕೆ?

ಯುಎನ್ ಫ್ರೇಮ್‌ವರ್ಕ್ ಕನ್ವೆನ್ಷನ್ ಆನ್ ಕ್ಲೈಮೇಟ್ ಚೇಂಜ್ (UNFCCC) ಸೇರಿದಂತೆ ಅಮೆರಿಕದ ಹಿತಾಸಕ್ತಿಗಳನ್ನು ಪೂರೈಸದ 60ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಒಪ್ಪಂದಗಳು ಮತ್ತು ಸಂಸ್ಥೆಗಳಿಂದ ಹೊರಬರುವ ನಿರ್ಧಾರವನ್ನು ಅಮೆರಿಕ ತೆಗೆದುಕೊಂಡಿದೆ. ಈ ಪಟ್ಟಿಯಲ್ಲಿ ಇಂಟರ್‌ಗವರ್ನಮೆಂಟಲ್ ಪ್ಯಾನಲ್ ಆನ್ ಕ್ಲೈಮೇಟ್ ಚೇಂಜ್ (IPCC), ಇಂಟರ್ನ್ಯಾಷನಲ್ ಸೌರ ಒಕ್ಕೂಟ (ISA) ಮತ್ತು ಇಂಟರ್ನ್ಯಾಷನಲ್ ರಿನ್ಯೂಯಬಲ್ ಎನರ್ಜಿ ಏಜೆನ್ಸಿ (IRENA) ಸೇರಿದಂತೆ ಹವಾಮಾನ ಸಂಬಂಧಿತ ಹಲವಾರು ಘಟಕಗಳಿವೆ. ಬುಧವಾರ ಈ ಕುರಿತು ಪ್ರಕಟಣೆ ನೀಡಿರುವ ಶ್ವೇತಭವನ, ಅಮೆರಿಕದ ಹಿತಾಸಕ್ತಿಗಳಿಗೆ ಪೂರಕವಾಗಿಲ್ಲದ 35 ವಿಶ್ವಸಂಸ್ಥೆಯೇತರ ಸಂಸ್ಥೆಗಳು ಹಾಗೂ 31 ವಿಶ್ವಸಂಸ್ಥೆ ಸಂಯೋಜಿತ ಸಂಸ್ಥೆಗಳಿಂದ ಅಮೆರಿಕ ಹೊರಬರುತ್ತಿದೆ ಎಂದು ತಿಳಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕದ ಸ್ಟೇಟ್ ಡಿಪಾರ್ಟ್‌ಮೆಂಟ್, ಟ್ರಂಪ್ ಆಡಳಿತವು ಈ ಸಂಸ್ಥೆಗಳನ್ನು ಸರಿಯಾದ ನಿರ್ವಹಣೆ ಇಲ್ಲದ, ಅನಗತ್ಯ ಮತ್ತು ದುಂದುವೆಚ್ಚದ ಸಂಸ್ಥೆಗಳೆಂದು ಪರಿಗಣಿಸಿದೆ. ಇವು ಅಮೆರಿಕದ ಹಿತಾಸಕ್ತಿಗಳಿಗೆ ವಿರುದ್ಧವಾಗಿವೆ. ಇವು ರಾಷ್ಟ್ರದ ಸಾರ್ವಭೌಮತ್ವ, ಸ್ವಾತಂತ್ರ್ಯ ಹಾಗೂ ಸಮೃದ್ಧಿಗೆ ಧಕ್ಕೆ ತರುವ ಅಜೆಂಡಾಗಳನ್ನು ಹೊಂದಿವೆ ಎಂದು ಹೇಳಿದೆ. ಟ್ರಂಪ್ ಅವರ ಈ ನಡೆ, ಜಾಗತಿಕ ಸವಾಲುಗಳನ್ನು ಎದುರಿಸಲು ರಾಷ್ಟ್ರಗಳ ನಡುವಿನ ಸಹಕಾರವನ್ನು ಕಡಿತಗೊಳಿಸುವ ತಂತ್ರವಾಗಿದೆ. ಈಗಾಗಲೇ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಸೆರೆ ಮತ್ತು ಗ್ರೀನ್‌ಲ್ಯಾಂಡ್ ಸ್ವಾಧೀನದ ಇರಾದೆಯಂತಹ ವಿಷಯಗಳಿಂದ ಮಿತ್ರ ರಾಷ್ಟ್ರಗಳು ಮತ್ತು ಎದುರಾಳಿಗಳಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕಳೆದ ವರ್ಷ, ಡೊನಾಲ್ಡ್ ಟ್ರಂಪ್ ತಮ್ಮ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ, ಅಮೆರಿಕ 2015ರ ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿಯಿತು. ಕಳೆದ ವರ್ಷದಲ್ಲಿ, ಟ್ರಂಪ್ ಆಡಳಿತವು ಹವಾಮಾನ ಸಂಶೋಧನೆಯಲ್ಲಿ ತೊಡಗಿರುವ ತನ್ನ ರಾಷ್ಟ್ರೀಯ ಸಂಸ್ಥೆಗಳ ನಿಧಿ ಮತ್ತು ಸಿಬ್ಬಂದಿಯನ್ನು ಕಡಿಮೆ ಮಾಡಿದೆ. ಟ್ರಂಪ್ ನಿರ್ಧಾರವು ಅಂತರರಾಷ್ಟ್ರೀಯ ಹವಾಮಾನ ಸಂಸ್ಥೆಗಳೊಂದಿಗೆ ಅದರ ಸಂಪೂರ್ಣ ನಿಷ್ಕ್ರಿಯತೆಯನ್ನು ಸೂಚಿಸುತ್ತದೆ. ಅದೇ ವೇಳೆ, ಹವಾಮಾನ ಬದಲಾವಣೆಯನ್ನು ಎದುರಿಸಲು ಅಸ್ತಿತ್ವದಲ್ಲಿರುವ ಬಹುಪಕ್ಷೀಯ ಪ್ರಕ್ರಿಯೆಯ ಪರಿಣಾಮಕಾರಿತ್ವದ ಬಗ್ಗೆ ಗಂಭೀರ ಪ್ರಶ್ನೆಯನ್ನೂ ಹುಟ್ಟುಹಾಕುತ್ತದೆ. ಅಂದಹಾಗೆ, ಅಂತರರಾಷ್ಟ್ರೀಯ ಹವಾಮಾನ ಸಂಸ್ಥೆಗಳೊಂದಿಗೆ ಅಮೆರಿಕದ ಈ ಅಸಮಾಧಾನ ಹೊಸದಲ್ಲ. ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಒಪ್ಪಿಕೊಂಡು, ಜಾಗತಿಕ ಪ್ರತಿಕ್ರಿಯೆಗಾಗಿ ಮೂಲಭೂತ ನಿಯಮಗಳು ಮತ್ತು ತತ್ವಗಳನ್ನು ರೂಪಿಸಿದ UNFCCCಯಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಅದು ಎಂದಿಗೂ 1997ರ ಕ್ಯೋಟೋ ಶಿಷ್ಟಾಚಾರದ ಸದಸ್ಯನಾಗಲಿಲ್ಲ. ಇದು UNFCCC ಅಡಿಯಲ್ಲಿ ವಿವಿಧ ದೇಶಗಳಿಗೆ ನಿರ್ದಿಷ್ಟ ಇಂಗಾಲ ಹೊರಸೂಸುವಿಕೆ ಕಡಿತ ಗುರಿಗಳನ್ನು ನಿಗದಿಪಡಿಸುವ ಸಾಧನವಾಗಿದೆ. ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ತನ್ನ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಅಮೆರಿಕದ ದಾಖಲೆಯು ಅತ್ಯಂತ ಕಳಪೆಯಾಗಿದೆ. ಇಂಗಾಲ ಹೊರಸೂಸುವಿಕೆ ಕಡಿತದ ವಿಷಯದಲ್ಲಿ, ಹಣಕಾಸು ಅಥವಾ ತಂತ್ರಜ್ಞಾನ ಒದಗಿಸುವಲ್ಲಿ ಅದು ಹೆಚ್ಚಿನದ್ದೇನೂ ಮಾಡಿಲ್ಲ. ಇವೆಲ್ಲವೂ UNFCCC ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ಅದರ ಕಡ್ಡಾಯ ಬಾಧ್ಯತೆಗಳಾಗಿವೆ. ಆದಾಗ್ಯೂ, ಅಮೆರಿಕ ಹವಾಮಾನ ಬದಲಾವಣೆಯ ಸಮಸ್ಯೆಯನ್ನು ಎಂದಿಗೂ ನಿರಾಕರಿಸಲಿಲ್ಲ. ಅದು ಹವಾಮಾನ ಚರ್ಚೆಯ ಮೇಲೆ ದೊಡ್ಡ ಪ್ರಭಾವ ಬೀರುವುದನ್ನು ಮುಂದುವರೆಸಿದೆ. ಹವಾಮಾನದ ಕುರಿತು ವೈಜ್ಞಾನಿಕ ಸಂಶೋಧನೆ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ಇದು ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿದೆ. ಇದು ದೇಶ ಮತ್ತು ವಿದೇಶಗಳಲ್ಲಿ ಹಸಿರು ಹೂಡಿಕೆಗಳನ್ನು ಪ್ರೋತ್ಸಾಹಿಸಿತು. ರೂಪಾಂತರದ ವೇಗ ನಿಧಾನವಾಗಿದ್ದರೂ ಮತ್ತು ಅದರಿಂದ ನಿರೀಕ್ಷಿಸಿದ್ದಕ್ಕೆ ಅನುಗುಣವಾಗಿಲ್ಲದಿದ್ದರೂ, ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಕಡಿಮೆ ಮಾಡಲು ಅಮೆರಿಕ ಕೆಲಸ ಮಾಡಿದೆ. ಆದರೆ ಟ್ರಂಪ್ ಶುದ್ಧ ಇಂಧನ ಪರಿವರ್ತನೆಯ ಮೇಲೆ ಮಾಡಲಾಗುತ್ತಿರುವ ಜಾಗತಿಕ ಪ್ರಯತ್ನಗಳನ್ನು ಪದೇಪದೇ ಅಪಹಾಸ್ಯ ಮಾಡಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಅಮೆರಿಕ ಇಲ್ಲಿಯವರೆಗೆ ಮಾಡಿದ ಪ್ರಗತಿಯನ್ನು ದುರ್ಬಲಗೊಳಿಸಲು ಬಹಿರಂಗವಾಗಿ ವರ್ತಿಸಿದೆ. ಉದಾಹರಣೆಗೆ, ಹವಾಮಾನ ಸಂಶೋಧನೆಯ ಮೇಲಿನ ಬಜೆಟ್ ಕಡಿತವು ಅಮೆರಿಕ ಮಾತ್ರವಲ್ಲದೆ ಇಡೀ ಜಗತ್ತಿಗೆ ದೀರ್ಘಾವಧಿಯ ಪರಿಣಾಮಗಳನ್ನು ಬೀರಬಹುದು. ಯಾಕೆಂದರೆ ಯುಎಸ್ ಏಜೆನ್ಸಿಗಳು ಡೇಟಾ ಸಂಗ್ರಹಣೆ ಮತ್ತು ಮೇಲ್ವಿಚಾರಣೆಗೆ ಅತ್ಯುತ್ತಮ ಸಂಪನ್ಮೂಲಗಳು ಮತ್ತು ನೆಟ್‌ವರ್ಕ್‌ಗಳನ್ನು ಹೊಂದಿವೆ. ತೈಲ ಮತ್ತು ಅನಿಲ ಉತ್ಪಾದನೆಯನ್ನು ಹೆಚ್ಚಿಸಲು ಟ್ರಂಪ್ ಅವರ ರಾಜಕೀಯ ಘೋಷಣೆ – Drill Baby Drill – ಗೆ ಅನುಗುಣವಾಗಿ ಪಳೆಯುಳಿಕೆ ಇಂಧನಗಳ ಬಳಕೆಯ ಮೇಲೆ ದೇಶವು ಹೆಚ್ಚುತ್ತಿರುವ ಗಮನಕ್ಕೆ ಅಮೆರಿಕದ ನಿರ್ಗಮನವು ಒಂದು ಉದಾಹರಣೆಯಾಗಿರಬಹುದು. ಯಾವುದೇ ಸಂದರ್ಭದಲ್ಲಿ, ಅಮೆರಿಕದ ಖಾಸಗಿ ಹೂಡಿಕೆದಾರರು ಸೌರಶಕ್ತಿ ಸಮೃದ್ಧ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಕೇಂದ್ರೀಕರಿಸುವ ISAಯ ಅಡಿಯಲ್ಲಿ ತಮ್ಮ ಹೂಡಿಕೆಯ ಮೇಲಿನ ಲಾಭವನ್ನು ಗಮನದಲ್ಲಿಟ್ಟುಕೊಂಡು, ಬೇರೆಡೆ ಹೂಡಿಕೆ ಮಾಡುವುದನ್ನು ಮುಂದುವರಿಸುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿದ ಸುಮಾರು ಒಂದು ವರ್ಷದ ನಂತರ ಅಮೆರಿಕದ ನಿರ್ಧಾರ ಬಂದಿದ್ದು, ಯಾವುದೇ ಬಹುಪಕ್ಷೀಯ ವೇದಿಕೆಯಲ್ಲಿ ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಯಾವುದೇ ರೀತಿಯ ತೊಡಗಿಸಿಕೊಳ್ಳುವಿಕೆಗೆ ತೆರೆ ಎಳೆದಿದೆ. ಪ್ಯಾರಿಸ್ ಒಪ್ಪಂದದಂತೆ ಮರುಸೇರ್ಪಡೆ ತ್ವರಿತವಾಗಿರಬಹುದಾದರೂ, ಡೆಮೋಕ್ರಾಟ್‌ಗಳ ಅಡಿಯಲ್ಲಿ ಭವಿಷ್ಯದ ಅಮೆರಿಕದ ಸರ್ಕಾರವು ಈ ಎರಡೂ ವಿಶ್ವಸಂಸ್ಥೆ ಸಂಸ್ಥೆಗಳಿಗೆ ಮರಳಲು ಸಮಯ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಅನುಸರಿಸಬೇಕಾಗಬಹುದು. ಪರಿಣಾಮ ಏನಾಗಲಿದೆ? ಯುಎನ್‌ಎಫ್‌ಸಿಸಿಸಿ ಮತ್ತು ಇತರ ಸಂಸ್ಥೆಗಳಿಂದ ಹೊರಗುಳಿಯುವ ಅಮೆರಿಕದ ಕ್ರಮವು ಸಂಪೂರ್ಣವಾಗಿ ನಿರೀಕ್ಷಿಸದಿದ್ದರೂ ಅಚ್ಚರಿಯ ಸಂಗತಿಯೇನಲ್ಲ. ಅಮೆರಿಕ ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿದಿದ್ದು ಮತ್ತು ಹವಾಮಾನ ಸಂಶೋಧನೆಗೆ ನೀಡುವ ಹಣವನ್ನು ಕಡಿತಗೊಳಿಸಿರುವುದು ಈಗಾಗಲೇ ಹೆಚ್ಚಿನ ಹಾನಿಯನ್ನುಂಟುಮಾಡಿದೆ. ಜಗತ್ತು 2030ರ ಹೊತ್ತಿಗೆ ಇಂಗಾಲ ಹೊರಸೂಸುವಿಕೆ ಕಡಿತ ಗುರಿಗಳನ್ನು ಕಳೆದುಕೊಳ್ಳುವುದು ಖಚಿತ. ಟ್ರಂಪ್‌ಗಿಂತಲೂ ಮುಂಚೆಯೇ ಅಮೆರಿಕ ಈ ಅಂತರವನ್ನು ತುಂಬಲು ಯಾವುದೇ ಮಹತ್ವದ ಕೊಡುಗೆ ನೀಡುವ ಹಾದಿಯಲ್ಲಿ ಇರಲಿಲ್ಲ. ಆದ್ದರಿಂದ ಅಲ್ಪಾವಧಿಯಲ್ಲಿ ಜಾಗತಿಕ ಹವಾಮಾನದ ಮೇಲೆ ಅಮೆರಿಕದ ನಿರ್ಧಾರಗಳ ಪರಿಣಾಮ ಕಡಿಮೆಯಾಗಿರಬಹುದು. ಆದರೆ ದೀರ್ಘಾವಧಿಯಲ್ಲಿನ ಪರಿಣಾಮವು ಶ್ವೇತಭವನದ ಉತ್ತರಾಧಿಕಾರಿಗಳು ತೆಗೆದುಕೊಳ್ಳುವ ನಿಲುವನ್ನು ಅವಲಂಬಿಸಿರುತ್ತದೆ. ಆದರೆ ಹವಾಮಾನ ಸಂಸ್ಥೆಗಳಿಂದ ನಂಟು ಕಡಿದುಕೊಳ್ಳುವ ಮೂಲಕ ಅಮೆರಿಕ ತನ್ನದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಅಪಾಯಕ್ಕೆ ಸಿಲುಕಿಸಬಹುದು. ಇದರ ನಾಯಕತ್ವವನ್ನು ತನ್ನ ಪ್ರಮುಖ ಪ್ರತಿಸ್ಪರ್ಧಿ ಚೀನಾಕ್ಕೆ ಬಿಟ್ಟುಕೊಡಬಹುದು. ಹೆಚ್ಚಿನ ದೇಶಗಳು ಈಗಾಗಲೇ ನವೀಕರಿಸಬಹುದಾದ ಇಂಧನ ಮಾರ್ಗಗಳಿಗೆ ಬದ್ಧವಾಗಿವೆ. ಸೌರ ಅಥವಾ ಪವನ ಶಕ್ತಿ ನವೀಕರಿಸಬಹುದಾದ ಮೂಲಗಳಾಗಿದ್ದು, ಇವು ಇಂಧನ ಪ್ರವೇಶವನ್ನು ಮಾತ್ರವಲ್ಲದೆ ಇಂಧನ ಸುರಕ್ಷತೆಯನ್ನೂ ಭರವಸೆ ನೀಡುತ್ತವೆ. ಇವು ಅಗ್ಗದ ಇಂಧನಗಳಾಗಿದ್ದು, ಪ್ರಪಂಚದ ಹೆಚ್ಚಿನ ಭಾಗಗಳಲ್ಲಿ ನವೀಕರಿಸಬಹುದಾದ ಇಂಧನವು ಆರ್ಥಿಕ ಹಾಗೂ ಕಾರ್ಯತಂತ್ರದ ಅರ್ಥಪೂರ್ಣವಾಗಲು ಪ್ರಾರಂಭಿಸಿದೆ. ಇತ್ತ ಚೀನಾ ಇದರ ಪ್ರಯೋಜನವನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ. ನವೀಕರಿಸಬಹುದಾದ ಇಂಧನ ನಿಯೋಜನೆಗೆ ಉಪಕರಣಗಳು ಮತ್ತು ಮೂಲಸೌಕರ್ಯಗಳು ಬೇಕಾಗುತ್ತವೆ. ಏತನ್ಮಧ್ಯೆ, ಚೀನಾವು ಅದರ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಲ್ಲಿ ಮುನ್ನಡೆಯನ್ನು ಹೊಂದಿದೆ. ಭಾರತದ ಮೇಲೆ ಪರಿಣಾಮ ಭಾರತಕ್ಕೆ ಅಮೆರಿಕದ ನಿರ್ಧಾರಗಳು ಇಂಗಾಲ ಹೊರಸೂಸುವಿಕೆಯನ್ನು ತ್ವರಿತವಾಗಿ ಕಡಿತಗೊಳಿಸುವ ಒತ್ತಡವನ್ನು ಕಡಿಮೆ ಮಾಡಬಹುದು. ಆದರೆ ಶುದ್ಧ ಇಂಧನ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಪಡೆಯುವುದು ಭಾರತಕ್ಕೆ ಕಷ್ಟಕರವಾಗಬಹುದು. ಟ್ರಂಪ್ ಅವರ ಎರಡನೇ ಅಧ್ಯಕ್ಷತೆಯ ಮೊದಲು, ಭಾರತವು ಹವಾಮಾನ ಮತ್ತು ಶುದ್ಧ ಇಂಧನದ ಕುರಿತು ಅಮೆರಿಕದೊಂದಿಗೆ ದೀರ್ಘಕಾಲದ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿತ್ತು. ಅದು ವೈವಿಧ್ಯಮಯ ಇಂಧನ ಸಂಬಂಧಿತ ಕ್ಷೇತ್ರಗಳಲ್ಲಿ ಹಲವಾರು ಚಟುವಟಿಕೆಗಳನ್ನು ಬೆಂಬಲಿಸುತ್ತಿತ್ತು. ಅಂತಹ ಸಹಯೋಗಕ್ಕೆ ತೆರೆ ಬೀಳುವ ನಿರೀಕ್ಷೆಯಿದ್ದು, ಇದು ಭಾರತವು ತನ್ನ ಇಂಧನ ಪರಿವರ್ತನಾ ಮಾರ್ಗಗಳನ್ನು ಪರಿಷ್ಕರಿಸುವಂತೆ ಒತ್ತಾಯಿಸಬಹುದು. 2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ COP21 ಹವಾಮಾನ ಸಭೆಯ ಸಂದರ್ಭದಲ್ಲಿ ಫ್ರಾನ್ಸ್‌ನ ಸಹಯೋಗದೊಂದಿಗೆ ಸ್ಥಾಪಿಸಲು ಭಾರತ ಸಹಾಯ ಮಾಡಿದ ಅಂತರರಾಷ್ಟ್ರೀಯ ಸೌರ ಒಕ್ಕೂಟವು ಅಮೆರಿಕದಿಂದ ಹಿಂದೆ ಸರಿದಿರುವ ಸಂಸ್ಥೆಗಳಲ್ಲಿ ಒಂದಾಗಿದೆ. ಅಮೆರಿಕವು 2021ರಲ್ಲಿ ಮಾತ್ರ 101ನೇ ಸದಸ್ಯನಾಗಿ ISAಗೆ ಸೇರಿತ್ತು. ಇದು ISAಗೆ ಯಾವುದೇ ಹಣಕಾಸಿನ ನೆರವು ನೀಡುವುದಿಲ್ಲ. 2025ರಲ್ಲಿ ನಡೆದ ತನ್ನ ಕೊನೆಯ ಅಸೆಂಬ್ಲಿ ಸಭೆಯಲ್ಲಿ ISA ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಂದ ವಾರ್ಷಿಕ USD 50,000 ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳಿಂದ USD 25,000 ಸದಸ್ಯತ್ವ ಶುಲ್ಕವನ್ನು ವಿಧಿಸಲು ನಿರ್ಧರಿಸಿತ್ತು. ಆದರೆ ಈ ನಿರ್ಧಾರವು ಇನ್ನೂ ಕಾರ್ಯರೂಪಕ್ಕೆ ಬರಬೇಕಿದೆ. ಅಂತರರಾಷ್ಟ್ರೀಯ ಸೌರ ಒಕ್ಕೂಟ ಎಂದರೇನು? ಸೌರಶಕ್ತಿ ನಿಯೋಜನೆಯನ್ನು ಉತ್ತೇಜಿಸಲು ಮತ್ತು ಶುದ್ಧ ಇಂಧನವನ್ನು ಹೆಚ್ಚು ಕೈಗೆಟುಕುವಂತೆ ಹಾಗೂ ಪ್ರವೇಶಿಸುವಂತೆ ಮಾಡಲು, ವರ್ಷಪೂರ್ತಿ ಮತ್ತು ಹೇರಳವಾದ ಸೂರ್ಯನ ಬೆಳಕನ್ನು ಅನುಭವಿಸುವ ದೇಶಗಳಲ್ಲಿ 2015ರಲ್ಲಿ ಭಾರತ ಮತ್ತು ಫ್ರಾನ್ಸ್ ಅಂತರರಾಷ್ಟ್ರೀಯ ಸೌರ ಒಕ್ಕೂಟ (ISA) ಅನ್ನು ಪ್ರಾರಂಭಿಸಿದವು. 2030ರ ವೇಳೆಗೆ ಸೌರಶಕ್ತಿ ಹೂಡಿಕೆಗಳಲ್ಲಿ USD 1 ಟ್ರಿಲಿಯನ್ ವರೆಗೆ ಹೂಡಿಕೆ ಮಾಡುವುದು, ತಂತ್ರಜ್ಞಾನ ಮತ್ತು ಹಣಕಾಸು ವೆಚ್ಚಗಳನ್ನು ಕಡಿಮೆ ಮಾಡುವುದು ಹಾಗೂ ಸದಸ್ಯ ರಾಷ್ಟ್ರಗಳ ನಡುವೆ ಸಹಯೋಗವನ್ನು ಬೆಳೆಸುವುದು ISAಯ ಗುರಿಯಾಗಿದೆ. 120ಕ್ಕೂ ಹೆಚ್ಚು ರಾಷ್ಟ್ರಗಳು ಇದಕ್ಕೆ ಸಹಿ ಹಾಕಿದ್ದು, 90ಕ್ಕೂ ಹೆಚ್ಚು ರಾಷ್ಟ್ರಗಳು ಪೂರ್ಣ ಸದಸ್ಯತ್ವವನ್ನು ಅಂಗೀಕರಿಸಿವೆ. ಭಾರತವು ಅಂತರರಾಷ್ಟ್ರೀಯ ಸೌರ ಒಕ್ಕೂಟದ ಕಾರ್ಯಸೂಚಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹರಿಯಾಣದ ಗುರುಗ್ರಾಮ್‌ನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಇದು ಹೊಂದಿದ್ದು, ಹವಾಮಾನ ಮತ್ತು ಇಂಧನ ಗುರಿಗಳ ಭಾಗವಾಗಿ ಸೌರ ನಿಯೋಜನೆಯನ್ನು ಬೆಂಬಲಿಸುತ್ತಿದೆ. ಸೌರ ನೀತಿಗಳನ್ನು ಪ್ರಮಾಣೀಕರಿಸುವಲ್ಲಿ, ಹೂಡಿಕೆ ಸಂಪನ್ಮೂಲಗಳನ್ನು ಒಟ್ಟುಗೂಡಿಸುವಲ್ಲಿ ಮತ್ತು ಸದಸ್ಯ ರಾಷ್ಟ್ರಗಳ ನಡುವೆ ತಾಂತ್ರಿಕ ಸಹಕಾರವನ್ನು ಚಾಲನೆ ಮಾಡುವಲ್ಲಿ ISA ಪ್ರಮುಖ ಪಾತ್ರ ವಹಿಸಿದೆ. ಭಾರತ, ಇತರ ದೇಶಗಳ ಮೇಲೆ ಪರಿಣಾಮ ಭಾರತಕ್ಕೆ ISA ಹವಾಮಾನ ರಾಜತಾಂತ್ರಿಕತೆ ಮತ್ತು ದೊಡ್ಡ ಪ್ರಮಾಣದ ಸಹಕಾರಕ್ಕೆ ಒಂದು ಪ್ರಮುಖ ಉದಾಹರಣೆಯಾಗಿದೆ. ಸೌರ ಸಾಮರ್ಥ್ಯವನ್ನು ವಿಸ್ತರಿಸುವ ಮತ್ತು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಭಾರತದ ಗುರಿಗಳನ್ನು ಮೈತ್ರಿಕೂಟ ಬೆಂಬಲಿಸುತ್ತದೆ. ಭಾರತ ಮತ್ತು ಇತರ ಪ್ರಮುಖ ಸದಸ್ಯರು ಮೈತ್ರಿಕೂಟದ ಕೆಲಸವನ್ನು ಬಲಪಡಿಸುವುದನ್ನು ಮುಂದುವರಿಸುವ ನಿರೀಕ್ಷೆಯಿದ್ದರೂ, ಅಮೆರಿಕ ಹೊರನಡೆದಿದ್ದು ಸಹಯೋಗದ ಪ್ರಯತ್ನಗಳನ್ನು ಸಂಕೀರ್ಣಗೊಳಿಸಬಹುದು.

ವಾರ್ತಾ ಭಾರತಿ 9 Jan 2026 8:57 pm

‘ಭ್ರಷ್ಟ ಜನತಾ ಪಾರ್ಟಿ’: ದೇಶದ ವಿವಿಧ ರಾಜ್ಯಗಳಲ್ಲಿನ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ: ಬಿಜೆಪಿಯನ್ನು ‘ಭ್ರಷ್ಟ ಜನತಾ ಪಾರ್ಟಿ’ ಎಂದು ಶುಕ್ರವಾರ ಬಣ್ಣಿಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದ ವಿವಿಧ ರಾಜ್ಯಗಳಲ್ಲಿನ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರಗಳು ಭ್ರಷ್ಟಾಚಾರ, ಅಧಿಕಾರದ ದುರ್ಬಳಕೆ ಹಾಗೂ ದುರಹಂಕಾರದ ನಂಜಿನಿಂದ ಜನರ ಬದುಕನ್ನು ಹಾಳುಮಾಡಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣ, ಉತ್ತರ ಪ್ರದೇಶದ ಉನ್ನಾಂವ್ ಅತ್ಯಾಚಾರ ಪ್ರಕರಣ, ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಹಲವು ಮಂದಿ ಮೃತಪಟ್ಟ ಪ್ರಕರಣ ಸೇರಿದಂತೆ ಹಲವು ಉದಾಹರಣೆಗಳನ್ನು ಉಲ್ಲೇಖಿಸಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಡಬಲ್‌ ಎಂಜಿನ್‌ ಸರ್ಕಾರ ಕೋಟ್ಯಧಿಪತಿಗಳಿಗಾಗಿ ನಡೆಯುತ್ತಿದೆಯೇ ಹೊರತು, ಸಾಮಾನ್ಯ ಭಾರತೀಯರಿಗಾಗಿ ಅಲ್ಲ. ಈ ಭ್ರಷ್ಟಾಚಾರದ ಡಬಲ್‌ ಎಂಜಿನ್‌ ಸರ್ಕಾರ ಅಭಿವೃದ್ಧಿಯಲ್ಲ; ಇದು ವಿನಾಶದ ವೇಗವಾಗಿದೆ. ಪ್ರತಿದಿನವೂ ಯಾರದಾದರೂ ಬದುಕನ್ನು ಧ್ವಂಸ ಮಾಡುತ್ತಿದೆ” ಎಂದು ತೀವ್ರ ಪ್ರಹಾರ ನಡೆಸಿದ್ದಾರೆ. “ದೇಶಾದ್ಯಂತ ಭ್ರಷ್ಟ ಜನತಾ ಪಾರ್ಟಿಯ ಡಬಲ್‌ ಎಂಜಿನ್‌ ಸರ್ಕಾರಗಳು ಜನರ ಬದುಕನ್ನು ಹಾಳುಮಾಡಿವೆ. ಬಿಜೆಪಿಯ ರಾಜಕಾರಣದಲ್ಲಿ ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಹಾಗೂ ದುರಹಂಕಾರದ ನಂಜು ವ್ಯಾಪಿಸಿದೆ. ಅವರ ವ್ಯವಸ್ಥೆಯಲ್ಲಿ ಬಡವರು, ಅಸಹಾಯಕರು, ಕೂಲಿ ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರ ಬದುಕು ಕೇವಲ ಅಂಕಿ-ಸಂಖ್ಯೆಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಸುಲಿಗೆಯ ಜಾಲವೊಂದು ನಡೆಯುತ್ತಿದೆ” ಎಂದೂ ಅವರು ಆರೋಪಿಸಿದ್ದಾರೆ. “ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಇಡೀ ದೇಶವನ್ನೇ ಅಲ್ಲಾಡಿಸಿದೆ. ಆದರೆ ಅಧಿಕಾರದಲ್ಲಿರುವವರು ಯಾವ ಬಿಜೆಪಿಯ ವಿಐಪಿಯನ್ನು ರಕ್ಷಿಸುತ್ತಿದ್ದಾರೆ ಎಂಬ ಪ್ರಶ್ನೆ ಇನ್ನೂ ಉತ್ತರವಿಲ್ಲದೇ ಉಳಿದಿದೆ. ಕಾನೂನು ಯಾವಾಗ ಎಲ್ಲರಿಗೂ ಸಮಾನವಾಗಲಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆದ ಉನ್ನಾಂವ್ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಅಧಿಕಾರದ ದುರಹಂಕಾರದಿಂದ ಅಪರಾಧಿಗಳನ್ನು ಹೇಗೆ ರಕ್ಷಿಸಲಾಗಿದೆ ಮತ್ತು ಅದಕ್ಕಾಗಿ ಅತ್ಯಾಚಾರ ಸಂತ್ರಸ್ತೆ ತೆತ್ತ ಭಾರೀ ಬೆಲೆಯನ್ನು ಇಡೀ ದೇಶವೇ ಕಂಡಿದೆ ಎಂದಿದ್ದಾರೆ. “ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಸಂಭವಿಸಿದ ಸಾವುಗಳಿರಲಿ ಅಥವಾ ಗುಜರಾತ್‌, ಹರ್ಯಾಣ ಹಾಗೂ ದಿಲ್ಲಿಯಲ್ಲಿ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪಗಳಿರಲಿ, ಎಲ್ಲೆಡೆಯೂ ರೋಗಭೀತಿಯ ವಾತಾವರಣ ಆವರಿಸಿದೆ” ಎಂದು ಅವರು ದೂರಿದ್ದಾರೆ.

ವಾರ್ತಾ ಭಾರತಿ 9 Jan 2026 8:51 pm

ಬೀದರ್‌ನಲ್ಲಿ 3 ಸ್ಕ್ಯಾನಿಂಗ್ ಕೇಂದ್ರಗಳು ಮುಟ್ಟುಗೋಲು

ಬೀದರ್: ಜಿಲ್ಲೆಯ ಹುಮನಾಬಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಔರಾದ್ (ಬಿ) ಪಟ್ಟಣಗಳಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಬೆಂಗಳೂರಿನ 'ಪಿಸಿ ಮತ್ತು ಪಿಎನ್ಡಿಟಿ' ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಮೂರು ಕೇಂದ್ರಗಳನ್ನು ಮುಟ್ಟುಗೋಲು ಹಾಕಲಾಗಿದೆ. ಬೆಂಗಳೂರಿನ ಉಪ ನಿರ್ದೇಶಕರಾದ ಡಾ. ವಿವೇಕ್ ದೊರೈ ಅವರ ನೇತೃತ್ವದ ತಂಡವು ಜ.6 ಮತ್ತು 7 ರಂದು ಜಿಲ್ಲೆಯ ಸುಮಾರು 8 ವಿವಿಧ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿತ್ತು. ಈ ವೇಳೆ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯಡಿ ಸ್ಪಷ್ಟ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಈ ಕೆಳಗಿನ ಆಸ್ಪತ್ರೆಗಳ ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಿ ಮುಟ್ಟುಗೋಲು ಮಾಡಲಾಗಿದೆ. ಬಸವಕಲ್ಯಾಣದ ನ್ಯೂ ರೀಫಾ ಆಸ್ಪತ್ರೆ, ಔರಾದ್ (ಬಿ)ನ ವಿಶ್ವ ಮತ್ತು ಮುಗಳೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಭಾಲ್ಕಿಯಲ್ಲಿ ಜಿಜಾಮಾತಾ ಆಸ್ಪತ್ರೆಯನ್ನು ಮುಟ್ಟುಗೋಲು ಮಾಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ್ ನಿರುಗುಡೆ, ಜಿಲ್ಲಾ ಜಾರಿ ಅಧಿಕಾರಿ ಹಾಗೂ ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ನೋಡಲ್ ಅಧಿಕಾರಿ ಡಾ. ದಿಲೀಪ್ ಡೂಂಗ್ರೆ, ಪಿ.ಸಿ ಮತ್ತು ಪಿ.ಎನ್.ಡಿ.ಟಿ ರಾಜ್ಯ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯ ವಸಂತಕುಮಾರ್, ಕಾನೂನು ಸಲಹೆಗಾರರಾದ ಮೋನಿಶಾ ಡಿ.ಎನ್, ದ್ವಿತೀಯ ದರ್ಜೆ ಸಹಾಯಕ ಅನೀಲ್ ಥಾಮಸ್, ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಕ್ರಮ ಸಲಹೆಗಾರ ಬನಾಮಾ ಎಸ್ ಸಜ್ಜನ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯ ಡಾ.ಅಬ್ರಾರ್ ಖಾದ್ರಿ, ಡಾ. ಅಶೋಕ್ ಕಟ್ಟಿಮನಿ ಹಾಗೂ ಪಿ.ಸಿ ಮತ್ತು ಪಿ.ಎನ್.ಡಿ.ಟಿ ವಿಷಯ ನಿರ್ವಾಹಕ ಮಹೇಶ್ವರ್ ರಡ್ಡಿ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

ವಾರ್ತಾ ಭಾರತಿ 9 Jan 2026 8:48 pm

ನ್ಯೂಝಿಲ್ಯಾಂಡ್ ವಿರುದ್ಧದ ಏಕದಿನ ಸರಣಿ| ಟೀಮ್ ಇಂಡಿಯಾ ಸೇರಲು ಶ್ರೇಯಸ್ ಅಯ್ಯರ್‌ಗೆ ಹಸಿರು ನಿಶಾನೆ

ಹೊಸದಿಲ್ಲಿ, ಜ.9: ನ್ಯೂಝಿಲ್ಯಾಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಭಾರತೀಯ ಕ್ರಿಕೆಟ್ ತಂಡವನ್ನು ಸೇರಲು ಶ್ರೇಯಸ್ ಅಯ್ಯರ್‌ಗೆ ಹಸಿರು ನಿಶಾನೆ ತೋರಲಾಗಿದೆ. ಈ ತಿಂಗಳಾರಂಭದಲ್ಲಿ ಭಾರತದ 15 ಸದಸ್ಯರ ತಂಡದಲ್ಲಿ ಶ್ರೇಯಸ್ ಅಯ್ಯರ್‌ರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಅವರ ಲಭ್ಯತೆಯು ಫಿಟ್ನೆಸ್ ಸಾಬೀತುಪಡಿಸುವುದನ್ನು ಅವಲಂಬಿಸಿತ್ತು. 50 ಓವರ್‌ಗಳ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ತನ್ನ ಮ್ಯಾಚ್ ಫಿಟ್ನೆಸ್ ಅನ್ನು ಸಾಬೀತುಪಡಿಸಿರುವ ಶ್ರೇಯಸ್ ಅಯ್ಯರ್ ಶುಕ್ರವಾರ ಭಾರತೀಯ ತಂಡವನ್ನು ಸೇರಿದ್ದಾರೆ. ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದಿದ್ದ ಏಕದಿನ ಪಂದ್ಯದ ವೇಳೆ ಕ್ಯಾಚ್ ಪಡೆಯುವ ಯತ್ನದಲ್ಲಿದ್ದಾಗ ಗುಲ್ಮದ ಗಾಯಕ್ಕೊಳಗಾಗಿದ್ದ ಭಾರತದ ಏಕದಿನ ತಂಡದ ಉಪ ನಾಯಕ ಅಯ್ಯರ್ ಇದೀಗ ಅಂತರ್‌ರಾಷ್ಟ್ರೀಯ ಕ್ರಿಕೆಟಿಗೆ ವಾಪಸಾಗಲು ಸಜ್ಜಾಗಿದ್ದಾರೆ. ಗುಲ್ಮದ ಸೀಳುವಿಕೆಯಿಂದ ಉಂಟಾದ ಆಂತರಿಕ ರಕ್ತಶ್ರಾವದಿಂದಾಗಿ ಅಯ್ಯರ್‌ರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವದೇಶದಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ವಂಚಿತರಾಗಿದ್ದ ಅಯ್ಯರ್ ಆ ನಂತರ ಚೇತರಿಸಿಕೊಳ್ಳಲಾರಂಭಿಸಿದರು. ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮುಂಬೈ ತಂಡದ ಪರ 82 ಹಾಗೂ 45 ರನ್ ಗಳಿಸಿದ್ದ ಅಯ್ಯರ್ ನ್ಯೂಝಿಲ್ಯಾಂಡ್ ವಿರುದ್ಧದ ಏಕದಿನ ಸರಣಿಗೆ ತಯಾರಿ ನಡೆಸಿದ್ದರು. ಶಾರ್ದುಲ್ ಠಾಕೂರ್ ಅನುಪಸ್ಥಿತಿಯಲ್ಲಿ ಎರಡು ಪಂದ್ಯಗಳಲ್ಲಿ ಅಯ್ಯರ್ ಮುಂಬೈ ತಂಡದ ನಾಯಕತ್ವವಹಿಸಿದ್ದರು. ಭಾರತ ಏಕದಿನ ತಂಡದ ಬಹುತೇಕ ಆಟಗಾರರು ಜನವರಿ 7ರಂದು ವಡೋದರಕ್ಕೆ ತೆರಳಿದ್ದಾರೆ. ವಡೋದರವು ರವಿವಾರದಂದು ಸುಮಾರು 15 ವರ್ಷಗಳ ನಂತರ ಮೊದಲ ಬಾರಿ ಪುರುಷರ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಯೋಜಿಸುತ್ತಿದೆ. ಹೊಸತಾಗಿ ನಿರ್ಮಿಸಿರುವ ಕೋಟಂಬಿ ಸ್ಟೇಡಿಯಂನಲ್ಲಿ ಈಗಾಗಲೇ ಡಬ್ಲ್ಯುಪಿಎಲ್ ಹಾಗೂ ಮಹಿಳೆಯರ ಏಕದಿನ ಪಂದ್ಯಗಳು ನಡೆದಿವೆ.

ವಾರ್ತಾ ಭಾರತಿ 9 Jan 2026 8:47 pm

ಡಾ.ಎ.ನಾರಾಯಣ ಅವರಿಗೆ ‘ಡಾ.ಬಿ.ಆ‌ರ್.ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿʼ

ಬೆಂಗಳೂರು : ರಾಜ್ಯ ಮಾಧ್ಯಮ ಅಕಾಡಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದ್ದು, ʼಡಾ.ಬಿ.ಆ‌ರ್.ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿʼಗೆ ಖ್ಯಾತ ಅಂಕಣಕಾರ, ಚಿಂತಕ ಡಾ.ಎ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ. ಡಾ.ಎ.ನಾರಾಯಣ ಅವರು ಬೆಂಗಳೂರಿನ ಅಝೀಮ್ ಪ್ರೇಮ್ ಜಿ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದು ಅಂಕಣಕಾರ ಹಾಗು ವಿಶ್ಲೇಷಕರಾಗಿ ಅಪಾರ ಓದುಗರು ಹಾಗು ವೀಕ್ಷಕರನ್ನು ಪಡೆದವರು. ಅವರ ರಾಜಕೀಯ ವಿಶ್ಲೇಷಣೆಗಳು ವ್ಯಾಪಕವಾಗಿ ಚರ್ಚೆಯಾಗುತ್ತವೆ. ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ 30 ಪತ್ರಕರ್ತರು, ವಿವಿಧ ದತ್ತಿ ಪ್ರಶಸ್ತಿಗಳಿಗೆ 10 ಮಂದಿ ಹಾಗೂ 2025ನೇ ಸಾಲಿನ ವಿಶೇಷ ಪ್ರಶಸ್ತಿಗೆ ಸರಿತಾ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ವಾರ್ತಾ ಭಾರತಿ 9 Jan 2026 8:44 pm

ಕಲಬುರಗಿ | ಕರ್ನಾಟಕ ಮಾಧ್ಯಮ ಅಕಾಡಮಿಯ ವಾರ್ಷಿಕ ಪ್ರಶಸ್ತಿಗೆ ಮೊಹಿಯುದ್ದೀನ್ ಪಾಷಾ ಆಯ್ಕೆ

ಕಲಬುರಗಿ: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಕಲಬುರಗಿಯ ಇಂಕ್ವಿಲಾವ್ ಎ ದಕ್ಕನ್ ಉರ್ದು ಪತ್ರಿಕೆಯ ಸಂಪಾದಕ ಮತ್ತು ಹಿರಿಯ ಪತ್ರಕರ್ತರಾದ ಮೊಹಿಯುದ್ದೀನ್ ಪಾಷಾ ಅವರು ಆಯ್ಕೆಯಾಗಿದ್ದಾರೆ. ಒಟ್ಟು 30 ಹಿರಿಯ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ವಿವಿಧ ದತ್ತಿ ಪ್ರಶಸ್ತಿಗೆ 10 ಪತ್ರಕರ್ತರಿಗೆ ಆಯ್ಕೆ ಮಾಡಿ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಮತ್ತು ಕಾರ್ಯದರ್ಶಿ ಸಹನಾ ಎಂ ಅವರು ಆದೇಶ ಹೊರಡಿಸಿದ್ದಾರೆ. 50 ಸಾವಿರ ರೂ‌. ನಗದು ಮತ್ತು ಪ್ರಶಸ್ತಿ ಫಲಕ ಹೊಂದಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 8:41 pm

ಡಿಜಿಟಲ್ ಅರೆಸ್ಟ್| 80ರ ಹರೆಯದ ವೃದ್ಧನಿಗೆ 96 ಲಕ್ಷ ರೂ.ವಂಚನೆ: ಇಬ್ಬರು ಬ್ಯಾಂಕ್ ಉದ್ಯೋಗಿಗಳು ಸೇರಿ ಐವರ ಬಂಧನ

ಹೊಸದಿಲ್ಲಿ,ಜ.9: ಡಿಜಿಟಲ್ ಅರೆಸ್ಟ್ ಜಾಲವೊಂದನ್ನು ಭೇದಿಸಿರುವ ದಿಲ್ಲಿ ಪೋಲಿಸರು 80ರ ಹರೆಯದ ವ್ಯಕ್ತಿಗೆ ಸುಮಾರು ಒಂದು ಕೋಟಿ ರೂ.ಗಳನ್ನು ವಂಚಿಸಿದ ಆರೋಪದಲ್ಲಿ ಇಬ್ಬರು ಖಾಸಗಿ ಬ್ಯಾಂಕ್ ಉದ್ಯೋಗಿಗಳು ಸೇರಿದಂತೆ ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು. ಆರೋಪಿಗಳು ಕಾನೂನು ಜಾರಿ ಮತ್ತು ಕೇಂದ್ರೀಯ ಸಂಸ್ಥೆಗಳ ಅಧಿಕಾರಿಗಳ ಸೋಗಿನಲ್ಲಿ ವೃದ್ಧ ಮತ್ತು ಅವರ ಪತ್ನಿಯನ್ನು ಏಳು ದಿನಗಳ ಕಾಲ ಡಿಜಿಟಲ್ ಬಂಧನದಲ್ಲಿ ಇರಿಸಿದ್ದರು ಎಂದರು. ವಂಚಕರು ಬಲಿಪಶುವನ್ನು ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಿ ತಾವು ದೂರಸಂಪರ್ಕ ಮತ್ತು ತನಿಖಾ ಸಂಸ್ಥೆಗಳ ಅಧಿಕಾರಿಗಳೆಂದು ಹೇಳಿಕೊಂಡು, ಅವರ ಮೊಬೈಲ್ ಫೋನ್ ಸಂಖ್ಯೆ ಮತ್ತು ಆಧಾರ್ ಕಾನೂನುಬಾಹಿರ ಚಟುವಟಿಕೆಗಳೊಂದಿಗೆ ತಳುಕು ಹಾಕಿಕೊಂಡಿವೆ ಎಂದು ಹೇಳಿ ಕಾನೂನು ಕ್ರಮದ ಬೆದರಿಕೆಯೊಡ್ಡಿದ್ದರು. ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮರಳಿಸಲಾಗುವುದು ಎಂದು ಭರವಸೆ ನೀಡುವ ಮೂಲಕ ಆರೋಪಿಗಳು ವೃದ್ಧರ ಮೇಲೆ ಒತ್ತಡ ಹೇರಿ ತನ್ನ ಇಡೀ ಜೀವಮಾನದ ಉಳಿತಾಯವನ್ನು ತಾವು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಮಾಡಿದ್ದರು. ಇದಕ್ಕಾಗಿ ತನ್ನ ಸ್ಥಿರ ಠೇವಣಿಯನ್ನು ಅವಧಿಗೆ ಮುನ್ನವೇ ಮುಕ್ತಾಯಗೊಳಿಸಿದ್ದ ಬಲಿಪಶು ಚಿನ್ನವನ್ನು ಅಡವಿಟ್ಟು ಸಾಲವನ್ನೂ ಪಡೆದಿದ್ದರು. ಆರೋಪಿಗಳು ವ್ಯಕ್ತಿಗೆ 96 ಲ.ರೂ.ಗಳನ್ನು ವಂಚಿಸಿದ್ದಾರೆ ಎಂದು ಹಿರಿಯ ಪೋಲಿಸ್ ಅಧಿಕಾರಿಯೋರ್ವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ವರ್ಷದ ನ.4ರಂದು ದೂರು ದಾಖಲಾದ ಬಳಿಕ ತನಿಖೆ ಆರಂಭಗೊಂಡಿತ್ತು. ಆರೋಪಿಗಳ ಪೈಕಿ ಪ್ರದೀಪ್ ಕುಮಾರ್‌ ಎಂಬಾತನನ್ನು ಹರ್ಯಾಣದ ಹಿಸ್ಸಾರ್‌ನಲ್ಲಿ ಪತ್ತೆ ಹಚ್ಚಲಾಗಿತ್ತು. ಹಲವಾರು ಮೊಬೈಲ್ ಫೋನ್‌ಗಳ ಬಳಕೆಯು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಹಿಸಾರ್‌ನಿಂದ ಇನ್ನೋರ್ವ ಆರೋಪಿ ನಮನದೀಪ್ ಮಲಿಕ್ ಎಂಬಾತನ ಬಂಧನಕ್ಕೆ ಈ ಮಾಹಿತಿ ನೆರವಾಗಿತ್ತು. ಮೂರನೇ ಆರೋಪಿ ಶಶಿಕಾಂತ ಪಟ್ಟನಾಯಕ್ ಎಂಬಾತನನ್ನು ಒಡಿಶಾದ ಭುವನೇಶ್ವರದಲ್ಲಿ ಬಂಧಿಸಲಾಗಿದ್ದು, ವಂಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಹೆಚ್ಚಿನ ತನಿಖೆಯಲ್ಲಿ ಖಾಸಗಿ ಬ್ಯಾಂಕ್‌ವೊಂದರ ಪಶ್ಚಿಮ ದಿಲ್ಲಿ ಶಾಖೆಯ ಅಧಿಕಾರಿ ನಿಲೇಶ್‌ ಕುಮಾರ್‌ ಮತ್ತು ಚಂದನ್‌ ಕುಮಾರ್‌ ಅವರು ಫೋರ್ಜರಿ ದಾಖಲೆಗಳನ್ನು ಬಳಸಿ ನಕಲಿ ಚಾಲ್ತಿ ಖಾತೆಯನ್ನು ತೆರೆಯಲು ವಂಚಕ ಜಾಲಕ್ಕೆ ನೆರವಾಗಿದ್ದರು ಎನ್ನುವುದು ಬಯಲುಗೊಂಡಿತ್ತು. ಈ ಖಾತೆಗಳನ್ನು ಸೈಬರ್ ಅಪರಾಧದ ಹಣವನ್ನು ವರ್ಗಾಯಿಸಲು ಬಳಸಲಾಗುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 8:41 pm

ಭಾರತದ ಶೇ.44ರಷ್ಟು ನಗರಗಳು ದೀರ್ಘಕಾಲಿಕ ವಾಯು ಮಾಲಿನ್ಯವನ್ನು ಎದುರಿಸುತ್ತಿವೆ: ವರದಿ

ಹೊಸದಿಲ್ಲಿ,ಜ.9: ಸುಮಾರು ಶೇ.44ರಷ್ಟು ಭಾರತೀಯ ನಗರಗಳು ದೀರ್ಘಕಾಲಿಕ ವಾಯು ಮಾಲಿನ್ಯವನ್ನು ಎದುರಿಸುತ್ತಿದ್ದು,ಇದು ಅಲ್ಪಾವಧಿ ಸಮಸ್ಯೆಗಿಂತ ನಿರಂತರ ಮಾಲಿನ್ಯ ಮೂಲಗಳಿಂದ ಉಂಟಾಗಿರುವ ರಚನಾತ್ಮಕ ಸಮಸ್ಯೆಯನ್ನು ಸೂಚಿಸುತ್ತಿದೆ ಎಂದು ಸೆಂಟರ್ ಫಾರ್ ರೀಸರ್ಚ್ ಆನ್ ಎನರ್ಜಿ ಆ್ಯಂಡ್ ಕ್ಲೀನ್ ಏರ್ (ಸಿಆರ್‌ಇಎ) ತನ್ನ ವಿಶ್ಲೇಷಣಾ ವರದಿಯಲ್ಲಿ ತಿಳಿಸಿದೆ. ಆದಾಗ್ಯೂ ಈ ನಗರಗಳ ಪೈಕಿ ಕೇವಲ ಶೇ.4ರಷ್ಟು ಮಾತ್ರ ರಾಷ್ಟ್ರೀಯ ಶುದ್ಧ ವಾಯು ಕಾರ್ಯಕ್ರಮದ (ಎನ್‌ಸಿಎಪಿ) ವ್ಯಾಪ್ತಿಗೊಳಪಟ್ಟಿವೆ ಎಂದು ಅದು ಬೆಟ್ಟು ಮಾಡಿದೆ. ಸಿಆರ್‌ಇಎ ಉಪಗ್ರಹ ದತ್ತಾಂಶಗಳನ್ನು ಬಳಸಿಕೊಂಡು 4,041 ಭಾರತೀಯ ನಗರಗಳಲ್ಲಿಯ ಪಿಎಂ2.5 ಮಟ್ಟಗಳನ್ನು ನಿರ್ಧರಿಸಿದೆ. 4,041 ನಗರಗಳ ಪೈಕಿ ಕನಿಷ್ಠ 1,787 ನಗರಗಳು 2020ರ ಕೋವಿಡ್ ಪೀಡಿತ ವರ್ಷವನ್ನು ಹೊರತುಪಡಿಸಿ ಇತ್ತೀಚಿನ ಐದು ವರ್ಷಗಳಲ್ಲಿ ರಾಷ್ಟ್ರೀಯ ವಾರ್ಷಿಕ ಪಿಎಂ2.5 ಮಾನದಂಡವನ್ನು ಮೀರಿವೆ ಎಂದು ವರದಿಯು ತಿಳಿಸಿದೆ. 2025ರ ಪಿಎಂ2.5 ಮೌಲ್ಯಮಾಪನದ ಪ್ರಕಾರ ಬೈರ್ನಿಹಾಟ್ (ಮೇಘಾಲಯ),ದಿಲ್ಲಿ ಮತ್ತು ಘಾಜಿಯಾಬಾದ್ (ಉ.ಪ್ರ) ಭಾರತದ ಮೂರು ಅಗ್ರ ಅತ್ಯಂತ ಕಲುಷಿತ ನಗರಗಳಾಗಿದ್ದು,ನೋಯ್ಡಾ, ಗುರುಗ್ರಾಮ, ಗ್ರೇಟರ್ ನೋಯ್ಡಾ, ಭಿವಂಡಿ, ಹಾಜಿಪುರ, ಮುಝಫ್ಫರ್‌ನಗರ ಮತ್ತು ಹಾಪುರ್ ನಂತರದ ಸ್ಥಾನಗಳಲ್ಲಿವೆ. ನಿರಂತರವಾಗಿ ವಾಯು ಮಾಲಿನ್ಯವನ್ನು ಎದುರಿಸುತ್ತಿರುವ 416 ನಗರಗಳೊಂದಿಗೆ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದ್ದು, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಪಂಜಾಬ್, ಬಿಹಾರ ಮತ್ತು ಪಶ್ಚಿಮ ಬಂಗಾಳ ನಂತರದ ಸ್ಥಾನಗಳಲ್ಲಿವೆ. ಎನ್‌ಸಿಎಪಿ ವ್ಯಾಪ್ತಿಯಲ್ಲಿರುವ 130 ನಗರಗಳ ಪೈಕಿ 28 ಈಗಲೂ ವಾತಾವರಣದಲ್ಲಿಯ ವಾಯು ಮಾಲಿನ್ಯವನ್ನು ನಿರಂತರ ಮೇಲ್ವಿಚಾರಣೆ ಮಾಡುವ ಕೇಂದ್ರಗಳನ್ನು ಹೊಂದಿಲ್ಲ. ಇಂತಹ ಕೇಂದ್ರಗಳನ್ನು ಹೊಂದಿರುವ 102 ನಗರಗಳ ಪೈಕಿ ನೂರು ಶೇ.80 ಅಥವಾ ಹೆಚ್ಚಿನ ಪಿಎಂ 2.5 ಮಟ್ಟವನ್ನು ವರದಿ ಮಾಡಿವೆ. ಪಿಎಂ10 ನಿಯಂತ್ರಣದಲ್ಲಿ ಮಿಶ್ರ ಪ್ರಗತಿ ಕಂಡು ಬಂದಿದೆ. 23 ನಗರಗಳು ಶೇ.40 ಪಿಎಂ10 ಇಳಿಕೆಯ ಪರಿಷ್ಕೃತ ಗುರಿಯನ್ನು ಸಾಧಿಸಿದ್ದರೆ, 23 ನಗರಗಳು ಶೇ.21ರಿಂದ ಶೇ.40ರಷ್ಟು ಇಳಿಕೆಯನ್ನು ಮತ್ತು 26 ನಗರಗಳು ಶೇ.1ರಿಂದ ಶೇ.20ರಷ್ಟು ಸಾಧಾರಣ ಇಳಿಕೆಯನ್ನು ತೋರಿಸಿವೆ. ಆದರೆ 23 ನಗರಗಳು ವಾಸ್ತವದಲ್ಲಿ ಎನ್‌ಸಿಎಪಿಯ ಆರಂಭದಿಂದಲೂ ಪಿಎಂ10 ಮಟ್ಟದಲ್ಲಿ ಹೆಚ್ಚಳವನ್ನು ಅನುಭವಿಸಿವೆ ಎಂದು ವರದಿಯು ತಿಳಿಸಿದೆ. ಪಿಎಂ10ಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನದಂಡದ ಮೂರು ಪಟ್ಟು ಮಾಲಿನ್ಯದೊಂದಿಗೆ ದಿಲ್ಲಿ ಪ್ರಥಮ ಸ್ಥಾನದಲ್ಲಿದ್ದರೆ, ಗಾಝಿಯಾಬಾದ್ ಮತ್ತು ಗ್ರೇಟರ್ ನೋಯ್ಡಾ ನಂತರದ ಸ್ಥಾನಗಳಲ್ಲಿವೆ. ಪಿಎಂ10 ಸಾಂದ್ರತೆ ಹೆಚ್ಚಿರುವ 50 ಅಗ್ರ ನಗರಗಳ ಪೈಕಿ 18 ರಾಜಸ್ಥಾನದಲ್ಲಿದ್ದು, ಉ.ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಒಡಿಶಾ ನಂತರದ ಸ್ಥಾನಗಳಲ್ಲಿವೆ ಎಂದು ವರದಿಯು ತಿಳಿಸಿದೆ. ಉದ್ದೇಶಿತ, ವಿಜ್ಞಾನ ಆಧಾರಿತ ಸುಧಾರಣೆಗಳ ಮೂಲಕ ದೇಶದ ವಾಯು ಗುಣಮಟ್ಟ ನಿರ್ವಹಣೆಯನ್ನು ಬಲಪಡಿಸುವುದು ಏಕೈಕ ಪರಿಹಾರವಾಗಬಹುದು ಎಂದು ಸಿಆರ್‌ಇಎದ ಭಾರತ ವಿಶ್ಲೇಷಕ ಮನೋಜ್ ಕುಮಾರ್‌ ವರದಿಯಲ್ಲಿ ಹೇಳಿದ್ದಾರೆ. ಎನ್‌ಸಿಎಪಿ ಆರಂಭಗೊಂಡಾಗಿನಿಂದ 13,415 ಕೋ.ರೂ.ಗಳ ಅನುದಾನ ಬಿಡುಗಡೆಯಾಗಿದ್ದು,ಈ ಪೈಕಿ 9,929 ಕೋ.ರೂ.ಗಳು ಬಳಕೆಯಾಗಿವೆ.

ವಾರ್ತಾ ಭಾರತಿ 9 Jan 2026 8:36 pm

ವಾಡಿ | ಜ.11 ರಂದು 'ಮರ್ಯಾದೆಗೇಡು ಹತ್ಯೆಗಳ' ಕುರಿತು ಸಂಚಲನ ವೇದಿಕೆಯಿಂದ ಸಂವಾದ ಕಾರ್ಯಕ್ರಮ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ವತಿಯಿಂದ ಮರ್ಯಾದೆಗೇಡು ಹತ್ಯೆ ಹಿಂದಿನ ಮನುವಾದ ಹುಡುಕುತ್ತಾ ಎಂಬ ಶೀರ್ಷಿಕೆಯಡಿ ರವಿವಾರ (ಜ.11) ಬೆಳಿಗ್ಗೆ 10:30ಕ್ಕೆ ವಿಶೇಷ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಶ್ರವಣಕುಮಾರ ಮೂಸಲಗಿ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಾತಿಯ ಮೇಲರಿಮೆಯಲ್ಲಿ ಹೆತ್ತವರೇ ತನ್ನ ಕರುಳಿನ ಕುಡಿಯನ್ನು ಕತ್ತರಿಸುವ ಮಟ್ಟಿಗೆ ಧರ್ಮ ಮತ್ತು ಜಾತಿಯ ಅಫೀಮು ಸಮಾಜದಲ್ಲಿ ಹರಡಿದೆ. ಇದನ್ನು ಮಟ್ಟಹಾಕಲು ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವವನ್ನು ಯುವಜನರ ಮನಸ್ಸಿನಲ್ಲಿ ಬಿತ್ತುವ ಉದ್ದೇಶದಿಂದ ಈ ಸಂವಾದವನ್ನು ಆಯೋಜಿಸಲಾಗಿದೆ ಎಂದರು. ಪಟ್ಟಣದ ಸೇಂಟ್ ಅಂಬ್ರೋಸ್ ಕಾನ್ವೆಂಟ್ ಶಾಲೆಯ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಕಾಶಿನಾಥ ಧನ್ನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸ್ತ್ರೀವಾದಿ ಚಿಂತಕಿ ಹಾಗೂ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಜಯದೇವಿ ಗಾಯಕವಾಡ ಅವರು ವಿಶೇಷ ಉಪನ್ಯಾಸ ನೀಡಿ ಸಂವಾದ ನಡೆಸಿಕೊಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಖೇಮಲಿಂಗ ಬೆಳಮಗಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸೇಂಟ್ ಅಂಬ್ರೋಸ್ ಕಾನ್ವೆಂಟ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಗ್ರೇಸಿ ಹಾಗೂ ವಿ.ಪಿ. ನಾಯಕ ಪಿ.ಯು. ಕಾಲೇಜಿನ ಉಪನ್ಯಾಸಕಿ ಕು. ಯಶೋಧಾ ಪವಾರ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ವಾರ್ತಾ ಭಾರತಿ 9 Jan 2026 8:33 pm

2028 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ; ಕ್ಷೇತ್ರದ ಬಗ್ಗೆ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು: ಕಳೆದ ಎರಡು ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್‌ ಕುಮಾರಸ್ವಾಮಿ 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ರಾಜಕಾರಣ ಮಾಡುವುದಕ್ಕೆ ಬಂದಿದ್ದೇನೆ. ಅದಕ್ಕಾಗಿ ನಾನು ಕೆಲಸ ಮಾಡುತ್ತಿದ್ದೇನೆ ಈ ಬಗ್ಗೆ ಯಾವುದೇ ಪ್ರಶ್ನೆ ಬೇಡ ಎಂದಿದ್ದಾರೆ. ನಮ್ಮದು ರಾಜಕಾರಣದ ಹಿನ್ನೆಲೆಯ

ಒನ್ ಇ೦ಡಿಯ 9 Jan 2026 8:26 pm

ನರೇಗಾ ಕಾನೂನು ತಿದ್ದುಪಡಿ ಬಗ್ಗೆ ವಿಶೇಷ ಅಧಿವೇಶನ: ದಿನೇಶ್ ಗುಂಡೂರಾವ್

ಮಂಗಳೂರು, ಜ.9: ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದ್ದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರಕಾರ ಬೆಂಕಿ ಹಚ್ಚಿದೆ. ಈ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲು ಹಾಕಲಾಗಿದೆ. ಇದನ್ನು ವಿರೋಧಿಸಿ ರಾಜ್ಯ ಸರಕಾರ ವಿಶೇಷ ಅಧಿವೇಶನ ಕರೆಯುವ ಚಿಂತನೆಯನ್ನೂ ನಿನ್ನೆಯ ಸಭೆಯಲ್ಲಿ ಮುಖ್ಯಮಂತ್ರಿ ಪ್ರಸ್ತಾವಿಸಿರುವುದಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ದಿಂದ ನಡೆಯುತ್ತಿರುವ ಅನ್ಯಾಯದ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕಾಗಿದೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲೂ ಯೋಜನೆಯ ಕಾನೂನು ತಿದ್ದುಪಡಿ ಬಗ್ಗೆ ಚರ್ಚೆ ಆಗಿದೆ. ರಾಜ್ಯದಲ್ಲೂ ಹೋರಾಟ ನಡೆಯಲಿದೆ. ಅಧಿವೇಶನದಲ್ಲೂ ಇದರ ಬಗ್ಗೆ ಚರ್ಚೆ ಆದಾಗ ಎಲ್ಲಾ ಪಕ್ಷದವರೂ ಅವರವರ ಅಭಿಪ್ರಾಯ ತಿಳಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು. ಯೋಜನೆಯ ಹೊಸ ಕಾನೂನಿನಿಂದ ಪಂಚಾಯತ್ ಮಟ್ಟದಲ್ಲಿಯೂ ಇದರ ಬಾಧಕಗಳ ಬಗ್ಗೆ ಅನುಭವ ಆಗಲಿದೆ. ಈ ಯೋಜನೆಯೇ ಬಂದ್ ಆಗುತ್ತಾ ಸಾಗಲಿದೆ. ಈ ಕಾನೂನು ವಿರುದ್ಧ ಪಕ್ಷದ ವತಿಯಿಂದ ಪಾದಯಾತ್ರೆ ಮಾಡುವ ಆಲೋಚನೆಯೂ ಇದೆ. ಕೆಪಿಸಿಸಿಯವರು ಯಾವ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ನಿರ್ಧರಿಸಲಿದ್ದಾರೆ ಎಂದವರು ಹೇಳಿದರು. 20 ವರ್ಷಗಳ ಹಿಂದೆ ಯುಪಿಎ ಸರಕಾರ ದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆ ಮೂಲಕ ಕ್ರಾಂತಿಕಾರಿ ಕಾನೂನು ಜಾರಿಗೆ ತಂದಿತ್ತು. ಬಳಿಕ ಅದನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಎಂದು ಬದಲಾಯಿಸಲಾಯಿತು. ಲಕ್ಷಾಂತರ ಮಂದಿಗೆ ಉದ್ಯೋಗದ ಜತೆಗೆ ಕೂಲಿಯನ್ನು ನಿಯಂತ್ರಣಕ್ಕೆ ತರುವುದು. ಗ್ರಾಪಂ ವ್ಯವಸ್ಥೆಯಲ್ಲಿ ಕೆಲಸ ಕಾರ್ಯದ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿಗೆ, ಆಸ್ತಿಗಳ ನಿರ್ಮಾಣಕ್ಕೆ ಪೂರಕವಾಗಿದ್ದ ಈ ಯೋಜನೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಗೆ ಶಕ್ತಿ ತುಂಬಿದೆ. ಆದರೆ ಪ್ರಧಾನಿ ಮೋದಿ ಸರಕಾರ ಸಾರ್ವಜನಿಕರ ಅಭಿಪ್ರಾಯ ಪಡೆಯದೆ, ಸಂಸತ್ತಿನಲ್ಲಿ ಚರ್ಚಿಸದೆ ಸರ್ವಾಧಿಕಾರ ಧೋರಣೆಯ ಬುಲ್ಡೋಜ್‌ನಂತೆ ವಿಚಿತ್ರ ಹೆಸರಿನೊಂದಿಗೆ ಹೊಸ ಕಾನೂನು ಜಾರಿಗೆ ತಂದಿದೆ ಎಂದು ಅವರು ಆರೋಪಿಸಿದರು. ಹಿಂದೆ ಯುಪಿಎ ಸರಕಾರ ಈ ಯೋಜನೆ ಆರಂಭಿಸಿದಾಗಲೇ ಇದಕ್ಕೆ ಇದನ್ನು ಅಂದು ಕೂಡಾ ಮೋದಿಯವರು ವಿರೋಧಿಸಿದ್ದರು. ಬಿಜೆಪಿಯಾಗಲಿ, ಆರೆಸ್ಸೆಸ್ಸಾಗಲಿ ಪ್ರಗತಿಪರ ವಿಚಾರಕ್ಕೆ ಕೆಲಸ ಮಾಡಿದ ಇತಿಹಾಸವೇ ಇಲ್ಲ. ಮೀಸಲಾತಿ ಪರ ಮಾತನಾಡಿಲ್ಲ. ಮಹಿಳೆಯರ ಸಬಲೀಕರಣದ ಬಗ್ಗೆ ಧ್ವನಿ ಎತ್ತಿಲ್ಲ. ಕಾಂಗ್ರೆಸ್ ಪಕ್ಷ ಸಂಪೂರ್ಣ ಸ್ವಚ್ಛ, ನಾವೇನೂ ತಪ್ಪೇ ಮಾಡಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ಕಾಂಗ್ರೆಸ್ ನೇತೃತ್ವದಲ್ಲಿ ದೇಶದಲ್ಲಿ ಉದ್ಯೋಗ ಖಾತ್ರಿ, ಶಿಕ್ಷಣ ಹಕ್ಕು, ಆಹಾರದ ಹಕ್ಕು, ಲೋಕಪಾಲ್, ಮಾಹಿತಿ ಹಕ್ಕು, ಅರಣ್ಯವಾಸಿಗಳ ಪರ ಹಕ್ಕುಗಳು ಜಾರಿಯಾಗಿವೆ. ಆದರೆ ಕಳೆದ 12 ವರ್ಷಗಳ ಆಡಳಿತಾವಧಿಯಲ್ಲಿ ಇಂತಹ ಯಾವುದೇ ಒಂದು ಯೋಜನೆ ಆಗಿಲ್ಲ. ಮಹಿಳಾ ಮೀಸಲಾತಿ ಕಾನೂನು ಘೋಷಣೆ ಮಾಡಿದ್ದರೂ ಇನ್ನೂ ಅನುಷ್ಟಾನ ಮಾಡಲಾಗಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು. ದ.ಕ. ಜಿಲ್ಲೆಯಲ್ಲಿ 2022-23ರಲ್ಲಿ 76 ಕೋಟಿರೂ. 2023-24ರಲ್ಲಿ 65 ಕೋಟಿ ರೂ., 2024-25ರಲ್ಲಿ 64 ಕೋಟಿ ರೂ. ಈ ಯೋಜನೆಯಡಿ ವೆಚ್ಚವಾಗಿದೆ. ಪ್ರತಿಯೊಂದು ಹಳ್ಳಿ, ಗ್ರಾ.ಪಂ.ಗಳಲ್ಲಿ ಸಣ್ಣಪುಟ್ಟ ಕಾಮಗಾರಿಗಳ ಮೂಲಕ ಹಣ ಬಂದಿದೆ. ಆದರೆ ಈ ಯೋಜನೆಯ ಸ್ವರೂಪ ಬದಲಾವಣೆಯಿಂದ ಗ್ರಾಮ ಪಂಚಾಯತ್‌ನ ಆರ್ಥಿಕತೆಯ ಶಕ್ತಿಯನ್ನು ಕುಗ್ಗಿಸುತ್ತದೆ. ಕರ್ನಾಟಕ, ತಮಿಳುನಾಡು, ತೆಲಂಗಾಣ ಮೊದಲಾದ ರಾಜ್ಯಗಳಿಗೆ ಕೇಂದ್ರ ಸರಕಾರ ಸಹಕಾರ ನೀಡದೆ ಸತಾಯಿಸುತ್ತಿದೆ. ಕೇಂದ್ರದಿಂದ ದೊರೆಯಬೇಕಾದ ನ್ಯಾಯಯುತವಾದ ಆರ್ಥಿಕ ಹಕ್ಕನ್ನು ನೀಡದೆ ರಾಜ್ಯವು ಹಣಕಾಸು ತೊಂದರೆಗಳನ್ನು ಅನುಭವಿಸುವಂತಾಗಿದೆ. ಉತ್ತಮ ರೀತಿಯಲ್ಲಿ ಜನಪರವಾಗಿದ್ದ ಕಾನೂನನ್ನು ಬದಲಾಯಿಸುವಾಗ, ರಾಜ್ಯದ ಪಾಲನ್ನು ಬಯಸುವಾಗ ಈ ಬಗ್ಗೆ ರಾಜ್ಯದ ಪ್ರತಿನಿಧಿಗಳನ್ನು ಕರೆದು ಚರ್ಚೆಯನ್ನೇ ಮಾಡಲಾಗಿಲ್ಲ. ಇದು ಸರ್ವಾಧಿಕಾರದ ಧೋರಣೆ ಅಲ್ಲದೆ ಮತ್ತೇನು ಎಂದವರು ಪ್ರಶ್ನಿಸಿದರು. ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಪಿಎಂ ಹೆಸರಿನಲ್ಲಿ ಜಾರಿಗೆ ತಂದಿದೆ. ಆದರೆ ಹೆಸರು ಫೋಟೋ ಮಾತ್ರ ಕೇಂದ್ರದ್ದು, ದುಡ್ಡು ರಾಜ್ಯದ್ದು. ಆಯುಷ್ಮಾನ್ ಭಾರತ್ ಹೆಸರು ಕೇಂದ್ರದ್ದು. ದುಡ್ಡು ರಾಜ್ಯ ಸರಕಾರ ನೀಡುವುದು. ದೇಶದ ಜನರ ಹಿತಕ್ಕಾಗಿ ಬಿಜೆಪಿ ಯಾವುದೇ ಕಾನೂನು, ಯೋಜನೆ ರೂಪಿಸಿಲ್ಲ. ಅವರ ಯೋಜನೆ ಏನಿದ್ದರೂ ಜನರ ಭಾವನಾತ್ಮಕ ವಿಚಾರಗಳನ್ನು ಕೆರಳಿಸುವುದು. ಮಂದಿರ, ಮಸೀದಿ, ಹಿಂದುತ್ವ, ಧರ್ಮರಕ್ಷಣೆ, ಪಾಕಿಸ್ತಾನ ಎಂದು ಹೇಳಕೊಂಡು ಜನರ ಮತ ಪಡೆದಿದ್ದಾರೆಯೇ ಹೊರತು ಸಮಾಜವನ್ನು ಸಂಘಟಿಸುವ ಯಾವುದೇ ಒಂದು ಕೆಲಸ ಮಾಡಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಗೋಷ್ಟಿಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಮುಖಂಡರಾದ ಪದ್ಮರಾಜ್, ಶಶಿಧರ ಹೆಗ್ಡೆ, ಮನುರಾಜ್, ವಿನಯರಾಜ್, ವಿಶ್ವಾಸ್ ಕುಮಾರ್ ದಾಸ್, ಶುಬೋದಯ ಆಳ್ವ, ಡೆನ್ನಿಸ್ ಡಿಸಿಲ್ವಾ, ಟಿ.ಕೆ. ಸುಧೀರ್, ಲಾವಣ್ಯ ಬಲ್ಲಾಳ್‌, ವಿಕಾಶ್ ಶೆಟ್ಟಿ, ಸಂತೋಷ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಕೇಂದ್ರ ದಿವಾಳಿ ಆಗಿದೆಯೇ ? ಹಿಂದೆ ಮನರೇಗ ಯೋಜನೆಯಡಿ 100 ದಿನದ ಉದ್ಯೋಗ ಖಾತ್ರಿ ಜತೆಗೆ ಸಂಪೂರ್ಣ ಕೂಲಿಯನ್ನು ಕೇಂದ್ರ ಸರಕಾರವೇ ನೀಡಬೇಕಿತ್ತು. ಸಲಕರಣೆಯಲ್ಲಿ ರಾಜ್ಯ ಸರಕಾರ ಶೇ. 25 ಪಾಲು ಒದಗಿಸಬೇಕಿತ್ತು. ಇದೀಗ ಕೂಲಿಯಲ್ಲಿ ಶೇ. 40ರಷ್ಟು ರಾಜ್ಯ ಸರಕಾರ ಕೊಡಬೇಕು. ಅಂದರೆ ಕೇಂದ್ರ ಸರಕಾರದಲ್ಲಿ ದುಡ್ಡಿಲ್ಲವೇ, ಕೇಂದ್ರ ದಿವಾಳಿ ಆಗಿದೆಯೇ ಎಂದು ಪ್ರಶ್ನಿಸಿದ ಸಚಿವ ದಿನೇಶ್ ಗುಂಡೂರಾವ್, ಈಗಾಗಲೇ ಆರ್ಥಿಕವಾಗಿ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳ ಮೇಲೆ ಆರ್ಥಿಕ ಸಂಕಷ್ಟ ಹೇರುತ್ತಿರುವ ಕೇಂದ್ರ ಸರಕಾರ ಇದೀಗ ಯೋಜನೆಯ ಸ್ವರೂಪ ಬದಲಾಯಿಸುವ ಮೂಲಕ ಮತ್ತಷ್ಟು ಹೊರೆ ನೀಡಲು ಮುಂದಾಗಿದೆ ಎಂದು ಆರೋಪಿಸಿದರು. ಯೋಜನೆಯಲ್ಲಿದ್ದ ಗಾಂಧಿ ಹೆಸರನ್ನು ತೆಗೆದಾಗ ನಾವು ಪ್ರಶ್ನಿಸುವುದು ತಪ್ಪೇ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಜನವಿರೋಧಿ, ರೈತ ವಿರೋಧಿ, ಬಡವರ ವಿರೋಧಿ ಯೋಜನೆಯಿಂದ ಗಾಂಧಿ ಹೆಸರು ತೆಗೆದಿರುವುದೇ ಒಳ್ಳೆಯದು. ಆದರೆ ಹೊಸ ಕಾನೂನಿನ ಮೂಲಕ ಸಾಮಾಜಿಕ ಕಳಕಳಿಯ ಯೋಜನೆಯನ್ನೇ ಕೇಂದ್ರ ಸರಕಾರ ಕೊಂದು ಹಾಕಿದೆ. ಹೊಸ ಕಾನೂನು ವಿಕೇಂದ್ರೀಕರಣದ ವಿರುದ್ಧವಾದ ಕಾನೂನು ಎಂದರು.

ವಾರ್ತಾ ಭಾರತಿ 9 Jan 2026 8:23 pm

2025ರಲ್ಲಿ ಮೋದಿ-ಟ್ರಂಪ್ 8 ಬಾರಿ ಮಾತುಕತೆ ನಡೆಸಿದ್ದರು: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಲುಟ್ನಿಕ್ ಹೇಳಿಕೆಗೆ ಎಂಇಎ ಪ್ರತಿಕ್ರಿಯೆ

ಹೊಸದಿಲ್ಲಿ,ಜ.9: ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಮತ್ತು ಸುಂಕ ವಿಷಯಗಳಲ್ಲಿ ಭಾರತ-ಅಮೆರಿಕ ನಡುವೆ ಸಂಬಂಧ ಹದಗೆಟ್ಟಿರುವ ನಡುವೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) 2025ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಎಂಟು ಬಾರಿ ಮಾತನಾಡಿದ್ದರು ಎಂದು ಶುಕ್ರವಾರ ತಿಳಿಸಿದೆ. ಸಂವಹನ ಕೊರತೆಯಿಂದಾಗಿ ಭಾರತ-ಅಮೆರಿಕ ನಡುವಿನ ಎಫ್‌ಟಿಎ ಮಾತುಕತೆಗಳು ಸ್ಥಗಿತಗೊಂಡಿವೆ. ಮೋದಿಯವರು ಟ್ರಂಪ್‌ಗೆ ಕರೆ ಮಾಡಿ ಮಾತನಾಡದ ಕಾರಣ ವ್ಯಾಪಾರ ಒಪ್ಪಂದವು ಅಂತಿಮಗೊಳ್ಳಲಿಲ್ಲ ಎಂದು ಅಮೆರಿಕದ ವಾಣಿಜ್ಯ ಸಚಿವ ಹೋವಾರ್ಡ್ ಲುಟ್ನಿಕ್ ಅವರು ಪಾಡಕಾಸ್ಟ್ ಸಂದರ್ಶನದಲ್ಲಿ ಹೇಳಿದ ಹಿನ್ನೆಲೆಯಲ್ಲಿ ಎಂಇಎ ಹೇಳಿಕೆ ಹೊರಬಿದ್ದಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ರಣಧೀರ್‌ ಜೈಸ್ವಾಲ್ ಅವರು,‘ಲುಟ್ನಿಕ್ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಭಾರತ ಮತ್ತು ಅಮೆರಿಕ ಫೆ.13,2025ರಷ್ಟು ಹಿಂದೆಯೇ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳನ್ನು ನಡೆಸಲು ಬದ್ಧವಾಗಿದ್ದವು. ಆಗಿನಿಂದ ಸಮತೋಲಿತ ಮತ್ತು ಪರಸ್ಪರ ಲಾಭದಾಯಕ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು ಉಭಯ ದೇಶಗಳು ಹಲವಾರು ಸುತ್ತುಗಳ ಮಾತುಕತೆಗಳನ್ನು ನಡೆಸಿವೆ. ಹಲವಾರು ಸಂದರ್ಭಗಳಲ್ಲಿ ನಾವು ಒಪ್ಪಂದಕ್ಕೆ ಹತ್ತಿರವಾಗಿದ್ದೆವು. ವರದಿಯಾಗಿರುವ ಹೇಳಿಕೆಗಳಲ್ಲಿ ಈ ಚರ್ಚೆಗಳ ವಿವರಗಳನ್ನು ಸರಿಯಾಗಿ ನೀಡಲಾಗಿಲ್ಲ. ಎರಡು ಪೂರಕ ಆರ್ಥಿಕತೆಗಳ ನಡುವೆ ಪರಸ್ಪರ ಲಾಭದಾಯಕ ವ್ಯಾಪಾರ ಒಪ್ಪಂದದಲ್ಲಿ ನಾವು ಈಗಲೂ ಆಸಕ್ತಿಯನ್ನು ಹೊಂದಿದ್ದೇವೆ. ಅದನ್ನು ಅಂತಿಮಗೊಳಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ. ಪ್ರಾಸಂಗಿಕವಾಗಿ,ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ 2025ರಲ್ಲಿ ಎಂಟು ಸಂದರ್ಭಗಳಲ್ಲಿ ದೂರವಾಣಿಯಲ್ಲಿ ಮಾತುಕತೆಗಳನ್ನೂ ನಡೆಸಿದ್ದಾರೆ ಮತ್ತು ನಮ್ಮ ವ್ಯಾಪಕ ಪಾಲುದಾರಿಕೆಯ ವಿವಿಧ ಅಂಶಗಳ ಬಗ್ಗೆ ಚರ್ಚಿಸಿದ್ದಾರೆ’ ಎಂದು ತಿಳಿಸಿದರು.

ವಾರ್ತಾ ಭಾರತಿ 9 Jan 2026 8:21 pm

ಈ ಜಿಲ್ಲೆಗೆ ಸಿಗಲಿದೆ ಸರ್ಕಾರಿ ವೈದ್ಯಕೀಯ ಕಾಲೇಜು: ಸಿಎಂ ಸಿದ್ದರಾಮಯ್ಯ ಆಶ್ವಾಸನೆ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಅಲ್ಲದೆ ವಿಜಯಪುರ ಜಿಲ್ಲೆಯಲ್ಲೂ ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು

ಒನ್ ಇ೦ಡಿಯ 9 Jan 2026 8:21 pm

ಯಡ್ರಾಮಿ | ಕಡಕೋಳ ಮಡಿವಾಳಪ್ಪ ಸಂಶೋಧನಾ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಸಿಎಂ ವೇದಿಕೆಗೆ ಪಾದಯಾತ್ರೆ

ಯಡ್ರಾಮಿ: ಕಡಕೋಳ ಮಡಿವಾಳಪ್ಪನವರ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ, ಕಡಕೋಳ ಮಡಿವಾಳೇಶ್ವರರ ಕರ್ತೃ ಗದ್ದಿಗೆಯಿಂದ ಯಡ್ರಾಮಿ ಪಟ್ಟಣದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಮಠದ ಪೀಠಾಧಿಪತಿಗಳಾದ ಡಾ.ರುದ್ರಮುನಿ ಶಿವಾಚಾರ್ಯರು ತಿಳಿಸಿದ್ದಾರೆ. ಯಡ್ರಾಮಿ ಪಟ್ಟಣದಲ್ಲಿ ಸೋಮವಾರ (ಜ.12) ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇದಿಕೆಯವರೆಗೆ ಅಪಾರ ಸಂಖ್ಯೆಯ ಭಕ್ತರೊಂದಿಗೆ ಪಾದಯಾತ್ರೆ ನಡೆಸಿ, ಸಿಎಂ ಅವರಿಗೆ ನೇರವಾಗಿ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು. ಕಡಕೋಳ ಮಡಿವಾಳಪ್ಪನವರು 12ನೇ ಶತಮಾನದ ಶರಣರಂತೆ ಸಮಾನತೆಯ ಸಂದೇಶ ಸಾರಿದವರು. ಸಾವಿರಾರು ತತ್ವಪದಗಳ ಮೂಲಕ ಜಾತೀಯತೆ, ಕಂದಾಚಾರ ಮತ್ತು ಸಾಮಾಜಿಕ ಶೋಷಣೆಯನ್ನು ಖಂಡಿಸಿದ ಮಹಾನ್ ತತ್ವಜ್ಞಾನಿ. ಕಡಕೋಳದಲ್ಲಿ ಎಲ್ಲಾ ಧರ್ಮದವರನ್ನು ಒಗ್ಗೂಡಿಸಿ ಅನುಭವ ಮಂಟಪ ನಡೆಸಿದ ಇಂತಹ ದಾರ್ಶನಿಕರ ಕ್ಷೇತ್ರವನ್ನು ಸರ್ಕಾರಗಳು ಸತತವಾಗಿ ಕಡೆಗಣಿಸುತ್ತಿವೆ ಎಂದು ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಿಎಂ ದಿ. ಧರ್ಮಸಿಂಗ್ ಅವರ ಕಾಲದಿಂದಲೂ ಮಠದ ಅಭಿವೃದ್ಧಿಗೆ ಮನವಿ ಸಲ್ಲಿಸುತ್ತಾ ಬರಲಾಗಿದೆ. ಪ್ರಸ್ತುತ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷರಾಗಿರುವ ಡಾ.ಅಜಯ್ ಸಿಂಗ್ ಅವರು ಮೂರು ಬಾರಿ ಆಯ್ಕೆಯಾದರೂ ಕಡಕೋಳದ ಅಭಿವೃದ್ಧಿಗೆ ಗಮನ ಹರಿಸಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಅಧ್ಯಯನ ಕೇಂದ್ರದ ಬಗ್ಗೆ ಸಿಎಂ ಅವರ ಭೇಟಿ ಮಾಡಿಸುವ ಬದಲು, ಅಧಿಕಾರಿಗಳ ಭೇಟಿ ಮಾಡಿಸಿ ಕಾಟಾಚಾರದ ನಡೆ ಪ್ರದರ್ಶಿಸಿದ್ದಾರೆ ಎಂದು ಅವರು ದೂರಿದರು. ರಾಜಕಾರಣಿಗಳು ಭರವಸೆ ಈಡೇರಿಸದ ಕಾರಣ, ಭಕ್ತರೊಂದಿಗೆ ಸ್ವತಃ ಪಾದಯಾತ್ರೆ ಕೈಗೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನ್ಯಾಯ ಕೇಳುವುದಾಗಿ ಶ್ರೀಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 8:19 pm

ಜ.10ರಂದು ಮಂಗಳೂರಿನಲ್ಲಿ ಸಂಚಾರ ವ್ಯತ್ಯಯ; ಪೊಲೀಸ್ ಕಮಿಷನರ್

ಮಂಗಳೂರು: ನಗರದಲ್ಲಿ ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲ ಮತ್ತು ನರಿಂಗಾನ ಹಾಗೂ ಅಂಬ್ಲಮೊಗರುವಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು. ಹಾಗಾಗಿ ಸುಗಮ ಸಂಚಾರದ ದೃಷ್ಟಿಯಿಂದ ತುರ್ತು ಸಂದರ್ಭ ಹೊರತುಪಡಿಸಿ ಈ ಮಾರ್ಗಗಳಲ್ಲಿ ಸಂಚರಿಸದೆ ಬದಲಿ ಮಾರ್ಗ ಉಪಯೋಗಿಸು ವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. *ಸಂಚಾರ ದಟ್ಟಣೆಯಾಗುವ ಮಾರ್ಗಗಳು: ಕೆಂಜಾರು ಜಂಕ್ಷನ್, ಮರವೂರು, ಕಾವೂರು, ಬೋಂದೆಲ್, ಪದವಿನಂಗಡಿ, ಮೇರಿಹಿಲ್, ಯೆಯ್ಯಾಡಿ, ಕೆ.ಪಿ.ಟಿ.ವೃತ್ತ, ಬಟ್ಟಗುಡ್ಡೆ, ಕದ್ರಿ ಕಂಬಳ, ಭಾರತ್ ಬೀಡಿ ಜಂಕ್ಷನ್, ಬಂಟ್ಸ್ ಹಾಸ್ಟೆಲ್, ಪಿ.ವಿ.ಎಸ್, ನವಭಾರತ್ ವೃತ್ತ, ಡಾ. ಅಂಬೇಡ್ಕರ್ ವೃತ್ತ, ಹಂಪನಕಟ್ಟೆ, ಕೈರಳಿ ಜಂಕ್ಷನ್, ಅತ್ತಾವರ ಕಟ್ಟೆ, ಅವತಾರ್ ಹೋಟೆಲ್ ಎದುರಿನ ರಸ್ತೆ. *ಪದವು ಜಂಕ್ಷನ್, ನಂತೂರು ವೃತ್ತ, ಪಂಪ್‌ವೆಲ್, ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು, ತೊಕ್ಕೊಟ್ಟು, ಕುತ್ತಾರ್ ಪದವು, ದೇರಳಕಟ್ಟೆ, ನಾಟೆಕಲ್, ಮಂಗಳಾಂತಿ, ಕಲ್ಕಟ್ಟ, ಮಂಜನಾಡಿ, ನರಿಂಗಾನ, ಕುತ್ತಾರ್ ಕೊರಗಜ್ಜನಕಟ್ಟೆ, ಉಳಿಯ, ಅಂಬ್ಲಮೊಗರು , ಮದಕ ಜಂಕ್ಷನ್. *ಕೆಪಿಟಿ ಜಂಕ್ಷನ್, ಕೊಟ್ಟಾರ ಚೌಕಿ, ಕೋಡಿಕಲ್ ಕ್ರಾಸ್, ಕೂಳೂರು, ಕೆಐಒಸಿಎಲ್ ಜಂಕ್ಷನ್, ತಣ್ಣೀರುಬಾವಿ, ಬ್ಲೂಪ್ಲ್ಯಾಗ್ ಬೀಚ್ ಈ ಮಾರ್ಗದ ಎರಡು ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತಿಲ್ಲ. ಈ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 8:16 pm

ಕಲಬುರಗಿ | ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ಡಾ.ಗೌಸುದ್ದೀನ್ ತುಮಕೂರಕರ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ, ಈ ಭಾಗದ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಿಕೊಡಬೇಕು ಎಂದು ಜಾನಪದ ತಜ್ಞ ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ಗೌಸುದ್ದೀನ್ ತುಮಕೂರಕರ್ ಹೇಳಿದರು. ನಗರದ ಜಿಲಾನಾಬಾದ್‌ನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷ ದ್ವಿತೀಯ ಪಿಯುಸಿ ಫಲಿತಾಂಶವು ನಿರೀಕ್ಷಿತ ಮಟ್ಟದಲ್ಲಿ ಬಂದಿಲ್ಲ. ಈ ಬಾರಿ ಕಲ್ಯಾಣ ಕರ್ನಾಟಕ ಭಾಗದ ಕಾಲೇಜುಗಳ ಫಲಿತಾಂಶವನ್ನು ಉತ್ತಮಪಡಿಸುವ ಜವಾಬ್ದಾರಿ ಆಯಾ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಮೇಲಿದೆ. ವಿದ್ಯಾರ್ಥಿಗಳು ಕೂಡ ಕಠಿಣ ಪರಿಶ್ರಮ ಪಟ್ಟು ಉತ್ತಮ ಅಂಕ ಗಳಿಸಬೇಕು. ಶಿಕ್ಷಣದ ಜೊತೆಗೆ ಜೀವನದಲ್ಲಿ ಸಂಸ್ಕಾರವನ್ನು ಮೈಗೂಡಿಸಿಕೊಳ್ಳುವುದು ಅನಿವಾರ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅನೇಕ ಸರ್ಕಾರಿ ಕಾಲೇಜುಗಳಲ್ಲಿ ತರಗತಿ ಕೋಣೆಗಳು, ಶೌಚಾಲಯ ಹಾಗೂ ಉಪನ್ಯಾಸಕರ ಕೊರತೆ ಎದ್ದು ಕಾಣುತ್ತಿದೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಈ ಭಾಗದ ಜನಪ್ರತಿನಿಧಿಗಳು ವಿಶೇಷ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ದಶರಥ ರಾಠೋಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶೇಕ್ ಸಮ್ರೀನ್, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಧರ್ಮರಾಯ ಜವಳಿ, ಮಹ್ಮದ್ ಅಮ್ಜದ್, ಶಂಕರ ರುದ್ರವಾಡಿ, ಮಹೇಶ ದೇಶಪಾಂಡೆ ಹಾಗೂ ರಾಜಶೇಖರ ಮಿಣಜಿಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಮೇಶ ಮಾಡಿಯ್ಯಾಳಕರ್, ಸೋಮಶೇಖರ ಚವ್ಹಾಣ್, ಡಾ.ವಿಶ್ವನಾಥ ಹೊಸಮನಿ, ಜಮುನಾ ಟಿಳೆ, ನೀಲಮ್ಮ ಪಾಟೀಲ್, ರೇಷ್ಮಾ ಖಾತೂನ್, ಸುಜಾತ ರೆಡ್ಡಿ, ಇಂದುಕಲಾ, ಸಂಗೀತಾ ಬುಳ್ಳಾ, ಬಾಬುರಾವ್ ಮೆಲಕೇರಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 9 Jan 2026 8:12 pm

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: ದೇಗುಲದ ತಂತ್ರಿ ಪೊಲೀಸ್ ವಶಕ್ಕೆ

ತಿರುವನಂತಪುರ,ಜ.9: ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ದೇಗುಲದ ತಂತ್ರಿ ಕಂಡರಾರು ರಾಜೀವಾರು ಅವರನ್ನು ಶುಕ್ರವಾರ ಕೇರಳ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ರಾಜೀವಾರು ಅವರನ್ನು ವಿಶೇಷ ತನಿಖಾ ತಂಡವು ವಿಚಾರಣೆಗಾಗಿ ತಿರುವನಂತಪುರಕ್ಕೆ ಕರೆಸಿಕೊಂಡಿತ್ತು. ಅವರನ್ನು ವಿಚಾರಣೆಗೊಳಪಡಿಸಿದ ಬಳಿಕ ಅವರನ್ನು ಬಂಧಿಸಲಾಯಿತೆಂದು ವರದಿಗಳು ತಿಳಿಸಿವೆ. ದೇವಾಲಯದಲ್ಲಿ ಅಳವಡಿಸಲಾಗಿದ್ದ ಬಂಗಾರದ ಲೇಪಗಳನ್ನು ರಿಪೇರಿಗಾಗಿ ತೆಗೆಯುವುದಕ್ಕೆ ತಾನು ಅನುಮತಿ ನೀಡಿದ್ದೆ. ಆದರೆ ಅದನ್ನು ದೇವಾಲಯದ ಆವರಣದಿಂದ ಹೊರಗೆ ಕೊಂಡೊಯ್ಯಲಾಗುತ್ತಿದೆಯೆಂಬುದು ತನಗೆ ತಿಳಿದಿರಲಿಲ್ಲವೆಂದು ಕಂಡರಾರು, ತನಿಖಾ ತಂಡಕ್ಕೆ ತಿಳಿಸಿದ್ದಾರೆನ್ನಲಾಗಿದೆ. ಶಬರಿಮಲೆ ಚಿನ್ನ ನಾಪತ್ತೆ ವಿವಾದದಲ್ಲಿ ಓರ್ವ ‘ ದೈವಿಕ ವ್ಯಕ್ತಿ’ ಹಾಗೂ ‘ಸಸ್ಯಾಹಾರಿ’ ಶಾಮೀಲಾಗಿದ್ದಾನೆಂದು ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಕೆಲವು ದಿನಗಳ ಹಿಂದೆಯಷ್ಟೇ ತಿಳಿಸಿದ್ದರು. ಪದ್ಮಕುಮಾರ್ ಅವರು ತಂತ್ರಿಯವರನ್ನೇ ಪ್ರಸ್ತಾವಿಸಿ ಈ ಮಾತುಗಳನ್ನಾಡಿದ್ದಾರೆಂಬ ಊಹಾಪೋಹಗಳುಂಟಾಗಿದ್ದವು. ಅಲ್ಲದೆ, ರಾಜೀವಾರು ಅವರಿಗೆ ಪ್ರಕರಣದ ಪ್ರಮುಖ ಆರೋಪಿ ಬೆಂಗಳೂರು ಮೂಲದ ಉನ್ನಿಕೃಷ್ಣನ್ ಪೊಟ್ಟಿ ಜೊತೆ ವೈಯಕ್ತಿಕ ನಂಟುಗಳಿರುವುದು ಕೂಡ ತಿಳಿದುಬಂದಿದೆ. ರಾಜೀವಾರು ಅವರು ಶಬರಿ ಮಲೆ ಅಯ್ಯಪ್ಪ ದೇವಾಲಯದ ತಂತ್ರಿಗಳ ಕುಟುಂಬ ‘ತಾಳಮನ ಮಡೊಮ್‌ನ ಹಿರಿಯ ಸದಸ್ಯರು. ಸಂಪ್ರದಾಯದ ಪ್ರಕಾರ ಈ ಕುಟುಂಬದ ಹಿರಿಯ ವ್ಯಕ್ತಿ, ದೇವಾಲಯದ ಧಾರ್ಮಿಕ ವಿಚಾರಗಳಲ್ಲಿ ಪರಮೋಚ್ಚ ಅಧಿಕಾರವನ್ನು ಹೊಂದಿರುತ್ತಾರೆ.

ವಾರ್ತಾ ಭಾರತಿ 9 Jan 2026 8:12 pm

ಶಾಸಕಿ ಭಾಗಿರಥಿ ಮುರುಳ್ಯರಿಗೆ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು, ಜ.9: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಕಾರಿ ಪೋಸ್ಟ್ ಮಾಡಿದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ರಾಜ್ಯ ಸರಕಾರದಲ್ಲಿ ಶಾಸಕರಿಗೇ ಭದ್ರತೆ ಇಲ್ಲ. ಇನ್ನು ಜನ ಸಾಮಾನ್ಯರ ಗತಿ ಏನು? ಕೇವಲ ಬಿಜೆಪಿ ಶಾಸಕರ ಮೇಲೆ, ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗುತ್ತಿದೆ, ಸುಳ್ಯ ಶಾಸಕಿಯ ಅವಹೇಳನಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಸಬೇಕು ಎಂದು ಆಗ್ರಹಿಸಿದರು. ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಪಕ್ಷದ ನಾಯಕಿ ಸುಲೋಚನಾ ಭಟ್ ಮಾತನಾಡಿದರು. ಪ್ರತಿಭಟನೆಯಲ್ಲಿ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕರಾದ ಮೋನಪ್ಪ ಭಂಡಾರಿ, ಸಂಜೀವ ಮಠಂದೂರು, ಬಾಲಕೃಷ್ಣ ಭಟ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಪ್ರವೀಣ್ ನಿಡ್ಡೇಲ್ ಮತ್ತಿತರರು ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 9 Jan 2026 8:06 pm

ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ: ಸಚಿವ ಈಶ್ವರ ಖಂಡ್ರೆ

ಮಂಗಳೂರು,ಜ.9: ರಾಜ್ಯಮಟ್ಟದ ಗೇರು ಮೇಳವನ್ನು ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಅತ್ಯಧಿಕ ಗೇರು ದ.ಕ.ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಇಲ್ಲಿ ಗೇರು ಸಸಿಗಳಿಗೆ ಹೆಚ್ಚು ಬೇಡಿಕೆಯಿದೆ. ಗೇರು ಉತ್ಪನ್ನಗಳಿಗೆ ದೇಶ, ವಿದೇಶದಲ್ಲೂ ಹೆಚ್ಚಿನ ಬೇಡಿಕೆಯಿದೆ. ಆದರೆ ಬೇಡಿಕೆಯಷ್ಟು ಗೇರು ಪೂರೈಕೆಯಿಲ್ಲದ ಕಾರಣ ವಿದೇಶದಿಂದ ಗೇರು ಆಮದು ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಸಚಿವ ಖಂಡ್ರೆ ಹೇಳಿದರು. ಕರಾವಳಿ ಗೇರು ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಗೇರು ಮೇಳವನ್ನು ಆಯೋಜಿಸಲಾ ಗುತ್ತಿದೆ. ಇದರಿಂದ ಗೇರು ಬೆಳೆಗಾರರು, ಗೇರು ಉದ್ಯಮಿಗಳನ್ನು ಒಂದೆಡೆ ಸೇರಿಸಿ ಗೇರು ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಗೇರು ಮೇಳದಲ್ಲಿ ಉತ್ಪನ್ನಗಳ ಪ್ರದರ್ಶನ, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮ ನಡೆಸಲಾಗುವುದು. ಗೇರು ಬೆಳೆಗಾರರಿಗೆ ವೈಜ್ಞ್ಞಾನಿಕ ಬೆಲೆ ದೊರಕುವಂತಾಗಲು ಇಲಾಖೆಯು ಕ್ರಮ ಕೈಗೊಳ್ಳಲಿದೆ. ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಎಲ್ಲಾ ರೀತಿಯ ಸಂಶೋಧನೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ ಜಿಲ್ಲೆಯಲ್ಲಿ 40 ಸಾವಿರ ಮೆಟ್ರಿಕ್ ಟನ್ ಗೇರು ಉತ್ಪಾದನೆಯಾಗುತ್ತಿದೆ. ಗೇರು ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಇದೆ. ಗೇರು ಉದ್ಯಮದಿಂದಲೂ ಬೇಡಿಕೆ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೇರು ಸಸಿಗಳಿಗೂ ಹೆಚ್ಚಿನ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ನಿಗಮವು ಇದಕ್ಕೆ ಬೇಕಾದ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ಮೇಗಿ, ಸಿಸಿಎಫ್ ಕರಿಕಲನ್, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Jan 2026 8:02 pm

`ರೋಹಿತ್ ಶರ್ಮಾ ನಮ್ಮ ಕಪ್ತಾನ' ಎಂದ ಜಯ್ ಶಾ; ಹಿಟ್ ಮ್ಯಾನ್ ನಕ್ಕ ವಿಡಿಯೋ ಪುಲ್ ವೈರಲ್!

Jay Shah On Rohit Sharma- ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಭಾರತದ ಸ್ಟಾರ್ ಕ್ರಿಕೆಟರ್ ರೋಹಿತ್ ಶರ್ಮಾ ಅವರನ್ನು 'ಕಪ್ತಾನ' ಎಂದು ಕರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇತ್ತೀಚೆಗೆ ನಡೆದ ರಿಲಯನ್ಸ್ ಫೌಂಡೇಶನ್ ನ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಈ ಸಂದರ್ಭದಲ್ಲಿ ರೋಹಿತ್ ಸಂತೋಷಗೊಂಡರು. ಅವರ ಪತ್ನಿ ರಿತಿಕಾ ಸಜ್ದೇಹ್ ಕೂಡ ಜೊತೆಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಜಯ ಕರ್ನಾಟಕ 9 Jan 2026 8:00 pm

ಜ.10: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿಗೆ ಭೇಟಿ

ಮಂಗಳೂರು,ಜ.9: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜ.10ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 9:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನಕ್ಕೆ ಆಗಮನ, ಮಧ್ಯಾಹ್ನ 12ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆ (ಅತ್ತಾವರದ ಹೋಟೆಲ್ ಅವತಾರ್‌ನಲ್ಲಿ), ಸಂಜೆ 5:30ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ, ಸಂಜೆ 7ಕ್ಕೆ ನರಿಂಗಾನದಲ್ಲಿ ಲವಕುಶ ಜೋಡುಕರೆ ಕಂಬಳ ಕಾರ್ಯಕ್ರಮ, ರಾತ್ರಿ 8:30ಕ್ಕೆ ಅಂಬ್ಲಮೊಗರು ಗ್ರಾಮದ ಕುಂಡೂರು ಜಮಾ ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜ.11ರಂದು ಪೂ.11:20ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 9 Jan 2026 7:56 pm

2023ರ ಚುನಾವಣೆಯಲ್ಲಿನ ಡಿಕೆಶಿ ಭವಿಷ್ಯ : 2028ರ NDA 'ಮ್ಯಾಜಿಕ್ ನಂಬರ್’ ರಹಸ್ಯ ಬಹಿರಂಗ ಪಡಿಸಿದ ನಿಖಿಲ್

Karnataka 2028 Assembly Election : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ನಾವು, ಜೊತೆಯಾಗಿ ಸ್ಪರ್ಧೆಯನ್ನು ಮಾಡುತ್ತಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಜೊತೆಗೆ, ಎಷ್ಟು ಸ್ಥಾನದಲ್ಲಿ ಗೆಲ್ಲಬಹುದು ಎನ್ನುವ ಭವಿಷ್ಯವನ್ನು ನುಡಿದಿದ್ದಾರೆ. ನಿಖಿಲ್ ಕುಮಾರಸ್ವಾಮಿಯವರ ನಂಬರ್ ಗೇಮ್ ಲೆಕ್ಕಾಚಾರ ಕುತೂಹಲಕ್ಕೆ ಕಾರಣವಾಗಿದೆ.

ವಿಜಯ ಕರ್ನಾಟಕ 9 Jan 2026 7:52 pm

ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಂದ ಕ್ಷೇತ್ರ ಭೇಟಿ

ಕುಂದಾಪುರ, ಜ.9: ಹೊಸ ವರ್ಷದ ಪ್ರಯುಕ್ತ ಹೊಸ ಕಲಿಕೆಗೆ ಮುನ್ನುಡಿಯಾಗಿ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆ ಸಿಬಿಎಸ್‌ಸಿ ವಿದ್ಯಾರ್ಥಿಗಳು ಉಡುಪಿ ಹಾಗೂ ಕುಂದಾಪುರದ ವಿವಿಧ ಸಾರ್ವಜನಿಕ ಹಾಗೂ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಕಚೇರಿ, ಅಗ್ನಿಶಾಮಕ ಠಾಣೆ, ವಿಶೇಷ ಚೇತನ ಶಾಲೆ, ಕಸ ವಿಲೇವಾರಿ ಸ್ಥಳ, ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ, ಗಂಗೊಳ್ಳಿ ಮೀನುಗಾರಿಕಾ ಬಂದರು, ಪುರಸಭೆ, ಪೊಲೀಸ್ ಠಾಣೆ, ಕುಂದಾಪುರ ಸಂಚಾರ ಪೊಲೀಸ್ ಠಾಣೆ, ಸರಕಾರಿ ಆಸ್ಪತ್ರೆ, ಅಂಚೆ ಕಚೇರಿ, ಕುಂದಾಪುರ ತಾಲೂಕು ಕಚೇರಿ, ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿ, ಸಾರ್ವಜನಿಕ ಗ್ರಂಥಾಲಯ, ವಿದ್ಯುತ್ ಸರಬರಾಜು ಕೇಂದ್ರ, ಉಪ ಪೊಲೀಸ್ ವರಿಷ್ಠಾಧಿಕಾರಿ ಗಳ ಕಚೇರಿ, ಜೀವ ವಿಮಾ ನಿಗಮ ಕಚೇರಿ, ವೃದ್ಧಾಶ್ರಮ ಹಾಗೂ ಕುಂದಾಪುರದ ಆಟೋ ನಿಲ್ದಾಣಕ್ಕೆ ಭೇಟಿ ನೀಡುವುದರ ಮೂಲಕ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದಿದ್ದಾರೆ. ಕ್ಷೇತ್ರ ಭೇಟಿ ನೀಡಿದ ಎಲ್ಲಾ ಸ್ಥಳಗಳಲ್ಲಿ ಅಧಿಕಾರಿ ವರ್ಗದವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಆತ್ಮೀಯ ವಾಗಿ ಸ್ವಾಗತಿಸಿ, ಸಿಹಿ ತಿಂಡಿ ನೀಡುವುದರ ಮೂಲಕ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಅಧಿಕಾರಿಗಳು ತಮ್ಮ ಕಚೇರಿಗಳ ಕಾರ್ಯವೈಖರಿಯ ಕುರಿತು ಅಗತ್ಯ ಮಾಹಿತಿಯನ್ನು ವಿವರವಾಗಿ ನೀಡಿದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಸಾರ್ವಜನಿಕ ಕ್ಷೇತ್ರಗಳಲ್ಲಿ ಎದುರಾಗುವ ಗೊಂದಲಗಳಿಗೆ ಸ್ಪಷ್ಟ ಪರಿಹಾರ ಗಳನ್ನು ತಿಳಿಸಿಕೊಟ್ಟ ಅಧಿಕಾರಿ ಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಭೇಟಿ ವಿದ್ಯಾರ್ಥಿಗಳಿಗೆ ತಿಳುವಳಿಕೆ ಹಾಗೂ ಅನುಭವವನ್ನು ಹೆಚ್ಚಿಸಿದ ಮಹತ್ವದ ಅವಕಾಶವಾಗಿ ಪರಿಣಮಿಸಿತು. ಒಟ್ಟಾರೆಯಾಗಿ ವಿವಿಧ ಕ್ಷೇತ್ರ ಭೇಟಿಯು ವಿದ್ಯಾರ್ಥಿಗಳ ಸರ್ವ ತೋಮುಖ ಬೆಳವಣಿಗೆಗೆ ಸಹಕಾರಿಯಾಗುವುದಲ್ಲದೆ ವಿದ್ಯಾರ್ಥಿ ಜೀವನದಲ್ಲಿ ಒಂದು ಮರೆಯಲಾಗದ ಅನುಭವವನ್ನು ನೀಡಿತು.

ವಾರ್ತಾ ಭಾರತಿ 9 Jan 2026 7:51 pm

ಕೊಪ್ಪಳ | ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ನಾಗರಾಜ್ ವೈ. ಆಯ್ಕೆ

ಕೊಪ್ಪಳ : ಕರ್ನಾಟಕ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2025ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳ ಪೈಕಿ ಪ್ರಜಾ ಸಂದೇಶ ದತ್ತಿ ಪ್ರಶಸ್ತಿ ಗೆ ಟಿವಿ 5 ವಾಹಿನಿ ಕೊಪ್ಪಳ ಜಿಲ್ಲಾವರದಿಗಾರ ನಾಗರಾಜ್  ವೈ. ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಮಾಧ್ಯಮ ಅಕಾಡೆಮಿ ಕಚೇರಿಯಲ್ಲಿ ಗುರುವಾರದಂದು ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರ ಅಧ್ಯಕ್ಷತೆಯಲ್ಲಿ ಸರ್ವಸದಸ್ಯರ ಸಮ್ಮುಖದಲ್ಲಿ ನಡೆದ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನ ಪ್ರಶಸ್ತಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಕಳೆದ ಹಲವು ವರ್ಷಗಳಿಂದ ದೃಶ್ಯ ಹಾಗೂ ಮುದ್ರಣ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ಕೊಪ್ಪಳ ತಾಲೂಕಿನ ಚಿಲಕಮುಖಿ ಗ್ರಾಮದಲ್ಲಿ ಯುವಕನೊಬ್ಬ ಅನ್ಯಜಾತಿ ಯುವತಿಯನ್ನು ಮದುವೆಯಾಗಿರುವ ಕಾರಣಕ್ಕೆ 8 ವರ್ಷಗಳ ಕಾಲ ಬಹಿಷ್ಕಾರ ಹಾಕಿದ ಘಟನೆ ಬಗ್ಗೆ ಟಿವಿ 5 ವಾಹಿನಿಯಲ್ಲಿ ವಿಶೇಷ ವರದಿ ಮಾಡಿದ್ದರು. ಈ ಪರಿಣಾಮಕಾರಿ ಮತ್ತು ವಿಶೇಷ ವರದಿಯನ್ನು ಗುರುತಿಸಿ ಸರಕಾರ ಈ ಗೌರವವನ್ನು ನೀಡಿದೆ.

ವಾರ್ತಾ ಭಾರತಿ 9 Jan 2026 7:50 pm

Madikeri | ದೇವರಕೊಲ್ಲಿಯಲ್ಲಿ ಲಾರಿ ಬೆಂಕಿಗಾಹುತಿ

ಮಡಿಕೇರಿ : ಮೈಸೂರಿನಿಂದ-ಮಂಗಳೂರು ಕಡೆಗೆ ಫ್ಲೈವುಡ್ ಶೀಟ್‍ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿ ಅವಘಡದಿಂದ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ನಡೆದಿದೆ. ಫ್ಲೈವುಡ್ ತುಂಬಿದ್ದ ಲಾರಿ ಮೈಸೂರಿನಿಂದ ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಬಳಿ ಬೆಳಗಿನ ಜಾವ ಆಗಮಿಸಿದೆ. ಈ ವೇಳೆ ಇಂಜಿನ್ ಭಾಗದಿಂದ ಹೊಗೆ ಕಂಡು ಬಂದಿದ್ದು, ಚಾಲಕ ಕೆಳಕ್ಕಿಳಿದು ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಲಾರಿಯನ್ನು ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಬೆಂಕಿ ವ್ಯಾಪಿಸಿದ್ದ ಹಿನ್ನೆಲೆ ಜೆಸಿಬಿ ಯಂತ್ರ ಬಳಸಿ ಲಾರಿಯಿಂದ ಫ್ಲೈವುಡ್ ಹೊರ ತೆಗೆದು ಬೆಂಕಿ ನಂದಿಸಿದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ವಾರ್ತಾ ಭಾರತಿ 9 Jan 2026 7:49 pm

ನ.11ರಂದು ಉಡುಪಿ ಫುಲ್ ಮ್ಯಾರಥಾನ್

ಉಡುಪಿ, ಜ.9: ಉಡುಪಿ ಜಿಲ್ಲಾಡಳಿತ, ಎನ್‌ಇಬಿ ಸ್ಪೋರ್ಟ್ಸ್ ಬೆಂಗಳೂರು ಮತ್ತುಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಫುಲ್ ಮ್ಯಾರಥಾನ್ ನ.11ರಂದು ಬೆಳಿಗ್ಗೆ 4ಗಂಟೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಈ ಸ್ಪರ್ಧೆಯ ಎಲ್ಲಾ ವಿಭಾಗಗಳಲ್ಲಿ 5500 ಕ್ರೀಡಾಪಟುಗಳು ನೋಂದಣಿ ಮಾಡಿಕೊಂಡಿದ್ದು, ಎಲ್ಲಾ ವಿಭಾಗಗಳಿಗೆ ಒಟ್ಟು 10 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಲಿರುವರು. ಬಹುಮಾನ ವಿತರಣಾ ಸಮಾರಂಭವು ಬೆಳಿಗ್ಗೆ 9.30ಕ್ಕೆ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಲಿದೆ. ಮ್ಯಾರಥಾನ್ ಸ್ಪರ್ಧೆಯು ಬೆಳಿಗ್ಗೆ 4 ಗಂಟೆಗೆ, ಹಾಫ್ ಮ್ಯಾರಥಾನ್ ಬೆಳಿಗ್ಗೆ 5.30ಕ್ಕೆ, 10 ಕಿ.ಮೀ. ಓಟ ಬೆಳಗ್ಗೆ 6.30ಕ್ಕೆ ಹಾಗೂ 5 ಕಿ.ಮೀ. ಫನ್ ರನ್ ಬೆಳಗ್ಗೆ 7.30ಕ್ಕೆ ಆರಂಭಗೊಳ್ಳಲಿದೆ. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿ ಗಾಗಿ 3 ಕಿ.ಮೀ ಮತ್ತು 5 ಕಿ.ಮೀ ಓಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಬೆಳಿಗ್ಗೆ 7.45ರ ನಂತರ ಪ್ರಾರಂಭಗೊಳ್ಳಲಿದೆ. ಮೊದಲ ಆರು ಸ್ಥಾನಗಳಿಗೆ ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 7:45 pm

ಗೃಹ ಖಾತೆ ಒತ್ತುವರಿ ಮಾಡಿಕೊಂಡ ಡಿ.ಕೆ.ಶಿವಕುಮಾರ್ : ಕುಮಾರಸ್ವಾಮಿ ಟೀಕೆ

ಹೊಸದಿಲ್ಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಾ.ಜಿ.ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಶುಕ್ರವಾರ ಈ ಕುರಿತು ದಿಲ್ಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿ.ಕೆ.ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ ಅಲಿಯಾಸ್ ಉಪ ಮುಖ್ಯಮಂತ್ರಿ. ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸುಲಿಗೆ, ಬೇಲಿ, ಚದರಡಿ, ಒದ್ದು ಕಿತ್ತುಕೊಳ್ಳುವುದು ನನ್ನ ಅನುಭವ ಅಲ್ಲ. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ. ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು ವ್ಯಂಗ್ಯವಾಡಿದ್ದಾರೆ. ನಿಮಗೆ ಭೂ ಕಬಳಿಕೆ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು. ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಹೆಚ್ಚುವರಿ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ ಎಂದು ಅವರು ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಈ ರೀತಿಯ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಹಿರಿತನ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ವಾರ್ತಾ ಭಾರತಿ 9 Jan 2026 7:44 pm

ಬಸ್ಸುಗಳಿಗೆ ಬಾಗಿಲು, ಟಿಪ್ಪರ್, ಲಾರಿಗೆ ಸ್ಪೀಡ್‌ಗವರ್ನರ್: ರಸ್ತೆ ಸುರಕ್ಷತಾ ಸಭೆಯ ನಿರ್ದೇಶನ ಪಾಲಿಸಲು ಸೂಚನೆ

ಉಡುಪಿ: ರಸ್ತೆ ಸುರಕ್ಷತಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಜನವರಿ 20ರೊಳಗೆ ಕಡ್ಡಾಯವಾಗಿ ಬಾಗಿಲನ್ನು (ಡೋರ್) ಅಳವಡಿಸಿಕೊಂಡು ಸಂಚರಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ. ಅದೇ ರೀತಿ ಮರಳು, ಮಣ್ಣು, ಕೆಂಪುಕಲ್ಲು, ಶಿಲೆಕಲ್ಲು ಸಹಿತ ಖನಿಜ ವಸ್ತುಗಳನ್ನು ಸಾಗಿಸುವ 6 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ಲಾರಿ, ಟಿಪ್ಪರ್ ವಾಹನಗಳಿಗೆ ವೇಗ ನಿಯಂತ್ರಕ (ಸ್ಪೀಡ್ ಗವರ್ನರ್)ಗಳನ್ನು 10 ದಿನಗಳ ಒಳಗೆ ಕಡ್ಡಾಯವಾಗಿ ಅಳವಡಿಸುವಂತೆ ಎಲ್ಲಾ ವಾಹನ ಮಾಲಕರು ಕ್ರಮ ವಹಿಸಬೇಕು ಎಂದು ಅದು ಸ್ಪಷ್ಟಪಡಿಸಿದೆ. ಕಾಂಕ್ರೀಟ್ ಮಿಕ್ಸರ್ ವಾಹನಗಳು ರಸ್ತೆಯಲ್ಲಿ ಸಂಚರಿಸುವಾಗ ಕಾಂಕ್ರೀಟ್ ಅನ್ನು ರಸ್ತೆಯಲ್ಲಿ ಚೆಲ್ಲದೇ ಸಾಗಾಟ ಮಾಡುವ ಕುರಿತು ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದೂ ಪ್ರಕಟಣೆಯಲ್ಲಿ ಹೇಳಲಾಗಿದೆ. ಮೇಲಿನ ಎಲ್ಲಾ ವಿಷಯಗಳಲ್ಲಿ ಯಾವುದೇ ಉಲ್ಲಂಘನೆಯಾದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವುದ ರೊಂದಿಗೆ ದಂಡ ವಿಧಿಸಲಾಗುವುದು. ಅಲ್ಲದೇ ವಾಹನವನ್ನು ಮುಟ್ಟುಗೋಲು ಹಾಕಿ ಕೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 9 Jan 2026 7:40 pm

ಛೂ ಬಾಣ | ಪಿ. ಮಹಮ್ಮದ್ ಕಾರ್ಟೂನ್

ವಾರ್ತಾ ಭಾರತಿ 9 Jan 2026 7:37 pm

ಡಾಲರ್ ಎದುರು ರುಪಾಯಿ ಮೌಲ್ಯವನ್ನು ಏರಿಸಲು ಆರ್ ಬಿಐ ಮುಂದಿರುವ ದಾರಿಗಳ್ಯಾವು?

2025ರ ಡಿಸೆಂಬರ್‌ನಲ್ಲಿ ಭಾರತೀಯ ರೂಪಾಯಿ ಡಾಲರ್ ಎದುರು ದಾಖಲೆಯ ಕುಸಿತ ಕಂಡಿತು. ವಿದೇಶಿ ಹೂಡಿಕೆದಾರರು ಷೇರುಗಳನ್ನು ಮಾರಾಟ ಮಾಡಿದರು ಮತ್ತು ಅಮೆರಿಕದ ಸುಂಕ ನೀತಿಯಿಂದ ರಫ್ತು ದುಬಾರಿಯಾಯಿತು. ಆದಾಗ್ಯೂ, RBI ಗವರ್ನರ್ ಮತ್ತು ಮುಖ್ಯ ಆರ್ಥಿಕ ಸಲಹೆಗಾರರು ರೂಪಾಯಿ ಕುಸಿತದ ಬಗ್ಗೆ ಚಿಂತಿಸುವುದಿಲ್ಲ ಎಂದು ಹೇಳಿದ್ದಾರೆ, ಇದು 'ಅಸಾಧ್ಯ ತ್ರಿಕೋನ' ಸಿದ್ಧಾಂತದ ಆಧಾರವಾಗಿದೆ.

ವಿಜಯ ಕರ್ನಾಟಕ 9 Jan 2026 7:35 pm

ಪರಶುರಾಮ ಥೀಮ್‌ ಪಾರ್ಕ್ ಸ್ವಚ್ಛತೆ, ಸುರಕ್ಷತೆಯು ನಿರ್ಮಿತಿ ಕೇಂದ್ರದ ಜವಾಬ್ದಾರಿ: ತಕ್ಷಣ ಕಾರ್ಯಪ್ರವೃತ್ತವಾಗಲು ಉಡುಪಿ ಡಿಸಿ ಸೂಚನೆ

ಉಡುಪಿ, ಜ.9: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಯರ್ಲಪಾಡಿ ಉಮಿಕಲ್‌ಬೆಟ್ಟದ ಮೇಲೆ ನಿರ್ಮಾಣ ಗೊಂಡು ಈಗ ವಿವಾದದ ಕೇಂದ್ರ ಬಿಂದುವಾಗಿರುವ ಪರಶುರಾಮ ಥೀಮ್‌ಪಾರ್ಕ್‌ನ ಕಾಮಗಾರಿ ಮುಕ್ತಾಯ ಗೊಳ್ಳುವವರೆಗೂ ಇದರ ನಿರ್ವಹಣೆ ಹಾಗೂ ಸುರಕ್ಷತೆ ಅನುಷ್ಠಾನ ಸಂಸ್ಥೆ ಯಾದ ನಿರ್ಮಿತಿ ಕೇಂದ್ರದ್ದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸ್ಪಷ್ಟಪಡಿಸಿದ್ದಾರೆ. ಥೀಮ್ ಪಾರ್ಕ್‌ನ ಸ್ವಚ್ಛತೆ ಹಾಗೂ ಸುರಕ್ಷತೆ ಉಡುಪಿಯ ನಿರ್ಮಿತಿ ಕೇಂದ್ರದ ಜವಾಬ್ದಾರಿಯಾಗಿದ್ದು, ಕಾಮಗಾರಿ ಪೂರ್ಣಗೊಂಡು ಹಸ್ತಾಂತರ ವಾಗುವವರೆಗೆ ಥೀಮ್ ಪಾರ್ಕ್‌ನಲ್ಲಿರುವ ಬೆಲೆಬಾಳುವ ಎಲೆಕ್ಟ್ರಾನಿಕ್ಸ್ ಉಪಕರಣ ಗಳು, ಸಾಮಗ್ರಿಗಳು ಹಾಗೂ ಇತರೆಲ್ಲಾ ವಸ್ತುಗಳ ಸುರಕ್ಷತೆ ಸೇರಿದಂತೆ ಪಾರ್ಕ್‌ನ ನಿರ್ವಹಣೆಯನ್ನು ಸಂಸ್ಥೆಯೇ ಅದನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ವಿಷಯದಲ್ಲಿ ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದೇ ನಿರ್ವಹಣೆ ಮಾಡಬೇಕು. ಜೊತೆಗೆ ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದ್ದಾರೆ. ಪ್ರಮುಖ ನಿರ್ದೇಶನ: ಪರಶುರಾಮ ಥೀಮ್ ಪಾರ್ಕ್‌ನ ಆವರಣದಲ್ಲಿ ಸ್ವಚ್ಛತಾ ಕಾರ್ಯ, ಗಿಡಗಂಟಿ ತೆರವು ಹಾಗೂ ಕಸ ವಿಲೇವಾರಿ ಕಾರ್ಯಗಳನ್ನು ಕೂಡಲೇ ಕೈಗೊಳ್ಳಬೇಕು. ಥೀಮ್ ಪಾರ್ಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಪಾರ್ಕ್ ಆವರಣದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈ ಸ್ಥಳದಲ್ಲಿ ಭದ್ರತಾ ದೃಷ್ಟಿಯಿಂದ ದಿನದ 24 ಗಂಟೆಯೂ ಕಾವಲುಗಾರರನ್ನು ನಿಯೋಜಿಸಲು ಕ್ರಮಕೈಗೊಳ್ಳಬೇಕು. ಸಾರ್ವಜನಿಕ ಪ್ರವೇಶ ನಿರ್ಬಂಧ: ಅಧಿಕೃತ ವ್ಯಕ್ತಿಗಳನ್ನು ಹೊರತುಪಡಿಸಿ, ಥೀಮ್‌ಪಾರ್ಕ್‌ಗೆ ಸಾರ್ವಜನಿಕರು ಸೇರಿದಂತೆ ಯಾರೊಬ್ಬರೂ ಪ್ರವೇಶಿಸ ದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ತನಿಖೆ ನಡೆಯುತ್ತಿರುವುದರಿಂದ ಇಲ್ಲಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಥೀಮ್ ಪಾರ್ಕ್ ಪ್ರದೇಶಕ್ಕೆ ಯಾರಾದರೂ ಅತಿಕ್ರಮಣ ಪ್ರವೇಶ ಮಾಡಿದರೆ ಅವರ ವಿರುದ್ಧ ಎಫ್‌ಐಆರ್ ಅಥವಾ ಬಿಎನ್‌ಎಸ್‌ಎಸ್ 2023ರ ಅಡಿಯಲ್ಲಿ ಮೊಕ್ಕದ್ದಮೆ ದಾಖಲಿಸಬೇಕು ಹಾಗೂ ಥೀಮ್ ಪಾರ್ಕ್‌ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮವಹಿಸಬೇಕು. ಥೀಮ್ ಪಾರ್ಕ್ ಸ್ಥಳದಲ್ಲಿರುವ ಅಮೂಲ್ಯ ವಸ್ತುಗಳು, ನಿರ್ಮಾಣ ಸಾಮಾಗ್ರಿಗಳು ಸುಸ್ಥಿತಿಯಲ್ಲಿರುವಂತೆ ನೋಡಿ ಕೊಳ್ಳಬೇಕು. ಥೀಮ್ ಪಾರ್ಕ್ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಥೀಮ್ ಪಾರ್ಕ್‌ನ ಸಂಪೂರ್ಣ ಜವಾಬ್ದಾರಿ ಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಳು ನಿರ್ಮಿತಿ ಕೇಂದ್ರಕ್ಕೆ ಸೂಚನೆಗಳನ್ನು ನೀಡಿದ್ದಾರೆ. ಮೇಲಿನ ಈ ಎಲ್ಲಾ ವಿಷಯಗಳ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಅನುಪಾಲನ ವರದಿಯನ್ನು ಜನವರಿ 10ರೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ನೀಡಬೇಕು. ಅಲ್ಲದೇ ಪ್ರತಿ ವಾರ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸ್ವಚ್ಛತೆಯ ಮೇಲುಸ್ತು ವಾರಿ ವಹಿಸಿಕೊಂಡು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಜಿ.ಪಿ.ಎಸ್ ಫೋಟೋದೊಂದಿಗೆ ವರದಿ ನೀಡುವಂತೆ ಸೂಚಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶದಲ್ಲಿ ತಿಳಿಸಿದ್ದಾರೆ. ಸ್ವಚ್ಛತಾ ಕಾರ್ಯ ಆರಂಭ: ಜಿಲ್ಲಾಧಿಕಾರಿಗಳ ಸೂಚನೆಯಂತೆ ನಿರ್ಮಿತಿ ಕೇಂದ್ರ ಪರಶುರಾಮ ಥೀಮ್ ಪಾರ್ಕ್ ಪರಿಸರದ ಸ್ವಚ್ಛತಾ ಕಾರ್ಯವನ್ನು ಪ್ರಾರಂಭಿಸಿದೆ. ಸಾರ್ವಜನಿಕರಿಗೆ ಅವಕಾಶ ನೀಡದೇ ಇಲಾಖೆಯ ಮೂಲಕವೇ ಇದನ್ನು ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಸ್ವಚ್ಛತಾ ಸಿಬ್ಬಂದಿಗಳು ಬೆಟ್ಟದ ಬುಡದಿಂದ ತುದಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ವರೆಗಿನ ಸಂಪರ್ಕ ರಸ್ತೆಯ ಆಸುಪಾಸಿನಲ್ಲಿ ಆಳೆತ್ತರಕ್ಕೆ ಬೆಳೆದು ನಿಂತಿರುವ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುತಿದ್ದಾರೆ. ಪರಶುರಾಮ ಮೂರ್ತಿಯ ವಿವಾದದ ಕುರಿತು ಈಗಾಗಲೇ ಹೈಕೋರ್ಟ್ ನಲ್ಲಿ ಹಾಗೂ ಸಿಐಡಿಯಿಂದ ತನಿಖೆ ನಡೆಯುತ್ತಿರುವುದರಿಂದ ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಜನಪ್ರತಿನಿಧಿಗಳ ಕೋರಿಕೆಗೆ ಹಸಿರು ನಿಶಾನೆ ದೊರೆಯುವ ಸಾದ್ಯತೆ ಇಲ್ಲ ಎನ್ನಲಾಗಿದೆ. ಕಳೆದ ಜ.4ರಂದು ಥೀಮ್‌ಪಾರ್ಕ್‌ನ ತಾಮ್ರದ ಹೊದಿಕೆಯ ಕೆಲವು ಶೀಟುಗಳು ಕಳ್ಳತನವಾಗಿರುವ ವಿಷಯವನ್ನು ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಅವರು ಬಹಿರಂಗಪಡಿಸಿದ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಈ ವಿವಾದ ಮತ್ತೊಮ್ಮೆ ಸ್ಫೋಟಗೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿತ್ತು.    

ವಾರ್ತಾ ಭಾರತಿ 9 Jan 2026 7:35 pm

Vijayapura| ಮುಂದಿನ ದಿನಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ; 160 ಕೋಟಿ ರೂ. ವೆಚ್ಚದ ಮೇಲ್ಸೇತುವೆ : ಸಿಎಂ ಸಿದ್ದರಾಮಯ್ಯ ಭರವಸೆ

► ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ► ವಿಜಯಪುರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭ

ವಾರ್ತಾ ಭಾರತಿ 9 Jan 2026 7:32 pm

ಮಹಿಳಾ ಯುಕ್ತಿ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದ ಶಕ್ತಿ ಸಂವಾದ; ವಿಜಯ ಕರ್ನಾಟಕ ಡಿಜಿಟಲ್ ಮೊಳಗಿಸಿತು ಸ್ತ್ರೀ ಧ್ವನಿಯ ಶಂಖನಾದ

ನಾಡಿನ ಮಹಿಳಾ ಸಂವೇದನೆಗೆ ಧ್ವನಿಯಾಗುವಲ್ಲಿ ಮುಂಚೂಣಿಯಲ್ಲಿರುವ ಸಮಸ್ತ ಕನ್ನಡಿಗರ ಹೆಮ್ಮೆಯ ವಿಜಯ ಕರ್ನಾಟಕ ಡಿಜಿಟಲ್‌, ಮೌಂಟ್‌ ಕಾರ್ಮಲ್‌ ಕಾಲೇಜು ಸಹಯೋಗದಲ್ಲಿ ಮತ್ತು ಸಾಯಿ ಗೋಲ್ಡ್‌ ಪ್ಯಾಲೇಸ್‌ ಸಹ ಪ್ರಾಯೋಜಕತ್ವದಲ್ಲಿ ಕಳೆದ ಬುಧವಾರ (ಡಿ.7) ಆಯೋಜಿಸಿದ್ದ ಶಕ್ತಿ ಸಂವಾದ 2026 ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವನ್ನು ನಾಡಿಗೆ ಮನದಟ್ಟು ಮಾಡಿಕೊಡುವಲ್ಲಿ ಶಕ್ತಿ ಸಂವಾದ ಕಾರ್ಯಕ್ರಮ ನೆರವಾಗಿದ್ದು, ಈ ಕಾರ್ಯಕ್ರಮದ ಸಿದ್ಧತೆ ಮತ್ತು ಅನುಷ್ಠಾನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ವಿಜಯ ಕರ್ನಾಟಕ 9 Jan 2026 7:24 pm

2028ರ ಚುನಾವಣೆಯಲ್ಲಿ ಎನ್‍ಡಿಎ 150 ಕ್ಷೇತ್ರಗಳಲ್ಲಿ ಗೆಲ್ಲಲಿದೆ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ‘ಮಾಧ್ಯಮ ಸಂವಾದ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾದರೆ ಒಳ್ಳೆಯದು’ ಎಂದು ಹೇಳಿದ್ದ ಡಿಸಿಎಂ ಹೇಳಿಕೆಗೆ ತಿರುಗೇಟು ನೀಡಿದರು. ನಮ್ಮ ಪಕ್ಷದ ಕಥೆ ಇರಲಿ. ಬಿಹಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿಗೆ ಬಂದು ನಿಂತಿದೆ? ಎಷ್ಟು ಡಿಜಿಟ್'ಗೆ ನಿಂತಿದೆ. ಬಿಹಾರ ಅಷ್ಟೇ ಅಲ್ಲ, ಇನ್ನೂ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗಳಿಸಿದೆ? ಮತ ಗಳಿಕೆಯಷ್ಟು? ಅಲ್ಲಿ ಡಿಕೆಶಿ ತಮ್ಮ ಪಕ್ಷವನ್ನು ಯಾವ ಪಕ್ಷದಲ್ಲಿ ವಿಲೀನ ಮಾಡಿದ್ದಾರೆ ಎನ್ನುವುದನ್ನು ಹೇಳಲಿ ಎಂದು ಸವಾಲು ಹಾಕಿದರು. ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಶೇ.37ರಷ್ಟು ಮತಪಾಲು ಹೊಂದಿದೆ. ಕಲ್ಯಾಣ ಕರ್ನಾಟಕದಲ್ಲಿಯೂ ಬಲಿಷ್ಟವಾಗಿದೆ. ಕಿತ್ತೂರು ಕರ್ನಾಟಕ, ಕರಾವಳಿ ಭಾಗದಲ್ಲಿಯೂ ನಮ್ಮ ಪಕ್ಷವಿದೆ. ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ನಡುವೆ ಸಹಜ ಮೈತ್ರಿ ಏರ್ಪಟ್ಟಿದೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಒಗ್ಗಟ್ಟಿನ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಯ ಬಲ ತಿಳಿಯಲಿದೆ. ನಮ್ಮ ಹಾಗೂ ಬಿಜೆಪಿಯ ಮೈತ್ರಿ ಸ್ವಾಭಾವಿಕ. ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಆಗಿರುವ ಮೈತ್ರಿ ಇದು ಎಂದು ನಿಖಿಲ್ ಹೇಳಿದರು. ಬಳ್ಳಾರಿ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಸಣ್ಣ ಕಾರಣಕ್ಕೆ ಶುರುವಾದ ಬಳ್ಳಾರಿ ಗಲಾಟೆ ಗುಂಡು ಹಾರಿಸಿ ಕೊಲೆಯವರೆಗೂ ಹೋಗಿದೆ. ಆದರೆ, ಅಲ್ಲಿನ ಶಾಸಕ ಜನಾರ್ದನ ರೆಡ್ಡಿ ಬಗ್ಗೆ ನೀಡಿರುವ ಹೇಳಿಕೆಯನ್ನು ಗಮನಿಸಿದೆ. ಈ ಸರಕಾರ ದ್ವೇಷ ಭಾಷಣ ತಡೆಗೆ ಮಸೂದೆ ಅಂಗೀಕಾರ ಮಾಡಿದೆ. ಇಲ್ಲಿ ದ್ವೇಷ ಭಾಷಣ ಅನ್ವಯ ಆಗುವುದಿಲ್ಲವೇ? ಈ ಸರಕಾರಕ್ಕೆ ಬಳ್ಳಾರಿಯ ಶಾಸಕ ಮಾತನಾಡಿದ ಮಾತುಗಳು ಕೇಳಿಸಲಿಲ್ಲವೇ? ಇದು ಆ ಮಸೂದೆ ವ್ಯಾಪ್ತಿಗೆ ಬರುವುದಿಲ್ಲವೇ? ಅವರಿಗೆ ರಕ್ಷಣೆ ಕೊಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಗೆ ಹೇಳುತ್ತಾರೆ ಎಂದು ನಿಖಿಲ್ ಪ್ರಶ್ನಿಸಿದರು. ಈ ವೇಳೆಯಲ್ಲಿ ಪರಿಷತ್ ಸದಸ್ಯ ಟಿ.ಎ.ಶರವಣ, ಪ್ರೆಸ್‍ಕ್ಲಬ್ ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 9 Jan 2026 7:14 pm

ಗ್ರೀನ್‌ಲ್ಯಾಂಡ್‌ ಮೇಲೆ ಆಕ್ರಮಣ ಮಾಡಿದ್ರೆ ಮೊದಲು ಗುಂಡು ಹಾರಿಸ್ತೀವಿ: ಟ್ರಂಪ್‌ಗೆ ಎಚ್ಚರಿಕೆ ಕೊಟ್ಟ ಡೆನ್ಮಾರ್ಕ್

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದಲೂ ವಿಶ್ವದ ಅತಿ ದೊಡ್ಡ ದ್ವೀಪವಾದ ಗ್ರೀನ್​ಲ್ಯಾಂಡ್​ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಾಗಿ, ಡೆನ್ಮಾರ್ಕ್​​ಗೆ ಬೆದರಿಕೆ ಹಾಕುತ್ತಾ ಅದನ್ನು ಸ್ವಾಧೀನಪಡಿಸಿಕೊಳ್ಳುವ ಎಚ್ಚರಿಕೆ ನೀಡುತ್ತಿದ್ದಾರೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನ ಬಂಧಿಸಿದ ನಂತರ ಗ್ರೀನ್​ಲ್ಯಾಂಡ್ ಮೇಲೆ ಕಣ್ಣೀಟಿದ್ದು, ಅಮೆರಿಕ ಗ್ರೀನ್‌ಲ್ಯಾಂಡ್ ಮೇಲೆ ಆಕ್ರಮಣ ಮಾಡಿದರೆ, ಮೊದಲು ಗುಂಡು ಹಾರಿಸಿ

ಒನ್ ಇ೦ಡಿಯ 9 Jan 2026 7:13 pm

19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 22 ವಿಧೇಯಕಗಳ ಪೈಕಿ 19 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಗುರುವಾರ ರಾತ್ರಿ ಅಂಕಿತ ಹಾಕಿದ್ದಾರೆ. ಕರ್ನಾಟಕ ಪರಿಶಿಷ್ಟ ಜಾತಿ(ಉಪ ವರ್ಗೀಕರಣ) ವಿಧೇಯಕ ಹಾಗೂ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಕಾನೂನುಗಳು(ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ವಿಧೇಯಕ ರಾಜ್ಯಪಾಲರ ಪರಿಶೀಲನೆಯಲ್ಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 9 Jan 2026 7:08 pm

ಮಂಗಳೂರು| ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ ʼಕಿಯಾ ಸೆಲ್ಟೋಸ್ ಕಾರುʼ ಅನಾವರಣ

ಮಂಗಳೂರು: ನಗರದ ಕದ್ರಿ ಮಲ್ಲಿಕಟ್ಟೆಯ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ ಕಿಯಾ ಸೆಲ್ಟೋಸ್ ಕಾರನ್ನು ಶುಕ್ರವಾರ ಅನಾವರಣಗೊಳಿಸಲಾಯಿತು. ಆ ಮೂಲಕ ಕರಾವಳಿಗರಿಗೆ ಈ ಜನಪ್ರಿಯ ಎಸ್‌ಯುವಿ ಇತ್ತೀಚಿನ ಆವೃತ್ತಿಯು ಪದಾರ್ಪಣೆ ಮಾಡಿದಂತಾಗಿದೆ. ಈ ಕಾರಿನ ಆರಂಭಿಕ ಬೆಲೆಯು 10.99 ಲಕ್ಷ ರೂ.ಗಳಾಗಿವೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾರ್ಟರ್ಡ್ ಅಕೌಂಟೆಂಟ್ ಮತ್ತು ’ಕಾಮತ್ ಅಂಡ್ ರಾವ್’ ಸಂಸ್ಥೆಯ ಆಡಳಿತ ಪಾಲುದಾರ ಶ್ರೀನಿವಾಸ್ ಎಸ್. ಕಾಮತ್ ನೂತನ ಕಾರನ್ನು ಅನಾವರಣಗೊಳಿಸಿದರು. ಈ ಸಂದರ್ಭ ಎ.ಆರ್.ಎಂ ಕಿಯಾ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಅರೂರ್ ಗಣೇಶ್ ರಾವ್, ಮಾರಾಟ ಮತ್ತು ಮಾರ್ಕೆಟಿಂಗ್ ನಿರ್ದೇಶಕ ಅರೂರ್ ವರುಣ್ ರಾವ್, ಎಚ್.ಆರ್. ನಿರ್ದೇಶಕ ಅರೂರ್ ವಿಕ್ರಮ್ ರಾವ್, ಹಿರಿಯ ಉಪಾಧ್ಯಕ್ಷ ಪ್ರದೀಪ್ ಪೈ, ಎಜಿಎಂ (ವಿಎಎಸ್) ಕನಕ ಕುಮಾರ್, ಮಾರಾಟ ವಿಭಾಗದ ಎಜಿಎಂ ಹರೀಶ್ ರಾವ್, ಮಾರಾಟ ಮತ್ತು ಎಚ್.ಆರ್ ವಿಭಾಗದ ಜಿಎಂ ಶಶಿಕುಮಾರ್ ಉಡುಪಿ ಹಾಗೂ ಮಾರಾಟ ವ್ಯವಸ್ಥಾಪಕ ಜಯಪ್ರಕಾಶ್ ಉಪಸ್ಥಿತರಿದ್ದರು. ನೂತನ ಕಿಯಾ ಸೆಲ್ಟೋಸ್ ಕಾರು ನವೀನ ವಿನ್ಯಾಸ, ಸುಧಾರಿತ ತಾಂತ್ರಿಕ ವೈಶಿಷ್ಟ್ಯಗಳು ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಒಳಗೊಂಡಿದೆ. ಮಿಡ್-ಸೈಝ್ ಎಸ್‌ಯುವಿ ವಿಭಾಗದಲ್ಲಿ ಶೈಲಿ, ತಂತ್ರಜ್ಞಾನ ಮತ್ತು ಸೌಕರ್ಯವನ್ನು ಬಯಸುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈ ಮಾದರಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ. ಈ ಕಾರು ವಾಹನ ಪ್ರೇಮಿಗಳು ಮತ್ತು ಸ್ಥಳೀಯ ಗ್ರಾಹಕರ ಗಮನ ಸೆಳೆದಿದೆ. ಮಂಗಳೂರಿನ ಶೋರೂಮ್‌ನಲ್ಲಿ ಹೊಸ ಸೆಲ್ಟೋಸ್‌ಗಾಗಿ ಬುಕ್ಕಿಂಗ್ ಮತ್ತು ವಿಚಾರಣೆಗಳು ಈಗಾಗಲೇ ಆರಂಭವಾಗಿವೆ ಎಂದು ಎ.ಆರ್.ಎಂ ಕಿಯಾ ತಿಳಿಸಿದೆ.

ವಾರ್ತಾ ಭಾರತಿ 9 Jan 2026 6:55 pm

ಎಚ್‌ಡಿಕೆ ಡಿಕೆಶಿ ನಡುವೆ ಗೃಹಖಾತೆ ಒತ್ತುವರಿ v/s ಮೀಡಿಯಾ ಹುಲಿ ಟ್ವೀಟ್ ವಾರ್: ಹೇಗಿದೆ ಏಟು ಇದಿರೇಟು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಟ್ವೀಟ್ ವಾರ್ ಜೋರಾಗಿದೆ. ಬಳ್ಳಾರಿ ಗಲಾಟೆಗೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಆದರೆ ಯಾವ ಅಧಿಕಾರದಲ್ಲಿ ಡಿಕೆಶಿ ಸಭೆ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದರು. ಇದೀಗ ಇದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಡಿಕೆಶಿಯನ್ನು ಗೃಹಖಾತೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದರೆ, ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ವಿಜಯ ಕರ್ನಾಟಕ 9 Jan 2026 6:50 pm

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಕೆಶಿ ಆರೋಪ

ನಿಂಬೆ ನಾಡಿಗೆ ನನ್ನನ್ನು ಕರೆಸಿರುವುದಕ್ಕೆ ಬಹಳ ಸಂತೋಷವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಹಾಗೂ ಗೋಲಗುಂಬಜ್ ಮಾದರಿ ಸ್ಮರಣಿಕೆ ನೀಡಿ ನನಗೆ ಇಂದು ಸನ್ಮಾನಿಸಲಾಗಿದೆ. ಎಲ್ಲಾ ಜಾತಿ, ಸಮುದಾಯ, ಧರ್ಮಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿರುವುದೇ ಈ ಸರ್ಕಾರದ ಶಕ್ತಿ. ಸರ್ವಜ್ಞ ಅವರು ತಮ್ಮ ವಚನದಲ್ಲಿ ನಿಂಬೆಗಿಂತ ಶ್ರೇಷ್ಠ ಹುಳಿ ಬೇರೊಂದಿಲ್ಲ, ದುಂಬಿಗಿಂತ ಶ್ರೇಷ್ಠ ಕಪ್ಪು ಬಣ್ಣ ಬೇರೊಂದಿಲ್ಲ, ಶಿವನಿಗಿಂತ ದೊಡ್ಡ ದೇವರಿಲ್ಲ, ಅದೇ ರೀತಿ ಮನುಷ್ಯನಲ್ಲಿ ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ ಎಂದು ಬಣ್ಣಿಸಿದ್ದಾರೆ. ಅದೇ ರೀತಿ ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಹತ್ತು ಶಾಸಕರನ್ನು ನೀಡಿ ಈ ಬಲಿಷ್ಠವಾದ ಗ್ಯಾರಂಟಿ ಸರ್ಕಾರವನ್ನು ನೀಡಿರುವ ನಿಮಗೆ ಕೋಟಿ ನಮನಗಳನ್ನು ಅರ್ಪಿಸುತ್ತೇನೆ ಎಂದರು.

ವಿಜಯ ಕರ್ನಾಟಕ 9 Jan 2026 6:50 pm

ಎಲ್‌ಐಸಿಯಲ್ಲಿ ಮಹಿಳೆಯರಿಗೆ ಬಿಮಾ ಸಖಿ ಯೋಜನೆ ಜಾರಿ

10ನೇ ತರಗತಿ ಪಾಸಾಗಿರುವ ಮಹಿಳೆಯರಿಗೆ ಇದು ಸುವರ್ಣಾವಕಾಶ. ಆದರೆ, ಬಹಳ ಸುಲಭದ ಯೋಜನೆಯೆಂದು ಕಂಡರೂ ಕಠಿಣ ಪರಿಶ್ರಮ ಹಾಕಿದಲ್ಲಿ ಮಾತ್ರ ಫಲ ಸಿಗಲಿದೆ. ಕೇಂದ್ರ ಸರ್ಕಾರ ಮತ್ತು ಎಲ್‌ಐಸಿ ಜಂಟಿಯಾಗಿ ಮಹಿಳೆಯರಿಗಾಗಿ ಬಿಮಾ ಸಖಿ ಯೋಜನೆ ಜಾರಿಗೆ ತಂದಿದೆ. 10ನೇ ತರಗತಿ ಪಾಸಾಗಿರುವ ಮಹಿಳೆಯರಿಗೆ ಇದು ಸುವರ್ಣಾವಕಾಶ. ಇದು ಬಹಳ ಸುಲಭದ ಯೋಜನೆಯೆಂದು ಕಂಡರೂ ಕಠಿಣ ಪರಿಶ್ರಮ ಹಾಕಿದಲ್ಲಿ ಮಾತ್ರ ಫಲ ಸಿಗಲಿದೆ. ಆದರೆ, ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸುವರ್ಣ ಅವಕಾಶವಾಗಿರುತ್ತದೆ. ಬಿಮಾ ಸಖಿಯಾದವರಿಗೆ ಕೆಲಸದ ಜೊತೆಗೆ ಮೂರು ವರ್ಷಗಳ ಕಾಲ ಸರ್ಕಾರದಿಂದ ನಿಗದಿತ ಹಣ (ಸ್ಟೈಪೆಂಡ್) ದೊರೆಯುತ್ತದೆ. ಏನಿದು ಬಿಮಾ ಸಖಿ ಯೋಜನೆ? ಮಹಿಳೆಯರು ಎಲ್‌ಐಸಿಯ ವಿಮಾ ಪಾಲಿಸಿಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಬಿಮಾ ಸಖಿಯರದ್ದಾಗಿದೆ. ವಿಶೇಷವೆಂದರೆ, ಮಾಡುವ ಕೆಲಸಕ್ಕೆ ಸಿಗುವ ಕಮಿಷನ್ ಹೊರತಾಗಿ, ಆರಂಭಿಕ ಮೂರು ವರ್ಷಗಳ ಕಾಲ ಸರ್ಕಾರ ನಿಮಗೆ ತಿಂಗಳ ಸ್ಟೈಫಂಡ್ ನೀಡುತ್ತದೆ. ಆದರೆ ಬಿಮಾ ಸಖಿಯರು ಆರಿಸಿಕೊಂಡ ಪ್ರದೇಶದಲ್ಲಿ ಈಗಾಗಲೇ ವಿಮೆ ಮಾಡಿಸಿಕೊಂಡವರು ಹೆಚ್ಚಿರಬಹುದು. ಅಂತಹ ಸಂದರ್ಭದಲ್ಲಿ ಹೊಸ ವಿಮೆಗಳನ್ನು ಮಾರುವುದು ಸುಲಭವಲ್ಲ. ಬದಲಾಗಿ ಎರಡನೇ ವರ್ಷದಿಂದ ಸ್ಟೈಪೆಂಡ್ ಸಿಗಬೇಕೆಂದರೆ ಟಾರ್ಗೆಟ್ ಇರುತ್ತದೆ. ಮೊದಲ ವರ್ಷ ಮಾಸಿಕ ಸ್ಟೈಪೆಂಡ್ ಆಗಿ ರೂ 7000 ಸಿಗುತ್ತದೆ. 2ನೇ ವರ್ಷದಲ್ಲಿ ರೂ 6000 ಕಮಿಷನ್ ಸಿಗಲಿದೆ. 3ನೇ ವರ್ಷದಲ್ಲಿ ರೂ 5000 ಕಮಿಷನ್ ಸಿಗಲಿದೆ. 2ನೇ ವರ್ಷದಿಂದ ಸ್ಟೈಫಂಡ್ ಪಡೆಯಲು ಕನಿಷ್ಠ ಟಾರ್ಗೆಟ್ ತಲುಪಿರಬೇಕು. ಎರಡನೇ ಮತ್ತು ಮೂರನೇ ವರ್ಷ ಸ್ಟೈಫಂಡ್ ಮುಂದುವರಿಯಬೇಕಾದರೆ, ನೀವು ಮಾಡಿದ ಹಿಂದಿನ ವರ್ಷದ ಪಾಲಿಸಿಗಳಲ್ಲಿ ಕನಿಷ್ಠ ಶೇ 65 ರಷ್ಟು ಚಾಲ್ತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಅರ್ಹತೆಗಳೇನು? 18 ವರ್ಷದಿಂದ 70 ವರ್ಷದೊಳಗಿನ ಯಾವುದೇ ಮಹಿಳೆ ಅರ್ಜಿ ಸಲ್ಲಿಸಬಹುದು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಐಸಿಎಆರ್ (ICAR) ನಡೆಸುವ ನೇಮಕಾತಿ ಪೂರ್ವ ಪರೀಕ್ಷೆಯಲ್ಲಿ ಪಾಸಾಗಬೇಕು. ಈಗಾಗಲೇ ಎಲ್‌ಐಸಿ ಏಜೆಂಟ್ ಆಗಿರುವವರು ಅಥವಾ ಅವರ ಹತ್ತಿರದ ಸಂಬಂಧಿಕರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ. ಬಿಮಾ ಸಖಿ ಪರೀಕ್ಷೆಯು ತುಂಬಾ ಸುಲಭವಾಗಿರುತ್ತದೆ. ಅರ್ಜಿ ಸಲ್ಲಿಸುವ ಮೊದಲು ಸಮೀಪದ ಎಲ್‌ಐಸಿ ಶಾಖೆಗೆ ಭೇಟಿ ನೀಡಿ ‘ಡೆವಲಪ್‌ಮೆಂಟ್ ಆಫೀಸರ್’ (DO) ಅವರನ್ನು ಭೇಟಿ ಮಾಡಿ. ಅವರು ಪರೀಕ್ಷೆಗೆ ಬೇಕಾದ ಉಚಿತ ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತಾರೆ. ಮೂರು ವರ್ಷಗಳ ನಂತರ ಮುಂದೇನು? 3 ವರ್ಷಗಳ ನಂತರ ಸಾಮಾನ್ಯ ಎಲ್‌ಐಸಿ ಏಜೆಂಟ್ ಆಗಿ ಮುಂದುವರಿಯಬಹುದು. ಒಂದು ವೇಳೆ ಪದವೀಧರರಾಗಿದ್ದರೆ (Degree), 5 ವರ್ಷಗಳ ನಂತರ ಎಲ್‌ಐಸಿಯಲ್ಲಿ ADO (ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್) ಹುದ್ದೆಗೆ ನೇರ ಪರೀಕ್ಷೆ ಬರೆಯುವ ಅವಕಾಶ ಸಿಗುತ್ತದೆ. ಕಮಿಷನ್ ಹೇಗೆ ಲೆಕ್ಕ ಹಾಕಲಾಗುತ್ತದೆ? ಮೊದಲ ವರ್ಷದಲ್ಲಿ ಮಾಡುವ ಪಾಲಿಸಿಗಳ ಸಂಖ್ಯೆಗೆ ಅನುಗುಣವಾಗಿ ಕಮಿಷನ್ ಇರುತ್ತದೆ. ಉದಾಹರಣೆಗೆ, ವರ್ಷಕ್ಕೆ 24 ಪಾಲಿಸಿಗಳನ್ನು ಮಾಡಿದರೆ ಅಂದಾಜು 48,000 ರೂ. ಕಮಿಷನ್ ಜೊತೆಗೆ ನಿಮ್ಮ ತಿಂಗಳ ಸ್ಟೈಫಂಡ್ ಕೂಡ ಸಿಗುತ್ತದೆ.

ವಾರ್ತಾ ಭಾರತಿ 9 Jan 2026 6:39 pm

Bescom Outages: ಬೆಂಗಳೂರಿನಲ್ಲಿ ಶನಿವಾರ, ಭಾನುವಾರ (ಜ.10, 11) ವಿದ್ಯುತ್ ಕಡಿತ! ಎಲ್ಲೆಲ್ಲಿ?

ಬೆಂಗಳೂರಿನ ಹಲವೆಡೆ ಜನವರಿ 10 ಮತ್ತು 11 ರಂದು ವಿದ್ಯುತ್ ಕಡಿತವಾಗಲಿದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಮಾಹಿತಿ ನೀಡಿದೆ. ಸೋಲದೇವನಹಳ್ಳಿ, ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿಜಯ ಕರ್ನಾಟಕ 9 Jan 2026 6:38 pm

‘ಹುಬ್ಬಳ್ಳಿ ಪ್ರಕರಣ’ ನ್ಯಾಯಾಂಗ ತನಿಖೆಗೆ ಆರ್.ಅಶೋಕ್ ಆಗ್ರಹ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಚಾರ ದೇಶದ ಸುದ್ದಿಯಾಗಿದೆ. ಜನರು ಇದರ ಸತ್ಯಾಂಶ ತಿಳಿಯಲು ಬಯಸುತ್ತಿದ್ದಾರೆ. ಆದುದರಿಂದ ಘಟನೆಯ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಣ್ಣು ಮಗಳೆ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಪೊಲೀಸರು ಏನು ಕತ್ತೆ ಕಾಯುತ್ತಿದ್ದರೇ? 40 ಜನ ಪೊಲೀಸರು, ವ್ಯಾನ್ ನಿಮ್ಮದೇ, ಚಾಲಕನೂ ನಿಮ್ಮವನೇ, ಪೊಲೀಸ್-ಕಾನೂನು ನಿಮ್ಮದೇ ಇರುವಾಗ ನಿಮ್ಮಿಂದ ತಡೆಯಲಾಗಲಿಲ್ಲವೇ? ಎಂದು ಪ್ರಶ್ನಿಸಿದರು. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸುಜಾತ ಹಂಡಿ ಅವರನ್ನು ಬಂಧಿಸಲು ಕೌನ್ಸಿಲರ್ ದೂರು ಕೊಟ್ಟಿದ್ದರು. ಇನ್ಸ್‌ ಪೆಕ್ಟರ್ ಅವರು ಬಂಧನ ಸಂಬಂಧ ಸುಮಾರು ಜನರನ್ನು ಕರೆದೊಯ್ದಾಗ ಆದ ಘಟನೆ ಎಂತಹದ್ದೆಂದು ಪೊಲೀಸರು ತನಿಖೆ ಮಾಡಿ ಹೇಳಲಿ ಎಂದು ಆಗ್ರಹಿಸಿದರು.

ವಾರ್ತಾ ಭಾರತಿ 9 Jan 2026 6:37 pm

ಸಂಚಲನ ಸೃಷ್ಟಿಸಿದೆ ಜಿಯೋ ಐಪಿಒ ಅಪ್ಡೇಟ್‌, ಬರೋಬ್ಬರಿ ₹36,000 ಕೋಟಿ ಸಂಗ್ರಹಿಸಲು ಹೊರಟಿದೆ ಅಂಬಾನಿ ಕಂಪನಿ

ರಿಲಯನ್ಸ್ ಜಿಯೋ ಪ್ಲಾಟ್‌ಫಾರ್ಮ್ಸ್ ಈ ವರ್ಷ ಭಾರತದ ಷೇರು ಮಾರುಕಟ್ಟೆ ಇತಿಹಾಸದಲ್ಲೇ ಅತಿದೊಡ್ಡ 'ಆರಂಭಿಕ ಸಾರ್ವಜನಿಕ ಕೊಡುಗೆ' (ಐಪಿಒ) ತರಲು ಸಜ್ಜಾಗುತ್ತಿದೆ. ಮುಕೇಶ್ ಅಂಬಾನಿ ನೇತೃತ್ವದ ಕಂಪನಿಯು ಕೇವಲ ಶೇಕಡಾ 2.5ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ಬರೋಬ್ಬರಿ 4 ಬಿಲಿಯನ್ ಡಾಲರ್ ಬಂಡವಾಳ ಸಂಗ್ರಹಿಸಲು ಮುಂದಾಗಿದೆ. ಸದ್ಯ ಐಪಿಒ ನಿಯಮಾವಳಿಗಳ ಬದಲಾವಣೆಗಾಗಿ ಕಂಪನಿ ಕಾಯುತ್ತಿದ್ದು, ಮೋರ್ಗನ್ ಸ್ಟಾನ್ಲಿ ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್‌ಗಳು ಈ ಐಪಿಒ ಪ್ರಕ್ರಿಯೆಯಲ್ಲಿ ತೊಡಗಿವೆ.

ವಿಜಯ ಕರ್ನಾಟಕ 9 Jan 2026 6:36 pm

ಸ್ಪೇಸ್ ಎಕ್ಸ್ ಗಗನಯಾನಿಗೆ ಆನಾರೋಗ್ಯ; ತುರ್ತು ಭೂಸ್ಪರ್ಶಕ್ಕೆ ಸಿದ್ಧತೆ

ಬಾಹ್ಯಾಕಾಶ ಕೇಂದ್ರದ 25 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅವಧಿಗೆ ಮೊದಲೇ ಗಗನಯಾನಿಗಳನ್ನು ಮರಳಿ ಭೂಮಿಗೆ ಕರೆಸಿಕೊಳ್ಳಲಾಗುತ್ತಿದೆ. ಸಿಬ್ಬಂದಿಯೊಬ್ಬರಿಗೆ ವೈದ್ಯಕೀಯ ಸಮಸ್ಯೆ ಕಾಣಿಸಿಕೊಂಡಿರುವ ಕಾರಣದಿಂದ ಸ್ಪೇಸ್ ಎಕ್ಸ್ ಕ್ರ್ಯೂ-11 ಮಿಷನ್ನ ನಾಲ್ವರು ಖಗೋಳಶಾಸ್ತ್ರಜ್ಞರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ (ಐಎಸ್ಎಸ್) ಅವಧಿಗೆ ಮೊದಲೇ ತುರ್ತಾಗಿ ಭೂಮಿಗೆ ಮರಳಿ ಕರೆತರಲಾಗುತ್ತಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹೇಳಿದೆ. ಬಾಹ್ಯಾಕಾಶ ಕೇಂದ್ರದ 25 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ಅವಧಿಗೆ ಮೊದಲೇ ಗಗನಯಾನಿಗಳನ್ನು ಮರಳಿ ಭೂಮಿಗೆ ಕರೆಸಿಕೊಳ್ಳಲಾಗುತ್ತಿದೆ. ನಾಸಾದ ಖಗೋಳತಜ್ಞರಾದ ಮೈಕ್ ಫಿನ್ಕ್ ಮತ್ತು ಜೆನಾ ಕಾರ್ಡ್ಮ್ಯಾನ್, ಜಪಾನ್ನ ಜಾಕ್ಸಾದ ಸದಸ್ಯರಾದ ಕಿಮಿಯಾ ಯು, ರಷ್ಯಾದ ರೋಸ್ಕೊಸ್ಮೊಸ್ ಸದಸ್ಯರಾದ ಒಲೆಗ್ ಪ್ಲಟೊನೊವ್ ಅವರನ್ನು ತುರ್ತಾಗಿ ಮರಳಿ ಕರೆತರಲಾಗುತ್ತಿದೆ. ಇವರು 2025 ಆಗಸ್ಟ್ನಲ್ಲಿ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕಾಶಕ್ಕೆ ನೆಗೆದ ಕ್ರ್ಯೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ತಲುಪಿದ್ದರು. 2026ರ ಮಾರ್ಚ್ನಲ್ಲಿ ಅವರ ಆರು ತಿಂಗಳ ಅಂತಾರಾಷ್ಟ್ರೀಯ ವಸತಿ ಕೊನೆಗೊಳ್ಳಬೇಕಿತ್ತು. ಪ್ರಸ್ತುತ ವೈದ್ಯಕೀಯ ತುರ್ತು ಸೇವೆಯ ಅಗತ್ಯವಿರುವ ಸಿಬ್ಬಂದಿಯ ಆರೋಗ್ಯ ಸ್ಥಿರವಾಗಿದೆ. ಹೀಗಾಗಿ ತಕ್ಷಣವೇ ಭೂಮಿಗೆ ಮರಳುವ ಅಗತ್ಯವಿಲ್ಲದೆ ಇದ್ದರೂ, ಆರೋಗ್ಯದ ಪೂರ್ಣ ರೋಗಪರಿಶೀಲನೆಯನ್ನು ಮೈಕ್ರೋಗ್ರಾವಿಟಿಯಲ್ಲಿ (ಕಕ್ಷೆಯಲ್ಲಿರುವ ಬಾಹ್ಯಾಕಾಶ ನೌಕೆಯಂತಹ ಬಹಳ ದುರ್ಬಲ ಗುರುತ್ವಾಕರ್ಷಣೆ ಇರುವ ಪ್ರದೇಶ) ಮಾಡಲು ಸಾಧ್ಯವಿಲ್ಲದ ಕಾರಣ ಅವಧಿಗೆ ಮೊದಲೇ ಭೂಮಿಗೆ ಮರಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ನಾಸಾದ ಮುಂದಿನ ಕ್ರೂ 12 ಉಡಾವಣೆಗೆ ಸಿದ್ಧವಾಗುತ್ತಿರುವ ಕಾರಣದಿಂದ ಕ್ರೂ- 11 ಸೂಕ್ತ ಸಮಯದಲ್ಲಿ ಮರಳುತ್ತಿದೆ. ಕ್ರೂ 11ನ ನಾಲ್ವರು ಸಿಬ್ಬಂದಿ ಮರಳಿದರೆ ಫೆಬ್ರವರಿ ಮಧ್ಯಭಾಗದಲ್ಲಿ ಕ್ರೂ 12 ಸಿಬ್ಬಂದಿಗಳನ್ನು ಬಾಹ್ಯಾಕಾಶ ಕೇಂದ್ರಕ್ಕೆ ಕಳುಹಿಸಲು ನಾಸಾ ಯೋಜನೆ ಹೂಡಿದೆ. ಖಗೋಳ ಶಾಸ್ತ್ರಜ್ಞರ ಖಾಸಗಿ ಮಾಹಿತಿಯನ್ನು ಗೌಪ್ಯವಾಗಿಡಬೇಕಾಗಿರುವ ಕಾರಣ ಸಿಬ್ಬಂದಿಗೆ ವಾಸ್ತವದಲ್ಲಿ ಯಾವ ಆರೋಗ್ಯ ಸಮಸ್ಯೆಯಾಗಿದೆ ಎನ್ನುವುದನ್ನು ತಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಆರೋಗ್ಯ ಮತ್ತು ವೈದ್ಯಕೀಯ ಅಧಿಕಾರಿ ಡಾ ಜೇಮ್ಸ್ ಪೋಲ್ಕ್ ಹೇಳಿದ್ದಾರೆ. ಬುಧವಾರ ಫಿನ್ಕ್ ಮತ್ತು ಕಾರ್ಡ್ಮ್ಯಾನ್ ಬಾಹ್ಯಾಕಾಶದಲ್ಲಿ ನಡೆದಾಡುವ ಕಾರ್ಯಕ್ರಮವಿದ್ದು, ಅದನ್ನೂ ಮುಂದೂಡಲಾಗಿದೆ ಎಂದು ನಾಸಾ ಹೇಳಿದೆ. ಮೈಕ್ರೋಗ್ರಾವಿಟಿಯ ಸವಾಲುಗಳ ನಡುವೆ ಈಗಿನ ತುರ್ತು ಮರಳುವಿಕೆಯು ಬಾಹ್ಯಾಕಾಶ ಆರೋಗ್ಯ ಕ್ಷೇತ್ರದ ಅತ್ಯಾಧುನಿಕ ಸವಲತ್ತುಗಳಲ್ಲಿ ಒಂದಾಗಿದೆ ಎಂದು ನಾಸಾ ಹೇಳಿದೆ.

ವಾರ್ತಾ ಭಾರತಿ 9 Jan 2026 6:28 pm