ಯುಜಿಡಿ ಗ್ರಾಹಕರಿಗೂ ಶುಲ್ಕ ; ಮೈಸೂರು ಮಹಾನಗರ ಪಾಲಿಕೆ ನಿರ್ಧಾರ
ಮೈಸೂರು ಮಹಾನಗರ ಪಾಲಿಕೆಯು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಪಾಲಿಕೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆಯದಿದ್ದರೂ ಒಳಚರಂಡಿ ವ್ಯವಸ್ಥೆಯನ್ನು ಬಳಸುತ್ತಿರುವ ಮನೆ ಮತ್ತು ಅಪಾರ್ಟ್ಮೆಂಟ್ಗಳಿಗೆ ಇನ್ಮುಂದೆ ಶುಲ್ಕ ವಿಧಿಸಲು ನಿರ್ಧರಿಸಿದೆ. ನಗರದ ಅನೇಕ ಬಡಾವಣೆಗಳಲ್ಲಿ ನಿವಾಸಿಗಳು ಸ್ವಂತ ಕೊಳವೆಬಾವಿಗಳ ಮೂಲಕ ನೀರು ಪಡೆದು, ತ್ಯಾಜ್ಯ ನೀರನ್ನು ಮಾತ್ರ ಪಾಲಿಕೆಯ ಒಳಚರಂಡಿ ಪೈಪ್ಲೈನ್ಗಳಿಗೆ ಬಿಡುತ್ತಿದ್ದಾರೆ.
ಬಳ್ಳಾರಿ ಜೈಲಿನಲ್ಲಿ ಕುಡಿವ ನೀರಿಗಾಗಿ ಕೈದಿಗಳ ಪರದಾಟ
ಬಿಸಿಲೂರು ಎಂದೇ ಕರೆಯಲ್ಪಡುವ ಬಳ್ಳಾರಿಯಲ್ಲಿ ಬೇಸಿಗೆಯ ಪ್ರಖರತೆ ಹೆಚ್ಚಾದಂತೆಲ್ಲಾ ನೀರಿನ ಅಭಾವ ತಲೆದೂರುವುದು ಮಾಮೂಲಿ. ಆದರೆ ಈ ಬಾರಿ ಈ ಜಲಕ್ಷಾಮದ ಬಿಸಿ ಸಾಮಾನ್ಯ ಜನರಿಗಷ್ಟೇ ಅಲ್ಲದೆ, ಕೇಂದ್ರ ಕಾರಾಗೃಹದ ಕೈದಿಗಳಿಗೂ ತೀವ್ರವಾಗಿ ತಟ್ಟಿದೆ. ಪ್ರಸ್ತುತ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹಾಗೂ ವಿಚಾರಣೆ ಎದುರಿಸುತ್ತಿರುವ ಸುಮಾರು 485 ಮಹಿಳಾ ಮತ್ತು ಪುರುಷ ಕೈದಿಗಳಿದ್ದು, ಇವರೆಲ್ಲರೂ ದೈನಂದಿನ ಬಳಕೆಯ ನೀರಿಗಾಗಿ ಹೈರಾಣಾಗುತ್ತಿದ್ದಾರೆ.
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ
Assembly Elections 2026: ದೇಶದ ಗಮನ ಸೆಳೆದಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಇಂದು ಮೂರು ವಿಧಾನಸಭೆಗಳ ಚುನಾವಣೆ ನಡೆಯುತ್ತಿದೆ. ಕೇರಳಂ, ಅಸ್ಸಾಂ ಹಾಗೂ ಕೇಂದ್ರಾಡಳಿ ಪ್ರದೇಶವಾದ ಪುದುಚೇರಿಯ ವಿಧಾನಸಭೆ ಚುನಾವಣೆಯ ಮತದಾನ ಪ್ರಾರಂಭವಾಗಿದ್ದು ಭರ್ಜರಿಯಾಗಿ ನಡೆಯುತ್ತಿದೆ.
ಚೆನ್ನೈ ಎಕ್ಸ್ಪ್ರೆಸ್ ಕಾರಿಡಾರ್ಗೆ ಎಂಟ್ರಿ, ಎಕ್ಸಿಟ್ ನಿರ್ಮಾಣ ಸಾಧ್ಯತೆ, ಶೀಘ್ರದಲ್ಲಿ ಹೆದ್ದಾರಿ ಪರಿಶೀಲನೆ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಯೋಜನೆಯು ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಕಾರಿಡಾರ್ ಆಗಿದ್ದು, ಸುಮಾರು 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 263 ಕಿಲೋಮೀಟರ್ ಉದ್ದದ ಅತ್ಯಾಧುನಿಕ ರಸ್ತೆಯನ್ನು ನಿರ್ಮಿಸಲಾಗುತ್ತಿದೆ. 2022ರಲ್ಲಿ ಚಾಲನೆ ಪಡೆದ ಈ ಬೃಹತ್ ಕಾಮಗಾರಿಯು 2027ರ ವೇಳೆಗೆ ಸಂಪೂರ್ಣವಾಗಿ ಸಾರ್ವಜನಿಕ ಬಳಕೆಗೆ ಮುಕ್ತವಾಗುವ ನಿರೀಕ್ಷೆಯಿದೆ.
Rrain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ
Rrain in Karnataka: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಸಿಲು ಹೆಚ್ಚಾಗಿದೆ. ಈ ನಡುವೆ ಚಂಡಮಾರುತ ಪ್ರಸರಣದ ಪ್ರಭಾವದಿಂದ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಿಸಿಲಿನ ನಡುವೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇಂದು (ಏ.9) ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ, ಉಡುಪಿಗೆ ಅಗ್ರಸ್ಥಾನ ಉಳಿಕೆ ವಿಶ್ವಾಸ
ಕರಾವಳಿ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಯಿಂದಲೇ ಮುತುವರ್ಜಿವಹಿಸಿ, ವಿದ್ಯಾರ್ಥಿಗಳನ್ನು ತಯಾರುಮಾಡುವುದರಿಂದ ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮವಾಗಿ ಬರಲು ಸಾಧ್ಯವಾಗುತ್ತದೆ. ಅಲ್ಲದೆ ದ್ವಿತೀಯ ಪಿಯು ಅಂಕಗಳಲ್ಲಿ ವ್ಯತ್ಯಾಸ ಆದರೂ ವಿದ್ಯಾರ್ಥಿಗಳ ಕುಗ್ಗದೆ, ಎರಡನೇ ಬಾರಿಗೆ ಇರುವ ಅವಕಾಶದಲ್ಲಿ ಅಂಕ ಹೆಚ್ಚು ಗಳಿಸಬಹುದು ಎನ್ನುತ್ತಾರೆ ಮನೋವೈದ್ಯರು.
Karnataka Bypolls: ಇಂದು ದಾವಣಗೆರೆ ದಕ್ಷಿಣ-ಬಾಗಲಕೋಟೆ ಉಪಚುನಾವಣೆ ಮತದಾನ: ಪ್ರತಿಷ್ಠೆಯ ಕಣದಲ್ಲಿ ಗೆಲುವು ಯಾರಿಗೆ?
ರಾಜ್ಯ ರಾಜಕಾರಣದ ದೃಷ್ಟಿಯಿಂದ ಅತ್ಯಂತ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು (ಏಪ್ರಿಲ್ 9) ಮತದಾನ ನಡೆಯುತ್ತಿದೆ. ರಾಜ್ಯದ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳಿಗೆ ಈ ಚುನಾವಣೆ ಕೇವಲ ಒಂದು ಸ್ಥಾನದ ಗೆಲುವಲ್ಲ, ಬದಲಾಗಿ ತಮ್ಮ ಅಸ್ತಿತ್ವ ಮತ್ತು ವರ್ಚಸ್ಸನ್ನು ಸಾಬೀತುಪಡಿಸುವ 'ಪ್ರತಿಷ್ಠೆಯ ಕಣ'ವಾಗಿ ಮಾರ್ಪಟ್ಟಿದೆ. ಶಾಮನೂರು ಕುಡಿ vs
Hassan | ಚಿಕ್ಕಕಡಲೂರು ಗ್ರಾಮದಲ್ಲಿ ದರೋಡೆ; ಮನೆಗೆ ನುಗ್ಗಿ ಬೆಳ್ಳಿ, ನಗದು ದೋಚಿದ 5 ಮಂದಿಯ ಗ್ಯಾಂಗ್
ಹಾಸನ : ಜಿಲ್ಲೆಯ ಚಿಕ್ಕಕಡಲೂರು ಗ್ರಾಮದಲ್ಲಿ ಮಧ್ಯರಾತ್ರಿ ಸಮಯದಲ್ಲಿ ಸುಸಜ್ಜಿತವಾಗಿ ಬಂದಿದ್ದ ಕಳ್ಳರ ತಂಡ ಮನೆಗೆ ನುಗ್ಗಿ ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಗ್ರಾಮದ ಪ್ರಸಾದ್ ಅವರಿಗೆ ಸೇರಿದ ಮನೆಯನ್ನು ಗುರಿಯಾಗಿಸಿಕೊಂಡು ಕಪ್ಪು ಬಣ್ಣದ ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡ ಐವರು ಕಳ್ಳರು ಕಬ್ಬಿಣದ ರಾಡ್ ಸಹಾಯದಿಂದ ಮನೆಯ ಮುಖ್ಯ ಬಾಗಿಲನ್ನು ಒಡೆದು ಒಳನುಗ್ಗಿದ್ದಾರೆ. ಈ ವೇಳೆ ಮನೆಯ ಗೇಟ್ ಹೊರಭಾಗದಲ್ಲಿ ಇನ್ನಿಬ್ಬರು ಕಳ್ಳರು ಕಾವಲು ನಿಂತಿದ್ದು, ಸಕಲ ಕಾರ್ಯಾಚರಣೆಯನ್ನು ಸಮನ್ವಯಗೊಳಿಸುತ್ತಿದ್ದರು ಎಂದು ತಿಳಿದುಬಂದಿದೆ. ಒಳಗೆ ಪ್ರವೇಶಿಸಿದ ಕಳ್ಳರು ಮನೆಯ ಕೋಣೆಗಳನ್ನು ಪರಿಶೀಲಿಸಿ, ರೂಂನಲ್ಲಿದ್ದ ಲಾಕರ್ನ್ನು ಗುರಿಯಾಗಿಸಿಕೊಂಡಿದ್ದಾರೆ. ಬಳಿಕ ಲಾಕರ್ಅನ್ನು ಮುರಿದು ಅದರಲ್ಲಿದ್ದ ಸುಮಾರು ಒಂದು ಕೆಜಿ ಬೆಳ್ಳಿ ವಸ್ತುಗಳು ಹಾಗೂ 15 ಸಾವಿರ ನಗದು ಕದ್ದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಕಳ್ಳರು ಕಾರ್ಯಾಚರಣೆ ನಡೆಸಿದ ರೀತಿ ಅವರಲ್ಲಿ ಪೂರ್ವಯೋಜನೆ ಇದ್ದುದನ್ನು ಸೂಚಿಸುತ್ತಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ದರೋಡೆ ಘಟನೆಯ ಸಂಪೂರ್ಣ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಳ್ಳರ ಚಲನವಲನಗಳು ಸ್ಪಷ್ಟವಾಗಿ ದಾಖಲಾಗಿವೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆ ತಿಳಿದ ತಕ್ಷಣ ದುಡ್ಡ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಳ್ಳಲಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ರೀತಿಯ ಧೈರ್ಯಶಾಲಿ ಕಳ್ಳತನ ಗ್ರಾಮದಲ್ಲಿ ನಡೆದಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ರಾತ್ರಿ ವೇಳೆ ಭದ್ರತೆ ಕೊರತೆಯ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಪೆಟ್ರೋಲಿಂಗ್ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ದುಡ್ಡ ಪೊಲೀಸ್ ಠಾಣೆ ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.
ಕೊಡಗಿನಲ್ಲಿ ಮುಂದುವರಿದ ಕಾಡಾನೆ ದಾಳಿ: ಕಾಫಿ ಬೆಳೆಗಾರ ಬಲಿ
ಕಳೆದ ಮೂರೂವರೆ ತಿಂಗಳಿನಲ್ಲಿ 6 ಮಂದಿ ಮೃತ್ಯು
ಮೇ 15ರಿಂದ ಎರಡು ದಿನಗಳ ಕಾಲ ‘ಕ್ಯಾಂಪಸ್ ನಿಂದ ವೃತ್ತಿ ಕಡೆಗೆ’ ಶೃಂಗಸಭೆ ಆಯೋಜನೆ
ಬೆಂಗಳೂರು : ಮೇ 15 ಮತ್ತು 16ರಂದು ಇಲ್ಲಿನ ಲಲಿತ್ ಅಶೋಕ್ ಹೋಟೆಲ್ನಲ್ಲಿ ‘ಕ್ಯಾಂಪಸ್ ನಿಂದ ವೃತ್ತಿ ಕಡೆಗೆ’ (ಕ್ಯಾಂಪಸ್ ಟು ಕರಿಯರ್-ಸಿ2ಸಿ) ಶೃಂಗಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶೃಂಗಸಭೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಉನ್ನತ ಶಿಕ್ಷಣವನ್ನು ಹೆಚ್ಚು ಕೌಶಲ್ಯಾಧಾರಿತ ಶಿಕ್ಷಣದೆಡೆಗೆ ಉತ್ತೇಜಿಸುವ ದೃಷ್ಟಿಯಿಂದ ಶೃಂಗಸಭೆಯನ್ನು ಆಯೋಜಿಸಲಾಗಿದ್ದು, ಸಭೆಯಲ್ಲಿ ರಾಜ್ಯದ ಪ್ರಮುಖ ಕೈಗಾರಿಕಾ ಸಂಸ್ಥೆಗಳು ಶಿಕ್ಷಣ ತಜ್ಞರು ಹಾಗೂ ಸರಕಾರ ಒಂದೆಡೆ ಸೇರಿ ಚರ್ಚಿಸಲಾಗುತ್ತದೆ. ಜೊತೆಗೆ ರಾಜ್ಯದ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿ ಕೊಡುವಂತಹ ಶಿಕ್ಷಣ ನೀಡುವ ಮಹತ್ವದ ಕಾರ್ಯ ನಡೆಯಲಿದೆ ಎಂದರು. ರಾಜ್ಯದ ಪ್ರತಿಷ್ಠಿತ ಕೈಗಾರಿಕಾ ಕಂಪನಿಗಳು ಈ ಎರಡು ದಿನದ ಶೃಂಗಸಭೆಯಲ್ಲಿ ಪಾಲ್ಗೊಂಡು ವಿದಾ-್ಯರ್ಥಿಗಳಿಗೆ ಅವಶ್ಯಕವಾಗಿ ಬೇಕಾಗಿರುವ ಶಿಕ್ಷಣ ಉದ್ಯೋಗ ಮತ್ತು ಅವಕಾಶಗಳ ಸಂಬಂಧಪಟ್ಟಂತೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ ಎಂದು ಸುಧಾಕರ್ ವಿವರಿಸಿದರು. ಜಾಗತಿಕ ಮಟ್ಟದಲ್ಲಿ ಉನ್ನತ ಶಿಕ್ಷಣ ಸಾಕಷ್ಟು ಬದಲಾಗಿದೆ. ಬದಲಾದ ಪರಿಕಲ್ಪನೆಗೆ ಸೂಕ್ತವಾಗಿ ನಾವು ವಿದ್ಯಾರ್ಥಿಗಳನ್ನು ಕೌಶಲಧಾರಿತ ಶಿಕ್ಷಣದೊಂದಿಗೆ ಸಜ್ಜುಗೊಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಈ ಶೃಂಗಸಭೆಯು ಶೈಕ್ಷಣಿಕ ವಲಯವನ್ನು ಔದ್ಯೋಗಿಕ ವಲಯದ ಸಮೀಪಕ್ಕೆ ತರಲಿದೆ. ಉದ್ಯಮ ವಲಯ ತಮ್ಮ ಅಗತ್ಯಗಳು ಏನು ಎಂಬುದನ್ನು ಈವರೆಗೂ ಮುಕ್ತವಾಗಿ ಹಂಚಿಕೊಳ್ಳಲು ಮುಂದೆ ಬಂದಿಲ್ಲ. ನಾವು ನಮ್ಮ ಪದವೀಧರರನ್ನು ಉದ್ಯಮಗಳ ಬೇಡಿಕೆಗೆ ಅನುಗುಣವಾಗಿ ತಯಾರಿ ಮಾಡಬೇಕು ಎಂದು ಅವರು ಹೇಳಿದರು. ವಿದೇಶಿ ಭಾಷೆ ಕಲಿಕೆಗೆ ಹೆಚ್ಚು ಗಮನ: ಕಾಲೇಜುಗಳಲ್ಲಿ ಬಿಬಿಎ, ಬಿಸಿಎ ಕೋರ್ಸ್ಗಳಿಗೆ ಒತ್ತು ನೀಡಲಾಗುತ್ತಿದ್ದು, ಪ್ರಯೋಗಾಲಯ, ಅಗತ್ಯ ಸಾಫ್ಟ್ ವೇರ್, ಕೌಶಲಕ್ಕೆ ಆದ್ಯತೆ ನೀಡಲಾಗಿದೆ. ಜರ್ಮನ್, ಜಪಾನಿ ಭಾಷೆ ಕಲಿತವರಿಗೆ ಉದ್ಯೋಗ ಅವಕಾಶಗಳು ಹೆಚ್ಚಿರುವುದು ನಮ್ಮ ಗಮನಕ್ಕೆ ಬಂದಿದ್ದು, ನಮ್ಮ ಕಾಲೇಜುಗಳಲ್ಲಿ ವಿದೇಶಿ ಭಾಷೆ ಕಲಿಕೆಗೆ ಹೆಚ್ಚು ಗಮನ ಕೇಂದ್ರಿಕರಿಸಲಿದ್ದೇವೆ. ಫಲಿತಾಂಶ ಆಧಾರಿತ ಉನ್ನತ ಶಿಕ್ಷಣ ನಮ್ಮ ಉದ್ದೇಶವಾಗಿದೆ ಎಂದು ಡಾ.ಎಂ.ಸಿ.ಸುಧಾಕರ್ ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುಷ್ಬೂ ಗೊಯೆಲ್ ಚೌಧರಿ, ಆಯುಕ್ತೆ ಮಂಜುಶ್ರೀ, ಕೌಶಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಮಣಿಪಾಲ್ ಅಕಾಡೆಮಿಯ ಏಕಲವ್ಯ ಬರೊಚ ಸೇರಿದಂತೆ ಇತರರು ಇದ್ದರು. ಸಂಪುಟದಲ್ಲಿ ರಾಜ್ಯ ಶಿಕ್ಷಣ ನೀತಿ ಬಗ್ಗೆ ತೀರ್ಮಾನ: ‘ರಾಜ್ಯ ಶಿಕ್ಷಣ ನೀತಿ ಸಂಬಂಧಪಟ್ಟಂತೆ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಾಗಲೇ ಉನ್ನತ ಶಿಕ್ಷಣ ದಲ್ಲಿ ರಾಜ್ಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ. ಉಳಿದಂತೆ ಶಿಕ್ಷಣ ದಲ್ಲಿನ ಉತ್ಕೃಷ್ಟತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೆಲ ಚರ್ಚೆಗಳು ನಡೆಯುತ್ತಿದೆ’ -ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
IPL| ಸಿಕ್ಸರ್ನಲ್ಲಿ ನೂತನ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ
ಗುವಾಹಟಿ, ಎ. 8: ಮಂಗಳವಾರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದ ರಾಜಸ್ಥಾನ ರಾಯಲ್ಸ್ನ ಆರಂಭಿಕ ಬ್ಯಾಟರ್ಗಳಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ, ಮುಂಬೈ ಇಂಡಿಯನ್ಸ್ನ ಖ್ಯಾತಿವೆತ್ತ ಬೌಲಿಂಗ್ ದಾಳಿಯನ್ನು ಚಿಂದಿ ಉಡಾಯಿಸಿದ್ದಾರೆ. ಅವರು ಮಳೆ ಬಾಧಿತ ಪಂದ್ಯದಲ್ಲಿ, ರಾಜಸ್ಥಾನವನ್ನು 11 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ 150 ರನ್ನತ್ತ ಮುನ್ನಡೆಸಿದರು. ಜೈಸ್ವಾಲ್ 32 ಎಸೆತಗಳಲ್ಲಿ 77 ರನ್ಗಳನ್ನು ಸಿಡಿಸಿದರೆ, ವೈಭವ್ ಸೂರ್ಯವಂಶಿ 14 ಎಸೆತಗಳಲ್ಲಿ 39 ರನ್ಗಳನ್ನು ಬಾರಿಸಿದರು. ಅವರು ಒಟ್ಟು 9 ಸಿಕ್ಸರ್ಗಳನ್ನು ಸಿಡಿಸಿದರು. ಅವರು ಮೊದಲ ವಿಕೆಟ್ಗೆ ಕೇವಲ ಐದು ಓವರ್ಗಳಲ್ಲಿ 82 ರನ್ಗಳನ್ನು ಕೂಡಿಸಿದರು. ಇನಿಂಗ್ಸ್ ಉದ್ದಕ್ಕೂ ಆಸರೆಯಾಗಿ ನಿಂತ ಜೈಸ್ವಾಲ್ 10 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್ಗಳನ್ನು ಸಿಡಿಸಿದರು. ಸೂರ್ಯವಂಶಿ ಐದು ಸಿಕ್ಸರ್ಗಳನ್ನು ಸಿಡಿಸಿದರು. ಈ ಪೈಕಿ ಎರಡು ಸಿಕ್ಸರ್ಗಳನ್ನು ಜಸ್ಪ್ರೀತ್ ಬುಮ್ರಾರ ಒಂದೇ ಓವರ್ನಲ್ಲಿ ಬಾರಿಸಿದರು. ಈ ಐದು ಸಿಕ್ಸರ್ಗಳ ಮೂಲಕ, ಸೂರ್ಯವಂಶಿ ಅವರು ಇಶಾನ್ ಕಿಶನ್ ಮತ್ತು ರಿಶಭ್ ಪಂತ್ರ ದಾಖಲೆಯನ್ನು ಮುರಿದರು. ಅವರಿಬ್ಬರು 20 ವರ್ಷ ತುಂಬುವ ಮೊದಲು ಐಪಿಎಲ್ನಲ್ಲಿ ಗರಿಷ್ಠ ಸಿಕ್ಸರ್ಗಳನ್ನು (ತಲಾ 30) ಗಳಿಸಿದ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದರು. ಸೂರ್ಯವಂಶಿ ಈಗ 35 ಐಪಿಎಲ್ ಸಿಕ್ಸರ್ಗಳನ್ನು ತನ್ನ ಹೆಸರಿನಲ್ಲಿ ಹೊಂದಿದ್ದಾರೆ. ಅವರು ಐಪಿಎಲ್ನಲ್ಲಿ 30ಕ್ಕಿಂತಲೂ ಅಧಿಕ ಸಿಕ್ಸರ್ಗಳನ್ನು ಸಿಡಿಸಿದ ಮೊದಲ ಹದಿಹರೆಯದ ಆಟಗಾರನಾಗಿದ್ದಾರೆ.
ಜಾಗತಿಕ ನಾವೀನ್ಯತಾ ಮೈತ್ರಿಕೂಟ ಬಲಕ್ಕೆ ಸಂಪರ್ಕ ಅಗತ್ಯ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯದ ಜಾಗತಿಕ ನಾವೀನ್ಯತಾ ಮೈತ್ರಿಕೂಟದ (ಜಿಐಎ) ಕಾರ್ಯಕ್ರಮ ಬಲಪಡಿಸಲು ಅಂತಾರಾಷ್ಟ್ರೀಯ ಒಡನಾಟ ಹಾಗೂ ಸಂಪರ್ಕ ಹೆಚ್ಚಿಸುವ ಅಗತ್ಯ ಇದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ಇಲ್ಲಿನ ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿನಲ್ಲಿ (ಕೆಐಟಿಎಸ್) ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಎ.17ರಂದು ಹೊಸದಿಲ್ಲಿಯಲ್ಲಿ ಜಾಗತಿಕ ನಾವೀನ್ಯತಾ ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ರಾಜತಾಂತ್ರಿಕರ ಜತೆ ಸಮಾಲೋಚನೆ ಸಭೆ ನಡೆಯಲಿದೆ. ಅಲ್ಲಿ ರಾಜ್ಯದ ನವೋದ್ಯಮಗಳಿಗೆ ಜಾಗತಿಕ ಮಾರುಕಟ್ಟೆ ವಿಸ್ತರಣೆಯ ಅನುಕೂಲತೆ ಕಲ್ಪಿಸುವುದು, ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಕರ್ನಾಟಕದ ಸ್ಥಾನವನ್ನು ಇನ್ನಷ್ಟು ಬಲಪಡಿಸುವುದಕ್ಕೆ ಕೈಗೊಳ್ಳಬೇಕಾದ ರಚನಾತ್ಮಕ ಕಾರ್ಯಕ್ರಮಗಳ ಕುರಿತು ಉಲ್ಲೇಖಿಸಲಾಗುವುದು ಎಂದರು. ಈ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಯಭಾರಿಗಳು, ಹೈಕಮಿಷನರ್ಗಳು ಮತ್ತು ಹಿರಿಯ ರಾಜತಾಂತ್ರಿಕ ಅಧಿಕಾರಿಗಳು ಸೇರಿದಂತೆ 50ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ.ಸಮಾನಾಂತರವಾಗಿ ಉದ್ಯಮಿಗಳ ಜೊತೆಗೆ ಸಭೆ, ಭಾಗಿದಾರರ ಜೊತೆ ಸಮಾಲೋಚನೆ ನಡೆಸುವುದಕ್ಕೂ ರಾಜ್ಯ ಸರಕಾರ ಉದ್ದೇಶಿಸಿದೆ. ನವೋದ್ಯಮಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಬಂಡವಾಳ ಹೂಡಿಕೆದಾರರನ್ನು ಒಟ್ಟುಗೂಡಿಸಿ ಜಾಗತಿಕ ಪಾಲುದಾರರ ಜೊತೆಗಿನ ಬಾಂಧವ್ಯ ಬಲಪಡಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದರು. ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಉಪಕ್ರಮಗಳ ಮೂಲಕ ಜಾಗತಿಕ ಮಾರುಕಟ್ಟೆಗಳಿಗೆ ಪ್ರವೇಶಿಸಲು ನವೋದ್ಯಮಗಳಿಗೆ ಅಗತ್ಯ ನೆರವು ನೀಡಲು ಪೂರಕವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯು ಕೆಲಸ ಮಾಡುತ್ತಿದೆ ಎಂದೂ ಅವರು ಉಲ್ಲೇಖಿಸಿದರು. ಸಭೆಯಲ್ಲಿ ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎನ್.ಮಂಜುಳಾ, ಕೆಐಟಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಪ್ರಮುಖರಿದ್ದರು.
ಕೆಎಲ್ ರಾಹುಲ್ ಸಾಹಸದ ಬಳಿಕ ಡೇವಿಡ್ ಮಿಲ್ಲರ್ ವೀರಾವೇಷ; ಆದರೂ ಗುಜರಾತ್ ಟೈಟಾನ್ಸ್ ಗೆ 1 ರನ್ ರೋಚಕ ಜಯ!
GT Vs DC Match Highlights- ಕೊನೆ ಎಸೆತದವರೆಗೂ ಕ್ರಿಕೆಟ್ ಪ್ರೇಮಿಗಳಿಗೆ ರೋಚಕತೆಯನ್ನು ಉಣಬಡಿಸಿದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಅನ್ನು 1 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್, ಗಿಲ್ (70), ಸುಂದರ್ (55) ಮತ್ತು ಬಟ್ಲರ್ (52) ಅವರ ಅರ್ಧಶತಕಗಳ ನೆರವಿನಿಂದ 210 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿಗೆ ಕೆಎಲ್ ರಾಹುಲ್ (92) ಮತ್ತು ನಿಸ್ಸಾಂಕಾ ಭರ್ಜರಿ ಆರಂಭ ನೀಡಿದರು. ಅಂತಿಮ ಹಂತದಲ್ಲಿ ಡೇವಿಡ್ ಮಿಲ್ಲರ್ ಹೋರಾಡಿದರೂ, ಪ್ರಸಿದ್ಧ ಕೃಷ್ಣ ಎಸೆದ ಕೊನೆಯ ಓವರ್ನಲ್ಲಿ ಡೆಲ್ಲಿ ಎಡವಿತು.
EC - TMC ಸಭೆಯಲ್ಲಿ ಮಾತಿನ ಚಕಮಕಿ; ‘‘ಇಲ್ಲಿಂದ ತೊಲಗಿ’’ ಎಂದ ಮುಖ್ಯ ಚುನಾವಣಾ ಆಯುಕ್ತ
ಕೋಲ್ಕತಾ, ಎ. 8: ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಿಯೋಗ ಮಂಗಳವಾರ ಭಾರತೀಯ ಚುನಾವಣಾ ಆಯೋಗವನ್ನು ಭೇಟಿಯಾಗಿದ್ದು, ಈ ಸಂದರ್ಭ ಟಿಎಂಸಿ ನಾಯಕರು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದಿದೆ. ತಮ್ಮನ್ನು ತೊಲಗುವಂತೆ ಜ್ಞಾನೇಶ್ ಕುಮಾರ್ ಅವರು ಹೇಳಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಆದರೆ, ಟಿಎಂಸಿ ನಾಯಕರು ಕೂಗಾಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ನಾಯಕ ಡರೆಕ್ ಒಬ್ರಿಯಾನ್, ನಿಯೋಗವು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪತ್ರವನ್ನು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಸಲ್ಲಿಸಿದೆ. ಚುನಾವಣಾ ಅಧಿಕಾರಿಗಳು ಬಿಜೆಪಿಯೊಂದಿಗೆ ನಂಟು ಹೊಂದಿದ ನಿರ್ದಿಷ್ಟ ನಿದರ್ಶನಗಳ ಕುರಿತು ನಿಯೋಗ ಪ್ರಶ್ನೆ ಎತ್ತಿದೆ ಎಂದು ಹೇಳಿದ್ದಾರೆ. ‘‘ಅವರು ‘ಇಲ್ಲಿಂದ ತೊಲಗಿ’ ಎಂದು ಹೇಳಿದರು,’’ ಎಂದು ಅವರು ತಿಳಿಸಿದ್ದಾರೆ. ‘‘ನಾವು ಚುನಾವಣಾ ಆಯುಕ್ತರೊಂದಿಗೆ 8ರಿಂದ 9 ಬಾರಿ ಸಭೆ ನಡೆಸಿದ್ದೇವೆ. ಸಿಇಸಿ ಹೊರತುಪಡಿಸಿ ಇತರ ಯಾರೊಬ್ಬರೂ ಮಾತನಾಡಿಲ್ಲ,’’ ಎಂದರು. ‘‘ನಾವು ಹೊರಗೆ ಬರುವಾಗ ನಮ್ಮ ಒಬ್ಬರು ಸಹೋದ್ಯೋಗಿ, ‘ನಿಮ್ಮನ್ನು ವಜಾಗೊಳಿಸುವಂತೆ ಪ್ರತಿಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನೋಟಿಸ್ ಸಲ್ಲಿಸಿವೆ. ಈ ರೀತಿ ವಜಾಗೊಳಿಸುವಂತೆ ನೋಟಿಸ್ ಸಲ್ಲಿಸಲಾದ ಮೊದಲ ಸಿಇಸಿ ನೀವು. ಆದ್ದರಿಂದ ನಿಮ್ಮನ್ನು ಅಭಿನಂದಿಸುತ್ತೇನೆ’ ಎಂದು ಹೇಳಿದರು,’’ ಎಂದು ಒಬ್ರಿಯಾನ್ ತಿಳಿಸಿದ್ದಾರೆ.
Assam | ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮಾರಿ ಪಕ್ಷಕ್ಕೆ ರಾಜೀನಾಮೆ
ಗುವಾಹಟಿ, ಎ. 8: ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ, ಬುಧವಾರ ಉದಲ್ಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮಾರಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷದಿಂದ ಬೆಂಬಲದ ಕೊರತೆಯನ್ನು ಉಲ್ಲೇಖಿಸಿ ಅವರು ಉಮೇದುವಾರಿಕೆಯಿಂದ ಹಿಂದೆ ಸರಿದಿದ್ದಾರೆ. ಆದರೆ, ದೈಮಾರಿ ಅವರು ಇನ್ನೂ ಔಪಚಾರಿಕವಾಗಿ ರಾಜೀನಾಮೆ ಪತ್ರ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ದೈಮಾರಿ, ಕಾಂಗ್ರೆಸ್ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ತನ್ನನ್ನು ವಂಚಿಸಿದೆ ಹಾಗೂ ಪರಿಶಿಷ್ಟ ಪಂಗಡವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ನಲ್ಲಿ ಇರುವುದರಿಂದ ಯಾವುದೇ ಲಾಭವಿಲ್ಲ ಎಂದು ದೈಮಾರಿ ತಿಳಿಸಿದ್ದಾರೆ.
ಅಮೆರಿಕ-ಇರಾನ್ ಕದನ ವಿರಾಮ | ಶೇರು ಮಾರುಕಟ್ಟೆಗಳಲ್ಲಿ ಸಂಭ್ರಮ: ಶೇ. 3.95ರಷ್ಟು ಜಿಗಿದ ಸೆನ್ಸೆಕ್ಸ್
ಹೊಸದಿಲ್ಲಿ, ಎ. 8: ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ಬಳಿಕ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೀವ್ರ ಏರಿಕೆ ಹಾಗೂ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯ ಕುಸಿತದ ಹಿನ್ನೆಲೆಯಲ್ಲಿ ಬುಧವಾರ ಭಾರತೀಯ ಶೇರು ಮಾರುಕಟ್ಟೆಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಬಾಂಬೆ ಶೇರು ವಿನಿಮಯ ಕೇಂದ್ರದ (BSE) ಸೂಚ್ಯಂಕ ಸೆನ್ಸೆಕ್ಸ್ ಬೆಳಿಗ್ಗೆ ಆರಂಭಗೊಂಡಾಗಲೇ 2,600ಕ್ಕೂ ಅಧಿಕ ಅಂಕಗಳಷ್ಟು ಜಿಗಿದಿದ್ದು, ದಿನವಿಡೀ ಏರಿಕೆಯನ್ನು ದಾಖಲಿಸುತ್ತಲೇ ಇತ್ತು. ಅಂತಿಮವಾಗಿ ಸೆನ್ಸೆಕ್ಸ್ 2,946.32 (ಶೇ. 3.95) ಅಂಕಗಳ ಏರಿಕೆಯೊಂದಿಗೆ 77,562.90ರಲ್ಲಿ ಮುಕ್ತಾಯಗೊಂಡರೆ, ಅತ್ತ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರದ (NSE) ಸೂಚ್ಯಂಕ ನಿಫ್ಟಿ 873.70 (ಶೇ. 3.76) ಅಂಕಗಳ ಏರಿಕೆಯೊಂದಿಗೆ 23,997.35ರಲ್ಲಿ ಮುಕ್ತಾಯಗೊಂಡಿತು. ಸೆನ್ಸೆಕ್ಸ್ ನ 30 ಕಂಪನಿಗಳ ಪೈಕಿ ಇಂಟರ್ಗ್ಲೋಬ್ ಏವಿಯೇಷನ್, ಲಾರ್ಸೆನ್ ಆ್ಯಂಡ್ ಟುಬ್ರೊ, ಬಜಾಜ್ ಫೈನಾನ್ಸ್, ಅದಾನಿ ಪೋರ್ಟ್ಸ್, ಬಜಾಜ್ ಫಿನ್ಸರ್ವ್ ಹಾಗೂ ಮಹೀಂದ್ರ ಆ್ಯಂಡ್ ಮಹೀಂದ್ರ ಹೂಡಿಕೆದಾರರಿಗೆ ಹೆಚ್ಚಿನ ಲಾಭ ನೀಡಿವೆ. ಅತ್ತ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ ಗೆ ಶೇ. 13.24ರಷ್ಟು ಕುಸಿದು 94.80 ಡಾಲರ್ಗೆ ತಲುಪಿತು. ಭೂರಾಜಕೀಯ ಒತ್ತಡ ತಗ್ಗಿದ ಪರಿಣಾಮ ಕಚ್ಚಾತೈಲ ಬೆಲೆಗಳಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಇದು ವಿಶೇಷವಾಗಿ ಭಾರತಕ್ಕೆ ಹಣದುಬ್ಬರ ಮತ್ತು ಕರೆನ್ಸಿ ದೃಷ್ಟಿಯಿಂದ ಸಕಾರಾತ್ಮಕವಾಗಿದೆ ಎಂದು ಲಿವ್ ಲಾಂಗ್ ವೆಲ್ತ್ ಸಂಸ್ಥಾಪಕ ಹರಿಪ್ರಸಾದ್ ಕೆ. ತಿಳಿಸಿದ್ದಾರೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ
ಬೆಂಗಳೂರು : ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧಿಪತಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ಪ್ರತಿಬಂಧಕಾದೇಶ ಮಾಡಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಸಾರ, ಪ್ರಕಟಣೆ ಮತ್ತು ಹಂಚಿಕೆ ಮಾಡದಂತೆ ಶಾಶ್ವತ ಪ್ರತಿಬಂಧಕಾದೇಶ ಮಾಡಬೇಕು ಎಂದು ಅಸಲು ದಾವೆ ಸಲ್ಲಿಸಿದ್ದು, ತಾತ್ಕಾಲಿಕ ಪ್ರತಿಬಂಧಕಾದೇಶ ಹೊರಡಿಸುವಂತೆ ಮಧ್ಯಂತರ ಮನವಿ ಮಾಡಿದ್ದರು. ಈ ಮನವಿಯನ್ನು 30ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎನ್.ಆರ್. ಮಧು ಅವರು ಪುರಸ್ಕರಿಸಿದ್ದಾರೆ. ಸ್ವಾಮೀಜಿ ಅವರ ದಾವೆಯಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆ, ಗ್ಯಾರಂಟಿ ಸುದ್ದಿ ವಾಹಿನಿ, ಸೌಖ್ಯಾ ಗಾಂವ್ಕರ್, ವಿಜಯವಾಹಿನಿ ನ್ಯೂಸ್, ಮೆಟಾ ಮತ್ತು ಯೂಟ್ಯೂಬ್ಗಳನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಇರಾನ್ನಿಂದ ಡ್ರೋನ್ ದಾಳಿ| ಪರ್ಷಿಯನ್ ಕೊಲ್ಲಿಯಲ್ಲಿ ಸೌದಿ ಆರೇಬಿಯದ ಪೈಪ್ಲೈನ್ಗೆ ಹಾನಿ
ರಿಯಾದ್: ಸೌದಿ ಆರೇಬಿಯದ ಪೂರ್ವ-ಪಶ್ಚಿಮ ತೈಲ ಪೈಪ್ಲೈನ್ ಮೇಲೆ ಬುಧವಾರ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಪರ್ಷಿಯನ್ ಕೊಲ್ಲಿಯಿಂದ ಕೆಂಪು ಸಮುದ್ರಕ್ಕೆ ಕಚ್ಚಾ ತೈಲವನ್ನು ಕೊಂಡೊಯ್ಯುತ್ತಿದ್ದ ಪ್ರಮುಖ ರಫ್ತು ಕೊಳವೆ ಮಾರ್ಗಕ್ಕೆ ಹಾನಿಯಾಗಿದೆ. ಪಾಕಿಸ್ತಾನದಲ್ಲಿ ಅಮೆರಿಕದ ಜೊತೆ ನಡೆಯಲಿರುವ ಮಾತುಕತೆಯ ಕಾರ್ಯಚೌಕಟ್ಟಿಗೆ ಸಮ್ಮತಿಯೇರ್ಪಟ್ಟಲ್ಲಿ ಗುರುವಾರ ಅಥವಾ ಶುಕ್ರವಾರವೇ ಹಾರ್ಮುಝ್ ಜಲಸಂಧಿಯನ್ನು ತೆರೆಯಲಾಗುವುದೆಂದು ಇರಾನ್ ತಿಳಿಸಿದೆ. ಮಾತುಕತೆಗೆ ಸಂಬಂಧಿಸಿದ ಇರಾನ್ನ ಪ್ರಸ್ತಾವಿತ 10 ಅಂಶಗಳ ಕಾರ್ಯಚೌಕಟ್ಟು, ಕೇವಲ ಪರಮಾಣು ಕಾರ್ಯಕ್ರಮವನ್ನು ಮಾತ್ರವಲ್ಲ ಪ್ರಾದೇಶಿಕ ಭದ್ರತೆಯನ್ನು ಒಳಗೊಂಡಿರುತ್ತದೆ. ಅಲ್ಲದೆ ಸುಮಾರು 45 ವರ್ಷಗಳಂದ ಇರಾನ್ ಮೇಲೆ 45 ವರ್ಷಗಳಂದ ಅಮೆರಿಕ ವಿಧಿಸಿರುವ ನಿರ್ಬಂಧಗಳು ಕೂಡಾ ಮಾತುಕತೆಯಲ್ಲಿ ಚರ್ಚಿಸಲಾಗುವುದು ಎಂದು ವರದಿಯೊಂದು ತಿಳಿಸಿದೆ.
ಅಮೆರಿಕಾ-ಇಸ್ರೇಲ್ ಸೇರಿ ಇರಾನ್ ಮೇಲೆ ಯುದ್ಧ; ಭಾರತ ಶಾಂತಿ ಸಂದಾನಕ್ಕೆ ಮುಂದಾಗಲಿ : ಪ್ರೊ.ರವಿವರ್ಮ ಕುಮಾರ್
ಬೆಂಗಳೂರು : ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನ್ ಮೇಲೆ ನಡೆಸುತ್ತಿರುವ ಯುದ್ಧದ ಸಂದರ್ಭದಲ್ಲಿ ಭಾರತ ಸಂದಾನ ನಡೆಸುವ ಯಾವುದೇ ಒಂದು ಪ್ರಯತ್ನ ಮಾಡದಿರುವುದರಿಂದ, ಇಂದು ಪಾಕಿಸ್ತಾನಕ್ಕೆ ಆ ಮರ್ಯಾದೆ ಸಿಕ್ಕಿದೆ. ಇಂತಹ ಸನ್ನಿವೇಶದಲ್ಲಿ ಶಾಂತಿ ಸಂದಾನಕ್ಕೆ ಭಾರತ ಮುನ್ನುಗ್ಗಬೇಕು ಎಂದು ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಸಂವಿಧಾನ ತಜ್ಞ ಪ್ರೊ.ರವಿವರ್ಮ ಕುಮಾರ್ ಸಲಹೆ ನೀಡಿದ್ದಾರೆ. ಬುಧವಾರ ನಗರದ ಟೌನ್ಹಾಲ್ ಮುಂಭಾಗ ಸಮಾನ ಮನಸ್ಕರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ‘ಯುದ್ಧ ನಿಲ್ಲಿಸಿ, ಶಾಂತಿ ಸ್ಥಾಪಿಸಿ’ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಶತಮಾನದ ದೊಡ್ಡ ದೌರ್ಭಾಗ್ಯವೆಂದರೆ ಭಾರತ 70 ವರ್ಷಗಳಲ್ಲಿ ಸಾಧಿಸಿದ್ದಂತ ಶಾಂತಿ ಸಂದಾನದ ಸಾಧನೆಯನ್ನು ಇಂದಿನ ಕೇಂದ್ರ ಸರಕಾರ ನೀರಿನ ಹೋಮ ಮಾಡಿ, ಅಮೆರಿಕ ಜೊತೆಗೆ ಕೈಜೋಡಿಸಿ, ಭಾರತಕ್ಕೆ ಕೆಟ್ಟ ಹೆಸರು ತಂದಿದೆ ಎಂದು ದೂರಿದರು. ಭಾರತದ ನಾಯಕರು ಅಮೆರಿಕ ಜೊತೆಗೆ ಕೈ ಜೋಡಿಸುವಂತಹ ಕೆಟ್ಟ ಕೆಲಸ ಮಾಡಬೇಡಿ. ನಿರ್ಲಿಪ್ತ ದೇಶವಾಗಿ ಎರಡು ದೇಶಗಳ ಜೊತೆಗೂ ಒಳ್ಳೆಯ ಸಂಬಂಧ ಇಟ್ಟುಕೊಂಡು, ಅವರೊಂದಿಗೆ ಕಿತ್ತಾಡದೆ, ಯುದ್ಧ ಮಾಡುವ ಯಾವುದೇ ರಾಷ್ಟ್ರದ ಜೊತೆ ಕೈ ಜೋಡಿಸದೇ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂದುವರೆಯಿರಿ ಎಂದು ರವಿವರ್ಮ ಕುಮಾರ್ ಮನವಿ ಮಾಡಿದರು. ಶಾಂತಿಗಾಗಿ ನಾಗರಿಕರ ವೇದಿಕೆಯ ಪ್ರೊ.ನಗರಗೆರೆ ರಮೇಶ್ ಮಾತನಾಡಿ, ‘ಯುದ್ಧ ಬೇಡ ಶಾಂತಿ ಬೇಕು ಎದು ಯಾರೂ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಜಗತ್ತಿನ ಎಲ್ಲ ವಾಸಿಗಳಿಗೂ ಬೇಕಾದಂತದ್ದು. ಯುದ್ಧಗಳು ಬಂದಾಗ ಸಾವನೋವುಗಳಿಗೆ ಹೆಚ್ಚಾಗಿ ಗುರಿಯಾಗುವರು ಸಾಮಾನ್ಯ ಜನರು. ಸಾಮ್ರಾಜ್ಯಶಾಹಿಗಳು, ಆಳುವವರು ತಮ್ಮ ಸ್ವಾರ್ಥಕ್ಕಾಗಿ ಅಧಿಕಾರವನ್ನು ಸಂಪಾದನೆ ಮಾಡಿಕೊಳ್ಳುವುದಕ್ಕೆ, ಸಂಪಾದನೆ ಮಾಡಿರುವ ಅಧಿಕಾರವನ್ನು ಗಟ್ಟಿಗೊಳಿಸುವುದಕ್ಕೆ, ಸಂಪತ್ತನ್ನು ಹೆಚ್ಚು ಗಳಿಸಿಕೊಳ್ಳುವುದಕ್ಕೆ ಯುದ್ಧವನ್ನು ಬಯಸುತ್ತಾರೆ ಎಂದರು. ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜು ಮಾತನಾಡಿ, ಜಗತ್ತಿನಲ್ಲಿ ಯುದ್ಧ ಸರ್ವನಾಶ ಮಾಡುವಂತದ್ದು. ಪ್ರಸ್ತುತ ಶಾಂತಿಯ ಕಾಲವಾಗಬೇಕು, ಯುದ್ಧದ ಕಾಲವಲ್ಲ. ಪಂಪ ಯುದ್ಧ ವಿರೋಧಿಯಾಗಿದ್ದ. ಮನುಷ್ಯರಿಗೆ ಸಂಕಟವನ್ನು ತಂದಿಡುವ ಯುದ್ಧ ಭೂಮಿಯನ್ನು ನಾಶ ಮಾಡಿದರೆ ಬದುಕುವುದಾದರೂ ಹೇಗೆ? ಯುದ್ಧದ ಪರವಾಗಿ ನಿಂತರೆ ನಮ್ಮ ಮಕ್ಕಳಿಗೆ ಮುಂದಿನ ಭವಿಷ್ಯ ಇರುವುದಿಲ್ಲ. ಮನುಷ್ಯ ವಿರೋಧಿ ಯುದ್ಧ ನಿಲ್ಲಬೇಕು. ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಾತ್ರವಲ್ಲ, ಜಗತ್ತಿನಲ್ಲಿ ಎಲ್ಲೂ ಯುದ್ಧ ನಡೆಯಬಾರದು ಎಂದು ಹೇಳಿದರು. ಜಾಗೃತಿ ಅಭಿಯಾನದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ.ನಾಗರಾಜಮೂರ್ತಿ, ಚಿಂತಕ ಶಿವಸುಂದರ್, ಹಿರಿಯ ಲೇಖಕ ಡಾ.ಜಿ.ರಾಮಕೃಷ್ಣ, ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಸಿಪಿಎಂ ಕಾರ್ಯದರ್ಶಿ ಡಾ.ಕೆ.ಪ್ರಕಾಶ್, ನಾಗೇಶ್ ಅರಳಕುಪ್ಪೆ, ವಕೀಲ ನರಸಿಂಹಮೂರ್ತಿ, ಇ.ಬಸವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.
ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಿಲ್ಲಿಸದಿದ್ದಲ್ಲಿ ಕದನವಿರಾಮ ರದ್ದು: ಇರಾನ್ ಎಚ್ಚರಿಕೆ
ಟೆಹರಾನ್,ಎ.10: ಒಂದು ವೇಳೆ ಲೆಬನಾನ್ ಮೇಲೆ ಇಸ್ರೇಲ್ ದಾಳಿಗಳನ್ನು ಮುಂದುವರಿಸಿದಲ್ಲಿ ಇರಾನ್ ಎರಡು ವಾರಗಳ ಕದನವಿರಾಮದಿಂದ ಹಿಂದೆಸರಿಯಲಿದೆ ಎಂದು ಇರಾನ್ ತಾಸ್ನಿಮ್ ಸುದ್ದಿಸಂಸ್ಥೆ, ಅನಾಮಿಕ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಲೆಬನಾನ್ ವಿರುದ್ಧ ಇಸ್ರೇಲ್ ನಡೆಸಿದ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ನ ಸಶಸ್ತ್ರ ಪಡೆಗಳು ಇಸ್ರೇಲ್ನಲ್ಲಿರುವ ಗುರಿಗಳನ್ನು ಗುರುತಿಸುತ್ತಿವೆ ಎಂದು ಎಂದು ಐಆರ್ಜಿಸಿ ಜೊತೆ ನಂಟು ಹೊಂದಿರುವ ಈ ಸುದ್ದಿಸಂಸ್ಥೆ ತಿಳಿಸಿದೆ. ಕದನವಿರಾಮ ಘೋಷಣೆಯ ಬಳಿಕವೂ ಲೆಬನಾನ್ನಲ್ಲಿ ಹಿಝ್ಬುಲ್ಲಾ ವಿರುದ್ಧ ದಾಳಿ ನಡೆಸಿದ್ದಕ್ಕಾಗಿ ಇಸ್ರೇಲನ್ನು ಇರಾನ್ ದಂಡಿಸಲಿದೆ ಎಂದು ಮೂಲವೊಂದು ತಿಳಿಸಿರುವುದಾಗಿ ಪ್ರೆಸ್ ಟಿವಿ ವರದಿ ಮಾಡಿದೆ.
ವಿಧಾನ ಮಂಡಲದ ಉಭಯ ಸಚಿವಾಲಯಗಳ ಸಂಪೂರ್ಣ ಡಿಜಿಟಲೀಕರಣ: ಒಪ್ಪಂದಕ್ಕೆ ಸಹಿ
ಬೆಂಗಳೂರು : ವಿಧಾನಮಂಡಲದ ಉಭಯ ಸಚಿವಾಲಯಗಳ ಸಂಪೂರ್ಣ ಡಿಜಿಟಲೀಕರಣ ಕಾರ್ಯದ ಕುರಿತು, ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ನ್ಯಾಷನಲ್ ಇ-ವಿಧಾನ್ ಅಪ್ಲಿಕೇಶನ್(NeVA) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯದ ಅಧಿಕಾರಿ ಡಾ.ಸತ್ಯಪ್ರಕಾಶ್ ಖಠಾನ, ಹೆಚ್ಚುವರಿ ಕಾರ್ಯದರ್ಶಿ ಅವರೊಂದಿಗೆ ಬುಧವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸಿ, ಶಾಸನ ಸಭೆಯನ್ನು ಸಂಪೂರ್ಣವಾಗಿ ಕಾಗದ ರಹಿತವಾಗಿ ನಡೆಸುವ ಕಾರ್ಯಕ್ಕೆ ಚಾಲನೆ ನೀಡಿ, ಒಪ್ಪಂದಕ್ಕೆ ಸಹಿ ಮಾಡಿದರು. ಈ ಸಭೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬಾಗಲಕೋಟೆ-ದಾವಣಗೆರೆ ದಕ್ಷಿಣ ಕ್ಷೇತ್ರಗಳ ‘ಉಪಚುನಾವಣೆ’: ನಾಳೆ(ಎ.9) ಮತದಾನ
ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಗೆ ತೀವ್ರ ಪ್ರತಿಷ್ಠೆಯಾಗಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಎ.9ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದೆ. ಮಾಜಿ ಸಚಿವ ಎಚ್.ವೈ.ಮೇಟಿ(ಬಾಗಲಕೋಟೆ) ಹಾಗೂ ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ನಿಧನದಿಂದ ತೆರವಾಗಿರುವ ಎರಡು ಕ್ಷೇತ್ರಗಳನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವಾಗಿದೆ. ಈ ಉಪ ಚುನಾವಣೆಯು ಮುಂದಿನ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದು ಬಿಂಬಿಸುತ್ತಿರುವ ಬಿಜೆಪಿ ಎರಡು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿ ಪ್ರದರ್ಶನ ಮಾಡಲು ಹವಣಿಸುತ್ತಿದೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷ ಎಚ್.ವೈ.ಮೇಟಿ ಅವರ ಪುತ್ರ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದ್ದು, ಇವರಿಬ್ಬರೂ ಇದೇ ಮೊದಲ ಬಾರಿ ಚುನಾವಣಾ ಅಖಾಡದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ವೀರಣ್ಣ ಚರಂತಿಮಠ ಕಣದಲ್ಲಿದ್ದರೆ, ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ದಾಸ ಕರಿಯಪ್ಪ ಸ್ಪರ್ಧೆಗೆ ಇಳಿದಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗವು ಈಗಾಗಲೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಈ ಉಪ ಚುನಾವಣೆಯ ಫಲಿತಾಂಶವು ಸರಕಾರದ ಮೇಲೆ ಯಾವುದೆ ಪರಿಣಾಮ ಬೀರದಿದ್ದರೂ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಪರಿಣಾಮ ಬೀರುವುದು ಸ್ಪಷ್ಟ. ಆದುದರಿಂದ, ಮತದಾರರನ್ನು ತಮ್ಮತ್ತ ಸೆಳೆದುಕೊಳ್ಳಲು ಆಡಳಿತ ಹಾಗೂ ಪ್ರತಿಪಕ್ಷಗಳು ಪೈಪೋಟಿಗೆ ಬಿದ್ದು ಪ್ರಚಾರ ಮಾಡಿವೆ. ದಾವಣಗೆರೆ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 76 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಂಗವಿಕಲ ಹಾಗೂ 80 ವರ್ಷ ಮೇಲ್ಪಟ್ಟ ಮತದಾರರು ಮನೆಯಿಂದಲೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಅಗತ್ಯ ಪ್ರಮಾಣದ ಇವಿಎಂ, ಕಂಟ್ರೋಲ್ ಯುನಿಟ್ ಹಾಗೂ 284 ವಿವಿಪ್ಯಾಟ್ಗಳನ್ನು ಒದಗಿಸಿ, ಹೆಚ್ಚುವರಿ ಇವಿಎಂಗಳನ್ನು ಕಾಯ್ದಿರಿಸಲಾಗಿದೆ. ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ ಸೇರಿ 681 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 60 ವೀಕ್ಷಕರು ಮತಗಟ್ಟೆಗಳ ಮೇಲೆ ನಿಗಾ ಇಡಲಿದ್ದಾರೆ. ಭದ್ರತೆಗಾಗಿ ಕೇಂದ್ರೀಯ ಸಶಸ್ತ್ರ ಪಡೆ ಸೇರಿದಂತೆ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ 322 ಮತಗಟ್ಟೆಗಳಲ್ಲಿಯೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಒಬ್ಬ ಚುನಾವಣಾಧಿಕಾರಿ ಹಾಗೂ ಮೂವರು ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಒಟ್ಟು 1564 ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನೇಮಕ ಮಾಡಲಾಗಿದೆ. ಬಾಗಲಕೋಟೆ : ಪುರುಷ ಮತದಾರರು-1,26,761, ಮಹಿಳಾ ಮತದಾರರು-1,32,476, ತೃತೀಯ ಲಿಂಗಿಗಳು-23 ಸೇರಿದಂತೆ ಒಟ್ಟು 2,59,260 ಮತದಾರರು. ಈ ಪೈಕಿ ಯುವ ಮತದಾರರು-4,188(ಯುವಕರು-2,002, ಯುವತಿಯರು-2,186), ವಿಕಲಚೇತನ ಮತದಾರರು-2,633(ಪುರುಷರು-1,532, ಮಹಿಳೆಯರು-1,101), 85 ವರ್ಷ ಮೇಲ್ಪಟ್ಟ ಮತದಾರರು-3,017(ಪುರುಷರು-1,264, ಮಹಿಳೆಯರು-1,753), 100 ವರ್ಷ ಮೇಲ್ಪಟ್ಟ ಮತದಾರರು-38(ಪುರುಷರು-12, ಮಹಿಳೆಯರು-26). ಒಟ್ಟು 187 ಸ್ಥಳಗಳಲ್ಲಿ 319 ಮತಗಟ್ಟೆಗಳು(ನಗರ ಪ್ರದೇಶ-143, ಗ್ರಾಮೀಣ-176) ಸ್ಥಾಪಿಸಲಾಗಿದೆ. ದಾವಣಗೆರೆ ದಕ್ಷಿಣ: ಪುರುಷ ಮತದಾರರು-1,13,654, ಮಹಿಳಾ ಮತದಾರರು-1,17,986, ತೃತೀಯ ಲಿಂಗಿಗಳು-43 ಸೇರಿದಂತೆ ಒಟ್ಟು 2,31,683 ಮತದಾರರು. ಈ ಪೈಕಿ ಯುವ ಮತದಾರರು-2,774(ಯುವಕರು-1,452, ಯುವತಿಯರು-1,322), ವಿಕಲಚೇತನ ಮತದಾರರು-2,518(ಪುರುಷರು-1,379, ಮಹಿಳೆಯರು-1,139), 85 ವರ್ಷ ಮೇಲ್ಪಟ್ಟ ಮತದಾರರು-2,066(ಪುರುಷರು-928, ಮಹಿಳೆಯರು-1,138), 100 ವರ್ಷ ಮೇಲ್ಪಟ್ಟ ಮತದಾರರು-44(ಪುರುಷರು-17, ಮಹಿಳೆಯರು-27). ಒಟ್ಟು 136 ಸ್ಥಳಗಳಲ್ಲಿ 284 ಮತಗಟ್ಟೆಗಳು(ನಗರ ಪ್ರದೇಶ-143, ಗ್ರಾಮೀಣ-176) ಸ್ಥಾಪಿಸಲಾಗಿದೆ. ಇವಿಎಂ-ವಿವಿಪ್ಯಾಟ್ ಬಳಕೆ: ಎಲ್ಲ ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಮತ್ತು ವಿವಿಪ್ಯಾಟ್ (ವಿವಿಪ್ಯಾಟ್) ಬಳಸಲಾಗುವುದು. ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ (ಸುಮಾರು ಶೇ.160 ರಿಂದ 200ರಷ್ಟು) ಯಂತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಪ್ರಮುಖ ಸೂಚನೆಗಳು: ಮತದಾನಕ್ಕೆ ಭಾವಚಿತ್ರ ಸಹಿತ ಮತದಾರರ ಗುರುತಿನ ಚೀಟಿ (ಎಪಿಕ್) ಮುಖ್ಯ ದಾಖಲೆಯಾಗಿದೆ. ಇದರ ಜೊತೆಗೆ ಆಧಾರ್ ಕಾರ್ಡ್, ನರೇಗಾ ಉದ್ಯೋಗ ಕಾರ್ಡ್, ಬ್ಯಾಂಕ್ ಪಾಸ್ಬುಕ್, ವಾಹನ ಪರವಾನಿಗೆ ಸೇರಿದಂತೆ ಆಯೋಗವು ಸೂಚಿಸಿರುವ 12 ಪರ್ಯಾಯ ದಾಖಲೆಗಳನ್ನು ಬಳಸಬಹುದು.
2nd PUC Result: ದ್ವಿತೀಯ ಪಿಯು ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ: ಸಚಿವ ಮಧು ಬಂಗಾರಪ್ಪ ಮಾಹಿತಿ
2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆ ಕೊನೆಗೊಳ್ಳಲಿದೆ. ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 9ರಂದು (ಗುರುವಾರ) ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಬರೆದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆಗೆ ಗುರುವಾರ
ಇಸ್ಲಾಮಾಬಾದ್ನಲ್ಲಿ ಕದನ ವಿರಾಮ ಕುರಿತು ಮುಂದಿನ ಮಾತುಕತೆ| ಅಮೆರಿಕದ ನಿಯೋಗಕ್ಕೆ ಜೆಡಿ ವಾನ್ಸ್ ನೇತೃತ್ವ
ವಾಶಿಂಗ್ಟನ್: ಅಮೆರಿಕ ಹಾಗೂ ಇರಾನ್ನ ನಡುವೆ ಸಂಘರ್ಷ ಅಂತ್ಯಕ್ಕೆ ಸಂಬಂಧಿಸಿ ಇಸ್ಲಾಮಾಬಾದ್ನಲ್ಲಿ ಶುಕ್ರವಾರ ನಡೆಯಲಿರುವ ಮಾತುಕತೆಯಲ್ಲಿ ಅಮೆರಿಕ ನಿಯೋಗದ ನೇತೃತ್ವವನ್ನು ಉಪಾಧ್ಯಕ್ಷ ಜೆ.ಡಿ.ವಾನ್ಸ್ ವಹಿಸಲಿದ್ದಾರೆ ಎಂದು ವರದಿಯಾಗಿದೆ ಮಾತುಕತೆಗೆ ಸಂಬಂಧಿಸಿದ ಇರಾನ್ನ ಪ್ರಸ್ತಾವಿತ 10 ಅಂಶಗಳ ಕಾರ್ಯಚೌಕಟ್ಟು, ಕೇವಲ ಪರಮಾಣು ಕಾರ್ಯಕ್ರಮವನ್ನು ಮಾತ್ರವಲ್ಲ ಪ್ರಾದೇಶಿಕ ಭದ್ರತೆಯನ್ನು ಒಳಗೊಂಡಿರುತ್ತದೆ. ಅಲ್ಲದೆ ಸುಮಾರು 45 ವರ್ಷಗಳಿಂದ ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧಗಳು ಕೂಡ ಮಾತುಕತೆಯಲ್ಲಿ ಚರ್ಚಿಸಲಾಗುವುದು ಎಂದು ವರದಿಯೊಂದು ತಿಳಿಸಿದೆ.
ಪೊಲೀಸ್ ಕಸ್ಟಡಿಯಲ್ಲಿ ಯುವಕನ ಸಾವು; ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಸಣ್ಣೇನಹಳ್ಳಿಯ ದರ್ಶನ್ ಎಂಬ ಯುಕನನ್ನು ಠಾಣೆಗೆ ಕರೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಆರೋಪದಲ್ಲಿ ವಿವೇಕನಗರ ಠಾಣೆ ಪೊಲೀಸರು ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಪೊಲೀಸ್ ಕಸ್ಟಡಿ ಸಾವುಗಳಿಗೆ ಸಂಬಂಧಿಸಿದಂತೆ 'ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್-ಕರ್ನಾಟಕ' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ಜತೆಗೆ, ಅರ್ಜಿ ಸಂಬಂಧ ರಾಜ್ಯ ಸರಕಾರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು. ಇದೇ ವೇಳೆ, ಕಳೆದ ಐದು ವರ್ಷಗಳ ಅವಧಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸಿರುವ ಸಾವುಗಳ ತನಿಖೆ, ಪ್ರಾಸಿಕ್ಯೂಷನ್, ಸಂತ್ರಸ್ತರಿಗೆ ಪರಿಹಾರ ಮತ್ತು ಸರಕಾರಕ್ಕೆ ಸೂಕ್ತ ಶಿಫಾರಸ್ಸು ಮಾಡುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಅರ್ಜಿಯಲ್ಲಿ ಮಾಡಲಾಗಿದ್ದ ಮನವಿ ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು. ಅರ್ಜಿ ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠ, ಕಸ್ಟಡಿ ಸಾವುಗಳ ಕುರಿತು ಹಲವು ತೀರ್ಪುಗಳು ಬಂದಿವೆ. ನಿಮಗೆ ಯಾವ ಆದೇಶ ಬೇಕು ಎಂದು ಕೇಳಿತು. ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ರೋಜಾರಿಯೊ ಪ್ರತಿಕ್ರಿಯಿಸಿ, ಕಸ್ಟಡಿ ಸಾವಿನ ಬಗ್ಗೆ ಪರಿಹಾರ ಕೋರುತ್ತಿಲ್ಲ, ಕಸ್ಟಡಿಯಲ್ಲಿನ ಕಿರುಕುಳದ ಬಗ್ಗೆ ಕೇಳುತ್ತಿದ್ದೇವೆ ಎಂದರು. ಆಗ ನ್ಯಾಯಪೀಠ, ಕಸ್ಟಡಿಯಲ್ಲಿನ ಕಿರುಕುಳದ ಬಗ್ಗೆಯೂ ಹಲವು ತೀರ್ಪುಗಳು ಬಂದಿವೆ. ವ್ಯಕ್ತಿಯನ್ನು ಬಂಧಿಸಿದ ನಂತರ ಪಾಲಿಸಬೇಕಾದ ಪ್ರಕ್ರಿಯೆಗಳು ಈಗಾಗಲೇ ಚಾಲ್ತಿಯಲ್ಲಿವೆ. ಪ್ರಕ್ರಿಯೆ ಉಲ್ಲಂಘಿಸಿದ ಪ್ರಕರಣಗಳಲ್ಲಿ ನಿರ್ದೇಶನ ನೀಡಬಹುದು. ಕಿರುಕುಳ ನೀಡಿರುವುದು ಸಾಬೀತಾದ ಪ್ರಕರಣಗಳಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹಲವು ಆದೇಶಗಳಲ್ಲಿ ಸಂತ್ರಸ್ತರಿಗೆ ಪರಿಹಾರಕ್ಕೆ ಆದೇಶಿಸಿದೆ ಎಂದು ಹೇಳಿತು. ಅಂತಿಮವಾಗಿ ಅರ್ಜಿಯಲ್ಲಿನ ಐದು ಮನವಿಗಳ ಪೈಕಿ ಐದನೇ ಮನವಿಯಂತೆ 2025ರ ನವೆಂಬರ್ನಲ್ಲಿ ಸಣ್ಣೇನಹಳ್ಳಿಯ ದರ್ಶನ್ ಎಂಬ ಯುವಕನನ್ನು ಕರೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಆರೋಪ ಸಂಬಂಧ ವಿವೇಕನಗರ ಠಾಣೆ ಪೊಲೀಸರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿ, ವಿಚಾರಣೆ ಮುಂದೂಡಿತು. ಅರ್ಜಿದಾರರ ಇತರ ಮನವಿಗಳು: ಪೊಲೀಸ್ ಕಸ್ಟಡಿಯಲ್ಲಿನ ಕಿರುಕುಳ ಮತ್ತು ಸಾವನ್ನು ತಡೆಯಲು ಕಡ್ಡಾಯ ವೈದ್ಯಕೀಯ ಪರೀಕ್ಷೆ, ಎಫ್ಐಆರ್ ದಾಖಲು, ಮಾಜಿಸ್ಟೀರಿಯಲ್ ತನಿಖೆ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಒಳಗೊಂಡು ಸಮಗ್ರ ಶಿಷ್ಟಾಚಾರ ರೂಪಿಸಲು ನಿರ್ದೇಶಿಸಬೇಕು. ಕಸ್ಟಡಿಯಲ್ಲಿನ ದೌರ್ಜನ್ಯ ಮತ್ತು ಸಾವುಗಳ ಸಂಬಂಧ ಕಠಿಣ ಮತ್ತು ಪಾರದರ್ಶಕ ಕ್ರಮಕೈಗೊಳ್ಳಲು ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಬೇಕು. ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳು ಚಾಲ್ತಿಯಲ್ಲಿರಬೇಕು. ಸಿಸಿಟಿವಿ ಸರಿಯಾಗಿ ಕೆಲಸ ಮಾಡದ ಠಾಣೆಯಲ್ಲಿನ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ಮನವಿಗಳನ್ನು ಪರಿಗಣಿಸಲು ಹೈಕೋರ್ಟ್ ನಿರಾಕರಿಸಿದೆ. ಇನ್ನು ದರ್ಶನ್ ಸಾವಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು. ಕಾಲಮಿತಿಯಲ್ಲಿ ಹೈಕೋರ್ಟ್ ನಿಗಾದಲ್ಲಿ ತನಿಖೆ ಕೈಗೊಳ್ಳಬೇಕು. ದರ್ಶನ್ ಕುಟುಂಬದವರಿಗೆ 50 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಬೇಕು. ಮೃತನ ಕುಟುಂಬದವರಿಗೆ ರಕ್ಷಣೆ ಒದಗಿಸಬೇಕು ಎಂಬ ಮನವಿಯ ಸಂಬಂಧ ರಾಜ್ಯ ಸರಕಾರಕ್ಕೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.
ಋತುಚಕ್ರದ ರಜೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್; ಸರಕಾರಕ್ಕೆ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಸರಕಾರದ ಅಧಿಸೂಚನೆ ಪ್ರಶ್ನಿಸಿ ಈಗಾಗಲೇ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಹಾಗೂ ವಿವಿಧ ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳು ಅರ್ಜಿ ಸಲ್ಲಿಸಿದ್ದಾರೆ. ಇದೀಗ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್ ಸಹ ಹೈಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದೆಡೆ, ಸರಕಾರದ ಕ್ರಮ ಸಮರ್ಥಿಸಿ ಹಾಗೂ ಉದ್ಯೋಗಸ್ಥ ಮಹಿಳೆಯರ ಪರವಾಗಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು), ಆಲ್ ಇಂಡಿಯಾ ಡೆಮಾಕ್ರಟಿಕ್ ಓಮೆನ್ಸ್ ಅಸೋಸಿಯೇಷನ್ (ಎಐಡಿಡಬ್ಲ್ಯುಎ) ಸಂಘಟನೆಗಳು ಹಾಗೂ 15 ಮಂದಿ ಮಹಿಳಾ ವಕೀಲರು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಎಲ್ಲ ಅರ್ಜಿಗಳು ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿದ್ದವು. ಅರ್ಜಿದಾರರು, ಸರಕಾರ ಹಾಗೂ ಮಧ್ಯಂತರ ಅರ್ಜಿದಾರರ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಎಲ್ಲ ಮಧ್ಯಂತರ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿತಲ್ಲದೆ, ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್ ಸಲ್ಲಿಸಿರುವ ಅರ್ಜಿ ಸಂಬಂಧ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.
Ballari | ಅತಿಥಿ ಶಿಕ್ಷಕರ ಗೌರವಧನ ತಾರತಮ್ಯ ನಿವಾರಣೆಗೆ ಮನವಿ
ಸಂಡೂರು/ಬಳ್ಳಾರಿ: ಕೆಕೆಆರ್ಡಿಬಿ (ಕೆಕೆಆರ್ಡಿಬಿ) ಆವಿಷ್ಕಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನದಲ್ಲಿ ಉಂಟಾದ ತಾರತಮ್ಯ ನಿವಾರಣೆಗಾಗಿ ಅತಿಥಿ ಶಿಕ್ಷಕರ ಸಂಘದ ಸಂಡೂರು ತಾಲೂಕು ಘಟಕ ಮನವಿ ಸಲ್ಲಿಸಿದೆ. ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಲ್ಲಿ, ವಿಶೇಷವಾಗಿ ದ್ವಿಭಾಷಾ ಮಾಧ್ಯಮದಲ್ಲಿ ಬೋಧನೆ ನಡೆಸುವವರಿಗೆ ಮೊದಲು 10,000 ರೂ. ಮಾಸಿಕ ಗೌರವಧನ ನೀಡಲಾಗುತ್ತಿತ್ತು. ಆದರೆ ಸರ್ಕಾರ 12,000 ರೂ. ವೇತನ ನಿಗದಿಪಡಿಸಿದ್ದರೂ, ಕೆಲವು ತಾಲೂಕುಗಳಲ್ಲಿ ಮಾತ್ರ ಅದು ಜಾರಿಯಾಗಿದ್ದು, ವಿಜಯನಗರ ಜಿಲ್ಲೆಯ ಹಲವೆಡೆ ಶಿಕ್ಷಕರು ಈಗಾಗಲೇ 12,000 ರೂ. ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯೊಳಗಿನವೇ ವೇತನ ತಾರತಮ್ಯ ಶಿಕ್ಷಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಮಸ್ಯೆಯನ್ನು ಗಮನಿಸಿದ ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಳಿಕ ಸ್ಥಳೀಯ ಶಾಸಕಿ ಅನ್ನಪೂರ್ಣ ಈ ತುಕಾರಾಮ್ ಅವರಿಗೆ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಶಾಸಕಿ, ಸಂಬಂಧಿತ ಶಿಕ್ಷಣಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ವೇತನ ತಾರತಮ್ಯವನ್ನು ಶೀಘ್ರದಲ್ಲೇ ಸರಿಪಡಿಸುವಂತೆ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಸಮಸ್ಯೆಯನ್ನು ಸಕಾರಾತ್ಮಕವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಾಸಕರ ತ್ವರಿತ ಸ್ಪಂದನೆಗೆ ಕೃತಜ್ಞತೆ ವ್ಯಕ್ತಪಡಿಸಿ, ಶೀಘ್ರದಲ್ಲೇ ₹12,000 ವೇತನ ಜಾರಿಗೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರಾದ ನಾಗವೇಣಿ, ಕೊಟ್ರಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟೆಲ್ಅವೀವ್: ಇರಾನ್ನೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನವಿರಾಮ ಘೋಷಿಸಿದ ಬಳಿಕ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಅವರು ಸ್ವದೇಶದಲ್ಲಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಕದನವಿರಾಮ ಒಪ್ಪಂದವು ಇಸ್ರೇಲ್ ಪಾಲಿಗೆ ಒಂದು ಐತಿಹಾಸಿಕ ವೈಫಲ್ಯವಾಗಿದೆಎಂದು ಪ್ರತಿಪಕ್ಷ ನಾಯಕ ಯಾಯಿರ್ ಲ್ಯಾಪಿಡ್ ಖಂಡಿಸಿದ್ದಾರೆ. ಭದ್ರತೆಗೆ ಸಂಬಂಧಿಸಿದ ಈ ಮಹತ್ವದ ಮಾತುಕತೆಗಳಿಂದ ಇಸ್ರೇಲನ್ನು ಹೊರಗಿಟ್ಟಿರುವುದಕ್ಕೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ‘‘ನಮ್ಮ ರಾಷ್ಟ್ರೀಯ ಭದ್ರತೆಯ ಜೊತೆ ನಂಟು ಹೊಂದಿರುವ ವಿಶಯಗಳ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳುವಾಗ ಇಸ್ರೇಲ್ ಮಾತುಕತೆಯ ಮೇಜಿನಲ್ಲಿ ಇರಲೇ ಇಲ್ಲ ಎಂದು ಲ್ಯಾಪಿಡ್ ಹೇಳಿದ್ದಾರೆ. ಇರಾನ್ ಜೊತೆ ಅಮೆರಿಕವು ಏರ್ಪಡಿಸಿಕೊಂಡಿರುವ ಕದನವಿರಾಮವನ್ನು ರೂಪಿಸುವಲ್ಲಿ ಇಸ್ರೇಲ್ ಸರಕಾರ ಪಾತ್ರವೇನೆಂಬುದನ್ನು ಅವರು ಪ್ರಶ್ನಿಸಿದ್ದಾರೆ. ಇರಾನ್ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲಿ ಸಶಸ್ತ್ರ ಪಡೆಗಳು ತಮಗೆ ವಹಿಸಿದ್ದ ಎಲ್ಲಾ ಕಾರ್ಯಗಳನ್ನು ಸಮರ್ಥವಾಗಿ ಈಡೇರಿಸಿವೆ. ನಾಗರಿಕರು ಕೂಡಾ ಸಹಕಾರವನ್ನು ನೀಡಿದ್ದಾರೆ. ಆದಾಗ್ಯೂ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ರಾಜತಾಂತ್ರಿಕವಾಗಿ ಹಾಗೂ ವ್ಯೆಹಾತ್ಮಕವಾಗಿ ವಿಲರಾಗಿದ್ದಾರೆ. ಪ್ರಧಾನಿಯವರು ಹೇಳಿಕೊಂಡಿದ್ದ ಯಾವುದೇ ಗುರಿಗಳು ಈಡೇರಿಲ್ಲವೆಂದು ಅವರು ಹೇಳಿದ್ದಾರೆ. ಇಸ್ರೇಲ್ ಪ್ರಧಾನಿಯ ‘ ಉದ್ದಟತನ, ನಿರ್ಲಕ್ಷ್ಯ ಹಾಗೂ ವ್ಯೆಹಾತ್ಮಕ ಯೋಜನೆಯ ಕೊರತೆ’ಯಿಂದಾಗಿ ಇಸ್ರೇಲ್ಗೆ ಭಾರೀ ಹಾನಿಯಾಗಿದ್ದು, ಅದನ್ನು ಸರಿಪಡಿಸಲು ವರ್ಷಗಳೇ ಬೇಕಾದೀತು ಎಂದು ಲ್ಯಾಪಿಡ್ ಹೇಳಿದ್ದಾರೆ.
ವಿಜಯನಗರ | ಮುಂಗಾರು ಹಂಗಾಮಿಗೆ ಸಕಾಲದಲ್ಲಿ ಬೀಜ, ರಸಗೊಬ್ಬರ ಪೂರೈಕೆ : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ): ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಕೃಷಿ ಪರಿಕರಗಳು ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ಕೃಷಿ ಪರಿಕರಗಳ ವಿತರಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳು ಮತ್ತು ಸಹಕಾರ ಸಂಘಗಳಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಬೀಜ ಹಾಗೂ ರಸಗೊಬ್ಬರವನ್ನು ಮುನ್ನೆಚ್ಚರಿಕೆಯಾಗಿ ದಾಸ್ತಾನು ಮಾಡಿಕೊಳ್ಳಬೇಕು. ರೈತರಿಗೆ ಉತ್ತಮ ಗುಣಮಟ್ಟದ ಬೀಜ ವಿತರಣೆ ಖಚಿತಪಡಿಸಬೇಕು ಎಂದು ತಿಳಿಸಿದರು. ಮಾರುಕಟ್ಟೆಯಲ್ಲಿ ನಕಲಿ ಬೀಜ ಹಾಗೂ ಕಳಪೆ ರಸಗೊಬ್ಬರ ಮಾರಾಟವನ್ನು ತಡೆಯಲು ವಿಶೇಷ ಜಾಗೃತ ದಳ ರಚಿಸಿ ನಿಯಮಿತ ದಾಳಿ ನಡೆಸಬೇಕು. ನಿಗದಿತ ದರಕ್ಕಿಂತ ಹೆಚ್ಚು ಬೆಲೆ ವಸೂಲಿ ಮಾಡಿದರೆ ಅಂತಹ ಮಳಿಗೆಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು. ರೈತರು ಖರೀದಿಸುವ ಪರಿಕರಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕು ಹಾಗೂ ದಾಸ್ತಾನು ವಿವರಗಳನ್ನು ಸ್ಪಷ್ಟವಾಗಿ ಪ್ರದರ್ಶಿಸಬೇಕು. ಕೃಷಿ ಇಲಾಖೆ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸಿ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬಿತ್ತನೆ ಸಮಯದಲ್ಲಿ ತಾಂತ್ರಿಕ ಸಲಹೆ ಮತ್ತು ಹವಾಮಾನ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ 2.78 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, ಪ್ರಸ್ತುತ 1.33 ಟನ್ ರಸಗೊಬ್ಬರ ಬೇಡಿಕೆಯಿದೆ. ಸದ್ಯಕ್ಕೆ ಯಾವುದೇ ಕೊರತೆಯಿಲ್ಲದಿದ್ದು, ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚುವರಿ ಬೇಡಿಕೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲಾ ರಸಗೊಬ್ಬರ ಮಾರಾಟಗಾರರ ಸಂಘದ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಕೊಟ್ಟೂರಿನಲ್ಲಿ ರೈಲ್ವೆ ರೇಕ್ ಪಾಯಿಂಟ್ ಸ್ಥಾಪನೆಗೆ ಒತ್ತಾಯಿಸಿದರು. ಪ್ರಸ್ತುತ ದಾವಣಗೆರೆ, ಕೊಪ್ಪಳ ಮತ್ತು ಬಳ್ಳಾರಿಯಿಂದ ರಸಗೊಬ್ಬರ ತರಿಸಲಾಗುತ್ತಿದ್ದು, ಸಾರಿಗೆ ವೆಚ್ಚ ಹೆಚ್ಚುತ್ತಿದೆ ಎಂದು ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಗುಲ್ಬರ್ಗಾ ವಿಚಕ್ಷಣಾ ವಿಭಾಗದ ಜಂಟಿ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿಜಯನಗರ | ಗಣಿ ಪೀಡಿತ ಪ್ರದೇಶ ಅಭಿವೃದ್ಧಿಗೆ 4,107 ಕೋಟಿ ರೂ. ಅನುದಾನ ಲಭ್ಯವಿದೆ : ಸಂಜಯ್ ಬಿಜ್ಜೂರ
ವಿಜಯನಗರ (ಹೊಸಪೇಟೆ) : ಗಣಿ ಪೀಡಿತ ಜಿಲ್ಲೆಗಳಲ್ಲಿ ಸಮಗ್ರ ಪರಿಸರ ಪುನಃಸ್ಥಾಪನೆ ಯೋಜನೆಗೆ ವೇಗ ನೀಡಲಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ 4,107 ಕೋಟಿ ರೂ. ಅನುದಾನ ಲಭ್ಯವಿದೆ ಎಂದು ಕರ್ನಾಟಕ ಗಣಿಗಾರಿಕೆ ಪರಿಸರ ಪುನಃಸ್ಥಾಪನೆ ನಿಗಮ (ಕೆಇಎಂಆರ್ಸಿ) ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಬಿಜ್ಜೂರ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರಿಂದ ಈವರೆಗೆ ವಿವಿಧ ಇಲಾಖೆಗಳ ಮೂಲಕ ಸಲ್ಲಿಕೆಯಾದ 99 ಪ್ರಸ್ತಾವನೆಗಳಿಗೆ 1,710 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ಅರಣ್ಯ ಇಲಾಖೆಗೆ 148 ಕೋಟಿ ರೂ., ಮರಿಯಮ್ಮನಹಳ್ಳಿಯ ಜಿಟಿಟಿಸಿ ಕಾಲೇಜು ನಿರ್ಮಾಣಕ್ಕೆ 19.65 ಕೋಟಿ ರೂ. ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸಲಾಗಿದೆ. ಗಣಿ ಪೀಡಿತ ಪ್ರದೇಶಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳಿಗೆ ವಿಶೇಷವಾಗಿ ಕುಡಿಯುವ ನೀರು, ರಸ್ತೆ ಸಂಪರ್ಕ ಮತ್ತು ಶಾಲಾ ಕಟ್ಟಡಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪರಿಸರ ಸಂರಕ್ಷಣೆಯ ಜೊತೆಗೆ ಸ್ಥಳೀಯರ ಜೀವನಮಟ್ಟ ಸುಧಾರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು. ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡಲಾಗುತ್ತಿದ್ದು, ಪ್ರತಿಯೊಂದು ಪ್ರಸ್ತಾವನೆಯನ್ನು ಮೂರು ಹಂತಗಳಲ್ಲಿ ಪರಿಶೀಲಿಸಿ ಅನುಮೋದನೆ ನೀಡಲಾಗುತ್ತಿದೆ. ಗಣಿಗಾರಿಕೆಯಿಂದ ಹೆಚ್ಚು ಹಾನಿಗೊಳಗಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ 10 ತಾಲೂಕುಗಳನ್ನು ಗಣಿ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದಲ್ಲದೆ, ಗಣಿ ಪೀಡಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸುಮಾರು 2,500 ಕೋಟಿ ರೂ. ಮೊತ್ತದ ಪ್ರಸ್ತಾವನೆಗಳು ಇನ್ನೂ ಬಾಕಿಯಿದ್ದು, ಸಂಬಂಧಪಟ್ಟ ಇಲಾಖೆಗಳು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಿದ ಬಳಿಕ ಪರಿಶೀಲಿಸಿ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹಾಗೂ ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ ಉಪಸ್ಥಿತರಿದ್ದರು.
ಎ.10ರಂದು ಹೊಸಪೇಟೆಯಲ್ಲಿ ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ
ಹೊಸಪೇಟೆ/ವಿಜಯನಗರ: ಸಹಕಾರಿ ಕ್ಷೇತ್ರದ ಅಭಿವೃದ್ಧಿ ಮತ್ತು ಬಲಪಡಿಸುವ ಉದ್ದೇಶದಿಂದ ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಪ್ರಮುಖ ಸಹಕಾರಿಗಳ ಸಮಾವೇಶವು ಎ.10ರಂದು ನಗರದ ಮಲ್ಲಿಗಿ ಹೋಟೆಲ್ನಲ್ಲಿ ನಡೆಯಲಿದೆ ಎಂದು ವಿಜಯನಗರ ಜಿಲ್ಲಾಧ್ಯಕ್ಷ ಕರಿಬಸವರಾಜ್ ಬಾದಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1978ರ ಸೆ.15ರಂದು ಮಹಾರಾಷ್ಟ್ರದ ಪೂನೆಯಲ್ಲಿ ಸ್ಥಾಪನೆಯಾದ ಸಹಕಾರ ಭಾರತಿ ದೇಶದ ಸಹಕಾರಿ ಕ್ಷೇತ್ರದ ಪ್ರಮುಖ ಸ್ವಯಂಸೇವಾ ಸಂಘಟನೆಯಾಗಿದ್ದು, 650ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಂಡಿದೆ ಎಂದು ತಿಳಿಸಿದರು. ಕೃಷಿ, ಹೈನುಗಾರಿಕೆ, ಗೃಹ ನಿರ್ಮಾಣ, ಮೀನುಗಾರಿಕೆ ಹಾಗೂ ನೇಕಾರಿಕೆ ಸೇರಿದಂತೆ ವಿವಿಧ ಸಹಕಾರಿ ಕ್ಷೇತ್ರಗಳ ಅಭಿವೃದ್ಧಿಗಾಗಿ ಸಂಸ್ಥೆ ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿರುವುದು ಹಾಗೂ ಹೊಸ ಸಹಕಾರಿ ನೀತಿಯ ಅನುಷ್ಠಾನದಿಂದ ಕಳೆದ ಮೂರು ವರ್ಷಗಳಲ್ಲಿ ಗಮನಾರ್ಹ ಬದಲಾವಣೆಗಳು ಸಂಭವಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಸಹಕಾರ ಭಾರತಿಯ ನೇತೃತ್ವದಲ್ಲಿ ಸೌಹಾರ್ದ ಸಹಕಾರಿ ವ್ಯವಸ್ಥೆ ಯಶಸ್ವಿಯಾಗಿ ನಡೆಯುತ್ತಿದ್ದು, ಈಗಾಗಲೇ 5,500ಕ್ಕೂ ಹೆಚ್ಚು ಸಂಸ್ಥೆಗಳು ಸಕ್ರಿಯವಾಗಿವೆ. ತಂತ್ರಜ್ಞಾನ ಮತ್ತು ವೃತ್ತಿಪರತೆಯನ್ನು ಅಳವಡಿಸಿಕೊಂಡು ಸಹಕಾರಿ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಎ.10ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿರುವ ಸಭೆಯಲ್ಲಿ ರಾಜ್ಯದ 33 ಜಿಲ್ಲೆಗಳು ಹಾಗೂ ಮೂರು ಮಹಾನಗರಗಳಿಂದ 200ಕ್ಕೂ ಹೆಚ್ಚು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಘಟನಾ ವಿಚಾರಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಇದೇ ವೇಳೆ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ, ಸಂಸ್ಥೆಯ ಪರಿಚಯ ಪುಸ್ತಕ ಹಾಗೂ ಪದಾಧಿಕಾರಿಗಳ ವಿಳಾಸ ಕೈಪಿಡಿ ಬಿಡುಗಡೆ ಮಾಡಲಾಗುತ್ತದೆ. ಸಂಜೆ 5 ಗಂಟೆಗೆ ಮಲ್ಲಿಗಿ ಹೋಟೆಲ್ನ ಸೆನೆಟ್ ಹಾಲ್ನಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಪ್ರಮುಖ ಸಹಕಾರಿಗಳ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ರಾಷ್ಟ್ರೀಯ ಅಧ್ಯಕ್ಷ ಉದಯ್ ವಾಸುದೇವ ಜೋಶಿ ಉದ್ಘಾಟಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ್ ಭಂಡೆರ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಕ್ ಚೌರಾಸಿಯಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಜ್ಯ ಮಹಿಳಾ ಪ್ರಮುಖ ವಿದ್ಯಾಪೈ, ರಾಜ್ಯಕಾರಿಣಿ ಸಂಚಾಲಕ ಜಿ. ನಂಜನಗೌಡ ಹಾಗೂ ರಾಜ್ಯಾಧ್ಯಕ್ಷ ಪ್ರಭುದೇವ ಆರ್. ಮಾಗನೂರು ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ.
ಕದನ ವಿರಾಮಕ್ಕೆ ಪಾಕಿಸ್ತಾನದ ಮಧ್ಯಸ್ಥಿಕೆಯು ಮೋದಿಯ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆ: ಕಾಂಗ್ರೆಸ್ ಆರೋಪ
ಹೊಸದಿಲ್ಲಿ,ಎ.8: ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಮಾತುಕತೆಗಳಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸಿದ್ದು ಪ್ರಧಾನಿ ನರೇಂದ್ರಮೋದಿಯವರ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಟೀಕಿಸಿದೆ. ಮೋದಿಯವರ ‘ಸ್ವಯಂ ಘೋಷಿತ’ ವಿಶ್ವಗುರು ಚಿತ್ರಣ ಈಗ ಬಯಲಾಗಿದೆ. ಅವರ ‘ಸ್ವಯಂ ಘೋಷಿತ 56 ಇಂಚಿನ ಎದೆ’ ಕುಗ್ಗಿಹೋಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿದ್ದಾರೆ. ಇರಾನ್ ಹೊರ್ಮುಝ್ ಜಲಸಂಧಿಯನ್ನು ಮತ್ತೆ ತೆರೆಯುವುದಕ್ಕೆ ಪ್ರತಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯದಲ್ಲಿ ಎರಡು ವಾರಗಳ ಕದನ ವಿರಾಮ ಘೋಷಿಸಿರುವ ಹಿನ್ನೆಲೆಯಲ್ಲಿ ರಮೇಶ್ ಹೇಳಿಕೆ ಹೊರಬಿದ್ದಿದೆ. ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಂತಹ ದೇಶಕ್ಕೆ ಕದನ ವಿರಾಮ ಮಾತುಕತೆಗಳಲ್ಲಿ ಪ್ರಮುಖ ಪಾತ್ರ ವಹಿಸಲು ಸಾಧ್ಯವಾಗಿರುವುದು ಮೋದಿಯವರ ಮಾತುಕತೆ ಮತ್ತು ನಿರೂಪಣೆ ನಿರ್ವಹಣೆಯ ಕಾರ್ಯತಂತ್ರವನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ರಮೇಶ್ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ಕದನ ವಿರಾಮವನ್ನು ಸ್ವಾಗತಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, ಈ ಒಪ್ಪಂದವು ಪಶ್ಚಿಮ ಏಶ್ಯಾದಲ್ಲಿ ಶಾಶ್ವತ ಶಾಂತಿಯನ್ನು ತರುತ್ತದೆ ಎಂದು ತಾನು ಆಶಿಸಿರುವುದಾಗಿ ಹೇಳಿದೆ. ಈ ಸಂಘರ್ಷವು ಈಗಾಗಲೇ ಜನರಿಗೆ ತೀವ್ರ ಸಂಕಷ್ಟಗಳನ್ನುಂಟು ಮಾಡಿದೆ ಮತ್ತು ಜಾಗತಿಕ ಇಂಧನ ಪೂರೈಕೆ ಹಾಗೂ ವ್ಯಾಪಾರ ಜಾಲಗಳಿಗೆ ಅಡ್ಡಿಯನ್ನುಂಟು ಮಾಡಿದೆ ಎಂದು ಹೇಳಿರುವ ಸಚಿವಾಲಯವು, ‘ಹೊರ್ಮುಝ್ ಜಲಸಂಧಿಯ ಮೂಲಕ ಮುಕ್ತ ಸಂಚಾರ ಮತ್ತು ಜಾಗತಿಕ ವಾಣಿಜ್ಯ ಹರಿವು ಸುಗಮವಾಗಿ ನಡೆಯುತ್ತವೆ ಎಂದು ನಾವು ನಿರೀಕ್ಷಿಸಿದ್ದೇವೆ ’ ಎಂದು ತಿಳಿಸಿದೆ. ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇರಾನಿಗೆ ಎಚ್ಚರಿಕೆ ನೀಡಲು ಟ್ರಂಪ್ ಬಳಸಿದ್ದ ಭಾಷೆಯು ‘ಅತ್ಯಂತ ಹೀನ’ವಾಗಿತ್ತು ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪಾಶ್ಚಾತ್ಯ ದೇಶಗಳ ನೈತಿಕತೆಯ ಮುಸುಕು ಹೇಗೆ ಕಳಚುತ್ತಿದೆ ಎನ್ನುವುದನ್ನು ಇಡೀ ಜಗತ್ತು ಗಮನಿಸುತ್ತಿದೆ ಮತ್ತು ಅರ್ಥ ಮಾಡಿಕೊಳ್ಳುತ್ತಿದೆ. ದ್ವೇಷ, ಕೋಪ, ಹಿಂಸೆ ಮತ್ತು ಅನ್ಯಾಯ ಎಂದಿಗೂ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ. ಧೈರ್ಯ ಮತ್ತು ಬೆನ್ನುಮೂಳೆ ಎಂದರೇನು ಎನ್ನುವುದನ್ನು ಇರಾನ್ ಜಗತ್ತಿಗೆ ಕಲಿಸಿದೆ ಎಂದಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, ಭಾರತದ ನಾಯಕತ್ವವು ಬೆದರಿಸುವವರನ್ನು ದೃಢವಾಗಿ ಎದುರಿಸಬೇಕು ಎಂದು ಹೇಳಿದ್ದಾರೆ. ಪಾಪ ವಿಶ್ವಗುರು:ಡಿಎಂಕೆ ಕದನ ವಿರಾಮದಲ್ಲಿ ಪಾಕಿಸ್ತಾನದ ಪಾತ್ರ ಕುರಿತು ಕೇಂದ್ರವನ್ನು ವ್ಯಂಗ್ಯವಾಡಿರುವ ಡಿಎಂಕೆ ರಾಜ್ಯಸಭಾ ಸದಸ್ಯೆ ರತಿಜಿ‘ಸಲ್ಮಾ’ಅವರು,‘ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಯುದ್ಧವು ನಿಂತಿದೆ. ಪಾಪ ವಿಶ್ವಗುರು! ಸಂಘಿಗಳು ಇದನ್ನು ಹೇಗೆ ಅರಗಿಸಿಕೊಳ್ಳುತ್ತಾರೆ?’ ಎಂದು ಎಕ್ಸ್ ಪೋಸ್ಟ್ನಲ್ಲಿ ಪ್ರಶ್ನಿಸಿದ್ದಾರೆ.
Bidar | ಗ್ರಾಮೀಣ ಜನತೆಗೆ ಶುದ್ಧ ನೀರು ಒದಗಿಸುವುದು ಅತ್ಯಂತ ಅಗತ್ಯ : ಸಂಸದ ಸಾಗರ್ ಖಂಡ್ರೆ
ಬೀದರ್ : ಗ್ರಾಮೀಣ ಜನತೆಗೆ ಶುದ್ಧ ಹಾಗೂ ನಿರಂತರ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು. ಭಾಲ್ಕಿ ತಾಲೂಕಿನ ಮರುರ್ ಗ್ರಾಮದಲ್ಲಿ ಬುಧವಾರ ಜಲ್ ಜೀವನ್ ಮಿಷನ್ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಸುಮಾರು 73 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 24×7 ಕುಡಿಯುವ ನೀರು ಸರಬರಾಜು ಯೋಜನೆಗೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು. ಜಲ್ ಜೀವನ್ ಮಿಷನ್ ಹಾಗೂ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಿಂದ ಮರುರ್ ಗ್ರಾಮದ ಜನರ ಜೀವನಮಟ್ಟದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ನೀರಿಗಾಗಿ ದೂರ ತೆರಳುವ ಸಂಕಷ್ಟ ನಿವಾರಣೆಯಾಗಲಿದೆ ಎಂದರು. ಪ್ರತಿಯೊಂದು ಮನೆಗೂ ಸುರಕ್ಷಿತ ಕುಡಿಯುವ ನೀರು ತಲುಪಿಸುವ ಕಾರ್ಯವನ್ನು ಮತ್ತಷ್ಟು ವೇಗಗೊಳಿಸಲು ನಾವು ಬದ್ಧರಾಗಿದ್ದೇವೆ. ಇಂತಹ ಯೋಜನೆಗಳು ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಬಲ ನೀಡುತ್ತವೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧ 40ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಅಮೆರಿಕ ಮತ್ತು ಇರಾನ್ ಪರಸ್ಪರ ಪ್ರಸ್ತಾವನೆಗಳ ಮೂಲಕ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ವಿರಾಮವು ಇರಾನ್ ಹಾರ್ಮುಝ್ ಜಲಸಂಧಿಯನ್ನು ಸಂಪೂರ್ಣ, ತಕ್ಷಣ ಮತ್ತು ಸುರಕ್ಷಿತವಾಗಿ ತೆರೆಯಲು ಒಪ್ಪಿಕೊಳ್ಳುವುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್ ತನ್ನ 10 ಅಂಶಗಳ ಪ್ರಸ್ತಾವನೆಯ ಮೂಲಕ ಕಾರ್ಯಸಾಧ್ಯ ಶಾಂತಿ ಸ್ಥಾಪನೆಗಾಗಿರುವ ಅಂಶಗಳನ್ನು ಮುಂದಿಟ್ಟಿದೆ ಎಂದು ಟ್ರಂಪ್ ಹೇಳಿದ್ದಾರೆ. ಸೋಮವಾರ, ಹಾರ್ಮುಝ್ ಜಲಸಂಧಿಯನ್ನು ಮತ್ತೆ ತೆರೆಯಲು ಟ್ರಂಪ್ ಗಡುವು ನೀಡಿದ್ದರೂ, ಯುದ್ಧವನ್ನು ನಿಲ್ಲಿಸುವ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿತು. ಬದಲಾಗಿ ಹತ್ತು ಷರತ್ತುಗಳನ್ನು ಇರಾನ್ ಅಮೆರಿಕದ ಮುಂದೆ ಇಟ್ಟಿತು. ಅದರ ರಾಜ್ಯ ಸುದ್ದಿ ಸಂಸ್ಥೆಯ ಪ್ರಕಾರ, ಈ ಯೋಜನೆ ಪ್ರದೇಶದಲ್ಲಿನ ವ್ಯಾಪಕ ಸಂಘರ್ಷವನ್ನು ಕೊನೆಗೊಳಿಸುವುದು, ಜಲಸಂಧಿಯ ಮೂಲಕ ಸುರಕ್ಷಿತ ಮಾರ್ಗವನ್ನು ಖಚಿತಪಡಿಸುವುದು, ನಿರ್ಬಂಧಗಳನ್ನು ತೆಗೆದುಹಾಕುವುದು ಮತ್ತು ಹಾನಿಗೊಳಗಾದ ಮೂಲಸೌಕರ್ಯವನ್ನು ಪುನರ್ನಿರ್ಮಿಸುವ ಕಾರ್ಯಗಳ ಮೇಲೆ ಕೇಂದ್ರೀಕರಿಸಿದೆ. ಅದೇ ಸಮಯದಲ್ಲಿ, ಯಾವುದೇ ಪ್ರಸ್ತಾವನೆಯನ್ನು ಪರಿಶೀಲಿಸುವಾಗ ಅದು ಗಡುವಿನೊಳಗೆ ಕಾರ್ಯನಿರ್ವಹಿಸುವುದಿಲ್ಲ ಎಂದು ಟೆಹ್ರಾನ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನದ ಮೂಲಕ ಸಂದೇಶವನ್ನು ರವಾನಿಸಲಾಯಿತು. ಇರಾನ್ ಬಯಸುತ್ತಿರುವುದೇನು? ಇರಾನ್ ಬಲವಾದ ಭರವಸೆಗಳನ್ನು ಬಯಸುತ್ತದೆ. ತನ್ನ ನೆಲದ ಮೇಲೆ ಇನ್ನು ಮುಂದೆ ದಾಳಿಗಳು ನಡೆಯಬಾರದು, ಲೆಬನಾನ್ ನಲ್ಲಿ ಹೆಜ್ಬೊಲ್ಲಾ ಮೇಲಿನ ಇಸ್ರೇಲಿ ದಾಳಿಗಳನ್ನು ಕೊನೆಗೊಳಿಸಬೇಕು. ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು. ಪ್ರತಿಯಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್ ಸಿದ್ಧವಾಗಿದೆ ಎಂದು ಸೂಚಿಸಿದೆ ಎಂದು ಹೆಸರು ಹೇಳಲು ಬಯಸದ ಇರಾನ್ನ ಇಬ್ಬರು ಹಿರಿಯ ಅಧಿಕಾರಿಗಳು ಹೇಳಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇರಾನ್ ಅಲ್ಲಿ ಸಂಚಾರವನ್ನು ಪರಿಣಾಮಕಾರಿಯಾಗಿ ನಿರ್ಬಂಧಿಸುತ್ತಿದೆ, ಆದರೆ ಈ ಪ್ರಸ್ತಾವನೆಯಡಿಯಲ್ಲಿ ಅದು ಹಡಗುಗಳು ಮತ್ತೆ ಹಾದುಹೋಗಲು ಅನುವು ಮಾಡಿಕೊಡುತ್ತದೆ. ಅದೇ ವೇಳೆ, ಟೆಹ್ರಾನ್ ಪ್ರತಿ ಹಡಗಿಗೆ ಸುಮಾರು 2 ಮಿಲಿಯನ್ ಡಾಲರ್ ಶುಲ್ಕ ವಿಧಿಸಲು ಯೋಜಿಸಿದೆ. ಆ ಹಣವನ್ನು ಜಲಸಂಧಿಯ ಆಚೆ ಇರುವ ಒಮಾನ್ ನೊಂದಿಗೆ ಹಂಚಿಕೊಳ್ಳಲಾಗುವುದು. ಯುದ್ಧ ಹಾನಿಗೆ ನೇರ ಪರಿಹಾರವನ್ನು ಕೇಳುವ ಬದಲು, ಅಮೆರಿಕ ಮತ್ತು ಇಸ್ರೇಲಿ ದಾಳಿಗಳಿಂದ ಹಾನಿಗೊಳಗಾದ ರಸ್ತೆಗಳು, ಸೌಲಭ್ಯಗಳು ಮತ್ತು ಇತರ ಮೂಲಸೌಕರ್ಯಗಳನ್ನು ಪುನರ್ನಿರ್ಮಿಸಲು ಈ ಹಣದ ತನ್ನ ಪಾಲನ್ನು ಬಳಸುವುದಾಗಿ ಇರಾನ್ ಹೇಳುತ್ತದೆ. ಇರಾನ್ ಮುಂದಿಟ್ಟ 10 ಅಂಶಗಳ ಪ್ರಸ್ತಾವನೆಗಳು ಇರಾನ್ ಮೇಲೆ ಇನ್ನು ಮುಂದೆ ದಾಳಿ ಮಾಡಬಾರದು ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳು ಎಲ್ಲಾ ದಾಳಿಗಳನ್ನು ಶಾಶ್ವತವಾಗಿ ನಿಲ್ಲಿಸುತ್ತವೆ ಎಂಬ ದೃಢವಾದ ಖಾತರಿಯನ್ನು ಇರಾನ್ ಬಯಸುತ್ತದೆ. ಟೆಹ್ರಾನ್ ಕೇವಲ ತಾತ್ಕಾಲಿಕ ವಿರಾಮವನ್ನು ಕೇಳುತ್ತಿಲ್ಲ, ಬದಲಾಗಿ ಸಂಘರ್ಷಕ್ಕೆ ಶಾಶ್ವತ ಅಂತ್ಯವನ್ನು ಕೇಳುತ್ತಿದೆ. ಇರಾನಿನ ಸ್ವತ್ತುಗಳ ಬಿಡುಗಡೆ ವಿದೇಶಗಳಲ್ಲಿ ಸ್ಥಗಿತಗೊಳಿಸಲಾದ ಎಲ್ಲಾ ಇರಾನಿನ ಸ್ವತ್ತುಗಳನ್ನು ಒಪ್ಪಂದದ ಭಾಗವಾಗಿ ಹಿಂತಿರುಗಿಸಬೇಕು. ಲೆಬನಾನ್ ನಲ್ಲಿ ಇಸ್ರೇಲಿ ದಾಳಿಗಳನ್ನು ನಿಲ್ಲಿಸಿ ಇಸ್ರೇಲ್ ಹೆಜ್ಬೊಲ್ಲಾವನ್ನು ಗುರಿಯಾಗಿಸಿಕೊಂಡಿರುವ ಲೆಬನಾನ್ ನಲ್ಲಿ ದಾಳಿಗಳನ್ನು ಕೊನೆಗೊಳಿಸಬೇಕೆಂದು ಇರಾನ್ ಒತ್ತಾಯಿಸುತ್ತದೆ. ಎಲ್ಲಾ ಯುಎಸ್ ನಿರ್ಬಂಧಗಳನ್ನು ತೆಗೆದುಹಾಕಬೇಕು ಇರಾನ್ ನ ಆರ್ಥಿಕತೆಗೆ ದೀರ್ಘಕಾಲದಿಂದ ಹಾನಿ ಮಾಡಿರುವುದರಿಂದ ಎಲ್ಲಾ ಅಮೆರಿಕನ್ ನಿರ್ಬಂಧಗಳನ್ನು ತೆಗೆದುಹಾಕಬೇಕೆಂದು ಟೆಹ್ರಾನ್ ಬಯಸುತ್ತದೆ. ಇರಾನ್ನ ಮಿತ್ರ ರಾಷ್ಟ್ರಗಳ ಮೇಲೆ ಇನ್ನು ಮುಂದೆ ದಾಳಿ ಮಾಡಬಾರದು ವಿಶಾಲ ಶಾಂತಿ ಒಪ್ಪಂದದ ಅಡಿಯಲ್ಲಿ ಪ್ರದೇಶದಾದ್ಯಂತ ತನ್ನ ಮಿತ್ರ ಗುಂಪುಗಳ ಮೇಲೆ ದಾಳಿ ಮಾಡಬಾರದೆಂದು ಇರಾನ್ ಒತ್ತಾಯಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ಪುನಃ ತೆರೆಯುವುದು ಈ ಪ್ರಮುಖ ಜಾಗತಿಕ ತೈಲ ಮಾರ್ಗದ ಮೂಲಕ ಹಡಗುಗಳು ಸುರಕ್ಷಿತವಾಗಿ ಹಾದುಹೋಗಲು ಇರಾನ್ ಸಿದ್ಧವಾಗಿದೆ ಎಂದು ಹೇಳುತ್ತದೆ. ಪ್ರತಿ ಹಡಗಿಗೆ ಶುಲ್ಕ ಜಲಸಂಧಿಯ ಮೂಲಕ ಹಾದುಹೋಗುವ ಪ್ರತಿಯೊಂದು ಹಡಗು ಸುಮಾರು 2 ಮಿಲಿಯನ್ ಡಾಲರ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಒಮಾನ್ ಜೊತೆ ಆದಾಯ ಹಂಚಿಕೆ ಸಾರಿಗೆ ಶುಲ್ಕದಿಂದ ಸಂಗ್ರಹಿಸಲಾದ ಹಣವನ್ನು ಜಲಸಂಧಿಯಾದ್ಯಂತ ಇರುವ ಒಮಾನ್ನೊಂದಿಗೆ ಹಂಚಿಕೊಳ್ಳಲಾಗುವುದು. ಹಡಗುಗಳ ಸುರಕ್ಷಿತ ಸಾಗಣೆಯನ್ನು ಖಚಿತಪಡಿಸಿಕೊಳ್ಳಲು ಟೆಹ್ರಾನ್ ಸರಿಯಾದ ವ್ಯವಸ್ಥೆಯನ್ನು ಸಹ ಸ್ಥಾಪಿಸುತ್ತದೆ. UN ಭದ್ರತಾ ಮಂಡಳಿಯ ನಿರ್ಣಯವನ್ನು ಬದ್ಧಗೊಳಿಸುವುದು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಬದ್ಧ ನಿರ್ಣಯದ ಮೂಲಕ ಎಲ್ಲಾ ಒಪ್ಪಂದಗಳನ್ನು ಔಪಚಾರಿಕಗೊಳಿಸಬೇಕೆಂದು ಇರಾನ್ ಬಯಸುತ್ತದೆ. ಪುನರ್ ನಿರ್ಮಾಣಕ್ಕಾಗಿ ಶುಲ್ಕಗಳ ಬಳಕೆ ನೇರ ಪರಿಹಾರವನ್ನು ಕೇಳುವ ಬದಲು, ಸಂಘರ್ಷದ ಸಮಯದಲ್ಲಿ ಹಾನಿಗೊಳಗಾದ ಮೂಲಸೌಕರ್ಯವನ್ನು ಪುನರ್ನಿರ್ಮಿಸಲು ಸಂಗ್ರಹಿಸಲಾದ ಶುಲ್ಕವನ್ನು ಬಳಸಲು ಇರಾನ್ ಯೋಜಿಸಿದೆ. ಶ್ವೇತಭವನದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದು, ಇದು ಮಹತ್ವದ ಪ್ರಸ್ತಾಪ. ಇದು ಮಹತ್ವದ ಹೆಜ್ಜೆ ಎಂದಿದ್ದಾರೆ. ಈ ಹಿಂದೆ ಅಮೆರಿಕದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿತ್ತು ಇದು ಮಾತುಕತೆಗೆ ಮೊದಲ ಪ್ರಯತ್ನವಲ್ಲ. ಮಾರ್ಚ್ 24ರಂದು ಅಮೆರಿಕವು ಇರಾನ್ ಗೆ ಪಾಕಿಸ್ತಾನದ ಮೂಲಕ 15 ಅಂಶಗಳ ಯೋಜನೆಯನ್ನು ಕಳುಹಿಸಿತ್ತು. ಟೆಹ್ರಾನ್ ಆ ಪ್ರಸ್ತಾವನೆಯನ್ನು ತಿರಸ್ಕರಿಸಿ ಪ್ರತಿ-ಬೇಡಿಕೆಗಳನ್ನು ಇಟ್ಟಿತ್ತು. ಅವುಗಳಲ್ಲಿ ಕೆಲವು ಈಗ ಈ ಇತ್ತೀಚಿನ ಪ್ರಸ್ತಾವನೆಯಲ್ಲಿ ಮತ್ತೆ ಕಾಣಿಸಿಕೊಂಡಿವೆ. ಅಮೆರಿಕ ಏನು ಹೇಳಿದೆ? ಗಲ್ಫ್ ನಿಂದ ತೈಲ ಮತ್ತು ಇತರ ರಫ್ತುಗಳಿಗೆ ಪ್ರಮುಖ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಟೆಹ್ರಾನ್ ಒಪ್ಪಿಕೊಂಡರೆ, ಇರಾನ್ ಮೇಲೆ ಬಾಂಬ್ ದಾಳಿ ಮತ್ತು ದಾಳಿಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸಲು ಒಪ್ಪಿಕೊಂಡಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ. ನಾವು ಈಗಾಗಲೇ ಎಲ್ಲಾ ಮಿಲಿಟರಿ ಉದ್ದೇಶಗಳನ್ನು ಪೂರೈಸಿದ್ದೇವೆ ಮತ್ತು ಮೀರಿದ್ದೇವೆ ಎಂದು ಟ್ರೂತ್ ಸೋಷಿಯಲ್ನಲ್ಲಿನ ಪೋಸ್ಟ್ನಲ್ಲಿ ಟ್ರಂಪ್ ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದಕ್ಕಿಂತ ಮೊದಲು ಅಮೆರಿಕ ಮುಂದಿಟ್ಟಿರುವ ಬೇಡಿಕೆಗಳನ್ನು ನಿಗದಿತ ಗಡುವಿನೊಳಗೆ ಒಪ್ಪದಿದ್ದರೆ ಇರಾನ್ ನಾಗರಿಕತೆಯ ಸರ್ವನಾಶವಾಗಲಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಇರಾನ್, ಅಮೆರಿಕದ ಬೆದರಿಕೆಗೆ ತಾನು ಜಗ್ಗುವುದಿಲ್ಲ ಎಂದಿತ್ತು. ಇರಾನ್ ಸೇನೆಯ ಸಮನ್ವಯದೊಂದಿಗೆ, ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳಿಗೆ ಎರಡು ವಾರಗಳ ಕಾಲ ಅವಕಾಶ ನೀಡಲು ಇರಾನ್ ಒಪ್ಪಿಕೊಂಡಿತು. ಇಸ್ರೇಲ್ ಏನು ಹೇಳಿದೆ? ಟ್ರಂಪ್ ಘೋಷಣೆ ಮಾಡಿದ ಸ್ವಲ್ಪ ಸಮಯದ ನಂತರ ಇಸ್ರೇಲ್ನಲ್ಲಿ ಸೈರನ್ಗಳು ಮೊಳಗಿದ್ದು, ಇಸ್ರೇಲ್ ರಕ್ಷಣಾ ಪಡೆಗಳು ಇರಾನ್ನಿಂದ ಹಾರಿಸಲಾದ ಕ್ಷಿಪಣಿಗಳನ್ನು ತಡೆಹಿಡಿಯುತ್ತಿವೆ ಎಂದು ತಿಳಿಸಿವೆ. ಮಂಗಳವಾರ ತಡರಾತ್ರಿ ಜೆರುಸಲೇಮ್ನಲ್ಲಿಯೂ ಜೋರಾದ ಶಬ್ದಗಳು ಕೇಳಿಬಂದವು. ಟ್ರಂಪ್ ಕದನ ವಿರಾಮ ಘೋಷಿಸಿದ ಕೆಲವು ಗಂಟೆಗಳ ನಂತರ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇರಾನ್ ವಿರುದ್ಧದ ದಾಳಿಗಳನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಅಧ್ಯಕ್ಷ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುತ್ತದೆ, ಇರಾನ್ ತಕ್ಷಣವೇ ಜಲಸಂಧಿಗಳನ್ನು ತೆರೆಯುತ್ತದೆ ಮತ್ತು ಅಮೆರಿಕ, ಇಸ್ರೇಲ್ ಹಾಗೂ ಈ ಪ್ರದೇಶದ ದೇಶಗಳ ಮೇಲಿನ ಎಲ್ಲಾ ದಾಳಿಗಳನ್ನು ನಿಲ್ಲಿಸುತ್ತದೆ ಎಂದಿದ್ದಾರೆ. ಟ್ರಂಪ್ ಅವರ ನಿರ್ಧಾರಗಳಲ್ಲಿ ನೆತನ್ಯಾಹು ಯಾವ ರೀತಿ ಭಾಗಿಯಾಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಮುಂದೇನು? ಮಾತುಕತೆಗಳಿಗೆ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನವು ಎಲ್ಲಾ ವಿವಾದಗಳನ್ನು ಇತ್ಯರ್ಥಪಡಿಸಲು ನಿರ್ಣಾಯಕ ಒಪ್ಪಂದಕ್ಕಾಗಿ ಮತ್ತಷ್ಟು ಮಾತುಕತೆ ನಡೆಸಲು ಶುಕ್ರವಾರ ಇಸ್ಲಾಮಾಬಾದ್ ನಲ್ಲಿ ಸಭೆ ಸೇರಲು ನಿಯೋಗಗಳನ್ನು ಆಹ್ವಾನಿಸಿದೆ. ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ವೈಯಕ್ತಿಕ ಮಾತುಕತೆಗಳ ಕುರಿತು ನಡೆಯುತ್ತಿರುವ ಚರ್ಚೆಗಳನ್ನು ಒಪ್ಪಿಕೊಂಡರು. ಆದರೆ ಅಧ್ಯಕ್ಷರು ಅಥವಾ ಶ್ವೇತಭವನ ಘೋಷಿಸುವವರೆಗೆ ಯಾವುದೂ ಅಂತಿಮವಾಗಿಲ್ಲ ಎಂದಿದ್ದಾರೆ.
Lingsugur | ರೈತ ಮುಖಂಡ ಅಮರಣ್ಣ ಗುಡಿಹಾಳ ನಿಧನ
ಲಿಂಗಸುಗೂರು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಧ್ಯಾಕ್ಷರಾದ ಅಮರಣ್ಣ ಗುಡಿಹಾಳ ಇಂದು ನಿಧನರಾಗಿದ್ದಾರೆ. ರೈತ ಸಂಘದ ಸಕ್ರಿಯ ಕಾರ್ಯಕರ್ತರಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡ ಇವರು ತಾಲೂಕು ಅಧ್ಯಕ್ಷರಾಗಿ ಹಲವಾರು ರೈತಪರ ಹೋರಾಟಗಳನ್ನು ಮಾಡಿ ರೈತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇವರ ಕೆಲಸ ಕಾರ್ಯಗಳನ್ನು ಗಮಿಸಿ ರಾಜ್ಯ ಉಪಾಧ್ಯಕ್ಷ ಸ್ಥಾನ ಪಡೆದಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಸಂಜೆ ಇನಿಧನರಾಗಿದ್ದಾರೆ. 4 ಜನ ಹೆಣ್ಣು ಮಕ್ಕಳು ಹಾಗೂ 4 ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಅವರ ಸ್ವಗ್ರಾಮ ಗುಡಿಹಾಳದಲ್ಲಿ ನೆರವೆರಲ್ಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Middle East Conflict- `ಎಕ್ಸ್'ನಲ್ಲಿ ಎಡವಟ್ಟು ಪೋಸ್ಟ್: ಅಪಹಾಸ್ಯಕ್ಕೀಡಾದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
Pakistan PM Prime Minister X Post- ಅಮೆರಿಕ-ಇರಾನ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಿದ್ಧಪಡಿಸಿದ ಸಂದೇಶದ ಡ್ರಾಫ್ಟ್ ಅನ್ನು ಇದ್ದಂತೆಯೇ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯಕ್ಕೀಡಾಗಿದ್ದಾರೆ. ಮತ್ತೊಂದೆಡೆ, ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ 50% ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನ ಯುರೇನಿಯಂ ಹೂತುಹಾಕಲು ಒಪ್ಪಿದ್ದು, ಕದನ ವಿರಾಮ ಜಾರಿಯಲ್ಲಿದ್ದರೂ ಶತ್ರುಗಳು ದಾಳಿ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಗುಡುಗಿದೆ.
Raichur | ಗೃಹರಕ್ಷಕದಳ ಸಮಾದೇಷ್ಟರ ನೇಮಕಾತಿಯಲ್ಲಿ ಅಕ್ರಮ : ಅರ್ಚನಾ ಹರಿಜನವಾಡ ಆರೋಪ
ರಾಯಚೂರು: ಜಿಲ್ಲಾ ಗೃಹರಕ್ಷಕದಳದ ನೂತನ ಜಿಲ್ಲಾ ಸಮಾದೇಷ್ಟರಾಗಿ ನೇಮಕಗೊಂಡಿರುವ ದೀಪಾ ಗೋಡೆಪಾಡ್ ಅವರ ನೇಮಕಾತಿ ನಿಯಮಬಾಹಿರವಾಗಿದ್ದು, ರಾಜಕೀಯ ಪ್ರಭಾವದಿಂದ ನಡೆದಿದೆ ಎಂದು ಗೃಹರಕ್ಷಕದಳದ ಸಿಬ್ಬಂದಿ ಅರ್ಚನಾ ಹರಿಜನವಾಡ ಆಕ್ಷೇಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.7ರಂದು ನಡೆದ ಈ ನೇಮಕಾತಿಯಲ್ಲಿ ಸೇವಾ ಹಿರಿತನವನ್ನು ಕಡೆಗಣಿಸಲಾಗಿದೆ. “ನಾನು ಹಿರಿಯರಾಗಿದ್ದರೂ ಕಿರಿಯರಾದ ದೀಪಾ ಗೋಡೆಪಾಡ್ ಅವರಿಗೆ ಹುದ್ದೆ ನೀಡಲಾಗಿದೆ. ಅವರಿಗೆ ಅಗತ್ಯ ಸೇವಾನುಭವವೂ ಇಲ್ಲ, ದೈಹಿಕ ಸಾಮರ್ಥ್ಯವೂ ಇಲ್ಲ” ಎಂದು ದೂರಿದರು. ಗೃಹರಕ್ಷಕದಳವು ಸಾರ್ವಜನಿಕರ ಸುರಕ್ಷತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಂಸ್ಥೆಯಾಗಿದ್ದು, ಇಂತಹ ಜವಾಬ್ದಾರಿಯುತ ಹುದ್ದೆಗೆ ಅನುಭವ, ನಾಯಕತ್ವ ಹಾಗೂ ಶೈಕ್ಷಣಿಕ ಅರ್ಹತೆ ಇರುವವರನ್ನು ನೇಮಿಸಬೇಕಾಗಿತ್ತು. ಆದರೆ ಇಲಾಖೆಯ ನಿಯಮಗಳನ್ನು ಬದಿಗಿಟ್ಟು ನೇಮಕಾತಿ ನಡೆಸಿರುವುದು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ನಿರಾಶೆ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದೈಹಿಕ ಸಾಮರ್ಥ್ಯ ಮತ್ತು ವಾಕ್ ಚಾತುರ್ಯದ ಕೊರತೆ ಇರುವವರ ನೇಮಕಾತಿಯಿಂದ ಇಲಾಖೆಯ ಕಾರ್ಯಕ್ಷಮತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಧ್ಯಪ್ರವೇಶಿಸಿ, ಅರ್ಹತೆ ಆಧಾರಿತ ನೇಮಕಾತಿ ಮಾಡುವಂತೆ ಮನವಿ ಮಾಡಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಿ. ಆಂಜನೇಯ, ಎಸ್. ರಾಜು, ಚಿನ್ನಬಾಬು, ರಾಮು ಉಪಸ್ಥಿತರಿದ್ದರು.
ಎ.9ರಿಂದ ಮಂಗಳೂರು ವಿವಿ ಅಂತರ ವಿವಿ ಮಹಿಳಾ ಕಬಡ್ಡಿ ಚಾಂಪಿಯನ್ಶಿಪ್
ಉಡುಪಿ, ಎ.8: ಮಂಗಳೂರು ವಿವಿ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕಬಡ್ಡಿ ಟೂರ್ನಿ ಎ.9 ಹಾಗೂ 10ರಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಟೂರ್ನಿಯನ್ನು ಅದಮಾರು ಮಠಾಧೀಶರಾದ ಬೆಂಗಳೂರಿನ ಯುಎಸ್ಎಎಂಇಸಿ ಅಧ್ಯಕ್ಷ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಬೆಳಗ್ಗೆ 10ಗಂಟೆಗೆ ಉದ್ಘಾಟಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಅದಮಾರು ಮಠ ಶಿಕ್ಷಣ ಟ್ರಸ್ಟ್ನ ಡಾ.ಎ.ಪಿ.ಭಟ್, ಡಾ.ಜಿ.ಎಸ್. ಚಂದ್ರಶೇಖರ್, ಪ್ರಶಾಂತ್ ಹೊಳ್ಳ, ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಮು ಎಲ್. ಉಪಸ್ಥಿತರಿರುವರು. ಸಮಾರೋಪ ಸಮಾರಂಭ ಎ.10ರಂದು ಅಪರಾಹ್ನ 3ಗಂಟೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಮೋದ್ ಮಧ್ವರಾಜ್, ವಿನಯಕುಮಾರ ಸೊರಕೆ, ಡಾ.ಎ.ಪಿ.ಭಟ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸರಿಯಲ್ಲ: ನ್ಯಾಯಮೂರ್ತಿ ಬಿ.ವಿ. ನಾಗರತ್ನ
ಹೊಸದಿಲ್ಲಿ, ಎ. 8: ಮಹಿಳೆಯರನ್ನು ಒಂದು ತಿಂಗಳಲ್ಲಿ ಮೂರು ದಿನ (ಮುಟ್ಟಿನ ಸಂದರ್ಭ)ಗಳ ವರೆಗೆ ಅಸ್ಪಶರು ಎಂದು ಪರಿಗಣಿಸುವುದು, ನಾಲ್ಕನೇ ದಿನದಿಂದ ಸ್ಪಶ್ಯರಂತೆ ಕಾಣುವುದು ಸಲ್ಲದು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಪ್ರತಿಪಾದಿಸಿದ್ದಾರೆ. ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ಮಾಡುವುದಕ್ಕೆ ಸಂಬಂಧಿದ ಅರ್ಜಿಗಳನ್ನು ಏಕೈಕ ಮಹಿಳಾ ನ್ಯಾಯಮೂರ್ತಿ ನಾಗರತ್ನ ಬಿ.ವಿ. ಸೇರಿದಂತೆ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂ ಕೋರ್ಟ್ನ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಈ ಅರ್ಜಿಗಳಲ್ಲಿ ಕೇರಳದ ಶಬರಿಮಲೆ ದೇವಸ್ಥಾನದ ಪ್ರಕರಣವೂ ಸೇರಿದೆ. ಈ ಅರ್ಜಿಗಳು ವಿವಿಧ ಧರ್ಮಗಳು ಅನುಸರಿಸುವ ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೂಡ ಎತ್ತಿವೆ. ಈ ಪೀಠದಲ್ಲಿದ್ದ ಇತರ 8 ನ್ಯಾಯಮೂರ್ತಿಗಳೆಂದರೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್, ಏಹ್ಸಾನುದ್ದೀನ್ ಅಮಾನುಲ್ಲಾ, ಅರವಿಂದ ಕುಮಾರ್, ಆಗಸ್ಟಿನ್ ಜಾರ್ಜ್ ಮಸೀಹ, ಪ್ರಸನ್ನ ಬಿ. ವರಾಲೆ, ಆರ್. ಮಹಾದೇವನ್ ಹಾಗೂ ಜೋಯ್ಮಲ್ಯ ಬಾಗ್ಚಿ. ಅರ್ಜಿಗಳ ವಿಚಾರಣೆ ನಡೆಸಿದ ಸಂದರ್ಭ ನ್ಯಾಯಮೂರ್ತಿ ನಾಗರತ್ನ ಅವರು, ಶಬರಿಮಲೆ ಸಂದರ್ಭದಲ್ಲಿ ವಿಧಿ 17 ಅನ್ನು ಹೇಗೆ ವಾದಿಸಬಹುದು ಎಂದು ನನಗೆ ತಿಳಿದಿಲ್ಲ. ನಾನು ಮಹಿಳೆಯಾಗಿ ಹೇಳುವುದಾದರೆ, ಪ್ರತಿ ತಿಂಗಳು ಮೂರು ದಿನ ಅಸ್ಪಶರಾಗಿ ಇರುವುದು ಹಾಗೂ ನಾಲ್ಕನೇ ದಿನ ಸ್ಪಶ್ಯರಾಗಿ ಇರುವುದು ಸಾಧ್ಯವಿಲ್ಲ ಎಂದಿದ್ದಾರೆ. ಈ ಪ್ರಕರಣದಲ್ಲಿ ವಿಧಿ 17 ಅನ್ನು ಅನ್ವಯಿಸುವ ಕುರಿತು ಅನುಮಾನ ವ್ಯಕ್ತಪಡಿಸಿದ ಅವರು, ಭಾರತದ ಜಾತಿ ಆಧಾರಿತ ಅಸ್ಪಶತೆಯ ದೀರ್ಘ ಇತಿಹಾಸದ ಹಿನ್ನೆಲೆಯಲ್ಲಿ ವಿಧಿ 17 ಅನ್ನು ಮೂಲಭೂತ ಹಕ್ಕಾಗಿ ಸೇರಿಸಲಾಗಿದೆ ಎಂದರು. 2018ರ ಶಬರಿಮಲೆ ತೀರ್ಪಿನ ಒಂದು ಅಭಿಪ್ರಾಯಕ್ಕೆ ತನ್ನ ತೀವ್ರ ಆಕ್ಷೇಪ ಇದೆ ಎಂದು ಕೇಂದ್ರ ಸರಕಾರದ ಪರವಾಗಿ ಹಾಜರಾಗಿದ್ದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿಪಾದಿಸಿದ ಸಂದರ್ಭ ನ್ಯಾಯಮೂರ್ತಿ ನಾಗರತ್ನ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಸಂಸದ ಕೋಟ ಸೂಚನೆ
ಉಡುಪಿ, ಎ.8: ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಬಳಿಕ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕರೆದ ಸಭೆಯಲ್ಲಿ ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸಭೆಯಲ್ಲಿ 2024-25 ಹಾಗೂ 2025-26ನೇ ಸಾಲಿನ ಸಂಸದ ಪ್ರದೇಶಾಭಿವೃದ್ಧಿ ನಿಧಿ (ಎಂಪಿಎಲ್ಎಡಿಎಸ್) ಅಡಿಯಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು. ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಕಾಮಗಾರಿ ಗಳ ಪ್ರಸ್ತುತ ಸ್ಥಿತಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಎದುರಾಗುತ್ತಿರುವ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ವಿವರಗಳನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸದರು ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಹಾಗೂ ಯಾವುದೇ ರೀತಿಯ ವಿಳಂಬವಾಗದಂತೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ವಿಶೇಷವಾಗಿ ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಬಾಕಿ ಇರುವ ಕಾಮಗಾರಿಗಳಿಗೆ ತಕ್ಷಣವೇ ತಾಂತ್ರಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರವೇ ಪೂರ್ಣಗೊಳಿಸಿ ಅನುಷ್ಠಾನ ಮಾಡುವಂತೆ ನಿರ್ದೇಶಿಸಿದರು. ಸಭೆಯಲ್ಲಿ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ಕುಮಾರ್, ಪಂಚಾಯತ್ರಾಜ್ ಇಂಜಿನಿಯರಿಂಗ್ ವಿಭಾಗದ ಶ್ರೀನಾಥ್ ಹಾಗೂ ವಿವಿಧ ಅನುಷ್ಠಾನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Raichur | ಕನಿಷ್ಠ ವೇತನ 42,000 ರೂ. ನಿಗದಿ ಮಾಡಲಿ: ಎಐಸಿಸಿಟಿಯು ಆಗ್ರಹ
ರಾಯಚೂರು: ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ 42,000 ರೂ. ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಜಿಲ್ಲಾ ಸಮಿತಿಯ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಸಂಘಟನೆಗಳು, ರಾಜ್ಯದಲ್ಲಿ ಕಾರ್ಮಿಕ ವರ್ಗದ ಹಕ್ಕುಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ. ಕೇಂದ್ರದ ಮೋದಿ ಸರ್ಕಾರವು 2025ರ ನ.21ರಿಂದ ಜಾರಿಗೆ ತಂದ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೇಲೆ ನೇರ ದಾಳಿ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಸಂಹಿತೆಗಳು ಕಾರ್ಮಿಕರು ದಶಕಗಳ ಹೋರಾಟದಿಂದ ಪಡೆದ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ. “ವ್ಯವಹಾರ ಸುಲಭತೆ” ಹೆಸರಿನಲ್ಲಿ ಉದ್ಯೋಗದಾತರ ಅಧಿಕಾರ ಹೆಚ್ಚಿಸಿ, ಕಾರ್ಮಿಕರ ಶೋಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಟೀಕಿಸಿದರು. ವೇತನ, ಉದ್ಯೋಗ ಭದ್ರತೆ ಮತ್ತು ಸಂಘಟನಾ ಹಕ್ಕುಗಳ ರಕ್ಷಣೆಯನ್ನು ಕುಗ್ಗಿಸುವ ಮೂಲಕ ಕಾರ್ಮಿಕರನ್ನು ಹಳೆಯ ಶೋಷಣೆಯ ವ್ಯವಸ್ಥೆಗೆ ತಳ್ಳುವ ಅಪಾಯವಿದೆ ಎಂದು ಎಚ್ಚರಿಸಿದರು. “ನೆಲವೇತನ (ಫ್ಲೋರ್ ವೇತನ)” ವ್ಯವಸ್ಥೆಯೂ ಕನಿಷ್ಠ ವೇತನದ ಹಕ್ಕಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಹೇಳಿದರು. ರಾಜ್ಯ ಸರ್ಕಾರವೂ ಕನಿಷ್ಠ ವೇತನ ಪರಿಷ್ಕರಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕಾನೂನು ಪ್ರಕಾರ ಐದು ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಬೇಕಾದರೂ ಕೊನೆಯದಾಗಿ 2017ರಲ್ಲಿ ಮಾತ್ರ ನಡೆದಿದೆ. 2025ರಲ್ಲಿ 25,000 ರೂ. ಗೆ ಹೆಚ್ಚಿಸುವ ಪ್ರಾಥಮಿಕ ಅಧಿಸೂಚನೆ ಹೊರಬಂದಿದ್ದರೂ ಅಂತಿಮಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನೆಲೆ ಕಾರ್ಮಿಕರು ಕಡಿಮೆ ವೇತನದಲ್ಲೇ ಕೆಲಸ ಮಾಡಲು ಬಾಧ್ಯರಾಗಿದ್ದಾರೆ. ಗಾರ್ಮೆಂಟ್ ಮತ್ತು ಬೀಡಿ ಕ್ಷೇತ್ರದ ಮಹಿಳಾ ಕಾರ್ಮಿಕರ ಸ್ಥಿತಿ ಮತ್ತಷ್ಟು ದುರ್ಬಲವಾಗಿದೆ ಎಂದು ಹೇಳಿದರು. ಆಹಾರ, ಬಟ್ಟೆ, ವಸತಿ, ಶಿಕ್ಷಣ ಸೇರಿದಂತೆ ಮೂಲಭೂತ ಅಗತ್ಯಗಳನ್ನು ಗಮನಿಸಿದರೆ, ಗೌರವಯುತ ಜೀವನಕ್ಕಾಗಿ ತಿಂಗಳಿಗೆ ಕನಿಷ್ಠ ರೂ.42,000 ಅಗತ್ಯವಿದೆ. ಇದಕ್ಕಿಂತ ಕಡಿಮೆ ವೇತನವು ಕಾರ್ಮಿಕರನ್ನು ದಾರಿದ್ರ್ಯದತ್ತ ತಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು. ಕನಿಷ್ಠ ವೇತನ ನೀಡದಿರುವುದು ಬಲವಂತದ ಕೆಲಸಕ್ಕೆ ಸಮಾನ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ ಕೂಡ ಹೇಳಿರುವುದನ್ನು ಅವರು ಉಲ್ಲೇಖಿಸಿದರು. ಸರ್ಕಾರಿ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಗುತ್ತಿಗೆ ಕಾರ್ಮಿಕರಿಗೆ ಸಹ ಕಾನೂನುಬದ್ಧ ವೇತನ ನೀಡಲಾಗುತ್ತಿಲ್ಲ ಎಂದು ಆರೋಪಿಸಿ, ಕಾರ್ಮಿಕ ಇಲಾಖೆ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣ ರದ್ದುಪಡಿಸಿ, ಕನಿಷ್ಠ ವೇತನವನ್ನು ರೂ.42,000ಕ್ಕೆ ನಿಗದಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಎಐಸಿಸಿಟಿಯು ಜಿಲ್ಲಾಧ್ಯಕ್ಷರು ಅಜೀಜ್ ಜಾಗೀರ್ದಾರ್, ಮುಖಂಡರಾದ ಪ್ರಹ್ಲಾದ್ ರಾವ್, ಜಿಲಾನಿ ಯರಿಗೇರಾ, ಭೀಮಯ್ಯ, ಲಕ್ಷ್ಮಣ್, ನಿಸಾರ್ ಅಹ್ಮದ್, ಈರಣ್ಣ, ಜಗದೀಶ್, ಚಾಂದ್, ರಾಮಸ್ವಾಮಿ, ಇಮಾಮ್, ಪರಶುರಾಮ್, ಸಣ್ಣ ನರಸಪ್ಪ ಇದ್ದರು.
Kalaburagi | ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅದ್ದೂರಿ ಆಚರಣೆ : ಶಾಸಕ ಬಿ.ಆರ್. ಪಾಟೀಲ್
ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೂರು ದಿನಗಳ ವಿಶೇಷ ಉಪನ್ಯಾಸ ಮಾಲಿಕೆ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿಂಗದೀಕ್ಷೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ್ ತಿಳಿಸಿದ್ದಾರೆ. ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.16, 17 ಮತ್ತು 18ರಂದು ನಡೆಯಲಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ ಚಾಲನೆ ನೀಡಲಿದ್ದು, ಪ್ರಭುಶ್ರೀ ಮಾತಾಜಿ ಅಕ್ಕಮಹಾದೇವಿ, ಗದ್ದುಗೆಮಠದ ಚರಲಿಂಗ ಶ್ರೀಗಳು ಹಾಗೂ ಗುರುಮಿಠಕಲ್ ಶಾಂತವೀರ ಶಿವಾಚಾರ್ಯರು ಪ್ರತ್ಯೇಕ ದಿನಗಳಲ್ಲಿ ಉಪನ್ಯಾಸ ಕೊಡಲಿದ್ದಾರೆ, ಇದೇ ವೇಳೆಯಲ್ಲಿ ಹಲವು ಮಠಾಧೀಶರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಎ.19ರಂದು ಬೆಳಿಗ್ಗೆ 6.30ಕ್ಕೆ ಶರಣಬಸವೇಶ್ವರರ ಸಂಸ್ಥಾನದ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿಂಗದೀಕ್ಷೆ ನಡೆಯಲಿದೆ. ಇದೇ ದಿನ ಸಂಜೆ 5 ಗಂಟೆಗೆ ಜಾತ್ರಾ ಮೈದಾನದಲ್ಲಿ ಬಸವಾಭಿಮಾನಿಗಳ ಬೃಹತ್ ಬಹಿರಂಗ ಸಭೆ ಜರುಗಲಿದೆ. ಈ ಸಭೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದರು. ಎ.20ರಂದು ಬಸವೇಶ್ವರರ ಜಯಂತಿ ಅಂಗವಾಗಿ ಬೆಳಿಗ್ಗೆ ಷಟಸ್ಥಲ ಧ್ವಜಾರೋಹಣ, ಉಪನ್ಯಾಸ, ವಚನ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಂಜೆ 4 ಗಂಟೆಗೆ ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ಬಸವಣ್ಣನವರ ಹಾಗೂ ಕಾಯಕ ಶರಣರ ಭಾವಚಿತ್ರಗಳೊಂದಿಗೆ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಇದರ ಜೊತೆಗೆ ಬೈಕ್ ರ್ಯಾಲಿಯೂ ವಿಶೇಷ ಆಕರ್ಷಣೆಯಾಗಲಿದೆ ಎಂದರು. ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಬಿಜಿ ಪಾಟೀಲ್ ಮಾತನಾಡಿ, ಎ.10ರಿಂದ ಜಿಲ್ಲಾದ್ಯಂತ ಪ್ರತಿದಿನ ಎರಡು ತಾಲೂಕುಗಳಂತೆ ಭೇಟಿ ನೀಡಿ ಸಭೆಗಳನ್ನು ನಡೆಸಲಾಗುತ್ತದೆ. ಈಗಾಗಲೇ ಮೂರು ಹಂತದ ಸಭೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಈ ಬಾರಿ ಯಾರಿಂದಲೂ ಹಣ ಸಂಗ್ರಹ ಮಾಡದೇ, ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಶಾಸಕ ಅಲ್ಲಂಪ್ರಭು ಪಾಟೀಲ್, ಅಮರನಾಥ ಪಾಟೀಲ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಡಾ. ಭೀಮಾಶಂಕರ ಬಿಲಗುಂದಿ, ಅಶೋಕ್ ಘೂಳಿ, ಸೋಮಶೇಖರ ಹಿರೇಮಠ, ಶಿವಾನಂದ ಧ್ಯಾಮಗೋಳ, ರುದ್ರಮುನಿ ಹಿರೇಮಠ, ಆರ್.ಕೆ.ಹುಡುಗಿ,ಆರ್. ಜಿ. ಶೆಟಗಾರ್, ಭೀಮಾಶಂಕರ ಮೀಟೆಕರ್, ಚನ್ನವೀರ ಡಿಗ್ಗಾವಿ, ರಾಜಶೇಖರ್ ಸಿರಿ, ಶರಣಬಸಪ್ಪಾ ಭೂಸನೂರ, ರಾಜಶೇಖರ ಮಂಕಂಚಿ, ರಮೇಶ್ ಮರಗೋಳ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Sedam | ದೈಹಿಕ, ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ತೊಡಗಿ : ಪಿಎಸ್ಐ ಉಪೇಂದ್ರ
ಸೇಡಂ: ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಶಿಸ್ತಿನಿಂದ ಆಟವಾಡುವುದೇ ನಿಜವಾದ ಕ್ರೀಡಾ ಸ್ಫೂರ್ತಿಯಾಗಿದೆ ಎಂದು ಸೇಡಂ ಠಾಣೆಯ ಪಿಎಸ್ಐ ಉಪೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ತಾಲೂಕಿನ ಬಿಬ್ಬಳ್ಳಿ ಗ್ರಾಮದ ಆದರ್ಶ ವಿದ್ಯಾಲಯ ಶಾಲಾ ಮೈದಾನದಲ್ಲಿ ಆಯೋಜಿಸಲಾದ 'ಬಿಪಿಎಲ್ ಕ್ರಿಕೆಟ್ ಟೂರ್ನಮೆಂಟ್ ಸೀಸನ್-1' ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ, ಆದರೆ ಸರಿಯಾದ ವೇದಿಕೆಯ ಅವಶ್ಯಕತೆಯಿದೆ. ಬಿಪಿಎಲ್ನಂತಹ ಟೂರ್ನಮೆಂಟ್ಗಳು ಸ್ಥಳೀಯ ಯುವಕರಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಉತ್ತಮ ಅವಕಾಶ ನೀಡುತ್ತವೆ. ಇಲ್ಲಿಂದ ಉತ್ತಮ ಆಟಗಾರರು ಹೊರಹೊಮ್ಮಲಿ ಎಂದು ಆಶಿಸಿದರು. ಈ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸುವಲ್ಲಿ ಸೋಮಶೇಖರ್ ಬಿಬ್ಬಳ್ಳಿ, ಬಸವರಾಜ ಬಿಬ್ಬಳ್ಳಿ ಹಾಗೂ ಜಗದೀಶ ಪಾಟೀಲ್ ಬಿಬ್ಬಳ್ಳಿ ಶ್ರಮವಹಿಸಿರುವುದು ಶ್ಲಾಘನೀಯ ಎಂದರು. ವಿಜಯಕುಮಾರ್ ಶರ್ಮಾ, ಸುಭಾಷ್ ನಾಟಿಕರ, ಜಗದೀಶ್ ಕುಕ್ಕುಂದ, ದೇವು ನಾಟಿಕರ, ತಿಪ್ಪಣ್ಣ ಯಡಗಾ, ನಾಗರಾಜ್ ವೇದಿಕೆಯಲ್ಲಿದ್ದರು.
ಇರಾನ್ ಜೊತೆಗಿನ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಕಠಿಣ ವ್ಯಾಪಾರ ನೀತಿಯನ್ನು ಪ್ರಕಟಿಸಿದ್ದಾರೆ. ಇರಾನ್ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶದ ಮೇಲೆ ಅಮೆರಿಕಕ್ಕೆ ರಫ್ತು ಮಾಡುವ ಎಲ್ಲಾ ಸರಕುಗಳ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಶೇ 50ರ ಸುಂಕ (Tariff) ವಿಧಿಸಲಾಗುವುದು
Kalaburagi | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಸಾಧಕಿಯರಿಗೆ ಸನ್ಮಾನ
ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕಾಲೋನಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಸಾಧಕಿಯರಾದ ಸುಷ್ಮಾವತಿ ಎಸ್.ಪೂಜಾರಿ, ಡಾ.ಪ್ರೇಮಾ ಅಪಚಂದ, ಆಯಿಷಾ ಪಟೇಲ್, ಡಾ.ನಸೀನ್ ಖತಿಜಾ, ಡಾ.ಜ್ಯೋತಿ ಬಳಗಾರ, ಡಾ.ಭಾಗೀರತಿ ಗುಡ್ಡವಾಡಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಬಿ. ಫೌಝಿಯಾ ತರನ್ನುಮ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಕಾಶ ಮೋರಗೆ ವಹಿಸಿದ್ದರು. ಅರುಣಕುಮಾರ ಲೋಯಾ, ಡಾ. ಶಾಂತಾ ಅಷ್ಟಗಿ, ಭಾಗ್ಯಲಕ್ಷ್ಮೀ ಎಂ., ಗುoಡಣ್ಣ ಪದ್ಮಾಜಿ, ರವೀಂದ್ರ ಶಾಬಾದಿ, ಡಾ.ಸಂತೋಷ ಹುಂಪಿ, ಡಾ. ಜ್ಯೋತಿ ರೆಡ್ಡಿ, ಡಾ. ಪದ್ಮರಾಜ ರಾಸಣಗಿ, ಡಾ. ಮಿನಾಕ್ಷಿ ವಿಜಯಕುಮಾರ, ನಯನಾ ಸೇಡಿಯಾ, ಡಾ. ಜ್ಯೋತಿ ಕೆ.ಎಸ್., ಡಾ. ರೂಪಾಲಿ ರಾಠೋಡ ಹಾಗೂ ಡಾ. ಪದ್ಮಾವತಿ ಧನ್ನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Afzalpur | ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಿ: ಅರುಣಕುಮಾರ ಪಾಟೀಲ್ ವಿರುದ್ಧ ಜಮೀಲ್ ಗೌಂಡಿ ವಾಗ್ದಾಳಿ
ಅಫಜಲಪುರ: ಲೋಕಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸದಿದ್ದರೂ ಕೆಕೆಆರ್ ಟಿಸಿ ನಿಗಮದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತಿರುವ ಅರುಣಕುಮಾರ ಪಾಟೀಲ್ ಅವರು ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಜಮೀಲ್ ಗೌಂಡಿ ಆಗ್ರಹಿಸಿದರು. ಪಟ್ಟಣದ ಎಸ್.ಕೆ.ಜಿ ಲಾಡ್ಜ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಫಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 50 ಸಾವಿರ ಮತಗಳ ಲೀಡ್ ಕೊಡುತ್ತೇವೆ, ಇಲ್ಲವಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಅರುಣಕುಮಾರ ಪಾಟೀಲ್ ಹೇಳಿದ್ದರು. ಆದರೆ ಫಲಿತಾಂಶದಲ್ಲಿ ಬಿಜೆಪಿ ಪಕ್ಷಕ್ಕೆ ಸುಮಾರು 20 ಸಾವಿರ ಮತಗಳ ಮುನ್ನಡೆ ಲಭಿಸಿದರೂ ಅವರು ತಮ್ಮ ಸ್ಥಾನದಲ್ಲೇ ಮುಂದುವರಿಯುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅವಕಾಶ ನೀಡುವುದನ್ನು ಬಿಟ್ಟು, ವರಿಷ್ಠರ ಒಲವು ಪಡೆದು ನಿಗಮದ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಿದರು. ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆಯಿಂದ ಬಿಜೆಪಿ ಲೀಡ್ ಕಡಿಮೆಯಾಗಿ, ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಗೆಲುವಿಗೆ ಸಾಧ್ಯವಾಯಿತು ಎಂದರು. ಇನ್ನು ಶಾಸಕ ಎಂ.ವೈ. ಪಾಟೀಲ್ ಹಾಗೂ ಅವರ ಪುತ್ರ ಅರುಣಕುಮಾರ ಪಾಟೀಲ್ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜೆ.ಎಂ. ಕೊರಬು ಅವರ ಬೆಂಬಲದಿಂದಲೇ ಎಂ.ವೈ. ಪಾಟೀಲ್ ಶಾಸಕರಾಗಿದ್ದಾರೆ. ಆದರೆ ಇದೀಗ ಅವರನ್ನು ರಾಜಕೀಯವಾಗಿ ಹಿಂಜರಿಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಾಲುಮತ ಸಮುದಾಯದ ನಾಯಕರಿಗೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಇದಕ್ಕೆ ಮುಂದಿನ ದಿನಗಳಲ್ಲಿ ಸಮುದಾಯ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಕೆ ನೀಡಿದರು. ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಮಕ್ಬೂಲ್ ಪಟೇಲ್ ಅವರು ಹಿಂದುಳಿದ, ದಲಿತ ಹಾಗೂ ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರೆ, ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು. ಶಾಸಕರಿಂದ ಕಾಮಗಾರಿಗಳನ್ನು ಪಡೆದವರು ಅವರನ್ನು ಮೆಚ್ಚಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ವಿಜಯಕುಮಾರ ಪಾಟೀಲ್, ಲತೀಫ್ ಪಟೇಲ್, ನಿಜಾಮೋದ್ದಿನ್ ಜಮಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕದನ ವಿರಾಮದ ನಡುವೆಯೇ ಮುಂದುವರಿದ ದಾಳಿ | ಇರಾನ್ ತೈಲ ಘಟಕಕ್ಕೂ ಹಾನಿ; ಯುಎಇ, ಕುವೈತ್, ಬಹ್ರೇನ್ ಮೇಲೂ ದಾಳಿ
ಟೆಹ್ರಾನ್/ವಾಷಿಂಗ್ಟನ್: ಅಮೆರಿಕ–ಇರಾನ್ ನಡುವೆ ಘೋಷಿಸಲಾದ ಎರಡು ವಾರಗಳ ಕದನ ವಿರಾಮದ ನಡುವೆಯೇ ಮಧ್ಯಪ್ರಾಚ್ಯದಲ್ಲಿ ಬುಧವಾರವೂ ದಾಳಿಗಳು ಮುಂದುವರಿದಿವೆ. ಇದರಿಂದ ಕದನ ವಿರಾಮದ ಎಷ್ಟು ದಿನ ಇರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ. ಇರಾನ್, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಕುವೈತ್, ಬಹ್ರೇನ್ ಹಾಗೂ ಲೆಬನಾನ್ ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ನ ತೈಲ ಸಂಸ್ಕರಣಾ ಮೂಲಸೌಕರ್ಯಕ್ಕೂ ಹಾನಿಯಾಗಿರುವ ಕುರಿತು ವರದಿಯಾಗಿದೆ. ಯುಎಇ, ಕುವೈತ್ ಮತ್ತು ಬಹ್ರೇನ್ ದೇಶಗಳು ಇರಾನ್ ಮೂಲದ ಕ್ಷಿಪಣಿಗಳು ಹಾಗೂ ಡ್ರೋನ್ ದಾಳಿಗೆ ಗುರಿಯಾಗಿವೆ. ಇದರಿಂದಾಗಿ ಈ ದೇಶಗಳು ತಮ್ಮ ವಾಯು ರಕ್ಷಣಾ ವ್ಯವಸ್ಥೆಗಳನ್ನು ತಕ್ಷಣ ಸಕ್ರಿಯಗೊಳಿಸಿವೆ. ಯುದ್ಧ ವಿರಾಮಕ್ಕೆ ಒಪ್ಪಂದವಾದ ಕೆಲವೇ ಗಂಟೆಗಳಲ್ಲೇ ಈ ದಾಳಿಗಳು ನಡೆದಿದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಈ ಕದನ ವಿರಾಮ ಮಾಡಲಾಗಿದ್ದು, ಆರು ವಾರಗಳ ಸಂಘರ್ಷಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಯುಎಇ ರಕ್ಷಣಾ ಇಲಾಖೆಯ ಪ್ರಕಾರ, ವಾಯು ರಕ್ಷಣಾ ಪಡೆಗಳು ಇರಾನ್ ನಿಂದ ಬರುವ ಕ್ಷಿಪಣಿಗಳು ಮತ್ತು ಡ್ರೋನ್ ಗಳನ್ನು ತಡೆಯಲು ಕಾರ್ಯನಿರ್ವಹಿಸುತ್ತಿವೆ. ಬ್ಯಾಲಿಸ್ಟಿಕ್ ಹಾಗೂ ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ವೇಳೆ ಅನೇಕ ಸ್ಥಳಗಳಲ್ಲಿ ಸ್ಫೋಟಗಳು ಕೇಳಿಬಂದಿವೆ. ಇದೇ ವೇಳೆ ಲೆಬನಾನ್ ನಲ್ಲಿ ಇಸ್ರೇಲ್ ದಾಳಿಗಳು ತೀವ್ರಗೊಂಡಿವೆ.
ಸರಕಾರಿ ಕೆಲಸ ಕೊಡಿಸುವುದಾಗಿ 20 ಲಕ್ಷ ರೂ ಪಂಗನಾಮ; ನಕಲಿ ಸಂದರ್ಶನ ನಡೆಸಿದ್ದಲ್ಲದೆ, ಆದೇಶ ಪತ್ರವನ್ನೂ ನೀಡಿದ್ದರು!
Fraud Case -ನಗರಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಗುತ್ತಿಗೆದಾರ ಮನುಕುಮಾರ್ ಎಂಬುವವರಿಂದ 20 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಎಂ.ಸಿ. ಗಿರೀಶ್ ಮತ್ತು ತಂಡವು ವಿಧಾನಸೌಧದ ಸಮೀಪ ಇರುವ ಕಬ್ಬನ್ ಪಾರ್ಕ್ ಒಳಗಿರುವ ಚನ್ನಬಸಪ್ಪ ಅಡಿಟೋರಿಯಂನಲ್ಲಿ ನಕಲಿ ಸಂದರ್ಶನ ನಡೆಸಿ, ನಕಲಿ ನೇಮಕಾತಿ ಪತ್ರ ಸಹ ನೀಡಿದ್ದರು. ಮನುಕುಮಾರ್ ಅವರಿಗೆ ತಡವಾಗಿ ಈ ವಂಚನೆ ಅರಿವಿಗೆ ಬಂದಿದೆ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ಸೇನಾ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ
ಉಡುಪಿ, ಎ.8: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006ರ ಎಪ್ರಿಲ್ 27ರಿಂದ 2009ರ ಎಪ್ರಿಲ್ 27ರ ನಡುವಿನ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 27 ಕೊನೆಯ ದಿನವಾಗಿದೆ. ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಮೇ 2ರಂದು ನಡೆಯಲಿರುವ ರ್ಯಾಲಿಯಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್ಸೈಟ್- https://udupi.nic.in-ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮೂರು ಮಕ್ಕಳ ದತ್ತು ಆದೇಶ ನೀಡಿದ ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಎ.8: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಅಡಿಯಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ಸೋಮವಾರ ಮಣಿಪಾಲದ ತಮ್ಮ ಕಚೇರಿಯಲ್ಲಿ ಬೆಂಗಳೂರು, ಆಂಧ್ರಪ್ರದೇಶ (ತೆಲಂಗಾಣ) ಹಾಗೂ ಉಡುಪಿ ಜಿಲ್ಲೆಯ ದಂಪತಿಗಳಿಗೆ ಒಟ್ಟು 3 ಮಕ್ಕಳ ಅಂತಿಮ ದತ್ತು ಆದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅಗತ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣ ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆಯು ಕಾನೂನು ಬದ್ಧವಾಗಿ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಇದೆ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದರು. ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬೇಕು. ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹುದು. ಜಿಲ್ಲೆಯ ಸಂತೆಕಟ್ಟೆ ಬಳಿ ಇರುವ ಶ್ರೀಕೃಷ್ಣಾನುಗೃಹ ದತ್ತು ಕೇಂದ್ರ ಹಾಗೂ ಬಿ.ಆರ್.ಶೆಟ್ಟಿ ಆಸ್ಪತ್ರೆಯಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ. ಕಾನೂನು ಉಲ್ಲಂಘಿಸಿ ಅಥವಾ ಮಕ್ಕಳ ಮಾರಾಟ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಶಾಮೀಲಾಗಿದ್ದಲ್ಲಿ ಒಂದು ಲಕ್ಷ ರೂ. ದಂಡ ಹಾಗೂ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ಕೊಂಡು ಕೊಂಡವರಿಗೆ ಒಂದು ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ರಕ್ಷಣಾಧಿಕಾರಿಗಳಾದ ಸುರಕ್ಷಾ ಹಾಗೂ ಮಹೇಶ್ ದೇವಾಡಿಗ, ಕೃಷ್ಣಾನುಗೃಹ ವಿಶೇಷ ದತ್ತು ಕೇಂದ್ರದ ವೃಂದಾ ಉಪಸ್ಥಿತರಿದ್ದರು. ದತ್ತು ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ - https://missionvatsalya.wcd.gov.in- ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ, ದೂರವಾಣಿ ಸಂಖ್ಯೆ: 0820-2574964 ಮತ್ತು ಸಂತೆಕಟ್ಟೆಯ ಶ್ರೀಕೃಷ್ಣಾನುಗೃಹ ವಿಶೇಷ ದತ್ತು ಕೇಂದ್ರ ದೂರವಾಣಿ ಸಂಖ್ಯೆ: 9880442640ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಇರಾನ್ ಮಾತುಕತೆ ಪ್ರಗತಿ ನಿಧಾನಕ್ಕೆ ಟ್ರಂಪ್ ಅಸಹನೆಗೊಂಡಿದ್ದರು: JD ವಾನ್ಸ್
ಬುಡಾಪೆಸ್ಟ್, ಎ. 8: ಇರಾನ್ ನೊಂದಿಗೆ ನಡೆಯುತ್ತಿರುವ ಯುದ್ಧ ಅಂತ್ಯಗೊಳಿಸುವ ದಿಕ್ಕಿನ ಮಾತುಕತೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಹನೆಗೊಂಡಿದ್ದರು ಎಂದು ಉಪಾಧ್ಯಕ್ಷ ಜೆ.ಡಿ. ವಾನ್ಸ್ ಹೇಳಿದ್ದಾರೆ. ಹಂಗೇರಿಯ ರಾಜಧಾನಿ ಬುಡಾಪೆಸ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಾನ್ಸ್, ಇರಾನ್ ಪ್ರಾಮಾಣಿಕವಾಗಿ ಸಂಧಾನ ನಡೆಸಿದರೆ ಒಪ್ಪಂದ ಸಾಧ್ಯವಿದೆ ಎಂದರು. ಆದರೆ, ಇರಾನ್ ಆಡಳಿತದ ಕೆಲವು ವಿಭಾಗಗಳು ಮಾತುಕತೆಗೆ ಸಹಕಾರ ನೀಡಿದರೆ, ಇನ್ನೂ ಕೆಲವು ವಿಭಾಗಗಳು ಸ್ಪಂದಿಸದಿರುವುದು ಒಪ್ಪಂದದ ಪ್ರಕ್ರಿಯೆಯನ್ನು ಉತ್ತಮಗೊಳಿಸಬಹುದು ಎಂದು ಹೇಳಿದರು. ಒಪ್ಪಂದ ಸಾಧನೆಗಾಗಿ ಇರಾನ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಟ್ರಂಪ್ ತಮ್ಮ ಸಂಧಾನಕಾರರ ತಂಡಕ್ಕೆ ಸೂಚಿಸಿದ್ದರು ಎಂದು ಅವರು ತಿಳಿಸಿದರು. “ನನಗೆ, ಸಂಧಾನಕಾರರ ತಂಡಕ್ಕೆ, ಕಾರ್ಯದರ್ಶಿಗೆ ಹಾಗೂ ವಿಶೇಷ ರಾಯಭಾರಿ ವಿಟ್ಕಾಫ್ ಅವರಿಗೆ ಅಧ್ಯಕ್ಷರು ಸ್ಪಷ್ಟ ಸೂಚನೆ ನೀಡಿದ್ದರು,” ಎಂದು ಹೇಳಿದರು. “ಮಾತುಕತೆಯಲ್ಲಿ ವೇಗದ ಪ್ರಗತಿ ಆಗಬೇಕು ಎಂಬ ಕಾರಣಕ್ಕೆ ಟ್ರಂಪ್ ಅಸಹನೆಗೊಂಡಿದ್ದರು. ವಿಶ್ವಾಸದ ಆಧಾರದ ಮೇಲೆ ಮಾತುಕತೆ ನಡೆಸಿದರೆ ಮಾತ್ರ ಒಪ್ಪಂದ ಸಾಧ್ಯ. ಅಂತಿಮವಾಗಿ ಸಂಧಾನದ ದಿಕ್ಕು ಇರಾನ್ ಕೈಯಲ್ಲಿದೆ,” ಎಂದು ವಾನ್ಸ್ ಅಭಿಪ್ರಾಯಪಟ್ಟರು. “ಇದು ದೊಡ್ಡ ಹಾಗೂ ಮಹತ್ವದ ಒಪ್ಪಂದವಾಗಲಿದೆ. ಇರಾನ್ ಸರಿಯಾದ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ,” ಎಂದು ಅವರು ಹೇಳಿದರು.
Vijayapura | ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಮೃತ್ಯು
ವಿಜಯಪುರ : ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನ ಆರ್ಟಿ ನಗರ ನಿವಾಸಿಗಳಾದ ಮುಹಮ್ಮದ್ ಹಯಾತ್ (12), ಹೈದರ್ ಪಾಷಾ (32) ಹಾಗೂ ಅಬ್ದುಲ್ ಖುದ್ದೂಸ್ (35) ಮೃತರು. ಒಟ್ಟು 14 ಜನರ ತಂಡ ವಿಜಯಪುರಕ್ಕೆ ಪ್ರವಾಸಕ್ಕೆ ಆಗಮಿಸಿದ್ದು, ಕೆರೆಯ ಬಳಿ ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ನೀರಿನಲ್ಲಿ ಇಳಿದಿದ್ದ ಬಾಲಕ ಮುಳುಗುತ್ತಿದ್ದಂತೆ, ಆತನ ರಕ್ಷಣೆಗೆ ಅಬ್ದುಲ್ ಖುದ್ದೂಸ್ ಹಾಗೂ ಮತ್ತೊಬ್ಬರು ಮುಂದಾಗಿದ್ದಾರೆ. ಆದರೆ ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೂವರನ್ನು ನೀರಿನಿಂದ ಹೊರತೆಗೆದರು. ಬಾಲಕ ಮುಹಮ್ಮದ್ ಹಯಾತ್ ಹಾಗೂ ಹೈದರ್ ಪಾಷಾ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಅಬ್ದುಲ್ ಖುದ್ದೂಸ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
Afzalpur | ಎ.12ರಂದು ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ : ಬಸಣ್ಣ ಗುಣಾರಿ
ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜಿಗದ ಕ್ಷೇಮಾಭಿವೃದ್ಧಿ ಸಂಘ (ರಿ) ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಸಹಯೋದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆ ಮತ್ತು ಅಕ್ಕಮಹಾದೇವಿ ಜಯಂತಿ ದಿನಾಚರಣೆ ಪ್ರಯುಕ್ತ ಆರೋಗ್ಯ ತಪಾಸಣೆ ಮತ್ತು ರಕ್ತಾದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಬಸಣ್ಣ ಗುಣಾರಿ ತಿಳಿಸಿದರು. ಪಟ್ಟಣದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಎ.12ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಗುರು ಮಳೇಂದ್ರ ಸಂಸ್ಥಾನ ಹಿರೇಮಠದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು,ಉದ್ಘಾಟನೆಯನ್ನು ಶಾಂತಾಬಾಯಿ ಎಂ.ವೈ.ಪಾಟೀಲ್, ಅಧ್ಯಕ್ಷತೆಯನ್ನು ದೇವಿಕಾ ಶೆಟ್ಟಿ, ಪೋಟೊ ಪೂಜೆಯನ್ನು ಅನ್ನಪೂರ್ಣ ಅರುಣಕುಮಾರ ಪಾಟೀಲ್, ಮುಖ್ಯ ಅತಿಥಿಗಳಾಗಿ ಅರುಣಾಬಾಯಿ ನೂಲಾ, ಪುಷ್ಪಾವತಿ ಎಸ್. ಟಕ್ಕಳಕಿ, ಸಾವಿತ್ರಿಬಾಯಿ ನಾಕೇದಾರ, ಜಯಶ್ರೀ ಉಪ್ಪಿನ, ಸಿದ್ದಮ್ಮ ಹೈಗೊಂಡೆ, ಪಾತಳಮ್ಮ ಫತಾಟೆ, ಡಾ.ಸಂಗಮೇಶ್ವರಿ ಪ್ರಮೋದ, ಜಗದೇವಿ ಜೇವರ್ಗಿ, ಅನ್ನಪೂರ್ಣ ಗುಣಾರಿ, ಚನ್ನಮ್ಮ ಜೇವರ್ಗಿ, ಲಕ್ಷ್ಮೀ ಗುಣಾರಿ, ಅನುಭಾವ ನುಡಿ ಸಾವಿತ್ರಿ ಎಸ್. ರೋಡಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ನೀಗಡಿ, ಲಕ್ಷ್ಮಿಪುತ್ರ ನೀಗಡಿ ಉಪಸ್ಥಿತರಿದ್ದರು.
ಜಾಗತಿಕ ಮಾನ್ಯತೆಗಾಗಿ ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದ ಡಾ.ಕಾರಂತ: ಪ್ರೊ.ನಿತ್ಯಾನಂದ ಶೆಟ್ಟಿ
ಉಡುಪಿ, ಎ.8: ಯಕ್ಷಗಾನಕ್ಕೆ ಜಾಗತಿಕ ಮನ್ನಣೆಗಾಗಿ ತಾನು ಅಪಾರವಾಗಿ ಮೆಚ್ಚಿದ್ದ ಯುರೋಪಿನ ಬ್ಯಾಲೆಯ ಸ್ಪೂರ್ತಿಯಿಂದ ಡಾ.ಶಿವರಾಮ ಕಾರಂತರು ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದರು ಎಂದು ತುಮಕೂರು ವಿವಿಯ ಪ್ರಾಧ್ಯಾಪಕ ಹಾಗೂ ಖ್ಯಾತ ಚಿಂತಕ ಪ್ರೊ.ನಿತ್ಯಾನಂದ ಬಿ.ಶೆಟ್ಟಿ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ , ಉಡುಪಿಯ ಯಕ್ಷಗಾನ ಕೇಂದ್ರ, ಎಂಜಿಎಂ ಸಂಧ್ಯಾ ಕಾಲೇಜುಗಳ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಯಕ್ಷಗಾನ ಮತ್ತು ಕಾರಂತರು’ ಕುರಿತು ವಿಚಾರಗೋಷ್ಠಿಯಲ್ಲಿ ಹಾಗೂ ‘ಅಳವು ಅರಿಯದ ಭಾಷೆ’ ಕೃತಿ ಬಿಡುಗಡೆ ಸಮಾರಂಭದಲ್ಲಿ ‘ಯಕ್ಷಗಾನ ಕಲಾಮೀಮಾಂಸೆ ಮತ್ತು ಅಧ್ಯಯನ: ಕಾರಂತರ ದೃಷ್ಟಿಕೋನ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡುತಿದ್ದರು. ಡಾ.ಕಾರಂತರು ತಮ್ಮ ಪ್ರಸಿದ್ಧ ‘ಯಕ್ಷಗಾನ’ ಕುರಿತ ಕೃತಿಯನ್ನು ಹೊರತು ಪಡಿಸಿ ವಿವಿಧ ಕಲೆಗಳ ಕುರಿತಂತೆ ಒಟ್ಟು ಆರು ಕೃತಿಗಳನ್ನು ಪ್ರಕಟಿಸಿದ್ದಾರೆ. 1948ರಲ್ಲಿ ಪ್ರಕಟಗೊಂಡ ಅವರ ‘ಮೊಗ ಪಡೆದ ಮನ’ ಕೃತಿಯಲ್ಲೇ ಅವರು ಕಲೆಯ ಕುರಿತ ಅಭಿಪ್ರಾಯವನ್ನು ಸವಿಸ್ತಾರವಾಗಿ ಬರೆದಿದ್ದಾರೆ. ಆಗಲೇ ಯಕ್ಷಗಾನ ಬ್ಯಾಲೆಯ ಬೀಜಾಂಕುರ ವಾಗಿರುವುದನ್ನು ಈ ಕೃತಿಯಲ್ಲಿ ಗಮನಿಸ ಬಹುದು ಎಂದು ಡಾ.ಶೆಟ್ಟಿ ಹೇಳಿದರು. ಡಾ.ಎಂ.ಗೋವಿಂದ ಪೈ, ಡಿವಿಜಿ, ಮಾಸ್ತಿ, ಕುವೆಂಪು ಹಾಗೂ ಕಾರಂತ ಮುಂತಾದವರು ಪಶ್ಚಿಮದ ಓದಿನಿಂದ ಕನ್ನಡದ ಸಾಂಸ್ಕೃತಿಕ ಲೋಕವನ್ನು ಹೇಗೆ ಶ್ರೀಮಂತಗೊಳಿಸಿದರು ಎಂಬುದನ್ನು ನೋಡಬಹುದು. ಇದರಿಂದ ಕನ್ನಡ ವಿದ್ವತ್ ವಲಯ ಶ್ರೀಮಂತಗೊಂಡಿದ್ದಲ್ಲದೇ, ಹೊಸ ಎಚ್ಚರ ಹುಟ್ಟಲು ಕಾರಣಿಭೂತರಾದರು ಎಂದು ವಿವರಿಸಿದರು. ಕಾರಂತರಿಗೆ ಕಲೆ, ರಂಗಭೂಮಿ, ಪ್ರಜಾತಂತ್ರ ಪ್ರತ್ಯೇಕ ವಿಷಯಗಳಲ್ಲ. ಅವರ ಪ್ರಕಾರ ಯುರೋಪಿನಲ್ಲಿ ಕಲೆ ಜೀವಂತವಾಗಿದ್ದು ಬೆಳೆದು ಬಂದು ಬದುಕಿನಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದೇ ಸ್ಥಿತಿ ಭಾರತದಲ್ಲಿಲ್ಲ ಎಂಬ ಭಾವನೆ ಕಾರಂತರಲ್ಲಿತ್ತು. ಹೀಗಾಗಿ ಅವರು ಯುರೋಪಿನ ಬ್ಯಾಲೆಯ ಮಾನದಂಡದ ಆಧಾರದಲ್ಲಿ ಯಕ್ಷಗಾನ ಬ್ಯಾಲೆಯನ್ನು ಕಟ್ಟಿದ್ದಾರೆ ಎಂದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಯಕ್ಷ ಕಲಾವಿದ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ.ಎಂ.ಎಲ್.ಸಾಮಗ, ಡಾ.ಕಾರಂತರು ಯಕ್ಷಗಾನಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ. ಅಲ್ಲದೇ ಯಕ್ಷಗಾನಕ್ಕೊಂದು ಹೊಸ ದಿಕ್ಕನ್ನು ತೋರಿಸಿದ್ದಾರೆ. ಆದರೆ ಇಂದಿನ ಸಾಮಾಜಿಕ ಬದಲಾವಣೆಗಳೂ ಯಕ್ಷಗಾನದಲ್ಲಿ ಅಳವಡಿಕೆಯಾಗುತ್ತಿದೆ ಎಂದು ಅವರು ವಿಷಾಧಿಸಿದರು. ಡಾ.ನಿತ್ಯಾನಂದ ಶೆಟ್ಟಿ ಅವರ ‘ಅಳವು ಅರಿಯದ ಬಾಷೆ’ ಕೃತಿಯನ್ನು ಉದ್ಯಮಿ ಹಾಗೂ ಶಿಕ್ಷಣ ತಜ್ಞರಾದ ಹರಿ ಪ್ರಸಾದ್ ರೈ ಅವರು ಬಿಡುಗಡೆ ಗೊಳಿಸಿ ಮಾತನಾಡಿದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ, ಎಂಜಿಎಂ ಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ನಾಯಕ್, ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಉಪಪ್ರಾಂಶುಪಾಲರಾದ ಡಾ.ಎಂ.ವಿಶ್ವನಾಥ ಪೈ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿಯ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ಸಾಂಸ್ಕೃತಿಕ ಕ್ಷೇತ್ರದ ಕುರಿತಂತೆ ಇಂದಿನ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವುದು ಶಿಕ್ಷಣ ರಂಗದ ಇಂದಿನ ಬಹುದೊಡ್ಡ ಸವಾಲಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾರಂತರ ಸಮಕಾಲೀನ ವೈಜ್ಞಾನಿಕ ಚಿಂತನೆಗಳ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಟ್ರಸ್ಟ್ ಕಳೆದೊಂದು ವರ್ಷದಿಂದ ಇಂಥ ಕಾರ್ಯಕ್ರಮ ಗಳನ್ನು ಕಾಲೇಜುಗಳಲ್ಲೇ ಹಮ್ಮಿಕೊಳ್ಳುತ್ತಿದೆ ಎಂದರು. ಡಾ.ಶಿವರಾಮ ಕಾರಂತ ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಅತಿಥಿಗಳನ್ನು ಸ್ವಾಗತಿಸಿದರೆ, ಸದಸ್ಯ ಸಂಚಾಲಕರಾದ ಜಿ.ಎಂ.ಶರೀಫ್ ಹೂಡೆ ವಂದಿಸಿ, ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಡಾ.ಶೆಟ್ಟಿ ಅವರ ‘ಅಳವು ಅರಿಯದ ಭಾಷೆ’ ಕೃತಿಯ ವಿವಿಧ ವಿಷಯಗಳ ಕುರಿತು ಮಂಗಳೂರು ವಿವಿಯ ಡಾ.ರಾಜಾರಾಮ ತೋಳ್ಪಾಡಿ, ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಫಣಿರಾಜ್ ಹಾಗೂ ಮಂಗಳೂರು ಬಲ್ಮಠ ಸರಕಾರಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ರಾಮದಾಸ ಪ್ರಭು ಉಪನ್ಯಾಸ ನೀಡಿ ಸಂವಾದದಲ್ಲಿ ಪಾಲ್ಗೊಂಡರು.
Kalaburagi | ಮದ್ಯ ವ್ಯಸನಿಗಳಾಗದೆ ಆರೋಗ್ಯಕರ ಜೀವನ ನಡೆಸಿ: ಅರುಣ್ ಚಕ್ರವರ್ತಿ
ಕಲಬುರಗಿ: ಮದ್ಯಪಾನವು ವ್ಯಕ್ತಿಯ ಆರೋಗ್ಯವನ್ನಷ್ಟೇ ಅಲ್ಲದೆ ಕುಟುಂಬದ ನೆಮ್ಮದಿಯನ್ನೂ ಹಾಳುಮಾಡುತ್ತದೆ. ಆದ್ದರಿಂದ ವ್ಯಸನಕ್ಕೆ ದಾಸರಾಗದೇ, ಅದರಿಂದ ಹೊರಬಂದು ಗೌರವಯುತ ಜೀವನ ನಡೆಸಲು ಸಂಕಲ್ಪ ಮಾಡಬೇಕು ಎಂದು ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅರುಣ್ ಚಕ್ರವರ್ತಿ ಹೇಳಿದರು. ನಗರ ಪೊಲೀಸ್ ಆಯುಕ್ತಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯಪಾನವನ್ನು ಕೇವಲ ಸಾಮಾಜಿಕ ಕಳಂಕವೆಂದು ನೋಡುವುದಕ್ಕಿಂತ, ಚಿಕಿತ್ಸೆ ಮೂಲಕ ಗುಣಪಡಿಸಬಹುದಾದ ಕಾಯಿಲೆಯಾಗಿ ಪರಿಗಣಿಸಬೇಕು ಎಂದು ಅಭಿಪ್ರಾಯಪಟ್ಟರು. ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ 1956ರಲ್ಲೇ ಮದ್ಯವ್ಯಸನವನ್ನು ಕಾಯಿಲೆಯಾಗಿ ವರ್ಗೀಕರಿಸಿದೆ ಎಂದು ತಿಳಿಸಿದರು. ಮಧುಮೇಹ ಅಥವಾ ರಕ್ತದೊತ್ತಡ ಇರುವವರಂತೆ ಮದ್ಯವ್ಯಸನಿಗಳನ್ನು ಸಮಾಜ ತಿರಸ್ಕರಿಸಬಾರದು. ಅವರಿಗೆ ವೈದ್ಯಕೀಯ ಚಿಕಿತ್ಸೆ ಹಾಗೂ ಮಾನಸಿಕ ಬೆಂಬಲ ನೀಡುವ ಮೂಲಕ ಈ ವ್ಯಸನದಿಂದ ಹೊರತರುವ ಪ್ರಯತ್ನ ಮಾಡಬೇಕು ಎಂದರು. ಪೊಲೀಸ್ ಇಲಾಖೆಯಲ್ಲಿನ ಒತ್ತಡದ ಕುರಿತು ಮಾತನಾಡಿದ ಅವರು, ಸಿಬ್ಬಂದಿಗಳ ಮಾನಸಿಕ ಆರೋಗ್ಯ ಕಾಪಾಡಲು ‘ವೆಲ್-ಬೀಯಿಂಗ್ ಆಫೀಸರ್ಸ್’ ಪರಿಕಲ್ಪನೆಯನ್ನು ಜಾರಿಗೆ ತಂದಿದ್ದೇವೆ. ಒತ್ತಡದ ಕಾರಣಕ್ಕೆ ಮದ್ಯದ ದಾಸರಾಗಬಾರದು ಎಂದು ಕೌನ್ಸೆಲಿಂಗ್ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಅದೇ ವೇಳೆ Alcoholics Anonymous ಸಂಸ್ಥೆಯ ಕಾರ್ಯವೈಖರಿಯನ್ನು ವಿವರಿಸಿದ ಅವರು, ಇದು 168ಕ್ಕೂ ಹೆಚ್ಚು ದೇಶಗಳಲ್ಲಿ ಸಕ್ರಿಯವಾಗಿರುವ ಸ್ವಯಂಸೇವಾ ಸಂಘಟನೆ ಆಗಿದ್ದು, ವ್ಯಸನಿಗಳಿಗೆ ಪರಸ್ಪರ ಬೆಂಬಲದ ಮೂಲಕ ಮದ್ಯಪಾನ ತ್ಯಜಿಸಲು ಸಹಕಾರಿಯಾಗುತ್ತಿದೆ. ಇದು ಉಚಿತ ಮತ್ತು ಗೌಪ್ಯ ಸೇವೆಯಾಗಿದ್ದು, ಅನೇಕರು ಇದರ ಮೂಲಕ ಹೊಸ ಜೀವನವನ್ನು ಆರಂಭಿಸಿದ್ದಾರೆ ಎಂದು ಹೇಳಿದರು. ಮದ್ಯವ್ಯಸನದಿಂದ ಮುಕ್ತರಾಗಿ ಸಮಾಜದಲ್ಲಿ ಘನತೆಯಿಂದ ಬದುಕುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಹಾಗೂ ಈಶಾನ್ಯ ವಲಯ ಪೊಲೀಸ್ ಉಪಮಹಾನಿರೀಕ್ಷಕ ಶಾಂತನು ಸಿನ್ಹಾ ಉಪಸ್ಥಿತರಿದ್ದರು.
ಮಂಗಳೂರು ಫಿಸಿಯೋಕಾನ್: ಫಾದರ್ ಮುಲ್ಲರ್ ಕಾಲೇಜಿನಲ್ಲಿ ಪ್ರಾಯೋಗಿಕ ಕಾರ್ಯಾಗಾರ ಉದ್ಘಾಟನೆ
ಮಂಗಳೂರು: ಫಾದರ್ ಮುಲ್ಲರ್ ಫಿಸಿಯೋಥೆರಪಿ ಕಾಲೇಜು ಮತ್ತು ದಕ್ಷಿಣ ಕನ್ನಡ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ‘ಮಂಗಳೂರು ಫಿಸಿಯೋಕಾನ್ 2026’ ರ ಅಂಗವಾಗಿ ಪ್ರಿ-ಕಾನ್ಫರೆನ್ಸ್ ಹ್ಯಾಂಡ್ಸ್-ಆನ್ ವರ್ಕ್ಶಾಪ್ ಪ್ರಾಯೋಗಿಕ ಕಾರ್ಯಾಗಾರ ಬುಧವಾರ ನಡೆಯಿತು. ಕ್ರೀಡಾಪಟುಗಳು ಗಾಯಗೊಂಡ ನಂತರ ಮತ್ತೆ ಕ್ರೀಡಾಂಗಣಕ್ಕೆ ಮರಳುವ ಮುನ್ನ ಕೈಗೊಳ್ಳಬೇಕಾದ ವೈಜ್ಞಾನಿಕ ನಿರ್ಧಾರಗಳ ಬಗ್ಗೆ ಇಲ್ಲಿ ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಕೆ ಶ್ಯಾಲೆಟ್ ಪಿಂಟೊ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಕ್ರೀಡೆ, ಪುನರ್ವಸತಿ ಮತ್ತು ಸಮಗ್ರ ಆರೋಗ್ಯದ ಮಹತ್ವ ಇಂದು ಹೆಚ್ಚಾಗಿದೆ. ಕ್ರೀಡಾ ಗಾಯಗಳ ನಿರ್ವಹಣೆಯಲ್ಲಿ ಇಂತಹ ಕಾರ್ಯಾಗಾರಗಳು ಅಗತ್ಯ ಎಂದರು. ಎಫ್ಎಂಸಿಐ ನಿರ್ದೇಶಕರಾದ ರೆ. ಫಾ. ಫಾಸ್ಟಿನ್ ಲ್ಯೂಕಾಸ್ ಲೋಬೋ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲದ ಮಾಹೆ ಕ್ರೀಡಾ ಮತ್ತು ವ್ಯಾಯಾಮ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಪ್ರಭು ರಾಜ ಜಿ. ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಚಿಕಿತ್ಸಾ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಎಫ್ಎಂಸಿಒಪಿ ಆಡಳಿತಾಧಿಕಾರಿ ರೆ. ಡಾ. ಮೈಕೆಲ್ ಸಾಂತುಮಾಯೋರ್, ಎಫ್ಎಂಎಂಸಿಎಚ್ ಆಡಳಿತಾಧಿಕಾರಿ ರೆ. ಫಾ. ಜಾರ್ಜ್ ಜೀವನ್ ಸಿಕ್ವೇರಾ, ಪ್ರಾಂಶುಪಾಲ ಪ್ರೊ. ಚರಿಷ್ಮಾ ಡಿಸಿಲ್ವಾ ಮತ್ತು ಸಂಘಟನಾ ಕಾರ್ಯದರ್ಶಿ ಡಾ. ಸಯಾನಾ ಡಿಸೋಜಾ ಉಪಸ್ಥಿತರಿದ್ದರು. ಡಾ. ಸಯಾನಾ ಡಿ ಸೋಜ ಸ್ವಾಗತಿಸಿದರು. ಇಶ್ರಾತ್ ಕಾರ್ಯಕ್ರಮ ನಿರೂಪಿಸಿದರು.
ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿ ಮೃತ್ಯು
ಹೆಬ್ರಿ, ಎ.8: ಮನೆಯ ಮೇಲಿನ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7ರಂದು ರಾತ್ರಿ ವೇಳೆ ಹೆಬ್ರಿ ಇಂದಿರಾನಗರ ಎಂಬಲ್ಲಿ ನಡೆದಿದೆ. ಮೃತರನ್ನು ಇಂದಿರಾನಗರದ ಶೇಖರ ನಾಯ್ಕ್(57) ಎಂದು ಗುರುತಿಸ ಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆಯ ಮೇಲಿನ ನೀರಿನ ಟ್ಯಾಂಕ್ನಲ್ಲಿ ನೀರು ಇರುವುದನ್ನು ಇಣುಕಿ ನೋಡಲು ಹೋಗಿದ್ದು, ಆಗ ಮೊಬೈಲ್ ಫೋನ್ ಟ್ಯಾಂಕ್ ಒಳಗೆ ಬಿತ್ತೆನ್ನಲಾಗಿದೆ. ಮೊಬೈಲ್ ಫೋನ್ ಟ್ಯಾಂಕಿಯಿಂದ ಬಾಗಿ ತೆಗೆಯುವಾಗ ಟ್ಯಾಂಕಿನೊಳಗೆ ಬಿದ್ದ ಅವರು, ನೀರಿನಲ್ಲಿ ಮುಗುಚಿ ಬಿದ್ದು ಮೇಲೆ ಬರಲಾಗದೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಬ್ರಹ್ಮಾವರ, ಎ.8: ಅನಾರೋಗ್ಯದಿಂದ ಬಳಲುತ್ತಿದ್ದ ಕಾಡೂರು ಗ್ರಾಮದ ತಂತ್ರಾಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ರುಕ್ಮಿಣಿ ಜಿ.ಕೆ.ಭಟ್(80) ಎಂಬವರು ಮಾನಸಿಕವಾಗಿ ನೊಂದು ಎ.7ರಂದು ರಾತ್ರಿ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರ್ವ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕಟ್ಟಿಂಗೇರಿ ಗ್ರಾಮದ ಸುಂದರ ಪೂಜಾರಿ(60) ಎಂಬವರು ಮನನೊಂದು ಎ.7ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷಾಂತರ ರೂ. ಆನ್ಲೈನ್ ವಂಚನೆ: ಪ್ರಕರಣ ದಾಖಲು
ಪಡುಬಿದ್ರಿ, ಎ.8: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆ ಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೈತ್ರಾ ಎಂಬವರಿಗೆ ಆರೋಪಿಗಳಾದ ನಿಶಾ ವರ್ಮಾ, ರಾಕೇಶ್ ಪರದಸಾನಿ ಎಂಬ ಹೆಸರಿನವರು ವಾಟ್ಸಪ್ ಮುಖಾಂತರ ಟೆಲಿಗ್ರಾಂ ಲಿಂಕ್ ಕಳುಹಿಸಿ, ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದರು. ಅದನ್ನು ನಂಬಿದ ಚೈತ್ರಾ, ಮಾ.19ರಂದು ಹಂತ ಹಂತವಾಗಿ 1,50,500ರೂ. ಹಣವನ್ನು ಹೂಡಿಕೆ ಮಾಡಿದ್ದರು. ನಂತರ ಚೈತ್ರಾಗೆ ಈ ಬಗ್ಗೆ ಅನುಮಾನ ಬಂದು ತಾನು ಕಳುಹಿಸಿದ ಹಣವನ್ನು ವಾಪಾಸು ನೀಡುವಂತೆ ವಿಚಾರಿಸಿ ದಲ್ಲಿ ಆರೋಪಿಗಳು, ಚೈತ್ರಾ ಹಾಕಿದ ಹಣವಾಗಲೀ, ಲಾಭಾಂಶವಾಗಲೀ ನೀಡದೆ ಮೋಸ ಮಾಡಿರುವು ದಾಗಿ ದೂರಲಾಗಿದೆ.
ಅಮೆರಿಕ - ಇರಾನ್ ಕದನ ವಿರಾಮ: US ಷೇರು ಮಾರುಕಟ್ಟೆ ಗಗನಕ್ಕೆ; 1000 ಅಂಕಗಳ ಜಿಗಿತ! ತೈಲ ಬೆಲೆಯೂ ಇಳಿಕೆ
ಅಮೆರಿಕ-ಇರಾನ್ ಎರಡು ವಾರಗಳ ಕದನ ವಿರಾಮ ಘೋಷಣೆಯಿಂದ ಯುಎಸ್ ಷೇರು ಮಾರುಕಟ್ಟೆಗಳು ಗಗನಕ್ಕೇರಿವೆ. ಡೌ ಜೋನ್ಸ್ 1000ಕ್ಕೂ ಹೆಚ್ಚು ಅಂಕಗಳ ಜಿಗಿತ ಕಂಡರೆ, ಹಾರ್ಮುಜ್ ಜಲಸಂಧಿ ಪುನರಾರಂಭದ ನಿರೀಕ್ಷೆಯಿಂದಾಗಿ ಕಚ್ಚಾ ತೈಲದ ಬೆಲೆಗಳು ತೀವ್ರವಾಗಿ ಕುಸಿದಿವೆ. ಈ ಬೆಳವಣಿಗೆಯು ಜಾಗತಿಕ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಿದೆ.
Railway Line: ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗಕ್ಕೆ ವಿಘ್ನ: ರೈತರಿಗೆ ಭೂಮಿ ಆತಂಕ, ಯೋಜನೆಗೆ ವಿರೋಧ
ಧಾರವಾಡ: ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಬೆಳಗಾವಿಗೆ ವಂದೇ ಭಾರತ್ ರೈಲು ಬಿಡುವಂತೆ ಈ ಹಿಂದೆ ಬೇಡಿಕೆ ಬಂದಿತ್ತು. ಇದರೊಂದಿಗೆ ಬೇರೆ ಬೇರೆ ಭಾಗಗಳಲ್ಲಿ ರೈಲು ಮಾರ್ಗ ನಿರ್ಮಿಸಲು, ಸಾರಿಗೆ ಸುಧಾರಣೆಗೆ ಆಗ್ರಹ ಸಾಮಾನ್ಯವಾಗಿದ್ದವು. ಇದೀಗ ಉತ್ತರ ಕರ್ನಾಟಕದಲ್ಲಿ ಪ್ರಮುಖ ರೈಲು ಮಾರ್ಗ ನಿರ್ಮಾಣಕ್ಕೆ ರೈತರು ಸೇರಿದಂತೆ ಸ್ಥಳೀಯರಿಂದ ವ್ಯಾಪಕ ವಿರೋಧ ಕೇಳಿ ಬರುತ್ತಿದೆ. ಅದಕ್ಕೆ ಸೂಕ್ತ ಕಾರಣಗಳನ್ನು
ಅಂತರ ಕಾಲೇಜು ಶೈಕ್ಷಣಿಕ -ಸಾಂಸ್ಕೃತಿಕ ಉತ್ಸವ: ಕುಂದಾಪುರ ಡಾ.ಬಿ.ಬಿ.ಹೆಗಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಉಡುಪಿ, ಎ.8: ಉಡುಪಿ ಪೂರ್ಣಪ್ರಜ್ಞ ಕಾಲೇಜು(ಸ್ವಾಯತ್ತ), ಆಯೋಜಿಸಿದ ರಾಜ್ಯ ಮಟ್ಟದ ಎರಡು ದಿನಗಳ ಅಂತರ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ಪ್ರಜ್ಞಾ 2026’ರ ಸಮಾರೋಪ ಸಮಾರಂಭವು ಮಂಗಳವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜರಗಿತು. ಎರಡು ದಿನಗಳಲ್ಲಿ 33 ಶೈಕ್ಷಣಿಕ ಹಾಗೂ 6 ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ರಾಜ್ಯದ ಸುಮಾರು 29 ಕಾಲೇಜುಗಳಿಂದ 562 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಥಮ ಸಮಗ್ರ ಪ್ರಶಸ್ತಿಯನ್ನು ಮತ್ತು 10,000ರೂ. ನಗದನ್ನು ಕುಂದಾಪುರ ಡಾ.ಬಿ.ಬಿ.ಹೆಗಡೆ ಕಾಲೇಜು ಹಾಗೂ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಉಡುಪಿ ಎಂಜಿಎಂ ಕಾಲೇಜು ಪಡೆದುಕೊಂಡಿತು. ಅದಮಾರು ಕಿರಿಯ ಯತಿ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ವನ್ನು ತಮ್ಮಲ್ಲಿ ಮೈಗೂಡಿಸಿ ಕೊಂಡರೆ ಶ್ರೇಷ್ಠತೆಯನ್ನು ತಮ್ಮದಾಗಿಸಿಕೊಂಡು, ಸಮಾಜಕ್ಕೆ ಉತ್ತಮ ಆಸ್ತಿ ಆಗಬಹುದು. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಒಳ್ಳೆಯ ಜ್ಞಾನ, ಪ್ರತಿಭೆ ಸಂಸ್ಕಾರ ಪಡೆದು ಸಮನ್ವಯದ ದೇಶವನ್ನು ನಿರ್ಮಿಸಲು ಕಾರಣರಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಉಪ ಪ್ರಧಾನ ವ್ಯವಸ್ಥಾಪಕ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ರಾಮು. ಎಲ್ ವಹಿಸಿದ್ದರು. ಎಸ್ಬಿಐ ರೀಜನಲ್ ಆಫೀಸ್ ಮುಖ್ಯ ವ್ಯವಸ್ಥಾಪಕ ಕೃಷ್ಣರಾಜ ಭಟ್ ಕೀಳಿಂಜೆ, ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುರೇಶ್ ತುಂಗ, ಕಾಲೇಜು ಆಂತರಿಕ ಗುಣಮಟ್ಟ ಖಾತರಿ ಘಟಕದ ಸಹ ಸಂಯೋಜಕ ಡಾ.ಲಕ್ಷ್ಮೀಶ ರಾವ್, ಡಾ.ಆನಂದ ರಾಯಮಾನೆ, ಡಾ. ಮಂಜುನಾಥ ಕರಬ, ಡಾ.ಸಂದೀಪ್ ಸತ್ಯಮೂರ್ತಿ, ಧನ್ಯಶ್ರೀ, ಸುಮಲತಾ ಪಿ.ಜೆ., ಡಾ.ಶಿವಕುಮಾರ್ ಅಳಗೋಡು, ವಿದ್ಯಾರ್ಥಿ ಪ್ರತಿನಿಧಿಗಳಾದ ಭಾರ್ಗವ ಭಟ್, ಕೆ.ಪಿ.ನೇಹಾ ಉಪಸ್ಥಿತರಿದ್ದರು. ಡಾ.ರಕ್ಷಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಪ್ರತಿಭಾ ಸಿ.ಆಚಾರ್ಯ ಸ್ವಾಗತಿಸಿ, ಡಾ.ಸೌಮ್ಯ ಶೆಟ್ಟಿ ವಂದಿಸಿದರು.
ನಾಟಕಗಳಿಂದ ನೈತಿಕ ಸಮಾಜ ಸೃಷ್ಟಿ ಸಾಧ್ಯ: ತಲ್ಲೂರು ಶಿವರಾಮ ಶೆಟ್ಟಿ
ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಮಾರೋಪ
ಉಡುಪಿ ಯಕ್ಷ ಶಿಕ್ಷಣ ಸನಿವಾಸ ಶಿಬಿರ ಉದ್ಘಾಟನೆ
ಉಡುಪಿ: ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಭೀಮ ಗೋಲ್ಡ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ -2026ನ್ನು ಗೀತಾನಂದ ಫೌಂಡೇಶನ್ ಅಧ್ಯಕ್ಷ ಆನಂದ ಸಿ.ಕುಂದರ್ ಬುಧವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಕ್ಷಗಾನ ಕಲಾರಂಗವು ಸಾಂಕೃತಿಕ- ಸಾಮಾಜಿಕ ಕಾರ್ಯಗಳಿಗೆ ತನ್ನನ್ನೇ ಸಮರ್ಪಿಸಿಕೊಂಡಿದೆ. ಯಕ್ಷಗಾನ ಕಲೆ, ಕಲಾದರ ಕ್ಷೇಮಚಿಂತನೆ, ಪ್ರತಿಭಾವಂತ ದ್ಯಾರ್ಥಿಗಳಿಗೆ ಆರ್ಥಿಕ ನೆರವು, ಯಕ್ಷಗಾನ ಕಲಿಕೆ ಕುರಿತಂತೆ ಅವರು ಮಾಡುತ್ತಿರುವ ಕೆಲಸ ಅಸಾಧಾರಣ ವಾದುದು. ಪರಿಶ್ರಮದ ದುಡಿಮೆ ಮತ್ತು ಪಾರದರ್ಶಕ ವ್ಯವಹಾರದಿಂದ ಈ ಸಂಸ್ಥೆ ಸಮಾಜದ ಮನ್ನಣೆಗೆ ಪಾತ್ರವಾಗಿದೆ ಎಂದು ಹೇಳಿದರು. ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ವಹಿಸಿದ್ದರು. ಉದ್ಯಮಿ ಪಿ.ನಟರಾಜ ಹೆಗ್ಡೆ, ಸಾಮಾಜಿಕ ಕಾರ್ಯಕರ್ತ ಸುಧೀರ್ ಕುಮಾರ್ ಶೆಟ್ಟಿ, ಪಶುವೈದ್ಯಾಧಿಕಾರಿ ಡಾ.ಪ್ರಶಾಂತ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ.ಭಟ್, ಟ್ರಸ್ಟಿ ಮೀನಾಲಕ್ಷಣಿ ಅಡ್ಯಂತಾಯ, ನಾರಾಯಣ ಎಂ.ಹೆಗಡೆ, ಕೋಶಾ ಧಿಕಾರಿ ಗಣೇಶ್ ಬ್ರಹ್ಮಾವರ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾದ ಯು.ವಿಶ್ವನಾಥ ಶೆಣೈ, ಕೆ.ಸದಾಶಿವ ರಾವ್, ಅನಂತರಾಜ ಉಪಾಧ್ಯಾಯ, ಕಿಶೋರ್ ಸಿ.ಉದ್ಯಾವರ, ನಟರಾಜ ಉಪಾಧ್ಯಾಯ, ಎ.ಅಜಿತ್ ಕುಮಾರ್, ಅಶೋಕ ಎಂ. ಸಹಕರಿಸಿದರು. ಸಂಸ್ಥೆಯ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತುಗಳ ನ್ನಾಡಿದರು. ವಿದ್ಯಾ ಪ್ರಸಾದ್ ವಂದಿಸಿದರು. ನಿರಂಜನ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ 104 ವಿದ್ಯಾರ್ಥಿಗಳು ಭಾಗವಹಿಸಿದ್ದು, ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ, ನರಸಿಂಹ ತುಂಗ ಲಂಬೋದರ ಹೆಗಡೆ, ಸುವರ್ಣರ ಶಿಷ್ಯರಾದ ಶ್ರೀಧರ ಹೆಗಡೆ, ಮನೋಜ್, ಆದ್ಯತಾ ಭಟ್, ಶಿಶಿರ, ಪ್ರಶಾಂತ, ಶ್ರುತಿ, ಕಾರ್ತಿಕ್ ಭಟ್ ಸಹಕರಿಸಲಿದ್ದಾರೆ. ಯಕ್ಷಶಿಕ್ಷಣದ ಗುರುಗಳಾದ ಮಹೇಶ ಮಂದಾರ್ತಿ, ನಿತ್ಯಾನಂದ ಶೆಟ್ಟಿಗಾರ್ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಿಗೆ ನೃತ್ಯ, ಅಭಿನಯ, ಮುಖ ವರ್ಣಿಕೆ, ವೇಷಭೂಷಣದ ತರಬೇತಿಯೊಂದಿಗೆ ಯಕ್ಷಗಾನದ ಕುರಿತ ಹಲವು ಮಾಹಿತಿಗಳನ್ನು ನೀಡಲಿದ್ದಾರೆ.
ಕೋರ್ಟ್ ವಿಚಾರಣೆಗೆ ಹಾಜರಾಗದ ಹಿನ್ನೆಲೆ; ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ
ಬೆಂಗಳೂರು : ಹಳೆಯ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಇಲ್ಲಿನ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ಕೋವಿಡ್ ಸಂದರ್ಭದಲ್ಲಿ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕೆಂದು ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು, ಈ ಸಂಬಂಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರು ಬೆಂಗಳೂರು 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಈ ಹಿನ್ನೆಲೆ, ಬಸವೇಶ್ವರನಗರ ಪೊಲೀಸರು ಬುಧವಾರ(ಎ.8) ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದು, ಪೊಲೀಸ್ ವಾಹನದಲ್ಲಿ ಹೋಗುವುದಕ್ಕೆ ವಾಟಾಳ್ ಅವರು ನಿರಾಕರಿಸಿದ ಕಾರಣ, ಆಟೋ ಮೂಲಕ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.
Auto Gas: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ಬಂಕ್ಗಳಲ್ಲಿ ಕ್ಯೂ ನಿಲ್ಲಬೇಡಿ: ಕರ್ನಾಟಕ ಸರ್ಕಾರ ಸ್ಪಷ್ಟನೆ
ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
‘ಗ್ಯಾರಂಟಿ’ ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರ ಕೇಳಿದ್ದ ಚುನಾವಣಾ ಆಯೋಗ
ಉಡುಪಿ, ಎ.8: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಕಳೆದ ಫೆ. 26 ಮತ್ತು 27ರಂದು ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಹಮ್ಮಿಕೊಂಡ ಕಾರ್ಯಕ್ರಮದ ವೇಳೆ ಜಿಲ್ಲೆಯ ವಿವಿಧ ಇಲಾಖೆ ಹಾಗೂ ಸರಕಾರಿ ಕಚೇರಿಗಳಿಗೆ ನೀಡಿದ ದಿಢೀರ್ ಭೇಟಿಯ ಸಂದರ್ಭದಲ್ಲಿ ಕಂಡುಬಂದ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ವಿವಿಧ ಅಧಿಕಾರಿಗಳ ವಿರುದ್ಧ ಜಿಲ್ಲೆಯಲ್ಲಿ ಒಟ್ಟು 17 ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ 11-ಇ, ತತ್ಕಾಲ್ ಪೋಡಿ ಸೇರಿದಂತೆ ಹಲವು ಕಡತಗಳು ಬಾಕಿ ಇರುವ ಹಾಗೂ ಕಳೆದ 7 ವರ್ಷಗಳಿಂದ ನಿವೃತ್ತ ಸೈನಿಕರೊಬ್ಬರ ಜಮೀನಿನ ಅಳತೆ ಮಾಡದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಕೂಡಲೇ ಮಾಡಿಕೊಡಲು ತಿಳಿಸಿದ್ದಲ್ಲದೇ, ಹಲವು ನ್ಯೂನ್ಯತೆಗಳು ಕಂಡು ಬಂದ ಕಾರಣದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಕೊಳಚೆ ನೀರು ಶುದ್ಧೀಕರಣ ಘಟಕ: ನಿಟ್ಟೂರಿನಲ್ಲಿರುವ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿಗಳು ಭೇಟಿ ನೀಡಿದ ಸಂದರ್ಭದಲ್ಲಿ, ಉಡುಪಿ ನಗರದ ತ್ಯಾಜ್ಯ ನೀರು ಸಮರ್ಪಕವಾಗಿ ಸಂಸ್ಕರಣೆ ಆಗದೇ ಇರುವ ಬಗ್ಗೆ, ಘಟಕದ ನೀರಿನಲ್ಲಿ ಪಾಚಿ ಸಂಗ್ರಹವಾಗಿ ರುವುದು ಕಂಡುಬಂದಿರುವ ಬಗ್ಗೆ, ಘಟಕದ ತ್ಯಾಜ್ಯ ನೀರು ಮತ್ತು ನಗರದ ಇತರೆ ಸಂಸ್ಕರಿಸದ ಕೊಳಚೆ ನೀರು ಚರಂಡಿಗಳ ಮೂಲಕ ಹಾಗೂ ನದಿಗಳ ಮೂಲಕ ಹರಿದು ಸಮುದ್ರವನ್ನು ಸೇರಿ ಕಲುಷಿತಗೊಳಿಸುತ್ತಿದ್ದರೂ ಸಹ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನೀರಾವರಿ ಇಲಾಖೆಯವರು ನಗರಸಭೆ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳದೇ ಕರ್ತವ್ಯಲೋಪ ಎಸಗಿರುವ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೇ ಕಲ್ಮಾಡಿ ಸೇತುವೆ ಬಳಿ ಹರಿಯುವ ಕಲುಷಿತ ನೀರಿನಿಂದ ಸೊಳ್ಳೆಗಳು, ನೊಣಗಳು ಹಾಗೂ ಇತರೆ ವಿಷ ಜಂತುಗಳು ಹೆಚ್ಚಿದ್ದು, ಇವುಗಳಿಂದ ಸ್ಥಳೀಯ ಜನರು ತೊಂದರೆ ಅನುಭಸುತ್ತಿರುವ ಬಗ್ಗೆ, ಮಲ್ಪೆ ಸೀವಾಕ್ ಪ್ರದೇಶ ಹಾಗೂ ಬಂದರಿನ ಸುತ್ತಮುತ್ತ ಪ್ರದೇಶದಲ್ಲಿ ಪ್ಲಾಸ್ಟಿಕ್ ಕವರ್, ಬಾಟಲ್ಗಳನ್ನು, ತ್ಯಾಜ್ಯವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಿದ್ದು, ದುರ್ವಾಸನೆ ಬೀರುತ್ತಿರುವುದು ಕಂಡಬಂದಿತ್ತು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ: ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಕರ್ತವ್ಯದ ಅವಧಿಯಲ್ಲಿ ಅನುಮತಿ ಪಡೆಯದೇ ಪತ್ರಾಂಕಿತ ಸಹಾಯಕರು ತೆರಳಿರುವ ಬಗ್ಗೆ, ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ಅಥವಾ ದಾಖಲೆಗಳನ್ನು ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ವಿಫಲರಾಗಿರುವ ಬಗ್ಗೆ, ಕಚೇರಿಯ ಕೆಲ ಸಿಬ್ಬಂದಿಗಳು ಗುರುತಿನ ಚೀಟಿ ಧರಿಸದಿರುವ ಬಗ್ಗೆ, ಕಚೇರಿಗೆ ಹಾಜರಾತಿ, ನಗದು ಘೋಷಣೆ ಮತ್ತು ಚಲನವಲನ ವಹಿಯನ್ನು ಸರಕಾರಿ ಮಾರ್ಗ ಸೂಚಿಯಂತೆ ನಿರ್ವಹಿಸದಿರುವುದು ಮತ್ತು ಕರ್ತವ್ಯದಲ್ಲಿ ಹಲವು ನ್ಯೂನ್ಯತೆ ಕಂಡು ಬಂದ ಕಾರಣ ಇಲಾಖೆಯ ಹಲವು ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ, ಇಲಾಖಾಯಿಂದ ಕಳೆದೆರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಾದ ಯೋಜನೆಗಳ ಕುರಿತು ಹಾಗೂ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದ ಕುರಿತಂತೆ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕೆಲವು ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ: ಉಪಲೋಕಾಯುಕ್ತರ ಕಚೇರಿ ಭೇಟಿ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ಹಾಸ್ಟೆಲ್ಗಳ ಸ್ವಚ್ಛತೆಯ ಸ್ಥಿತಿಗತಿಗಳ ಬಗ್ಗೆ, ಹಾಸ್ಟೆಲ್ನ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ, ಶುದ್ಧ ಕುಡಿಯುವ ನೀರಿನ ಸೌಲಭ್ಯಗಳ ಬಗ್ಗೆ, ವಿದ್ಯಾರ್ಥಿಗಳಿಗೆ ನೀಡುವ ಉಚಿತ ಆರೋಗ್ಯ ತಪಾಸಣೆಯ ವಿವರಗಳ ಕುರಿತಂತೆ ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ಹಾಗೂ ದಾಖಲೆಗಳನ್ನು ನೀಡದಿರುವ ಕಾರಣ ವಿವಿಧ ಅಧಿಕಾರಿಗಳ ವಿರುದ್ಧ ದೂರನ್ನು ದಾಖಲಿಸಲಾಗಿದೆ. ತೆಂಕನಿಡಿಯೂರಿನ ಪೊಟ್ಟು ಕೆರೆಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಗ್ರಾಪಂ ಅಥವಾ ನಗರಸಭೆ ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ್ದು, ನಗರಸಭೆ ವಿವಿಧ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿಪಾಲ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ, ಠಾಣಾ ವ್ಯಾಪ್ತಿಯಲ್ಲಿ ರುವ ಡ್ರಗ್ಸ್ ಪೆಡ್ಲರ್ಗಳ ವಿರುದ್ಧ ಹಾಗೂ ಗಾಂಜಾ ತಯಾರು ಮಾಡುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಸಮರ್ಪಕ ಉತ್ತರ ದೊರಕದ ಹಿನ್ನೆಲೆ, ಠಾಣೆಯ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸಾರಿಗೆ ಇಲಾಖೆ ವಿರುದ್ಧ: ಅದೇ ರೀತಿ ಮೀನುಗಾರಿಕೆ ಇಲಾಖೆಯ ಹಲವು ಅಧಿಕಾರಿಗಳ ವಿರುದ್ಧ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಲೋಕಾಯುಕ್ತರ ಪ್ರಶ್ನೆಗೆ ಸರಿಯಾದ ಉತ್ತರವನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು, ಖನಿಜಗಳನ್ನು ಸಾಗಿಸುವ ವಾಹನಗಳ ಕಣ್ಗಾವಲಿನ ಬಗ್ಗೆ ಚೆಕ್ಪೋಸ್ಟ್ಗಳಲ್ಲಿ ಸಾರಿಗೆ ಇಲಾಖೆ ಅಧಿಕಾರಿ ಗಳು ಕೈಗೊಂಡಿರುವ ಕ್ರಮ, ಶಾಲಾವಾಹನಗಳು ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಪಾಲಿಸುತ್ತಿ ರುವ ಬಗ್ಗೆ, ಚಾಲನಾ ಪರವಾನಗಿ, ಕಲಿಕೆಯ ಪರವಾನಗಿಯನ್ನು ಸಾರ್ವಜನಿಕರಿಗೆ ತರಿಸಿರುವ ಬಗ್ಗೆ ರಿಜಿಸ್ಟರ್ನ್ನು ಸರಿಯಾಗಿ ನಿರ್ವಹಿಸದೇ ಕರ್ತವ್ಯಲೋಪವೆಸಗಿರುವ ಕುರಿತಂತೆ ಸಂಬಂಧಪಟ್ಟ ಅಧಿಕಾರಿ ಗಳ ವಿರುದ್ಧ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರನ್ನು ದಾಖಲಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಎಷ್ಟು ರೆಸಾರ್ಟ್ಗಳು, ಲಾಡ್ಜ್ಗಳು ಹಾಗೂ ಹೋಮ್-ಸ್ಟೇಗಳು ತ್ಯಾಜ್ಯವನ್ನು ಕೆರೆಗಳಿಗೆ, ನದಿಗಳಿಗೆ ಹಾಗೂ ಸಮುದ್ರಕ್ಕೆ ಬಿಡುತ್ತಾ ಪರಿಸರವನ್ನು ಹಾನಿ ಮಾಡುತ್ತಿದ್ದಾರೆ ಎಂಬ ಬಗ್ಗೆ, ಜಿಲ್ಲೆಯಾದ್ಯಂತ ಎಷ್ಟು ರೆಸಾರ್ಟ್ಗಳು ಹಾಗೂ ಹೋಮ್-ಸ್ಟೇಗಳು ಬಪರ್ ವಲಯ ವ್ಯಾಪ್ತಿಯನ್ನು ಮೀರಿದ್ದಾರೆ ಎಂಬ ಪ್ರಶ್ನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಯಾವುದೇ ಅಧಿಕಾರಿ ನೀಡದ ಬಗ್ಗೆ ಕರ್ತವ್ಯಲೋಪದ ಕುರಿತಂತೆ ದೂರು ದಾಖಲಿಸಲಾಗಿದೆ. ಅದೇ ರೀತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟಂತೆ ಭೇಟಿಯ ವೇಳೆ ಹಲವು ನ್ಯೂನತೆಗಳು ಉಪ ಲೋಕಾಯುಕ್ತರ ಹಾಗೂ ಅಧಿಕಾರಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹಾಗೂ ಕಡತಗಳ ವಿಲೇವಾರಿಯ ಕುರಿತಂತೆ ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ವಸತಿ ಉದ್ದೇಶದ ಅರ್ಜಿ ಬಾಕಿ ಇರುವ ಬಗ್ಗೆ, ವಿನ್ಯಾಸ ಅನುಮೋದನೆಯ ಅರ್ಜಿಗಳನ್ನು ಬಾಕಿ ಇರಿಸಿಕೊಂಡಿರುವ ಬಗ್ಗೆ ಹಲವು ನ್ಯೂನ್ಯತೆಗಳಿರುವ ಕಾರಣ ಸಂಬಂಧ ಪಟ್ಟವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ತಾಲೂಕು ಕಚೇರಿಯಲ್ಲಿ ಅನಧಿಕೃತ ಚಿಟ್ಫಂಡ್ ಉಡುಪಿಯ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ವೇಳೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳ ತಂಡ ಆರ್.ಆರ್.ಟಿ. ಕಡತಗಳು, ತತ್ಕಾಲ್ ಪೋಡಿ ಕಡತಗಳು, ನಮೂನೆ 57, ಇ-ಪೌತಿ ಖಾತೆಗಳ ಕಡತಗಳು ವಿಲೇವಾರಿಗೆ ಬಾಕಿ ಇರುವ ಬಗ್ಗೆ, ಸರ್ಕಾರಿ ಕಛೇರಿಯಲ್ಲಿ ಅನಧಿಕೃತವಾಗಿ ಚಿಟ್ಫಂಡ್ ವ್ಯವಹಾರ ನಡೆಸುತ್ತಿರು ವುದು ಹಾಗೂ ತಮ್ಮ ಮೇಲಾಧಿಕಾರಿ ಗಳಿಂದ ಚಿಟ್ಫಂಡ್ ಕಾಯ್ದೆಯಡಿಯಲ್ಲಿ ಯಾವುದೇ ಅನುಮತಿಯನ್ನು ಪಡೆಯದೇ ಇರುವುದು ಸೇರಿದಂತೆ ವಿವಿಧ ಕರ್ತವ್ಯಲೋಪಕ್ಕಾಗಿ ಸಂಬಂಧ ಪಟ್ಟವರ ವಿರುದ್ಧ ಸ್ವಯಂಪ್ರೇರಿತ ದೂರನ್ನು ದಾಖಲಿಸಲಾಗಿದೆ. ಉಪ ನೋಂದಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ದೂರುಗಳ ಕಡತವನ್ನು ನಿರ್ವಹಿಸದೇ ಇರುವ ಬಗ್ಗೆ, ಅಲ್ಲಿನ ಗುತ್ತಿಗೆ ನೌಕರರ ಸ್ವಂತ ಬ್ಯಾಗ್ನಲ್ಲಿ ಅನೇಕ ಖಾಸಗಿ ದಾಖಲೆಗಳು ಕಂಡು ಬಂದಿರುವ ಕಾರಣ ಹಲವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗಣಿ ಮಾಹಿತಿ ಇಲ್ಲ! ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದ ಕಚೇರಿಗೆ ಭೇಟಿ ನೀಡಿದ ವೇಳೆ, ಇಲಾಖೆಯ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಕ್ವಾರಿಗಳ ಸಂಖ್ಯೆ, ಪರವಾನಗಿ ಪಡೆದಿರುವ ಕ್ರಷರ್ಗಳ ಸಂಖ್ಯೆ, ಸ್ಥಳ ಪರಿಶೀಲನೆ ನಡೆಸಿ ಪರವಾ ನಗಿ ಉಲ್ಲಂಘನೆ ಬಾಬ್ತು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಬಗ್ಗೆ, ಕ್ರಷರ್ಗಳು ಸರಕಾರಿ ಭೂಮಿ/ಪಟ್ಟಾ ಭೂಮಿಯಲ್ಲಿವೆಯೇ, ಇವುಗಳಲ್ಲಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಾರ್ಯಾಚರಣೆ ನಡೆಸುತ್ತಿ ರುವ ಬಗ್ಗೆ, ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸದಿರುವ ಕ್ವಾರಿಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲು ಸಾಧ್ಯವಾಗಲಿಲ್ಲ. ಅಲ್ಲದೇ ಗಣಿ ಮತ್ತು ಕ್ರಷರ್ಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿಮೆ ಮಾಡಿಸಿರುವ ಬಗ್ಗೆ, ಗಣಿಗಾರಿಕೆ ಪ್ರದೇಶ ವ್ಯಾಪ್ತಿಯಲ್ಲಿ ಜಿಪಿಎಸ್ ನಿರ್ದೇಶಾಂಕಗಳು ಇರುವ ಕುರಿತಂತೆ ಲೋಕಾಯುಕ್ತರ ಹಲವು ಪ್ರಶ್ನೆಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಲು ವಿಫಲರಾಗಿದ್ದರು. ಹೀಗೆ ಅಧಿಕಾರಿಗಳ ಕರ್ತವ್ಯದಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಇಲಾಖೆಯ ಹಲವು ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರನ್ನು ದಾಖಲಿಸಲಾಗಿದೆ.
ಸುರಪುರ |ಕಳೆದುಹೋದ ಮೊಬೈಲ್ಗಳು ಪತ್ತೆ : ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು
ಸುರಪುರ: ಪಟ್ಟಣದ ವಿವಿಧ ಕಡೆಗಳಲ್ಲಿ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಪತ್ತೆ ಮಾಡಿದ ಮೊಬೈಲ್ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂತಿರುಗಿಸಿದರು. ಈ ಸಂದರ್ಭದಲ್ಲಿ ಠಾಣೆಯ ಪಿ.ಐ ಉಮೇಶ ಎಂ. ನಾಯಕ ಮಾತನಾಡಿ, ಸಾರ್ವಜನಿಕರು ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವೊಮ್ಮೆ ವಾರಸುದಾರರ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗುತ್ತದೆ ಎಂದರು. ಪೊಲೀಸ್ ಇಲಾಖೆ ಸಿಇಐಆರ್ ಪೋರ್ಟಲ್ ಮೂಲಕ ಕಳೆದುಹೋದ ಮೊಬೈಲ್ಗಳನ್ನು ಪತ್ತೆಹಚ್ಚಿ ಮರಳಿ ನೀಡಲಾಗುತ್ತದೆ. ಇಂದು ಒಟ್ಟು ಎಂಟು ಜನರಿಗೆ ಅವರ ಮೊಬೈಲ್ಗಳನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು. ಮೊಬೈಲ್ ಕಳೆದುಕೊಂಡವರು ಅಗತ್ಯ ದಾಖಲೆಗಳೊಂದಿಗೆ ತಕ್ಷಣ ಠಾಣೆಗೆ ದೂರು ನೀಡಿದಲ್ಲಿ ಪತ್ತೆ ಕಾರ್ಯ ಸುಲಭವಾಗುತ್ತದೆ. ಸಾರ್ವಜನಿಕರು ಸಿಇಐಆರ್ ಪೋರ್ಟಲ್ನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಈ ವೇಳೆ ಪಿಎಸ್ಐ ಸಿದ್ದಣ್ಣ ಯಡ್ರಾಮಿ, ಶರಣಪ್ಪ ಹವಾಲ್ದಾರ್ ಹಾಗೂ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಸಣ್ಣಕೆಪ್ಪ ತನಕೇದಾರ್, ಮಲ್ಲಯ್ಯ ಕುರಿಹಾಳ್, ಪ್ರಕಾಶ ಕೊಂಕಲ್, ಹುಸೇನ್ ಸಾಬ್, ಲಕ್ಷ್ಮಣ ನಾಯಕ ಸಗರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Yadgiri | ಪರಿಹಾರ ಧನವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ: ಸರ್ಕಾರ ನೀಡುವ ಪರಿಹಾರ ಧನವನ್ನು ದುಂದುವೆಚ್ಚ ಮಾಡದೇ ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಡಗೇರಾ ತಾಲ್ಲೂಕಿನ ಜೋಳದಡಗಿ ಗ್ರಾಮದ ರೈತ ಬಸವರಾಜ ಅವರು ಕೃಷಿ ಕೆಲಸ ಮಾಡುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ, ಜೆಸ್ಕಾಂನಿಂದ ಮಂಜೂರಾದ 5 ಲಕ್ಷ ರೂ. ಪರಿಹಾರ ಚೆಕ್ನ್ನು ಅವರ ಪತ್ನಿ ನಿರ್ಮಲಾ ಬಸವರಾಜ ಅವರಿಗೆ ವಿತರಿಸಿದರು. ಇನ್ನೊಂದು ಪ್ರಕರಣದಲ್ಲಿ ವರ್ಕನಳ್ಳಿ ಗ್ರಾಮದ ತಿಪ್ಪಣ್ಣ ಅವರ ಎತ್ತು ವಿದ್ಯುತ್ ತಗುಲಿ ಸಾವನ್ನಪ್ಪಿದ ಹಿನ್ನೆಲೆ, ಅವರಿಗೆ ಜೆಸ್ಕಾಂ ವತಿಯಿಂದ ಮಂಜೂರಾದ 15 ಸಾವಿರ ರೂ. ಪರಿಹಾರ ಚೆಕ್ನ್ನು ವಿತರಿಸಲಾಯಿತು. ಈ ವೇಳೆ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕಂಡೇಶ್ವರ, ಇಂಜಿನಿಯರ್ಗಳಾದ ಆನಂದ, ಮೋಸಿನ್, ರವಿ ಪಾಟೀಲ್, ಶರಣಪ್ಪ ಕ್ಯಾತನಾಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಂಗಳೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ; ಕಾಲೇಜು ವಿದ್ಯಾರ್ಥಿಗಳ ಬಂಧನ
ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಪೋಷಕರು, ಶಿಕ್ಷಕರು ನಿಗಾ ಇಡಿ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಅನುಮತಿ ಪಡೆಯದ ಹಡಗು ನಾಶ; ಕದನ ವಿರಾಮದ ಖುಷಿಯನ್ನೇ ಕಸಿದುಕೊಂಡ ಇರಾನ್ ಹಾರ್ಮುಜ್ ಎಚ್ಚರಿಕೆ!
ಅಮೆರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತು, ಹಾರ್ಮುಜ್ ಜಲಸಂಧಿ ತೆರೆಯಿತು ಎಂದು ಖುಷಿಪಟ್ಟಿದ್ದವರಿಗೆ, ಇರಾನ್ನ ಹೊಸ ನಿರ್ಧಾರ ಬರಸಿಡಿಲಿನಂತೆ ಬಂದೆರಗಿದೆ. ಅನುಮತಿ ಪಡೆಯದೇ ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುವ ಯಾವುದೇ ಹಡಗನ್ನು ನಾಶಪಡಿಸಲಾಗುವುದು ಎಂದು ಇರಾನ್ ಹೊಸದಾಗಿ ಎಚ್ಚರಿಕೆ ನೀಡಿದೆ. ಹಾರ್ಮುಜ್ ಜಲಸಂಧಿ ದಾಟಲು ಈಗಲೂ ಅನುಮತಿ ಕಡ್ಡಾಯ ಎಂದು ಇರಾನ್ ಸ್ಪಷ್ಟಪಡಿಸಿದ್ದು, ಇದು ಮತ್ತೆ ಬಿಕ್ಕಟ್ಟನ್ನು ಉಲ್ಬಣಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಇರಾನ್ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ 50% ಸುಂಕ ಘೋಷಿಸಿದ ಟ್ರಂಪ್
ವಾಷಿಂಗ್ಟನ್: ಇರಾನ್ ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶಗಳ ಮೇಲೆ 50% ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟೆಹ್ರಾನ್ ಜೊತೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಂದವಾದ ನಂತರದ ದಿನವೇ ಸಾಮಾಜಿಕ ಜಾಲತಾಣದ ಮೂಲಕ ಈ ಘೋಷಣೆ ಮಾಡಿರುವ ಅವರು, ಈ ಕ್ರಮಕ್ಕೆ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಕ್ಷಣದಿಂದಲೇ ಸುಂಕ ಜಾರಿಗೆ ಬರುತ್ತದೆ ಎಂದೂ ಹೇಳಿದ್ದಾರೆ. ಇರಾನ್ ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಇತ್ತೀಚಿನ ಉದ್ವಿಗ್ನತೆಯ ನಡುವೆ ಈ ಘೋಷಣೆ ಮಹತ್ವ ಪಡೆದಿದೆ. ಈ ಕ್ರಮವು ಅಂತರರಾಷ್ಟ್ರೀಯ ವ್ಯಾಪಾರ ಹಾಗೂ ರಾಜತಾಂತ್ರಿಕ ಸಂಬಂಧಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿದೆ.
ವಿಜಯನಗರ ಜಿಲ್ಲಾ ಆರೋಗ್ಯಾಧಿಕಾರಿ ವರ್ಗಾವಣೆ : ಡಾ.ವಿನಯ್ ಅವರಿಗೆ ಹೆಚ್ಚುವರಿ ಜವಾಬ್ದಾರಿ
ಹೊಸಪೇಟೆ/ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಆದೇಶದಂತೆ ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶಂಕರ್ ನಾಯ್ ಎಲ್.ಆರ್. ಅವರನ್ನು ಹಾಲಿ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಬೆಂಗಳೂರುದಲ್ಲಿನ ಸರ್ಕಾರದ ಪತ್ರದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಸ್ಥಾನಕ್ಕೆ ತಾತ್ಕಾಲಿಕವಾಗಿ ಡಾ.ಎಂ.ವಿನಯ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಡಾ. ಎಂ. ವಿನಯ ಅವರು ಪ್ರಸ್ತುತ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಆದೇಶದವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಹುದ್ದೆಯ ಪ್ರಭಾರವನ್ನು ನಿರ್ವಹಿಸಲಿದ್ದಾರೆ. ಇನ್ನೊಂದೆಡೆ, ಡಾ. ಶಂಕರ್ ನಾಯ್ ಎಲ್.ಆರ್. ಅವರು ಮುಂದಿನ ನಿಯುಕ್ತಿಗಾಗಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
Bengaluru | ಚಿನ್ನ ಕಳ್ಳಸಾಗಣೆಗೆ ಯತ್ನ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಐವರ ಬಂಧನ
ಬೆಂಗಳೂರು : ನಗರದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ) ಅಧಿಕಾರಿಗಳು, ಸುಮಾರು ಐದು ಕೋಟಿ ರೂ. ಮೌಲ್ಯದ 3.356 ಕೆ.ಜಿ. ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಿಮಾನ ನಿಲ್ದಾಣದ ಟರ್ಮಿನಲ್-2ರ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಆರೋಪಿಗಳ ಗುಂಪು ಚಿನ್ನವನ್ನು ಕಳ್ಳಸಾಗಣೆ ಮಾಡಲು ಮುಂದಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್ಐ ಅಧಿಕಾರಿಗಳು, ಐವರು ಆರೋಪಿಗಳನ್ನು ಬಲೆಗೆ ಕೆಡವಿ ಅವರಿಂದ 5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ಹಾಗೂ ಕ್ಯಾಪ್ಸುಲ್ ಆಕಾರದ ಪ್ಯಾಕೆಟ್ಗಳಲ್ಲಿ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ. ಬಾಂಗ್ಲಾದೇಶದ ಪ್ರಜೆಗಳು ಸ್ಥಳೀಯರ ಸಹಕಾರದೊಂದಿಗೆ ಚಿನ್ನ ಕಳ್ಳಸಾಗಣೆ ಮಾಡಲು ಮುಂದಾಗಿದ್ದರು. ಅದರಂತೆ ಚಿನ್ನವನ್ನು ದೇಹದ ವಿವಿಧ ಅಂಗಗಳಲ್ಲಿ ಮರೆಮಾಚಿಕೊಂಡು ಶೌಚಾಲಯಗಳು ಮತ್ತು ಧೂಮಪಾನ ವಲಯಗಳಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಪಾಸ್ಕೋಡ್ ಬಳಸಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ವರ್ಗಾಯಿಸಲು ಮುಂದಾಗಿದ್ದರು. ಈ ಪ್ರಕರಣದಲ್ಲಿ ವಿದೇಶಿಯರು-ಬಾಂಗ್ಲಾದೇಶಿ ಪ್ರಜೆಗಳು ಇರುವ ಶಂಕೆ ಇದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಪ್ರಮುಖ ಸೂತ್ರಧಾರಿಗಳು ಹಾಗೂ ಈ ಜಾಲವನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಆರ್ ಐ ಅಧಿಕಾರಿಗಳು ತಿಳಿಸಿದ್ದಾರೆ.
Bidar | ಭೋವಿ ಅಭಿವೃದ್ಧಿ ನಿಗಮ ಯೋಜನೆಗೆ ಬ್ಯಾಂಕ್ಗಳ ನಿರ್ಲಕ್ಷ್ಯ : ಕ್ರಮಕ್ಕೆ ಒತ್ತಾಯ
ಬೀದರ್: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿ 2022ರಿಂದ 2026ರವರೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಬ್ಯಾಂಕ್ ಕ್ಷೇಮು ಪತ್ರ ನೀಡುವಲ್ಲಿ ಜಿಲ್ಲೆಯ ಬ್ಯಾಂಕ್ಗಳು ನಿರ್ಲಕ್ಷ್ಯ ತೋರಿಸುತ್ತಿವೆ ಎಂದು ಆರೋಪಿಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಭೋವಿ ವಡ್ಡರ ಸಮಾಜ ಸಂಘ ಒತ್ತಾಯಿಸಿದೆ. ಬುಧವಾರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಯೋಜನೆಗೆ ಆಯ್ಕೆಯಾದ ಫಲಾನುಭವಿಗಳು ಸಂಬಂಧಪಟ್ಟ ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಹಲವು ಬಾರಿ ಸಂಪರ್ಕಿಸಿದರೂ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಇದರಿಂದ ಫಲಾನುಭವಿಗಳು ಸರ್ಕಾರದ ಯೋಜನೆಗಳ ಲಾಭ ಪಡೆಯಲು ವಿಳಂಬವಾಗುತ್ತಿದ್ದು, ಅನಾವಶ್ಯಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಹಲವಾರು ಬ್ಯಾಂಕ್ ಶಾಖೆಗಳಲ್ಲಿ ಹೊರರಾಜ್ಯಗಳಿಂದ ಬಂದಿರುವ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದರಿಂದ ಕನ್ನಡ ಭಾಷೆಯನ್ನು ಸಮರ್ಪಕವಾಗಿ ಅರ್ಥಮಾಡಿಕೊಳ್ಳಲಾಗುತ್ತಿಲ್ಲ. ಇದರಿಂದ ಸ್ಥಳೀಯರೊಂದಿಗೆ ಸಂವಹನದಲ್ಲಿ ಸಮಸ್ಯೆಗಳು ಉಂಟಾಗಿ, ಸಮಸ್ಯೆಗಳ ಪರಿಹಾರದಲ್ಲಿ ವಿಳಂಬವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸರ್ಕಾರದ ಯೋಜನೆಗಳ ಸದುಪಯೋಗ ಫಲಾನುಭವಿಗಳಿಗೆ ತಲುಪಿಸಲು ಬ್ಯಾಂಕ್ಗಳು ಕ್ಷೇಮು ಪತ್ರಗಳನ್ನು ನೀಡುವುದು ಅತ್ಯವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳಿಗೆ ಸೂಕ್ತ ನಿರ್ದೇಶನ ನೀಡಿ, ಆಯ್ಕೆಯಾದ ಫಲಾನುಭವಿಗಳಿಗೆ ತಕ್ಷಣ ಕ್ಷೇಮು ಪತ್ರಗಳನ್ನು ನೀಡುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ನಿರ್ಲಕ್ಷ್ಯ ತೋರಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಸಂತೋಷ ಎಣಕೂರ್ ಮನವಿ ಮಾಡಿದ್ದಾರೆ.
Bidar | ವಕೀಲರ ಸಂಘದಿಂದ ಜಿಲ್ಲಾ ಸತ್ರ ನ್ಯಾಯಾಧೀಶ ಸೈಯದ್ ಬಳೆಗಾರು ರೆಹಮಾನ್ಗೆ ಸನ್ಮಾನ
ಚಿಟಗುಪ್ಪಾದಲ್ಲಿ ನ್ಯಾಯಾಲಯ ಕಟ್ಟಡ, ಹುಮನಾಬಾದ್ನಲ್ಲಿ ಕ್ಯಾಂಟೀನ್ ನಿರ್ಮಿಸಲು ಮನವಿ
ಮಂಗಳೂರು| ಆರಿಫ್ ಕೊಲೆ ಪ್ರಕರಣ: ಏಳು ಮಂದಿ ವಶಕ್ಕೆ
ಮಂಗಳೂರು, ಎ.8: ತೊಕ್ಕೊಟ್ಟು ಓವರ್ ಬ್ರಿಡ್ಜ್ನಲ್ಲಿ ಮಾ.27ರಂದು ನಡೆದ ರೌಡಿಶೀಟರ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಸಹಿತ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಕೃತ್ಯ ಎಸಗಲು ಬಾಡಿಗೆ ವಾಹನವನ್ನು ಬಳಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ನೇರವಾಗಿ ಪಾಲ್ಗೊಂಡಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
KKR ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸದ ಕನ್ನಡಿಗ ಮನೀಶ್ ಪಾಂಡೆ! ಒಂದು ಕಾಲದ ಮ್ಯಾಚ್ ವಿನ್ನರ್ ಈಗ ಯಾಕೆ ಬೇಡವಾದ?
ಐಪಿಎಲ್ ಇತಿಹಾಸದಲ್ಲಿ ಶತಕ ಹೊಡೆದ ಮೊದಲ ಭಾರತೀಯ ಬ್ಯಾಟರ್ ಎಂಬ ಖ್ಯಾತಿ ಮನೀಶ್ ಪಾಂಡೆಯದ್ದು, ನಿರಂತರ 19ನೇ ಸೀಸನ್ ನಲ್ಲಿ ಆಡುತ್ತಿರುವ ಅವರು ಪ್ರಸ್ತುತ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿದ್ದರೂ ಪ್ಲೇಯಿಂಗ್ ಇಲೆವೆನ್ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿಲ್ಲ. ಇದು ಕನ್ನಡಿಗ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಕೆಕೆಆರ್ ತಂಡದ ಬ್ಯಾಟಿಂಗ್ ವಿಭಾಗವು ಪ್ರಸ್ತುತ ಅಸ್ಥಿರತೆಯಿಂದ ಕೂಡಿದ್ದು, ಅಜಿಂಕ್ಯ ರಹಾನೆ ನೇತೃತ್ವದ ಮ್ಯಾನೇಜ್ಮೆಂಟ್ ಮನೀಶ್ ಪಾಂಡೆಗೆ ಅವಕಾಶ ನೀಡುವ ಮೂಲಕ ಮಧ್ಯಮ ಕ್ರಮಾಂಕವನ್ನು ಬಲಪಡಿಸಬೇಕಿದೆ. ತಮ್ಮ ಸಾಮರ್ಥ್ಯ ಸಾಬೀತುಪಡಿಸಿ ಕರ್ನಾಟಕ ರಾಜ್ಯ ತಂಡಕ್ಕೆ ಮರಳಲು ಸಹ ಅವರಿಗೆ ಈ ಸೀಸನ್ ಅತ್ಯಂತ ನಿರ್ಣಾಯಕ .
ಭಾಲ್ಕಿ | ಮಹಿಳಾ ಸಬಲೀಕರಣದಿಂದ ಗ್ರಾಮಾಭಿವೃದ್ಧಿ ಸಾಧ್ಯ: ಪಿಡಿಒ ಗೀತಾ ಪಾಟೀಲ್
ಭಾಲ್ಕಿ: ಮಹಿಳೆಯರ ಆರ್ಥಿಕ ಸಬಲೀಕರಣವು ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಪಂಚಾಯಿತಿಯು ವಿವಿಧ ಯೋಜನೆಗಳ ಮೂಲಕ ಪ್ರೋತ್ಸಾಹ ನೀಡಲಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಪಾಟೀಲ್ ಹೇಳಿದರು. ತಾಲೂಕಿನ ಅಂಬೆಸಾಂಗವಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಮಹಿಳಾ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ತರಬೇತಿ, ಆರ್ಥಿಕ ನೆರವು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಮಹಿಳೆಯರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ತಿಳಿಸಿದರು. ಮಹಿಳಾ ಗ್ರಾಮಸಭೆಗಳ ಮೂಲಕ ಮಹಿಳೆಯರ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ಅವರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದಕ್ಕೂ ಇದು ಸಹಕಾರಿ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖ ಮಹಿಳೆಯರು ಭಾಗವಹಿಸಿದ್ದರು.
‘ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ’ | ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ : ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯೂ ನಡೆಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ನಗರದಲ್ಲಿರುವ ತಮ್ಮ ಸರಕಾರಿ ನಿವಾಸದಲ್ಲಿ ಸುದ್ದಿಗಾರರೊಂಧಿಗೆ ಮಾತನಾಡಿದ ಅವರು, ಕೆಲವು ಆಯ್ದ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಇವುಗಳ ಸಂಖ್ಯೆಗೆ ಕಡಿವಾಣ ಹಾಕುವ ಅಗತ್ಯವೂ ಕಂಡು ಬರುತ್ತಿದೆ. ವನ್ಯಜೀವಿಗಳ ಸಂರಕ್ಷಣೆಯೂ ಆಗಬೇಕು. ಅಮೂಲ್ಯವಾದ ಜೀವಹಾನಿಯೂ ತಪ್ಪಬೇಕು. ಮಾನವರ ಜೀವ ಉಳಿಸುವ ಕೆಲಸವೂ ಆಗಬೇಕಿದೆ ಎಂದು ತಿಳಿಸಿದರು. ಇದು ನಿರ್ಧಾರವಲ್ಲ, ಒಂದು ಚಿಂತನೆ ಮಾತ್ರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುವ ಅಗತ್ಯವಿದೆ. ಜೊತೆಗೆ ತತ್ಸಂಬಂಧವಾದ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದ್ದು, ತಜ್ಞರು, ಕಾನೂನು ಪಂಡಿತರೊಂದಿಗೆ ಚರ್ಚಿಸಿ ನ್ಯಾಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆಯೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕಾಗುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದರು. ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು ಎಂದ ಅವರು, ಯಾವ ಭಾಗದಲ್ಲಿ ಯಾವ ವನ್ಯಜೀವಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತದೊ ಅಲ್ಲಿ ಒಂದೆರೆಡು ವರ್ಷ ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಬೇರೆ ಬೇರೆ ರಾಜ್ಯಗಳಲ್ಲೂ ಇಂತಹ ಆಲೋಚನೆ, ಚಿಂತನೆ ಇದೆ. ಈ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯುವ ಅಗತ್ಯವಿದೆ ಎಂದರು. ಸ್ವಯಂ ಇಚ್ಛೆಯಿಂದ ಕಾಡಿನಿಂದ ಹೊರಬರಲು ಇಚ್ಛಿಸುವ ಅರಣ್ಯವಾಸಿಗಳ ಸ್ಥಳಾಂತರದ ಬಗ್ಗೆಯೂ ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಆ ರೀತಿ ಸ್ವಯಂ ಪ್ರೇರಣೆಯಿಂದ ಹೊರಬರುವವರ ಪಟ್ಟಿ ಸಿದ್ಧಪಡಿಸಲು ತಿಳಿಸಿದ್ದೇವೆ, ಪಟ್ಟಿ ಸಿದ್ಧವಾದ ಬಳಿಕ ಎಷ್ಟು ಹಣದ ಅಗತ್ಯ ಬರುತ್ತದೆ. ಆಯವ್ಯಯದಲ್ಲಿ ಎಷ್ಟು ಹಣ ನೀಡಲಾಗಿದೆ. ಎಷ್ಟು ಕೊರತೆ ಆಗುತ್ತದೆ ಎಂಬ ಬಗ್ಗೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಈಶ್ವರ್ ಖಂಡ್ರೆ ಹೇಳಿದರು. ಈ ರೀತಿ ಅರಣ್ಯದಲ್ಲಿರುವ ವಸತಿಪ್ರದೇಶಗಳನ್ನು ಸ್ಥಳಾಂತರಿಸುವುದರಿಂದ ವನ್ಯಜೀವಿಗಳ ಆವಾಸ ಸ್ಥಾನ ವಿಸ್ತರಣೆ ಆಗುತ್ತದೆ. ಮೂಲಭೂತ ಸೌಕರ್ಯ ಇಲ್ಲದೆ ಬದುಕುತ್ತಿರುವ ಅರಣ್ಯವಾಸಿಗಳನ್ನೂ ಸಮಾಜದ ಮುಖ್ಯವಾಹಿನಿಗೆ ತಂದಂತೆ ಆಗುತ್ತದೆ ಎಂದು ಈಶ್ವರ್ ಖಂಡ್ರೆ ವಿವರಿಸಿದರು. ಆನೆ ದಾಳಿಗೆ ಕಾಫಿ ಬೆಳೆಗಾರ ಸಾವು-ಸಂತಾಪ: ಇಂದು ಕಾಡಾನೆ ದಾಳಿಯಿಂದ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಮಾನವ-ಆನೆ ಸಂಘರ್ಷ ತಡೆಯಲು ಸರಕಾರ ಮತ್ತು ಇಲಾಖೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದೆ. ಜೀವಕ್ಕೆ ಬೆಲೆ ನೀಡಲು ಸಾಧ್ಯವೆ ಇಲ್ಲ. ಈ ನೋವಿನ ಸಂದರ್ಭದಲ್ಲಿ ನೊಂದ ಕುಟುಂಬದ ಜೊತೆ ಸರಕಾರ ಇದೆ ಎಂದು ಅವರು ಹೇಳಿದರು. ಆನೆಗಳ ಸಮಸ್ಯೆ ಪರಿಹರಿಸಲು ಆನೆ ಧಾಮ ಮಾಡುವ ಬಗ್ಗೆ ಸರಕಾರ ಯೋಜನೆ ರೂಪಿಸಿತ್ತು. ಅದಕ್ಕೆ ಕೇಂದ್ರ ಸರಕಾರದಿಂದ ಅನುಮತಿ ಸಿಗುವಲ್ಲಿ ತೊಡಕಾಗಿದೆ. ಈ ಸಮಸ್ಯೆ ಪರಿಹರಿಸಿಕೊಂಡು ಆನೆ ಧಾಮ ನಿರ್ಮಾಣದ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.
Bidar | ಎ.11ರಂದು ಕಾರಂಜಾ ಸಂತ್ರಸ್ತರ ಬೃಹತ್ ಹಕ್ಕೊತ್ತಾಯ ಸಮಾವೇಶ
28 ಹಳ್ಳಿಗಳಲ್ಲಿ ಸಂಚರಿಸಿ ರೈತರಿಗೆ ಆಹ್ವಾನ
ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯ ಹೆಚ್ಚಳ : ಸಚಿವ ಭೋಸರಾಜು
ಬೆಂಗಳೂರು : ಜಲಸಂರಕ್ಷಣಾ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಗಣನೀಯವಾಗಿ ಹೆಚ್ಚಳ ಆಗಿದ್ದು, ಇದೇ ಕಾರಣದಿಂದ ಉತ್ತಮ ಮಳೆ ಹಾಗೂ ಜನಜಾಗೃತಿ ಅಭಿಯಾನದ ಪರಿಣಾಮವಾಗಿ ಅಂತರ್ಜಲ ಬಳಕೆಯಲ್ಲಿ ಗಣನೀಯವಾದ ಇಳಿಕೆ ಕಂಡುಬಂದಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಹೇಳಿದ್ದಾರೆ. ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ 2025ನೆ ಸಾಲಿನ ಅಂತರ್ಜಲ ಮೌಲ್ಯಮಾಪನ ವರದಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕಳೆದ ವಾರ್ಷಿಕ ಸಾಲಿನಲ್ಲಿ ಉತ್ತಮ ಮಳೆ ಆಗಿದೆ. ಜತೆಗೆ, ರಾಜ್ಯ ಸರಕಾರದ ಭದ್ರ ಜಲ ಸಂರಕ್ಷಣಾ ನೀತಿಗಳ ಯಶಸ್ಸಿನ ಫಲವಾಗಿ, ಕರ್ನಾಟಕವು ಅಂತರ್ಜಲ ಸೂಚ್ಯಂಕಗಳಲ್ಲಿ ಗಮನಾರ್ಹ ಸುಧಾರಣೆಯನ್ನು ದಾಖಲಿಸಿದೆ. ದತ್ತಾಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟಾರೆಯಾಗಿ ಅಂತರ್ಜಲ ಬಳಕೆಯು ಗಣನೀಯವಾಗಿ ಇಳಿಕೆಯಾಗಿದ್ದು, ವಾರ್ಷಿಕವಾಗಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಭಾರಿ ಏರಿಕೆಯಾಗಿದೆ ಎಂದು ಉಲ್ಲೇಖಿಸಿದರು. ರಾಜ್ಯದ ಒಟ್ಟಾರೆ ಅಂತರ್ಜಲ ಬಳಕೆಯು 2024ರಲ್ಲಿದ್ದ ಶೇ.68.44ರಿಂದ 2025ರಲ್ಲಿ ಶೇ.66.49ಕ್ಕೆ ಇಳಿಕೆಯಾಗಿರುವುದು ಕಂಡುಬಂದಿದೆ. ಈ ಸಕಾರಾತ್ಮಕ ಇಳಿಕೆಯು, ರಾಜ್ಯಾದ್ಯಂತ ಲಭ್ಯವಿರುವ ವಾರ್ಷಿಕ ಅಂತರ್ಜಲದಲ್ಲಿ ಸರಾಸರಿ ಶೇ.66.5ರಷ್ಟನ್ನು ಮಾತ್ರ ಪ್ರಸ್ತುತ ಬಳಸಲಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ. ಅದೇ ರೀತಿ, ಒಟ್ಟು ವಾರ್ಷಿಕ ಅಂತರ್ಜಲ ಮರುಪೂರಣ ಪ್ರಮಾಣವು 2024ರಲ್ಲಿದ್ದ 18.74 ಬಿಲಿಯನ್ ಕ್ಯೂಬಿಕ್ ಮೀಟರ್ ನಿಂದ 2025ರಲ್ಲಿ 19.28ಗೆ ಗಮನಾರ್ಹವಾಗಿ ಏರಿಕೆಯಾಗಿದೆ ಎಂದು ಸಚಿವರು ವಿವರಿಸಿದರು. ಈ ಸಕಾರಾತ್ಮಕ ಬೆಳವಣಿಗೆಗೆ ಕಳೆದ ಸಾಲಿನಲ್ಲಿ ಆದಂತಹ ಉತ್ತಮ ಮಳೆ ಹಾಗೂ ಸರಕಾರದ ದೂರದೃಷ್ಟಿಯ ಯೋಜನೆಗಳು ಪ್ರಮುಖ ಕಾರಣವಾಗಿದೆ. ಅಂತರ್ಜಲ ಬಳಕೆಯಲ್ಲಿ ಗಣನೀಯ ಇಳಿಕೆ ಮತ್ತು ನಮ್ಮ ವಾರ್ಷಿಕ ಮರುಪೂರಣ ಪ್ರಮಾಣದಲ್ಲಿನ ಏರಿಕೆಯು, ಜಲ ಸುಸ್ಥಿರತೆಯ ಕಡೆಗಿನ ನಮ್ಮ ಸರಕಾರದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದರು. ವೈಜ್ಞಾನಿಕ ಜಲ ನಿರ್ವಹಣೆ, ಕೆರೆಗಳ ಪುನರುಜ್ಜೀವನ ಯೋಜನೆಗಳು ಮತ್ತು ಕರ್ನಾಟಕದಾದ್ಯಂತ ಜಲ ಸಂರಕ್ಷಣಾ ರಚನೆಗಳ ನಿರ್ಮಾಣದ ಮೂಲಕ, ಅಂತರ್ಜಲದ ಮರುಪೂರಣವನ್ನು ಹೆಚ್ಚಿಸಿದ್ದೇವೆ. ಅಲ್ಲದೇ, ಜನಜಾಗೃತಿಯ ಅಭಿಯಾನದ ಮೂಲಕ ಅತಿಯಾದ ಬಳಕೆಯನ್ನು ನಾವು ಯಶಸ್ವಿಯಾಗಿ ತಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಇದಲ್ಲದೆ, ನಮ್ಮ ಮಹತ್ವಾಕಾಂಕ್ಷೆಯ ಕೆರೆ ತುಂಬಿಸುವ ಯೋಜನೆಗಳು ಅತ್ಯುತ್ತಮ ಫಲಿತಾಂಶಗಳನ್ನು ನೀಡಿದ್ದು, ಕೆರೆ-ಕುಂಟೆಗಳ ಮೂಲಕ ಆಗುವ ಮರುಪೂರಣ ಶೇ.4.48ರಷ್ಟು ಹೆಚ್ಚಾಗಿದೆ ಎಂದು ಹೇಳಿದರು. ಈ ದೂರದೃಷ್ಟಿಯ ಯೋಜನೆಗಳ ಸಕಾರಾತ್ಮಕ ಪರಿಣಾಮವು ಪ್ರಾದೇಶಿಕ ಮಟ್ಟದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. 2024ರ ಸಾಲಿನ ದತ್ತಾಂಶಗಳಿಗೆ ಹೋಲಿಸಿದರೆ 11 ತಾಲೂಕುಗಳ ಅಂತರ್ಜಲ ಸ್ಥಿತಿಗತಿಯಲ್ಲಿ ಸುಧಾರಣೆ ಕಂಡುಬಂದಿದೆ. ಗಮನಾರ್ಹವಾಗಿ, ಚಾಮರಾಜನಗರ ತಾಲೂಕು 'ಅತಿ-ಬಳಕೆ' ಪಟ್ಟಿಯಿಂದ ‘ನಿರ್ಣಾಯಕ' ಹಂತದ ಪಟ್ಟಿಗೆ ವರ್ಗಾವಣೆಯಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಅದೇ ರೀತಿ, ಬೆಳಗಾವಿಯ ಅಥಣಿ, ಬೆಂಗಳೂರು ದಕ್ಷಿಣದ ಚನ್ನಪಟ್ಟಣ, ಚಿತ್ರದುರ್ಗದ ಮೊಳಕಾಲ್ಮೂರು ಹಾಗೂ ಹಾವೇರಿಯ ರಾಣೆಬೆನ್ನೂರು, ಸವಣೂರು ಮತ್ತು ಶಿಗ್ಗಾಂವಿ ತಾಲೂಕುಗಳು ‘ಅರೆ-ನಿರ್ಣಾಯಕ' ಸ್ಥಿತಿಯಿಂದ ಸಂಪೂರ್ಣ 'ಸುರಕ್ಷಿತ' ವರ್ಗಕ್ಕೆ ಯಶಸ್ವಿಯಾಗಿ ಭಡ್ತಿ ಪಡೆದಿವೆ ಎಂದು ಅವರು ತಿಳಿಸಿದರು. ಈ ವೇಳೆ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆಯ ಕಾರ್ಯದರ್ಶಿ ಬಿ.ಕೆ.ಪವಿತ್ರ, ಕೇಂದ್ರ ಅಂತರ್ಜಲ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಧ್ಯಪ್ರಾಚ್ಯ ಯುದ್ಧದಲ್ಲಿ ರಷ್ಯಾ, ಚೀನಾ ಜಯಶಾಲಿಗಳು; ಕೊನೆಗೊಳ್ಳದ ಮಹಾಯುದ್ಧದ ಬಗ್ಗೆ ಬಿಲಿಯನೇರ್ ಎಚ್ಚರಿಕೆ!
ಮಧ್ಯಪ್ರಾಚ್ಯದ ಯುದ್ಧ ಕೊನೆಗೊಂಡಿದೆ ಎಂದು ಜಗತ್ತು ಸಂತಸದಲ್ಲಿದೆ. ಆದರೆ ಅಮೆರಿಕದ ಬಿಲಿಯನೇರ್ ಹೂಡಿಕೆದಾರ ರೇ ಡಾಲಿಯೊ ಮಾತ್ರ ಮಧ್ಯಪ್ರಾಚ್ಯ ಸಂಘರ್ಷಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೇ ಇಡೀ ಜಗತ್ತು ಈಗ ಮಹಾಯುದ್ಧದ ಮಧ್ಯದಲ್ಲಿದ್ದು, ಯಾವುದೇ ಸಮಯದಲ್ಲಿ ಮತ್ತೆ ಯುದ್ಧ ಭುಗಿಲೇಳಬಹುದು ಎಂದು ಎಚ್ಚರಿಸಿದ್ದಾರೆ. ಅಲ್ಲದೇ ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಅಸಲಿಗೆ ಗೆದ್ದಿರುವುದು ರಷ್ಯಾ ಮತ್ತು ಚೀನಾ ಎಂದು ರೇ ಡಾಲಿಯೊ ಹೇಳಿದ್ದಾರೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಚುನಾವಣಾ ಆಯೋಗದ ನಡೆ ಶಂಕಾಸ್ಪದ; ಮಹಾರಾಷ್ಟ್ರದಲ್ಲಿ ಮೌನ, ರಾಜ್ಯದಲ್ಲಿ ಪ್ರಶ್ನೆ ಏಕೆ?: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆಯ ನೀತಿ ತಾಳಿದೆ. ಇಲ್ಲಿನ ಪ್ರೇರಣೆಯಿಂದಲೇ ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುತ್ತಿದೆ. ಇನ್ನೂ ನಮ್ಮ ಯೋಜನೆಗಳಿಗೆ ಚುನಾವಣೆಗಾಗಿ ಮತದಾರರ ಸೆಳೆಯಲು ನೀಡಿದ ಯೋಜನೆಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಚುನಾವಣೆ ಆಯೋಗದ ಪ್ರಶ್ನೆಗೆ ಉತ್ತರಿಸಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ
Kalaburagi | ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಫುಲೆ ಪ್ರಶಸ್ತಿಗೆ ಎ.ಬಿ.ಹೊಸಮನಿ ಆಯ್ಕೆ
ಕಲಬುರಗಿ: ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಹಿರಿಯ ಹೋರಾಟಗಾರರಾದ ಎ.ಬಿ.ಹೊಸಮನಿ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಹಿರಿಯ ಹೋರಾಟಗಾರ ಎ.ಬಿ.ಹೊಸಮನಿ ಅವರು ಸುಮಾರು 35 ವರ್ಷಗಳಿಂದ ಶೋಷಿತರ ಪರವಾಗಿ ಧ್ವನಿಯಾಗಿ ಹೋರಾಟದಲ್ಲಿ ಸಕ್ರಿಯವಾಗಿದ್ದಾರೆ. ಸಂಘಟಕರಾಗಿ ಗುರುತಿಸಿಕೊಂಡಿರವ ಇವರು ಸಮಾಜದ ಓರೆ ಕೋರೆಗಳನ್ನು ಸರಿಮಾಡುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವರು. ಸಮಾಜ ಚಿಂತಕರು, ಸಾಹಿತಿಯೂ ಆಗಿರುವ ಇವರು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವುದಕ್ಕಾಗಿ ಅವಿರತವಾಗಿ ದುಡಿಯುತ್ತಿರುವರು. ಹೋರಾಟವೇ ಅವರ ಬದುಕಿನ ಉಸಿರಾಗಿದೆ ಇವರ ಹೋರಾಟದ ಸೇವಾ ಕಾರ್ಯ ಗುರುತಿಸಿ ಈ ಸಾಲಿನ ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗೆ ಆಯ್ಕೆಗೊಂಡ ಶ್ರೀಯುತರಿಗೆ ಎ.11 ರಂದು (2026) ವಿಜಯಪುರದ ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಮಹಾತ್ಮ ಜ್ಯೋತಿಬಾ ಫುಲೆ ಅವರ 199ನೇ ಜನ್ಮ ಜಯಂತಿ ಅಂಗವಾಗಿ ನಡೆಯುವ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ” ಪ್ರಧಾನ ಮಾಡಲಾಗುತ್ತದೆ” ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕರು ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಸಹವಾಸದಿಂದ ಖರ್ಗೆ ಬಾಲಿಶ ಹೇಳಿಕೆ : ಪ್ರಹ್ಲಾದ್ ಜೋಶಿ ಆಕ್ರೋಶ
ಹೊಸದಿಲ್ಲಿ : ‘ಆರೆಸ್ಸೆಸ್, ಬಿಜೆಪಿ ವಿಷ ಸರ್ಪ. ಅದನ್ನು ಕೊಲ್ಲಿ’ ಎಂದು ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಭಾಷಣಗೈದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಮತ್ತು ಧ್ಯೇಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಬುಧವಾರ ದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖರ್ಗೆಯವರು ಹಿರಿಯ ರಾಜಕಾರಣಿಯಾಗಿ ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಅತ್ಯಂತ ಬಾಲಿಶತನದಿಂದ ಕೂಡಿದೆ. ಗುಜರಾತಿಗರು ಅನಕ್ಷರಸ್ಥರು, ಆರೆಸ್ಸೆಸ್, ಬಿಜೆಪಿಯವರು ವಿಷ ಸರ್ಪವಿದ್ದಂತೆ ಅವರನ್ನು ಕೊಲ್ಲಿ ಎಂದೆಲ್ಲಾ ಪ್ರಚೋದನಕಾರಿ ಭಾಷಣ ಮಾಡಿರುವುದು ಪ್ರಜಾಪ್ರಭುತ್ವದ ದುರಂತ. ಒಬ್ಬ ಸಭ್ಯ ಮತ್ತು ಹಿರಿಯ ನಾಯಕರಿಂದ ಬರುವಂತಹ ಮಾತಲ್ಲ ಇದು ಎಂದು ಬೇಸರ ವ್ಯಕ್ತಪಡಿಸಿದರು. ಸಹವಾಸ ದೋಷ: ಖರ್ಗೆಯವರನ್ನು ನಾನು ಕಾಲೇಜು ಕ್ಯಾಂಪಸ್ ದಿನಗಳಿಂದಲೂ ಬಲ್ಲೆ. ಹೀಗೆಲ್ಲಾ ವರ್ತಿಸಿದವರಲ್ಲಿ. ಆದರೆ, ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಸಹವಾಸದಿಂದ ಹೀಗೆಲ್ಲಾ ಅಪ್ರಬುದ್ಧ, ಅಸಮಂಜಸ, ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ. ರಾಹುಲ್ ಗಾಂಧಿ ಗಂಭೀರ ರಾಜಕಾರಣಿಯಲ್ಲ. ಅವರೊಂದಿಗೆ ಬೆರೆತು ಖರ್ಗೆ ಅವರೂ ರಾಹುಲ್ರಂತೆ ವರ್ತಿಸುತ್ತಿದ್ದಾರೆ. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೋಲುವ ಭೀತಿ: ಕಾಂಗ್ರೆಸ್ ಇಂತಹ ಹೇಳಿಕೆ ನೀಡುತ್ತ ವಿವಿಧ ಸಮುದಾಯಗಳ ನಡುವೆ ವಿಷ ಬಿತ್ತುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೀಗೆ ಹಿಂಸೆಗೆ ಪ್ರಚೋದನೆ ನೀಡುವುದು ಅಕ್ಷಮ್ಯ ಅಪರಾಧ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ವಿವಾದಾತ್ಮಕ ಹೇಳಿಕೆ ನೀಡುತ್ತಿದೆ ಎಂದು ಜೋಶಿ ಆರೋಪಿಸಿದರು.
ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಲಿ : ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು : ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು-ಮರಳು ರೀತಿ ಮಾತನಾಡಬಾರದು. ಇವರ ಮಾನಸಿಕ ಆರೋಗ್ಯ ಸರಿ ಇಲ್ಲ’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಬುಧವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಖಂಡನೀಯ. ದೇಶದಾದ್ಯಂತ ಜನರು ಇವರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೊಲ್ಲಲು ಪ್ರಚೋದನೆ ನೀಡುವುದು ಸರಿ ಅಲ್ಲ ಎಂದು ಆಕ್ಷೇಪಿಸಿದರು. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಅಂಗೀಕಾರ ದೊರೆತಿದೆ. ಆ ಮಸೂದೆ ಅನ್ವಯ ಖರ್ಗೆ ರೀತಿ ಪ್ರಚೋದನಾಕಾರಿಯಾಗಿ ಮಾತನಾಡಿದರೆ ಪ್ರಕರಣ ದಾಖಲು ಮಾಡಬಹುದು. ಆದುದರಿಂದ ಬಿಜೆಪಿ ದೂರು ನೀಡಿದೆ. ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿಯ ಕಾರ್ಯಕರ್ತರು ಸಿಡಿದೆದ್ದು ಎಲ್ಲ ಕಡೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ರಝಾಕರಿಂದ ತಮ್ಮ ಕುಟುಂಬದ ಮೇಲೆ ದಾಳಿ ನಡೆದಿದೆ ಎಂದು ಖರ್ಗೆಯವರೇ ಹೇಳಿದ್ದಾರೆ. ತಮ್ಮ ಮನೆತನ ಹಾಳು ಮಾಡಿದವರ ವಿರುದ್ಧ ಮಾತನಾಡುವುದನ್ನು ಬಿಟ್ಟು ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬೆಂಬಲ ನೀಡಿದ್ದಾರೆ. ಇದು ‘ಬೇವಿನ ಕಾಯಿಗೆ ಹಾಗಲಕಾಯಿ ಸಾಕ್ಷಿ ಇದ್ದಂತೆ’. ಇವರಿಬ್ಬರ ಮನಸ್ಥಿತಿ ಒಂದೇ ಆಗಿದೆ ಎಂದು ಅವರು ಟೀಕಿಸಿದರು.
Wadi | ಸಾರ್ವಜನಿಕ ಸ್ಥಳಗಳಲ್ಲಿ ಅರವಟ್ಟಿಗೆ ಅಳವಡಿಸಲು ಜನಧ್ವನಿ ಜಾಗೃತಿ ಸಮಿತಿಯಿಂದ ಆಗ್ರಹ
ವಾಡಿ: ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಸಾರ್ವಜನಿಕರು ಕುಡಿಯುವ ನೀರು ಮತ್ತು ನೇರಳಿಗಾಗಿ ಹಾತೊರೆಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜನಧ್ವನಿ ಜಾಗೃತಿ ಸಮಿತಿಯ ಸದಸ್ಯರು ಬುಧವಾರ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಆರ್.ಕೆ., ಪುರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಅಧಿಕಾರಿಗಳು ಸಹ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ಇದರಿಂದ ಪಟ್ಟಣದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಬೃಹತ್ ನೀರು ಶುದ್ಧೀಕರಣ ಘಟಕ ಇದ್ದರೂ ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಹಲವೆಡೆ ಚರಂಡಿಗಳು ಹೂಳು ತುಂಬಿ ದುರ್ಗಂಧ ವಾಸಿಸುತ್ತಿದ್ದು, ಸಾರ್ವಜನಿಕ ಶೌಚಾಲಯಗಳ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ಯಾದಗಿರಿ–ಕಲಬುರಗಿ ಮಾರ್ಗದಲ್ಲಿ ಸಂಚರಿಸುವ ಬಸ್ಸುಗಳಿಗೆ ಸೂಕ್ತ ಬಸ್ ನಿಲ್ದಾಣ ಇಲ್ಲದ ಕಾರಣ, ಪ್ರಯಾಣಿಕರು ಉರಿಬಿಸಿಲಿನಲ್ಲಿ ನಡುರಸ್ತೆಯಲ್ಲೇ ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ತಕ್ಷಣ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಗಳನ್ನು ಸ್ಥಾಪಿಸಬೇಕು. ಬಸವೇಶ್ವರ ವೃತ್ತದಲ್ಲಿರುವ ಶೌಚಾಲಯವನ್ನು ಸಾರ್ವಜನಿಕ ಬಳಕೆಗೆ ತೆರೆಯಬೇಕು. ಶ್ರೀನಿವಾಸ ಗುಡಿ ವೃತ್ತ, ಹನುಮಾನ ದೇವಸ್ಥಾನ ಪ್ರದೇಶಗಳಲ್ಲಿ ತಾತ್ಕಾಲಿಕ ನೇರಳಿನ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಹನುಮಾನ ನಗರದಲ್ಲಿರುವ ಆರ್ಒ ನೀರು ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಒದಗಿಸಬೇಕು ಎಂದು ಅವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಶೇಖ್ ಅಲ್ಲಾಭಕ್ಷ, ಸದಸ್ಯ ಶಿವಪ್ಪಾ ಮುಂಡರ್ಗಿ, ಈರಣ್ಣ ಯಲಗಟ್ಟಿ, ಆರ್. ಎನ್ ಆನಂದ, ಶಂಕರ ರದ್ದೇವಾಡಿ, ಇದ್ದರು
Bengaluru | ವ್ಯಕ್ತಿಯ ಹತ್ಯೆಗೈದು ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ತುಂಬಿ ಬಿಸಾಡಿದ್ದ ಆರೋಪಿಯ ಬಂಧನ
ಬೆಂಗಳೂರು : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿಯನ್ನು ಹತ್ಯೆಗೈದು ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬಿಸಾಡಿದ್ದ ಆರೋಪಿಯನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ಬಸುದೇವ್ ಮಲ್ಲಿಕ್(30) ಬಂಧಿತ ಎಂದು ಗುರುತಿಸಲಾಗಿದೆ. ಮಾ.26ರಂದು ಸ್ನೇಹಿತ ಸುನೀಲ್ ನಾಯಕ್(42) ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದ ಬಾರ್ ಪಕ್ಕದ ಜಾಗದಲ್ಲಿ ಎಸೆದು ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಡಿಶಾದ ಸುನೀಲ್ ನಾಯಕ್ ಮತ್ತು ಬಸುದೇವ್ ಮಲ್ಲಿಕ್ ಕೆಲವು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಹೆಬ್ಬಗೋಡಿ ವ್ಯಾಪ್ತಿಯ ಯಾರಂಡನಹಳ್ಳಿಯಲ್ಲಿ ಕುಟುಂಬ ಸಮೇತ ವಾಸವಾಗಿದ್ದರು. ನಿರ್ಮಾಣ ಹಂತದ ಕಟ್ಟಡ ಕೆಲಸ ಮಾಡಿಕೊಂಡಿದ್ದರು. ಈ ಮಧ್ಯೆ ಸುನೀಲ್ ನಾಯಕ್ ವಿಪರೀತ ಮದ್ಯ ವ್ಯಸನಿಯಾಗಿದ್ದ. ಹೀಗಾಗಿ ಆರೋಪಿಯು ಸುನೀಲ್ ನಾಯಕ್ನ ಪತ್ನಿ ಜತೆ ಆತ್ಮೀಯವಾಗಿದ್ದ. ಈ ವಿಚಾರ ತಿಳಿದ ಸುನೀಲ್, ಮನೆ ಬಳಿ ಬಾರದಂತೆ ಎಚ್ಚರಿಕೆ ನೀಡಿದ್ದ. ಎರಡು ವರ್ಷಗಳ ಹಿಂದೆ ಬೇರೆಡೆ ವಾಸವಾಗಿದ್ದಾಗಲೂ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ಎಲ್ಲಾ ಬೆಳವಣೆಗೆಗಳಿಂದ ಕೋಪಗೊಂಡಿದ್ದ ಆರೋಪಿ ಬಸುದೇವ್ ಮಲ್ಲಿಕ್, ಕೊಲೆಗೆ ಸಂಚು ರೂಪಿಸಿದ್ದ. ಅದರಂತೆ ಮಾ.26ರಂದು ಸುನೀಲ್ ಕುಮಾರ್ ನನ್ನು ಬಾರ್ಗೆ ಕರೆದೊಯ್ದು ವಿಪರೀತ ಮದ್ಯಪಾನ ಮಾಡಿಸಿದ್ದ ಆರೋಪಿ, ಮಾತುಕತೆ ಮಾಡುವ ನೆಪದಲ್ಲಿ ಹೆಬ್ಬಗೋಡಿ ಠಾಣೆ ವ್ಯಾಪ್ತಿಯ ಕೈಗಾರಿಕಾ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಬಳಿಕ, ಸಾಕ್ಷ್ಯನಾಶ ಪಡಿಸುವ ಉದ್ದೇಶದಿಂದ ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ತುಂಬಿ ಬಾರ್ ಪಕ್ಕದ ಖಾಲಿ ಪ್ರದೇಶದಲ್ಲಿ ಎಸೆದು ಹೋಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯ ಪತ್ತೆಗೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಎಸಿಪಿ ಕೆ.ಎಂ.ಸತೀಶ್ ಮತ್ತು ಹೆಬ್ಬಗೋಡಿ ಠಾಣೆಯ ಇನ್ಸ್ಪೆಕ್ಟರ್ ಜಿ.ಸೋಮಶೇಖರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡವು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿ ಪತ್ತೆ ಹಚ್ಚಿ ಬಂಧಿಸಿದ್ದು, ತನಿಖೆಯನ್ನು ಮುಂದುವರೆಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

22 C