ಕುಂದಾಪುರ | ಸಂವಿಧಾನದ ಆಶಯ ಪೂರ್ಣಪ್ರಮಾಣದಲ್ಲಿ ಈಡೇರಿಸುವಲ್ಲಿ ಎಲ್ಲರ ಪಾತ್ರ ಮುಖ್ಯ: ವಿನೋದ್ ಕ್ರಾಸ್ತ
ಕುಂದಾಪುರ, ನ.26: ನಮ್ಮದು ಅನೇಕ ಧರ್ಮಗಳಿರುವ ದೇಶ. ಎಲ್ಲ ಧರ್ಮಗಳಿಗೂ ಅವರದೇ ಆದ ಧರ್ಮಗ್ರಂಥಗಳಿವೆ. ಆದರೆ ಅದೆಲ್ಲದಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ನಮ್ಮ ದೇಶದ ಸಂವಿಧಾನವೇ ಶ್ರೇಷ್ಠ ಗ್ರಂಥ. ಪವಿತ್ರವಾದ ಸಂವಿಧಾನದ ಆಶಯಗಳು ಪೂರ್ಣಪ್ರಮಾಣದಲ್ಲಿ ಈಡೇರಿಸುವಲ್ಲಿ ಎಲ್ಲರ ಪಾತ್ರವೂ ಮುಖ್ಯ ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ ಹೇಳಿದ್ದಾರೆ. ಕುಂದಾಪುರ ತಾಲೂಕು ಆಡಳಿತ, ತಾ.ಪಂ., ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಕುಂದಾಪುರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಜೂನಿಯರ್ ಕಾಲೇಜಿನ ಕಲಾ ಮಂದಿರದಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್. ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಪ್ರಭಾಕರ ವಿ., ಕುಂದಾಪುರ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ದಲಿತ ಸಂಘಟನೆಯ ಪ್ರಮುಖರಾದ ರಾಜು ಬೆಟ್ಟಿನಮನೆ, ದೀಪಾ ಜಪ್ತಿ, ಮತ್ತಿತರರು ಉಪಸ್ಥಿತರಿದ್ದರು. ಯುವ ಲೇಖಕ ಮಂಜುನಾಥ ಹಿಲಿಯಾಣ ಸಂವಿಧಾನ ದಿನಾಚರಣೆಯ ಕುರಿತಂತೆ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಕುಲಾಲ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಸ್ಟೆಲ್ ಮೇಲ್ವಿಚಾರಕಿ ರಾಧಿಕಾ ರಾಣಿ ಕಾರ್ಯಕ್ರಮ ನಿರೂಪಿಸಿದರು. ಸಂವಿಧಾನ ದಿನಾಚರಣೆ ಅಂಗವಾಗಿ ಶಾಸ್ತ್ರಿ ಸರ್ಕಲ್ ನಿಂದ ಜೂನಿಯರ್ ಕಾಲೇಜಿನವರೆಗೆ ಸಂವಿಧಾನ ಜಾಥಾ ನಡೆಯಿತು. ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮೀ ಎಸ್.ಆರ್. ಜಾಥಾಗೆ ಚಾಲನೆ ನೀಡಿದರು.
ಮಂಗಳೂರು, ನ.26: ವಿವಿಧ ನಮೂನೆಯ ಅಲಂಕಾರಿಕ ದೀಪ, ಫ್ಯಾನ್ ಗಳು ಮತ್ತಿತರ ಇಲೆಕ್ಟ್ರಿಕ್ ಸಾಧನಗಳ ಮಾರಾಟದಲ್ಲಿ ಕರಾವಳಿ ಕರ್ನಾಟಕದ ಮುಂಚೂಣಿ ಸಂಸ್ಥೆಯಾದ ನಗರದ ಕದ್ರಿ ರಸ್ತೆಯ ಬಂಟ್ಸ್ ಹಾಸ್ಟೆಲ್ ಬಳಿಯಿರುವ ’ಇಲೆಕ್ಟ್ರಿಕಲ್ ಪಾಯಿಂಟ್’ ನ. 27ರಂದು ಬೆಳ್ಳಿ ಹಬ್ಬ ಸಂಭ್ರಮ ಆಚರಿಸಲಿದೆ. 2000ರ ನ.27ರಂದು ಸಣ್ಣ ಪ್ರಮಾಣದಲ್ಲಿ ಆರಂಭಗೊಂಡ ಸಂಸ್ಥೆ ಇಂದು ಬೃಹದಾಗಿ ಬೆಳೆದಿದೆ. ವಿವಿಧ ಕಂಪೆನಿಗಳ ಅಲಂಕಾರಿಕ ದೀಪಗಳು, ಫ್ಯಾನ್ ಗಳು, ವಾಟರ್ ಹೀಟರ್ ಗಳು, ಎಲ್ಇಡಿ ಟ್ಯೂಬ್ ಫಿಟ್ಟಿಂಗ್ಸ್, ಎಲ್ಇಡಿ ಪ್ಯಾನಲ್ ಫಿಟ್ಟಿಂಗ್ಸ್, ಎಲ್ಇಡಿ ಸ್ಟ್ರಿಪ್ ಲೈಟ್ಸ್, ಎಲ್ಇಡಿ ಬಲ್ಬ್ಸ್ ಮೊಡ್ಯುಲರ್ ಸ್ವಿಚಸ್ ಮತ್ತಿತರ ಸಾಧನೆಗಳ ಮಾರಾಟದಲ್ಲಿ ಕರಾವಳಿ ಕರ್ನಾಟಕದ ಮುಂಚೂಣಿ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಸಂಸ್ಥೆಯ ಗ್ರಾಹಕಪರ ಕಾಳಜಿ, ಗ್ರಾಹಕರ ಸತತ ಪ್ರೀತಿ ವಿಶ್ವಾಸ ಗಳಿಸುವಲ್ಲಿ ’ಇಲೆಕ್ಟ್ರಿಕಲ್ ಪಾಂಟ್’ಗೆ ಸಹಕಾರಿಯಾಗಿದೆ. ಸಂಸ್ಥೆಯ ವಿಶಾಲ ಸ್ಥಳಾವಕಾಶ, ದೇಶ-ವಿದೇಶಗಳ ವಿವಿಧ ಖ್ಯಾತ ಕಂಪೆನಿಗಳ ಉತ್ಪಾದನೆಗಳು, ಸಾಮಗ್ರಿಗಳ ಅತ್ಯುತ್ತಮ ಜೋಡಣೆ ಮತ್ತು ಪ್ರದರ್ಶನ, ಆಯ್ಕೆಯಲ್ಲಿ ನುರಿತ ಸಿಬ್ಬಂದಿಯ ಮಾರ್ಗದರ್ಶನ ಇಂತಹ ಹಲವಾರು ಅಂಶಗಳು ’ಇಲೆಕ್ಟ್ರಿಕಲ್ ಪಾಂಟ್’ನ ಉನ್ನತಿಗೆ ಕಾರಣವಾಗಿವೆ. ’ಇಲೆಕ್ಟ್ರಿಕಲ್ ಪಾಂಟ್’ ವಿವಿಧ ಖ್ಯಾತ ಕಂಪೆನಿಗಳ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ನೇರ ಮಾರಾಟಗಾರರಾಗಿದ್ದು ಅಲಂಕಾರಿಕ ದೀಪಗಳು, ಫ್ಯಾನ್, ವಿವಿಧ ನಮೂನೆಯ ಎಲ್ಇಡಿ ಸಾಮಗ್ರಿಗಳನ್ನು ಅಧಿಕ ಪ್ರಮಾಣದಲ್ಲಿ ಮಾರಾಟ ಮಾಡುವ ಕಾರಣ ಕಡಿಮೆ ಬೆಲೆಗಳಲ್ಲಿ ಗ್ರಾಹಕರಿಗೆ ಒದಗಿಸಲು ಸಾಧ್ಯವಾಗಿದೆ. ವಿವಿಧ ಸಾಧನಗಳಿಗೆ ವಿವಿಧ ಪ್ರಮಾಣದ ರಿಯಾಯಿತಿಯಿದ್ದು, ಅಲಂಕಾರ ದೀಪಗಳಿಗೆ ಶೇ.45 ರಿಯಾಯಿತಿ ನೀಡಲಾಗುತ್ತದೆ. ಬೆಳ್ಳಿ ಹಬ್ಬ ಮಾರಾಟ ಯೋಜನೆ ಮತ್ತು ಉಡುಗೊರೆ : ’ಇಲೆಕ್ಟ್ರಿಕಲ್ ಪಾಂಟ್’ ಬೆಳ್ಳಿ ಹಬ್ಬ ಮಾರಾಟ ಯೋಜನೆಯನ್ನು ಹಮ್ಮಿಕೊಂಡಿದೆ. ನ.27ರಿಂದ 2026 ಜನವರಿ 10ರವರೆಗೆ ಚಾಲ್ತಿಯಲ್ಲಿರುವ ಈ ಯೋಜನೆಯಲ್ಲಿ ಇಲೆಕ್ಟ್ರಿಕಲ್ ಉಪಕರಣ ಮತ್ತು ಸಾಮಗ್ರಿಗಳು ರಿಯಾಯಿತಿ ದರದಲ್ಲಿ ದೊರೆಯಲಿವೆ. 25ನೇ ವರ್ಷದ ಪ್ರಯುಕ್ತ 25,000 ರೂ.ಗೆ ಮೇಲ್ಪಟ್ಟ ಖರೀದಿಗೆ ಸ್ಥಳದಲ್ಲೇ ಖಚಿತ ಉಡುಗೊರೆ ದೊರೆಯಲಿದೆ. ಅಲಂಕಾರಿಕ ದೀಪಗಳಿಗೆ ಎಂದಿನಂತೆ ಶೇ.45ರಂತೆ ರಿಯಾಯಿತಿ ಇದೆ. ರವಿವಾರ ಹೊರತು ಇತರ ದಿನಗಳಲ್ಲಿ (ರಜಾ ದಿನಗಳಲ್ಲಿಯೂ) ’ಇಲೆಕ್ಟ್ರಿಕಲ್ ಪಾಂಟ್’ ಶೋರೂಮ್ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ತೆರೆದಿರುತ್ತದೆ. ಕ್ರೆಡಿಟ್ ಕಾರ್ಡ್ ಪಾವತಿಗೆ ಅವಕಾಶವಿದೆ. ಸಂಸ್ಥೆಯ ವಿಳಾಸ : ’ಇಲೆಕ್ಟ್ರಿಕಲ್ ಪಾಯಿಂಟ್’, ಇಲೆಕ್ಟ್ರಿಕಲ್ ಪಾಯಿಂಟ್ ಕಾಂಪ್ಲೆಕ್ಸ್, ಬಂಟ್ಸ್ ಹಾಸ್ಟೆಲ್ ಬಳಿ, ಸಿ.ವಿ. ನಾಯಕ್ ಹಾಲ್ ಎದುರುಗಡೆ, ಕದ್ರಿ ರಸ್ತೆ, ಮಂಗಳೂರು - 575 003. ದೂ.ಸಂ: (0824-2447778 ವಾಟ್ಸ್ಆ್ಯಪ್: 9141691310. Email: electricalpoint@gmail.com Website: electricalpoint.net
ಪಂಜಾಬ್ | ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ನಾಲ್ವರ ಸೆರೆ
ಟ್ರೈಸಿಟಿ, ಪಾಟಿಯಾಲ ಪ್ರಾಂತ್ಯಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದ ಬಂಧಿತರು
ರಾಯಚೂರು | ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ, ಜಾಥಾ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಯಿತು. ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ಪವನ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಈಶ್ವರ ಕಾಂದೂ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ನಾಗೇಂದ್ರ ಮಠಮಾರಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಜಾಥಾವು ಬಸವೇಶ್ವರ ವೃತ್ತ, ಚಂದ್ರಮೌಳೇಶ್ವರ ವೃತ್ತ, ತೀನ್ ಕಂದಿಲ್ ವೃತ್ತ, ತಹಶೀಲ್ದಾರ್ ಕಚೇರಿ, ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಾಗಿ ನಗರದ ಶ್ರೀ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಸಮಾಪ್ತಿಯಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾಧಿಕಾರಿ ನಿತೀಶ್ ಕೆ ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಸುಭಾಷ್ ಚಂದ್ರ ಅವರು ವಿಶೇಷ ಉಪನ್ಯಾಸ ನೀಡಿದರು. ಜಾನ್ವೆಸ್ಲಿ ಟಿ ಕಾತರಕಿ ಅವರು ಡಾ.ಬಿ.ಆರ್.ಅಂಬೇಡ್ಕರ್ ವೇಷ ಧರಿಸಿ ಗಮನ ಸೆಳೆದರು. ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷರು ಹಾಗೂ ಕಲಾವಿದರಾದ ಪರಶುರಾಮ ಅರೋಲಿ ಅವರು ಕಾರ್ಯಕ್ರಮದಲ್ಲಿ ಪ್ರಾರ್ಥಿಸಿ, ಅಂಬೇಡ್ಕರ್ ಗೀತೆಗಳ ಗಾಯನ ನಡೆಸಿಕೊಟ್ಟರು. ಈ ವೇಳೆ ವಿವಿಧ ಸಂಘಟನೆಗಳ ಮುಖಂಡರಾದ ಕೆ.ಇ.ಕುಮಾರ, ಎಂ.ಆರ್.ಭೇರಿ, ಅನಿತಾ ನವಲಕಲ್, ನಿವೇದಿತಾ ಎನ್, ವಿಶ್ವನಾಥ ಪಟ್ಟಿ, ಬಸವರಾಜ ಸಾಸಲಮರಿ, ಗಿರಿಯಪ್ಪ ನೆಲಹಾಳ, ಕರುಣಕುಮಾರ ಕಟ್ಟಿಮನಿ, ಪಿ.ಪ್ರಭಾಕರ, ಪ್ರಾಣೇಶ ಮಂಚಾಳ, ರವಿ ದಾದಸ, ಎಂ.ವೆಂಕಟೇಶ ಅರೋಲಿಕರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸಿಂಧೂ ರಘು ಹೆಚ್.ಎಸ್., ಆದಿ ಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಾಜೇಂದ್ರ ಜಲ್ದಾರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಮಾನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇಸ್ರೇಲ್ ನಿಂದ ಮುಂದುವರಿದ ವೈಮಾನಿಕ ದಾಳಿ: ಅತಂತ್ರ ಸ್ಥಿತಿಯಲ್ಲಿ ಗಾಝಾ
ಗಾಝಾ: ಅಕ್ಟೋಬರ್ ತಿಂಗಳಲ್ಲಿ ಇಸ್ರೇಲ್ ಹಾಗೂ ಹಮಾಸ್ ನಡುವೆ ಕದನ ವಿರಾಮವೇರ್ಪಟ್ಟ ನಂತರ, ಗಾಝಾದ ಮೇಲೆ ಇಸ್ರೇಲ್ ಸಾರಿದ್ದ ಯುದ್ಧ ಬಹುತೇಕ ಅಂತ್ಯಗೊಂಡಿತು ಎಂದೇ ಫೆಲೆಸ್ತೀನಿಯನ್ನರು ಭಾವಿಸಿದ್ದರು. ಆದರೆ, ಹಮಾಸ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಪುನಾರಂಭಿಸಿರುವ ವೈಮಾನಿಕ ದಾಳಿಯಲ್ಲಿ ಇಲ್ಲಿಯವರೆಗೆ 342 ಫೆಲೆಸ್ತೀನ್ ನಾಗರಿಕರು ಮೃತಪಟ್ಟಿದ್ದು, ಈ ಪೈಕಿ 67 ಮಕ್ಕಳು ಸೇರಿದ್ದಾರೆ. ಕದನ ವಿರಾಮದ ನಂತರ, ಹೊಸದಾಗಿ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದ ಫೆಲೆಸ್ತೀನಿಯನ್ನರು ಇಸ್ರೇಲ್ ನ ವೈಮಾನಿಕ ದಾಳಿಯಿಂದ ಕಂಗಾಲಾಗಿದ್ದು, “ಇದು ಕದನ ವಿರಾಮವಲ್ಲ; ನಮ್ಮ ಪಾಲಿನ ದುಃಸ್ವಪ್ನ” ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯ ದುಃಸ್ವಪ್ನದ ಕುರಿತು ತಮ್ಮ ಅನುಭವ ಹಂಚಿಕೊಳ್ಳುವ ಫೈಕ್ ಅಜೌರ್, “ನಾನು ಪವಾಡಸದೃಶವಾಗಿ ಬದುಕುಳಿದೆ. ನಾನು ಆಗಷ್ಟೇ ಬೀದಿಯನ್ನು ದಾಟಿದ್ದೆ. ಹತ್ತಿರದ ತರಕಾರಿ ಅಂಗಡಿಯಿಂದ ಮನೆಗೆ ಒಂದಿಷ್ಟು ಸಾಮಗ್ರಿಗಳನ್ನು ಕೊಂಡುಕೊಳ್ಳಲೆಂದು ತೆರಳಿದಾಗ, ನನ್ನ ಮನೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು” ಎಂದು ಸ್ಮರಿಸುತ್ತಾರೆ. “ಆದರೆ ಇದಷ್ಟೇ ವಿಷಯವಾಗಿರಲಿಲ್ಲ. ನಾನು ನನ್ನ ಮನೆಗೆ ಓಡಿ ಬಂದಾಗ, ನನ್ನ ಕುಟುಂಬದ ಸದಸ್ಯರಿಗೆ ದೈಹಿಕವಾಗಿ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ, ನನ್ನ ಮೂವರು ಕಿರಿಯ ಪುತ್ರಿಯರು ಭಯದಿಂದ ಆಘಾತಕ್ಕೊಳಗಾಗಿದ್ದರು. ಅಕ್ಟೋಬರ್ ನಿಂದ ಜಾರಿಗೆ ಬಂದಿದ್ದ ಕದನ ವಿರಾಮ ಅಂತ್ಯಗೊಂಡು, ಗಾಝಾ ಮೇಲಿನ ಜನಾಂಗೀಯ ಹತ್ಯೆ ಮತ್ತೆ ಪ್ರಾರಂಭಗೊಂಡಿರಬಹುದು ಎಂದು ಗಾಬರಿಗೊಳಗಾಗಿದ್ದರು” ಎಂದು ಅವರು ಹೇಳುತ್ತಾರೆ. ಕದನ ವಿರಾಮ ಪ್ರಾರಂಭಗೊಂಡಾಗಿನಿಂದ, ಹಮಾಸ್ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಇಸ್ರೇಲ್ ಪದೇ ಪದೇ ಗಾಝಾ ಮೇಲೆ ದಾಳಿ ನಡೆಸುತ್ತಿದೆ. ಆದರೆ, ಈ ಆರೋಪವನ್ನು ಅಲ್ಲಗಳೆದಿರುವ ಹಮಾಸ್, ಕದನ ವಿರಾಮ ಪ್ರಾರಂಭಗೊಂಡಾಗಿನಿಂದ ಇಲ್ಲಿಯವರೆಗೆ 500 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿರುವ ಇಸ್ರೇಲ್, ತನ್ನ ವೈಮಾನಿಕ ದಾಳಿಯಲ್ಲಿ 67 ಮಕ್ಕಳು ಸೇರಿದಂತೆ ಒಟ್ಟು 342 ಫೆಲೆಸ್ತೀನ್ ನಾಗರಿಕರನ್ನು ಹತ್ಯೆಗೈದಿದೆ. ಈ ಪೈಕಿ, ಶನಿವಾರ ಗಾಝಾ ಪಟ್ಟಿಯಾದ್ಯಂತ ಹತ್ಯೆಗೀಡಾದ 24 ಮಂದಿಯ ಪೈಕಿ, ಫೈಕ್ ಅಜೌರ್ ವಾಸಿಸುತ್ತಿರುವ ಗಾಝಾದ ಅಲ್-ಅಬ್ಬಾಸ್ ಪ್ರದೇಶದಲ್ಲಿನ ನಿವಾಸಿಗಳು ಸೇರಿದ್ದಾರೆ. ಈ ಕುರಿತು ಪ್ರತಿಕ್ರಿಯಿಸುವ ಫೈಕ್ ಅಜೌರ್, “ಇದು ಕದನ ವಿರಾಮವಲ್ಲ; ಇದು ದುಃಸ್ವಪ್ನವಾಗಿದೆ. ಒಂದು ಕ್ಷಣದ ಶಾಂತ ವಾತಾವರಣದ ಬಳಿಕ, ಇದು ಮತ್ತೆ ಯುದ್ಧವೇನೊ ಎಂಬ ಸ್ಥಿತಿಗೆ ಜೀವನ ಮರಳುತ್ತಿದೆ” ಎಂದು ಅಳಲು ತೋಡಿಕೊಳ್ಳುತ್ತಾರೆ. “ನೀವು ಈ ಪ್ರದೇಶದಾದ್ಯಂತ ದೇಹದ ಭಾಗಗಳು, ಹೊಗೆ, ಒಡೆದು ಹೋದ ಗಾಜು, ಹತ್ಯೆಗೀಡಾದ ಜನರು, ಆ್ಯಂಬುಲೆನ್ಸ್ ಗಳನ್ನು ಕಾಣಬಹುದು. ಈ ದೃಶ್ಯಗಳ ಆಘಾತದಿಂದ ನಾವೀಗಲೂ ಹೊರ ಬಂದಿಲ್ಲ ಮತ್ತು ಅವು ನಮ್ಮ ನೆನಪುಗಳಿಂದ ಅಳಿಸಿ ಹೋಗುತ್ತಿಲ್ಲ” ಎಂದು ಅವರು ಹೇಳಿದರು. ಮೂಲತಃ ಪೂರ್ವ ಗಾಝಾ ನಗರದ ನೆರೆಯ ತುಫಾದವರಾದ 29 ವರ್ಷದ ಫೈಕ್ ಅಜೌರ್, ಯುದ್ಧದ ವೇಳೆ ಸಾಕಷ್ಟು ಘಾಸಿಗೊಳಗಾಗಿದ್ದಾರೆ. ಫೈಕ್ ಅಜೌರ್ ಕುಟುಂಬಸ್ಥರು ವಾಸಿಸುತ್ತಿದ್ದ ಮನೆಯ ಮೇಲೆ ಫೆಬ್ರವರಿ 2024ರಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅವರು ತಮ್ಮ ಪೋಷಕರು, ತಮ್ಮ ಸಹೋದರನ ಮಕ್ಕಳು ಸೇರಿದಂತೆ ತಮ್ಮ ಅವಿಭಜಿತ ಕುಟುಂಬದ 30 ಮಂದಿ ಸದಸ್ಯರನ್ನು ಈವರೆಗೆ ಕಳೆದುಕೊಂಡಿದ್ದಾರೆ. ಈ ವೈಮಾನಿಕ ದಾಳಿಯಲ್ಲಿ ಅವರ ಪತ್ನಿ ಕೂಡಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಒಂದು ಬೆರಳನ್ನು ವೈದ್ಯರು ಕತ್ತರಿಸಬೇಕಾಗಿ ಬಂದಿದೆ. ಕದನ ವಿರಾಮದ ನಂತರ ಗಾಝಾಗೆ ಮರಳಿರುವ ಬಹುತೇಕ ಫೆಲೆಸ್ತೀನಿಯನ್ನರ ಪರಿಸ್ಥಿತಿಯೂ ಇದೇ ರೀತಿ ಇದೆ. ಸೌಜನ್ಯ: aljazeera.com
ನ.27-30: ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ನಾಟಕೋತ್ಸವ
ಮಂಗಳೂರು, ನ.26: ಅಸ್ತಿತ್ವ (ರಿ.) ಮಂಗಳೂರು ವತಿಯಿಂದ ರಂಗ ಅಧ್ಯಯನ ಕೇಂದ್ರ, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಹಾಗೂ ಅರೆಹೊಳೆ ಪ್ರತಿಷ್ಠಾನದ ಸಹಯೋಗದಲ್ಲಿ ನ.27ರಿಂದ 30ರವರೆಗೆ ನಗರದ ಅಲೋಶಿಯಸ್ ಕಾಲೇಜಿನ ಎಲ್ಸಿಆರ್ಐ ಆಡಿಟೋರಿಯಂನಲ್ಲಿ ಸಂಜೆ 6:30ರಿಂದ ನಡೆಯಲಿದೆ. ನ.27ರಂದು ಸೈರನ್ (ಕನ್ನಡ), ನ.28ರಂದು ಪೊಲಿಟಿಕಲ್ ಪ್ರಿಸನರ್ಸ್ (ಕನ್ನಡ), ನ.29ರಂದು ಯೇನಾ ಜಾಲ್ಯಾರ್ ವಚಾನಾ (ಕೊಂಕಣಿ), ನ.30ರಂದು ಚಿರಿ... (ತೀಸ್ ನಾಣ್ಯಾಂಚಿ) (ಕೊಂಕಣಿ) ನಾಟಕ ಪ್ರದರ್ಶನಗೊಳ್ಳಲಿದೆ. ಎಲ್ಲಾ ನಾಟಕಗಳಿಗೆ ಪ್ರವೇಶ ಉಚಿತವಾಗಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
ನಿವೃತ್ತ ಶಿಕ್ಷಕಿ ಫೌಸ್ಟಿನ್ ಸುದಾನಾ ಫುರ್ಟಾಡೊ
ಮಂಗಳೂರು,ನ.26:ನಿವೃತ್ತ ಶಿಕ್ಷಕಿ, ಚರ್ಚ್ ಆಫ್ ಸೌತ್ ಇಂಡಿಯಾದ ಕರ್ನಾಟಕ ದಕ್ಷಿಣ ಸಭಾ ಪ್ರಾಂತದ ನಿವೃತ್ತ ಬಿಷಪ್ ಮಂಗಳೂರಿನ ರೆ.ಸಿ.ಎಲ್. ಫುರ್ಟಾಡೊರ ಪತ್ನಿ ಫೌಸ್ಟಿನ್ ಸುದಾನಾ ಫುರ್ಟಾಡೊ (84) ಮಂಗಳವಾರ ನಿಧನರಾದರು. ಮೃತರು ಪತಿ ಬಿಷಪ್ ಸಿ.ಎಲ್. ಫುರ್ಟಾಡೊ, ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿಯನ್ನು ಆಗಲಿದ್ದಾರೆ. ಫೌಸ್ಟಿನ್ ಸುದಾನಾ ಫುರ್ಟಾಡೊ ನಗರದ ಮಿಲಾಗ್ರಿಸ್ ಬಾಲಕರ ಶಾಲೆ ಮತ್ತು ಸೈಂಟ್ ಆಗ್ನೆಸ್ ಹೆಣ್ಮಕ್ಕಳ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿ, ತುಮಕೂರು ಯುನಿಟಿ ಹೈಸ್ಕೂಲಿನಲ್ಲಿ ಮುಖ್ಯ ಶಿಕ್ಷಕಿಯಾಗಿ, ನಗರದ ಬಲ್ಮಠ ಕರ್ನಾಟಕ ಥಿಯಾಲಜಿಕಲ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕಿಯಾಗಿ ಕರ್ತವ್ಯ ಸಲ್ಲಿಸಿದ್ದರು. ನಗರದ ಕೆಟಿಸಿಯಲ್ಲಿರುವ ಮೊಗ್ಲಿಂಗ್ ಇನ್ಸ್ಟಿಟ್ಯೂಟ್ ಆಫ್ ಜರ್ಮನ್ ಲಾಂಗ್ವೇಜ್ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲೆ ಹಾಗೂ ಜರ್ಮನ್ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದರು. ಕೆಟಿಸಿ ಮಂಗಳೂರು ಕೋಶಾಧಿಕಾರಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಸಿಎಸ್ಐ ಕರ್ನಾಟಕ ದಕ್ಷಿಣ ಸಭಾ ಪ್ರಾಂತದ ವಿಮನ್ಸ್ ಫೆಲೋಶಿಪ್ ಅಧ್ಯಕ್ಷರಾಗಿ, ವೈಎಂಸಿಎ ಮಂಗಳೂರು ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಮಂಗಳೂರು | ನಿರ್ಲಕ್ಷ್ಯದ ಚಾಲನೆ ಆರೋಪ; ಸಿಟಿ ಬಸ್ ಪೊಲೀಸ್ ವಶಕ್ಕೆ
ಮಂಗಳೂರು, ನ.26: ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದ ಎದುರಿನ ಜಂಕ್ಷನ್ನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದ ಬಸ್ಸನ್ನು ಅಡ್ಡಗಟ್ಟಿದ ಸಾರ್ವಜನಿಕರು ಪಾಂಡೇಶ್ವರ ಸಂಚಾರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಬುಧವಾರ ನಗರದ ಲಾಲ್ಭಾಗ್ ಕಡೆಯಿಂದ ಮಂಗಳಾದೇವಿಗೆ ಹೋಗುತ್ತಿದ್ದ ರೂಟ್ ನಂಬ್ರ 15ರ ಬಸ್ಸನ್ನು ಅದರ ಚಾಲಕ ಜಂಕ್ಷನ್ನಲ್ಲಿ ಯದ್ವಾತದ್ವಾ ಚಲಾಯಿಸಿಕೊಂಡು ಓವರ್ಟೇಕ್ ಮಾಡಲು ಯತ್ನಿಸಿದ್ದ ಎನ್ನಲಾಗಿದೆ. ಈ ಸಂದರ್ಭ ಬಸ್ ಜಂಕ್ಷನ್ನಲ್ಲಿ ನಿಂತಿದ್ದ ಬೈಕ್ಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ರಸ್ತೆಗೆ ಬಿದ್ದಿದ್ದರೆ, ಜಂಕ್ಷನ್ನಲ್ಲಿ ನಿಂತಿದ್ದ ಇತರರು ಯದ್ವಾತದ್ವಾ ಬಸ್ ಬರುತ್ತಿರುವುದನ್ನು ಕಂಡು ಆತಂಕಗೊಂಡರು.ಹಾಗೇ ಬಳಿಕ ಸಾರ್ವಜನಿಕರು ಬಸ್ ಚಾಲಕನನ್ನು ಕೆಳಗಿಳಿಸಿ ಪೊಲೀಸರಿಗೆ ಮಾಹಿತಿ ನೀಡಿ ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಬಸ್ಸನ್ನು ಕೊಂಡೊಯ್ದು ಠಾಣೆಯಲ್ಲಿಟ್ಟು, ದಂಡ ಪಾವತಿಸಿದ ಬಳಿಕ ಕೊಂಡೊಯ್ಯುವಂತೆ ಸೂಚಿಸಿದ್ದಾರೆ.
ಮಂಗಳೂರು | ಮಾದಕ ವಸ್ತು ಸೇವನೆ ಆರೋಪ: ಇಬ್ಬರ ಬಂಧನ
ಮಂಗಳೂರು, ನ.26: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನಗರದ ಸೆನ್ ಕ್ರೈಂ ಠಾಣೆಯ ಪೊಲೀಸರು ಗಸ್ತು ನಿರತರಾಗಿದ್ದಾಗ ಕಣ್ಣೂರು ರೈಲ್ವೆ ಟ್ರ್ಯಾಕ್ ಬಳಿ ಆರೋಪಿ ಮುಹಮ್ಮದ್ ಅಫ್ರೀದ್ (23) ಮತ್ತು ಕಣ್ಣೂರು ಚೆಕ್ಪೋಸ್ಟ್ ಬಳಿ ಮುಝಂಬಿಲ್ (23) ಎಂಬವರನ್ನು ಬಂಧಿಸಲಾಗಿದೆ.
ಬಹರೈನ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅಬ್ದುಲ್ ಶಕೀಲ್ ಆಯ್ಕೆ
ಮಂಗಳೂರು,ನ.26: ಎನ್ಆರ್ಐ ಫೋರಂ ಕರ್ನಾಟಕ ಬಹರೈನ್ 2025ನೇ ಸಾಲಿನ ಬಹರೈನ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಅಬ್ದುಲ್ ಶಕೀಲ್ ಆಯ್ಕೆಯಾಗಿದ್ದಾರೆ. ಬಹರೈನ್ನ ಇಂಡಿಯನ್ ಕ್ಲಬ್ ಓಪನ್ ಗ್ರೌಂಡ್ನಲ್ಲಿ ನ.28ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025 ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರಿ ಎಚ್.ಇ. ವಿನೋದ್ ಕೆ. ಜೇಕಬ್, ಸ್ಪೀಕರ್ ಡಾ.ಯು.ಟಿ.ಖಾದರ್ ಫರೀದ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಇದರ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ರಾಯಚೂರು : ದತ್ತು ಮಾಸಾಚರಣೆ ಪ್ರಯುಕ್ತ ಜಾಗೃತಿ ಕಾರ್ಯಕ್ರಮ
ರಾಯಚೂರು : ಅನಾಥ, ನಿರ್ಗತಿಕ ಹಾಗೂ ಪರಿತ್ಯಕ್ತ ಮಕ್ಕಳಿಗೂ ಕೂಡ ಪ್ರೀತಿ, ವಾತ್ಸಲ್ಯ, ಮಮತೆ ನೀಡಬೇಕು. ಅನಾಥ ಮಕ್ಕಳನ್ನು ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಬೇಕು ಎಂದು ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಗಣೇಶ್ ಕೆ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣಾ ಸಭಾಂಗಣದಲ್ಲಿ ದತ್ತು ಮಾಸಾಚರಣೆ ಪ್ರಯುಕ್ತ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಗಣೇಶ್ ಕೆ, ಪ್ರಸ್ತುತ ವರ್ಷ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ದತ್ತು ತೆಗೆದುಕೊಂಡು ಹೊಸ ಬದುಕಿಗೆ ಅವಕಾಶ ಮಾಡಿಕೊಡಲು ಜನತೆಯು ಮುಂದೆ ಬರಲು ಜನಜಾಗೃತಿ ನೀಡಬೇಕು ಎಂದು ಹೇಳಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಕಿರಲಿಂಗಪ್ಪ ಮಾತನಾಡಿ, ಯಾವುದೋ ಕಾರಣ, ಸಂದಿಗ್ಧ ಸನ್ನಿವೇಶಗಳಿಂದ ಕಂದಮ್ಮಗಳನ್ನು ಬೀದಿ, ತಿಪ್ಪೆ, ಕಾಲುವೆ ಬದಿ ಬಿಟ್ಟುಹೋಗುವ ಹಲವಾರ ಉದಾಹರಣೆಗಳಿವೆ. ಇಂತ ಸಂದರ್ಭದಲ್ಲಿ 1098ಗೆ ಕರೆಮಾಡಿ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿ ಮಗುವನ್ನು ಒಪ್ಪಿಸಿದಲ್ಲಿ ಮಕ್ಕಳನ್ನು ಸಾಕುವ ಅದೆಷ್ಟೊ ಪಾಲಕರಿಗೆ ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ-2015 ರಡಿ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರದ ಮಾರ್ಗಸೂಚಿಯನ್ವಯ ದತ್ತು ನೀಡಲಾಗುತ್ತಿದೆ. ದಯವಿಟ್ಟು ಯಾರೂ ನವಜಾತ ಶಿಶು ಹಾಗೂ ಮಕ್ಕಳನ್ನು ಅನಾಥವಾಗಿಸಬೇಡಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಎಮ್ ಶಾಕೀರ್ ಮೊಹಿಯುದ್ದೀನ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಶಿವಕುಮಾರ್, ಡಾ.ಶೀತಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡಿವೈಹೆಚ್ಓ ಬಸಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಗಳೂರು | ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ : ಹರೀಶ್ ಕುಮಾರ್
ಮಂಗಳೂರು, ನ.26: ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಸಂವಿಧಾನ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸಂವಿಧಾನ ಪೀಠಿಕೆ ಬೋಧಿಸಿ ಬಳಿಕ ಮಾತನಾಡುತ್ತಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಬಹುತ್ವ ಭಾರತದ ಬುನಾದಿಯಾಗಿದೆ. ಭಾರತೀಯರಿಗೆ ಸಂವಿಧಾನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನಕ್ಕೆ ಗೌರವ ನೀಡಿ ಸಂವಿಧಾನದ ಬಗ್ಗೆ ತಿಳಿಯುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಸಂವಿಧಾನ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು. ಈ ಸಂದರ್ಭ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ಅವರು ಸಂವಿಧಾನದ ಮಹತ್ವದ ಬಗ್ಗೆ ವಿವರಿಸಿದರು. ಸಂವಿಧಾನ ಪೀಠಿಕೆ, ಅಂಬೇಡ್ಕರ್ ಭಾವಚಿತ್ರ ಅನಾವರಣ : ಇದಕ್ಕೂ ಮುನ್ನ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾನೂನು ಘಟಕದ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಅಳವಡಿಸಿದ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಮುಖಂಡರಾದ ಶಾಹುಲ್ ಹಮೀದ್ ಕೆ.ಕೆ, ಜೋಕಿಂ ಡಿಸೋಜಾ, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ದಿನೇಶ್ ಮುಳೂರು, ಶೈಲಜಾ ಬಂಟ್ವಾಳ, ಪ್ರೇಮ್ ನಾಥ್ ಬಳ್ಳಾಲ್ ಭಾಗ್, ನಿತ್ಯಾನಂದ ಶೆಟ್ಟಿ, ಕಾನೂನು ಘಟಕದ ವಿಧಾನಸಭಾ ಅಧ್ಯಕ್ಷರಾದ ಮೆಲ್ವಿನ್ ಜೋನ್ಸನ್ ಲೋಬೊ, ನವೀನ್ ಪೈಸ್, ಕ್ಸೆವಿಯರ್ ಪಾಲೇಲಿ ಮತ್ತಿತರರು ಉಪಸ್ಥಿತರಿದ್ದರು. ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ ಸ್ವಾಗತಿಸಿದರು. ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ವಂದಿಸಿದರು.
ಮಂಗಳೂರು | ಟ್ರಾಫಿಕ್ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿಗೆ ಅವಕಾಶ
ಮಂಗಳೂರು,ನ.26 : ಸರಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019-20ರ ಅವಧಿಯಲ್ಲಿ ಹಾಗೂ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂದಿನ ರಾಷ್ಟ್ರೀಯ ಲೋಕ ಅದಾಲತ್ ಡಿ.13ರ ನಿಟ್ಟಿನಲ್ಲಿ ಆದೇಶಿಸಲಾಗಿದೆ. ನ.21 ರಿಂದ ಡಿಸೆಂಬರ್ 12ರವರೆಗೆ ಬಾಕಿ ಇರುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದುದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಂಡು ಮೇಲೆ ಕಾಣಿಸಿದ ಪ್ರಕರಣಗಳಿಗೆ ಶೇ.50 ರಿಯಾಯಿತಿಯಲ್ಲಿ ದಂಡ ಪಾವತಿಸುವ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು | ಉತ್ತಮ ನೈರ್ಮಲ್ಯ ಅಭ್ಯಾಸ ಮೈಗೂಡಿಸಿಕೊಳ್ಳಿ : ಜಯಪ್ರಕಾಶ್
ಮಂಗಳೂರು,ನ.26: ವಿಶಿಷ್ಟ ಕಲಿಕೆಯೊಂದಿಗೆ ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ. ಪರಿಸರ ಕಾಳಜಿಯೊಂದಿಗೆ ಓದು ಉತ್ತಮಗೊಳ್ಳುತ್ತದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಜಯಪ್ರಕಾಶ್ ಹೇಳಿದರು. ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿ ಜಿಪಂ ಹಾಗೂ ಕಳೆಂಜ ಗ್ರಾಪಂ ಸಹಭಾಗಿತ್ವದಲ್ಲಿ ಕಾಯತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಏರ್ಪಡಿಸಲಾದ ಚಿತ್ರಕಲೆ ಬಿಡಿಸುವ ಸ್ಪರ್ಧೆ ಮತ್ತು ಮಾಹಿತಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಪಂ ಪಿಡಿಒ ಹೊನ್ನಮ್ಮ, ಜಿಪಂ ಡಿಪಿಎಂ ವಿಜ್ಞೇಶ್ ರಾಜ್ ಮತ್ತಿತರರು ಉಪಸ್ಥಿತರಿದ್ದರು. ಸಂಯೋಜಕ ಶಿವರಾಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಆನಂದ್ ಕಾರ್ಯಕ್ರಮ ನಿರೂಪಿಸಿದರು.
224 ಕ್ಷೇತ್ರಗಳಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸಲು ನಿರ್ದೇಶನ : ಡಿ.ಕೆ.ಶಿವಕುಮಾರ್
ಬೆಂಗಳೂರು, ನ.26: ‘ವರ್ಡ್ ಪವರ್ ಈಸ್ ವರಲ್ಡ್ ಪವರ್’ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬುಧವಾರ ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಪ್ರಜಾಪ್ರಭುತ್ವದ ಆತ್ಮ. ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಂಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರ ಎದೆಯ ಮೇಲೆ ತ್ರಿವರ್ಣ ಧ್ವಜ, ಎದೆಯೊಳಗೆ ಸಂವಿಧಾನವಿದೆ ಎಂದರು. 100 ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿದರು. ಗಾಂಧೀಜಿ ಅವರ ನೇತೃತ್ವದ ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ 2024ರಲ್ಲಿ ಬೆಳಗಾವಿಯಲ್ಲಿ ನಾವು ಗಾಂಧಿ ಭಾರತ ಕಾರ್ಯಕ್ರಮ ಮಾಡಿದೆವು. ಆಗ ನಡೆಸಿದ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಹೆಸರಿಟ್ಟು, ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಲೀಗಲ್ ಬ್ಯಾಂಕ್ : ಮತಕಳ್ಳತನ ನಡೆಯುತ್ತಿರುವ ಸದ್ಯದ ಪರಿಸ್ಥಿತಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಬ್ಲಡ್ ಬ್ಯಾಂಕ್ ಮಾದರಿಯಲ್ಲಿ ಲೀಗಲ್ ಬ್ಯಾಂಕ್ ಸ್ಥಾಪಿಸಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಅದರಂತೆ ನಾನು ರಾಜ್ಯ ಕಾನೂನು ಘಟಕದ ಅಧ್ಯಕ್ಷ ಧನಂಜಯ ಅವರಿಗೆ ಆರು ತಿಂಗಳು ಕಾಲಾವಕಾಶ ನೀಡಿದ್ದು, 224 ಕ್ಷೇತ್ರಗಳಲ್ಲಿ ಕನಿಷ್ಠ 10 ವಕೀಲರಿರುವ ಲೀಗಲ್ ಬ್ಯಾಂಕ್ ಅನ್ನು ಸ್ಥಾಪಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ವಕೀಲರು ಏನೇ ವಾದ ಮಾಡಿದರೂ ಸಂವಿಧಾನ ಪುಸ್ತಕ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಮೇಲೆ ಮಂಡಿಸುತ್ತಾರೆ. ಇದೆಲ್ಲವನ್ನು ಕೊಟ್ಟಿರುವುದು ಕಾಂಗ್ರೆಸ್ ಪಕ್ಷ. ಇದನ್ನು ಉಳಿಸಿಕೊಳ್ಳಬೇಕು. ಅದಕ್ಕಾಗಿ ಲೀಗಲ್ ಬ್ಯಾಂಕ್ ಸ್ಥಾಪಿಸಬೇಕಿದೆ. ಲೀಗಲ್ ಬ್ಯಾಂಕ್ನ ವಕೀಲರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಆಚಾರ ವಿಚಾರ ರಕ್ಷಣೆಗೆ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಮಿತಿ ರಚಿಸಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಕಾನೂನು ಘಟಕದವರಿಗೆ ಸೂಕ್ತ ಸ್ಥಾನ ಮಾನ ನೀಡಬೇಕು ಎಂಬ ಬೇಡಿಕೆಯನ್ನು ನಾನು ಒಪ್ಪುತ್ತೇನೆ. ಪಕ್ಷ ಇದ್ದರೆ ಸರಕಾರ, ಪಕ್ಷವೇ ಇಲ್ಲದಿದ್ದರೆ ಸರಕಾರ ಇಲ್ಲ. ಕಾರ್ಯಕರ್ತರು ಬಲಿಷ್ಠವಾಗಿದ್ದರೆ ನಾವು ಬಲಿಷ್ಠವಾಗಿರುತ್ತೇವೆ. ಕೆಪಿಸಿಸಿ ಆಸ್ತಿಗಳ ಬಗ್ಗೆ ಚರ್ಚೆ ಮಾಡುತ್ತಿದ್ದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿರುವವರ ಪಟ್ಟಿಯನ್ನು ಕೊಡಿ. ಈ ಆಸ್ತಿಗಳನ್ನು ಕಾನೂನು ಸಮಿತಿಗೆ ಸೇರಿಸಲು ನಾನು ಸಿದ್ಧನಿದ್ದೇನೆ. ಆದರೆ, ಅವರು ಇದನ್ನು ಸೇವೆಯಂತೆ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ನಾನು ನನ್ನ ಇಲಾಖೆಗಳಲ್ಲಿರುವ ನ್ಯಾಯಾಲಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಿದೆ. ಸುಮಾರು 60 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಕೆಲವು ಪ್ರಕರಣಗಳಲ್ಲಿ ವಕೀಲರು ಅರ್ಜಿದಾರರ ಜೊತೆ ರಾಜಿ ಮಾಡಿಕೊಂಡು ಭೂಸ್ವಾಧೀನ ಪ್ರಕ್ರಿಯೆಯಲ್ಲಿ 10 ಲಕ್ಷ ಪರಿಹಾರ ನಿಗದಿಯಾಗಿದ್ದರೆ, ನ್ಯಾಯಾಲಯದಲ್ಲಿ ಅರ್ಜಿದಾರರಿಗೆ 8-10 ಕೋಟಿ ಪರಿಹಾರ ನೀಡುವಂತೆ ತೀರ್ಪು ಬರುವಂತೆ ಮಾಡಿದ್ದಾರೆ. ಈ ರೀತಿ ಆದರೆ ಸರಕಾರದ ಗತಿ ಏನು? ಈ ರೀತಿ ಕರ್ತವ್ಯ ಲೋಪ ಎಸಗಿದ ವಕೀಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗಳಲ್ಲಿ ನಮ್ಮ ಪರ ವಾದ ಮಾಡುವ ವಕೀಲರು ಮಂಡಿಸುವ ವಾದಗಳನ್ನು ದಾಖಲು ಮಾಡುವ ವ್ಯವಸ್ಥೆ ತರಲಾಗಿದೆ. ಈ ವಿಚಾರದಲ್ಲಿ ಜವಾಬ್ದಾರಿ ಹೊತ್ತುಕೊಳ್ಳದವರನ್ನು ಬದಲಿಸಬೇಕು ಎಂದು ಹೇಳಿದ್ದೇನೆ. ಸಂವಿಧಾನ ಬಳಸಿಕೊಂಡರೆ ನಾಯಕರಾಗಬಹುದು, ಮಾರಿಕೊಂಡರೆ ಗುಲಾಮರಾಗುತ್ತೀರಿ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಡಾ.ಜಿ.ಸಿ.ಚಂದ್ರಶೇಖರ್, ಶಾಸಕ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಮಾಜಿ ಸಚಿವ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ, ತೇಜಸ್ವಿನಿ, ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಸಲಹೆಗಾರ ದೀಪಕ್ ತಿಮ್ಮಯ, ಕಾನೂನು ಘಟಕದ ರಾಜ್ಯಾಧ್ಯಕ್ಷ ಧನಂಜಯ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜು ಚುನಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ..! ನಮ್ಮ ಕಾಲದಲ್ಲಿ ವಿದ್ಯಾರ್ಥಿ ನಾಯಕತ್ವ ಬಲಿಷ್ಠವಾಗಿತ್ತು. ಈಗ ಅದು ಇಲ್ಲವಾಗಿದೆ. ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ರಾಹುಲ್ ಗಾಂಧಿ ಅವರು ಪತ್ರ ಬರೆದು, ಕಾಲೇಜು ಚುನಾವಣೆ ಬಗ್ಗೆ ಆಲೋಚಿಸುವಂತೆ ಮಾರ್ಗದರ್ಶನ ನೀಡಿದ್ದಾರೆ. ಈ ಹಿಂದೆ ವಿದ್ಯಾರ್ಥಿ ಚುನಾವಣೆಗಳಲ್ಲಿ ಇದ್ದ ಅಪರಾಧ ಚಟುವಟಿಕೆ ನಿಯಂತ್ರಿಸಿ ಹೇಗೆ ಕಾಲೇಜು ಚುನಾವಣೆ ನಡೆಸಬಹುದು, ಇದರ ಸಾಧಕ, ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗುವುದು. ಇದಕ್ಕಾಗಿ ಸಂವಿಧಾನದ 73 ಹಾಗೂ 74ನೇ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ನಮ್ಮ ಸಂವಿಧಾನ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಜಾತ್ಯಾತೀತತೆ, ಧರ್ಮ ಉಳಿಸಿಕೊಳ್ಳುವ ಹಕ್ಕನ್ನು ಕೊಟ್ಟಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಪೊನ್ನಣ್ಣಗೆ ಟಿಕೆಟ್ ನೀಡಬೇಡಿ ಎಂದಿದ್ದ ಬಿಜೆಪಿ ನಾಯಕ! ರಾಜ್ಯ ಕಾನೂನು ಘಟಕಕ್ಕೆ ಎ.ಎಸ್.ಪೊನ್ನಣ್ಣ ಅವರನ್ನು ಆಯ್ಕೆ ಮಾಡುವಾಗ ಅನೇಕರು ಅವರ ತಂದೆ ಆರೆಸ್ಸೆಸ್ ಹಾಗೂ ಬಿಜೆಪಿ ಹಿನ್ನೆಲೆ ಹೊಂದಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು. ಎ.ಎಸ್.ಪೊನ್ನಣ್ಣನಿಗೆ ವಿಧಾನಸಭೆಗೆ ಟಿಕೆಟ್ ನೀಡಬೇಡಿ ಎಂದೂ ಬಿಜೆಪಿ ನಾಯಕರೊಬ್ಬರು ಕರೆ ಮಾಡಿ ಹೇಳಿದ್ದರು. ಆದರೆ, ನಾನು ಅವರು ಕಾಂಗ್ರೆಸ್ ಸಿದ್ಧಾಂತಕ್ಕೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ಅವರು ಪಕ್ಷದ ಪರವಾಗಿ ಕೆಲಸ ಮಾಡಿದರು. ಈಗ ವಿರಾಜಪೇಟೆಯಲ್ಲಿ ಸ್ಪರ್ಧಿಸಿ ಶಾಸಕರಾಗಿದ್ದಾರೆ. ಸರಕಾರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿದ್ದಾರೆ. ಅನೇಕ ಕಾನೂನು ಸಂಕಟಗಳಲ್ಲಿ ನಮಗೆ ಸಹಾಯ ಮಾಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ವಾರ್ತಾಭಾರತಿ ನೊಂದವರ ಧ್ವನಿಯಾಗಿದೆ : ಶರಣಪ್ಪ ಮಾನೇಗಾರ್
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಯಾದಗಿರಿ ನಗರದಲ್ಲಿ ಓದುಗ, ಹಿತೈಷಿಗಳ ಸಭೆ
ಅಹ್ಮದಾಬಾದ್ ನಲ್ಲಿ ನಡೆಯಲಿದೆ 2030ರ ಕಾಮನ್ವೆಲ್ತ್ ಗೇಮ್ಸ್
ಗ್ಲಾಸ್ಗೋ, ನ. 26: 2030ರ ಕಾಮನ್ವೆಲ್ತ್ ಕ್ರೀಡಾಕೂಟದ ಆತಿಥೇಯ ಹಕ್ಕನ್ನು ಅಹ್ಮದಾಬಾದ್ ಗೆ ನೀಡಲಾಗಿದೆ. ಸ್ಕಾಟ್ ಲ್ಯಾಂಡ್ ರಾಜಧಾನಿ ಗ್ಲಾಸ್ಗೊದಲ್ಲಿ ಬುಧವಾರ ನಡೆದ ಕಾಮನ್ ವೆಲ್ತ್ ಸ್ಪೋರ್ಟ್ಸ್ನ ಮಹಾಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಇದರೊಂದಿಗೆ, ಕಾಮನ್ವೆಲ್ತ್ ಕ್ರೀಡಾಕೂಟವು ಎರಡು ದಶಕಗಳ ಬಳಿಕ ಭಾರತಕ್ಕೆ ಮರಳುತ್ತಿದೆ. ಕಾಮನ್ವೆಲ್ತ್ ಕ್ರೀಡಾಕೂಟ ಮೌಲ್ಯಮಾಪನ ಸಮಿತಿಯ ಉಸ್ತುವಾರಿಯಲ್ಲಿ ನಡೆದ ಕ್ರೀಡಾಂಗಣ ಆಯ್ಕೆ ಪ್ರಕ್ರಿಯೆಯ ಕೊನೆಯಲ್ಲಿ ಈ ಶಿಫಾರಸು ಮಾಡಲಾಗಿದೆ. ‘‘ಭಾರತವು ಈ ಕ್ರೀಡಾಕೂಟಕ್ಕೆ ಬೃಹತ್ ಆಯಾಮ, ಮಹತ್ವಾಕಾಂಕ್ಷೆ, ಶ್ರೀಮಂತ ಸಂಸ್ಕೃತಿ, ಅಗಾಧ ಕ್ರೀಡಾ ಗೀಳನ್ನು ತರುತ್ತದೆ. ಕಾಮನ್ವೆಲ್ತ್ ಗೇಮ್ಸ್ನ ಮುಂದಿನ ಶತಮಾನವನ್ನು ನಾವು ಉತ್ತಮ ಆರೋಗ್ಯದೊಂದಿಗೆ ಆರಂಭಿಸುತ್ತೇವೆ’’ ಎಂದು ಕಾಮನ್ವೆಲ್ತ್ ಸ್ಪೋರ್ಟ್ ನ ಅಧ್ಯಕ್ಷ ಡಾ. ಡೊನಾಲ್ಡ್ ರುಕೇರ್ ಹೇಳಿದರು. 2036ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಆಯೋಜಿಸುವ ಭಾರತದ ಮಹತ್ವಾಕಾಂಕ್ಷೆಗೆ ಈ ನಿರ್ಧಾರವು ಮತ್ತಷ್ಟು ಬಲ ನೀಡಿದೆ. ಒಲಿಂಪಿಕ್ಸ್ ಆತಿಥೆಯ ಹಕ್ಕುಗಳನ್ನು ಪಡೆಯುವ ಸ್ಪರ್ಧೆಯಲ್ಲಿರುವ ಅಹ್ಮದಾಬಾದ್ ಕಳೆದ ದಶಕದಲ್ಲಿ ತನ್ನ ಕ್ರೀಡಾ ಮೂಲಸೌಕರ್ಯವನ್ನು ಯುದ್ಧೋಪಾದಿಯಲ್ಲಿ ಮೇಲ್ದರ್ಜೆಗೇರಿಸಿದೆ. 2030ರ ಕಾಮನ್ವೆಲ್ತ್ ಕ್ರೀಡಾಕೂಟದ ಆಯೋಜನೆಗೆ ಅಹ್ಮದಾಬಾದ್ ಗೆ ಸ್ಪರ್ಧೆಯೊಡ್ಡಿದ್ದು ನೈಜೀರಿಯದ ಅಬುಜ ನಗರ. ಆದರೆ, 2034ರ ಕ್ರೀಡಾಕೂಟಕ್ಕೆ ಅಬುಜವನ್ನು ಪರಿಗಣಿಸಲು ಕಾಮನ್ವೆಲ್ತ್ ಸ್ಪೋರ್ಟ್ಸ್ ನಿರ್ಧರಿಸಿತು.
ಉಡುಪಿ | ನ.28ರಂದು ಪ್ರಧಾನಿ ಜೊತೆ ರಾಜ್ಯಪಾಲರ ಆಗಮನ
ಉಡುಪಿ, ನ.26: ನ.28ರಂದು ಉಡುಪಿಯಲ್ಲಿ ನಡೆಯುವ ಲಕ್ಷ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಪಾಲ್ಗೊಳ್ಳಲಿದ್ದಾರೆ. ನ.28ರಂದು ಬೆಳಗ್ಗೆ 8:00ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಟು 9:00ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಜ್ಯಪಾಲರು 11:05ಕ್ಕೆ ಆಗಮಿಸುವ ಪ್ರಧಾನ ಮಂತ್ರಿ ಅವರನ್ನು ಸ್ವಾಗತಿಸಿ ಅವರೊಂದಿಗೆ ಎಂ1-17 ಹೆಲಿಕಾಪ್ಟರ್ನಲ್ಲಿ 11:35ಕ್ಕೆ ಉಡುಪಿಯ ಆದಿಉಡುಪಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಅಪರಾಹ್ನ 12:00ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಗೆಹ್ಲೋಟ್ ಅವರು, 1:30ರವರೆಗೆ ಪ್ರಧಾನಿಯವರೊಂದಿಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ. ಬಳಿಕ ಅವರೊಂದಿಗೆ ಆದಿಉಡುಪಿಯ ಮೂಲಕ ಪ್ರಧಾನಿಯವರೊಂದಿಗೆ ಹೆಲಿಕಾಫ್ಟರ್ನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು. ಬಜ್ಪೆ ವಿಮಾನನಿಲ್ದಾಣದಲ್ಲಿ ಅಪರಾಹ್ನ 2:15ಕ್ಕೆ ಪ್ರಧಾನಿ ಅವರನ್ನು ಗೋವಾಕ್ಕೆ ಬೀಳ್ಕೋಡುವ ರಾಜ್ಯಪಾಲರು ವಿಶ್ರಾಂತಿಯ ಬಳಿಕ 2:50ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು. ಪ್ರಹ್ಲಾದ್ ಜೋಷಿ ಉಡುಪಿಗೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರೂ ಪ್ರಧಾನಿಯವರೊಂದಿಗೆ ಉಡುಪಿ ಶ್ರೀಕೃಷ್ಣ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನ.27ರಂದು ಸಂಜೆ 5:40ಕ್ಕೆ ಹೊರಟು ರಾತ್ರಿ 8:25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಜೋಷಿ ಅವರು, ರಸ್ತೆ ಮಾರ್ಗವಾಗಿ 9:30ಕ್ಕೆ ಉಡುಪಿಗೆ ಆಗಮಿಸಿ ವಾಸ್ತ್ಯ ಮಾಡುವರು. ನ.28ರಂದು ಬೆಳಗ್ಗೆ 10ರಿಂದ ಅಪರಾಹ್ನ 2:00ಗಂಟೆಯವರೆಗೆ ಪ್ರಧಾನಿ ಅವರೊಂದಿಗೆ ಮಠದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸಂಜೆ 4:00ಗಂಟೆಗೆ ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ಅವರು ಬೆಂಗಳೂರಿಗೆ ತೆರಳುವರು.
ದಕ್ಷಿಣ ಆಫ್ರಿಕಾ ಕ್ರಿಕೆಟ್ ಗೆ ಭರವಸೆ ತುಂಬಿದ ʼಅಜೇಯʼ ಟೆಂಬಾ ಬವುಮಾ
ಹೊಸದಿಲ್ಲಿ, ನ.26: ಗುವಾಹಟಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 408 ರನ್ ಗಳ ಅಂತರದಿಂದ ಮಣಿಸಿ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಗೈದಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ. ನಾಯಕತ್ವದಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿರುವ ಟೆಂಬಾ ಬವುಮಾ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ. ಜೂನ್ ನಲ್ಲಿ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಸ್ಟ್ರೇಲಿಯ ತಂಡವನ್ನು ಮಣಿಸಿದ್ದ ದಕ್ಷಿಣ ಆಫ್ರಿಕಾ ಕೊನೆಗೂ 27 ವರ್ಷಗಳ ನಂತರ ಐಸಿಸಿ ಟ್ರೋಫಿಯೊಂದನ್ನು ಗೆದ್ದುಕೊಂಡಿತು. 1998ರ ನಂತರ ದಕ್ಷಿಣ ಆಫ್ರಿಕಾದ ಯಾವ ನಾಯಕನೂ ಜಾಗತಿಕ ಪ್ರಶಸ್ತಿಯನ್ನು ಎತ್ತಿ ಹಿಡಿದಿರಲಿಲ್ಲ. ದಕ್ಷಿಣ ಆಫ್ರಿಕಾದ ಯಾವೊಬ್ಬ ನಾಯಕನೂ 25 ವರ್ಷಗಳಿಂದ ಭಾರತದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿರಲಿಲ್ಲ. ಟೆಂಬಾ ಬವುಮಾ ಈ ಎರಡು ಸಾಧನೆಯನ್ನು ಮಾಡಿದ್ದಾರೆ. 2025 ದಕ್ಷಿಣ ಆಫ್ರಿಕಾ ತಂಡದ ಪಾಲಿಗೆ ಮರೆಯಲಾರದ ವರ್ಷವಾಗಿದೆ. ಕಳೆದ ಹಲವು ವರ್ಷಗಳಿಂದ ದಕ್ಷಿಣ ಆಫ್ರಿಕಾ ತಂಡ ಪ್ರಮುಖ ಪ್ರಶಸ್ತಿಯ ಹಾದಿಯಲ್ಲಿ ಸಾಕಷ್ಟು ಬಾರಿ ಎಡವಿತ್ತು. ಆದರೆ ಅದು ತನ್ನ ಪ್ರಯತ್ನವನ್ನು ಮುಂದುವರಿಸುತ್ತಾ ಬಂದಿತ್ತು. ಆತ್ಮವಿಶ್ವಾಸದೊಂದಿಗೆ ಭಾರತಕ್ಕೆ ಆಗಮಿಸಿದ್ದ ಆಫ್ರಿಕನ್ನರು ಐತಿಹಾಸಿಕ ಸಾಧನೆಯೊಂದಿಗೆ ತಾಯ್ನಾಡಿಗೆ ಮರಳುತ್ತಿದ್ದಾರೆ. ಕೋಲ್ಕತಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳ ಬ್ಯಾಟರ್ ಗಳು ರನ್ ಗಳಿಸಲು ತಿಣುಕಾಡುತ್ತಿದ್ದಾಗ ಅರ್ಧಶತಕ ಗಳಿಸಿದ ಬವುಮಾ ತನ್ನ ತಂಡವು 30 ರನ್ ನಿಂದ ರೋಚಕವಾಗಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಕೋಸಾ ಭಾಷೆಯಲ್ಲಿ ಟೆಂಬಾ ಎಂದರೆ ಭರವಸೆ ಎಂದರ್ಥ. ಬವುಮಾಗೆ ಅವರ ಅಜ್ಜಿ ಈ ಹೆಸರು ಇಟ್ಟಿದ್ದರು. ಬವುಮಾ ದೇಶಕ್ಕೆ ಅತ್ಯಂತ ಅಗತ್ಯವಿದ್ದಾಗ ಭರವಸೆ ತುಂಬಿದ್ದಾರೆ. 12 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಿರುವ ಬವುಮಾ 11ರಲ್ಲಿ ಗೆಲುವು ಹಾಗೂ 1ರಲ್ಲಿ ಡ್ರಾ ಸಾಧಿಸಿ ಅಜೇಯವಾಗುಳಿದಿದ್ದಾರೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದಿರುವ ಬವುಮಾ ಅವರು ಇದೀಗ ಭಾರತ ನೆಲದಲ್ಲಿ ಅಪರೂಪದ ಟೆಸ್ಟ್ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾರೆ. ದಕ್ಷಿಣ ಆಫ್ರಿಕಾವು 2000ರಲ್ಲಿ ಹ್ಯಾನ್ಸಿ ಕ್ರೋನಿಯೆ ನಾಯಕತ್ವದ ಮಾತ್ರ ಭಾರತ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತ್ತು. ದಕ್ಷಿಣ ಆಫ್ರಿಕಾವು ಭಾರತ ನೆಲದಲ್ಲಿ 2015 ಹಾಗೂ 2019ರಲ್ಲಿ ಟೆಸ್ಟ್ ಸರಣಿಯನ್ನು ಸೋತಿತ್ತು. ಟೆಸ್ಟ್ ನಾಯಕನಾಗಿ ಅಜೇಯ ದಾಖಲೆಯೊಂದಿಗೆ ಬವುಮಾ ಇದೀಗ ದಾಖಲೆ ಪುಸ್ತಕದಲ್ಲಿ ಸ್ಥಾನ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ತಂಡವು ಎರಡನೇ ಟೆಸ್ಟ್ನ ಮೊದಲ ಇನಿಂಗ್ಸ್ ನಲ್ಲಿ 489 ರನ್ ಗಳಿಸಿದ ನಂತರ ಭಾರತ ತಂಡವನ್ನು 201 ರನ್ಗೆ ನಿಯಂತ್ರಿಸಿತು. ಆಗ ಭಾರತಕ್ಕೆ ಫಾಲೋ ಆನ್ ಹೇರದ ಬವುಮಾ ಅವರು 2ನೇ ಇನಿಂಗ್ಸ್ ಆರಂಭಿಸಲು ಒತ್ತು ನೀಡಿದರು. ಟ್ರಿಸ್ಟನ್ ಸ್ಟಬ್ಸ್ ಶತಕ ತಲುಪುವುದನ್ನು ಕಾದ ಪರಿಣಾಮ ಎರಡನೇ ಇನಿಂಗ್ಸ್ ಅನ್ನು ತಡವಾಗಿ ಡಿಕ್ಲೇರ್ ಮಾಡಲಾಯಿತು. ಬವುಮಾರ ಈ ನಿರ್ಧಾರವನ್ನು ಕೆಲವರು ಪ್ರಶ್ನಿಸಿದ್ದರು. ಐದನೇ ದಿನದಾಟದಲ್ಲಿ ಆರು ವಿಕೆಟ್ಗಳನ್ನು ಕಬಳಿಸಿ ಮೆರೆದಾಡಿದ ಸ್ಪಿನ್ನರ್ ಸೈಮನ್ ಹಾರ್ಮರ್ ನಾಯಕನ ನಿರ್ಧಾರವನ್ನು ಸಮರ್ಥಿಸಿ ಆಫ್ರಿಕಾ ತಂಡದ ಭರ್ಜರಿ ಗೆಲುವಿನ ಹಾದಿ ಸುಗಮಗೊಳಿಸಿದರು.
ತಮಿಳುನಾಡು: ಶಾಸಕ ಸ್ಥಾನಕ್ಕೆ ಸೆಂಗೊಟ್ಟೈಯನ್ ರಾಜೀನಾಮೆ
ಚೆನ್ನೈ,ನ.26: ಎಐಎಡಿಎಂಕೆಯಿಂದ ಉಚ್ಚಾಟಿತ ಮಾಜಿ ಸಚಿವ ಕೆ.ಎ.ಸೆಂಗೊಟ್ಟೈಯನ್ ಅವರು ಬುಧವಾರ ಗೋಬಿಚೆಟ್ಟಿಪಾಳ್ಯಂ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಒಂಭತ್ತು ಸಲ ಶಾಸಕರಾಗಿದ್ದ ಸೆಂಗೊಟ್ಟೈಯನ್ ಚೆನ್ನೈನ ಸಚಿವಾಲಯದಲ್ಲಿ ವಿಧಾನಸಭಾ ಸ್ಪೀಕರ್ ಎಂ.ಅಪ್ಪಾವು ಅವರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಸುದ್ದಿಗಾರರು ಸೆಂಗೊಟ್ಟೈಯನ್ ನಟ ವಿಜಯ ಅವರ ರಾಜಕೀಯ ಪಕ್ಷ ಟಿವಿಕೆಗೆ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ಉಲ್ಲೇಖಿಸಿ ಅವರ ಭವಿಷ್ಯದ ನಡೆಯ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿದರು. ಸೆಂಗೊಟ್ಟೈಯನ್ ಈ ತಿಂಗಳು ರಾಜೀನಾಮೆ ಸಲ್ಲಿಸಿರುವ ಎರಡನೇ ಎಐಎಡಿಎಂಕೆ ಶಾಸಕರಾಗಿದ್ದಾರೆ. ನ.4ರಂದು ಪಿ.ಎಚ್.ಮನೋಜ ಪಾಂಡ್ಯನ್ ಅವರು ಡಿಎಂಕೆಗೆ ಸೇರ್ಪಡೆಗೊಂಡ ಬೆನ್ನಲ್ಲೇ ಅಳಂಗುಳಂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಸೆಂಗೊಟ್ಟೈಯನ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಉಚ್ಚಾಟಿತ ನಾಯಕ ಒ.ಪನ್ನೀರ್ ಸೆಲ್ವಂ ಮತ್ತು ಎಎಂಎಂಕೆ ಸ್ಥಾಪಕ ಟಿ.ಟಿ.ವಿ.ದಿನಕರನ್ ಜೊತೆ ಒಂದೇ ಕಾರಿನಲ್ಲಿ ಪಸುಂಪನ್ ಗೆ ಪ್ರಯಾಣಿಸಿದ್ದರು ಮತ್ತು ಅಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿಯೂ ಮಾತನಾಡಿದ್ದರು. ಮರುದಿನವೇ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಇ.ಕೆ.ಪಳನಿಸ್ವಾಮಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದರು.
ಅಕ್ರಮ ಬೆಟ್ಟಿಂಗ್ ಮೂಲಕ ಗಳಿಕೆಯು ಅಪರಾಧದ ಆದಾಯ: ದಿಲ್ಲಿ ಹೈಕೋರ್ಟ್
ಹೊಸದಿಲ್ಲಿ,ನ.26: ಅಕ್ರಮ ಹಣ ವರ್ಗಾವಣೆ ತನಿಖೆಗಳ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರಬಹುದಾದ ಮಹತ್ವದ ತೀರ್ಪೊಂದರಲ್ಲಿ ದಿಲ್ಲಿ ಉಚ್ಚ ನ್ಯಾಯಾಲಯವು, ಅಕ್ರಮ ಬೆಟ್ಟಿಂಗ್ ನಿಂದ ಗಳಿಸಿದ ಆದಾಯವನ್ನು, ಅಂತಹ ಚಟುವಟಿಕೆಗೆ ಕಳಂಕಿತ ಹಣವು ಮೂಲವಾಗಿದ್ದರೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ‘ಅಪರಾಧದ ಆದಾಯ’ ಎಂದು ಪರಿಗಣಿಸಬಹುದು ಎಂದು ಎತ್ತಿ ಹಿಡಿದಿದೆ. ಹಣದ ಮೂಲವು ಕಾನೂನುಬಾಹಿರವಾಗಿದ್ದರೆ ಅದರಿಂದ ದೊರೆಯುವ ಪ್ರತಿಯೊಂದೂ ಲಾಭವೂ ಅದೇ ಕಾನೂನು ಬಾಹಿರತೆಯನ್ನು ಹೊಂದಿರುತ್ತದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಅನಿಲ ಕ್ಷೇತ್ರಪಾಲ ಮತ್ತು ಹರೀಶ್ ವಿ.ಶಂಕರ್ ಅವರ ಪೀಠವು, ಅದನ್ನು ‘ವಿಷಪೂರಿತ ಮರದ ಹಣ್ಣಿಗೆ’ ಹೋಲಿಸಿತು. ಮೂಲ ಅಪರಾಧ ಆದಾಯಗಳಿಗೆ ಅಂಟಿಕೊಂಡಿರುವ ಕಳಂಕವು ನಂತರದ ಚಟುವಟಿಕೆಗಳನ್ನು ಪಿಎಂಎಲ್ಎ ಅಡಿ ನಿಗದಿತ ಅಪರಾಧಗಳೆಂದು ಪಟ್ಟಿ ಮಾಡಿರದಿದ್ದರೂ ಅವುಗಳಿಗೂ ಮುಂದುವರಿಯುತ್ತದೆ ಎಂದು ಪೀಠವು ಒತ್ತಿ ಹೇಳಿತು. ವ್ಯಾಪಕ ಕ್ರಿಕೆಟ್ ಬೆಟ್ಟಿಂಗ್ ಕಾರ್ಯಾಚರಣೆ ಕುರಿತು 2015ರ ಜಾರಿ ನಿರ್ದೇಶನಾಲಯದ (ಈಡಿ) ತನಿಖೆಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಈ ತೀರ್ಪು ಹೊರಬಿದ್ದಿದೆ. ಈಡಿ ಪ್ರಕಾರ ಬೆಟ್ಟಿಂಗ್ ಜಾಲವು ಹಣದ ಚಲಾವಣೆಗಾಗಿ ಸಾಗರೋತ್ತರ ವೇದಿಕೆಗಳು, ಹವಾಲಾ ಆಪರೇಟರ್ ಗಳು ಮತ್ತು ದೇಶಿಯ ನಿರ್ವಾಹಕರನ್ನು ಬಳಸಿಕೊಂಡಿತ್ತು ಮತ್ತು ವಾರ್ಷಿಕ ಸುಮಾರು 2,400 ಕೋಟಿ ರೂ.ಗಳ ವಹಿವಾಟುಗಳು ನಡೆಯುತ್ತಿದ್ದವು. ಶೋಧ ಕಾರ್ಯಾಚರಣೆಗಳ ಸಂದರ್ಭದಲ್ಲಿ ತನಿಖಾಧಿಕಾರಿಗಳು ನಗದು ಹಣ,ದಾಖಲೆಗಳು ಮತ್ತು ಡಿಜಿಟಲ್ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದು,ಇವು ಪ್ರಮುಖ ಆರೋಪಿಗಳು ವಿಶೇಷ ಲಾಗಿನ್ ಐಡಿಗಳ ಮೂಲಕ ವಿದೇಶಿ ಬೆಟ್ಟಿಂಗ್ ಪೋರ್ಟಲ್ ಗಳಿಗೆ ಪ್ರವೇಶವನ್ನು ನಿಯಂತ್ರಿಸಿದ್ದರು ಎನ್ನುವುದನ್ನು ಸೂಚಿಸಿತ್ತು. ಬೆಟ್ಟಿಂಗ್ ಲಾಭಗಳು ನೇರವಾಗಿ ನಿಗದಿತ ಅಪರಾಧದಿಂದ ಸೃಷ್ಟಿಯಾಗಿರದಿದ್ದರೂ ಅವುಗಳನ್ನು ಈಗಾಗಲೇ ಅಕ್ರಮ ಚಟುವಟಿಕೆಯೊಂದಿಗೆ ಗುರುತಿಸಿಕೊಂಡಿದ್ದ ಹಣವನ್ನು ಬಳಸಿ ಗಳಿಸಲಾಗಿತ್ತು ಎಂದು ಈಡಿವಾದಿಸಿತ್ತು. ಸೊತ್ತುಗಳನ್ನು ಜಪ್ತಿ ಮಾಡಿದ್ದನ್ನು ಪ್ರಶ್ನಿಸಿದ್ದ ಆರೋಪಿಗಳು, ಬೆಟ್ಟಿಂಗ್ ನಿಗದಿತ ಅಪರಾಧವಲ್ಲ,ಹೀಗಾಗಿ ಅದರ ಗಳಿಕೆಯನ್ನು ಪಿಎಂಎಲ್ಎ ಅಡಿ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ ಎಂದು ಪ್ರತಿಪಾದಿಸಿದ್ದರು. ಆರೋಪಿಗಳ ವಾದವನ್ನು ತಿರಸ್ಕರಿಸಿದ ಉಚ್ಚ ನ್ಯಾಯಾಲಯವು, ‘ಅಪರಾಧದ ಆದಾಯ’ದ ಪಿಎಂಎಲ್ಎ ವ್ಯಾಖ್ಯಾನವು ಉದ್ದೇಶಪೂರ್ವಕವಾಗಿ ವಿಶಾಲವಾಗಿದೆ ಎನ್ನುವುದನ್ನು ಗಮನಕ್ಕೆ ತೆಗೆದುಕೊಂಡಿತು. ಆರಂಭಿಕ ನಿಧಿಯ ಕ್ರಿಮಿನಲ್ ಸ್ವರೂಪ ಮುಖ್ಯವೇ ಹೊರತು ನಂತರದ ಚಟುವಟಿಕೆಗಳ ಸ್ವರೂಪವಲ್ಲ ಎಂದು ಪೀಠವು ಹೇಳಿತು. ಕಳಂಕಿತ ಹಣವನ್ನು ಬಂಡವಾಳವಾಗಿ ಬಳಸಿದಾಗ ಅದರಿಂದ ದೊರೆಯುವ ಯಾವುದೇ ಲಾಭವೂ ಕಳಂಕಿತವಾಗಿರುತ್ತದೆ ಮತ್ತು ಮುಟ್ಟುಗೋಲು ಹಾಕಿಕೊಳ್ಳಲು ಅರ್ಹವಾಗಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತು.
ಶಿರೂರು | ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ಉಡುಪಿ, ನ.26: ಖಿದ್ಮಾ ಫೌಂಡೇಶನ್ ವತಿಯಿಂದ ಶಿರೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಗುರುವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಖಿದ್ಮಾ ಫೌಂಡೇಶನ್ ಕುಂದಾಪುರ ಮತ್ತು ಬೈಂದೂರು ತಾಲೂಕು ಅಧ್ಯಕ್ಷ ಶೇಖ್ ಅಬು ಮುಹಮ್ಮದ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅಕಾಡೆಮಿ ಆಫ್ ಎಜುಕೇಶನಲ್ ಡೆವಲಪ್ಮೆಂಟ್ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷ ಅಮ್ಜದ್ ಅಲಿ ಇಬ್ರಾಹಿಂ ಶೈಖ್ ವಿದ್ಯಾರ್ಥಿ - ಪೋಷಕರಿಗೆ ವೃತ್ತಿ ಮಾರ್ಗದರ್ಶನ ನೀಡಿದರು. ಎಸೆಸೆಲ್ಸಿ ಮತ್ತು ಪಿಯುಸಿ ನಂತರದ ಕೋರ್ಸ್ ಗಳ ವಿವರಣೆ ನೀಡಿದ ಅವರು, ಸರಿಯಾದ ವೃತ್ತಿಯನ್ನು ಹೇಗೆ ಆಯ್ಕೆ ಮಾಡಬಹುದು ಮತ್ತು ವೃತ್ತಿ ಮಾರ್ಗದರ್ಶನದಲ್ಲಿ ಪಾಲಕರ ಪಾತ್ರ ಏನು ಎಂಬುವುದರ ಬಗ್ಗೆ ಬೆಳಕು ಚೆಲ್ಲಿದರು. ಅತಿಥಿಗಳಾದ ಶಿರೂರು ಗ್ರಾಪಂ ಅಧ್ಯಕ್ಷ ನಾಗರತ್ನ, ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ಕೆ.ಮೊಗೇರ, ಉಪಪ್ರಾಂಶುಪಾಲ ಜಯಂತಿ ಶೇಡ್ತಿ, ನಮ್ಮ ನಾಡ ಒಕ್ಕೂಟ, ಬೈಂದೂರು ತಾಲೂಕು ಅಧ್ಯಕ್ಷ ಸೈಯದ್ ಅಜ್ಮಲ್ ಶಿರೂರು, ಎಸ್.ಡಿ.ಎಂ.ಸಿ ಅಧ್ಯಕ್ಷ ಮುಹಮ್ಮದ್ ಗೌಸ್ ಮಾತನಾಡಿದರು. ಸಂಸ್ಥೆಯ ಸದಸ್ಯರಾದ ಅಬ್ದುಲ್ ರಹ್ಮಾನ್ ಶಿರೂರು, ಹನೀಫ್ ಖ್ವಾಜಾ ಕುಂದಾಪುರ, ಇಬ್ರಾಹಿಂ ಬೇಂದ್ರೆ, ಎನ್.ಎಸ್.ರಿಝ್ವಾನ್ ನಾಗೂರು, ಎನ್.ಎಸ್.ಇರ್ಫಾನ್ ನಾಗೂರು, ಅಶ್ರಫ್ ನಾಗೂರು, ಅಸ್ಲಂ ತಲ್ಲೂರು, ಜಲಾಲ್ ಕಂಡ್ಲೂರು ಮೊದಲಾದವರು ಉಪಸ್ಥಿತರಿದ್ದರು. ಮೌಲಾನಾ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಿದ್ಮಾ ಫೌಂಡೇಶನ್ ಕುಂದಾಪುರ ಮತ್ತು ಬೈಂದೂರು ತಾಲೂಕು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ವಂಡ್ಸೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುಂದಾಪುರ | ಶ್ರಮನೀತಿ -2025ರ ಕರಡು ಪ್ರತಿ ದಹಿಸಿದ ಹಂಚು ಕಾರ್ಮಿಕರು !
ಕುಂದಾಪುರ, ನ.26: ಕುಂದಾಪುರ ಹಂಚು ಕಾರ್ಖಾನೆಗಳಲ್ಲಿ ಬುಧವಾರ ಹಂಚು ಕಾರ್ಮಿಕರು ಕೆಲಸ ಆರಂಭಕ್ಕೂ ಮುನ್ನ ಕಾರ್ಖಾನೆ ದ್ವಾರಗಳಲ್ಲಿ ಶ್ರಮಶಕ್ತಿ ನೀತಿ -2025ರ ಕರಡು ಪ್ರತಿಯನ್ನು ದಹಿಸಿ ಪ್ರತಿಭಟಿಸಿದರು. ಮಂಗಳೂರು ಟೈಲ್ಸ್ ನಲ್ಲಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ನರಸಿಂಹ ಮಾತನಾಡಿ, ಶ್ರಮಶಕ್ತಿ ನೀತಿ -2025 ಅನ್ನು 300 ಮಂದಿ ಕಾರ್ಮಿಕರು ಒಳಗೆ ಇರುವ ಕಾರ್ಖಾನೆಗಳನ್ನು ಮಾಲಕರು ಯಾವುದೇ ಸಮಯದಲ್ಲಿ ಸರಕಾರದ ಅನುಮತಿ ಇಲ್ಲದೆ ಬಂದ್ ಮಾಡಲು ಅವಕಾಶ ನೀಡುತ್ತದೆ. ಇದು ಬಹಳ ಅಪಾಯಕಾರಿಯಾಗಿದೆ ಎಂದರು. ಕಾರ್ಮಿಕರಿಗೆ ಅನ್ಯಾಯ ಮಾಲಕರಿಂದ ಆದಾಗ ಪ್ರತಿಭಟಿಸಿದರೆ ಅದು ಅಪರಾಧ ಎಂದು ಈ ಸಂಹಿತೆ ಹೇಳುತ್ತದೆ. ಕಾರ್ಮಿಕ ನಿರೀಕ್ಷಕರು ಕಾರ್ಮಿಕ ರಕ್ಷಣೆಗೆ ಕಾರ್ಖಾನೆಯೊಳಗೆ ಅವರ ಸುರಕ್ಷೆ ಬಗ್ಗೆ ಪರಿಶೀಲಿಸುವಂತಿಲ್ಲ. ಈ ಎಲ್ಲಾ ಕಾರಣಗಳಿಗಾಗಿ ಶ್ರಮಶಕ್ತಿ -2025 ಕಾರ್ಮಿಕರ ಪಾಲಿನ ಮರಣ ಶಾಸನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸುಪ್ರೀಂ ಕಾರ್ಖಾನೆಯಲ್ಲಿ ಸಿಐಟಿಯು ಮುಖಂಡರಾದ ಸುರೇಂದ್ರ ಎಚ್., ಗಣಪ, ಗ್ರೀನ್ಲ್ಯಾಂಡ್ ಕಾರ್ಖಾನೆಯಲ್ಲಿ ಚಂದ್ರ ಪೂಜಾರಿ, ಪ್ರಭಾಕಿರಣ ಕಾರ್ಖಾನೆಯಲ್ಲಿ ಪಂಜು ಪೂಜಾರಿ ಗುಲ್ವಾಡಿ, ನಾಗರಾಜ, ಭಾಸ್ಕರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಜಿ20ರಿಂದ ದಕ್ಷಿಣ ಆಫ್ರಿಕಾ ವಜಾಕ್ಕೆ ಅಮೆರಿಕ ಒತ್ತಡ: ವರದಿ
ಜೊಹಾನ್ಸ್ಬರ್ಗ್, ನ.26: ಜಿ20 ಗುಂಪಿನಿಂದ ದಕ್ಷಿಣ ಆಫ್ರಿಕಾವನ್ನು ತೆಗೆದು ಹಾಕಿ ಆ ಜಾಗದಲ್ಲಿ ಮಧ್ಯ ಯುರೋಪ್ ನ ದೇಶವನ್ನು ಸ್ಥಾಪಿಸಲು ಅಮೆರಿಕ ಒತ್ತಡ ಹೇರುತ್ತಿದೆ ಎಂದು ದಕ್ಷಿಣ ಆಫ್ರಿಕಾದ ಅಧಿಕಾರಿಗಳು ಹೇಳಿದ್ದಾರೆ. 2026ರ ಸಾಲಿನಲ್ಲಿ ಜಿ20 ಅಧ್ಯಕ್ಷತೆಯನ್ನು ಅಮೆರಿಕ ವಹಿಸಿದ ಬಳಿಕ ಜಿ20 ಸಭೆಗಳಿಂದ ದಕ್ಷಿಣ ಆಫ್ರಿಕಾವನ್ನು ಹೊರಗಿಟ್ಟಿರುವುದಾಗಿ ಅಮೆರಿಕ ಸೂಚಿಸುವ ನಿರೀಕ್ಷೆಯಿದೆ ಎಂದು ದಕ್ಷಿಣ ಆಫ್ರಿಕಾ ಸರಕಾರದ ಮೂಲಗಳು ಹೇಳಿವೆ. ಒಂದು ವೇಳೆ ಈ ಬೆಳವಣಿಗೆ ನಡೆದರೆ ಎರಡೂ ದೇಶಗಳ ನಡುವಿನ ಬಿಕ್ಕಟ್ಟು ಮತ್ತಷ್ಟು ಆಳಗೊಳ್ಳಲಿದೆ ಎಂದು `ಬ್ಲೂಮ್ಬರ್ಗ್' ವರದಿ ಮಾಡಿದೆ. ಜಿ20ರ ಗುಂಪಿನಿಂದ ದಕ್ಷಿಣ ಆಫ್ರಿಕಾವನ್ನು ತೆಗೆದು ಹಾಕಿ ಟ್ರಂಪ್ ಆಡಳಿತಕ್ಕೆ ನಿಕಟವಾಗಿರುವ ಮಧ್ಯ ಯುರೋಪ್ ನ ಹೊಸ ಸದಸ್ಯನನ್ನು ಆ ಸ್ಥಾನಕ್ಕೆ ನೇಮಿಸುವ ಉದ್ದೇಶವಿದೆ. ಮುಂದಿನ ವರ್ಷ ನಡೆಯಲಿರುವ ಜಿ20 ಗುಂಪಿನ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಲ್ಲಿರುವ ದಕ್ಷಿಣ ಆಫ್ರಿಕಾ ಅಧಿಕಾರಿಗಳಿಗೆ ವೀಸಾವನ್ನು ತಡೆಹಿಡಿಯುವುದು ಈ ನಿರ್ಧಾರದ ಮುಂದಿನ ಹಂತವಾಗಿರಬಹುದು ಎಂದು ವರದಿ ಹೇಳಿದೆ. ದಕ್ಷಿಣ ಆಫ್ರಿಕಾದಲ್ಲಿ `ಬಿಳಿಯರ ನರಮೇಧ' ನಡೆಯುತ್ತಿದೆ. ದಕ್ಷಿಣ ಆಫ್ರಿಕಾದ ಕಪ್ಪುವರ್ಣೀಯ ಸಮುದಾಯ ಬಿಳಿಯರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ ಟ್ರಂಪ್, ದಕ್ಷಿಣ ಆಫ್ರಿಕಾದಲ್ಲಿ ಕಳೆದ ವಾರ ನಡೆದಿದ್ದ ಜಿ20 ಶೃಂಗಸಭೆಯನ್ನು ಬಹಿಷ್ಕರಿಸಿದ್ದರು ಮತ್ತು ತನ್ನ ಪ್ರತಿನಿಧಿಯಾಗಿ ದಕ್ಷಿಣ ಆಫ್ರಿಕಾದಲ್ಲಿನ ಅಮೆರಿಕ ರಾಯಭಾರಿ ಪಾಲ್ಗೊಳ್ಳುತ್ತಾರೆ ಎಂದಿದ್ದರು. ಆದರೆ, ಜಿ20 ಗುಂಪಿನ ಮುಂದಿನ ಅಧ್ಯಕ್ಷತೆಯನ್ನು ಅಮೆರಿಕ ರಾಯಭಾರಿ ಕಚೇರಿಯ `ಕಿರಿಯ ಅಧಿಕಾರಿಗೆ' ಹಸ್ತಾಂತರಿಸಲು ದಕ್ಷಿಣ ಆಫ್ರಿಕಾ ನಿರಾಕರಿಸಿತ್ತು. ಬಳಿಕ (ನವೆಂಬರ್ 25ರಂದು) ಮಂಗಳವಾರ ದಕ್ಷಿಣ ಆಫ್ರಿಕಾದ ವಿದೇಶಾಂಗ ಇಲಾಖೆಯ ಕಚೇರಿಯಲ್ಲಿ ರಾಜತಾಂತ್ರಿಕ ಮಟ್ಟದಲ್ಲಿ ಅಧಿಕಾರ ಹಸ್ತಾಂತರ ಸದ್ದಿಲ್ಲದೆ ನಡೆದಿರುವುದಾಗಿ ವರದಿಯಾಗಿದೆ.
ಶೂ ಎಸೆದ ವಕೀಲನ ವಿರುದ್ಧ ಕ್ರಮ ಕೈಗೊಳ್ಳದಿರಲು ತಕ್ಷಣವೇ ನಿರ್ಧರಿಸಿದ್ದೆ: ನ್ಯಾ.ಗವಾಯಿ
ಹೊಸದಿಲ್ಲಿ,ನ.26: ಕಳೆದ ತಿಂಗಳು ಸುಪ್ರೀಂಕೋರ್ಟ್ನ ಒಳಗೆ ತನ್ನ ಮೇಲೆ ನ್ಯಾಯವಾದಿಯೊಬ್ಬ ಶೂ ಎಸೆಯಲು ಯತ್ನಿಸಿದ ಹೊರತಾಗಿಯೂ, ನನ್ನ ಸಹಜಪ್ರವೃತ್ತಿಯಿಂದಾಗಿ ತಾನು ನ್ಯಾಯಾಲಯದಲ್ಲಿ ವಿಚಾರಣಾ ಕಲಾಪವನ್ನು ಮುಂದುವರಿಸಲು ನಿರ್ಧರಿಸಿದ್ದೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಬುಧವಾರ ತಿಳಿಸಿದ್ದಾರೆ. ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ‘‘ನಾನು ಬೆಳೆದುಬಂದ ರೀತಿಯಿಂದಾಗಿ ನಾನು ಈ ನಿರ್ಧಾರವನ್ನು ಕೈಗೊಂಡೆ. ನ್ಯಾಯಾಲಯದಲ್ಲಿ ನಾನು ಆಡಿದೆನ್ನಲಾದ ಮಾತುಗಳಿಗಾಗಿ ಅಥವಾ ನ್ಯಾಯಾಲಯದಲ್ಲಿ ನನ್ನ ವ್ಯಕ್ತಪಡಿಸಿದ ಅಭಿಪ್ರಾಯಗಳಿಗಾಗಿ ಹೀಗೆ ಮಾಡಲಾಯಿತೇ ಎಂಬುದು ನನಗೆ ಗೊತ್ತಿಲ್ಲ. ಆದಾಗ್ಯೂ ನಾನು ವಿಚಾರಣಾ ಕಲಾಪವನ್ನು ಮುಂದುವರಿಸಬೇಕೆಂಬ ನಿರ್ಧರಿಸಿದೆ. ಈ ಕುರಿತು ನಾನು ಕ್ಷಣ ಮಾತ್ರದಲ್ಲಿ ಈ ನಿರ್ಧಾರವನ್ನು ಕೈಗೊಂಡೆ ’’ಎಂದವರು ಹೇಳಿದರು. ಮಧ್ಯಪ್ರದೇಶದ ಖಜುರಾಹೋದಲ್ಲಿರುವ ಜವಾರಿ ದೇವಾಲಯದಲ್ಲಿರುವ ವಿಷ್ಣು ವಿಗ್ರಹದ ಪುನರ್ಸ್ಥಾಪನೆಗೆ ಕೋರಿ ನ್ಯಾಯವಾದಿ ರಾಕೇಶ್ ಕಿಶೋರ್ ಎಂಬಾತ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (ಪಿಐಎಲ್)ಯನ್ನು ಆಗ ಸಿಜೆಐ ಆಗಿದ್ದ ಗವಾಯಿ ಅವರು ತಿರಸ್ಕರಿಸಿದ್ದರು. ಈ ಸಂದರ್ಭದಲ್ಲಿ ಅವರೆಡೆಗೆ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿದ್ದ. ಆದರೆ ಭದ್ರತಾ ಸಿಬ್ಬಂದಿ ತಕ್ಷಣವೇ ಮಧ್ಯಪ್ರವೇಶಿಸಿ ಆತನನ್ನು ತಡೆದಿದ್ದರು, ಆದರೆ ಗವಾಯಿ ಅವರು ಅದನ್ನು ನಿರ್ಲಕ್ಷಿಸಿ ನ್ಯಾಯಾಲಯದ ಕಲಾಪವನ್ನು ಮುಂದುವರಿಸಲು ಸೂಚಿಸಿದರು. ಇಂತಹ ಕ್ಷುಲ್ಲಕ ವಿಷಯಗಳಿಗೆ ನ್ಯಾಯಾಲಯ ವಿಚಲಿತವಾಗಕೂಡದೆಂದು ಅವರು ಹೇಳಿದ್ದರು. ಭದ್ರತಾ ಸಿಬ್ಬಂದಿ ಕಿಶೋರ್ ನನ್ನು ಹೊರಗೊಯ್ಯುತ್ತಿದ್ದಾಗ, ಆತ ‘ಸನಾತನ್ ಕಾ ಅಪಮಾನ್ ನಹೀ ಸಹೇಂಗೇ’ (ಸನಾತನ ಧರ್ಮದ ಅಪಮಾನವನ್ನು ಸಹಿಸುವುದಿಲ್ಲ) ಎಂಬ ಘೋಷಣೆಯನ್ನು ಕೂಗಿದ್ದನು. ಇದೊದು ನ್ಯಾಯಾಂಗ ನಿಂದನೆಯ ಘಟನೆಯಾಗಿದ್ದರೂ, ಆರೋಪಿ ನ್ಯಾಯವಾದಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸಿಜೆಐ ಸೂಚಿಸಿದರು. ತರುವಾಯ ಭಾರತೀಯ ನ್ಯಾಯವಾದಿಗಳ ಮಂಡಳಿಯು ಕಿಶೋರ್ ನ ವಕೀಲಿ ವೃತ್ತಿಯ ಪರವಾನಗಿಯನ್ನು ರದ್ದುಪಡಿಸಿತ್ತು.
ವಿರಳ ಖನಿಜ ಕ್ಷೇತ್ರದಲ್ಲಿ ‘ಆತ್ಮನಿರ್ಭರತೆ’ಯ ಗುರಿ; REPM ಲೋಹಗಳ ಉತ್ಪಾದನೆ ಉತ್ತೇಜನಕ್ಕೆ 7200 ಕೋ.ರೂ. ಯೋಜನೆ
ಹೊಸದಿಲ್ಲಿ,ನ.26: ವಿರಳ ಖನಿಜಗಳನ್ನು ದೇಶಿಯವಾಗಿ ಉತ್ಪಾದಿಸುವ ಭಾರತದ ಸಾಮರ್ಥ್ಯವನ್ನು ಉತ್ತೇಜಿಸುವ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೇತತೃತ್ವದ ಕೇಂದ್ರ ಸಂಪುಟವು 7200 ಕೋಟಿ ರೂ.ಗೂ ಅಧಿಕ ಮೊತ್ತದ REPM (ರೇರ್ ಆರ್ಥ್ ಪರ್ಮಾನೆಂಟ್ ಮ್ಯಾಗ್ನೆಟ್) ಯೋಜನೆಗೆ ಅನುಮೋದನೆ ನೀಡಿದೆ. ವಾರ್ಷಿಕವಾಗಿ 6 ಸಾವಿರ ಮೆಟ್ರಿಕ್ಟನ್ (ಎಂಟಿಪಿಎ) ಸಾಮರ್ಥ್ಯದ REPM ಲೋಹಗಳ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ವಿರಳ ಖನಿಜಗಳ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸ್ವಾವಲಂಬನೆಯನ್ನು ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಅದರ ಉಪಸ್ಥಿತಿಯನ್ನು ಬಲಪಡಿಸುವ ಭರವಸೆಯನ್ನ್ನು ಈ ಉಪಕ್ರಮವು ಹೊಂದಿದೆ. REPM ಲೋಹಗಳು, ಭೂಮಿಯಲ್ಲಿ ಲಭ್ಯವಿರುವ ಅತ್ಯಂತ ಶಕ್ತಿಶಾಲಿಯಾದ ಆಯಸ್ಕಾಂತಗಳಾಗಿವೆ. ವಿದ್ಯುತ್ಚಾಲಿತ ವಾಹನಗಳು, ಪುನರ್ನವೀಕರಣ ಯೋಗ್ಯ ಇಂಧನ, ಇಲೆಕ್ಟ್ರಾನಿಕ್ಸ್,ವ್ಯೋಮಯಾನ ಹಾಗೂ ರಕ್ಷಣಾ ಕೈಗಾರಿಕೆಗಳು ಸೇರಿದಂತೆ ವಿವಿಧ ಉತ್ಪಾದನಾ ವಲಯಗಳಿಗೆ ಇವು ಅತ್ಯವಶ್ಯವಾಗಿವೆ. ಪ್ರಸಕ್ತ ಭಾರತವು ತನ್ನ REPM ಲೋಹಗಳನ್ನು ತನ್ನ ಅಗತ್ಯಕ್ಕಾಗಿ ವಿದೇಶದಿಂದ ಆಮದು ಮಾಡಿಕೊಳ್ಳುತ್ತಿದೆ. REPM ಉತ್ಪಾದನಾ ಘಟಕಗಳ ಸ್ಥಾಪನೆಯ ಯೋಜನೆಯಿಂದಾಗಿ, ದೇಶದಲ್ಲಿ ಉದ್ಯೋಗ ಸೃಷ್ಟಿ, ಸ್ವಾವಲಂಬನೆಯ ವರ್ಧನೆಗೆ ಸಹಕಾರಿಯಾಗಲಿದೆ. ಪ್ರಸಕ್ತ ಭಾರತವು REPM ಲೋಹವನ್ನು ಪ್ರಮುಖವಾಗಿ ಚೀನಾದಿಂದ ಆಮದು ಮಾಡಿಕೊಳ್ಳುತ್ತಿದೆ.
ಭೋಪಾಲ,ನ.26: ಮಧ್ಯಪ್ರದೇಶದ ಸೆಹೋರ್ನ ವಿಐಟಿ ವಿಶ್ವವಿದ್ಯಾನಿಲಯದಲ್ಲಿ ಕಳಪೆದರ್ಜೆಯ ಆಹಾರ ಹಾಗೂ ಮಲಿನಗೊಂಡ ನೀರಿನ ಸೇವನೆಯಿಂದಾಗಿ ಕ್ಯಾಂಪಸ್ ನಲ್ಲಿ ಹಳದಿಕಾಮಾಲೆ ರೋಗ ಹರಡಿದೆಯೆಂದು ಆರೋಪಿಸಿ ವಿದ್ಯಾರ್ಥಿಗಳು ಬುಧವಾರ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಉದ್ರಿಕ್ತ ವಿದ್ಯಾರ್ಥಿಗಳು ಬಸ್ಗಳು ಹಾಗೂ ಕಾರುಗಳಿಗೆ ಬೆಂಕಿ ಹಚ್ಚಿದ್ದು, ಆ್ಯಂಬುಲೆನ್ಸ್ ಒಂದನ್ನು ಜಖಂಗೊಳಿಸಿದ್ದಾರೆ. ವಿಶ್ವವಿದ್ಯಾನಿಲಯ ಕ್ಯಾಂಪಸ್ ನ ಹಲವು ವಿಭಾಗಗಳಿಗೆ ಹಾನಿಯೆಸಗಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಐದು ಪೊಲೀಸ್ ಠಾಣೆಗಳ ಪೊಲೀಸ್ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉದ್ವಿಗ್ನತೆ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ನವೆಂಬರ್ 30ರವರೆಗೆ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಕಳಪೆ ಆಹಾರ ಹಾಗೂ ಅಸುರಕ್ಷಿತವಾದ ಕುಡಿಯುವ ನೀರು ವಿವಿ ಕ್ಯಾಂಪಸ್ ನಲ್ಲಿ ವ್ಯಾಪಕವಾಗಿ ಅಸ್ವಸ್ಥತೆಗೆ ಕಾರಣವಾಗಿದೆಯೆಂದು ವಿದ್ಯಾರ್ಥಿಗಳು ದೂರಿದ್ದಾರೆ. ಹಲವು ವಿದ್ಯಾರ್ಥಿಗಳು ಹಳದಿ ಕಾಮಾಲೆ ಪೀಡಿತರಾಗಿದ್ದಾರೆಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದಾಗ ಹಾಸ್ಟೆಲ್ ವಾರ್ಡನ್ ಗಳು ಹಾಗೂ ಭದ್ರತಾ ಕಾವಲುಗಾರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ದೂರು ನೀಡದಂತೆ ಒತ್ತಡ ಹೇರಿದ್ದರು. ವಿಶ್ವವಿದ್ಯಾನಿಲಯದ ಆಡಳಿತವರ್ಗದ ಜೊತೆ ಈ ಕುರಿತು ಮಾತನಾಡಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ತಮ್ಮ ದೂರುಗಳಿಗೆ ಯಾವುದೇ ಸ್ಪಂದನೆ ದೊರೆಯದೇ ಇದ್ದಾಗ, ಸುಮಾರು ನಾಲ್ಕು ಸಾವಿರದಷ್ಟಿದ್ದ ವಿದ್ಯಾರ್ಥಿಗಳಿಗೆ ಹಿಂಸಾಚಾರಕ್ಕಿಳಿದಿದ್ದಾರೆ. ಅವರು ಬಸ್, ಮೋಟಾರ್ ಸೈಕಲ್ ಹಾಗೂ ಆ್ಯಂಬುಲೆನ್ಸ್ಗೆ ಬೆಂಕಿ ಹಚ್ಚಿದ್ದಾರೆ. ಹಾಸ್ಟೆಲ್ನ ಕಿಟಕಿಗಾಜುಗಳು ಮತ್ತು ಕ್ಯಾಂಪಸ್ ನಲ್ಲಿರುವ ಹಲವಾರು ಸ್ಥಾಪನೆಗಳಿಗೆ ಹಾನಿಯೆಸಗಿದ್ದಾರೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಹಾಸ್ಟೆಲ್ನಲ್ಲಿ ಕಳಪೆ ದರ್ಜೆಯ ಆಹಾರ ಪೂರೈಕೆ ಹಾಗೂ ರೋಗ ಹರಡುವಿಕೆ ಮತ್ತು ಭದ್ರತಾಸಿಬ್ಬಂದಿಗಳಿಂದ ಹಲ್ಲೆ, ವ್ಯಾಪಕ ಗಲಭೆ ಸೇರಿದಂತೆ ಎಲ್ಲಾ ಘಟನೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳ | NRCಯೇ SIRನ ನೈಜ ಉದ್ದೇಶ: ಮಮತಾ
ಕೋಲ್ಕತಾ, ನ. 26: ಸ್ವಾತಂತ್ರ್ಯ ಸಿಕ್ಕಿ ಎಷ್ಟೋ ವರ್ಷಗಳು ಗತಿಸಿದ ಬಳಿಕ ಜನರ ಪೌರತ್ವವನ್ನು ಪ್ರಶ್ನಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಹಿಂದಿನ ನಿಜವಾದ ಉದ್ದೇಶ ರಾಷ್ಟ್ರೀಯ ಪೌರತ್ವ ನೋಂದಣಿ (NRC)ಯೇ ಆಗಿದೆ ಎಂದು ಅವರು ಹೇಳಿದರು. ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಕೋಲ್ಕತದ ಕೆಂಪು ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಗೆ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ‘‘ಪ್ರಜಾಪ್ರಭುತ್ವ ಅಪಾಯದಲ್ಲಿರುವಾಗ, ಜಾತ್ಯತೀತತೆ ವಿನಾಶದ ಸುಳಿಯಲ್ಲಿ ಸಿಲುಕಿರುವಾಗ ಮತ್ತು ಒಕ್ಕೂಟ ವ್ಯವಸ್ಥೆಗೆ ಕೊಡಲಿ ಏಟು ಬೀಳುತ್ತಿರುವಾಗ ಜನರು ಸಂವಿಧಾನದ ರಕ್ಷಣೆಗೆ ಮುಂದಾಗಬೇಕು’’ ಎಂದು ಮುಖ್ಯಮಂತ್ರಿ ಹೇಳಿದರು. ಸಂವಿಧಾನವು ಭಾರತದ ಬೆನ್ನೆಲುಬಾಗಿದೆ ಎಂದು ಹೇಳಿದ ಅವರು, ಅದು ಭಾರತದ ಸಂಸ್ಕೃತಿಗಳು, ಭಾಷೆಗಳು ಮತ್ತು ಸಮುದಾಯಗಳ ವೈವಿಧ್ಯತೆಯನ್ನು ಪರಿಪೂರ್ಣವಾಗಿ ಜೊತೆಗೆ ಬೆಸೆದಿದೆ ಎಂದರು. ‘‘ಇಂದು, ಸಂವಿಧಾನ ದಿನದಂದು, ಭಾರತದಲ್ಲಿರುವ ನಮ್ಮನ್ನು ಒಗ್ಗೂಡಿಸಿರುವ ನಮ್ಮ ಶ್ರೇಷ್ಠ ಸಂವಿಧಾನಕ್ಕೆ ನಾನು ಮಹೋನ್ನತ ಗೌರವ ನೀಡುತ್ತಿದ್ದೇನೆ. ಇಂಥ ಶ್ರೇಷ್ಠ ಸಂವಿಧಾನವನ್ನು ರೂಪಿಸಿರುವ ದೂರದೃಷ್ಟಿಯ ನಾಯಕರಿಗೆ, ಅದರಲ್ಲೂ ಮುಖ್ಯವಾಗಿ ಅದರ ಪ್ರಧಾನ ರೂವಾರಿ ಡಾ. ಬಿ.ಆರ್. ಅಂಬೇಡ್ಕರ್ರಿಗೆ ನಾನಿಂದು ಗೌರವ ಸಲ್ಲಿಸುತ್ತೇನೆ’’ ಎಂದು ಬಳಿಕ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದಿದ್ದಾರೆ.
ಉಳಿದ ಅವಧಿಗೆ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬುದು ನನ್ನ, ಭಕ್ತರ ಮನದ ಮಾತು: ನಿರ್ಮಲಾನಂದನಾಥ ಸ್ವಾಮೀಜಿ
ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಡಿಕೆ ಶಿವಕುಮಾರ್ ಅವರು ಉಳಿದ ಅವಧಿಗೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯಿಂದ ಅಭಿವೃದ್ಧಿ ಕುಂಠಿತವಾಗುವುದನ್ನು ತಪ್ಪಿಸಲು ಕಾಂಗ್ರೆಸ್ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಇಥಿಯೋಪಿಯಾದ ಜ್ವಾಲಾಮುಖಿ ಸ್ಫೋಟದಿಂದಾಗಿ ಭಾರತದಲ್ಲಿ ವಿಮಾನಯಾನಕ್ಕೆ ತೊಂದರೆಯಾಗಿದೆ. ಏರ್ ಇಂಡಿಯಾ 13 ವಿಮಾನಗಳನ್ನು ರದ್ದುಗೊಳಿಸಿದೆ. ದೋಹಾದಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲೂ ವಿಮಾನ ರದ್ದು ಮತ್ತು ವಿಳಂಬವಾಗಿದೆ. ಈ ಪರಿಸ್ಥಿತಿಯಿಂದಾಗಿ ಹಲವು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ʻಮೊದಲು ಪರಮೇಶ್ವರ್ರ ಕೂಲಿ ಚುಕ್ತಾ ಮಾಡಿ, ಆಮೇಲೆ ಡಿಕೆ ಶಿವಕುಮಾರ್ ಸಿಎಂ ಆಗಲಿʼ: ಕೆಎನ್ ರಾಜಣ್ಣ
ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಮುನ್ನ, ಪಕ್ಷಕ್ಕಾಗಿ ದುಡಿದ ಡಾ.ಜಿ.ಪರಮೇಶ್ವರ್ ಅವರ 'ಹಳೇ ಕೂಲಿ ಕೊಡಬೇಕಿದೆ. ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಬೇಕು, ಒಂದು ವೇಳೆ ಅನಿವಾರ್ಯತೆ ಬಂದರೆ ಪರಮೇಶ್ವರ್ ಅವರಿಗೆ ಅವಕಾಶ ನೀಡಬೇಕು ಎಂದು ಕೆಎನ್ ರಾಜಣ್ಣ ಅವರು ಮಾತನಾಡಿದರು.
ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ ಜೊತೆಗೆ... Smriti Mandhana
ಬೆಂಗಳೂರು ತಂಡದ ನಾಯಕಿ, ಕನ್ನಡಿಗರ ಮನೆಮಗಳು ಸ್ಮೃತಿ ಮಂಧಾನಗೆ ದಿಢೀರ್ ಆಘಾತವೇ ಇದೀಗ ಎದುರಾಗಿದೆ. ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಮದುವೆ ಮುರಿದು ಬಿದ್ದಿರುವ ಬೆನ್ನಲ್ಲೇ ಕ್ರಿಕೆಟ್ ಲೋಕದಲ್ಲಿ ಮತ್ತು ಸಿನಿಮಾ ಲೋಕದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಹೀಗೆ ಎಲ್ಲೆಲ್ಲೂ ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನ ಮದುವೆ ವಿಚಾರವೇ ಪ್ರಸ್ತಾಪ ಆಗುತ್ತಿರುವಾಗಲೇ ಮತ್ತೊಂದು ಸುದ್ದಿ ಸುನಾಮಿಯನ್ನೇ ಸೃಷ್ಟಿ
ಉಡುಪಿ | ನ.28: ಪ್ರಧಾನಿ ಸಂಚರಿಸುವ ಮಾರ್ಗದ ಇಕ್ಕೆಲಗಳ ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಧಿಕಾರಿ ಆದೇಶ
ಡ್ರೋನ್ ಹಾರಾಟಕ್ಕೆ ನಿಷೇಧ
ಕಲಬುರಗಿ : ದಶಕದಲ್ಲಿ ನೆಲೆಯೂರಿರುವ ವೈವಿಧ್ಯಮಯ ಸಂಸ್ಕೃತಿಯನ್ನು ಗೌರವಿಸುವುದರ ಜೊತೆಗೆ ಜಾತಿ, ಧರ್ಮ, ವರ್ಣರಹಿತ ಜಾತ್ಯತೀತ ಮನೋಭಾವನೆಯೊಂದಿಗೆ ಸರ್ವರ ಪ್ರಗತಿಗೆ ದಾರದೀಪದಂತಹ ಸಂವಿಧಾನ ನೀಡಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ ಎಂದು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಕೆ.ವಾಯ್ ರತ್ನಮ್ ಹೇಳಿದರು. ಬುಧವಾರ ಗುಲ್ಬರ್ಗ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ವಿವಿಯ ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ 76ನೇ ಸಂವಿಧಾನ ದಿನಾಚರಣೆ ನಿಮಿತ್ತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಪೀಠಿಕೆಯಲ್ಲಿನ ಪ್ರತಿಯೊಂದು ಪದಗಳು ಬಹಳಷ್ಟು ವಿಶಾಲವಾದ ಅರ್ಥವನ್ನು ನೀಡುತ್ತವೆ. ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ನಮಗೆ ಪ್ರೇರಣೆಯಾಗಿದೆ. ವಿದ್ಯಾರ್ಥಿ ಸಮುದಾಯ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರಿತುಕೊಳ್ಳಬೇಕು ಮತ್ತು ಹೆಚ್ಚು ಪಸರಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಮಾತನಾಡಿ, ಸಂವಿಧಾನ ಜಾರಿಯಾದ ಕಾರಣ ಇಂದು ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯಲು ಸಾಧ್ಯವಾಗಿದೆ. ಶಿಕ್ಷಣವೆಂಬುದು ಹುಲಿಯ ಹಾಲಿದ್ದಂತೆ ಅದನ್ನು ಕುಡಿದವರು ಘರ್ಜಿಸಲೆಬೇಕು ಎಂಬ ಮಾತಿನಂತೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅಧ್ಯಯನವನ್ನು ಮಾಡುವುದರ ಮೂಲಕ ಹೆಚ್ಚಿನ ಜ್ಞಾನವನ್ನು ಸಂಪಾದನೆಯನ್ನು ಮಾಡಬೇಕು. ಇಂದಿನ ಸಮಾಜದಲ್ಲಿ ಕಾಣಬಹುದಾದ ಅಸಮಾನತೆ, ಜೀತ ಪದ್ದತಿ ನಿರ್ಮೂಲನೆ, ಮರ್ಯಾದೆ ಹತ್ಯೆಗಳು ಹೋಗಲಾಡಿಸಲು ಶ್ರಮಿಸಬೇಕು ಎಂದರು. ರಾಷ್ಟ್ರೀಯ ವಿಚಾರ ಸಂಕಿರಣ ಅಂಗವಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಪ್ರೊ.ರಾಜನಾಳ್ಕರ್ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮುಖ್ಯಗೋಷ್ಠಿ ನಡೆಯಿತು. ಗುಲ್ಬರ್ಗ ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಚಂದ್ರಕಾಂತ್ ಯಾತನೂರ್ ಅವರು ಸರ್ವರನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಂಶೋಧನಾ ವಿದ್ಯಾರ್ಥಿ ಮಹೇಶ್ವರಿ ಎಸ್. ಚೆನ್ನಪ್ಪಗೊಳ ಮತ್ತು ಅತಿಥಿ ಉಪನ್ಯಾಸಕ ಡಾ.ಶಿವಾನಂದ ಕಡಗಂಚಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಮ್.ಭೈರಪ್ಪ, ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಎಸ್.ಎನ್. ಗಾಯಕ್ವಾಡ್, ಕುಲಸಚಿವ ಪ್ರೊ. ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಡಾ. ನಿಂಗಣ್ಣ ಕಣ್ಣೂರ, ಹಣಕಾಸು ಅಧಿಕಾರಿ ಜಯಾಂಬಿಕಾ ಸೇರಿದಂತೆ ಇತರೆ ಬೋಧಕ-ಬೋಧಕೇತರ ವೃಂದದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉಡುಪಿ | ನ.28ರಂದು ಕೃಷ್ಣಮಠಕ್ಕೆ ಪ್ರವೇಶ ನಿರ್ಬಂಧ
ಉಡುಪಿ, ನ.26: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಕೋಟಿ ಗೀತಾ ಲೇಖನ ಯಜ್ಞದ ಪ್ರಯುಕ್ತ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿಸಲಿರುವ ಕಾರಣ ಶುಕ್ರವಾರದಂದು ಬೆಳಿಗ್ಗೆ 8:00ರಿಂದ ಅಪರಾಹ್ನ 3:00 ಗಂಟೆಯ ವರೆಗೆ ಶ್ರೀಕೃಷ್ಣ ಮಠಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೂಚನೆಯನ್ನು ಗಮನಿಸಿ ಸಹಕರಿಸಬೇಕೆಂದು ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ. ಪ್ರಧಾನಿಯವರು ಕೃಷ್ಣನ ಸನ್ನಿಧಾನಕ್ಕೆ ಆಗಮಿಸಿ, ಭಕ್ತ ಸಮೂಹದೊಂದಿಗೆ ಗೀತಾ ಪಾರಾಯಣವನ್ನು ನಡೆಸಿ ಕೃಷ್ಣನಿಗೆ ಸಮರ್ಪಿಸಲಿದ್ದಾರೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುವಾಗ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರು ಹಾಗೂ ಮಠದ ಗಣ್ಯರಿಂದ ಸಾಂಪ್ರದಾಯಿಕ ಸ್ವಾಗತ ಸಲ್ಲಿಸಲಾಗುತ್ತದೆ. ನರೇಂದ್ರ ಮೋದಿ ಅವರು ಎಂಟು ಶತಮಾನಗಳ ಇತಿಹಾಸವಿರುವ ಶ್ರೀಕೃಷ್ಣದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ಮಾಡಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲಕ್ಷಕಂಠ ಗೀತೆ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುರ್ಚಿ ಬಿಕ್ಕಟ್ಟು | ಶೀಘ್ರದಲ್ಲಿಯೇ ಹೈಕಮಾಂಡ್ ಸಭೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು, ನ.26: ರಾಜ್ಯ ಸರಕಾರದಲ್ಲಿನ ಅಧಿಕಾರ ಹಂಚಿಕೆ ಚರ್ಚೆ ಕುರಿತು ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಭೆ ನಡೆಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಿಲ್ಲಿಯಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಸಭೆ ಇದೆ. ಬಿಹಾರ ಫಲಿತಾಂಶ ಬಗ್ಗೆಯೂ ಚರ್ಚೆ ನಡೆಯಲಿದೆ. ಆಗ ರಾಜ್ಯದ ಗೊಂದಲದ ಬಗ್ಗೆ ಮಾತನಾಡಿ ಬಗೆಹರಿಸುತ್ತಾರೆ ಎಂದು ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ನಮ್ಮ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು. ಇವರ ಹೊರತಾಗಿ ಹೈಕಮಾಂಡ್ ತೀರ್ಮಾನಿಸಬೇಕು. ಅದೇ ರೀತಿ ಹೊಸ ಅಧ್ಯಕ್ಷರ ಬಗ್ಗೆಯೂ ಅವರೇ ತೀರ್ಮಾನಿಸಬೇಕು ಎಂದು ಅವರು ಹೇಳಿದರು.
ಧರ್ಮಸ್ಥಳ ಪ್ರಕರಣ | ದೂರು, ಮಾಹಿತಿಗಾಗಿ ವಿಶೇಷವಾದ ‘ಸಹಾಯವಾಣಿ’ ಸ್ಥಾಪಿಸುವಂತೆ ಒತ್ತಾಯ
ಬೆಂಗಳೂರು : ಧರ್ಮಸ್ಥಳ ಪ್ರದೇಶದಲ್ಲಿ ಆಗಿರುವ ಮಹಿಳೆಯರ ನಾಪತ್ತೆ ಮತ್ತು ಸಾವುಗಳಿಗೆ ಸಂಬಂಧಿಸಿದ ದೂರುಗಳು ಮತ್ತು ಮಾಹಿತಿಗಾಗಿ ವಿಶೇಷವಾದ ‘ಸಹಾಯವಾಣಿ’ಯನ್ನು(ಹೆಲ್ಪ್ಲೈನ್) ಸ್ಥಾಪಿಸಬೇಕು. ಹಾಗೆಯೇ ಸಾಕ್ಷಿ ಮತ್ತು ದೂರುದಾರರಿಗೆ ಅಗತ್ಯವಾದ ರಕ್ಷಣೆ, ಸುರಕ್ಷತೆ ಮತ್ತು ಗೌಪ್ಯತೆಯನ್ನು ಒದಗಿಸಬೇಕು ಎಂದು ‘ಕೊಂದವರು ಯಾರು?’ ಎಂಬ ಸಂಘಟನೆಯು ಒತ್ತಾಯಿಸಿದೆ. ಬುಧವಾರದಂದು ಧರ್ಮಸ್ಥಳ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಗಳ ತನಿಖೆಗೆ ಸರಕಾರ ನೇಮಿಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಸಂಘಟನೆಯು ಪತ್ರ ಬರೆದಿದ್ದು, ದೂರುದಾರಿಗೆ, ಸಾಕ್ಷಿದಾರರಿಗೆ ತಜ್ಞ ಸಂಸ್ಥೆಗಳ ಕಾನೂನಿನ ನೆರವು ನೀಡಬೇಕು. ಜೊತೆಗೆ ಸುರಕ್ಷಿತ ವಾಸಸ್ಥಾನ ಮತ್ತು ಜೀವನೋಪಾಯ ನೀಡುವ ನಿಯಮಗಳನ್ನು ಪರಿಶೀಲಿಸಬೇಕು. ನೊಂದ ಕುಟುಂಬಗಳಿಗೆ ರಕ್ಷಣೆ, ಪರಿಹಾರ ಮತ್ತು ಪುನರ್ವಸತಿಯನ್ನು ಒದಗಿಸಬೇಕು ಎಂದು ತಿಳಿಸಿದೆ. ಲಿಂಗ ಆಧಾರಿತ ಹಿಂಸೆ ಮತ್ತು ದೌರ್ಜನ್ಯದ ಯಾವುದೇ ಸಾಕ್ಷಿ/ಬದುಕುಳಿದವರು ತಮ್ಮ ಜೀವ, ಆಸ್ತಿ, ಜೀವನೋಪಾಯ ಮತ್ತು ಬದುಕಿನ ಘನತೆಯ ದೃಷ್ಟಿಯಿಂದ ಬೆದರಿಕೆಗಳನ್ನು ಎದುರಿಸುತ್ತಾರೆ. ದೂರುದಾರರು, ಸಾಕ್ಷಿದಾರರು ತಮ್ಮ ಹೇಳಿಕೆಗಳು ಮತ್ತು ಹಂಚಿಕೊಂಡ ಸಾಕ್ಷ್ಯಗಳನ್ನು ದಾಖಲಿಸುವಲ್ಲಿ ಮಾನದಂಡಗಳನ್ನು ಅನುಸರಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. 2024ರ ಸೆ.13ರ ಹೈಕೋರ್ಟ್ನ ತೀರ್ಪಿನಂತೆ, ಸೌಜನ್ಯ ಪ್ರಕರಣದಲ್ಲಿ ಸಂಬಂಧಿತ ಅಧಿಕಾರಿಗಳು ಮತ್ತು ತನಿಖಾಕಾಧಿಕಾರಿಗಳ ನಿರ್ಲಕ್ಷ್ಯವನ್ನು ಅಪರಾಧವಾಗಿ ಪರಿಗಣಿಸಿ, ರಾಜ್ಯ ಸರಕಾರವು ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಕಾನೂನಿನಂತೆ ಕ್ರಮ ತೆಗೆದುಕೊಳ್ಳದ ಸಾರ್ವಜನಿಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸುವ ಐಪಿಸಿ ಸೆಕ್ಷನ್ 166ಎ(ಅಥವಾ ತತ್ಸಮಾನ ಬಿಎನ್ಎಸ್ ಸೆಕ್ಷನ್) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ಎಸ್ಐಟಿಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಲಿಂಗ ನ್ಯಾಯ ಮತ್ತು ಜವಾಬ್ದಾರಿಯನ್ನು ಖಚಿತಪಡಿಸಲು ಒಂದು ಸ್ವತಂತ್ರ ಬೆಂಬಲ ಗುಂಪನ್ನು ಸ್ಥಾಪಿಸಿ, ಅದರಲ್ಲಿ ಮಹಿಳಾ ಹಕ್ಕುಗಳ ತಜ್ಞರನ್ನು ಸೇರಿಸಬೇಕು. ಸತ್ಯವನ್ನು ಮರೆಮಾಚುವ ಅಥವಾ ಜಾತಿ/ವರ್ಗ/ಧರ್ಮ/ರಾಜಕೀಯ ಪ್ರಾಬಲ್ಯ ಬಳಸಿ ಒತ್ತಡ ಹೇರುವ ಮೂಲಕ ಯಾರಾದರೂ ತನಿಖೆಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಅಡ್ಡಿಪಡಿಸಿದದಲ್ಲಿ ಅವರನ್ನು ಶಿಕ್ಷೆಗೊಳಪಡಬೇಕು ಎಂದು ಸಂಘಟನೆಯು ಹೇಳಿದೆ. ಧರ್ಮಸ್ಥಳ ಪ್ರದೇಶದಲ್ಲಿ ಅಸ್ವಾಭಾವಿಕ ಸಾವುಗಳ ಸಂಖ್ಯೆಯು ಅಸಾಮಾನ್ಯವಾಗಿ ಹೆಚ್ಚಾಗಿದ್ದು, ಇದನ್ನು ಉಗ್ರಪ್ಪ ಸಮಿತಿಯು ಗುರುತಿಸಿದೆ. ಎಸ್ಐಟಿ ನಡೆಸುವ ಸಮಗ್ರ ತನಿಖೆಯು ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಿಗದ ನ್ಯಾಯವನ್ನು ಕೊಡಬೇಕು. ಅಲ್ಲದೇ, ಮುಂದಿನ ದಿನಗಳಲ್ಲಿ ಇಂತಹ ಅಪರಾಧಗಳು ನಡೆಯದಂತೆ ಸಮಾಜಕ್ಕೆ ಸಂದೇಶ ಕೊಡಬೇಕು ಎಂದು ಸಂಘಟನೆ ಆಗ್ರಹಿಸಿದೆ. ಸಾವುಗಳು, ಅತ್ಯಾಚಾರಗಳು, ನಾಪತ್ತೆ ಪ್ರಕರಣಗಳು ಮತ್ತು ದೌರ್ಜನ್ಯಗಳಿಗೆ ಸಂಬಂಧಿಸಿದ ಪೊಲೀಸ್ ತನಿಖೆಗಳು ಏಕೆ ನಿರಂತರವಾಗಿ ಕಳಪೆಯಾಗಿ ನಡೆದಿವೆ ಮತ್ತು ಅರೆಮನಸ್ಸಿನಿಂದ ಕೂಡಿದಂತಿವೆ? ಧರ್ಮಸ್ಥಳ ಪ್ರದೇಶದ ಬಹುತೇಕ ಪ್ರಕರಣಗಳಲ್ಲಿ ಸಾಕ್ಷಿಗಳ ನಾಪತ್ತೆ ಅಥವಾ ವಿವರಣೆಗೆ ನಿಲುಕದ ಸಾವುಗಳನ್ನು ಏಕೆ ತನಿಖೆ ಮಾಡಲಿಲ್ಲ? ಈ ಪ್ರಕರಣಗಳಲ್ಲಿ ಸಾಮ್ಯತೆ ಇರುವುದನ್ನು ಗಮನಿಸಿ, ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ವಿಫಲರಾಗಿರುವುದು ಏಕೆ ಎಂದು ಸಂಘಟನೆಯು ಸರಕಾರವನ್ನು ಪ್ರಶ್ನಿಸಿದೆ. ಪದ್ಮಲತಾ, ಯಮುನಾ/ನಾರಾಯಣ ಮತ್ತು ಹೇಮಾವತಿ ದೇವಾಡಿಗಾ ಮುಂತಾದ ಹಳೆಯ ಪ್ರಕರಣಗಳಿಗೆ ಸರಿಯಾದ ತನಿಖೆ ಇಲ್ಲದೆ, ಪ್ರಕರಣಗಳು ಮುಚ್ಚಲ್ಪಟ್ಟಿವೆ. ಇಂತಹ ಪ್ರಕರಣಗಳಿಗೆ ಮರುಚಾಲನೆ ನೀಡಬೇಕಾಗಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಂದೇಹಾಸ್ಪದವಾಗಿ ಸಾವಿಗೀಡಾದ ರವಿ ಪೂಜಾರಿ, ಗೋಪಾಲಕೃಷ್ಣ ಗೌಡ, ದಿನೇಶ್ ಗೌಡ, ವಾರಿಜಾ ಆಚಾರ್ಯ ಮತ್ತು ಹರೀಶ್ ಮಡಿವಾಳ ಮುಂತಾದ ಸಂದೇಹಾಸ್ಪದ ಸಾಕ್ಷಿಗಳ ಸಾವುಗಳನ್ನು ಮರುತನಿಖೆ ಮಾಡಬೇಕು ಎಂದು ‘ಕೊಂದವರು ಯಾರು?’ ಎಂಬ ಸಂಘಟನೆಯು ಆಗ್ರಹಿಸಿದೆ.
ದಯವಿಟ್ಟು ಕಾಯಿರಿ, ನಾನೇ ನಿಮಗೆ ಕರೆ ಮಾಡುವೆ: ಡಿ.ಕೆ.ಶಿವಕುಮಾರ್ಗೆ ರಾಹುಲ್ ಗಾಂಧಿ ಸಂದೇಶ
► ಹೈಕಮಾಂಡ್ ಅಂಗಳದಲ್ಲಿ ‘ನಾಯಕತ್ವ ಬದಲಾವಣೆ’; ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ► ನಾಯಕತ್ವ ಬದಲಾವಣೆ ಬಿಕ್ಕಟ್ಟು ಶೀಘ್ರವೇ ಇತ್ಯರ್ಥ: ಮಲ್ಲಿಕಾರ್ಜುನ ಖರ್ಗೆ
ಇಂಡೋನೇಶ್ಯ ಕರಾವಳಿಗೆ ಅಪ್ಪಳಿಸಿದ ‘ಸೆನ್ಯಾರ್’ ಚಂಡಮಾರುತ
ಬಂಗಾಳ ಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ
ಐಎಎಸ್ ಆಧಿಕಾರಿ ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ
ಬೆಳಗಾವಿ : ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಾಘತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿ ನಾಲ್ವರ ಅಂತ್ಯಕ್ರಿಯೆ ರಾಮದುರ್ಗ ಹೊರ ವಲಯದ ಅವರ ತೋಟದಲ್ಲಿ ನೆರವೇರಿತು. ಮಹಾಂತೇಶ ಬೀಳಗಿ ಅವರ ಚಿತೆಗೆ ಅಣ್ಣ ಸಿದ್ದರಾಮಪ್ಪ ಅವರು ಅಗ್ನಿಸ್ಪರ್ಶ ಮಾಡಿದರು. ಕುಟುಂಬಸ್ಥರ ಆಕ್ರಂದನದ ನಡುವೆ ನಾಲ್ಕು ಜನರ ಅಂತ್ಯಸಂಸ್ಕಾರ ಮಾಡಲಾಯಿತು. ಮಹಾಂತೇಶ ಅವರ ಪಕ್ಕದಲ್ಲಿ ಶಂಕರ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು. ಶಾಸಕ ಅಶೋಕ ಪಟ್ಟಣ, ಜಿಎಸ್ ಪಾಟೀಲ್, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ, ವಾಯ್.ಎಸ್.ಪಾಟೀಲ, ಶಿವಾನಂದ ಕಾಪಶಿ, ವಿಜಯಮಹಾಂತೇಶ, ಸುರೇಶ ಇಟ್ನಾಳ್, ವೈಶಾಲಿ, ರವಿ ಚೆಣ್ಣನ್ನವರ, ಯಶೋಧಾ ವಂಟಗೋಡಿ, ಚನ್ನಬಸವಣ್ಣ ಲಂಗೋಟಿ, ಡಾ.ಭೀಮಾಶಂಕರ ಗುಳೇದ, ಹಣಮಂತರಾಯಪ್ಪ, ರಿಷಂತ್, ಯಶವಂತ ಗುರಿಕಾರ, ಗಂಗಾಧರಸ್ವಾಮಿ, ಗೋವಿಂದರೆಡ್ಡಿ, ಪದ್ಮಾ ಬಸವಂತಪ್ಪ, ಶಶಿಧರ ಕುರೇರ ಸೇರಿದಂತೆ 50ಕ್ಕೂ ಅಧಿಕ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ಹಾಜರಿದ್ದು, ಅಂತಿಮ ದರ್ಶನ ಪಡೆದರು.
ಎಸ್ಐಆರ್ ಪ್ರಶ್ನಿಸಿ ಅರ್ಜಿ: ಉತ್ತರಿಸುವಂತೆ ಚುನಾವಣಾ ಆಯೋಗಕ್ಕೆ ʼಸುಪ್ರೀಂʼ ನಿರ್ದೇಶನ
ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಿಂದ ಅರ್ಜಿ
ಸಂವಿಧಾನ ದಿನದಲ್ಲಿ ಭಾಗವಹಿಸಿದ ವಿದೇಶಿ ನ್ಯಾಯಾಧೀಶರು
ಹೊಸದಿಲ್ಲಿ, ನ. 26: ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ವಿವಿಧ ದೇಶಗಳ ಮುಖ್ಯ ನ್ಯಾಯಾಧೀಶರು ಮತ್ತು ಹಿರಿಯ ನ್ಯಾಯಾಧೀಶರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಗಣ್ಯರನ್ನು ಭಾರತದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂತ್ ಸ್ವಾಗತಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ, ವಿದೇಶಿ ನ್ಯಾಯಾಧೀಶರು ಭಾರತದ ಮುಖ್ಯ ನ್ಯಾಯಾಧೀಶ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಯಮಲ್ಯ ಬಾಗ್ಚಿ ಜೊತೆಗೆ ಕುಳಿತು ಸುಪ್ರೀಂ ಕೋರ್ಟ್ನ ನ್ಯಾಯಾಂಗ ಕಲಾಪಗಳನ್ನು ವೀಕ್ಷಿಸಿದರು. ಉಪಸ್ಥಿತರಿದ್ದ ವಿದೇಶಿ ಗಣ್ಯರಲ್ಲಿ ಭೂತಾನ್ ಮುಖ್ಯ ನ್ಯಾಯಾಧೀಶ ಲ್ಯೊನ್ಪೊ ನೊರ್ಬು ಶೆರಿಂಗ್, ಕೆನ್ಯದ ಮುಖ್ಯ ನ್ಯಾಯಾಧೀಶೆ ಮಾರ್ತಾ ಕೆ. ಕೂಮೆ, ಮಾರಿಶಸ್ ನ ಮುಖ್ಯ ನ್ಯಾಯಾಧೀಶೆ ರೆಹಾನಾ ಬೀಬಿ ಮುಂಗ್ಲಿ-ಗುಲ್ಬುಲ್ ಮತ್ತು ಶ್ರೀಲಂಕಾದ ಮುಖ್ಯ ನ್ಯಾಯಾಧೀಶ ಪ್ರೀತಿ ಪದ್ಮನ್ ಸೂರಸೇನ ಸೇರಿದ್ದಾರೆ. ಕೆನ್ಯ, ನೇಪಾಳ, ಶ್ರೀಲಂಕಾ ಮತ್ತು ಮಲೇಶ್ಯದ ಸರ್ವೋಚ್ಛ ನ್ಯಾಯಾಲಯಗಳ ಇತರ ಹಿರಿಯ ನ್ಯಾಯಾಧೀಶರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಕಪಿಲ್ ಸಿಬಲ್, ರಾಕೇಶ್ ದ್ವಿವೇದಿ ಮುಂತಾದವರೂ ಈ ಸಂದರ್ಭದಲ್ಲಿ ಮಾತನಾಡಿದರು. 1949ರಲ್ಲಿ ಭಾರತದ ಸಂವಿಧಾನಕ್ಕೆ ನೀಡಲಾದ ಅಂಗೀಕಾರವನ್ನು ಸ್ಮರಿಸುವುದಕ್ಕಾಗಿ ಪ್ರತಿ ವರ್ಷ ನವೆಂಬರ್ 26ರಂದು ಸಂವಿಧಾನ ದಿನ ಅಥವಾ ರಾಷ್ಟ್ರೀಯ ಕಾನೂನು ದಿನವನ್ನು ಆಚರಿಸಲಾಗುತ್ತಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ಪ್ರಕರಣ ದಾಖಲು
ಮಂಗಳೂರು, ನ.26: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸುನಿಲ್ ಕುಮಾರ್ ಎನ್. ನ.25ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಗಳನ್ನು ಪರಿಶೀಲಿಸುತ್ತಿದ್ದ ಫೇಸ್ ಬುಕ್ ನಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನ ಖಾತೆ ಕಂಡು ಬಂದಿದೆ. ಈ ಖಾತೆಯ ಬಗ್ಗೆ ಸಂಶಯಗೊಂಡು ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ನಲ್ಲಿ ವಿಚಾರಿಸಿದಾಗ ನಕಲಿ ಖಾತೆ ಎಂಬುದಾಗಿ ದೃಢಪಟ್ಟಿದೆ. ಅದರಂತೆ ನಕಲಿ ಖಾತೆ ತೆರೆದು ವಂಚಿಸುವ ಹಾಗೂ ಸುಳ್ಳು ಸಂದೇಶ ಹರಡುವ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ದಿಲ್ಲಿ ಮತ್ತೊಮ್ಮೆ ಅತ್ಯಂತ ಕಲುಷಿತ ನಗರ: CREA
ಹೊಸದಿಲ್ಲಿ,ನ.26: ಭಾರತದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ದಿಲ್ಲಿ ಅತ್ಯಂತ ಕಲುಷಿತವಾಗಿದೆ ಎಂದು ಸೆಂಟರ್ ಫಾರ್ ರೀಸರ್ಚ್ ಆನ್ ಎನರ್ಜಿ ಆ್ಯಂಡ್ ಕ್ಲೀನ್ ಏರ್ (CREA) ಬಿಡುಗಡೆಗೊಳಿಸಿರುವ ಹೊಸ ಉಪಗ್ರಹ ಆಧಾರಿತ ಮೌಲ್ಯಮಾಪನ ವರದಿಯು ಹೇಳಿದೆ. ದಿಲ್ಲಿಯು ವಾರ್ಷಿಕವಾಗಿ ಪ್ರತಿ ಘನ ಮೀಟರ್ ಗೆ 101 ಮೈಕ್ರೋಗ್ರಾಂ ಪಿಎಂ2.5 ಸಾಂದ್ರತೆಯನ್ನು ದಾಖಲಿಸಿದ್ದು, ಇದು ದೇಶದ ರಾಷ್ಟ್ರೀಯ ಪರಿಸರ ವಾಯು ಗುಣಮಟ್ಟ ಮಾನದಂಡಕ್ಕಿಂತ 2.5 ಪಟ್ಟು ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಿಂತ 20 ಪಟ್ಟು ಅಧಿಕವಾಗಿದೆ. ದಿಲ್ಲಿಯನ್ನು ಒಳಗೊಂಡಿರುವ ಸಿಂಧೂ-ಗಂಗಾ ವಾಯು ವಲಯದಲ್ಲಿ ಅತ್ಯಧಿಕ ಮಾಲಿನ್ಯ ಮಟ್ಟಗಳು ಮುಂದುವರಿದಿವೆ ಎಂದು CREA ಅಧ್ಯಯನವು ಸೂಚಿಸಿದೆ. ವಾಯುವಲಯವು ಸಾಮಾನ್ಯ ಹವಾಮಾನ ಮತ್ತು ಸ್ಥಳಾಕೃತಿಯಿಂದಾಗಿ ಒಂದೇ ರೀತಿಯ ವಾಯು ಗುಣಮಟ್ಟವನ್ನು ಹೊಂದಿರುವ ಭೌಗೋಳಿಕ ಪ್ರದೇಶವಾಗಿದ್ದು, ಇದು ಮಾಲಿನ್ಯಕಾರಕಗಳನ್ನು ಹಿಡಿದಿಟ್ಟುಕೊಳ್ಳುತ್ತದೆ ಮತ್ತು ಪ್ರದೇಶದಾದ್ಯಂತ ಹರಡುತ್ತದೆ. ಸಾಂಪ್ರದಾಯಿಕವಾಗಿ, ತುಲನಾತ್ಮಕವಾಗಿ ಪರಿಗಣಿಸಲಾಗಿರುವ ಈಶಾನ್ಯ ಭಾರತವು ಕಳವಳಕಾರಿಯಾಗಿ ಮಾರ್ಪಡುತ್ತಿದ್ದು, ಅಸ್ಸಾಂ-ತ್ರಿಪುರಾ ವಾಯುವಲಯವು ನಿರಂತರವಾಗಿ ಹೆಚ್ಚಿನ ಮಾಲಿನ್ಯಕಾರಕಗಳ ಸಾಂದ್ರತೆಯನ್ನು ತೋರಿಸುತ್ತಿದೆ ಮತ್ತು ಸಿಂಧೂ-ಗಂಗಾ ಬಯಲು ಪ್ರದೇಶದ ಬಳಿಕ ಎರಡನೇ ಅತ್ಯಂತ ಕಲುಷಿತ ವಾಯುವಲಯವಾಗಿ ಬದಲಾಗುತ್ತಿದೆ ಎಂದು CREA ವಿಶ್ಲೇಷಕ ಮನೋಜ್ ಕುಮಾರ್ ಹೇಳಿದ್ದಾರೆ. ಸಿಂಧೂ-ಗಂಗಾ ಬಯಲು ಪ್ರದೇಶವು ಪಂಜಾಬಿನಿಂದ ಪಶ್ಚಿಮ ಬಂಗಾಳದವರೆಗೆ ವಿಸ್ತರಿಸಿಕೊಂಡಿದೆಯಾದರೂ ಋತುಮಾನವನ್ನು ಅವಲಂಬಿಸಿ ಅದು ಒಂದು ಅಥವಾ ಎರಡು ವಾಯುವಲಯಗಳನ್ನು ಹೊಂದಿರುತ್ತದೆ. ಇದೇ ರೀತಿ ಬದಲಾಗುತ್ತಿರುವ ಋತುಮಾನಗಳೊಂದಿಗೆ ಭಾರತವು 9ರಿಂದ 11ರವರೆಗೆ ಬಹು ವಾಯುವಲಯಗಳನ್ನು ಹೊಂದಿರುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ಮತ್ತು ದಿಲ್ಲಿ ದೇಶದ 50 ಅತ್ಯಂತ ಕಲುಷಿತ ಜಿಲ್ಲೆಗಳಲ್ಲಿ ಸುಮಾರು ಅರ್ಧದಷ್ಟು ಪಾಲನ್ನು ಹೊಂದಿದ್ದು, ಹರ್ಯಾಣ ಮತ್ತು ಬಿಹಾರದಂತಹ ರಾಜ್ಯಗಳು ಸಹ ಇವುಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿವೆ. ದೇಶಾದ್ಯಂತ 749 ಜಿಲ್ಲೆಗಳ ಪೈಕಿ 447 ಜಿಲ್ಲೆಗಳು ವಾರ್ಷಿಕ ಪಿಎಂ2.5 ಮಿತಿಯನ್ನು ಉಲ್ಲಂಘಿಸಿವೆ ಎಂದು ವರದಿಯು ಬೆಟ್ಟು ಮಾಡಿದೆ.
ದಿಲ್ಲಿ ಭಯೋತ್ಪಾದಕ ದಾಳಿ | ಉಮರ್ ಉನ್ ನಬಿಗೆ ನೆರವಾಗಿದ್ದ ವ್ಯಕ್ತಿಯನ್ನು ಬಂಧಿಸಿದ NIA
ಬಂಧಿತರ ಸಂಖ್ಯೆ ಏಳಕ್ಕೇರಿಕೆ
ರಾಷ್ಟ್ರೀಯತಾವಾದಿ ಚಿಂತನೆ ಅಳವಡಿಸಿಕೊಳ್ಳಲು ಸಂವಿಧಾನ ಮಾರ್ಗದರ್ಶಿ ದಾಖಲೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ಹೊಸದಿಲ್ಲಿ,ನ.26: ಸಂವಿಧಾನವು ದೇಶದ ಅನನ್ಯತೆಯ ಅಡಿಪಾಯವಾಗಿದೆ. ಜೊತೆಗೆ ವಸಾಹತು ಮನಃಸ್ಥಿತಿಯನ್ನು ತೊರೆದು ರಾಷ್ಟ್ರೀಯತಾವಾದಿ ಚಿಂತನೆಯನ್ನು ಅಳವಡಿಸಿಕೊಳ್ಳಲು ಮಾರ್ಗದರ್ಶಿ ದಾಖಲೆಯೂ ಆಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಪ್ರತಿಪಾದಿಸಿದರು. ಈಗ ‘ಸಂವಿಧಾನ ಸದನ’ ಎಂದು ಕರೆಯಲಾಗುತ್ತಿರುವ ಹಳೆಯ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್ ನಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುರ್ಮು,ಭಾರತವು ಜಗತ್ತಿಗೆ ಅಭಿವೃದ್ಧಿಯ ಹೊಸ ಮಾದರಿಯನ್ನು ಪ್ರಸ್ತುತ ಪಡಿಸುತ್ತಿದೆ ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸಲು ಹಲವಾರು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. ‘ನಮ್ಮ ಸಂವಿಧಾನವು ರಾಷ್ಟ್ರೀಯ ಹೆಮ್ಮೆಯ ದಾಖಲೆಯಾಗಿದೆ. ಅದು ರಾಷ್ಟ್ರದ ಗುರುತಿನ ದಾಖಲೆಯಾಗಿದೆ. ಅದು ವಸಾಹತುಶಾಹಿ ಮನಃಸ್ಥಿತಿಯನ್ನು ತೊರೆದು ರಾಷ್ಟ್ರೀಯತಾವಾದಿ ದೃಷ್ಟಿಕೋನವನ್ನು ಅಳವಡಿಸಿಕೊಳ್ಳಲು ಮತ್ತು ದೇಶವನ್ನು ಮುಂದಕ್ಕೊಯ್ಯಲು ಮಾರ್ಗದರ್ಶಿ ದಾಖಲೆಯಾಗಿದೆ ’ಎಂದು ಹೇಳಿದ ರಾಷ್ಟ್ರಪತಿಗಳು, ಈ ದೃಷ್ಟಿಕೋನದೊಂದಿಗೆ ರಾಷ್ಟ್ರವು ಭಾರತೀಯ ನ್ಯಾಯ ಸಂಹಿತಾ,ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಹೀಗೆ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಳವಡಿಸಿಕೊಂಡಿದೆ ಎಂದರು. ವೈಯಕ್ತಿಕ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಯಾವಾಗಲೂ ರಕ್ಷಿಸಬೇಕು ಎಂದು ದೇಶದ ಸಂವಿಧಾನ ನಿರ್ಮಾತೃರು ಬಯಸಿದ್ದರು ಎಂದು ಮುರ್ಮು ಹೇಳಿದರು. ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿ ರದ್ದತಿಯನ್ನು ಉಲ್ಲೇಖಿಸಿದ ಅವರು, ಅದನ್ನು ಅಂತ್ಯಗೊಳಿಸುವ ಮೂಲಕ ರಾಷ್ಟ್ರವು ರಾಜಕೀಯ ಅಡಚಣೆಯಿಂದ ಮುಕ್ತಗೊಂಡಿದೆ ಎಂದು ಹೇಳಿದರು. ‘ಕಳೆದೊಂದು ದಶಕದಲ್ಲಿ ನಮ್ಮ ಸಂಸತ್ತು ಜನತೆಯ ಆಶೋತ್ತರಗಳನ್ನು ಈಡೇರಿಸಲು ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ’ ಎಂದರು. ತ್ರಿವಳಿ ತಲಾಖ್ಗೆ ನಿಷೇಧ ಮತ್ತು ಜಿಎಸ್ಟಿ ಜಾರಿಯನ್ನೂ ಉಲ್ಲೇಖಿಸಿದ ರಾಷ್ಟ್ರಪತಿಗಳು,ಇವು ಮಹಿಳೆಯರಿಗಾಗಿ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಅನುಕ್ರಮವಾಗಿ ಎರಡು ಅತ್ಯಂತ ಮಹತ್ವದ ಕ್ರಮಗಳಾಗಿವೆ ಎಂದು ತಿಳಿಸಿದರು. ನಮ್ಮ ರಾಷ್ಟ್ರವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವ ನಿಟ್ಟಿನಲ್ಲಿ ಭರದಿಂದ ಮುನ್ನಡೆಯುತ್ತಿದೆ ಎಂದೂ ಅವರು ಹೇಳಿದರು. ಇದೇ ವೇಳೆ ರಾಷ್ಟ್ರಪತಿಗಳು ಮಲಯಾಳಂ,ಮರಾಠಿ,ನೇಪಾಳಿ, ಪಂಜಾಬಿ, ಬೋಡೊ,ಕಾಶ್ಮೀರಿ, ತೆಲುಗು, ಒಡಿಯಾ ಮತ್ತು ಅಸ್ಸಾಮಿ ಭಾಷೆಗಳಲ್ಲಿ ಸಂವಿಧಾನದ ಡಿಜಿಟಲ್ ಆವೃತ್ತಿಯನ್ನು ಬಿಡುಗಡೆಗೊಳಿಸಿದರು.
ಹಾಂಗ್ ಕಾಂಗ್ನಲ್ಲಿ ಭೀಕರ ಅಗ್ನಿ ದುರಂತ: 7 ಬಹುಮಹಡಿ ಕಟ್ಟಡಗಳಿಗೆ ವ್ಯಾಪಿಸಿದ ಬೆಂಕಿ, 13 ಸಾವು
ಹಾಂಕ್ ಕಾಂಗ್ನಲ್ಲಿ ಏಳು ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭೀಕರ ಅಗ್ನಿ ದುರಂತದ ಪರಿಣಾಮ ಹದಿಮೂರು ಜನರು ಮೃತಪಟ್ಟಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ಹಂಚಿಕೊಂಡಿದೆ. ಏಳು ನೂರು ಜನರನ್ನು ಸ್ಥಳಾಂತರಿಸಲಾಗಿದೆ, ಅಗ್ನಿ ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ ಎಂದು ಅಗ್ನಿ ಶಾಮಕ ದಳ ತಿಳಿಸಿದೆ. ನಾವು ಗಳಿಸಿದ ಆಸ್ತಿಯೆಲ್ಲ ಕಣ್ಮುಂದೆಯೇ ನಾಶವಾಗ್ತಿದೆ ಎಂದು ವಸತಿ ಸಮುಚ್ಚಯದ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ಅಧಿಕಾರ ಹಂಚಿಕೆ ಚರ್ಚೆ ವಿಚಾರ | ಶೀಘ್ರದಲ್ಲಿಯೇ ಹೈಕಮಾಂಡ್ ಸಭೆ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯ ಸರಕಾರದಲ್ಲಿನ ಅಧಿಕಾರ ಹಂಚಿಕೆ ಚರ್ಚೆ ಕುರಿತು ಶೀಘ್ರದಲ್ಲಿಯೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಭೆ ನಡೆಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಿಲ್ಲಿಯಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಸಭೆ ಇದೆ. ಬಿಹಾರ ಫಲಿತಾಂಶ ಬಗ್ಗೆಯೂ ಚರ್ಚೆ ನಡೆಯಲಿದೆ. ಆಗ ರಾಜ್ಯದ ಗೊಂದಲದ ಬಗ್ಗೆ ಮಾತನಾಡಿ ಬಗೆಹರಿಸುತ್ತಾರೆ ಎಂದು ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ನಮ್ಮ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು. ಇವರ ಹೊರತಾಗಿ ಹೈಕಮಾಂಡ್ ತೀರ್ಮಾನಿಸಬೇಕು. ಅದೇ ರೀತಿ ಹೊಸ ಅಧ್ಯಕ್ಷರ ಬಗ್ಗೆಯೂ ಅವರೇ ತೀರ್ಮಾನಿಸಬೇಕು ಎಂದು ಅವರು ಹೇಳಿದರು.
ಮೋಹನ ಭಾಗವತ್ ರೈತರ, ದಲಿತರ ಮೇಲಾಗುವ ದೌರ್ಜನ್ಯದ ಬಗ್ಗೆ ಮಾತನಾಡುವುದಿಲ್ಲ : ಮಾವಳ್ಳಿ ಶಂಕರ್
ಬೀದರ್ : ಆರ್ಎಸ್ಎಸ್ ಸಂಘಟನೆ ಮಾಡುವ ತಾರತಮ್ಯ ನೀತಿಗೆ ನಮ್ಮ ಬೆಂಬಲವಿಲ್ಲ. ಆರ್ಎಸ್ಎಸ್ ಮುಖಂಡ ಮೋಹನ ಭಾಗವತ್ ಅವರು ವಿಷಕಾರಿ ಮಾತುಗಳನ್ನು ಆಡುತ್ತಿರುತ್ತಾರೆ. ಆದರೆ ದಲಿತರ, ರೈತರ ಮತ್ತು ಮಹಿಳೆಯರ ಮೇಲೆ ಆಗುವ ದೌರ್ಜನ್ಯದ ಬಗ್ಗೆ ಮಾತನಾಡುವುದಿಲ್ಲ. ಇದು ಹೀಗೆ ಮುಂದುವರಿದರೆ ಸಂವಿಧಾನ ಅಪಾಯಕ್ಕೆ ಸಿಲುಕುವ ಸಂಭವವಿದೆ ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಕಳವಳ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾವಳ್ಳಿ ಶಂಕರ್, ಇಂದಿನ ದಿನಗಳಲ್ಲಿ ದೇಶದಲ್ಲಿ ಉದಾರಿಕರಣ, ಜಾಗತಿಕರಣದಿಂದ ಎಲ್ಲವೂ ಖಾಸಗೀಕರಣಗೊಳಿಸುವ ಹುನ್ನಾರ ನಡೆಯುತ್ತಿದೆ. ದಲಿತರ, ಹಿಂದುಳಿದವರ ಮತ್ತು ಶೋಷಿತರ ಹಕ್ಕುಗಳನ್ನು ಕಸಿಯುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದರು. ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜನೆ ಮಾಡುವ ಕಾರ್ಯ ಸಲ್ಲದು. ಯಾವುದೇ ಸರಕಾರವಿರಲಿ ಅಖಂಡ ರಾಷ್ಟ್ರದ ಪರಿಕಲ್ಪನೆ ಹೊಂದಬೇಕೆ ವಿನಃ ವಿಭಜಿಸುವ ಕಾರ್ಯಕ್ಕೆ ಮುಂದಾಗಬಾರದು. ಸಂವಿಧಾನದ ನಿಜಾಂಶಗಳು ಜನತೆಗೆ ತಲುಪುತ್ತಿಲ್ಲ. ಪ್ರಧಾನಮಂತ್ರಿಗಳ ಮಾತು ಕೇಳುತ್ತಿದ್ದರೆ ದೇಶ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬ ಆತಂಕ ಕಾಡುತ್ತಿದೆ. ದಲಿತ ಸಂಘರ್ಷ ಸಮಿತಿಯು ಜನತೆಗೆ ಸತ್ಯ ತಿಳಿಸುವ ಕಾರ್ಯ ಮಾಡುತ್ತಿದೆ. ಆರ್ಎಸ್ಎಸ್ ಮತ್ತು ಡಿಎಸ್ಎಸ್ ಮಾಡುವ ಕಾರ್ಯಗಳ ಕುರಿತು ಚರ್ಚೆ ಆಗಬೇಕಾಗಿದೆ. ಬೀದರ್ ಜಿಲ್ಲೆಯಿಂದಲೇ ದಲಿತ ಸಂಘರ್ಷ ಸಮಿತಿಯ ಸದಸ್ಯತ್ವಕ್ಕೆ ಚಾಲನೆ ನೀಡುತ್ತಿದ್ದೇವೆ. ಜಾತಿ, ಮತ, ಪಂಥಗಳ ಭೇದವಿಲ್ಲದೆ ಸದಸ್ಯರಾಗಬಹುದು. 1 ಲಕ್ಷ ಸದಸ್ಯತ್ವದ ಗುರಿ ಹೊಂದಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ದಲಿತ ಮಹಿಳಾ ಒಕ್ಕೂಟದ ಮುಖ್ಯಸ್ಥೆ ಇಂದಿರಾ ಕೃಷ್ಣಪ್ಪ, ಪತ್ರಕರ್ತ ಎನ್.ನಾಗರಾಜ್, ಡಿಎಸ್ಎಸ್ ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕ ರಮೇಶ್ ಮಂದಕನಳ್ಳಿ, ರಾಜಕುಮಾರ್ ಬನ್ನೇರ್, ನಾಗಣ್ಣ ಬಡಿಗೇರ್, ರಾಮಣ್ಣ ಕಲದೇವನಹಳ್ಳಿ, ರಂಜಿತಾ ಜೈನೂರ್, ಜಗದೇವಿ ಭಂಡಾರಿ ಹಾಗೂ ದೈವಶೀಲಾ ಉಪಸ್ಥಿತರಿದ್ದರು.
ಕಡಬ | ಕೌಟುಂಬಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು
ಕಡಬ, ನ.26. ಕೌಟುಂಬಿಕ ಕಾರಣದಿಂದ ಮನನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ವರದಿಯಾಗಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (37) ಮೃತ ಯುವಕ. ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ ಪೋನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದು ತೀವ್ರ ನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೃತ ಯುವಕನ ತಂದೆ ಸೊಲೊಮೊನ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ | ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ : ಆರೋಪಿಗಳ ಬಂಧನ
ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್, ಮುಹಮ್ಮದ್ ಮಿಸ್ಬಾ, ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ತಿಯಾಝ್, ಮಂಚಿಲದ ಝಹೀಮ್ ಅಹ್ಮದ್ ಬಂಧಿತರಾಗಿದ್ದು, ಹೆಜಮಾಡಿಯ ನೌಫಾಲ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕೊಣಾಜೆ ವಿವಿ ರಸ್ತೆಯಲ್ಲಿರುವ ಹಣಕಾಸು ಸಂಸ್ಥೆಯೊಂದಕ್ಕೆ ನ.22ರಂದು ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಬಂದಿದ್ದ ನೌಫಾಲ್ ಮತ್ತು ಝಹೀಮ್ ಅಹ್ಮದ್ ಎಂಬವರು 41 ಗ್ರಾಂ ತೂಗುವ ಎರಡು ಚೈನ್ ಗಳನ್ನು ಅಡವಿರಿಸಿ ಸಾಲ ಕೊಡುವಂತೆ ಕೇಳಿದ್ದಾರೆ. ಈ ಸಂದರ್ಭ ಸಂಸ್ಥೆಯ ಮಾಲಕ ದಿನೇಶ್ ರೈ ಮತ್ತು ಸಿಬ್ಬಂದಿ ನಿಕೇಶ್ ಎಂಬವರು ಆರೋಪಿಗಳು ನೀಡಿದ ಚಿನ್ನಾಭರಣ ಪರಿಶೀಲಿಸಿದಾಗ ಚಿನ್ನದ ಪರಿಶುದ್ಧತೆಯ 916 ಸಂಕೇತ ಮತ್ತು ಓರೆ ಕಲ್ಲಿನಲ್ಲಿ ಉಜ್ಜಿದಾಗಲೂ ಅಸಲಿಯಂತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಝಹೀಮ್ ಅಹ್ಮದ್ ಹೆಸರಿನಲ್ಲಿ ಆಭರಣಗಳನ್ನು ಅಡವು ಇಟ್ಟು 3 ಲಕ್ಷದ 55 ಸಾವಿರ ರೂ. ಹಣವನ್ನು ಮಾಲಕ ಸಾಲ ನೀಡಿದ್ದಾರೆ. ನ.24ರ ಸಂಜೆ 5 ಗಂಟೆ ಹೊತ್ತಿಗೆ ಉಳ್ಳಾಲ ಮೇಲಂಗಡಿಯ ನಿವಾಸಿ ಇಮ್ತಿಯಾಝ್ ಎಂಬಾತ ಇದೇ ಹಣಕಾಸು ಸಂಸ್ಥೆಗೆ ಬಂದಿದ್ದು 55 ಗ್ರಾಂ ತೂಕದ ಎರಡು ಚೈನ್ ಮತ್ತು ಒಂದು ಬ್ರಾಸ್ಲೇಟ್ ಅಡವಿಟ್ಟು 4 ಲಕ್ಷ 80 ಸಾವಿರ ರೂಪಾಯಿ ಸಾಲ ಕೊಡುವಂತೆ ತಿಳಿಸಿದ್ದಾನೆ. ಆಭರಣ ಪರಿಶೀಲಿಸಿದಾಗ ಅದರಲ್ಲೂ 916 ಸಂಕೇತ ಮತ್ತು ಓರೆ ಕಲ್ಲಿಗೆ ಉಜ್ಜಿದಾಗ ಚಿನ್ನವೆಂದೇ ಕಂಡುಬಂದಿದೆ. ಚಿನ್ನ ಖರೀದಿ ಬಗ್ಗೆ ವಿಚಾರಿಸಿದಾಗ ದುಬೈಯ ಚಿನ್ನವೆಂದು ತಿಳಿಸಿದ್ದಾಗಿ ಹೇಳಲಾಗಿದೆ. ಆತನ ಮಾತಿನಿಂದ ಅನುಮಾನಗೊಂಡ ಸಂಸ್ಥೆಯ ಮಾಲಕ ದಿನೇಶ್ ರೈ ಅವರು ಇಮ್ತಿಯಾಝ್ ನೀಡಿದ ಆಭರಣ ಮತ್ತು ನ.22ರಂದು ಝಹೀಮ್ ಅಹ್ಮದ್ ಅಡವಿಟ್ಟಿದ್ದ ಆಭರಣಗಳನ್ನು ಮಂಗಳೂರಲ್ಲಿ ಚಿನ್ನದ ಕೆಲಸ ಮಾಡುವ ತನ್ನ ಸ್ನೇಹಿತ ಉದಯ್ ಆಚಾರ್ಯ ಎಂಬವರ ಬಳಿ ಹೋಗಿ ಪರೀಕ್ಷಿಸಿದ್ದಾರೆ. ಈ ವೇಳೆ ಆಭರಣಗಳನ್ನು ಆ್ಯಸಿಡ್ ಲ್ಲಿನ ಮುಳುಗಿಸಿ ಬಿಸಿ ಮಾಡಿದಾಗ ನೊರೆ ಬಂದಿದ್ದು ನಕಲಿ ಎನ್ನುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಸಂಸ್ಥೆಯ ದಿನೇಶ್ ರೈ ಅವರು ಉಳ್ಳಾಲ ಠಾಣೆಯಲ್ಲಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳಾದ ಝಹೀಮ್ ಅಹ್ಮದ್, ನೌಫಾಲ್ ಹಾಗೂ ಇಮ್ತಿಯಾಝ್ ಎಂಬವರ ಮೇಲೆ ಕೇಸು ದಾಖಲಿಸಿ, ಇಮ್ತಿಯಾಝ್ ನನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆತ ನೀಡಿದ ಮಾಹಿತಿಯಾಧಾರದಲ್ಲಿ ಇತರ ಆರೋಪಿಗಳನ್ನು ಬಂಧಿಸಿದ್ದಾರೆ.
ಉಡುಪಿ | ಗ್ಯಾರಂಟಿ ಯೋಜನೆಗಳು ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಯೋಜನೆ ಫಲಪ್ರದ: ಅಶೋಕ್ ಕೊಡವೂರು
ಕಲಾಜಾಥಾ ಪ್ರಚಾರ ಆಂದೋಲನಕ್ಕೆ ಚಾಲನೆ
ಕಲಬುರಗಿ | ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ : ಕಾರ್ಮಿಕ ಕಾಯ್ದೆ ಕುರಿತು ಅರಿವು
ಕಲಬುರಗಿ : ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಆಯುಕ್ತ ಎಂ.ಸುಬ್ರಮಣ್ಯಮ್ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿಯ ಇ.ಪಿ.ಎಫ್.ಓ ಕಚೇರಿಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಂವಾದ ನಡೆಸಿ ಕಾರ್ಮಿಕರಿಗೆ ವಿವಿಧ ಸವಲತ್ತು ಒದಗಿಸುವ ನಾಲ್ಕು ಕಾರ್ಮಿಕ ಸಂಹಿತೆ ಕುರಿತು ಅರಿವು ಮೂಡಿಸಲಾಯಿತು. ವೇತನ ಸಂಹಿತೆ-2019, ಕೈಗಾರಿಕಾ ಸಂಬಂಧ ಸಂಹಿತೆ-2020, ಸಾಮಾಜಿಕ ಭದ್ರತೆ ಸಂಹಿತೆ-2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020 ಕುರಿತು ವಿವವರವಾಗಿ ಕಾರ್ಮಿಕ ಸಂಘಟನೆ ಮುಖಂಡರಿಗೆ ತಿಳುವಳಿಕೆ ನೀಡಿದ್ದಲ್ಲದೆ ಕರಪತ್ರ ಹಂಚಲಾಯಿತು. ಉದ್ಯೋಗಸ್ಥರು ಮತ್ತು ಉದ್ಯೋಗದಾತರ ಪಾತ್ರಗಳ ಬಗ್ಗೆಯೂ ತಿಳಿ ಹೇಳಿದಲ್ಲದೆ ಈ ಕುರಿತು ಕಾರ್ಮಿಕ ವರ್ಗಕ್ಕೆ ಕಾರ್ಮಿಕ ಸಂಹಿತೆಗಳಿಂದ ಸಿಗುವ ಪ್ರಯೋಜನಗಳ ಕುರಿತು ವಿವರಿಸಲಾಯಿತು. ಟ್ರೇಡ್ ಯೂನಿಯನ್ ಪ್ರತಿನಿಧಿಗಳ ಪ್ರಶ್ನೆಗಳಿಗೂ ಸಭೆಯಲ್ಲಿ ಸ್ಪಷ್ಟನೆ ನೀಡಲಾಯಿತು. ಸಭೆಯಲ್ಲಿ ಕಲಬುರಗಿ ಇ.ಎಸ್.ಐ.ಸಿ ಯ ಜಂಟಿ ನಿರ್ದೇಶಕ ಯುವರಾಜ್, ಉಪ ನಿರ್ದೇಶಕ ರಮೇಶ್ ರೈ, ಸಹಾಯಕ ಕಾರ್ಮಿಕ ಆಯುಕ್ತ(ಕೇಂದ್ರ) ಅಶ್ವಿನಿ ಕುಮಾರ್ ಯಾದವ್ ಹಾಗೂ ಸಹಾಯಕ ಪಿ.ಎಫ್ ಆಯುಕ್ತ ಭರತ್ ಲಾಲ್ ಮೀನಾ, ಸಿಐಟಿಯು, ಐಎನ್ಟಿಯುಸಿ ಹಾಗೂ ಎಐಯುಯುಸಿಯ ಮುಖಂಡರು ಭಾಗವಹಿಸಿದ್ದರು.
Chikkamagaluru | ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ : ಪ್ರಾಧ್ಯಾಪಕನ ವಿರುದ್ಧ ದೂರು; ಪ್ರತಿದೂರು ದಾಖಲು
ಚಿಕ್ಕಮಗಳೂರು : ಇಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಪೊಲೀಸರಿಗೆ ಮಂಗಳವಾರ ರಾತ್ರಿ ದೂರು ನೀಡಿದ್ದಾರೆ. ಕಾಲೇಜಿನ ಪ್ರಾಧ್ಯಾಪಕ ಡಾ.ಗಂಗಾಧರ ಅವರು ಅಸಭ್ಯ ಮೆಸೇಜ್ ಕಳುಹಿಸಿದ್ದಾರೆ. ಅವರು ಹೇಳಿದಂತೆ ಕೇಳದ ಕಾರಣಕ್ಕೆ ಹಾಜರಾತಿ ಕೊರತೆಯ ನೆಪದಲ್ಲಿ ಪರೀಕ್ಷೆಗೆ ಹಾಜರಾಗದಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ನೀಡಿರುವ ಹೇಳಿಕೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ಕಾಲೇಜಿನ ಪ್ರಾಧ್ಯಾಪಕ ಗಂಗಾಧರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಪ್ರತಿ ದೂರು ಸಲ್ಲಿಸಿದ್ದು, ವಿದ್ಯಾರ್ಥಿನಿ ತರಗತಿಗೆ ಹಾಜರಾಗದ ಕಾರಣ ಹಾಜರಾತಿ ಕೊರತೆಯಾಗಿದೆ. ತನ್ನ ವಿರುದ್ಧ ಕಾಲೇಜಿಗೆ ಲಿಖಿತ ದೂರು ನೀಡಿಲ್ಲ. ಆಂತರಿಕ ವಿಚಾರಣಾ ಸಮಿತಿ, ಪೋಶ್ ಸಮಿತಿ ಮುಂದೆಯೂ ದೂರು ನೀಡಿಲ್ಲ. ಇದು ಎರಡು ವರ್ಷಗಳ ಹಳೆಯ ಪ್ರಕರಣವಾಗಿದ್ದು, ಸಂಪೂರ್ಣ ವೈಯಕ್ತಿಕ ವಿಷಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಇದೇ ಕಾಲೇಜಿನ ಉಪನ್ಯಾಸಕರೊಬ್ಬರನ್ನು ವಿದ್ಯಾರ್ಥಿನಿ ವಿವಾಹವಾಗಿದ್ದು, ಅ.29ರಂದು ಕೆಲ ಸಂಘಟನೆಗಳ ಜತೆ ಪರೀಕ್ಷೆಗೆ ಅರ್ಹತೆ ನೀಡುವಂತೆ ಕೇಳಿದ್ದರು. ಈ ವೇಳೆ ತನ್ನ ವಿರುದ್ಧ ಆರೋಪ ಮಾಡಿದ್ದರು. ಪೊಲೀಸರಿಗೆ ಲಿಖಿತವಾಗಿ ದೂರು ನೀಡಲು ವಿದ್ಯಾರ್ಥಿನಿಗೆ ತಿಳಿಸಲಾಗಿತ್ತು. ಹಾಜರಾತಿ ಮತ್ತು ಅಂಕಗಳ ಕೊರತೆ ಇರುವುದರಿಂದ ಪೂರಕ ಪರೀಕ್ಷೆ ಬರೆಯಲು ಒಪ್ಪಿದ್ದರು ಎಂದು ಅವರು ಮನವಿಯಲ್ಲಿ ವಿವರಿಸಿದ್ದಾರೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹರಿಬಿಟ್ಟಿದ್ದು, ಕಾಲೇಜಿನ ಗೌರವಕ್ಕೆ ಧಕ್ಕೆಯಾಗುತ್ತಿದೆ. ದುರುದ್ದೇಶದಿಂದ ಕೂಡಿರುವ ವೀಡಿಯೊ ಪ್ರಸರಣ ತಡೆಯಬೇಕು ಎಂದು ಮನವಿ ಮಾಡಿದ್ದಾರೆ. ʼಗಂಗಾಧರ ಅವರ ವಿರುದ್ಧ ಲಿಖಿತ ದೂರನ್ನು ಕಾಲೇಜಿಗೆ ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಮಾಡಿರುವ ಆರೋಪದ ವೀಡಿಯೊ ನೋಡಿದ ಬಳಿಕ ನೋಟಿಸ್ ನೀಡಿದ್ದೇವೆʼ ಹರೀಶ್, ಡೀನ್, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ʼವಿದ್ಯಾರ್ಥಿನಿ ಪ್ರಾಧ್ಯಾಪಕನ ವಿರುದ್ಧ ದೂರು ನೀಡಿದ್ದು, ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಗ್ರ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆʼ ಡಾ.ವಿಕ್ರಮ್ ಅಮಟೆ, ಎಸ್ಪಿ
ವಾರ್ತಾಭಾರತಿ ಸಂವಿಧಾನದ ಆಶಯವನ್ನು ಎತ್ತಿಹಿಡಿಯುತ್ತಿದೆ : ರಾಘವೇಂದ್ರ ಕುಷ್ಠಗಿ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ರಾಯಚೂರು ನಗರದಲ್ಲಿ ಓದುಗ, ಹಿತೈಷಿಗಳ ಸಭೆ
ಉಡುಪಿ | ವಿದ್ಯಾರ್ಥಿಗಳು ಸಂವಿಧಾನದ ಮೂಲ ಆಶಯಗಳನ್ನು ಚೆನ್ನಾಗಿ ಅರ್ಥೈಸಿಕೊಳ್ಳಿ : ಪ್ರತೀಕ್ ಬಾಯಲ್
ಸಂವಿಧಾನ ದಿನಾಚರಣೆ ಕಾರ್ಯಕ್ರಮ
ಕಲಬುರಗಿ | ಸೇಡಂನಲ್ಲಿ ಸಂವಿಧಾನ ದಿನಾಚರಣೆ
ಕಲಬುರಗಿ : ದೇಶಕ್ಕಾಗಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಲ್ಲಿಸಿದ ಸೇವೆ ಅಪ್ರತಿಮ, ದೇಶಕ್ಕೆ ಅವರು ನೀಡಿದ ಸಂವಿಧಾನವನ್ನು ಪ್ರತಿಯೊಬ್ಬ ವ್ಯಕ್ತಿಯು ಓದಬೇಕು ಎಂದು ಸಹಾಯಕ ಆಯುಕ್ತ ಪ್ರಭು ರೆಡ್ಡಿ ಹೇಳಿದರು. ಸೇಡಂ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಪಂ ಸಭಾಂಗಣದಲ್ಲಿ ಭಾರತೀಯ ಸಂವಿಧಾನವು ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನೆಲೆ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಪ್ರತಿಯೊಂದು ರಾಜ್ಯಗಳಿಗೆ ಸುತ್ತಾಡಿ ಅಲ್ಲಿರುವ ಜನರ ಕುಂದು ಕೊರತೆಗಳನ್ನು ಅರಿತುಕೊಂಡು ಸಮಾನವಾದ ಸಂವಿಧಾನ ನೀಡಿ ಸಮಾನತೆ ಸಾರಿದ ಮಹಾನ್ ನಾಯಕರಾಗಿದ್ದಾರೆ. ಸಂವಿಧಾನದ ತತ್ವಗಳು ಮತ್ತು ಮಹತ್ವದ ಬಗ್ಗೆ ದೇಶದ ಪ್ರತಿಯೊಬ್ಬ ವ್ಯಕ್ತಿಯು ಅರಿಯುವುದು ಮತ್ತು ಜಾಗೃತರಾಗಿರುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು. ಸೇಡಂ ಪಟ್ಟಣದ ಶ್ರೀ ಕೋತ್ತಲ ಬಸವೇಶ್ವರ ದೇವಾಲಯದಿಂದ ಸಂವಿಧಾನ ಜಾಥಾ ಪ್ರಮುಖ ರಸ್ತೆಗಳ ಮೂಲಕ ತಾಪಂ ಸಭಾಂಗಣದವರೆಗೆ ನಡೆಯಿತು. ತಹಶೀಲ್ದಾರ್ ಶ್ರೀಯಾಂಕ ಧನಶ್ರೀ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚೆನ್ನಪ್ಪ ರಾಯಣ್ಣನ, ತಾಲೂಕ ಆರೋಗ್ಯ ಅಧಿಕಾರಿ ಡಾ.ಸಂಜುಕುಮಾರ್ ಪಾಟೀಲ್, ಸಿಪಿಐ ಮಹಾದೇವ ದಿಡಿಮನಿ, ಅರವಿಂದ್ ಪಸಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಂಡಿತ್ ಬಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅನುರಾಧ ಪಾಟೀಲ್, ಶಿವಶಂಕ್ರಯ್ಯ ಸ್ವಾಮಿ ಇಮಡಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಡುಪಿ | ನ.29ರಂದು ಉಪಾಧ್ಯಾಯ ದಂಪತಿ ಪ್ರಶಸ್ತಿ ಪ್ರದಾನ
ಉಡುಪಿ, ನ.26: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮಣಿಪಾಲ ಇವರ ಸಹಯೋಗದಲ್ಲಿ ಹಿರಿಯ ವಿದ್ವಾಂಸರಾದ ಡಾ.ಯು.ಪಿ ಉಪಾಧ್ಯಾಯ ಮತ್ತು ಡಾ. ಸುಶೀಲಾ ಪಿ. ಉಪಾಧ್ಯಾಯ ದಂಪತಿ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.29ರ ಶನಿವಾರ ಎಂ.ಜಿ.ಎಂ.ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಪ್ರಶಸ್ತಿಯನ್ನು ಹಿರಿಯ ಗಮಕ ವ್ಯಾಖ್ಯಾನಕಾರ ಮತ್ತು ಅಷ್ಟಾವಧಾನಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಅವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ.ಎನ್.ತಿರುಮಲೇಶ್ವರ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಡಾ. ಪದ್ಮನಾಭ ಕೇಕುಣ್ಣಾಯ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಿರುವರು. ಇದೇ ಸಂದರ್ಭದಲ್ಲಿ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಾರಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಉಡುಪಿ ಜಿಲ್ಲಾ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು| ಪಿಲಿಕುಳದಲ್ಲಿ ಶುಭಾಂಶು ಶುಕ್ಲಾ ಸಂವಾದ ನೇರಪ್ರಸಾರ
ಮಂಗಳೂರು,ನ.26 : ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಏರ್ಪಡಿಸಿದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿದ್ಯಾರ್ಥಿಗಳ ನೇರ ಸಂವಾದದ ಪ್ರಸಾರ ಕಾರ್ಯಕ್ರಮವನ್ನು ಮಂಗಳವಾರ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿತ್ತು. ಬೆಂಗಳೂರಿನ ಜವಹರಲಾಲ್ ನೆಹರೂ ತಾರಾಲಯದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸುವ ಅವಕಾಶವನ್ನು ರಾಜ್ಯದ ಎಲ್ಲಾ ವಿಜ್ಞಾನ ಕೇಂದ್ರಗಳು ತಮ್ಮ ಸುತ್ತಮುತ್ತಲಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಒದಗಿಸಿತ್ತು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ.ರಾವ್ ಮಾತನಾಡಿದು.
ಮಂಗಳೂರು | ಕಾಲುಸಂಕ ಕುಸಿತ ಸ್ಥಳಕ್ಕೆ ದೋಣಿಯಲ್ಲಿ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿ
ಮಂಗಳೂರು,ನ.26: ಕಾಲುಸಂಕ ಕುಸಿತ ಸ್ಥಳಕ್ಕೆ ದೋಣಿಯಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಬುಧವಾರ ಪರಿಶೀಲನೆ ನಡೆಸಿದರಲ್ಲದೆ, ಕಾಲುಸಂಕ ಪುನಃ ನಿರ್ಮಾಣ ಅಥವಾ ದುರಸ್ತಿಯ ಬಗ್ಗೆ ತಾಂತ್ರಿಕ ಅಭಿಪ್ರಾಯ ಪಡೆದು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯಿಗೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಲೋಹದ ಕಾಲುಸಂಕವನ್ನು ಬಹಳ ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. 4 ವರ್ಷಗಳ ಹಿಂದೆ ಈ ಸಂಕ ಕುಸಿದು ಬಿದ್ದಿತ್ತು. ಈ ಪ್ರದೇಶದಲ್ಲಿ ಸುಮಾರು 300ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಕಾಲುಸಂಕದ ಮೂಲಕ ನದಿಬದಿಯಲ್ಲಿ ಸಮನಾಂತರವಾಗಿ ನಡೆದು ನಗರ ಸಂಪರ್ಕಿಸಲು ಹತ್ತಿರವಾಗಿತ್ತು. ಕಾಲುಸಂಕ ಕುಸಿದುಬಿದ್ದು, ಸ್ಥಳೀಯರಿಗೆ ದೈನಂದಿನ ಓಡಾಟಕ್ಕೆ ತೊಂದರೆಯಾಗಿತ್ತು. ಈ ಸಂಕವನ್ನು ದುರಸ್ತಿಪಡಿಸಲು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಎಚ್.ವಿ.ದರ್ಶನ್ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ರೊಂದಿಗೆ ದೋಣಿಯಲ್ಲೇ ಕಾಲುಸಂಕ ಇದ್ದ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
371(ಜೆ) ಅಡಿ ಹೊರಡಿಸಲಾಗುವ ಆದೇಶಗಳ ಅನುಷ್ಠಾನದಲ್ಲಿ ವಿಳಂಬ : ಪ್ರಿಯಾಂಕ್ ಖರ್ಗೆ ಅಸಮಾಧಾನ
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯನ್ನು ತೋರಿಸುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪಸಮಿತಿಯ ಸಭೆಯಲ್ಲಿ ಅವರು ಬೇಸರ ಹೊರ ಹಾಕಿದರು. ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಬಂಧ ಚರ್ಚೆ ನಡೆಸಿದ ಉಪ ಸಮಿತಿಯು, ಅವುಗಳನ್ನು ಶೀಘ್ರದಲ್ಲಿ ಜಾರಿಗೊಳಿಸಬೇಕು. ಅಲ್ಲದೇ, ಮುಂಭಡ್ತಿ ನೀಡುವಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೆ ಒಂದೇ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವಂತೆ ಸ್ಪಷ್ಟ ಸೂಚನೆ ನೀಡಿತು. ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಜೇಷ್ಠತೆಯನ್ನು 2014ರ ಎಪ್ರಿಲ್ 21ರಿಂದ ಜಾರಿಗೆ ಬರುವಂತೆ ಕಾಲ್ಪನಿಕ ಜೇಷ್ಠತೆ ಪಟ್ಟಿಯನ್ನು ಸಿದ್ಧಪಡಿಸಲು ನೀಡಲಾಗಿದ್ದ ಸೂಚನೆಗೆ ಅನುಗುಣವಾಗಿ ಸಹಾಯಕ, ಹಿರಿಯ ಸಹಾಯಕ, ಶಾಖಾಧಿಕಾರಿ, ಶೀಘ್ರಲಿಪಿಗಾರರು ಹಾಗೂ ಪತ್ರಾಂಕಿತ ಆಪ್ತ ಸಹಾಯಕ ವೃಂದದ ಅಧಿಕಾರಿ/ನೌಕರರ ಜೇಷ್ಠತೆಯನ್ನು ಮರು ನಿಗದಿಪಡಿಸಲಾಗಿದೆ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಅಧಿಕಾರಿಗಳು ಸಂಪುಟ ಉಪ ಸಮಿತಿಯ ಮುಂದೆ ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ, 5000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, 4193 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ, ಈ ಪೈಕಿ 3837 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ತಿಳಿಸಿದರು. ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದ ಮುಂದಿದ್ದು, ಅಂತಹ ಪ್ರಕರಣಗಳ ಸ್ವರೂಪ, ಪ್ರಸ್ತುತ ಸ್ಥಿತಿ ಗತಿ ಕುರಿತ ಮಾಹಿತಿ ನೀಡುವುದರ ಜೊತೆಗೆ ಅವುಗಳ ಇತ್ಯರ್ಥಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಪೂರ್ಣ ವಿವರಗಳನ್ನು ಒಂದು ವಾರದ ಒಳಗಾಗಿ ಸಂಪುಟ ಉಪ ಸಮಿತಿಗೆ ಸಲ್ಲಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ, ಕಾರಣ ಕೇಳಿ ನೋಟಿಸ್ ನೀಡಲು ಸೂಚಿಸಿದ ಪ್ರಿಯಾಂಕ್ ಖರ್ಗೆ, ಅನುಪಾಲನ ವರದಿ ಸಲ್ಲಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಸಂಪಟ ಉಪಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು, ಪೌರಾಡಳಿತ ಸಚಿವ ರಹೀಂಖಾನ್ ಪಾಲ್ಗೊಂಡಿದ್ದರು.
ಬ್ರಹ್ಮಾವರ | ʼಕಿಶೋರ ಯಕ್ಷಗಾನ ಸಂಭ್ರಮ-2025ʼ ಉದ್ಘಾಟನೆ
ಬ್ರಹ್ಮಾವರ, ನ.26: ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಹದಿನೆಂಟು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕಿಶೋರ ಯಕ್ಷಗಾನ ಸಂಭ್ರಮ -2025 ಬ್ರಹ್ಮಾವರದ ಬಂಟರ ಭವನದ ಬಳಿ ಮಂಗಳವಾರ ಸಂಜೆ ಉದ್ಘಾಟನೆಗೊಂಡಿತು. ಬ್ರಹ್ಮಾವರ ಬಂಟರ ಸಂಘದ ಆವರಣದಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಈ ಬಾರಿಯ ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟ, ಯಕ್ಷಗಾನ ಶ್ರೀಮಂತ ಕಲಾಪ್ರಕಾರವಾಗಿದ್ದು, ಮಕ್ಕಳಲ್ಲಿ ಭಾಷಾ ಪ್ರೌಢಿಮೆ, ಪುರಾಣ ಜ್ಞಾನ, ಆತ್ಮ ವಿಶ್ವಾಸ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಮಕ್ಕಳಿಗೆ ಇಂಥ ಅವಕಾಶವನ್ನು ನಿರಂತರವಾಗಿ ನೀಡುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗ ಅಭಿನಂದನಾರ್ಹ ಎಂದರು. ಉಡುಪಿ ಶಾಸಕ ಹಾಗೂ ಟ್ರಸ್ಟ್ ನ ಅಧ್ಯಕ್ಷರೂ ಆದ ಯಶಪಾಲ್ ಎ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯರಾದ ಬಿ. ಭುಜಂಗ ಶೆಟ್ಟಿ, ಆರೂರು ತಿಮ್ಮಪ್ಪ ಹೆಗ್ಡೆ, ದಿನಕರ ಹೇರೂರು, ಟಿ.ಭಾಸ್ಕರ್ ರೈ, ಮೈರ್ಮಾಡಿ ಅಶೋಕ್ಕುಮಾರ್ ಶೆಟ್ಟಿ, ಬಿರ್ತಿ ರಾಜೇಶ ಶೆಟ್ಟಿ, ಎಂ. ಗಂಗಾಧರ ರಾವ್, ರಾಜು ಕುಲಾಲ್, ಮಾರಾಳಿ ಪ್ರತಾಪ ಹೆಗ್ಡೆ, ಬಿ.ಆರ್.ನಿತ್ಯಾನಂದ, ನಾರಾಯಣ ಎಂ.ಹೆಗಡೆ ಉಪಸ್ಥಿತರಿದ್ದರು. ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳನ್ನಾಡಿದರು. ಪ್ರದರ್ಶನ ಸಂಘಟನಾ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಉದಯ ಪೂಜಾರಿ ವಂದಿಸಿದರು. ಟ್ರಸ್ಟಿನ ಕೋಶಾಧಿಕಾರಿ ಗಣೇಶ ಬ್ರಹ್ಮಾವರ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಸಮಾರಂಭದ ನಂತರ ಎಸ್.ಎಂ.ಎಸ್. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ನರಸಿಂಹ ತುಂಗ ನಿರ್ದೇಶನದಲ್ಲಿ ವೀರ ವೃಷಸೇನ ಪ್ರದರ್ಶನಗೊಂಡಿತು. ಈ ವರ್ಷ ಒಟ್ಟು 94 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಡಿ.31ರವರೆಗೆ ಉಡುಪಿ, ಕಾಪು, ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರದರ್ಶನ ನೀಡಲಿದ್ದಾರೆ.
ತ್ಯಾಜ್ಯ ಮುಕ್ತ ಸುಸ್ಥಿರ ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ದ.ಕ. ಜಿಪಂ ಸಿಇಒ ಸೂಚನೆ
ಮಂಗಳೂರು,ನ.26 : ಗ್ರಾಪಂಗಳು ಸಮುದಾಯದ ಸಹಭಾಗಿತ್ವದಲ್ಲಿ ತ್ಯಾಜ್ಯ ಮುಕ್ತ ಸುಸ್ಥಿರ ಸ್ವಚ್ಛ ಗ್ರಾಪಂ ನಿರ್ಮಾಣಕ್ಕೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲು ದ.ಕ. ಜಿಪಂ ಸಿಇಒ ಸೂಚಿಸಿದ್ದಾರೆ. ಪ್ರಸ್ತುತ 322 ಗ್ರಾಮಗಳು ಒಡಿಎಫ್ ಪ್ಲಸ್ ಮಾದರಿ ಗ್ರಾಮಗಳಾಗಿ ಘೋಷಣೆಯಾಗಿದ್ದರೂ ಕೂಡ ರಸ್ತೆ ಬದಿಯ ಚರಂಡಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸುಡುವುದು ಮತ್ತು ತ್ಯಾಜ್ಯಗಳನ್ನು ಎಸೆದು ರಾಶಿ ಹಾಕುವುದು ಕಂಡುಬರುತ್ತಿದೆ. ಸ್ವಚ್ಛತೆ ಸಾರ್ವಜನಿಕರ ಹೊಣೆಗಾರಿಕೆ ಆಗಿರುವಂತೆಯೇ ಜನರಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತೆ ಕಾಪಾಡಲು ಗುಣಮಟ್ಟದ ಸೇವೆ ಕಲ್ಪಿಸುವುದು ಗ್ರಾಪಂ ಆಡಳಿತದ ಕರ್ತವ್ಯವೂ ಆಗಿದೆ. ಗ್ರಾಮದಲ್ಲಿರುವ ಎಲ್ಲಾ ಮನೆಗಳು ವೈಯುಕ್ತಿಕ ಕ್ರಿಯಾತ್ಮಕ ಶೌಚಾಲಯಗಳನ್ನು ಹೊಂದಿರಬೇಕು. ಎಲ್ಲಾ ಅಂಗನವಾಡಿ, ಶಾಲೆಗಳು, ಗ್ರಾಪಂ ಕಟ್ಟಡಗಳಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಕ್ರಿಯಾತ್ಮಕ ಶೌಚಾಲಯಗಳಿರಬೇಕು. ಗ್ರಾಮದಲ್ಲಿರುವ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಹೊಂದಿರಬೇಕು. ಗ್ರಾಮ ವ್ಯಾಪ್ತಿಯ ತೆರೆದ ಪ್ರದೇಶದಲ್ಲಿ ಕಲುಷಿತ ನೀರು ನಿಂತಿರಬಾರದು ಹಾಗೂ ಕಸದ ರಾಶಿ ಹೊಂದಿರಬಾರದು. ಮಾದರಿ ಒಡಿಎಫ್ ಗ್ರಾಮ ಎಂದು ಘೋಷಣೆಯಾಗಿರುವ ಬಗ್ಗೆ, ಮಾಹಿತಿ, ಶಿಕ್ಷಣ ಮತ್ತು ಸಂವಹನ ಸಂದೇಶಗಳಾದ ಚಿತ್ರಗಳು, ಗೋಡೆ ಬರಹಗಳ ಮೂಲಕ ತಿಳಿಸಬೇಕು ಎಂದು ತಿಳಿಸಿದ್ದಾರೆ. ಬಾಕಿ ಇರುವ ಗ್ರಾಮಗಳನ್ನು ಒಡಿಎಫ್ ಪ್ಲಸ್ ಮಾದರಿಯನ್ನಾಗಿ ಮಾಡಲು ಅಗತ್ಯ ಕ್ರಮವಹಿಸಬೇಕು. ಪರಿಸರ ಸ್ನೇಹಿ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಸಮಾಜದ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸುಸ್ಥಿರತೆಯನ್ನು ಕಾಯ್ದುಕೊಳ್ಳುವ ಸಲುವಾಗಿ ನಿರಂತರ ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳನ್ನು ನಡೆಸಿ, ತೆರೆದ ಪ್ರದೇಶದಲ್ಲಿ ಕಸ ಬೀಳದಂತೆ ಹಾಗೂ ಕಲುಷಿತ ನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಎಲ್ಲಾ ಗ್ರಾಮಗಳಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಪ್ರಾಸ್ಟಿಕ್ ಮತ್ತಿತರ ಘನ ತ್ಯಾಜ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ತ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಗ್ರಾಪಂ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳು : 1. ಗ್ರಾಪಂಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ನೈರ್ಮಲ್ಯ, ಸಲಹಾ ಸಮಿತಿ ಮತ್ತು ಸ್ವಚ್ಛತಾ ಕಾರ್ಯಪಡೆಗಳನ್ನು ಕ್ರಿಯಾಶೀಲಗೊಳಿಸಬೇಕು. 2. ಸ್ವಚ್ಛ ಭಾರತ ಅಭಿಯಾನದ ಆಶಯದಂತೆ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸುವ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸಮುದಾಯ ಆಧಾರಿತವಾಗಿ ಸಮರ್ಪಕವಾಗಿ ನಿರ್ವಹಿಸಬೇಕು. 3. ಗ್ರಾಪಂ ಸದಸ್ಯರು, ಗ್ರಾಮ ಮಟ್ಟದ ಅಧಿಕಾರಿಗಳು, ಶಾಲಾ ಅಭಿವೃದ್ಧಿ ಸಮಿತಿ, ಬಾಲವಿಕಾಸ ಸಮಿತಿ, ಗ್ರಾಮ ನೈರ್ಮಲ್ಯ ಸಮಿತಿ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಸಂಜೀನಿ ಒಕ್ಕೂಟದ ಸದಸ್ಯರು ಮತ್ತು ಸಖಿಯರು, ಸಂಘ ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ವಾರ್ಡ್ ಮಟ್ಟದ ಕಾರ್ಯಪಡೆಗಳನ್ನು ರಚಿಸಿ ಕಾರ್ಯಾಚರಿಸಬೇಕು. 4. ಗ್ರಾಪಂ ಕಚೇರಿ, ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಗ್ರಾಮಗಳಲ್ಲಿರುವ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕಡ್ಡಾಯವಾಗಿ ಕಾಪಾಡಿಕೊಂಡಿರುವ ಕುರಿತು ಖಾತರಿ ಪಡಿಸಬೇಕು. 5. ಕಾರ್ಯಪಡೆಯ ಸದಸ್ಯರು ತಂಡಗಳಾಗಿ ಎಲ್ಲಾ ಮನೆಗಳು, ವಾಣಿಜ್ಯ ಅಂಗಡಿಗಳಿಗೆ ತೆರಳಿ ಜಾಗೃತಿ ಮೂಡಿಸಬೇಕು. ಕಸದ ಅಸಮರ್ಪಕ ನಿರ್ವಹಣೆಯಿಂದಾಗುವ ಅಪಾಯ ಮತ್ತು ಕಸವನ್ನು ಸಂಪನ್ಮೂಲವಾಗಿ ಪರಿವರ್ತಿಸುವ ಸರಳ ಉಪಾಯಗಳ ಬಗ್ಗೆ ತಿಳಿಸಿಕೊಡಬೇಕು. 6. ಹಸಿ, ಒಣ, ಅಪಾಯಕಾರಿ ಕಸಗಳ ಸಮರ್ಪಕ ವಿಂಗಡಣೆ ಮತ್ತು ನಿರ್ವಹಣೆಯನ್ನು ಖಾತರಿ ಪಡಿಸಿದ ಮನೆಗಳು, ವಾಣಿಜ್ಯ ಅಂಗಡಿಗಳು ಹಾಗೂ ಸಂಸ್ಥೆಗಳಿಂದ ನಿಗದಿಪಡಿಸಿದ ನವೂನೆಯಲ್ಲಿ ಸ್ವಚ್ಛತಾ ಸ್ವಯಂ ಘೋಷಣಾ ಪತ್ರಗಳನ್ನು ಸ್ವೀಕರಿಸಬೇಕು. 7. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ/ಬಳಕೆ ಮಾಡದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. 8. ಸ್ವಚ್ಛ ಮನೆ ಸ್ವಯಂ ಘೋಷಣಾ ಪತ್ರ ಸಲ್ಲಿಸಿ. ಸ್ವಚ್ಛತಾ ಸಂಸ್ಕೃತಿಯನ್ನು ಅಳವಡಿಸಿಕೊಂಡ ಕುಟುಂಬಗಳ ಸಮಾವೇಶದೊಂದಿಗೆ ’ಗ್ರಾಮ ಸ್ವಚ್ಛತಾ ಸಂಭ್ರಮ’ ಕಾರ್ಯಕ್ರಮವನ್ನು ಏರ್ಪಡಿಸಬೇಕು ಹಾಗೂ ’ಬಯಲು ಕಸ ಮುಕ್ತ ಗ್ರಾಮ’ ಎಂದು ಘೋಷಿಸಬೇಕು.
ಅಧಿಕಾರ ಹಂಚಿಕೆ: ಸತೀಶ್ ಜಾರಕಿಹೊಳಿ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 26: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಜತೆಗೆ ಏನೇನು ಮಾತುಕತೆ ನಡೆಯಿತು ಎಂಬ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ
Bengaluru | ಕೇಂದ್ರ ಸರಕಾರದ ನೀತಿ, ರಾಜ್ಯ ಸರಕಾರದ ಧೋರಣೆಗಳ ವಿರುದ್ಧ ರೈತ-ಕಾರ್ಮಿಕರ ಪ್ರತಿಭಟನೆ
ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನ ರದ್ದು ಘೋಷಣೆಯನ್ನು ಕೂಡಲೇ ಗೆಜೆಟ್ನಲ್ಲಿ ಪ್ರಕಟಿಸುವುದು ಸೇರಿ, ಕೇಂದ್ರ ಸರಕಾರದ ನೀತಿ ಮತ್ತು ರಾಜ್ಯ ಸರಕಾರದ ಧೋರಣೆಗಳ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ವತಿಯಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ರೈತ, ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡ ಪ್ರೊ.ಬಾಬು ಮ್ಯಾಥ್ಯೂ, ಸಂವಿಧಾನ ನಂಬಿಕೊಂಡಿರುವ ರೈತರು ಮತ್ತು ಕಾರ್ಮಿಕರ ಐಕ್ಯತೆ ಮುರಿಯುವ ಯತ್ನ ದೇಶದಲ್ಲಿ ನಡೆಯುತ್ತಿದೆ. ಈಗ ಜಾರಿಯಾಗಿರುವ ಕಾರ್ಮಿಕ ವಿರೋಧಿ ಕಾಯ್ದೆಗಳು ಸಾಕಷ್ಟು ಅಮಾನವೀಯವಾಗಿವೆ. ಇನ್ನು ಮುಂದೆ ಕಾರ್ಮಿಕರು ಕಾನೂನು ಹೋರಾಟ ಮಾಡಲು ಸಾಧ್ಯವಿಲ್ಲ. ಹೋರಾಟ ಮಾಡಿದರೆ ಅದು ಕಾನೂನು ಬಾಹಿರ ಆಗುತ್ತದೆ. ಕಾರ್ಮಿಕರ ಯೂನಿಯನ್ಗಳು ನಿಷೇಧ ಆಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು. ಹಳೆಯ ಕಾರ್ಮಿಕ ಕಾನೂನುಗಳ ಮೇಲೆ ನಮಗೆ ಹಿಡಿತ ಇತ್ತು. ಆದರೆ ಹೊಸ ಕಾರ್ಮಿಕ ಕಾನೂನುಗಳ ಪ್ರಕಾರ ಯಾವಾಗ ಬೇಕಾದರೂ ಕಾರ್ಮಿಕರನ್ನು ಕೆಲಸದಿಂದ ತೆಗೆಯಬಹುದು. ಇದು ಕಾನೂನು ಬಾಹಿರ ಎಂಬುದನ್ನು ಮರೆಯಬಾರದು ಎಂದು ಅಭಿಪ್ರಾಯಪಟ್ಟರು. ಜನಶಕ್ತಿಯ ನೂರ್ ಶ್ರೀಧರ್ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಬಿಜೆಪಿ ಸರಕಾರ ರೂಪಿಸಿದ ಎಲ್ಲ ಕಾನೂನುಗಳನ್ನು ವಿರೋಧ ಪಕ್ಷವಿದ್ದಾಗ ವಿರೋಧ ಮಾಡಿ, ಈಗ ನೀವು ಏನು ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಎಪಿಎಂಸಿ ಕಾಯ್ದೆಗೆ ಸ್ವಲ್ಪ ತಿದ್ದುಪಡಿ ಮಾಡಿದ್ದು ಬಿಟ್ಟರೆ ಎಲ್ಲ ಕಾನೂನುಗಳೂ ಹಾಗೆಯೇ ಇವೆ. ಪ್ರಜಾತಂತ್ರವನ್ನು ಬುಡಮೇಲು ಮಾಡುವ, ವಿರೋಧ ಪಕ್ಷಗಳು ಅಧಿಕಾರಕ್ಕೆ ಬರಲೇಬಾರದು ಎಂದು ಎಸ್ಐಆರ್ ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಜಾತ್ಯತೀತ ಮತದಾರರ ಹೆಸರುಗಳನ್ನ ಶೇ.15ರಷ್ಟು ಅಳಿಸುತ್ತಿದ್ದಾರೆ, ಇಷ್ಟೆಲ್ಲಾ ಆದರೂ ಕರ್ನಾಟಕದ ಕಾಂಗ್ರೆಸ್ ಸರಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆಯ ಎಚ್.ಆರ್.ಬಸವರಾಜಪ್ಪ, ಕರ್ನಾಟಕ ಪ್ರಾಂತ ರೈತ ಸಂಘದ ಯು.ಬಸವರಾಜು, ಸಿಐಟಿಯುನ ಮೀನಾಕ್ಷಿ ಸುಂದರಂ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ, ಸಂಯುಕ್ತ ಹೋರಾಟದ ಬಡಗಲಪುರ ನಾಗೇಂದ್ರ, ಎಐಯುಟಿಯುಸಿ ಕೆ.ವಿ.ಭಟ್ ಮತ್ತಿತರರು ಹಾಜರಿದ್ದರು. ಪ್ರಮುಖ ಹಕ್ಕೊತ್ತಾಯಗಳು ಕೇಂದ್ರ ಸರಕಾರದ 4 ಕಾರ್ಮಿಕ ಸಂಹಿತೆಗಳು ಮತ್ತು ಶ್ರಮ ಶಕ್ತಿ ನೀತಿ2025ನ್ನು ರದ್ದು ಪಡಿಸಬೇಕು. ಈ ಜನ ವಿರೋಧಿ ನೀತಿಗಳನ್ನು ರಾಜ್ಯದಲ್ಲಿ ಜಾರಿ ಮಾಡುವುವುದಿಲ್ಲ ಎಂದು ರಾಜ್ಯ ಸರಕಾರವು ವಿಧಾನಸಭೆಯಲ್ಲಿ ನಿರ್ಣಯಿಸಿ ತಿರಸ್ಕರಿಸಬೇಕು. ದೇವನಹಳ್ಳಿ ಭೂಸ್ವಾಧೀನ ರದ್ದು ಘೋಷಣೆಯನ್ನು ಕೂಡಲೇ ಗೆಜೆಟ್ನಲ್ಲಿ ಪ್ರಕಟಿಸಬೇಕು. ಅರಣ್ಯವಾಸಿಗಳನ್ನು ಸದಾ ಒಕ್ಕಲೇಳುವ ಆತಂಕದಿಂದ ಪಾರು ಮಾಡಬೇಕು. ಎಲ್ಲ ಆದಿವಾಸಿ, ಅರಣ್ಯವಾಸಿಗಳಿಗೆ ಭೂಮಿ ಹಕ್ಕು ನೀಡಬೇಕು. ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು. ಸರ್ಜಾಪುರ ಹೋಬಳಿಯ ಆಂಧೇನಳ್ಳಿ, ಮುತ್ತೆನಲ್ಲೂರು, ಸೊಳ್ಳೆಪುರ ಮುಂತಾದ ಗ್ರಾಮಗಳಲ್ಲಿ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಸ್ವಾಧೀನ ಪಡಿಸಿ ಕೊಳ್ಳುತ್ತಿರುವುದನ್ನು ಕೈಬಿಡಬೇಕು. ಮೆಕ್ಕೆ ಜೋಳವನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಕೊಳ್ಳಲು ಕೇಂದ್ರ ಸರಕಾರ ಮುಂದೆ ಬರಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಹಕ್ಕೊತ್ತಾಯ ಮಂಡಿಸಲಾಯಿತು.
ಭಾರತದ ವಿರುದ್ಧ ಟೆಸ್ಟ್ | ಡೇಲ್ ಸ್ಟೇಯ್ನ್ ದಾಖಲೆ ಮುರಿದ ಹಾರ್ಮರ್
ಗುವಾಹಟಿ, ನ.26: ದಕ್ಷಿಣ ಆಫ್ರಿಕಾ ತಂಡವು ಭಾರತ ನೆಲದಲ್ಲಿ ಎರಡೂವರೆ ದಶಕಗಳ ನಂತರ ಟೆಸ್ಟ್ ಸರಣಿಯನ್ನು ಗೆಲ್ಲುವಲ್ಲಿ ಆಫ್ ಸ್ಪಿನ್ನರ್ ಸೈಮನ್ ಹಾರ್ಮರ್ ಮಹತ್ವದ ಕೊಡುಗೆ ನೀಡಿದ್ದಾರೆ. ಹಾರ್ಮರ್ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 8.94ರ ಸರಾಸರಿಯಲ್ಲಿ ಒಟ್ಟು 17 ವಿಕೆಟ್ ಗಳನ್ನು ಪಡೆದಿದ್ದಾರೆ. ವಿಂಡೀಸ್ ನ ಕೋರ್ಟ್ನಿ ವಾಲ್ಶ್ ಅವರು 1994-95ರಲ್ಲಿ ನ್ಯೂಝಿಲ್ಯಾಂಡ್ ನಲ್ಲಿ 8.25ರ ಸರಾಸರಿಯಲ್ಲಿ ಒಟ್ಟು 16 ವಿಕೆಟ್ ಗಳನ್ನು ಪಡೆದಿದ್ದರು. ಹಾರ್ಮರ್ ಅವರು ಭಾರತದಲ್ಲಿ ಅತ್ಯಂತ ಹೆಚ್ಚು ಟೆಸ್ಟ್ ವಿಕೆಟ್ ಗಳನ್ನು(27)ಪಡೆದ ದಕ್ಷಿಣ ಆಫ್ರಿಕಾದ ಬೌಲರ್ ಎನಿಸಿಕೊಂಡರು. ಈ ಮೂಲಕ ಡೇಲ್ ಸ್ಟೇಯ್ನ್(26 ವಿಕೆಟ್)ದಾಖಲೆಯನ್ನು ಮುರಿದರು. ಹಾರ್ಮರ್ ಇದೀಗ 14 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 69 ವಿಕೆಟ್ ಗಳನ್ನು ಪಡೆದಿದ್ದಾರೆ. ಮೊದಲ 14 ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಸ್ಪಿನ್ ಬೌಲರ್ ನ ಶ್ರೇಷ್ಠ ಸಾಧನೆ ಇದಾಗಿದೆ. ‘‘ನಾನು 10 ವರ್ಷಗಳ ನಂತರ ಭಾರತದಲ್ಲಿ ಟೆಸ್ಟ್ ಪಂದ್ಯ ಆಡಿದ್ದೇನೆ. ನನಗೆ ವಿಭಿನ್ನ ಅನುಭವವಾಗಿದೆ. ಕಳೆದ ಬಾರಿಗಿಂತ ಹೆಚ್ಚು ಸ್ಮರಣೀಯ ನೆನಪಿನೊಂದಿಗೆ ಸ್ವದೇಶಕ್ಕೆ ಮರಳುತ್ತಿರುವೆ. ಭಾರತೀಯ ತಂಡದ ವಿರುದ್ಧ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಖುಷಿಯಾಗುತ್ತಿದೆ’’ ಎಂದು ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದ ನಂತರ ಹಾರ್ಮರ್ ಪ್ರತಿಕ್ರಿಯಿಸಿದರು.
ಬಂಗಾಳದಲ್ಲಿ ಹಿಂದು-ಮುಸ್ಲಿಂರ ಮತ ಸೆಳೆಯಲು TMC ಪ್ಲ್ಯಾನ್; ಒಂದೆಡೆ ಮಸೀದಿ, ಮತ್ತೊಂದೆಡೆ ದೇಗುಲ ಸ್ಥಾಪನೆಗೆ ಚಿಂತನೆ
ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಟಿಎಂಸಿ ಹಿಂದೂ ಮತ್ತು ಮುಸ್ಲಿಂರ ಮತ ಸೆಳೆಯಲು ನಾನಾ ರೀತಿಯಲ್ಲಿ ಪ್ಲ್ಯಾನ್ ಮಾಡುತ್ತಿದೆ. ಒಂದೆಡೆ ಸಿಎಂ ಮಮತಾ ಬ್ಯಾನರ್ಜಿಯವರು ದುರ್ಗಾ ದೇಗುಲ ನಿರ್ಮಾಣಕ್ಕೆ ಪ್ಲ್ಯಾನ್ ಮಾಡುತ್ತಿದ್ದರೆ, ಮತ್ತೊಂದು ಕಡೆ ಅವರದ್ದೇ ಪಕ್ಷದ ಶಾಸಕರೊಬ್ಬರು ದರ್ಗಾ ಉದ್ಘಾಟನೆಗೆ ಮುಂದಾಗಿದ್ದರೆ. ಇದು ಒಡೆದು ಆಳುವ ನೀತಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಬಂಗಾಳದಲ್ಲಿ ಈ ವರ್ಷ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿದ್ದವೂ ಈ ಎಲ್ಲ ಅಡೆತಡೆಗಳ ಮಧ್ಯೆ ಮತ ಸೆಳೆಯಲು ಹಗ್ಗ ಜಗ್ಗಾಟ ಮುಂದುವರೆದಿದೆ.
ಹವ್ಯಾಸಿ ಭಾಗವತ ನಿಟ್ಟೂರು ಶೀನಪ್ಪ ಸುವರ್ಣ
ಉಡುಪಿ, ನ.26: ಹವ್ಯಾಸಿ ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಭಾಗವತ ನಿಟ್ಟೂರು ಶೀನಪ್ಪ ಸುವರ್ಣ (79) ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ನೀಲಾವರ ರಾಮಕೃಷ್ಣಯ್ಯ ಅವರಲ್ಲಿ ಯಕ್ಷಗಾನ ಭಾಗವತಿಕೆ ಅಭ್ಯಾಸ ಮಾಡಿ ಐದು ದಶಕಗಳ ಸುಧೀರ್ಘ ಕಾಲ ಯಕ್ಷಗಾನ ಭಾಗವತರಾಗಿ ಸೇವೆಸಲ್ಲಿಸಿದ್ದರು. ಉಡುಪಿಯ ಅತ್ಯಂತ ಹಿರಿಯ ಯಕ್ಷಗಾನ ಮಂಡಳಿ ಯಕ್ಷಗಾನ ಕಲಾರಂಗದಿಂದ ಶ್ರೀವಿಶ್ವೇಶತೀರ್ಥ ಪ್ರಶಸ್ತಿಯನ್ನು ಪಡೆದು, ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು ಸಂಸ್ಥೆಯಲ್ಲಿ ಆರು ದಶಕಗಳ ಕಾಲ ಪದಾಧಿಕಾರಿಯಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಆ ಸಂಸ್ಥೆಯ ಅವಿಭಾಜ್ಯ ಅಂಗವೇ ಆಗಿದ್ದರು. ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ಧ ಸುವರ್ಣರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು : ಎಂ.ಬಿ.ಪಾಟೀಲ್
ಲಂಡನ್ : ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ ಮುಂತಾದ ದಿಗ್ಗಜ ಕಂಪನಿಗಳೊಂದಿಗೆ ಎರಡನೆಯ ದಿನವಾದ ಮಂಗಳವಾರ ಮಾತುಕತೆ ನಡೆಸಿ, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಇಲ್ಲಿನ ಫೋರ್ ಸೀಸನ್ ಹೋಟೆಲಿನಲ್ಲಿ ಮಾತುಕತೆ ನಡೆಸಿರುವ ಅವರು, ಡ್ರೋನ್ ಮತ್ತು ಮುಂದಿನ ತಲೆಮಾರಿನ ವಿಮಾನಗಳಿಗೆ ಬೇಕಾಗುವ ಅಧಿಕ ಸಾಮಥ್ರ್ಯದ ಎಲೆಕ್ಟ್ರಿಕ್ ಜೆಟ್ ಮತ್ತು ಡಕ್ಟೆಡ್-ಫ್ಯಾನ್ ಪ್ರೊಪಲ್ಶನ್ ತಯಾರಿಕೆಗೆ ಹೆಸರಾಗಿರುವ ಗ್ರೀನ್ ಜೆಟ್ಸ್ ಕಂಪನಿಯು ಬೆಂಗಳೂರಿಗೆ ಸಮೀಪವಿರುವ ಜಾಗದಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದೆ. ನಾವು ಕೂಡ ಆದ್ಯತೆಯ ಮೇಲೆ ಭೂಮಿ ಒದಗಿಸುವ ಭರವಸೆ ನೀಡಿದ್ದೇವೆ ಎಂದಿದ್ದಾರೆ. ಫಿಡೋ ಎಐ ಕಂಪನಿ ಕೂಡ ಕರ್ನಾಟಕದಲ್ಲಿ ತನ್ನದೊಂದು ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ ಎಂದು ಅದರ ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ವಿನ್ಯಾಸಕ್ಕೆ ಹೆಚ್ಚಿನ ಮಹತ್ವ್ವವಿರುವ ಸ್ಮಾರ್ಟ್ ಫೋನ್ ತಯಾರಿಸುವ ನಥಿಂಗ್ ಕಂಪನಿಯೊಂದಿಗಿನ ಚರ್ಚೆಯಲ್ಲಿ ರಾಜ್ಯದಲ್ಲಿ ಒಂದು ತಯಾರಿಕಾ ಸ್ಥಾವರ ಸ್ಥಾಪಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಉನ್ನತ ಎಂಜಿನಿಯರಿಂಗ್ ವಲಯದಲ್ಲಿ ಹೆಸರು ಮಾಡಿರುವ ರೋಡ್ಸ್ ಗ್ರೂಪ್ ಜತೆಗಿನ ಮಾತುಕತೆಯಲ್ಲಿ, ಕಂಪನಿಯ ಉನ್ನತ ಮಟ್ಟದ ನಿಯೋಗವು ಆದಷ್ಟು ಬೇಗ ಕರ್ನಾಟಕಕ್ಕೆ ಭೇಟಿ ನೀಡಬೇಕೆಂದು ಆಹ್ವಾನಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಈ ಮಾತುಕತೆಗಳಲ್ಲಿ ಗ್ರೀನ್ ಜೆಟ್ಸ್ ಸಿಇಒ ಅನ್ಮೋಲ್ ಮನೋಹರ್, ಫಿಡೋ ಎಐ ಸಹ ಸಂಸ್ಥಾಪಕಿ ವಿಕ್ಟೋರಿಯಾ ಎಡ್ವಡ್ರ್ಸ್, ನಥಿಂಗ್ ಕಂಪನಿಯ ಜಾಗತಿಕ ಕಾರ್ಯತಂತ್ರ ನಿರ್ದೇಶಕಿ ಟಮೀನಾ, ರೋಡ್ಸ್ ಗ್ರೂಪ್ ಸಿಇಒ ಮಾರ್ಕ್ ರಿಡ್ಜ್ವೇ ಮತ್ತು ಎಂಬಿಡಿಎ ಕಂಪನಿಯ ಭಾರತೀಯ ಪ್ರಾದೇಶಿಕ ವ್ಯವಹಾರಗಳ ಮುಖ್ಯಸ್ಥ ಟಾಮ್ ಫೆಲ್ ಪಾಲ್ಗೊಂಡಿದ್ದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮತ್ತಿತರರು ನಿಯೋಗದಲ್ಲಿ ಇದ್ದಾರೆ.
ಕಲಬುರಗಿ| ಸಂವಿಧಾನ ಮಾತ್ರವೇ ಭಾರತಕ್ಕೆ ದಿಕ್ಸೂಚಿ ಗ್ರಂಥ : ಎಂ.ವೈ.ಪಾಟೀಲ
ಕಲಬುರಗಿ: ಭಾರತ ಸಂವಿಧಾನಕ್ಕೆ ಯಾವುದೇ ಇನ್ನೊಂದು ಗ್ರಂಥ ಸರಿಸಮವಾಗಲು ಸಾಧ್ಯವಿಲ್ಲ. ಅದರಲ್ಲಿ ಭಾರತದ ಭವಿಷ್ಯವನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರರು ಕಟ್ಟಿ ಕೊಟ್ಟಿದ್ದಾರೆ. ಸಂವಿಧಾನ ದಾರಿ ತೋರಿದ ರೀತಿ ಈ ದೇಶ ನಡೆಯುತ್ತದೆ ಎಂದು ಶಾಸಕರಾದ ಎಂ.ವೈ.ಪಾಟೀಲ ಹೇಳಿದರು. ಬುಧವಾರ ಅಫಜಲಪುರ ಪಟ್ಟಣದಲ್ಲಿ ತಾಲೂಕು ಆಡಳಿತ, ಜಿಲ್ಲಾ ಪಂಚಾಯತ್ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂವಿಧಾನ ನಮಗೆ ಮೂಲಭೂತ ಹಕ್ಕುಗಳನ್ನು ಕೊಟ್ಟು ನಮ್ಮ ಬದುಕನ್ನು ಭದ್ರಗೊಳಿಸಿದೆ. ಆದ್ದರಿಂದ ನಾವು ಸಂವಿಧಾನವನ್ನು ರಕ್ಷಿಸುವ ಕರ್ತವ್ಯ ನಿಭಾಯಿಸಬೇಕು ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ರಮೇಶ್ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿದ್ಧಾರ್ಥ ಬಸರಿಗಿಡದ, ತಹಶೀಲ್ದಾರ್ ಸಂಜುಕುಮಾರ್ ದಾಸರ್ ಮಾತನಾಡಿದರು. ಸಂವಿಧಾನ ಎಲ್ಲರಿಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಕೊಟ್ಟಿದೆ. 6 ರಿಂದ 14ನೇ ವಯಸ್ಸಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಟ್ಟಿದ್ದು ಸಂವಿಧಾನ. ಆದ್ದರಿಂದ ಸಂವಿಧಾನದ ಅರಿವು ಮೂಡಿಸುವ ಕಾರ್ಯ ಮಕ್ಕಳಿದ್ದಾಗಿನಿಂದಲೇ ಆರಂಭವಾಗಬೇಕು ಎಂದರು. ಸಭೆಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಮಹಾಲಿಂಗ ಅಂಗಡಿ, ಭೀಮರಾಯ ಗೌರ್, ಶಿವು ಸಿಂಗೆ, ಭಾಗಣ್ಣಾ ಮತ್ತು ಇತರರು ಉಪಸ್ಥಿತರಿದ್ದರು.
ಕಲಬುರಗಿ | ಆರೆಸ್ಸೆಸ್ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಕಲಬುರಗಿ : ಆರೆಸ್ಸೆಸ್ ನೀತಿ ವಿರುದ್ಧ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯ ಅವರನ್ನು ಬೆಂಬಲಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ ಬಳಿಕ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್, ಆರೆಸ್ಸೆಸ್ ದೇಶದ ಸಂವಿಧಾನವನ್ನು ಒಪ್ಪುವುದಿಲ್ಲ. ಆರೆಸ್ಸೆಸ್ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ. ಹಾಗಾಗಿ ಇಂತಹ ಸಂಘಟನೆಯನ್ನು ಮತ್ತೊಮ್ಮೆ ನಿಷೇಧಿಸಿದರೂ ದೇಶಕ್ಕೆ ಯಾವುದೇ ನಷ್ಟವಿಲ್ಲ ಎಂದು ಹೇಳಿದರು. ಆರೆಸ್ಸೆಸ್ ಇದೊಂದು ನೋಂದಣಿ ಇಲ್ಲದ ಸಂಸ್ಥೆ, ಇದು ಸಂವಿಧಾನದ ಅಡಿ ನೋಂದಣಿ ಮಾಡಿಕೊಂಡಿಲ್ಲ. ಇದಕ್ಕೆ ಆದಾಯ ಎಲ್ಲಿಂದ ಬರುತ್ತಿದೆ ಎನ್ನುವುದನ್ನು ಪ್ರಶ್ನಿಸಬೇಕಿದೆ ಎಂದು ಹೇಳಿದರು. ಇತ್ತೀಚೆಗೆ ಸಚಿವ ಪ್ರಿಯಾಂಕ ಖರ್ಗೆ ಅವರು ಆರೆಸ್ಸೆಸ್ ಅನ್ನು ಸರಕಾರಿ ಸ್ಥಳಗಳಲ್ಲಿ ನಿಷೇಧಿಸಬೇಕೆಂದು ಹೇಳಿರುವುದಕ್ಕೆ ಬೆಂಬಲವಿದೆ. ಖರ್ಗೆ ವಿರುದ್ಧ ಆರೆಸ್ಸೆಸ್ ಷಡ್ಯಂತ್ರ ನಡೆಸುತ್ತಿದೆ. ಇದನ್ನು ಸಮಿತಿ ಖಂಡಿಸುತ್ತದೆ. ಪ್ರಿಯಾಂಕ ಖರ್ಗೆ ಅವರನ್ನು ಬೆಂಬಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ, ಮುಖಂಡರಾದ ಕೃಷ್ಣಪ್ಪ ಕರಣಿಕ್, ಪ್ರಕಾಶ್ ಮೂಲಭಾರತಿ, ರವಿ ಬಡಿಗೇರ, ತಿಪ್ಪಣ್ಣ ಕಣೇಕರ್, ಮಹಾಲಿಂಗ ಅಂಗಡಿ, ಬಿ.ಸಿ.ವಾಲಿ, ಎಸ್.ಪಿ. ಸುಳ್ಳದ್, ಶಿವಪುತ್ರರಾಗಿ, ಅಂಬಣ್ಣ ಜೀವಣಗಿ, ಎಸ್.ಶಂಕರ್, ಮಹಾದೇವ ತರನಳ್ಳಿ, ಸುಭಾಷ ಡಾಂಗೆ, ಶಿವಶರಣ ಮಾರಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಕ್ರೇನ್ &ರಷ್ಯಾ ಯುದ್ಧ ನಿಲ್ಲಿಸಲು ಕೊನೆಯ ಅಸ್ತ್ರ ಪ್ರಯೋಗಿಸಿದ ಟ್ರಂಪ್, ಸಕ್ಸಸ್ ಗ್ಯಾರಂಟಿ!
ರಷ್ಯಾ &ಉಕ್ರೇನ್ ನಡುವೆ ನಡೆಯುತ್ತಿರುವ ಘನಘೋರ ಯುದ್ಧಕ್ಕೆ ಹೇಗಾದರೂ ಮಾಡಿ ಇದೀಗ ಕೊನೆಯ ಮೊಳೆ ಹೊಡೆಯಬೇಕು ಎಂಬ ಡೊನಾಲ್ಡ್ ಟ್ರಂಪ್ ಅವರ ಪ್ರಯತ್ನ ಫಲ ನೀಡುತ್ತಿದೆ. ಅಂದಹಾಗೆ ಕಳೆದ 4 ವರ್ಷಗಳಿಂದ ಬಡಿದಾಡುತ್ತಿರುವ ರಷ್ಯಾ &ಉಕ್ರೇನ್ ಯಾವುದೇ ಕಾರಣಕ್ಕೂ ಈ ಯುದ್ಧ ನಿಲ್ಲಿಸಲು ತಯಾರೇ ಇರಲಿಲ್ಲ. ಆದರೆ ಇಂತಹ ಸಮಯದಲ್ಲಿ ಡೊನಾಲ್ಡ್ ಟ್ರಂಪ್ ಅವರ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರತದ ಸಂವಿಧಾನದ ಅನುಚ್ಛೇದ 371(ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯನ್ನು ತೋರಿಸುತ್ತಿಲ್ಲ ಎಂದು ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ತಮ್ಮ ವಿಳಂಬ ಧೋರಣೆಯನ್ನು ಬದಿಗಿರಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದಾರೆ. ಭಾರತದ ಸಂವಿಧಾನದ ಅನುಚ್ಛೇದ 371 (ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ ಪ್ರಯುಕ್ತ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ರಚಿಸಲಾಗಿರುವ ಸಂಪುಟ ಉಪಸಮಿತಿಯ ಅಧ್ಯಕ್ಷರಾದ ಪ್ರಿಯಾಂಕ್ ಖರ್ಗೆ ಸಂಪುಟ ಉಪ ಸಮಿತಿಯ ಇತರ ಸದಸ್ಯರೊಂದಿಗೆ ಸಭೆ ನಡೆಸಿ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಬಂಧ ಚರ್ಚೆ ನಡೆಸಿ ಅವುಗಳನ್ನು ಶೀಘ್ರದಲ್ಲಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಂಪುಟ ಉಪಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಸಚಿವ ಬೋಸರಾಜು, ಪೌರಾಡಳಿತ ಸಚಿವ ರಹೀಂಖಾನ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಮುಂಬಡ್ತಿ ನೀಡುವಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತಾ ಪಟ್ಟಯನ್ನು ಪ್ರಕಟಿಸಲು ಸಚಿವ ಸಂಪುಟ ಉಪ ಸಮಿತಿಯು ಸಿಬ್ಬಂದಿ ಹಾಗೂ ಆಡಳಿತ ಸುಧಾರಣ ಇಲಾಖೆಗೆ ಈಗಾಗಲೆ ಸೂಚಿಸಿದ್ದು, ಅದರಂತೆ ಒಂದೇ ಜೇಷ್ಠತಾ ಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳಬೇಕೆಂದು ಸಂಪುಟ ಉಪಸಮಿತಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿತು. ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಜೇಷ್ಠತೆಯನ್ನು 2014ರ ಏಪ್ರಿಲ್ 21ರಿಂದ ಜಾರಿಗೆ ಬರುವಂತೆ ಕಾಲ್ಪನಿಕ ಜೇಷ್ಠತೆ ಪಟ್ಟಿಯನ್ನು ಸಿದ್ಧಪಡಿಸಲು ನೀಡಲಾಗಿದ್ದ ಸೂಚನೆಗೆ ಅನುಗುಣವಾಗಿ ಸಹಾಯಕ, ಹಿರಿಯ ಸಹಾಯಕ, ಶಾಖಾಧಿಕಾರಿ, ಶೀಘ್ರಲಿಪಿಗಾರರು ಹಾಗೂ ಪತ್ರಾಂಕಿತ ಆಪ್ತ ಸಹಾಯಕ ವೃಂದದ ಅಧಿಕಾರಿ/ನೌಕರರ ಜೇಷ್ಠತೆಯನ್ನು ಮರು ನಿಗದಿಪಡಿಸಲಾಗಿದೆ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಅಧಿಕಾರಿಗಳು ಸಂಪುಟ ಉಪ ಸಮಿತಿಯ ಮುಂದೆ ತಿಳಿಸಿದರು. ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದ ಮುಂದಿದ್ದು, ಅಂತಹ ಪ್ರಕರಣಗಳ ಸ್ವರೂಪ, ಪ್ರಸ್ತುತ ಸ್ಥಿತಿಗತಿ ಕುರಿತ ಮಾಹಿತಿ ನೀಡುವುದರ ಜೊತೆಗೆ ಅವುಗಳ ಇತ್ಯರ್ಥಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಪೂರ್ಣ ವಿವರಗಳನ್ನು ಒಂದು ವಾರದ ಒಳಗಾಗಿ ಸಂಪುಟ ಉಪ ಸಮಿತಿಗೆ ಸಲ್ಲಿಸಲು ಸಚಿವ ಪ್ರಿಯಾಂಕ ಖರ್ಗೆ ಸೂಚಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಸೂಚಿಸಿದ ಸಚಿವರು ಅನುಪಾಲನ ವರದಿ ಸಲ್ಲಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸಂವಿಧಾನ ವಿರೋಧಿ ಮನುವಾದಿಗಳ ಬಗ್ಗೆ ಎಚ್ಚರ ಇರಲಿ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮನುಸ್ಮೃತಿಯಲ್ಲಿದ್ದ ಮನುಷ್ಯ, ಸಮಾನತೆ ವಿರೋಧಿ ನಿಯಮಗಳಿಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಈ ಕಾರಣಕ್ಕಾಗಿಯೇ ಮನುವಾದಿಗಳು ಈಗಲೂ ನಮ್ಮ ಸಂವಿಧಾನ ವಿರೋಧಿಸುತ್ತಿದ್ದು, ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬುಧವಾರ ನಗರದ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನ ದಿನಾಚರಣೆ-2025 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಜಾರಿಗೂ ಮೊದಲು ನಮ್ಮ ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಆಗ ಮನುಷ್ಯ, ಸಮಾನತೆ ವಿರೋಧಿ ನೀತಿಗಳಿಂದ ಶೋಷಣೆ ಮಾಡಲಾಗುತಿತ್ತು. ಆದರೆ, ಈಗಲೂ ಇಂತಹ ಮನುಸ್ಮೃತಿ ಬೆಂಬಲಿಸುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಬೇಕಾಗಿದೆ ಎಂದು ತಿಳಿಸಿದರು. ಈ ದೇಶದ ಜನತೆಗೆ ಯಾವ ರೀತಿಯ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷಗಳ ಕಾಲ ಸಮಗ್ರ ಚರ್ಚೆ ನಡೆಸಿದ ಬಳಿಕ ಸಂವಿಧಾನ ಅಂಗೀಕರಿಸಲಾಗಿದೆ. ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆಗೆ ಆದ್ಯತೆ ನೀಡಿ ಸಂವಿಧಾನ ರಚನೆ ಮಾಡಲಾಗಿದೆ. ಇದನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅವರು ಹೇಳಿದರು. ವಿವಿಧ ಬಗೆಯ ಸಂವಿಧಾನಗಳು ವಿಶ್ವದಲ್ಲಿವೆ. ಆದರೆ, ನಮ್ಮದು ಲಿಖಿತ ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಅವರು ಕೊಟ್ಟರು. ಆದರೆ, ಮನುವಾದಿಗಳು ಸಂವಿಧಾನ ಡಾ.ಅಂಬೇಡ್ಕರ್ ಅವರು ರಚನೆ ಮಾಡಿಲ್ಲ ಎಂದು ವಾದಿಸುತ್ತಾರೆ. ಸತ್ಯಾಂಶ ಎಂದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು ಎಂದು ಅವರು ನುಡಿದರು. ಡಾ.ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣ ಸೇರಿದಂತೆ ಅನೇಕ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ ಎಂದು ಸಿದ್ದರಾಮಯ್ಯ ಉಲ್ಲೇಖ ಮಾಡಿದರು. ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ ಕೊನೆಯ ಭಾಷಣವನ್ನು ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು ಎಂದ ಅವರು, ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ಜತೆಗೆ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ಯಾವ ಧರ್ಮವೂ ಹೇಳುವುದಿಲ್ಲ ಎಂದರು. ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದು ಅವರು ಹೇಳಿದರು. ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ಜಾರಿಗೊಳಿಸಲಾಯಿತು. ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ಜಾರಿಗೊಳಿಸಿದೆ. ಹೀಗೆ, ಎಲ್ಲ ಭಾಗ್ಯಗಳ, ಯೋಜನೆಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದು ಅವರು ಪ್ರತಿಪಾದಿಸಿದರು. ಬಹುಮಾನ: ಇದೇ ಸಂದರ್ಭದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲನೆ ಬಹುಮಾನ 50 ಸಾವಿರ ರೂ., ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ.ಗಳನ್ನು ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೊದಲ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 50 ಸಾವಿರ ರೂ. ತೃತೀಯ ಬಹುಮಾನ 25 ಸಾವಿರ ರೂ.ಗಳ ನಗದು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ತೇಜಸ್ ಚಕ್ರವರ್ತಿ ಎಂಬ ಪುಟ್ಟ ಬಾಲಕ ಸಂವಿಧಾನದ ವಿಧಿಗಳನ್ನು ವಾಚಿಸಿದ್ದು ವಿಶೇಷವಾಗಿತ್ತು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾಎ.ಚ್.ಸಿ.ಮಹದೇವಪ್ಪ, ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎನ್.ಮಂಜುನಾಥ್, ಭೋವಿ ನಿಗಮದ ಅಧ್ಯಕ್ಷ ರಾಮಪ್ಪ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ, ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ರಂದೀಪ್ ಡಿ, ಆಯುಕ್ತ ಡಾ.ರಾಕೇಶ್ ಕುಮಾರ್ ಸೇರಿದಂತೆ ಪ್ರಮುಖರಿದ್ದರು.
ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನಾಚರಣೆ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದ ಸಿಬ್ಬಂದಿಗಳು ಬುಧವಾರ ನಗರದ ಹೊರವಲಯದ ಕೇಂದ್ರ ಕಾರಾಗೃಹದಲ್ಲಿ ಸಸಿ ನೆಡುವುದರ ಮೂಲಕ ಸಂವಿಧಾನ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಡಾ.ಅನಿತಾ ಆರ್ ಕಾರಾಗೃಹದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕ ಬಿ. ಸುರೇಶ್, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿಯಾದ ಭೀಮಾಶಂಕರ ಡಾಂಗೆ, ಜೈಲರ್ಗಳಾದ ಸುನಂದ ವಿ, ಪುಂಡಲಿಕ ಟಿ.ಕೆ, ಶ್ಯಾಮ ಬಿದ್ರಿ, ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಕಾರಾಗೃಹದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ | ಬೈಕ್ ಢಿಕ್ಕಿ : ಇಬ್ಬರಿಗೆ ಗಾಯ
ಕಲಬುರಗಿ: ರಸ್ತೆ ದಾಟುತ್ತಿದ್ದಾಗ ವೃದ್ಧನಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ರಿಂಗ್ ರಸ್ತೆಯ ಬಾಕೆರ್ ಸರ್ಕಲ್ ಬಳಿ ನಡೆದಿದೆ. ಬೈಕ್ ಸವಾರ ಇಮ್ತಿಯಾಝ್ ಉಲ್ಲಾ ಹಾಗೂ ಪಾದಚಾರಿ ಅಬ್ದುಲ್ ಖಾದಿರ್ ಗಾಯಗೊಂಡವರು. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ-2ರ ಪಿಎಸ್ಐ ಸುಮಂಗಲಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೀದರ್ | ಬೆಳೆ ಪರಿಹಾರ ಹಣ ಜಮೆಗೊಳಿಸಲು ರೈತರಿಂದ ಮನವಿ
ಬೀದರ್ : ಜಿಲ್ಲೆಯಲ್ಲಿ ಮುಂಗಾರಿನ ಹಂಗಾಮು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಬೆಳೆಹಾನಿ ಪರಿಹಾರ ಸಮರ್ಪಕ ವಿತರಣೆ ಆಗುತ್ತಿಲ್ಲ. ಬೆಳೆ ಪರಿಹಾರ ಹಣ ಸಮರ್ಪಕವಾಗಿ ಜಮೆಗೊಳಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಮಂಗಳವಾರ ಬಸವಕಲ್ಯಾಣದ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಹುಮನಾಬಾದ್, ಬಸವಕಲ್ಯಾಣ, ಹುಲಸೂರ ತಾಲೂಕಿನ ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮೆ ಆಗಿಲ್ಲ. ಈ ಬಗ್ಗೆ ಅನೇಕ ರೈತರು ತಿಳಿಸಿದ್ದು, ಜಿಲ್ಲಾಡಳಿತವು ಈ ಕುರಿತು ಮುತುವರ್ಜಿ ವಹಿಸಿ ಸಂತ್ರಸ್ತರ ಖಾತೆಗೆ ಪರಿಹಾರ ಹಣ ಜಮೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಮುಂಗಾರಿನ ಬೆಳೆ ರೈತರಿಗೆ ಸಂಪೂರ್ಣ ಕೈಕೊಟ್ಟ ಕಾರಣ ಕೇಂದ್ರ ಸರಕಾರದ ರಾಷ್ಟ್ರೀಯ ವಿಪತ್ತು ಪ್ರಕ್ರಿಯೆ ನಿಧಿ ಈಗಾಗಲೇ 8,500 ರೂ.ಗಳು ರಾಜ್ಯ ಸರಕಾರಕ್ಕೆ ಜಮಾವಣೆಗೊಂಡಿದ್ದು, ಅದರ ಜೊತೆಗೆ ರಾಜ್ಯ ವಿಪತ್ತು ಪ್ರಕ್ರಿಯೆ ನಿಧಿಯ ಹಣವಾದ 8,500 ರೂ. ಸೇರಿಸಿ ಕೊಡುತ್ತೇವೆಂದು ಹೇಳಿದ್ದರು. ಆದರೆ ಇಲ್ಲಿಯವರೆಗೆ ಜಮಾವಣೆಗೊಂಡಿಲ್ಲ. ಅತೀ ಶೀಘ್ರದಲ್ಲಿ ರೈತರ ಖಾತೆಗೆ ಹಣ ಜಮಾವಣೆ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ರೈತ ಮುಖಂಡ ವೀರಾರೆಡ್ಡಿ ಪಾಟೀಲ್, ಬೀದರ್ ಹಾಗೂ ಭಾಲ್ಕಿ ತಾಲೂಕಿನ ರೈತರಿಗೆ ಬೆಳೆ ಪರಿಹಾರದ ಹಣ ಜಮಾವಣೆಯಾಗಿದೆ ಎಂದು ಕೇಳಲ್ಪಟ್ಟಿದ್ದೇವೆ. ಆದರೆ ಬಸವಕಲ್ಯಾಣ ಹಾಗೂ ಹುಮನಾಬಾದ ತಾಲೂಕಿನ ರೈತರಿಗೆ ಇನ್ನು ಕೂಡ ನಯಾ ಪೈಸೆ ಕೂಡ ಬೆಳೆ ಪರಿಹಾರ ಹಣ ಜಮೆಯಾಗಲಿಲ್ಲ. ಎಲ್ಲ ರೈತರ ಖಾತೆಗೆ ಹಣ ಜಮೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದರು. ಆದರೆ, ನಮ್ಮ ತಾಲೂಕಿನ ರೈತರಿಗೆ ಇನ್ನು ಕೂಡ ಪರಿಹಾರ ಹಣ ಜಮೆಯಾಗಲಿಲ್ಲ. ಆದಷ್ಟು ಬೇಗ ಬೆಳೆ ಪರಿಹಾರ ಹಣ ಜಮೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸಂತೋಷಕುಮಾರ್ ಗುದಗೆ, ರುದ್ರಯ್ಯ ಸ್ವಾಮಿ, ಕಾಶೀನಾಥ್ ಬಿರಾದಾರ್, ಬಾಬು ಗೌರ್, ಹಣಮಂತ್ ಯಳವಂತಗಿ, ರಾಜಕುಮಾರ್ ಹೊಳ್ಳೆ ಹಾಗೂ ಕಲ್ಲಪ್ಪ ಗೌದೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೇಣಿ ಬಂದರು ವಿರೋಧಿ ಹೋರಾಟಕ್ಕೆ ಒಂದು ವರ್ಷ : ಅಂಕೋಲಾ ಸಂಪೂರ್ಣ ಬಂದ್, ಬೃಹತ್ ಪ್ರತಿಭಟನೆ
ಅಂಕೋಲಾ, ನ.25: ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಖಾಸಗಿ ಬಂದರು ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷವಾದ ಹಿನ್ನಲೆಯಲ್ಲಿ ಹೋರಾಟಗಾರರು ಮಂಗಳವಾರ ಅಂಕೋಲಾ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ 3,000ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು, ಬಂದ್ ಸಂಪೂರ್ಣ ಯಶಸ್ವಿಯಾಯಿತು. ಸಂಘಟಕ ಸಂಜೀವ ಬಲೇಗಾರ ಮಾತನಾಡಿ, ಒಂದು ವರ್ಷದಿಂದ ವಿವಿಧ ಹಂತದ ಪ್ರತಿಭಟನೆ ಮಾಡುತ್ತಾ ಬಂದಿದ್ದು, ತಹಶೀಲ್ದಾರ ಕಚೇರಿ ಎದುರು ಕಳೆದ 14 ದಿನಗಳಿಂದ ಧರಣಿ ಹಮ್ಮಿಕೊಂಡಿದ್ದೆವು. ಆದರೆ ಯಾವ ಜನ ಪ್ರತಿನಿಧಿಗಳು ನಮಗೆ ಬಂದು ಬೆಂಬಲ ಸೂಚಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಿವರಾಂ ಗಾಂವ್ಕರ ಮಾತನಾಡಿ, ಈಗಾಗಲೇ ಸಾಕಷ್ಟು ಯೋಜನೆಗಳು ಉತ್ತರ ಕನ್ನಡದ ಬಹು ಭಾಗವನ್ನು ಆವರಿಸಿಕೊಂಡಿದೆ. ಈಗ ಮತ್ತೆ ಖಾಸಗಿ ಬಂದರು ನಿರ್ಮಾಣಕ್ಕೆ ಮುಂದಾಗಿದ್ದು, ಯಾವುದೇ ಕಾರಣಕ್ಕೂ ನಿರ್ಮಿಸಲು ಬಿಡುವುದಿಲ್ಲ ಎಂದರು. ನಿವೃತ್ತ ಸಾಗರ ವಿಜ್ಞಾನಿ ಡಾ. ವಿ. ಎನ್. ನಾಯಕ ಮಾತನಾಡಿ, ಕೇಣಿ ಬಂದರು ನಿರ್ಮಾಣವಾದರೆ 105 ಹಳ್ಳಿಗಳು ಮಾತ್ರ ಸಮಸ್ಯೆಗೆ ಸಿಲುಕುವುದಲ್ಲ, ಪಶ್ಚಿಮ ಘಟ್ಟಗಳಿಗೂ ಹಾನಿಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಉ.ಕ. ಜಿಲ್ಲಾ ಹಾಲಕ್ಕಿ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತ ಬೊಮ್ಮು ಗೌಡ ಮಾತನಾಡಿ, ನಮ್ಮ ಸಮುದಾಯದ ಸಾಕಷ್ಟು ಫಲವತ್ತಾದ ಭೂಮಿಗಳು ಈ ಯೋಜನೆಗೆ ಭೂಸ್ವಾಧೀನವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ನಾವು ನಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು. ಪಪಂ ಮಾಜಿ ಅಧ್ಯಕ್ಷ ಅರುಣ ನಾಡಕರ್ಣಿ ಮಾತನಾಡಿ, ಒಂದು ವೇಳೆ ಯೋಜನೆ ಜಾರಿಗೊಂಡರೆ ಇಡೀ ಕರಾವಳಿ ಸೇರಿದಂತೆ ಅಂಕೋಲಾ ತಾಲೂಕು ಇನ್ನಿಲ್ಲವಾಗುತ್ತದೆ ಎಂದರು. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮಾತನಾಡಿ, ಚಳಿಗಾಲದ ಅಧಿವೇಶನ ಸದ್ಯದಲ್ಲಿಯೇ ನಡೆಯಲಿದೆ. ನಾನು ಮುಖ್ಯಮಂತ್ರಿಯವರ ಬಳಿ ನಿಯೋಗ ಕರೆದುಕೊಂಡು ಹೋಗುತ್ತೇನೆ. ಹಾಗೇ ಕಾರವಾರದಲ್ಲಿಯೂ ಬಂದ್ ಮಾಡಿ ಪ್ರತಿಭಟನೆ ಮಾಡಬೇಕು ಎಂದು ತಿಳಿಸಿದರು. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ : ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯ ತೀವ್ರತೆ ಹೆಚ್ಚುತ್ತಿದ್ದಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಹೋರಾಟಗಾರರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿಯವರು ಇದನ್ನು ಸರಕಾರಕ್ಕೆ ಕಳಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಶಿವಮೊಗ್ಗ ರೈತ ಸಂಘದ ಅಧ್ಯಕ್ಷ ದಿನೇಶ, ಕರವೇ ಅಧ್ಯಕ್ಷ ಭಾಸ್ಕರ ಪಟಗಾರ, ರಾಜು ಹರಿಕಂತ್ರ, ವಿಲಾಸ ನಾಯ್ಕ, ದಾಮೋದರ ಜಿ. ನಾಯ್ಕ, ಉದಯ ವಾಮನ ನಾಯ್ಕ, ಪ್ರಮೋದ ಬಾನಾವಳಿಕರ, ರಾಜೇಶ್ವರಿ ಕೇಣಿಕರ, ಮಾದೇವ ಗೌಡ, ರಮೇಶ ಎಸ್. ನಾಯ್ಕ, ಹೂವಾ ಖಂಡೇಕರ ಪಾಲ್ಗೊಂಡಿದ್ದರು. ಅಹವಾಲು ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯಗಳನ್ನು ವೀಡಿಯೊ ಚಿತ್ರಿಕರಣ ಹಾಗೂ ಲಿಖಿತವಾಗಿಯೂ ಬರೆದುಕೊಂಡಿದ್ದನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ಕೇಂದ್ರಕ್ಕೆ ಅವರು ಕಳುಹಿಸಿದ್ದು ಇದುವರೆಗೂ ಯಾವುದೇ ಉತ್ತರ ಬಂದಿಲ್ಲ. ಬಂದ ನಂತರ ತಿಳಿಸುತ್ತೇನೆ. -ಲಕ್ಷ್ಮೀಪ್ರೀಯಾ, ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಖ್ಯಾಂಶ : ► ಯಾವುದೇ ಕಾರಣಕ್ಕೂ ಸಮೀಕ್ಷೆ ನಡೆಸಬಾರದು. ► ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ. ► ಅಣಕು ಶವವಿಟ್ಟು ಪ್ರತಿಭಟನೆ. ► ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್
ಡಿಕೆಶಿಯನ್ನು ಭೇಟಿ ಮಾಡಿದ್ದು ನಿಜ, ಆದರೆ ನಾಯಕತ್ವ ಬದಲಾವಣೆ ಚರ್ಚೆ ಆಗಿಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ನಿಜ. ಆದರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ಕೇವಲ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗಳ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಭೇಟಿ ಕುರಿತಾಗಿ ನಡೆಯುತ್ತಿರುವ ಚರ್ಚೆಗಳ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದರು. ಮಂಗಳವಾರ ರಾತ್ರಿ ಸತೀಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.
ಮತಗಳ್ಳತನ ಮಾಡಿ ಸಿಕ್ಕಿಬಿದ್ದು ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾಗಾಂಧಿ: ಛಲವಾದಿ ನಾರಾಯಣಸ್ವಾಮಿ ಆರೋಪ
ರಾಜ್ಯದಲ್ಲಿ ದಲಿತರ, ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಏರಿಸಿದ್ದು ಬಿಜೆಪಿ. ಎಸ್ಟಿಗಳ ಮೀಸಲಾತಿ 3ರಿಂದ 7ಕ್ಕೆ ಹೆಚ್ಚಿಸಿದ್ದು ಬಿಜೆಪಿ. ಆದರೂ ನಮ್ಮನ್ನು ಮೀಸಲಾತಿ ವಿರೋಧಿಗಳು ಎನ್ನುತ್ತಾರೆ. ಸಂವಿಧಾನ ವಿರೋಧಿಗಳು ಎನ್ನುತ್ತಾರೆ. ಬಾಬಾಸಾಹೇಬರ ಪಂಚ ಕ್ಷೇತ್ರಗಳನ್ನು ರಾಷ್ಟ್ರೀಯ ಸ್ಮಾರಕ ಮಾಡಿದ್ದು ನರೇಂದ್ರ ಮೋದಿಜೀ ಅವರ ಬಿಜೆಪಿ ಸರಕಾರ ಎಂದರು. ಅಂಬೇಡ್ಕರರು ದೆಹಲಿ ನಿವಾಸದಲ್ಲಿ ತೀರಿಕೊಂಡಾಗ ಬಾಂಬೆಗೆ ಓಡಿಸಿದವರು ಕಾಂಗ್ರೆಸ್ಸಿನವರು. ಅನಾಥ ಶವದಂತೆ ಸಮುದ್ರ ತೀರದಲ್ಲಿ ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇದಕ್ಕೆ ಕಾಂಗ್ರೆಸ್ ಕಾರಣ. ಆದರೆ, ಬಿಜೆಪಿ ವಿರುದ್ಧ ಹೇಳುತ್ತಾರೆ ಎಂದು ಟೀಕಿಸಿದರು.
ಕೊಪ್ಪಳ | ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ : ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಆದೇಶ
ಕೊಪ್ಪಳ: ಗಂಗಾವತಿ ನಗರದಲ್ಲಿ ಡಿಸೆಂಬರ್ 3ರಂದು ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21 ರನ್ವಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ 10 ಕಿ.ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 2ರ ಸಂಜೆ 6 ಗಂಟೆಯಿಂದ ಡಿಸೆಂಬರ್ 3ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ. ಗಂಗಾವತಿ ನಗರದಲ್ಲಿ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಿಮಿತ್ತ ಪವಮಾನ ಹೋಮ ಹಾಗೂ ಮಾಲಾ ವಿಸರ್ಜನೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆ, ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸಾವಿರಾರು ಭಕ್ತರು ಪಾಲ್ಗೊಳ್ಳುವರು. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಲಾಗಿದೆ. ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ | ಧರ್ಮಸ್ಥಳ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂಧ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ವಿವರ : ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5:15 ರಿಂದ 6 ಗಂಟೆ ಸಮಯಕ್ಕೆ ಬ್ಯಾಗ್ ನಲ್ಲಿ 6,79,000 ರೂಪಾಯಿ ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಇಟ್ಟುಕೊಂಡು ಹೋಗಿದ್ದರು. ಬಳಿಕ ಉಡುಪಿ ಕಡೆ ಕೆಲಸದ ವಿಚಾರವಾಗಿ ಹೋಗುವಾಗ ಬ್ಯಾಗ್ ಒಳಗಡೆ ಇಟ್ಟಿದ ಚಿನ್ನಾಭರಣ ನೋಡಿದಾಗ ಯಾರೋ ಕಳ್ಳರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಉಡುಪಿಯಿಂದ ವಾಪಸ್ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ಮೇ.4 ರಂದು ಜೆ.ಲತಾ ಅವರು ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ಕಳೆದ ಐದು ತಿಂಗಳಿನಿಂದ ವಿವಿಧ ಅಯಾಮಗಳಲ್ಲಿ ತನಿಖೆ ಮಾಡುತ್ತಿರುವಾಗ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳಿಬ್ಬರು ವಿವಿಧ ಕಡೆ ಪ್ರಯಾಣ ಮಾಡಿಕೊಂಡು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುತ್ತಿದ್ದರು. ಕೊನೆಗೂ ಆರೋಪಿಗಳನ್ನು ನ.23 ರಂದು ಧರ್ಮಸ್ಥಳದ ದ್ವಾರದ ಬಳಿ ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ತಾಯಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಎಂಬುವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ನ.23 ರಂದು ಭಾನುವಾರ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನ.24 ರಂದು ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಐದು ದಿನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣ ಆರೋಪಿಗಳ ಹುಬ್ಬಳಿ ಮನೆಯಿಂದ ನ.25 ರಂದು ಮಂಗಳವಾರ ಧರ್ಮಸ್ಥಳ ಪೊಲೀಸರು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಇಬ್ಬರು ಕೂಡ ದೇವಾಲಯಗಳನ್ನು ಟಾರ್ಗೆಟ್ ಮಾಡಿ ಭಕ್ತಾಧಿಗಳ ಸೋಗಿನಲ್ಲಿ ಹೋಗಿ ಚಿನ್ನಾಭರಣ ಮತ್ತು ಹಣ ಕಳ್ಳತನ ಮಾಡುವ ಪ್ರವೃತ್ತಿ ಹೊಂದಿದ್ದಾರೆ ಎನ್ನಲಾಗಿದೆ. ಇಬ್ಬರು ಆರೋಪಿಗಳ ವಿಚಾರಣೆ ಹಾಗೂ ಮಹಜರು ಮುಗಿಸಿರುವ ಧರ್ಮಸ್ಥಳ ಪೊಲೀಸರು ನ.26 ರಂದು ಬುಧವಾರ ಸಂಜೆ 4:30 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ, ಸಿಬ್ಬಂದಿ ರಾಜೇಶ್, ಪ್ರಶಾಂತ್, ಚರಣ್ ರಾಜ್, ಸಂದೀಪ್, ಮಲ್ಲಿಕಾರ್ಜುನ್, ಶಶಿಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
E Khata: ಇ-ಖಾತಾ ಮಹತ್ವದ ಮಾಹಿತಿ ನೀಡಿದ ಆಯುಕ್ತರಾದ ಡಾ ರಾಜೇಂದ್ರ
ಬೆಂಗಳೂರು, ನವೆಂಬರ್26: ಬಾಕಿ ಉಳಿದಿರುವ ಎಲ್ಲಾ ಇ-ಖಾತಾ ಅರ್ಜಿಗಳನ್ನು ವಾರಾಂತ್ಯದೊಳಗೆ ವಿಲೇವಾರಿ ಮಾಡಲು ಆಯುಕ್ತರಾದ ಡಾ ರಾಜೇಂದ್ರ ಕೆ.ವಿ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ಅರ್ಜಿಯನ್ನು ಸೂಕ್ತ ಕಾರಣವಿಲ್ಲದೆ ತಿರಸ್ಕರಿಸುವಂತಿಲ್ಲ. ನಾಗರಿಕರಿಗೆ ಇ-ಖಾತಾ ಪಡೆಯುವಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ-1 ರ ಕಂದಾಯ ವಿಭಾಗಕ್ಕೆ ಸಂಬಂಧಿಸಿದಂತೆ
Aadhaar Card: ಆಧಾರ್ ಬಗೆಗಿನ 3 ಹೊಸ ನಿಯಮ, ಕೊನೆ ಘಳಿಗೆಯಲ್ಲಿ ಪರದಾಡಬೇಡಿ..!
Aadhaar Card update news: ಭಾರತದಲ್ಲಿ ಆಧಾರ್ ಕಾರ್ಡ್ ಬಹುತೇಕ ಎಲ್ಲ ವ್ಯವಹಾರಗಳಿಗೆ, ಪ್ರಮುಖ ಗುರುತಿನ ಚೀಟಿಯಾಗಿ ಪರಿಗಣಿಸಲಾಗಿದೆ. ಈ ಆಧಾರ್ ಕಾರ್ಡ್ ನವೀಕರಣ/ಅಪ್ಡೇಟ್ ಅನ್ನು ಮತ್ತಷ್ಟು ಸರಳಗೊಳಿಸಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಇದೇ ನವೆಂಬರ್ನಿಂದ ಮೂರು ಹೊಸ ನಿಯಮ ಜಾರಿಗೆ ತಂದಿದೆ. ಇದರಿಂದ ಸಾರ್ವಜನಿಕರು ತೊಂದರೆ ಇಲ್ಲದೇ, ಕಚೇರಿಗಳಿಗೆ ಅಲೆಯದೇ ಕೂತಲ್ಲಿಯೇ ಆಧಾರ
'HR88B8888' ನೋಂದಣಿ ಸಂಖ್ಯೆಗೆ ಕೋಟಿಗೂ ಮೀರಿ ಹಣ ಕೊಟ್ಟು ಖರೀದಿ! ಕೇರಳದ ದಾಖಲೆ ಮುರಿದ ಹರ್ಯಾಣ ವ್ಯಕ್ತಿ!
ಹರಿಯಾಣದ ರೋಡ್ಟ್ರಾನ್ನಲ್ಲಿ ನಡೆದ ರೋಚಕ ಆನ್ಲೈನ್ ಹರಾಜಿನಲ್ಲಿ, 'HR88B8888' ಎಂಬ ಅದೃಷ್ಟದ ನೋಂದಣಿ ಸಂಖ್ಯೆ ಬರೋಬ್ಬರಿ ₹1.17 ಕೋಟಿ ಬೆಲೆಗೆ ಮಾರಾಟವಾಗಿ, ಭಾರತೀಯ ದಾಖಲೆಗಳನ್ನು ಪುಡಿಗಟ್ಟಿದೆ! 45 ಮಂದಿ ಈ ವಿಶಿಷ್ಟ ಸಂಖ್ಯೆಗಾಗಿ ಪೈಪೋಟಿ ನಡೆಸಿದ್ದು, ಇದು ವಾಹನಗಳಿಗೆ ನೀಡುವ ಅಸಾಧಾರಣ ಗೌರವಕ್ಕೆ ಸಾಕ್ಷಿಯಾಗಿದೆ. ಈ ಹಿಂದೆ ಕೇರಳದ 'KL 07 DG 0007' ₹46 ಲಕ್ಷಕ್ಕೆ ಮಾರಾಟವಾಗಿತ್ತು, ಆದರೆ ಈಗ ಹರಿಯಾಣದ ಈ ಸಂಖ್ಯೆ ಎಲ್ಲರನ್ನೂ ಮೀರಿಸಿದೆ.
ಸರ್ಕಾರಿ ನೌಕರ ಎಂದು ಮಗಳ ಮದುವೆಯನ್ನು ವಿಜೃಂಭಣೆಯಿಂದ ಮಾಡಿಕೊಟ್ಟು, ಮಗಳ ಸುಖ ಜೀವನದ ಬಗ್ಗೆ ಕನಸುಕಂಡಿದ್ದ ಪೋಷಕರಿಗೆ ಅಘಾತವುಂಟಾಗಿದೆ. ಲಕ್ಷ ಲಕ್ಷ ವರದಕ್ಷಿಣೆ ಕೊಟ್ಟರೂ ಸಹ ಮದುವೆಯಾದ ಒಂದೇ ತಿಂಗಳಿಗೆ ಕಿರುಕುಳ ಕೊಟ್ಟು, ಬೇರೆ ಯುವತಿಯರ ಜೊತೆ ಸಲುಗೆ ಹೊಂದಿದ್ದ ಎಂದು ನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಡೆತ್ನೋಟ್ನಲ್ಲಿ ಪತಿಯ ಕುಟುಂಬದವರ ಹೆಸರನ್ನು ಉಲ್ಲೇಖಿಸಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಪೊಲೀಸರುಹುಡುಕಾಟ ನಡೆಸುತ್ತಿದ್ದಾರೆ.
ವಿಶಾಖಪಟ್ಟಣ | ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ: ಅಶೋಕ್ ಕುಮಾರ್, ವಿಕಾಸ್ ಕುಮಾರ್ಗೆ NIA ನ್ಯಾಯಾಲಯದಿಂದ ಶಿಕ್ಷೆ
ವಿಶಾಖಪಟ್ಟಣ: ನೌಕಾಪಡೆಯ ರಹಸ್ಯ ವಿವರಗಳನ್ನು ಪಾಕಿಸ್ತಾನದ ಏಜೆಂಟರುಗಳಿಗೆ ರವಾನಿಸುತ್ತಿದ್ದ ಬೇಹುಗಾರಿಕೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವೈಝಾಗ್ನಲ್ಲಿರುವ ವಿಶೇಷ ನ್ಯಾಯಾಲಯವು ಇಬ್ಬರು ಆರೋಪಿಗಳಾದ ಅಶೋಕ್ ಕುಮಾರ್ ಮತ್ತು ವಿಕಾಸ್ ಕುಮಾರ್ ಗೆ ಶಿಕ್ಷೆ ವಿಧಿಸಿದೆ. ರಾಜಸ್ಥಾನದ ಜುನ್ಜುನು ಜಿಲ್ಲೆಯ ಅಶೋಕ್ ಕುಮಾರ್ ಹಾಗೂ ಅಲ್ವಾರ್ ಜಿಲ್ಲೆಯ ವಿಕಾಸ್ ಕುಮಾರ್ ಗೆ UA(P) ಕಾಯ್ದೆ ಸೆಕ್ಷನ್ 18 ಮತ್ತು ಅಧಿಕೃತ ರಹಸ್ಯ ಕಾಯ್ದೆ ಸೆಕ್ಷನ್ 3 ಅಡಿಯಲ್ಲಿ ಐದು ವರ್ಷ ಹನ್ನೊಂದು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿದೆ. ತಲಾ 5,000 ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಅನ್ವಯವಾಗಲಿದೆ. ಈ ತೀರ್ಪಿನಿಂದ 15 ಮಂದಿಯ ಬಂಧತರ ಪೈಕಿ ಈಗಾಗಲೇ ಎಂಟು ಮಂದಿಗೆ ಶಿಕ್ಷೆ ಖಚಿತಗೊಂಡಿದೆ. ಡಿಸೆಂಬರ್ 2019ರಲ್ಲಿ ಅಶೋಕ್ ನನ್ನು ಮುಂಬೈಯಲ್ಲಿ ಮತ್ತು ವಿಕಾಸ್ ನನ್ನು ಕರ್ನಾಟಕದ ಕಾರವಾರದಲ್ಲಿ ಬಂಧಿಸಲಾಗಿತ್ತು. ನಂತರ NIA ಜೂನ್ 2020ರಲ್ಲಿ ಮೊದಲ ಚಾರ್ಜ್ಶೀಟ್ ಹಾಗೂ 2021ರ ಮಾರ್ಚ್ನಲ್ಲಿ ಪೂರಕ ಚಾರ್ಜ್ಶೀಟ್ ಸಲ್ಲಿಸಿತು. ಉಳಿದ ಆರೋಪಿಗಳ ವಿಚಾರಣೆಗಳು ಇನ್ನೂ ನ್ಯಾಯಾಲಯದಲ್ಲಿ ಸಾಗುತ್ತಿವೆ. ಭಾರತೀಯ ನೌಕಾಪಡೆಯ ಪ್ರಮುಖ ನೆಲೆಗಳ ವಿವರಗಳನ್ನು ವಿದೇಶಿ ಏಜೆಂಟ್ಗಳಿಗೆ ಸೋರಿಕೆ ಮಾಡುವ ದೊಡ್ಡ ಪಿತೂರಿ ಈ ಪ್ರಕರಣದಿಂದ ಬಹಿರಂಗವಾಗಿದೆ ಎಂದು ತನಿಖಾ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣವನ್ನು ಮೊದಲಿಗೆ ವಿಜಯವಾಡ ಕೌಂಟರ್ ಇಂಟೆಲಿಜೆನ್ಸ್ ಪೊಲೀಸ್ ದಾಖಲು ಮಾಡಿತ್ತು, ಬಳಿಕ 2019ರ ಡಿಸೆಂಬರ್ನಲ್ಲಿ ತನಿಖೆಯನ್ನು NIAಗೆ ಹಸ್ತಾಂತರಿಸಲಾಗಿತ್ತು.
Bengaluru | ನಂದಿನಿ ತುಪ್ಪ ಕಲಬೆರಕೆ ಪ್ರಕರಣ; ಆರೋಪಿ ದಂಪತಿ ಬಂಧನ
ಬೆಂಗಳೂರು : ತಮಿಳುನಾಡಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಸೂತ್ರಧಾರರು ಎಂಬುದು ಖಚಿತವಾಗಿದೆ. ಆರೋಪಿ ದಂಪತಿಗಳು ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕವನ್ನು ಸ್ಥಾಪಿಸಿದ್ದರು. ಈ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ, ನಕಲಿ ತುಪ್ಪ ತಯಾರಿಸಲು ಬಳಸುತ್ತಿದ್ದ ದೊಡ್ಡ ದೊಡ್ಡ ಹೈಟೆಕ್ ಮೆಷಿನರಿಗಳು ಮತ್ತು ಅತ್ಯಾಧುನಿಕ ಯಂತ್ರಗಳು ಪತ್ತೆಯಾಗಿವೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಈ ಯಂತ್ರಗಳನ್ನು ಬಳಸಿಕೊಂಡು ದಂಪತಿಗಳು ನಂದಿನಿ ಲೇಬಲ್ನ ನಕಲಿ ತುಪ್ಪಗಳನ್ನು ತಯಾರಿಸಿ, ರೀ-ಪ್ಯಾಕಿಂಗ್ ಮಾಡಿ ಬೆಂಗಳೂರಿನಲ್ಲಿದ್ದ ನಂದಿನಿ ಮಳಿಗೆಗಳಿಗೆ ಮಾರಾಟ ಮಾಡುತ್ತಿದ್ದರು. ದಾಳಿ ವೇಳೆ ಪೊಲೀಸರು ಮೆಷಿನರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ತಿಳಿದುಬಂದಿದೆ. ಸದ್ಯ, ಆರೋಪಿ ದಂಪತಿಗಳ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 60 ಲಕ್ಷ ರೂ. ಹಣವನ್ನು ತಡೆ ಹಿಡಿಯಲಾಗಿದೆ. ಅಲ್ಲದೆ, ನಕಲಿ ತುಪ್ಪದಲ್ಲಿ ಏನೆಲ್ಲಾ ಕಳಪೆ ವಸ್ತುಗಳನ್ನು ಮಿಶ್ರಣ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಲು, ವಶಪಡಿಸಿಕೊಂಡ ಮಾದರಿಗಳನ್ನು ಎಫ್ಎಸ್ಎಲ್ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಹಿನ್ನೆಲೆ: ನವೆಂಬರ್ 14ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ನಂದಿನಿ ತುಪ್ಪವನ್ನು ವಶಪಡಿಸಿಕೊಂಡಿದ್ದರು. ಈ ನಕಲಿ ಉತ್ಪನ್ನಗಳನ್ನು ಕೆಲ ನಂದಿನಿ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಆ ಸಮಯದಲ್ಲಿ ಪ್ರಕರಣ ದಾಖಲಿಸಿ, ವಿತರಣಾ ಜಾಲದಲ್ಲಿದ್ದ ವಿತರಕ ಮಹೇಂದ್ರ, ಆತನ ಮಗ ದೀಪಕ್ ಮತ್ತು ಮುನಿರಾಜು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿತ್ತು.
ಮಂಗಳೂರು | ಕೂರತ್ ತಂಙಳ್ ಸ್ಮರಣಾರ್ಥ ಆ್ಯಂಬುಲೆನ್ಸ್ ಲೋಕಾರ್ಪಣೆ
ಮಂಗಳೂರು, ನ.26: ದ.ಕ. ಜಿಲ್ಲಾ ಸಂಯುಕ್ತ ಖಾಝಿಯಾಗಿದ್ದ ಖುರ್ರತುಸ್ಸಾದಾತ್ ಸೈಯದ್ ಕೂರತ್ ತಂಙಳ್ ಅವರ ಸ್ಮರಣಾರ್ಥ ಎನರ್ಜಿಯಾ ಎಂಟಿಸಿ ಸೌದಿ ಅರೇಬಿಯಾ ಇದರ ಸಿಇಒ ಹಾಗೂ ಯುವ ಉದ್ಯಮಿ ಹಸನ್ ಶಾಹಿದ್ ಅವರ ಎನರ್ಜಿಯಾ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ತಾಜುಲ್ ಉಲಮಾ ಹೆಲ್ಪ್ವಿಂಗ್ ಖುರ್ರತುಸ್ಸಾದಾತ್ ಮೆಮೋರಿಯಲ್ ಫೌಂಡೇಶನ್ (ರಿ) ವತಿಯಿಂದ ನೂತನ ಆ್ಯಂಬುಲೆನ್ಸ್ ನ ಲೋಕಾರ್ಪಣೆ ಕಾರ್ಯಕ್ರಮವು ಬುಧವಾರ ನಗರದಲ್ಲಿ ನಡೆಯಿತು. ಸೈಯದ್ ಮಶ್ಊದ್ ಅಲ್ ಬುಖಾರಿ ಕೂರತ್ ಅಧ್ಯಕ್ಷತೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಯಾಗಿ ಎಸ್.ಎಂ.ರಶೀದ್ ಹಾಜಿ ಭಾಗವಹಿಸಿದ್ದರು. ಹೆಲ್ಪ್ವಿಂಗ್ ಅಧ್ಯಕ್ಷ ಖಾಲಿದ್ ಹಾಜಿ ಸ್ವಾಗತಿಸಿದರು.
ಮಂಗಳೂರು | ಬ್ಯಾರಿ ಅಕಾಡಮಿ ಚಮ್ಮನಕ್ಕೆ ಹತ್ತು ಮಂದಿ ಸಾಧಕರ ಆಯ್ಕೆ
ಮಂಗಳೂರು, ನ.26: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2022 ಮತ್ತು 2023 ನೇ ಸಾಲಿನ ಬ್ಯಾರಿ ಅಕಾಡಮಿ ಚಮ್ಮನ (ಗೌರವ ಪುರಸ್ಕಾರ)ಕ್ಕೆ ಹತ್ತು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅಬ್ದುಲ್ ಸಮದ್ ಬಾವಾ (ಬ್ಯಾರಿ ಸಾಹಿತ್ಯ), ಅನ್ಸಾರ್ ಇನೋಳಿ (ಬ್ಯಾರಿ ಭಾಷೆ), ರಶೀದ್ ನಂದಾವರ (ಬ್ಯಾರಿ ಕಲೆ, ಸಂಸ್ಕೃತಿ), ನಝ್ಮತ್ತುನ್ನೀಸಾ ಲೈಝ್ (ಬ್ಯಾರಿ ಸಾಹಿತ್ಯ), ಮುಹಮ್ಮದ್ ಅಲಿ ಬಡ್ಡೂರು (ಬ್ಯಾರಿ ಸಂಸ್ಕೃತಿ, ಕಲೆ), ಟಿ.ಎಂ. ಶಹೀದ್ ( ಬ್ಯಾರಿ ಭಾಷೆ- ಸಂಘಟನೆ), ಎಂ.ಪಿ.ಬಶೀರ್ ಅಹ್ಮದ್ (ಬ್ಯಾರಿ ಸಾಹಿತ್ಯ), ಯಾಸೀರ್ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ), ಮಲ್ಲಿಕಾ ಶೆಟ್ಟಿ ( ಬ್ಯಾರಿ ಕಲೆ, ಸಂಸ್ಕೃತಿ), ಸೈಫ್ ಕುತ್ತಾರ್ ( ಬ್ಯಾರಿ ಭಾಷೆ) ಆಯ್ಕೆಯಾಗಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬ್ಯಾರಿ ಅಕಾಡಮಿ ಚಮ್ಮನವು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಬ್ಯಾರಿ ಅಕಾಡಮಿ ಚಮ್ಮನ ಕಾರ್ಯಕ್ರಮವು ಡಿ.7ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

21 C