Google Trends: ಭಾರತ vs ದಕ್ಷಿಣ ಆಫ್ರಿಕಾ 2ನೇ ಟೆಸ್ಟ್: ಭಾರತಕ್ಕೆ ದಾಖಲೆಯ ಗುರಿ ನೀಡಿದ ಹರಿಣಗಳ ಪಡೆ
ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 548 ರನ್ಗಳ ಬೃಹತ್ ಗುರಿ ನೀಡಿದೆ. ಇದು ಭಾರತದಲ್ಲಿ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ತವರಿನಲ್ಲಿ ತಂಡವೊಂದು ನೀಡಿದ ಅತಿ ದೊಡ್ಡ ಗುರಿಯಾಗಿದೆ. ಈ ಮೊದಲು ಆಸ್ಟ್ರೇಲಿಯಾ 2004 ರಲ್ಲಿ 542 ರನ್ಗಳ ಗುರಿ ನೀಡಿತ್ತು. ಸೌತ್ ಆಫ್ರಿಕಾ ತಂಡವು 288 ರನ್ಗಳ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 260 ರನ್ಗಳನ್ನು ಎರಡನೇ ಇನ್ನಿಂಗ್ಸ್ನಲ್ಲಿ ಕಲೆಹಾಕಿದೆ. ಈ ಗುರಿಯನ್ನು ಬೆನ್ನತ್ತುವುದು ಭಾರತಕ್ಕೆ ಕಠಿಣ ಸವಾಲಾಗಿದೆ.
2026ರ ಟಿ20 ವಿಶ್ವಕಪ್ ವೇಳಾಪಟ್ಟಿ - ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಒಂದೂ ಪಂದ್ಯವಿಲ್ಲ!
2026ರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಪಂದ್ಯಗಳು ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುವುದಿಲ್ಲ. ಹಿಂದೆ ನಡೆದ ಕಾಲ್ತುಳಿತ ದುರಂತದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿದೆ.
ಉಪ್ಪಿನಂಗಡಿ | ಆವರಣಗೋಡೆ ಕುಸಿದು ಅಡುಗೆ ಕೋಣೆ ಧ್ವಂಸ : ಅಪಾರ ನಷ್ಟ
ಉಪ್ಪಿನಂಗಡಿ, ನ.25: ಮನೆಯೊಂದರ ನಿರ್ಮಾಣ ಹಂತದ ಆವರಣಗೋಡೆ ದರೆ ಸಹಿತ ಕುಸಿದು ಬಿದ್ದ ಪರಿಣಾಮ ಪಕ್ಕದ ಮನೆಯ ಅಡುಗೆ ಕೋಣೆ ಧ್ವಂಸಗೊಂಡ ಘಟನೆ 34 ನೆಕ್ಕಿಲಾಡಿಯ ಸುಭಾಶ್ನಗರದ ಜನತಾ ಕಾಲನಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಇಲ್ಲಿನ ಜಬ್ಬಾರ್ ಎಂಬವರು ತನ್ನ ಮನೆಯನ್ನು ನಂದಾವರದ ಇಲ್ಯಾಸ್ ಎಂಬವರಿಗೆ ಬಾಡಿಗೆಗೆ ನೀಡಿದ್ದರು. ನ.24ರಂದು ಇಲ್ಯಾಸ್ರ ಕುಟುಂಬ ಈ ಮನೆಗೆ ಬಂದಿದ್ದು, ಕುಟುಂಬ ಹಾಗೂ ಬಂದ ನೆಂಟರಿಷ್ಟರಿಗೆ ಸಂಜೆ ಅಡುಗೆ ಕೋಣೆಯಲ್ಲಿ ಔತಣದ ತಯಾರಿ ನಡೆಯುತ್ತಿತ್ತು. ಈ ಮನೆಯ ಹಿಂಬದಿ ಎತ್ತರದ ಜಾಗದಲ್ಲಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಸುಶೀಲಾ ಎಂಬವರಿಗೆ ಸೇರಿದ ಮನೆಯಿದ್ದು, ಸುಮಾರು 10 ದಿನಗಳಿಂದ ಇದಕ್ಕೆ ಆವರಣಗೋಡೆ ಕಟ್ಟುವ ಕೆಲಸಗಳು ನಡೆಯುತ್ತಿತ್ತು. ನ.24ರಂದು ಸಂಜೆ ಸುಮಾರು ಐದು ಗಂಟೆಯ ವೇಳೆಗೆ ಆವರಣ ಗೋಡೆ ಕುಸಿಯುವ ಲಕ್ಷಣಗಳು ಗೋಚರಿಸಿದ್ದು, ಇದನ್ನು ಕಂಡ ಮೇಸ್ತ್ರಿ ಬೊಬ್ಬೆ ಹಾಕಿ ಕೆಳಗಿನ ಮನೆಯವರನ್ನು ಮನೆಯಿಂದ ಹೊರಗೆ ಓಡುವಂತೆ ಎಚ್ಚರಿಸಿದ್ದಾರೆ. ಈ ವೇಳೆ ಅಡುಗೆ ಕೋಣೆಯಲ್ಲಿದ್ದವರೆಲ್ಲಾ ಹೊರಗೋಡಿ ಬಂದಿದ್ದರು. ಕ್ಷಣಾರ್ಧದಲ್ಲಿ ದರೆ ಸಹಿತ ಆವರಣಗೋಡೆ ಕುಸಿದು ಕೆಳಗಿನ ಮನೆಯ ಅಡುಗೆ ಕೋಣೆ ಮೇಲೆ ಬಿದ್ದಿದೆ. ಇದರಿಂದ ಜಬ್ಬಾರ್ ಅವರ ಮನೆಯ ಅಡುಗೆ ಕೋಣೆ ಸಂಪೂರ್ಣ ಧ್ವಂಸವಾಗಿದ್ದು, ಮನೆಗೂ ಹಾನಿ ಯಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್, ಗ್ಯಾಸ್, ಗ್ಯಾಸ್ ಸ್ಟವ್, ಪಾತ್ರೆಗಳು ಮಣ್ಣಿನಡಿ ಸಿಲುಕಿಕೊಂಡಿವೆ. ಮನೆಯಲ್ಲಿ ಇಲ್ಯಾಸ್ರ ಕುಟುಂಬ ಸದಸ್ಯರಲ್ಲದೆ, ನೆಂಟರಿಷ್ಟರೂ ಇದ್ದು, ಹೆಚ್ಚಿನವರು ಅಡುಗೆ ಕೋಣೆಯಲ್ಲಿ ಔತಣ ತಯಾರಿ ಸುವ ಕೆಲಸದಲ್ಲಿದ್ದರು. ಮೇಲಿನ ಮನೆ ಯಲ್ಲಿ ಆವರಣ ಗೋಡೆ ಕಟ್ಟುತ್ತಿದ್ದ ಮೇಸ್ತ್ರಿ ನೀಡಿದ ಎಚ್ಚರಿಕೆಯ ಮೇರೆಗೆ ಇವರೆಲ್ಲಾ ಮನೆಯಿಂದ ಹೊರಗೋಡಿ ಬಂದಿದ್ದರಿಂದ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಮಲ್ಪೆ ದಕ್ಕೆಗೆ ಬಿದ್ದು ವ್ಯಕ್ತಿ ಮೃತ್ಯು
ಮಲ್ಪೆ, ನ.25: ಮಲ್ಪೆ ಬಂದರಿನ ಧಕ್ಕೆಯ ನೀರಿಗೆ ಬಿದ್ದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕ್ಲಿಟಸ್ ವಿ. (56) ಎಂದು ಗುರುತಿಸಲಾಗಿದೆ. ಮೀನುಗಾರಿಕೆ ಬೋಟ್ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ನ.22ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ನ.24ರಂದು ಬೆಳಗ್ಗೆ ಪಡುಕೆರೆ ಪಾಪನಾಶಿನಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಎಂ ಜೊತೆ ದಿಢೀರ್ ಸಭೆ ನಡೆಸಿದ ಸಚಿವ ಜಮೀರ್, ಕುತೂಹಲ ಕೆರಳಿಸಿದ ನಡೆ... Karnataka Government
ಕರ್ನಾಟಕ ರಾಜಕೀಯದಲ್ಲಿ ಇದೀಗ ದೊಡ್ಡ ಬಿರುಗಾಳಿ ಸೃಷ್ಟಿಯಾಗಿದ್ದು, ಯಾವುದೇ ಕ್ಷಣದಲ್ಲಿ ಸಿಎಂ ಬದಲಾವಣೆ ಗ್ಯಾರಂಟಿ ಅನ್ನೋ ಚರ್ಚೆ ಜೋರಾಗಿದೆ. ಇಷ್ಟೆಲ್ಲದರ ನಡುವೆ ದೆಹಲಿ ಮತ್ತು ಕರ್ನಾಟಕ ನಾಯಕರ ನಡುವೆ ಮಹತ್ವದ ಮಾತುಕತೆ ಆರಂಭವಾಗಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಗೊಂದಲ ಕೂಡ ಹೆಚ್ಚಾಗಿದೆ. ಒಂದು ಕಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಣ ದೆಹಲಿಗೆ ಓಡಾಡುತ್ತಾ, ಸಿಎಂ ಸ್ಥಾನ ಬದಲಾಗಬೇಕು
ರಾಯಚೂರು | ಜಮೀನು ಮಾರಾಟ ವಿಚಾರಕ್ಕೆ ಸಂಬಂಧಿಸಿ ವಿವಾದ : ಪತ್ನಿಯನ್ನು ಕೊಂದ ಪತಿ
ಸಿರವಾರ : ಬೊಮ್ಮನಾಳ ಗ್ರಾಮದಲ್ಲಿ ಜಮೀನು ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿ ನಡೆದ ವಾಗ್ವಾದ ತಾರಕಕ್ಕೇರಿ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಬಸ್ಸಮ್ಮ ಕೊಲೆಯಾದ ಮಹಿಳೆ. ಬಸ್ಸಮ್ಮ ಪತಿ ಬಸವಂತರಾಯ 10 ಎಕರೆ ಜಮೀನು ಹೊಂದಿದ್ದು, ಲಕ್ಷಾಂತರ ರೂ. ಸಾಲ ಮಾಡಿದ್ದ. ಅದನ್ನು ತೀರಿಸಲು 1 ಎಕರೆ ಜಮೀನು ಮಾರಾಟ ಮಾಡಲು ಮುಂದಾಗಿದ್ದ. ಆದರೆ ಪತ್ನಿ ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾಳೆ. ಇದೇ ಕಾರಣಕ್ಕೆ ಪತಿ-ಪತ್ನಿ ನಡೆವೆ ವಾಗ್ವಾದ ನಡೆದು ಬಸವಂತರಾಯ ಒನಕೆ ಮತ್ತು ಪೈಪ್ನಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿದ್ದ ಬಸ್ಸಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿ ಬಸವಂತರಾಯನನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಸ್ಪರ ಗೌರವಿಸುವುದು ಸಂಘಟನೆಗಳ ಗುರಿಯಾಗಲಿ : ಯು.ಟಿ.ಖಾದರ್
ಬಂಟರ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ
ಮಡಿಕೇರಿ | ಪಿಕ್ ಅಪ್ ವಾಹನ ಪಲ್ಟಿ; ಚಾಲಕ, ಕಾರ್ಮಿಕರಿಗೆ ಗಾಯ
ಮಡಿಕೇರಿ : ಟಯರ್ ಸ್ಫೋಟಗೊಂಡು ಪಿಕ್ ಅಪ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಕಾರ್ಮಿಕರು ಗಾಯಗೊಂಡಿರುವ ಘಟನೆ ಸೋಮವಾರಪೇಟೆ-ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಪಿಕ್ ಅಪ್ ವಾಹನ ಪಲ್ಟಿಯಾದ ಸಂದರ್ಭ ವಾಹನ ಚಾಲಕ ರವಿ ಎಂಬುವವರ ಸೊಂಟಕ್ಕೆ ತೀವ್ರ ಗಾಯಗಳಾಗಿದೆ. ಕಾರ್ಮಿಕ ಬಾಬು ಹಾಗೂ ಇನ್ನೋರ್ವ ಅಸ್ಸಾಂ ಮೂಲದ ಕಾರ್ಮಿಕನ ಕಾಲಿಗೂ ಗಾಯವಾಗಿದೆ. ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸಮೀಪದ ಕಟ್ಟಡದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನ ದೇವಾಲಯದಲ್ಲಿ ಕಾಳಿ ವಿಗ್ರಹಕ್ಕೆ ಮೇರಿ ರೂಪ: ಪೂಜಾರಿ ಬಂಧನ
ಮುಂಬೈನ ಚೆಂಬೂರ್ ಪ್ರದೇಶದ ದೇವಾಲಯವೊಂದರಲ್ಲಿ ಕಾಳಿ ದೇವಿಯ ವಿಗ್ರಹಕ್ಕೆ ಮೇರಿ ಮಾತೆಯ ವೇಷ ಧರಿಸಲಾಗಿತ್ತು. ಇದನ್ನು ಕಂಡು ಭಕ್ತರು ಆಕ್ರೋಶಗೊಂಡರು. ದೇವಿಯ ಆದೇಶದಂತೆ ಕನಸಿನಲ್ಲಿ ಹೀಗೆ ಮಾಡಿದ್ದಾಗಿ ಪೂಜಾರಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಧಾರ್ಮಿಕ ನಂಬಿಕೆಗಳ ಉಲ್ಲಂಘನೆ ಎಂದು ಭಕ್ತರು ಆರೋಪಿಸಿದ್ದಾರೆ.
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣದ ಕುರಿತು ಸಂಶೋಧನೆ ಮತ್ತು ಚುಟುವಟಿಕೆ ಕೈಗೊಳ್ಳಲು ಅಲ್ಪಸಂಖ್ಯಾತ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಸ್ಥಾಪಿಸಲಾಗಿರುವ 'ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರ'ದ ಕಾರ್ಯವೈಖರಿ ಕುರಿತು ಮಾಡಲಾಗಿರುವ ಆರೋಪಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ವಜೀರ್ ಬೇಗ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಸಂಶೋಧನಾ ಕೇಂದ್ರದ ಕಾರ್ಯವೈಖರಿ ಬಗ್ಗೆ ಅರ್ಜಿಯಲ್ಲಿ ಮಾಡಲಾಗಿರುವ ಆರೋಪಗಳನ್ನು ಪರಿಶೀಲಿಸಿ, ತಪ್ಪುಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ನಿರ್ದೇಶಿಸಿ ಪಿಐಎಲ್ ಇತ್ಯರ್ಥಪಡಿಸಿತು. ಅರ್ಜಿದಾರರ ಆಕ್ಷೇಪವೇನು? ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ಕಲ್ಯಾಣ ಸಂಶೋಧನಾ ಸಂಸ್ಥೆ ಹಾಗೂ ದಿವಂಗತ ದೇವರಾಜ ಅರಸು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಕಲ್ಯಾಣ ಕಾರ್ಯಕ್ರಮಗಳ ಕುರಿತು ಸಂಶೋಧನಾ ಅಧ್ಯಯನ ನಡೆಸಿ ವರದಿ ಸಲ್ಲಿಸಲು 2015ರಲ್ಲಿ ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿದೆ. ಈ ಸಂಸ್ಥೆಗೆ ವರ್ಷಕ್ಕೆ 4.5 ಕೋಟಿ ರೂ. ಹಣ ನೀಡಲಾಗುತ್ತಿದೆ. ಆದರೆ, ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಂಶೋಧನೆ ನಡೆಸಿದ ಉದಾಹರಣೆ ಇಲ್ಲ. ನಿರ್ದೇಶಕರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಅದೇ ರೀತಿ ಸಂಶೋಧನಾ ಕೇಂದ್ರದ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿದರು.
ರೈಲ್ವೇ ಇಲಾಖೆಯಿಂದ ದಲಿತ ಕುಟುಂಬಗಳ ಮನೆ ನೆಲಸಮ; ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಬಿಡಿಎ ಅಭಿವೃದ್ದಿಪಡಿಸಿ ಜಾಗ ಹಂಚಿಕೆ ಮಾಡಿದ ಬಡಾವಣೆಯಲ್ಲಿ ಬಿಬಿಎಂಪಿ ಮಂಜೂರು ಮಾಡಿದ ಹಣದಲ್ಲಿ ಕಟ್ಟಿಕೊಂಡಿದ್ದ ದಲಿತ ಕುಟುಂಬಗಳ 29 ಮನೆಗಳನ್ನು ನೆಲಸಮಗೊಳಿಸಿರುವ ರೈಲ್ವೇ ಇಲಾಖೆಯ ಕ್ರಮ ಪ್ರಶ್ನಿಸಿ ಸಂತ್ರಸ್ತ ಕುಟುಂಬಗಳು ಹೈಕೋರ್ಟ್ ಮೆಟ್ಟಿಲೇರಿವೆ. ಕೆ.ಜಿ. ಹಳ್ಳಿಯ ಎಚ್ಬಿಆರ್ 1ನೇ ಹಂತ ವಾರ್ಡ್ ನಂಬರ್ 23ರಲ್ಲಿನ ಸರ್ವೆ ನಂಬರ್ 71ರಲ್ಲಿ ನಿರ್ಮಿಸಲಾಗಿದ್ದ ಮನೆ ಕಳೆದುಕೊಂಡಿರುವ ಯು. ರಾಣಿ ಸೇರಿ 14 ಮಂದಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ವಾದ ಮಂಡಿಸಿ, ಬಿಡಿಎ 1985ರಲ್ಲಿ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ಹಂಚಿಕೆ ಮಾಡಿತ್ತು. 2015-16ರಲ್ಲಿ ಬಿಬಿಎಂಪಿ ಮನೆ ಕಟ್ಟಿಸಿಕೊಳ್ಳಲು ಪ್ರತಿ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಸಾಲ ಸಹಾಯಧನ ನೀಡಿತ್ತು. ಎಸ್ಸಿ-ಎಸ್ಟಿ ಕುಟುಂಬಗಳು ಅಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಅವರಿಗೆ ಬಿಬಿಎಂಪಿ ವತಿಯಿಂದ ಮೂಲಸೌಕರ್ಯಗಳನ್ನೂ ಕೊಡಲಾಗಿದ್ದು, ಹಕ್ಕುಪತ್ರಗಳನ್ನೂ ವಿತರಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಆದರೆ, ರೈಲ್ವೇ ಇಲಾಖೆ ಯಾವುದೇ ನೋಟಿಸ್ ನೀಡದೆ ಅಕ್ಟೋಬರ್ 31ರಂದು ಏಕಾಏಕಿ ಬುಲ್ಡೋಜರ್ನಿಂದ 29 ಮನೆಗಳನ್ನು ಧ್ವಂಸಗೊಳಿಸಿದೆ. ಇದರಿಂದ, ನೂರಾರು ದಲಿತ ಕುಟುಂಬಗಳ ಬೀದಿಪಾಲಾಗಿದ್ದು, ಸದ್ಯ ಅವರೆಲ್ಲ ಸ್ಥಳೀಯ ಲಿಡ್ಕರ್ ಭವನದಲ್ಲಿ ನವೆಂಬರ್ 30ರವರೆಗೆ ತಾತ್ಕಾಲಿಕವಾಗಿ ಆಶ್ರಯ ಪಡೆದುಕೊಂಡಿದ್ದಾರೆ. ವಿವಾದ ಇತ್ಯರ್ಥವಾಗುವ ತನಕ ಹೆಚ್ಚುವರಿಯಾಗಿ 30 ದಿನಗಳ ಕಾಲ ಆಶ್ರಯ ಒದಗಿಸಲು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ, ರೈಲ್ವೇ ಇಲಾಖೆ, ಬಿಬಿಎಂಪಿ, ಬಿಡಿಎ, ಕೊಳಗೇರಿ ಮಂಡಳಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತಲ್ಲದೆ, ಅಲ್ಲದೇ ಸಂತ್ರಸ್ತ ಕುಟುಂಬಗಳಿಗೆ ನವೆಂಬರ್ 30ರ ನಂತರ ಹೆಚ್ಚುವರಿಯಾಗಿ 30 ದಿನಗಳ ತಾತ್ಕಾಲಿಕ ಆಶ್ರಯ ನೀಡುವ ಬಗ್ಗೆ ನಿಲುವು ತಿಳಿಸುವಂತೆ ಬಿಬಿಬಿಎಂಪಿ ಹಾಗೂ ಇತರರಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 26ಕ್ಕೆ (ಬುಧವಾರ) ಮುಂದೂಡಿತು.
ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ; ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ
ಬೆಂಗಳೂರು : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಎಸ್. ಮೋಹನದಾಸ್ ಹೆಗ್ಗಡೆ ಅವರು ‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ಎಂಬ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. ರಾಜ್ಯದ ಕೊಬ್ಬರಿ ಆರ್ಥಿಕತೆ, ರೈತರ ಜೀವನಮಟ್ಟ ಮತ್ತು ಪರಿಸರ ಸಂರಕ್ಷಣೆಯನ್ನು ಸಮಗ್ರವಾಗಿ ಬಲಪಡಿಸುವ ನಿಟ್ಟಿನಲ್ಲಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ಕೊಬ್ಬರಿ ತೋಟಗಳ ಮೇಲೆ ಗಂಭೀರವಾದ ಬಿಳಿ ನೋಣಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವ ಜೊತೆಗೆ, ಜಾಗತಿಕ ಮಟ್ಟದಲ್ಲಿ ಪುನರುಜ್ಜೀವನಾಧಾರಿತ, ಜೈವಿಕ, ತಂತ್ರಜ್ಞಾನಚಾಲಿತ ಕೃಷಿಗೆ ಕರ್ನಾಟಕವನ್ನು ಮಾದರಿಯಾಗಿ ರೂಪಿಸುವುದು ಈ ವರದಿಯ ಮುಖ್ಯ ಗುರಿಯಾಗಿದೆ. ಮಂಡ್ಯ, ತುಮಕೂರು, ಹಾಸನ, ಉಡುಪಿ ಜಿಲ್ಲೆಗಳಲ್ಲಿ ಎನ್ಕಾರ್ಸಿಯಾ ಮತ್ತು ಕ್ರೈಸೊಪರ್ಲಾ ಜೀವ ಪರೋಪಜೀವಿಗಳ ಉತ್ಪಾದನಾ ಜೈವ-ಲ್ಯಾಬ್ಗಳನ್ನು ಸ್ಥಾಪನೆ ಮಾಡಬೇಕು. ಸ್ಥಳೀಯವಾಗಿ ಉತ್ಪಾದನೆಯಾಗುವ ಬಯೋಟ್ರಾಪ್ಗಳು, ಬಯೋ-ಕಿಟ್ಗಳನ್ನು ವಿತರಣೆ ಮಾಡಬೇಕು. ಡ್ರೋನ್ ಮೂಲಕ ಕೀಟ ನಕ್ಷೆ(ಪೆಸ್ಟ್ ಮ್ಯಾಪಿಂಗ್), ಬೇವಿನ ಸ್ಪ್ರೇ, ಬಯೋ-ರಿಲೀಸ್ ಅನ್ನು ಸಿಂಪಡಿಸಬೇಕು ಎಂದು ವರದಿಯಲ್ಲಿ ತಿಳಿಸಲಾಗಿದೆ. ಜೈವಿಕ ನಿಯಂತ್ರಣ ಸಾಮಗ್ರಿಗಳ ಮೇಲೆ ಶೇ.50 ಸಹಾಯಧನ ನೀಡಬೇಕು. ಮಿಶ್ರ ಬೇಸಾಯ ಪದ್ಧತಿ ಮತ್ತು ನೈಸರ್ಗಿಕ ನಿಯಂತ್ರಣಕ್ಕೆ ರೈತ ಪ್ರೋತ್ಸಾಹ ನಿಧಿ ಸ್ಥಾಪನೆ ಮಾಡಬೇಕು. ಬಯೋ-ಎಜೆಂಟ್ ಸಂಶೋಧನೆ ಮತ್ತು ಬಯೋ-ಟೆಕ್ ಆವಿಷ್ಕಾರಗಳಿಗೆ ಅನುದಾನವನ್ನು ಒದಗಿಸಬೇಕು. ಕೃಷಿಯ ಬಗ್ಗೆ ಸಾರ್ವಜನಿಕ ಜಾಗೃತಿ ಅಭಿಯಾನ ಮಾಡಬೇಕು ಎಂದು ಎಸ್.ಮೋಹನದಾಸ್ ಹೆಗ್ಗಡೆ ಅವರು ವರದಿಯಲ್ಲಿ ಶಿಫಾರಸು ಮಾಡಿದ್ದಾರೆ. ‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ವರದಿಯ ಶಿಫಾರಸುಗಳನ್ನು ಮಂಡ್ಯ, ತುಮಕೂರು, ಹಾಸನ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಬೇಕಾಗಿದೆ. ಹೀಗಾಗಿ ಈ ಕುರಿತು ಪರಿಶೀಲಿಸಿ ಸಾಧಕ-ಬಾಧಕಗಳನ್ನು ವಿರ್ಮಶಿಸಿ ಅನುಮತಿಯನ್ನು ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರಕಾರದ ಕಾರ್ಯದರ್ಶಿಗಳು ತೋಟಗಾರಿಕೆ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಮೊಳಗಿದ ಕೂಗು : ರಾಜಧಾನಿಯಲ್ಲಿ 10 ಸಾವಿರ ಮಹಿಳೆಯರಿಂದ ಅನಿರ್ಧಿಷ್ಟಾವಧಿ ಧರಣಿ
ಬೆಂಗಳೂರು : ರಾಜ್ಯ ಸರಕಾರ ಕೂಡಲೇ ಮದ್ಯ ಮಾರಾಟ ಮತ್ತು ಸೇವೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯದ ನಾನಾ ಜಿಲ್ಲೆಗಳ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ‘ಮದ್ಯ ನಿಷೇಧ ಆಂದೋಲನ’ದ ಅಡಿಯಲ್ಲಿ ನಗರದ ಫ್ರೀಡಂ ಪಾರ್ಕ್ನಲ್ಲಿ ಮಂಗಳವಾರ ಬೃಹತ್ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು. ಮದ್ಯ ಮಾರಾಟಕ್ಕೆ ಪರವಾನಗಿ ನೀಡಲು ಗ್ರಾಮ ಸಭೆಗಳಿಗೆ ಅಧಿಕಾರ ನೀಡಬೇಕು. ಸಭೆಗಳಲ್ಲಿ ಶೇ.20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿ ಹಳ್ಳಿಗಳಲ್ಲೂ ಮಹಿಳೆಯರ ಜಾಗೃತಿ ಸಮಿತಿಗಳನ್ನು ರಚಿಸಬೇಕು. ಸಮಿತಿಗಳಿಗೆ ಅರೆ ನ್ಯಾಯಿಕ ಅಧಿಕಾರ ನೀಡಬೇಕೆಂದು ಧರಣಿನಿರತ ಮಹಿಳೆಯರು ಸರಕಾರವನ್ನು ಒತ್ತಾಯಿಸಿದರು. 20 ವರ್ಷಗಳಿಂದ ಕಾನೂನಾತ್ಮಕವಾಗಿ ಮತ್ತು ಕಾನೂನುಬಾಹಿರವಾಗಿ ಮದ್ಯ ಮಾರಾಟ ಹೆಚ್ಚುತ್ತಲೇ ಇದೆ. ಸರಕಾರವು ಕೇವಲ ಮದ್ಯ ಮಾರಾಟದಿಂದ ಬರುವ (ಅಬಕಾರಿ) ಆದಾಯದ ಮೇಲೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪುಟ್ಟ ಮಕ್ಕಳೂ ಕೂಡ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಪುರುಷರು ಮತ್ತು ಮಕ್ಕಳು ಕುಡಿತಕ್ಕೆ ತುತ್ತಾಗುತ್ತಿರುವುದರಿಂದ ಮಹಿಳೆಯರು ತಮ್ಮ ಕುಟುಂಬಗಳನ್ನು ಸಲಹುವುದಕ್ಕಾಗಿ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುವಂತಾಗಿದೆ ಎಂದು ಧರಣಿನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿದ ಮದ್ಯ ನಿಷೇಧ ಆಂದೋಲನದ ಸಂಘಟಕಿ ಸ್ವರ್ಣಾ ಭಟ್, ಮದ್ಯ ನಿಷೇಧಕ್ಕಾಗಿ 10 ವರ್ಷಗಳಿಂದ ವಿಭಿನ್ನವಾಗಿ ಹೋರಾಟ ನಡೆಸುತ್ತಲೇ ಇದ್ದೇವೆ. 2015ರಲ್ಲಿ ರಾಯಚೂರಿನಲ್ಲಿ ಬೃಹತ್ ಸತ್ಯಾಗ್ರಹ ನಡೆಸಿದ್ದೆವು. ಮೇಧಾ ಪಾಟ್ಕರ್ ಅವರೊಂದಿಗೂ ಚಳವಳಿ ನಡೆಸಿದ್ದೆವು. ಮದ್ಯ ನಿಷೇಧಕ್ಕಾಗಿ ನೀರಿನಲ್ಲಿ ನಿಂತು ಜಲ ಸತ್ಯಾಗ್ರಹ ನಡೆಸಿದ್ದೇವೆ. ಅಬಕಾರಿ ಅಧಿಕಾರಿಗಳಿಗೆ ಗಾಂಧಿ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಇಲ್ಲವೆಂದು ಪ್ರತಿಭಟನೆ ನಡೆಸಿದ್ದೇವೆ. ಆದರೂ, ಸರಕಾರಗಳು ನಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮದ್ಯ ಮಾರಾಟಕ್ಕೆ ಪರವಾನಗಿ(ಲೈಸನ್ಸ್) ವಿತರಿಸಲು ಹರಿಯಾಣ, ಮಹಾರಾಷ್ಟ್ರ ರಾಜಸ್ಥಾನದಂತ ರಾಜ್ಯಗಳಲ್ಲಿ ಗ್ರಾಮ ಸಭೆಗಳಿಗೆ ಪರಮಾಧಿಕಾರ ನೀಡಲಾಗಿದೆ. ವಿವಿಧ ರಾಜ್ಯಗಳ ಪಂಚಾಯತ್ ರಾಜ್ ಕಾನೂನಿನಂತೆ ರಾಜ್ಯ ಸರಕಾರಗಳು ಯಾವುದೇ ಒಂದು ಮದ್ಯದ ಅಂಗಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರವಾನಿಗೆ ನೀಡಲು (ತೆರೆಯಲು) ಗ್ರಾಮ ಸಭೆಯಲ್ಲಿ ಕನಿಷ್ಠ 20ರಷ್ಟು ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಂದರೆ ಗ್ರಾಮ ಸಭೆಯ ಈ ಠರಾವಿಗೆ ಮಾನ್ಯತೆ ನೀಡಲೇಬೇಕು. ಅದೇ ರೀತಿ, ಕರ್ನಾಟಕದಲ್ಲಿಯೂ ಈ ಅಂಶವನ್ನು ಪಂಚಾಯತ್ ರಾಜ್ ಕಾನೂನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಬೇಕು ಎಂದು ಸ್ವರ್ಣಾ ಭಟ್ ಒತ್ತಾಯಿಸಿದರು. ಹೋರಾಟದಲ್ಲಿ ಭಾಗಿಯಾಗಿದ್ದ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕರ್ನಾಟಕ ಮಾತ್ರವಲ್ಲ, ಇಡೀ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು. ಆಗ ಮಾತ್ರವೇ ಜನರು ನೆಮ್ಮದಿಯಿಂದ ಬದುಕಲು ಸಾಧ್ಯ. ಜನರು ಸರಕಾರದಿಂದ ಯಾವುದೇ ಲಾಭವನ್ನು ಬಯಸುತ್ತಿಲ್ಲ. ಬದಲಾಗಿ, ನಮ್ಮ ಆರೋಗ್ಯ, ಮಕ್ಕಳ ಶಿಕ್ಷಣ, ದುಡಿಮೆಗೆ ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಆದರೆ, ಸರಕಾರಗಳು ಯೋಜನೆಗಳ ವಿಸ್ತರಣೆ ಹೆಸರಿನಲ್ಲಿ ಮದ್ಯ ಮಾರಾಟವನ್ನು ಹೆಚ್ಚಿಸುತ್ತಿವೆ. ಜನರ ಆರೋಗ್ಯ, ಹಣ, ಮರ್ಯಾದೆ ಎಲ್ಲವೂ ಮಣ್ಣುಪಾಲಾಗುತ್ತಿದೆ ಎಂದರು. ಇದೇ ವೇಳೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮದ್ಯ ನಿಷೇಧ ಆಂದೋಲನ’ದ ಬೇಡಿಕೆಗಳ ಮನವಿ ಸ್ವೀಕರಿಸಿ ಈಡೇರಿಸುವ ಭರವಸೆ ನೀಡಿದರು. ಧರಣಿಯಲ್ಲಿ ‘ಮದ್ಯ ನಿಷೇಧ ಆಂದೋಲನ’ದ ಮಹಿಳೆಯರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
ಮೂಡುಬಿದಿರೆ | ಕಾರ್ಮಿಕರ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ
ಕಟ್ಟಡ ನಿರ್ಮಾಣ ಕಾರ್ಮಿಕರ ಆರೋಗ್ಯ ತಪಾಸಣೆ, ತರಬೇತಿ ಒದಗಿಸುವ ಯೋಜನೆ ಉದ್ಘಾಟನೆ
ಸಮಾಜದ ಒಳತಿಗಾಗಿ ಕೆಲಸ ಮಾಡುವ ವಾರ್ತಾಭಾರತಿ ಮಾಧ್ಯಮವನ್ನು ಪ್ರೋತ್ಸಾಹಿಸಬೇಕು : ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಮಾನ್ವಿಯಲ್ಲಿ ಓದುಗ, ಹಿತೈಷಿಗಳ ಸಭೆ
ಇರುವೈಲು | 1 ಕೋ. ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ
ಮೂಡುಬಿದಿರೆ : ಲೋಕೋಪಯೋಗಿ ಇಲಾಖೆ ಮತ್ತು ಶಾಸಕರ ವಿಶೇಷ ಅನುದಾನದಡಿ 1 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕಿನ ಕುಪ್ಪೆಪದವು - ಇರುವೈಲು - ಮೂಡುಬಿದಿರೆ ಜಿಲ್ಲಾ ಮುಖ್ಯರಸ್ತೆಯ ಕಿ.ಮೀ 4.93 ರಿಂದ 5.26 ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಮಂಗಳವಾರ ದಂಬೆದಕೋಡಿಯಲ್ಲಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಕೋಟ್ಯಾನ್ ಅವರು, ಇಕ್ಕಟ್ಟಿನ ರಸ್ತೆ ಮತ್ತು ಕಿರಿದಾದ ಸೇತುವೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವುದರಿಂದ ರಸ್ತೆಯನ್ನು ಅಗಲೀಕರಣಗೊಳಿಸಬೇಕೆಂದು ದಂಬೆದಕೋಡಿ ಭಾಗದ ಜನರ ಬಹು ಕಾಲದ ಬೇಡಿಕೆಯಾಗಿತ್ತು. ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಪೂಣ೯ಗೊಳಿಸಬೇಕೆಂದು ಪಿಡಬ್ಲ್ಯುಡಿ ಇಲಾಖೆಗೆ ಸೂಚಿಲಾಗಿದೆ. ಆದ್ದರಿಂದ ಆದಷ್ಟು ಬೇಗ ಇಲ್ಲಿನ ಜನರ ಬೇಡಿಕೆ ಈಡೇರಲಿದೆ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ನ ಸದಸ್ಯ ವಲೇರಿಯನ್ ಕುಟಿನ್ಹಾ ಮಾತನಾಡಿದರು. ಪಂಚಾಯತ್ ಸದಸ್ಯರಾದ ನಾಗೇಶ್ ಅಮೀನ್ , ನವೀನ್ ಪೂಜಾರಿ ಕಿಟ್ಟುಬೆಟ್ಟು, ಮೋಹಿನಿ.ಎಸ್ ಪೂಜಾರಿ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ಸ್ಥಳದಾನಿಗಳಾದ ರಾಕೇಶ್ ವಿಕ್ರಂ ಭಟ್ ದಂಬೆಕೋಡಿ, ಸತ್ಯಪ್ರಕಾಶ್ ಭಟ್ ನಡುಮನೆ, ರವಿ ನಾಯ್ಕ್ , ಕೆಡಿಪಿ ಸದಸ್ಯ ಪ್ರವೀಣ್ ಪೂಜಾರಿ, ಹೊಸಬೆಟ್ಟು ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಕಾಳೂರು, ವಕೀಲ ಕೆ ಚಂದ್ರಹಾಸ ಶೆಟ್ಟಿ, ಪಂ.ಮಾಜಿ ಸದಸ್ಯ ಪೂವಪ್ಪ ಸಾಲ್ಯಾನ್ , ರಾಮಕೃಷ್ಣ ಪೆಜತ್ತಾಯ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್, ಬಾಲಚಂದ್ರ ಶೆಟ್ಟಿ, ದಿನೇಶ್ ಶೆಟ್ಟಿ ದೊಡ್ಡಗುತ್ತು, ಹಿರಿಯರಾದ ಮುತ್ತಪ್ಪ ಪೂಜಾರಿ, ವಾಸುದೇವ ಸಾಮಂತ್, ಜಿ. ಪಂ.ಸಹಾಯಕ ಇಂಜಿನಿಯರ್ ಹೇಮಂತ್ ಕುಮಾರ್, ಗುತ್ತಿಗೆದಾರ ಅಬ್ದುಲ್ ನಾಸಿರ್ ಕೆ. ಸ್ಥಳೀಯ ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ, 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ- 2021 ಅನ್ನು ತಕ್ಷಣವೇ ರದ್ದುಪಡಿಸಬೇಕು. ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ-2021 ಅನ್ನು ರದ್ದುಪಡಿಸಬೇಕು. ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮುಖಂಡರು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ರೈತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಎಲ್ಲಾ ನಾಗರಿಕರಿಗೆ ನ್ಯಾಯ ಒದಗಿಸಬೇಕು. 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದರೆ ಸರಕಾರ ಬಂದು ಎರಡೂವರೆ ವರ್ಷ ಕಳೆದರೂ ಜನವಿರೋಧಿ ಕಾಯ್ದೆಗಳನ್ನು ಹಿಂಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತ್ತಾಪುರಿ, ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಅಫ್ಜಾಲ್ ಮಹಮೂದ್, ಹೈದರ್ ಅಲಿ ಬಗ್ಬಾನ್, ಅಡ್ವೊಕೇಟ್ ಅಬ್ದುಲ್ ಜಬ್ಬಾರ್ ಗೋಲಾ , ಅಫ್ಜಲ್ ಮೆಹಮೂದ್ ಸಲೀಮ್ ಸಗರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಂಟ್ವಾಳ : ಕಲ್ಲಡ್ಕ ಪರಿಸರದ ಗೋಳ್ತಮಜಲು ಪ್ರದೇಶದಲ್ಲಿರುವ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮಂಗಳೂರು ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಮಿಂಚಿ, ಥ್ರೋಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದಕ್ಕೂ ಮೊದಲು ಹಲವು ಅಂತರ್-ಕಾಲೇಜು ಕ್ರೀಡಾಕೂಟಗಳಲ್ಲಿ ತನ್ನ ಸಾಮರ್ಥ್ಯ ಪ್ರದರ್ಶಿಸಿರುವ ಈ ಕಾಲೇಜಿನ ವಿದ್ಯಾರ್ಥಿನಿಯರು, ನ.11ರಂದು ಮಂಗಳೂರಿನ ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜಿನ ಪ್ರಾಯೋಜಕತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮೀಫ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಂಡಿದ್ದ ಥ್ರೋಬಾಲ್ ಸ್ಪರ್ಧೆಯಲ್ಲಿ ಉಜ್ವಲ ಪ್ರದರ್ಶನ ನೀಡಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ನೂಹ ಮರಿಯಮ್ ಹೈದರ್, ಜೈನಬ್ ನಸ್ರೀನ್, ದ್ವಿತೀಯ ಕಲಾ ವಿಭಾಗದ ಮೈಮುನ ತನ್ವಿಲ, ದ್ವಿತೀಯ ವಾಣಿಜ್ಯ ವಿಭಾಗದ ಅಶ್ಮಿಯಾ, ಅಲಿಫಾ ಆಯಿಷ, ರಫಾ, ಜುವೇರಿಯಾ, ಸಫ್ರೀನ, ಬಿ.ಎಸ್. ಶಬೀಬಾ ಆಫಿಯಾ ಹಾಗೂ ಪ್ರಥಮ ವಾಣಿಜ್ಯ ವಿದ್ಯಾರ್ಥಿನಿಯರಾದ ಆಯಿಷತ್ ರುಶೀದ, ನೆಬಿಸತ್ ಹಿಬಾ, ನಫೀಸತ್ತುಲ್ ಶಹಲ ಭಾಗವಹಿಸಿ ತಮ್ಮ ಸಾಮರ್ಥ್ಯ ತೋರಿದರು. ಇವರ ನಡುವೆ ಪ್ರಥಮ ವಾಣಿಜ್ಯ ವಿಭಾಗದ ಆಯಿಷತ್ ರುಶೀದ ಅವರು ಅತ್ಯುತ್ತಮ ಪ್ರದರ್ಶನಕ್ಕಾಗಿ ‘ಬೆಸ್ಟ್ ಥ್ರೋವರ್’ ಪ್ರಶಸ್ತಿ ಪಡೆದರು. ಹೈಸ್ಕೂಲ್ ಮತ್ತು ಪಿಯು ಕಾಲೇಜುಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ ಈ ಕ್ರೀಡಾಕೂಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 37 ವಿದ್ಯಾಸಂಸ್ಥೆಗಳು ಭಾಗವಹಿಸಿದ್ದವು. ಸ್ಪರ್ಧೆಯನ್ನು ಹಿರಾ ಮಹಿಳಾ ಕಾಲೇಜಿನ ಜನಾಬ್ ಅಬ್ದುಲ್ ರಹಮಾನ್ ಹಾಗೂ ಅನುಗ್ರಹ ಮಹಿಳಾ ಕಾಲೇಜು ಕಲ್ಲಡ್ಕದ ಕೋಶಾಧಿಕಾರಿ ಹೈದರ್ ಅಲಿ ಅವರು ಪಂದ್ಯಾವಳಿಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದರು.
Davanagere | ಚಿನ್ನಾಭರಣ ಸುಲಿಗೆ ಆರೋಪ; ಪಿಎಸ್ಸೈ ಸೇರಿದಂತೆ ಏಳು ಜನರ ಬಂಧನ
ದಾವಣಗೆರೆ : ಬಂಗಾರದ ಆಭರಣ ತಯಾರು ಮಾಡುವ ವ್ಯಕ್ತಿಯೊಬ್ಬರಿಂದ 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದಡಿ ಇಬ್ಬರು ಪಿಎಸ್ಸೈ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಸೈಗಳಾದ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಹಾಗೂ ಇಬ್ಬರು ಕಾನ್ಸ್ಟೇಬಲ್ ಸೇರಿದಂತೆ ಒಟ್ಟು 7 ಜನರನ್ನು ಕೆಟಿಜೆ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರವಾರ ಮೂಲದ ವಿಶ್ವನಾಥ್ ಅರ್ಕಸಾಲಿ ಅವರು ಮಂಡಿಪೇಟೆ, ಹಳೆಪೇಟೆಯ ಕೆಲ ಆಭರಣ ಮಾರಾಟಗಾರರಿಂದ ಚಿನ್ನದ ಗಟ್ಟಿ ಹಾಗೂ ಹಳೆಯ ಉಂಗುರಗಳನ್ನು ಸಂಗ್ರಹಿಸಿ ರವಿವಾರ ಮಧ್ಯರಾತ್ರಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಕಾರವಾರಕ್ಕೆ ಮರಳಲು ಹುಬ್ಬಳ್ಳಿ ಮಾರ್ಗದ ಬಸ್ ಏರಿದ ಅವರನ್ನು ಪಿಎಸ್ಸೈಗಳು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಸಮೀಪದ ಕೆಟಿಜೆ ನಗರ ಪೊಲೀಸ್ ಠಾಣೆಯ ಬಳಿಗೆ ವಿಶ್ವನಾಥ್ ಅವರನ್ನು ಕರೆತಂದಿದ್ದಾರೆ. ಠಾಣೆಯ ಹೊರಭಾಗದಲ್ಲಿ ಕಾರು ನಿಲ್ಲಿಸಿ ಕೆಲಹೊತ್ತು ಠಾಣೆಯಲ್ಲಿದ್ದ ಪೊಲೀಸರೊಂದಿಗೆ ಚರ್ಚಿಸಿದ ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿಶ್ವನಾಥ್ ಅವರನ್ನು ಬೆದರಿಸಿದ್ದಾರೆ. ಅವರ ಬಳಿ ಇದ್ದ 78 ಗ್ರಾಂ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿಗಳನ್ನು ಕಸಿದುಕೊಂಡು ಊರಿಗೆ ಮರಳುವಂತೆ ಸೂಚಿಸಿದ್ದರು. ಶಂಕೆಗೊಂಡ ವಿಶ್ವನಾಥ್ ಘಟನೆಯ ಕುರಿತು ಮನೆಗೆ ಮಾಹಿತಿ ನೀಡಿ, ಸೋಮವಾರ ಸಂಜೆ ಠಾಣೆಗೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ನೀಡಿ ಸಹಾಯ ಮಾಡಿದ ಆರೋಪದಡಿ ದಾವಣಗೆರೆ ಮೂಲದ ಇಬ್ಬರು ಆಭರಣ ತಯಾರಕರಾದ ವಿನಾಯಕ ನಗರದ ಸತೀಶ್ ರೇವಣ್ಕರ್, ಶಿರಸಿ ಮೂಲದ ನಾಗರಾಜ್ ರೇವಣ್ಕರನನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಕೃತ್ಯಕ್ಕೆ ಬಳಸಿದ್ದ ಕಾರು, ನಕಲಿ ಪಿಸ್ತೂಲನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪೂರ್ವವಲಯ ಐಜಿಪಿ ಡಾ. ರವಿಕಾಂತೇಗೌಡ ಈ ಕುರಿತು ಮಾತನಾಡಿ, ಆರೋಪಿಗಳನ್ನು ತಡರಾತ್ರಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕೆಟಿಜೆ ನಗರ ರಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಕೇಳಲಿದ್ದೇವೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಆಭರಣ ತಯಾರಕರಿಂದ ಚಿನ್ನ ದೋಚಿದ ಆರೋಪ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಪಿಎಸ್ಸೈ ಸೇರಿದಂತೆ ನಾಲ್ವರನ್ನು ತಡರಾತ್ರಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಮಂಗಳವಾರ ಮತ್ತೆ ಮೂವರು ಸೇರಿ ಒಟ್ಟು ಏಳು ಜನರನ್ನು ಬಂಧಿಸಿದ್ದು, ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಡಿವೈಎಸ್ಪಿಯವರನ್ನು ನಿಯೋಜಿಸಿ ವಶಕ್ಕೆ ಪಡೆದು ನಿಷ್ಪಕ್ಷ ವಿಚಾರಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ
ಬೆಂಗಳೂರಿನ ಹೆಬ್ಬಾಳ ಜಂಕ್ಷನ್ನಲ್ಲಿ ಹೊಸ ಫ್ಲೈಓವರ್ ನಿರ್ಮಾಣ; 1.4 ಕಿ.ಮೀ ಎಲ್ಲಿಂದ ಎಲ್ಲಿಗೆ ಸಂಪರ್ಕ?
ಬೆಂಗಳೂರಿನಲ್ಲಿ ಹೊಸ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ. ಕೆ.ಆರ್.ಪುರದಿಂದ ಬಳ್ಳಾರಿ ರಸ್ತೆಗೆ ನೇರ ಸಂಪರ್ಕ ಕಲ್ಪಿಸುವ 1.4 ಕಿ.ಮೀ. ಮೇಲ್ಸೇತುವೆ ಯೋಜನೆ ರೂಪಿಸಲಾಗಿದೆ. ಹೆಬ್ಬಾಳ ಜಂಕ್ಷನ್ನಲ್ಲಿ ಹೊಸ ಲೂಪ್ ನಿರ್ಮಾಣ 15 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ನಾಗವಾರ ಜಂಕ್ಷನ್ ಅಭಿವೃದ್ಧಿಪಡಿಸಲಾಗುವುದು. ಒಟ್ಟಾರೆ ನಗರದ ಸಂಚಾರ ಸುಗಮಗೊಳಿಸುವ ಗುರಿ ಇದೆ.
Delhi AQI: ಜ್ವಾಲಾಮುಖಿ ಸ್ಫೋಟ, ದೆಹಲಿ ಜನರಿಗೆ ಅಪಾಯ ಎದುರಾಯ್ತಾ?
ದೆಹಲಿ ನಗರದಲ್ಲಿ ಇಷ್ಟು ದಿನ ಜನರು ಉಸಿರಾಡುವುದಕ್ಕೆ ದುಡ್ಡು ಕೊಡಬೇಕಿತ್ತು, ಹೀಗೆ ದುಡ್ಡು ಕೊಟ್ಟು ಆಕ್ಸಿಜೆನ್ ಖರೀದಿ ಮಾಡಿ ಜೀವ ಉಳಿಸಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಈಗ ದಿಢೀರ್ ಈ ಪರಿಸ್ಥಿತಿ ಇನ್ನಷ್ಟು ಭೀಕರವಾಗಿದೆ. ದೆಹಲಿಗೆ ಜ್ವಾಲಾಮುಖಿ ಸ್ಫೋಟದ ಸಿಡಿಲು ಬಡಿದಿದ್ದು, ಹೀಗೆ ಜ್ವಾಲಾಮುಖಿ ಸುಳಿಯಲ್ಲಿ ಸಿಲುಕಿ ವಿಲವಿಲ ಒದ್ದಾಡಿ ಹೋಗುತ್ತಿದೆ ರಾಷ್ಟ್ರ ರಾಜಧಾನಿ. ದೂರದ ದೇಶದಲ್ಲಿ
ಸ್ಮಶಾನ ಹೊರತು ಪಡಿಸಿ ಇತರೆಡೆ ಅನುಮತಿ ಇಲ್ಲದೇ ಅಂತ್ಯಕ್ರಿಯೆಗೆ ಮಾಡುವಂತಿಲ್ಲ - ಕರ್ನಾಟಕ ಹೈಕೋರ್ಟ್
ಮೃತದೇಹಗಳನ್ನು ಗೊತ್ತುಪಡಿಸಿದ ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೆ ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ಸೊಸೆ ಶವವನ್ನು ಮನೆ ಬಳಿ ಹೂಳಲಾಗಿದ್ದು, ಅದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಸೂಚನೆ ನೀಡಿದೆ. ಎಲ್ಲೆಂದರಲ್ಲಿ ಸಮಾಧಿ ಮಾಡುವುದು ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ನ್ಯಾಯಪೀಠ ತಿಳಿಸಿದೆ.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮೃತ್ಯು : ಸಚಿವ ಪ್ರಿಯಾಂಕ ಖರ್ಗೆ ಸಂತಾಪ
ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿಯು ಅತ್ಯಂತ ನೋವಿನ ಸಂಗತಿಯಾಗಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಕರ್ತವ್ಯನಿಷ್ಠೆ, ದಕ್ಷತೆ, ಜನಪರ ನಿಲುವುಗಳಿಂದ ಜನಮಾನಸದಲ್ಲಿ ಅಚ್ಚಳಿಯದ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ದುಃಖದಲ್ಲಿರುವ ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಜಿಸಿಸಿ ಸ್ಥಾಪನೆಗೆ ಎಸ್.ಸಿ.ಐ. ಸೆಮಿಕಂಡಕ್ಟರ್ಸ್ ಒಲವು: ಎಂ.ಬಿ.ಪಾಟೀಲ್
ಲಂಡನ್ : ಯುನೈಟೆಡ್ ಕಿಂಗ್ಡಮ್ ನ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿಯು ಕರ್ನಾಟಕದಲ್ಲಿ ತನ್ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವ ಆಸಕ್ತಿ ವ್ಯಕ್ತಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕಂಪನಿಯ ಉದ್ದೇಶಿತ ಬಂಡವಾಳ ಹೂಡಿಕೆ ಮತ್ತು ಭವಿಷ್ಯದ ಸಹಭಾಗಿತ್ವ ಎರಡಕ್ಕೂ ಸರಕಾರದ ಸಂಪೂರ್ಣ ಬೆಂಬಲದ ಖಚಿತ ಭರವಸೆಯನ್ನು ಕೊಡಲಾಗಿದೆ. ಇದರಿಂದ ಕಂಪ್ಯೂಟರ್ ಸುರಕ್ಷತೆಗೆ ಅಗತ್ಯವಿರುವ ಅಂತರ್ಗತ ಸುರಕ್ಷೆಯನ್ನು ಹೊಂದಿರುವ ಮೈಕ್ರೋಪ್ರೊಸೆಸರುಗಳ ತಯಾರಿಕೆ ಸ್ಥಳೀಯವಾಗಿಯೆ ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ. ಅಧಿಕೃತವಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಅವರು, ಸೋಮವಾರ ತಡರಾತ್ರಿ ಎಸ್.ಸಿ.ಐ ಸೆಮಿಕಂಡಕ್ಟರ್ ಕಂಪನಿ ಮಾತ್ರವಲ್ಲದೆ, ವಿಯರ್ ಗ್ರೂಪ್, ಲೇಟೋಸ್ ಡೇಟಾ ಸೆಂಟರ್, ಸ್ಯಾಮ್ಕೋ ಹೋಲ್ಡಿಂಗ್ಸ್, ಎ.ಆರ್.ಎಂ. ಸೆಮಿಕಂಡಕ್ಟರ್ಸ್ ಕಂಪನಿಗಳ ಮುಖ್ಯಸ್ಥರೊಂದಿಗೆ ಬಂಡವಾಳ ಹೂಡಿಕೆ/ಹೂಡಿಕೆ ವಿಸ್ತರಣೆ ಕುರಿತು ಪ್ರತ್ಯೇಕ ಸಭೆಗಳನ್ನು ನಡೆಸಿದರು. ಈ ಬಗ್ಗೆ ಮಾತನಾಡಿದ ಸಚಿವರು, ಎ.ಆರ್.ಎಂ. ಸೆಮಿಕಂಡಕ್ಟರ್ಸ್ ಕಂಪನಿಯ ಎರಡನೇ ಅತ್ಯಂತ ದೊಡ್ಡ ಕಚೇರಿ ಬೆಂಗಳೂರಿನಲ್ಲಿದ್ದು, ಅದು ಆಸ್ಟಿನ್-ಬೆಂಗಳೂರು-ಕ್ಯಾಲಿಫೋರ್ನಿಯಾ (ಎಬಿಸಿ) ವ್ಯಾಪ್ತಿಯನ್ನು ಹೊಂದಿದೆ. ಈಗ ಕಂಪನಿಯು ತನ್ನ ಜಾಗತಿಕ ಕೇಂದ್ರಗಳಲ್ಲಿ ಸಹಭಾಗಿತ್ವವನ್ನು ವಿಸ್ತರಿಸಿಕೊಳ್ಳಲು ಬಯಸಿದ್ದು, ಬೆಂಗಳೂರಿನಲ್ಲಿ ತನ್ನ ಮತ್ತೊಂದು ಕಚೇರಿಯನ್ನು ಸ್ಥಾಪಿಸಲು ಒಲವು ಹೊಂದಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂಬ್ರಿಡ್ಜ್ ಮತ್ತು ಬೆಂಗಳೂರು ನಗರಗಳೆರಡೂ ಸೆಮಿಕಂಡಕ್ಟರ್ ವಿನ್ಯಾಸ, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಹಾಗೂ ಪ್ರತಿಭಾವಂತ ಯುವಜನರನ್ನು ಹೊಂದಿರುವುದನ್ನು ಚರ್ಚಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸ್ಯಾಮ್ಕೋ ಹೋಲ್ಡಿಂಗ್ಸ್ ಕಂಪನಿಯು ರಾಜ್ಯದ ಮರುಬಳಕೆ ಇಂಧನ, ಎಥನಾಲ್ ಉತ್ಪಾದನೆ ಮತ್ತು ಬ್ಯಾಟರಿ ತಯಾರಿಕೆ ವಲಯಗಳಲ್ಲಿ ಬಂಡವಾಳ ಹೂಡುವ ಮನಸ್ಸು ಹೊಂದಿದೆ. ಹಾಗೆಯೇ ಲೇಟೋಸ್ ಡೇಟಾ ಸೆಂಟರ್ ಕಂಪನಿಯು ಬೆಂಗಳೂರಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರಕ್ಕೆ ಸಂಬಂಧಿಸಿದ ಇನ್ಕ್ಯುಬೇಷನ್ ಕೇಂದ್ರವನ್ನು ತೆರೆಯಲು ಆಸಕ್ತಿ ತೋರಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಾವು ಉದ್ದೇಶಿತ ಕ್ವಿನ್ ಸಿಟಿಯಲ್ಲಿ ಇದಕ್ಕೆಲ್ಲ ಆದ್ಯತೆ ಕೊಡುತ್ತಿರುವ ಸಂಗತಿಯನ್ನು ಅವರ ಗಮನಕ್ಕೆ ತಂದಿದ್ದೇವೆ. ಜತೆಗೆ ಮರುಬಳಕೆ ಇಂಧನ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಿಗೆ ಸಂಬಂಧಿಸಿದ ಡೇಟಾ ಸೆಂಟರುಗಳನ್ನು ತೆರೆಯಲು ಕರ್ನಾಟಕದಲ್ಲಿರುವ ಅವಕಾಶಗಳನ್ನು ಮನದಟ್ಟು ಮಾಡಿಕೊಟ್ಟಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಗಣಿಗಾರಿಕೆ, ಖನಿಜ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ತನ್ನದೆ ಛಾಪು ಮೂಡಿಸಿರುವ ವಿಯರ್ ಗ್ರೂಪ್ ಕಂಪನಿಯು ಬೆಂಗಳೂರಿನ ಸಮೀಪ ಈಗಾಗಲೇ ತನ್ನ ತಯಾರಿಕಾ ಘಟಕ ಹೊಂದಿದ್ದು, ಅದನ್ನು ಮತ್ತಷ್ಟು ವಿಸ್ತರಿಸಲು ಚಿಂತಿಸುತ್ತಿದೆ. ಇದಕ್ಕೆ ರಾಜ್ಯದ ಹೊಸ ಕೈಗಾರಿಕಾ ನೀತಿಯ ಪ್ರಕಾರ ಎಲ್ಲಾ ಬೆಂಬಲ ಕೊಡುವ ಆಶ್ವಾಸನೆ ಕೊಡಲಾಗಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ. ಮಾತುಕತೆಯಲ್ಲಿ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಪರವಾಗಿ ಸಿಇಎ ಹೇಡನ್ ಫೋವಿ, ವಿಯರ್ ಗ್ರೂಪ್ ಪರವಾಗಿ ಅದರ ಮುಖ್ಯಸ್ಥ ಜಾಕ್ ಓಬ್ರಿಯನ್, ಲೇಟೋಸ್ ಪರವಾಗಿ ಅದರ ಸಂಸ್ಥಾಪಕ ಮೈಕ್ ಕಾರ್ಲಿನ್, ರಾಮ್ ಶಂಕರ್, ಹರೀಂದರ್ ಧಾಲೀವಾಲ್, ಸ್ಯಾಮ್ಕೋ ಹೋಲ್ಡಿಂಗ್ಸ್ ಪರವಾಗಿ ಅಧ್ಯಕ್ಷ ಸಂಪತ್ ಕುಮಾರ್ ಮಲ್ಯ, ನಿರ್ದೇಶಕ ಅಶ್ವಿನ್ ಸಂಪತ್ ಕುಮಾರ್, ಸಿಇಒ ವೈದ್ಯನಾಥನ್ ನಟೇಶನ್ ಮತ್ತು ಎ.ಆರ್.ಎಂ. ಸೆಮಿಕಂಡಕ್ಟರ್ಸ್ ಪರವಾಗಿ ಪೀಟರ್ ಸ್ಟೀಫನ್ಸ್ ಭಾಗವಹಿಸಿದ್ದರು. ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಇದ್ದರು.
ಹೈಕಮಾಂಡ್ ಅಂಗಳಕ್ಕೆ ‘ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟು’
ಬೆಂಗಳೂರು : ‘ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ’ ವಿಚಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸಿಎಂ, ಡಿಸಿಎಂ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಲ್ಲಿಗೆ ತೆರಳಿದ್ದು, ಕರ್ನಾಟಕ ರಾಜ್ಯದ ಕಾಂಗ್ರೆಸ್ ಬಿಕ್ಕಟ್ಟು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ರಾಹುಲ್ ವಿದೇಶ ಪ್ರವಾಸದಿಂದ ಹಿಂದಿರುಗಿದ್ದು, ರಾಜ್ಯದ ಕಾಂಗ್ರೆಸ್ ನಾಯಕರ ಜೊತೆ ನಾಳೆ(ನ.26) ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ ನಾಯಕತ್ವ ಬಿಕ್ಕಟ್ಟು ಶಮನಕ್ಕೆ ಯಾವ ಸೂತ್ರವನ್ನು ಹೆಣೆಯಲಿದ್ದಾರೆ ಎಂಬುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್ ತಮ್ಮ ಪಟ್ಟು ಸಡಿಲಿಸುತ್ತಿಲ್ಲ. ಹೀಗಾಗಿ ಹೈಕಮಾಂಡ್ ನಾಯಕರು ಒತ್ತಡಕ್ಕೆ ಸಿಲುಕಿದ್ದಾರೆ. ಡಿಸೆಂಬರ್ 8 ರಿಂದ ಬೆಳಗಾವಿ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು, ಅದಕ್ಕೂ ಮೊದಲೇ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆಗೆ ಮುಂದಾದರೆ ತಪ್ಪು ಸಂದೇಶ ಕೊಟ್ಟಂತೆ ಆಗುತ್ತದೆ. ಹೀಗಾಗಿ ಈ ವಿಚಾರ ಮತ್ತಷ್ಟು ವಿಳಂಬ ಆಗುವ ಸಾಧ್ಯತೆಗಳಿವೆ. ಈ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ತಮ್ಮ ಆಪ್ತ ಶಾಸಕರೊಂದಿಗೆ ಜತೆ ಸಮಾಲೋಚನೆ ನಡೆಸಿದ್ದಾರೆ. ನಿಜಕ್ಕೂ ನಾಯಕತ್ವ ಬದಲಾವಣೆ ಆಗಲಿದೆಯೋ ಅಥವಾ ಸಂಪುಟ ಪುನರ್ ಮಾಡಿ, ಶಾಸಕರ ಒತ್ತಾಯದಂತೆ ಇನ್ನೂ ಒಂದೆರಡು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಬಿಕ್ಕಟ್ಟು ಶಮನ ಮಾಡಲಿದ್ದಾರೆಯೋ ಎಂಬುದನ್ನು ಕಾದುನೋಡಬೇಕಿದೆ. ಎಐಸಿಸಿ ಮುಖಂಡ ರಾಹುಲ್ ಗಾಂಧಿ ಕೈಗೊಳ್ಳಲಿರುವ ತೀರ್ಮಾನದ ಮೇಲೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿನ ಮುಂದಿನ ಬೆಳವಣಿಗೆಗಳು ನಿರ್ಧಾರವಾಗಲಿವೆ.
ಕಾಪು | ಕನ್ನಡದ ಅಸ್ಮಿತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ : ಸುಬ್ರಹ್ಮಣ್ಯ ಶೆಟ್ಟಿ
ಕಾಪು, ನ.25: ಕನ್ನಡ ಎನ್ನುವುದು ಭಾಷೆಯಾಗಿಯೇ ಉಳಿದಿಲ್ಲ. ಕನ್ನಡ ಎಂದರೆ ನಾಡು, ನುಡಿ, ನಡೆಯೂ ಹೌದು. ಕನ್ನಡಕ್ಕೆ ವ್ಯಾಪ್ತಿ ಇಲ್ಲ. ಬದುಕು ಮತ್ತು ಭರವಸೆಗಳ ನಡುವೆ ಕನ್ನಡತನವನ್ನು ಉಳಿಸಿಕೊಂಡು ಹೋಗಬೇಕು. ಇದರ ಭಾಗವಾಗಿ ಕನ್ನಡದ ಅಸ್ಮಿತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ಉಡುಪಿ ಜಿಲ್ಲಾ ಕನ್ನಡ ಸಾತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದ್ದಾರೆ. ಕಾಪು ತಾಲೂಕು ಕನ್ನಡ ಸಾತ್ಯ ಪರಿಷತ್ತು ಇದರ ವತಿಯಿಂದ ದುರ್ಗಾನಗರ ಸಮೀಪದ ಬಿಳಿಯಾರು ಶ್ರೀಉಮಾಮಹೇಶ್ವರ ದೇವಳದ ಆವರಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ ತಿಂಗಳ ಸಡಗರ- ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಡಿಯಲ್ಲಿ ವೇದಮೂರ್ತಿ ಮಾಧವ ಭಟ್ರವರನ್ನು ಪತ್ನಿ ಸುಧಾ ಭಟ್ರೊಂದಿಗೆ ಸನ್ಮಾನಿಸಿ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮುಖ್ಯ ಅತಿಥಿಯಾಗಿ ಕುರ್ಕಾಲು ಗ್ರಾಪಂ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗ್ರಾಪಂ ಉಪಾಧ್ಯಕ್ಷೆ ನತಾಲಿಯಾ ಮಾರ್ಟಿಸ್, ಕಸಾಪ ಉಡುಪಿ ಜಿಲ್ಲಾ ಸಹಕಾರ್ಯದರ್ಶಿ ಡಾ.ರಘು ನಾಯ್ಕ್, ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಸಿದ್ದರು. ಸ್ಥಳೀಯ ಸಂಯೋಜಕ ಭಾಸ್ಕರ್ ಆಚಾರ್ಯ ಬಿಳಿಯಾರು ಸನ್ಮಾನಿತರನ್ನು ಪರಿಚಯಿಸಿದರು. ಕಸಾಪ ಗೌರವ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್, ಸಹ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಜಿಲ್ಲಾ ಸುತಿಯ ನರಸಿಂಹ ಮೂರ್ತಿ ರಾವ್ ಉಪಸ್ಥಿತರಿದ್ದರು. ಸದಸ್ಯ ಎಸ್.ಎಸ್.ಪ್ರಸಾದ್ ನಿರೂಪಿಸಿ ದರು. ಕಸಾಪ ಕಾರ್ಯದರ್ಶಿ ನೀಲಾನಂದ ನಾಯ್ಕ್ ವಂದಿಸಿದರು.
Bengaluru | 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಆರೋಪಿಯ ಬಂಧನ
ಬೆಂಗಳೂರು : ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಓರ್ವ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 11.50 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮತ್ತು 1040 ಎಕ್ಸೆಟಿಸ್ ಮಾತ್ರೆಗಳು ಪತ್ತೆಯಾಗಿದ್ದು, ನೈಜೀರಿಯಾ ಮೂಲದ ಎಜಿಕೆ ನೈಗೂ ಒಕಾಫಾರ್(42) ಎಂಬುವನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. 2017ರಲ್ಲಿ ವ್ಯವಹಾರದ ವಿಸಾದಡಿಯಲ್ಲಿ ಭಾರತಕ್ಕೆ ಬಂದಿದ್ದ ಈತ, ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಎಂಬುದು ತಿಳಿದು ಬಂದಿದೆ. ಆರೋಪಿಯು ಹೊಸದಿಲ್ಲಿಯಿಂದ ಡ್ರಗ್ಸ್ ತರಿಸಿಕೊಂಡು ಮನೆಯಲ್ಲಿ ಸಂಗ್ರಹಿಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಈತ ಕರ್ನಾಟಕದ ಜೊತೆಗೆ ಚೆನ್ನೈ ಮತ್ತು ಹೈದರಾಬಾದ್ ಸೇರಿ ಹಲವು ನಗರಗಳಲ್ಲಿ ಇತರ ಪೆಡ್ಲರ್ಗಳ ಮೂಲಕ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಎಂದು ಸಿಸಿಬಿ ತನಿಖೆಯಲ್ಲಿ ಗೊತ್ತಾಗಿದೆ. ಸದ್ಯ, ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದು, ಆತನ ಸಂಪರ್ಕದಲ್ಲಿ ಯಾರ್ಯಾರಿದ್ದಾರೆ, ಎಷ್ಟು ವರ್ಷಗಳಿಂದ ಈ ದಂಧೆ ನಡೆಯುತ್ತಿದೆ ಎಂಬ ಬಗ್ಗೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಜಿ.ತಾವ್ರೋ ಅಧಿಕಾರ ಸ್ವೀಕಾರ
ಮಂಗಳೂರು, ನ.25 : ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸ್ಟ್ಯಾನಿ ಜಿ.ತಾವ್ರೋ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು, ಶಿಕ್ಷಕರ ಬೇಡಿಕೆಗಳಿಗೆ ಕಾಂಗ್ರೆಸ್ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಚಿವರಾದ ಮಧುಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಹಲವು ಸಧಾರಣೆಗಳನ್ನು ಜಾರಿಗೆ ತಂದಿದ್ದಾರೆ. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ತಳ ಮಟ್ಟದಿಂದ ಸಂಪರ್ಕ ಹೊಂದಿರುವ ನಿವೃತ್ತ ಶಿಕ್ಷಕರನ್ನು ಗುರುತಿಸಿ ಸದ್ಬಳಕೆ ಮಾಡಿಕೊಂಡು ಪಕ್ಷ ಸಂಘಟನೆ ತೊಡಗಿಸಿಕೊಳ್ಳಬೇಕು. ಆ ಮೂಲಕ ಶಿಕ್ಷಕರ ಪರವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು. ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜ ಮಾತನಾಡಿ, ಸ್ಟ್ಯಾನಿ ಅವರು ಶಿಕ್ಷಕರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಶಿಕ್ಷರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಸರಕಾರ ಬದ್ಧವಾಗಿದೆ ಎಂದರು. ಈ ಸಂದರ್ಭ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ಅಪ್ಪಿ, ನೀರಜ್ ಚಂದ್ರಪಾಲ್, ಶಬೀರ್ ಸಿದ್ದಕಟ್ಟೆ, ವಿಕಾಸ್ ಶೆಟ್ಟಿ, ಸಬಿತಾ ಮಿಸ್ಕಿತ್ ಮತ್ತಿತರರು ಉಪಸ್ಥಿತರಿದ್ದರು. ಉದಯ ಶಂಕರ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿಗೆ ಪಿಎಂ ಮೋದಿ ಆಗಮನ: ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ನವೆಂಬರ್ 28ರಂದು ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಕರಡು ಮತದಾರರ ಪಟ್ಟಿ ಪ್ರಕಟ ; ಆಕ್ಷೇಪಣೆ ಆಹ್ವಾನ
ಕಲಬುರಗಿ : ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 25ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಪಟ್ಟ ಮತದಾರರು ಲಿಖಿತವಾಗಿ ಆಯಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಡಿ.10 ರೊಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರರ ನೋಂದಣಿ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಆದ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಝಹೀರಾ ನಸೀಮ ಅವರು ತಿಳಿಸಿದ್ದಾರೆ. ಸದರಿ ಕರಡು ಮತದಾರರ ಪಟ್ಟಿಯ ಭೌತಿಕ ಪ್ರತಿಯು ಸಂಬಂಧಪಟ್ಟ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಲಭ್ಯವಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ. ಇದನ್ನು ಹೊರತುಪಡಿಸಿ ಸರಕಾರದ ಅಧಿಕೃತ ಅಂರ್ತಜಾಲದಲ್ಲಿಯೂ ಸಹ ಮಾಹಿತಿಗಾಗಿ ಲಭ್ಯವಿದೆ. ಇದನ್ನು ಮತದಾರರು ಅವಲೋಕಿಸಬಹುದಾಗಿದೆ. ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ ಅರ್ಹ ಮತದಾರರು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅವಶ್ಯಕ ದಾಖಲೆಗಳೊಂದಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ಝಹೀರಾ ನಸೀಮ ಹೇಳಿದರು.
ರಷ್ಯಾ-ಉಕ್ರೇನ್ ಶಾಂತಿ ಒಪ್ಪಂದ ಬಹುತೇಕ ಅಂತಿಮ: ಮೂರುವರೆ ವರ್ಷದ ಯುದ್ಧ ಕೊನೆಗೂ ಅಂತ್ಯ?
ಮೂರೂವರೆ ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಮುಖ ರಾಜತಾಂತ್ರಿಕ ಪ್ರಗತಿ ಕಂಡುಬಂದಿದೆ. ಅಮೆರಿಕದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿರುವ ಪ್ರಕಾರ, ಉಕ್ರೇನ್ ಶಾಂತಿ ಒಪ್ಪಂದಕ್ಕೆ ತಾತ್ವಿಕವಾಗಿ ಒಪ್ಪಿಕೊಂಡಿದ್ದು, ಅಬುಧಾಬಿಯಲ್ಲಿ ಅಮೆರಿಕದ ಸೇನಾ ಕಾರ್ಯದರ್ಶಿ ಡಾನ್ ಡ್ರಿಸ್ಕಾಲ್ ಅವರು ರಷ್ಯಾ ಅಧಿಕಾರಿಗಳೊಂದಿಗೆ ಟ್ರಂಪ್ ಆಡಳಿತದ ಪ್ರಸ್ತಾವನೆಯ ಕುರಿತು ಸಭೆ ನಡೆಸುತ್ತಿದ್ದಾರೆ. ಉಕ್ರೇನ್ನ ರಾಷ್ಟ್ರೀಯ ಭದ್ರತಾ ಕಾರ್ಯದರ್ಶಿ ರುಸ್ಟೆಮ್ ಉಮೆರೊವ್ ಅವರು ಜಿನೀವಾದಲ್ಲಿ ನಡೆದ ಮಾತುಕತೆಗಳ ನಂತರ ಒಪ್ಪಂದದ ಮೂಲ ನಿಯಮಗಳ ಬಗ್ಗೆ ಸಾಮಾನ್ಯ ತಿಳುವಳಿಕೆ ಗೆ ತಲುಪಿದ್ದಾಗಿ ಖಚಿತಪಡಿಸಿದ್ದಾರೆ.
ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರದ ಬದಲು ಶಾಸಕರ ಖರೀದಿ ಕೇಂದ್ರ ಸ್ಥಾಪನೆಯಾಗಿದೆ : ಎನ್. ರವಿಕುಮಾರ್
ಬೀದರ್ : ಕೇಂದ್ರ ಸರಕಾರ ಮೆಕ್ಕೆಜೋಳಕ್ಕೆ ಕ್ವಿಂಟಾಲ್ಗೆ 2,400ರೂ. ನಿಗದಿಗೊಳಿಸಿ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಹೇಳಿದರೂ ಇಂದಿಗೂ ಕೂಡ ರಾಜ್ಯ ಸರಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿಲ್ಲ. ಬದಲಾಗಿ ಶಾಸಕರ ಖರೀದಿ ಕೇಂದ್ರ ಸ್ಥಾಪನೆ ಮಾಡಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎನ್.ರವಿಕುಮಾರ್ ಅವರು ರಾಜ್ಯ ಸರಕಾರದ ವಿರುದ್ಧ ವ್ಯಂಗ್ಯವಾಡಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎನ್.ರವಿಕುಮಾರ್, ರಾಜ್ಯದ ಕಾಂಗ್ರೇಸ್ ಸರಕಾರ ಖಾಸಗಿ ಎಜೆನ್ಸಿ ಜೊತೆಗೆ ಶಾಮೀಲಾಗಿ ರೈತರು ಬೆಳೆದ ಬೆಳೆಗಳನ್ನು ಕಡಿಮೆ ದರದಲ್ಲಿ ಖರೀದಿಸಿ ರೈತರ ಬೆನ್ನು ಮೂಳೆ ಮುರಿಯಲು ಮುಂದಾಗಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಆರೋಪಿಸಿದರು. ಸರಕಾರ ಖರೀದಿ ಕೇಂದ್ರಗಳನ್ನು ತೆರೆಯದಿದ್ದರೆ ನ.27, 28 ಮತ್ತು 29ರಂದು 200 ವಿಧಾನಸಭಾ ಕ್ಷೇತ್ರಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸರಕಾರವೇ ಪ್ರತಿ ಟನ್ ಕಬ್ಬಿಗೆ 3,300 ರೂ. ಬೆಲೆ ನಿಗದಿ ಮಾಡಿರುವಾಗ ಬೀದರ್ ಜಿಲ್ಲೆಯಲ್ಲಿ ಯಾಕೆ 2,950 ರೂ. ನಿಗದಿ ಮಾಡಲಾಗಿದೆ? ಇದು ಬೀದರ್ ಜಿಲ್ಲೆಗೆ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನಿಸಿದರು. ಇಲ್ಲಿ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ವಿರುದ್ಧ ಹರಿಹಾಯ್ದರು. ರೈತರ ಮಕ್ಕಳಿಗೆ ವಿದ್ಯಾನಿಧಿ, ಹಾಲಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ. ರೈತರಿಗೆ ಬಿಜೆಪಿ ಸರಕಾರದ ಸಂದರ್ಭದಲ್ಲಿ ವರ್ಷಕ್ಕೆ 4 ಸಾವಿರ ರೂ, ಕೇಂದ್ರದಿಂದ 6 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ರಾಜ್ಯ ಸರಕಾರದ ಪಾಲು ಇಂದಿನ ಸರಕಾರ ಕಡಿತಗೊಳಿಸಿದೆ. ರಾಜ್ಯದ ಕಾಂಗ್ರೆಸ್ ಸರಕಾರ ರೈತ ವಿರೋಧಿಯಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದರು. ಶಾಸಕ ಡಾ. ಶೈಲೇಂದ್ರ ಬೆಲ್ಧಾಳೆ ಮಾತನಾಡಿ, ನ. 27 ಮತ್ತು 28ರಂದು ‘ಜನಪರ ನೋಟ, ರೈತಪರ ಹೋರಾಟ’ ಶೀರ್ಷಿಕೆಯಡಿ ರಾಜ್ಯದಾದ್ಯಂತ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸರಕಾರದ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ರೈತರ ಬೆಳೆಹಾನಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಹೋರಾಟವನ್ನು ಪೊಲೀಸರ ಮುಖಾಂತರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎನಿಸುತ್ತಿದೆ. ಕಬ್ಬು ಬೆಳೆಗಾರರಿಗೆ ಕೇವಲ ಪ್ರತಿ ಟನ್ ಕಬ್ಬಿಗೆ 2,950ರೂ. ನೀಡಲು ನಿರ್ಧರಿಸಿರುವುದು ವಿಷಾದನೀಯ ಎಂದರು. ಈ ಸಂದರ್ಭದಲ್ಲಿ ಹುಮನಾಬಾದ್ ಶಾಸಕ ಡಾ. ಸಿದ್ಧಲಿಂಗಪ್ಪ ಪಾಟೀಲ್, ಬಸವಕಲ್ಯಾಣ ಶಾಸಕ ಶರಣು ಸಲಗರ್, ಬಿಜೆಪಿಯ ವಿಭಾಗೀಯ ಸಹಪ್ರಭಾರಿ ಈಶ್ವರಸಿಂಗ್ ಠಾಕೂರ್, ಮಾಜಿ ಬುಡಾ ಅಧ್ಯಕ್ಷ ಬಾಬು ವಾಲಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ ಯರನಳ್ಳಿ, ಮುಖಂಡರಾದ ವಸಂತ್ ವಕೀಲ, ಕಿರಣ್ ಪಾಟೀಲ್, ಗುರುನಾಥ್ ರಾಜಗಿರಾ, ಬಸವರಾಜ್ ಪವಾರ್ ಹಾಗೂ ಶ್ರೀನಿವಾಸ್ ಚೌಧರಿ ಉಪಸ್ಥಿತರಿದ್ದರು.
ಪ್ರಧಾನಿ ಭೇಟಿಯ ಹಿನ್ನೆಲೆ | ನ.28ರಂದು ಉಡುಪಿ ನಗರಸಭೆ ವ್ಯಾಪ್ತಿ ಶಾಲೆಗೆ ರಜೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ಉಡುಪಿ, ನ.25 : ನ.28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಪ್ರಧಾನ ಮಂತ್ರಿಗಳ ಉಡುಪಿ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕುಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಪ್ರಸ್ತುತ ನೀಡಿರುವ ರಜೆ ಅವಧಿಯನ್ನು ನಿರ್ವಹಿಸಬೇಕಾದ ಪಠ್ಯವನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಗುಜರಾತ್ ನಲ್ಲಿ 16,000 ಕೋಟಿ ರೂ. ಮೌಲ್ಯದ ಮಾದಕದ್ರವ್ಯ ವಶ; ಸದೃಢ ಕ್ರಮವಿಲ್ಲ: ಕಾಂಗ್ರೆಸ್
ಹೊಸದಿಲ್ಲಿ, ನ. 25: ಗುಜರಾತ್ ನ ಬಿಜೆಪಿ ಸರಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು 16,000 ಕೋಟಿ ರೂಪಾಯಿ ಮೌಲ್ಯದ ಮಾದಕದ್ರವ್ಯ ವಶಪಡಿಸಿಕೊಳ್ಳಲಾಗಿದೆಯಾದರೂ, ಯಾವುದೇ ಪ್ರಕರಣದಲ್ಲಿ ಒಬ್ಬನೇ ಒಬ್ಬ ಪಾತಕಿಯನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಮತ್ತು ಯಾವುದೇ ಸದೃಢ ಕ್ರಮವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದೆ. ಅಕ್ರಮ ಮದ್ಯ ಮಾರಾಟಗಾರರು ಮತ್ತು ಮಾದಕದ್ರವ್ಯ ವ್ಯಾಪಾರಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲು ವಿಫಲರಾಗಿರುವ ಪೊಲೀಸರು ತಮ್ಮ ಕೆಲಸಗಳನ್ನು ಕಳೆದುಕೊಳ್ಳುತ್ತಾರೆ ಎಂಬ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ ನೀಡಿರುವ ಎಚ್ಚರಿಕೆಯನ್ನು ಖಂಡಿಸಿ ಅವರ ವಿರುದ್ಧ ಉತ್ತರ ಗುಜರಾತ್ ನ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆದ ಒಂದು ದಿನದ ಬಳಿಕ ಕಾಂಗ್ರೆಸ್ ಈ ಹೇಳಿಕೆ ನೀಡಿದೆ. ಮೆವಾನಿ ಹೇಳಿಕೆಯನ್ನು ಖಂಡಿಸಿ ಪೊಲೀಸರ ಸಂಬಂಧಿಕರು ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆ ಮತ್ತು ಅವರು ತನ್ನ ಹೇಳಿಕೆಗಾಗಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ. ಶಾಲೆಯೊಂದರ ಪಕ್ಕದಲ್ಲೇ ‘‘ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಅಂಗಂಡಿಯೊಂದರ’’ ಮೇಲೆ ಮೆವಾನಿ ಮತ್ತು ಸಾರ್ವಜನಿಕರು ‘‘ದಾಳಿ ನಡೆಸಿದ್ದಾರೆ’’ ಎಂದು ಕೆಲವು ದಿನಗಳ ಹಿಂದೆ ಗುಜರಾತ್ ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ಸೇವಾ ದಳ ಮುಖ್ಯಸ್ಥ ಲಾಲ್ಜಿ ದೇಸಾಯಿ ಹೇಳಿದ್ದಾರೆ.
ಉಡುಪಿ | ನ.28 : ಬನ್ನಂಜೆಯಿಂದ ಕಲ್ಸಂಕವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’
ಉಡುಪಿ, ನ.25 : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಬೃಹತ್ ಗೀತೋತ್ಸವದ ಹಿನ್ನೆಲೆಯಲ್ಲಿ ಜರುಗಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಬನ್ನಂಜೆಯಿಂದ ಕಲ್ಸಂಕದವರೆಗೆ ‘ರೋಡ್ ಶೋ’ದಲ್ಲಿ ಭಾಗವಹಿಸುವರು ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.28ರ ಶುಕ್ರವಾರ ಬೆಳಗ್ಗೆ 11:40ಕ್ಕೆ ಆದಿಉಡುಪಿ ಹೆಲಿಪ್ಯಾಡ್ಗೆ ಆಗಮಿಸುವ ಮೋದಿ ಅವರ ರೋಡ್ ಶೋ ಬನ್ನಂಜೆಯ ಡಾ.ವಿ.ಎಸ್.ಆಚಾರ್ಯ ಬಸ್ನಿಲ್ದಾಣದ ಬಳಿ ಇರುವ ನಾರಾಯಣಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣದಿಂದ ಕಲ್ಸಂಕ ಜಂಕ್ಷನ್ವರೆಗೆ ಸಾಗಲಿದೆ ಎಂದು ಅವರು ತಿಳಿಸಿದರು. ರೋಡ್ ಶೋನಲ್ಲಿ 30 ಸಾವಿರಕ್ಕೂ ಅಧಿಕ ಮಂದಿ ಬಾಗವಹಿಸಲಿದ್ದಾರೆ ಎಂದು ತಿಳಿಸಿದ ಕುತ್ಯಾರು, ಪ್ರಧಾನಿ ಮೋದಿ ಅಪರಾಹ್ನ 12:00ಗಂಟೆಗೆ ಶ್ರೀಕೃಷ್ಣ ಮಠದ ತಲುಪಲಿದ್ದು, ಶ್ರೀಕೃಷ್ಣ ದರ್ಶನದ ಬಳಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಪರಾಹ್ನ 1:35ಕ್ಕೆ ಸಮಾರಂಭದ ಸ್ಥಳದಿಂದ ಹೊರಟು 1.40ಕ್ಕೆ ಆದಿಉಡುಪಿ ಹೆಲಿಪ್ಯಾಡ್ ತಲುಪಿ 1:45ಕ್ಕೆ ಉಡುಪಿಯಿಂದ ಹೆಲಿಕಾಫ್ಟರ್ ಮೂಲಕ ಮಂಗಳೂರಿಗೆ ತೆರಳಿ ಅಲ್ಲಿಂದ 2:15ಕ್ಕೆ ಗೋವಾಕ್ಕೆ ಪ್ರಯಾಣಿಸಲಿದ್ದಾರೆ ಎಂದರು. ಲಕ್ಷ ಕಂಠ ಗೀತಾ ಪಾರಾಯಣ ಮತ್ತು ರೋಡ್ ಶೋ ನಡುವೆ ಯಾವುದೇ ಗೊಂದಲವಿಲ್ಲ. ಲಕ್ಷಕಂಠ ಗೀತಾ ಪಾರಾಯಣದಲ್ಲೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ ಎಂದ ನವೀನ್ ಶೆಟ್ಟಿ, ರೋಡ್ ಶೋನಲ್ಲಿ ಜಿಲ್ಲೆಯ 1112 ಬೂತ್ ಗಳ ಕಾರ್ಯಕರ್ತರು, ನಾಯಕರು ಭಾಗವಹಿಸಲಿದ್ದಾರೆ ಎಂದರು. ಬನ್ನಂಜೆಯಿಂದ ಕಲ್ಸಂಕದವರೆಗೂ ರೋಡ್ ಶೋ ಇರಲಿದೆ. ಇದಕ್ಕಾಗಿಯೇ ರಸ್ತೆಯ ಎರಡು ಕಡೆಗಳಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಬನ್ನಂಜೆಯ ಜಯಲಕ್ಷ್ಮೀ ಶೋರೂಮ್ ಎದುರು ಹಾಗೂ ಸಿಟಿ ಬಸ್ ನಿಲ್ದಾಣದ ಬಳಿ ವೇದಿಕೆಯನ್ನು ನಿರ್ಮಿಸಿ ಅಲ್ಲಿ ಯಕ್ಷಗಾನ, ಹುಲಿವೇಷ ಹಾಗೂ ಕೃಷ್ಣ ವೇಷಧಾರಿಗಳ ಪ್ರದರ್ಶನ ಮೂಲಕ ಪ್ರಧಾನಿಯನ್ನು ಸ್ವಾಗತಿಸಲಾಗುತ್ತದೆ. ವೇದಿಕೆಯ ಮೇಲೆ ಯಕ್ಷಗಾನ, ಹುಲಿವೇಷ ಹಾಗೂ ಕೃಷ್ಣ ವೇಷಧಾರಿಗಳು ಇರುತ್ತಾರೆ ಎಂದರು. ಬನ್ನಂಜೆಯಿಂದ ಕಲ್ಸಂಕದವರೆಗೂ ಸುಮಾರು 15 ನಿಮಿಷ ರೋಡ್ ಶೋ ಇರಲಿದೆ. ತೆರೆದ ವಾಹನದಲ್ಲಿ ಮೋದಿಯವರು ಇರುವುದಿಲ್ಲ. ತಮ್ಮ ವಾಹನದ ಒಳಗೆ ಅಥವಾ ಸ್ವಲ್ಪ ದೂರ ನಡೆದುಕೊಂಡು ಬರಬಹುದು. ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಏನಿದ್ದರೂ ಮೋದಿ ಸ್ವಾಗತಕ್ಕೆ ಎಲ್ಲ ಸಿದ್ಧತೆಗಳು ಪಕ್ಷದ ವತಿಯಿಂದ ನಡೆಯುತ್ತಿದೆ ಎಂದರು.
ಕೆಎಸ್ಸಿಎ ಅಧ್ಯಕ್ಷರಾಗಿ ವೆಂಕಟೇಶ ಪ್ರಸಾದ್: ಅಧಿಕೃತ ಘೋಷಣೆಯಷ್ಟೇ ಬಾಕಿ
ಬೆಂಗಳೂರು, ನ.25: ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ ಪ್ರಸಾದ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್ಸಿಎ)ನೂತನ ಅಧ್ಯಕ್ಷರಾಗಲು ಸಜ್ಜಾಗಿದ್ದಾರೆ. ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಇನ್ನೋರ್ವ ಅಭ್ಯರ್ಥಿ ಸಲ್ಲಿಸಿರುವ ನಾಮಪತ್ರ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಪ್ರಸಾದ್ ಸ್ಪರ್ಧೆಯಲ್ಲಿರುವ ಏಕೈಕ ಅಭ್ಯರ್ಥಿಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಡಿಸೆಂಬರ್ 7ರಂದು ಕೆಎಸ್ಸಿಎ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿತ್ತು. ನವೆಂಬರ್ 26ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಅಧ್ಯಕ್ಷ ಹುದ್ದೆಗಾಗಿ ವೆಂಕಟೇಶ ಪ್ರಸಾದ್ ಹಾಗೂ ದಿ ಪ್ರಿಂಟರ್ಸ್(ಮೈಸೂರು)ಪ್ರೈ.ಲಿ.ನಿರ್ದೇಶಕರಾದ ಕೆ.ಎನ್. ಶಾಂತ ಕುಮಾರ್ ಇಬ್ಬರು ಅಭ್ಯರ್ಥಿಗಳಾಗಿದ್ದರು. ಸೋಮವಾರ ನಾಮಪತ್ರದ ಪರಿಶೀಲನೆಯ ವೇಳೆ ಶಾಂತಕುಮಾರ್ ಅವರ ನಾಮಪತ್ರ ಅಸಿಂಧು ಎಂದು ಪ್ರಕಟಿಸಲಾಯಿತು. ವೆಂಕಟೇಶ ಪ್ರಸಾದ್ ಕಣದಲ್ಲಿರುವ ಏಕೈಕ ಅಭ್ಯರ್ಥಿಯಾಗಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಟೀಮ್ ಗೇಮ್ ಚೇಂಜರ್ಸ್’ ಬಣದ ವೆಂಕಟೇಶ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಬುಧವಾರ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. ವೆಂಕಟೇಶ ಪ್ರಸಾದ್ ಈ ಹಿಂದೆ 2010ರಿಂದ 2013ರ ತನಕ ಕೆಎಸ್ಸಿಎ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಇದೀಗ 12 ವರ್ಷಗಳ ನಂತರ ಕೆಎಸ್ಸಿಎಗೆ ಮರಳಿದ್ದಾರೆ. ಆಗ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದು, ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು. ಕಾರ್ಯದರ್ಶಿ ಹುದ್ದೆಗೆ ಕೆಎಸ್ಸಿಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಅವರ ನಾಮಪತ್ರವನ್ನು ತಾಂತ್ರಿಕ ಕಾರಣದಿಂದಾಗಿ ತಿರಸ್ಕೃರಿಸಲಾಗಿದ್ದು, ಇದು ‘ಟೀಮ್ ಗೇಮ್ ಚೇಂಜರ್ಸ್’ಗೆ ಹಿನ್ನಡೆಯಾಗಿದೆ. ಕೆಎಸ್ಸಿಎ ಮಾಜಿ ಖಜಾಂಚಿ ಇ.ಎಸ್.ಜೈರಾಮ್ ಹಾಗೂ ಕೆಎಸ್ಸಿಎ ಮಾಜಿ ಕಾರ್ಯದರ್ಶಿ ಸಂತೋಷ್ ಮೆನನ್(ಇಬ್ಬರೂ ಟೀಮ್ ಬ್ರಿಜೇಶ್ ಬಣ)ಹಾಗೂ ಭಾರತದ ಮಾಜಿ ಬ್ಯಾಟರ್ ಸುಜಿತ್ ಸೋಮಸುಂದರ್ (ಟೀಮ್ ಗೇಮ್ ಚೇಂಜರ್ಸ್)ಅವರು ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಲು ಅರ್ಹರೆಂದು ಪರಿಗಣಿಸಲಾಗಿದೆ.
ಕ್ರಿಕೆಟ್ ಮಹಾಯುದ್ಧಕ್ಕೆ ಮುಹೂರ್ತ ಫಿಕ್ಸ್, ಫೆಬ್ರವರಿ 15 ಭಾನುವಾರ ಭಾರತ &ಪಾಕಿಸ್ತಾನ... T20 World Cup
ಕ್ರಿಕೆಟ್ ಎಂಬ ಆಟವೇ ಒಂದು ರಣರಂಗ, ಅದರಲ್ಲೂ ಭಾರತ ಮತ್ತು ಪಾಕಿಸ್ತಾನ ನಡುವೆ ಮ್ಯಾಚ್ ನಡೆಯುತ್ತೆ ಅಂದ್ರೆ ಅದು ಮತ್ತೊಂದು ಮಹಾಯುದ್ಧವೇ ಆಗಿರುತ್ತದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಮ್ಯಾಚ್ ಶುರುವಾದರೆ ಪ್ರಪಂಚದ ಮೂಲೆ ಮೂಲೆಯಿಂದ ಕೂಡ ಕೋಟಿ ಕೋಟಿ ಜನ ನೋಡ್ತಾರೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಭಾರಿ ಭರ್ಜರಿ
ಅಮೆರಿಕ |1921ರ ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದ 111ರ ವೃದ್ಧೆ ವಿಧಿವಶ
ವಾಶಿಂಗ್ಟನ್,ನ.25: ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದಿರುವ ಅತ್ಯಂತ ಹಿರಿಯ ವಯಸ್ಸಿನ ಮಹಿಳೆ ವಿಯೊಲಾ ಫ್ಲೆಚರ್ ಅವರು ಸೋಮವಾರ ನಿಧನರಾದರು. ಅವರಿಗೆ 111 ವರ್ಷ ವಯಸ್ಸಾಗಿತ್ತು. 1921ರ ಮೇ 31ರಂದು ಅಮೆರಿಕದಲ್ಲಿ ಕರಿಯಜನಾಂಗೀಯರ ಬಾಹುಳ್ಯದ ಪ್ರದೇಶವಾದ ಗ್ರೀನ್ವುಡ್ನ ಟುಲ್ಸಾ ಎಂಬಲ್ಲಿ ಬಿಳಿಜನಾಂಗೀಯರ ಗುಂಪೊಂದು 300ಕ್ಕೂ ಅಧಿಕ ಅಫ್ರಿಕನ್ ಮೂಲದ ಕರಿಯಜನಾಂಗೀಯರನ್ನು ಹತ್ಯೆಗೈದಿತ್ತು. ಅಮೆರಿಕ ಇತಿಹಾಸದ ಕರಾಳ ಅಧ್ಯಾಯಗಳಲ್ಲೊಂದೆನಿಸಿರುವ ಟುಲ್ಸಾ ಹತ್ಯಾಕಾಂಡ ನಡೆದ ಫ್ಲೆಚರ್ ಪುಟ್ಟ ಬಾಲಕಿಯಾಗಿದ್ದಳು. ಬಿಳಿಜನಾಂಗೀಯ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಕರಿಯಜನಾಂಗದ ಯುವಕನೊಬ್ಬನನ್ನು ಸಮರ್ಥಿಸಲು ಆಫ್ರಿಕನ್ ಅಮೆರಿಕನ್ನರ ಗುಂಪೊಂದು ನ್ಯಾಯಾಲಯಕ್ಕೆ ತೆರಳುತ್ತಿದ್ದಾಗ ಬಿಳಿಯ ಜನಾಂಗೀಯರ ಗುಂಪೊಂದು ಗುಂಡಿನ ದಾಳಿ ನಡೆಸಿತ್ತು ಬಿಳಿಯ ಜನಾಂಗೀಯ ಗುಂಪುಗಳು ಗ್ರೀನ್ವುಡ್ನಲ್ಲಿರುವ ಕರಿಯಜನಾಂಗೀಯರ ಮನೆಗಳಿಗೆ ಬೆಂಕಿ ಹಚ್ಚಿದ್ದರಿಂದ ಸಾವಿರಾರು ಜನರು ನಿರಾಶ್ರಿತರಾಗಿದ್ದರು. ಈ ಹತ್ಯಾಕಾಂಡ ನಡೆದ ಬಳಿಕ ಫ್ಲೆಟರ್ ಪ್ರಾಥಮಿಕ ಶಾಲಾ ಶಿಕ್ಷಣವನ್ನು ತೊರೆದಿದ್ದಳು. ತರುವಾಯ ಆಕೆ ಬಿಳಿಯ ಜನಾಂಗೀಯ ಕುಟುಂಬಗಳಲ್ಲಿ ಮನೆಗೆಲಸ ಮಾಡಿಕೊಂಡಿದ್ದಳು. ಎಎಫ್ಪಿ ಸುದ್ದಿಸಂಸ್ಥೆಗೆ ಕೆಲವು ವರ್ಷಗಳ ಹಿಂದೆ ನೀಡಿದ ಸಂದರ್ಶನವೊಂದರಲ್ಲಿ ಆಕೆ ಟುಲ್ಸಾ ಜನಾಂಗೀಯ ಹತ್ಯಾಕಾಂಡದ ಭೀಕರತೆಯನ್ನು ವಿವರಿಸಿದ್ದಳು. ‘‘ ಕರಿಯ ಜನಾಂಗೀಯರ ಮೇಲೆ ಗುಂಡಿನ ದಾಳಿ ನಡೆದುದನ್ನು, ಅವರ ದೇಹಗಳು ರಸ್ತೆಗಳಲ್ಲಿ ಚದುರಿಬಿದ್ದಿರುವುದನ್ನು, ಅವರ ಅಂಗಡಿಮುಂಗಟ್ಟೆಗಳನ್ನು ಸುಟ್ಟುಹಾಕಿರುವ ದೃಶ್ಯಗಳು ಈಗಲೂ ನನಗೆ ಕಾಣುತ್ತಿದೆ’’ ಎಂದು ಮಾರ್ಮಿಕವಾಗಿ ಹೇಳಿದ್ದರು.
ಕಲಬುರಗಿ | ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ
ಕಲಬುರಗಿ: ನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಆಳಂದ ತಾಲೂಕಿನ ತಂಬಾಕವಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್ ಪಾಟೀಲ್ ಮತ್ತು ಬೋಳಣಿ ಗ್ರಾಮದ ಯುವ ಮುಖಂಡ ರಮೇಶ ಬಿರಾದಾರ ಅವರು ಕಾಂಗ್ರೆಸ್ ತೊರೆದು ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ಮಾಜಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಮಾಜಿ ಅಧ್ಯಕ್ಷ ಆನಂದರಾವ್ ಪಾಟೀಲ್, ಜಿಲ್ಲಾ ಮುಖಂಡ ಸಂತೋಷ ಹಾದಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗೋಸಾಗಣೆ ಪ್ರಕರಣದಲ್ಲಿ ಮಹಿಳೆಯ ಮನೆ ಜಪ್ತಿ; ಧರ್ಮಸ್ಥಳ ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣದಲ್ಲಿ ಸಜಿಪ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆ ಜಪ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಧರ್ಮಸ್ಥಳ ಠಾಣೆ ಪೋಲಿಸರು ನವೆಂಬರ್ 4ರಂದು ನೀಡಿದ್ದ ನೋಟಿಸ್ ರದ್ದುಕೋರಿ ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದ ನಿವಾಸಿ ಬೀಫಾತುಮ್ಮ (57) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಗೋಸಾಗಣೆ ಆರೋಪಿಗಳಿಗೂ ಅರ್ಜಿದಾರೆಗೂ ಯಾವುದೇ ಸಂಪರ್ಕವಿಲ್ಲ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅರ್ಜಿದಾರೆ ಆರೋಪಿಯೂ ಆಗಿಲ್ಲ. ಹೀಗಿದ್ದರೂ, ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020ರ ಸೆಕ್ಷನ್ 8(1) ಅಡಿಯಲ್ಲಿ ಅರ್ಜಿದಾರರ ಮನೆ ಜಪ್ತಿಗೆ ಧರ್ಮಸ್ಥಳ ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿ, ಜಪ್ತಿ ಮಾಡಿದ್ದರು ಎಂದು ಆಕ್ಷೇಪಿಸಿದರು. ಅರ್ಜಿದಾರರ ಮನೆ ಜಪ್ತಿಗೆ ಯಾವ ಆಧಾರದಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ ಎಂಬ ಬಗ್ಗೆ ವಿವರಣೆ ನೀಡಲು ಸರಕಾರದ ಪರ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು. ಪ್ರಕರಣವೇನು? ನವೆಂಬರ್ 2ರಂದು ಪಟ್ಟೂರಿನಿಂದ ಕೊಕ್ಕಡ ಕಡೆಗೆ ಸಂಶಯಾಸ್ಪದವಾಗಿ ಬರುತ್ತಿದ್ದ ಕಾರೊಂದನ್ನು ತಡೆದು ಪೊಲೀಸರು ಪರಿಶೀಲಿಸಿದ್ದರು. ಈ ವೇಳೆ ಕಾರಿನ ಹಿಂಬದಿಯಲ್ಲಿ ಮೂರು ಕರುಗಳು ಕಂಡು ಬಂದಿದ್ದವು. ಜಾನುವಾರುಗಳ ಸಾಗಣೆಗೆ ಯಾವುದೇ ಪರವಾನಗಿಯೂ ಇರಲಿಲ್ಲ. ಈ ಬಗ್ಗೆ ಕಾರಿನಲ್ಲಿದ್ದ ಮಹಮ್ಮದ್ ಸಿನಾನ್ ಹಾಗೂ ಇಬ್ರಾಹಿಂ ಖಲೀಲ್ ಅವರನ್ನು ವಿಚಾರಿಸಲಾಗಿ ಪಟ್ರಮೆ ಗ್ರಾಮದ ಜೋಹಾರ ಎಂಬ ಮಹಿಳೆಯ ಮನೆಯಿಂದ ಕರುಗಳನ್ನು ಖರೀದಿಸಿದ್ದಾಗಿ ತಿಳಿಸಿದ್ದರು. ಪ್ರಕರಣ ಸಂಬಂಧ ಮಹಮ್ಮದ್ ಸಿನಾನ್, ಇಬ್ರಾಹಿಂ ಖಲೀಲ್ ಹಾಗೂ ಜೋಹಾರ ವಿರುದ್ಧ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದೇ ಪ್ರಕರಣದಲ್ಲಿ ಆರೋಪಿಯೊಬ್ಬರ ತಾಯಿ ಅರ್ಜಿದಾರೆ ಬೀಫಾತುಮ್ಮ ಅವರಿಗೆ ನವೆಂಬರ್ 4ರಂದು ಮನೆ ಜಪ್ತಿಗೆ ನೋಟಿಸ್ ನೀಡಿ ಮನೆ ಜಪ್ತಿ ಮಾಡಲಾಗಿದ್ದು, ಇದರಿಂದ, ಜಪ್ತಿ ರದ್ದು ಕೋರಿ ಬೀಫಾತುಮ್ಮ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರೆಯ ಪರವಾಗಿ ವಕೀರಲಾದ ಮಹಮ್ಮದ್ ಮುಸ್ತಫಾ, ಅನ್ವರ್ ಕೆ.ಪಿ ಹಾಗೂ ಎಸ್.ಜಿ.ಅಫ್ರೀಝ್ ಸಜಿಪ ವಾದ ಮಂಡಿಸಿದರು.
2026ರ ಆವೃತ್ತಿಯ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಫೆ.7ರಂದು ಆರಂಭ, ಒಂದೇ ಗುಂಪಿನಲ್ಲಿ ಭಾರತ, ಪಾಕಿಸ್ತಾನ
ಮುಂಬೈ, ನ.25: ಭಾರತ ಹಾಗೂ ಶ್ರೀಲಂಕಾದ ಜಂಟಿ ಆಶ್ರಯದಲ್ಲಿ ನಡೆಯಲಿರುವ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ನಡೆಯಲಿರುವ ಪಂದ್ಯಾವಳಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ‘ಎ’ಗುಂಪಿನಲ್ಲಿ ಸ್ಥಾನ ಪಡೆದಿವೆ. ಫೆ.15ರಂದು ಕೊಲಂಬೊದಲ್ಲಿ ಗ್ರೂಪ್ ಪಂದ್ಯವನ್ನಾಡಲಿವೆ. ಪಂದ್ಯಾವಳಿಯು ಭಾರತದ ಐದು ಹಾಗೂ ಶ್ರೀಲಂಕಾ ಮೂರು ಸಹಿತ ಒಟ್ಟು 8 ತಾಣಗಳಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. ಐದು ತಂಡಗಳಿರುವ ನಾಲ್ಕು ಗುಂಪುಗಳನ್ನು ರಚಿಸಲಾಗಿದೆ. ಗ್ರೂಪ್ ಹಂತದ ಪಂದ್ಯಗಳ ನಂತರ ಪ್ರತೀ ಗುಂಪಿನ ಅಗ್ರ ಎರಡು ತಂಡಗಳು ಸೂಪರ್-8 ಹಂತಕ್ಕೆ ಅರ್ಹತೆ ಪಡೆಯುತ್ತವೆ. ಸೂಪರ್-8 ಹಂತದಲ್ಲಿ ಎಂಟು ತಂಡಗಳು ಪರಸ್ಪರ ಸೆಣಸಾಡಲಿದ್ದು, ಅಗ್ರ ನಾಲ್ಕು ತಂಡಗಳು ಸೆಮಿ ಫೈನಲ್ ಗೆ ಪ್ರವೇಶಿಸಲಿವೆ. ಎರಡು ಶ್ರೇಷ್ಠ ತಂಡಗಳು ಫೈನಲ್ ಗೆ ತಲುಪುತ್ತವೆ. ಕೊಲಂಬೊದಲ್ಲಿ ಪಾಕಿಸ್ತಾನ ತಂಡವು ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸುವ ಮೂಲಕ ಪಂದ್ಯಾವಳಿಯು ಆರಂಭವಾಗಲಿದೆ. ಆಸ್ಟ್ರೇಲಿಯ-ಒಮಾನ್ ನಡುವೆ ಕೊನೆಯ ಗ್ರೂಪ್ ಪಂದ್ಯ ಕ್ಯಾಂಡಿಯಲ್ಲಿ ನಡೆಯಲಿದೆ. ಗ್ರೂಪ್ ಹಂತದ ಪಂದ್ಯಗಳು ಫೆಬ್ರವರಿ 7ರಿಂದ 20ರ ತನಕ ನಡೆಯಲಿವೆ. ಸೂಪರ್-8 ಪಂದ್ಯಗಳು ಫೆಬ್ರವರಿ 21ರಿಂದ ಮಾರ್ಚ್ 1ರ ತನಕ ನಡೆಯಲಿದೆ. ಎರಡು ಸೆಮಿ ಫೈನಲ್ಗಳು ಕ್ರಮವಾಗಿ ಮಾ.4 ಹಾಗೂ 5ರಂದು ನಡೆಯಲಿದೆ. ಫೈನಲ್ ಪಂದ್ಯವು ಮಾರ್ಚ್ 8ರಂದು ಅಹ್ಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯಲಿದೆ. ಒಂದು ವೇಳೆ ಪಾಕಿಸ್ತಾನ ತಂಡ ಫೈನಲ್ ಗೆ ತಲುಪಿದರೆ ಫೈನಲ್ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ. ಪಾಕಿಸ್ತಾನ ಫೈನಲ್ ಗೆ ಅರ್ಹತೆ ಪಡೆಯದೇ ಇದ್ದರೆ ಫೈನಲ್ ಪಂದ್ಯವು ಅಹ್ಮದಾಬಾದ್ ನಲ್ಲೇ ನಡೆಯುವುದು. ಪಾಕಿಸ್ತಾನ ಸೆಮಿ ಫೈನಲ್ ಗೆ ತಲುಪದಿದ್ದರೆ, ಸೆಮಿ ಫೈನಲ್ ಪಂದ್ಯಗಳು ಕೋಲ್ಕತಾ ಹಾಗೂ ಮುಂಬೈನಲ್ಲಿ ನಡೆಯಲಿದೆ. ನಿರೀಕ್ಷೆಯಂತೆಯೇ ಭಾರತ ಹಾಗೂ ಪಾಕಿಸ್ತಾನ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿವೆ. ಹಾಲಿ ಚಾಂಪಿಯನ್ ಭಾರತ ತಂಡವು ಫೆಬ್ರವರಿ 7 ರಂದು ಅಮೆರಿಕವನ್ನು ಎದುರಿಸುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಫೆ.15ರಂದು ಪಾಕಿಸ್ತಾನವನ್ನು ಕೊಲಂಬೊದಲ್ಲಿ ಎದುರಿಸಲಿದೆ. ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯ ತಂಡವು ಬಿ ಗುಂಪಿನಲ್ಲಿ ಐರ್ಲ್ಯಾಂಡ್, ಒಮಾನ್, ಶ್ರೀಲಂಕಾ ಹಾಗೂ ಝಿಂಬಾಬ್ವೆ ತಂಡದೊಂದಿಗೆ ಸ್ಥಾನ ಪಡೆದಿದೆ.
2024ರಲ್ಲಿ ಜಗತ್ತಿನಾದ್ಯಂತ ಸಂಗಾತಿಗಳು, ಕುಟುಂಬ ಸದಸ್ಯರಿಂದಲೇ 50 ಸಾವಿರಕ್ಕೂ ಅಧಿಕ ಸ್ತ್ರೀಯರ ಹತ್ಯೆ!
ನ್ಯೂಯಾರ್ಕ್,ನ.25: ಜಗತ್ತಿನಾದ್ಯಂತ 2024ರಲ್ಲಿ ಸರಾಸರಿ ಪ್ರತಿ 10 ನಿಮಿಷಕ್ಕೆ ಒಬ್ಬರಂತೆ ಅಥವಾ ದಿನಕ್ಕೆ 137 ಮಂದಿಯಂತೆ 50 ಸಾವಿರಕ್ಕೂ ಅಧಿಕ ಮಹಿಳೆಯರು, ಬಾಲಕಿಯರು ತಮ್ಮ ಆಪ್ತ ಸಂಗಾತಿಗಳು ಅಥವಾ ಕುಟುಂಬ ಸದಸ್ಯರಿಂದ ಹತ್ಯೆಯಾಗಿದ್ದಾರೆಂದು ವಿಶ್ವಸಂಸ್ಥೆಯ ಮಾದಕದ್ರವ್ಯ ಹಾಗೂ ಅಪರಾಧ ಕುರಿತ ಕಾರ್ಯಾಲಯ (ಯುಎನ್ಓಡಿಸಿ) ಹಾಗೂ ವಿಶ್ವಸಂಸ್ಥೆಯ ಮಹಿಳಾ ಸಂಘಟನೆ ಸೋಮವಾರ ಪ್ರಕಟಿಸಿದ ವರದಿಯೊಂದು ತಿಳಿಸಿದೆ. ಪ್ರತಿ ವರ್ಷವೂ ಸಹಸ್ರಾರು ಮಹಿಳೆಯರು ಹತ್ಯೆಯಾಗುತ್ತಿದ್ದು, ಅದನ್ನು ತಡೆಗಟ್ಟುವಲ್ಲಿ ನಿಜವಾದ ಪ್ರಗತಿಯಾಗಿರುವ ಬಗ್ಗೆ ಯಾವುದೇ ಲಕ್ಷಣ ಕಂಡುಬರುತ್ತಿಲ್ಲವೆಂದು ಅವರು ಹೇಳಿದ್ದಾರೆ. ಕಳೆದ ವರ್ಷ 83 ಸಾವಿರಕ್ಕೂ ಅಧಿಕ ಮಹಿಳೆಯರು ಹಾಗೂ ಬಾಲಕಿಯರು ಉದ್ದೇಶಪೂರ್ವಕವಾಗಿ ಕೊಲೆಯಾಗಿದ್ದಾರೆ. ಇವರ ಪೈಕಿ ಶೇ.60ರಷ್ಟು ಮಂದಿ ತಮ್ಮ ಸಂಗಾತಿಗಳಿಂದ ಅಥವಾ ಸಂಬಂಧಿಕರಿಂದ ಕೊಲ್ಲಲ್ಪಟ್ಟಿದ್ದಾರೆಂದು ವರದಿ ತಿಳಿಸಿದೆ. ಈ ಅಂಕಿಅಂಶಗಳಿಗೆ ಹೋಲಿಸಿದರೆ, 2024ರಲ್ಲಿ ಶೇ.11ರಷ್ಟು ಪುರುಷರು ತಮ್ಮ ಆಪ್ತ ಸಂಗಾತಿಗಳಿಂದ ಅಥವಾ ಕುಟುಂಬ ಸದಸ್ಯರಿಂದ ಕೊಲೆಯಾಗಿದ್ದಾರೆಂದು ವರದಿ ಹೇಳಿದೆ. ಕಳೆದ ವರ್ಷ ವರದಿಯಾದ ಹಲವಾರು ಪ್ರಕರಣಗಳಲ್ಲಿ ಮಹಿಳೆಯರು ಹಾಗೂ ಬಾಲಕಿಯರ ಕೊಲೆಗಳನ್ನು ತಡೆಯಲು ಸಾಧ್ಯವಿತ್ತಾದರೂ, ರಕ್ಷಣೆ, ಪೊಲೀಸರ ಪ್ರತಿಕ್ರಿಯೆ ಹಾಗೂ ಸಾಮಾಜಿಕ ಬೆಂಬಲದ ವ್ಯವಸ್ಥೆಗಳ ಕೊರತೆಯು ಮಹಿಳೆಯರು ಹಾಗೂ ಬಾಲಕಿಯರನ್ನು ಸಾವಿನೆಡೆಗೆ ದೂಡಿದೆ ಎಂದು ವರದಿ ಕಳವಳ ವ್ಯಕ್ತಪಡಿಸಿದೆ. ಹಲವಾರು ದೇಶಗಳಲ್ಲಿ ದತ್ತಾಂಶ ಸಂಗ್ರಹ ವ್ಯವಸ್ಥೆ ತೀರಾ ಕಳಪೆಯಾಗಿರುವುದರಿಂದ ಮಹಿಳಾ ಸಾವುನೋವಿನ ಅಂಕಿಅಂಶಗಳನ್ನು ವಾಸ್ತವಕ್ಕಿಂತ ಕಡಿಮೆಯಾಗಿ ಅಂದಾಜಿಸಲಾಗಿದೆಯೆಂದು ವರದಿ ಹೇಳಿದೆ. ಹಿಂಸಾಚಾರದಲ್ಲಿ ಬದುಕುಳಿದವರು ದೂರು ನೀಡಲು ಭಯಪಡುತ್ತಿರುವುದು ಹಾಗೂ ಸವಕಲು ಕಾನೂನು ವ್ಯಾಖ್ಯಾನಗಳಿಂದಾಗಿ ಹಲವಾರು ಪ್ರಕರಣಗಳನ್ನು ದೃಢಪಡಿಸಲು ಕಷ್ಟಕರವಾಗಿದೆ ಎಂದು ವರದಿ ತಿಳಿಸಿದೆ. ‘‘ಆರ್ಥಿಕ ಅಸ್ಥಿರತೆ,ಸಂಘರ್ಷ, ಬಲವಂತದ ಸ್ಥಳಾಂತರ ಹಾಗೂ ಸುರಕ್ಷಿತ ವಾಸ್ತವ್ಯದ ಕೊರತೆ ಇವುಗಳಿಂದಾಗಿ ಮಹಿಳೆಯರು ಪ್ರಾಣಾಪಾಯವನ್ನು ಎದುರಿಸುತ್ತಿದ್ದಾರೆ. ಜಗತ್ತಿನಾದ್ಯಂತ ಹಲವಾರು ಮಹಿಳೆಯರು ಹಾಗೂ ಬಾಲಕಿಯರಿಗೆ ಮನೆಯು ಅತ್ಯಂತ ಅಪಾಯಕಾರಿ ಅಥವಾ ಕೆಲವೊಮ್ಮೆ ಮಾರಣಾಂತಿಕ ಸ್ಥಳವಾಗಿ ಉಳಿದಿದೆ’’ ಎಂದು ಯುಎನ್ಓಡಿಸಿಯ ಕಾರ್ಯಕಾರಿ ನಿರ್ದೇಶಕಜಾನ್ ಬ್ರಾಂಡೊಲಿನೊ ಅವರು ತಿಳಿಸಿದ್ದಾರೆ.
ರೈತರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ : ಆರ್.ಅಶೋಕ್ ವಾಗ್ಧಾಳಿ
ಕಲಬುರಗಿ : ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೋಮಾ ಸ್ಥಿತಿಯಲ್ಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ರೈತರು ಅತಿವೃಷ್ಟಿ, ಪ್ರವಾಹದಿಂದ ಸಂಕಷ್ಟದಲ್ಲಿದ್ದರೂ ಮುಖ್ಯಮಂತ್ರಿ, ಕಂದಾಯ ಸಚಿವರು ನಾಪತ್ತೆಯಾಗಿದ್ದಾರೆ. ಈವರೆಗೆ ಸ್ಥಳಕ್ಕೆ ಬಂದು ಭೇಟಿ ನೀಡಿ ವಾಸ್ತವವನ್ನು ಗಮನಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಕ್ಕೆ ಬಂದಾಗಿನಿಂದಲೂ ನಿತ್ಯವೂ ಐದು ವರ್ಷ ನಾನೇ ಸಿಎಂ, ನಾನೇ ಬಜೆಟ್ ಮಂಡಿಸುವುದು, ಮಾಧ್ಯಮದವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ, ಬಿಜೆಪಿಗೆ ಬುದ್ದಿ ಇಲ್ಲ ಎಂಬ ವರದಿಗಳೇ ಪತ್ರಿಕೆಗಳಲ್ಲಿ ಕಾಣುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ದಿನಾಲೂ ದೇವಸ್ಥಾನಗಳನ್ನು ಸುತ್ತುವುದು, ಮತ್ತಿತರ ಜಪ ಮಾಡುವುದನ್ನೇ ಮುಂದುವರಿಸಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಯಾರು ಮುಖ್ಯಮಂತ್ರಿ ಎನ್ನುವ ಬಗ್ಗೆ ಜನರು ಗೊಂದಲದಲ್ಲಿದ್ದಾರೆ. ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಾಯಕರು, ರೈತರ ಗೋಳು ಕೇಳುತ್ತಿಲ್ಲ. ಹಾಗಾಗಿ ಬಿಜೆಪಿಯಿಂದಲೇ ರಾಜ್ಯಾದ್ಯಂತ ರೈತ ಪರ ಚಳುವಳಿ ನಡೆಸಲು ನಿರ್ಧರಿಸಲಾಗಿದ್ದು, ಡಿ.1 ಮತ್ತು 2ರಂದು ಜಿಲ್ಲಾ ಕೇಂದ್ರಗಳಲ್ಲಿ ರೈತರ ಪರ ಹೋರಾಟ ನಡೆಸಲು ರೂಪರೇಷೆ ಮಾಡಲಾಗಿದೆ ಎಂದರು. ಸಂಸದ ಗೋವಿಂದ ಕಾರಜೋಳ ಮಾತನಾಡಿ, ಕೈ ನಾಯಕರಲ್ಲಿ 3 ಗುಂಪುಗಳಾಗಿವೆ. ಸಿಎಂ, ಡಿಸಿಎಂ, ಲಿಂಗಾಯತ, ದಲಿತರು, ಲೆಕ್ಕಕ್ಕೆ ಇಲ್ಲ. ನನ್ನ ಬೆನ್ನ ಹಿಂದೆ ಎಷ್ಟು ಶಾಸಕರಿದ್ದಾರೆ ಎಂಬ ಬಲ ಪ್ರದರ್ಶನ ಜೋರಾಗಿ ನಡೆದಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಂತು ಒಂದು ನಿರ್ಧಾರ ಕೈಗೊಳ್ಳದ ಪರಿಸ್ಥಿತಿಗೆ ಬಂದಿದ್ದಾರೆ. ಯಾಕೆಂದರೆ ಅವರಿಗೆ ಯಾವುದೇ ಅಧಿಕಾರ ಇಲ್ಲ ಎಂಬುದು ಅವರ ಮಾತುಗಳಿಂದ ಗೊತ್ತಾಗುತ್ತಿದೆ. ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರ ಸರ್ವಾಧಿಕಾರವೇ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರು ಸಿಎಂ ಬಗ್ಗೆ ನಿರ್ಧಾರ ಮಾಡುವಲ್ಲಿ ಅಸಹಾಯಕರಾಗಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಾಸಕರಾದ ಬಿ.ಜಿ ಪಾಟೀಲ್, ಬಸವರಾಜ ಮತ್ತಿಮಡು, ಶಶೀಲ್ ನಮೋಶಿ, ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡಿವೈಡರ್ಗೆ ಕಾರು ಡಿಕ್ಕಿಯಾಗಿ ರಕ್ತದ ಮಡುವಿನಲ್ಲಿ ಬಿದಿದ್ದ ಮಹಾಂತೇಶ್ ಬೀಳಗಿ! ಜತೆಗಿದ್ದ ಸಹೋದರರೂ ಉಳಿಯಲಿಲ್ಲ
ಕಲಬುರಗಿ ಬಳಿ ಜೇವರ್ಗಿ ಹೆದ್ದಾರಿಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಾರಿ ಮಧ್ಯೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬೀಳಗಿ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.
ಡ್ರಗ್ಸ್ ಕಳ್ಳಸಾಗಣೆ ಜಾಲದ ಸೂತ್ರಧಾರಿ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರು
ದುಬೈ,ನ.25: ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಬೃಹತ್ ಕೊಕೇನ್ ಮಾದಕದ್ರವ್ಯ ಕಳ್ಳಸಾಗಣೆಜಾಲದ ಸೂತ್ರಧಾರಿ ಎನ್ನಲಾದ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರುಗೊಳ್ಳಲಿದ್ದಾನೆ ಎಂದು ವರದಿಯೊಂದು ತಿಳಿಸಿದೆ. ಈತ ಕಳೆದ ವರ್ಷದ ನವೆಂಬರ್ನಲ್ಲಿ ದಿಲ್ಲಿಯಲ್ಲಿ ವಶಪಡಿಸಿಕೊಳ್ಳಲಾದ 2500 ಕೋಟಿ ರೂ. ಮೌಲ್ಯದ 82 ಕಿಲೋಗ್ರಾಂ ಕೊಕೇನ್ನ ಕಳ್ಳಸಾಗಣೆಯ ಸೂತ್ರಧಾರಿಯೆಂದು ಆರೋಪಿಸಲಾಗಿದೆ. ಪವನ್ ಠಾಕೂರ್ನ ಬಂಧನಕ್ಕಾಗಿ ಭಾರತೀಯ ಮಾದಕದ್ರವ್ಯ ನಿಯಂತ್ರಣ ದಳ (ಎನ್ಸಿಬಿ) ವು ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಇಂಟರ್ಪೋಲ್ ಮೂಲಕ ಆತನ ವಿರುದ್ಧ ಸಿಲ್ವರ್ ನೋಟಿಸ್ ಜಾರಿಗೊಳಿಸಿತ್ತು. ಈ ನೋಟಿಸ್ ಜಾರಿಯಿಂದಾಗಿ, ಆತನ ಆಸ್ತಿಪಾಸ್ತಿಗಳನ್ನು,ವಹಿವಾಟುಗಳನ್ನು ಹಾಗೂ ಹಣಕಾಸಿನ ಕಾರ್ಯನಿರ್ವಹಣೆಗಳನ್ನು ಪತ್ತೆಹಚ್ಚಲು ಎನ್ಸಿಬಿಗೆ ಸಾಧ್ಯವಾಗಲಿದೆ. ಜಾರಿ ನಿರ್ದೇಶನಾಲಯವು ಪವನ್ಠಾಕೂರ್ ಮಾಲಕತ್ವದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಲ್ಲದೆ, ಆತನ 118 ಬೇನಾಮಿ ಖಾತೆಗಳನ್ನು ಮುಟ್ಟುಗೋಲು ಹಾಕಿತ್ತು. ಈ ವಾರದ ಆರಂಭದಲ್ಲಿ ದಿಲ್ಲಿಯಲ್ಲಿ ಎನ್ಸಿಬಿ ಹಾಗೂ ದಿಲ್ಲಿ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದ 282 ಕೋಟಿ ರೂ. ಮೌಲ್ಯದ ಮೆಥಾಂಫೆಟಾಮೈನ್ ಮಾದಕದ್ರವ್ಯ ಕಳ್ಳಸಾಗಣೆಯಲ್ಲೂ ಈತನ ಕೈವಾಡವಿದೆಯೆಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಠಾಕೂರ್ ದೀರ್ಘಸಮಯದಿಂದ ಹವಾಲಾ ಹಾಗೂ ಕಪ್ಪುಹಣ ಬಿಳುಪು ದಂಧೆಯಲ್ಲೂ ತೊಡಗಿದ್ದನೆಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ದಿಲ್ಲಿಯಲ್ಲಿ ಕೊಕೇನ್ ಮಾದಕದ್ರವ್ಯ ಮುಟ್ಟುಗೋಲು ಹಾಕಲಾದ ಬಳಿಕ ಥಾಕೂರ್ ಹಾಗೂ ಆತನ ಕುಟುಂಬವು ದುಬೈಗೆ ಪರಾರಿಯಾಗಿತ್ತು.
ಬೀದರ್ |ನೆರೆ ಹೊರೆಯವರ ಸುಖ, ದುಃಖದಲ್ಲಿ ಭಾಗಿಯಾಗಬೇಕು : ಅಮೀನುಲ್ ಹಸನ್
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆ ಹೊರೆಯವರ ಹಕ್ಕುಗಳು ಅಭಿಯಾನ ಕಾರ್ಯಕ್ರಮ
ಚೀನಾದಲ್ಲಿ ಅರುಣಾಚಲ ಮಹಿಳೆಗೆ ಜನಾಂಗೀಯ ನಿಂದನೆ: ಸಿಎಂ ಪೆಮ ಖಂಡು ಖಂಡನೆ
ಇಟಾನಗರ, ನ. 25: ಇತ್ತೀಚೆಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲಪ್ರದೇಶದ ಮಹಿಳೆಯೊಬ್ಬರನ್ನು ಚೀನಾ ನಡೆಸಿಕೊಂಡ ರೀತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಪೆಮ ಖಂಡು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದಾರೆ. ಚೀನಾದ ಅಧಿಕಾರಿಗಳು ಮಹಿಳೆಯನ್ನು ಜನಾಂಗೀಯ ನಿಂದನೆಗೆ ಗುರಿಪಡಿಸಿರುವುದು ಆಘಾತಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ. ಅರುಣಾಚಲಪ್ರದೇಶವು ಚೀನಾದ ಭಾಗವಾಗಿರುವುದರಿಂದ ನನ್ನ ಭಾರತೀಯ ಪಾಸ್ಪೋರ್ಟ್ ಅಸಿಂಧುವಾಗಿದೆ ಎಂಬುದಾಗಿ ಚೀನಾದ ಅಧಿಕಾರಿಗಳು ಘೋಷಿಸಿದರು ಎಂದು ತನ್ನನ್ನು ಪ್ರೇಮಾ ವಾಂಗ್ಜೊಮ್ ತೊಂಗ್ಡೊಕ್ ಎಂಬುದಾಗಿ ಗುರುತಿಸಿಕೊಂಡ ಮಹಿಳೆ ಸೋಮವಾರ ಹೇಳಿದ್ದರು. ತನ್ನನ್ನು ವಲಸೆ ಅಧಿಕಾರಿಗಳು ಶಾಂಘೈ ವಿಮಾನ ನಿಲ್ದಾಣದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ಕೂಡಿಹಾಕಿದರು ಎಂದು ಅವರು ಹೇಳಿದ್ದಾರೆ. ಅಧಿಕಾರಿಗಳು ನನಗೆ ತಮಾಷೆ ಮಾಡುತ್ತಾ, ಚೀನಾ ಪಾಸ್ ಪೋರ್ಟ್ ಗೆ ಅರ್ಜಿ ಹಾಕುವಂತೆ ಸೂಚಿಸಿದರು ಎಂದಿದ್ದಾರೆ. ‘‘ಅರುಣಾಚಲಪ್ರದೇಶದ ಹೆಮ್ಮೆಯ ಭಾರತೀಯ ಪ್ರಜೆ ಪ್ರೇಮಾ ವಾಂಗ್ಜೊಮ್ ತೊಂಗ್ಡೊಕ್ ರನ್ನು ಚೀನಾದ ಅಧಿಕಾರಿಗಳು ನಡೆಸಿಕೊಂಡ ರೀತಿಯ ಬಗ್ಗೆ ನನಗೆ ತೀರಾ ಆಘಾತವಾಗಿದೆ. ಮಾನ್ಯ ಭಾರತೀಯ ಪಾಸ್ಪೋರ್ಟ್ ಇದ್ದರೂ ಅವರಿಗೆ ಅವಮಾನ ಮಾಡಿರುವುದು ಮತ್ತು ಅವರನ್ನು ಜನಾಂಗೀಯ ನಿಂದನೆಗೆ ಗುರಿಪಡಿಸಿರುವುದು ಅಸ್ವೀಕಾರಾರ್ಹವಾಗಿದೆ’’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಾಕಿದ ಸಂದೇಶವೊಂದರಲ್ಲಿ ಖಂಡು ಹೇಳಿದ್ದಾರೆ.
ಬೀದರ್ | ಬಸವಕಲ್ಯಾಣ ನಗರಸಭೆ ಪೌರಾಯುಕ್ತರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಬಿಎಸ್ಪಿಯಿಂದ ಪ್ರತಿಭಟನೆ
ಬೀದರ್ : ಬಸವಕಲ್ಯಾಣ ನಗರಸಭೆ ಪೌರಾಯುಕ್ತ ರಾಜು ಡಿ.ಬನಕರ್ ಅವರು ಅವ್ಯವಹಾರ ನಡೆಸಿದ್ದು, ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ವತಿಯಿಂದ ಬಸವಕಲ್ಯಾಣದ ಪೌರಾಯುಕ್ತ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಸವಕಲ್ಯಾಣದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬಸವಕಲ್ಯಾಣದ ನಗರಸಭೆ ಪೌರಾಯುಕ್ತ ರಾಜು ಡಿ. ಬನಕರ್ ಅವರು ಭ್ರಷ್ಟಾಚಾರ ಮಾಡಿದ್ದಾರೆ. ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಬಿಎಸ್ಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಅಶೋಕ್ ಬಿ.ಮಂಠಾಳಕರ್, ಜ್ಞಾನೇಶ್ವರ್ ಸಿಂಗಾರೆ, ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ, ಜಿಲ್ಲಾ ಉಪಾಧ್ಯಕ್ಷ ಸಚಿನ್ ಗಿರಿ, ತಾಲೂಕು ಅಧ್ಯಕ್ಷ ಶಂಕರ್ ಫುಲೆ, ವಿರಶೇಟ್ಟಿ ಮೂಲಗೆ, ಮಕ್ಬುಲ್ ಸಾಬ್, ರವಿ ಉದಾತೆ, ರಮೇಶ್ ರಾಠೋಡ್, ಸಚಿನ್ ಕಾಂಬಳೆ, ಮಹಾದೇವ್ ಹಾಗೂ ಚಂದ್ರಶಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೋಲ್ಕತಾ | ಎಸ್ಐಆರ್ ಕೆಲಸ ಆಗಲ್ಲ: ಸಿಇಒ ಕಚೇರಿಯಲ್ಲಿ ಬಿಎಲ್ಒಗಳ ಆಹೋರಾತ್ರಿ ಧರಣಿ
ಕೋಲ್ಕತಾ, ನ. 25: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ‘‘ನಿಭಾಯಿಸಲಾಗದ ಕೆಲಸದ ಒತ್ತಡ’’ವನ್ನು ಪ್ರತಿಭಟಿಸಿ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್ಒ)ಗಳು ಸೋಮವಾರ ರಾತ್ರಿಯಿಡೀ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯಲ್ಲಿ ಕಳೆದಿದ್ದಾರೆ. ತಮ್ಮನ್ನು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಭೇಟಿಯಾಗಿ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸ್ವೀಕರಿಸಿದ ಬಳಿಕವಷ್ಟೇ ತಾವು ಅಲ್ಲಿಂದ ಹೊರ ಹೋಗುವುದಾಗಿ ಅವರು ಘೋಷಿಸಿದ್ದಾರೆ. ಅವರ ಪೈಕಿ ಹೆಚ್ಚಿನವರು ಸೋಮವಾರ ಸಂಜೆಯಿಂದಲೇ ಅಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸುತ್ತಿದ್ದರು. ಅದಕ್ಕೂ ಮುನ್ನ ಅವರು ಉತ್ತರ ಕೋಲ್ಕತದ ಕಾಲೇಜು ಚೌಕದಿಂದ ಮಧ್ಯ ಕೋಲ್ಕತದ ಬಿಬಿಡಿ ಬಾಗ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಬಿಡಿ ಬಾಗ್ ನಲ್ಲಿ ಮುಖ್ಯ ಚುನಾವಣಾಧಿಕಾರಿಯ ಕಚೇರಿಯಿದೆ. ಇತ್ತೀಚೆಗೆ ಸ್ಥಾಪನೆಯಾದ ಬಿಎಲ್ಒ ಅಧಿಕಾರ್ ರಕ್ಷಾ ಸಮಿತಿಯ ಸದಸ್ಯರು ಸೋಮವಾರ ಮಧ್ಯಾಹ್ನ ಮುಖ್ಯ ಚುನಾವಣಾಧಿಕಾರಿಯ ಕಚೇರಿ ಎದುರು ಧರಣಿ ಆರಂಭಿಸಿದರು. ಅದು ಮಂಗಳವಾರ ಬೆಳಗ್ಗಿನವರೆಗೂ ಮುಂದುವರಿಯಿತು. ತಮ್ಮ ಮನವಿಯನ್ನು ಅಗರ್ವಾಲ್ ಸ್ವತಃ ಬಂದು ಸ್ವೀಕರಿಸುವವರೆಗೆ ಧರಣಿಯನ್ನು ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ಮತಗಟ್ಟೆಯ ವಿಶೇಷ ತೀವ್ರ ಪರಿಷ್ಕರಣೆಯಡಿ ತಮ್ಮ ಮೇಲೆ ‘‘ಅತ್ಯಧಿಕ ಹಾಗೂ ಅಮಾನವೀಯ ಕೆಲಸದ ಒತ್ತಡ’’ವನ್ನು ಹೇರಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸುದೀರ್ಘ ಬಿಕ್ಕಟ್ಟಿನ ಬಳಿಕ, ಮನವಿ ಸಲ್ಲಿಸುವುದಕ್ಕಾಗಿ ಕಚೇರಿಯ ಒಳಗೆ ಹೋಗಲು 13 ಸದಸ್ಯರ ನಿಯೋಗಕ್ಕೆ ಪೊಲೀಸರು ಅವಕಾಶ ನೀಡಿದರು. ಆದರೆ, ತಮ್ಮ ಮನವಿಯನ್ನು ಸ್ವೀಕರಿಸಲು ಸ್ವತಃ ಅಗರ್ವಾಲ್ ಬರಬೇಕು ಎಂದು ಆಗ್ರಹಿಸಿ ಅವರ ಚೇಂಬರ್ ಹೊರಗೆ ನಿಯೋಗದ ಸದಸ್ಯರು ಸಂಜೆ 4:30ರ ವೇಳೆಗೆ ಧರಣಿ ಕುಳಿತರು. ರಾತ್ರಿಯ ವೇಳೆಗೆ, ಏಳು ಸದಸ್ಯರು ಕಚೇರಿಯ ಒಳಗೆ ಉಳಿದರು. ಆದರೆ, ಅವರ ಮನವಿ ಸ್ವೀಕರಿಸಲು ಅಗರ್ವಾಲ್ ಬರಲಿಲ್ಲ. ಸೋಮವಾರ ರಾತ್ರಿ 11:30ರ ಹೊತ್ತಿಗೆ ಅವರು ಪೊಲೀಸ್ ಭದ್ರತೆಯಲ್ಲಿ ಕಚೇರಿಯಿಂದ ಹೊರಗೆ ಹೋದರು. ಆದರೆ, ಪ್ರತಿಭಟನಾಕಾರರು ರಾತ್ರಿಯಿಡೀ ಕಚೇರಿಯೊಳಗೇ ಉಳಿದರು. ಮಂಗಳವಾರವೂ ಅವರ ಧರಣಿ ಮುಂದುವರಿದಿದೆ. ಇತ್ತೀಚಿನ ವಾರಗಳಲ್ಲಿ ಕನಿಷ್ಠ ಮೂವರು ಬಿಎಲ್ಒಗಳು ‘‘ಕೆಲಸದ ಒತ್ತಡವನ್ನು ನಿಭಾಯಿಸಲಾಗದೆ’’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರಪ್ರದೇಶ | 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ; ಪ್ರಕರಣ ಮುಚ್ಚಿ ಹಾಕಿದ ಪೊಲೀಸರು!
ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಲು ಪೊಕ್ಸೊ ನ್ಯಾಯಾಲಯ ನಿರ್ದೇಶನ
ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಮೇಲ್ವಿಚಾರಣೆ ಮಾಡಲ್ಲ: ಸುಪ್ರೀಂ ಕೋರ್ಟ್
ಹೊಸದಿಲ್ಲಿ,ನ.25: ಶಾಸಕಾಂಗ ಕ್ರಮಗಳು, ಪೋಲಿಸ್ ಠಾಣೆಗಳು ಮತ್ತು ಹೈಕೋರ್ಟ್ ಗಳು ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದೇಶಾದ್ಯಂತ ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಕುರಿತು ಕಾನೂನು ರೂಪಿಸಲು ಅಥವಾ ಮೇಲ್ವಿಚಾರಣೆಯನ್ನು ನಡೆಸಲು ತಾನು ಒಲವು ಹೊಂದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ತಿಳಿಸಿದೆ. ನಿರ್ದಿಷ್ಟ ಸಮುದಾಯವೊಂದನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಿಷ್ಕರಿಸಬೇಕೆಂಬ ಕರೆಗಳ ವಿಷಯವನ್ನು ಎತ್ತಿರುವ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹ್ತಾ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು. ‘ಈ ಅರ್ಜಿಯ ನೆಪದಲ್ಲಿ ನಾವು ಯಾವುದೇ ಕಾನೂನನ್ನು ರೂಪಿಸುವುದಿಲ್ಲ. ದೇಶದಲ್ಲಿ ಎಲ್ಲಿಯೋ ನಡೆಯುವ ಪ್ರತಿಯೊಂದೂ ಸಣ್ಣ ಘಟನೆಯ ಬಗ್ಗೆ ಕಾನೂನು ರೂಪಿಸಲು ಅಥವಾ ಮೇಲ್ವಿಚಾರಣೆಯನ್ನು ನಡೆಸಲು ನಾವು ಒಲವು ಹೊಂದಿಲ್ಲ. ಅದಕ್ಕಾಗಿ ಪೋಲಿಸ್ ಠಾಣೆಗಳು, ಹೈಕೋರ್ಟ್ಗಳು,ಶಾಸಕಾಂಗ ಕ್ರಮಗಳು ಈಗಾಗಲೇ ಅಸ್ತಿತ್ವದಲ್ಲಿವೆ ’ ಎಂದು ಪೀಠವು ಹೇಳಿತು. ಆರಂಭದಲ್ಲಿ ಸರ್ವೋಚ್ಚ ನ್ಯಾಯಾಲಯವು ತನ್ನ ದೂರಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ಸೂಚಿಸಿತ್ತು. ದೇಶಾದ್ಯಂತ ಇಂತಹ ಎಲ್ಲ ಪ್ರಕರಣಗಳ ಮೇಲ್ವಿಚಾರಣೆಯನ್ನು ಈ ನ್ಯಾಯಾಲಯವು ಮುಂದುವರಿಸಲು ಹೇಗೆ ಸಾಧ್ಯ? ನೀವು ಅಧಿಕಾರಿಗಳನ್ನು ಸಂಪರ್ಕಿಸಿ. ಅವರು ಕ್ರಮವನ್ನು ತೆಗೆದುಕೊಳ್ಳಲಿ. ಇಲ್ಲದಿದ್ದರೆ ನೀವು ಹೈಕೋರ್ಟ್ಗೆ ಹೋಗಿ ಎಂದು ಪೀಠವು ಅರ್ಜಿದಾರರ ಪರ ವಕೀಲರಿಗೆ ತಿಳಿಸಿತು. ದ್ವೇಷ ಭಾಷಣದ ವಿಷಯವನ್ನು ಎತ್ತಿರುವ ಬಾಕಿ ಇರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ಕೋರಿ ಅರ್ಜಿಯನ್ನು ಸಲ್ಲಿಸಿದ್ದೇನೆ. ಆರ್ಥಿಕ ಬಹಿಷ್ಕಾರಕ್ಕಾಗಿ ನೀಡಲಾಗುತ್ತಿರುವ ಕರೆಗಳನ್ನು ನ್ಯಾಯಾಲಯದ ಗಮನಕ್ಕೆ ತರಲು ಕೆಲವು ಹೆಚ್ಚುವರಿ ನಿದರ್ಶನಗಳನ್ನು ಉಲ್ಲೇಖಿಸುತ್ತಿದ್ದೇನೆ ಎಂದು ವಕೀಲರು ತಿಳಿಸಿದರು. ಕೆಲವು ವ್ಯಕ್ತಿಗಳು ಇಂತಹ ಕರೆಗಳನ್ನು ನೀಡಿದ್ದಾರೆ ಎಂದು ಪೀಠವು ಬೆಟ್ಟು ಮಾಡಿದಾಗ ವಕೀಲರು, ಕೆಲವು ಜನಪ್ರತಿನಿಧಿಗಳೂ ಸಾರ್ವಜನಿಕವಾಗಿ ಇಂತಹ ಕರೆಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದರು. ನ್ಯಾಯಾಲಯದಲ್ಲಿ ಉಪಸ್ಥಿತರಿದ್ದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು,‘ಸಾರ್ವಜನಿಕ ಹಿತಾಸಕ್ತಿಯು ಒಂದು ನಿರ್ದಿಷ್ಟ ಧರ್ಮಕ್ಕೆ ಸೀಮಿತವಾಗಿರಲು ಸಾಧ್ಯವಿಲ್ಲ. ಎಲ್ಲ ಧರ್ಮಗಳಲ್ಲಿಯೂ ತೀವ್ರವಾದ ದ್ವೇಷ ಭಾಷಣಗಳು ನಡೆಯುತ್ತಿವೆ. ಆ ವಿವರಗಳನ್ನು ನಾನು ಅರ್ಜಿದಾರರಿಗೆ ನೀಡುತ್ತೇನೆ. ಅವರು ಅವುಗಳನ್ನೂ ಸೇರಿಸಿಕೊಳ್ಳಲಿ ಮತ್ತು ಸರ್ವ ಧರ್ಮ ಆಧಾರದಲ್ಲಿ ತನ್ನ ಸಾರ್ವಜನಿಕ ಹಿತಾಸಕ್ತಿಯ ಹೋರಾಟವನ್ನು ನಡೆಸಲಿ’ ಎಂದು ಹೇಳಿದರು. ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳದ್ದರಿಂದ ತಾನು ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದೇನೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಸೂಕ್ತ ಕಾರ್ಯವಿಧಾನಗಳು ಅಸ್ತಿತ್ವದಲ್ಲಿವೆ ಮತ್ತು ಕಾನೂನು ಒದಗಿಸುವ ಯಾವುದೇ ಮಾರ್ಗವನ್ನು ನೀವು ಬಳಸಬಹುದು ಎಂದು ಪೀಠವು ಅವರಿಗೆ ಸೂಚಿಸಿತು. ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿದ್ದರೆ ಇಂತಹ ವಿಷಯಗಳನ್ನು ಹೈಕೋರ್ಟ್ಗಳು ನೋಡಿಕೊಳ್ಳುತ್ತವೆ ಎಂದೂ ಪೀಠವು ತಿಳಿಸಿತು.
ವಿಶ್ವಕಪ್ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ
ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆಯ (ಸಿಎಬಿಐ) ಅಧ್ಯಕ್ಷ ಡಾ. ಮಹಾಂತೇಶ್ ಜಿ. ಕಿವಡಸಣ್ಣವರ ಅವರ ನೇತೃತ್ವದ ಈ ತಂಡವು, ದೇಶಕ್ಕೆ ಮರಳಿದಾಗ ವಿಮಾನ ನಿಲ್ದಾಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಈ ಐತಿಹಾಸಿಕ ಗೆಲುವು ಜಾಗತಿಕ ಅಂಧರ ಕ್ರಿಕೆಟ್ ಸಮುದಾಯದಲ್ಲಿ ಭಾರತದ ಸ್ಥಾನಮಾನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ, ದೇಶಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದೆ.
Bengaluru Second Airport: ಎರಡನೇ ಏರ್ಪೋರ್ಟ್ ಬಗ್ಗೆ ಬಿಗ್ ಅಪ್ಡೇಟ್; ಗೊಂದಲಕ್ಕೆ ತೆರೆ ಎಳೆದ ಎಂ ಬಿ ಪಾಟೀಲ್!
ಬೆಂಗಳೂರು, ನವೆಂಬರ್ 25: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಬಿಗ್ ಅಪ್ಡೇಟ್ ಒಂದು ಬಂದಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಸ್ಥಳವನ್ನು ಫೈನಲ್ ಮಾಡಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಎರಡನೇ ವಿಮಾನ ನಿಲ್ದಾಣದ ಕುರಿತು ಎಂ
ಉಳ್ಳಾಲ | ಮಾದಕ ವಸ್ತು ಸೇವನೆ ಆರೋಪ : ಆರೋಪಿಯ ಬಂಧನ
ಉಳ್ಳಾಲ : ಮಾದಕ ವಸ್ತುವನ್ನು ಸೇವಿಸಿ, ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯೊರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್(29) ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣಾ ಪಿಎಸ್ಐ ಕೃಷ್ಣ ಕೆ ಹೆಚ್ ರವರು ಸಿಬ್ಬಂದಿ ಜೊತೆಯಲ್ಲಿ ಈತನನ್ನು ಬಂಧಿಸಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೀದರ್ | ಡಿ. 6ರಂದು ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಸಮಾವೇಶ : ಪದಾಧಿಕಾರಿಗಳ ನೇಮಕ
ಬೀದರ್ : ವಿವಿಧ ದಲಿತ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಬಹಿರಂಗ ಸಮಾವೇಶದ ಹಿನ್ನೆಲೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ವಿನೀತ್ ಗಿರಿ ಚಿದ್ರಿ ತಿಳಿಸಿದ್ದಾರೆ. ಡಿ. 6ರಂದು ಸಾಯಂಕಾಲ 5 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ. ಯುವ ಒಕ್ಕೂಟದಿಂದ ನಡೆಸುವ ಡಾ.ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಸಮಾವೇಶದ ಅಧ್ಯಕ್ಷರಾಗಿ ವಿನೀತ್ ಗಿರಿ ಚಿದ್ರಿ, ಗೌರವಾಧ್ಯಕ್ಷರಾಗಿ ಅಂಬರೀಶ್ ಕುದುರೆ, ಕಾರ್ಯಾಧ್ಯಕ್ಷರಾಗಿ ಪ್ರದೀಪ್ ಕುದುರೆ, ಪ್ರಧಾನ ಕಾರ್ಯದರ್ಶಿಯಾಗಿ ಗೌತಮ್ ಬಗದಲಕರ್, ಉಪಾಧ್ಯಕ್ಷರಾಗಿ ಅಖಿಲೇಶ್ ಸಾಗರ್, ರಾಹುಲ್ ಡಾಂಗೆ, ರಮೇಶ್ ಮಾಲೆ, ಖಜಾಂಚಿಯಾಗಿ ಗೌತಮ್ ದೊಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಯ ಹಿರಿಯ ಸಲಹೆಗಾರರಾಗಿ ಸುಬ್ಬಣ್ಣ ಕರಕನಹಳ್ಳಿ, ಸಮಿತಿಯ ಮಾರ್ಗದರ್ಶಕರಾಗಿ ವಿಷ್ಣುವರ್ಧನ್ ವಾಲ್ದೊಡ್ಡಿ, ಸಮಿತಿಯ ಪದಾಧಿಕಾರಿಗಳಾಗಿ ರಾಜಕುಮಾರ್ ಪ್ರಸಾದ್, ಮಾರ್ಟಿನ್ ಕಿಂಗ್ ಹಾಗೂ ಉತ್ತಮ್ ಕೆಂಪೆ ಅವರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗಾಗಿ ಲಂಡನ್ ನಿಂದ ಭಾರತಕ್ಕೆ ಆಗಮಿಸಿದ ಕೊಹ್ಲಿ
ಹೊಸದಿಲ್ಲಿ, ನ.25: ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ನವೆಂಬರ್ 30ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸುವ ಸಲುವಾಗಿ ಮಂಗಳವಾರ ಬ್ರಿಟನ್ ನಿಂದ ಭಾರತಕ್ಕೆ ಬಂದಿಳಿದರು. ಭಾರತದ ಹಿರಿಯ ಬ್ಯಾಟರ್ ಕೊಹ್ಲಿ ಮಂಗಳವಾರ ಮಧ್ಯಾಹ್ನ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಭಾರತದ ಮಾಜಿ ನಾಯಕ ಕೊಹ್ಲಿ ಲಂಡನ್ ನಲ್ಲಿ ನೆಲೆಸಿದ್ದು, ಸ್ವದೇಶ ಹಾಗೂ ವಿದೇಶದ ಸರಣಿಗೆ ಇಂಗ್ಲೆಂಡ್ ನಲ್ಲೇ ತಯಾರಿ ನಡೆಸುತ್ತಾರೆ. ಸರಣಿ ಆರಂಭವಾಗಲು ಕೆಲವೇ ದಿನಗಳ ಮುಂಚಿತವಾಗಿ ಟೀಮ್ ಇಂಡಿಯಾವನ್ನು ಸೇರುತ್ತಾರೆ. ಕೊಹ್ಲಿ ಅವರು ವಿಮಾನನಿಲ್ದಾಣದಿಂದ ಹೊರಬರುತ್ತಿರುವ ಚಿತ್ರಗಳನ್ನು ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕೊಹ್ಲಿ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಕೊನೆಯ ಬಾರಿ ಏಕದಿನ ಸರಣಿಯನ್ನು ಆಡಿದ್ದರು. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ನ.30ರಂದು ರಾಂಚಿಯಲ್ಲಿ ನಡೆಯಲಿದೆ. ಎರಡನೇ ಏಕದಿನ ಡಿಸೆಂಬರ್ 3ರಂದು ರಾಯ್ಪುರ ಹಾಗೂ ಮೂರನೇ ಏಕದಿನ ಡಿಸೆಂಬರ್ 6ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ತಂಡವನ್ನು ಬಿಸಿಸಿಐ ರವಿವಾರ ಪ್ರಕಟಿಸಿದೆ. ಕೆ.ಎಲ್.ರಾಹುಲ್ ಸರಣಿಯಲ್ಲಿ ಹಂಗಾಮಿ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಐತಿಹಾಸಿಕ ಸರಣಿ ಗೆಲುವಿನ ಹಾದಿಯಲ್ಲಿ ದಕ್ಷಿಣ ಆಫ್ರಿಕಾ
ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾ ಗೆಲುವಿಗೆ 549 ರನ್ ಗುರಿ
ಉಡುಪಿ | ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ನ.25: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣಾ ಯೋಜನೆಯ ಸೌಲಭ್ಯ ಪಡೆಯಲು, ಪ್ರವರ್ಗ-3-ಬಿ ಅಡಿಯಲ್ಲಿ2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರುವ, ನಮೂನೆ-3 ಬಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರುವ, ರಾಜ್ಯದಲ್ಲಿ ಖಾಯಂ ವಿಳಾಸ ಹೊಂದಿರುವ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಮಾಹಿತಿಗೆ ವೆಬ್ಸೈಟ್- https://kmcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ದೂ.ಸಂಖ್ಯೆ: 0820-2574882 ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ಗಂಡು ಮಗುವಿಗಾಗಿ ಹಂಬಲ: ನಾಲ್ಕನೇ ಹೆಣ್ಣು ಮಗುವನ್ನು ಉಸಿರುಗಟ್ಟಿಸಿ ಕೊಂದ ತಾಯಿ! ಬೆಳಗಾವಿಯಲ್ಲಿ ಭೀಕರ ಘಟನೆ
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ, ಮೂವರು ಹೆಣ್ಣು ಮಕ್ಕಳಿದ್ದರೂ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಆಶ್ವಿನಿ ಹಳಕಟ್ಟಿ ಎಂಬಾಕೆ ತನ್ನ ನಾಲ್ಕನೇ ನವಜಾತ ಹೆಣ್ಣು ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ವೈದ್ಯಕೀಯ ತಪಾಸಣೆಯಲ್ಲಿ ಕೊಲೆ ದೃಢವಾದ ನಂತರ, ಆಕೆಯು ಕೃತ್ಯ ಒಪ್ಪಿಕೊಂಡಿದ್ದು, ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ರೀತಿ, ಧಾರವಾಡದಲ್ಲಿ ತಂದೆಯೊಬ್ಬ ಏಳು ತಿಂಗಳ ಹೆಣ್ಣು ಮಗುವನ್ನು ಗೋಡೆಗೆ ಎಸೆದು ಕೊಲೆ ಮಾಡಿದ್ದ ಆಘಾತಕಾರಿ ಘಟನೆ ಸಹ ವರದಿಯಾಗಿದೆ.
ರಾಯಚೂರು | ಶಾಲಾ ವಾಹನ- ಮಿನಿ ಲಾರಿ ನಡುವೆ ಅಪಘಾತ : 10ಕ್ಕೂ ಅಧಿಕ ಮಕ್ಕಳಿಗೆ ಗಾಯ
ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ ವಾಹನ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 4ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಯನ್ನು ಮಾನ್ವಿ ಪಟ್ಟಣದ ಲಕ್ಷ್ಮಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ವೈದ್ಯಾಧಿಕಾರಿ ಡಾ. ಶರಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ.
ಉಡುಪಿ | ನ.26ರಂದು ಸಂವಿಧಾನ ದಿನಾಚರಣೆ
ಉಡುಪಿ, ನ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡ ಸಂಘಟನೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ (ನ.26) ಬೆಳಗ್ಗೆ 9 ಗಂಟೆಗೆ ಸಂವಿಧಾನ ದಿನಾಚರಣೆ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಇತರರು ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಬೆಳಗ್ಗೆ 8ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ಆವರಣದಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬಿ.ಇಡಿ. ಕೋರ್ಸ್ನ ಸೀಟು ಹಂಚಿಕೆ ಪಟ್ಟಿ ಪ್ರಕಟ
ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ಕೋರ್ಸ್ನ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in/ ನಲ್ಲಿ ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡನ್ನು ಬಳಸಿ ನ.25 ರಿಂದ ಡಿ.5ರವರೆಗೆ ನಿಗದಿತ ಶುಲ್ಕದ ಚಲನ್ ಅನ್ನು ಮುದ್ರಿಸಿಕೊಂಡು ಸ್ಟೇಟ್ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಬೇಕು. ಅದರ ಮೂಲ ಪ್ರತಿ ಹಾಗೂ ಇತರೆ ಎಲ್ಲ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ಹಾಜರಾಗಿ ದಾಖಲಾತಿ ಪತ್ರವನ್ನು ಪಡೆದುಕೊಳ್ಳಬಹುದು. ಹಾಗೆಯೇ ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜಿಗೆ ಸೇರ್ಪಡೆಗೊಳ್ಳಬೇಕು. ಮೊದಲ ಸುತ್ತಿನ ಆಯ್ಕೆಯಲ್ಲಿ ಹಂಚಿಕೆಯಾದ ಕಾಲೇಜಿಗೆ ಸೇರಲು ಬಯಸದೇ ಇರುವ ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಬಳಸಿ ಅಭಿಮತವನ್ನು ದಾಖಲಿಸಬಹುದು. ಅಭಿಮತವನ್ನು ದಾಖಲಿಸದೇ ಇರುವ ಅಭ್ಯರ್ಥಿಗಳನ್ನು ಬಿಟ್ಟು ಎರಡನೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಮೊದಲ ಪಟ್ಟಿಯ ಹಂಚಿಕೆ ಪ್ರಕಾರ ಸೇರ್ಪಡೆಯಾಗಿ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ಸ್ ಅನ್ನು ಡಿ.8ರಂದು ಬಿಡುಗಡೆಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.
ಕಾರ್ಕಳ | ಅರುಣೋದಯ ವಿಶೇಷ ಶಾಲೆಗೆ ಪ್ರಶಸ್ತಿ
ಕಾರ್ಕಳ : ಮಂಗಳೂರು ವಿಶ್ವವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ. ಉಡುಪಿ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಐದು ಚಿನ್ನದ ಪದಕ, ನಾಲ್ಕು ಬೆಳ್ಳಿಯ ಪದಕ, ಆರು ಕಂಚಿನ ಪದಕಗಳನ್ನು ಪಡೆದಿರುತ್ತಾರೆ. ಸಮಾರಂಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ .ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರುರು ರಾಜೀವ್ ಶೆಟ್ಟಿ ನಿರ್ದೇಶನಾಲಯದ ಯೋಜನಾ ನಿರ್ದೇಶಕರು ಅಲೀಮಾ, ಗಿರೀಶ್ ಶೆಟ್ಟಿ ತೆಲ್ಲಾರ್ ಉಪಸ್ಥಿತರಿದ್ದರು. ಅರುಣೋದಯ ವಿಶೇಷ ಶಾಲೆಯು ಸಲ್ಲಿಸಿದ ಸೇವೆಯನ್ನು ಗುರುತಿಸಿ ಶಾಲಾ ಆಡಳಿತ ಮಂಡಳಿಯ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ಜೆಸಿಂತಾ ಡಿಮೆಲ್ಲೋ ರವರನ್ನು ಸನ್ಮಾನಿಸಲಾಯಿತು.
ಹೊಸದಿಲ್ಲಿ,ನ.25: ಶೇ.50ರ ಮೀಸಲಾತಿ ಮಿತಿಯ ಉಲ್ಲಂಘನೆಯಾಗಿರುವ ಮಹಾರಾಷ್ಟ್ರದ 57 ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಂತಿಮ ಫಲಿತಾಂಶಗಳು ಪ್ರಕರಣದಲ್ಲಿ ತನ್ನ ತೀರ್ಪನ್ನು ಅವಲಂಬಿಸಿರಲಿವೆ ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾ.ಜಾಯಮಲ್ಯ ಬಾಗ್ಚಿ ಅವರ ಪೀಠವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೀಸಲಾತಿ ವಿಷಯ ಕುರಿತು ವಿಚಾರಣೆಯನ್ನು ನ.28ಕ್ಕೆ ಮುಂದೂಡಿತು. ಮಹಾರಾಷ್ಟ್ರ ಸರಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು,ಮೀಸಲಾತಿಗಳ ಮೇಲಿನ ಶೇ.50 ಮಿತಿಯ ಪಾಲನೆ ಕುರಿತು ರಾಜ್ಯ ಚುನಾವಣಾ ಆಯೋಗದೊಂದಿಗೆ (ಎಸ್ಇಸಿ) ಸಮಾಲೋಚಿಸಲು ಸಮಯಾವಕಾಶವನ್ನು ಕೋರಿದ್ದರು. ಇತರ ಹಿಂದುಳಿದ ವರ್ಗಗಗಳಿಗೆ ಶೇ.27ರಷ್ಟು ಮೀಸಲಾತಿಯನ್ನು ನೀಡುವ ವಿಷಯವನ್ನು ತಾನು ನಿರ್ಧರಿಸುವವರೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡುವಂತೆ ಪೀಠವು ನ.19ರಂದು ರಾಜ್ಯ ಸರಕಾರಕ್ಕೆ ಸೂಚಿಸಿತ್ತು. 242 ನಗರಸಭೆಗಳು ಮತ್ತು 42 ನಗರ ಪಂಚಾಯತ್ಗಳು ಸೇರಿದಂತೆ ಒಟ್ಟು 288 ಸ್ಥಳೀಯ ಸಂಸ್ಥೆಗಳಿಗೆ ಡಿ.2ರಂದು ಚುನಾವಣೆ ನಡೆಸಲು ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿದ್ದು,ಈ ಪೈಕಿ 57 ಸಂಸ್ಥೆಗಳಲ್ಲಿ ಮೀಸಲಾತಿ ಮಿತಿಯನ್ನು ಉಲ್ಲಂಘಿಸಲಾಗಿದೆ ಎಂದು ಎಸ್ಇಸಿ ಪರ ಹಿರಿಯ ವಕೀಲ ಬಲ್ಬೀರ್ ಸಿಂಗ್ ಅವರು ಮಂಗಳವಾರ ಪೀಠಕ್ಕೆ ತಿಳಿಸಿದರು. ಇದನ್ನು ಗಮನಕ್ಕೆ ತೆಗೆದುಕೊಂಡ ಪೀಠವು,ಈ 57 ಸಂಸ್ಥೆಗಳ ಚುನಾವಣೆಗಳ ಅಂತಿಮ ಫಲಿತಾಂಶಗಳು ತನ್ನ ತೀರ್ಪನ್ನು ಅವಲಂಬಿಸಿರಲಿವೆ ಎಂದು ತಿಳಿಸಿತು.
ಪರವಾನಿಗೆ ಅವಧಿ ಮೀರಿದ ಮಮತಾ ಹೆಲಿಕಾಪ್ಟರ್; ನಿರ್ವಾಹಕರಿಗೆ ಶೋ-ಕಾಸ್ ನೋಟಿಸ್
ಕೋಲ್ಕತಾ,ನ.25: ಮಂಗಳವಾರ ರಾಜಕೀಯ ರ್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೊಂಗಾಂವ್ ಭೇಟಿಗೆ ನಿಯೋಜಿಸಲಾಗಿದ್ದ ಹೆಲಿಕಾಪ್ಟರ್ ಅವಧಿ ಮೀರಿದ ಪರವಾನಿಗೆಯೊಂದಿಗೆ ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದ ನಂತರ ಅವರ ಹೆಲಿಕಾಪ್ಟರ್ ಪ್ರಯಾಣವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಬದಲಿಗೆ ಬ್ಯಾನರ್ಜಿ ಉತ್ತರ 24 ಪರಗಣಗಳ ಜಿಲ್ಲೆಯ ಬೊಂಗಾಂವ್ ಗೆ ರಸ್ತೆ ಮೂಲಕ ಪ್ರಯಾಣಿಸಿದರು. ಈ ಸಂಬಂಧ ಹೆಲಿಕಾಪ್ಟರ್ ನಿರ್ವಾಹಕರಿಗೆ ಶೋ-ಕಾಸ್ ನೋಟಿಸ್ ನೀಡಲಾಗಿದೆ. ಹಿರಿಯ ಆಡಳಿತಾಧಿಕಾರಿಗಳ ಪ್ರಕಾರ ಮುಖ್ಯಮಂತ್ರಿಗಳು ಸುಮಾರು ಆರು ತಿಂಗಳುಗಳಿಂದ ಹೆಲಿಕಾಪ್ಟರ್ ನ್ನು ಬಳಸಿರಲಿಲ್ಲ. ಸೋಮವಾರ ಅದು ತನ್ನ ಕಡ್ಡಾಯ ಪರೀಕ್ಷಾರ್ಥ ಹಾರಾಟವನ್ನು ಪೂರ್ಣಗೊಳಿಸಿತ್ತು. ಪರವಾನಿಗೆಯ ಅವಧಿ ಮುಗಿದಿದ್ದನ್ನು ತಕ್ಷಣವೇ ಗುರುತಿಸಬೇಕಿತ್ತು. ದಾಖಲೆಗಳನ್ನು ಪರಿಶೀಲಿಸದೆ ಪರೀಕ್ಷಾರ್ಥ ಹಾರಾಟಕ್ಕೆ ಅವಕಾಶ ನೀಡಿದ್ದು ಸ್ವೀಕಾರಾರ್ಹವಲ್ಲ. ತಪಾಸಣೆಯ ಸಂದರ್ಭದಲ್ಲಿ ಪರವಾನಿಗೆಯ ಅವಧಿ ಮುಗಿದಿದ್ದನ್ನು ವರದಿ ಮಾಡಿರಲಿಲ್ಲ. ಈ ವಿಷಯವು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು ಎಂದು ಅಧಿಕಾರಿಯೋರ್ವರು ತಿಳಿಸಿದರು. ಈ ಘಟನೆಯಿಂದ ಮುಖ್ಯಮಂತ್ರಿಗಳು ಅಸಮಾಧಾನಗೊಂಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿದವು. ಇಂತಹ ನಿರ್ಲಕ್ಷ್ಯವನ್ನು,ಅದೂ ವಿವಿಐಪಿಗಳ ಸಂಚಾರವನ್ನು ಒಳಗೊಂಡ ವಿಷಯಗಳಲ್ಲಿ, ಸಹಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸಂಪೂರ್ಣ ವಿವರಣೆಯನ್ನು ಕೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೋರ್ವರು ತಿಳಿಸಿದರು. ಈ ಕಣ್ತಪ್ಪು ಹೇಗೆ ಸಂಭವಿಸಿತ್ತು ಮತ್ತು ಅದನ್ನು ಮೊದಲೇ ಏಕೆ ತಿಳಿಸಿರಲಿಲ್ಲ ಎನ್ನುವುದನ್ನು ಕಂಡುಕೊಳ್ಳಲು ವಿಚಾರಣೆಯನ್ನು ಆರಂಭಿಸಲಾಗಿದೆ.
ಧರ್ಮೇಂದ್ರರ 450 ಕೋಟಿ ರೂ. ಆಸ್ತಿಯಲ್ಲಿ 2ನೇ ಪತ್ನಿ ಹೇಮಾಮಾಲಿನಿಗೆ ಎಷ್ಟು ಪಾಲು? ಕಾನೂನು ಏನು ಹೇಳುತ್ತೆ?
ಬಾಲಿವುಡ್ ನಟ ಧರ್ಮೇಂದ್ರ ಅವರು 450 ಕೋಟಿ ರೂ. ಆಸ್ತಿ ಬಿಟ್ಟು ಹೋಗಿದ್ದಾರೆ. ಅವರ ಆಸ್ತಿ ಯಾರಿಗೆ ಸೇರಲಿದೆ ಎಂಬುದು ಈಗ ಚರ್ಚೆಯಲ್ಲಿದೆ. ಮೊದಲ ಪತ್ನಿ ಪ್ರಕಾಶ್ ಕೌರ್ ಮತ್ತು ಎರಡನೇ ಪತ್ನಿ ಹೇಮಾ ಮಾಲಿನಿ ಅವರ ಹಕ್ಕುಗಳೇನು ಎಂಬುದನ್ನು ಕಾನೂನು ನಿರ್ಧರಿಸುತ್ತದೆ. ಹಿಂದೂ ವಿವಾಹ ಪದ್ಧತಿ ಪ್ರಕಾರ, ಮೊದಲ ಪತ್ನಿಗೆ ವಿಚ್ಛೇದನ ಕೊಡದ ಹೊರತು ಎರಡನೇ ಸಂಬಂಧಕ್ಕೆ ಯಾವುದೇ ಕಾನೂನಿನ ಮಾನ್ಯತೆ ಇರುವುದಿಲ್ಲ. ಇಂಥ ಸಂದರ್ಭಗಳಲ್ಲಿ ಆಸ್ತಿ ಹೇಗೆ ಹಂಚಿಕೆಯಾಗುತ್ತದೆ ಎಂಬುದರ ಕುತೂಹಲಕಾರಿ ಅಂಶಗಳು ಇಲ್ಲಿವೆ.
ಕಾರ್ಕಳ : ಮಂಗಳೂರು ವಿಶ್ವ ವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ.ಉಡುಪಿ, ಡಾ ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂ ನಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಚಾಂಪಿಯನ್ ಶಿಪ್ 2025 ಹಾಗೂ ಪಥ ಸಂಚಲನದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ. ಶಾಸಕ ಯಶ್ ಪಾಲ್ ಸುವರ್ಣ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರುರು ರಾಜೀವ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪಥ ಸಂಚಲನದ ಬಹುಮಾನ ವಿತರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಬಂಟ್ಸ್ ಸಂಘ ಮುಂಬೈ ಜತೆ ಕಾರ್ಯದರ್ಶಿ, ಗಿರೀಶ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ನಿರ್ದೇಶನಾಲಯದ ಯೋಜನಾ ನಿರ್ದೇಶಕರು ಅಲೀಮಾ ಇವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗಿರೀಶ್ ಶೆಟ್ಟಿ ತೆಲ್ಲಾರ್ ಇವರು ವಿಜೇತ ವಿಶೇಷ ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ವಿಜೇತ ವಿಶೇಷ ಶಾಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಹಾಗೂ ಪಥ ಸಂಚಲನದಲ್ಲಿ ಒಟ್ಟು 48 ವಿದ್ಯಾರ್ಥಿಗಳು ಭಾಗವಹಿಸಿದ್ದು, ಚಿನ್ನದ ಪದಕ-30, ಬೆಳ್ಳಿ ಪದಕ -18 ಕಂಚಿನ ಪದಕ - 15 ಒಟ್ಟು 63 ಪದಕಗಳನ್ನು ಗಳಿಸಿದ್ದಾರೆ. ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿ ಶಾಲೆಗೆ ಕೀರ್ತಿ ತಂದ ವಿಜೇತ ಶಾಲೆಯ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಭಾವಿ ಗಂಡನಿಂದಲೇ ಮಹಾ ಮೋಸದ ಬಗ್ಗೆ... Smriti Mandhana
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಅಂದ್ರೆ ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಒಂದು ಗತ್ತು ಇದೆ... ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಎದುರು ಕ್ರಿಕೆಟ್ ಲೋಕವೇ ತಲೆಬಾಗಿ ಪ್ರೀತಿ ಕೊಡುತ್ತದೆ... 18 ವರ್ಷಗಳ ನಂತರ ನೀಯತ್ತಾಗಿ ಆಡಿ ಕಪ್ ಗೆದ್ದಿದೆ ನಮ್ಮ ಬೆಂಗಳೂರು ತಂಡ ಆರ್ಸಿಬಿ ಅಂತಾ ಅಭಿಮಾನಿಗಳು ಎದೆ ತಟ್ಟಿಕೊಂಡು ಹೇಳುತ್ತಾರೆ. ಅದರಲ್ಲೂ ಬೆಂಗಳೂರು ತಂಡ
ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ
ಉಡುಪಿ, ನ.25: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163ರಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಈ ಕೆಳಗಿನ ಆದೇಶ ಹೊರಡಿಸಿದ್ದಾರೆ. ಉಡುಪಿ ನಗರ ವ್ಯಾಪ್ತಿಯೊಳಗೆ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. ಈ ನಿರ್ಬಂಧ ಆದೇಶವು ನ. 28ರ ಸಂಜೆ 5ರವರೆಗೆ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಆದೇಶವನ್ನು ಎನ್.ಹೆಚ್ ವಿಭಾಗೀಯ ಅಧಿಕಾರಿಗಳು, ಪಿ.ಡಬ್ಲ್ಯೂ.ಡಿ, ಪಿ.ಆರ್.ಇ.ಡಿ, ನಗರಸಭೆ, ಬಿಎಸ್ಎನ್ಎಲ್ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಂಗಳೂರು | ನ.29ರಂದು ವಿಶ್ವ ಮಧುಮೇಹ ರೋಗ ದಿನಾಚರಣೆ
ಮಂಗಳೂರು, ನ.25: ನಗರದ ನಾಟೆಕಲ್ ಪ್ರದೇಶದಲ್ಲಿ ಕಾರ್ಯಚರಿಸುತ್ತಿರುವ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ‘ವಿಶ್ವ ಮಧುಮೇಹ ರೋಗ ದಿನಾಚರಣೆ’ ನ.29ರಂದು ಬೆ. 10:00 ಗಂಟೆಗೆ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಸಂಸ್ಥೆಯ ನಿರಂತರ ಶಿಕ್ಷಣ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ವೈದ್ಯಕೀಯ ಕಾರ್ಯಗಾರವನ್ನು ಉದ್ಘಾಟಿಸಲಿರುವರು. ಖ್ಯಾತ ಮತ್ತು ನುರಿತ ಮಧುಮೇಹ ರೋಗ ಶಾಸ್ತ್ರ ತಜ್ಞರು ಹಾಗೂ ಚಿಕಿತ್ಸಕರಾದ ಖ್ಯಾತ ವೈದ್ಯಕೀಯ ಶಾಸ್ತ್ರತಜ್ಞರು ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾಯಿಲೆ ಬಗ್ಗೆ ಜಾಗೃತಿ ಮತ್ತು ಮಾಹಿತಿ ಅಭಿಯಾನ ಹಾಗೂ ಕಾರಣಗಳು ರೋಗದ ವಿವಿಧ ಲಕ್ಷಣಗಳು, ದೇಹದ ವಿವಿಧ ಅಂಗಾಂಗಗಳಿಗೆ ಬೀರುವ ಪರಿಣಾಮಗಳು ಹಾಗೂ ವಿವಿಧ ಚಿಕಿತ್ಸಾ ಉಪಾಯ ಪರಿಹಾರ ಕ್ರಮಗಳ ಬಗ್ಗೆ ಅತಿಥಿ ಉಪನ್ಯಾಸ ನೀಡಲಿರುವರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹಿಮಾನ್, ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ಶಹನವಾಜ್ ಮಣಿಪಾಡಿ, ವೈದ್ಯಕೀಯ ಅಧೀಕ್ಷಕ ಡಾ.ಅಂಜನ್ ಕುಮಾರ್, ಮುಖ್ಯ ಸಲಹೆಗಾರ ಡಾ. ಮುಹಮ್ಮದ್ ಇಸ್ಮಾಯಿಲ್ ಮತ್ತು ಸಲಹಾ ಸಮಿತಿಯ ಸದಸ್ಯ ಡಾ. ಎಂ.ವಿ. ಪ್ರಭು, ಮುಖ್ಯ ಆಡಳಿತ ಅಧಿಕಾರಿಯಾದ ಡಾ. ರೋಹನ್ ಮೋನಿಸ್ ಭಾಗವಹಿಸಲಿರುವರು. ವಿವಿಧ ವೈದ್ಯಕೀಯ ಸಂಸ್ಥೆಗಳನ್ನು ಪ್ರತಿನಿಧಿಸುವ 250 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಸಂಘಟನಾ ಸಮಿತಿಯ ಅಧ್ಯಕ್ಷ ಡಾ. ದೇವದಾಸ್ ರೈ ಮಾಹಿತಿ ನೀಡಿದ್ದಾರೆ.
ಮಂಗಳೂರು | ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ
ಮಂಗಳೂರು, ನ.24: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಇಂದು ತನ್ನ ಪ್ರಮುಖ ಬ್ರೈಡ್ಸ್ ಆಫ್ ಇಂಡಿಯಾ (ಭಾರತದ ವಧುಗಳ) ಅಭಿಯಾನದ 15ನೇ ಆವೃತ್ತಿಯನ್ನು ಅನಾವರಣಗೊಳಿಸಿದೆ. ಇದು ಭಾರತದ ಅತಿದೊಡ್ಡ ಮತ್ತು ಅತ್ಯಂತ ನಿರೀಕ್ಷಿತ ವಧುವಿನ ಚಿನ್ನಾಭರಣಗಳ ಅಭಿಯಾನವಾಗಿದೆ. ಈ ವರ್ಷದ ಆವೃತ್ತಿಯು 22 ವಧುಗಳು ಮತ್ತು 10 ತಾರಾ ನಟಿಮಣಿಗಳನ್ನು ಒಂದೆಡೆ ಸೇರಿಸಲಿದ್ದು, ಇವರಲ್ಲಿ ಶ್ರೀನಿಧಿ ಶೆಟ್ಟಿ, ಕಾರ್ತಿ, ಎನ್ಟಿಆರ್, ಆಲಿಯಾ ಭಟ್, ಕರೀನಾ ಕಪೂರ್ ಖಾನ್, ಅನಿಲ್ ಕಪೂರ್, ರುಕ್ಮಿಣಿ ಮೈತ್ರಾ, ಸವ್ಯಸಾಚಿ ಮಿಶ್ರಾ, ಪ್ರಾರ್ಥನಾ ಬೆಹೆರೆ ಮತ್ತು ಮಾನಸಿ ಪಾರೇಖ್ ಮತ್ತಿತರ ಖ್ಯಾತನಾಮರು ಸೇರಿದ್ದಾರೆ. ಇವರೆಲ್ಲರ ಭಾಗವಹಿಸುವಿಕೆಯು ಈ ಅಭಿಯಾನದ ಅಗಾಧತೆ, ವೈವಿಧ್ಯತೆ ಮತ್ತು ಗಾಢ ಭಾವನಾತ್ಮಕತೆಯನ್ನು ಅರ್ಥಪೂರ್ಣವಾಗಿ ಪ್ರತಿಬಿಂಬಿಸಲಿದೆ ಎಂದು ಅಧ್ಯಕ್ಷ ಎಂ.ಪಿ.ಅಹಮ್ಮದ್ ಪ್ರಕಟನೆಯಲ್ಲಿ ಹೇಳಿದ್ದಾರೆ. ಈ ಆವೃತ್ತಿಯು ಮುಖ್ಯವಾಗಿ ದೇಶದ ಸಾಂಸ್ಕೃತಿಕ ವೈವಿಧ್ಯತೆಯ ವರ್ಣರಂಜಿತ ಲೋಕದ ಮೇಲೆ ಬೆಳಕು ಚೆಲ್ಲಲಿದ್ದು, ವಿಶಿಷ್ಟ ವಧುವಿನ ಆಭರಣಗಳನ್ನು ಒಂದೆಡೆ ಪ್ರದರ್ಶಿಸಲಿದೆ. ಇವುಗಳಲ್ಲಿ ಭಾರತದ ಪರಂಪರೆ ಮತ್ತು ದೇವಾಲಯ ಕಲೆಯಿಂದ ಪ್ರೇರಿತವಾದ ಡಿವೈನ್ ಕಲೆಕ್ಷನ್, ಮಾಣಿಕ್ಯಗಳು, ಪಚ್ಚೆಗಳು ಮತ್ತು ನೀಲಮಣಿಗಳನ್ನು ಒಳಗೊಂಡಿರುವ ರತ್ನ-ಸಮೃದ್ಧ ಪ್ರೀಶಿಯಾ ಕಲೆಕ್ಷನ್ ಮತ್ತು ಭಾರತದ ಸಾಂಸ್ಕೃತಿಕ ಲೋಕದ ಸಮಕಾಲೀನ ಆದರೆ ಸಂಪ್ರದಾಯ ಅಳವಡಿಸಿಕೊಂಡಿರುವ ವಜ್ರ ಸಂಗ್ರಹವೂ ಇದರಲ್ಲಿದೆ ಎಂದು ವಿವರಿಸಿದ್ದಾರೆ.
Mahantesh Bilagi Passes Away: ಭೀಕರ ರಸ್ತೆ ಅಪಘಾತ: ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ನಿಧನ
Mahantesh Bilagi Passes Away: ಕರ್ನಾಟಕದಲ್ಲಿ ಹೆಚ್ಚು ಜನ ಮನ್ನಣೆ ಗಳಿಸಿದ್ದ ಹಾಗೂ ಬಡವರಿಗೆ ಆಪ್ತರು, ಜನಪರ ಕಾಳಜಿಯಿಂದ ಹೆಸರು ಗಳಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (51) ಅವರು ಕಾರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಅವರು ಸೇವೆ ಸಲ್ಲಿಸಿದ್ದರು.
ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ
ಬಜ್ಪೆ: ಇಲ್ಲಿನ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲಾ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಬಂಧಿತರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಬಂಧಿತರ ಪೈಕಿ ಮಂಗಳೂರು ಬಂದರು ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಸ್ಥಳದಲ್ಲೇ ಪೊಲೀಸರಿಗೆ ಒಪ್ಪಿಸಿದ್ದರು. ಉಳಿದಂತೆ ವೇಣೂರು ನಿವಾಸಿ ಇರ್ಷಾದ್ ನನ್ನು ಬಜ್ಪೆ ಪೊಲೀಸರು ಬಂಧಿಸಿದ್ದರು. ಜೊತೆಗೆ ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 4 ಗಂಟೆಯ ಒಳಗಾಗಿ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪೈಕಿ ಅಕ್ರಮ್ ಮತ್ತು ನಿಸಾನ್ ವಿರುದ್ಧ ಗಾಂಜಾ ಸಂಬಂಧಿಸಿದ ಪ್ರಕರಣಗಳು ಇರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೊಲೆ ಯತ್ನ ಪ್ರಕರಣದ ಜೊತೆಗೆ ಎನ್ ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಆರೋಪಿ ಸಿನಾನ್ ವಿರುದ್ಧ ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕಳವು, ಗಾಂಜಾ ಸಾಗಾಟ, ಮಾರಾಟ ಹಾಗೂ ಕೊಲೆಯತ್ನ ಸೇರಿದಂತೆ 7 ಪ್ರಕರಣಗಳು ದಾಖಲಾಗಿವೆ. ಇರ್ಷಾದ್, ಅಕ್ರಮ್ ಮತ್ತು ನಿಸಾನ್ ವಿರುದ್ಧವೂ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು , ಗಾಂಜಾ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ಎಡಪದವು ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಅವರು ಪೂಪಾಡಿ ಕಲ್ಲುವಿನಿಂದ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಒಂದೇ ದ್ವಿಚಕ್ರವಾಹನದಲ್ಲಿ ನಾಲ್ಕು ಮಂದಿ ಚೂರಿ ಹಿಡಿದು ಸಂಚರಿಸುತ್ತಿರುವುದನ್ನು ಗಮನಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಲು ಮುಂದಾಗಿದ್ದಾರೆ. ಇದನ್ನು ಕಂಡ ಆರೋಪಿಗಳು ಕೊಲೆಗೈಯ್ಯುವ ಉದ್ದೇಶದಿಂದ ಚೂರಿಯಿಂದ ದಾಳಿ ಮಾಡಿದ್ದಾರೆ ಎಂದು ಅಖಿಲೇಶ್ ಅವರು ಬಜ್ಪೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.
2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮಗೆ ಮುಖ್ಯ : ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೆ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮಂಗಳವಾರ ನಗರದ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ನಾನು ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಳಗ್ಗೆ ಮುಖ್ಯಮಂತ್ರಿಗೆ ಆಮಂತ್ರಣ ನೀಡಿ ಬಂದೆ, ಈಗ ಉಪ ಮುಖ್ಯಮಂತ್ರಿಗೆ ಆಹ್ವಾನ ನೀಡಿದ್ದೇನೆ. ಹಾಗಾಗಿ ಬೇರೆ ವಿಷಯಗಳ ಬಗ್ಗೆ ನಾನೇನು ಮಾತನಾಡಲಾರೆ ಎಂದು ಅವರು ಹೇಳಿದರು. ಇದೇ ಶುಕ್ರವಾರ ಅರಮನೆ ಮೈದಾನದಲ್ಲಿ ನಡೆಯುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಂದರ್ಭದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಉದ್ಘಾಟನೆ, ಅಕ್ಕಪಡೆಗೆ ಚಾಲನೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳ ಆರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರು ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದ್ದು, ಅವರ ಆಗಮನದ ಕುರಿತು ಇನ್ನಷ್ಟೇ ಖಚಿತವಾಗಬೇಕಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ
37 ಜನರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿ
Belagavi | 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ನವಜಾತ ಶಿಶುವಿನ ಕತ್ತು ಹಿಸುಕಿ ಕೊಂದ ತಾಯಿ!
ಬೆಳಗಾವಿ : ನಾಲ್ಕನೇ ಬಾರಿ ಹೆಣ್ಣುಮಗು ಹುಟ್ಟಿದ್ದಕ್ಕೆ ನವಜಾತ ಶಿಶುವನ್ನೇ ತಾಯಿ ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ರಾಮದುರ್ಗ ತಾಲ್ಲೂಕಿನ ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ. ಮುದಕವಿ ಗ್ರಾಮದ ಅಶ್ವಿನಿ ಹಣಮಂತ ಹಳಕಟ್ಟಿ ರವಿವಾರ (ನ.23) ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಬಾಣಂತಿ ಮತ್ತು ಶಿಶು ಇಬ್ಬರೂ ಎರಡು ದಿನ ಆರೋಗ್ಯವಾಗಿದ್ದರು. ಮಂಗಳವಾರ ಬೆಳಿಗ್ಗೆ ಶಿಶು ಅಳು ನಿಲ್ಲಿಸಿದ್ದರಿಂದ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಕತ್ತು ಹಿಸುಕಿರುವುದು ಪತ್ತೆಯಾಗಿದೆ. ಅಶ್ವಿನಿ–ಹಣಮಂತ ದಂಪತಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಈ ಬಾರಿ ಗಂಡು ಮಗುವಿನ ನಿರೀಕ್ಷೆ ಇಟ್ಟಿದ್ದರು. ಆದರೆ ಮತ್ತೆ ಹೆಣ್ಣು ಮಗು ಹುಟ್ಟಿರುವುದರಿಂದ ಅಶ್ವಿನಿ ಮನನೊಂದುಗೊಂಡಿದ್ದು, ಶಿಶುವನ್ನು ಸಾಕಲು ಸಾಧ್ಯವಿಲ್ಲವೆಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಹಣಮಂತ ಅವರ ತಮ್ಮನಿಗೂ ಮೂವರು ಮಕ್ಕಳು ಇದ್ದು, ಅವರ ಪತ್ನಿ ಕಳೆದ ವರ್ಷ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಮಕ್ಕಳನ್ನೂ ಅಶ್ವಿನಿಯೇ ನೋಡಿಕೊಳ್ಳುತ್ತಿದ್ದರು. ಇದರಿಂದ ಆರೂ ಮಕ್ಕಳ ಜವಾಬ್ದಾರಿ ಈಗಲೇ ಅಶ್ವಿನಿಯ ಮೇಲೆ ಇದ್ದ ಹಿನ್ನೆಲೆಯಲ್ಲಿ, ಏಳನೇ ಮಗು ಕೂಡ ಹೆಣ್ಣಾಗಿದ್ದರಿಂದ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ ಎಂದು ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರು ತಿಳಿಸಿದ್ದಾರೆ. ಆರೋಪಿ ಅಶ್ವಿನಿ ಬಾಣಂತಿಯಾಗಿರುವುದರಿಂದ ಬಂಧಿಸದೇ, ತಾಲ್ಲೂಕು ಆಸ್ಪತ್ರೆಯಲ್ಲಿ ಪೊಲೀಸ್ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಲಹೆಯ ನಂತರ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವೇಳೆ ಹೆರಿಗೆ ವಾರ್ಡಿನಲ್ಲಿ ಅಶ್ವಿನಿ ಒಬ್ಬರೇ ಇದ್ದರು. ಲಾರಿ ಚಾಲಕರಾದ ಹಣಮಂತ ಘಟನೆ ನಂತರ ಆಸ್ಪತ್ರೆಗೆ ಧಾವಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಕ್ಯಾಂಪ್ಕೊ ಕುಂದಾಪುರ ಶಾಖೆಯ ನವೀಕೃತ ಕಚೇರಿ, ಗೋದಾಮು ಕಟ್ಟಡದ ಉದ್ಘಾಟನೆ
ಕುಂದಾಪುರ, ನ.25: ಕ್ಯಾಂಪ್ಕೊ ರೈತರ ಪರವಾದ ಸಂಸ್ಥೆ. ಕೇವಲ ಲಾಭ ಮಾಡುವ ಉದ್ದೇಶವಲ್ಲದೆ ಸಾರ್ವಜನಿಕ ಸೇವೆ, ರೈತರಿಗೆ ಉಪಯೋಗ ಎಲ್ಲವೂ ಅಡಗಿದೆ. ರೈತರ ಸಹಭಾಗಿತ್ವ ಇಲ್ಲದೇ ಯಾವುದೇ ಸಹಕಾರಿ ಸಂಸ್ಥೆ ಬೆಳವಣಿಗೆ ಕಾಣುವುದಿಲ್ಲ. ಕ್ಯಾಂಪ್ಕೊ ಜತೆ ವ್ಯವಹಾರ ಮಾಡಿ ಕ್ಯಾಂಪ್ಕೊದ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ಕುಂದಾಪುರ ಎಪಿಎಂಸಿ ಪ್ರಾಂಗಣದಲ್ಲಿ ಸೋಮವಾರ ಕ್ಯಾಂಪ್ಕೊದ ಕುಂದಾಪುರ ಶಾಖೆಯ ನವೀಕೃತ ಕಚೇರಿ, ಗೋದಾಮು ಕಟ್ಟಡದ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕ್ಯಾಂಪ್ಕೋ ವ್ಯವಸ್ಥಾಪನ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ ಮಾತನಾಡಿ, ಕಳೆದ ವರ್ಷ 3,632 ಕೋ.ರೂ. ವ್ಯವಹಾರ ಮಾಡಿ 49 ಕೋ.ರೂ. ಲಾಭ ಮಾಡಿದೆ. ಕೆಜಿಯೊಂದಕ್ಕೆ ಅಡಿಕೆಗೆ 2 ರೂ., ಕೊಕೊಗೆ 6ರೂ. ಹಸಿಬೀಜಕ್ಕೆ 4ರೂ. ಪ್ರೋತ್ಸಾಹಧನ ನೀಡಿದ್ದು, ಕ್ಯಾಂಪ್ಕೋ ಇತಿಹಾಸದಲ್ಲೇ ಮೊದಲು ಎಂದರು. ಈ ವರ್ಷ ಈಗಾಗಲೇ 30,400 ಟನ್ ಅಡಿಕೆ ಖರೀದಿಸಲಾಗಿದೆ. ಕಳೆದ ವರ್ಷಕ್ಕಿಂತ 1 ಸಾವಿರ ಟನ್ ಹೆಚ್ಚು. 880 ಮೆ.ಟನ್ ರಬ್ಬರ್ ಖರೀದಿಸಲಾಗಿದೆ. 857 ಮೆ.ಟನ್ ಕಾಳುಮೆಣಸು ಖರೀದಿಸಲಾಗಿದೆ. 6,435 ಟನ್ ಚಾಕಲೇಟ್ ಉತ್ಪನ್ನಗಳನ್ನು ತಯಾರಿಸಲಾಗಿದೆ. ಕಳೆದ ವರ್ಷ 5,684 ಮೆ.ಟನ್ ಉತ್ಪಾದನೆಯಾಗಿತ್ತು. ಕನಿಷ್ಟ 100 ಕೆಜಿಯಾದರೂ ಅಡಿಕೆ ನೀಡುವ ರೈತರಿಗೆ ವೈದ್ಯಕೀಯ ನೆರವು ಕೂಡಾ ದೊರೆಯುತ್ತದೆ ಎಂದು ಅವರು ತಿಳಿಸಿದರು. ಉಪಾಧ್ಯಕ್ಷ ಶಂ.ನಾ.ಖಂಡಿಗೆ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಟಿಎಪಿಸಿಎಂಎಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ನಿರ್ದೇಶಕರಾದ ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಶಂಭುಲಿಂಗ ಜಿ.ಹೆಗಡೆ, ಕೆ. ಬಾಲಕೃಷ್ಣ ರೈ, ಜಯರಾಮ ಸರಳಾಯ, ಪದ್ಮರಾಜ ಪಟ್ಟಾಜೆ, ಎಂ.ಮಹೇಶ ಚೌಟ, ರಾಘವೇಂದ್ರ ಭಟ್, ಡಾ.ಜಯಪ್ರಕಾಶ ನಾರಾಯಣ ಟಿ.ಕೆ., ರಾಧಾಕೃಷ್ಣನ್, ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ, ಜನರಲ್ ಮೆನೆಜರ್ ರೇಶ್ಮಾ ಮಲ್ಯ, ಡಿಜಿಎಂ ಗೋವಿಂದ ಭಟ್, ಸರಕಾರಿ ಆಸ್ಪತ್ರೆ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾ.ಚಂದ್ರ ಮರಕಾಲ ಉಪಸ್ಥಿತರಿದ್ದರು. ಮುಖ್ಯ ವ್ಯವಸ್ಥಾಪಕ ಚಂದ್ರ ವಿ.ಅಮೀನ್ ಕಾರ್ಯಕ್ರಮ ನಿರ್ವಹಿಸಿದರು.
ನಟ ಧರ್ಮೇಂದ್ರಗೆ ಅಮಿತಾಭ್ ಬಚ್ಚನ್ ರಿಂದ ಭಾವುಕ ವಿದಾಯ
ಮುಂಬೈ: ಅಪರೂಪದ ವ್ಯಕ್ತಿಯಾಗಿದ್ದ ಧರ್ಮೇಂದ್ರ ರಂಗಸ್ಥಳದಿಂದ ನಿರ್ಗಮಿಸಿದ್ದಾರೆ ಎಂದು ಹಿರಿಯ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ನಟ ಧರ್ಮೇಂದ್ರರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಶೋಲೆ, ಚುಪ್ಕೆ ಚುಪ್ಕೆ, ರಾಮ್ ಬಲರಾಮ್, ಗುಡ್ಡಿ, ಚರಣ್ ದಾಸ್ ಹಾಗೂ ದೋಸ್ತ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಧರ್ಮೇಂದ್ರ ಹಾಗೂ ಅಮಿತಾಭ್ ಬಚ್ಚನ್ ಒಟ್ಟಾಗಿ ನಟಿಸಿದ್ದರು. ಶೋಲೆ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಹಾಗೂ ಧರ್ಮೇಂದ್ರ ಕ್ರಮವಾಗಿ ಜೈ ಹಾಗೂ ವೀರು ಪಾತ್ರಗಳಲ್ಲಿ ಅಭಿನಯಿಸಿದ್ದರು. ಅವರಿಬ್ಬರ ನಡುವಿನ ಕ್ಯಾಮೆರಾ ಮುಂದೆ ಹಾಗೂ ಹಿಂದಿನ ಬಲಿಷ್ಠ ಸ್ನೇಹ ಅಪರೂಪದ ನಿದರ್ಶನವಾಗಿ ಇಂದಿಗೂ ಉಳಿದಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಮಿತಾಭ್ ಬಚ್ಚನ್, “ಮತ್ತೊಬ್ಬ ಮಹಾನ್ ನಟ ತಮ್ಮ ರಂಗಸ್ಥಳದಿಂದ ನಿರ್ಗಮಿಸಿದ್ದಾರೆ” ಎಂದು ಕಂಬನಿ ಮಿಡಿದಿದ್ದಾರೆ. “ಧರ್ಮೇಂದ್ರ ತಮ್ಮ ದೈಹಿಕ ಉಪಸ್ಥಿತಿಯಿಂದ ಮಾತ್ರ ಅದ್ಭುತ ವ್ಯಕ್ತಿಯಾಗಿರಲಿಲ್ಲ; ಬದಲಿಗೆ ತಮ್ಮ ಹೃದಯ ವೈಶಾಲ್ಯತೆಯಿಂದಲೂ ಅವರು ಅದ್ಭುತ ವ್ಯಕ್ತಿಯಾಗಿದ್ದರು. ಪಂಜಾಬ್ ನ ಹಳ್ಳಿಯೊಂದರಿಂದ ಅವರು ತಮ್ಮೊಂದಿಗೆ ಸರಳತೆಯನ್ನು ಹೊತ್ತು ತಂದಿದ್ದರು ಹಾಗೂ ತಮ್ಮ ಸ್ವಭಾವದಲ್ಲಿ ಅವರು ನೈಜವಾಗಿ ಉಳಿದಿದ್ದರು. ತಮ್ಮ ವೈಭವಯುತ ವೃತ್ತಿ ಜೀವನದುದ್ದಕ್ಕೂ ಅವರು ನಿಷ್ಕಳಂಕರಾಗಿದ್ದರು. ಸಿನಿಮಾ ರಂಗದಲ್ಲಿ ಪ್ರತಿ ದಶಕದಲ್ಲೂ ಬದಲಾವಣೆಯಾಗುತ್ತಿದ್ದರೂ, ಅವರು ಮಾತ್ರ ಎಂದಿನಂತೆಯೇ ಉಳಿದಿದ್ದರು” ಎಂದು ಅವರು ಶ್ಲಾಘಿಸಿದ್ದಾರೆ.
ಟಿ20 ವಿಶ್ವಕಪ್ 2026ರ ಅಧಿಕೃತ ವೇಳಾಪಟ್ಟಿ ಪ್ರಕಟ: ಫೆ.15ರಂದು ಭಾರತ-ಪಾಕ್ ಮುಖಾಮುಖಿ; ಪಂದ್ಯಗಳು ಎಲ್ಲೆಲ್ಲಿ?
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2026ರ ಟಿ20 ವಿಶ್ವಕಪ್ನ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7, 2026 ರಂದು ಆರಂಭಗೊಳ್ಳಲಿದೆ. ಆತಿಥೇಯ ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಒಂದೇ ಗುಂಪಿನಲ್ಲಿದ್ದು, ಬಹುನಿರೀಕ್ಷಿತ ಪಂದ್ಯವು ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ. ಟೂರ್ನಿಯ ಸೆಮಿ-ಫೈನಲ್ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆದರೆ, ಮಾರ್ಚ್ 8 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ನಡೆಯಲಿದೆ.
ಉಡುಪಿ | ನಮ್ಮ ನಾಡ ಒಕ್ಕೂಟ ಕುಂದಾಪುರ ಅಧ್ಯಕ್ಷರಾಗಿ ಜಮಾಲ್ ಗುಲ್ವಾಡಿ ಆಯ್ಕೆ
ಉಡುಪಿ, ನ.25 : ನಮ್ಮ ನಾಡ ಒಕ್ಕೂಟ ಕುಂದಾಪುರ ತಾಲೂಕು ಸಮಿತಿ ಸಭೆ ಅಧ್ಯಕ್ಷರಾದ ದಸ್ತಗೀರ್ ಸಾಹೇಬ್ ಅಧ್ಯಕ್ಷತೆಯಲ್ಲಿ ಕಮ್ಯೂನಿಟಿ ಸೆಂಟರ್ ಸಭಾಭವನದಲ್ಲಿ ನಡೆಯಿತು. 2026-27ನೇ ಸಾಲಿನ ಕುಂದಾಪುರ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾಗಿ ಜಮಾಲ್ ಗುಲ್ವಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಅಲಫಾಜ್ ಕುಂದಾಪುರ, ಉಪಾಧ್ಯಕ್ಷರಾಗಿ ಶಾಬನ್ ಹಂಗಳೂರ್, ಖಜಾಂಚಿಯಾಗಿ ಎಸ್.ಅನ್ವರ್ ಕಂಡ್ಲೂರ್, ಸಂಘಟನ ಕಾರ್ಯದರ್ಶಿ ಯಾಗಿ ಹ್ಯಾರಿಸ್ ಹೆಮ್ಮಾಡಿ, ಜೊತೆ ಕಾರ್ಯದರ್ಶಿಯಾಗಿ ಪಳ್ಳಿ ಉಸ್ಮಾನ್ ಗುಲ್ವಾಡಿ ಅವಿರೋಧವಾಗಿ ಆಯ್ಕೆಗೊಂಡರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಬಿಎಸ್ಎಫ್, ಚುನಾವಣೆ ಅಧಿಕಾರಿಯಾಗಿ ಪೀರು ಸಾಹೇಬ್, ಸೈಯದ್ ಅಜ್ಮಿಲ್ ಶಿರ್ರೂ, ಸೆಂಟ್ರಲ್ ಕಮಿಟಿಯ ಸಂಘಟನ ಕಾರ್ಯದರ್ಶಿ ಹುಸೇನ್ ಹೈಕಾಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಫಾಝಿಲ್ ಆದಿ ಉಡುಪಿ, ಖಜಾಂಚಿ ಝಹಿರ್ ಅಹ್ಮದ್ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ಹೊಸ 7 ಜಿಟಿಟಿಸಿ ಕೇಂದ್ರಗಳ ಕಾಮಗಾರಿ ಶೀಘ್ರದಲ್ಲಿಯೇ ಆರಂಭ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಸಲುವಾಗಿ ಈಗಾಗಲೇ ಹೊಸ 7 ಜಿಟಿಟಿಸಿ(ಸರಕಾರಿ ಉಪಕರಣಾಗಾರ ಮತ್ತು ತರಬೇತಿ) ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಸಂಬಂಧ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಧುಗಿರಿ ಮತ್ತು ಇಂಡಿ ನಬಾರ್ಡ್ ಸಹಯೋಗದೊಂದಿಗೆ ಹಾಗೂ ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರಿನಲ್ಲಿ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ ಅನುದಾನದಡಿ ನೂತನ ಜಿಟಿಟಿಸಿ ಗಳನ್ನು ಸ್ಥಾಪಿಸುವ ಸಂಬಂಧ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ರಾಜ್ಯದಲ್ಲಿ ಒಟ್ಟು 32 ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಶೀಘ್ರದಲ್ಲಿ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದರು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದೂ ಉಲ್ಲೇಖಿಸಿದರು. ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಕಂಪೆನಿಗಳಲ್ಲಿಯೂ ಸೇರಿದಂತೆ ಶೇಕಡ 100 ರಷ್ಟು ನೇಮಕಾತಿ ಆಗುತ್ತಿದೆ. ಬೇಡಿಕೆಯಿರುವ ಕೋರ್ಸ್ಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಜತೆಗೆ, ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಸಭೆಯಲ್ಲಿ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಟಿಟಿಸಿ ಜೊತೆ ಒಪ್ಪಂದ: ಮತ್ತೊಂದು ಸಭೆಯಲ್ಲಿ, ಐಫೋನ್ ತಯಾರಕ ಫಾಕ್ಸ್ ಕಾನ್ಗೆ ಕ್ಯಾಮೆರಾ ಪರಿಕರಗಳನ್ನು ಒದಗಿಸುವ ಕೊರಿಯನ್ ಸಂಸ್ಥೆಯಾದ ಹೈವಿಷನ್ ಇಂಡಿಯಾ ಪ್ರೈ ಲಿಮಿಟೆಡ್ನ ಮುಖ್ಯಸ್ಥರು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಸಮ್ಮುಖದಲ್ಲಿ ಜಿಟಿಟಿಸಿ ಒಪ್ಪಂದಕ್ಕೆ ಸಹಿ ಹಾಕಿತು. ತಾಂತ್ರಿಕ ತರಬೇತಿ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಯಾಂತ್ರೀಕೃತತೆ, ನಿಖರ ಯಂತ್ರೋಪಕರಣ ಮತ್ತು ಸಲಕರಣೆಗಳ ಜೋಡಣೆಯಂತಹ ಕ್ಷೇತ್ರಗಳಲ್ಲಿ ಸೌಲಭ್ಯಗಳ ಹಂಚಿಕೆಯಲ್ಲಿ ಸಹಕಾರಕ್ಕಾಗಿ ಈ ಒಪ್ಪಂದವು ಅವಕಾಶವನ್ನು ಒದಗಿಸುತ್ತದೆ. ಒಪ್ಪಂದಕ್ಕೆ ಹೈವಿಷನ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಲೀ ಯುನ್ಹೋ ಮತ್ತು ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಸಹಿ ಹಾಕಿದರು. ಎರಡೂ ಸಂಸ್ಥೆಗಳು ಅರ್ಹ ಜಿಟಿಟಿಸಿ ಪ್ರಶಿಕ್ಷಣಾರ್ಥಿಗಳಿಗೆ ಕೈಗಾರಿಕಾ ಮಾನ್ಯತೆ, ಇಂಟರ್ನ್ಶಿಪ್ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಸಮ್ಮತಿಸಿವೆ. ಜೊತೆಗೆ ಶೈಕ್ಷಣಿಕ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಕೈಗಾರಿಕಾ ಸೌಲಭ್ಯಗಳು ಮತ್ತು ಪ್ರಾತ್ಯಕ್ಷಿಕೆ ಸಲಕರಣೆಗಳನ್ನು ಪೂರೈಸಲಿವೆ.
ಉಡುಪಿ | ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಅಧ್ಯಕ್ಷರಾಗಿ ಅಜ್ಮಲ್ ಆಯ್ಕೆ
ಉಡುಪಿ, ನ.25: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕಿನ ವಾರ್ಷಿಕ ಮಹಾಸಭೆಯು ಶಿರೂರು ಯುನಿಯನ್ ಸುಪರ್ ಮಾರ್ಕೆಟ್ ನ ಮೇಲ್ ಮಹಡಿಯ ಇಸ್ಲಾಹಿ ತಂಜೀಮ್ ಕಚೇರಿಯಲ್ಲಿ ಇತ್ತೀಚಿಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಮಾಮ್ದು ಇಬ್ರಾಹೀಂ ಶಿರೂರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ನಮ್ಮ ನಾಡ ಒಕ್ಕೂಟದ ಕಾರ್ಯ ಚಟುವಟಿಕೆಗಳ ಮಾತನಾಡಿದರು. ಸಭೆಯಲ್ಲಿ ಜಿಲ್ಲಾಧ್ಯಕ್ಷ ನಕ್ವಾ ಯಾಹ್ಯಾ, ಪ್ರಧಾನ ಕಾರ್ಯದರ್ಶಿ ಫಾಝಿಲ್ ಆದಿಉಡುಪಿ, ಮಾಜಿ ಜಿಲ್ಲಾ ಅಧ್ಯಕ್ಷ ಮುಷ್ತಾಕ್ ಬೆಳ್ವೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಖಲೀಲ್ ಕಾಪ್ಸಿ ವರದಿ ಮಂಡಿಸಿದರು. ಖಜಾಂಚಿ ಪರಿ ಹುಸೈನ್ ರವರು ಲೆಕ್ಕ ಪತ್ರ ಮಂಡಿಸಿದರು. ತಾಲೂಕು ಉಸ್ತುವಾರಿ ಮಮ್ದು ಇಬ್ರಾಹಿಂ ಸಾಹ್ಗ್ಡೇ ಮತ್ತು ಚುನಾವಣಾ ಅಧಿಕಾರಿಗಳಾದ ನಿಹಾರ್ ಅಹ್ಮದ್ ಕುಂದಾಪುರ, ಅಬ್ದುಲ್ ಖಾದರ್ ಮೂಡುಗೋಪಾಡಿ, ಹಾರೂನ್ ರಶೀದ್ ಸಾಸ್ತಾನ್ ರವರು ಬೈಂದೂರು ತಾಲೂಕಿನ ಹೊಸ ಸಮಿತಿ ರಚನೆಯ ಪ್ರಕ್ರಿಯೆ ನಡೆಸಿಕೊಟ್ಟರು. 2026-27 ಸಾಲಿನ ನೂತನ ಅಧ್ಯಕ್ಷರಾಗಿ ಸೈಯದ್ ಅಜ್ಮಲ್ ಸಿ.ಎ.ಶಿರೂರು, ಉಪಾಧ್ಯಕ್ಷರಾಗಿ ತಮ್ಟಿಕರ್ ಮುಹಮ್ಮದ್ ಇಲ್ಯಾಸ್ ಬೈಂದೂರು, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕಾಪ್ಸಿ ಶಿರೂರು, ಜಂಟಿ ಕಾರ್ಯದರ್ಶಿಯಾಗಿ ತಾರಿಸಲ್ಲಾ ಮುಹಮ್ಮದ್ ಗೌಸ್ ಶಿರೂರು, ಕೋಶಾಧಿಕಾರಿಯಾಗಿ ಅಮೀರ್ ಹುಸೈನ್ ನಾಗೂರು, ಸಂಘಟನಾ ಕಾರ್ಯದರ್ಶಿಯಾಗಿ ಡಾ.ಮೊಹಮ್ಮದ್ ತಾಹಾ ಶಿರೂರು, ತಾಲೂಕು ಸಮಿತಿ ಸದಸ್ಯರಾಗಿ, ಪರಿ ಹುಸೈನ್ ಶಿರೂರು, ಮಾಮ್ದು ಇಬ್ರಾಹೀಂ ಶಿರೂರು, ಕಾವಾ ಸಯೀದ್ ಶಿರೂರು, ಮುಝಫ್ಫರ್ ಕಿರಿಮಂಜೇಶ್ವರ, ಎನ್.ಎಸ್.ರಿಜ್ವಾನ್ ಬೊಳ್ಕಿಂಬೊಳೆ, ಉಸ್ಮಾನ್ ನಾಗೂರು, ಅಬ್ದುಲ್ ಸಮಿ ಹಳಗೇರಿ, ಜೈನುಲ್ ಅಬೀದಿನ್ ಹಳಗೇರಿ, ಫೈಝಾನ್ ಕಿರಿಮಂಜೇಶ್ವರ, ಕಾಝಿ ಇರ್ಶಾದ್ ಕಿರಿಮಂಜೇಶ್ವರ, ಸಯ್ಯದ್ ಅಸ್ಲಮ್ ಶಿರೂರು, ನಿಹಾಲ್ ಶಿರೂರು, ಶೇಕ್ ನಸ್ರುಲ್ಲಾ ಕಿರಿಮಂಜೇಶ್ವರ, ಮುದಸ್ಸಿರ್, ಸಮಿಉಲ್ಲಾ ಶೇಖ್ ಕಿರಿಮಂಜೇಶ್ವರ ಮತ್ತು ಅಮೀನ್ ಗೊಳಿಹೊಳೆ ಆಯ್ಕೆಯಾದರು. ಅಲ್ ಹಾಶ್ಮಿ ಮಸೀದಿಯ ಮುಅಝ್ಝಿನ್ ಅಬ್ದುಲ್ ಕಯ್ಯುಮ್ ಕಿರಾತ್ ಪಠಿಸಿದರು. ಉಪಾಧ್ಯಕ್ಷರಾದ ತಮ್ಟಿಕರ್ ಮೊಹಮ್ಮದ್ ಇಲ್ಯಾಸ್ ಬೈಂದೂರು ವಂದಿಸಿದರು.
ಕೆಪಿಎಸ್ಸಿ : ಪರಿಷ್ಕೃತ ಕೀ ಉತ್ತರ ಪ್ರಕಟ
ಬೆಂಗಳೂರು : ಲೋಕಸೇವಾ ಆಯೋಗವು ಅಧಿಸೂಚಿಸಲಾದ ವಿವಿಧ ಹುದ್ದೆಗಳಾದ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು, ವಿವಿಧ ಗ್ರೂಪ್-ಸಿ, ವಿವಿಧ ಗ್ರೂಪ್-ಸಿ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಕೀ-ಉತ್ತರಗಳು ಪ್ರಕಟಿಸಿದ ನಂತರ, ಕೀ ಉತ್ತರ, ಪರಿಷ್ಕೃತ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಸಲ್ಲಿಸುವ ಯಾವುದೇ ಮನವಿ, ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು, ನ.25: ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ.ದಿನೇಶ್ ಶೆಟ್ಟಿ ಯಾನೆ ದಿನ್ನು ಎಂಬಾತನನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೊಗೀಶ್ ನಿಂದ ಸುಪಾರಿ ಪಡೆದು ನ್ಯಾಯವಾದಿ ನೌಶಾದ್ ಖಾಶಿಂಜಿ ಅವರನ್ನು 2009ರಲ್ಲಿ ಕೊಲೆಗೈದ ಆರೋಪದಲ್ಲಿ ದಿನೇಶ್ ಶೆಟ್ಟಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಆ ಪ್ರಕರಣದಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದ ಈತ ರಾಜ್ಯ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ 2019ರಲ್ಲಿ ಬಿಡುಗಡೆಗೊಂಡಿದ್ದ. ನಂತರದ ದಿನಗಳಲ್ಲಿ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಹರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕಳೆದ ಒಂದೂವರೆ ವರ್ಷದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಿನೇಶ್ನನ್ನು ಮಂಗಳವಾರ ಬಂಧಿಸಲಾಗಿದೆ.
ರಸ್ತೆ ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ ಬೀಳಗಿ ಸಾವು! ಕಲಬುರಗಿಯ ಜೇವರ್ಗಿ ಬಳಿ ಘಟನೆ
ಬೆಸ್ಕಾಂ ಎಮ್ಡಿ ಮಹಾಂತೇಶ್ ಬೀಳಗಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ದುರ್ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಕುಂದಾಪುರ | ಸಾಧಕ ಪತ್ರಕರ್ತರಿಗೆ ಸನ್ಮಾನ, ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮ
ಕುಂದಾಪುರ, ನ.25: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರಿಗೆ ಸನ್ಮಾನ ಹಾಗೂ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮವು ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮುಖ್ಯ ಅತಿಥಿಯಾಗಿ ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಕಿರ್ಶೋ ಕುಮಾರ್ ಮಾತನಾಡಿ, ಬದುಕಿನಲ್ಲಿ ಏನು ಬರುತ್ತದೋ ಅದನ್ನು ಸ್ವೀಕಾರ ಮಾಡಿ ಬದುಕಬೇಕು, ಅದೇ ನಮ್ಮ ಜೀವನವಾಗಿರಬೇಕು. ಯಾರು ಯಕ್ಷಗಾನವನ್ನು ಪ್ರೀತಿಸುತ್ತಾರೋ ಅವರು ಪ್ರತಿಯೊಬ್ಬರನ್ನೂ ಪ್ರೀತಿಸಬಲ್ಲರು ಮತ್ತು ಜಗತ್ತನ್ನು ಪ್ರೀತಿಸುತ್ತಾರೆ. ಯಕ್ಷಗಾನವನ್ನು ಪ್ರೀತಿಸುವುದರಿಂದ ನಿರಂತರವಾಗಿ ಬರೆಯಲು ಸಾಧ್ಯವಾಗುತ್ತದೆ. ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಲಕ್ಷ್ಮೀ ಮಚ್ಚಿನ ಅವರು, ಸಮಾಜದಲ್ಲಿ ಬದಲಾವಣೆಯನ್ನು ಪತ್ರಕರ್ತರಿಂದ ಮಾಡಲು ಸಾಧ್ಯವಾಗುತ್ತದೆ. ಪತ್ರಕರ್ತರು ಉತ್ಸಾಹದ ಚಿಲುಮೆಯಾಗಿ ಕೆಲಸ ಮಾಡುವಂತೆ ಆಗಬೇಕು. ಪತ್ರಕರ್ತರಲ್ಲಿ ಉತ್ಸಾಹ ಕಡಿಮೆಯಾದರೆ, ಉದಾಸೀನದ ಮನೋಭಾವ ಬೆಳೆದರೆ ನಾವು ಅರ್ಧ ಸತ್ತ ಹಾಗೆ. ಆದ್ದರಿಂದ ಯಾವುದೇ ಸುದ್ಧಿಯನ್ನು ಈಗಲೇ ಮಾಡುವ, ಇವತ್ತೇ ಮಾಡುವ ನಮ್ಮಲ್ಲಿ ಉತ್ಸಾಹ ಇದ್ದರೆ ಮಾತ್ರ ನಾವು ಬೇಡಿಕೆಯ ಪತ್ರಕರ್ತರಾಗಿ ಇರಲು ಸಾಧ್ಯವಾಗುತ್ತದೆ ಎಂದರು. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಜಾನ್ ಡಿಸೋಜ ಶುಭಾಶಂಸನೆಗೈದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಎಸ್.ಸುಬ್ರಹ್ಮಣ್ಯ ಕುರ್ಯ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕಾರ್ಯದರ್ಶಿ ಟಿ.ಲೋಕೇಶ ಆಚಾರ್ಯ ತೆಕ್ಕಟ್ಟೆ, ಬಿ.ರಾಘವೇಂದ್ರ ಪೈ ಗಂಗೊಳ್ಳಿ, ಚಂದ್ರಮ ತಲ್ಲೂರು ಮತ್ತು ಯೋಗೀಶ್ ಕುಂಭಾಶಿ ಅವರನ್ನು ಗೌರವಿಸಲಾಯಿತು. ಭಂಡಾರ್ಕರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರ ಆಚಾರ್ಯ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ ಮಾತನಾಡಿದರು. ತಾಲೂಕು ಸಂಘದ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಪತ್ರಕರ್ತ ಪ್ರಶಾಂತ ಪಾದೆ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ವಂದಿಸಿದರು.
ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ ವಾರ್ತಾಭಾರತಿ ಮಾಧ್ಯಮವನ್ನು ಬೆಂಬಲಿಸಬೇಕು : ವಿರಕ್ತಮಠದ ಮಹಾಲಿಂಗ ಮಹಾಸ್ವಾಮಿ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಸಿಂಧನೂರಿನಲ್ಲಿ ಓದುಗ, ಹಿತೈಷಿಗಳ ಸಭೆ
ಉಡುಪಿ | ಹೆಜ್ಜೆ-ಗೆಜ್ಜೆಯಿಂದ ರಾಷ್ಟ್ರಮಟ್ಟದ ನೃತ್ಯ, ಸಂಗೀತ ಸ್ಪರ್ಧೆ
ಉಡುಪಿ, ನ.25: ಮಣಿಪಾಲ- ಉಡುಪಿಯ ಹೆಜ್ಜೆ ಗೆಜ್ಜೆ ಫೌಂಡೇಶನ್ ಆಶ್ರಯದಲ್ಲಿ ರಾಷ್ಟ್ರಮಟ್ಟದ ಏಕವ್ಯಕ್ತಿ ಭರತನಾಟ್ಯ ಮತ್ತು ಸಂಗೀತ ಸ್ಪರ್ಧೆ ನ.30 ಹಾಗೂ ಡಿಸೆಂಬರ್ 7ರಂದು ನಡೆಯಲಿದೆ. ದಾಸಪದ ವೈಭವಂ ಹೆಸರಿನಲ್ಲಿ ನಡೆಯುವ ಭಕ್ತಿ ನೃತ್ಯ ಸೌರಭ ಭರತನಾಟ್ಯ ಸ್ಪರ್ಧೆ ನ.30ರ ರವಿವಾರ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಹೆಜ್ಜೆ ಗೆಜ್ಜೆಯ ಸಹ ನಿರ್ದೇಶಕಿ ದೀಕ್ಷಾ ರಾಮಕೃಷ್ಣ ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ವಿಜೇತರಿಗೆ ಫಲಕದೊಂದಿಗೆ 10,000 ರೂ.ನಗದು, ಎರಡನೇ ಬಹುಮಾನ ಪಡೆದವರಿಗೆ 7,000 ರೂ. ಹಾಗೂ ಮೂರನೇ ಬಹುಮಾನ ಪಡೆದವರಿಗೆ 5000 ರೂ. ನೀಡಲಾಗುವುದು. ಅಲ್ಲದೇ ಪ್ರಥಮ ಬಹುಮಾನ ವಿಜೇತರಿಗೆ ನೃತ್ಯದಾಸರತ್ನ ಬಿರುದು ನೀಡಲಾಗುವುದು ಎಂದು ಅವರು ತಿಳಿಸಿದರು. ಪ್ರತಿಯೊಬ್ಬ ನೃತ್ಯ ಸ್ಪರ್ಧಾರ್ಥಿಗೆ 10 ನಿಮಿಷಗಳ ಕಾಲಾವಕಾಶವಿರುತ್ತದೆ. ನೃತ್ಯಭಾಗ ಅಲರಿಪು, ಜತಿಸ್ವರ ಇತ್ಯಾದಿ ಮತ್ತು ಇನ್ನೊಂದು ದಾಸರ ಅಂಕಿತ ಇರುವ ದೇವರನಾಮ (ಅಭಿನಯ)ಕ್ಕೆ ನರ್ತಿಸಬೇಕಾಗುತ್ತದೆ ಎಂದು ದೀಕ್ಷಾ ರಾಮಕೃಷ್ಣ ತಿಳಿಸಿದರು. ಡಿ.7ರ ರವಿವಾರ ಭಕ್ತಿ ಗಾನ ಲಹರಿ ರಾಷ್ಟ್ರಮಟ್ಟದ ದಾಸ ಪದ ಸಂಗೀತ ಸ್ಪರ್ಧೆಯನ್ನು ಹೆಜ್ಜೆ ಗೆಜ್ಜೆ ಉಡುಪಿಯಲ್ಲಿ ನಡೆಸಲಾಗುವುದು. ಪ್ರತಿಯೊಬ್ಬರಿಗೆ 10 ನಿಮಿಷಗಳ ಕಾಲಾವಕಾಶ ನೀಡಲಾಗುವುದು. ಈ ಸ್ಪರ್ಧೆಯ ವಿಜೇತರಿಗೆ ಫಲಕದೊಂದಿಗೆ 10,000 ರೂ. ನಗದು ಬಹುಮಾನ, ಎರಡನೇ ಸ್ಥಾನಿಗೆ 7,000 ರೂ. ಹಾಗೂ ಮೂರನೇ ಸ್ಥಾನಿಗೆ 5000 ರೂ. ನಗದು ನೀಡಲಾಗುವುದು. ಅಗ್ರಸ್ಥಾನಿಗೆ ದಾಸಗಾನರತ್ನ ಪ್ರಶಸ್ತಿ ನೀಡಲಾಗುವುದು. ಈ ಎರಡು ಸ್ಪರ್ಧೆಗಳಲ್ಲಿ 13ರಿಂದ 25 ವರ್ಷ ವಯೋಮಿತಿಯವರು ಮಾತ್ರ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹೆಜ್ಜೆ ಗೆಜ್ಜೆ ಉಡುಪಿ ದೂರವಾಣಿ ಸಂಖ್ಯೆ:9110814436ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹೆಜ್ಜೆಗೆಜ್ಜೆಯ ನಿರ್ದೇಶಕ ಡಾ.ರಾಮಕೃಷ್ಣ ಹೆಗ್ಡೆ ಹಾಗೂ ರಂಜನಿ ಸಾಮಗ ಉಪಸ್ಥಿತರಿದ್ದರು.
ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ : ಶುಭಾಂಶು ಶುಕ್ಲಾ
ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ಉಡುಪಿ | ವಿಜ್ಞಾನ ನಾಟಕ ಸ್ಪರ್ಧೆ : ಕೆ.ಪಿ.ಎಸ್.ಕೊಕ್ಕರ್ಣೆ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Udupi, Science Drama Competition

19 C