SENSEX
NIFTY
GOLD
USD/INR

Weather

18    C
... ...View News by News Source

ಸುಳ್ಯ | ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ಕಾಡು ಹಂದಿ : ಕಾರು ಪಲ್ಟಿ, ಚಾಲಕನಿಗೆ ಗಾಯ

ಸುಳ್ಯ, ನ.16: ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ರವಿವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಕಾಡು ಹಂದಿ ರಸ್ತೆಗೆ ಜಿಗಿದು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮೋರಿಯ ಕೆಳಗೆ ಉರುಳಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ವಾರ್ತಾ ಭಾರತಿ 17 Nov 2025 12:01 am

ಮಂಗಳೂರು | ಜಾನುವಾರು ವಧೆ: ಓರ್ವ ಆರೋಪಿ ಸೆರೆ

ಮಂಗಳೂರು, ನ.16: ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ರವಿವಾರ ಬಂಟ್ವಾಳ ತಾಲೂಕು ಅರಳ ಗ್ರಾಮದಲ್ಲಿ ನಡೆದಿದೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಶೆಡ್‌ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ಸ್ಥಳದಿಂದ ಸುಮಾರು 150 ಕೆ.ಜಿ. ಮಾಂಸ ವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪರವಾನಿಗೆ ಇಲ್ಲದೇ ಮನೆಯ ಶೆಡ್‌ನಲ್ಲಿ ಜಾನುವಾರುಗಳನ್ನು ವಧೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೆಡ್‌ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗೆ ಮುಟ್ಟುಗೋಲು ಹಾಕುವಂತೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 16 Nov 2025 11:56 pm

ಸುಳ್ಯ | ಆನೆಗುಂಡಿ ವ್ಯಾಪ್ತಿಯಲ್ಲಿ ಕಸ ಎಸೆತ : ಕನಕಮಜಲು ಗ್ರಾಮ ಪಂಚಾಯತ್‌ನಿಂದ ದಂಡ

ಸುಳ್ಯ, ನ.16: ಕನಕಮಜಲು ಗ್ರಾಪಂ ವ್ಯಾಪ್ತಿಯ ಆನೆಗುಂಡಿ ಎಂಬಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿದ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಕಸ ಎಸೆದವರನ್ನು ಕರೆಸಿ ದಂಡ ವಿಧಿಸಿ ಮುಚ್ಚಳಿಕೆ ಬರೆಸಿ ಕಳುಹಿಸಿ ಕೊಟ್ಟ ಘಟನೆ ಶನಿವಾರ ನಡೆದಿದೆ. ಹಲವು ಸಮಯಗಳಿಂದ ಆನೆಗುಂಡಿ ಪ್ರದೇಶದ ರಸ್ತೆ ಬದಿ ಕಸದ ರಾಶಿ ಆಗಾಗ್ಗೆ ಬೀಳುತಿತ್ತು. ಗ್ರಾಮ ಸಭೆಯಲ್ಲಿ, ಸಾಮಾನ್ಯ ಸಭೆಯಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚುವಂತೆ ಆಗ್ರಹ ವ್ಯಕ್ತವಾ ಗಿತ್ತು. ಕಸ ಹಾಕುವರನ್ನು ಪತ್ತೆ ಹಚ್ಚುವ ಸಲುವಾಗಿ ಆನೆಗುಂಡಿ ಪ್ರದೇಶಕ್ಕೆ ತೆರಳಿದ ಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಪಂಚಾಯತ್ ಪ್ರಭಾರ ಪಿಡಿಒ ಬಾಬು ನಾಯ್ಕ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಆರ್ಲಪದವಿನ ವ್ಯಕ್ತಿಯೊಬ್ಬರ ಮನೆಯ ವಿಳಾಸವಿರುವ ಕವರ್, ಪುಸ್ತಕ ಲಭ್ಯವಾದವು. ಆ ಆಧಾರದಲ್ಲಿ ಪಂಚಾಯತ್‌ನಿಂದ ಅವರನ್ನು ಸಂಪರ್ಕಿಸಿ, ಕರೆಸಲಾಯಿತು. ಬಳಿಕ ವಿಚಾರಿಸಿದಾಗ ಕಸ ತಾನು ತಂದು ಎಸೆದಿಲ್ಲ. ಯಾರೋ ಇಲ್ಲಿ ಎಸೆದಿದ್ದಾರೆಂದು ಹೇಳಿದರೆನ್ನಲಾ ಗಿದೆ. ಕನಕಮಜಲು ಪಂಚಾಯತ್ ವತಿಯಿಂದ 4,500 ರೂ. ದಂಡ ಹಾಕಿ ಅವರಿಂದಲೇ ಕಸವನ್ನು ತೆರವುಗೊಳಿಸಲಾಯಿತು.

ವಾರ್ತಾ ಭಾರತಿ 16 Nov 2025 11:54 pm

ಯುದ್ಧದ ನಡುವೆ ಉಕ್ರೇನ್ ಮಹತ್ವದ ಒಪ್ಪಂದ, ತೈಲ &ಗ್ಯಾಸ್ ಪಡೆಯಲು ಉಕ್ರೇನ್ ಪ್ಲಾನ್ ಏನು?

ಉಕ್ರೇನ್ ಸರಿಯಾಗಿ ಏಟು ತಿಂದು ಮೂಲೆ ಸೇರುವಂತೆ ಆಗಿದೆ, ಇನ್ನೊಂದು ಕಡೆ ತನ್ನ ನೆಲದ ಜನರಿಗೆ ಸೂಕ್ತವಾಗಿ ತೈಲ &ಗ್ಯಾಸ್ ಸರಬರಾಜು ಮಾಡಲು ಕೂಡ ಪರದಾಡುತ್ತಿದೆ ಇದೇ ಉಕ್ರೇನ್ ದೇಶ. ಎಲ್ಲವೂ ಅಲ್ಲೋಲ &ಕಲ್ಲೋಲ ಆಗಿರುವ ಸಮಯದಲ್ಲೇ ಭಾರತದಿಂದ ಖರೀದಿ ಮಾಡ್ತಾ ಇದ್ದ ತೈಲವನ್ನೂ ನಿಲ್ಲಿಸಿತ್ತು ಉಕ್ರೇನ್. ಇದರ ಪರಿಣಾಮ ಒದ್ದಾಟ ಕೂಡ ಉಕ್ರೇನ್‌ಗೆ

ಒನ್ ಇ೦ಡಿಯ 16 Nov 2025 11:46 pm

ಮಂಗಳೂರು | ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು, ನ.16: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿಯು ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ, ಆರೋಪಿಯು ಹಲ್ಲೆ ನಡೆಸಿ, ಮಹಿಳೆಗೆ ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ವಾರ್ತಾ ಭಾರತಿ 16 Nov 2025 11:43 pm

ಯುವಪೀಳಿಗೆಯಲ್ಲಿ ಓದುವ ಹವ್ಯಾಸ ಬೆಳೆಸೋಣ: ಫಕೀರ್ ಮುಹಮ್ಮದ್

ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

ವಾರ್ತಾ ಭಾರತಿ 16 Nov 2025 11:41 pm

ಗೇರು ಅಭಿವೃದ್ಧಿಗೆ ಅನುದಾನ ಘೋಷಿಸಲು ಸರಕಾರಕ್ಕೆ ಒತ್ತಾಯ : ಯು.ಟಿ.ಖಾದರ್

‘ಕಾಜು ಶತಮಾನೋತ್ಸವ ಸಮ್ಮೇಳನ’ದ ಸಮಾರೋಪ

ವಾರ್ತಾ ಭಾರತಿ 16 Nov 2025 11:36 pm

ಅರಣ್ಯ ಇಲಾಖೆ ನಿರ್ಲಕ್ಷ್ಯ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಮೈಸೂರು: ಅರಣ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವನ್ನು ವಿರೋಧಿಸಿ ವಾಟಾಳ್ ನಾಗರಾಜ್‌ ರವರ ನೇತೃತ್ವದಲ್ಲಿ ಮೈಸೂರಿನ ಆರ್ ಗೇಟ್ ಬಳಿ ರವಿವಾರ ಪ್ರತಿಭಟನೆ ನಡೆಸಲಾಯಿತು. ಆರಣ್ಯ ಇಲಾಖೆಯವರ ಬೇಜವಾಬ್ದಾರಿಯಿಂದ ಆನೆಗಳನ್ನು ರಕ್ಷಣೆ ಮಾಡಲು ಆಗುತ್ತಿಲ್ಲ. ಮೈಸೂರು ಜಿಲ್ಲೆಯಲ್ಲಿ ಹುಲಿ ಹಾಗೂ ಹುಲಿ ಮರಿಗಳು ಸಾವನ್ನಪ್ಪುತ್ತಿವೆ. ಜನರ ಮೇಲೆ ಹುಲಿಗಳು ದಾಳಿ ನಡೆಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ 18ರಿಂದ 20 ಜಿಂಕೆಗಳು ಸಾವಿಗೀಡಾಗಿವೆ. ಇದಕ್ಕೆ ಯಾರು ಕಾರಣ? ಯಾರು ಜವಾಬ್ದಾರಿ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಅರಣ್ಯ ರಕ್ಷಣೆ ಮಾಡದಿದ್ದರೆ ನಾವುಗಳು ಉಳಿಯುವುದಿಲ್ಲ. ಅರಣ್ಯವನ್ನು ಲೂಟಿ ಮಾಡಲಾಗುತ್ತಿದೆ. ಕೇರಳ ಭಾಗದಲ್ಲಿ ಮರಗಳನ್ನು ಕಳ್ಳತನ ಮಾಡಲಾಗುತ್ತಿದೆ. ಇತ್ತೀಚೆಗೆ ಅರಣ್ಯದಲ್ಲಿ ಕಾರು ಸಂಚರಿಸಿ ಕಾರಿನಲ್ಲಿ ಪಿಸ್ತೂಲ್ ಸಿಕ್ಕಿತ್ತು. ಆ ಪಿಸ್ತೂಲ್ ಯಾರದು ಎಂಬುದರ ಬಗ್ಗೆ ತನಿಖೆಯೇ ಆಗಲಿಲ್ಲ. ಹೀಗಾದರೆ ಅರಣ್ಯ ಉಳಿಯಲುವ ಸಾಧ್ಯವೇ ಎಂದು ಪ್ರಶ್ನಿಸಿದರು. ವನ್ಯ ಪ್ರಾಣಿಗಳು ನಾಡಿಗೆ ಬಂದು ಮನುಷ್ಯನ‌ ಮೇಲೆ ದಾಳಿ ಮಾಡುತ್ತಿವೆ. ಇದಕ್ಕೆ ಕಾರಣ ಏನು ಎಂದು ಪತ್ತೆ ಹಚ್ಚಲಿಲ್ಲ. ಎಷ್ಟೇ ಹಣ ಖರ್ಚಾದರು ಕಾಡಿನ ಸುತ್ತಾ ಬೇಲಿ ಹಾಕಬೇಕು ಎಂದು ಒತ್ತಾಯಿಸಿದರು. ವನ್ಯಜೀವಿ-ಪ್ರಾಣಿ ಸಂಘರ್ಷದಿಂದ ಸಾವೀಗೀಡಾದವರಿಗೆ ರಾಜ್ಯ ಸರ್ಕಾರ ಬರಿ 25 ಲಕ್ಷ ರೂ. ನೀಡಲಾಗುತ್ತಿದೆ. ಇದು ಏನೇನು ಸಾಲದು. ಹಾಗಾಗಿ ಈ ಪರಿಹಾರ ಮೊತ್ತವನ್ನು 50 ಲಕ್ಷ ರೂ. ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಬಿ.ಎ.ಶಿವಶಂಕರ್, ಜಿಯಾ ನಾಸಿರ್, ತೇಜಸ್ ಲೋಕೇಶ್ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಾರ್ತಾ ಭಾರತಿ 16 Nov 2025 11:25 pm

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ; ಸರಣಿ ಸಾವಿಗೆ ಕಾರಣ ನಿಗೂಢ

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಒಟ್ಟು ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ತೀವ್ರ ತನಿಖೆ ನಡೆಸಲಾಗುತ್ತಿದೆ. ಜೊತೆಗೆ ಮೃಗಾಲಯದ ಆವರಣದಲ್ಲಿ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯ ಕರ್ನಾಟಕ 16 Nov 2025 11:21 pm

OYO: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಓಯೋ ಸಂಸ್ಥಾಪಕ

ಈಗಿನ ಯುವಜನರ ಹಾಟ್‌ ಟಾಪಿಕ್‌ಗಳಲ್ಲಿ ಓಯೋ (OYO) ಕೂಡ ಒಂದು. ಓಯೋ ಅಂದಾಕ್ಷಣ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಈಗಾಗಲೇ ಈ ರೂಂ ಸೇವೆಯು ಯುವಜೋಡಿಗಳು, ಪ್ರೇಮಿಗಳ ಅಡ್ಡಾ ಎನಿಸಿಕೊಂಡಿದೆ. ಲಕ್ಷಾಂತರ ಮಂದಿ ಓಯೋ ರೂಂ ಸೇವೆಯನ್ನು ಬಳಸಿ ಮೆಚ್ಚಿಕೊಂಡಿದ್ದಾರೆ. ಹೀಗಿರುವಾಗ ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರು ವಿದ್ಯಾರ್ಥಿಗಳನ್ನು ಕುರಿತು ಇತ್ತೀಚೆಗೆ ಆಡಿರುವ ಮಾತುಗಳು ಗಮನ ಸೆಳೆದಿದೆ.

ಒನ್ ಇ೦ಡಿಯ 16 Nov 2025 11:21 pm

ದುಬೈ | ಶಾರ್ಜಾದಲ್ಲಿ ಭಾರತದ ಸಾಮಾಜಿಕ ವಿಕಸನ, ಮುಸ್ಲಿಮರು ಕೃತಿ ಬಿಡುಗಡೆ

ಶಾರ್ಜಾ, ನ.16: ಮಂಗಳೂರಿನ ಶಾಂತಿ ಪ್ರಕಾಶನ ಪ್ರಕಟಿಸಿದ ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು ಎಂಬ ಕೃತಿಯನ್ನು ಖ್ಯಾತ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಅವರು ಶಾರ್ಜಾದಲ್ಲಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ನೂರ್ ಅಶ್ಫಾಕ್ ಕಾರ್ಕಳ, ಲೇಖಕ ಇರ್ಶಾದ್ ಮೂಡುಬಿದ್ರೆ, ರಿಯಾಝ್ ಪುತ್ತೂರು, ಅಬ್ದುಲ್ ಸಲಾಮ್ ದೇರಳಕಟ್ಟೆ, ರಫೀಕ್ ಅಲಿ ಕೊಡಗು ಮತ್ತು ಹಾದಿಯ ಮಂಡ್ಯ ಉಪಸ್ಥಿತರಿದ್ದರು. ಶಾರ್ಜಾ ಅಂತರ್‌ರಾಷ್ಟ್ರೀಯ ಪುಸ್ತಕ ಮೇಳದ 44 ನೆಯ ಆವೃತ್ತಿಯಲ್ಲಿ ಸರಕಾರದ ಅಧಿಕೃತ ಅತಿಥಿಯಾಗಿ ಆಗಮಿಸಿದ ಬಾನು ಮುಸ್ತಾಕ್ ವಿಶ್ವ ವಿಖ್ಯಾತ ಶಾರ್ಜಾ ಪುಸ್ತಕ ಮೇಳದಲ್ಲಿ ಭಾಗವಹಿಸಿ ಮಹಿಳೆಯರ ಅಸ್ತಿತ್ವ, ಜೀವನ ಮತ್ತು ಪ್ರತಿರೋಧ ಎಂಬ ವಿಷಯದಲ್ಲಿ ವಿಷಯ ಮಂಡಿಸಿದರು.

ವಾರ್ತಾ ಭಾರತಿ 16 Nov 2025 11:10 pm

ಭಟ್ಕಳ | ತಲಾಂದ ಶಾಲೆಯಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಭಟ್ಕಳ: ತಲಾಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – 2025-26 ಕಾರ್ಯಕ್ರಮವು ಗುರುವಾರ ಸಡಗರದಿಂದ ಜರುಗಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಸಮೂಹ ಸಂಪನ್ಮೂಲ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ವೈವಿಧ್ಯಮಯ ಪ್ರತಿಭೆಗಳನ್ನು ಮೆರೆದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣವನ್ನು ತಳಿರು ತೋರಣಗಳಿಂದ ಸಿಂಗಾರಿಸಲಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಯಿತು. ವಿದ್ಯಾರ್ಥಿಗಳು ಛದ್ಮವೇಷ, ಕ್ಲೇ ಮಾಡೆಲಿಂಗ್, ಆಶುಭಾಷಣ, ಕಂಠಪಾಠ, ಧಾರ್ಮಿಕ ಪಠಣ, ಲಘು ಸಂಗೀತ, ಕಥೆ ಹೇಳುವುದು, ಚಿತ್ರಕಲೆ, ಬಣ್ಣಹಚ್ಚುವಿಕೆ, ಅಭಿನಯಗೀತೆ, ಭಕ್ತಿಗೀತೆ ಮುಂತಾದ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಟ್ಟಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರಜಿನಿ ನಾಯ್ಕ ಅವರು, “ಮಕ್ಕಳಲ್ಲಿರುವ ಅಡಗಿದ ಪ್ರತಿಭೆಯನ್ನು ಹೊರತರುವ ಅತ್ಯುತ್ತಮ ವೇದಿಕೆಯೇ ಪ್ರತಿಭಾ ಕಾರಂಜಿ” ಎಂದು ಹೇಳಿದರು.  ಯಲ್ವಡಿಕವೂರ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಗೊಂಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ನಾಗೇಶ ಹೆಬ್ಬಾರ, ಉಪಾಧ್ಯಕ್ಷೆ ಲಕ್ಷ್ಮೀ ಗೊಂಡ, ಸದಸ್ಯರು ದೇವಯ್ಯ ನಾಯ್ಕ, ಗಣಪತಿ ನಾಯ್ಕ, ಜಯಶ್ರೀ ನಾಯ್ಕ, ಶೇಷಗಿರಿ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಪೊಣಿಮಾ ಮೊಗೇರ, ಕಟ್ಟೇವಿರ ಯುವಕ ಸಂಘ ಅಧ್ಯಕ್ಷ ಜಗದೀಶ ನಾಯ್ಕ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಸಂಕಪ್ಪ ನಾಯ್ಕ, ಮೋಹನ ಗೊಂಡ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಬಿಆರ್‌ಸಿ ಜಯಶ್ರೀ ಆಚಾರ್ಯ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಬೇಬಿ ದೇವಡಿಗ ವಂದನೆ ಸಲ್ಲಿಸಿದರು. ಶಿಕ್ಷಕ ವಿಜಯ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ವಾರ್ತಾ ಭಾರತಿ 16 Nov 2025 11:07 pm

ಭಟ್ಕಳದಲ್ಲಿ ಸ್ಟೆಮ್ ಫೆಸ್ಟ್-2025

ಭಟ್ಕಳ, ನ.16: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್‌ಮೆಂಟ್ ನಲ್ಲಿ ಶನಿವಾರ ಸ್ಟೆಮ್ ಫೆಸ್ಟ್-2025 ನ್ನು ಆಚರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ 800ಕ್ಕೂ ಹೆಚ್ಚು ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಆಗಮಿಸಿ, ಸ್ಪರ್ಧಾತ್ಮಕ ಹಾಗೂ ಸಂವಹನಾತ್ಮಕ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸಂವಾದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಕೆ. ಫಝ್ಲುರ್ ರಹ್ಮಾನ್ ಮಾತನಾಡಿ, ಸಿದ್ಧಾಂತದ ಜ್ಞಾನಕ್ಕೆ ಅನುಭವದ ಸ್ಪರ್ಶ ಸಿಕ್ಕಾಗ ಮಾತ್ರ ವಿಜ್ಞಾನ ಜೀವಂತವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಂಊಒ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಶಾಕ್ ಶಬಂದ್ರಿ ಮಾತನಾಡಿ, ಸ್ಟೆಮ್ ಮೂಲಕ ವಿದ್ಯಾರ್ಥಿಗಳಲ್ಲಿ ವಿಚಾರಶೀಲತೆ ಮತ್ತು ಆವಿಷ್ಕಾರ ಮನೋಭಾವ ಬೆಳೆಯುತ್ತದೆ ಎಂದರು. ಮಾದರಿ ಪ್ರದರ್ಶನ, ರೋಬೋ ರೇಸ್, ಕ್ವಿಜ್, ಸ್ಟಾರ್ಟ್-ಅಪ್ ಪಿಚ್ ಸೇರಿದಂತೆ ಹಲವಾರು ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಿದ್ದವು. ಸಂಜೆಯ ಸಮಾರೋಪದಲ್ಲಿ ವಿಜೇತರಿಗೆ ಪ್ರಶಸ್ತಿ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.

ವಾರ್ತಾ ಭಾರತಿ 16 Nov 2025 11:05 pm

ಶಿವಮೊಗ್ಗ| ಖಾಸಗಿ ಬಸ್ ಢಿಕ್ಕಿ ನವವಿವಾಹಿತ ಮೃತ್ಯು; ಮೂವರಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್ ಢಿಕ್ಕಿಯಾಗಿ ನವ ವಿವಾಹಿತ ಮೃತಪಟ್ಟಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ರವಿವಾರ ರಾತ್ರಿ ನಡೆದಿದೆ. ಶಾಂತಿ ನಗರದ ನಿವಾಸಿ ಅಹ್ಮದ್ (31) ಮೃತ ಯುವಕ. ಅಲ್ಲದೆ, ಮೂವರು ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ರಾಗಿಗುಡ್ಡ ಕಡೆಯಿಂದ ಬಂದ ಖಾಸಗಿ ಬಸ್ ಮಣ್ಣಿನ ದಿಬ್ಬ ಹಾರಿ ಅಡ್ಡಾದಿಡ್ಡಿ ಚಲಿಸಿದ್ದು, ಮೂರು ದ್ವಿಚಕ್ರ ವಾಹನಗಳು, ನಾಲ್ವರು ವ್ಯಕ್ತಿಗಳಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್‌ಗಳು ಜಖಂಗೊಂಡಿದ್ದರೆ, ಪೊಲೀಸ್ ಬ್ಯಾರಿಕೇಡ್ ತುಂಡಾಗಿದೆ. ಫುಟ್‌ಪಾತ್‌ಗೆ ಅಳವಡಿಸಿದ್ದ ರೇಲಿಂಗ್ ಕೂಡ ಹಾನಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಮೇಲೆ ಭಾರೀ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಸದ್ಯ ಪರ್ಯಾಯ ಮಾರ್ಗದಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಮೇಲ್ಸೇತುವೆ ಮುಂಭಾಗ ಮಣ್ಣಿನ ಗುಡ್ಡೆ ಹಾಕಲಾಗಿದ್ದು, ದ್ವಿಚಕ್ರ ವಾಹನಗಳು ಮಾತ್ರ ಈ ಮಾರ್ಗದಲ್ಲಿ ಸಂಚರಿಸುತ್ತಿವೆ. ಹಾಗಿದ್ದೂ ಬಸ್ ಈ ಮಾರ್ಗದಲ್ಲಿ ಬಂದು ಅಪಘಾತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಜನರು ಘಟನಾ ಸ್ಥಳದಲ್ಲಿ ಗುಂಪುಗೂಡಿದ್ದರು. ಕೆಲವು ಬಸ್ಸಿನ ಗಾಜಿಗೆ ಕಲ್ಲು ತೂರಿದ್ದಾರೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 16 Nov 2025 10:58 pm

ಬೆಳ್ತಂಗಡಿ | ಆಟೋ ಪಲ್ಟಿ : ಓರ್ವ ಬಾಲಕ ಮೃತ್ಯು ಹಲವರಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು - ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂದು ಗುರುತಿಸಲಾಗಿದೆ. ನಾವೂರಿನ ಶಶಿ ಎಂಬವರ ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ವಾರ್ತಾ ಭಾರತಿ 16 Nov 2025 10:51 pm

ಇಸ್ರೇಲ್ ದಾಳಿಗೆ ಮತ್ತೆ ನಲುಗಿದ ಗಾಜಾ, 3 ಜನರ ಜೀವ ಬಲಿ?

ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ತೀವ್ರ ದಾಳಿಯ ಪರಿಣಾಮ ಈಗಾಗಲೇ ಭಾರಿ ಘೋರ ಘಟನೆಗಳು ನೆಡೆದು ಹೋಗಿದ್ದು, ನೋಡ ನೋಡುತ್ತಲೇ ಹತ್ತಾರು ಸಾವಿರ ಜನರ ಜೀವ ಹೋಗಿದೆ. ಅದರಲ್ಲೂ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ದಾಳಿಯನ್ನ ಶುರು ಮಾಡಿ 2 ವರ್ಷವೇ ಮುಗಿಯುತ್ತಾ ಬಂದರೂ ಈ ಕಾಳಗ ನಿಲ್ಲಿಸಲು ಸಿದ್ಧವಿಲ್ಲ. ಇಂತಹ ಸಮಯದಲ್ಲೇ ಮತ್ತೆ ಇಂದು

ಒನ್ ಇ೦ಡಿಯ 16 Nov 2025 10:50 pm

ಬಿಹಾರ ಚುನಾವಣೆಯಲ್ಲಿ ಸೋಲಿಗೆ ಕಾರಣಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಶೋಧನಾ ತಂಡ ಅಧ್ಯಯನ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ : ಬಿಹಾರ್ ಚುನಾವಣೆಯಲ್ಲಿ ಹೀನಾಯ ಸೋಲಿಗೆ ಕಾರಣಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಶೋಧನಾ ತಂಡ ಅಧ್ಯಯನ ನಡೆಸುತ್ತಿದೆ. ಚುನಾವಣಾ ಪೂರ್ವದಲ್ಲಿಯೇ ಸರ್ಕಾರಿ ಹಣವನ್ನೇ ಜನರ ಖಾತೆಗೆ ಜಮಾವಣೆ ಮಾಡಿದ್ದು ಸಹ ಸೋಲಿಗೆ ಕಾರಣ ಎಂದು ವಿಶ್ಲೇಷಿಸಬಹುದಾಗಿದೆ ಎಂದು ಸಚಿವ ಡಾ.ಎಂ.ಬಿ. ಪಾಟೀಲ್ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳ್ಳತನ ಮೊದಲಾದ ಗಂಭೀರ ಆರೋಪಗಳ ಬಗ್ಗೆ ತನಿಖೆ ಮಾಡಲು ಆಸಕ್ತಿ ತೋರದ ಚುನಾವಣಾ ಆಯೋಗದ ನಡವಳಿಕೆಗಳಿಂದ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರಪಯೋಗಪಡಿಸಿಕೊಳ್ಳುತ್ತಿದೆ ಎಂದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ. ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಂಬಂದಿಸಿದಂತೆ ತನಿಖೆ ನಡೆಸಬೇಕಾದ ಚುನಾವಣಾ ಆಯೋಗ ಅವರಿಗೆ ಅಫಿಡಿವಿಟ್ ಕೇಳಿದೆ. ಸಂವಿಧಾನಬದ್ಧವಾಗಿ ಪ್ರತಿಜ್ಞೆ ಸ್ವೀಕರಿಸಿಯೇ ಅವರು ಸಂಸದರಾಗಿದ್ದಾರೆ. ಪ್ರತಿಜ್ಞೆ ಸ್ವೀಕರಿಸಿಯೇ ಲೋಕಸಭೆ ಪ್ರತಿಪಕ್ಷ ನಾಯಕರಾಗಿದ್ದಾರೆ. ಚುನಾವಣಾ ಆಯೋಗ ಸಂವಿಧಾನಕ್ಕಿಂತ ದೊಡ್ಡದಲ್ಲ. ಅಫಿಡಿವೇಟ್ ಸಲ್ಲಿಸುವ ನಿಯಮಾವಳಿ ಇಲ್ಲ, ಹೀಗಾಗಿ ಸಲ್ಲಿಸಿಲ್ಲ ಎಂದರು. ಗಂಭೀರವಾದ ಆರೋಪಗಳ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕಾಗಿರುವುದು ಅಗತ್ಯವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ವಿಶೇಷವಾಗಿ ಕಬ್ಬು ಬೆಳೆಗಾರರ ಬಗ್ಗೆ ಚರ್ಚಿಸಲಿದ್ದಾರೆ. ಕೇಂದ್ರ ರೂಪಿಸಿರುವ ಎಫ್ಆರ್‌ಪಿ ದರದಿಂದ ರೈತರಿಗೆ ಅನ್ಯಾಯವಾಗುತ್ತದೆ. ಕಬ್ಬು ಕಟಾವು, ಸಾಗಾಣಿಕೆ ವೆಚ್ಚ ಸೇರಿ 3500 ರೂ. ನಿಗದಿ ಮಾಡಿರುವುದರಿಂದ ರೈತರಿಗೆ ತೊಂದರೆಯಾಗುತ್ತದೆ. ಇದರ ಪರಿಷ್ಕರಣೆ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

ವಾರ್ತಾ ಭಾರತಿ 16 Nov 2025 10:32 pm

Suratkal | ಕಾಟಿಪಳ್ಳ ಬದ್ರಿಯಾ ಜುಮಾ ಮಸೀದಿಯ ಮುಸ್ಲಿಂ ಜಮಾಅತ್ ಸಮಿತಿಯ ತುರ್ತು ಸಭೆ ರದ್ದು; ಹೈಕೋರ್ಟ್ ಆದೇಶ

ಸತ್ತಾರ್, ಮುಸ್ತಫಾ ಅವರಿದ್ದ ಸಮಿತಿ ಮುಂದುವರಿಯಲು ಅವಕಾಶ

ವಾರ್ತಾ ಭಾರತಿ 16 Nov 2025 10:26 pm

ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪ್ರಮುಖ 3 ಸೂತ್ರಗಳ ರೂಪಿಸಿದ ಸಂಚಾರಿ ಪೊಲೀಸ್‌! ಏನೆಲ್ಲಾ?

ಬೆಂಗಳೂರಿನ ಐಟಿ ಕಾರಿಡಾರ್‌ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಪೊಲೀಸರು ಮೂರು ಸೂತ್ರಗಳನ್ನು ಕಂಡುಕೊಂಡಿದ್ದಾರೆ. ವೈಟ್‌ಫೀಲ್ಡ್‌ ಮತ್ತು ಮಾರತ್‌ಹಳ್ಳಿ ಭಾಗದಲ್ಲಿ 'ಪೇ ಆ್ಯಂಡ್‌ ಪಾರ್ಕಿಂಗ್‌', ಕಾರು ಪೂಲಿಂಗ್‌ ಹಾಗೂ ಸಮೂಹ ಸಾರಿಗೆಯನ್ನು ಪ್ರೋತ್ಸಾಹಿಸಲು ಚಿಂತನೆ ನಡೆದಿದೆ. ಕಂಪನಿಗಳು ಹಾಗೂ ಉದ್ಯೋಗಿಗಳ ಸಹಕಾರದಿಂದ ಸಂಚಾರ ಸುಗಮಗೊಳಿಸುವ ಗುರಿ ಇದೆ.

ವಿಜಯ ಕರ್ನಾಟಕ 16 Nov 2025 10:18 pm

Ukraine War: ರಷ್ಯಾ ಜೊತೆ ಕೈದಿಗಳ ವಿನಿಮಯ, ಯುದ್ಧ ನಿಲ್ಲಿಸಿಲು ಉಕ್ರೇನ್ ಪ್ಲಾನ್?

ರಷ್ಯಾ ಹೊಡಿತಾ ಇದೆ, ಉಕ್ರೇನ್ ಏಟು ತಿಂತಾನೇ ಇದೆ... ಹೀಗೆ ರಷ್ಯಾ &ಉಕ್ರೇನ್ ನಡುವಿನ ಭಾರಿ ಘೋರ ಕಾಳಗ ಮುಂದುವರಿದಿದೆ. ಕಳೆದ 4 ವರ್ಷಗಳಿಂದ ಬಡಿದಾಡುತ್ತಿರುವ ಈ ಎರಡೂ ದೇಶಗಳು ತಮ್ಮ ಫೈಟಿಂಗ್ ನಿಲ್ಲಿಸುತ್ತಲೇ ಇಲ್ಲ. ಈಗಾಗಲೇ ಲಕ್ಷ ಲಕ್ಷ ಜನರ ಜೀವ ಬಲಿ ಪಡೆದು ಪ್ರಪಂಚದ ನೆಮ್ಮದಿ ಕಸಿದಿರುವ ರಷ್ಯಾ &ಉಕ್ರೇನ್ ಯುದ್ಧ

ಒನ್ ಇ೦ಡಿಯ 16 Nov 2025 10:12 pm

ನಮ್ಮ ಗಡಿಗಳ ಭೌಗೋಳಿಕ ಪರಿಸ್ಥಿತಿ ಭಿನ್ನವಾಗಿದ್ದು, ಕೆಲವೆಡೆ ಬೇಲಿ ಹಾಕಲಾಗುವುದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಬೆಂಗಳೂರು: ನಮ್ಮ ದೇಶದೊಳಗೆ ಉಗ್ರರು ಹೇಗೆ ಬಂದರು, ಇದು ಭದ್ರತಾ ವೈಫಲ್ಯ ಎಂದು ಟೀಕೆ ಮಾಡುತ್ತಾರೆ. ಆದರೆ ನಮ್ಮ ಗಡಿಗಳ ಭೌಗೋಳಿಕ ಪರಿಸ್ಥಿತಿ ಭಿನ್ನವಾಗಿದ್ದು, ಕೆಲವೆಡೆ ಬೇಲಿ ಹಾಕಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ರವಿವಾರ ನಗರದ ಎಫ್‍ಕೆಸಿಸಿಐ ಸಭಾಂಗಣದಲ್ಲಿ ಶ್ರೀ ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ʼಬದುಕುಳಿದವರು ಕಂಡಂತೆʼ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮದೂ ಇಸ್ರೇಲ್‍ನಂತೆಯೇ ಗೆದ್ದ ಇತಿಹಾಸ ಹೊರತು ಸೋತ ಇತಿಹಾಸವಲ್ಲ. ಆದರೆ ಇತಿಹಾಸ ಪಾಠದಲ್ಲಿ ಇದನ್ನೆಲ್ಲ ಹೇಳಿಕೊಡುತ್ತಿಲ್ಲ. ನಮ್ಮಲ್ಲಿ ಮೊದಲಿನಿಂದ ಮಾನಸಿಕ ಗುಲಾಮಿತನ ಬೆಳೆಸಿದ್ದಾರೆ. ನಮ್ಮ ದೇಶದೊಳಗೆ ಉಗ್ರರು ಹೇಗೆ ಬಂದರು, ಇದು ಭದ್ರತಾ ವೈಫಲ್ಯ ಎಂದು ಟೀಕೆ ಮಾಡುತ್ತಾರೆ. ಆದರೆ ನಮ್ಮ ಗಡಿಗಳ ಭೌಗೋಳಿಕ ಪರಿಸ್ಥಿತಿ ಭಿನ್ನವಾಗಿದೆ. ಕೆಲವೆಡೆ ಭದ್ರವಾದ ಬೇಲಿಯಿದೆ.ಇನ್ನು ಕೆಲವೆಡೆ ಹಾಗೆ ಬೇಲಿ ಹಾಕಲಾಗುವುದಿಲ್ಲ ಎಂದು ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ತೇಜಸ್ವಿ ಸೂರ್ಯ, ಇಸ್ರೇಲಿನ ಕಾನ್ಸುಲ್ ಜನರಲ್ ಒರ್ಲಿ ಮೆಯಿಟ್ಜ್ಮನ್, ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಪ್ರಮುಖರಿದ್ದರು.

ವಾರ್ತಾ ಭಾರತಿ 16 Nov 2025 10:10 pm

ರಾಜಾ ರಾಮ್ ಮೋಹನ್ ರಾಯ್ ಅವರನ್ನು ‘ಬ್ರಿಟೀಷರ ಏಜೆಂಟ್’ ಎಂದು ಕರೆದು, ಬಳಿಕ ಕ್ಷಮೆ ಕೋರಿದ ಬಿಜೆಪಿ ಸಂಸದ

ಶಾಜಾಪುರ, ನ. 16: ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ನಾಯಕ ಇಂದರ್ ಸಿಂಗ್ ಪರಮಾರ್ ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯ್ ಅವರನ್ನು ಬ್ರಿಟೀಷರ ಏಜೆಂಟ್ ಎಂದು ಕರೆಯುವ ಮೂಲಕ ವಿವಾದಕ್ಕೆ ಒಳಗಾಗಿದ್ದಾರೆ. ರಾಜಾ ರಾಮ್ ಮೋಹನ್ ರಾಯ್ ಅವರು ‘‘ಮತಾಂತರದ ವಿಷ ವರ್ತುಲ’’ ಆರಂಭಿಸಿದ್ದರು ಎಂದು ಅವರು ಹೇಳಿದ್ದರು. ಈ ಹೇಳಿಕೆ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅವರು ರವಿವಾರ ಕ್ಷಮೆ ಯಾಚಿಸಿದ್ದಾರೆ. ತಾನು ಬಾಯ್ತಪ್ಪಿ ಈ ಹೇಳಿಕೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಬುಡಕಟ್ಟು ಜನರ ಮಹಾ ನಾಯಕ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಅಗರ್ ಮಾಲ್ವ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪರಮಾರ್ ಅವರು ರಾಜ ರಾಮ್ ಮೋಹನ್ ರಾಯ್ ಅವರು ಬ್ರಿಟೀಷ್ ಏಜೆಂಟ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘‘ರಾಜಾ ರಾಮ್ ಮೋಹನ್ ರಾಯ್ ಅವರು ದೇಶದಲ್ಲಿ ಬ್ರಿಟೀಷರ ಏಜೆಂಟ್ ಆಗಿ ಕೆಲಸ ಮಾಡಿದರು ಹಾಗೂ ಮತಾಂತರದ ವಿಷ ವರ್ತುಲವನ್ನು ಆರಂಭಿಸಿದರು’’ ಎಂದು ತನ್ನ ಭಾಷಣದಲ್ಲಿ ಹೇಳಿದ್ದರು. ಬ್ರಿಟೀಷರು ಹಲವು ಜನರನ್ನು ನಕಲಿ ಸಾಮಾಜ ಸುಧಾರಕರು ಎಂದು ಬಿಂಬಿಸಿದರು ಹಾಗೂ ಮತಾಂತರ ಪ್ರೋತ್ಸಾಹಿಸಿದವರನ್ನು ಉತ್ತೇಜಿಸಿದರು ಎಂದು ಅವರು ಪ್ರತಿಪಾದಿಸಿದ್ದರು. ‘‘ಇದನ್ನು ನಿಲ್ಲಿಸಿ ಬುಡಕಟ್ಟು ಜನರನ್ನು ರಕ್ಷಿಸುವ ಧೈರ್ಯ ತೋರಿದ್ದು ಬಿರ್ಸಾ ಮುಂಡಾ ಅವರು ಮಾತ್ರ’’ ಎಂದು ಅವರು ಹೇಳಿದ್ದರು. ಬ್ರಿಟೀಷ್ ಆಡಳಿತದ ಸಂದರ್ಭ ಮಿಷನರಿ ಶಾಲೆಗಳು ಮಾತ್ರ ಶಿಕ್ಷಣ ಸಂಸ್ಥೆಗಳಾಗಿದ್ದವು ಹಾಗೂ ಮತಾಂತರವನ್ನು ಮರೆ ಮಾಚಲು ಶಿಕ್ಷಣವನ್ನು ಬಳಸಲಾಗುತ್ತಿತ್ತು ಎಂದು ಅವರು ಹೇಳಿದ್ದರು. ರಾಯ್ ಕುರಿತ ಹೇಳಿಕೆ ತೀವ್ರ ಟೀಕಿಗೆ ಗುರಿಯಾದ ಬಳಿಕ ಪರ್ಮಾರ್ ವೀಡಿಯೊ ಹೇಳಿಕೆಯಲ್ಲಿ, ‘‘ರಾಜಾ ರಾಮ್ ಮೋಹನ್ ರಾಯ್ ಅವರು ಸಮಾಜ ಸುಧಾರಕರು. ಅವರಿಗೆ ಗೌರವ ನೀಡಬೇಕು. ನಾನು ಬಾಯ್ತಪ್ಪಿ ಈ ಹೇಳಿಕೆ ನೀಡಿದ್ದೇನೆ. ನನಗೆ ಈ ಬಗ್ಗೆ ವಿಷಾದವಿದೆ. ನಾನು ಇದಕ್ಕೆ ಕ್ಷಮೆ ಯಾಚಿಸುತ್ತೇನೆ ’’ ಎಂದು ಹೇಳಿದ್ದಾರೆ. ಚಾರಿತ್ರಿಕ ನಾಯಕರನ್ನು ಅವಮಾನಿಸುವ ಉದ್ದೇಶವನ್ನು ತಾನು ಹೊಂದಿಲ್ಲ ಎಂದು ಪರ್ಮಾರ್ ತಿಳಿಸಿದ್ದಾರೆ.

ವಾರ್ತಾ ಭಾರತಿ 16 Nov 2025 10:10 pm

ಗಾಝಾ ಶಾಂತಿ ಯೋಜನೆ ನಿರ್ಣಯ; ಭದ್ರತಾ ಮಂಡಳಿಯಿಂದ ನ.17ಕ್ಕೆ ಮತದಾನ

ನ್ಯೂಯಾರ್ಕ್, ನ.16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗಾಝಾ ಶಾಂತಿ ಯೋಜನೆಯನ್ನು ಬೆಂಬಲಿಸುವ ನಿರ್ಣಯದ ಕುರಿತಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೋಮವಾರ ಮತದಾನ ಮಾಡಲಿದೆ. ಇಸ್ರೇಲ್ ಹಾಗೂ ಹಮಾಸ್ ನಡುವಿನ ಎರಡು ವರ್ಷಗಳ ನಡುವಿನ ಸಂಘರ್ಷದಲ್ಲಿ ಕದನವಿರಾಮವನ್ನು ಜಾರಿಗೊಳಿಸುವ ಕುರಿತ ಕರಡು ನಿರ್ಣಯವನ್ನು, ಕಳೆದ ಗುರುವಾರ 15 ಸದಸ್ಯ ಬಲದ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿತ್ತು. ಈ ಕರಡು ನಿರ್ಣಯವು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಹಂಗಾಮಿ ಅಂತಾರಾಷ್ಟ್ರೀಯ ಸ್ಥಿರೀಕರಣ ಪಡೆ (ಐಎಸ್ಎಫ್)ಯನ್ನು ರಚಿಸಲಿದೆ. ಗಾಝಾಪಟ್ಟಿಯ ಗಡಿಪ್ರದೇಶಗಳ ಭದ್ರತೆಗೆ ಹಾಗೂ ಗಾಝಾಪಟ್ಟಿಯನ್ನು ಮಿಲಿಟರಿ ರಹಿತಗೊಳಿಸಲು ಇಸ್ರೇಲ್ ಹಾಗೂ ಈಜಿಪ್ಟ್ ಮತ್ತು ಹೊಸತಾಗಿ ತರಬೇತಿ ಪಡೆದ ಫೆಲೆಸ್ತೀನ್ ಪೊಲೀಸರಿಗೆ ಐಎಸ್ಎಫ್ ನೆರವಾಗಲಿದೆ. ಅಲ್ಲದೆ, ಭವಿಷ್ಯದಲ್ಲಿ ಫೆಲೆಸ್ತೀನ್ ರಾಷ್ಟ್ರ ಸ್ಥಾಪನೆಯ ಸಾಧ್ಯತೆಯ ಬಗ್ಗೆಯೂ ಈ ಕರಡಿನಲ್ಲಿ ಪ್ರಸ್ತಾವಿಸಲಾಗಿದೆ. ಅಮೆರಿಕ ಹಾಗೂ ಈಜಿಪ್ಟ್, ಸೌದಿ ಆರೇಬಿಯ, ಟರ್ಕಿ ಸೇರಿದಂತೆ ಹಲವು ಅರಬ್ ಮತ್ತು ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳು ಈ ನಿರ್ಣಯವನ್ನು ತ್ವರಿತವಾಗಿ ಆಂಗೀಕರಿಸುವಂತೆ ಆಗ್ರಹಿಸಿದೆ.

ವಾರ್ತಾ ಭಾರತಿ 16 Nov 2025 10:08 pm

ಎಸ್ಸಿ ಮೀಸಲಾತಿಯಿಂದ ಕೆನೆಪದರವನ್ನು ಹೊರಗಿಡುವುದಕ್ಕೆ ಸಿಜೆಐ ಗವಾಯಿ ಬೆಂಬಲ

ಅಮರಾವತಿ (ಆಂಧ್ರಪ್ರದೇಶ),ನ.16: ಪರಿಶಿಷ್ಟ ಜಾತಿಗಳಿಗೆ (ಎಸ್ಸಿ) ಮೀಸಲಾತಿಯಿಂದ ಕೆನೆ ಪದರವನ್ನು ಹೊರಗಿರಿಸುವುದನ್ನು ತಾನು ಈಗಲೂ ಬೆಂಬಲಿಸುತ್ತೇನೆ ಎಂದು ರವಿವಾರ ಇಲ್ಲಿ ಹೇಳಿದ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಬಿ.ಆರ್.ಗವಾಯಿ ಅವರು,ಮೀಸಲಾತಿ ವಿಷಯದಲ್ಲಿ ಐಎಎಸ್ ಅಧಿಕಾರಿಯ ಮಕ್ಕಳನ್ನು ಬಡ ಕೃಷಿಕಾರ್ಮಿಕರ ಮಕ್ಕಳೊಂದಿಗೆ ಸಮೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾ.ಗವಾಯಿ,‘ಇಂದ್ರಾ ಸಾಹ್ನಿ ಪ್ರಕರಣದಲ್ಲಿ ಕಂಡುಕೊಂಡಂತೆ ಕೆನೆ ಪದರದ ಪರಿಕಲ್ಪನೆಯನ್ನು ನಾನು ಇನ್ನಷ್ಟು ವಿಶ್ಲೇಷಿಸಿ ನನ್ನದೇ ಆದ ಅಭಿಪ್ರಾಯವನ್ನು ಹೊಂದಿದ್ದೇನೆ. ನನ್ನ ತೀರ್ಪನ್ನು ವ್ಯಾಪಕವಾಗಿ ಟೀಕಿಸಲಾಗಿತ್ತಾದರೂ,ಇತರ ಹಿಂದುಳಿದ ವರ್ಗಗಳಿಗೆ ಅನ್ವಯವಾಗುವುದು ಪರಿಶಿಷ್ಟ ಜಾತಿಗಳಿಗೂ ಅನ್ವಯವಾಗಬೇಕು’ ಎಂದು ಹೇಳಿದರು. ಒಂದೆರಡು ದಿನಗಳಲ್ಲಿ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ನ್ಯಾ.ಗವಾಯಿ ಸಿಜೆಐ ಆದ ಬಳಿಕ ಭಾಗವಹಿಸಿದ್ದ ಮೊದಲ ಕಾರ್ಯಕ್ರಮ ಅವರ ಹುಟ್ಟೂರು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿತ್ತು,ಈಗ ಅವರ ಕೊನೆಯ ಕಾರ್ಯಕ್ರಮವು ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆದಿದೆ. ನ್ಯಾ.ಸೂರ್ಯಕಾಂತ ಅವರು ಭಾರತದ ಮುಂದಿನ ಮುಖ್ಯ ನ್ಯಾಯಾಧೀಶರಾಗಲಿದ್ದಾರೆ. 2024ರಲ್ಲಿ ಪ್ರಕರಣವೊಂದರಲ್ಲಿ ತನ್ನ ನೇತೃತ್ವದ ಏಳು ನ್ಯಾಯಾಧೀಶರ ಸಂವಿಧಾನ ಪೀಠದ ತೀರ್ಪು ಪ್ರಕಟಿಸಿದ ಸಂದರ್ಭದಲ್ಲಿ ನ್ಯಾ.ಗವಾಯಿ ಅವರು ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳಲ್ಲಿಯೂ ಕೆನೆ ಪದರವನ್ನು ಗುರುತಿಸಲು ರಾಜ್ಯಗಳು ನೀತಿಯೊಂದನ್ನು ರೂಪಿಸಬೇಕು ಮತ್ತು ಅವರಿಗೆ ಮೀಸಲಾತಿಯ ಲಾಭಗಳನ್ನು ನಿರಾಕರಿಸಬೇಕು. ನಿಜವಾದ ಸಮಾನತೆಯನ್ನು ಸಾಧಿಸಲು ಇದೊಂದೇ ಮಾರ್ಗವಾಗಿದೆ ಎಂದು ಪ್ರತಿಪಾದಿಸಿದ್ದರು. ಮಹತ್ವದ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಉಪ ವರ್ಗೀಕರಣ ನ್ಯಾಯಸಮ್ಮತವಾಗಿದೆ ಎಂದು ಬಹುಮತದಿಂದ ಎತ್ತಿ ಹಿಡಿದಿತ್ತು. ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಮೀಸಲಾತಿಯನ್ನು ಕಲ್ಪಿಸಲು ಈ ವರ್ಗೀಕರಣವನ್ನು ಮಾಡುವ ಅಧಿಕಾರವನ್ನು ರಾಜ್ಯಗಳು ಹೊಂದಿವೆ ಎಂದು ಅದು ಸ್ಪಷ್ಟಪಡಿಸಿತ್ತು.

ವಾರ್ತಾ ಭಾರತಿ 16 Nov 2025 10:05 pm

DK Shivakumar Resignation: ರಾಜೀನಾಮೆ ಬಗ್ಗೆ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ಅಚ್ಚರಿ ಹೇಳಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ವಿಚಾರವು ಸದ್ಯ ದೆಹಲಿ ಅಂಗಳದಲ್ಲಿದೆ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್‌ ಭೇಟಿಗಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇದರ ನಡುವೆ ಡಿ.ಕೆ.ಶಿವಕುಮಾರ್‌ ಅವರು ರಾಜೀನಾಮೆ ವಿಚಾರವಾಗಿ ಅಚ್ಚರಿ ಹೇಳಿಕೆ ನೀಡಿದ್ದಾರೆ. 'ನಾನು ಮಲ್ಲಿಕಾರ್ಜುನ

ಒನ್ ಇ೦ಡಿಯ 16 Nov 2025 10:05 pm

ಮೆಟ್ರೋದಲ್ಲಿಅದಲು ಬದಲಾದ ಬ್ಯಾಗ್‌; ಸಿಬ್ಬಂದಿಯಿಂದ ಯಶಸ್ವಿ ಕಾರ್ಯಾಚರಣೆ, ಅಮೂಲ್ಯ ವಸ್ತುಗಳು ವಾಪಸ್

ಬೆಂಗಳೂರು ಮೆಟ್ರೊ ಸಿಬ್ಬಂದಿ ಇಂದಿರಾನಗರ ನಿಲ್ದಾಣದಲ್ಲಿ ಅದಲು ಬದಲಾದ ಬ್ಯಾಗ್‌ಗಳನ್ನು ಪತ್ತೆ ಹಚ್ಚಿ, ಮಾಲೀಕರಿಗೆ ಹಿಂತಿರುಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಟಿವಿ ಪರಿಶೀಲನೆ ಮತ್ತು 24 ಗಂಟೆಗಳ ನಿಗಾ ವಹಿಸಿ ಹುಡುಕಾಟ ನಡೆಸಿದ ನಂತರ, ತಪ್ಪಾಗಿ ಬ್ಯಾಗ್ ತೆಗೆದುಕೊಂಡಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ, ದಾಖಲೆಗಳಿದ್ದ ಬ್ಯಾಗ್ ಅನ್ನು ಅದರ ನಿಜವಾದ ಮಾಲೀಕರಿಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಯಿತು.

ವಿಜಯ ಕರ್ನಾಟಕ 16 Nov 2025 10:02 pm

ಬಾಂಗ್ಲಾದಾದ್ಯಂತ ಬಿಗಿ ಬಂದೋಬಸ್ತ್; ನ.17ಕ್ಕೆ ಹಸೀನಾ ವಿರುದ್ಧ ತೀರ್ಪು

2024ರಲ್ಲಿ ಆಡಳಿತ ವಿರೋಧಿ ಪ್ರತಿಭಟನೆ ಸಂದರ್ಭ ನಡೆದಿದ್ದ ‘ನರಮೇಧ’

ವಾರ್ತಾ ಭಾರತಿ 16 Nov 2025 10:01 pm

ದಿಲ್ಲಿ ಕಾರ್ ಬಾಂಬ್ ಸ್ಫೋಟ ಪ್ರಕರಣ | ಪ್ರಮುಖ ಆರೋಪಿಯ ಶಂಕಿತ ಸಹಚರನನ್ನು ಬಂಧಿಸಿದ NIA

ಹೊಸದಿಲ್ಲಿ: ದಿಲ್ಲಿಯ ಕೆಂಪು ಕೋಟೆಯ ಬಳಿ ಕಾರು ಸ್ಫೋಟ ನಡೆಸುವ ಪಿತೂರಿ ನಡೆಸಿದ ಆರೋಪದ ಮೇಲೆ ಕಾಶ್ಮೀರ ನಿವಾಸಿಯೊಬ್ಬನನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ. ನ. 10ರಂದು ನಡೆದಿದ್ದ ಈ ಸ್ಫೋಟದಲ್ಲಿ 10 ಮಂದಿ ಮೃತಪಟ್ಟು, 32 ಮಂದಿ ಗಾಯಗೊಂಡಿದ್ದರು. “ದಿಲ್ಲಿ ಪೊಲೀಸರಿಂದ ಪ್ರಕರಣದ ಹಸ್ತಾಂತರವಾದ ಬಳಿಕ, ವ್ಯಾಪಕ ಶೋಧ ಕಾರ್ಯ ನಡೆಸಿದ ರಾಷ್ಟ್ರೀಯ ತನಿಖಾ ದಳವು, ಸ್ಫೋಟದಲ್ಲಿ ಭಾಗಿಯಾಗಿದ್ದ ಕಾರು ನೋಂದಣಿಗೊಂಡಿದ್ದ ಅಮೀರ್ ರಶೀದ್ ಅಲಿ ಎಂಬ ವ್ಯಕ್ತಿಯನ್ನು ದಿಲ್ಲಿಯಲ್ಲಿ ಬಂಧಿಸಿದೆ” ಎಂದು ರವಿವಾರ ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. “ಭಯೋತ್ಪಾದಕ ದಾಳಿಯನ್ನು ನಡೆಸಲು ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಯೊಂದಿಗೆ ಪ್ಯಾಂಪೋರ್ ನ ಸಂಬೂರ ನಿವಾಸಿಯಾದ ಆರೋಪಿಯು ಪಿತೂರಿ ನಡೆಸಿರುವುದು ತನಿಖೆಯಲ್ಲಿ ಬಯಲಾಗಿದೆ” ಎಂದು ರಾಷ್ಟ್ರೀಯ ತನಿಖಾ ದಳ ಹೇಳಿದೆ. “ಸ್ಫೋಟಕ್ಕೆ ಕಾರಣವಾಗಿದ್ದ ಸುಧಾರಿತ ಸ್ಫೋಟಕ ಸಾಧನ ಹೊಂದಿದ್ದ ಕಾರಿನ ಖರೀದಿಗೆ ನೆರವು ನೀಡಲು ಅಮೀರ್ ದಿಲ್ಲಿಗೆ ಬಂದಿದ್ದ. ಸುಧಾರಿತ ಸ್ಫೋಟಕ ಸಾಧನ ಹೊಂದಿದ್ದ ಕಾರಿನ ಚಾಲಕನ ಗುರುತನ್ನು ಉಮರ್ ಉನ್ ನಬಿ ಎಂದು ವಿಧಿ ವಿಜ್ಞಾನ ಪರೀಕ್ಷೆಗಳ ಮೂಲಕ ರಾಷ್ಟ್ರೀಯ ತನಿಖಾ ತಂಡ ಪತ್ತೆ ಹಚ್ಚಿದೆ. ಆತ ಹರ್ಯಾಣದ ಫರೀದಾಬಾದ್ ನಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಾಮಾನ್ಯ ಔಷಧ ವಿಭಾಗದ ಸಹಾಯಕ ಪ್ರಾಧ್ಯಾ ಪಕ ಮತ್ತು ಪುಲ್ವಾಮಾ ಜಿಲ್ಲೆಯ ನಿವಾಸಿಯಾಗಿದ್ದಾನೆ” ಎಂದು ಅದು ತಿಳಿಸಿದೆ. ದಿಲ್ಲಿ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ ಹಾಗೂ ಉತ್ತರ ಪ್ರದೇಶ ಪೊಲೀಸರು ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವ ರಾಷ್ಟ್ರೀಯ ತನಿಖಾ ದಳ, ಹಲವು ರಾಜ್ಯಗಳಲ್ಲಿ ತನ್ನ ತನಿಖೆ ಮುಂದುವರಿಸಿದೆ. “ಇದು ಸ್ಫೋಟದ ಹಿಂದೆ ದೊಡ್ಡ ಪಿತೂರಿ ನಡೆದಿರುವುದನ್ನು ಬಯಲು ಮಾಡಲು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಪತ್ತೆ ಹಚ್ಚಲು ಹಲವು ಸುಳಿವನ್ನು ನೀಡಿದೆ” ಎಂದು ರಾಷ್ಟ್ರೀಯ ತನಿಖಾ ತಂಡ ಹೇಳಿದೆ

ವಾರ್ತಾ ಭಾರತಿ 16 Nov 2025 9:58 pm

ಮಡಿಕೇರಿ: ಪತ್ನಿಗೆ ವಿಡಿಯೋ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ

ಮಡಿಕೇರಿ: ಕಾಳು ಮೆಣಸು ಕಳ್ಳತನದ ಆರೋಪದಡಿ ಬಂಧಿತನಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿಗೆ ಲೈವ್ ವಿಡಿಯೋ ಕರೆ ಮಾಡಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ನಡೆದಿದೆ. ಕಿಬ್ಬೆಟ್ಟ ಗ್ರಾಮದ ಕೀರ್ತಿ (32) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಿಕೇರಿ ತಾಲೂಕಿನ ಬೋಯಿಕೇರಿ ಸಮೀಪದ ತೋಟವೊಂದಕ್ಕೆ ಹೋದ ಕೀರ್ತಿ ಊರಿನಲ್ಲಿದ್ದ ಪತ್ನಿಗೆ ಲೈವ್ ವಿಡಿಯೋ ಮಾಡಿ ಮನೆಗೆ ಬರುವಂತೆ ಕರೆದಿದ್ದಾನೆ. ಆಕೆ ಬರಲು ಒಪ್ಪದೆ ಇದ್ದಾಗ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಯಡವಾರೆ ಗ್ರಾಮದ ಕಾಫಿ ತೋಟದಲ್ಲಿ ನಡೆದಿದ್ದ ಕಾಳು ಮೆಣಸು ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಕೀರ್ತಿ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

ವಾರ್ತಾ ಭಾರತಿ 16 Nov 2025 9:41 pm

ಭಾರತದಲ್ಲಿ ಗರಿಷ್ಠ ವಿಕೆಟ್ ಪಡೆದ ದಕ್ಷಿಣ ಆಫ್ರಿಕಾದ ಮೊದಲ ಸ್ಪಿನ್ನರ್ ಹಾರ್ಮರ್

ಕೋಲ್ಕತಾ, ನ.16: ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಸೈಮರ್ ಹಾರ್ಮರ್ ಅವರು ದಕ್ಷಿಣ ಆಫ್ರಿಕಾದ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈಡನ್ಗಾರ್ಡನ್ಸ್ನಲ್ಲಿ ಮೂರೇ ದಿನದಲ್ಲಿ ಕೊನೆಗೊಂಡಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಹಾರ್ಮರ್ ಒಟ್ಟು 8 ವಿಕೆಟ್ ಗಳನ್ನು ಪಡೆಯುವ ಮೂಲಕ ಈ ಸಾಧನೆ ಮಾಡಿದರು. ಬಲಗೈ ಆಫ್ ಸ್ಪಿನ್ನರ್ ಹಾರ್ಮರ್ ಅವರು ಶನಿವಾರ ಧ್ರುವ ಜುರೆಲ್ ವಿಕೆಟನ್ನು ಪಡೆಯುವ ಮೂಲಕ ಪೌಲ್ ಆ್ಯಡಮ್ಸ್ ಹಾಗೂ ಇಮ್ರಾನ್ ತಾಹಿರ್(ತಲಾ 14 ವಿಕೆಟ್ ಗಳು)ಹೆಸರಲ್ಲಿದ್ದ ದಾಖಲೆಯನ್ನು ಮುರಿದರು. ಭಾರತದಲ್ಲಿ 3ನೇ ಟೆಸ್ಟ್ ಪಂದ್ಯವನ್ನಾಡಿದ ಹಾರ್ಮರ್ ಅವರು ರಿಷಭ್ ಪಂತ್, ರವೀಂದ್ರ ಜಡೇಜ ಹಾಗೂ ಕುಲದೀಪ್ರನ್ನು ಔಟ್ ಮಾಡಿ ಇನ್ನೂ ಮೂರು ವಿಕೆಟನ್ನು ಉರುಳಿಸಿದರು. ಇದರೊಂದಿಗೆ ಭಾರತ ನೆಲದಲ್ಲಿ ಒಟ್ಟು 18 ವಿಕೆಟ್ ಗಳನ್ನು ಉರುಳಿಸಿದ್ದಾರೆ. 36ರ ವಯಸ್ಸಿನ ಹಾರ್ಮರ್ ಮೊದಲ ಇನಿಂಗ್ಸ್ ನಲ್ಲಿ ನಾಲ್ಕು ವಿಕೆಟ್ ಪಡೆದಿದ್ದಾರೆ. 2015ರಲ್ಲಿ ಮೊಹಾಲಿ ಹಾಗೂ ನಾಗ್ಪುರದಲ್ಲಿ ನಡೆದಿದ್ದ ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಗ ಒಟ್ಟು 10 ವಿಕೆಟ್ ಗಳನ್ನು ಪಡೆದಿದ್ದರು.

ವಾರ್ತಾ ಭಾರತಿ 16 Nov 2025 9:38 pm

11 ಪಂದ್ಯಗಳಲ್ಲಿ ಅಜೇಯ: ನಾಯಕತ್ವದಿಂದ ಗಮನ ಸೆಳೆದ ಬವುಮಾ

ಹೊಸದಿಲ್ಲಿ, ನ.16: ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಎಲ್ಲ ನಿರೀಕ್ಷೆಯನ್ನು ಮೀರಿ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು 30 ರನ್ ನಿಂದ ಮಣಿಸಿ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 124 ರನ್ ಚೇಸ್ ವೇಳೆ ಎಡವಿದ ಭಾರತವು 35 ಓವರ್ ಗಳಲ್ಲಿ ಕೇವಲ 93 ರನ್ ಗೆ ಆಲೌಟಾಯಿತು. ಸ್ವದೇಶದ ಪಿಚ್ನಲ್ಲಿ ಉತ್ತಮ ಸ್ಪಿನ್ ಬೌಲಿಂಗ್ ಎದುರು ಪರದಾಟ ನಡೆಸುವುದನ್ನು ಮುಂದುವರಿಸಿದೆ. ಭಾರತ ನೆಲದಲ್ಲಿ 15 ವರ್ಷಗಳ ನಂತರ ದಕ್ಷಿಣ ಆಫ್ರಿಕಾ ತಂಡ ಗೆಲುವು ದಾಖಲಿಸಲು ನಾಯಕತ್ವವಹಿಸಿರುವ ಟೆಂಬಾ ಬವುಮಾ ಎಲ್ಲರ ಗಮನ ಸೆಳೆದಿದ್ದಾರೆ. ನಾಯಕನಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ಅಜೇಯ ದಾಖಲೆಯನ್ನು ಕಾಯ್ದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ನಾಯಕತ್ವ ಹೊಣೆವಹಿಸಿಕೊಂಡ ನಂತರ ಆಡಿರುವ 11 ಪಂದ್ಯಗಳ ಪೈಕಿ 10ರಲ್ಲಿ ಜಯ ಸಾಧಿಸಿದ್ದು, ಒಂದು ಪಂದ್ಯವು ಡ್ರಾನಲ್ಲಿ ಕೊನೆಗೊಂಡಿದೆ. ಆಸ್ಟ್ರೇಲಿಯ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆಲುವಿನ ದಾಖಲೆ ಕೂಡ ಇದರಲ್ಲಿದೆ. ಕೋಲ್ಕತಾ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಗಳನ್ನು ಪಡೆದಿರುವ ಸೈಮರ್ ಹಾರ್ಮರ್ ಅವರು ಭಾರತದ ಸ್ಪಿನ್ನರ್ ಗಳಾದ ರವೀಂದ್ರ ಜಡೇಜ, ಅಕ್ಷರ್ ಪಟೇಲ್ ಹಾಗೂ ಕುಲದೀಪ್ ಯಾದವ್ ರನ್ನು ಮೀರಿ ನಿಂತರು. ಭಾರತ ತಂಡ ಸ್ವದೇಶದಲ್ಲಿ ಹಿಂದಿನ 6 ಟೆಸ್ಟ್ ಪಂದ್ಯಗಳಲ್ಲಿ ನಾಲ್ಕನೇ ಸೋಲು ಕಂಡಿದೆ. ಕಳೆದ ವರ್ಷ ನ್ಯೂಝಿಲ್ಯಾಂಡ್ ವಿರುದ್ಧ ಆಡಿದ್ದ ಮೂರೂ ಪಂದ್ಯಗಳನ್ನು ಸೋತಿತ್ತು. 

ವಾರ್ತಾ ಭಾರತಿ 16 Nov 2025 9:31 pm

ದುಬೈನಲ್ಲಿ 2026ರಲ್ಲಿ ಏರ್ ಟ್ಯಾಕ್ಸಿ ಪ್ರಾರಂಭ

ದುಬೈ,ನ.17: 2026ರಲ್ಲಿ ಜಗತ್ತಿನ ಪ್ರಪ್ರಥಮ ಸಮಗ್ರ ನಗರ ವೈಮಾನಿಕ ಟ್ಯಾಕ್ಸಿ ಜಾಲವನ್ನು ಪ್ರಾರಂಭಿಸುವ ತನ್ನ ಯೋಜನೆಯನ್ನು ದುಬೈ ರವಿವಾರ ದೃಢೀಕರಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ನೇತೃತ್ವವನ್ನು ದುಬೈನ ರಸ್ತೆಗಳು ಆ ಹಾಗೂ ಸಾರಿಗೆ ಪ್ರಾಧಿಕಾರ (ಆರ್ಟಿಎ) ವಹಿಸಿಕೊಂಡಿದೆ. ಅಮೆರಿಕ ಮೂಲದ ಜೊಬಿ ಏವಿಯೇಶನ್ ಕಂಪೆನಿಯ ಪಾಲುದಾರಿಕೆಯೊಂದಿಗೆ ಆರ್ಟಿಎ, ಯಶಸ್ವಿಯಾಗಿ ಯುಎಇನ ಚೊಚ್ಚಲ ಮಾನವಸಹಿತ ಇಲೆಕ್ಟ್ರಿಕ್ ವರ್ಟಿಕಲ್ ಟೇಕ್ಆಫ್ ಆ್ಯಂಡ್ ಲ್ಯಾಂಡಿಂಗ್ (ಇವಿಟೊಓಎಲ್)ನ ಎರಡು ವಿಭಿನ್ನ ಕೇಂದ್ರಗಳ ನಡುವೆ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮಾರ್ಗಮ್ನಲ್ಲಿರುವ ದುಬೈನ ಜೆಟ್ಮ್ಯಾನ್ ಹೆಲಿಪ್ಯಾಡ್ನಿಂದ ಟೇಕ್ಆಫ್ ಆದ ಏರ್ ಟಾಕ್ಸಿ, 17 ನಿಮಿಷಗಳ ಆನಂತರ ಅಲ್ ಮಖ್ತೂಮ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣ (ಎಡಬ್ಲ್ಯುಸಿ)ದಲ್ಲಿ ಇಳಿಯಿತು. 2025ರ ದುಬೈ ಏರ್ ಶೋ ಸಂದರ್ಭದಲ್ಲಿ ಈ ಪ್ರಾಯೋಗಿಕ ಹಾರಾಟವನ್ನು ನಡೆಸಲಾಗಿದೆ. ನಿವಾಸಿಗಳು ಹಾಗೂ ಸಂದರ್ಶಕರು ಏರ್ ಟ್ಯಾಕ್ಸಿಗಳನ್ನು ಹತ್ತುವುದಕ್ಕೆ ನಾಲ್ಕು ಆದ್ಯತೆಯ ಸ್ಥಳಗಳನ್ನು ದುಬೈ ರಸ್ತೆ ಹಾಗೂ ಸಾರಿಗೆ ಪ್ರಾಧಿಕಾರವು ಪ್ರಕಟಿಸಿದೆ. ದುಬೈ ಅಂತಾರಾಷ್ಟ್ರೀಯ ವಿಮಾನನಿಲ್ದಾಣ, ಡೌನ್ಟೌನ್ ದುಬೈ, ದುಬೈ ಮರೀನಾ ಹಾಗೂ ಪಾಮ್ ಜುಮೈರಾಗಳಲ್ಲಿ ಏರ್ ಟ್ಯಾಕ್ಸಿ ನಿಲ್ದಾಣಗಳನ್ನು ಸ್ಥಾಪಿಸಲಾಗುವುದು. ಪ್ರಮುಖ ಸಾರಿಗೆ ಕೇಂದ್ರಗಳನ್ನು, ಪ್ರವಾಸಿ ಸ್ಥಳಗಳನ್ನು ಹಾಗೂ ಜನದಟ್ಟಣೆಯ ವಸತಿ ಪ್ರದೇಶಗಳನ್ನು ಸಂಪರ್ಕಿಸಲು ಈ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ದುಬೈ ಆರ್‌ ಟಿ ಒ ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 16 Nov 2025 9:25 pm

ಮಲ್ಪೆ | ಬೈಕ್ ಕಳವು : ಪ್ರಕರಣ ದಾಖಲು

ಮಲ್ಪೆ, ನ.16: ಶಿಕಾರಿಪುರ ಮೂಲದ ಗೌಸ್ ಅಲಿ ಎಂ. ಎಂಬವರು ಮಲ್ಪೆ- ಕೊಡವೂರು ರಸ್ತೆಯ ಕಲ್ಮಾಡಿಯ ಭಾರತ್ ಕ್ಲೋತ್ ಸ್ಟೋರ್ಸ್ ಸಮೀಪ ನ.15ರಂದು ರಾತ್ರಿ ನಿಲ್ಲಿಸಿದ್ದ 30000ರೂ. ಮೌಲ್ಯದ ಕೆಎ-15 ಇಬಿ-6523 ನಂಬರಿನ ಹೊಂಡಾ ಬೈಕ್ ಕಳವಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 16 Nov 2025 9:24 pm

ಬಿʼಹಾರ್ʼ | ರೋಹಿಣಿಯನ್ನು ಅನುಸರಿಸಿದ ಸೋದರಿಯರು

ಪಾಟ್ನಾ: ರೋಹಿಣಿ ಆಚಾರ್ಯ ಅವರ ಬೆನ್ನಿಗೇ ಅವರ ಸೋದರಿಯರಾದ ರಾಜಲಕ್ಷ್ಮಿ, ರಾಗಿಣಿ ಮತ್ತು ಚಂದಾ ಅವರೂ ರವಿವಾರ ಬೆಳಿಗ್ಗೆ ತಮ್ಮ ಮಕ್ಕಳೊಂದಿಗೆ ಲಾಲು ಪ್ರಸಾದ್ ಯಾದವ್ ಅವರ ಪಾಟ್ನಾ ನಿವಾಸವನ್ನು ತೊರೆದು ದಿಲ್ಲಿಗೆ ತೆರಳಿದ್ದಾರೆ. ಇದು ಬಿಹಾರದ ಅತ್ಯಂತ ಪ್ರಭಾವಶಾಲಿ ರಾಜಕೀಯ ಕುಟುಂಬದಲ್ಲಿ ಕಚ್ಚಾಟ ಇನ್ನಷ್ಟು ಹೆಚ್ಚುತ್ತಿದೆ ಎನ್ನುವುದನ್ನು ಸೂಚಿಸಿದೆ. ಈಗ ಲಾಲು,ಪತ್ನಿ ರಾಬ್ಡಿದೇವಿ ಮತ್ತು ಇನ್ನೋರ್ವ ಪುತ್ರಿ ಮಿಸಾ ಭಾರ್ತಿ ಅವರು ಮಾತ್ರ ಒಂದು ಕಾಲದಲ್ಲಿ ಆರ್ಜೆಡಿ ನಾಯಕರು ಮತ್ತು ಕಾರ್ಯಕರ್ತರಿಂದ ಗಿಜಿಗುಡುತ್ತಿದ್ದ ಮನೆಯಲ್ಲಿ ಉಳಿದುಕೊಂಡಿದ್ದಾರೆ.

ವಾರ್ತಾ ಭಾರತಿ 16 Nov 2025 9:21 pm

ಕಾಸರಗೋಡು | ರಸ್ತೆ ಅಪಘಾತ : ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಕಾಸರಗೋಡು: ಕಾರು ಮತ್ತು ಥಾರ್ ಜೀಪು ನಡುವೆ ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟೀಯ ಹೆದ್ದಾರಿಯ ಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತಪಟ್ಟ ಮಹಿಳೆ ವರ್ಕಾಡಿ ಮಚ್ಚಂ ಪಾಡಿ ಕೋಡಿ ನಿವಾಸಿ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಮೃತಪಟ್ಟ ಮಹಿಳೆ ಆಲ್ಟೊ ಕಾರಿನಲ್ಲಿದ್ದವರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ವಾರ್ತಾ ಭಾರತಿ 16 Nov 2025 9:15 pm

ಮಂಗಳೂರು ನಗರ ಪೊಲೀಸರ ಕಾರ್ಯಚರಣೆ : ಸೈಬರ್ ವಂಚನೆ ಪ್ರಕರಣದ ಇಬ್ಬರು ಆರೋಪಿಗಳ ಸೆರೆ

ವಂಚನೆಗೆ 300ಕ್ಕೂ ಅಧಿಕ ಬ್ಯಾಂಕ್ ಖಾತೆ, 250ಕ್ಕೂ ಅಧಿಕ ಸಿಮ್‌ಗಳ ಬಳಕೆ ಆರೋಪ

ವಾರ್ತಾ ಭಾರತಿ 16 Nov 2025 9:11 pm

ಬಿಹಾರ | ನ. 19 ಅಥವಾ 20ಕ್ಕೆ ನಿತೀಶ್ 10ನೇ ಬಾರಿ ಸಿಎಂ ಪ್ರಮಾಣವಚನ ಸಾಧ್ಯತೆ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಎಲ್ಲ ವದಂತಿಗಳಿಗೂ ತೆರೆ ಬಿದ್ದಿದ್ದು, ಮುಂದಿನ ಕೆಲವೇ ದಿನಗಳಲ್ಲಿ ನಿತೀಶ್ ಕುಮಾರ್ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಮೈತ್ರಿಕೂಟದ ಪ್ರಚಂಡ ಗೆಲುವಿನ ನಂತರ, ನಿತೀಶ್ ಕುಮಾರ್ ಪ್ರಮಾಣ ವಚನದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯ ಲಭ್ಯತೆಯನ್ನು ಆಧರಿಸಿ, ಬುಧವಾರ ಅಥವಾ ಗುರುವಾರದಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ನಿತೀಶ್ ಕುಮಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಆಡಳಿತಾರೂಢ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಎನ್ಡಿಎ ಉನ್ನತ ಮೂಲಗಳು ಮಾಹಿತಿ ನೀಡಿವೆ. “ನಿತೀಶ್ ಕುಮಾರ್ ಹಾಗೂ ಅವರ ಸಂಪುಟದ ಸಚಿವರ ಪ್ರಮಾಣ ವಚನ ಸಮಾರಂಭವು ರಾಜಭವನದಲ್ಲಿ ನಡೆಯುವ ಬದಲು, ಐತಿಹಾಸಿಕ ಗಾಂದಿ ಮೈದಾನದಲ್ಲಿ ನಡೆಯುವ ಸಾಧ್ಯತೆ ಇದೆ. ಅಧಿಕಾರ ಹಂಚಿಕೆಯ ಕುರಿತು ದಿಲ್ಲಿಯಲ್ಲಿ ಜೆಡಿಯು ಮತ್ತು ಬಿಜೆಪಿ ನಡುವೆ ಮಾತುಕತೆ ಪ್ರಗತಿಯಲ್ಲಿದೆ” ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಎನ್ಡಿಎ ಮೈತ್ರಿಕೂಟದ ಎಲ್ಲ ಐದು ಮಿತ್ರ ಪಕ್ಷಗಳಾದ ಜೆಡಿಯು, ಬಿಜೆಪಿ, LJP (R) ಎಚ್ಎಎಂ ಹಾಗೂ RLMನ ಪ್ರತಿನಿಧಿಗಳು ಸಚಿವ ಸಂಪುಟದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ವಾರ್ತಾ ಭಾರತಿ 16 Nov 2025 9:08 pm

ಉಡುಪಿ | 431 ಮಂದಿಗೆ 25ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ

ಉಡುಪಿ, ನ.16: ಬನ್ನಂಜೆ ಬಿಲ್ಲವರ ಸೇವಾ ಸಂಘ ಹಾಗೂ ಶ್ರೀನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವೆಚ್ಚದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ರವಿವಾರ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಶ್ರೀನಾರಾಯಣ ಗುರು ವಿದ್ಯಾನಿಧಿ ಟ್ರಸ್ಟ್ ನ ಮೂಲಕ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ವಿತರಿಸುವುದು ನಿಜಕ್ಕೂ ಶ್ಲಾಘನೀಯ. ಇಂತಹ ಕೆಲಸ ಹೆಚ್ಚೆಚ್ಚು ನಡೆಯಬೇಕೆಂದರು. ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂತೋಷ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ, ಅಧ್ಯಾಪಕರ ಮೇಲೆ ನಂಬಿಕೆ ಇಟ್ಟು ಕಾರ್ಯಪ್ರವೃತ್ತರಾಗಬೇಕು. ಮೂಢನಂಬಿಕೆಯನ್ನು ಇಟ್ಟುಕೊಳ್ಳದೆ ಸಮಾಜಮುಖಿ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ನಾರಾಯಣ ಗುರುಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಮುಂದುವರಿಯಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಬನ್ನಂಜೆ ಬಿಲ್ಲವರ ಸೇವಾ ಸಂಘ ಉಡುಪಿ ಅಧ್ಯಕ್ಷ ಶಶಿಧರ ಎಂ.ಅಮೀನ್ ವಹಿಸಿದ್ದರು. ಸಂಶೋಧನಾ ವಿದ್ಯಾರ್ಥಿ ಶ್ರೇಯಸ್ ಜಿ. ಕೋಟ್ಯಾನ್ ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹರ್ಷ ಯು.ಪೂಜಾರಿ, ಸಾಯಿ ವೈಷ್ಣವ್ ದಯಾಕರ್ ಹಾಗೂ ಪ್ರಣತಿ ಜತ್ತನ್ನ ಅವರನ್ನು ಸನ್ಮಾನಿಸಲಾಯಿತು. ನಾರಾಯಣಗುರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ರಾಜ್ಯೋತ್ಸವ ಸನ್ಮಾನ ಪುರಸ್ಕೃತ ವಿಠಲ ಪೂಜಾರಿ, ನಟ, ನಿರ್ದೇಶಕ ಸೂರ್ಯೋದಯ್ ಪೆರಂಪಳ್ಳಿ ಅವರನ್ನು ಗೌರವಿಸಲಾಯಿತು. ಹರ್ಷ ಸಂಸ್ಥೆಯ ಸೂರ್ಯಪ್ರಕಾಶ್, ಉದ್ಯಮಿ ಪ್ರಭಾಕರ್ ಪೂಜಾರಿ, ಪ್ರಮುಖರಾದ ಸದಾನಂದ ಪೂಜಾರಿ ಬನ್ನಂಜೆ, ಜಿತೇಶ್ ಕುಮಾರ್, ಗೌರವ ಕಾರ್ಯದರ್ಶಿ ದಯಾನಂದ ಪೂಜಾರಿ ಬನ್ನಂಜೆ, ಜಿ.ಸದಾನಂದ ಅಮೀನ್, ಅಶೋಕ ಪೂಜಾರಿ, ಸುಧಾಕರ ಪೂಜಾರಿ, ಉದಯ ಪೂಜಾರಿ, ಪ್ರವೀಣ್ ಆರ್. ಸುವರ್ಣ, ವಿಶ್ವನಾಥ ಕಲ್ಮಾಡಿ, ಗಣೇಶ್ ಕೋಟ್ಯಾನ್, ಸತೀಶ್ ಅಮೀನ್, ಲಕ್ಷ್ಮಣ ಪೂಜಾರಿ, ಸಂದೀಪ್ ಸನಿಲ್, ಸುಕನ್ಯಾ, ಯು. ದೀಪಕ್ ಕಿರಣ್, ಕೃಷ್ಣಪ್ಪ ಅಂಚನ್, ಎಸ್.ಟಿ. ಕುಂದರ್, ಜಯಕರ್ ಪೂಜಾರಿ ಉಪಸ್ಥಿತರಿದ್ದರು. ಸಂಘದ ಜತೆಕಾರ್ಯದರ್ಶಿ ರಾಘವೇಂದ್ರ ಅಮೀನ್ ವಂದಿಸಿದರು. ತೇಜೇಶ್ ಜೆ.ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 16 Nov 2025 9:04 pm

ಬಿಹಾರದ ಶೇ.42ರಷ್ಟು ನೂತನ ಚುನಾಯಿತ ಶಾಸಕರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ: ವರದಿ

ಪಾಟ್ನಾ,ನ.16: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿಜೇತ ಎಲ್ಲ 243 ಅಭ್ಯರ್ಥಿಗಳ ಚುನಾವಣಾ ಅಫಿಡವಿಟ್ ಗಳನ್ನು ಪರಿಶೀಲಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಬಿಹಾರ ಎಲೆಕ್ಷನ್ ವಾಚ್ (ಬಿಇಡಬ್ಲ್ಯು) ಶೇ.42ರಷ್ಟು ನೂತನವಾಗಿ ಚುನಾಯಿತರಾಗಿರುವ ಶಾಸಕರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿವೆ. ಆದಾಗ್ಯೂ 2020ರ ಚುನಾವಣೆಗೆ ಹೋಲಿಸಿದರೆ ಇಂತಹವರ ಸಂಖ್ಯೆ ಇಳಿಕೆಯಾಗಿದೆ. ಆಗ ಶೇ.51ರಷ್ಟು ಶಾಸಕರು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರು ಎಂದು ತಿಳಿಸಿವೆ. ‘2025ರ ಚುನಾವಣೆಗಳಲ್ಲಿ ಆಯ್ಕೆಯಾಗಿರುವ ಒಟ್ಟು ಶಾಸಕರ ಪೈಕಿ 102 (ಶೇ.42) ಜನರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿದ್ದಾರೆ. ಕೊಲೆ,ಕೊಲೆ ಯತ್ನ,ಅಪಹರಣ,ಮಹಿಳೆಯರ ವಿರುದ್ಧ ದೌರ್ಜನ್ಯಗಳು,ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿರುವುದು ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಗಂಭೀರ ಕ್ರಿಮಿನಲ್ ಅಪರಾಧಗಳು ಎಂದು ನಾವು ಪರಿಗಣಿಸಿದ್ದೇವೆ ಹಾಗೂ ಪ್ರತಿಭಟನೆ, ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಯಂತಹ ಅಪರಾಧಗಳನ್ನು ಈ ವರ್ಗದಿಂದ ಹೊರಗಿರಿಸಿದ್ದೇವೆ’ ಎಂದು ಎಡಿಆರ್ ಬಿಹಾರ ರಾಜ್ಯ ಸಂಯೋಜಕ ರಾಜೀವ್ ಕುಮಾರ್ ಅವರು ಸುದ್ದಿಸಂಸ್ಥೆಗೆ ತಿಳಿಸಿದರು. ರಾಜಕೀಯದ ಅಪರಾಧೀಕರಣದ ಗ್ರಾಫ್ ಇಳಿಯುತ್ತಿದ್ದರೂ ಅದರಿಂದ ಸಂತೋಷ ಪಟ್ಟುಕೊಳ್ಳುವಂಥದ್ದೇನೂ ಇಲ್ಲ, ಏಕೆಂದರೆ ಎಲ್ಲ ರಾಜಕೀಯ ಪಕ್ಷಗಳು ಈಗಲೂ ಇಂತಹ ಜನರಿಗೆ ಟಿಕೆಟ್ ಗಳನ್ನು ನೀಡುತ್ತಿವೆ ಮತ್ತು ತನ್ಮೂಲಕ ಉತ್ತಮ ಅಭ್ಯರ್ಥಿಗೆ ಮತ ಚಲಾಯಿಸುವ ಅವಕಾಶದಿಂದ ಮತದಾರರನ್ನು ವಂಚಿಸುತ್ತಿವೆ ಎಂದು ಹೇಳಿದ ಅವರು, ‘ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಗಳಿಗೆ ಟಿಕೆಟ್ ಗಳನ್ನು ನೀಡುವುದನ್ನು ರಾಜಕೀಯ ಪಕ್ಷಗಳು ನಿಲ್ಲಿಸಬೇಕು. ಆಗ ಮಾತ್ರ ರಾಜಕೀಯವು ಅಪರಾಧೀಕರಣದಿಂದ ಮುಕ್ತಗೊಳ್ಳುತ್ತದೆ ಮತ್ತು ಅದು ನಮ್ಮ ಗುರಿಗಳಲ್ಲೊಂದಾಗಿದೆ ’ ಎಂದರು. ದತ್ತಾಂಶಗಳ ಪ್ರಕಾರ ಆರು ಶಾಸಕರು ತಮ್ಮ ವಿರುದ್ಧ ಕೊಲೆಗೆ ಸಂಬಂಧಿಸಿದ ಪ್ರಕರಣಗಳನ್ನು ಘೋಷಿಸಿದ್ದಾರೆ. 19 ಶಾಸಕರು ಕೊಲೆ ಯತ್ನ ಮತ್ತು ಒಂಭತ್ತು ಶಾಸಕರು ಮಹಿಳೆಯರ ವಿರುದ್ಧ ದೌರ್ಜನ್ಯಗಳ ಆರೋಪಗಳನ್ನು ಎದುರಿಸುತ್ತಿದ್ದಾರೆ. ದೊಡ್ಡ ಪಕ್ಷಗಳ ಪೈಕಿ ಹೊಸದಾಗಿ ಆಯ್ಕೆಯಾಗಿರುವ ಆರ್ಜೆಡಿಯ 25 ಶಾಸಕರ ಪೈಕಿ 14 (ಶೇ.56),ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ರ ಎಲ್ಜೆಪಿ(ಆರ್ವಿ)ಯ 19 ಶಾಸಕರ ಪೈಕಿ 10 (ಶೇ.53),ಕಾಂಗ್ರೆಸ್ನ ಆರು ಶಾಸಕರ ಪೈಕಿ ಮೂವರು(ಶೇ.50),ಬಿಜೆಪಿಯ 89 ಶಾಸಕರ ಪೈಕಿ 43 (ಶೇ.48) ಮತ್ತು ಜೆಡಿಯುದ 85 ಶಾಸಕರ ಪೈಕಿ 23 (ಶೇ.27) ಜನರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದೇ ರೀತಿ ವಿಜೇತ ಅಭ್ಯರ್ಥಿಗಳ ಪೈಕಿ ಶೇ.90ರಷ್ಟು ಜನರು ಕೋಟ್ಯಧಿಪತಿಗಳಾಗಿದ್ದು,ಸರಾಸರಿ 9.02 ಕೋ.ರೂ.ಮೌಲ್ಯದ ಚರ ಮತ್ತು ಸ್ಥಿರಾಸ್ತಿಗಳನ್ನು ಹೊಂದಿದ್ದಾರೆ. ಭಾರತೀಯ ಚುನಾವಣಾ ಆಯೋಗವು ಚುನಾವಣೆಗಳಲ್ಲಿ ಕೋಟ್ಯಧಿಪತಿಗಳ ಸಮಸ್ಯೆ ಕುರಿತು ಗಮನ ಹರಿಸಬೇಕು. ಅದು ಸಾಮಾನ್ಯ ಜನರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಮತ್ತು ಗೆಲ್ಲುವ ಅವಕಾಶಗಳನ್ನು ನಿರಾಕರಿಸುತ್ತದೆ,ಅವರಿಗೂ ಸಮಾನ ಸ್ಪರ್ಧೆಯ ಅವಕಾಶವಿರಬೇಕು ಎಂದು ರಾಜೀವ್ ಕುಮಾರ್ ಹೇಳಿದರು. ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯು ಸುಧಾರಣೆಯತ್ತ ಸಾಗುತ್ತಿದೆ. ಸುಮಾರು ಶೇ.60 ರಷ್ಟು ಚುನಾಯಿತ ಅಭ್ಯರ್ಥಿಗಳು ಪದವಿ ಅಥವಾ ಹೆಚ್ಚಿನ ವಿದ್ಯಾರ್ಹತೆಗಳನ್ನು ಹೊಂದಿದ್ದಾರೆ. ಆದಾಗ್ಯೂ ಸುಮಾರು ಶೇ.35ರಷ್ಟು ಅಭ್ಯರ್ಥಿಗಳು ಐದರಿಂದ 12ನೇ ತರಗತಿವರೆಗೆ ಓದಿದ್ದಾರೆ. ಒಟ್ಟು ಏಳು ಅಭ್ಯರ್ಥಿಗಳು ತಾವು ಕೇವಲ ‘ಅಕ್ಷರಸ್ಥರು’ ಎಂದು ಘೋಷಿಸಿಕೊಂಡಿದ್ದಾರೆ.

ವಾರ್ತಾ ಭಾರತಿ 16 Nov 2025 8:59 pm

ಯುನಿಸೆಫ್ ಇಂಡಿಯಾ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ನಟಿ ಕೀರ್ತಿ ಸುರೇಶ್ ನೇಮಕ

ಹೊಸದಿಲ್ಲಿ, ನ. 16: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರನ್ನು ಯುನಿಸೆಫ್ ಇಂಡಿಯಾದ ಸೆಲೆಬ್ರೆಟಿ ಅಡ್ವೊಕೇಟ್ ಆಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ರವಿವಾರ ತಿಳಿಸಿದೆ. ತಮಿಳು, ತೆಲುಗು ಹಾಗೂ ಮಲಯಾಳಂ ಸಿನೆಮಾಗಳಲ್ಲಿ ಮೆಚ್ಚುಗೆ ಪಡೆದ ಪಾತ್ರಗಳ ಮೂಲಕ ಜನಪ್ರಿಯರಾಗಿರುವ ಕೀರ್ತಿ ಸುರೇಶ್ ಅವರು ಈಗ ದುರ್ಬಲ ಮಕ್ಕಳಿಗಾಗಿ ಯುನಿಸೆಫ್ ಮಾಡುತ್ತಿರುವ ಕೆಲಸವನ್ನು ಬೆಂಬಲಿಸುವ ವ್ಯಕ್ತಿಗಳ ವಿಶೇಷ ಗುಂಪಿನ ಭಾಗವಾಗಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಅವರು ಈಗ ಮಾನಸಿಕ ಆರೋಗ್ಯ, ಶಿಕ್ಷಣ ಹಾಗೂ ಲಿಂಗ ಸಮಾನತೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕೀರ್ತಿ ಸುರೇಶ್, ಮಕ್ಕಳು ನಮ್ಮ ಅತಿ ದೊಡ್ಡ ಜವಾಬ್ದಾರಿ ಹಾಗೂ ಭರವಸೆ. ಪೋಷಣೆ, ಪ್ರೀತಿಯ ಆರೈಕೆಯು ಮಕ್ಕಳು ಸಂತೋಷ, ಆರೋಗ್ಯಕರ ಮತ್ತು ತೃಪ್ತಿಕರ ಜೀವನ ನಡೆಸಲು ಅಗತ್ಯವಾಗಿರುವ ಸಾಮಾಜಿಕ ಹಾಗೂ ಭಾವನಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅಡಿಪಾಯ ನಿರ್ಮಿಸುತ್ತದೆ. ಇದು ನನಗೆ ಸಿಕ್ಕ ಒಂದು ದೊಡ್ಡ ಗೌರವವಾಗಿದೆ ಎಂದಿದ್ದಾರೆ.

ವಾರ್ತಾ ಭಾರತಿ 16 Nov 2025 8:53 pm

ವೆಲೆನ್ಸಿಯಾ ಸಮುದಾಯ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ: ಮಕ್ಕಳು, ಓದುಗರಿಗೆ ಸ್ಪರ್ಧೆ

ಮಂಗಳೂರು, ನ.16: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025ರ ಅಂಗವಾಗಿ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯ, ವೆಲೆನ್ಸಿಯಾದಲ್ಲಿ ಮಕ್ಕಳಿಗಾಗಿ ಹಾಗೂ ಓದುಗರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ನವೆಂಬರ್ 14ರಂದು ಮಕ್ಕಳ ದಿನಾಚರಣೆಯ ದಿನ ನಡೆದ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದವರಿಗೆ ಬಹುಮಾನ ನೀಡಲಾಯಿತು. ದ.ಕ. ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಗಾಯತ್ರಿ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ ಗ್ರಂಥಾಲಯ ಸಪ್ತಾಹದ ಅಂಗವಾಗಿ ಮಕ್ಕಳು ತೋರಿಸಿದ ಉತ್ಸಾಹ ಮತ್ತು ಸೃಜನಶೀಲತೆ ನಮಗೆ ಅಪಾರ ಸಂತೋಷ ತಂದಿದೆ. ಪುಸ್ತಕಗಳು ಕೇವಲ ಮನರಂಜನೆಯಷ್ಟೇ ಅಲ್ಲ, ಜ್ಞಾನಕ್ಕೆ ದಾರಿ ತೆರೆದಿಡುವ ಅಮೂಲ್ಯ ಸಂಗಾತಿಗಳಾಗಿವೆ’ ಎಂದರು. ತೀರ್ಪುಗಾರರಾದ ಶಿಕ್ಷಕ ಉಮೇಶ್ ಕಾರಂತ, ಶೇಷಗಿರಿ ಉಪಸ್ಥಿತರಿದ್ದರು. ಓದುಗರ ಆಶುಭಾಷಣ ಸ್ಪರ್ಧೆಯಲ್ಲಿ ಒಲಿವರ್ ಡಿ ಸೋಜ ಪ್ರಥಮ, ಶೇಷಗಿರಿ ದ್ವಿತೀಯ ಹಾಗೂ ಗೋಪಾಲಕೃಷ್ಣ ಭಟ್ ತೃತೀಯ ಸ್ಥಾನ ಪಡೆದರು. ಬಾಲವಾಡಿ ಮಕ್ಕಳ ಕಪ್ಪೆ ಜಿಗಿತ ಸ್ಪರ್ಧೆಯಲ್ಲಿ ಆರ್ಯನ್, ಆರಾಧ್ಯ ಮತ್ತು ಮಲ್ಲಿಕಾರ್ಜುನ ವಿಜೇತರಾದರು. 1 ಮತ್ತು 2ನೇ ತರಗತಿಯ ಮಕ್ಕಳಿಗೆ ನಡೆದ ಬಕೆಟ್ ನಲ್ಲಿ ಬಾಲ್ ಹಾಕುವ ಸ್ಪರ್ಧೆಯಲ್ಲಿ ಸಂಜನಾ, ನಿಶಾನ್ ಹಾಗೂ ದ್ರಾಕ್ಷಾಯಿಣಿ ಅವರು ಬಹುಮಾನ ಪಡೆದರು. 3 ಮತ್ತು 4ನೇ ತರಗತಿಯ ಕನ್ನಡ ಓದು ಸ್ಪರ್ಧೆಯಲ್ಲಿ ವಿಕ್ರಂ, ಹನುಮಾನ್ ಮತ್ತು ಯಮನಾರಿ ವಿಜೇತರಾದರೆ, 5ನೇ ತರಗತಿಯ ಜ್ಞಾಪಕಶಕ್ತಿ ಸ್ಪರ್ಧೆಯಲ್ಲಿ ಸಮೀರ್, ಗ್ರೀಷ್ಮ ಮತ್ತು ಸಂಜನಾ ಬಹುಮಾನ ಗಳಿಸಿದರು. 6 ಮತ್ತು 7ನೇ ತರಗತಿಯ ಆಶುಭಾಷಣ ಸ್ಪರ್ಧೆಯಲ್ಲಿ ಭೂಮಿಕಾ, ಶುಭನ್ ಮತ್ತು ಲಾಸ್ಯ ಶೆಟ್ಟಿಯವರು ಕ್ರಮವಾಗಿ ಮೊದಲ ಮೂರೂ ಸ್ಥಾನ ಪಡೆದರು. ಮಾಲತಿ ಬಿ. ಶೆಟ್ಟಿ ವಂದಿಸಿದರು. ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯ ರಿನ್ಸಿ ಪಿ. ವಿ. ಕಾರ್ಯಕ್ರಮ ನಿರ್ವಹಿಸಿದರು.

ವಾರ್ತಾ ಭಾರತಿ 16 Nov 2025 8:48 pm

ಬಾಂಗ್ಲಾದೇಶದ ಸುಧಾರಣಾ ಕೇಂದ್ರದಲ್ಲಿ ಪಶ್ಚಿಮ ಬಂಗಾಳದ ಕಿವುಡ, ಮೂಕ ಮೀನುಗಾರ ಮೃತ್ಯು; ತನಿಖೆಗ ಕುಟುಂಬ ಆಗ್ರಹ

ಕೋಲ್ಕತಾ, ನ. 16: ಪಶ್ಚಿಮಬಂಗಾಳದ ಕಿವುಡ ಹಾಗೂ ಮೂಕ ಮೀನುಗಾರರೊಬ್ಬರು ಬಾಂಗ್ಲಾದೇಶದ ಸುಧಾರಣಾ ಕೇಂದ್ರದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಪಶ್ಚಿಮ ಗಂಗಾಧರಪುರ ಗ್ರಾಮದ ನಿವಾಸಿ ಬಬ್ಲು ದಾಸ್ ಎಂದು ಗುರುತಿಸಲಾಗಿದೆ. ಬಬ್ಲು ದಾಸ್ ನಮ್ಮ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ. ಆತ ಕಿವುಡ ಹಾಗೂ ಮೂಕನಾಗಿದ್ದರೂ ಕಷ್ಟಪಟ್ಟು ದುಡಿಯುತ್ತಿದ್ದ ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ. ‘‘ಇದು ಸಹಜ ಸಾವಲ್ಲ. ಕಾರಾಗೃಹದಲ್ಲಿ ಆತನಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈಯಲಾಗಿದೆ ಎಂಬುದು ನಮ್ಮ ಸಂದೇಹ. ಇದು ಯೋಜಿತ ಕೊಲೆ. ಈ ಬಗ್ಗೆ ತನಿಖೆ ನಡೆಸುವಂತೆ ನಾವು ಆಗ್ರಹಿಸುತ್ತೇವೆ. ಅವರಿಗೆ ಯಾವುದೇ ರೀತಿಯ ಸಣ್ಣ ಕಾಯಿಲೇ ಇಲ್ಲದೆ ಇದ್ದರೂ ಸಹಜವಾಗಿ ಸಾಯಲು ಹೇಗೆ ಸಾಧ್ಯ?’’ ಎಂದು ಬಬ್ಲು ದಾಸ್ ಅವರ ಕಿರಿಯ ಸಹೋದರ ಬಸುದೇಬ್ ಪ್ರಶ್ನಿಸಿದ್ದಾರೆ. ಪಶ್ಚಿಮಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಕಾಕ್ ದ್ವೀಪ್ ಕರಾವಳಿಯ ಬಬ್ಲು ದಾಸ್ ಹಾಗೂ ಇತರ 33 ಮೀನುಗಾರರನ್ನು ಬಾಂಗ್ಲಾದೇಶದ ನೌಕಾ ಪಡೆ ನಾಲ್ಕು ತಿಂಗಳ ಹಿಂದೆ ಬಂಧಿಸಿತ್ತು. ಈ ಮೀನುಗಾರರು ಶ್ರೀಲಂಕಾದ ಜಲ ಭಾಗದಲ್ಲಿ ಮೀನುಗಾರಿಕೆ ನಡೆಸಿದ್ದಾರೆ ಎಂದು ಅದು ಆರೋಪಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೀನುಗಾರರು ‘ಎಫ್ಬಿ ಮಂಗಳಚಂಡಿ’ ದೋಣಿಯಲ್ಲಿ ಜುಲೈಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಇವರಲ್ಲಿ ಬಬ್ಲು ಸೇರಿದಂತೆ ಕೆಲವರು ಪ್ರಮಾದವಶಾತ್ ಜಲ ಗಡಿಯನ್ನು ದಾಟಿದ್ದರು ಎಂದು ಅವರು ಹೇಳಿದ್ದಾರೆ. ಈ ಮೀನುಗಾರರನ್ನು ಬಾಂಗ್ಲಾದೇಶದ ನೌಕಾ ಪಡೆ ಬಂಧಿಸಿತ್ತು. ಅನಂತರ ಅವರು ಬಾಂಗ್ಲಾದೇಶದ ಕಾರಾಗೃಹದಲ್ಲಿ ಇರಿಸಿತು ಎಂದು ಬಬ್ಲುವಿನ ಕುಟುಂಬದ ಸದಸ್ಯರು ತಿಳಿಸಿದ್ದಾರೆ.   

ವಾರ್ತಾ ಭಾರತಿ 16 Nov 2025 8:47 pm

ರಾಜ್ಯಮಟ್ಟದ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್: ಮುಹಮ್ಮದ್‌ಗೆ 2 ಚಿನ್ನ, 1 ಕಂಚು

ಮಂಗಳೂರು, ನ.16: ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ ಆಶ್ರಯದಲ್ಲಿ ಇತ್ತೀಚೆಗೆ ನಡೆದ 26ನೇ ರಾಜ್ಯಮಟ್ಟದ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ ನಲ್ಲಿ ಪಾಂಡೇಶ್ವರ ನಿವಾಸಿ ಪಿ. ಎ. ಮುಹಮ್ಮದ್ ಕಾಟಿಪಳ್ಳ ಅವರು 2 ಬೆಳ್ಳಿ, 1 ಕಂಚು ಪದಕ ಪಡೆದಿದ್ದಾರೆ. ಮುಹಮ್ಮದ್ ಕಾಟಿಪಳ್ಳ ಅವರು 100 ಮೀ ಫ್ರೀ ಸ್ಟೈಲ್, 100 ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಎರಡು ಬೆಳ್ಳಿಯ ಪದಕವನ್ನು , 50 ಮೀ ಫ್ರೀ ಸ್ಟೈಲ್ ವೇಗದ ಸ್ವಿಮ್ಮಿಂಗ್ನಲ್ಲಿ ಕಂಚಿನ ಪದಕವನ್ನು ಜಯಿಸಿದರು. ಇದರೊಂದಿಗೆ ಅವರು 2025 ನ. 21ರಿಂದ 23ರ ತನಕ ಹೈದರಾಬಾದ್ ನ ಗಚಿಬೌಲಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿದ್ದಾರೆ.

ವಾರ್ತಾ ಭಾರತಿ 16 Nov 2025 8:44 pm

ಮಹಾರಾಷ್ಟ್ರ | ಶಾಲೆಗೆ ತಡವಾಗಿ ಬಂದಿದ್ದಕ್ಕೆ 100 ಭಸ್ಕಿ ಹೊಡೆಯುವ ಶಿಕ್ಷೆ: ಕಠಿಣ ಶಿಕ್ಷೆಯಿಂದ 13 ವರ್ಷದ ಬಾಲಕಿ ಮೃತ್ಯು!

ಪಾಲ್ಘರ್ (ಮಹಾರಾಷ್ಟ್ರ): ಶಾಲೆಗೆ ತಡವಾಗಿ ಬಂದಿದ್ದಕ್ಕೆ ನೀಡಿದ 100 ಭಸ್ಕಿ ಹೊಡೆಯುವ ಶಿಕ್ಷೆಯು 13 ವರ್ಷದ ಬಾಲಕಿಯೊಬ್ಬಳನ್ನು ಬಲಿ ಪಡೆದಿರುವ ಆಘಾತಕಾರಿ ಘಟನೆ ಪಾಲ್ಘರ್ ಜಿಲ್ಲೆಯ ವಸಾಯಿ ತಾಲ್ಲೂಕಿನ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಂಶಿಕಾ ಗೌಡ್ (13) ಎಂದು ಗುರುತಿಸಲಾಗಿದ್ದು, ಆಕೆ ವಸಾಯಿ ಪ್ರದೇಶದಲ್ಲಿರುವ ಸಾತಿವಾಲಿಯಲ್ಲಿನ ಶ್ರೀ ಹನುಮಂತ್ ವಿದ್ಯಾಮಂದಿರ್ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕರಿಂದ 100 ಭಸ್ಕಿ ಹೊಡೆಯುವ ಕಠಿಣ ಶಿಕ್ಷೆಗೆ ಬಾಲಕಿ ಗುರಿಯಾಗಿದ್ದಾಳೆ. ಈ ಶಿಕ್ಷೆಯ ಬೆನ್ನಿಗೇ ಆಕೆಯ ಬೆನ್ನಿನ ಕೆಳ ಭಾಗದಲ್ಲಿ ಗಂಭೀರ ಸ್ವರೂಪದ ನೋವು ಕಾಣಿಸಿಕೊಂಡಿದೆ. ಮನೆಗೆ ಮರಳಿದ ಬಳಿಕ ಆಕೆಯ ಆರೋಗ್ಯ ಕ್ಷೀಣಿಸುತ್ತಲೇ ಸಾಗಿದ್ದು, ಆಕೆಯನ್ನು ನಲಸೋಪಾರದಲ್ಲಿನ ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಆದರೆ, ಆಕೆಯ ಆರೋಗ್ಯ ಸ್ಥಿತಿ ಮತ್ತಷ್ಟು ವಿಷಮಿಸಿದ ಬಳಿಕ, ಆಕೆಯನ್ನು ಮುಂಬೈನ ಸರ್ ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದ ಆಕೆ ಮೃತಪಟ್ಟಿದ್ದಾಳೆ. ಈ ಘಟನೆ ವಸಾಯಿ ಪ್ರದೇಶದಲ್ಲಿನ ಪೋಷಕರ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಾಲಕಿಯ ಕುಟುಂಬದ ಸದಸ್ಯರೊಬ್ಬರು, “ಶಿಕ್ಷೆಯ ನಂತರ ಆಕೆ ತೀವ್ರ ಸ್ವರೂಪದ ಬೆನ್ನು ಮತ್ತು ಕುತ್ತಿಗೆ ನೋವಿಗೆ ಗುರಿಯಾಗಿದ್ದಳು ಹಾಗೂ ಆಕೆಗೆ ಮೇಲೇಳಲೂ ಸಾಧ್ಯೆವಾಗುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಾಲಿವ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ, ಅಂಶಿಕಾ ಸಾವಿನ ಕುರಿತು ತನಿಖೆ ನಡೆಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ್ ಗಲಂಗೆ ಘೋಷಿಸಿದ್ದಾರೆ. ಈ ಘಟನೆಯ ವಿರುದ್ಧ ಪ್ರತಿಭಟನೆ ನಡೆಸಿದ ಮಹಾರಾಷ್ಟ್ರ ನವನಿರ್ಮಾಣ ಸೇನೆ ಹಾಗೂ ಎನ್ಸಿಪಿ(ಎಸ್ಪಿ)ಯ ಕಾರ್ಯಕರ್ತರು, ಶಾಲೆ ಮತ್ತು ಅದರ ಆಡಳಿತ ಮಂಡಳಿ ಹಾಗೂ ಈ ಘಟನೆಯಲ್ಲಿ ಭಾಗಿಯಾಗಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ.

ವಾರ್ತಾ ಭಾರತಿ 16 Nov 2025 8:41 pm

ಮಂಗಳೂರು ಫುಟ್ಬಾಲ್ ಕ್ರೀಡಾಂಗಣ ಡಿಸೆಂಬರ್‌ನಲ್ಲಿ ಉದ್ಘಾಟನೆ : ಯು.ಟಿ.ಖಾದರ್

ಮಂಗಳೂರು, ನ.16: ನಗರದ ನೆಹರೂ ಮೈದಾನದ ಫುಟ್ಬಾಲ್ ಕ್ರೀಡಾಂಗಣದ ಕಾಮಗಾರಿಯನ್ನು ರವಿವಾರ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಪರಿಶೀಲಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಫುಟ್ಬಾಲ್ ಕ್ರೀಡಾಂಗಣವು ಈಗಾಗಲೇ ಆಸ್ಟ್ರೋ ಟರ್ಫ್ ಅಳವಡಿಸಲಾಗಿದೆ. ಇಂಟರ್ಲಾಕ್, ತಡೆಬೇಲಿ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು,  ಮಂಗಳೂರಿನಲ್ಲಿ ಫುಟ್ಬಾಲ್ ಆಟಕ್ಕೆ ಸುಸಜ್ಜಿತ ಟರ್ಫ್ ಕ್ರೀಡಾಂಗಣ ಬಹುತೇಕ ಸಿದ್ದವಾಗಿದೆ. ಶೇ 90ರಷ್ಟು ಕಾಮಗಾರಿ ಮುಗಿದಿದೆ. ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಂಡು ಫುಟ್ಬಾಲ್ ಆಟಕ್ಕೆ ಕ್ರೀಡಾಂಗಣ ಲಭ್ಯವಾಗಲಿದೆ. ಡಿಸೆಂಬರ್ ಮೂರನೇ ವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಈ ಕ್ರೀಡಾಂಗಣವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಫುಟ್ಬಾಲ್ ಆಟಗಾರರಿಗೆ ಈ ಕ್ರೀಡಾಂಗಣದ ಮೂಲಕ ತರಬೇತಿಗೆ ಇನ್ನಷ್ಟು ಅವಕಾಶ ಲಭ್ಯವಾಗಲಿದೆ. ಈಗಾಗಲೇ ಇದೇ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದ ದ.ಕ. ಜಿಲ್ಲಾ ಅಂಡರ್-14 ಬಾಲಕರ ಫುಟ್ಬಾಲ್ ತಂಡ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಿನಿ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿತ್ತು. ಪೆನಾಲ್ಟಿ ಶೂಟೌಟ್ ನಲ್ಲಿ ಬೆಳಗಾವಿ ತಂಡದ ಎದುರು ಸೋಲು ಅನುಭವಿಸಿತ್ತು. ಇದರೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ತಂಡದ 5 ಮಂದಿ ಆಟಗಾರರು ರಾಷ್ಟ್ರೀಯ ತಂಡದ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ ಎಂದು ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ನ ಅಧ್ಯಕ್ಷ ಡಿ.ಎಂ. ಅಸ್ಲಂ ತಿಳಿಸಿದ್ದಾರೆ. ಸ್ಪೀಕರ್ ಯುಟಿ. ಖಾದರ್ ಅವರು ಕ್ರೀಡಾಂಗಣದ ಕಾಮಗಾರಿ ಪರಿಶೀಲನೆ ವೇಳೆ ಮಾಜಿ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದ.ಕ. ಬ್ಯಾಡ್ಮಿಂಟನ್ ಅಸೋಸಿಯೇಶನ್ ನ ಸಂತೋಷ್ ಶೆಟ್ಟಿ,  ಮನಪಾ ಮಾಜಿ ಸದಸ್ಯರಾದ ಲತೀಫ್ ಕಂದಕ್, ಶಂಸುದ್ದೀನ್ ಬಂದರ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಸಂತೋಷ್, ಮ್ಯಾನೇಜರ್ ಅರುಣ್ ಪ್ರಭಾ, ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ. ಅಸ್ಲಂ , ಕಾರ್ಯದರ್ಶಿ ಹುಸೈನ್ ಬೋಳಾರ್, ಕೋಶಾಧಿಕಾರಿ ಅಫ್ರೋಝ್ ಉಳ್ಳಾಲ, ಮ್ಯಾಂಗಳೂರು ಫುಟ್ಬಾಲ್ ಸ್ಪೋರ್ಟಂಗ್ ಕ್ಲಬ್ ನ ಅಧ್ಯಕ್ಷ ಫಯಾಝ್, ಕಾರ್ಯದರ್ಶಿ ಅಶ್ರಫ್ , ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ನ ಪ್ರಮುಖರಾದ ಅನಿಲ್ ಪಿ.ವಿ, ಭಾಸ್ಕರ ಬೆಂಗ್ರೆ, ವಿಜಯ ಸುವರ್ಣ, ಅಸ್ಪಾಕ್, ಕೋಚ್ ಅಜ್ಮಲ್ ಮತ್ತು ತಸ್ವರ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 16 Nov 2025 8:40 pm

ಉಡುಪಿ | ಬಂದರು ಭೂಮಿ ಅಕ್ರಮ ಗುತ್ತಿಗೆ ಆರೋಪ : ಸಿಪಿಎಂ ಖಂಡನೆ

ಉಡುಪಿ, ನ.16: ಮಲ್ಪೆಯ ಸೀ ವಾಕ್ನಲ್ಲಿರುವ ಸರಕಾರಿ ಬಂದರಿನ 37554.55 ಚದರ ಮೀಟರ್ ವಿಸ್ತೀರ್ಣದ ಭೂಮಿಯನ್ನು ಶಾಸಕ ಯಶ್ಪಾಲ್ ಸುವರ್ಣ ದಕ್ಷಿಣ ಕನ್ನಡದ ಮೀನುಗಾರಿಕಾ ಫೆಡರೇಶನ್ ಹೆಸರಿನಲ್ಲಿ ನಿರ್ದೇಶಕರು ಹಾಗೂ ಸಾರ್ವಜನಿಕರ ಗಮನಕ್ಕೆ ತಾರದೇ ಅಕ್ರಮ ಒಳ ಒಪ್ಪಂದ ಮಾಡಿ ವಂಚಿಸಿರುವುದು ಖಂಡನೀಯ ಎಂದು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ತಿಳಿಸಿದೆ. ಈ ಪ್ರದೇಶವು ಮಲ್ಪೆಯ ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗ ಬೇಕು. ಮಲ್ಪೆ ಸಾರ್ವಜನಿಕರು ಶಾಸಕರ ಮನೆಗೆ ಮುತ್ತಿಗೆ ಹಾಕಿ ಈ ಜಾಗದಲ್ಲಿ ಪ್ರವಾಸೋದ್ಯಮವಾಗಿ ಅಭಿವೃದ್ಧಿ ಪಡಿಸಬೇಕೆಂಬ ಬೇಡಿಕೆಯನ್ನು ಸಿಪಿಎಂ ಬೆಂಬಲಿಸುತ್ತದೆ. ಕರ್ನಾಟಕ ಸರಕಾರ ಈ ಒಪ್ಪಿಗೆ ಪತ್ರವನ್ನು ರದ್ದು ಪಡಿಸಬೇಕು ಎಂದು ಉಡುಪಿ ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 16 Nov 2025 8:34 pm

ಮಡ್ಡಲೇನಾ ಮೇಲೆ ಪಾರಮ್ಯ ಸಾಧಿಸಿ ಯುಎಫ್ಸಿ ವೆಲ್ಟರ್ ವೆಯ್ಟ್ ಬೆಲ್ಟ್ ತಮ್ಮದಾಗಿಸಿಕೊಂಡ ಇಸ್ಲಾಂ ಮಖಚೇವ್

ನ್ಯೂಯಾರ್ಕ್: ಮ್ಯಾಡಿಸನ್ ಗಾರ್ಡನ್ ಸ್ಕೇರ್ ನಲ್ಲಿ ನಡೆದ ಯುಎಫ್ಸಿ ವೆಲ್ಟರ್ ವೆಯ್ಟ್ ಚಾಂಪಿಯನ್ ಶಿಪ್ ನಲ್ಲಿ ಜಾಕ್ ಡೆಲ್ಲಾ ಮಡ್ಡಲೇನಾರನ್ನು ಐದು ಸುತ್ತಿನ ಹೋರಾಟದಲ್ಲಿ ಏಕಪಕ್ಷೀಯವಾಗಿ ಮಣಿಸುವ ಮೂಲಕ, ಇಸ್ಲಾಂ ಮಖಚೇವ್ ಸರ್ವಾನುಮತದ ಗೆಲುವಿನ ತೀರ್ಪಿನೊಂದಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಮತ್ತೊಂದು ಸಹ ಮುಖ್ಯ ಪಂದ್ಯದಲ್ಲಿ ಫ್ಲೈವೇಟ್ ವಿಭಾಗದ ಪ್ರಶಸ್ತಿಯನ್ನು ವ್ಯಾಲೆಂಟಿನಾ ಶೆವ್ಚೆಂಕೊ ತಮ್ಮ ಬಳಿಯೇ ಉಳಿಸಿಕೊಂಡರು. ಲೈಟ್ ವೆಯ್ಟ್ ವಿಭಾಗದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ, ಹೊಸ ಸವಾಲಿಗೆ ಸನ್ನದ್ಧರಾಗಿದ್ದ ಮಖಚೇವ್, ತಮ್ಮ ಆಸ್ಟ್ರೇಲಿಯಾ ಎದುರಾಳಿ ಜಾಕ್ ಡೆಲ್ಲಾ ಮಡ್ಡಲೇನಾರೊದಿಗೆ ನಡೆದ 25 ನಿಮಿಷಗಳ ಹೋರಾಟದಲ್ಲಿ ಅಕ್ಷರಶಃ ಪಾರಮ್ಯ ಸಾಧಿಸಿದರು. ಆ ಮೂಲಕ ಶನಿವಾರ ರಾತ್ರಿ ಸತತ 16ನೇ ಯುಎಫ್ಸಿ ಗೆಲುವನ್ನು ದಾಖಲಿಸಿದರು. ತಮ್ಮ 29 ವರ್ಷದ ಎದುರಾಳಿ ಜಾಕ್ ಡೆಲ್ಲಾ ಮಡ್ಡಲೇನಾರ ಮೇಲೆ 34 ವರ್ಷದ ಮಖಚೇವ್ ತಡೆರಹಿತ ದಾಳಿಯನ್ನು ನಡೆಸುವುದಕ್ಕೂ ಮುನ್ನ, ಅವರ ಮೇಲೆ ಲಘು ಪ್ರಹಾರವನ್ನು ನಡೆಸಿದರು. ಅವರ ತೀಕ್ಷ್ಣ ದಾಳಿಯೆದುರು ನಿರುತ್ತರರಾದ ಮಡ್ಡಲೇನಾ, ದೀರ್ಘ ಕಾಲ ತೀವ್ರ ಒತ್ತಡದಲ್ಲಿ ನೆಲದ ಮೇಲೆ ಕುಸಿದು ಬಿದ್ದಿದ್ದರು. ಮಖಚೇವ್ ರ ಪ್ರಹಾರಗಳಿಗೆ ಎಲ್ಲ ಮೂವರು ತೀರ್ಪುಗಾರರು 50-45 ಅಂಕಗಳನ್ನು ನೀಡುವ ಮೂಲಕ, ಯುಎಫ್ಸಿ ಇತಿಹಾಸದಲ್ಲಿ ಅವರು ಎರಡು ವಿಭಿನ್ನ ತೂಕದ ವಿಭಾಗಗಳಲ್ಲಿ ಪ್ರಶಸ್ತಿ ಪಡೆದ 11ನೇ ಕುಸ್ತಿ ಪಟು ಎಂಬ ಕೀರ್ತಿಗೆ ಭಾಜನರಾದರು. ಪಂದ್ಯದ ನಂತರ ಮಾತನಾಡಿದ ಇಸ್ಲಾಂ ಮಖಚೇವ್, “ಇದು ನನ್ನ ಯೋಜನೆಯಾಗಿತ್ತು ಹಾಗೂ ಇದು ಗೋಪ್ಯವಾಗಿಯೇನೂ ಇರಲಿಲ್ಲ. ಇದು ನನ್ನ ಎಲ್ಲ ಪ್ರತಿಸ್ಪರ್ಧಿಗಳಿಗೂ ತಿಳಿದಿದ್ದು, ನನ್ನನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿಕೊಂಡರು. ಮತ್ತೊಂದು ಸಹ ಪ್ರಮುಖ ಪಂದ್ಯದಲ್ಲಿ ಡಬಲ್ ಚಾಂಪಿಯನ್ ಶಿಪ್ ನ ಎಲೈಟ್ ಗುಂಪಿಗೆ ಸೇರ್ಪಡೆಯಾಗುವ ಝಾಂಗ್ ವೀಲಿಯ ಕನಸನ್ನು ವ್ಯಾಲೆಂಟಿನಾ ಶೆವ್ಚೆಂಕೊ ಭಗ್ನಗೊಳಿಸಿದರು. ಈ ಪಂದ್ಯದಲ್ಲಿ ಏಪಕ್ಷೀಯ ಪಾರಮ್ಯ ಪ್ರದರ್ಶಿಸಿದ ವ್ಯಾಲೆಂಟಿನಾ ಶೆವ್ಚೆಂಕೊ, ಫ್ಲೈವೆಯ್ಟ್ ವಿಭಾಗದ ಪ್ರಶಸ್ತಿಯನ್ನು ತಮ್ಮ ಬಳಿಯೇ ಉಳಿಸಿಕೊಂಡರು. ಝಾಂಗ್ ವಿರುದ್ಧ 50-45 ಅಂಕಗಳ ಮುನ್ನಡೆ ಸಾಧಿಸುವ ಮೂಲಕ, ಶೆವ್ ಚೆಂಕೊ (26-4-1) ತಮ್ಮ 11ನೇ ಸರ್ವಾಂಗೀಣ ಪ್ರಶಸ್ತಿಯನ್ನು ಬಾಚಿಕೊಂಡರು.

ವಾರ್ತಾ ಭಾರತಿ 16 Nov 2025 8:32 pm

ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆ

ಉಡುಪಿ, ನ.16: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಹಾಗೂ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯನ್ನು ರವಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪುತ್ತಿಗೆ ಪರ್ಯಾಯ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ವಹಿಸಿದ್ದರು. ಸಂಘದ ಪ್ರಮುಖರಾದ ಜಿ.ಕೃಷ್ಣಪ್ಪ, ಗೋವಿಂದ ಪಟಗಾರ, ಜಯರಾಮ್ ಎ., ಜೀವನ್ದಾಸ್ ಶೆಟ್ಟಿ, ಸುರೇಶ್ ಗಾಣಿಗ, ರಾಘವೇಂದ್ರ ಶೆಟ್ಟಿ, ಹುಕ್ರಪ್ಪ ಗೌಡ, ಗುರುರಾಜ್ ಕೆ., ಉಡುಪಿ ಚಿಕ್ಕಮಗಳೂರು ಸಂಸದರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ, ಉಡುಪಿ ರನ್ನರ್ ಕ್ಲಬ್ ನ ಕಾರ್ಯದರ್ಶಿ ದಿವಾಕರ್ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧೆಯಲ್ಲಿ ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 16 Nov 2025 8:32 pm

ದೆಹಲಿ ಕಾರು ಸ್ಫೋಟ ಕೇಸ್‌: ಎನ್‌ಐಎ ಬಲೆಗೆ ಬಿದ್ದ ಪ್ರಮುಖ ಆರೋಪಿ

ದೇಶವನ್ನೇ ಬೆಚ್ಚಿಬೀಳಿಸಿರುವ ದೆಹಲಿ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದರ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತ್ಮಾಹುತಿ ಬಾಂಬರ್ ಜೊತೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಕಾಶ್ಮೀರಿ ನಿವಾಸಿಯನ್ನು ಬಂಧಿಸಿದೆ. ಆತ್ಮಾಹುತಿ ಬಾಂಬರ್‌ನ ಸಹಾಯಕನ ಬಂಧನದೊಂದಿಗೆ ಕೆಂಪು ಕೋಟೆ ಪ್ರದೇಶ ಬಾಂಬ್ ದಾಳಿ ಪ್ರಕರಣದಲ್ಲಿ ಎನ್‌ಐಎ ಮಹತ್ವದ ಪ್ರಗತಿ ಸಾಧಿಸಿದೆ.

ಒನ್ ಇ೦ಡಿಯ 16 Nov 2025 8:26 pm

ಬೈಂದೂರು | ಸ್ಕೂಟರ್- ಬೈಕ್ ಢಿಕ್ಕಿ: ಸವಾರ ಮೃತ್ಯು

ಬೈಂದೂರು, ನ.16: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.15ರಂದು ತಡರಾತ್ರಿ ನಾಗೂರು ವೀರ ಆಂಜನೇಯ ದೇವಸ್ಥಾನ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಮಹಾಬಲ ಶೆಟ್ಟಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಶರತ್‌ ಮತ್ತು ಸಹಸವಾರ ಸುದಾಮ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ವಿರುದ್ದ ದಿಕ್ಕಿನಲ್ಲಿ ಬಂದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಾಬಲ ಶೆಟ್ಟಿ, ಬೈಂದೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 16 Nov 2025 8:22 pm

ಮಣಿಪಾಲ | ಅಂದರ್ ಬಾಹರ್: ಎಂಟು ಮಂದಿ ಬಂಧನ

ಮಣಿಪಾಲ, ನ.16: ಮನೋಳಿಗುಜ್ಜಿಬೆಟ್ಟು ಎಂಬಲ್ಲಿನ ಮನೆಯೊಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ನ.15ರಂದು ಸಂಜೆ ವೇಳೆ ಬಂಧಿಸಿದ್ದಾರೆ. ನವೀನ್(37), ಭಾಸ್ಕರ್(55), ಕೃಷ್ಣ(27), ಜಗದೀಶ, ಸಂತೋಷ್(42), ಶಂಕರ ಪೂಜಾರಿ(42), ಮಂಜುನಾಥ್(37) ಶಿವಯ್ಯ(36) ಬಂಧಿತ ಆರೋಪಿಗಳು. ಬಂಧಿತರಿಂದ 1,02,060 ರೂ. ನಗದು, 7 ಮೊಬೈಲ್ ಫೋನ್ ಗಳು ಹಾಗೂ ಎರಡು ಬೈಕುಗಳು, ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 16 Nov 2025 8:20 pm

2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 25 ಸಾವಿರ ರೂ.ಪರಿಹಾರ ಕೊಡಿ: ಬಿಜೆಪಿ ಆಗ್ರಹ

ತುಂಗಭದ್ರಾ ಜಲಾಶಯ ವ್ಯಾಪ್ತಿಯ 4 ಜಿಲ್ಲೆಗಳ 2ನೇ ಬೆಳೆಗೆ ನೀರು ಹರಿಸಲು ಸಾಧ್ಯವಾಗದಿದ್ದರೆ ಪ್ರತಿ ಎಕರೆಗೆ 25,000 ರೂ. ಪರಿಹಾರ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಕ್ರಸ್ಟ್‌ಗೇಟ್‌ ಅಳವಡಿಕೆ, ನಾಲೆಗಳ ದುರಸ್ತಿಗೆ ಹಣ ಬಿಡುಗಡೆಗೆ ಒತ್ತಾಯಿಸಿ ನ.26ರೊಳಗೆ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ.

ವಿಜಯ ಕರ್ನಾಟಕ 16 Nov 2025 8:09 pm

ಕೆಂಪು ಕೋಟೆ ಬಳಿ ಸ್ಫೋಟ ಪ್ರಕರಣ | ಯಾವುದೇ ಪುರಾವೆಗಳಿಲ್ಲ; ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA

ಹೊಸದಿಲ್ಲಿ: ಕೆಂಪು ಕೋಟೆ ಸಮೀಪ ನ. 10ರಂದು ನಡೆದ ಭೀಕರ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು ರವಿವಾರ ಬಿಡುಗಡೆ ಮಾಡಲಾಗಿದೆ. ಯಾವುದೇ ದೃಢ ಪುರಾವೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಿಡುಗಡೆ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು India Today ವರದಿ ಮಾಡಿದೆ. ಹರಿಯಾಣದ ನುಹ್ ನಲ್ಲಿ ಬಂಧಿಸಲಾಗಿದ್ದ ಡಾ. ರೆಹಾನ್, ಡಾ. ಮುಹಮ್ಮದ್, ಡಾ. ಮುಸ್ತಕೀಮ್ ಹಾಗೂ ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾ, ಈ ನಾಲ್ವರೂ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿಯೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಶಂಕೆಯಲ್ಲಿ ಬಂಧಿತರಾಗಿದ್ದರು. ಅಲ್-ಫಲಾಹ್ ವಿಶ್ವವಿದ್ಯಾಲಯದೊಂದಿಗೆ ಇವರ ಸಂಪರ್ಕ, ಹಾಗೂ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುತ್ತಿತ್ತು. ರಸಗೊಬ್ಬರ ವ್ಯಾಪಾರಿಯಿಂದ ಸ್ಫೋಟಕ ತಯಾರಿಕೆಗೆ ಅಗತ್ಯವಾದ ರಸಾಯನಿಕಗಳನ್ನು ಪಡೆಯಲಾಗಿದೆಯೇ ಎಂಬುದನ್ನು NIA ಪರಿಶೀಲಿಸಿತ್ತು. ಆದರೆ ಮೂರು ದಿನಗಳ ವಿಚಾರಣೆಯ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ಸಂಪರ್ಕವಿರುವುದಕ್ಕೆ ಯಾವುದೇ ಪುರಾವೆ ತನಿಖಾಧಿಕಾರಿಗಳಿಗೆ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ನಾಲ್ವರು ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ದೃಢಪಡಿಸಿದರೂ, ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ವಾರ್ತಾ ಭಾರತಿ 16 Nov 2025 8:04 pm

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ‘ಚಳಿ ಹೆಚ್ಚಳ’: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳ ವರೆಗೆ ವಿವಿಧ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಎಚ್‍ಎಎಲ್ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕ್ರಮವಾಗಿ 1 ಡಿಗ್ರಿ ಸೆಲ್ಸಿಯಸ್ ಮತ್ತು 0.7 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿ 16.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕನಿಷ್ಠ 11.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 4.8 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ವಿಜಯಪುರ ಮತ್ತು ಧಾರವಾಡದಲ್ಲಿ ಕ್ರಮವಾಗಿ 12.4 ಮತ್ತು 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 17.8 ಮತ್ತು 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯದ ಹೆಚ್ಚಿನ ಭಾಗಗಳಿಗೆ, ವಿಶೇಷವಾಗಿ ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಮುಂದಿನ ಎರಡು ದಿನಗಳ ವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾರ್ತಾ ಭಾರತಿ 16 Nov 2025 7:54 pm

ಎಸ್ಸೆಸ್ಸೆಫ್ ರಾಷ್ಟ್ರೀಯ ಸಾಹಿತ್ಯೋತ್ಸವ ಸಮಾರೋಪ: ಕರ್ನಾಟಕಕ್ಕೆ ಚಾಂಪಿಯನ್ ಪಟ್ಟ

ಗುಲ್ಬರ್ಗಾ : ಉತ್ತರ ಕರ್ನಾಟಕದ ಗುಲ್ಬರ್ಗಾದಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ ಮಟ್ಟದ ಸಾಹಿತ್ಯೋತ್ಸವವು ದೇಶದ ಮೂಲೆಮೂಲೆಗಳಿಂದ ಬಂದ 2,000ಕ್ಕೂ ಹೆಚ್ಚು ಯುವ ಪ್ರತಿಭೆಗಳ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ಸಂಪನ್ನವಾಯಿತು. ವಿವಿಧ ಕಲೆ ಹಾಗೂ ಸಾಹಿತ್ಯ ಸ್ಪರ್ಧೆಗಳಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಕರ್ನಾಟಕವು ಚಾಂಪಿಯನ್ ಪಟ್ಟಗಳಿಸಿತು. ಕೇರಳ ಮತ್ತು ಜಮ್ಮು-ಕಾಶ್ಮೀರ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದವು. ವೈಯಕ್ತಿಕ ವಿಭಾಗಗಳಲ್ಲಿ ದೆಹಲಿಯ ಮುಹಮ್ಮದ್ ಅಶ್ಹಾದ್ ಅವರು ಕ್ಯಾಂಪಸ್ ಬಾಯ್ಸ್ ವಿಭಾಗದ “ಪೆನ್ ಆಫ್ ದ ಫೆಸ್ಟ್” ಆಗಿ ಆಯ್ಕೆಯಾದರೆ ಅಬ್ದುರ್ ರಶೀದ್ ಅವರನ್ನು ಸಾಮಾನ್ಯ ವಿಭಾಗದ “ಸ್ಟಾರ್ ಆಫ್ ದ ಫೆಸ್ಟ್” ಆಗಿ ಘೋಷಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕಲಾ ಶಾಲೆ ವೇದಿಕೆಯಲ್ಲಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರಗಳ ಗಣ್ಯ ವ್ಯಕ್ತಿಗಳಿಂದ ಹಲವು ಕಲಿಕಾ ಕಾರ್ಯಾಗಾರಗಳು ನಡೆದವು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಮದನಗೂಡು ಚಿನ್ನಸ್ವಾಮಿ, ಸಮಾಜಸೇವಕ ಮತ್ತು ಸಾಹಿತ್ಯಕಾರ ಮುಹಮ್ಮದ್ ಅಮ್ಜದ್ ಹುಸೈನ್, ಉರ್ದು ಲೇಖಕ ಸೈಯದ್ ಹುಸೈನಿ ಪೀರನ್ ಸಾಹಬ್ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರು ದೊಡ್ಡ ಸಂಖ್ಯೆಯಲ್ಲಿ ಈ ಕಾರ್ಯಾಗಾರದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳು ತಮಗೆ ಸೂಕ್ತವಾದ ವೃತ್ತಿ ಆಯ್ಕೆಗಳನ್ನು ಆಯ್ದುಕೊಳ್ಳಲು ರೂಪಿಸಲಾದ ಎಜುಕೈನ್ ಕರಿಯರ್ ಕ್ಲಿನಿಕ್ ಕೂಡ ವಿಶೇಷ ಗಮನಸೆಳೆಯಿತು. ಸಮಾರೋಪ ಸಮಾರಂಭಕ್ಕೆ ಫಕೀಹುಲ್ ಉಮರ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಡಾ.ಕಮರುಜ್ಜಮಾನ್ ಹುಸೈನೀ ಇನಾಂದಾರ್ ಉದ್ಘಾಟಿಸಿದರು. ಡಾ.ಶೇಖ್ ಶಾ ಮುಹಮ್ಮದ್ ಅಫ್ಜಲುದ್ದೀನ್, ಉಬೈದುಲ್ಲಾ ಸಖಾಫಿ, ದಿಲ್‌ಷಾದ್ ಅಹ್ಮದ್, ಇಬ್ರಾಹಿಂ ಸಖಾಫಿ ಮತ್ತು ಶರೀಫ್ ನಿಜಾಮಿ ಅವರು ಉಪಸ್ಥಿತರಿದ್ದರು. ಸಲ್ಮಾನ್ ಖುರ್ಶೀದ್ ಮಣಿಪುರ ಸ್ವಾಗತಿಸಿ ಸ್ವಾದಿಕ್ ಅಲಿ ಬುಖಾರಿ ಧನ್ಯವಾದವಿತ್ತರು. 

ವಾರ್ತಾ ಭಾರತಿ 16 Nov 2025 7:54 pm

ಉಡುಪಿ | ವಿಶ್ವ ಮಧುಮೇಹ ದಿನದ ಪ್ರಯುಕ್ತ ಡಯಾಬಿಟಿಸ್ ಮೇಳ

ಉಡುಪಿ, ನ.16: ಉಡುಪಿ ಆದರ್ಶ ಆಸ್ಪತ್ರೆಯ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆಸ್ಪತ್ರೆ, ಎನ್ಸಿಡಿ ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ ಎನ್.ಸಿ.ಡಿ. ಉಡುಪಿ ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿ, ಆದರ್ಶ ಚಾರಿಟೇಬಲ್ ಟ್ರಸ್ಟ್, ಉಡುಪಿ ಪ್ರಸಾದ್ ನೇತ್ರಾಲಯ, ಉಡುಪಿ ರೆಡ್ಕ್ರಾಸ್, ಐ.ಎಂ.ಐ ಉಡುಪಿ, ಎಪಿಐ ಉಡುಪಿ ಮಣಿಪಾಲ್ ಚಾಪ್ಟರ್ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಡಯಾಬಿಟಿಸ್ ಮೇಳವನ್ನು ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರವಿವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭ ಹಾರೈಸಿದರು. ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆದ ಮೇಳವನ್ನು ಆದರ್ಶ ಆಸ್ಪತ್ರೆಯ ನಿರ್ದೇಶಕ ಹಾಗೂ ಹೃದ್ರೋಗ ತಜ್ಞ ಡಾ.ಸುಹಾಸ್ ಜಿ.ಸಿ. ನೇತೃತ್ವ ವಹಿಸಿದ್ದರು. ಉಡುಪಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ, ಉಡುಪಿ ಎಪಿಐ ಅಧ್ಯಕ್ಷ ಡಾ.ಸುರೇಶ್ ಹೆಗ್ಡೆ, ಐಎಂಎ ಅಧ್ಯಕ್ಷ ಡಾ.ಅಶೋಕ್ ಕುಮಾರ್, ರೆಡ್ಕ್ರಾಸ್ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ, ಡಾ.ಅಶೋಕ್ ಕುಮಾರ್ ವೈ.ಜಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 1,300ಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿ ವಿವಿಧ ಉಚಿತ ಪರೀಕ್ಷೆಗಳನ್ನು ಮಾಡಿಸಿದರು.

ವಾರ್ತಾ ಭಾರತಿ 16 Nov 2025 7:37 pm

ಮೂಡುಬಿದಿರೆ | ಯುವಜನತೆ ಕೃಷಿಯನ್ನು ಪ್ರೀತಿಸಬೇಕು : ಆಸ್ಮಾ ಬಾನು

ಮೂಡುಬಿದಿರೆ : ಜೀವ-ಜೀವನದ ನಡುವೆ ಇರುವ ಸಂಬಂಧ ಕೃಷಿ. ಯುವ ಜನತೆ ಕೃಷಿಯನ್ನು ಪ್ರೀತಿಸಿದರೆ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕಾರ್ಕಳದ ಪೆರ್ವಾಜೆ ಸರಕಾರಿ ಮಾ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಆಸ್ಮಾ ಬಾನು ಹೇಳಿದರು. ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯುತ್ತಿರುವ ʼಸಹಕಾರ ಸಪ್ತಾಹ ಸಂಭ್ರಮʼದ ಎರಡನೇ ದಿನವಾಗಿರುವ ಶನಿವಾರದಂದು ಸಹಕಾರ-ಪರಿಸರ ಸಂರಕ್ಷಣೆ-ಕೃಷಿ, ಪಶು ಸಂಗೋಪನೆ- ಗ್ರಾಮೀಣ ಅಭಿವೃದ್ಧಿ ದಿನಾಚರಣೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ನಾವು ಇಂದು ರಾಸಾಯನಿಕ ಪದಾರ್ಥಗಳನ್ನು ತುಂಬಿರುವ ಆಹಾರಗಳನ್ನು ಸೇವಿಸುವ ಮೂಲಕ ದೇಹದಲ್ಲಿ ರೋಗಗಳು ಬೆಳೆಯುವಂತೆ ಮಾಡುತ್ತಿದ್ದೇವೆ ಎಂದು ಎಚ್ಚರಿಸಿದ ಅವರು, ನಮ್ಮ ಅನ್ನದ ಬಟ್ಟಲಿನಲ್ಲಿ ಕಲ್ಮಶ ಪದಾರ್ಥಗಳು ಸೇರದಂತೆ ಮಾಡಲು ದೇಶಿಯ ಭತ್ತಗಳನ್ನು ಬೆಳೆಸಿ, ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುವ ಅಕ್ಕಿ ಮತ್ತು ಸಾತ್ವಿಕ ಆಹಾರಗಳನ್ನು ಸೇವಿಸುವಂತೆ ಸಲಹೆ ನೀಡಿದರು. ದ. ಕ. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಕೆ. ಮಾತನಾಡಿ, ವಿದ್ಯಾಥಿ೯ಗಳು ಮೆಡಿಕಲ್, ಎಂಜಿನಿಯರ್ ಪದವಿಯನ್ನು ಪಡೆಯುವಂತೆಯೇ ಕೃಷಿರಂಗದಲ್ಲಿಯೂ ಪದವಿಯನ್ನು ಪಡೆಯಲು ಆಸಕ್ತಿ ವಹಿಸಬೇಕು. ಇಲ್ಲಿ ಉದ್ಯೋಗ ಮತ್ತು ಪಿಹೆಚ್ ಡಿಯನ್ನು ಮಾಡಲು ಅವಕಾಶವಿದೆ ಹಾಗೂ ಸರಕಾರಗಳು ಇದಕ್ಕೆ ಆರ್ಥಿಕ ಬೆಂಬಲವನ್ನು ನೀಡುತ್ತಿವೆ ಎಂದು ತಿಳಿಸಿದರು. ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಮಾತನಾಡಿ,  ಕೃಷಿ ನಮ್ಮ ಜೀವಾಳ. ನೆಲ ಜಲ, ಮಣ್ಣು ಇವುಗಳನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಿಷ್ಯ ಭಾರತದ ಯುವ ಮನಸ್ಸುಗಳು ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಪ್ರಗತಿಪರ ಕೃಷಿಕ ರಾಜು ಪೂಜಾರಿ ಕಾಶಿಪಟ್ಣ ಅಧ್ಯಕ್ಷತೆ ವಹಿಸಿದ್ದರು. ಸಾಧಕ ರೈತರಿಗೆ ಸನ್ಮಾನ : ಕೃಷಿಯಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುವ ಅಜಿತ್ ಕುಮಾರ್ ಜೈನ್, ಚಂದು ಭಂಡಾರಿ, ಪೌಲ್ ಪಿ. ಎಸ್. ರೆಬೆಲ್ಲೋ, ಸುಂದರ ಪೂಜಾರಿ, ಜಗನ್ನಾಥ ಶೆಟ್ಟಿ, ಸುರೇಂದ್ರ ಶೆಟ್ಟಿ ಹಾಗೂ ಸರಸ್ವತಿ ಅವರನ್ನು ಸನ್ಮಾನಿಸಲಾಯಿತು. 63 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಕನ್ನಡ/ ಹಿಂದಿ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 63 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ನೆಲ್ಲಿಕಾರು ವ್ಯ.ಸೇ.ಸ. ಸಂಘದ ಅಧ್ಯಕ್ಷ ಜಯವರ್ಮ ಜೈನ್ ಗೌರವ ಉಪಸ್ಥಿತರಿದ್ದರು. ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಕಳೆದ ವರ್ಷದ ಕಲ್ಪವೃಕ್ಷ ಪ್ರಶಸ್ತಿ ಪುರಸ್ಕೃತರಾದ ಗಣೇಶ್ ನಾಯಕ್ ಉಪಸ್ಥಿತರಿದ್ದರು. ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ.ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಚೇತನಾ ರವೀಂದ್ರ ಹೆಗ್ಡೆ ಸನ್ಮಾನಿತರ ಮಾಹಿತಿ ನೀಡಿದರು. ಪತ್ರಕರ್ತ, ಉಪನ್ಯಾಸಕ ಗಣೇಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 16 Nov 2025 7:33 pm

ವಿಜಯಪುರ: ಕಬ್ಬು ಬೆಳೆಗಳ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

6 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ

ವಾರ್ತಾ ಭಾರತಿ 16 Nov 2025 7:30 pm

Breaking: ದೆಹಲಿ ಸ್ಫೋಟ; ಕಾರು ಬಳಸಿ ಆತ್ಮಾಹುತಿ ದಾಳಿ ನಡೆಸಿದ್ದು ಖಚಿತ; ಎನ್‌ಐಎ ಸ್ಪಷ್ಟನೆ

ನವೆಂಬರ್ 10 ರಂದು ನಡೆದಿದ್ದ ಕಾರು ಸ್ಫೋಟ ಒಂದು ಆತ್ಮಾಹುತಿ ದಾಳಿ. ಈ ದಾಳಿಯನ್ನು ನಡೆಸಿದ್ದ ಆಲ್‌ ಫಲಾಹ್‌ ವಿವಿಯ ಸಹಾಯಕ ಪ್ರಾಧ್ಯಾಪಕ ಉಮರ್ ಉನ್ ನಬಿ ಎಂದು ವಿಧಿವಿಜ್ಞಾನ ಪರೀಕ್ಷೆಯಿಂದ ದೃಢಪಟ್ಟಿದೆ. ಈತನಿಗೆ ಕಾರು ಖರೀದಿಸಲು ಸಹಾಯ ಮಾಡಿ, ಸಂಚು ರೂಪಿಸಿದ್ದ ಜಮ್ಮು ಮತ್ತು ಕಾಶ್ಮೀರದ ಅಮೀರ್ ರಶೀದ್ ಅಲಿಯನ್ನು ಎನ್‌ಐಎ ಬಂಧಿಸಿದೆ. ತನಿಖೆ ಮುಂದುವರೆಸಿದೆ.

ವಿಜಯ ಕರ್ನಾಟಕ 16 Nov 2025 7:27 pm

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರಕಾರಗಳನ್ನು ಸೋಲಿಸಿದ್ದು ಸಮಾಜವಾದಿ ಪಕ್ಷ: ಅಖಿಲೇಶ್ ಯಾದವ್

ಬೆಂಗಳೂರು: ಸಮಾಜವಾದಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರಕಾರಗಳನ್ನು ಸೋಲಿಸಿತು ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾರೆ. ರವಿವಾರ ಬೆಂಗಳೂರು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಊಹಿಸಲಾಗದ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಥಾನಗಳನ್ನು ಕಳೆದುಕೊಂಡಿತು. ಬಿಹಾರದಲ್ಲಿ ಬಿಜೆಪಿ ತನ್ನ ಗೆಲುವನ್ನು ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಗೆಲುವಿನೊಂದಿಗೆ ಸಮೀಕರಿಸಲು ಸಾಧ್ಯವಿಲ್ಲ. ಬಿಜೆಪಿಯು ಸರಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಚುನಾವಣಾ ಫಲಿತಾಂಶಗಳನ್ನು ತನ್ನ ಪರವಾಗಿ ಕುಶಲತೆಯಿಂದ ನಿರ್ವಹಿಸುತ್ತದೆ ಎಂದು ದೂರಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರಿ ಯಂತ್ರಾಂಗವನ್ನು ದುರುಪಯೋಗಪಡಿಸಿಕೊಂಡಿದೆ. ಸಮಾಜವಾದಿ ಪಕ್ಷವು ವಿಧಾನಸಭೆ, ಲೋಕಸಭಾ ಚುನಾವಣೆಗಳಲ್ಲಿ ಸೋತಿತು. ನಾವು ಸೋಲಿನಿಂದ ಪಾಠ ಕಲಿತಿದ್ದೇವೆ. 2019ರಲ್ಲಿ ಸಮಾಜವಾದಿ ಪಕ್ಷವು ಕೇವಲ 5ಲೋಕಸಭಾ ಸ್ಥಾನಗಳನ್ನು ಗೆದ್ದಿತು. 2022ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸರಕಾರ ರಚಿಸಲು ವಿಫಲವಾಯಿತು. ಆದರೆ, ಅದು ಬಿಜೆಪಿಗೆ ಬಲವಾಗಿ ಸವಾಲು ಹಾಕಿತು. 2024ರ ಲೋಕಸಭಾ ಚುನಾವಣೆಯಲ್ಲಿ, ಸಮಾಜವಾದಿ ಪಕ್ಷವು ಬಿಜೆಪಿಯ ಡಬಲ್-ಇಂಜಿನ್ ಸರಕಾರಗಳನ್ನು ಸೋಲಿಸಿತು ಎಂದರು. ಸಮಾಜವಾದಿ ಕರ್ನಾಟಕ ಅಧ್ಯಕ್ಷ ಎನ್.ಮಂಜಪ್ಪ ಮಾತನಾಡಿ, ಬಿಹಾರ ಚುನಾವಣಾ ಫಲಿತಾಂಶದಿಂದ ನಾವು ಗೆಲುವು-ಸೋಲು ಎರಡೂ ಪಾಠಗಳನ್ನು ಕಲಿಯಬೇಕಿದೆ. ಬಿಹಾರ ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸದಸ್ಯರು ತಾವು ಹೆಚ್ಚಿನ ಮಹಿಳಾ ಮತಗಳನ್ನು ಪಡೆದಿದ್ದೇವೆಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಇದನ್ನು ಹೇಳಿಕೊಳ್ಳಬಹುದು, ಆದರೆ ಅದು ಪ್ರತಿ ಮಹಿಳೆಗೆ 10 ಸಾವಿರ ರೂ.ಗಳನ್ನು ಯಾವಾಗ ನೀಡಿದ್ದು ಎಂದು ಸ್ಪಷ್ಟಪಡಿಸುವುದಿಲ್ಲ ಎಂದು ಟೀಕಿಸಿದರು. ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ.ತಿರುಮಲ ಮಾತನಾಡಿ, ಮಹಿಳೆಯರು ಮತ್ತು ಯುವಕರಿಗೆ ಘನತೆಯ ಜೀವನ ಮತ್ತು ಉದ್ಯೋಗಗಳನ್ನು ಒದಗಿಸಲು ಬಿಜೆಪಿ ಬಯಸುವುದಿಲ್ಲ. ಇಂದು ದೇಶದ ಲಕ್ಷಾಂತರ ವಿದ್ಯಾವಂತ ಯುವ ಜನತೆ ಪದವೀಧರರಾದರು ಅರ್ಹತೆಗೆ ಅನುಗುಣವಾಗಿ ಉದ್ಯೋಗ ಸಿಗುತ್ತಿಲ್ಲ. ಯುವ ಜನಾಂಗ ಬಲಿಷ್ಠ ಭಾರತ ನಿರ್ಮಾಣ ಮಾಡಲು ಸರ್ವರಿಗೂ ಸಮಾನ ಅವಕಾಶ ಸಿಗಬೇಕು ಎಂದು ಹೇಳಿದರು. ಈ ವೇಳೆ ಪಕ್ಷದ ಲೋಕಸಭಾ ಸದಸ್ಯ ರಾಜೀವ್ ರಾಯ್, ಗೌರವ ಅಧ್ಯಕ್ಷ ಎಸ್.ಜಿ.ಮಠ್, ಪ್ರಧಾನ ಕಾರ್ಯದರ್ಶಿ ಜಯರಾಮ್ ರೆಡ್ಡಿ, ಮಾಂತೇಶ ಪಾಟೀಲ್, ಪ್ರಶಾಂತ್ ಚಿತ್ರದುರ್ಗ, ಮಂಜುನಾಥ್ ರಾಜನಹಳ್ಳಿ, ಪ್ರತಿಭಾ, ಉಷಾ ರಾಣಿ, ಎಲ್.ರಂಗನಾಥ್, ಗೋವಿಂದ್‍ರಾಜು, ವೇಣುಗೋಪಾಲ್, ಜಗದೀಶ್, ನಾಗರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು. ‘ಕಾಂಗ್ರೆಸ್ ನಮ್ಮ ಮಿತ್ರ ಪಕ್ಷ. ಸ್ನೇಹಿತ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನಾವು ಕೈಬಿಡಬಾರದು. ಇಂಡಿಯಾ ಮೈತ್ರಿಕೂಟದ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ. ಬಿಹಾರದಲ್ಲಿ ಜನರಿಗೆ ಹಣವನ್ನು ಕೊಟ್ಟು ಎನ್‍ಡಿಎ ಗೆಲುವು ಸಾಧಿಸಿದ್ದು, ಭವಿಷ್ಯದಲ್ಲಿ ನಾವು ಅದೇ ದಾರಿಯನ್ನು ಹಿಡಿಯಬೇಕೇ? ಎಂಬ ಪ್ರಶ್ನೆಯಿದೆ’ -ಅಖಿಲೇಶ್ ಯಾದವ್, ಉತ್ತರ ಪ್ರದೇಶ ಮಾಜಿ ಸಿಎಂ

ವಾರ್ತಾ ಭಾರತಿ 16 Nov 2025 7:18 pm

ಉಳ್ಳಾಲ | ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ

ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈ ಭಾರತ್ ದಕ್ಷಿಣ ಕನ್ನಡ, ಯುವಜನ ಒಕ್ಕೂಟ, ಗ್ರಾಮ ಪಂಚಾಯತ್ ಕೊಣಾಜೆ, ಸಮರ್ಪಣಾ ಪರಿವಾರ ಸೇವಾ ಟ್ರಸ್ಟ್ (ರಿ) ಮಂಗಳೂರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ ಅಸೈಗೋಳಿ ಖಾಸಗಿ ಸಭಾಂಗಣದಲ್ಲಿ ನಡೆಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದಾಮೋದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಗಿ ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು ಯಚ್. ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಶಹೀದ್ ಟಿ.ಕೆ.ತೆಕ್ಕಿಲ್, ಬಂಟರ ಸಂಘ ಉಳ್ಳಾಲ ಅಧ್ಯಕ್ಷ ರವೀಂದ್ರ ರೈ ಕಳ್ಳಿಮಾರ್, ಮಂಗಳಾ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಎ. ಕೆ ಅಬ್ದುಲ್ ರಹ್ಮಾನ್ ಕೊಡಿಜಾಲ್, ಲಯನ್ಸ್ ಕ್ಲಬ್ ಕುಡ್ಲ ಅಧ್ಯಕ್ಷ ಅಬ್ದುಲ್ ರಝಾಕ್, ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕ ರಜನಿ, ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಸೋಮೇಶ್ವರ ಪುರಸಭೆ ಸದಸ್ಯ ದೀಪಕ್ ಪಿಲಾರ್ ಮತ್ತಿತರರು ಉಪಸ್ಥಿತರಿದ್ದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ ಪ್ರಸ್ತಾವನೆಗೈದರು. ಸಮರ್ಪಣಾ ಪಾರಿವಾರ್ ಟ್ರಸ್ಟ್(ರಿ) ಮಂಗಳೂರು ಇದರ ಉಪಾಧ್ಯಕ್ಷ ವಸಂತ್ ಕೋಡಿ ವಂದಿಸಿದರು. ಯುವಜನೋತ್ಸವ ನೋಡಲ್ ಅಧಿಕಾರಿ ಮೋಹನ್ ಶಿರ್ಲಾಲ್ ನಿರೂಪಿಸಿದರು.

ವಾರ್ತಾ ಭಾರತಿ 16 Nov 2025 7:08 pm

BMTC ಹೊಸ ಬಸ್‌ ಮಾರ್ಗ ಆರಂಭ: ಮೆಜೆಸ್ಟಿಕ್‌ನಿಂದ ನಗರದ ಹೊರ ವಲಯಕ್ಕೆ ಸಂಪರ್ಕ; ಮಾರ್ಗ, ವೇಳಾಪಟ್ಟಿ ಏನು?

ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕನ್ನಲ್ಲಿಗೆ ಹೊಸ ಬಸ್ ಮಾರ್ಗವನ್ನು ಆರಂಭಿಸಿದೆ. ನವೆಂಬರ್ 17ರ ಸೋಮವಾರದಿಂದ ಆರಂಭವಾಗುವ ಈ 238-ಯುಕೆ ಮಾರ್ಗವು, ನಗರದ ಹೃದಯಭಾಗದಿಂದ ಹೊರವಲಯಕ್ಕೆ ಸಂಪರ್ಕ ಕಲ್ಪಿಸಲಿದೆ. ಈ ಸೇವೆಯು ಹವಾನಿಯಂತ್ರಣ ರಹಿತವಾಗಿದ್ದು, ಪ್ರಯಾಣಿಕರಿಗೆ ಅನುಕೂಲ ಒದಗಿಸಲಿದೆ.

ವಿಜಯ ಕರ್ನಾಟಕ 16 Nov 2025 7:03 pm

ಲಾಲು ಮನೆಯಲ್ಲಿ ಒಡಕು; ರೋಹಿಣಿ ಆಚಾರ್ಯ ನಂತರ ಮನೆ ಬಿಟ್ಟ ಮೂವರು ಸಹೋದರಿಯರು

ರೋಹಿಣಿ ಆಚಾರ್ಯ ಅವರು ನಿವಾಸ ತೊರೆದ ನಂತರ ಲಾಲು ಪ್ರಸಾದ್ ಯಾದವ್ ಅವರ ಮನೆಯಲ್ಲಿನ ಬಿಕ್ಕಟ್ಟು ತೀವ್ರಗೊಂಡಿದೆ. ಮೂವರು ಪುತ್ರಿಯರಾದ ರಾಜಲಕ್ಷ್ಮಿ, ರಾಗಿಣಿ ಮತ್ತು ಚಂದಾ ಅವರು ಪಾಟ್ನಾದ ನಿವಾಸವನ್ನು ತೊರೆದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿಯ ಹೀನಾಯ ಸೋಲಿನ ಬೆನ್ನಲ್ಲೇ ಈ ಹೈಡ್ರಾಮಾ ಸೃಷ್ಟಿಯಾಗಿದೆ.

ವಿಜಯ ಕರ್ನಾಟಕ 16 Nov 2025 7:02 pm

ಉಳ್ಳಾಲ | ಸೌಹಾರ್ದ ದೀಪಾವಳಿ ಸಂಗಮ

ಉಳ್ಳಾಲ: ನಾವು ಸಮಾಜದಲ್ಲಿ ನೆಮ್ಮದಿ, ಶಾಂತಿಯಿಂದ ಬದುಕಬೇಕಾದರೆ ನಮ್ಮ ಹೃದಯದೊಳಗೆ ಸೌಹಾರ್ದದ ಹೂವು ಅರಳಬೇಕು, ಆ ಹೂವಿಗೆ ಸುಗಂದ ಇರಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಅಭಿಪ್ರಾಯಪಟ್ಟರು. ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಬಿಲ್ಲವ ಸೇವಾ ಸಮಾಜ ಯುವವಾಹಿನಿ, ರೋಟರಿ ಸಮುದಾಯ ದಳ, ಉಳ್ಳಾಲ ಜಮಾಅತೆ ಇಸ್ಮಾಮಿ ಹಿಂದ್, ನವೋದಯ ಫ್ರೆಂಡ್ಸ್, ಪೊಸಕುರಲ್ ಬಳಗ, ಸದ್ಫಾವನಾ ವೇದಿಕೆ, ಕಿನ್ಯ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಯುವಕ ಮಂಡಲ, ಛೋಟಾ ಮಂಗಳೂರು ಲಯನ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಲ್ಯ ಬಿಲ್ಲವ ಸಮಾಜದ ನಾರಾಯಣ ಗುರು ಕಲಾಂಗಣದಲ್ಲಿ ನಡೆದ ಸೌಹಾರ್ದ ದೀಪಾವಳಿ ಸಂಗಮದಲ್ಲಿ ಮಾತನಾಡಿದರು. ತೊಕ್ಕೊಟ್ಟು ಮಸ್ಜಿದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ ಮಾತನಾಡಿ, ಎಲ್ಲಾ ಧರ್ಮಗಳು ಜಗತ್ತಿಗೆ ಬೆಳಕನ್ನು ಕೊಟ್ಟಿದೆ. ಆದರೆ ನಾವಿಂದು ಅಕ್ರಮ, ಹಿಂಸೆ, ಸುಳ್ಳು, ಅನೈತಿಕ ಎಂಬ ಕತ್ತಲ ಜಗತ್ತಿನಲ್ಲಿ ಬದುಕುತ್ತಿರುವ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮಗಳಿಗೆ ಬಹಳ ಪ್ರಾಮುಖ್ಯತೆ ಇದೆ ಎಂದರು. ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ವಂ.ಫಾ.ಡೊನಾಲ್ಡ್ ನೀಲೇಶ್ ಮಾತನಾಡಿದರು. ಈ ಸಂದರ್ಭದಲ್ಲಿ ಈ ಸಾಲಿನ ದ.ಕ.ಜಿಲ್ಲಾ ರಾಜೋತ್ಸವ ಪುರಸ್ಕೃತರಾದ ಅನಿಲ್‌ದಾಸ್, ಗಂಗಾಧರ್ ಎಸ್.ಪೂಜಾರಿ, ಮುಹಮ್ಮದ್ ಮುಕ್ಕಚೇರಿ, ಡಾ.ಅಶ್ವಿನಿ ಎಸ್.ಶೆಟ್ಟಿ, ಇಸ್ಮಾಯಿಲ್ ಶಾಫಿ ಬಬುಕಟ್ಟೆ, ಎ.ಕೆ.ಕುಕ್ಕಿಲ, ಸತೀಶ್ ಇರಾ, ರಾಜೇಶ್ ದಡ್ಡಗಡಿ, ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್, ನಮ್ಮೂರ ಧ್ವನಿ ಉಳ್ಳಾಲ, ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಗ್ರಾಮಚಾವಡಿ-ಕೊಣಾಜೆ, ಶ್ರೀ ದುರ್ಗಾ ಫ್ರೆಂಡ್ಸ್ ಉಳ್ಳಾಲಬೈಲು, ಶಂಸುಲ್ ಉಲಮಾ ದಾರುಸ್ಸಲಾಮ್ ಆಕಾಡಮಿ ವಾದಿತ್ವಾಯಿಲ ಕಿನ್ಯ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪುರಸ್ಕೃತ ಜಗದೀಶ್ ಸಿ.ಎಚ್, ದುರ್ಗಾಲತಾ , ರಾಧಾಕೃಷ್ಣ ರೈ ಹರೇಕಳ, ನಯನ ಇವರನ್ನು ಅಭಿನಂದಿಸಲಾಯಿತು. ತೊಕ್ಕೊಟ್ಟು ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಧರ್ಮಕೇಂದ್ರದ ಪ್ರಧಾನ ಧರ್ಮಗುರು ವಂದನಿಯ ಫಾದರ್ ಸಿಪ್ರಿಯನ್ ಪಿಂಟೋ ಉದ್ಘಾಟಿಸಿದರು. ನಿವೃತ್ತ ಸೇನಾನಿ ಕೃಷ್ಣ ಗಟ್ಟಿ ಅಡ್ಕ ಅಧ್ಯಕ್ಷತೆ ವಹಿಸಿದ್ದರು. ತೊಕ್ಕೊಟ್ಟು ಸಹ್ಯಾದ್ರಿ ಕೊ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಟಿ.ಸುವರ್ಣ, ಉಳ್ಳಾಲ ಸದ್ಭಾವನಾ ವೇದಿಕೆ ಗೌರವಾಧ್ಯಕ್ಷ ಸದಾನಂದ ಬಂಗೇರ, ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲಾ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಎಂ.ಇ.ಐ.ಎಲ್ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್, ಉಳ್ಳಾಲ ಶ್ರೀ ಚೀರುಂಭಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ದ.ಕ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಯುವಕ ಮಂಡಲದ ಅಧ್ಯಕ್ಷ ಬಾಬು ಶ್ರೀ ಶಾಸ್ತ ಕಿನ್ಯ, ಜಮಾಅತೆ ಇಸ್ಮಾಮಿ ಹಿಂದ್ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಂ, ಲಯನ್ಸ್ ಕ್ಲಬ್ ಅಧ್ಯಕ್ಷೆ ಹರಿಣಾಕ್ಷಿ ಕೊಲ್ಯ, ನವೋದಯ ಫ್ರೆಂಡ್ಸ್ ಸರ್ಕಲ್ ಕಾರ್ಯದರ್ಶಿ ರೂಪೇಶ್ ಭಟ್ನಗರ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ್ ಕೊಲ್ಯ, ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಗೋಪಾಲ ಎಸ್.ಕೊಂಡಾಣ, ಯುವವಾಹಿನಿ ಅಧ್ಯಕ್ಷ ನಿತಿನ್ ಕರ್ಕೇರ, ರೋಟರಿ ಸಮುದಾಯ ದಳದ ಅಧ್ಯಕ್ಷ ಸೀತಾರಾಮ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು. ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಸ್ವಾಗತಿಸಿದರು. ಕುಸುಮಾಕರ ಕುಂಪಲ ವಂದಿಸಿದರು. ಮೋಹನ್ ಶಿರ್ಲಾಲ್ ನಿರೂಪಿಸಿದರು.

ವಾರ್ತಾ ಭಾರತಿ 16 Nov 2025 7:01 pm

ಕಲಬುರಗಿ | ಕಾರು-ಬೈಕ್ ಮಧ್ಯೆ ಢಿಕ್ಕಿ : ಸವಾರರಿಬ್ಬರು ಮೃತ್ಯು

ಕಲಬುರಗಿ: ಕಾರು- ಬೈಕ್ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ್‌ ಕ್ರಾಸ್ ಸಮೀಪದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಕಮಲಾಪುರ ತಾಲ್ಲೂಕಿನ ಸಿರಗಾಪುರ ಗ್ರಾಮದ ಆಕಾಶ ಚಂದ್ರಕಾಂತ ಧನವಂತ (19), ಭೂಸಣಗಿ ಗ್ರಾಮದ ಸುಶೀಲ್‌ ಮಲ್ಲಿಕಾರ್ಜುನ (28) ಎಂದು ಗುರುತಿಸಲಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದೆ. ಇಬ್ಬರಿಗೆ ಸುಟ್ಟ ಗಾಯಗಳಾಗಿದ್ದು, ಯುವಕ ಆಕಾಶ ಸ್ಥಳದಲ್ಲೆ ಮೃತಪಟ್ಟಿದ್ದು, ಸುಶೀಲ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಕಾಶ ಹಾಗೂ ಸುಶೀಲ್‌ ಇಬ್ಬರು ಬೈಕ್ ಮೇಲೆ ಸಿರಗಾಪುರದಿಂದ ಮಹಾಗಾಂವ್‌ ಕ್ರಾಸ್ ಕಡೆಗೆ ತೆರಳುತ್ತಿದ್ದರು. ಹೈದರಾಬಾದ್‌ ನಿಂದ ಕಲಬುರಗಿಗೆ ಕಾರು ತೆರಳುತ್ತಿತ್ತು. ಎರಡರ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಾರ್ತಾ ಭಾರತಿ 16 Nov 2025 6:56 pm

ಉಡುಪಿ | ಸುಬ್ರಹ್ಮಣ್ಯನಗರ ಶಾಲೆಯ ಶೌಚಾಲಯ ಕಟ್ಟಡ ಉದ್ಘಾಟನೆ

ಉಡುಪಿ, ನ.16: ಅಸೋಸಿಯೇಷನ್ ಆಫ್ ಕನ್ಸಲ್ಟಿಟಗ್ ಸಿವಿಲ್ ಇಂಜಿನಿಯರ್ಸ್ ಎಂಡ್ ಆರ್ಕಿಟೆಕ್ಟ್(ಎಸಿಸಿಇಎ) ಉಡುಪಿ ಪ್ರಾಯೋಜಕತ್ವದಲ್ಲಿ ಸುಬ್ರಹ್ಮಣ್ಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಸುಮಾರು 2.50 ಲಕ್ಷ ರೂ. ವೆಚ್ಚದ ನೂತನ ಶೌಚಾಲಯ ಕಟ್ಟಡವನ್ನು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಉಮಾ ಉದ್ಘಾಟಿಸಿದರು. ಎಸಿಸಿಇಎಯ ಅಧ್ಯಕ್ಷ ಯೋಗಿಶ್ಚಂದ್ರ ಧಾರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ನಗರಸಭಾ ಸದಸ್ಯೆ ಜಯಂತಿ ಪೂಜಾರಿ, ಏಸಿಸಿಇಎಯ ಮಾಜಿ ಅಧ್ಯಕ್ಷ ಪಾಂಡುರಂಗ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಸುಜಾತ ಬಿ. ಸ್ವಾಗತಿಸಿದರು. ಸಂಸ್ಥೆಯ ಗೌರವಧ್ಯಕ್ಷ ನಾಗೇಶ್ ಹೆಗ್ಡೆ, ಮಾಜಿ ಅಧ್ಯಕ್ಷ ಗೋಪಾಲ್ ಭಟ್ ಹಾಗೂ ಎಸಿಸಿಇಎಯ ಸದಸ್ಯರುಗಳು, ಶಾಲೆಯ ಹಳೆ ವಿದ್ಯಾರ್ಥಿ ಪುರಂದರ ಶೆಟ್ಟಿ, ಶಾಲೆಯ ಶಿಕ್ಷಕಿಯರು, ಪೋಷಕರುಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಹೇಶ್ ಕಾಮತ್ ವಂದಿಸಿದರು. ನಿರಂಜನ್ ಭಟ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 16 Nov 2025 6:48 pm

ಸಚಿವ ಸಂಪುಟ ಪುನರ್‌ರಚನೆ, ನಾಯಕತ್ವ ಬದಲಾವಣೆ ಬಗ್ಗೆ ಜಿ.ಪರಮೇಶ್ವರ್‌ ಅಚ್ಚರಿ ಹೇಳಿಕೆ

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೈಕಮಾಂಡ್‌ ನಾಯಕರ ಭೇಟಿಗಾಗಿ ದೆಹಲಿಗೆ ಹಾರಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಹಾಲಿ ಸಚಿವರಿಗೆ ನಡುಕ ಶುರುವಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌

ಒನ್ ಇ೦ಡಿಯ 16 Nov 2025 6:36 pm

ಉಡುಪಿ | ಹಿರಿಯ ನಾಗರಿಕರಿಗಾಗಿ ವೈದ್ಯಕೀಯ ಶಿಬಿರ

ಉಡುಪಿ, ನ.16: ಬ್ರಹ್ಮಗಿರಿ ಶ್ರೀಸತ್ಯಸಾಯಿ ಸೇವಾ ಸಮಿತಿ, ಉಡುಪಿ ಗಾಂಧಿ ಆಸ್ಪತ್ರೆ, ಮಣಿಪಾಲದ ಕೆಎಂಸಿ ಆಸ್ಪತ್ರೆ, ಭಾರತೀಯ ವೈದ್ಯರ ಸಂಘ ಉಡುಪಿ, ಮಣಿಪಾಲ ವಿಭಾಗ, ಶ್ರೀಕೃಷ್ಣ ಯೋಗ ಕೇಂದ್ರ ಉಡುಪಿ ಹಿರಿಯ ನಾಗರಿಕರ ವೇದಿಕೆ ಉಡುಪಿ ಸಹಕಾರದೊಂದಿಗೆ ಭಗವಾನ್ ಶ್ರೀಸತ್ಯ ಸಾಯಿಬಾಬಾರವರ 100ನೇ ಜನ್ಮದಿನಾಚರಣೆಯ ಅಂಗವಾಗಿ ಹಿರಿಯ ನಾಗರಿಕರಿಗಾಗಿ ವಿಶೇಷ ವೈದ್ಯಕೀಯ ಶಿಬಿರವನ್ನು ಇತ್ತೀಚಿಗೆ ಬ್ರಹ್ಮಗಿರಿಯ ಸಾಯಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಸತ್ಯಸಾಯಿ ಸೇವಾ ಸಂಸ್ಥೆಗಳ ಉಡುಪಿ ಜಿಲ್ಲಾಧ್ಯಕ್ಷ ಆನಂದ ಕುಂದಾಪುರ ಚಾಲನೆ ನೀಡಿದರು. ವೈದ್ಯ ಡಾ.ಅನಂತ ಶೆಣೈ ಮಾತನಾಡಿ, ಹಿರಿಯ ನಾಗರಿಕರು ಆಗ್ಗಾಗೆ ವೈದ್ಯರ ಭೇಟಿ ಮಾಡಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಹೃದಯ ಪರೀಕ್ಷೆ, ಮಧುಮೇಹ ತಪಾಸಣೆ, ಬಿಪಿ ಪರೀಕ್ಷೆ ಜೊತೆಗೆ ನಿತ್ಯ ವ್ಯಾಯಾಮ, ವಾಕಿಂಗ್, ಮಿತ ಆಹಾರ ಸೇವನೆ, ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಡಾ.ಸುರೇಶ್ ಹೆಗ್ಡೆ, ಡಾ.ಅನಂತ ಶೆಣೈ, ಡಾ.ಶಿವಶಂಕರ್, ಡಾ.ಕಸ್ತೂರಿ ನಾಯಕ್ ಹಾಗೂ ಇತರ ವೈದ್ಯರು ಮತ್ತು 20 ಮಂದಿ ಅರೆ ವೈದ್ಯಕೀಯ ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶ್ರೀಕೃಷ್ಣ ಯೋಗ ಕೇಂದ್ರದ ಅಮಿತ್ ಶೆಟ್ಟಿ ಹಾಗೂ ಹಿರಿಯ ನಾಗರಿಕರ ವೇದಿಕೆಯ ಮುರಳಿಧರ್ ಉಪಸ್ಥಿತರಿದ್ದರು. ವೈದ್ಯಕೀಯ ತಪಾಸಣಾ ಶಿಬಿರದಲ್ಲಿ 157 ಹಿರಿಯ ನಾಗರಿಕರು ಭಾಗವಹಿಸಿದ್ದರು. ಹಲವು ಬಗೆಯ ತಪಾಸಣೆ ನೆಡೆಸಿ ಸಲಹೆ ಸೂಚನೆ ನೀಡಲಾಯಿತು.

ವಾರ್ತಾ ಭಾರತಿ 16 Nov 2025 6:31 pm

ಎಸ್ಸೆಸ್ಸೆಫ್ ಸಾಹಿತ್ಯೋತ್ಸವ: ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಸೆಯ್ಯದ್ ಮುಹಮ್ಮದ್ ಉವೈಸ್

ಬೆಳ್ತಂಗಡಿ: ಕಲಬುರಗಿಯಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದ ಉರ್ದು ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿಯ ಸೆಯ್ಯದ್ ಮುಹಮ್ಮದ್ ಉವೈಸ್ ಸತತ ಮೂರನೇ ಬಾರಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಮಂಜೊಟ್ಟಿಯ ಸೆಯ್ಯದ್ ಅಯ್ಯೂಬ್ ಮತ್ತು ನೂರ್ ಸಬಾ ದಂಪತಿಯ ಪುತ್ರ.

ವಾರ್ತಾ ಭಾರತಿ 16 Nov 2025 6:31 pm

Udupi | ಬ್ರಹ್ಮಗಿರಿ- ಬನ್ನಂಜೆ ರಸ್ತೆ ಗುಂಡಿಮಯ: ದುರಸ್ತಿಗೆ ಆಗ್ರಹ

ಉಡುಪಿ, ನ.16: ನಗರದ ಬ್ರಹ್ಮಗಿರಿ ವೃತ್ತದಿಂದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನಗಳು ಸಂಚರಿಸಲು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಡಾಮರು ಕಿತ್ತುಹೋಗಿದ್ದು, ಗುಂಡಿಗಳು ಬಿದ್ದುಕೊಂಡಿವೆ. ವಾಹನಗಳ ಚಾಲಕರು ಗುಂಡಿ ತಪ್ಪಿಸಲು ಹೋಗಿ, ವಾಹನ ನಿಯಂತ್ರಣ ಸಿಗದೆ ಅಪಘಾತಗಳು ಸಂಭವಿಸುತ್ತಿರುತ್ತವೆ. ಈ ರಸ್ತೆಯು ಪ್ರಮುಖ ರಸ್ತೆ ಆಗಿರುವುದರಿಂದ ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ತಾಲೂಕು ಕಚೇರಿ, ಸರಕಾರಿ ಪ್ರವಾಸಿ ಬಂಗ್ಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ, ಹಾಗೂ ಇನ್ನಿತರ ಸರಕಾರಿ ಕಚೇರಿಗಳು ಇಲ್ಲಿವೆ. ಧೂಳೇಳುತ್ತಿರುವ ರಸ್ತೆಯಲ್ಲಿ ನಡೆದು ಸಾಗುವ ಸಾರ್ವಜನಿಕರಿಗೆ ಕಣ್ಣಿನ ಶ್ವಾಸಕೋಶದ ತೊಂದರೆಗಳು ಬಾಧಿಸುವ ಸಾದ್ಯತೆಗಳು ಇಲ್ಲಿವೆ. ತಕ್ಷಣ ಜಿಲ್ಲಾಡಳಿತವು ಈ ರಸ್ತೆಯನ್ನು ದುರಸ್ತಿಪಡಿವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ

ವಾರ್ತಾ ಭಾರತಿ 16 Nov 2025 6:24 pm

ಉಡುಪಿ | ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರ

ಉಡುಪಿ, ನ.16: ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಕರಕುಶಲ ಅಭಿವೃದ್ಧಿ ಮಂಡಳಿಯ ವತಿಯಿಂದ ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರವನ್ನು ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿದ ಹಾವಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗುರುರಾಜ ಕಾರ್ತಿಬೈಲು ಮಾತನಾಡಿ, ಈ ರೀತಿಯ ಕಾರ್ಯಾಗಾರ ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವುದು ನಮಗೊಂದು ಹೆಮ್ಮೆ. ಕಾವಿ ಕಲೆಯನ್ನು ಬೆಳೆಸಿ, ಗ್ರಾಮೋದ್ಯೋಗವನ್ನು ಸೃಜಿಸುವ ಡಾ.ಹಾವಂಜೆ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು. ಮಣ್ಣಿನ ಉತ್ಪನ್ನಗಳು, ಬಟ್ಟೆ, ಮರ ಮೊದಲಾದ ವಿವಿಧ ಮಾಧ್ಯಮದಲ್ಲಿ ಕಾವಿ ಕಲೆಯ ವಿನ್ಯಾಸಗಳನ್ನು ಬೆಳೆಸುವ ಈ ಕಾರ್ಯಾಗಾರವು ಸುಮಾರು 25 ದಿನಗಳ ಕಾಲ ನಡೆಯಲಿದ್ದು, ಉಡುಪಿ ಭಾಗದ ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಪನ್ಮೂಲ ವ್ಯಕ್ತಿ ಹಾಗೂ ಕಾವಿ ಕಲಾವಿದ ಡಾ.ಜನಾರ್ದನ ಹಾವಂಜೆ ತಿಳಿಸಿದರು. ದೆಹಲಿಯ ವಿನ್ಯಾಸಗಾರ ಬ್ರಿಜೇಶ್ ಜೈಸ್ವಾಲ್ ಈ ಕಾರ್ಯಾಗಾರದಲ್ಲಿ ಕಲಾವಿದರು ವಿನ್ಯಾಸಗಳ ಬೆಳವಣಿಗೆಗೆ ಸಹಕರಿಸುವರಲ್ಲದೇ ವಿವಿಧ ಮಾಧ್ಯಮಗಳ ಮೇಲೆ ಇದರ ಬಳಕೆ ಸಾಧ್ಯತೆಯನ್ನು ಪ್ರಯೋಗಿಸಲಿದ್ದಾರೆ. ಪುತ್ತೂರಿನ ಕುಂಬಾರರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜನಾರ್ದನ ಮೂಲ್ಯ, ಕರಕುಶಲ ನಿಗಮದ ಎಚ್ಪಿಒ ಸುಪ್ರಿಯಾ ಭಾರದ್ವಾಜ್ ಹಾಗೂ ಕಾವಿ ಆರ್ಟ್ ಫೌಂಡೇಶನ್ನ ಮಂಜುನಾಥ ರಾವ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 16 Nov 2025 6:21 pm

ಬ್ರಹ್ಮಾವರ | ನ.23ರಂದು ಶೋಷಿತ ಜನ ಜಾಗೃತಿ ಸಮಾವೇಶ

ಬ್ರಹ್ಮಾವರ, ನ.16: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಶೋಷಿತ ಜನ ಜಾಗೃತಿ ಸಮಾವೇಶ’ವನ್ನು ಬ್ರಹ್ಮಾವರ ಹೊಟೇಲ್ ಆಶ್ರಯ ಸಭಾಭವನದಲ್ಲಿ ನ.23ರಂದು ಬೆಳಗ್ಗೆ 10ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ವಹಿಸಲಿರುವರು. ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನ ಪದಾಧಿಕಾರಿಗಳ ಪ್ರಮಾಣ ವಚನ ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 16 Nov 2025 6:18 pm

ಚಿತ್ತಾಪುರ: ಪೊಲೀಸ್ ಬಂದೋಬಸ್ತ್ ನಲ್ಲಿ ಆರೆಸ್ಸೆಸ್ ಪಥ ಸಂಚಲನ

ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸುಮಾರು 300 ಗಣವೇಶಧಾರಿಗಳಿಂದ ಆರೆಸ್ಸೆಸ್ ಪಥ ಸಂಚಲನ ರವಿವಾರ ನಡೆಯಿತು. ಚಿತ್ತಾಪುರ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾದ ಪಥ ಸಂಚಲನ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ ವೃತ್ತ, ಅಂಬೇಡ್ಕರ್ ವೃತ್ತ, ರಾಘವೇಂದ್ರ ಖಾನಾವಳಿ, ಕೆನರಾ ಬ್ಯಾಂಕ್, ತಾ.ಪಂ ಕಚೇರಿ ವೃತ್ತದ ಮೂಲಕ ಪುನಃ ಬಜಾಜ್ ಕಲ್ಯಾಣ ಮಂಟಪಕ್ಕೆ ತಲುಪಿತು. 300 ಗಣವೇಶಧಾರಿಗಳು ಹಾಗೂ 50 ಜನ ಘೋಷವಾದಕರಿಂದ ಪಥ ಸಂಚಲನ ನಡೆಯಿತು. ಪಥ ಸಂಚಲನದಲ್ಲಿ ಭಾಗವಹಿಸಿದ ಗಣವೇಶಧಾರಿಗಳಿಗೆ ಹಲವರು ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಆರೆಸ್ಸೆಸ್ ನ ಹಲವು ಮುಖಂಡರು ಸೇರಿದಂತೆ ಇತರರು ಇದ್ದರು. ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.            

ವಾರ್ತಾ ಭಾರತಿ 16 Nov 2025 6:03 pm

ಮಂಗಳೂರು | ಯೆನೆಪೋಯ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಮಂಗಳೂರು, ನ.16: ಯೆನೆಪೊಯ ಶಾಲೆ ಮತ್ತು ಮಂಗಳೂರು ಕ್ವಿಝಿಂಗ್ ಫೌಂಡೇಶನ್ ಸಹಯೋಗದೊಂದಿಗೆ ಮಂಗಳೂರು ಮತ್ತು ಉಡುಪಿಯ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಅಂತರ್ ಕಾಲೇಜು ಮತ್ತು ಅಂತರ್‌ಶಾಲಾ ರಸಪ್ರಶ್ನೆ ಸ್ಪರ್ಧೆ ಯೆನೆಕ್ವಿಝ್ ನ.14 ಮತ್ತು 15 ರಂದು ಶಾಲಾ ಆವರಣದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಮಂಗಳೂರು ಮತ್ತು ಉಡುಪಿಯ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆ 5 ರಿಂದ 8ನೇ ತರಗತಿಯವರೆಗಿನ ವಿಭಾಗದ ಸ್ಪರ್ಧೆಯಲ್ಲಿ ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ ಅದ್ವೈತ್ ಟಿ. ಪಡಿಯಾರ್ ಮತ್ತು ಪ್ರಣವ್ ಕೋಟೆಕರ್ ಪ್ರಥಮ ಸ್ಥಾನ ಪಡೆದರು. ಮಂಗಳೂರಿನ ಪಣಂಬೂರಿನ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ ಕೆ. ಅಭಯ್ ನಾಯರ್ ಮತ್ತು ಸೋನಿತ್ ಶೆಟ್ಟಿ ಕಿದೂರ್ ದ್ವಿತೀಯ ಸ್ಥಾನ ಪಡೆದರು. ಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಶಾಲೆಯ ಸೃಜನ್ ಎನ್.ವೈ ಮತ್ತು ವಿಭವ್ ಕಲ್ಕೂರಾ ತೃತೀಯ ಸ್ಥಾನ ಪಡೆದರು. ಎರಡನೇ (9- 12) ವಿಭಾಗದಲ್ಲಿ ಬ್ರಹ್ಮಾವರದ ಲಿಟಲ್ ರಾಕ್ ಶಾಲೆಯ ಸ್ಕಂದ ಜೆ.ಶೆಟ್ಟಿ ಮತ್ತು ತಕ್ಷಕ್ ಶೆಟ್ಟಿ ಪ್ರಥಮ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದರು. ಸಿಎಫ್‌ಎಎಲ್‌ನ ವಿದ್ಯುತ್ ಅಜಿತ್ ಸೋಮನ್ ಮತ್ತು ಶಾಂತನು ವೈಭವ್ ಅನೀಶ್ ಪ್ರಥಮ ರನ್ನರ್ ಅಪ್ ಪ್ರಶಸ್ತಿಯನ್ನು, ಸೈಂಟ್ ಥೆರೆಸಾದ ಶನ್ನಾರ ಕಡಿದಾಲ್ ಮತ್ತು ಸುಮೇಧ್ ರಾವ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಗಿಟ್ಟಿಸಿಕೊಂಡರು. ಮಂಗಳೂರು ಕ್ವಿಝಿಂಗ್ ಫೌಂಡೇಶನ್ ಅಧ್ಯಕ್ಷ ಡಾ.ಅಣ್ಣಪ್ಪ ಕಾಮತ್, ಯೆನೆಪೊಯ ಶಾಲೆಯ ಅಸೋಸಿಯೇಟ್ ಡೈರೆಕ್ಟರ್ ಆಂಟನಿ ಜೋಸೆಫ್ ಯೆನೆಕ್ವಿಝ್ 2025 ವಿಜೇತರಿಗೆ ನಗದು ಬಹುಮಾನ ವಿತರಿಸಿದರು.        

ವಾರ್ತಾ ಭಾರತಿ 16 Nov 2025 5:55 pm

KPCC ಅಧ್ಯಕ್ಷರ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಶಾಕಿಂಗ್ ಹೇಳಿಕೆ

ಬೆಂಗಳೂರು, ನವೆಂಬರ್‌ 16: ಬಿಹಾರ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಬಿಹಾರ ಫಲಿತಾಂಶದ ಬೆನ್ನಲ್ಲೇ ದಿಢೀರ್ ದೆಹಲಿಗೆ ಹಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಯಾಗಿದ್ದು, ಕೈ

ಒನ್ ಇ೦ಡಿಯ 16 Nov 2025 5:54 pm

ಕಾವಳಕಟ್ಟೆ | ಹಿದಾಯ ವಿಶೇಷ ಚೇತನ ಮಕ್ಕಳ ವಸತಿಯುತ ಶಾಲಾ ದಶಮಾನೋತ್ಸವ

ಬಂಟ್ವಾಳ : ಕಾವಳಕಟ್ಟೆ- ಗುರಿಮಜಲು ಹಿದಾಯ ವಿಶೇಷ ಮಕ್ಕಳ ವಸತಿಯುತ ಶಾಲೆಯ ದಶಮಾನೋತ್ಸವ ಸಮಾರಂಭವು ಇಲ್ಲಿನ ಹಿದಾಯ ಶೇರ್ ಮತ್ತು ಕೇರ್ ಕಾಲೊನಿಯಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಪೂರ್ವಭಾವಿಯಾಗಿ ಕಾವಳಕಟ್ಟೆ ಶಾಲಾ ಬಳಿಯಿಂದ ವಿಶೇಷ ಶಾಲೆಯ ಆವರಣದವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರ ಮೆರವಣಿಗೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿದಾಯ ವಿಶೇಷ ಶಾಲೆ ಆರಂಭವಾಗಿ ಹಾಗೂ ಹತ್ತು ವರ್ಷಗಳು ಪೂರ್ಣಗೊಂಡ ನೆನಪಿನಲ್ಲಿ ಜಿಲ್ಲೆಯ ಇಬ್ಬರು ಸಾಧಕ ವಿಶೇಷ ಮಕ್ಕಳಿಗೆ ಸನ್ಮಾನ, ವಿಶೇಷ ಮಕ್ಕಳ ಶಿಕ್ಷಕಿಯವರಿಗೆ ಗೌರವಾರ್ಪಣೆ, ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿದಾಯ ಫೌಂಡೇಶನ್ ಚೇರ್ಮೆನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯಾ ಜೋಕಟ್ಟೆ ವಹಿಸಿದ್ದರು. ದಶಮಾನೋತ್ಸವ ಸಮಾರಂಭವನ್ನು ಫಲಕ ಅನಾವರಣಗೊಳಿಸುವ ಮೂಲಕ ದುಬಾಯಿಯ ಗಡಿಯಾರ್ ಗ್ರೂಪ್ ಆಫ್ ಕಂಪೆನಿ ಚೇರ್ಮೆನ್ ಇಬ್ರಾಹಿಂ ಗಡಿಯಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಮಾತನಾಡಿ, ಸಮಾಜದ ಒಳಿತಿಗಾಗಿ ನಡೆಸಲ್ಪಡುವ ಎಲ್ಲಾ ಕಾರ್ಯಗಳು ದೇವರು ಮೆಚ್ಚುವ ಕಾರ್ಯಗಳಾಗಿವೆ. ಇಂತವುಗಳ ಬಗ್ಗೆ ಹೆಚ್ಚು ಪ್ರಚಾರ ನೀಡಬೇಕಾಗಿದೆ ಎಂದರು. ಬಂಟ್ವಾಳ ತೌಹೀದ್ ಶಿಕ್ಷಣ ಸಂಸ್ಥೆಗಳ ಆಧ್ಯಕ್ಷ ರಿಯಾಝ್ ಬಂಟ್ವಾಳ, ಹಿದಾಯ ಫೌಂಡೇಶನ್ ನ ವೈಸ್ ಚೇರ್ಮೆನ್ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಸಂಸ್ಥೆಯ ಆಡಳಿತಾಧಿಕಾರಿ‌ ಆಬಿದ್ ಅಸ್ಗರ್ ಅತಿಥಿಗಳಾಗಿ ಭಾಗವಹಿಸಿದ್ದರು . ಹಿದಾಯ ಫೌಂಡೇಶನ್ ನ ಎಫ್.ಎಂ.ಬಶೀರ್, ಆಸಿಫ್ ಇಕ್ಬಾಲ್, ಮಕ್ಬೂಲ್ ಅಹ್ಮದ್, ಕೆ.ಎಸ್ ಅಬೂಬಕ್ಕರ್, ಹಂಝ ಆನಿಯಾ ದರ್ಬಾರ್ ಬಸ್ತಿಕೋಡಿ,‌ ಇದ್ದಿನ್ ಕುಂಞಿ, ಬಶೀರ್ ವಗ್ಗ , ಹಕೀಂ ಸುನ್ನತ್ ಕೆರೆ,‌ ಆಶಿಕ್ ಕುಕ್ಕಾಜೆ, ಇಲ್ಯಾಸ್ ಕಕ್ಕಿಂಜೆ, ಪಿ.ಮುಹಮ್ಮದ್,‌ ಸಾದಿಕ್ ಹಸನ್, ಅಬೂಬಕ್ಕರ್ ಸಿದ್ದೀಕ್, ಇಫ್ತಿಕಾರ್ ಅಹಮದ್, ರಶೀದ್ ಕಕ್ಕಿಂಜೆ, ಶರೀಫ್ ಮುಕ್ರಂಪಾಡಿ‌,‌ ಇಬ್ರಾಹೀಂ‌ ಖಲೀಲ್ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯೆಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯಾ ಜೋಕಟ್ಟೆ ಅವರನ್ನು ಹಿದಾಯ ವಿಶೇಷ ಚೇತನ ವಿದ್ಯಾರ್ಥಿಗಳು ಅಭಿನಂದಿಸಿದರು. ಸಾಧಕ ವಿದ್ಯಾರ್ಥಿಗಳಾದ ಫಾತಿಮಾ ಸುಝ್ನ, ಮಾಸ್ಟರ್‌ ಮೋಕ್ಷಿತ್ ಸಿ. ಮಾರ್ಧಾಳ, ಶಯಾನ್, ಮುಹಮ್ಮದ್ ನಝೀಂ ಅವರನ್ನು ಸನ್ಮಾನಿಸಲಾಯಿತು. ಡಾ.ಫಾತಿಮಾ‌ ಸುಹಾನ ವಿಶೇಷ ಮಕ್ಕಳ ಪಾಲನೆ‌ ಮತ್ತು ಪೋಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮ‌ ನಡೆಸಿಕೊಟ್ಟರು ಕಾರ್ಯಕ್ರಮದಲ್ಲಿ ಸದಸ್ಯ ಬಿ.ಎಂ. ತುಂಬೆ ಸ್ವಾಗತಿಸಿದರು, ಮುಖ್ಯ ಶಿಕ್ಷಕಿ ಆಶಾಲತಾ ಶಾಲಾ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿ ಮುಹಮ್ಮದ್ ಅಲಿ ಖಿರಾತ್ ಪಠಿಸಿದರು. ಹಕೀಂ ಕಲಾಯಿ ವಂದಿಸಿ, ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.    

ವಾರ್ತಾ ಭಾರತಿ 16 Nov 2025 5:45 pm

ಉಡುಪಿ | ನಿರಂತರ ರಕ್ತದಾನದಿಂದ ಉತ್ತಮ ಆರೋಗ್ಯ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ನ.16: ಪ್ರಸ್ತುತ ಕಾಲ ಘಟ್ಟದಲ್ಲಿ ರಕ್ತದ ಬೇಡಿಕೆ ವಿಫುಲವಾಗಿದ್ದು, ವ್ಯಕ್ತಿ ಅನಾರೋಗ್ಯ ಪೀಡಿತನಾದಾಗ ಅಪಘಾತಕ್ಕೀಡಾದಾಗ ತುರ್ತು ರಕ್ತದ ಅವಶ್ಯಕತೆ ನಿರಂತರವಾಗಿದ್ದು, ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹ ಮಾಡಿದಾಗ ಪೂರೈಕೆ ಸುಲಭವಾಗುತ್ತದೆ. ಹಾಗೆಯೇ ಸತತವಾಗಿ ರಕ್ತದಾನ ಮಾಡುವುದರಿಂದ ದಾನಿಯು ಅರೋಗ್ಯ ಕರವಂತನಾಗುತ್ತಾನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ನೆಸ್ಫಿಟ್ ಜಿಮ್ ಮಣಿಪಾಲ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತ ಕೇಂದ್ರ ಕೆಎಂಸಿ ಮಣಿಪಾಲ ಸಹಕಾರದಲ್ಲಿ ರವಿವಾರ ಮಣಿಪಾಲ ಕೆಎಂಸಿಯ ರಕ್ತನಿಧಿ ಕೇಂದ್ರದಲ್ಲಿ ಏರ್ಪಡಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಧ್ಯಕ್ಷತೆಯನ್ನು ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ.ಗಣೇಶ್ ಮೋಹನ್ ವಹಿಸಿದ್ದರು. ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ, ಮಣಿಪಾಲ ಎಂಐಟಿಯ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಬಾಲಕೃಷ್ಣ ಮದ್ದೋಡಿ, ಕಸ್ತೂರ್ಬಾ ಆಸ್ಪತ್ರೆಯ ಸುರಕ್ಷಾ ಅಧಿಕಾರಿ ಕ್ಲಿಂಗ್ ಜಾನ್ಸನ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಹಾಗೂ ರಕ್ತದಾನ ಶಿಬಿರದ ಮುಖ್ಯ ರೂವಾರಿ ವೆಲ್ನೆಸ್ ಜಿಮ್ನ ತಿಲಕ್ ಶೆಟ್ಟಿ, ರಕ್ತ ಕೇಂದ್ರದ ಸವಿನ ಹಾಗೂ ಅಮಿತ ಶೆಟ್ಟಿ ಉಪಸ್ಥಿತರಿದ್ದರು. ಸಾಜನ್ ಸತೀಶ್ ಸಾಲ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ್ ವಂದಿಸಿದರು.

ವಾರ್ತಾ ಭಾರತಿ 16 Nov 2025 5:39 pm

Bescom Outages: ಬೆಂಗಳೂರಿನ 20 ಕ್ಕೂ ಅಧಿಕ ಬಡಾವಣೆಗಳಲ್ಲಿ ಮಂಗಳವಾರ (ನ.18) ವಿದ್ಯುತ್‌ ಕಡಿತ! ಎಲ್ಲೆಲ್ಲಿ?

ಬೆಂಗಳೂರಿನಲ್ಲಿ ನವೆಂಬರ್ 18 ರಂದು ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತವಾಗಲಿದೆ. ಶೋಭಾ ಸಿಟಿ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ಶೋಭಾ ಸಿಟಿ, ಚೊಕ್ಕನಹಳ್ಳಿ, ನೂರ್ ನಗರ, ಆರ್ ಕೆ ಹೆಗ್ಡೆ ನಗರ ಸೇರಿದಂತೆ ಹಲವು ಬಡಾವಣೆಗಳು ಇದರಿಂದ ಬಾಧಿತವಾಗಲಿವೆ. ಯಾವೆಲ್ಲಾ ಬಡಾವಣೆಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬ ವಿವರ ಇಲ್ಲಿದೆ.

ವಿಜಯ ಕರ್ನಾಟಕ 16 Nov 2025 5:38 pm

ಕೋಲ್ಕತಾ ಟೆಸ್ಟ್ ನಲ್ಲಿ ಹೊಸ ದಾಖಲೆ; ನಾಲ್ಕೂ ಇನ್ನಿಂಗ್ಸ್ ಗಳಲ್ಲಿ ಈ ರೀತಿ ಆಗಿದ್ದು 24361 ದಿನಗಳಲ್ಲಿ ಇದೇ ಮೊದಲು!

ಟೆಸ್ಟ್ ಕ್ರಿಕೆಟ್ ನಲ್ಲಿ ನಾಲ್ಕೂ ಇನ್ನಿಂಗ್ಸ್ ಗಳಲ್ಲಿ ಯಾವ ತಂಡವೂ 200 ರನ್ ಗಳ ಗಡಿ ದಾಟದಿರುವುದು ಬಹಳ ಅಪರೂಪ. ಒಟ್ಟು 12 ಬಾರಿ ಮಾತ್ರ ಇಂತಹ ಘಟನೆಗಳು ನಡೆದಿವೆ. ಕೊನೆಯ ಬಾರಿಗೆ ಇಂತಗ ಘಟನೆ ನಡೆದಿರುವು 1959ರಲ್ಲಿ. ಅದಾಗಿ 67 ವರ್ಷಗಳ ಬಳಿಕ ಅಂದರೆ 24361 ದಿನಗಳಲ್ಲಿ ಇದೀಗ ಈ ಘಟನೆ ನಡೆದಿದೆ. ಇಡೀ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಅವರನ್ನು ಹೊರತುಪಡಿಸಿದರೆ ಇತ್ತಂಡಗಳಿಂದಲೂ ಯಾವ ಬ್ಯಾಟರ್ ಸಹ 50 ರನ್ ಗಳ ಗಡಿ ದಾಟಲಿಲ್ಲ.

ವಿಜಯ ಕರ್ನಾಟಕ 16 Nov 2025 5:38 pm

ಶಿರ್ವ | ದುಂಡಾವರ್ತನೆ ತೋರಿದ ಸರ್ವೇಯರ್ ವಿರುದ್ಧ ಕ್ರಮಕ್ಕೆ ಕೃಷಿಕರಿಂದ ಕಾಪು ಶಾಸಕರಿಗೆ ಮನವಿ

ಶಿರ್ವ, ನ.16: ಶಿರ್ವ ಗ್ರಾಮದ ಬಂಟಕಲ್ಲು ಅರಸೀಕಟ್ಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಜಮೀನು ಸರ್ವೇಮಾಡಲು ಬಂದಿದ್ದ ಸರ್ವೇಯರ್ ಮತ್ತು ಆತನ ಸಹಾಯಕ ಯಾವುದೇ ಕಾನೂನು ಪಾಲಿಸದೆ ಪಕ್ಕದ ಜಮೀನುಗಳವರೊಂದಿಗೆ ದುಂಡಾವರ್ತನೆ ನಡೆಸಿದ್ದು, ಈ ಸರ್ವೆಯರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘವು ಕಾಪು ತಹಶೀಲ್ದಾರ್ ಮತ್ತು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರಿ ಮನವಿ ಸಲ್ಲಿಸಿದೆ. ಜಮೀನು ಅಳತೆಗೆ ಹೊರಡುವ ಮೊದಲು ಸರ್ವೇಯರ್ ಅದರ ನಾಲ್ಕೂ ಪಕ್ಕದ ಜಮೀನುಗಳವರಿಗೆ ಸಾಕಷ್ಟು ಮುಂಚಿತವಾಗಿ ನೋಟೀಸು ನೀಡಬೇಕು. ನಕ್ಷೆ ಪ್ರಕಾರವೇ ಜಮೀನು ಅಳತೆ ಮಾಡಿ ಗುರುತುಗಳಿಗೆ ಗಡಿಕಲ್ಲು ಅಳವಡಿಸಬೇಕು. ಇದಾವುದನ್ನೂ ಪಾಲಿಸದೆ ಏಕಾಏಕಿ ಬಂದಿದ್ದ ಸರ್ವೇಯರ್ ತನ್ನಿಷ್ಟದಂತೆ ಎಲ್ಲಾ ಅಳತೆ, ಗಡಿಗುರುತು ಕಾರ್ಯ ಮುಗಿಸಿಯಾದ ಮೇಲೆ ಪಕ್ಕದ ಜಮೀನಿನವರನ್ನು ಫೋನ್ ಕರೆ ಮಾಡಿ ಕರೆದಿದ್ದರು. ಮೊದಲೇ ಮಾಹಿತಿ ನೀಡದೆ ಸರ್ವೇ ಮಾಡಲು ಬಂದಿರುವುದಲ್ಲದೆ, ತಪ್ಪಾದ ಅಳತೆ, ಗಡಿ ಗಲ್ಲು ಎಲ್ಲೆಲ್ಲೋ ಅಳವಡಿಸಿ, ಎಲ್ಲಾ ಮುಗಿದ ಮೇಲೆ ಕರೆ ಮಾಡಿರುವುದಕ್ಕೆ ಪಕ್ಕದ ಜಮೀನಿನವರು ಆಕ್ಷೇಪವೆತ್ತಿದರು. ಅಷ್ಟಕ್ಕೇ ಆ ಸರ್ವೇಯರ್ ಮತ್ತು ಸಹಾಯಕ ಇಬ್ಬರೂ ತಾವು ಮಾಡಿದ್ದೇ ಕಾನೂನು, ಹೇಳಿದ್ದೇ ಕಾನೂನು ಎನ್ನುವ ರೀತಿಯ ದುಂಡಾವರ್ತನೆ ತೋರಿದ್ದಾರೆ. ಅಲ್ಲದೆ ಗೂಂಡಾಗಳಂತೆ ಮನಬಂದಂತೆ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನಸಾಮಾನ್ಯರ ಸೇವೆಗೆಂದು ನಿಯುಕ್ತಿಗೊಂಡಿರುವ ನೌಕರರ ಈ ರೀತಿ ಕಾನೂನು ಬಾಹಿರ ವರ್ತನೆ, ದೌರ್ಜನ್ಯ ನಡೆಸಿರುವುದು ಸಮರ್ಥನೀಯವಲ್ಲ. ಇರುವ ಕಾನೂನು ಪಾಲಿಸದ ಇಂಥಹವರು ಸರಕಾರಿ ನೌಕರಿ ಮಾಡಲು ಅನರ್ಹರು. ಮೇಲಾಧಿಕಾರಿಗಳು ತನಿಖೆ ನಡೆಸಿ, ಈ ಸರ್ವೇಯರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಾಪು ತಹಶೀಲ್ದಾರರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಎಚ್ಚರಿಸಿದ್ದಾರೆ.

ವಾರ್ತಾ ಭಾರತಿ 16 Nov 2025 5:37 pm

ʻ50 ಸಾವಿರಕ್ಕೆ ಇಬ್ಬರು ಇಂಟರ್ನ್‌ಗಳು ಸಿಗುತ್ತಾರೆ, ಕಾಫಿ ಮೆಷಿನ್ ಬೇಕೇ?ʼ; ನೋಯ್ಡಾ CEO ಯೋಚನೆಗೆ ನೆಟ್ಟಿಗರು ಕಿಡಿ

ನೋಯ್ಡಾ ಮೂಲದ ಐಟಿ ಕಂಪನಿಯೊಂದರ ಸಿಇಒ, ಕಚೇರಿಯಲ್ಲಿ ಕಾಫಿ ಮೆಷಿನ್ ಅಳವಡಿಸುವಂತೆ ಕೇಳಿದ ಇಂಟರ್ನ್‌ಗಳಿಗೆ ನೀಡಿದ ಉತ್ತರವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 50 ಸಾವಿರಕ್ಕೆ ಉದ್ಯೋಗಿಗಳನ್ನು ಖರೀದಿಸಬಹುದು. ಅಷ್ಟೊಂದು ಹಣವನ್ನು ಕಾಫಿ ಮೆಷಿನ್‌ಗೆ ಮೇಲೆ ಹೂಡಿಕೆ ಮಾಡೋದು ಯಾಕೆ? ಎಂದು ಹೇಳಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ವಿಜಯ ಕರ್ನಾಟಕ 16 Nov 2025 5:32 pm

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ತಿರುವನಂತಪುರಂನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಆತ್ಮಹತ್ಯೆ

ತಿರುವನಂತಪುರಂನ ಆರ್‌ಎಸ್‌ಎಸ್‌ ಕಾರ್ಯಕರ್ತ ಆನಂದ್ ತಂಬಿ ಎನ್ನುವವರು ಬಿಜೆಪಿ ಟಿಕೆಟ್ ನಿರಾಕರಣೆ ಮತ್ತು ಸ್ಥಳೀಯ ನಾಯಕರ ಮಾನಸಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇವರು ತಮ್ಮ ಆತ್ಮಹತ್ಯಾ ಟಿಪ್ಪಣಿಯಲ್ಲಿ ಹಲವು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಾಯಕರು 'ಮಣ್ಣು ಮಾಫಿಯಾ'ದಲ್ಲಿ ಭಾಗಿಯಾಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರ ಸರಣಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಈ ಪ್ರಕರಣ ಇದಕ್ಕೆ ಹೊಸ ಸೇರ್ಪಡೆ ಯಾಗಿದೆ.

ವಿಜಯ ಕರ್ನಾಟಕ 16 Nov 2025 5:30 pm

ಉಡುಪಿ | ಬಡವರ ಕಣ್ಣೀರೊರೆಸುವ ಕಾರ್ಯ ಎಲ್ಲ ಸೇವೆಗಿಂತ ಮಿಗಿಲು : ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ, ನ.16: ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ. ಇದು ಪವಿತ್ರ ಧರ್ಮಸಭೆಯ ಆಶಯವೂ ಕೂಡ ಆಗಿದ್ದು, ಪ್ರತಿಯೊಬ್ಬರು ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಕೆಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ. ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ದಾನಿ ಜೋಸೆಫ್ ಮಿನೇಜಸ್ ಸಾಸ್ತಾನ ನೇತೃತ್ವದಲ್ಲಿ ಮತ್ತು ಫ್ರೀಡಾ ರೇಗೊ ಮತ್ತು ಬೆಸಿಲ್ ಪಿಂಟೊ ಇವರ ಸಹಕಾರದೊಂದಿಗೆ ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ಉಡುಪಿ ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ ಶೇ.50 ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಯನ್ನು ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು. ಬಡವರ ನೋವಿಗೆ ಎಷ್ಟು ನಾವು ದನಿಯಾಗುತ್ತೇವೆಯೋ ಅಷ್ಟು ನಾವು ದೇವರ ಪ್ರೀತಿಯನ್ನು ಗಳಿಸುವಂತವರಾಗುತ್ತೇವೆ. ಸಮಾಜದ ಅತ್ಯಂತ ಬಡವರ, ನೊಂದವರ ಕಣ್ಣೊರೆಸಿದಾಗ ಅಂತಹ ಸೇವೆ ದೇವರನ್ನು ತಲುಪುತ್ತದೆ. ಇಂತಹ ಸೇವೆ ಜೊಸೇಫ್ ಮಿನೇಜಸ್ ಮತ್ತವರ ತಂಡ ಕೆಥೊಲಿಕ್ ಸಭಾ ಸಂಘಟನೆಯ ಮೂಲಕ ಮಾಡಲು ಮುಂದೆ ಬಂದಿರುವುದು ಶ್ಲಾಘನೀಯ ಸಂಗತಿಯಾಗಿದೆ. ಈ ಸೇವೆ ನಿರಂತರವಾಗಿ ನೆರವೇರಲಿ ಎಂದು ಶುಭಹಾರೈಸಿದರು. ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ.ಡೆನಿಸ್ ಡೆಸಾ ಮಾತನಾಡಿ, ತನ್ನ ಸೇವೆಯ ಮೂಲಕ ಇನ್ನೊಬ್ಬರ ಜೀವನದಲ್ಲಿ ಸಂತೋಷವನ್ನು ಕಾಣುವುದು ಪ್ರತಿಯೊಬ್ಬ ಮಾನವನ ಉದ್ದೇಶವಾದಾಗ ಸಮಾಜದಲ್ಲಿ ಬಡವರೂ ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯವಿದೆ. ಪ್ರತಿಯೊಬ್ಬರಿಗೂ ಜನನ ಉಚಿತ ಮರಣ ಖಚಿತ ಆದರೆ ಅವೆರಡರ ನಡುವಿನ ನಮ್ಮ ಜೀವನ ಪರರ ಸೇವೆಯಲ್ಲಿ ವಿನಿಯೋಗಿಸಿದಾಗ ಸಾರ್ಥಕತೆ ಕಾಣುತ್ತದೆ ಎಂದರು. ವೈದ್ಯೆ ಡಾ.ಮೇಘಾ ಪೈ ಮಾತನಾಡಿ, ಮೊದಲಿನ ಆಹಾರ ಪದ್ಧತಿಗೂ ಇಂದಿನ ಆಹಾರ ಪದ್ಧತಿಗೂ ವ್ಯತ್ಯಾಸಗೊಂಡು ಆರೋಗ್ಯದಲ್ಲಿನ ವ್ಯವಸ್ಥೆಯೂ ಸಹ ವ್ಯತ್ಯಾಸಗೊಂಡಿದೆ. ಇಂದಿನ ಜಂಕ್ ಫುಡ್ ಆಹಾರ ಶೈಲಿಯಿಂದಾಗಿ ಹೃದಯ ಸಂಬಂಧಿ ತೊಂದರೆ, ಡಯಾಬಿಟಿಸ್, ಕಿಡ್ನಿ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಿದೆ. ಆದ್ದರಿಂದ ಆಹಾರ ಪದ್ದತಿಯಲ್ಲಿ ಹಿತಮಿತವನ್ನು ಕಾಪಾಡಿಕೊಳ್ಳುವುದರಿಂದ ಮೂತ್ರಪಿಂಡದಂತಹ ಸಮಸ್ಯೆಗಳಿಂದ ದೂರವಿರಲು ಸಾಧ್ಯವಿದೆ ಎಂದರು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಹೊರತಂದ ರಕ್ತದಾನಿಗಳ ವಿವರವುಳ್ಳ ಡೈರಕ್ಟರಿ, ಮುಂದಿನ ವರ್ಷದಲ್ಲಿ ಆರೋಗ್ಯ ಯೋಜನೆಗಳ ಸಹಾಯಾರ್ಥವಾಗಿ ಹಮ್ಮಿಕೊಂಡ ಜೋಶಲ್ ಅವರ ಸಂಗೀತ ಕಾರ್ಯಕ್ರಮದ ಪೋಸ್ಟರ್ನ್ನು ಅನಾವರಣಗೊಳಿಸಲಾಯಿತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಮೂವರು ರೋಗಿಗಳಿಗೆ ಸಾಂಕೇತಿಕವಾಗಿ ಗುರುತಿನ ಕಾರ್ಡ್ಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಯ ರೂವಾರಿಗಳಾದ ಜೊಸೇಫ್ ಮಿನೇಜಸ್ ಸಾಸ್ತಾನ ಮತ್ತು ಬೆಸಿಲ್ ಪಿಂಟೊ ದಂಪತಿ ಹಾಗೂ ಸ್ನೇಹಾಲಯ ಆಶ್ರಮದ ನಿರ್ದೇಶಕ ಜೋಸೇಫ್ ಕ್ರಾಸ್ತಾ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ರೊನಾಲ್ಡ್ ಆಲ್ಮೇಡಾ ವಹಿಸಿದ್ದರು. ವಾಗ್ಮಿ ರಫೀಕ್ ಮಾಸ್ಟಒ್ಡ ಮಂಗಳೂರು, ಕಥೊಲಿಕ್ ಸಭಾ ಉಡುಪಿ ಪ್ರದೇಶ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಕೋಶಾಧಿಕಾರಿ ಉರ್ಬಾನ್ ಲೂವಿಸ್ ಮೊದಲಾದವರು ಉಪಸ್ಥಿತರಿದ್ದರು. ರೊನಾಲ್ಡ್ ಆಲ್ಮೇಡಾ ಸ್ವಾಗತಿಸಿ, ಜೊಯೇಲ್ ಆಲ್ಮೇಡಾ ವಂದಿಸಿದರು, ಆಲ್ವಿನ್ ಅಂದ್ರಾದ್ರೆ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಜಿಲ್ಲಾ ವ್ಯಾಪ್ತಿಯ ನಿಗದಿತ ಆಸ್ಪತ್ರೆಗಳಲ್ಲಿ ಈ ಸೌಲಭ್ಯವನ್ನು ಆರಂಭಿಸಲಾಗಿದ್ದು ಪ್ರಾಥಮಿಕ ಹಂತದಲ್ಲಿ ಕಲ್ಯಾಣಪುರ ಸಂತೆಕಟ್ಟೆಯ ಗೊರೆಟ್ಟಿ ಆಸ್ಪತ್ರೆ ಮತ್ತು ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಕಳ ಮತ್ತು ಕುಂದಾಪುರದ ನಿಗದಿತ ಆಸ್ಪತ್ರೆಗಳಿಗೆ ಕೂಡ ಸೇವೆಯನ್ನು ವಿಸ್ತರಿಸಲಾಗುತ್ತದೆ.

ವಾರ್ತಾ ಭಾರತಿ 16 Nov 2025 5:30 pm

ಮಂಗಳೂರು | ಉಚಿತ ನ್ಯಾಚುರೋಪತಿ, ಯೋಗ ಚಿಕಿತ್ಸಾ ಶಿಬಿರ

ಮಂಗಳೂರು, ನ.16: ಎಂಟನೇ ರಾಷ್ಟ್ರೀಯ ನ್ಯಾಚುರೋಪತಿ ದಿನದ ಅಂಗವಾಗಿ ನರಿಂಗಾನದ ಯೆನೆಪೊಯ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಶ್ರೀ ಮುನೀಶ್ವರ ಮಹಾಗಣಪತಿ ಸೇವಾ ಟ್ರಸ್ಟ್, ಶ್ರೀ ಮುನೀಶ್ವರ ವತಿಯಿಂದ ನ.13ರಂದು ಉಚಿತ ನ್ಯಾಚುರೋಪತಿ ಮತ್ತು ಯೋಗ ಚಿಕಿತ್ಸಾ ಶಿಬಿರ ನಗರದ ಮಹಾಗಣಪತಿ ಕಲಾ ಮಂಟಪದಲ್ಲಿ ನಡೆಯಿತು. ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಡಾ.ಅಭಿಜ್ಞಾ ಮತ್ತು ಡಾ.ಪ್ರತೀಕ್ಷಾ ಭಾಗವಹಿಸಿ, ಶಿಬಿರದಲ್ಲಿ ಚಿಕಿತ್ಸಾ ಸಲಹೆ ಹಾಗೂ ಯೋಗ ಮಾರ್ಗದರ್ಶನ ನೀಡಿದರು. ಒಟ್ಟು 80 ಮಂದಿ ರೋಗಿಗಳುಈ ಶಿಬಿರದಲ್ಲಿ ಭಾಗವಹಿಸಿ, ನ್ಯಾಚುರೋಪತಿ ಮತ್ತು ಯೋಗದ ಮೂಲಕ ಚಿಕಿತ್ಸಾ ಸಲಹೆಗಳು, ಥೆರಪಿಗಳು ಹಾಗೂ ಜೀವನಶೈಲಿ ಮಾರ್ಗದರ್ಶನದಿಂದ ಪ್ರಯೋಜನ ಪಡೆದರು.

ವಾರ್ತಾ ಭಾರತಿ 16 Nov 2025 5:06 pm

ನಿವೃತ್ತ ಧರ್ಮಗುರು ಡೆನಿಸ್ ಡಿ ಸೋಜ

ಮಂಗಳೂರು, ನ.16: ಮಂಗಳೂರಿನ ಹಿರಿಯ ಕ್ರೈಸ್ತ ಧರ್ಮಗುರು ಜೆಪ್ಪುವಿನ ಸೈಂಟ್ ಜುಝ್ ವಾಜ್ ಹೋಂನ ನಿವಾಸಿ ವಂ. ಡೆನಿಸ್ ಡಿ ಸೋಜ (91) ಅವರು ನಿಧನರಾದರು ಮಂಗಳೂರು ಧರ್ಮಪ್ರಾಂತ್ಯದಲ್ಲಿ ಡೆನಿಸ್ ಆರು ದಶಕಗಳಿಗೂ ಹೆಚ್ಚು ಕಾಲ ಧರ್ಮಗುರುವಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಫೆ.15ರ, 1935 ರಂದು ಮೊಡಂಕಾಪುವಿನ ತೊಡಂಬಿಲಾದಲ್ಲಿ ಪಾಲ್ ಡಿ ಸೋಜ ಮತ್ತು ಮೇರಿ ಮ್ಯಾಗ್ಡಲೆನ್ ನೊರೊನ್ಹಾ ದಂಪತಿಯ ಪುತ್ರನಾಗಿ ಜನಿಸಿದ ಡೆನಿಸ್ ಅವರು ಡಿ.4ರ, 1961 ರಂದು ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಶಿರ್ವದಲ್ಲಿ ಸಹಾಯಕ ಧರ್ಮಗುರುಗಳಾಗಿ ಸೇವೆ ಆರಂಭಿಸಿದ ಪಾಂ ದೂರ್, ಬೊಂದೆಲ್, ನಿಡ್ಡೋಡಿ, ಮುಕಮಾರ್, ಕ್ಯಾಸಿಯಾ, ಸುರತ್ಕಲ್ ಮತ್ತು ಸಂಪಿಗೆಯ ಚರ್ಚ್‌ನಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದರು. 2010 ರಲ್ಲಿ ನಿವೃತ್ತರಾಗಿದ್ದರು. ಬಳಿಕ ಜೆಪ್ಪುವಿನ ಸೈಂಟ್ ಜುಝೆ ವಾಜ್ ಹೋಂನಲ್ಲಿ ನೆಲೆಸಿದ್ದರು. ಡೆನಿಸ್ ಅವರ ಮೃತದೇಹದ ಅಂತ್ಯಕ್ರಿಯೆಯ ಬಲಿದಾನ ಮತ್ತು ಅಂತ್ಯಕ್ರಿಯೆ ವಿಧಿವಿಧಾನಗಳು ಸೋಮವಾರ (ನ.17) ಬೆಳಗ್ಗೆ 10.00 ಗಂಟೆಗೆ ವೆಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರರ್ ಚರ್ಚ್‌ನಲ್ಲಿ ನಡೆಯಲಿದೆ.

ವಾರ್ತಾ ಭಾರತಿ 16 Nov 2025 5:02 pm

ಹೂಡೆ | ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಉಡುಪಿ, ನ.16: ವಿಮೆನ್ ಇಂಡಿಯಾ ಮೂವ್ಮೆಂಟ್ ಹೂಡೆ ಶಾಖೆಯ ವತಿಯಿಂದ ಹೂಡೆ ಗುಡ್ಡೇರಿಕಂಬಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಹಾಗೂ ಹಳೆ ವಿದ್ಯಾರ್ಥಿ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯ ಉಸ್ತಾದ್ ಹೈದರ್ ಅಲಿ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿದರು. ಅತಿಥಿಗಳಾಗಿ ವಿಮೆನ್ ಇಂಡಿಯಾ ಮೂಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಝಿಯ ನಸ್ರುಲ್ಲಾ, ಉಡುಪಿ ಜಿಲ್ಲಾ ಕಾರ್ಯದರ್ಶಿ ರಹಮ್ತುನ್ನಿಸಾ, ಜಿಲ್ಲಾ ಸಮಿತಿ ಸದಸ್ಯ ನಸೀಮ್ ಫಾತಿಮಾ, ಉಡುಪಿ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ನಾದಿಯ ಅನ್ಸಾರ್, ಅಂಗನವಾಡಿ ಬಾಲವಿಕಾಸ ಅಧ್ಯಕ್ಷೆ ಫೌಝಿಯಾ ನಯಾಜ್, ಕೆಮ್ಮಣ್ಣು ಗ್ರಾಪಂ ಸದಸ್ಯೆ ಫೌಝಿಯಾ ಸಾದಿಕ್, ಅಂಗನವಾಡಿ ಶಿಕ್ಷಕಿ ಅರ್ಚನಾ, ನಿವೃತ್ತ ಶಿಕ್ಷಕಿ ಶಕುಂತಲಾ ಕುಂದರ್, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 16 Nov 2025 4:55 pm

Udupi | ಮಲ್ಪೆ ಬಂದರು ಭೂಮಿಯ ಅಕ್ರಮ ಗುತ್ತಿಗೆ ರದ್ದತಿಗೆ ಆಗ್ರಹ

ಉಡುಪಿ, ನ.16: ಮಲ್ಪೆ ಕಡಲತೀರದ ಸುಮಾರು ಎಂಟು ಎಕರೆ ಸರಕಾರಿ ಬಂದರು ವ್ಯಾಪ್ತಿಯ ಭೂಮಿಯನ್ನು ಪಾರದರ್ಶಕತೆ ಇಲ್ಲದೆ, ಸಾರ್ವಜನಿಕರ ಅನುಮತಿ ಪಡೆಯದೆ, ಹೊರಗುತ್ತಿಗೆ ನೀಡಲಾಗಿದೆ. ಸರಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ ರದ್ದುಪಡಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಅರುಣ್ ಕುಂದರ್ ಕಲ್ಗದ್ದೆ ಆಗ್ರಹಿಸಿದ್ದಾರೆ. ಮಲ್ಪೆ ಬಂದರು ಸರಕಾರಿ ಭೂಮಿಯ ಅಕ್ರಮ ಗುತ್ತಿಗೆ ಈ ಘಟನೆ ಉಡುಪಿ ಜಿಲ್ಲೆಯ ಜನತೆಗೆ ಆಘಾತ ಮತ್ತು ಅಸಮಾಧಾನ ಉಂಟು ಮಾಡಿದೆ. ಸರಕಾರಿ ಆಸ್ತಿ ಜನರ ಆಸ್ತಿ. ಸಾರ್ವಜನಿಕರಿಗೆ ಸೇರಿದ ಬಂದರು ಪ್ರದೇಶವನ್ನು ಖಾಸಗಿ ಸಂಸ್ಥೆ/ಸಂಘಗಳ ಲಾಭಕ್ಕಾಗಿ ವರ್ಗಾವಣೆ ಮಾಡುತ್ತಿರುವುದು ಕಾನೂನುಬಾಹಿರ, ಅಸಂವಿಧಾನಿಕ ಮತ್ತು ಜನಹಿತವಿರೋಧಿ ಕ್ರಮವಾಗಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳ ಪರಿಶೀಲನೆ, ಪರಿಸರ ಪ್ರಭಾವ, ಮೀನುಗಾರ ಸಮುದಾಯದ ಅಭಿಪ್ರಾಯ ಪಡೆದುಕೊಳ್ಳದೆ ಈ ಗುತ್ತಿಗೆ ನೀಡಲಾಗಿದೆ. ಮಲ್ಪೆ ಕಡಲ ತೀರದಲ್ಲಿ ನಿರ್ಮಿಸಿದ್ದ ಮಕ್ಕಳ ಆಟದ ಮೈದಾನ, ಭಜನಾ ಕ್ಷೇತ್ರ, ಪ್ರವಾಸೋದ್ಯಮ ಮೂಲಸೌಕರ್ಯಗಳ ಬಳಕೆಗೆ ಸಾರ್ವಜನಿಕರಿಗೆ ಇರುವ ಹಕ್ಕು ಉಲ್ಲಂಘನೆಯಾಗಿದೆ. ಮಲ್ಪೆ ಬಂದರು ಉಡುಪಿ ಜಿಲ್ಲೆಯ ಮೀನುಗಾರಿಕೆ ಆರ್ಥಿಕತೆಗೆ ಕೇಂದ್ರ, ಬಂದರು ಚಟುವಟಿಕೆಗಳಿಗೆ ಮೂಲ ಸೌಕರ್ಯ, ಪ್ರವಾಸೋದ್ಯಮದ ಪ್ರಮುಖ ಕೇಂದ್ರ, ಭಜನಾ-ಸಾಂಸ್ಕೃತಿಕ ಚಟುವಟಿಕೆಗಳ ವಿಕಾಸ ಕ್ಷೇತ್ರ. ಹೀಗಾಗಿ ಈ ಪ್ರದೇಶದ ಭೂಮಿಯನ್ನು ವ್ಯವಹಾರಿಕ ಹಕ್ಕಿಗೆ ಒಳಪಡಿಸುವುದು ಭವಿಷ್ಯದ ಬಂದರು ಮತ್ತು ಮೀನುಗಾರ ಸಮುದಾಯಕ್ಕೆ ಅಪಾಯಕಾರಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಗುತ್ತಿಗೆ ಒಪ್ಪಿಗೆ ಪತ್ರ ತಕ್ಷಣ ರದ್ದುಪಡಿಸಬೇಕು. ವಿಚಾರಣೆಗೆ ನ್ಯಾಯಿಕ/ನಿಜಾನ್ವೇಷಣಾ ಸಮಿತಿ ರಚಿಸಬೇಕು. ಭೂಮಿ ಬಳಕೆ ಕುರಿತು ಸಾರ್ವಜನಿಕ ಗ್ರಾಮಸಭೆ/ಸಾರ್ವಜನಿಕ ವಿಚಾರಣೆ ನಡೆಸಬೇಕು. ಭೂಮಿಯ ಸಮಗ್ರ ಬಳಕೆ ಕುರಿತು ಮೀನುಗಾರರು, ಸ್ಥಳೀಯರು, ಪ್ರವಾಸೋದ್ಯಮ ಸಂಘಟನೆಗಳು, ಪರಿಸರ ತಜ್ಞರು ಹಾಗೂ ಆಡಳಿತ ಸಮಿತಿಗಳ ಸಲಹೆ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ವಾರ್ತಾ ಭಾರತಿ 16 Nov 2025 4:52 pm

ಉಡುಪಿ | ಅಗಲಿದ ಸಾಲುಮರ ತಿಮ್ಮಕ್ಕಗೆ ನುಡಿ ನಮನ

ಉಡುಪಿ, ನ.16: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಇತ್ತೀಚಿಗೆ ಅಗಲಿದ ವೃಕ್ಷಮಾತೆ ಪದ್ಮಶ್ರೀ ಸಾಲುಮರ ತಿಮ್ಮಕ್ಕ ಅವರಿಗೆ ನುಡಿ ನಮನ ಕಾರ್ಯಕ್ರಮ ಉಡುಪಿಯ ಇನ್ನಲ್ಲಿ ಯಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉರಗತಜ್ಞ ಗುರುರಾಜ್ ಸನಿಲ್, ಸಾಲುಮರ ತಿಮ್ಮಕ್ಕರವರು ಯಾವುದೇ ರೀತಿಯ ಪ್ರತಿಫಲಾಪೇಕ್ಷೆ ಇಲ್ಲದೆ ಪರಿಸರದ ಮೇಲಿನ ಅಪಾರ ಪ್ರೀತಿಯನ್ನು ಹೊಂದಿ ನೂರಾರು ಗಿಡಗಳನ್ನು ನೆಟ್ಟು ಘೋಷಣೆ ಮಾಡಿದ್ದರು. ಅದನ್ನು ನೋಡಿ ವಿಶ್ವದಾದ್ಯಂತ ಪರಿಸರದ ಬಗ್ಗೆ ಅಭಿಯಾನಗಳು ನಡೆಯಲು ಸಾಧ್ಯವಾಯಿತು ಎಂದರು. ನಿರೂಪಕ ಅವಿನಾಶ್ ಕಾಮತ್ ಮಾತನಾಡಿ, ತಿಮ್ಮಕ್ಕ ಅಜ್ಜಿ ಮತ್ತು ಉಡುಪಿಗೆ ಅವಿನಾಭಾವ ಸಂಬಂಧವಿದೆ. ಇಂದು ಅಜ್ಜಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆಯಲು ಉಡುಪಿಯ ಜನತೆಯ ಸಹಕಾರವು ಇತ್ತು ಎಂದು ನೆನಪು ಮಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಸುಹಾಸಂನ ಶ್ರೀನಿವಾಸ್ ಉಪಾಧ್ಯ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಶಂಕರ್ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಇನ್ನ ಮುಖ್ಯಸ್ಥ ನಾಗರಾಜ ಹೆಬ್ಬಾರ್, ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಪದಾಧಿಕಾರಿಗಳಾದ ದೀಪಾ ಚಂದ್ರಕಾಂತ್, ರಂಜನಿ ವಸಂತ್, ಸಿದ್ದ ಬಸಯ್ಯಸ್ವಾಮಿ ಚಿಕ್ಕಮಠ, ಶಶಿಕಾಂತ ಶೆಟ್ಟಿ, ಲಕ್ಷ್ಮಿಕಾಂತ್, ರಾಜೇಶ್, ರಾಮಾಂಜಿ ಮುಂತಾದವರು ಉಪಸ್ಥಿತರಿದ್ದರು. ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಸ್ತಾವನೆಗೈದರು. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ನಿರೂಪಿಸಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

ವಾರ್ತಾ ಭಾರತಿ 16 Nov 2025 4:50 pm

ಅರ್ಚಕ ಬಾಲಕೃಷ್ಣ ಗಾಂಸ್ಕರ್

ಉಡುಪಿ, ನ.15: ಉಡುಪಿ ಅಂಬಾಗಿಲು ಸಂತೆಕಟ್ಟೆಯ ಮಾಸ್ತಿಅಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಬಾಲಕೃಷ್ಣ ಗಾಂಸ್ಕರ್(90) ಶನಿವಾರ ಸ್ವಗೃಹದಲ್ಲಿ ನಿಧನರಾದರು. ಹಲವಾರು ದಶಕಗಳಿಂದ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿದ್ದ ಇವರು, ಭಗವದ್ಗೀತೆಯ ಬಗ್ಗೆ ಆಳವಾದ ಜ್ಞಾನ ಮತ್ತು ಆಸಕ್ತಿಯನ್ನು ಹೊಂದಿದ್ದರು. ಇವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ನಗರಸಭಾ ಸದಸ್ಯೆ ಮಂಜುಳಾ ವಿ.ನಾಯಕ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಾರ್ತಾ ಭಾರತಿ 16 Nov 2025 4:43 pm