SENSEX
NIFTY
GOLD
USD/INR

Weather

20    C
... ...View News by News Source

ಅನಂತ್ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ, ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.   ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,  ‘ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.  

ವಾರ್ತಾ ಭಾರತಿ 28 Jan 2026 11:27 pm

ಬೆಂಗಳೂರು| ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ಆರೋಪಿಯ ಬಂಧನ

ಬೆಂಗಳೂರು, ಜ.28: ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕಳ್ಳತನದ ಆರೋಪದಲ್ಲಿ ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ಅಂದಾಜು ಒಂದು ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಶ್ಚಿಮ ಬಂಗಾಳದ ಚಂದನ್ ರೌಲ್ ಬಂಧಿತ ಆರೋಪಿ. ಸಾಫ್ಟ್‌ವೇರ್‌ ಉದ್ಯೋಗಿಗಳಾಗಿದ್ದ ಅಮೆರಿಕದ ಮೆರಿಯಲ್ ಮೊರೆನೋ ದಂಪತಿ ನಗರದಲ್ಲಿರುವ ಕೋಡಿಹಳ್ಳಿಯ ರುಸ್ತುಂಭಾಗ್ ಮುಖ್ಯರಸ್ತೆಯ ವಿಲ್ಲಾವೊಂದರಲ್ಲಿ ಬಾಡಿಗೆಗೆ ವಾಸವಿದ್ದರು. ಅದೇ ಮನೆಯಲ್ಲಿ ಚಂದನ್ ರೌಲ್ ಕೆಲಸ ಮಾಡುತ್ತಿದ್ದ. ಜ.21ರಂದು ಮೆರಿಯಲ್ ಕೆಲಸಕ್ಕೆ ಹೋಗಿದ್ದಾಗ ಆರೋಪಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದನು. ಕಳ್ಳತನವಾಗಿರುವುದನ್ನು ತಿಳಿದ ಮೆರಿಯಲ್ ಆ ಸಂದರ್ಭದಲ್ಲಿ ಅಮೆರಿಕಕ್ಕೆ ತೆರಳಿದ್ದ ತಮ್ಮ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತಕ್ಷಣ ಪತಿ ಭಾರತದಲ್ಲಿರುವ ಅಮೆರಿಕದ ಎಂಬೆಸ್ಸಿಯ ನೆರವಿನೊಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ನೀಡಿದ್ದರು. ಮೆರಿಯಲ್ ಅವರಿಂದ ದೂರು ಪಡೆದ ಜೀವನ್ ಭೀಮಾನಗರ ಠಾಣೆ ಪೊಲೀಸರು ಆರೋಪಿ ಚಂದನ್ ರೌಲ್‍ನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ವಾರ್ತಾ ಭಾರತಿ 28 Jan 2026 11:19 pm

ವಿಜಯನಗರ | ಮಾನವ ಅಭಿವೃದ್ಧಿಗೆ ನಿಖರ ದತ್ತಾಂಶ ಅಗತ್ಯ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಮಾನವ ಸಂಪನ್ಮೂಲ ಅಭಿವೃದ್ಧಿ ನಗರ ಹಾಗೂ ಗ್ರಾಮೀಣ ಹಂತದಿಂದ ಆರಂಭವಾದಾಗ ಮಾತ್ರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಸಂಬಂಧಿಸಿದ ಸಮಗ್ರ ಮಾನವ ಅಭಿವೃದ್ಧಿ ವರದಿಯನ್ನು ಫೆ.10ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 2025ರ ಮಾನವ ಅಭಿವೃದ್ಧಿ ವರದಿ ಮತ್ತು 2031ರವರೆಗೆ ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ತಯಾರಿಕೆ ಕುರಿತು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯದ ಯೋಜನೆ ರೂಪಿಸುವ ಸಂದರ್ಭದಲ್ಲಿ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿ ತಪ್ಪು ಮಾಹಿತಿ ನೀಡದೇ ನಿಖರ, ಸ್ಪಷ್ಟ ಹಾಗೂ ವಾಸ್ತವಾಧಾರಿತ ದತ್ತಾಂಶವನ್ನು ಒದಗಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಶಿಕ್ಷಣ, ಮಾನವ ಅಭಿವೃದ್ಧಿ ಸೂಚ್ಯಂಕ, ತಲಾ ಆದಾಯ ಸೇರಿದಂತೆ ಎಲ್ಲಾ ಅಂಶಗಳ ಸಮಗ್ರ ಮಾಹಿತಿ ಅತ್ಯಂತ ಮಹತ್ವದ್ದು ಎಂದು ಅವರು ಹೇಳಿದರು. ಅಧಿಕಾರಿಗಳು ನೀಡುವ ದತ್ತಾಂಶದ ಆಧಾರದಲ್ಲಿಯೇ ಮುಂದಿನ ಯೋಜನೆಗಳು ರೂಪುಗೊಳ್ಳುವುದರಿಂದ, ಯಾವುದೇ ರೀತಿಯ ಗೊಂದಲ ಅಥವಾ ಸಮಸ್ಯೆಗಳು ಉಂಟಾಗದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪೂರಕ ವರದಿ ತಯಾರಿಸಿ ಜೂನ್ ಅಂತ್ಯದೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ನೊಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯ ಡೀನ್ ಹೆಚ್.ಡಿ. ಪ್ರಶಾಂತ, ಡಾ. ಜಿ.ಎಸ್. ಗಣೇಶ್ ಪ್ರಸಾದ್, ಟೆಕ್ ಏಜೆನ್ಸಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ನಾರಾಯಣ ಶಾಸ್ತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 11:09 pm

ಬೆಂಗಳೂರು| ನಾಲ್ಕು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: 10 ಮಂದಿ ಆರೋಪಿಗಳ ಬಂಧನ

ಬೆಂಗಳೂರು, ಜ.28: ಇಲ್ಲಿನ ಅಮೃತಹಳ್ಳಿ ಪೊಲೀಸರು 4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದು, ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಇಂಜಿನಿಯರ್‌ಗಳು, ಕಾನೂನು ವಿದ್ಯಾರ್ಥಿ, ಬೌನ್ಸರ್ ಸೇರಿ ಹತ್ತು ಮಂದಿ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 36 ಸಾವಿರ ರೂ. ನಗದು, 3 ಕೆ.ಜಿ ಹೈಡೋ ಗಾಂಜಾ, 50 ಗ್ರಾಂ ಎಂಡಿಎಂಎ, 500 ಗ್ರಾಂ ಚರಸ್, 500 ಎಲ್‍ಎಸ್ ಡಿ ಸ್ಟ್ರಿಪ್ಸ್ ಗಳು, 10 ಕೆಜಿ ಗಾಂಜಾ, 2 ಕಾರುಗಳು, 14 ಮೊಬೈಲ್ ಗಳು ಸೇರಿ 4 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಕೋಗಿಲು ಲೇಔಟ್‍ನ ಎರೋನಾಟಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕುಶಾಲ್‍ಗೌಡ(23), ರಾಜಾನುಕುಂಟೆಯ ಕಾನೂನು ವಿದ್ಯಾರ್ಥಿ ಶಶಾಂಕ್(28), ಮರಳವಾಡಿಯ ಬೌನ್ಸರ್ ಸಾಗರ್(29), ದೊಡ್ಡಕಮ್ಮನಹಳ್ಳಿಯ ಕ್ಯಾಬ್ ಚಾಲಕ ವಿಲ್ಸನ್.ಎಸ್(48), ಅಕ್ಷಯನಗರದ ಆಶಿರ್ ಅಲಿ(36), ರಿಯಾಸ್(38), ಬೇಗೂರಿನ ಸಜಾದ್(34) ಎಲೆಕ್ಟ್ರಾನಿಕ್ ಸಿಟಿಯ ಶಿಹಾಬ್.ಕೆ.ಪಿ(30), ದೊಡ್ಡಗಮ್ಮನಹಳ್ಳಿಯ ಅಬ್ದುಲ್ ನಾಸಿರ್(28) ದೇವರಾಜ ಅರಸು ನಗರದ ಸಾಫ್ಟ್‌ವೇರ್‌  ಇಂಜಿನಿಯರ್ ಅಭಿನವ್ ಡಿ.(21) ಬಂಧಿತ ಆರೋಪಿಗಳಾಗಿದ್ದಾರೆ.

ವಾರ್ತಾ ಭಾರತಿ 28 Jan 2026 11:09 pm

Ukraine: ಉಕ್ರೇನ್ ಪ್ರಯಾಣಿಕ ರೈಲಿನ ಮೇಲೆ ಭೀಕರ ದಾಳಿ, 12 ಜನ ಬಲಿ ಆರೋಪ

ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲುವ ಬದಲು ಮತ್ತಷ್ಟು ಹೆಚ್ಚಾಗುತ್ತಿದ್ದು, ಇಬ್ಬರ ನಡುವೆ ಈಗ ಮತ್ತೆ ಬೆಂಕಿ ಹೊತ್ತಿಕೊಂಡಿದೆ. ಅದರಲ್ಲೂ ಉಕ್ರೇನ್ ಪ್ರಯಾಣಿಕ ರೈಲಿನ ಮೇಲೆ ಭೀಕರ ದಾಳಿ ನಡೆದ ಆರೋಪ ಕೇಳಿಬಂದಿದೆ. ಈ ದಾಳಿಯಲ್ಲಿ ಬರೋಬ್ಬರಿ 12 ಜನ ಬಲಿಯಾಗಿ, ಹತ್ತಾರು ಮಂದಿ ಭಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈಗ ಅವರಿಗೆ

ಒನ್ ಇ೦ಡಿಯ 28 Jan 2026 11:06 pm

ವಿಜಯನಗರ | ಸರಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಅಂಗುಳ ಶಸ್ತ್ರಚಿಕಿತ್ಸೆ ಬಡವರಿಗೆ ವರದಾನ : ಡಾ.ಎಲ್.ಆರ್.ಶಂಕರ ನಾಯ್ಕ

ವಿಜಯನಗರ (ಹೊಸಪೇಟೆ) : ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಹಾಗೂ ಇತರ ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯುತ್ತಿರುವುದು ಬಡವರ್ಗದ ಜನರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರ ನಾಯ್ಕ ಹೇಳಿದರು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಬಿಎಂಎಸ್‌ಎಸ್ ಫೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಏರ್ಪಡಿಸಿದ್ದ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಸೇವೆಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದಕ್ಕಾಗಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಾರ್ವಜನಿಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸೀಳು ತುಟಿ ಹಾಗೂ ಸೀಳು ಅಂಗುಳ ಸಮಸ್ಯೆಗಳು ಭ್ರೂಣದ ಬೆಳವಣಿಗೆಯ ವೇಳೆ ಉಂಟಾಗುವ ಅಸಹಜತೆಯಿಂದ ಸಂಭವಿಸುತ್ತವೆ. ಇವುಗಳನ್ನು ಸೂಕ್ಷ್ಮ ಹಾಗೂ ಸಣ್ಣ ಶಸ್ತ್ರಚಿಕಿತ್ಸೆಯ ಮೂಲಕ ಸುಲಭವಾಗಿ ಸರಿಪಡಿಸಬಹುದಾಗಿದೆ. ಆದ್ದರಿಂದ ಯಾವುದೇ ರೀತಿಯ ಆತಂಕ ಬೇಡದೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 11:06 pm

ವಿಜಯನಗರ | ಫೆ.10ರಂದು ಜಂತುಹುಳು ನಿವಾರಣಾ ದಿನಾಚರಣೆ : ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಮಕ್ಕಳನ್ನು ಜಂತು ಹುಳು ರಹಿತ ಹಾಗೂ ಆರೋಗ್ಯವಂತರನ್ನಾಗಿಸುವ ಉದ್ದೇಶದಿಂದ ಫೆ.10ರಂದು ಜಂತುಹುಳು ನಿವಾರಣಾ ದಿನಾಚರಣೆ ಹಾಗೂ ಫೆ.16ರಂದು ಮಾಪ್‌ಅಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಂತುಹುಳು ನಿವಾರಣಾ ದಿನಾಚರಣೆಯ ಅಂಗವಾಗಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಗುವುದು. ಹೀಗಾಗಿ ಸಮರ್ಪಕ ಔಷಧ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ದಾಸ್ತಾನಿರುವ ಔಷಧಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂಗನವಾಡಿಗಳಿಗೆ ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆ ನೀಡುವ ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕುಷ್ಠರೋಗ ನಿವಾರಣೆ ಕುರಿತ ಜಾಗೃತಿ ಪೋಸ್ಟರ್‌ನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ ನಾಯ್ಕ್, ಆರ್‌ಸಿಎಚ್ ಅಧಿಕಾರಿ ಜಂಬಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 11:03 pm

8th Pay Commission: ನೌಕರರ ಅಸಲಿ ಸಂಬಳ ಎಷ್ಟು ಹೆಚ್ಚಾಗಲಿದೆ?, ಶೇ.13ರಷ್ಟು 'ರಿಯಲ್ ಪೇ ಹೈಕ್' ನಿರೀಕ್ಷೆ.

ನವದೆಹಲಿ: 8ನೇ ವೇತನ ಆಯೋಗ (CPC) ಜಾರಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರ ಪ್ರತಿನಿಧಿ ಸಂಘಟನೆಗಳ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಅದರಲ್ಲಿ ಫಿಟ್‌ಮೆಂಟ್ ಅಂಶ ಹಾಗೂ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ವರದಿ ಸಿದ್ಧಪಡಿಸುವ ಚರ್ಚೆಗಳು ಆಗಿವೆ. ಇದರ ಬೆನ್ನಲ್ಲೆ ವೇತನ ಎಷ್ಟು ಹೆಚ್ಚಾಗಬಹುದು. ಕೆಲವು ಅಂಶಗಳು ಕಾಗದದ ಮೇಲೆ ನಮೂದಿಸಿದರೂ ಸಹಿತ

ಒನ್ ಇ೦ಡಿಯ 28 Jan 2026 10:59 pm

ಏಳು ಸಾವಿರ ಶಾಲಾ ಕೊಠಡಿಗಳ ದುರಸ್ತಿಗೆ 96.88 ಕೋಟಿ ರೂ. ಮಂಜೂರು ಮಾಡಿದ ರಾಜ್ಯ ಸರಕಾರ

ಬೆಂಗಳೂರು, ಜ.28: ರಾಜ್ಯ ಸರಕಾರವು 2,819 ಸರಕಾರಿ ಶಾಲೆಗಳ ಒಟ್ಟು 7,293 ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು 96.88 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. 2,819 ಸರಕಾರಿ ಶಾಲೆಗಳ 4,163 ತರಗತಿ ಕೊಠಡಿಗಳ ಸಣ್ಣ ಪ್ರಮಾಣದ ದುರಸ್ತಿ ಕಾಮಗಾರಿಗಳಿಗೆ 44.30 ಕೋಟಿ ರೂ.ಗಳನ್ನು ಮತ್ತು 3,130 ತರಗತಿ ಕೊಠಡಿಗಳ ದೊಡ್ಡ ಪ್ರಮಾಣ ದುರಸ್ತಿಯ ಕಾಮಗಾರಿಗಳಿಗೆ 52.58 ಕೋಟಿ ರೂ.ಗಳು ಸೇರಿ ಒಟ್ಟು 7,293 ತರಗತಿ ಕೊಠಡಿಗಳ ದುರಸ್ತಿಗೆ 96.88 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಉದ್ದೇಶಿತ ಎಲ್ಲಾ ದುರಸ್ತಿ ಕಾಮಗಾರಿಗಳನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆ ಮೂಲಕ ಕೆ.ಟಿ.ಪಿ.ಪಿ-1999 ಕಾಯ್ದೆ ಮತ್ತು ನಿಯಮಗಳ ಪ್ರಕಾರ ಪಾರದರ್ಶಕ ಜಿಲ್ಲಾ ಹಂತದ ಟೆಂಡರ್ ಮೂಲಕ ಜಿಲ್ಲಾ ಪಂಚಾಯತ್‍ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕು ಎಂದು ತಿಳಿಸಿದೆ.

ವಾರ್ತಾ ಭಾರತಿ 28 Jan 2026 10:55 pm

ಬಳ್ಳಾರಿ | ಬಾದನಹಟ್ಟಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಬಳ್ಳಾರಿ / ಕುರುಗೋಡು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್‌ ಬಾದನಹಟ್ಟಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಾದನಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ “ಆರೋಗ್ಯದ ನಡಿಗೆ–ಜನರ ಬಳಿಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಬುಧವಾರ ಬಾದನಹಟ್ಟಿ ಉಪಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಮಂಜುನಾಥ ಜವಳಿ ಅವರು ಉದ್ಘಾಟಿಸಿ ಮಾತನಾಡಿ, ಆಸಾಂಕ್ರಾಮಿಕ ರೋಗಗಳು, ಅವುಗಳಿಂದ ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗಗಳ ಕುರಿತು ಜನರಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಹದಿಹರೆಯದವರು, ಗರ್ಭಿಣಿಯರು, ಚಿಕ್ಕ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ವೃದ್ಧರು ಸೇರಿದಂತೆ 75ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್‌ನ ವೈದ್ಯಾಧಿಕಾರಿ ಡಾ. ಸುನಿಲ್, ನೇತ್ರಾಧಿಕಾರಿ ಪಲ್ಲವಿ, ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಜಯಶ್ರೀ, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಊರಿನ ಹಿರಿಯ ಮುಖಂಡರು, ಎನ್‌ಸಿಡಿ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದು ಶಿಬಿರಕ್ಕೆ ಸಹಕಾರ ನೀಡಿದರು.

ವಾರ್ತಾ ಭಾರತಿ 28 Jan 2026 10:53 pm

ಐದು ಆಸ್ಪತ್ರೆಗಳಿಗೆ ಇಸ್ಕಾನ್‍ನಿಂದ ಆಹಾರ ಪೂರೈಸಲು 2.83 ಕೋಟಿ ರೂ. ಅನುಮೋದನೆ ನೀಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು, ಜ.28: ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿ ಐದು ಸಾರ್ವಜನಿಕ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ ಉಪಾಹಾರ, ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ಇಸ್ಕಾನ್ ಸಂಸ್ಥೆಯಿಂದ ಪಡೆಯಲು 2.83ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಬುಧವಾರ ಈ ಸಂಬಂಧ ರಾಜ್ಯ ಸರಕಾರವು ಆದೇಶ ಹೊರಡಿಸಿದ್ದು, ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ, ಧಾರವಾಡ ಜಿಲ್ಲಾಸ್ಪತ್ರೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಯಲಹಂಕ ಸಾರ್ವಜನಿಕ ಆಸ್ಪತ್ರೆ, ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪರಿಷ್ಕೃತ ಆಹಾರ ಪದ್ದತಿಯನ್ವಯ ಉಪಾಹಾರ ಹಾಗೂ ಸಿದ್ದಪಡಿಸಿದ ಉತ್ತಮ ದರ್ಜೆಯ ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದೆ. ನಾಲ್ಕು ತಿಂಗಳ ಅವಧಿಗೆ ಇಸ್ಕಾನ್ ಸಂಸ್ಥೆಯಿಂದ ಉಪಾಹಾರ, ಸಿದ್ಧಪಡಿಸಿದ ಉತ್ತಮ ಉತ್ತಮ ದರ್ಜೆಯ ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ಪೂರೈಕೆ ಮಾಡಲು ಒಟ್ಟು ರೂ. 2,83,47,000 ರೂ.ಗಳ ಅನುದಾನವನ್ನು ಭರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವಾರ್ತಾ ಭಾರತಿ 28 Jan 2026 10:50 pm

ಕುಳಾಯಿ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಜ.28: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ್ತು ಜೋಕಟ್ಟೆಯ ಸಯ್ಯದ್ ಆಲಿ (40) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಳಾಯಿ ಗ್ರಾಮದ ಯಶೋಧ ಕ್ಲಿನಿಕ್ ಬಳಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧ ಪಟ್ಟ ಪೂಜಾ ಪರಿಕರಗಳು ಮತ್ತು ಟಿವಿ ಮತ್ತಿತರ ಸೊತ್ತುಗಳನ್ನು ಕಳ್ಳರು 2025 ಡಿಸೆಂಬರ್‌26 ರಂದು ರಾತ್ರಿ ಸಮಯ ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಕಳವು ಮಾಡಿದ್ದರು. ಈ ಸಂಬಂಧ ಅಮಿತಾ, ಎಂಬರು ಪೊಲೀಸರಿಗೆ ದೂರು ನೀಡಿದ್ದರು. ಸುಮಾರು 1 ಲಕ್ಷ ರೂ. ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ-1, ಮಂತ್ರದೇವತೆಯ ಬೆಳ್ಳಿಯ ಮೂರ್ತಿ-1, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ-1, ಬೆಳ್ಳಿಯ ಕಡ್ಸಲೆ (ಖಡ್ಗ)-1, ತಾಮ್ರದ ಘಂಟೆ-2, ತಾಮ್ರದ ಚೆಂಬು-4, ಹಾಗೂ ಎಲ್‌ಇಡಿ ಟಿ.ವಿ-1 ಕಳವಾಗಿರುವ ಬಗ್ಗೆ ಡಿ.27ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ವಾಜೀದ್ ಜೆ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ತಾನು ಕಳವುಗೈದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜ.27ರಂದು ಸಯ್ಯದ್ ಆಲಿ ಎಂಬಾತನನ್ನು ವಶಕ್ಕೆ ಪಡೆದು ಆತನ ಮನೆಯಿಂದ ಸುಮಾರು 1,95,000 ರೂ ಮೌಲ್ಯದ ಬೆಳ್ಳಿಯ ಮಂತ್ರದೇವತೆಯ ಮೂರ್ತಿ, ಕೊಡೆ, ಕಡ್ಸಲೆ, ಸುಮಾರು ರೂ 2,750 ಮೌಲ್ಯದ ಹಿತ್ತಾಳೆ ಪೂಜಾ ಸಾಮಾಗ್ರಿ, ಸುಮಾರು ರೂ. 300 ಮೌಲ್ಯದ ತಾಮ್ರದ ಪೂಜಾ ಸಾಮಾಗ್ರಿ, ಟಿ.ವಿ ಮತ್ತು ಸೆಟ್‌ಆಪ್ ಬಾಕ್ಸ್, ಆರೋಪಿಗಳ 2 ಮೊಬೈಲ್ ಹಾಗೂ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಸುಮಾರು ರೂ. 30,000 ಮೌಲ್ಯದ ಸ್ಕೂಟರ್-1 ಪೊಲೀಸರು ವಶಪಡಿಸಿಕೊಂಡಿದ್ದರು. ಕಳವು ಆರೋಪಿ ವಾಜೀದ್ ಮೇಲೆ ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಶೀಟ್ ಹಾಗೂ ಎಂಒಬಿ ತೆರೆಯಲಾಗಿದ್ದು ಈತನ ಮೇಲೆ ಮಂಗಳೂರು ನಗರ, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಾದ್ಯಂತ 1 ಕೊಲೆಯತ್ನ, 2 ದರೋಡೆ, 3 ದನ ಕಳ್ಳತನ, 6 ಮನೆಕಳ್ಳತನ, 3 ವಾಹನ ಕಳ್ಳತನ, 1 ಇತರ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಹೀಗಾಗಿ ನ್ಯಾಯಾಲಯವು ಆರೋಪಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಆರೋಪಿಗಳನ್ನು ಜ.28 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ,ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. 

ವಾರ್ತಾ ಭಾರತಿ 28 Jan 2026 10:48 pm

ಚೀನಾ ಪ್ರವಾಸದಿಂದ ಬ್ರಿಟನ್‌ ಗೆ ಪ್ರಯೋಜನ: ಸ್ಟಾರ್ಮರ್

ಬೀಜಿಂಗ್, ಜ.28: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮೂರು ದಿನಗಳ ಭೇಟಿಗಾಗಿ ಬುಧವಾರ ಚೀನಾಕ್ಕೆ ಆಗಮಿಸಿದ್ದು, ಈ ಪ್ರವಾಸವು ಬ್ರಿಟನ್‌ಗೆ ಪ್ರಯೋಜನಗಳನ್ನು ತರುತ್ತದೆ ಎಂದು ಹೇಳಿದ್ದಾರೆ. ಸುಮಾರು ಎಂಟು ವರ್ಷಗಳ ಬಳಿಕ ಬ್ರಿಟನ್ ಪ್ರಧಾನಿಯೊಬ್ಬರು ಚೀನಾಕ್ಕೆ ಭೇಟಿ ನೀಡಿದ್ದು, ಎರಡು ರಾಷ್ಟ್ರಗಳ ನಡುವಿನ ವ್ಯಾಪಾರ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಸ್ಟಾರ್ಮರ್ ಬಯಸಿದ್ದಾರೆ. ಈ ನಡುವೆ, ಮಂಗಳವಾರ ಬೀಜಿಂಗ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿನ್‌ಪಿಂಗ್, ‘ವಿಶ್ವಸಂಸ್ಥೆ ಕೇಂದ್ರಸ್ಥಾನದಲ್ಲಿರುವ ಜಾಗತಿಕ ವ್ಯವಸ್ಥೆಯನ್ನು ದೃಢವಾಗಿ ಎತ್ತಿಹಿಡಿಯಲು ಇತರ ಸಮಾನ ಮನಸ್ಕ ರಾಷ್ಟ್ರಗಳೊಂದಿಗೆ ಕಾರ್ಯನಿರ್ವಹಿಸಲು ಸಿದ್ಧವಾಗಿದೆ’ ಎಂದು ಹೇಳಿರುವುದಾಗಿ ಸರ್ಕಾರಿ ಸ್ವಾಮ್ಯದ ಸಿಸಿಟಿವಿ ವರದಿ ಮಾಡಿದೆ. ಕಳೆದ ವಾರ ಟ್ರಂಪ್ ಘೋಷಿಸಿರುವ ‘ಶಾಂತಿ ಮಂಡಳಿ’ ಮೂಲಕ ಅಮೆರಿಕಾ ಅಧ್ಯಕ್ಷರು ವಿಶ್ವಸಂಸ್ಥೆಗೆ ಪರ್ಯಾಯ ಜಾಗತಿಕ ವ್ಯವಸ್ಥೆಯನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಕಳವಳದ ನಡುವೆ ಜಿನ್‌ಪಿಂಗ್ ಈ ಹೇಳಿಕೆ ನೀಡಿದ್ದಾರೆ. ಶಾಂತಿ ಮಂಡಳಿಗೆ ಸೇರುವಂತೆ ಟ್ರಂಪ್ ನೀಡಿರುವ ಆಹ್ವಾನಕ್ಕೆ ಚೀನಾ ಇದುವರೆಗೆ ಪ್ರತಿಕ್ರಿಯಿಸಿಲ್ಲ.

ವಾರ್ತಾ ಭಾರತಿ 28 Jan 2026 10:48 pm

ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ನಗರವು ಸುಂದರ ಹಾಗೂ ಸ್ವಚ್ಛವಾಗಿ ಕಾಣಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ಹೇಳಿದರು. ನಗರದ ಜೈಲ್‌ಖಾನ್ ಸಮೀಪದ ಮಹಿಳಾ ಸಮಾಜ ಮೈದಾನದಲ್ಲಿ ಜ.28ರಂದು ಆಯೋಜಿಸಿದ್ದ ಪೌರ ಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು. ಶುಚಿತ್ವ ಇದ್ದಲ್ಲಿ ಶಿಸ್ತು, ಶಿಸ್ತು ಇದ್ದಲ್ಲಿ ಶಾಂತಿ ಇರುತ್ತದೆ. ಈ ದೃಷ್ಟಿಕೋನದಿಂದ ಉತ್ಸವದ ಸಂದರ್ಭದಲ್ಲಿ ನಮ್ಮ ಮನೆ, ಮನೆಯ ಸುತ್ತಮುತ್ತಲಿನ ಪರಿಸರ, ರಸ್ತೆ, ಗಟಾರು, ಸಾರ್ವಜನಿಕ ಸ್ಥಳಗಳು ಸೇರಿದಂತೆ ಎಲ್ಲೆಡೆ ಶುಚಿತ್ವಕ್ಕೆ ಒತ್ತು ನೀಡಬೇಕು. ಜಿಲ್ಲಾ ಉತ್ಸವಕ್ಕೆ ಆಗಮಿಸುವ ಅತಿಥಿಗಳಿಗೆ ರಾಯಚೂರು ನಗರವು ಸ್ವಚ್ಛ ಹಾಗೂ ಆಕರ್ಷಕವಾಗಿ ಕಾಣಬೇಕು. ಜನರಿಗೆ ಸ್ವಚ್ಛತೆಯ ಸಂದೇಶ ರವಾನೆಯಾಗಬೇಕು. ರಾಯಚೂರನ್ನು ಸ್ವಚ್ಛ ನಗರವೆಂದು ಜನರು ಮೆಚ್ಚುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೌರ ಕಾರ್ಮಿಕರಿಗೆ ತಿಳಿಸಿದರು. ಜಿಲ್ಲಾ ಉತ್ಸವಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಇರುವುದರಿಂದ ಈಗಾಗಲೇ ನಗರದಲ್ಲಿ ಕಸ ಸಂಗ್ರಹ ಸ್ಥಳಗಳಲ್ಲಿ ನಿತ್ಯ ಕಸ ವಿಲೇವಾರಿ, ಮನೆಮನೆ ಕಸ ಸಂಗ್ರಹ, ಕಾರ್ಖಾನೆಗಳು, ಆಸ್ಪತ್ರೆಗಳಲ್ಲಿ ಕಸ ವಿಲೇವಾರಿ ಕಾರ್ಯ ನಡೆಯುತ್ತಿದೆ. ಈ ಕಾರ್ಯ ನಿರಂತರವಾಗಿ ಮುಂದುವರಿಯಬೇಕು ಎಂದು ಸೂಚಿಸಿದರು. ಉತ್ಸವಕ್ಕೂ ಮುಂಚಿತವಾಗಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ಕಲಾವಿದರು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಲಿರುವುದರಿಂದ ರಾಯಚೂರು ನಗರವನ್ನು ಸ್ವಚ್ಛ ನಗರವೆಂದು ಪರಿಚಯಿಸುವ ಅವಕಾಶ ಇದು ಎಂದರು. ಪ್ರಮುಖವಾಗಿ ಮುಖ್ಯ ರಸ್ತೆಗಳು ಹಾಗೂ ರಾಜ ಕಾಲುವೆಗಳಲ್ಲಿ ದುರ್ವಾಸನೆ ಬರದಂತೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಎಲ್ಲಿಯೂ ಕಸ ಕಾಣದಂತೆ ನೋಡಿಕೊಳ್ಳಬೇಕು. ಉತ್ಸವ ನಡೆಯಲಿರುವ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರ, ಜೈಲ್‌ಖಾನ್ ಬಳಿಯ ಮಹಿಳಾ ಸಮಾಜ ಆವರಣ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ವಾಲ್‌ಕಟ್ ಮೈದಾನ, ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಈಗಿನಿಂದಲೇ ಪ್ರತಿದಿನ ಶುಚಿತ್ವ ಕಾರ್ಯ ನಡೆಸಬೇಕು ಎಂದು ಆಯುಕ್ತರು ಸೂಚಿಸಿದರು. ಜೊತೆಗೆ ವಿವಿಧೆಡೆ ಫಾಗಿಂಗ್ ಕಾರ್ಯ ಕೈಗೊಳ್ಳಬೇಕು ಮತ್ತು ಸಾರ್ವಜನಿಕರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಬೇಕು ಎಂದರು. ಮೈಸೂರು, ಮಂಗಳೂರು ಸೇರಿದಂತೆ ಕೆಲವು ನಗರಗಳು ಸ್ವಚ್ಛತೆಗೆ ಹೆಸರುವಾಸಿಯಾಗಿವೆ. ಅವುಗಳ ಸಾಲಿನಲ್ಲಿ ರಾಯಚೂರು ಕೂಡ ಸೇರುವಂತೆ ಮಾಡಲು ಜಿಲ್ಲಾ ಉತ್ಸವ ಒಂದು ಉತ್ತಮ ಅವಕಾಶವಾಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಸ್ವಚ್ಛತೆಯನ್ನು ತಮ್ಮ ಮನೆಯ ಕೆಲಸವೆಂದು ಭಾವಿಸಿ ಜವಾಬ್ದಾರಿ ಹೊತ್ತರೆ ಮಾತ್ರ ರಾಯಚೂರು ಸ್ವಚ್ಛ ನಗರವಾಗಿ ಗುರುತಿಸಿಕೊಳ್ಳುತ್ತದೆ ಎಂದು ಹೇಳಿದರು. ಪೌರ ಕಾರ್ಮಿಕರ ಕಾರ್ಯದಲ್ಲಿ ಸಮರ್ಪಕ ಮೇಲ್ವಿಚಾರಣೆ ವಹಿಸುವಂತೆ ಪಾಲಿಕೆಯ ಪರಿಸರ ಅಭಿಯಂತರರು ಹಾಗೂ ಪರಿಸರ ನಿರೀಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪರಿಸರ ವಿಭಾಗದ ಅಭಿಯಂತರ ಜೈಪಾಲ್ ರೆಡ್ಡಿ, ಉಪ ಆಯುಕ್ತ ಮಲ್ಲಿಕಾರ್ಜುನ, ಪೌರ ಕಾರ್ಮಿಕರು ಹಾಗೂ ಮಹಾನಗರ ಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 10:46 pm

ವಿಧಾನಸಭೆಯಲ್ಲಿ ‘ಟೆಲಿಫೋನ್‌ ಕದ್ದಾಲಿಕೆ’ ವಿಚಾರ ಸದ್ದು| ಸರಕಾರ ಫೋನ್ ಕದ್ದಾಲಿಕೆ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ.28: ‘ಕೇಂದ್ರ ಗೃಹ ಸಚಿವರು ಮತ್ತು ಆರೆಸ್ಸೆಸ್ ಕಚೇರಿ ಕೇಶವ ಕೃಪಾದಿಂದ ರಾಜ್ಯಪಾಲರಿಗೆ ದೂರವಾಣಿ ಕರೆಗಳು ಬರುತ್ತಿವೆ’ ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲ್‍ರ ಮಾತು ವಿಧಾನಸಭೆಯ ಸದನದಲ್ಲಿ ಗದ್ದಲಕ್ಕೆ ಕಾರಣವಾಗಿ ಪ್ರತಿಪಕ್ಷ ಸದಸ್ಯರು, ‘ಸಚಿವರ ಮಾತು ನೋಡಿದರೆ ಈ ಸರಕಾರ ದೂರವಾಣಿ ಕದ್ದಾಲಿಸುತ್ತಿದೆ. ಈ ಬಗ್ಗೆ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು. ಬುಧವಾರ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡುತ್ತಿದ್ದಾಗ ಸಚಿವ ಎಚ್.ಕೆ.ಪಾಟೀಲ್ ಅವರು, ರಾಜ್ಯಪಾಲರಿಗೆ ಕೇಂದ್ರ ಸರಕಾರ ಹಾಗೂ ಆರೆಸ್ಸೆಸ್ ಕಚೇರಿ ಕೇಶವ ಕೃಪಾದಿಂದ ದೂರವಾಣಿ ಕರೆ ಹೋಗಿದೆ ಎಂದು ಹೇಳಿದಾಗ ಪ್ರತಿಪಕ್ಷ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಈ ಸರಕಾರ ಫೋನ್‌ ಕದ್ದಾಲಿಸುತ್ತಿದೆ. ಈ ಬಗ್ಗೆ ತನಿಖೆ ಆಗಬೇಕೆಂದು ಪಟ್ಟು ಹಿಡಿದರು. ಈ ವೇಳೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ನೀವು ಬೇಕಾದರೆ ತನಿಖೆಗೆ ಕೇಳಿ. ನಾವು ತನಿಖೆಗೆ ವಹಿಸುತ್ತೇವೆ ಎಂದರು. ಆಗ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಾ, ಇದು ಫೋನ್‌ ಟ್ಯಾಪ್ ಸರಕಾರನಾ? ಆರೆಸ್ಸೆಸ್, ಬಿಜೆಪಿ ಕಚೇರಿಯಿಂದ ಫೋನ್‌ ಮಾಡುವುದು ಸರಕಾರಕ್ಕೆ ಹೇಗೆ ಗೊತ್ತಾಗುತ್ತೆ? ಎಂದು ಬಿಜೆಪಿ ಸದಸ್ಯರು ವಾಗ್ದಾಳಿ ಮುಂದುವರೆಸಿದರು. ಈ ವೇಳೆ ಎಚ್.ಕೆ.ಪಾಟೀಲ್ ಮಧ್ಯಪ್ರವೇಶಿಸಿ, ಆ ಆಪಾದನೆ ಇಂದಿನ ಸನ್ನಿವೇಶದಲ್ಲಿ ಸಮಂಜಸವಾಗಿದೆ. ಇಲ್ಲವಾದರೆ ರಾಜ್ಯಪಾಲರಿಗೆ ಸಂವಿಧಾನವನ್ನು ಉಲ್ಲಂಘಿಸಲು ಆಗುತ್ತದೆಯೇ? ಯಾವ ಒತ್ತಡದಿಂದ ಹಾಗೆ ಮಾಡಿದರು. ವಿಪಕ್ಷಗಳು ಅವರ ಮೂಲಗಳಿಂದ ಮಾಹಿತಿ ತರಿಸಿಕೊಳ್ಳಲಿ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯದಿಂದ ಸ್ಪಷ್ಟನೆ ನೀಡಲಿ. ಜತೆಗೆ, ರಾಜಭವನದಿಂದ ಈ ಬಗ್ಗೆ ಸ್ಪಷ್ಟೀಕರಣವನ್ನು ನಿರೀಕ್ಷಿಸುತ್ತಿದ್ದೇನೆ ಎಂದರು. ಇದೇ ವೇಳೆ ಮಧ್ಯಪ್ರವೇಶಿಸಿದ ಸುರೇಶ್ ಕುಮಾರ್, ಕೇಂದ್ರದ ಮಟ್ಟದಲ್ಲಿರುವ ಪ್ರತಿಪಕ್ಷಗಳು ರಾಜ್ಯಪಾಲರ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆಂಧ್ರ ಸರಕಾರ ರಾಜ್ಯಪಾಲರ ಬಗ್ಗೆ ಆರೋಪ ಮಾಡಿಲ್ಲ. ಗೃಹ ಸಚಿವಾಲಯದಿಂದ ಸ್ಪಷ್ಟನೆಯನ್ನು ನಿರೀಕ್ಷಿಸುತ್ತಿದ್ದೇನೆ ಎನ್ನುವುದು ಕಾನೂನು ಸಚಿವ ಮಾತನಾಡುವ ಮಾತಲ್ಲ ಎಂದು ಆಕ್ಷೇಪಿಸಿದರು. ಬಳಿಕ ಇದಕ್ಕೆ ಅರವಿಂದ್ ಬೆಲ್ಲದ್ ಸೇರಿದಂತೆ ಹಲವು ಸದಸ್ಯರು ದನಿಗೂಡಿಸಿದರು. ನಮ್ಮ ಸರಕಾರ ಫೋನ್ ಕದ್ದಾಲಿಕೆ ಮಾಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ  ನಮ್ಮ ಸರಕಾರ ಯಾರ ಫೋನ್ ಕದ್ದಾಲಿಕೆಯನ್ನು ಮಾಡುವುದಿಲ್ಲ. ರಾಜ್ಯಪಾಲರಿಗೆ ಭಾಷಣ ಮಾಡದಂತೆ ಹೈಕಮಾಂಡ್ ನಿಂದ ಕರೆ ಬಂದಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ಕಾನೂನು ಸಚಿವರು ಹೇಳಿಕೆ ನೀಡಿದ್ದಾರೆ. ಅದನ್ನೆ ದೊಡ್ಡ ವಿಚಾರ ಮಾಡುವುದು ಅನಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡುತ್ತಾ, ರಾಜ್ಯಪಾಲರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ ಎಂದು ಕಾನೂನು ಸಚಿವರು ಹೇಳಿದ್ದಾರೆ. ಆರೆಸ್ಸೆಸ್ ಕಚೇರಿಯಿಂದ ಕರೆ ಬಂದಿದೆ ಎಂದು ಮತ್ತೊಬ್ಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕರೆಗಳ ದಾಖಲೆಗಳನ್ನು ಸಚಿವರು ಸದನದ ಮುಂದಿಡಬೇಕು ಎಂದು ಆಗ್ರಹಿಸಿದರು. ರಾಜಭವನಕ್ಕೆ ಕಳಂಕ ತರಲು ಸರಕಾರ ಹೊರಟಿದೆ. ಕಾನೂನು ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಇಲ್ಲವೇ, ಅವರ ಹೇಳಿಕೆಗಳನ್ನು ಕಡತದಿಂದ ತೆಗೆಯಬೇಕು. ಇಲ್ಲದಿದ್ದರೆ, ಸಚಿವರು ಹೇಳಿದ್ದೆ ಸತ್ಯ ಅಂತ ಆಗುತ್ತದೆ. ವಿಧಾನಪರಿಷತ್ತಿನಲ್ಲಿ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಸಚಿವರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಅಶೋಕ್ ಹೇಳಿದರು. ರಾಜ್ಯಪಾಲರು ಸ್ಪೀಕರ್ ಪೀಠದಿಂದ ಇಳಿದು ಹೋಗುತ್ತಿರುವಾಗ ವಿಧಾನಪರಿಷತ್ ಸಭಾಪತಿ ಮೂರು ಬಾರಿ ರಾಜ್ಯಪಾಲರಿಗೆ ರಾಷ್ಟ್ರಗೀತೆ ಕುರಿತು ಹೇಳಿದರೂ ಅವರು ನಿಲ್ಲದೇ ಹೋದರು ಎಂದು ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಆದರೆ, ಇದನ್ನು ಸಭಾಪತಿ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕರು ಅಲ್ಲಗೆಳೆದಿದ್ದಾರೆ. ಸಚಿವರು ಉಭಯ ಸದನಗಳಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ ಎಂದು ಅವರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನಮ್ಮ ಸರಕಾರ ಯಾರೊಬ್ಬರ ಫೋನ್ ಕದ್ದಾಲಿಕೆಯನ್ನು ಮಾಡುವುದಿಲ್ಲ. ಕಾನೂನು ಸಚಿವರು ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಹೊರಗೆ ಬರಲು ಆಗುತ್ತಿಲ್ಲ ಎಂದು ಹೇಳುವುದು ಸರಿಯಲ್ಲ. ರಾಜ್ಯಪಾಲರ ಭಾಷಣದ ಬಗ್ಗೆ ಮಾತನಾಡಬೇಕಿದ್ದರೆ ಮಾತನಾಡಿ, ಕಾಲಹರಣ ಮಾಡಬೇಡಿ. ಅಗತ್ಯವಿದ್ದರೆ ಈ ಬಗ್ಗೆ ತನಿಖೆ ಮಾಡಿಸೋಣ ಎಂದು ಹೇಳಿದರು. ರಾಜ್ಯಪಾಲರನ್ನು ಗೌರವಪೂರ್ವಕವಾಗಿ ನಾವು ಹೋಗಿ ಬೀಳ್ಕೊಟ್ಟಿದ್ದೇವೆ. ಅವರಿಗೆ ಅಗೌರವ ತೋರಲು ಸಚಿವರು ನಿಂತಿರಲಿಲ್ಲ. ರಾಜ್ಯಪಾಲರಿಗೆ ಧಿಕ್ಕಾರವನ್ನು ಕೂಗಿಲ್ಲ. ರಾಜ್ಯಪಾಲರು ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಪೀಠದಿಂದ ಇಳಿದು ಹೊರಟು ಹೋಗುವುದೇ? ಈ ಚರ್ಚೆಗೆ ಅಂತ್ಯ ಹಾಡಿ ಎಂದು ಮುಖ್ಯಮಂತ್ರಿ, ಸ್ಪೀಕರ್‌ಗೆ ಕೋರಿದರು. 2011ರ ಜ.6ರಂದು ರಾಜ್ಯಪಾಲರಾಗಿದ್ದ ಎಚ್.ಆರ್.ಭಾರದ್ವಾಜ್ ಭಾಷಣ ಮಾಡುವಾಗ, ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಭಾಷಣ ಓದದಂತೆ ತಡೆದರು ಎಂದು ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಹೇಳೀದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ರಾಜ್ಯಪಾಲರನ್ನು ವಿರೋಧಿಸಿಲ್ಲ. ಅಕ್ರಮ ಗಣಿಗಾರಿಕೆ ಕಳಂಕ ಹೊತ್ತಿದ್ದ ಬಿಜೆಪಿ ಸರಕಾರ, ಭ್ರಷ್ಟ ಸರಕಾರ. ಅದನ್ನು ಸಮರ್ಥಿಸಿಕೊಂಡ ಓದಬೇಡಿ ಎಂದು ಹೇಳಿದ್ದೆ. ಅಕ್ರಮ ಗಣಿಗಾರಿಕೆ ವಿರುದ್ಧ ಲೋಕಾಯುಕ್ತ ವರದಿ ಇತ್ತು. ನಾನು ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಪಕ್ಷೇತರ ಸದಸ್ಯ ಗಾಲಿ ಜನಾರ್ದನ ರೆಡ್ಡಿ, ನೀವು ಪಾದಯಾತ್ರೆ ಮಾಡಿದ್ದ 2010ರ ಜುಲೈನಲ್ಲಿ. ಅದರ ಪರಿಣಾಮವಾಗಿಯೆ ಸುಪ್ರೀಂಕೋರ್ಟ್ ಸಂತೋಷ್ ಲಾಡ್ ಮೈನ್ಸ್ ಅನ್ನು ರದ್ದು ಮಾಡಿದೆ. ನಾಚಿಕೆ ಇಲ್ಲದೇ ಆತನನ್ನು ಮಂತ್ರಿ ಮಾಡಿ ಈ ಸದನದಲ್ಲಿ ಕೂರಿಸಿದ್ದೀರಾ ಎಂದು ಕಿಡಿಗಾರಿದರು. ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ಏರ್ಪಟ್ಟ ಹಿನ್ನೆಲೆಯಲ್ಲಿ ಸ್ಪೀಕರ್ ಸದನವನ್ನು 10 ನಿಮಿಷ ಮುಂದೂಡಿದರು.

ವಾರ್ತಾ ಭಾರತಿ 28 Jan 2026 10:42 pm

IND Vs NZ | ನಾಲ್ಕನೇ T20: ಭಾರತಕ್ಕೆ ಸೋಲುಣಿಸಿದ ಕಿವೀಸ್

ಸೀಫರ್ಟ್ ಅರ್ಧಶತಕ, ಸ್ಯಾಂಟ್ನರ್‌ಗೆ ಮೂರು ವಿಕೆಟ್

ವಾರ್ತಾ ಭಾರತಿ 28 Jan 2026 10:41 pm

IND Vs NZ- ವಿಶಾಖಪಟ್ಟಣದಲ್ಲಿ ಟಿಂ ಸೈಫರ್ಟ್ ಭರ್ಜರಿ ಆಟ; ಟೀಂ ಇಂಡಿಯಾ ಲೆಕ್ಕಾಚಾರವೆಲ್ಲಾ ಉಲ್ಟಾಪಲ್ಟಾ!

ಭಾರತದ ವಿರುದ್ಧ ಸತತ 3 ಪಂದ್ಯಗಳಲ್ಲಿ ಸೋಲನುಭವಿಸಿ ಟಿ20 ಸರಣಿಯನ್ನು ಕಳೆದುಕೊಂಡಿರುವ ನ್ಯೂಜಿಲೆಂಡ್ ಇದೀಗ ಮೊದಲ ಜಯದ ಸವಿ ಕಂಡಿದೆ. ಟಿಂ ಸೈಫರ್ಟ್ ಅವರ ಬಿರುಸಿನ ಅರ್ಧಶತಕ ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್ ಅವರ ಬಿಗು ದಾಳಿಯ ನೆರವಿನಿಂದ ಭಾರತದ ವಿರುದ್ಧ 50 ರನ್ ಗಳ ಜಯ ಸಾಧಿಸಿದೆ. ಹೀಗಾಗಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೋಲಿನ ಅಂತರವನ್ನು 3-1ಕ್ಕೆ ಇಳಿಸಿಕೊಂಡಿದೆ. 5ನೇ ಮತ್ತು ಅಂತಿಮ ಪಂದ್ಯ ತಿರುವನಂತಪುರದಲ್ಲಿ ಜನವರಿ 31 ಶನಿವಾರದಂದು ನಡೆಯಲಿದೆ. ವಿಶಾಖಪಟ್ಟಣದಲ್ಲಿ ಬುಧವಾರ ನಡೆದ ದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿತು. ಇದಕ್ಕುತ್ತರವಾಗಿ ಭಾರತ ತಂಡ 18.4 ಓವರ್ ಗಳಲ್ಲಿ ಕೇವಲ 165 ರನ್ ಗಳಿಸುವಷ್ಟರೊಳಗೆ ಆಲೌಟ್ ಆಯಿತು.

ವಿಜಯ ಕರ್ನಾಟಕ 28 Jan 2026 10:41 pm

ರಾಯಚೂರು ಜಿಲ್ಲಾ ಉತ್ಸವದ ಯಶಸ್ಸಿಗೆ ಮನೆಮನೆಗೆ ಆಹ್ವಾನ ನೀಡಬೇಕು : ಸಿಇಓ ಈಶ್ವರ್‌ ಕಾಂದೂ ಸೂಚನೆ

ರಾಯಚೂರು : ಫೆ.5ರಿಂದ ಆರಂಭವಾಗಲಿರುವ ರಾಯಚೂರು ಜಿಲ್ಲಾ ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್‌ಗಳು ಮನೆಮನೆಗೆ ಆಹ್ವಾನ ನೀಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್‌ ಕಾಂದೂ ಅವರು ಸೂಚಿಸಿದರು. ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಪಿಡಿಓಗಳೊಂದಿಗೆ ಸಭೆ ನಡೆಸಿ ಉತ್ಸವದ ಪೂರ್ವಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಜಿಲ್ಲಾ ಉತ್ಸವದ ಡಂಗುರ ಸಾರಬೇಕು. ಜಿಲ್ಲಾಡಳಿತದಿಂದ ಸಿದ್ಧಪಡಿಸಲಾದ ಆಹ್ವಾನ ಪತ್ರಿಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಗುಂಪುಗಳ ಮೂಲಕ ಮನೆಮನೆಗೆ ತಲುಪಿಸಬೇಕು. ಗ್ರಾಮ ಮಟ್ಟದಲ್ಲಿಯೂ ಉತ್ಸವವನ್ನು ಮನೆಯ ಉತ್ಸವದಂತೆ ಸಂಭ್ರಮಿಸುವಂತೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಸೂಚಿಸಿದರು. ಪಂಚಾಯತ್ ಮಟ್ಟದಲ್ಲಿ ಜಾಥಾ ಹಾಗೂ ಪ್ರಚಾರ ಸಭೆಗಳನ್ನು ಆಯೋಜಿಸಬೇಕು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ವಿವರಗಳನ್ನು ಪಂಚಾಯತ್ ಸಿಬ್ಬಂದಿಗಳು ಸಂಗ್ರಹಿಸಿ, ಅವರನ್ನು ಉತ್ಸವಕ್ಕೆ ಕರೆದುಕೊಂಡು ಬರುವ ವ್ಯವಸ್ಥೆ ಮಾಡಬೇಕು. ಈ ಕಾರ್ಯದಲ್ಲಿ ತಾಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದರು. ಉತ್ಸವದ ಅಂಗವಾಗಿ ಮಕ್ಕಳ ಉತ್ಸವ, ಆಹಾರ ಮೇಳಗಳು ನಡೆಯುತ್ತಿರುವುದರಿಂದ ಸ್ವಸಹಾಯ ಗುಂಪುಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗಮನಹರಿಸಬೇಕು. ನೆರೆ ಆಂಧ್ರಪ್ರದೇಶದ ಎರಡು ಜಿಲ್ಲೆಗಳು ಸೇರಿದಂತೆ ರಾಜ್ಯದ 10 ಜಿಲ್ಲೆಗಳ ಆಹಾರ ಮಳಿಗೆಗಳು ಉತ್ಸವದಲ್ಲಿ ಭಾಗವಹಿಸಲಿದ್ದು, ಜನರಿಗೆ ಹೊಸ ಅನುಭವ ಮತ್ತು ಪರಿಚಯ ದೊರಕುವಂತಾಗಬೇಕು ಎಂದು ಹೇಳಿದರು. ಸರ್ಕಾರದ ವಿವಿಧ ಯೋಜನೆಗಳ ಪ್ರಚಾರದೊಂದಿಗೆ ಉತ್ಸವವನ್ನು ಯಶಸ್ವಿಗೊಳಿಸುವ ಹೊಣೆಗಾರಿಕೆಯನ್ನು ಎಲ್ಲರೂ ಹೊತ್ತುಕೊಳ್ಳಬೇಕು. ಉತ್ಸವದಲ್ಲಿ ಭಾಗವಹಿಸುವ ಎಲ್ಲಾ ಫಲಾನುಭವಿಗಳ ನೊಂದಣಿ ಕಡ್ಡಾಯವಾಗಿದೆ ಎಂದು ಸಿಇಓ ಸ್ಪಷ್ಟಪಡಿಸಿದರು. ಸಭೆಯಲ್ಲಿ ಯೋಜನಾ ನಿರ್ದೇಶಕ ಡಾ. ಟಿ. ರೋಣಿ, ಲೆಕ್ಕಾಧಿಕಾರಿ ವಿಜಯಶಂಕರ್, ಹಿರಿಯ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಪಿಡಿಓಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 10:40 pm

ರನ್ ವೇ ಕಾಣಿಸುತ್ತಿಲ್ಲ ಎಂದು ಸಂದೇಶ ರವಾನಿಸಿದ್ದ ಪೈಲಟ್!

►ಲ್ಯಾಂಡಿಂಗ್ ಅನುಮತಿಯ ರೀಡ್‌ಬ್ಯಾಕ್ ಇರಲಿಲ್ಲ►ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನದ ಅಂತಿಮ ಕ್ಷಣಗಳು

ವಾರ್ತಾ ಭಾರತಿ 28 Jan 2026 10:38 pm

ಮಹಾರಾಷ್ಟ್ರ ತನ್ನ ಜನನಾಯಕನನ್ನು ಕಳೆದುಕೊಂಡಿದೆ; ಅಜಿತ್‌ ಪವಾರ್‌ ನಿಧನಕ್ಕೆ ಕಂಬನಿ ಮಿಡಿದ ನರೇಂದ್ರ ಮೋದಿ

ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸಾವನ್ನಪ್ಪಿದ್ದಾರೆ. ಅಜಿತ್‌ ಪವಾರ್‌ ಅವರ ಅಕಾಲಿಕ ನಿಧನ ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಜಿತ್‌ ಪವಾರ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಜಿತ್‌ ಪವಾರ್‌ ಅವರನ್ನು ಜನನಾಯಕ ಎಂದು ಕರೆದಿದ್ದಾರೆ. ಅಜಿತ್‌ ಪವಾರ್‌ ಅವರ ಎನ್‌ಸಿಪಿ ಪಕ್ಷ ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿತ್ತು.

ವಿಜಯ ಕರ್ನಾಟಕ 28 Jan 2026 10:37 pm

ವಿಧಾನಸಭಾ ಅಧಿವೇಶನ| ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚಿಸುವಂತಿಲ್ಲ: ಶಾಸಕರಿಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಬೆಂಗಳೂರು, ಜ.28: ‘ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆಯುವ ಚರ್ಚೆ ವೇಳೆ ಸದನದ ಯಾವೊಬ್ಬ ಸದಸ್ಯರು ರಾಜ್ಯಪಾಲರ ಬಗ್ಗೆಯಾಗಲಿ, ಅವರ ನಡವಳಿಕೆ ಬಗ್ಗೆಯಾಗಲಿ ಚರ್ಚಿಸುವಂತಿಲ್ಲ’ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ರೂಲಿಂಗ್ ನೀಡಿದರು. ರಾಜ್ಯಪಾಲರಿಗೆ ಅಗೌರವ ತೋರಿರುವ ಸರಕಾರ ಕ್ಷಮೆ ಕೋರಬೇಕು ಇಲ್ಲವೇ ವಿಷಾದ ವ್ಯಕ್ತಪಡಿಸಬೇಕು ಎಂದು ಬುಧವಾರ ವಿಧಾನಸಭೆಯಲ್ಲಿ ವಿಪಕ್ಷ ಸದಸ್ಯರು ಪಟ್ಟು ಹಿಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಷಮೆ ಕೋರಲು ಸದನ ಏನು ತಪ್ಪು ಮಾಡಿದೆ? ರಾಜ್ಯಪಾಲರು ರಾಷ್ಟ್ರಗೀತೆಗೆ ಅಗೌರವ ತೋರಿ ಸದನದಿಂದ ಹೊರ ನಡೆದದ್ದು ಯಾಕೆ ಎಂದು ಪ್ರಶ್ನಿಸಿದರು. ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು 10 ನಿಮಿಷ ಮುಂದೂಡಿದ ಸ್ಪೀಕರ್, ಸಂಧಾನ ಸಭೆಯನ್ನು ನಡೆಸಿ, ಒಮ್ಮತದ ತೀರ್ಮಾನವನ್ನು ಸದನದಲ್ಲಿ ಪ್ರಕಟಿಸಿದರು. ರಾಜ್ಯಪಾಲರು ಜ.22ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ ಸದನದಲ್ಲಿ ನಡೆದಿರುವ ಘಟನೆಗಳು ಮತ್ತು ಚರ್ಚೆಯು ಸಾರ್ವಜನಿಕರಲ್ಲಿ ತಪ್ಪು ಸಂದೇಶ ಮೂಡಲು ಕಾರಣವಾಗಿದೆ ಎಂದು ಸ್ಪೀಕರ್ ತಿಳಿಸಿದರು. ಈ ಸದನದ ಸದಸ್ಯರಾಗಿರುವ ನಮ್ಮ ನಡತೆ, ವ್ಯಕ್ತಪಡಿಸುವ ಅಭಿಪ್ರಾಯಗಳು ಸದಾಭಿರುಚಿ ಹಾಗೂ ಸಂವಿಧಾನದತ್ತವಾಗಿರಬೇಕು. ಅಲ್ಲದೇ, ಈ ಸದನದ ಘನತೆ ಹಾಗೂ ಗೌರವ ಎತ್ತಿ ಹಿಡಿಯುವಂತಾಗಿರಬೇಕು. ಈ ನಿಟ್ಟಿನಲ್ಲಿ ಸದನ ಸದಸ್ಯರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಖಾದರ್ ಹೇಳಿದರು. ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಈ ವಿಷಯವನ್ನು ಮುಕ್ತಾಯಗೊಳಿಸಿ, ವಂದನಾ ನಿರ್ಣಯದ ಮೇಲಿನ ಚರ್ಚೆ ಮುಂದುವರೆಸುವುದು. ಚರ್ಚೆಯ ಸಂದರ್ಭದಲ್ಲಿ ರಾಜ್ಯಪಾಲರ ಬಗ್ಗೆಯಾಗಲಿ, ಅವರ ನಡವಳಿಕೆ ಬಗ್ಗೆಯಾಗಲಿ ಮಾತನಾಡಬಾರದು ಎಂದು ಸ್ಪೀಕರ್ ರೂಲಿಂಗ್ ನೀಡಿದರು.

ವಾರ್ತಾ ಭಾರತಿ 28 Jan 2026 10:30 pm

ಕದ್ರಿ ಜೋಗಿ ಮಠದ ಕಚೇರಿಯಿಂದ ನಗ ನಗದು ಕಳವು: ಪ್ರಕರಣ ದಾಖಲು

ಮಂಗಳೂರು, ಜ.28: ಕದ್ರಿ ಜೋಗಿ ಮಠ ಆವರಣದಲ್ಲಿರುವ ಜೋಗಿ ಮಠ ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣಾ ಸಮಿತಿ ಕಚೇರಿಯ ಬಾಗಿಲ ಬೀಗ ಮುರಿದು ಕವಾಟಿನಲ್ಲಿದ್ದ ಧೂಮಾವತಿ ದೈವ, ಗಣಪತಿ ದೇವರ ಚಿನ್ನಾಭರಣ ಮತ್ತು ನಗದು ಕಳವಾದ ಘಟನೆ ವರದಿಯಾಗಿದೆ. ಕವಾಟಿನಲ್ಲಿದ್ದ ಧೂಮಾವತಿ ದೈವದ ಆಭರಣಗಳಿದ್ದ ಬ್ಯಾಗ್ ನಲ್ಲಿದ್ದ 8 ಬೆಳ್ಳಿಯ ಗುಬ್ಬೆಗಳ ಪೈಕಿ 07 ಗುಬ್ಬೆಗಳನ್ನು, ಎರಡು ಬೆಳ್ಳಿಯ ಅರ್ಧ ಚಂದ್ರಾಕೃತಿಯ ಆಭರಣಗಳ ಪೈಕಿ ಒಂದು ಬೆಳ್ಳಿಯ ಅರ್ಧ ಚಂದ್ರಾಕೃತಿಯ ಆಭರಣ, ಎರಡು ಬೆಳ್ಳಿಯ ದೊಡ್ಡ ಹೂವುಗಳ ಪೈಕಿ ಒಂದು ದೊಡ್ಡ ಬೆಳ್ಳಿಯ ಹೂವು, ಎರಡು ಬೆಳ್ಳಿಯ ಸಣ್ಣ ಹೂವುಗಳ ಪೈಕಿ ಒಂದು ಬೆಳ್ಳಿಯ ಸಣ್ಣ ಹೂವು, ಒಂದು ಗಂಧದ ಗಿಂಡಿ ಬಟ್ಟಲು ಕಳವಾಗಿದೆ. ಗಣಪತಿಯ ಎರಡು ಬೆಳ್ಳಿಯ ಸೊಂಡಿಲುಗಳ ಕಟ್ಟಗಳ ಪೈಕಿ ಒಂದು ಸೊಂಡಿಲು ಕಟ್ಟ, ನಾಲ್ಕು ಬೆಳ್ಳಿಯ ಕೈಕಡಗ ಗಳ ಪೈಕಿ ಮೂರು ಕೈಕಡಗಗಳು, ಬೆಳ್ಳಿಯ ಕಿವಿಯ ಒಂದು ಕುಂಡಲಗ, ಬೆಳ್ಳಿಯ ಎರಡು ಕಾಲ್ಗಡಗಳನ್ನು ಕಳ್ಳರು ಕಳವು ಮಾಡಿರುವುದು ಜ.27ರಂದು ಬೆಳಕಿಗೆ ಬಂದಿದೆ. ಸುಮಾರು ರೂ. 90,000 ರೂ. ಮೌಲ್ಯದ 511 ಗ್ರಾಂ ತೂಕದ ಬೆಳ್ಳಿಯ ಆಭರಣಗಳನ್ನು ಹಾಗೂ ನಗದು ರೂ. 40,000ನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತಿನ ಮೌಲ್ಯ ರೂ.1,30,000 ಆಗಿರುತ್ತದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕದ್ರಿ ಜೋಗಿ ಮಠದ ಜೀರ್ಣೋದ್ದಾರ ಮತ್ತು ಕಾರ್ಯನಿರ್ವಹಣಾ ಸಮಿತಿ ಅಧ್ಯಕ್ಷ ಹರಿನಾಥ ಎಂ ಅವರು ನೀಡಿರುವ ದೂರಿನಂತೆ ಮಂಗಳೂರು ಪೂರ್ವ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಾರ್ತಾ ಭಾರತಿ 28 Jan 2026 10:29 pm

ಜ.31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’

ಮಂಗಳೂರು, ಜ.28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ, ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರಂದು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ -ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಎಸ್ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕ್ಷೇಮವನ, ಬೆಂಗಳೂರು ಇದರ ಕಾರ್ಯನಿರ್ವಹಕ ನಿರ್ದೇಶಕಿ ಶ್ರದ್ಧಾ ಅಮಿತ್ ವಿಶೇಷ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ .ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

ವಾರ್ತಾ ಭಾರತಿ 28 Jan 2026 10:24 pm

ವೆನ್‌ಲಾಕ್ ಆಸ್ಪತ್ರೆಗೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಶೀಘ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ಜ.28: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ವಾಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ , ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ. ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ ಒಪಿಡಿ ಕಟ್ಟಡ ನಿರ್ಮಾಣಕ್ಕೆ ಸದ್ಯದಲ್ಲಿಯೇ ಟೆಂಡರ್ ಆಹ್ವಾನಿಸಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು, ಸಿಸಿ ಟಿವಿ ಅಳವಡಿಸಲಾಗು ವುದು ಎಂದು ಮಾಹಿತಿ ನೀಡಿದರು. ವೆನ್ಲಾಕ್ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಾರ್ತಾ ಭಾರತಿ 28 Jan 2026 10:22 pm

ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲು ಕಾರಣವೇನು?: ಪ್ರಾಸಿಕ್ಯೂಷನ್‌ನಿಂದ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು: ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಠಾಣೆ ಪೊಲೀಸರಿಂದ ಸಿಐಡಿಗೆ ವಹಿಸುವಲ್ಲಿ ಗಂಭೀರ ಕಾರಣ ಏನು? ಎನ್ನುವುದನ್ನು ತಿಳಿಸುವಂತೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಿಗೆ ಹೈಕೋರ್ಟ್‌ ಸೂಚಿಸಿದೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಬೈರತಿ ಬಸವರಾಜ್‌ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್‌ ದತ್ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿತು. ನ್ಯಾಯಾಲಯದ ಸೂಚನೆಗೆ ಪ್ರತಿಕ್ರಿಯಿಸಿದ ವಿಶೇಷ ಸರಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌, ಸಿಐಡಿ ತನಿಖೆಗೆ ವಹಿಸಿ ಸರಕಾರ ಹೊರಡಿಸಿದ ಆದೇಶ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಕಡತವನ್ನು ಗುರುವಾರ ಒದಗಿಸಲಾಗುವುದು ಎಂದು ತಿಳಿಸಿದರು. ಅದಕ್ಕೆ ನ್ಯಾಯಪೀಠ, ಕಡತ ಸಲ್ಲಿಸಿದ ನಂತರ ಅದನ್ನು ದಾಖಲಿಸಿಕೊಂಡು ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಲಾಗುವುದು ಎಂದು ತಿಳಿಸಿತು. ಇದಕ್ಕೂ ಮುನ್ನ ವಿಚಾರಣೆ ವೇಳೆ ಬೈರತಿ ಬಸವರಾಜ್‌ ಪರ ವಕೀಲರು ವಾದ ಮಂಡಿಸಿ, ಪೈ ಲೇಔಟ್‌ ಭೂಮಿ ಸಂಬಂಧ ಬಿಕ್ಲು ಶಿವು ಹಾಗೂ ಜಗದೀಶ್‌ ನಡುವೆ ವಿವಾದವಿತ್ತು. ಈ ವೇಳೆ ಜಗದೀಶ್‌, ಮೃತ ಬಿಕ್ಲು ಶಿವುಗೆ ಜೀವ ಬೆದರಿಕೆ ಹಾಕಿದ್ದರು. ಆ ಕುರಿತು ಶಿವು ದೂರು ದಾಖಲಿಸಿದ್ದರು. ಆರೋಪಿಗಳ ಬಂಧನವಾಗದಂತೆ ಪೊಲೀಸರೊಂದಿಗೆ ಮಾತನಾಡಿ ಅರ್ಜಿದಾರರು ರಕ್ಷಣೆ ಒದಗಿಸಿದ್ದಾರೆ ಎಂದು ಪ್ರಾಸಿಕ್ಯೂಷನ್‌ ಹೇಳುತ್ತಿದೆ. 2025ರ ಫೆಬ್ರವರಿ 10ರಿಂದ 13ರವರೆಗೆ ಪೈ ಲೇಔಟ್‌ ವ್ಯಾಜ್ಯ ನಡೆದಿದೆ. ಆ ನಡುವೆ ಶಿವು ಮತ್ತು ಜಗದೀಶ್‌ ಸಾಕಷ್ಟು ಭಾರಿ ಪೋನ್‌ನಲ್ಲಿ ಸಂಭಾಷಣೆ ನಡೆಸಿದ್ಧಾರೆ. ಪೈ ಲೇಔಟ್‌ ಹಾಗೂ ಕಿತ್ತಗನೂರು ಭೂ ವ್ಯಾಜ್ಯಕ್ಕೂ ಅರ್ಜಿದಾರರಿಗೆ ಯಾವುದೇ ಸಂಬಂಧವಿಲ್ಲ ಎಂದರು. ಪ್ರಯಾಗ್‌ ರಾಜ್‌ ಪ್ರಯಾಣಕ್ಕೆ 2025ರ ಜಮವರಿ 18ರಂದು ಅರ್ಜಿದಾರರು ಟಿಕೆಟ್‌ ಕಾಯ್ದಿರಿಸಿದ್ದು, ಫೆಬ್ರವರಿ 11ರಂದು ಪ್ರಯಾಣಿಸಿದ್ದಾರೆ. ಜನವರಿ 18ರಂದು ಟಿಕೆಟ್‌ ಕಾಯ್ದಿಸಿರಬೇಕಾದರೆ ಕೊಲೆಗೆ ಸಂಬಂಧವಿದೆ ಎಂದು ಹೇಗೆ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂಬುದು ಗೊತ್ತಿಲ್ಲ. ಪ್ರಯಾಗ್‌ ರಾಜ್‌ಗೆ ಅರ್ಜಿದಾರರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪ್ರಯಾಣಿಸಿದ್ದಾರೆ. ಅವರ ಪಿಎನ್‌ಆರ್ ಸಂಖ್ಯೆಗೂ ಜಗದೀಶ್‌ ಪಿಎನ್‌ಆರ್ ಸಂಖ್ಯೆಗೂ ವ್ಯತ್ಯಾಸವಿದೆ. ಆದ್ದರಿಂದ, ಒಂದೇ ಪಿಎನ್‌ಆರ್‌ ಸಂಖ್ಯೆಯಲ್ಲಿ ಜಗದೀಶ್‌ ಮತ್ತು ಅರ್ಜಿದಾರರು ಪ್ರಯಾಣಿಸಿದ್ದಾರೆ ಎಂಬ ವಾದ ಸುಳ್ಳು ಎಂದು ಪ್ರತಿಪಾದಿಸಿದರು. ಬಿಕ್ಲು ಶಿವು ಮೇಲೆ ಅಪರಿಚಿತ ದಾಳಿಕೋರರು ದಾಳಿ ನಡೆಸಿದ್ದಾರೆ ಎಂದು ಮೃತನ ತಾಯಿ ಮೊದಲಿಗೆ ಹೇಳುತ್ತಾರೆ. ನಂತರ ಯಾರದೋ ಮಾತಿಗೂ ಕಿವಿಗೊಟ್ಟು ಬಸವರಾಜ್‌ ಹೆಸರು ಹೇಳಿದ್ದಾರೆ. ನಂತರ ತಮ್ಮ ಹೇಳಿಕೆ ಹಿಂಪಡೆದುಕೊಂಡಿದ್ದಾರೆ. ಅವರ ಹೇಳಿಕೆಯೇ ಅನುಮಾನಸ್ಪದವಾಗಿದೆ. ಅಂತಹವರನ್ನು ಸಿಐಡಿ ಪ್ರಧಾನ ಸಾಕ್ಷ್ಯ ಎಂದು ಹೇಳುತ್ತಿದೆ. ಇನ್ನು ಅರ್ಜಿದಾರರು ತನಿಖೆಗೆ ಸಹಕರಿಸಿಲ್ಲ ಎಂದು ಆರೋಪಿಸಲಾಗುತ್ತಿದೆ. ಭಾರತಿನಗರ ಠಾಣೆ ಪೊಲೀಸರ ತನಿಖೆ ನಡೆಸುವಾಗ ಎಸಿಪಿಯೇ ಬಸವರಾಜ್‌ ಅವರನ್ನು ವಿಚಾರಣೆ ನಡೆಸಿದ್ದರು. ಎಸಿಪಿ ಕೇಳಿದ್ದ 150 ಪ್ರಶ್ನೆಗಳಿಗೆ ಬಸವರಾಜ್‌ ಉತ್ತರಿಸಿದ್ದಾರೆ. ಸಿಐಡಿಗೆ ವರ್ಗಾವಣೆಯಾದ ನಂತರ ತನಿಖಾಧಿಕಾರಿಗಳು ಒಮ್ಮೆಯೂ ಅರ್ಜಿದಾರರನ್ನು ವಿಚಾರಣೆಗೆ ಕರೆದಿಲ್ಲ ಎಂದರು. ಪ್ರಕರಣದ  18 ಆರೋಪಿಗಳ ದೋಷಾರೋಷ ಪಟ್ಟಿ ಸಲ್ಲಿಸಿದ್ದರೂ ಅರ್ಜಿದಾರ ವಿರುದ್ಧದ ಮಾತ್ರ ತನಿಖೆ ನಡೆಸಬೇಕಿದೆ. ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ ಎಂದು ಸಿಐಡಿ ಪೊಲಿಸರು ಹೇಳುತ್ತಿದ್ದಾರೆ. ಅರ್ಜಿದಾರರು ಪ್ರಕರಣದಲ್ಲಿ ಭಾಗವಹಿಸಿಲ್ಲ. ಹಾಗೊಂದು ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾದರೆ, ನ್ಯಾಯಾಲಯ ಅಗತ್ಯ ಷರತ್ತುಗಳನ್ನು ವಿಧಿಸಬಹುದು. ಆ ಷರತ್ತುಗಳನ್ನು ಅರ್ಜಿದಾರರು ಪಾಲಿಸಲಿದ್ದಾರೆ ಎಂದು ಭರವಸೆ ನೀಡಿದರು.

ವಾರ್ತಾ ಭಾರತಿ 28 Jan 2026 10:20 pm

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ: ಸುನಿಲ್ ಕುಮಾರ್ ಬಜಾಲ್

ಮಂಗಳೂರು, ಜ.28: ಕೇಂದ್ರ ಸರಕಾರವು ಬಂಡವಾಳ ಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣ ದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ. ಇದು ಕೇವಲ ಲೇಬರ್ ಕೋಡ್ ಅಲ್ಲ ಬದಲಾಗಿ ಕಾರ್ಪೊರೇಟ್ ಕೋಡ್ ಆಗಿದೆ ಎಂದು ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ಸಂಹಿತೆಗಳ ವಿರುದ್ದ ಫೆ.12 ರಂದು ನಡೆಯಲಿರುವ ಆಖಿಲ ಭಾರತ ಮಹಾಮುಷ್ಕರದ ಪ್ರಚಾರಾರ್ಥ ವಾಗಿ ಮುಲ್ಕಿಯಿಂದ ಪ್ರಾರಂಭಗೊಂಡ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ರೈತ ವಿರೋಧಿ ಬೀಜ ಮಸೂದೆ ಹಾಗೂ ವಿದ್ಯುತ್ ಮಸೂದೆಯನ್ನು ಜಾರಿಗೊಳಿಸಲು ಹುನ್ನಾರ ನಡೆಸುತ್ತಿರುವ ಕೇಂದ್ರ ಸರಕಾರವು ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕಾರ್ಪೊರೇಟ್ ಕಂಪೆನಿಗಳ ಪಾದತಲಕ್ಕೆ ಒಪ್ಪಿಸಲು ಸನ್ನದ್ದವಾಗಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಿಐಟಿಯು ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು ಮಾತನಾಡಿ ಗ್ರಾಮೀಣ ಜನತೆಯ ಬದುಕಿಗೆ ಪೂರಕವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಿದ್ದುಪಡಿ ತರುವ ಮೂಲಕ ಸರ್ವನಾಶ ಮಾಡಲು ಹೊರಟಿದೆ ಎಂದು ದೂರಿದರು ಪಾದಯಾತ್ರೆಯ ಉದ್ಘಾಟಕ ಸುನಿಲ್ ಕುಮಾರ್ ಬಜಾಲ್ ಕೆಂಬಾವುಟವನ್ನು ಜಾಥಾ ತಂಡದ ನಾಯಕರಾದ ಬಿ.ಕೆ ಇಮ್ತಿಯಾಜ್ ಹಾಗೂ ಉಪನಾಯಕರಾದ ಜಯಲಕ್ಷ್ಮಿ , ರವಿಚಂದ್ರ ಕೊಂಚಾಡಿ, ಶ್ರೀನಾಥ ಕಾಟಿಪಳ್ಳ, ತಯ್ಯುಬ್ ಬೆಂಗರೆ, ಪ್ರಮೀಳಾ ಶಕ್ತಿನಗರ, ಸಾಧಿಕ್ ಮುಲ್ಕಿಯವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ಜನಪರ ಹೋರಾಟಗಾರರಾದ ಮುನೀರ್ ಕಾಟಿಪಳ್ಳ, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ, ವಿಮಾ ಪ್ರತಿನಿಧಿ ಸಂಘಟನೆಯ ಜಿಲ್ಲಾ ನಾಯಕರಾದ ರಾಜನ್ ಡಿ ಕೋಸ್ತಾ, ಸಿಐಟಿಯು ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ದಿನೇಶ್ ಶೆಟ್ಟಿ,ಸಂತೋಷ್ ಆರ್.ಎಸ್, ಅಶೋಕ್ ಶ್ರೀಯಾನ್,ನಾಗೇಶ್ ಕೋಟ್ಯಾನ್,ಯುವಜನ ನಾಯಕರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಆದಿವಾಸಿ ಸಂಘಟನೆಯ ಜಿಲ್ಲಾ ನಾಯಕರಾದ ಕರಿಯ ಕೆ, ಶೇಖರ್ ವಾಮಂಜೂರು, ಕೃಷ್ಣ ಇನ್ನಾ,ದಲಿತ ಸಂಘಟನೆಯ ಮುಖಂಡರಾದ ಕೃಷ್ಣ ತಣ್ಣೀರುಬಾವಿ, ಮಹಿಳಾ ಮುಖಂಡರಾದ ಅಸುಂತ ಡಿ ಸೋಜ, ಯೋಗಿತಾ,ರೋಹಿಣಿ, ಮುಂತಾದವರು ಉಪಸ್ಥಿತರಿದ್ದರು. ನೂರಕ್ಕೂ ಮಿಕ್ಕಿದ ಕಾರ್ಯಕರ್ತರು ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿದರು.   

ವಾರ್ತಾ ಭಾರತಿ 28 Jan 2026 10:18 pm

ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ: ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆ

ಮಂಗಳೂರು , ಜ.28: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ ಇದರ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೇಘರಾಜ್ ಜೈನ್ ಅವರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮೆನೇಜಿಂಗ್ ಟ್ರಸ್ಟಿಯೂ ಆಗಿರುತ್ತಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರತ್ನಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಇವರು ಮೊದಲ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೆೇರಿಯ ಅಧೀಕ್ಷಕರಾದ ಬಿ.ನಾಗೇಂದ್ರ ನಡೆಸಿಕೊಟ್ಟರು. ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ., ಇದರ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಎಂ.ಎನ್.ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ , ರತ್ನಾಕರ ಶೆಟ್ಟಿ , ರಾಘವ ಶೆಟ್ಟಿ , ಮೋನಪ್ಪ ಶೆಟ್ಟಿ , ಸುನೀಲ್ ಕುಮಾರ್ , ನಜೀರ್ ಹುಸೈನ್ , ಎಂ. ಮಹೇಶ್ ಹೆಗ್ಡೆ , ಎಸ್.ರಾಜು ಪೂಜಾರಿ , ಎಂ. ವಾದಿರಾಜ ಶೆಟ್ಟಿ , ಮೇಘರಾಜ್ ಜೈನ್ , ಹಿಂದುಳಿದ ‘ಅ’ ವರ್ಗದಿಂದ ಭಾಸ್ಕರ್ ಎಸ್.ಕೋಟ್ಯಾನ್ , ಪರಿಶಿಷ್ಟ ಜಾತಿ ವರ್ಗದಿಂದ ಜಗದೀಶ್ಚಂದ್ರ ಎಸ್, ಹಿಂದುಳಿದ ‘ ಬ’ ವರ್ಗದಿಂದ ಗುಲ್ಜರ್ ಹುಸೈನ್ , ಮಹಿಳಾ ಮೀಸಲು ಕ್ಷೇತ್ರದಿಂದ ಸಾವಿತ್ರಿ ರೈ , ಪೂರ್ಣಿಮಾ ಶೆಟ್ಟಿ, ಅವಿರೋಧವಾಗಿ ಆಯ್ಕೆಗೊಂಡರು.

ವಾರ್ತಾ ಭಾರತಿ 28 Jan 2026 10:16 pm

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಸರಕಾರಕ್ಕೆ ನೋಟಿಸ್

ಬೆಂಗಳೂರು: ಜನವರಿ 29ರಿಂದ ಆರಂಭವಾಗಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ. ಹೊಸದಾಗಿ ಆಯ್ಕೆ ಸಮಿತಿ ರಚಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಪಕರಾದ ಸಂವಿಧಾನ ಸಿನಿ ಕಂಬೈನ್ಸ್‌ನ ಎ.ವಿ. ನಾಗರಾಜು ಮತ್ತು ಎ.ಆರ್‌. ಪ್ರೊಡಕ್ಷನ್ಸ್‌ನ ಅರುಣ್‌ ರೈ ತೋಡರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಈ ಕುರಿತು ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಚಿತ್ರೋತ್ಸವ ಆರಂಭವಾಗುವ ಕೊನೇ ಕ್ಷಣದಲ್ಲಿ ಅರ್ಜಿ ಸಲ್ಲಿಸಿರುವುದರಿಂದ ಈ ಹಂತದಲ್ಲಿ ತಡೆ ನೀಡಲಾಗದು ಎಂದು ತಿಳಿಸಿದ್ದಲ್ಲದೆ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು, ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಹಾಗೂ ಸಹಕಾರ ಸಂಘಗಳ ಡೆಪ್ಯೂಟಿ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌ ವಾದ ಮಂಡಿಸಿ, ಚಲನಚಿತ್ರೋತ್ಸವಕ್ಕೆ ಚಿತ್ರಗಳನ್ನು ಆಯ್ಕೆ ಮಾಡಲು ರಚಿಸಿದ್ದ ಸಮಿತಿಯ ವಿರುದ್ಧವೇ ಆಕ್ಷೇಪ ಎತ್ತಿ ದೂರು ನೀಡಲಾಗಿದ್ದು, ಅದನ್ನು ಪರಿಹರಿಸಿಲ್ಲ. ಆಯ್ಕೆ ಸಮಿತಿಯು ಪಾರದರ್ಶಕ ರೀತಿಯಲ್ಲಿ ಚಿತ್ರಗಳನ್ನು ಆಯ್ಕೆ ಮಾಡಿಲ್ಲ. ಆದ್ದರಿಂದ ಹೊಸ ಸಮಿತಿ ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಮುಂದುವರಿದು, ಚಲನಚಿತ್ರೋತ್ಸವದ ಹೆಸರಿನಲ್ಲಿ ಸಾಕಷ್ಟು ಹಣಕಾಸು ಅವ್ಯವಹಾರ ನಡೆದಿದೆ. ಆ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಲ್ಲಿ ದೂರು ನೀಡಲಾಗಿದೆ. ಚಿತ್ರೋತ್ಸವವನ್ನು ಒರಾಯನ್‌ ಮಾಲ್‌‌ನಿಂದ ಲುಲು ಮಾಲ್‌ಗೆ ಸ್ಥಳಾಂತರ ಮಾಡಲಾಗಿದೆ. ಚಿತ್ರೋತ್ಸವಕ್ಕೆ ಚಿತ್ರಗಳ ಆಯ್ಕೆಯಲ್ಲಿ ಪ್ರತಿವರ್ಷ ಗೋಲ್‌‌ಮಾಲ್‌ ನಡೆಯುತ್ತಿದೆ. ಆದ್ದರಿಂದ, ಆ ಬಗ್ಗೆ ತನಿಖೆಗೆ ಆದೇಶಿಸಬೇಕೆಂದು ಕೋರಿದರು. ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೂಬೆನ್‌ ಜಾಕೋಬ್‌, ಗುರುವಾರದಿಂದಲೇ ಚಲನಚಿತ್ರೋತ್ಸವ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಯಾವುದೇ ತಡೆ ನೀಡಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ವಾರ್ತಾ ಭಾರತಿ 28 Jan 2026 10:14 pm

ಕರಾವಳಿ ಕಾವಲು ಪೊಲೀಸರಿಂದ ಬೋಟು ಮಾಲಕರ ಸಭೆ

ಮಲ್ಪೆ, ಜ.28: ಕೋಡಿಬೆಂಗ್ರೆ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಪ್ರವಾಸಿ ದೋಣಿ ದುರಂತದ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಾಟರ್ ಸ್ಪೋರ್ಟ್ಸ್ ಮತ್ತು ಟೂರಿಸ್ಟ್ ಬೊಟುಗಳ ಮಾಲಕರ ಸಭೆಯನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆಸಲಾಯಿತು. ಕರಾವಳಿ ಕಾವಲು ಪೊಲೀಸ್ ಡಿವೈಎಸ್ಪಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಟ್ಟು 40 ಬೋಟುಗಳ ಮಾಲಕರು ಹಾಜರಿದ್ದರು. ಬೋಟ್ ಮಾಲಕರಿಗೆ ಉಡುಪಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದ ಸೂಚನೆಗಳನ್ನು ತಿಳಿಸಲಾ ಯಿತು ಹಾಗೂ ಮುಂದಿನ ದಿನಗಳಲ್ಲಿ ಸರಿಯಾದ ದಾಖಲೆಗಳನ್ನು ಕಡ್ದಾಯವಾಗಿ ಸಿದ್ಧಪಡಿಸಿಕೊಂಡು ಬೋಟ್/ಕಯಾಕಿಂಗ್ ಹಾಗೂ ಇನ್ನಿತರ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ನಡೆಸುವಂತೆ ತಿಳಿಸಲಾಯಿತು.

ವಾರ್ತಾ ಭಾರತಿ 28 Jan 2026 10:12 pm

ಪಾಕಿಸ್ತಾನ ಟಿ20 ವಿಶ್ವಕಪ್ ಬಹಿಷ್ಕರಿಸಿದರೆ ಮುಂಬೈನವರಿಗೇಕೆ ಹಾಲು ಕುಡಿದಷ್ಟು ಖುಷಿ? ಗಮ್ಮತ್ತೇ ಗಮ್ಮತ್ತು!

ICC T20 World Cup 2026- ಬಾಂಗ್ಲಾದೇಶದ ಕಾರಣ ಮುಂದಿಟ್ಟು ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಟಿ20 ವಿಶ್ವಕಪ್ ನಿಂದ ಹಿಂದೆ ಸರಿಯುವ ಬೆದರಿಕೆ ಹಾಕುತ್ತಿದೆ. ಇಡೀ ಕ್ರಿಕೆಟ್ ಜಗತ್ತು ಈ ಬೆಳವಣಿಗೆಯನ್ನು ಕುತೂಹಲದಿಂದ ನೋಡುತ್ತಿದ್ದರೆ, ಭಾರತದ ಅಹ್ಮದಾಬಾದ್, ಕೋಲ್ಕತಾ ಮುತ್ತು ಮುಂಬೈ ನಗರದ ಕ್ರಿಕೆಟ್ ಪ್ರೇಮಿಗಳು ಮಾತ್ರ ಖುಷಿಯಲ್ಲಿದ್ದಾರೆ. ಏನಾದ್ರೂ ಆಗ್ಲಿ ಒಮ್ಮೆ ಪಾಕಿಸ್ತಾನ ಈ ಟೂರ್ನಿಯನ್ನು ಬಹಿಷ್ಕರಿಸಲಿ ಎಂದು ಮನಸಾರೆ ಆಶಿಸುತ್ತಿದ್ದಾರೆ. ಇದರ ಹಿಂದಿದೆ ಮಹತ್ವದ ಕಾರಣ.

ವಿಜಯ ಕರ್ನಾಟಕ 28 Jan 2026 10:11 pm

ಹಾಸನ| ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಯತ್ನ: ಪತ್ನಿ ಮೃತ್ಯು

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆ ಪತಿ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೆ,  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಅದ್ದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತಾ(25) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಪತಿ ಚೇತನ್ (28) ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಪ್ರೀತಿಸಿ ವಿವಾಹವಾಗಿದ್ದ ದಂಪತಿ ನಡುವೆ ಕಲಹ ಏರ್ಪಟ್ಟು ಮೂರು ದಿನ ಹಿಂದೆ ಚೇತನ್‌ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪತಿಯು ಸಾವು ಬದುಕಿನ ಮಡುವೆ ಹೋರಾಡುತ್ತಿರುವುದನ್ನು ಕಂಡು ರಂಜಿತಾ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Jan 2026 10:06 pm

ಬೆಂಗಳೂರು ಟೆಕ್ ಕಂಪನಿಯ 869 ಕೋಟಿ ರೂ. ಮೌಲ್ಯದ ಸೋರ್ಸ್ ಕೋಡ್ ಕದ್ದ ಉದ್ಯೋಗಿ! ಪತ್ತೆಯಾಗಿದ್ದು ಹೇಗೆ, ನಂತರ ಆಗಿದ್ದೇನು?

ಬೆಂಗಳೂರಿನ ಪ್ರಮುಖ ಟೆಕ್ ಕಂಪನಿಯಿಂದ ಸುಮಾರು 8 ಮಿಲಿಯನ್ ಯೂರೋ ಮೌಲ್ಯದ ಸೋರ್ಸ್ ಕೋಡ್ ಕಳ್ಳತನವಾಗಿದೆ. ಒಬ್ಬ ಹಿರಿಯ ಉದ್ಯೋಗಿ ತನ್ನ ವೈಯಕ್ತಿಕ ಇಮೇಲ್‌ಗೆ ಕೋಡ್ ವರ್ಗಾಯಿಸಿರುವುದಾಗಿ ಒಪ್ಪಿಕೊಂಡಿದ್ದು, ಕಂಪನಿ ಆತನನ್ನು ವಜಾಗೊಳಿಸಿ ಪೊಲೀಸರಿಗೆ ದೂರು ನೀಡಿದೆ. ಈ ಘಟನೆ ಟೆಕ್ ಉದ್ಯಮದಲ್ಲಿ ಭದ್ರತಾ ಲೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.

ವಿಜಯ ಕರ್ನಾಟಕ 28 Jan 2026 10:06 pm

ದರ್ಸ್ ರಂಗವನ್ನು ಹೆಚ್ಚಿಸಲು ಉಲಮಾಗಳ ಪಾತ್ರ ಮುಖ್ಯ: ಕುಂಬೋಳ್ ತಂಙಳ್

ಉಡುಪಿ, ಜ.28: ರಾಜ್ಯ ಉಲಮಾ ಒಕ್ಕೂಟದ ನಿರ್ದೇಶನದಂತೆ ಉಡುಪಿ ಜಿಲ್ಲಾ ಉಲಮಾ ಕ್ಯಾಂಪ್ ಮೂಳೂರು ಸುನ್ನೀ ಸೆಂಟರ್ ಸಂಸ್ಥೆಯಲ್ಲಿ ನಡೆಯಿತು ಉಲಮಾ ಕ್ಯಾಂಪ್‌ನ್ನು ಉದ್ಘಾಟಿಸಿದ ಕೇಂದ್ರ ಮುಶಾವರ ಉಪಾಧ್ಯಕ್ಷ, ಡಿಕೆಎಸ್‌ಸಿ ಸಂಸ್ಥೆಯ ಅಧ್ಯಕ್ಷ ಖುದುವತು ಸ್ಸಾದಾತ್ ಅಸ್ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಮಾತನಾಡಿ, ಆಧುನಿಕತೆಯ ಈ ಕಲುಷಿತ ವಾತಾವರಣದಲ್ಲಿ ನಮ್ಮ ಸಮೂಹ ಅದಕ್ಕೆ ಹೊಂದಿಕೊಂಡು ಬೆಳೆಯುತ್ತಿದೆ. ನಾವು ಧಾರ್ಮಿಕ ವಿದ್ಯೆಗೆ ಒತ್ತು ಕೊಡದಿದ್ದರೆ ನಮ್ಮ ಸಮೂಹ ಕೈ ತಪ್ಪುವ ಸಾಧ್ಯತೆಗಳು ಬಹಳ ಹೆಚ್ಚಿದೆ. ಹಳೆಯ ಕಾಲದ ಪಳ್ಳಿ ದರ್ಸುಗಳನ್ನು ಹೆಚ್ಚಿಸಬೇಕು. ತಮ್ಮ ತಮ್ಮ ಮೊಹಲ್ಲಾ ಗಳಲ್ಲಿ ಪಳ್ಳಿ ದರ್ಸ್ ಆರಂಭಿಸಬೇಕು. ಇದು ಉಲಮಾಗಳ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ ಉಸ್ತಾದ್ ದುವಾದೊಂದಿಗೆ ಚಾಲನೆ ನೀಡಲಾ ಯಿತು. ಅಧ್ಯಕ್ಷತೆಯನ್ನು ನಿರ್ವಹಣಾ ಸಮಿತಿಯ ಅಧ್ಯಕ್ಷ ಯು.ಕೆ.ಮುಸ್ತಫಾ ಸಅದಿ ಉಸ್ತಾದ್ ವಹಿಸಿದ್ದರು. ದೀನೀ ಪ್ರಭೋದನೆ ಹೇಗಿರಬೇಕೆಂಬ ವಿಷಯದಲ್ಲಿ ಇಬ್ರಾಹಿಂ ಸಖಾಫಿ ಪುಝಕ್ಕಾಟೀರಿ, ಸುನ್ನತ್ ಮತ್ತು ಬಿದ್ ಅತ್ ಎಂಬ ವಿಷಯದಲ್ಲಿ ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ ಹಾಗೂ ತ್ವರೀಖತ್ ಎಂಬ ವಿಷಯದಲ್ಲಿ ಸ್ವಾಬಿರ್ ಸಅದಿ ಮೂಳೂರು ವಿಷಯ ಮಂಡಿಸಿದರು ಸುನ್ನೀ ಸೆಂಟರ್ ಕೇಂದ್ರ ಸಮಿತಿ ನಾಯಕರಾದ ಅಸ್ಸಯ್ಯಿದ್ ಮುಹಮ್ಮದ್ ತಂಙಳ್ ಉಚ್ಚಿಲ, ಅಸ್ಸಯ್ಯಿದ್ ಅಲವಿ ತಂಙಳ್ ಕರ್ಕಿ, ಕಾಪು ಖಾಝಿ ಅಹ್ಮದ್ ಖಾಸಿಮಿ, ರಾಜ್ಯ ಮುಶಾವರ ಸದಸ್ಯರಾದ ಅಶ್ರಫ್ ಸಖಾಫಿ ಕನ್ನಂಗಾರು, ಜಿಲ್ಲಾ ಸುನ್ನೀ ಕೋ-ಓಡಿನೇಶ್ ಅಧ್ಯಕ್ಷ ಕೆ.ಎ. ಅಬ್ದುರ‌್ರಹ್ಮಾನ್ ರಝ್ವಿ ಕಲ್ಕಟ್ಟ, ಎಸ್‌ಜೆಎಂ ಜಿಲ್ಲಾಧ್ಯಕ್ಷ ಅಬ್ದುರ‌್ರಝಾಖ್ ಖಾಸಿಮಿ ಕಾಪು, ಹಂಝ ಮದನಿ ಮಿತ್ತೂರು ಮೊದಲಾದವರು ಉಪಸ್ಥಿತರಿದ್ದರು ಜಿಲ್ಲಾ ನಾಯಿಬ್ ಖಾಝಿ ಬಿ.ಕೆ.ಅಬ್ದುರ‌್ರಹ್ಮಾನ್ ಮದನಿ ಮೂಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಸಅದಿ ಅಫ್ಲಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಫುರ್ಖಾನಿ ಉಚ್ಚಿಲ ವಂದಿಸಿದರು.

ವಾರ್ತಾ ಭಾರತಿ 28 Jan 2026 10:00 pm

ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಕಳವು

ಕುಂದಾಪುರ, ಜ.28: ಚಿನ್ನಾಭರಣ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಹೋಗಿವು ಘಟನೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಜ.27ರಂದು ಸಂಜೆ ವೇಳೆ ನಡೆದಿದೆ. ಶಿರೂರಿನ ಮುಹಮ್ಮದ್ ಕಾಸಿಮ್ ಎಂಬವರ ಎಸ್‌ಪಿಜಿ ಗೋಲ್ಡ್ ಆ್ಯಂಡ್ ಡೈಮಂಡ್ ಅಂಗಡಿಗೆ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದು, ಆತ ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ನೋಡಿ ಅವರ ಕಣ್ಣು ತಪ್ಪಿಸಿ 1,25,000 ರೂ. ಮೌಲ್ಯದ ಸುಮಾರು 9 ಗ್ರಾಮ್ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Jan 2026 9:58 pm

ಪಡುಬಿದ್ರೆ: ಮನೆಗೆ ನುಗ್ಗಿ 48ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಪಡುಬಿದ್ರಿ, ಜ.28: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ. ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ಮಂಗಳ ವಾರ ಸಂಜೆಯ ಹೋಗಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇವರ ಸೊಸೆ ತನ್ನ ತಾಯಿ ಮನೆಗೆ ಹೋಗಿದ್ದು, ಅವರ ಮಗ ದುಬೈಯಲ್ಲಿ ಇರುವುದಾಗಿ ತಿಳಿದುಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲೆಸ್, 5 ಪವನ್ ತೂಕದ ಚಿನ್ನದ ನೆಕ್ಲೆಸ್, ಸುಮಾರು 3 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲೆಸ್, ಸುಮಾರು 2.5 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲೆಸ್, 15 ಪವನ್ ತೂಕದ ಬಂಗಾರದ ಬಳೆಗಳು, 3 ಪವನ್ ತೂಕದ ಬಂಗಾರದ ಬ್ರೇಸ್ಲೇಟ್, 1 ಪವನ್ ತೂಕದ ಚಿನ್ನದ ಉಂಗುರ, 3 ಪವನ್ ತೂಕದ ಚಿನ್ನದ ಉಂಗುರಗಳು ಸಹಿತ ಮುತ್ತಿನ ಮಣಿಯ ಚಿನ್ನದ ಸರ, ಸಣ್ಣ ಚಿನ್ನದ ಸರಗಳು, ಕಿವಿಯೋಲೆ ಸೇರಿದಂತೆ ಒಟ್ಟು 70 ಪವನ್ ತೂಕದ 48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50000 ರೂ. ಮೌಲ್ಯದ ರಾಡೋ ವಾಚನ್ನು ಕಳವುಗೈದಿದ್ದಾರೆ. ಮನೆಯಲ್ಲಿ ಸಿಮ್ ಸಹಿತವಾದ ಸಿಸಿಟಿವಿ ಇದ್ದು ಅದನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ ಅದರ ಸಿಮ್ ಸಂದೇಶವು ಮಗನ ಸಿಮ್‌ನಲ್ಲಿ ದಾಖಲಾಗಿದೆ ಎನ್ನಲಾಗಿದೆ. ಸುತ್ತಮುತ್ತ ಹಲವು ಮನೆಗಳಿದ್ದು, ಇಂತಹ ವಸತಿ ಪ್ರದೇಶಕ್ಕೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಡಿವೈಎಸ್ಪಿ ಪ್ರಭು ಡಿ.ಟಿ., ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ, ಪಡುಬಿದ್ರಿ ಠಾಣಾಧಿಕಾರಿ ಶಕ್ತಿವೇಲು ಸಹಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನ ದಳ, ವೈಜ್ಞಾನಿಕವಾಗಿ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 28 Jan 2026 9:56 pm

KSRTC ನೌಕರರ ಫೆಡರೇಷನ್‌ ಅಧ್ಯಕ್ಷ ಅನಂತ ಸುಬ್ಬರಾವ್‌ ನಿಧನ! ಆಸ್ಪತ್ರೆಗೆ ದೇಹದಾನ; ಸ್ಪೂರ್ತಿಯಾದ ಕಾರ್ಮಿಕ ಮುಖಂಡ

ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್‌ ಅವರು ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಲ್ಕು ದಶಕಗಳ ಕಾಲ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಅವರು, ಸಾರಿಗೆ ನೌಕರರ ಬೇಡಿಕೆಗಳಿಗಾಗಿ ಧ್ವನಿ ಎತ್ತಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಲಾಗಿದೆ. ಮೃತರ ದೇಹವನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ವಿಜಯ ಕರ್ನಾಟಕ 28 Jan 2026 9:53 pm

ಉಡುಪಿ| ಇಡಿ ತನಿಖೆ ಹೆಸರಿನಲ್ಲಿ 40 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.28: ಇಡಿ ತನಿಖೆ ಹೆಸರಿನಲ್ಲಿ ಕಟಪಾಡಿಯ ವ್ಯಕ್ತಿಯೊಬ್ಬರಿಗೆ 40ಲಕ್ಷ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿ ಕಲ್ತಟ್ಟ ನಿವಾಸಿ ಕೆ.ರಾಘವೇಂದ್ರ ರಾವ್(45) ಎಂಬವರ ಮೊಬೈಲ್‌ಗೆ ಜ.11ರಂದು ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರದಿಂದ ಮಾತನಾಡುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ‘ನಿಮ್ಮ ಹೆಸರಿನಲ್ಲಿರುವ ಮೊಬೈಲ್ ಸಂಖ್ಯೆಯಿಂದ ಕಾನೂನುಬಾಹಿರ ಚಟುವಟಿಕೆ ಗಳು ಹಾಗೂ ಬೆದರಿಕೆ ಕರೆಗಳನ್ನು ಮಾಡುತ್ತಿರುವುದಾಗಿ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ನೀವು ಕೂಡಲೇ ಠಾಣೆಯನ್ನು ಸಂಪರ್ಕಿಸಿ ಎನ್‌ಓಸಿ ಪಡೆದು ಕಳುಹಿಸಿ, ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು 2 ಗಂಟೆಯ ಒಳಗೆ ನಿಷ್ಕ್ರೀಯಗೊಳಿಸಲಾಗುವುದು’ ಎಂದು ಆತ ತಿಳಿಸಿದ್ದನು. ಅಲ್ಲದೇ ಕರೆಯನ್ನು ಕೊಲಾಬಾ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿ ಕರೆಯನ್ನು ಇನ್ನೊಂದು ನಂಬರ್‌ಗೆ ವರ್ಗಾಯಿಸಿದನು.ಅದರಲ್ಲಿ ಕೊಲಾಬಾ ಪೊಲೀಸ್ ಠಾಣೆಯ ಪೊಲೀಸ್ ಎಂದು ಹೇಳಿಕೊಂಡು ಮಾತನಾಡಿದ ವ್ಯಕ್ತಿ, ನಿಮ್ಮ ಮೊಬೈಲ್ ಸಂಖ್ಯೆಯನ್ನು ಉಪಯೋಗಿಸಿ ಮುಂಬೈಯಲ್ಲಿ ಬ್ಯಾಂಕ್ ಖಾತೆ ತೆರೆದು 4.90 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದನು. ಈ ಸಂಬಂಧ ಹೈಕೋರ್ಟ್ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿ ಆಡಿಯೋ ಕರೆಯನ್ನು ವೀಡಿಯೋ ಕರೆಗೆ ವರ್ಗಾಯಿಸಿದನು. ಆಗ ವಿಕ್ರಮ್ ರಾಥೋಡ್ ಎಂಬ ಹೆಸರಿನ ವ್ಯಕ್ತಿಯು ಪೊಲೀಸ್ ಸಮವಸ್ತ್ರದಲ್ಲಿದ್ದು, ತಾನು ತನಿಖಾಧಿಕಾರಿಯೆಂದು ತನ್ನ ಗುರುತು ಸಂಖ್ಯೆ ಹಾಗೂ ಹೆಸರನ್ನು ಹೇಳಿಕೊಂಡು ತನಿಖೆಗೆ ಸಹಕರಿಸದಿದ್ದಲ್ಲಿ ಕೂಡಲೇ ಬಂಧಿಸಬೇಕಾಗುತ್ತದೆ ಎಂದು ಹೇಳಿದನು. ನಂತರ ಅದೇ ರೀತಿ ಪ್ರತಿದಿನ ಕರೆ ಮಾಡಿ ವಿಚಾರಣೆ ಎಂದು ವಿವಿಧ ದಾಖಲೆಗಳನ್ನು ಪಡೆದು ಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಪ್ರಕರಣವನ್ನು ಇಡಿಗೆ ವರ್ಗಾಯಿಸಲಾಗಿದ್ದು, ಇಡಿ ನಿರ್ದೇಶಕ ಹೇಳಿ ಕರೆ ಮಾಡಿ, ಹಣ ವರ್ಗಾಯಿಸುವಂತೆ ತಿಳಿಸಿದನು. ಇದನ್ನು ನಂಬಿದ ರಾಘವೇಂದ್ರ ರಾವ್ ಜ.16 ಮತ್ತು 19ರಂದು ತನ್ನ ಪತ್ನಿಯ ಖಾತೆಯಿಂದ ಒಟ್ಟು 25,00,000ರೂ. ಹಾಗೂ ಜ.23ರಂದು ತನ್ನ ಖಾತೆಯಿಂದ 15,00,000ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ, ಒಟ್ಟು 40,00,000ರೂ. ಮೋಸ ಹೋಗಿದ್ದರು ಎಂದು ದೂರಲಾಗಿದೆ.

ವಾರ್ತಾ ಭಾರತಿ 28 Jan 2026 9:52 pm

ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ ಬಿಡುಗಡೆ: ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಜ.28: ಸವಳು-ಜವಳು ಬಾಧಿತ ಭೂಪ್ರದೇಶ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿತ ಕೇಂದ್ರದಲ್ಲಿರುವ ದತ್ತಾಂಶದನ್ವಯ ಸುಮಾರು 77646.6 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವು ಸವಳು-ಜವಳು ಬಾದಿತವಾಗಿದೆ. ಇದರಲ್ಲಿ ಉತ್ತರ ಕರ್ನಾಟಕದ ಒಟ್ಟು 13 ಜಿಲ್ಲೆಗಳಲ್ಲಿ ಸವಳು-ಜವಳು ಬಾಧಿತ ಪ್ರದೇಶ 56621.34 ಹೆಕ್ಟೇರ್‌ಗಳಿದೆ ಎಂದರು. ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಮಳೆಯಾಶ್ರಿತ ಪ್ರದೇಶದಲ್ಲಿ(ಅಚ್ಚುಕಟ್ಟು ಪ್ರದೇಶವನ್ನು ಹೊರತುಪಡಿಸಿ) ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮದಡಿ 2016-17ನೆ ಸಾಲಿನಿಂದ 2025-26ನೆ ಸಾಲಿನವರೆಗೆ ಒಟ್ಟು 31.43 ಕೋಟಿ ರೂ.,ಗಳ ವೆಚ್ಚದಲ್ಲಿ ಸವಳು-ಜವಳು ಬಾಧಿತ ಪ್ರದೇಶಗಳಲ್ಲಿ ಬಸಿ ಕಾಲುವೆ ನಿರ್ಮಾಣ ಮೂಲಕ ಮಣ್ಣಿನ ಸುಧಾರಣೆಗೆ ಒಟ್ಟು 4208.19 ಹೆಕ್ಟೇರ್ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 2024-25ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದ್ದಂತೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಒಟ್ಟು 53.98 ಹೆಕ್ಟೇರ್ ಸವಳು-ಜವಳು ಪ್ರದೇಶವನ್ನು 20.03 ಲಕ್ಷ ರೂ., ವೆಚ್ಚದೊಂದಿಗೆ ಉಪಚರಿಸಿದ್ದು, 5,992 ಮಾನವ ದಿನಗಳನ್ನು ಸೃಜಿಸಲಾಗಿರುತ್ತದೆ ಎಂದು  ಉಲ್ಲೇಖಿಸಿದರು. 2025-26ನೆ ಸಾಲಿನಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮಕ್ಕೆ ಈಗಾಗಲೇ ಕೇಂದ್ರ ಸಚಿವರನ್ನು ಸಹ ಭೇಟಿ ಮಾಡಿ ಅನುದಾನ ಕೋರಲಾಗಿದೆ. 4.18 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ದೊರೆತಿದ್ದು, ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಾರ್ತಾ ಭಾರತಿ 28 Jan 2026 9:51 pm

ಸುವರ್ಣ ಕರ್ನಾಟಕ ಭವನಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು, ಜ.28: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಸುವರ್ಣ ಕನ್ನಡ ಭವನದ ಮುಂದುವರೆದ ಕಾಮಗಾರಿಗೆ ಅನುಮೋದಿತ ಮೊತ್ತಕ್ಕಿಂತ ಹೆಚ್ಚುವರಿ ಅನುದಾನ ಒದಗಿಸುವಂತೆ ಕೋರಲಾಗಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವರಾಜ ತಂಗಡಗಿ, ಕೊಳ್ಳೇಗಾಲದ ಸುವರ್ಣ ಕರ್ನಾಟಕ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲು ಪರಿಸ್ಕೃತ ಅಂದಾಜು ಪಟ್ಟಿಯಂತೆ 186.49 ಲಕ್ಷಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಈಗಾಗಲೇ ಕಾಮಗಾರಿಗೆ ಬಿಡುಗಡೆಯಾಗಿರುವ 125 ಲಕ್ಷಗಳನ್ನು ಹೊರತುಪಡಿಸಿ ಬಾಕಿಯಿರುವ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ಹೆಚ್ಚುವರಿಯಾಗಿ 80 ಲಕ್ಷಗಳ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ವಾರ್ತಾ ಭಾರತಿ 28 Jan 2026 9:43 pm

Ukraine | ರಷ್ಯಾದ ವೈಮಾನಿಕ ದಾಳಿಯಲ್ಲಿ 12 ಮಂದಿ ಮೃತ್ಯು

ಕೀವ್, ಜ.28: ಮಂಗಳವಾರ ತಡರಾತ್ರಿ ಉಕ್ರೇನ್‌ ನ ಇಂಧನ ಮೂಲಸೌಕರ್ಯ ಮತ್ತು ಪ್ರಯಾಣಿಕರ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈಶಾನ್ಯ ಖಾರ್ಕಿವ್ ಪ್ರದೇಶದಲ್ಲಿ ಸುಮಾರು 200 ಪ್ರಯಾಣಿಕರಿದ್ದ ರೈಲಿನ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಕನಿಷ್ಠ 5 ಪ್ರಯಾಣಿಕರು ಮೃತಪಟ್ಟಿದ್ದಾರೆ. ರೈಲಿನ ಕೆಲವು ಬೋಗಿಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ ಎಂದು ಉಕ್ರೇನ್ ಪ್ರಧಾನಿ ಯೂಲಿಯಾ ಸ್ವೈರಿಡೆಂಕೋ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ದಕ್ಷಿಣದ ಒಡೆಸಾ ನಗರದ ಮೇಲೆ ರಷ್ಯಾ 50ಕ್ಕೂ ಹೆಚ್ಚು ಡ್ರೋನ್‌ಗಳನ್ನು ಪ್ರಯೋಗಿಸಿದ್ದು, ಮೂವರು ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹತ್ತುಕ್ಕೂ ಹೆಚ್ಚು ಕಟ್ಟಡಗಳು, ಚರ್ಚ್, ಶಿಶುವಿಹಾರ ಮತ್ತು ಶಾಲೆಗಳಿಗೆ ಹಾನಿಯಾಗಿದೆ. ಇಂಧನ ಮೂಲಸೌಕರ್ಯವನ್ನೂ ಗುರಿಯಾಗಿಸಿಕೊಂಡು ದಾಳಿ ನಡೆದಿರುವುದರಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತಗೊಂಡಿದೆ ಎಂದು ಪ್ರಾದೇಶಿಕ ಅಧಿಕಾರಿಗಳು ತಿಳಿಸಿದ್ದಾರೆ. ಸ್ಲೊವಿಯಾಂಸ್ಕ್ ನಗರದಲ್ಲಿ ದಂಪತಿ, ಝಪೋರಿಝಿಯಾ ಪ್ರದೇಶದಲ್ಲಿ ವೃದ್ಧೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾರ್ತಾ ಭಾರತಿ 28 Jan 2026 9:41 pm

ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್‌ಗೆ 12 ಲಕ್ಷ ರೂ ದಂಡ

ಹೊಸದಿಲ್ಲಿ, ಜ.28: ಗುಜರಾತ್ ಜಯಂಟ್ಸ್ ವಿರುದ್ಧ ಬುಧವಾರ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗ್ಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಮಂಗಳವಾರ ಬರೋಡಾ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಡೆಲ್ಲಿ ತಂಡವು ಮೂರು ರನ್ ಅಂತರದಿಂದ ವೀರೋಚಿತ ಸೋಲು ಕಂಡಿತ್ತು. ವಡೋದರದ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್‌ಗಳಿಗೆ ಸಂಬಂಧಿಸಿದಂತೆ ಡಬ್ಲ್ಯುಪಿಎಲ್ ನೀತಿ ಸಂಹಿತೆಯಡಿಯಲ್ಲಿ ಇದು ಮೊದಲ ಪ್ರಮಾದವಾಗಿದ್ದು, ಜೆಮಿಮಾ ರೊಡ್ರಿಗ್ಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಡಬ್ಲ್ಯುಪಿಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸೋಲು ಡೆಲ್ಲಿ ತಂಡಕ್ಕೆ ದುಬಾರಿಯಾಗಿದ್ದು, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಾರಿದೆ. ಆರು ಅಂಕ ಹಾಗೂ –0.164 ನೆಟ್ ರನ್ ರೇಟ್ ಹೊಂದಿರುವ ಡೆಲ್ಲಿ ತಂಡ ಅಗ್ರ ಮೂರು ಸ್ಥಾನ ಪಡೆದು ಪ್ಲೇ–ಆಫ್ ಪ್ರವೇಶಿಸಲು ತೀವ್ರ ಪೈಪೋಟಿ ಎದುರಿಸುತ್ತಿದೆ. ಡೆಲ್ಲಿ ತಂಡವು ಫೆ.1ರಂದು ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೆಳ ಸ್ಥಾನದಲ್ಲಿರುವ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಇದು ಡೆಲ್ಲಿ ಪಾಲಿಗೆ ನಾಕೌಟ್ ಪಂದ್ಯವಾಗಿದೆ.

ವಾರ್ತಾ ಭಾರತಿ 28 Jan 2026 9:40 pm

Indore ಸಾವುಗಳ ತನಿಖೆಗೆ ಆಯೋಗ ನೇಮಿಸಿದ ಹೈಕೋರ್ಟ್

ಇಂದೋರ್, ಜ. 28: ಇಂದೋರ್‌ ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಜನರು ಮೃತಪಟ್ಟಿರುವ ಘಟನೆಯ ಕುರಿತು ತನಿಖೆ ನಡೆಸಲು ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಏಕ ಸದಸ್ಯ ಆಯೋಗವೊಂದನ್ನು ನೇಮಿಸಿದೆ. ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಸುಶೀಲ್ ಕುಮಾರ್ ಗುಪ್ತರನ್ನು ಈ ಆಯೋಗದ ಮುಖ್ಯಸ್ಥರಾಗಿ ನ್ಯಾಯಾಲಯ ನೇಮಿಸಿದೆ. ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಸುಮಾರು 30 ಮಂದಿ ಮೃತಪಟ್ಟಿದ್ದು, 1,400ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಲ್ಲಿನ ನೀರನ್ನು ಪ್ರತಿದಿನ ಪರೀಕ್ಷಿಸಬೇಕು ಹಾಗೂ ಸಂತ್ರಸ್ತ ಪ್ರದೇಶಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ನಡೆಸಬೇಕು ಎಂದು ನ್ಯಾಯಾಲಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಭಗೀರಥಪುರದಲ್ಲಿ 23 ಸಾವುಗಳು ವರದಿಯಾಗಿವೆ ಎಂದು ರಾಜ್ಯ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ, ಈ ಪೈಕಿ ಕಲುಷಿತ ನೀರು ಸೇವನೆಯಿಂದ ಸಂಭವಿಸಿದ ಸಾವುಗಳ ಸಂಖ್ಯೆ 16 ಮಾತ್ರ ಎಂದು ಅದು ಹೇಳಿದೆ. ಆದರೆ, ಕಲುಷಿತ ನೀರು ಸೇವನೆಯಿಂದ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ವಾರ್ತಾ ಭಾರತಿ 28 Jan 2026 9:40 pm

Australian Open | ಜೊಕೊವಿಕ್, ಸಿನ್ನರ್ ಸೆಮಿ ಫೈನಲ್‌ ಗೆ

ಹೊಸದಿಲ್ಲಿ, ಜ.28: ಸರ್ಬಿಯಾದ ಸೂಪರ್‌ಸ್ಟಾರ್ ನೊವಾಕ್ ಜೊಕೊವಿಕ್ ಹಾಗೂ ವಿಶ್ವದ ನಂ.2 ಆಟಗಾರ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಥಳೀಯ ಫೇವರಿಟ್ ಬೆನ್ ಶೆಲ್ಟನ್ ಅವರನ್ನು 6–3, 6–4, 6–4 ನೇರ ಸೆಟ್‌ಗಳ ಅಂತರದಿಂದ ಮಣಿಸಿದ ಇಟಲಿ ಆಟಗಾರ ಸಿನ್ನರ್ ಸತತ ಮೂರನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆಲ್ಲುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ. ಮೆಲ್ಬರ್ನ್ ಪಾರ್ಕ್‌ನಲ್ಲಿ ಸತತ 19ನೇ ಪಂದ್ಯವನ್ನು ಗೆದ್ದುಕೊಂಡಿರುವ ಸಿನ್ನರ್ ಶುಕ್ರವಾರ ನಡೆಯಲಿರುವ ಸೆಮಿ ಫೈನಲ್‌ನಲ್ಲಿ ನೊವಾಕ್ ಜೊಕೊವಿಕ್ ಅವರನ್ನು ಎದುರಿಸಲಿದ್ದಾರೆ. ಗ್ರ್ಯಾನ್‌ಸ್ಲಾಮ್ ಟೂರ್ನಿಯಲ್ಲಿ 9ನೇ ಬಾರಿ ಹಾಗೂ ಆಸ್ಟ್ರೇಲಿಯನ್ ಓಪನ್‌ನಲ್ಲಿ ಮೂರನೇ ಬಾರಿ ಸೆಮಿ ಫೈನಲ್‌ಗೆ ಪ್ರವೇಶಿಸಿರುವ ಸಿನ್ನರ್ ಮುಂದಿನ ಸುತ್ತಿನಲ್ಲಿ ಹಿರಿಯ ಆಟಗಾರ ಜೊಕೊವಿಕ್‌ನಿಂದ ಕಠಿಣ ಸವಾಲು ಎದುರಿಸಲಿದ್ದಾರೆ. ಸಿನ್ನರ್ ಅವರು ಆಸ್ಟ್ರೇಲಿಯನ್ ಓಪನ್ (2024), ಫ್ರೆಂಚ್ ಓಪನ್ (2025) ಹಾಗೂ ವಿಂಬಲ್ಡನ್ (2025) ಚಾಂಪಿಯನ್‌ಶಿಪ್‌ಗಳ ಸೆಮಿ ಫೈನಲ್‌ನಲ್ಲಿ ಜೊಕೊವಿಕ್ ಅವರನ್ನು ಸೋಲಿಸಿದ್ದರು. ಮೂರನೇ ಬಾರಿ ಆಸ್ಟ್ರೇಲಿಯನ್ ಓಪನ್ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದ ಶೆಲ್ಟನ್ ಈ ಹಿಂದಿನ ಪಂದ್ಯಗಳಂತೆಯೇ ಸಿನ್ನರ್ ವಿರುದ್ಧ ತಮ್ಮ ಶ್ರೇಷ್ಠ ಪ್ರದರ್ಶನ ನೀಡಲು ಪರದಾಡಿದರು. ಪ್ರಮುಖ ಟೂರ್ನಿಯಲ್ಲಿ ಸಿನ್ನರ್–ಶೆಲ್ಟನ್ ನಾಲ್ಕನೇ ಬಾರಿ ಮುಖಾಮುಖಿಯಾಗಿದ್ದು, ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್‌ನಲ್ಲಿ ತಲಾ ಎರಡು ಬಾರಿ ಸೇರಿ ಪ್ರತಿಬಾರಿಯೂ ಸಿನ್ನರ್ ಜಯ ಸಾಧಿಸಿದ್ದಾರೆ. ಇಟಲಿಯ ಲೊರೆನ್ಜೋ ಮುಸೆಟ್ಟಿ ಗಾಯದ ಸಮಸ್ಯೆಯ ಕಾರಣದಿಂದ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಎದುರಾಳಿ ಜೊಕೊವಿಕ್ ಮುಂದಿನ ಸುತ್ತಿಗೆ ಅರ್ಹತೆ ಪಡೆದರು. ಮುಸೆಟ್ಟಿ ಗಾಯಗೊಂಡು ನಿವೃತ್ತಿಯಾದಾಗ 24 ಬಾರಿ ಗ್ರ್ಯಾನ್‌ಸ್ಲಾಮ್ ಚಾಂಪಿಯನ್ ಜೊಕೊವಿಕ್ ವಿರುದ್ಧ ಮೊದಲ ಎರಡು ಸೆಟ್‌ಗಳನ್ನು 6–4, 6–3 ಅಂತರದಿಂದ ಗೆದ್ದಿದ್ದರು. ಮೂರನೇ ಸೆಟ್ ವೇಳೆ ಮುಸೆಟ್ಟಿಗೆ ಗಾಯ ತೀವ್ರವಾಗಿದ್ದು, ಬಲಗಾಲಿಗೆ ದೀರ್ಘಕಾಲ ವೈದ್ಯಕೀಯ ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಲಿಲ್ಲ. ಜೊಕೊವಿಕ್ ತಮ್ಮ ಅದೃಷ್ಟದ ಮೈದಾನದಲ್ಲಿ ಸಂಭಾವ್ಯ ಸೋಲಿನಿಂದ ಪಾರಾಗಿದ್ದಾರೆ. 10 ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದಿರುವ ಜೊಕೊವಿಕ್ 25ನೇ ಗ್ರ್ಯಾನ್‌ಸ್ಲಾಮ್ ಟ್ರೋಫಿ ಜಯಿಸಿ ಮಾರ್ಗರೆಟ್ ಕೋರ್ಟ್ ಅವರ ದಾಖಲೆಯನ್ನು ಮುರಿಯುವ ವಿಶ್ವಾಸದಲ್ಲಿದ್ದಾರೆ. ಇದಕ್ಕೂ ಮೊದಲು ನಾಲ್ಕನೇ ಸುತ್ತಿನ ಎದುರಾಳಿ ಜಾಕಬ್ ಮೆನ್ಸಿಕ್ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಜೊಕೊವಿಕ್ ಒಂದೂ ಎಸೆತವನ್ನಾಡದೆ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದರು. ► ಜೆಸ್ಸಿಕಾ, ರೈಬಾಕಿನಾ ಸೆಮಿ ಫೈನಲ್‌ ಗೆ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ ಜೆಸ್ಸಿಕಾ ಪೆಗುಲಾ ಹಾಗೂ ಕಝಕ್‌ಸ್ತಾನದ ಎಲೆನಾ ರೈಬಾಕಿನಾ ಸೆಮಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಅಮೆರಿಕ ಆಟಗಾರ್ತಿಯರ ನಡುವಿನ ಕ್ವಾರ್ಟರ್ ಫೈನಲ್‌ನಲ್ಲಿ ಪೆಗುಲಾ ತಮ್ಮದೇ ದೇಶದ ಅಮಂಡಾ ಅನಿಸಿಮೋವಾವರನ್ನು 6–2, 7–6 (7/1) ಸೆಟ್‌ಗಳ ಅಂತರದಿಂದ ಮಣಿಸಿದರು. ಮೆಲ್ಬರ್ನ್‌ನಲ್ಲಿ ಅಜೇಯವಾಗಿ ಮುಂದುವರೆದಿರುವ ಪೆಗುಲಾ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆಲ್ಲುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. 2024ರ ಯು.ಎಸ್. ಓಪನ್ ಫೈನಲ್‌ನಲ್ಲಿ ಆರ್ಯನಾ ಸಬಲೆಂಕಾ ವಿರುದ್ಧ ಸೋಲು ಅನುಭವಿಸಿದ್ದ ಪೆಗುಲಾ ಈ ಬಾರಿ ಪ್ರಶಸ್ತಿ ಕನಸು ಕಟ್ಟಿದ್ದಾರೆ. ಹಾಲಿ ಚಾಂಪಿಯನ್ ಮ್ಯಾಡಿಸನ್ ಕೀಸ್ ಅವರನ್ನು ಮಣಿಸಿದ ಬಳಿಕ ಇದೇ ಮೊದಲ ಬಾರಿ ಪೆಗುಲಾ ಆಸ್ಟ್ರೇಲಿಯನ್ ಓಪನ್ ಸೆಮಿ ಫೈನಲ್‌ಗೆ ತಲುಪಿದ್ದಾರೆ. ಅನಿಸಿಮೋವಾ ವಿರುದ್ಧ ಆಡಿದ ಹಿಂದಿನ ಮೂರೂ ಪಂದ್ಯಗಳಲ್ಲೂ ಪೆಗುಲಾ ಜಯ ಸಾಧಿಸಿದ್ದರು. 31 ವರ್ಷದ ಪೆಗುಲಾ ಸೆಮಿ ಫೈನಲ್‌ನಲ್ಲಿ ಐದನೇ ಶ್ರೇಯಾಂಕದ ಎಲೆನಾ ರೈಬಾಕಿನಾ ಅವರನ್ನು ಎದುರಿಸಲಿದ್ದಾರೆ. ಮತ್ತೊಂದು ಸೆಮಿ ಫೈನಲ್‌ನಲ್ಲಿ ವಿಶ್ವದ ನಂ.1 ಆಟಗಾರ್ತಿ ಆರ್ಯನಾ ಸಬಲೆಂಕಾ 12ನೇ ಶ್ರೇಯಾಂಕದ ಎಲಿನಾ ಸ್ವಿಟೋಲಿನಾರೊಂದಿಗೆ ಸೆಣಸಾಡಲಿದ್ದಾರೆ.

ವಾರ್ತಾ ಭಾರತಿ 28 Jan 2026 9:40 pm

ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ ಘೋರ ಪರಿಣಾಮ ಎದುರಿಸಬೇಕು: ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಜ.28: ಪರಮಾಣು ಶಸ್ತ್ರಾಸ್ತ್ರ ತ್ಯಜಿಸುವ ಒಪ್ಪಂದದ ಬಗ್ಗೆ ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ, ಇರಾನ್ ಮೇಲೆ ಮುಂದಿನ ದಾಳಿ ಅತ್ಯಂತ ಮಾರಕವಾಗಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ವಿಮಾನವಾಹಕ ಯುದ್ಧನೌಕೆಗಳ ಮತ್ತೊಂದು ತಂಡ ಇರಾನ್ ಕಡೆಗೆ ಮುಂದುವರಿದಿದ್ದು, ‘ಅಗತ್ಯವಿದ್ದರೆ ವೇಗವಾಗಿ ಮಾರಕ ಹೊಡೆತ ನೀಡಲು ಸಿದ್ಧವಾಗಿದೆ’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಪರಮಾಣು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದಂತೆ ನ್ಯಾಯಯುತ ಮತ್ತು ಸಮಾನ ಒಪ್ಪಂದಕ್ಕಾಗಿ ಇರಾನ್ ಮಾತುಕತೆಗೆ ಮುಂದಾಗಬೇಕು. ಸಮಯ ಅಮೂಲ್ಯವಾಗಿದೆ’ ಎಂದು ಅವರು ಆಗ್ರಹಿಸಿದ್ದಾರೆ. ‘ಪರಮಾಣು ಅಸ್ತ್ರ ಹೊಂದುವುದಿಲ್ಲ’ ಎಂಬ ನ್ಯಾಯಯುತ ಒಪ್ಪಂದಕ್ಕೆ ಇರಾನ್ ಸಹಿ ಹಾಕುವುದು ಎಲ್ಲರಿಗೂ ಒಳ್ಳೆಯದು. ಇರಾನ್ ಹಿಂದಿನ ತಪ್ಪುಗಳನ್ನು ಪುನರಾವರ್ತಿಸುವುದಿಲ್ಲ ಎಂಬ ನಿರೀಕ್ಷೆಯಿದೆ ಎಂದು ಟ್ರಂಪ್ ಹೇಳಿದ್ದಾರೆ.

ವಾರ್ತಾ ಭಾರತಿ 28 Jan 2026 9:40 pm

ಮ್ಯಾಚ್ ಫಿಕ್ಸಿಂಗ್ ಪ್ರಕರಣ | ಬಾಂಗ್ಲಾ ಮೂಲದ ತಮೀಮ್ ರೆಹಮಾನ್‌ಗೆ ಜೈಲು ಶಿಕ್ಷೆ ವಿಧಿಸಿದ ಶ್ರೀಲಂಕಾ ನ್ಯಾಯಾಲಯ

ಕೊಲಂಬೊ, ಜ.28: ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಶ್ರೀಲಂಕಾ ನ್ಯಾಯಾಲಯವು ದೇಶೀಯ ಟಿ–20 ಲೀಗ್ ತಂಡದ ಮಾಲಿಕನಿಗೆ ಬುಧವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸುದ್ದಿಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಬಾಂಗ್ಲಾದೇಶ ಮೂಲದ, ಬ್ರಿಟನ್ ಪ್ರಜೆ ಹಾಗೂ ಡಾಂಬುಲ್ಲಾ ಥಂಡರ್ಸ್ ಫ್ರಾಂಚೈಸಿಯ ಮಾಲಿಕ ತಮೀಮ್ ರೆಹಮಾನ್ ಪಂದ್ಯಾವಳಿಯ ಸಮಯದಲ್ಲಿ ಆಟಗಾರನ ಮೇಲೆ ಪ್ರಭಾವ ಬೀರುವ ಹಾಗೂ ಬೆಟ್ಟಿಂಗ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದ ಆರೋಪವನ್ನು ಒಪ್ಪಿಕೊಂಡಿದ್ದಾರೆ. ರೆಹಮಾನ್ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಕೊಲಂಬೊ ಹೈಕೋರ್ಟ್ 24 ಮಿಲಿಯನ್ ಶ್ರೀಲಂಕಾ ರೂಪಾಯಿ (80,000 ಯುಎಸ್ ಡಾಲರ್) ದಂಡವನ್ನೂ ವಿಧಿಸಿದೆ. ಶ್ರೀಲಂಕಾದಲ್ಲಿ ಕ್ರೀಡಾ ಭ್ರಷ್ಟಾಚಾರ ತಡೆಯಲು 2019ರಲ್ಲಿ ಜಾರಿಗೆ ತಂದ ಕಠಿಣ ಕಾನೂನಿನ ಅಡಿಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ಆಟಗಾರನೊಬ್ಬ ನೀಡಿದ ದೂರಿನ ಮೇರೆಗೆ 2024ರಲ್ಲಿ ದುಬೈಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ರೆಹಮಾನ್ ಅವರನ್ನು ಕೊಲಂಬೊ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗುವ ಮುನ್ನ ಅವರು ಹಲವು ವಾರಗಳ ಕಾಲ ಕಸ್ಟಡಿಯಲ್ಲಿ ಇದ್ದರು.

ವಾರ್ತಾ ಭಾರತಿ 28 Jan 2026 9:40 pm

ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಪತ್ನಿಗೆ ಜೈಲುಶಿಕ್ಷೆ

ಸಿಯೋಲ್, ಜ.28: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ಪತ್ನಿ, ಮಾಜಿ ಪ್ರಥಮ ಮಹಿಳೆ ಕಿಮ್ ಕಿಯೊನ್ ಹೀ ಅವರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ 1 ವರ್ಷ 8 ತಿಂಗಳ ಜೈಲುಶಿಕ್ಷೆ ವಿಧಿಸಿದೆ. 8,990 ಡಾಲರ್ ದಂಡ ಪಾವತಿಸುವ ಜೊತೆಗೆ, ಲಂಚದ ರೂಪದಲ್ಲಿ ಸ್ವೀಕರಿಸಿದ್ದ ವಜ್ರದ ನೆಕ್ಲೇಸ್ ಅನ್ನು ಸರಕಾರಿ ಖಜಾನೆಗೆ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ. ಆದರೆ ಷೇರು ಮಾರುಕಟ್ಟೆಯಲ್ಲಿ ಪ್ರಭಾವ ಬೀರಿ ಲಾಭ ಗಳಿಸಿರುವುದು ಹಾಗೂ ರಾಜಕೀಯ ನಿಧಿ ಕಾಯ್ದೆ ಉಲ್ಲಂಘನೆಯ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ವರದಿಯಾಗಿದೆ.

ವಾರ್ತಾ ಭಾರತಿ 28 Jan 2026 9:40 pm

ಭಾರತ ವಿರೋಧಿ ನಖ್ವಿ ವಿರುದ್ಧ ಸಿಡಿದೆದ್ದ ಪಾಕ್ ಕ್ರಿಕೆಟ್ ಲೆಜೆಂಡ್ಸ್! ಇಂಜಮಾಮ್, ರಶೀದ್ ಸೇರಿ ಹಲವರು ಕಿಡಿ

ಟಿ20 ವಿಶ್ವಕಪ್ ವಿವಾದ ಒಂದು ಹಂತಕ್ಕೆ ಬಂದಿದೆ. ಬಾಂಗ್ಲಾದೇಶವನ್ನು ಟೂರ್ನಿಯಿಂದ ಆಚೆಗಟ್ಟಲಾಗಿದೆ. ಇದರಿಂದ ಕ್ಷುದ್ಧಗೊಂಡಿರುವ ಪಾಕಿಸ್ತಾನ, ತಾನೂ ಟಿ20 ವಿಶ್ವಕಪ್ ನಲ್ಲಿ ಆಡುವುದು ಅನುಮಾನ ಎಂತಲೂ, ಒಂದೊಮ್ಮೆ ಆಡಿದರೆ, ತಾನು ಭಾರತದ ವಿರುದ್ಧ ಆಡುವುದಿಲ್ಲ ಎಂತಲೂ ಕ್ಯಾತೆ ತಗೆದಿದೆ. ಈ ಬಗ್ಗೆ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷರಾದ ಮೊಹ್ಸಿನ್ ನಖ್ವಿ ವಿರುದ್ಧ ಈಗ ಪಾಕಿಸ್ತಾನದ ಸ್ಟಾರ್ ಆಟಗಾರರು ಒಗ್ಗಟ್ಟಾಗಿದ್ದಾರೆ.

ವಿಜಯ ಕರ್ನಾಟಕ 28 Jan 2026 9:33 pm

ಕಲಬುರಗಿ | ಹೃದಯಾಘಾತದಿಂದ ಎಇಇ ನಾಗಮೂರ್ತಿ ಶೀಲವಂತ್ ಮೃತ್ಯು

ಕಲಬುರಗಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಜೇವರ್ಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಬ್ಬರು(ಎಇಇ) ಬುಧವಾರ ಹೃದಯಾಘಾತದಿಂದಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಜೇವರ್ಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾಗಿ ಹಾಗೂ ಕಾಳಗಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗಮೂರ್ತಿ ಶೀಲವಂತ್ (45) ಮೃತಪಟ್ಟ ಅಧಿಕಾರಿಯಾಗಿದ್ದಾರೆ. ಅವರು ಕಲಬುರಗಿ ನಗರದ ಹೌಸಿಂಗ್ ರ್ಬೋಡ್ ಕಾಲನಿಯಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಆಳಂದ ತಾಲೂಕಿನ ಲಾಡಚಿಂಚೋಳಿ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಗುರುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 28 Jan 2026 9:33 pm

ಐಸಿಸಿ T20 ರ‍್ಯಾಂಕಿಂಗ್ | 5 ಸ್ಥಾನ ಭಡ್ತಿ ಪಡೆದ ಸೂರ್ಯಕುಮಾರ್

ದುಬೈ, ಜ.28: ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ನ್ಯೂಝಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆಯಾದ ಪುರುಷರ ಐಸಿಸಿ ಟಿ–20 ರ‍್ಯಾಂಕಿಂಗ್‌ನಲ್ಲಿ ಐದು ಸ್ಥಾನಗಳ ಭಡ್ತಿ ಪಡೆದು ಏಳನೇ ಸ್ಥಾನಕ್ಕೇರಿದ್ದಾರೆ. ವಿಶ್ವದ ಮಾಜಿ ನಂ.1 ಬ್ಯಾಟರ್ ಸೂರ್ಯಕುಮಾರ್ ಟಿ–20 ಸರಣಿಯಲ್ಲಿ 32, ಔಟಾಗದೆ 82 ಹಾಗೂ ಔಟಾಗದೆ 57 ರನ್‌ಗಳನ್ನು ಗಳಿಸಿದ್ದರು. ಟಿ–20 ವಿಶ್ವಕಪ್ ಆರಂಭಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಅಭಿಷೇಕ್ ಶರ್ಮಾ ಹಾಗೂ ತಿಲಕ್ ವರ್ಮಾ ಅವರು ಕ್ರಮವಾಗಿ ಮೊದಲನೇ ಹಾಗೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ರಾಯ್ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ 32 ಎಸೆತಗಳಲ್ಲಿ 76 ರನ್ ಗಳಿಸಿದ್ದ ಇಶಾನ್ ಕಿಶನ್ 64ನೇ ಸ್ಥಾನಕ್ಕೇರಿದ್ದಾರೆ. ಶಿವಂ ದುಬೆ (9 ಸ್ಥಾನಗಳ ಭಡ್ತಿ, 58ನೇ ಸ್ಥಾನ) ಹಾಗೂ ರಿಂಕು ಸಿಂಗ್ (13 ಸ್ಥಾನಗಳ ಭಡ್ತಿ, 68ನೇ ಸ್ಥಾನ) ಕೂಡ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ. ಟಿ–20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್ ಮುಜೀಬುರ್ರಹ್ಮಾನ್ ಐದು ಸ್ಥಾನಗಳ ಭಡ್ತಿ ಪಡೆದು 9ನೇ ಸ್ಥಾನಕ್ಕೇರಿದ್ದಾರೆ. ಭಾರತದ ಜಸ್‌ಪ್ರೀತ್ ಬುಮ್ರಾ (4 ಸ್ಥಾನಗಳ ಭಡ್ತಿ, 13ನೇ ಸ್ಥಾನ) ಹಾಗೂ ರವಿ ಬಿಷ್ಣೋಯಿ (13 ಸ್ಥಾನಗಳ ಭಡ್ತಿ, 19ನೇ ಸ್ಥಾನ) ಕೂಡ ರ‍್ಯಾಂಕಿಂಗ್‌ನಲ್ಲಿ ಮೇಲೇರಿದ್ದಾರೆ. ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿರುವ ಭಾರತದ ಹಾರ್ದಿಕ್ ಪಾಂಡ್ಯ 18 ಸ್ಥಾನಗಳ ಭಡ್ತಿ ಪಡೆದು 59ನೇ ಸ್ಥಾನ ತಲುಪಿದ್ದಾರೆ.

ವಾರ್ತಾ ಭಾರತಿ 28 Jan 2026 9:32 pm

ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ: ಟ್ರಂಪ್

ವಾಷಿಂಗ್ಟನ್, ಜ.28: ಕ್ಯೂಬಾ ಪತನದ ಅಂಚಿನಲ್ಲಿದೆ. ಈ ಹಿಂದಿನಂತೆ ಇನ್ನು ಮುಂದೆ ಆ ರಾಷ್ಟ್ರಕ್ಕೆ ವೆನೆಝುವೆಲಾದಿಂದ ತೈಲ ಅಥವಾ ಆರ್ಥಿಕ ನೆರವು ದೊರಕುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ದೀರ್ಘಕಾಲದ ಬೆಂಬಲಿಗ ವೆನೆಝುವೆಲಾದಿಂದ ತೈಲ ಮತ್ತು ಹಣ ಕ್ಯೂಬಾಗೆ ತಲುಪದಂತೆ ತಡೆಯುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾ ಸೆರೆಹಿಡಿದ ಬಳಿಕ, ಮಾಜಿ ಉಪಾಧ್ಯಕ್ಷೆ ಡೆಲ್ಸಿ ರೋಡ್ರಿಗಸ್ ಅವರನ್ನು ಮಧ್ಯಂತರ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದ್ದು, ಅವರು ಅಮೆರಿಕಾದ ಮೇಲ್ವಿಚಾರಣೆಯಲ್ಲಿ ದೇಶದ ಆಡಳಿತವನ್ನು ನಿರ್ವಹಿಸುತ್ತಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ. ಕ್ಯೂಬಾವು ಅಮೆರಿಕಾದೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಟ್ರಂಪ್ ಈ ತಿಂಗಳ ಆರಂಭದಲ್ಲಿ ನೀಡಿದ್ದ ಸಲಹೆಯನ್ನು ಕ್ಯೂಬಾ ಅಧ್ಯಕ್ಷರು ತಿರಸ್ಕರಿಸಿದ್ದು, ಒಪ್ಪಂದಕ್ಕೆ ಒತ್ತಾಯಿಸುವ ನೈತಿಕ ಅಧಿಕಾರ ಅಮೆರಿಕಾಕ್ಕೆ ಇಲ್ಲ ಎಂದು ಅವರು ಹೇಳಿದ್ದಾರೆ.

ವಾರ್ತಾ ಭಾರತಿ 28 Jan 2026 9:28 pm

ಗಾಝಾದಲ್ಲಿ ತನ್ನ ಪೊಲೀಸರನ್ನು ನಿಯೋಜಿಸಲು ಹಮಾಸ್ ಪ್ರಯತ್ನ: ವರದಿ

ಗಾಝಾ, ಜ.28: ನಿಶಸ್ತ್ರೀಕರಣ ಮಾತುಕತೆಗೂ ಮುನ್ನ, ಗಾಝಾದಲ್ಲಿನ ಪ್ರಸ್ತಾವಿತ ಅಮೆರಿಕ ಬೆಂಬಲಿತ ಫೆಲೆಸ್ತೀನಿಯನ್ ಆಡಳಿತಕ್ಕೆ ತನ್ನ 10,000 ಪೊಲೀಸರನ್ನು ಸೇರಿಸಿಕೊಳ್ಳಲು ಹಮಾಸ್ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಹಮಾಸ್ ಗುಂಪು ಗಾಝಾದ ಸುಮಾರು 50% ಪ್ರದೇಶದ ಮೇಲೆ ನಿಯಂತ್ರಣ ಹೊಂದಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಸಹಿ ಹಾಕಲಾದ ಒಪ್ಪಂದದ ಪ್ರಕಾರ, ಹಮಾಸ್ ಶಸ್ತ್ರಾಸ್ತ್ರ ತ್ಯಜಿಸಬೇಕು ಮತ್ತು ಇಸ್ರೇಲ್ ಪಡೆಗಳು ಇನ್ನಷ್ಟು ಹಿಂದೆ ಸರಿಯಬೇಕು. ಎರಡನೇ ಹಂತದಲ್ಲಿರುವ 20 ಅಂಶಗಳ ಶಾಂತಿ ಯೋಜನೆ ಅಮೆರಿಕ ಮೇಲ್ವಿಚಾರಣೆಯಲ್ಲಿರುವ, ಹಮಾಸ್ ಅನ್ನು ಒಳಗೊಂಡಿರದ ಗಾಝಾ ಆಡಳಿತಕ್ಕಾಗಿ ರಾಷ್ಟ್ರೀಯ ಸಮಿತಿ (ಎನ್‌ಸಿಎಜಿ)ಗೆ ಆಡಳಿತ ಹಸ್ತಾಂತರಿಸಲು ಕರೆ ನೀಡುತ್ತದೆ. ಗಾಝಾದಲ್ಲಿ ಹಮಾಸ್ ನಡೆಸುತ್ತಿರುವ ಆಡಳಿತವು ತನ್ನ 40,000ಕ್ಕೂ ಹೆಚ್ಚು ನಾಗರಿಕ ಸೇವಕರು ಮತ್ತು ಭದ್ರತಾ ಸಿಬ್ಬಂದಿಯನ್ನು ಎನ್‌ಸಿಎಜಿಯೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದು, ಅವರನ್ನು ಹೊಸ ಸರ್ಕಾರಕ್ಕೆ ಸೇರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದೆ. ಇದರಲ್ಲಿ ಸುಮಾರು 10,000 ಪೊಲೀಸರು ಸೇರಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ವರದಿ ಮಾಡಿದೆ.

ವಾರ್ತಾ ಭಾರತಿ 28 Jan 2026 9:27 pm

ಟ್ರಂಪ್ ವಲಸೆ ಯೋಜನೆಗೆ ಟೆಕ್ಸಾಸ್ ಬೆಂಬಲ: H-1B ವೀಸಾ ಅರ್ಜಿ ಸ್ಥಗಿತಕ್ಕೆ ಗವರ್ನರ್ ಸೂಚನೆ

ಭಾರತೀಯರಿಗೆ ಮತ್ತೊಂದು ಹಿನ್ನಡೆ

ವಾರ್ತಾ ಭಾರತಿ 28 Jan 2026 9:26 pm

ಭಾರತಕ್ಕೆ ಶೇ.96ರಷ್ಟು ಇಯು ರಫ್ತುಗಳಿಗೆ ಸುಂಕ ಕಡಿತ ಕುರಿತು ಕಾಂಗ್ರೆಸ್ ಕಳವಳ

ಹೊಸದಿಲ್ಲಿ, ಜ.28: ಭಾರತ ಮತ್ತು ಐರೋಪ್ಯ ಒಕ್ಕೂಟ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಕುರಿತು ಕಾಂಗ್ರೆಸ್ ಬುಧವಾರ ಕಳವಳ ವ್ಯಕ್ತಪಡಿಸಿದೆ. ಭಾರತದ ಅಲ್ಯುಮಿನಿಯಂ ಮತ್ತು ಉಕ್ಕು ಉತ್ಪಾದಕರಿಗೆ ಕಾರ್ಬನ್ ಬಾರ್ಡರ್ ಹೊಂದಾಣಿಕೆ ಕಾರ್ಯವಿಧಾನದಿಂದ ವಿನಾಯಿತಿ ಪಡೆಯುವಲ್ಲಿ ವೈಫಲ್ಯ ಹಾಗೂ ಭಾರತಕ್ಕೆ ಶೇ.96ರಷ್ಟು ಇಯು ರಫ್ತುಗಳ ಮೇಲೆ ಸುಂಕ ಕಡಿತ ಅಥವಾ ವಿನಾಯಿತಿಯನ್ನು ಕಾಂಗ್ರೆಸ್ ಟೀಕಿಸಿದೆ. ಭಾರತದಿಂದ ರಫ್ತುಗಳಿಗೆ ಸಂಬಂಧಿಸಿದಂತೆ ಜಾರಿಯಲ್ಲಿರುವ ಐರೋಪ್ಯ ಒಕ್ಕೂಟದ ಕಟ್ಟುನಿಟ್ಟಿನ ಆರೋಗ್ಯ ಮತ್ತು ಉತ್ಪನ್ನ ಸುರಕ್ಷತಾ ನಿಯಮಗಳು ಎಫ್‌ಟಿಎ ಬಳಿಕವೂ ಮುಂದುವರಿಯುವ ಬಗ್ಗೆ ಹಾಗೂ ಇಯುಗೆ ಭಾರತದ ಅತಿದೊಡ್ಡ ರಫ್ತು ಆಗಿರುವ ಸಂಸ್ಕರಿತ ಇಂಧನದ ಕುರಿತೂ ಕಳವಳಗಳಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು. ಈ ಇಂಧನದ ಬಹುಪಾಲು ರಷ್ಯಾದಿಂದ ಆಮದಾಗಿದ್ದು, ಅಮೆರಿಕದ ಒತ್ತಡದ ನಡುವೆ ಈ ವ್ಯಾಪಾರ ಮಾರ್ಗಗಳ ಭವಿಷ್ಯದ ಕುರಿತು ಸ್ಪಷ್ಟತೆಯ ಅಗತ್ಯವಿದೆ ಎಂದರು. ಭಾರೀ ಪ್ರಚಾರ ಪಡೆದಿರುವ ಎಫ್‌ಟಿಎ, ಭಾರತವು ತನ್ನ ಯಾವುದೇ ವ್ಯಾಪಾರ ಪಾಲುದಾರ ದೇಶಕ್ಕೆ ನೀಡಿರುವ ಅತ್ಯಂತ ದೊಡ್ಡ ವ್ಯಾಪಾರ ಅವಕಾಶವಾಗಿದೆ (ಭಾರತಕ್ಕೆ ಶೇ.96ರಷ್ಟು ಐರೋಪ್ಯ ರಫ್ತುಗಳ ಮೇಲೆ ಸುಂಕ ಕಡಿತ ಅಥವಾ ವಿನಾಯಿತಿ). ಇಯುಗೆ ಭಾರತದ ರಫ್ತುಗಳು ದ್ವಿಗುಣಗೊಳ್ಳುವ ನಿರೀಕ್ಷೆಯಿದ್ದು, ಭಾರತದ ವ್ಯಾಪಾರ ಕೊರತೆಯ ಮೇಲೆ ಇದರ ಪರಿಣಾಮವನ್ನು ಸೂಕ್ಷ್ಮವಾಗಿ ಗಮನಿಸಬೇಕಿದೆ ಎಂದು ರಮೇಶ್ ತಿಳಿಸಿದರು.

ವಾರ್ತಾ ಭಾರತಿ 28 Jan 2026 9:24 pm

Maharastra | ಅಪಘಾತವಾದ ವಿಮಾನವು ಹಾರಾಟಕ್ಕೆ ಸಂಪೂರ್ಣ ಯೋಗ್ಯವಾಗಿತ್ತು: ವಿಎಸ್‌ಆರ್ ಏವಿಯೇಶನ್ ಮುಖ್ಯಸ್ಥ

ಹೊಸದಿಲ್ಲಿ, ಜ. 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ನಡೆದ ವಿಮಾನ ಅಪಘಾತದಲ್ಲಿ ಸಾವಿಗೀಡಾದ ಬಳಿಕ, ದಿಲ್ಲಿಯ ವಿಮಾನ ಸಂಸ್ಥೆ ವಿಎಸ್‌ಆರ್ ಏವಿಯೇಶನ್ ನಿರ್ವಹಿಸುತ್ತಿದ್ದ ‘ಬೊಂಬಾರ್ಡಿಯರ್ ಲಿಯರ್‌ಜೆಟ್–45’ ವಿಮಾನದ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಎದ್ದಿವೆ. ಕಂಪೆನಿಯ ಈ ಮಾದರಿಯ ವಿಮಾನವೊಂದು ಅಪಘಾತಕ್ಕೀಡಾಗುತ್ತಿರುವುದು ಕಳೆದ ಮೂರು ವರ್ಷಗಳಲ್ಲಿ ಇದು ಎರಡನೇ ಬಾರಿ. 2023ರ ಸೆಪ್ಟೆಂಬರ್‌ನಲ್ಲಿ, ವಿಶಾಖಪಟ್ಟಣಂನಿಂದ ಮುಂಬೈಗೆ ಆರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇದೇ ಮಾದರಿಯ ವಿಮಾನವೊಂದು ಮುಂಬೈಯಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿತ್ತು. ಅದೃಷ್ಟವಶಾತ್, ಆ ಅಪಘಾತದಲ್ಲಿ ಯಾವುದೇ ಸಾವು–ನೋವು ಸಂಭವಿಸಿರಲಿಲ್ಲ. ವಿಮಾನವು ‘ಸಂಪೂರ್ಣವಾಗಿ ಹಾರಾಟಕ್ಕೆ ಯೋಗ್ಯವಾಗಿತ್ತು’ ಎಂದು ವಿಎಸ್‌ಆರ್ ಏವಿಯೇಶನ್ ಮುಖ್ಯಸ್ಥ ವಿ.ಕೆ. ಸಿಂಗ್ ತಿಳಿಸಿದ್ದಾರೆ. ಕಡಿಮೆ ಗೋಚರತೆಯೇ ಅಪಘಾತಕ್ಕೆ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘‘ಪೈಲಟ್‌ಗೆ ರನ್‌ವೇ ಕಾಣಿಸಲಿಲ್ಲ. ಹೀಗಾಗಿ, ಭೂಸ್ಪರ್ಶದ ವೇಳೆ ತಪ್ಪು ಸಂಭವಿಸಿದೆ’’ ಎಂದು ಅವರು ಹೇಳಿದ್ದಾರೆ.

ವಾರ್ತಾ ಭಾರತಿ 28 Jan 2026 9:22 pm

Shamvhavi Pathak: ಮನಸು ಕಲಕುವ ಎಳೆಯರ ಸಾವು, ಶಾಂಭವಿ ಪಾಠಕ್ ಸಾವಿಗೆ ಕನ್ನಡಿಗರ ಕಂಬನಿ

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿದ್ದ ವಿಮಾನ ಬುಧವಾರ ಬೆಳಗ್ಗೆ ಪತನವಾಯಿತು. ಡಿಸಿಎಂ ಮತ್ತು ಐವರು ಮೃತಪಟ್ಟಿದ್ದಾರೆ. ಈ ವಿಚಾರ ದೊಡ್ಡ ಸುದ್ದಿಯಾಗಿದ್ದು, ಅಜಿತ್ ಪವಾರ್ ಅವರ ಸಾವಿಗೆ ಪ್ರಧಾನಿ ಸೇರಿ ಗಣ್ಯಾತಿಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಅವರೊಂದಿಗೆ ಮೃತಪಟ್ಟ ಇತರ ವ್ಯಕ್ತಿಗಳು ಮತ್ತವರ ಕುಟುಂಬಸ್ಥರ ಆಕ್ರಂದನವು ಮುಗಿಲು ಮುಟ್ಟಿದೆ. ಡಿಸಿಎಂ ಜೊತೆಗೆ ಮೃತಪಟ್ಟ ಇತರ

ಒನ್ ಇ೦ಡಿಯ 28 Jan 2026 9:12 pm

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ರಾಯಚೂರಿನ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಮಕ್ಕಳಿಗೆ ಉಡುಪು ವಿತರಣೆ

ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಾಯಚೂರಿನ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಜನನವಾದ ಹೆಣ್ಣು ಮಕ್ಕಳಿಗೆ ಹೊಸ ಉಡುಪುಗಳು ಹಾಗೂ ಸಿಹಿ ಪದಾರ್ಥಗಳನ್ನು ತಾಯಂದಿರಿಗೆ ವಿತರಿಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿದರು. ಇಂದಿನ ದಿನಗಳಲ್ಲಿ ಹೆರಿಗೆಯು ಕುಟುಂಬದ ಆರ್ಥಿಕ ಹೊರೆ ಎನ್ನುವ ತಪ್ಪು ನಂಬಿಕೆಯನ್ನು ದೂರಮಾಡಲು ಹಾಗೂ ಮಗು ಹುಟ್ಟಿದ ಬಳಿಕ ಹೆಣ್ಣು–ಗಂಡು ಎಂಬ ಭೇದ ತೊಲಗಿಸಲು ರಾಜ್ಯ ಸರ್ಕಾರವು ಮಹಿಳೆಯ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು. ರಾಯಚೂರು, ಮಾನ್ವಿ ಹಾಗೂ ಸಿಂಧನೂರುಗಳಲ್ಲಿ ಸುಸಜ್ಜಿತ ಕಟ್ಟಡ, ಅತ್ಯಾಧುನಿಕ ಉಪಕರಣಗಳು ಹಾಗೂ ತಜ್ಞ ವೈದ್ಯರೊಂದಿಗೆ ತಾಯಿ–ಮಕ್ಕಳ ಆಸ್ಪತ್ರೆಗಳನ್ನು ಜಿಲ್ಲಾಡಳಿತದ ಮಾರ್ಗದರ್ಶನ ಮತ್ತು ಜನಪ್ರತಿನಿಧಿಗಳ ಬೆಂಬಲದೊಂದಿಗೆ ಆರಂಭಿಸಲಾಗಿದೆ ಎಂದು ತಿಳಿಸಿದರು. ಗರ್ಭಿಣಿಯರಿಗೆ ಜನನಿ ಶಿಶು ಸುರಕ್ಷಾ ಯೋಜನೆ, ಸುಮನ್ ಹಾಗೂ ಲಕ್ಷ್ಯ ಕಾರ್ಯಕ್ರಮಗಳಡಿ ಸುರಕ್ಷಿತ ಹೆರಿಗೆಯ ಸೌಲಭ್ಯ ಒದಗಿಸಲಾಗುತ್ತಿದ್ದು, ಹೆರಿಗೆಯ ನಂತರ ತಾಯಿ ಹಾಗೂ ಮಗು ನಗುಮುಖದೊಂದಿಗೆ ಉಚಿತ ವಾಹನದ ಮೂಲಕ ಮನೆಗೆ ಮರಳುತ್ತಿದ್ದಾರೆ. ಇದು ತಾಯಿ ಮರಣ ಪ್ರಮಾಣ ಕಡಿಮೆ ಮಾಡುವ ಜೊತೆಗೆ ಹೆಣ್ಣು ಮಕ್ಕಳ ಸುರಕ್ಷತೆಗೆ ಸರ್ಕಾರದ ದಿಟ್ಟ ಹೆಜ್ಜೆಯಾಗಿದೆ ಎಂದರು. ಹೆಣ್ಣು ಮಕ್ಕಳ ಆರೋಗ್ಯಕ್ಕಾಗಿ ಬಾಲ್ಯದಲ್ಲಿಯೇ ಸಂಪೂರ್ಣ ಲಸಿಕೆ ನೀಡಲಾಗುತ್ತಿದ್ದು, ಹದಿಹರೆಯದ ಬಾಲಕಿಯರಲ್ಲಿ ರಕ್ತಹೀನತೆ ನಿವಾರಣೆಗೆ ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯಡಿ ಕಬ್ಬಿಣಾಂಶ ಮಾತ್ರೆಗಳ ವಿತರಣೆ, ಶುಚಿ ನ್ಯಾಪ್‌ಕಿನ್ ಪೂರೈಕೆ ಹಾಗೂ ಸ್ನೇಹ ಕ್ಲಿನಿಕ್ ಮೂಲಕ ಹದಿಹರೆಯದ ಸಮಸ್ಯೆಗಳಿಗೆ ಸ್ಪಂದನೆ ನೀಡಲಾಗುತ್ತಿದೆ ಎಂದು ವಿವರಿಸಿದರು. ಜೊತೆಗೆ 18 ವರ್ಷ ನಂತರ ಮದುವೆ ಮತ್ತು 20 ವರ್ಷಗಳ ಬಳಿಕ ಗರ್ಭಧಾರಣೆಯ ಮಹತ್ವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ–1994ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಹೆಣ್ಣು ಭ್ರೂಣ ಹತ್ಯೆ ತಡೆಗೆ ಮಾಹಿತಿ ನೀಡುವವರಿಗೆ ನೀಡುವ ಬಹುಮಾನವನ್ನು 50 ಸಾವಿರ ರೂ.ದಿಂದ 1 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಎನ್‌ಫೋರ್ಸ್ಮೆಂಟ್ ಅಧಿಕಾರಿ ಡಾ. ಶಿವಕುಮಾರ ನಾರಾ, ತಾಲೂಕು ಆರೋಗ್ಯಾಧಿಕಾರಿ ಡಾ. ಅಮೃತ ಹುಕ್ಕೇರಿ, ಎಂಸಿಎಚ್ ಆಡಳಿತ ವೈದ್ಯಾಧಿಕಾರಿ ಡಾ. ಪ್ರಜ್ವಲ್ ಕುಮಾರ್, ಪ್ರಸೂತಿ ತಜ್ಞೆ ಡಾ. ಶಾಲಿನಿ, ಮಕ್ಕಳ ತಜ್ಞೆ ಡಾ. ಮೋಹಿಜಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್. ದಾಸಪ್ಪನವರ, ಮುಖ್ಯ ಶುಶ್ರೂಷಣಾಧಿಕಾರಿ ಸಲೋಮಿ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ತಾಯಂದಿರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 9:11 pm

ಡಾ.ರೊನಾಲ್ಡ್ ಕೊಲಾಸೊರಿಗೆ ಕರ್ನಾಟಕ ಡಿಜಿಪಿಯಿಂದ ವಿಶೇಷ ಸನ್ಮಾನ

ಬೆಂಗಳೂರು: ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಕೊಡುಗೈ ದಾನಿ ಡಾ.ರೊನಾಲ್ಡ್ ಕೊಲಾಸೊ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ (DGP) ಡಾ. ಎಂ.ಎ. ಸಲೀಂ ಅವರು ಇತ್ತೀಚೆಗೆ 'ವಿಶೇಷ ಗೌರವ' ನೀಡಿ ಸನ್ಮಾನಿಸಿದರು. ಮಾದರಿ ಸಮಾಜ ಸೇವೆ, ಪೊಲೀಸ್ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ರಾಜ್ಯದಲ್ಲಿ ಕೋಮು ಸಾಮರಸ್ಯವನ್ನು ಉತ್ತೇಜಿಸಲು ನೀಡಿದ ಅಸಾಧಾರಣ ಕೊಡುಗೆಗಳನ್ನು ಪರಿಗಣಿಸಿ ಡಾ.ರೊನಾಲ್ಡ್ ಕೊಲಾಸೊ ಅವರಿಗೆ ಈ ಗೌರವ ನೀಡಲಾಗಿದೆ. ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಡಾ.ಕೊಲಾಸೊ ಅವರಿಗೆ 'ಕರ್ನಾಟಕ ಪೊಲೀಸ್ ಯುನಿಕ್ ಅಫೀಶಿಯಲ್ ಮೆಮೆಂಟೊ' ಮತ್ತು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದರು. ರಾಜ್ಯಾದ್ಯಂತ ಉನ್ನತ ಮಟ್ಟದ ಪೊಲೀಸ್ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಡಾ.ಕೊಲಾಸೊ ನೀಡುತ್ತಿರುವ ನಿರಂತರ ಬೆಂಬಲವನ್ನು ಈ ಸಂದರ್ಭದಲ್ಲಿ ಶ್ಲಾಘಿಸಲಾಯಿತು. ಮಾಜಿ ಪೊಲೀಸ್ ಮುಖ್ಯಸ್ಥರಿಂದಲೂ ಶ್ಲಾಘನೆ ಇದಕ್ಕೂ ಮೊದಲು, ನಿಕಟಪೂರ್ವ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಕೂಡ ಡಾ. ಕೊಲಾಸೊ ಅವರ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವಿಸಿದ್ದರು. ಕೋಮು ಸೌಹಾರ್ದ ಉತ್ತೇಜಿಸಲು ಮತ್ತು ಪೊಲೀಸ್ ಇಲಾಖೆಯ ಉನ್ನತೀಕರಣಕ್ಕೆ ಡಾ.ಕೊಲಾಸೊ ನೀಡಿರುವ ಅಗಾಧ ಕೊಡುಗೆಯನ್ನು ಪ್ರಶಂಸನಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸ್ ಇಲಾಖೆಗೆ ಡಾ.ಕೊಲಾಸೊ ನೀಡಿದ ಪ್ರಮುಖ ಕೊಡುಗೆಗಳು ಕರ್ನಾಟಕ ಪೊಲೀಸ್ ಇಲಾಖೆ ಜೊತೆ ಡಾ.ರೊನಾಲ್ಡ್ ಕೊಲಾಸೊ ಅವರ ಸಂಬಂಧ 2003ರಿಂದ ಆರಂಭವಾಗಿದೆ. ಅಂದಿನ ಬೆಂಗಳೂರು ಪೊಲೀಸ್ ಮುಖ್ಯಸ್ಥರಾಗಿದ್ದ ಮರಿಸ್ವಾಮಿ ಅವರು ಫ್ರೇಝರ್ ಟೌನ್ (ಇಂದಿನ ಪುಲಿಕೇಶಿನಗರ) ಪೊಲೀಸ್ ಠಾಣೆಯನ್ನು ನವೀಕರಣ ಮಾಡುವಂತೆ ಡಾ. ಕೊಲಾಸೊ ಅವರನ್ನು ವಿನಂತಿಸಿದ್ದರು. ಈ ವೇಳೆ ಆಧುನಿಕ ಸೌಲಭ್ಯಗಳೊಂದಿಗೆ ಪೊಲೀಸ್ ಠಾಣೆಯನ್ನು ವಿನ್ಯಾಸಗೊಳಿಸಿ ಮಾದರಿ ಠಾಣೆಯಾಗಿ ನಿರ್ಮಿಸುವ ಇಚ್ಛೆಯನ್ನು ಡಾ.ಕೊಲಾಸೊ ವ್ಯಕ್ತಪಡಿಸಿದ್ದರು. ಕೊಟ್ಟ ಮಾತಿನಂತೆ ಅವರು ಫ್ರೇಝರ್ ಟೌನ್ನಲ್ಲಿ 5,000 ಚದರ ಅಡಿಗಳ ವಿಸ್ತೀರ್ಣದ ಅತ್ಯಾಧುನಿಕ ಪೊಲೀಸ್ ಠಾಣೆಯನ್ನು ನಿರ್ಮಿಸಿದ್ದರು. ಇದು ದೇಶದಲ್ಲೇ ಅತ್ಯಂತ ವಿಶಿಷ್ಟ ಸಾಮಾಜಿಕ ಸೇವೆಯೆಂದು ಪರಿಗಣಿಸಲ್ಪಟ್ಟಿತ್ತು. 2004ರಲ್ಲಿ ಡಾ.ಕೊಲಾಸೊ ಅವರು ಫ್ರೇಝರ್ ಟೌನ್ನಲ್ಲಿ 3,000 ಚದರ ಅಡಿ ವಿಸ್ತೀರ್ಣದ ಹಿಂದಿನ ಪೊಲೀಸ್ ಠಾಣೆಯನ್ನು ಪ್ರತ್ಯೇಕ ಸಂಚಾರ ಪೊಲೀಸ್ ಠಾಣೆಯಾಗಿ ಪುನರ್ ನಿರ್ಮಿಸಿದ್ದರು. ಡಾ. ಕೊಲಾಸೊ ಅವರಿಂದ ಪ್ರೇರಿತಗೊಂಡು, ಇನ್ಫೋಸಿಸ್, ವಿಪ್ರೋ, ಜಿಂದಾಲ್ ಸೇರಿದಂತೆ ಅನೇಕ ಪ್ರಮುಖ ಕಾರ್ಪೊರೇಟ್ ಹಾಗೂ ಎಂಎನ್ಸಿ ಸಂಸ್ಥೆಗಳು ಮುಂದೆ ಬಂದು ರಾಜ್ಯಾದ್ಯಂತ 49ಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಿಸಿವೆ. 2021ರಲ್ಲಿ ಡಾ. ಕೊಲಾಸೊ ಅವರು ಫ್ರೇಝರ್ ಟೌನ್ನಲ್ಲಿ ಪೊಲೀಸ್ ಮ್ಯೂಸಿಯಂನ್ನೂ ನಿರ್ಮಿಸಿದರು. ಈ ಮ್ಯೂಸಿಯಂನ ಅಧಿಕೃತ ಉದ್ಘಾಟನೆ ಇನ್ನೂ ಬಾಕಿಯಿದ್ದು, ಈ ವರ್ಷಾಂತ್ಯದಲ್ಲಿ ನಡೆಯುವ ನಿರೀಕ್ಷೆಯಿದೆ. ಡಾ. ಕೊಲಾಸೊ ಅವರ ಕೊಡುಗೆ ಬೆಂಗಳೂರಿನಾಚೆಗೂ ವಿಸ್ತರಿಸಿದೆ. 2006 ರಲ್ಲಿ ಅವರು ಚಿಕ್ಕಜಾಲ ಪೊಲೀಸ್ ಠಾಣೆಗೆ ಪೀಠೋಪಕರಣಗಳು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿದ್ದರು. ಡಾ. ಕೊಲಾಸೊ ಅವರ ನೆರವು ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗಿರಲಿಲ್ಲ. 2006ರಲ್ಲಿ ಅವರು ಚಿಕ್ಕಜಾಲ ಪೊಲೀಸ್ ಠಾಣೆಗೆ ಅಗತ್ಯ ಫರ್ನಿಚರ್ ಮತ್ತು ಮೂಲಸೌಕರ್ಯವನ್ನು ಒದಗಿಸಿದ್ದರು. ಇದಲ್ಲದೆ, ಅಚ್ಯುತ ರಾವ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅವಧಿಯಲ್ಲಿ ಪೊಲೀಸ್ ಅಧಿಕಾರಿಗಳ ಮೆಸ್(Police Officers’ Mess) ನಲ್ಲಿ ಆಧುನಿಕ ಆಧುನಿಕ ಡ್ರಾಯಿಂಗ್ ರೂಮ್ ನಿರ್ಮಾಣಕ್ಕೂ ಅವರು ಸಹಕಾರ ನೀಡಿದ್ದರು. ಮಂಗಳೂರು ನಗರಕ್ಕೂ ಡಾ. ಕೊಲಾಸೊ ಅವರ ಕೊಡುಗೆ ಮಹತ್ವದ್ದಾಗಿದೆ. ಪಶ್ಚಿಮ ವಲಯದ ಐಜಿಪಿಯಾಗಿ ಡಾ.ಅಲೋಕ್ ಮೋಹನ್ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, ಮಂಗಳೂರು ಐಜಿಪಿ ಕಚೇರಿಯ ನವೀಕರಣಕ್ಕೆ ಅವರು ನೆರವು ನೀಡಿದರು. ನಂತರ ಸೀಮಂತ್ ಕುಮಾರ್ ಸಿಂಗ್ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅವಧಿಯಲ್ಲಿ, ಪೊಲೀಸ್ ಸಿಬ್ಬಂದಿಯ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿವೇತನ ಯೋಜನೆಗಳನ್ನು ಡಾ.ಕೊಲಾಸೊ ಆರಂಭಿಸಿದರು. 2010 ಮತ್ತು 2011ರಲ್ಲಿ 26 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿವೇತನ ಹಾಗೂ 8 ಲಕ್ಷ ರೂ. ಮೌಲ್ಯದ ಯೂನಿಫಾರ್ಮ್ ಮತ್ತು ಶಾಲಾ ಚೀಲಗಳನ್ನು 550ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಿಸಿದರು. ಡಾ. ರೊನಾಲ್ಡ್ ಕೊಲಾಸೊ ಅವರ ಪುತ್ರ ನೈಜಲ್ ಕೊಲಾಸೊ ಅವರು ಕೂಡ ಒಂದು ವರ್ಷದ ವಿದ್ಯಾರ್ಥಿ ವೇತನವನ್ನು ನೀಡಿದ್ದರು. ಪೊಲೀಸ್ ಇಲಾಖೆಗೆ ಮೂಲಸೌಕರ್ಯದ ಹೊರತಾಗಿ, ಡಾ. ಕೊಲಾಸೊ ಅವರು ವಿವಿಧ ಸರಕಾರಿ ಸಂಸ್ಥೆಗಳ ನಿರ್ಮಾಣ, ಅಭಿವೃದ್ಧಿ ಮತ್ತು ನವೀಕರಣಕ್ಕೆ ಗಮನಾರ್ಹ ಬೆಂಬಲವನ್ನು ನೀಡಿದ್ದಾರೆ. 25ಕ್ಕೂ ಹೆಚ್ಚು ವಿವಿಧ ಕ್ಷೇತ್ರಗಳಿಗೆ ಕಳೆದ ಮೂರೂವರೆ ದಶಕಗಳಿಂದ ಧಾರಾಳ ಕೊಡುಗೆಯನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಸೇವೆ, ತೋಟಗಾರಿಕೆ, ಬೆಸ್ಕಾಂ, ಮೆಸ್ಕಾಂ, ಕಲೆ ಮತ್ತು ಸಂಸ್ಕೃತಿ, ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆ ಸಾರ್ವಜನಿಕ ರಸ್ತೆ ನಿರ್ಮಾಣ, ಸಮುದಾಯ ಭವನಗಳ ನಿರ್ಮಾಣ, ಕ್ರೀಡೆ, ರಾಷ್ಟ್ರೀಯ ವಿಪತ್ತು ನಿರ್ವಹಣೆ, ಗ್ರಾಮೀಣ ಕುಡಿಯುವ ನೀರಿನ ಸೌಲಭ್ಯ, ಸಾಮೂಹಿಕ ವಿವಾಹಗಳು, ಬಡವರ ಮನೆ ನಿರ್ಮಾಣ, ದೇವಸ್ಥಾನಗಳು, ಮಸೀದಿಗಳು, ಚರ್ಚುಗಳು ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಡಾ ರೊನಾಲ್ಡ್ ಕೊಲಾಸೊ ಅವರ ಅಸಾಮಾನ್ಯ ಸೇವಾ ಕಾರ್ಯಗಳನ್ನು ಗುರುತಿಸಿ ಬ್ರಿಟಿಷ್ ಸಂಸತ್ತಿನಲ್ಲಿ ಅವರನ್ನು ಗೌರವಿಸಲಾಗಿದೆ. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಅವರ ಸೇವಾ ಸರಣಿಯನ್ನು ದಾಖಲಿಸಲಾಗಿದೆ. ಅಮೇರಿಕ ಅಧ್ಯಕ್ಷರ ಔತಣಕೂಟಕ್ಕೆ ಅವರ ಕುಟುಂಬಕ್ಕೆ ಆಹ್ವಾನ ನೀಡಿ ಗೌರವಿಸಲಾಗಿದೆ.

ವಾರ್ತಾ ಭಾರತಿ 28 Jan 2026 9:04 pm

ಮೇಲ್ಜಾತಿಯ ಹಿಂದೂಗಳಿಗೆ ಅಲ್ಪಸಂಖ್ಯಾತ ಪ್ರಮಾಣಪತ್ರ ನೀಡುವುದು ‘ಹೊಸ ಮಾದರಿಯ ವಂಚನೆ’: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಜ. 28: ಅಲ್ಪಸಂಖ್ಯಾತರ ಮೀಸಲಾತಿ ಸೌಲಭ್ಯಗಳನ್ನು ಪಡೆಯುವ ಏಕೈಕ ಉದ್ದೇಶದಿಂದ ಹರ್ಯಾಣದಲ್ಲಿ ಬಲಾಢ್ಯ ಮೇಲ್ಜಾತಿಗಳ ಜನರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುತ್ತಿರುವ ‘ನೂತನ ಮಾದರಿಯ ವಂಚನೆ’ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ಹೇಗೆ ನೀಡಲಾಗುತ್ತಿದೆ ಎಂಬ ಕುರಿತು ವರದಿಯೊಂದನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ. ಮುಖ್ಯ ನ್ಯಾಯಾಧೀಶ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಯಮಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು ನಿಖಿಲ್ ಕುಮಾರ್ ಪುನಿಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿತ್ತು. ತಾನು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದು, ಅಲ್ಪಸಂಖ್ಯಾತ ಅಭ್ಯರ್ಥಿಯ ನೆಲೆಯಲ್ಲಿ ತನಗೆ ಉದ್ಯೋಗ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ವಿಚಾರಣೆಯ ವೇಳೆ ಮುಖ್ಯ ನ್ಯಾಯಾಧೀಶರು ಅರ್ಜಿದಾರರ ಸಾಮಾಜಿಕ ಹಿನ್ನೆಲೆಯ ಕುರಿತು ಪ್ರಶ್ನಿಸಿದರು. “ನೀವು ಒಬ್ಬ ಪುನಿಯ? ನೀವು ಹೇಗೆ ಅಲ್ಪಸಂಖ್ಯಾತರಾಗುತ್ತೀರಿ? ನಾನಿದನ್ನು ನಿಮಗೆ ನೇರವಾಗಿ ಕೇಳುತ್ತಿದ್ದೇನೆ. ನೀವು ಯಾವ ಪುನಿಯ?” ಎಂದು ಮುಖ್ಯ ನ್ಯಾಯಾಧೀಶರು ಪ್ರಶ್ನಿಸಿದರು. ಅರ್ಜಿದಾರರು ಜಾಟ್ ಪುನಿಯ ಸಮುದಾಯಕ್ಕೆ ಸೇರಿದವರು ಎಂದು ಅವರ ವಕೀಲರು ಉತ್ತರಿಸಿದಾಗ, ಹಾಗಾದರೆ ನೀವು ಅಲ್ಪಸಂಖ್ಯಾತ ಸ್ಥಾನಮಾನವನ್ನು ಹೇಗೆ ಕೇಳುತ್ತೀರಿ ಎಂದು ನ್ಯಾಯಪೀಠ ಪ್ರಶ್ನಿಸಿತು. “ಅರ್ಜಿದಾರರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಮತಾಂತರಗೊಳ್ಳುವುದು ಅವರ ಹಕ್ಕು,” ಎಂದು ವಕೀಲರು ಉತ್ತರಿಸಿದರು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಾಧೀಶರು, “ಓಹ್! ಇದೊಂದು ಹೊಸ ಮಾದರಿಯ ವಂಚನೆ,” ಎಂದು ಉದ್ಗರಿಸಿದರು. ಅಲ್ಪಸಂಖ್ಯಾತ ಪ್ರಮಾಣಪತ್ರಗಳನ್ನು ನೀಡುವುದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹರ್ಯಾಣದ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ನಿರ್ದೇಶನ ನೀಡಿತು. ಮೇಲ್ಜಾತಿಯ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಧಾರ್ಮಿಕ ಮತಾಂತರವಾಗಿದೆ ಎಂದು ಹೇಳಿಕೊಂಡು ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಬಹುದೇ ಎಂಬುದನ್ನು ಸ್ಪಷ್ಟಪಡಿಸುವಂತೆಯೂ ನ್ಯಾಯಾಲಯ ಸೂಚಿಸಿತು.

ವಾರ್ತಾ ಭಾರತಿ 28 Jan 2026 9:00 pm

Maharastra | ಅಜಿತ್ ಪವಾರ್ ಅವರದ್ದು ಅಪಘಾತ ಮಾತ್ರ; ಅದರಲ್ಲಿ ಯಾವುದೇ ರಾಜಕೀಯವಿಲ್ಲ: ಶರದ್ ಪವಾರ್ ಪ್ರತಿಕ್ರಿಯೆ

ಮುಂಬೈ: ತಮ್ಮ ಸೋದರಳಿಯ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕುರಿತು ವಿಷಾದ ವ್ಯಕ್ತಪಡಿಸಿರುವ ಎನ್‌ಸಿಪಿ (ಶರದ್ ಬಣ)ದ ವರಿಷ್ಠ ಶರದ್ ಪವಾರ್, ಈ ಅಪಘಾತದ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂಬ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಅಪಘಾತದ ಕುರಿತು ಪ್ರಥಮ ಪ್ರತಿಕ್ರಿಯೆ ನೀಡಿದ ಶರದ್ ಪವಾರ್, ಕೆಲವು ವ್ಯಕ್ತಿಗಳು ಈ ಘಟನೆಯನ್ನು ರಾಜಕೀಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಇದರಲ್ಲಿ ಯಾವುದೇ ರಾಜಕೀಯವಿಲ್ಲ; ಇದು ಕೇವಲ ಅಪಘಾತ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ. ಈ ಘಟನೆಯನ್ನು ರಾಜಕೀಕರಣಗೊಳಿಸದಂತೆ ಜನರಿಗೆ ಅವರು ಮನವಿ ಮಾಡಿದ್ದಾರೆ. “ಕೆಲವರು ಈ ಘಟನೆಯನ್ನು ರಾಜಕೀಕರಣಗೊಳಿಸಲು ಯತ್ನಿಸುತ್ತಿದ್ದಾರೆ. ಆದರೆ, ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಈ ನಷ್ಟದ ದುಃಖವನ್ನು ಮಹಾರಾಷ್ಟ್ರದಲ್ಲಿರುವ ನಾವು ಬಹುತೇಕ ಎಲ್ಲರೂ ಅನುಭವಿಸುತ್ತಿದ್ದೇವೆ. ದಯವಿಟ್ಟು ಇದನ್ನು ರಾಜಕೀಯ ವಿಷಯವಾಗಿಸಬೇಡಿ” ಎಂದು ಅವರು ವಿನಂತಿಸಿದ್ದಾರೆ. ಸೋದರಳಿಯನ ಸಾವಿಗೆ ಸಂತಾಪ ವ್ಯಕ್ತಪಡಿಸಿದ ಶರದ್ ಪವಾರ್, ಇದು ಮಹಾರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದ್ದು, ಅದಕ್ಕೆ ಪರ್ಯಾಯ ಸೃಷ್ಟಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.

ವಾರ್ತಾ ಭಾರತಿ 28 Jan 2026 9:00 pm

ಸರಕಾರವು ಸಂಪೂರ್ಣ ಸಂವೇದನೆಯೊಂದಿಗೆ ಎಲ್ಲರಿಗಾಗಿ ಕೆಲಸ ಮಾಡುತ್ತಿದೆ: ರಾಷ್ಟ್ರಪತಿ

ಹೊಸದಿಲ್ಲಿ, ಜ.28: ರಾಷ್ಟ್ರಪತಿ ದ್ರೌಪದಿ ಮರ್ಮು ಅವರು, ಸರಕಾರವು ದಲಿತರು, ಹಿಂದುಳಿದ ವರ್ಗಗಳು, ಶೋಷಿತರು ಮತ್ತು ಬುಡಕಟ್ಟು ಸಮುದಾಯಗಳು ಸೇರಿದಂತೆ ಎಲ್ಲರಿಗಾಗಿ ಸಂವೇದನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ನಿಯಮಾವಳಿಗಳ ಕುರಿತು ವಿವಿಧ ವಲಯಗಳಲ್ಲಿ ವ್ಯಕ್ತವಾಗಿರುವ ಅಸಮಾಧಾನದ ನಡುವೆಯೇ ರಾಷ್ಟ್ರಪತಿಗಳ ಈ ಹೇಳಿಕೆ ಹೊರಬಿದ್ದಿದೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾದ ಬುಧವಾರ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮರ್ಮು, ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ದೃಷ್ಟಿಕೋನವು ಎಲ್ಲ ನಾಗರಿಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುತ್ತಿದೆ ಎಂದು ಹೇಳಿದರು. ‘2014ರ ಆರಂಭದಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳು ಕೇವಲ 25 ಕೋಟಿ ನಾಗರಿಕರನ್ನು ತಲುಪಿದ್ದವು. ನನ್ನ ಸರಕಾರದ ನಿರಂತರ ಪ್ರಯತ್ನಗಳಿಂದಾಗಿ ಇಂದು ಸುಮಾರು 95 ಕೋಟಿ ಭಾರತೀಯರು ಸಾಮಾಜಿಕ ಭದ್ರತೆ ವ್ಯಾಪ್ತಿಯಲ್ಲಿದ್ದಾರೆ’ ಎಂದರು. ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಸದಾ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಮಹತ್ವ ನೀಡಿದ್ದರು ಎಂದು ಹೇಳಿದ ರಾಷ್ಟ್ರಪತಿಗಳು, ‘ನಮ್ಮ ಸಂವಿಧಾನವು ಅದೇ ಆಶಯದೊಂದಿಗೆ ನಮಗೆ ಸ್ಫೂರ್ತಿಯನ್ನು ನೀಡುತ್ತಿದೆ’ ಎಂದರು. ಸಾಮಾಜಿಕ ನ್ಯಾಯ ಎಂದರೆ ಪ್ರತಿಯೊಬ್ಬ ನಾಗರಿಕನೂ ಯಾವುದೇ ಭೇದಭಾವವಿಲ್ಲದೆ ತನ್ನ ಸಂಪೂರ್ಣ ಹಕ್ಕುಗಳನ್ನು ಅನುಭವಿಸುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಸರಕಾರವು ಸಾಮಾಜಿಕ ನ್ಯಾಯದ ನಿಜವಾದ ಅರ್ಥದಲ್ಲಿ ಅದಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ. ಇದರ ಪರಿಣಾಮವಾಗಿ ಕಳೆದೊಂದು ದಶಕದಲ್ಲಿ 25 ಕೋಟಿ ನಾಗರಿಕರು ಬಡತನದಿಂದ ಹೊರಬಂದಿದ್ದಾರೆ ಎಂದರು. ‘ನನ್ನ ಸರಕಾರದ ಮೂರನೇ ಅಧಿಕಾರಾವಧಿಯಲ್ಲಿ ಬಡವರ ಸಬಲೀಕರಣದ ಅಭಿಯಾನವು ಇನ್ನಷ್ಟು ವೇಗದೊಂದಿಗೆ ಮುನ್ನಡೆದಿದೆ’ ಎಂದ ಮರ್ಮು, ಕಳೆದೊಂದು ದಶಕದಲ್ಲಿ ಬಡವರಿಗಾಗಿ ನಾಲ್ಕು ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಲಾಗಿದೆ. ಕಳೆದೊಂದು ವರ್ಷದಲ್ಲಿಯೇ 32 ಲಕ್ಷ ಹೊಸ ಮನೆಗಳನ್ನು ಬಡವರಿಗೆ ನೀಡಲಾಗಿದೆ. ಜಲಜೀವನ್ ಮಿಷನ್‌ನ ಐದು ವರ್ಷಗಳ ಅವಧಿಯಲ್ಲಿ 12.5 ಕೋಟಿ ಹೊಸ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. ಕಳೆದ ವರ್ಷ ಸುಮಾರು ಒಂದು ಕೋಟಿ ಹೊಸ ಮನೆಗಳು ನಲ್ಲಿ ನೀರಿನ ಸಂಪರ್ಕವನ್ನು ಪಡೆದುಕೊಂಡಿವೆ ಎಂದರು. ಉಜ್ವಲಾ ಯೋಜನೆಯಡಿ ಈವರೆಗೆ 10 ಕೋಟಿಗೂ ಅಧಿಕ ಕುಟುಂಬಗಳಿಗೆ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗಿದೆ. ಕಳೆದ ವರ್ಷದಲ್ಲಿ ಈ ಅಭಿಯಾನವು ತ್ವರಿತ ಗತಿಯಲ್ಲಿ ಪ್ರಗತಿಯನ್ನು ಸಾಧಿಸಿದೆ ಎಂದು ಅವರು ಹೇಳಿದರು. ‘ನನ್ನ ಸರಕಾರವು ವ್ಯವಸ್ಥೆಗಳಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಸಾಂಸ್ಥಿಕಗೊಳಿಸುತ್ತಿದೆ. ಕಳೆದೊಂದು ವರ್ಷದಲ್ಲಿ ನನ್ನ ಸರಕಾರವು ನೇರ ಲಾಭ ವರ್ಗಾವಣೆಯ ಮೂಲಕ ಫಲಾನುಭವಿಗಳಿಗೆ 6.75 ಲಕ್ಷ ಕೋಟಿ ರೂ.ಗೂ ಅಧಿಕ ಮೌಲ್ಯದ ಪ್ರಯೋಜನಗಳನ್ನು ನೇರವಾಗಿ ಒದಗಿಸಿದೆ’ ಎಂದು ಮರ್ಮು ಹೇಳಿದರು. ತನ್ನ ಸರಕಾರವು ತ್ವರಿತ ಸುಧಾರಣೆಗಳನ್ನು ಕೈಗೊಳ್ಳುತ್ತಿದ್ದು, ಅದರ ಮೂಲಕ ಬಡವರು ಮತ್ತು ಮಧ್ಯಮ ವರ್ಗದವರಿಗೆ ಪ್ರಯೋಜನಗಳನ್ನು ಒದಗಿಸುತ್ತಿದೆ. ಕಳೆದ ವರ್ಷ ಜಾರಿಗೊಳಿಸಲಾದ ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯಿಂದ ನಾಗರಿಕರಿಗೆ ಒಂದು ಲಕ್ಷ ಕೋಟಿ ರೂ.ಗಳ ಉಳಿತಾಯವಾಗಿದೆ. 2025ರಲ್ಲಿ ಜಿಎಸ್‌ಟಿ ಕಡಿತದ ಬಳಿಕ ದ್ವಿಚಕ್ರ ವಾಹನಗಳ ನೋಂದಣಿ ಎರಡು ಕೋಟಿಯನ್ನು ದಾಟಿದ್ದು, ಇದೇ ಒಂದು ಹೊಸ ದಾಖಲೆಯಾಗಿದೆ ಎಂದು ಹೇಳಿದ ರಾಷ್ಟ್ರಪತಿಗಳು, ಸರಕಾರವು ಆದಾಯ ತೆರಿಗೆ ಕಾಯ್ದೆಯನ್ನು ಪರಿಷ್ಕರಿಸಿದ್ದು, 12 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆಯಿಂದ ವಿನಾಯಿತಿ ನೀಡುವ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಿದರು. ಈ ಸುಧಾರಣೆಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅಭೂತಪೂರ್ವ ಪ್ರಯೋಜನಗಳನ್ನು ಒದಗಿಸುತ್ತಿವೆ. ಅವು ದೇಶದ ಆರ್ಥಿಕತೆಗೆ ಹೊಸ ಉತ್ತೇಜನವನ್ನೂ ನೀಡಿವೆ ಎಂದರು. ‘ಇಂದು ನನ್ನ ಸರಕಾರವು ತ್ವರಿತ ಸುಧಾರಣೆಗಳ ಮಾರ್ಗದಲ್ಲಿ ಮುನ್ನಡೆಯುತ್ತಿದೆ. ಹಳೆಯ ನಿಯಮಗಳು ಮತ್ತು ನಿಬಂಧನೆಗಳನ್ನು ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ನಿರಂತರವಾಗಿ ನವೀಕರಿಸಲಾಗುತ್ತಿದೆ’ ಎಂದು ಮರ್ಮು ಹೇಳಿದರು.

ವಾರ್ತಾ ಭಾರತಿ 28 Jan 2026 9:00 pm

ಅಫಜಲಪುರ | ಸಾವಿನಲ್ಲೂ ಒಂದಾದ ಸಹೋದರರು

ಅಫಜಲಪುರ: ತಾಲೂಕಿನ ಬಡದಾಳ ಗ್ರಾಮದ ಬಸವಂತರಾಯ ಸಿದ್ದಣ್ಣ ಸಾಣಾಕ್ (81) ಅವರು ಜ.25ರಂದು ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಜ.26ರಂದು ಸಂಜೆ 4 ಗಂಟೆಗೆ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕಿರಿಯ ಸಹೋದರ ಶಿವರಾಯ ಸಿದ್ದಣ್ಣ ಸಾಣಾಕ್ (79) ಅವರು ಅಣ್ಣನ ಅಗಲಿಕೆಯ ನೋವಿನಿಂದ ತೀವ್ರವಾಗಿ ಮನನೊಂದು ಮನೆಗೆ ಮರಳಿದ್ದರು. ಆದರೆ ಅದೇ ದಿನ ರಾತ್ರಿ ಸುಮಾರು 8 ಗಂಟೆಗೆ ಅಣ್ಣನ ನಿಧನದ ದುಃಖ ಸಹಿಸಲಾರದೆ ಅವರು ನಿಧನರಾದ ದಾರುಣ ಘಟನೆ ನಡೆದಿದೆ. ಒಂದೇ ದಿನದ ಅಂತರದಲ್ಲಿ ಇಬ್ಬರು ಸಹೋದರರು ನಿಧನರಾದದ್ದು ಗ್ರಾಮಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ವಿಶೇಷವೆಂದರೆ, ಕಿರಿಯ ಸಹೋದರ ಶಿವರಾಯ ಸಾಣಾಕ್ ಅವರ ಅಂತ್ಯಕ್ರಿಯೆಯೂ ಹಿರಿಯ ಅಣ್ಣನ ಅಂತ್ಯಕ್ರಿಯೆ ನಡೆದ ಅದೇ ತೋಟದ ಪಕ್ಕದಲ್ಲೇ ನೆರವೇರಿತು. ಬದುಕಿರುವಾಗ ಸಹೋದರ ವಾತ್ಸಲ್ಯಕ್ಕೆ ಮಾದರಿಯಾಗಿದ್ದ ಈ ಸಹೋದರರು, ಸಾವಿನಲ್ಲೂ ಒಂದಾಗಿ ಉಳಿದ ಅಪರೂಪದ ಘಟನೆ ಗ್ರಾಮದಲ್ಲಿ ಕಂಬನಿಯನ್ನು ಮೂಡಿಸಿದೆ.

ವಾರ್ತಾ ಭಾರತಿ 28 Jan 2026 8:54 pm

`ನೀವಾಡೊಲ್ಲ ಅಂದ್ರೆ ನಾವ್ ರೆಡಿ, ಬೇಗ ಹೇಳಿ!': ಕಿರಿಕ್ ಮಾಡುತ್ತಿರುವ ಪಾಕ್ ಬಗ್ಗೆ ಐಸ್ಲೆಂಡ್ ವ್ಯಂಗ್ಯ ಮಾಡಿದ್ದೇಕೆ?

ಪಾಕಿಸ್ತಾನ ತಂಡ ಐಸಿಸಿ ಟಿ20 ವಿಶ್ವಕಪ್ ಆಡುವ ಬಗ್ಗೆ ತೀರ್ಮಾನಕ್ಕೆ ಬರದಿರುವುದು ದೊಡ್ಡ ತಮಾಷೆಯ ಸಂಗತಿಯಾಗಿಬಿಟ್ಟಿದೆ. ಇದೀಗ ಐಸ್ಲೆಂಡ್ ಕ್ರಿಕೆಟ್ ಅಸೋಸಿಯೇಶನ್ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ನೀವು ಬೇಗ ನಿಮ್ಮ ನಿರ್ಧಾರ ತಿಳಿಸಿ, ನಮಗೆ ಅವಕಾಶ ಸಿಕ್ಕರೆ ವಿಮಾನದ ಟಿಕೆಟ್ ಬುಕ್ ಮಾಡಲು ಅನುಕೂಲ ಆಗುತ್ತದೆ ಎಂದು ಕಿಚಾಯಿಸಿದೆ. ಬಾಂಗ್ಲಾದೇಶ ಮಹತ್ವದ ಟೂರ್ನಿಗೆ ಬಹಿಷ್ಕಾರ ಹಾಕಿರುವುದರಿಂದ ಸ್ಕಾಟ್ಲೆಂಡ್ ಗೆ ಆಡುವ ಅವಕಾಶ ಸಿಕ್ಕಿತು. ಇದೀಗ ಪಾಕಿಸ್ತಾನ ಆಡದಿದ್ದರೆ ತನಗೆ ಅವಕಾಶ ಸಿಗಲಿದೆ ಎಂಬಂತೆ ಐಸ್ಲೆಂಡ್

ವಿಜಯ ಕರ್ನಾಟಕ 28 Jan 2026 8:51 pm

ಹಿದಾಯ ಫೌಂಡೇಶನ್ ವತಿಯಿಂದ ʼಉನ್ನತಿ - 2026ʼ ಶೈಕ್ಷಣಿಕ ಕಾರ್ಯಕ್ರಮ

ಮಂಗಳೂರು : ಸರಕಾರಿ ಶಾಲೆಯನ್ನು ನೆಚ್ಚಿಕೊಂಡಿರುವ ಬಡ, ದುರ್ಬಲ ಕುಟುಂಬಗಳ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಅವರು ದೇಶದ ಮುಂಚೂಣಿಯ ಸ್ಥಾನಗಳಿಗೆ ಆಯ್ಕೆಯಾಗುವಂತೆ ಮಾಡುವುದು ಪರಮಶ್ರೇಷ್ಠ ಕರ್ತವ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕ ಶಶಿಧರ್ ಹೇಳಿದರು. ಅವರು ಮಂಗಳೂರಿನ ಹಿದಾಯ ಫೌಂಡೇಶನ್ ವತಿಯಿಂದ ಸಂಸ್ಥೆಯ ಸಭಾಂಗಣ ಎಪಿಸೆಂಟರ್ ನಲ್ಲಿ ಆಯೋಜಿಸಲಾದ ಎಸ್ ಎಸ್ ಎಲ್ ಸಿ ಫಲಿತಾಂಶ ಉನ್ನತೀಕರಣ ಯೋಜನೆಯ ಉಪಕ್ರಮಗಳ ಅವಲೋಕನ ಕಾರ್ಯಕ್ರಮ ಉನ್ನತಿ - 2026ರಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಸರಕಾರಿ ಶಾಲೆಗಳು ದುರ್ಬಲಗೊಂಡರೆ ಅದರ ನೇರ ಪರಿಣಾಮ ತಳಸಮುದಾಯದ ಮೇಲೆ ಬೀರಲಿದೆ ಆದುದರಿಂದ ಸಂವಿಧಾನದ ಆಶಯದಂತೆ ಪ್ರತಿ ಮಗುವೂ ಶೈಕ್ಷಣಿಕ ಸಬಲೀಕರಣಗೊಳ್ಳಲು ಸರಕಾರಿ ಶಾಲೆ ಗಳನ್ನು ಪೋಷಿಸಬೇಕಾದುದು ಸರಕಾರದ ಜೊತೆ ಸಮಾಜದ ಕರ್ತವ್ಯವೂ ಹೌದು, ಈ ನಿಟ್ಟಿನಲ್ಲಿ ಹಿದಾಯ ಫೌಂಡೇಶನ್ ಸರಕಾರಿ ಶಾಲೆಗಳಿಗೆ ನೀಡುತ್ತಿರುವ ಬೆಂಬಲ ಮತ್ತು ನೆರವು ಅಮೋಘವಾದುದು ಎಂದು ಅವರು ಹೇಳಿದರು. ಸಂಸ್ಥೆಯು ಜಿಲ್ಲೆಯ ಹತ್ತು ಶಾಲೆಗಳಿಗೆ ಗೌರವ ಶಿಕ್ಷಕಿಯರನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣದ ಅಡಿಪಾಯ ಗಟ್ಟಿ ಮಾಡಿ ಎಸ್ ಎಸ್ ಎಪ್ ಸಿ ಫಲಿತಾಂಶ ಉನ್ನತೀಕರಣಗೊಳ್ಳಲು ಕೆಲವು ವರ್ಷಗಳಿಂದ‌ ಉಪಕ್ರಮಗಳನ್ನು ಜಾರಿ ಮಾಡಿತ್ತು. ಈ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಸಂಸ್ಥೆ ಪ್ರಾಯೋಜಿಸಿದ ಸುಮಾರು 25 ಗೌರವ ಶಿಕ್ಷಕಿಯರು ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯಾಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್ , ಆಡಳಿತಾಧಿಕಾರಿ ಆಬಿದ್ ಅಸ್ಗರ್, ಶೈಕ್ಷಣಿಕ ಯೋಜನೆಯ ಉಸ್ತುವಾರಿ ಅಬ್ದುಲ್ ರಝಾಕ್ ಅನಂತಾಡಿ, ಹಿದಾಯ ವಿಶೇಷ ಶಾಲೆಯ ಉಸ್ತುವಾರಿ ಮೊಹಮ್ಮದ್ ತುಂಬೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸದಸ್ಯರಾದ ಮಕ್ಬೂಲ್ ಅಹಮದ್, ಆಸೀಫ್ ಇಕ್ಬಾಲ್, ಹಕೀಂ ಕಲಾಯಿ, ಕೆ.ಎಸ್ ಅಬೂಬಕ್ಕರ್, ಶಕೂರ್ ಹಾಜಿ‌ ಪುತ್ತೂರು, ಶರೀಫ್ ಮುಕ್ರಂಪಾಡಿ ,ಇದ್ದಿನ್ ಕುಂಞಿ ಮಂಗಳೂರು, ಇಬ್ರಾಹಿಂ ಖಲೀಲ್, ಇಫ್ತಿಕಾರ್ ಅಹಮದ್, ಪಿ.ಮೊಹಮ್ಮದ್, ಆಶಿಕ್ ಕುಕ್ಕಾಜೆ, ರಶೀದ್ ಕಕ್ಕಿಂಜೆ, ಇಲ್ಯಾಸ್ ಕಕ್ಕಿಂಜೆ, ಜಬ್ಬಾರ್ ಬೆಂಗರೆ, ಸಿ.ಎಚ್ ಮೊಹಿದಿನ್ ಭಾಗವಹಿಸಿದ್ದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ.ಎಂ.ತುಂಬೆ ಸ್ವಾಗತಿಸಿದರು. ಅಬ್ದುಲ್ ಹಕೀಂ ಕಲಾಯಿ ಧನ್ಯವಾದಗೈದರು.

ವಾರ್ತಾ ಭಾರತಿ 28 Jan 2026 8:50 pm

Kerala | ವೆಲ್ಲಪಲ್ಲಿ ನಟೇಶನ್‌ ಗೆ ಪದ್ಮಭೂಷಣ; ಪ್ರಶಸ್ತಿ ಹಿಂಪಡೆಯುವಂತೆ ವಿಸಲ್‌ಬ್ಲೋಯರ್ ಗುಂಪಿನ ಆಗ್ರಹ

ತಿರುವನಂತಪುರಂ: ನಾರಾಯಣ ಧರ್ಮ ಪರಿಪಾಲನಾ ಯೋಗಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವೆಲ್ಲಪಲ್ಲಿ ನಟೇಶನ್ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖಿಸಿ, ನೈತಿಕ ಕಳವಳ ವ್ಯಕ್ತಪಡಿಸಿರುವ ಶಿಕ್ಷಣ ವಲಯದ ವಿಸಲ್‌ಬ್ಲೋಯರ್ ಗುಂಪಾದ ‘ಸೇವ್ ಯೂನಿವರ್ಸಿಟಿ ಕ್ಯಾಂಪೇನ್ ಕಮಿಟಿ’, ಅವರಿಗೆ ಘೋಷಿಸಲಾದ ಪದ್ಮಭೂಷಣ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಮನವಿ ಮಾಡಿದೆ. ಕೇರಳದಲ್ಲಿ ಈಳವ ಸಮುದಾಯವನ್ನು ಪ್ರತಿನಿಧಿಸುವ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಸಂಸ್ಥೆ ಪ್ರಮುಖ ಸಾಮಾಜಿಕ–ಧಾರ್ಮಿಕ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಮಹತ್ವದ ಸಾಮಾಜಿಕ ಹಾಗೂ ರಾಜಕೀಯ ಪ್ರಭಾವವನ್ನು ಹೊಂದಿದೆ. ನಟೇಶನ್ ಅವರು ರಾಜ್ಯದಲ್ಲಿ ಹಲವು ಶಾಲೆಗಳು ಮತ್ತು ಕಾಲೇಜುಗಳನ್ನು ನಡೆಸುತ್ತಿರುವ ಶ್ರೀ ನಾರಾಯಣ ಟ್ರಸ್ಟ್‌ನ ಕಾರ್ಯದರ್ಶಿಯೂ ಆಗಿದ್ದಾರೆ. ಜನವರಿ 27ರಂದು ಮನವಿ ಪತ್ರ ಸಲ್ಲಿಸಿರುವ ‘ಸೇವ್ ಯೂನಿವರ್ಸಿಟಿ ಕ್ಯಾಂಪೇನ್ ಕಮಿಟಿ’ಯ ಅಧ್ಯಕ್ಷ ಆರ್.ಎಸ್. ಶಶಿಕುಮಾರ್, ಈಗ ತಮ್ಮ ಹೆಸರಿನಲ್ಲಿ ಪ್ರಕಟಗೊಂಡಿರುವ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳ ವಿಶ್ವಾಸಾರ್ಹತೆ ಬಗ್ಗೆ ನಟೇಶನ್ ಸಾರ್ವಜನಿಕವಾಗಿ ವ್ಯಂಗ್ಯವಾಡಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪದ್ಮ ಪ್ರಶಸ್ತಿಯನ್ನು ಸಾರ್ವಜನಿಕವಾಗಿಯೇ ಅವಮಾನಿಸಿದ ವ್ಯಕ್ತಿಗೆ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡುವುದು ಅದರ ಘನತೆಯನ್ನು ಕುಗ್ಗಿಸುತ್ತದೆ ಹಾಗೂ ಈ ಹಿಂದೆ ಪ್ರಶಸ್ತಿಯನ್ನು ಸ್ವೀಕರಿಸಿರುವವರ ಪ್ರತಿಷ್ಠೆಗೆ ಮಸಿ ಬಳಿಯುತ್ತದೆ ಎಂದು ಅವರು ತಿಳಿಸಿದ್ದಾರೆ. ನಟೇಶನ್ ಅವರಿಗೆ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಿದ ಬಳಿಕ, ಇತ್ತೀಚೆಗೆ ಮಲಯಾಳಂ ಸುದ್ದಿತಾಣವೊಂದಕ್ಕೆ ಅವರು ನೀಡಿದ್ದ ಸಂದರ್ಶನವು ಗಮನ ಸೆಳೆದಿತ್ತು. ‘ನಿಮಗೆ ಬಿಜೆಪಿಯೊಂದಿಗೆ ನಿಕಟತೆ ಇದೆ ಎಂಬ ಅಭಿಪ್ರಾಯವಿದ್ದು, ನೀವು ಪದ್ಮಭೂಷಣ ಪ್ರಶಸ್ತಿಗೆ ಅರ್ಹರಾಗಿದ್ದೀರಾ?’ ಎಂಬ ಸಂದರ್ಶಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಟೇಶನ್, “ಪದ್ಮಭೂಷಣ ಪ್ರಶಸ್ತಿಗೆ ಏನಾದರೂ ಬೆಲೆ ಇದೆಯೇ? ಅವೆಲ್ಲ ಪ್ರಶಸ್ತಿಗಳೂ ದುಡ್ಡು ನೀಡಿ ಖರೀದಿಸಬಹುದಾದ ವಸ್ತುಗಳಲ್ಲವೇ? ಅದನ್ನು ನನಗೆ ನೀಡಿದರೂ ನಾನು ಸ್ವೀಕರಿಸುವುದಿಲ್ಲ” ಎಂದು ಹೇಳಿದ್ದರು.

ವಾರ್ತಾ ಭಾರತಿ 28 Jan 2026 8:45 pm

ತುಂಬೆ: ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋ ಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ ತುಂಬೆ ವಿದ್ಯಾ ಸಂಸ್ಥೆಗಳಲ್ಲಿ ಶಕ್ತಿ ಮೀರಿ ಬೋಧನಾ ಕರ್ತವ್ಯವನ್ನು ಅಹರ್ನಿಶಿ ಯಾಗಿ ನಿಭಾಯಿಸಿದ ಬೋಧಕ-ಬೋಧಕಿಯರನ್ನು ಸಂಸ್ಥೆ ಸದಾ ಸ್ಮರಿಸುತ್ತದೆ ಎಂದು ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ಹೇಳಿದರು. ಅವರು ತುಂಬೆ ಬಿ.ಎ.ವಿದ್ಯಾ ಸಂಸ್ಥೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿ ವಯೋ ಸಹಜ ನಿವೃತ್ತಿ ಹೊಂದುತ್ತಿರುವ ನಾಲ್ಕು ಮಂದಿ ಬೋಧಕ-ಬೋಧಕಿಯರ ವಿದಾಯ ಕೂಟದಲ್ಲಿ ಅವರನ್ನು ಸನ್ಮಾನಿಸಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಂಬೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಮಾತನಾಡಿ ತುಂಬೆಯಂತಹ ವಿದ್ಯಾ ಸಂಸ್ಥೆಯಲ್ಲಿ ಕೆಲಸ ಮಾಡುವುದೇ ಒಂದು ಒಳ್ಳೆಯ ಅನುಭವ. ಈ ವರ್ಷ ನಿವೃತ್ತರಾಗುವವರೂ ನಿಷ್ಕಲ್ಮಷ ಮನೋಭಾವದಿಂದ ಸೇವೆ ಸಲ್ಲಿಸಿ, ತಮ್ಮ ಅಪಾರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆದು ವಿದ್ಯಾರ್ಥಿಗಳ ಮತ್ತು ಅವರ ಪೋಷಕರ ಹಾಗೂ ಆಡಳಿತ ಮಂಡಳಿಯ ಪ್ರೀತಿ, ಪ್ರಶಂಸೆ ಮತ್ತು ಸಹೋದ್ಯೋಗಿಗಳೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು. ಉಪನ್ಯಾಸಕರಾದ ದಿನೇಶ ಶೆಟ್ಟಿ, ಅಬ್ದುಲ್ ರಹಮಾನ್ ಡಿ.ಬಿ., ಕವಿತಾ, ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ, ಶಿಕ್ಷಕಿಯರಾದ ಪ್ರತಿಮಾ, ರೇಷ್ಮಾ ಶೆಟ್ಟಿ, ಸೌಮ್ಯಾ ಹಾಗೂ ಲವೀನಾ ವಿದಾಯ ಹೊಂದಲಿರುವ ನಾಲ್ಕು ಮಂದಿಗಳ ಗುಣಗಾದೊಂದಿಗೆ ಅಭಿನಂದಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ನಿವೃತ್ತಿ ಹೊಂದಲಿರುವ ತುಂಬೆ ಪ.ಪೂ.ಕಾಲೇಜಿನ ಇತಿಹಾಸ ಉಪನ್ಯಾಸಕಿ ಶರ್ಮಿಳಾ, ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಶೆಟ್ಟಿ, ತುಂಬೆ ಹೈಸ್ಕೂಲ್ ನ ಹಿಂದಿ ಅಧ್ಯಾಪಕ ರಘುಪತಿ ಭಟ್, ಎಲ್ ಕೆ ಜಿ ಶಿಕ್ಷಕಿ ಜಾನೆಟ್ ಪಸನ್ನ ಸನ್ಮಾನ ಸ್ವೀಕರಿಸಿ ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಟ್ರಸ್ಟೀ ಬಿ.ಎಂ.ಅಶ್ರಫ್, ಪಿ.ಟಿ.ಎ ಅಧ್ಯಕ್ಷ ನಿಸಾರ್ ಅಹಮದ್ ವಳವೂರು, ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಕಾರ್ಯಕಾರಿ ಸಮಿತಿಯ ಮ್ಯಾಕ್ಸಿಂ ಕುವೆಲ್ಲೋ, ಶರೀಫ್, ಅಬ್ದುಲ್ ಗಫೂರ್, ತುಂಬೆ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಕೆದಿಲ, ನಿವೃತ್ತ ಕನ್ನಡ ಪಂಡಿತ ರಾಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶೇಖರ್ ಬಿ ತುಂಬೆ ಪ್ರಾರ್ಥನೆ ಗೈದರು. ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ಪ್ರಸ್ತಾವಿಸಿ ತುಂಬೆ ಕಾಲೇಜಿನ ಪ್ರಾಂಶುಪಾಲ ವಿ.ಎಸ್.ಭಟ್ ಸ್ವಾಗತಿಸಿದರು. ತುಂಬೆ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ವಂದಿಸಿದರು. ಕಚೇರಿ ಸಹಾಯಕ ಹಾಗು ಕಲಾವಿದ ಯೋಗೀಶ್ ಬಿ ತುಂಬೆ ನಿರೂಪಿಸಿದರು.

ವಾರ್ತಾ ಭಾರತಿ 28 Jan 2026 8:43 pm

ಭಟ್ಕಳ: ರಸ್ತೆ ಅಪಘಾತ; ಗಾಯಾಳು ಯುವಕ ಮೃತ್ಯು

ಭಟ್ಕಳ: ನವಾಯತ್ ಕಾಲೋನಿಯ ಸಿಟಿ ಲೈಟ್ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ್ದ ಕಾರು–ಸ್ಕೂಟರ್ ಡಿಕ್ಕಿ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ತೌಸಿಫ್ (40) ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತೌಸಿಫ್ ಅವರು ಶಿರೂರು ಮೂಲದವರಾಗಿದ್ದು, ಪ್ರಸ್ತುತ ಭಟ್ಕಳದ ಆಜಾದ್ ನಗರದಲ್ಲಿ ವಾಸವಾಗಿದ್ದರು. ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಅವರೊಂದಿಗೆ ಇದ್ದ ಮದೀನಾ ಕಾಲನಿಯ ನಿವಾಸಿ ಸೈಯದ್ ಉಮರ್ ರಶಾದ್ ಶೇಖ್ (20) ಅವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಟಿ ಲೈಟ್ ಕ್ರಾಸ್‌ನಿಂದ ಶಮ್ಸುದ್ದೀನ್ ಸರ್ಕಲ್ ಕಡೆಗೆ ಸ್ಕೂಟರ್ ಸಾಗುತ್ತಿದ್ದ ವೇಳೆ, ಎದುರಿನಿಂದ ಉಡುಪಿ–ಸಿರಸಿ ಮಾರ್ಗವಾಗಿ ಬರುತ್ತಿದ್ದ ಕಾರು ಲಾರಿಯನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಇಬ್ಬರೂ ಸವಾರರು ರಸ್ತೆ ಮೇಲೆ ಎಸೆಯಲ್ಪಟ್ಟಿದ್ದರು. ಈ ಸಂಬಂಧ ಭಟ್ಕಳ ಟೌನ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 28 Jan 2026 8:40 pm

ಅಜಿತ್‌ ಪವಾರ್‌ ವಿಮಾನ ಅಪಘಾತದಲ್ಲಿ ಪಿತೂರಿ ಆರೋಪ; ಶರದ್‌ ಪವಾರ್‌ ಹೇಳಿದ್ದೇನು? ಸೋದರಳಿಯನ ಸಾವಿನ ಬಗ್ಗೆ ಫಸ್ಟ್‌ ರಿಯಾಕ್ಷನ್‌!

ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯ ಬಗ್ಗೆ ಇದೀಗ ಅನೇಕ ಊಹಾಪೋಹಗಳು ಹುಟ್ಟಿಕೊಂಡಿದ್ದು, ಕೆಲವರು ಇದರಲ್ಲಿ ಪಿತೂರಿಯ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಅಜಿತ್‌ ಪವಾರ್‌ ಸಂಬಂಧಿ ಶರದ್‌ ಪವಾರ್‌, ದುರ್ಘಟನೆಯಲ್ಲಿ ಯಾವುದೇ ಪಿತೂರಿ ಇಲ್ಲ ಎಂದು ಸ್ಪ್ಟಪಡಿಸಿದ್ದಾರೆ. ಅಜಿತ್‌ ಪವಾರ್‌ ನಿಧನದ ಬಗ್ಗೆ ತುಂಬಾ ಭಾವುಕರಾಗಿ ಶರದ್‌ ಪವಾರ್‌ ಮಾತನಾಡಿದ್ದಾರೆ. ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 28 Jan 2026 8:39 pm

ತಂತ್ರಜ್ಞಾನದ ವಿವೇಕ ಕನ್ನಡಕ್ಕೆ ಬಾರದ ಕಾರಣಕ್ಕೆ ಕಂದರ ಸೃಷ್ಠಿ: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು, ಜ.28: ತಂತ್ರಜ್ಞಾನದ ವಿವೇಕವು ಇಲ್ಲಿಯವರೆಗೆ ಕನ್ನಡಕ್ಕೆ ಸಮರ್ಪಕವಾಗಿ ಬಾರದ ಕಾರಣ ಸೃಷ್ಠಿಯಾಗಿರುವ ಬಹುದೊಡ್ಡ ಕಂದರವು, ಸಾಮಾನ್ಯ ಕನ್ನಡಿಗರನ್ನು ಕನ್ನಡದ ನೆಲದಲ್ಲಿಯೇ ಪರಕೀಯರನ್ನಾಗಿಸಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಬುಧವಾರ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದಲ್ಲಿ ‘ಕನ್ನಡ ಅನುಷ್ಠಾನ ಪ್ರಗತಿ’ ಪರಿಶೀಲನೆ ನಡೆಸಿ ಮಾತನಾಡಿದ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಭಾಷೆಯನ್ನು ಕೇವಲ ಸಾಹಿತ್ಯಿಕ ಆಯಾಮದಿಂದ ಗ್ರಹಿಸದೇ ಅದಕ್ಕೆ ಇತರ ಆಯಾಮಗಳೂ ಇವೆ ಎಂದು ಭಾವಿಸಿದಾಗ ಅದು ಇನ್ನಷ್ಟು ಗಟ್ಟಿಯಾಗುವ ಸಾಧ್ಯತೆಯನ್ನು ಹೊಂದುತ್ತದೆ ಎಂದರು. ಜ್ಞಾನದ ಅಂತರ್‍ರಾಷ್ಟ್ರೀಕರಣದ ಇಂದಿನ ಸಂದರ್ಭದಲ್ಲಿ ಆರೋಗ್ಯ, ತಂತ್ರಜ್ಞಾನ, ಕೃಷಿ ಸೇರಿದಂತೆ ಕನ್ನಡಕ್ಕೆ ಇರುವ ಬಹು ಆಯಾಮಗಳನ್ನು ಗುರುತಿಸಿಕೊಂಡು ನಮ್ಮ ವಿವೇಕ ವೃದ್ಧಿಗೆ ಕ್ರಮವಹಿಸಬೇಕಾಗುತ್ತದೆ. ಆಗ ಕನ್ನಡ ಭಾಷೆ ತನ್ನ ಸಮಗ್ರತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದರು. ಆರೋಗ್ಯ ಕ್ಷೇತ್ರದಲ್ಲಿ ರಾಜೀವ್‍ಗಾಂಧಿ ವಿಶ್ವವಿದ್ಯಾಲಯವು ಜನ-ಸಾಮಾನ್ಯರು ಮತ್ತು ಜ್ಞಾನದ ನಡುವಿನ ಕಂದರವನ್ನು ಕಿರಿದಾಗಿಸಲು ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯವನ್ನು ಅಭಿವೃದ್ಧಿಪಡಿಸಲು ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಅಲ್ಲಿನ ಸವಾಲುಗಳು, ಸಾಮಾನ್ಯ ರೋಗಗಳ ಬಗ್ಗೆ ಜನರಿಗೆ ಸಾಮಾನ್ಯ ತಿಳುವಳಿಕೆಯನ್ನು ಒದಗಿಸುವ ಮಾದರಿಯಲ್ಲಿ ಹಾಗೂ ಹೊಸ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಕುರಿತಂತೆ ಕನ್ನಡದಲ್ಲಿ ಪುಸ್ತಕಗಳನ್ನು ಹೊರತರುವಲ್ಲಿ ಗಮನ ಹರಿಸಬೇಕು ಎಂದರು. ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ಸಹ ಈ ಸಾಹಿತ್ಯ ಸೃಷ್ಠಿಗೆ ಕೈ ಜೋಡಿಸುವಂತೆ ವಿಶ್ವವಿದ್ಯಾಲಯವು ಗಮನ ಹರಿಸುವುದು ಮುಖ್ಯ. ಅಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿವೇತನವನ್ನು ನೀಡಲು ಸಹ ವಿಶ್ವವಿದ್ಯಾಲಯ ಆಲೋಚಿಸಬಹುದು ಎಂದು ತಿಳಿಸಿದರು. ಆರೋಗ್ಯ ವಿಶ್ವವಿದ್ಯಾಲಯದ ಲಾಂಛನದಲ್ಲಿ ಕನ್ನಡಕ್ಕೆ 2ನೇ ಸ್ಥಾನವನ್ನು ನೀಡಿರುವುದು ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕದ ಪ್ರಕಾರ ಸರಿಯಾದ ಕ್ರಮವಲ್ಲ. ಕೂಡಲೇ ಈ ವಿಷಯವನ್ನು ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ವಿಶ್ವವಿದ್ಯಾಲಯದ ಲಾಂಛನದಲ್ಲಿ ಕನ್ನಡಕ್ಕೆ ಮೊದಲ ಸ್ಥಾನವನ್ನು ನೀಡಬೇಕು ಎಂದು ಸೂಚಿಸಿದರು. ಕನ್ನಡೇತರ ವಿದ್ಯಾರ್ಥಿಗಳಿಗೆ ಬಳಕೆ ಕನ್ನಡ ಪಠ್ಯವನ್ನು ನಿಗದಿಪಡಿಸಲಾಗಿದ್ದು, ಅಂಕಗಳಿಕೆಗೆ ಇದನ್ನು ಪರಿಗಣಿಸದ ಕಾರಣ ಕನ್ನಡ ಕಲಿಯುವಿಕೆಯಲ್ಲಿ ಗಂಭೀರತೆಯನ್ನು ತರಲಾಗುತ್ತಿಲ್ಲ, ಕನ್ನಡೇತರ ವಿದ್ಯಾರ್ಥಿಗಳು ಇದನ್ನು ಕಲಿತು ಪರೀಕ್ಷೆಯಲ್ಲಿ ತೇರ್ಗಡೆ ಅಂಕಗಳನ್ನು ಗಳಿಸುವುದು ಕಡ್ಡಾಯ ಮಾಡುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಆಲೋಚಿಸಬೇಕು. ವಿಶ್ವವಿದ್ಯಾಲಯದಲ್ಲಿ ಅಧಿಕಾರಿ-ಸಿಬ್ಬಂದಿಯನ್ನೊಳಗೊಂಡ ಕನ್ನಡ ಘಟಕಗಳನ್ನು ಸ್ಥಾಪಿಸಬೇಕು. ಜಾಲತಾಣದಲ್ಲಿ ಕನ್ನಡ ಭಾಷೆ ಆಯ್ಕೆ ಆಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಡಾ.ಭಗವಾನ್ ಬಿ.ಸಿ., ಕುಲಸಚಿವ ಸಿ. ಅರ್ಜುನ್ ಒಡೆಯರ್, ಕುಲಸಚಿವ (ಮೌಲ್ಯಮಾಪನ) ಡಾ.ರಿಯಾಝ್ ಬಾಷಾ, ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್‌ ಹಾನಗಲ್ಲ, ಆಪ್ತ ಕಾರ್ಯದರ್ಶಿ ಟಿ.ಎಸ್.ಫಣಿಕುಮಾರ್, ವೈದ್ಯ ಡಾ.ಸಿ.ಎ. ಕಿಶೋರ್ ಮತ್ತಿತರರು ಹಾಜರಿದ್ದರು.

ವಾರ್ತಾ ಭಾರತಿ 28 Jan 2026 8:39 pm

ಕಲಬುರಗಿ | ಅಜಿತ್ ಪವಾರ್ ನಿಧನಕ್ಕೆ ಮಾಜಿ ಸಂಸದ ಉಮೇಶ್ ಜಾಧವ್ ಸಂತಾಪ

ಕಲಬುರಗಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮರಣ ಹೊಂದಿರುವ ವಿಷಯ ಮನಸ್ಸಿಗೆ ತುಂಬಾ ಆಘಾತ ಉಂಟುಮಾಡಿದೆ ಎಂದು ಮಾಜಿ ಸಂಸದ ಉಮೇಶ್ ಜಾಧವ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪವಾರ್ ಅವರು ಮಹಾರಾಷ್ಟ್ರದಲ್ಲಿರುವ ಬಂಜಾರಾ ಸಮಾಜದ ಇಂದ್ರನಿಲ್ ನಾಯಕ್ ಅವರನ್ನು ಮಂತ್ರಿ ಮಾಡಿದ ಕೊಡುಗೆಯ ಋಣವನ್ನು ಸಮಾಜವು ಎಂದಿಗೂ ಮರೆಯುವುದಿಲ್ಲ. ಬಂಜಾರಾ ಸಮಾಜದ ಕಲ್ಯಾಣಕ್ಕಾಗಿ ಶ್ರಮ ಪಟ್ಟಿರುವ ಅಜಿತ್ ಪವಾರ್ ಅವರನ್ನು ಕಳೆದುಕೊಂಡು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಬಾರಾಮತಿಯ ರಾಜಕೀಯ ಧುರೀಣ ಅಜಿತ್ ಪವಾರ್ ಮಹಾರಾಷ್ಟ್ರ ರಾಜ್ಯದಲ್ಲಿ ದೊಡ್ಡ ರಾಜಕೀಯ ಶಕ್ತಿಯಾಗಿ ಮಹಾನ್ ಕೊಡುಗೆ ನೀಡಿ ಸ್ಮರಣೀಯರಾಗಿದ್ದಾರೆ. ಎನ್ ಡಿಎ ಅಂಗ ಪಕ್ಷವಾಗಿ ರಾಜ್ಯವನ್ನು ಅಭಿವೃದ್ಧಿಯಲ್ಲಿ ಮುಂಚೂಣಿಗೆ ತರುವಲ್ಲಿ ಇವರ ಪಾತ್ರ ಮಹತ್ತರವಾದುದು. ಅಗಲಿದ ಅವರ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿ ಕರುಣಿಸಲಿ ಹಾಗೂ ಕುಟುಂಬದವರಿಗೆ ಅಗಲುವಿಕೆಯ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಜಾಧವ್ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 28 Jan 2026 8:36 pm

ಕಲಬುರಗಿ | 2026ರ ಇಂಜಿನಿಯರಿಂಗ್ ದಿನಚರಿ ಬಿಡುಗಡೆ

ಕಲಬುರಗಿ: ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ ಬೆಂಗಳೂರು ಜಿಲ್ಲಾ ಘಟಕದ ವತಿಯಿಂದ ಪ್ರಕಟಿಸಲಾದ 2026ನೇ ವರ್ಷದ ಇಂಜಿನಿಯರಿಂಗ್ ದಿನಚರಿಯನ್ನು ಸಂಪರ್ಕ ಮತ್ತು ಕಟ್ಟಡಗಳ ವಿಭಾಗದ ಮುಖ್ಯ ಅಭಿಯಂತರ ಶರಣಪ್ಪಾ ಸುಲಗಂಟೆ ಅವರು ಬುಧವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ (ವಿನ್ಯಾಸ) ಮುಖ್ಯ ಅಭಿಯಂತರರ ಕಚೇರಿಯ ಅಧೀಕ್ಷಕ ಅಭಿಯಂತರ ಸುರೇಶ ಎಲ್. ಶರ್ಮಾ, ಉಪಮುಖ್ಯ ಇಂಜಿನಿಯರರಾದ ಶ್ರೀಮಂತ ಬೆನ್ನೂರ ಹಾಗೂ ಶಿವರಾಜ ಪಾಟೀಲ್, ಕಾರ್ಯನಿರ್ವಕ ಅಭಿಯಂತ ಸೂರ್ಯಕಾಂತ್ ಕಾರ್ಬರಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘದ ಗೌರವಾಧ್ಯಕ್ಷ ನೀಲಕಂಠ ಜಮಾದಾರ್, ಜಿಲ್ಲಾ ಘಟಕದ ಅಧ್ಯಕ್ಷ ಕಾಳಪ್ಪ, ಕಾರ್ಯದರ್ಶಿ ಮಾರ್ತಾಂಡ ಶಾಸ್ತ್ರಿ, ಉಪಾಧ್ಯಕ್ಷ ರಮೇಶ್ ನಾಯಕ್, ಕೋಶ್ಯಾಧ್ಯಕ್ಷ ಶಶಿಕಾಂತ್ ಕಮಲಾಪುರ, ತಜಮುಲ್ ಹುಸೇನ್, ಶರಣಗೌಡ ಪಾಟೀಲ್, ದುಂಡೇಶ್ ಸುಬೇದಾರ್, ಮುಸ್ತಕ ಅಹಮದ್ ಸೇರಿದಂತೆ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ಇದೇ ವೇಳೆ ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣ್ ರಾಜ್ ಚಪ್ಪರಬಂದಿ ಸೇರಿದಂತೆ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ವಾರ್ತಾ ಭಾರತಿ 28 Jan 2026 8:34 pm

ಕಾಪು: ಯಕ್ಷಗಾನ ಕಲಾರಂಗದ 84ನೇ ಮನೆ ಹಸ್ತಾಂತರ

ಕಾಪು, ಜ.28: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ವರ್ಷದಲ್ಲಿ ಅರಿವಳಿಕೆ ತರಬೇತಿ ವ್ಯಾಸಂಗ ಮಾಡುತ್ತಿರುವ ಉದಯ ಜೋಜಿ ಮತ್ತು ರತ್ನಾ ಜೋಗಿ ಅವರ ಪುತ್ರ ವಿದ್ಯಾರ್ಥಿ ಚೇತನ್ ಜೋಗಿ ಇವನಿಗೆ ಕಾಪು ತಾಲೂಕಿನ ಶಂಕರಪುರದಲ್ಲಿ ದಾನಿಗಳ ಪ್ರಾಯೋಜಕತ್ವದಲ್ಲಿ ನವೀಕರಿಸಿದ ‘ಜಯಲಕ್ಷ್ಮೀ ನಿಲಯ’ ಮನೆಯನ್ನು ಇತ್ತೀಚೆಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು. ಜ್ಯೋತಿ ಬೆಳಗಿಸಿ ಮನೆಯನ್ನು ಉದ್ಘಾಟಿಸಿದ ಶಾಸಕ ಗುರ್ಮೆ ಮಾತನಾಡಿ, ಯಕ್ಷಗಾನ ಕಲಾರಂಗಕ್ಕೆ ಇರುವ ಸಾಮಾಜಿಕ ಬದ್ಧತೆ, ಕಳಕಳಿ ಅನನ್ಯ. ಇದು ಸಾಮಾಜಿಕವಾಗಿ ಕೆಲಸ ಮಾಡುವ ಎಲ್ಲ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು. ಆದರ್ಶ ಆಸ್ಪತ್ರೆಯ ಆಡಳಿತಾಧಿಕಾರಿ ವಿಮಲಾ ಚಂದ್ರಶೇಖರ್ ಮಾತನಾಡಿ, ಯಕ್ಷಗಾನ ಕಲಾರಂಗದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿದು ಸಂತೋಷವಾಗಿದೆ. ಅರ್ಹ ಬಡ ವಿದ್ಯಾರ್ಥಿಗಳಿಗೆ ಮನೆ ನಿರ್ಮಿಸಿ ಯಾವ ಆಡಂಬರವಿಲ್ಲದೆ ಸರಳವಾಗಿ ಹಸ್ತಾಂತರಿಸುವ ಕ್ರಮ ಖಂಡಿತ ಪ್ರಶಂಸನೀಯ ಎಂದರು. ಮನೆ ನಿರ್ಮಿಸಿಕೊಟ್ಟ ದಾನಿ ಗುರುರಾಜ ಅಮೀನ್, ವಿದ್ಯಾರ್ಥಿ ಚೇತನ ಜೋಗಿಗೆ ಕಿವಿಮಾತು ಹೇಳಿದರು. ಜಯಲಕ್ಷ್ಮೀ ಗುರುರಾಜ ಅಮೀನ್, ನಿವೃತ್ತ ಪ್ರಾಧ್ಯಾಪಕಿ ಶಾರದಾ ಮೇಡಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗ ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ.ಕೆ. ಸದಾಶಿವ ರಾವ್, ಸದಸ್ಯರಾದ ಯು. ಎಸ್. ರಾಜಗೋಪಾಲ ಆಚಾರ್ಯ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ ಮುದ್ರಾಡಿ, ಹಿರಿಯಣ್ಣ ಕಿದಿಯೂರ್, ಕಿಶೋರ್ ಸಿ.ಉದ್ಯಾವರ, ಗಣಪತಿ ಭಟ್, ಎಚ್. ಎನ್. ವೆಂಕಟೇಶ್, ಅಶೋಕ ಎಂ., ನಾಗರಾಜ ಹೆಗಡೆ, ಸುದರ್ಶನ ಬಾಯರಿ, ವಿಶ್ವನಾಥ, ಚಂದ್ರಕಾಂತ ಕೆ. ಎನ್. ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 28 Jan 2026 8:34 pm

ತೆಂಕನಿಡಿಯೂರು ಕಾಲೇಜು: ಮತದಾರ ಜಾಗೃತಿ ಜಾಥಾ

ಉಡುಪಿ, ಜ.28: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಮೈಭಾರತ್ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರ ದಿನಾಚರಣೆ ಅಂಗವಾಗಿ ವಿಶೇಷಉಪನ್ಯಾಸ, ಮತದಾರ ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮತದಾರ ಜಾಗೃತಿ ಜಾಥವನ್ನು ಆಯೋಜಿಸಲಾಗಿತ್ತು. ಯುವಜನತೆ ಮತ್ತು ಮತದಾನ ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದ ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕ ಪ್ರಶಾಂತ್ ನೀಲಾವರ, ಯುವಜನತೆ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಅರ್ಥಪೂರ್ಣ ವಾಗಿ ಮತ ಚಲಾಯಿಸಿದಲ್ಲಿ ಮಾತ್ರ ನಮ್ಮ ಪ್ರಜಾಪ್ರಭುತ್ವ ಯಶಸ್ವಿಯಾಗ ಬಲ್ಲದು. ಯುವಜನತೆಯ ನಿರ್ಲಿಪ್ತತೆ ನಿಜಕ್ಕೂ ಕಳವಳಕಾರಿ ಎಂದರು. ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೆ ಸಂದರ್ಭದಲ್ಲಿ ಮೈ ಭಾರತ್ ಉಡುಪಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಉಲ್ಲಾಸ್ ಕೆ.ಟಿ. ನೂತನ ಮತದಾರರ ನೊಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ನೂತನ ಮತದಾರರನ್ನು ಅಭಿನಂದಿಸಿದರು. ಕಾಲೇಜಿನ ಐಕ್ಯುಎಸಿ ಸಂಚಾಲಕ ಡಾ.ವಿಷ್ಣುಮೂರ್ತಿ ಪ್ರಭು, ಶೈಕ್ಷಣಿಕ ಸಲಹೆಗಾರ ಡಾ.ಶ್ರೀಧರ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಂದೇಶ್, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಬಳಿಕ ಮತದಾರ ಜಾಗೃತಿ ಘೋಷಣಾ ಫಲಕಗಳೊಂದಿಗೆ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪಾದಯಾತ್ರೆಯ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿದರು. ಜಾಥಾದಲ್ಲಿ ಎನ್ನೆಸ್ಸೆಸ್, ಯುವ ರೆಡ್‌ಕ್ರಾಸ್ ಹಾಗೂ ರೋವರ್ -ರೇಂಜರ್ಸ್‌ ಸ್ವಯಂಸೇವಕರು ಭಾಗಿಯಾಗಿದ್ದರು.

ವಾರ್ತಾ ಭಾರತಿ 28 Jan 2026 8:32 pm

ವಿಧಾನ ಪರಿಷತ್‌ ಅಧಿವೇಶನ| ‘ಸದನದ ನಿಯಮಾವಳಿಗಳ ಪುಸ್ತಕ’ವನ್ನೇ ಹರಿದು ಹಾಕಿದ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು, ಜ.28: ‘ನಿಯಮಾವಳಿಗಳಂತೆ ಸದನವು ನಡೆಯುತ್ತಿಲ್ಲ’ ಎಂದು ಆರೋಪಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ತಿನ ನಿಯಮಾವಳಿಗಳ ಪುಸ್ತಕವನ್ನೇ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ಇದನ್ನು ಖಂಡಿಸಿ ಆಡಳಿತ ಪಕ್ಷದ ಸದಸ್ಯರು ವಿಪಕ್ಷ ಸದಸ್ಯರಿಗೆ ಧಿಕ್ಕಾರ ಕೂಗಿದರು. ಬುಧವಾರ ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಛಲವಾದಿ ನಾರಾಯಣಸ್ವಾಮಿ ಎದ್ದು ನಿಂತು, ‘ನಮ್ಮ ಬೇಡಿಕೆ ಈಡೇರಿಸಬೇಕು. ಸದನವು ಸರಿದಾರಿಯಲ್ಲಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ. ಸದನ ನ್ಯಾಯಬದ್ಧವಾಗಿ ನಡೆಯಬೇಕು. ಆದರೆ, ಈಗ ನ್ಯಾಯಬದ್ಧವಾಗಿ ನಡೆಯುತ್ತಿದೆಯೇ? ನಿಯಮಾವಳಿಗಳ ಪುಸ್ತಕಕ್ಕೆ ಬೆಲೆಯೇ ಇಲ್ಲವೇ? ಹಾಗದರೆ, ನಿಯಮಾವಳಿಗಳ ಪುಸ್ತಕವನ್ನು ಹರಿದು ಬಿಸಾಕಿ’ ಎಂದು ಪುಸ್ತಕವನ್ನು ಹರಿದು ಗಾಳಿಗೆ ತೂರಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ಎದ್ದು ನಿಂತು ಛಲವಾದಿ ನಾರಾಯಣಸ್ವಾಮಿ ಅವರ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು. ವಿರೋಧ ಪಕ್ಷದ ಸದಸ್ಯರಿಗೆ ಧಿಕ್ಕಾರ ಕೂಗಿದರು. ಈ ವೇಳೆ ಧರಣಿಯಲ್ಲಿದ್ದ ಸದಸ್ಯರನ್ನು ಹಾಗೂ ವಿಪಕ್ಷ ನಾಯಕರ ವರ್ತನೆಗೆ ಧಿಕ್ಕಾರ ಕೂಗುತ್ತಿದ್ದ ಆಡಳಿತ ಸದಸ್ಯರನ್ನು ನಿಯಂತ್ರಿಸಲು ಸಭಾಪತಿ ಬಸವರಾಜ ಹೊರಟ್ಟಿ ಹರಸಾಹಸಪಟ್ಟರು. ಸದನ ಹತೋಟಿಗೆ ಬಾರದ ಕಾರಣ ಸಭಾಪತಿಗಳು ಕಲಾಪವನ್ನು ಮುಂದೂಡಿದರು.

ವಾರ್ತಾ ಭಾರತಿ 28 Jan 2026 8:30 pm

ಯಕ್ಷಗಾನ ಉಳಿವಿಗೆ ಯುವ ಜನತೆಯ ಸಕ್ರಿಯ ಪಾತ್ರ ಅಗತ್ಯ: ಡಾ. ಎಚ್.ಎಸ್. ಬಲ್ಲಾಳ್

ಚಂದ್ರಗೌಡ ಗೋಳಿಕೆರೆಗೆ ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ

ವಾರ್ತಾ ಭಾರತಿ 28 Jan 2026 8:29 pm

ಕಲಬುರಗಿ | ಹಾರಕೂಡ ದಾಕ್ಷಾಯಣಿ ಎಸ್.ಅಪ್ಪ ಸೇರಿದಂತೆ ಆರು ಮಂದಿಗೆ ʼಅವ್ವ ಪ್ರಶಸ್ತಿʼ

ಕಲಬುರಗಿ: ಡೊಂಗರಗಾಂವದ ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಹತ್ತನೇ ವರ್ಷದ 2025ನೇ ಸಾಲಿನ ‘ಅವ್ವ’ ಪ್ರಶಸ್ತಿಗೆ ಹಾರಕೂಡ ಶ್ರೀ, ಡಾ.ದಾಕ್ಷಾಯಣಿ ಎಸ್. ಅಪ್ಪ ಸೇರಿದಂತೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪ್ರತಿಷ್ಠಾನದ ಅಧ್ಯಕ್ಷ ಡಾ. ಶರಣಬಸಪ್ಪ ವಡ್ಡನಕೇರಿ ಹಾಗೂ ಪ್ರತಿಷ್ಠಾನದ ಸಂಚಾಲಕ ಡಾ. ನಾಗಪ್ಪ ಗೋಗಿ ಅವರು, ಹಾರಕೂಡದ ಷ.ಬ್ರ.ಶ್ರೀ ಡಾ.ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳವರ ಚನ್ನಶ್ರೀವಾಣಿ (ಅಂಕಣ ಬರಹಗಳ ಸಂಕಲನ), ಗೊರೂರು ಪಂಕಜ ಅವರ ಬೆರಗು ರೇಖೆಗಳು(ಕವನ ಸಂಕಲನ ) ಕೃತಿಗಳನ್ನು ಅವ್ವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅದೇ ರೀತಿ ಶರಣಬಸವೇಶ್ವರ ಮಹಾಸಂಸ್ಥಾನದ ಡಾ.ದಾಕ್ಷಾಯಣಿ ಶರಣಬಸವಪ್ಪ ಅಪ್ಪ (ಶಿಕ್ಷಣ ಮತ್ತು ದಾಸೋಹ), ನಿವೃತ ಪ್ರಾಧ್ಯಾಪಕರು ಹಾಗೂ ಭಾಷಾ ವಿಜ್ಞಾನಿಗಳಾದ ಪ್ರೊ.ವಿ.ಜಿ.ಪೂಜಾರ(ಸಾಹಿತ್ಯ), ಕಲಬುರಗಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಿವಕುಮಾರ ಪಸಾರ,(ಕಾನೂನು) ಹಾಗೂ ಶರಣಮ್ಮ ಬಿ.ಪಾಟೀಲ( ಮಹಿಳಾ ಉದ್ಯಮಿ) ಅವರನ್ನು 2025 ನೇ ಸಾಲಿನ 'ಅವ್ವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆ.16ರ ಸೋಮವಾರದಂದು ಹಾರಕೂಡ ಶ್ರೀಮಠದಲ್ಲಿ ನಡೆಯಲಿದ್ದು, ಪ್ರಶಸ್ತಿಯು ನೆನಪಿನ ಕಾಣಿಕೆ, ಪ್ರಶಸ್ತಿ ಪತ್ರ ಹಾಗೂ ಸನ್ಮಾನ ಒಳಗೊಂಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 28 Jan 2026 8:28 pm

ಪತ್ನಿಯ ಕನ್ಯತ್ವ ಪರೀಕ್ಷೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದ ಪತಿ! ನ್ಯಾಯಧೀಶರಿಂದ ಮಹತ್ವದ ತೀರ್ಪು

ಪತ್ನಿಯ ಕನ್ಯತ್ವ ಪರೀಕ್ಷೆ ಅಥವಾ 'ಟೂ-ಫಿಂಗರ್ ಟೆಸ್ಟ್' ವಿಚ್ಛೇದನ ಪ್ರಕರಣದಲ್ಲಿ ಪ್ರಸ್ತುತವಲ್ಲ ಮತ್ತು ನಿರ್ಣಾಯಕವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ತಿಳಿಸಿದೆ. ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ್ದನ್ನು ಸಾಬೀತುಪಡಿಸಲು ವೈದ್ಯಕೀಯ ಪರೀಕ್ಷೆ ನಡೆಸಬೇಕೆಂಬ ಪತಿಯ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಇದು ಗೌಪ್ಯತೆಗೆ ಧಕ್ಕೆ ತರುತ್ತದೆ ಎಂದಿದೆ.

ವಿಜಯ ಕರ್ನಾಟಕ 28 Jan 2026 8:26 pm

ಮನರೇಗಾ ವಾಪಸತ್ತಿಗೆ ಆಗ್ರಹಿಸಿ ಪೆರ್ಡೂರಿನಲ್ಲಿ ಕಾಂಗ್ರೆಸ್ ಧರಣಿ

ಪೆರ್ಡೂರು, ಜ.28: ಯು.ಪಿ.ಎ ಸರಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಾದ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ, ಯೋಜನೆಯನ್ನು ದುರ್ಬಲಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ವತಿ ಯಿಂದ ಪೆರ್ಡೂರು ಪಂಚಾಯತ್ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕೃಷಿಕರು ತಮ್ಮ ಸ್ವಂತ ಜಮೀನಿನಲ್ಲಿ ಬಾವಿ, ಹೈನುಗಾರಿಕೆ, ತೋಟ ನಿರ್ಮಾಣ, ಎಡೆಸಸಿ ಮುಂತಾದ ಕೆಲಸಗಳ ಮೂಲಕ ಸ್ವತಃ ಉದ್ಯೋಗ ನಿರ್ಮಿಸಿಕೊಂಡು ಆದಾಯ ಗಳಿಸುವ ಅವಕಾಶ ನೀಡಿದ ಏಕೈಕ ಯೋಜನೆ ಉದ್ಯೋಗ ಖಾತ್ರಿ ಯೋಜನೆ ಎಂದು ಹೇಳಿದರು. ಇಂತಹ ಜನಪರ ಹಾಗೂ ಬಡವರ ಬದುಕಿಗೆ ಆಸರೆಯಾದ ಯೋಜನೆಯನ್ನು ರದ್ದುಪಡಿಸುವ ಉದ್ದೇಶ ಕೇಂದ್ರ ಸರಕಾರಕ್ಕೆ ನಾಚಿಕೆಯಾಗಬೇಕು. ಯು.ಪಿ.ಎ ಸರಕಾರ ಬಡವರಿಗೆ 100 ದಿನಗಳ ಕೆಲಸ ನೀಡಿ ಜನಸ್ನೇಹಿ ಸರಕಾರವಾಗಿತ್ತು ಎಂದು ಅವರು ತಿಳಿಸಿದರು. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ದೇಶದ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಹಾಗೂ ಕೃಷಿಕರಿಗೆ ನೇರವಾಗಿ ಲಕ್ಷಾಂತರ ರೂಪಾಯಿ ಆದಾಯ ತರುವ ಶಕ್ತಿ ಹೊಂದಿರುವ ಯೋಜನೆ ಎಂದರೆ ಅದು ಉದ್ಯೋಗ ಖಾತ್ರಿ ಯೋಜನೆ ಮಾತ್ರ. ಹಳ್ಳಿಗಳ ರಸ್ತೆ, ನೀರು ಸಂರಕ್ಷಣೆ, ಕೃಷಿ ಆಧಾರಿತ ಉದ್ಯೋಗ, ಸ್ವಂತ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯಗಳು-ಎಲ್ಲವೂ ಈ ಯೋಜನೆಯ ಫಲವಾಗಿ ಸಾಧ್ಯವಾಗಿದೆ ಎಂದು ಹೇಳಿದರು. ಬಡವರ ಬದುಕಿಗೆ ಆಸರೆಯಾದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನ ಗಳನ್ನು ದೇಶದ ಜನತೆ ಒಪ್ಪುವುದಿಲ್ಲ ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮಾಜಿ ಮಂಡಲ ಪ್ರಧಾನ ಶಾಂತಾರಾಮ ಸೂಡರು, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತ ರೈ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಪೂಜಾರಿ, ಪೆರ್ಡೂರು ಗ್ರಾಪಂ ಸದಸ್ಯರಾದ ನವೀನ್ ಸಾಲಿಯಾನ್, ದಯಾನಂದ್ ಶೆಟ್ಟಿ, ಶೋಭಾ ಗಾಮ್ಸ್, ಲಕ್ಷ್ಮಿ, ಉದಯ್ ಕುಲಾಲ, ರಾಘವೇಂದ್ರ, ಗಾಯತ್ರಿ, ಜಯಶ್ರೀ ಕುಲಾಲ್, ಎಸ್ಟಿ ಘಟಕದ ಬ್ಲಾಕ್ ಅಧ್ಯಕ್ಷ ರಾಮದಾಸ್ ನಾಯ್ಕ್, ರಾಜು ಸುವರ್ಣ, ಕಾರ್ತಿಕ್ ಆಚಾರ್ಯ, ಶಿವು ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 8:25 pm

ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ನಾಯಕತ್ವ ಯಾರಿಗೆ?

ಪವಾರ್ ಕುಟುಂಬ ರಾಜಕೀಯದಲ್ಲಿ ಯಾರಿಗೆ ಸಿಗಬಹುದು ಅಧಿಕಾರ?

ವಾರ್ತಾ ಭಾರತಿ 28 Jan 2026 8:22 pm

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕ ಮಹೋತ್ಸವ

ಕಾರ್ಕಳ, ಜ.28: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಮಹೋತ್ಸವದ ಮುಖ್ಯ ದಿನವಾದ್ದರಿಂದ ಬೆಳಗ್ಗೆಯಿಂದ ತಡರಾತ್ರಿ ತನಕ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಬೇಡಿಕೆಗಳನ್ನು ಸಮರ್ಪಿಸಿದರು. ಸಾಂಪ್ರದಾುಕವಾಗಿ, ಭಕ್ತರು ಬಲಿಪೂಜೆಗೆ ಹಾಜರಾಗುವ ಮೊದಲು ಪಾಪನಿವೇದನಾ ಸಂಸ್ಕಾರವನ್ನು ಸ್ವೀಕರಿಸಲು ಸಾಲಿನಲ್ಲಿ ನಿಂತರು. ದಿನಪೂರ್ತಿ ದೀರ್ಘ ಸಾಲುಗಳು ಕಾಣಿಸಿಕೊಂಡವು. ಪಡೆದ ಕೃಪೆಗಳಿಗಾಗಿ ಕೃತಜ್ಞತೆಯ ಸಂಕೇತವಾಗಿ ಭಕ್ತರು ಬಲಿಪೂಜೆ ಅರ್ಪಣೆಗಳನ್ನು ಸಮರ್ಪಿಸಿದರು. ಸ್ಥಳದಲ್ಲಿದ್ದ ಯಾಜಕರು ರೋಗಿಗಳು ಮತ್ತು ಮಕ್ಕಳ ಮೇಲೆ ತಮ್ಮ ಹಸ್ತವನ್ನು ಚಾಚಿ ಆಶೀರ್ವದಿಸಿ ಅವರ ಆರೋಗ್ಯ ಮತ್ತು ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ಮಹೋತ್ಸವದ ಎರಡು ಪ್ರಮುಖ ಬಲಿಪೂಜೆಗಳು ನಡೆದವು. ಬೆಳಗ್ಗಿನ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೋ ನೆರವೇರಿಸಿದರು. ಸಂಜೆಯ ಬಲಿಪೂಜೆಯನ್ನು ಅಜ್ಮಿರ್‌ನ ನೂತನ ಧರ್ಮಾಧ್ಯಕ್ಷ ಪರಮಪೂಜ್ಯ ಧರ್ಮಾಧ್ಯಕ್ಷ ಡಾ.ಜಾನ್ ಕಾರ್ವಾಲೋ ನೆರವೇರಿಸಿದರು. ಬಳಿಕ ಅವರು ತಮ್ಮ ಸಂದೇಶದಲ್ಲಿ, ನಾನು ನಿಮ್ಮನ್ನು ಪ್ರೀತಿಸಿದ್ದೇನೆ ಎಂಬ ಮಹೋತ್ಸವದ ಸಂದೇಶವನ್ನು ವಿವರಿಸಿ, ಕ್ರಿಸ್ತನ ನಿರ್ವ್ಯಾಜ ಪ್ರೀತಿಯನ್ನು ಅನುಭಸಿ, ಅದನ್ನು ದೀನದಲಿತರಾದ ಸಹೋದರ ಸಹೋದರಿಯ ರೊಂದಿಗೆ ಹಂಚಿಕೊಳ್ಳುವ ಮೂಲಕ ವಿಸ್ತರಿಸುವ ಅಗತ್ಯವಿದೆ ಎಂದು ಹೇಳಿದರು. ಇತರ ಬಲಿಪೂಜೆಗಳನ್ನು ಐಸಿವೈಎಂ ನಿರ್ದೇಶಕ ವಂ.ಸ್ಟೀವನ್ ಫೆನಾರ್ಂಡಿಸ್, ಚಿಕ್ಕಮಗಳೂರು ಸುಂಡೇಕೆರೆಯ ವಂ.ಅನಿಲ್ ಲೋಬೋ, ಮಂಗಳೂರು ಗ್ಲಾಡ್ಸಮ್ ಹೋಮ್‌ನ ವಂ.ಕ್ಲಾನಿ ಡಿಸೋಜ, ಕಡಬ ಶಾಲೆಯ ಪ್ರಾಂಶುಪಾಲ ವಂ.ಸುನಿಲ್ ಪಿಂಟೊ, ಮಿಲಾಗ್ರಿಸ್ ಕ್ಯಾಥೆಡ್ರಲ್ ಸಹಾಯಕ ಧರ್ಮಗುರು ವಂ.ಪ್ರದೀಪ್ ಕಾರ್ಡೋಜ, ಮಂಗಳೂರು ಮಂಗಳ ಜ್ಯೋತಿ ನಿರ್ದೇಶಕ ವಂ.ರೋತ್ ಡಿಕೋಸ್ಟಾ, ಮೂಡಬಿದ್ರೆ ಅಲಂಗಾರ್ ಸಿಎಸ್ ಎಸ್‌ಆರ್ ಸಭೆಯ ವಂ.ರೋಹನ್ ಡಯಾಸ್ ನೆರವೇರಿಸಿ ರೋಗಿಗಳ ಮೇಲೆ ಪ್ರಾರ್ಥಿಸಿದರು. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಉತ್ಸವದ ಶುಭಾಶಯಗಳನ್ನು ಕೋರಿದರು. ನಾಳೆ ಸಂಪ್ರದಾಯದಂತೆ ಕೃತಜ್ಞತೆಯ ತಾಯಿಯಾದ ಮಾತೆ ಮೇರಿಯವರ ಗೌರವಾರ್ಥ ಬಲಿಪೂಜೆ ಅರ್ಪಿಸಲಾಗುವುದು. ಸಂಜೆ 6ಗಂಟೆಯ ಬಲಿಪೂಜೆಯೊಂದಿಗೆ ಮಹೋತ್ಸವದ ಕಾರ್ಯಕ್ರಮಗಳು ಅಂತ್ಯ ಗೊಳ್ಳಲಿವೆ. ಆ ಬಳಿಕ ಜಗತ್ ಜ್ಯೋತಿ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.  

ವಾರ್ತಾ ಭಾರತಿ 28 Jan 2026 8:21 pm

ಕಲಬುರಗಿ | ಜ.29 ರಂದು ‘ಕವಿರಾಜಮಾರ್ಗ’ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ: ಬಿ.ಎಚ್.ನಿರಗುಡಿ

ಕಲಬುರಗಿ : ಕನ್ನಡದ ಮೊಟ್ಟಮೊದಲ ಲಕ್ಷಣ ಗ್ರಂಥವಾಗಿರುವ “ಕವಿರಾಜಮಾರ್ಗ” (ಕ್ರಿ.ಶ. 850) ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಜ.29 ರಂದು ಬೆಳಗ್ಗೆ 10.45 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪುಸ್ತಕ ಪ್ರಾಧಿಕಾರ ಸದಸ್ಯ, ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಎಚ್.ನಿರಗುಡಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು, ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಲಬುರಗಿ ಹಾಗೂ ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಅವರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ವಿಚಾರ ಸಂಕಿರಣವನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ರಮೇಶ ಲಂಡನಕರ್ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ವಹಿಸಲಿದ್ದಾರೆ. ಆಶಯ ನುಡಿಯನ್ನು ಕಲಾನಿಕಾಯದ ಡೀನರಾದ ಪ್ರೊ.ಎಚ್. ಟಿ. ಪೋತೆ ಅವರು ನೀಡಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ವಿರುಪಣ್ಣ ಕಲ್ಲೂರು, ಡಾ.ಸಿದ್ಧರಾಮ ಹೊನಕಲ್ ಹಾಗೂ ಮಹಿಪಾಲರೆಡ್ಡಿ ಮುನ್ನೂರು ಅವರು ಭಾಗವಹಿಸಲಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಬಿ. ಎಚ್. ನಿರಗುಡಿ ಅವರು ಮಾಡಲಿದ್ದಾರೆ. ವಿಚಾರ ಸಂಕಿರಣದ ಮೊದಲ ಗೋಷ್ಠಿ ಮಧ್ಯಾಹ್ನ 12.30 ರಿಂದ 1.30ರವರೆಗೆ ನಡೆಯಲಿದ್ದು, “ಕವಿರಾಜಮಾರ್ಗದ ವೈಶಿಷ್ಟ್ಯ” ವಿಷಯವನ್ನು ಡಾ.ಭಾಗ್ಯ ಜ್ಯೋತಿ ಹಾಗೂ “ಕವಿರಾಜಮಾರ್ಗದ ಭಾಷೆ” ಕುರಿತು ಡಾ.ನಾಗೇಂದ್ರ ಮಸೂತಿ ಉಪನ್ಯಾಸ ನೀಡಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಡಾ.ಶ್ರೀಶೈಲ ನಾಗರಾಳ ವಹಿಸಲಿದ್ದಾರೆ. ಎರಡನೇ ಗೋಷ್ಠಿ ಮಧ್ಯಾಹ್ನ 2.30 ರಿಂದ 3.30ರವರೆಗೆ ನಡೆಯಲಿದ್ದು, “ಕವಿರಾಜಮಾರ್ಗದ ಜಾನಪದೀಯ ಅಂಶಗಳು” ಕುರಿತು ಡಾ. ಚಿ. ಸಿ. ನಿಂಗಣ್ಣ ಹಾಗೂ “ಕವಿರಾಜಮಾರ್ಗ – ನಾಡು–ನಾಡವರ್–ಕಾವ್ಯ” ವಿಷಯವನ್ನು ಡಾ. ಚಿದಾನಂದ ಚಿಕ್ಕಮಠ ಅವರು ಪ್ರಸ್ತುತಪಡಿಸಲಿದ್ದಾರೆ. ಈ ಗೋಷ್ಠಿಗೆ ಡಾ.ಸೂರ್ಯಕಾಂತ ಸುಜ್ಯಾತ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಮಾರೋಪ ನುಡಿಯನ್ನು ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಅವರು ನೀಡಲಿದ್ದು, ಅಧ್ಯಕ್ಷತೆಯನ್ನು ಮತ್ತೆ ಪ್ರೊ.ಎಚ್.ಟಿ.ಪೋತೆ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಸಂತೋಷ ಹಾನಗಲ್ಲ, ಡಾ.ರಾಜೇಂದ್ರ ಯರನಾಳೆ ಹಾಗೂ ಸುರೇಶ ಬಡಿಗೇರ ಅವರು ಪಾಲ್ಗೊಳ್ಳಲಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಆಸಕ್ತಿ ಹೊಂದಿರುವ ಸಂಶೋಧಕರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಆಯೋಜಕರಾದ ಬಿ.ಎಚ್.ನಿರಗುಡಿ ಹಾಗೂ ಡಾ. ಸಂತೋಷ ಹಾನಗಲ್ಲ ಅವರು ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 28 Jan 2026 8:19 pm

ಕೆಲಸಕ್ಕೆಂದು ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ, ಜ.28: ಬೈಂದೂರು ತಾಲೂಕು ಯೆಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ ಪೂಜಾರಿ (40) ಎಂಬವರು 2024ರ ಫೆಬ್ರವರಿ 18ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆಯಿಂದ ಕೆಲಸ ಕ್ಕೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254- 251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 100(0820-2526444) ಅನ್ನು ಸಂಪರ್ಕಿಸಬಹುದು ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 28 Jan 2026 8:19 pm

Gujrat | S I R ವೇಳೆ ಮತ ಪಟ್ಟಿಯಲ್ಲಿ ಹೆಸರು ಅಳಿಸುವಂತೆ BJP ಕಾರ್ಪೊರೇಟರ್ ಆಕ್ಷೇಪಿಸಿದ್ದ, ಡೋಲಕ್ ವಾದಕ ಮೀರ್ ಹಾಜಿ ಕಸಮ್ ಪದ್ಮಶ್ರೀ ಗೌರವ!

ಹೊಸದಿಲ್ಲಿ: ಗುಜರಾತ್ ಮತಪಟ್ಟಿಯಲ್ಲಿ ಡೋಲಕ್ ವಾದಕ ಮೀರ್ ಹಾಜಿ ಕಸಮ್ ಅವರ ಹೆಸರಿಗೆ ಬಿಜೆಪಿ ನಾಯಕ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ವಿವಾದ ಭುಗಿಲೆದ್ದ ಬೆನ್ನಲ್ಲೇ, ಗಣರಾಜ್ಯೋತ್ಸವದ ಹಿಂದಿನ ದಿನ ಪ್ರಕಟಗೊಂಡ ಪದ್ಮಶ್ರೀ ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ. 74 ವರ್ಷದ ಡೋಲಕ್ ವಾದಕ ಮೀರ್ ಹಾಜಿಭಾಯಿ ಕಸಮ್‌ಭಾಯಿ ಅವರು ಹಾಜಿ ರಾಮಕ್ಡು ಹಾಗೂ ಹಾಜಿ ರಾಥೋಡ್ ಎಂದೇ ಖ್ಯಾತರಾಗಿದ್ದಾರೆ. ಇದಕ್ಕೂ ಮುನ್ನ, ಹಾಜಿ ರಾಥೋಡ್ ಹಾಗೂ ಅವರ ಕುಟುಂಬವು ಜುನಾಗಢ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗೈರಾಗಿದೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದೆ ಎಂದು ಆಕ್ಷೇಪಿಸಿ, ಜನವರಿ 13ರಂದು ಜುನಾಗಢ ನಗರ ಪಾಲಿಕೆ ಕಾರ್ಪೊರೇಟರ್ ಸಂಜಯ್ ಮನ್ವಾರ, ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಡಿ ಫಾರಂ–7 ಅನ್ನು ಸಲ್ಲಿಸಿದ್ದರು. ಮಂಗಳವಾರ ಜುನಾಗಢದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಜುನಾಗಢ ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಲಲಿತ್ ಪನ್ಸಾರ, ಮನ್ವಾರ ಸಲ್ಲಿಸಿರುವ ಫಾರಂ–7 ಅನ್ನು ಪ್ರದರ್ಶಿಸಿದ್ದರು ಹಾಗೂ ಬಿಜೆಪಿ ನಾಯಕನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಕಾಂಗ್ರೆಸ್ ಪಕ್ಷದ ವಕ್ತಾರ ಮನೀಶ್ ದೋಶಿ ಈ ಫಾರಂನ ಚಿತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. “ಹಾಜಿ ರಾಮಕ್ಡು ಜುನಾಗಢದಲ್ಲಿ ಪ್ರತಿಭಾವಂತ ಡೋಲಕ್ ವಾದಕರಾಗಿ ಖ್ಯಾತ ಹಾಗೂ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಕೇಂದ್ರ ಸರ್ಕಾರ ಅವರಿಗೆ ಎರಡು ದಿನಗಳ ಹಿಂದೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಿ ಗೌರವಿಸಿದೆ. ಅವರು ಜುನಾಗಢ, ಗುಜರಾತ್ ಹಾಗೂ ಭಾರತದ ಹೆಮ್ಮೆಯಾಗಿದ್ದಾರೆ. ಅವರು ದೇಶ ಹಾಗೂ ವಿದೇಶಗಳಲ್ಲಿ 3,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ನೀಡಿದ್ದಾರೆ. 2022ರಲ್ಲಿ ಅವರಿಗೆ ‘ಗುಜರಾತ್ ಗರಿಮಾ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಾಜಿಭಾಯಿ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರಾದ ಇಕ್ಬಾಲ್ ರಾಥೋಡ್, ಎಜಾಝ್, ರಶೀದಾಬೆನ್ ಹಾಗೂ ಹನೀಫ್‌ಭಾಯಿ ಅವರ ಹೆಸರುಗಳಿಗೆ ಬಿಜೆಪಿ ಕಾರ್ಪೊರೇಟರ್ ಮನ್ವಾರ ಆಕ್ಷೇಪ ವ್ಯಕ್ತಪಡಿಸಿ ಫಾರಂ–7 ಸಲ್ಲಿಸಿರುವುದು ಖಂಡನೀಯ. ಈ ಕೃತ್ಯದ ಮೂಲಕ ಜುನಾಗಢ ಹಾಗೂ ನಮ್ಮ ದೇಶದ ಹೆಮ್ಮೆಗೆ ಮಸಿ ಬಳಿದ ಬಿಜೆಪಿ ಕಾರ್ಪೊರೇಟರ್ ವಿರುದ್ಧ ಕಟ್ಟುನಿಟ್ಟಿನ ಶಾಸನಾತ್ಮಕ ಕ್ರಮ ಜರುಗಿಸಬೇಕು. ಬಿಜೆಪಿ ಕಾರ್ಪೊರೇಟರ್‌ಗಳು ನಿರ್ದಿಷ್ಟ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡಿದ್ದು, ಜುನಾಗಢ ನಗರ ಪಾಲಿಕೆಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಡಿ ನಿರ್ದಿಷ್ಟ ಸಮುದಾಯದ ಮತದಾರರ ಹೆಸರುಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಸಗಟಾಗಿ ಸಾವಿರಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ ಎಂದು The Indian Express ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಕುರಿತು The Indian Express ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ 74 ವರ್ಷದ ಹಾಜಿಭಾಯಿ ಕಸಮ್‌ಭಾಯಿ, “ಇಂತಹ ಘಟನೆಯಿಂದ ನನ್ನ ಹೃದಯ ಒಡೆದುಹೋಗಿದೆ. ಮಾಧ್ಯಮಗಳಲ್ಲಿ ವೈರಲ್ ಆಗಿರುವ ಸುದ್ದಿ ತುಣುಕುಗಳ ಮೂಲಕ ಮಂಗಳವಾರ ನನಗೆ ಈ ವಿಷಯ ತಿಳಿಯಿತು. ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಹಾಗೂ ನನ್ನ ಕುಟುಂಬದ ಸದಸ್ಯರ ಹೆಸರು ಸೇರಿಸಲು ಆಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿಯ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ನಮ್ಮ ಬಳಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಹಾಗೂ ಪಾಸ್‌ಪೋರ್ಟ್‌ಗಳು ಸೇರಿದಂತೆ ಎಲ್ಲ ಪ್ರಮುಖ ದಾಖಲೆಗಳೂ ಇವೆ. ಸಂಬಂಧಿತ ಪ್ರಾಧಿಕಾರಗಳು ಸೂಚಿಸಿದಾಗ ನಮ್ಮ ಎಲ್ಲ ದಾಖಲೆಗಳನ್ನು ತೋರಿಸಲು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ. ಇದೇ ವೇಳೆ, “ಭಾರತ ಸರ್ಕಾರ ನನಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವುದರಿಂದ ರೋಮಾಂಚಿತನಾಗಿದ್ದೇನೆ. ನನ್ನ ಸಂತೋಷವನ್ನು ವ್ಯಕ್ತಪಡಿಸಲು ನನ್ನ ಬಳಿ ಪದಗಳೇ ಇಲ್ಲ. ನನ್ನ ಉಪನಾಮ ‘ರಾಥೋಡ್’ ಆಗಿದ್ದು, ಉಪಜಾತಿಯ ಹೆಸರು ‘ಮೀರ್’ ಎಂದೂ ಹೇಳಲು ಬಯಸುತ್ತೇನೆ” ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 28 Jan 2026 8:18 pm

ವಿಧಾನ ಪರಿಷತ್‌ನಲ್ಲಿ ಸದನದ ಬಾವಿಗಿಳಿದು ವಿಪಕ್ಷದ ಸದಸ್ಯರಿಂದ ಧರಣಿ

ಬೆಂಗಳೂರು, ಜ.28: ಬುಧವಾರ ವಿಧಾನ ಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣ ಕುರಿತು ಆಡಳಿತ ಪಕ್ಷದ ಸದಸ್ಯರು ಮಂಡಿಸಿದ ವಂದನಾ ನಿರ್ಣಯವನ್ನು ವಿರೋಧಿಸಿ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಧರಣಿಯನ್ನು ಮುಂದುವರೆಸಿದರು. ಮಂಗಳವಾರ ನಡೆದ ಕಲಾಪದಲ್ಲಿ ರಾಜ್ಯಪಾಲರ ಭಾಷಣ ಕುರಿತ ವಂದನಾ ನಿರ್ಣಯದ ಮೇಲೆ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಚರ್ಚೆ ಆರಂಭಿಸಿದ್ದರು. ಹೀಗಾಗಿ ಬುಧವಾರದಂದು ಬೇರೆ ಸದಸ್ಯರು ಚರ್ಚೆ ಮುಂದುವರೆಸಲು ಹೋದಾಗ, ರಾಜ್ಯಪಾಲರ ಭಾಷಣ ಕುರಿತು ಖಂಡನೆ ವ್ಯಕ್ತಪಡಿಸಿದ ಸಂಬಂಧ ಆಡಳಿತ ಪಕ್ಷವು ವಿರೋಧ ವ್ಯಕ್ತಪಡಿಸಬೇಕು ಎಂದು ವಿಪಕ್ಷ ಸದಸ್ಯರು ಧರಣಿ ನಡೆಸಿದರು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ‘ರಾಜ್ಯಪಾಲರು ಭಾಷಣ ಮಾಡಿಲ್ಲ ಎಂದಾದ ಮೇಲೆ, ವಂದನೆ ನಿರ್ಣಯ ಹೇಗಾಗುತ್ತದೆ? ಆಡಳಿತ ಪಕ್ಷದವರು ಮಾಡುತ್ತಿರುವುದು ವಂದನಾ ನಿರ್ಣಯವೋ ಅಥವಾ ಖಂಡನಾ ನಿರ್ಣಯವೋ? ಮೊದಲು ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು. ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ‘ರಾಷ್ಟ್ರಪತಿ ಹಾಗೂ ರಾಜ್ಯಪಾಲರನ್ನು ಟೀಕೆಗೆ ಒಳಪಡಿಸುವಂತಿಲ್ಲ. ಇದು ಎರಡೂ ಪಕ್ಷದ ಸದಸ್ಯರಿಗೆ ಅನ್ವಯಿಸಲಿದ್ದು, ನಿಯಮಗಳಲ್ಲಿ ಉಲ್ಲೇಖವಾಗಿದೆ. ಹೀಗಾಗಿ ಈ ಬಗ್ಗೆ ಗಮನಹರಿಸಬೇಕು. ನಿಯಮ ಮೀರಿದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು. ಸದನದ ಬಾವಿಗಿಳಿದು ಧರಣಿ ಮುಂದುವರೆಸಿದ್ದ ವಿಪಕ್ಷಗಳ ನಡೆಯನ್ನು ಕಾಂಗ್ರೆಸ್ ಸದಸ್ಯರು ಟೀಕಿಸಿದರು. ಸದನ ಹತೋಟಿಗೆ ಬಾರದಿರುವುದನ್ನು ಕಂಡು ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮುಂದೂಡಿ, ಆಡಳಿತ ಹಾಗೂ ಪ್ರತಿಪಕ್ಷ ನಾಯಕರೊಡನೆ ತಮ್ಮ ಕೊಠಡಿಯಲ್ಲಿ ಹೊರಟ್ಟಿ ಸಂಧಾನ ಸಭೆ ನಡೆಸಿದರು. ಆದರೆ ಮತ್ತೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದರು. ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ‘ಸಭಾ ನಾಯಕರು ಹೇಳಿರುವ ಖಂಡನಾ ನಿರ್ಣಯ ಪದವನ್ನು ಕಡತದಿಂದ ತೆಗೆಯುವಂತೆ ಆದೇಶಿಸಿದರು. ಈ ವೇಳೆ ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು ಮಂದೂಡಲಾಯಿತು.

ವಾರ್ತಾ ಭಾರತಿ 28 Jan 2026 8:18 pm

ಫೆ.2: ಜೀವರಕ್ಷಕ ಸಿಬ್ಬಂದಿಗಳ ಆಯ್ಕೆ ಪ್ರಕ್ರಿಯೆ

ಉಡುಪಿ, ಜ.28: ಉಡುಪಿ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಬೀಚ್, ಆಸರೆ ಬೀಚ್, ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪ, ಕಾಪು ಬೀಚ್ ಹಾಗೂ ಪಡುಬಿದ್ರಿ ಮುಖ್ಯ ಬೀಚ್‌ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಪ್ರವಾಸೋದ್ಯಮ ಇಲಾಖೆಯಿಂದ 20 ಮಂದಿಗೆ ಜೀವರಕ್ಷಕ ತರಬೇತಿ ನೀಡಿ, ಮುಂದಿನ ದಿನಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಆಯ್ಕೆ ಪ್ರಕ್ರಿಯೆಯು ಫೆಬ್ರವರಿ 2ರಂದು ನಡೆಯಲಿದ್ದು, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ ಅಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದ ಬಲಿ ಹಾಜರಾಗಿ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ 6 ದಿನಗಳ ಕಾಲ ತರಬೇತಿ ಆಯೋಜಿಸಲಾಗುವುದು. ಮಾಸಿಕ ವೇತನ 14,958 ರೂ.ನೊಂದಿಗೆ ಪಿಎಫ್, ಇಎಸ್‌ಐ ಸೌಲಭ್ಯ ಕಲ್ಪಿಸಲಾಗುವುದು. ಕನಿಷ್ಠ 18ರಿಂದ 40 ವರ್ಷ ವಯೋಮಿತಿಯೊಳಗಿನ, 1 ಕಿ.ಮಿ. ಓಟ ಮತ್ತು 400ಮೀ. ಈಜಲು ಸಾಮರ್ಥ್ಯ ಹೊಂದಿರುವ ಹಾಗೂ ಯಾವುದೇ ಆರೋಗ್ಯ ಸಮಸ್ಯೆ ಹೊಂದಿರದ ಆಸಕ್ತರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಳಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ ಕೊಠಡಿ ಸಂಖ್ಯೆ 303 ಅಥವಾ ದೂ.ಸಂಖ್ಯೆ 0820-2574868 ಅನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 28 Jan 2026 8:17 pm

ಬಾರಾಮತಿ ವಿಮಾನ ಪತನ: ಪೈಲಟ್ ರೀಡ್‌ಬ್ಯಾಕ್ ಮಾಡದಿರುವುದೇ ದುರಂತಕ್ಕೆ ಕಾರಣ, ಏನಿದು?

ಮುಂಬೈ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನದ ಅಪಘಾತ ಉಂಟಾಗಿ ಐವರು ಮೃತಪಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ. ಅಪಘಾತಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದೆ. ಪೈಲಟ್ 'ಲ್ಯಾಂಡಿಂಗ್ ಕ್ಲಿಯರೆನ್ಸ್‌ನ ರೀಡ್‌ಬ್ಯಾಕ್ ನೀಡಿಲ್ಲ'. ಇದರಿಂದ ಹೀಗಾಗಿರಬಹುದು ಎಂಬ ಆತಂಕಕಾರಿ ಅಂಶವನ್ನು ಬಹಿರಂಗಪಡಿಸಿದೆ. ಜಾಗತಿಕ ವಿಮಾನಯಾನ ಪ್ರೋಟೋಕಾಲ್

ಒನ್ ಇ೦ಡಿಯ 28 Jan 2026 8:14 pm

ಉಡುಪಿ: ರಾ.ಹೆಣ್ಣು ಮಕ್ಕಳ ದಿನಾಚರಣೆ; ಜನಜಾಗೃತಿ ಜಾಥಾ

ಉಡುಪಿ, ಜ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ- ಪಿ.ಎನ್.ಡಿ.ಟಿ ಉಡುಪಿ ಜಿಲ್ಲೆ ಹಾಗೂ ನ್ಯೂಸಿಟಿ ನಸಿರ್ಂಗ್ ವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಕ್ಕೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬೀದ್ ಗದ್ಯಾಳ್, ಹೆಣ್ಣು ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣ ವನ್ನು ನಿರ್ಮಿಸಲು, ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿ ಸುವ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಹೆಣ್ಣು ಮಕ್ಕಳ ಹಕ್ಕು ಮತ್ತು ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲು ಹಾಗೂ ಹೆಣ್ಣು ಮಕ್ಕಳು ಸಶಕ್ತರಾಗಲು ಸಮಾಜ ಅವಕಾಶ ಮಾಡಿಕೊಡಬೇಕು ಎಂದು ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ್ ರಾವ್, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶ, ಮಹತ್ವ, ಭ್ರೂಣಲಿಂಗ ಪತ್ತೆ ಮತ್ತು ತಡೆಗಟ್ಟುವ ಕಾನೂನುಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿ ಕಾರಿಗಳು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಸಮಾಲೋಚಕರು, ಮಣಿಪಾಲ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಜಾಥಾ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ಮಣಿಪಾಲದ ಕಾಯಿನ್ ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಪನಗೊಂಡಿತು.

ವಾರ್ತಾ ಭಾರತಿ 28 Jan 2026 8:11 pm

ದಾವಣಗೆರೆ| ಜಿಲ್ಲಾ ಮಟ್ಟದ ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆ

ದಾವಣಗೆರೆ: ದಲಿತರ ಕೇರಿಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಯಬೇಕು. ದಲಿತರ ಅಂತ್ಯ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಸೇರಿದಂತೆ ಜಿಲ್ಲೆಯಲ್ಲಿ ದಲಿತ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆಯಲ್ಲಿ ಆಗ್ರಹ ಕೇಳಿ ಬಂದವು.  ಬುಧವಾರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್‌ಪಿ ಉಮಾ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಎಸ್ಸಿ, ಎಸ್ಟಿ ಕುಂದು ಕೊರತೆ ಸಭೆಯಲ್ಲಿ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ದಲಿತ ಮುಖಂಡರು, ದಲಿತ ಹಳ್ಳಿಗಳ ಸಣ್ಣ ಪುಟ್ಟ ಕಿರಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟವಾಗುತ್ತಿದೆ. ಇದರಿಂದ ಬಾಲಕರು, ಯುವಕರು ದಾರಿ ತಪ್ಪುತ್ತಿದ್ದಾರೆ ಮತ್ತು ಕುಟುಂಬಗಳು ಬೀದಿಗೆ ಬರುತ್ತಿವೆ. ಹಲವು ಬಾರಿ ದೂರು ನೀಡಿದರೂ ಅಬಕಾರಿ ಮತ್ತು ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ವ್ಯವಸ್ಥಿತ ಜಾಲದಂತೆ ನಡೆಯುತ್ತಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಎಸ್‌ಪಿ ಉಮಾ ಪ್ರಶಾಂತ್, ಸಭೆಯಲ್ಲಿ ಹಾಜರಿದ್ದ ಅಬಕಾರಿ ಇಲಾಖೆ ಅಧಿಕಾರಿಗೆ ನಾಳೆಯಿಂದಲೇ ದೂರು ಬಂದಿರುವ ಕಡೆಗಳಲ್ಲಿ ದಾಳಿ ನಡೆಸಿ ಜಾಗೃತಿ ಜೊತೆಗೆ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಮೊಕದ್ದಮೆ ದಾಖಲಿಸಿ ಎಂದು ಸೂಚಿಸಿದರು. ಆರಂಭದಲ್ಲಿ ಮಾತನಾಡಿದ ಎಸ್‌ಪಿ ಉಮಾ ಪ್ರಶಾಂತ್, ಕಳೆದ ಬಾರಿಯ ಸಭೆಯಲ್ಲಿ ಒಟ್ಟು 81 ವಿಷಯಗಳು ಕೇಳಿ ಬಂದಿದ್ದವು. ಈ ಪೈಕಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ 22 ವಿಷಯಗಳನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಉಳಿದ 6 ವಿಷಯಗಳಿಗೆ ಸಮಯಾವಕಾಶದ ಅಗತ್ಯವಿದೆ ಎಂದು ತಿಳಿಸಿದರು. ಸಭೆಯಲ್ಲಿ ಚರ್ಚೆಯಾದ ಮತ್ತೊಂದು ಪ್ರಮುಖ ವಿಷಯವೆಂದರೆ ಮತಾಂತರ ಹೊಂದಿದವರು ಎಸ್‌ಸಿ ಕೋಟಾದ ಸೌಲಭ್ಯ ಪಡೆಯುತ್ತಿರುವುದು. ಮತಾಂತರಗೊಂಡ ವ್ಯಕ್ತಿಗಳು ಈಗಲೂ ಪರಿಶಿಷ್ಟ ಜಾತಿಯ ಪ್ರಮಾಣಪತ್ರಗಳನ್ನು ಬಳಸಿ ಮೀಸಲಾತಿ, ಶಿಕ್ಷಣ ಮತ್ತು ಉದ್ಯೋಗದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದು ಮೂಲ ದಲಿತರಿಗೆ ಮತ್ತು ಸಂವಿಧಾನದ ಆಶಯಕ್ಕೆ ಮಾಡುತ್ತಿರುವ ಅನ್ಯಾಯ. ಕೂಡಲೇ ಅಂತಹವರನ್ನು ಗುರುತಿಸಿ ಅವರ ಸೌಲಭ್ಯಗಳನ್ನು ರದ್ದುಗೊಳಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು.   ಹೊನ್ನಾಳಿಯ ಹಾಸ್ಟೆಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೆರಿಗೆಯಾಗಿದ್ದು, ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್ಸಿ ಹಾಸ್ಟೆಲ್ ಗಳಿಗೆ ಸಿಸಿಟಿವಿ ಅಳವಡಿಸಬೇಕು. ಪ್ರತಿ ಹಾಸ್ಟೆಲ್‌ಗಳಿಗೆ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಬೇಕು. ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಇದಕ್ಕೆ ಉತ್ತರಿಸಿದ ಎಸ್ಪಿ ಉಮಾ ಪ್ರಶಾಂತ್, ಎಲ್ಲ ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳಿಗೆ ಮಹಿಳಾ ವಾರ್ಡನ್‌ಗಳೇ ಇದ್ದಾರೆ. ಈ ಘಟನೆ ಹೇಗೆ ನಡೆಯಿತು ಎಂಬ ಕುರಿತು ಹೊನ್ನಾಳಿ ಪೊಲೀಸರಿಂದ ತನಿಖೆ ಮಾಡಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಡಿವೈಎಸ್‌ಪಿಗಳಾದ ಬಸವರಾಜ್ ಬಿ.ಎಸ್, ರುದ್ರೇಶ್ ಉಜ್ಜನಕೊಪ್ಪ, ಅಬಕಾರಿ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತು ಜಿಲ್ಲೆಯ ಎಸ್ಸಿ ಎಸ್ಟಿ ವರ್ಗಗಳ ಮುಖಂಡರುಗಳು ಹಾಗೂ ಕುಂದುಕೊರತೆ ಸಲ್ಲಿಸುವವರು ಸಭೆಯಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 28 Jan 2026 8:10 pm

ಫ್ಲೋರಿಡಾದಲ್ಲಿ ತ್ಯಾಗರಾಜ–ಪುರಂದರ ದಾಸರ ಆರಾಧನಾ ಉತ್ಸವ; ಸಪ್ತಸಾಗರದಾಚೆ ಕನ್ನಡದ ಆಧ್ಯಾತ್ಮಿಕ ಚೈತನ್ಯದ ದರ್ಶನ

ಸಪ್ತ ಸಾಗರದಾಚೆ ಭಾರತೀಯ ಸಂಸ್ಕೃತಿಯ ಕಂಪನ್ನು ಪಸರಿಸುತ್ತಿರುವ ಅನಿವಾಸಿ ಭಾರತೀಯರು, ನಮ್ಮ ಭವ್ಯ ಆಧ್ಯಾತ್ಮ ಪರಂಪರೆಯ ಪಾಲನೆಯಲ್ಲಿ ಮುಂಚೂಣಿಯಲ್ಲಿದೆ. ಅದರಲ್ಲೂ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಈ ನೆಲದ ಸಾಂಸ್ಕೃತಿಕ ವೈಭವವನ್ನು ಇಡೀ ಜಗತ್ತಿಗೆ ಪರಿಚಯಿಸುತ್ತಿದ್ದಾರೆ. ಅದರಂತೆ ದಕ್ಷಿಣ ಫ್ಲೋರಿಡಾದ ನಂದಿ ಕನ್ನಡ ಕೂಟದ ವತಿಯಿಂದ ಇತ್ತೀಚಿಗೆ ತ್ಯಾಗರಾಜ-ಪುರಂದರ ದಾಸರ ಆರಾಧನಾ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ನಂದಿ ಕನ್ನಡ ಕೂಟದ ಸದಸ್ಯರು ದಾಸರ ಶಾಶ್ವತ ಸಂಗೀತ ಪರಂಪರೆಯನ್ನು ಸ್ಮರಿಸಿ ಗೌರವ ಸಮರ್ಪಿಸಿದರು. ಇಲ್ಲಿದೆ ಮಾಹಿತಿ.

ವಿಜಯ ಕರ್ನಾಟಕ 28 Jan 2026 8:03 pm

ಬೆಳಗಾವಿ| ಪ್ರಿಯತಮೆಯೊಂದಿಗೆ ಮಲಪ್ರಭಾ ನದಿಗೆ ಹಾರಿ ವಿವಾಹಿತ ಯುವಕ ಆತ್ಮಹತ್ಯೆ

ಬೆಳಗಾವಿ: ಎರಡನೇ ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿವಾಹಿತ ಯುವಕನೊಬ್ಬ ತನ್ನ ಪ್ರಿಯತಮೆಯೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಿಗ್ಗೆ ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ತಾಲ್ಲೂಕಿನ ಮಲ್ಲಾಪುರ ಗ್ರಾಮದ ಜಗದೀಶ್‌ ಯಲ್ಲಪ್ಪ ಕವಳೇಕರ (27) ಹಾಗೂ ಗಂಗಮ್ಮ ಪವಾಡೆಪ್ಪ ತ್ಯಾಪಿ (26) ಎಂದು ಗುರುತಿಸಲಾಗಿದೆ. ಜಗದೀಶ್‌ ಪತ್ನಿ ಪ್ರಥಮ ಹೆರಿಗೆಗಾಗಿ ತವರುಮನೆ ಬೋಚಬಾಳ ಗ್ರಾಮಕ್ಕೆ ತೆರಳಿದ್ದಳು. ಆಕೆ ಮರಳಿ ಬಂದ ಬಳಿಕ ಎರಡನೇ ಮದುವೆಯ ವಿಚಾರವನ್ನು ಇತ್ಯರ್ಥಪಡಿಸೋಣ ಎಂದು ಕುಟುಂಬಸ್ಥರು ತಿಳಿಸಿದ್ದಕ್ಕೆ ವಿರೋಧ ವ್ಯಕ್ತವಾಗಿದ್ದು, ಈ ವಿಚಾರವಾಗಿ ಮನೆಯಲ್ಲಿ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಸೋಮವಾರ ಮನೆ ತೊರೆದಿದ್ದ ಜಗದೀಶ್‌ ಹಾಗೂ ಗಂಗಮ್ಮ, ಬುಧವಾರ ಬೆಳಿಗ್ಗೆ ಮಲಪ್ರಭಾ ನದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ರಾಮದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಇಬ್ಬರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ಇಬ್ಬರ ಮೃತದೇಹ ಅಪ್ಪಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.   ಘಟನೆಗೆ ಸಂಬಂಧಿಸಿದಂತೆ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ವಾರ್ತಾ ಭಾರತಿ 28 Jan 2026 7:56 pm