SENSEX
NIFTY
GOLD
USD/INR

Weather

19    C
...

Saudi Arabia | ತನ್ನ ನಾಗರಿಕರಿಗೆ ಆಶ್ರಯ ತಾಣದಲ್ಲಿಯೇ ಉಳಿಯುವಂತೆ ಅಮೆರಿಕ ರಾಯಭಾರ ಕಚೇರಿಯಿಂದ ಸೂಚನೆ

ರಿಯಾದ್: ಸೌದಿ ಅರೇಬಿಯಾದ ವಿವಿಧ ನಗರಗಳಲ್ಲಿ ವಾಸಿಸುತ್ತಿರುವ ಅಮೆರಿಕ ನಾಗರಿಕರು ತಕ್ಷಣವೇ ಆಶ್ರಯ ತಾಣಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಮುಂದಿನ ಸೂಚನೆ ಬರುವವರೆಗೆ ಭೇಟಿ ನೀಡದಂತೆ ಅಮೆರಿಕದ ಅಧಿಕಾರಿಗಳು ಕೋರಿದ್ದಾರೆ ಎಂದು Aljazeera ವರದಿ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಅಧಿಸೂಚನೆಯಲ್ಲಿ, ಸೌದಿ ಅರೇಬಿಯಾದಲ್ಲಿರುವ ಅಮೆರಿಕ ಮಿಷನ್‌ಗಳು ಜಿದ್ದಾ, ರಿಯಾದ್ ಮತ್ತು ಧಹ್ರಾನ್ ನಗರಗಳಿಗೆ ಸಂಬಂಧಿಸಿದಂತೆ ಆಶ್ರಯ ತಾಣದಲ್ಲಿ ಉಳಿಯುವ ಸೂಚನೆಯನ್ನು ಹೊರಡಿಸಿರುವುದಾಗಿ ತಿಳಿಸಲಾಗಿದೆ. ಈ ಪ್ರದೇಶದಲ್ಲಿನ ಮಿಲಿಟರಿ ನೆಲೆಗಳಿಗೆ ಅನಗತ್ಯ ಪ್ರಯಾಣವನ್ನು ಸೀಮಿತಗೊಳಿಸಲಾಗಿದ್ದು, ಭದ್ರತಾ ಕಾರಣಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಈ ನಡುವೆ ನಡೆದ ದಾಳಿಯಿಂದ, ಅಲ್ಪ ಪ್ರಮಾಣದ ಬೆಂಕಿ ಹೊತ್ತಿ ಹಾನಿ ಮಾತ್ರ ಉಂಟಾಗಿದೆ ಎಂದು ಸೌದಿ ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಸಮೀಕ್ಷಿಸಲಾಗುತ್ತಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 3 Mar 2026 7:26 am

ಇರಾನ್ ಪ್ರತಿದಾಳಿ ಹೆಚ್ಚುತ್ತಿದ್ದಂತೆ ರೆಕಾರ್ಡೆಡ್ ಭಾಷಣ ಬಿಟ್ಟು Live ಭಾಷಣ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್!

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಅಭಿಯಾನದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ದೇಶದ ಸಾರ್ವಜನಿಕರನ್ನು ಉದ್ದೇಶಿಸಿ ನೇರವಾಗಿ ಮಾತನಾಡಿದರು. ಇದುವರೆಗೆ ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ ರೆಕಾರ್ಡೆಡ್ ವೀಡಿಯೊಗಳ ಮೂಲಕವೇ ಪ್ರತಿಕ್ರಿಯೆ ನೀಡಿದ್ದರು. ಶ್ವೇತಭವನದಲ್ಲಿ ನಡೆದ ಪದಕ ಪ್ರದಾನ ಸಮಾರಂಭದ ವೇಳೆ ಮಾತನಾಡಿದ ಟ್ರಂಪ್, ಇರಾನ್ ಮೇಲೆ ದಾಳಿ ನಡೆಸುವ ತಮ್ಮ ನಿರ್ಧಾರ ಮತ್ತು ಅದರ ಹಿಂದೆ ಇರುವ ಉದ್ದೇಶಗಳನ್ನು ವಿವರಿಸಿದರು. ಈ ಕಾರ್ಯಾಚರಣೆಗೆ ನಾಲ್ಕು ಪ್ರಮುಖ ಗುರಿಗಳನ್ನು ಅವರು ಪ್ರಕಟಿಸಿದರು. ಇರಾನ್‌ನ ಕ್ಷಿಪಣಿ ಸಾಮರ್ಥ್ಯ ಹಾಗೂ ಹೊಸ ಕ್ಷಿಪಣಿಗಳನ್ನು ಉತ್ಪಾದಿಸುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸುವುದು ಮೊದಲ ಗುರಿ ಎಂದು ಅವರು ಹೇಳಿದರು. ಎರಡನೆಯದಾಗಿ, ಇರಾನಿನ ನೌಕಾಪಡೆಯನ್ನು “ನಿರ್ಮೂಲನೆ” ಮಾಡುವುದು. ಮೂರನೆಯದಾಗಿ, ಟೆಹ್ರಾನ್ ಯಾವ ಸಂದರ್ಭದಲ್ಲೂ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯದಂತೆ ಖಚಿತಪಡಿಸಿಕೊಳ್ಳುವುದು. ಅಂತಿಮವಾಗಿ, ತನ್ನ ಗಡಿಯ ಹೊರಗೆ ಸಶಸ್ತ್ರ ಗುಂಪುಗಳನ್ನು ಉತ್ತೇಜಿಸುವ ಸಾಮರ್ಥ್ಯವನ್ನು ಇರಾನ್ ಕಳೆದುಕೊಳ್ಳುವಂತೆ ಮಾಡುವುದು ಈ ಅಭಿಯಾನದ ಉದ್ದೇಶವೆಂದು ಟ್ರಂಪ್ ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 3 Mar 2026 7:06 am

Karnataka Weather: ರಾಜ್ಯದಲ್ಲಿ ಏರಿಕೆಯಾಯ್ತು ಬಿಸಿಲಿನ ತಾಪ: ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ 3, 2026 ರ ಇಂದಿನ ಹವಾಮಾನ ವರದಿಯ ಪ್ರಕಾರ, ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಸಂಪೂರ್ಣ ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತವಾಗಿ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಯಾವುದೇ ಜಿಲ್ಲೆಗಳಲ್ಲಿ ಮುಂದಿನ ಐದು

ಒನ್ ಇ೦ಡಿಯ 3 Mar 2026 7:03 am

ಬೆಂಗಳೂರು ಗ್ರಾಮಾಂತರ : ಎದುರಾಗಲಿದೆಯಾ ನೀರಿನ ‌ಬವಣೆ? ಜನರಲ್ಲಿ ಶುರುವಾಗಿದೆ ಆತಂಕ

ಬೇಸಿಗೆ ಆರಂಭವಾಗುತ್ತಿದ್ದಂತೆ ನೀರಿಗೂ ಸಮಸ್ಯೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಬಯಲು ಸೀಮೆ ಜಿಲ್ಲೆಯಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಯಾವುದೇ ನದಿ ಮೂಲಗಳಿಲ್ಲ. ನಾನಾ ತಾಲೂಕುಗಳಲ್ಲಿಈಗಾಗಲೇ ಕೆಲ ಕೆರೆಗಳು ಹಲವೆಡೆ ಕಲುಷಿತಗೊಂಡಿವೆ. ಅಂತರ್ಜಲದ ಮಟ್ಟ ಗಣನೀಯ ಕುಸಿಯುತ್ತಿದೆ. ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬೇಸಿಗೆಯಲ್ಲಿನಿರ್ವಹಣೆಗೆ ಸವಾಲುಗಳು ಎದುರಾಗುವ ಸಾಧ್ಯತೆಯಿದೆ. ಹಾಗಾಗಿ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಅಗತ್ಯ ಕ್ರಮವಹಿಸುವ ಅನಿವಾರ್ಯತೆ ಇದೆ.

ವಿಜಯ ಕರ್ನಾಟಕ 3 Mar 2026 6:57 am

ಕುವೈತ್‌ ನಲ್ಲಿರುವ ಅಮೆರಿಕದ ಅರಿಫ್ಜನ್ ನೆಲೆಯ ಮೇಲೆ ಇರಾನ್‌ ನಿಂದ ಡ್ರೋನ್ ದಾಳಿ

ಕುವೈತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಕುವೈತ್‌ ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಆರಂಭಿಸಿದೆ ಎಂದು Aljazeera ವರದಿ ಮಾಡಿದೆ. ಕುವೈತ್‌ನಲ್ಲಿ ಅಮೆರಿಕದ ಮಿಲಿಟರಿ ನೆಲೆ ಅರಿಫ್ಜನ್ (Camp Arifjan) ಗುರಿಯಾಗಿಸಿಕೊಂಡು 10 ಡ್ರೋನ್‌ಗಳನ್ನು ಬಳಸಿ ಹೊಸ ದಾಳಿ ನಡೆಸಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಘೋಷಿಸಿದೆ. ದಾಳಿಗೆ ಬಳಸಲಾದ ಡ್ರೋನ್‌ಗಳು ತಮ್ಮ ನಿಗದಿತ ಗುರಿಗಳನ್ನು ಯಶಸ್ವಿಯಾಗಿ ಹೊಡೆದಿವೆ ಎಂದು IRGC ಹೇಳಿಕೊಂಡಿದೆ. ಆದರೆ ದಾಳಿಯಿಂದ ಉಂಟಾದ ಹಾನಿಯ ಪ್ರಮಾಣದ ಕುರಿತು ತಕ್ಷಣದ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬೆಳವಣಿಗೆ ಕುರಿತು ಕುವೈತ್ ಸರ್ಕಾರದಿಂದಲೂ, ಅಮೆರಿಕದ ರಕ್ಷಣಾ ಇಲಾಖೆ ಅಥವಾ ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ಮಿಲಿಟರಿ ಅಧಿಕಾರಿಗಳಿಂದಲೂ ತಕ್ಷಣದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ವಾರ್ತಾ ಭಾರತಿ 3 Mar 2026 6:54 am

Saudi Arabia | ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್ ದಾಳಿ

ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ದಾಳಿ ನಡೆಸಿದ ಪರಿಣಾಮ ಸ್ಫೋಟ ಸಂಭವಿಸಿ ಸೀಮಿತ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸ್ಫೋಟದ ಬಳಿಕ ರಾಯಭಾರ ಕಚೇರಿ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭದ್ರತಾ ಸಿಬ್ಬಂದಿ ತಕ್ಷಣ ನಂದಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿದ ಸೌದಿ ರಕ್ಷಣಾ ಸಚಿವಾಲಯ, ರಿಯಾದ್‌ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಎರಡು ಡ್ರೋನ್‌ ಗಳು ಡಿಕ್ಕಿ ಹೊಡೆದಿರುವುದನ್ನು ದೃಢಪಡಿಸಿದೆ. “ಪ್ರಾಥಮಿಕ ಅಂದಾಜಿನ ಪ್ರಕಾರ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್‌ಗಳು ದಾಳಿ ನಡೆಸಿದ್ದು, ಇದರ ಪರಿಣಾಮವಾಗಿ ಸೀಮಿತ ಬೆಂಕಿ ಕಾಣಿಸಿಕೊಂಡು ಕಟ್ಟಡಕ್ಕೆ ಸಣ್ಣ ಪ್ರಮಾಣದ ವಸ್ತು ಹಾನಿಯಾಗಿದೆ” ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

ವಾರ್ತಾ ಭಾರತಿ 3 Mar 2026 6:32 am

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ | ಅವಧಿ ಮೀರಿದ ವೀಸಾಗಳಿಗೆ ಒಂದು ತಿಂಗಳ ವಿಶೇಷ ರಿಯಾಯಿತಿ ಘೋಷಿಸಿದ ಖತರ್

ವಾಯುಪ್ರದೇಶ ಮುಚ್ಚಿದ ನಡುವೆ ಖತರ್ ಮಹತ್ವದ ನಿರ್ಧಾರ

ವಾರ್ತಾ ಭಾರತಿ 3 Mar 2026 6:02 am

ಅತಿ ಹೆಚ್ಚು ತೆಂಗು ಬೆಳೆಯುವ ತುಮಕೂರಿಗೆ ತೆಂಗು ಪಾರ್ಕ್ ಭಾಗ್ಯ? ಕರ್ನಾಟಕ ಬಜೆಟ್‌ ಮೇಲೆ ನಿರೀಕ್ಷೆ

ತೆಂಗು ಉತ್ಪನ್ನಗಳ ಮೌಲ್ಯವರ್ದನೆಗೆ ತೆಂಗು ಪಾರ್ಕ್ ನಿರ್ಮಾಣದ ಒತ್ತಾಸೆ ಕೇಳಿಬಂದದೆ. ಇದರಿಂದ ಉದ್ಯೋಗ ಸೃಷ್ಟಿ, ರಫ್ತಿಗೆ ಉತ್ತೇಜನ ಸಿಗುವ ಮೂಲಕ ತೆಂಗು ಬೆಳೆಯ ವಿಸ್ತಾರ, ಬೆಳೆದ ರೈತರಿಗೂ ಬಲ ಸಿಗಲಿದೆ.

ವಿಜಯ ಕರ್ನಾಟಕ 3 Mar 2026 5:51 am

ಮುಂದುವರಿದ ಸಂಘರ್ಷ; ಇರಾನ್‌ ನಿಂದ UAE ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ

ಅಬುಧಾಬಿ: ಇರಾನ್‌ ನಿಂದ ಹಾರಿಸಲಾದ ಹೊಸ ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯನ್ನು ಎದುರಿಸುತ್ತಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಕ್ಷಿಪಣಿಗಳನ್ನು ತಡೆಹಿಡಿಯಲು ದೇಶದ ವಾಯು ರಕ್ಷಣಾ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ ಎಂದು ALJAZEERA ವರದಿ ಮಾಡಿದೆ. “ಎಮಿರಾಟಿ ವಾಯು ರಕ್ಷಣಾ ಪಡೆಗಳು ಪ್ರಸ್ತುತ ಇರಾನ್‌ನಿಂದ ಬರುವ ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯನ್ನು ಎದುರಿಸುತ್ತಿವೆ,” ಎಂದು ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಿದೆ. ದಾಳಿಯ ಸ್ವರೂಪ, ಗುರಿಯಾದ ಪ್ರದೇಶಗಳು ಅಥವಾ ಸಂಭವನೀಯ ಹಾನಿ ಕುರಿತು ತಕ್ಷಣದ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ದೇಶದ ಭೌಗೋಳಿಕ ಅಖಂಡತೆ ಮತ್ತು ಸಾರ್ವಜನಿಕರ ಸುರಕ್ಷತೆ ಕಾಪಾಡುವುದು ಪ್ರಾಥಮಿಕ ಕರ್ತವ್ಯ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. “ನಾಗರಿಕರು ಮತ್ತು ನಿವಾಸಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ನಾವು ಸಂಪೂರ್ಣ ಸಿದ್ಧತೆಯಲ್ಲಿದ್ದೇವೆ. ಎಲ್ಲ ರೀತಿಯ ಬೆದರಿಕೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗುತ್ತದೆ,” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಲಾಗಿದೆ. ಸಾರ್ವಜನಿಕರು ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಲಾಗಿದೆ.

ವಾರ್ತಾ ಭಾರತಿ 3 Mar 2026 5:50 am

ಫಸ್ಟ್‌ ಪಿಯು ಉತ್ತೀರ್ಣತೆ ಗೊಂದಲ! 33 ಅಂಕವೋ 35 ಅಂಕವೋ? ಯಾವುದು ಸರಿ? ಸ್ಯಾಟ್ಸ್‌ ತಂತ್ರಾಂಶದಲ್ಲಿ ಗೊಂದಲ

ದ್ವಿತೀಯ ಪಿಯುಸಿಗಿರುವ ನಿಯಮದಂತೆ , ಪ್ವಿರಥಮ ಪಿಯುಸಿ ವಿದ್ಯಾರ್ಥಿಗಳು ಕೂಡಾ ಪಾಸ್‌ ಆಗಲು ಒಟ್ಟು ಶೇ. 33 ಅಂಕ ಪಡೆದರೆ ಸಾಕೇ, ಅಥವಾ 35% ಅಂಕಗಳನ್ನು ಪಡೆಯಬೇಕೇ ಎಂಬ ಗೊಂದಲ ಕಾಲೇಜು ಪ್ರಿನ್ಸಿಪಾಲರಿಗೆ ತಲೆ ನೋವಾಗಿ ಪರಿಣಮಿಸಿದೆ. ತಂತ್ರಾಂಶ ಅಭಿವೃದ್ಧಿ ಆಗಿಲ್ಲದ ಕಾರಣಕ್ಕೆ ಈ ಗೊಂದಲ ಉಂಟಾಗಿದೆ.

ವಿಜಯ ಕರ್ನಾಟಕ 3 Mar 2026 5:36 am

ಖತರ್ ರಾಜಧಾನಿ ದೋಹಾದಲ್ಲಿ ಭಾರೀ ಸರಣಿ ಸ್ಫೋಟ: ವರದಿ

ದೋಹಾ: ಖತರ್ ರಾಜಧಾನಿ ದೋಹಾದಲ್ಲಿ ಮಧ್ಯರಾತ್ರಿ ಬಳಿಕ ಸರಣಿ ಭಾರೀ ಸ್ಫೋಟಗಳು ಸಂಭವಿಸಿವೆ ಎಂದು Aljazeera ವರದಿ ಮಾಡಿದೆ. ಸ್ಥಳೀಯ ಸಮಯದಂತೆ (22:40 GMT) ಬೆಳಗಿನ ಜಾವ ಸುಮಾರು 1:40 ಗಂಟೆಯ ವೇಳೆಗೆ ನಗರದಲ್ಲಿ ಕನಿಷ್ಠ ಐದು ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಸ್ಫೋಟಗಳಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಸಾವುನೋವು ಅಥವಾ ಆಸ್ತಿ ಹಾನಿ ಸಂಭವಿಸಿರುವ ವರದಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ತಕ್ಷಣ ಕಾರ್ಯಾಚರಣೆ ಕೈಗೊಂಡು ಪ್ರಮುಖ ಪ್ರದೇಶಗಳಲ್ಲಿ ನಿಗಾವಣೆ ಹೆಚ್ಚಿಸಿವೆ. ಇದಕ್ಕೂ ಮೊದಲು ಸೋಮವಾರ, ಇರಾನಿನ ಡ್ರೋನ್‌ ಗಳು ಖತರ್‌ ನ ಎರಡು ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿಕೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ. ಮೆಸಯೀದ್ ಕೈಗಾರಿಕಾ ನಗರದಲ್ಲಿರುವ ವಿದ್ಯುತ್ ಸ್ಥಾವರ ಮತ್ತು ವಿಶ್ವದ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (LNG) ಉತ್ಪಾದಕ ಸಂಸ್ಥೆಯಾದ ಖತರ್ ಎನರ್ಜಿ‌ಗೆ ಸೇರಿದ ರಾಸ್ ಲಫಾನ್‌ ನ ಇಂಧನ ಸೌಲಭ್ಯಗಳು ದಾಳಿಗೆ ಒಳಗಾಗಿವೆ ಎಂದು ತಿಳಿದುಬಂದಿದೆ. ಯಾವುದೇ ಸಾವುನೋವುಗಳ ವರದಿ ಇಲ್ಲದಿದ್ದರೂ, ಭದ್ರತಾ ಕಾರಣಗಳಿಂದಾಗಿ ಖತರ್ ಎನರ್ಜಿಯು ದಾಳಿ ನಡೆದ ಪ್ರದೇಶಗಳಲ್ಲಿ LNG ಹಾಗೂ ಇತರ ಉತ್ಪನ್ನಗಳ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ವಾರ್ತಾ ಭಾರತಿ 3 Mar 2026 5:07 am

ಸಿಕ್ಕಿದ ವಿಮಾನ ಹತ್ತಿ ಮಧ್ಯಪ್ರಾಚ್ಯ ತೊರೆಯಿರಿ: 14 ರಾಷ್ಟ್ರಗಳನ್ನು ತಕ್ಷಣ ತೊರೆಯುವಂತೆ ತನ್ನ ನಾಗರಿಕರಿಗೆ ಅಮೆರಿಕ ಸೂಚನೆ

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ದಾಳಿಗಳ ನಡುವೆಯೇ ಮಧ್ಯಪ್ರಾಚ್ಯದ ಒಂದು ಡಝನ್‌ ಗೂ ಹೆಚ್ಚು ರಾಷ್ಟ್ರಗಳಿಂದ ತಕ್ಷಣವೇ ನಿರ್ಗಮಿಸುವಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ನಾಗರಿಕರಿಗೆ ತುರ್ತು ಸೂಚನೆ ನೀಡಿದೆ Aljazeera ವರದಿ ಮಾಡಿದೆ. ಬಹ್ರೇನ್, ಈಜಿಪ್ಟ್, ಇರಾನ್, ಇರಾಕ್, ಇಸ್ರೇಲ್, ಆಕ್ರಮಿತ ವೆಸ್ಟ್ ಬ್ಯಾಂಕ್ ಮತ್ತು ಗಾಝಾ, ಜೋರ್ಡಾನ್, ಕುವೈತ್, ಲೆಬನಾನ್, ಒಮಾನ್, ಖತರ್, ಸೌದಿ ಅರೇಬಿಯಾ, ಸಿರಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಹಾಗೂ ಯೆಮೆನ್ ದೇಶಗಳಲ್ಲಿ ಭದ್ರತಾ ಪರಿಸ್ಥಿತಿ ವೇಗವಾಗಿ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾಮಾನ್ಯ ಸಾರಿಗೆ ವ್ಯವಸ್ಥೆಗಳ ಮೂಲಕ ತಕ್ಷಣವೇ ಹೊರಹೋಗುವಂತೆ ಸೂಚಿಸಲಾಗಿದೆ. ಅಮೆರಿಕ ವಿದೇಶಾಂಗ ಇಲಾಖೆಯ ಕಾನ್ಸುಲರ್ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಮೋರಾ ನಾಮ್ದಾರ್ ಪ್ರಕಟಣೆ ನೀಡಿ, “ಪ್ರದೇಶದಲ್ಲಿ ಪರಿಸ್ಥಿತಿ ಕ್ಷಣಕ್ಷಣಕ್ಕೂ ಬದಲಾಗುತ್ತಿದೆ. ಭದ್ರತಾ ಆತಂಕಗಳು ಹೆಚ್ಚುತ್ತಿರುವುದರಿಂದ ಅಮೆರಿಕ ನಾಗರಿಕರು ವಿಳಂಬ ಮಾಡದೆ ನಿರ್ಗಮಿಸಬೇಕು” ಎಂದು ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ದಾಳಿಗಳ ತೀವ್ರತೆ, ಇರಾನಿನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ನಂತರದ ಬೆಳವಣಿಗೆ ಮತ್ತು ಯಾವುದೇ ಸ್ಪಷ್ಟ ನಿರ್ಗಮನ ಯೋಜನೆಯ ಕೊರತೆ ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ. ಈ ಬೆಳವಣಿಗೆಗಳು ದೀರ್ಘಕಾಲದ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ವಾರ್ತಾ ಭಾರತಿ 3 Mar 2026 4:36 am

ಟೆಹ್ರಾನ್ ನ ಸರ್ಕಾರಿ ಟಿವಿ ಕೇಂದ್ರದ ಮೇಲೆ ವಾಯುದಾಳಿ ಮಾಡಿದ್ದು ನಾವೇ: ದೃಢಪಡಿಸಿದ ಇಸ್ರೇಲ್ ಸೇನೆ

ಇರಾನ್ ನಲ್ಲಿ ಮೃತಪಟ್ಟವರ ಸಂಖ್ಯೆ 555ಕ್ಕೆ ಏರಿಕೆ: ರೆಡ್ ಕ್ರೆಸೆಂಟ್ ವರದಿ

ವಾರ್ತಾ ಭಾರತಿ 3 Mar 2026 4:16 am

ಇಸ್ರೇಲ್ ನಿಂದ ಟೆಹ್ರಾನ್ ಮೇಲೆ ಭಾರೀ ಪ್ರಮಾಣದಲ್ಲಿ ವಾಯುದಾಳಿ

ಲೆಬನಾನ್ ರಾಜಧಾನಿ ಬೈರುತ್‌ ಮೇಲೆ ದಾಳಿಗೆ ಸಿದ್ಧತೆ

ವಾರ್ತಾ ಭಾರತಿ 3 Mar 2026 4:01 am

UAE | ಅಬುಧಾಬಿಯಲ್ಲಿ ಇಂಧನ ಟ್ಯಾಂಕ್ ಟರ್ಮಿನಲ್‌ ಗೆ ಡ್ರೋನ್ ದಾಳಿ

ಮುಂದುವರಿದ 'ಮಧ್ಯಪ್ರಾಚ್ಯ' ಸಂಘರ್ಷ

ವಾರ್ತಾ ಭಾರತಿ 3 Mar 2026 3:33 am

ಅಮೆರಿಕಾ-ಇಸ್ರೇಲ್‍ನಿಂದ ಇರಾನ್ ಮೇಲಿನ ದಾಳಿ ಖಂಡನೀಯ : ಜಾಗೃತ ನಾಗರಿಕರು-ಕರ್ನಾಟಕ

ಬೆಂಗಳೂರು, ಮಾ.2: ಅಮೆರಿಕಾ ಮತ್ತು ಇಸ್ರೇಲ್ ಏಕಪಕ್ಷೀಯವಾಗಿ ಇರಾನ್ ಮೇಲೆ ನಡೆಸಿರುವ ಬಾಂಬ್ ಮತ್ತು ಕ್ಷಿಪಣಿ ದಾಳಿ ಖಂಡನೀಯ. ಇದು ಇರಾನ್‍ನ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ ಎಂದು ಜಾಗೃತ ನಾಗರಿಕರು-ಕರ್ನಾಟಕ ತಿಳಿಸಿದೆ. ಸೋಮವಾರ ಈ ಕುರಿತು ಜಾಗೃತ ನಾಗರಿಕರು-ಕರ್ನಾಟಕದ ಡಾ.ಕೆ.ಮರುಳಸಿದ್ದಪ್ಪ, ಡಾ.ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ವಿಮಲಾ ಕೆ.ಎಸ್. ಬಿ.ಶ್ರೀಪಾದ ಭಟ್, ಡಾ.ಬಂಜಗೆರೆ ಜಯಪ್ರಕಾಶ್, ಟಿ.ಸುರೇಂದ್ರ ರಾವ್, ಡಾ.ವಸುಂಧರಾ ಭೂಪತಿ, ಡಾ.ಎನ್. ಗಾಯತ್ರಿ, ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ರುದ್ರಪ್ಪ ಹುನಗವಾಡಿ, ಡಾ.ಮೀನಾಕ್ಷಿ ಬಾಳಿ, ಇಂದಿರಾ ಕೃಷ್ಣಪ್ಪ, ವಾಸುದೇವ ಉಚ್ಚಿಲ, ಎನ್.ಕೆ.ವಸಂತರಾಜ್, ಡಾ.ಬಿ.ಆರ್.ಮಂಜುನಾಥ್. ಡಾ.ಎಚ್.ಜಿ.ಜಯಲಕ್ಷ್ಮೀ ಅವರು ಜಂಟಿ ಪ್ರಕಟನೆ ನೀಡಿದ್ದಾರೆ. ಅಮೆರಿಕಾ ಮತ್ತು ಇಸ್ರೇಲ್‍ನ ಯುದ್ಧದಾಹಿತನ ಅನಗತ್ಯವಾಗಿ ಅಮಾಯಕರ ಸಾವಿಗೆ ಕಾರಣವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ನೇತನ್ಯಾಹು ಅವರ ಪ್ರತಿಯೊಂದು ಹೇಳಿಕೆ ಅನಾಗರಿಕತೆ ಮತ್ತು ಸಾಮ್ರಾಜ್ಯಶಾಹಿ ಧೋರಣೆಯ ಪ್ರತೀಕವಾಗಿದೆ. ಅಮೆರಿಕಾ ಮತ್ತು ಇರಾನ್ ಮಧ್ಯೆ ಶಾಂತಿ ಮಾತುಕತೆ ನಡೆಯುತ್ತಿರುವಾಗ ನಡೆಸಿದ ಇವರಿಬ್ಬರ ಈ ಪುಂಡಾಟಿಕೆ ಜಾಗತಿಕವಾಗಿ ತೀವ್ರವಾದ ಸಂಘರ್ಷ ಸೃಷ್ಟಿಸುತ್ತಿದೆ ಎಂದು ತಿಳಿಸಿದ್ದಾರೆ. ನಾಗರಿಕರ ನೆಲೆಗಳನ್ನು ಗುರಿಯಾಗಿರಿಸಿ ಬಾಂಬ್ ದಾಳಿ ಮಾಡಿ 165 ಜನ ಮಕ್ಕಳನ್ನು ಕೊಂದ ಘಟನೆಯು ಇವರ ದಾಳಿಯ ಹಿಂದಿರುವ ಜನಾಂಗ ನಾಶದ ದುಷ್ಟ ಸಂಚನ್ನೂ ಬಯಲಿಗೆಳೆದಿದೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್‍ಗೆ ಭೇಟಿ ನೀಡಿ ನೇತಾನ್ಯಾಹು ಅವರ ಜೊತೆ ಕೈ ಕುಲಕಿದ್ದರು. ಇದಾದ ಕೂಡಲೇ ಇರಾನ್ ಮೇಲಿನ ಈ ದಾಳಿ ನಡೆದಿದೆ. ಹಾಗಿದ್ದರೆ ನಮ್ಮ ಪ್ರಧಾನಿಯವರಿಗೆ ಈ ದಾಳಿಯ ಮುನ್ಸೂಚನೆ ಇರಲಿಲ್ಲವೇ ಎನ್ನುವ ಪ್ರಶ್ನೆ ಕಾಡುತ್ತದೆ ಎಂದು ಹೇಳಿದ್ದಾರೆ. ಭಾರತ ಸರಕಾರವು ಇರಾನ್ ಮೇಲಿನ ದಾಳಿಯನ್ನು ಖಂಡಿಸಬೇಕು. ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಬೇಕು ಎಂದು ಸಾಹಿತಿಗಳು, ಚಿಂತಕರು, ಹೋರಾಟಗಾರರು ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 3 Mar 2026 12:05 am

ಅರೆಭಾಷೆ ಸಂಸ್ಕೃತಿ-ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ

ಮಡಿಕೇರಿ, ಮಾ.2: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪುತ್ತೂರಿನ ಅನಂತರಾಜ ಗೌಡ, ಅರೆಭಾಷಿಕ ಸಂಘಟನಾ ಕ್ಷೇತ್ರದಲ್ಲಿ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಹಾಗೂ ಅರೆಭಾಷೆ ಸಾಹಿತ್ಯ ಕ್ಷೇತ್ರದಲ್ಲಿ ಮಡಿಕೇರಿಯ ಕಟ್ರತನ ಲಲಿತಾ ಅಯ್ಯಣ್ಣ ಅವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಮಾರ್ಚ್ 14ರಂದು ಮಂಗಳೂರಿನ ಉರ್ವಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಂದು ನಡೆಯುವ ಸಮಾರಂಭದಲ್ಲಿ ಅಕಾಡಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಕಾಡಮಿ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಾರ್ತಾ ಭಾರತಿ 3 Mar 2026 12:02 am

ಹಿರಿಯರ ತ್ಯಾಗ ಯುವಕರಿಗೆ ಸ್ಫೂರ್ತಿ: ಸ್ಪೀಕರ್ ಯು.ಟಿ.ಖಾದರ್

ಆಂದ್ರಪ್ರದೇಶದ ಮಾಜಿ ಸ್ಪೀಕರ್ ದಿ. ದುಡ್ಡಿಳ್ಳ ಶ್ರೀಪಾದ್ ರಾವ್ ಜಯಂತಿ ಆಚರಣೆ

ವಾರ್ತಾ ಭಾರತಿ 2 Mar 2026 11:59 pm

Kolar | ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ; ಅವಳಿ ಮಕ್ಕಳ ಮೃತ್ಯು

ಕೋಲಾರ, ಮಾ.2: ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಅದೃಷ್ಟವಶಾತ್ ತಾಯಿ ರಕ್ಷಣೆಯಾಗಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ವರದಿಯಾಗಿದೆ. ಇಬ್ಬರು ಮಕ್ಕಳು ಸಂಪಿನಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟ ಗ್ರಾಮದಲ್ಲಿ ಜರುಗಿದೆ . ಸೋಮವಾರ ಬೆಳಗ್ಗೆ ಕೌಟುಂಬಿಕ ಕಲಹದಿಂದ ಬೇಸತ್ತ ಕೋಡಗುರ್ಕಿ ಗ್ರಾಮದ ಉಷಾ(28) ತನ್ನ ಮೂರು ವರ್ಷಗಳ ಅವಳಿ ಮಕ್ಕಳಾದ ಹರ್ಷಿತ್ ಮತ್ತು ಹಿತೇಶ್ ಬೂದಿಕೋಟಿಯ ಹೈದರಾಲಿ ಕೋಟೆಯ ಸಮಿಪದ ಸಂಪಿನಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಜನರು ನೋಡಿ ತಾಯಿಯನ್ನು ರಕ್ಷಣೆ ಮಾಡಿದ್ದು, ಮಕ್ಕಳಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಎಂಟು ವರ್ಷಗಳ ಹಿಂದೆ ಕಾರಹಳ್ಳಿಯ ಉಷಾ ಅವರನ್ನು ಮುರಳಿಗೆ ನೀಡಿ ಮದುವೆ ಮಾಡಲಾಗಿತ್ತು. ಮೊದಲು ಅನೋನ್ಯವಾಗಿದ್ದ ಇದ್ದಂತಹ ದಂಪತಿ ನಡುವೆ ಪ್ರತಿದಿನ ಸಣ್ಣಪುಟ್ಟ ವಿಷಯಗಳಿಗೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಬೂದಿಕೋಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಾರ್ತಾ ಭಾರತಿ 2 Mar 2026 11:59 pm

ಇರಾನ್‌ ಪರ ಇರುವ ಮೂಲಭೂತವಾದಿಗಳ ಬಗ್ಗೆ ನಿಗಾ ವಹಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

Central Government Instructions- ಖಮೇನಿ ಹತ್ಯೆಯ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ ಭಾರತದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದೇಶದೊಳಗೆ ಸಂಭವನೀಯ ಹಿಂಸಾಚಾರ ತಡೆಯಲು ತೀವ್ರಗಾಮಿಗಳು ಮತ್ತು ಮೂಲಭೂತವಾದಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸುವಂತೆ ಕೇಂದ್ರ ಸರ್ಕಾರ ಇದೀಗ ಎಲ್ಲಾ ರಾಜ್ಯಗಳಿಗೆ ತುರ್ತು ಸೂಚನೆ ನೀಡಿದೆ. ಇಷ್ಟೇ ಅಲ್ಲದೆ ಜಾಗತಿಕ ಭಯೋತ್ಪಾದಕ ಸಂಘಟನೆಗಳು ಮತ್ತು ತೀವ್ರಗಾಮಿಗಳ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳ ಮೇಲೆ ಹದ್ದಿನ ಕಣ್ಣಿಡಲು ಗುಪ್ತಚರ ಸಂಸ್ಥೆಗಳಿಗೆ ನಿರ್ದೇಶಿಸಲಾಗಿದೆ.

ವಿಜಯ ಕರ್ನಾಟಕ 2 Mar 2026 11:57 pm

Karnataka Budget: ಡಿಕೆ ಶಿವಕುಮಾರ್ ಮೇಲೆ ನಿಗಾ ಇಡಲು ಸಿದ್ದರಾಮಯ್ಯರಿಂದ ತಂಡ ರಚನೆ: ಆರ್.ಅಶೋಕ್

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್‌ಪಿ ನೇತೃತ್ವದಲ್ಲಿ ಅನಧಿಕೃತವಾಗಿ ತಂಡ ರಚಿಸಿದ್ದಾರೆ. ಅನುದಾನ ಕಡಿತ ಮಾಡುವುದು, ಫೋನ್‌ ಟ್ಯಾಪ್ ಮಾಡುವುದು ಹೀಗೆ ಎಲ್ಲ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. 2026ರ ಬಜೆಟ್ ಅಧಿವೇಶನಕ್ಕೆ ಸಂಬಂಧಿಸಿದಂತೆ ಅವರು ಸುದ್ದಿಗೋಷ್ಠ

ಒನ್ ಇ೦ಡಿಯ 2 Mar 2026 11:51 pm

ನೇಮಕಾತಿ ವಿಚಾರ | ವಿವಿಯನ್ನು ಘಟಕವಾಗಿ ಮಾಡಿದರೆ ಯಾರಿಗೂ ಅನ್ಯಾಯ ಆಗದು : ಸಚಿವ ಮಹದೇವಪ್ಪ

ಬೆಂಗಳೂರು, ಮಾ.2: ನೇಮಕಾತಿ ವಿಚಾರವಾಗಿ ವಿಶ್ವ ವಿದ್ಯಾನಿಲಯವನ್ನು ಘಟಕವಾಗಿ ಮಾಡಿದರೆ ಶೋಷಿತ ಸಮುದಾಯದ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ವಿಶ್ವ ವಿದ್ಯಾನಿಲಯ/ಶೈಕ್ಷಣಿಕ ಸಂಸ್ಥೆಗಳ ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ವಿಷಯವಾರು ಮೀಸಲಾತಿ ಅಥವಾ ವಿಶ್ವವಿದ್ಯಾಲಯ/ ಶೈಕ್ಷಣಿಕ ಸಂಸ್ಥೆಗಳನ್ನು ಒಂದು ಘಟಕ ಎಂದು ಪರಿಗಣಿಸಿ ಮೀಸಲಾತಿ ಅನ್ವಯಿಸಬೇಕೇ ಎಂಬುದರ ಕುರಿತು ಸರಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆಯುಕ್ತರು ಮತ್ತು ರಾಜ್ಯದ ವಿವಿಧ ವಿಶ್ವ ವಿದ್ಯಾಲಯದ ಕುಲಪತಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಹೇಳಿದರು. ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ಶೋಷಿತ ಸಮುದಾಯದ ಯಾರಿಗೂ ಅನ್ಯಾಯವಾಗಬಾರದು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲ ವಿವಿಗಳ ಕುಲಪತಿಗಳೊಂದಿಗೆ ನಡೆಸಿರುವ ಈ ಸಭೆಯು ಐತಿಹಾಸಿಕ ಮಹತ್ವವನ್ನು ಒಳಗೊಂಡಿದ್ದು, ಇದೇ ಮೊದಲ ಬಾರಿಗೆ ಸರಕಾರ ಮಾಡಿದ ಇಂತಹ ಪ್ರಯತ್ನಕ್ಕೆ ವಿದ್ವಾಂಸರ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಅವರು ಹೇಳಿದರು. ಇನ್ನು ಉದ್ಯೋಗಾವಕಾಶ ನೀಡುವಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಎಲ್ಲ ಜಾತಿಗಳ ನ್ಯಾಯಬದ್ಧ ಮನವಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸುವ ಸಲುವಾಗಿ ಯಾವೆಲ್ಲಾ ರೀತಿ ನೀತಿಗಳನ್ನು ಅನುಸರಿಸಬಹುದು ಎಂಬುದರ ಕುರಿತು ಸುದೀರ್ಘ ಅವಧಿಯವರೆಗೆ ಸಮಾಜ ಕಲ್ಯಾಣ ಸಚಿವರು ಚರ್ಚಿಸಿದರು ಎಂದು ಅವರು ತಿಳಿಸಿದರು. ವಿಭಾಗವಾರು ಮಾಡುವ ಮೀಸಲಾತಿಗೂ ಮತ್ತು ಘಟಕವಾರು ಮಾಡುವ ನೇಮಕಾತಿಗೆ ಇರುವಂತಹ ವ್ಯತ್ಯಾಸಗಳು ಮತ್ತು ಯಾವ ಕ್ರಮ ಅನುಸರಿಸಿದರೆ ಪರಿಶಿಷ್ಟ ವರ್ಗದ ಯುವಕ ಯುವತಿಯರಿಗೆ ನ್ಯಾಯಬದ್ಧ ಅನುಕೂಲ ಆಗುತ್ತದೆ ಎಂಬುದರ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು. ಒಳ ಮೀಸಲಾತಿಯನ್ನು ಒಳಗೊಂಡಂತೆ ಮಾಡಲಾಗುವ ನೇಮಕಾತಿ ವಿಷಯಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ನಿವಾರಿಸಿ ಎಲ್ಲರಿಗೂ ನ್ಯಾಯಬದ್ಧ ಅವಕಾಶಗಳನ್ನು ನೀಡುವ ಉದ್ದೇಶದಿಂದ ಮಾಡಿದ ಸಭೆಯು ಹೆಚ್ಚು ಉಪಯುಕ್ತವಾಗಿದೆ ಎಂದು ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ವಾರ್ತಾ ಭಾರತಿ 2 Mar 2026 11:48 pm

ಜಾಗತಿಕ ವಿಜ್ಞಾನಿಗಳ ಸಮುದಾಯದಿಂದ ಕರ್ನಾಟಕದ ‘ಕ್ಯೂ-ಮಿಂಟ್' ಯೋಜನೆಗೆ ಬೆಂಬಲ; ಸಚಿವ ಭೋಸರಾಜುಗೆ ವಿಶ್ವದ 34 ವಿಜ್ಞಾನಿಗಳಿಂದ ಪತ್ರ

ಬೆಂಗಳೂರು, ಮಾ.2: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ವಿಶ್ವದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ವಿಜ್ಞಾನಿಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಪತ್ರ ಬರೆದಿದ್ದು, ರಾಜ್ಯದ ‘ಕ್ವಾಂಟಮ್ ಮೆಟೀರಿಯಲ್ ಇನ್ನೋವೇಶನ್ ನೆಟ್‍ವರ್ಕ್' ಯೋಜನೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಐಸಿಟಿಎಸ್-ಟಿಐಎಫ್‍ಆರ್‍ನಲ್ಲಿ ನಡೆದ ‘ಫ್ರಾಂಟಿಯರ್ಸ್ ಇನ್ ಕ್ವಾಂಟಮ್ ಕಂಡೆನ್ಸ್ಡ್ ಮ್ಯಾಟರ್ ಫಿಸಿಕ್ಸ್' ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ, ಜಾಗತಿಕ ವಿಜ್ಞಾನಿಗಳ ಸಮುದಾಯವು ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಸಿಟಿ' ಕಾರ್ಯಕ್ರಮದ ಪ್ರಮುಖ ಭಾಗವಾಗಿ ಕ್ಯೂ-ಮಿಂಟ್ ಸ್ಥಾಪಿಸುವ ದೂರದೃಷ್ಟಿಯ ಕ್ರಮವನ್ನು ಶ್ಲಾಘಿಸಿದೆ. ಕಂಪ್ಯೂಟಿಂಗ್, ಸಂವಹನ ಮತ್ತು ಸೆನ್ಸಿಂಗ್ ಕ್ಷೇತ್ರಗಳಲ್ಲಿ ಮುಂದಿನ ಪೀಳಿಗೆಯ ತಂತ್ರಜ್ಞಾನಗಳ ಆವಿಷ್ಕಾ ರಕ್ಕೆ ನವೀನ ಕ್ವಾಂಟಮ್ ವಸ್ತುಗಳು ನಿರ್ಣಾಯಕ ಅಡಿಪಾಯವಾಗಿವೆ ಎಂದು ವಿಜ್ಞಾನಿಗಳು ತಮ್ಮ ಜಂಟಿ ಪತ್ರದಲ್ಲಿ ಹೇಳಿದ್ದಾರೆ. ವಿಶ್ವದ ಪ್ರಮುಖ ವಿಜ್ಞಾನಿಗಳ ಬೆಂಬಲವನ್ನು ಸಚಿವ ಭೋಸರಾಜು ಸ್ವಾಗತಿಸಿದ್ದಾರೆ. ‘ಕರ್ನಾಟಕ ರಾಜ್ಯವು ಮೊದಲಿನಿಂದಲೂ ನಾವೀನ್ಯತೆಗೆ ಹೆಸರುವಾಸಿಯಾಗಿದೆ. ವಿಶ್ವದ ಅಗ್ರಗಣ್ಯ 34 ಕ್ವಾಂಟಮ್ ವಿಜ್ಞಾನಿಗಳಿಂದ ಇಂತಹ ಬೆಂಬಲ ದೊರೆತಿರುವುದು ನಮ್ಮ ಗುರಿಯ ಉತ್ತಮ ದಾರಿಯಲ್ಲಿ ನಡೆಯುತ್ತಿರುವುದನ್ನು ತೋರಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ. ‘ಕ್ವಾಂಟಮ್ ಮೆಟೀರಿಯಲ್ ಇನ್ನೋವೇಶನ್ ನೆಟ್‍ವರ್ಕ್' ಅನ್ನು ಅನುಷ್ಠಾನಗೊಳಿಸಲು ನಾವು ಉತ್ಸುಕರಾಗಿದ್ದೇವೆ. ಸುಧಾರಿತ ಸಂಶೋಧನೆ ಮತ್ತು ಉತ್ಪಾದನೆಗಾಗಿ ಉತ್ತಮ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಮೂಲಕ, 2035ರ ವೇಳೆಗೆ 20 ಬಿಲಿಯನ್ ಡಾಲರ್ ಮೌಲ್ಯದ ಕ್ವಾಂಟಮ್ ಆರ್ಥಿಕತೆಯ ಗುರಿಯನ್ನು ತಲುಪಲು ನಾವು ಅಡಿಪಾಯ ಹಾಕುತ್ತಿದ್ದೇವೆ. ಜೊತೆಗೆ ಈ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸಿ, ನಮ್ಮ ಯುವಜನತೆಗೆ ಉದ್ಯೋಗಗಳನ್ನು ಸೃಷ್ಟಿಸಲಿದ್ದೇವೆ ಎಂದು ತಿಳಿಸಿದರು. ಕ್ಯೂ-ಮಿಂಟ್ ಅನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು, ವಿಜ್ಞಾನಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಐಟಿ/ಬಿಟಿ ಇಲಾಖೆಗೆ, ವಿಶ್ವದರ್ಜೆಯ ತಜ್ಞರನ್ನು ಒಳಗೊಂಡ ಕೇಂದ್ರೀಕೃತ ‘ಕ್ವಾಂಟಮ್ ಮೆಟೀರಿಯಲ್ಸ್ ಫೌಂಡ್ರಿ'ಯನ್ನು ಸ್ಥಾಪಿಸುವುದು, ಸಮಗ್ರ ಕಂಪ್ಯೂಟೇಶನಲ್ ಮತ್ತು ಡೇಟಾ ಸೈನ್ಸ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಹಾಗೂ ಬಹುಸಂಸ್ಥೆಗಳ ಸಹಯೋಗವನ್ನು ಉತ್ತೇಜಿಸುವಂತಹ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ, ವಿಶ್ವಾಸ-ವರ್ಧಿಸುವ ಯೋಜನೆಗಳ ಮೂಲಕ ಹಂತ ಹಂತದ ಅನುಷ್ಠಾನದ ಅಗತ್ಯವನ್ನು ಅವರು ಎತ್ತಿ ತೋರಿಸಿದ್ದಾರೆ. ಈ ಪತ್ರಕ್ಕೆ ಸಹಿ ಹಾಕಿರುವ ಗಣ್ಯ ವಿಜ್ಞಾನಿಗಳು ಐಐಎಸ್‍ಸಿ, ಟಿಐಎಫ್‍ಆರ್, ಎಂಐಟಿ, ಆಕಾ ಫರ್ಡ್, ಪ್ರಿನ್ಸ್‌ ಟನ್ ಮತ್ತು ಕೊಲಂಬಿಯಾ ವಿಶ್ವ ವಿದ್ಯಾನಿಲಯಗಳಂತಹ ಪ್ರಮುಖ ಜಾಗತಿಕ ಸಂಸ್ಥೆಗಳನ್ನು ಪ್ರತಿನಿಧಿಸುತ್ತಾರೆ ಎಂದು ಭೋಸರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Mar 2026 11:40 pm

ಬಿಗಡಾಯಿಸಿದ ಮಧ್ಯಪ್ರಾಚ್ಯ ಸಂಘರ್ಷ: ಸಿಡಿದೆದ್ದ ಇರಾನ್‌! ಯುದ್ಧಭೂಮಿಯಲ್ಲಿ ಸೋಮವಾರ ಇಡೀ ದಿನ ನಡೆದದ್ದೇನು?

ತನ್ನ ಪರಮೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಸಿಟ್ಟಿಗೆದ್ದಿರುವ ಇರಾನ್ ಇದೀಗ ನೆರೆಯ ರಾಷ್ಟ್ರಗಳ ಮೇಲೆ ಅವ್ಯಾಹತವಾಗಿ ಕ್ಷಿಪಣಿ ದಾಳಿ ನಡೆಸಿದೆ. ಸೌದಿ ಅರೇಬಿಯಾ ಮತ್ತು ಕತಾರ್‌ನ ತೈಲ ಹಾಗೂ ಅನಿಲ ಸ್ಥಾವರಗಳ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಜೊತೆಗೆ ಒಮಾನ್ ಕರಾವಳಿ ತೀರ ಮೂಲಕ ಹಾದು ಹೋಗುತ್ತಿರುವ ತೈಲ ಹಡಗುಗಳನ್ನು ಟಾರ್ಗೆಟ್ ಮಾಡುತ್ತಿದೆ. ಇದರಿಂದ ಹರ್ಮುಜ್ ಜಲಸಂಧಿ ಬಂದ್ ಆಗಿದ್ದು ಜಾಗತಿಕ ತೈಲ ಬೆಲೆ ಏರಿಕೆಯಾಗಿದೆ. ಅಮೆರಿಕ ಇರಾನ್ ವಿರುದ್ಧ ಮತ್ತಷ್ಟು ಸೈನ್ಯವನ್ನು ಸಜ್ಜುಗೊಳಿಸುತ್ತಿದ್ದರೆ, ಅತ್ತ ಇರಾನ್ ಪರ ಹೆಜ್ಬೊಲ್ಲಾ ಬಂಡುಕೋರರು ಇಸ್ರೇಲ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದ್ದಾರೆ. ಈ ಯುದ್ಧದ ಕಾರ್ಮೋಡದಿಂದಾಗಿ ಷೇರುಪೇಟೆ ಕುಸಿದಿದೆ.

ವಿಜಯ ಕರ್ನಾಟಕ 2 Mar 2026 11:22 pm

ಕಲಬುರಗಿ | ಡಾ.ಬಾಬು ಜಗಜೀವನ್ ರಾಮ್‌ರವರ 119 ಜಯಂತಿ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಹಸಿರು ಕ್ರಾಂತಿ ಹರಿಕಾರ, ಭಾರತ ಸರ್ಕಾರದ ಮಾಜಿ ಉಪ ಪ್ರಧಾನ ಮಂತ್ರಿಯಾದ ಡಾ.ಬಾಬು ಜಗಜೀವನ್ ರಾಮ್ ಅವರ 119 ನೆಯ ಜಯಂತಿ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ, ಕಾರ್ಯಾಧ್ಯಕ್ಷರಾಗಿ ಶರಣು ಸಾಗರಕರ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸತೀಶ್ ಅಳ್ಳೊಳ್ಳಿ, ಕಾರ್ಯಾಧ್ಯಕ್ಷರಾಗಿ ಪ್ರದೀಪ್ ಬಾಚ್ಚನಹಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾದಿಗ ಸಮಾಜದ ಹಿರಿಯ ಮುಖಂಡರಾದ ಪರಮೇಶ್ವರ್ ಖಾನಾಪುರ್, ಶ್ಯಾಮ್ ನಾಟೇಕರ್,ರಾಜು ವಾಡೆಕರ್, ಬಾಬು ಸುಂಟಾಣ್, ಗೋಪಾಲರಾವ ಕಟ್ಟಿಮನಿ, ರಮೇಶ್ ವಾಡೆಕರ್, ಗೋಪಿಕೃಷ್ಣ ಗುಡೇನವರ್, ಲಿಂಗರಾಜ್ ತಾರಫೈಲ್, ದಶರಥ್ ಕಲಗುರ್ತಿ, ಮಾಣಿಕರಾವ್ ಕಟ್ಟಿಮನಿ, ನಾಗರಾಜ್ ಸೋಲಾಪುರ್ ಕರ್, ಮಲ್ಲಿಕಾರ್ಜುನ ಜಿನಕೇರಿ, ಶ್ರೀನಿವಾಸ್ ರಾಮನಾಳ್ಕರ್, ದತ್ತು ಬಾಸ್ಗಿ,ಮನೋಹರ್ ಬೀರನೂರ್, ಗೋಪಾಲ್ ನಾಟಿಕರ್, ಬಸವರಾಜ್ ಬಾಡಿಯಾಳ್, ಪ್ರಲ್ಲಾದ್ ಹಡಗಿಲ್ಕರ್, ಹಾಗೂ ವಿವಿಧ ಬಡಾವಣೆಯ ಹಿರಿಯ ಮುಖಂಡರು ಸಮಾಜ ಚಿಂತಕರು ಮತ್ತು ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Mar 2026 11:05 pm

T20 World Cup- ಕೊನೇ ಓವರ್ ನಲ್ಲಿ ಶ್ರೀಲಂಕಾಗೆ ರನ್ ಧಾರೆಯೆರೆದ ಶಾಹಿನ್ ಗೆ ಈಗ ಮಾವ ಶಾಹಿದ್ ಅಫ್ರಿದಿಯಿಂದಲೇ ಕ್ಲಾಸ್!

Shahid Afridi Slams Shaheen Shah Afridi- ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ನಲ್ಲಿ ತೋರಿರುವ ಕಳಪೆ ಪ್ರದರ್ಶನಕ್ಕೆ ಇದೀಗ ಎಲ್ಲರೂ ಬೈವವರೇ. ಪ್ರೀಮಿಯರ್ ವೇಗಿ ಶಾಹಿನ್ ಶಾ ಅಫ್ರಿದಿ ಅವರನ್ನೂ ಈ ನಿಟ್ಟಿನಲ್ಲಿ ಅಲ್ಲಿನ ಕ್ರಿಕೆಟ್ ಪ್ರೇಮಿಗಳು ಬಿಟ್ಟಿಲ್ಲ. ಇದೀಗ ಶಾಹಿನ್ ಅವರನ್ನು ಮಾವ ಶಾಹಿನ್ ಶಾ ಅಫ್ರಿದಿ ಅವರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಶ್ರೀಲಂಕಾ ವಿರುದ್ಧ ಪಂದ್ಯದ ಅಂತಿಮ ಓವರ್ ನಲ್ಲಿ ಅವರು ಕಳಪೆ ಬೌಲಿಂಗ್ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಜಯ ಕರ್ನಾಟಕ 2 Mar 2026 11:02 pm

ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ ‘ರುದ್ರಾಕ್ಷ್’ ಕೊಟ್ಟಾರದ ಇನ್ಫೋಸಿಸ್ ಬಳಿ ನಿರ್ಮಾಣ

ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ್’ ಹೈ ಲಿವಿಂಗ್ ಲಕ್ಸುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮಂಗಳೂರಿನ ವಸತಿ ಮತ್ತು ಐಟಿ ಕಾರಿಡಾರ್ ಪ್ರದೇಶದಲ್ಲಿ ನೂತನ ಯೋಜನೆಯನ್ನು ಇತ್ತೀಚೆಗೆ ಅನಾವರಣಗೊಳಿಸಲಾಗಿತ್ತು. ಈ ಮೂಲಕ ಆಧುನಿಕ ಶೈಲಿಯಲ್ಲಿ ನಗರ ಜೀವನದ ಹೊಸ ಅಧ್ಯಾಯ ಆರಂಭವಾಗುತ್ತಿದೆ. ವೃತ್ತಿಪರರು ಮತ್ತು ಕುಟುಂಬಗಳ ಅಗತ್ಯಗಳನ್ನು ಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ರುದ್ರಾಕ್ಷ್, ಉತ್ತಮ ಸಂಪರ್ಕ ಮತ್ತು ಜೀವನ ಶೈಲಿಯ ಸೌಲಭ್ಯಗಳನ್ನು ಒಟ್ಟುಗೂಡಿಸಿದೆ. ನಾರಾಯಣ ಗುರು ವೃತ್ತ ಮತ್ತು ಲೇಡಿಹಿಲ್ ಪ್ರದೇಶದ ಸಮೀಪದಲ್ಲಿರುವ ಈ ಯೋಜನೆ ಶಿಕ್ಷಣ ಸಂಸ್ಥೆಗಳು, ಆರೋಗ್ಯ ಕೇಂದ್ರಗಳು, ವಾಣಿಜ್ಯ ಕೇಂದ್ರಗಳು ಮತ್ತು ಪ್ರಮುಖ ರಸ್ತೆಗಳಿಗೆ ಸುಲಭ ಸಂಪರ್ಕ ವ್ಯವಸ್ಥೆಯನ್ನು ಹೊಂದಿದೆ. ವೆಲ್‍ನೆಸ್ ಆಧಾರಿತ ವಸತಿ ಸಮುದಾಯವಾಗಿ ರೂಪುಗೊಂಡಿರುವ ರುದಾಕ್ಷ್ಷ್, ಮನರಂಜನೆ, ವಿಶ್ರಾಂತಿ ಮತ್ತು ದೈನಂದಿನ ಸೌಲಭ್ಯಗಳನ್ನು ಒಂದೇ ಕಡೆ ಒದಗಿಸುತ್ತದೆ. ಮುಖ್ಯವಾಗಿ, ಮಂಗಳೂರಿನ ಮೊದಲ 24/7 ಕ್ಲೌಡ್ ಕಿಚನ್ ಅನ್ನು ವಸತಿ ಸಮುಚ್ಚಯದ ಒಳಗೆ ಪರಿಚಯಿಸಿರುವುದು ವಿಶೇಷತೆಯಾಗಿದೆ. ಈ ಯೋಜನೆಯಲ್ಲಿ ರೂಫ್‍ಟಾಪ್ ಇನ್ಫಿನಿಟಿ ಪೂಲ್ ವಿದ್ ಸಿಟಿ ಮತ್ತು ಸೀ ವ್ಯೂ, ವೆಲ್‍ನೆಸ್ ಕ್ಲಬ್‍ನಲ್ಲಿ ಜಕುಝಿ ಮತ್ತು ಸೌನಾ, ಜಿಮ್ನೇಶಿಯಂ, ಜಾಗಿಂಗ್ ಟ್ರ್ಯಾಕ್, ಒಳಾಂಗಣ ಆಟಗಳ ಪ್ರದೇಶ, ಬ್ಯಾಡ್ಮಿಂಟನ್ ಮತ್ತು ಬಾಸ್ಕೆಟ್‍ಬಾಲ್ ಕೋರ್ಟ್‍ಗಳು ಸೇರಿವೆ. ಮಿನಿ ಥಿಯೇಟರ್, ಮಕ್ಕಳ ಆಟದ ಮೈದಾನ ಮತ್ತು ಬಹು ಉದ್ದೇಶ ಸಭಾಂಗಣವು ಇಲ್ಲಿನ ನಿವಾಸಿಗಳಿಗೆ ಸ್ವಾವಲಂಬಿ ಜೀವನಶೈಲಿ ಗುರಿಯನ್ನಾಗಿಸಿದೆ. ಮಂಗಳೂರು ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳೆಯುತ್ತಿರುವ ತಾಣವಾಗಿ ರೂಪುಗೊಳ್ಳುತ್ತಿರುವಾಗ, ರುದ್ರಾಕ್ಷ್‍ನಂತಹ ಯೋಜನೆಗಳು ಸ್ಥಳ ಮತ್ತು ಜೀವನ ಶೈಲಿಯ ಸೌಲಭ್ಯಗಳನ್ನು ಒಟ್ಟುಗೂಡಿಸಿದ ಮನೆಗಳತ್ತ ಹೆಚ್ಚುತ್ತಿರುವ ಆಸಕ್ತಿಯನ್ನು ಪ್ರತಿಬಿಂಬಿಸುತ್ತವೆ. ಈ ಯೋಜನೆಯಲ್ಲಿ 2ಬಿಎಚ್‍ಕೆ ಅಪಾರ್ಟ್‍ಮೆಂಟ್‍ಗಳು 98 ಲಕ್ಷ ರೂ. ದಿಂದ ಪ್ರಾರಂಭವಾಗುತ್ತವೆ. ಹೆಚ್ಚಿನ ಮಾಹಿತಿಗಾಗಿ 7090933700ಗೆ ಸಂಪರ್ಕಿಸಿ ಅಥವಾ www.mukundmgmrealty.comಗೆ ಭೇಟಿ ನೀಡಲು ಪ್ರವರ್ತಕರು ತಿಳಿಸಿದ್ದಾರೆ. ರುದ್ರಾಕ್ಷ್ ಯೋಜನೆಯ ಮುಖ್ಯ ವೈಶಿಷ್ಟ್ಯಗಳು - ಪ್ರೀಮಿಯಂ 2ಬಿಎಚ್‍ಕೆ, 3ಬಿಎಚ್‍ಕೆ, 4 ಬಿಎಚ್‍ಕೆ ಡ್ಯುಪ್ಲೆಕ್ಸ್ ಮನೆಗಳು - ಇನ್ಫೋಸಿಸ್ ಸಮೀಪದ ಪ್ರಮುಖ ಸ್ಥಳ ಕೊಟ್ಟಾರ - ನಗರ ನೋಟಗಳೊಂದಿಗೆ ರೂಫ್‍ಟಾಪ್ ಇನ್ಫಿನಿಟಿ ಪೂಲ್ - ಜಕುಝಿ ಮತ್ತು ಸೌನಾ ಹೊಂದಿದ ವೆಲ್‍ನೆಸ್ ಕ್ಲಬ್ - ಜಿಮ್ನೇಶಿಯಂ, ಜಾಗಿಂಗ್ ಟ್ರಾಕ್ ಮತ್ತು ಕ್ರೀಡಾಂಗಣಗಳು - ಮಿನಿ ಥಿಯೇಟರ್ ಮತ್ತು ಬಹುಉದ್ದೇಶ ಸಭಾಂಗಣ - ಮಂಗಳೂರಿನ ಮೊದಲ 24/7 ಕ್ಲೌಡ್ ಕಿಚನ್ ಸೌಲಭ್ಯ

ವಾರ್ತಾ ಭಾರತಿ 2 Mar 2026 11:00 pm

ಕನಕಗಿರಿ | ಪ.ಪಂ ಸಾಮಾನ್ಯ ಸಭೆಗೆ ಗೈರು ವಿಚಾರ; ಓರ್ವ ಸದಸ್ಯ, ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ : ಆರೋಪ

ಕನಕಗಿರಿ: ಪಟ್ಟಣ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗೈರು ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಓರ್ವ ಸದಸ್ಯನ ಮೇಲೆ ನೂರಾರು ಜನರ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪ.ಪಂ ಅಧ್ಯಕ್ಷೆ ತನುಶ್ರೀ ಟಿಜೆ ರಾಮಚಂದ್ರ ಬೆಂಬಲಿಗರ ಗುಂಪು ಮೆಡಿಕಲ್ ಸ್ಟೋರ್‌ನಲ್ಲಿ ಇದ್ದ ಪ.ಪಂ ಸದಸ್ಯ ಅನಿಲ ಬಿಜ್ಜಳ್ ಮೇಲೆ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದರೆ, ಅಕ್ಕಪಕ್ಕದವರು ತಕ್ಷಣ ಮಧ್ಯಪ್ರವೇಶಿಸಿ ಹಲ್ಲೆಕೋರರನ್ನು ತಡೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗುಂಪನ್ನು ಚದುರಿಸಲು ಪ್ರಯತ್ನಿಸಿದರೂ ಪರಿಸ್ಥಿತಿ ಹತೋಟಿಗೆ ಬರಲಿಲ್ಲ. ಬಳಿಕ ಡಿ.ಆರ್ ವಾಹನ ಮೂಲಕ ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ. ಪತ್ರಕರ್ತರ ಮೇಲೂ ಹಲ್ಲೆಗೆ ಯತ್ನ :  ಘಟನಾ ಸ್ಥಳಕ್ಕೆ ತೆರಳಿದ ಕೆಲ ಪತ್ರಕರ್ತರು ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಅವರ ಮೊಬೈಲ್‌ಗಳನ್ನು ಕಸಿದುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಓರ್ವ ಪತ್ರಕರ್ತನನ್ನು ಎಳೆದಾಡಿದಾಗ ಅಲ್ಲಿದ್ದ ಪೊಲೀಸರು ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದು ರಕ್ಷಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನೂ ಕೆಲ ವರದಿಗಾರರನ್ನು ಪ.ಪಂ ಸಿಬ್ಬಂದಿಯೊಬ್ಬ ಮಧ್ಯಪ್ರವೇಶಿಸಿ ತಡೆಯುವ ಮೂಲಕ ಅಪಾಯದಿಂದ ತಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 2 Mar 2026 11:00 pm

Kerala | ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಗೆ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ತಿರುವನಂತಪುರಂ: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 37 ವರ್ಷದ ತಿರುವಳ್ಳಂನ ವೆಟ್ಟಕಲ್ಲು ನಿವಾಸಿಗೆ ತ್ವರಿತ ವಿಶೇಷ ನ್ಯಾಯಾಲಯ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಂತ್ರಸ್ತೆಯಿಂದ ಸಂಗ್ರಹಿಸಲಾದ ವೀರ್ಯವು ಆರೋಪಿಯ ವೀರ್ಯದೊಂದಿಗೆ ಹೋಲಿಕೆಯಾಗಿರುವುದನ್ನು ಡಿಎನ್ಎ ಪರೀಕ್ಷೆ ದೃಢಪಡಿಸಿದೆ. ಆರೋಪಿಯನ್ನು ಶೈನು ಎಂದು ಗುರುತಿಸಲಾಗಿದ್ದು, ಆತನನ್ನು ಅಪರಾಧಿ ಎಂದು ಘೋಷಿಸಿದ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಅಂಜು ಮೀರಾ ಬಿರ್ಲಾ ಅವರು 30,000 ರೂ. ದಂಡವನ್ನೂ ವಿಧಿಸಿದ್ದಾರೆ. ದಂಡವನ್ನು ಪಾವತಿಸದಿದ್ದರೆ ಹೆಚ್ಚುವರಿಯಾಗಿ ಮೂರು ವರ್ಷಗಳ ಸೆರೆವಾಸ ಅನುಭವಿಸಬೇಕಾಗುತ್ತದೆ. ಡಿಸೆಂಬರ್ 31, 2018ರಂದು ಈ ಪ್ರಕರಣದ ಮೊದಲ ಘಟನೆ ನಡೆದಿದೆ. ಹೊಸ ವರ್ಷಾಚರಣೆಗೆ ಆರೋಪಿ ಹಾಗೂ ಸಂತ್ರಸ್ತೆ ಸ್ನೇಹಿತರೊಂದಿಗೆ ಕೋವಲಂಗೆ ತೆರಳಿದ್ದರು. ಬಳಿಕ ಆರೋಪಿಯು ಅವರನ್ನು ತನ್ನ ಸಂಬಂಧಿಕರೊಬ್ಬರ ಮನೆಗೆ ಕರೆದೊಯ್ದಿದ್ದಾನೆ. ಶೌಚಾಲಯಕ್ಕೆ ಹೋಗಬೇಕೆಂದು 16 ವರ್ಷದ ಸಂತ್ರಸ್ತೆ ತಿಳಿಸಿದಾಗ, ಆಕೆಯೊಂದಿಗೆ ತೆರಳಿದ ಆರೋಪಿಯು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಕೆ ಕೂಗಲು ಪ್ರಯತ್ನಿಸಿದಾಗ, ಆತ ಆಕೆಯ ಬಾಯಿಗೆ ಬಟ್ಟೆ ತುರುಕಿದ್ದಾನೆ. ಸಾಮಾಜಿಕ ಕಳಂಕದ ಭೀತಿ ಹಾಗೂ ಸ್ನೇಹಿತರ ಮುಂದೆ ಮುಜುಗರಕ್ಕೊಳಗಾಗುವ ಭಯದಿಂದ ಸಂತ್ರಸ್ತೆ ಘಟನೆ ಬಹಿರಂಗಪಡಿಸಿರಲಿಲ್ಲ. ಎರಡನೇ ಘಟನೆ ಜನವರಿ 12, 2019ರಂದು ನಡೆದಿದೆ. ಸಂತ್ರಸ್ತೆಯ ಮನೆಯಲ್ಲಿ ಪ್ರವೇಶಿಸಿದ ಆರೋಪಿ, ಹಿಂದಿನ ಘಟನೆಯನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಮತ್ತೆ ದೌರ್ಜನ್ಯ ಎಸಗಿದ್ದಾನೆ. ಹತ್ತು ತಿಂಗಳ ಬಳಿಕ ರಾಸಾಯನಿಕ ವಿಶ್ಲೇಷಣೆಯ ವರದಿ ಬಂದಿದ್ದು, ಸಂತ್ರಸ್ತೆಯ ಮಾದರಿಯಲ್ಲಿ ವೀರ್ಯ ಇರುವುದನ್ನು ದೃಢಪಡಿಸಿದೆ. ನಂತರ ಆಕೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಡಿಎನ್ಎ ವಿಶ್ಲೇಷಣೆಯಲ್ಲಿ ಆರೋಪಿಯ ರಕ್ತದ ಮಾದರಿ ಹಾಗೂ ಸಂತ್ರಸ್ತೆಯಿಂದ ಸಂಗ್ರಹಿಸಿದ ಜೈವಿಕ ಮಾದರಿಯ ನಡುವೆ ಹೋಲಿಕೆ ಹೊಂದಿರುವುದು ದೃಢಪಟ್ಟಿದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಆರ್.ಎಸ್. ವಿಜಯ್ ವಾದ ಮಂಡಿಸಿದ್ದರು. ಪೂಂತುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗಳು ಬಿ.ಎಸ್. ಸಾಜಿಕುಮಾರ್ ಹಾಗೂ ಅನೂಪ್ ಎ ತನಿಖೆ ನಡೆಸಿದ್ದರು. ಸೌಜನ್ಯ: onmanorama.com

ವಾರ್ತಾ ಭಾರತಿ 2 Mar 2026 10:59 pm

ಪಶ್ಚಿಮ ಬಂಗಾಳ | ಮೂರೂವರೆ ವರ್ಷದ ಬಾಲಕಿಯನ್ನು ಕಬೋರ್ಡ್‌ ನಲ್ಲಿ ಕೂಡಿ ಹಾಕಿದ ಶಿಕ್ಷಕಿ!

ಕೋಲ್ಕತ್ತಾ ಪ್ರೀಸ್ಕೂಲ್‌ನಲ್ಲಿ ನಡೆದ ಘಟನೆ

ವಾರ್ತಾ ಭಾರತಿ 2 Mar 2026 10:57 pm

ಇರಾನ್-ಇಸ್ರೇಲ್ ಸಂಘರ್ಷ: ತೈಲ ಟ್ಯಾಂಕರ್‌ಗೆ ಡ್ರೋನ್ ಬೋಟ್ ಡಿಕ್ಕಿ, ಓರ್ವ ಭಾರತೀಯ ಸಾವು

Oman Oil Tanker: ಒಂದು ಕಡೆ ಇರಾನ್-ಇಸ್ರೇಲ್ ಯುದ್ಧ ಮುಂದುವರಿದಿದೆ. ಅಮೆರಿಕ ಸಹ ಇರಾನ್ ಮೇಲೆ ತನ್ನ ಪರಾಕ್ರಮ ಮುಂದುವರಿಸಿದೆ. ಈ ಮಧ್ಯೆ ಇಂದು ಸೋಮವಾರ ಒಮಾನ್ ಕೊಲ್ಲಿಯಲ್ಲಿ ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ತೈಲ ಟ್ಯಾಂಕರ್‌ಗೆ ಬಾಂಬ್ ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್ ಮೇಲೆ ಡ್ರೋನ್ ಹಡಗಿನ ಮೂಲಕ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಓರ್ವ ನಾವಿಕ ಮೃತಪಟ್ಟ

ಒನ್ ಇ೦ಡಿಯ 2 Mar 2026 10:51 pm

ನ್ಯಾಯಾಧೀಶರಾಗಿ ನೇಮಕಗೊಂಡ ಕೊಂಬೆಟ್ಟು ಕಾಲೇಜಿನ ಹಿರಿಯ ವಿದ್ಯಾರ್ಥಿ ಮಂಜುನಾಥ್ ಶಿವಲಿಂಗಪ್ಪ ಸಂಸ್ಥೆಗೆ ಭೇಟಿ

ಪುತ್ತೂರು : ಕರ್ನಾಟಕ ನ್ಯಾಯಾಂಗ ಇಲಾಖೆ ಮತ್ತು ರಾಜ್ಯ ಉಚ್ಚ ನ್ಯಾಯಾಲಯವು ನಡೆಸಿದ ಸಿವಿಲ್ ನ್ಯಾಯಾಧಿಶರ ನೇಮಕಾತಿ ಪರೀಕ್ಷೆಯಲ್ಲಿ ನೇಮಕಗೊಂಡ ಕೊಂಬೆಟ್ಟು ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಮಂಜುನಾಥ ಶಿವಲಿಂಗಪ್ಪ‌ ಜಿ ಅವರು ಕೊಂಬೆಟ್ಟು ಸರಕಾರಿ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಉಪನ್ಯಾಸಕರು ಮತ್ತು ಶಿಕ್ಷಕರೊಂದಿಗೆ ತನ್ನ ಸಂತಸವನ್ನು ಹಂಚಿಕೊಂಡರು. ಕಾಲೇಜಿನ ಪರವಾಗಿ ಮಂಜುನಾಥ್ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದ‌ ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ ಅವರು ಮಾತನಾಡುತ್ತಾ ತನ್ನ 25 ನೇ ವಯಸ್ಸಿನಲ್ಲಿ ಕಾನೂನು ವಿದ್ಯಾಭ್ಯಾಸ ಮುಗಿದ ಅಲ್ಪಾವಧಿಯಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡಿರುವ ಮಂಜುನಾಥ್ ಇವರಿಗೆ ಭವಿಷ್ಯದಲ್ಲಿ ನ್ಯಾಯಾಂಗ ವ್ವವಸ್ಥೆಯಲ್ಲಿ ಅತ್ಯುನ್ನತ ಹುದ್ದೆಗೆ ಏರುವ ಅವಕಾಶಗಳು ಲಭಿಸಲಿ ಎಂದು ಹಾರೈಸಿದರು. ಕೊಂಬೆಟ್ಟು ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಜನೆ ಮಾಡಿರುವ ಹಲವು ಹಿರಿಯ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು ಅಂತಹ ಸಾಧಕರ ಸಾಲಿಗೆ ಮಂಜುನಾಥ್ ಅವರು ಸೇರ್ಪಡೆಗೊಂಡಿರುವುದು ಹೆಮ್ಮೆಯ ಸಂಗತಿ, ಇದು ಅವರಿಗೆ ಬೋಧಿಸಿದ ಶಿಕ್ಷಕರಿಗೂ ಅಭಿಮಾನದ ವಿಷಯ ಎಂದು ಹೇಳಿದರು. 2014 - 2019ರ ಅವಧಿಯಲ್ಲಿ ತನಗೆ ಬೋಧಿಸಿದ ಉಪನ್ಯಾಸಕರು ಮತ್ತು ಶಿಕ್ಷಕರನ್ನು ಬೇಟಿಯಾದ ಮಂಜುನಾಥ್ ಎಲ್ಲಾ ಶಿಕ್ಷಕರ ಶುಭಹಾರೈಕೆ ಮತ್ತು ಅಭಿನಂದನೆಗಳನ್ನು ಸ್ವೀಕರಿಸಿದರು. ವಿವಿಧ ತರಗತಿಗಳ ವಿದ್ಯಾರ್ಥಿಗಳಿಗೆ ತನ್ನ ನೇಮಕಾತಿ‌ ವಿಧಾನವನ್ನು ತಿಳಿಸಿ ಎಲ್ಲಾ ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ವಹಿಸಿ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಬೇಕೆಂದು ಪ್ರೇರೆಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಧರಣಪ್ಪ ಗೌಡ, ಸುಬ್ರಹ್ಮಣ್ಯ , ಲತಾ ಕುಮಾರಿ, ಜಯಪ್ರಕಾಶ್, ಮನಮೋಹನ್, ಡಾ. ಯೋಗೀಶ್, ಪದ್ಮನಾಭ , ಅಬ್ದುಲ್ ರಝಾಕ್, ಪ್ರಕಾಶ್ , ಗೌತಮ್ ಕಾಮತ್, ಕಾತ್ಯಾಯಿನಿ , ಸುಪ್ರೀತಾ, ಸ್ವಾತಿ, ಪ್ರತಿಭಾ ರೈ , ವಿಜೇತಾ ಕುಮಾರಿ ಮತ್ತು ಮಂಜುನಾಥ ಅವರ ತಾಯಿ ನಿಂಗವ್ವ ಉಪಸ್ಥಿತರಿದ್ದರು. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾದ ಶಿವಲಿಂಗಪ್ಪ ಮತ್ತು ನಿಂಗವ್ವ ದಂಪತಿಗಳ ಪುತ್ರರಾದ ಮಂಜುನಾಥ ಶಿವ ಲಿಂಗಪ್ಪ ಗೌಡರ್ ಅವರ ಕುಟುಂಬ ಕೂಲಿಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಇಲ್ಲೆ ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದರು. ಪ್ರಾಥಮಿಕ, ಪ್ರೌಢ, ಪದವಿಪೂರ್ವ ಮತ್ತು ಕಾನೂನು ಶಿಕ್ಷಣವನ್ನು ಪುತ್ತೂರಿನ ವಿವಿಧ ಶಿಕ್ಣಣ ಸಂಸ್ಥೆಗಳಲ್ಲಿ ಪಡೆದು 2025 ರ ನ್ಯಾಯಾಧೀಶ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುತ್ತಾರೆ. ಪ್ರಸ್ತುತ ಬೆಳ್ತಂಗಡಿ ಸಮೀಪದ ಮೇಲಂತಬೆಟ್ಟುವಿನಲ್ಲಿ ವಾಸಿಸುತ್ತಿರುವ ಇವರು ಪರಿಶ್ರಮ ಮತ್ತು ಶ್ರದ್ದೆಯಿಂದ ಶಿಕ್ಷಣ ಪಡೆದರೆ ಎಂತಹ ಬಡತನವನ್ನು ಮೀರಿ ನಿಲ್ಲಬಹುದು ಎಂಬುದಕ್ಕೆ ನಿದರ್ಶನವಾಗಿದ್ದಾರೆ.

ವಾರ್ತಾ ಭಾರತಿ 2 Mar 2026 10:43 pm

ಹರಪನಹಳ್ಳಿ | ಹಕ್ಕುಪತ್ರ ನೀಡುವಂತೆ ಗ್ರಾಮಸ್ಥರ ಮನವಿ

ಹರಪನಹಳ್ಳಿ, ಮಾ.2: ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಸರ್ವೇ ನಂ.578ರಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಸ್ಥಳೀಯರು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು. ಗ್ರಾಮದಲ್ಲಿ ಸುಮಾರು 40 ವರ್ಷಗಳಿಂದ ಅನೇಕ ಬಡ ಕುಟುಂಬಗಳು ಮನೆ ನಿರ್ಮಿಸಿ ವಾಸವಾಗಿದ್ದು, ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದಾಗಿ ಅವರು ದೂರಿದರು. ಹಕ್ಕುಪತ್ರ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ. ಒಂದೇ ಸರ್ವೇ ಸಂಖ್ಯೆಯಲ್ಲಿ ಕೆಲವರಿಗೆ ಹಕ್ಕುಪತ್ರ ನೀಡಲು ಸಿದ್ಧತೆ ನಡೆಸಿದರೆ, ಇತರ ಅರ್ಹರಿಗೆ ಸ್ಪಂದನೆ ನೀಡಲಾಗುತ್ತಿಲ್ಲ. ಕೂಡಲೇ ಮರು ಸಮೀಕ್ಷೆ ನಡೆಸಿ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹೆಸರಿನ 3.79 ಎಕರೆ ಜಮೀನಿನಲ್ಲಿ ಜನ ವಾಸವಾಗಿರುವ 16 ಸೆಂಟ್ಸ್ ಭೂಮಿಯನ್ನು ಯಾವುದೇ ಮಾಹಿತಿ ನೀಡದೆ ಪೋಡಿ ಮಾಡಲಾಗಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಅದನ್ನು ರದ್ದುಗೊಳಿಸಿ ಯಥಾಸ್ಥಿತಿಯಲ್ಲಿ ಉಳಿಸಿ ಹಕ್ಕುಪತ್ರ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಮುನ ನಾಯ್ಕ, ಗ್ರಾಮ ಲೆಕ್ಕಾಧಿಕಾರಿ ಶೃತಿ, ಮುಖಂಡ ಕೆ. ಹನುಮಂತಪ್ಪ, ಅಂಜಿನಪ್ಪ, ಬಿ.ಪರಶುರಾಮ, ಉಮೇಶ್, ದೊಡ್ಡಪ್ಪರ ನಾಗರಾಜ್, ಹನುಮಂತಪ್ಪ, ಮಾರುತಿ, ತಿಪ್ಪಣ್ಣ, ಬಸವರಾಜ್, ಮಲ್ಲೇಶಪ್ಪ, ಅಭಿಜಿತ್, ಮಲ್ಲಿಕಾರ್ಜುನ, ಪರಶುರಾಮಪ್ಪ, ಭರತ, ನಾಗಪ್ಪ, ಶಿವಣ್ಣ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Mar 2026 10:40 pm

ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ; ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಗ್ರಹ

ಮಂಗಳೂರು : ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಸಂದೇಶ ಹಾಕಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಕೆಸಿ ರೋಡ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಿಕಾ ರೈ ಕೋಟೆಕಾರ್ ಉಳ್ಳಾಲ ಕ್ಷೇತ್ರದಲ್ಲಿ ಎಲ್ಲಾ ಜಾತಿ, ಧರ್ಮದ ಜನರು ಶಾಂತಿ ಸೌಹಾರ್ದತೆ ಹಾಗೂ ಅನೋನ್ಯತೆಯಿಂದ ಜೀವಿಸುತ್ತಿದ್ದಾರೆ. ಕ್ಷೇತ್ರದ ಶಾಸಕ, ವಿಧಾನ ಸಭಾಧ್ಯಕ್ಷ ಯು .ಟಿ ಖಾದರ್ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕೆಲ ಕಿಡಿಗೇಡಿಗಳು ಇಂತಹ ಕೃತ್ಯ ಎಸಗುತ್ತಿರುವುದು ಖಂಡನೀಯ. ಪೊಲೀಸ್ ಇಲಾಖೆ ಕೂಡಲೇ ಈ ಕಿಡಿಗೇಡಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಾರ್ತಾ ಭಾರತಿ 2 Mar 2026 10:32 pm

ಡಿಕೆಶಿ ಕಡೆಯವರ ಸಭೆಗಳ ಮೇಲೆ ನಿಗಾ ಇಡಲು ಸಿಎಂ ಒಬ್ಬ ಎಸ್ಪಿಯನ್ನು ನೇಮಕ ಮಾಡಿದ್ದಾರೆ : ಆರ್.ಅಶೋಕ್

ಬೆಂಗಳೂರು : ‘ಇರಾನ್ ಮೇಲೆ ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ಯುದ್ಧ ನಿಲ್ಲಬೇಕೆಂಬುದು ಭಾರತದ ನಿಲುವು. ನಾವು ಕೇಂದ್ರದ ಮೇಲೆ ಒತ್ತಡ ಹಾಕಿದ್ದು, ಕೇಂದ್ರ ಸರಕಾರ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸ ಮಾಡುತ್ತದೆ’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇರಾನ್ ದೇಶದಲ್ಲಿ ಭಾರತೀಯರು ಸಿಲುಕಿದ್ದಾರೆ. ಪ್ರಧಾನಿ ಮೋದಿಯವರು ಆ ದೇಶಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಆಗಿದೆ. ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆತರುವ ಕೆಲಸ ಆಗಲಿದೆ ಎಂದರು. ಪ್ರತಿಭಟನೆ ಸಲ್ಲ: ಇರಾನ್ ನಾಯಕ ಖಾಮಿನೈ ಹತ್ಯೆಯನ್ನು ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಪ್ರತಿಭಟನೆ ಮಾಡಿದ್ದು ಸರಿಯಲ್ಲ. ಶಿಯಾ ಮುಸ್ಲಿಮ್ ಗುಂಪಿನವರು ಪ್ರತಿಭಟನೆ ಮಾಡಿದ್ದು, ಅವರ ಮೇಲೆ ಕ್ರಮ ಆಗಬೇಕು. ಖಾಮಿನೈ ಓರ್ವ ಸರ್ವಾಧಿಕಾರಿ. ಇಲ್ಲಿ ಪ್ರತಿಭಟನೆ ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಅಶೋಕ್ ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಮಿನೈ ಹತ್ಯೆಯನ್ನು ಖಂಡಿಸಿರುವುದು ಅವರ ಕಾಂಗ್ರೆಸ್ ಮನಸ್ಥಿತಿಗೆ ಸಾಕ್ಷಿ. ಭಾರತ ದೇಶವು ಯಾರಿಗೂ ವಿರೋಧಿಯಲ್ಲ, ಇಸ್ರೇಲ್‍ಗೂ ವಿರೋಧವಿಲ್ಲ, ಇರಾನ್‍ಗೂ ವಿರೋಧವಿಲ್ಲ. ಭಾರತ-ಇರಾನ್ ಮಧ್ಯೆ ವ್ಯವಹಾರಿಕ ಸಂಬಂಧ ಚೆನ್ನಾಗಿಯೇ ಇದೆ ಎಂದು ಅಶೋಕ್ ತಿಳಿಸಿದರು. ನಿಗಾಕ್ಕೆ ಎಸ್ಪಿ ನಿಯೋಜನೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಡೆಯವರ ಸಭೆಗಳ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಯನ್ನು ನೇಮಕ ಮಾಡಿದ್ದಾರೆ ಎಂದು ದೂರಿದ ಆರ್.ಅಶೋಕ್, ಕಾಂಗ್ರೆಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್‍ನವರು ಕಾಂಗ್ರೆಸ್‍ನವರಿಗೇ ಬೀದಿಗಿಳಿದು ಧಮ್ಕಿ ಹಾಕುತ್ತಿದ್ದಾರೆ. ಈ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂದು ನುಡಿದರು.

ವಾರ್ತಾ ಭಾರತಿ 2 Mar 2026 10:31 pm

Gujarat | ಪ್ರಧಾನಿ ಮೋದಿ ತವರು ರಾಜ್ಯದಲ್ಲಿ 2 ವರ್ಷಗಳಲ್ಲಿ 75 ಸರಕಾರಿ ಶಾಲೆಗಳ ಬಂದ್!

ಅಹ್ಮದಾಬಾದ್, ಮಾ.2: ಖಾಸಗಿ ಶಾಲೆಗಳು ವಿಧಿಸುತ್ತಿರುವ ದುಬಾರಿ ಶುಲ್ಕಗಳು ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಳೆದ ಎರಡು ವರ್ಷಗಳಲ್ಲಿ ಗುಜರಾತ್‌ ನಲ್ಲಿ 75 ಸರಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುಗಡೆಗೊಂಡಿರುವುದನ್ನು ರಾಜ್ಯ ಸರಕಾರ ಸೋಮವಾರ ವಿಧಾನಸಭೆಯಲ್ಲಿ ಒಪ್ಪಿಕೊಂಡಿದೆ. ಅತ್ಯಂತ ಕ್ಷೀಣ ಸಂಖ್ಯೆಯಿಂದ ಹಿಡಿದು ಶೂನ್ಯಮಟ್ಟದವರೆಗೆ ಶಾಲಾ ದಾಖಲಾತಿಯಿರುವುದೇ ಶಾಲೆಗಳ ಮುಚ್ಚುಗಡೆಗೆ ಕಾರಣವೆಂದು ರಾಜ್ಯಸರಕಾರವು ಲಿಖಿತ ಉತ್ತರದಲ್ಲಿ ತಿಳಿಸಿದೆ. ಅಲ್ಲದೆ ಶಿಥಿಲವಾದ ತರಗತಿಕೊಠಡಿಗಳನ್ನು ಧ್ವಂಸಗೊಳಿಸಲಾಗುತ್ತಿದ್ದು, ನೂತನ ಕಟ್ಟಡಗಳ ಕಾಮಗಾರಿಯ ಕಾರಣ ರಾಜ್ಯದ 2674 ಸರಕಾರಿ ಶಾಲೆಗಳು ಪಾಳಿ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಕೂಡಾ ಸರಕಾರವು ಬಹಿರಂಗಪಡಿಸಿದೆ. 2023-24 ಹಾಗೂ 2024-25ರ ನಡುವೆ ಗುಜರಾತ್‌ನ 15 ಜಿಲ್ಲೆಗಳ ಸರಕಾರಿ ಪ್ರಾಥಮಿಕ ಶಾಲೆಗಳನ್ನು ತೊರೆಯು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದು ಕೂಡಾ ಶಾಲೆಗಳ ಮುಚ್ಚುಗಡೆಗೆ ಇನ್ನೊಂದು ಪ್ರಮುಖ ಕಾರಣವಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ವಾರ್ತಾ ಭಾರತಿ 2 Mar 2026 10:30 pm

ಇಸ್ರೇಲ್ ನಿಂದ ದಾಳಿ | ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್‌ ನ ಹಿರಿಯ ಕಮಾಂಡರ್ ಹತ್ಯೆ: ವರದಿ

ಬೈರುತ್, ಮಾ. 2: ಲೆಬನಾನ್‌ ನ ರಾಜಧಾನಿ ಬೈರುತ್ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ರಾತ್ರೋರಾತ್ರಿ ವಾಯುದಾಳಿಯಲ್ಲಿ ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಹಿರಿಯ ಕಮಾಂಡರ್ ಹತ್ಯೆಯಾಗಿದ್ದಾರೆ ಎಂದು ಸಂಘಟನೆ ತಿಳಿಸಿದೆ ಎಂದು Aljazeera ವರದಿ ಮಾಡಿದೆ. ಸಂಘಟನೆಯ ಸಶಸ್ತ್ರ ಘಟಕವಾದ ಅಲ್-ಕುಡ್ಸ್ ಬ್ರಿಗೇಡ್ಸ್ ಹೊರಡಿಸಿದ ಪ್ರಕಟನೆಯಲ್ಲಿ, ಮೃತರನ್ನು 41 ವರ್ಷದ ಅದಮ್ ಅಲ್-ಒಥ್ಮನ್ ಎಂದು ಗುರುತಿಸಲಾಗಿದೆ. ಅವರನ್ನು ಲೆಬನಾನ್ ನಲ್ಲಿನ ಅಲ್-ಕುಡ್ಸ್ ಬ್ರಿಗೇಡ್‌ ಗಳ ಕಮಾಂಡರ್ ಎಂದು ಕರೆಯಲಾಗುತ್ತಿತ್ತು. ದಾಳಿ ನಡೆದ ವೇಳೆ ಅವರು ಬೈರುತ್‌ ನ ದಕ್ಷಿಣ ಉಪನಗರ ಪ್ರದೇಶದಲ್ಲಿದ್ದರು ಎನ್ನಲಾಗಿದೆ. ಲೆಬನಾನ್‌ ನಲ್ಲಿರುವ ಹೆಜ್ಬೊಲ್ಲಾ ಸಂಘಟನೆಗೆ ಸೇರಿದ 70 ಕ್ಕೂ ಹೆಚ್ಚು ನೆಲೆಗಳನ್ನು ಹೊಡೆದಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ. ಹೆಜ್ಬೊಲ್ಲಾ ರಾತ್ರಿಯಿಡೀ ಉತ್ತರ ಇಸ್ರೇಲ್ ಭಾಗಗಳ ಮೇಲೆ ರಾಕೆಟ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಈ ಪ್ರತಿದಾಳಿ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದೆ. ಗಡಿಭಾಗದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಇಸ್ರೇಲ್–ಲೆಬನಾನ್ ಸಂಘರ್ಷ ಮತ್ತಷ್ಟು ವಿಸ್ತಾರಗೊಳ್ಳುವ ಸಾಧ್ಯತೆಗಳ ಬಗ್ಗೆ ಆತಂಕ ವ್ಯಕ್ತವಾಗಿದೆ.

ವಾರ್ತಾ ಭಾರತಿ 2 Mar 2026 10:28 pm

ಮರಿಯಮ್ಮನಹಳ್ಳಿ - ಶಿವಮೊಗ್ಗ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಟೆಂಡರ್‌ : ಸಚಿವ ಸತೀಶ ಜಾರಕಿಹೊಳಿ

ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಿಂದ ಶಿವಮೊಗ್ಗವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಟೆಂಡರ್‌ ಕಡೆಯಲಾಗಿದೆ. ಈ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಸಿಎಂ ಕುರ್ಚಿ ಗೊಂದಲ ಹೈಕಮಾಂಡ್‌ ಇತ್ಯರ್ಥ ಪಡಿಸಲಿ, ಇಸ್ರೇಲ್‌ ಇರಾನ್‌ ಯುದ್ಧದಲ್ಲಿ ಕನ್ನಡಿಗರ ರಕ್ಷಣೆಗೆ ಕೇಂದ್ರ ಮುಂದಾಗಲಿ ಎಂದು ಸಚಿವರು ಒತ್ತಾಯಿಸಿದ್ದಾರೆ.

ವಿಜಯ ಕರ್ನಾಟಕ 2 Mar 2026 10:28 pm

ಬೆಂಗಳೂರು | ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯ ರಕ್ಷಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು

ಬೆಂಗಳೂರು, ಮಾ.2: ಇತ್ತೀಚೆಗೆ ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದು, ಆಕೆಯ ಪೋಷಕರಿಗೆ ಒಪ್ಪಿಸಿದ್ದಾರೆ. ಮಾ.1ರಂದು ರಾತ್ರಿ 11 ಗಂಟೆಯ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೆಟ್ಟದಾಸನಪುರದ ನಾಗಮ್ಮ ದೇವಸ್ಥಾನದ ಬಳಿ ಒಂಟಿಯಾಗಿ ಅಳುತ್ತಿದ್ದ ಬಾಲಕಿಯನ್ನು ಗಮನಿಸಿದ ಓರ್ವ ಆಟೋ ಚಾಲಕನು ಪೊಲೀಸರಿಗೆ ಕರೆ ಮಾಡಿ, ಮಾಹಿತಿಯನ್ನು ತಿಳಿಸಿದ್ದಾನೆ. ಈ ಬಗ್ಗೆ ಸುದ್ದಿ ತಿಳಿದ ಕೂಡಲೇ ಕಾರ್ಯಪ್ರವೃತ್ತರಾದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕೇವಲ 9 ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿ, ಬಾಲಕಿಯನ್ನು ವಿಚಾರಿಸಲಾಗಿ, ಬಾಲಕಿಗೆ ತನ್ನ ಮನೆಯ ವಿಳಾಸ ತಿಳಿಯದೆ, ಬೇಗೂರಿನ ಶಾಲೆಯಲ್ಲಿ ಓದುತ್ತೇನೆ ಎಂದು ತಿಳಿಸಿದ್ದಾಳೆ. ಪೊಲೀಸರು ಆಕೆಯನ್ನು ಶಾಲೆಗೆ ಕರೆದುಕೊಂಡು ಹೋಗಿ, ಶಿಕ್ಷಕರು ಮತ್ತು ಸ್ಥಳೀಯರ ಸಹಾಯದಿಂದ ಪೋಷಕರನ್ನು ಪತ್ತೆಮಾಡಿ, ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ವಾರ್ತಾ ಭಾರತಿ 2 Mar 2026 10:21 pm

Bengaluru | ಮಾಜಿ ಪ್ರಿಯಕರನ ಹತ್ಯೆಗೈದ ಆರೋಪ: ಕಿರುತೆರೆ ನಟಿ ಸಹಿತ ಮೂವರ ಬಂಧನ

ಬೆಂಗಳೂರು : ಮಾಜಿ ಪ್ರಿಯಕರನನ್ನು ಹತ್ಯೆಗೈದ ಆರೋಪದ ಮೇಲೆ ಕಿರುತೆರೆ ನಟಿ ಸೇರಿ ಮೂವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ಇತ್ತೀಚಿಗೆ ನಡೆದಿದ್ದ ಮೋಹನ್ ಕೃಷ್ಣ(45) ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಬಿಂದು(27), ವಿನಯ್(31) ಹಾಗೂ ಧನುಷ್‌(26) ಎಂಬುವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಸಣ್ಣಪುಟ್ಟ ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಮೋಹನ್‍ಕೃಷ್ಣ ತನ್ನ ಪತ್ನಿಯನ್ನು ಬಿಟ್ಟು ಬಿಂದು ಜೊತೆ  ಇದ್ದರು. ಬಿಂದು ಕೂಡ ಪತಿಯಿಂದ ದೂರವಾಗಿದ್ದಳು. ಕೆಲವು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಬಿಂದು ನಟಿಸಿದ್ದಳು. ಎರಡು ತಿಂಗಳ ಹಿಂದಷ್ಟೇ ಬಿಂದು ಹಾಗೂ ಮೋಹನ್ ಕೃಷ್ಣ ಇಬ್ಬರೂ ಬಂದು ವಿಜಯಲಕ್ಷ್ಮೀ ಬಡಾವಣೆಯಲ್ಲಿರುವ ನಟರಾಜ್ ಎಂಬವರ ಮನೆಯನ್ನು ಬಾಡಿಗೆಗೆ ಪಡೆದಿದ್ದರು ಎನ್ನಲಾಗಿದೆ. ಕರಾರುಪತ್ರದ ವಿಚಾರವಾಗಿ ಮಾತನಾಡಿದಾಗ ಒಂದೇ ತಿಂಗಳಿಗೆ ಮನೆ ಖಾಲಿ ಮಾಡುವುದಾಗಿ ಹೇಳಿದ್ದರಿಂದ ಮಾಲಕರು ಕರಾರುಪತ್ರವನ್ನು ಮಾಡಿಕೊಂಡಿರಲಿಲ್ಲ ಎಂದು ಮಾಲಕರು ಹೇಳಿದ್ದರು. ಮನೆ ಬಳಿ ಬಂದಾಗೆಲ್ಲ ಬಾಗಿಲು ಹಾಕಿರುತ್ತಿತ್ತು. ಮಾರ್ಚ್ 1ರಂದು ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದರಿಂದ ಪರಿಶೀಲನೆ ನಡೆಸಿದಾಗ ಮೋಹನ್ ಕೃಷ್ಣನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ಮಾಲಕರು ಬಾಗಲುಗುಂಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೊಬೈಲ್ ಲೊಕೇಶನ್ ಮತ್ತು ಕಾಲ್ ರೆಕಾರ್ಡ್ ಆಧರಿಸಿ ಬಿಂದು, ವಿನಯ್ ಹಾಗೂ ಧನುಷ್‌ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಮೋಹನ್ ಕೃಷ್ಣನ ಜೊತೆಯಲ್ಲಿದ್ದಾಗಲೇ ವಿನಯ್ ಜೊತೆ ಬಿಂದು ಪ್ರೀತಿಯಲ್ಲಿ ಬಿದ್ದಿದ್ದಳು. ವಿನಯ್ ಸಹ ಆಕೆಯನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದ. ಮದುವೆಗೆ ಮೋಹನ್ ಕೃಷ್ಣ ಅಡ್ಡಿಯಾಗಬಹುದು ಎಂದು ಇಬ್ಬರೂ ಸಹ ಆತನ ಹತ್ಯೆಗೆ ಸಂಚು ರೂಪಿಸಿದ್ದರು. ಫೆಬ್ರವರಿ 18ರಂದು ರಾತ್ರಿ ಮೋಹನ್ ಕೃಷ್ಣ, ಬಿಂದು, ಆಕೆಯ ಹೊಸ ಪ್ರಿಯಕರ ವಿನಯ್ ಹಾಗೂ ಧನುಷ್‌ ಎಲ್ಲರೂ ಸೇರಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಮೋಹನ್ ಬಿಂದುವಿನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದ. ಆಗ ಅಲ್ಲೇ ಇದ್ದ ವಿನಯ್ ಕೋಪಗೊಂಡು ತನ್ನ ಬಳಿಯಿದ್ದ ಚಾಕುವಿನಿಂದ ಮೋಹನ್ ಕೃಷ್ಣನಿಗೆ ಮನಬಂದಂತೆ ಇರಿದಿದ್ದ. ಆತ ಜೋರಾಗಿ ಕಿರುಚಾಡಲು ಶುರು ಮಾಡಿದಾಗ ಮೂವರೂ ಸೇರಿ ಆತನ ಮುಖಕ್ಕೆ ಮತ್ತು ಮೂಗಿಗೆ ಸೆಲ್ಲೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಹತ್ಯೆಗೈದಿದ್ದರು. ಬಳಿಕ ಮನೆ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 2 Mar 2026 10:18 pm

ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ: ಸಂಸದ ಬ್ರಿಜೇಶ್ ಚೌಟ ಮಾಹಿತಿ

ಮಂಗಳೂರು, ಮಾ.2: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರೆತಿದೆ ಎಂದು ಸಂಸದ ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ. ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಈ ಭಾಗದ ಜನರ ಬಹುವರ್ಷಗಳ ಬೇಡಿಕೆಯಾಗಿದೆ. ಅದರಂತೆ ತಾನು ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ರೈಲ್ವೆ ಅಧಿಕಾರಿ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೆ. ಈ ಲೆವೆಲ್ ಕ್ರಾಸಿಂಗ್‌ನಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ರೈಲ್ವೆ ಅಧಿಕಾರಿಗಳು ಸಮನ್ವಯತೆಯಿಂದ ಪರಿಹಾರ-ಮಾರ್ಗೋಪಾಯಗಳ ಬಗ್ಗೆ ಸಮಗ್ರ ವರದಿಯನ್ನು ತಯಾರಿಸಬೇಕು ಎಂದು ನಿರ್ದೇಶಿಸಿದ್ದೆ. ಈ ವರದಿಯನ್ನು ರೈಲ್ವೆ ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವಂತೆ ಮನಪಾ ಅಧಿಕಾರಿಗಳಿಗೆ ಸೂಚಿಸಿದ್ದೆ. ಅಲ್ಲದೆ ದಕ್ಷಿಣ ರೈಲ್ವೆಯ ಜಿಎಂ ಹಾಗೂ ಪಾಲಕ್ಕಾಡ್ ವಿಭಾಗದ ಡಿಆರ್‌ಎಂ ಅವರೊಂದಿಗೆ ಚರ್ಚೆ ನಡೆಸಿದ್ದೆ. ಅದರಂತೆ ಇದೀಗ ದಕ್ಷಿಣ ರೈಲ್ವೆ ವ್ಯಾಪ್ತಿಗೆ ಸೇರಿರುವ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸುವುದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಈ ಲೆವೆಲ್ ಕ್ರಾಸಿಂಗ್ ರಸ್ತೆ ಅಗಲೀಕರಣಕ್ಕೆ ಸದ್ಯ ಅಂದಾಜು ಪಟ್ಟಿ ಸಿದ್ಧಪಡಿಸಲಾಗುತ್ತದೆ. ಈ ತಿಂಗಳ ಅಂತ್ಯದೊಳಗೆ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇಲ್ಲಿ ಮನಪಾ ವ್ಯಾಪ್ತಿಗೆ ಸಂಬಂಧಪಟ್ಟ ಚತುಷ್ಪಥ ರಸ್ತೆ ಇದ್ದು, ರೈಲ್ವೆ ವ್ಯಾಪ್ತಿಯ ರಸ್ತೆ ಮಾತ್ರ ದ್ವಿಪಥವಾಗಿದೆ. ಇದು ಅಗಲೀಕರಣಗೊಂಡರೆ ಲೆವೆಲ್ ಕ್ರಾಸಿಂಗ್ ರಸ್ತೆ ಕೂಡ ಚತುಷ್ಪಥ ರಸ್ತೆಯಾಗಿ ವಾಹನ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ. ಜತೆಗೆ ಸುರಕ್ಷತೆಗಾಗಿ ’ಡಬಲ್ ಬೂಮ್’ ಆಟೋಮ್ಯಾಟಿಕ್ ಗೇಟ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದರಿಂದ ಈ ರಸ್ತೆಯಲ್ಲಿ ಸುಗಮ ಸಂಚಾರದ ಜತೆಗೆ ಟ್ರಾಫಿಕ್ ದಟ್ಟನೆ ಸಮಸ್ಯೆಯೂ ಬಗೆಹರಿಯಲಿದೆ ಎಂದು ಸಂಸದರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Mar 2026 10:17 pm

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್‌ ದಾಳಿಗೆ ಪ್ರಧಾನಿ ಮೋದಿ ಖಂಡನೆ : ಸೌದಿ ಆರೇಬಿಯಾದ ಯುವರಾಜ, ಬಹರೈನ್ ದೊರೆ ಜೊತೆ ದೂರವಾಣಿಯಲ್ಲಿ ಮಾತುಕತೆ

ಹೊಸದಿಲ್ಲಿ,ಮಾ.2: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸೌದಿ ಆರೇಬಿಯದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಹಾಗೂ ಬಹರೈನ್ ಕಿಂಗ್ ಹಮಾದ್ ಬಿನ್ ಇಸಾ ಅಲ್ ಖಲೀಫಾ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್‌ನ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್, ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕನ್ ನೆಲೆಗಳನ್ನು ಗುರಿಯಿರಿಸಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮೋದಿ, ಅವರು ಸೌದಿ ಹಾಗೂ ಬಹರೈನ್‌ನ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ಸಮುದಾಯಕ್ಕೆ ಗಲ್ಫ್ ರಾಷ್ಟ್ರಗಳು ನೀಡಿರುವ ಸಹಕಾರಕ್ಕೆ ಪ್ರಧಾನಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ‘‘ಪಶ್ಚಿಮ ಏಶ್ಯದಲ್ಲಿ ರೂಪುಗೊಂಡಿರುವ ಸನ್ನಿವೇಶದ ಬಗ್ಗೆ ಯುವರಾಜ ಸಲ್ಮಾನ್ ಹಾಗೂ ಸೌದಿ ಆರೇಬಿಯದ ಪ್ರಧಾನಿ ಜೊತೆ ಚರ್ಚಿಸಿದ್ದೇನೆ. ಸೌದಿ ಆರೇಬಿಯದ ಮೇಲೆ ಇರಾನ್ ನಡೆಸಿದ ದಾಳಿಯು ಅದರ ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಯ ಉಲ್ಲಂಘನೆಯಾಗಿದೆ. ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಸಾಧ್ಯವಾದಷ್ಟು ಬೇಗನೆ ಮರುಸ್ಥಾಪನೆಯು ಅತಿ ಮುಖ್ಯವಾದುದೆಂಬುದನ್ನು ನಾವೆಲ್ಲಾ ಒಪ್ಪಿಕೊಂಡಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ಭಾರತೀಯ ಸಮುದಾಯದ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಿರುವುದಕ್ಕಾಗಿ ಸೌದಿ ಯುವರಾಜರಿಗೆ ಕೃತಜ್ಞತೆ ಸಲ್ಲಿಸಿದ್ದೇನೆ’’ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಬಹರೈನ್ ದೊರೆ ಹಮದ್ ಬಿನ್ ಇಸಾ ಅಲ್ ಖಲೀಫಾ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದು, ಬಹರೈನ್ ಮೇಲೆ ಇರಾನ್‌ನ ದಾಳಿಯನ್ನು ಖಂಡಿಸಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಆ ದೇಶದ ಜನತೆಯ ಜೊತೆ ಭಾರತದ ಏಕತೆಯನ್ನು ವ್ಯಕ್ತಪಡಿಸಿದ್ದಾರೆ. ಬಹರೈನ್‌ನಲ್ಲಿ ಭಾರತದ ಸಮುದಾಯಕ್ಕೆ ಸ್ಥಿರವಾದ ಬೆಂಬಲವನ್ನು ನೀಡಿರುವುದಕ್ಕಾಗಿ ಬಹರೈನ್ ದೊರೆಗೆ ಕೃತಜ್ಞತೆಯನ್ನು ಸಲ್ಲಿಸಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Mar 2026 10:11 pm

ಇರಾನಿನ 49 ನಾಯಕರ ಹತ್ಯೆ ಮಾಡಲಾಗಿದೆ; ‘ದಾಳಿ ಯ ದೊಡ್ಡ ಅಲೆ’ ಇನ್ನೂ ಬಾಕಿಯಿದೆ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾ. 2: ಇರಾನ್ ವಿರುದ್ಧ ಅಮೆರಿಕ ಮಾಡುತ್ತಿರುವ ಮಿಲಿಟರಿ ದಾಳಿಯ ಆರಂಭಿಕ ಹಂತದಲ್ಲೇ ಇರಾನಿನ 49 ನಾಯಕರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. ಇದೇ ವೇಳೆ, ಪ್ರಸ್ತುತ ನಡೆಯುತ್ತಿರುವ ದಾಳಿಗಳು ವಿಶಾಲ ಸೇನಾ ಅಭಿಯಾನದ ಮುನ್ನೋಟ ಮಾತ್ರವಾಗಿದ್ದು, ದೊಡ್ಡ ಅಲೆ ಇನ್ನೂ ಬಾಕಿಯಿದೆ ಎಂದು ಅವರು ಎಚ್ಚರಿಸಿದ್ದಾರೆ. ಸಿಎನ್‌ಎನ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, “ನಾವು ಅವರನ್ನು ಸಂಪೂರ್ಣ ಶಕ್ತಿಯಿಂದ ಹೊಡೆಯಲು ಇನ್ನೂ ಆರಂಭಿಸಿಲ್ಲ. ದೊಡ್ಡ ಅಲೆ ಇನ್ನೂ ಆಗಿಲ್ಲ. ಅದು ಶೀಘ್ರದಲ್ಲೇ ಬರಲಿದೆ,” ಎಂದು ಹೇಳಿದ್ದಾರೆ. ಈ ಮೂಲಕ ಇರಾನ್ ವಿರುದ್ಧದ ಕ್ರಮ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳುವ ಸೂಚನೆ ನೀಡಿದ್ದಾರೆ. ಸಂಘರ್ಷದ ಅವಧಿ ಕುರಿತು ಪ್ರತಿಕ್ರಿಯಿಸಿದ ಅವರು, “ಇದು ದೀರ್ಘಕಾಲ ಮುಂದುವರಿಯುವುದನ್ನು ನಾನು ಬಯಸುವುದಿಲ್ಲ. ಇದು ನಾಲ್ಕು ವಾರಗಳವರೆಗೆ ಸಾಗಬಹುದು ಎಂದು ನಾನು ಅಂದಾಜಿಸಿದ್ದೆ. ಈಗ ನಾವು ನಿಗದಿತ ಅವಧಿಗಿಂತ ಸ್ವಲ್ಪ ಮುಂದಿದ್ದೇವೆ,” ಎಂದು ತಿಳಿಸಿದ್ದಾರೆ. ಇರಾನ್ ನಡೆಸಿದ ಪ್ರತಿದಾಳಿಗಳನ್ನು ಉಲ್ಲೇಖಿಸಿದ ಟ್ರಂಪ್, ಬಹ್ರೇನ್, ಜೋರ್ಡಾನ್, ಕುವೈತ್, ಖತರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲೆ ನಡೆದ ದಾಳಿಯನ್ನು ಅಚ್ಚರಿ ಎಂದು ವಿವರಣೆ ನೀಡಿದ್ದಾರೆ. ಆರಂಭಿಕ ಹಂತದ ದಾಳಿಗಳಲ್ಲಿ ಇರಾನಿನ 49 ನಾಯಕರು ಹತ್ಯೆಯಾಗಿದೆ ಎಂಬ ಮಾಹಿತಿ ತನ್ನ ಬಳಿ ಇದೆ ಎಂದು ಟ್ರಂಪ್ ಹೇಳಿದ್ದಾರೆ.

ವಾರ್ತಾ ಭಾರತಿ 2 Mar 2026 10:04 pm

ಅಮೆರಿಕ-ಇಸ್ರೇಲ್ ಜಂಟಿ ದಾಳಿ: ಇರಾನ್‍ನಲ್ಲಿ ಮೃತರ ಸಂಖ್ಯೆ 555ಕ್ಕೆ ಏರಿಕೆ

ಟೆಹ್ರಾನ್, ಮಾ.2: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‍ನಾದ್ಯಂತ ಮೃತರ ಸಂಖ್ಯೆ 555ಕ್ಕೆ ಏರಿಕೆಯಾಗಿದೆ ಎಂದು ಇರಾನ್‍ನ ರೆಡ್ ಕ್ರೆಸೆಂಟ್ ಸೋಮವಾರ ವರದಿ ಮಾಡಿದೆ. `ನಮ್ಮ ರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ನಡೆಸಲಾದ ಝಿಯೋನಿಸ್ಟ್-ಅಮೆರಿಕನ್ ಭಯೋತ್ಪಾದಕ ದಾಳಿಗಳಲ್ಲಿ 131 ನಗರಗಳಲ್ಲಿ ವ್ಯಾಪಕ ನಾಶ-ನಷ್ಟ ಸಂಭವಿಸಿದೆ ಮತ್ತು ವಿಷಾದನೀಯವಾಗಿ 555 ಮಂದಿ ಕೊಲ್ಲಲ್ಪಟ್ಟಿದ್ದಾರೆ. ಕ್ಷಿಪ್ರವಾಗಿ ಹೆಚ್ಚುತ್ತಿರುವ ಪ್ರಾಣ ಹಾನಿಯ ಸಂಖ್ಯೆಯು ಘರ್ಷಣೆಯು ತ್ವರಿತವಾಗಿ ಪ್ರಾದೇಶಿಕ ಬಿಕ್ಕಟ್ಟಾಗಿ ಉಲ್ಬಣಗೊಂಡಿರುವುದನ್ನು ಸೂಚಿಸುತ್ತದೆ. ಗಾಯಾಳುಗಳ ಬಗ್ಗೆ ಇತ್ತೀಚಿನ ಮಾಹಿತಿ ಲಭಿಸಿಲ್ಲ. ರವಿವಾರದವರೆಗೆ 747 ಮಂದಿ ಗಾಯಗೊಂಡಿದ್ದರು' ಎಂದು ರೆಡ್‍ಕ್ರೆಸೆಂಟ್ ಸೋಮವಾರ ಹೇಳಿದೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನ್‍ನ ಗಾಂಧಿ ಆಸ್ಪತ್ರೆಗೆ ಹಾನಿ ರವಿವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಉತ್ತರ ಟೆಹ್ರಾನ್‍ನಲ್ಲಿರುವ ಗಾಂಧಿ ಆಸ್ಪತ್ರೆಗೆ ಹಾನಿಯಾಗಿರುವುದಾಗಿ ವರದಿಯಾಗಿದೆ. ಇನ್‍ಕ್ಯುಬೇಟರ್(ಅಕಾಲಿಕವಾಗಿ ಜನಿಸುವ ಶಿಶುಗಳನ್ನು ಬೆಚ್ಚಗಿನ ತಾಪಮಾನದಲ್ಲಿ ಇರಿಸುವ ಸಾಧನ)ನಲ್ಲಿದ್ದ ಮಗು ಹಾಗೂ ಇತರ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ವಸತಿ ಪ್ರದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ ಎಂದು ವರದಿ ಹೇಳಿದೆ.

ವಾರ್ತಾ ಭಾರತಿ 2 Mar 2026 10:01 pm

Bhadravathi | 1 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಇಒ

ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇಒ ಕಚೇರಿಯ ಅಧೀಕ್ಷಕರಾದ ಲಿಂಗರಾಜು ಎಂಬುವವರಿಗೆ 2011 ರಿಂದ 2023 ರವರೆಗೆ ವೇತನ ಭಡ್ತಿ ಮತ್ತು ಇತರೇ ಭತ್ಯೆಗಳ ಹಣ ಬಾಕಿ ಇತ್ತು. ಇದನ್ನು ಮಂಜೂರು ಮಾಡಲು ಹಲವು ಬಾರಿ ಬಿಇಒ ನಾಗೇಂದ್ರಪ್ಪ ಅವರನ್ನು ಕೋರಿದ್ದರು. ಬಿಇಒ ಅವರು ಮಧ್ಯವರ್ತಿ ಮಂಜುನಾಥ ಎಂಬವರ ಮೂಲಕ ಬಾಕಿ ಮಂಜೂರು ಮಾಡಲು 4 ಲಕ್ಷ ರೂಪಾಯಿ ಲಂಚ ಕೇಳಿದ್ದರು. ಈ ಬಗ್ಗೆ ಲಿಂಗರಾಜು ಅವರು ಲೋಕಾಯುಕ್ತ ಪೋಲೀಸರಿಗೆ ದೂರು ನೀಡಿದ್ದರು. ಸೋಮವಾರ ರಾತ್ರಿ 7 ಗಂಟೆ ವೇಳೆಗೆ ಬಿಇಒ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ವೀರಬಸಪ್ಪ ಮತ್ತವರ ಸಿಬ್ಬಂದಿ ಬಿಇಒ ಮತ್ತು ಮಧ್ಯವರ್ತಿಯನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ.

ವಾರ್ತಾ ಭಾರತಿ 2 Mar 2026 9:59 pm

ಒಮನ್‍ನಲ್ಲಿ ನಡೆದ ದಾಳಿ ಸರಕಾರದ ಆಯ್ಕೆಯಲ್ಲ: ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ

ಟೆಹ್ರಾನ್, ಮಾ.2: ತಮ್ಮ ದೇಶದ ಮಿಲಿಟರಿ ಘಟಕಗಳು ಈಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿವೆ ಮತ್ತು ಒಮಾನ್‍ನಲ್ಲಿ ನಡೆದ ದಾಳಿ ಇರಾನ್ ಸರಕಾರದ ಆಯ್ಕೆಯಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಪ್ರತಿಪಾದಿಸಿದ್ದಾರೆ. ಇರಾನ್-ಅಮೆರಿಕ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದ ಒಮಾನ್‍ನ ಬಂದರಿನ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯಿಂದ ತಮ್ಮ ಸರಕಾರ ಅಂತರ ಕಾಯ್ದುಕೊಂಡಿರುವ ಸುಳಿವು ನೀಡಿದ ಅರಾಘ್ಚಿ ` ಆಯ್ಕೆ ಮಾಡುವ ಗುರಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಈ ಹಿಂದೆಯೇ ಸಶಸ್ತ್ರ ಪಡೆಗಳಿಗೆ ಸೂಚಿಸಲಾಗಿದೆ. ನಮ್ಮ ಮಿಲಿಟರಿ ಘಟಕಗಳು ಈಗ ವಾಸ್ತವವಾಗಿ ಸ್ವತಂತ್ರ ಮತ್ತು ಸ್ವಲ್ಪಮಟ್ಟಿಗೆ ಪ್ರತ್ಯೇಕವಾಗಿವೆ ಮತ್ತು ಮುಂಚಿತವಾಗಿ ಅವರಿಗೆ ನೀಡಿದ ಸಾಮಾನ್ಯ ಸೂಚನೆಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ' ಎಂದು ಹೇಳಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 2 Mar 2026 9:58 pm

ನಮ್ಮ ಯುದ್ದವಿಮಾನಗಳನ್ನು ಕುವೈತ್‌ `ಪ್ರಮಾದವಶಾತ್' ಹೊಡೆದುರುಳಿಸಿವೆ: ಅಮೆರಿಕ

ವಾಷಿಂಗ್ಟನ್, ಮಾ.2: ಸೋಮವಾರ ಬೆಳಿಗ್ಗೆ ಕುವೈತ್‌ ನಲ್ಲಿ ಪತನಗೊಂಡ ಅಮೆರಿಕದ ಮೂರು ಎಫ್-15 ಯುದ್ದವಿಮಾನಗಳನ್ನು ಕುವೈತ್‌ ನ ವಾಯುರಕ್ಷಣಾ ವ್ಯವಸ್ಥೆ ಪ್ರಮಾದವಶಾತ್ ಹೊಡೆದುರುಳಿಸಿದೆ ಎಂದು ಅಮೆರಿಕದ ಮಿಲಿಟರಿ ಸೋಮವಾರ ಹೇಳಿದೆ. ಕುವೈತ್‌ ನ ನೆಲೆಗಳ ಮೇಲೆ ಇರಾನ್‍ನ ಪ್ರತಿದಾಳಿಯನ್ನು ಎದುರಿಸುವ ಸಂದರ್ಭದಲ್ಲಿ ಕುವೈತ್‌ ನ ವಾಯು ರಕ್ಷಣಾ ವ್ಯವಸ್ಥೆಯು ಅಮೆರಿಕದ ಮೂರು ಎಫ್-15 ಇ ಯುದ್ದವಿಮಾನಗಳನ್ನು ಶತ್ರುಗಳ ವಿಮಾನವೆಂದು ತಪ್ಪಾಗಿ ತಿಳಿದು ಹೊಡೆದುರುಳಿಸಿದೆ. ವಿಮಾನದಲ್ಲಿದ್ದ ಎಲ್ಲಾ 6 ಸಿಬ್ಬಂದಿಗಳೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ವಾರ್ತಾ ಭಾರತಿ 2 Mar 2026 9:56 pm

ಬಳ್ಳಾರಿ | ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಬಳ್ಳಾರಿ/ಕಂಪ್ಲಿ: ಪಟ್ಟಣದ ಬಿಎಸ್‌ವೈ ಗಾರ್ಡನ್‌ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಆಯೋಜಿಸಿದ್ದ ಸರ್ವಧರ್ಮೀಯ ಇಫ್ತಾರ್ ಕೂಟದ ಜಾಗೃತಿ ಸಭೆ ಭಾನುವಾರ ಸಂಜೆ ನಡೆಯಿತು. ಇಲಕಲ್‌ನ ನಿವೃತ್ತ ಶಿಕ್ಷಕ ಕಂದಗಲ್ ಲಾಲ್‌ಹುಸೇನ್ ಸಾಬ್ ಮಾತನಾಡಿ, ಇಸ್ಲಾಂ ಧರ್ಮದಲ್ಲಿ ರಮಝಾನ್‌ ಮಾಸವನ್ನು ಕಡ್ಡಾಯ ಉಪವಾಸದ ಪವಿತ್ರ ಅವಧಿಯಾಗಿ ಪಾಲಿಸಲಾಗುತ್ತದೆ. ಉಪವಾಸ ಆಚರಿಸುವವರೊಂದಿಗೆ ಆಹಾರ ಹಂಚಿಕೊಂಡರೂ ಉಪವಾಸದ ಪುಣ್ಯ ಲಭಿಸುತ್ತದೆ ಎಂದು ಹೇಳಿದರು. ಹಿರಿಯರು ಸಂಸ್ಕಾರವಂತರಾದರೆ ಮಕ್ಕಳು ಸಹ ಅದನ್ನೇ ಅನುಸರಿಸುತ್ತಾರೆ. ಪಂಚೇಂದ್ರಿಯಗಳನ್ನು ನಿಯಂತ್ರಿಸುವುದೇ ರಮಝಾನ್‌ ಆಚರಣೆಯ ಮೂಲ ಉದ್ದೇಶವಾಗಿದೆ. ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ, ಮೋಸ ಹಾಗೂ ದುರಾಸೆಗಳಿಗೆ ದೇವಭಯದ ಕೊರತೆಯೇ ಕಾರಣವಾಗಿದೆ. ಮಾನವೀಯತೆ ಬೆಳಗಲು ದೇವಭಯ ಅಗತ್ಯವಿದೆ ಎಂದು ಅವರು ತಿಳಿಸಿದರು. ಕುರಾನ್ ಕೇವಲ ಮುಸ್ಲಿಮರ ಧರ್ಮಗ್ರಂಥವಲ್ಲ. ಸಮಸ್ತ ಮನುಕುಲದ ಉದ್ಧಾರಕ್ಕಾಗಿ ನೀಡಿರುವ ಮಾರ್ಗದರ್ಶಕ ಗ್ರಂಥವಾಗಿದೆ. ಮನುಷ್ಯ ಮನುಷ್ಯತ್ವವನ್ನು ಮರೆತ ಪರಿಣಾಮ ಅನಾಚಾರಗಳು ನಡೆಯುತ್ತಿವೆ. ಪ್ರತಿಯೊಂದು ಪಾಪ–ಪುಣ್ಯಕ್ಕೂ ಲೆಕ್ಕವಿದ್ದು ಅಂತಿಮವಾಗಿ ದೇವನಿಗೆ ಉತ್ತರಿಸಬೇಕಾಗುತ್ತದೆ ಎಂದು ಲಾಲ್‌ಹುಸೇನ್ ಸಾಬ್ ಹೇಳಿದರು. ಸೈಯದ್ ಷಾಹ್ ಅಬ್ದುಲ್ ವಾಹೀದ್ ಖಾದ್ರಿ ಸಾಹೇಬ್, ಸೈಯದ್ ಷಾಹ್ ಕರಿಮುಲ್ಲಾಖಾದ್ರಿ, ಎಚ್.ವೀರಾಪುರದ ಜ್ಞಾನಜ್ಯೋತಿ ಶಿವಮಂದಿರದ ಜಡೇಶತಾತ ಸಾನ್ನಿಧ್ಯವಹಿಸಿದ್ದರು. ಜಮಾಅತೆ ಇಸ್ಲಾಮೀ ಹಿಂದ್ ಸಂಚಾಲಕ ವಾಸೀಮ್ ಫಯಾಝ್‌ ಅಧ್ಯಕ್ಷತೆ ವಹಿಸಿದ್ದರು. ಜಮಾಅತೆ ಜಿಲ್ಲಾ ಸಂಚಾಲಕ ಡಾ.ಸೈಯದ್ ಜೈನುಲ್ಲಾ ಅಬುದಿನ್‌ಖಾದ್ರಿ, ಜಿಲ್ಲಾ ಉಪಾಧ್ಯಕ್ಷೆ ನೂರ್‌ಜಹಾ ಸಾಹೀಬಾ, ವಲಯ ಅಧ್ಯಕ್ಷ ಅನ್ವರ್‌ಬಾಷ ಉಮ್ರಿ, ಪ್ರಮುಖರಾದ ಎನ್.ಹಬೀಬ್ ರೆಹಮಾನ್, ಕೆ.ಎಸ್.ಚಾಂದ್‌ಭಾಷ, ನೌಷಾದ್‌ಅಹ್ಮದ್ ಹಾಫೀಜ್, ಅತಾವುಲ್ಲಾ ರೆಹಮಾನ್, ಕೆ.ಮಸ್ತಾನ್, ಎಸ್.ಕೆ.ಇಂತಿಯಾಜ್, ಅಹ್ಮದ್, ಖಲಂದರ್, ಸಾಧಿಕ್, ಪಾಸ್ಟರ್ ಪಾಲ್‌ಪಂಪಾಪತಿ, ಜೈನ್‌ಧರ್ಮದ ಪ್ರಮುಖರಾದ ಶಾಂತಿಲಾಲ್ ಸಿಂಘ್ವಿ, ಶಾಂತಿಲಾಲ್ ಬಾಲಾರ್, ಹಿಂದೂ ಪ್ರಮುಖರಾದ ಪಿ.ನಾಗೇಶ್ವರರಾವ್, ಷಣ್ಮುಖಪ್ಪ ಚಿತ್ರಗಾರ, ಕೆ.ಎಂ.ಹೇಮಯ್ಯಸ್ವಾಮಿ, ನೀರಗಂಟಿ ವೀರೇಶ್, ಎಲ್.ರಾಘವೇಂದ್ರ ಇತರರಿದ್ದರು.  

ವಾರ್ತಾ ಭಾರತಿ 2 Mar 2026 9:54 pm

ಪಿಲಿಕುಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಲನಿರ್ಂಗ್ ಲಿಂಕ್ಸ್ ಫೌಂಡೇಶನ್‌ನ ಸಹಯೋಗದಲ್ಲಿ ’ರಾಷ್ಟ್ರೀಯ ವಿಜ್ಞ್ಞಾನ ದಿನಾಚರಣೆ’ಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಉಪಸಮಿತಿಯ ಅಧ್ಯಕ್ಷ ಪ್ರೊ.ಜಿ.ಶ್ರೀನಿಕೇತನ್ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ವಿಜ್ಞ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಅನೇಕ ನೀತಿಗಳು ಹಾಗೂ ನವೀನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಸಾಧನೆಗೆ ಪೂರಕವಾದ ಸಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಮಕ್ಕಳು ಪ್ರಶ್ನಿಸುವ ಹಾಗೂ ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿಜ್ಞ್ಞಾನ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಸಾಧನೆಗಳತ್ತ ಮುಂದಾಗಬೇಕು ಎಂದು ಕರೆ ನೀಡಿದರು. ಡಯಟ್ ಉಪನ್ಯಾಸಕರ ಶ್ರೀನಿವಾಸ ಅಡಿಗ ಮಾತನಾಡಿ ಕಲಿಕೆ ಕೇವಲ ತರಗತಿಗೆ ಸೀಮಿತವಾಗಬಾರದು. ಜ್ಞಾನ, ಸೃಜನಾಶೀಲತೆ, ಕ್ರೀಯಾತತ್ಪರತೆ, ಸಂಶೋಧನಾ ಭಾವನೆಗಳು ಒಟ್ಟು ಸೇರಿದಾಗ ಮಾತ್ರ ವಿದ್ಯಾರ್ಥಿಗಳ ಸಾಮಾಜಿಕ, ಭೌತಿಕ, ಶೈಕ್ಷಣಿಕ ಬೆಳವಣಿಗೆಗಳು ಆಗಲು ಸಾಧ್ಯ. ಹೊಸ ಹೊಸ ವಿಚಾರಗಳನ್ನು ತಿಳಿಯಬೇಕಾದರೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿಜ್ಞ್ಞಾನ ಸಂವಹನಕಾರ ನಂದಿತಾ ಜಯರಾಜ್ ಮಾತನಾಡಿದರು. ಕೇಂದ್ರದ ನಿರ್ದೇಶಕ ಡಾ. ಅಶೋಕ್ ಕೆ.ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರೋಪ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್ ಭಾಗವಹಿಸಿ ಮಾತನಾಡಿದರು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಲನಿರ್ಂಗ್ ಲಿಂಕ್ಸ್ ಫೌಂಡೇಶನ್‌ನ ಚೀಫ್ ಮ್ಯಾನೇಜರ್ ಮಂಜುನಾಥ್ ಹಾಗೂ ಶ್ರೀಕಾಂತ್ ಉಪಸ್ಥಿತರಿದ್ದರು. ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಸ್ವಾಗತಿಸಿದರು. ಕೇಂದ್ರದ ಕ್ಯುರೇಟರ್ ಜಗನ್ನಾಥ್ ಕಾರ್ಯಕ್ರಮ ನಿರೂಪಿಸಿದರು. ಶೈಕ್ಷಣಿಕ ಸಹಾಯಕಿ ರಶ್ಮಿ ಕೆ.ಎಂ. ವಂದಿಸಿದರು.

ವಾರ್ತಾ ಭಾರತಿ 2 Mar 2026 9:48 pm

Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ಕಲಬುರಗಿ: 2024-25 ಹಾಗೂ 2025-26 ಸಾಲಿನ ಬಾಕಿ ಇರುವ ಎಲ್ಲಾ ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ರೈತ ಮುಖಂಡರು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರೈತರಿಗೆ ಆಗಿರುವ ಹಾನಿಗೆ ತಕ್ಕಂತೆ ವಿಮೆಯನ್ನು ಬಿಡುಗಡೆಗೊಳಿಸುವಂತೆ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಮೊತ್ತವನ್ನು ಕೂಡಲೇ ಜಮಾ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು, ಸರ್ಕಾರವೇ ನೇರವಾಗಿ ವಿಮೆಯನ್ನು ನೋಡಿಕೊಳ್ಳಬೇಕು ಹಾಗೂ ಸಮರ್ಪಕವಾಗಿ ವಿಮೆ ಹಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ರೈತರನ್ನು ಮೋಸ ಮಾಡುತ್ತಿರುವ ಕಂಪನಿಗಳ ಮೇಲೆ ಸರ್ಕಾರವು ಕಠಿಣ ಕಾನೂನು ಕ್ರಮವನ್ನು ಜರುಗಿಸಿ ಅಂತಹ ಕಂಪನಿಗಳ ಲೈಸೆನ್ಸ್‌ ಅನ್ನು ರದ್ದುಗೊಳಿಸಬೇಕು, ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಸಮಗ್ರ ಸಾಲಮನ್ನಾ ಘೋಷಿಸಬೇಕು ಎಂದು ಒತ್ತಾಯಿಸಿದರು. ಕನಿಷ್ಠ ಬೆಂಬಲ ಬೆಲೆ (MSP) ಕಡ್ಡಾಯ ಜಾರಿಗೊಳಿಸಿ, ನೇರ ಖರೀದಿ ಕೇಂದ್ರಗಳನ್ನು ಹೆಚ್ಚಿಸಬೇಕು. ತೊಗರಿಗೆ ಘೋಷಿತ MSP ದರದಲ್ಲಿ ಖರೀದಿಸಬೇಕು ಎಂದು ಸರಕಾರಕ್ಕೆ ಒತ್ತಡ ಹೇರಲಾಯಿತು. ರೈತ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ್ ಮಾಡ್ಯಾಳ್, ಮಹೇಶ್ ಎಸ್. ಬಿ, ಮೌಲಾ ಮುಲ್ಲಾ, ರಮೇಶ ರಾಗಿ, ಉಮಾಪತಿ ಮಾಲೀಪಾಟೀಲ್, ಅರ್ಜುನ್ ಗೊಬ್ಬರ್ ಸೇರಿದಂತೆ ಹಲವರು ಇದ್ದರು.

ವಾರ್ತಾ ಭಾರತಿ 2 Mar 2026 9:48 pm

ಆರ್.ಟಿ.ಇ ದಾಖಲಾತಿ: ಹೆಲ್ಪ್ ಡೆಸ್ಕ್ ಸ್ಥಾಪನೆ

ಉಡುಪಿ, ಮಾ.2: ಶಾಲಾ ಶಿಕ್ಷಣ ಇಲಾಖೆ ವತಿುಂದ 2026-27ನೇ ಸಾಲಿನ ಆರ್.ಟಿ.ಇ ದಾಖಲಾತಿಗೆ ಸಂಬಂಧಿ ಸಿದಂತೆ ಆರ್.ಟಿ.ಇ ಹೆಲ್ಪ್ ಡೆಸ್ಕ್ ಅನ್ನು ರಚಿಸಲಾಗಿದ್ದು, ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಈ ಕೆಳಗಿನವರನ್ನು ಸಂಪರ್ಕಿಸಬಹುದಾಗಿದೆ. ನೋಡೆಲ್ ಅಧಿಕಾರಿ ಜ್ಯೋತಿ ಬಿ (ಮೊ.ನಂ: 7259359707), ವಿಷಯ ನಿರ್ವಾಹಕಿ ಸ್ವಾತಿ ಎಸ್ (ಮೊ.ನಂ: 7353552827), ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡೆಲ್ ಅಧಿಕಾರಿ ಅಶ್ವಿನಿ (ಮೊ.ನಂ: 9743280418), ವಿಷಯ ನಿರ್ವಾಹಕಿ ಸ್ವಾತಿ ಸಾಗರ್ (ಮೊ.ನಂ: 8310670380). ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ನೋಡೆಲ್ ಅಧಿಕಾರಿ ಪ್ರಮೀಳ ಕುಮಾರಿ (ಮೊ.ನಂ: 9164225346), ವಿಷಯ ನಿರ್ವಾಹಕ ರಾಘವೇಂದ್ರ ಪಡಿಯಾರ್ (ಮೊ.ನಂ: 9448428348), ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡೆಲ್ ಅಧಿಕಾರಿ ನಾರಾಯಣ ಮರಾಠಿ (ಮೊ.ನಂ: 9900519333), ವಿಷಯ ನಿರ್ವಾಹಕ ಸುರೇಶ್ ಬಾಯರಿ (ಮೊ.ನಂ: 8861034028). ಕಾರ್ಕಳ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡೆಲ್ ಅಧಿಕಾರಿ ರವಿಕುಮಾರ್ (ಮೊ.ನಂ: 9481502159), ವಿಷಯ ನಿರ್ವಾಹಕ ಕಾರ್ತಿಕೇಶ್ (ಮೊ.ನಂ: 9945676922) ಹಾಗೂ ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡೆಲ್ ಅಧಿಕಾರಿ ರಾಜೇಶ್ ಕುಮಾರ್ (ಮೊ.ನಂ: 6361257728), ವಿಷಯ ನಿರ್ವಾಹಕ ಉದಯ್ ಡಿ ಆರ್ (ಮೊ.ನಂ: 9739353416) ಇವರನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 2 Mar 2026 9:44 pm

ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು: ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಉಡುಪಿ, ಮಾ.2: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನ ಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು ನೀಡಿದೆ. ವೈಮಾನಿಕ ನಿರ್ಬಂಧ ಮತ್ತು ಕೊಲ್ಲಿ ಪ್ರದೇಶದ ಪ್ರಚಲಿತ ಸ್ಥಿತಿಗತಿಯಂದ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿಕೊಳ್ಳುವಂತಾಗಿದೆ. ಜಿಲ್ಲಾಡಳಿತದ ಕ್ರಮಗಳು: ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದ್ದು, ಮಾಹಿತಿಗಳನ್ನು ಹಂಚಿಕೊಳ್ಳಲಿದೆ. ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ:0820-2574802 (1077-ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ. ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿ ರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ ಸಾರಥಿ ಸಹಾಯತಾ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ವೀಸಾಗೆ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 2 Mar 2026 9:42 pm

ಉತ್ತರ ಪ್ರದೇಶ | ಫ್ರೀಝರ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಲಕ್ನೊ, ಮಾ. 2: ಇಲ್ಲಿನ ಬಕ್ಷಿ ಕಾ ತಲಾಬ್ (ಬಿಕೆಟಿ) ಪ್ರದೇಶದಲ್ಲಿರುವ ವೆಜ್ ಬಿರಿಯಾನಿ ಅಂಗಡಿಯ ಫ್ರೀಝರ್‌ನಲ್ಲಿ 35 ವರ್ಷದ ವ್ಯಕ್ತಿಯೋರ್ವರ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಪುರ ಮಾಜ್ರಾದ ನಿವಾಸಿ. ವೆಜ್ ಬಿರಿಯಾನಿ ಅಂಗಡಿ ಮಾಲಕನ ತಂದೆ ನಿಧನರಾಗಿದ್ದುದರಿಂದ ಅಂಗಡಿ ಮೂರ್ನಾಲ್ಕು ದಿನಗಳು ಮುಚ್ಚಿತ್ತು. ಅಂಗಡಿ ಮಾಲಕ ಆಗಮಿಸಿ ಅಂಗಡಿಯನ್ನು ತೆರೆದು ವ್ಯವಹಾರ ಆರಂಭಿಸಿದ ಸಂದರ್ಭ ಪ್ರೀಝರ್‌ನಲ್ಲಿ ಮೃತದೇಹ ಕಂಡು ಬಂದಿದೆ. ‘‘ಈ ತಾತ್ಕಾಲಿಕ ಅಂಗಡಿಗೆ ಗೇಟ್ ಇರಲಿಲ್ಲ. ಫ್ರೀಝರ್‌ನ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು. ಆದರೆ, ಅದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಅವರನ್ನು ವಿಜಯ್ ಪಾಲ್ ಎಂದು ಗುರುತಿಸಲಾಗಿದೆ. ಅವರ ಮೃತದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ. ನಾವು ಅವರ ಕುಟುಂಬದ ಸದಸ್ಯರನ್ನು ಸಂಪರ್ಕಿಸಿದ್ದೇವೆ. ಅವರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ’’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ವಿಜಯ್ ಪಾಲ್ ಒಬ್ಬನೇ ವಾಸಿಸುತ್ತಿದ್ದರು. ಅವರ ಗುರುತನ್ನು ಮೊಬೈಲ್ ಫೋನ್ ಹಾಗೂ ಆಧಾರ್ ಕಾರ್ಡ್ ಮೂಲಕ ಗುರುತಿಸಲಾಯಿತು ಎಂದು ಅವರು ಹೇಳಿದ್ದಾರೆ. ವಿಜಯ್ ಪಾಲ್ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಐದು ವರ್ಷಗಳ ಹಿಂದೆ ತನ್ನ ಪತ್ನಿಯಿಂದ ಪ್ರತ್ಯೇಕವಾದ ಬಳಿಕ ಆತ ಏಕಾಂಗಿಯಾಗಿ ವಾಸಿಸುತ್ತಿದ್ದ. ಆತ ಮದ್ಯವ್ಯಸನಿಯಾಗಿದ್ದ ಎಂದು ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಪಾಲ್‌ನ ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ವಾರ್ತಾ ಭಾರತಿ 2 Mar 2026 9:41 pm

ಮಧ್ಯಪ್ರಾಚ್ಯ ಉದ್ವಿಗ್ನತೆ: ಬೀದರ್ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಬೀದರ್: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆ ಬೀದರ್ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಾಯಕ್ಕಾಗಿ ಬೀದರ್ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ದೂರವಾಣಿ ಸಂಖ್ಯೆ 08482-225409ಕ್ಕೆ ಕರೆ ಮಾಡಬಹುದು. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ 080-22340676, 080-22253707 ಹಾಗೂ ಟೋಲ್ ಫ್ರೀ ಸಂಖ್ಯೆ 1070ಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾ.2, 2026ರವರೆಗೆ ಮುಚ್ಚಲಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದ ಅನೇಕ ಪ್ರಯಾಣಿಕರು ದುಬೈ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳು 24x7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳ ಸೂಚನೆಗಳನ್ನು ಜಿಲ್ಲಾಡಳಿತ ನಿರಂತರವಾಗಿ ಗಮನಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಇರುವ ಕರ್ನಾಟಕದ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಸಂಬಂಧಿತ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘Sarthi Sahayata’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್‌ಆರ್‌ಆರ್‌ಒ (FRRO) ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 2 Mar 2026 9:39 pm

Bidar | ಕಳಪೆ ಮಟ್ಟದ ಕಾಮಗಾರಿ ಆರೋಪ : ಗುತ್ತಿಗೆದಾರನ ವಿರುದ್ಧ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ಅಸಮಾಧಾನ

ಬೀದರ್ : ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗುತ್ತಿಗೆದಾರ ಗೋಳಯ್ಯ ಹಿರೇಮಠ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿಟಗುಪ್ಪ ತಾಲೂಕಿನ ಹಿಪ್ಪರಗಾ ಕ್ರಾಸ್ ಬಳಿ ಸೋಮವಾರ ನಡೆದ ವಸತಿ ಶಾಲೆಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರ ಸಮ್ಮುಖದಲ್ಲೇ ಗುತ್ತಿಗೆದಾರರ ವಿರುದ್ಧ ಆರೋಪ ಮಾಡಿದ ಅವರು, ತಮ್ಮ ಕ್ಷೇತ್ರದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳು ಕಳಪೆ ಮಟ್ಟದಲ್ಲಿ ನಡೆದಿವೆ ಎಂದು ದೂರಿದರು. ಘಾಟಬೋರಾಳ್ ಹಾಗೂ ದುಬಲಗುಂಡಿ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿಗಳನ್ನು ಸರಿಯಾಗಿ ಮಾಡಿಲ್ಲ. ಸುಮಾರು ಶೇ.90 ರಷ್ಟು ಹಣ ಎತ್ತಿಕೊಂಡಿದ್ದರೂ ಶೇ.50 ರಷ್ಟು ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಪರಿಶೀಲನೆ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. “ನಾನು ಗುತ್ತಿಗೆದಾರರ ವಿರೋಧಿಯಲ್ಲ. ಆದರೆ ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಕಾಮಗಾರಿಗಳು ಗುಣಮಟ್ಟದಿಂದಿರಬೇಕು. 5-6 ಕೋಟಿ ರೂ. ಕಾಮಗಾರಿ ಸರಿಯಾಗಿ ಮಾಡದವರು 16-17 ಕೋಟಿ ರೂ. ಕಾಮಗಾರಿ ಹೇಗೆ ಸಮರ್ಪಕವಾಗಿ ಮಾಡುತ್ತಾರೆ?” ಎಂದು ಪ್ರಶ್ನಿಸಿದರು. ಜಿಲ್ಲಾಧಿಕಾರಿಗಳು ಜೆಜೆಎಂ ಕಾಮಗಾರಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಬೇಕು. ಸಚಿವರಿಗೆ ಸಮಯವಿದ್ದರೆ ಕಾರ್ಯಕ್ರಮದ ಬಳಿಕ ಸಂಬಂಧಿಸಿದ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಬೇಕು ಎಂದು ಅವರು ಮನವಿ ಮಾಡಿದರು.

ವಾರ್ತಾ ಭಾರತಿ 2 Mar 2026 9:36 pm

ಯುಎಇಯಲ್ಲಿ ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ; ಏರುತ್ತಲೇ ಇದೆ ತರಕಾರಿ - ಹಣ್ಣು ಹಂಪಲುಗಳ ಬೆಲೆ

ಸಂಘರ್ಷ ಮುಂದುವರಿದರೆ ಇನ್ನಷ್ಟು ಏರಿಕೆ ಸಾಧ್ಯತೆ

ವಾರ್ತಾ ಭಾರತಿ 2 Mar 2026 9:36 pm

ಜಾಗತಿಕ ಅನಿಶ್ಚಿತತೆಯ ನಡುವೆ ಪರಮಾಣು ಸಿಡಿತಲೆಗಳ ಹೆಚ್ಚಳಕ್ಕೆ ಫ್ರಾನ್ಸ್ ನಿರ್ಧಾರ: ವರದಿ

ದಶಕಗಳ ಬಳಿಕ ಶಸ್ತ್ರಾಗಾರ ವಿಸ್ತರಣೆ; ಮಿತ್ರ ರಾಷ್ಟ್ರಗಳ ಭದ್ರತೆಗೆ ಬಲ ನೀಡುವ ಸಂದೇಶ

ವಾರ್ತಾ ಭಾರತಿ 2 Mar 2026 9:31 pm

ಪೊಲೀಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಶಾಸಕರನ್ನೇ ಬಂಧನ ಮಾಡಿದ್ದಾರೆ : ಶಾಸಕ ಸಿದ್ದು ಪಾಟೀಲ್

ಹುಮನಾಬಾದ್: ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡದೇ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದರೂ, ಪೊಲೀಸ್ ಅಧಿಕಾರಿಗಳ ದುರ್ಬಳಕೆ ಮೂಲಕ ಶಾಸಕರನ್ನೇ ಬಂಧಿಸಲಾಗಿದೆ ಎಂದು ಶಾಸಕ ಸಿದ್ದು ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಸೋಮವಾರ ನಡೆದ ಕಿತ್ತೂರು ರಾಣಿ ವಸತಿ ಶಾಲೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಸಂದರ್ಭದಲ್ಲಿ ತಮ್ಮನ್ನು ಬಂಧಿಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರವಿವಾರವೇ ಸಚಿವರೊಂದಿಗೆ ಮಾತನಾಡಿ ತಾಳಮಡಗಿ ಗ್ರಾಮದ ಹತ್ತಿರ ಶಾಲೆಯ ಉದ್ಘಾಟನೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸೋಣ ಎಂದು ಸೂಚಿಸಿದ್ದೆ. ಆದರೆ ಅದಕ್ಕೆ ಅವರು ಒಪ್ಪಲಿಲ್ಲ ಎಂದು ತಿಳಿಸಿದರು. ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಸರಿಯಲ್ಲ. ಯಾವ ಸರ್ಕಾರವೂ ಶಾಶ್ವತವಲ್ಲ. ನಾನು ಶಾಸಕನಾಗಿದ್ದರೂ ಶಾಶ್ವತನಲ್ಲ. ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ನಡೆಸಬೇಕು ಎಂದು ಪತ್ರ ಬರೆದಿದ್ದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಶಂಕುಸ್ಥಾಪನೆ ತಾವು ಮಾಡಿದ ನಂತರ ಮತ್ತೆ ಸಚಿವರು ಭೂಮಿಪೂಜೆ ನಡೆಸುವುದು ಎಷ್ಟರ ಮಟ್ಟಿಗೆ ಸರಿಯೆಂದು ಪ್ರಶ್ನಿಸಿದ ಅವರು, ಅಧಿಕಾರಿಗಳ ತಪ್ಪಿನಿಂದ ವಿಷಯ ಮಿಸ್‌ಗೈಡ್ ಆಗಿದೆ. ಈ ಕುರಿತು ಸದನದಲ್ಲೂ ಧ್ವನಿ ಎತ್ತುತ್ತೇನೆ. ಪ್ರಿವಿಲೇಜ್ ಸಮಿತಿಗೆ ದೂರು ನೀಡುವುದಾಗಿ ಎಚ್ಚರಿಸಿದರು. ಪೊಲೀಸ್ ಅಧಿಕಾರಿಗಳ ದುರ್ಬಳಕೆ ಮಾಡಿ ಶಾಸಕರನ್ನೇ ಬಂಧಿಸಿರುವುದು ಹಾಗೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸುತ್ತೇವೆ ಎಂದು ಅವರು ಗುಡುಗಿದರು.

ವಾರ್ತಾ ಭಾರತಿ 2 Mar 2026 9:29 pm

ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೂಡುಬಿದಿರೆ: ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯಾರ್ಥಿಯೂ ಉತ್ತಮ ವಿಜ್ಞಾನಿಯಾಗಬಹುದು ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಪರಿಷತ್ತಿನ ಬೆಂಗಳೂರಿನ ಶಾಖೆಯ ಗೌರವ ಕಾರ್ಯದರ್ಶಿ ಡಾ. ಎಸ್ . ಅನಂತ ಪದ್ಮನಾಭ ಭಟ್ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳು ಕುವೆಂಪು ಸಭಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಿಜವಾದ ರಾಷ್ಟ್ರೀಯತೆ ಕೇವಲ ಮಾತುಗಳಲ್ಲಿ ವ್ಯಕ್ತವಾಗುವುದಲ್ಲ, ಅದು ಸಂಶೋಧನೆ ಮತ್ತು ಆವಿಷ್ಕಾರಗಳ ಮೂಲಕ ರೂಪುಗೊಳ್ಳಬೇಕು. ದೇಶದ ಭವಿಷ್ಯವು ವಿಜ್ಞಾನದ ಬೆಳವಣಿಗೆಯನ್ನು ಅವಲಂಬಿಸಿದೆ. ಜ್ಞಾನವನ್ನು ಎಷ್ಟು ಆಳವಾಗಿ ಅನ್ವೇಷಿಸುತ್ತೇವೋ ಅಷ್ಟೇ ಹೊಸ ಸಾಧನೆಗಳು ಮತ್ತು ಅನ್ವೇಷಣೆಗಳು ಹೊರಹೊಮ್ಮುತ್ತವೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ವಿಜ್ಞಾನವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಿರದೆ ಜನಜೀವನದಲ್ಲಿ ಅನ್ವಯವಾಗಬೇಕು. ಶಿಕ್ಷಣವು ವೈಜ್ಞಾನಿಕ ಮನೋಭಾವ, ವಿಚಾರಶೀಲತೆ ಹಾಗೂ ಪ್ರಶ್ನಿಸುವ ಧೈರ್ಯವನ್ನು ಬೆಳೆಸುವಂತಿರಬೇಕು ಎಂದರು. ಈ ಸಂದರ್ಭದಲ್ಲಿ ಸ್ನಾತಕೋತ್ತರ ವಿಜ್ಞಾನ ವಿಭಾಗಗಳಿಂದ ಆಯೋಜಿಸಲ್ಪಟ್ಟ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಕೇಶ್, ವಿವಿಧ ವಿಭಾಗಗಳ ಉಪನ್ಯಾಸಕರು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿಎಸ್ಸಿಯ ಶ್ರಾವ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಿನೆಟ್ ವಾಸ್ ಅತಿಥಿಯನ್ನು ಪರಿಚಯಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ವಸುಧಾ ಭಟ್ ಸ್ವಾಗತಿಸಿ, ಜೈವಿಕ ತಂತ್ರಜ್ಞಾನ ವಿಭಾಗದ ಉಪನ್ಯಾಸಕ ಯೋಗೇಂದ್ರ ಎನ್. ವಂದಿಸಿದರು.

ವಾರ್ತಾ ಭಾರತಿ 2 Mar 2026 9:29 pm

ಟಿ-20 ವಿಶ್ವಕಪ್‌ | ಸೋಲಿನ ಹೊಣೆ ತಾನೆೇ ಹೊತ್ತುಕೊಂಡ ವಿಂಡೀಸ್ ನಾಯಕ ಹೋಪ್

ಕೋಲ್ಕತಾ, ಮಾ.2: ಟಿ-20 ವಿಶ್ವಕಪ್‌ನ ಸೂಪರ್-8ರ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಸೋತ ವೆಸ್ಟ್‌ಇಂಡೀಸ್ ತಂಡವು ಟೂರ್ನಿಯಿಂದ ನಿರ್ಗಮಿಸಿದೆ. ಸೋಲಿನ ಕುರಿತು ಪ್ರತಿಕ್ರಿಯಿಸಿದ ವಿಂಡೀಸ್ ನಾಯಕ ಶಾಯ್ ಹೋಪ್, ಸೋಲಿನ ಹೊಣೆಯನ್ನು ತಾನೇ ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದಾಗ ಬೃಹತ್ ಗುರಿ ನೀಡುವ ಜವಾಬ್ದಾರಿ ಇತ್ತು. ಅದರಂತೆ ವಿಂಡೀಸ್ ಬ್ಯಾಟರ್‌ಗಳು ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಆದರೆ ನಾಯಕ ಹೋಪ್ ಮಾತ್ರ ನಿಧಾನಗತಿಯ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಅಗ್ರ ಕ್ರಮಾಂಕದಲ್ಲಿ ನಾನು ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದು ಸೋಲಿಗೆ ಕಾರಣ ಎಂದಿದ್ದಾರೆ. ವಿಂಡೀಸ್ ಪರ ಇನಿಂಗ್ಸ್ ಆರಂಭಿಸಿದ ಶಾಯ್ ಹೋಪ್ 33 ಎಸೆತಗಳಲ್ಲಿ 33 ರನ್ ಗಳಿಸಿದ್ದರು. ಇದರಲ್ಲಿ 17 ಡಾಟ್‌ಬಾಲ್‌ಗಳಿದ್ದವು. ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ವಿಂಡೀಸ್ ತಂಡವು ಅಂತಿಮ ಗುರಿಯಲ್ಲಿ ಕನಿಷ್ಠ 20 ರನ್ ಕೊರತೆ ಅನುಭವಿಸುವಂತಾಯಿತು. ‘‘ಹೌದು ಸೋಲಿನ ಹೊಣೆಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಅಗ್ರ ಕ್ರಮಾಂಕದಲ್ಲಿ ನಾನು ವೇಗವಾಗಿ ಬ್ಯಾಟಿಂಗ್ ಮಾಡಬೇಕಿತ್ತು. ಇನ್ನೂ 20 ರನ್ ಹೆಚ್ಚು ಗಳಿಸಿದ್ದರೆ ಗೆಲುವು ಸಾಧಿಸಬಹುದಿತ್ತು’’ ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡರು.

ವಾರ್ತಾ ಭಾರತಿ 2 Mar 2026 9:29 pm

ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ: ಡಾ. ಗ್ರೀಷ್ಮ ವಿವೇಕ್ ಆಳ್ವ

ಮೂಡುಬಿದಿರೆ: ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ. ಮನಸ್ಸಿಗೆ ಶಾಂತಿ, ಸಮಾಜಕ್ಕೆ ಏಕತೆ ಮತ್ತು ಸಂಸ್ಕೃತಿಗೆ ಶ್ರೀಮಂತಿಕೆ ನೀಡುವ ಪರಂಪರೆ ಎಂದು ಆಳ್ವಾಸ್ ಮಹಿಳಾ ಘಟಕ ‘ಸಕ್ಷಮ’ದ ಸಂಚಾಲಕಿ ಹಾಗೂ ಆಳ್ವಾ ಫಾರ್ಮಸಿಯ ನಿರ್ದೇಶಕಿ ಡಾ. ಗ್ರೀಷ್ಮ ವಿವೇಕ್ ಆಳ್ವ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ಘಟಕ ‘ಸಕ್ಷಮ’ ವತಿಯಿಂದ ಆಯೋಜಿಸಲಾದ ‘ಮೆಹಫಿಲ್-ಎ-ಕವ್ವಾಲಿ’ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯಾವುದೇ ಕಲೆಯು ಕಾಲಚಕ್ರದ ಪ್ರಭಾವಕ್ಕೆ ಒಳಗಾಗಿ ಬದಲಾವಣೆಗಳನ್ನು ಅನುಭವಿಸುವುದು ಸಹಜ. ಕವ್ವಾಲಿಯಲ್ಲಿಯೂ ಇಂತಹ ಪರಿವರ್ತನೆಗಳು ಸಂಭವಿಸಿವೆ ಎಂದು ಹೇಳಿದರು. ಕವ್ವಾಲಿಗೆ ಮನಸ್ಸನ್ನು ಧ್ಯಾನಸ್ಥ ಸ್ಥಿತಿಗೆ ಕೊಂಡೊಯ್ಯುವ ಅಪೂರ್ವ ಶಕ್ತಿ ಇದೆ. ನಾವು ಕಲಾವಿದರು, ಕಲಾ ಪೋಷಕರು ಅಥವಾ ಕಲಾಸಕ್ತರು ಎಂಬುದರಲ್ಲಿ ಯಾವುದಾದರೂ ಒಂದು ವರ್ಗಕ್ಕೆ ಸೇರಿ ಕಲೆ ಉಳಿಸಿ ಬೆಳೆಸಬೇಕಿದೆ ಎಂದು ಅವರು ಕರೆ ನೀಡಿದರು. ಕವ್ವಾಲಿ ಮನಸ್ಸನ್ನು ಶಾಂತಗೊಳಿಸಿ ಭಾವನಾತ್ಮಕ ಶುದ್ಧೀಕರಣಕ್ಕೆ ಕಾರಣವಾಗುತ್ತದೆ. ಜೊತೆಗೆ ಪ್ರೀತಿ, ಸಹಾನುಭೂತಿ ಮತ್ತು ಸಹೋದರತ್ವದ ಸಂದೇಶವನ್ನು ಸಮಾಜಕ್ಕೆ ಸಾರುವ ಸಾಮರ್ಥ್ಯ ಕವ್ವಾಲಿಗಿದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಕವ್ವಾಲಿಗಳಲ್ಲಿ ಪ್ರೇಮ ಮತ್ತು ಭಕ್ತಿಯ ಅಭಿವ್ಯಕ್ತಿ, ಆತ್ಮಸಾಕ್ಷಾತ್ಕಾರದ ಚಿಂತನೆ, ಗುರು-ಶಿಷ್ಯ ಸಂಬಂಧ, ಕಾಲಾನುಕ್ರಮದ ಬದಲಾವಣೆಗಳು ಹಾಗೂ ಜನಪ್ರಿಯತೆಯ ಕಾರಣಗಳ ಕುರಿತು ವಿಶ್ಲೇಷಣಾತ್ಮಕ ಚರ್ಚೆ ನಡೆಯಿತು. ಜಿಲ್ಲಾ ಮಟ್ಟದ ಕವ್ವಾಲಿ ಸ್ಪರ್ಧೆಯಲ್ಲಿ ವಿಜೇತರಾದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವಿಭಾ ನಾಯಕ್, ಮನುಜ ನೇಹಿಗ, ಮಹಮ್ಮದ್ ಅರ್ಹಾನ್, ವಿಶ್ವನಾಥ್, ನಿಯೋಲ ಲೋಬೋ, ಅದಿತಿ ಪೂಜಾರಿ ಹಾಗೂ ಯದುನಂದನ್ ಅವರು “ಮೇರೆ ಮುರ್ಷಿದ್ ಖೇಲೆ ಹೋಳಿ”, “ದಮ್ ದಮ್ ಮಸ್ತ್ ಕಲಂದರ್”, “ಚಾಪ್ ತಿಲಕ್”, “ಭರ್ ದೋ ಜೋಲಿ”, “ಸನ್ಸೋನ್ ಕಿ ಮಾಲಾ ಪೆ” ಮೊದಲಾದ ಕವ್ವಾಲಿಗಳನ್ನು ಗಾಯನ ಮಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ರಿಜಿಸ್ಟ್ರಾರ್ (ಶೈಕ್ಷಣಿಕ) ಡಾ. ನಾರಾಯಣ ಶೆಟ್ಟಿ, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಆಳ್ವಾಸ್ ವೆಲ್‌ನೆಸ್ ಸೆಂಟರ್‌ನ ನಿರ್ದೇಶಕಿ ಡಾ. ದೀಪಾ ಕೊಟ್ಟಾರಿ ಸೇರಿದಂತೆ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ರೂಪಾ ಎಸ್. ಭಟ್ ಹಾಗೂ ಮಾಧವಿ ಚಡಗ ಸಂಯೋಜಿಸಿದರು.  

ವಾರ್ತಾ ಭಾರತಿ 2 Mar 2026 9:27 pm

ಆಯತುಲ್ಲಾ ಅಲಿ ಖಾಮಿನೈ ಹತ್ಯೆ ಖಂಡಿಸಿ ಶ್ರೀನಗರದಲ್ಲಿ ಮುಂದುವರಿದ ಪ್ರತಿಭಟನೆ : ಭದ್ರತಾ ಪಡೆಗಳೊಂದಿಗೆ ಘರ್ಷಣೆ

ಹೊಸದಿಲ್ಲಿ, ಮಾ. 2: ಇರಾನ್‌ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಜನರು ಸೋಮವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದ್ದು, ಶ್ರೀನಗರದ ಬಟಮಾಲು ಪ್ರದೇಶದಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು. ಅಮೆರಿಕ ಹಾಗೂ ಇಸ್ರೇಲ್‌ನ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರು ಮೃತಪಟ್ಟ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಜಮ್ಮು ಹಾಗೂ ಕಾಶ್ಮೀರ ಆಡಳಿತ ಜಾರಿಗೊಳಿಸಿದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಉಲ್ಲಂಘಿಸಿ ಧ್ವಜ ಹಾಗೂ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಇಲ್ಲಿ ಸೇರಿದರು. ನಿರ್ಬಂಧ ಉಲ್ಲಂಘಿಸಿದ ಬಳಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಕಾರರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದರು ಹಾಗೂ ಭದ್ರತಾ ಪಡೆಗಳೊಂದಿಗೆ ಘರ್ಷಣೆಗೆ ಇಳಿದರು. ಉದ್ರಿಕ್ತ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು, ಅಶ್ರುವಾಯು ಸೆಲ್‌ಗಳನ್ನು ಸಿಡಿಸಿದರು. ಇರಾನ್‌ನ ಸರ್ವೋಚ್ಛ ನಾಯಕ ಅಯತುಲ್ಲಾ ಅಲಿ ಖಾಮಿನೈ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರತಿಭಟನೆ ಆರಂಭವಾದ ಒಂದು ದಿನದ ಬಳಿಕ ಈ ಘರ್ಷಣೆ ನಡೆದಿದೆ. ಪ್ರತಿಭಟನಕಾರರು ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಇರಾನ್ ಮೇಲಿನ ದಾಳಿಯನ್ನು ಖಂಡಿಸಿದರು. ಅಲ್ಲದೆ ಇರಾನ್‌ಗೆ ಬೆಂಬಲ ಘೋಷಿಸಿದರು. ‘‘ನಮ್ಮ ಪ್ರೀತಿಯ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರು ಕ್ರೂರವಾಗಿ ಹುತಾತ್ಮರಾದರು. ಹೌದು, ಈ ಶೋಕ ಮೆರವಣಿಗೆ ನಗರ ಕೇಂದ್ರಗಳಲ್ಲಿ ಶಾಂತಿಯುತವಾಗಿ ನಡೆಯುತ್ತಿದೆ’’ ಎಂದು ಪ್ರತಿಭಟನಕಾರರೊಬ್ಬರು ತಿಳಿಸಿದ್ದಾರೆ. ಲಾಲ್‌ಚೌಕ್‌ನಲ್ಲಿ ಕೂಡ ಬೃಹತ್ ಸಭೆ ನಡೆಯಿತು. ಅಲ್ಲಿ ಕಣಿವೆಯ ವಿವಿಧ ಭಾಗಗಳಿಂದ ಆಗಮಿಸಿದ ಒಂದು ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಆದರೆ, ಅಧಿಕಾರಿಗಳು ನಿರ್ಬಂಧಗಳನ್ನು ಜಾರಿಗೊಳಿಸಲು ಪ್ರಯತ್ನಿಸಿದಾಗ ಘರ್ಷಣೆ ಭುಗಿಲೆದ್ದಿತು ಎಂದು ವರದಿಯಾಗಿದೆ.

ವಾರ್ತಾ ಭಾರತಿ 2 Mar 2026 9:26 pm

ಇರಾನ್ ಡ್ರೋನ್‌ ಗಳನ್ನು ಉರುಳಿಸಲು ಉಕ್ರೇನ್ ನೆರವು: ರಷ್ಯಾ ಯುದ್ಧದಿಂದ ರೂಪುಗೊಂಡ ಹೊಸ ಅಧ್ಯಾಯ

ಯುದ್ಧದ ಸ್ವರೂಪವನ್ನೇ ಬದಲಿಸಿದ ದೀರ್ಘಕಾಲೀನ ಸಂಘರ್ಷ

ವಾರ್ತಾ ಭಾರತಿ 2 Mar 2026 9:23 pm

ಕಲಬುರಗಿ | ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ

ಕಲಬುರಗಿ: ನಗರದ ವಿವೇಕಾನಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ರವಿವಾರ ಸಂಜೆ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಡಾ.ಶರಬಯ್ಯ ಸ್ವಾಮಿ ಅವರು ರೇಣುಕಾಚಾರ್ಯರ ಜೀವನ, ತತ್ವಚಿಂತನೆ ಹಾಗೂ ಸಮಾಜಕ್ಕೆ ನೀಡಿದ ಮಹತ್ವದ ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.  ದೇವಸ್ಥಾನ ಟ್ರಸ್ಟಿನ ಅಧ್ಯಕ್ಷರಾದ ಮಲ್ಲಿನಾಥ ದಂಗಾಪುರ ಮಾತನಾಡಿ, ಇಂತಹ ಆಚರಣೆಗಳು ನಮ್ಮ ಸಂಸ್ಕೃತಿ ಹಾಗೂ ಧಾರ್ಮಿಕ ಮೌಲ್ಯಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಹೇಳಿದರು. ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಶೇಖರ್ ಕಲಶೆಟ್ಟಿ ಮಾತನಾಡಿ, ಭವಿಷ್ಯದಲ್ಲಿಯೂ ಇಂತಹ ಕಾರ್ಯಕ್ರಮಗಳನ್ನು ಇನ್ನಷ್ಟು ವಿಜೃಂಭಣೆಯಿಂದ ನಡೆಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಲೋನಿಯ ಹಿರಿಯರು, ದೇವಸ್ಥಾನ ಕಮಿಟಿಯ ಸದಸ್ಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವಾರ್ತಾ ಭಾರತಿ 2 Mar 2026 9:21 pm

ಇಸ್ರೇಲ್ ದಾಳಿಯಲ್ಲಿ ಗಾಯಗೊಂಡಿದ್ದ ಆಯತುಲ್ಲಾ ಅಲಿ ಖಾಮಿನೈ ಅವರ ಪತ್ನಿ ಮೃತ್ಯು : ವರದಿ

ಟೆಹ್ರಾನ್, ಮಾ.2: ಶನಿವಾರ ಅಮೆರಿಕ-ಇಸ್ರೇಲ್ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಗಾಯಗೊಂಡಿದ್ದ ಇರಾನ್‍ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ಅವರ ಪತ್ನಿ ಮನ್ಸೌರೆ ಖೋಜಸ್ತೆ ಬಗರ್ಜಾಡೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಇರಾನ್‍ನ ಸರಕಾರಿ ಸ್ವಾಮ್ಯದ ಮಾಧ್ಯಮ ಸೋಮವಾರ ವರದಿ ಮಾಡಿದೆ. ದಾಳಿಯಲ್ಲಿ ಖಾಮಿನೈ, ಅವರ ಪುತ್ರಿ, ಮೊಮ್ಮಗ, ಸೊಸೆ ಮತ್ತು ಅಳಿಯ ಕೂಡ ಮೃತಪಟ್ಟಿದ್ದರು.

ವಾರ್ತಾ ಭಾರತಿ 2 Mar 2026 9:20 pm

Kalaburagi | ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕಲಬುರಗಿ: ಹೊಲಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಪತ್ತೆಯಾಗಿದೆ. ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಕಡಲೆ ಬೆಳೆ ಕಾಯಲು ಹೊಲಕ್ಕೆ ತೆರಳಿದ್ದ ಅವರು ಮನೆಗೆ ಮರಳದ ಹಿನ್ನೆಲೆ ಆತಂಕಗೊಂಡ ಕುಟುಂಬಸ್ಥರು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಗ್ರಾಮದ ಸಣ್ಣ ನೀರಾವರಿ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನ ಕಾಲಿಗೆ ಹಗ್ಗ ಬಿಗಿದಿರುವುದು ಕಂಡುಬಂದಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವ ಬಗ್ಗೆ ಮೂಲಗಳು ತಿಳಿಸಿವೆ. ಹೆಚ್ಚಿನ ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಸಂಗಮನಾಥ ಹಿರೇಮಠ, ಸಿಪಿಐ ಕಪಿಲದೇವ ಹಾಗೂ ಎಸ್‌ಐ ಗಂಗಮ್ಮ ಜಿನಿಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾರ್ತಾ ಭಾರತಿ 2 Mar 2026 9:18 pm

ನೇಜಾರು ನಾಲ್ವರ ಹತ್ಯೆ ಪ್ರಕರಣ: ಮತ್ತೆ 8 ಮಂದಿ ಸಾಕ್ಷಿಗಳ ವಿಚಾರಣೆ

ಉಡುಪಿ, ಮಾ.2: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಫೆ.27 ಮತ್ತು 28ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳ ಮುಖ್ಯ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ನಡೆಸಿದರೆ, ಆರೋಪಿ ಪರ ವಕೀಲ ರಾಜು ಪೂಜಾರಿ ಪಾಟಿಸವಾಲು ನಡೆಸಿದರು. ಈ ಮೂಲಕ ಈವರೆಗೆ ಈ ಪ್ರಕರಣದಲ್ಲಿ ಒಟ್ಟು 34 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಮುಂದಿನ ವಿಚಾರಣೆಯನ್ನು ಎ.1 ಮತ್ತು ಎ.2ಕ್ಕೆ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಆ ದಿನದಂದು ಮತ್ತೆ 10-15 ಸಾಕ್ಷಿಗಳ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಲು ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ವಾರ್ತಾ ಭಾರತಿ 2 Mar 2026 9:17 pm

ಮಾ.3ರಂದು ಚಂದ್ರಗ್ರಹಣ: ಕೇವಲ 9 ನಿಮಿಷ ಮಾತ್ರ ಗೋಚರ

ಉಡುಪಿ, ಮಾ.2: ಈ ವರ್ಷದ ಒಂದೇ ಚಂದ್ರಗ್ರಹಣ ಮಾ.3ರ ಹುಣ್ಣಿಮೆಯ ದಿನ ಕಾಣಲಿದೆ. ಆದರೆ ಭಾರತೀಯ ರಿಗೆ ಇದು ಗ್ರಹಣವೆಂದು ಅನಿಸುವುದಿಲ್ಲ. ಯಾಕೆಂದರೆ ಈ ಗ್ರಹಣ ಸಂಪೂರ್ಣ ಮುಗಿಯುವ ಹಂತದಲ್ಲಿ ಚಂದ್ರೋದ ಯವಾಗಲಿದೆ. ಇದರಿಂದ ನಮಗೆ ಗ್ರಹಣದ ಚಂದ್ರ ಕೇವಲ 9 ನಿಮಿಷ ಮಾತ್ರ ಕಾಣಲಿದೆ ಎಂದು ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ ತಿಳಿಸಿದ್ದಾರೆ. ಇದು ಪಾರ್ಶ್ವ ಚಂದ್ರ ಗ್ರಹಣ. ಅದೂ ಕೇವಲ ಚಂದ್ರ 8 ಅಂಶ ಭಾಗ ಮಾತ್ರ ಗ್ರಹಣ ಆವರಿಸಲಿದೆ. ಉಡುಪಿಗೆ ಸೂರ್ಯಾಸ್ತ 6:38ಕ್ಕೆ ಮತ್ತು ಚಂದ್ರೋದಯ 6:38ಕ್ಕೆ. ಆ ಕಡೆ ಪಶ್ಚಿಮದಲ್ಲಿ ಸೂರ್ಯಾಸ್ತವಾದರೆ ಈ ಕಡೆ ಪೂರ್ವದಲ್ಲಿ ಪಾರ್ಶ್ವಗ್ರಹಣದ ಚಂದ್ರೋದಯ ಕಾಣಲಿದೆ. ಇದು ಗ್ರಹಣದ ಚಂದಿರ ಹೌದೋ ಅಲ್ಲವೋ ಎಂದು ಯೋಚಿಸುವಷ್ಟರಲ್ಲಿ ಗ್ರಹಣ ಮುಗಿದಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಂಜೆ 6:47ಕ್ಕೆ ಗ್ರಹಣ ಮುಗಿಯುವದರಿಂದ ಗ್ರಹಣದ ಚಂದಿರ ಕಾಣ ಸಿಗುವುದು ಕಷ್ಟ. ಸೂರ್ಯ ಗ್ರಹಣದಲ್ಲಾದರೆ ಗ್ರಹಣದ ಬಿಂಬ ಪ್ರಾರಂಭ ಅಂತ್ಯ ಪ್ರತಿಬಿಂಬ ನೋಡಿ ಕರಾರುವಕ್ಕಾಗಿ ತಿಳಿಯಬಹುದು. ಆದರೆ ಚಂದ್ರ ಗ್ರಹಣದಲ್ಲಿ ಕಪ್ಪು ಆವರಿಸಿರುವುದು ಕರಾರುವಕ್ಕಾಗಿ ಕಾಣುವುದಿಲ್ಲ. ಸುಮಾರು 25 ಅಂಶ ಆವರಿಸಿದಾಗ ಅನುಭವಕ್ಕೆ ಬರು ತ್ತದೆ. ಈ ದಿನ ಗ್ರಹಣದ ಕಡೆಯ ಉಳಿದ ಭಾಗ ಬರೇ 8 ಅಂಶ. ಬರೇ ಒಂಭತ್ತೇ ನಿಮಿಷ. ಹಾಗಾಗಿ ಗ್ರಹಣ ನೋಡಲು ಕಷ್ಟ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Mar 2026 9:16 pm

ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ

T20 World Cup 2026: ಭಾರತದ ಟಿ20 ವಿಶ್ವಕಪ್ 2026ನಲ್ಲಿ ಅತ್ಯಂತ ಪ್ರಮುಖ ಗಮನ ಸೆಳೆದಿದ್ದು, ಪ್ರತಿ ಪಂದ್ಯದಲ್ಲೂ ಭಾರತದ ತಂಡದಲ್ಲಿ ಒಬ್ಬೊಬ್ಬ ಆಟಗಾರರು ಜವಾಬ್ದಾರಿಯುತವಾಗಿ ಆಕ್ರಮಣಕಾರಿ ಆಟ ಆಡಿದ್ದು. ಯುಎಸ್‌ಎ ವಿರುದ್ಧದ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮಿಂಚಿದ್ದರೆ, ಕೊನೆಯ ಸೂಪರ್ 8 ಹಂತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಹೀರೋ ಆದರು. ಭಾನುವಾರ

ಒನ್ ಇ೦ಡಿಯ 2 Mar 2026 9:14 pm

ಗಂಗೊಳ್ಳಿ: ಯಕ್ಷಗಾನ ಕಲಾರಂಗದ 90ನೇ ಮನೆ ಹಸ್ತಾಂತರ

ಉಡುಪಿ, ಮಾ.2: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ತಾಯಿಯವರ ನೆನಪಿನಲ್ಲಿ, ಸುಮಾರು ಏಳು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಸರಸ್ವತಿ ಕೃಪಾ’ವನ್ನು ಮಾ.1ರಂದು ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ದೀಪ ಬೆಳಗಿಸಿ ಉದ್ಘಾಟಿಸಿ ಹಸ್ತಾಂತರಿಸಿದರು. ಜಗನ್ನಾಥ ಹಾಗೂ ರೇಖಾ ದಂಪತಿ ಪುತ್ರಿ ಶ್ರಾವ್ಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಅಂಕಗಳೊಂದಿಗೆ ಉತ್ತೀರ್ಣಳಾ ಗಿದ್ದಳು. ಮನೆಯನ್ನು ಬಡ ಕುಟುಂಬಕ್ಕೆ ಹಸ್ತಾಂತರಿಸಿ ಮಾತನಾಡಿದ ಕೊಡ್ಗಿ, ಯಕ್ಷಗಾನ ಕಲಾರಂಗ ನೊಂದವರ ಬಾಳಿಗೆ ಬೆಳಕಾಗುತ್ತಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ನಡೆದ ದೋಣಿ ದುರಂತದಲ್ಲಿ ತಂದೆಯನ್ನು ಕಳೆದು ಕೊಂಡಿದ್ದ ಶ್ರಾವ್ಯಳ ಕುಟುಂಬಕ್ಕೆ ಆಸರೆಯಾಗಿ ಇದೀಗ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟಿದೆ ಎಂದರು. ದಾನಿಗಳಾದ ವಸಂತ ಆಚಾರ್ಯ ಈ ಸಂದರ್ಭದಲ್ಲಿ ಮಾತನಾಡಿ, ಕಲಾರಂಗ ನಮಗೆ ಯಾವ ಶ್ರಮವೂ ಇಲ್ಲದೆ ಇಂಥ ಉತ್ತಮ ಕಾರ್ಯಕ್ಕೆ ಅವಕಾಶ ಕಲ್ಪಿಸಿದೆ. ಇದರಿಂದ ತಾಯಿ ನೆನಪನ್ನು ಸಾರ್ಥಕಗೊಳಿಸಿದಂತಾಗಿದೆ. ಪ್ರತಿಭಾವಂತ, ಬಡ ವಿದ್ಯಾರ್ಥಿನಿಗೆ ಮನೆ ನಿರ್ಮಿಸಿದ್ದು ತುಂಬಾ ಸಂತೋಷ ತಂದಿದೆ. ಆಕೆಯ ಮುಂದಿನ ಶಿಕ್ಷಣದ ಖರ್ಚನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ವೇದಿಕೆಯಲ್ಲಿ ಗಣೇಶ್ ಆಚಾರ್ಯ, ಸುರೇಶ್ ಆಚಾರ್ಯ, ದಿನೇಶ್ ಆಚಾರ್ಯ, ಸಿದ್ಧಾರ್ಥ ಆಚಾರ್ಯ ಉಪಸ್ಥಿತರಿ ದ್ದರು. ಸಂಸ್ಥೆಯ ಸದಸ್ಯರಾದ ಪ್ರೊ. ಕೆ. ಸದಾಶಿವ ರಾವ್, ಯು.ಎಸ್.ರಾಜಗೋಪಾಲ ಆಚಾರ್ಯ, ವಿಜಯ ಕುಮಾರ್ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ಅಶೋಕ ಎಂ., ಜಯರಾಮ ಪಡಿಯಾರ್, ಗಣೇಶ ಬ್ರಹ್ಮಾವರ, ಪ್ರಭಾಕರ ಬಂಡಿ, ಪತ್ರಕರ್ತ ರಾಘವೇಂದ್ರ ಪೈ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 2 Mar 2026 9:13 pm

ಸೇಡಂ | ಹೃದಯಾಘಾತದಿಂದ ಬಸ್ ಚಾಲಕ ಮೃತ್ಯು

ಸೇಡಂ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿರುವುದು ಸೋಮವಾರ ವರದಿಯಾಗಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ ರೆಡ್ಡಿ (56) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆಯ ಸುಮಾರಿಗೆ ಸೇಡಂ ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಾಗನಾಥ ರೆಡ್ಡಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 2 Mar 2026 9:10 pm

ಹೆಚ್ಚಾದ ಇರಾನ್-ಇಸ್ರೇಲ್ ಯುದ್ಧದ ತೀವ್ರತೆ, 3ನೇ ಮಹಾಯುದ್ಧದ ಆತಂಕ: 10 ಪ್ರಮುಖಾಂಶಗಳು ಹೀಗಿವೆ

Middle East War Update: ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವೆ ಸಂಘರ್ಷ ತಾರಕಕ್ಕೇರಿರಿದೆ. ಟೆಹರಾನ್ ಮೇಲಿನ ದಾಳಿಗೆ ಇರಾನ್ ಪ್ರತೀಕಾರ ತಿರಿಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಇಂದು (ಮಾ.2) ಮೂರನೇ ದಿನ ಯುದ್ಧ ಭೀಕರ ಸ್ವರೂಪ ಪಡೆದಿದೆ. ಮಧ್ಯ ಪ್ರಾಚ್ಯದಲ್ಲಿ ಸಿಲುಕಿದ ಮಕ್ಕಳು, ಗರ್ಭಿಣಿಯರು ಮತ್ತು ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಜರ್ಮನಿ ಸರ್ಕಾರ ಸಿದ್ಧತೆ ನಡೆಸಿದೆ.

ಒನ್ ಇ೦ಡಿಯ 2 Mar 2026 9:03 pm

US Israel - Iran War: ಭಾರತದ ಮೇಲಾಗುವ ಪರಿಣಾಮಗಳೇನು? ಸಾಮಾನ್ಯ ಜನರಿಗೂ ತಟ್ಟಲ್ಲಿದೆ ಬಿಸಿ; 5 ಅಂಶಗಳಿವು

ಅಮೆರಿಕ - ಇಸ್ರೇಲ್ ಮತ್ತು ಇರಾನ್ ಯುದ್ಧ ಭಾರತದ ಮೇಲೆಯೂ ಭಾರೀ ಪರಿಣಾಮ ಬೀರುಯವ ಸಾಧ್ಯತೆ ಇದೆ. ಪ್ರಮುಖ ತೈಲ ಬೆಲೆ ಏರಿಕೆಯ ಭೀತಿ ಇದೆ. ಷೇರುಪೇಟೆ ಮತ್ತು ರೂಪಾಯಿ ಮೌಲ್ಯ ಕುಸಿತವಾಗಲಿದ್ದು, ದಿನಸಿ ಮತ್ತು ಇತರೆ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

ವಿಜಯ ಕರ್ನಾಟಕ 2 Mar 2026 9:02 pm

ಮಾ.3ರಿಂದ ಮಂಗಳೂರು-ಮಸ್ಕತ್ ಏರ್ ಇಂಡಿಯಾ ವಿಮಾನಯಾನ ಮತ್ತೆ ಆರಂಭ

ಮಂಗಳೂರು, ಮಾ.2: ಗಲ್ಫ್ ಉದ್ವಿಗ್ನತೆಯ ಬಳಿಕ ಮಂಗಳೂರು ವಿಮಾನ ನಿಲ್ದಾಣದಿಂದ ಮಸ್ಕತ್‌ ಗೆ ಸ್ಥಗಿತಗೊಂಡಿದ್ದ ವಿಮಾನ ಯಾನ ಮತ್ತೆ ಮಾ. 3ರಿಂದ ಪ್ರಾರಂಭವಾಗಲಿದೆ. ಮಂಗಳೂರಿನಿಂದ ನಾಳೆ ಬೆಳಿಗ್ಗೆ 9.20ಕ್ಕೆ ಹೊರಟು 11.30ಕ್ಕೆ ಮಸ್ಕತ್ ತಲುಪುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX 817 ವಿಮಾನ ಹಾರಾಟ ಪ್ರಾರಂಭಿಸಲಿದೆ. ಅದೇ ವಿಮಾನ ಮಸ್ಕತ್ ನಿಂದ ಸ್ಥಳಿಯ ಕಾಲಮಾನ 12.30ಕ್ಕೆ ಹೊರಟು ಸಂಜೆ 5.30ಕ್ಕೆ ಮಂಗಳೂರು ತಲುಪುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX 818 ವಿಮಾನ ಸೇವೆ ನೀಡಲಿದೆ ಎಂದು ಮಂಗಳೂರು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 2 Mar 2026 9:02 pm

ಹಿಜ್ಬುಲ್ಲಾದ ಮಿಲಿಟರಿ ಚಟುವಟಿಕೆ ನಿಷೇಧಿಸಲು ಲೆಬನಾನ್ ನಿರ್ಧಾರ

ಬೈರೂತ್, ಮಾ.2: ಹಿಜ್ಬುಲ್ಲಾದ ಮಿಲಿಟರಿ ಚಟುವಟಿಕೆಗಳ ಮೇಲೆ ನಿಷೇಧವನ್ನು ಲೆಬನಾನ್ ಜಾರಿಗೊಳಿಸಲಾಗುವುದು ಎಂದು ಲೆಬನಾನ್ ಪ್ರಧಾನಿ ನವಾಫ್ ಸಲಾಮ್ ಸೋಮವಾರ ಹೇಳಿದ್ದಾರೆ. ಹಿಜ್ಬುಲ್ಲಾ ತನ್ನ ಶಸ್ತ್ರಾಸ್ತ್ರಗಳನ್ನು ತಕ್ಷಣ ಒಪ್ಪಿಸುವಂತೆ ಲೆಬನಾನ್ ಆಡಳಿತ ಆಗ್ರಹಿಸಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ವೈಮಾನಿಕ ದಾಳಿ ನಡೆಸಿದ ಬಳಿಕ ಇರಾನ್‍ಗೆ ಬೆಂಬಲವಾಗಿ ಹಿಜ್ಬುಲ್ಲಾ ಉತ್ತರ ಇಸ್ರೇಲ್‍ನ ಮಿಲಿಟರಿ ನೆಲೆಗಳತ್ತ ರಾಕೆಟ್‍ಗಳು ಮತ್ತು ಡ್ರೋನ್‍ಗಳನ್ನು ಪ್ರಯೋಗಿಸಿದ ಬೆನ್ನಲ್ಲೇ ಲೆಬನಾನ್ ಸರಕಾರ ಈ ಘೋಷಣೆ ಹೊರಡಿಸಿದೆ. ಈ ಮಧ್ಯೆ, ಹಿಜ್ಬುಲ್ಲಾ ನಡೆಸಿದ ರಾಕೆಟ್ ಮತ್ತು ಡ್ರೋನ್ ದಾಳಿಗೆ ಪ್ರತಿಯಾಗಿ ದಕ್ಷಿಣ ಲೆಬನಾನ್‍ನಲ್ಲಿ ಹಿಜ್ಬುಲ್ಲಾದ ನೆಲೆಗಳನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದ್ದು ಹಲವು ದಿಕ್ಕಿನ ದಾಳಿಗಳನ್ನು ಎದುರಿಸಲು ಇಸ್ರೇಲ್ ಪಡೆ ಸಿದ್ದ ಎಂದು ಇಸ್ರೇಲ್‍ನ ರಕ್ಷಣಾ ಸಚಿವರು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಾರ್ತಾ ಭಾರತಿ 2 Mar 2026 9:00 pm

ಮಂಗಳೂರು: ಸೈಬರ್ ವಂಚನೆ; ಪ್ರಕರಣ ದಾಖಲು

ಮಂಗಳೂರು, ಮಾ.2: ಗೋಲ್ಡ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭಗಳಿಸ ಬಹುದು ಎಂದು ನಂಬಿಸಿ 10,55,000 ರೂ. ವರ್ಗಾವಣೆ ಮಾಡಿಸಿಕೊಂಡು ಬಳಿಕ ವಂಚಿಸಿದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ಸುಹಾನಿ ಪಟೇಲ್ ಎಂಬ ಅಪರಿಚಿತ ವ್ಯಕ್ತಿಯು ತನ್ನಿಂದ ಹಂತಹಂತವಾಗಿ 10,550,000 ರೂ. ಹೂಡಿಕೆ ಮಾಡಿಸಿದ್ದಾನೆ. ಈ ಮೊತ್ತ ಆತ ಹೇಳಿದ ಆ್ಯಪ್‌ನಲ್ಲಿ 60 ಲಕ್ಷ ರೂ. ಎಂದು ತೋರಿಸು ತ್ತಿತ್ತು. ಹಾಗಾಗಿ ತಾನು ಆ ಹಣ ಪಡೆಯಲು ಯತ್ನಿಸಿದಾಗ ಸಾಧ್ಯವಾಗಿಲ್ಲ. ಈ ಬಗ್ಗೆ ಕಸ್ಟಮರ್ ಸರ್ವಿಸ್‌ನಲ್ಲಿ ವಿಚಾರಿಸಿದಾಗ ಶೇ.30 ಟ್ಯಾಕ್ಸ್ ಮೊತ್ತವನ್ನು ಹಾಕಿದರೆ ಹಣ ವಿತ್ ಡ್ರಾ ಮಾಡಬಹುದೆಂದು ತಿಳಿಸಿದ್ದರು. ಇದನ್ನು ಬ್ಯಾಂಕ್‌ನವರಿಗೆ ತಿಳಿಸಿದಾಗ ಅವರು ಇದೊಂದು ವಂಚನಾ ಜಾಲ ಎಂದು ಮಾಹಿತಿ ನೀಡಿದರು. ಈ ಸಂದೇಶವನ್ನು ಕಳುಹಿಸಿದ ಕೂಡಲೇ ಆ್ಯಪ್‌ನಲ್ಲಿರುವ ಹಣವನ್ನು ಶೂನ್ಯ ಮಾಡಿ ಬ್ಲಾಕ್ ಮಾಡಿದ್ದಾನೆ ಎಂದು ಹಣ ಕಳಕೊಂಡ ವ್ಯಕ್ತಿ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 2 Mar 2026 8:59 pm

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ | ಗುರಿಗಳನ್ನು ಸಾಧಿಸುವವರೆಗೆ ದಾಳಿ ನಿಲ್ಲಿಸುವುದಿಲ್ಲ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಮಾ.2: ಇರಾನ್‍ನೊಂದಿಗಿನ ಸಂಘರ್ಷವು ನಾಲ್ಕು ವಾರಗಳವರೆಗೆ ಮುಂದುವರಿಯಬಹುದು. ಮಿಲಿಟರಿ ಕಾರ್ಯಾಚರಣೆಗಳು ಮುಂದುವರಿದಂತೆ ಹೆಚ್ಚಿನ ಸಾವು-ನೋವುಗಳ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಯುದ್ದ ಕಾರ್ಯಾಚರಣೆಗಳು ಪೂರ್ಣ ಬಲದಲ್ಲಿ ಮುಂದುವರಿಯುತ್ತಿವೆ ಮತ್ತು ನಮ್ಮ ಎಲ್ಲಾ ಉದ್ದೇಶಗಳನ್ನು ಸಾಧಿಸುವವರೆಗೆ ನಿಲ್ಲುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ವಿರುದ್ದದ ಯುದ್ದವು ಅಮೆರಿಕದ ಅಸ್ತಿತ್ವಕ್ಕೆ ಎದುರಾದ ಬೆದರಿಕೆಗೆ ಪ್ರತಿಕ್ರಿಯೆಯಾಗಿದೆ. ದೀರ್ಘ ಶ್ರೇಣಿಯ ಕ್ಷಿಪಣಿಗಳು ಮತ್ತು ಪರಮಾಣು ಶಸ್ತ್ರಾಸ್ತ್ರಗಳಿಂದ ಸಜ್ಜುಗೊಂಡಿರುವ ಇರಾನ್‍ನ ಆಡಳಿತವು ಪ್ರತೀ ಅಮೆರಿಕನ್ನರಿಗೆ ಭೀಕರ ಬೆದರಿಕೆಯಾಗಿದೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ವಾರ್ತಾ ಭಾರತಿ 2 Mar 2026 8:57 pm

ಸೀಮಿತ ರಕ್ಷಣಾತ್ಮಕ ಉದ್ದೇಶಗಳಿಗೆ ಬ್ರಿಟನ್ ನೆಲೆ ಬಳಸಲು ಅಮೆರಿಕಕ್ಕೆ ಅವಕಾಶ: ಕೀರ್ ಸ್ಟಾರ್ಮರ್

ಲಂಡನ್, ಮಾ.2: ನಿರ್ದಿಷ್ಟ ಮತ್ತು ಸೀಮಿತ ರಕ್ಷಣಾತ್ಮಕ ಉದ್ದೇಶಗಳಿಗೆ ಬ್ರಿಟಿಷ್ ಮಿಲಿಟರಿ ನೆಲೆಗಳನ್ನು ಬಳಸುವ ಅಮೆರಿಕದ ಕೋರಿಕೆಯನ್ನು ಬ್ರಿಟನ್ ಒಪ್ಪಿಕೊಂಡಿದೆ ಎಂದು ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ. ಇರಾನಿನ ಕ್ಷಿಪಣಿ ತಾಣಗಳನ್ನು ಗುರಿಯಾಗಿಸಲು ಬ್ರಿಟಿಷ್ ನೆಲೆಗಳನ್ನು ಬಳಸಲು ಅಮೆರಿಕಕ್ಕೆ ಅನುಮತಿ ನೀಡಲಾಗುವುದು. ಇರಾನ್‍ನ ಮೇಲಿನ ಆರಂಭಿಕ ಅಮೆರಿಕ-ಇಸ್ರೇಲ್ ದಾಳಿಗಳಲ್ಲಿ ಬ್ರಿಟನ್ ಭಾಗಿಯಾಗಿಲ್ಲ ಮತ್ತು ಈಗಲೂ ಆಕ್ರಮಣಕಾರಿ ಕ್ರಮಗಳಿಗೆ ಸೇರುವುದಿಲ್ಲ. ಪ್ರದೇಶದಾದ್ಯಂತ ಇರಾನ್ ಮತ್ತಷ್ಟು ದಾಳಿಗಳನ್ನು ನಡೆಸಿ ಅಮಾಯಕ ಜನರನ್ನು ಕೊಲ್ಲುವುದನ್ನು ನಿಲ್ಲಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮವು ಸಾಮೂಹಿಕ ಆತ್ಮರಕ್ಷಣೆ ತತ್ವವನ್ನು ಆಧರಿಸಿದೆ ಮತ್ತು ಅಂತಾರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿದೆ ಎಂದು ಸ್ಟಾರ್ಮರ್ ಹೇಳಿದ್ದಾರೆ. ಬಿಬಿಸಿ ವರದಿಯ ಪ್ರಕಾರ, ಗ್ಲೌಸೆಸ್ಟರ್‍ಶೈರ್‌ನ ಆರ್‌ಎಎಫ್ ಫೇರ್‍ಫೋರ್ಡ್ ಮತ್ತು ಹಿಂದು ಮಹಾಸಾಗರದ ಡಿಗೊ ಗಾರ್ಶಿಯ ನೆಲೆಯನ್ನು ಅಮೆರಿಕ ಬಳಸುವ ಸಾಧ್ಯತೆಯಿದೆ.

ವಾರ್ತಾ ಭಾರತಿ 2 Mar 2026 8:54 pm

ಟಿ-20 ವಿಶ್ವಕಪ್ | ಆರನೇ ಬಾರಿ ಸೆಮಿ ಫೈನಲ್‌ಗೆ ತಲುಪಿ ಸ್ಥಿರ ಪ್ರದರ್ಶನ ನೀಡಿದ ಭಾರತ

ಹೊಸದಿಲ್ಲಿ, ಮಾ.2: ಕೋಲ್ಕತಾದ ಈಡನ್‌ಗಾರ್ಡನ್ಸ್ ಸ್ಟೇಡಿಯಂನಲ್ಲಿ ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡವನ್ನು ರವಿವಾರ ಐದು ವಿಕೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿರುವ ಭಾರತ ಕ್ರಿಕೆಟ್ ತಂಡವು 2026ರ ಆವೃತ್ತಿಯ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಫೈನಲ್‌ನಲ್ಲಿ ಸ್ಥಾನ ಪಡೆದಿದೆ. ಗೆಲ್ಲಲು 196 ರನ್ ಗುರಿ ಬೆನ್ನಟ್ಟಿದ ಭಾರತ ತಂಡವು ಕೇವಲ ನಾಲ್ಕು ಎಸೆತಗಳು ಬಾಕಿ ಇರುವಾಗ ಗುರಿ ತಲುಪಿತು. ಈ ಗೆಲುವಿನ ಮೂಲಕ ಭಾರತದ ಬ್ಯಾಟಿಂಗ್ ಶಕ್ತಿ ಹೊರ ಹೊಮ್ಮಿತು. ಒತ್ತಡವನ್ನು ಮೀರಿ ನಿಂತ ಭಾರತೀಯರು 2022ರ ನಂತರ ಎರಡನೇ ಬಾರಿ ಸೆಮಿ ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದ್ದಾರೆ. ಟಿ-20 ವಿಶ್ವಕಪ್‌ನಲ್ಲಿ ಭಾರತ ಎಷ್ಟು ಬಾರಿ ಸೆಮಿ ಫೈನಲ್‌ಗೆ ತಲುಪಿದೆ? 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಆವೃತ್ತಿಯ ಪುರುಷರ ಟಿ-20 ವಿಶ್ವಕಪ್ ಟೂರ್ನಿಯ ನಂತರ ಒಟ್ಟು ಒಂಭತ್ತು ಆವೃತ್ತಿಗಳು(2007, 2009, 2010, 2012, 2014, 2016, 2021, 2022, 2024)ನಡೆದಿವೆೆ. ಈಗ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ 10ನೇ ಆವೃತ್ತಿಯ ಟಿ-20 ವಿಶ್ವಕಪ್ ಟೂರ್ನಿಯು ನಡೆಯುತ್ತಿದೆ. ಅತ್ಯಂತ ಸ್ಥಿರ ಪ್ರದರ್ಶನ ನೀಡುತ್ತಿರುವ ತಂಡಗಳ ಪೈಕಿ ಒಂದಾಗಿರುವ ಟೀಮ್ ಇಂಡಿಯಾವು 2007, 2014, 2016, 2022, 2024, 2026ರ ಸಹಿತ ಒಟ್ಟು ಆರನೇ ಬಾರಿ ಸೆಮಿ ಫೈನಲ್‌ಗೆ ತಲುಪಿದೆ. ಆರು ಬಾರಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಭಾರತ ತಂಡವು 2007, 2014 ಹಾಗೂ 2024 ಸಹಿತ ಮೂರು ಬಾರಿ ಫೈನಲ್‌ಗೆ ಪ್ರವೇಶಿಸಿದೆ. 2007 ಹಾಗೂ 2024ರಲ್ಲಿ ಎರಡು ಬಾರಿ ಟಿ-20 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿ ತನ್ನ ಶಕ್ತಿ ಹಾಗೂ ಸ್ಥಿರತೆಯನ್ನು ಸಾಬೀತುಪಡಿಸಿದೆ. 2026ರ ಟಿ-20 ವಿಶ್ವಕಪ್‌ನ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಮತ್ತೊಮ್ಮೆ ಎದುರಿಸಲಿದೆ. 2022ರ ಟಿ-20 ವಿಶ್ವಕಪ್ ಸೆಮಿ ಫೈನಲ್‌ನಲ್ಲೂ ಭಾರತ-ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಆಗ ಭಾರತ ತಂಡವು ಆಂಗ್ಲ ಪಡೆಗೆ ಸೋಲುಂಡಿತ್ತು. ಈ ಬಾರಿ ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ತಂಡವು ಎದುರು ನೋಡುತ್ತಿದೆ. ಭಾರತ, ಪಾಕಿಸ್ತಾನ ತಂಡಗಳಂತೆಯೇ ಇಂಗ್ಲೆಂಡ್ ತಂಡ ಕೂಡ ಪುರುಷರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆರು ಬಾರಿ ಸೆಮಿ ಫೈನಲ್‌ಗೆ ತಲುಪಿದೆ. ಪಾಕಿಸ್ತಾನ ತಂಡವು 2007, 2009, 2010, 2012, 2021 ಹಾಗೂ 2022ರಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಇಂಗ್ಲೆಂಡ್ ತಂಡವು 2010, 2016, 2021, 2022, 2024 ಹಾಗೂ 2026ರಲ್ಲಿ ಅಂತಿಮ-ನಾಲ್ಕರ ಹಂತ ತಲುಪಿದೆ. ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ತಂಡಗಳ ಪೈಕಿ ಭಾರತ, ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಅಗ್ರ ಸ್ಥಾನದಲ್ಲಿವೆ. ಟಿ-20 ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್‌ನಲ್ಲಿ ಭಾರತ ತಂಡದ ಏಳು-ಬೀಳುಗಳು 2007: ಎಂ.ಎಸ್. ಧೋನಿ ನಾಯಕತ್ವದ ಭಾರತ ಕ್ರಿಕೆಟ್ ತಂಡವು ಸೆಮಿ ಫೈನಲ್‌ಗೆ ತಲುಪಿತ್ತು. ಫೈನಲ್‌ಗೂ ಪ್ರವೇಶಿಸಿ ಪಾಕಿಸ್ತಾನ ತಂಡವನ್ನು ಮಣಿಸಿ ತನ್ನ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದುಕೊಂಡಿತ್ತು. 2014: ಭಾರತ ತಂಡವು ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿ ರನ್ನರ್ ಅಪ್‌ಗೆ ತೃಪ್ತಿಪಟ್ಟಿತ್ತು. 2016: ಸ್ವದೇಶದಲ್ಲಿ ಟಿ-20ವಿಶ್ವಕಪ್ ಟೂರ್ನಿ ಆಡಿದ ಭಾರತ ತಂಡವು ಸೆಮಿ ಫೈನಲ್‌ಗೆ ಪ್ರವೇಶಿಸಿತ್ತು. ಆದರೆ ವೆಸ್ಟ್‌ಇಂಡೀಸ್ ವಿರುದ್ಧ ಸೋಲುಂಡಿತ್ತು. 2022: ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಆದರೆ ಇಂಗ್ಲೆಂಡ್‌ಗೆ ಶರಣಾಗಿತ್ತು. 2024: ರೋಹಿತ್ ಶರ್ಮಾ ನೇತೃತ್ವದಲ್ಲಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ರೋಚಕವಾಗಿ ಮಣಿಸಿದ್ದ ಭಾರತ ತಂಡ ಎರಡನೇ ಬಾರಿ ಟಿ-20 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿ ಹಿಡಿದಿತ್ತು. 2026: ಸೂರ್ಯಕುಮಾರ್ ನಾಯಕತ್ವದಲ್ಲಿ ಭಾರತವು ಸತತ ಎರಡನೇ ಬಾರಿ ಸೆಮಿ ಫೈನಲ್‌ನಲ್ಲಿ ಕಾಣಿಸಿಕೊಂಡಿದೆ. ಪಂದ್ಯಾವಳಿಯಲ್ಲಿ ತನ್ನ ಸ್ಥಿರ ಪ್ರದರ್ಶನ ಮುಂದುವರಿಸಿದೆ.

ವಾರ್ತಾ ಭಾರತಿ 2 Mar 2026 8:45 pm

ಗಂಜಿಮಠ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಸೇರಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಪಾದಯಾತ್ರೆ

ಬಜ್ಪೆ: ಗಂಜಿಮಠ ಆರೋಗ್ಯ ಕೇಂದ್ರವನ್ನು ಗುರುಪುರ ಹೋಬಳಿಯ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಹೋಬಳಿಯ ಕುಪ್ಪೆಪದವು, ಕೊಂಪದವು, ವಾಮಂಜೂರು ಆರೋಗ್ಯ ಕೇಂದ್ರಗಳಿಗೆ ವೈದ್ಯರ ಸಹಿತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ಜಿಲ್ಲೆಯಲ್ಲಿ‌ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಸಿಪಿಐಎಂ ಗುರುಪುರ ವಲಯ ಸಮಿತಿ ನೇತೃತ್ವದಲ್ಲಿ ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದವರಗೆ ಸೋಮವಾರ ಹಕ್ಕೊತ್ತಾಯ ಪಾದಯಾತ್ರೆ ನಡೆಯಿತು. ಸಿಪಿಐಎಂ ದಕ್ಷಿಣ ಕನ್ನಡ‌ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಪಾದಯಾತ್ರೆಯ ಸಮಾರೋಪ ಭಾಷಣ ಮಾಡಿದ ಅವರು, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಕ್ಷೇತ್ರವನ್ನು ಪೂರ್ಣವಾಗಿ ಕಡೆಗಣಿಸಲಾಗಿದೆ. ಬಹುತೇಕ ಹೋಬಳಿ ಕೇಂದ್ರಗಳಲ್ಲಿ ಸಮುದಾಯ ಆಸ್ಪತ್ರೆಗಳನ್ನು ತೆರೆಯಲು ಇಲ್ಲಿಯವರಗೆ ಸಾಧ್ಯ ಆಗಿಲ್ಲ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ವೈದ್ಯರು, ದಾದಿಯರು ಸಹಿತ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ. ಹೊಸದಾಗಿ ಸ್ಥಾಪನೆಗೊಂಡಿರುವ ನಾಲ್ಕು ತಾಲೂಕುಗಳಲ್ಲಿ ಇಲ್ಲಿಯವರಗೆ ತಾಲೂಕು ಆಸ್ಪತ್ರೆಗಳ ನಿರ್ಮಾಣ ಆಗಿಲ್ಲ ಎಂಬುದು ಗ್ರಾಮೀಣ ಭಾಗಗಳ ಆರೋಗ್ಯ ಕ್ಷೇತ್ರದ ಗಂಭೀರ ಸ್ಥಿತಿಯನ್ನು‌ ಪ್ರತಿಬಿಂಬಿಸುತ್ತದೆ ಎಂದು ಅವರು ಆರೋಪಿಸಿದರು. ಜಿಲ್ಲೆಯ ದೊಡ್ಡ ಹೋಬಳಿ ಕೇಂದ್ರ ಆಗಿರುವ ಗುರುಪರದಲ್ಲಿ ಎಲ್ಲಾ ಅರ್ಹತೆಗಳ ಹೊರತಾಗಿಯು ಸಮುದಾಯ ಆಸ್ಪತ್ರೆ ಮಂಜೂರು ಮಾಡಲು ಮೀನಾಮೇಷ ಎಣಿಸುತ್ತಿರುವುದು ವಿಷಾದನೀಯ. ಈ ಕುರಿತು ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಮುನೀರ್ ಕಾಟಿಪಳ್ಳ ಹೇಳಿದರು. ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು ಮಾತಾಡಿ, ಜಿಲ್ಲೆಯ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಪಿ.ಪಿ.ಪಿ ಮಾದರಿ ಪಿಡುಗಿನಂತೆ ಕಾಡುತ್ತಿದೆ. ಜಿಲ್ಲಾಸ್ಪತ್ರೆ ವೆನ್ಲಾಕ್ ಸಹಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಖಾಸಗಿ ಮೆಡಿಕಲ್ ಕಾಲೇಜುಗಳ ವಶವಾಗುತ್ತಿವೆ, ಸರಕಾರ ಪಿ.ಪಿ.ಪಿ ಮಾದರಿ ಕೈ ಬಿಟ್ಟು ಜಿಲ್ಲೆಯ ಸಾರ್ವಜನಿಕ ಆರೋಗ್ಯ ಕ್ಷೇತ್ರವನ್ನು ಬಲಪಡಿಸಬೇಕು ಎಂದು ಆಗ್ರಹಿಸಿದರು. ಪಾದಯಾತ್ರೆಗೆ ಕುಪ್ಪೆಪದವು ಆರೋಗ್ಯ ಕೇಂದ್ರದ ಬಳಿ ಸಿಪಿಐಎಂ ಗುರುಪುರ ವಲಯ ಕಾರ್ಯದರ್ಶಿ ಸದಾಶಿವ ದಾಸ್ ಚಾಲನೆ ನೀಡಿದರು. ಬಾಬು ಸಾಲ್ಯಾನ್ ತಿರುವೈಲು, ಆನಂದ ಪೂಜಾರಿ ಇರುವೈಲು, ಲೋಲಾಕ್ಷಿ, ಕುಸುಮ ಕುಪ್ಪೆಪದವು, ಸದಾಶಿವ ದಾಸ್ , ಭವ್ಯ ಮುಚ್ಚೂರು, ಹೊನ್ನಯ್ಯ ಅಮೀನ್ ವಾಮಂಜೂರು, ನೋಣಯ್ಯ ಗೌಡ ಮಿಜಾರು, ಗೋಪಾಲ ಮೂಲ್ಯ ಮಳಲಿ, ಭವಾನಿ ಕುಪ್ಪೆಪದವು ಮತ್ತಿತರರು ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯೆ ವಸಂತಿ ಕುಪ್ಪೆಪದವು ಕಾರ್ಯಕ್ರಮ ನಿರ್ವಹಿಸಿದರು.

ವಾರ್ತಾ ಭಾರತಿ 2 Mar 2026 8:43 pm

ಟಿ-20 ವಿಶ್ವಕಪ್‌ನಿಂದ ಬೇಗನೆ ನಿರ್ಗಮನ : ಪಾಕಿಸ್ತಾನದ ಆಟಗಾರರಿಗೆ ದಂಡ ವಿಧಿಸಲು ಪಿಸಿಬಿ ನಿರ್ಧಾರ

ಕರಾಚಿ, ಮಾ.2: ಪಾಕಿಸ್ತಾನ ಕ್ರಿಕೆಟ್ ತಂಡವು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಿಂದ ಬೇಗನೆ ನಿರ್ಗಮಿಸಿ ಸೆಮಿ ಫೈನಲ್ ತಲುಪುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕ್ರಿಕೆಟ್ ಮಂಡಳಿಯು(ಪಿಸಿಬಿ)ತನ್ನ ಆಟಗಾರರಿಗೆ ತಲಾ 50 ಲಕ್ಷ ಪಾಕಿಸ್ತಾನ ರೂಪಾಯಿಗಳಷ್ಟು ದಂಡ ವಿಧಿಸಲು ನಿರ್ಧರಿಸಿದೆ. ಸಲ್ಮಾನ್ ಅಲಿ ನಾಯಕತ್ವದ ಪಾಕಿಸ್ತಾನ ತಂಡವು ಪಂದ್ಯಾವಳಿಯ ಸೂಪರ್-8 ಹಂತದಿಂದ ಹೊರಗುಳಿದಿದೆ. ತಾನಾಡಿದ ಕೊನೆಯ ಸೂಪರ್-8 ಪಂದ್ಯದಲ್ಲಿ 213 ರನ್ ಚೇಸಿಂಗ್‌ಗೆ ತೊಡಗಿದ್ದ ಶ್ರೀಲಂಕಾ ತಂಡವನ್ನು 147 ರನ್‌ಗೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ ತಂಡವು ನೆಟ್‌ರನ್‌ರೇಟ್‌ನಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಹಿಂದಿಕ್ಕುವಲ್ಲಿ ಎಡವಿತು. ಹೀಗಾಗಿ ಸೆಮಿ ಫೈನಲ್ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಐಸಿಸಿ ಟೂರ್ನಿಯಲ್ಲಿ ಸತತ ನಾಲ್ಕನೇ ಬಾರಿ ಪಾಕಿಸ್ತಾನ ತಂಡವು ಅಂತಿಮ-4ರ ಘಟ್ಟಕ್ಕೇರುವಲ್ಲಿ ವಿಫಲವಾಗಿದೆ. ಪಿಸಿಬಿ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡುವ ಬದಲಿಗೆ ಪ್ರತೀ ಆಟಗಾರನಿಗೆ 50 ಲಕ್ಷ ಪಾಕಿಸ್ತಾನಿ ರೂ. ದಂಡ ವಿಧಿಸಲು ಮುಂದಾಗಿದೆ. ಪಾಕಿಸ್ತಾನ ತಂಡವು ಟಿ-20 ವಿಶ್ವಕಪ್ ಪಂದ್ಯಾವಳಿಯಿಂದ ಬೇಗನೆ ನಿರ್ಗಮಿಸಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಫೆ.15ರಂದು ಭಾರತ ವಿರುದ್ಧ ಗ್ರೂಪ್ ಹಂತದ ಪಂದ್ಯವನ್ನು ಸೋತ ನಂತರ ಈ ಹೆಜ್ಜೆ ಇಡಲು ನಿರ್ಧರಿಸಲಾಗಿದೆ ಎಂದು ಪಾಕಿಸ್ತಾನದ ಮೂಲದ ಪತ್ರಿಕೆಯೊಂದು ವರದಿ ಮಾಡಿದೆ. ಪಾಕಿಸ್ತಾನ ತಂಡವು ಗ್ರೂಪ್ ಹಂತದಲ್ಲಿ ನಮೀಬಿಯಾ ತಂಡವನ್ನು ಸೋಲಿಸಿದ ನಂತರ ಸೂಪರ್-8 ಹಂತಕ್ಕೆ ತಲುಪಿತ್ತು. ಪಾಕ್ ತಂಡವು ನ್ಯೂಝಿಲ್ಯಾಂಡ್ ವಿರುದ್ಧ ಆಡಬೇಕಾಗಿದ್ದ ಮೊದಲ ಸೂಪರ್-8 ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಇಂಗ್ಲೆಂಡ್ ವಿರುದ್ಧ ಸೋತ ನಂತರ ಸೆಮಿ ಫೈನಲ್‌ಗೆ ತಲುಪಲು ಇತರ ತಂಡಗಳ ಫಲಿತಾಂಶವನ್ನು ಅವಲಂಬಿಸಬೇಕಾಯಿತು. ನ್ಯೂಝಿಲ್ಯಾಂಡ್ ವಿರುದ್ಧ ಇಂಗ್ಲೆಂಡ್ ತಂಡ ಗೆದ್ದ ನಂತರ ಪಾಕಿಸ್ತಾನದ ಸೆಮಿ ಫೈನಲ್ ಆಸೆ ಚಿಗುರೊಡೆದಿತ್ತು. ಆದರೆ, ಶ್ರೀಲಂಕಾ ವಿರುದ್ಧ ಕಡಿಮೆ ರನ್ ಅಂತರದಿಂದ ಗೆದ್ದ ಹಿನ್ನೆಲೆಯಲ್ಲಿ ಪಾಕ್‌ನ ನೆಟ್‌ರನ್‌ರೇಟ್ ಏರಿಕೆ ಕಂಡಿರಲಿಲ್ಲ. ನ್ಯೂಝಿಲ್ಯಾಂಡ್ ಸೆಮಿ ಫೈನಲ್‌ಗೆ ತಲುಪಿದ್ದು, ಪಾಕಿಸ್ತಾನದ ಅಭಿಯಾನವು ಅಂತ್ಯವಾಗಿದೆ. ಮಾಜಿ ನಾಯಕ ಬಾಬರ್ ಆಝಂ, ಹಾಲಿ ನಾಯಕ ಸಲ್ಮಾನ್ ಅಲಿ ಹಾಗೂ ಸೀನಿಯರ್ ಆಟಗಾರರಾದ ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ ಹಾಗೂ ಮುಹಮ್ಮದ್ ನವಾಝ್ ಟೀಕೆ ಎದುರಿಸಿದ್ದಾರೆ. ಪಾಕಿಸ್ತಾನಕ್ಕೆ ತಲುಪಿದ ನಂತರ ಸಲ್ಮಾನ್ ಅಲಿ ನಾಯಕತ್ವ ತ್ಯಜಿಸುವ ನಿರೀಕ್ಷೆ ಇದೆ.

ವಾರ್ತಾ ಭಾರತಿ 2 Mar 2026 8:39 pm

Vijayanagara | ಕರಡಿ ದಾಳಿಗೆ ಕುರಿಗಾಹಿ ಬಲಿ : ಕರಡಿಯನ್ನು ಹೊಡೆದು ಸಾಯಿಸಿದ ಗ್ರಾಮಸ್ಥರು

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹಾಲಸಾಗರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿಯಿಂದ ಕುರಿಗಾಹಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಾಲಸಾಗರ ಗ್ರಾಮದ ಓಬಣ್ಣ (30) ಎಂದು ಗುರುತಿಸಲಾಗಿದೆ. ಓಬಣ್ಣ ಅವರು  ದಿನನಿತ್ಯದಂತೆ ಕುರಿ ಮೇಯಿಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಸಂಜೆಯಾದರೂ ಮನೆಗೆ ಮರಳಿ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದರು. ಅರಣ್ಯದ ಒಳಭಾಗದಲ್ಲಿ ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಓಬಣ್ಣ ಅವರ ಮೃತದೇಹ ಪತ್ತೆಯಾಗಿತ್ತು ಎನ್ನಲಾಗಿದೆ. ಅಚಾನಕ್ ದಾಳಿ ನಡೆಸಿದ ಕರಡಿಯಿಂದ ಉಂಟಾದ ತೀವ್ರ ಗಾಯಗಳ ಪರಿಣಾಮ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ.  ಇದೇ ವೇಳೆ ದಾಳಿ ನಡೆಸಿದ ಕರಡಿಯನ್ನು ಆಕ್ರೋಶಗೊಂಡ ಗ್ರಾಮಸ್ಥರು ಹೊಡೆದು ಸಾಯಿಸಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಗುಡೆಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಪ್ರದೇಶದ ಸಮೀಪದ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಸಂಚಾರಿ ಹೆಚ್ಚುತ್ತಿರುವ ಹಿನ್ನೆಲೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಜನರ ರಕ್ಷಣೆಗಾಗಿ ಅರಣ್ಯ ಇಲಾಖೆ ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೃತ ಓಬಣ್ಣ ಅವರ ಕುಟುಂಬಕ್ಕೆ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ವಾರ್ತಾ ಭಾರತಿ 2 Mar 2026 8:38 pm

ಮಳೆನೀರಿನ ಕಾಲುವೆಯಲ್ಲಿ ಡ್ರೈನೇಜ್ ನೀರು:ಪರಿಸರದಲ್ಲಿ ರೋಗದ ಭೀತಿ

ಮಣಿಪಾಲ, ಮಾ.2: ಮಣಿಪಾಲದಿಂದ ರಾಜೀವನಗರ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಬರುವ, ಪೋಲಿಸ್ ವಸತಿ ಗೃಹದ ಬಳಿ, ಮಳೆ ನೀರು ಹರಿಯುವ ಕಾಲುವೆಯಲ್ಲಿ ಡ್ರೈನೇಜ್ ನೀರು ಹರಿಯುತ್ತಿದ್ದು ಇದರಿಂದ ಪರಿಸರದಲ್ಲಿ ಮಾರಕರೋಗಗಳು ಪಸರಿಸುವ ಭೀತಿ ಎದುರಾಗಿದೆ. ಪರಿಸರದಲ್ಲಿ ವಾಕರಿಕೆ ತರಿಸುವ ಗಬ್ಬು ವಾಸನೆ ಹಬ್ಬಿದ್ದು ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ವಸತಿಗಳು, ವಾಣಿಜ್ಯ ಕಟ್ಟಡಗಳು, ಧಾರ್ಮಿಕ ಕೇಂದ್ರಗಳು ಇಲ್ಲಿವೆ. ಕಾನೂನು ಸುವ್ಯವಸ್ಥೆ ಕರ್ತವ್ಯ ಪಾಲನೆಯಲ್ಲಿರುವ ಪೋಲಿಸ್ ಸಿಬ್ಬಂದಿಗಳ ವಸತಿ ಸಮುಚ್ಛಯಗಳು ಈ ಪರಿಸರದಲ್ಲಿದ್ದು ಉದ್ಭವಿಸಿದ ಸಮಸ್ಯೆಗೆ ತುತ್ತಾಗಿದ್ದಾರೆ. ಇಲ್ಲಿಯ ಕೊಳಚೆನೀರು ಕಾಲುವೆಯಲ್ಲಿ ಹರಿದು ವಾಯುವಿಹಾರ ತಾಣವಾಗಿರುವ ಮಣ್ಣಪಳ್ಳದ ಕೆರೆಯನ್ನು ಸೇರುವುದು ಕಂಡುಬಂದಿದೆ. ಕೆರೆಯ ಶುದ್ಧ ನೀರು ಮಲಿನವಾಗುವುದಲ್ಲದೆ, ವಿಷಕಾರಕ ನೀರಿನಿಂದಾಗಿ ಕೆರೆಯಲ್ಲಿರುವ ಜಲಚರಗಳು ನಾಶವಾಗುವ ಸಾಧ್ಯತೆಯು ಇದೆ. ಆದುದರಿಂದ ಜಿಲ್ಲಾಡಳಿತವು ಈ ಸಮಸ್ಯೆಯನ್ನು ಶೀಘ್ರಗತಿಯಲ್ಲಿ ಪರಿಹರಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 2 Mar 2026 8:36 pm

ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ: ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ ಪ್ರಾರಂಭಕ್ಕೆ ಮನವಿ

ಬೆಂಗಳೂರು, ಮಾ.2: ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಬರೆದಿದ್ದು, ನಾಗರಿಕರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ನಿಟ್ಟಿನಲ್ಲಿ ವಿಶೇಷ ವಿಮಾನಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ. ಸೋಮವಾರ ಈ ಕುರಿತು ಪತ್ರ ಬರೆದಿದ್ದು, ಮಧ್ಯ ಪ್ರಾಚ್ಯದ ಕೆಲವು ಭಾಗಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಅಲ್ಲಿ ವಾಸವಾಗಿರುವ ಹಾಗೂ ವ್ಯಾಸಂಗ ಮಾಡುತ್ತಿರುವ ಕನ್ನಡಿಗರು ಮತ್ತು ಭಾರತೀಯ ಪ್ರಜೆಗಳ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕಳವಳದೊಂದಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಸಚಿವಾಲಯವು ನೀಡಿರುವ ಮಾಹಿತಿಗಳ ಪ್ರಕಾರ, ಮಧ್ಯ ಪ್ರಾಚ್ಯದ ಹಲವು ದೇಶಗಳಲ್ಲಿ ವಾಯು ಪ್ರದೇಶಕ್ಕೆ ನಿರ್ಬಂಧ ಗಳನ್ನು ಹೇರಲಾಗಿದೆ. ಹೀಗಾಗಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳಿಗೆ ಅಡ್ಡಿ ಉಂಟಾಗಿದೆ. ಇದರ ಪರಿಣಾಮ ದುಬೈ ಹಾಗೂ ಅರಬ್ ದೇಶದಲ್ಲಿರುವ ಕನ್ನಡಿಗರ ಮೇಲೂ ಆಗಿದೆ. ಪ್ರಮುಖವಾಗಿ ದುಬೈ ವಿಮಾನ ನಿಲ್ದಾಣಗಳಲ್ಲಿ ಕನ್ನಡಿಗರು, ಭಾರತೀಯರು ಸಿಲುಕಿಕೊಂಡಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿರುವ ಕನ್ನಡಿಗರ ಕುಟುಂಬಸ್ಥರಲ್ಲೂ ಅನಿಶ್ಚಿತತೆ ಕಾಡುತ್ತಿದೆ ಮತ್ತು ಆತಂಕವನ್ನು ಉಂಟು ಮಾಡಿದೆ. ಈ ಸಂಬಂಧ ಸಂಕಷ್ಟದಲ್ಲಿರುವ ಕನ್ನಡಿಗರು ಮತ್ತು ಭಾರತೀಯ ಪ್ರಜೆಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ, ಅವರನ್ನು ಮರಳಿ ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು.ಇದೇ ವಿಚಾರವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಕನ್ನಡಿಗರು ಮತ್ತು ಭಾರತೀಯ ಪ್ರಜೆಗಳ ಹಿತದೃಷ್ಟಿಯಿಂದ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.   ಪತ್ರದಲ್ಲಿ ಪ್ರಮುಖ 5 ಅಂಶ ಉಲ್ಲೇಖಿಸಿದ ಸಿಎಂ * ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ನಾಗರಿಕರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ನಿಟ್ಟಿನಲ್ಲಿ ವಿಶೇಷ ವಿಮಾನಗಳನ್ನು ಪ್ರಾರಂಭಿಸಲು ಸಿದ್ಧತೆ ಕೈಗೊಳ್ಳಬೇಕು. * ಕನ್ನಡಿಗರು ಮತ್ತು ಇತರ ಭಾರತೀಯ ಪ್ರಜೆಗಳ ಕುಟುಂಬಗಳ ಅನುಕೂಲಕ್ಕಾಗಿ ನೋಂದಣಿ, ಟ್ರ್ಯಾಕಿಂಗ್ ಮತ್ತು ಅಗತ್ಯ ಮಾಹಿತಿಗಳನ್ನು ನೀಡುವ ನಿಟ್ಟಿನಲ್ಲಿ ಕೇಂದ್ರೀಕೃತ ಡಿಜಿಟಲ್ ವ್ಯವಸ್ಥೆಯನ್ನು ರೂಪಿಸಬೇಕು. * ಪ್ರಯಾಣದ ಸಂದರ್ಭದಲ್ಲಿ ಹೆಚ್ಚುವರಿ ಶುಲ್ಕಗಳನ್ನು ಪಡೆದುಕೊಳ್ಳದಂತೆ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. * ಪ್ರಯಾಣಿಕರಿಗೆ ಅಗತ್ಯ ಸಂದರ್ಭದಲ್ಲಿ ಮಾನವೀಯ ನೆರವು ನೀಡುವ ನಿಟ್ಟಿನಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. * ಅದೇ ರೀತಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ರಾಜ್ಯ ಸರಕಾರಗಳು ಮಾತ್ರವಲ್ಲದೆ, ವಿಮಾನಯಾನ ಸಂಸ್ಥೆಗಳ ನಡುವೆ ಸಂಪರ್ಕ ಮತ್ತು ಸಂವಹನ ಅನುಕೂಲಗೊಳಿಸುವ ನಿಟ್ಟಿಲ್ಲಿ ಅಂತರ-ಸಚಿವಾಲಯ ಕಾರ್ಯಪಡೆಯನ್ನು ರಚಿಸಬೇಕು.

ವಾರ್ತಾ ಭಾರತಿ 2 Mar 2026 8:34 pm

ಕೊಲ್ಲೂರು ದೇವಳದಲ್ಲಿ ಶಿಲಾಮಯ ಓಲಗ ಮಂಟಪ ಲೋಕಾರ್ಪಣೆ

ಕುಂದಾಪುರ, ಮಾ.2: ಆಧುನಿಕತೆಯಿಂದ ಜಗತ್ತು ಬೆಳೆಯುತ್ತಿದ್ದರೂ, ಸನಾತನ ಧರ್ಮ, ಪರಂಪರೆ, ಭಕ್ತಿ ಮಾರ್ಗ ಮತ್ತು ಧಾರ್ಮಿಕ ನಂಬಿಕೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದ್ದಾರೆ. ಸೋಮವಾರ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಹಾಲಿಂಗ ನಾಯ್ಕ್ ಮತ್ತು ಕುಟುಂಬಿಕರು ಸೇವಾರ್ಥವಾಗಿ ನೀಡಿದ ನೂತನ ಶಿಲಾಮಯ ಓಲಗ ಮಂಟಪವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಆಶೀರ್ವಚನ ನೀಡಿದರು. ಧರ್ಮದ ಪರಿಪಾಲನೆಯಾದಲ್ಲಿ ಅಲ್ಲಿ ಸುಖವನ್ನು ಕಾಣಲು ಸಾಧ್ಯ. ದುಃಖದ ಮೂಲವಾದ ಅಧರ್ಮ ಸಮಾಜದಲ್ಲಿ ಇನ್ನೂ ಉಳಿದು ಕೊಂಡಿರುವುದರಿಂದ, ಯಾವುದೇ ತಂತ್ರಜ್ಞಾನಗಳು ಬಂದಿದ್ದರೂ ದುಃಖದ ಸನ್ನಿವೇಶಗಳು ಪೂರ್ಣವಾಗಿ ಹೋಗುತ್ತಿಲ್ಲ. ನಾವು ಗಳಿಸಿದ ಪುಣ್ಯದ ಫಲಗಳು ನಿಶ್ಚಿತವಾಗಿ ದೊರಕುತ್ತದೆ ಎಂದರು. ಕೊಲ್ಲೂರು ಕ್ಷೇತ್ರದ ಅರ್ಚಕ ಕೆ.ಎನ್.ಸುಬ್ರಹ್ಮಣ್ಯ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಕ್ಷೇತ್ರ ಶೃಂಗೇರಿ ಹಾಗೂ ಕೊಲ್ಲೂರು ಕ್ಷೇತ್ರಕ್ಕೆ ನೂರಾರು ವರ್ಷಗಳ ಅವಿನಾಭಾವ ಸಂಬಂಧವಿದೆ. ಶತ-ಶತಮಾನಗಳ ಪೌರಾಣಿಕ ಇತಿಹಾಸವಿರುವ ಶ್ರೀಕ್ಷೇತ್ರ ಕೊಲ್ಲೂರಿನ ಆರಾಧ್ಯ ದೇವತೆ ಶ್ರೀಮೂಕಾಂಬಿಕಾ ಅಮ್ಮನವರು ವಿಶೇಷ ಉತ್ಸವಗಳಲ್ಲಿ ವಿರಾಜಮಾನರಾಗುವ ಓಲಗ ಮಂಟಪವನ್ನು ಶಿಲೆಗಳಿಂದ ಸುಂದರವಾಗಿ ಪುರ್ನ ನಿರ್ಮಾಣ ಮಾಡು ವುದರ ಮೂಲಕ ಮಹಾಲಿಂಗ ನಾಯ್ಕ್ ಕುಟುಂಬಿಕರು ಭಕ್ತಿಯ ಸೇವೆಯನ್ನು ಜಗನ್ಮಾತೆಗೆ ಅರ್ಪಿಸಿದ್ದಾರೆ ಎಂದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಶೃಂಗೇರಿ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ ಅಡಿಗ ಬಡಾಕೆರೆ, ಶೃಂಗೇರಿ ಪೀಠದ ಶಂಮತ್ ಭಟ್, ಕೊಲ್ಲೂರು ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಡಾ.ಪಿ.ವಿ.ಅಭಿಲಾಷ್, ಯು.ರಾಜೇಶ್ ಕಾರಂತ, ರಘುರಾಮ ದೇವಾಡಿಗ ಆಲೂರು, ಸುರೇಂದ್ರ ಶೆಟ್ಟಿ, ಧನಾಕ್ಷಿ ವಿ ಪೂಜಾರಿ, ಶ್ರೀಕ್ಷೇತ್ರ ಕೊಲ್ಲೂರಿನ ಹಿರಿಯ ಅರ್ಚಕರಾದ ಎನ್.ನರಸಿಂಹ ಅಡಿಗ, ಶ್ರೀಧರ ಅಡಿಗ, ರಾಮಚಂದ್ರ ಅಡಿಗ, ಕಾಳಿದಾಸ ಭಟ್, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಡಾ.ಅತುಲ್ ಕುರ್ಮಾ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು, ಉದ್ಯಮಿಗಳಾದ ಕೃಷ್ಣಮೂರ್ತಿ ತೀರ್ಥಹಳ್ಳಿ, ನಿತೀಶ್ ಬಾಯ್ ಗಾಂಧಿ ಸೂರತ್, ಭೋಜ ನಾಯ್ಕ್, ನಾರಾಯಣ ನಾಯ್ಕ್ ಬ್ರಹ್ಮೇರಿ, ಚಂದ್ರಶೇಖರ ನಾಯ್ಕ್ ಸೆಳ್ಕೋಡು, ಉಪನ್ಯಾಸಕ ಉದಯ ನಾಯ್ಕ್ ಉಪಸ್ಥಿತರಿದ್ದರು. ಪತ್ರಕರ್ತ ರಾಜೇಶ್ ಕೆ.ಸಿ ನಿರೂಪಿಸಿದರು. ಓಲಗ ಮಂಟಪದ ಸೇವಾಕರ್ತರಾದ ಮಹಾಲಿಂಗ ನಾಯ್ಕ್ ಮತ್ತು ಮಲ್ಲಿಕಾ ಎಂ ನಾಯ್ಕ್ ದಂಪತಿಯನ್ನು ಗೌರವಿಸಲಾಯಿತು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಓಲಗ ಮಂಟಪದವರೆಗೆ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮಿಗಳನ್ನು ವೈಭವದ ಮೆರವಣಿಗೆಯ ಮೂಲಕ ಕರೆತರಲಾಯಿತು.

ವಾರ್ತಾ ಭಾರತಿ 2 Mar 2026 8:34 pm

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣ : ಸಚಿವ ಶರಣಬಸಪ್ಪ ದರ್ಶನಾಪುರ ಖಂಡನೆ

ಯಾದಗಿರಿ: ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಮವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಘಟನೆ ಎನ್ನುವಂತದ್ದೇ ಅಲ್ಲ. ದಾಖಲಾಗಿರುವ ದೂರು ಸಂಪೂರ್ಣ ತಪ್ಪಾಗಿದೆ. ವಿಡಿಯೋವನ್ನು ಗಮನಿಸಿದ್ದೇನೆ. ಅದರಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲು ಯೋಗ್ಯವಾದ ಯಾವುದೇ ಸನ್ನಿವೇಶಗಳಿಲ್ಲ. ಗುರು-ಶಿಷ್ಯರ ಒಡನಾಟವನ್ನು ಸಾಮಾಜಿಕ ಜಾಲತಾಣ ಹಾಗೂ ಕೆಲ ಮಾಧ್ಯಮಗಳು ತಿರುಚಿ ತೋರಿಸಿ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿದರು. ಮುತ್ಯಾ ಅವರ ತಂದೆ-ತಾಯಿ ಭೇಟಿ ನೀಡಿ ಅಳಲನ್ನು ವ್ಯಕ್ತಪಡಿಸಿರುವುದಾಗಿ ತಿಳಿಸಿದ ಸಚಿವರು, ಆಯೋಗಗಳೂ ಅವಸರದಲ್ಲಿ ಕ್ರಮ ಕೈಗೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗಲ್ಪ್ ರಾಷ್ಟ್ರಗಳಲ್ಲಿ ಯುದ್ಧದಿಂದ ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು. ಬಜೆಟ್ ನಂತರ ಮುಖ್ಯಮಂತ್ರಿ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅಂತಹ ಯಾವುದೇ ವಿಚಾರವಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ. ಉಳಿದದ್ದು ಮಾಧ್ಯಮ ಸೃಷ್ಟಿ” ಎಂದರು. ಈ ವೇಳೆ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ, ಜಿಲ್ಲಾ ವಕ್ತಾರ ಶಾಮಸನ್ ಮಾಳಿಕೇರಿ, ಯುವ ಮುಖಂಡ ಬಸ್ಸುಗೌಡ ಬಿಳ್ಹಾರ್, ಹನುಮಂತ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಮುತ್ಯಾ ನಿರ್ದೋಷಿ ಹೊರಬರುತ್ತಾರೆ: ಶಾಸಕ ತುನ್ನೂರು ವಿಶ್ವಾಸ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ಅವರು ಶೀಘ್ರದಲ್ಲೇ ನಿರ್ದೋಷಿಯಾಗಿ ಹೊರಬರುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು. ಏಳು ವರ್ಷದ ಮಗು ಪಾಲಕರೊಂದಿಗೆ ಆಶೀರ್ವಾದ ಪಡೆಯಲು ಭೇಟಿ ನೀಡಿದ ವೇಳೆ ಗುರುವಾಗಿ ಮುತ್ಯಾ ಮಗುವನ್ನು ಪ್ರೀತಿಯಿಂದ ಅಪ್ಪಿಕೊಂಡು ಮಾತಾಡಿದ್ದಾರೆ. ಇದನ್ನು ಅನುಚಿತ ವರ್ತನೆ ಎಂದು ಹೇಳುವುದು ಸಮಂಜಸವಲ್ಲ. ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗೊಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ವಾರ್ತಾ ಭಾರತಿ 2 Mar 2026 8:29 pm

ಸಂಜೆಯಿಂದ ಸೀಮಿತ ವಿಮಾನಯಾನ ಮತ್ತೆ ಪ್ರಾರಂಭ: ಎಮಿರೇಟ್ಸ್ ಏರ್ ಹೇಳಿಕೆ

ದುಬೈ, ಮಾ. 2: ದುಬೈ ಮೂಲದ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಸೋಮವಾರ ಸಂಜೆಯಿಂದ ಸೀಮಿತ ಸಂಖ್ಯೆಯ ವಿಮಾನಗಳ ಹಾರಾಟವನ್ನು ಮರುಪ್ರಾರಂಭಿಸುವುದಾಗಿ ಪ್ರಕಟಿಸಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆಗಳನ್ನು ನಿಯಮಿತವಾಗಿ ಮರುಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದೆ. “ಈ ಹಂತದಲ್ಲಿ ಈ ಹಿಂದೆ ಬುಕಿಂಗ್ ಮಾಡಿರುವ ಪ್ರಯಾಣಿಕರಿಗೆ ಆದ್ಯತೆ ನೀಡಲಾಗುತ್ತದೆ. ಸೀಮಿತ ಹಾರಾಟಗಳಲ್ಲಿ ಪ್ರಯಾಣಿಸಲು ಮರುಬುಕಿಂಗ್ ಮಾಡಲಾದ ಗ್ರಾಹಕರನ್ನು ಎಮಿರೇಟ್ಸ್ ನೇರವಾಗಿ ಸಂಪರ್ಕಿಸಲಿದೆ,” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಪ್ರಯಾಣಿಕರು ಸೂಚನೆ ಇಲ್ಲದೆ ವಿಮಾನ ನಿಲ್ದಾಣಕ್ಕೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ನೇರವಾಗಿ ಮಾಹಿತಿ ನೀಡದ ಹೊರತು ವಿಮಾನ ನಿಲ್ದಾಣಕ್ಕೆ ಬರಬೇಡಿ ಎಂದು ಮನವಿ ಮಾಡಲಾಗಿದೆ. ಇದಲ್ಲದೆ ಮುಂದಿನ ಅಧಿಕೃತ ಸೂಚನೆ ಬರುವವರೆಗೆ ಉಳಿದ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದೂ ಸಂಸ್ಥೆ ಸ್ಪಷ್ಟಪಡಿಸಿದೆ.

ವಾರ್ತಾ ಭಾರತಿ 2 Mar 2026 8:27 pm

ಕೋಟೇಶ್ವರ ದೇವಾಡಿಗ ಸಂಘದ ರಜತ ಮಹೋತ್ಸವ ಸಮಾರಂಭ

ಕುಂದಾಪುರ, ಮಾ.2: ಅನಾದಿ ಕಾಲದಿಂದ ದೇವರನ್ನು ತೃಪ್ತಿ ಪಡಿಸುವ ಕೆಲಸವನ್ನು ಮಾಡಿಕೊಂಡು ಬಂದಿರುವ ದೇವಾಡಿಗ ಸಮಾಜ ದೇವರ ವಿಶೇಷ ಪ್ರೀತಿಗೆ ಪಾತ್ರವಾಗಿದೆ ಎಂದು ಬಾಳೆಕುದ್ರು ಹಂಗಾರಕಟ್ಟೆ ಮಠದ ಪೀಠಾಧಿಪತಿ ಶ್ರೀವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಹೇಳಿದ್ದಾರೆ. ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆದ ಕೋಟೇಶ್ವರ ದೇವಾಡಿಗ ಸಮಾಜ ಸೇವಾ ಸಂಘದ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ದೇವಾಡಿಗ ಸಮಾಜ ಬಂಧುಗಳಲ್ಲಿ ಇರುವ ದೇವರ ಮೇಲಿನ ಶೃದ್ಧೆ ಹಾಗೂ ನಂಬಿಕೆಗಳು ಉಲ್ಲೇಖನೀಯ. ಭಗವಂತನ ಮೇಲಿನ ಸ್ವಾರ್ಥ ರಹಿತವಾದ ಭಕ್ತಿ ಹಾಗೂ ಕಠಿಣ ದುಡಿಮೆಗಳು ನಮ್ಮನ್ನು ಸಂಸ್ಕಾರವಂತರನ್ನಾಗಿಸುತ್ತದೆ. ನಾವು ಬೆಳೆಯುವುದರೊಂದಿಗೆ ಸಮಾಜವನ್ನು ಬೆಳೆಸಬೇಕು ಎಂದರು. ಕಾರ್ಯಕ್ರಮವನ್ನು ವಿಶ್ವ ದೇವಾಡಿಗ ಮಹಾ ಮಂಡಲ ಅಧ್ಯಕ್ಷ ಧರ್ಮಪಾಲ ದೇವಾಡಿಗ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀನಿವಾಸ ದೇವಾಡಿಗ ಮಾರ್ಕೋಡು, ವಿಠ್ಠಲ ದೇವಾಡಿಗ, ಯೋಗೀಶ್ ದೇವಾಡಿಗ ದೊಡ್ಡೋಣಿ, ಲೋಕೇಶ್ ಅಂಕದಕಟ್ಟೆ, ಸುರ್ಧೀ ದೇವಾಡಿಗ, ಪ್ರತೀಕ್ಷಾ ಸಿ.ದೇವಾಡಿಗ, ಸಂಘದ ಮಾಜಿ ಅಧ್ಯಕ್ಷರು ಹಾಗೂ ಮಹಿಳಾ ಘಟಕದ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲ್ಲೂಕು ದೇವಾಡಿಗ ಒಕ್ಕೂಟದ ಅಧ್ಯಕ್ಷ ರಘುರಾಮ್ ದೇವಾಡಿಗ ಆಲೂರು, ಮುಂಬೈ ದೇವಾಡಿಗ ಸಂಘದ ಅಧ್ಯಕ್ಷ ರವಿ ದೇವಾಡಿಗ, ಬೆಂಗಳೂರು ದೇವಾಡಿಗ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ವಂಡ್ಸೆ, ಶ್ರೀಏಕನಾಥೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜನಾರ್ದನ ದೇವಾಡಿಗ, ಏಕನಾಥೇಶ್ವರಿ ಕ್ರೆಡಿಟ್ ಕೋ ಒಪರೇಟಿವ್ ಸೊಸೈಟಿ ಅಧ್ಯಕ್ಷ ರತ್ನಾಕರ ಜಿ.ಎಸ್., ಕುಂದಾಪುರ ದೇವಾಡಿಗ ಸಂಘದ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ದೇವಬಂಧು ಸೊಸೈಟಿ ಅಧ್ಯಕ್ಷ ಸಂಜೀವ ದೇವಾಡಿಗ, ಕೋಟೇಶ್ವರ ಗ್ರಾಪಂ ಮಾಜಿ ಅಧ್ಯಕ್ಷೆ ರಾಗಿಣಿ ದೇವಾಡಿಗ, ಸಂಘದ ಗೌರವ ಅಧ್ಯಕ್ಷ ಚಂದ್ರಶೇಖರ್ ದೇವಾಡಿಗ, ಮಹಿಳಾ ಸಂಘದ ಅಧ್ಯಕ್ಷೆ ಶ್ಯಾಮಲ ದೇವಾಡಿಗ, ಕಾರ್ಯದರ್ಶಿ ಆಶ್ರಿತಾ ದೇವಾಡಿಗ, ಯುವ ಸಂಘಟನೆ ಅಧ್ಯಕ್ಷ ವಿನೋದ್ ದೇವಾಡಿಗ, ಕಾರ್ಯದರ್ಶಿ ಹರೀಶ್ ದೇವಾಡಿಗ, ಕೋಶಾಧಿಕಾರಿ ಆನಂದ ದೇವಾಡಿಗ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಶ್ರೀನಿವಾಸ್ ದೇವಾಡಿಗ ಸ್ವಾಗತಿಸಿದರು. ಕಾರ್ಯದರ್ಶಿ ಪ್ರದೀಪ್ ದೇವಾಡಿಗ ವರದಿ ವಾಚಿಸಿದರು. ಅಧ್ಯಕ್ಷ ವಿಜೇತ ಕಾರ್ಯಕ್ರಮ ನಿರೂಪಿಸಿದರು. ರವಿ ದೇವಾಡಿಗ ವಂದಿಸಿದರು.

ವಾರ್ತಾ ಭಾರತಿ 2 Mar 2026 8:25 pm

ಗಲ್ಫ್ ನಗರಗಳ ಮೇಲೆ ಮುಂದುವರಿದ ಇರಾನ್ ದಾಳಿ : ಅಬುದಾಭಿ, ದುಬೈ, ದೋಹಾ ಮೇಲೆ ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ

ಅಬುದಾಭಿ,ಮಾ.2: ಇರಾನ್‌ನ ಪರಮೋಚ್ಚ ನಾಯಕ ಅಯಾತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಇರಾನ್ ತನ್ನ ಕ್ಷಿಪಣಿ ದಾಳಿಯನ್ನು ತೀವ್ರಗೊಳಿಸಿದ್ದು, ಸೋಮವಾರವೂ ಗಲ್ಫ್ ಪ್ರಾಂತದ ಪ್ರಮುಖ ನಗರಗಳಾದ ಅಬುದಾಭಿ, ದುಬೈ, ದೋಹಾ ಕ್ಷಿಪಣಿ , ಡ್ರೋನ್ ದಾಳಿಗೆ ತುತ್ತಾಗಿವೆ. ಇರಾನ್‌ನ ನಗರಗಳ ಮೇಲೆ ಅಮೆರಿಕ ಹಾಗೂ ಇಸ್ರೇಲ್ ವಾಯುದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ, ಅಮೆರಿಕನ್ ಸೇನಾನೆಲೆಗಳಿರುವ ಗಲ್ಫ್ ರಾಷ್ಟ್ರಗಳ ಮೇಲೆ ದೊಟ್ಟ ಮಟ್ಟದಲ್ಲಿ ಪ್ರತೀಕಾರ ದಾಳಿ ನಡೆಸುತ್ತಿರುವುದಾಗಿ ಇರಾನ್‌ನ ಕ್ರಾಂತಿಕಾರಿಗಳ ಪಡೆ (ಐಆರ್‌ಜಿಸಿ) ಘೋಷಿಸಿದೆ. ಖತರ್ ರಾಜಧಾನಿ ದೋಹಾ, ಬಹರೈನ್‌ನ ರಾಜಧಾನಿ ಮನಾಮ ಹಾಗೂ ಯುಎಇನ ಅತ್ಯಂತ ಜನನಿಬಿಡ ನಗರ ಅಬುದಾಭಿಯಲ್ಲಿ ಸತತ ಮೂರನೇ ದಿನವೂ ಭಾರೀ ಸ್ಪೋಟದ ಸದ್ದುಗಳು ಕೇಳಿಬಂದಿವೆ. ಬಹರೈನ್‌ನ ಬಂದರುನಗರ ಸಲ್ಮಾನ್‌ನಲ್ಲಿ ಇರಾನ್‌ನ ಕ್ಷಿಪಣಿಯೊಂದನ್ನು ಅಡ್ಡಗಟ್ಟಿದ ಸಂದರ್ಭ, ವಿದೇಶಿ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಇದರೊಂದಿಗೆ ಗಲ್ಫ್ ಪ್ರದೇಶಗಳಲ್ಲಿ ಇರಾನ್‌ನ ದಾಳಿಗಳಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೇರಿದೆ. ಯುಎಇನಲ್ಲಿ ಮೂವರು, ಕುವೈತ್, ಓಮನ್ ಮತ್ತು ಬಹರೈನ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇರಾನ್ ಮೇಲೆ ತನ್ನ ಕ್ಷಿಪಣಿ ದಾಳಿಗಳನ್ನು ತೀವ್ರಗೊಳಿಸಿರುವುದಾಗಿ ಇಸ್ರೇಲ್ ಸೇನೆ ಘೋಷಿಸಿದ ಬಳಿಕ, ಇಸ್ರೇಲ್‌ ನಗರಗಳಾದ ಟೆಲ್‌ಅವೀವ್ ಹಾಗೂ ಜೆರುಸಲೇಂಗಳ ಮೇಲೆಯೂ ಇರಾನ್ ಪ್ರತಿ ದಾಳಿ ನಡೆಸಿದೆ. ಟೆಲ್‌ಅವೀವ್ ಹಾಗೂ ಜೆರುಸಲೇಂನೆಡೆಗೆ ಧಾವಿಸಿ ಬರುತ್ತಿದ್ದ ಹಲವಾರು ಕ್ಷಿಪಣಿಗಳನ್ನು ನಾಶಪಡಿಸಲಾಗಿದೆ. ರವಿವಾರ ಸಂಜೆಯಿಂದ ದೋಹಾ, ರಿಯಾದ್, ದುಬೈ ಹಾಗೂ ಅಬುದಾಭಿ ಸೇರಿದಂತೆ ಹಲವಾರು ಗಲ್ಫ್ ನಗರಗಳ ಮೇಲೆ ಟೆಹರಾನ್ ಸರಣಿ ದಾಳಿಗಳನ್ನು ಆರಂಭಿಸಿದೆ. ಬಹರೈನ್‌ನಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗಲ್ಲಿ ಐವರು ಮೃತಪಟ್ಟಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆಂದು ಇಸ್ರೇಲ್‌ ಅಧಿಕಾರಿಗಳು ತಿಳಿಸಿದ್ದಾರೆ. ದುಬೈನ ಮೆಡಿಯಾ ಸಿಟಿ ಹಾಗೂ ಜೆಬೆಲ್ ಅಲಿ ಬಂದರು ಪ್ರದೇಶದಲ್ಲಿ ಹಾರಾಡುತ್ತಿದ್ದ ಎರಡು ಇರಾನಿಯನ್‌ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ. ಯುಎಇ ಮೇಲೆ ಇರಾನ್ ಈವರೆಗೆ 165 ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಅವುಗಳಲ್ಲಿ 152 ಕ್ಷಿಪಣಿಗಳನ್ನು ನಾಶಪಡಿಸಲಾಗಿದೆ ಹಾಗೂ ಎರಡು ಕ್ರೂಸ್ ಕ್ಷಿಪಣಿಗಳನ್ನು ಭೇದಿಸಲಾಗಿದೆ. ಈವರೆಗೆ ಒಟ್ಟಾರೆ 541 ಡ್ರೋನ್‌ಗಳನ್ನು ಪತ್ತೆ ಹಚ್ಚಲಾಗಿದ್ದು,ಆ ಪೈಕಿ 506 ಕ್ಷಿಪಣಿಗಳನ್ನು ಅಡ್ಡಗಟ್ಟಿ,ನಾಶಪಡಿಸಲಾಗಿದೆ ಎಂದು ಆ ದೇಶದ ರಕ್ಷಣಾ ಸಚಿವಾಲಯ ತಿಳಿಸಿ ಇರಾನ್ ಕ್ಷಿಪಣಿ ದಾಳಿಗಳನ್ನು ತೀವ್ರಗೊಳಿಸಿದ ಬೆನ್ನಲ್ಲೇ ಆ ದೇಶದೊಂದಿಗೆ ಯುಎಇ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಯುಎಇಲ್ಲಿರುವ ಇರಾನಿಯನ್ ರಾಯಭಾರಿ ಕಚೇರಿಯನ್ನು ಮುಚ್ಚಲಾಗಿದೆ.

ವಾರ್ತಾ ಭಾರತಿ 2 Mar 2026 8:24 pm

ಜಿಟಿಟಿಸಿ ವಿದ್ಯಾರ್ಥಿಗಳಿಗೆ ಕೌಶಲ್ಯ ಜೊತೆಗೆ ಇಂಗ್ಲಿಷ್ ಜ್ಞಾನ ಅಗತ್ಯ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಯಾದಗಿರಿ: ಜಿಟಿಟಿಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಲಭ್ಯವಿದ್ದರೂ, ಕೌಶಲ್ಯದ ಜೊತೆಗೆ ಮಾತನಾಡುವ ಶಿಸ್ತು ಹಾಗೂ ಇಂಗ್ಲಿಷ್ ಜ್ಞಾನವನ್ನು ಅಳವಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಹೇಳಿದರು. ಸೈದಾಪುರ ಸಮೀಪದ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸರಕಾರಿ ಉಪಕರಣಗಾರ ತರಬೇತಿ ಕೇಂದ್ರ (GTTC)ಕ್ಕೆ ದಿಢೀರ್ ಭೇಟಿ ನೀಡಿದ ಸಚಿವರು, ಕೇಂದ್ರದ ವ್ಯವಸ್ಥೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಜಿಟಿಟಿಸಿ ಕೋರ್ಸ್‌ಗಳ ಮೂಲಕ ಲಭ್ಯವಾಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ದೇಶದಲ್ಲಿಯೇ ಅಲ್ಲದೆ ವಿದೇಶಗಳಲ್ಲಿಯೂ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಟಿಎನ್‌ಸಿ, ಇಡಿಯಂ, ಪಿಲ್ಲಿಂಗ್ ಮಷಿನ್ ಸೇರಿದಂತೆ ವಿವಿಧ ಯಂತ್ರೋಪಕರಣಗಳಿರುವ ಕಾರ್ಯಾಗಾರಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಂದ ವಾಸ್ತವ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು. ಹಾಸ್ಟೆಲ್ ಹಾಗೂ ಊಟದ ವ್ಯವಸ್ಥೆ, ಬಸ್ ನಿಲುಗಡೆ ಸೇರಿದಂತೆ ಅಗತ್ಯ ಸೌಲಭ್ಯಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು. ತರಗತಿ ಕೊಠಡಿಗಳಿಗೆ ಬಣ್ಣ ಹಚ್ಚಿಸಿ, ಸ್ವಚ್ಛತೆ ಹಾಗೂ ವ್ಯವಸ್ಥೆಯನ್ನು ಸುಧಾರಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಲು ಆಡಳಿತ ಮಂಡಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಟಿಟಿಸಿ ಪ್ರಾಂಶುಪಾಲ ಶಿವಕುಮಾರ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 2 Mar 2026 8:24 pm