SENSEX
NIFTY
GOLD
USD/INR

Weather

19    C
... ...View News by News Source

ಗುಡಿಬಂಡೆ | ಚಿನ್ನಸೇರಿದಂತೆ ಇನ್ನಿತರ ಖನಿಜಗಳಿಗಾಗಿ ಹೆಲಿಕಾಪ್ಟರ್ ಮೂಲಕ ಶೋಧ ಕಾರ್ಯ

ಗುಡಿಬಂಡೆ : ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿಯ ಕೆಲ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನಕ್ಕಾಗಿ ಶೋಧ ಕಾರ್ಯವು ಸತತವಾಗಿ ಮೂರು ನಾಲ್ಕು ದಿನಗಳಿಂದ ನಡೆಯುತ್ತಿದೆ ಎನ್ನುವಂತಹ ಶಂಕೆ ಸಾರ್ವಜನಿಕರಲ್ಲಿ ಮೂಡಿರುವುದು ವರದಿಯಾಗಿದೆ. ಬೀಚಗಾನಹಳ್ಳಿ ಕ್ರಾಸ್ ಬಳಿ ಇರುವಂತಹ ಆದರ್ಶ ಶಾಲೆಯ ಆವರಣದ ಆಟದ ಮೈದಾನದಲ್ಲಿ ಹೆಲಿಕಾಪ್ಟರ್‌ನ್ನು ನಿಲ್ಲಿಸಿಕೊಂಡು ಅದರ ಮೂಲಕ ಚಿನ್ನ ಸೇರಿದಂತೆ ಇನ್ನಿತರ ಇಂಧನದ ರೂಪದ ವಸ್ತುಗಳಿಗೆ ಶೋಧ ಕಾರ್ಯವನ್ನು ಮಾಡುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯಗಳಲ್ಲಿ ವ್ಯಾಪಕ ಚರ್ಚೆಗಳು ಆಗುತ್ತಿವೆ. ಕೇಂದ್ರ ಸರಕಾರದ ಜಿಯಾಲಜಿಕಲ್ ಆಫ್ ಸರ್ವೇ ಇಲಾಖೆಯ ಆದೇಶದಂತೆ ಪ್ರಕೃತಿಯಲ್ಲಿ ಸಿಗುವಂತಹ ಖನಿಜ ಸಂಪನ್ಮೂಲಗಳಿಗಾಗಿ ಶೋಧ ಕಾರ್ಯವನ್ನು ಹೊಸ ತಂತ್ರಜ್ಞಾನ ಮೂಲಕ ಶೋಧ ಕಾರ್ಯ ಮಾಡುತ್ತಿದ್ದಾರೆ. ಇನ್ನೂ 20 ದಿನಗಳು ಗುಡಿಬಂಡೆ ತಾಲೂಕಿನಲ್ಲಿ ಶೋಧ ಕಾರ್ಯವು ನಡೆಯಲಿದೆ. ಸಿಗ್ಬತ್‌ವುಲ್ಲಾ, ತಹಶೀಲ್ದಾರ್, ಗುಡಿಬಂಡೆ

ವಾರ್ತಾ ಭಾರತಿ 3 Feb 2026 12:13 am

25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ರೂ.ನಷ್ಟ : ದೇವೇಂದರ ಶರ್ಮಾ

ಬೆಂಗಳೂರು : ವರದಿಗಳ ಪ್ರಕಾರ 25 ವರ್ಷಗಳ (2000-2025) ಅವಧಿಯಲ್ಲಿ ದೇಶದ ರೈತರಿಗೆ 111 ಲಕ್ಷ ಕೋಟಿ ರೂ.ನಷ್ಟವಾಗಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಕೃಷಿ ಬಿಕ್ಕಟ್ಟಿನಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‍ನ ಕೃಷಿ ಸುಧಾರಣಾ ಸಮಿತಿ ಅಧ್ಯಕ್ಷ ದೇವೇಂದರ ಶರ್ಮಾ ಮಾಹಿತಿ ನೀಡಿದ್ದಾರೆ. ಸೋಮವಾರ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರೈತರ ಆತ್ಮಹತ್ಯೆಗಳ ತಡೆ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 2000 ರಿಂದ 2016ರ ಅವಧಿಯಲ್ಲಿ 45 ಲಕ್ಷ ಕೋಟಿ ರೂ. ರೈತರಿಗೆ ನಷ್ಟವಾಗಿತ್ತು. ನಂತರ ನಷ್ಟದ ಮೊತ್ತ ಮತ್ತಷ್ಟು ಹೆಚ್ಚಾಯಿತು. ಮಾರುಕಟ್ಟೆ ಏರಿಳಿತ, ಬೆಳೆ ನಷ್ಟ ಸೇರಿದಂತೆ ಅನೇಕ ಕಾರಣಗಳಿರಬಹುದು. ಈ ವಿಷಯದ ಬಗ್ಗೆ ಕೃಷಿ ವಿಶ್ವ ವಿದ್ಯಾನಿಲಯಗಳಾಗಲಿ, ಶಿಕ್ಷಣ ಸಂಸ್ಥೆಗಳಾಗಲಿ, ಸಂಸತ್‍ನಲ್ಲೂ ಚರ್ಚೆಯಾಗಲಿಲ್ಲ ಎಂದರು. ವರ್ಷದಿಂದ ವರ್ಷಕ್ಕೆ ಆದಾಯ ಕುಸಿಯುತ್ತಿದ್ದರೂ ವಿಶ್ವದಲ್ಲಿ ಭಾರತ ದೇಶದ ರೈತರು ಮಾತ್ರ ಬೆಳೆ ಉತ್ಪಾದನೆ ನಿಲ್ಲಿಸಿಲ್ಲ. ಬೆಳೆಗಳ ಬೆಲೆ ಕುಸಿತಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಬೇಕು. ರೈತರ ಕಲ್ಯಾಣಕ್ಕೆ ಸರಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದರೂ ಅನ್ನದಾತರ ಆತ್ಮಹತ್ಯೆ ನಿಂತಿಲ್ಲ. ದೇಶದಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿಯಲ್ಲಿ ಮುಂಚೂಣಿಯಲ್ಲಿರುವ ಪಂಜಾಬ್‍ನಲ್ಲೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕ, ಆಂದ್ರಪ್ರದೇಶ, ತಮಿಳುನಾಡು, ತೆಲಂಗಾಣ, ಕೇರಳದಲ್ಲೂ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೇವೇಂದರ ಶರ್ಮಾ ವಿವರಿಸಿದರು. ಈ ಸಮಸ್ಯೆ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಅಭಿವೃದ್ಧಿ ಹೊಂದಿರುವ ಅಮೆರಿಕ, ಆಸ್ಟ್ರೇಲಿಯಾ ಮತ್ತು ಯುರೋಪ್‍ನಲ್ಲಿಯೂ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮೆರಿಕದಲ್ಲಿ 8 ಸಾವಿರ ಹತ್ತಿ ಬೆಳೆಗಾರರಿಗೆ ಸರಕಾರ 1 ಲಕ್ಷ ಡಾಲರ್ ಸಬ್ಸಿಡಿ ನೀಡಿದೆ. ಆದರೆ ಭಾರತದಲ್ಲಿ 98 ಲಕ್ಷ ಹತ್ತಿ ಬೆಳೆಗಾರರಿಗೆ 27 ಸಾವಿರ ಡಾಲರ್ ಸಬ್ಸಿಡಿ ದೊರೆತಿದೆ. ಸಬ್ಸಿಡಿಯಿಂದಲೇ ರೈತರು ಉಳಿದುಕೊಂಡಿದ್ದಾರೆ. ಚೀನಾ ತನ್ನ ರೈತರಿಗೆ ಹೆಚ್ಚು ಸಬ್ಸಿಡಿ ನೀಡುತ್ತಿದೆ ಎಂದು ಅವರು ಹೇಳಿದರು. ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಕೃಷಿ ಕ್ಷೇತ್ರಕ್ಕೆ ಶೇ.3.4 ಅನುದಾನ ನೀಡಲಾಗಿದೆ. ಕಳೆದ ವರ್ಷ ಶೇ.3.15 ಇತ್ತು. ಎಲ್ಲ ಕ್ಷೇತ್ರಕ್ಕೂ ಸಮಾನ ಹಂಚಿಕೆ ಮಾಡಬೇಕೆಂದು ಭಾರತೀಯ ಕಿಸಾನ್ ಸಂಘ ಆಗ್ರಹಿಸಿದೆ. ಕರ್ನಾಟಕದ ನೀತಿ ನಿರೂಪಕರು ಸಹ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಬೇಕು. ಸಾಲ ಪಡೆಯುವ ರೈತರಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಿಬಿಲ್ ಸ್ಕೋರ್ ಪರಿಗಣಿಸಬಾರದು, ವರ್ಷದ 12 ತಿಂಗಳೂ ಖರೀದಿ ಕೇಂದ್ರಗಳು ತೆರೆದಿರಬೇಕು ಮತ್ತು ರಾಜ್ಯದಲ್ಲಿ ರೈತರ ಆತ್ಮಹತ್ಯೆ ತಡೆಯಲು `ಋಣ ಮುಕ್ತ ಕಾಯ್ದೆ' ಜಾರಿ ತರಬೇಕು ಎಂದು ದೇವೇಂದರ ಶರ್ಮಾ ಒತ್ತಾಯಿಸಿದರು. ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಮಾತನಾಡಿ, ರೈತರ ಆತ್ಮಹತ್ಯೆಗೆ ಹಲವು ಕಾರಣಗಳಿವೆ. ಸರಕಾರಕ್ಕೆ ಆದಾಯ ಬರಲಿದೆ ಎಂಬ ಕಾರಣಕ್ಕೆ ಮದ್ಯ ಮಾರಾಟಕ್ಕೆ ಉತ್ತೇಜನ ನೀಡಬಾರದು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಬಜೆಟ್ ಕುರಿತ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲು ರೈತ ನಾಯಕರು, ತಜ್ಞರು ತಂಡವನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ರೈತ ನಾಯಕ ಕೆ.ಟಿ.ಗಂಗಾಧರ್, ಭಾರತೀಯ ಆರ್ಥಿಕ ಮತ್ತು ಸಾಮಾಜಿಕ ಸಂಸ್ಥೆ ಡಾ.ಅಶೋಕ್ ದಳವಾಯಿ, ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ.ಎ.ಬಿ.ಪಾಟೀಲ, ರಾಜ್ಯ ಕೃಷಿ ಮಾರಾಟ ಮಂಡಳಿಯ ಬಸವರಾಜ ಹುಂಬರವಾಡಿ, ನಿವೃತ್ತ ಕೃಷಿ ಅಧಿಕರಿ ಬಿ.ಎಚ್.ಪಿಂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 3 Feb 2026 12:04 am

Modi-Trump: ಅಮೆರಿಕ - ಭಾರತ ತೆರಿಗೆ ಸಮರಕ್ಕೆ ಬ್ರೇಕ್: ಸುಂಕ ಶೇ 18ರಷ್ಟು ಇಳಿಕೆ, ಗೆಳಯನೊಂದಿಗೆ ಮಾತನಾಡಿದೆ ಮೋದಿ ಟ್ವೀಟ್

Modi-Trump Tariff Reduction: ಭಾರತ ಹಾಗೂ ಅಮೆರಿಕದ ನಡುವೆ ಕಳೆದ ಐದಾರು ತಿಂಗಳಿನಿಂದಲೂ ಸೃಷ್ಟಿಯಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಭಾರತ ಹಾಗೂ ಅಮೆರಿಕದ ನಡುವೆ ಕಳೆದ ಐದಾರು ತಿಂಗಳಿನಿಂದಲೂ ತೆರಿಗೆ ವಿಚಾರಕ್ಕೆ ಸಂಘರ್ಷ ಏರ್ಪಟ್ಟಿತ್ತು. ರಷ್ಯಾದಿಂದ ಭಾರತವು ಕಚ್ಚಾ ತೈಲವನ್ನು ಖರೀದಿ ಮಾಡುತ್ತಿರುವುದನ್ನು ವಿರೋಧಿಸಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ವಿಪರೀತವಾದ ತೆರಿಗೆಯನ್ನು ವಿಧಿಸಿದ್ದರು. ಇದೀಗ

ಒನ್ ಇ೦ಡಿಯ 3 Feb 2026 12:03 am

ಕಲಬುರಗಿ | ಎಸ್‌ಡಿಟಿಯು ಜಿಲ್ಲಾ ಘಟಕದ ಪದಾಧಿಕಾರಿಗಳ ನೇಮಕ : ಸ್ಮಾರ್ಟ್ ಕಾರ್ಡ್ ವಿತರಣೆ

ಕಲಬುರಗಿ: ನಗರದ ಹಬೀಬ್ ಫಂಕ್ಷನ್ ಹಾಲ್‌ನಲ್ಲಿ ರವಿವಾರ ನಡೆದ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮತ್ತು ಸದಸ್ಯರಿಗೆ ಸ್ಮಾರ್ಟ್ ಕಾರ್ಡ್‌ಗಳು ವಿತರಣೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸೈಯದ್ ಜಾಕಿರ್ ಅವರನ್ನು ನೇಮಕ ಮಾಡಲಾಗಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಮುಲ್ಲಾ, ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಡಿ. ಖಾಜಾ ಅವರನ್ನು ನೇಮಕ ಮಾಡಲಾಯಿತು. ಈ ವೇಳೆ ಹಿಂದಿನ ಜಿಲ್ಲಾ ಅಧ್ಯಕ್ಷರಾದ ಸೈಯದ್ ಅಲ್ತಾಫ್, ಪ್ರಧಾನ ಕಾರ್ಯದರ್ಶಿಯಾದ ಇಮ್ತಿಯಾಜ್ ಖಾನ್ ಸೇರಿದಂತೆ ಅನೇಕ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘವು ಸದಾ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸುವುದಾಗಿ ನೂತನ ಅಧ್ಯಕ್ಷ ಸೈಯದ್ ಜಾಕಿರ್ ಕರೆ ನೀಡಿದರು. ಸಂಘಟನೆಯ ಬಲವರ್ಧನೆ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಡಿ.ಖಾಜಾ ಸಾಹೇಬ್, ಪ್ರಧಾನ ಕಾರ್ಯದರ್ಶಿ ಜನಾಬ್ ಸಲೀಮ್ ಮುಲ್ಲಾ ಸಾಹೇಬ್, ಜಾಯಿಂಟ್ ಕಾರ್ಯದರ್ಶಿ ಅಬ್ದುಲ್ ರಹೀಮ್, ಕಾರ್ಯದರ್ಶಿ ಸೈಯದ್ ಕಲೀಂ ಹಾಗೂ ಖಜಾಂಚಿ ಮುಹಮ್ಮದ್ ಅಝರುದ್ದೀನ್, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ SDTU ರಾಜ್ಯ ಸಮಿತಿಯ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್, ಮುಹಮ್ಮದ್ ಮೊಹ್ಸಿನ್, ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೆಹಬೂಬ್, ವಕೀಲ ಮೊಹ್ತೆಶಮ್ ಪಟೇಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 11:56 pm

ಕಲಬುರಗಿ | ಸಂಪೂರ್ಣತಾ ಅಭಿಯಾನ ಮೂಲಕ ಆರೋಗ್ಯ, ಶಿಕ್ಷಣ ಕೃಷಿಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿ: ಬಿ.ಫೌಝಿಯಾ ತರನ್ನುಮ್

ಕಲಬುರಗಿ: ನೀತಿ ಆಯೋಗ ಗುರುತಿಸಿರುವ ಜಿಲ್ಲೆಯ ಆಫಜಲಪುರ, ಕಾಳಗಿ ಹಾಗೂ ಶಹಾಬಾದ್ ತಾಲೂಕುಗಳಲ್ಲಿ ‘ಸಂಪೂರ್ಣತಾ ಅಭಿಯಾನ 2.0’ ಮೂಲಕ ಆರೋಗ್ಯ, ಅಪೌಷ್ಟಿಕತೆ ನಿವಾರಣೆ, ಶಿಕ್ಷಣ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವುದು ಜಿಲ್ಲಾಡಳಿತದ ಗುರಿಯಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ನೀತಿ ಆಯೋಗದ ಮಹತ್ವಾಕಾಂಕ್ಷಿ ಕಾರ್ಯಕ್ರಮ ‘ಸಂಪೂರ್ಣತಾ ಅಭಿಯಾನ 2.0’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೂರು ಆಕಾಂಕ್ಷಿ ಬ್ಲಾಕ್‌ಗಳಲ್ಲಿ ಯೋಜನೆಗಳು ಯಶಸ್ವಿಯಾಗಲು ವಿಭಾಗಗಳ ನಡುವಿನ ಸಮನ್ವಯ ಅತ್ಯಗತ್ಯ ಎಂದು ಹೇಳಿದರು. ಕ್ಷೇತ್ರಮಟ್ಟದಲ್ಲಿ ನಿರಂತರ ಮೇಲ್ವಿಚಾರಣೆ ಅಗತ್ಯವಿದ್ದು, ಪ್ರಮುಖವಾಗಿ ಜನರ ಸಹಭಾಗಿತ್ವ ಇಲ್ಲದೆ ಗುರಿ ಸಾಧನೆ ಸಾಧ್ಯವಿಲ್ಲ. ಯಾವುದೇ ಅರ್ಹ ಫಲಾನುಭವಿಯೂ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು. ಕಾಳಗಿ ನಮಗೆ ಪ್ರೇರಣೆ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವಾರ್ ಸಿಂಗ್ ಮಾತನಾಡಿ, ನೀತಿ ಆಯೋಗದ ಸಂಪೂರ್ಣತಾ ಅಭಿಯಾನ 1.0ರಲ್ಲಿ ಕಾಳಗಿ ಆಕಾಂಕ್ಷಿ ಬ್ಲಾಕ್ 6 ಸೂಚಕಗಳಲ್ಲಿ 5 ಸೂಚಕಗಳಲ್ಲಿ ಶೇ.100 ಸಾಧನೆ ಮಾಡಿ ಬೆಳ್ಳಿ ಪದಕ ಪಡೆದಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ಹೇಳಿದರು. ಇದೇ ಸಾಧನೆ ಸಂಪೂರ್ಣತಾ ಅಭಿಯಾನ 2.0ಕ್ಕೆ ಪ್ರೇರಣೆಯಾಗಿದೆ ಎಂದರು. ಸಂಪೂರ್ಣತಾ ಅಭಿಯಾನ 2.0ರಲ್ಲಿ ಶೇ.100 ಗುರಿ ಸಾಧನೆಗಾಗಿ ಎಲ್ಲ ಇಲಾಖೆಗಳು ಸಂಕಲ್ಪದೊಂದಿಗೆ ಕೆಲಸ ಮಾಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಕಾರ್ಯಯೋಜನೆ ರೂಪಿಸಬೇಕು, ಪ್ರತಿ ವಾರ ಪರಿಶೀಲನೆ, ಕ್ಷೇತ್ರ ಭೇಟಿ ಹಾಗೂ ನೈಜ ಫಲಿತಾಂಶ ಆಧಾರಿತ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ದಾಖಲೆಗಿಂತ ನೆಲಮಟ್ಟದ ಸಾಧನೆ ಮುಖ್ಯ ಎಂಬುದನ್ನು ಅವರು ಸ್ಪಷ್ಟಪಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗದೇವಪ್ಪ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಆಕಾಂಕ್ಷಿ ಬ್ಲಾಕ್ ಫೆಲೋ ಶಿವರಾಜ ಹೊಳ್ಕರ್ ಸೇರಿದಂತೆ ಕಾಳಗಿ, ಆಫಜಲಪೂರ ಹಾಗೂ ಶಹಾಬಾದ್ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಿಡಿಪಿಓಗಳು, ಸಹಾಯಕ ಕೃಷಿ ನಿರ್ದೇಶಕರು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 2 Feb 2026 11:53 pm

ದೇಶಕ್ಕೆ ಮೋದಿ ದ್ರೋಹ ಮಾಡಿದ್ದಾರೆ ಎಂದ ನಸೀರ್‌ ಅಹ್ಮದ್‌: ವಿಧಾನ ಪರಿಷತ್‌ನಲ್ಲಿ ಕೋಲಾಹಲ ಸೃಷ್ಟಿ

ಬೆಂಗಳೂರು : ಕಾಂಗ್ರೆಸ್‌ ಸದಸ್ಯ ನಸೀರ್‌ ಅಹ್ಮದ್‌ ಅವರು ದೇಶಕ್ಕೆ ಮೋದಿ ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದು, ವಿಧಾನ ಪರಿಷತ್‌ನಲ್ಲಿ ಭಾರೀ ಕೋಲಾಹಲ ಸೃಷ್ಟಿಸಿತು. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ವಂದನಾ ನಿರ್ಣಯಕ್ಕೆ ಸಂಬಂಧಿಸಿದಂತೆ ಉತ್ತರಿಸುವ ವೇಳೆ, ಪ್ರತಿಪಕ್ಷದವರು, ರಾಜ್ಯ ಸರಕಾರದ ಬಳಿ ಹಣವಿಲ್ಲ. ಆದ್ದರಿಂದ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ರಾಜ್ಯದಲ್ಲಿ ದಂಗೆ ಏಳುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ ಎಂದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರೊಬ್ಬರು ಕೇಂದ್ರವೇ ದಿವಾಳಿ ಆಗಿದೆ ಎಂದರು. ಇದಕ್ಕೆ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರು, ಕೇಂದ್ರ ಸರಕಾರ ಆರ್ಥಿಕ ಸ್ಥಿತಿಯಲ್ಲಿ ನಾಲ್ಕನೆ ಸ್ಥಾನದಲ್ಲಿದೆ. ಮೋದಿ ಅವರಿಂದಲೇ ದೇಶ ಈ ಸ್ಥಿತಿಗೆ ಬಂದಿದೆ. ಮೋದಿಜೀಯಿಂದಲೇ ದೇಶ ಇದೆ ಎಂದು ಹೇಳಿದರು. ಇದಕ್ಕೆ ಕಾಂಗ್ರೆಸ್‌ ನಸೀರ್ ಅಹ್ಮದ್‌ ಅವರು, ದೇಶದ ಈ ಪರಿಸ್ಥಿತಿ ಮೋದಿಯಿಂದಲೇ ಬಂದಿದೆ. ದೇಶಕ್ಕೆ ಮೋದಿ ದ್ರೋಹ ಮಾಡಿದ್ದಾರೆ ಎಂದು ಕೂಗಿದರು. ಈ ವೇಳೆ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಎನ್‌.ರವಿಕುಮಾರ್‌, ಕೇಶವಪ್ರಸಾದ್‌, ಸಿ.ಟಿ.ರವಿ ಸೇರಿದಂತೆ ಪ್ರತಿಪಕ್ಷದ ಸದಸ್ಯರು ಪ್ರಧಾನಿಯವರನ್ನು ದೇಶ ದ್ರೋಹಿ ಎಂದ ನಸೀರ್‌ ಅಹ್ಮದ್‌ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು, ನಸೀರ್‌ ಅಹ್ಮದ್‌ ಅವರ ಹೇಳಿಕೆಯನ್ನು ಕಡತದಿಂದ ತೆಗೆಸಿದರೂ ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರು.

ವಾರ್ತಾ ಭಾರತಿ 2 Feb 2026 11:53 pm

ಗುರುಮಠಕಲ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಚಿವ ಪ್ರಿಯಾಂಕ್ ಖರ್ಗೆ ಯಾದಗಿರಿಗೆ ಭೇಟಿ ನೀಡಬೇಕು : ಶಾಸಕ ಶರಣಗೌಡ ಕಂದಕೂರ

ಯಾದಗಿರಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತುರ್ತಾಗಿ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿ ಇಲಾಖೆ ಮಟ್ಟದ ಸಭೆ ನಡೆಸಬೇಕು. ಜಿಲ್ಲೆ ಮತ್ತು ವಿಶೇಷವಾಗಿ ಗುರುಮಠಕಲ್ ಮತಕ್ಷೇತ್ರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಹಾಗೂ ಆರ್‌ಒ ಪ್ಲಾಂಟ್ ಸಮಸ್ಯೆಗಳ ಗಂಭೀರತೆ ತಿಳಿದರೆ ಮಾತ್ರ ಶಾಶ್ವತ ಪರಿಹಾರ ಸಾಧ್ಯವಾಗಲಿದೆ ಎಂದು ಶಾಸಕ ಶರಣಗೌಡ ಕಂದಕೂರ ಒತ್ತಾಯಿಸಿದರು. ಸೋಮವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ತಮ್ಮ ಮತಕ್ಷೇತ್ರದಲ್ಲಿ ದುರಸ್ತಿ ಆಗದೇ, ನಿರ್ವಹಣೆಗೆ ಹಣವಿಲ್ಲದೆ ಅನೇಕ ಆರ್‌ಒ ಪ್ಲಾಂಟ್‌ಗಳು ಬಂದ್ ಆಗಿವೆ. ಇದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಆತಂಕವಿದೆ ಎಂದು ಹೇಳಿದರು. ಆರ್‌ಒ ಪ್ಲಾಂಟ್‌ಗಳ ದುರಸ್ತಿಗಾಗಿ ಈ ಹಿಂದೆ ಕೊರೆಸಿದ್ದ ಬೋರ್‌ವೆಲ್‌ಗಳಿಗೆ ಸಂಬಂಧಿಸಿದಂತೆ 1.13 ಕೋಟಿ ರೂ. ಬಿಲ್ ಇನ್ನೂ ಬಾಕಿಯಿದೆ. ಈ ಕಾರಣದಿಂದ ಕೆಲಸ ಮಾಡಿದ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದು, “ಬಿಲ್ ಮಾಡಿಸದಿದ್ದರೆ ವಿಷ ಕುಡಿಯುತ್ತೇವೆ” ಎಂದು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ ಎಂಬ ವಿಷಯವನ್ನು ಶಾಸಕರು ಸಚಿವರ ಗಮನಕ್ಕೆ ತಂದರು. ಇಡಿ ಜಿಲ್ಲೆಯಲ್ಲಿ ಆರ್‌ಒ ಪ್ಲಾಂಟ್‌ಗಳ ದುರಸ್ತಿಗೆ ಸುಮಾರು 9 ಕೋಟಿ ರೂ. ಅನುದಾನ ಅಗತ್ಯವಿದೆ. ಈ ಕುರಿತು ಇದುವರೆಗೂ 20 ರಿಂದ 25 ಬಾರಿ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಗುರುಮಠಕಲ್ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಅತ್ಯಂತ ತೀವ್ರವಾಗಿದ್ದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರ್‌ಒ ಪ್ಲಾಂಟ್‌ಗಳ ದುರಸ್ತಿ ಮತ್ತು ನಿರ್ವಹಣೆಯನ್ನು ಹೇಗೆ ಸಮರ್ಪಕವಾಗಿ ನಡೆಸಬೇಕು ಎಂಬುದಕ್ಕೆ ನನಗೂ ಸ್ಪಷ್ಟ ಉತ್ತರ ಸಿಗುತ್ತಿಲ್ಲ ಎಂಬುವುದನ್ನು ಪ್ರಮಾಣಿಕವಾಗಿ ಒಪ್ಪಿಕೊಳ್ಳುತ್ತೆನೆ ಎಂದರು. ಮುಂದುವರೆದು ಮಾತನಾಡಿದ ಅವರು, ಇಡೀ ರಾಜ್ಯದಲ್ಲೇ ಈ ಸಮಸ್ಯೆ ಇದೆ. ಆದ್ದರಿಂದ ಆರ್‌ಒ ಪ್ಲಾಂಟ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸ್ಪಷ್ಟ ನೀಲನಕ್ಷೆ ಹಾಗೂ ರೂಪರೇಷೆಗಳನ್ನು ಸಿದ್ಧಪಡಿಸಲಾಗುವುದು. ಅದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದರು. ಈಗಾಗಲೇ ಗುರುಮಠಕಲ್ ಕ್ಷೇತ್ರಕ್ಕೆ ಆರ್‌ಒ ಪ್ಲಾಂಟ್ ದುರಸ್ತಿಗಾಗಿ 56.54 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಶಾಸಕರ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬಾಕಿ ಇರುವ ಬಿಲ್‌ಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಸದನದಲ್ಲಿ ಭರವಸೆ ನೀಡಿದರು. ಜಲಧಾರೆ ಯೋಜನೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯೋಜನೆಯಲ್ಲಿರುವ ಸಮಸ್ಯೆಗಳನ್ನೂ ಸರಿಪಡಿಸಲಾಗುವುದು ಎಂದು ತಿಳಿಸಿದರು.

ವಾರ್ತಾ ಭಾರತಿ 2 Feb 2026 11:45 pm

ಎಪ್ಸ್ಟೀನ್, ಅನಿಲ್ ಅಂಬಾನಿ, ದಿಲ್ಲಿ ʼನಾಯಕತ್ವʼದ ನಡುವೆ ನಂಟು?: ಎಪ್ಸ್ಟೀನ್ ಕಡತಗಳಿಂದ ಬಹಿರಂಗ!; The Hindu ವರದಿ

ಹೊಸದಿಲ್ಲಿ: ಅಮೆರಿಕದ ಲೈಂಗಿಕ ಅಪರಾಧಿ ಹಾಗೂ ಮಾನವಕಳ್ಳಸಾಗಾಟದ ಆರೋಪಿ ಜೆಫ್ರಿ ಎಪ್ಸ್ಟೀನ್, ಭಾರತದ ಉದ್ಯಮಿ ಅನಿಲ್ ಅಂಬಾನಿಯನ್ನು ಅಮೆರಿಕದ ಅಧ್ಯಕ್ಷ ಡೊಲಾಲ್ಡ್ ಟ್ರಂಪ್ ಅವರ ಅಳಿಯ ಹಾಗೂ ಸಲಹೆಗಾರ ಜಾರೆಡ್ ಕುಶ್ನರ್ ಹಾಗೂ ರಿಪಬ್ಲಿಕನ್ ಪಕ್ಷದ ರಾಜಕಾರಣಿ ಸ್ಟೀವ್ ಬ್ಯಾನನ್ ಅವರಿಗೆ ಪರಿಚಯಿಸಬೇಕೆಂದು ದಿಲ್ಲಿಯ ‘ನಾಯಕತ್ವ’ ಬಯಸಿತ್ತೆಂದು ಇತ್ತೀಚೆಗೆ ಬಿಡುಗಡೆಗೊಂಡ ವಿವಾದಾತ್ಮಕ ಎಪ್ಸ್ಟೀನ್ ಕಡತಗಳಿಂದ ಬಹಿರಂಗಗೊಂಡಿದೆ ಎಂದು thehindu.com ವರದಿ ಮಾಡಿದೆ. ಅನಿಲ್ ಅಂಬಾನಿ ಅವರು ಎಪ್ಸ್ಟೀನ್ ಗೆ 2017 ಮಾರ್ಚ್‌ನಲ್ಲಿ ಈ ಕುರಿತಾಗಿ ಕಳುಹಿಸಿದ ಸಂದೇಶದಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿದೆ. ಎಪ್ಸ್ಟೀನ್ ಕಡತಗಳ ಹೊಸ ಕಂತನ್ನು ಅಮೆರಿಕದ ನ್ಯಾಯಾಂಗ ಇಲಾಖೆ ಶುಕ್ರವಾರ ಬಿಡುಗಡೆಗೊಳಿಸಿತ್ತು. 2017 ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಸಂದರ್ಭದಲ್ಲೇ ಈ ಭೇಟಿಯನ್ನು ಆಯೋಜಿಸಲಾಗಿತ್ತು ಎನ್ನಲಾಗಿದೆ. 2017 ಜುಲೈಯಲ್ಲಿ ಇಸ್ರೇಲ್‌ಗೆ ಭೇಟಿ ನೀಡಲು ಮೋದಿಗೆ ನೆರವು ನೀಡಿರುವುದಾಗಿ ಎಪ್ಸ್ಟೀನ್ ನೀಡಿದ ಹೇಳಿಕೆಯನ್ನು ನಿರಾಕರಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಆತನ ಹೇಳಿಕೆಯನ್ನು ‘‘ಶನಿವಾರ ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಪ್ರಲಾಪ’’ ಎಂದು ಕರೆದಿದೆ. ಆದರೆ, ಅಮೆರಿಕ ಭೇಟಿಯ ಕುರಿತ ಇತ್ತೀಚೆಗಿನ ಇಮೇಲ್‌ಗಳ ಕುರಿತು ಪ್ರತಿಕ್ರಿಯಿಸಲು ಅದು ನಿರಾಕರಿಸಿದೆ. ಇದಲ್ಲದೆ, ಅನಿಲ್ ಅಂಬಾನಿ ಅವರು 2019 ಮೇ 23ರಂದು ಬೆಳಗ್ಗೆ 9.25ಕ್ಕೆ ಎಪ್ಸ್ಟೀನ್ ಅನ್ನು ಭೇಟಿ ಮಾಡಿದಂತೆ ಕಾಣುತ್ತದೆ. ಎಪ್ಸ್ಟೀನ್ ಈ ಭೇಟಿಯ ನಂತರ ಬ್ಯಾನನ್‌ಗೆ ಸಂದೇಶ ಕಳುಹಿಸಿದ್ದಾನೆ. ಈ ಸಂದೇಶದಲ್ಲಿ ಆತ ತಾನು ಪ್ರಧಾನಿ ಮೋದಿಯ ‘ವ್ಯಕ್ತಿ’ಯನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾನೆ. ವಾಷಿಂಗ್ಟನ್‌ನಲ್ಲಿ ಮೋದಿ ಅವರೊಂದಿಗೆ ಯಾರೂ ಮಾತನಾಡುವುದಿಲ್ಲ ಎಂದು ತನ್ನನ್ನು ಭೇಟಿಯಾದ ವ್ಯಕ್ತಿ ದೂರಿದ್ದಾನೆ ಎಂದು ಎಪ್ಸ್ಟೀನ್ ತಿಳಿಸಿದ್ದಾನೆ. ಈ ಸಂದೇಶಗಳು ಕೇಂದ್ರ ಸರಕಾರಕ್ಕೆ ಸಂಬಂಧಿಸಿವೆ ಎಂಬುದನ್ನು ಬಿಜೆಪಿ ನಿರಾಕರಿಸಿದೆ.

ವಾರ್ತಾ ಭಾರತಿ 2 Feb 2026 11:41 pm

ಮನರೇಗಾ ಮುಂದುವರಿಕೆಗೆ ಕಾರ್ಮಿಕರ ಒಕ್ಕೊರಲ ಆಗ್ರಹ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ʼಮನರೇಗಾ ಕಾರ್ಮಿಕರ ಮಹಾಪಂಚಾಯತ್ʼ

ಬೆಂಗಳೂರು : ‘ಕೇಂದ್ರ ಸರಕಾರ ತಂದಿರುವ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯನ್ನು ಸಾರಾಸಗಟು ತಿರಸ್ಕರಿಸಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ)ಯೋಜನೆಯನ್ನೇ ಬಲಪಡಿಸಿ ಮುಂದುವರಿಸಬೇಕು’ ಎಂದು ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ‘ಮನರೇಗಾ ಕೂಲಿ ಕಾರ್ಮಿಕರು’ ಒಕ್ಕೂರಲಿನಿಂದ ಆಗ್ರಹಿಸಿದ್ದಾರೆ. ಸೋಮವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟ-ಕರ್ನಾಟಕದ ವತಿಯಿಂದ ಆಯೋಜಸಿದ್ದ ‘ಮನರೇಗಾ ಕಾರ್ಮಿಕರ ಮಹಾ ಪಂಚಾಯತ್’ನಲ್ಲಿ ಜಮಾವಣೆಗೊಂಡಿದ್ದ ಕಾರ್ಮಿಕರು ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸಿ, ಮನರೇಗಾ ಯೋಜನೆಯನ್ನೇ ಬಲಪಡಿಸುವಂತೆ ಒತ್ತಾಯಿಸಿದರು. ಗ್ರಾಮೀಣ ಬಡವರಿಗೆ ಬೆನ್ನೆಲುಬಾಗಿದ್ದ, ಸಂವಿಧಾನ ಬದ್ಧ ಹಕ್ಕಾಗಿದ್ದ, ಮನರೇಗಾ ಯೋಜನೆಯನ್ನು ಕೇಂದ್ರ ಸರಕಾರವು ರದ್ದುಗೊಳಿಸಿದೆ. ಅದರ ಜಾಗದಲ್ಲಿ ಜನರನ್ನು ಅತಂತ್ರಗೊಳಿಸುವ, ಪ್ರತಿಯೊಂದು ತೀರ್ಮಾನದ ಹಕ್ಕನ್ನೂ ತಾನೇ ವಶಪಡಿಸಿಕೊಳ್ಳುವ, ರಾಜ್ಯಗಳ ಮೇಲೆ ಜವಾಬ್ದಾರಿಯನ್ನು ಹೊರಿಸುವ ವಿಬಿ-ಜಿ ರಾಮ್‌ ಜಿ ಕಾಯ್ದೆ ಜಾರಿಗೆ ತಂದಿರುವುದು ದುಡಿಯುವ ಜನರ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಮನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸುವ ವರೆಗೆ ಕೂಲಿ ಕಾರ್ಮಿಕರ ಹೋರಾಟವನ್ನು ಮುಂದುವರಿಸುವ ತೀರ್ಮಾನವನ್ನು ಮಾಡಿದೆ. ಈ ಕಾಯ್ದೆಯನ್ನು ತಿರಸ್ಕರಿಸಿ ಹಿಂದೆ ಕಳುಹಿಸುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುತ್ತದೆ ಎಂದು ತಿಳಿಸಿದರು. ಮನರೇಗಾ ಯೋಜನೆಯನ್ನು ಮರುಸ್ಥಾಪಿಸಿ, 200 ದಿನ ಕೆಲಸ ಕೊಡಬೇಕು ದುಡಿಯುವ ಕೈಗಳಿಗೆ ಕೆಲಸ ಕೊಡಲೇಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ಕಡಿತ ಮಾಡಿರುವ ಕೇಂದ್ರ ಸರಕಾರಕ್ಕೆ ಧಿಕ್ಕಾರ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಕಾರ್ಯದರ್ಶಿಗಳಿಗೆ ‘ವಿಬಿ ಜಿ-ರಾಮ್ ಜಿ ಹಿಂಪಡೆಯುವಂತೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ವೇಳೆ ದಲಿತ ಸಂಘರ್ಷ ಸಮಿತಿಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಹೋರಾಟಗಾರ ನೂರ್ ಶ್ರೀಧರ್, ಗಾಯತ್ರಿ, ದೇವಿ, ಗುರುರಾಜ್, ಶಾರದಾ, ನವೀನ್, ಮೋಕ್ಷಮ್ಮ, ಮಹಾಂತೇಶ, ಸ್ವಪ್ನ ಮತ್ತಿತರರು ಹಾಜರಿದ್ದರು. ಪ್ರಮುಖ ನಿರ್ಣಯಗಳು: ಕರ್ನಾಟಕ ಸರಕಾರ ಅಧಿವೇಶನದಲ್ಲಿ ವಿಬಿ-ಜಿ ರಾಮ್‌ ಜಿ ಕಾಯ್ದೆಯನ್ನು ತಿರಸ್ಕರಿಸುವ ಮನರೇಗಾ ಯೋಜನೆಯನ್ನು ಮುಂದುವರಿಸುವ ತೀರ್ಮಾನ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಮನರೇಗಾ ರಕ್ಷಣಾ ಒಕ್ಕೂಟ ಬರೆದಿರುವ ಪತ್ರವನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳ ಗಮನಕ್ಕೆ ಬರುವಂತೆ ಕಳುಹಿಸಿಕೊಡಬೇಕು ಎಂದು ‘ಮನರೇಗಾ ಕಾರ್ಮಿಕರ ಮಹಾ ಪಂಚಾಯತ್’ನಲ್ಲಿ ನಿರ್ಣಯ ಕೈಗೊಳ್ಳಲಾಯಿತು. ‘ಮನರೇಗಾ ಯೋಜನೆಯನ್ನು ರದ್ದುಗೊಳಿಸಿ, ಬಿಜೆಪಿ ಸರಕಾರ ಸಂವಿಧಾನ ವಿರೋಧಿ, ಜನ, ಗ್ರಾಮೀಣಾಭಿವೃದ್ಧಿ ವಿರೋಧಿ ಕಾಯ್ದೆ ಜಾರಿ ಮಾಡಿದೆ. 125 ದಿನ ಎಂದು ಮೂಗಿಗೆ ತುಪ್ಪ ಹಚ್ಚಿದ್ದಾರೆ’ -ವಿ.ಎಸ್.ಉಗ್ರಪ್ಪ, ಮಾಜಿ ಸಂಸದ

ವಾರ್ತಾ ಭಾರತಿ 2 Feb 2026 11:40 pm

ಜಿ.ಪಂ. ಚುನಾವಣೆ | ಶಿವಸೇನೆ ಗೆದ್ದರೆ ಅನುದಾನ ಕಡಿತಗೊಳಿಸುತ್ತೇವೆ: ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಬೆದರಿಕೆ

ಮುಂಬೈ: ಮುಂಬರುವ ಜಿಲ್ಲಾ ಪರಿಷತ್ ಹಾಗೂ ಪಂಚಾಯತಿ ಸಮಿತಿ ಚುನಾವಣೆಯಲ್ಲಿ ಶಿವಸೇನೆ (ಉದ್ಧವ್ ಬಣ) ಅಭ್ಯರ್ಥಿಗಳು ಗೆಲುವು ಸಾಧಿಸಿದಲ್ಲಿ, ಅವರಿಗೆ ಮಂಜೂರು ಮಾಡಬೇಕಾದ ಅಭಿವೃದ್ಧಿ ನಿಧಿಗಳನ್ನು ತಡೆ ಹಿಡಿಯುತ್ತೇವೆ ಎಂದು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಬೆದರಿಕೆ ಒಡ್ಡಿದ್ದಾರೆ. ರವಿವಾರ ಸಿಂಧುದುರ್ಗ ಜಿಲ್ಲೆಯ ಕಂಕ್ಲಾವಿಯಾ ಪೋಂಡಾ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, “ನಮ್ಮ ಪಕ್ಷದ ಚಿಹ್ನೆಯನ್ನು ನೋಡಿದ ಬಳಿಕವೇ ಅನುದಾನ ಬಿಡುಗಡೆ ಮಾಡುತ್ತೇವೆ. ಕಮಲ ಅಥವಾ ಬಿಲ್ಲು ಮತ್ತು ಬಾಣ (ಬಿಜೆಪಿ ಮತ್ತು ಶಿವಸೇನೆಯ ಚುನಾವಣಾ ಚಿಹ್ನೆಗಳು) ಕಂಡರೆ ತಕ್ಷಣವೇ ಹಣವನ್ನು ಮಂಜೂರು ಮಾಡಲಾಗುತ್ತದೆ. ಒಂದು ವೇಳೆ ತಪ್ಪಾಗಿ ಪಂಜಿನ ಚಿಹ್ನೆ (ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ) ಕಂಡು ಬಂದರೆ, ಈಗಾಗಲೇ ಮಂಜೂರಾಗಿರುವ ಅನುದಾನವನ್ನೂ ಸಹ ಹಿಂಪಡೆಯುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. “ಎಲ್ಲ ಸರಪಂಚರು ತಮ್ಮ ಗ್ರಾಮ ಪಂಚಾಯತ್ ಗಳನ್ನು ನಮಗೆ ಹಸ್ತಾಂತರಿಸಬೇಕೆಂದು ನಾವು ಸ್ಪಷ್ಟವಾಗಿ ತಿಳಿಸಿದ್ದೆವು. ಅವರಿಗೆ ಒಂದು ರೂಪಾಯಿಯ ಅನುದಾನವೂ ದೊರೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದೆವು. ಹೀಗಾಗಿಯೇ ಎಲ್ಲ ಸರಪಂಚರೂ ಲಗುಬಗೆಯಿಂದ ನಮ್ಮ ಪಕ್ಷಕ್ಕೆ ಸೇರ್ಪಡೆಯಾದರು” ಎಂದು ಅವರು ಹೇಳಿದ್ದಾರೆ. ಜಿಲ್ಲಾ ಪರಿಷತ್ ಮತ್ತು ಪಂಚಾಯತಿ ಸಮಿತಿ ಚುನಾವಣೆಗಳು ಏಕಪಕ್ಷೀಯವಾಗುತ್ತಿವೆ ಹಾಗೂ ಮತದಾರರು ಪ್ರತಿಪಕ್ಷಗಳನ್ನು ಬೆಂಬಲಿಸುವ ಅಗತ್ಯವನ್ನು ಪ್ರಶ್ನಿಸುತ್ತಿದ್ದಾರೆ ಎಂದೂ ಅವರು ಪ್ರತಿಪಾದಿಸಿದ್ದಾರೆ. ಸಂಸದ ನಾರಾಯಣ ರಾಣೆ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತಿವೆ ಹಾಗೂ ಮುಂದಿನ ಐದು ವರ್ಷಗಳ ಕಾಲ ಸಿಂಧುದುರ್ಗ ಜಿಲ್ಲೆ ಅವರ ನಾಯಕತ್ವದಲ್ಲೇ ಉಳಿಯಲಿದೆ ಎಂದು ನಿತೇಶ್ ರಾಣೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಚುನಾವಣೆಯ ನಂತರ ಶಿವಸೇನೆಯ ನಾಯಕರು ನಮ್ಮ ಬಳಿಗೆ ಅನುದಾನಕ್ಕಾಗಿ ಬರಬೇಕಾಗುತ್ತದೆ” ಎಂದು ಅವರು ವ್ಯಂಗ್ಯವಾಡಿದ್ದಾರೆ. ಫೆಬ್ರವರಿ 7ರಂದು 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯತಿ ಸಮಿತಿಗಳಿಗೆ ಚುನಾವಣೆ ನಡೆಯಲಿದ್ದು, ಫೆಬ್ರವರಿ 9ರಂದು ಮತ ಎಣಿಕೆ ನಡೆಯಲಿದೆ.

ವಾರ್ತಾ ಭಾರತಿ 2 Feb 2026 11:37 pm

ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ: ಬಿಸಿಸಿಐ ಪ್ರತಿಕ್ರಿಯಿಸಿದ್ದು ಹೀಗೆ...

ಹೊಸದಿಲ್ಲಿ: ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೆಬ್ರವರಿ 15ರಂದು ನಿಗದಿಯಾಗಿರುವ ಭಾರತ ವಿರುದ್ಧದ ಗ್ರೂಪ್ ಹಂತದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ತಂಡ ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ), ಕ್ರೀಡಾ ಮನೋಭಾವದ ಕುರಿತು ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನಿಲುವಿಗೆ ನಮ್ಮ ಸಂಪೂರ್ಣ ಸಮ್ಮತಿ ಇದೆ. ಐಸಿಸಿಯೊಂದಿಗೆ ಔಪಚಾರಿಕವಾಗಿ ಚರ್ಚೆ ನಡೆಸುವ ತನಕ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದೆ. ‘‘ಐಸಿಸಿ ಒಂದು ದೊಡ್ಡ ಹೇಳಿಕೆಯೊಂದನ್ನು ನೀಡಿದೆ. ಅದರಲ್ಲಿ ಕ್ರೀಡಾ ಮನೋಭಾವದ ಬಗ್ಗೆ ಮಾತನಾಡಿದೆ. ಐಸಿಸಿಯ ನಿಲುವನ್ನು ನಾವು ಸಂಪೂರ್ಣವಾಗಿ ಒಪ್ಪುತ್ತೇವೆ. ಐಸಿಸಿ ಜೊತೆ ಮಾತನಾಡುವ ತನಕ ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ’’ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ. ಆಯ್ದ ಪಂದ್ಯಗಳಲ್ಲಿ ಭಾಗವಹಿಸುವುದು ಜಾಗತಿಕ ಕ್ರೀಡಾಕೂಟದ ಮೂಲಭೂತ ಪ್ರಮೇಯಕ್ಕೆ ವಿರುದ್ಧವಾಗಿದೆ. ಪಾಕಿಸ್ತಾನದ ಸರಕಾರದ ಹೇಳಿಕೆಯನ್ನು ಗಮನಿಸಿದ್ದೇವೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ(ಪಿಸಿಬಿ)ಅಧಿಕೃತ ಸಂವಹನಕ್ಕಾಗಿ ಕಾಯುತ್ತಿದ್ದೇವೆ. ಪ್ರಕಟಿತ ವೇಳಾಪಟ್ಟಿಯ ಪ್ರಕಾರವೇ ಎಲ್ಲ ಅರ್ಹ ತಂಡಗಳು ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಐಸಿಸಿ ಪ್ರಕಟನೆಯೊಂದರಲ್ಲಿ ತಿಳಿಸಿದೆ.

ವಾರ್ತಾ ಭಾರತಿ 2 Feb 2026 11:35 pm

Kanakagiri | ಆದಾಪುರ ಸರಕಾರಿ ಶಾಲೆಗೆ ಸಚಿವ ಶಿವರಾಜ ತಂಗಡಗಿ ತಾಯಿಯಿಂದ 1 ಎಕರೆ ಭೂ ದಾನ

ಕನಕಗಿರಿ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ಸಂಗಪ್ಪ ತಂಗಡಗಿ ಅವರು ತಾಲ್ಲೂಕಿನ ಆದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಗ್ರಾಮದಲ್ಲಿ ಈಗಾಗಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ಬಿಸಿಯೂಟ ಕೊಠಡಿ, ಶಾಲಾ ಕಚೇರಿ ಸೇರಿ ಒಟ್ಟು 7 ಕೊಠಡಿಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಯನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದ್ದರೂ, ಶಾಲಾ ಜಾಗದ ಕೊರತೆ ಮತ್ತು ವಿವಾದ ಅಡ್ಡಿಯಾಗಿತ್ತು. ಈ ಹಿನ್ನೆಲೆ 2023ರ ವಿಧಾನಸಭಾ ಚುನಾವಣೆಯ ವೇಳೆ ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ನೀಡಿದ್ದರು. ಆಗ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಶಿವರಾಜ ತಂಗಡಗಿ ಅವರು ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದಲ್ಲಿ ಶಾಲೆಗೆ ಒಂದು ಎಕರೆ ಜಾಗ ದಾನ ಮಾಡುವುದಾಗಿ ಭರವಸೆ ನೀಡಿದ್ದರು. ಭರವಸೆಯಂತೆ, ತಂಗಡಗಿ ಅವರ ತಾಯಿ ಹುಲಿಗೆಮ್ಮ ಸಂಗಪ್ಪ ಅವರು ಸ್ಥಳೀಯರಿಂದ ಒಂದು ಎಕರೆ ಭೂಮಿಯನ್ನು ಖರೀದಿಸಿ ಅದನ್ನು ಶಾಲೆಗೆ ದಾನವಾಗಿ ನೀಡಿದ್ದಾರೆ. ರೈಸ್ ಟೆಕ್ನಾಲಜಿ ಪಾರ್ಕ್ ಯೋಜನೆಯಿಂದ ಈ ಭಾಗದಲ್ಲಿ ಭೂಮಿಯ ದರ ಹೆಚ್ಚಿರುವ ಸಂದರ್ಭದಲ್ಲಿ ಕೂಡಾ ಶಾಲೆಯ ಹಿತಕ್ಕಾಗಿ ಜಾಗ ದಾನ ಮಾಡಿರುವುದನ್ನು ಗ್ರಾಮಸ್ಥರು ಮೆಚ್ಚಿಕೊಂಡಿದ್ದಾರೆ. ಶನಿವಾರ ಕಾರಟಗಿಯ ಉಪನೋಂದಣಿ ಕಚೇರಿಯಲ್ಲಿ 80 ವರ್ಷ ವಯಸ್ಸಿನ ಹುಲಿಗೆಮ್ಮ ಸಂಗಪ್ಪ ತಂಗಡಗಿ ಅವರು ದಾನಪತ್ರವನ್ನು ರಾಜ್ಯಪಾಲರ ಹೆಸರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಿದರು. ಈ ವೇಳೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ನಟೇಶ್ ಬಿ.ಎಚ್, ಸರ್ಕಾರಿ ಭೂಮಿ ಇಲ್ಲದ ಊರಲ್ಲಿ ಖಾಸಗಿ ವ್ಯಕ್ತಿಯಿಂದ ಜಾಗ ಖರೀದಿಸಿ ಶಾಲೆಗೆ ದಾನವಾಗಿ ನೀಡಿರುವುದು ಅತ್ಯಂತ ಮಾದರಿಯ ನಡೆ. ಈ ಭಾಗದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶ ಶ್ಲಾಘನೀಯ ಎಂದು ಹೇಳಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 5 ಶಾಲಾ ಕೊಠಡಿಗಳು ಹಾಗೂ ರಾಜ್ಯ ವಲಯದಿಂದ ಒಂದು ಕೊಠಡಿ ಮಂಜೂರು ಮಾಡಿಸಿರುವುದಕ್ಕೆ ಸಚಿವ ಶಿವರಾಜ ತಂಗಡಗಿ ಅವರಿಗೆ ಶಿಕ್ಷಣ ಇಲಾಖೆ ಅಭಿನಂದನೆ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಇನಾಯತ್, ಶಿಕ್ಷಣ ಸಂಯೋಜಕರು ರಾಘವೇಂದ್ರ, ಶಶಿಧರಸ್ವಾಮಿ, ಪ್ರಭಾರ ಸಿಆರ್‌ಪಿ ರಾಜಕುಮಾರ, ಕಾರಟಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ, ಮುಖ್ಯ ಶಿಕ್ಷಕರು ನರಹರಿ, ರಮೇಶ್ ಕುಕನೂರು, ಶಾಮಸುಂದರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 11:27 pm

ಆಡಿಯೊ ಬುಕ್‌ಗಾಗಿ ಮೊದಲ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ದಲಾಯಿ ಲಾಮಾ

ಹೊಸದಿಲ್ಲಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿ ಲಾಮಾ ಅವರು ತನ್ನ ‘ಮೆಡಿಟೇಷನ್ಸ್:ದಿ ರಿಫ್ಲೆಕ್ಷನ್ಸ್ ಆಫ್ ಹೀಸ್ ಹೋಲಿನೆಸ್ ದಿ ದಲಾಯಿ ಲಾಮಾ’ ಆಡಿಯೊ ಬುಕ್‌ಗಾಗಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದು, ಇದು 68ನೇ ಗ್ರ್ಯಾಮಿ ಪ್ರಶಸ್ತಿಗಳಲ್ಲಿ ಗಮನಾರ್ಹ ಘಳಿಗೆಯಾಗಿ ಗುರುತಿಸಲ್ಪಟ್ಟಿದೆ. ದಲಾಯಿ ಲಾಮಾರ ಆಲ್ಬಮ್ ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೇತಾಂಜಿ ಬ್ರೌನ್ ಜಾಕ್ಸನ್, ಕ್ಯಾಥಿ ಗಾರ್ವರ್ ಮತ್ತು ಫ್ಯಾಬ್ ಮೊರ್ವಾನ್ ಸೇರಿದಂತೆ ವಿವಿಧ ಕ್ಷೇತ್ರಗಳ ನಾಮನಿರ್ದೇಶಿತರನ್ನು ಹಿಂದಿಕ್ಕಿ ಸ್ಪೋಕನ್ ವರ್ಡ್ ವಿಭಾಗದಲ್ಲಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದೆ. ದಲಾಯಿ ಲಾಮಾ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಗಾಯಕ-ಗೀತ ರಚನೆಕಾರ ರಫಸ್ ವೇನ್‌ರೈಟ್ ಅವರು ದಲಾಯಿ ಲಾಮಾ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ದಲಾಯಿ ಲಾಮಾರ ಈ ಆಲ್ಬಂ ನಿರ್ಮಾಣದಲ್ಲಿ ಖ್ಯಾತ ಸರೋದ್ ವಾದಕ ಅಮ್ಜದ್ ಅಲಿ ಖಾನ್,ಅವರ ಪುತ್ರರಾದ ಅಮಾನ್ ಅಲಿ ಬಂಗಾಶ್ ಮತ್ತು ಅಯಾನ್ ಅಲಿ ಬಂಗಾಶ ಸಹಕರಿಸಿದ್ದು, ಶಾಂತಿ,ಅನುಕಂಪ,ದಯೆ ಮತ್ತು ಭರವಸೆಯ ಸಾರ್ವತ್ರಿಕ ಮೌಲ್ಯಗಳನ್ನು ಬಿಂಬಿಸುವ ಪದಗಳು ಮತ್ತು ಸಂಗೀತ ಆಲ್ಬಮ್‌ನಲ್ಲಿ ಹದವಾಗಿ ಬೆರೆತುಕೊಂಡಿವೆ. ಪ್ರಶಸ್ತಿಯನ್ನು ಗೆದ್ದ ಬಳಿಕ ನೀಡಿದ ಹೇಳಿಕೆಯಲ್ಲಿ ದಲಾಯಿ ಲಾಮಾ, ‘ಈ ಗೌರವವನ್ನು ನಾನು ಕೃತಜ್ಞತೆ ಮತ್ತು ನಮ್ರತೆಯೊಂದಿಗೆ ಸ್ವೀಕರಿಸುತ್ತೇನೆ. ನಾನು ಇದನ್ನು ವೈಯಕ್ತಿಕ ವಿಷಯವನ್ನಾಗಿ ನೋಡುವುದಿಲ್ಲ,ನಾವು ಹಂಚಿಕೊಂಡಿರುವ ಸಾರ್ವತ್ರಿಕ ಜವಾಬ್ದಾರಿಗೆ ಸಿಕ್ಕ ಮಾನ್ಯತೆಯಾಗಿ ಪರಿಗಣಿಸುತ್ತೇನೆ. ಎಂಟು ಶತಕೋಟಿ ಮಾನವರ ಸಾಮೂಹಿಕ ಯೋಗಕ್ಷೇಮಕ್ಕೆ ಶಾಂತಿ,ಅನುಕಂಪ,ನಮ್ಮ ಪರಿಸರದ ಬಗ್ಗೆ ಕಾಳಜಿ ಹಾಗೂ ಮಾನವೀಯ ಏಕತೆಯ ತಿಳುವಳಿಕೆ ಅತ್ಯಗತ್ಯ ಎನ್ನುವುದು ನನ್ನ ನಿಜವಾದ ನಂಬಿಕೆಯಾಗಿದೆ. ಈ ಗ್ರ್ಯಾಮಿ ಗೌರವವು ಈ ಸಂದೇಶಗಳನ್ನು ವ್ಯಾಪಕವಾಗಿ ಹರಡಲು ನೆರವಾಗಲಿದೆ,ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ’ ಎಂದು ತಿಳಿಸಿದ್ದಾರೆ. ದಲಾಯಿ ಲಾಮಾ ಈ ವರ್ಷ ಮೊದಲ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಪಡೆದವರ ಪಟ್ಟಿಗೆ ಸೇರಿಕೊಂಡಿದ್ದು, ಕೆ-ಪಾಪ್ ಕಲಾವಿದರು ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕ ಸ್ಟೀವನ್ ಸ್ಪಿಲ್‌ಬರ್ಗ್ ಕೂಡ ಈ ಪಟ್ಟಿಯಲ್ಲಿದ್ದಾರೆ.

ವಾರ್ತಾ ಭಾರತಿ 2 Feb 2026 11:21 pm

ಬಳ್ಳಾರಿ | ಪಂಪಾಪತಿ ಹಂಪಮ್ಮದೇವಿ ಮಹಾರಥೋತ್ಸವ

ಬಳ್ಳಾರಿ : ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ತೀರದಲ್ಲಿ ಪಂಪಾಪತಿ ಮತ್ತು ಹಂಪಮ್ಮದೇವಿ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಮಹಾರಥೋತ್ಸವದ ಅಂಗವಾಗಿ ಕಂಕಣಧಾರಣೆ, ರಥಕ್ಕೆ ಕಳಸಧಾರಣೆ ಹಾಗೂ ಶ್ರೀ ಪಂಪಾಪತಿ ಹಂಪಮ್ಮದೇವಿಯ ಕಲ್ಯಾಣ ಮಹೋತ್ಸವವು ವಿಜೃಂಭಣೆಯಿಂದ ಜರುಗಿದವು. ರಾತ್ರಿ ಆಕರ್ಷಕ ಹೂವಿನ ಪಲ್ಲಕ್ಕಿ ಉತ್ಸವ ನಡೆಯಿತು. ಸಂಜೆ ರಥಕ್ಕೆ ಹೂಗಳು, ತಳಿರು ತೋರಣಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಲಾಯಿತು. ನಂತರ ಜಯಘೋಷಗಳೊಂದಿಗೆ ದೇವಸ್ಥಾನದ ಪದಾಧಿಕಾರಿಗಳು ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾರಥೋತ್ಸವದಲ್ಲಿ ವಿವಿಧ ಜಾನಪದ ಕಲಾತಂಡಗಳು, ಮಂಗಳವಾದ್ಯಗಳು ಭಾಗವಹಿಸಿದ್ದವು. ರಥೋತ್ಸವದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಕೋಟೆ, ಕಂಪ್ಲಿ ಹಾಗೂ ಸುತ್ತ ಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.

ವಾರ್ತಾ ಭಾರತಿ 2 Feb 2026 11:20 pm

ಭಾರತವನ್ನು ಅವಹೇಳನ ಮಾಡಬೇಡಿ: ಜಾಗತಿಕ ಜಿಡಿಪಿ ಅಂದಾಜಿಗೆ ಮಸ್ಕ್ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ರಿಜಿಜು ದಾಳಿ

ಹೊಸದಿಲ್ಲಿ: 2026ರ ಜಾಗತಿಕ ಜಿಡಿಪಿಗೆ ಭಾರತವು ಎರಡನೇ ಅತಿದೊಡ್ಡ ಕೊಡುಗೆಯನ್ನು ನೀಡಲಿದೆ ಎಂದು ಅಂದಾಜಿಸಿರುವ ಜಾಗತಿಕ ಅಂಕಿಅಂಶಗಳ ವರದಿಗೆ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಅವರ ಪ್ರತಿಕ್ರಿಯೆಯನ್ನು ಉಲ್ಲೇಖಿಸಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಳಿ ನಡೆಸಿದ್ದಾರೆ. ಸರಕಾರವನ್ನು ಟೀಕಿಸುವ ಭರದಲ್ಲಿ ಭಾರತದ ಅವಹೇಳನ ಮಾಡಬೇಡಿ ಎಂದು ರಾಹುಲ್‌ರನ್ನು ಆಗ್ರಹಿಸಿದ್ದಾರೆ. ಮಸ್ಕ್ ತನ್ನ ರವಿವಾರದ ಪೋಸ್ಟ್‌ನಲ್ಲಿ ‘ಶಕ್ತಿಯ ಸಮತೋಲನ ಬದಲಾಗುತ್ತಿದೆ’ ಎಂದು ಬರೆದಿದ್ದರು. ‘ಜಾಗತಿಕ ಬೆಳವಣಿಗೆಯಲ್ಲಿ ಭಾರತ ಮತ್ತು ಚೀನಾ ಒಟ್ಟಾಗಿ ಶೇ.43.6ರಷ್ಟು ಕೊಡುಗೆ ನೀಡುತ್ತಿವೆ’ ಎಂಬ @stats_feed ನ ಪೋಸ್ಟ್‌ ಅನ್ನು ಅವರು ಹಂಚಿಕೊಂಡಿದ್ದರು. ಭಾರತದ ಆರ್ಥಿಕತೆ ಸತ್ತಿದೆ ಎಂದು ಪುನರುಚ್ಚರಿಸಿದ್ದು ಮತ್ತು 2026-27ರ ಕೇಂದ್ರ ಬಜೆಟ್‌ಗೆ ಆಕ್ಷೇಪಣೆಗಳು ಸೇರಿದಂತೆ ಬಿಜೆಪಿ ನೇತೃತ್ವದ ಸರಕಾರವು ಆರ್ಥಿಕತೆಯನ್ನು ನಿರ್ವಹಿಸುತ್ತಿರುವ ಕುರಿತು ರಾಹುಲ್‌ರ ನಿರಂತರ ಟೀಕೆಗಳ ನಡುವೆ ರಿಜಿಜು ಅವರ ಹೇಳಿಕೆಗಳು ಹೊರಬಿದ್ದಿವೆ. ರಾಷ್ಟ್ರದ ಸಾಧನೆಯನ್ನು ಎತ್ತಿ ತೋರಿಸಲು ಮಾತ್ರ ತಾನು ಮಸ್ಕ್ ಹೇಳಿಕೆಯನ್ನು ಉಲ್ಲೇಖಿಸುತ್ತಿದ್ದೇನೆ ಎಂದು ಎಕ್ಸ್‌ನಲ್ಲಿ ಬರೆದಿರುವ ರಿಜಿಜು,‘ನಾನು ಸಾಮಾನ್ಯವಾಗಿ ಭಾರತೀಯರಲ್ಲದವರು ನೀಡುವ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಸರಕಾರವನ್ನು ಟೀಕಿಸುವುದು ಪ್ರಜಾಸತ್ತಾತ್ಮಕ ಹಕ್ಕು,ಆದರೆ ಭಾರತವನ್ನು ಅವಮಾನಿಸಬೇಡಿ ಮತ್ತು ಭಾರತದ ಸಾಧನೆಯನ್ನು ಕೀಳಾಗಿ ನೋಡಬೇಡಿ. ಹೆಮ್ಮೆಯ ಭಾರತೀಯರಾಗಿ ಎಂದು ರಾಹುಲ್ ಗಾಂಧಿಯವರಿಗೆ ತಿಳಿಸಲು ಮಾತ್ರ ನಾನು ಮಸ್ಕ್ ಪೋಸ್ಟ್‌ನ್ನು ಉಲ್ಲೇಖಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ. ಮಸ್ಕ್ ಹಂಚಿಕೊಂಡಿರುವ ಪೋಸ್ಟ್ ಐಎಂಎಫ್ ದತ್ತಾಂಶಗಳನ್ನು ಉಲ್ಲೇಖಿಸಿ ಅಗ್ರ 10 ದೇಶಗಳನ್ನು ಮತ್ತು 2026ರಲ್ಲಿ ಜಾಗತಿಕ ಜಿಡಿಪಿ ಬೆಳವಣಿಗೆಯಲ್ಲಿ ಅವುಗಳ ನಿರೀಕ್ಷಿತ ಕೊಡುಗೆಗಳನ್ನು ಪಟ್ಟಿ ಮಾಡಿದೆ. ಜೊತೆಗೆ,ಏಷ್ಯಾ-ಪೆಸಿಫಿಕ್ ಪ್ರದೇಶವು ಒಟ್ಟು ಜಾಗತಿಕ ಬೆಳವಣಿಗೆಯಲ್ಲಿ ಸುಮಾರು ಶೇ.50ರಷ್ಟು ಪಾಲನ್ನು ಹೊಂದಿದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ. ಪಟ್ಟಿಯಲ್ಲಿ ಭಾರತವು ಶೇ.17ರಷ್ಟು ಜಿಡಿಪಿ ಕೊಡುಗೆ ಅಂದಾಜಿನೊಂದಿಗೆ ಅಮೆರಿಕಕ್ಕಿಂತ ಮೇಲಿನ ಸ್ಥಾನದಲ್ಲಿದೆ. ಇಂಡೋನೇಶ್ಯಾ,ಅಮೆರಿಕ,ಚೀನಾ ಮತ್ತು ಜರ್ಮನಿ ಅನುಕ್ರಮವಾಗಿ ಶೇ.3.8,ಶೇ.9.9,ಶೇ.26.6 ಮತ್ತು ಶೇ.0.9 ರಷ್ಟು ಕೊಡುಗೆಯನ್ನು ಸಲ್ಲಿಸುವ ನಿರೀಕ್ಷೆಯಿದೆ. ಈ ವರ್ಷದ ಜನವರಿಯಲ್ಲಿ ಐಎಂಎಫ್ 2025-26ರ ವಿತ್ತವರ್ಷಕ್ಕೆ ಭಾರತದ ಆರ್ಥಿಕ ಬೆಳವಣಿಗೆಯ ಅಂದಾಜನ್ನು ಶೇ.7.3ಕ್ಕೆ ಮತ್ತು 2026-27ಕ್ಕೆ ಶೇ.6.4ಕ್ಕೆ ಹೆಚ್ಚಿಸಿತ್ತು.

ವಾರ್ತಾ ಭಾರತಿ 2 Feb 2026 11:19 pm

ಬಳ್ಳಾರಿ | ಸ್ವ-ಉದ್ಯೋಗದಿಂದ ಸ್ವಾವಲಂಬಿ ಜೀವನ: ಶಿಲ್ಪರಾಣಿ

ಮಾದಕ ವಸ್ತು ಜಾಗೃತಿ ಅಭಿಯಾನ

ವಾರ್ತಾ ಭಾರತಿ 2 Feb 2026 11:16 pm

ಬಲೂಚಿಸ್ತಾನದ ಗ್ವಾದರ್ ನಲ್ಲಿ ನೆಲದ ಕಾರ್ಯಾಚರಣೆ ಸ್ಥಗಿತಗೊಳಿಸಿದ ಚೀನಾ

ಬೀಜಿಂಗ್: ಬಲೂಚಿಸ್ತಾನದ ಗ್ವಾದರ್ ಸೇರಿದಂತೆ ವಿವಿಧೆಡೆ ಬಲೂಚಿಸ್ತಾನ್ ಪ್ರತ್ಯೇಕತಾವಾದಿ ಗುಂಪು ಬಿಎಲ್‍ಎ ಇತ್ತೀಚೆಗೆ ನಡೆಸಿದ ಸಂಘಟಿತ ದಾಳಿಯ ಬಳಿಕ ಪಾಕಿಸ್ತಾನದ ಆಯಕಟ್ಟಿನ ಬಂದರು ನಗರ ಗ್ವಾದರ್‍ನಲ್ಲಿ ಚೀನಾ ತನ್ನ ನೆಲದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ಸಿಎನ್‍ಎನ್-ನ್ಯೂಸ್ 18 ವರದಿ ಮಾಡಿದೆ. ಗ್ವಾದರ್‍ನಲ್ಲಿ ನಿಯೋಜಿಸಲಾದ ಎಲ್ಲಾ `ಗ್ರೌಂಡ್ ಸ್ಟಾಫ್'ಗಳನ್ನು ವಿಶೇಷ ವಿಮಾನಗಳ ಮೂಲಕ ಸ್ಥಳಾಂತರಿಸಲಾಗಿದ್ದು ಈ ಪ್ರದೇಶದಲ್ಲಿ ಚೀನಾ ನೇತೃತ್ವದಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಚೀನಾಕ್ಕೆ ಸಂಬಂಧಿಸಿದ ಯೋಜನೆಗಳನ್ನು ಪಾಕಿಸ್ತಾನದ ಸಿಬ್ಬಂದಿಗಳು ನಿರ್ವಹಿಸಲಿದ್ದು ಚೀನಾದ ತಂಡವು ಬೆಳವಣಿಗೆಗಳನ್ನು ಮೇಲುಸ್ತುವಾರಿ ನಡೆಸುತ್ತವೆ ಮತ್ತು ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ದೂರದಿಂದಲೇ ಪರಿಹರಿಸುತ್ತವೆ ಎಂದು ಇಸ್ಲಮಾಬಾದ್‍ನಲ್ಲಿನ ಚೀನಾದ ರಾಯಭಾರಿ ಕಚೇರಿಯ ಮೂಲಗಳು ಹೇಳಿವೆ. ತಾನು ಸಿಪಿಇಸಿ(ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್) ಸಂಬಂಧಿಸಿದ ಯೋಜನೆಗಳಿಂದ ಹಿಂದೆ ಸರಿದಿಲ್ಲ. ಪ್ರಸ್ತುತ ಅಮಾನತು ತಾತ್ಕಾಲಿಕವಾಗಿದೆ, ಆದರೆ ಅದರ ಅವಧಿಯು ಹೊಸ ಭದ್ರತಾ ಕ್ರಮಗಳು ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಅವಲಂಬಿಸಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 2 Feb 2026 11:11 pm

ಪರಮಾಣು ಒಪ್ಪಂದದ ಬಗ್ಗೆ ಅಮೆರಿಕಾ ಜೊತೆ ಮಾತುಕತೆ ಆರಂಭಿಸಲು ಇರಾನ್ ಆದೇಶ: ವರದಿ

ಟೆಹ್ರಾನ್: ಅಮೆರಿಕಾದೊಂದಿಗೆ ಮಾತುಕತೆ ಆರಂಭಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯಾನ್ ಆದೇಶಿಸಿರುವುದಾಗಿ ಉನ್ನತ ಮೂಲಗಳನ್ನು ಉಲ್ಲೇಖಿಸಿ `ಫಾರ್ಸ್' ಸುದ್ದಿಸಂಸ್ಥೆ ಸೋಮವಾರ ವರದಿ ಮಾಡಿದೆ. `ಪರಮಾಣು ವಿಷಯದ ಬಗ್ಗೆ ಇರಾನ್ ಮತ್ತು ಅಮೆರಿಕಾ ಮಾತುಕತೆ ನಡೆಸಲಿವೆ' ಎಂದು ವರದಿ ಹೇಳಿದ್ದು ದಿನಾಂಕದ ಬಗ್ಗೆ ಮಾಹಿತಿ ನೀಡಿಲ್ಲ. ಇದಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಇರಾನ್‍ನ ವಿದೇಶಾಂಗ ಇಲಾಖೆಯ ವಕ್ತಾರ ಇಸ್ಮಾಯಿಲ್ ಬಘೈ `ಅಮೆರಿಕಾದೊಂದಿಗಿನ ಉದ್ವಿಗ್ನತೆಯನ್ನು ನಿರ್ವಹಿಸಲು ವಿವಿಧ ರಾಜತಾಂತ್ರಿಕ ಆಯ್ಕೆಗಳನ್ನು ಇರಾನ್ ಪರಿಶೀಲಿಸುತ್ತಿದೆ ಮತ್ತು ಮುಂದಿನ ದಿನಗಳಲ್ಲಿ ಫಲಿತಾಂಶಗಳನ್ನು ನಿರೀಕ್ಷಿಸುತ್ತದೆ. ಪ್ರಾದೇಶಿಕ ರಾಷ್ಟ್ರಗಳ ನಡುವೆ ವಿವಿಧ ಸಂದೇಶಗಳನ್ನು, ವಿವಿಧ ಅಂಶಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ. ನಾವು ಪ್ರಸ್ತುತ ಪ್ರತೀ ರಾಜತಾಂತ್ರಿಕ ಪ್ರಕ್ರಿಯೆಯ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ' ಎಂದು ಹೇಳಿದ್ದರು. ಈ ಮಧ್ಯೆ, ಅಮೆರಿಕಾದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ `ಅಮೆರಿಕಾದ ಒತ್ತಡವನ್ನು ಪ್ರತಿರೋಧಿಸುವುದನ್ನು ಇರಾನ್ ಮುಂದುವರಿಸುತ್ತದೆ. ಇರಾನ್ ದೃಢವಾಗಿ ನಿಲ್ಲುತ್ತದೆ ಮತ್ತು ದೈವೇಚ್ಛೆಯಿದ್ದರೆ ಅಮೆರಿಕಾದ ಕಿಡಿಗೇಡಿತನ ಮತ್ತು ಕಿರುಕುಳ ಕೊನೆಗೊಳ್ಳುತ್ತದೆ' ಎಂದು ಹೇಳಿದ್ದಾರೆ. ಅಮೆರಿಕಾ ಮತ್ತು ಇರಾನ್‍ನ ನಡುವಿನ ಬಿಕ್ಕಟ್ಟಿಗೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಸರಳವಿದೆ `ಅಮೆರಿಕಾವು ಇರಾನ್ ಅನ್ನು ಕಬಳಿಸಲು ಬಯಸುತ್ತಿದೆ ಮತ್ತು ಇರಾನ್ ರಾಷ್ಟ್ರ ಇದನ್ನು ತಡೆಯುತ್ತಿದೆ. ಅವರು ನಮ್ಮ ನೈಸರ್ಗಿಕ ಸಂಪನ್ಮೂಲಗಳು, ಕಾರ್ಯತಂತ್ರದ ಸ್ಥಾನವನ್ನು ಅಪೇಕ್ಷಿಸುತ್ತಿದ್ದಾರೆ'' ಎಂದು ಖಾಮಿನೈ ಪ್ರತಿಪಾದಿಸಿದ್ದಾರೆ. ಇರಾನ್ ಜೊತೆ ಒಪ್ಪಂದದ ಭರವಸೆಯಿದೆ ಎಂದ ಟ್ರಂಪ್: ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳುವ ಭರವಸೆಯಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು ರಾಜತಾಂತ್ರಿಕತೆ ವಿಫಲವಾದರೆ ಫಲಿತಾಂಶ ಸ್ಪಷ್ಟವಾಗಿದೆ ಎಂದು ಎಚ್ಚರಿಸಿದ್ದಾರೆ. ಫ್ಲೋರಿಡಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಟ್ರಂಪ್ ` ಆ ಪ್ರದೇಶದಲ್ಲಿ ನಾವು ಅತೀ ದೊಡ್ಡ, ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿ ಸಮರ ನೌಕೆಗಳನ್ನು ಹೊಂದಿದ್ದೇವೆ. ಮುಂದಿನ ಒಂದೆರಡು ದಿನಗಳಲ್ಲಿ ನಾವು ಒಪ್ಪಂದ ಮಾಡಿಕೊಳ್ಳುವ ಭರವಸೆಯಿದೆ. ಒಪ್ಪಂದ ಸಾಧ್ಯವಾಗದಿದ್ದರೆ, ಇರಾನ್‍ನ ನಾಯಕರು ಹೇಳಿದ ಮಾತು ಸರಿಯಾಗುತ್ತದಯೇ ಎಂಬುದನ್ನು ನೋಡಬೇಕಿದೆ' ಎಂದು ಹೇಳಿದರು. ಒಂದು ವೇಳೆ ಅಮೆರಿಕಾವು ಇರಾನ್‍ನ ಮೇಲೆ ದಾಳಿ ಮಾಡಿದರೆ ಅದು ಪ್ರಾದೇಶಿಕ ಸಂಘರ್ಷವಾಗುತ್ತದೆ ಎಂದು ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ರವಿವಾರ ಎಚ್ಚರಿಸಿದ್ದರು.

ವಾರ್ತಾ ಭಾರತಿ 2 Feb 2026 11:08 pm

ವಿಜಯನಗರ | ‘ವಾತ್ಸಲ್ಯ ಮನೆ’ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ವಿಜಯನಗರ, ಫೆ. 2: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕರಿಗೆ ಮತ್ತು ಬಡತನದಲ್ಲಿರುವವರಿಗೆ ಮಾಸಾಶನ ನೀಡುವುದು ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುತ್ತಿದೆ ಎಂದು ಹರಿಪುರ ಕ್ಷೇತ್ರ ಯೋಜನಾಧಿಕಾರಿ ಬಾಬು ಹೇಳಿದರು. ತಾಲೂಕಿನ ಉಚ್ಚಂಗಿದುರ್ಗ ಸಮೀಪದ ಯು.ಬೇವಿನಹಳ್ಳಿ ಗ್ರಾಮದಲ್ಲಿ ಭೋವಿ ತಿಮ್ಮಕ್ಕನಿಗೆ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಜೂರಾಗಿದ್ದ ವಾತ್ಸಲ್ಯ ಮನೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಭೋವಿ ತಿಮ್ಮಕ್ಕ ಎಂಬವರಿಗೆ ವಾಸಿಸಲು ಯೋಗ್ಯವಾದ ಮನೆ ಇಲ್ಲದ ಕಾರಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ಮಂಜೂರಾಗಿದೆ. ವಾತ್ಸಲ್ಯ ಮನೆ 1 ಲಕ್ಷ 35 ಸಾವಿರ ರೂ.ನಲ್ಲಿ ನಿರ್ಮಾಣವಾಗುತ್ತಿದೆ. ಶೌಚಾಲಯ, ಅಡುಗೆಕೋಣೆ, ಸೇರಿ ಸುಸಜ್ಜಿತ ಮನೆ ನಿರ್ಮಾಣ ಮಾಡಿಕೊಡುತ್ತೇವೆ ಎಂದರು. ತಾಲೂಕು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಅನಿತಾ, ಮೇಸ್ತ್ರಿ ಆಲೂರು ಜಿಡಿ ಮಂಜುನಾಥ್, ಮಂಜುಳಾ, ಆರ್ಚಕರು ಪೂಜಾರ್ ಪ್ರೇಮ್ ಕುಮಾರ್, ಮಮತಾ,ಅನಿತಾ,ರೇಣುಕಾ, ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 11:06 pm

ಬಾಂಗ್ಲಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲುಶಿಕ್ಷೆ

ಢಾಕ: ಸರ್ಕಾರಿ ವಸತಿ ಯೋಜನೆಯಲ್ಲಿ ಭೂಮಿ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾದೇಶದ ನ್ಯಾಯಾಲಯ ಸೋಮವಾರ 10 ವರ್ಷ ಜೈಲುಶಿಕ್ಷೆ ವಿಧಿಸಿದೆ. ಶೇಖ್ ಹಸೀನಾಗೆ ಪ್ರತೀ ಪ್ರಕರಣಗಳಲ್ಲಿ ಐದು ವರ್ಷದಂತೆ ಒಟ್ಟು 10 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಎಸ್‍ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಇದೇ ಪ್ರಕರಣಗಳಲ್ಲಿ ಹಸೀನಾ ಅವರ ಸೋದರಳಿಯ ರದ್ವಾನ್ ಮುಜಿಬ್ ಸಿದ್ದಿಕ್, ಸೋದರ ಸೊಸೆ ಅಜ್ಮಿನಾ ಸಿದ್ದಿಕ್‍ಗೆ ಒಟ್ಟು 7 ವರ್ಷ ಜೈಲುಶಿಕ್ಷೆ, ಸೋದರ ಸೊಸೆ, ಬ್ರಿಟನ್ ಸಂಸದೆ ಟುಲಿಪ್ ಸಿದ್ದಿಕ್‍ಗೆ ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಿ ಢಾಕಾದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಬಾಂಗ್ಲಾದೇಶದಲ್ಲಿ ಪ್ರತಿಭಟನೆ ವ್ಯಾಪಕಗೊಳ್ಳುತ್ತಿದ್ದಂತೆಯೇ ಕಳೆದ ವರ್ಷದ ಆಗಸ್ಟ್ 5ರಂದು ಭಾರತಕ್ಕೆ ಪಲಾಯನ ಮಾಡಿದ್ದ ಹಸೀನಾರನ್ನು ʼದೇಶಭ್ರಷ್ಟೆ' ಎಂದು ಈ ಹಿಂದೆ ನ್ಯಾಯಾಲಯ ಘೋಷಿಸಿತ್ತು.

ವಾರ್ತಾ ಭಾರತಿ 2 Feb 2026 11:03 pm

ಕೊಪ್ಪಳ | ‘ಪೊಲೀಸ್ ಕೆಲಸಕ್ಕಿಂತ ಎಗ್ ರೈಸ್ ಮಾರೋದೇ ಮೇಲು’

ವಾಟ್ಸ್‌ ಆ್ಯಪ್ ಸ್ಟೇಟಸ್ ಮೂಲಕ ಅಸಮಾಧಾನ ಹೊರಹಾಕಿದ ಕೊಪ್ಪಳದ ಕಾನ್‌ಸ್ಟೇಬಲ್

ವಾರ್ತಾ ಭಾರತಿ 2 Feb 2026 11:02 pm

ದುಬೈಯಲ್ಲಿ ಸಿಲುಕಿದ ಜಾರ್ಖಂಡ್‌ನ ಕಾರ್ಮಿಕರು; ನೆರವು ನೀಡುವಂತೆ ವೀಡಿಯೊದಲ್ಲಿ ಕೋರಿಕೆ

ರಾಂಚಿ: ಜಾರ್ಖಂಡ್‌ನ ಗಿರಿಡಿಹ, ಹಝಾರಿಬಾಗ್ ಹಾಗೂ ಬೊಕಾರೊ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ತೆರಳಿದ್ದ 14 ವಲಸೆ ಕಾರ್ಮಿಕರು ಕಳೆದ ಕೆಲವು ತಿಂಗಳುಗಳಿಂದ ದುಬೈಯಲ್ಲಿ ಸಿಲುಕಿಕೊಂಡಿದ್ದಾರೆ. ತಮ್ಮ ಕುಟುಂಬದ ಸದಸ್ಯರಿಗೆ ವೀಡಿಯೊ ಸಂದೇಶ ಕಳುಹಿಸಿರುವ ಅವರು, ಕೂಡಲೇ ನೆರವು ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಕೋರಿದ್ದಾರೆ. ದುಬೈಯಲ್ಲಿ ಸಿಲುಕಿಕೊಂಡ ಕಾರ್ಮಿಕರು ವೀಡಿಯೊ ಸಂದೇಶದ ಮೂಲಕ ತಮ್ಮ ಸಂಕಷ್ಟಗಳನ್ನು ಹಂಚಿಕೊಡಿದ್ದಾರೆ ಹಾಗೂ ನೆರವು ನೀಡುವಂತೆ ಕೋರಿದ್ದಾರೆ. ವಲಸೆ ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಕಾರ್ಯ ನಿರ್ವಹಿಸುತ್ತಿರುವ ಸಾಮಾಜಿಕ ಹೋರಾಟಗಾರ ಸಿಕಂದರ್ ಅಲಿ ಅವರಿಗೆ ಕೂಡ ಅವರು ವೀಡಿಯೊ ಕಳುಹಿಸಿದ್ದಾರೆ. ಅಲಿ ಅನಂತರ ಈ ವೀಡಿಯೊವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ವೀಡಿಯೊ ಸಂದೇಶದಲ್ಲಿ ಕಾರ್ಮಿಕರು ತಮ್ಮನ್ನು ನೇಮಿಸಿಕೊಂಡ ಕಂಪೆನಿ ನಿಗದಿತ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಲು ಒತ್ತಾಯಿಸುತ್ತಿದೆ. ತಮಗೆ ವೇತನ ಪಾವತಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಕಳೆದ ಮೂರು ತಿಂಗಳಿಂದ ವೇತನ ಪಾವತಿಸದೇ ಇರುವುದರಿಂದ, ಆಹಾರ, ವಸತಿ ಹಾಗೂ ಇತರ ಮೂಲಭೂತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಮಿಕರು ವೀಡಿಯೊದಲ್ಲಿ ಹೇಳಿದ್ದಾರೆ.

ವಾರ್ತಾ ಭಾರತಿ 2 Feb 2026 10:55 pm

ಭಾರತೀಯ ಮೂಲದ ಪರಿಸರ ವಿಜ್ಞಾನಿ ರಾಮನಾಥನ್‍ಗೆ ಕ್ರಾಫರ್ಡ್ ಪ್ರಶಸ್ತಿ

ವಾಷಿಂಗ್ಟನ್: ಭಾರತೀಯ ಮೂಲದ ಹವಾಮಾನ ವಿಜ್ಞಾನಿ ವೀರಭದ್ರನ್ ರಾಮನಾಥನ್ ಅವರಿಗೆ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್‍ನಿಂದ ಭೂವಿಜ್ಞಾನದಲ್ಲಿ 2026ರ ಕ್ರಾಫರ್ಡ್ ಪ್ರಶಸ್ತಿಯನ್ನು ನೀಡಲಾಗಿದೆ. ಭೂವಿಜ್ಞಾನದ ನೊಬೆಲ್ ಎಂದು ಗುರುತಿಸಲಾಗುವ ಕ್ರಾಫರ್ಡ್ ಪ್ರಶಸ್ತಿಯು ರಾಮನಾಥನ್ ಅವರು ಎರಡು ದಶಕಗಳಿಂದ ಜಾಗತಿಕ ತಾಪಮಾನ ಏರಿಕೆ, ಕಂದು ಮೋಡಗಳ ಬಗ್ಗೆ ನಡೆಸಿದ ಸಂಶೋಧನೆಯನ್ನು ಗುರುತಿಸಿದೆ. 82 ವರ್ಷದ ರಾಮನಾಥನ್ ಮದುರೈಯಲ್ಲಿ ಜನಿಸಿದ್ದು ಅಣ್ಣಾಮಲೈ ವಿವಿ ಮತ್ತು ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್‍ನಲ್ಲಿ ಪದವಿ ಪಡೆದಿದ್ದಾರೆ. ಪ್ರಸ್ತುತ ಕ್ಯಾಲಿಫೋರ್ನಿಯಾ ವಿವಿಯಲ್ಲಿ ಗೌರವ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ವಾರ್ತಾ ಭಾರತಿ 2 Feb 2026 10:53 pm

ಕಲಬುರಗಿ | ಅಂತರರಾಜ್ಯ ಇರಾನಿ ಗ್ಯಾಂಗ್ ಬಂಧನ : 27.30 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಕಲಬುರಗಿ : ದೇಶದ ವಿವಿಧೆಡೆ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ 7 ಮಂದಿಯನ್ನೊಳಗೊಂಡ ಅಂತರರಾಜ್ಯ ಕುಖ್ಯಾತ ಇರಾನಿ ಗ್ಯಾಂಗ್‌ ಅನ್ನು ನಗರ ಪೊಲೀಸರು ಬಂಧಿಸಿದ್ದು, ಅವರಿಂದ 27.30 ಲಕ್ಷ ರೂ. ಮೌಲ್ಯದ ವಾಹನಗಳು, ಬಂಗಾರದ ಆಭರಣಗಳು ಹಾಗೂ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಶಿವಾಜಿನಗರದ ನಿವಾಸಿಗಳಾದ ಜಹೀರ ಅಬ್ಬಾಸ್‌ ಅಲಿ, ಅಲಿ ರಝಾಕ್ ಬೇಗ್, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬೆವಿಲಿ, ಇಂದಿರಾನಗರದ ಲಾಲ ಸಮೀರ್‌ ಶೇಖ್‌, ಮಧ್ಯಪ್ರದೇಶದ ಭೂಪಾಲ ನಗರದ ಖಾಸಿಂ ಜೋಜೋ ಜಾಫ್ರಿ, ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಶಿವಾಜಿನಗರ ಪರ್ಲಿ ನಿವಾಸಿ ಅಲಿಮಿರ್ಜಾ ದರಬೇಶ, ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬೆವಿಲಿಯ ಪಟೇಲ್ ಕಾಲೋನಿ ನಿವಾಸಿ ಜಾಫರ ಅಲಿ ಸೈಯದ್‌ ಹಾಗೂ ಮಹಾರಾಷ್ಟ್ರದ ಬೆವೆಲಿಯ ನಿವಾಸಿ ಜಾಫರ ಆಝಾಮ್ ಸೈಯದ್‌ ಎಂದು ಗುರುತಿಸಲಾಗಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಜ.23ರಂದು ಬೆಳಗಿನ ಜಾವ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ತಾವರಗೇರಾ ಕ್ರಾಸ್ ಸಮೀಪ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮಾರಕಾಸ್ತ್ರಗಳೊಂದಿಗೆ ವಾಹನ ಸವಾರರನ್ನು ತಡೆದು ದರೋಡೆ ನಡೆಸಲು ಯತ್ನಿಸುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ ಪರಿಣಾಮ ಗ್ಯಾಂಗ್ ಬಂಧನಕ್ಕೆ ಒಳಪಟ್ಟಿದೆ ಎಂದು ತಿಳಿಸಿದರು. ಪೊಲೀಸ್ ಕಸ್ಟಡಿಯಲ್ಲಿ ನಡೆದ ವಿಚಾರಣೆಯಲ್ಲಿ, ಆರೋಪಿತರು ತೆಲಂಗಾಣದ ಮಹಬೂಬ್‌ನಗರ ಹಾಗೂ ಏವಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಂತೆ ನಟಿಸಿ ಬಂಗಾರದ ಆಭರಣಗಳನ್ನು ದೋಚಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಆರೋಪಿಗಳಿಂದ 90 ಗ್ರಾಂ ಬಂಗಾರದ ಆಭರಣಗಳು (ಅಂದಾಜು ಮೌಲ್ಯ 15.30 ಲಕ್ಷ ರೂ.), ಟಾಟಾ ಹೆಕ್ಸಾ ಕಾರು, ಟಿವಿಎಸ್ ಅಪಾಚಿ 160, ಹೋಂಡಾ ಹಾರ್ನೆಟ್ ಬೈಕ್, ರಾಡು, ತಲವಾರು, ಖಾರದ ಪುಡಿ, ಕಪ್ಪು ಬಟ್ಟೆಗಳು ಸೇರಿದಂತೆ ಒಟ್ಟು 27.30 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು. ಪ್ರಮುಖ ಆರೋಪಿ ಜಹೀರ ಅಬ್ಬಾಸ್‌ ಅಲಿ ವಿರುದ್ಧ ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಮಾಹಿತಿ ನೀಡಿದವರಿಗೆ 15 ಸಾವಿರ ರೂ. ಬಹುಮಾನ ಘೋಷಿಸಲಾಗಿತ್ತು. ಅಲ್ಲದೆ, ನಾಸಿಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಳುವಾದ ಮೋಟಾರ್‌ಸೈಕಲ್ ಕೂಡ ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಕರ್ನಾಟಕದ ವಿವಿಧ ಠಾಣೆಗಳಲ್ಲಿ ನಕಲಿ ಪೊಲೀಸ್ ವೇಷಧಾರಣೆ, ವಂಚನೆ, ಸುಲಿಗೆ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ ನಾಯಕ್ (ಅಪರಾಧ & ಸಂಚಾರ), ಸಬ್ ಅರ್ಬನ್ ಉಪವಿಭಾಗದ ಎಸಿಪಿ ಬಸವೇಶ್ವರ, ಪಿಐ ನಟರಾಜ ಲಾಡೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 10:45 pm

Gruhalakshmi Scheme Update: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಜಮಾ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಬಿಗ್ ಅಪ್ಡೇಟ್‌

Gruhalakshmi Scheme: ಗೃಹಲಕ್ಷ್ಮಿ ಯೋಜನೆಯು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ 2,000 ರೂಪಾಯಿ ಹಣ ಹಾಕಲಾಗುತ್ತದೆ. ಇದೀಗ ಬಾಕಿ ಉಳಿದಿದ್ದ ಕಂತುಗಳ ಬಿಡುಗಡೆ ಆಗಿದ್ದು, ಇದನ್ನು ಯಾವಾಗ ಖಾತೆಗೆ ಹಾಕಲಾಗುತ್ತದೆ ಎನ್ನುವ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಗ್ ಅಪ್ಡೇಟ್‌

ಒನ್ ಇ೦ಡಿಯ 2 Feb 2026 10:38 pm

ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯದಿದ್ದರೆ ನಷ್ಟ ಎಷ್ಟು?

ಹೊಸದಿಲ್ಲಿ: ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ-ಪಾಕಿಸ್ತಾನ ಪಂದ್ಯವೊಂದು 2,200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆದಾಯವನ್ನು ಗಳಿಸುತ್ತದೆ. ಆದರೆ, ಮುಂಬರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಈ ಪಂದ್ಯಗಳ ಅನುಪಸ್ಥಿತಿಯು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು ಎಂಬ ಭೀತಿಯು ಸಂಘಟಕರನ್ನು ಕಾಡುತ್ತಿದೆ ಎಂದು ವರದಿಯಾಗಿದೆ. ನೆರೆಹೊರೆಯ ದೇಶಗಳ ನಡುವಿನ ರಾಜಕೀಯ ಸಂಬಂಧ ಹದಗೆಟ್ಟಿರುವುದರಿಂದ, ಉಭಯ ದೇಶಗಳ ಕ್ರಿಕೆಟ್ ತಂಡಗಳು ಬಹುದೇಶಗಳು ಭಾಗವಹಿಸುವ ಪಂದ್ಯಾವಳಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ. ಭಾರತ-ಪಾಕ್ ಪಂದ್ಯಗಳು ವಾಣಿಜ್ಯಾತ್ಮಕವಾಗಿ ಎಷ್ಟು ಪ್ರಭಾವಶಾಲಿಯೆಂದರೆ, ಜಾಗತಿಕ ಪಂದ್ಯಾವಳಿಗಳಲ್ಲಿ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು ಈ ತಂಡಗಳನ್ನು ಒಂದೇ ಗುಂಪಿನಲ್ಲಿ ಆಡಿಸುತ್ತದೆ. ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತದ ವಿರುದ್ಧ ನಡೆಯಲು ನಿಗದಿಯಾಗಿರುವ ಪಾಕಿಸ್ತಾನದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಸರಕಾರ ರವಿವಾರ ಘೋಷಿಸಿದೆ. ತನ್ನ ಈ ನಿರ್ಧಾರಕ್ಕೆ ಪಾಕಿಸ್ತಾನ ಅಂಟಿಕೊಂಡರೆ, ಅದು ಕೋಟ್ಯಂತರ ರೂಪಾಯಿ ಹಣವನ್ನು ಕಳೆದುಕೊಳ್ಳುತ್ತದೆ. ಅದೇ ವೇಳೆ, ಈ ಪಂದ್ಯ ನಡೆಯದಿದ್ದರೆ ಐಸಿಸಿ ಮತ್ತು ಭಾರತದ ಮಾಧ್ಯಮ ಹಕ್ಕುಗಳನ್ನು ಹೊಂದಿರುವ ಜಿಯೋಸ್ಟಾರ್ ಮೇಲೂ ಗಣನೀಯ ಪ್ರಮಾಣದ ಆರ್ಥಿಕ ಹೊಡೆತ ಬೀಳುತ್ತದೆ. ಜಿಯೋಸ್ಟಾರ್ 200ರಿಂದ 250 ಕೋಟಿ ರೂ. ಜಾಹೀರಾತು ನಷ್ಟವನ್ನು ಅನುಭವಿಸಬಹುದಾಗಿದೆ. ಭಾರತ-ಪಾಕ್ ಐಸಿಸಿ ಪಂದ್ಯಗಳ ವೇಳೆ 10 ಸೆಕೆಂಡ್‌ಗಳ ಒಂದು ಜಾಹೀರಾತಿನ ಬೆಲೆ ಸುಮಾರು 40 ಲಕ್ಷ ರೂ.ಯಷ್ಟು ಆಗುತ್ತದೆ. ಈ ವಾಕೋವರ್‌ನಿಂದ ಭಾರತಕ್ಕೆ ಪೂರ್ಣ ಅಂಕಗಳು ಸಿಗುತ್ತದೆಯಾದರೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮೇಲೆ ಆರ್ಥಿಕ ದಂಡವನ್ನು ವಿಧಿಸುವ ಅಧಿಕಾರ ಐಸಿಸಿಗೆ ಈಗಲೂ ಇದೆ. ಭಾರತ-ಪಾಕ್ ಪಂದ್ಯ ರದ್ದತಿಯ ಪರಿಣಾಮಗಳು ಭಾರತ-ಪಾಕಿಸ್ತಾನ ಐಸಿಸಿ ಪಂದ್ಯವೊಂದು ತರುವ ಆದಾಯ : 2,200 ಕೋಟಿ ರೂ.ಗೂ ಅಧಿಕ ನೇರಪ್ರಸಾರಕರ ಜಾಹೀರಾತು ನಷ್ಟ : ಸುಮಾರು 200- 250 ಕೋಟಿ ರೂ. ಪಂದ್ಯದ ವೇಳೆ 10 ಸೆಕೆಂಡ್ ಜಾಹೀರಾತೊಂದರ ದರ : ಸುಮಾರು 40 ಲಕ್ಷ ರೂ. ಜಾಗತಿಕ ವೀಕ್ಷಕರ ಸಂಖ್ಯೆ : 100 ಕೋಟಿಗೂ ಅಧಿಕ ಪಾಕ್ ನಿರ್ಧಾರವು ಕ್ರೀಡೆಯ ಆಶಯವನ್ನು ಕಡೆಗಣಿಸುತ್ತದೆ: ಐಸಿಸಿ ಐಸಿಸಿ ಪಂದ್ಯಾವಳಿಗಳಲ್ಲಿ ಆಯ್ದ ಪಾಲ್ಗೊಳ್ಳುವಿಕೆಯು ಕ್ರೀಡೆಯ ಆಶಯಗಳನ್ನು ಕಡೆಗಣಿಸುತ್ತದೆ ಎಂದು ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸೋಮವಾರ ಹೇಳಿದೆ. ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಪಾಕಿಸ್ತಾನ ಕ್ರಿಕೆಟ್ ತಂಡದ ನಿರ್ಧಾರಕ್ಕೆ ಐಸಿಸಿ ಈ ಪ್ರತಿಕ್ರಿಯೆ ನೀಡಿದೆ. ‘‘ಈ ಆಯ್ದ ಪಾಲ್ಗೊಳ್ಳುವಿಕೆಯು ಜಾಗತಿಕ ಕ್ರೀಡಾ ಕೂಟವೊಂದರ ಪ್ರಾಥಮಿಕ ಆಶಯಕ್ಕೆ ಹೊಂದಿಕೊಳ್ಳುವುದಿಲ್ಲ. ಇಂಥ ಕ್ರೀಡಾಕೂಟಗಳಲ್ಲಿ ಎಲ್ಲಾ ಅರ್ಹ ತಂಡಗಳು ವೇಳಾಪಟ್ಟಿಯಂತೆ ಸಮಾನ ನೆಲೆಯಲ್ಲಿ ಸ್ಪರ್ಧಿಸಬೇಕೆಂದು ನಿರೀಕ್ಷಿಸಲಾಗುತ್ತದೆ’’ ಎಂದು ಅದು ಹೇಳಿದೆ. ‘‘ಕ್ರೀಡಾ ನೈತಿಕತೆ, ಸ್ಪರ್ಧಾತ್ಮಕತೆ, ಸ್ಥಿರತೆ ಮತ್ತು ನ್ಯಾಯಪರತೆಯ ಆಧಾರದಲ್ಲಿ ಐಸಿಸಿ ಪಂದ್ಯಾವಳಿಗಳನ್ನು ರೂಪಿಸಲಾಗಿದೆ. ಆಯ್ದ ಪಾಲ್ಗೊಳ್ಳುವಿಕೆಯು ಸ್ಪರ್ಧೆಗಳ ಆಶಯ ಮತ್ತು ಪಾವಿತ್ರ್ಯತೆಯನ್ನು ಕಡೆಗಣಿಸುತ್ತದೆ’’ ಎಂದು ಅದು ಅಭಿಪ್ರಾಯಪಟ್ಟಿದೆ.

ವಾರ್ತಾ ಭಾರತಿ 2 Feb 2026 10:32 pm

ಗ್ರಾಮ ಪಂಚಾಯತಿ ಅಧಿಕಾರ ಮುಕ್ತಾಯ: ಸದಸ್ಯರ ಮುಂದುವರಿಕೆ? ಅಥವಾ ಚುನಾವಣೆ? ರಾಜ್ಯ ಸರ್ಕಾರದ ಸ್ಪಷ್ಟನೆ ಇಲ್ಲಿದೆ

ರಾಜ್ಯದ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಗಿಯುತ್ತಿದೆ. ಹೊಸ ಚುನಾವಣೆ ನಡೆಸುವವರೆಗೆ ಹಾಲಿ ಸದಸ್ಯರನ್ನೇ ಮುಂದುವರಿಸಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಚುನಾವಣೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದ್ದರಿಂದ ಹಾಲಿ ಸದಸ್ಯರನ್ನು ಮುಂದುವರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕ 2 Feb 2026 10:24 pm

ಕೌಶಲ ಅಭಿವೃದ್ಧಿ ಪ್ರಕರಣ: ಚಂದ್ರಬಾಬು ನಾಯ್ಡುಗೆ ಈಡಿ ಕ್ಲೀನ್ ಚಿಟ್

ಅಮರಾವತಿ: ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ಜಾರಿ ನಿರ್ದೇಶನಾಲಯ (ಈಡಿ) ಕ್ಲೀನ್ ಚಿಟ್ ನೀಡಿದೆ. ಅಪರಾಧದಲ್ಲಿ ಚಂದ್ರಬಾಬು ನಾಯ್ಡು ಅವರ ಪ್ರತ್ಯಕ್ಷ ಅಥವಾ ಪರೋಕ್ಷ ಪಾತ್ರವಿಲ್ಲ ಎಂದು ಅದು ಹೇಳಿದೆ. ವಿಶಾಖಪಟ್ಟಣಂನ ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಜನವರಿ 31ರಂದು ಸಲ್ಲಿಸಲಾದ ಪೂರಕ ಆರೋಪ ಪಟ್ಟಿಯಲ್ಲಿ ಜಾರಿ ನಿರ್ದೇಶನಾಲಯ, ಹಣ ಅಕ್ರಮ ವರ್ಗಾವಣೆಯೊಂದಿಗೆ ನಾಯ್ಡು ಅವರು ನಂಟು ಹೊಂದಿರುವ ಬಗ್ಗೆ ಯಾವುದೇ ಪುರಾವೆ ಇಲ್ಲ. ಈ ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಹೆಸರಿಸಿಲ್ಲ ಎಂದು ಹೇಳಿದೆ. ಕೌಶಲ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ನಾಯ್ಡು ಅವರು ಭಾಗಿಯಾಗಿಲ್ಲ ಎಂದು ಈ ಹಿಂದೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಎಪಿ ಸಿಐಡಿ) ಕೂಡ ದೃಢಪಡಿಸಿತ್ತು. ವಿಜಯವಾಡ ಎಸಿಬಿ ನ್ಯಾಯಾಲಯ ಆರೋಪಗಳನ್ನು ಉಳಿಸಿಕೊಳ್ಳಲು ಯಾವುದೇ ಆಧಾರಗಳಿಲ್ಲ ಎಂದು ಪ್ರಕರಣವನ್ನು ಹಿಂಪಡೆಯುಲು ಅನುಮತಿ ನೀಡುವಾಗ ಸ್ಪಷ್ಟಪಡಿಸಿತ್ತು. ಕೌಶಲ್ಯ ಅಭಿವೃದ್ಧಿ ನಿಗಮ ಪ್ರಕರಣ 2023 ಸೆಪ್ಟಂಬರ್‌ನಲ್ಲಿ ನಾಯ್ಡು ಅವರ ಬಂಧನಕ್ಕೆ ಕಾರಣವಾಗಿತ್ತು. 2023 ಅಕ್ಟೋಬರ್‌ನಲ್ಲಿ ಜಾಮೀನು ಸಿಗುವ ವರೆಗೆ ಅವರು 53 ದಿನಗಳ ಕಾಲ ರಾಜಮುಂಡ್ರಿ ಕೇಂದ್ರ ಕಾರಾಗೃಹದಲ್ಲಿ ಕಳೆದಿದ್ದರು. ಈ ಪ್ರಕರಣ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ (ಎಪಿಎಸ್‌ಎಸ್‌ಡಿಸಿ)ದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದೆ. ಇದರಿಂದ ರಾಜ್ಯ ಸರಕಾರಕ್ಕೆ 300 ಕೋಟಿ ರೂ. ಅಧಿಕ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ವಾರ್ತಾ ಭಾರತಿ 2 Feb 2026 10:20 pm

ಮತಾಂತರ ವಿರೋಧಿ ಕಾಯ್ದೆ ಪ್ರಶ್ನಿಸಿ ಪಿಐಎಲ್: ಕೇಂದ್ರ, ರಾಜ್ಯ ಸರಕಾರಗಳ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮತಾಂತರ ವಿರೋಧಿ ಕಾನೂನುಗಳನ್ನು ಪ್ರಶ್ನಿಸಿ ನ್ಯಾಷನಲ್ ಕೌನ್ಸಿಲ್ ಆಫ್ ಚರ್ಚಸ್ ಇನ್ ಇಂಡಿಯಾ (ಎನ್‌ಸಿಸಿಐ) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರಕಾರ ಹಾಗೂ ರಾಜಸ್ಥಾನ, ಅರುಣಾಚಲ ಪ್ರದೇಶ ಸೇರಿದಂತೆ 12 ರಾಜ್ಯಗಳ ಪ್ರತಿಕ್ರಿಯೆ ಕೇಳಿದೆ. ಈ ರಾಜ್ಯಗಳಲ್ಲಿ ಈ ಕಾನೂನುಗಳಿಗೆ ತಡೆ ನೀಡುವಂತೆ ಕೂಡ ನ್ಯಾಷನಲ್ ಕೌನ್ಸಿಲ್ ಆಫ್ ಚರ್ಚಸ್ ಇನ್ ಇಂಡಿಯಾ (ಎನ್‌ಸಿಸಿಐ)ವನ್ನು ಪ್ರತಿನಿಧಿಸಿದ ಹಿರಿಯ ನ್ಯಾಯವಾದಿ ಮೀನಾಕ್ಷಿ ಅರೋರಾ ಕೋರಿದ್ದಾರೆ. ಎನ್‌ಸಿಸಿಐಯ ಪ್ರತಿಪಾದನೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಅವರನ್ನು ಒಳಗೊಂಡ ಪೀಠ ಗಮನಕ್ಕೆ ತೆಗೆದುಕೊಂಡಿತು ಹಾಗೂ ಕೇಂದ್ರ ಸರಕಾರ, 12 ರಾಜ್ಯ ಸರಕಾರಗಳಿಂದ ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು. ಹೊಸ ಅರ್ಜಿಯನ್ನು ಬಾಕಿ ಉಳಿದಿರುವ ಅರ್ಜಿಯೊಂದಿಗೆ ಸೇರಿಸುವಂತೆ ಆದೇಶಿಸಿದ ಮುಖ್ಯ ನ್ಯಾಯಮೂರ್ತಿ, ಮೂವರು ಸದಸ್ಯರ ಪೀಠ ಈ ಅರ್ಜಿಗಳನ್ನು ಒಟ್ಟಾಗಿ ಆಲಿಸಲಿದೆ ಎಂದರು. ಕೇಂದ್ರ ಸರಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಕಾನೂನನ್ನು ಪ್ರಶ್ನಿಸಿದ ಇದೇ ರೀತಿಯ ಅರ್ಜಿಗಳು ಬಾಕಿ ಇವೆ. ನಮ್ಮ ಪ್ರತಿಕ್ರಿಯೆ ಸಿದ್ಧವಿದೆ. ಶೀಘ್ರದಲ್ಲಿ ಸಲ್ಲಿಸಲಿದ್ದೇವೆ ಎಂದರು.

ವಾರ್ತಾ ಭಾರತಿ 2 Feb 2026 10:20 pm

Uttarakhand | ಧಾರ್ಮಿಕ ಮೆರವಣಿಗೆ ವೇಳೆ ವಿರೋಧಿ ಗುಂಪುಗಳ ನಡುವೆ ಘರ್ಷಣೆ: ಇಬ್ಬರು ಮೃತ್ಯು

ಡೆಹ್ರಾಡೂನ್: ಹರಿದ್ವಾರ ಜಿಲ್ಲೆಯ ರೂರ್ಕಿಯ ಭಗವಾನ್‌ಪುರ ಪ್ರದೇಶದಲ್ಲಿ ರವಿವಾರ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಎರಡು ವಿರೋಧಿ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು,ಇಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರದೇಶದಲ್ಲಿ ಉದ್ವಿಗ್ನತೆಯಿದ್ದು, ಭಾರೀ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬನಾರಸಿ ಗ್ರಾಮದಲ್ಲಿ ಸಂತ ರವಿದಾಸ ಶೋಭಾಯಾತ್ರೆಯ ಅಂಗವಾಗಿ ಮೆರವಣಿಗೆ ನಡೆದಿದ್ದು,ಸಾಮೂಹಿಕ ಭೋಜನದ ವೇಳೆ ಈ ಘಟನೆ ನಡೆದಿದೆ. ಸಂಜೆ ಐದು ಗಂಟೆಯ ಸುಮಾರಿಗೆ ದೀರ್ಘಕಾಲದ ದ್ವೇಷವನ್ನು ಹೊಂದಿರುವ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭಗೊಂಡಿತ್ತು. ಶೀಘ್ರವೇ ಅದು ಹಿಂಸೆಗೆ ತಿರುಗಿದ್ದು, ಪಿಸ್ತೂಲುಗಳನ್ನೂ ಬಳಸಲಾಗಿತ್ತು. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಆನಂದ (28) ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ ರಾತ್ರಿ ಸಮೀಪದ ಹೊಲವೊಂದರಲ್ಲಿ ಎದುರಾಳಿ ಗುಂಪಿಗೆ ಸೇರಿದ ಮಾಂಗೆರಾಮ್ ಎಂಬಾತನ ಶವ ಪತ್ತೆಯಾಗಿತ್ತು. ಆತನನ್ನು ಥಳಿಸಿ ಕೊಲ್ಲಲಾಗಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಮೃತ ಆನಂದನ ಕುಟುಂಬ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ರಸ್ತೆಯ ಮಧ್ಯೆ ಶವವನ್ನು ಇರಿಸಿ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ್ದರು. ಆರೋಪಿಗಳನ್ನು ಬಂಧಿಸುವವರೆಗೂ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಧಾವಿಸಿದ ಹಿರಿಯ ಪೋಲಿಸ್ ಅಧಿಕಾರಿಗಳು ಗುಂಪನ್ನು ಸಮಾಧಾನಗೊಳಿಸಿದ ಬಳಿಕ ತಡಸಂಜೆ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿತ್ತು. ಗಾಯಗೊಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾರ್ತಾ ಭಾರತಿ 2 Feb 2026 10:05 pm

ಕ್ರೀಡೆಯನ್ನು ರಾಜಕೀಯಗೊಳಿಸಿರುವುದು ಅತ್ಯಂತ ಅವಮಾನಕರ: ಶಶಿ ತರೂರ್

ಹೊಸದಿಲ್ಲಿ: ಐಸಿಸಿ ಟಿ-20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಾಕಿಸ್ತಾನ ತಂಡವು ಫೆ.15ರಂದು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದೆ. ಪಾಕಿಸ್ತಾನದ ಈ ನಿರ್ಧಾರ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತ ಹಾಗೂ ಪಾಕಿಸ್ತಾನದ ನಡುವೆ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ತರೂರ್, ಕ್ರೀಡೆಯನ್ನು ರಾಜಕೀಯದಿಂದ ದೂರವಿಡಬೇಕು ಎಂದು ಪ್ರತಿಪಾದಿಸಿದರು. ‘‘ಉಭಯ ದೇಶಗಳು ಕ್ರೀಡೆಯನ್ನು ಈ ರೀತಿ ರಾಜಕೀಯಗೊಳಿಸಿರುವುದು ಅತ್ಯಂತ ಅವಮಾನಕರ ಸಂಗತಿ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಫಿಝುರ‌್ರಹ್ಮಾನ್‌ರನ್ನು ಕೆಕೆಆರ್ ಫ್ರಾಂಚೈಸಿ ಐಪಿಎಲ್‌ನಿಂದ ಹೊರ ಹಾಕಬಾರದಿತ್ತು. ಕ್ರೀಡೆಯಲ್ಲಿ ರಾಜಕೀಯ ಒಳ ನುಸುಳುವಿಕೆ ದುರದೃಷ್ಟಕರ. ರೆಹಮಾನ್ ಕುರಿತು ಬಾಂಗ್ಲಾದೇಶದ ಪ್ರತಿಕ್ರಿಯೆ ಕೂಡ ಅತಿರೇಕವಾಗಿತ್ತು’’ಎಂದು ತರೂರ್ ಹೇಳಿದರು. ‘‘ಕ್ರಿಕೆಟ್ ಎಲ್ಲರೂ ಇಷ್ಟಪಡುವ ಕ್ರೀಡೆಯಾಗಿದ್ದು, ಕನಿಷ್ಠ ಆಟದ ಮೈದಾನದಲ್ಲಾದರೂ ಇದು ನಮ್ಮನ್ನು ಒಟ್ಟುಗೂಡಿಸುವ ಒಂದು ಸಾಧನವಾಗಿರಬೇಕು. ಆತುರದ ನಿರ್ಧಾರ ತೆಗೆದುಕೊಂಡ ಎಲ್ಲರಿಗೂ ಇದೊಂದು ಎಚ್ಚರಿಕೆಯ ಕರೆಯಾಗಿದೆ. ಇದನ್ನು ಐಸಿಸಿ ಮಧ್ಯಸ್ಥಿಕೆವಹಿಸಿ ಬಿಕ್ಕಟ್ಟು ಬಗೆಹರಿಸಬೇಕು’’ಎಂದು ಹೇಳಿದ್ದಾರೆ.

ವಾರ್ತಾ ಭಾರತಿ 2 Feb 2026 10:01 pm

ಬೇಡಿಕೆ ಈಡೇರಿಕೆಗೆ ಆಗ್ರಹ: ಫೆ. 5ಕ್ಕೆ ಶಿಕ್ಷಕರ ‘ದೆಹಲಿ ಚಲೋ’ ಹೋರಾಟಕ್ಕೆ ಐಟಾ ಬೆಂಬಲ

ಭಟ್ಕಳ: ಶಿಕ್ಷಕ ಸಮುದಾಯ ಎದುರಿಸುತ್ತಿರುವ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿ ಫೆಬ್ರುವರಿ 5ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ‘ದೆಹಲಿ ಚಲೋ’ ಹೋರಾಟ ಹಮ್ಮಿಕೊಂಡಿದೆ. ಈ ಬೃಹತ್ ಚಳವಳಿಗೆ ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಐಟಾ) ಸಂಪೂರ್ಣ ಬೆಂಬಲ ನೀಡಿದೆ ಎಂದು ಐಟಾ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಎಂ.ಆರ್. ಮಾನ್ವಿ ತಿಳಿಸಿದ್ದಾರೆ. ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯ ಮಟ್ಟದವರೆಗೆ ವಿವಿಧ ಶಿಕ್ಷಕ ಸಂಘಟನೆಗಳು ಒಗ್ಗೂಡಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಿಕೊಂಡಿದ್ದು, ಅದರ ನೇತೃತ್ವದಲ್ಲಿ ಫೆ.5ರಂದು ಬೆಳಿಗ್ಗೆ 10 ಗಂಟೆಯಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಧರಣಿ–ಸತ್ಯಾಗ್ರಹ ನಡೆಯಲಿದೆ. ಶಿಕ್ಷಕರ ಹಿತರಕ್ಷಣೆಗೆ ಸಂಬಂಧಿಸಿದಂತೆ ಈ ಹೋರಾಟದಲ್ಲಿ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಲಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಬೇಕು, ಸೇವೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಯಿಂದ ವಿನಾಯಿತಿ ನೀಡಬೇಕು, ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಮತದಾನದ ಹಕ್ಕು ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ. ಇದಲ್ಲದೆ, 8ನೇ ವೇತನ ಆಯೋಗದ ವರದಿಯನ್ನು ನಿಗದಿತ ಅವಧಿಯಲ್ಲಿ ಜಾರಿಗೊಳಿಸಬೇಕು, ದೇಶಾದ್ಯಂತ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು, ಅತಿಥಿ ಮತ್ತು ಗುತ್ತಿಗೆ ಆಧಾರಿತ ಶಿಕ್ಷಕರನ್ನು ಕಾಯಂಗೊಳಿಸಿ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಲಾಗಿದೆ. ನೂತನ ಶಿಕ್ಷಣ ನೀತಿಯಲ್ಲಿರುವ ವಿದ್ಯಾರ್ಥಿ ಮತ್ತು ಶಿಕ್ಷಕ ವಿರೋಧಿ ಅಂಶಗಳನ್ನು ಕೈಬಿಡಬೇಕು, ಸರ್ಕಾರಿ ಶಾಲೆಗಳ ವಿಲೀನ ಅಥವಾ ಮುಚ್ಚುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಹಾಗೂ ಶಿಕ್ಷಕರನ್ನು ಬೋಧಕೇತರ ಕೆಲಸಗಳಿಂದ ಮುಕ್ತಗೊಳಿಸಬೇಕು ಎಂಬ ಬೇಡಿಕೆಗಳನ್ನೂ ಹೋರಾಟದಲ್ಲಿ ಮುಂದಿಡಲಾಗಿದೆ. ಈ ಮಹತ್ವದ ‘ದೆಹಲಿ ಚಲೋ’ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಎಂ.ಆರ್. ಮಾನ್ವಿ ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 2 Feb 2026 9:59 pm

ಬೆಂಗಳೂರು ಸುರಂಗ ಮಾರ್ಗ ಯೋಜನೆಗೆ ಕಾರ್ಯಾದೇಶ ನೀಡುವು ಸುಳ್ಳು: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಫೆಬ್ರವರಿ ಅಂತ್ಯಕ್ಕೆ ಆರಂಭವಾಗಲಿದೆ ಎಂಬ ವರದಿ ಸುಳ್ಳು ಎಂದು ರಾಜ್ಯ ಅಡ್ವೊಕೇಟ್‌ ಜನರಲ್‌ ಹೈಕೋರ್ಟ್‌ಗೆ ತಿಳಿಸಿದರು. ಈ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಯಿತು. ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯ ಕಾಲಾವಕಾಶ ನೀಡಿತು. ವಿಚಾರಣೆ ಫೆ.23ಕ್ಕೆ ಮುಂದೂಡಲಾಗಿದೆ.

ವಿಜಯ ಕರ್ನಾಟಕ 2 Feb 2026 9:57 pm

Gujarat | ಕುದುರೆ ಸವಾರಿ ಮಾಡಿದ್ದಕ್ಕೆ ದಲಿತ ವರನ ಮೇಲೆ ದಾಳಿ

ಪಟನ್: ಮದುವೆ ದಿನ ಕುದುರೆ ಸವಾರಿ ಮಾಡಿದ್ದಕ್ಕೆ ದಲಿತ ವರನ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಗುಜರಾತಿನ ಪಟನ್ ಜಿಲ್ಲೆಯ ಚಂದ್ರುಮನಾ ಗ್ರಾಮದಲ್ಲಿ ನಡೆದಿದೆ. ಸೋಮವಾರ ದಲಿತ ಸಮುದಾಯದ ವರ ವಿಶಾಲ ಚಾವ್ಡಾ ತನ್ನ ವಿವಾಹ ಮೆರವಣಿಗೆಯಲ್ಲಿ ಕುದುರೆಯ ಮೇಲೆ ಸಾಗುತ್ತಿದ್ದಾಗ ಪ್ರಬಲ ಸಮುದಾಯದ ಗುಂಪೊಂದು ತಡೆದಿತ್ತು. ಕೆಳಜಾತಿಯ ವರ ಕುದುರೆ ಸವಾರಿ ಮಾಡುತ್ತಿದ್ದುದು ಅವರನ್ನು ಕೆರಳಿಸಿತ್ತು. ‘ಈ ಗ್ರಾಮದಲ್ಲಿ ದಲಿತನೋರ್ವನಿಗೆ ಕುದುರೆ ಸವಾರಿ ಮಾಡಲು ಎಷ್ಟು ಧೈರ್ಯ?’ ಎಂದು ಅಬ್ಬರಿಸಿದ ಗುಂಪು ಚಾವ್ಡಾ ಮತ್ತು ಆತನ ಸಂಬಂಧಿಗಳ ಮೇಲೆ ಕತ್ತಿಗಳಿಂದ ಹಲ್ಲೆ ನಡೆಸಿದೆ. ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೋಲಿಸರು ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಹೆಚ್ಚಿನ ಬಂದೋಬಸ್ತ್ ಏರ್ಪಡಿಸಿದ್ದಾರೆ. ಇದೊಂದು ಪ್ರತ್ಯೇಕ ಘಟನೆಯಲ್ಲ,ಇಂತಹ ಘಟನೆಗಳು ಗುಜರಾತಿನಲ್ಲಿ ನಡೆಯುತ್ತಲೇ ಇರುತ್ತವೆ. ಗಾಂಧಿನಗರದಿಂದ ಬನಾಸ್‌ಕಾಂತಾವರೆಗೂ ದಲಿತ ವರ ಕುದುರೆ ಸವಾರಿ ಮಾಡುವುದು ಹಿಂಸಾಚಾರಕ್ಕೆ ಕಾರಣವಾಗಿರುವ ಘಟನೆಗಳು ನಡೆದಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 2 Feb 2026 9:57 pm

ಟ್ವೆಕಾಂಡೋ ಪಂದ್ಯ: ದ.ಕ.ಜಿಲ್ಲೆಗೆ ಚಿನ್ನ, ಬೆಳ್ಳಿ ಪದಕ

ಮಂಗಳೂರು: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಟ್ವೆಕಾಂಡೋ ಚಾಂಪಿಯನ್ ಶಿಪ್-2026 (8ನೇ ಕೆಟಿಎ ಕಪ್) ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು 2 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಫಾನ್ ರಹ್ಮತುಲ್ಲಾ ಅಹ್ಮದ್ ಸುರತ್ಕಲ್ ಹಾಗೂ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ವಿಷ್ಣು ಇಡ್ಯಾ-ಸುರತ್ಕಲ್ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ರಫಾನ್ ಅವರು ರಹಮತುಲ್ಲಾ ಅಹ್ಮದ್-ಫಾತಿಮಾ ಫರ್ಝಾನಾ ದಂಪತಿಯ ಪುತ್ರ. ವಿಷ್ಣು ಅವರು ರವಿ-ಜ್ಯೋತಿ ದಂಪತಿಯ ಪುತ್ರ. 15 ವರ್ಷ ಮೇಲ್ಪಟ್ಟ ಬಾಲಕರ ವಿಭಾಗದಲ್ಲಿ ಆಯಾನ್ ಅಹ್ಮದ್ ಮಂಗಳೂರು ಹಾಗೂ 14 ವರ್ಷದೊಳಗಿನ ಬಾಲಕಿ ಯರ ವಿಭಾಗದಲ್ಲಿ ಕುಳಾಯಿಯ ಅವಂತಿಕಾ ಎಸ್. ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಅಯಾನ್ ಅಹ್ಮದ್ ಅವರು ನಜೀಮ್ ಅಹ್ಮದ್ - ಸುನೇನಾ ನಜೀಮ್ ದಂಪತಿಯ ಪುತ್ರ. ಅವಂತಿಕಾ ಅವರು ವಿನೋದ್ ಎಸ್.-ಸುಮಾ ಕೆ ದಂಪತಿಯ ಪುತ್ರಿ. ದ.ಕ. ಟ್ವೇಕಾಂಡೋ ಸಂಘದ ಪ್ರಧಾನ ಕಾರ್ಯದರ್ಶಿ ಇಶಾಕ್ ಇಸ್ಮಾಯಿಲ್ ನಂದಾವರ ಈ ಕ್ರೀಡಾಪಟು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ವಾರ್ತಾ ಭಾರತಿ 2 Feb 2026 9:56 pm

ಮಂಗಳೂರು: ಯುವಕ ನಾಪತ್ತೆ

ಮಂಗಳೂರು: ನಗರ ಹೊರವಲಯದ ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಸಫ್ವಾನ್ (28) ಎಂಬಾತ ಜ.28ರಂದು ತನ್ನ ಮನೆಯಿಂದ ಹೊರಟು ಹೋಗಿದ್ದು, ಮರಳಿ ಬಂದಿಲ್ಲ ಎಂದು ಪಣಂಬೂರು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸುಮಾರು 5.6 ಅಡಿ ಎತ್ತರದ, ಸಾಧಾರಣ ಶರೀರದ, ಎಣ್ಣೆಕಪ್ಪು ಮೈಬಣ್ಣದ ಸಫ್ವಾನ್ ಕಾಣೆಯಾದ ಬಿಳಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ತುಳು, ಬ್ಯಾರಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಈತನ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಪಣಂಬೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ವಾರ್ತಾ ಭಾರತಿ 2 Feb 2026 9:53 pm

ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ

ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಹಾಗೂ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ನಡುವೆ ನಡೆದ ಒಪ್ಪಂದದಂತೆ ಕಾಂಗ್ರೆಸ್ ಬೆಂಬಲಿತ 10 ಮಂದಿ ಅಭ್ಯರ್ಥಿಗಳು ಹಾಗೂ ಸಹಕಾರ ಭಾರತಿಯ ಇಬ್ಬರು ಅಭ್ಯರ್ಥಿಗಳು ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐದು ವರ್ಷದ ಅವಧಿಗೆ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಫೆ.8ರಂದು ಮತದಾನ ನಿಗದಿಯಾಗಿತ್ತು. ಇದಕ್ಕಾಗಿ 25 ನಾಮಪತ್ರಗಳು ಸಲ್ಲಿಕೆಯಾಗಿತ್ತು. ನಾಮಪತ್ರ ಹಿಂಪಡೆಯುವ ದಿನವಾದ ಫೆ.2ರಂದು 10 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಹಾಗೂ ಎರಡು ಮಂದಿ ಸಹಕಾರ ಭಾರತಿಯ ಅಭ್ಯರ್ಥಿಗಳನ್ನು ಉಳಿದವರು ನಾಮಪತ್ರ ಹಿಂದೆಗೆದುಕೊಂಡರು. ಅವಿರೋಧ ಆಯ್ಕೆಯಾದವರು: ನಿರ್ದೇಶಕ ಸ್ಥಾನಕ್ಕೆ ಸಾಲಗಾರ ಸಾಮಾನ್ಯದಿಂದ ಅಬ್ದುಲ್ ಲತೀಫ್, ನೀಲಪ್ಪ ಗೌಡ, ಡಾ. ರಾಜ್‍ಗೋಪಾಲ ಶರ್ಮಾಬಿ., ತೋಯಜಾಕ್ಷ ಶೆಟ್ಟಿ, ಜಾರಪ್ಪ ಗೌಡ ಆಯ್ಕೆಯಾಗಿದ್ದಾರೆ. ಸಾಲಗಾರ ಅನುಸೂಚಿತ ಜಾತಿಯಿಂದ ಶಾಂತಾ, ಸಾಲಗಾರ ಅನುಸೂಚಿತ ಪಂಗಡದಿಂದ ಲಕ್ಷ್ಮಣ ನಾಯ್ಕ, ಸಾಲಗಾರ ಮಹಿಳೆಯಿಂದ ಜಯಲಕ್ಷ್ಮೀ, ರೇವತಿ ಪಿ., ಸಾಲಗಾರ ಹಿಂದುಳಿದ ವರ್ಗ (ಬಿ)ಯಿಂದ ಸುನೀಲ್ ನೆಲ್ಸನ್ ಪಿಂಟೋ, ಸಾಲಗಾರ ಹಿಂದುಳಿದ ವರ್ಗ (ಎ)ಯಿಂದ ತನಿಯಪ್ಪ ಪೂಜಾರಿ, ಸಾಲಗಾರರಲ್ಲದ್ದರಿಂದ ಬೇಬಿ ಆಯ್ಕೆಯಾಗಿದ್ದಾರೆ. ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘವು 20 ವರ್ಷಗಳನ್ನು ಪೂರ್ಣಗೊಳಿಸಿದ್ದು, ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಈ ಹಿಂದಿನ ನಾಲ್ಕು ಅವಧಿಗಳಲ್ಲೂ ಚುನಾವಣೆ ನಡೆದಿತ್ತು. ನಾಲ್ಕು ಅವಧಿಗಳಲ್ಲೂ ನಿರ್ದೇಶಕ ರಾಗಿ ಆಯ್ಕೆಯಾಗಿ ತೋಯಜಾಕ್ಷ ಶೆಟ್ಟಿಯವರೇ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರಲ್ಲದೆ, ಸಂಘವನ್ನು ಪ್ರಗ ತಿಯ ಪಥದಲ್ಲಿ ಮುನ್ನಡೆಸಿದ್ದರು. ಆದರೆ ಈ ಬಾರಿ ಮಾತ್ರ ಹೊಂದಾಣಿಕೆಯೊಂದಿಗೆ ಸಾಗಿದ್ದು, ಹಾಗಾಗಿ ಅವಿರೋಧ ಆಯ್ಕೆ ನಡೆದಿದೆ. ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಈ ಬಾರಿ ನಾವು ಸೌಹಾರ್ದತೆಯ ಒಪ್ಪಂದ ಮಾಡಿಕೊಂಡು ಚುನಾವಣೆ ನಡೆಯದೇ ಅವಿರೋಧ ಆಯ್ಕೆಯಾಗುವಂತೆ ನೋಡಿ ಕೊಂಡಿದ್ದೇವೆ. ಈ ಮೂಲಕ ಬ್ಯಾಂಕಿಗೆ ಆಗುವ ಖರ್ಚು ಕೂಡಾ ಉಳಿಯುವಂತಾಗಿದೆ. ಚುನಾವಣೆ ನಡೆದಾಗ ಬ್ಯಾಂಕಿಗೂ ಖರ್ಚು, ಅಭ್ಯರ್ಥಿಗೂ ಖರ್ಚು. ಚುನಾವಣೆಯಲ್ಲಿ ಎದುರು ಬದುರಾಗುವಾಗ ಪರಸ್ಪರ ಮನಸ್ತಾಪಗಳು ಸಹಜ. ಆದ್ದರಿಂದ ಈ ಬಾರಿ ನಾವು ಪರಸ್ಪರ ಮಾತನಾಡಿಕೊಂಡು 10+2ರ ಒಪ್ಪಂದ ಮಾಡಿಕೊಂಡಿದ್ದೆವು. ಎಲ್ಲರೂ ಜೊತೆಗೂಡಿ ಸಂಘವನ್ನು ಇನ್ನಷ್ಟು ಬೆಳೆಸುವುದೇ ನಮ್ಮ ಕನಸು. - ತೋಯಜಾಕ್ಷ ಶೆಟ್ಟಿ ನಿಕಟಪೂರ್ವಾಧ್ಯಕ್ಷರು, ಪೆರ್ನೆ ಸಿಎ ಬ್ಯಾಂಕ್ 

ವಾರ್ತಾ ಭಾರತಿ 2 Feb 2026 9:45 pm

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆದೇಶ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಗ್ರಾಮ ಪಂಚಾಯಿತಿ ಸದಸ್ಯರ ಅವಧಿಯು ಮುಕ್ತಾಯಗೊಳ್ಳುತ್ತಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿಯನ್ನು ನೇಮಿಸುವ ಬದಲು ಈಗಿರುವ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ದೊಡ್ಡನಗೌಡ ಪಾಟೀಲ್ ಗಮನ ಸೆಳೆದ ಸೂಚನೆಗೆ ಅವರು ಉತ್ತರಿಸಿದರು. ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ. ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ವಾರ್ತಾ ಭಾರತಿ 2 Feb 2026 9:42 pm

ಫೆ.4ರಿಂದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನೇಮೋತ್ಸವ

ಸುರತ್ಕಲ್‌ : ಪರಮಪವಿತ್ರ ಕ್ಷೇತ್ರ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು ಇದರ ಜೀರ್ಣೋದ್ಧಾರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಫೆ.4 ರಿಂದ 10ರ ವರೆಗೆ ನಿರಂತರ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಜರುಗಲಿದೆ. ಈ ಸಂಬಂಧ ದೈವಸ್ಥಾನದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಿ.ಬಿ.ಕರ್ಕೇರ ಅವರು, ಬಡವರೇ ಇರುವ ಸಸಿಹಿತ್ಲು ಎಂಬ ಇಷ್ಟು ಸಣ್ಣ ಗ್ರಾಮದಲ್ಲಿ ನಾಲ್ಕು ಕರೆ ಸಮಾಜ ಒಟ್ಟಾಗಿ ಸುಮಾರು 3.5 ಕೋಟಿ ರೂ. ವೆಚ್ಚದ ಸಂಪೂರ್ಣ ಶಿಲಾಮಯ ದೈವಸ್ಥಾನ ನಿರ್ಮಾಣ ಮಾಡಲಾ ಗಿದ್ದು, ನಮ್ಮ ಹೃದಯಂತರಾಳದ ಮನವಿಗೆ ದಾನಿಗಳು ಸಕಾರಾತ್ಮವಾಗಿ ಸ್ಪಂದಿಸಿದ ಫಲ. ಅಲ್ಲದೆ, ಉಳ್ಳಾಯ ಮತ್ತು ಪರಿವಾರ ದೈವಗಳ ಕಾರಣಿಕ ಎಂದರು. ದೈವಸ್ಥಾನದ ಒಳಾಂಗಣದಲ್ಲಿ ಫೆ.4 ರಿಂದ 8 ರ ತನಕ ನಿರಂತರ ವೈದಿಕ ವಿಧಿ ವಿಧಾನಗಳು, ಋತ್ವಿಜರ ನೇತೃತ್ವ ದಲ್ಲಿ ನಡೆಯುತ್ತಿದ್ದರೆ ಹೊರಾಂಗಣದಲ್ಲಿ ಹಾಕಿರುವ ಎರಡು ವೇದಿಕೆಯಲ್ಲಿ ಪ್ರತ್ಯೇಕವಾಗಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಒಂದು ವೇದಿಕೆಗೆ ಉಳ್ಳಾಯ ಮದಿಪು ಚಾವಡಿ ಎಂಬ ಹೆಸರಿಡಲಾ ಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ವೇದಿಕೆಗೆ ಕಾಂತುಲಕಣ ಗಡಿಪ್ರದಾನ ಯಾನೆ ಪಠೇಲ್ ಯಾದವ ಜಿ. ಬಂಗೇರ ಸಾಂಸ್ಕೃತಿಕ ವೇದಿಕೆ ಎಂದು ಹೆಸರಿಡಲಾಗಿದೆ. ಫೆ.4ರಿಂದ 8ರ ವರೆಗೆ ನಿರಂತರ ಭಜನಾ ಕಾರ್ಯಕ್ರಮ ನಡೆಯಲಿದ್ದು, ಈ ವೇದಿಕೆಗೆ ಕಾಂತಾಬಾರೆ ಬುಧಾಬಾರೆ ಭಜಕ ವೇದಿಕೆ ಎಂದು ಹೆಸರಿಡಲಾಗಿದೆ ಎಂದರು. ಶ್ರೀ ಉಳ್ಳಾಯ ಹಾಗೂ ಪರಿವಾರ ಶಕ್ತಿಗಳಿಗೆ ಪ್ರಧಾನಗೊಂಡ ಕಾಂತಾಬಾರೆ ಬುಧಾಬಾರೆ ಮತ್ತು ಮಾಯಂದಾಳ ದೈವಕ್ಕೆ ಪ್ರತ್ಯೇಕ ಗುಡಿ ನಿರ್ಮಾಣ ಮಾಡಲಾಗಿದ್ದು, ಎದುರಿನ ಗೋಪುರ ನವೀಕರಣ ಹಾಗೂ ಪ್ರವೇಶದ್ವಾರ ಉದ್ಘಾಟನೆ ನಡೆಯಲಿದೆ. ಜೀರ್ಣೋದ್ಧಾರ ಯಶಸ್ಸಿಗೆ ಊರಿನ ಜೀರ್ಣೋದ್ಧಾರ, ಆಡಳಿತ ಹಾಗೂ ಮಹಿಳಾ ಸಮಿತಿ ಗಳ ಜೊತೆಗೆ ಮುಂಬೈ, ಬೆಂಗಳೂರು ಸೇರಿದಂತೆ ಹೊರನಾಡು ಸಮಿತಿಗಳ ಸಹಕಾರವೇ ಕಾರಣವಾಗಿದೆ. ವಿವಿಧ ಉಪಸಮಿತಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ವಾಹನಗಳ ಪಾರ್ಕಿಂಗ್, ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ರೂಪಿಸಲಾಗಿದೆ ಎಂದು ನುಡಿದರು. ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿ.ಬಿ. ಕರ್ಕೇರ, ಗೌರವಾಧ್ಯಕ್ಷ ಮಿಥುನ್ ರೈ, ಗೌರವ ಸಲಹೆಗಾರರಾದ ಸತ್ಯಜಿತ್ ಸುರತ್ಕಲ್ ಮತ್ತು ಚಣ್ಯದ್ರಶೇಖರ ನಾನಿಲ್, ಕಾರ್ಯಾಧ್ಯಕ್ಷ ಪರಮಾನಂದ ವಿ. ಸಾಲ್ಯಾನ್, ಆಡಳಿತ ಸಮಿತಿಯ ಅಧ್ಯಕ್ಷ ಜಗನ್ನಾಥ ಆರ್. ಕೋಟ್ಯಾನ್, ಉಪಾಧ್ಯಕ್ಷ ಅನಿಲ್ ಪೂಜಾರಿ, ಕೋಶಾಧಿಕಾರಿ ಎಸ್. ದಯಾನಂದ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಶ್ರೀಧರ ವಿ. ಸುವರ್ಣ, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್‌ ಎನ್. ಕೋಟ್ಯಾನ್ ಹಾಗೂ ಸಂಚಾಲಕ ಪದ್ಮನಾಭ ಸಸಿಹಿತ್ಲು, ಜೊತೆಗೆ ಗೌರವ ಸಲಹೆಗಾರರಾದ ಪದ್ಮನಾಭ ಬಂಗೇರ ಮತ್ತು ರಮೇಶ್ ಪಿ. ಸನಿಲ್, ಕಾಂತುಲಕಣ ಗಡಿಪುದಾನರಾದ ನಿರಂಜನ್ ಬಂಗೇರ ಹಾಗೂ ಲೀಲಾಧರ ಬಂಗೇರ, ಪ್ರಧಾನ ಅರ್ಚಕ ತೋಚೋಡಿ ಶೇಖರ ಪೂಜಾರಿ, ಅರ್ಚಕರಾದ ಸುರೇಶ್ ಪೂಜಾರಿ ಮತ್ತು ದಾಮೋದರ ಪೂಜಾರಿ, ಮಹಿಳಾ ಸಮಿತಿಯ ಅಧ್ಯಕ್ಷೆ ಶಕುಂತಳಾ ಭೋಜ ಬಂಗೇರ ಹಾಗೂ ಗೌರವಾಧ್ಯಕ್ಷೆ ಪುಷ್ಪಾ ದಯಾನಂದ್‌, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಎಸ್.ಆರ್. ಪ್ರಭಾತ್, ಆಡಳಿತ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್, ಜೊತೆ ಕಾರ್ಯದರ್ಶಿ ಹರೀಶ್ ಕುಮಾ‌ರ್, ಜೊತೆ ಕೋಶಾಧಿಕಾರಿ ಯತೀಶ್ ಸಾಲ್ಯಾನ್ ಮತ್ತು ಮಾಧ್ಯಮ ಸಂಚಾಲಕ ಯಶೋಧರ ಕೋಟ್ಯಾನ್ ಭಾಗವಹಿಸಿದ್ದರು.

ವಾರ್ತಾ ಭಾರತಿ 2 Feb 2026 9:40 pm

Bengaluru | ರಸ್ತೆಯಲ್ಲಿ ತೆರೆದಿದ್ದ ಕಾಂಕ್ರಿಟ್ ಚೇಂಬರ್‌ಗೆ ಬಿದ್ದು ಬಾಲಕ ಮೃತ್ಯು

ಬೆಂಗಳೂರು : ಬೆಂಗಳೂರಿನ ಕನಕಪುರ ಮಾರ್ಗದ ಪೈಪ್‍ಲೈನ್ ರಸ್ತೆಯಲ್ಲಿ ತೆರೆದಿದ್ದ ಕಾಂಕ್ರೀಟ್ ಚೇಂಬರ್‌ಗೆ ಬಿದ್ದು 9ನೇ ತರಗತಿಯ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಂ (14) ಎಂಬಾತ ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ರಜನಿಕಾಂತ್ ಮತ್ತು ಪುಷ್ಪಾ ದಂಪತಿಯ ಪುತ್ರ ಪ್ರೀತಂ, ಜ.28ರ ಬೆಳಗ್ಗೆ 9 ಗಂಟೆಗೆ ಮನೆಯಿಂದ ಆಟವಾಡಲು ಹೊರ ಹೋಗಿದ್ದ. ಆದರೆ, ಸಂಜೆಯಾದರೂ ಮಗ ಮನೆಗೆ ಬಾರದಿದ್ದಾಗ ಆತಂಕಗೊಂಡ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಮಗ ಕಾಣೆಯಾದ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಲಕ ನಾಪತ್ತೆಯಾದ ಮೂರು ದಿನಗಳ ನಂತರ, ಅಂದರೆ ಜ.31ರ ಶನಿವಾರ ರಾತ್ರಿ ಪೈಪ್‍ಲೈನ್ ರಸ್ತೆಯಲ್ಲಿರುವ ಜಲಮಂಡಳಿಯ ಚೇಂಬರ್‍ನಿಂದ ತೀವ್ರವಾದ ಕೊಳೆತ ವಾಸನೆ ಬರಲಾರಂಭಿಸಿದೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಚೇಂಬರ್ ಒಳಗೆ ಇಣುಕಿ ನೋಡಿದಾಗ ಬಾಲಕನ ಶವ ತೇಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸದ್ಯ, ಬಾಲಕನ ಮೃತದೇಹವನ್ನು ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಅಂತಿಮ ಸಂಸ್ಕಾರಕ್ಕಾಗಿ ಕೊಳ್ಳೇಗಾಲಕ್ಕೆ ರವಾನಿಸಲಾಗಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಬಗ್ಗೆ ಮೃತ ಬಾಲಕನ ತಂದೆ ರಜನಿಕಾಂತ್ ಮಾತನಾಡಿ, ಚೇಂಬರ್ ಮುಚ್ಚಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ನನ್ನ ಮಗನ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 2 Feb 2026 9:37 pm

‘ಹನುಮ ಕಲ್ಯಾಣ’ ಪೌರಾಣಿಕ ಆಖ್ಯಾನದ ಪ್ರದರ್ಶನ

ಬ್ರಹ್ಮಾವರ, ಫೆ.2: ನಂಚಾರಿನಲ್ಲಿರುವ ಕಾಮಧೇನು ಗೋಶಾಲಾ ಮಹಾ ಸಂಘ ಟ್ರಸ್ಟ್‌ನ ಗೋಶಾಲೆಗೆ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ನಾದ ನೂಪುರ ಯಕ್ಷೇತ್ಥಾನ ಟ್ರಸ್ಟ್ ವಂಡಾರು ವತಿಯಿಂದ ಶುಭಾಶಯ ಜೈನ್ ವಿರಚಿತ ಹನುಮ ಕಲ್ಯಾಣ ಎಂಬ ಪೌರಾಣಿಕ ಆಖ್ಯಾನದ ಪ್ರದರ್ಶನ ರವಿವಾರ ಮೈರ್‌ಕೊಮೆಯ ಸಪ್ತಪದಿ ಕನ್ವೆನ್‌ಷನ್ ಹಾಲ್‌ನಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಗೋಶಾಲೆಯ ಮುಖ್ಯಸ್ಥರಿಗೆ ಕಾರ್ಯಕ್ರಮ ದಿಂದ ಸಂಗ್ರಹವಾದ ಒಂದು ಲಕ್ಷ ರೂ. ಮೊತ್ತದ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಉಳಿದ ಒಂದು 1.30ಲಕ್ಷರೂ. ಮೊತ್ತವನ್ನೂ ಗೋಶಾಲೆಗೆ ಹಸ್ತಾಂತರಿಸುವ ಕುರಿತು ನಾದ ಟ್ರಸ್ಟ್ ಅಧ್ಯಕ್ಷ ಗೋವಿಂದ ವಂಡಾರು ಘೋಷಣೆ ಮಾಡಿದರು. ನಂಚಾರು ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ ಮುಖ್ಯಸ್ಥ ರಾಜೇಂದ್ರ ಚಕ್ಕೆ, ಕುಂದಾಪುರ ಕನ್ನಡದ ರಾಯಭಾರಿ ಮನು ಹಂದಾಡಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀಕ್ಷೇತ್ರ ಮಂದಾರ್ತಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಧನಂಜಯ ಶೆಟ್ಟಿ, ಯಕ್ಷ ಪೋಷಕರಾದ ಚೋರಾಡಿಯ ರಾಜೀವ ಶೆಟ್ಟಿ, ಕೊಕ್ಕರ್ಣೆ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ವಂಡಾರು, ಯಕ್ಷಗಾನ ಪೋಷಕ ಆಂದ್ರೂ ಡಿಸಿಲ್ವ, ಕೊಕ್ಕರ್ಣೆಯ ರಾಮಚಂದ್ರ ಶಾಸ್ತ್ರಿ, ಪ್ರಸಂಗಕರ್ತೆ ಶುಭಾಶಯ ಜೈನ್ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಾಪಕರಾದ ಶಶಿಧರ್ ಶೆಟ್ಟಿ ನಂಚಾರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ವಾರ್ತಾ ಭಾರತಿ 2 Feb 2026 9:37 pm

ಬೆಂಗಳೂರಿಗೆ ಆಗಮಿಸಬೇಕಿದ್ದ Air India ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ; ತಪ್ಪಿದ ಸಂಭಾವ್ಯ ಅನಾಹುತ

ಹೊಸದಿಲ್ಲಿ: ಕಳೆದ ವರ್ಷ ಅಹ್ಮದಾಬಾದ್‌ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ತನಿಖೆಯ ನಡುವೆಯೇ ಸೋಮವಾರ ಲಂಡನ್‌ನಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಕಂಡು ಬಂದಿದ್ದು, ವಿಮಾನವನ್ನು ಕಾರ್ಯಾಚರಣೆಯಿಂದ ಹಿಂದೆಗೆದುಕೊಳ್ಳಲಾಗಿದೆ ಎಂದು ವಾಯುಯಾನ ಸಂಸ್ಥೆಯ ವಕ್ತಾರರೋರ್ವರು ತಿಳಿಸಿದರು. ‘ಹಾರಾಟವನ್ನು ಆರಂಭಿಸುವ ಮುನ್ನ ತಪಾಸಣೆ ನಡೆಸಿದ್ದ ನಮ್ಮ ಪೈಲಟ್ ಓರ್ವರು ಇಂಧನ ಸ್ವಿಚ್‌ನಲ್ಲಿ ಸಂಭಾವ್ಯ ದೋಷವನ್ನು ಪತ್ತೆ ಹಚ್ಚಿದ್ದರು. ಇಂಜಿನ್ ಚಾಲೂ ಮಾಡುವ ಸಂದರ್ಭದಲ್ಲಿ ಸ್ವಿಚ್ ಎರಡು ಸಲ ‘ರನ್’ ಸ್ಥಿತಿಯಲ್ಲಿ ಇರಲು ವಿಫಲಗೊಂಡಿತ್ತು ಮತ್ತು ‘ಕಟ್‌ಆಫ್’ ಸ್ಥಿತಿಗೆ ಚಲಿಸಿತ್ತು. ಮಾಹಿತಿ ಲಭಿಸಿದ ತಕ್ಷಣ ನಾವು ವಿಮಾನದ ಹಾರಾಟವನ್ನು ನಿಲ್ಲಿಸಿದ್ದೇವೆ ಮತ್ತು ಸಂಪೂರ್ಣ ತಪಾಸಣೆ ನಡೆಸುತ್ತಿದ್ದೇವೆ. ನಾಗರಿಕ ವಾಯುಯಾನ ಮಹಾ ನಿರ್ದೇಶನಾಲಯಕ್ಕೆ (ಡಿಜಿಸಿಎ) ಈ ಬಗ್ಗೆ ಮಾಹಿತಿ ನೀಡಲಾಗಿದೆ’ ಎಂದರು. ಕಳೆದ ವರ್ಷದ ಅಪಘಾತದ ಬಳಿಕ ಡಿಜಿಸಿಎ ನಿರ್ದೇಶನದ ಮೇರೆಗೆ ಏರ್ ಇಂಡಿಯಾ ತನ್ನ ಎಲ್ಲ ಬೋಯಿಂಗ್ 787 ವಿಮಾನಗಳ ಇಂಧನ ನಿಯಂತ್ರಣ ಸ್ವಿಚ್‌ಗಳ ತಪಾಸಣೆ ನಡೆಸಿತ್ತು ಮತ್ತು ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ ಎಂದು ಅವರು ತಿಳಿಸಿದರು. ಜುಲೈ 2025ರಲ್ಲಿ ಅಹ್ಮದಾಬಾದ್ ವಿಮಾನ ನಿಲ್ದಾಣದ ಸಮೀಪ ಸಂಭವಿಸಿದ್ದ ಡ್ರೀಮ್‌ಲೈನರ್ ಅಪಘಾತ ಪ್ರಕರಣದಲ್ಲಿ ತನಿಖಾಧಿಕಾರಿಗಳ ಪ್ರಾಥಮಿಕ ವರದಿಯು, ವಿಮಾನವು ಟೇಕ್‌ಆಫ್ ಆದ ಕೆಲವೇ ಸೆಕೆಂಡ್‌ಗಳ ಬಳಿಕ ಇಂಧನ ನಿಯಂತ್ರಣ ಸ್ವಿಚ್‌ಗಳು ಅಲ್ಪಾವಧಿಗೆ ಆಫ್ ಆಗಿದ್ದರಿಂದ ಇಂಜಿನ್‌ಗೆ ಇಂಧನದ ಕೊರತೆಯಾಗಿತ್ತು ಎಂದು ಸೂಚಿಸಿತ್ತು. ಈ ದುರಂತದಲ್ಲಿ 260 ಜನರು ಸಾವನ್ನಪ್ಪಿದ್ದರು.

ವಾರ್ತಾ ಭಾರತಿ 2 Feb 2026 9:34 pm

Bengaluru | ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

ಬೆಂಗಳೂರು : ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಭಾರತಿನಗರದ ಫ್ರೂಟ್ಸ್ ಮಾರ್ಕೆಟ್ ಬಳಿ ವರದಿಯಾಗಿದೆ. ಇರ್ಫಾನ್ ಮುಲ್ಲಾನಿ(26) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಜ.30ರಂದು ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಭಾರತಿನಗರ ಠಾಣೆಯಲ್ಲಿ ಅಸಹಜ ಸಾವು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 2 Feb 2026 9:34 pm

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು

ಉಡುಪಿ, ಫೆ.2: ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆಯ ಸಹಯೋಗದೊಂದಿಗೆ ನೈರುತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ. ರೈಲು ನಂ.06507 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13ರಂದು ಶುಕ್ರವಾರ ಅಪರಾಹ್ನ 12:30ಕ್ಕೆ ಯಶವಂತಪುರ ದಿಂದ ಹೊರಟು ಮರುದಿನ ಮುಂಜಾನೆ 6:45ಕ್ಕೆ ಮಡಗಾಂವ್ ತಲುಪಲಿದೆ. ರೈಲು ನಂ.06508 ಮಡಗಾಂವ್ ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಫೆ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಟು ಮರುದಿನ ಮುಂಜಾನೆ 4:45ಕ್ಕೆ ಯಶವಂತಪುರ ತಲುಪಲಿದೆ. ಈ ರೈಲಿಗೆ ಚಿಕ್ಕಬಾಣಾವರ, ಚೆನ್ನರಾಯಪಟ್ಟಮ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ ಹಾಗೂ ಕಾರವಾರಗಳಲ್ಲಿ ನಿಲುಗಡೆ ಇರಲಿದೆ. ಈ ರೈಲು ಒಟ್ಟು 20 ಕೋಚ್‌ಗಳನ್ನು ಹೊಂದಿರಲಿದೆ. ಇವುಗಳಲ್ಲಿ ಫಸ್ಟ್ ಕ್ಲಾಸ್ 2ಟಯರ್ 1ಕೋಚ್, 2ಟಯರ್ ಎಸಿ-2, 3ಟಯರ್ ಎಸಿ-2, ಸ್ಲೀಪರ್ ಕೋಚ್-9, ಜನರಲ್-4 ಹಾಗೂ ಎಸ್‌ಎಲ್‌ಆರ್-2 ಕೋಚ್‌ಗ ಳಿರುತ್ತವೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 2 Feb 2026 9:31 pm

ಮಹಿಳೆಯರ ಸಾಧನೆಯು ಆಶಾದಾಯಕ ಬೆಳವಣಿಗೆ: ಡಾ. ಮೋಹನ ಆಳ್ವ

ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ

ವಾರ್ತಾ ಭಾರತಿ 2 Feb 2026 9:28 pm

ಸಿಎಂ ಸೇರಿದಂತೆ 139 ಶಾಸಕರೂ ನನ್ನ ಬಲ; ಸಿದ್ದರಾಮಯ್ಯ ಅವರು ಶೇ.100ರಷ್ಟು ನನ್ನ ಜತೆಗಿದ್ದಾರೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ‘ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ‘ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಕ್ಕೆ ತಿರುಗೇಟು ನೀಡಿದರು. ‘ಒಂದು ತಿಂಗಳಿಂದ ಡಿ.ಕೆ.ಶಿವಕುಮಾರ್ ಮಾತು, ಟ್ವೀಟ್‍ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ’ ಎಂದು ಆರ್.ಅಶೋಕ್ ಉಲ್ಲೇಖಿಸಿದರು. ಬಳಿಕ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ‘ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ. ಯಾರು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ವಿದ್ಯಾರ್ಥಿ ನಾಯಕನಿಂದ ಬೆಳೆದು ಬಂದವನು. ನನ್ನದೇ ಆದ ಮೌಲ್ಯಗಳನ್ನು ಪಾಲಿಸಿಕೊಂಡು ಬಂದಿದ್ದೇನೆ. ಪಕ್ಷ ನನಗೆ ಚಿಕ್ಕವಯಸ್ಸಿಗೆ ಟಿಕೆಟ್ ಕೊಟ್ಟಿದ್ದು, ಇಲ್ಲಿಯವರೆಗೂ ಬೆಳೆದಿದ್ದೇನೆ. ರಾಜಕೀಯದಲ್ಲಿ ಏಳು-ಬೀಳು ಸಹಜ. ನಾನು ಎಂತೆಂತಹವರ ಏಳು-ಬೀಳು ನೋಡಿದ್ದೇನೆ. ನಾನು ಬಿದ್ದಿದ್ದೇನೆ, ಎದ್ದಿದ್ದೇನೆ, ಜೈಲುವಾಸ ಎಲ್ಲವನ್ನೂ ಅನುಭವಿಸಿದ್ದೇನೆ. ಇನ್ನು ತಿಂಗಳು ಕಳೆದರೆ ನಾನು ಪಕ್ಷದ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತದೆ’ ಎಂದರು. ‘ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ ಅವರು ಶೇ.100ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ, ಮುಂದೆಯೂ ಕೆಲಸ ಮಾಡುತ್ತೇವೆ. ನಾವು ಜನಕ್ಕೆ ಮಾತು ಕೊಟ್ಟಿದ್ದು, ಆ ಮಾತನ್ನು ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ, ಮುಂದೆಯೂ ನಡೆಯುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ಮುಂದೆಯೂ ನಿಲ್ಲುತ್ತೇನೆ. ಅವರು ಕಷ್ಟಕಾಲದಲ್ಲಿ ನನ್ನ ಜತೆ ನಿಲ್ಲಲಿದ್ದಾರೆ’ ಎಂದು ಹೇಳಿದರು. ‘ನಿಮ್ಮ ಟ್ವೀಟ್ ಅರ್ಥವೇನು’ ಎಂದು ಅಶೋಕ್ ಪುನಃ ಪ್ರಶ್ನಿಸಿದರು. ‘ನೀವು ಟ್ವೀಟ್ ಅನ್ನು ಯಾವ ರೀತಿ ಅರ್ಥ ಮಾಡಿಕೊಳ್ಳುತ್ತೀರಿ ಎಂಬುದು ನಿಮಗೆ ಬಿಟ್ಟ ವಿಚಾರ’ ಎಂದು ಹೇಳಿದರು. ಯಾರ್ಯಾರೋ ಮಾತನಾಡುವುದಕ್ಕೆ ನಾನು ಉತ್ತರ ನೀಡಲು ಆಗುವುದಿಲ್ಲ. ನಮ್ಮ ಪಕ್ಷದಲ್ಲಿ ಹಾಗೂ ನಿಮ್ಮ (ಬಿಜೆಪಿ) ಪಕ್ಷದಲ್ಲಿ ಸಂಖ್ಯಾಬಲಕ್ಕಿಂತ ಪಕ್ಷವೇ ತೀರ್ಮಾನ ಮಾಡುತ್ತದೆ. ನಿಮ್ಮ ಸರಕಾರದಲ್ಲಿ ಎಷ್ಟೋ ಸಿಎಂ ಬದಲಾದರು, ಸಚಿವ ಸಂಪುಟಗಳೇ ಬದಲಾದವು. ಹೀಗಾಗಿ ನಿಮ್ಮ ಮಾತಿಗೆ ನಾನು ಜಗ್ಗುವುದಿಲ್ಲ, ನೀವು ಸುಮ್ಮನೇ ತಲೆಕೆಡಿಸಿಕೊಳ್ಳಬೇಡಿ’ ಎಂದು ಶಿವಕುಮಾರ್ ವಿವರಣೆ ನೀಡಿದರು.

ವಾರ್ತಾ ಭಾರತಿ 2 Feb 2026 9:26 pm

ಬೈಕ್ ಸ್ಕಿಡ್: ಸವಾರ ಮೃತ್ಯು

ಗಂಗೊಳ್ಳಿ, ಫೆ.3: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಫೆ.1ರಂದು ರಾತ್ರಿ 10.45ರ ಸುಮಾರಿಗೆ ನಾಡ ಗ್ರಾಮದ ಗುಡ್ಡೆ ಹೊಟೇಲ್ ಬಳಿ ನಡೆದಿದೆ. ಮೃತರನ್ನು ಪ್ರಭಾಕರ ಎಚ್ ಮೆಂಡನ್(58) ಎಂದು ಗುರುತಿಸಲಾಗಿದೆ. ಇವರು ಆಲೂರಿಗೆ ಹೋಗುವ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗು ತ್ತಿದ್ದ ಬೈಕ್, ಸ್ಕಿಡ್ ಆಯಿತ್ತೆನ್ನಲಾಗಿದೆ. ಇದರಿಂದ ಪ್ರಭಾಕರ್, ರಸ್ತೆಯ ಎಡದಿಂದ ಬಲಭಾಗಕ್ಕೆ ಬೈಕ್ ಸಮೇತ ಎಸೆಯಲ್ಪಟ್ಟರು. ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರು ಮಧ್ಯರಾತ್ರಿ ವೇಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 2 Feb 2026 9:25 pm

ರಿಕ್ಷಾ ಢಿಕ್ಕಿ: ಪಾದಚಾರಿ ಮೃತ್ಯು, ಮೂವರಿಗೆ ಗಾಯ

ಬ್ರಹ್ಮಾವರ, ಫೆ.2: ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.1ರಂದು ರಾತ್ರಿ 8ಗಂಟೆ ಸುಮಾರಿಗೆ ಹೇರೂರು ಗ್ರಾಮದ ಕೊಳಂಬೆ ಬಸ್ಸ್ ನಿಲ್ದಾಣದ ಸಮೀಪ ನಡೆದಿದೆ. ಮೃತರನ್ನು 52ನೇ ಹೇರೂರು ಗ್ರಾಮದ ಕೊಳಂಬೆ ನಿವಾಸಿ ರಿಚ್ಚರ್ಡ್ ಡಿಸೋಜ(70) ಎಂದು ಗುರುತಿಸಲಾಗಿದೆ. ರಿಕ್ಷಾ ಚಾಲಕ ಜಗದೀಶ್ ಪೂಜಾರಿ ಹಾಗೂ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅವರ ಪತ್ನಿ ಗೌರಿ ಮತ್ತು ಮಗಳು ಜನ್ಯ ಎಂಬವರು ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೇತ್ರಿ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ರಿಕ್ಷಾ, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತಿದ್ದ ರಿಚರ್ಡ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಬಳಿಕ ರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಯಿತ್ತೆನ್ನಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯ ಗೊಂಡ ರಿಚರ್ಡ್ ಡಿಸೋಜ, ಫೆ.2ರಂದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 2 Feb 2026 9:23 pm

ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆ

ಮಣಿಪಾಲ, ಫೆ.2: ವೈಯಕ್ತಿಕ ಕಾರಣದಿಂದ ಮನನೊಂದ ಮಣಿಪಾಲದ ಕಲ್ಕುಡ ಅಪಾರ್ಟಮೆಂಟ್‌ನ ಕೆಳಗಡೆ ಬಾಡಿಗೆ ಮನೆಯ ನಿವಾಸಿ ಗ್ಯಾನೇಂದ್ರ ಖಾತ್ರಿ ಎಂಬವರ ಪತ್ನಿ ಶಾಂತಿ ಖಾತ್ರಿ(25) ಎಂಬವರು ಫೆ.1ರಂದು ಸಂಜೆ ವೇಲೆ ಮನೆಯ ಶೀಟಿನ ರಾಡ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿ: ಮದ್ಯಪಾನ ಮಾಡುವ ಚಟ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಕೆರೆಬೆಟ್ಟು ಗ್ರಾಮದ ಅಸ್ರಂಬಳ್ಳಿ ನಿವಾಸಿ ಜಗದೀಶ್ ಆಚಾರ್ಯ(54) ಎಂಬವರು ಫೆ.1ರಂದು ರಾತ್ರಿ ವೇಳೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ: ಅನಾರೋಗ್ಯ ಹಾಗೂ ಪತ್ನಿ ಮಗಳು ತೀರಿಕೊಂಡ ಬಗ್ಗೆ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಬೇಳೂರು ಗ್ರಾಮದ ಬಡಾಬೆಟ್ಟು ನಿವಾಸಿ ಶಿವರಾಮ ಶೆಟ್ಟಿ (78) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.2ರಂದು ಬೆಳಗಿನ ಜಾವ ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 2 Feb 2026 9:22 pm

ಉಡುಪಿ| ಕಳವು ಪ್ರಕರಣ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಉಡುಪಿ: ಮಲ್ಪೆ ಬೀಚ್‌ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆಶಾ ಸುಮಿತ್ರ ಕೃಷ್ಣ ಹಾಗೂ ರೇಖಾ ದಾನಪ್ಪ ಬಂಧಿತ ಆರೋಪಿಗಳು. ಇವರು ಮಲ್ಪೆ ಬೀಚ್‌ನಲ್ಲಿ ಕಳವು ಪ್ರಕರಣ ದಲ್ಲಿ ಭಾಗಿಯಾಗಿ ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಇವರನ್ನು ಮಲ್ಪೆ ಠಾಣಾ ಸಿಬ್ಬಂದಿ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರ ತಂಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ.31ರಂದು ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು. ಇವರನ್ನು ಮಂಗಳೂರು ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 2 Feb 2026 9:20 pm

ಮಂಗಳೂರು ಕರಾವಳಿಯನ್ನು ‘ಕಡಲ ಪವನ ಶಕ್ತಿ ಉತ್ಪಾದನಾ ವಲಯವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಸಂಸದ ಬ್ರಿಜೇಶ್ ಚೌಟ ಮನವಿ

ಮಂಗಳೂರು, ಫೆ.2: ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯ ತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’   ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದ ಚೌಟ ಅವರು, ಕಡಲನಗರಿ ಮಂಗಳೂರಿನ ಸಮುದ್ರ ತೀರದಲ್ಲಿ ಪವನ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶವಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ  ವರದಿಯನ್ನು ಉಲ್ಲೇಖಿಸಿ, ಭಾರತದ ಭರವಸೆಯ ಕಡಲ ಪವನ ಇಂಧನ ‘ವಲಯ-2ರಲ್ಲಿ ಮಂಗಳೂರು ಕರಾವಳಿ’ ಗುರುತಿಸಿಕೊಂಡಿದ್ದು, ಮಂಗಳೂರು ಕರಾವಳಿಯು ಸುಮಾರು 6,490 ಚ.ಕಿಮೀ. ಪ್ರದೇಶವು ಪವನ ಇಂಧನ ಉತ್ಪಾದನೆಗೆ ಹೆಚ್ಚು ಪೂರಕವಾಗಿದೆ. ಇಲ್ಲಿ ಭೂಕಂಪನ, ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪಗಳ ಅಪಾಯ ಕಡಿಮೆ ಇರುವುದರಿಂದ ದೀರ್ಘಕಾಲದ ಪವನ ಇಂಧನ ಯೋಜನೆಗಳ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಸುರಕ್ಷಿತ ಪ್ರದೇಶವಾಗಿದೆ. ಹೀಗಾಗಿ, ಮಂಗಳೂರು ಕಡಲ ತೀರವನ್ನು ಪವನ ಶಕ್ತಿ ಉತ್ಪಾದನೆ ತಾಣವಾಗಿ ಅಭಿವೃದ್ಧಿಪಡಿಸಬೇಕೆಂದು ಚೌಟ ಆಗ್ರಹಿಸಿದರು. ನವ ಮಂಗಳೂರು ಬಂದರಿನ ಕಾರ್ಯತಂತ್ರದ ಪ್ರಯೋಜನವನ್ನು ಒತ್ತಿ ಹೇಳಿದ ಚೌಟ ಅವರು, ಅತ್ಯುತ್ತಮ ಮೂಲಸೌಕರ್ಯ, ಬಹು ಬರ್ತ್‌ಗಳು, ಹೆಚ್ಚಿನ ಸರಕು ನಿರ್ವಹಣಾ ಸಾಮರ್ಥ್ಯ ಸೇರಿದಂತೆ ಅತ್ಯಾಧುನಿಕ ಸೌಲಭ್ಯ ಗಳು ಈ ಬಂದರಿನಲ್ಲಿದೆ. ವಿಂಡ್ ಟರ್ಬೈನ್‌ಗಳಂತಹ ಬೃಹತ್ ಯಂತ್ರೋಪಕರಣಗಳ ಸಾಗಣೆ ಮತ್ತು ಜೋಡಣೆಗೆ ಇಲ್ಲಿ ಪೂರಕ ವ್ಯವಸ್ಥೆಯಿದೆ. ಇದು ಕಡಲ ಪವನ ಇಂಧನ ಯೋಜನೆಗಳ ನಿರ್ವಹಣೆಗೆ ಒಂದು ಪ್ರಮುಖ ಲಾಜಿಸ್ಟಿಕ್ ನೆಲೆಯನ್ನಾಗಿ ಪರಿವರ್ತಿಸಬಹುದು ಎಂದು ಅಭಿಪ್ರಾಯಪಟ್ಟರು. ಎಂಆರ್ ಪಿಎಲ್, ಒಎಂಪಿಎಲ್ , ಯುಪಿಸಿಎಲ್ ಮತ್ತು ಮಂಗಳೂರು ಎಸ್‌ಇಝಡ್ ನಂತಹ ಬೃಹತ್ ಕೈಗಾರಿಕೆಗಳ ಕೇಂದ್ರವಾಗಿರುವುದರಿಂದ, ಇಲ್ಲಿ ತಯಾರಾಗುವ ಗ್ರೀನ್ ಎನರ್ಜಿಗೂ ಸ್ಥಳೀಯವಾಗಿಯೇ ದೊಡ್ಡ ಮಟ್ಟದ ಮಾರುಕಟ್ಟೆ ಲಭ್ಯವಿದೆ. ಹೀಗಾಗಿ ಕಡಲ ಪವನ ಶಕ್ತಿಯ ಉತ್ಪಾದನೆಯಾಗುವ ವಿದ್ಯುತ್‌ನ್ನು ನೇರವಾಗಿ ಮಾರಾಟ ಮಾಡಲು ಸುಲಭವಾಗುತ್ತದೆ. ಇವುಗಳೊಂದಿಗೆ ನೇರ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿ ಕೊಳ್ಳುವ ಮೂಲಕ ಯೋಜನೆಯ ಆರ್ಥಿಕ ಸುಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು ಮತ್ತು ತ್ವರಿತ ಅನುಷ್ಠಾನಕ್ಕೂ ಇದು ಸಹಕಾರಿ ಎಂದು ಚೌಟ ಪ್ರತಿಪಾದಿಸಿದ್ದಾರೆ. ಕರ್ನಾಟಕಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, 2025ರ ಆರಂಭದಲ್ಲಿ ರಾಜ್ಯದ ಗರಿಷ್ಠ ವಿದ್ಯುತ್ ಬೇಡಿಕೆಯು 18,000 ಮೆಗಾವ್ಯಾಟ್ ದಾಟಿದ್ದು, ಇಂಥಹ ಸಂದರ್ಭದಲ್ಲಿ ಪರ್ಯಾಯ ಇಂಧನ ಉತ್ಪಾದಿಸುವ ಪವನ ಶಕ್ತಿಯನ್ನು ಉತ್ತೇಜಿ ಸುವ ಅಗತ್ಯವಿದೆ. ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗವು ತುಲನಾತ್ಮಕವಾಗಿ ಕಡಿಮೆ ಇದ್ದರೂ, ಅರಬ್ಬಿ ಸಮುದ್ರದಲ್ಲಿ ಕಡಲಾಚೆಯ ಗಾಳಿ ಇಂಧನ ಅಭಿವೃದ್ಧಿಪಡಿಸುವುದು ದಕ್ಷಿಣ ಭಾರತದ ಇಂಧನ ಭದ್ರತೆಗೆ ಅತ್ಯಗತ್ಯ ವಾಗಿದೆ. ಜೊತೆಗೆ ಬಂಗಾಳ ಕೊಲ್ಲಿಯು ಸದಾ ಚಂಡಮಾರುತದ ಭೀತಿ ಎದುರಿಸುತ್ತಿರುವುದರಿಂದ, ಅರಬ್ಬಿ ಸಮುದ್ರದ ಈ ವಲಯವು ಪವನ ಶಕ್ತಿಯ ಬಲವರ್ಧನೆಗೆ ಹೆಚ್ಚು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ. 2030ರ ವೇಳೆಗೆ 500 ಜಿಡಬ್ಲ್ಯು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಭಾರತದ ಗುರಿಯನ್ನು ತಲುಪಲು ಮಂಗಳೂರು ಪವನ ಶಕ್ತಿ ಉತ್ಪಾದನಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ತಕ್ಷಣವೇ ಸಂಪನ್ಮೂಲಗಳ ಮೌಲ್ಯಮಾಪನ, ಯೋಜನೆಗಳ ಪ್ರಾಯೋಗಿಕ ಅನುಷ್ಠಾನ ಮತ್ತು ಕೈಗಾರಿಕಾ ಸಮಾಲೋಚನೆ ಗಳನ್ನು ನಡೆಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನವೀಕರಿಸಬಹುದಾದ ಇಂಧನ ಸಚಿವಾಲಯವನ್ನು ಸಂಸದ ಚೌಟ ಅವರು ಸದನದಲ್ಲಿ ಆಗ್ರಹಿಸಿದರು.

ವಾರ್ತಾ ಭಾರತಿ 2 Feb 2026 9:07 pm

ಫೆ.12: ಕೇಂದ್ರ ಸರಕಾರದ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಜೆಸಿಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಉಡುಪಿ, ಜ.2: ದೇಶದ ಕೋಟ್ಯಾಂತರ ಮಂದಿ ಕಾರ್ಮಿಕರನ್ನು ಮಾಲಕರ ಗುಲಾಮರನ್ನಾಗಿಸುವ ಕೇಂದ್ರದ ನಾಲ್ಕು ನೂತನ ಕಾಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ಬೃಹತ್ ಪ್ರತಿಭಟನೆಯನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊ ಳ್ಳಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ. ಉಡುಪಿಯ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ಅಲ್ಲದೇ ರೈತ, ಕಾರ್ಮಿಕ, ಕೃಷಿ ಕೂಲಿಕಾರ, ಮಹಿಳಾ, ವಿದ್ಯಾರ್ಥಿ-ಯುವಜನ, ವಿಮಾ, ಬ್ಯಾಂಕ್ ನೌಕರರ ಸಂಘಗಳು, ದಲಿತ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲವನ್ನು ಸಾರಿವೆ ಎಂದು ಹೇಳಿದರು. ದೇಶದಲ್ಲಿದ್ದ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರ ಅವುಗಳನ್ನು 4 ಕಾರ್ಮಿಕ ಸಂಹಿತೆಗಳನ್ನಾಗಿಸಿ ಕಳೆದ ನವೆಂಬರ್ 21ರಂದು ಅಧಿಕೃತವಾಗಿ ಜಾರಿಗೊಳಿಸುವ ಪ್ರಕಟಣೆ ನೀಡಿದೆ. ಈ ಸಂಹಿತೆಗಳು 2019 ಮತ್ತು 2020ರಲ್ಲೇ ಲೋಕಸಭೆಯಲ್ಲಿ ಪಾಸಾಗಿದ್ದರೂ, ದೇಶಾದ್ಯಂತ ಕಾರ್ಮಿಕ ವರ್ಗ ಇವುಗಳ ವಿರುದ್ಧ ನಡೆಸಿದ ಸತತ ಹೋರಾಟ ದಿಂದ ಅದನ್ನು ಜಾರಿಗೊಳಿಸಲು ಸಾದ್ಯವಾಗಿರಲಿಲ್ಲ ಎಂದವರು ಹೇಳಿದರು. ಆದರೆ ಇದೀಗ ಕೇಂದ್ರದ ಬಿಜೆಪಿ ಸರಕಾರ ಕಾರ್ಪೋರೇಟ್ ಕಂಪೆನಿಗಳ ಹಾಗೂ ಬಂಡವಾಳಗಾರರ ಒತ್ತಡದಿಂದ ಈ ಎಲ್‌ಪಿಜಿ ನೀತಿಗಳನ್ನು ಆದ್ಯತೆ ಮೇಲೆ ಜಾರಿಗೊಳಿಸಲು ಮುಂದಾಗಿವೆ. ಇದರಿಂದಾಗಿ ವಿದ್ಯುತ್, ದೂರ ಸಂಪರ್ಕ, ಕಲ್ಲಿದ್ದಲು, ಗಣಿಗಾರಿಕೆ, ರೈಲ್ಲ, ಹೆದ್ದಾರಿ, ಬಂದರುಗಳೆಲ್ಲವೂ ಖಾಸಗಿ ಕಾರ್ಪೋರೇಟ್ ಕಂಪೆನಿಗಳಿಗೆ ವರ್ಗಾಯಿಸಲಾಗುತ್ತಿದೆ ಎಂದರು. ಬಿಜೆಪಿ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆ ಜಾರಿಗೊಂಡರೆ ಬಂಡವಾಳಶಾಹಿಗಳಿಗೆ ಅಗ್ಗದ ದರದಲ್ಲಿ ಕಾರ್ಮಿಕರನ್ನು ಮಾರಾಟ ಮಾಡಲು ಅವಕಾಶವಿದೆ. ಇದರಿಂದ ಶ್ರೀಮಂತರು ಹಾಗೂ ಬಡವರ ನಡುವಿನ ಅಸಮಾನತೆ ಇನ್ನಷ್ಟು ಹೆಚ್ಚುವುದು ಖಂಡಿತ ಎಂದು ಸುರೇಶ್ ಕಲ್ಲಾಗರ ಹೇಳಿದರು. ಜೆಟಿಸಿ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕ ಕವಿರಾಜ್ ಕಾಂಚನ್ ಮಾತನಾಡಿ, ಫೆ.12ರಂದು ಉಡುಪಿ ಜಿಲ್ಲೆಯ ಉಡುಪಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ (ಬೆಳಗ್ಗೆ 10:30), ಕಾರ್ಕಳ ಬಸ್ ನಿಲ್ದಾಣದ ಬಳಿ (10:00), ಕುಂದಾಪುರದ ಸ್ತ್ರ ಸರ್ಕಲ್ ಬಳಿ (9:30) ಹಾಗೂ ಬೈಂದೂರಿನ ತಹಶೀಲ್ದಾರ್ ಕಚೇರಿ ಎದುರು (9:30)ಕ್ಕೆ ಪ್ರತಿಭಟನೆ ನಡೆಯಲಿದೆ ಎಂದರು. ಉಡುಪಿಯಲ್ಲಿ ಬೆಳಗ್ಗೆ 9:30ಕ್ಕೆ ಜೆಸಿಟಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಳ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಪ್ರಾರಂಭಗೊಂಡು ಕೆಎಂ ಮಾರ್ಗ, ಕೋರ್ಟ್ ರೋಡ್, ಜೋಡುಕಟ್ಟೆ ಮಾರ್ಗವಾಗಿ ಸಾಗಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಮುಕ್ತಾಯಗೊಂಡು ಅಲ್ಲೇ ಬಹಿರಂಗ ಸಭೆ ನಡೆಯಲಿದೆ ಎಂದರು. ಪತ್ರಿಕಾಗೋಷಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ, ಇಂಟಕ್‌ನ ಕಿರಣ್ ಹೆಗ್ಡೆ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ವಿ, ಎಐಟಿಯುಸಿಯ ಯು.ಶಿವಾನಂದ ಉಪಸ್ಥಿತರಿದ್ದರು.  

ವಾರ್ತಾ ಭಾರತಿ 2 Feb 2026 9:03 pm

ಗುವಾಹಾಟಿ: ಒಡಿಶಾ ಪರಬ್ 2026 ಸಮಾಪ್ತಿ: ಈಶಾನ್ಯ ಭಾರತದೊಂದಿಗೆ ಸಾಂಸ್ಕೃತಿಕ, ಪ್ರವಾಸೋದ್ಯಮ, ವ್ಯಾಪಾರ ಬಾಂಧವ್ಯ ಬಲ

Odisha Parab 2026: ಒಡಿಶಾ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಒಡಿಶಾ ಪರಬ್ 2026 ಎನ್ನುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದೆ. ಮೂರು ದಿನಗಳ ಕಾಲ ನಡೆದ ಈ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಪ್ರದರ್ಶನವು ಒಡಿಶಾ ಮತ್ತು ಈಶಾನ್ಯ ಭಾರತದ ನಡುವೆ ಸಾಂಸ್ಕೃತಿಕ ಬಾಂಧವ್ಯ, ಅನಿವಾಸಿ (ವಲಸಿಗರು) ಸಮುದಾಯದ ಸಂಪರ್ಕ ಹಾಗೂ ಪ್ರವಾಸೋದ್ಯಮ ಮತ್ತು

ಒನ್ ಇ೦ಡಿಯ 2 Feb 2026 8:56 pm

ಲೋಕಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾದ ನರವಾಣೆ ಅವರ ಅಪ್ರಕಟಿತ ಪುಸ್ತಕದಲ್ಲೇನಿದೆ?

ರಾಜನಾಥ್ ಸಿಂಗ್ , ರಾಹುಲ್ ಗಾಂಧಿ | Photo Credit : PTI  ಕಾರವಾನ್ ಲೇಖನದಲ್ಲಿ ಮುಖ್ಯವಾಗಿ ಉಲ್ಲೇಖಿಸಲಾಗಿರುವ ವಿವಾದಾತ್ಮಕ ಪುಸ್ತಕದ ಕೆಲವು ಭಾಗಗಳಲ್ಲಿ 2020 ಆಗಸ್ಟ್ 31ರಂದು ನರವಾಣೆ ಕರ್ತವ್ಯದಲ್ಲಿರುವಾಗ ಎದುರಿಸಿದ ಹತಾಶ ಚಿತ್ರಣವನ್ನು ವಿವರಿಸಲು ಪ್ರಯತ್ನಿಸಿದೆ. ಲೋಕಸಭೆಯಲ್ಲಿ ಸೋಮವಾರ ನಡೆದ ಇಡೀ ಚರ್ಚೆಯು ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ” ಎನ್ನುವ ಅಪ್ರಕಟಿತ ಪುಸ್ತಕದ ಸುತ್ತ ತಿರುಗಿದೆ. ಪೆಂಗ್ವಿನ್ ಬುಕ್ಸ್ ಸಂಸ್ಥೆಯ ಪ್ರಕಾಶಿತ ಪ್ರಶ್ನಾರ್ಹ ಆತ್ಮಚರಿತ್ರೆ 2024ರಲ್ಲಿ ಬಿಡುಗಡೆಯಾಗಬೇಕತ್ತು. ಅಮೆಝಾನ್ ಪುಸ್ತಕದ ಪಟ್ಟಿಯಲ್ಲಿದ್ದರೂ ಇನ್ನೂ ಅಧಿಕೃತವಾಗಿ ಬಿಡುಗಡೆಯಾಗಿಲ್ಲ. ಫೆ.1ರಂದು ‘ದಿ ಕಾರವಾನ್‌’ ನಿಯತಕಾಲಿಕೆಯು “ನರವಾಣೆಯ ಸತ್ಯದ ಕ್ಷಣ” ಎನ್ನುವ ಶೀರ್ಷಿಕೆಯಡಿ ಲೇಖನವನ್ನು ಪ್ರಕಟಿಸುವ ಮೂಲಕ ಮರೆತು ಹೋಗಿರುವ ಪುಸ್ತಕದ ಚರ್ಚೆಯನ್ನು ಮತ್ತೆ ಮುಂಚೂಣಿಗೆ ತಂದಿದೆ. ಲೇಖನದ ಸಾರಾಂಶ ಪಠ್ಯವು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ನೇರವಾಗಿ ಉಲ್ಲೇಖಿಸಿರುವುದು ಆರೋಪ- ಪ್ರತ್ಯಾರೋಪಗಳ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದೆ. “ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆಯು ಕೇಂದ್ರ ಸರ್ಕಾರವು ಚೀನಾ ಗಡಿ ಬಿಕ್ಕಟ್ಟನ್ನು ಹೇಗೆ ತಿರುಚಿದೆ ಎಂಬುದನ್ನು ಬಹಿರಂಗಪಡಿಸುತ್ತದೆ” ಎಂದು ಸಾರಾಂಶದಲ್ಲಿ ಹೇಳಲಾಗಿದೆ. ಮನೋಜ್ ಮುಖಂದ್ ನರವಾಣೆಯವರು ತಮ್ಮ ಅನುಭವವನ್ನು ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ ಎಂದು ಲೇಖನ ಹೇಳಿದೆ. ಇದೀಗ ನಿವೃತ್ತ ಭಾರತೀಯ ಸೇನಾ ಜನರಲ್ ಆಗಿರುವ ನರವಾಣೆ 2019ರ ಡಿಸೆಂಬರ್‌ನಿಂದ 2022 ಎಪ್ರಿಲ್ ನಡುವೆ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿದ್ದರು. ಕಾರವಾನ್ ಲೇಖನದಲ್ಲಿ ಮುಖ್ಯವಾಗಿ ಉಲ್ಲೇಖಿಸಲಾಗಿರುವ ವಿವಾದಾತ್ಮಕ ಪುಸ್ತಕದ ಕೆಲವು ಭಾಗಗಳಲ್ಲಿ 2020 ಆಗಸ್ಟ್ 31ರಂದು ನರವಾಣೆ ಕರ್ತವ್ಯದಲ್ಲಿರುವಾಗ ಎದುರಿಸಿದ ಹತಾಶ ಚಿತ್ರಣವನ್ನು ವಿವರಿಸಲು ಪ್ರಯತ್ನಿಸಿದೆ. “ಫೂರ್ವ ಲಡಾಖ್‌ನಲ್ಲಿ ನಾಲ್ಕು ಚೀನೀ ಟ್ಯಾಂಕ್‌ಗಳು ಪದಾತಿ ಸೈನ್ಯದ ಬೆಂಬಲದೊಂದಿಗೆ ರೆಚಿನ್ ಲಾ ಕಡೆಗೆ ಕಡಿದಾದ ಪರ್ವತದ ಹಾದಿಯಲ್ಲಿ ಮುಂದೆ ಬರಲಾರಂಭಿಸಿದ್ದವು. ವಿವಾದಿತ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಈ ಚಲನವಲನವನ್ನು ಲೆಫ್ರಿನೆಂಟ್ ಜನರಲ್ ಯೋಗೇಶ್ ಜೋಶಿ ಆಗಿನ ಸೇನಾ ಮುಖ್ಯಸ್ಥರಿಗೆ ವರದಿ ಮಾಡಿದ್ದಾರೆ” ಎಂದು ನಿಯತಕಾಲಿಕದ ಲೇಖನ ತಿಳಿಸಿದೆ. “ಸೇನಾ ಮುಖ್ಯಸ್ಥರು ತಕ್ಷಣ ನಾಯಕರಿಗೆ ಕರೆ ಮಾಡಲಾರಂಭಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮೊದಲಾದವರಿಗೆ ಕರೆ ಮಾಡಿದ್ದಾರೆ” ಎಂದು ಕಾರವಾನ್ ಲೇಖನ ಹೇಳಿದೆ. ಈ ಮೊದಲು ಇಂಡಿಯನ್ ಎಕ್ಸ್‌ಪ್ರೆಸ್ ಕೂಡ ವರದಿ ಮಾಡಿರುವಂತೆ ರಾಜನಾಥ್ ಸಿಂಗ್ ಅವರು ಪ್ರಧಾನಿ ಮೋದಿಯವರ ಅನುಮೋದನೆಯನ್ನು ತಿಳಿಸಿದ್ದು, ಆಗಿನ ಸೇನಾ ಮುಖ್ಯಸ್ಥರಿಗೆ “ನಿಮಗೆ ಏನು ಸೂಕ್ತವೆಂದು ಅನಿಸುತ್ತದೆಯೋ ಅದನ್ನು ಮಾಡಿ (Jo ucchit samjho woh karo)” ಎಂದು ಹೇಳಿದ್ದಾರೆ. #WATCH | Delhi: Lok Sabha LoP and Congress MP Rahul Gandhi says, This is not me, this is what the Army Chief (former) has written in a book. The book is not being allowed to be published. It is languishing, and this is the Army Chief's perspective. Why are they so scared of the… pic.twitter.com/GnWYRAPYIA — ANI (@ANI) February 2, 2026 ನರವಾಣೆ ಪುಸ್ತಕ ಪ್ರಕಟವಾಗದೆ ಇರಲು ಕಾರಣವೇನು? ಅತ್ಯಂತ ಸೂಕ್ಷ್ಮವಾದ ಸೇನಾ ಕಾರ್ಯಾಚರಣೆಗಳು ಮತ್ತು ಅದನ್ನು ಸರ್ಕಾರ ನಿಭಾಯಿಸಿರುವ ರೀತಿಯ ಕುರಿತ ವಿವರಗಳನ್ನು ಬಹಿರಂಗಪಡಿಸಿದ ಕಾರಣದಿಂದ ಪುಸ್ತಕದ ಬಿಡುಗಡೆ ಅನಿಶ್ಚಿತತೆಯಲ್ಲಿರುವುದರಿಂದ ನರವಾಣೆಯ ಮೊದಲ ಪುಸ್ತಕ ವಿವಾದಕ್ಕೆ ಸಿಲುಕಿದೆ. ಒಂದು ಪುಸ್ತಕದಲ್ಲಿ ಸೂಕ್ಷ್ಮ ಮಾಹಿತಿ ಇರುವಾಗ ಅದರ ಸಾರ್ವಜನಿಕ ಬಿಡುಗಡೆಗೆ ಸರ್ಕಾರದ ಅನುಮೋದನೆಗೆ ಕಾಯುವುದು ಸಾಮಾನ್ಯ ಕಾರ್ಯವಿಧಾನವಾಗಿದ್ದರೂ, ಒಂದು ವರ್ಷಕ್ಕೂ ಹೆಚ್ಚು ಅವಧಿ ಕಳೆದರೂ ಪುಸ್ತಕವನ್ನು ಇನ್ನೂ ಪ್ರಕಟಿಸಲಾಗಿಲ್ಲ. ನರವಾಣೆಯ ಆತ್ಮಚರಿತ್ರೆ ರಕ್ಷಣಾ ಸಚಿವಾಲಯದ ಆದೇಶದ ಮೇರೆಗೆ ಪರಿಶೀಲನೆಗೆ ಒಳಗಾಗುತ್ತಿದೆ ಎಂದು ಹೇಳಲಾಗಿದೆ. ಆತ್ಮಚರಿತ್ರೆಯಲ್ಲಿ 2022ರ ಅಗ್ನಿಪಥ್ ನೇಮಕಾತಿ ಯೋಜನೆಯ ಕುರಿತಂತೆ ಅಭಿಪ್ರಾಯಗಳನ್ನೂ ಸಹ ಒಳಗೊಂಡಿದೆ ಎಂದು ವರದಿಯಾಗಿದೆ. ತಮ್ಮ ಪುಸ್ತಕ ಪ್ರಕಟವಾಗದೆ ಇರುವ ಬಗ್ಗೆ ನರವಾಣೆ ಬಹಿರಂಗವಾಗಿ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, “ನನ್ನ ಕೆಲಸ ಪುಸ್ತಕ ಬರೆಯವುದು ಮಾತ್ರವಾಗಿದೆ. ಅದನ್ನು ಪ್ರಕಟಿಸುವ ಜವಾಬ್ದಾರಿ ಪ್ರಕಾಶಕರದ್ದು” ಎಂದು ಹೇಳಿದ್ದಾರೆ. “ರಕ್ಷಣಾ ಸಚಿವಾಲಯದ ಬಳಿ ಅನುಮೋದನೆ ಕೇಳುವುದು ನನ್ನ ಕೆಲಸವಲ್ಲ. ಇದೀಗ ಪುಸ್ತಕ ಪ್ರಕಾಶಕರು ಮತ್ತು ರಕ್ಷಣಾ ಸಚಿವಾಲಯದ ಮುಂದೆ ಇದೆ. ಸಚಿವಾಲಯಕ್ಕೆ ಒಪ್ಪಿಗೆಯಾದಾಗ ಅನುಮೋದನೆ ನೀಡಬಹುದು” ಎಂದು ಅವರು ಹೇಳಿದ್ದರು.

ವಾರ್ತಾ ಭಾರತಿ 2 Feb 2026 8:55 pm

ʼಲ್ಯಾಪ್‍ಟಾಪ್ ಕೊಡಿʼ ಎಂದು ಮನವಿ ಮಾಡಿದ ಪ್ರಭು ಚೌಹಾಣ್; ನೀವೇ ಬಳಸುವುದಾದರೆ ಐಪ್ಯಾಡ್ ನೀಡುವ ಚಿಂತನೆ ಇದೆ ಎಂದ ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು : ವಿಧಾನಸಭೆಯ ಪ್ರತಿ ಸದಸ್ಯರಿಗೆ(ಶಾಸಕರಿಗೆ) ಐಪ್ಯಾಡ್ ನೀಡುವ ಚಿಂತನೆ ಇದೆ. ಆದರೆ, ಅದನ್ನು ಶಾಸಕರು ಮಾತ್ರ ಬಳಕೆ ಮಾಡಬೇಕೆಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಕಲಾಪದ ಆರಂಭದಲ್ಲಿ ಬಿಜೆಪಿ ಸದಸ್ಯ ಪ್ರಭು ಚೌಹಾಣ್ ವಿಷಯ ಪ್ರಸ್ತಾಪಿಸಿ, ಎಲ್ಲ ಸದಸ್ಯರಿಗೆ ಲ್ಯಾಪ್‍ಟಾಪ್ ಕೊಡಿ ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಖಾದರ್, ತಮಗೆ ಲ್ಯಾಪ್‍ಟಾಪ್ ಅಲ್ಲ, ಐ ಪ್ಯಾಡ್ ನೀಡುವ ಆಲೋಚನೆ ಇದೆ. ಆದರೆ, ಅದನ್ನು ಶಾಸಕರು ತಾವು ಬಳಸದೆ ಸ್ನೇಹಿತರಿಗೆ, ಕುಟಂಬಸ್ಥರಿಗೆ, ಆಪ್ತ ಸಹಾಯಕರಿಗೆ ನೀಡುವುದಾದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಖುದ್ದಾಗಿ ಶಾಸಕರೇ ಬಳಸುವುದಾದರೆ ನೀಡಲಾಗುವುದು ಎಂದು ತಿಳಿಸಿದರು. ಐಪ್ಯಾಡ್ ಬಳಕೆ ಮಾಡಲು ಶಾಸಕರಿಗೆ ಮೂರು ದಿನಗಳ ತರಬೇತಿ ನೀಡಲಾಗುವುದು. ಅದರಲ್ಲಿ ಭಾಗವಹಿಸಿದವರಿಗೆ ಮಾತ್ರ ಐಪ್ಯಾಡ್ ನೀಡಲಾಗುವುದು ಎಂದು ಸಭಾಧ್ಯಕ್ಷರು ಹೇಳಿದರು.

ವಾರ್ತಾ ಭಾರತಿ 2 Feb 2026 8:52 pm

ಬಳ್ಳಾರಿ | ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ, ಮಾರಾಟ ಮೇಳಕ್ಕೆ ಚಾಲನೆ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ, ನಗರದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ (ಫೆ.1ರಿಂದ 3ರವರೆಗೆ) ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರೀಸ್ ಸುಮೇರ್ ಅವರು ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಮೇಳದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿದ ವಿವಿಧ ಬಗೆಯ ಕೈಗಾರಿಕಾ ಹಾಗೂ ಗೃಹೋಪಯೋಗಿ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಪಂ ಯೋಜನಾ ನಿರ್ದೇಶಕ ಬಸವರಾಜ ಹಿರೇಮಠ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್ ಸೇರಿದಂತೆ ಎನ್‌ಆರ್‌ಎಲ್‌ಎಂ ಯೋಜನೆಯ ಸಿಬ್ಬಂದಿಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 2 Feb 2026 8:46 pm

‘ಬಂಗ ಭವನ’ದಲ್ಲಿ ಎಸ್‌ಐಆರ್ ಸಂತ್ರಸ್ತ ನಿವಾಸಿಗಳಿಗೆ ದಿಲ್ಲಿ ಪೊಲೀಸರಿಂದ ಕಿರುಕುಳ, ಬೆದರಿಕೆ: ಮಮತಾ ಬ್ಯಾನರ್ಜಿ ಆರೋಪ

ಹೊಸದಿಲ್ಲಿ: ದಿಲ್ಲಿಯಲ್ಲಿರುವ ‘ಬಂಗ ಭವನ’ದ ಹೊರಗಡೆ ಭಾರೀ ಪ್ರಮಾಣದಲ್ಲಿ ಪೊಲೀಸರ ನಿಯೋಜನೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳಿಗೆ ನೀಡಲಾಗುತ್ತಿದೆ ಎನ್ನಲಾದ ಕಿರುಕುಳವನ್ನು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಭಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಗ ಭವನದಲ್ಲಿ ವಾಸಿಸುತ್ತಿರುವ ಪಶ್ಚಿಮ ಬಂಗಾಳದ ಜನರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಹೇಳಿದರು ಹಾಗೂ ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸ್ ನಿಯೋಜನೆಯನ್ನು ಪ್ರಶ್ನಿಸಿದರು. ಆದರೆ, ನಾನು ಪೊಲೀಸರನ್ನು ದೂರುವುದಿಲ್ಲ, ನಾನು ದೂರುವುದು ‘‘ಮೇಲಿನವರನ್ನು’’ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ರನ್ನು ಭೇಟಿಯಾಗಲು ಮಮತಾ ಬ್ಯಾನರ್ಜಿ ರವಿವಾರ ಹೊಸದಿಲ್ಲಿಗೆ ಬಂದಿದ್ದಾರೆ. ಅವರು ಹೊಸದಿಲ್ಲಿಯಲ್ಲಿರುವ ಪಶ್ಚಿಮಬಂಗಾಳ ಸರಕಾರದ ಅತಿಥಿಗೃಹ ಬಂಗ ಭವನದಲ್ಲಿ ತಂಗಿದ್ದಾರೆ. ಕಟ್ಟಡದ ಹೊರಗೆ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಅವರು, ನಾನಿಲ್ಲಿಗೆ ಬಂದಿರುವುದು ಪ್ರತಿಭಟನೆ ನಡೆಸಲು ಅಲ್ಲ, ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಿಂದ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ನ್ಯಾಯ ಕೊಡಿಸುವುದಕ್ಕಾಗಿ ಎಂದು ಅವರು ಹೇಳಿದರು. ‘‘ಪಶ್ಚಿಮಬಂಗಾಳದ ಜನರಿಗೆ ಬಂಗ ಭವನದಲ್ಲಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ದಾವೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ನಮಗೆ ಚುನಾವಣಾ ಆಯೋಗವನ್ನು ಭೇಟಿಯಾಗಲಿಕ್ಕಿದೆ. ಅಧಿಕೃತ ಅನುಮೋದನೆ ಪಡೆದುಕೊಂಡೇ ನಾವು ಇಲ್ಲಿಗೆ ಬಂದಿದ್ದೇವೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರಣಕ್ಕಾಗಿ ಜನರು ಮೃತರಾಗಿದ್ದಾರೆ. ಅವರ ಕುಟುಂಬಗಳು ಮಾಧ್ಯಮಗಳೊಂದಿಗೆ ಮಾತನಾಡಬಾರದೇ?’’ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಪ್ರಶ್ನಿಸಿದರು.

ವಾರ್ತಾ ಭಾರತಿ 2 Feb 2026 8:38 pm

ಕೇಂದ್ರ-ರಾಜ್ಯ ಸರಕಾರಗಳು ಒಟ್ಟಾಗಿ ಕೆಲಸ ಮಾಡಬೇಕು : ಆರ್.ಅಶೋಕ್

ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ.ಆದರೆ, ಕರ್ನಾಟಕದ ಕಾಂಗ್ರೆಸ್ ಸರಕಾರ ಕೇಂದ್ರದ ವಿರುದ್ದ ಪದೇ ಪದೇ ಕಾಲು ಕೆರೆದು ಜಗಳವಾಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು ಕೇಂದ್ರದೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿದ್ದರಿಂದಾಗಿ ಬೆಂಗಳೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೊ ರೈಲು ಅನುಷ್ಠಾನಕ್ಕೆ ಬಂದವು. ಆದರೆ, ಕಾಲು ಕೆರೆದು ಜಗಳವಾಡುವುದರಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಉಲ್ಲೇಖಿಸಿದರು. ರಾಜ್ಯಪಾಲರ ಭಾಷಣದಲ್ಲಿ 12 ಪುಟಗಳಷ್ಟು ವಿಬಿ-ಜಿ ರಾಮ್‍ಜಿ ಯೋಜನೆಯನ್ನು ಟೀಕಿಸಲು ಬಳಕೆ ಮಾಡಿದ್ದಾರೆ ಎಂದು ಟೀಕಿಸಿದರು. ಆಗ ಸಚಿವ ರಾಮಲಿಂಗಾರೆಡ್ಡಿ ಮಧ್ಯಪ್ರವೇಶಿಸಿ, ವಿಬಿ ಜಿ ರಾಮ್‍ಜಿ ಯಲ್ಲಿರುವುದು ಶ್ರೀರಾಮನ ಹೆಸರಲ್ಲ ಎಂದು ಉಲ್ಲೇಖಿಸಿದರು.ಇದಕ್ಕೆ ಸಚಿವ ಭೈರತಿ ಸುರೇಶ್ ದನಿಗೂಡಿಸಿ ಬಿಜೆಪಿಯವರು ಎಲ್ಲದಕ್ಕೂ ದೇವರನ್ನೆ ಎಳೆದು ತರುವುದು ಏಕೆ ಎಂದು ಪ್ರಶ್ನಿಸಿದರು. ಆಗ ಬಿಜೆಪಿ ಸದಸ್ಯ ಸುರೇಶ್‍ಕುಮಾರ್, ರಾಜ್ಯಪಾಲರ ಭಾಷಣದಲ್ಲಿ ವಿಬಿ-ಜಿ ರಾಮ್ ಜಿ ಅನ್ನು ಕಾಂಗ್ರೆಸ್ ಸರಕಾರ ವಿಬಿ ಗ್ರಾಮ್ ಜೀ ಎಂದು ಬದಲಾವಣೆ ಮಾಡಿದೆ. ರಾಮನ ಕಂಡರೆ ಇವರಿಗೆ ಸಹನೆ ಇಲ್ಲ ಎಂದರು. ರಾಮಲಿಂಗಾರೆಡ್ಡಿ ಅವರ ಹೆಸರಿನಲ್ಲಿಯೇ ರಾಮ ಇದ್ದಾನೆ ಎಂದು ಭೈರತಿ ಸುರೇಶ್ ಹೇಳಿದಾಗ, ಅಶೋಕ್ ಅವರು ಇವರೇ ಆಗಿದ್ದರೆ ರಾಮನ ಹೆಸರು ಇಟ್ಟುಕೊಳ್ಳುತ್ತಿರಲಿಲ್ಲ. ಅವರ ತಂದೆ ನಾಮಕರಣ ಮಾಡಿದ್ದಕ್ಕೆ ಆ ಹೆಸರು ಉಳಿದಿದೆ ಎಂದು ಅಶೋಕ್ ಲೇವಡಿ ಮಾಡಿದರು.

ವಾರ್ತಾ ಭಾರತಿ 2 Feb 2026 8:35 pm

ಫೆ.6: ರಾಜ್ಯಾದ್ಯಂತ ‘ಕರಿಕಾಡ’ ಸಿನಿಮಾ ಬಿಡುಗಡೆ

ಮಂಗಳೂರು, ಫೆ.2: ‘‘ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್‌ಗಳಲ್ಲಿ ಮಾಡಲಾಗುತ್ತದೆ. ಎಂದು ಚಿತ್ರದ ನಾಯಕ ನಟ ಕಾಡ ನಟರಾಜ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮಾಹಿತಿ ನೀಡಿದ ಅವರು ನಾಯಕನಟನಾಗಿ ತಾನು ಅಭಿನಯಿಸಿದ್ದು, ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ ಎಂದು ತಿಳಿದರು. ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು ಎಂದು ಮಾಹಿತಿ ನೀಡಿದರು. ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, ‘ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6 ಹಾಡುಗಳನ್ನು ತಾನು ಬರೆದಿದ್ದೇನೆ. ಎಲ್ಲ ಹಾಡುಗಳು ಕೂಡ ಚೆನ್ನಾಗಿ ಮೂಡಿಬಂದಿದ್ದು 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗುವ ಕಂಟೆಂಟ್ ಸಿನಿಮಾದಲ್ಲಿದ್ದು ಜನರು ಇಷ್ಟಪಡುವುದರಲ್ಲಿ ಎರಡು ಮಾತಿಲ್ಲ ಎಂದರು. ನಟಿ ನಿರೀಕ್ಷಾ ಶೆಟ್ಟಿ ಮಾತಾಡಿ, ‘‘ನನ್ನ ಮೊದಲ ಕನ್ನಡ ಸಿನಿಮಾ ಇದಾಗಿದೆ. ಮೊದಲನೇ ಶೋ ಮಂಗಳೂರಲ್ಲಿ ನಡೆಯುತ್ತಿರುವುದು ಇನ್ನಷ್ಟು ಖುಷಿ ತಂದಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ವಿತರಕ ಬಾಲಕೃಷ್ಣ ಶೆಟ್ಟಿ ಪುತ್ತೂರು ಉಪಸ್ಥಿತರಿದ್ದರು. ‘ ಕರಿಕಾಡ’ ಸಿನಿಮಾ ಕುರಿತು ಒಂದಿಷ್ಟು ‘ಕರಿಕಾಡ’ ಇದೊಂದು ಆಕ್ಷನ್ ಥ್ರಿಲ್ಲರ್ ಹಾಗೂ ಮ್ಯೂಸಿಕಲ್ ಜರ್ನಿ ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಬಣ್ಣದ ಲೋಕದ ಕನಸು ಹೊತ್ತು ಕಾಡ ನಟರಾಜ್ ‘ಕರಿಕಾಡ’ ಚಿತ್ರದ ಮೂಲಕ ಪ್ರೇಕ್ಷಕರ ಆಶೀರ್ವಾದ ಗಿಟ್ಟಿಸಿಕೊಳ್ಳಲು ಬರುತ್ತಿದ್ದಾರೆ. ಕಾಡ ನಟರಾಜ್ ಈ ಸಿನಿಮಾದ ನಾಯಕರಾಗಿದ್ದು ಸದಾ ಚಿತ್ರಜಗತ್ತಿನ ಕನಸು ಕಾಣುತ್ತಾ ಐಟಿ ವಲಯದಲ್ಲಿ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಕೆಲಸ ಮಾಡ್ತಿರೋ ಕಲಾವಿದ. 2024 ಆಗಸ್ಟ್ 15ರಂದು ಸಕಲ ತಯಾರಿಗಳೊಂದಿಗೆ ‘ಕರಿಕಾಡ’ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತ ಕೆಲಸಕ್ಕೆ ರಜೆ ಸಿಕ್ಕಾಗೆಲ್ಲ ಅಭಿನಯ ಮಾಡಿ ನವೆಂಬರ್ 2024ರ ಒಳಗೆ ಸಿನಿಮಾದ ಮಾತಿನ ಭಾಗ ಕಂಪ್ಲೀಟ್ ಮಾಡಿಕೊಟ್ಟಿದ್ದಾರೆ ಕಾಡ ನಟರಾಜ್. ತಾವೇ ಈ ಸಿನಿಮಾದ ಕಥೆ ಬರೆದಿರೋದು ವಿಶೇಷ. ರಿದ್ಧಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಕಾಡ ನಟರಾಜ್ ಅವರ ಧರ್ಮಪತ್ನಿ ದೀಪ್ತಿ ದಾಮೋದರ್ ತನ್ನ ಗಂಡನ ಕನಸಿನ ಗುರಿಗೆ ದಾರಿ ತೋರಿಸಿದ್ದಾರೆ. ಈ ದಾರಿಗೆ ಸ್ನೇಹಿತರಾದ ರವಿಕುಮಾರ್ ಎಸ್.ಆರ್ ಸಹ ನಿರ್ಮಾಣದ ಸಾಥ್ ನೀಡಿದ್ದಾರೆ. ಇನ್ನೂ ಚಿತ್ರಕಥೆ ಸಂಭಾಷಣೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಕೆ.ವೆಂಕಟೇಶ್ ಹೊತ್ತಿದ್ದಾರೆ. ‘ಕರಿಕಾಡ’ ಚಿತ್ರಕ್ಕೆ ಅತೀಶಯ್ ಜೈನ್ ಹಾಗೂ ಶಶಾಂಕ್ ಶೇಷಗಿರಿ ಅವರುಗಳ ರಾಗ ಸಂಯೋಜನೆ ಇದೆ. ಶಶಾಂಕ್ ಶೇಷಗಿರಿ ಅವರು ರಾಗ ಸಂಯೋಜನೆ ಜೊತೆಗೆ ಜಬರ್ದಸ್ತ್ ಹಿನ್ನಲೆ ಸಂಗೀತವನ್ನು ನೀಡಿದ್ದಾರೆ. ಕ್ಯಾಮರಾ ಸಾರಥಿಯಾಗಿ ಜೀವನ್ ಗೌಡ ಕೆಲಸ ಮಾಡಿದ್ದಾರೆ. ದೀಪಕ್ ಸಿ.ಎಸ್ ಸಂಕಲನವಿದೆ. ಕರಿಕಾಡ ಕನ್ನಡದ ಜೊತೆಗೆ ತೆಲುಗು, ತಮಿಳ್, ಹಿಂದಿ, ಹಾಗೂ ಮಲಯಾಳಂ ನಲ್ಲೂ ಸಹ ಚಿತ್ರ ಬಿಡುಗಡೆಯಾ ಗುತ್ತಿದ್ದು, ಇದೆ ಫೆಬ್ರವರಿ 6ಕ್ಕೆ ರಾಜ್ಯಾದಂತ ಚಿತ್ರಮಂದಿರಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಈಗಾಗಲೇ ಟೈಟಲ್ ಟೀಸರ್, ಟೀಸರ್ ಹಾಗೂ ಮೂರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರದ ಟ್ರೈಲರ್ ಸಹ ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನದಲ್ಲಿ ಚಿತ್ರ ತಂಡವಿದೆ. ಮಂಜು ಸ್ವಾಮಿ , ಯಶ್ ಶೆಟ್ಟಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ ಕಿಲಾಡಿ ಸೂರ್ಯ , ದಿ.ರಾಕೇಶ್ ಪೂಜಾರಿ , ವಿಜಯ್ ಚಂಡೂರು , ಚಂದ್ರಪ್ರಭ , ಕರಿಸುಬ್ಬು , ಗಿರಿ , ಬಲರಾಜ್ ವಾಡಿ , ಮಾಸ್ಟರ್ ಆರ್ಯನ್ ಹಾಗೂ ಮುಂತಾದವರು ತಾರಾಗಣದಲ್ಲಿದ್ದಾರೆ.

ವಾರ್ತಾ ಭಾರತಿ 2 Feb 2026 8:34 pm

ಫೆ.7: :ಪುಟ್ಟ ರೋಗಿಗಳು ದೊಡ್ಡ ನಿರ್ಧಾರಗಳು - ವೈದ್ಯಕೀಯ ಕಾರ್ಯಾಗಾರ

ಉಳ್ಳಾಲ : ನಾಟೇಕಲ್ ಪ್ರದೇಶದಲ್ಲಿರುವ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ಶಾಸ್ತ್ರ ಮತ್ತು ಚಿಕಿತ್ಸಾ ವಿಭಾಗ ಮತ್ತು ಸೂಕ್ಷ್ಮ ಜೀವ ವಿಜ್ಞಾನ ಶಾಸ್ತ್ರ ವಿಭಾಗ ಹಾಗೂ ಔಷಧ ಶಾಸ್ತ್ರ ವಿಭಾಗ ಸಹಯೋಗದಲ್ಲಿ ಒಂದು ದಿನದ ಅವಧಿಯ ಪುಟ್ಟ ರೋಗಿಗಳು ದೊಡ್ಡ ನಿರ್ಧಾರಗಳು ಶೀರ್ಷಿಕೆಯಡಿ ಸಮಗ್ರ, ವೈದ್ಯಕೀಯ ಕಾರ್ಯಾಗಾರವು ಫೆ.7 ರಂದು ಬೆಳಿಗ್ಗೆ 10:30 ಕ್ಕೆ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರೋ. ಡಾ| ಶಂಶಾದ್ ಖಾನ್ ಹೇಳಿದರು. ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನುರವರು ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ಹಮ್ಮಿಕೊಂಡ ವೈದ್ಯಕೀಯ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ದಲ್ಲಿ ರಾಷ್ಟ್ರ ಮಟ್ಟದ ವಿವಿಧ ವೈದ್ಯಕೀಯ ಪ್ರತಿಷ್ಠಿತ ಸಂಸ್ಥೆಗಳ ನುರಿತ ಮಕ್ಕಳ ಶಾಸ್ತ್ರ ತಜ್ಞರು, ಔಷಧ ಶಾಸ್ತ್ರ ತಜ್ಞರು ಮತ್ತು ಸೂಕ್ಷ್ಮ ಜೀವ ವಿಜ್ಞಾನ ಶಾಸ್ತ್ರ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಮಕ್ಕಳ ಚಿಕಿತ್ಸೆಯಲ್ಲಿ ಅತಿಯಾದ ಅನಾವಶ್ಯಕವಾದ ರೋಗ ನಿರೋಧಕ ಔಷಧ ಬಳಕೆಯಿಂದ, ಬ್ಯಾಕ್ಟಿರಿಯಾಗಳಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಾಗಿದ್ದು, ಈ ಸಮಸ್ಯೆಗೆ ವೈದ್ಯಕೀಯ ವೃತ್ತಿಪರರಲ್ಲಿ ತರ್ಕಬದ್ಧ ಔಷಧೋಪಚಾರ ಮತ್ತು ವೈಜ್ಞಾನಿಕ ಚಿಕಿತ್ಸಾ ಪದ್ಧತಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. ಸುದ್ದಿ ಗೋಷ್ಠಿ ಯಲ್ಲಿ ಔಷಧ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಡಾ| ಯಶ್ವಂತ್ ಕುಮಾರ್ ರೈ, ಮಕ್ಕಳ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ| ಒನೀಲ್ ಫೆರ್ನಾಂಡಿಸ್, ಮಕ್ಕಳ ಶಾಸ್ತ್ರ ತಜ್ಞರು ಡಾ.ಪೃಥ್ವಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 8:31 pm

ಅಹಿಂದ ಸಂಘಟನೆ ಬಲವರ್ಧನೆಗೆ ಜಿಲ್ಲಾದ್ಯಂತ ಚಳವಳಿ: ಡಾ. ನಾಗೇಶ ನಾಯ್ಕ ಕಾಗಾಲ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಹಿಂದ ಸಂಘಟನೆಯನ್ನು ಬಲಗೊಳಿಸಿ ಜನರಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ. ನಾಗೇಶ ನಾಯ್ಕ ಕಾಗಾಲ ಹೇಳಿದರು. ರವಿವಾರ ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಹಿಂದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಭೆಗಳನ್ನು ನಡೆಸಿ ಚರ್ಚೆ ಕೈಗೊಳ್ಳಲಾಗುತ್ತಿದೆ ಎಂದರು. ಯುವಜನರನ್ನು ರಾಜಕೀಯವಾಗಿ ಸಶಕ್ತರನ್ನಾಗಿಸುವುದು, ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಸಾಮಾಜಿಕ ಚಳವಳಿಗಳ ಬಲವರ್ಧನೆಯ ಮೂಲಕ ರಾಜಕೀಯ ಸಬಲೀಕರಣ ಸಾಧಿಸುವ ನಿಟ್ಟಿನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಚಲನಾ ಸಮಿತಿಗಳನ್ನು ರಚಿಸಲಾಗುವುದು. ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳನ್ನು ಆಧಾರವಾಗಿ ತೆಗೆದುಕೊಂಡು ಹೋರಾಟದ ತಳಹದಿ ರೂಪಿಸಲಾಗುವುದು ಎಂದು ಹೇಳಿದರು. ಭಟ್ಕಳದಲ್ಲಿ ಎಲ್ಲಾ ಪ್ರಮುಖರು ಅಹಿಂದ ಸಂಘಟನೆ ಬಲಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕೊರತೆ, ರಾಷ್ಟ್ರೀಯ ಹೆದ್ದಾರಿ ಸಮಸ್ಯೆ, ಇ–ಸ್ವತ್ತು, ಅರಣ್ಯ ಅತಿಕ್ರಮಣ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳಿದ್ದು, ಈ ವಿಷಯಗಳಲ್ಲಿ ಜನಜಾಗೃತಿ ಮೂಡಿಸಿ ಹೋರಾಟ ರೂಪಿಸುವ ಅಗತ್ಯವಿದೆ ಎಂದು ಹೇಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ ಕುರಿತು ಈಗಾಗಲೇ ಹೈಕೋರ್ಟ್‌ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದರು. ಕಾಮಗಾರಿ ಪೂರ್ಣಗೊಳ್ಳದೇ ಟೋಲ್ ವಸೂಲಿ ನಡೆಯುತ್ತಿರುವುದು ಗಂಭೀರ ವಿಚಾರವಾಗಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾದ್ಯಂತ ಹೋರಾಟ ನಡೆಸಲಾಗುವುದು. ಅಗತ್ಯವಿದ್ದರೆ ಕರಾವಳಿ ಭಾಗದ ತಾಲ್ಲೂಕುಗಳ ನ್ಯಾಯಾಲಯಗಳಲ್ಲಿಯೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು. ಹಿರಿಯ ಮುಖಂಡ ರಾಮಾ ಎಂ. ಮೊಗೇರ ಮಾತನಾಡಿ, ಜಿಲ್ಲೆಯಲ್ಲಿ ಅಹಿಂದ ಸಂಘಟನೆಯ ಅಗತ್ಯವಿದ್ದು, ಅಹಿಂದ ವರ್ಗದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಜಾಗೃತಿ ಮೂಡಬೇಕಾಗಿದೆ ಎಂದರು. ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ಅಹಿಂದ ಸಂಘಟನೆ ಆರಂಭಿಸಿರುವುದು ಉತ್ತಮ ಬೆಳವಣಿಗೆ. ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ಅವಶ್ಯಕ ಎಂದು ಅಭಿಪ್ರಾಯಪಟ್ಟರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಹಾಗೂ ಮಾರುಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಂ.ಡಿ. ನಾಯ್ಕ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಸತೀಶಕುಮಾರ ನಾಯ್ಕ, ಸಾಲಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗಣಪತಿ ನಾಯ್ಕ, ವೆಂಕಟಯ್ಯ ಬೈರುಮನೆ, ಕುಮಟಾದ ಸುಧಾಕರ, ಶಿವಾನಂದ ನಾಯ್ಕ (ಶಿರಸಿ), ಕೆ. ಸುಲೇಮಾನ್, ಶ್ರೀಧರ ನಾಯ್ಕ, ಟಿ.ಡಿ. ನಾಯ್ಕ, ದಿನೇಶ್ ಗೊಂಡ, ವೆಂಕಟೇಶ್ ನಾಯ್ಕ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 8:29 pm

ವಿಶೇಷ ಮಕ್ಕಳ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಮಾನ ವೇತನ ಕೋರಿ ಅರ್ಜಿ; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರಾಜ್ಯದ ವಿಶೇಷ ಮಕ್ಕಳ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಸಮಾನ ವೇತನ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಬೋಧಕೇತರರ ಸಂಘ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಾಜ್ಯ ಅಂಗವಿಕಲರ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆಬ್ರವರಿ 26ಕ್ಕೆ ಮುಂದೂಡಿತು.

ವಾರ್ತಾ ಭಾರತಿ 2 Feb 2026 8:28 pm

ಮಕ್ಕಳಿಗೆ ಸಂಬಂಧಿಸಿದ ಪುಸ್ತಕಗಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

ಮಂಗಳೂರು,ಫೆ.2: ಕರ್ನಾಟಕ ಬಾಲ ವಿಕಾಸ ಅಕಾಡಮಿಯು 2024ನೇ ಹಾಗೂ 2025ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದಉತ್ತಮ ಪುಸ್ತಕಗಳಿಗೆ ’ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ ನೀಡಲು ಅರ್ಜಿ ಆಹ್ವಾನಿಸಿದೆ. 2024 ಮತ್ತು 2025ನೆ ಸಾಲಿನಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ (7 ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಆದ್ದರಿಂದ ಈ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ನಮೂದಿಸಲು ಹಾಗೂ ಪ್ರಶಸ್ತಿಗಾಗಿ ಪರಿಗಣಿಸಲು/ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವರಗಳನ್ನು ಒಳಗೊಂಡ ಮನಇಯೊಂದಿಗೆ ಫೆ.20ರೊಳಗಾಗಿ ಅಕಾಡಮಿಯ ಕೇಂದ್ರ ಕಚೇರಿಯ ವಿಳಾಸ (ಯೋಜನಾಧಿಕಾರಿಗಳು, ಕರ್ನಾಟಕ ಬಾಲ ವಿಕಾಸ ಅಕಾಡಮಿ, ಚಂದ್ರಿಕಾ ಲೇ ಔಟ್ ಹಿಂಭಾಗ ಕೆಎಚ್‌ಬಿ ಕಾಲನಿ, ಲಕಮನಹಳ್ಳಿ ಧಾರವಾಡ-580004 (ದೂ.ಸಂ: 0836 -2465490)ಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 8050392209, 7204396275, 9448981944 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Feb 2026 8:27 pm

ಕೊಲೆಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

ಮಂಗಳೂರು, ಫೆ.2: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಕುರುಡುಕಟ್ಟೆ ಎಂಬಲ್ಲಿ ತನ್ನ ಮಗನ ಜಾಗದಲ್ಲಿ ಸೊಪ್ಪುಕತ್ತರಿಸುತ್ತಿದ್ದ ವೆಂಕಪ್ಪನಾಯ್ಕ ಎಂಬವರಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಆರೋಪಿ ನಾರಾಯಣ ಗೌಡ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯವು 20,500 ರೂ. ದಂಡ ವಿಧಿಸಿ ಆದೇಶ ನೀಡಿದೆ. 2019ರ ಮೇ 6ರಂದು ವೆಂಕಪ್ಪನಾಯ್ಕ ತನ್ನ ಮಗ ದೇವಪ್ಪನಾಯ್ಕರ ಜಾಗದಲ್ಲಿ ಸೊಪ್ಪುಕತ್ತರಿಸುತ್ತಿದ್ದಾಗ ನಾರಾಯಣ ಗೌಡ, ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಸಹಾಯಕ ಪೊಲೀಸ್ ಅಧೀಕ್ಷಕ ಸೈದುಲ್ ಅಡಾವತ್ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ನ್ಯಾಯಾಧೀಶ ಜಗದೀಶ ವಿ.ಎನ್ ಪ್ರಕರಣದ ವಿಚಾರಣೆ ನಡೆಸಿ ಆರೋಪಿ ನಾರಾಯಣ ಗೌಡನಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಪೈಕಿ 20 ಸಾವಿರ ರೂ. ಸಂತ್ರಸ್ತ ವೆಂಕಪ್ಪನಾಯ್ಕಗೆ ನೀಡಬೇಕು. 500 ರೂ. ವನ್ನು ಸರಕಾರಕ್ಕೆ ಪಾವತಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ. ಸರಕಾರದ ಪರವಾಗಿ ಜ್ಯೋತಿ ಪ್ರಮೋದ ನಾಯಕ ವಾದಿಸಿದ್ದಾರೆ.

ವಾರ್ತಾ ಭಾರತಿ 2 Feb 2026 8:25 pm

ಡಿಕೆಎಸ್‌ಸಿ ಜುಬೈಲ್ ಘಟಕದ ಅಧ್ಯಕ್ಷರಾಗಿ ಮುಸ್ತಫಾ ಮೈನ ಆಯ್ಕೆ

ಮಂಗಳೂರು,ಫೆ.2:ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ದಮ್ಮಾಂ ವಲಯ ಅಧೀನದ ಜುಬೈಲ್ ಘಟಕದ ಮಹಾಸಭೆಯು ಅಧ್ಯಕ್ಷ ಮುಹಮ್ಮದ್ ಅಲಿ ಕೃಷ್ಣಾಪುರ ಅವರ ಅಧ್ಯಕ್ಷತೆಯಲ್ಲಿ ಜುಬೈಲ್‌ನಲ್ಲಿ ಜರಗಿತು. ಜಾಫರ್ ಮುಂಡ್ಕೂರ್ ವಾರ್ಷಿಕ ವರದಿ ಹಾಗೂ ಹಣಕಾಸು ಕಾರ್ಯದರ್ಶಿ ಅನ್ವರ್ ಪಡುಬಿದ್ರಿ ಲೆಕ್ಕಪತ್ರ ಮಂಡಿಸಿ ದರು. ಡಿಕೆಎಸ್‌ಸಿ ದಮ್ಮಾಂ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರೋಯಲ್ ಮುಕ್ವೆ ನೇತೃತ್ವದಲ್ಲಿ 2026-27ನೇ ಸಾಲಿಗೆ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಮುಸ್ತಫಾ ಮೈನ, ಉಪಾಧ್ಯಕ್ಷರಾಗಿ ಅನ್ವರ್ ಪಡುಬಿದ್ರೆ, ಜಾಫರ್ ಮುಂಡ್ಕೂರ್, ಪ್ರಧಾನ ಕಾರ್ಯ ದರ್ಶಿಯಾಗಿ ಮುಹಮ್ಮದ್ ಮುಸ್ತಫ ಹೊಸನಗರ, ಕಾರ್ಯದರ್ಶಿಗಳಾಗಿ ಅಬ್ದುಲ್ ಹಕೀಮ್ ನೆಕ್ಕರೆ, ಉಬೈದ್ ಸುರಿಬೈಲ್, ಯಹ್ಯಾ ಕೆಸಿ ರೊಡ್, ಹಣಕಾಸು ಕಾರ್ಯದರ್ಶಿಯಾಗಿ ಶಮೀರ್ ಪಲಿಮಾರ್, ಸಮಿತಿಯ ಅಭಿವೃದ್ಧಿ ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಕೃಷ್ಣಾಪುರ, ಸಂವಹನ ಕಾರ್ಯದರ್ಶಿಯಾಗಿ ಅಶ್ರಫ್ ನಾಳ ಅವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಸಲಹೆಗಾರರನ್ನಾಗಿ ಕೆ ಎಚ್. ರಫೀಕ್ ಸೂರಿಂಜೆ, ಸುಲೈಮಾನ್ ಮಿಲನ್ ಸೂರಿಂಜೆ, ಅಬ್ದುಲ್ ಹಮೀದ್ ಉಳ್ಳಾಲ್, ಅಬ್ದುಲ್ ಹಮೀದ್ ಕಾಪು, ಅಬ್ದುಲ್ ಕರೀಂ ಪಾಣೆಮಂಗಳೂರು, ಹಾತಿಂ ಕೂಳೂರು, ಅಬೂಬಕ್ಕರ್ ಬರ್ವ, ಇಕ್ಬಾಲ್ ಮಲ್ಲೂರ್ ಆಯ್ಕೆ ಮಾಡಲಾಯಿತು. ಡಿಕೆಎಸ್‌ಸಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕಣ್ಣಂಗಾರ್, ಜುಬೈಲ್ ಉಸ್ತುವಾರಿ ಉಸ್ಮಾನ್ ಹೊಸಂಗಡಿ, ಜುಬೈಲ್ ಯೂತ್‌ವಿಂಗ್ ಸಾಮಿತ್ ಪಡುಬಿದ್ರಿ, ದಮ್ಮಾಂ ಘಟಕದ ಅಧ್ಯಕ್ಷ ಜಮಾಲ್ ಸ್ವಾಲಿಹ್ ಕಣ್ಣಂಗಾರ್, ತುಖ್ಬ ಘಟಕದ ಅಧ್ಯಕ್ಷ ಜೆಪ್ಪುಮುಹಮ್ಮದ್ ಹನೀಫ್ ಉಪಸ್ಥಿತರಿದ್ದರು. ಡಿಕೆಎಸ್‌ಸಿ ಕೇಂದ್ರ ಸಮಿತಿಯ ದಾಯಿ ಅಬ್ದುರ‌್ರಶೀದ್ ಸಅದಿ ದುಆಗೈದರು. ಡಿಕೆಎಸ್‌ಸಿ ದಮ್ಮಾಂ ವಲಯ ಸಂಘಟಕ ಝುಬೈರ್ ಸಖಾಫಿ ಕಿರಾಅತ್ ಪಠಿಸಿದರು. ಅನ್ವರ್ ಪಡುಬಿದ್ರಿ ಸ್ವಾಗತಿಸಿದರು. ಶಾಫಿ ಶುಐಬ್ ವಂದಿಸಿದರು.

ವಾರ್ತಾ ಭಾರತಿ 2 Feb 2026 8:23 pm

ಗ್ಯಾರಂಟಿಗಳಿಗೆ 1.16 ಲಕ್ಷ ಕೋಟಿ ರೂ.ಅನುದಾನ ಒದಗಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯವನ್ನು ಸರ್ವತೋಮುಖವಾಗಿ ಬೆಳೆಸುವ ಉದ್ದೇಶ ನಮಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಇದುವರೆಗೆ 1.16 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಅನುದಾನ ಒದಗಿಸಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಜನರ ಕೊಂಡುಕೊಳ್ಳುವ ಶಕ್ತಿ ಆರೋಗ್ಯಕರವಾಗಿದೆ. ನೀವು ಬಡವರ, ಮಧ್ಯಮ ವರ್ಗದವರ ವಿರೋಧಿಗಳು. ಹಾಗಾಗಿ ಇದು ನಿಮಗೆ ಕಾಣುವುದಿಲ್ಲ ಎಂದು ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಕುರಿತ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಗೆ ಸರಕಾರದ ಪರವಾಗಿ ಉತ್ತರಿಸಿದ ಅವರು, ಕೋವಿಡ್ ಸಂದರ್ಭದಲ್ಲಿ ಜನರು ವಿಪರೀತ ಸಂಕಷ್ಟದಲ್ಲಿದ್ದಾರೆ. ಅವರ ದುಡಿಮೆಗಳೆಲ್ಲ ನಿಂತು ಹೋಗಿವೆ, ಆರ್ಥಿಕತೆ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತದೆ. ಹಾಗಾಗಿ ಪ್ರತಿ ಕುಟುಂಬಕ್ಕೆ ಒಂದು ಸಾರಿ 10 ಸಾವಿರ ರೂ.ಕೊಡಿ ಎಂದು ಯಡಿಯೂರಪ್ಪ ಮತ್ತು ಬೊಮ್ಮಾಯಿಗೆ ಹೇಳಿದ್ದೆ. ನೀವು ಒಂದು ರೂಪಾಯಿಯಾದ್ರೂ ಕೊಟ್ರಾ? ಎಂದು ಪ್ರಶ್ನಿಸಿದರು. ಸಂವೇದನೆಯನ್ನೂ ಐಸಿಯುನಲ್ಲಿಟ್ಟಿದ್ರಾ?: ಜನ ಸಂಕಷ್ಟದ ಸುಳಿಯಲ್ಲಿದ್ದಾಗ ನಿಮ್ಮ ಸಂವೇದನೆ ಎಲ್ಲಿ ಹೋಗಿತ್ತು? ನಿಮಗೆ ಆಕ್ಸಿಜನ್ ಕೊಟ್ಟು ರೋಗಿಗಳನ್ನು ಉಳಿಸಿಕೊಳ್ಳಲಾಗಲಿಲ್ಲ? ರೋಗಿಗಳು ಒದ್ದಾಡಿ ಪ್ರಾಣ ಬಿಟ್ಟಾಗ ನಿಮ್ಮ ಸಂವೇದನೆಯನ್ನೂ ಐಸಿಯುನಲ್ಲಿಟ್ಟಿದ್ರಾ? ನಮಗೆ ಸಂವೇದನೆಯಿದೆ. ಪಶುಪಾಲಕರ ಕುರಿ-ಮೇಕೆ, ಎತ್ತು, ಎಮ್ಮೆ, ಹಸು, ಕೋಣ ಮರಣ ಹೊಂದಿದರೆ ಪರಿಹಾರ ಕೊಡುತ್ತಿದ್ದ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ರಿ, ಕೃಷಿ ಭಾಗ್ಯ ಯೋಜನೆ ನಿಲ್ಲಿಸಿದ್ರಿ ಆಗ ನಿಮಗೆ ಸಂವೇದನೆ ನೆನಪಾಗಲಿಲ್ವೆ? ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. ಆಗ ನಿಮ್ಮ ಆಡಳಿತ ಹದಗೆಟ್ಟಿರಲಿಲ್ಲವೆ? ದಲಿತರು, ಹಿಂದುಳಿದ ವರ್ಗಗಳ ನೆನಪಾಗಿರಲಿಲ್ಲವೆ? ನಾವು ದಲಿತ ಸಮುದಾಯದ ಆತಂಕ ಕೇಳಿಸಿಕೊಂಡಿದ್ದೇವೆ. ಅದಕ್ಕಾಗಿಯೇ ದಲಿತರ ಭೂಮಿ ಬಲಾಢ್ಯರ ಕೈಗೆ ಹೋಗಬಾರದೆಂದು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದಿದ್ದೇವೆ. ಸಂವೇದನಾ ಶೀಲ ಸರಕಾರ ಆಗಿರುವುದರಿಂದಲೇ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ ಮನವಿಗೆ ಮಣಿದು ಭೂಮಿಯನ್ನು ಭೂಸ್ವಾಧೀನದಿಂದ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಉಲ್ಲೇಖಿಸಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರಿಗೆ ಗೊಬ್ಬರ ಕೊಡಲಾಗದೆ ಹಾವೇರಿಯಲ್ಲಿ ಗೋಲಿಬಾರ್ ಮಾಡಿ ಕೊಂದು ಹಾಕಲಾಯಿತು. ಆದರೆ ಮುಧೋಳದಲ್ಲಿ ರೈತರ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳು ಟ್ರ್ಯಾಕ್ಟರ್ ಮುಂತಾದ ವಾಹನ, ರೈತರ ಕಬ್ಬಿಗೆ ಬೆಂಕಿ ಹಚ್ಚಿದಾಗಲೂ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತಿದ್ದೇವೆಯೆ ಹೊರತು ನಾವು ಗೋಲಿಬಾರ್ ಮಾಡಿ ಕೊಲ್ಲಲು ಹೋಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಕೇಂದ್ರ ಸರಕಾರದ ಅಸಹಕಾರದ ನಡುವೆಯೂ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳವನ್ನು 250 ರೂ. ವರೆಗೆ ಪ್ರೋತ್ಸಾಹ ಧನ ನೀಡುವುದರ ಮೂಲಕ ಸುಮಾರು 40 ಲಕ್ಷ ಕ್ವಿಂಟಾಲ್ ಜೋಳ ಖರೀದಿ ಮಾಡಲಾಗುತ್ತಿದೆ. ಕೆಎಂಎಫ್ ಮೂಲಕ ಖರೀದಿಸಲು ಹಾಗೂ ಎಥೆನಾಲ್ ಉತ್ಪಾದಕರು, ಪೌಲ್ಟ್ರಿ, ಪಶು ಆಹಾರ ತಯಾರಕರ ಜೊತೆ ಸಭೆ ಮಾಡಿ ಮೆಕ್ಕೆಜೋಳ ಖರೀದಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ದಿವಾಳಿಯಾಗಿರುವ ಕೇಂದ್ರ ಸರಕಾರ: ಪ್ರಕೃತಿ ವಿಕೋಪಕ್ಕೆ ಕಳೆದ ತಿಂಗಳು 250 ಕೋಟಿ ರೂ., ಮುಖ್ಯಮಂತ್ರಿಗಳ ವಿಶೇಷ ಅನುದಾದಡಿ 2,445 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನಮ್ಮ ಸರಕಾರ ದಿವಾಳಿಯಾಗಿಲ್ಲ. ಕೇಂದ್ರ ಸರಕಾರ ದಿವಾಳಿ ಆಗಿದೆ. ನಿನ್ನೆ ಕೇಂದ್ರ ಸರಕಾರ ಬಜೆಟ್ ಮಂಡಿಸಿದೆ. ಮನೆಗಳ ನಿರ್ಮಾಣಕ್ಕೆ 19,490 ಕೋಟಿ ರೂ. ಇದ್ದ ಅನುದಾನವನ್ನು ಪರಿಷ್ಕೃತ ಅಂದಾಜಿನಲ್ಲಿ 7500 ಕೋಟಿ ರೂ.ಗಳಿಗೆ ಇಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಬಜೆಟ್‍ನಲ್ಲಿ 8,260 ಕೋಟಿ ರೂ.ಇಟ್ಟು, ಪರಿಷ್ಕರಣೆ ಮಾಡಿ 6,372 ಕೋಟಿ ರೂ.ಮಾಡಿದ್ದಾರೆ. 2026-27ರಲ್ಲಿ 6,587 ಕೋಟಿ ರೂ.ಗಳಿಗೆ ಇಳಿಸಿದ್ದಾರೆ. ಪಿಎಂ ಇಂಟರ್ನ್‍ಶಿಪ್ ಪ್ರೋ ಗ್ರಾಂ ನಲ್ಲಿ 10,831 ಕೋಟಿ ರೂ. ಇಟ್ಟಿದ್ದರು, ಅದನ್ನು 526 ಕೋಟಿ ರೂ.ಗಳಿಗೆ ಪರಿಷ್ಕರಣೆ ಮಾಡಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆ 5,100 ಕೋಟಿ ರೂ.ಗಳಿಂದ 3,861 ಕೋಟಿ ರೂ.ಗಳಿಗೆ ಇಳಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ನಾವು ಮೂರು ವರ್ಷದಿಂದ ಬಜೆಟ್ ನಲ್ಲಿ ಬೆಲೆ ಏರಿಸಿದ್ದರೂ., ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಗಣನೀಯವಾಗಿ ಕಡಿಮೆಯಿದೆ. ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ 2023-24 ರಿಂದ ಇಲ್ಲಿಯವರೆಗೆ 1,17,197 ಕೋಟಿ ರೂ.ಗಳನ್ನು ನೀಡಿದ್ದೇವೆ. ವಿವಿಧ ಸಮುದಾಯಗಳ ನಿಗಮ ಮಂಡಳಿಗಳಿಗೆ ನಮ್ಮ ಅವಧಿಯಲ್ಲಿ 1538.60 ಕೋಟಿ ರೂ.ಗಳನ್ನು ನೀಡಲಾಗಿದೆ. ಹಿಂದುಳಿದ ವರ್ಗಗಳಿಗಾಗಿ 2023-24 ರಿಂದ ಈವರೆಗೆ 220 ಹಾಸ್ಟೆಲ್‍ಗಳನ್ನು ನಿರ್ಮಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು. 2013-14 ರಿಂದ 18ರ ಅವಧಿಯಲ್ಲಿ ನಾವು 15 ಲಕ್ಷ ಮನೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದೇವು. ಈ ಪೈಕಿ 14.52 ಲಕ್ಷ ಮನೆಗಳನ್ನು ನಿರ್ಮಿಸಲಾಯಿತು. ಆದರೆ, ಬಿಜೆಪಿಯವರು ನಾಲ್ಕು ವರ್ಷಗಳಲ್ಲಿ ಕೇವಲ 5 ಲಕ್ಷ ಮನೆಗಳನ್ನು ಮಾತ್ರ ಕಟ್ಟಿದರು. ನಾವು ಜನಪರವಾದ, ಸಮಾಜಮುಖಿಯಾದ ಆಡಳಿತವನ್ನು ನೀಡುತ್ತಿದ್ದು, ನಮ್ಮ ಅಭಿವೃದ್ಧಿ ಮಾದರಿಯನ್ನು 21 ಕ್ಕಿಂತ ಹೆಚ್ಚು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ಆದುದರಿಂದ, ರಾಜ್ಯಪಾಲರು, ಸರಕಾರದ ಭಾಷಣವನ್ನು ಓದಿದ್ದರೆ, ನಮ್ಮ ಜನಪರ ಆಡಳಿತದ ಬಗ್ಗೆ ಜನರಿಗೆ ಅರಿವು ನೀಡಿದಂತಾಗುತ್ತಿತ್ತು ಎಂದು ಮುಖ್ಯಮಂತ್ರಿ ತಿಳಿಸಿದರು. ಪ್ರತಿಪಕ್ಷಗಳ ಸಭಾತ್ಯಾಗ: ‘ಗುತ್ತಿಗೆದಾರರ ಸಂಘದವರು ಈ ಸರಕಾರವನ್ನು ಶೇ.65ರಷ್ಟು ಕಮಿಷನ್ ಸರಕಾರ ಎಂದು ಟೀಕಿಸಿದ್ದಾರೆ. ಈ ಬಗ್ಗೆ ಸರಕಾರ ಉತ್ತರ ಕೊಟ್ಟಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ 5 ಸಾವಿರ ಕೋಟಿ ರೂ.ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಆ ಹಣ ಎಲ್ಲಿ ಹೋಯಿತು ಗೊತ್ತಿಲ್ಲ. ಇದೊಂದು ‘ಇಲ್ಲಗಳ ಸರಕಾರ’ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಜ.22ರಂದು ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯ ಪ್ರಸ್ತಾವವನ್ನು ವಿಧಾನಸಭೆಯಲ್ಲಿ ಮಂಡಿಸಿ, ಅಂಗೀಕರಿಸಲಾಯಿತು.

ವಾರ್ತಾ ಭಾರತಿ 2 Feb 2026 8:22 pm

25 ಲಕ್ಷ ರೂ. ವಂಚನೆ ಪ್ರಕರಣ: ನಟ ಗೋವಿಂದ, ಬಿಜೆಪಿ ಸಂಸದ ಮನೋಜ್ ತಿವಾರಿ ಹೆಸರು ಉಲ್ಲೇಖ

ಹೊಸದಿಲ್ಲಿ: ಗಾಝಿಯಾಬಾದ್ ಮೂಲದ ಮ್ಯಾಕ್ಸಿಝೋನ್ ಟಚ್ ಪ್ರೈವೇಟ್ ಲಿಮಿಟೆಡ್ ನಲ್ಲಿ ನಡೆದಿದ್ದ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ನಲ್ಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಸೇರಿದಂತೆ ಬಾಲಿವುಡ್ ನಟರಾದ ಗೋವಿಂದ, ಶಕ್ತಿ ಕಪೂರ್ ಹಾಗೂ ಚಂಕಿ ಪಾಂಡೆ ಹೆಸರುಗಳು ಉಲ್ಲೇಖವಾಗಿವೆ ಎಂದು ವರದಿಯಾಗಿದೆ. ನಕಲಿ ಹೂಡಿಕೆ ಯೋಜನೆಯ ಮೂಲಕ ಮ್ಯಾಕ್ಸಿಝೋನ್ ಟಚ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಮ್ಮನ್ನು ವಂಚಿಸಿದೆ ಎಂದು ಹಲವಾರು ಹೂಡಿಕೆದಾರರು ಆರೋಪ ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. Deccan Herald ವರದಿಯ ಪ್ರಕಾರ, ಈ ವಂಚನೆಯ ಮೊತ್ತ 25 ಲಕ್ಷ ರೂ. ಆಗಿದ್ದು, ಈ ವಂಚನೆಯು ಬೃಹತ್ ಪ್ರಮಾಣದ ಹೂಡಿಕೆ ಹಾಗೂ 600 ಕೋಟಿ ರೂ. ಮೌಲ್ಯದ ಕ್ರಿಪ್ಟೊಕರೆನ್ಸಿ ವಂಚನೆಯೊಂದಿಗೆ ಸಂಬಂಧ ಹೊಂದಿದೆ ಎನ್ನಲಾಗಿದೆ. ವಂಚನೆಗೊಳಗಾದ ಹೂಡಿಕೆದಾರ ಜಸ್ಪಾಲ್ ಸಿಂಗ್ ಎಂಬವರು ನೀಡಿದ ದೂರನ್ನು ಆಧರಿಸಿ ಈ ಎಫ್ಐಆರ್ ದಾಖಲಾಗಿದೆ. ಹೂಡಿಕೆದಾರರಿಗೆ ಶೇ. 15ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಹೂಡಿಕೆದಾರರು ಬಡ್ಡಿಯನ್ನೂ ಪಡೆದಿಲ್ಲ ಅಥವಾ ಮೂಲ ಬಂಡವಾಳವನ್ನೂ ಹಿಂಪಡೆದಿಲ್ಲ ಎಂದು ಅವರು ಆರೋಪಿಸಿದ್ದಾರೆ. ಬಾಲಿವುಡ್ ನಟರು ಈ ಹೂಡಿಕೆಯ ಪ್ರಚಾರ ಮಾಡಿ, ಈ ಯೋಜನೆಯತ್ತ ತುಂಬಾ ಜನರನ್ನು ಸೆಳೆದಿದ್ದರು ಎಂದೂ ದೂರಿನಲ್ಲಿ ಆರೋಪಿಸಲಾಗಿದೆ. ಈ ದೂರಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2025ರಲ್ಲಿ ಮ್ಯಾಕ್ಸಿಝೋನ್ ಟಚ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾದ ಚಂದರ್ ಭೂಷಣ್ ಸಿಂಗ್ ಹಾಗೂ ಅವರ ಪತ್ನಿ ಪ್ರಿಯಾಂಕಾ ಸಿಂಗ್ ಅವರನ್ನು ಬಂಧಿಸಲಾಗಿತ್ತು ಎಂದು ವರದಿಗಳು ಹೇಳಿವೆ.

ವಾರ್ತಾ ಭಾರತಿ 2 Feb 2026 8:21 pm

ಬಜೆಟ್‌| ಮೀನುಗಾರಿಕಾ ಕ್ಷೇತ್ರಕ್ಕೆ ಗರಿಷ್ಠ ಅನುದಾನ ಮೀಸಲಿಡಲಾಗಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು, ಫೆ.2: ಕೇಂದ್ರ ಸರಕಾರದ 2026-27ರ ಬಜೆಟ್‌ನಲ್ಲಿ ಮೀನುಗಾರಿಕಾ ಕ್ಷೇತ್ರಕ್ಕೆ ಇದುವರೆಗಿನ ಅತ್ಯಧಿಕ ವಾರ್ಷಿಕ ಅನುದಾನವಾಗಿ 2,761.80 ಕೋಟಿ ಮೀಸಲಿಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರಾವಳಿ ಹಾಗೂ ಒಳನಾಡು ಮೀನುಗಾರಿಕೆಯನ್ನು ಬಲಪಡಿಸುವುದು, ರಫ್ತು ಹೆಚ್ಚಿಸುವುದು ಮತ್ತು ಮೀನುಗಾರರು ಹಾಗೂ ಮೀನು ಸಾಕಾಣಿಕೆದಾರರ ಜೀವನೋಪಾಯವನ್ನು ಸುಧಾರಿಸುವುದರ ಮೇಲೆ ಕೇಂದ್ರ ಸರಕಾರದ ಒತ್ತಾಸೆ ಸ್ಪಷ್ಟವಾಗಿದೆ. ಒಟ್ಟು ಅನುದಾನದಲ್ಲಿ 2,530 ಕೋಟಿ ರೂಪಾಯಿ ಯೋಜನಾ ಆಧಾರಿತ ಕ್ರಮಗಳಿಗೆ ಮೀಸಲಾ ಗಿದ್ದು, ಪ್ರಧಾನ ಮಂತ್ರಿ ಮತ್ಸಸಂಪದಾ ಯೋಜನೆಯಿಂದ 2026-27ಕ್ಕೆ 2500 ಕೋಟಿ ರೂ ಅನುದಾನವನ್ನು ಪಡೆದಿದೆ ಎಂದು ಮಾಹಿತಿ ನೀಡಿದರು. ಕರಾವಳಿ ಪ್ರದೇಶಗಳಲ್ಲಿ ಮೀನುಗಾರಿಕಾ ಮೌಲ್ಯ ಸರಪಳಿಯನ್ನು ಬಲಪಡಿಸುವ ಉದ್ದೇಶದಿಂದ 500 ಜಲಾಶಯ ಗಳು ಮತ್ತು ಅಮೃತ್ ಸರೋವರಗಳ ಏಕೀಕೃತ ಅಭಿವೃದ್ಧಿಗೆ ಹಾಕಿರುವ ಯೋಜನೆಯಡಿಯಲ್ಲಿ ಸ್ಪಾರ್ಟ್ ಅಪ್‌ಗಳು, ಮಹಿಳಾ ನೇತೃತ್ವದ ಗುಂಪುಗಳು ಹಾಗೂ ಮೀನುಗಾರರ ಉತ್ಪಾದಕ ಸಂಸ್ಥೆಗಳು ಭಾಗವಹಿಸುವ ಮೂಲಕ ಮಾರುಕಟ್ಟೆ ಸಂಪರ್ಕವನ್ನು ಸುಧಾರಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ನುಡಿದರು. ದೇಶದ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪ್ರಮುಖ ನಗರಗಳ ಅಭಿವೃದ್ಧಿಗಾಗಿ ನಗರ ಆರ್ಥಿಕ ವಲಯ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಲ್ಲಿ ಐದು ವರ್ಷಗಳಲ್ಲಿ ಐದು ಸಾವಿರ ಕೋಟಿ ರೂಪಾಯಿಗಳನ್ನು ಬೆಂಗಳೂರಿಗೆ ನೀಡಲಾಗುತ್ತದೆ. ರೇಷ್ಮೆಗೆ ರಾಷ್ಟ್ರೀಯ ಫೈಬರ್ ಸ್ಕೀಮ್, ಫಲ ಬಿಡದ ಹಳೆಯ ತೆಂಗು ತೆಗೆದು ಹೊಸ ಸಸಿ ನೆಡಲು ನೆರವು. ಗೋಡಂಬಿಗೆ ಜಾಗತಿಕ ಬ್ರ್ಯಾಂಡ್ ಮಾಡಲು ಸರಕಾರ ಕ್ರಮ ಕೈಗೊಳ್ಳಲಿದೆ. ಬೆಂಗಳೂರಿಗೆ 2 ಹೈಸ್ಪೀಡ್ ರೈಲು ಕಾರಿಡಾರ್, ಬೆಂಗಳೂರಿನಿಂದ ಹೈದ್ರಾಬಾದಿಗೆ ಹಾಗೂ ಬೆಂಗಳೂರಿನಿಂದ ಚೆನ್ನೈಗೆ ಹೈಸ್ಪೀಡ್ ರೈಲು ಯೋಜನೆ ಘೋಷಿಸಲಾಗಿದೆ. ಇದರಿಂದ ವ್ಯಾಪಾರ, ವ್ಯವಹಾರ ಅಭಿವೃದ್ಧಿ ಕಾಣಲಿವೆ. ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 2026-27ನೇ ಸಾಲಿನಲ್ಲಿ ವಿಶೇಷ 500 ಕೋಟಿ ರೂಪಾಯಿ ಗಳನ್ನು ಕೂಡ ಮೀಸಲಿಡಲಾಗಿದೆ. ಕಳೆದ ಬಾರಿ 350 ಕೋಟಿ ರೂಪಾಯಿ ನೀಡಲಾಗಿತ್ತು. ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ರೈಲು ಮಾರ್ಗ ನಿರ್ಮಾಣ, ಜೋಡಿ ಹಳಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಲಾಗಿದೆ. 17 ಕ್ಯಾನ್ಸರ್ ಔಷಧಿ ಹಾಗೂ ಮಧುಮೇಹ ಔಷಧಿಗಳು ಅಗ್ಗದ ದರದಲ್ಲಿ ಸಿಗುವಂತೆ ವ್ಯವಸ್ಥೆ. ಇಂತಹ ಔಷಧಿಗಳ ಮೇಲಿನ ಕನಿಷ್ಠ ಸೀಮಾ ಸುಂಕವನ್ನು ರದ್ದುಗೊಳಿಸಲಾಗಿದೆ. ಈ ಬಾರಿ ಬಜೆಟಿನಲ್ಲಿ ಸ್ತ್ರೀಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ , ಭಾರತದಲ್ಲಿ ಡೇಟಾ ಸೆಂಟರ್ ತೆರೆಯುವ ವಿದೇಶಿ ಕಂಪನಿಗಳಿಗೆ 2047 ರವರೆಗೂ ತೆರಿಗೆ ರಜೆ ನೀಡುವುದಾಗಿ ಕೇಂದ್ರ ಸರಕಾರ ಮಹತ್ವದ ಘೋಷಣೆಯನ್ನು ಮಾಡಿದೆ. ಪಶು ಆಹಾರ ಮತ್ತು ಹತ್ತಿ ಬೀಜ ಪೂರೈಕೆಯಲ್ಲಿ ತೊಡಗಿರುವ ಸಹಕಾರಿ ವಲಯದ ಸಂಸ್ಥೆಗಳಿಗೆ ತೆರಿಗೆ ವಿನಾಯ್ತಿ ವಿಸ್ತರಣೆ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದೆ ಎಂದು ಮಾಹಿತಿ ನೀಡಿದರು. ಆರ್ಥಿಕತೆಯಲ್ಲಿ ಜಗತ್ತಿನಲ್ಲೇ ಭಾರತವನ್ನು ನಂ.1 ಸ್ಥಾನಕ್ಕೆ ಕೊಂಡೊಯ್ಯುವುದು ಕೇಂದ್ರ ಸರಕಾರದ ಗುರಿಯಾ ಗಿದೆ. ಉದ್ಯೋಗ ಮತ್ತು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಆದ್ಯತೆ, ಬಯೋಫಾರ್ಮ್ ಹಬ್‌ಗೆ 10 ಲಕ್ಷ ಕೋಟಿ ರೂ, 3 ಹೊಸ ಫಾರ್ಮಾ ಕಾಲೇಜು, ಮೆಡಿಕಲ್ ಟೂರಿಸಮ್‌ಗೆ ಒತ್ತು ನೀಡಲಾಗಿದೆ ಎಂದು ವಿವರಿಸಿದರು. *ಬೆಂಗಳೂರಿಗೆ ನಾನು ನಾಲ್ಕು ಗಂಟೆಯಲ್ಲಿ ತಲುಪುತ್ತೇನೆ:ದೇಶದ ಪ್ರತಿಯೊಂದು ಮನೆಯವರು ನರೇಂದ್ರ ಮೋದಿ ಸರಕಾರದ ಒಂದಲ್ಲ ಒಂದು ಯೋಜನೆ ಪ್ರಯೋಜನ ಪಡೆದಿದ್ದಾರೆ. ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಕಾಂಕ್ರಿಟೀಕರಣ ಸುಂದರವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗಲು ಆನಂದವಾಗುತ್ತದೆ. ನಾನು ನಾಲ್ಕು ಗಂಟೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತಲುಪುತ್ತೇನೆ ಎಂದರು. *ರೈಲ್ವೇ ಎಲ್ಲ ಯೋಜನೆಗಳು 50-50: ಕೇಂದ್ರ ಸರಕಾರದ ಯಾವುದೇ ಯೋಜನೆಯನ್ನು ಜಾರಿಗೊಳಿಸುವ ಇಚ್ಛಾಶಕ್ತಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕಿಲ್ಲ. ಎಲ್ಲ ಯೋಜನೆಗಳಿಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಅನುಷ್ಠಾನಗೊಳ್ಳುವ ರೈಲ್ವೇ ಯೋಜನೆಗಳಿಗೆ ಕೇಂದ್ರ ಸರಕಾರ ಶೇ 50ರಷ್ಟು ಅನುದಾನ ನೀಡಿದರೆ ಉಳಿದ ಶೇ50ರಷ್ಟು ಅನುದಾನವನ್ನು ರಾಜ್ಯ ಸರಕಾರ ಭರಿಸಬೇಕು. ಇದು ಹಿಂದೆ ಮಲ್ಲಿಕಾರ್ಜುನ ಖರ್ಗೆ ರೈಲ್ವೇ ಸಚಿವರಾಗಿದ್ದಾಗ ಆಗಿರುವ ಒಪ್ಪಂದ ಎಂದು ಹೇಳಿದರು. *ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಲಿ: ಜಿಎಸ್‌ಟಿ ನಿಯಮಗಳು ಎಲ್ಲ ರಾಜ್ಯಗಳಿಗೂ ಒಂದೇ ರೀತಿಯಾಗಿದೆ. ಜಿಎಸ್‌ಟಿ ಪಾಲು ಕೇಂದ್ರ ಸರಕಾರ ರಾಜ್ಯಕ್ಕೆ ಸರಿಯಾಗಿ ನೀಡುತ್ತಿಲ್ಲ ಎಂದು ಹೇಳುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಜಿಎಸ್‌ಟಿ ಸದಸ್ಯರಾಗಿದ್ದರೂ, ಜಿಎಸ್‌ಟಿ ಸಭೆಗಳಿಗೆ ಯಾಕೆ ಹೋಗುತ್ತಿಲ್ಲ. ಅಲ್ಲಿ ಹೋಗಿ ಯಾಕೆ ಮಾತನಾಡುತ್ತಿಲ್ಲ. ಎಂದು ಪ್ರಶ್ನಿಸಿದರು. ಕರ್ನಾಟಕ ಸರಕಾರ ಶ್ವೇತ ಪತ್ರ ಹೊರಡಿಸಲಿ. ಆಗ ಕೇಂದ್ರ ಸರಕಾರ ಎಷ್ಟು ಹಣ ಕೊಡುತ್ತದೆ. ರಾಜ್ಯ ಸರಕಾರ ಎಷ್ಟು ಹಣ ನೀಡುತ್ತದೆ ಸ್ಪಷ್ಟವಾಗುತ್ತದೆ ಎಂದು ಹೇಳಿದರು. * ಬಿಲ್ ಪಾವತಿ ಬಾಕಿಯಾಗಲು ಕೇಂದ್ರ ಸರಕಾರ ಕಾರಣವಲ್ಲ: ಗುತ್ತಿಗೆದಾರರಿಗೆ ಬಿಲ್ ಪಾವತಿ ಬಾಕಿಯಾಗಲು ಕೇಂದ್ರ ಸರಕಾರ ಕಾರಣವಲ್ಲ ರಾಜ್ಯ ಸರಕಾರದ ವೈಫಲ್ಯ ಕಾರಣವಾಗಿದೆ. 16 ವರ್ಷ ಬಜೆಟ್ ಮಂಡಿಸಿರುವ ಅಪಾರ ಅನುಭವ ಇರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯನ್ನು ಹೊರಡಿಸುವಾಗ ಈ ರಾಜ್ಯದ ವೆಚ್ಚದ ಬಗ್ಗೆ ಯೋಚಿಸಬೇಕಿತ್ತು. ಆದರೆ ಆ ಬಗ್ಗೆ ಯೋಚಿಸದೆ ಮಾಡಿರುವ ಎಡವಟ್ಟಿನ ಕಾರಣ ಈಗ ರಾಜ್ಯ ಸರಕಾರ ಸಂಕಷ್ಟದಲ್ಲಿ ಸಿಲುಕಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ , ಪಾಲಿಕೆಯ ಚುನಾವಣೆ ರಾಜ್ಯ ಸರಕಾರ ಮಾಡದಿರಲು ಮುಖ್ಯ ಮಂತ್ರಿ ಕುರ್ಚಿಯ ಗೊಂದಲ ಕಾರಣವಾಗಿದೆ ಎಂದರು. ವಿಜಯೇಂದ್ರ ಎಲ್ಲರಿಗೂ ಅಧ್ಯಕ್ಷರು: ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ್ದು ಬಿಜೆಪಿಯ ರಾಷ್ಟ್ರೀಯ ನಾಯಕರು. ಅವರು ಬಿಜೆಪಿಯ ರಾಜ್ಯದ ಎಲ್ಲರಿಗೂ ಅಧ್ಯಕ್ಷರು. ರಾಜ್ಯದಲ್ಲಿ ಅತ್ಯಂತ ಕ್ರೀಯಾಶೀಲವಾಗಿ ಪಕ್ಷವನ್ನು ಅವರು ಮುನ್ನೆಡೆಸುತ್ತಿದ್ದಾರೆ,ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವದ ಬಗ್ಗೆ ಭಿನ್ನಾಭಿಪ್ರಾಯ ಇರುವುದು ಅದೇನು ದೊಡ್ಡ ವಿಚಾರವಲ್ಲ. ನಾನು ಅಧ್ಯಕ್ಷನಾಗಿ ನೇಮಕ ಗೊಂಡು ಒಂದು ವಾರ ಕಳೆಯುವಷ್ಟರಲ್ಲಿ ನಳಿನ್ ಕುಮಾರ್ ಅವರನ್ನು ಬಿಜೆಪಿ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬರಲು ಆರಂಭಿಸಿತ್ತು. ಆದರೆ ನನಗೆ 4 ವರ್ಷ ಮತ್ತು 8 ತಿಂಗಳು ಬಿಜೆಪಿ ರಾಜ್ಯ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿತ್ತು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ನಳಿನ್ ಕುಮಾರ್ ಕಟೀಲ್ ಉತ್ತರಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ , ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ದ.ಕ. ಬಿಜೆಪಿ ಮಾಧ್ಯಮ ಸಂಚಾಲಕ ವಸಂತ್ ಜೆ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 8:20 pm

Bengaluru | ಯುವಕನನ್ನು ಅಡ್ಡಗಟ್ಟಿ 31.38 ಲಕ್ಷ ನಗದು ದರೋಡೆ: ಪ್ರಕರಣ ದಾಖಲು

ಬೆಂಗಳೂರು : ಯುವಕನನ್ನು ಅಡ್ಡಗಟ್ಟಿದ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಬರೋಬ್ಬರಿ 31.38 ಲಕ್ಷ ರೂಪಾಯಿ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ರವಿವಾರ(ಫೆ.1) ವರದಿಯಾಗಿದೆ. ಖಾಸಗಿ ಕಂಪೆನಿಯೊಂದರಲ್ಲಿ ಹಣ ಸಂಗ್ರಹಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಕೈಲಾಸ್(27) ಎಂಬಾತ ದರೋಡೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಫೆ.1ರ ರವಿವಾರ ಸಂಜೆ ಸುಮಾರು 4:20ರ ಸುಮಾರಿಗೆ ಕೈಲಾಸ್ ಅವರು ಕಂಪೆನಿಯ ವಿವಿಧ ಶಾಖೆಗಳಿಂದ ಒಟ್ಟು 31,38,625 ರೂ. ಹಣವನ್ನು ಸಂಗ್ರಹಿಸಿ, ತಮ್ಮ ದ್ವಿಚಕ್ರ ವಾಹನದಲ್ಲಿ ಇಟ್ಟುಕೊಂಡು ಸಕಲವಾರದಿಂದ ಬನ್ನೇರುಘಟ್ಟ ರಸ್ತೆಯತ್ತ ಬರುತ್ತಿದ್ದರು. ಈ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ಆರೋಪಿಗಳು, ಏಕಾಏಕಿ ಕೈಲಾಸ್ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ ಹಾಕಿ ಹಣವಿದ್ದ ದ್ವಿಚಕ್ರ ವಾಹನ ಸಮೇತ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಆರೋಪಿಗಳು ಕೃತ್ಯ ನಡೆದ ಒಂದು ಕಿ.ಮೀ. ದೂರದಲ್ಲಿ ದ್ವಿಚಕ್ರ ವಾಹನವನ್ನು ಬಿಟ್ಟು, ಅದರಲ್ಲಿದ್ದ ನಗದು ಹಣದೊಂದಿಗೆ ಪರಾರಿಯಾಗಿದ್ದಾರೆ. ಈ ಘಟನೆಯ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತ ಕೈಲಾಸ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Feb 2026 8:17 pm

ಮಟ್ಟು ಪರಿಸರದಲ್ಲಿ 23 ಪ್ರಬೇಧಗಳ 219 ಹಕ್ಕಿಗಳ ವೀಕ್ಷಣೆ

ಕಾಪು, ಫೆ.2: ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪಿತ್ರೋಡಿ ಹಾಗೂ ಮಟ್ಟು ಪರಿಸರದಲ್ಲಿ ಜ.31ರಂದು ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂಲಕ ಸುತ್ತಮುತ್ತಲಿನ ಪರಿಸರದಲ್ಲಿ 23 ಪ್ರಬೇಧಗಳ 219 ಹಕ್ಕಿಗಳನ್ನು ಪಟ್ಟಿ ಮಾಡಿದರು. ಇದರಲ್ಲಿ ಬ್ಲಾಕ್ ಹೆಡೆಡ್ ಐಬಿಸ್, ಗುಲಾಬಿ ಕೊರಳಿನ ಗಿಳಿ, ಸಣ್ಣ ಕುಟ್ರ, ಕಾಡು ಗೊರವಂಕ, ಚುಕ್ಕೆ ಬೆಳವ, ಗದ್ದೆ ಮಿಂಚುಳ್ಳಿ, ನೀಲಿ ಮಿಂಚುಳ್ಳಿ, ಕೆಂಪು ಟಿಟ್ಟಿಭ, ದೊಡ್ಡ ಬೆಳ್ಳಕ್ಕಿ, ಕೊಳದ ಬಕ, ಸಣ್ಣ ಕಳ್ಳಿಪೀರ, ಗದ್ದೆಗೊರವ, ಗಲ್ ಸೇರಿದಂತೆ 23 ಪ್ರಬೇಧಗಳು ಒಳಗೊಂಡಿವೆ. ಬಳಿಕ ಮಟ್ಟುಗುಳ್ಳ ಬೆಳೆಗಾರರ ಜತೆ ಸಂವಾದ ನಡೆಯಿತು. ಮಟ್ಟು ಗುಳ್ಳ ಬೆಳೆಗಾರರ ಸಂಘದ ಪ್ರಬಂಧಕ ಮಟ್ಟು ಲಕ್ಷ್ಮಣ್, ಗಿರೀಶ್ ಆರ್ಚಾ, ಪ್ರತಿಮಾ ಆರ್ಚಾ, ಮೇಧಾ ನಾಯಕ್, ರಮ್ಯಾ ಕಾಮತ್, ರಾಜಶ್ರೀ ಎಸ್., ವೈಭವ್ ಯಡಿಯಾಳ್, ವಿದ್ಯಾಶ್ರೀ ಎಸ್., ಪ್ರಸನ್ನ ಉದ್ಯಾವರ ಉಪಸ್ಥಿತರಿದ್ದರು. ಡಾ.ಗಣೇಶ್ ಪ್ರಸಾದ್ ಜಿ.ನಾಯಕ್ ಕಾರ್ಯಕ್ರಮ ಸಂಯೋಜಿಸಿದರು.

ವಾರ್ತಾ ಭಾರತಿ 2 Feb 2026 8:16 pm

ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿ: ಅದೃಷ್ಟದ ಆಯ್ಕೆಯಲ್ಲಿ ಪಂಚಜನ್ಯ ವಿನ್ನರ್, ಜಯಕರ್ನಾಟಕ ರನ್ನರ್

ಉಡುಪಿ, ಫೆ.2: ಸಾಕಷ್ಟು ವಿವಾದಕ್ಕೆ ಕಾರಣವಾಗಿ ಅರ್ಧದಲ್ಲಿಯೇ ರದ್ದಾಗಿದ್ದ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟ ನಾಣ್ಯ ಚಿಮ್ಮುಗೆ ಮೂಲಕ ಆಯ್ಕೆ ಮಾಡಲಾಯಿತು. ಈ ಮೂಲಕ ಖುಷಿ ಅಮರ್ ಪಾಂಚಜನ್ಯ ತಂಡವು ವಿನ್ನರ್ ಆಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ರನ್ನರ್ಸ್‌ ಪ್ರಶಸ್ತಿಯನ್ನು ಬೆಂಗಳೂರಿನ ಜಯ ಕರ್ನಾಟಕ ತಂಡ ಪಡೆದುಕೊಂಡಿತು. ಉಡುಪಿಯ ಮಣಿಪಾಲ ಇನ್ ಹೊಟೇಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾ ಯಿತು. ವಿಜೇತ ತಂಡಗಳು ಸೇರಿದಂತೆ ಸೆಮಿಫೈನಲ್ ಪ್ರವೇಶಿಸಿದ ಇಝಾನ್ ಚೈತನ್ಯ ಫೈಸ್‌ರ್ ಎಚ್.ಎಂ ಎಕ್ತಾ ಹಾಗೂ ಫ್ರೆಂಡ್ಸ್ ಬೆಂಗಳೂರು ತಂಡಗಳಿಗೆ ತಲಾ 5 ಲಕ್ಷ ರೂ.ನಂತೆ ಒಟ್ಟು 20ಲಕ್ಷ ರೂ. ಮೊತ್ತವನ್ನು ಹಂಚಲಾಯಿತು. ಎಚ್‌ಎಂಸಿ ಯುನೈಟೆಡ್ ವತಿಯಿಂದ ಬ್ರಹ್ಮಾವರದಲ್ಲಿ ಜ.23ರಿಂದ ಮೂರು ದಿನಗಳ ಕಾಲ ಎಚ್‌ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಆಯ್ದ 16 ತಂಡಗಳು ಭಾಗವಹಿಸಿತ್ತು. ಪ್ರಥಮ 25 ಲಕ್ಷ ರೂ. ಹಾಗೂ ದ್ವಿತೀಯ 15 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಟೂರ್ನಿ ಆಯೋಜಕ ಶಕೀಲ್ ಹೊನ್ನಾಳ ಪಂದ್ಯಾಟದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಚ್‌ಎಂಸಿ ಯುನೈಟೆಡ್ ಗೌರವಾಧ್ಯಕ್ಷ ಕೆ.ಪಿ ಇಬ್ರಾಹಿಂ ಮಟಪಾಡಿ, ಮಾಜಿ ಅಧ್ಯಕ್ಷ ಸಂಜೀವ ಕೋಟ್ಯಾನ್, ದಿ ಯುನಿವರ್ಸಲ್ ಐಡಲ್‌ನ ಚೇಯರ್‌ಮೆನ್ ಶಫೀ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 8:15 pm

Bengaluru | ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಓರ್ವನ ಹತ್ಯೆ

ಬೆಂಗಳೂರು : ಆಟೋ ಪಾರ್ಕಿಂಗ್ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾಗಿದ್ದ ಗಲಾಟೆ ಹತ್ಯೆಯಲ್ಲಿ ಅಂತ್ಯವಾದ ಘಟನೆ ಫೆ.1ರ ತಡರಾತ್ರಿ ಇಲ್ಲಿನ ನಾಯಂಡಹಳ್ಳಿ ಸಮೀಪದ ಅಂಬೇಡ್ಕರ್ ಕಾಲೋನಿಯಲ್ಲಿ ವರದಿಯಾಗಿದೆ. ಚಾಕುವಿನಿಂದ ಇರಿದು ಗುಣ(28) ಎಂಬಾತನನ್ನು ಹತ್ಯೆ ಮಾಡಲಾಗಿದ್ದು, ಆತನ ಸ್ನೇಹಿತ ವೇಲು ಎಂಬಾತ ಗಾಯಗೊಂಡಿದ್ದಾನೆ. ಈ ಪ್ರಕರಣ ಸಂಬಂಧ ವಿನೋದ್, ಅಜಿತ್, ಕುಮಾರ್ ಮತ್ತು ದೀನ ಎಂಬುವರನ್ನು ಬಂಧಿಸಿರುವುದಾಗಿ ಬ್ಯಾಟರಾಯನಪುರ ಠಾಣೆ ಪೊಲೀಸರು ತಿಳಿಸಿದ್ದಾರೆ. ಒಂದೇ ಏರಿಯಾ ನಿವಾಸಿಗಳಾಗಿದ್ದ ಗುಣ ಹಾಗೂ ವಿನೋದ್ ನಡುವೆ ಆಟೋ ನಿಲ್ಲಿಸುವ ವಿಚಾರಕ್ಕೆ ಎರಡು ದಿನಗಳ ಹಿಂದಷ್ಟೇ ಗಲಾಟೆಯಾಗಿತ್ತು. ಆ ಸಂದರ್ಭದಲ್ಲಿ ವಿನೋದ್, ಅಜಿತ್ ಹಾಗೂ ಕುಮಾರ್ ಸೇರಿ ಗುಣನ ಆಟೋ ಜಖಂಗೊಳಿಸಿದ್ದರು. ಈ ಪ್ರಕರಣ ಬ್ಯಾಟರಾಯನಪುರ ಠಾಣೆ ಮೆಟ್ಟಿಲೇರಿದ ಬಳಿಕ ಎರಡೂ ಕಡೆಯವರಿಗೆ ಪೊಲೀಸರು ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿದ್ದರು. ಅದೇ ವಿಚಾರವಾಗಿ ಫೆ.1ರ ತಡರಾತ್ರಿ ಪೊಲೀಸ್ ಠಾಣೆಗೆ ತೆರಳಿ ವಾಪಸ್ ಬಂದ ಗುಣ ಎಂಬುವನಿಗೆ ಆರೋಪಿ ವಿನೋದ್, ಮತ್ತವನ ಕಡೆಯವರು ಸೇರಿಕೊಂಡು ಚಾಕು ಇರಿದಿದ್ದು, ಆತನ ಸ್ನೇಹಿತ ವೇಲು ಎಂಬಾತನಿಗೂ ಗಾಯಗಳಾಗಿದ್ದವು. ತಕ್ಷಣ ಗುಣನನ್ನು ಆಸ್ಪತ್ರೆಗೆ ಸಾಗಿಸಲಾಗಿದೆಯಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಮೂವರು ಹತ್ಯೆ ಪ್ರಕರಣವೊಂದರ ಆರೋಪಿಗಳಾಗಿದ್ದವರು. ಅವರವರ ನಡುವೆಯೇ ಆರಂಭವಾದ ಗಲಾಟೆ ಹತ್ಯೆ ಮಾಡುವ ಹಂತಕ್ಕೆ ತಲುಪಿದೆ. ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 2 Feb 2026 8:13 pm

ಪ್ರವಾಸಿ ಬೋಟು, ವಾಟರ್‌ಸ್ಪೋರ್ಟ್ಸ್‌ಗಳಿಗೆ ಪರವಾನಿಗೆ ಪಡೆಯಲು 45 ದಿನಗಳ ಕಾಲಾವಕಾಶ: ಎಸ್ಪಿ ಹರಿರಾಂ ಶಂಕರ್

ಉಡುಪಿ, ಫೆ.2: ಉಡುಪಿ ಜಿಲ್ಲೆಯಲ್ಲಿ ಪ್ರವಾಸಿ ಬೋಟು ಸೇರಿದಂತೆ ವಾಟರ್ ಸ್ಪೋರ್ಟ್ಸ್‌ಗಳಿಗೆ ಪ್ರವಾಸೋದ್ಯಮ ಸಹಿತ ವಿವಿಧ ಇಲಾಖೆಗಳಿಂದ ಅನುಮತಿ ಹಾಗೂ ಪರವಾನಿಗೆ ಪಡೆಯಲು 45 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕರಾವಳಿ ಕಾವಲು ಪೊಲೀಸ್ ಪ್ರಭಾರ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಪ್ರವಾಸಿ ಬೋಟ್/ಹೌಸ್ ಬೋಟ್/ಕಯಾಕಿಂಗ್/ಪ್ರವಾಸಿ ದೋಣಿ/ಪ್ಯಾರಜೂಟ್/ಬನಾನರೈಡ್/ಸರ್ಫಿಂಗ್/ಜೆಟ್ಟಿ/ಬಂಫಿ/ಬೋಟ್ ರೈಂಡಿಂಗ್ ಎಂಬ ವಾಟರ್ ಸ್ಪೋರ್ಟ್ಸ್ ನಡೆಸುತ್ತಿರುವವರು ವಿವಿಧ ಇಲಾಖೆಗಳಿಂದ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಹಾಗೂ ಪರವಾನಿಗೆ ಪಡೆಯಲು 45 ದಿನಗಳ ಕಾಲಾವಕಾಶ ನೀಡಲಾಗಿದೆ. 45 ದಿನಗಳ ನಂತರವೂ ನಿಯಮ ಮತ್ತು ಕಾನೂನು ಮೀರಿ ಜಲಕ್ರೀಡೆ ನಡೆಸಿ, ಯಾವುದೇ ದುರಂತ ಸಂಭವಿಸಿ ಯಾರಾದರೂ ಮೃತರಾದರೆ ಕಲಂ 105ರ ಭಾರತೀಯ ನ್ಯಾಯ ಸಂಹಿತೆ 2023ರ ಅಡಿಯಲ್ಲಿ ಅಪರಾಧ ವಾಗುತ್ತದೆ. ಆದುದರಿಂದ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದು ಜಲಕ್ರೀಡೆಗಳನ್ನು ನಡೆಸಬೇಕು ಎಂದು ಅವರು ತಿಳಿಸಿದರು. ಮೋಟರೈಸ್ ಬೋಟು ನಡೆಸಲು ಬಂದರು ಇಲಾಖೆಯಿಂದ ನೊಂದಾವಣಾ ಪ್ರಮಾಣ ಪತ್ರ, ಸಂಬಂಧ ಪಟ್ಟ ವಿವಿಧ ಇಲಾಖೆಗಳಿಂದ ನಿರಪೇಕ್ಷಣಾ ಪತ್ರ ಹೊಂದಿರಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪತ್ರ, ವಿಮಾ ಪ್ರಮಾಣ ಪತ್ರ, ಬೋಟ್ ನಡೆಸಲು ಸಾರಂಗ ಪ್ರಮಾಣ ಪತ್ರ ಇರಬೇಕು. ನಾನ್ ಮೋಟರೈಸ್ ಬೋಟ್/ದೋಣಿ ನಡೆಸಲು ಸಂಬಂಧಪಟ್ಟ ವಿವಿಧ ಇಲಾಖೆಗಳಿಂದ ನಿರಪೇಕ್ಷಣಾ ಪತ್ರ ಹೊಂದಿರಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪತ್ರ, ವಿಮಾ ಪ್ರಮಾಣ ಪತ್ರ, ಬೋಟ್ ನಡೆಸಲು ಸಾರಂಗ ಪ್ರಮಾಣ ಪತ್ರ, ವಾಟರ್ ಸೋರ್ಟ್ಸ್ ನಡೆಸಲು ನ್ಯಾಶನಲ್ ಇಸ್ಟಿಟ್ಯೂಟ್ ಆಫ್ ವಾಟರ್ ಸ್ಪೋರ್ಟ್ಸ್‌ನ ಪ್ರಮಾಣ ಪತ್ರ ಹೊಂದಿರಬೇಕು. ಕಯಾಕಿಂಗ್/ಪ್ಯಾರಚೂಟ್/ಬನಾನ ರೈಡ್/ಜೆಟ್ಲಿ ನಡೆಸಲು ಸಂಬಂಧ ಪಟ್ಟ ವಿವಿಧ ಇಲಾಖೆಗಳಿಂದ ನಿರಪೇಕ್ಷಣಾ ಪತ್ರ, ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆ ಪತ್ರ, ಜೆಟ್ಲಿ ನಡೆಸಲು ಸಾರಂಗ ಪ್ರಮಾಣ ಪತ್ರ, ವಾಟರ್ ಸೋರ್ಟ್ಸ್ ನಡೆಸಲು ನ್ಯಾಶನಲ್ ಇಸ್ಟಿಟ್ಯೂಟ್ ಆಫ್ ವಾಟರ್ ಸ್ಪೋರ್ಟ್ಸ್‌ನ ಪ್ರಮಾಣ ಪತ್ರ ಹೊಂದಿರಬೇಕು. ಜಲಕ್ರೀಡೆ ನಡೆಸುವ ಸಮಯದಲ್ಲಿ ಪ್ರವಾಸಿಗರಿಗೆ ಲೈಪ್ ಜಾಕೇಟ್‌ನ್ನು ಕಡ್ಡಾಯವಾಗಿ ಧರಿಸುವಂತೆ ಕ್ರಮ ಕೈಗೊಳ್ಳಬೇಕು. ಲೈಫ್‌ಬಾಯ್, ಪ್ರಥಮ ಚಿಕಿತ್ಸೆ ಕಿಟ್, ಅಗ್ನಿಶಾಮಕ ಸಾಧನ ಹಾಗೂ ಇನ್ನಿತರ ಸುರಕ್ಷತಾ ಸಲಕರಣೆಗಳನ್ನು ಬೋಟ್/ದೋಣಿಯಲ್ಲಿ ಇಟ್ಟುಕೊಳ್ಳಬೇಕು. ಸಂಬಂಧ ಪಟ್ಟ ಮಾಲಕರು ಜಲಕ್ರೀಡೆ ನಡೆಸುವ ಸ್ಥಳದಲ್ಲಿ ಪ್ರವಾಸಿಗರಿಗೆ/ಸಾರ್ವಜನಿಕರಿಗೆ ಫಲಕಗಳನ್ನು ಅಳವಡಿಸಿ ಅರಿವು ಮೂಡಿಸಬೇಕು. ಸಾರಂಗ ಪತ್ರವನ್ನು ಹೊಂದಿದವರು ಮಾತ್ರ ಬೋಟ್ ಚಲಾಯಿಸಬೇಕು. ಸಂಬಂಧಪಟ್ಟ ಪ್ರಾಧಿಕಾರದವರು ನಾವೆಯ ಪರಿಶೀಲನೆ ಸಮಯದಲ್ಲಿ ದಾಖಲಾತಿಗಳನ್ನು ಕೇಳಿದ್ದಲ್ಲಿ ಅವುಗಳನ್ನು ಕಡ್ಡಾಯವಾಗಿ ಹಾಜರುಪಡಿಸ ಬೇಕು. ಯಾವುದೇ ರೀತಿಯ ಜಲಕ್ರೀಡೆ ನಡೆಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ನಿರಪೇಕ್ಷಣಾ ಪತ್ರವನ್ನು ಪಡೆದು ಕಾಯನಿರ್ವಹಿಸಬೇಕು ಎಂದು ಎಸ್ಪಿ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ವಾರ್ತಾ ಭಾರತಿ 2 Feb 2026 8:13 pm

ಫೆ.6ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ, ಫೆ.2: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 6 ರಂದು ಬೆಳಗ್ಗೆ 11ರಿಂದ ಅಪರಾಹ್ನ 1:30ರವರೆಗೆ ಕಾರ್ಕಳ ತಾಲೂಕು ಸರಕಾರಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ. ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661,ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 2 Feb 2026 8:07 pm

ಮಾರಿ ಜಾತ್ರೆ: ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯ ಮಾರಿ ಜಾತ್ರೆ ಹಿನ್ನೆಲೆ ಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ದೇಶಿಯ ಮದ್ಯ ಮಾರಾಟ) ನಿಯಮಗಳು 1968ರ ನಿಯಮ 3ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965ರ ನಿಯಮ 21ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಗುಜ್ಜಾಡಿ ಹಾಗೂ ಗಂಗೊಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಫೆಬ್ರವರಿ 4ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12:00ಗಂಟೆಯವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ಗ್ರಾಮಗಳ ವ್ಯಾಪಿಯಲ್ಲಿ ಒಣದಿನ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಆದೇಶ ಹೊರಡಿಸಿದ್ದಾರೆ.

ವಾರ್ತಾ ಭಾರತಿ 2 Feb 2026 7:58 pm

ಡಿಜಿಟಲ್ ಆ್ಯಪ್ ಆಧಾರಿತ ಆಟೋಗೆ ಸರಕಾರದ ಪರವಾನಿಗೆ ಕಡ್ಡಾಯ: ಉಡುಪಿ ಡಿಸಿ ಸ್ವರೂಪಾ

ʼಸಾಧಕ-ಬಾಧಕ ಚರ್ಚಿಸಿ ಅನುಷ್ಠಾನʼ

ವಾರ್ತಾ ಭಾರತಿ 2 Feb 2026 7:55 pm

ಸೆಸ್-ಸಚಾರ್ಜ್ ಮೂಲಕ 6 ಲಕ್ಷ ಕೋಟಿ ರೂ.ಸಂಗ್ರಹ; ರಾಜ್ಯಗಳಿಗೆ ಒಂದು ಪೈಸೆಯೂ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ಸರಕಾರ ಸೆಸ್ ಮತ್ತು ಸಚಾರ್ಜ್ ಮೂಲಕ ಸುಮಾರು 6ಲಕ್ಷ ಕೋಟಿ ರೂ. ವಸೂಲಿ ಮಾಡುತ್ತಿದೆ. ಇದರಲ್ಲಿ ರಾಜ್ಯಗಳಿಗೆ ಒಂದು ಪೈಸೆಯೂ ಬರುವುದಿಲ್ಲ. ಈ ಬಗ್ಗೆ ಧ್ವನಿ ಎತ್ತಿ ರಾಜ್ಯಗಳಿಗೂ ಪಾಲು ನೀಡಿ ಎಂದು ನಮ್ಮ ಸರಕಾರ ಒತ್ತಾಯಿಸಿದ್ದರೂ, ಇದು ಜಾರಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಕುರಿತ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಗೆ ಸರಕಾರದ ಪರವಾಗಿ ಉತ್ತರಿಸಿದ ಅವರು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಅನುದಾನ ಕಡಿತದ ಬಗ್ಗೆ ನಾನೇ ಹಲವು ಬಾರಿ ಸಂಬಂಧಿಸಿದವರಿಗೆ ಪತ್ರ ಬರೆದಿದ್ದೇನೆ. ಕೇಂದ್ರ ವಿತ್ತ ಸಚಿವರನ್ನು ಈ ಸಂಬಂಧ ಭೇಟಿ ಮಾಡಲಾಗಿದೆ. ಜಿಎಸ್‍ಟಿ ಸಮಿತಿ ಸಭೆಯಲ್ಲಿ ರಾಜ್ಯ ಸರಕಾರ ತನ್ನ ನಿಲುವನ್ನು ಮಂಡಿಸಿದರೂ, ಅದನ್ನು ಪರಿಗಣಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 2022 ರಿಂದ ಪ್ರತಿ ವರ್ಷ ರಾಜ್ಯಕ್ಕೆ 18 ರಿಂದ 20 ಸಾವಿರ ಕೋಟಿ ರೂ.ಗಳಷ್ಟು ಜಿಎಸ್‍ಟಿ ಪರಿಹಾರ ನಷ್ಟವಾಗಿದೆ. ಅಂದರೆ, 4 ವರ್ಷಗಳಲ್ಲಿ 75 ರಿಂದ 80 ಸಾವಿರ ಕೋಟಿ ರೂ.ನಷ್ಟವಾಗಿದೆ. ಜಿಎಸ್‍ಟಿ ಪರಿಹಾರದ ಸೆಸ್ಸನ್ನು ಕೇಂದ್ರದವರು ಜನರಿಂದ ಸಂಗ್ರಹಿಸುವುದನ್ನು ನಿಲ್ಲಿಸಿದ್ದರೆ ಒಪ್ಪುತ್ತಿದ್ದೆ. 2025-26 ರಲ್ಲಿ 1.67 ಲಕ್ಷ ಕೋಟಿ ರೂ.ಗಳಷ್ಟು ಸೆಸ್ಸನ್ನು ಸಂಗ್ರಹಿಸಿದ್ದಾರೆ. ಈ ವರ್ಷ ಎಲ್ಲ ಸೆಸ್, ಸಚಾರ್ಜ್ ಮುಂತಾದವು ಸೇರಿ 6 ಲಕ್ಷ ಕೋಟಿ ರೂ.ಸಂಗ್ರಹಿಸುತ್ತಿದ್ದಾರೆ ಮುಖ್ಯಮಂತ್ರಿ ಅಂಕಿ ಅಂಶ ನೀಡಿದರು. 16ನೆ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರಕಾರ ಒಪ್ಪಿಕೊಂಡಿದೆ. 14ನೆ ಹಣಕಾಸು ಆಯೋಗವು ನಮಗೆ ಶೇ.4.71ರಷ್ಟು ತೆರಿಗೆ ಹಂಚಿಕೆ ಮಾಡಿತ್ತು. ಅದಕ್ಕಿಂತ ಹೆಚ್ಚಿನ ಅನುದಾನ ಸಿಕ್ಕರೆ ಮಾತ್ರ ನಮಗೆ ನ್ಯಾಯ ದೊರೆಯುತ್ತದೆ. ಆದರೆ, 16ನೆ ಹಣಕಾಸು ಆಯೋಗವು ಶೇ.4.131 ರಷ್ಟನ್ನು ಮಾತ್ರ ಶಿಫಾರಸ್ಸು ಮಾಡಿದೆ. ತೆರಿಗೆ ಪಾಲನ್ನು ಶೇ.50ಕ್ಕೆ ಏರಿಸಿ ಎಂದು ಕೇಳಿದ್ದೆವು. ಆದರೆ, ಶೇ.41ರಷ್ಟೇ ಕೊಟ್ಟಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಕರ್ನಾಟಕದ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 5 ವರ್ಷಗಳಲ್ಲಿ 37,372 ಕೋಟಿ ರೂ. ಸಿಕ್ಕಿದ್ದರೆ, ಉತ್ತರಪ್ರದೇಶಕ್ಕೆ 1.17 ಲಕ್ಷ ಕೋಟಿ ರೂ., ಮಹಾರಾಷ್ಟ್ರಕ್ಕೆ 79.6 ಸಾವಿರ ಕೋಟಿ ರೂ., ಮಧ್ಯಪ್ರದೇಶಕ್ಕೆ 48 ಸಾವಿರ ಕೋಟಿ ರೂ. ದೊರೆಯಲಿದೆ. ಹಾಗೆಯೇ ಪ್ರಕೃತಿ ವಿಕೋಪ ನಿಧಿಯಲ್ಲೂ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. ನಮಗೆ 5,135 ಕೋಟಿ ರೂ., ಮಹಾರಾಷ್ಟ್ರಕ್ಕೆ 31,597 ಕೋಟಿ ರೂ., ಗುಜರಾತಿಗೆ 6,766 ಕೋಟಿ ರೂ. ಸಿಗಲಿದೆ ಎಂದು ಅವರು ಮಾಹಿತಿ ನೀಡಿದರು. ಬೆಂಗಳೂರಿನ ಅಭಿವೃದ್ಧಿಗೆ, ಕಲ್ಯಾಣ ಕರ್ನಾಟಕ, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು, ಅನುದಾನಗಳನ್ನು ಕೇಳಿದ್ದೆವು. ನಯಾಪೈಸೆ ಕೊಡಲಿಲ್ಲ. ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ‘ಗ್ರಾಮೀಣಾಭಿವೃದ್ಧಿಗೆ ಮನರೆಗಾ ಸಂಜೀವಿನಿ’ ಎಂದಿದ್ದರು. ಆದರೆ ಅಂದು ಬೆಂಬಲಿಸಿದವರು ಇಂದು ಬಿಜೆಪಿಯವರೊಂದಿಗೆ ಹೊಂದಾಣಿಕೆ ಮಾಡಿಕೊಂಡು ವಿರೋಧಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು. ಕೇಂದ್ರ ವಿತ್ತ ಸಚಿವರು ಕೃಷ್ಣಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಅನುದಾನ ನೀಡುವುದಾಗಿ ಘೋಷಿಸಿದ್ದನ್ನು ಕೊಡಲಿಲ್ಲ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ. 15ನೆ ಹಣಕಾಸು ಆಯೋಗದಲ್ಲಿ ಶಿಫಾರಸ್ಸು ಮಾಡಲಾಗಿದ್ದ 11,495 ಕೋಟಿ ರೂ.ಗಳು ರಾಜ್ಯಕ್ಕೆ ನೀಡಲಿಲ್ಲ. 14ನೆ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೊಡುತ್ತಿದ್ದ ಶೇ.4.71ರಷ್ಟು ತೆರಿಗೆ ಹಂಚಿಕೆ ಪ್ರಮಾಣವನ್ನು 15ನೆ ಆಯೋಗದಲ್ಲಿ ಶೇ.3.64ಕ್ಕೆ ಇಳಿಸಿದ್ದರಿಂದ ಐದು ವರ್ಷಗಳಲ್ಲಿ ರಾಜ್ಯಕ್ಕೆ 1.25 ಲಕ್ಷ ಕೋಟಿ ರೂ.ಕೊರತೆ ಉಂಟಾಯಿತು. ರಾಜ್ಯದಿಂದ 4.50 ಲಕ್ಷ ಕೋಟಿ ರೂ. ತೆರಿಗೆ ಕೊಟ್ಟರೆ, ನಮಗೆ ಕೇವಲ 55 ರಿಂದ 60 ಸಾವಿರ ಕೋಟಿ ರೂ. ಬರುತ್ತದೆ ಎಂದು ಅವರು ಹೇಳಿದರು.

ವಾರ್ತಾ ಭಾರತಿ 2 Feb 2026 7:50 pm

ಕಾಸರಗೋಡು| ತಂದೆಯಿಂದ ಮಗಳ ಕೊಲೆ: ಆರೋಪಿ ಸೆರೆ

ಕಾಸರಗೋಡು: 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದಿದ್ದಾನೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ ಉಳಿಸಲಾಗಲಿಲ್ಲ, ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದು, ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಾರ್ತಾ ಭಾರತಿ 2 Feb 2026 7:47 pm

Nikhil Kumaraswamy: ಅಪ್ಪ, ಅಜ್ಜನ ಕರ್ಮಭೂಮಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ, ಈ ಕ್ಷೇತ್ರದಿಂದಲೇ ಸ್ಪರ್ಧೆ: ನಿಖಿಲ್ ಕುಮಾರಸ್ವ

Nikhil Kumaraswamy: ರಾಮನಗರ ನಮ್ಮ ತಂದೆಯ ಕರ್ಮಭೂಮಿ ಹಾಗೂ ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿರುವ ಪುಣ್ಯಭೂಮಿಯಾಗಿದೆ. ಹೀಗಾಗಿ, ಆ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯು ನನ್ನ ತಂದೆಯವರ ಕರ್ಮಭೂಮಿ. 1994ರಲ್ಲಿ ಹಾಸನದಿಂದ

ಒನ್ ಇ೦ಡಿಯ 2 Feb 2026 7:46 pm

ರೈಲ್ವೆ ಬಜೆಟ್‌: ಕರ್ನಾಟಕ್ಕೆ 7,748 ಕೋಟಿ ರೂ. ಅನುದಾನ; 61 ನಿಲ್ದಾಣಗಳ ಪುನಾರಾಭಿವೃದ್ಧಿ - ಸಚಿವ ವಿ ಸೋಮಣ್ಣ ಮಾಹಿತಿ

ಕರ್ನಾಟಕಕ್ಕೆ ಈ ಬಾರಿ ರೈಲ್ವೆ ಬಜೆಟ್‌ನಲ್ಲಿ 7,748 ಕೋಟಿ ರೂ. ನೀಡಲಾಗಿದ್ದು, 61 ನಿಲ್ದಾಣಗಳ ಪುನರಾಭಿವೃದ್ಧಿಗೆ 2,110 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಒಂಬತ್ತು ಪಟ್ಟು ಹೆಚ್ಚಳವಾಗಿದ್ದು, 52,950 ಕೋಟಿ ರೂ. ಮೌಲ್ಯದ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ. 12 ಜೋಡಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸುತ್ತಿವೆ.

ವಿಜಯ ಕರ್ನಾಟಕ 2 Feb 2026 7:40 pm

ಯಾದಗಿರಿ | ಎಂಎಸ್‌ಎಂಇಗಳ ಕಾರ್ಯಕ್ಷಮತೆ ವೃದ್ಧಿಗೆ ಝಡ್ & ಲಿಯನ್ ಕುರಿತು ಅರಿವು ಕಾರ್ಯಗಾರ

ಯಾದಗಿರಿ : ಜಿಲ್ಲಾ ಕೈಗಾರಿಕಾ ಕೇಂದ್ರ, ಸುರಪುರ ಹಾಗೂ ಶಹಾಪೂರ ತಾಲೂಕುಗಳ ಕೈಗಾರಿಕಾ ಅಸೋಸಿಯೇಷನ್‌ಗಳು ಮತ್ತು ಕೆ.ಎಸ್.ಎಂ.ಸಿ.ಎ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಿ ವೇಗಗೊಳಿಸುವ ಉದ್ದೇಶದ ರಾಂಪ್ ಯೋಜನೆಯಡಿ ಝಡ್ & ಲಿಯನ್ ಕುರಿತು ಒಂದು ದಿನದ ಅರಿವು ಕಾರ್ಯಗಾರ ಶಹಾಪೂರದಲ್ಲಿ ಜರುಗಿತು. ಶಹಾಪೂರದ ಬಿ.ಬಿ. ರಸ್ತೆದಲ್ಲಿರುವ ಶುಭಾಶ್ರೀ ಹೋಟೆಲ್‌ನಲ್ಲಿ ನಡೆದ ಕಾರ್ಯಗಾರವನ್ನು ಯಾದಗಿರಿ ಜಿಲ್ಲಾ ಕಾಟನ್ ಜಿನ್ನಿಂಗ್ ಅಸೋಸಿಯೇಷನ್ ವ್ಯವಸ್ಥಾಪಕ ಪಾಲುದಾರ ಹಾಗೂ ಕಾಟನ್ ಜಿನ್ನಿಂಗ್ ಇಂಡಸ್ಟ್ರೀಸ್‌ನ ಮಣಿಕಂಠ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ. ಸತೀಶಕುಮಾರ, ಈ ಭಾಗದಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಝಡ್ & ಲಿಯನ್ ಪ್ರಮಾಣೀಕರಣದ ಬಗ್ಗೆ ಕೈಗಾರಿಕೋದ್ಯಮಿಗಳು ಅರಿವು ಪಡೆದುಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಹಾಪೂರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಮುಸ್ತಫಾ ದರ್ಬಾನ್, ತಾಲ್ಲೂಕಿನಲ್ಲಿ ಕೈಗಾರಿಕಾ ಬೆಳವಣಿಗೆಗೆ ಅಪಾರ ಅವಕಾಶಗಳಿದ್ದು, ಆರ್ಥಿಕವಾಗಿ ಸದೃಢರಾದವರು ಬೇರೆ ವಲಯಗಳಲ್ಲಿ ಹೂಡಿಕೆ ಮಾಡುವ ಬದಲಾಗಿ ಕೈಗಾರಿಕಾ ವಲಯದಲ್ಲಿ ಹೂಡಿಕೆ ಮಾಡಿದರೆ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, ಆರ್ಥಿಕ ಬೆಳವಣಿಗೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಯಾದಗಿರಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ (ಗ್ರಾಕೈ) ಮುಕುಂದ ರೆಡ್ಡಿ ಪಾಟೀಲ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜ್ಯೋತಿ ಕೃಷ್ಣ (ಅಸಿಸ್ಟೆಂಟ್), ರಾಧಾ, ಎಂ.ಎ. ಸಲೀಮ್, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 7:31 pm

ಭಾರತೀಯ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ದುರಹಂಕಾರಿ - ಸುಳ್ಳುಗಾರ: ಮಮತಾ ಬ್ಯಾನರ್ಜಿ

Mamata Banerjee: ಭಾರತೀಯ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ದುರಹಂಕಾರಿ ಮತ್ತು ಸುಳ್ಳುಗಾರ ಎಂದು ಕರೆದಿದ್ದಾರೆ. ಭಾರತದಾದ್ಯಂತ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದೆ. ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆದಿದೆ. ಕೇಂದ್ರ ಸರ್ಕಾರದ ನಿರ್ಧಾರಗಳನ್ನು ತೀವ್ರವಾಗಿ ಖಂಡಿಸುವುದನ್ನು ಮುಂದುವರಿಸಿರುವ ಪಶ್ವಿಮ ಬಂಗಾಳದ

ಒನ್ ಇ೦ಡಿಯ 2 Feb 2026 7:17 pm

ಔರಾದ್ | ಆಹಾರ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ : ಅಧಿಕಾರಿಗಳ ಅಮಾನತಿಗೆ ಮನವಿ

ಬೀದರ್ : ಔರಾದ್ ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ದಲ್ಲಾಳಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೈಜೋಡಿಸಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಒತ್ತಾಯಿಸಿದೆ. ಸೋಮವಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಹೊಸ ಪಡಿತರ ಚೀಟಿ ನೀಡಲು ಅರ್ಜಿದಾರರಿಂದ 3 ರಿಂದ 5 ಸಾವಿರ ರೂಪಾಯಿ ವರೆಗೆ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಹಣ ನೀಡುವವರಿಗೆ ಮಾತ್ರ ಪಡಿತರ ಚೀಟಿ ಮಂಜೂರು ಮಾಡಲಾಗುತ್ತಿದ್ದು, ಬಡವರು ಹಣ ನೀಡಲು ಅಸಮರ್ಥರಾದರೆ ವಿವಿಧ ನೆಪ ಹೇಳಿ ಅವರ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ ಎಂದು ದೂರಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೇ ಪಡಿತರ ಚೀಟಿಗಳನ್ನು ಮಂಜೂರು ಮಾಡುತ್ತಿದ್ದು, ಕೆಲವು ಆನ್‌ಲೈನ್ ಕೇಂದ್ರಗಳ ಮಾಲೀಕರ ಸಹಾಯದಿಂದ ಲಂಚ ಸಂಗ್ರಹಿಸಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ, ಕೆಲ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಪತ್ನಿಯ ಹೆಸರಿನಲ್ಲಿ ಪಡಿತರ ಚೀಟಿಗಳನ್ನು ಹೊಂದಿದ್ದು, ಕುಟುಂಬ ಸದಸ್ಯರ ಹೆಸರಿನಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಲಾಗಿದೆ. ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಯಾವುದೇ ನೋಟಿಸ್ ಪ್ರಕಟಿಸದೇ ಹಾಗೂ ಮಾಧ್ಯಮಗಳಲ್ಲಿ ಪ್ರಕಟಣೆ ನೀಡದೇ ಅಕ್ರಮವಾಗಿ ಅನುಮತಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತಿ ತಿಂಗಳು ಫಲಾನುಭವಿಗಳಿಂದ ಸುಮಾರು 3 ಸಾವಿರ ರೂಪಾಯಿ ಹಣವನ್ನು ತಾಲೂಕು ಆಹಾರ ಇಲಾಖೆಗೆ ನೀಡುವಂತೆ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ತಿಂಗಳಿಗೆ ಸುಮಾರು 3 ಲಕ್ಷ ರೂಪಾಯಿಗೂ ಅಧಿಕ ಹಣ ಅಕ್ರಮವಾಗಿ ಸಂಗ್ರಹವಾಗುತ್ತಿದೆ ಎಂದು ತಿಳಿಸಲಾಗಿದೆ. ಈ ಕುರಿತು ಈಗಾಗಲೇ ತಹಸೀಲ್ದಾರ್ ಅವರಿಗೆ ದೂರು ನೀಡಿದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದಕ್ಕೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಂಡು ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಉಪ ನಿರ್ದೇಶಕರ ಕಚೇರಿ ಎದುರು ಸಾಂಕೇತಿಕ ಸತ್ಯಾಗ್ರಹ ನಡೆಸಲಾಗುವುದು ಎಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಎಚ್ಚರಿಕೆ ನೀಡಿದೆ.

ವಾರ್ತಾ ಭಾರತಿ 2 Feb 2026 7:09 pm

ವಿಧಾನಸಭೆಯಲ್ಲಿ ಬಾಂಗ್ಲಾ ಗದ್ದಲ: ವಿಪಕ್ಷಗಳ ಆರೋಪಗಳಿಗೆ ಖಡಕ್ ಉತ್ತರ ಕೊಟ್ಟ ಸಿದ್ದು, ಪರಂ!

ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಬಿಜೆಪಿ ಆರೋಪಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದರು. 197 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದ್ದು, 320 ಮಂದಿಯನ್ನು ಗುರುತಿಸಿ ವಾಪಸ್ ಕಳುಹಿಸುವ ಭರವಸೆ ನೀಡಿದರು. ಪುನೀತ್ ಕೆರೆಹಳ್ಳಿ ಕ್ರಮ ಕಾನೂನು ಉಲ್ಲಂಘನೆ ಎಂದೂ ಸ್ಪಷ್ಟಪಡಿಸಿದರು.

ವಿಜಯ ಕರ್ನಾಟಕ 2 Feb 2026 7:05 pm

ರಾಮನಗರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ಚಿಕ್ಕಮಗಳೂರು : ರಾಮನಗರ ಜಿಲ್ಲೆ ನಮ್ಮ ತಂದೆಯವರ ಕರ್ಮಭೂಮಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರಿಗೆ ರಾಜಕೀಯ ಜನ್ಮ ನೀಡಿದ ಭೂಮಿ, ಹಾಗಾಗಿ ರಾಮನಗರ ಬಿಟ್ಟು ಹೋಗುವ ಅಥವಾ ಬೇರೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸೋಮವಾರ ಆಲ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮನಗರದಲ್ಲಿ ನಮ್ಮನ್ನು ನಂಬಿಕೊಂಡಿರುವ ಕಾರ್ಯಕರ್ತರು ಮತ್ತು ಮುಖಂಡರು, ನಮ್ಮನ್ನು ಪ್ರೀತಿಸುವ ಜನರಿದ್ದಾರೆ. ಹಿಂದಿನ ನಾಲ್ಕು ಚುನಾವಣೆಗಳಲ್ಲಿ ಜಿಲ್ಲೆಯ ಜನ ನಮ್ಮನ್ನು ಕೈಬಿಟ್ಟಿಲ್ಲ. ಬೇರೆ ಬೇರೆ ಕಾರಣಕ್ಕೆ ಕೆಲವು ಸಂದರ್ಭಗಳಲ್ಲಿ ಏರುಪೇರು ಆಗಿದೆ. ದೇವೇಗೌಡರ ಕುಟುಂಬ ಜಿಲ್ಲೆಯ ಜನರಿಗಾಗಿ ದುಡಿದಿದೆ. ಸರ್ವಾಂಗೀಣಾ ಅಭಿವೃದ್ಧಿಗೆ ಶ್ರಮಿಸಿದೆ. ಹಾಗಾಗಿ ಆ ಜಿಲ್ಲೆಯನ್ನು ಬಿಟ್ಟು ಹೋಗುವ ಪ್ರಶ್ನೆಯೆ ಇಲ್ಲ ಎಂದರು. ಪ್ರತಿಪಕ್ಷಗಳಿಗೆ ಇರುವ ಹಕ್ಕನ್ನು ಸದೆಬಡಿಯುವ ಪ್ರಯತ್ನ : ದ್ವೇಷ ಭಾಷಣ ಕಾಯ್ದೆ ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳಿಗೆ ಇರುವ ಹಕ್ಕನ್ನು ಸದೆಬಡಿಯುವ ಪ್ರಯತ್ನವಾಗಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ಮಸೂದೆಯಾಗಿದೆ. ರಾಜ್ಯಪಾಲರು ಎಲ್ಲಾ ಅಂಶಗಳನ್ನು ಗಮನಿಸಿ ಒಳ್ಳೆಯ ತೀರ್ಮಾನ ಕೈಗೊಂಡಿದ್ದು, ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದರು. ರಾಜ್ಯಪಾಲರ ಘನತೆಯನ್ನು ತಗ್ಗಿಸುವ ಪ್ರಯತ್ನಗಳು ಸರಕಾರದ ಕಡೆಯಿಂದ ಆಗಬಾರದು, ಅವರನ್ನು ಮುಜುಗರಕ್ಕೆ ಸಿಲುಕಿಸುವುದು, ಅವರ ಗೌರವಕ್ಕೆ ಧಕ್ಕೆ ತರುವುದನ್ನು ಸರಕಾರ ಕೈಬಿಡಬೇಕು. ರಾಜ್ಯಪಾಲರು ಒಂದು ವಾಕ್ಯ ಓದಬೇಕೆ? ಒಂದು ಪ್ಯಾರ ಓದಬೇಕೆ? ಅಥವಾ ಒಂದು ಪದದಲ್ಲಿ ಮುಗಿಸಬೇಕೆ ? ಎನ್ನುವುದು ಅವರಿಗೆ ಬಿಟ್ಟಿರುವ ವಿಚಾರ. ಅವರು ಎಲ್ಲವನ್ನು ಓದಿಕೊಂಡಿದ್ದಾರೆ. ಮುಜುಗರಕ್ಕೆ ಈಡಾಗುವ ಅಂಶಗಳನ್ನು ಹಾಕಿದ್ದರು, ಅವುಗಳನ್ನು ನೋಡಿಕೊಂಡೆ ರಾಜ್ಯಪಾಲರು ಅವರ ಘನತೆಯನ್ನು ಕಾಪಾಡಿಕೊಂಡು ಆ ನಿಟ್ಟಿನಲ್ಲಿ ತೀರ್ಮಾನ ಕೈಗೊಂಡಿದ್ದಾರೆ ಎಂದರು.

ವಾರ್ತಾ ಭಾರತಿ 2 Feb 2026 7:01 pm

ಬೀದರ್ | 15ನೇ ಹಣಕಾಸು ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ಪಂಚಾಯತ್‌ ಅಧಿಕಾರಿಗಳ ಅಮಾನತಿಗೆ ಒತ್ತಾಯ

ಬೀದರ್ : ಚಿಟಗುಪ್ಪಾ ತಾಲ್ಲೂಕಿನ ಮುಸ್ತರಿ ಹಾಗೂ ಇಟಗಾ ಗ್ರಾಮ ಪಂಚಾಯತಿಗಳಲ್ಲಿ 15ನೇ ಹಣಕಾಸು ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತ ಸಂತೋಷ್ ಒತ್ತಾಯಿಸಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಮುಸ್ತರಿ ಗ್ರಾಮ ಪಂಚಾಯತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನವನ್ನು ಯಾವುದೇ ಕಾಮಗಾರಿ ಕೈಗೊಳ್ಳದೇ ನಕಲಿ ಬಿಲ್ಲುಗಳ ಮೂಲಕ ದೂರುಪಯೋಗ ಮಾಡಲಾಗಿದೆ ಎಂದು ದೂರಿದ್ದಾರೆ. ಅಲ್ಲದೆ, ಗ್ರಾಮ ಪಂಚಾಯತಿಗೆ ಲಭ್ಯವಾಗುವ ಅನುದಾನದಲ್ಲಿ ಶೇ.5ರಷ್ಟು ವಿಶೇಷ ಚೇತನರಿಗಾಗಿ ಮೀಸಲಿರಿಸಿದ ಹಣವನ್ನು ಕೂಡ ಯಾವುದೇ ಕಾಮಗಾರಿ ನಡೆಸದೇ ನಕಲಿ ಬಿಲ್ಲು ಸೃಷ್ಟಿಸಿ ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆರೋಪಿಸಲಾಗಿದೆ. ಇದೇ ರೀತಿಯಲ್ಲಿ ಇಟಗಾ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹಾಗೂ ಶೇ.25ರ ಬಟವಾಡೆ ಅನುದಾನದಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಕಂಡು ಬಂದಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಮುಸ್ತರಿ ಗ್ರಾಮ ಪಂಚಾಯತಿಯಲ್ಲಿ ಕೂಡ 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ, ಶೇ.25ರ ಬಟವಾಡೆ ಅನುದಾನ ಹಾಗೂ ಸಣ್ಣಪುಟ್ಟ ಖರೀದಿಗಳ ದಾಖಲೆಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ, ಇಟಗಾ ಹಾಗೂ ಮುಸ್ತರಿ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿ ಸಮಗ್ರ ತನಿಖೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಂತೋಷ್ ಅವರು ಒತ್ತಾಯಿಸಿದ್ದಾರೆ.

ವಾರ್ತಾ ಭಾರತಿ 2 Feb 2026 6:55 pm

ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ರಾ.ಹೆ.ಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾ.ಹೆ. ಪ್ರಾಧಿಕಾರಕ್ಕೆ ಸೂಚಿಸ ಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದರು. ಆಂಗ್ಲ ಮಾಧ್ಯಮ ಶಾಲೆಗಳು ಮತ್ತು ಕಾಲೇಜುಗಳ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್‌ಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದ ಜಿಲ್ಲಾಧಿಕಾರಿ ನಗರದ ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆ ಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿದೆ. ಈ ಸಮಸ್ಯೆಗೆ ಪರಿಹರಿ ಕಲ್ಪಿಸಬೇಕು. ಕೆಲವು ಉದ್ಯಮ ಗಳಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ನೇಮಿಸಲಾಗುತ್ತಿದ್ದು, ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಠೇವಣಿ ಹಾಗೂ ಹಣ ಹಿಂತೆಗೆಯುವಿಕೆ ಚೀಟಿಯನ್ನೂ ಕನ್ನಡದಲ್ಲಿ ಒದಗಿಸಬೇಕು. ಗ್ರಾಮೀಣ ಪ್ರದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಜ್ಞಾನವಿಲ್ಲದ ಸಿಬ್ಬಂದಿಯು ಕಾರ್ಯನಿರ್ವಹಿಸುತ್ತಿದೆ. ಇದರಿಂದ ಸ್ಥಳೀಯರ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಯ ಗಮನ ಸೆಳೆದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಮಾತನಾಡಿ ನಗರದಲ್ಲಿ ಜಿಲ್ಲಾ ಮಟ್ಟದ ಕನ್ನಡ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಲು ಆಗ್ರಹಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ., ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ.ಸಂತೋಷ್ ಕುಮಾರ್ ಜಿ, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ದೇವಿಪ್ರಸಾದ್, ರಾಜಶೇಖರ್ ಅಜ್ರಿ, ರಾಜೇಶ್ ಡಿಸೋಜ, ದಿವಾಕರ್ ದಾಸ್, ಹಸೈನಾರ್ ತಾಳಿತ್ತನೂಜಿ ಮತ್ತಿತ ರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Feb 2026 6:53 pm

ರಾಯಚೂರು | ಜೆಸ್ಕಾಂ ಉಗ್ರಾಣದಲ್ಲಿ ಕಳ್ಳತನಕ್ಕೆ ಯತ್ನ: ಮಹಿಳೆಯ ಬಂಧನ

ರಾಯಚೂರು : ಜೆಸ್ಕಾಂ ರಾಯಚೂರು ವಿಭಾಗದ ಉಗ್ರಾಣದಲ್ಲಿ ಬೆಳಗಿನ ಜಾವ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಒರ್ವರನ್ನು ಬಂಧಿಸಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಐದು ಮಂದಿ ಮಹಿಳೆಯರು ಕಾಂಪೌಂಡ್ ಗೋಡೆ ಜಿಗಿದು ಉಪವಿಭಾಗದ ಉಗ್ರಾಣಕ್ಕೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಕಾವಲುಗಾರ ವೀರೇಶ್ ಅವರು ಮಹಿಳೆಯರನ್ನು ಹಿಡಿಯಲು ಪ್ರಯತ್ನಿಸಿದಾಗ, ನಾಲ್ವರು ಪರಾರಿಯಾಗಿದ್ದು, ಓರ್ವ ಮಹಿಳೆ ಮಾತ್ರ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ. ಸಿಕ್ಕಿಬಿದ್ದ ಮಹಿಳೆಯನ್ನು ನಗರದ ಸದರ್ ಬಜಾರ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ. ಜೆಸ್ಕಾಂ ಉಗ್ರಾಣದಲ್ಲಿ ಸಂಗ್ರಹವಾಗಿರುವ ವಿದ್ಯುತ್ ಉಪಕರಣಗಳನ್ನು ಕದಿಯಲು ಮಹಿಳೆಯರು ಬೆಳಗಿನ ಜಾವದಲ್ಲಿ ಪ್ರಯತ್ನಿಸುತ್ತಿರುವುದು ಕಂಡುಬಂದಿದ್ದು, ಈ ರೀತಿಯ ಘಟನೆಗಳು ಹಿಂದೆ ಹಲವು ಬಾರಿ ನಡೆದಿವೆ ಎಂದು ತಿಳಿದುಬಂದಿದೆ. ಕಾವಲುಗಾರರ ಕೈಗೆ ಸಿಗದಂತೆ ಪರಾರಿಯಾಗಲು ಕೆಲವರು ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸುವುದು, ಅಶ್ಲೀಲ ವರ್ತನೆ ಮೂಲಕ ತಪ್ಪಿಸಿಕೊಳ್ಳುವ ಯತ್ನ ಮಾಡುವಂತಹ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ವಾರ್ತಾ ಭಾರತಿ 2 Feb 2026 6:50 pm