ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರೋಧಿಸಿ ಪ್ರತಿಭಟನೆ
ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ಆಲ್ ಇಂಡಿಯಾ ಯುನೈಡೆಟ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರಕಾರ ಜಾರಿಗೊಳಿಸಿದ 4 ಹೊಸ ಕಾರ್ಮಿಕ ಸಂಹಿತೆಗಳು ವ್ಯವಹಾರವನ್ನು ಸುಲಭಗೊಳಿಸುವ ಹೆಸರಿನಲ್ಲಿ, ಕಾರ್ಮಿಕರ ಹಕ್ಕುಗಳನ್ನು ಮತ್ತು ರಕ್ಷಣೆಯನ್ನು ಮೊಟಕುಗೊಳಿಸುವ ಮೂಲಕ, ಬಂಡವಾಳಶಾಹಿ ಮತ್ತು ಉದ್ಯಮದ ಪರವಾಗಿವೆ. ಇದು ಪ್ರಗತಿಪರ ಸುಧಾರಣೆಯಲ್ಲ, ಬದಲಿಗೆ ಕಾರ್ಮಿಕ ವಿರೋಧಿ ನಡೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. ಕೈಗಾರಿಕಾ ಸಂಬಂಧಗಳ ಸಂಹಿತೆ ಅಡಿಯಲ್ಲಿ, ಉದ್ಯೋಗಿಗಳನ್ನು ವಜಾ ಮಾಡಲು ಅಥವಾ ಕಾರ್ಖಾನೆಗಳನ್ನು ಮುಚ್ಚಲು ಸರಕಾರದ ಅನುಮತಿಯ ಅಗತ್ಯವಿರುವ ಸಂಸ್ಥೆಗಳ ಗಾತ್ರವನ್ನು ಹೆಚ್ಚಿಸಲಾಗಿದೆ. ಉದಾಹರಣೆಗೆ, ಕೆಲವು ರಾಜ್ಯಗಳಲ್ಲಿ 300 ಕಾರ್ಮಿಕರನ್ನು ಹೊಂದಿರುವ ಸಂಸ್ಥೆಗಳಿಗೆ ಈ ಮಿತಿ ವಿಸ್ತರಿಸಲಾಗಿದೆ. ಇದರಿಂದಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಸಂಸ್ಥೆಗಳು ಸುಲಭವಾಗಿ ಕಾರ್ಮಿಕರನ್ನು ತೆಗೆದುಹಾಕಲು ಸಾಧ್ಯವಾಗುತ್ತದೆ. ಇದು ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೈಗಾರಿಕಾ ಸಂಬಂಧಗಳ ಸಂಹಿತೆಯು ಮುಷ್ಕರ ಎಂಬ ಪದದ ವ್ಯಾಖ್ಯೆಯನ್ನು ವಿಸ್ತರಿಸಿದೆ. ಮುಷ್ಕರಕ್ಕೆ ಹೋಗುವ ಮೊದಲು 14-ದಿನಗಳ ನೋಟಿಸ್ ಕಡ್ಡಾಯಗೊಳಿಸಿದೆ. ಇದು ಮುಷ್ಕರ ನಡೆಸುವುದನ್ನು ಕಷ್ಟಕರವಾಗಿಸುತ್ತದೆ ಮತ್ತು ಕಾರ್ಮಿಕರ ಸಂಘಟಿತ ಶಕ್ತಿಯನ್ನು ದುರ್ಬಲಗೊಳಿಸುತ್ತದೆ. ಕಾರ್ಮಿಕ ಕಾಯಿದೆಗಳನ್ನು ಕೇಂದ್ರೀಕರಿಸುವುದರಿಂದ, ಸಂಸ್ಥೆಗಳು ಮತ್ತು ಮಾಲಕರು ಕಡಿಮೆ ನಿಯಂತ್ರಣ ಮತ್ತು ಪರಿಶೀಲನೆಗೆ ಒಳಪಟ್ಟಿರುತ್ತಾರೆ. ಸಂಹಿತೆಗಳು ಅನುಸರಣೆಯನ್ನು ಸರಳಗೊಳಿಸುವುದಾಗಿ ಹೇಳಿದರೂ, ಇದು ವಾಸ್ತವವಾಗಿ ದುರ್ಬಲ ಕಾರ್ಮಿಕ ಶ್ರಮ ಪರಿಶೀಲನಾ ವ್ಯವಸ್ಥೆಗೆ ಕಾರಣವಾಗಬಹುದು ಆತಂಕ ವ್ಯಕ್ತಪಡಿಸಿದರು. ಸಾಮಾಜಿಕ ಭದ್ರತಾ ಸಂಹಿತೆ, ಗುತ್ತಿಗೆ ಕಾರ್ಮಿಕರು ಮತ್ತು ಗಿಗ್ ವರ್ಕರ್ಸ್ ಬಗ್ಗೆ ಮಾತನಾಡಿದರೂ, ಎಲ್ಲಾ ಕಾರ್ಮಿಕರಿಗೆ ಸಮಗ್ರ ಮತ್ತು ಕಡ್ಡಾಯ ಸಾಮಾಜಿಕ ಭದ್ರತೆಯನ್ನು ಖಚಿತಪಡಿಸುವುದಿಲ್ಲ. ವೇತನ ಸಂಹಿತೆಯಲ್ಲಿ ಕೆಲಸದ ಸಮಯಕ್ಕೆ ಸಂಬಂಧಿಸಿದ ನಿಯಮಗಳಲ್ಲಿನ ಬದಲಾವಣೆಗಳು, ಕೆಲವೊಮ್ಮೆ, ಕೆಲಸದ ಸಮಯವನ್ನು 8 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಸಂಸ್ಥೆಗಳಿಗೆ ಅವಕಾಶ ನೀಡಬಹುದು ಎಂಬ ಆತಂಕವಿದೆ. ಇದು ಕಾರ್ಮಿಕರ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ ಎಂದರು. ಈ ಹೊಸ ಕಾರ್ಮಿಕ ಸಂಹಿತೆಗಳ ಬಗ್ಗೆ ಕೇಂದ್ರ ಸರಕಾರವು ಸ್ವಾತಂತ್ರ್ಯದ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಸುಧಾರಣೆಗಳು ಎಂದು ಬಣ್ಣಿಸಿದ್ದರೂ, ಅವು ವಾಸ್ತವದಲ್ಲಿ ಬಂಡವಾಳಶಾಹಿಗಳ ಪರವಾಗಿವೆ. ದಶಕಗಳಿಂದ ಗಳಿಸಿದ ಕಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವಂತಿವೆ ಪ್ರತಿಭಟನಾನಿರತ ಕಾರ್ಮಿಕರು ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಯುನೈಡೆಟ್ ಟ್ರೇಡ್ ಯೂನಿಯನ್ ಸೆಂಟರ್ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್, ಉಪಾಧ್ಯಕ್ಷ ಕೆ.ವಿ.ಭಟ್, ದೇವದಾಸ್ ಮತ್ತಿತರರು ಹಾಜರಿದ್ದರು.
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿ ಯಾರು ಎಂದು ಸ್ಪಷ್ಟಪಡಿಸಬೇಕು: ಆರ್.ಅಶೋಕ್ ವ್ಯಂಗ್ಯ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ಆಡಳಿತ ಯಂತ್ರಾಂಗ ನಿಷ್ಕ್ರಿಯಗೊಂಡಿದ್ದು, ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಪದ್ಮನಾಭನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಾರು ಎಂದು ಕೂಡಲೇ ಸ್ಪಷ್ಟಪಡಿಸಬೇಕು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರಕಾರ ಸತ್ತುಹೋಗಿದೆ ಎಂದು ದೂರಿದರು. ‘ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ’ ಎಂದು ಆರ್.ಅಶೋಕ್ ಹೇಳಿದರು. ‘ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್ ಹೈಕಮಾಂಡ್ಗೆ ಇಲ್ಲ. ಸಿದ್ದರಾಮಯ್ಯನವರನ್ನು ಉಳಿಸಲು ಒಂದು ಬಣ, ಅವರನ್ನು ಕೆಳಗಿಳಿಸಲು ಮತ್ತೊಂದು ಬಣ ಕೆಲಸ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಒಂದು ತಂಡ, ಆಗಬಾರದೆಂದು ಮತ್ತೊಂದು ತಂಡ, ತಂತ್ರ ಕುತಂತ್ರ ಮಾಡುತ್ತಿವೆ ಎಂದು ಟೀಕಿಸಿದರು. ಈ ನಡುವೆ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದು, ರಾಜಕೀಯ ಸ್ಥಿತಿ ಅಧೋಗತಿಗೆ ಹೋಗಿದೆ. ರಾಹುಲ್ ಗಾಂಧಿ ನಾಯಕತ್ವ ಬಲಹೀನವಾಗಿದ್ದು, ರಾಜ್ಯದಲ್ಲಿಯೂ ಕಾಂಗ್ರೆಸ್ ನಾಯಕತ್ವ ಇಲ್ಲವಾಗಿದೆ. ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆಶಿ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್ಗೆ ಇಂತಹ ಸ್ಥಿತಿ ಬಂದಿರುವುದು ಶೋಚನೀಯ ಎಂದು ವಾಗ್ದಾಳಿ ನಡೆಸಿದರು.
ನ.26ರಿಂದ ಆರೆಸ್ಸೆಸ್ ವಿರುದ್ಧ ಜನಜಾಗೃತಿ, ದಸಂಸ ಸದಸ್ಯತ್ವ ಆಂದೋಲನ: ಮಾವಳ್ಳಿ ಶಂಕರ್
ಬೆಂಗಳೂರು: ಸಂವಿಧಾನ ಸಮರ್ಪಣಾ ದಿನ ಪ್ರಯುಕ್ತ ನ.26ರಿಂದ ಆರೆಸ್ಸೆಸ್ ವಿರುದ್ಧ ಜನಜಾಗೃತಿ ಹಾಗೂ ದಲಿತ ಸಂಘರ್ಷ ಸಮಿತಿಯ ಸದಸ್ಯತ್ವ ಆಂದೋಲನ ನಡೆಸಲಾಗುತ್ತದೆ ಎಂದು ದಸಂಸ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದಸ್ಯತ್ವ ಆಂದೋಲನವು ನ.26ರಂದು ಬೀದರ್ ನಲ್ಲಿ ಚಾಲನೆಗೊಳ್ಳಲಿದೆ. ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಗ್ರಾಮಮಟ್ಟದಲ್ಲಿ ಜನರ ಸದಸ್ಯತ್ವನ್ನು ಮಾಡಿಕೊಳ್ಳಲಾಗುವುದು. 18 ವರ್ಷ ಮೇಲ್ಪಟ್ಟ ಒಂದು ಲಕ್ಷ ಜನರ ಸದಸ್ಯತ್ವವನ್ನು ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು. ಸಮಾಜವನ್ನು ಜಾತಿ ಆಧಾರದಲ್ಲಿ ವಿಭಜನೆ ಮಾಡಿ, ಧರ್ಮ ಧರ್ಮಗಳ ನಡುವೆ ವಿಷ ಬೀಜವನ್ನು ಬಿತ್ತಿ, ಮಹಿಳೆಯರನ್ನು ದಾಸಿಯರನ್ನಾಗಿ ಮಾಡಿದಂತಹ ಮನುಸ್ಮೃತಿಯನ್ನು ನಂಬಿರುವ ಆರೆಸ್ಸೆಸ್ ಸಂವಿಧಾನವನ್ನು ವಿರೋಧಿಸುತ್ತಿದೆ. ಅಂಬೇಡ್ಕರ್ ಅವರು ಬಹುಸಂಖ್ಯಾತರು ಮತ್ತು ಮಹಿಳೆಯರಿಗೆ ಕಾನೂನಾತ್ಮಕ ಹಕ್ಕು ಮತ್ತು ಅವಕಾಶಗಳನ್ನು ನೀಡುವ ಹಿಂದೂ ಕೋಡ್ ಬಿಲ್ ಅನ್ನು ಸುಟ್ಟವರು ಆರೆಸ್ಸೆಸ್ನ ಮನುವಾದಿಗಳು ಎಂದು ಅವರು ಟೀಕಿಸಿದರು. ಬಿಜೆಪಿಯವರು ಅಂಬೇಡ್ಕರ್ ಅವರನ್ನು ಗೌರವಿಸುವ ದೊಡ್ಡ ನಾಟಕವನ್ನು ಆಡುತ್ತಿದ್ದಾರೆ. ಇದರ ಹಿಂದೆ ಯಾವ ಹುನ್ನಾರವಿದೆ ಎನ್ನುವುದನ್ನು ದೇಶದ ಜನರು ಅರ್ಥ ಮಾಡಿಕೊಂಡಿದ್ದಾರೆ. ದೇಶದ ಬಹುಸಂಖ್ಯಾತರು ಹಸಿವಿನಿಂದ ನರಳುತಿದ್ದಾರೆ. ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಉದ್ಯೋಗಗಳು ಸಿಗುತ್ತಿಲ್ಲ. ಈ ರೀತಿಯ ಸಮಸ್ಯೆಯ ಬಗ್ಗೆ ಆರೆಸ್ಸೆಸ್ ಯಾವತ್ತೂ ಮಾತನಾಡುವುದಿಲ್ಲ. ಕೇವಲ ಒಂದು ಧರ್ಮವನ್ನು ಗುತ್ತಿಗೆ ಹಿಡದ ರೀತಿಯಲ್ಲಿ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡಿ ರಾಜಕೀಯ ಲಾಭ ಪಡೆಯುತ್ತಿದೆ. ಆದ್ದರಿಂದ ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ದಲಿತ ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ ಮಾತನಾಡಿ, ದೇಶದಲ್ಲಿ ಈ ಸಂದರ್ಭದಲ್ಲಿ ಅನೇಕ ಅಲ್ಲೋಲ ಕಲ್ಲೋಲಗಳು ಆಗುತ್ತಿವೆ. ದಸಂಸ ಪ್ರಾರಂಭದಿಂದಲೂ ಸನಾತನ ಮತ್ತು ಮತೀಯವಾದದ ಹೇರುವಿಕೆಯನ್ನು ವಿರೋಧಿಸತ್ತಲೇ ಬರಲಾಗುತ್ತಿದೆ. ಈಗ ಆರೆಸ್ಸೆಸ್-ಬಿಜೆಪಿಯವರು ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಿವೆ. ಬಿಜೆಪಿಯಿಂದ ಭೀಮ ನಡಿಗೆ ಎಂಬ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಂಬೇಡ್ಕರ್ ಇದ್ದಾಗಿನಿಂದಲೂ ಅವರನ್ನು ವಿರೋಧಿಸಿದ, ಸಂವಿಧಾನ, ರಾಷ್ಟ್ರ ಧ್ವಜವನ್ನು ವಿರೋಧಿಸಿರುವುದನ್ನು ನಾವು ಕಂಡಿದ್ದೇವೆ. ಅದಕ್ಕಾಗಿ ಬಿಜೆಪಿ-ಆರೆಸ್ಸೆಸ್ ವಿರುದ್ಧ ಕರ್ನಾಟಕದಾದ್ಯಂತ ಅಭಿಯಾನಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ದಸಂಸ ರಾಜ್ಯ ಸಂಚಾಲಕ ಕಾರಳ್ಳಿ ಶ್ರೀನಿವಾಸ್, ಬೆಂಗಳೂರು ವಿಭಾಗೀಯ ಸಂಚಾಲಕ ಮಣಿಪಾಲ್ ರಾಜಪ್ಪ, ನಾಗರಾಜ್, ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ನಿರ್ಮಲ, ದನಮ್ಮ ಮತ್ತಿತರರು ಹಾಜರಿದ್ದರು.
ಉಪ್ಪಿನಂಗಡಿ | ಸಮಗ್ರ ಕೃಷಿಯೊಂದಿಗೆ ಸ್ವಾವಲಂಬಿಗಳಾಗೋಣ: ಸಂಜೀವ ಮಠಂದೂರು
ಉಪ್ಪಿನಂಗಡಿ: ಪ್ರಾಕೃತಿಕ ವೈಪರೀತ್ಯದಿಂದಾಗಿ ಕೃಷಿಕರ ಬದುಕು ಕಷ್ಟಕರವಾಗತೊಡಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಸ್ವಾವಲಂಬಿ ಕೃಷಿಕನಾಗಬೇಕು, ಹಾಗಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ಮತ್ತು ವಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಬಜತ್ತೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಕೃಷಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಕೃಷಿ ಪದ್ಧತಿ ವ್ಯವಸ್ಥೆಯಿಂದ ನಾವು ಹೊರ ಬರಬೇಕಾಗಿದೆ. ವಾಣಿಜ್ಯ ಬೆಳೆಗಳಾದ ಅಡಿಕೆ, ಕಾಳು ಮೆಣಸು, ಕಾಫಿ ಜೊತೆಗೆ ತರಕಾರಿ ಮೊದಲಾದ ಉಪ ಕೃಷಿಯೊಂದಿಗೆ ಸ್ವಾವಲಂಬಿ ಕೃಷಿಕನಾಗಬೇಕು ಎಂದರು. ಬಜತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಂಗಾಧರ ಪಿ.ಎನ್.ಮಾತನಾಡಿ, ರೈತರು ಸಮಸ್ಯೆಯನ್ನು ಎದುರಿಸುತ್ತಿದ್ದು, ಅವರ ಒಳಿತಿನ ಸಲುವಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಕೃಷಿಕರಿಗೆ ಸಹಕಾರಿ ಆಗಲಿದೆ. ನಾವುಗಳು ಹಟ್ಟಿ ಗೊಬ್ಬರ, ನೈಸರ್ಗಿಕ ಗೊಬ್ಬರಕ್ಕೆ ಹೆಚ್ಚು ಒತ್ತು ಕೊಡುವಂತಾಗಬೇಕು ಎಂದರು. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವ ವಿಜ್ಞಾನಿ ಡಾ. ಭವಿಷ್ ಅಡಿಕೆ ಕೃಷಿಯಲ್ಲಿ ಗೊಬ್ಬರದ ಬಳಕೆ, ಸೂಕ್ಷ್ಮ ಪೋಷಕಾಂಶದ ಸಮಗ್ರ ನಿರ್ವಹಣೆ ಹಾಗೂ ರೋಗಗಳ ಹತೋಟಿ ಬಗ್ಗೆ ಮಾಹಿತಿ ನೀಡಿದರು. ಸನ್ಮಾನ: ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಯು.ಎಲ್. ಉದಯಕುಮಾರ್, ಸಹಕಾರಿ ಸಂಘದ ವಳಾಲು ಶಾಲೆಯಲ್ಲಿ ಸುಮಾರು 20 ವರ್ಷಗಳಿಗೂ ಅಧಿಕ ಕಾಲ ಸಿಬ್ಬಂದಿಯಾಗಿ ಪ್ರಾಮಾಣಿಕತೆಯ ದ್ಯೋತಕದಂತಿದ್ದು, ನಿವೃತ್ತಿ ಹೊಂದಿರುವ ಇಸ್ಮಾಯಿಲ್ ನೀರಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ದಯಾನಂದ ಸರೋಳಿ, ನಿರ್ದೇಶಕರಾದ ಉಮೇಶ್, ರಾಜೇಶ್, ರಾಘವ ನಾಯ್ಕ್, ಶ್ರೀಮತಿ ಗೀತಾ, ಶ್ರೀಮತಿ ಸಂಧ್ಯಾ, ಪ್ರಕಾಶ್ ರೈ ಬೆಳ್ಳಿಪ್ಪಾಡಿ, ಶ್ರೀರಾಮ, ಸುಂದರ ಕೆ., ಉಪ್ಪಿನಂಗಡಿ ತಾ.ಪಂ. ಮಾಜಿ ಸದಸ್ಯ ಮುಕುಂದ ಬಜತ್ತೂರು, ಸಂಘದ ಮಾಜಿ ಅಧ್ಯಕ್ಷ ಯಶವಂತ ಗೌಡ, ಹಿರೇಬಂಡಾಡಿ ಗ್ರಾಮ ಪಂಚಾಯತ್ ಸದಸ್ಯ ಹಮ್ಮಬ್ಬ ಶೌಕತ್ ಅಲಿ, ನಿತಿನ್, ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಪದ್ಮಾವತಿ, ಸಂಘದ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪರಾಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಸಹಕಾರಿ ವ್ಯವಸಾಯಿಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶೋಭಾ ಸ್ವಾಗತಿಸಿದರು. ವಳಾಲು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವಸಂತ ಪಿಜಕ್ಕಳ ವಂದಿಸಿದರು. ಸಂಸ್ಥೆಯ ಪ್ರವೀಣ್ ಆಳ್ವ, ರವೀಶ್ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ | ಜಾಗದ ವಿವಾದ: ಕತ್ತಿಯಿಂದ ಕಡಿದು ಹಲ್ಲೆ
ಸುಳ್ಯ, ನ.22: ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಲ್ಲಮೊಗ್ರದ ಶಿವಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆಗೊಳಗಾದವರು. ಭರತ್ ಶಿವಾಲ ಹಲ್ಲೆ ನಡೆಸಿದ ಆರೋಪಿ. ಇವರಿಬ್ಬರ ನಡುವೆ ಹಲವು ಸಮಯಗಳಿಂದ ಜಾಗದ ತಕರಾರು ನಡೆಯುತ್ತಿತ್ತು. ಈ ನಡುವೆ ಭರತ್ ಶಿವಾಲ ರಸ್ತೆಯನ್ನು ಅಗಲೀಕರಣಗೊಳಿಸಿದ್ದರು. ಇದೇ ಸಂದರ್ಭ ವಿಶ್ವನಾಥ ರೈ ತನ್ನ ಜಾಗಕ್ಕೆ ಬೇಲಿ ಹಾಕುತ್ತಿದ್ದಾಗ ಮತ್ತೆ ವಿವಾದ ಉಂಟಾಗಿದೆ. ಬೇಲಿ ತೆಗೆಯುವ ವಿಚಾರದಲ್ಲಿ ಜಗಳವಾಗಿ ವಿಶ್ವನಾಥ ರೈ ಅವರಿಗೆ ಭರತ್ ಶಿವಾಲ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ವಿಶ್ವನಾಥ ರೈಯವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ | ರಸ್ತೆ ಅಪಘಾತದ ಗಾಯಾಳು ಮೃತ್ಯು
ಸುಳ್ಯ, ನ.22: ಬೈಕ್ ಸ್ಕಿಡ್ಡಾಗಿ ಬಿದ್ದ ಪರಿಣಾಮ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಸುಳ್ಯದ ಹಳೆಗೇಟು ತಮಿಳು ಕಾಲನಿ ನಿವಾಸಿ ರಾಮಕೃಷ್ಣ (52) ಮೃತಪಟ್ಟವರು. ಇವರು ನ.19ರಂದು ರಾತ್ರಿ ಹಳೆಗೇಟಿನಿಂದ ತಮಿಳು ಕಾಲನಿಯ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕಿಡ್ಡಾಗಿ ರಸ್ತೆಯಲ್ಲಿ ಬಿದ್ದಿದ್ದರು. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸುಳ್ಯ, ನ.22: ಎಣ್ಮೂರು ಪಟ್ಟೆ ನಿವಾಸಿ ಪ್ರಭಾಕರ ರೈ ಎನ್.ಜಿ. -ವನಜಾ ರೈ ಕುಂಬ್ರಗುತ್ತು ದಂಪತಿಯ ಪುತ್ರ ಕುಂಬ್ರಗುತ್ತು ರಕ್ಷಿತ್ ರೈ (34) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
23 ಕೋಟಿ ರೂ. ವಂಚನೆ ಪ್ರಕರಣ: ಧಾರವಾಡದಲ್ಲಿ ಹೈದರಾಬಾದ್ ಮೂಲದ ದಂಪತಿ ಬಂಧನ
ಧಾರವಾಡ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ವರದಿಯಾಗಿದೆ. ಸತೀಶ ಉಪ್ಪಾಲಪಟ್ಟಿ ಹಾಗೂ ಶಿಲ್ಪಾ ಬಂಡಾ ಬಂಧಿತ ಆರೋಪಿಗಳು. ಹೈದರಾಬಾದ್ನಲ್ಲಿ ಹೂಡಿಕೆದಾರರಿಗೆ 23 ಕೋಟಿ ರೂ. ವಂಚಿಸಿರುವ ಆರೋಪಿಗಳ ವಿರುದ್ಧ ಹೈದರಾಬಾದ್ ಸೆಂಟ್ರಲ್ ಕ್ರೈಂ ಸ್ಟೇಷನ್ನಲ್ಲಿ ದೂರು ದಾಖಲಾಗಿದ್ದವು. ಆದರೆ, ಇವರು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಹುಬ್ಬಳ್ಳಿ-ಧಾರವಾಢ ಬೈಪಾಸ್ ಮಾರ್ಗದಲ್ಲಿ ಕಾರಿನಲ್ಲಿ ಸಾಗುತ್ತಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು. ದಂಪತಿಯು ಹುಬ್ಬಳ್ಳಿ-ಧಾರವಾಢ ಬೈಪಾಸ್ ಮೂಲಕ ಹೋಗುತ್ತಿದ್ದಾರೆ ಎಂದು ಹೈದರಾಬಾದ್ ಪೊಲೀಸರು ಧಾರವಾಡ ಜಿಲ್ಲಾ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಹೈದರಾಬಾದ್ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಗುಂಜನ್ ಆರ್ಯ ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಹೈದರಬಾದ್ ಸೆಂಟ್ರಲ್ ಕ್ರೈಂ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.
Ukraine War: ಉಕ್ರೇನ್ ಭೂಮಿ ಮೇಲೆ ರಷ್ಯಾ ಹಿಡಿತ ಮತ್ತಷ್ಟು ಜೋರು, ಇನ್ನಷ್ಟು ಪ್ರದೇಶಗಳು ವಶಕ್ಕೆ!
ರಷ್ಯಾ &ಉಕ್ರೇನ್ ನಡುವೆ ಶಾಂತಿ ಮಾತುಕತೆ ಇನ್ನೇನು ನಡೆದೇ ಹೋಗಲಿದೆ ಅನ್ನೋ ಸಮಯ ಎದುರಾಗಿರುವ ವಾತಾವರಣದಲ್ಲೇ, ಇನ್ನೊಮ್ಮೆ ದ್ವೇಷದ ಬೆಂಕಿ ಮೊಳಗಿದೆ. ರಷ್ಯಾ ಸೇನೆಯಿಂದ ಭಾರಿ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ಶುರು ಆಗಿದ್ದು, ನೋಡ ನೋಡುತ್ತಲೇ ಉಕ್ರೇನ್ ದೇಶಕ್ಕೆ ಸೇರಿದ ಮತ್ತಷ್ಟು ಪ್ರದೇಶಗಳನ್ನು ವಶಕ್ಕೆ ಪಡೆದಿದೆ ರಷ್ಯಾ ಸೇನೆ. ಈ ಮೂಲಕ ರಷ್ಯಾ &ಉಕ್ರೇನ್
ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ : ಆರೋಪಿಗಳಿಗೆ ಪೊಲೀಸ್ ಕಸ್ಟಡಿ ಸಾಧ್ಯತೆ
ಉಡುಪಿ, ನ.22: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನ ಸೇರಿದಂತೆ ವಿದೇಶಗಳಿಗೆ ಸೋರಿಕೆ ಮಾಡಿದ ಪ್ರಕರಣದ ಬಂಧಿತ ಇಬ್ಬರು ಆರೋಪಿಗಳನ್ನು ಎರಡು ದಿನಗಳ ನಂತರ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆಗೆ ಒಳಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ನ ನೌಕರರಾದ ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯ ರೋಹಿತ್(29) ಮತ್ತು ಸಂತ್ರಿ(37) ಎಂಬವರನ್ನು ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆ ಮಾಡಿರುವ ಆರೋಪದಲ್ಲಿ ಬಂಧಿಸಲಾಗಿದೆ. ಆರೋಪಿಗಳು ವಾಟ್ಸ್ಆ್ಯಪ್ ಹಾಗೂ ಫೇಸ್ಬುಕ್ ಮೂಲಕ ನೌಕಾ ಸೇನೆಗೆ ಸಂಬಂಧಿಸಿದ ಮಾಹಿತಿಗಳನ್ನು ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಡಿ.3ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ಹೆಚ್ಚಿನ ಮಾಹಿತಿಗಾಗಿ ಎರಡು ದಿನಗಳ ಬಳಿಕ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ತಾಂತ್ರಿಕ ವಿಶ್ಲೇಷಣೆ ವರದಿಗಳು ನಮ್ಮ ಕೈ ಸೇರಬೇಕಾಗಿದೆ. ಅದನ್ನು ಕಾಯಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ತನಿಖೆಗೆ ಶಾಸಕರ ಆಗ್ರಹ : ನೌಕಾಪಡೆಯ ಹಡಗುಗಳ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗೃಹ ಇಲಾಖೆಯನ್ನು ಒತ್ತಾಯಿಸಿದ್ದಾರೆ. ದೇಶದ ಭದ್ರತೆಗೆ ಧಕ್ಕೆ ತರುವ ಘಟನೆ ನಡೆದಿರುವುದು ಅತ್ಯಂತ ಆಘಾತಕಾರಿಯಾಗಿದೆ. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಸಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಅಕ್ರಮ ವಲಸಿಗರು ಹಾಗೂ ಬಂಧಿತ ಆರೋಪಿಗಳ ಜಾಲದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನೂ ನಡೆಸಿ ದೇಶದ ಭದ್ರತೆಗೆ ಸವಾಲಾಗಿರುವ ದೇಶ ವಿರೋಧಿ ಶಕ್ತಿಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಗೃಹ ಸಚಿವಾಲಯ ಉನ್ನತ ಮಟ್ಟದ ತನಿಖೆಯನ್ನೂ ನಡೆಸುವಂತೆ ಅವರು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
Mandya | ಚಿನ್ನಾಭರಣ ದರೋಡೆ ಪ್ರಕರಣ: ಮದ್ದೂರು ಪುರಸಭಾ ಮಾಜಿ ಅಧ್ಯಕ್ಷ ಮರೀಗೌಡ ಬಂಧನ
ಮಂಡ್ಯ: ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ.ಮರೀಗೌಡ ಅವರನ್ನು ಬಂಧಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಆಗಸ್ಟ್ 26ರಂದು ಸಂಜೆ ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಅವರ ಮನೆಗೆ ಮುಸುಕುಧಾರಿಯೊಬ್ಬ ನುಗ್ಗಿ ಅವರ ಪತ್ನಿ ಸುಶೀಲಮ್ಮ ಅವರನ್ನು ಬೆದರಿಸಿ ಮೈಮೇಲಿದ್ದ ವಜ್ರದ ಓಲೆ, ಬಳೆ ಸೇರಿದಂತೆ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಕೃತ್ಯಕ್ಕೆ ಸಂಬಂಧಿಸಿದಂತೆ ಪೋಲೀಸರು ತನಿಖೆ ಕೈಗೊಂಡಿದ್ದ ವೇಳೆಗೆ ಮದ್ದೂರಿನಲ್ಲಿ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಗಲಭೆ ನಡೆದ ಹಿನ್ನೆಲೆಯಲ್ಲಿ ಕೆಲವು ಪೋಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಪರಿಣಾಮ ಪ್ರಕರಣ ಭೇದಿಸುವಲ್ಲಿ ವಿಳಂಬವಾಗಿತ್ತು. ಕೆಲ ದಿನಗಳ ಹಿಂದೆ ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ ಎಚ್.ಎಸ್. ನವೀನ ಅವರು ಪ್ರಥಮವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ಕಳವು ಪ್ರಕರಣಗಳ ಮಾಹಿತಿ ಪಡೆದುಕೊಂಡು ಕಾರ್ಯಪ್ರವೃತ್ತರಾಗಿದ್ದರು. ಸುಶೀಲಮ್ಮ ಅವರನ್ನು ಬೆದರಿಸಿ ಚಿನ್ನಾಭರಣಗಳನ್ನು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಯಶವಂತ್ ಕುಮಾರ್ ಅವರ ಸೂಕ್ತ ನಿರ್ದೇಶನದ ಮೇರೆಗೆ ಎಚ್.ಎಸ್.ನವೀನ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ನ.21ರಂದು ತನಿಖೆಯ ಜಾಡು ಹಿಡಿದ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಸುಶೀಲಮ್ಮ ಅವರ ಪಕ್ಕದ ಮನೆಯ ನಿವಾಸಿ ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ.ಮರೀಗೌಡನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಿದ ಪರಿಣಾಮ ಕೃತ್ಯ ನಡೆಸಿದ್ದಾಗಿ ಮರೀಗೌಡ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ದರೋಡೆ ಮಾಡಿದ ಚಿನ್ನಾಭರಣಗಳನ್ನು ಆರೋಪಿ ಮರೀಗೌಡ ಮಳವಳ್ಳಿ ಮತ್ತು ಮದ್ದೂರಿನ ಬ್ಯಾಂಕರ್ಸ್ ಗಳಲ್ಲಿ ಅಡವಿಟ್ಟಿದ್ದಾಗಿ ಒಪ್ಪಿಕೊಂಡಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಮರೀಗೌಡನನ್ನು ಮದ್ದೂರು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಭಟ್ಕಳ ಟಿಎಂಸಿಯನ್ನು ಸಿಎಂಸಿಯಾಗಿ ಘೋಷಿಸುವ ಕರಡು ಪ್ರಸ್ತಾವನೆಗೆ ಅಂತಿಮ ಮುದ್ರೆ
ಭಟ್ಕಳ : ಭಟ್ಕಳ ಟೌನ್ ಮುನ್ಸಿಪಲ್ ಕೌನ್ಸಿಲ್ (TMC) ಅನ್ನು ಸಿಟಿ ಮುನ್ಸಿಪಲ್ ಕೌನ್ಸಿಲ್ (CMC) ಆಗಿ ಘೋಷಿಸುವ ಕುರಿತು ಪ್ರಕಟಿಸಲಾಗಿದ್ದ ಕರಡು ಪ್ರಸ್ತಾವನೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ್ದ ಅವಧಿ ಮುಗಿದರೂ ಯಾರೊಬ್ಬರೂ ಕೂಡ ಯಾವುದೇ ಆಕ್ಷೇಪಣೆ ಸಲ್ಲಿಸದಿರುವುದರಿಂದ, ಈ ಪ್ರಸ್ತಾವನೆಗೆ ತಾತ್ವಿಕವಾಗಿ ಅಂತಿಮ ಮುದ್ರೆ ಬಿದ್ದಿದೆ. ನಗರಾಭಿವೃದ್ಧಿ ಇಲಾಖೆ ಅ.25ರಂದು ಸಿಎಂಸಿ ರಚನೆಗೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಅವಧಿಯು ನೀಡಲಾಗಿತ್ತು. ಭಟ್ಕಳ ಪುರಸಭೆಯನ್ನು ನಗರ ಸಭೆಯನ್ನಾಗಿ ಮಾಡುವ ಕುರಿತಂತೆ ಕರಡು ಪ್ರಕಟವಾದ ತಕ್ಷಣ, ಭಟ್ಕಳ ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಈ ಪ್ರಸ್ತಾವನೆಯ ವಿರುದ್ಧ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಸಿಎಂಸಿಯ ವ್ಯಾಪ್ತಿಯಲ್ಲಿ ಮುಖ್ಯವಾಗಿ ಮುಸ್ಲಿಂ ಬಹುಮತದ ಪ್ರದೇಶಗಳನ್ನು ಮಾತ್ರ ಸೇರಿಸಲಾಗುತ್ತಿದೆ, ಆದ್ದರಿಂದ ನಾವು ಈ ಪ್ರಸ್ತಾವನೆಗೆ ವಿರೋಧಿಸುತ್ತೇವೆ ಎಂಬ ಹೇಳಿಕೆಗಳನ್ನು ನೀಡಿದ್ದರು. ಆದರೆ, ಅವರ ಹೇಳಿಕೆ ಕೇವಲ ಹೇಳಿಕೆಯಾಗಿ ಉಳಿದಿದ್ದು ಕರಡು ಪ್ರಸ್ತಾವಕ್ಕೆ ಯಾರೂ ಕೂಡ ಲಿಖಿತ ಆಕ್ಷೇಪಣೆ ಇಲಾಖೆಗೆ ಸಲ್ಲಿಸಿಲ್ಲ ಎಂದು ತಿಳಿದು ಬಂದಿದ್ದು, ಈ ಕಾರಣಕ್ಕಾಗಿ ನಗರಾಭಿವೃದ್ಧಿ ಇಲಾಖೆ ಭಟ್ಕಳವನ್ನು ನಗರಸಭೆಯನ್ನಾಗಿ ಮಾಡುವ ಪ್ರಸ್ತಾವಕ್ಕೆ ಅಂತಿಮ ಮುದ್ರೆಯೊತ್ತಿದೆ ಎಂದು ತಿಳಿದುಬಂದಿದೆ. ಲಭ್ಯ ಮಾಹಿತಿಯ ಪ್ರಕಾರ 60 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನೊಳಗೊಂಡ ಭಟ್ಕಳ ಪುರಸಭೆಯನ್ನು 2015ರಿಂದಲೇ ಸಿಎಂಸಿ ಆಗಿ ವರ್ಗೀಕರಿಸಲು ಪ್ರಯತ್ನಗಳು ನಡೆಯುತ್ತಿವೆ. ನ.20ರಂದು ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಅದರಂತೆ ಹೊಸದಾಗಿ ರೂಪುಗೊಳ್ಳಲಿರುವ ಭಟ್ಕಳ ಸಿಎಂಸಿಗೆ ಭಟ್ಕಳ TMC, ಜಾಲಿ ಪಟ್ಟಣ ಪಂಚಾಯತ್ ಹಾಗೂ ಹೆಬಳೆ ಗ್ರಾಮ ಪಂಚಾಯತ್ಗಳನ್ನು ವಿಲೀನಗೊಳಿಸಲಾಗುತ್ತದೆ. ಇದನ್ನು ‘ಚಿಕ್ಕ ನಗರ’ (Mini City) ಆಗಿ ವರ್ಗೀಕರಿಸಲಾಗುತ್ತದೆ. ಹೊಸ ಸಿಎಂಸಿಯ ಒಟ್ಟು ವ್ಯಾಪ್ತಿ 22.67 ಚ.ಕಿ.ಮೀ ಆಗಿರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಧ್ಯ ಅವರು 2025ರ ಜ.12ರಂದು ನಗರಾಭಿವೃದ್ಧಿ ಸಚಿವರಿಗೆ ಪತ್ರವೊಂದನ್ನು ಕಳುಹಿಸಿದ್ದು, ಪತ್ರದಲ್ಲಿ “2011ರ ಜನಗಣತಿಯಲ್ಲಿ ಭಟ್ಕಳದಲ್ಲಿ 32 ಸಾವಿರ, ಜಾಲಿಯಲ್ಲಿ 19 ಸಾವಿರ, ಹೆಬಳೆ ಗ್ರಾ.ಪಂ. ಯಲ್ಲಿ 19 ಸಾವಿರ ಜನವಸತಿ ಇದೆ. ಈ ಪ್ರದೇಶಗಳನ್ನು ವಿಲೀನಗೊಳಿಸಿದರೆ ಒಟ್ಟು ಜನಸಂಖ್ಯೆ 75 ಸಾವಿರದ ಮೇಲೆ ಹೋಗುತ್ತದೆ, ಆದ್ದರಿಂದ ಸಿಎಂಸಿ ರಚನೆ ಅಗತ್ಯ” ಎಂದು ಶಿಫಾರಸು ಮಾಡಿದ್ದರು ಎನ್ನಲಾಗಿದೆ. ಬಿಜೆಪಿ ನಾಯಕರು ಭಟ್ಕಳ ಸಿಎಂಸಿಗೆ ವಿರೋಧವಿಲ್ಲವೆಂದರೂ, ಶೀರಾಲಿ, ಮುಟ್ಟಳ್ಳಿ, ಮಣ್ಕುಳ್ಳಿ, ಯಲ್ವಡಿಕವೂರು, ಮವಿನಕುರ್ವೆ ಮುಂತಾದ ಸಮೀಪದ ಗ್ರಾಮಗಳನ್ನು ಕೂಡ ಸೇರಿಸಬೇಕು ಎಂದು ಆಗ್ರಹಿಸಿದ್ದರು. ಆದರೆ ಈ ಬಗ್ಗೆ ಕೂಡಾ ಪಕ್ಷದ ವತಿಯಿಂದ ಯಾವುದೇ ಅಧಿಕೃತ ಲಿಖಿತ ಪ್ರಸ್ತಾಪ ಸಲ್ಲಿಸಲೇ ಇಲ್ಲ ಎಂದು ತಿಳಿದು ಬಂದಿದೆ. ಆದರೆ ಅಂತಿಮ ಅಧಿಸೂಚನೆ ಹೊರಬಿದ್ದ ನಂತರ ಬಿಜೆಪಿ ಮುಖಂಡ ಶ್ರಿಕಾಂತ್ ಅಸರಕೇರಿ ಪ್ರತಿಕ್ರಿಯಿಸಿದ್ದು, “ನಾವು ಮವಿನಕುರ್ವೆ ಮತ್ತು ಮುಟ್ಟಳ್ಳಿ ಗ್ರಾಮಗಳನ್ನು ಸೇರಿಸುವ ಕುರಿತು ಬೇಡಿಕೆ ಇಟ್ಟಿದ್ದೇವೆ. ಆದರೆ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಕೆಲವೇ ಪ್ರದೇಶಗಳನ್ನು ಮಾತ್ರ ಸಿಎಂಸಿಗೆ ಸೇರಿಸಲಾಗಿದೆ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು: ಪಕ್ಷ ಸಂಘಟನೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಹಿತ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚರ್ಚೆ ಮಾಡಿದ್ದೇನೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವನ್ನು ನಾನು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶನಿವಾರ ರಾತ್ರಿ ಇಲ್ಲಿನ ಸದಾಶಿವನಗರದಲ್ಲಿನ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಯಾವಾಗ ನನ್ನನ್ನು ಕರೆಯುತ್ತಾರೋ ಆಗ ನಾನು ಹೊಸದಿಲ್ಲಿಗೆ ಹೋಗುತ್ತೇನೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಅದರಂತೆ ನಡೆದುಕೊಳ್ಳುತ್ತೇನೆ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ಒಂದೂವರೆ ಗಂಟೆ ಚರ್ಚೆ ಮಾಡಿದ್ದೇವೆ. ಇದೊಂದು ಸೌಜನ್ಯದ ಭೇಟಿಯಾಗಿತ್ತು ಅಷ್ಟೇ. ನಾನು ಯಾವಾಗಲು ಸಪ್ಪೆಯಾಗಿ ಇರುವುದಿಲ್ಲ. ಬದಲಿಗೆ ಹೆಚ್ಚು ಖುಷಿಯಾಗಿಯೂ ಇರುವುದಿಲ್ಲ. ಯಾವಾಗಲೂ ಒಂದೇ ರೀತಿಯಲ್ಲಿ ಇರುತ್ತೇನೆ ಎಂದು ಅವರು ತಿಳಿಸಿದರು.
ಬಂಟ್ವಾಳ | ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಬಂಟ್ವಾಳ, ನ. 22 : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ, ಕಡೇಶಿವಾಲಯ ಗ್ರಾಮದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇದರ ಕ್ಯಾಂಪಸ್ ನಲ್ಲಿ ಇತ್ತೀಚೆಗೆ, ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್ ಗಳಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಇರುವ ಒಟ್ಟು ಹದಿನೈದು ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಬಹಳ ಸಡಗರದಿಂದ ಜರುಗಿತು. ಕರ್ನಾಟಕದ ಸರಕಾರದ ಆದೇಶದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸುತ್ತೋಲೆಯ ಪ್ರಕಾರ ಜರುಗುವ ಈ ಕಾರ್ಯಕ್ರಮವನ್ನು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್ ಗಳ ಸಹಭಾಗಿತ್ವದಲ್ಲಿ ಇಲ್ಲಿನ, ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ಇವರ ಅಧ್ಯಕ್ಷತೆಯಲ್ಲಿ ಕಳೆದ, ನ.6ರ, 2025ರಂದು ಶನಿವಾರ ಆಯೋಜಿಸಲಾಗಿತ್ತು. ಪರಿಸರ ಸಂರಕ್ಷಣೆಯ ಕಾಳಜಿ ಹಾಗೂ ಜಾಗೃತಿ ಮೂಡಿಸುವ ಸಲುವಾಗಿ, ಸಸಿಗೆ ನೀರೆರೆಯುವ ಮೂಲಕ, ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆಯವರಾದ, ಭಾರತಿ ಅವರು ಸಮಾರಂಭಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಸುಧಾಕರ್ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಆಮಿನಾ ಬಾನು ಅವರು ಅತಿಥಿ ಗಣ್ಯರು ಹಾಗೂ ಸಭಿಕರನ್ನು ಸ್ವಾಗತಿಸಿದರು, ಕೊನೆಯಲ್ಲಿ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆ ರವರ ಅಧ್ಯಕ್ಷೀಯ ಭಾಷಣದ ಬಳಿಕ ಸಹ ಶಿಕ್ಷಕಿಯವರಾದ ಕುಮಾರಿ ನಿಖಿತಾರವರು ಧನ್ಯವಾದವಿತ್ತರು ಹಾಗೂ ಸಹ ಶಿಕ್ಷಕ ಹೈದರ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಸುರೇಶ್ ಪೂಜಾರಿ, ಸತೀಶ್ ರಾವ್, ಗುರುರಾಜ್ ಪಾಟ್ರಕೋಡಿ, ರಾಜೇಶ್ವರಿ, ಝಕರಿಯಾ ದಾರಿಮಿ ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು. ಸಾಯಂಕಾಲ ಕೈಗೊಳ್ಳಲಾದ ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಮುಹಿಯುದ್ದೀನ್ ಜುಮಾ ಮಸೀದಿ ಗಡಿಯಾರ ಇದರ ಅಧ್ಯಕ್ಷರಾದ ರಿಯಾಝ್ ಕಲ್ಲಾಜೆ, ಶಾಲಾ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಹಾಜಿ ಇಸ್ಮಾಯಿಲ್ ಕಲ್ಲಾಜೆ, ಅಲ್ತಾಫ್ ದಾರಿಮಿ ಖತೀಬರು ಹಯಾತುಲ್ ಇಸ್ಲಾಮ್ ಜುಮಾ ಮಸೀದಿ ಪೆರ್ಲಾಪು ಮತ್ತು ಅಧ್ಯಾಪಕರು ಮುಹಿಯುದ್ದೀನ್ ಜುಮಾ ಮಸೀದಿ ಗಡಿಯಾರ ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಲ್ಲಿ, ಸಹಕರಿಸಿದ ಎಲ್ಲಾ ಶಾಲೆಗಳ ಅಧ್ಯಾಪಕ ವೃಂದವನ್ನು ಶ್ಲಾಘಿಸಿ, ವಿಜೇತ ವಿದ್ಯಾರ್ಥಿಗಳನ್ನು, ಅಭಿನಂದಿಸಿದ, ಶಾಲಾ ಸಂಚಾಲಕ ಶ್ರೀಯುತ ಅಬ್ದುಲ್ ಖಾದರ್ ಕುಕ್ಕಾಜೆ ಸಾಂದರ್ಭಿಕ ನುಡಿಗಳನ್ನಾಡಿದರು. ಸ್ಥಳೀಯ ಮುಹಿಯುದ್ದೀನ್ ಜುಮಾ ಮಸೀದಿ ಗಡಿಯಾರ ಇದರ ಅಧ್ಯಕ್ಷರಾದ ರಿಯಾಝ್ ಕಲ್ಲಾಜೆಯವರು ಶುಭ ಹಾರೈಸಿದರು. ಸಮಾರೋಪ ಸಮಾರಂಭದಲ್ಲಿ ಸಹ ಶಿಕ್ಷಕಿಯವರಾದ ಮುಬೀನಾ ಶುಭಾನ್ ಆರಂಭದಲ್ಲಿ ಸ್ವಾಗತ ಕೋರಿ, ಕೊನೆಯಲ್ಲಿ ಧನ್ಯವಾದವಿತ್ತರು. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಒಟ್ಟು ಏಳು ಪ್ರಶಸ್ತಿಗಳನ್ನು ಪಡೆದು ಕೆದಿಲ ಕ್ಲಸ್ಟರ್ ಮಟ್ಟದ ಚಾಂಪಿಯನ್, ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಮಲ್ಲಡ್ಕ ತನ್ನದಾಗಿಸಿಕೊಂಡಿತು. ಒಟ್ಟು ಐದು ಪ್ರಶಸ್ತಿಗಳನ್ನು ಪಡೆಯುವುದರೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕೆದಿಲ ದ್ವಿತೀಯ ಸ್ಥಾನವನ್ನು ಗಳಿಸಿತು. ದ.ಕ. ಹಿರಿಯ ಪ್ರಾಥಮಿಕ ಶಾಲೆ, ಪಾಟ್ರಕೋಡಿ ನಾಲ್ಕು ಪ್ರಶಸ್ತಿಗಳನ್ನು ಪಡೆದು ತೃತೀಯ ಸ್ಥಾನವನ್ನು ಪಡೆಯಿತು. ವಿಜೇತರೆಲ್ಲರಿಗೂ, ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ಬಹುಮಾನ ವಿತರಿಸಲಾಯಿತು. ಕ್ಲಸ್ಟರ್ ಮಟ್ಟದ ಈ ಸ್ಪರ್ಧೆಯಲ್ಲಿ, ಕಡೇಶಿವಾಲಯ ಕ್ಲಸ್ಟರ್ ಉಸ್ತುವಾರಿಯನ್ನು, ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಇಲ್ಲಿನ ಸಹ ಶಿಕ್ಷಕಿಯಾದ ಸಿನಾನ ವಹಿಸಿಕೊಂಡರು ಹಾಗೂ ಅಲಿಮತ್ ಸಅದಿಯ ಸಹ ಶಿಕ್ಷಕಿ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಅವರು ಕೆದಿಲ ಕ್ಲಸ್ಟರ್ ಗೆ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಲಾಯಿತು.
ಸಚಿವ ಸಂಪುಟ ಪುನರ್ ರಚನೆ: ಕುತೂಹಲಕ್ಕೆ ಕಾರಣವಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿ
ಬೆಂಗಳೂರು: ಸಂಪುಟ ಪುನರ್ ರಚನೆ ಹಾಗೂ ‘ಅಧಿಕಾರ ಹಂಚಿಕೆ’ ಕುರಿತು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ‘ನಾನೇ ಮುಖ್ಯಮಂತ್ರಿ’ ಎಂದು ಸಿದ್ದರಾಮಯ್ಯ ಪ್ರಕಟಿಸಿದ ಬೆನ್ನಲ್ಲೆ ‘ಅವರಿಗೆ ಒಳ್ಳೆಯದಾಗಲಿ’ ಎಂದು ಶುಭ ಕೋರಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ‘ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ’ ಕಾರ್ಯಕ್ರಮದ ಒಂದೇ ವೇದಿಕೆಯಲ್ಲಿ ಅಕ್ಕ-ಪಕ್ಕ ಕೂತು ಚರ್ಚಿಸಿದ್ದು ವಿಶೇಷವಾಗಿತ್ತು. ‘ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸ್ಪಷ್ಟ ನಿರ್ಧಾರಕ್ಕೆ ಬರಲೇಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಇದು ಪಕ್ಷ ಹಾಗೂ ಸರಕಾರದ ಭವಿಷ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಹೀಗಾಗಿ ಹೈಕಮಾಂಡ್ ಯಾವ ತೀರ್ಮಾನ ಪ್ರಕಟಿಸಲಿದೆ ಎಂಬುದನ್ನು ಕಾದುನೋಡಬೇಕಿದೆ. ಪಕ್ಷದ ಹೈಕಮಾಂಡ್ ನಾಜೂಕಾಗಿ ಎಲ್ಲವನ್ನು ನಿಭಾಯಿಸಬೇಕಾದ ಸ್ಥಿತಿಯಲ್ಲಿದೆ. ಹೀಗಾಗಿ ಎಲ್ಲವನ್ನು ಅಳೆದು-ತೂಗಿ ನಿರ್ಧಾರ ಪ್ರಕಟಿಸಲು ಕಾಲಾವಕಾಶ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ನಿನ್ನೆ ಸಂಜೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಕಟ್ಬೆಲ್ತೂರು | ದಲಿತರ ಬೇಡಿಕೆಗಳಿಗೆ ಡಿಎಚ್ಎಸ್ ಹಕ್ಕೊತ್ತಾಯ
ಕುಂದಾಪುರ, ನ.22: ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕಟ್ಬೆಲ್ತೂರು ಘಟಕದ ನೇತೃತ್ವದಲ್ಲಿ ಸ್ಥಳೀಯ ಗ್ರಾಪಂಗೆ ಮನವಿಯನ್ನು ಶುಕ್ರವಾರ ಅರ್ಪಿಸಲಾಯಿತು. ದಲಿತರ ಬೇಡಿಕೆಗಳನ್ನು ಕಡೆಗಣಿಸಿದಲ್ಲಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಹಾಗೂ ಸಾಮಾಜಿಕ ಹೋರಾಟವನ್ನು ಡಿಎಚ್ಎಸ್ ಮೂಲಕ ಸಂಘಟಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು ಎಚ್ಚರಿಕೆ ನೀಡಿದರು. ಗ್ರಾಪಂ ಅಧ್ಯಕ್ಷೆ ವೈಶಾಲಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇಖಾ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ರಾಮ ಶೆಟ್ಟಿ ಹಾಗೂ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ವಿಮಲಾ, ಅಶೋಕ ಬಳೆಗಾರ, ಶಾರದಾ, ದಲಿತ ಚಿಂತಕ ಶುಭಕರ, ಜಿಲ್ಲಾ ಕಾರ್ಯದರ್ಶಿ ರವಿ ವಿಎಂ, ಹಿರಿಯ ದಲಿತ ಮುಖಂಡರಾದ ಬಾಬು ಬಳ್ಕೂರ್, ಘಟಕದ ಸಂಚಾಲಕ ಸಹನಾ, ಮೊದಲಾದವರು ಉಪಸ್ಥಿತರಿದ್ದರು. ಮುಳ್ಳಿಕಟ್ಟೆಯ ಹೊಸಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೊಭ ರಮೇಶ್ ಅವರನ್ನು ಜಿಲ್ಲಾ ನಾಯಕರಾದ ರವಿ ವಿ.ಎಂ. ಮತ್ತು ಬಾಬುಬಳ್ಕೂರು ಹಾಗೂ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು ಭೇಟಿ ಮಾಡಿ ಅಲ್ಲಿನ ನಿವಾಸಿ ಕೃಷ್ಣ ಅವರ ಮನೆಗೆ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿ ಕೊಡುವಂತೆ ವಿನಂತಿಸಿದರು. ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ಪಿಡಿಓ, ನಂತರದಲ್ಲಿ ಕೃಷ್ಣ ಅವರಿಗೆ ಸಂಬಂಧಪಟ್ಟ ದಾಖಲೆಯನ್ನು ಕೂಡಲೇ ಪಂಚಾಯತ್ ಒದಗಿಸುವಂತೆ ನಿರ್ದೇಶನ ನೀಡಲಾಯಿತು.
‘ಮೆಡಿಕಲ್ ಸ್ಪಾ’ಗಳನ್ನು ಅಧಿಕೃತವಾಗಿ ‘ವೈದ್ಯಕೀಯ ಸಂಸ್ಥೆಗಳುʼ ಎಂದು ಘೋಷಿಸಿದ ರಾಜ್ಯ ಸರಕಾರ
►ಸೌಂದರ್ಯವರ್ಧಕ ಚಿಕಿತ್ಸೆ ನೀಡುವ ರಾಜ್ಯದ ಎಲ್ಲ ಮೆಡಿಕಲ್ ಸ್ಪಾಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಂತ್ರಣಕ್ಕೆ
ದ.ಕ. ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ
ಮಂಗಳೂರು, ನ.22: ದ.ಕ. ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸುಮಾರು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ಗಾಳಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿದಿದೆ. ಜಿಲ್ಲೆಯ ಹಲವಡೆ ಆಗಾಗ ಮಳೆಯಾಗುತ್ತಿದ್ದು, ನಗರದಲ್ಲಿ ಕೆಲವು ದಿನಗಳಿಂದ ಮಳೆ ಕಣ್ಮರೆಯಾಗಿತ್ತು. ಸಿಡಿಲಿನ ಅರ್ಭಟಕ್ಕೆ ಕೆಲವಡೆ ವಿದ್ಯುತ್ ಸಂಪರ್ಕ ಕಡಿದು ಹೋಗಿ ಜನಸಾಮಾನ್ಯರು ತೊಂದರೆ ಅನುಭವಿಸಿದ್ದಾರೆ.
ಮಂಗಳೂರು | ವೀಕೆಂಡ್ ವಾರಿಯರ್ಸ್ ನಿಂದ ಜರ್ಸಿ ಬಿಡುಗಡೆ
ಹಸನ್ ಬಜಾಲ್ ಅವರಿಗೆ ಸನ್ಮಾನ
ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ
ಮಂಗಳೂರು, ನ.22: ಕೇರಳದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಗೆ ಸಂಬಂಧಿಸಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ ಮಂಗಳೂರು ನಗರ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳದ ಕಣ್ಣೂರು ವಲಯದ ಡಿಐಜಿಪಿ ಯತೀಶ್ಚಂದ್ರ ಜಿ. ಎಚ್ ಮತ್ತು ಕಾಸರಗೋಡು ಎಸ್ಪಿ ವಿಜಯ ಭರತ್ ರೆಡ್ಡಿ, ಮಂಗಳೂರು ಡಿಸಿಪಿ ಮಿಥುನ್ ಎಚ್ ಎನ್ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಉಭಯ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ನಡೆಯುವ ಅಪರಾಧ ಪ್ರಕರಣಗಳ ಮಾಹಿತಿ ವಿನಿಮಯ ಮಾಡಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳು, ವಾರಂಟ್ನ ಅಸಾಮಿಗಳು, ಅಂತರ್ ರಾಜ್ಯ ಅಪರಾಧ ಪ್ರಕರಣಗಳು, ಮಾದಕದ್ರವ್ಯ ಸಾಗಾಟ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೇ ಎರಡೂ ರಾಜ್ಯಗಳಲ್ಲಿ ದಾಖಲಾದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಮತ್ತು ವಾರಂಟ್ ಅಸಾಮಿಗಳ ಮಾಹಿತಿ ವಿನಿಮಯ ಮತ್ತು ಪತ್ತೆಯ ಬಗ್ಗೆ ಕಾರ್ಯಯೋಜನೆಯನ್ನು ರೂಪಿಸಲಾಗಿದ್ದು, ಅಪರಾಧ ಪ್ರಕರಣಗಳ ನಿಯಂತ್ರಣ ಮತ್ತು ಪತ್ತೆ ಕಾರ್ಯದಲ್ಲಿ ಪರಸ್ಪರ ಸಹಕಾರ, ಜಂಟಿ ಕಾರ್ಯಾಚರಣೆಗಳ ಬಗ್ಗೆ ಚರ್ಚಿಸಿ, ವಿಚಾರ ವಿನಿಮಯ ನಡೆಸಲಾಗಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಉಡುಪಿ | ಕಾಣೆಯಾದ ಬಾಲಕನನ್ನು ಪತ್ತೆ ಮಾಡಿದ ರೈಲ್ವೆ ಸಿಬ್ಬಂದಿ
ಉಡುಪಿ, ನ.22: ವಾಸ್ಕೋದಿಂದ ನಾಪತ್ತೆಯಾಗಿದ್ದ 14 ವರ್ಷ ಬಾಲಕನೊಬ್ಬನನ್ನು ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಜನರಲ್ ಕೋಚ್ ನಲ್ಲಿ ಮುಖ್ಯ ಟಿಕೇಟ್ ಪರೀಕ್ಷಕ ಪತ್ತೆ ಹಚ್ಚಿದ ಘಟನೆ ನ.20ರಂದು ಕೊಂಕಣ ರೈಲ್ವೆಯಲ್ಲಿ ವರದಿಯಾಗಿದೆ. ರೈಲು ನಂ. 12619 ಮತ್ಸ್ಯಗಂಧ ಎಕ್ಸ್ಪ್ರೆಸ್ನ ಜನರಲ್ ಕೋಚ್ ನಲ್ಲಿ 14 ವರ್ಷ ಪ್ರಾಯದ ಬಾಲಕನೊಬ್ಬ ಶಾಲಾ ಸಮವಸ್ತ್ರದಲ್ಲಿ ಶಾಲಾ ಬ್ಯಾಗ್ನೊಂದಿಗೆ ಟಿಕೇಟ್ ಇಲ್ಲದೇ ಪ್ರಯಾಣಿಸುತ್ತಿರುವುದನ್ನು ಟಿಕೇಟ್ ತಪಾಸಣೆ ವೇಳೆ ಪತ್ತೆ ಹಚ್ಚಿದ ಮುಖ್ಯ ಟಿಕೇಟ್ ಪರೀಕ್ಷಕ ಪ್ರದೀಪ್ ಶ್ರೀಕೆ, ಆತನೊಂದಿಗೆ ನಯವಾಗಿ ಮಾತನಾಡಿ ಎಲ್ಲಾ ವಿವರಗಳನ್ನು ಸಂಗ್ರಹಿಸಿದರು. ಬಾಲಕ ವಾಸ್ಕೊದ ತನ್ನ ಮನೆಯಿಂದ ಶಾಲಾ ಯುನಿಫಾರ್ಮ್ ಹಾಗೂ ಬ್ಯಾಗ್ನೊಂದಿಗೆ ಓಡಿ ಬಂದಿದ್ದು, ರೈಲಿನಲ್ಲಿ ಒಬ್ಬನೇ ಪ್ರಯಾಣಿಸುತ್ತಿರುವುದನ್ನು ಅವರು ಆತನೊಂದಿಗಿನ ಮಾತುಕತೆಯಿಂದ ಅರಿತುಕೊಂಡರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪ್ರದೀಪ್, ರತ್ನಗಿರಿ ನಿಲ್ದಾಣದಲ್ಲಿ ರೈಲ್ವೆ ಪೊಲೀಸ್ ಹಾಗೂ ಸಿಸಿ ಸಿಬ್ಬಂದಿ ಅವರಿಗೆ ಬಾಲಕನನ್ನು ಒಪ್ಪಿಸಿ ಆತನ ಪೋಷಕರನ್ನು ಪತ್ತೆ ಹಚ್ಚುವಂತೆ ತಿಳಿಸಿದರು. ಅದರಂತೆ ಕಾರ್ಯಪ್ರವೃತ್ತರಾದ ರೈಲ್ವೆ ಪೊಲೀಸರು, ಬಾಲಕ ವಾಸ್ಕೋದ ಶಾಲೆಯಿಂದ ನಾಪತ್ತೆಯಾಗಿದ್ದು, ಆತನ ಹೆತ್ತವರು ಮಗನ ಪತ್ತೆಗಾಗಿ ಎಲ್ಲಾ ಮಾಧ್ಯಮಗಳ ಮೂಲಕ ಮಾಹಿತಿಯನ್ನು ಹಂಚಿಕೊಂಡಿರುವುದನ್ನು ಅರಿತರು. ಬಳಿಕ ಬಾಲಕನ ಹೆತ್ತವರಿಗೆ ಮಾಹಿತಿ ನೀಡಿ, ಅವರ ವಶಕ್ಕೆ ಬಾಲಕನನ್ನು ಒಪ್ಪಿಸಲಾಯಿತು. ಕೊಂಕಣ ರೈಲ್ವೆ ಸಿಬ್ಬಂದಿಗಳ ಸಕಾಲಿಕ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಮಂಗಳೂರು | ಅಂಚೆ ಚೀಟಿ- ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ
800 ನಾಣ್ಯ, 2,000 ಅಂಚೆಚೀಟಿಗಳ ಪ್ರದರ್ಶನ
ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಕಲಬುರಗಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 29 ಮಂದಿ ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಗರದ ಅನ್ನಪೂರ್ಣ ಕ್ರಾಸ್ ಸಮೀಪದಲ್ಲಿರುವ ಕಲಾ ಮಂಡಳ ಸಭಾಗೃಹದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀನಿವಾಸ ಸರಡಗಿಯ ಹಿರೇಮಠ ಸಂಸ್ಥಾನದ ಡಾ.ರೇವಣಸಿದ್ಧ ಶಿವಾಚಾರ್ಯರು, ಎಲ್ಲಾ ಭಾಷೆಗಳಲ್ಲಿ ಶ್ರೇಷ್ಟವಾದ ಭಾಷೆ ಎಂದರೆ ಕನ್ನಡ, ಇದಕ್ಕೆ ತನ್ನದೇ ಆದ ಇತಿಹಾಸ ಇದೆ. ಇದನ್ನು ಮೀರಿಸುವ ಭಾಷೆ ಯಾವುದೂ ಇಲ್ಲ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅರುಣ್ ಕುಮಾರ್ ಎಂ.ವೈ.ಪಾಟೀಲ್, ಕನ್ನಡವನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು. ರೈತ ಹೋರಾಟಗಾರ ದಯಾನಂದ ಪಾಟೀಲ್, ಡಾ. ಮಲ್ಲಿಕಾರ್ಜುನ್ ಯಡ್ರಾಮಿ ರಚಿಸಿದ 'ಅಂತರಂಗದ ಪ್ರಣತಿ' ಎಂಬ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಕಸಾಪ ಮಾಜಿ ಅಧ್ಯಕ್ಷ ಮಹಿಪಾಲರೆಡ್ಡಿ ಮಾತನಾಡಿ, ಕಸಾಪ ಅಧ್ಯಕ್ಷರಾಗಿ ಬಿ.ಎಚ್ ನಿರಗುಡಿ ಗೆದ್ದು ಬಂದರೆ, ಮುಂದಿನ ದಿನಗಳಲ್ಲಿ 'ಕೃಷಿ ಸಾಹಿತ್ಯ ಸಮ್ಮೇಳನ' ಆಯೋಜಿಸುವರು ಎಂದು ಭರವಸೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕಲ್ಯಾಣರಾವ್ ಪಾಟೀಲ್ ಅವರು ಪ್ರಶಸ್ತಿ ವಿತರಿಸಿದರು. ಪ್ರತಿಷ್ಠಾನದ ಅಧ್ಯಕ್ಷ, ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಕವಿಗೋಷ್ಠಿ ಕಾರ್ಯಕ್ರಮದಲ್ಲಿ 12 ಮಂದಿ ಕವಿಗಳು ನಾಡು, ನುಡಿ, ಇತರ ವಿಷಯಗಳ ಬಗ್ಗೆ ತಮ್ಮ ಕವನಗಳನ್ನು ವಾಚಿಸುವ ಮೂಲಕ ಗಮನ ಸೆಳೆದರು. ಕಾಂಗ್ರೆಸ್ ಮುಖಂಡರಾದ ಕಿಶೋರ್ ಗಾಯಕ್ವಾಡ್, ಡಾ.ಎಸ್.ಎಸ್.ಗುಬ್ಬಿ, ಮಲ್ಲಿಕಾರ್ಜುನ್ ಯಡ್ರಾಮಿ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಣ್ಣಾರಾಯ ಶೆಳ್ಳಗಿ, ನಾಗಪ್ಪ ಗೋಗಿ, ಅಪ್ಪಾರಾವ್ ಅಕ್ಕೋಣಿ, ಸೂರ್ಯಕಾಂತ್ ಪೂಜಾರಿ, ಶಿವಾನಂದ ಮಠಪತಿ, ಸಂದೀಪ್ ಮಾಳಗಿ, ಶಿವಾನಂದ ಖಜೂರಿ, ಜಿ.ಎಸ್.ಮಾಲಿ ಪಾಟೀಲ್, ಅಪ್ಪಾಸಾಬ ತೀರ್ಥೆ, ಚಾಮರಾಜ ದೊಡ್ಡಮನಿ, ಪರ್ವೀನ್ ಸುಲ್ತಾನಾ, ಸುನೀಲ್ ಮಾನ್ಪಡೆ, ದಸ್ತಗೀರ ನದಾಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಲ್ಪೆ | ಬೋಟಿನಿಂದ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು
ಮಲ್ಪೆ, ನ.22: ಮಲ್ಪೆ ದಕ್ಕೆಯಲ್ಲಿ ಬೋಟಿನಿಂದ ಮೀನು ಖಾಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನ.21ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಮಲ್ಪೆಯ ರವಿ ಟಿ.ಸಾಲ್ಯಾನ್(51) ಎಂದು ಗುರುತಿಸಲಾಗಿದೆ. ಇವರು ಮಲ್ಪೆ ದಕ್ಕೆಯಲ್ಲಿ ಜಯಮಂಗಳ ಬೋಟಿನಲ್ಲಿ ಮೀನು ಖಾಲಿ ಮಾಡುತ್ತಿದ್ದು, ಈ ವೇಳೆ ಅವರು ಆಯತಪ್ಪಿ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಮೇಲಕ್ಕೆತ್ತಿ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಈಗಾಗಲೇ ರವಿ ಸಾಲ್ಯಾನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಜಾ ನೆಲದಲ್ಲಿ ಮತ್ತೆ ಅಲ್ಲೋಲ ಕಲ್ಲೋಲ, ಇಸ್ರೇಲ್ ವಾಯುದಾಳಿಗೆ 14 ಜನ ಬಲಿ?
ಗಾಜಾ ನೆಲದಲ್ಲಿ ರಕ್ತಪಾತ ನಿಂತಿಲ್ಲ, ಗಾಜಾ ನೆಲದಲ್ಲಿ ಪದೇ ಪದೇ ಹಿಂಸಾಚಾರವು ಭುಗಿಲೆದ್ದು ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪರಿಸ್ಥಿತಿ ಇನ್ನೂ ಹಿಡಿತಕ್ಕೆ ಸಿಕ್ಕಿಲ್ಲ, ಇಂತಹ ಸಮಯದಲ್ಲೇ ಮತ್ತೆ ಇಂದು ಘೋರ ದುರಂತ ಒಂದು ನಡೆದುಬಿಟ್ಟಿದೆ. ಅಂದಹಾಗೆ ಗಾಜಾ ಪ್ರದೇಶದಲ್ಲಿ ತನ್ನ ಕಾರ್ಯಾಚರಣೆ ಮುಂದುವರಿಸಿರುವ ಇಸ್ರೇಲ್ ಮಿಲಿಟರಿ ಮತ್ತಷ್ಟು ಪ್ರದೇಶಗಳ ಮೇಲೆ ವಾಯುದಾಳಿ
ಮಣಿಪಾಲ | ಫ್ಲ್ಯಾಟ್ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ
ಮಣಿಪಾಲ, ನ.22: ಎರಡು ಅಪಾರ್ಟ್ಮೆಂಟ್ ಗಳಿಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು, ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಗುಜರಾತ್ ಮೂಲದ ಕುಶ್ ಕೆಯುಶ್ ಪಟೇಲ್(20) ಹಾಗೂ ಉತ್ತರ ಪ್ರದೇಶ ಮೂಲದ ದೇವಾಂಶ್ ತ್ಯಾಗಿ(22) ಬಂಧಿತ ಆರೋಪಿಗಳು. ಇವರಿಂದ ಸುಮಾರು 36 ಸಾವಿರ ರೂ. ಮೌಲ್ಯದ 727 ಗ್ರಾಂ ಗಾಂಜಾ ಹಾಗೂ 30 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಎಸ್ಸೈ ಅನಿಲ ಬಿ.ಎಂ. ಮತ್ತು ಸಿಬ್ಬಂದಿರವರನ್ನೊಳಗೊಂಡ ತಂಡ ನ.20ರಂದು ಸಂಜೆ ಮಣಿಪಾಲ ವಿದ್ಯಾರತ್ನ ನಗರದ ಅಪಾರ್ಟೆಂಟ್ ಗೆ ದಾಳಿ ನಡೆಸಿ, ಕುಶ್ ಕೆಯುಶ್ ಪಟೇಲ್ ನನ್ನು ವಶಕ್ಕೆ ಪಡೆದರು. ಬಳಿಕ ಆತ ನೀಡಿದ ಮಾಹಿತಿಯಂತೆ ದೇವಾಂಶ್ ತ್ಯಾಗಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಗಾಂಜಾವನ್ನು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಶೇಖರಿಸಿ ಇಟ್ಟಿರುವುದು ತನಿಖೆಯಿಂದ ಕಂಡುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕ ವಸ್ತುಗಳನ್ನು ಮಣಿಪಾಲದಲ್ಲಿ ಮಾರಾಟ ಮಾಡುವ ಜಾಲದ ಬಗ್ಗೆ ತನಿಖೆ ಮುಂದುವರಿಸಲಾಗಿದೆ. ಈ ಪ್ರಕರಣದ ವಿಚಾರಣೆ ಮುಂದುವರಿಸಲಾಗಿದ್ದು, ಮಣಿಪಾಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಹಲವಾರು ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿರುವುದು ಹಾಗೂ ಸೇವನೆ ಮಾಡಿರುವುದು ತಿಳಿದು ಬಂದಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.
ಅಲ್-ಫಲಾಹ್ ಗ್ರೂಪ್ ಅಧ್ಯಕ್ಷರಿಗೆ ಸಂಬಂಧಿಸಿದ ಕಟ್ಟಡದ ನೆಲಸಮಕ್ಕೆ ಮಧ್ಯಪ್ರದೇಶ ಹೈಕೋರ್ಟ್ ತಡೆ
ಭೋಪಾಲ,ನ.22: ಅಲ್-ಫಲಾಹ್ ಗ್ರೂಪ್ ನ ಅಧ್ಯಕ್ಷ ಜವಾದ್ ಸಿದ್ದೀಕಿ ಅವರಿಗೆ ಸಂಬಂಧಿಸಿದ ಮಹುದಲ್ಲಿಯ ಮನೆಯ ನೆಲಸಮಕ್ಕೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು 15 ದಿನಗಳ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ನ.10ರಂದು ದಿಲ್ಲಿಯ ಕೆಂಪು ಕೋಟೆ ಬಳಿ ಸಂಭವಿಸಿದ್ದ ಸ್ಫೋಟ ಮತ್ತು ಅಲ್-ಫಲಾಹ್ ಮೆಡಿಕಲ್ ಕಾಲೇಜಿನ ನಡುವೆ ಆರೋಪಿತ ನಂಟಿನ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಸಿದ್ದೀಕಿ ಅವರೂ ತನಿಖಾ ಸಂಸ್ಥೆಯ ನಿಗಾದಲ್ಲಿದ್ದಾರೆ. ಮಹು ಕಂಟೋನ್ಮೆಂಟ್ ಬೋರ್ಡ್ ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ತೆಗೆದುಹಾಕುವಂತೆ ಜಾರಿಗೊಳಿಸಿರುವ ನೋಟಿಸನ್ನು ಪ್ರಶ್ನಿಸಿ ಮನೆಯ ಪ್ರಸ್ತುತ ಮಾಲಿಕ ಅಬ್ದುಲ್ ಮಜೀದ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದೆ. ಆಸ್ತಿಗೆ ಸಂಬಂಧಿಸಿದಂತೆ ಹಿಂದಿನ ನೋಟಿಸ್ಗಳನ್ನು 1996-97ರಲ್ಲಿ ಹೊರಡಿಸಲಾಗಿತ್ತು ಎನ್ನುವುದನ್ನು ಗಮನಿಸಿದ ನ್ಯಾ.ಪ್ರಣಯ್ ವರ್ಮಾ ಅವರು, ಅಧಿಕಾರಿಗಳು ಸುಮಾರು 30 ವರ್ಷಗಳ ಬಳಿಕ ಕ್ರಮಕ್ಕೆ ಮುಂದಾಗಿದ್ದರೆ ಅರ್ಜಿದಾರರ ಅಹವಾಲು ಆಲಿಸಲು ಸೂಕ್ತ ಅವಕಾಶವನ್ನು ನೀಡಬೇಕಿತ್ತು ಎಂದು ಹೇಳಿದರು. ಅರ್ಜಿಯ ಪ್ರಕಾರ ಮನೆಯು ಮೂಲತಃ ಸಿದ್ದೀಕಿಯವರ ತಂದೆ ಅಹ್ಮದ್ ಅವರಿಗೆ ಸೇರಿದ್ದು, ಅವರು ನಂತರ ಅದನ್ನು ಸಿದ್ದೀಕಿಯವರಿಗೆ ವರ್ಗಾಯಿಸಿದ್ದರು. ಸಿದ್ದೀಕಿ 2021ರಲ್ಲಿ ಅದನ್ನು ಮಜೀದ್ಗೆ ಉಡುಗೊರೆಯಾಗಿ ನೀಡಿದ್ದರು.
ಬಾಕಿ ಇರುವ 90,000 ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವುದು ನನ್ನ ಪ್ರಥಮ ಆದ್ಯತೆ: ನಿಯೋಜಿತ ಸಿಜೆಐ ಸೂರ್ಯಕಾಂತ್
ಹೊಸದಿಲ್ಲಿ: ಮುಖ್ಯ ನ್ಯಾಯಮೂರ್ತಿ ಅವಧಿಯಲ್ಲಿ ನನ್ನೆದುರಿರುವ ಅತಿ ದೊಡ್ಡ ಸವಾಲೆಂದರೆ, ಬಾಕಿ ಇರುವ 90,000 ಪ್ರಕರಣಗಳ ಸಂಖ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಹಂತಕ್ಕೆ ತರುವುದಾಗಿದೆ ಎಂದು ಶನಿವಾರ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯ ಪಟ್ಟಿದ್ದಾರೆ. ಹೊಸದಿಲ್ಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಜಾಲದಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ 90,225ಕ್ಕೆ ತಲುಪಿದೆ ಎಂದು ಹೇಳಿದ್ದಾರೆ. ದೇಶದ ಇತಿಹಾಸದಲ್ಲೇ ಸುಪ್ರೀಂ ಕೋರ್ಟ್ ನಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಪ್ರಕರಣಗಳು ಬಾಕಿ ಇರುವ ಕುರಿತು ನಾನು ಯಾರನ್ನೂ ದೂಷಿಸಲು ಹೋಗುವುದಿಲ್ಲ ಎಂದೂ ಅವರು ಹೇಳಿದ್ದಾರೆ. “ನಾನು ಇದಕ್ಕೆ ಯಾರನ್ನೂ ತಪ್ಪಿತಸ್ಥರು ಎಂದು ಹೊಣೆಗಾರರನ್ನಾಗಿಸುವುದಿಲ್ಲ. ಅದು ಅಪ್ರಸ್ತುತವಾಗಿದೆ” ಎಂದು ಮಾಧ್ಯಾಮಗಳೊಂದಿಗೆ ನಡೆದ ಅನೌಪಚಾರಿಕ ಸಂವಾದದಲ್ಲಿ ಅವರು ಹೇಳಿದ್ದಾರೆ. ನವೆಂಬರ್ 24ರಂದು ಅವರು ಸುಪ್ರೀಂ ಕೋರ್ಟ್ ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಾಕಿ ಇರುವ ಭಾರಿ ಸಂಖ್ಯೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಅಧ್ಯಯನಶೀಲ ಮತ್ತು ಪ್ರಯೋಗಶೀಲ ಧೋರಣೆಯನ್ನು ಅಳವಡಿಸಿಕೊಳ್ಳುವ ಇಂಗಿತವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಬಾಕಿ ಇರುವ ಪ್ರಮುಖ ಕಾನೂನು ಪ್ರಶ್ನೆಗಳನ್ನು ಹೊಂದಿರುವ ಮಹತ್ವದ ಪ್ರಕರಣಗಳನ್ನು ಗುರುತಿಸುವುದು ಈ ಕ್ರಮಗಳ ಪೈಕಿ ಒಂದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬಾಡಿಗೆ, ಅಡ್ವಾನ್ಸ್ ದುಬಾರಿ; 3 ತಿಂಗಳಿಗೆ ಮನೆ ಬೇಡಿಕೆ ಕುಸಿತ, ಯಾವ ನಗರದಲ್ಲಿ ಹೇಗಿದೆ ಡಿಮ್ಯಾಂಡ್!
ಐಟಿಬಿಟಿ ಸಿಟಿಯಾದ ಬೆಂಗಳೂರಿನಲ್ಲಿ ಬಾಡಿಗೆ ಮತ್ತು ಅಡ್ವಾನ್ಸ್ ಹೆಚ್ಚಾಗುತ್ತಿರುವ ಹಿನ್ನೆಲೆ, ಮೂರೇ ತಿಂಗಳಿಗೆ ಬೇಡಿಕೆ ಕುಸಿತಗೊಂಡಿದೆ ಎಂದು ಮ್ಯಾಜಿಕ್ಬ್ರಿಕ್ಸ್ ವರದಿಯಿಂದ ತಿಳಿದುಬಂದಿದೆ. ದೆಹಲಿ ಮತ್ತು ಎನ್ಸಿಆರ್ ಭಾಗದಲ್ಲಿ ಬಾಡಿಗೆ ಮನೆಗಳಿಗೆ ದೇಶದಲ್ಲೇ ಅತಿ ಹೆಚ್ಚು ಬೇಡಿಕೆಯಿದೆ. ಆದರೆ ದಕ್ಷಿಣದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಚೆನ್ನೈನಲ್ಲಿ ಬೇಡಿಕೆ ತಗ್ಗಿರುವುದು ಕಂಡುಬಂದಿದೆ. ಇದಕ್ಕೆ ದುಬಾರಿ ಬಾಡಿಗೆ ಕಾರಣ ಎನ್ನಲಾಗಿದೆ.
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬೆನ್ನಿಗೇ, ಶನಿವಾರ ಪಂಚಾಯತಿ ಹಂತದಿಂದ ರಾಜ್ಯ ಮಟ್ಟದವರೆಗಿನ ಜನ್ ಸೂರತ್ ಪಕ್ಷದ ಸಂಘಟನಾತ್ಮಕ ಘಟಕಗಳನ್ನು ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ವಿಸರ್ಜಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿರುವ ಜನ್ ಸೂರಜ್ ಪಕ್ಷದ ವಕ್ತಾರ ಸೈಯದ್ ಮಾಸಿಹ್ ಉದ್ದೀನ್, ಮುಂದಿನ ಒಂದೂವರೆ ತಿಂಗಳಲ್ಲಿ ನೂತನ ಘಟಕಗಳನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಮನೋಜ್ ಭಾರತಿ ನೇತೃತ್ವದಲ್ಲಿ ಪಾಟ್ನಾದಲ್ಲಿ ಆಯೋಜನೆಗೊಂಡಿದ್ದ ಜನ್ ಸೂರಜ್ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಈ ಸಭೆಯಲ್ಲಿ ಭಾರತೀಯ ಸೇನೆಯ ಮಾಜಿ ಉಪ ಮುಖ್ಯಸ್ಥ ಎಸ್.ಕೆ.ಸಿಂಗ್, ಮಾಜಿ ಕೇಂದ್ರ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ಹಾಗೂ ಹಿರಿಯ ವಕೀಲ ವೈ.ವಿ.ಗಿರಿಯೊಂದಿಗೆ ಪ್ರಶಾಂತ್ ಕಿಶೋರ್ ಕೂಡಾ ಉಪಸ್ಥಿತರಿದ್ದರು. ಬಳಿಕ ಬಿಡುಗಡೆ ಮಾಡಲಾಗಿರುವ ಪತ್ರಿಕಾ ಪ್ರಕಟನೆಯಲ್ಲಿ, “ರಾಜ್ಯದ ಎಲ್ಲ 12 ವಿಭಾಗಗಳ ಹೊಣೆಗಾರಿಕೆಯನ್ನು ಹಿರಿಯ ನಾಯಕರಿಗೆ ವಹಿಸಲಾಗಿದ್ದು, ಪರಿಣಾಮಕಾರಿ ಮತ್ತು ಸಕ್ರಿಯ ಸಂಘಟನಾತ್ಮಕ ಚೌಕಟ್ಟನ್ನು ಮರು ರಚಿಸಲಾಗುವುದು. ಪಕ್ಷದ ಈ ತಂಡವು ಚುನಾವಣೆಯಲ್ಲಿ ಆಗಿರುವ ಪರಾಭವದ ಕಾರಣಗಳನ್ನು ಪತ್ತೆ ಹಚ್ಚಲು ವಿಸ್ತೃತ ಚರ್ಚೆಗಳನ್ನು ನಡೆಸುವುದು ಹಾಗೂ ಅಶಿಸ್ತು ಅಥವಾ ಆಂತರಿಕ ದ್ರೋಹದ ದೋಷಿಗಳಾಗಿರುವ ನಾಯಕರಿಗೆ ಸಂಬಂಧಿಸಿದಂತೆ ವರದಿಯೊಂದನ್ನು ಸಲ್ಲಿಸುವುದು” ಎಂದು ಹೇಳಲಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತನ್ನ ಬಹುತೇಕ ಅಭ್ಯರ್ಥಿಗಳು ತಮ್ಮ ಠೇವಣಿಗಳನ್ನು ಕಳೆದುಕೊಳ್ಳುವ ಮೂಲಕ, ರಾಜ್ಯದಲ್ಲಿ ಖಾತೆ ತೆರೆಯುವಲ್ಲಿ ಜನ್ ಸೂರಜ್ ಪಕ್ಷ ವಿಫಲಗೊಂಡಿತ್ತು.
ಶ್ರೀರಾಮನ ಕುರಿತ ಹೇಳಿಕೆ | ಡಿ. 18ರಂದು ಹಾಜರಾಗಲು ರಾಹುಲ್ ಗಾಂಧಿಗೆ ವಾರಣಾಸಿ ನ್ಯಾಯಾಲಯ ಸೂಚನೆ
ಲಕ್ನೊ, ನ. 22: ಶ್ರೀರಾಮನ ಬಗ್ಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಡಿಸೆಂಬರ್ 18ರಂದು ಹಾಜರಾಗುವಂತೆ ವಾರಣಾಸಿ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಸೂಚಿಸಿದೆ. ಈ ಪ್ರಕರಣವನ್ನು ವಿಶೇಷ ನ್ಯಾಯಾಧೀಶ (ಎಂಪಿ-ಎಂಎಲ್ಎ) ಯುಜುರ್ವೇದ್ ವಿಕ್ರಮ್ ಸಿಂಗ್ ಅವರ ನ್ಯಾಯಾಲಯದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ, ರಾಹುಲ್ ಗಾಂಧಿ ಅವರ ಗೈರು ಹಾಜರಿನ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಯಿತು. ಶ್ರೀರಾಮನ ಕುರಿತ ರಾಹುಲ್ ಗಾಂಧಿ ಹೇಳಿಕೆ ಹಿನ್ನೆಲೆಯಲ್ಲಿ ನ್ಯಾಯವಾದಿ ಹರಿಕೃಷ್ಣ ಪಾಂಡೆ ಅವರು ಈ ವರ್ಷ ಮೇ 12ರಂದು ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಪಾಂಡೆ ಅವರು ಎಪ್ರಿಲ್ 21ರಂದು ಅಮೆರಿಕದ ಬ್ರೌನ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಹನದ ಸಂದರ್ಭ ರಾಹುಲ್ ಗಾಂಧಿ ಅವರು ಶ್ರೀರಾಮ ಪೌರಾಣಿಕ ವ್ಯಕ್ತಿ. ಆಗಿನ ಕಥೆಗಳು ಕಾಲ್ಪನಿಕ ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸಿದ್ದರು. ಪಾಂಡೆ ಅವರ ಈ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿತ್ತು. ಅನಂತರ ಪಾಂಡೆ ಅವರು ಸೆಪ್ಟಂಬರ್ 26ರಂದು ಅದೇ ನ್ಯಾಯಾಲಯದಲ್ಲಿ ಪುನರ್ ಪರೀಶೀಲನಾ ಅರ್ಜಿ ಸಲ್ಲಿಸಿದ್ದರು.
ವೆನೆಝುವೆಲಾದ ನೊಬೆಲ್ ಪ್ರಶಸ್ತಿ |ವಿಜೇತೆ ಪ್ರಶಸ್ತಿ ಸ್ವೀಕರಿಸಲು ದೇಶವನ್ನು ತೊರೆದರೆ ದೇಶಭ್ರಷ್ಟರೆಂದು ಘೋಷಣೆ: ಸರಕಾರ
ಕ್ಯಾರಕಾಸ್, ನ.22: ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿರುವ ವೆನೆಝುವೆಲಾದ ವಿಪಕ್ಷ ನಾಯಕಿ ಮರಿಯಾ ಕೊರಿನಾ ಮಚಾದೊ ಅಡಗುದಾಣದಿಂದ ಹೊರಬಂದು ಪ್ರಶಸ್ತಿ ಸ್ವೀಕರಿಸಲು ನಾರ್ವೆಗೆ ತೆರಳಿದರೆ ಅವರನ್ನು ದೇಶಭ್ರಷ್ಟರೆಂದು ಪರಿಗಣಿಸುವುದಾಗಿ ವೆನೆಝುವೆಲಾದ ಅಟಾರ್ನಿ ಜನರಲ್ರನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಓಸ್ಲೋದಲ್ಲಿ ಡಿಸೆಂಬರ್ 10ರಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಚಾದೊ ಈ ಹಿಂದೆ ಆಸಕ್ತಿ ವ್ಯಕ್ತಪಡಿಸಿದ್ದರು. `ಹಲವಾರು ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅವರು ವೆನೆಝುವೆಲಾದಿಂದ ಹೊರಗೆ ತೆರಳಿದರೆ ಪಲಾಯನ ಮಾಡಿದವರು ಎಂದು ಪರಿಗಣಿಸಲಾಗುತ್ತದೆ. ಮಚಾದೊ ವಿರುದ್ಧ `ಪಿತೂರಿ, ದ್ವೇಷದ ಪ್ರಚೋದನೆ, ಭಯೋತ್ಪಾದನೆ ಕೃತ್ಯಗಳ' ಆರೋಪವಿದೆ ಎಂದು ವೆನೆಝುವೆಲಾದ ಅಟಾರ್ನಿ ಜನರಲ್ ತರೆಕ್ ವಿಲಿಯಮ್ ಹೇಳಿದ್ದಾರೆ. ವೆನೆಝುವೆಲಾದ `ಉಕ್ಕಿನ ಮಹಿಳೆ' ಎಂದು ಕರೆಯಲ್ಪಡುವ ಮಚಾದೊ(58 ವರ್ಷ) ಅಧ್ಯಕ್ಷೀಯ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿದ್ದರು. 2024ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸದಂತೆ ಅವರನ್ನು ನಿಷೇಧಿಸಿದ ಬಳಿಕ ಅಧ್ಯಕ್ಷ ನಿಕೋಲಸ್ ಮಡುರೊ ಗೆಲುವು ಸಾಧಿಸಿದ್ದರು. ಆದರೆ ಚುನಾವಣೆ ನ್ಯಾಯಸಮ್ಮತ ರೀತಿಯಲ್ಲಿ ನಡೆದಿಲ್ಲ ಎಂದು ಅಂತಾರಾಷ್ಟ್ರೀಯ ವೀಕ್ಷಕರು ಹೇಳಿದ್ದರು. ನೋಬೆಲ್ ಪ್ರಶಸ್ತಿ ಪಡೆದಿರುವುದು ಮಡುರೊ ಆಡಳಿತದಿಂದ ತನಗೆ ಸಾಕಷ್ಟು ರಕ್ಷಣೆ ಒದಗಿಸಿದೆ ಎಂದು ಇತ್ತೀಚೆಗೆ ಮಚಾದೋ ಪ್ರತಿಕ್ರಿಯಿಸಿದ್ದರು.
ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ಪತ್ತೆ
ಬೀದರ್ : ಭಾಲ್ಕಿ ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ಇರುವ ಮಾಂಜ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ. ಹಲಸಿತೂಗಾಂವ್ ಗ್ರಾಮದ ನಿವಾಸಿ ದಿಗಂಬರ ಸೂರ್ಯವಂಶಿ(21) ಮೃತಪಟ್ಟ ಯುವಕನಾಗಿದ್ದಾನೆ. ನವೆಂಬರ್ 16ರಂದು ತನ್ನ ಗೆಳೆಯರೊಂದಿಗೆ ಹಲಸಿತೂಗಾಂವ್ ಗ್ರಾಮದ ಬಳಿ ಇರುವ ಮಾಂಜ್ರಾ ನದಿಗೆ ಈಜಲು ತೆರಳಿದ್ದ ದಿಗಂಬರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತದೇಹದ ಪತ್ತೆಗಾಗಿ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಶನಿವಾರ ವಾಂಜರಖೇಡ್ ಗ್ರಾಮದ ಬಳಿಯ ಮಾಂಜ್ರಾ ನದಿ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ.
ಮಂಗಳೂರು | ನ.23 ರಂದು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ಮಂಗಳೂರಿನಲ್ಲಿ ನಮೋ ಚೆಸ್ ಟೂರ್ನಮೆಂಟ್ ಆಯೋಜನೆ
ಮಂಗಳೂರು, ನ.22: ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ’ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ. ಈಗಾಗಾಲೇ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು 500ಕ್ಕೂ ಹೆಚ್ಚು ಆಸಕ್ತರಿಂದ ನೋಂದಾವಣೆಯಾಗಿದ್ದು, ಸಬ್ ಜ್ಯೂನಿಯರ್ (ಯು-10) ಬಾಲಕ ಮತ್ತು ಬಾಲಕಿಯರ , ಜ್ಯೂನಿಯರ್ (ಯು-15) ಬಾಲಕ ,ಬಾಲಕಿಯರ , ಓಪನ್ ಕೆಟಗರಿ ಈ ಮೂರು ವಿಭಾಗದಲ್ಲಿ ಟೂರ್ನಮೆಂಟ್ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಬೆಳಗ್ಗೆ8ಕ್ಕೆ ತಪ್ಪದೇ ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕಾಗಿದ್ದು, 8.30ಕ್ಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್ ಯುವ ಪರಿಕಲ್ಪನೆಯಡಿ ಈ ಕ್ರೀಡಾ ಮಹೋತ್ಸವ ಆಯೋಜಿಸಲಾಗಿದೆ. ನ.23ರ ಬಳಿಕ ಪ್ರತಿ ವಾರವು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ವಾಲಿಬಾಲ್, ತ್ರೋಬಾಲ್, ಕುಸ್ತಿ, ಕಬ್ಬಡ್ಡಿ, ಹಗ್ಗ - ಜಗ್ಗಾಟ, ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾಟಗಳನ್ನು ಆಯೋಜಿಸಲಾಗುತ್ತದೆ. ಈ ವಾರ ಚೆಸ್ ಟೂರ್ನಮೆಂಟ್ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳು, ಯುವಕರು ಸೇರಿ ಕ್ರೀಡಾಸಕ್ತರು ಈ ಟೂರ್ನಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ವಿ.ಪ.ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನೀಲ್ ಅಚಾರ್, ಜಿಲ್ಲಾಧ್ಯಕ್ಷ ಅಮರಶ್ರೀ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಂಗಳೂರು | ಕೇಂದ್ರ ಸರಕಾರ ಜಾರಿಗೊಳಿಸಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ
ಮಂಗಳೂರು, ನ.22: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೊಳಿಸಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಇಂದು ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು ಸಿಐಟಿಯು ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು, ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಸರಕಾರ ಈ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಬಾರದು ಎಂದು ಒತ್ತಾಯಿಸಿದರು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ಕರ್ನಾಟಕ ರಾಜ್ಯ ನಾಯಕ ಡಾ.ಕೆ ಪ್ರಕಾಶ್ ಅವರು, ದೇಶದ ಕಾರ್ಮಿಕ ವರ್ಗ ಸಮರಧೀರ ಹೋರಾಟಗಳ ಮೂಲಕ ರೂಪಿಸಿರುವ ನೂರಾರು ಕಾರ್ಮಿಕ ಕಾನೂನುಗಳಲ್ಲಿ 29 ಪ್ರಮುಖ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿದ ಕೇಂದ್ರ ಸರಕಾರ ಈ ದೇಶದ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನಲ್ಲ. ಈ ಸಂಹಿತೆಯು ಅತ್ಯಂತ ಅಪಾಯಕಾರಿ, ಅಪ್ರಜಾಸತ್ತಾತ್ಮಕ, ಕಾರ್ಮಿಕ ವಿರೋಧಿಯಾಗಿದ್ದು, ಎಲ್ಲಾ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಮೌಲ್ಯಗಳನ್ನು ನಾಶಗೊಳಿಸಿ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ಕೊಂಡೊಯ್ಯುವ ಮೂಲಕ ದೇಶವನ್ನೇ ಸರ್ವನಾಶಗೊಳಿಸುವ ಹುನ್ನಾರ ಅಡಗಿದೆ ಎಂದು ತೀವ್ರವಾಗಿ ಟೀಕಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು, ಕಳೆದ ಅವಧಿಯಲ್ಲಿ ಇದೇ ನರೇಂದ್ರ ಮೋದಿ ಸರಕಾರ 2019ರಲ್ಲಿ ವೇತನ ಸಂಹಿತೆ ಹಾಗೂ 2020ರಲ್ಲಿ ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತಾ ಸಂಹಿತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಗಳನ್ನು ಜಾರಿಗೆ ತಂದಿದ್ದರೂ ನಂತರದ ಐದಾರು ವರ್ಷಗಳಲ್ಲಿ ಕಾರ್ಮಿಕ ವರ್ಗದ ನಿರಂತರ ಪ್ರಬಲ ಹೋರಾಟಗಳು ನಡೆದ ಫಲವಾಗಿ ಕೇಂದ್ರ ಸರಕಾರ ಹಿಂದೆ ಸರಿದಿತ್ತು. ಮೂರನೆ ಬಾರಿಗೆ ಅಧಿಕಾರಕ್ಕೆ ಬಂದ ಈ ಸರಕಾರ ಕಾರ್ಪೊರೇಟ್ ಹಾಗೂ ದೊಡ್ಡ ಬಂಡವಾಳಿಗರ ಪರವಾಗಿ ನಿರಂತರವಾಗಿ ತುತ್ತೂರಿ ಬಾರಿಸಿತು. ಇತ್ತೀಚಿನ ಬಿಹಾರ ಚುನಾವಣಾ ಫಲಿತಾಂಶ ಹಾಗೂ ಅಧಿಕಾರದ ಮದದಿಂದ ಬೀಗುತ್ತಿರುವ ಕೇಂದ್ರ ಸರಕಾರ ಪ್ರಜಾಪ್ರಭುತ್ವ ರೀತಿಯಲ್ಲಿ ಚರ್ಚಿಸದೆ ಸಂಸತ್ತು ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ವರ್ತಿಸಿರುವುದು ಸರ್ವಾಧಿಕಾರಿ ನಡೆಯಾಗಿದೆ ಎಂದು ಹೇಳಿದರು. ಸಿಐಟಿಯು ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ಮಾತನಾಡಿ, 2014ರ ಬಳಿಕ ಕೇಂದ್ರದಲ್ಲಿ ಅಧಿಕಾರದ ಗದ್ದುಗೆಯೇರಿದ ನರೇಂದ್ರ ಮೋದಿ ಸರಕಾರ ಈ ದೇಶದ ಸಂವಿಧಾನ ಕಾನೂನಿನ ಆಶಯಗಳನ್ನು ಗಾಳಿಗೆ ತೂರಿ ತನ್ನ ಫ್ಯಾಸಿಸ್ಟ್ ಬುದ್ಧಿಯನ್ನು ತೋರಿಸುತ್ತಾ ಬಂದಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಸಂಹಿತೆಗಳ ಅಧಿಸೂಚನೆಯ ಪ್ರತಿಗಳನ್ನು ಸುಡುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು, ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೊಟು, ಯಾದವ ಶೆಟ್ಟಿ, ರವಿಚಂದ್ರ ಕೊಂಚಾಡಿ, ರೋಹಿದಾಸ್,ನೋಣಯ್ಯ ಗೌಡ, ಕಟ್ಟಡ ಕಾರ್ಮಿಕರ ಸಂಘಟನೆಯ ಜನಾರ್ದನ ಕುತ್ತಾರ್, ಚಂದ್ರಹಾಸ ಪಿಲಾರ್, ಇಬ್ರಾಹೀಂ ಅಂಬ್ಲಮೊಗರು, ಉಮೇಶ್ ಶಕ್ತಿನಗರ,ಬೀಡಿ ಕಾರ್ಮಿಕರ ಸಂಘಟನೆಯ ಜಯಂತಿ ಶೆಟ್ಟಿ,ವಿಲಾಸಿನಿ,ಬೀದಿಬದಿ ವ್ಯಾಪಾರಸ್ಥರ ಸಂಘದ ಸಂತೋಷ್, ಖಾದರ್,ಬಂದರು ಶ್ರಮಿಕ ಸಂಘದ ಫಾರೂಕ್ ಉಳ್ಳಾಲ, ರಫೀಕ್ ಹರೇಕಳ,ರೈತ ಸಂಘಟನೆಯ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ಮಶೇಖರ್ ಕುಂದರ್, ಡಿವೈಎಫ್ಐ ನಾಯಕರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ನವೀನ ಕೊಂಚಾಡಿ, ತಯ್ಯುಬ್ ಬೆಂಗರೆ, ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ ಶಕ್ತಿನಗರ, ಅಸುಂತ ಡಿ ಸೋಜ, ಮಾಧುರಿ ಬೋಳಾರ, ಯೋಗಿತಾ ಉಳ್ಳಾಲ, ಪ್ಲೇವಿ ಕ್ರಾಸ್ತಾ ಅತ್ತಾವರ, ಪ್ರಮೀಳಾ ದೇವಾಡಿಗ, ದಲಿತ ಸಂಘಟನೆಯ ರಘುವೀರ್, ಆದಿವಾಸಿ ಹಕ್ಕುಗಳ ಸಮಿತಿಯ ಕರಿಯ ಕೆ, ಶೇಖರ್ ವಾಮಂಜೂರು, ವಿಕಾಸ್, ಕೃಷ್ಣ ಕತ್ತಲ್ ಸಾರ್, ಬ್ಯಾಂಕ್ ನೌಕರರ ಸಂಘಟನೆಯ ಪುರುಷೋತ್ತಮ ಪೂಜಾರಿ, ಮುನ್ನೂರು ಪಂಚಾಯತ್ ಸದಸ್ಯರಾದ ಗಣೇಶ್ ಅಡ್ಯಂತಾಯ ಮುಂತಾದವರು ಉಪಸ್ಥಿತರಿದ್ದರು.
ಪಶ್ಚಿಮ ಬಂಗಾಳ: ಇನ್ನೋರ್ವ ಬಿಎಲ್ಒ ಆತ್ಮಹತ್ಯೆ
ಎಸ್ಐಆರ್ಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?:ಮಮತಾ
ನೀವು ಮತ ನೀಡದಿದ್ದರೆ, ನಾನು ನಿಮ್ಮ ನಗರಕ್ಕೆ ಹಣ ನೀಡಲಾರೆ: ಮತದಾರರಿಗೆ ಅಜಿತ್ ಪವಾರ್ ಬಹಿರಂಗ ಬೆದರಿಕೆ
ಪುಣೆ, ನ. 22: ತನ್ನ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಮಾಲೇಗಾಂವ್ಗೆ ಸಾಕಷ್ಟು ಹಣ ನೀಡುತ್ತೇನೆ. ಮತ ನೀಡದೇ ಇದ್ದರೆ ಹಣ ನೀಡುವುದಿಲ್ಲ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಜಿಲ್ಲೆಯ ಮಾಲೆಗಾಂವ್ ಮತದಾರರಿಗೆ ಬಹಿರಂಗ ಬೆದರಿಕೆ ಒಡ್ಡಿದ್ದಾರೆ. ಎನ್ಸಿಪಿಯ ಮುಖ್ಯಸ್ಥರಾಗಿರುವ ಪವಾರ್ ಅವರು ಮಾಲೇಗಾಂವ್ ನಗರ ಪಂಚಾಯತ್ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಬಾರಾಮತಿ ತೆಹ್ಸಿಲ್ನಲ್ಲಿ ಶುಕ್ರವಾರ ಪ್ರಚಾರ ನಡೆಸುವ ಸಂದರ್ಭ ಮತದಾರರಿಗೆ ಈ ಬೆದರಿಕೆ ಒಡ್ಡಿದ್ದಾರೆ. ಗಮನಾರ್ಹ ವಿಚಾರವೆಂದರೆ ಬಿಜೆಪಿ-ಎನ್ಸಿಪಿ-ಶಿವಸೇನೆಯ ಸರಕಾರದಲ್ಲಿ ಪವಾರ್ ಅವರು ಹಣಕಾಸು ಖಾತೆ ನಿರ್ವಹಿಸುತ್ತಿದ್ದಾರೆ. ‘‘ನೀವು ಎನ್ಸಿಪಿಯ ಎಲ್ಲಾ 18 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅನುದಾನದ ಕೊರತೆ ಆಗದಂತೆ ನಾನು ನೋಡಿಕೊಳ್ಳುತ್ತೇನೆ. ನೀವು ಎಲ್ಲಾ 18 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ, ನಾನು ಭರವಸೆ ನೀಡಿದ್ದನ್ನು ಒದಗಿಸಲು ಬದ್ಧ. ಆದರೆ, ನೀವು ತಿರಸ್ಕರಿಸಿದರೆ, ನಾನು ಕೂಡ ತಿರಸ್ಕರಿಸುತ್ತೇನೆ. ನಿಮ್ಮಲ್ಲಿ ಮತಗಳಿವೆ. ನನ್ನಲ್ಲಿ ಹಣವಿದೆ’’ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪವಾರ್ ಅವರು ಮತದಾರರನ್ನು ಬೆದರಿಸುತ್ತಿದ್ದಾರೆ ಎಂದು ಶಿವಸೇನೆ (ಯುಬಿಟಿ) ನಾಯಕ ಅಂಬಾದಾಸ್ ದಾನ್ವೆ ಹೇಳಿದ್ದಾರೆ. ‘‘ಹಣ ನೀಡುವುದು ಸಾಮಾನ್ಯ ಜನರು ಪಾವತಿಸಿದ ತೆರಿಗೆಯಿಂದ. ಅಜಿತ್ ಪವಾರ್ ಅವರ ಮನೆಯಿಂದ ಅಲ್ಲ. ಪವಾರ್ ಅವರಂತಹ ನಾಯಕರು ಮತದಾರರನ್ನು ಬೆದರಿಸುತ್ತಿರುವಾಗ, ಚುನಾವಣಾ ಆಯೋಗ ಏನು ಮಾಡುತ್ತಿದೆ’’ ಎಂದು ಅವರು ಪ್ರಶ್ನಿಸಿದ್ದಾರೆ. ನಗರ ಪಂಚಾಯತ್ಗಳಿಗೆ ಡಿಸೆಂಬರ್ 2ರಂದು ಚುನಾವಣೆ ನಡೆಯಲಿದೆ. ಪವಾರ್ ನೇತೃತ್ವದ ಎನ್ಸಿಪಿ ಮಾಲೆಗಾಂವ್ನಲ್ಲಿ ಬಿಜೆಪಿ ಬೆಂಬಲಿತರೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಉಡುಪಿ | ನ.23ರಿಂದ ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ
ಉಡುಪಿ, ನ.22: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ವತಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನ.23ರಿಂದ ಡಿ.4ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ.23ರಂದು ಸಂಜೆ 5 ಗಂಟೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಈ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ.ಕೆ. ವಿ.ನಾಗರಾಜ ಮೂರ್ತಿ, ಉದ್ಯಮಿಗಳಾದ ರಂಜನ್, ಸತ್ಯಾನಂದ ನಾಯಕ್ ಹಾಗೂ ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ವನಿತಾ ಮಯ್ಯ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಾಡಿನ ಸಾಂಸ್ಕೃತಿಕ ರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿರುವ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಗುವುದು. ರಂಗಭೂಮಿಯ ಕಲಾವಿದರಿಂದ ಗೀತಂ ಗಿರೀಶ್ ನೇತೃತ್ವದಲ್ಲಿ ’ಸಂಗೀತ ಸೌರಭ’ ಕಾಠ್ಯಕ್ರಮ ಸಭಾ ಕಾರ್ಯಕ್ರಮದ ಮೊದಲು ಸಂಜೆ 4 ಗಂಟೆಗೆ ನಡೆಯಲಿದೆ ಎಂದರು. ಡಾ.ಟಿಎಂಎ ಪೈ, ಎಸ್.ಎಲ್. ನಾರಾಯಣ ಭಟ್ ಮತ್ತು ಮಲ್ಪೆ ಮಧ್ವರಾಜ ಸ್ಮಾರಕ ನಡೆಯುವ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿದೆಡೆಗಳಿಂದ ಅತ್ಯುತ್ತಮ 12 ತಂಡಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಬೆಂಗಳೂರಿನ 6, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ತಲಾ 2 ಮತ್ತು ತುಮಕೂರು ಹಾಗೂ ಮೈಸೂರು ಜಿಲ್ಲೆಯ ತಲಾ 1 ತಂಡ ಭಾಗವಹಿಸಲಿವೆ. ಒಟ್ಟು 12 ದಿನಗಳಲ್ಲಿ 12 ನಾಟಕಗಳು ಪ್ರತಿದಿನ ಸಂಜೆ 6:30ಕ್ಕೆ ಪ್ರದರ್ಶನಗೊಳ್ಳಲಿವೆ. ಈ ಬಾರಿ ಪ್ರಥಮ ಬಹುಮಾನ ಪಡೆದ ತಂಡಕ್ಕೆ 35,000ರೂ, ದ್ವಿತೀಯ ಸ್ಥಾನಿಗೆ 25,000 ಹಾಗೂ ತೃತೀಯ ಸ್ಥಾನಿಗೆ 15,000 ರೂ. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಪ್ರಸಾಧನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ, ಶಿಸ್ತಿನ ತಂಡಗಳಿಗೆ ನಗದು ಸಹಿತ ಪುರಸ್ಕಾರ ನೀಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಉಪಾಧ್ಯಕ್ಷ ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ, ವಿವೇಕಾನಂದ ಎನ್., ಯು. ಭೋಜ ಉಪಸ್ಥಿತರಿದ್ದರು. ಬಾಕ್ಸ್ ಮಾಡಿ ಪ್ರದರ್ಶನಗೊಳ್ಳುವ ನಾಟಕಗಳು ನ.23ರಂದು ಗುಬ್ಬಿವೀರಣ್ಣ ಶಿಕ್ಷಣ ಕಲಾತಂಡ ತುಮಕೂರು ಇವರಿಂದ ಗೌತಮ ಬುದ್ಧ (ನಿರ್ದೇಶನ: ಭಾನುಪ್ರಕಾಶ್ ಎಸ್.ವಿ.), ನ.24ರಂದು ಅಂತರಂಗ - ಬಹಿರಂಗ ಬೆಂಗಳೂರು ತಂಡದಿಂದ ‘ಅನುಗ್ರಹ’ (ಭಾಷ್ ರಾಘವೇಂದ್ರ), ನ.25ರಂದು ಪುನಃ ಥಿಯೇಟರ್ ಉಡುಪಿಯಿಂದ ‘ಯೋಗಿ ಮತ್ತು ಭೋಗಿ’ (ಮಹೇಶ್ ದತ್ತಾನಿ), ನ.26ರಂದು ಮೈಸೂರಿನ ನೇಪಥ್ಯ ರಂಗತಂಡದಿಂದ ‘ಒಡಲಾಳ’ (ಸಾಗರ್ ಗುಂಬಳ್ಳಿ),ನ.27ರಂದು ಸುಮನಸಾ ಕೊಡವೂರು ಉಡುಪಿ ತಂಡದಿಂದ ‘ಈದಿ’(ವಿದ್ದು ಉಚ್ಚಿಲ), ನ.28ರಂದು ಬೆಂಗಳೂರಿನ ಸಂಚಯ ತಂಡದಿಂದ ‘ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏನಕೆ? (ಚಿತ್ರಶೇಖರ್ ಎನ್.ಎಸ್.). ನ.29ರಂದು ಬೆಂಗಳೂರಿನ ಕ್ರಾನಿಕಲ್ಸ್ ಆಫ್ ಇಂಡಿಯಾ ತಂಡದಿಂದ ‘ಶಿವೋಹಂ’ (ಗಣೇಶ್ ಮಂದಾರ್ತಿ), ನ.30ರಂದು ಬೆಂಗಳೂರಿನ ನಮ್ದೆ ನಟನೆ ತಂಡದಿಂದ ‘ಮಗಳೆಂಬ ಮಲ್ಲಿಗೆ’ (ರಾಜೇಂದ್ರ ಕಾರಂತ), ಡಿ.1ರಂದು ನೆನಪು ಕಲ್ಬರಲ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ‘ಮಾಯಾ ದ್ವೀಪ’ (ಪುನೀತ್ ಎ.ಎಸ್.), ಡಿ.2ರಂದು ತೀರ್ಥಹಳ್ಳಿ ನಟಮಿತ್ರರು ಹವ್ಯಾಸಿ ಕಲಾತಂಡದಿಂದ ‘ಆ ಊರು ಈ ಊರು’ (ಹುಲುಗಪ್ಪ ಕಟ್ಟೀಮನಿ), ಡಿ.3ರಂದು ಸಾಗರದ ಸ್ಪಂದನ ತಂಡ ದಿಂದ ‘ಪ್ರಾಣಪದ್ಮಿನಿ’ (ಮಂಜುನಾಥ ಎಲ್.ಬಡಿಗೇರ), ಡಿ.4ರಂದು ಬೆಂಗಳೂರು ರೇವಾ ರಂಗ ಅಧ್ಯಯನ ತಂಡದಿಂದ ‘ದರ್ಶನಂ’ (ನಂದಕುಮಾರ್ ಅನ್ನಕ್ಕನವರ್) ನಾಟಕ ಪ್ರದರ್ಶನಗೊಳ್ಳಲಿವೆ. ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ ಉಡುಪಿ, ನ.22: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ವತಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನ.23ರಿಂದ ಡಿ.4ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ.23ರಂದು ಸಂಜೆ 5 ಗಂಟೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಈ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ.ಕೆ. ವಿ.ನಾಗರಾಜ ಮೂರ್ತಿ, ಉದ್ಯಮಿಗಳಾದ ರಂಜನ್, ಸತ್ಯಾನಂದ ನಾಯಕ್ ಹಾಗೂ ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ವನಿತಾ ಮಯ್ಯ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಾಡಿನ ಸಾಂಸ್ಕೃತಿಕ ರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿರುವ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಗುವುದು. ರಂಗಭೂಮಿಯ ಕಲಾವಿದರಿಂದ ಗೀತಂ ಗಿರೀಶ್ ನೇತೃತ್ವದಲ್ಲಿ ’ಸಂಗೀತ ಸೌರಭ’ ಕಾಠ್ಯಕ್ರಮ ಸಭಾ ಕಾರ್ಯಕ್ರಮದ ಮೊದಲು ಸಂಜೆ 4 ಗಂಟೆಗೆ ನಡೆಯಲಿದೆ ಎಂದರು. ಡಾ.ಟಿಎಂಎ ಪೈ, ಎಸ್.ಎಲ್. ನಾರಾಯಣ ಭಟ್ ಮತ್ತು ಮಲ್ಪೆ ಮಧ್ವರಾಜ ಸ್ಮಾರಕ ನಡೆಯುವ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿದೆಡೆಗಳಿಂದ ಅತ್ಯುತ್ತಮ 12 ತಂಡಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಬೆಂಗಳೂರಿನ 6, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ತಲಾ 2 ಮತ್ತು ತುಮಕೂರು ಹಾಗೂ ಮೈಸೂರು ಜಿಲ್ಲೆಯ ತಲಾ 1 ತಂಡ ಭಾಗವಹಿಸಲಿವೆ. ಒಟ್ಟು 12 ದಿನಗಳಲ್ಲಿ 12 ನಾಟಕಗಳು ಪ್ರತಿದಿನ ಸಂಜೆ 6:30ಕ್ಕೆ ಪ್ರದರ್ಶನಗೊಳ್ಳಲಿವೆ. ಈ ಬಾರಿ ಪ್ರಥಮ ಬಹುಮಾನ ಪಡೆದ ತಂಡಕ್ಕೆ 35,000ರೂ, ದ್ವಿತೀಯ ಸ್ಥಾನಿಗೆ 25,000 ಹಾಗೂ ತೃತೀಯ ಸ್ಥಾನಿಗೆ 15,000 ರೂ. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಪ್ರಸಾಧನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ, ಶಿಸ್ತಿನ ತಂಡಗಳಿಗೆ ನಗದು ಸಹಿತ ಪುರಸ್ಕಾರ ನೀಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಉಪಾಧ್ಯಕ್ಷ ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ, ವಿವೇಕಾನಂದ ಎನ್., ಯು. ಭೋಜ ಉಪಸ್ಥಿತರಿದ್ದರು. ಬಾಕ್ಸ್ ಮಾಡಿ ಪ್ರದರ್ಶನಗೊಳ್ಳುವ ನಾಟಕಗಳು ನ.23ರಂದು ಗುಬ್ಬಿವೀರಣ್ಣ ಶಿಕ್ಷಣ ಕಲಾತಂಡ ತುಮಕೂರು ಇವರಿಂದ ಗೌತಮ ಬುದ್ಧ (ನಿರ್ದೇಶನ: ಭಾನುಪ್ರಕಾಶ್ ಎಸ್.ವಿ.), ನ.24ರಂದು ಅಂತರಂಗ - ಬಹಿರಂಗ ಬೆಂಗಳೂರು ತಂಡದಿಂದ ‘ಅನುಗ್ರಹ’ (ಭಾಷ್ ರಾಘವೇಂದ್ರ), ನ.25ರಂದು ಪುನಃ ಥಿಯೇಟರ್ ಉಡುಪಿಯಿಂದ ‘ಯೋಗಿ ಮತ್ತು ಭೋಗಿ’ (ಮಹೇಶ್ ದತ್ತಾನಿ), ನ.26ರಂದು ಮೈಸೂರಿನ ನೇಪಥ್ಯ ರಂಗತಂಡದಿಂದ ‘ಒಡಲಾಳ’ (ಸಾಗರ್ ಗುಂಬಳ್ಳಿ),ನ.27ರಂದು ಸುಮನಸಾ ಕೊಡವೂರು ಉಡುಪಿ ತಂಡದಿಂದ ‘ಈದಿ’(ವಿದ್ದು ಉಚ್ಚಿಲ), ನ.28ರಂದು ಬೆಂಗಳೂರಿನ ಸಂಚಯ ತಂಡದಿಂದ ‘ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏನಕೆ? (ಚಿತ್ರಶೇಖರ್ ಎನ್.ಎಸ್.). ನ.29ರಂದು ಬೆಂಗಳೂರಿನ ಕ್ರಾನಿಕಲ್ಸ್ ಆಫ್ ಇಂಡಿಯಾ ತಂಡದಿಂದ ‘ಶಿವೋಹಂ’ (ಗಣೇಶ್ ಮಂದಾರ್ತಿ), ನ.30ರಂದು ಬೆಂಗಳೂರಿನ ನಮ್ದೆ ನಟನೆ ತಂಡದಿಂದ ‘ಮಗಳೆಂಬ ಮಲ್ಲಿಗೆ’ (ರಾಜೇಂದ್ರ ಕಾರಂತ), ಡಿ.1ರಂದು ನೆನಪು ಕಲ್ಬರಲ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ‘ಮಾಯಾ ದ್ವೀಪ’ (ಪುನೀತ್ ಎ.ಎಸ್.), ಡಿ.2ರಂದು ತೀರ್ಥಹಳ್ಳಿ ನಟಮಿತ್ರರು ಹವ್ಯಾಸಿ ಕಲಾತಂಡದಿಂದ ‘ಆ ಊರು ಈ ಊರು’ (ಹುಲುಗಪ್ಪ ಕಟ್ಟೀಮನಿ), ಡಿ.3ರಂದು ಸಾಗರದ ಸ್ಪಂದನ ತಂಡ ದಿಂದ ‘ಪ್ರಾಣಪದ್ಮಿನಿ’ (ಮಂಜುನಾಥ ಎಲ್.ಬಡಿಗೇರ), ಡಿ.4ರಂದು ಬೆಂಗಳೂರು ರೇವಾ ರಂಗ ಅಧ್ಯಯನ ತಂಡದಿಂದ ‘ದರ್ಶನಂ’ (ನಂದಕುಮಾರ್ ಅನ್ನಕ್ಕನವರ್) ನಾಟಕ ಪ್ರದರ್ಶನಗೊಳ್ಳಲಿವೆ. ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ ಉಡುಪಿ, ನ.22: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ವತಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನ.23ರಿಂದ ಡಿ.4ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ.23ರಂದು ಸಂಜೆ 5 ಗಂಟೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಈ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ.ಕೆ. ವಿ.ನಾಗರಾಜ ಮೂರ್ತಿ, ಉದ್ಯಮಿಗಳಾದ ರಂಜನ್, ಸತ್ಯಾನಂದ ನಾಯಕ್ ಹಾಗೂ ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ವನಿತಾ ಮಯ್ಯ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ನಾಡಿನ ಸಾಂಸ್ಕೃತಿಕ ರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿರುವ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಗುವುದು. ರಂಗಭೂಮಿಯ ಕಲಾವಿದರಿಂದ ಗೀತಂ ಗಿರೀಶ್ ನೇತೃತ್ವದಲ್ಲಿ ’ಸಂಗೀತ ಸೌರಭ’ ಕಾಠ್ಯಕ್ರಮ ಸಭಾ ಕಾರ್ಯಕ್ರಮದ ಮೊದಲು ಸಂಜೆ 4 ಗಂಟೆಗೆ ನಡೆಯಲಿದೆ ಎಂದರು. ಡಾ.ಟಿಎಂಎ ಪೈ, ಎಸ್.ಎಲ್. ನಾರಾಯಣ ಭಟ್ ಮತ್ತು ಮಲ್ಪೆ ಮಧ್ವರಾಜ ಸ್ಮಾರಕ ನಡೆಯುವ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿದೆಡೆಗಳಿಂದ ಅತ್ಯುತ್ತಮ 12 ತಂಡಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಬೆಂಗಳೂರಿನ 6, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ತಲಾ 2 ಮತ್ತು ತುಮಕೂರು ಹಾಗೂ ಮೈಸೂರು ಜಿಲ್ಲೆಯ ತಲಾ 1 ತಂಡ ಭಾಗವಹಿಸಲಿವೆ. ಒಟ್ಟು 12 ದಿನಗಳಲ್ಲಿ 12 ನಾಟಕಗಳು ಪ್ರತಿದಿನ ಸಂಜೆ 6:30ಕ್ಕೆ ಪ್ರದರ್ಶನಗೊಳ್ಳಲಿವೆ. ಈ ಬಾರಿ ಪ್ರಥಮ ಬಹುಮಾನ ಪಡೆದ ತಂಡಕ್ಕೆ 35,000ರೂ, ದ್ವಿತೀಯ ಸ್ಥಾನಿಗೆ 25,000 ಹಾಗೂ ತೃತೀಯ ಸ್ಥಾನಿಗೆ 15,000 ರೂ. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಪ್ರಸಾಧನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ, ಶಿಸ್ತಿನ ತಂಡಗಳಿಗೆ ನಗದು ಸಹಿತ ಪುರಸ್ಕಾರ ನೀಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಉಪಾಧ್ಯಕ್ಷ ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ, ವಿವೇಕಾನಂದ ಎನ್., ಯು. ಭೋಜ ಉಪಸ್ಥಿತರಿದ್ದರು. ಬಾಕ್ಸ್ ಮಾಡಿ ಪ್ರದರ್ಶನಗೊಳ್ಳುವ ನಾಟಕಗಳು ನ.23ರಂದು ಗುಬ್ಬಿವೀರಣ್ಣ ಶಿಕ್ಷಣ ಕಲಾತಂಡ ತುಮಕೂರು ಇವರಿಂದ ಗೌತಮ ಬುದ್ಧ (ನಿರ್ದೇಶನ: ಭಾನುಪ್ರಕಾಶ್ ಎಸ್.ವಿ.), ನ.24ರಂದು ಅಂತರಂಗ - ಬಹಿರಂಗ ಬೆಂಗಳೂರು ತಂಡದಿಂದ ‘ಅನುಗ್ರಹ’ (ಭಾಷ್ ರಾಘವೇಂದ್ರ), ನ.25ರಂದು ಪುನಃ ಥಿಯೇಟರ್ ಉಡುಪಿಯಿಂದ ‘ಯೋಗಿ ಮತ್ತು ಭೋಗಿ’ (ಮಹೇಶ್ ದತ್ತಾನಿ), ನ.26ರಂದು ಮೈಸೂರಿನ ನೇಪಥ್ಯ ರಂಗತಂಡದಿಂದ ‘ಒಡಲಾಳ’ (ಸಾಗರ್ ಗುಂಬಳ್ಳಿ),ನ.27ರಂದು ಸುಮನಸಾ ಕೊಡವೂರು ಉಡುಪಿ ತಂಡದಿಂದ ‘ಈದಿ’(ವಿದ್ದು ಉಚ್ಚಿಲ), ನ.28ರಂದು ಬೆಂಗಳೂರಿನ ಸಂಚಯ ತಂಡದಿಂದ ‘ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏನಕೆ? (ಚಿತ್ರಶೇಖರ್ ಎನ್.ಎಸ್.). ನ.29ರಂದು ಬೆಂಗಳೂರಿನ ಕ್ರಾನಿಕಲ್ಸ್ ಆಫ್ ಇಂಡಿಯಾ ತಂಡದಿಂದ ‘ಶಿವೋಹಂ’ (ಗಣೇಶ್ ಮಂದಾರ್ತಿ), ನ.30ರಂದು ಬೆಂಗಳೂರಿನ ನಮ್ದೆ ನಟನೆ ತಂಡದಿಂದ ‘ಮಗಳೆಂಬ ಮಲ್ಲಿಗೆ’ (ರಾಜೇಂದ್ರ ಕಾರಂತ), ಡಿ.1ರಂದು ನೆನಪು ಕಲ್ಬರಲ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ‘ಮಾಯಾ ದ್ವೀಪ’ (ಪುನೀತ್ ಎ.ಎಸ್.), ಡಿ.2ರಂದು ತೀರ್ಥಹಳ್ಳಿ ನಟಮಿತ್ರರು ಹವ್ಯಾಸಿ ಕಲಾತಂಡದಿಂದ ‘ಆ ಊರು ಈ ಊರು’ (ಹುಲುಗಪ್ಪ ಕಟ್ಟೀಮನಿ), ಡಿ.3ರಂದು ಸಾಗರದ ಸ್ಪಂದನ ತಂಡ ದಿಂದ ‘ಪ್ರಾಣಪದ್ಮಿನಿ’ (ಮಂಜುನಾಥ ಎಲ್.ಬಡಿಗೇರ), ಡಿ.4ರಂದು ಬೆಂಗಳೂರು ರೇವಾ ರಂಗ ಅಧ್ಯಯನ ತಂಡದಿಂದ ‘ದರ್ಶನಂ’ (ನಂದಕುಮಾರ್ ಅನ್ನಕ್ಕನವರ್) ನಾಟಕ ಪ್ರದರ್ಶನಗೊಳ್ಳಲಿವೆ.
ನ.24-26: ಉಡುಪಿಯಲ್ಲಿ 45ನೇ ಮಂಗಳೂರು ವಿವಿ ಅಥ್ಲೆಟಿಕ್ ಕ್ರೀಡಾಕೂಟ
ಉಡುಪಿ, ನ.22 : 45ನೇ ಮಂಗಳೂರು ವಿವಿ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್ ಶಿಪ್ 2025-26 ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿಯ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಹಭಾಗಿತ್ವದಲ್ಲಿ ನ.24ರಿಂದ 26ರವರೆಗೆ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆತಿಥೇಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸೋಜನ್ ಕೆ.ಜಿ. ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ನ.24ರಂದು ಜಿಲ್ಲಾ ಮಟ್ಟದ ವಿಶೇಷ ಮಕ್ಕಳ ಕ್ರೀಡಾಕೂಟ ನಡೆಯಲಿದ್ದು, ಜಿಲ್ಲೆಯಾದ್ಯಂತ ಇರುವ ವಿಶೇಷ ಶಾಲೆಗಳ 500ಕ್ಕೂ ಅಧಿಕ ಮಕ್ಕಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಮಕ್ಕಳ ಕ್ರೀಡಾಚಟುವಟಿಕೆಗಳಿಗೆ ವೇದಿಕೆ ಒದಗಿಸುವುದು ಹಾಗೂ ವಿಶೇಷ ಮಕ್ಕಳ ಉಸ್ತುವಾರಿ ಶಿಕ್ಷಕರನ್ನು ಗೌರವಿಸುವುದು ಇದರಲ್ಲಿ ಉದ್ದೇಶವಾಗಿದೆ ಎಂದರು. ನ.25 ಮತ್ತು 26ರಂದು ಮಂಗಳೂರು ವಿವಿ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಅಥ್ಲೆಟಿಕ್ ಸ್ಪರ್ಧೆಗಳು ನಡೆಯಲಿವೆ. ಮಂಗಳೂರು ವಿವಿ ವ್ಯಾಪ್ತಿಯ ಮೂರು ಜಿಲ್ಲೆಗಳ ಕಾಲೇಜುಗಳ 1000ಕ್ಕೂ ಅಧಿಕ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಇವರೊಂದಿಗೆ 150ಕ್ಕೂ ಅಧಿಕ ಕ್ರೀಡಾ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು. ಮಂಗಳೂರು ವಿವಿ, ಇತ್ತೀಚಿನ ಹಲವು ವರ್ಷಗಳಲ್ಲಿ ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ತಂಡವಾಗಿ ಮೂಡಿಬರುತಿದ್ದು, ಹೀಗಾಗಿ ಈ ಬಾರಿಯ ವಿವಿ ತಂಡದ ಆಯ್ಕೆಗೆ ಮಾನದಂಡವಾಗಿ ಈ ಕೂಟ ವಿಶೇಷ ಮಹತ್ವ ಪಡೆದಿದೆ ಎಂದರು. ಪ್ರೊ.ಕಿಶೋರ್ ಹೆಸರಿನಲ್ಲಿ ರೋಲಿಂಗ್ ಟ್ರೋಫಿ : ಮಂಗಳೂರು ವಿವಿ ಅಥ್ಲೆಟಿಕ್ ಕೂಟದಲ್ಲಿ ಪುರುಷರ ವಿಭಾಗದ ತಂಡ ಪ್ರಶಸ್ತಿ ಪಡೆಯುವ ತಂಡಕ್ಕೆ ಸೈಂಟ್ ಫಿಲೋಮಿನಾ ಕಾಲೇಜು ಪುತ್ತೂರಿನ ನೀಡಿದ ಟ್ರೋಫಿ ಹಾಗೂ ಮಹಿಳಾ ವಿಭಾಗದ ಚಾಂಪಿಯನ್ ತಂಡಕ್ಕೆ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ನೀಡಿದ ಟ್ರೋಫಿಯನ್ನು ನೀಡಲಾಗುತ್ತಿದೆ. ಇದೀಗ ಚಾಂಪಿಯನ್ಷಿಪ್ನಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆಲ್ಲುವ ತಂಡಕ್ಕೆ ಇದೇ ಮೊದಲ ಬಾರಿ ಪ್ರೊ.ಕಿಶೋರ್ ಕುಮಾರ್ ಸಿ.ಕೆ.ಹೆಸರಿನಲ್ಲಿ ರೋಲಿಂಗ್ ಟ್ರೋಫಿಯನ್ನು ನೀಡಲಾಗುತ್ತದೆ. ಈ ಟ್ರೋಫಿಯ ಅನಾವರಣವೂ ನ.25ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂಡಬಿದರೆ ಆಳ್ವಾಸ್ ನ ಡಾ.ಮೋಹನ್ ಆಳ್ವ ಈ ಟ್ರೋಫಿಯನ್ನು ಅನಾವರಣಗೊಳಿಸುವರು ಎಂದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಬಹುಕಾಲ ಸೇವೆ ಸಲ್ಲಿಸಿದ್ದ ಪ್ರೊ.ಕಿಶೋರ್ ಕುಮಾರ್ ಸಿ.ಕೆ. ಬಳಿಕ ರಿಜಿಸ್ಟ್ರಾರ್ ಆಗಿ ಹಾಗೂ ಉಪಕುಲಪತಿಗಳಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಕಳೆದ ಅ.5ರಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಈ ಬೆಳ್ಳಿಯ ಟ್ರೋಫಿಯನ್ನು ಅವರ ಅಭಿಮಾನಿಗಳು ನೀಡಿದ್ದಾರೆ ಎಂದು ಪ್ರೊ.ಸೋಜನ್ ತಿಳಿಸಿದರು. ನ.24ರ ವಿಶೇಷ ಮಕ್ಕಳ ಕ್ರೀಡಾಕೂಟವನ್ನು ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿದರೆ, ನ.25ರ ಮಂಗಳೂರು ವಿವಿ ಅಥ್ಲೆಟಿಕ್ ಕೂಟವನ್ನು ಬೆಳಗ್ಗೆ 9:30ಕ್ಕೆ ಮಂಗಳೂರು ವಿವಿ ಕುಲಪತಿಗಳಾದ ಡಾ.ಪಿ.ಎಲ್.ಧರ್ಮ ಉದ್ಘಾಟಿಸುವರು. ಮಂಗಳೂರು ವಿಭಾಗ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ.ಕೆ.ಆರ್.ಕವಿತಾ, ಉದ್ಯಮಿ ಡಾ.ಜಿ.ಶಂಕರ್, ಡಾ.ಮೋಹನ್ ಆಳ್ವ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದರು. ಕ್ರೀಡಾಕೂಟದ ಸಮಾರೋಪ ಸಮಾರಂಭ ನ.26ರ ಅಪರಾಹ್ನ 3:30ಕ್ಕೆ ನಡೆಯಲಿದ್ದು, ಮಂಗಳೂರು ವಿವಿ ರಿಜಿಸ್ಟ್ರಾರ್ ರಾಜು ಮೊಗವೀರ, ಉಡುಪಿಯ ಎಡಿಸಿ ಅಬಿದ್ ಗದ್ಯಾಳ್, ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ, ಉದ್ಯಮಿ ಹರಿಯಪ್ಪ ಕೋಟ್ಯಾನ್, ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ ಡಿಸೋಜ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರೊ. ಸೋಜನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ರಾಜೇಂದ್ರ ಕೆ., ಪ್ರೊ.ಕೃಷ್ಣ ಭಟ್, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸಚ್ಚೇಂದ್ರ,ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಉಪಸ್ಥಿತರಿದ್ದರು.
100 ವರ್ಷಗಳ ನಂತರ ಎರಡೇ ದಿನದಲ್ಲಿ ಅಂತ್ಯಗೊಂಡ ಪಂದ್ಯ
ಪರ್ತ್, ನ.22: ಮೊದಲ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವು ಎರಡು ದಿನದೊಳಗೆ ಇಂಗ್ಲೆಂಡ್ ತಂಡವನ್ನು 8 ವಿಕೆಟ್ ಗಳ ಅಂತರದಿಂದ ಮಣಿಸಿದೆ.100ಕ್ಕೂ ಅಧಿಕ ವರ್ಷಗಳ ನಂತರ ಆ್ಯಶಸ್ ಪಂದ್ಯವು ಬೇಗನೆ ಕೊನೆಗೊಂಡಿದೆ. 1921ರಲ್ಲಿ ನಾಟಿಂಗ್ಹ್ಯಾಮ್ನಲ್ಲಿ ಆಸ್ಟ್ರೇಲಿಯ ತಂಡವು ಇಂಗ್ಲೆಂಡ್ ವಿರುದ್ದ ಎರಡು ದಿನದೊಳಗೆ ಪಂದ್ಯವನ್ನು ಜಯಿಸಿತ್ತು. ಗೆಲ್ಲಲು 205 ರನ್ ಗುರಿ ಪಡೆದಿದ್ದ ಆಸ್ಟ್ರೇಲಿಯ ತಂಡವು ಸುಲಭವಾಗಿ ಗೆಲುವಿನ ದಡ ಸೇರಿತು.
ಭಾರತ 38ನೇ ಟೆಸ್ಟ್ ನಾಯಕನಾದ ರಿಷಭ್ ಪಂತ್
ಗುವಾಹಟಿ, ನ.22: ಶುಭಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ ಶನಿವಾರ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ ಹಿನ್ನೆಲೆಯಲ್ಲಿ ರಿಷಬ್ ಪಂತ್ ಭಾರತದ 38ನೇ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಗಿಲ್ ಎರಡನೇ ಟೆಸ್ಟ್ ಪಂದ್ಯವನ್ನಾಡಲು ಸಂಪೂರ್ಣ ಫಿಟ್ ಇರಲಿಲ್ಲ. ಅವರು ಕುತ್ತಿಗೆ ನೋವಿನ ಬಗ್ಗೆ ಹೆಚ್ಚಿನ ತಪಾಸಣೆಗಾಗಿ ಮುಂಬೈಗೆ ತೆರಳಿದ್ದಾರೆ. ಇಂಗ್ಲೆಂಡ್ ವಿರುದ್ದ ಆ್ಯಂಡರ್ಸನ್-ತೆಂಡುಲ್ಕರ್ ಟ್ರೋಫಿಯ ವೇಳೆ ಭಾರತದ ಟೆಸ್ಟ್ ನಾಯಕತ್ವವನ್ನು ವಹಿಸಿಕೊಂಡಿರುವ ಗಿಲ್ ಅವರು ಕೋಲ್ಕತಾ ಟೆಸ್ಟ್ ಸಂದರ್ಭ ಕುತ್ತಿಗೆ ನೋವಿಗೆ ಒಳಗಾಗಿದ್ದರು. ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗಿರುವ ವಿರಾಟ್ ಕೊಹ್ಲಿ ಅವರು ಭಾರತದ ಪರ ಅತ್ಯಂತ ಹೆಚ್ಚು ಪಂದ್ಯಗಳಲ್ಲಿ(68)ನಾಯಕತ್ವವಹಿಸಿದ್ದಾರೆ. ಭಾರತದ ಟೆಸ್ಟ್ ನಾಯಕರ ಪಟ್ಟಿ : 1. ಸಿ.ಕೆ. ನಾಯ್ಡು, 2.ವಿಜಯನಗರದ ರಾಜಕುಮಾರ,3. ಐಎಕೆ ಪಟೌಡಿ, 4. ಲಾಲಾ ಅಮರನಾಥ್, 5. ವಿಜಯ ಹಝಾರೆ, 6. ವಿನೂ ಮಂಕಡ್, 7. ಗುಲಾಂ ಅಹ್ಮದ್, 8. ಪಾಲಿ ಉಮ್ರಿಗರ್, 9. ಹೆಮು ಅಧಿಕಾರಿ, 10.ದತ್ತ ಗಾಯಕ್ವಾಡ್, 11. ಪಂಕಜ್ ರಾಯ್, 12. ರಾಮಚಂದ್, 13. ನಾರಿ ಕಾಂಟ್ರಾಕ್ಟರ್, 14. ಎಂಐಎಕೆ ಪಟೌಡಿ, 15. ಚಂದು ಬೋರ್ಡೆ, 16. ಅಜಿತ್ ವಾಡೆಕರ್, 17. ವೆಂಕಟರಾಘವನ್, 18. ಸುನೀಲ್ ಗವಾಸ್ಕರ್, 19. ಬಿಶನ್ ಸಿಂಗ್ ಬೇಡಿ, 20. ಗುಂಡಪ್ಪ ವಿಶ್ವನಾಥ್, 21. ಕಪಿಲ್ ದೇವ್, 22. ದಿಲಿಪ್ ವೆಂಗ್ಸರ್ಕಾರ್, 23. ರವಿ ಶಾಸ್ತ್ರಿ, 24. ಕೆ. ಶ್ರೀಕಾಂತ್, 25. ಮುಹಮ್ಮದ್ ಅಝರುದ್ದೀನ್, 26. ಸಚಿನ್ ತೆಂಡುಲ್ಕರ್, 27. ಸೌರವ್ ಗಂಗುಲಿ, 28. ರಾಹುಲ್ ದ್ರಾವಿಡ್, 29. ವೀರೇಂದ್ರ ಸೆಹ್ವಾಗ್, 30. ಅನಿಲ್ ಕುಂಬ್ಳೆ, 31. ಎಂ.ಎಸ್. ಧೋನಿ, 32. ವಿರಾಟ್ ಕೊಹ್ಲಿ, 33. ಅಜಿಂಕ್ಯ ರಹಾನೆ, 34. ಕೆ.ಎಲ್.ರಾಹುಲ್, 35. ರೋಹಿತ್ ಶರ್ಮಾ, 36. ಜಸ್ಪ್ರಿತ್ ಬುಮ್ರಾ, 37. ಶುಭಮನ್ ಗಿಲ್, 38. ರಿಷಭ್ ಪಂತ್.
ಕುಲದೀಪ್ ಯಾದವ್ ಕೈಚಳಕ | ದ್ವಿತೀಯ ಟೆಸ್ಟ್: ದಕ್ಷಿಣ ಆಫ್ರಿಕಾ 247/6
ಗುವಾಹಟಿ, ನ.22: ಸ್ಪಿನ್ನರ್ ಕುಲದೀಪ್ ಯಾದವ್(3-48)ಅವರ ಕೈಚಳಕದ ನೆರವಿನಿಂದ ಟೀಮ್ ಇಂಡಿಯಾ ಶನಿವಾರ ಆರಂಭವಾದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವನ್ನು 6 ವಿಕೆಟ್ ಗಳ ನಷ್ಟಕ್ಕೆ 247 ರನ್ ಗೆ ನಿಯಂತ್ರಿಸಿದೆ. ಭಾರತದ ನೆಲದಲ್ಲಿ 25 ವರ್ಷಗಳಲ್ಲಿ ಮೊದಲ ಬಾರಿ ಟೆಸ್ಟ್ ಸರಣಿಯನ್ನು ಗೆಲ್ಲುವ ಕನಸು ಕಾಣುತ್ತಿರುವ ದಕ್ಷಿಣ ಆಫ್ರಿಕಾ ತಂಡವು ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಟ್ರಿಸ್ಟನ್ ಸ್ಟಬ್ಸ್(49 ರನ್, 112 ಎಸೆತ, 4 ಬೌಂಡರಿ, 2 ಸಿಕ್ಸರ್)ಹಾಗೂ ನಾಯಕ ಟೆಂಬಾ ಬವುಮಾ(41 ರನ್, 92 ಎಸೆತ, 5 ಬೌಂಡರಿ)ಮೂರನೇ ವಿಕೆಟ್ಗೆ 84 ರನ್ ಗಳಿಸಿ ತಂಡವು ಮೊದಲ ದಿನದಾಟದಂತ್ಯಕ್ಕೆ ಗೌರವಾರ್ಹ ಮೊತ್ತ ಕಲೆ ಹಾಕಲು ನೆರವಾದರು. ದಕ್ಷಿಣ ಆಫ್ರಿಕಾದ ಎಲ್ಲ ಬ್ಯಾಟರ್ಗಳು ಉತ್ತಮ ಆರಂಭ ಪಡೆದಿದ್ದರು. ಆದರೆ ಯಾರೂ ಕೂಡ ಅರ್ಧಶತಕವನ್ನು ಗಳಿಸಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡವು ಕೋಲ್ಕತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಎರಡು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು 30 ರನ್ ಅಂತರದಿಂದ ಗೆದ್ದುಕೊಂಡು 1-0 ಮುನ್ನಡೆ ಸಾಧಿಸಿದೆ. ಸ್ಟಬ್ಸ್ ವಿಕೆಟನ್ನು ಉರುಳಿಸಿದ ಕುಲದೀಪ್ ಅರ್ಧಶತಕವನ್ನು ನಿರಾಕರಿಸಿದರು. ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಅವರು ಬವುಮಾಗೆ ಪೆವಿಲಿಯನ್ ಹಾದಿ ತೋರಿಸಿದರು. ಎಡಗೈ ಸ್ಪಿನ್ನರ್ ಕುಲದೀಪ್(3-48) ವಿಯಾನ್ ಮುಲ್ದರ್(13 ರನ್)ವಿಕೆಟನ್ನು ಕಬಳಿಸಿದರೆ, ಮುಹಮ್ಮದ್ ಸಿರಾಜ್ ಅವರು ಎರಡನೇ ಹೊಸ ಚೆಂಡಿನಲ್ಲಿ ಟೋನಿ ಡಿ ರೆರ್ಝಿ(28 ರನ್)ವಿಕೆಟನ್ನು ಉರುಳಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಇನ್ನಷ್ಟು ಒತ್ತಡ ಹೇರಿದರು. ಮಂದ ಬೆಳಕಿನಿಂದಾಗಿ 81.5 ಓವರ್ಗಳ ಪಂದ್ಯವನ್ನು ಮಾತ್ರ ಆಡಲು ಸಾಧ್ಯವಾಗಿದ್ದು ಎಡಗೈ ಬ್ಯಾಟರ್ ಎಸ್. ಮುತ್ತುಸ್ವಾಮಿ(25 ರನ್)ಹಾಗೂ ವಿಕೆಟ್ಕೀಪರ್-ಬ್ಯಾಟರ್ ಕೈಲ್ ವೆರ್ರೆನ್ನೆ(1 ರನ್)ಕ್ರೀಸ್ ಕಾಯ್ದುಕೊಂಡಿದ್ದಾರೆ. ಏಡೆನ್ ಮರ್ಕ್ರಮ್(38 ರನ್, 81 ಎಸೆತ, 5 ಬೌಂಡರಿ)ಹಾಗೂ ರಯಾನ್ ರಿಕೆಲ್ಟನ್(35 ರನ್, 82 ಎಸೆತ, 5 ಬೌಂಡರಿ)ಆರಂಭಿಕ ವಿಕೆಟ್ಗೆ 82 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು. ಮರ್ಕ್ರಮ್ರನ್ನು ಕ್ಲೀನ್ಬೌಲ್ಡ್ ಮಾಡಿದ ಜಸ್ಪ್ರಿತ್ ಬುಮ್ರಾ ಈ ಜೋಡಿಯನ್ನು ಬೇರ್ಪಡಿಸಿದರು. ಮರ್ಕ್ರಮ್ ಔಟಾದ ಬೆನ್ನಿಗೆ ರಿಕೆಲ್ಟನ್ ಅವರು ಕುಲದೀಪ್ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಭಡ್ತಿ ಪಡೆದು ಬಂದ ಸ್ಟಬ್ಸ್ ಹಾಗೂ ಬವುಮಾ ಭಾರತೀಯ ಸ್ಪಿನ್ನರ್ಗಳ ವಿರುದ್ಧ ಎಚ್ಚರಿಕೆಯ ಆಟವಾಡಿ ನಿರಂತರ ಬೌಂಡರಿಗಳ ಮೂಲಕ ಇನಿಂಗ್ಸ್ ಬೆಳೆಸಿದರು. ಜಡೇಜ ಫಾರ್ಮ್ ನಲ್ಲಿರುವ ಬವುಮಾ ವಿಕೆಟನ್ನು ಉರುಳಿಸುವಲ್ಲಿ ಯಶಸ್ವಿಯಾದರು. ಬವುಮಾ ಕೋಲ್ಕತಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದ ಏಕೈಕ ಆಟಗಾರನಾಗಿದ್ದರು. ಜಡೇಜ ಬೌಲಿಂಗ್ನಲ್ಲಿ ಸಿಕ್ಸರ್ ಸಿಡಿಸಿದ ಸ್ಟಬ್ಸ್ ಇನಿಂಗ್ಸ್ ಮತ್ತಷ್ಟು ಹಿಗ್ಗಿಸುವ ಪ್ರಯತ್ನದಲ್ಲಿದ್ದರು. ಆದರೆ ಅವರು ಕುಲದೀಪ್ ಸ್ಪಿನ್ ಮೋಡಿಗೆ ವಿಕೆಟ್ ಒಪ್ಪಿಸಿದರು. ದಕ್ಷಿಣ ಆಫ್ರಿಕಾ ತಂಡವು 201 ರನ್ಗೆ ಐದು ವಿಕೆಟ್ಗಳನ್ನು ಕಳೆದುಕೊಂಡಿತು. ಆಗ ಆರನೇ ವಿಕೆಟ್ಗೆ 45 ರನ್ ಸೇರಿಸಿದ ಟೋನಿ ಡಿ ರೆರ್ಝಿ ಹಾಗೂ ಮುತ್ತುಸ್ವಾಮಿ ತಂಡವನ್ನು ಆಧರಿಸಿದರು. ರೆರ್ಝಿ ವಿಕೆಟನ್ನು ಪಡೆದ ಸಿರಾಜ್ ಈ ಜೋಡಿಯನ್ನು ಬೇರ್ಪಡಿಸಿದರು. ಪಂದ್ಯವು ನಿಗದಿತ ಸಮಯಕ್ಕಿಂತ 30 ನಿಮಿಷ ಮೊದಲೇ ಆರಂಭವಾಗಿದ್ದು, ಲಂಚ್ ವಿರಾಮಕ್ಕಿಂತ ಮೊದಲೇ ಟೀ ವಿರಾಮ ಪಡೆಯಲಾಯಿತು. ಇದೇ ಮೊದಲ ಬಾರಿ ಬರ್ಷಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ಮೊದಲ ದಿನ 15,000ಕ್ಕೂ ಅಧಿಕ ಕ್ರಿಕೆಟ್ ಪ್ರೇಮಿಗಳು ಆಗಮಿಸಿದ್ದರು. ನಿರೀಕ್ಷೆಯಂತೆಯೇ ಭಾರತ ತಂಡವು ಶುಭಮನ್ ಗಿಲ್ ಬದಲಿಗೆ ಸಾಯಿ ಸುದರ್ಶನ್, ಅಕ್ಷರ್ ಪಟೇಲ್ ಬದಲಿಗೆ ನಿತೀಶ್ ರೆಡ್ಡಿ ಅವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಂಡಿತು. ದಕ್ಷಿಣ ಆಫ್ರಿಕಾ ಅಚ್ಚರಿಯ ಹೆಜ್ಜೆ ಇಟ್ಟಿದ್ದು, ಆಲ್ರೌಂಡರ್ ಕಾರ್ಬಿನ ಬಾಷ್ ಬದಲಿಗೆ ಹೆಚ್ಚುವರಿ ಸ್ಪಿನ್ನರ್ ಎಸ್.ಮುತ್ತುಸ್ವಾಮಿಗೆ ಮಣೆ ಹಾಕಿತು. ಇತ್ತೀಚೆಗೆ ಪಾಕಿಸ್ತಾನ ತಂಡದ ವಿರುದ್ಧ 1-1 ಅಂತರದಿಂದ ಡ್ರಾ ಸಾಧಿಸಿರುವ ದಕ್ಷಿಣ ಆಫ್ರಿಕಾ ತಂಡವು 2000ರ ನಂತರ ಮೊದಲ ಬಾರಿ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ.
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಮತ್ತೆ ತಾಲಿಬಾನ್ ಎಂಟ್ರಿ ಗ್ಯಾರಂಟಿ?
ತಾಲಿಬಾನ್ &ಪಾಕಿಸ್ತಾನ ನಡುವೆ ಕೆಲವು ವಾರಗಳ ಹಿಂದೆ ದೊಡ್ಡ ಗಲಾಟೆ ನಡೆದಿತ್ತು, ಹೀಗೆ ಇಬ್ಬರೂ ಬಡಿದಾಡಿಕೊಂಡು ಹತ್ತಾರು ಜೀವಗಳು ಕೂಡ ಬಲಿಯಾಗಿದ್ದವು. ಅಲ್ಲದೆ ಪಾಪಿ ಪಾಕ್ ತಾನು ಮಾಡಿದ ಕೃತ್ಯಕ್ಕೆ ಸರಿಯಾಗಿ ಪಾಠ ಕೂಡ ಕಲಿತಿದೆ. ಪರಿಸ್ಥಿತಿ ಇಷ್ಟೆಲ್ಲಾ ವಿನಾಶಕಾರಿಯಾಗಿ ಇರುವಾಗ ಮತ್ತೆ ಇಬ್ಬರ ನಡುವೆ ಯುದ್ಧ ಶುರುವಾಗುತ್ತಾ? ಎಂಬ ಆತಂಕ ಕೂಡ ಇದ್ದೇ ಇದೆ.
ದ್ವಿತೀಯ ಟೆಸ್ಟ್ | ಅನಪೇಕ್ಷಿತ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು
ಗುವಾಹಟಿ, ನ.22: ದಕ್ಷಿಣ ಆಫ್ರಿಕಾ ತಂಡವು ದ್ವಿತೀಯ ಟೆಸ್ಟ್ನ ಮೊದಲ ದಿನದಾಟದಲ್ಲಿ ಅನಪೇಕ್ಷಿತ ದಾಖಲೆಯೊಂದನ್ನು ನಿರ್ಮಿಸಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ ಸರದಿಯ ನಾಲ್ವರು ಬ್ಯಾಟರ್ಗಳು ಅರ್ಧಶತಕವನ್ನು ಗಳಿಸುವಲ್ಲಿ ವಿಫಲರಾಗಿದ್ದಾರೆ. ಎಲ್ಲ ನಾಲ್ಕೂ ಆಟಗಾರರು ಕನಿಷ್ಠ 35 ರನ್ ಗಳಿಸುವಲ್ಲಿ ಶಕ್ತರಾಗಿದ್ದಾರೆ. ಇನಿಂಗ್ಸ್ ಆರಂಭಿಸಿದ ಮರ್ಕ್ರಮ್ ಹಾಗೂ ರಿಕೆಲ್ಟನ್ ಕ್ರಮವಾಗಿ 38 ಹಾಗೂ 35 ರನ್ ಗಳಿಸಿದ್ದರು. ಇಬ್ಬರು ಎರಡು ಓವರ್ಗಳ ಅಂತರದಲ್ಲಿ ಔಟಾದರು. ಟ್ರಿಸ್ಟನ್ ಸ್ಟಬ್ಸ್ 49 ರನ್ ಹಾಗೂ ಟೆಂಬಾ ಬವುಮಾ 41 ರನ್ ಗಳಿಸಿ ಇನಿಂಗ್ಸ್ಗೆ ಜೀವ ತುಂಬಿದ್ದಾರೆ .ಸ್ಟಬ್ಸ್ ಕೇವಲ 1 ರನ್ನಿಂದ ತನ್ನ ಚೊಚ್ಚಲ ಅರ್ಧಶತಕದಿಂದ ವಂಚಿತರಾದರು.
ಮೊದಲ ಆ್ಯಶಸ್ ಟೆಸ್ಟ್: ಆಸ್ಟ್ರೇಲಿಯಕ್ಕೆ ಸುಲಭ ತುತ್ತಾದ ಇಂಗ್ಲೆಂಡ್
ಟ್ರಾವಿಸ್ ಹೆಡ್ ಶತಕ
ಅತ್ಯಂತ ಹೆಚ್ಚು ಪ್ರೇಕ್ಷಕರ ಹಾಜರಾತಿಗೆ ಸಾಕ್ಷಿಯಾದ ಪರ್ತ್ ಸ್ಟೇಡಿಯಂ
ಮೆಲ್ಬರ್ನ್, ಫೆ.22: ಆಸ್ಟ್ರೇಲಿಯ ಕ್ರಿಕೆಟ್ ತಂಡ ಎರಡೇ ದಿನದಲ್ಲಿ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಂಡಿದ್ದು, ಪರ್ತ್ ಕ್ರೀಡಾಂಗಣವು ಟೆಸ್ಟ್ ಪಂದ್ಯದಲ್ಲಿ ಇದೇ ಮೊದಲ ಬಾರಿ ಅತ್ಯಂತ ಹೆಚ್ಚು ಪ್ರೇಕ್ಷಕರ ಹಾಜರಾತಿಗೆ ಸಾಕ್ಷಿಯಾಯಿತು. ಮೊದಲ ಟೆಸ್ಟ್ನ ಎರಡನೇ ದಿನವಾದ ಶನಿವಾರ 49,983 ಪ್ರೇಕ್ಷಕರು ಆಗಮಿಸಿದ್ದು ಈ ಮೂಲಕ ಪಂದ್ಯ ವೀಕ್ಷಿಸಿದ ಒಟ್ಟು ಪ್ರೇಕ್ಷಕರ ಸಂಖ್ಯೆ 1,01,514 ಕ್ಕೇರಿದೆ. ಕಳೆದ ವರ್ಷ ಭಾರತ ತಂಡದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ 96,463 ಜನರು ಆಗಮಿಸಿದ್ದರು. ಇದೀಗ ಆ ದಾಖಲೆಯು ಪತನಗೊಂಡಿದೆ. 1921ರ ನಂತರ ಮೊದಲ ಬಾರಿ ಆ್ಯಶಸ್ ಸರಣಿಯ ಪಂದ್ಯವು ಎರಡು ದಿನದೊಳಗೆ ಅಂತ್ಯವಾಗಿದೆ.
ಯಾದಗಿರಿ | ಸಚಿವ ಪ್ರಿಯಾಂಕ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾಸೋಹ
ಸುರಪುರ: ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಅನ್ನದಾಸೋಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮಾತನಾಡಿ, ಪ್ರಿಯಾಂಕ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಒಬ್ಬ ಮಾದರಿ ರಾಜಕಾರಣಿಯಾಗಿದ್ದಾರೆ. ಅವರು ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವರಾಗಿ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಯೋಜನೆಗಳನ್ನು ಮಾಡಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಲಬುರ್ಗಿ ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ವಿಠ್ಠಲ್ ಯಾದವ್, ಸುರಪುರ ತಾಲೂಕು ವಕ್ಲುತನ ಹುಟ್ಟುವಳಿ ಮಾರಾಟಗಾರ ಸಹಕಾರ ಸಂಘದ ಅಧ್ಯಕ್ಷ ರಾಜಾ ಸಂತೋಷ ನಾಯಕ್, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ್ ನಾಯಕ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಶೇಖರ್ ಪಾಟೀಲ್ ವಜ್ಜಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಮುಖಂಡರಾದ ಮಲ್ಲಣ್ಣ ಸಾಹುಕಾರ್ ನರಸಿಂಗಪೇಟ, ರಮೇಶ್ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಅಬ್ದುಲ್ ಗಫರ್ ನಗನೂರಿ, ವೆಂಕಟೇಶ ಹೊಸಮನಿ, ಮಾಳಪ್ಪ ಕಿರದಳ್ಳಿ, ಸೂಗುರೇಶ ವಾರದ, ಮಹೆಬೂಬ್ ಒಂಟಿ, ನಾಗಪ್ಪ ಚಿಕ್ಕನಹಳ್ಳಿ, ನಾಸಿರ್ ಕುಂಡಾಲೆ, ಅಬ್ದುಲ್ ಅಲೀಂ ಗೋಗಿ, ಶಕೀಲ್ ಅಹ್ಮದ್ ಖುರೇಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಹನುಮಂತ್ ನಾಯಕ್ ಆಗ್ರಹ
ಸುರಪುರ: ಸುರಪುರ ತಾಲೂಕಿನಲ್ಲಿ ನಡೆಯುವ ಅಕ್ರಮ ಮರಳು ಗಣಿಗಾರಿಕೆಯನ್ನು ಕೂಡಲೇ ತಡೆಯುವಂತೆ ಬಿಜೆಪಿ ಮುಖಂಡ ಹನುಮಂತ್ ನಾಯಕ್ ಬಬ್ಲುಗೌಡ ಆಗ್ರಹಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹನುಮಂತ್ ನಾಯಕ್, ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಗಮನಿಸಿದರೆ ಪೊಲೀಸ್ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಅಕ್ರಮ ಮರಳು ತುಂಬಿಕೊಂಡು ಓಡಾಡುವ ಟಿಪ್ಪರ್ಗಳಿಂದ ರಸ್ತೆಗಳು ಸಂಪೂರ್ಣವಾಗಿ ಹಾನಿಯಾಗಿದೆ. ಈ ರಸ್ತೆಗಳಲ್ಲಿ ವಾಹನಗಳ ಓಡಾಟ ತುಂಬಾ ಕಷ್ಟಕರವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರೂ, ಪೊಲೀಸ್ ಇಲಾಖೆ, ತಹಶೀಲ್ದಾರ್, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಇದನ್ನು ತಡೆಯುತ್ತಿಲ್ಲ ಎನ್ನುವುದು ಹಲವು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು. ಅಕ್ರಮ ಮರಳು ಗಣಿಗಾರಿಕೆ ನಿಲ್ಲಬೇಕು. ಇಲ್ಲವಾದಲ್ಲಿ ಎಲ್ಲಾ ಗ್ರಾಮಗಳ ಸಾರ್ವಜನಿಕರನ್ನು ಜಾಗೃತಿಗೊಳಿಸಿ ನಿರಂತರ ಹೋರಾಟವನ್ನು ನಡೆಸಲಾಗುವುದು ಎಂದು ಹೇಳಿದರು.
ಬೆಂಗಳೂರು ಮಸಾಲ ದೋಸೆಯ ರುಚಿಗೆ ಮನಸೋತ ಇಟಲಿಯ ರಾಯಭಾರಿ!
ಬೆಂಗಳೂರಿನಲ್ಲಿ ಇಟಲಿಯ ಕಾನ್ಸುಲ್ ಜನರಲ್ ಗಿಯಾಂಡೊಮೆನಿಕೊ ಮಿಲಾನೊ ಅವರು ಮಸಾಲ ದೋಸೆಯನ್ನು ತಮ್ಮ ನೆಚ್ಚಿನ ಬೆಳಗಿನ ಉಪಾಹಾರ ಎಂದು ಹೊಗಳಿದ್ದಾರೆ. ವಿಶ್ವ ಇಟಾಲಿಯನ್ ಪಾಕಶಾಲೆಯ ವಾರದ 10ನೇ ಆವೃತ್ತಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಬಾರಿ 'ಸಾಂಪ್ರದಾಯಿಕತೆ ಮತ್ತು ನಾವೀನ್ಯತೆ, ಆರೋಗ್ಯ ಮತ್ತು ಸುಸ್ಥಿರತೆ' ಎಂಬುದು ವಿಷಯವಾಗಿದೆ. ಪ್ರಸಿದ್ಧ ಶೆಫ್ ಇಟಾಲೊ ಬಸ್ಸಿ ಅವರು ಪಾಕಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದ್ದಾರೆ. ಡಿಸೆಂಬರ್ 1 ರಿಂದ ನಗರದ ಪ್ರಮುಖ ರೆಸ್ಟೋರೆಂಟ್ಗಳಲ್ಲಿ ವಿಶೇಷ ಇಟಾಲಿಯನ್ ಆಹಾರ ಉತ್ಸವ ನಡೆಯಲಿದೆ.
2019-2024ರ ಅವಧಿಯಲ್ಲಿ ಕಲಬೆರಕೆ ತುಪ್ಪದಿಂದ 20 ಕೋಟಿ ಲಾಡುಗಳು ತಯಾರಾಗಿದ್ದವು: ತಿರುಪತಿಯ ಅಧಿಕಾರಿ
ತಿರುಮನ,ನ.22: ತಿರುಪತಿ ದೇವಸ್ಥಾದಲ್ಲಿ ಕಲಬೆರಕೆ ತುಪ್ಪವನ್ನು ಬಳಸಿ ಅಂದಾಜು 20 ಕೋಟಿ ಲಾಡುಗಳನ್ನು ತಯಾರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ದೇವಸ್ಥಾನದ ಪ್ರಸಾದದಲ್ಲಿ ಕಂಡು ಬಂದಿರುವ ಕಲ್ಮಶಗಳ ಕುರಿತು ತನಿಖೆ ಮುಂದುವರಿದೆ. 2019-2024ರ ಅವಧಿಯಲ್ಲಿ ವಿತರಿಸಲಾಗಿದ್ದ ಒಟ್ಟು 48.76 ಕೋಟಿ ಲಾಡುಗಳಲ್ಲಿ ಈ 20 ಕೋಟಿ ಲಾಡುಗಳೂ ಸೇರಿದ್ದವು ಎಂದು ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಟ್ರಸ್ಟ್ನ ಅಧ್ಯಕ್ಷ ಬಿ.ಆರ್.ನಾಯ್ಡು ತಿಳಿಸಿದರು. ದೇವಸ್ಥಾನಕ್ಕೆ ಪ್ರತಿ ದಿನ ಆಗಮಿಸುವ ಭಕ್ತರ ಸಂಖ್ಯೆ, ಖರೀದಿ ವಿವರಗಳು ಹಾಗೂ ಉತ್ಪಾದನೆ ಮತ್ತು ಮಾರಾಟ ಅಂಕಿಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಸರಳ ಲೆಕ್ಕಾಚಾರದ ಆಧಾರದಲ್ಲಿ ಈ ಸಂಖ್ಯೆಯನ್ನು ಪಡೆಯಲಾಗಿದೆ. ಕಲಬೆರಕೆಯು ಕಳೆದ ವರ್ಷ ಬೆಳಕಿಗೆ ಬಂದಿದ್ದು,ಪ್ರಸಾದವನ್ನು ಪವಿತ್ರ ಎಂದು ಪರಿಗಣಿಸುವ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿತ್ತು. ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡವು (ಸಿಟ್) ಈಗ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ತಾಳೆ ಎಣ್ಣೆ ಮತ್ತು ಇತರ ವಿಷಕಾರಿ ಪದಾರ್ಥಗಳು ಮಿಶ್ರಗೊಂಡಿದ್ದ ಸುಮಾರು 250 ಕೋಟಿ ರೂ.ಮೌಲ್ಯದ 68 ಲಕ್ಷ ಕೆ.ಜಿ.ಕಲಬೆರಕೆ ತುಪ್ಪವನ್ನು ಉತ್ತರಾಖಂಡದ ಭೋಲೆ ಬಾಬಾ ಡೇರಿ ಮತ್ತು ಅದರ ಶೆಲ್ ಕಂಪನಿಗಳು ಪೂರೈಸಿದ್ದವು ಎನ್ನುವುದನ್ನು ಸಿಟ್ ಪತ್ತೆ ಹಚ್ಚಿದೆ. 2019ರಿಂದ 2024ರ ನಡುವಿನ ಐದು ವರ್ಷಗಳ ಅವಧಿಯಲ್ಲಿ ಅಂದಾಜು 11 ಕೋಟಿ ಜನರು ದೇವಸ್ಥಾನಕ್ಕೆ ಭೇಟಿ ನೀಡಿದ್ದು,ಕಲಬೆರಕೆ ತುಪ್ಪವನ್ನು ಬಳಸಿ ತಯಾರಿಸಿದ್ದ ಲಾಡುಗಳನ್ನು ಯಾರು ಸ್ವೀಕರಿಸಿದ್ದರು ಎನ್ನುವುದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿದವು. ವಿವಿಐಪಿ ಲಾಡುಗಳನ್ನು ಸಹ ಪ್ರತ್ಯೇಕವಾಗಿ ಗುರುತಿಸಲು ಸಾಧ್ಯವಿಲ್ಲ ಎಂದು ಟಿಟಿಡಿ ಒಪ್ಪಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟ್ ಇತ್ತೀಚಿಗೆ ಮಾಜಿ ಟಿಟಿಡಿ ಅಧ್ಯಕ್ಷ ಹಾಗೂ ವೈಎಸ್ಆರ್ಸಿಪಿ ಸಂಸದ ವೈ.ವಿ.ಸುಬ್ಬಾರೆಡ್ಡಿಯವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಸ್ಯಾಂಪಲ್ಗಳಲ್ಲಿ ಕಲಬೆರಕೆಯನ್ನು ಪ್ರಯೋಗಾಲಯವು ಪತ್ತೆ ಹಚ್ಚಿದ್ದರೂ ತುಪ್ಪದ ಟ್ಯಾಂಕರ್ಗಳಿಗೆ ಏಕೆ ಅವಕಾಶ ನೀಡಲಾಗಿತ್ತು ಎಂಬ ಪ್ರಶ್ನೆಗೆ ಸುಬ್ಬಾರಾವ್, ವರದಿಯನ್ನು ಎಂದಿಗೂ ತನಗೆ ಸಲ್ಲಿಸಿರಲಿಲ್ಲ ಮತ್ತು ತಾಂತ್ರಿಕ ಸಮಿತಿಯ ಶಿಫಾರಸುಗಳ ಮೇರೆಗೆ ಖರೀದಿಯನ್ನು ಮಾಡಲಾಗಿತ್ತು ಎಂದು ಉತ್ತರಿಸಿದ್ದರು. ಸುಬ್ಬಾರಾವ್ ಅವರ ಸಹಾಯಕ ಚಿನ್ನ ಅಪ್ಪಣ್ಣನನ್ನು ಸಿಟ್ ಈಗಾಗಲೇ ಬಂಧಿಸಿದೆ. ಸಿಟ್ ಮಾಜಿ ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ.ಧರ್ಮರೆಡ್ಡಿ ಅವರನ್ನೂ ವಿಚಾರಣೆ ನಡೆಸಿದೆ. ಅದು ತನ್ನ ತನಿಖೆಯ ಪ್ರಮುಖ ಅಂಶಗಳನ್ನು ನೆಲ್ಲೂರಿನ ನ್ಯಾಯಾಲಯಕ್ಕೆ ಸಲ್ಲಿಸಿದ್ದು,ಡಿ.15ರೊಳಗೆ ಪೂರಕ ದೋಷಾರೋಪ ಪಟ್ಟಿಯನ್ನು ಸಲ್ಲಿಸುವ ನಿರೀಕ್ಷೆಯಿದೆ.
ಪೊಕ್ಸೊ ಕಾಯಿದೆಯಡಿ ಜೀವಾವಧಿ ಶಿಕ್ಷೆ ನೀಡಲು ಅವಕಾಶ : ನ್ಯಾ.ಪುರುಷೋತ್ತಮ
ಉಡುಪಿ, ನ.22: ಇತರ ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯನ್ನು ಪ್ರಕಟಿಸುವ ವೇಳೆ ನ್ಯಾಯಾಧೀಶರು ತಮ್ಮ ಪರಮಾಧಿಕಾರವನ್ನು ಬಳಸಲು ಅವಕಾಶವಿದೆ. ಆದರೆ ಪೋಕ್ಸೊ ಕಾಯ್ದೆಯಲ್ಲಿ ನ್ಯಾಯಧೀಶರು ಕನಿಷ್ಠ 10 ವರ್ಷ ಶಿಕ್ಷೆಯನ್ನು ನೀಡಲೇಬೇಕಾಗಿದೆ. ಅದೇ ರೀತಿ ಜೀವಾವಧಿ ಶಿಕ್ಷೆಯನ್ನು ನೀಡಲು ಅವಕಾಶವಿದೆ ಎಂದು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸಿಜೆಎಂ ಎಂ.ಪುರುಷೋತ್ತಮ್ ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಶುಕ್ರವಾರ ನಡೆದ ಪೋಕ್ಸೊ ಕಾಯ್ದೆಯ ಮಾಹಿತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಅಶ್ಲೀಲ ಪೋಟೋ ನೋಡುವುದು ಅಪರಾಧವಾಗಿದೆ. ಪ್ರಕರಣದ ಬಗ್ಗೆ ತಿಳಿದು, ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡದೇ ಇರುವುದು, ಸುಳ್ಳು ಪ್ರಕರಣ ದಾಖಲಿಸುವುದು ಈ ಎಲ್ಲಾ ಕೃತ್ಯಗಳನ್ನು ತಪ್ಪು ಎಂದು ಕಾಯ್ದೆ ತಿಳಿಸಿದ್ದು, ಶಿಕ್ಷೆಯನ್ನು ವಿಧಿಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಈ ಕಾಯ್ದೆಯ ಬಗ್ಗೆ ತಿಳಿದುಕೊಂಡು, ಇತರರಿಗೂ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಿ ಎಂದರು. 2012ರ ನ.14ರಂದು ಪೋಕ್ಸೊ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯಲ್ಲಿ ಒಟ್ಟು 46 ಸೆಕ್ಷನ್ ಗಳಿವೆ. ಈ ಕಾಯ್ದೆಯನ್ನು 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಾಗುವ ಶೋಷಣೆ, ಲೈಂಗಿಕ ಶೋಷಣೆಗೆ ಒಳಗಾದವರಿಗೆ ನ್ಯಾಯದೊರಕಿಸಿ ಕೊಡಲೆಂದು ರೂಪಿಸಲಾಗಿದೆ. ಕೆಲವು ಯೌವನದ ಪೇಮಾಂಕುರವು, ಆಕರ್ಷಣೆಗೆ ಒಳಗಾಗಿ ಪರಸ್ಪರ ಒಪ್ಪಿಗೆಯಿಂದ ಒಂದಾಗಿದ್ದರೂ, ಪೋಷಕರ ಒತ್ತಡದಿಂದ ಸುಳ್ಳು ಪೋಕ್ಸೊ ಪ್ರಕರಣಗಳು ದಾಖಲಾದ ನಿದರ್ಶನಗಳಿವೆ. ಆರೋಪ ಸಾಭೀತಾಗಿ ಶಿಕ್ಷೆ ಪ್ರಕಟಗೊಂಡರೆ ಆತನ ಜೀವನವೇ ಬರ್ಬಾದ್ ಆಗುತ್ತದೆ. ಹೀಗಾಗಿ ಕಾಯ್ದೆಯ ಕುರಿತಾಗಿ ಜಾಗೃತಿ ಅತ್ಯಗತ್ಯ ಎಂದು ಅವರು ತಿಳಿಸಿದರು. ಕಾಲದಿಂದ ಕಾಲಕ್ಕೆ ಕಾನೂನುಗಳು ಬದಲಾಗುತ್ತಿರುತ್ತವೆ. ಅನೇಕ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಆದರೆ ಹಳ್ಳಿಯಲ್ಲಿ ನಮ್ಮ ಹಿರಿಯರು ಕಟ್ಟಿದ ಗಾದೆ ಮಾತುಗಳು ಎಲ್ಲಾ ಕಾಲಕ್ಕೂ ಪ್ರಸ್ತುತ. ಮಕ್ಕಳನ್ನು ದೇವರಂತೆ ಕಾಣು ಎಂದು ಶತಮಾನಗಳ ಹಿಂದೆಯೇ ಹಿರಿಯರು ತಿಳಿಸಿದ್ದರು. ಇಂದು ಮಕ್ಕಳನ್ನು ದೇವರಂತೆ ಕಂಡರೇ ಪೋಕ್ಸೊ ಪ್ರಕರಣಗಳು ದಾಖಲಾಗುವುದು ತಪ್ಪುತ್ತದೆ ಎಂದರು. ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿರ್ದೇಶಕಿ ಪ್ರೊ.ಡಾ.ನಿರ್ಮಲಾ ಕುಮಾರಿ ಮಾತನಾಡಿ, ಭಾರತದ ಸಂವಿಧಾನ 15ನೇ ಅನುಚ್ಛೇದವು ಯಾರನ್ನು ತಾರತಮ್ಯ ಮಾಡಬಾರದು ಎಂದು ಹೇಳುವುದಲ್ಲದೇ, ಶೋಷಣೆಯನ್ನು ತಡೆಗಟ್ಟಲು ವಿಶೇಷ ಕಾಯ್ದೆಯನ್ನು ರಚಿಸಲು ಅವಕಾಶವನ್ನು ಕಲ್ಪಿಸಿದೆ. ಹೀಗಾಗಿ ಪೋಕ್ಸೊ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಕಾನೂನು ಆಯೋಗವು ಈಗಾಗಲೇ 227 ವರದಿಗಳನ್ನು ಸಿದ್ದಪಡಿಸಿದ್ದು, ಕಾಲ ಕಾಲಕ್ಕೆ ಕಾನೂನು ರಚಿಸುತ್ತವೆ ಎಂದು ಅವರು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರಕಾಂತ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಡಾ.ರಾಘವೇಂದ್ರ ಉಪಸ್ಥಿತರಿದ್ದರು. ಪತ್ರಕರ್ತ ರಕ್ಷಿತ್ ಬೆಳಪು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅಶ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ನವ್ಯಾ ವಂದಿಸಿದರು. ನಿಶಾ ನಿರೂಪಿಸಿದರು.
ಉಡುಪಿ | ಮೂವರಿಗೆ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಪ್ರದಾನ
ಉಡುಪಿ, ನ.22: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ ಸಮಾರಂಭವನ್ನು ಶನಿವಾರ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿತ್ತು. ಚನ್ನಪ್ಪ ಅಂಗಡಿ(ಸಮಗ್ರ ಸಾಹಿತ್ಯ), ಡಾ.ನಿಕೇತನ(ಸಂಶೋಧನೆ, ವಿಮರ್ಶೆ) ಹಾಗೂ ಮುದಲ್ ವಿಜಯ್(ಕಾವ್ಯ) ಅವರಿಗೆ ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ಮಾಧವಿ ಭಂಡಾರಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಮಲಬಾರ್ ಗೋಲ್ಡ್ ಉಡುಪಿ ವ್ಯವಸ್ಥಾಪಕ ಪುರಂದರ, ಪುರಸ್ಕಾರ ಸಮಿತಿಯ ಸಂಚಾಲಕಿ ಸಂಧ್ಯಾ ಶೆಣೈ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಭಟ್ ಪಣಿಯಾಡಿ ಕಾರ್ಯಕ್ರಮ ನಿರೂಪಿಸಿದರು.
ರಾಯಚೂರು |15 ಪ್ರಮುಖ ಹಕ್ಕೊತ್ತಾಯ ಪರಿಹಾರಕ್ಕೆ ಆಗ್ರಹಿಸಿ ನ.26ರಂದು ಬೆಂಗಳೂರು ಚಲೋ : ಡಿ.ಹೆಚ್ ಪೂಜಾರ್
ಸಿಂಧನೂರು : ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಮತ್ತು ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಿದ್ದ ಹದಿನೈದು ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕಾಗಿ ಆಗ್ರಹಿಸಿ ಹಾಗೂ ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ನ.26 ರಂದು ಬೃಹತ್ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕೋರ್ ಕಮೀಟಿ ಸದಸ್ಯ ಡಿ.ಹೆಚ್.ಪೂಜಾರ್ ಹೇಳಿದರು. ಶನಿವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಹೆಚ್.ಪೂಜಾರ್, ರಾಜ್ಯ ಹಾಗೂ ಕೇಂದ್ರ ಸರಕಾರದ ನೀತಿಗಳನ್ನು ಧಿಕ್ಕರಿಸಿ ಸಂಯುಕ್ತ ಕಿಸಾನ್ ಮೋರ್ಚಾ ಜೆಸಿಟಿಯು ಹಾಗೂ ವಿವಿಧ ಸಂಘಟನೆಗಳ ಕರೆಯ ಮೇರೆಗೆ ಬೆಂಗಳೂರು ಚಲೋ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ಕೇಂದ್ರ ಸರಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಖಾಸಗಿ ಕಂಪೆನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಇದರಿಂದ ಜನರು ತೀವ್ರ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ. ಜನಹಿತ ರಕ್ಷಿಸುತ್ತೇವೆ. ಕಾಂಗ್ರೆಸ್ ಸರಕಾರ ಈಗ ಏನು ಮಾಡುತ್ತಿದೆ? ಬರೀ ಆಶ್ವಾಸನೆ ನೀಡುತ್ತಾ ಕಾಲ ಕಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ, ಎಲ್ಲಾ ಆರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು. ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು. ವಸತಿ ನಿವೇಶನಗಳ ಹಂಚಿಕೆಗೆ ಸರಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ ಕಾರ್ಯನೀತಿಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಸಲಿಂಗಪ್ಪ, ಬಿ.ಎನ್.ಯರದಿಹಾಳ, ಚಿಟ್ಟಿಬಾಬು ಬೂದಿವಾಳ ಕ್ಯಾಂಪ್, ರಮೇಶ್ ಪಾಟೀಲ್ ಬೇರಗಿ, ಬಸನಗೌಡ ಮುಳ್ಳೂರು, ಹೆಚ್.ವಿರೂಪಾಕ್ಷಗೌಡ ಕಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು : ಕೆ.ವಿ.ಪ್ರಭಾಕರ್
ಮಂಗಳೂರು, ನ.22 : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತ್ರಿ ಕೋಶ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಪತ್ರಿಕಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಆಧುನಿಕ ಕಾಲಘಟ್ಟದಲ್ಲಿ ಸುಳ್ಳು ಸುದ್ದಿ, ಊಹಾ ಪತ್ರಿಕೋದ್ಯಮ ವೇಗವಾಗಿ ಹರಡುತ್ತದೆ. ಈ ರೀತಿಯ ಪತ್ರಿಕೋದ್ಯಮ ಸಮಾಜದಲ್ಲಿ ವಿಭಜನೆ ಅಭದ್ರತೆಗೆ ಕಾರಣವಾಗುತ್ತಿದೆ. ಮಾಧ್ಯಮಗಳು ಜನರು ಮತ್ತು ಸರಕಾರದ ನಡುವೆ ರಾಯಭಾರಿಗಳಂತೆ ಕಾರ್ಯ ನಿರ್ವಹಿಸಬೇಕಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಕಾಲದಲ್ಲಿ ಮುಂಚೂಣಿಯಲ್ಲಿದ್ದ ಅಭಿವೃದ್ಧಿ ಪತ್ರಿಕೋದ್ಯಮ ಕಳೆಗುಂದುತ್ತಿದೆ ಎಂದರು. ಇಂದಿನ ಸುದ್ದಿ ಪ್ರಸಾರದ ಧಾವಂತದಲ್ಲಿ, ಡಿಜಿಟಲ್ ಮಾಧ್ಯಮಗಳ ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳುವುದೇ ಒಂದು ಸವಾಲಾಗಿದೆ. ಪತ್ರಕರ್ತರಿಗೆ ಸಮಾಜವನ್ನು ತಿದ್ದುವ ಅವಕಾಶವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವಾಗದಂತೆ ಪತ್ರಕರ್ತರು ಎಚ್ಚರ ವಹಿಸಬೇಕಾಗಿದೆ. 1966 ರ ನವೆಂಬರ್ 16 ರಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ರಚನೆಯಾದ ಹಿನ್ನೆಲೆಯಲ್ಲಿ ಆ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಭವಿಷ್ಯದ ಮಾಧ್ಯಮಗಳು ಎಂಬ ವಿಷಯದ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕ ಖಾದರ್ ಶಾ, ಮಂಗಳೂರು ರೋಟರಿ ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ ಕರ್ನಾಟಕ ಸೆಣಬು ನಿಗಮ ಅಧ್ಯಕ್ಷ ನಟರಾಜ್, ರಾಜ್ಯ ಬಾಲಭವನ ಸಮಿತಿಯ ಅಧ್ಯಕ್ಷ ಬಿ.ಆರ್ ನಾಯ್ಡು ಉಪಸ್ಥಿತರಿದ್ದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಸುರೇಶ್ ವಂದಿಸಿದರು.
ಲಕ್ನೋ,ನ.22: ಉತ್ತರಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟವು ಬಲವಾದ ಸಾಧನೆ ಮಾಡಿದ್ದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಮತದಾರರನ್ನು ಮತದಾರಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ಸರಕಾರ ಹಾಗೂ ಚುನಾವಣಾ ಆಯೋಗವು ಸಂಚುಹೂಡಿದೆ ಎಂದು ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಶನಿವಾರ ಆಪಾದಿಸಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ 12 ರಾಜ್ಯಗಳಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಮೆ (ಎಸ್ಐಆರ್) ನಡೆಯುತ್ತಿರುವ ನಡುವೆ ಅಖಿಲೇಶ್ ಅವರು ಈ ಆರೋಪ ಮಾಡಿರುವುದು ಹೆಚ್ಚಿನ ಮಹತ್ವವನ್ನು ಪಡೆದಿದೆ. ತನ್ನ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಪಕ್ಷದ ಮುಖ್ಯ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ‘‘ ಉತ್ತರಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ, ಬಿಜೆಪಿಯು ಚುನಾವಣಾ ಆಯೋಗದ ಜೊತೆ ಶಾಮೀಲಾಗಿ ಮತದಾರರ ಹೆಸರುಗಳನ್ನು ಅಳಿಸಿಹಾಕಲು ದೊಡ್ಡ ಮಟ್ಟದ ಸಿದ್ಧತೆಗಳನ್ನು ನಡೆಸುತ್ತಿರುವ ಬಗ್ಗೆ ನಮಗೆ ಮಾಹಿತಿ ದೊರೆತಿದೆ’’ ಎಂದವರು ಹೇಳಿದ್ದಾರೆ. ವಿವಾಹದ ಋತುವಿನಲ್ಲಿ ಎಸ್ಐಆರ್ ನಡೆಸಕೂಡದೆಂದು ಆಗ್ರಹಿಸಿದ ಅವರು ಉತ್ತರಪ್ರದೇಶದ ಮತದಾರ ಪಟ್ಟಿಯನ್ನು ಪರಿಷ್ಕರಿಸುವ ಪ್ರಕ್ರಿಯೆಗೆ ಕಾಲಾಮಿತಿಯನ್ನು ಚುನಾವಣಾ ಆಯೋಗವು ವಿಸ್ತರಿಸಬೇಕೆಂದು ಅವರು ಆಗ್ರಹಿಸಿದರು. 2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 225 ಸ್ಛಾನಗಳನ್ನು ಗೆದ್ದಿತ್ತು. ಆದರೆ 2024ರ ಲೋಕಸಭಾ ಚುನಾವಣೆಯ ವೇಳೆಗೆ ಪಕ್ಷವು ಕೇವಲ 162 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಹೊಂದಿತ್ತು. ಆದರೆ 2022ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು 111 ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯಗಳಿಸಿದ್ದು, 183 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು. 2022ರ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಎರಡರಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಗಳಿಸಿತ್ತು ಎಂದವರು ಹೇಳಿದರು. 2024ರ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಹಾಗೂ ಚುನಾವಣಾ ಆಯೋಗವು ಪ್ರಾಥಮಿಕವಾಗಿ ಉತ್ತರಪ್ರದೇಶ ಹಾಗೂ ಪಶ್ಚಿಮಬಂಗಾಳದ ಬಗ್ಗೆ ಗಮನಹರಿಸಿದೆ ಎಂದರು. ಮತದಾರ ಪಟ್ಟಿಯನ್ನು ವಿವೇಕಯುತವಾಗಿ ದೃಢಿೀಕರಿಸುವಂತೆ ಬೂತ್ ಮಟ್ಟದ ಅಧಿಕಾರಿಗಳನ್ನು ಭೇಟಿಯಾಗುವುದು, ಅರ್ಹ ಮತದಾರರನ್ನು ದೃಢೀಕರಿಸುವುದು ಹಾಗೂ ಯಾವುದೇ ಅಕ್ರಮಗಳು ನಡೆದಲ್ಲಿ ತಕ್ಷಣವೇ ಪಕ್ಷದ ಮುಖ್ಯ ಕಚೇರಿಗೆ ಮಾಹಿತಿ ನೀಡಬೇಕೆಂದು ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು. ಸ್ವಕ್ಷೇತ್ರವಾದ ಕನೌಜ್ ಅನ್ನು ಕೂಡಾ ಮತದಾರರ ಹೆಸರುಗಳನ್ನು ಅಳಿಸಲು ಗುರಿಯಾಗಿಸಲಾಗಿದೆ ಎಂದವರು ಹೇಳಿದರು. ‘‘ ಉತ್ತರಪ್ರದೇಶ ವಿಧಾನಸಭಾ ಚುನಾವಮೆಣೆಗೆ 414 ದಿನಗಳು ಬಾಕಿಯುಳಿದಿವೆ. ಉತ್ತರಪ್ರದೇಶದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 50 ಸಾವಿರಕ್ಕೂ ಅಧಿಕ ಮತಗಳನ್ನು ತೆಗೆದುಹಾಕಲು ಸಂಚು ನಡೆಯುತ್ತಿದೆ.ಅದನ್ನು ತಡೆಗಟ್ಟಲು ಸಮಾಜವಾದಿ ಪಕ್ಷದ ಕಾರ್ಯಕರ್ತರು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ’’ ಎಂದವರು ಹೇಳಿದರು.
ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರೂಪಿಸಿದ ಕಾಂಗ್ರೆಸ್
ಹೊಸದಿಲ್ಲಿ, ನ. 22: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಐವರು ಸದಸ್ಯರ ಸಮಿತಿಯೊಂದನ್ನು ರೂಪಿಸಿದ್ದಾರೆ. ಈ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂತಂಗೈ ಅವರು ಶನಿವಾರ ಮಾಹಿತಿ ನೀಡಿದ್ದಾರೆ. ತಮಿಳುನಾಡು ಹಾಗೂ ಪುದುಚೇರಿಯ ಪಕ್ಷದ ಉಸ್ತುವಾರಿ ಗಿರೀಶ್ ಚೋಂಡಂಕರ್ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸೆಲ್ವಪೆರುಂತಂಗೈ ಹಾಗೂ ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್ ಕುಮಾರ್ ಅವರು ಕೂಡ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಸಮಿತಿ ನಿಯೋಜಿಸಿರುವುದಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ, ರಾಜ್ಯ ಸಭಾ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪಕ್ಷದ ಹೈ ಕಮಾಂಡ್ ಅನ್ನು ಶ್ಲಾಘಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿದ್ದಾರೆ. ಈ ನಡೆ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟನ್ನು ಸಶಕ್ತಗೊಳಿಸಲಿದೆ ಎಂದು ಚಿದಂಬರಂ ಹೇಳಿದ್ದಾರೆ.
ಗುಜರಾತ್: ಎಸ್ಐಆರ್ ಕೆಲಸದ ಒತ್ತಡ ಬಿಎಲ್ಒ ಸಹಾಯಕಿ ಕುಸಿದು ಬಿದ್ದು ಮೃತ್ಯು
ಅಹ್ಮದಾಬಾದ್, ನ. 22: ಗುಜರಾತ್ನ ವಡೋದರಾದ ಶಾಲೆಯೊಂದರಲ್ಲಿ ಶನಿವಾರ ಕರ್ತವ್ಯ ನಿರತರಾಗಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರ ಸಾವು ಸಿಬ್ಬಂದಿಯ ಮೇಲೆ ಎಸ್ಐಆರ್ ಕೆಲಸದ ಒತ್ತಡದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮೃತಪಟ್ಟ ಬಿಎಲ್ಒ ಸಹಾಯಕಿಯನ್ನು ಉಷಾಬೆನ್ ಇಂದ್ರಸಿಂಗ್ ಸೋಲಂಕಿ (50) ಎಂದು ಗುರುತಿಸಲಾಗಿದೆ. ಇವರು ವಡೋದರಾದ ಕಡಕ್ ಬಜಾರ್ನ ಪ್ರತಾಪ್ ಶಾಲೆಯಲ್ಲಿ ಎಸ್ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೊರ್ವಾ ಮಹಿಳಾ ಐಟಿಐಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉಷಾಬೆನ್ ಅವರನ್ನು ದುರ್ಬಲ ಆರೋಗ್ಯದ ಹೊರತಾಗಿಯೂ ಬೂತ್ ಮಟ್ಟದ ಅಧಿಕಾರಿಯ ಸಹಾಯಕಿಯಾಗಿ ನಿಯೋಜಿಸಲಾಗಿತ್ತು. ಉಷಾಬೆನ್ ಅವರ ಆರೋಗ್ಯದ ಬಗ್ಗೆ ಕುಟುಂಬ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತ್ತು ಎಂದು ಅವರ ಪತಿ ಇಂದ್ರಸಿಂಗ್ ಸೋಲಂಕಿ ಬಹಿರಂಗಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‘‘ನನ್ನ ಪತ್ನಿಯ ಆರೋಗ್ಯ ಚೆನ್ನಾಗಿರಲಿಲ್ಲ. ನಾವು ಸುಭಾನ್ಪುರದಲ್ಲಿ ಪಿಡಬ್ಲ್ಯು ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದೆವು. ಅವರು ಗರ್ವಾ ಐಟಿಐಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಬಿಎಲ್ಒ ಕರ್ತವ್ಯ ನೀಡದಿರುವಂತೆ ನಾವು ಮನವಿ ಮಾಡಿದ್ದೆವು. ಆದರೆ, ನಮ್ಮ ಮನವಿಯ ಹೊರತಾಗಿಯೂ ಅವರನ್ನು ಕರ್ತವ್ಯಕ್ಕೆ ಕಳುಹಿಸಲಾಗಿದೆ’’ ಎಂದು ಇಂದ್ರಸಿಂಗ್ ಸೋಲಂಕಿ ಹೇಳಿದ್ದಾರೆ. ಉಷಾ ಬೆನ್ ಅವರ ಇನ್ನೋರ್ವ ಸಂಬಂಧಿ ವಿಕ್ರಮಸಿಂಗ್ ಸುಹಾದಿಯಾ ಎಸ್ಐಆರ್ನ ಅತ್ಯಧಿಕ ಕೆಲಸದ ಒತ್ತಡದ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ. ‘‘ಐಟಿಐ ಕ್ಲರ್ಕ್ ಕರ್ತವ್ಯಗಳ ಹೊರತಾಗಿ ನೀಡಲಾದ ಕೆಲಸದ ಹೊರೆಯಿಂದ ಅವರು ಒತ್ತಡಕ್ಕೆ ಒಳಗಾಗಿದ್ದರು’’ ಎಂದು ಅವರು ಹೇಳಿದ್ದಾರೆ. ಗುಜರಾತ್ನಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಒಟ್ಟು ನಾಲ್ವರು ಬಿಎಲ್ಒ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದರೆ, ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಬೈ: ಮಹಾರಾಷ್ಟ್ರದ ವಿಪಕ್ಷಗಳ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದ್ದು, “ಶಿವಸೇನೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಡುವಿನ ಮೈತ್ರಿಯ ಬಗ್ಗೆ ಕಾಂಗ್ರೆಸ್ ಅಭಿಪ್ರಾಯವೇನು ಎಂಬುದು ನಮಗೆ ಮುಖ್ಯವಲ್ಲ” ಎಂದು ಶಿವಸೇನೆ (ಉದ್ಛವ್ ಬಣ) ಸಂಸದ ಸಂಜಯ್ ರಾವತ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮುನ್ನ, ಮೈತ್ರಿಕೂಟದ ಕುರಿತು ದಿಲ್ಲಿಯ ಹೈಕಮಾಂಡ್ ಅನ್ನು ಸಂಪರ್ಕಿಸದೆ ತಾನು ಸಮ್ಮತಿಯನ್ನು ವ್ಯಕ್ತಪಡಿಸುವುದಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕ ಎಚ್ಚರಿಕೆಯ ನಿಲುವನ್ನು ಪ್ರಕಟಿಸಿತ್ತು. ಈ ಹೇಳಿಕೆಯನ್ನು ಉಲ್ಲೇಖಿಸಿರುವ ಸಂಜಯ್ ರಾವತ್, “ಕಾಂಗ್ರೆಸ್ ತನ್ನ ವೈಯಕ್ತಿಕ ನಿರ್ಧಾರವನ್ನು ಏನೇ ಕೈಗೊಂಡರೂ, ಯಾರದೇ ಅನುಮತಿಗಾಗಿ ಶಿವಸೇನೆ (ಉದ್ಧವ್ ಬಣ) ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾಯುವುದಿಲ್ಲ” ಎಂದೂ ಘೋಷಿಸಿದ್ದಾರೆ. “ಶಿವಸೇನೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ ಈಗಾಗಲೇ ಒಟ್ಟಿಗೆ ಬಂದಿವೆ. ಇದು ಜನರ ಬಯಕೆಯಾಗಿದೆ. ಇದಕ್ಕಾಗಿ ಯಾರದೇ ಆದೇಶ ಅಥವಾ ಅನುಮತಿಯ ಅಗತ್ಯವಿಲ್ಲ. ಈ ವಿಷಯದ ಕುರಿತು ಶರದ್ ಪವಾರ್ ಹಾಗೂ ಎಡಪಕ್ಷಗಳು ಒಮ್ಮತ ಹೊಂದಿವೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ನಡುವೆ, ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳೂ ಒಟ್ಟುಗೂಡಬೇಕು ಎಂದು ಶರದ್ ಪವಾರ್ ಸೂಚಿಸಿದ್ದಾರೆ. ಮುಂಬೈನಲ್ಲಿ ಆಯೋಜನೆಗೊಂಡಿದ್ದ ಪಕ್ಷದ ಸಭೆಯಲ್ಲಿ ಈ ಇಂಗಿತವನ್ನು ವ್ಯಕ್ತಪಡಿಸಿದ ಶರದ್ ಪವಾರ್, ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿಯ ವಿರುದ್ಧ ಒಗ್ಗಟ್ಟಾಗಿ ಸ್ಪರ್ಧಿಸಬೇಕು ಎಂದು ಕರೆ ನೀಡಿದ್ದಾರೆ.
ಉಡುಪಿಗೆ ಪ್ರಧಾನಿ ಮೋದಿ ಆಗಮನ ಡೇಟ್ ಫಿಕ್ಸ್; ಈ ದಿನದಂದು ಶ್ರೀಕೃಷ್ಣ ಮಠಕ್ಕೆ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯ ಖಚಿತಪಡಿಸಿದೆ. ನವೆಂಬರ್ 28 ರಂದು ಉಡುಪಿಗೆ ಆಗಮಿಸಲಿರುವ ಮೋದಿ, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಲಕ್ಷ ಕಂಠ ಗೀತ ಗಾಯನ ಕಾರ್ಯಕ್ರಮ ಭಾಗಿಯಾಗಿ ನಂತರ ಗೋವಾಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಸಮಯದ ಅಭಾವದಿಂದ ಈ ಹಿಂದೆ ಯೋಜಿಸಲಾಗಿದ್ದ ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
ಮೂಡುಬಿದಿರೆ | ಯೆನೆಪೋಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಮೂಡುಬಿದಿರೆ: ಕ್ರೀಡೆಯು ನಮಗೆ ಸಮಯದ ನಿರ್ವಹಣೆಯನ್ನು, ಸರಿಯಾದ ವೇಳೆಯಲ್ಲಿ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವಂತಹ ಅನೇಕ ಬದುಕಿನ ಅವಕಾಶಗಳನ್ನು ನೀಡುತ್ತದೆ ಎಂದು ಕಬಡ್ಡಿ ರಾಷ್ಟ್ರೀಯ ಆಟಗಾರ್ತಿ ದೀಕ್ಷಾ ಕುಮಾರಿ ಹೇಳಿದರು. ಅವರು ಸ್ವರಾಜ್ಯ ಮೈದಾನದಲ್ಲಿ ಶನಿವಾರ ತೋಡಾರಿನ ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಮತ್ತು ಕ್ರೀಡೆಗಳನ್ನು ಸಮಾನವಾಗಿ, ವ್ಯವಸ್ಥಿತ ರೀತಿಯಲ್ಲಿ ಮುನ್ನಡೆಸುವ ಅಗತ್ಯ ಕ್ರೀಡಾಳುಗಳಿಗೆ ಇದೆ ಎಂದರು. ಯೆನೆಪೋಯ ವಿವಿಯ ಅಪರೇಷನ್ ವಿಭಾಗದ ನಿರ್ದೇಶಕ ಅಬ್ದುಲ್ಲಾ ಜಾವೇದ್, ಉಪ ಪ್ರಾಂಶುಪಾಲ ಪ್ರಭಾಕರ ಬಿ.ಕೆ., ಕ್ಯಾಂಪಸ್ ಆಡಳಿತಾಧಿಕಾರಿ ಮುಹಮ್ಮದ್ ಶಾಹಿದ್, ಕ್ರೀಡಾ ನಿರ್ದೇಶಕ ಲೋಕೇಶ್ ಮತ್ತಿತರರಿದ್ದರು. ವಿದ್ಯಾರ್ಥಿಗಳಾದ ವಾಂಚಿತಾ ಸ್ವಾಗತಿಸಿದರು. ತಾಸ್ಮಿಯಾ ವಾರ್ಷಿಕ ಕ್ರೀಡಾಕೂಟದ ವರದಿ ವಾಚಿಸಿದರು. ಇಬ್ರಿಸಾನ್ ನಿರೂಪಿಸಿದರು. ಸಂಜು ವಂದಿಸಿದರು. ವಾರ್ಷಿಕ ಕ್ರೀಡಾಕೂಟದಲ್ಲಿ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 400ಕ್ಕೂ ಅಧಿಕ ಕ್ರೀಡಾಪಟುಗಳು ಕ್ರೀಡಾಪಟುಗಳಾಗಿ ಭಾಗವಹಿಸಿದರು. ಪಥ ಸಂಚಲನದಲ್ಲಿ ಇಸಿಇ ವಿಭಾಗವು ಪ್ರಥಮ ಬಹುಮಾನವನ್ನು ಪಡೆದುಕೊಂಡಿತು. ಶಿರ್ತಾಡಿ ಭುವನ ಜ್ಯೋತಿ ಸಂಸ್ಥೆಯ ಬ್ಯಾಂಡ್ ಸೆಟ್ ತಂಡವನ್ನು ಗೌರವಿಸಲಾಯಿತು.
ಉಡುಪಿ, ನ.22: ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮವು ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ.ಬಾಳಿಗಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಂದಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು. ವೇದಿಕೆಯಲ್ಲಿ ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ ಮತ್ತು ಡಾ.ಮಾನಸ್ ಈ.ಆರ್. ಉಪಸ್ಥಿತರಿದ್ದರು. ಜೇನಿಷಾ ಸ್ವಾಗತಿಸಿದರು. ಸಿಂಚನಾ ವಂದಿಸಿದರು. ಸ್ವಾತಿ ಮತ್ತು ಮಾಸ್ಟರ್ ಸಾತ್ವಿಕ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಯೋಗ ತಜ್ಞರಾದ ಇಳಾ ಅವರಿಂದ ಮನೋರಂಜನಾತ್ಮಕ ಯೋಗಾಸನವನ್ನು ಪ್ರದರ್ಶಿಸಲಾಯಿತು. ನಂತರ ಚಿತ್ರಕಲಾ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಎಲ್ಲಾ ಮಕ್ಕಳಿಗೂ ಸಮಾಧಾನಕರ ಬಹುಮಾನವನ್ನು ನೀಡಲಾಯಿತು. ತದ ನಂತರ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ನಡೆಯಲ್ಪಟ್ಟಿತು. 60ಕ್ಕೂ ಹೆಚ್ಚಿನ ಮಕ್ಕಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
ಉಡುಪಿ | ನ.23ರಂದು ʼರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳುʼ ಕುರಿತು ವಿಚಾರ ಸಂಕಿರಣ
ಉಡುಪಿ, ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ನ.23ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪ ದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 9.30ಕ್ಕೆ ಕಾರ್ಯಕ್ರಮವನ್ನು ಡಾ.ಜನಾರ್ದನ(ಸನ್ನಿ) ಮೈಸೂರು ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ. ನಾಗರಾಜ ಮೂರ್ತಿ ವಹಿಸಲಿರುವರು. ಬಳಿಕ ವಿವಿಧ ವಿಚಾರಗಳ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ಸಂಜೆ 4.15ಕ್ಕೆ ಸಮಾರೋಪ ಸಮಾರಂಭ ದಲ್ಲಿ ರೆ.ಫಾ.ಆಲ್ವಿನ್ ಸೆರಾವೋ ಸಮಾರೋಪ ಭಾಷಣ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
ಪೆರ್ನೆ ಎಲ್ಪಿಜಿ ಟ್ಯಾಂಕರ್ ದುರಂತ ಪ್ರಕರಣ: ಮೃತ ಕುಟುಂಬದವರ ಪರಿಹಾರ ಮೊತ್ತ ಕಡಿತಗೊಳಿಸಲು ಹೈಕೋರ್ಟ್ ನಕಾರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರಲ್ಲಿ ಸಂಭವಿಸಿದ್ದ ಎಲ್ಪಿಜಿ ಟ್ಯಾಂಕರ್ ದುರಂತದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ ಪರಿಹಾರ ಪ್ರಕಟಿಸಿರುವುದರಿಂದ, ಆ ಮೊತ್ತವನ್ನು ವಿಮಾ ಪರಿಹಾರದ ಮೊತ್ತದಲ್ಲಿ ಕಡಿತಗೊಳಿಸುವಂತೆ ಕೋರಿ ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಎಲ್ಪಿಜಿ ಟ್ಯಾಂಕರ್ನ ವಿಮೆದಾರರಾದ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಪಿ. ಶ್ರೀಸುಧಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರ ನೀಡಿರುವ ಹೆಚ್ಚುವರಿ ಪರಿಹಾರ (ಎಕ್ಸ್ಗ್ರೇಷಿಯಾ) ಕುಟುಂಬಗಳಿಗೆ ಉಂಟಾಗಿರುವ ಆದಾಯ ನಷ್ಟವನ್ನು ಭರಿಸಿಲು ನೀಡಿರುವ ಸಾಮಾಜಿಕ ಭದ್ರತೆಯ ಭಾಗವಾಗಿದೆ. ಅದಕ್ಕೂ ವಿಮೆ ಪರಿಹಾರಕ್ಕೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶವೇನು? ಎಲ್ಪಿಜಿ ಟ್ಯಾಂಕರ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರವಾಗಿ, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್ಪಿಸಿಎಲ್) ಪಾವತಿಸಿದ ಎಕ್ಸ್ಗ್ರೇಷಿಯಾವನ್ನು ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ (ಎಂಎಸಿಟಿ) ಘೋಷಿಸಿರುವ ಪರಿಹಾರದಿಂದ ಕಡಿತಗೊಳಿಸಲಾಗುವುದಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ. ಸರ್ಕಾರ ಸಂತ್ರಸ್ತರಿಗೆ ನೀಡುವ ಎಕ್ಸ್ಗ್ರೇಷಿಯಾವನ್ನು ಕಡಿತಗೊಳಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಎಕ್ಸ್ಗ್ರೇಷಿಯಾ ಪಾವತಿ ಸಾಮಾಜಿಕ ಭದ್ರತೆಯ ಭಾಗವೇ ಅಥವಾ ಆದಾಯ ನಷ್ಟಕ್ಕೆ ಪರಿಹಾರವೇ ಎಂಬುದು ಸ್ಪಷ್ಟವಾಗಿಲ್ಲ ಹಾಗೂ ಎಕ್ಸ್ಗ್ರೇಷಿಯಾ ಲೆಕ್ಕಾಚಾರಕ್ಕೆ ಆಧಾರವನ್ನು ಉಲ್ಲೇಖಿಸಲಾಗಿಲ್ಲ. ಎಲ್ಪಿಜಿ ಟ್ಯಾಂಕರ್ನಿಂದಾಗಿ ಅಪಘಾತ ಸಂಭವಿಸಿದ್ದು, ಅದಕ್ಕೆ ಚಾಲಕನ ನಿರ್ಲಕ್ಷ್ಯವೂ ಕಾರಣವಾಗಿದೆ ಎಂದು ಆದೇಶದಲ್ಲಿ ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮೋಟಾರು ವಾಹನ ಕಾಯ್ದೆ ಅಡಿಯಲ್ಲಿನ ಕ್ಲೇಮ್ಗಳನ್ನು ಪಡೆಯಲು ಸಂತ್ರಸ್ತರಿಗೆ ಅನುಮತಿಸಿದ್ದು, ಸಂಪೂರ್ಣ ಪರಿಹಾರದ ಮೊತ್ತವನ್ನು ಬಡ್ಡಿಯೊಂದಿಗೆ ಠೇವಣಿ ಇಡುವಂತೆ ವಿಮಾ ಕಂಪನಿಗೆ ನಿರ್ದೇಶಿಸಿದೆ. ಪ್ರಕರಣವೇನು? ಮಂಗಳೂರು-ಬಂಟ್ವಾಳ ಹೆದ್ದಾರಿಯ ಉಪ್ಪಿನಂಗಡಿ ಬಳಿಯ ಪೆರ್ನೆ ಗ್ರಾಮದಲ್ಲಿ 2013ರ ಎಪ್ರಿಲ್ 9ರಂದು ಎಲ್ಪಿಜಿ ಟ್ಯಾಂಕರ್ ಪಲ್ಟಿಯಾಗಿತ್ತು. ಅನಿಲ ಸೋರಿಕೆಯಾಗಿ ಸ್ಪೋಟಗೊಂಡ ಹಿನ್ನೆಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ 13 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದರು. ವಸತಿ ಕಟ್ಟಡಗಳು ಮತ್ತು ಅಂಗಡಿಗಳು ಸೇರಿದಂತೆ ಅನೇಕ ಕಟ್ಟಡಗಳು ಮತ್ತು ರಸ್ತೆಯುದ್ದಕ್ಕೂ ಇದ್ದ ವಾಹನಗಳೂ ಹಾನಿಗೊಳಗಾಗಿದ್ದವು. ಟ್ಯಾಂಕರ್ ಎಚ್ಪಿಸಿಎಲ್ಗೆ ಸೇರಿದ್ದರಿಂದ ಆ ಸಂಸ್ಥೆ ಮತ್ತು ರಾಜ್ಯ ಸರ್ಕಾರ ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಗೊಂಡವರಿಗೆ ಹಲವು ವಿಧದ ಪರಿಹಾರ ಮೊತ್ತ ವಿತರಿಸಿದ್ದವು. ಈ ಮಧ್ಯೆ ಪರಿಹಾರ ಕೋರಿ ಸಂತ್ರಸ್ತರ ಕುಟುಂಬ ಸಲ್ಲಿಸಿದ್ದ ಅರ್ಜಿಗಳನ್ನು 2016ರ ಡಿಸೆಂಬರ್ನಲ್ಲಿ ಮಾನ್ಯ ಮಾಡಿದ್ದ ಮಂಗಳೂರಿನ ಎಂಎಸಿಟಿ, ಅವರಿಗೆ ಪರಿಹಾರ ಪಾವತಿಸಲು ಆದೇಶಿಸಿತ್ತು. ಎಂಎಟಿಸಿ ಆದೇಶವನ್ನು 8 ಪ್ರತ್ಯೇಕ ಮೇಲ್ಮನವಿಗಳಲ್ಲಿ ಪ್ರಶ್ನಿಸಿದ್ದ ವಿಮಾ ಕಂಪನಿ, ರಾಜ್ಯ ಸರ್ಕಾರ ಸಂತ್ರಸ್ತರಿಗೆ ಎಕ್ಸ್ಗ್ರೇಷಿಯಾ ಮೊತ್ತ ಪಾವತಿಸಿದೆ. ಆದರೆ, ಆ ಮೊತ್ತವನ್ನು ನ್ಯಾಯಮಂಡಳಿಯು ಪರಿಹಾರದಲ್ಲಿ ಕಡಿತಗೊಳಿಸಿಲ್ಲ. ಅಲ್ಲದೆ, ಘಟನೆಯು ಮೋಟಾರು ವಾಹನ ಅಪಘಾತವಲ್ಲ. ಬದಲಿಗೆ ಬೆಂಕಿಯ ಅವಘಡವಾಗಿದೆ. ಕಟ್ಟಡ ಮಾಲೀಕರಿಗೆ ಮತ್ತು ಅಪಘಾತಕ್ಕೊಳಗಾದವರಿಗೆ ಎಚ್ಪಿಸಿಎಲ್ ಈಗಾಗಲೇ ಎಕ್ಸ್ಗ್ರೇಷಿಯಾ ಮೊತ್ತ ಪಾವತಿಸಿದೆ. ಆದ್ದರಿಂದ, ಆ ಮೊತ್ತವನ್ನು ಪರಿಹಾರ ಮೊತ್ತದಲ್ಲಿ ಕಡಿತಗೊಳಿಸಬೇಕು ಎಂದು ಕೋರಿತ್ತು.
ನಗರಗಳಿಗೆ ಫೆಡರಲ್ ಅನುದಾನ ಕಡಿತಗೊಳಿಸುವ ಟ್ರಂಪ್ ಕ್ರಮಕ್ಕೆ ತಡೆ
ವಾಷಿಂಗ್ಟನ್, ನ.22: ಸ್ಯಾನ್ ಫ್ರಾನ್ಸಿಸ್ಕೋ, ಲಾಸ್ ಏಂಜಲೀಸ್ ಮತ್ತು ನ್ಯೂಯಾರ್ಕ್ ಸೇರಿದಂತೆ ನಗರಗಳಿಗೆ ಅಮೆರಿಕಾದ ರಾಷ್ಟ್ರೀಯ ಭದ್ರತಾ ಇಲಾಖೆ ನೀಡುವ ಅನುದಾನಕ್ಕೆ ಏಕಪಕ್ಷೀಯ ಷರತ್ತು ವಿಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಕ್ರಮಗಳಿಗೆ ಅಮೆರಿಕಾದ ಎರಡು ಫೆಡರಲ್ ನ್ಯಾಯಾಧೀಶರು ತಡೆಯಾಜ್ಞೆ ವಿಧಿಸಿದ್ದಾರೆ. ಕ್ಯಾಲಿಫೋರ್ನಿಯಾ, ವಾಷಿಂಗ್ಟನ್ ಮತ್ತು ಅರಿಝೋನಾದಲ್ಲಿ 25ಕ್ಕೂ ಹೆಚ್ಚು ನಗರಗಳಿಗೆ ರಾಷ್ಟ್ರೀಯ ಭದ್ರತಾ ಇಲಾಖೆಯ 350 ದಶಲಕ್ಷ ಡಾಲರ್ಗೂ ಹೆಚ್ಚು ಅನುದಾನ ಬಿಡುಗಡೆಗೆ ಏಕಪಕ್ಷೀಯ ಷರತ್ತು ವಿಧಿಸುವ ಟ್ರಂಪ್ ಆಡಳಿತದ ಕ್ರಮಕ್ಕೆ ಸ್ಯಾನ್ಜೋಸ್ ಜಿಲ್ಲಾ ನ್ಯಾಯಾಧೀಶರು ತಾತ್ಕಾಲಿಕ ತಡೆ ನೀಡಿದ್ದಾರೆ. ನ್ಯೂಯಾರ್ಕ್, ಬೋಸ್ಟನ್ ಹಾಗೂ ಇತರ ಹಲವು ನಗಗಳಿಗೆ 100 ದಶಲಕ್ಷ ಡಾಲರ್ಗೂ ಹೆಚ್ಚು ಅನುದಾನ ಬಿಡುಗಡೆಗೆ ಷರತ್ತು ವಿಧಿಸಿರುವ ಟ್ರಂಪ್ ಕ್ರಮಕ್ಕೆ ಚಿಕಾಗೋ ಜಿಲ್ಲಾ ನ್ಯಾಯಾಧೀಶರು ತಾತ್ಕಾಲಿಕ ತಡೆಯಾಜ್ಞೆ ವಿಧಿಸಿರುವುದಾಗಿ ವರದಿಯಾಗಿದೆ.
ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಶೃಂಗಸಭೆಯಲ್ಲಿ ನಿರ್ಣಯ ಅಂಗೀಕಾರ
ಜೊಹಾನ್ಸ್ ಬರ್ಗ್, ನ.22: ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಗುಂಪಿನ ಜಾಗತಿಕ ನಾಯಕರು ಜಿ20 ಶೃಂಗಸಭೆಯ ಪ್ರಾರಂಭದಲ್ಲಿ ಘೋಷಣೆಯನ್ನು ಅಂಗೀಕರಿಸಿದ್ದಾರೆ. ದಕ್ಷಿಣ ಆಫ್ರಿಕಾದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಮೆರಿಕಾ ಶೃಂಗಸಭೆಯನ್ನು ಬಹಿಷ್ಕರಿಸಿದೆ. `ಸಾಮಾನ್ಯವಾಗಿ ಘೋಷಣೆಯನ್ನು ಶೃಂಗಸಭೆಯ ಅಂತ್ಯದಲ್ಲಿ ಅಂಗೀಕರಿಸಲಾಗುತ್ತದೆ. ಆದರೆ ಶೃಂಗಸಭೆಯ ಘೋಷಣೆಯನ್ನು ಶೃಂಗಸಭೆಯ ಮೊದಲ ದಿನದಂದು ಪ್ರಥಮವಾಗಿ ಅಂಗೀಕರಿಸಬೇಕೆಂದು ನಾವು ಬಯಸಿದ್ದೆವು. ಇದಕ್ಕೆ ಸರ್ವಾನುಮತದ ಬೆಂಬಲ ದೊರಕಿದೆ' ಎಂದು ದಕ್ಷಿಣ ಆಫ್ರಿಕಾ ಅಧ್ಯಕ್ಷರ ವಕ್ತಾರ ವಿನ್ಸೆಂಟ್ ಮಗ್ವೆನ್ಯಾ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅಮೆರಿಕಾ ನಿಯೋಗದ ಗೈರು ಹಾಜರಿಯಲ್ಲಿ ನಾಯಕರ ಘೋಷಣೆಯನ್ನು ಅಂಗೀಕರಿಸದಂತೆ ಟ್ರಂಪ್ ಆಡಳಿತವು ದಕ್ಷಿಣ ಆಫ್ರಿಕಾದ ಮೇಲೆ ಒತ್ತಡ ಹೇರಿತ್ತು. ಆದರೂ ನಿರ್ಣಯ ಅಂಗೀಕಾರಗೊಂಡಿರುವುದು ಆಫ್ರಿಕಾ ಖಂಡದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಗೆ ದೊರೆತ ಗೆಲುವಾಗಿದೆ ಎಂದು ದ.ಆಫ್ರಿಕಾದ ಮೂಲಗಳು ಹೇಳಿವೆ. ಜಿ20 ವಾಸ್ತವದಲ್ಲಿ 19 ರಾಷ್ಟ್ರಗಳು, ಯುರೋಪಿಯನ್ ಯೂನಿಯನ್ ಮತ್ತು ಆಫ್ರಿಕನ್ ಯೂನಿಯನ್ ಸೇರಿದಂತೆ 21 ಸದಸ್ಯರ ಗುಂಪಾಗಿದೆ. ಜಾಗತಿಕ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಲು ಶ್ರೀಮಂತ ಮತ್ತು ಬಡ ರಾಷ್ಟ್ರಗಳ ನಡುವಿನ ಸೇತುವೆಯಾಗಿ 1999ರಲ್ಲಿ ಜಿ20 ರಚನೆಯಾಗಿದೆ. ಆದರೆ ಇದು ಕೆಲವೊಮ್ಮೆ 7 ಶ್ರೀಮಂತ ರಾಷ್ಟ್ರಗಳ ನೆರಳಿನಲ್ಲಿ ಕಾರ್ಯನಿರ್ವಹಿಸಿದೆ. ಜಿ20 ಸದಸ್ಯರು ಒಟ್ಟಾಗಿ ಜಾಗತಿಕ ಆರ್ಥಿಕತೆಯ ಸುಮಾರು 85%, ಅಂತಾರಾಷ್ಟ್ರೀಯ ವ್ಯಾಪಾರದ 75%ವನ್ನು ಪ್ರತಿನಿಧಿಸುತ್ತಾರೆ. ವಿಭಿನ್ನ ಹಿತಾಸಕ್ತಿಯನ್ನು ಹೊಂದಿರುವ ಅಮೆರಿಕಾ, ರಶ್ಯ, ಚೀನಾ, ಭಾರತ, ಜಪಾನ್, ಫ್ರಾನ್ಸ್, ಜರ್ಮನಿ, ಬ್ರಿಟನ್, ಇಂಡೊನೇಶ್ಯಾ, ಸೌದಿ ಅರೆಬಿಯಾ, ದಕ್ಷಿಣ ಆಫ್ರಿಕಾ ಇತ್ಯಾದಿ ರಾಷ್ಟ್ರಗಳನ್ನು ಹೊಂದಿರುವ ಜಿ20 ಒಮ್ಮತದ ಆಧಾರದಲ್ಲಿ ಕಾರ್ಯನಿರ್ವಹಿಸುತ್ತದೆ.
ಮಾದಕ ವಸ್ತು- ಭಯೋತ್ಪಾದನೆ ಜಾಲದ ವಿರುದ್ಧ ಜಾಗತಿಕ ಕ್ರಮ: ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಆಗ್ರಹ
ಜೊಹಾನ್ಸ್ ಬರ್ಗ್, ನ.22: ಮಾದಕ ವಸ್ತು-ಭಯೋತ್ಪಾದನೆ ಜಾಲವನ್ನು ಎದುರಿಸಲು ಪ್ರತ್ಯೇಕ ಜಿ20 ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದ್ದಾರೆ. ಫೆಂಟಾನಿಲ್ ನಂತಹ ಅಪಾಯಕಾರಿ ಸಂಶ್ಲೇಷಿತ ವಸ್ತುಗಳ ಹರಡುವಿಕೆ ಮತ್ತು ಕಳ್ಳಸಾಗಣೆಯನ್ನು ತಡೆಯುವ ಹಾಗೂ ಭಯೋತ್ಪಾದನೆಯನ್ನು ಉತ್ತೇಜಿಸುವ ಕ್ರಿಮಿನಲ್ ಆರ್ಥಿಕತೆಗಳನ್ನು ತೊಡೆದುಹಾಕುವ ತುರ್ತು ಅಗತ್ಯವನ್ನು ಒತ್ತಿಹೇಳಿದ್ದಾರೆ. ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿರುವ ನಾಸ್ರೆಕ್ ಎಕ್ಸ್ ಪೋ ಸೆಂಟರ್ ನಲ್ಲಿ ಜಿ20 ನಾಯಕರ ಶೃಂಗಸಭೆಯ ಮೊದಲ ದಿನದ ಸಮಗ್ರ ಅಧಿವೇಶನದಲ್ಲಿ ಅವರು ಭಾಗವಹಿಸಿದರು. ಹೆಚ್ಚು ಶಕ್ತಿಯುತವಾದ ಸಂಶ್ಲೇಷಿತ ಔಷಧಿಗಳ ಜಾಗತಿಕ ಪ್ರಸರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಫೆಂಟಾನಿಲ್ನಂತಹ ವಸ್ತುಗಳು ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸ್ಥಿರತೆ ಮತ್ತು ಪ್ರಪಂಚದಾದ್ಯಂತದ ಭದ್ರತಾ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದರು. ಮಾದಕ ವಸ್ತು- ಭಯೋತ್ಪಾದನೆ ಜಾಲವನ್ನು ಎದುರಿಸುವ ಹೊಸ ಜಿ20 ಉಪಕ್ರಮವು ಹಣಕಾಸು, ಆಡಳಿತ ಮತ್ತು ಭದ್ರತಾ ಚೌಕಟ್ಟುಗಳ ಸಂಯೋಜನೆಯಾಗಿರಬೇಕು. ಮಾದಕ ವಸ್ತು ಕಳ್ಳಸಾಗಣೆ ಜಾಲವನ್ನು ಕಿತ್ತುಹಾಕುವುದು, ಅಕ್ರಮ ಹಣಕಾಸು ಹರಿವುಗಳನ್ನು ಅಡ್ಡಿಪಡಿಸುವುದು ಮತ್ತು ಭಯೋತ್ಪಾದಕ ಗುಂಪುಗಳಿಗೆ ಹಣಕಾಸಿನ ಪ್ರಮುಖ ಮೂಲವನ್ನು ದುರ್ಬಲಗೊಳಿಸುವುದು ಇದರ ಪ್ರಮುಖ ಆದ್ಯತೆಗಳನ್ನು ಒಳಗೊಂಡಿರುತ್ತದೆ. ಮಾದಕ ವಸ್ತು- ಭಯೋತ್ಪಾದನೆ ಜಾಲದ ಸವಾಲನ್ನು ಏಕೀಕೃತ ಜಾಗತಿಕ ಕ್ರಿಯೆಯ ಮೂಲಕ ಮಾತ್ರ ಪರಿಹರಿಸಬಹುದು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ. ಜಾಗತಿಕ ಅಭಿವೃದ್ಧಿ ಆದ್ಯತೆಗಳನ್ನು ಮರುಪರಿಶೀಲಿಸುವ ವಿಶಾಲ ಮನವಿಯೊಂದಿಗೆ ತಮ್ಮ ಮಾತು ಆರಂಭಿಸಿದ ಮೋದಿ, ಅಂತರ್ಗತ, ಸುಸ್ಥಿರ ಮತ್ತು ನಾಗರಿಕರ ವಿವೇಕದಲ್ಲಿ ನೆಲೆಗೊಂಡಿರುವ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸಿದರು. ಜಿ20 ಜಾಗತಿಕ ಆರೋಗ್ಯರಕ್ಷಕ ಪ್ರತಿಕ್ರಿಯೆ ತಂಡವನ್ನು ಸ್ಥಾಪಿಸಲು ಪ್ರಸ್ತಾಪಿಸಿದ ಅವರು ` ಆರೋಗ್ಯ ತುರ್ತುಪರಿಸ್ಥಿತಿಗಳು ಮತ್ತು ಪ್ರಾಕೃತಿಕ ದುರಂತಗಳ ಎದುರು ಜೊತೆಗೂಡಿ ಕಾರ್ಯ ನಿರ್ವಹಿಸಿದಾಗ ನಾವು ಬಲಿಷ್ಠರಾಗುತ್ತೇವೆ. ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭಗಳಲ್ಲಿ ತ್ವರಿತ ನಿಯೋಜನೆಗೆ ಸಿದ್ಧವಾಗಿರುವ ಜಿ20 ಸದಸ್ಯ ರಾಷ್ಟ್ರಗಳಿಂದ ತರಬೇತಿ ಪಡೆದ ವೈದ್ಯಕೀಯ ತಜ್ಞರ ತಂಡವೊಂದರ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ► ಶೃಂಗಸಭೆಯ ಘೋಷಣೆ ರಾಯ್ಟರ್ಸ್ನ ವರದಿಯ ಪ್ರಕಾರ ಜಿ20 ಶೃಂಗಸಭೆಯ ಘೋಷಣೆ `ಜಾಗತಿಕ ಆರ್ಥಿಕತೆಗೆ ಅಸ್ತಿತ್ವದಲ್ಲಿರುವ ಮತ್ತು ಉದ್ಬವಿಸುವ ಅಪಾಯಗಳನ್ನು ಎದುರಿಸಲು ಬಹುಪಕ್ಷೀಯ ಸಹಕಾರವನ್ನು ಬಲಪಡಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದೆ. ಸುಡಾನ್, ಕಾಂಗೋ, ಆಕ್ರಮಿತ ಫೆಲೆಸ್ತೀನಿಯನ್ ಪ್ರದೇಶ ಮತ್ತು ಉಕ್ರೇನ್ ನಲ್ಲಿ ನ್ಯಾಯಯುತ, ಸಮಗ್ರ ಮತ್ತು ಶಾಶ್ವತ ಶಾಂತಿಗಾಗಿ ಕೆಲಸ ಮಾಡುವುದಾಗಿ' ಪ್ರತಿಜ್ಞೆ ಮಾಡಿದೆ.
Ukraine War: ಅತ್ತ ಮುಳ್ಳು, ಇತ್ತ ಬೆಂಕಿ... ವಿಲವಿಲ ಒದ್ದಾಡುತ್ತಿರುವ ಉಕ್ರೇನ್!
ಉಕ್ರೇನ್ ಬಾಯಲ್ಲಿ ಬಿಸಿ ತುಪ್ಪ ಬಿದ್ದಿದೆ, ಅತ್ತ ಉಗುಳುವುದಕ್ಕೂ ಆಗಲ್ಲ &ಇತ್ತ ಅದನ್ನ ನುಂಗಿ ಅರಗಿಸಿಕೊಳ್ಳಲು ಕೂಡ ಆಗಲ್ಲ. ಹೀಗೆ ದೊಡ್ಡ ಸಮಸ್ಯೆ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಉಕ್ರೇನ್ ದೇಶಕ್ಕೆ ರಷ್ಯಾ ದೇಶದ ಜೊತೆಗೆ ಶಾಂತಿ ಮಾತುಕತೆ ಮಾಡಲು ಇಷ್ಟವೇ ಇಲ್ಲ. ಹೀಗಿದ್ದರೂ ಈ ಪರಿಸ್ಥಿತಿ &ಸಂಕಷ್ಟದ ವಾತಾವರಣದಲ್ಲಿ ಅನಿವಾರ್ಯ ಕಾರಣಗಳಿಗೆ ರಷ್ಯಾ ಜೊತೆಗೆ
ಮಳೆ ಬಾರದಿದ್ದರೂ ಶಿರಾದ ಕಳ್ಳಂಬೆಳ್ಳ, ಮದಲೂರು ಸೇರಿ ಹೇಮಾವತಿ ನೀರಿನಿಂದ 36 ಕೆರೆ ಭರ್ತಿ
ಶಿರಾ ತಾಲೂಕಿನ 36 ಕೆರೆಗಳಿಗೆ ಹೇಮಾವತಿ ನೀರು ಹರಿಸಲಾಗಿದೆ ಎಂದುಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಜಲಾನಯನ ಮಹೋತ್ಸವದಲ್ಲಿ ರೈತರಿಗೆ ಮಾಹಿತಿ ನೀಡಲಾಯಿತು. ಮಣ್ಣಿನ ಪರೀಕ್ಷೆ ಹಾಗೂ ಸಂರಕ್ಷಣೆಗೆ ಅಧಿಕಾರಿಗಳು ಸಹಕರಿಸುವರು. ಉತ್ತಮ ಬೆಳೆ ಪಡೆಯಲು ಮಾರ್ಗದರ್ಶನ ನೀಡಲಾಗುವುದು. ರೈತರಿಗೆ ಅನುಕೂಲವಾಗುವ ಸವಲತ್ತುಗಳನ್ನು ಒದಗಿಸಲಾಗುವುದು. ಕಾರ್ಯಕ್ರಮದಲ್ಲಿ 11 ಲಕ್ಷ ರೂ. ವೆಚ್ಚದಲ್ಲಿ ಶಾಲೆಗಳಿಗೆ ಡೆಸ್ಕ್ಗಳನ್ನು ವಿತರಿಸಲಾಯಿತು.
ಮಂಗಳೂರಿನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮೆಂಡ್ಸ್ ಶೋ ರೂಮ್ನಲ್ಲಿ ನ.30ರ ತನಕ ‘ವಧುವಿನ ಆಭರಣಗಳ ಪ್ರದರ್ಶನ’
ಮಂಗಳೂರು, ನ.22: ಪ್ರತಿಷ್ಠಿತ ಮಲಬಾರ್ ಗೋಲ್ಡ್ ಡೈಮಂಡ್ಸ್ನ ಮಂಗಳೂರು ಶೋರೂಮ್ನಲ್ಲಿ ವಧುವಿನ ಆಭರಣಗಳ ಪ್ರದರ್ಶನ ಶನಿವಾರ ಆರಂಭಗೊಂಡಿದ್ದು, ನ.30ರ ತನಕ ನಡೆಯಲಿದೆ. ನಿಶ್ಚಿತಾರ್ಥದ ಉಂಗುರಗಳಿಂದ ಹಿಡಿದು ಆಕರ್ಷಕ ವಧುವಿನ ಆಭರಣ ಸೆಟ್ಗಳವರೆಗೆ ಇರಲಿದೆ.ವಧುವಿನ ಆಭರಣಗಳನ್ನು ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಮತ್ತು ಆಂಕೊಲಾಜಿಸ್ಟ್ ಡಾ.ಮರಿಯಮ್ ಅಂಜುಮ್ ಇಫ್ತಿಕರ್ ಹಾಗೂ ಮೂಡಬಿದ್ರೆಯ ಆಳ್ವಾಸ್ ಫಾರ್ಮಸಿಯ ಆಡಳಿತ ನಿರ್ದೇಶಕಿ ಡಾ.ಗ್ರೀಷ್ಮಾ ವಿವೇಕ್ ಆಳ್ವ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ಸ್ಟೋರ್ ಹೆಡ್ ಶರತ್ ಚಂದ್ರನ್, ಮ್ಯಾನೆಜ್ಮೆಂಟ್ ಟೀಮ್ನ ಅಹ್ಮದ್ ನಝರ್, ಶೋರೂಮ್ ಮ್ಯಾನೇಜರ್ ರಘು ರಾಮ್ ಸಿ.ಎಸ್., ಸೇಲ್ಸ್ ಮ್ಯಾನೇಜರ್ ಗಿರೀಶ್ ರೈ, ಡೆಪ್ಯುಟಿ ಸೇಲ್ಸ್ ಮ್ಯಾನೇಜರ್ ಮುಹಮ್ಮದ್ ಸಮೀರ್, ಮಾರ್ಕೆಟಿಂಗ್ ಮ್ಯಾನೇಜರ್ ಶೇಕ್ ಫರ್ಹಾನ್ ಉಪಸ್ಥಿತರಿದ್ದರು. ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ನ ಪ್ರಸಿದ್ಧ ಉಪ-ಬ್ರ್ಯಾಂಡ್ಗಳಾದ ಭಾರತೀಯ ಪಾರಂಪರಿಕ ಆಭರಣ ಡಿವೈನ್ ಮತ್ತು ಕೈಯಿಂದ ತಯಾರಿಸಿದ ಆಭರಣಗಳು ಎಥ್ನಿಕ್, ವಜ್ರದ ಆಭರಣ ಬ್ರ್ಯಾಂಡ್ ಮೈನ್ ಮತ್ತು ಅನ್ಕಟ್ ವಜ್ರದ ಆಭರಣ ಬ್ರ್ಯಾಂಡ್ ಎರಾವನ್ನು ಒಳಗೊಂಡಿದೆ. ಪೋಲ್ಕಿ ಡೈಮಂಡ್ ಆಭರಣ ಬ್ರ್ಯಾಂಡ್ ವಿರಾಜ್ನ್ನು ಒಳಗೊಂಡಿದೆ. ವಿಶ್ವ ದರ್ಜೆಯ ಸೌಲಭ್ಯಗಳು ಮತ್ತು ಉತ್ಪನ್ನಗಳಲ್ಲದೆ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಜೀವನಪರ್ಯಂತ ನಿರ್ವಹಣೆ, ಒಂದು ವರ್ಷದ ಖಚಿತ ವಿಮೆ, ವಿನಿಮಯಕ್ಕೆ ಶೂನ್ಯ ಕಡಿತ ಮತ್ತು ಎಲ್ಲ ಚಿನ್ನದ ಆಭರಣಗಳಿಗೆ ಮರುಖರೀದಿ ಗ್ಯಾರಂಟಿಯನ್ನು ಸಹ ನೀಡಲಾಗುತ್ತದೆ. ಪ್ರತಿಯೊಂದು ಉತ್ಪನ್ನವು ಒಟ್ಟು ತೂಕ, ಕಲ್ಲಿನ ತೂಕ ಮತ್ತು ಉತ್ಪಾದನಾ ವೆಚ್ಚವನ್ನು ವಿವರಿಸುವ ಬೆಲೆಯನ್ನು ಹೊಂದಿದೆ. ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಬಗ್ಗೆ : ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಪ್ರಮುಖ ಭಾರತೀಯ ವ್ಯಾಪಾರ ಸಮೂಹವಾದ ಮಲಬಾರ್ ಗ್ರೂಪ್ನ ಪ್ರಮುಖ ಕಂಪೆನಿಯಾಗಿದೆ. 1993ರಲ್ಲಿ ಕೇರಳದಲ್ಲಿ ಸ್ಥಾಪನೆಗೊಂಡ ಸಂಸ್ಥೆಯು ಇಂದು 14 ದೇಶಗಳಲ್ಲಿ 400ಕ್ಕೂ ಅಧಿಕ ಮಳಿಗೆಗಳು ಮತ್ತು 14 ಸಗಟು ಘಟಕಗಳ ಬಲಿಷ್ಠ ಚಿಲ್ಲರೆ ಜಾಲವನ್ನು ಜೊತೆಗೆ ಭಾರತ, ಆಸ್ಟ್ರೇಲಿಯಾ, ಕೆನಡಾ, ಯುಕೆ, ಅಮೆರಿಕ , ಮಧ್ಯಪ್ರಾಚ್ಯದಲ್ಲಿ ಕಚೇರಿಗಳು, ವಿನ್ಯಾಸ ಕೇಂದ್ರಗಳು ಮತ್ತು ಕಾರ್ಖಾನೆಗಳನ್ನು ಹೊಂದಿದೆ.
ಕಾರ್ಮಿಕ ಸಂಹಿತೆಗಳ ಏಕಪಕ್ಷೀಯ ಅನುಷ್ಠಾನ:ಯೂನಿಯನ್ ಗಳ ಖಂಡನೆ
ಹೊಸದಿಲ್ಲಿ,ನ.22: ಕೇಂದ್ರ ಸರಕಾರವು ಶುಕ್ರವಾರ ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸಿದ್ದು,10 ಕಾರ್ಮಿಕ ಒಕ್ಕೂಟಗಳು ಈ ಸಂಹಿತೆಗಳು ಕಾರ್ಮಿಕ ವಿರೋಧಿ ಮತ್ತು ಉದ್ಯೋಗದಾತರ ಪರವಾಗಿವೆ ಎಂದು ಬಣ್ಣಿಸಿವೆ. ಹೇಳಿಕೆಯಲ್ಲಿ ನಾಲ್ಕು ಕಾರ್ಮಿಕ ಸಂಹಿತೆಗಳ ಏಕಪಕ್ಷೀಯ ಅನುಷ್ಠಾನವನ್ನು ಖಂಡಿಸಿರುವ ಅವು,ಇದು ದೇಶದಲ್ಲಿಯ ದುಡಿಯುವ ವರ್ಗದ ಜನರಿಗೆ ಕೇಂದ್ರ ಸರಕಾರವು ಮಾಡಿರುವ ವಂಚನೆಯಾಗಿದೆ ಎಂದು ಆರೋಪಿಸಿವೆ. ಸಂಸತ್ತು 2019ರಲ್ಲಿ ವೇತನ ಸಂಹಿತೆಯನ್ನು ಹಾಗೂ 2020ರಲ್ಲಿ ಕೈಗಾರಿಕಾ ಸಂಬಂಧಗಳ ಸಂಹಿತೆ, ಸಾಮಾಜಿಕ ಭದ್ರತೆ ಸಂಹಿತೆ ಹಾಗೂ ಔದ್ಯೋಗಿಕ ಸುರಕ್ಷತೆ,ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಗಳನ್ನು ಅಂಗೀಕರಿಸಿತ್ತು. 29 ಕಾರ್ಮಿಕ ಕಾನೂನುಗಳ ಬದಲಿಗೆ ಈ ನಾಲ್ಕು ಸಂಹಿತೆಗಳು ಅನುಷ್ಠಾನಗೊಂಡಿವೆ. ಕೇಂದ್ರ ಸರಕಾರವು ಗಿಗ್ ಕಾರ್ಮಿಕರಿಗೆ ಅಗತ್ಯ ಆಧಾರಿತ ಕನಿಷ್ಠ ವೇತನ,ಸುರಕ್ಷಿತ ಕೆಲಸದ ಪರಿಸ್ಥಿತಿಗಳು ಮತ್ತು ಸಾರ್ವತ್ರಿಕ ಸಾಮಾಜಿಕ ಭದ್ರತಾ ಹಕ್ಕುಗಳು ಸೇರಿದಂತೆ ಶಾಸನಬದ್ಧ ರಕ್ಷಣೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಸರಕಾರವು ಹೇಳಿಕೊಂಡಿದೆ. ಆದರೆ ವಲಸೆ ಕಾರ್ಮಿಕರು,ಸ್ವ ಉದ್ಯೋಗಿ ಕಾರ್ಮಿಕರು, ಮತ್ತು ಮನೆಯಿಂದ ಕೆಲಸ ನಿರ್ವಹಿಸುವ ಕಾರ್ಮಿಕರು ಸೇರಿದಂತೆ ಅನೌಪಚಾರಿ ವಲಯದ ಬಹುಪಾಲು ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆಯನ್ನು ವಿಸ್ತರಿಸಲು ಈ ಸಂಹಿತೆಗಳು ವಿಫಲಗೊಂಡಿವೆ ಎಂದು ಟೀಕಾಕಾರರು ವಾದಿಸಿದ್ದಾರೆ. 2020ರಲ್ಲಿ ಈ ಕಾರ್ಮಿಕ ಸಂಹಿತೆಗಳ ವಿರುದ್ಧ ಕಾರ್ಮಿಕ ಒಕ್ಕೂಟಗಳು ಪ್ರತಿಭಟನೆ ನಡೆಸಿದ್ದವು. ಇವು ಉದ್ಯೋಗದಾತರು ಕಾರ್ಮಿಕರನ್ನು ಸುಲಭವಾಗಿ ನೇಮಿಸಿಕೊಳ್ಳಲು ಮತ್ತು ತೆಗೆದುಹಾಕಲು ಅವಕಾಶ ನೀಡುತ್ತವೆ ಹಾಗೂ ಕಾರ್ಮಿಕರಿಗಾಗಿ ಯಾವುದೇ ಸುರಕ್ಷತಾ ಕ್ರಮಗಳನ್ನು ಹೊಂದಿಲ್ಲ ಎಂದು ಅವು ಆರೋಪಿಸಿದ್ದವು. ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್,ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್,ಹಿಂದ್ ಮಜ್ದೂರ್ ಸಭಾ,ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸೇರಿದಂತೆ ಹತ್ತು ಕಾರ್ಮಿಕ ಒಕ್ಕೂಟಗಳು ನಾಲ್ಕು ಕಾರ್ಮಿಕ ಸಂಹಿತೆಗಳ ಏಕಪಕ್ಷೀಯ ಅನುಷ್ಠಾನವನ್ನು ಖಂಡಿಸಿ ಶುಕ್ರವಾರ ಹೇಳಿಕೆಯನ್ನು ಹೊರಡಿಸಿವೆ. ಕಾರ್ಮಿಕ ಸಂಹಿತೆಗಳ ಕುರಿತು ಹೊರಡಿಸಿರುವು ಅಧಿಸೂಚನೆಯು ನಿರಂಕುಶವಾಗಿದೆ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ತಿಳಿಸಿರುವ ಹೇಳಿಕೆಯು, ಅದು ಎಲ್ಲ ಪ್ರಜಾಪ್ರಭುತ್ವ ನೀತಿಗಳನ್ನು ಧಿಕ್ಕರಿಸಿದೆ ಮತ್ತು ಭಾರತದ ಕಲ್ಯಾಣ ರಾಜ್ಯದ ಸ್ವರೂಪವನ್ನು ನಾಶಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಮಸೀದಿ ಬಳಿ ಕಾಮಗಾರಿಗೆ ನೆಲ ತೋಡುವಾಗ ಸೀತಾರಾಮ ವಿಗ್ರಹ ಪತ್ತೆ - ಪರಿಸ್ಥಿತಿ ಉದ್ವಿಗ್ನ
ಜಮಾ ಮಸೀದಿ ಸಮೀಪ ನಿರ್ಮಾಣ ಕಾರ್ಯಕ್ಕಾಗಿ ಅಗೆಯುವಾಗ ಶ್ರೀರಾಮ ಮತ್ತು ಸೀತಾ ದೇವಿಯರ ವಿಗ್ರಹಗಳು ಪತ್ತೆಯಾಗಿವೆ. ಈ ಸುದ್ದಿ ಹರಡುತ್ತಿದ್ದಂತೆ ಹಿಂದೂ ಸಮುದಾಯದ ಜನರು ಸ್ಥಳಕ್ಕೆ ಆಗಮಿಸಿ, ಹಿಂದೆ ಇಲ್ಲಿ ದೇವಸ್ಥಾನವಿದ್ದು, ಆ ಜಾಗವನ್ನು ಬಹಳ ಹಿಂದೆಯೇ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದರಿಂದಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಅನೇಕರು ಸ್ಥಳಕ್ಕೆ ಬಂದು ದೊಡ್ಡ ಜನಸಂದಣಿ ಉಂಟಾಯಿತು.
ನ.23ರಂದು ಉಡುಪಿ ಧರ್ಮಪ್ರಾಂತದ ಪರಮ ಪ್ರಸಾದ ಮೆರವಣಿಗೆ
ಉಡುಪಿ, ನ.22: ಉಡುಪಿ ಕ್ರೈಸ್ತ ಧರ್ಮಪ್ರಾಂತ ಮಟ್ಟದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ನ.23ರಂದು ರವಿವಾರ ಅಪರಾಹ್ನ 3:00 ಗಂಟೆಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ನಡೆಯಲಿದೆ. ವಾರ್ಷಿಕ ಪರಮ ಪ್ರಸಾದ ಮೆರವಣಿಗೆಯ ದಿವ್ಯ ಬಲಿಪೂಜೆಯನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ಅರ್ಪಿಸಲಿದ್ದು, ಬಳಿಕ ಪರಮ ಪ್ರಸಾದವನ್ನು ಅಲಂಕರಿಸಲಾದ ತೆರೆದ ವಾಹನದಲ್ಲಿ ನಗರದಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ದು ಪರಮ ಪ್ರಸಾದಕ್ಕೆ ಸಾರ್ವಜನಿಕ ಗೌರವ ಸಲ್ಲಿಸಲಾಗುವುದು. ಧಾರ್ಮಿಕ ಕಾರ್ಯಕ್ರಮದಲ್ಲಿ ಯಾಜಕರು, ಧಾರ್ಮಿಕ ಭಗಿನಿಯರು ಹಾಗೂ ಸಾವಿರಾರು ಭಕ್ತಾದಿಗಳ ಇದರಲ್ಲಿ ಭಾಗವಹಿಸಲಿದ್ದಾರೆ. ನಂತರ ಧರ್ಮಾಧ್ಯಕ್ಷರ ಪ್ರೇರಣಾದಾಯಕ ಪ್ರವಚನ ನಡೆಯಲಿದೆ. ಬಲಿಪೂಜೆಯ ನಂತರ ದಿವ್ಯ ಪರಮಪ್ರಸಾದ ಮೆರವಣಿಗೆ ಮಿಲಾಗ್ರಿಸ್ ಕಾಥೆಡ್ರಲ್ನಿಂದ ಮೌಂಟ್ ರೋಜರಿ ಚರ್ಚ್ಗೆ ಸಾಗಲಿದೆ. ಅಲ್ಲಿ ದೈವವಾಕ್ಯದ ಪ್ರವಚನ ಹಾಗೂ ದಿವ್ಯ ಪರಮಪ್ರಸಾದದ ಆಶೀರ್ವಚನ ನಡೆಯಲಿದೆ. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ n ಸಹಾಯಕ ಧರ್ಮಗುರು ವಂ. ಪ್ರದೀಪ್ ಕಾರ್ಡೋಜಾ ದೈವವಾಕ್ಯದ ಪ್ರವಚನ ನೆರವೇರಿಸಲಿದ್ದಾರೆ. ಈ ಮಹೋತ್ಸವದ ಸಂದರ್ಭದಲ್ಲಿ ಭಾರತ ಹಾಗೂ ವಿಶ್ವದಾದ್ಯಂತ ಶಾಂತಿ, ಸಹೋದರತ್ವ ಮತ್ತು ಮಾನವೀಯ ಬೆಳವಣಿಗೆಗಾಗಿ ವಿಶೇಷ ಪ್ರಾರ್ಥನೆ ನೆರವೇರಲಿದೆ ಎಂದು ಧರ್ಮಪ್ರಾಂತದ ಶ್ರೇಷ್ಠಗುರು ಮೊನ್ಸಿಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ | ಪೊಲೀಸ್ ಕ್ರೀಡಾಕೂಟ : ಡಿಎಆರ್ ಚಾಂಪಿಯನ್
ಉಡುಪಿ, ನ.22: ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯಗೊಂಡ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿಯ ಡಿಎಆರ್ ತಂಡ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಪುರುಷರ ವಿಭಾಗದಲ್ಲಿ ಡಿಎಆರ್ ತಂಡದ ಜೀನ್ ಹಾಗೂ ಮಹಿಳೆಯರ ವಿಭಾಗದಲ್ಲಿ ಉಡುಪಿ ಉಪವಿಭಾಗದ ನಾಗಶ್ರೀ ಇವರು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳನ್ನು ಗೆದ್ದುಕೊಂಡರು. ಕ್ರೀಡಾಕೂಟದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಒಟ್ಟು ಐದು ತಂಡಗಳಾಗಿ ಸ್ಪರ್ಧಿಸಿದ್ದು, ಮೂರು ದಿನಗಳ ಕಾಲ ನಡೆದ ವಿವಿಧ ಕ್ರೀಡಾಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ನಿನ್ನೆ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಕಾರ್ಕಳ ಉಪವಿಭಾಗದ ಎಎಸ್ಪಿ ಹರ್ಷ ಪ್ರಿಯಂವದಾ ಅವರು ಬಾಗವಹಿಸಿದ್ದರು.
ಯಾದಗಿರಿ | ವಡಗೇರಾ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೇಗೇರಿಸಲಾಗುವುದು : ಶಾಸಕ ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ: ದೋರನಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗುವ ಸಂದರ್ಭದಲ್ಲಿಯೇ ವಡಗೇರಾ ಪಟ್ಟಣ ಪಂಚಾಯಿತಿ ಆಗುತ್ತಿತ್ತು. ಕೆಲವು ದಾಖಲೆಗಳ ವಿಳಂಬದಿಂದ ವಡಗೇರಾ ಆ ಪಟ್ಟಿಯಿಂದ ಹಿಂದೆ ಬಿದ್ದಿದೆ. ಮುಂಬರುವ ಕ್ಯಾಬಿನೆಟ್ನಲ್ಲಿ ವಡಗೇರಾ ಪಂಚಾಯಿತಿಯನ್ನು ಮೇಲ್ದರ್ಜೇಗೇರಿಸಲಾಗುವುದು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭರವಸೆ ನೀಡಿದರು. ವಡಗೇರಾ ಪಟ್ಟಣ ಪಂಚಾಯಿತಿ ಹೋರಾಟ ಸಮಿತಿ ಸದಸ್ಯರು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಶಾಸಕ ಚನ್ನಾರಡ್ಡಿ ಪಾಟೀಲ್, ಮುಂಬರುವ ಕ್ಯಾಬಿನೆಟ್ನಲ್ಲಿ ವಡಗೇರಾ ಗ್ರಾಮ ಪಂಚಾಯತಿಯನ್ನು ಮೇಲ್ದರ್ಜೇಗೇರಿಸಿ ಪಟ್ಟಣ ಪಂಚಾಯಿತಿ ಮಾಡಿಕೊಡುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ತಿಳಿಸಿದ್ದಾರೆ. ಹಾಗಾಗಿ ನಾನು ಈ ಭರವಸೆ ನೀಡುತ್ತಿದ್ದು ಜನರು ಸಹಕರಿಸಬೇಕು ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ವಡಗೇರಾ ಪಟ್ಟಣ ಪಂಚಾಯತಿ ಹೋರಾಟ ಸಮಿತಿ ಸದಸ್ಯರು, ವಡಗೇರಾ ತಾಲೂಕು ಕೇಂದ್ರವಾಗಿ ಸುಮಾರು ಎಂಟು ವರ್ಷಗಳು ಕಳೆದರೂ ವಡಗೇರಾ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮಾಡದೆ ಸರಕಾರ ಕೈಬಿಟ್ಟಿದ್ದು, ಕೂಡಲೇ ಪಟ್ಟಣ ಪಂಚಾಯತಿ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಿದ್ದಣ್ಣಗೌಡ ಕಾಡಂನೋರ, ಸಂಗುಗೌಡ ಮಾಲಿ ಪಾಟೀಲ್, ಅಶೋಕ ಮುಸ್ತಾಜೀರ, ಬಸವರಾಜ ನೀಲಹಳ್ಳಿ , ಯಂಕಣ್ಣ ಬಸಂತಪೂರ, ಶರಣಪ್ಪ ಪಡಿಶೆಟ್ಟಿ , ಶಿವಕುಮಾರ ಕೊಂಕಲ್, ಮಲ್ಲಣ್ಣ ನೀಲಹಳ್ಳಿ , ಫಕೀರ್ ಅಹಮ್ಮದ್, ಅಬ್ದುಲ್ ಚಿಗಾನೂರ, ಭೀಮಣ್ಣ ಬುದಿನಾಳ, ಸಾಬಯ್ಯ ಗುತ್ತೇದಾರ, ಹೊನ್ನಪ್ಪ ಕಡೆಚೂರ, ಮರೆಪ್ಪ, ಶರಣು ಕುರಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ | ಬೃಹತ್ ಶಿಲಾಯುಗದ 2 ನಿಲ್ಸ್ಕಲ್ಗಳು ಪತ್ತೆ
ಉಡುಪಿ, ನ.22: ಉಡುಪಿಯ ರಾಷ್ಟ್ರೀಯ ಸಂಘಟನೆ ‘ಆದಿಮ ಕಲಾ ಟ್ರಸ್ಟ್’ ಇತ್ತೀಚಿಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯಲ್ಲಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಿಲ್ಕೋಡು ಮತ್ತು ಮಾವಿನಕೆರೆಯಲ್ಲಿ ಬೃಹತ್ ಶಿಲಾಯುಗ ಕಾಲದ ಎರಡು ನಿಲ್ಸ್ಕಲ್ಗಳು ಪತ್ತೆಯಾಗಿವೆ ಎಂದು ಪುರಾತತ್ತ್ವ ಸಂಶೋಧಕ ಮತ್ತು ಆದಿಮ ಕಲಾ ಟ್ರಸ್ಟ್ ನ ಸ್ಥಾಪಕ ಸಂಚಾಲಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಕುಂದಾಪುರ ತಾಲೂಕಿನ ನೇರಳೆಕಟ್ಟೆಯಿಂದ ಆಜ್ರಿಗೆ ಹೋಗುವ ರಾಜ್ಯ ಹೆದ್ದಾರಿಯ ಎಡಬದಿಯ ದೈವದ ಹಾಡಿಯಲ್ಲಿ ಹಿಲ್ಕೋಡಿನ ನಿಲ್ಸ್ಕಲ್ ಇದೆ. ಸ್ಥಳೀಯವಾಗಿ ಜನರು ಅದನ್ನು ನೀಚ ದೈವ/ಬೊಬ್ಬರ್ಯನ ಕಲ್ಲು ಎಂದು ಕರೆಯುತ್ತಾರೆ. ಮತ್ತೊಂದು ನಿಲ್ಸ್ಕಲ್ ಇದೇ ತಾಲೂಕಿನ ಕೆಂಚನೂರು ಗ್ರಾಮದ ಮಾವಿನಕೆರೆ ಹಾಡಿಯಲ್ಲಿ ರಸ್ತೆ ಬದಿಯಲ್ಲಿಯೇ ಕಂಡುಬಂದಿದೆ. ಇತ್ತೀಚಿಗೆ ಸ್ಥಳೀಯರು ಈ ನಿಲುವುಗಲ್ಲಿನ ಅರ್ಧಭಾಗಕ್ಕೆ ಒಂದು ಕಟ್ಟೆಯನ್ನು ಕಟ್ಟಿ ಅದನ್ನು ರಕ್ತೇಶ್ವರಿ ಎಂದು ಆರಾಧಿಸುತ್ತಿದ್ದಾರೆ ಎಂದು ಪ್ರೊ.ಮುರುಗೇಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಾವಿನಕೆರೆಯ ನಿಲ್ಸ್ಕಲ್ 112 ಸೆ.ಮೀ. ಎತ್ತರವಿದ್ದು, ಪಶ್ಚಿಮೋತ್ತರದ ಕಡೆ ಸ್ವಲ್ಪ ವಾಲಿದಂತೆ ಮುಖವನ್ನು ನಿರ್ದೇಶಿಸಲಾಗಿದೆ. ಹಿಲ್ಕೋಡಿನ ನಿಲ್ಸ್ಕಲ್ ಸುಮಾರು 135 ಸೆ.ಮೀ. ಎತ್ತರವಿದೆ. ಹಿಲ್ಕೋಡು ನಿಲ್ಸ್ಕಲ್ ಕೆಳಗೆ ಪರೀಕ್ಷಾರ್ಥವಾಗಿ ನಡೆಸಿದ ಅಗೆತದಲ್ಲಿ ಕೆಂಪು ಮತ್ತು ಕೆನೆಬಣ್ಣದ ಮಡಕೆ ಅವಶೇಷದ ತುಣುಕುಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ. ಬೃಹತ್ ಶಿಲಾಯುಗ ಸಂಸ್ಕೃತಿಯ ಜನರು, ಅಂತ್ಯ ಸಂಸ್ಕಾರದ ನಂತರ ಸಮಾಧಿಗಳ ಮೇಲೆ ಅಥವಾ ಸಮಾಧಿಯ ಸಮೀಪದಲ್ಲಿಯೋ ನೆನಪಿನ ಸ್ಮಾರಕಗಳಾಗಿ ಬೃಹತ್ ನಿಲುವುಗಲ್ಲುಗಳನ್ನು ನಿಲ್ಲಿಸುತ್ತಿದ್ದರು. ಸಾಮಾನ್ಯವಾಗಿ ನಿಲುವುಗಲ್ಲುಗಳು 3 ಅಡಿ ಎತ್ತರದಿಂದ 16, 17 ಅಡಿ ಎತ್ತರದವರೆಗೆ ಇರುವುದು ಕಂಡು ಬರುತ್ತವೆ. ದಕ್ಷಿಣ ಭಾರತದಾದ್ಯಂತ ಕಂಡುಬರುವ ನಿಲುವುಗಲ್ಲುಗಳನ್ನು ರಕ್ಕಸಗಲ್ಲು, ನಿಲ್ಸ್ಕಲ್, ನಿಂತಿಕಲ್ಲು, ಗರ್ಭಿಣಿಯರ ಕಲ್ಲು, ಬಸುರಿಕಲ್ಲು, ಆನೆಕಲ್ಲು ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ. ಚಾರಿತ್ರಿಕ ಮಹತ್ವ : ಮಾವಿನಕೆರೆ ಮತ್ತು ಹಿಲ್ಕೋಡಿನ ನಿಲ್ಸ್ಕಲ್ಗಳು ಬೃಹತ್ ಶಿಲಾಯುಗದ ಅಂತ್ಯಕಾಲದ ಅವಶೇಷಗಳಾಗಿವೆ. ಹಿಲ್ಕೋಡಿನ ನಿಲ್ಸ್ಕಲ್ಲಿನ ಕೆಳಭಾಗದಲ್ಲಿ ದೊರೆತ ಕೆಂಪು ಮತ್ತು ಕೆನೆಬಣ್ಣದ ಮಡಕೆಯ ಅವಶೇಷಗಳು ಈ ಅಭಿಪ್ರಾಯವನ್ನು ಸಮರ್ಥಿಸುತ್ತವೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಲ್ಸ್ಕಲ್ ಮತ್ತು ಹೆರಗಲ್ ಸಮೂಹದ ನಿಲುವುಗಲ್ಲುಗಳು ಕಾಲಮಾನದ ದೃಷ್ಟಿಯಿಂದ ಬಹಳ ಪ್ರಾಚೀನವಾಗಿದ್ದು, ಸುಮಾರು ಕ್ರಿ.ಪೂ. 800ರ ಕಾಲದವುಗಳೆಂದು ತರ್ಕಿಸಲಾಗಿದೆ. ಆದರೆ, ಕುಂದಾಪುರದಲ್ಲಿ ಕಂಡುಬಂದಿರುವ ನಿಲ್ಸ್ಕಲ್ಗಳು ಕ್ರಿ.ಪೂ. 300 ರಿಂದ ಕ್ರಿ.ಶ.1 ಅಥವಾ 2ನೇ ಶತಮಾನಕ್ಕೆ ಸೇರಿದವುಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ತುಳುನಾಡಿನ ಸಾಂಸ್ಕೃತಿಕ ಬದುಕಿನ ಮೇಲೆ ಅಗಾಧ ಪರಿಣಾಮವನ್ನು ಉಂಟುಮಾಡಿರುವ ಬೃಹತ್ ಶಿಲಾಯುಗದ ಅವಶೇಷಗಳನ್ನು ಸಂರಕ್ಷಿಸುವುದು ಎಲ್ಲರ ಹೊಣೆಯಾಗಿದೆ ಎಂದು ಪ್ರೊ.ಮುರುಗೇಶಿ ಹೇಳಿದ್ದಾರೆ. ಈ ಸಂಶೋಧನೆಯಲ್ಲಿ ತಮಗೆ ಸಹಾಯ ಮಾಡಿದ ವಿಶ್ವನಾಥ್ ಗುಲ್ವಾಡಿ, ಸುಧಾಕರ್ ಶೆಟ್ಟಿ, ಕೃಷಿ ಅಧಿಕಾರಿ ಸಿ.ನಾಗರಾಜ್ ಶೆಟ್ಟಿ, ಮಂಜು ಪೂಜಾರಿ ಹಿಲ್ಕೋಡು, ಆದಿಮ ಕಲಾ ಸಂಶೋಧನಾ ತಂಡದ ಸದಸ್ಯರಾದ ಮುರುಳೀಧರ ಹೆಗಡೆ ಇಡೂರು-ಕುಂಜ್ಞಾಡಿ, ಶ್ರೇಯಸ್ ಬಂಟಕಲ್, ಗೌತಮ್ ಬೆಳ್ಮಣ್ ಇವರಿಗೆ ತಾವು ಅಭಾರಿಯಾಗಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯಾದಗಿರಿ | ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ
ಯಾದಗಿರಿ: ಸಾಮಾಜಿಕ ಪ್ರಬುದ್ಧತೆ ಮೈಗೂಡಿಸಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಶಾಸಕ, ಸಚಿವರಾಗಿ ಅಭಿವೃದ್ಧಿ ಕೆಲಸಗಳು ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಂಬರುವ ದಿನಗಳಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಂತೆಯೇ ಉನ್ನತ ಸ್ಥಾನಗಳು ಪಡೆಯಲಿ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಆಶಯ ವ್ಯಕ್ತಪಡಿಸಿದರು. ಗಾಂಧಿ ಸರ್ಕಲ್ ನಲ್ಲಿ ಶನಿವಾರ ಸಚಿವರ ಹುಟ್ಟುಹಬ್ಬದಂಗವಾಗಿ ಏಪರ್ಡಿಸಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬುದ್ಧ, ಬಸವ, ಡಾ.ಅಂಬೇಡ್ಕರ್ ಅವರ ಆದರ್ಶ, ತತ್ವಗಳನ್ನು ಚಾಚು ತಪ್ಪದೆ ಪಾಲಿಸುವ ಮೂಲಕ ಸತ್ಯ, ನ್ಯಾಯ ಮತ್ತು ಧರ್ಮದ ದಾರಿಯಲ್ಲಿ ಕೆಲಸ ಮಾಡುತ್ತಿರುವ ಬೆರಳೆಣಿಕೆಯಷ್ಟು ಜನರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಒಬ್ಬರಾಗಿದ್ದಾರೆ ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಕಂಡ ಓರ್ವ ಪ್ರತಿಭಾವಂತ ರಾಜಕಾರಣಿಯಾಗಿದ್ದು, ಅಭಿವೃದ್ಧಿ ವಿಷಯದಲ್ಲಿ ರಾಜಿಯಾಗದ ಗಟ್ಟಿ ನಿಲುವಿನ ವ್ಯಕ್ತಿಯೆಂದು ಹೇಳಿದರು. ಯುವ ನಾಯಕ ಪಂಪಣ್ಣಗೌಡ (ಸನ್ನಿಗೌಡ) ಅವರ ನೇತೃತ್ವದಲ್ಲಿ ಪೌರಾ ಕಾರ್ಮಿಕರಿಗೆ ಸನ್ಮಾನ, ರಕ್ತದಾನ ಶಿಬಿರ, ಕಣ್ಣಿನ ತಪಾಸಣೆ ಹಾಗೂ ಅನ್ನ ಸಂತಪರ್ಣೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಬಸ್ಸುಗೌಡ ಬಿಳ್ಹಾರ್, ಸಾಯಿಬಣ್ಣ ಕೆಂಗೂರಿ, ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಮಲ್ಲಮ್ಮ ಕೋಮಾರ್, ನಿಲೋಫರ ಬಾದಲ್, ಮಲ್ಲಿಕಾರ್ಜುನ ಇಟೆ, ಶರಣಪ್ಪ ಡಿ ಮಾನೇಗಾರ್, ಲಕ್ಣ್ಮರೆಡ್ಡಿ, ರಾಘವೇಂದ್ರ ಮಾನಸಗಲ್, ಅನಿಲಕುಮಾರ ಹೆಡಗಿಮದ್ರಿ, ಹಣುಮೇಗೌಡ ಮರಮಕಲ್, ಚಿದಾನಂದಪ್ಪ ಕಾಳೆಬೆಳಗುಂದಿ, ಸುದರ್ಶನ್ ನಾಯಕ್, ಸುರೇಶ್ ಮಡ್ಡಿ, ಭೀಮರಾಯ ಠಾಣಗುಂದಿ, ಶರಣಗೌಡ ಮಾಲಿಪಾಟೀಲ್, ಶ್ಯಾಮಸನ್ ಮಾಳಿಕೇರಿ, ಮಲ್ಲಣ್ಣ ದಾಸನಕೇರಿ, ಸಾಯಿಬಣ್ಣ ಸೈದಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೆಎಸ್ಸಿಎ ರಾಜ್ಯ ತಂಡಕ್ಕೆ ಯಾದಗಿರಿಯ ಶ್ವೇತಾ ಆಯ್ಕೆ
ಯಾದಗಿರಿ: ಬಿಸಿಸಿಐ 15 ವರ್ಷದೊಳಗಿನ ಮಹಿಳೆಯರ ಏಕದಿನ ಟ್ರೋಫಿಯ ಆಯ್ಕೆ ಪಂದ್ಯಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಪ್ರಕಟಿಸಿರುವ ರಾಜ್ಯ ತಂಡಕ್ಕೆ ಯಾದಗಿರಿಯ ಗಾಂಧಿ ನಗರದ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ ಶ್ವೇತಾ ಹತ್ತಿಮನಿ ಆಯ್ಕೆಯಾಗಿದ್ದಾರೆ. ನವನಂದಿ ವಿಂಗ್ ಕ್ರಿಕೆಟ್ ಅಕಾಡೆಮಿಯಲ್ಲಿ ಕೋಚಿಂಗ್ ಪಡೆಯುತ್ತಿರುವ ಶ್ವೇತಾ ಹತ್ತಿಮನಿ ವಿವಿಧ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಶ್ವೇತಾ ಹತ್ತಿಮನಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕೆಎಸ್ಸಿಎ ಗ್ರೂಪ್-ಎ ಅಲ್ಲಿನ ಟೀಮ್-ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬಾಲಕಿಯ ಸಾಧನೆಗೆ ನಗರಸಭೆ ಸದಸ್ಯರಾದ ಹಣಮಂತ ಇಟಗಿ ಸೇರಿದಂತೆ ಹಲವರು ಹರ್ಷ ವ್ಯಕ್ತಪಡಿಸಿದ್ದಾರೆ.
Bengaluru | ಮಹದೇವಪುರ ಕ್ಷೇತ್ರದಲ್ಲಿ ನಕಲಿ ಮತದಾರರ ಸೇರ್ಪಡೆ ಆರೋಪ: ಪ್ರಕರಣ ದಾಖಲು
ಬೆಂಗಳೂರು: 2024ರ ಲೋಕಸಭೆ ಚುನಾವಣೆಗೂ ಮುನ್ನ ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂಬ ಆರೋಪದಡಿ ಇಲ್ಲಿನ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ ನಲ್ಲೂರುಹಳ್ಳಿ ನಿವಾಸಿ ವೈ.ವಿನೋದ (39) ಎಂಬವರು ದೂರು ನೀಡಿದ್ದು, ಸರಕಾರಿ ಅಧಿಕಾರಿಗಳು, ಇತರೆ ಖಾಸಗಿ ವ್ಯಕ್ತಿಗಳು ಲೋಕಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಚುನಾವಣಾ ವಂಚನೆಯು ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆಯಾಗಿದೆ. 2024ರ ಚುನಾವಣೆಗೆ ಮುಂಚಿತವಾಗಿ ಮಹದೇವಪುರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ನಕಲಿ ಮತ್ತು ಸುಳ್ಳು ಮತದಾರರ ಬಗ್ಗೆ ನಿಷ್ಪಕ್ಷಪಾತ ಮತ್ತು ನ್ಯಾಯಯುತ ತನಿಖೆಯಾಗಬೇಕು. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಧ್ಯಪ್ರದೇಶ | ಖಾಂಡ್ವಾ ಸರಕಾರಿ ಆಸ್ಪತ್ರೆಯ ಹಾಸಿಗೆಗಳ ಮೇಲೆ ಮಲಗಿದ್ದ ನಾಯಿ: ಉದ್ಯೋಗಿ ವಜಾ
ಖಾಂಡ್ವಾ (ಮಧ್ಯ ಪ್ರದೇಶ): ಖಾಂಡ್ವಾ ಜಿಲ್ಲೆಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ಹಾಸಿಗೆಯ ಮೇಲೆ ನಾಯಿಗಳು ವಿಶ್ರಾಂತಿ ಪಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಿಗೇ ಓರ್ವ ಸ್ವಚ್ಛತಾ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ಘಟನೆಯ ವಿರುದ್ಧ ವ್ಯಾಪಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯು ಕಿಲ್ಲೌದ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ತಕ್ಷಣದಿಂದಲೇ ಅನ್ವಯವಾಗುವಂತೆ ಓರ್ವ ಸ್ವಚ್ಛತಾ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿರುವ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಧರ್ಮೇಂದ್ರ ಶರ್ಮ, ಓರ್ವ ಕರ್ತವ್ಯನಿರತ ಶುಶ್ರೂಷಕಿಯ ಏಳು ದಿನಗಳ ವೇತನವನ್ನು ಕಡಿತಗೊಳಿಸಲೂ ಆದೇಶಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಈ ಲೋಪಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆರೋಗ್ಯ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ” ಎಂದು ಜಿಲ್ಲಾಧಿಕಾರಿ ರಿಷವ್ ಗುಪ್ತ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸರ್ಕಾರಿ ನೌಕರರಿಗೆ ಕಾಂಗ್ರೆಸ್ನಿಂದ ಆತ್ಮಹತ್ಯೆ ಗ್ಯಾರಂಟಿ: ಬಿಜೆಪಿ ಹೀಗಂದಿದ್ದೇಕೆ?
ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾದಲ್ಲೇ ಮಹಿಳಾ ಅಧಿಕಾರಿ ಸರ್ಕಾರಿ ಕಚೇರಿಯೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕಿರುಕುಳದ ಹಿಂದೆ ವರ್ಗಾವಣೆ ಕಿಂಗ್ ಪಿನ್ ವರುಣಾ ಉಸ್ತುವಾರಿ ಯತೀಂದ್ರ ಸಿದ್ದರಾಮಯ್ಯನವರ ಕೈವಾಡ ಶಂಕೆ ಮೂಡುತ್ತಿದೆ. ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ ಇರುವಾಗ ಉಳಿದ ಕಡೆ ಏನು
ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಸಚಿವ ಮಂಕಾಳ ವೈದ್ಯ
ಬೆಂಗಳೂರು: ಪ್ರತಿಯೊಬ್ಬ ಮೀನುಗಾರ ಕುಟುಂಬಕ್ಕೂ ಶಾಶ್ವತ ಸೂರಿರಬೇಕು ಉದ್ದೇಶದಿಂದ ಮತ್ಯಾಶ್ರಯ ಯೋಜನೆ ಮೂಲಕ ವಸತಿ ರಹಿತ 10 ಸಾವಿರ ಮೀನುಗಾರರಿಗೆ ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ. ಶನಿವಾರ ನಗರದ ಹೆಬ್ಬಾಳ ರಸ್ತೆಯಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ-2025 ಹಾಗೂ ಮತ್ಸ್ಯ ಮೇಳ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ನಮ್ಮ ಕರಾವಳಿಯಲ್ಲಿ ಕರ್ನಾಟಕದ ಮೊಟ್ಟ ಮೊದಲ ಸಮರ್ಪಿತ ಸಮುದ್ರ ಅಂಬ್ಯುಲೆನ್ಸ್ ಅನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ. 7 ಕೋಟಿ ರೂ. ವೆಚ್ಚದ ಈ ಯೋಜನೆಯು, ಸಮುದ್ರದಲ್ಲಿ ಮೀನುಗಾರರ ಜೀವ ತುರ್ತು ವೈದ್ಯಕೀಯ ನೆರವಿನಿಂದ ವಂಚಿತವಾಗಬಾರದು ಎಂಬ ನಮ್ಮ ಆಶಯ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರವಾಗಿ ನಮ್ಮ ಕಡಲ ತೀರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು. ಮೀನುಗಾರಿಕಾ ನಿಷೇಧದ ಅವಧಿಯಲ್ಲಿ ನಮ್ಮ ಮೀನುಗಾರರು ಎದುರಿಸುವ ಸಂಕಷ್ಟವನ್ನು ನಾವು ಗುರುತಿಸಿದ್ದೇವೆ. ಹಾಗಾಗಿ, 'ಮಕ್ಷ್ಯ ಆಶಾ ಕಿರಣ' ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ ಪರಿಹಾರವನ್ನು 1,500 ರೂ. ಗಳಿಂದ 3,000 ರೂ.ಗಳಿಗೆ ದ್ವಿಗುಣಗೊಳಿಸಿದ್ದೇವೆ. ಇದು ನಮ್ಮ ಮೀನುಗಾರ ಕುಟುಂಬಗಳಿಗೆ ಅತಿ ಮುಖ್ಯವಾದ ಆರ್ಥಿಕ ಬೆಂಬಲವಾಗಿದೆ ಎಂದು ಹೇಳಿದರು. ನಮ್ಮ ಸಾಂಪ್ರದಾಯಿಕ ವಲಯವನ್ನು ಬೆಂಬಲಿಸಲು ನಾವು ಬದ್ಧರಾಗಿದ್ದೇವೆ. ನಾಡದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತಿ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಿಸಲು ನಮ್ಮ ಸರಕಾರವು ತಕ್ಷಣ ಕ್ರಮ ಕೈಗೊಂಡು ಅಗತ್ಯ ಪರಿಹಾರವನ್ನು ಮುಂದುವರೆಸಿದೆ ಎಂದರು. ಕರಾವಳಿಯಿಂದ ಮಾರುಕಟ್ಟೆಗೆ ಮೀನಿನ ಸಾಗಾಣಿಕೆಗೆ ಅನುಕೂಲವಾಗಲು, ನಮ್ಮ ಕರಾವಳಿ ಜಿಲ್ಲೆಗಳಲ್ಲಿನ ಪ್ರಮುಖ ಮೀನುಗಾರಿಕಾ ಸಂಪರ್ಕ ರಸ್ತೆಗಳ ತಕ್ಷಣದ ಅಭಿವೃದ್ಧಿಯನ್ನು ನಬಾರ್ಡ್ ನೆರವಿನೊಂದಿಗೆ ಕೈಗೊಳ್ಳಲು 30 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು. ಮೀನುಗಾರರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಮೀನುಗಾರರಿಗೆ ಜೀವ ರಕ್ಷಕ ಕವಚಗಳನ್ನು ನೀಡಲಾಗುತ್ತಿದೆ. ಒಟ್ಟಾರೆಯಾಗಿ ನಮ್ಮ ಸರಕಾರ ಮೀನುಗಾರರ ಅಭಿವೃದ್ಧಿ, ಬಂದರುಗಳ ಅಭಿವೃದ್ಧಿ, ಕೆರೆ ತುಂಬಿಸುವ ಕೆಲಸ, ಮೀನುಗಾರರಿಗೆ ಪೂರಕವಾದ ಪರಿಕರಗಳನ್ನು ಒದಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಅವರು ತಿಳಿಸಿದರು. ಈ ಎಲ್ಲ ಉಪಕ್ರಮಗಳಿಗೆ ಆಧಾರವಾಗಿ, ನಮ್ಮ ಸರಕಾರವು ಕರ್ನಾಟಕಕ್ಕಾಗಿ ನೂತನ ಮೀನುಗಾರಿಕೆ ನೀತಿಯನ್ನು ಅಂತಿಮಗೊಳಿಸುವ ಹಂತದಲ್ಲಿದೆ. ಈ ನೀತಿಯು ಪರಿಸರ ಆರೋಗ್ಯ, ಸಂಪನ್ಮೂಲಗಳ ರಕ್ಷಣೆ ಮತ್ತು ಪ್ರತಿಯೊಬ್ಬ ಮೀನುಗಾರ ಕುಟುಂಬದ ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ ನೀಲನಕ್ಷೆಯಾಗಲಿದೆ ಎಂದು ಅವರು ವಿವರಿಸಿದರು.
ಹೊಸದಿಲ್ಲಿ: ದಿಲ್ಲಿ ಪೊಲೀಸರು ಭಾರಿ ಅಂತಾರಾಷ್ಟ್ರೀಯ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದು, ಚೀನಾದಲ್ಲಿ ತಯಾರಾಗಿ, ತುರ್ಕಿಯಾ ಮೂಲಕ ಸರಬರಾಜಾಗಿ, ಪಾಕಿಸ್ತಾನದ ಮೂಲಕ ಭಾರತಕ್ಕೆ ಬರುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿದ್ದಾರೆ. ಈ ಜಾಲ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನೊಂದಿಗೆ ಸಂಪರ್ಕ ಹೊಂದಿದ್ದು, ಅತ್ಯಾಧುನಿಕ ಪಿಸ್ತೂಲುಗಳನ್ನು ಪಾಕಿಸ್ತಾನದ ಮೂಲಕ ಭಾರತಕ್ಕೆ ಡ್ರೋನ್ ಗಳನ್ನು ಬಳಸಿಕೊಂಡು ಕಳ್ಳಸಾಗಣೆ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಕಳ್ಳಸಾಗಣೆ ಗುಂಪಿನ ನಾಲ್ವರನ್ನು ಬಂಧಿಸಿದ್ದು, ಈ ಪೈಕಿ ಪೊಲೀಸರಿಗೆ ಬೇಕಿದ್ದ ಓರ್ವ ಕ್ರಿಮಿನಲ್, ಪಂಜಾಬ್ ನ ಮಂದೀಪ್ ಹಾಗೂ ಆತನ ಇಬ್ಬರು ನಿಕಟವರ್ತಿಗಳಾದ ರೋಶನ್ ಮತ್ತು ಮೋನು ಸೇರಿದ್ದಾರೆ. ಈ ಇಬ್ಬರು ಉತ್ತರ ಪ್ರದೇಶದ ನಿವಾಸಿಗಳಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 10 ಅತ್ಯಂತ ದುಬಾರಿ ವಿದೇಶಿ ಪಿಸ್ತೂಲುಗಳು ಹಾಗೂ 92 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಸೋನು ಖತ್ರಿ ಗುಂಪಿನೊಂದಿಗೆ ಸಂಬಂಧ ಹೊಂದಿರುವ ಮಂದೀಪ್ ವಿರುದ್ಧ ಹತ್ಯೆ ಪ್ರಕರಣ ಸೇರಿದಂತೆ ಅಸಂಖ್ಯಾತ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಡ್ರೋನ್ ಗಳು ಈ ಶಸ್ತ್ರಾಸ್ತ್ರಗಳ ಸರಕನ್ನು ನಿಗದಿತ ಸ್ಥಳಗಳಲ್ಲಿ ಬಿಸಾಡಿ ಹೋಗುತಿದ್ದವು ಎಂಬ ಸಂಗತಿ ತನಿಖೆಯ ವೇಳೆ ಬಯಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ಸ್ಕ್ಯಾನರ್ ಗಳು ಪತ್ತೆ ಹಚ್ಚಬಾರದು ಎಂಬ ಕಾರಣಕ್ಕೆ ಈ ಸರಕನ್ನು ಕಾರ್ಬನ್ ಪೇಪರ್ ನೊಂದಿಗೆ ಸುತ್ತಲಾಗುತ್ತಿತ್ತು ಎಂದು ಹೇಳಲಾಗಿದೆ. ಈ ಸರಕನ್ನು ಇಳಿಸಲಾಗಿರುವ ಸ್ಥಳದಿಂದ ಅದನ್ನು ಸಂಗ್ರಹಿಸಿ, ದಿಲ್ಲಿಗೆ ಸರಬರಾಜು ಮಾಡುವಂತೆ ಈ ಗುಂಪಿನ ಸದಸ್ಯರಿಗೆ ನಿರ್ದೇಶಿಸಲಾಗುತ್ತಿತ್ತು ಎಂಬ ಸಂಗತಿ ತನಿಖೆಯ ವೇಳೆ ತಿಳಿದು ಬಂದಿದೆ. ದಿಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಕ್ರಿಮಿನಲ್ ಗಳಿಗೆ ಸರಬರಾಜು ಮಾಡಲು ಈ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಇಂತಹ ಅದೆಷ್ಟು ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಲಾಗಿದೆ ಹಾಗೂ ಈ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿರುವ ಗುಂಪುಗಳು ಅಥವಾ ವ್ಯಕ್ತಿಗಳಾರು ಎಂಬುದನ್ನು ಪತ್ತೆ ಹಚ್ಚಲು ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬ : ಅಭಿಮಾನಿಗಳಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಸೇಡಂ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಈಶ್ವರಾಜ ಮಾದವರ, ಗೌತಮ್ ಆರ್ ಹಳ್ಳಿ, ಸುನೀಲ್ ಎಸ್ ರಾಂಪೂರ, ಸಂತೋಷ ಜಾಕನಹಳ್ಳಿ, ರಾಘು ವಾಲಿಕಾರ, ಶಿವಾನಂದ ಬರಮಕರ, ಪ್ರಶಾಂತ್ ಗದ್ದಗಿ, ಮಲ್ಲಪ್ಪ ಪೂಜಾರಿ, ಶರಣು ಹೊಸೂರ್, ಕೈಲಾಸ ಮೌರ್ಯ, ಸುನೀಲ್ ಕರಣಿ ಮೂಗನೂರ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.
ಉಡುಪಿ | ನ.25ರಿಂದ ಬೀಡಿ ಕಾರ್ಮಿಕರಿಂದ ಅನಿರ್ಧಿಷ್ಟವಾದಿ ಅಹೋರಾತ್ರಿ ಧರಣಿ
ಉಡುಪಿ, ನ.22: ಬಡ ಬೀಡಿ ಕಾರ್ಮಿಕರಿಗೆ ಕಾನೂನು ಬದ್ಧ ವೇತನ ನೀಡದ ಬೀಡಿ ಮಾಲಕರ ವಿರುದ್ಧ ಅನಿರ್ಧಿಷ್ಟವಾಧಿ ಅಹೋರಾತ್ರಿ ಧರಣಿ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಉಮೇಶ್ ಕುಂದರ್ ಹಾಗೂ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್, ಕೋಶಾಧಿಕಾರಿ ಬಲ್ಕೀಸ್ ತಿಳಿಸಿದ್ದಾರೆ. ನ.25ರಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮಂದೆ ಧರಣಿ ಮತ್ತು ನ.28ರಂದು ಸಾವಿರಾರು ಬೀಡಿ ಕಾರ್ಮಿಕರು ಮಂಗಳೂರು ಸಹಾಯ ಕಾರ್ಮಿಕ ಕಮೀಷನರ್ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಕಾನೂನು ಬದ್ದ ವೇತನ ಜಾರಿಗೆ ಮತ್ತು 7 ವರ್ಷಗಳ ಬಾಕಿ ವೇತನ ಕೂಡಲೇ ಪಾವತಿಗಾಗಿ ಅಗ್ರಹಿಸಿ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಅನಿರ್ದಿಷ್ಟವಾದಿ ಅಹೋರಾತ್ರಿ ಧರಣಿ ನಡೆಯಲಿದೆ. 2024ರ ಎ.1ರಿಂದ ಪ್ರತಿ 1,000 ಬೀಡಿಗೆ ಕರ್ನಾಟಕ ಸರಕಾರ ನಿಗದಿಗೊಳಿಸಿದಂತೆ ಕನಿಷ್ಠ ಕೂಲಿ ಡಿ.ಎ. ಸೇರಿ ಪ್ರತಿ 1,000 ಬೀಡಿಗೆ 301.92ರೂ.ನಂತೆ ಬೀಡಿ ಮಾಲಕರು ಕಾರ್ಮಿಕರಿಗೆ ನೀಡಬೇಕಿದ್ದರೂ ನೀಡುತ್ತಿಲ್ಲ. ಈ ಕನಿಷ್ಠ ಕೂಲಿ ಸರಕಾರ ಪ್ರತಿ 1,000 ಬೀಡಿಗೆ 270ರೂ. ಕನಿಷ್ಠ ಕೂಲಿ ಹಾಗೂ ಡಿ.ಎ. 2024ರ ಎ.1ರಿಂದ 287.04ರೂ.ನಂತೆ ವೇತನ ನೀಡಬೇಕಿದ್ದರೂ ಮಾಲಕರು ನೀಡಿರುವ ವೇತನ 2025ರ ಮಾ.31ತನಕ ಪ್ರತಿ 1,000 ಬೀಡಿಗೆ ಕೇವಲ 263.80 ಮಾತ್ರ. ಪ್ರತಿ 1,000 ಬೀಡಿ ವೇತನದಲ್ಲಿ 23.24ರೂ.ನಂತೆ ಬಾಕಿ ಮಾಡಿದ್ದಾರೆ. 2018 ಎ.1ರಿಂದ 2025ರ ಮಾ.31ತನಕ ಕೂಡ ಸರಕಾರ ನಿಗದಿ ಪಡಿಸಿದ ವೇತನದಲ್ಲಿ ಪ್ರತಿ 1,000 ಬೀಡಿಗೆ 39.98ರೂ. ವೇತನ ಬಾಕಿ ಮಾಡಿ ಕಾರ್ಮಿಕರನ್ನು ಬೀಡಿ ಮಾಲಕರು ವಂಚಿಸಿದ್ದಾರೆ. ವರ್ಷದಲ್ಲಿ 1 ಲಕ್ಷ ಬೀಡಿ ಕಟ್ಟಿದರೂ ತಲಾ ಸಾವಿರಾರು ರೂಪಾಯಿ ಬೀಡಿ ಕಾರ್ಮಿಕರ ವೇತನ ಬಾಕಿ ಆಗಿದೆ. ಬೀಡಿ ಮಾಲಕರ ಪರವಾಗಿ ಇವತ್ತು ಸರಕಾರ ಕಾರ್ಮಿಕರ ವೇತನ ಹಿಮ್ಮುಖವಾಗಿ ನಿಗದಿಗೊಳಿಸಿ ಆದೇಶ ಮಾಡಿರುವುದು ಬೀಡಿ ಕಾರ್ಮಿಕರಿಗೆ ಮಾಡಿರುವ ಮೋಸ ಎಂದು ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್ ಆರೋಪಿಸಿದ್ದಾರೆ.
ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವುದು ಮಾತ್ರವಲ್ಲದೆ, ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶನಿವಾರ ನಗರದ ಹೆಬ್ಬಾಳ ರಸ್ತೆಯಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ-2025 ಹಾಗೂ ಮತ್ಸ್ಯ ಮೇಳ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೀವು ಗಂಗಾ ಪುತ್ರರು. ಇಂತಹ ಯೋಗ ಎಲ್ಲರಿಗೂ ಬರುವುದಿಲ್ಲ. ಗಂಗಾ ಪುತ್ರ ಭೀಷ್ಮನ ಪ್ರತಿಜ್ಞೆ ಎಂದರೆ ಅದಕ್ಕೆ ಆದ ಘನತೆ ಇದೆ. ನೀವು ನೀರಿನಲ್ಲಿ ಕೆಲಸ ಮಾಡಿ ಸಮಾಜಕ್ಕೆ ಸೇವೆ ಮಾಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಅವರು ನುಡಿದರು. ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು. ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ ಎಂದು ಅವರು ಉಲ್ಲೇಖಿಸಿದರು. 10 ಸಾವಿರ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು ಎಂದು ಅವರು ತಿಳಿಸಿದರು. ಮೀನು ಎಂದರೆ ಲಕ್ಷ್ಮೀ, ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ ಎಂದು ಅವರು ಹೇಳಿದರು. ಒಂದೇ ವೇದಿಕೆಯಲ್ಲಿ ಸಿಎಂ-ಡಿಸಿಎಂ: ರಾಜ್ಯದ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಚರ್ಚೆ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ-2025 ಹಾಗೂ ಮತ್ಸ್ಯ ಮೇಳ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಈ ವೇಳೆ ಮಾರ್ಮಿಕವಾಗಿ ಮಾತನಾಡಿದ ಶಿವಕುಮಾರ್, ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಮೀನು ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು ಎಂದು ನುಡಿದರು.
ICC T20i World Cup 2026: ಮತ್ತೆ ಒಂದೇ ಬಣದಲ್ಲಿ ಇಂಡೋ- ಪಾಕ್ ಹಣಾಹಣಿ! ಹೀಗಿದೆ ನೋಡಿ 4 ಬಣ
Indo Pak Cricket Rivalry- 2026ರ ಐಸಿಸಿ ಟಿ20 ವಿಶ್ವಕಪ್ಗೆ ತಂಡಗಳ ರಚನೆ ಆಗಿದ್ದು ಶೀಘ್ರದಲ್ಲೇ ಐಸಿಸಿಯು ಪ್ರಕಟಿಸಲಿದೆ ಎಂದು ಕ್ರಿಕ್ ಬಝ್ ವರದಿ ತಿಳಿಸಿದೆ. ಇನ್ನು ವಿಶೇಷವೆಂದರೆ ಈ ಬಾರಿಯ ಏಷ್ಯಾ ಕಪ್ ರೀತಿಯಲ್ಲೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಪ್ರತಿ ಬಣದಲ್ಲಿ 5 ತಂಡಗಳಿರಲಿದ್ದು ಅಗ್ರ ಎರಡು ತಂಡಗಳು ಸೂಪರ್ ಎಂಟಕ್ಕೆ ಪ್ರವೇಶಿಸಲಿವೆ. ಭಾರತ ಮತ್ತು ಪಾಕಿಸ್ತಾನದ ಪಂದ್ಯ ಹೈಬ್ರಿಡ್ ಮಾದರಿಯಲ್ಲಿ ಕೊಲಂಬೊದಲ್ಲಿ ನಡೆಯಲಿದೆ.
ಉಡುಪಿ, ನ.22: ಉಡುಪಿ ರೈಲ್ವೆ ಯಾತ್ರಿ ಸಂಘದ ಆಡಳಿತ ಮಂಡಳಿಯ ಸಭೆಯು ಮಂಗಳವಾರ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಧೀರಜ್ ಶಾಂತಿ ವಹಿಸಿದ್ದರು. ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಮಹಾಸಭೆಯ ಬಳಿಕ ಸಂಘದ ಚಟುವಟಿಕೆಗಳನ್ನು ವಿವರವಾಗಿ ಸಭೆಗೆ ತಿಳಿಸಿದರು. ರೈಲ್ವೆ ಪ್ರಯಾಣಿಕರ ಮತ್ತು ಉಡುಪಿ ರೈಲ್ವೆ ನಿಲ್ದಾಣದ ಮೂಲಭೂತ ಸೌಕರ್ಯಗಳ ಸುದೀರ್ಘ ಸಮಾಲೋಚನೆ ನಡೆಸಿ ಶಾಸಕರು ಮತ್ತು ಸಂಸದರ ಮೂಲಕ ಕ್ರಮ ಕೈಗೊಳ್ಳಲು ಹಾಗು ಈ ಹಿಂದೆ ನೀಡಿದ ಮನವಿಗಳ ಬಗ್ಗೆ ಪರಾಮರ್ಶೆ ನಡೆಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಕೋಶಾಧಿಕಾರಿ ಅಜಿತ್ ಕುಮಾರ್ ಶೆಣೈ, ಉಪಾಧ್ಯಕ್ಷ ಮಧುಸೂದನ್ ಹೇರೂರು, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಜಯಚಂದ್ರ ರಾವ್, ಅಪ್ರಾಯ ಶೆಟ್ಟಿಗಾರ್ ಪರ್ಕಳ, ಪಿ.ಎನ್.ರವೀಂದ್ರ ರಾವ್, ಸಿ.ಎಸ್.ರಾವ್, ಪ್ಲಾಸಿಡ್ ಜೆ.ಎ. ಮತ್ತಿತರರು ಉಪಸ್ಥಿತರಿದ್ದರು.
‘ಜಿ- 20’ ಶೃಂಗಸಭೆಯಲ್ಲಿ ಜಗತ್ತಿನ ಅಭಿವೃದ್ಧಿಗೆ ನಾಲ್ಕು ಸೂತ್ರ ಕೊಟ್ಟ ಮೋದಿ
ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಿದ್ದರು. ವಿಶ್ವದ ನಾನಾ ದೇಶಗಳಲ್ಲಿರುವ ಗಣ್ಯರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕ ಅಭಿವೃದ್ಧಿಗಾಗಿ 5 ಅಂಶಗಳ ಇನಿಶಿಯೇಟಿವ್ ಗಳನ್ನು ನೀಡಿದ್ದಾರೆ. ಆ ಇನಿಶಿಯೇಟಿವ್ ಗಳೇನು, ಅದರ ಅರ್ಥವೇನು ಎಂಬುದರ ಸಂಪೂರ್ಣ ವಿವರಣೆ ಇಲ್ಲಿದೆ.
DK Shivakumar: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 22: ರಾಜ್ಯದ ಗ್ರಾಮೀಣ ಜನತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ
ಉಡುಪಿ | ಕೇವಲ ಅಭಿಮಾನದಿಂದ ಭಾಷೆಗಳು ಉಳಿಯಲ್ಲ: ಪ್ರೊ.ಕೆ.ಪಿ.ರಾವ್
‘ನಾರಿ ಚೇತನ : ಸಾಹಿತ್ಯದಲ್ಲಿ ಮಹಿಳಾ ಸಂವೇದನೆ’ ವಿಚಾರ ಸಂಕಿರಣ

21 C