SENSEX
NIFTY
GOLD
USD/INR

Weather

18    C
... ...View News by News Source

Bihar | ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ: ಪಿಕಪ್ ವ್ಯಾನ್‌ನಿಂದ ಮೀನು ಹೊತ್ತೊಯ್ದ ದಾರಿಹೋಕರು!

ಪಾಟ್ನಾ: ಮೀನು ಸಾಗಾಟ ನಡೆಸುತ್ತಿದ್ದ ಪಿಕಪ್ ವ್ಯಾನ್‌ವೊಂದು ಢಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ರಸ್ತೆಯಲ್ಲೇ ಮೃತಪಟ್ಟಿದ್ದು, ಈ ವೇಳೆ ರಸ್ತೆಯಲ್ಲೇ ಮೃತದೇಹ ಬಿದ್ದಿದ್ದರೂ ಪಿಕಪ್ ವ್ಯಾನ್‌ನಲ್ಲಿದ್ದ ಮೀನುಗಳನ್ನು ದಾರಿಹೋಕರು ಹೊತ್ತೊಯ್ದ ಘಟನೆ ಪಾಟ್ನಾದ ಪುಪ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಝಾಝಿಹಾಟ್ ಗ್ರಾಮದಲ್ಲಿ ನಡೆದಿದೆ. 17 ವರ್ಷದ ರಿತೇಶ್ ಕುಮಾರ್ ಬೆಳಗ್ಗಿನ ಕೋಚಿಂಗ್ ತರಗತಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ವ್ಯಾನ್ ಒಂದು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಿತೇಶ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತ ಬಾಲಕನ ಕುಟುಂಬಸ್ಥರು ದುಃಖದ ಮಡುವಿನಲ್ಲಿ ಮುಳುಗಿದರೆ, ಅನತಿ ದೂರದಲ್ಲಿ ಇದಕ್ಕೆ ವ್ಯತಿರಿಕ್ತವಾದ ದೃಶ್ಯಗಳು ಕಂಡು ಬಂದಿವೆ. ಅಪಘಾತದ ವೇಳೆ ಪಿಕಪ್ ವ್ಯಾನ್‌ ನಿಂದ ಮೀನುಗಳು ರಸ್ತೆಯೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ವೇಳೆ ಗಾಯಗೊಂಡಿದ್ದ ವಿದ್ಯಾರ್ಥಿಗೆ ಸಹಾಯ ಮಾಡುವ, ಆ್ಯಂಬುಲೆನ್ಸ್ ಕರೆಸುವ ಅಥವಾ ಪೊಲೀಸರಿಗೆ ಮಾಹಿತಿ ನೀಡುವ ಬದಲು, ಸ್ಥಳದಲ್ಲಿ ನೆರೆದಿದ್ದವರು ಮೀನನ್ನು ಹೊತ್ತೊಯ್ಯಲು ಪ್ರಾರಂಭಿಸಿದ್ದಾರೆ. ರಿತೇಶ್ ಮೃತದೇಹವು ರಸ್ತೆಯ ಮೇಲೆ ಬಿದ್ದಿದ್ದರೂ, ದಾರಿಹೋಕರು ಮೀನುಗಳನ್ನು ಗೋಣಿಚೀಲಗಳಲ್ಲಿ ತುಂಬಿಕೊಂಡು ಸ್ಥಳದಿಂದ ಪರಾರಿಯಾಗುತ್ತಿರುವ ದೃಶ್ಯಗಳು ಕಂಡು ಬಂದಿವೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪುಪ್ರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಜನರನ್ನು ಸ್ಥಳದಿಂದ ಚದುರಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. “ಅಪಘಾತ ಸಂಭವಿಸಿದಾಗ ಸಂತ್ರಸ್ತ ಬಾಲಕನು ಕೋಚಿಂಗ್ ತರಗತಿಗೆ ಹಾಜರಾಗಲು ತೆರಳುತ್ತಿದ್ದ. ಅಪಘಾತದಲ್ಲಿ ಭಾಗಿಯಾದ ಪಿಕಪ್ ವ್ಯಾನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಸ್ಥಳದಿಂದ ಪರಾರಿಯಾಗುವಲ್ಲಿ ವ್ಯಾನ್ ಚಾಲಕ ಯಶಸ್ವಿಯಾಗಿದ್ದಾನೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಆತನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಪುಪ್ರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಮಶಂಕರ್ ಕುಮಾರ್ ತಿಳಿಸಿದ್ದಾರೆ. एक बार फ़िर इंसानियत हुई शर्मसार डे//ड बॉडी सामने सड़क पर पड़ी रही मछली उठाते रहे स्थानाय लोग दर असल पुपरी में सड़क हादसा हुआ बोलेरो पिकअप पर मछली लोड था धक्का लगने से साइकल सवार की मौत होगई लेकिन लोग मछली पकड़ते रहे pic.twitter.com/46pfAdDcDQ — Sitamarhi Times (@SitamarhiTimes) January 16, 2026

ವಾರ್ತಾ ಭಾರತಿ 17 Jan 2026 11:25 pm

ಕಲಬುರಗಿ | ಎಸಿಪಿ ಶಿವನಗೌಡ ಸೇರಿದಂತೆ 10 ಜನರಿಗೆ ಬೆಸ್ಟ್ ಪೊಲೀಸ್ ಪ್ರಶಸ್ತಿ

ಜ.20 ರಂದು ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾ ಭಾರತಿ 17 Jan 2026 11:20 pm

ಕಲಬುರಗಿ | ಜ.19 ರಂದು ಶಾಸಕ ಅವಿನಾಶ್ ಜಾಧವ್ ಕಚೇರಿ ಎದುರು ಧರಣಿ: ರಮಾಕಾಂತ್ ಕುಲಕರ್ಣಿ

ಕಲಬುರಗಿ: ರಾಜ್ಯ ಸಿಮೆಂಟ್ ಕಾರ್ಖಾನೆಗಳಲ್ಲಿ ಅರ್ಹ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜ.19 ರಂದು ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಅವರ ಚಿಂಚೋಳಿಯಲ್ಲಿರುವ ಶಾಸಕರ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ಹೋರಾಟಗಾರ ರಮಾಕಾಂತ್ ಕುಲಕರ್ಣಿ ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯಲ್ಲಿ 9 ಕಾರ್ಖಾನೆಗಳಿದ್ದು, ಇದರಲ್ಲಿ 8 ರಿಂದ 9 ಸಾವಿರ ಜನ ಗುತ್ತಿಗೆ ಆಧಾರದ ಅರ್ಹ ಕಾರ್ಮಿಕರು ಇದ್ದಾರೆ, ಆದರೆ ಅವರು ಸಮಾನ ಕೆಲಸಕ್ಕೆ ಸಮಾನ ವೇತನ ಪಡೆಯುತ್ತಿಲ್ಲ. ಜೊತೆಗೆ ಅವರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಅರ್ಹ ಕಾರ್ಮಿಕರ ಸರ್ವೇ ಮಾಡುವ ಮೂಲಕ ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು. 2024 ರ ಜು.9 ರಂದು ಕೇಂದ್ರ ಕಾರ್ಮಿಕ ಸಚಿವಾಲಯವು ಸಿಮೆಂಟ್ ಕಾರ್ಖಾನೆಗಳ ಗುತ್ತಿಗೆ ಆಧಾರದ ಕಾರ್ಮಿಕರಿಗೆ ಸಮಾನ ವೇತನ ಸೇರಿದಂತೆ ಇತರೆ ಸೌಲಭ್ಯಗಳು ಕುರಿತಾಗಿ ಕ್ರಮ ವಹಿಸುವಂತೆ ಬೆಂಗಳೂರಿನ ಕಾರ್ಮಿಕ ಇಲಾಖೆಗೆ ಸೂಚಿಸಿದೆ. ಆದರೂ ಇಲಾಖೆಯ ಅಧಿಕಾರಿಗಳು ಕಾರ್ಮಿಕರ ಸೌಲಭ್ಯಗಳನ್ನು ದೊರಕಿಸುವಲ್ಲಿ ಶ್ರಮಿಸುತ್ತಿಲ್ಲ. ಶಾಸಕರ ಕಚೇರಿ ಎದುರು ಪ್ರತಿಭಟಿಸಿ, ಮನವಿ ನೀಡಿ, ಅವರ ಮೂಲಕ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಲಾಗುತ್ತಿದೆ ಎಂದರು. ಸಾಮಾಜಿಕ ಕಾರ್ಯಕರ್ತ ಬಿ.ಎಂ ರಾವೂರ ಮಾತನಾಡಿ, ಕಲಬುರಗಿ ಭಾಗದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಎಲ್ಲೋ ಆಗಿರುವ ಘಟನೆಗಳಿಗೆ ಪ್ರತಿಕ್ರಿಯೆ ನೀಡುವ ರಾಜಕಾರಣಿಗಳು ತಮ್ಮದೇ ಜಿಲ್ಲೆಗಳ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಹಾಗೂ ಧ್ವನಿಯಾಗುವುದರಲ್ಲಿ ವಿಫಲರಾಗಿದ್ದಾರೆ. ಕಾರ್ಮಿಕರ ಕುರಿತು ಚುರುಕಿನ ಸಮೀಕ್ಷೆ ನಡೆಸಬೇಕು, ಅಂದಾಗ ಮಾತ್ರ ಕಾರ್ಮಿಕರ ನೈಜ ಅಂಶಗಳ ಸರ್ಕಾರಕ್ಕೆ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಎನ್.ಕೆ ಅರ್ಜುನ್, ಉಮೇಶ್ ಸಿಂಗ್ ಚೌಹಾಣ್, ಮತ್ತಿತರರು ಇದ್ದರು.

ವಾರ್ತಾ ಭಾರತಿ 17 Jan 2026 11:16 pm

ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ಜ.17: ಸರ್ಕಾರಿ ಕಚೇರಿಗಳಲ್ಲಿ ಕಡತಗಳ ತ್ವರಿತ ವಿಲೇವಾರಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಿಕೊಂಡ ಪರಿಣಾಮ ಇ-ಆಫೀಸ್‌ಬಳಕೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2025ನೇ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 2,938 ಇ-ಕಡತ ಸೃಷ್ಟಿಸಿ 54,381 ಕಡತ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರಿಂದ ಸ್ವೀಕೃತ 13,664 ಪತ್ರಗಳನ್ನು ಇ-ರಸೀದಿಯಡಿ ಸೃಷ್ಟಿಸಿ 3,52,221 ಇ-ರಸೀದಿ ವಿಲೇವಾರಿ ಮಾಡಲಾಗಿದೆ ಎಂದರು. ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಬೇಕು. ಸಾರ್ವಜನಿಕರು ತಮ್ಮ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಅನಗತ್ಯ ವರ್ಷಗಟ್ಟಲೆ ಅಲೆದಾಡುವುದನ್ನು ತಪ್ಪಿಸಲೆಂದು ಇ-ಆಫೀಸ್ ಅನುಷ್ಠಾನದ ಮೂಲಕ ಅಧಿಕಾರಿ-ಸಿಬ್ಬಂದಿಗೆ ಕಾಲಮಿತಿಲ್ಲಿಯೇ ಕಡತ ವಿಲೇವಾರಿ ಮಾಡಲು ನೀಡಿದ ಹೊಣೆಗಾರಿಕೆ ಫಲ ಇದಾಗಿದೆ ಎಂದರು. ಟಾಪ್ 10ನಲ್ಲಿ ಕಲ್ಯಾಣದ ನಾಲ್ಕು ಜಿಲ್ಲೆ : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಇ-ಕಡತ ಬಳಕೆಯಲ್ಲಿ ಟಾಪ್-10 ಜಿಲ್ಲೆಗಳಲ್ಲಿ ಡಿ ಕಲಬುರಗಿ ಮೊದಲನೇ ಸ್ಥಾನದಲ್ಲಿದೆ. 2,339 ಇ-ಕಡತ ಸೃಜಿಸಿ ಐದನೇ ಸ್ಥಾನದಲ್ಲಿ ಬೀದರ್, 1,955 ಇ-ಕಡತ ಸೃಜಿಸಿ ಎಂಟನೇ ಸ್ಥಾನದಲ್ಲಿ ಯಾದಗಿರಿ, 1,924 ಇ-ಕಡತ ಸೃಷ್ಟಿಸುವುದರೊಂದಿಗೆ ಒಂಬತ್ತನೇ ಸ್ಥಾನದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಇದೆ. ಗ್ರಾಮೀಣ ಭಾಗದಲ್ಲಿ ಆಡಳಿತ ವೇಗ ಪಡೆದುಕೊಂಡಿರುವುದಕ್ಕೆ ಇದು ಹಿಡಿದ ಕನ್ನಡಿಯಾಗಿದೆ. ಸುಗಮ ಅಡಳಿತಕ್ಕೆ ಕಲಬುರಗಿ ಜಿಲ್ಲೆ ಮಾದರಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗಮನ ಸೆಳೆದ ಆಳಂದ-ಅಫಜಲಪೂರ ತಾಲೂಕು ಪಂಚಾಯತ್ : ತಾಲೂಕು ಪಂಚಾಯತ್‌ವಾರು ಇ-ಆಫೀಸ್ ಬಳಕೆಯಲ್ಲಿಯೂ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಪಂಚಾಯತ್ 1,508 ಇ-ಕಡತ ಸೃಜಿಸಿ 3,089 ಇ-ಕಡತ ವಿಲೇವಾರಿ ಮಾಡಿ ಅಗ್ರ ಸ್ಥಾನ ಪಡೆದುಕೊಂಡರೆ, ಜಿಲ್ಲೆಯ ಆಳಂದ ತಾಲೂಕು ಪಂಚಾಯತ್ 1,127 ಇ-ಕಡತ ಸೃಜಿಸಿ 3,560 ಕಡತ ವಿಲೇವಾರಿ ಮತ್ತು 526 ಇ-ರಸೀದಿ ಸೃಷ್ಟಿಸಿ 2,022 ಇ-ರಸೀದಿ ವಿಲೇವಾರಿಯೊಂದಿಗೆ ರಾಜ್ಯದಲ್ಲಿಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಅದೇ ರೀತಿ ಅಫಜಲಪುರ ತಾಲೂಕು ಪಂಚಾಯತ್ 668 ಇ-ಕಡತ ಸೃಜಿಸಿ 3,189 ಕಡತ ವಿಲೇವಾರಿ ಮಾಡಿ ಏಳನೇ ಸ್ಥಾನ ಹಾಗೂ ಕಲಬುರಗಿ ತಾಲೂಕು ಪಂಚಾಯತ್ 564 ಇ-ಕಡತ ಸೃಜಿಸಿ 1,527 ಕಡತ ವಿಲೇವಾರಿ ಮಾಡಿ ಒಂಭತ್ತನೇ ಸ್ಥಾನ ಕಾಯ್ದುಕೊಂಡಿದೆ. ಈ ಮೂಲಕ ತಾಲೂಕಾವಾರು ಟಾಪ್ ಟೆನ್ ನಲ್ಲಿ ಕಲಬುರಗಿ ಜಿಲ್ಲೆಯ ಮೂರು ತಾಲೂಕುಗಳು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ.

ವಾರ್ತಾ ಭಾರತಿ 17 Jan 2026 11:10 pm

Indonesia | 11 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ನಾಪತ್ತೆ

ಜಕಾರ್ತಾ: ಶನಿವಾರ 11 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ರಾಂತೀಯ ಪ್ರಯಾಣಿಕರ ವಿಮಾನವೊಂದು ಗುಡ್ಡಗಾಡು ಪ್ರದೇಶವಾದ ದಕ್ಷಿಣ ಸುಲವೇಸಿಯನ್ನು ಸಮೀಪಿಸುವ ವೇಳೆ ವಾಯು ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಳೆದುಕೊಂಡಿದೆ. ವಿಮಾನದ ಪತ್ತೆಗಾಗಿ ವ್ಯಾಪಕ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ ಎಂದು ಇಂಡೋನೇಶ್ಯಾ ಪ್ರಾಧಿಕಾರಗಳು ತಿಳಿಸಿವೆ. ಇಂಡೋನೇಶ್ಯಾ ಏರ್ ಟ್ರಾನ್ಸ್‌ಪೋರ್ಟ್ ಕಾರ್ಯಾಚರಿಸುತ್ತಿದ್ದ ಟರ್ಬೊಪ್ರಾಪ್ ಎಟಿಆರ್ 42-500 ವಿಮಾನವು ಯೋಗ್ಯಕರ್ತದಿಂದ ದಕ್ಷಿಣ ಸುಲವೇಸಿಯ ರಾಜಧಾನಿಯತ್ತ ಪ್ರಯಾಣಿಸುತ್ತಿದ್ದಾಗ ರಡಾರ್ ಸಂಪರ್ಕ ಕಡಿದುಕೊಂಡಿತು ಎಂದು ಸಾರಿಗೆ ಸಚಿವಾಲಯದ ವಕ್ತಾರೆ ಎಂಡಾಹ್ ಪುರ್ನಾಮ ಸಾರಿ ತಿಳಿಸಿದ್ದಾರೆ. ಮಧ್ಯಾಹ್ನ 1.17ರ ವೇಳೆಗೆ ಈ ವಿಮಾನವು ಬುಲುಸರೌಂಗ್ ರಾಷ್ಟ್ರೀಯ ಉದ್ಯಾನವನದ ಸಮೀಪದ ಗುಡ್ಡಗಾಡು ಪ್ರದೇಶವಾದ ಮಾರೋಸ್ ಜಿಲ್ಲೆಯ ಲಿಯಾಂಗ್-ಲಿಯಾಂಗ್ ಪ್ರದೇಶದ ಮೇಲೆ ಕೊನೆಯದಾಗಿ ಕಾಣಿಸಿಕೊಂಡಿತ್ತು ಎಂದು ಅವರು ಹೇಳಿದ್ದಾರೆ. “ವಾಯುಪಡೆ ಹೆಲಿಕಾಪ್ಟರ್‌ಗಳು, ಡ್ರೋನ್‌ಗಳು ಹಾಗೂ ಭೂಪಡೆಗಳ ನೆರವಿನಿಂದ ವಿವಿಧ ಶೋಧ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ತನ್ನ ದಿಕ್ಕಿನ ಗುರಿಯನ್ನು ಸರಿಪಡಿಸುವಂತೆ ವಾಯು ನಿಯಂತ್ರಣ ಕೊಠಡಿಗೆ ಕೊನೆಯ ನಿರ್ದೇಶನಗಳನ್ನು ನೀಡಿದ ಬಳಿಕ ವಿಮಾನದ ರೇಡಿಯೊ ಸಂಪರ್ಕ ಕಡಿದುಹೋಯಿತು. ಈ ಹಿನ್ನೆಲೆಯಲ್ಲಿ ವಾಯು ನಿಯಂತ್ರಕರು ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 10:59 pm

Iran: ಇರಾನ್ ಪ್ರತಿಭಟನೆಗಳಿಗೆ ಇಸ್ರೇಲ್ ಮತ್ತು ಅಮೆರಿಕ ಕಾರಣ ಎಂದು ಆರೋಪಿಸಿದ ಖಮೇನಿ

ಇರಾನ್ ಮತ್ತು ಅಮೆರಿಕ ನಡುವೆ ಜಟಾಪಟಿ ಜೋರಾಗಿದೆ, ಇದರ ಜೊತೆಗೆ ಇಸ್ರೇಲ್ ವಿರುದ್ಧ ಕೂಡ ಇರಾನ್ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ಸಜ್ಜಾದಂತೆ ಕಾಣುತ್ತಿದೆ. ಇದರ ಮೊದಲ ಭಾಗ ಎನ್ನುವಂತೆ ಇರಾನ್ ನೆಲದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಇಸ್ರೇಲ್ &ಅಮೆರಿಕ ಕಾರಣ ಎಂದು ಇರಾನ್ ಸರ್ವಾಧಿಕಾರಿ ಖಮೇನಿ ಆರೋಪ ಮಾಡಿರುವುದು ಕಿಚ್ಚು ಹೊತ್ತಿಸಿದೆ. ಈಗಾಗಲೇ ಇರಾನ್‌ನ ಹಿಂಸಾಚಾರ

ಒನ್ ಇ೦ಡಿಯ 17 Jan 2026 10:57 pm

ಬೀದರ್ | ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಶತಾಯುಷಿ ಹಾಗೂ ಹಿರಿಯ ಮುತ್ಸದ್ದಿ ರಾಜಕಾರಣಿ ಡಾ.ಭೀಮಣ್ಣ ಖಂಡ್ರೆ (102) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾಲ್ಕಿಯ ಶಾಂತಿ ಧಾಮದಲ್ಲಿ ಶನಿವಾರ ನೆರವೇರಿಸಲಾಯಿತು. ಲಿಂಗಾಯತ ಧರ್ಮದ ವಿಧಿವಿಧಾನಗಳಂತೆ ಚಿಕಲಚಂದಾ ರಸ್ತೆಯಲ್ಲಿರುವ ಅವರ ಪತ್ನಿ ಲಕ್ಷ್ಮಿಬಾಯಿ ಅವರ ಸಮಾಧಿ ಸ್ಥಳದ ಸನಿಹದಲ್ಲೇ ಅಂತ್ಯ ಸಂಸ್ಕಾರ ನಡೆಸಲಾಯಿತು. ಶನಿವಾರ ಬೆಳಿಗ್ಗೆಯಿಂದಲೇ ಭಾಲ್ಕಿಯ ಅವರ ಸ್ವಗೃಹದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಜಿಲ್ಲೆ ಹಾಗೂ ನೆರೆಯ ರಾಜ್ಯಗಳಿಂದ ಆಗಮಿಸಿದ್ದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ತಮ್ಮ ಪ್ರೀತಿಯ ನಾಯಕನ ಕೊನೆಯ ದರ್ಶನ ಪಡೆದರು. ಸಂಜೆ 4 ಗಂಟೆಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಅಂತಿಮ ಯಾತ್ರೆ ಆರಂಭಿಸಲಾಯಿತು. ಡಾ. ಭೀಮಣ್ಣ ಖಂಡ್ರೆ ಅವರ ಮೃತದೇಹವನ್ನು ನಗರದ ಪ್ರಮುಖ ರಸ್ತೆಗಳು, ಬಸವೇಶ್ವರ ವೃತ್ತ, ಗಾಂಧಿ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಶಾಂತಿ ಧಾಮದವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಅಭಿಮಾನಿಗಳು ನೆಚ್ಚಿನ ನಾಯಕನ ಪರವಾಗಿ ಜೈ ಘೋಷಗಳನ್ನು ಕೂಗಿದರು. ಶಾಂತಿ ಧಾಮಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆಯೇ ಪೊಲೀಸರು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ವೈ. ವಿಜಯೇಂದ್ರ, ಸಚಿವರಾದ ರಹೀಮ್ ಖಾನ್, ಶರಣಬಸಪ್ಪ ದರ್ಶನಾಪುರ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ನೂರಾರು ಮಠಾಧೀಶರು ಹಾಗೂ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ನಾಡಿನ ಹಿರಿಯ ನಾಯಕರು, ಹೈದರಾಬಾದ್‌ ಕರ್ನಾಟಕ ವಿಮೋಚನೆ ಹೋರಾಟಗಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅಗಲಿದ ಹಿರಿಯ ಜೀವಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ -ಆರ್.ಅಶೋಕ್, ಪ್ರತಿಪಕ್ಷ ನಾಯಕ ರಾಜಕಾರಣಿ ಭೀಮಣ್ಣ ಖಂಡ್ರೆ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ರಾಜಕಾರಣಿಗಳು ಸರಳವಾಗಿರಬೇಕು. ಸರಳತೆಯೇ ರಾಜಕಾರಣಿಗಳ ಕೈ ಹಿಡಿಯುತ್ತೆ ಎಂದು ಅವರು ಹೇಳಿದ್ದರು. ಅವರಿಂದ ನಾನು ಸರಳತೆ ಕಲಿತಿದ್ದೇನೆ. ಭೀಮಣ್ಣ ಖಂಡ್ರೆ ಅವರ ದಾರಿಯಲ್ಲೇ ನಾವೆಲ್ಲ ನಡೆಯುತ್ತಿದ್ದೇವೆ. -ಪ್ರಿಯಾಂಕ್ ಖರ್ಗೆ, ಸಚಿವ ಹಿರಿಯ ನಾಯಕ ಭೀಮಣ್ಣ ಖಂಡ್ರೆ ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ನಮ್ಮ ತಂದೆ ಹಾಗು ಭೀಮಣ್ಣ ಖಂಡ್ರೆ ಬಹಳ ಆತ್ಮೀಯ ಸ್ನೇಹಿತರು. ಹಿರಿಯ ಜೀವಿಯನ್ನ ಕಳೆದುಕೊಂಡು ನಾವೆಲ್ಲ ಬಡವಾಗಿದ್ದೇವೆ. -ಎಂ.ಬಿ.ಪಾಟೀಲ್, ಸಚಿವ ಲೋಕನಾಯಕ ಭೀಮಣ್ಣ ಖಂಡ್ರೆ ನಿಧನದಿಂದ ರಾಜ್ಯ ಒಬ್ಬ ಸಮಾಜಮುಖಿ ಮಾರ್ಗದರ್ಶಕ ನೇತಾರರನ್ನು ಕಳೆದುಕೊಂಡಿದೆ. ರಾಜಕೀಯ ರಂಗದ ಒಂದು ಸುದೀರ್ಘ ಕೊಂಡಿ ಕಳಚಿದಂತಾಗಿದೆ. ಉತ್ತರ ಕರ್ನಾಟಕದ ಶೈಕ್ಷಣಿಕ ಮತ್ತು ಸಹಕಾರ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದರು. -ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ              

ವಾರ್ತಾ ಭಾರತಿ 17 Jan 2026 10:50 pm

ಉರಿಯೂತ ವಿರೋಧಿ ಆಹಾರ ಕ್ರಮದಿಂದ 18 ಕೆಜಿ ತೂಕ ಇಳಿಸಿದ ನಟ ಆಮೀರ್ ಖಾನ್!

ಉರಿಯೂತ ವಿರೋಧಿ ಆಹಾರವೆಂದರೆ ನಿರ್ದಿಷ್ಟ ಆಹಾರವನ್ನು ಸೇವಿಸುವುದಲ್ಲ. ಬದಲಾಗಿ ಉರಿಯೂತ ತರುವಂತಹ ಅಲ್ಟ್ರಾ ಸಂಸ್ಕರಿತ ಆಹಾರಗಳನ್ನು ಸೇವಿಸದೆ ಇರುವುದು. ಅಮೀರ್ ಖಾನ್ ತೂಕ ಇಳಿಸಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, 18 ಕಿಲೋಗ್ರಾಂ ತೂಕ ಇಳಿಸಿದ್ದಾಗಿ ಹೇಳಿದ್ದಾರೆ. ಅವರ ಉರಿಯೂತ ವಿರೋಧಿ (anti-inflammatory) ಆಹಾರ ಕ್ರಮವೇ ತೂಕ ಇಳಿಕೆಗೆ ಮುಖ್ಯ ಕಾರಣವಾಗಿದೆ. ಪದೇಪದೇ ಬರುವ ತಲೆನೋವಿಗೆ ಪರಿಹಾರವಾಗಿ ಈ ಆಹಾರ ಕ್ರಮವನ್ನು ಅವರು ಅಳವಡಿಸಿಕೊಂಡಿದ್ದರು. ಈ ಆಹಾರ ಕ್ರಮದಿಂದ ತಲೆನೋವಿನ ಸಮಸ್ಯೆಯೂ ಪರಿಹಾರವಾಗಿದೆ ಮತ್ತು ಅನಗತ್ಯ ತೂಕವೂ ಇಳಿದಿದೆ. ಏನಿದು ಉರಿಯೂತ ವಿರೋಧಿ ಆಹಾರ ಕ್ರಮ? ಉರಿಯೂತ ವಿರೋಧಿ ಆಹಾರವೆಂದರೆ ನಿರ್ದಿಷ್ಟ ಆಹಾರವನ್ನು ಸೇವಿಸುವುದಲ್ಲ. ಬದಲಾಗಿ ಉರಿಯೂತ ಉಂಟುಮಾಡುವ ಅಲ್ಟ್ರಾ ಸಂಸ್ಕರಿತ ಆಹಾರಗಳನ್ನು ಸೇವಿಸದೆ ಇರುವುದು. ಅಂದರೆ ಪ್ಯಾಕೆಟ್ ಆಗಿ ಬರುವ ಬ್ರೆಡ್‌, ಸೆರೆಲ್ ಮತ್ತು ಪಾಸ್ತಾಗಳಂತಹ ವಸ್ತುಗಳನ್ನು ತೊರೆಯುವುದು. ಮುಖ್ಯವಾಗಿ ಸ್ವೀಟ್ನರ್‌ಗಳು (ಸಕ್ಕರೆ ಅಂಶ) ಸೇರಿಸಿರುವ ಯಾವುದೇ ಆಹಾರವನ್ನು ಬಿಟ್ಟುಬಿಡಬೇಕು ಎಂದು ಹಾರ್ವರ್ಡ್ ಆರೋಗ್ಯ ಅಧ್ಯಯನ ಹೇಳುತ್ತದೆ. ಉರಿಯೂತ ವಿರೋಧಿ ಆಹಾರ ಕ್ರಮ ಹೇಗೆ ಕೆಲಸ ಮಾಡುತ್ತದೆ? ತಜ್ಞರ ಪ್ರಕಾರ, ಉರಿಯೂತ ವಿರೋಧಿ ಆಹಾರ ಕ್ರಮ ದೇಹದಲ್ಲಿರುವ ದೀರ್ಘಕಾಲದ ಉರಿಯೂತವನ್ನು ಶಮನಗೊಳಿಸುತ್ತದೆ. ಇದರಲ್ಲಿ ಹಣ್ಣುಗಳು ಮತ್ತು ತರಕಾರಿಗಳು, ಇಡೀ ಧಾನ್ಯಗಳು, ಲೀನ್ ಪ್ರೊಟೀನ್‌ (ಕಡಿಮೆ ಕೊಬ್ಬುಳ್ಳ ಆಹಾರಗಳು) ಹಾಗೂ ಆರೋಗ್ಯಕರ ಕೊಬ್ಬುಗಳು (ಒಮೆಗಾ–3) ಸೇರಿರುತ್ತವೆ. ಸಂಸ್ಕರಿತ ಆಹಾರಗಳು, ಸಕ್ಕರೆ, ರಿಫೈನ್ಡ್ ಕೊಬ್ಬುಗಳು ಮತ್ತು ಅನಾರೋಗ್ಯಕರ ಕೊಬ್ಬುಗಳನ್ನು ಇದರಲ್ಲಿ ಸೇವಿಸುವಂತಿಲ್ಲ. ಸಂಧಿವಾತ ಹಾಗೂ ಹೃದಯ ರೋಗಗಳ ನಿಯಂತ್ರಣಕ್ಕೆ ಅನುಸರಿಸುವ ಮೆಡಿಟರೇನಿಯನ್ ಆಹಾರ ಕ್ರಮದಂತೆಯೇ ಇದು ಇರುತ್ತದೆ. ಉರಿಯೂತ ವಿರೋಧಿ ಆಹಾರ ಕ್ರಮ ಮತ್ತು ತೂಕ ಇಳಿಕೆ ಉರಿಯೂತದಿಂದ ಚಯಾಪಚಯ ಕ್ರಿಯೆ ಕುಂಠಿತವಾಗಬಹುದು. ಇದರಿಂದ ಮುಖ್ಯವಾಗಿ ಹೊಟ್ಟೆ ಸುತ್ತಲೂ ಕೊಬ್ಬು ಸಂಗ್ರಹವಾಗುತ್ತದೆ. ಉರಿಯೂತ ಕಡಿಮೆಯಾದಾಗ ಇನ್‌ಸುಲಿನ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ದೇಹದಲ್ಲಿನ ಕೊಬ್ಬು ಪರಿಣಾಮಕಾರಿಯಾಗಿ ಕರಗುತ್ತದೆ. ಆಹಾರದಲ್ಲಿ ಪೌಷ್ಠಿಕಾಂಶಗಳು ಸಮೃದ್ಧವಾಗಿರುವುದರಿಂದ ಅತಿಯಾಗಿ ತಿನ್ನುವ ಅಗತ್ಯವಿರುವುದಿಲ್ಲ. ನಿರಂತರವಾಗಿ ಆಹಾರ ಕ್ರಮವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಕಾಲಕ್ರಮೇಣ ಉತ್ತಮ ಫಲಿತಾಂಶ ದೊರೆಯುತ್ತದೆ. ಮೈಗ್ರೇನ್ ಕಡಿಮೆ ಮಾಡಲು ಹೇಗೆ ಸಹಕಾರಿಯಾಗುತ್ತದೆ? ಮೈಗ್ರೇನ್ ನೋವಿಗೆ ಸಾಮಾನ್ಯ ಪ್ರಚೋದಕವಾಗಿರುವ ದೇಹ ಮತ್ತು ಮೆದುಳಿನ ಉರಿಯೂತವನ್ನು ಈ ಆಹಾರ ಕ್ರಮ ಶಮನಗೊಳಿಸುತ್ತದೆ. ಒಮೆಗಾ–3 ಕೊಬ್ಬುಗಳು (ವಾಲ್‌ನಟ್‌, ಫ್ಲ್ಯಾಕ್ಸ್‌, ಮೀನು) ಮತ್ತು ಆಂಟಿ ಆಕ್ಸಿಡೆಂಟ್‌ಗಳು ಸಿಜಿಆರ್‌ಪಿ (Calcitonin Gene-Related Peptide) ಮತ್ತು ನರಮಂಡಲದ ಉರಿಯೂತವನ್ನು ಕಡಿಮೆಗೊಳಿಸುತ್ತವೆ. ಉರಿಯೂತ ವಿರೋಧಿ ಆಹಾರ ಕ್ರಮದಲ್ಲಿ ಪ್ರೊಟೀನ್‌, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳ ಪ್ರಮಾಣ ಹೆಚ್ಚಿರುತ್ತದೆ. ಇದು ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ಸ್ಥಿರವಾಗಿಡುತ್ತದೆ ಮತ್ತು ಮೈಗ್ರೇನ್ ಹೆಚ್ಚಾಗುವುದನ್ನು ತಡೆಯುತ್ತದೆ. ಉರಿಯೂತ ವಿರೋಧಿ ಆಹಾರ ಕರುಳಿಗೆ ಹೇಗೆ ಸಹಕಾರಿ? ಹಣ್ಣುಗಳು, ತರಕಾರಿಗಳು, ಕಡಲೆಗಳು, ಬೀಜಗಳು, ಇಡೀ ಧಾನ್ಯಗಳು ಮತ್ತು ಕೊಬ್ಬುಳ್ಳ ಮೀನುಗಳು ಉರಿಯೂತ ಕಡಿಮೆ ಮಾಡುವ ಆಂಟಿ ಆಕ್ಸಿಡೆಂಟ್‌ಗಳು ಹಾಗೂ ಒಮೆಗಾ–3 ಕೊಬ್ಬುಗಳನ್ನು ಒದಗಿಸುತ್ತವೆ. ಇವು ಉರಿಯೂತವನ್ನು ಕಡಿಮೆ ಮಾಡಿ ಆರೋಗ್ಯಕರ ರಕ್ತನಾಳಗಳಿಗೆ ಬೆಂಬಲ ನೀಡುತ್ತವೆ. ಇದರ ಪರಿಣಾಮವಾಗಿ ಮೆದುಳಿಗೆ ರಕ್ತ ಹರಿವಿನಲ್ಲಿ ಸುಧಾರಣೆ ಕಂಡುಬರುತ್ತದೆ ಮತ್ತು ನರದ ಉರಿ ಕಡಿಮೆಯಾಗುತ್ತದೆ. ಸಂಸ್ಕರಿತ ಆಹಾರ, ಸಕ್ಕರೆ, ಕರಿದ ವಸ್ತುಗಳು, ಮದ್ಯಪಾನ ಹಾಗೂ ಕೃತಕ ಅಡಿಟಿವ್‌ಗಳ ಸೇವನೆಯನ್ನು ಕಡಿಮೆ ಮಾಡಿದರೆ ಉರಿಯೂತ ಶಮನಗೊಳ್ಳುತ್ತದೆ. ಸಾಕಷ್ಟು ನೀರು ಕುಡಿಯುವುದು ಮತ್ತು ನಿಯಮಿತವಾಗಿ ಸಮತೋಲಿತ ಆಹಾರ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಸ್ಥಿರವಾಗಿರುತ್ತದೆ. ಇದರಿಂದ ಮೈಗ್ರೇನ್ ಶಮನಕ್ಕೆ ಸಹಕಾರಿಯಾಗುತ್ತದೆ. ಉರಿಯೂತ ವಿರೋಧಿ ಆಹಾರ ಕ್ರಮ ಯಾವುದೇ ಆಹಾರ ಕ್ರಮವನ್ನು ಆರೋಗ್ಯ ತಜ್ಞರ ಸಲಹೆಯೊಂದಿಗೆ ಆರಂಭಿಸುವುದು ಸೂಕ್ತ. ಇಲ್ಲಿ ಕೆಲವು ಉರಿಯೂತ ವಿರೋಧಿ ಆಹಾರದ ವಿವರಗಳಿವೆ.

ವಾರ್ತಾ ಭಾರತಿ 17 Jan 2026 10:48 pm

ಭಟ್ಕಳ: ಎಸ್‌ಐಆರ್ ಮತ್ತು ಮತದಾರ ನಕ್ಷೆಕರಣ ಕುರಿತು ಜಾಗೃತಿ ಸಮ್ಮೇಳನ

ಭಟ್ಕಳ: ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ವತಿಯಿಂದ ನವಾಯತ್ ಕಾಲನಿಯಲ್ಲಿ ಎಸ್‌ಐಆರ್ (Special Intensive Revision) ಹಾಗೂ ಮತದಾರ ನಕ್ಷೆಕರಣ ಕುರಿತ ಜಾಗೃತಿ ಸಮ್ಮೇಳನ ಆಯೋಜಿಸಲಾಯಿತು. ಈ ಸಂದರ್ಭ ದಾಖಲೆ ಸಂಗ್ರಹ, ಪರಿಶೀಲನಾ ಪ್ರಕ್ರಿಯೆಗಳಿಗೆ ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ, ತಂಝೀಮ್ ಮೇಲ್ವಿಚಾರಣೆಯಡಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಕಟಿಸಲಾಯಿತು. ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಮುಬಾಶಿರ್ ಹುಸೇನ್ ಹಲ್ಲಾರೆ, ಮುರ್ಡೇಶ್ವರ ಮತ್ತು ಮಾಂಕಿ ಸೇರಿದಂತೆ ವಿವಿಧ ಕ್ರೀಡಾ ಕೇಂದ್ರಗಳ ಸಂಯೋಜಕರು ಹಾಗೂ ಭಾಗವಹಿಸಿದ್ದವ ರಿಗೆ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು. ನೋಟು ಅಮಾನ್ಯೀಕರಣ, ಸಿಎಎ–ಎನ್‌ಆರ್‌ಸಿ ಹಾಗೂ ಸಮಾನ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಗಳ ನಂತರ ಇದೀಗ ಎಸ್‌ಐಆರ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಅಳಿಸುವ ಪ್ರಯತ್ನಗಳು ನಡೆಯುತ್ತಿರುವ ಕುರಿತು ಅವರು ಎಚ್ಚರಿಸಿದರು. ಯುವ ನಾಗರಿಕರು ತಮ್ಮ ದಾಖಲೆಗಳನ್ನು ಸರಿಯಾಗಿ ಸಿದ್ಧಪಡಿಸಿಕೊಂಡು, ತಕ್ಷಣವೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿನ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಎಸ್‌ಐಆರ್ ಪರಿಶೀಲನೆಗೆ ಪ್ರಸ್ತುತ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳನ್ನು ಮಾನ್ಯ ದಾಖಲೆಗಳಾಗಿ ಪರಿಗಣಿಸಲಾಗುವುದಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದರು. ಇದೇ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಮುರ್ಡೇಶ್ವರ ಮತ್ತು ಮಾಂಕಿಯಲ್ಲೂ ಆಯೋಜಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ವಕೀಲ ಹಾಗೂ ಫೆಡರೇಶನ್ ಉಪಾಧ್ಯಕ್ಷ ಇಮ್ರಾನ್ ಲಂಕಾ, ಎಸ್‌ಐಆರ್‌ನ ಕಾನೂನಾತ್ಮಕ ಅಂಶಗಳು, ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ಮತದಾರ ಪರಿಶೀಲನೆ ವೇಳೆ ಎದುರಾಗುವ ಸಾಮಾನ್ಯ ಸಮಸ್ಯೆಗಳ ಕುರಿತು ವಿವರಿಸಿದರು. ಸಮಯಕ್ಕೆ ಸರಿಯಾಗಿ ದಾಖಲೆ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ನಿಜವಾದ ಮತದಾರರ ಹೆಸರುಗಳೂ ಮತದಾರರ ಪಟ್ಟಿಯಿಂದ ಕೈ ತಪ್ಪುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು. ಕಾರ್ಯಕ್ರಮವು ಮೌಲವಿ ಸಯ್ಯದ್ ಸಾಲಿಕ್ ಬರ್ಮಾವರ್ ನದ್ವಿ ಅವರ ಪವಿತ್ರ ಕುರ್‌ಆನ್ ಪಠಣದೊಂದಿಗೆ ಆರಂಭ ಗೊಂಡು, ಫೆಡರೇಶನ್ ಅಧ್ಯಕ್ಷ ಮೌಲಾನಾ ವಾಸಿಯುಲ್ಲಾ ಡಿಎಫ್ ಅವರ ಧನ್ಯವಾದ ಸಮರ್ಪಣೆಯೊಂದಿಗೆ ಮುಕ್ತಾಯವಾಯಿತು. ವಕೀಲ ಅಫಾಕ್ ಕೋಲಾ, ಸಾಮಾಜಿಕ ಸಮಿತಿ ಕಾರ್ಯದರ್ಶಿ ಜಹೀರ್ ಶೇಖ್ ಸೇರಿದಂತೆ ಫೆಡರೇಶನ್‌ನ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Jan 2026 10:38 pm

ಮಧ್ಯಪ್ರದೇಶ | 16 ವರ್ಷದ ಬಾಲಕನಿಗೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ

ಭೋಪಾಲ್‌ ಜ. 17: ಮೂರು ತಿಂಗಳ ಹಿಂದೆ ಬಾಲಕಿಯೊಂದಿಗೆ ಪರಾರಿಯಾಗಿದ್ದ ಕಾರಣ 16 ವರ್ಷದ ಬಾಲಕನಿಗೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಬಳಿದ ಹಾಗೂ ಸುಮಾರು 1.5 ಕಿ.ಮೀ. ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಮದ್ಯಪ್ರದೇಶದ ಉಜ್ಜೈನ್‌ಯಲ್ಲಿ ಗುರುವಾರ ನಡೆದಿದೆ ಎಂದು ಹೇಳಲಾಗಿದೆ. ಘಟನೆಯ ವೀಡಿಯೊ ವೈರಲ್ ಆದ ಬಳಿಕ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಹಾಗೂ ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೂರು ತಿಂಗಳ ಹಿಂದೆ ಬಾಲಕನೊಂದಿಗೆ ಪರಾರಿಯಾದ ಬಾಲಕಿಯ ಕುಟುಂಬದ ಸದಸ್ಯರು ಬಾಲಕನಿಗೆ ಉಜ್ಜೈನಿಯ ಪನ್ವಾಸ ಪ್ರದೇಶದಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾವಿಬ್ಬರು ಮೂರು ತಿಂಗಳ ಹಿಂದೆ ಪರಾರಿಯಾಗಿದ್ದೆವು. ಎರಡು ವಾರಗಳ ಹಿಂದೆ ಹಿಂದಿರುಗಿದ್ದೆವು. ತನ್ನನ್ನು ಒಂದು ತಿಂಗಳು ಕಾಲ ಜೈಲಿಗೆ ಕಳುಹಿಸಲಾಗಿತ್ತು. ಬಾಲಕಿಯನ್ನು ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿತ್ತು ಎಂದು ಬಾಲಕ ಹೇಳಿದ್ದಾನೆ. ‘‘ಅನಂತರ ಬಾಲಕಿಯ ಸಂಬಂಧಿಕರು ನನ್ನನ್ನು ಗಮನಿಸಿದರು ಹಾಗೂ ಬಲವಂತವಾಗಿ ವಾಹನದಲ್ಲಿ ಕರೆದುಕೊಂಡು ಹೋದರು. ಕೊಠಡಿ ಒಳಗೆ ಗಂಟೆಗಳ ಕಾಲ ಕೂಡಿ ಹಾಕಿದರು. ಅಲ್ಲಿ ನಿರ್ದಯವಾಗಿ ಥಳಿಸಿದರು. ಬೆತ್ತಲೆ ಮಾಡಿದರು. ಮುಖಕ್ಕೆ ಮಸಿ ಬಳಿದರು. ಸುಮಾರು 1.5 ಕಿ.ಮೀ. ಮೆರವಣಿಗೆ ಮಾಡಿದರು. ಪೊಲೀಸರಿಗೆ ಅನಂತರ ಈ ಬಗ್ಗೆ ತಿಳಿಯಿತು. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ’’ ಎಂದು ಬಾಲಕ ಹೇಳಿದ್ದಾನೆ. ಬಾಲಕ ಶುಕ್ರವಾರ ತನ್ನ ಅಂಗವಿಕಲ ತಾಯಿಯೊಂದಿಗೆ ಉಜ್ಜೈನಿಯ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ಅನ್ನು ಸಂಪರ್ಕಿಸಿದ್ದಾನೆ. ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾನೆ. ‘‘ಘಟನೆಗೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪನ್ವಾಸ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಿಸಲಾಗಿದೆ. ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ’’ ಎಂದು ಹೆಚ್ಚುವರಿ ಎಸ್‌ಪಿ (ಉಜ್ಜೈನಿ) ಅಲೋಕ್ ಶರ್ಮಾ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 10:36 pm

ಮಂಗಳೂರು ವಕೀಲರ ಸಂಘದಿಂದ ನ್ಯಾ. ಮುರಳಿಧರ ಪೈಗೆ ಸನ್ಮಾನ

ಮಂಗಳೂರು, ಜ.17: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಇದೀಗ ಧಾರವಾಡ ಹೈಕೋರ್ಟ್ ಪೀಠದಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಮುರಳಿಧರ್ ಪೈ ಯವರನ್ನು ಮಂಗಳೂರು ವಕೀಲರ ಸಂಘದಿಂದ ಸನ್ಮಾನಿಸಲಾಯಿತು. ಜಿಲ್ಲಾ ನ್ಯಾಯಾಲಯದಲ್ಲಿ ಲೋಕಾಯುಕ್ತ ನ್ಯಾಯಾಧೀಶರಾಗಿ, ಪ್ರಧಾನ ಜಿಲ್ಲಾ ಹಾಗೂ ಸತ್ತ ನ್ಯಾಯಾಧೀಶರಾಗಿ ಸುಮಾರು ಐದು ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ರಿಜಿಸ್ಟರ್ ಜನರಲ್ ಆಗಿ ನೇಮಕಗೊಂಡು ಹೈಕೋರ್ಟ್ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಮುರಳಿಧರ್ ಪೈ ಗೌರವವನ್ನು ಸ್ವೀಕರಿಸಿ ಮಾತನಾಡಿ‘ ತನ್ನ ಹುಟ್ಟೂರು ಕಾರ್ಕಳವಾದರೂ ತಾನು ನ್ಯಾಯಾಧೀಶನಾಗಿ ಹೆಚ್ಚಿನ ಸೇವೆಯನ್ನು ಮಂಗಳೂರಿನಲ್ಲಿ ಸಲ್ಲಿಸಿದ ಕಾರಣ ಮಂಗಳೂರು ತಮಗೆ ತವರು ಮನೆ ಇದ್ದಂತೆ, ಇಲ್ಲಿನ ಪ್ರತಿಭಾವಂತ ವಕೀಲರ ನಡುವೆ ಸೇವೆ ಸಲ್ಲಿಸಿದ ಅನುಭವ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪರಿಣಾಮ ಕಾರಿಯಾಗಿ ಸೇವೆ ಸಲ್ಲಿಸಲು ಅವಕಾಶ ದೊರಕಿದೆ ಎಂದರು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರು ವಿಧಾನ ಪ್ರಶಸ್ತಿ ಸದಸ್ಯ ಐವನ್ ಡಿ ಸೋಜ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಬಸವರಾಜ್ ವಹಿಸಿದ್ದರು. ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಜೊತೆ ಕಾರ್ಯದರ್ಶಿ ಜ್ಯೋತಿ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ ಇಬ್ರಾಹಿಂ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ರಾಜ್ಯ ವಕೀಲರ ಪರಿಷತ್‌ನ ಮಾಜಿ ಉಪಾಧ್ಯಕ್ಷ ಟಿ ಎನ್ ಪೂಜಾರಿ, ಸಂಘದ ಮಾಜಿ ಅಧ್ಯಕ್ಷ ಎಂ ಆರ್ ಬಳ್ಳಾಲ್, ಅಶೋಕ ಅರಿಗ, ಶಂಭು ಶರ್ಮ, ಪೃಥ್ವಿರಾಜ್ ರೈ, ನರಸಿಂಹ ಹೆಗಡೆ, ಇತರ ಹಿರಿಯ ಸದಸ್ಯರು ಉಪಸ್ಥಿತರಿದ್ದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್ ವಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್ ವಂದಿಸಿ ಕಾರ್ಯಕ್ರಮನ್ನು ನಿರೂಪಿಸಿದರು. 

ವಾರ್ತಾ ಭಾರತಿ 17 Jan 2026 10:34 pm

ಇಂಡಿಗೋಗೆ ₹22 ಕೋಟಿ ದಂಡ, ₹50 ಕೋಟಿ ಬ್ಯಾಂಕ್ ಗ್ಯಾರಂಟಿ ನೀಡಲು ಕೇಂದ್ರ ಸರ್ಕಾರ ಸೂಚನೆ

2025ರ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಉಂಟಾದ ಭಾರೀ ವ್ಯತ್ಯಯವನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ), ವಿಮಾನಯಾನ ಸಂಸ್ಥೆಗೆ 22.20 ಕೋಟಿ ರೂಪಾಯಿಗಳ ದಂಡ ವಿಧಿಸಿದೆ. ತನಿಖೆಯಲ್ಲಿ ಇಂಡಿಗೋ ಸಂಸ್ಥೆಯ ಯೋಜನೆ ಮತ್ತು ಕಾರ್ಯಾಚರಣೆಯಲ್ಲಿ ಗಂಭೀರ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಿಇಒ ಸೇರಿದಂತೆ ಉನ್ನತ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಲಾಗಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು 50 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಆದೇಶಿಸಲಾಗಿದೆ.

ವಿಜಯ ಕರ್ನಾಟಕ 17 Jan 2026 10:28 pm

ಇಂದೋರ್‌ಗೆ ರಾಹುಲ್ ಗಾಂಧಿ ಭೇಟಿ: ಕಲುಷಿತ ನೀರು ಕುಡಿದು ಮೃತರ ಕುಟುಂಬಸ್ಥರ ಜೊತೆ ಮಾತುಕತೆ

ಇಂದೋರ್, ಜ. 17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಇಂದೋರ್‌ಗೆ ಆಗಮಿಸಿದರು ಹಾಗೂ ಕಲುಷಿತ ನೀರು ಕುಡಿದು ವಾಂತಿ, ಅತಿಸಾರ ಬಾಧಿಸಿ ಪ್ರಾಣ ಕಳೆದುಕೊಂಡವರ ಕುಟುಂಬಗಳ ಸದಸ್ಯರು ಹಾಗೂ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಯಾದರು. ಇಂದೋರ್‌ನ ಬಾಂಬೆ ಆಸ್ಪತ್ರೆಗೆ ತೆರಳಿದ ರಾಹುಲ್ ಗಾಂಧಿ ಕಲುಷಿತ ನೀರು ಕುಡಿದು ವಾಂತಿ ಹಾಗೂ ಅತಿಸಾರ ಬಾಧಿಸಿ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಅವರ ಕುಟುಂಬಗಳ ಸದಸ್ಯರನ್ನು ಭೇಟಿಯಾದರು. ಸಂತ್ರಸ್ತ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುವ ಹಾಗೂ ತಳಮಟ್ಟದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ಉದ್ದೇಶವನ್ನು ರಾಹುಲ್ ಗಾಂಧಿ ಅವರ ಈ ಭೇಟಿ ಹೊಂದಿತ್ತು. ಭಗೀರಥಪುರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದರು. ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪಟ್ವಾರಿ, ನಿಂದನೆ ಹಾಗೂ ಪ್ರತಿ ನಿಂದನೆಯ ರಾಜಕೀಯದಲ್ಲಿ ತೊಡಗಿರುವುದಕ್ಕಾಗಿ ರಾಜ್ಯದಲ್ಲಿರುವ ಬಿಜೆಪಿ ಸರಕಾರವನ್ನು ತರಾಟೆಗೆ ತೆಗದುಕೊಂಡರು. ಮಧ್ಯಪ್ರದೇಶವನ್ನು 20 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬಿಜೆಪಿಗೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆದರೆ, ರಾಹುಲ್ ಗಾಂಧಿ ಅವರಿಗೆ ಸಂತ್ರಸ್ತರ ನೋವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದಲ್ಲಿ ಜನರಿಗೆ ಕುಡಿಯುವ ನೀರನ್ನು ಪೂರೈಸಲು ಕೂಡ ಸಾಧ್ಯವಾಗುತ್ತಿಲ್ಲ. ಆದುದರಿಂದ ಈ ಬಗ್ಗೆ ದೇಶಾದ್ಯಂತ ಧ್ವನಿ ಎತ್ತಬೇಕು ಎಂದು ಪಟ್ವಾರಿ ಹೇಳಿದರು.

ವಾರ್ತಾ ಭಾರತಿ 17 Jan 2026 10:27 pm

Explained: ಭಾರತ ಸೂಪರ್‌ ಪವರ್‌ ಆಗಲು ಮುಸ್ಲಿಂ ನಾಯಕತ್ವ ಬೆಳೆಸುವುದೇ ಗುರಿ; ನಮ್ಮದು ಇಂಡಿಯಾ ಟೀಂ ಎಂದ ಅಸಾದುದ್ದೀನ್‌ ಓವೈಸಿ

ಮಹಾರಾಷ್ಟ್ರ ನಗರ ಪಾಲಿಕೆ ಚುನಾವಣೆಗಳಲ್ಲಿ ಹೈದರಾಬಾದ್‌ ಮೂಲದ ಎಐಎಂಐಎಂ ತೋರಿದ ಅದ್ಭುತ ಪ್ರದರ್ಶನ, ರಾಷ್ಟ್ರ ರಾಜಕಾರಣದ ಗಮನ ಸೆಳೆದಿದೆ. ಈಗಾಗಲೇ ಬಿಹಾರದಲ್ಲಿ ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿರುವ ಪಕ್ಷ, ಅಸಾದುದ್ದೀನ್‌ ಓವೈಸಿ ನೇತೃತ್ವದಲ್ಲಿ ದೇಶಾದ್ಯಂತ ಹಂತ ಹಂತವಾಗಿ ವಿಸ್ತರಿಸುತ್ತಿದೆ. ಮಹಾರಾಷ್ಟ್ರ ದಿಗ್ವಿಜಯದಿಂದ ಸಂತುಷ್ಟರಾಗಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ, ಭಾರತವನ್ನು ಮತ್ತಷ್ಟು ಸದೃಢ ಮಾಡಲು ಮುಸ್ಲಿಂ ನಾಯಕತ್ವ ಬೆಳೆಸುವ ಗುರಿಯೊಂದಿಗೆ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ವಿಜಯ ಕರ್ನಾಟಕ 17 Jan 2026 10:24 pm

ಚತ್ತೀಸ್‌ಗಢ | ಭದ್ರತಾ ಪಡೆಗಳ ಗುಂಡಿನ ದಾಳಿಗೆ ಇಬ್ಬರು ಶಂಕಿತ ನಕ್ಸಲರು ಮೃತ್ಯು

ಬಿಜಾಪುರ, ಜ. 17: ಚತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ನಕ್ಸಲೀಯರ ನಡುವೆ ಶನಿವಾರ ನಡೆದ ಗುಂಡಿನ ಕಾಳಗದಲ್ಲಿ ದಿಲೀಪ್ ಬೆಡ್ಜಾ ಸೇರಿದಂತೆ ಇಬ್ಬರು ಶಂಕಿತ ಮಾವೋವಾದಿಗಳು ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಿದ ಸಂದರ್ಭ ಶನಿವಾರ ಬೆಳಗ್ಗೆ ಗುಂಡಿನ ಕಾಳಗ ನಡೆದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ವಿಭಾಗೀಯ ಸಮಿತಿ ಸದಸ್ಯ ಬೆಡ್ಜಾ ಉಪಸ್ಥಿತಿಯ ಕುರಿತ ಮಾಹಿತಿಯ ಆಧಾರದಲ್ಲಿ ಆರಂಭಿಸಲಾದ ಕಾರ್ಯಾಚರಣೆಯಲ್ಲಿ ವಿಶೇಷ ಕಾರ್ಯ ಪಡೆ ಹಾಗೂ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಎರಡೂ ಚತ್ತೀಸ್‌ಗಢ ಪೊಲೀಸ್‌ನ ಘಟಕ) ಹಾಗೂ ಕೋಬ್ರಾ (ಕಮಾಂಡೊ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್-ಸಿಆರ್‌ಪಿಎಫ್‌ನ ಘಟಕ) ಕ್ಕೆ ಸೇರಿದ ಸಿಬ್ಬಂದಿ ಪಾಲ್ಗೊಂಡರು. ಗುಂಡಿನ ಕಾಳಗದಲ್ಲಿ ಮೃತಪಟ್ಟ ಇನ್ನೋರ್ವನ ಗುರುತು ಇದುವರೆಗೆ ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ‘‘ಘಟನಾ ಸ್ಥಳದಲ್ಲಿ ಇದುವರೆಗೆ ಇಬ್ಬರು ನಕ್ಸಲೀಯರ ಮೃತದೇಹಗಳು ಹಾಗೂ ಎ.ಕೆ. 47 ರೈಫಲ್‌ಗಳು ಪತ್ತೆಯಾಗಿವೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ’’ ಎಂದು ಅವರು ತಿಳಿಸಿದ್ದಾರೆ. ಮಾವೋವಾದಿಗಳ ರಾಷ್ಟ್ರೀಯ ಉದ್ಯಾನವನ ಪ್ರದೇಶ ಸಮಿತಿಯಲ್ಲಿ ಬೆಡ್ಜಾ ಸಕ್ರಿಯನಾಗಿದ್ದ. ಈತ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 10:20 pm

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆಯೋಜನೆಗೆ ಸರಕಾರ ಅನುಮತಿ

ಬೆಂಗಳೂರು : ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಅಂತರರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಪಂದ್ಯಗಳನ್ನು ಪುನಃ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ), ರಾಜ್ಯ ಗೃಹ ಇಲಾಖೆ ಅಧಿಕೃತವಾಗಿ ಅನುಮತಿ ನೀಡಿದೆ. ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ಅವರ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಅನುಮತಿ ನೀಡಲಾಗಿದೆ. ಶನಿವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ, ಸರಕಾರದ ಗೃಹ ಇಲಾಖೆಯು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ನೀಡಿರುವುದು ನಮಗೆ ಸಂತೋಷ ತಂದಿದೆ ಎಂದು ತಿಳಿಸಿದ್ದಾರೆ. ಸರಕಾರ ನೇಮಿಸಿದ್ದ ಕಾರ್ಯಪಡೆಯು ಕ್ರೀಡಾಂಗಣದ ಭದ್ರತಾ ಕ್ರಮಗಳನ್ನು ಪರಿಶೀಲಿಸಿ ವರದಿ ನೀಡಿದ ನಂತರ ಈ ಅನುಮತಿ ದೊರೆತಿದೆ. 2025ರಲ್ಲಿ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 18 ವರ್ಷಗಳ ನಂತರ ಐಪಿಎಲ್ ಟ್ರೋಫಿ ಗೆದ್ದಿತ್ತು. ಈ ವೇಳೆ ನಡೆದ ವಿಜಯೋತ್ಸವದ ಮೆರವಣಿಗೆಯಲ್ಲಿ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯ ನಂತರ ಭದ್ರತಾ ಕಾರಣಗಳಿಗಾಗಿ ಕ್ರೀಡಾಂಗಣದಲ್ಲಿ ಯಾವುದೇ ಪ್ರಮುಖ ಪಂದ್ಯಗಳನ್ನು ಆಯೋಜಿಸಲು ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ನಿಷೇಧದಿಂದಾಗಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಸೇರಿದಂತೆ ಹಲವು ಪಂದ್ಯಗಳನ್ನು ದೇವನಹಳ್ಳಿಯ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಅಷ್ಟೇ ಅಲ್ಲದೆ, ಮಹಿಳಾ ವಿಶ್ವಕಪ್ ಮತ್ತು ಮುಂಬರುವ ಪುರುಷರ ಟಿ20 ವಿಶ್ವಕಪ್ ಪಂದ್ಯಗಳ ಆತಿಥ್ಯವನ್ನೂ ಬೆಂಗಳೂರು ಕಳೆದುಕೊಂಡಿತ್ತು.

ವಾರ್ತಾ ಭಾರತಿ 17 Jan 2026 10:13 pm

ರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ.ಹೊಸ ಹೂಡಿಕೆ ಆಕರ್ಷಣೆ : ಎಂ.ಬಿ.ಪಾಟೀಲ್

ಬೆಂಗಳೂರು : ಹಿಂದಿನ ವಾರ್ಷಿಕ ಸಾಲಿನ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದೊಂದಿಗೆ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಈ ಬಗ್ಗೆ ವಿವರ ನೀಡಿರುವ ಅವರು, ರಾಜ್ಯಕ್ಕೆ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿದ್ದು, ಅದು ಕೇವಲ ಹೂಡಿಕೆದಾರರ ಸಮಾವೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ತಯಾರಿಕೆ, ಮರುಬಳಕೆ ಇಂಧನ, ಡೇಟಾ ಕೇಂದ್ರಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಸ್ಥಾಪನೆಯ ಈ ವಲಯಗಳಲ್ಲಿ ಹಲವು ಅಗ್ರಗಣ್ಯ ಉದ್ಯಮ ಸಂಸ್ಥೆಗಳು ಈ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ ಎಂದು ಹೇಳಿದ್ದಾರೆ. 11 ತಿಂಗಳಲ್ಲಿ ಆಕರ್ಷಿಸಿರುವ ಹೊಸ ಬಂಡವಾಳದಲ್ಲಿ ತಯಾರಿಕೆ ವಲಯದಲ್ಲಿ 66,293 ಕೋಟಿ ರೂ., ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ 20,913 ಕೋಟಿ ರೂ., ಜಿಸಿಸಿ ಕೇಂದ್ರಗಳ ಸ್ಥಾಪನೆಗೆ 12,500 ಕೋಟಿ ರೂ. ಮತ್ತು ಡೇಟಾ ಸೆಂಟರ್‍ಗಳ ಸ್ಥಾಪನೆಗೆ 6,350 ಕೋಟಿ ರೂಪಾಯಿ ಹೂಡಿಕೆ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಟೊಯೋಟಾ ಕಂಪನಿ ಜಿಗಣಿಯ ತನ್ನ ಘಟಕದಲ್ಲಿ ಗ್ಯಾಸೊಲಿನ್ ಮತ್ತು ಹೈಬ್ರಿಡ್ ಇಂಜಿನ್‍ಗಳ ತಯಾರಿಕೆಗೆ 1,330 ಕೋಟಿ ರೂ. ಕ್ಯೂಪೈಎಐ ಕಂಪೆನಿಯು ಬೆಂಗಳೂರಿನಲ್ಲಿ ತನ್ನ ಕ್ವಾಂಟಂ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ 1,136 ಕೋಟಿ ರೂ. ಎಟಿ&ಎಸ್ ಕಂಪೆನಿಯು ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕೆಗೆ ನಂಜನಗೂಡಿನಲ್ಲಿ 2,850 ಕೋಟಿ ರೂ. ವಿಪ್ರೋ ಹೈಡ್ರಾಲಿಕ್ಸ್ ಕಂಪೆನಿಯು ಎಲೆಕ್ಟ್ರಾನಿಕ್ಸ್ ಮತ್ತು ಪಿಸಿಬಿ ವಲಯಕ್ಕೆ ಬೇಕಾದ ತಾಮ್ರದ ಲ್ಯಾಮಿನೇಟ್ ತಯಾರಿಕೆಗೆ 499 ಕೋಟಿ ರೂ. ಝೆನ್-ಫೋಲ್ಡ್ ಬಯೋಸೈನ್ಸಸ್ ಲಿಮಿಟೆಡ್ ಔಷಧ ವಿಜ್ಞಾನ ಕ್ಷೇತ್ರಕ್ಕೆ ಬೇಕಾಗುವ ಕಿಣ್ವಗಳ ತಯಾರಿಕೆಗೆ 490 ಕೋಟಿ ರೂ. ಹೂಡಿಕೆ ಮಾಡುತ್ತಿವೆ ಎಂದು ಅವರು ಅಂಕಿ-ಅಂಶ ಸಹಿತ ವಿವರಿಸಿದ್ದಾರೆ. ಉಳಿದಂತೆ ಜೆಜೆಜಿ ಏರೋಸ್ಪೇಸ್ ವಿಮಾನಗಳ ಬಿಡಿಭಾಗಗಳ ತಯಾರಿಕೆಗೆ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯಲ್ಲಿ 470 ಕೋಟಿ ರೂ. ಯಸಾಕಾವ ಇದೇ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುನ್ಮಾನ ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪನೆಗೆ 330 ಕೋಟಿ ರೂ. ಐನಾಕ್ಸ್ ವಿಂಡ್ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ವಿಂಡ್ ಟರ್ಬೈನ್ ತಯಾರಿಕಾ ಘಟಕ ಸ್ಥಾಪನೆಗೆ 305 ಕೋಟಿ ರೂ., 4,000 ಕೋಟಿ ರೂ. ಡೇಟಾ ಸಮುದ್ರ ಕಂಪನಿಗೆ ಮಂಗಳೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರಿನಲ್ಲಿ 1,350 ಕೋಟಿ ರೂ. ಹಳದಿರಾಮ್ಸ್ ಸಮೂಹವು ತುಮಕೂರಿನ ವಸಂತ ನರಸಾಪುರದಲ್ಲಿ ತನ್ನ ಕುರುಕಲು ತಿಂಡಿ ಘಟಕ ಸ್ಥಾಪನೆಗೆ 444 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿವೆ ಎಂದು ಸಚಿವರು ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 10:08 pm

ತಣ್ಣೀರುವಾಬಿ ಬೀಚ್‌ನಲ್ಲಿ ಗಾಳಿಪಟಗಳ ಚಿತ್ತಾರ: ದೇಶ ವಿದೇಶದ ದೈತ್ಯಗಾತ್ರ- ಬಣ್ಣ- ವಿನ್ಯಾಸಗಳ ಸಂಗಮ

ಮಂಗಳೂರು, ಜ.17: ಕಣ್ಣು ಹಾಯಿಸಿದಷ್ಟುದ್ದಕ್ಕೂ ನೀಲ ಬಣ್ಣದ ಕಡಲ ಅಲೆಗಳು ಒಂದೆಡೆಯಾದರೆ, ನೀಲ ಆಗಸ ದಲ್ಲಿ ಬಣ್ಣಬಣ್ಣದ, ವಿವಿಧ ನಮೂನೆಯ ಚುಕ್ಕಿಯಾಕಾರದಿಂದ ಹಿಡಿದು ದೈತ್ಯಗಾತ್ರದ ಗಾಳಿಪಟಗಳ ಚಿತ್ತಾರ. ಮೀನು, ಬೆಕ್ಕು, ಆನೆ, ಚಿಟ್ಟೆ, ಮೊಸಳೆ, ಹೂ, ಮಿಕ್ಕಿ, ಏಲಿಯನ್ ... ಹೀಗೆ ವಿವಿಧ ಬಗೆಯ ವಿವಿಧ ವಿನ್ಯಾಸ ಬಣ್ಣಗಳ ಸಂಗಮದ ಗಾಳಿಪಟಗಳು. ಇನ್ನು ಕಡಲ ಕಿನಾರೆಯ ಮರಳಿನ ಮೇಲೆ ಭಾರೀ ಗಾತ್ರದ ಗಾಳಿಪಟಗಳ ಸೂತ್ರವನ್ನು ಸಮತೂಗಿಸಿಕೊಂಡು ತಮ್ಮ ಕೌಶಲ್ಯವನ್ನು ಪ್ರದರ್ಶಿಸುವ ಅಂತಾರಾಷ್ಟ್ರೀಯ ಗಾಳಿಪಟಗಾರರು ಹಾಗೂ ಅವರಿಗೆ ಪ್ರೋತ್ಸಾಹ ನೀಡುವ ಸಾವಿರಾರು ಸಂಖ್ಯೆಯ ಗಾಳಿಪಟ ಪ್ರೇಮಿಗಳು, ಪ್ರೇಕ್ಷಕರು. ಇದು ಮಂಗಳೂರಿನ ತಣ್ಣೀರುಬಾವಿಯ ಬ್ಲೂಬೇ ಬೀಚ್‌ನಲ್ಲಿ ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿ ರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದದ ಮೊದಲ ದಿನವಾದ ಶನಿವಾರ ಕಂಡು ಬಂದ ದೃಶ್ಯ. ಟೀಮ್ ಮಂಗಳೂರು ತಂಡದಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ದಲ್ಲಿ 15 ದೇಶಗಳ 30 ಮಂದಿ ಅಂತಾರಾಷ್ಟ್ರೀಯ ಗಾಳಿಪಟಗಾರರ ಜತೆಗೆ 62 ನುರಿತ ಗಾಳಿಪಟ ಹಾರಾಟ ಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಪ್ರದರ್ಶಿಸುತ್ತಿದ್ದಾರೆ. ಸಾಂಪ್ರದಾಯಿಕ, ಏರೋಫಾಯಿಲ್, ಇನ್‌ಪ್ಲೇಟಬಲ್ ಹಾಗೂ ಕ್ಲಾಡ್ ಲೈನ್ ಸ್ಪೋರ್ಟ್ ಗಾಳಿಪಟಗಳ ಜತೆಗೆ ಸ್ಥಳೀಯ ಸಾಂಪ್ರದಾಯಿಕ ಗಾಳಿಪಟಗಳು ಉತ್ಸವದಲ್ಲಿ ನೋಡುಗರನ್ನು ಆಕರ್ಷಿಸುತ್ತಿವೆ. ಉತ್ಸವ ಮುಂದುವರಿಸಲು ಪ್ರೇರಣೆ: ಯು.ಟಿ.ಖಾದರ್ ಗಾಳಿಪಟ ಹಾರಿಸುವ ಮೂಲಕ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಕರಾವಳಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ 2 ಕೋಟಿ ರೂ. ಅನುದಾನ ಒದಗಿಸಿದ್ದು ಅತ್ಯಂತ ಯಶಸ್ವಿಯಾಗಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ದೇಶ ವಿದೇಶಗಳಿಂದ ಪ್ರವಾಸಿಗರು, ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಇಂತಹ ಉತ್ಸವ ಮುಂದೆಯೂ ಯೋಜಿಸಲು ಪ್ರೇರಣೆ ದೊರಕಿದೆ ಎಂದರು. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿ.ಪಂ. ಸಿಇಒ ವಿನಾಯಕ ನರ್ವಾಡೆ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ‘ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಗಾಳಿಪಟ ಉತ್ಸವದಲ್ಲಿ ಪತ್ನಿ ಜತೆ ಭಾಗವಹಿಸುತ್ತಿದ್ದೇನೆ. ಹೈದರಾ ಬಾದ್‌ನಿಂದ ಇಂದು ಬೆಳಗ್ಗೆ ತಣ್ಣೀರುಬಾವಿಗೆ ಆಗಮಿಸಿದ್ದು, ಇಲ್ಲಿನ ಜನರಿಂದ ಉತ್ತಮ ಸ್ಪಂದನೆ ದೊರಕಿದೆ. ತುಂಬಾ ಸ್ನೇಹಮಯಿ ಜನರು. ಸೆಲ್ಪಿ ಕ್ಲಿಕ್ಕಿಸಿಕೊಳ್ಳುತ್ತಾರೆ, ಮಾತನಾಡಿಸುತ್ತಾರೆ. ನಾನು ಇಲ್ಲಿ ಸುರಕ್ಷಿತವಾಗಿರುವ ಭಾವನೆ ಬಂದಿದೆ’ ಎಂದು ಇಟಲಿಯ ಅಂತಾರಾಷ್ಟ್ರೀಯ ಗಾಳಿಪಟಗಾರ ಆ್ಯಂಡ್ರಿಯಾ ಹೇಳಿದರು. ಪತ್ನಿ ಸಬ್ರೀನಾ ಜತೆಗೆ 24 ಬೃಹತ್ ಗಾಳಿಪಟಗಳೊಂದಿಗೆ ಉತ್ಸವಕ್ಕೆ ಆಗಮಿಸಿರುವ ಆ್ಯಂಡ್ರಿಯಾ ಅವರ ಜೆಲ್ಲಿ ಫಿಶ್, ಏಲಿಯನ್, ಫಿಸ್ ಸ್ಕೆಲಿಟನ್, ಹೂವಿನ ದೈತ್ಯಾಕಾರದ ಗಾಳಿಪಟಗಳು 5 ಮೀಟರ್‌ನಿಂದ 25 ಮೀಟರ್ ಉದ್ದವನ್ನು ಹೊಂದಿವೆ. ಇಸ್ತಾನಿಯಾದ ಜಾನ ಸೂಮ್ ಅವರದ್ದು ಮಂಗಳೂರಿಗೆ ಇದು 2ನೇ ಭೇಟಿಯಂತೆ. ಸುಮಾರು 14 ಗಾಳಿಪಟ ಗಳೊಂದಿಗೆ ಇಬ್ಬರ ತಂಡ ಮಂಗಳೂರಿಗೆ ಆಗಮಿಸಿರುವುದಾಗಿ ಹೇಳುವ ಜಾನ ಸೂಮ್‌ಗೆ ಇಲ್ಲಿನ ಬಿಸಿಲಿನ ವಾತಾವರಣ ಖುಷಿ ನೀಡಿದೆಯಂತೆ. ‘ನಮ್ಮಲ್ಲಿ ಮೈನಸ್ 20 ಡಿಗ್ರಿ ಹವಾಮಾನ. ಎಲ್ಲೆಲ್ಲೂ ಹಿಮತುಂಬಿರುತ್ತದೆ. ಆದರೆ ಇಲ್ಲಿಯ ಬೀಚ್‌ನ ವಾತಾವರಣ ಹಿತವಾಗಿದೆ. ಗಾಳಿಪಟ ಹಾರಾಟಕ್ಕೂ ಸೂಕ್ತ ಪ್ರದೇಶ. ಭಾರತದ ಮೀನಿನ ಆಹಾರ ತನಗೆ ಇಷ್ಟ ಎನ್ನುತ್ತಾರೆ’ ಜಾನ ಸೂಮ್.    

ವಾರ್ತಾ ಭಾರತಿ 17 Jan 2026 10:04 pm

ಖಂಡ್ರೆ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ : ಡಿಸಿಎಂ ಡಿ.ಕೆ. ಶಿವಕುಮಾರ್

ಬೀದರ್ : ಭೀಮಣ್ಣ ಖಂಡ್ರೆ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೀರಶೈವ ಸಮಾಜದ ಅಧ್ಯಕ್ಷರಾಗಿ ಕೆಲಸ ಮಾಡಿ ಇಡೀ ರಾಜ್ಯದಲ್ಲಿ ಸಂಘಟನೆ ಮಾಡಿದ್ದಾರೆ. ಈ ಕುಟುಂಬ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಈ ಕುಟುಂಬ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬದುಕಿನಲ್ಲಿ ದೊಡ್ಡ ಸಾಧನೆ ಮಾಡಿದ ದೊಡ್ಡ ಶಕ್ತಿಗೆ ನಮನ ಸಲ್ಲಿಸಲು ನಾವು ಬಂದಿದ್ದೇವೆ. 1989ರಿಂದ ಭೀಮಣ್ಣ ಖಂಡ್ರೆ ಅವರ ಜೊತೆಗೆ ವಿಧಾನಸಭೆಯಲ್ಲಿ ಒಟ್ಟಿಗೆ ಕೆಲಸ ಮಾಡುವ ಭಾಗ್ಯ ನನಗೆ ಸಿಕ್ಕಿತ್ತು. ಅವರನ್ನು ಸಚಿವರನ್ನಾಗಿ ನೋಡಿದ್ದೇನೆ. ಅವರ ಮಗ ವಿಜಯ್ ಕುಮಾರ್ ಖಂಡ್ರೆ ಅವರ ಜೊತೆಗೂ ಶಾಸಕನಾಗಿ ಕೆಲಸ ಮಾಡಿದ್ದೇನೆ. ಈಶ್ವರ್ ಖಂಡ್ರೆ ಅವರ ಜೊತೆ ಶಾಸಕನಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಅವರು ನನ್ನ ಜೊತೆ ಪಕ್ಷದ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅವರ ಮೊಮ್ಮಗ ಸಾಗರ್ ಖಂಡ್ರೆ ಅವರು ಸಂಸದರಾಗಿ ನಮ್ಮೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ವಿದ್ಯಾ ಕ್ಷೇತ್ರ ಸೇರಿದಂತೆ ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಒಂದು ಮಗು ಹುಟ್ಟಿದಾಗ ಆ ಮಗು ಅಳುತ್ತದೆ, ಸಮಾಜ ಖುಷಿ ಪಡುತ್ತದೆ. ಅದೇ ವ್ಯಕ್ತಿ ಲಿಂಗೈಕ್ಯರಾದಾಗ ಅವರ ಸಾಧನೆ ಸ್ಮರಿಸಿ ಸಮಾಜ ದುಃಖಪಡುತ್ತದೆ. ಈ ಕಾರಣಕ್ಕೆ ನಾನು ದೆಹಲಿಯಲ್ಲಿದ್ದರೂ, ಸಿಎಂ ಬೆಂಗಳೂರಿನಲ್ಲಿ ಇದ್ದರೂ ನಮ್ಮ ಕೆಲಸಗಳನ್ನು ಬದಿಗೊತ್ತಿ ಅಂತಿಮ ನಮನ ಸಲ್ಲಿಸಲು ಬಂದಿದ್ದೇವೆ ಎಂದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬರಲು ಬಹಳ ಪ್ರಯತ್ನಪಟ್ಟರು. ಆದರೆ ಬೇರೆ ರಾಜ್ಯಗಳ ಚುನಾವಣೆ ಸಂಬಂಧ ಸರಣಿ ಸಭೆಗಳಿರುವ ಕಾರಣ ಬರಲು ಆಗಲಿಲ್ಲ. ನಾವು ಪಕ್ಷ ಹಾಗೂ ಸರ್ಕಾರದ ಪರವಾಗಿ ಬಂದಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ವಾರ್ತಾ ಭಾರತಿ 17 Jan 2026 10:00 pm

ಫೆ.4ರಿಂದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ನೇಮೋತ್ಸವ

ಸುರತ್ಕಲ್: ಮುಲ್ಕಿ ತಾಲೂಕಿನ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಶ್ರೀ ಉಳ್ಳಾಯ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಸಮಾರಂಭ 2026 ನೇ ಫೆ.4 ರಿಂದ10ರ ವರೆಗೆ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸಿ.ಬಿ.ಕರ್ಕೇರ ಅವರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇದು ಇತಿಹಾಸ ಪುರುಷರಾದ ಕಾಂತಾಬಾರೆ ಬೂದಾಬಾರೆಯರು ರಾತ್ರಿ ಬೆಳಗಾಗುವುದರೊಳಗೆ ಕೈಯಾರೆ ನಿರ್ಮಿ ಸಿದ ಈ ಕ್ಷೇತ್ರವಾಗಿದೆ. ಸುಮಾರು 3.5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಇಲ್ಲಿನ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಎಲ್ಲಾ ಕಾಮಗಾರಿಗಳೂ ಬಹುತೇಕ ಪೂರ್ಣಗೊಂಡಿದೆ. ಬಾರೆಯರು ಬರಿಗೈಯಲ್ಲಿ ತೋಡಿದ್ದರೆಂದು ಪ್ರತೀತಿ ಹೊಂದಿದ್ದ ಬಾವಿಯ ನವೀಕರಣ, ಅಂಗಣಕ್ಕೆ ಇಂಟರ್‌ಲಾಕ್ ವ್ಯವಸ್ಥೆ, ಆವರಣಗೋಡೆ, ಪಡುದಿಕ್ಕಿನಲ್ಲಿ ನೂತನ ಪ್ರವೇಶದ್ವಾರ ನಿರ್ಮಾಣದ ಕಾರ್ಯ ನಡೆಯುತ್ತಿದೆ ಎಂದು ವಿವರಿಸಿದರು. ಫೆ.4 ರಿಂದ ಋತ್ವಿಜರ ಉಪಸ್ಥಿತಿಯಲ್ಲಿ ಸರ್ವ ವೈದಿಕ ವಿಧಿವಿಧಾನಗಳು, ನಿತ್ಯ ಭಜನೆ, ಅನ್ನಸಂತರ್ಪಣೆ, ಸಂಜೆ ಗಣ್ಯರ, ದಾನಿಗಳ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ತುಳು ನಾಟಕ, ನೃತ್ಯ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ಫೆ.8 ರಂದು ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಫೆ.9 ರಂದು ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದರು. ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದ್ದು ಪ್ರತಿ ಸಮಿತಿಗಳು ಅತ್ಯಂತ ಸಕ್ರಿಯವಾಗಿ ಸಿದ್ಧತೆಗಳನ್ನು ಮಾಡುತ್ತಿದ್ದು ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಪರಮಾನಂದ‌ ಸಾಲ್ಯಾನ್, ಕೋಶಾಧಿಕಾರಿ ಶ್ರೀಧರ ವಿ. ಸುವರ್ಣ, ಆಡಳಿತ ಸಮಿತಿ ಅಧ್ಯಕ್ಷ ಜಗನ್ನಾಥ ಆರ್. ಕೋಟ್ಯಾನ್, ಉಲಾಧ್ಯಕ್ಷ ಅನಿಲ್ ಪೂಜಾರಿ, ಮುಂಬೈ ಸಮಿತಿ‌ ಅಧ್ಯಕ್ಷ ಸತೀಶ್ ಎಸ್.‌ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಸಿ. ಸಾಲ್ಯಾನ್, ಸಂಚಾಲಕ ಪದ್ಮನಾಭ ಸಸಿಹಿತ್ಲು, ಮಾಧ್ಯಮ ಸಂಚಾಲಕ ಯಶೋಧರ ಕೋಟ್ಯಾನ್, ಪ್ರಮೋದ್ ಕೋಟ್ಯಾನ್ , ಜಗದೀಸ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Jan 2026 9:59 pm

ದೇವದುರ್ಗ | ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರಾಮಾಣಿಕ‌ ಸೇವೆ ಮಾಡುವೆ : ಶಾಸಕಿ ಕರೆಮ್ಮ ಜಿ‌.ನಾಯಕ್

ದೇವದುರ್ಗ: ಮಕ್ಕಳ ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುತ್ತಿರುವುದು ಅತ್ಯಂತ ಸಂತಸದ ವಿಷಯ. ನಾನು ಸದಾ ನಿಮ್ಮೊಡನೆ ಸಹೋದರಿಯಂತೆ ನಿಂತು, ಶಿಕ್ಷಕರ ಕಷ್ಟ-ಸುಖಗಳಿಗೆ ಬೆನ್ನೆಲುಬಾಗಿ ಬೆಂಬಲ ನೀಡಲಿದ್ದೇನೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ್ ಭರವಸೆ ನೀಡಿದರು. ಪಟ್ಟಣದ ಶ್ರೀಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 'ತಾಲೂಕು ಗುರು ನಮನ' ಹಾಗೂ 'ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ' ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ವೈಯಕ್ತಿಕ ಜೀವನದ ಹಾದಿಯನ್ನು ಮೆಲುಕು ಹಾಕಿದ ಶಾಸಕರು, ನನಗೆ ನಿಜವಾಗಿಯೂ ಶಾಸಕಿಗಿಂತಲೂ ಶಿಕ್ಷಕಿಯಾಗುವ ದೊಡ್ಡ ಆಸೆ ಇತ್ತು. ಆದರೆ, ಬಾಲ್ಯದಲ್ಲೇ ವಿವಾಹವಾದ ಕಾರಣ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗಲಿಲ್ಲ. ಇಂದು ರಾಜಕೀಯವಾಗಿ ಜನಸೇವೆ ಮಾಡುವ ಅವಕಾಶ ಸಿಕ್ಕಿದೆ. ತಾಲೂಕಿನ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆಯ ಬಗ್ಗೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು. ಅಲ್ಲದೆ, ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಶಿಕ್ಷಕರು ಶ್ರಮಿಸಬೇಕು ಎಂದು ಕರೆ ನೀಡಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮಾತನಾಡಿ, ಸಾರ್ವಜನಿಕರು ಸಮುದಾಯ ಭವನ, ಗುಡಿ-ಗುಂಡಾರಗಳಿಗೆ ಅನುದಾನ ಕೇಳುವ ಬದಲು, ಶಾಲೆಗಳಿಗೆ ಮೂಲಸೌಲಭ್ಯ ಹಾಗೂ ಶಿಕ್ಷಕರನ್ನು ಕೇಳಿದ್ದರೆ ಇಂದು ಕಲ್ಯಾಣ ಕರ್ನಾಟಕ ಶಿಕ್ಷಣದಲ್ಲಿ ಹಿಂದುಳಿಯುತ್ತಿರಲಿಲ್ಲ. ಸರ್ಕಾರವು ಬಡ ಮಕ್ಕಳಿಗೆ 'ವಿದ್ಯಾ ಕಿಟ್' ನೀಡುವ ಮೂಲಕ ಪ್ರೋತ್ಸಾಹಿಸಬೇಕು. ಬಡ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿದಾಗ ಮಾತ್ರ ಶಿಕ್ಷಕರಿಗೆ ನೀಡುವ ಪ್ರಶಸ್ತಿಗೆ ನೈಜ ಬೆಲೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ, ಪ್ರಮುಖರಾದ ಬಸನಗೌಡ ದೇಸಾಯಿ, ಆದನಗೌಡ ಬುಂಕಲದೊಡ್ಡಿ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Jan 2026 9:54 pm

ಶೀರೂರು ಪರ್ಯಾಯಕ್ಕೆ ಮಟ್ಟುಗುಳ್ಳ ಹೊರೆಕಾಣಿಕೆ

ಉಡುಪಿ, ಜ.17: ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯಕ್ಕೆ ಮಟ್ಟು ಭಾಗದ ಶ್ರೀಕೃಷ್ಣ ಭಕ್ತರು ಶನಿವಾರ ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು. ನಗರದ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಟ್ಟು ಭಾಗದ ಭಕ್ತರನ್ನು ಸ್ವಾಗತಿಸಿದರು. ಬಳಿಕ ಗುಳ್ಳ ತುಂಬಿದ ಬುಟ್ಟಿಯನ್ನು ಹೊತ್ತು ಭಕ್ತರು ಸಾಲಾಗಿ ಮೆರವಣಿಗೆ ಮೂಲಕ ರಥಬೀದಿಗೆ ಬಂದು ಬಳಿಕ ಹೊರೆಕಾಣಿಕೆ ಮಂಟಪ ತಲುಪಿದರು. ಶ್ರೀಕೃಷ್ಣ ಮಠ ಮತ್ತು ಮಟ್ಟುಗುಳ್ಳಕ್ಕೆ ವಿಶೇಷ ಸಂಬಂಧವಿದೆ. ವಾದಿರಾಜ ಸ್ವಾಮಿಗಳು ಅನುಗ್ರಹಿಸಿ ನೀಡಿದ ಬೀಜ ದಿಂದ ಹುಟ್ಟಿಕೊಂಡ ಗುಳ್ಳ ಇಂದು ದೇಶದಲ್ಲೇ ಜಿಐ ಪೇಟೆಂಟ್ ಪಡೆದ ಮೊದಲ ತರಕಾರಿ ಎಂಬ ಖ್ಯಾತಿ ಪಡೆದಿದೆ. ಜೊತೆಗೆ ಕೃಷ್ಣ ಮಠದ ನಿತ್ಯ ಬಳಕೆಯ ತರಕಾರಿಗಳಲ್ಲಿ ಗುಳ್ಳ ತರಕಾರಿಗೆ ವಿಶೇಷ ಸ್ಥಾನವಿದೆ. ಹೊರೆಕಾಣಿಕೆ ಸಮರ್ಪಣೆಯಲ್ಲಿ ಮಟ್ಟು ಭಾಗದ ಭಕ್ತರು, ಡಾ.ಟಿ.ಎಸ್. ರಾವ್, ಪ್ರದೀಪ್ ರಾವ್, ವಿಷ್ಣು ಪಾಡೀಗಾರ್, ಸುನಿಲ್ ಬಂಗೇರ, ಸರಸ್ವತಿ ಬಂಗೇರ, ಮಟ್ಟಿ ಲಕ್ಷ್ಮೀ ನಾರಾಯಣ ರಾವ್, ಶ್ರೀಕಾಂತ್ ಉಪಾಧ್ಯಾಯ, ಸಂದೀಪ್ ಮಂಜ, ನರೇಶ್ ಪಾಲನ್, ಸದಾನಂದ ಸುವರ್ಣ, ಜಯ ಪೂಜಾರಿ, ಎಂ. ಲಕ್ಷ್ಮಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 17 Jan 2026 9:52 pm

ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾವು, ಪರಿಹಾರ ಮೊತ್ತವನ್ನು 4 ಪಟ್ಟು ಹೆಚ್ಚಿಸಿದ ಹೈಕೋರ್ಟ್‌; ಕಾರಣ ಏನು?

ಬೆಂಗಳೂರಿನಲ್ಲಿ 2017ರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರು ಚಾಲಕನ ಕುಟುಂಬಕ್ಕೆ ಹೈಕೋರ್ಟ್ ಪರಿಹಾರ ಮೊತ್ತವನ್ನು 9.20 ಲಕ್ಷದಿಂದ 36.60 ಲಕ್ಷಕ್ಕೆ ಹೆಚ್ಚಿಸಿದೆ. ಅಪಘಾತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ತೀರ್ಪು ನೀಡಿದ್ದು, ಮೃತ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಎಂಎಸಿಟಿ ಆದೇಶವನ್ನು ನ್ಯಾಯಾಲಯ ತಳ್ಳಿಹಾಕಿದೆ.

ವಿಜಯ ಕರ್ನಾಟಕ 17 Jan 2026 9:32 pm

ಕಲಬುರಗಿ | ಕುರಿಕೋಟಾ ಸೇತುವೆ ಮೇಲಿಂದ ಹಾರಿದ ಯುವತಿ

ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಹೊರವಲಯದಲ್ಲಿರುವ ಕುರಿಕೋಟಾ ಹಳೆಯ ಸೇತುವೆ ಮೆಲಿಂದ ಹಾರಿದ್ದ ಯುವತಿವೋರ್ವಳು ನಾಪತ್ತೆಯಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕಮಲಾಪುರ ತಾಲೂಕಿನ ಮಹಾಗಾಂವ್‌ ಗ್ರಾಮದ ನಿವಾಸಿ ಎನ್ನಲಾಗುತ್ತಿರುವ ತ್ರೀವೇಣಿ ಸೂರ್ಯಕಾಂತ (30) ಎಂಬ ಯುವತಿ ನದಿಗೆ ಹಾರಿದ್ದಾಳೆ ಎಂದು ತಿಳಿದುಬಂದಿದೆ. ಶುಕ್ರವಾರದಿಂದ ನಾಪತ್ತೆಯಾಗಿರುವ ಯುವತಿಯ ಪತ್ತೆಗೆ ಕಾರ್ಯಾಚರಣೆ ನಡೆಸಲಾಗಿದೆ, ಆದರೆ ಇವರೆಗೆ ಯುವತಿ ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ರವಿವಾರವೂ ಮುಂದುವರೆದಿದೆ ಎಂದು ಮಹಾಗಾಂವ್‌ ಪೊಲೀಸ್ ಠಾಣೆಯ ಪಿಎಸ್ಐ ಅವರು ತಿಳಿಸಿದ್ದಾರೆ. ಘಟನೆ ಮಹಾಗಾಂವ್‌ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ವಾರ್ತಾ ಭಾರತಿ 17 Jan 2026 9:32 pm

ಪಾದಚಾರಿಗಳಿಗೆ ಕಾರು ಢಿಕ್ಕಿ: ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕೋಟ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜ.16ರಂದು ರಾತ್ರಿ ವೇಳೆ ಕಾರ್ಕಡ ಗ್ರಾಮದ ರಿಶಿ ಆಟೋ ವೆಲ್ಡಿಂಗ್ ವರ್ಕಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಇಂಟಿರಿಯಲ್ ಡಿಸೈನ್ ಕೆಲಸ ಮಾಡಿಕೊಂಡಿದ್ದ ಪ್ರದೀಪ ಎಂದು ಗುರುತಿಸಲಾಗಿದೆ. ಅವರೊಂದಿಗೆ ಕೆಲಸ ಮಾಡಿಕೊಂಡಿದ್ದ ಶಶಿ ತೀವ್ರವಾಗಿ ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರು, ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಚಾಲಕ ಬಳಿಕ ತನ್ನ ಕಾರನ್ನು ನಿಲ್ಲಿಸದೆ ಅಲ್ಲಿಂದ ಪರಾರಿಯಾದನು ಎನ್ನಲಾಗಿದೆ. ಅಪಘಾತದಿಂದ ಪ್ರದೀಪ ಹಾಗೂ ಶಶಿ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದು, ಕೂಡಲೇ ಅವರನ್ನು ಸ್ಥಳೀಯರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರದೀಪ್ ಮೃತಪಟ್ಟಿ ರುವುದಾಗಿ ತಿಳಿಸಿದರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Jan 2026 9:28 pm

114 ರಫೇಲ್ ಯುದ್ಧವಿಮಾನಗಳ ಖರೀದಿಗೆ ರಕ್ಷಣಾ ಖರೀದಿ ಮಂಡಳಿ ಅಸ್ತು

ಹೊಸದಿಲ್ಲಿ,ಜ.17: ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್‌ನಿಂದ 114 ರಫೇಲ್ ಯುದ್ಧವಿಮಾನಗಳ ಖರೀದಿ ಪ್ರಸ್ತಾವಕ್ಕೆ ರಕ್ಷಣಾ ಖರೀದಿ ಮಂಡಳಿಯು ಶುಕ್ರವಾರ ಹಸಿರು ನಿಶಾನೆಯನ್ನು ತೋರಿಸಿದೆ. ಪ್ರಸ್ತಾವವನ್ನು ಈಗ ಅನುಮೋದನೆಗಾಗಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯ ರಕ್ಷಣಾ ಸ್ವಾಧೀನ ಮಂಡಳಿಗೆ ಸಲ್ಲಿಸಲಾಗುವುದು. ಅಂತಿಮ ಒಪ್ಪಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿಯು ನೀಡಬೇಕಾಗುತ್ತದೆ. ಈಗಾಗಲೇ 36 ರಫೇಲ್ ಯುದ್ಧವಿಮಾನಗಳನ್ನು ಹೊಂದಿರುವ ಭಾರತೀಯ ವಾಯುಪಡೆಯು ಕಳೆದ ವರ್ಷ 114 ಹೆಚ್ಚುವರಿ ರಫೇಲ್ ವಿಮಾನಗಳನ್ನು ಕೋರಿ ರಕ್ಷಣಾ ಸಚಿವಾಲಯಕ್ಕೆ ಔಪಚಾರಿಕ ಪ್ರಸ್ತಾವವನ್ನು ಸಲ್ಲಿಸಿತ್ತು. ಮೂಲಗಳ ಪ್ರಕಾರ ಭಾರತ ಮತ್ತು ಫ್ರಾನ್ಸ್ ಮುಂದಿನ ತಿಂಗಳಿನಲ್ಲೇ 114 ಯುದ್ಧವಿಮಾನಗಳ ಅಂತಿಮ ಒಪ್ಪಂದಕ್ಕೆ ಸಹಿ ಹಾಕಬಹುದು. ಕಳೆದ ವರ್ಷದ ಎಪ್ರಿಲ್‌ನಲ್ಲಿ ಭಾರತವು ಭಾರತೀಯ ನೌಕಾಪಡೆಯ ಬಲವರ್ಧನೆಗಾಗಿ 26 ರಫೇಲ್-ಸಾಗರ ಯುದ್ಧ ವಿಮಾನಗಳ ಖರೀದಿಗಾಗಿ ಫ್ರಾನ್ಸ್‌ನೊಂದಿಗೆ 63,000 ಕೋ.ರೂ.ಗಳ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿತ್ತು. ಖರೀದಿಯು ಅಂತರ್-ಸರಕಾರಿ ಒಪ್ಪಂದದಡಿ ನಡೆಯಲಿದ್ದು,ಇದು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರ ಪೂರೈಕೆಗಳನ್ನು ಖಚಿತಪಡಿಸುತ್ತದೆ. 22 ಒಂಟಿ ಆಸನಗಳ ಯುದ್ಧವಿಮಾನಗಳು ಮತ್ತು ಅವಳಿ ಆಸನಗಳ ನಾಲ್ಕು ತರಬೇತಿ ವಿಮಾನಗಳಿಗಾಗಿ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, 2031ರ ವೇಳೆಗೆ ಪೂರೈಕೆಗಳು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಜೂನ್‌ನಲ್ಲಿ ಡಸಾಲ್ಟ್ ಏವಿಯೇಷನ್ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿ.(ಟಿಎಎಸ್) ಭಾರತದಲ್ಲಿ ರಫೇಲ್ ಯುದ್ಧವಿಮಾನದ ಫ್ಯೂಸ್‌ಲೇಜ್ (ದೇಹಭಾಗ) ತಯಾರಿಕೆಗಾಗಿ ನಾಲ್ಕು ಉತ್ಪಾದನೆ ವರ್ಗಾವಣೆ ಒಪ್ಪಂದಗಳಿಗೆ ಸಹಿ ಹಾಕಿದ್ದವು. ಇದು ದೇಶದ ವೈಮಾನಿಕ ಉತ್ಪಾದನಾ ಸಾಮರ್ಥ್ಯಗಳನ್ನು ಬಲಗೊಳಿಸುವಲ್ಲಿ ಮತ್ತು ಜಾಗತಿಕ ಪೂರೈಕೆ ಸರಪಳಿಗಳನ್ನು ಬೆಂಬಲಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮೊದಲ ಫ್ಯೂಸಲೇಜ್ ಭಾಗಗಳು ವಿತ್ತವರ್ಷ 2028ರಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದ್ದು, ಪ್ರತಿ ತಿಂಗಳು ಎರಡು ಸಂಪೂರ್ಣ ಫ್ಯೂಸಲೇಜ್‌ಗಳು ಹೊರಬರುವ ನಿರೀಕ್ಷೆಯಿದೆ. ರಫೇಲ್ ಯುದ್ಧವಿಮಾನಗಳ ಫ್ಯೂಸಲೇಜ್‌ನ ಪ್ರಮುಖ ರಚನಾತ್ಮಕ ವಿಭಾಗಗಳ ತಯಾರಿಕೆಗಾಗಿ ಟಿಎಎಸ್ ಹೈದರಾಬಾದ್‌ನಲ್ಲಿ ಅತ್ಯಾಧುನಿಕ ಉತ್ಪಾದನಾ ಸೌಲಭ್ಯವನ್ನು ಸ್ಥಾಪಿಸಲಿದೆ.

ವಾರ್ತಾ ಭಾರತಿ 17 Jan 2026 9:22 pm

ತಮಿಳುನಾಡಿನಲ್ಲಿ ಮುಷ್ಕರ, ಕರ್ನಾಟಕದಲ್ಲಿ ಗಗನಕ್ಕೇರಿದ ಕೋಳಿ ಮಾಂಸದ ಬೆಲೆ, ಕೆಜಿಗೆ ₹100 ಹೆಚ್ಚಳ!

ತಮಿಳುನಾಡಿನ ಕೋಳಿ ಸಾಕಾಣಿಕೆದಾರರು ಖಾಸಗಿ ಕಂಪನಿಗಳು ನೀಡುತ್ತಿರುವ ಕಡಿಮೆ ಸಾಕಾಣಿಕೆ ದರದ ವಿರುದ್ಧ ಸಿಡಿದೆದ್ದಿದ್ದು ಜನವರಿ 1, 2026 ರಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಬ್ರಾಯ್ಲರ್ ಕೋಳಿಗಳಿಗೆ ಪ್ರಸ್ತುತ ನೀಡುತ್ತಿರುವ 6.5 ರೂ. ದರವನ್ನು 20 ರೂ.ಗೆ ಹೆಚ್ಚಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಈ ಮುಷ್ಕರದಿಂದಾಗಿ ತಮಿಳುನಾಡಿನ ಪ್ರಮುಖ ಉತ್ಪಾದನಾ ಕೇಂದ್ರಗಳಾದ ಪಲ್ಲಡಂ, ಈರೋಡ್ ಮತ್ತು ಕೊಯಮತ್ತೂರು ಭಾಗಗಳಿಂದ ಬೆಂಗಳೂರಿಗೆ ಬರುತ್ತಿದ್ದ ಕೋಳಿ ಮಾಂಸದ ಪೂರೈಕೆ ಸ್ಥಗಿತಗೊಂಡಿದೆ. ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಚಿಕನ್ ಬೆಲೆ ಗಣನೀಯವಾಗಿ ಏರಿಕೆಯಾಗಿದೆ.

ವಿಜಯ ಕರ್ನಾಟಕ 17 Jan 2026 9:18 pm

ಆರ್‌ಸಿಬಿ ಫ್ಯಾನ್ಸ್‌ಗೆ ಹಬ್ಬ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ಐಕಾನಿಕ್ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಅಂತರರಾಷ್ಟ್ರೀಯ ಪಂದ್ಯಗಳು ಹಾಗೂ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಕರ್ನಾಟಕ ಗೃಹ ಇಲಾಖೆಯು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಈ ಸಂಬಂಧ ಅಧಿಕೃತ ಅನುಮೋದನೆ ನೀಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಎಸ್‌ಸಿಎ,

ಒನ್ ಇ೦ಡಿಯ 17 Jan 2026 9:11 pm

ಸ್ಕೂಟರ್ ಸಹಿತ ಎಲೆಕ್ಟ್ರಿಷಿಯನ್ ನಾಪತ್ತೆ

ಶಿರ್ವ, ಜ.17: ಎಲೆಕ್ಟ್ರಿಷಿಯನೊಬ್ಬರು ಮನೆಯಿಂದ ಸ್ಕೂಟರ್‌ನಲ್ಲಿ ಹೋದವರು ನಾಪತ್ತೆಯಾಗಿರುವ ಘಟನೆ ಜ.13ರಂದು ಬೆಳ್ಳೆ ಗ್ರಾಮದ ಪಾಂಬೂರು ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಪಾಂಬೂರು ಮಡಿವಾಳ ತೋಟ ನಿವಾಸಿ ಸಾಧು ಸಾಲಿಯಾನ್ ಎಂಬವರ ಮಗ ಸಚಿನ್ ಎಸ್ ಸಾಲಿಯಾನ್(33) ಎಂದು ಗುರುತಿಸಲಾಗಿದೆ. ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಇವರು, ಮನೆಯಿಂದ ತನ್ನ ಸ್ಕೂಟರ್‌ನಲ್ಲಿ ಹೋದವರು ಕೆಲಸಕ್ಕೂ ಹೋಗದೆ ವಾಪಾಸ್ಸು ಮನೆಗೂ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Jan 2026 9:10 pm

ಬಾರ್ ಪರವಾನಗಿ ನೀಡಲು 25 ಲಕ್ಷ ಲಂಚ; ಅಬಕಾರಿ ಉಪ ಆಯುಕ್ತ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಬಾರ್ ಮತ್ತು ಮೈಕ್ರೋಬ್ರೂವರಿ ಪರವಾನಗಿ ನೀಡಲು 80 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇಲಾಖೆಯ ಮೂವರು ಅಧಿಕಾರಿಗಳನ್ನು ಬಂಧಿಸಲಾಗಿದೆ. 25 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕಾರ್ಯಾಚರಣೆಯಿಂದ ಅಬಕಾರಿ ಇಲಾಖೆಯ ಭ್ರಷ್ಟಾಚಾರ ಬಯಲಾಗಿದೆ. ತನಿಖೆ ಮುಂದುವರಿದಿದೆ.

ವಿಜಯ ಕರ್ನಾಟಕ 17 Jan 2026 9:09 pm

ಮಹಾರಾಷ್ಟ್ರ ಚುನಾವಣೆಯಲ್ಲಿ ಶಾಯಿ ವಿವಾದ: ಮಾರ್ಕರ್ ಪೆನ್ VS ಅಳಿಸಲಾಗದ ಶಾಯಿ; ಏನಿದು ವಿವಾದ?

ಬೃಹನ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಚ್ರದ 29 ನಗರ ಪಾಲಿಕೆಗಳಲ್ಲಿ ಗುರುವಾರ ಮತದಾನ ನಡೆದಿದ್ದು ಶೇ 52.94 ರಷ್ಟು ಮತಗಳು ಚಲಾವಣೆ ಆಗಿದೆ. ಮುಂಬೈ ಮಹಾನಗರ ಪಾಲಿಕೆಯಲ್ಲಿ ಹೆಚ್ಚಿನ ವಾರ್ಡ್ ಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇನ್ನೂ ಚುನಾವಣೆಯಲ್ಲಿ ಬಳಸಿದ ಶಾಯಿ ಬಗ್ಗೆ

ಒನ್ ಇ೦ಡಿಯ 17 Jan 2026 9:05 pm

ಪ್ರತ್ಯೇಕ ಪ್ರಕರಣ: ನಾಲ್ವರು ಆತ್ಮಹತ್ಯೆ

ಅಜೆಕಾರು, ಜ.17: ಪತ್ನಿಯ ಮರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಜೆಕಾರು ನಿವಾಸಿ ದೇವರಾಯ ಹೆಗ್ಡೆ(80) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.15ರಂದು ರಾತ್ರಿ ಮನೆಯ ಹಿಂಬದಿಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು: ವೈಯಕ್ತಿಕ ಕಾರಣದಿಂದ ಮನನೊಂದ ಯಳಜಿತ ಗ್ರಾಮದ ಕಾಂಬ್ಳಿಕೇರಿ ನಿವಾಸಿ ಚಂದು(85) ಎಂಬವರು ಜ.14ರ ಬೆಳಗ್ಗೆಯಿಂದ ಜ.16ರ ಮಧ್ಯಾಹ್ನದ ಮಧ್ಯಾವಧಿಯಲ್ಲಿ ಮನೆ ಸಮೀಪದ ಹೊಲದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ: ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ಜ.8ರಂದು ರಾತ್ರಿ ಮನೆಯ ಜಗಲಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹೆಜಮಾಡಿ ಗ್ರಾಮದ ಪಡುಕೆರೆ ನಿವಾಸಿ ಗಣೇಶ್(48) ಎಂಬವರು ತೀವ್ರವಾಗಿ ಅಸ್ವಸ್ಥ ಗೊಂಡು ಜ.16ರಂದು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು: ಮದ್ಯ ಸೇವನೆ ಚಟದಿಂದ ಹೊಟ್ಟೆನೋವು ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಗಲಕೋಟೆ ಮೂಲದ ಪ್ರಕಾಶ ಎಂಬವರು ತಾನು ಮನೆ ಕೆಲಸ ಮಾಡಿಕೊಂಡಿದ್ದ ಮಣಿಪುರ ಗ್ರಾಮದ ಸಖರಾಮ ಶೆಟ್ಟಿ ಎಂಬ ವರ ಜಾಗದಲ್ಲಿರುವ ಬಾವಿಗೆ ಜ.16ರಂದು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Jan 2026 9:03 pm

ನಿರ್ಗಮನ ಪರ್ಯಾಯ ಪುತ್ತಿಗೆ ಯತಿಗಳಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ, ಜ.17: ಚತುರ್ಥ ಪರ್ಯಾಯ ಮಹೋತ್ಸವವನ್ನು ಯಶಸ್ವಿಯಾಗಿ ಪೂರೈಸಿದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರಿಗೆ ಶಿರೂರು ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಶನಿವಾರ ಉಡುಪಿ ರಥಬೀದಿಯಲ್ಲಿ ಆಯೋಜಿಸಲಾಗಿತ್ತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ, ಕೆಲವರಲ್ಲಿ ಪುತ್ತಿಗೆ ಸ್ವಾಮೀಜಿ ಯವರಲ್ಲಿ ಕೋಟಿಗಟ್ಟಲೆ ಹಣ ಸಂಗ್ರಹ ಇದೆ ಎಂಬ ಭಾವನೆ ಇದೆ. ಆದರೆ ನಮ್ಮ ಹತ್ತಿರ ಯಾವುದೇ ಹಣ ಸಂಗ್ರಹ ಇಲ್ಲ. ಖರ್ಚು ಮಾಡಿದಷ್ಟು ಹಣ ಬರುತ್ತದೆ ಎಂಬ ಭಾವನೆ ನಮ್ಮದು. ಹಣ ಖರ್ಚು ಮಾಡುವುದೇ ಹಣ ಸಂಪಾದನೆ ಮಾಡುವ ಗುಟ್ಟು. ನಾವು ಹಣ ಕೂಡಿಟ್ಟು ಯಾವುದೇ ಯೋಜನೆ ಮಾಡಿಲ್ಲ. ನಮ್ಮಲ್ಲಿ ಹಣ ಇಲ್ಲ, ಜನರ ವಿಶ್ವಾಸ ಇದೆ. ಅದೇ ನಮ್ಮ ದೊಡ್ಡ ಸಂಪತ್ತು ಎಂದರು. ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶ್‌ಪಾಲ್ ಸುವರ್ಣ ವಹಿಸಿದ್ದರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿದರು. ಉಡುಪಿ ಸಂಸ್ಕೃತ ಕಾಲೇಜಿನ ಉಪನ್ಯಾಸಕ ಡಾ.ಷಣ್ಮುಗ ಹೆಬ್ಬಾರ್ ಅಭಿನಂದನಾ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ದರು. ಸ್ವಾಗತ ಸಮಿತಿಯ ಕೋಶಾಧಿಕಾರಿ ಜಯ ಪ್ರಕಾಶ್ ಕೆದ್ಲಾಯ ಅಭಿನಂದನಾ ಪತ್ರವನ್ನು ವಾಚಿಸಿದರು. ಹೊರೆಕಾಣಿಕೆ ಸಮಿತಿಯ ಸಂಚಾಲಕ ಸುಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 17 Jan 2026 9:00 pm

Bengaluru | ಹಿಟ್ ಆ್ಯಂಡ್ ರನ್ : ಮೂವರು ಮೃತ್ಯು

ಬೆಂಗಳೂರು : ಹಿಟ್ ಆ್ಯಂಡ್ ರನ್‍ಗೆ ಮೂವರು ಯುವಕರು ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲೂಕಿನ ಅಗಲಕೋಟೆ ಬಳಿ ಶನಿವಾರ ವರದಿಯಾಗಿದೆ. ಘಟನೆಯಲ್ಲಿ ಚಿಕ್ಕಜಾಲ ಮೂಲದ ತೌಸಿಫ್ ಸೇರಿದಂತೆ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಬಂದು, ಪಕ್ಕದ ರಸ್ತೆಯಲ್ಲಿ ಎದುರಿನಿಂದ ಬಂದ ಟಿಪ್ಪರ್‌ ನಡಿ ಸಿಲುಕಿದೆ. ಅಪಘಾತದ ರಭಸಕ್ಕೆ ಮೂವರು ಯುವಕರ ದೇಹಗಳು ಛಿದ್ರಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ನಂತರ ಟಿಪ್ಪರ್ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿರುವುದಾಗಿ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 8:52 pm

ಇರಾನ್‌ನಿಂದ ವಿದ್ಯಾರ್ಥಿಗಳು ಸಹಿತ ಹಲವು ಭಾರತೀಯರು ಸ್ವದೇಶಕ್ಕೆ ವಾಪಸ್

ಹೊಸದಿಲ್ಲಿ,ಜ.17: ವ್ಯಾಪಕವಾದ ಆಡಳಿತ ವಿರೋಧಿ ಪ್ರತಿಭಟನೆಯನ್ನು ಎದುರಿಸುತ್ತಿರುವ ಇರಾನ್‌ನಿಂದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಭಾರತೀಯರು ಶುಕ್ರವಾರ ತಡರಾತ್ರಿ ಹೊಸದಿಲ್ಲಿಯ ವಿಮಾನನಿಲ್ದಾಣದಲ್ಲಿ ಬಂದಿಳಿದಿದ್ದಾರೆ. 12-13 ಮಂದಿಯ ಭಾರತೀಯರ ತಂಡದಲ್ಲಿದ್ದ ಅಲ್‌ನಕ್ವಿಯವರನ್ನು ಹೊಸದಿಲ್ಲಿಯ ವಿಮಾನನಿಲ್ದಾಣದಲ್ಲಿ ಸಂದರ್ಶಿಸಿದ ಪತ್ರಕರ್ತರು, ಇರಾನ್‌ನಲ್ಲಿ ಯಾವುದೇ ರೀತಿಯ ತೊಂದರೆಯನ್ನು ಎದುರಿಸಿದ್ದೀರಾ ಎಂಬ ಪ್ರಶ್ನಿಸಿದಾಗ, ತನಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲವೆಂದು ತಿಳಿಸಿದರು. ‘‘ನಾವು ಟೆಹರಾನ್‌ನಿಂದ ಆಗಮಿಸಿದ್ದೇವೆ. ಇದಕ್ಕೂ ಮುನ್ನ ನಾವು ಇರಾಕ್‌ನಲ್ಲಿದ್ದು ಅಲ್ಲಿಂದ ಇರಾನ್‌ಗೆ ಪ್ರಯಾಣಿಸಿದ್ದೇವೆ. ಸುಮಾರು 8 ದಿನಗಳ ವಾಸ್ತವ್ಯದ ಆನಂತರ ನಾವು ಭಾರತಕ್ಕೆ ವಾಪಸಾಗಿದ್ದೇವೆ’’ ಎಂದವರು ಪಿಟಿಐಗೆ ತಿಳಿಸಿದ್ದಾರೆ. ಶಿರಾಝ್‌ನ ವೈದ್ಯಕೀಯ ಕಾಲೇಜ್‌ನಲ್ಲಿ ಕಲಿಯುತ್ತಿಯುವ ವಿದ್ಯಾರ್ಥಿನಿಯೊಬ್ಬರು ಸುದ್ದಿಗಾರರ ಜೊತೆ ಮಾತನಾಡುತ್ತಾ, ಅಲ್ಲಿ ಇಂಟರ್‌ನೆಟ್ ಕಾರ್ಯನಿರ್ವಹಿಸುತ್ತಿಲ್ಲ. ದೇಶಾದ್ಯಂತ ಏನಾಗುತ್ತಿದೆಯೆಂಬುದು ನಿಖರವಾಗಿ ಗೊತ್ತಾಗುತ್ತಿಲ್ಲವೆಂದರು. ತಾನಿದ್ದ ಶಿರಾಝ್ ನಗರದಲ್ಲಿ ಪರಿಸ್ಥಿತಿ ಉತ್ತಮವಾಗಿತ್ತು. ತಾವೆಲ್ಲಾ ಸ್ವಂತ ಖರ್ಚಿನಲ್ಲಿ ವಾಣಿಜ್ಯ ವಿಮಾನದಲ್ಲಿ ಆಗಮಿಸಿದ್ದೇವೆಯೇ ಹೊರತು ಭಾರತ ಸರಕಾರವು ಏರ್ಪಾಡು ಮಾಡಿಲ್ಲವೆಂದು ಹೇಳಿದರು. ಇರಾನ್‌ನಿಂದ ವಾಪಾಸಾ ತಮ್ಮ ಬಂಧುಗಳನ್ನು ಸ್ವಾಗತಿಸಲು ದಿಲ್ಲಿ ವಿಮಾನನಿಲ್ದಾಣದಲ್ಲಿ ಶುಕ್ರವಾರ ಭಾರೀ ಸಂಖ್ಯೆಯ ಜನರು ನೆರೆದಿದ್ದರು. ಹಣದುಬ್ಬರ ಹಾಗೂ ಇರಾನ್ ಕರೆನ್ಸಿ ರಿಯಾಲ್‌ನ ಮೌಲ್ಯದ ಕುಸಿತದ ಬಳಿಕ ಇರಾನ್‌ನಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು. ಆನಂತರ ಅದು ಆಡಳಿತ ವಿರೋಧಿ ಪ್ರತಿಭಟನೆಯಾಗಿ ಮಾರ್ಪಟ್ಟಿತ್ತು. ಟೆಹರಾನ್ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆಯಲ್ಲಿ ಈವರೆಗೆ ಕನಿಷ್ಠ 2,500 ಮಂದಿ ಮೃತಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ವಾರ್ತಾ ಭಾರತಿ 17 Jan 2026 8:49 pm

ಅತ್ಯಾಚಾರ ಆರೋಪ| ರಾಹುಲ್ ಮಾಂಕೂಟತ್ತಿಲ್‌ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ತಿರುವನಂತಪುರ,ಜ.17: ಅತ್ಯಾಚಾರ ಹಾಗೂ ಕ್ರಿಮಿನಲ್ ಬೆದರಿಕೆಯ ಆರೋಪಗಳಿಗೆ ಸಂಬಂಧಿಸಿ ಬಂಧಿತರಾಗಿರುವ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ತಿರುವಲ್ಲಾದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ-1 ಶನಿವಾರ ತಿರಸ್ಕರಿಸಿದೆ. ದೂರುದಾರ ಮಹಿಳೆಯ ಜೊತೆಗಿನ ತನ್ನ ಸಂಬಂಧವು ಪರಸ್ಪರ ಸಹಮತದ್ದಾಗಿತ್ತು ಹಾಗೂ ಆಕೆಯ ಸಮ್ಮತಿಯೂ ಇತ್ತು ಎಂಬ ರಾಹುಲ್ ಮಾಂಕೂಟತ್ತಿಲ್ ಅವರ ವಾದವನ್ನು ಪುರಸ್ಕರಿಸಲು ಮುನ್ಸಿಫ್ ಮ್ಯಾಜಿಸ್ಟ್ರೇಟ್ ಅರುಂಧತಿ ದಿಲೀಪ್ ಅವರು ನಿರಾಕರಿಸಿದ್ದಾರೆ. ರಾಹುಲ್ ಹಾಗೂ ಸಂತ್ರಸ್ತೆಯ ನಡುವೆ ಸ್ನೇಹಯುತ ಹಾಗೂ ಪರಸ್ಪರ ಸಮ್ಮತಿ ಪೂರ್ವಕವಾದ ಸಂಬಂಧವಿತ್ತೆಂಬುದನ್ನು ದೃಢಪಡಿಸುವ ಚಾಟ್‌ಗಳನ್ನು ಹಾಗೂ ಆಡಿಯೋ ಸಂಭಾಷಣೆಗಳನ್ನು ಕೂಡಾ ಆರೋಪಿ ಪರ ವಕೀಲರು ಹಾಜರುಪಡಿಸಿದ್ದರು. ಪ್ರಾಸಿಕ್ಯೂಶನ್ ವಕೀಲರು, ರಾಹುಲ್ ಮಾಂಕೂಟತ್ತಿಲ್ ಅವರಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಆರೋಪಿಯು ಅಪರಾಧ ಪ್ರವೃತ್ತಿಯವರೆಂದು ಆಪಾದಿಸಿದರು. ಒಂದು ವೇಳೆ ಮಾಂಕೂಟತ್ತಿಲ್ ಅವರಿಗೆ ಜಾಮೀನು ನೀಡಿದರೆ ಅವರು ಸಂತ್ರಸ್ತೆಯ ಮೇಲೆ ಪ್ರಭಾವ ಬೀರುವ ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವ ಅಪಾಯವಿದೆಯೆಂದು ಹೇಳಿದರು. ಈ ನಡುವೆ ರಾಹುಲ್ ಅವರು ಜಾಮೀನಿನಲ್ಲಿ ಬಿಡುಗಡೆ ಕೋರಿ ಪಟ್ಟಣಂತಿಟ್ಟ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಮೂರನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಂಕೂಟತ್ತಿಲ್ ಅವರನ್ನು ರವಿವಾರ ಬಂಂಧಿಸಲಾಗಿತ್ತು. ಅವರಿಗೆ ತಿರುವಲ್ಲಾ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನ್ಯಾಯಾಂಗ ಕಸ್ಟಡಿಯನ್ನು ವಿಧಿಸಿತ್ತು. ವಿದೇಶದಲ್ಲಿ ನೆಲೆಸಿರುವ ಕೊಟ್ಟಾಯಂನ ಮಹಿಳೆಯೊಬ್ಬರು ನೀಡಿದ ದೂರನ್ನು ಆಧರಿಸಿ ಈ ಪ್ರಕರಣವನ್ನು ದಾಖಲಿಸಲಾಗಿದೆ.

ವಾರ್ತಾ ಭಾರತಿ 17 Jan 2026 8:47 pm

ಯಾದಗಿರಿ | ಲುಂಬಿನಿ ಗಾರ್ಡನ್‌ನಲ್ಲಿ ದೆವ್ವದ ವದಂತಿ !

ಸತ್ಯಾಸತ್ಯತೆ ಬಯಲಿಗೆಳೆಯಲು ಜ.18ರಂದು ವೈಜ್ಞಾನಿಕ ಪರಿಷತ್ತಿನಿಂದ ಜಾಗೃತಿ ಅಭಿಯಾನ

ವಾರ್ತಾ ಭಾರತಿ 17 Jan 2026 8:46 pm

ವಲಸೆ ಕಾರ್ಮಿಕರ ಮನೆಗೆ ಅಕ್ರಮ ಪ್ರವೇಶ, ಬೆದರಿಕೆ ಪ್ರಕರಣ : ಪುನೀತ್ ಕೆರೆಹಳ್ಳಿಗೆ ಜಾಮೀನು

ಬೆಂಗಳೂರು : ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡಿದ ಆರೋಪದಡಿ ಬಂಧಿತರಾಗಿದ್ದ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿ ಹಾಗೂ ಮತ್ತೊಬ್ಬರಿಗೆ ಆನೇಕಲ್ ತಾಲೂಕು ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಶನಿವಾರ ಆದೇಶಿಸಿದೆ. ಜ.13ರಂದು ಬನ್ನೇರುಘಟ್ಟ ಪೊಲೀಸ್ ಠಾಣೆ ಸರಹದ್ದಿನ ಎಸ್.ಬಿಂಗೀಪುರದ ಸಿದ್ದೇಶ್ ಕೆ.ಆರ್. ಎಂಬುವರ ಮಾಲಕತ್ವದ ಜಮೀನಿನ ಬಾಡಿಗೆ ಮನೆಯಲ್ಲಿ ವಾಸವಿದ್ದವರಿಗೆ ಧಮ್ಕಿ ಹಾಕಿ, ಗಲಾಟೆ ಮಾಡಿದ್ದಲ್ಲದೆ, ಅಲ್ಲಿಗೆ ಬಂದ ಸಿದ್ದೇಶ್ ಕೆ.ಆರ್. ಅವರಿಗೂ ನಿಂದಿಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ದಾಖಲಾದ ದೂರಿನ ಮೇರೆಗೆ ಶುಕ್ರವಾರ(ಜ.17) ತಡರಾತ್ರಿ 11 ಗಂಟೆ ಸುಮಾರಿಗೆ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿ ಹಾಗೂ ಡಾ.ನಾಗೇಂದ್ರಪ್ಪ ಶಿರೂರು ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಜ.17ರ ಶನಿವಾರ ಬಂಧಿತ ಆರೋಪಿಗಳನ್ನು ಆನೇಕಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಪ್ರಕರಣದಲ್ಲಿ ಬಲವಂತದ ಕ್ರಮ ಜರುಗಿಸದಂತೆ ಸೂಚಿಸಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ದೂರಿನಲ್ಲೇನಿದೆ?: ಈ ಸಂಬಂಧ ಜಮೀನಿನ ಮಾಲಕ ಸಿದ್ದೇಶ್ ಕೆ.ಆರ್. ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, ‘ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದ ಸಾಯಿಬೃಂದಾವನ ಲೇಔಟ್ ಬಳಿ, ಜನವರಿ 13ರ ಬೆಳಗಿನ ಜಾವ 12.05ರ ಸುಮಾರಿಗೆ ತಮ್ಮ ಮಾವ ಮಲ್ಲಿಕಾರ್ಜುನ ಅವರು ಬಾಡಿಗೆಗೆ ನೀಡಿರುವ ಜಾಗದ ಬಳಿ ಗಲಾಟೆ ನಡೆಯುತ್ತಿದೆ ಎಂಬ ಮಾಹಿತಿ ಸಿದ್ದೇಶ ಕೆ.ಆರ್. ಅವರಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಸುಮಾರು 12.30ರ ವೇಳೆಗೆ ಬಾಡಿಗೆ ಮನೆಯ ಬಳಿ ತೆರಳಿದ್ದಾರೆ. ಅಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಶಿರೂರು ಹಾಗೂ ಇತರರು ಸೇರಿಕೊಂಡು ಬಾಡಿಗೆದಾರರೊಂದಿಗೆ, ‘ನೀವು ಬಾಂಗ್ಲಾದೇಶದವರು, ಇಲ್ಲಿಗೆ ಏಕೆ ಬಂದಿದ್ದೀರಿ?’ ಎಂದು ವಾಗ್ವಾದ ನಡೆಸುತ್ತಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಲಾಟೆಯನ್ನು ತಡೆಯಲು ಮುಂದಾದ ಸಿದ್ದೇಶ ಕೆ.ಆರ್. ಅವರನ್ನು, ‘ಇವರಿಗೆ ಏಕೆ ಮನೆ ಬಾಡಿಗೆ ಕೊಟ್ಟಿದ್ದೀಯ?’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಬಾಡಿಗೆದಾರರು ಕರ್ನಾಟಕದ ಆಧಾರ್ ಕಾರ್ಡ್ ತೋರಿಸಿದ್ದರಿಂದಲೇ ಮನೆ ಬಾಡಿಗೆ ನೀಡಲಾಗಿದೆ ಎಂದು ತಿಳಿಸಿದರೂ, ಆರೋಪಿಗಳು ಗಲಾಟೆ ಮುಂದುವರಿಸಿ, ‘ನೀನು ಬಾಂಗ್ಲಾದೇಶದವರಿಗೆ ಮನೆ ಬಾಡಿಗೆ ಕೊಟ್ಟಿದ್ದಕ್ಕೆ ನಿನ್ನನ್ನು ಜೀವ ಸಹಿತ ಸುಮ್ಮನೆ ಬಿಡುವುದಿಲ್ಲ’ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬೆಳಗಿನ ಜಾವ ಸುಮಾರು 1 ಗಂಟೆಗೆ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಬಾಡಿಗೆದಾರರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಪುನೀತ್ ಕೆರೆಹಳ್ಳಿ ಹಾಗೂ ಡಾ.ನಾಗೇಂದ್ರಪ್ಪ ಶಿರೂರು ಮತ್ತೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ ಎಂಬ ಭಯದಿಂದ ತಡವಾಗಿ ದೂರು ನೀಡಿರುವುದಾಗಿ ಸಿದ್ದೇಶ ಕೆ.ಆರ್. ತಿಳಿಸಿದ್ದಾರೆ. ತಮ್ಮ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿ, ಅವಾಚ್ಯ ನಿಂದನೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಶಿರೂರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಈ ಪ್ರಕರಣದ ಕುರಿತು ಬನ್ನೇರುಘಟ್ಟ ಪೊಲೀಸರು ಬಿಎನ್‍ಎಸ್ ಸೆಕ್ಷನ್ 126(2), 3(5), 329(3), 351(2) 352 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಾರ್ತಾ ಭಾರತಿ 17 Jan 2026 8:43 pm

ತಮಿಳುನಾಡು ವಿಧಾನಸಭಾ ಚುನಾವಣೆ| ಪ್ರತಿ ಕುಟುಂಬಗಳಿಗೆ ತಲಾ 2,000 ರೂ.ನೆರವು ಸೇರಿದಂತೆ 5 ಭರವಸೆಗಳನ್ನು ನೀಡಿದ AIADMK

ಚೆನ್ನೈ: ಶನಿವಾರ ಎಲ್ಲರಿಗಿಂತ ಮುಂಚಿತವಾಗಿ ಚುನಾವಣಾ ಭರವಸೆಗಳನ್ನು ಪ್ರಕಟಿಸಿರುವ ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ ಎಐಎಡಿಎಂಕೆ, ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೆ ಮಾಸಿಕ ತಲಾ 2,000 ರೂ. ನೆರವು, ನಗರ ಬಸ್‌ಗಳಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ, ಹಾಗೂ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ಅವಧಿಯನ್ನು 125 ದಿನಗಳಿಂದ 150 ದಿನಗಳಿಗೆ ಹೆಚ್ಚಿಸುವುದಾಗಿ ಸೇರಿದಂತೆ ಐದು ಭರವಸೆಗಳನ್ನು ನೀಡಿದೆ. ಈ ಐದು ಚುನಾವಣಾ ಭರವಸೆಗಳನ್ನು ಪ್ರಕಟಿಸಲು ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ ಜನ್ಮದಿನವನ್ನು ಆಯ್ದುಕೊಂಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಪಕ್ಷದ ಪ್ರಣಾಳಿಕೆ ಮಹಿಳೆಯರನ್ನು ಮೊದಲ ಸ್ಥಾನದಲ್ಲಿರಿಸುವುದರೊಂದಿಗೆ ಕಲ್ಯಾಣ, ಘನತೆ ಮತ್ತು ಆರ್ಥಿಕ ನ್ಯಾಯದ ಮೇಲಿನ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. “ಈ ಭರವಸೆಗಳು ಜನರನ್ನು ಮೊದಲ ಸ್ಥಾನದಲ್ಲಿಡುವ ಎಐಎಡಿಎಂಕೆಯ ಆಡಳಿತ ಪರಂಪರೆಯನ್ನು ಪ್ರತಿಫಲಿಸುತ್ತವೆ. ನಮ್ಮ ಗುರಿ ಮಹಿಳೆಯರನ್ನು ಸಬಲೀಕರಣಗೊಳಿಸುವುದು, ಜೀವನೋಪಾಯವನ್ನು ಬಲಪಡಿಸುವುದು, ಎಲ್ಲರಿಗೂ ವಸತಿಯನ್ನು ಖಾತರಿಗೊಳಿಸುವುದು ಹಾಗೂ ಕಾರ್ಮಿಕರ ಘನತೆಯನ್ನು ಮರುಸ್ಥಾಪಿಸುವುದಾಗಿದೆ” ಎಂದು ಅವರು ತಿಳಿಸಿದ್ದಾರೆ. ‘ಕುಳವಿಕ್ಕು’ ಎಂದು ಹೆಸರಿಸಲಾದ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥೆಯ ಖಾತೆಗೆ ಮಾಸಿಕ ತಲಾ 2,000 ರೂ. ನೆರವನ್ನು ನೇರವಾಗಿ ಜಮಾ ಮಾಡಲಾಗುತ್ತದೆ. ಡಿಎಂಕೆ ಸರಕಾರ ಜಾರಿಗೆ ತಂದಿರುವ ‘ಕಲೈಗ್ನರ್ ಮಗಳಿರ್ ಉರಿಮೈ ತಿಟ್ಟಂ’ ಯೋಜನೆಯಡಿ ರಾಜ್ಯದಲ್ಲಿ ಸುಮಾರು 1.31 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ತಲಾ 1,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಮೊತ್ತವನ್ನು ಎಐಎಡಿಎಂಕೆ ತನ್ನ ಚುನಾವಣಾ ಭರವಸೆಯಲ್ಲಿ ಎಲ್ಲಾ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ 2,000 ರೂ.ಗೆ ಏರಿಸುವುದಾಗಿ ಘೋಷಿಸಿದೆ.

ವಾರ್ತಾ ಭಾರತಿ 17 Jan 2026 8:30 pm

Maharashtra ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಠಾಕ್ರೆ–ಪವಾರ್ ಎದುರು ಬಿಜೆಪಿ ಪ್ರಾಬಲ್ಯ; 2029 ಚುನಾವಣೆಗೆ ಹೆಚ್ಚಿದ ನಿರೀಕ್ಷೆ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 29 ಮಹಾನಗರ ಪಾಲಿಕೆಗಳ 2,869 ಸ್ಥಾನಗಳಲ್ಲಿ 1,425 ಸ್ಥಾನಗಳನ್ನು ಗೆದ್ದಿದೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ)ಯಲ್ಲಿ ಜಯ ಸಾಧಿಸಿರುವ ಬಿಜೆಪಿ, ರಾಜ್ಯದ ಏಕೈಕ ಅತಿದೊಡ್ಡ ಮತ್ತು ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ. 227 ಸದಸ್ಯ ಬಲದ ಬಿಎಂಸಿಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದಿದ್ದು, ಶಿವಸೇನಾ 29 ಸ್ಥಾನಗಳನ್ನು ಪಡೆದುಕೊಂಡಿದೆ. ಶಿವಸೇನಾ (ಯುಬಿಟಿ) 65 ಮತ್ತು ಎಂಎನ್‌ಎಸ್ ಆರು ಸ್ಥಾನಗಳನ್ನು ಗೆದ್ದಿವೆ. ವಂಚಿತ್ ಬಹುಜನ ಅಘಾಡಿ (ವಿಬಿಎ) ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ 24 ಸ್ಥಾನಗಳನ್ನು ಗಳಿಸಿದ್ದು, ಎಐಎಂಐಎಂ 8, ಎನ್‌ಸಿಪಿ 3, ಸಮಾಜವಾದಿ ಪಕ್ಷ 2 ಮತ್ತು ಎನ್‌ಸಿಪಿ (ಎಸ್‌ಪಿ) ಕೇವಲ ಒಂದು ಸ್ಥಾನ ಗಳಿಸಿವೆ. ಪುಣೆ ಚುನಾವಣೆಯಲ್ಲಿ ಬಿಜೆಪಿ 119 ಸ್ಥಾನಗಳನ್ನು ಗೆದ್ದು ಪವಾರ್ ಕುಟುಂಬಕ್ಕೆ ರಾಜಕೀಯ ಹೊಡೆತ ನೀಡಿದೆ. ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 27 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಅದರ ಮಿತ್ರಪಕ್ಷ ಎನ್‌ಸಿಪಿ (ಎಸ್‌ಪಿ) ಮೂರು ಸ್ಥಾನಗಳನ್ನು ಮತ್ತು ಕಾಂಗ್ರೆಸ್ 15 ಸ್ಥಾನಗಳನ್ನು ಪಡೆದಿವೆ. ಛತ್ರಪತಿ ಸಂಭಾಜಿನಗರದಲ್ಲಿ ಬಿಜೆಪಿ 57, ಶಿವಸೇನಾ 13, ಕಾಂಗ್ರೆಸ್ 1 ಮತ್ತು ಎಐಎಂಐಎಂ 33 ಸ್ಥಾನಗಳನ್ನು ಗಳಿಸಿವೆ. ಅಂತಿಮ ಲೆಕ್ಕಾಚಾರದ ಪ್ರಕಾರ, ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ 1,425 ಸ್ಥಾನಗಳನ್ನು ಗೆದ್ದಿದೆ. ಶಿವಸೇನಾ 399, ಕಾಂಗ್ರೆಸ್ 324, ಎನ್‌ಸಿಪಿ 167, ಶಿವಸೇನಾ (ಯುಬಿಟಿ) 155, ಎನ್‌ಸಿಪಿ (ಎಸ್‌ಪಿ) 36, ಎಂಎನ್‌ಎಸ್ 13, ಬಿಎಸ್‌ಪಿ 6, ಇತರ ಪಕ್ಷಗಳು 129, ಮಾನ್ಯತೆ ಪಡೆಯದ ಪಕ್ಷಗಳು 196 ಮತ್ತು 19 ಸ್ಥಾನಗಳಲ್ಲಿ ಪಕ್ಷೇತರರು ಗೆದ್ದಿದ್ದಾರೆ. ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಫಲಿತಾಂಶಗಳು 2029ರ ಚುನಾವಣೆಗೆ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಬಿಜೆಪಿಯನ್ನು ರಾಜ್ಯದ ಏಕೈಕ ಅತಿದೊಡ್ಡ ಮತ್ತು ಬಲಿಷ್ಠ ಪಕ್ಷವಾಗಿ ಬಿಂಬಿಸಿವೆ. ಈ ಫಲಿತಾಂಶಗಳು ಮಹಾಯುತಿಯೊಳಗಿನ ಸಂಭಾವ್ಯ ಅಧಿಕಾರ ಪ್ರಾಬಲ್ಯವನ್ನು ತೋರಿಸುವುದರ ಜತೆಗೆ, ವಿರೋಧ ಪಕ್ಷವಾಗಿರುವ ಮಹಾ ವಿಕಾಸ್ ಅಘಾಡಿಯ ಭವಿಷ್ಯದ ಬಗ್ಗೆ ಸಹ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಮರಾಠಿ ಮತ ಬ್ಯಾಂಕ್‌ ನ ಕ್ರೋಡೀಕರಣ 20 ವರ್ಷಗಳ ಬಳಿಕ ಮತ್ತೆ ಒಂದಾದ ಉದ್ಧವ್ ಮತ್ತು ರಾಜ್ ಠಾಕ್ರೆ ಅವರ ಪ್ರಯತ್ನಗಳು ಮರಾಠಿ ಮತ ಬ್ಯಾಂಕ್ ಅನ್ನು ಕ್ರೋಢೀಕರಿಸುವ ಉದ್ದೇಶ ಹೊಂದಿದ್ದವು. ಆ ಭಾವನಾತ್ಮಕ ಆಕರ್ಷಣೆ ಮುಂಬೈನ ಪ್ರಮುಖ ಮರಾಠಿ ಮತದಾರರ ಪ್ರದೇಶಗಳಾದ ದಾದರ್, ಮಾಹಿಮ್, ಪರೇಲ್ ಸೇರಿದಂತೆ ಕೆಲವು ವಾರ್ಡ್‌ಗಳಲ್ಲಿ ಪರಿಣಾಮ ಬೀರಿತು. ಈ ಕ್ಷೇತ್ರಗಳಲ್ಲಿ ಠಾಕ್ರೆ ಬಣದ ಶಿವಸೇನಾ, ಶಿಂಧೆ ಬಣದ ಅಭ್ಯರ್ಥಿಗಳನ್ನು ಸೋಲಿಸಿತು. ಆದರೆ ರಾಜ್ಯದ ಉಳಿದ ಭಾಗಗಳಲ್ಲಿ ಉದ್ಧವ್ ಠಾಕ್ರೆ ಅವರಿಗೆ ಹಿನ್ನಡೆ ಎದುರಾಯಿತು. ಉದ್ಧವ್ ಬಣಕ್ಕೆ ಹಿನ್ನಡೆ; ಫಲಿತಾಂಶಗಳು ಹೇಳುವುದೇನು? ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣಾ ಫಲಿತಾಂಶಗಳು ಉದ್ಧವ್ ಠಾಕ್ರೆ ಮತ್ತು ಶಿವಸೇನಾ (ಯುಬಿಟಿ)ಗೆ ನಿರ್ಣಾಯಕ ತಿರುವು ತಂದಿವೆ. ಭಾರತದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯ ಮೇಲಿನ 25 ವರ್ಷಗಳ ಆಡಳಿತ ಈ ಚುನಾವಣೆಯೊಂದಿಗೆ ಅಂತ್ಯಗೊಂಡಿದೆ. ಬಿಎಂಸಿ ಕೇವಲ ಅಧಿಕಾರದ ಸಂಕೇತವಲ್ಲ; ಪಕ್ಷದ ರಾಜಕೀಯ ಪ್ರಭಾವ ಮತ್ತು ಆರ್ಥಿಕ ಬಲದ ಪ್ರಮುಖ ಮೂಲವೂ ಆಗಿತ್ತು. ಮಹಾರಾಷ್ಟ್ರದ ಪುರಸಭೆಗಳಲ್ಲಿ ಆಡಳಿತಾರೂಢ ಮಹಾಯುತಿ ಗೆಲ್ಲುವ ಮೂಲಕ ಬಿಜೆಪಿಯ ನಗರ ಪ್ರಾಬಲ್ಯ ಇನ್ನಷ್ಟು ಗಟ್ಟಿಯಾಗಿದೆ. ಸೀಮಿತ ಸಂಪನ್ಮೂಲಗಳೊಂದಿಗೆ ಹೋರಾಡುತ್ತಾ ಉದ್ಧವ್ ಠಾಕ್ರೆ ಮುಂಬೈ ಕೇಂದ್ರಿತ ಪ್ರಚಾರ ನಡೆಸಿದ್ದರು. ಅವರು ‘ಮರಾಠಿ ಮನೂಸ್’ಗಾಗಿ ಕಲ್ಯಾಣದ ಸಂದೇಶ ಹಾಗೂ ಸೇನೆಯ ಸಾಂಪ್ರದಾಯಿಕ ತಳಮಟ್ಟದ ಜಾಲವನ್ನು ಅವಲಂಬಿಸಿದ್ದರು. ಸೋದರ ಸಂಬಂಧಿ ರಾಜ್ ಠಾಕ್ರೆಯೊಂದಿಗೆ ಯುದ್ಧತಂತ್ರದ ಸಮನ್ವಯವು ಮರಾಠಿ ಮತಗಳನ್ನು ಕ್ರೋಢೀಕರಿಸುವ ಗುರಿಯನ್ನು ಹೊಂದಿತ್ತು. ಈ ತಂತ್ರವು ಶಿವಸೇನಾ (ಯುಬಿಟಿ)ಗೆ ದಕ್ಷಿಣ–ಮಧ್ಯ ಮುಂಬೈನಲ್ಲಿ, ದಾದರ್‌ ನಿಂದ ಬೈಕುಲ್ಲಾದವರೆಗೆ ಬಲವಾದ ಮತಾಧಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡಿದರೂ, ಬಿಎಂಸಿ ಅಧಿಕಾರ ಕಳೆದುಕೊಳ್ಳುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಏಕನಾಥ್ ಶಿಂಧೆ ನೇತೃತ್ವದ ಪ್ರತಿಸ್ಪರ್ಧಿ ಬಣದೊಂದಿಗೆ ಹೋಲಿಸಿದರೆ, ಠಾಕ್ರೆ ಮುಂಬೈನಲ್ಲಿ ತನ್ನ ನೆಲೆಯನ್ನು ಉಳಿಸಿಕೊಂಡರು. 25 ವರ್ಷಗಳ ಬಳಿಕ ಬಿಎಂಸಿ ಅಧಿಕಾರ ಕಳೆದುಕೊಂಡಿದ್ದರೂ, ಠಾಕ್ರೆಗಳು ತಮ್ಮ ಮರಾಠಿ ಗುರುತಿನ ರಾಜಕೀಯವನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ಈ ಹೋರಾಟ ಇನ್ನೂ ಮುಗಿದಿಲ್ಲ” ಎಂದು ಶಿವಸೇನಾ (ಯುಬಿಟಿ) ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಛಾಯಾಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಮರಾಠಿಗಳಿಗೆ ಯೋಗ್ಯ ಗೌರವ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಪಕ್ಷ ಸ್ಪಷ್ಟಪಡಿಸಿದೆ. ಈ ಸೋಲು ಶಿವಸೇನಾ (ಯುಬಿಟಿ)ಗೆ ತೀವ್ರ ಹೊಡೆತ ಶ್ರೀಮಂತ ನಾಗರಿಕ ಸಂಸ್ಥೆಯ ಮೇಲಿನ ನಿಯಂತ್ರಣವು ದಶಕಗಳ ಕಾಲ ಅವಿಭಜಿತ ಶಿವಸೇನೆಗೆ ಪೋಷಕ ಜಾಲಗಳು, ಅಸ್ಮಿತೆ ಮತ್ತು ಸಾಂಸ್ಥಿಕ ಬಲಕ್ಕೆ ವಿಶಿಷ್ಟ ಪ್ರವೇಶವನ್ನು ನೀಡಿತ್ತು. ಆದರೆ ಇದೀಗ ಪಕ್ಷ ವಿರೋಧ ಪಕ್ಷದ ಸ್ಥಾನಕ್ಕೆ ಸರಿದಿದೆ. ಸೋಲಿನ ಬಳಿಕ ಪಕ್ಷಾಂತರವನ್ನು ತಡೆಯುವುದು, ಮಹಾ ವಿಕಾಸ್ ಅಘಾಡಿಯ ಪತನದಿಂದ ಪಾಠ ಕಲಿಯುವುದು ಮತ್ತು ವಿಧಾನ ಪರಿಷತ್ತಿನಲ್ಲಿ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವ ಸವಾಲು ಉದ್ಧವ್ ಠಾಕ್ರೆ ಎದುರಾಗಿದೆ. ತಮ್ಮ ಸಾಂಪ್ರದಾಯಿಕ ಭದ್ರಕೋಟೆಗಳನ್ನು ಮೀರಿ ಪ್ರಸ್ತುತವಾಗಿರಲು, ಸೇನಾ (ಯುಬಿಟಿ) ರಾಜಕೀಯವನ್ನು ಮರುಕಲ್ಪಿಸಿಕೊಳ್ಳಬೇಕಾಗಿದೆ. ಮೂಲ ಮರಾಠಿ ಮತದಾರರನ್ನು ಮೀರಿ ಆಕರ್ಷಣೆಯನ್ನು ವಿಸ್ತರಿಸುವುದು ಹಾಗೂ ನಗರ ಆಡಳಿತದ ಎರಡೂ ಹಂತಗಳನ್ನು ನಿಯಂತ್ರಿಸುತ್ತಿರುವ ಬಿಜೆಪಿಯನ್ನು ಎದುರಿಸಬಲ್ಲ ಒಕ್ಕೂಟವನ್ನು ಪುನರ್‌ನಿರ್ಮಿಸುವುದು ಅಗತ್ಯವಾಗಿದೆ. ಪುಣೆ ಮುನ್ಸಿಪಲ್ ಚುನಾವಣೆಯಲ್ಲಿ ಪವಾರ್ ಬ್ರ್ಯಾಂಡ್‌ಗೆ ಹಿನ್ನಡೆ ಪುಣೆ ಮತ್ತು ಪಿಂಪ್ರಿ–ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಫಲಿತಾಂಶಗಳು ಸ್ಪಷ್ಟ ರಾಜಕೀಯ ಸಂದೇಶವನ್ನು ನೀಡಿವೆ. ಈ ನಗರ ಶಕ್ತಿ ಕೇಂದ್ರಗಳಲ್ಲಿ ಒಂದು ಕಾಲದಲ್ಲಿ ನಿರ್ಣಾಯಕವೆಂದು ಪರಿಗಣಿಸಲ್ಪಟ್ಟಿದ್ದ ಪವಾರ್ ಬ್ರ್ಯಾಂಡ್ ಹಿನ್ನಡೆಯನ್ನು ಅನುಭವಿಸಿದೆ. ಶರದ್ ಪವಾರ್ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಎರಡು ಬಣಗಳ ನಡುವೆ ಯುದ್ಧತಂತ್ರದ ಸಮನ್ವಯ ಇದ್ದರೂ, ನಿರೀಕ್ಷಿಸಿದ ಮಟ್ಟಿಗೆ ಮತಗಳು ಬಂದಿಲ್ಲ. ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿದೆ. ಕಳೆದ ದಶಕದಲ್ಲಿ ಪುಣೆಯ ಮತದಾರರ ಆದ್ಯತೆಗಳಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಮಧ್ಯಮ ವರ್ಗ, ಮೊದಲ ಬಾರಿಗೆ ಮತದಾನ ಮಾಡುವವರು ಮತ್ತು ಅಪಾರ್ಟ್‌ಮೆಂಟ್‌ ಗಳಲ್ಲಿ ವಾಸಿಸುವ ಜನರು ಸ್ಥಳೀಯ ನಾಯಕತ್ವಕ್ಕಿಂತ ಆಡಳಿತ, ಮೂಲಸೌಕರ್ಯ ಮತ್ತು ರಾಷ್ಟ್ರೀಯ ರಾಜಕೀಯ ನಿರೂಪಣೆಗಳಿಗೆ ಹೆಚ್ಚು ಸ್ಪಂದಿಸುತ್ತಿದ್ದಾರೆ. ಈ ಬದಲಾವಣೆಗೆ ಪವಾರ್ ಬ್ರ್ಯಾಂಡ್‌ಗಳು ಹೊಂದಿಕೊಳ್ಳಲು ವಿಫಲವಾದವು. ಪಿಂಪ್ರಿ–ಚಿಂಚ್‌ವಾಡ್ ವಿಭಿನ್ನವಾಗಿರಲಿದೆ ಎಂಬ ನಿರೀಕ್ಷೆಯಿದ್ದರೂ, ಅಲ್ಲಿ ದೊರೆತ ಫಲಿತಾಂಶಗಳು ಎನ್‌ಸಿಪಿ ಪಾಳಯವನ್ನು ನಿರಾಶೆಗೊಳಿಸಿವೆ. ಅಜಿತ್ ಪವಾರ್ ಅವರ ವೈಯಕ್ತಿಕ ಪ್ರಭಾವವಿದ್ದರೂ, ಬಲವಾದ ಸಾಂಸ್ಥಿಕ ಒಗ್ಗಟ್ಟು ಮತ್ತು ಸ್ಪಷ್ಟ ರಾಜಕೀಯ ನಿರೂಪಣೆ ಇಲ್ಲದೆ ವರ್ಚಸ್ಸು ಮಾತ್ರ ಸಾಕಾಗುವುದಿಲ್ಲ ಎಂಬುದನ್ನು ಈ ಫಲಿತಾಂಶಗಳು ಸೂಚಿಸುತ್ತವೆ. ತೃಪ್ತಿಕರ ಸಾಧನೆ ಮಾಡಿದ ಕಾಂಗ್ರೆಸ್ ಬಿಜೆಪಿ ಮತ್ತು ಶಿವಸೇನಾ (ಶಿಂಧೆ) ನಂತರ ರಾಜ್ಯಾದ್ಯಂತ ಅತಿ ಹೆಚ್ಚು ಮುನ್ಸಿಪಲ್ ಕಾರ್ಪೊರೇಷನ್ ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಪಕ್ಷ, ಮಹಾರಾಷ್ಟ್ರದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಹೊರಗೆ ಬಿಜೆಪಿ ಬಳಿಕ ಕಾಂಗ್ರೆಸ್‌ ನ ಪ್ರಾಬಲ್ಯವಿದೆ. ಹಲವು ನಗರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಸ್ಥಳೀಯ ನಾಯಕತ್ವದ ಪಾತ್ರ ಮಹತ್ವದ್ದಾಗಿದೆ. ಕೊಲ್ಹಾಪುರದಲ್ಲಿ ಸತೇಜ್ ‘ಬಂಟಿ’ ಪಾಟೀಲ್ ಮತ್ತು ಲಾತೂರಿನಲ್ಲಿ ಅಮಿತ್ ದೇಶಮುಖ್ ನಿರ್ವಹಿಸಿದ ಪಾತ್ರವು ಗಮನಾರ್ಹವಾಗಿದೆ. ಇದಕ್ಕೆ ವಿರುದ್ಧವಾಗಿ, ಸೋಲಾಪುರದಂತಹ ಸ್ಥಳಗಳಲ್ಲಿ ಸ್ಥಳೀಯ ನಾಯಕತ್ವದ ವಿಭಜನೆ ಪಕ್ಷದ ಪ್ರದರ್ಶನಕ್ಕೆ ಧಕ್ಕೆಯುಂಟುಮಾಡಿದೆ. ಅಕೋಲಾ, ಅಮರಾವತಿ ಮತ್ತು ನಾಗ್ಪುರದಂತಹ ನಗರಗಳಲ್ಲಿ ವಿಬಿಎ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಲಾಭ ಕಂಡಿದೆ. ನವಯಾನ ಬೌದ್ಧ, ಮುಸ್ಲಿಂ ಮತದಾರರು ಮತ್ತು ಪ್ರಗತಿಪರ ವರ್ಗಗಳನ್ನು ಕ್ರೋಢೀಕರಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ. ಆದರೆ ಥಾಣೆ, ನವಿ ಮುಂಬೈ, ಕಲ್ಯಾಣ–ಡೊಂಬಿವಿಲಿ, ವಸೈ–ವಿರಾರ್, ಪನ್ವೇಲ್ ಮತ್ತು ಉಲ್ಹಾಸ್‌ನಗರಗಳಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ. ಮುಸ್ಲಿಂ ಬಹುಸಂಖ್ಯಾತ ಭಿವಂಡಿ–ನಿಜಾಂಪುರ ಮತ್ತು ಮುಸ್ಲಿಂ–ಕ್ರಿಶ್ಚಿಯನ್ ಜನಸಂಖ್ಯೆ 20 ಶೇಕಡಕ್ಕೂ ಹೆಚ್ಚು ಇರುವ ಮೀರಾ–ಭಯಂದರ್‌ನಲ್ಲಿ ಮಾತ್ರ ಪಕ್ಷ ಉತ್ತಮ ಪ್ರದರ್ಶನ ನೀಡಿದೆ. ಹಿಂದೂ ಮಧ್ಯಮ ವರ್ಗದ ಪ್ರದೇಶಗಳಲ್ಲಿ ಪಕ್ಷದ ಹಿಡಿತ ದುರ್ಬಲವಾಗಿಯೇ ಉಳಿದಿದ್ದು, ಮುಸ್ಲಿಂ ಮತ್ತು ದಲಿತರಂತಹ ಪ್ರಮುಖ ಜನಸಂಖ್ಯಾ ಗುಂಪುಗಳಲ್ಲಿ ಬೆಂಬಲವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ.

ವಾರ್ತಾ ಭಾರತಿ 17 Jan 2026 8:25 pm

ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ, ಜ.17: ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ ಒಂದನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂಬ ಯುವಕ ಜನವರಿ 12ರಂದು ರಾತ್ರಿ 8 ಬಳಿಕ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 9480805445ನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 17 Jan 2026 8:24 pm

ಜ.19, 20: ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟ

ಉಡುಪಿ, ಜ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆಗಲ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜನವರಿ 19 ಮತ್ತು 20ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜ.19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಶಾಸಕರಾದ ವಿ.ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 17 Jan 2026 8:20 pm

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಹೌರಾ-ಗುವಾಹಟಿ ನಡುವೆ ಸಂಚರಿಸಲಿರುವ ರೈಲು

ವಾರ್ತಾ ಭಾರತಿ 17 Jan 2026 8:20 pm

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಹೊಸ ಕಾನೂನು: ಪೊಲೀಸರೇ ಕ್ರೈಂನಲ್ಲಿ ಭಾಗಿಯಾಗುವುದು ಅಕ್ಷಮ್ಯ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸೈಬರ್ ಅಪರಾಧ ಮತ್ತು ಮಾದಕವಸ್ತು ಜಾಲವನ್ನು ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಭವಿಷ್ಯದಲ್ಲಿ ಕಾನೂನುಗಳನ್ನು ಬಿಗಿಗೊಳಿಸಲು ಹೊಸ ತಿದ್ದುಪಡಿ ತರಲಾಗುವುದು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ಮತ್ತು ಶಿಡ್ಲಘಟ್ಟ ಪ್ರಕರಣಗಳ ಬಗ್ಗೆಯೂ ಸ್ಪಷ್ಟನೆ ನೀಡಿದರು. ಮಾದಕವಸ್ತು ಮುಕ್ತ ಕರ್ನಾಟಕ ಗುರಿಯಾಗಿದೆ.

ವಿಜಯ ಕರ್ನಾಟಕ 17 Jan 2026 8:16 pm

ಪಿ.ಎಂ. ಶ್ರಮಯೋಗಿ ಮಾನ್-ಧನ್ ಯೋಜನೆ: ವಿಶೇಷ ನೋಂದಣಿ ಅಭಿಯಾನ

ಉಡುಪಿ, ಜ.17: ಕೇಂದ್ರ ಸರಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ ವ್ಯಾಪಾರಿ ಗಳಿಗೆ ಮತ್ತು ಸ್ವಉದ್ಯೋಗಿಗಳಿಗೆ ರಾಷ್ಟ್ರೀಯ ಪೆನ್ಷನ್ (ಎನ್‌ಪಿಎಸ್ ಟ್ರೇಡರ್ಸ್‌) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು ಜ. 15ರಿಂದ ಮಾರ್ಚ್ 15ರವರೆಗೆ ‘ವಿಶೇಷ ನೋಂದಣಿ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ. 18ರಿಂದ 40 ವರ್ಷ ದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ಹೆಸರು ನೋಂದಾಯಿಸಬಹುದಾಗಿದೆ. ಇದರಲ್ಲಿ ವಯಸ್ಸಿಗನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ.ವರೆಗೆ ವಂತಿಕೆ ಪಾವತಿ ಮಾಡಬೇಕು. ಕೇಂದ್ರ ಸರಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಸದರಿ ಮೊತ್ತವನ್ನು ಸಂಗ್ರಹಿಸಲಾ ಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3000 ರೂ. ಪಿಂಚಣಿ ಸೌಲಭ್ಯ ಪಡೆಯಬಹುದು. ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ರಜತಾದ್ರಿಯ ಕಾರ್ಮಿಕ ಅಧಿಕಾರಿಗಳ ಕಚೇರಿ ಅಥವಾ ತಾಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸ ಬಹುದು ಎಂದು ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 17 Jan 2026 8:14 pm

RCB ಅಭಿಮಾನಿಗಳಿಗೆ ಬಂಪರ್‌ ಸುದ್ದಿ, ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ ಆಯೋಜನೆಗೆ ಸರ್ಕಾರ ಗ್ರೀನ್‌ ಸಿಗ್ನಲ್

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳು ನಡೆಯಲಿವೆ. ಕಳೆದ ವರ್ಷ ಜೂನ್‌ನಲ್ಲಿ ನಡೆದ ಕಾಲ್ತುಳಿತದ ದುರಂತದ ನಂತರ, ಭದ್ರತಾ ಕಾರಣಗಳಿಗಾಗಿ ಇಲ್ಲಿ ಪಂದ್ಯಗಳನ್ನು ನಿಷೇಧಿಸಲಾಗಿತ್ತು. ಇದೀಗ ಸರ್ಕಾರದ ಗೃಹ ಇಲಾಖೆಯು ಕೆಎಸ್‌ಸಿಎಗೆ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಸಿಬಿ ತಂಡವು ಜನಸಂದಣಿಯನ್ನು ನಿರ್ವಹಿಸಲು ಅತ್ಯಾಧುನಿಕ ಎಐ ಕ್ಯಾಮೆರಾಗಳನ್ನು ಅಳವಡಿಸಲು ಮುಂದಾಗಿದ್ದು, ಮುಂಬರುವ ಐಪಿಎಲ್‌ನಲ್ಲಿ ಆರ್‌ಸಿಬಿ ತವರು ನೆಲದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.

ವಿಜಯ ಕರ್ನಾಟಕ 17 Jan 2026 8:10 pm

ಜ.18ರಂದು ಪುತ್ತಿಗೆಯಿಂದ ಶೀರೂರಿಗೆ ‘ಪರ್ಯಾಯ’ ಹಸ್ತಾಂತರ

ಉಡುಪಿ, ಜ.17: ಪ್ರತಿ ಎರಡು ವರ್ಷಗಳಿಗೊಮ್ಮೆ ಉಡುಪಿಯ ಜನತೆ ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿರುವ ‘ಪರ್ಯಾಯ ಮಹೋತ್ಸವ’ ಮತ್ತೆ ಬಂದಿದೆ. ರವಿವಾರ ಮುಂಜಾನೆ ಈ ಬಾರಿಯ ಪರ್ಯಾಯ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದಿಂದ ಶೀರೂರು ಮಠಕ್ಕೆ ಹಸ್ತಾಂತರಗೊಳ್ಳಲಿದೆ. ಅದ್ದೂರಿಯ, ವರ್ಣರಂಜಿತ ಮೆರವಣಿಗೆಯಲ್ಲಿ ಸಾಗಿಬರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು, ಮುಂಜಾನೆ 5:45ಕ್ಕೆ ಸರಿಯಾಗಿ ತಮ್ಮ 21ರ ಕಿರುಪ್ರಾಯದಲ್ಲೇ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿ ಮುಂದಿನ ವರ್ಷಗಳ ಕಾಲ ಉಡುಪಿಯ ಪರ್ಯಾಯ ಪೀಠಾಧಿಪತಿ ಎನಿಸಿಕೊಳ್ಳಲಿದ್ದಾರೆ. ಕಳೆದೆರಡು ವರ್ಷಗಳಿಂದ ಪರ್ಯಾಯವನ್ನು ನಡೆಸಿಕೊಟ್ಟ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮಠದ ಅಧಿಕಾರ ಹಸ್ತಾಂ ತರದ ಸಂಕೇತವಾದ ಅಕ್ಷಯಪಾತ್ರೆ, ಸಟುಗ ಹಾಗೂ ಕೀಲಿಕೈಯನ್ನು ನೀಡುವ ಮೂಲಕ ಕೃಷ್ಣ ಪೂಜೆಯ ಅಧಿಕಾರವನ್ನೂ ಕಿರಿಯ ಸ್ವಾಮೀಜಿಗೆ ಒಪ್ಪಿಸುತ್ತಾರೆ. ಕರಾವಳಿ ಜಿಲ್ಲೆಗಳ ನಾಡಹಬ್ಬವೆಂದೇ ಖ್ಯಾತಿ ಪಡೆದಿರುವ ಈ ಭಾಗದ ಬಹುದೊಡ್ಡ ಸಾಂಸ್ಕೃತಿಕ ಉತ್ಸವ ‘ಶ್ರೀಕೃಷ್ಣ ಮಠದ ಪರ್ಯಾಯ’ಕ್ಕೆ ಉಡುಪಿ ಮತ್ತೊಮ್ಮೆ ಸಜ್ಜಾಗಿ ನಿಂತಿದೆ. ಈ ಮೂಲಕ ಸುಮಾರು ಎಂಟು ನೂರು ವರ್ಷಗಳ ಹಿಂದೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅದರ ಪೂಜೆಗೆ ತನ್ನ ಎಂಟು ಮಂದಿ ಶಿಷ್ಯರನ್ನು ನಿಯೋಜಿಸಿ ಅವರಿಗೆ ಸರತಿಯಂತೆ ತಲಾ ಎರಡು ತಿಂಗಳ ಕೃಷ್ಣ ಪೂಜೆಯ ಅಧಿಕಾರವನ್ನು ನೀಡಿದ ದ್ವೈತ ಮತದ ಸ್ಥಾಪಕ ಶ್ರೀಮಧ್ವಾಚಾರ್ಯರು ಪ್ರಾರಂಭಿಸಿದ ಪರಂಪರೆ ಈಗಲೂ ಮುಂದುವರಿಯಲಿದೆ. ಶ್ರೀಮಧ್ವಾಚಾರ್ಯರು ಎರಡು ತಿಂಗಳ ಪರ್ಯಾಯ ವ್ಯವಸ್ಥೆ ಮಾಡಿದ್ದರೆ, ಈ ವ್ಯವಸ್ಥೆಯಲ್ಲಿ ಹಲವು ಸುಧಾರಣೆ ಗಳನ್ನು ಮಾಡಿದ ಸೋದೆ ಮಠದ ಶ್ರೀವಾದಿರಾಜ ತೀರ್ಥರು (1481-1601) ಅದನ್ನು ಎರಡು ವರ್ಷಗಳಿಗೆ ಏರಿಸಿದರು. ವಾದಿರಾಜರಿಂದ 1522ರಿಂದ ಪ್ರಾರಂಭಗೊಂಡ ಎರಡು ವರ್ಷಗಳ ಪರ್ಯಾಯ ಈಗಲೂ ನಿರ್ವಿಘ್ನ ವಾಗಿ ಮುಂದುವರಿದುಕೊಂಡು ಬಂದಿದೆ. ಅಷ್ಟಮಠಗಳೊಳಗೆ ಎಷ್ಟೇ ಭಿನ್ನಮತಗಳಿದ್ದು, ವಿವಾದದ ಮಟ್ಟಕ್ಕೇರಿ ನ್ಯಾಯಾಲಯದ ಮೆಟ್ಟಿಲು ಹತ್ತಿದರೂ ಈವರೆಗೆ ಪ್ರತಿ ಎರಡು ವರ್ಷಗಳಿ ಗೊಮ್ಮೆ ಒಂದು ಮಠದಿಂದ ಇನ್ನೊಂದು ಮಠಕ್ಕೆ ಅಧಿಕಾರದ ಹಸ್ತಾಂತರ ಮಾತ್ರ ಯಾವುದೇ ಅಡೆತಡೆಯಿಲ್ಲದೇ ನಡೆದುಕೊಂಡು ಬಂದಿದೆ. ದ್ವೈವಾರ್ಷಿಕ ಪರ್ಯಾಯದಲ್ಲಿ ಈಗ ನಡೆಯುತ್ತಿರುವುದು 253ನೇ ಪರ್ಯಾಯವಾಗಿದೆ. ತಮ್ಮ ಎರಡು ವರ್ಷಗಳ ಪರ್ಯಾಯಾವಧಿಯನ್ನು ಶಿಷ್ಯರಾದ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರೊಂದಿಗೆ ಯಶಸ್ವಿ ಯಾಗಿ ಮುಗಿಸಿರುವ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ರವಿವಾರ ಮುಂಜಾನೆ 5:45ಕ್ಕೆ ಶ್ರೀಕೃಷ್ಣನ ಪೂಜೆಯ ಅಧಿಕಾರದ ಹಸ್ತಾಂತರದ ದ್ಯೋತಕವಾದ ಅಕ್ಷಯ ಪಾತ್ರೆ ಹಾಗೂ ಮಠದ ಕೀಲಿಕೈಯನ್ನು ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರಿಗೆ ನೀಡಲಿದ್ದಾರೆ. ಬಳಿಕ ಶೀರೂರು ಶ್ರೀಗಳು ಮಧ್ವ ಪೀಠಾರೋಹಣ ಮಾಡುವರು. ಇಲ್ಲಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಶೀರೂರು ಶ್ರೀಗಳೇ ಶ್ರೀಕೃಷ್ಣನ ಪೂಜೆಗೆ ಅಧಿಕೃತ ಅಧಿಕಾರ ಪಡೆದಂತಾಗುತ್ತದೆ. ಕಳೆದೊಂದು ವಾರದಿಂದ ನಿರಂತರವಾಗಿ ನಡೆಯುತಿದ್ದ ಪುತ್ತಿಗೆ ಶ್ರೀಗಳ ಪರ್ಯಾಯ ಸಮಾರೋಪ ಸಮಾರಂಭ ಇಂದು ರಥಬೀದಿಯಲ್ಲಿ ಅವರಿಗೆ ಪೌರ ಸನ್ಮಾನ ನೀಡುವ ಮೂಲಕ ಮುಕ್ತಾಯಗೊಂಡಿದೆ. ಪುತ್ತಿಗೆ ಶ್ರೀಸುಗುಣೇಂದ್ರತೀರ್ಥರ ಕಳೆದೆರಡು ವರ್ಷಗಳ ತಮ್ಮ ನಾಲ್ಕನೇ ಪರ್ಯಾಯಾವಧಿಯನ್ನು ವಿಶ್ವ ಗೀತಾ ಪರ್ಯಾಯ ಎಂದು ಕರೆದು ಕೊಂಡಿದ್ದಾರೆ. ಸ್ವಾಮೀಜಿ ಅವರ ಕೋಟಿ ಗೀತಾ ಲೇಖನ ಯಜ್ಞದ ಸಂಕಲ್ಪಕ್ಕೂ ನಾಡಿನ ಜನತೆಯಿಂದ ನಿರೀಕ್ಷೆಗೆ ಮೀರಿದ ಬೆಂಬಲ ವ್ಯಕ್ತವಾಗಿದೆ. ಈ ಕೋಟಿ ಗೀತಾ ಲೇಖನ ಯಜ್ಞ ಇನ್ನೂ ಎರಡು ವರ್ಷಗಳ ಕಾಲ ಮುಂದುವರಿಯ ಲಿದೆ ಎಂದು ಅವರು ಈಗಾಗಲೇ ಪ್ರಕಟಿಸಿದ್ದಾರೆ. ಪುತ್ತಿಗೆ ಶ್ರೀಗಳ ಭಗವದ್ಗೀತಾ ಅಭಿಯಾನದ ವಿವಿಧ ಹಂತಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ರಾಷ್ಟ್ರಮಟ್ಟದ ಹಲವು ಗಣ್ಯರು ಉಡುಪಿಗೆ ಹಾಗೂ ಮಠಕ್ಕೆ ಬಂದು ಹೋಗಿದ್ದಾರೆ. ಇದಲ್ಲದೇ ಕೃಷ್ಣನಿಗೆ ಸುವರ್ಣ ಪಾರ್ಥಸಾರಥಿ ರಥ, ಕನಕನ ಕಿಂಡಿಗೆ ಸುವಣ‰ ಕವಚ, ಕನಕಮಯ ಸುವರ್ಣ ಮಂಟಪ, ಸುವರ್ಣ ಭಗವದ್ಗೀತೆ ಇತ್ಯಾದಿ ಸಮರ್ಪಣೆಗೊಂಡಿವೆ. ಆದರೆ ತಾವು ಬಯಸಿದಂತೆ ಕಲ್ಸಂಕದಲ್ಲಿ ಶ್ರೀಕೃಷ್ಣ ಮಠಕ್ಕೆ ಪ್ರವೇಶ ದ್ವಾರ ನಿರ್ಮಿಸುವ ಕನಸು ಕೈಗೂಡಿಲ್ಲ. ಅವರು ಮಾಡಿರುವ ಹಲವು ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಮುಖವಾದುದು ಎಂಜಲು ಎಲೆ ತ್ಯಾಜ್ಯದ ನಿರ್ವಹಣೆಗೆ ಘಟಕವೊಂದನ್ನು ಮಠದ ಆವರಣದಲ್ಲಿ ನಿರ್ಮಿಸಿ ಕಾರ್ಯಾರಂಭ ಮಾಡಿ ರುವುದು. ಹಿಂದಿನ ಮೂರನೇ ಪರ್ಯಾಯದಂತೆ ಪುತ್ತಿಗೆ ಶ್ರೀಗಳ ನಾಲ್ಕನೇ ಪರ್ಯಾಯವೂ ಯಾವುದೇ ವಿವಾದಗಳಿಲ್ಲದೇ ಮುಗಿದಿರುವುದು ಅವರ ‘ವಿದೇಶ ಸಂಚಾರ’ ವಿವಾದ ಸದ್ದಿಲ್ಲದೇ ಬಗೆಹರಿದಿರುವುದಕ್ಕೆ ಸಾಕ್ಷಿಯಾಗಿದೆ. ಪರ್ಯಾಯ ಪೀಠವೇರುವ 21ರ ಹರೆಯದ ಶ್ರೀವೇದವರ್ಧನ ತೀರ್ಥರಿಗೆ ಇದು ಚೊಚ್ಚಲ ಪರ್ಯಾಯ. 2018ರಲ್ಲಿ ಅಕಸ್ಮಿಕವಾಗಿ ತೀರಿಕೊಂಡ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರು ತೆರವು ಮಾಡಿದ ಪೀಠದಲ್ಲಿ ಕುಳಿತಿರುವ ಶ್ರೀವೇದವರ್ಧನ ತೀರ್ಥರಿಗೆ ‘ಹಿರಿಯ ಸ್ವಾಮೀಜಿ’ ಹಾಕಿಕೊಟ್ಟು ಹೋದ ‘ಶೀರೂರು ಪರಂಪರೆ’ಯ ಭಾರವಿದೆ. 2021ರ ಮೇ 14ರಂದು ದ್ವಂದ್ವ ಮಠವಾದ ಸೋದೆ ಮಠದ ಶ್ರೀಗಳಿಂದ ಸನ್ಯಾಸ ದೀಕ್ಷೆ ಸ್ವೀಕರಿಸಿದ ಶ್ರೀವೇದವರ್ಧನ ತೀರ್ಥರು ನಾಲ್ಕೇ ವರ್ಷಕ್ಕೆ ಸರ್ವಜ್ಞ ಪೀಠವೇರುವ ಅದೃಷ್ಟ ಪಡೆದಿದ್ದಾರೆ. ಜನಸಾಮಾನ್ಯರ ಸ್ವಾಮೀಜಿ ಎನಿಸಿದ್ದ ಶ್ರೀಲಕ್ಷ್ಮೀವರ ತೀರ್ಥರು ತೆರವು ಮಾಡಿದ ಪೀಠವನ್ನು ಶ್ರೀವೇದವರ್ಧನರು ಯಾವ ರೀತಿ ತುಂಬುತ್ತಾರೆ ಎಂಬುದನ್ನು ಅವರ ಲಕ್ಷಾಂತರ ಅಭಿಮಾನಿ ಕುತೂಹಲದಿಂದ ಎದುರು ನೋಡುತ್ತಿದೆ. ಬಿಗುಭದ್ರತೆ: ಪರ್ಯಾಯಕ್ಕಾಗಿ ನಗರ ಸಂಪೂರ್ಣ ಸಜ್ಜಾಗಿ ನಿಂತಿದೆ. ನಗರದ ಪ್ರತಿಯೊಂದು ಕಟ್ಟಡಗಳು ರಂಗುರಂಗಿನ ಬಣ್ಣ ತಳೆದು, ಇಡೀನಗರವೇ ಮದುಮಗಳಂತೆ ಸಿಂಗರಿಸಿಕೊಂಡು ನಿಂತಿದೆ. ಪರ್ಯಾಯ ಶಾಂತಿಯುತವಾಗಿ ನಡೆಯುಂತೆ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ನಗರದಲ್ಲಿ ಗಸ್ತು ತಿರುಗುತಿದ್ದಾರೆ. ಸುಮಾರು ಮೂರು ಲಕ್ಷ ಜನರು ಈ ಬಾರಿಯ ಪರ್ಯಾಯವನ್ನು ವೀಕ್ಷಿಸುವ ನಿರೀಕ್ಷೆ ಪರ್ಯಾಯ ಸ್ವಾಗತ ಸಮಿತಿಯದ್ದಾಗಿದೆ. 32ನೇ ಪರ್ಯಾಯ ಚಕ್ರದ ಐದನೇ ಪರ್ಯಾಯ ಉಡುಪಿಯ ಶ್ರೀಕೃಷ್ಣನನ್ನು ಶ್ರೀಮಧ್ವಾಚಾರ್ಯರು 1278ರ ಮಕರ ಸಂಕ್ರಮಣದ ದಿನದಂದು ಉಡುಪಿಯಲ್ಲಿ ಪ್ರತಿಷ್ಠಾಪಿಸಿದರೆಂದು ಪ್ರತೀತಿ ಇದೆ. ಎರಡು ವರ್ಷಗಳಿಗೊಮ್ಮೆ ಪರ್ಯಾಯ ಬದಲಾಗುವ ಕ್ರಮ 1522ರಲ್ಲಿ ಪ್ರಾರಂಭಗೊಂಡಿತು. ಈ ವ್ಯವಸ್ಥೆ ಪಲಿಮಾರು ಮಠದಿಂದ ಆರಂಭಗೊಂಡು ಅದರ ಬಳಿಕ ಅನುಕ್ರಮವಾಗಿ ಅದಮಾರು, ಕೃಷ್ಣಾಪುರ, ಪುತ್ತಿಗೆ, ಶೀರೂರು, ಸೋದೆ, ಕಾಣಿಯೂರು ಕೊನೆಯಲ್ಲಿ ಪೇಜಾವರ ಮಠದೊಂದಿಗೆ ಪರ್ಯಾಯದ ಒಂದು ಚಕ್ರ 16 ವರ್ಷಗಳಲ್ಲಿ ಪೂರ್ಣಗೊಳ್ಳುತ್ತದೆ. ಹೀಗೆ ಸಾಗಿ ಬಂದ ಪರ್ಯಾಯ 2002ರಲ್ಲಿ 30ನೇ ಚಕ್ರವನ್ನು ಪೂರ್ಣಗೊಳಿಸಿದೆ. 2018ರಲ್ಲಿ ಪೇಜಾವರ ಮಠದ ಪರ್ಯಾಯದವರೆಗೆ ಎಲ್ಲಾ ಮಠಗಳೂ ಸರದಿಯಂತೆ 31 ಪರ್ಯಾಯಗಳನ್ನು ನಡೆಸಿವೆ. ಇದೀಗ ಪರ್ಯಾಯದ 32ನೇ ಚಕ್ರ ಚಾಲ್ತಿಯಲ್ಲಿದೆ. ಇದರಲ್ಲಿ ಈಗಾಗಲೇ ಪಲಿಮಾರು, ಅದಮಾರು, ಕೃಷ್ಣಾಪುರ ಹಾಗೂ ಇಂದಿಗೆ ಪುತ್ತಿಗೆ ಮಠಗಳು ತಮ್ಮ ಪರ್ಯಾಯವನ್ನು ಮುಗಿಸಿವೆ. ನಾಳೆ ಮುಂಜಾನೆ ಶೀರೂರು ಶ್ರೀಗಳ ಪರ್ಯಾಯ ಆರಂಭಗೊಳ್ಳಲಿದೆ. ಇದು ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ 253ನೇ ದ್ವೈವಾರ್ಷಿಕ ಪರ್ಯಾಯೋತ್ಸವ. ಶೀರೂರು ಮಠದ ಯತಿ ಪರಂಪರೆ ಆಚಾರ್ಯ ಮಧ್ವರ ನೇರ ಶಿಷ್ಯರಲ್ಲೊಬ್ಬರಾದ ಶ್ರೀವಾಮನ ತೀರ್ಥರು ಶೀರೂರು ಮಠದ ಆದ್ಯ ಯತಿಗಳು. ಇದುವರೆಗೆ ಶೀರೂರು ಮಠದ ಪರಂಪರೆಯಲ್ಲಿ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರವರೆಗೆ 30 ಮಂದಿ ಯತಿಗಳು ಸಂದು ಹೋಗಿದ್ದು, ಇದೀಗ ಸರ್ವಜ್ಞ ಪೀಠಾರೋಹಣ ಮಾಡುವ ಶ್ರೀವೇದವರ್ಧನ ತೀರ್ಥರು ಈ ಮಠದ 31ನೇ ಯತಿಗಳು.  

ವಾರ್ತಾ ಭಾರತಿ 17 Jan 2026 7:59 pm

‘ವಿಬಿ-ಜಿ ರಾಮ್ ಜಿ ಕಾಯ್ದೆ’ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದೊಂದೇ ದಾರಿ : ಬಿ.ಆರ್.ಪಾಟೀಲ್

ಬೆಂಗಳೂರು : ಕೇಂದ್ರ ಸರಕಾರವು ‘ವಿಬಿ-ಜಿ ರಾಮ್ ಜಿ' ಕಾಯ್ದೆಯನ್ನು ಜಾರಿ ಮಾಡಿದ್ದು, ಇದರ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದೊಂದೇ ದಾರಿ, ಬೇರೆ ದಾರಿಯೇ ಇಲ್ಲ ಎಂದು ರಾಜ್ಯ ಸರಕಾರದ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಕರೆ ನೀಡಿದ್ದಾರೆ. ಶನಿವಾರ ನಗರದ ಗಾಂಧಿ ಭವನದಲ್ಲಿ ಮನರೇಗಾ ರಕ್ಷಣಾ ಒಕ್ಕೂಟವು ಆಯೋಜಿಸಿದ್ದ ‘ಉದ್ಯೋಗ ಖಾತರಿ ಧ್ವಂಸದ ವಿಬಿ-ಜಿ ರಾಮ್-ಜಿ ಕಾನೂನಿನ ಅಪಾಯ ಮತ್ತು ಮುನ್ನೆಚ್ಚರಿಕೆ’ ಎಂಬ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕೇಂದ್ರ ಸರಕಾರವು ಯಾವುದೇ ರೀತಿಯ ಚರ್ಚೆ ಮಾಡದೆ ‘ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ’ ಯೋಜನೆಯನ್ನು ತೆಗೆದು ಹಾಕಿದೆ. ಅದರ ಬದಲಿಗೆ ‘ವಿಬಿ-ಜಿ ರಾಮ್ ಜಿ' ಕಾಯ್ದೆಯನ್ನು ಜಾರಿ ಮಾಡುತ್ತಿದೆ. ಈಗಾಗಲೇ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಸೇರಿ ಬಹುತೇಕ ರಾಜ್ಯ ಸರಕಾರಗಳು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದು, ಈ ನೂತನ ಕಾಯ್ದೆ ಮೂಲಕ ರಾಜ್ಯಗಳನ್ನು ಮತ್ತಷ್ಟು ಆರ್ಥಿಕ ಬಿಕ್ಕಟ್ಟಿಗೆ ದೂಡೂತ್ತಿದೆ ಎಂದು ಅವರು ಆರೋಪಿಸಿದರು. ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ ಮತ್ತು ಉದ್ಯೋಗದ ಹಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಇನ್ನು ಜನರು ಭರವಸೆಯಿಂದ ವಾಸಿಸುತ್ತಿದ್ದಾರೆ. ಇಲ್ಲದಿದ್ದರೆ, ಉದ್ಯೋಗವನ್ನು ಹುಡುಕುತ್ತಾ ನಗರಗಳಿಗೆ ವಲಸೆ ಬರುತ್ತಿದ್ದರು. ಕೃಷಿಯಲ್ಲಿ ಯಂತ್ರೋಪಕರಣಗಳು ಬಂದಿರುವುದರಿಂದ ಈಗಲೂ ಹಳ್ಳಿ ಜನರು ಉದ್ಯೋಗವನ್ನು ಹುಡುಕುತ್ತಾ ನಗರಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಉದ್ಯೋಗ ಖಾತರಿ ಯೋಜನೆ ವಲಸೆ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದರು. ಚಿಂತಕ ಕೆ.ಪಿ ಸುರೇಶ್ ಮಾತನಾಡಿ, ಮನರೇಗಾವನ್ನು ‘ವಿಬಿ-ಜಿ ರಾಮ್ ಜಿ’ ಎಂದು ಹೆಸರು ಬದಲಿಸಿರುವುದು ಮಾತ್ರವಲ್ಲ, ಇಡೀ ಯೋಜನೆಯ ನಿಯಂತ್ರಣವನ್ನು ಕೇಂದ್ರ ಸರಕಾರ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ದುಡಿಯುವ ಜನರ ಕೆಲಸದ ಹಕ್ಕನ್ನು ಕಸಿದುಕೊಳ್ಳುತ್ತದೆ. ಆರ್ಥಿಕ ಹೊರೆಯನ್ನು ರಾಜ್ಯಗಳ ಮೇಲೆ ಹೇರುತ್ತದೆ ಎಂದು ಆರೋಪಿಸಿದರು. ಮನರೇಗಾ ಯೋಜನೆಗೆ ಶೇ.90ರಷ್ಟು ಅನುದಾನವನ್ನು ಕೇಂದ್ರ ಕೊಡುತ್ತಿತ್ತು. ಶೇ.10ರಷ್ಟನ್ನು ರಾಜ್ಯಗಳು ಭರಿಸುತ್ತಿದ್ದವು. ಯಾವ ಪ್ರದೇಶಕ್ಕೆ ಎಷ್ಟು ಉದ್ಯೋಗಗಳ ಬೇಡಿಕೆ ಇದೆ ಎಂಬುದನ್ನು ಗ್ರಾಮ ಸಭೆಗಳು ನಿರ್ಧರಿಸುತ್ತಿದ್ದವು. ಅದಕ್ಕೆ ಅನುಗುಣವಾಗಿ ಉದ್ಯೋಗ ಮತ್ತು ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ, ಈಗ ಯಾವ ರಾಜ್ಯದ ಯಾವ ಪ್ರದೇಶಕ್ಕೆ ಎಷ್ಟು ಉದ್ಯೋಗ ಕೊಡಬೇಕು ಎಂಬುದನ್ನೂ ಕೇಂದ್ರವೇ ನಿರ್ಧರಿಸಲಿದೆ ಎಂದು ಅವರು ಹೇಳಿದರು. ‘ವಿಬಿ-ಜಿ ರಾಮ್ ಜಿ’ ಕಾಯ್ದೆಯಡಿ ಕೇಂದ್ರದ ಪಾಲನ್ನು ಶೇ.60ಕ್ಕೆ ಇಳಿಸಿದ್ದು, ರಾಜ್ಯಗಳು ಶೇ.40ರಷ್ಟು ಅನುದಾನವನ್ನು ಭರಿಸಬೇಕೆಂದು ಹೇಳುತ್ತಿದೆ. ಇಡೀ ತೆರಿಗೆ ವ್ಯವಸ್ಥೆಯಲ್ಲಿ ಶೇ.75 ಆದಾಯವನ್ನು ಪಡೆಯುವ ಕೇಂದ್ರ ಸರಕಾರವು, ರಾಜ್ಯಗಳಿಗೆ ದೊರೆಯಬೇಕಾದ ನ್ಯಾಯಯುತ ಅನುದಾನವನ್ನು ಕಡಿತ ಮಾಡಿದೆ. ಅಲ್ಲದೆ, ರಾಜ್ಯಗಳಿಗೆ ಹೆಚ್ಚಿನ ಹೊರೆ ಹಾಕಲಾಗುತ್ತಿದೆ ಎಂದು ಅವರು ಆರೋಪಿಸಿದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿಗೆ ಶೇ.40ರಷ್ಟು ಅನುದಾನವನ್ನೂ ಕೇಂದ್ರವೇ ಪರೋಕ್ಷವಾಗಿ ಕೊಡುತ್ತದೆ. ಆದುದರಿಂದ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು ಈ ಯೋಜನೆಗೆ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ, ದಕ್ಷಿಣ ಭಾರತದ ರಾಜ್ಯಗಳಿಗೆ ಅನುದಾನ ಕಡಿತ ಮಾಡಿ ಹೆಚ್ಚಿನ ಹೊರೆಯಾಗುವಂತೆ ಮಾಡಿದೆ ಎಂದು ಅವರು ಹೇಳಿದರು. ರೈತ ಸಂಘದ ಮುಖಂಡ ಎನ್.ಡಿ. ವಸಂತ್ ಕುಮಾರ್ ಮಾತನಾಡಿ, ಬಿಜೆಪಿ ಸರಕಾರವು ದೇಶಾದ್ಯಂತ ಉದ್ಯೋಗ ಖಾತರಿ ನೀಡುವ ಕಾಯ್ದೆಯನ್ನೇ ತಲೆಕೆಳಗೆ ಮಾಡಲು ಸಂಚು ರೂಪಿಸಿದೆ. ಅತ್ಯುತ್ತಮ ಕಾಯ್ದೆಯನ್ನು ಜಾರಿಗೆ ತಂದಿದ್ದ ಕಾಂಗ್ರೆಸ್, ಈಗ ಅದನ್ನು ಉಳಿಸಿಕೊಳ್ಳುವ ರೀತಿ ಸಮರ್ಥವಾಗಿ ಹೋರಾಟ ಮಾಡುತ್ತಿಲ್ಲ. ಹೀಗಾಗಿ ಮನರೇಗಾ ಉಳಿವಿಗಾಗಿ ಎಲ್ಲರೂ ಹೋರಾಟ ಕಟ್ಟಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತಿ ಎಸ್.ಜಿ. ಸಿದ್ದರಾಮಯ್ಯ, ದಲಿತ ಮುಖಂಡ ಇಂಧೂದರ ಹೊನ್ನಾಪುರ, ಶಾರಾದಾ ಗೋಪಾಲ್, ಪ್ರಕಾಶ್ ಕಮ್ಮರಡಿ, ಮೈತ್ರೇಯಿ ಕೃಷ್ಣನ್, ಚೆನ್ನಮ್ಮ, ರೇಣುಕ ಸೇರಿದಂತೆ ಮತ್ತಿತರರು ಇದ್ದರು. ‘ಬಿಜೆಪಿ ದೇಶದ ಅಧಿಕಾರ ಹಿಡಿದಾಗಿನಿಂದ ಭಾರತದ ಪ್ರಗತಿಯಲ್ಲಿ ಹಿಂಚಲನೆ ಆರಂಭವಾಗಿದೆ. ಈಗ, ಮನರೇಗಾ ಯೋಜನೆಯನ್ನು ಮಣ್ಣುಪಾಲು ಮಾಡುತ್ತಿದೆ. ಮನರೇಗಾ ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಮುಂಚೂಣಿಗೆ ಬರುತ್ತಿಲ್ಲ. ಕಾಂಗ್ರೆಸ್ ಅನ್ನು ನೆಚ್ಚಿ ಹೋರಾಟ ಕಟ್ಟಲು ಸಾಧ್ಯವೂ ಇಲ್ಲ. ಹೀಗಾಗಿ ಎಲ್ಲ ಜನಪರ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು’ -ಇಂಧೂದರ ಹೊನ್ನಾಪುರ, ಹಿರಿಯ ಪತ್ರಕರ್ತ ವಿಚಾರ ಸಂಕಿರಣದಲ್ಲಿ ತೆಗೆದುಕೊಂಡ ನಿರ್ಣಯಗಳು: 1. ಇದೇ ಜ.26ರಂದು ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲೂ ಗ್ರಾಮಸಭೆ ಮಾಡಿ ‘ವಿಬಿ-ಜಿ ರಾಮ್ ಜಿ’ ಕಾನೂನನ್ನು ತಿರಸ್ಕರಿಸಬೇಕು. 2. ಒಕ್ಕೂಟದಿಂದ ‘ವಿಬಿ-ಜಿ ರಾಮ್ ಜಿ’ ಮತ್ತು ಹಿಂದಿನ ಮನರೇಗಾ ಕುರಿತು ಜನರಿಗೆ ಮಾಹಿತಿ ನೀಡುವ ಕರಪತ್ರಗಳನ್ನು ಹೊರತರುವುದು. 3. ಹುತಾತ್ಮ ದಿನವಾದ ಜ.30ರಂದು ತಾಲೂಕು, ಜಿಲ್ಲಾ ಮಟ್ಟದಿಂದ ಪ್ರಧಾನ ಮಂತ್ರಿಗಳಿಗೆ ಕಾಯ್ದೆಯನ್ನು ಹಿಂಪಡೆಯಲು ಮನವಿ ಸಲ್ಲಿಸುವುದು. 4. ದಿಲ್ಲಿಯಲ್ಲಿ ಜ. 22ರಂದು ನಡೆಯುತ್ತಿರುವ ಸಭೆಗೆ ಒಕ್ಕೂಟದಿಂದ ಕನಿಷ್ಟ 20 ಜನ ಭಾಗವಹಿಸುವುದು. 5. ಸಹಭಾಗಿ ಸಂಘಟನೆಗಳಾದ ಸಂಯುಕ್ತ ಹೋರಾಟ ಮತ್ತು ಜೆಸಿಟಿಯು ಸಂಘಟಿಸುತ್ತಿರುವ ಜ.21ರ ಟೌನ್ ಹಾಲ್ ಎದುರು ನಡೆಯುವ ಹೋರಾಟ ಮತ್ತು ಫೆ.12ರಂದು ನಡೆಯುವ ಕರ್ನಾಟಕ ಬಂದ್‍ಗಳಲ್ಲಿಯೂ ಒಕ್ಕೂಟವು ಭಾಗವಹಿಸಿ ಬೆಂಬಲ ನೀಡುವುದು. 6. ಫೆ.2ಕ್ಕೆ ಮನರೇಗಾಗೆ 20 ವರ್ಷ ಆಗುವ ಸಂದರ್ಭದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಮಹಾ ಪಂಚಾಯತ್ ನಡೆಸಲು ಯೋಚಿಸಲಾಗಿದೆ.  

ವಾರ್ತಾ ಭಾರತಿ 17 Jan 2026 7:57 pm

ಯಾದಗಿರಿ | ಇಬ್ರಾಹಿಂಪುರದಲ್ಲಿ ಸಾಯಿಬಾಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ : ಹಸೆಮಣೆ ಏರಿದ ಹತ್ತು ಜೋಡಿಗಳು

ಯಾದಗಿರಿ: ಶಹಾಪುರ ತಾಲೂಕಿನ ಇಬ್ರಾಹಿಂಪುರ ಗ್ರಾಮದಲ್ಲಿನ ಶ್ರೀ ಶಿರಡಿ ಸಾಯಿಬಾಬಾ ಮಂದಿರದ 4ನೇ ಜಾತ್ರಾ ಮಹೋತ್ಸವವು ನಾಡಿನ ಹರಗುರು ಚರಮೂರ್ತಿಗಳು, ಸಾಹಿತಿಗಳು, ಗಣ್ಯರು, ಕಲಾವಿದರು ಹಾಗೂ ಅಪಾರ ಸಂಖ್ಯೆಯ ಸಾಯಿಬಾಬಾ ಭಕ್ತರ ಸಮ್ಮುಖದಲ್ಲಿ ಶನಿವಾರ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಶಾಸಕ ಗುರು ಪಾಟೀಲ್, ಸರ್ವಧರ್ಮಗಳ ಸಕಾರ ಮೂರ್ತಿಯಾದ ಸಾಯಿಬಾಬಾ ಅವರ ಜಾತ್ರೆಯನ್ನು ಆಚರಿಸುವ ಮೂಲಕ ಜಾತ್ಯತೀತ ತತ್ವಗಳನ್ನು ಜೀವಂತವಾಗಿಟ್ಟಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಮಾತನಾಡಿ, ದಿಗ್ಗಿ ಮಹಾರಾಜ್ ಅವರ ಸಾಮಾಜಿಕ ಕಳಕಳಿ ಎಲ್ಲರಿಗೂ ಪ್ರೇರಣೆಯಾಗಬೇಕು. ಸಾಮೂಹಿಕ ವಿವಾಹದಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸರಳತೆ ಹಾಗೂ ಸಮಾಜಮುಖಿ ಚಿಂತನೆ ಮೆರೆದಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಭಗವಂತ ಎಲ್ಲವನ್ನೂ ನೀಡುತ್ತಾನೆ. ಆದರೆ ಇಂತಹ ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ಮಾಡುವವರು ವಿರಳ. ಈ ನಿಟ್ಟಿನಲ್ಲಿ ದಿಗ್ಗಿ ಮಹಾರಾಜ್ ಅವರ ಸೇವೆ ಅನನ್ಯವಾಗಿದೆ ಎಂದರು. ಗುರುಮಠಕಲ್ ಖಾಸಾಮಠದ ಶಾಂತವೀರ ಗುರುಮುರುಘರಾಜೇಂದ್ರ ಹಾಗೂ ಕಡಕೋಳದ ರುದ್ರಮುನಿ ಸ್ವಾಮಿಗಳು ಮಾತನಾಡಿದರು. ಬೆಳಿಗ್ಗೆ ಸಾಯಿಬಾಬಾ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಮಂಗಳಾರತಿ ಕಾರ್ಯಕ್ರಮಗಳು ಆಶ್ರಮದ ರೂವಾರಿಗಳಾದ ದಿಗ್ಗಿ ಮಹಾರಾಜ್, ಸಿದ್ದಪಾಜಿ ದಿಗ್ಗಿ ಹಾಗೂ ಕುಟುಂಬಸ್ಥರಿಂದ ನೆರವೇರಿದವು. ನಂತರ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸುಮಾರು ಹತ್ತು ಜೋಡಿಗಳ ಸಾಮೂಹಿಕ ವಿವಾಹ ಜರುಗಿತು. ಡಿ.ಜಾನ್ ಸಂಸ್ಥೆಯ ಶಾಲಾ ಮಕ್ಕಳಿಂದ ಭರತನಾಟ್ಯ ಪ್ರದರ್ಶನ, ಬಸವಣ್ಣನವರ ವಚನ ಗಾಯನ ನಡೆಯಿತು. ಲಿಂಗೈಕ್ಯರಾದ ಕಾಗಿನೆಲೆ ಸಿದ್ದರಾಮನಂದಪೂರಿ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೀಠಾಧಿಪತಿಗಳು, ಸಾಹಿತಿಗಳು ಹಾಗೂ ಗಣ್ಯರಾದ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂಯುಹಳ್ಳಿ, ಮಾಜಿ ಅಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ, ಸಾಹಿತಿ ಡಾ.ಸಿದ್ದರಾಮ ಹೊನ್ಕಲ್, ಶಾಂತರೆಡ್ಡಿ ದೇಸಾಯಿ, ಆರ್. ಮಹಾದೇವಪ್ಪ ಗೌಡ ಅಬ್ಬೆತುಮಕೂರು, ಡಾ. ರವೀಂದ್ರನಾಥ ಹೊಸಮನಿ, ರಾಯಪ್ಪ ಗೌಡ ಹುಡೆದ್, ಪತ್ರಕರ್ತ ಪ್ರಕಾಶ ದೊರೆ, ನೀಲಕಂಠ ಬಡಿಗೇರ, ಉಮೇಶ ಮುದ್ನಾಳ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಶ್ರೀಶೈಲ್ ಪೂಜಾರಿ ಸ್ವಾಗತಿಸಿದರು. ಮಹಾಂತೇಶ ಹೂಲಕೊಟಿ ಹಾಗೂ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಜ.18ರಂದು ಸಂಜೆ 6 ಗಂಟೆಗೆ ಧಾರ್ಮಿಕ ಸಭೆ, ಸಂಗೀತ ಹಾಗೂ ನೃತ್ಯ ಗಾಯನ ಕಾರ್ಯಕ್ರಮಗಳು ನಡೆಯಲಿದ್ದು, ಡಾಲಿ ಧನಂಜಯ ಸೇರಿದಂತೆ ಇತರ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 7:56 pm

ಬಳ್ಳಾರಿ | ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ ಜಾರಿ : ಡಿಸಿ ನಾಗೇಂದ್ರ ಪ್ರಸಾದ್ ಕೆ. ಆದೇಶ

ಬಳ್ಳಾರಿ : ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ದೆಹಲಿಯ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಜ.18 ರಂದು ಆಲ್ ಇಂಡಿಯಾ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ-2026 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರೆಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 7:51 pm

ರಾಜ್ಯದ ʼನವೋದ್ಯಮ ನೀತಿ 2025-30ʼ ಅನಾವರಣ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ಉದ್ಯಮಶೀಲತೆಗೆ ಇನ್ನಷ್ಟು ಉತ್ತೇಜನ ನೀಡಿ ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ‘ನವೋದ್ಯಮ ನೀತಿ 2025-2030ನ್ನು ರಾಜ್ಯ ಸರಕಾರವು ಅನಾವರಣಗೊಳಿಸಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶನಿವಾರ ನಗರದಲ್ಲಿ ರಾಷ್ಟ್ರೀಯ ‘ನವೋದ್ಯಮ ಮಾಸ’ದ ಭಾಗವಾಗಿ, ರಾಜ್ಯ ಸರಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯ ಆಶ್ರಯದಲ್ಲಿ ನಡೆದ ನವೋದ್ಯಮಗಳಿಗೆ ನೆರವಾಗುವ ‘ಐಡಿಯಾ 2 ಪಿಒಸಿ ಎಲೆವೇಟ್ 2025’ ಉಪಕ್ರಮದ 146 ವಿಜೇತರ ಸನ್ಮಾನ ಸಮಾರಂಭದಲ್ಲಿ ಈ ನೀತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಮುಖ್ಯಾಂಶಗಳು: ರಾಜ್ಯದಲ್ಲಿ 25 ಸಾವಿರ ನವೋದ್ಯಮ ಸ್ಥಾಪಿಸುವ ಗುರಿ, ನೀತಿ ಜಾರಿಗೆ 570.67 ಕೋಟಿ ರೂ. ಮೊತ್ತ ನಿಗದಿ, ಮಹಿಳೆ ನೇತೃತ್ವದ ಹಾಗೂ ಗ್ರಾಮೀಣ ನವೋದ್ಯಮಗಳಿಗೆ ಆದ್ಯತೆ, ನವೋದ್ಯಮಗಳ ಎಲ್ಲ ಹಂತಗಳಲ್ಲಿ ಸರಕಾರದ ಬೆಂಬಲದ ಭರವಸೆ, ಮುಂದಿನ ಐದು ವರ್ಷಗಳ ಉದ್ಯಮಶೀಲ ಬೆಳವಣಿಗೆಗೆ ಮಾರ್ಗಸೂಚಿ ಹೊಂದಿರುವ ಈ ನೀತಿಯು, 2030ರ ವೇಳೆಗೆ ಬೆಂಗಳೂರು ಆಚೆಗಿನ ಕ್ಲಸ್ಟರ್‍ಗಳಲ್ಲಿ ಕನಿಷ್ಠ 10 ಸಾವಿರ ನವೋದ್ಯಮಗಳು ಸೇರಿದಂತೆ ರಾಜ್ಯದಾದ್ಯಂತ 25 ಸಾವಿರ ನವೋದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಅವರು ಮಾಹಿತಿ ನೀಡಿದರು. ಈ ನೀತಿ ಜಾರಿಗೊಳಿಸಲು ಇಲಾಖೆಯು 570.67 ಕೋಟಿ ರೂ. ಮೊತ್ತವನ್ನು ಮೀಸಲು ಇರಿಸಿದೆ, ಹಣಕಾಸು, ಪೋಷಣೆ, ಮಾರ್ಗದರ್ಶನ, ಮಾರುಕಟ್ಟೆ ಲಭ್ಯತೆ, ಅಂತರ್‍ರಾಷ್ಟ್ರೀಯ ಸಹಯೋಗ, ಸೇರ್ಪಡೆ, ಸುಸ್ಥಿರತೆ ಮತ್ತು ನಿಯಂತ್ರಣ ಕ್ರಮಗಳಿಗೆ ನೆರವು ಒಳಗೊಂಡಂತೆ ಒಟ್ಟು ಏಳು ಪ್ರಮುಖ ಆಧಾರ ಸ್ತಂಭಗಳನ್ನು ಈ ನೀತಿಯು ಆಧರಿಸಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಮಹಿಳಾ ನೇತೃತ್ವದ ಉದ್ಯಮಗಳು, ತಳಮಟ್ಟದ ನಾವೀನ್ಯಕಾರರು, ಗ್ರಾಮೀಣ ಉದ್ಯಮಿಗಳು ಮತ್ತು ಸಾಮಾಜಿಕವಾಗಿ ಪ್ರಭಾವ ಬೀರುವ ಉದ್ಯಮಗಳನ್ನು ಬೆಂಬಲಿಸುವ ಮೂಲಕ ಎಲ್ಲರ ಒಳಗೊಳ್ಳುವಿಕೆಗೆ ಆದ್ಯತೆ ನೀಡಲಿದೆ, ಸರಕಾರ ಮೊದಲು-ಯೋಜನೆಯಡಿ, ಉತ್ಪನ್ನ ಮತ್ತು ಪರಿಹಾರ ನೀಡುವ ನವೋದ್ಯಮ(ಸ್ಟಾರ್ಟ್‍ಅಪ್)ಗಳಿಗೆ ರಾಜ್ಯ ಸರಕಾರವನ್ನು ತಮ್ಮ ಮೊದಲ ಗ್ರಾಹಕರಾಗಿ ಹೊಂದುವ ವಿಶಿಷ್ಟ ಅವಕಾಶವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು. ಆರಂಭಿಕ ಪರಿಕಲ್ಪನೆಯಿಂದ ಆರಂಭಿಸಿ ಜಾಗತಿಕ ವಿಸ್ತರಣೆ ಮತ್ತು ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ಷೇರುಪೇಟೆ ಪ್ರವೇಶಿಸುವ ಹಂತದವರೆಗೂ ನವೋದ್ಯಮಗಳಿಗೆ ಬೆಂಬಲ ನೀಡುವ ರೀತಿಯಲ್ಲಿ ಈ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು. ನವೋದ್ಯಮಿಗಳಿಗೆ ಸನ್ಮಾನ: ಸನ್ಮಾನಕ್ಕೆ ಪಾತ್ರರಾದ ನವೋದ್ಯಮಿಗಳಲ್ಲಿ 103 ಎಲೆವೇಟ್ 2025 ವಿಜೇತರು, 33 ಎಲೆವೇಟ್ ಉನ್ನತಿ ವಿಜೇತರು ಮತ್ತು 10 ಎಲೆವೇಟ್ ಅಲ್ಪಸಂಖ್ಯಾತ ನವೋದ್ಯಮಿಗಳು ಸೇರಿದ್ದಾರೆ. ಅರ್ಹ ನವೋದ್ಯಮಗಳಿಗೆ ಒಟ್ಟು 38.85 ಕೋಟಿ ರೂ. ಮೊತ್ತದ ಅನುದಾನ ವಿತರಿಸಲಾಗಿದೆ. ಎಲೆವೇಟ್ ಕಾರ್ಯಕ್ರಮದಡಿಯಲ್ಲಿ ಗುರುತಿಸಲ್ಪಟ್ಟ ನವೋದ್ಯಮಗಳಿಗೆ 50 ಲಕ್ಷ ರೂ.ವರೆಗೆ ಒಂದು ಬಾರಿಯ ಅನುದಾನ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಇದರ ಜೊತೆಗೆ, ಉತ್ಪನ್ನ ಅಭಿವೃದ್ಧಿ ಮತ್ತು ದೃಢೀಕರಣಕ್ಕೆ ನೆರವಾಗಲು ನವೋದ್ಯಮಗಳಿಗೆ ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುವ ಸರಕಾರಿ ಬೆಂಬಲಿತ ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಮಾರ್ಗದರ್ಶನ ಮತ್ತು ಸೂಕ್ತ ನೆರವು ನೀಡಲಾಗುತ್ತಿದೆ. ಎಲೆವೇಟ್ ಮೂಲಕ, ರಾಜ್ಯದಾದ್ಯಂತದ ನವೋದ್ಯಮಿಗಳು ತಮ್ಮ ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಅನುವು ಮಾಡಿಕೊಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಎಲೆವೇಟ್ ಕಾರ್ಯಕ್ರಮದಡಿ ಉದ್ಯಮಶೀಲತೆಯ ಪಯಣದ ವಿವಿಧ ಹಂತಗಳಲ್ಲಿ ಭರವಸೆ ಮೂಡಿಸಿರುವ ನವೋದ್ಯಮಗಳನ್ನು ಗುರುತಿಸಿ ಅಗತ್ಯ ಬೆಂಬಲ ನೀಡಲಾಗುತ್ತಿದೆ. ನವೋದ್ಯಮಗಳು ಸುಸ್ಥಿರ ರೀತಿಯಲ್ಲಿ ಬೆಳೆಯಲು ಅನುವು ಮಾಡಿಕೊಡಲಾಗುತ್ತಿದೆ. ನವೋದ್ಯಮಗಳ ಒಡೆತನದಲ್ಲಿ ಯಾವುದೆ ಪಾಲು ತೆಗೆದುಕೊಳ್ಳದೆ ಹಣಕಾಸಿನ ನೆರವು ನೀಡುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದು ಭರವಸೆಯದಾಯಕ ನವೋದ್ಯಮಗಳ ಬಗ್ಗೆ ರಾಜ್ಯ ಸರ್ಕಾರ ತಳೆದಿರುವ ಪ್ರಗತಿಪರ ಮತ್ತು ಅನುಕೂಲಕರ ಧೋರಣೆಗೆ ನಿದರ್ಶನವಾಗಿದೆ ಎಂದು ಅವರು ತಿಳಿಸಿದರು. ಮೂರು ಹೊಸ ಉಪಕ್ರಮಗಳ ಘೋಷಣೆ: ಎಲೆವೇಟ್ 2025 ಕಾರ್ಯಕ್ರಮದಲ್ಲಿ, ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ರಾಜ್ಯದ ಸ್ಟಾರ್ಟ್‍ಅಪ್ ವ್ಯವಸ್ಥೆ ಬಲಪಡಿಸುವ, ಡೀಪ್‍ಟೆಕ್ ನಾವೀನ್ಯತೆಗೆ ವೇಗ ನೀಡುವ ಮತ್ತು ಬೆಂಗಳೂರಿನ ಆಚೆಗೆ ಉದ್ಯಮಶೀಲತೆ ವಿಸ್ತರಿಸುವ ಗುರಿ ಹೊಂದಿರುವ ಮೂರು ಹೊಸ ಉಪಕ್ರಮಗಳನ್ನು ಕಾರ್ಯಗತಗೊಳಿಸುವುದಾಗಿ ಘೋಷಿಸಲಾಯಿತು. ನಾವೀನ್ಯತೆ ಆಧಾರಿತ ಕೈಗಾರಿಕಾ ಪರಿವರ್ತನೆಯಲ್ಲಿ ಕರ್ನಾಟಕದ ನಾಯಕತ್ವವನ್ನು ಪುನಃ ದೃಢಪಡಿಸಲು ಎಲೆವೇಟ್ ನೆಕ್ಸ್ಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕಾಗಿ 150 ಕೋಟಿ ರೂ. ನಿಗದಿಪಡಿಸಲಾಗಿದೆ. ಆಯ್ಕೆಯಾದ ಪ್ರತಿಯೊಂದು ಅರ್ಹ ನವೋದ್ಯಮವು 1 ಕೋಟಿ ರೂ. ನೆರವು ಪಡೆಯಲಿದೆ. ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್‌, ಐಒಟಿ, ಬ್ಲಾಕ್‍ಚೇನ್, ಎಆರ್/ವಿಆರ್, ರೋಬೊಟಿಕ್ಸ್, ಡ್ರೋನ್ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸ್ಟಾರ್ಟ್‍ಅಪ್‍ಗಳಿಗೆ ಎಲೆವೇಟ್ ನೆಕ್ಸ್ಟ್ ನೆರವಾಗಲಿದೆ. ಬೆಂಗಳೂರು ಆಚೆಗೆ ಪ್ರವರ್ಧಮಾನಕ್ಕೆ ಬರುತ್ತಿರುವ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ಕೈಗಾರಿಕಾ ಸಮೂಹಗಳಲ್ಲಿ ನವೋದ್ಯಮಗಳ ಸ್ಥಾಪನೆ ಉತ್ತೇಜಿಸಲು ಆರಂಭಿಕ ಹಂತದ ಹಣಕಾಸು ನೆರವು ಒದಗಿಸುವ ಉದ್ದೇಶಕ್ಕೆ 75 ಕೋಟಿ ರೂ.ಮೊತ್ತದ ನಿಧಿ ಸ್ಥಾಪಿಸುವ ನಿರ್ಧಾರ ಪ್ರಕಟಿಸಲಾಗಿದೆ. ಸಮಾರಂಭದಲ್ಲಿ ಶಾಸಕ ರಿಝ್ವಾನ್ ಅರ್ಶದ್, ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್., ಕಿಯೊನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Jan 2026 7:48 pm

ಎಸ್‍ಐಆರ್ : ರಾಜ್ಯದಲ್ಲಿ ಶೇ.61ರಷ್ಟು ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಪೂರ್ಣ

ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್)ಗೆ ಪೂರ್ವಭಾವಿಯಾಗಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಸುತ್ತಿರುವ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಮ್ಯಾಪಿಂಗ್ ಕಾರ್ಯವು ಶೇ.61ರಷ್ಟು ಪೂರ್ಣಗೊಂಡಿದೆ. ಕರ್ನಾಟಕದಲ್ಲಿ 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿತ್ತು. ಇದೀಗ 23 ವರ್ಷಗಳ ಬಳಿಕ ಪುನಃ ಎಸ್‍ಐಆರ್ ನಡೆಸಲು ಉದ್ದೇಶಿಸಲಾಗಿದೆ. 2002ರಲ್ಲಿ ರಾಜ್ಯದಲ್ಲಿ 3.40 ಕೋಟಿ ಮತದಾರರಿದ್ದರು. 2025ರ ಮತದಾರರ ಪಟ್ಟಿಯಂತೆ ಈಗ 5.57 ಕೋಟಿ ಮತದಾರರಿದ್ದಾರೆ. 2025ರ ಮತದಾರರ ಪಟ್ಟಿಯಲ್ಲಿ ಗುರುತಿಸಲಾದ ನಿಗದಿತ ವಯಸ್ಸು 40 ವರ್ಷ ಹೊಂದಿರುವ 1.92 ಕೋಟಿ ಮತದಾರರ ಮ್ಯಾಪಿಂಗ್ ಜ.15ರ ವೇಳೆಗೆ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದೊಳಗೆ ಇನ್ನೂ ಕನಿಷ್ಠ ಒಂದು ಕೋಟಿ ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ನಿಗದಿತ ವಯಸ್ಸಿನ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಕೊಪ್ಪಳ(ಶೇ.75.1), ಚಿತ್ರದುರ್ಗ (ಶೇ.75.7), ಹಾವೇರಿ (ಶೇ.75.1), ತುಮಕೂರು (ಶೇ.76.4) ಮತ್ತು ವಿಜಯಪುರ (ಶೇ.70.8), ಕೊಡಗು(ಶೇ.70.48), ಚಾಮರಾಜನಗರ(ಶೇ.75.5), ಉಡುಪಿ(ಶೇ.66.5), ದಕ್ಷಿಣ ಕನ್ನಡ(ಶೇ.58.6), ಮೈಸೂರು(ಶೇ.64.3), ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಕೇಂದ್ರ ವಲಯ-ಶೇ.27.47, ಉತ್ತರ ವಲಯ-ಶೇ.27.33 ಮತ್ತು ದಕ್ಷಿಣ ವಲಯ-ಶೇ.26.05ರಷ್ಟು ಪ್ರಗತಿ ಸಾಧಿಸಲಾಗಿದೆ ಎನ್ನಲಾಗಿದೆ. ರಾಜ್ಯಾದ್ಯಂತ ಇದುವರೆಗೆ 1.35 ಕೋಟಿ ‘ಪ್ರೊಜೆನಿ’(ಭವಿಷ್ಯದ ಮತದಾರರ ಮಾಹಿತಿ) ದಾಖಲೆಗಳ ಮ್ಯಾಪಿಂಗ್ ಪೂರ್ಣಗೊಂಡಿದೆ. ಬೆಳಗಾವಿ, ಬಾಗಲಕೋಟೆ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಈ ಪ್ರೊಜೆನಿ ಮಾಹಿತಿಯ ಸಂಗ್ರಹ ಉತ್ತಮವಾಗಿದ್ದರೆ, ಬೆಂಗಳೂರು ವಲಯಗಳಲ್ಲಿ ಮೂಲಮಟ್ಟದ ಪರಿಶೀಲನೆ ಪೂರ್ಣಗೊಳ್ಳದ ಕಾರಣ ಕಡಿಮೆ ಪ್ರಗತಿ ಕಂಡುಬಂದಿದೆ. ಎಸ್‍ಐಆರ್ ಸಿದ್ಧತೆಯ ಎರಡನೆ ಹಂತವಾಗಿ 2002ನೆ ಸಾಲಿನ ನಂತರ ಜನಿಸಿದ ಮತದಾರರ (ಪ್ರೊಜೆನಿ) ಮ್ಯಾಪಿಂಗ್ ನಡೆಯುತ್ತಿದೆ. ಕಟ್‍ಆಫ್ ವಯಸ್ಸು ತಲುಪಿದ ಮತದಾರರ ಜೊತೆಗೆ ಮುಂದಿನ ವರ್ಷಗಳಲ್ಲಿ ಮತದಾನ ಹಕ್ಕು ಪಡೆಯಲಿರುವ ಯುವಜನರ ಮಾಹಿತಿಯನ್ನೂ ಅಧಿಕಾರಿಗಳು ನವೀಕರಿಸುತ್ತಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಬಿಎಲ್‍ಒಗಳು ಮನೆಮನೆಗೆ ಭೇಟಿ ನೀಡಿ ಗುರುತು ಮತ್ತು ವಿಳಾಸ ಪರಿಶೀಲನೆ, ನಕಲಿ ಅಥವಾ ಸ್ಥಳಾಂತರಗೊಂಡ ದಾಖಲೆಗಳ ವಜಾ ಹಾಗೂ ಯಾವುದೇ ಅರ್ಹ ಮತದಾರ ಹೊರಗುಳಿಯದಂತೆ ಖಚಿತಪಡಿಸುವ ಕಾರ್ಯ ನಡೆಸಲಿದ್ದಾರೆ. ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸುವ ಮೊದಲು ಇನ್ನಷ್ಟು ವಿಚಾರಣೆ ಹಾಗೂ ಪರಿಶೀಲನೆ ಪ್ರಕ್ರಿಯೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 17 Jan 2026 7:37 pm

ಇರಾನ್‌ ಅಶಾಂತಿಗೆ ಸಂಬಂಧಿಸಿದಂತೆ ಎರಡು ಉತ್ತಮ ಸಂಗತಿ ಹೇಳಿದ ಶಶಿ ತರೂರ್‌; ನೀಡಿದ ಸಲಹೆ ಇನ್ನೂ ಸೂಪರ್‌

ಇರಾನ್‌ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಪ್ರತಿಭಟನೆಗಳ ಕಿಚ್ಚು ಕಡಿಮೆಯಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಇರಾನ್‌ ಸರ್ಕಾರ 800ಕ್ಕೂ ಹೆಚ್ಚು ಪ್ರತಿಭಟನಾಕಾರರ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಿರುವುದು ಮತ್ತು ಇರಾನ್‌ ಮೇಲೆ ಮಿಲಿಟರಿ ಕಾರ್ಯಾಚರಣೆಯ ಯೋಜನೆಯಿಂದ ಅಮೆರಿಕ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಎಂದು ಶಶಿ ತರೂರ್‌ ಅಭಿಪ್ರಾಯಪಟ್ಟಿದ್ದಾರೆ. ಆದಾಗ್ಯೂ, ಪ್ರತಿಭಟನೆಯನ್ನು ಕ್ರೂರವಾಗಿ ಹತ್ತಿಕ್ಕುತ್ತಿರುವ ಖಮೇನಿ ಆಡಳಿತದ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚಬೇಕಿದೆ ಎಂದು ಶಶಿ ತರೂರ್‌ ಸಲಹೆ ನೀಡಿದ್ದಾರೆ.

ವಿಜಯ ಕರ್ನಾಟಕ 17 Jan 2026 7:30 pm

ಕಂಪ್ಲಿ | ಅಧಿಕಾರ ಶಾಶ್ವತವಲ್ಲ, ಜನರ ಪ್ರೀತಿಯೇ ಮುಖ್ಯ: ಶಾಸಕ ಗಣೇಶ್‌

ಕಂಪ್ಲಿ: ಕಂಪ್ಲಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯ ಅವಶ್ಯಕತೆ ಇರುವುದನ್ನು ಮನಗಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಕಚೇರಿ ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಜೆ.ಎನ್. ಗಣೇಶ್‌ ಹೇಳಿದರು. ಪಟ್ಟಣದ ವೀರಶೈವ ಭವನದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ, ಕುರುಗೋಡು ಬಿಇಒ ಕಚೇರಿ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಜಯಂತ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೊದಲ ಬಾರಿಗೆ ಶಾಸಕನಾದಾಗ ಕ್ಷೇತ್ರದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿದ್ದವು. ನಂತರದ ದಿನಗಳಲ್ಲಿ ಹೆಚ್ಚಿನ ಅನುದಾನ ಬಳಸಿಕೊಂಡು ಶೈಕ್ಷಣಿಕ ಬದಲಾವಣೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಶಿಕ್ಷಕರು ಹಾಗೂ ಸರ್ಕಾರಿ ನೌಕರರ ಭವನದ ಬೇಡಿಕೆಯನ್ನು ಆದಷ್ಟು ಬೇಗ ಈಡೇರಿಸಲಾಗುವುದು ಎಂದು ಅವರು ಆಶ್ವಾಸನೆ ನೀಡಿದರು. ಅಧಿಕಾರ ಎನ್ನುವುದು ಶಾಶ್ವತವಲ್ಲ, ಜನರೊಂದಿಗೆ ನಾವು ಗಳಿಸುವ ಪ್ರೀತಿ ಮತ್ತು ವಿಶ್ವಾಸ ಮಾತ್ರ ಕೊನೆಯವರೆಗೂ ಉಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ವಿವಿಧ ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ನಿವೃತ್ತ ಶಿಕ್ಷಕರಾದ ವಿರೇಶ, ಎಲೆಗಾರ ಪಾರ್ವತಿ, ಶೀಲಾವತಿ, ಸರ್ವಮಂಗಳ, ರಾಘವೇಂದ್ರ, ಹುಲಿಕುಂಟಾಚಾರ್ ಹಾಗು ಇ. ಶಾಂತ ಗಡ್ಡಾದ್, ನಾಗವೇಣಿ, ಎನ್.ಲೋಕೇಶ, ಮರಿಸ್ವಾಮಿ, ಮುದುಕಪ್ಪ, ಬಸವನಗೌಡ, ವೆಂಕಟರಮಣ, ಗಾದಿಲಿಂಗಪ್ಪ, ಹೊಸಗೇರಪ್ಪ, ವೈ. ಎಂ. ಈರಮ್ಮ, ಸಂಗನಗೌಡ ಗೌಡರ್, ವಿರೇಶ, ಈರಮ್ಮ, ನರಸಿಂಹಲು, ಎಸ್.ಚಂದ್ರಪ್ಪ, ಶೃತಿಕುಮಾರಿ, ರಂಗಪ್ಪ, ಮಡಿವಾಳಪ್ಪ, ಎನ್. ಶಿವಕುಮಾರ, ಕೆ. ಮೌನೇಶ, ಎಸ್. ಭವ್ಯಶ್ರೀ, ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮಿಕಾಂತ ಬಣಕಾರ, ಸದ್ಯೋಜಾತಪ್ಪ, ಅನ್ನದಾನೇಶ್, ರೇಣುಕಾದೇವಿ, ಸುನೀತಾ ಕುಮಾರಿ, ಶ್ಯಾಮಲಾ ಪಿ. ಜೆ. ವಿರೇಶ ಕೆ., ಮೇಲಾರೆಡ್ಡಿ, ಜಬೀನಾ, ಬಿ. ಜಯಮ್ಮ, ಲಕ್ಕಪ್ಪ, ರಂಗಪ್ಪ ಕಟ್ಟಿಮನಿ, ಮಡಿವಾಳಪ್ಪ, ಶಾಬನ, ರೇಣುಕಾ ಆರ್. ಎಚ್, ಪರಶುರಾಮ, ಬಿ. ಸಾವಿತ್ರಿ, ಪಿ. ಎನ್. ರಾಜಾಭಕ್ಷಿ, ವಿರುಪಾಕ್ಷಪ್ಪ, ಶ್ರೀ ವಿಜಯ ಇವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿಇಒ ಸಿದ್ದಲಿಂಗಮೂರ್ತಿ, ಇಒ ಆರ್.ಕೆ.ಶ್ರೀಕುಮಾರ, ಎಡಿ ಮಲ್ಲನಗೌಡ ಕೆ.ಎಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ದೊಡ್ಡಬಸಪ್ಪ, ಪ್ರಮುಖರಾದ ಪಿ.ನಾಗೇಶ್ವರರಾವ್, ಸಿ.ಆರ್.ಹನುಮಂತ, ಲಿಂಗಪ್ಪ, ಟಿ.ಎಂ.ಬಸವರಾಜ, ರೇವಣ್ಣ, ಮಂಜುನಾಥ, ಯುಗಾದಿ ಶಿವರಾಜ, ಗಾದಿಲಿಂಗಪ್ಪ, ಜಡೆಪ್ಪ, ಸುಗ್ಗೇನಹಳ್ಳಿ ರಮೇಶ, ಬಸವರಾಜ ಪಾಟೀಲ್, ಸುಜಾತ ಸೇರಿದಂತೆ ಸಿಆರ್ಪಿಗಳು, ಖಾಸಗಿ ಆಡಳಿತ ಮಂಡಳಿಯ ಮುಖ್ಯಸ್ಥರು ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Jan 2026 7:27 pm

ಜೆಡಿಎಸ್‌ಗೆ ಇಬ್ಬರು ಶಾಸಕರು ಗುಡ್‌ ಬೈ, ಹೊಸ ಪಕ್ಷ ಸೇರ್ಪಡೆ! ದಳಪತಿಗಳಿಗೆ ಆಘಾತ ಉಂಟುಮಾಡಿದ ಕೇರಳ ಬೆಳವಣಿಗೆ

ಕೇರಳದಲ್ಲಿ ಜನತಾ ದಳ (ಜಾತ್ಯತೀತ) ಪಕ್ಷದ ರಾಜ್ಯ ಘಟಕವು ತನ್ನ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧ ಕಡಿದುಕೊಂಡು, 'ಇಂಡಿಯನ್ ಸೋಷಿಯಲಿಸ್ಟ್ ಜನತಾ ದಳ' (ಐಎಸ್‌ಜೆಡಿ) ಎಂಬ ಹೊಸ ಪಕ್ಷದಲ್ಲಿ ವಿಲೀನಗೊಂಡಿದೆ. ಎಚ್.ಡಿ. ದೇವೇಗೌಡ ನೇತೃತ್ವದ ರಾಷ್ಟ್ರೀಯ ಜೆಡಿಎಸ್ ಬಿಜೆಪಿಯ ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಗೊಂಡಿದ್ದನ್ನು ವಿರೋಧಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೊಚ್ಚಿಯಲ್ಲಿ ನಡೆದ ಸಮಾವೇಶದಲ್ಲಿ ಈ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದ್ದು, ಪಕ್ಷದ ಶಾಸಕರಾದ ಮ್ಯಾಥ್ಯೂ ಟಿ. ಥಾಮಸ್ ಮತ್ತು ಕೆ. ಕೃಷ್ಣನ್‌ಕುಟ್ಟಿ ಹೊಸ ಪಕ್ಷದ ಭಾಗವಾಗಿದ್ದಾರೆ.

ವಿಜಯ ಕರ್ನಾಟಕ 17 Jan 2026 7:25 pm

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಬಾಕಿ ವೇತನ ಪಾವತಿಗೆ ಸರ್ಕಾರ ಕ್ರಮ, 175.75 ಕೋಟಿ ರೂ. ಬಿಡುಗಡೆ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರು ಮತ್ತು ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದ ಮಹತ್ವದ ಘೋಷಣೆ! ಕಳೆದ ಎರಡು ತಿಂಗಳ ಬಾಕಿ ವೇತನ ಹಾಗೂ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ಕೇಂದ್ರದಿಂದ 175.75 ಕೋಟಿ ರೂ. ಅನುದಾನ ಜಿಲ್ಲೆಗಳಿಗೆ ತಲುಪಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಭವಿಷ್ಯದಲ್ಲಿ ಕೇಂದ್ರದ ಅನುದಾನ ವಿಳಂಬವಾದರೂ, ರಾಜ್ಯ ಸರ್ಕಾರವೇ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವ ಭರವಸೆ ನೀಡಿದೆ.

ವಿಜಯ ಕರ್ನಾಟಕ 17 Jan 2026 7:25 pm

ಯುವಕನಿಗೆ ಕೊಲೆ ಬೆದರಿಕೆ ಆರೋಪ: ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲು

ಮಂಗಳೂರು, ಜ.17: ಯುವಕನಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶ ದಂತೆ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿಯ ಉಪಜಾತಿಯಾದ ಮುಂಡಾಲ ಸಮುದಾಯಕ್ಕೆ ಸೇರಿದ ಮುಲ್ಕಿಯ ಅರುಣ್ ಕುಮಾರ್ ಎಂಬವ ರಿಗೆ ಖಾಸಗಿ ಕಂಪೆನಿಯೊಂದರ ಉದ್ಯೋಗಿ ಸುರತ್ಕಲ್ ತಡಂಬೈಲ್ ನಿವಾಸಿ ನವೀನ್ ಎಂಬಾತ ಮೊಬೈಲ್‌ನಲ್ಲಿ ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಅರುಣ್ ಕುಮಾರ್ ಖಾಸಗಿ ಕಂಪೆನಿಯಲ್ಲಿ ಸೆಕ್ಯುರಿಟಿ ಸುಪರ್‌ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದು, ಜ.12ರಂದು ಸಂಜೆ ಅದೇ ಕಂಪೆನಿಯ ಮತ್ತೋರ್ವ ಉದ್ಯೋಗಿ ನವೀನ್ ಎಂಬಾತ ಫೋನ್ ಮಾಡಿ ಕೆಲಸಕ್ಕೆ ಜನ ಇಲ್ಲ. ಬೇಗ ಕರೆದುಕೊಂಡು ಬಾ ಎನ್ನುತ್ತಾ ಅವಾಚ್ಯ ಶಬ್ದದಿಂದ ಬೈದು ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಅರುಣ್ ಕುಮಾರ್ 3ನೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ನ್ಯಾಯಾಲಯದ ಆದೇಶದಂತೆ ಜ.16ರಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಾರ್ತಾ ಭಾರತಿ 17 Jan 2026 7:24 pm

ಬಳ್ಳಾರಿಯ ಕಂಪ್ಲಿ ಬಳಿ ಪಾಮ್ ಆಯಿಲ್ ಟ್ಯಾಂಕರ್ ಪಲ್ಟಿ : ಎಣ್ಣೆಗಾಗಿ ಕೊಡ-ಬಿಂದಿಗೆಗಳೊಂದಿಗೆ ಮುಗಿಬಿದ್ದ ಜನ!

ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಮಾರೆಮ್ಮ ದೇವಸ್ಥಾನದ ಬಳಿ ಪಾಮ್ ಆಯಿಲ್ ತುಂಬಿದ್ದ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಈ ವೇಳೆ ಟ್ಯಾಂಕರ್‌ನಿಂದ ಸೋರುತ್ತಿದ್ದ ಎಣ್ಣೆಯನ್ನು ಸಂಗ್ರಹಿಸಲು ಸುತ್ತಮುತ್ತಲಿನ ಗ್ರಾಮಸ್ಥರು ಕೊಡ, ಬಿಂದಿಗೆ ಹಾಗೂ ಬಕೆಟ್‌ಗಳೊಂದಿಗೆ ಮುಗಿಬಿದ್ದ ದೃಶ್ಯ ಕಂಡುಬಂತು. ಪಾಮ್ ಆಯಿಲ್ ತುಂಬಿದ್ದ ಟ್ಯಾಂಕರ್ ಚಳ್ಳಕೇರಿಯಿಂದ ಗಂಗಾವತಿಗೆ ತೆರಳುತ್ತಿತ್ತು. ದೇವಲಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ಬಿರುಕು ಬಿಟ್ಟಿದ್ದು, ಎಣ್ಣೆ ಹಳ್ಳದಂತೆ ಹರಿಯಲಾರಂಭಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮಹಿಳೆಯರು, ಪುರುಷರು ಮತ್ತು ಮಕ್ಕಳು ಎನ್ನದೆ ನೂರಾರು ಜನರು ಪ್ಲಾಸ್ಟಿಕ್ ಕ್ಯಾನ್ ಹಾಗೂ ಡ್ರಮ್‌ಗಳನ್ನು ಹಿಡಿದುಕೊಂಡು ಸ್ಥಳಕ್ಕೆ ಧಾವಿಸಿದರು. ಎಣ್ಣೆ ಹಿಡಿಯಲು ಜನರ ನಡುವೆ ಭಾರಿ ಪೈಪೋಟಿ ಏರ್ಪಟ್ಟಿತ್ತು. ಅಪಘಾತದಲ್ಲಿ ಲಾರಿ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಕುಡುತಿನಿ ಠಾಣೆಯ ಪೊಲೀಸರು, ಜನರನ್ನು ಚದುರಿಸಲು ಮತ್ತು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ರಸ್ತೆಯ ಮೇಲೆ ಎಣ್ಣೆ ಚೆಲ್ಲಿದ್ದರಿಂದ ವಾಹನಗಳು ಸ್ಕಿಡ್ ಆಗುವ ಭೀತಿ ಎದುರಾಗಿತ್ತು. ಹೀಗಾಗಿ ವಾಹನ ಸವಾರರು ಅತ್ಯಂತ ನಿಧಾನಗತಿಯಲ್ಲಿ ಸಂಚರಿಸಿದರು. ಇದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಈ ಕುರಿತು ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 17 Jan 2026 7:22 pm

ಖತರ್ ಕಕ್ಕಿಂಜೆ ಶರೀಅತ್ ಕಾಲೇಜು ನೂತನ ಸಮಿತಿಗೆ ಆಯ್ಕೆ

ದೋಹ, ಜ.17: ಖತರ್ ಕಕ್ಕಿಂಜೆ ಶರೀಅತ್ ಕಾಲೇಜಿನ ನೂತನ ಸಮಿತಿಯ ರಚನಾ ಸಭೆಯು ದೋಹಾದ ಐನ್ ಖಾಲಿದ್‌ನ ಗ್ರೀನ್ಸ್ ರೆಸ್ಟೋರೆಂಟ್ ಹಾಲ್‌ನಲ್ಲಿ ನಡೆಯಿತು. ಹಂಝ ಎ.ಕೆ. ಕಿರಾಅತ್ ಪಠಿಸಿದರು. ಝೈನುದ್ದೀನ್ ಹಾಶಿಮಿ ಉಪನ್ಯಾಸ ನೀಡಿದರು. ಶರಿಅತ್ ಕಾಲೇಜಿನ ಸಾಧನೆ ಹಾಗೂ ಸಮಿತಿಯ ಬಗ್ಗೆ ರಶೀದ್ ಅಬ್ದುಲ್ ಹಮೀದ್ ಮಾಹಿತಿ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಮೀದ್ ಫೈಝಿ ಉಸ್ತಾದ್‌ರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಮಿತಿಯ ಕಾರ್ಯದರ್ಶಿ ಉನೈಜ್ ಬಿ.ಎಲ್. ವಾರ್ಷಿಕ ವರದಿ ವಾಚಿಸಿದರು. ರಶೀದ್ ಅಬ್ದುಲ್ ಹಮೀದ್ ನೂತನ ಸಮಿತಿಗೆ ಅಧಿಕೃತ ಚಾಲನೆ ನೀಡಿದರು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಆದಮ್ ಹೈದ್ರೋಸ್ ಚಾರ್ಮಾಡಿ, ಅಧ್ಯಕ್ಷರಾಗಿ ರಫೀಕ್ ಯು.ಪಿ., ಉಪಾಧ್ಯಕ್ಷರಾಗಿ ಉನೈಜ್ ಬಿ.ಎಲ್., ಹಮೀದ್ ಸೊರಂಗ, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಎ.ಕೆ., ಕಾರ್ಯದರ್ಶಿಯಾಗಿ ಸಲೀಂ ಯು.ಕೆ, ಇಲ್ಯಾಸ್ ಪಿ.ಕೆ., ಕೋಶಾಧಿಕಾರಿಯಾಗಿ ಉಸ್ಮಾನ್ ಪಿ.ಕೆ., ಸಂಚಾಲಕರಾಗಿ ಝೈನುದ್ದೀನ್ ಹಾಶಿಮಿ ಉಸ್ತಾದ್, ಮಾಧ್ಯಮ ಪ್ರತಿನಿಧಿಯಾಗಿ ಅಜ್ಮಲ್ ರಹ್ಮಾನ್ ಹಾಗು ಅಂಶಾದ್ ಚಾರ್ಮಾಡಿ, ಸಲಹಾ ಸಮಿತಿಯಾಗಿ ರಶೀದ್ ಅಬ್ದುಲ್ ಹಮೀದ್, ಅಕ್ಬರ್ ಎ.ಕೆ., ಆಸೀಫ್ ಎಂ.ಎ. ಆಯ್ಕೆಯಾಗಿದ್ದಾರೆ.

ವಾರ್ತಾ ಭಾರತಿ 17 Jan 2026 7:21 pm

ಕಲಬುರಗಿ | ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಕಲಬುರಗಿ: 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2024 ರಿಂದ 31-12-2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳು https://sevasindhu.karnataka.gov.in  ಆನ್‍ಲೈನ್ ಮೂಲಕ 2026ರ ಜ.31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ವಾರ್ತಾ ಭಾರತಿ 17 Jan 2026 7:16 pm

ಶಹಾಬಾದ್‌ | ಸಿ.ಎ ಇಂಗಿನಶೆಟ್ಟಿ ಕಾಲೇಜಿನಲ್ಲಿ ಬಿಳ್ಕೊಡುಗೆ ಸಮಾರಂಭ

ಶಹಾಬಾದ್‌ : ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ಪರಿಶ್ರಮವೇ ಹೊರತು ಅನ್ಯಮಾರ್ಗವಿಲ್ಲ ಎಂದು ಕಾಲೇಜಿನ ಉಪನ್ಯಾಸಕಿ ಶರಣಮ್ಮ ಕೊಳ್ಳಿ ಹೇಳಿದರು. ಶಹಾಬಾದ್‌ ನಗರದ ಪ್ರತಿಷ್ಠಿತ ಶ್ರೀ ಸಿ.ಎ ಇಂಗಿನಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಅಂಕಗಳ ಜೊತೆಗೆ ಜೀವನದ ಮೌಲ್ಯಗಳು ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನಿರಾಶರಾಗಬಾರದು. ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಕಠಿಣ ಪರಿಸ್ಥಿತಿ ಎದುರಿಸುವ ಛಲ ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು ಎಂದರು. ಸಂಸ್ಥೆಯ ಹಿರಿಯ ಉಪನ್ಯಾಸಕ ರಾಜಕುಮಾರ ಭಾಸದ್ಕರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಪ್ರಮುಖವಾಗಿರುತ್ತದೆ, ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು. ಸಕಾರಾತ್ಮಕ ಚಿಂತನೆಗಳು ಮೈಗೂಡಿಸಿಕೊಳ್ಳಬೇಕು, ಆತ್ಮವಿಶ್ವಾಸದಿಂದ ಮುನ್ನಡೆದರೆ ಜೀವನದಲ್ಲಿ ಏನಾದರೂ ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತುಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ದಿಲೀಪ್ ಎಲ್ ಶೆಟ್ಟಿ, ಸದಸ್ಯರಾದ ಅನಿಲ್ ಕುಮಾರ್ ಬೋರ್ಗೌಕರ್, ಎಸ್.ಜಿ.ವರ್ಮ ಹಿಂದಿ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಲ್ಲಿನಾಥ್ ಪಾಟೀಲ್, ಉಪನ್ಯಾಸಕರಾದ ಸಾಬಣ್ಣ ಗುಡ್ಲಾ, ಶರಣಪ್ಪ ಹಲಕರ್ಟಿ, ಪದ್ಮಶ್ರೀ ಜೋಶಿ, ದೀಪಾ, ಅಶ್ವಿನಿ ಮೋಹಿತೆ, ಸುಮರಾಣಿ ಗೌಳಿ, ವೀರಯ್ಯ ಹಿರೇಮಠ್, ಸುಗಯ್ಯ ಗಂಟೆ ಮಠ, ರಮೇಶ್ ಮಹೇಂದ್ರಕರ್ ಉಪಸ್ಥಿತರಿದ್ದರು. ಗೌರಿ ಹಾಗೂ ರಿತಿಕಾ ನಿರೂಪಿಸಿದರು. ತನಾಜ್ ಸ್ವಾಗತಿಸಿದರು. ಸೀಮಾ ವಂದಿಸಿದರು.

ವಾರ್ತಾ ಭಾರತಿ 17 Jan 2026 7:13 pm

ಕಲಬುರಗಿ | ತೊಗರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಜ.20ರಂದು ಪ್ರತಿಭಟನೆ : ಶರಣಬಸಪ್ಪ ಮಮಶೆಟ್ಟಿ

ಕಲಬುರಗಿ: ಜಿಲ್ಲೆಯ ರೈತರ ಆರ್ಥಿಕತೆ ನಿರ್ಧರಿಸುವ ತೊಗರಿ ಪ್ರತಿ ಟನ್ ಗೆ 12,500 ರೂ. ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ, ಜ.20 ರಂದು ಇಲ್ಲಿನ ನೆಹರೂ ಗಂಜ್ ಪ್ರದೇಶದಲ್ಲಿರುವ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಯುಕ್ತ ಹೋರಾಟ - ಕರ್ನಾಟಕ ಸಮಿತಿಯ ಸಂಚಾಲಕ, ರೈತ ಮುಖಂಡ ಶರಣಬಸಪ್ಪ ಮಮಶೆಟ್ಟಿ ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲೇ ಅತಿ ಹೆಚ್ಚು ತೊಗರಿ ಬೆಳೆಯುವ ನಾಡು ನಮ್ಮ ಕಲಬುರಗಿ ಜಿಲ್ಲೆ ಆಗಿದೆ, ಇಲ್ಲಿನ ಉತ್ಕೃಷ್ಟ ಮಟ್ಟದ ತೊಗರಿಯು ವಿಶ್ವದೆಲ್ಲೆಡೆ ಖ್ಯಾತಿ ಪಡೆದಿದ್ದಲ್ಲದೆ ಜಿಐ ಟ್ಯಾಗ್ ಕೂಡ ಪಡೆದಿದೆ. ಇಷ್ಟಾದರೂ ತೊಗರಿಗೆ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ, ಹಾಗಾಗಿ ಕೂಡಲೇ ಸ್ವಾಮಿನಾಥನ್ ವರದಿ ಪ್ರಕಾರ ಎಂಎಸ್ಪಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು. ಹಾಲು ಉತ್ಪಾದಕರ ಸಹಕಾರ ಸಂಘಗಳ (ಕೆಎಂಎಫ್) ಮಾದರಿಯಲ್ಲಿ ತೊಗರಿ ಖರೀದಿ ಕೇಂದ್ರ ಸ್ಥಾಪಿಸಬೇಕು, ಪ್ರತಿ ಕ್ವಿಂಟಲ್ ತೊಗರಿಗೆ 12,500 ರೂಪಾಯಿ ಬೆಂಬಲ ಬೆಲೆ ನೀಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ತಲಾ 1,000 ರೂಪಾಯಿ ಪ್ರೋತ್ಸಾಹಧನ ಕೊಡಬೇಕು. ಹೊರದೇಶದ ತೊಗರಿಗೆ ಶೇ.50ರಷ್ಟು ಆಮದು ಶುಲ್ಕ ಹಾಕಬೇಕು, ತೊಗರಿ ತುರ್ತು ಖರೀದಿ ಕೇಂದ್ರ ಸ್ಥಾಪನೆ, ಬೆಳೆ ವಿಮೆ ಮಂಜೂರು ಮತ್ತಿತ್ತರ ಬೇಡಿಕೆಗಳು ಈಡೇರಿಸಬೇಕೆಂದು ಸರ್ಕಾರಕ್ಕೆ ಒತ್ತಡ ಹೇರಿದರು. ಮುಖಂಡ ಮಹೇಶ್ ಎಸ್.ಬಿ. ಅವರು ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಭೀಮಾಶಂಕರ ಮಾಡ್ಯಾಳ, ಉಮಾಪತಿ ಪಾಟೀಲ್, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್ ಮತ್ತಿತರರು ಇದ್ದರು.

ವಾರ್ತಾ ಭಾರತಿ 17 Jan 2026 7:09 pm

ಟಿಕೆಟ್ ರಹಿತ ಪ್ರಯಾಣ : ಡಿಸೆಂಬರ್ ತಿಂಗಳಲ್ಲಿ 4,353 ಪ್ರಯಾಣಿಕರಿಂದ 8ಲಕ್ಷ ರೂ.ದಂಡ ವಸೂಲಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಸಾರ್ಟಿಸಿ) ಡಿಸೆಂಬರ್ ತಿಂಗಳಲ್ಲಿ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,353 ಪ್ರಯಾಣಿಕರಿಂದ ಒಟ್ಟು 8ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ದಂಡ ವಸೂಲಿ ಮಾಡಿದೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,553 ವಾಹನಗಳನ್ನು ತನಿಖೆಗೊಳಪಡಿಸಿ 4,207 ಪ್ರಕರಣಗಳನ್ನು ಪತ್ತೆಹಚ್ಚಿ, 4,353 ಟಿಕೆಟ್ ರಹಿತ ಪ್ರಯಾಣಿಕರಿಂದ 8,08,704 ರೂ.ಗಳನ್ನು ದಂಡ ವಸೂಲಿ ಮಾಡಿದೆ. ಅಲ್ಲದೆ, ಇದೇ ವೇಳೆ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಲಾಗಿದೆ.

ವಾರ್ತಾ ಭಾರತಿ 17 Jan 2026 7:08 pm

ಕಾಳಗಿ | ರಾಜಾಪೂರ ಗ್ರಾಪಂ ಅಧ್ಯಕ್ಷರಾಗಿ ಮತ್ತೆ ಮುಂದುವರೆದ ಪ್ರಕಾಶರೆಡ್ಡಿ

ಕಾಳಗಿ : ತಾಲೂಕಿನ ರಾಜಾಪೂರ ಗ್ರಾಪಂ ಅಧ್ಯಕ್ಷ ಪ್ರಕಾಶರೆಡ್ಡಿ ಸದಸ್ಯತ್ವ ಪಂಚಾಯತ್ ರಾಜ್ ಇಲಾಖೆ ರದ್ದುಗೊಳಿದನ್ನು ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಮತ್ತೆ ರಾಜಾಪೂರ ಗ್ರಾಪಂ ಅಧ್ಯಕ್ಷರಾಗಿ ಪ್ರಕಾಶರೆಡ್ಡಿ ಅವರೇ ಮುಂದುವರೆಯಲಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.‌ಬಸಲಿಂಗಪ್ಪ ಡಿಗ್ಗಿ ತಿಳಿಸಿದ್ದಾರೆ. ಈ ಹಿಂದೆ ರಾಜಾಪೂರ ಗ್ರಾಪಂ ಅಧ್ಯಕ್ಷ ಪ್ರಕಾಶರೆಡ್ಡಿ ಅವರ ಮೇಲಿನ ಲಂಚದ ಆರೋಪ ಸಾಬೀತಾಗಿದ್ದರಿಂದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಪ್ರಕಾಶರೆಡ್ಡಿ ಅವರ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಮರು ಪ್ರಶ್ನಿಸಿ ಪ್ರಕಾಶರೆಡ್ಡಿ ಅವರು ಕಲಬುರಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದಾಗ ಗ್ರಾಪಂ ಸದಸ್ಯತ್ವ ಅನರ್ಹತೆಗೆ ತಡೆಯಾಜ್ಞೆ ನೀಡಿದೆ, ಹಾಗಾಗಿ ಮತ್ತೆ ಪ್ರಕಾಶರೆಡ್ಡಿ ಮಲ್ಲರೆಡ್ಡಿ ಅವರೇ ರಾಜಾಪೂರ ಗ್ರಾಪಂ ಅಧ್ಯಕ್ಷರಾಗಿ ಮುಂದುವರೆಯಲ್ಲಿದ್ದಾರೆ ಎಂದು ಡಾ. ಬಸಲಿಂಗಪ್ಪ ಡಿಗ್ಗಿ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 7:05 pm

ಕುಂದಾಪುರ: ಮರಳಲ್ಲಿ ಅರಳಿದ ನಮ್ಮೂರ ಶಾಲೆ!

ಕುಂದಾಪುರ: ಕುಂದಾಪುರ ಪಾರಿಜಾತದ ವತಿುಂದ ದಿ.ರಾಮ ಚಂದ್ರ ಭಟ್ ಮತ್ತು ದಿ.ಅಹಲ್ಯ ಭಟ್ ಸನೆನಪಿಗಾಗಿ ಕೋಡಿ ಬೀಚ್‌ನಲ್ಲಿ ನಡೆಯುವ ಗಾಳಿಪಟ ಉತ್ಸವದಲ್ಲಿ ಆಕರ್ಷಣೀಯ ’ನಮ್ಮೂರ ಶಾಲೆ’ ಪರಿಕಲ್ಪನೆಯ ಬೃಹತ್ ಮರಳು ಶಿಲ್ಪಾಕೃತಿ ಕಣ್ಮನ ಸೆಳೆಯುತ್ತಿದೆ. ಸರಕಾರಿ ಶಾಲಾ ಮಕ್ಕಳ ಧ್ಯೇಯವನ್ನಿಟ್ಟುಕ್ಕೊಂಡು ಸ್ವಾತಂತ್ರತೆಯನ್ನು ಮತ್ತು ಬಣ್ಣದ ಕನಸ್ಸನ್ನು ಕಾಣುವ ಗಾಳಿಪಟದ ವರ್ಣನೆಯೊಂದಿಗೆ ಶಾಲಾ ದೃಶ್ಯ ಹಾಗೂ ಗಾಳಿಪಟ ಉತ್ಸವ ಎಂಬ ಬರಹದೊಂದಿಗೆ ಬಳಪವನ್ನು ಹಿಡಿದುಕೊಂಡ ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯ ಭಾವನೆಯನ್ನು ಅಭಿವ್ಯಕ್ತಿಸುವ ಕಲಾಕೃತಿಯನ್ನು ಸ್ಯಾಂಡ್ ಥೀಂ ಉಡುಪಿಯ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ರಚಿಸಿದ್ದಾರೆ. 15 ಅಡಿ ಅಗಲ ಮತ್ತು 6 ಅಡಿ ಎತ್ತರದಲ್ಲಿ ರಚಿಸಲಾಗಿರುವ ಈ ಕಲಾಕೃತಿಯ ವೀಕ್ಷಣೆಗೆ ಜ.18ರಂದು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ವಾರ್ತಾ ಭಾರತಿ 17 Jan 2026 7:02 pm

ಆಳಂದ | ಮಾಜಿ ಸಚಿವ ಭೀಮಣ್ಣ ಖಂಡ್ರೆಗೆ ಶ್ರದ್ಧಾಂಜಲಿ

ಆಳಂದ : ಶುಕ್ರವಾರ ಸಂಜೆ ನಿಧನರಾದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರಿಗೆ ವೀರಶೈವ ಲಿಂಗಾಯತ್ ಮಹಾಸಭಾ ತಾಲೂಕು ಘಟಕದ ಆಶ್ರಯದಲ್ಲಿ ಸಮಾಜ ಬಾಂಧವರು ಶನಿವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಪಟ್ಟಣದ ಬಸ್ ನಿಲ್ದಾಣ ಬಳಿಯ ವೀರಶೈವ ಲಿಂಗಾಯತ ಮಹಾಸಭಾ ಪ್ರಾಂಗಣದಲ್ಲಿನ ವಿಶ್ವಗುರು ಬಸಣ್ಣಣವರ ಪ್ರತಿಮೆ ಬಳಿ ಲಿಂ. ಭೀಮಣ್ಣ ಖಂಡ್ರೆ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭೀಮಣ್ಣ ಖಂಡ್ರೆ ಅವರ ವ್ಯಕ್ತಿತ್ವನ್ನು ಸ್ಮರಿಸಿದ ಮುಖಂಡರು, ಆಳಂದ ತಾಲೂಕಿನ ಸಮಾಜಿಕ, ರಾಜಕೀಯವಾಗಿ ಬಹು ಹತ್ತಿರದ ನಂಟು ಹೊಂದಿದ್ದರು. ಅವರ ಜನಪರ ಮತ್ತು ಸಮಾಜಪರ ಕಾಳಜಿಯುಳ್ಳ ನಾಯಕತ್ವದೊಂದಿಗೆ ಯುವ ಸಮುದಾಯಕ್ಕೆ ಮಾದರಿ ವ್ಯಕ್ತಿತ್ವನ್ನು ಬಿಟ್ಟುಕೊಟ್ಟಿದ್ದಾರೆ. ಅವರ ಅಗಲಿಕೆಗೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಉಪಾಧ್ಯಕ್ಷ ಶ್ರೀಶೈಲ ಖಜೂರಿ ಮತ್ತು ಸಿದ್ಧು ಪಾಟೀಲ ಮೋಘಾ, ನ್ಯಾಯವಾದಿ ಮಹಾದೇವ ಹತ್ತಿ ಅವರು ಹೇಳಿದರು. ಮಹಾಸಭಾ ಕಾರ್ಯದರ್ಶಿ ಕಲ್ಲಪ್ಪ ಹತ್ತರಕಿ, ಹಿರಿಯ ಮುಖಂಡ ಮಲ್ಲಪ್ಪ ಹತ್ತರಕಿ, ಮಲ್ಲಿಕಾರ್ಜುನ ಕಂದಗುಳೆ, ಶ್ರೀಶೈಲ ಹತ್ತರಕಿ, ಬಸವಸೇನೆ ತಾಲೂಕು ಅಧ್ಯಕ್ಷ ಲಿಂಗರಾಜ ಪಾಟೀಲ, ಮಾಳಿ ಸಮಾಜ ಅಧ್ಯಕ್ಷ ಪಂಡಿತ ಶೇರಿಕಾರ, ವಿಎಸ್‌ಎಸ್‌ಎನ್ ಅಧ್ಯಕ್ಷ ಭಾರತ ಪಾಟೀಲ, ಭೂವಿ ಸಮಾಜದ ಕನಕಪ್ಪ ದಂಡಗುಲೆ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಶರಣಬಸಪ್ಪ ವಾಡೆ, ಪಂಚಮಸಾಲಿ ಸಮಾಜ ಅಧ್ಯಕ್ಷ ಆನಂದ ಎಸ್. ದೇಶಮುಖ, ಸಂತೋಷ ವಾಲೆ, ಬಾಬುರಾವ್ ಗೊಬ್ಬರೆ ಭೂಸನೂರ, ಚನ್ನಪ್ಪ ಹತ್ತರಕಿ, ರಾಮ ಹತ್ತರಕಿ, ಸಿದ್ಧು ಶೇಖಾಪೂರ, ಶಿವರಾಯ ಸರಸಂಬಿ ಮತ್ತಿತರು ಉಪಸ್ಥಿತರಿದ್ದು ಖಂಡ್ರೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗಣ್ಯರ ಸಂತಾಪ : ಶತಾಯುಷಿ ಭೀಮಣ್ಣ ಖಂಡ್ರೆ ಅವರ ಅಗಲಿಕೆಗೆ ಶಾಸಕ ಬಿ.ಆರ್.ಪಾಟೀಲ್‌, ಮಾಜಿ ಶಾಸಕ ಸುಭಾಷ ಗುತ್ತೇದಾರ್‌, ಕೃಷಿಕ ಸಮಾಜ ಅಧ್ಯಕ್ಷ ಗುರುಶರಣ ಪಾಟೀಲ ಕೊರಳಿ, ಪಂಚಗ್ಯಾರಂಟಿ ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ, ಜೆಡಿಎಸ್ ನಾಯಕಿ ಮಹೇಶ್ವರಿ ವಾಲಿ, ಹೋರಾಟಗಾರ ರಮೇಶ ಲೋಹಾರ, ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ, ಡಿಸಿಸಿ ನಿರ್ದೇಶಕ ಅಶೋಕ ಸಾವಳೇಶ್ವರ, ಕಿಸಾನಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ಬಂಜಾರಾ ಸಮಾಜದ ರಾಜು ಚವ್ಹಾಣ, ಸುಭಾಷ ಫೌಜಿ, ಗುತ್ತಿಗೆದಾರ ರೇವಣಸಿದ್ಧಪ್ಪ ನಾಗೂರೆ, ಅಖಿಲ ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷ ದತ್ತಾತ್ರೆಯ ಕುಡಕಿ, ಬಾಬುರಾವ್ ಅರುಣೋದಯ, ಹಿರಿಯ ದಯಾನಂದ ಶೇರಿಕಾರ, ಬಿಜೆಪಿ ಮುಖಂಡ ಅಶೋಕ ಹತ್ತರಕಿ, ಬಸವರಾಜೇಂದ್ರ ಗುಂಡೆ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 17 Jan 2026 7:02 pm

ಒಗ್ಗಟ್ಟಿನಲ್ಲಿ ದೇಶ ಕಟ್ಟುವ ಕಾರ್ಯ ಅಗತ್ಯ: ಭಾವೀ ಪರ್ಯಾಯ ಶಿರೂರು ಶ್ರೀ

ಉಡುಪಿ ಕಾಂಗ್ರೆಸ್ ಭವನದಲ್ಲಿ ಭಜನಾ ಕಾರ್ಯಕ್ರಮ

ವಾರ್ತಾ ಭಾರತಿ 17 Jan 2026 7:00 pm

ಸೇಡಂ | ಅತಿವೃಷ್ಟಿಯಿಂದ ಬೆಳೆ ಹಾನಿ : ಹೆಚ್ಚಿನ ಪರಿಹಾರ ಒದಗಿಸುವಂತೆ ಕರವೇ ಆಗ್ರಹ

ಸೇಡಂ: 2025-26ನೇ ಸಾಲಿನಲ್ಲಿ ಭಾರೀ ಮಳೆ, ಪ್ರವಾಹದಿಂದಾಗಿ ಹಾನಿಗೊಳಗಾದ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ತಾಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ರೈತರು ಬೆಳೆದ ತೊಗರಿ ಬೆಳೆಗಳು ಮಳೆ ನೀರಿನಲ್ಲಿ ಮುಳುಗಿ ಸಂಪೂರ್ಣ ಹಾಳಾಗಿವೆ, ಈಗಾಗಲೇ ಸರ್ಕಾರದಿಂದ ರೈತರಿಗೆ ಪರಿಹಾರಧನ ನೀಡಲಾಗಿದೆ. ಆದರೆ, ಅತಿವೃಷ್ಟಿಯಿಂದ ಇಳುವರಿ ತುಂಬಾ ಕಡಿಮೆ ಆಗಿದ್ದರಿಂದ ಹೆಚ್ಚಿನ ಪರಿಹಾರಧನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮೌನೇಶ್ ಬೇನಕನಹಳ್ಳಿ, ಮಹಿಳಾ ಘಟಕ ತಾಲೂಕು ಅಧ್ಯಕ್ಷೆ ಶರಣಮ್ಮ, ರೈತ ಸಂಘ ಅಧ್ಯಕ್ಷ ಅಂಜುಕುಮಾರ ಬಿಲ್ಕುಲ್, ಉಪಾಧ್ಯಕ್ಷರಾದ ಬಸವರಾಜ ತಳವಾರ, ಸಂತೋಷ ನಮವಾರ, ಚೇತನ್ ಹಾಬಳಟಿ, ಶ್ರೀಶೈಲ್, ಸೈದಪ್ಪ, ನಾಗರಾಜ್, ಸುಮನ್, ರವಿಕುಮಾರ್, ವಿಶ್ವನಾಥ್ ಉಡಗಿ ಸೇರಿದಂತೆ ಹಲವರು ಇದ್ದರು.

ವಾರ್ತಾ ಭಾರತಿ 17 Jan 2026 6:58 pm

ಡಾ.ಗಿರಿಜಾ ಶಾಸ್ತ್ರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಉಡುಪಿ, ಜ.17: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವುಗಳ ಸಂಯುಕ್ತ ಆಶ್ರಯ ದಲ್ಲಿ ಹಿರಿಯ ಲೇಖಕಿ ಡಾ.ಗಿರಿಜಾ ಶಾಸ್ತ್ರಿ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಯನ್ನು ಶನಿವಾರ ಉಡುಪಿ ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಚದುರಿ ಹೋಗಿರುವ ಮುಳಿಯ ತಿಮ್ಮಪ್ಪಯ್ಯ ಅವರ ಬರೆದ ಅನೇಕ ಕೃತಿಗಳು ಒಟ್ಟುಗೂಡಿಸಿ ಸಮಗ್ರ ಸಂಪುಟ ಹೊರತರಬೇಕು. ಅಲ್ಲದೆ ಅವರ ಕುರಿತು ನಡೆಸಿರುವ ಪಿಎಚ್‌ಡಿ ಅಧ್ಯಯನವನ್ನು ಕೃತಿಯಾಗಿ ರಚಿಸ ಬೇಕು. ಇದಕ್ಕೆಲ್ಲ ಬೇಕಾದ ಆರ್ಥಿಕ ನೆರವು ನೀಡುವ ಕಾರ್ಯವನ್ನು ಸರಕಾರ ಮಾಡಬೇಕಾಗಿದೆ ಎಂದರು. ಮುಳಿಯ ತಿಮ್ಮಪ್ಪಯ್ಯ ಹೊರಗಿನ ಸಂಪರ್ಕ ಇಲ್ಲದೆಯೇ ದೇಶಿ ಮೂಲಕ ಅಧ್ಯಯನ ಮಾಡಿದರು. ಇಂದಿನ ಯುವ ಪೀಳಿಗೆ ಮುಳಿಯ ತಿಮ್ಮಪ್ಪಯ್ಯ ಅವರನ್ನು ಓದಿಲ್ಲ. ಹಾಗಾಗಿ ಯುವ ಸಮುದಾಯಕ್ಕೆ ಅವರ ಪರಿಚಯ ಮಾಡುವ ಕಾರ್ಯ ಮಾಡಬೇಕು ಎಂದು ಅವರು ತಿಳಿಸಿದರು. ಅಧ್ಯಕ್ಷತೆಯನ್ನು ಮುಳಿಯ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ನಾ ದಾಮೋದರ ಶೆಟ್ಟಿ ವಹಿಸಿದ್ದರು. ವಿಶ್ರಾಂತ ಪ್ರಾಧ್ಯಾಪಕಿ ಡಾ.ಸರಸ್ವತಿ ಅಭಿನಂದನಾ ಭಾಷಣ ಮಾಡಿದರು. ಮುಳಿಯ ಕುಟುಂಬಸ್ಥರಾದ ರಾಘವಯ್ಯ, ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕ ರಾಘವೇಂದ್ರ ತುಂಗ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 17 Jan 2026 6:57 pm

ಚಿತ್ತಾಪುರ | ಸಮಾಜಕ್ಕೆ ಭೀಮಣ್ಣ ಖಂಡ್ರೆಯವರ ಕೊಡುಗೆ ಅಪಾರ: ನಾಗರಾಜ ಭಂಕಲಗಿ

ಚಿತ್ತಾಪುರ: ಭೀಮಣ್ಣ ಖಂಡ್ರೆ ಅವರು ಸರಳ ಜೀವನ, ನಿಸ್ವಾರ್ಥ ಸೇವೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಗುಣಗಳಿಂದ ಸಮಾಜ ಸೇವೆಗೆ ಮಾದರಿಯಾಗಿದ್ದರು. ಸಮಾಜದ ವಿರುದ್ಧ ಅವೈಜ್ಞಾನಿಕವಾಗಿ ಮಂಡಿಸಲಾದ ಹಾವನೂ‌ರ್ ವರದಿಯನ್ನು ಧೈರ್ಯದಿಂದ ವಿರೋಧಿಸಿ ವೀರಶೈವ ಸಮಾಜದ ಹಕ್ಕುಗಳ ರಕ್ಷಣೆಗೆ ಮುಂಚೂಣಿಯಲ್ಲಿ ನಿಂತ ನಾಯಕರಾಗಿದ್ದರು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು. ಪಟ್ಟಣದ ವರುಣ ನಗರದ ಶರಣಬಸವೇಶ್ವರ ಮಂದಿರದ ಸಭಾಭವನದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗೌರವಾಧ್ಯಕ್ಷ ಭೀಮಣ್ಣ ಖಂಡ್ರೆ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, 102 ವರ್ಷಗಳ ಸಾರ್ಥಕ ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಅಜಾತಶತ್ರುವಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಾಗಿ, ಹೈದರಾಬಾದ್ ಕರ್ನಾಟಕದ ವಿಮೋಚನೆಗಾಗಿ, ಏಕೀಕರಣಕ್ಕಾಗಿ ಹೋರಾಡಿದ್ದ ಅವರು, ಶಾಸಕರಾಗಿ, ಸಚಿವರಾಗಿ, ವಿಧಾನಪರಿಷತ್ ಸದಸ್ಯರಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು. ಮುಖಂಡ ಮಲ್ಲರೆಡ್ಡಿ ಗೋಪಸೇನ್ ಮಾತನಾಡಿ, ಖಂಡ್ರೆ ಅವರ ನಿಧನದಿಂದ ಸಮಾಜ ಮಾತ್ರವಲ್ಲದೆ ಇಡೀ ರಾಜ್ಯವೇ ತೀವ್ರ ಆಘಾತ ಅನುಭವಿಸುತ್ತಿದೆ ಎಂದು ಹೇಳಿದರು. ಮುಖಂಡ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿ, ವೀರಶೈವ ಸಮಾಜಕ್ಕೆ ಅನ್ಯಾಯವಾದಾಗ ಧೈರ್ಯವಾಗಿ ಸಿಡಿದು ನಿಂತ ಹೋರಾಟಗಾರರು ಖಂಡ್ರೆ ಎಂದು ಸ್ಮರಿಸಿದರು. ಯುವ ಮುಖಂಡ ಪ್ರಸಾದ ಅವಂಟಿ ಅವರು, ಖಂಡ್ರೆ ಅವರು ತೋರಿಸಿದ ಮಾರ್ಗದರ್ಶನದಂತೆ ಸಮಾಜದ ಹಿತಕ್ಕಾಗಿ ಒಗ್ಗಟ್ಟಿನಿಂದ ಮುಂದುವರೆಯಬೇಕು ಎಂದು ಕರೆ ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಸಂಘಟನೆ ಬಲಪಡಿಸುವಲ್ಲಿ ಖಂಡ್ರೆ ಅವರು ಮಹತ್ವದ ಪಾತ್ರ ವಹಿಸಿದ್ದರು ಎಂದರು. ಇದೇ ವೇಳೆ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನೇಹಲ್ ಪಾಟೀಲ್ ಬೆಳಗುಂಪಾ, ಅಶೋಕ ನಿಪ್ಪಾಣಿ, ಬಸವರಾಜ ಕಾಳಗಿ, ಸೋಮಶೇಖರ ಅಜಲಾಪುರ್, ಅನಿಲಕುಮಾರ ವಡ್ಡಡಗಿ, ರವೀಂದ್ರ ಗೊಬ್ಬುರ, ಎಸ್.ಎನ್. ಪಾಟೀಲ, ಚಂದ್ರಶೇಖರ ಉಟಗೂರ್, ನಾಗರೆಡ್ಡಿ ಗೋಪಸೇನ್, ಬಸವರಾಜ ಸಂಕನೂರ, ಶಿವರಾಜ ಪಾಳೇದ್, ರಮೇಶ್ ಕಾಳನೂ‌ರ್, ಸಂಗಣ್ಣಗೌಡ ಸಂಕನೂರ, ಬಸವರಾಜಗೌಡ ಆಲೂರ್, ಮಂಜುನಾಥ ಪೊಲೀಸ್ ಪಾಟೀಲ್‌, ಅಂಬರೀಶ್ ಸುಲೇಗಾಂವ್, ರಾಚು ಬೊಮ್ಮನಳ್ಳಿ, ಮಲ್ಲಿಕಾರ್ಜುನ ದಂಡಗುಂಡ, ಸಿದ್ದು ರಾಜಾಪುರ, ವೀರಭದ್ರಪ್ಪ ಗುರುಮಿಠಕಲ್, ಕೋಟೇಶ್ವರ ರೇಷ್ಮೆ, ಶರಣಗೌಡ ಸೂಲಹಳ್ಳಿ, ಸಂತೋಷ ಹಾವೇರಿ, ರವಿ ಸಿಂಪಿ, ಅಡೆಪ್ಪ ಖಣದಾಳ ಇದ್ದರು.

ವಾರ್ತಾ ಭಾರತಿ 17 Jan 2026 6:48 pm

ಕಲಬುರಗಿ | ಬಂಜಾರಾ ಸೇವಾ ಸಂಘದ ಕಾರ್ಯದರ್ಶಿಯಾಗಿ ವಿನೋದ್ ಚೌಹಾಣ್ ಆಯ್ಕೆ

ಕಲಬುರಗಿ : ಜಿಲ್ಲಾ ಬಂಜಾರ (ಲಂಬಾಣಿ) ಸೇವಾ ಸಂಘದ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಿನೋದ್ ಕುಮಾರ್ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘವು ಇತ್ತೀಚೆಗೆ ಸಭೆ ನಡೆಸಿ ಈ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಬಿ.ಬಿ ನಾಯಕ್ ತಿಳಿಸಿದ್ದಾರೆ. ಕರ್ನಾಟಕ ಪ್ರದೇಶ ಲಂಬಾಣಿ ಸಮುದಾಯದಲ್ಲಿ ಕ್ರಿಯಾಶೀಲರಾಗಿ ಸಂಘಟನೆಗೆ ಶ್ರಮಿಸುತ್ತಿರುವ ವಿನೋದ್ ಕುಮಾರ್ ಚೌಹಾಣ್, ಪ್ರಧಾನ ಕಾರ್ಯದರ್ಶಿ ಸ್ಥಾನ ಅಲಂಕರಿಸಿರುವುದು ಸಂಘಕ್ಕೆ ಶಕ್ತಿ ಬಂದಿದೆ ಎಂದು ಸಭೆಯಲ್ಲಿ ಅಭಿಪ್ರಾಯದ ಆನಂದ ಚೌಹಾಣ್ ಚಿಂಚೋಳಿ, ಲಕ್ಷ್ಮಣ ಚೌಹಾಣ್, ರಮೇಶ್ ರಾಠೋಡ್ ಕಾರಬಾರಿ, ಲಾಲಪ್ಪ ರಾಥೋಡ್, ಕಿಶನ್ ನಾಯಕ್, ವಸಂತ ಚೌಹಾಣ್, ರಾಠೋಡ್ ರೇಣುಕಾ ರಾಥೋಡ್, ಸುನಿತಾ ಜಾಧವ್, ಕವಿತಾ ರಾಥೋಡ್, ಸಂಗೀತಾ ಚೌಹಾಣ್ ಲಲಿತಾಬಾಯಿ ರಾಥೋಡ್ ಮತ್ತಿತರು ಇದ್ದರು.

ವಾರ್ತಾ ಭಾರತಿ 17 Jan 2026 6:42 pm

ಸಿಂಧನೂರು ಜಿಲ್ಲಾ ಕೇಂದ್ರಕ್ಕಾಗಿ ವಿಶೇಷ ಅಧಿವೇಶನದಲ್ಲಿ ಧ್ವನಿ ಎತ್ತಲು ಕರವೇ ರಾಮಕೃಷ್ಣ ಭಜಂತ್ರಿ ಒತ್ತಾಯ

ಸಿಂಧನೂರು: ಇದೇ ಜನವರಿ 22ರಿಂದ 31ರವರೆಗೆ ನಡೆಯುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ‘ಸಿಂಧನೂರು ಜಿಲ್ಲೆ’ ರಚನೆಗೆ ಕುರಿತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯ ಧ್ವನಿ ಎತ್ತಬೇಕು ಹಾಗೂ ಮಾಜಿ ಸಚಿವರು, ಶಾಸಕರು, ಸಂಸದರೂ ಕೂಡ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಜಂತ್ರಿ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಿಂಧನೂರು ತಾಲೂಕು ಕೇಂದ್ರ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ಕಲಬುರಗಿ ಜಿಲ್ಲೆಗಳ ಮಧ್ಯಭಾಗದಲ್ಲಿದ್ದು, ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಹೊಂದುವ ಮೂಲಕ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ವಿಶಿಷ್ಠತೆಯನ್ನು ಹೊಂದಿದ್ದು, ತಾಲೂಕಿನಲ್ಲಿ ವಿವಿಧ ರಾಜ್ಯಗಳ ವಿವಿಧ ಸಂಸ್ಕೃತಿಗಳ ಜನರು ಬದುಕು ಕಟ್ಟಿಕೊಳ್ಳುವುದರ ಜೊತೆಗೆ ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಜಿಲ್ಲಾ ಕೇಂದ್ರವಾಗಿಸುವ ನಿಟ್ಟಿನಲ್ಲಿ ಡಿಪ್ಲೊಮಾ ಕಾಲೇಜು, ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯ ಅಗತ್ಯತೆ ಇದ್ದು, ಈ ಬಗ್ಗೆ ಗಮನಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಹಾಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯ ಧ್ವನಿ ಎತ್ತುವುದರಿಂದ ಸರ್ಕಾರದ ಗಮನ ಸೆಳೆಯಬಹುದಾಗಿದೆ. ಅಲ್ಲದೇ ಮಾಜಿ ಸಚಿವರು, ಶಾಸಕರು ಹಾಗೂ ಸಂಸದರು ಸರ್ಕಾರಕ್ಕೆ ಪತ್ರ ಬರೆದು ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಬೇಕು ಎಂದು ರಾಮಕೃಷ್ಣ ಭಜಂತ್ರಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ದೇವೇಂದ್ರಗೌಡ, ತಾಲೂಕು ಅಧ್ಯಕ್ಷ ಎಲ್.ರಾಜಾಸಾಬ್ ಗಾಂಧಿನಗರ, ನಗರ ಘಟಕದ ಅಧ್ಯಕ್ಷ ಆರ್.ಎಕ್ಸ್.ಸುರೇಶ, ತಾಲೂಕು ಉಪಾಧ್ಯಕ್ಷ ಬಸವರಾಜ, ಎಸ್.ಎಸ್.ಪಾಷಾ ಇನ್ನಿತರರು ಇದ್ದರು

ವಾರ್ತಾ ಭಾರತಿ 17 Jan 2026 6:39 pm

ಹಿಮವಿಲ್ಲದ ಹಿಮಾಲಯ: ಕಡಿಮೆಯಾದ ನೀರಿನ ಲಭ್ಯತೆ, ಬೆಳೆಗಳಿಗೂ ಭೀತಿ

ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಈ ಬಾರಿ ಅಪರೂಪದಷ್ಟು ಒಣ ಚಳಿಗಾಲ ಅನುಭವವಾಗಿದ್ದು, ಸಾಮಾನ್ಯವಾಗಿ ಹಿಮದಿಂದ ಮುಚ್ಚಿರಬೇಕಾದ ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರದ ಪರ್ವತ ಶಿಖರಗಳು ಬಹುತೇಕ ಬರಿದಾಗಿವೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಡಿಸೆಂಬರ್ ಮತ್ತು ಜನವರಿಯಲ್ಲಿ ಉತ್ತರಾಖಂಡದಲ್ಲಿ ಮಳೆಯೇ ದಾಖಲಾಗಿಲ್ಲ. ಹಿಮಾಚಲ ಪ್ರದೇಶದಲ್ಲಿ 1901ರಿಂದಲೂ ದಾಖಲಾಗಿರುವ ಮಾಹಿತಿಯಲ್ಲಿ, ಈ ಬಾರಿ ಆರನೇ ಅತಿ

ಒನ್ ಇ೦ಡಿಯ 17 Jan 2026 6:36 pm

PHOTOS | ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಶ್ಚಿಮ ಬಂಗಾಳದ ಮಾಲ್ಡಾ ಟೌನ್‌ನಿಂದ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿದ್ದಾರೆ. 

ವಾರ್ತಾ ಭಾರತಿ 17 Jan 2026 6:36 pm

ಮಾನ್ವಿ | ಪೇಂಟ್ ಅಂಗಡಿಯಲ್ಲಿ ಅಗ್ನಿ ಅವಘಡ : ಅಪಾರ ನಷ್ಟ

ಮಾನ್ವಿ : ಪಟ್ಟಣದ ಬಸವ ವೃತ್ತದ ಹತ್ತಿರ ಇರುವ ಲಕ್ಷ್ಮೀ ವೆಂಕಟೇಶ್ವರ ಪೇಂಟ್ ಅಂಗಡಿಗೆ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅನಾಹುತದಿಂದಾಗಿ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಗಳ ಪೇಂಟ್ ಸೇರಿದಂತೆ ಅಂಗಡಿಯಲ್ಲಿನ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು ಎಂದು ಅಂಗಡಿ ಮಾಲಕ ಬಿ.ವೀರೇಶ ಬಾಬು ರವರಿಗೆ ತಿಳಿಸಿದ್ದಾರೆ.

ವಾರ್ತಾ ಭಾರತಿ 17 Jan 2026 6:36 pm

ಎಲ್ಲಿಯ ಭಾರತ, ಎಲ್ಲಿಯ ಪಾಕ್ - ಹೋಲಿಕೆಗೂ ರೀತಿನೀತಿ ಬೇಡವೇ : ಟ್ರಂಪ್’ಗೆ US ಕಾಂಗ್ರೆಸ್ ಎಚ್ಚರಿಕೆ

Rich McCormick Suggestion to Trump On India : ರಷ್ಯಾದ ಜೊತೆಗೆ ತೈಲ ಖರೀದಿಗೆ ಸಂಬಂಧಿಸಿದಂತೆ, ಭಾರತ ಮತ್ತು ಅಮೆರಿಕಾ ನಡುವಿನ ರಾಜತಾಂತ್ರಿಕ ಸಂಬಂಧ ಹಿಂದಿನಂತಿಲ್ಲ. ಭಾರತ ಮತ್ತು ಪಾಕಿಸ್ತಾನದ ತುಲನೆ ಸರಿಯಲ್ಲ. ಭಾರತ, ದೇಶಕ್ಕೆ ಹೂಡಿಕೆಯನ್ನು ತರುತ್ತದೆ, ಅದು ಪಾಕಿಸ್ತಾನದಿಂದ ಸಾಧ್ಯವೇ ಎಂದು ಟ್ರಂಪ್ ಅವರ ರಿಪಬ್ಲಿಕನ್ ಪಾರ್ಟಿಯ ರಿಚ್ ಮೆಕ್‌ಕಾರ್ಮಿಕ್ ಹೇಳಿದ್ದಾರೆ.

ವಿಜಯ ಕರ್ನಾಟಕ 17 Jan 2026 6:33 pm

ಇರಾನ್‌ ಅಶಾಂತಿಯಲ್ಲಿ ಅಮೆರಿಕದ ಕೈವಾಡ, ಪ್ರತಿಭಟನಾಕಾರರ ಸಾವಿಗೆ ಡೊನಾಲ್ಡ್‌ ಟ್ರಂಪ್‌ ಕಾರಣ; ಯುದ್ಧ ನಗಾರಿ ಬಾರಿಸಿದ ಖಮೇನಿ!

ಇರಾನ್‌ನಲ್ಲಿ ಭುಗಿಲೆದ್ದಿರುವ ಖಮೇನಿ ಆಡಳಿತ ವಿರೋಧಿ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ಅದನ್ನು ಬಲಪ್ರಯೋಗ್ದ ಮೂಲಕ ನಿರ್ದಯವಾಗಿ ಹತ್ತಿಕ್ಕುವ ಪ್ರಯತ್ನಗಳು ಆತಂಕವನ್ನು ಹುಟ್ಟಿಸಿವೆ. ಈ ಮಧ್ಯೆ ಇರಾನ್‌ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಇರಾನ್‌ ಅಶಾಂತಿಯಲ್ಲಿ ಅಮೆರಿಕದ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರತಿಭಟನಾಕಾರರ ಸಾವಿಗೆ ಡೊನಾಲ್ಡ್‌ ಟ್ರಂಪ್‌ ಕಾರಣ ಎಂಬ ಅವರ ಆರೋಪ ಇದೀಗ ಚರ್ಚೆಗೆ ಗ್ರಾಸವಾಗಿದೆ.

ವಿಜಯ ಕರ್ನಾಟಕ 17 Jan 2026 6:29 pm

ವಿಮಾನಯಾನ ಸಂಸ್ಥೆ ಖರೀದಿಸ್ತಾರಾ ಎಲಾನ್‌ ಮಸ್ಕ್‌? ಕುತೂಹಲ ಹುಟ್ಟಿಸಿದೆ ನಂ.1 ಶ್ರೀಮಂತನ ಪೋಸ್ಟ್‌

ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಮತ್ತು ಪ್ರಸಿದ್ಧ ವಿಮಾನಯಾನ ಸಂಸ್ಥೆ ರೈಯಾನ್‌ಏರ್‌ನ ಸಿಇಒ ಮೈಕೆಲ್ ಒ'ಲಿಯರಿ ನಡುವೆ ಭಾರಿ ವಾಕ್ಸಮರ ನಡೆದಿದೆ. ತಮ್ಮ ವಿಮಾನಗಳಲ್ಲಿ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಇಂಟರ್ನೆಟ್ ಅಳವಡಿಸಲು ಒ'ಲಿಯರಿ ನಿರಾಕರಿಸಿದ್ದಲ್ಲದೆ, ಅದರ ತಾಂತ್ರಿಕತೆಯ ಬಗ್ಗೆ ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಮಸ್ಕ್, ಒ'ಲಿಯರಿ ಅವರನ್ನು 'ಮೂರ್ಖ' ಎಂದು ಕರೆದಿದ್ದಾರೆ. ಇದರ ಬೆನ್ನಲ್ಲೇ ರೈಯಾನ್‌ಏರ್ ಟ್ವಿಟರ್‌ನಲ್ಲಿ ಮಸ್ಕ್ ಅವರನ್ನು ಕಾಲೆಳೆದಾಗ, ಸಿಟ್ಟಿಗೆದ್ದ ಮಸ್ಕ್ 'ನಾನೇ ಈ ಏರ್‌ಲೈನ್ ಖರೀದಿಸಿ, 'ರೈಯಾನ್' ಎಂಬ ಹೆಸರಿನ ವ್ಯಕ್ತಿಯನ್ನೇ ಅದರ ಬಾಸ್ ಮಾಡಲಾ?' ಎಂದು ಕೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

ವಿಜಯ ಕರ್ನಾಟಕ 17 Jan 2026 6:19 pm

ಡಾ.ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಗೆ ಪಾದಯಾತ್ರೆ ಮೂಲಕ ಹುಮನಾಬಾದ್ ನಿಂದ ಭಾಲ್ಕಿಗೆ ಹೊರಟ ಅಭಿಮಾನಿ

ಹುಮನಾಬಾದ್ : ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದ್ದು, ಭಾಲ್ಕಿಯ ಶಾಂತಿಧಾಮದಲ್ಲಿ ಶನಿವಾರ ನಡೆಯಲಿರುವ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಹುಮನಾಬಾದ್‌ನ ಖಂಡ್ರೆ ಪರಿವಾರದ ಅಭಿಮಾನಿ ಹಾಗೂ ದಲಿತ ಮುಖಂಡ ಲಕ್ಷ್ಮಿಪುತ್ರ ಮಾಳಗೆ ಅವರು ಪಾದಯಾತ್ರೆ ಕೈಗೊಂಡಿದ್ದಾರೆ. ಪಾದಯಾತ್ರೆ ಆರಂಭಿಸುವ ಮುನ್ನ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ನಾಯಕರ ಆಶೀರ್ವಾದ ಪಡೆದು ಭಾಲ್ಕಿಯತ್ತ ಪ್ರಯಾಣ ಬೆಳೆಸಿದರು. ಹುಮನಾಬಾದ್‌ನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಭಾಲ್ಕಿ ನಗರಕ್ಕೆ ಜಲಸಂಗಿ, ದುಬಲಗುಂಡಿ ಹಾಗೂ ಏಣಕೂರ್ ಮಾರ್ಗವಾಗಿ ಲಕ್ಷ್ಮಿಪುತ್ರ ಮಾಳಗೆ ಅವರು ಪಾದಯಾತ್ರೆ ನಡೆಸಲಿದ್ದಾರೆ. ಜಿಲ್ಲೆಯ ಮಹಾನ್ ಚೇತನಕ್ಕೆ ಈ ಮೂಲಕ ವಿಶಿಷ್ಟವಾಗಿ ಗೌರವ ಸಲ್ಲಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಿಪುತ್ರ ಮಾಳಗೆ, ಲೋಕನಾಯಕ ಭೀಮಣ್ಣ ಖಂಡ್ರೆ ಅವರನ್ನು ಕಳೆದುಕೊಂಡಿರುವುದು ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸರ್ವಧರ್ಮಗಳನ್ನು ಸಮಾನವಾಗಿ ಕಾಣುತ್ತಿದ್ದ ಇಂತಹ ಧೀಮಂತ ನಾಯಕರು ಸಿಗುವುದು ಅಪರೂಪ. ಅವರ ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಅವರ ಮೇಲಿರುವ ಅಭಿಮಾನ ಹಾಗೂ ಗೌರವದ ಸಂಕೇತವಾಗಿ ನಾನು ಪಾದಯಾತ್ರೆ ಮೂಲಕ ತೆರಳಿ ಅಂತಿಮ ದರ್ಶನ ಪಡೆಯಲಿದ್ದೇನೆ,ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ್ ಪಾಟೀಲ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 17 Jan 2026 6:19 pm

ಇಂದೋರ್‌ನಲ್ಲಿ ಫೈನಲ್‌ ಪಂದ್ಯಕ್ಕೂ ಮುನ್ನ ಕುಡಿಯುವ ನೀರಿಗಾಗಿ 3 ಲಕ್ಷ ರೂ.ನ ಪ್ಯೂರಿಫೈಯರ್ ಯಂತ್ರ ತರಿಸಿಕೊಂಡ ಶುಭ್ಮನ್ ಗಿಲ್! ಕಾರಣವೇನು?

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ರೋಚಕ ಘಟ್ಟ ತಲುಪಿದೆ, 1-1 ಸಮಬಲದೊಂದಿಗೆ ನಾಳಿನ ಪಂದ್ಯ ನಿರ್ಣಾಯಕವಾಗಿದೆ. ಆಟಗಾರರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕಲುಷಿತ ನೀರಿನ ಸಮಸ್ಯೆಯಿಂದ ಎಚ್ಚೆತ್ತುಕೊಂಡ ನಾಯಕ ಶುಭಮನ್ ಗಿಲ್, ವೈಯಕ್ತಿಕವಾಗಿ ವಾಟರ್ ಪ್ಯೂರಿಫೈಯರ್ ಅಳವಡಿಸಿಕೊಂಡಿದ್ದಾರೆ. ತಂಡವು ದೈವಬಲದೊಂದಿಗೆ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ವಿಜಯ ಕರ್ನಾಟಕ 17 Jan 2026 6:15 pm

ಶಾಸಕ ಭರತ್ ರೆಡ್ಡಿ ಬಂಧಿಸಲು ಗೋವಿಂದ ಕಾರಜೋಳ ಒತ್ತಾಯ

ಕಾಂಗ್ರೆಸ್ ಸರಕಾರದ ವಿರುದ್ಧ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

ವಾರ್ತಾ ಭಾರತಿ 17 Jan 2026 6:13 pm

ಸಂವಿಧಾನದ ಅಡಿಯಲ್ಲೇ ನಿಮಗೆ ಪಾಠ ಕಲಿಸುತ್ತೇವೆ : ಶಾಸಕ ಭರತ್ ರೆಡ್ಡಿಗೆ ಛಲವಾದಿ ನಾರಾಯಣಸ್ವಾಮಿ ತಿರುಗೇಟು

ಬಳ್ಳಾರಿ: ಗಾಲಿ ಜನಾರ್ಧನ ರೆಡ್ಡಿಯವರ ಮನೆ ಸುಟ್ಟು ಭಸ್ಮ ಮಾಡಲು ನನಗೆ ಐದು ನಿಮಿಷ ಸಾಕು ಎಂದು ಹೇಳಿಕೆ ನೀಡಿರುವ ಶಾಸಕ ಭರತ್ ರೆಡ್ಡಿ ಅವರ ಮಾತುಗಳು ಒಬ್ಬ ಜನಪ್ರತಿನಿಧಿಗೆ ಶೋಭೆ ತರುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಳ್ಳಾರಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಳ್ಳಾರಿಯಲ್ಲಿ ಎಂತಹ ಭಸ್ಮಾಸುರನಿಗೆ ಜನ್ಮ ನೀಡಿದ್ದೀರಿ? ಜನಾರ್ಧನ ರೆಡ್ಡಿಯವರನ್ನು ಮುಗಿಸಿಬಿಡುವುದಾಗಿ ಹೇಳಲು ನಿಮಗೇನು ಅಷ್ಟು ತಾಕತ್ತಿದೆಯೇ? ಎಂದು ಸವಾಲು ಹಾಕಿದ ಅವರು, ನಾವು ಯಾವುದಕ್ಕೂ ಹೆದರುವವರಲ್ಲ. ನಿಮ್ಮಂತೆ ನಾವು ದುಂಡಾವರ್ತಿ ಮಾಡುವುದಿಲ್ಲ, ಬದಲಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಅಡಿಯಲ್ಲೇ ನಿಮಗೆ ಪಾಠ ಕಲಿಸುತ್ತೇವೆ, ಎಂದು ಎಚ್ಚರಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ಕಿವಿಮಾತು ಹೇಳಿದ ಛಲವಾದಿ, ಕೋಪ ಮಾಡಿಕೊಂಡು ಮೂಗು ಕೊಯ್ದುಕೊಂಡರೆ ಅದು ಮತ್ತೆ ಬೆಳೆಯುವುದಿಲ್ಲ. ನಿಮ್ಮ ಕೋಪದ ಕೂಸು, ಪಾಪದ ಕೂಸೇ ಇಂದು ನಿಮ್ಮ ಮೇಲೆ ಹಗೆತನ ಸಾಧಿಸುತ್ತಿದೆ. ಎಚ್ಚರಿಕೆಯಿಂದ ಹೆಜ್ಜೆ ಇಡಿ ಎಂದು ನುಡಿದರು

ವಾರ್ತಾ ಭಾರತಿ 17 Jan 2026 6:10 pm

5 ವರ್ಷಗಳಲ್ಲಿ 1097 ಬಿಎಂಟಿಸಿ ಬಸ್‌ಗಳ ಅಪಘಾತ: ಚಾಲಕರ ಮೇಲಿನ ಒತ್ತಡದಿಂದ ಪ್ರಯಾಣಿಕರ ಸುರಕ್ಷತೆ ಆತಂಕ

ಬೆಂಗಳೂರಿನಲ್ಲಿ ಕಳೆದ 5 ವರ್ಷಗಳಲ್ಲಿ 1097 ಬಿಎಂಟಿಸಿ ಬಸ್‌ಗಳ ಅಪಘಾತಗಳು ಸಂಭವಿಸಿವೆ. ಚಾಲಕರ ಮೇಲಿನ ಒತ್ತಡದಿಂದ ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದೆ. ಅಪಘಾತಕ್ಕೆ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿಟ್ಟಿನಲ್ಲಿ ಪ್ರತಿದಿನ 6,288 ಅನುಸೂಚಿಗಳನ್ನು ಪ್ರಯಾಣಿಕರ ದಟ್ಟಣೆ ಅವಶ್ಯಕತೆಗನುಗುಣವಾಗಿ ವಿವಿಧ ಪಾಳಿಗಳಲ್ಲಿ ಪಾಲನೆ ಮಾಡಲಾಗುತ್ತಿದೆ. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಅಥವಾ ನಿಯಮಿತ ಸಾರಿಗೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸುತ್ತಿರುವ ಸಾರಿಗೆಗಳಿಗೆ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ವಿಜಯ ಕರ್ನಾಟಕ 17 Jan 2026 6:05 pm

ʼರಾಯಚೂರು ಉತ್ಸವ-2026ʼ | ವಾಲಿಬಾಲ್, ಕಬ್ಬಡಿ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ʼಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ʼರ ಅಂಗವಾಗಿ ಜ.17ರಂದು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾಲಿಬಾಲ್, ಕಬ್ಬಡಿ ಕ್ರೀಡಾಕೂಟಕ್ಕೆ ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ ಅವರು ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸುಮಾರು 75 ತಂಡಗಳಾಗಿ ವಿವಿಧ ಕ್ರೀಡೆಯಲ್ಲಿ ಭಾಗಿಯಾದರು. ಕಬ್ಬಡಿಯಲ್ಲಿ ಪುರುಷರ 20 ತಂಡಗಳು ಮತ್ತು ಮಹಿಳೆಯರ 10 ತಂಡಗಳು ಭಾಗಿಯಾಗಿದ್ದವು. ಅಲ್ಲದೆ ವಾಲಿಬಾಲ್‌ ನಲ್ಲಿ ಪುರುಷರ 25 ತಂಡಗಳು ಮತ್ತು ಮಹಿಳೆಯರ 20 ತಂಡಗಳು ಭಾಗಿಯಾಗಿದ್ದವು. ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಮಿತಿ ಕಾರ್ಯದರ್ಶಿ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ ಶಾಂವತಗೇರಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ವೀರೇಶ ನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ರಂಗಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಪರುಶರಾಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸೂಪರಿಡೆಂಟ್ ಸಂತೋಷ್, ಚಂದ್ರಶೇಖರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.    

ವಾರ್ತಾ ಭಾರತಿ 17 Jan 2026 6:04 pm

ಬಲ್ಡೋಟ ತೊಲಗಿಸಿ ಕೊಪ್ಪಳ ಉಳಿಸಿ ಸಹಿ ಆಂದೋಲನಕ್ಕೆ ಬಸವರಾಜ ಬಳ್ಳೊಳ್ಳಿ ಚಾಲನೆ

79ನೇ ದಿನಕ್ಕೆ ಕಾಲಿಟ್ಟ ಕಾರ್ಖಾನೆ ವಿರೋಧಿ ಹೋರಾಟ

ವಾರ್ತಾ ಭಾರತಿ 17 Jan 2026 6:01 pm

ಕಲಬುರಗಿ | ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ ಸಿಬ್ಬಂದಿ

ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದಿದೆ. ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕಾಂತ್ ಜಂಜೀರ್ ಎಂಬಾತರೆ ಸಿಕ್ಕಿಬಿದ್ದ ಸಿಬ್ಬಂದಿಯಾಗಿದ್ದಾರೆ. ಎಫ್‌ಡಿಎ ಶಶಿಕಾಂತ್ ಅವರು, ತಹಶೀಲ್ದಾರ್ ಅವರು ನಡೆಸಿದ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆದೇಶ ಪ್ರತಿಯನ್ನು ನೀಡಲು ಫಲಾನುಭವಿಗಳಿಗೆ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡುವಂತೆ ಒತ್ತಾಯಿಸುತ್ತಿರುವುದರಿಂದ ಕಿಶನ್ ರಾಠೋಡ್ ಎಂಬಾತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ತನಿಖಾಧಿಕಾರಿಯಾದ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ಅವರ ನೇತೃತ್ವದಲ್ಲಿ ನಡೆಸಿದ ದಾಳಿಯಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 17 Jan 2026 5:54 pm

ಮುಂಬೈನಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’; ಶಿಂಧೆ ಬಣದ ಶಿವಸೇನೆಯ ಕಾರ್ಪೊರೇಟರ್‌ಗಳು ಫೈವ್ ಸ್ಟಾರ್ ಹೋಟೆಲ್‌ ಗೆ ಶಿಫ್ಟ್!

ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ (ಬಿಎಂಸಿ)ನಲ್ಲಿ ಅಧಿಕಾರ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ ತನ್ನ ಹೊಸದಾಗಿ ಆಯ್ಕೆಯಾದ ಎಲ್ಲ ಕಾರ್ಪೊರೇಟರ್‌ಗಳನ್ನು ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಉಳಿಯುವಂತೆ ಸೂಚಿಸಿದೆ. ಈ ಕ್ರಮದೊಂದಿಗೆ ನಗರ ರಾಜಕಾರಣದಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ದ ಚರ್ಚೆ ಆರಂಭವಾಗಿದೆ ಎಂದು indiatoday.in ವರದಿ ಮಾಡಿದೆ. ಪಕ್ಷದ ಮೂಲಗಳ ಪ್ರಕಾರ, ಶಿಂಧೆ ಸೇನಾ ಟಿಕೆಟ್‌ ನಲ್ಲಿ ಆಯ್ಕೆಯಾದ 29 ಕಾರ್ಪೊರೇಟರ್‌ ಗಳು ಬುಧವಾರ ಮಧ್ಯಾಹ್ನದೊಳಗೆ ಬಾಂದ್ರಾದ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್‌ಗೆ ಆಗಮಿಸಿ, ಮುಂದಿನ ಮೂರು ದಿನಗಳವರೆಗೆ ಅಲ್ಲಿಯೇ ಉಳಿಯಲಿದ್ದಾರೆ. ಬಿಎಂಸಿ ನಾಯಕತ್ವದ ಕುರಿತು ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಪಕ್ಷಗಳಿಂದ ‘ ಕುದುರೆ ವ್ಯಾಪಾರ’ ಪ್ರಯತ್ನಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 29 ಸ್ಥಾನಗಳನ್ನು ಹೊಂದಿರುವ ಶಿಂಧೆ ಬಣ, ಸ್ವಂತ ಬಹುಮತದ ಕೊರತೆಯಲ್ಲಿರುವ ಬಿಜೆಪಿಗೆ ನಿರ್ಣಾಯಕ ಬೆಂಬಲಿಗನಾಗಿ ಹೊರಹೊಮ್ಮಿದೆ. ದೇಶದ ಅತ್ಯಂತ ಶ್ರೀಮಂತ ಸ್ಥಳೀಯ ಸಂಸ್ಥೆಯಾದ ಬಿಎಂಸಿಯಲ್ಲಿ ಅಧಿಕಾರದ ಹಕ್ಕು ಅಧಿಕೃತವಾಗುವವರೆಗೆ ಎಲ್ಲ ಕಾರ್ಪೊರೇಟರ್‌ಗಳು ಒಟ್ಟಿಗೆ ಇರಬೇಕೆಂಬುದು ಶಿಂಧೆಯ ಉದ್ದೇಶ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಮಹಾರಾಷ್ಟ್ರ ರಾಜಕಾರಣದಲ್ಲಿ ಇಂತಹ ಕ್ರಮ ಹೊಸದಲ್ಲ. 2019ರ ವಿಧಾನಸಭೆ ಚುನಾವಣೆಯ ನಂತರದ ಬಿಕ್ಕಟ್ಟು ಹಾಗೂ 2022ರ ಶಿವಸೇನೆ ವಿಭಜನೆಯ ಸಂದರ್ಭದಲ್ಲಿ ಪಕ್ಷಾಂತರದ ಭೀತಿಯಿಂದ ಶಾಸಕರನ್ನು ಹೋಟೆಲ್‌ಗಳಲ್ಲಿ ಉಳಿಸಿದ್ದ ಉದಾಹರಣೆಗಳಿವೆ. ಈ ಬೆಳವಣಿಗೆಗೆ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿದೆ. ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಪ್ರತಿಕ್ರಿಯಿಸಿ, “ತಮ್ಮ ಕೌನ್ಸಿಲರ್‌ಗಳನ್ನು ಯಾರು ತಮ್ಮತ್ತ ಸೆಳೆಯುತ್ತಾರೆ? ಈ ಅನುಭವ ಯಾರಿಗೆ ಇದೆ?” ಎಂದು ಪ್ರಶ್ನಿಸಿದರು. ಇತ್ತ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಧಿಕಾರ, ಹಣ ಮತ್ತು ಒತ್ತಡದ ದುರುಪಯೋಗವಾಗಿದೆ ಎಂದು ಆರೋಪಿಸಿದರು. ಬಿಎಂಸಿ ಮೇಯರ್ ಸ್ಥಾನವನ್ನು ತಮ್ಮ ಪಕ್ಷ ಬಯಸಿದ್ದರೂ, ಪ್ರಸ್ತುತ ಸಂಖ್ಯಾಬಲದ ಕೊರತೆಯನ್ನು ಅವರು ಒಪ್ಪಿಕೊಂಡರು. ಬಿಎಂಸಿ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 227 ವಾರ್ಡ್‌ಗಳಲ್ಲಿ 89 ಸ್ಥಾನಗಳನ್ನು ಗೆದ್ದು ಏಕೈಕ ಅತಿದೊಡ್ಡ ಪಕ್ಷವಾಗಿದೆ. ಶಿಂಧೆ ನೇತೃತ್ವದ ಶಿವಸೇನೆ 29 ಸ್ಥಾನಗಳನ್ನು ಪಡೆದು ಮಹಾಯುತಿ ಮೈತ್ರಿಕೂಟದ ಸಂಖ್ಯೆಯನ್ನು 118ಕ್ಕೆ ತಲುಪಿಸಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 65 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ 24 ಸ್ಥಾನಗಳನ್ನು ಪಡೆದರೆ, ಎಐಎಂಐಎಂ ಎಂಟು ಸ್ಥಾನಗಳನ್ನು ಗೆದ್ದಿದೆ.

ವಾರ್ತಾ ಭಾರತಿ 17 Jan 2026 5:52 pm

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ʼಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದರು. 2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು. ಪೋಲೀಸ್ ಸಬ್ ಇನ್ಸ್‌ಪೆಕ್ಟರ್, ಎಎಸ್‌ಪಿ, ಡಿವೈಎಸ್‌ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಕಳ್ಳತನ, ಸುಲಿಗೆ, ದರೋಡೆ, ಕೊಲೆ ಮುಂತಾದ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಸೈಬರ್ ಅಪರಾಧ ಹಾಗೂ ಡ್ರಗ್ಸ್ ಅಪರಾಧಗಳು ಕಡಿಮೆಯಾಗುತ್ತಿಲ್ಲ. ಯುವಜನರು ಇದರಿಂದ ಹಾಳಾಗುತ್ತಿದ್ದು, ಕರ್ನಾಟಕವನ್ನು ಮಾದಕ ವಸ್ತು ಮುಕ್ತಾ ರಾಜ್ಯವಾಗಿಸಬೇಕೆಂದು ಸರಕಾರ ಘೋಷಣೆ ಮಾಡಿದೆ. ಪೊಲೀಸರು ಜಾಗರೂಕತೆಯಿಂದ, ದಕ್ಷತೆಯಿಂದ ಕೆಲಸ ಮಾಡಿದರೆ ರಾಜ್ಯವನ್ನು ಮಾದಕ ವಸ್ತು ಮುಕ್ತವನ್ನಾಗಿಸಬಹುದು. ಜೊತೆಗೆ ಯುವಜನರನ್ನೂ ರಕ್ಷಿಸಬಹುದು ಎಂದರು. ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು : ರಾಜ್ಯವನ್ನು ಮಾದಕವಸ್ತು ಮುಕ್ತ ಮಾಡಬೇಕಾದರೆ ಡ್ರಗ್ಸ್ ಮಾರಾಟ ಮಾಡುವವರನ್ನು ವಿಚಾರಣೆ ಮಾಡಿದರೆ ಅಥವಾ ಮಾದಕ ವಸ್ತು ವ್ಯಸನಿಗಳನ್ನು ವಿಚಾರಿಸಿದರೆ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಬಹುದು. ಸರಬರಾಜು ಮಾಡುವವರನ್ನು ವಿಚಾರಣೆಗೆ ಗುರಿ ಪಡಿಸಿದರೆ ಉತ್ಪಾದಕರು ಹಾಗೂ ಸರಬರಾಜುದಾರರು ಯಾರು ಎಂದು ತಿಳಿಯುತ್ತದೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕೆಲಸವನ್ನು ತಕ್ಷಣದಿಂದಲೇ ಮಾಡಬೇಕೆಂದು ಸೂಚಿಸಲಾಗಿದೆ. ವಿದೇಶಿಯರು ಜಾಮೀನಿನ ಮೇಲೆ ಬಿಡುಗಡೆಯಾಗಿ ಇಲ್ಲೇ ಉಳಿದರೆ ಪುನಃ ಅದೇ ಅಪರಾಧದಲ್ಲಿ ತೊಡಗುವ ಸಾಧ್ಯತೆಗಳು ಹೆಚ್ಚು. ಆದ್ದರಿಂದ ವಿದೇಶಿಯರನ್ನು ಯಾವುದೇ ಮುಲಾಜಿಲ್ಲದೆ ಅವರ ದೇಶಕ್ಕೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ : ಮಹಾರಾಷ್ಟ್ರದ ಪೊಲೀಸರಿಗೆ ಬೆಂಗಳೂರಿಗೆ ಬಂದು ಡ್ರಗ್ಸ್ ಪತ್ತೆ ಹಚ್ಚಲು ಸಾಧ್ಯವಾದರೆ, ರಾಜ್ಯದ ಪೊಲೀಸರು ಏಕೆ ಮಾಡಬಾರದು? ರಾಜ್ಯದ ಪೊಲೀಸರು ಇದನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದು, ಸಂಬಂಧಪಟ್ಟ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಐಪಿಎಲ್ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಡಿ ಮೈಕಲ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ, ಅವರ ಶಿಫಾರಸ್ಸುಗಳನ್ನು ಪಾಲಿಸಲು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಅವರು ಅಲ್ಪಾವಧಿ ಶಿಫಾರಸ್ಸುಗಳನ್ನು ಕೂಡಲೆ ಜಾರಿಗೆ ತರಬೇಕು ಹಾಗೂ ದೀರ್ಘಾವಧಿಯಲ್ಲಿ ಉಳಿದವನ್ನು ಪಾಲಿಸಬೇಕಿದೆ. ಶಿಫಾರಸುಗಳನ್ನು ಜಾರಿ ಮಾಡಲೇಬೇಕು ಎಂದರು. ಬಳ್ಳಾರಿ ಘಟನೆ: ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ : ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಬಳ್ಳಾರಿ ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ. ತನಿಖಾ ವರದಿ ಬಂದ ನಂತರ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜೀವ್ ಗೌಡರನ್ನು ಬಂಧಿಸಲಾಗುವುದು : ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು, ಅವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ, ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

ವಾರ್ತಾ ಭಾರತಿ 17 Jan 2026 5:42 pm