ಕೋಲಾರ : ಪೊಲೀಸರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ದೃಷ್ಟಿಯಿಂದ ವಾರ್ಷಿಕ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ, ನವಚೈತನ್ಯದಿಂದ ಕರ್ತವ್ಯಕ್ಕೆ ಮರಳಿ ಬನ್ನಿ ಎಂದು ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕರೆ ನೀಡಿದರು. ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಕವಾಯತು ಮೈದಾನದಲ್ಲಿ ಕೋಲಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ 3 ದಿನಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸರು ವೃತ್ತಿಯನ್ನು ಅತ್ಯಂತ ಗಂಭೀರವಾಗಿ ಘನತೆಯಿಂದ ನಿರ್ವಹಿಸಬೇಕಾಗುತ್ತದೆ. ಹಾಗಾಗಿ ಬಹಳ ಒತ್ತಡದಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ, ಒತ್ತಡ ನೀಗಿಸಿಕೊಳ್ಳುವುದು ಅಷ್ಟೇ ಅಗತ್ಯವಿದೆ. ಒತ್ತಡಗಳಿಂದ ಹೊರಬಂದು ತಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸಿಕೊಳ್ಳುವ ದೃಷ್ಟಿಯಿಂದ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತದೆ. ಎಲ್ಲರೂ ಕ್ರೀಡಾ ಸ್ಫೂರ್ತಿ ಯಿಂದ ಭಾಗವಹಿಸಬೇಕು, ಸೋಲು ಗೆಲುವು ಪ್ರಶ್ನೆಯಲ್ಲ̤ಅಂತಿಮವಾಗಿ ಕ್ರೀಡಾಕೂಟದ ಕೊನೆಯಲ್ಲಿ ಹೊಸ ಚೈತನ್ಯ ತುಂಬಿಕೊಂಡು ಹೊಸ ಹೊಸ ಸವಾಲುಗಳನ್ನು ಎದುರಿಸುವಂತಹ ಆತ್ಮವಿಶ್ವಾಸವನ್ನು ಪಡೆಯಲು ಈ ಕ್ರೀಡಾಕೂಟ ಸಹಕಾರಿಯಾಗಲಿ ಎಂದು ಆಶಿಸಿದರು. ಪೊಲೀಸರಲ್ಲೂ ಬಹಳ ಜನ ಸಾಂಸ್ಕೃತಿಕ ಪ್ರತಿಭೆ ಹೊಂದಿರುವವರಿದ್ದಾರೆ, ನಮ್ಮಲ್ಲಿಯೂ ಕಲೆ ಮತ್ತು ಸಾಂಸ್ಕೃತಿಕ ಪ್ರತಿಭೆ ಇದೆ, ಸಮಾಜದ ಇತರೆ ಜನರೊಂದಿಗೆ ಬೆರೆಯುವ ನಮ್ಮ ಭಾವನೆಗಳನ್ನೂ ಗೌರವಿಸಿ ಎಂಬುವ ಸಂದೇಶ ಒಳ್ಳೆಯದು ಎಂದು ಹೇಳಿದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್ ಮಾತನಾಡಿ, ಪೊಲೀಸರು ದೇಶದ ಬೆನ್ನೆಲುಬಾಗಿ ಕೆಲಸ ಮಾಡುತ್ತಿದ್ದಾರೆ, ಆದುದ್ದರಿಂದಲೇ ನಾವೆಲ್ಲರೂ ನೆಮ್ಮದಿಯಿಂದ ಮಲಗುತ್ತೇವೆ ಎಂದು ಹೇಳಿದರು. ಒತ್ತಡದಲ್ಲಿ ಕೆಲಸ ಮಾಡಿದರೂ ಅರಣ್ಯ ಇಲಾಖೆಗೂ ಪೊಲೀಸರು ಸಹಕಾರ ನೀಡಿದ್ದಾರೆ, ಅದಕ್ಕಾಗಿ ಧನ್ಯವಾದ ಎಂದ ಅವರು, ಪೊಲೀಸರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಹಳ ಮುಖ್ಯವಾಗಿದೆ, ಕ್ರೀಡಾಕೂಟದಲ್ಲಿ ಸೋಲು ಗೆಲುವುಗಿಂತ ಕ್ರೀಡಾ ಸ್ಪೂರ್ತಿ ಮುಖ್ಯ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ರವಿಶಂಕರ್, ಜಗದೀಶ್, ಪೊಲೀಸ್ ಉಪಾಧೀಕ್ಷ ಎಂ.ಹೆಚ್. ನಾಗ್ತೆ, ಗಲ್ ಪೇಟೆ ವೃತ್ತ ನಿರೀಕ್ಷಕ ಎಂ. ಜೆ.ಲೋಕೇಶ್, ಕೋಲಾರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಕಾಂತರಾಜು ಇದ್ದರು.
KPCL Exam: ಕೆಪಿಸಿಎಲ್ ಪರೀಕ್ಷೆ ರದ್ದುಪಡಿಸಿದ ಸುಪ್ರೀಂ ಕೋರ್ಟ್: ಮರು ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ KEA
ಬೆಂಗಳೂರು, ನವೆಂಬರ್ 20: ಕರ್ನಾಟಕ ವಿದ್ಯುತ್ ನಿಗಮದಲ್ಲಿ (KPCL) ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸದಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕ ವಿದ್ಯುತ್ ನಿಗಮದ ಖಾಲಿ ಹುದ್ದೆಗಳ ನೇಮಕಾತಿಗಾಗಿ (KPCL Exam 2025) ಡಿಸೆಂಬರ್
ಸ್ಥಿರಾಸ್ತಿ-ಚರಾಸ್ತಿ, ವಾರ್ಷಿಕ ಭೌತಿಕ ಆಸ್ತಿಗಳ ವಿವರಗಳನ್ನು ಒದಗಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ
ಬೆಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರದ ಪ್ರಕಾರ ಸ್ಥಿರಾಸ್ತಿಗಳ ಪ್ರಾರಂಭಿಕ ಶಿಲ್ಕು 438.54 ಕೋಟಿ ರೂ.ಗಳಿವೆ. ಇದೇ ವರ್ಷದಲ್ಲಿ 19.20 ಕೋಟಿ ರೂ. ಸವಕಳಿ ಒಳಗೊಂಡಂತೆ ಅಂತಿಮವಾಗಿ 442.03 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಆದರೆ ಸ್ಥಿರಾಸ್ತಿ ಹಾಗೂ ಚರಾಸ್ತಿಗಳಿಗೆ ಸಂಬಂಧಿಸಿದಂತೆ ಹಿಂದಿನ ಸಾಲಿನಿಂದಲೂ ಆಸ್ತಿ ವಹಿ ಹಾಗೂ ವಾರ್ಷಿಕ ಭೌತಿಕ ಆಸ್ತಿಗಳ ವಿವರಗಳನ್ನು ಒದಗಿಸಿಲ್ಲ. 2023-24ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನಾ ಇಲಾಖೆಯು ಪೂರ್ಣಗೊಳಿಸಿರುವ ವರದಿಯು, ವಿಶ್ವವಿದ್ಯಾನಿಲಯದ ಆರ್ಥಿಕ ಅಶಿಸ್ತಿನ ವಿವಿಧ ಮುಖಗಳನ್ನು ತೆರೆದಿಟ್ಟಿದೆ. ಈ ವರದಿಯ ಪ್ರತಿಯು ‘the-file.in’ಗೆ ಲಭ್ಯವಾಗಿದೆ. ಸ್ಥಿರಾಸ್ತಿ, ಚರಾಸ್ತಿ ಮತ್ತು ಒಟ್ಟಾರೆ ಆಸ್ತಿ ವಹಿಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಒದಗಿಸದೇ ಇರುವುದಕ್ಕೆ ಲೆಕ್ಕ ಪರಿಶೋಧಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವುದು ವರದಿಯಿಂದ ಗೊತ್ತಾಗಿದೆ. ಯಾವುದೇ ವಿವರಗಳನ್ನು ನೀಡದ ಕಾರಣ ಜಮೀನು, ಕಟ್ಟಡ, ಪೀಠೋಪಕರಣ, ವಾಹನ, ಕಂಪ್ಯೂಟರ್ ಹಾಗೂ ಇತರ ಸ್ಥಿರಾಸ್ತಿಗಳ ಮೌಲ್ಯವನ್ನು ಯಾವ ಮಾನದಂಡದ ಆಧಾರದ ಮೇಲೆ ನಿರ್ಧರಿಸಲಾಗಿದೆ ಎಂದು ಲೆಕ್ಕ ಪರಿಶೋಧಕರು ದೃಢೀಕರಿಸಿಲ್ಲ. ಹಾಗೆಯೇ ಆಸ್ತಿಗಳ ಮೌಲ್ಯದ ಮೇಲೆ ಸವಕಳಿ ಕಳೆದು 442 ಕೋಟಿ 03 ಲಕ್ಷ ರೂ.ಸ್ಥಿರಾಸ್ತಿ ಅಂತಿಮ ಶಿಲ್ಕನ್ನು ತೋರಿಸಿರುವ ಕುರಿತು ವಿವರಣೆ, ನಿರ್ವಹಿಸಿರುವ ಆಸ್ತಿ ವಹಿಯನ್ನು ಮತ್ತು ಸ್ಥಿರಾಸ್ತಿಗಳ ಮೌಲ್ಯವನ್ನು ದೃಢೀಕರಿಸಿ ನೀಡಬೇಕು ಎಂದು 2024ರ ಅಕ್ಟೋಬರ್ 5ರಂದೇ ಕೋರಿತ್ತು. ಆದರೆ ವಿಶ್ವವಿದ್ಯಾನಿಲಯವು ಈ ಸಂಬಂಧ ಯಾವುದೇ ಮಾಹಿತಿಯನ್ನೂ ಒದಗಿಸಿಲ್ಲ. ಹೀಗಾಗಿ ಸ್ಥಿರಾಸ್ತಿಗಳ ಮೌಲ್ಯವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ ಎಂದು ಲೆಕ್ಕಪರಿಶೋಧಕರು ವರದಿಯಲ್ಲಿ ದಾಖಲಿಸಿರುವುದು ತಿಳಿದು ಬಂದಿದೆ. ಟಿಡಿಎಸ್ ಮತ್ತು ಟಿಸಿಎಸ್ ಬಗ್ಗೆ ದಾಖಲೆ ಒದಗಿಸಿಲ್ಲ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 2023-24ನೇ ಸಾಲಿನ ಅಂತ್ಯಕ್ಕೆ 7,76,87,297 ರೂ.ಗಳನ್ನು ಬ್ಯಾಂಕ್ ಬಡ್ಡಿಗಳ ಮೇಲಿನ ಕಟಾವಣೆಯಾದ ಆದಾಯ ತೆರಿಗೆ ಎಂದು ನಮೂದಿಸಿತ್ತು. ಈ ಆದಾಯ ತೆರಿಗೆಯನ್ನು ಹಿಂಪಡೆಯಲು ಸಂಸ್ಥೆಯು ಪ್ರತೀ ವರ್ಷ ನಿಗದಿತ ಸಮಯದಲ್ಲಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿ ಹಿಂಪಡೆಯಬೇಕು. 2010-11ರಿಂದ 2013-14ನೇ ಸಾಲುಗಳ ರಿಟರ್ನ್ ಪ್ರತಿಗಳು ವಿಶ್ವವಿದ್ಯಾನಿಲಯದಲ್ಲಿ ಲಭ್ಯವೇ ಇಲ್ಲ. ಹೀಗಾಗಿ ಟಿಡಿಎಸ್ ಮತ್ತು ಟಿಸಿಎಸ್ ಅಡಿ ತೋರಿಸಿರುವ ಮೊತ್ತವನ್ನು ದೃಢೀಕರಿಸಲು ಲೆಕ್ಕ ಪರಿಶೋಧನೆಗೆ ಸಾಧ್ಯವಾಗಿಲ್ಲ ಎಂದು ವರದಿಯಲ್ಲಿ ವಿವರಿಸಿದೆ.
ಬೆಂಗಳೂರಿನ ಲಾಲ್ಬಾಗ್ ನಲ್ಲಿ ಮನರಂಜನಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಹೊಸ ನಿರ್ಬಂಧಗಳನ್ನು ವಿಧಿಸಿದೆ. ವಾಕಿಂಗ್, ಜಾಗಿಂಗ್ಗೆ ಸಮಯ ನಿಗದಿಪಡಿಸಿದ್ದು, ಸೈಕ್ಲಿಂಗ್, ಸ್ಕೇಟಿಂಗ್ಗಳಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಉದ್ಯಾನವನದ ಸಸ್ಯ ಸಂಪತ್ತು ಮತ್ತು ಜೀನ್ ಬ್ಯಾಂಕ್ಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಉಲ್ಲಂಘಿಸಿದರೆ 500 ರೂ. ದಂಡ ವಿಧಿಸಲಾಗುವುದು ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ.
ಕಾಶ್ಮೀರಿಗಳನ್ನು ಉಗ್ರರಿಗೆ ಒಪ್ಪಿಸದಿರೋಣ
‘‘ದಿಲ್ಲಿ ಸ್ಫೋಟಕ್ಕೆ ಕಾರಣರಾಗಿರುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಇದರ ಹೆಸರಿನಲ್ಲಿ ಅಮಾಯಕ ನಾಗರಿಕರನ್ನು ಅನುಮಾನದಿಂದ ನೋಡುವುದನ್ನು ತಪ್ಪಿಸಬೇಕು. ಎಲ್ಲ ಕಾಶ್ಮೀರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಅವರ ಮೇಲೆ ದೌರ್ಜನ್ಯವೆಸಗಬಾರದು’’ ಹೀಗೆಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಭಾರತ ಸರಕಾರಕ್ಕೆ ಮನವಿ ಮಾಡಿದ್ದಾರೆ. ನ. 10ರಂದು ದಿಲ್ಲಿಯಲ್ಲಿ ನಡೆದ ಸ್ಫೋಟದ ಬಳಿಕ ಇಬ್ಬರು ಕಾಶ್ಮೀರಿ ವೈದ್ಯರನ್ನು ಬಂಧಿಸಲಾಗಿದೆ. ಸ್ಫೋಟದಲ್ಲಿ ಕಾಶ್ಮೀರದಲ್ಲಿರುವ ಉಗ್ರರ ಕೈವಾಡಗಳನ್ನು ಶಂಕಿಸಲಾಗಿದ್ದು ಈ ದಿಕ್ಕಿನಲ್ಲಿ ತನಿಖೆ ನಡೆಯುತ್ತಿದೆ. ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಕೆಲವರನ್ನು ವಿಚಾರಣೆ ನಡೆಸಿದ ಎನ್ಐಎ ಬಳಿಕ ಬಿಡುಗಡೆಯನ್ನೂ ಮಾಡಿದೆ. ಆದರೆ ಮಾಧ್ಯಮಗಳು ತನಿಖೆ ಪೂರ್ತಿಯಾಗುವ ಮೊದಲೇ ಇಡೀ ಕಾಶ್ಮೀರಿಗಳನ್ನು ಸ್ಫೋಟಕ್ಕೆ ಹೊಣೆಗಾರರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಊಹಾಪೋಹಗಳ ವರದಿಗಳನ್ನು ಹರಿಯ ಬಿಟ್ಟು ಒಂದು ನಿರ್ದಿಷ್ಟ ಪ್ರದೇಶದ, ನಿರ್ದಿಷ್ಟ ಸಮುದಾಯದ ಜನರನ್ನು ಅಪರಾಧಿಗಳನ್ನಾಗಿ ಘೋಷಿಸಿ ಅವರಿಗೆ ಶಿಕ್ಷೆ ನೀಡುವ ಪ್ರಯತ್ನ ನಡೆಸುತ್ತಿದೆ. ಇದರ ಪರಿಣಾಮವಾಗಿ, ಕಾಶ್ಮೀರದ ಹೊರಗೆ ವಿದ್ಯಾಭ್ಯಾಸ ನಡೆಸುತ್ತಿರುವ ಕಾಶ್ಮೀರಿಗಳನ್ನು ಅನುಮಾನದ ಕಣ್ಣಿನಿಂದ ನೋಡಲಾಗುತ್ತಿದೆ ಮಾತ್ರವಲ್ಲ, ಅವರನ್ನು ಭಯೋತ್ಪಾದಕರಂತೆ ಚಿತ್ರಿಸುವ ಪ್ರಯತ್ನ ನಡೆಯುತ್ತಿದೆ. ಪರಿಣಾಮವಾಗಿ ಅವರ ಮೇಲೆ ಕೆಲವೆಡೆ ದಾಳಿಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವರಿಗೆ ಮೇಲಿನ ಮನವಿಯನ್ನು ಮಾಡಿದ್ದಾರೆ. ಇಬ್ಬರು ಕಾಶ್ಮೀರಿ ವೈದ್ಯರ ಬಂಧನದ ಬಳಿಕ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಓದುತ್ತಿರುವ ಕಾಶ್ಮೀರಿ ವೈದ್ಯರು ಆತಂಕದಿಂದ ದಿನ ಕಳೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಭದ್ರತೆಯ ಹೆಸರಿನಲ್ಲಿ ಕಿರುಕುಳ ನೀಡುವುದು, ತಾರತಮ್ಯ ಎಸಗುವುದು, ಅಪಮಾನಿಸುವುದು ದಿನ ನಿತ್ಯ ನಡೆಯುತ್ತಿವೆಎಂದು ಅವರು ಆರೋಪಿಸುತ್ತಿದ್ದಾರೆ. ಸ್ಥಳೀಯ ಅಂಗಡಿಗಳು ಅವರಿಗೆ ದಿನಸಿ ವಸ್ತುಗಳನ್ನೂ ನಿರಾಕರಿಸುತ್ತಿವೆ ಎಂದು ಕೆಲವು ವಿದ್ಯಾರ್ಥಿಗಳು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. ಫರೀದಾಬಾದ್ನಲ್ಲಿ ಸ್ಥಳೀಯ ಪೊಲೀಸರು ಕಾಶ್ಮೀರಿ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಅವರು ತನಿಖೆಯ ಹೆಸರಿನಲ್ಲಿ ಕಿರುಕುಗಳನ್ನು ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇಂತಹ ಅವಮಾನ, ಹಿಂಸೆ, ದೌರ್ಜನ್ಯಗಳು ಕಾಶ್ಮೀರಿಗಳಿಗೆ ಹೊಸದೇನೂ ಅಲ್ಲ. ಕಾಶ್ಮೀರದಲ್ಲಿ ಉಗ್ರವಾದಿಗಳು ನಡೆಸುತ್ತಾ ಬರುವ ಎಲ್ಲ ಕೃತ್ಯಗಳ ಹೊಣೆಗಳನ್ನು ಇವರ ತಲೆಗೆ ಕಟ್ಟಿ ಅವರನ್ನು ನಾವು ಶಿಕ್ಷಿಸುತ್ತಾ ಬಂದಿದ್ದೇವೆ. ಇಷ್ಟಾದರೂ ಕಾಶ್ಮೀರಿಗಳು ಭಾರತದೊಂದಿಗೆ ಗುರುತಿಸುವುದಕ್ಕೆ ಇಷ್ಟ ಪಡುತ್ತಿದ್ದಾರೆ. ಕಳೆದ ಒಂದು ದಶಕದಲ್ಲಿ ಕಾಶ್ಮೀರಿಗಳನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಉಗ್ರರು ಶತಪ್ರಯತ್ನ ನಡೆಸುತ್ತಾ ಬಂದಿದ್ದಾರೆ. ಆದರೆ ಕಾಶ್ಮೀರಿಗಳು ಆ ಪ್ರಯತ್ನವನ್ನು ವಿಫಲಗೊಳಿಸುತ್ತಲೇ ಬರುತ್ತಿದ್ದಾರೆ. ಒಂದೆಡೆ ಉಗ್ರವಾದಿಗಳ ಹಿಂಸಾಚಾರ, ಮಗದೊಂದೆಡೆ ಪೊಲೀಸರ, ಸೇನೆಯ ಅನುಮಾನದ ಕಣ್ಣುಗಳು. ಇವುಗಳ ನಡುವೆ ಕಾಶ್ಮೀರಿಗಳು ತಮ್ಮ ಭಾರತದ ಮೇಲಿನ ಪ್ರೇಮವನ್ನು ಸಾಬೀತುಪಡಿಸಬೇಕಾಗಿದೆ. ಕಾಶ್ಮೀರದ ಹೊರಗಡೆ ಬೇರೆ ಬೇರೆ ವಿಶ್ವವಿದ್ಯಾನಿಲಯಗಳಲ್ಲಿರುವ ವಿದ್ಯಾರ್ಥಿಗಳು ಭಾರತ-ಕಾಶ್ಮೀರದ ನಡುವಿನ ಕೊಂಡಿಗಳಾಗಿದ್ದಾರೆ, ಸೇತುವೆಗಳಾಗಿದ್ದಾರೆ. ಅವರನ್ನು ಅನುಮಾನಿಸಿ ಅವರ ಮೇಲೆ ದಾಳಿ ನಡೆಸುವುದೆಂದರೆ ಆ ಸೇತುವೆಗಳನ್ನು ನಾವೇ ಧ್ವಂಸಗೊಳಿಸಿದಂತೆ. ಪಹಲ್ಗಾಮ್ ದಾಳಿಯ ಸಂದರ್ಭವನ್ನೇ ತೆಗೆದುಕೊಳ್ಳೋಣ. ಭದ್ರತಾ ವೈಫಲ್ಯದ ಲಾಭ ಪಡೆದು ನಾಲ್ಕು ಮಂದಿ ಉಗ್ರರು ಭಾರತದ ಪ್ರವಾಸಿಗರ ಮೇಲೆ ಯದ್ವಾತದ್ವಾ ಗುಂಡಿನ ಸುರಿಮಳೆಗೈದರು. ಈ ಸಂದರ್ಭದಲ್ಲಿ ತಮ್ಮ ಜೀವವನ್ನು ಒತ್ತೆಯಿಟ್ಟು ಸ್ಥಳೀಯ ಕಾಶ್ಮೀರಿಗಳು ಪ್ರವಾಸಿಗರನ್ನು ರಕ್ಷಿಸಿದರು. ಉಗ್ರರ ವಿರುದ್ಧ ಹೋರಾಡುತ್ತಲೇ ಓರ್ವ ಕಾಶ್ಮೀರಿ ಹುತಾತ್ಮನಾದ. ಅಂದು ಸ್ಥಳೀಯ ಕಾಶ್ಮೀರಿಗಳು ಪ್ರವಾಸಿಗರ ನೆರವಿಗೆ ಧಾವಿಸದೇ ಇದ್ದರೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುತ್ತಿತ್ತು. ತಮ್ಮನ್ನು ರಕ್ಷಿಸಿದ ಕಾಶ್ಮೀರಿಗಳ ಬಗ್ಗೆ ಪ್ರವಾಸಿಗರೇ ಕೃತಜ್ಞತೆಯ ಮಾತುಗಳನ್ನಾಡಿದ್ದಾರೆ. ಘಟನೆ ನಡೆದ ಒಂದು ಗಂಟೆಯ ಬಳಿಕ ಭದ್ರತಾ ಸಿಬ್ಬಂದಿ ಆಗಮಿಸಿದರು.ಅಲ್ಲಿಯವರೆಗೆ ಪ್ರವಾಸಿಗರನ್ನು ಕಾಪಾಡಿದ್ದು, ಅವರಿಗೆ ಧೈರ್ಯ ಹೇಳಿದ್ದು ಸ್ಥಳೀಯ ಕಾಶ್ಮೀರಿಗಳಾಗಿದ್ದರು. ಒಂದು ವೇಳೆ ಕಾಶ್ಮೀರಿಗಳೆಲ್ಲ ಉಗ್ರವಾದಿಗಳಾಗಿದ್ದರೆ ಇದು ಸಾಧ್ಯವಾಗುತ್ತಿತ್ತೆ? ಇಂದು ಕಾಶ್ಮೀರದಲ್ಲಿ ಉಗ್ರವಾದಿಗಳ ಸಂಖ್ಯೆ ಬೆರಳೆಣಿಕೆಯಷ್ಟೇ ಇದೆ. ಇವರಿಗೆ ಹೋಲಿಸಿದರೆ, ಭಾರತದ ಒಳಗೆ ಗೋವಿನ ಹೆಸರಿನಲ್ಲಿ, ಹಿಂದುತ್ವದ ಹೆಸರಿನಲ್ಲಿ ಜಾತಿಯ ಹೆಸರಿನಲ್ಲಿ ಹಿಂಸಾಚಾರಗಳನ್ನು ನಡೆಸುವ, ಕೊಲೆಗಳನ್ನು ಮಾಡುವ ಉಗ್ರವಾದಿಗಳ ದೊಡ್ಡ ಪಡೆಯೇ ಇದೆ. ಉತ್ತರ ಪ್ರದೇಶ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ಇಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂದುತ್ವದ ಹೆಸರಿನಲ್ಲಿ ಪದೇ ಪದೇ ದಾಳಿಗಳು ನಡೆಯುತ್ತಿವೆ. ಇಲ್ಲಿ ನಡೆಯುವ ಗುಂಪುದಾಳಿಗಳು ಕಾಶ್ಮೀರದಲ್ಲಿಯೂ ನಡೆಯುವುದಿಲ್ಲ. ಹಾಗೆಂದು ಇಡೀ ಉತ್ತರ ಪ್ರದೇಶದ ಜನರನ್ನೇ ನಾವು ಅನುಮಾನಾಸ್ಪದವಾಗಿ ನೋಡಲು ಸಾಧ್ಯವೆ? ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೇಲೆ ಬರ್ಬರ ಹಿಂಸಾಚಾರಗಳನ್ನು ನಡೆಸಿದ ಉಗ್ರರು ಕಾಶ್ಮೀರಿಗಳೇನೂ ಅಲ್ಲ. ಕಾಶ್ಮೀರವೆಂದರೆ ಕೇವಲ ಭೂಭಾಗವಲ್ಲ. ಬರೇ ಸೇನೆಯ ಕೋವಿಯ ಮೂಲಕ ಅದನ್ನು ನಮ್ಮದಾಗಿಸಲು ಸಾಧ್ಯವಿಲ್ಲ ಎನ್ನುವುದನ್ನು ಕಳೆದ ಒಂದು ದಶಕದಿಂದ ಕಂಡುಕೊಂಡಿದ್ದೇವೆ. ಎಲ್ಲಿಯವರೆಗೆ ಕಾಶ್ಮೀರಿಗಳು ನಮ್ಮವರಾಗಲು ಸಾಧ್ಯವಿಲ್ಲವೋ ಅಲ್ಲಿಯವರೆಗೆ ಕಾಶ್ಮೀರ ನಮ್ಮದಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕಾಶ್ಮೀರದ ಜನರ ಭಾವನೆಗಳನ್ನು ನಾವು ಗೌರವಿಸಬೇಕು. ಕಾಶ್ಮೀರಿಯತ್ ಉಳಿದಾಗ ಮಾತ್ರ ಕಾಶ್ಮೀರ ಭಾರತದ ಭಾಗವಾಗಿ ಉಳಿಯಲು ಸಾಧ್ಯ. ಕಾಶ್ಮೀರದ ಹೊರಗೆ ನಾವು ಕಾಶ್ಮೀರಿಗಳನ್ನು ಹೇಗೆ ನಡೆಸಿಕೊಳ್ಳುತ್ತೇವೆ ಎನ್ನುವುದರ ಆಧಾರದಲ್ಲಿ ಕಾಶ್ಮೀರದೊಳಗೆ ಭಾರತದ ಕುರಿತಂತೆ ಅಭಿಪ್ರಾಯವೊಂದು ರೂಪುಗೊಳ್ಳುತ್ತದೆ. ಕಾಶ್ಮೀರದ ಹೊರಗಿರುವ ಕಾಶ್ಮೀರಿಗಳಲ್ಲಿ ಆತ್ಮವಿಶ್ವಾಸವನ್ನು ಬಿತ್ತುವುದು ಭಾರತೀಯರ ಕರ್ತವ್ಯವಾಗಿದೆ. ಭಾರತದ ಭಾಗವಾಗಿದ್ದಾಗ ಮಾತ್ರ ನಾವು ನೆಮ್ಮದಿಯ, ಭದ್ರತೆಯ ಬದುಕನ್ನು ಕಾಣಲು ಸಾಧ್ಯ ಎನ್ನುವುದನ್ನು ಕಾಶ್ಮೀರಿಗಳಿಗೆ ಮನವರಿಕೆ ಮಾಡಬೇಕು ಮತ್ತು ಅವರು ಆ ನಂಬಿಕೆಯ ಜೊತೆಗೆ ಕಾಶ್ಮೀರಕ್ಕೆ ಮರಳಿ ಅಲ್ಲಿ ಭಾರತದ ಪರವಾಗಿ ಜನರಲ್ಲಿ ಅಭಿಪ್ರಾಯಗಳನ್ನು ಬಿತ್ತಬೇಕು. ಕಾಶ್ಮೀರಿಗಳನ್ನು ನಾವಾಗಿಯೇ ಉಗ್ರವಾದಿಗಳ ಕೈಗೆ ಒಪ್ಪಿಸುವಂತಹ ಕೆಲಸವನ್ನು ಯಾವ ಕಾರಣಕ್ಕೂ ಮಾಡಬಾರದು. ಕಾಶ್ಮೀರಿಗಳ ಮೇಲೆ ಅನ್ಯಾಯವಾಗಿ ಹಲ್ಲೆ, ದೌರ್ಜನ್ಯಗಳು ನಡೆದಷ್ಟೂ ಅದರ ಲಾಭವನ್ನು ಕಾಶ್ಮೀರಿ ಪ್ರತ್ಯೇಕತಾ ವಾದಿಗಳು ಮತ್ತು ನೆರೆಯ ಪಾಕಿಸ್ತಾನ ತಮ್ಮದಾಗಿಸುತ್ತವೆ ಎನ್ನುವ ಎಚ್ಚರಿಕೆ ನಮಗಿರಬೇಕು.
Vehicle Fitness Fee Hike: ಹಳೇ ವಾಹನಗಳ ಮಾಲೀಕರಿಗೆ ಕೇಂದ್ರ ಶಾಕ್! ಈ ಶುಲ್ಕ ಹೆಚ್ಚಳ ಯಾರಿಗೆ ಅನ್ವಯ?
ನವದೆಹಲಿ, ನವೆಂಬರ್ 20: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹಳೆಯ ವಾಹನಗಳ ಮಾಲೀಕರಿಗೆ ಶಾಕಿಂಗ್ ಸುದ್ದಿ ನೀಡಿದೆ. 2025ರ ಕೇಂದ್ರ ಮೋಟಾರು ವಾಹನಗಳ ಐದನೇ ತಿದ್ದುಪಡಿ ನಿಯಮಗಳ ಅಡಿಯಲ್ಲಿ ವಾಹನಗಳ ಫಿಟ್ನೆಸ್ ಪರೀಕ್ಷೆಯ ಶುಲ್ಕ ಪರಿಷ್ಕರಣೆ ಮಾಡಿದೆ. ಈ ಪರಿಷ್ಕರಣೆ ಶುಲ್ಕ ಯಾರಿಗೆಲ್ಲ ಅನ್ವಯವಾಗುತ್ತದೆ. ಮೊದಲಿದ್ದ ಶುಲ್ಕವೆಷ್ಟು? ಈಗಿನದ್ದು ಎಷ್ಟು? ಯಾವೆಲ್ಲ ವಾಹನಗಳಿಗೆ ಇದು
ಮುಲ್ತಾನ್ ಸುಲ್ತಾನ್ಸ್ ಮಾಲೀಕರಿಂದ ಕಾನೂನು ಕ್ರಮದ ಎಚ್ಚರಿಕೆ; ಪಿಸಿಬಿ, ಪಿಎಸ್ಎಲ್ ಗೆ ಸಂಕಷ್ಟ
ಕರಾಚಿ: ಪಾಕಿಸ್ತಾನ ಸೂಪರ್ ಲೀಗ್ ಮತ್ತು ಮುಲ್ತಾನ್ ಸುಲ್ತಾನ್ಸ್ ಫ್ರಾಂಚೈಸಿ ಮಾಲೀಕ ಅಲಿ ಖಾನ್ ತರೀನ್ ನಡುವಿನ ಸಂಬಂಧ ತೀವ್ರ ಹದಗೆಟ್ಟಿದೆ. ಟೂರ್ನಿಯನ್ನು ತರೀನ್ ಬಹಿರಂಗವಾಗಿ ಟೀಕಿಸಿದ್ದು, ಇದಕ್ಕಾಗಿ ಟೂರ್ನಿ ನಿರ್ವಹಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಕಾನೂನಾತ್ಮಕ ನೋಟಿಸ್ ಪಡೆದಿದ್ದಾರೆ. ತರೀನ್ ಅವರು ಪ್ರಾಂಚೈಸಿ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂದು ಪಿಸಿಬಿ ಆಪಾದಿಸಿದೆ. ಇದಕ್ಕೆ ಪ್ರತಿಯಾಗಿ ಮುಲ್ತಾನ್ ಸುಲ್ತಾನ್ಸ್ ಮಾಲೀಕರು ಪಿಸಿಬಿಯನ್ನು ಅಣಕಿಸಿ ಮತ್ತೆ ವ್ಯಂಗ್ಯದ ಕ್ಷಮೆ ಕೋರಿದ್ದಾರೆ. ಜತೆಗೆ ತಮಗೆ ನೀಡಿದ ಕಾನೂನು ನೋಟಿಸನ್ನು ಹರಿದು ಹಾಕಿದ್ದಾರೆ. ಮುಲ್ತಾನ್ ಸುಲ್ತಾನ್ಸ್ ಫ್ರಾಂಚೈಸಿ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಮತ್ತು ನವೀಕರಣ ಪತ್ರದ ಸಂಬಂಧ ತರೀನ್ ಮಾಡಿರುವ ಇ-ಮೇಲ್ ಗೆ ಪಿಸಿಬಿ ಹಾಗೂ ಪಿಎಎಸ್ಎಲ್ ಸ್ಪಂದಿಸಿಲ್ಲ ಎನ್ನುವುದು ತರೀನ್ ಆಕ್ರೋಶಕ್ಕೆ ಕಾರಣ. ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ. ಬುಧವಾರ ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿದ ತರೀನ್, ನಮ್ಮೊಂದಿಗೆ ಪಿಸಿಬಿ ಸಂವಹನ ಮಾಡದೇ ಇರುವುದರಿಂದ, ನಾವೇ ಅಪ್ಡೇಟ್ ಹಂಚಿಕೊಳ್ಳುತ್ತಿದ್ದೇವೆ. ನಾವು ನಿರಂತರವಾಗಿ ಮಾಡಿರುವ ಇ-ಮೇಲ್ ಗಳಿಗೆ ಪಿಸಿಬಿ ಪ್ರತಿಕ್ರಿಯಿಸಿಲ್ಲ. ನಾವು ಕಳುಹಿಸಿರುವ ಕಾನೂನಾತ್ಮಕ ಪತ್ರಗಳಿಗೂ ಸ್ಪಂದಿಸಿಲ್ಲ. ಮೌಲ್ಯಮಾಪನ ಮತ್ತು ನವೀಕರಣ ಪ್ರಕ್ರಿಯೆಗೆ ಏಕೆ ನಮ್ಮ ಫ್ರಾಂಚೈಸಿಯನ್ನ ಪರಿಗಣಿಸಿಲ್ಲ ಎಂದು ಪ್ರಶ್ನಿಸಿದರೂ ಉತ್ತರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ: ವಿದೇಶಿಯರ ಜೊತೆ ಸ್ಥಳೀಯರ ನಂಟು, ಬ್ಯಾಂಕ್ ಖಾತೆಗಳು ಸ್ಥಗಿತ
ಕೆಂಪು ಕೋಟೆ ಸ್ಫೋಟ ಪ್ರಕರಣದಲ್ಲಿ, ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ವಿದೇಶಿ ನಿರ್ವಾಹಕರು ಮತ್ತು ಸ್ಥಳೀಯ ಕಾರ್ಯಕರ್ತರನ್ನು ಒಳಗೊಂಡಿರುವುದು ಪತ್ತೆಯಾಗಿದೆ. ತನಿಖಾ ಸಂಸ್ಥೆಗಳು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ಡಿಜಿಟಲ್ ಜಾಡುಗಳನ್ನು ಪರಿಶೀಲಿಸುತ್ತಿವೆ.
ನ.20 ಗುರುವಾರ ಚಾಮರಾಜ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ: 'ಅಧಿಕಾರ ಗಟ್ಟಿ' ಎಂಬ ಮುನ್ಸೂಚನೆಯೇ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದು, ವಿಶೇಷ ಸಂದೇಶ ಸಾರುವಂತಿದೆ.. ರಾಜ್ಯ ಮಟ್ಟದ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಇಂದು ಭಾಗವಹಿಸಲಿದ್ದಾರೆ.
Karnataka Weather: ಭೀಕರ ಚಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೂರು ದಿನ ಭಾರೀ ಮಳೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ನವೆಂಬರ್ 20) ಬೆಳಗ್ಗೆ
ಜಿಎಸ್ಟಿ ಕಡಿತ: ಹಬ್ಬದ ಸೀಸನ್ ನಲ್ಲಿ ಪ್ರತಿ ಎರಡು ಸೆಕೆಂಡ್ ಗೆ ಒಂದು ಕಾರು ಮಾರಾಟ!
ಚೆನ್ನೈ; ಜಿಎಸ್ಟಿ ದರ ಕಡಿತ ಮತ್ತು ಹಬ್ಬಗಳ ಭಾವನಾತ್ಮಕ ತುಡಿತದ ಕಾರಣದಿಂದ 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳ ಮಾರಾಟ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೇರಿದೆ. ಸಣ್ಣ ಕಾರುಗಳು ಮತ್ತು ಕಾಂಪ್ಯಾಕ್ಟ್ ಎಸ್ಯುವಿಗಳ ತೆರಿಗೆ ದರವನ್ನು ಕಡಿತಗೊಳಿಸಿರುವುದು ಈ ವಾಹನಗಳ ಕೈಗೆಟುಕುವಿಕೆಯನ್ನು ವಿಸ್ತೃತಗೊಳಿಸಿದ್ದು, ಸಾಲ ವೆಚ್ಚ ಮತ್ತು ಬೆಲೆ ಏರಿಕೆ ಹೆಚ್ಚಳದಿಂದ ಕಂಗಾಲಾಗಿದ್ದ ಗ್ರಾಹಕರ ಆಸಕ್ತಿಯ ಪುನರುಜ್ಜೀವನಕ್ಕೆ ಕಾರಣವಾಗಿದೆ. ಎಸ್ಬಿಐ ಸಂಶೋಧನೆಯ ಪ್ರಕಾರ 2025ರ ಸೆಪ್ಟೆಂಬರ್ ನಲ್ಲಿ ಮಾರಾಟವಾದ ಎಲ್ಲ ಕಾರುಗಳ ಪೈಕಿ ಶೇಕಡ 78ರಷ್ಟು ಕಾರುಗಳು 10 ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳಾಗಿವೆ. ಇದು ಸಮೂಹ ಮಾರುಕಟ್ಟೆ ವರ್ಗದ ಬಲವನ್ನು ನವೀಕರಿಸಿದೆ. 5 ರಿಂದ 10 ಲಕ್ಷ ರೂಪಾಯಿ ಬೆಲೆಯ ವಾಹನಗಳು ಒಟ್ಟು ಮಾರಾಟದ ಶೇಕಡ 64ರಷ್ಟಿದ್ದು, 5ಲಕ್ಷಕ್ಕಿಂತ ಕಡಿಮೆ ಬೆಲೆಯ ಕಾರುಗಳು ಶೇಕಡ 14ರಷ್ಟು ಕೊಡುಗೆ ನೀಡಿವೆ. ಈ ಮೂಲಕ ಬಜೆಟ್ ಕಾರುಗಳು ಹಬ್ಬದ ಬೇಡಿಕೆಯ ಬೆನ್ನೆಲುಬು ಎನಿಸಿವೆ. ದೀಪಾವಳಿ ಮತ್ತು ನವರಾತ್ರಿ ಸಂದರ್ಭದಲ್ಲಿ ವಾಹನೋದ್ಯಮ ಪ್ರತಿ ಎರಡು ಸೆಕೆಂಡ್ ಗಳಲ್ಲಿ ಒಂದು ಕಾರು ಮಾರಾಟ ಮಾಡಿದ್ದು, ಡೀಲರ್ ಗಳು ವಿತರಣೆಯ ಗಡುವಿಗೆ ಬದ್ಧರಾಗಲು ಹೆಣಗಾಡಬೇಕಾಯಿತು ಎಂದು ವಿವರಿಸಿದೆ. ಜಿಎಸ್ಟಿ ಪುನರ್ರಚನೆಯಿಂದ ಸಣ್ಣ ಕಾರುಗಳು ಮತ್ತು ಕಾಂಪ್ಯಾಕ್ಟ್ ಎಸ್ಯುವಿಗಳ ಮೇಲಿನ ತೆರಿಗೆ ಹೊರೆ ಕಡಿಮೆಯಾದದ್ದು ಗ್ರಾಹಕರ ಆಸಕ್ತಿ ಹೆಚ್ಚಿಸಲು ಮುಖ್ಯ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಅಭಿಪ್ರಾಯಪಟ್ಟಿದ್ದಾರೆ. ತೆರಿಗೆ ಕಡಿತದಿಂದಾಗಿ ಶೋರೂಂ ಬೆಲೆಗಳು ಕಡಿಮೆಯಾಗಿದ್ದು, ಡೀಲರ್ಶಿಪ್ಗಳಿಗೆ ಗ್ರಾಹಕರನ್ನು ಹೆಚ್ಚಾಗಿ ಆಕರ್ಷಿಸಿದೆ.
ನ್ಯಾಯಾಧಿಕರಣ ಕಾಯ್ದೆ ಅಸಂವಿಧಾನಿಕ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ಹೊಸದಿಲ್ಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನ್ಯಾಯಾಧಿಕರಣ ಸುಧಾರಣಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್, ಕಾಯ್ದೆಯನ್ನು ಅನೂರ್ಜಿತಗೊಳಿಸಿದೆ. ತೆರಿಗೆ ಪದ್ಧತಿ, ಪರಿಸರ, ವಿದ್ಯುತ್, ದೂರಸಂಪರ್ಕ ಮತ್ತು ರಿಯಲ್ ಎಸ್ಟೇಟ್ ಹೀಗೆ ವೈವಿಧ್ಯಮಯ ಕ್ಷೇತ್ರಗಳ ವ್ಯಾಜ್ಯವನ್ನು ನಿರ್ಧರಿಸುವ ನ್ಯಾಯಾಧಿಕರಣದ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂಕೋರ್ಟ್ ಹಲವು ಬಾರಿ ನೀಡಿದ ತೀರ್ಪನ್ನು ಅತಿಕ್ರಮಿಸುವ ಪ್ರಯತ್ನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ನಿವೃತ್ತಿಗೆ ಒಂದು ದಿನ ಮುನ್ನ ಸಿಜೆಐ ಬಿ.ಆರ್.ಗವಾಯಿ ನೇತೃತ್ವದ ಪೀಠ, ನ್ಯಾಯಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರ ಅರ್ಹತೆ ಮಾನದಂಡ, ಅಧಿಕಾರಾವಧಿ ಮತ್ತು ಸೇವಾ ಷರತ್ತುಗಳ ಹೆಸರಿನಲ್ಲಿ ಕಾಲಹರಣ ಮಾಡುವ ಕೇಂದ್ರ ಸರ್ಕಾರದ ನಿರಂತರ ಪ್ರಯತ್ನಗಳಿಗೆ ಅಸಮ್ಮತಿ ಸೂಚಿಸಿದೆ. ಜತೆಗೆ ನ್ಯಾಯಾಧಿಕರಣ ಸುಧಾರಣಾ ಸುಗ್ರೀವಾಜ್ಞೆ-2021ನ್ನು ತಳ್ಳಿಹಾಕಿದ ವಾರದ ಒಳಗಾಗಿ ಸರ್ಕಾರ ಇದನ್ನು ಕಾನೂನಾಗಿ ಪರಿವರ್ತಿಸಲು ಸಂಸತ್ತಿನಲ್ಲಿ, ಸುಗ್ರೀವಾಜ್ಞೆಯ ನಿಬಂಧನೆಗಳನ್ನೇ ಹೋಲುವ ಮಸೂದೆ ಮಂಡಿಸಿರುವ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೆಲವೊಂದು ನಿಬಂಧನೆಗಳನ್ನು ಮಾತ್ರ ಆಲಂಕರಿಕವಾಗಿ ಬದಲಿಸಿ ಕಾಯ್ದೆಯಾಗಿ ರೂಪಿಸುವ ಪ್ರಯತ್ನ ಮಾಡಿ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಜ್ಞಾಪೂರ್ವಕವಾಗಿ ಉಲ್ಲಂಘಿಸುವ ಕ್ರಮದ ಬಗ್ಗೆ ಸರ್ಕಾರಕ್ಕೆ ನ್ಯಾಯಪೀಠ ಛೀಮಾರಿ ಹಾಕಿದ್ದು, ನ್ಯಾಯಾಧಿಕರಣ ಸಧಾರಣಾ ಕಾಯ್ದೆ-2021, ಸುಪ್ರೀಂಕೋರ್ಟ್ ತಳ್ಳಿಹಾಕಿದ ಸುಗ್ರೀವಾಜ್ಞೆಯ ಪ್ರತಿರೂಪ. ಹೊಸ ಬಾಟಲಿಯಲ್ಲಿ ಹಳೆ ಮದ್ಯ ಇದ್ದಂತೆ. ಆದರೆ ಈ ಮದ್ಯ ನ್ಯಾಯಾಂಗಕ್ಕೆ ರುಚಿಕರ ಎನಿಸದು. ಆದರೆ ಬಾಟಲಿ ಕೇವಲ ಬೆರಗುಗೊಳಿಸಬಲ್ಲದು ಎಂದು ಹೇಳಿದೆ. ಈ ತೀರ್ಪಿನಿಂದಾಗಿ ಹೊಸ ಕಾಯ್ದೆಯ ಜಾರಿಗೆ ತಡೆ ಉಂಟಾಗಿದ್ದು, ನ್ಯಾಯಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರ ಸೇವಾ ಷರತ್ತುಗಳು ಮೂಲ ಕಾಯ್ದೆಗಳ ಅನುಸಾರವಾಗಿಯೇ ಮುಂದುವರಿಯಲಿವೆ.
ಸಿಎಂ ಆಗಮನಕ್ಕೆ ಹಾಸನದಲ್ಲಿ ಸಿದ್ಧತೆ: ಡಿ.6ರಂದು ನಾನಾ ಯೋಜನೆಗೆ ಚಾಲನೆ, ಶಂಕುಸ್ಥಾಪನೆಗೆ ಸಜ್ಜು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.6ರಂದು ಹಾಸನಕ್ಕೆ ಭೇಟಿ ನೀಡಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಸವಲತ್ತು ವಿತರಣೆ ಕಾರ್ಯಕ್ರಮವೂ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಹಲವು ಸಚಿವರು ಮುಖ್ಯಮಂತ್ರಿಯೊಂದಿಗೆ ಆಗಮಿಸಲಿದ್ದಾರೆ.
ದಾಳಿಂಬೆಗೆ ಬಂಪರ್ ಬೆಲೆ, ದುಬಾರಿ ಬೆಳೆ ಮೇಲೆ ಕಳ್ಳರ ಕಣ್ಣು , ಫಸಲು ರಕ್ಷಣೆಯೇ ರೈತರಿಗೆ ಭಾರೀ ಸವಾಲು
ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಭಾರಿ ಮಡಿವಂತಿಕೆ ಮತ್ತು ಸ್ವಚ್ಛತೆ ಬಯಸುವ ದಾಳಿಂಬೆ ಬೆಳೆಯನ್ನು ಕಳ್ಳಕಾಕರಿಂದ ರಕ್ಷಿಸಿಕೊಳ್ಳಲು ರಾತ್ರಿಯಿಡೀ ಕಾವಲು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿ ಬೆಳೆದ ದಾಳಿಂಬೆಯನ್ನು ಕಳ್ಳರು ಮನಸೋಇಚ್ಛೆ ಹಾಳು ಮಾಡುತ್ತಿದ್ದು, ಬೆಳೆಗಾರರು ಸಿಸಿ ಕ್ಯಾಮೆರಾ ಅಳವಡಿಸಿದರೂ ಪ್ರಯೋಜನವಾಗುತ್ತಿಲ್ಲ. ಕಠಿಣ ಕಾನೂನಿನ ಕೊರತೆಯಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ.
ಮೆಣಸಿನಕಾಯಿ ಬೆಲೆಯಲ್ಲಿ ಚೇತರಿಗೆ, ₹5-10 ಸಾವಿರ ಹೆಚ್ಚಳ, ಬೆಲೆಯಿಲ್ಲದೆ ಕಂಗಾಲಾಗಿದ್ದ ರೈತರ ಮುಖದಲ್ಲಿ ಖುಷಿ
ಕಳೆದ ಎರಡು ವರ್ಷಗಳಿಂದ ಮೆಣಸಿನಕಾಯಿ ಬೆಳೆಗೆ ಬೆಲೆ ಸಿಗದೆ ಸಂಕಷ್ಟದಲ್ಲಿದ್ದ ರೈತರಿಗೆ ಈ ಬಾರಿ ಉತ್ತಮ ಬೆಲೆ ದೊರೆತಿದೆ. ಆದರೆ, ರೋಗ ಮತ್ತು ಹವಾಮಾನ ವೈಪರೀತ್ಯದಿಂದ ಇಳುವರಿ ಕುಂಠಿತಗೊಂಡಿರುವುದು ರೈತರ ಚಿಂತೆಗೆ ಕಾರಣವಾಗಿದೆ. ಮಾರುಕಟ್ಟೆಯಲ್ಲಿ ಬೆಲೆ ಏರಿಳಿತ ಕಾಣುತ್ತಿದ್ದು, ರೈತರು ಈ ಬಗ್ಗೆಯೂ ಎಚ್ಚೆತ್ತುಕೊಳ್ಳಬೇಕಿದೆ.
ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಪ್ರತಿ ವರ್ಷ ಐವರಿಗೆ ಪ್ರಶಸ್ತಿ, ಸಿದ್ದರಾಮಯ್ಯ ಘೋಷಣೆ
ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕನ ಹೆಸರಿನಲ್ಲಿ ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಪ್ರಶಸ್ತಿಗಾಗಿ ಒಂದು ಕೋಟಿ ರೂಪಾಯಿ ದತ್ತಿ ನಿಧಿ ಸ್ಥಾಪಿಸುವುದಾಗಿ ತಿಳಿಸಿದರು. ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನೂ ಅವರು ಒತ್ತಿ ಹೇಳಿದರು.
ಎತ್ತಿನಹೊಳೆಗೆ ಕೇಂದ್ರದಿಂದ ತಡೆ, ರೈತರಲ್ಲಿ ಆತಂಕ, ಭೂಮಿ ಕೊಟ್ಟವರಿಗೂ ಚಿಂತೆ
ರಾಜ್ಯದ ಮಹತ್ವಕಾಂಕ್ಷಿ ಎತ್ತಿನಹೊಳೆ ಯೋಜನೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ತಡೆ ನೀಡಿದೆ. ಈ ತಡೆಯಾಜ್ಞೆ ತೆರವುಗೊಳಿಸಲು ರಾಜ್ಯ ಸರಕಾರ ಕೇಂದ್ರದ ಮನವೊಲಿಸುವ ಪ್ರಯತ್ನದಲ್ಲಿದೆ. ಯೋಜನೆಗೆ ಭೂಮಿ ನೀಡಿದ ಮತ್ತು ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದ ರೈತರಲ್ಲಿ ಆತಂಕ ಮನೆ ಮಾಡಿದೆ. 2027ಕ್ಕೆ ಯೋಜನೆ ಪೂರ್ಣಗೊಳ್ಳುವುದು ಅನುಮಾನ ಎದುರಾಗಿದ್ದು, ಜಲಸಂಪನ್ಮೂಲ ಸಚಿವರು ತಡೆಯಾಜ್ಞೆ ತೆರವುಗೊಳಿಸಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿಚಾರದಲ್ಲಿ ಎಐಸಿಸಿ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದೆ. ಸಂಪುಟ ಪುನಾರಚನೆ ಮತ್ತು ನಾಯಕತ್ವ ಬದಲಾವಣೆಯ ಬೇಡಿಕೆಗಳಿಂದಾಗಿ, ಸದ್ಯಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ವರಿಷ್ಠರು ನಿರ್ಧರಿಸಿದ್ದಾರೆ. ಡಿಸೆಂಬರ್ನಲ್ಲಿ ಸಂಸತ್ ಅಧಿವೇಶನದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಭರವಸೆ ನೀಡಲಾಗಿದೆ.
ಕೊಡಿಗೇಹಳ್ಳಿಯಲ್ಲಿ ಗೃಹಿಣಿಯನ್ನು ರಸ್ತೆ ಮೇಲೆ ಎಳೆದಾಡಿ ಹೊಡೆದ ಪಕ್ಕದ ಮನೆಯವರು - ಎಫ್ಐಆರ್ ದಾಖಲು
ಬೆಂಗಳೂರಿನ ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ಘೋರ ಘಟನೆ ನಡೆದಿದೆ. ಪವನ್ ಕುಮಾರ್ ಎಂಬುವರು ತಮ್ಮ ಮನೆಯ ನಿರ್ಮಾಣ ಕಾರ್ಯದ ವೇಳೆ ಚಿತ್ರಕಲಾ ಅವರ ಕಾಂಪೌಂಡ್ ಗೋಡೆಗೆ ಹಾನಿ ಮಾಡಿದ್ದಾರೆ. ಈ ವಿಚಾರವಾಗಿ ಮಾತಿಗೆ ಹೋದ ಚಿತ್ರಕಲಾ ಅವರ ಮೇಲೆ ಪವನ್ ಕುಮಾರ್, ಪದ್ಮಾವತಿ, ಭಾಗ್ಯ, ರಾಜೇಂದ್ರ ಹಾಗೂ ಮೋನಿಕಾ ಸೇರಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ರಾಜೇಂದ್ರ ಆ್ಯಸಿಡ್ ಎರಚುವುದಾಗಿ ಬೆದರಿಸಿದ್ದಾನೆ. ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಡಿ.27, 28 ಕೆಪಿಸಿಎಲ್ ಮರು ಪರೀಕ್ಷೆ
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ; ವೈದ್ಯಕೀಯ ಶಿಕ್ಷಣ ಇಲಾಖೆ, ಕೆಇಎಗೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಮೂಡಬಿದರೆಯ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಬಿಎಂಎಚ್ಎಸ್ ಕೋರ್ಸ್ ಮುಗಿಸಿ ಹೋಮಿಯೋಪಥಿ ಸ್ನಾತಕೋತ್ತರ ಕೋರ್ಸ್ ಪ್ರವೇಶ ಪಡೆಯಲು ಬಯಸಿದ 30 ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ಗೆ ಹಾಜರಾಗಲು 'ವೈದ್ಯಕೀಯ ಅರ್ಹತಾ ಮಾನ್ಯತಾ ಪಟ್ಟಿ' (ಎಂಕ್ಯೂಆರ್ಎಲ್) ಹಾಗೂ ನೋಂದಣಿ ಪ್ರಮಾಣಪತ್ರ ಒದಗಿಸುವಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಏಕಸದಸ್ಯ ನ್ಯಾಯಪೀಠ 2025ರ ಅಕ್ಟೋಬರ್ 27ರಂದು ನೀಡಿದ್ದ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೋಮಿಯೋಪಥಿ ಪರಿಷತ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಆಳ್ವಾಸ್ ಹೋಮಿಯೋಪಥಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ 30 ವಿದ್ಯಾರ್ಥಿಗಳು ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಿತು.
ಎಸ್ಸಿ-ಎಸ್ಟಿ ಮೀಸಲಾತಿ ಕಾಯ್ದೆ ಅನ್ವಯ ನೇಮಕಾತಿ : ಮುಂದಿನ ವಿಚಾರಣೆವರೆಗೆ ಕ್ರಮಕೈಗೊಳ್ಳದಂತೆ ಸರಕಾರಕ್ಕೆ ನಿರ್ದೇಶನ
ಬೆಂಗಳೂರು : ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹಿಗ್ಗಿಸಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022ಕ್ಕೆ ಸಂಬಂಧಿಸಿ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿತು. ಹೆಚ್ಚುವರಿ ಅಡ್ವೋಕೇಟ್ ಜನರಲ್ ರೊಬೆನ್ ಜೇಕಬ್ ಅವರು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋ ರ್ಟ್ ಮತ್ತೊಂದು ಪೀಠ, ನೇಮಕಾತಿ ಪ್ರಕ್ರಿಯೆಯಗಳನ್ನು ನಡೆಸಬಹುದು. ಆದರೆ, ನೇಮಕಾತಿ ಆದೇಶಗಳನ್ನು ನೀಡಬಾರದು ಎಂದು ಆದೇಶಿಸಿದೆ. ಹೀಗಾಗಿ, ಅದೇ ಆದೇಶವನ್ನು ಈ ಅರ್ಜಿಯಲ್ಲಿಯೂ ಮುಂದುವರೆಸಬೇಕು. ಕಳೆದ ಒಂದು ವರ್ಷದಿಂದ ನೇಮಕಾತಿ ನಡೆದಿಲ್ಲ. ಈಗಷ್ಟೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕಾಯ್ದೆ ಅನುಷ್ಠಾನಕ್ಕೆ ತಡೆ ನೀಡಿದರೆ ಮತ್ತಷ್ಟು ವಿಳಂಬವಾಗಲಿದೆ ಎಂದರು. 'ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗವನ್ನು ರಚನೆ ಮಾಡಲಾಗಿತ್ತು. ಈ ಆಯೋಗವು, ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ದತ್ತಾಂಶ ಸಂಗ್ರಹಿಸಿ ಹಲವು ಶಿಫಾರಸುಗಳನ್ನು ಮಾಡಿದೆ. ಇದರ ಆಧಾರದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಕಾಯ್ದೆ ರೂಪಿಸಲಾಗಿದೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠವು ಇಷ್ಟು ದಿನ ಸರಕಾರ ಏನು ಮಾಡುತ್ತಿತ್ತು. ಇನ್ನೂ 6 ತಿಂಗಳವರೆಗೆ ನೇಮಕಾತಿ ಮಾಡದಿದ್ದರೆ ಏನೂ ಆಗುವುದಿಲ್ಲ. ಮೊದಲು ಅರ್ಜಿಯಲ್ಲಿ ಎತ್ತಿರುವ ಕಾನೂನಾತ್ಮಕ ಅಂಶಗಳು ಪರಿಹಾರ ವಾಗಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ವಿಚಾರಣೆಯನ್ನು ಮುಂದೂಡಿತು. ಪರಿಶಿಷ್ಟ ಜಾತಿಗೆ ಶೇ 15ರಿಂದ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ ಶೇ.7ರವರೆಗೂ ಮೀಸಲಾತಿ ಹೆಚ್ಚಳ ಮಾಡಿ ಒಟ್ಟು ಮೀಸಲಾತಿಯನ್ನು 56ಕ್ಕೆ ಹೆಚ್ಚಿಸಿ ರಾಜ್ಯ ಸರಕಾರ 2023ರ ಜ.12ರಂದು ಅಧಿಸೂಚನೆ ಹೊರಡಿಸಿದೆ. ಸರಕಾರ ಅನುಮತಿ ಪಡೆಯದೇ ಮೀಸಲಾತಿ ಹೆಚ್ಚಳ ಮಾಡಿರುವುದು ಸಂವಿಧಾನ ಬಾಹಿರ. ಆದ್ದರಿಂದ, ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರು ಸ್ವತಃ ವಾದ ಮಂಡಿಸಿದರು.
10,000 ಹೆಕ್ಟೇರ್ ಪ್ರದೇಶದ ಗಡಿ ಗುರುತು; ಟಾಸ್ಕ್ ಫೋರ್ಸ್ ಅವಧಿ ವಿಸ್ತರಿಸಿ ರಾಜ್ಯ ಸರಕಾರ ಆದೇಶ
ಚಿಕ್ಕಮಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71ರನ್ವಯ ಚಿಕ್ಕಮಗಳೂರು ಜಿಲ್ಲೆಯಲ್ಲಿನ ಅರಣ್ಯ ಮೀಸಲು ಪ್ರದೇಶಗಳಿಂದ ಹೊರತುಪಡಿಸಿರುವ 10,000 ಹೆಕ್ಟೇರ್ ಪ್ರದೇಶಕ್ಕೆ ಸರಿಯಾದ ಗಡಿ ವಿಸ್ತೀರ್ಣವನ್ನು ಗುರುತಿಸಿ ಗ್ರಾಮವಾರು, ಸರ್ವೇ ನಂಬರ್ಗಳನ್ನು ಗುರುತಿಸಲು ಜಂಟಿ ಮೋಜಣಿ ತಂಡಗಳ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಅವಧಿಯನ್ನು ವಿಸ್ತರಿಸಿ ಸರಕಾರ ಆದೇಶ ಹೊರಡಿಸಿದೆ. ಜಂಟಿ ಮೋಜಣಿ ತಂಡಗಳು, ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಕಾಲಾವಧಿಯನ್ನು ದಿನಾಂಕ 31-07-2026 ರವರೆಗೆ ವಿಸ್ತರಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿಶೇಷವಾಗಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ತಾಲೂಕು ಮತ್ತು ಖಾಂಡ್ಯ ಹೋಬಳಿಯ ರೈತರಿಗೆ ಟಾಸ್ಕ್ ಫೋರ್ಸ್ ರಚನೆಯಿಂದ ಕಳೆದ ಕೆಲವು ದಶಕಗಳಿಂದ ಹಕ್ಕುಪತ್ರ ಪಡೆಯಲು ಪಡುತ್ತಿರುವ ಸಮಸ್ಯೆಗೆ ಬಹುತೇಕ ಪರಿಹಾರ ಸಿಗಲಿದೆ. ಟಾಸ್ಕ್ ಫೋರ್ಸ್ ಅವಧಿ ವಿಸ್ತರಣೆ ಮಾಡಲು ಶಾಸಕ ಟಿ.ಡಿ.ರಾಜೇಗೌಡರ ನಿರಂತರ ಪ್ರಯತ್ನ ಮುಖ್ಯ ಕಾರಣ. ಟಾಸ್ಕ್ ಫೋರ್ಸ್ ಜಂಟಿ ಸರ್ವೇಯಿಂದ ಅನಧಿಕೃತ ಸಾಗುವಳಿ ಸಕ್ರಮೀಕರಣಕ್ಕಾಗಿ ಬಾಕಿ ಇರುವ ವಿಸ್ತೀರ್ಣ, ಅಕ್ರಮ ಮನೆಗಳ (94ಸಿ,94ಸಿಸಿ) ಸಕ್ರಮೀಕರಣಕ್ಕೆ ಒಳಗೊಂಡಿರುವ ವಿಸ್ತೀರ್ಣ, ಸಾಗುವಳಿ ಚೀಟಿ ನೀಡಲು ಬಾಕಿ ಇರುವ ವಿಸ್ತೀರ್ಣ ಮತ್ತು ಟಿ.ಟಿ. ದಂಡ ವಿಧಿಸಿರುವ ವಿಸ್ತೀರ್ಣದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಭೂ ಮಂಜೂರಾತಿ ನಿಯಮಾವಳಿ ಅಡಿ ಪರಿಶೀಲನೆಗೆ ಒಳಪಡಿಸಿ ಸಕ್ರಮೀಕರಣಕ್ಕೆ ಅನುವಾಗಲು 9,895 ಹೆಕ್ಟೇರ್ ಪ್ರದೇಶವನ್ನು ಗ್ರಾಮವಾರು ಮತ್ತು ಸರ್ವೇ ನಂಬರ್ವಾರು ಗುರುತಿಸಿ ಸರ್ವೇ ಮಾಡಿ ಹದ್ದುಬಸ್ತು ಕಾರ್ಯ ಕೈಗೊಳ್ಳಲಾಗುವುದು. ಶೃಂಗೇರಿ ಶಾಸಕರ ರೈತ ಪರವಾದ ಈ ಪ್ರಯತ್ನದಿಂದ ಕ್ಷೇತ್ರದ ಸಾವಿರಾರು ರೈತರಿಗೆ ಅನುಕೂಲ ಆಗಲಿದೆ. ಬಗರ್ ಹುಕುಂ ಕೃಷಿ ಜಮೀನು ಮಾಡಿಕೊಂಡಿರುವ ರೈತರಿಗೆ ಹಕ್ಕುಪತ್ರ ಪಡೆಯಲು, ಈಗಾಗಲೇ ಹಕ್ಕುಪತ್ರ ಪಡೆದು ಪಹಣಿ ಆಗದ ರೈತರಿಗೆ, ಹಕ್ಕುಪತ್ರ, ಪಹಣಿ ಹೊಂದಿದ್ದರೂ ಅರಣ್ಯ ಪ್ರದೇಶ ಎಂದು ಸಮಸ್ಯೆಗೆ ಸಿಕ್ಕಿರುವ ರೈತರಿಗೆ ಇದರಿಂದ ಶಾಶ್ವತ ಪರಿಹಾರ ದೊರೆಯಲಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಇರುವ ಟಾಸ್ಕ್ ಪೋರ್ಸ್ ಸರಕಾರದ ಹೊಸ ಆದೇಶ ಅಲ್ಲ. ಈ ಟಾಸ್ಕ್ ಫೋರ್ಸ್ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದ ಸಮಯದಲ್ಲಿ 2008ರಿಂದ 2017-18ರವರೆಗೆ ವಿಸ್ತರಿಸುತ್ತಾ ಬಂದಿತ್ತು. ಸರಕಾರದ ಆದೇಶ ವಿಸ್ತರಣೆ ಆದರೂ ಜಿಲ್ಲೆಯಲ್ಲಿ ಯಾವುದೇ ಜಂಟಿ ಸರ್ವೇ ನಡೆಯಲಿಲ್ಲ. ರೈತರ ನೆರವಿಗೆ ಬರಬೇಕಾದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜಂಟಿ ಸರ್ವೇ ಮಾಡಿ ರೈತರ ಸಹಾಯಕ್ಕೆ ಬರದೆ ಅದೇ ಅವಧಿಯಲ್ಲಿ ಶೃಂಗೇರಿ ಕ್ಷೇತ್ರದಾದ್ಯಂತ ಕಂದಾಯ ಭೂಮಿಯನ್ನು ಅರಣ್ಯ ಭೂಮಿ ಮಾಡಲು ಸೆಕ್ಷನ್ 4 ಹೊರಡಿಸಿ ರೈತರ ಪಾಲಿಗೆ ಮತ್ತಷ್ಟು ಸಮಸ್ಯೆ ತಂದಿಟ್ಟರು. ಕಂದಾಯ ಭೂಮಿಯನ್ನು ಉಳಿಸಿಕೊಳ್ಳಲು ಮತ್ತು ರೈತರಿಗೆ ಹಕ್ಕುಪತ್ರ ನೀಡಲು ನಿರಂತರ ಪ್ರಯತ್ನ ನಡೆಸುತ್ತಿರುವ ಜನಪರ ಕಾಳಜಿ ಇರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರ ನೇತೃತ್ವದಲ್ಲಿ ರೈತರ ದಶಕಗಳ ಸಮಸ್ಯೆ ಬಗೆಹರಿಯಲಿದೆ ಎಂಬ ಆಶಾಭವನೆ ಇದೆ. -ಎಂ.ಯೂಸುಫ್ ಪಟೇಲ್, ಜಯಪುರ
ಜೆಫ್ರಿ ಎಪ್ಸ್ಟೀನ್ ಪ್ರಕರಣದ ದಾಖಲೆಗಳನ್ನು ಬಹಿರಂಗಪಡಿಸಲು ಅಮೆರಿಕಾದ ಕಾಂಗ್ರೆಸ್ ಆದೇಶಿಸಿದೆ. ಅಧ್ಯಕ್ಷ ಟ್ರಂಪ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದ್ದಾರೆ. ಈ ಹಿಂದೆ ಬಿಡುಗಡೆಯಾದ 20,000 ಪುಟಗಳ ದಾಖಲೆಗಳಲ್ಲಿ ಹಲವು ಪ್ರಮುಖ ವ್ಯಕ್ತಿಗಳ ಹೆಸರುಗಳು ಉಲ್ಲೇಖವಾಗಿವೆ. ಆದರೆ, ನ್ಯಾಯಾಂಗ ಇಲಾಖೆ ಎಲ್ಲಾ ದಾಖಲೆಗಳನ್ನು ನೀಡುವ ಸಾಧ್ಯತೆ ಕಡಿಮೆ ಇದೆ. ತನಿಖಾ ಹಂತದಲ್ಲಿರುವ ಅಥವಾ ವಿಶೇಷ ಹಕ್ಕುಗಳ ಅಡಿಯಲ್ಲಿರುವ ಮಾಹಿತಿಗಳು ಗೌಪ್ಯವಾಗಿ ಉಳಿಯಲಿವೆ.
ವಿವಿಗಳು ಮುಕ್ತ ವಿಚಾರಗಳ ನೆಪದಲ್ಲಿ ಮತೀಯವಾಗಬಾರದು : ಬರಗೂರು ರಾಮಚಂದ್ರಪ್ಪ
ಶಿವಮೊಗ್ಗ : ಯಾವುದೇ ವಿಶ್ವ ವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದ್ದಾರೆ. ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ವಿಶ್ವ ವಿದ್ಯಾನಿಲಯ ಮುಕ್ತವಾಗಿ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾವ ಮಾಡಿದರೂ ವಿನಃ, ಅಂತಿಮವಾಗಿ ಅದು ಮತೀಯವಾಗದೇ ಇರುವಂತಹ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದರು. ವಿಶ್ವ ವಿದ್ಯಾನಿಲಯಗಳು ಅದು ಕೇಳಬೇಕು, ಇದು ಕೇಳಬೇಕು ನಿಜ. ಆದರೆ, ಯಾರು ಸುಂದರವಾದ ಸುಳ್ಳನ್ನು ಹೇಳುತ್ತಾರೋ ಅದನ್ನು ನಮ್ಮ ಜನ ನಂಬಿ ಬಿಡುತ್ತಾರೆ. ಸುಳ್ಳು ಸುಂದರವಾಗಿರುತ್ತೆ, ಸತ್ಯ ಕಠೋರವಾಗಿರುತ್ತದೆ. ಸುಳ್ಳಿಗೆ ಸಾಕ್ಷಿ ಬೇಕಿಲ್ಲ. ಸತ್ಯಕ್ಕೆ ಸಾಕ್ಷಿ ಕೇಳುವ ಕಾಲ ಇದಾಗಿದೆ. ಹಾಗಾಗಿ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಮುಕ್ತವಾಗಿರೋಣ. ಆದರೆ, ಅದನ್ನು ಪ್ರತಿಪಾದಿಸುವಲ್ಲಿ ನಮಗೊಂದು ಸ್ಪಷ್ಟತೆ ಇರಬೇಕು. ಕುವೆಂಪು ವಿವಿಯ ವಿಚಾರಗಳಲ್ಲಿ ಮುಕ್ತವಾಗಿರೋಣ. ಆದರೆ, ಇಡೀ ಸಮಾಜ ಮತೀಯವಾಗಿರದಂತೆ ನೋಡಿಕೊಳ್ಳೋಣ ಎಂದರು. ಯಾವುದೇ ವಿಚಾರಗಳ ಬಗ್ಗೆ ನಮಗೆ ನಿರ್ದಿಷ್ಟವಾದ ನಿಲುವು ಇರಬೇಕಾಗುತ್ತದೆ. ಯು.ಆರ್.ಅನಂತಮೂರ್ತಿ ಅವರೂ ಇದನ್ನೇ ಹೇಳಿದ್ದು. ಬೇರೆಯವರ ವಿಚಾರ ಕೇಳಬಾರದು ಎಂದಲ್ಲ. ಕೇಳುವಾಗ ಸಹ ಮಕ್ಕಳಲ್ಲಿ ಏನು ಪರಿಣಾಮ ಆಗಬಹುದು ಎಂಬುದನ್ನು ಯೋಚಿಸಿ ಕಾರ್ಯಕ್ರಮಗಳನ್ನು ಮಾಡಬೇಕೆಂದು ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದರು. ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಶರತ್ ಅನಂತಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಎನ್.ಛಲವಾದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕನ್ನಡ ಭಾರತಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಲಸಚಿವ ಎ.ಎಲ್.ಮಂಜುನಾಥ್, ಪ್ರೊ.ಶ್ರೀಕಂಠಕೂಡಿಗೆ, ಪ್ರೊ.ಸಣ್ಣರಾಮ, ಪ್ರೊ.ಕೇಶವಶರ್ಮ, ಪ್ರೊ.ಕುಮಾರಚಲ್ಯ ಅವರನ್ನು ಇದೇ ವೇಳೆ ಗೌರವಿಸಲಾಯಿತು.
ಬೀದಿ ನಾಯಿ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ 5 ಲಕ್ಷ ರೂ. ಪರಿಹಾರ : ರಾಜ್ಯ ಸರಕಾರ ಆದೇಶ
ಬೆಂಗಳೂರು : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರಕಾರವು ಆದೇಶ ಹೊರಡಿಸಿದೆ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ನೀಡುವ ಪರಿಹಾರ ಹಣದಲ್ಲಿ ಚಿಕಿತ್ಸೆ ವೆಚ್ಚವಾಗಿ 1,500 ರೂ. ಹಾಗೂ ಗಾಯಗೊಂಡ ಸಂತ್ರಸ್ತರಿಗೆ 3,500 ರೂ. ಪಾವತಿಯಾಗಲಿದೆ. ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ ಅಥವಾ ರೇಬೀಸ್ನಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ
4,056 ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ : ರಾಜ್ಯ ಸರಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್ಕೆಜಿ, ಯುಕೆಜಿಯನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದಿಂದಲೇ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು ಮತ್ತು ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1699 ಮ್ಯಾಗ್ನೆಟ್ ಶಾಲೆಗಳು ಸೇರಿ 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದೆ. ಪ್ರಸ್ತುತ ಸರಕಾರಿ ಶಾಲೆಗಳಲ್ಲಿ ನಡೆಸಲಾಗುತ್ತಿರುವ ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಎಲ್ಕೆಜಿ, ಯುಕೆಜಿ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುವುದು. ಪೂರ್ವ ಪ್ರಾಥಮಿಕ ತರಗತಿಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ನಡೆಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ. ಪೂರ್ವ ಪ್ರಾಥಮಿಕ ತರಗತಿಗಳನ್ನು ನಡೆಸಲು ಅಗತ್ಯ ಮೂಲಭೂತ ಸೌಕರ್ಯ ಮತ್ತು ಕಲಿಕಾ ಸೌಕರ್ಯಗಳನ್ನು ನಿಯಮಾನುಸಾರ ಒದಗಿಸಲು ಉಪನಿರ್ದೇಶಕರು(ಆಡಳಿತ) ಇವರಿಗೆ ಸೂಕ್ತ ನಿರ್ದೇಶನ ನೀಡುತ್ತಾರೆ. ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿ ಸಜ್ಜುಗೊಳಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಆದೇಶದಲ್ಲಿ ಹೇಳಿದೆ. ಪ್ರಸ್ತುತ 2,619 ಸರಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದು ಈ ವರ್ಷದ ಬಜೆಟ್ನಲ್ಲಿ ತಿಳಿಸಲಾಗಿತ್ತು ಅದರಂತೆ ರಾಜ್ಯ ಸರಕಾರವು ಈ ಆದೇಶ ಹೊರಡಿಸಿದೆ.
ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ: ಝೋಝೋ ಕನೆಕ್ಟ್ ಬಿಸಿನೆಸ್ ಕಾರ್ಡ್ ಬಿಡುಗಡೆ
ಬೆಂಗಳೂರು : ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆ-2025ರ ಎರಡನೇ ದಿನ ಬೆಂಗಳೂರು ಅಂತರ್ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರಾಜ್ಯ ಸರಕಾರವು ನವೋದ್ಯಮಗಳ 50 ಹೊಸ ಆವಿಷ್ಕಾರಗಳು ಮತ್ತು ಪರಿಹಾರಗಳನ್ನು ಬಿಡುಗಡೆ ಮಾಡಿತು. ಅವುಗಳಲ್ಲಿ ಕೇವಲ 8 ವರ್ಷದ ಕಿರಿಯ ಆವಿಷ್ಕಾರಕ ಅತ್ವಿಕ್ ಅಮಿತ್ ಕುಮಾರ್ ಅವರು ಬಿಡುಗಡೆ ಮಾಡಿದ ಝೋಝೋ ಕನೆಕ್ಟ್ ಡಿಜಿಟಲ್ ಬಿಸಿನೆಸ್ ಕಾರ್ಡ್ ಸಹ ಒಂದಾಗಿದೆ. ಝೋಝೋ ಕನೆಕ್ಟ್ ಸ್ಮಾರ್ಟ್ ತಂತ್ರಜ್ಞಾನದ ಮೂಲಕ ನೆಟ್ವರ್ಕಿಂಗ್ ಅನ್ನು ಇನ್ನಷ್ಟು ಸುಲಭವಾಗಿಸುತ್ತದೆ ಮತ್ತು ಬ್ರ್ಯಾಂಡಿಂಗ್ ಅನ್ನು ಸರಳಗೊಳಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಬಿಜೆಪಿ ಪಕ್ಷ ʼವೋಟ್ ಚೋರಿʼ ಮಾಡಿ ಅಧಿಕಾರದ ಗದ್ದುಗೆಗೇರಿದೆ: ಇನಾಯತ್ ಅಲಿ
ಸುರತ್ಕಲ್: ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ʼವೋಟ್ ಚೋರಿʼ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಬುಧವಾರ ಸಂಜೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, “ಬಿಜೆಪಿ ಪಕ್ಷ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ ಬಯಲಾಗಿದ್ದು, ಒಂದೇ ಹೆಸರಲ್ಲಿ ಹತ್ತಾರು ಕಡೆಗಳಲ್ಲಿ ಮತ ಚಲಾಯಿಸಿರುವುದು ಬೆಳಕಿಗೆ ಬಂದಿದೆ. ಹರ್ಯಾಣದಲ್ಲಿ ಬ್ರೆಝಿಲ್ ಮಾಡೆಲ್ ಒಬ್ಬಳ ಫೋಟೋ ಬಳಸಿ 22ಕ್ಕೂ ಹೆಚ್ಚು ಕಡೆಗಳಲ್ಲಿ ಮತದಾನ ಮಾಡಲಾಗಿದೆ. ಬಿಹಾರದಲ್ಲಿ ಅಧಿಕಾರಕ್ಕೇರಲು ಮತಗಳ್ಳತನವೇ ಪ್ರಮುಖ ಕಾರಣವಾಗಿದೆ. ದಿಲ್ಲಿಯಲ್ಲಿ ನಡೆದಿರುವ ವಿಧ್ವಂಸಕ ಕೃತ್ಯಗಳಲ್ಲಿ ಬಿಜೆಪಿ ಸರಕಾರದ ನಿಷ್ಕ್ರಿಯತೆ ಎದ್ದು ಕಾಣುತ್ತಿದೆ. ಕೇಂದ್ರ ಸರಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ನಡೆಯಲಿದೆ” ಎಂದರು. ರಾಷ್ಟ್ರೀಯ ಉಸ್ತುವಾರಿ ನಿಗಮ್ ಭಂಡಾರಿ ಮಾತಾಡಿ, “ಬಿಹಾರದಲ್ಲಿ ನಡೆದಿರುವ ವೋಟ್ ಚೋರಿಗೆ ಅಂತ್ಯ ಹಾಡುವ ಕಾಲ ಸನ್ನಿಹಿತವಾಗಿದೆ. ಮತದಾನವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಹಾಕುವ ಮತ ಬೇರೆ ಪಕ್ಷದ ಪಾಲಾಗುತ್ತಿದೆ. ಇದನ್ನು ನಾವೆಲ್ಲರೂ ಒಗ್ಗೂಡಿ ತಡೆಯಬೇಕು” ಎಂದರು. ಪದ್ಮರಾಜ್ ಆರ್. ಮಾತಾಡಿ, “ಬಿಹಾರದಲ್ಲಿ ಕೊನೆಯ ಹಂತದ ಮತದಾನದ ಹಿಂದಿನ ದಿನ ದಿಲ್ಲಿಯಲ್ಲಿ ವಿಧ್ವಂಸಕ ಕೃತ್ಯ ನಡೆಯುತ್ತದೆ ಎಂದರೆ ಇದರ ಹಿಂದೆ ಯಾರ ಕೈವಾಡ ಇದೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ದೇಶದ ಪ್ರಮುಖ ತನಿಖಾ ಸಂಸ್ಥೆಗಳು, ಗುಪ್ತಚರ ಇಲಾಖೆಗಳು ಕೇಂದ್ರ ಸರಕಾರದ ಅಧೀನದಲ್ಲಿದ್ದರೂ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಆಗುತ್ತಿಲ್ಲ. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಪಡೆಯಲು ವೋಟ್ ಚೋರಿ ಅಸ್ತ್ರವನ್ನು ಬಳಸಿಕೊಂಡಿದೆ. ಇಂತಹ ವೋಟ್ ಚೋರಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ, ಹೋರಾಟಗಳು ನಡೆಯಬೇಕು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಒಬ್ಬರೇ ಅಲ್ಲ ಅವರೊಂದಿಗೆ ನಾವೆಲ್ಲರೂ ನಿಲ್ಲಬೇಕು” ಎಂದರು. ವೇದಿಕೆಯಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ಕಲ್ಯಾಣ್ ತೇಜಸ್, ಇಬ್ರಾಹಿಂ ನವಾಝ್, ಪುರುಷೋತ್ತಮ್ ಚಿತ್ರಾಪುರ, ಸದಾಶಿವ ಶೆಟ್ಟಿ, ಅನಿಲ್, ಬಾಹುಬಲಿ ಮತ್ತಿತರರು ಉಪಸ್ಥಿತರಿದ್ದರು. ರೆಹಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಧನ್ಯವಾದ ಸಲ್ಲಿಸಿದರು.
ಮೀಫ್ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಕರಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಬಗ್ಗೆ ತರಬೇತಿ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀಫ್ ವಿದ್ಯಾ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ದೈಹಿಕ ಶಿಕ್ಷಕರು ಮತ್ತು ಶಿಕ್ಷಕಿಯರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಬುಧವಾರ ಮಂಗಳೂರಿನ ಅಡ್ಯಾರ್ನಲ್ಲಿ ಆಯೋಜಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಅಂಗವಾಗಿ ಜರಗುವ ಧ್ವಜಾರೋಹಣ, ಪಥಸಂಚಲನೆ, ಗೌರವರಕ್ಷೆ ಸ್ವೀಕೃತಿ ಇತ್ಯಾದಿ ಕಾರ್ಯಕ್ರಮಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳು ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ಶಿಕ್ಷಕರಿಗೆ ತರಬೇತಿ ನೀಡಲಾಯಿತು. ಕಾರ್ಯಾಗಾರದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ ಸೋಜ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ಮಟ್ಟದ ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ, ಉಪಾಧ್ಯಕ್ಷ ಅರುಣ್ ಪ್ರಸಾದ್ ರೈ ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಪ್ರಧಾನ ಕಾರ್ಯದರ್ಶಿ ಪ್ರತಿಮ್ ಕುಮಾರ್ ತರಬೇತಿ ನೀಡಿದರು. ಮೀಫ್ ಕೇಂದ್ರ ಸಮಿತಿಯ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ತರಬೇತುದಾರರನ್ನು ಪರಿಚಯಿಸಿದರು. ಉಪಾಧ್ಯಕ್ಷ ಪರ್ವೇಜ್ ಅಲಿ ವಂದಿಸಿದರು. ಕಾರ್ಯದರ್ಶಿಗಳಾದ ಅನ್ವರ್ ಹುಸೈನ್ ಗೂಡಿನಬಳಿ, ಶಹಮ್, ಮತ್ತು ಬರಕಾ ವಿದ್ಯಾ ಸಂಸ್ಥೆಯ ಜನರಲ್ ಮ್ಯಾನೇಜರ್ ಸಮೀರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಾಗಾರದ ಅಂಗವಾಗಿ ನಡೆದ ಅಣುಕು ಪಥಸಂಚಲನೆ ಮತ್ತು ಗೌರವರಕ್ಷೆಯನ್ನು ಸೌದಿ ಅರೇಬಿಯಾದ ಅಲ್-ಮುಝಈನ್ ಸಂಸ್ಥೆಯ ಮಾಲಕರು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಝಕರಿಯ ಜೋಕಟ್ಟೆ ಸ್ವೀಕರಿಸಿದರು. ಮುಹಮ್ಮದ್ ಶಾರಿಕ್ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಾಗಾರರ ಕ್ರಮ ಬದ್ಧ ಅನುಷ್ಠಾನಕ್ಕಾಗಿ ಹತ್ತು ವಿದ್ಯಾ ಸಂಸ್ಥೆಗಳನ್ನು ಆಯ್ಕೆ ಮಾಡಲಾಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಮೀಫ್ ವಿದ್ಯಾ ಸಂಸ್ಥೆಗಳ ಒಟ್ಟು ೬೮ ಮಂದಿ ದೈಹಿಕ ಶಿಕ್ಷಕರು ಮತ್ತು ಶಿಕ್ಷಕಿಯರು ಈ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಝಕರಿಯಾ ಜೋಕಟ್ಟೆ ಅವರಿಗೆ ಮೀಫ್ನಿಂದ ಸನ್ಮಾನ
ಮಂಗಳೂರು: ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಕನ್ನಡ ರಾಜ್ಯೋತ್ಸವ ರಾಜ್ಯ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ ಅವರನ್ನು ಮಂಗಳೂರಿನ ಬರಕಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೀಫ್ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ ವಹಿಸಿ, ಈ ಸಂಸ್ಥೆಯು ಅರ್ಹ ವಿದ್ಯಾರ್ಥಿಗಳಿಗೆ ಈ ತನಕ 485 ಮೀಫ್ ಉಚಿತ ಸೀಟುಗಳನ್ನು ನೀಡಿರುವುದರ ಜೊತೆಗೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ಗುಣ ಮಟ್ಟವನ್ನು ಹೆಚ್ಚಿಸಲು ಪ್ರತೀ ವರ್ಷ ನೂರಕ್ಕೂ ಹೆಚ್ಚು ವಿವಿಧ ಕಾರ್ಯಕ್ರಮಗಳನ್ನು ನಡೆಸಿತ್ತಿರುವ ಬಗ್ಗೆ ಸಂಕ್ಷಿಪ್ತ ವಿವರಣೆಯನ್ನು ನೀಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಮೀಫ್ ಕೈಗೊಂಡ ವಿವಿದ ಕಾರ್ಯಕ್ರಮಗಳನ್ನು ಶ್ಲಾಘಿಸಿ, ಮೀಫ್ ಬಡ ವಿದ್ಯಾರ್ಥಿಗಳ ಉನ್ನತಿಗಾಗಿ ಇನ್ನಷ್ಟು ಹೆಚ್ಚಿನ ಕಾರ್ಯಕ್ರಮ ಅಳವಡಿಸಬೇಕೆಂದೂ, ಅದಕ್ಕೆ ತಾನೂ ನಿಮ್ಮ ಜೊತೆ ಕೈಜೋಡಿಸುವುದಾಗಿಯೂ ಝಕ್ರಿಯಾ ಭರವಸೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಮಂಗಳೂರಿನ ಸುಲ್ತಾನ್ ಗೋಲ್ಡ್ ಆಡಳಿತ ನಿರ್ದೇಶಕರಾದ ರವೂಫ್ ಮತ್ತು ಬರಕಾ ಸಂಸ್ಥೆಯ ಆಡಳಿತ ನಿರ್ದೇಶಕಿ ನರ್ಗಿಸ್ ಆಶ್ರಫ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಮೀಫ್ ಉಪಾಧ್ಯಕ್ಷ ಪರ್ವೀಜ್ ಅಲಿ, ಉಡುಪಿ ಘಟಕದ ಗೌರವಾಧ್ಯಕ್ಷ ಶಬೀ ಅಹಮದ್ ಖಾಝಿ, ಕಾರ್ಯದರ್ಶಿ ಗಳಾದ ಅನ್ವರ್ ಗೂಡಿನ ಬಳಿ, ಕೋಶಾಧಿಕಾರಿ ನಿಸಾರ್ ಎಂ. ಫಕೀರ್, ಸದಸ್ಯರುಗಳಾದ ಪಿ. ಎ. ಇಲ್ಯಾಸ್ ಕಾಟಿಪಳ್ಳ, ಅಬ್ದುಲ್ ರಝಕ್ ಗೋಳ್ತಮಜಲು, ಹನೀಫ್ ಚೈತನ್ಯ, ಅಬ್ದುಲ್ ಅಝೀಝ ಅಂಬರ್ ವ್ಯಾಲಿ, ಆದಿಲ್ ಕುನಿಲ್, ಫಾರೂಕ್ ಏರ್ ಲೈನ್ಸ್, ಬಷೀರ್ ಕುಂಬ್ರ, ಬರಕ ವಿದ್ಯಾ ಸಂಸ್ಥೆಯ ಅಯಾನ್ ಆಶ್ರಫ್, ಸೌಶ್ರೀನ್ ಮತ್ತು ಸಮೀರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ಸ್ವಾಗತಿಸಿ, ಕಾರ್ಯದರ್ಶಿ ಶಹಮ್ ಅಲ್ ಫುರ್ಖಾನ್ ವಂದಿಸಿದರು. ಕಾರ್ಯದರ್ಶಿ ಮುಹಮ್ಮದ್ ಶಾರಿಕ್ ಕಾರ್ಯಕ್ರಮ ನಿರೂಪಿಸಿದರು.
ಕೋಡಿ ಬ್ಯಾರೀಸ್ ಸಂಸ್ಥೆಗಳ ವಾರ್ಷಿಕ ಕ್ರೀಡೋತ್ಸವ ಸಮರೋಪ
ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಉಪ ಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ, 120 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರೀಸ್ ಸಂಸ್ಥೆಯ ಆಶಯ ಈ ಭಾಗದ ಪರಿಸರದಲ್ಲಿರುವ ಕಟ್ಟಕಡೆಯ ಮಗು ಶಿಕ್ಷಣ ವಂಚಿತರಾಗದೆ ಸುಶಿಕ್ಷಿತ ರನ್ನಾಗಿಸಬೇಕೆಂಬ ಉದ್ದೇಶವನ್ನು ಹೊಂದಿದ ಹೆಮ್ಮೆಯ ಸಂಸ್ಥೆ ಎಂದು ತಿಳಿಸುತ್ತಾ, ಸೋಲೇ ಗೆಲುವಿನ ಸೋಪಾನ. ಸೋಲುವುದನ್ನು ನಾವು ಕಲಿಯಬೇಕು. ಆ ಸೋಲಿನಲ್ಲೂ ಜೀವನಾನುಭವ ಸಿಗುತ್ತದೆ ಎಂದು ಹೇಳಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಸ್ವಸ್ಥ ಮಂಡಳಿಯ ಸದಸ್ಯ ಡಾ.ಆಸೀಫ್ ಬ್ಯಾರಿ ಮಾತನಾಡಿ, ಪ್ರಯತ್ನಿಸಿದರೂ ಯಶಸ್ಸು ಕಾಣದವರು ನಿರಾಶರಾಗದೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ಸಾಧನೆ ಮಾಡಲು ಉತ್ಸಾಹದಿಂದ ಭಾಗವಹಿಸಬೇಕೆಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ಕ್ರೀಡೆಯಲ್ಲಿನ ಸಾಧನೆಯನ್ನು ಇಲ್ಲಿಗೇ ಮುಗಿಸದೆ ಸದಾ ಕ್ರಿಯಾಶೀಲರಾಗಿ ಇರಬೇಕು’ ಎಂದು ತಿಳಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಅಶ್ವಿನಿ ಶೆಟ್ಟಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಡೀನ್ ಅಕಾಡೆಮಿ ಡಾ.ಪೂರ್ಣಿಮಾ ಟಿ., ಬ್ಯಾರೀಸ್ ಡಿ.ಎಡ್. ಮತ್ತು ಬಿ.ಎಡ್ ಪ್ರಾಂಶುಪಾಲೆ ಡಾ.ಫಿರ್ದೋಸ್, ಹಾಜಿ ಕೆ.ಮೊಹಿದ್ದೀನ್ ಬ್ಯಾರಿ, ಅನುದಾನಿತ ಪ್ರೌಢಶಾಲೆಯ ಪ್ರಾಂಶುಪಾಲೆ ಡಾ.ಜಯಶೀಲ ಶೆಟ್ಟಿ. ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಜಟ್ಟಪ್ಪ, ಚಕ್ರೇಶ್ವರಿ ದೇವಸ್ಥಾನದ ಧರ್ಮದರ್ಶಿ ಗೋಪಾಲ ಪೂಜಾರಿ, ಸಂಸ್ಥೆಯ ಎಲ್ಲ ಉಪ ಪ್ರಾಂಶುಪಾಲರು, ಎಸ್ಡಿಎಂಸಿ ಹಾಗೂ ಪಿಟಿಎಯ ಎಲ್ಲಾ ಸದಸ್ಯರು, ಉಪನ್ಯಾಸಕರು, ಉಪನ್ಯಾಸಕೇತರರ ವೃಂದ, ವಿದ್ಯಾರ್ಥಿ ಸಮೂಹ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಗಣ್ಯರ ಸಮ್ಮುಖದಲ್ಲಿ ಬಹುಮಾನ ವಿತರಿಸಲಾಯಿತು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್. ಸ್ವಾಗತಿಸಿದರು. ಬ್ಯಾರೀಸ್ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಸೌರಭ್ ವಂದಿಸಿದರು. ಬಿಎಡ್ನ ಪ್ರಶಿಕ್ಷಣಾರ್ಥಿ ಸ್ವಾತಿ ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಲುವಿಸ್ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಪತ್ರಕರ್ತರ ಸಂಘ: ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2015-28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನ.19ರಂದು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು. ಸಂಘದ ಚುನಾವಣಾಧಿಕಾರಿಯೂ ಆಗಿರುವ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಸಂಘದ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿ ಮಂಜುನಾಥ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ: ಕಾರು ಢಿಕ್ಕಿಯಾಗಿ ಪಾದಾಚಾರಿ ಮೃತ್ಯು
ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.18ರಂದು ಸಂಜೆ ವೇಳೆ ಜೋಡುರಸ್ತೆ ಶ್ರೀಸಾಯಿ ಅಟೋವರ್ಕ್ ಗ್ಯಾರೆಜ್ ಎದುರು ನಡೆದಿದೆ. ಮೃತರನ್ನು ಜೋಡುರಸ್ತೆಯ ನಿವಾಸಿ ಮಹಾಬಲ ಮೊಯಿಲಿ(86) ಎಂದು ಗುರುತಿಸಲಾಗಿದೆ. ಇವರು ಹಿರ್ಗಾನ ಕಡೆಯಿಂದ ತನ್ನ ಮನೆ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಹಿರ್ಗಾನ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು, ಮಹಾಬಲ ಮೊಯಿಲಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಕಾರ್ಕಳ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Ukraine War: ಉಕ್ರೇನ್ ರಾಜಧಾನಿಗೆ ಬಿಗಿ ಬಂದೋಬಸ್ತ್, ಯಾವ ಕ್ಷಣದಲ್ಲೂ ದಾಳಿ ಸಾಧ್ಯತೆ?
ರಷ್ಯಾ ಜೊತೆಗೆ ಯುದ್ಧ ಮಾಡಿ ಮಾಡಿ ಸೋತು ಹೋಗಿರುವ ಉಕ್ರೇನ್ ಸೇನೆಗೆ ಈಗ ಒಂದಷ್ಟು ಧೈರ್ಯ ಹಾಗೂ ಆತ್ಮಸ್ಥೈರ್ಯ ಬೇಕಾಗಿದೆ. ಆದರೆ ಇಂತಹ ಭಾರಿ ಒತ್ತಡದ ಸಮಯ ಇರುವ ವಾತಾವರಣದಲ್ಲೇ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಅಂದಹಾಗೆ ರಷ್ಯಾ ಸೇನೆಯು ಇದೀಗ ಉಕ್ರೇನ್ ರಾಜಧಾನಿಯನ್ನೇ ಟಾರ್ಗೆಟ್ ಮಾಡಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಇದೇ ಉಕ್ರೇನ್ ರಾಜಧಾನಿಯನ್ನ ವಶಕ್ಕೆ
ಮೊದಲ ಬಾರಿ ಟಾಪ್-5ರಲ್ಲಿ ಟೆಂಬಾ ಬವುಮಾ
ಕೋಲ್ಕತಾದಲ್ಲಿ ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊದಲ ಟೆಸ್ಟ್ ಪಂದ್ಯ ಅಂತ್ಯಗೊಂಡ ನಂತರ ಟೆಸ್ಟ್ ರ್ಯಾಂಕಿಂಗ್ನಲ್ಲೂ ಬದಲಾವಣೆ ಆಗಿದೆ. ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಅವರು ಎರಡನೇ ಇನಿಂಗ್ಸ್ ನಲ್ಲಿ 55 ರನ್ ಗಳಿಸಿದ ನಂತರ ಮೊದಲ ಬಾರಿ ಅಗ್ರ-5ರಲ್ಲಿ ಸ್ಥಾನ ಪಡೆದಿದ್ದಾರೆ. ಮೊದಲ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿ ಬ್ಯಾಟಿಂಗ್ ಮಾಡದಿದ್ದರೂ ಭಾರತ ತಂಡದ ನಾಯಕ ಶುಭಮನ್ ಗಿಲ್ ಎರಡು ಸ್ಥಾನ ಮೇಲಕ್ಕೇರಿ 11ನೇ ಸ್ಥಾನ ತಲುಪಿದರು. ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹುಸೇನ್ ಐರ್ಲ್ಯಾಂಡ್ ವಿರುದ್ಧ ಶತಕ ಗಳಿಸಿದ ಹಿನ್ನೆಲೆಯಲ್ಲಿ 34ನೇ ಸ್ಥಾನ ಹಂಚಿಕೊಂಡಿದ್ದಾರೆ. ತನ್ನ ಎರಡನೇ ಶತಕ ದಾಖಲಿಸಿದ ನಂತರ ಮಹ್ಮೂದುಲ್ ಹಸನ್ 19 ಸ್ಥಾನ ಮೇಲಕ್ಕೇರಿ 74ನೇ ರ್ಯಾಂಕ್ ತಲುಪಿದ್ದಾರೆ. ಈಡನ್ ಗಾರ್ಡನ್ಸ್ನಲ್ಲಿ ಆರು ವಿಕೆಟ್ಗೊಂಚಲು ಪಡೆದಿದ್ದ ಜಸ್ಪ್ರಿತ್ ಬುಮ್ರಾ ಬೌಲಿಂಗ್ ರ್ಯಾಂಕಿಂಗ್ನಲ್ಲಿ ತನ್ನ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಕುಲದೀಪ ಯಾದವ್ ಎರಡು ಸ್ಥಾನ ಮೇಲಕ್ಕೇರಿ 13ನೇ ರ್ಯಾಂಕಿಗೆ ತಲುಪಿದ್ದಾರೆ. ರವೀಂದ್ರ ಜಡೇಜ 15ನೇ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾದ ಮಾರ್ಕೊ ಜಾನ್ಸನ್ 11ನೇ ಸ್ಥಾನಕ್ಕೇರಿದ್ದಾರೆ. ಅದೇ ರೀತಿ ಟೆಸ್ಟ್ ಆಲ್ರೌಂಡರ್ಗಳಲ್ಲಿ ಐದನೇ ಸ್ಥಾನ ಪಡೆದಿದ್ದಾರೆ. ಸೈಮನ್ ಹಾರ್ಮರ್ 20 ಸ್ಥಾನ ಭಡ್ತಿ ಪಡೆದು 24ನೇ ರ್ಯಾಂಕಿಗೆ ಪ್ರವೇಶಿಸಿದ್ದಾರೆ.
ಉಡುಪಿ: ಕುಸಿದು ಬಿದ್ದು ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ಮೃತ್ಯು
ಉಡುಪಿ: ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಪಂ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ(51) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಶಾಲೆಗೆ ಕರ್ತವ್ಯಕ್ಕೆ ತೆರಳಿದ ಗಣೇಶ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮಾರ್ಪಳ್ಳಿ ನಿವಾಸಿಯಾಗಿದ್ದ ಇವರು ಸ್ಥಳೀಯ ಗೆಳೆಯರ ಬಳಗ, ಭಜನ ಮಂಡಳಿ ಹಾಗೂ ಗದ್ದಿಗೆ ಅಮ್ಮನವರ ಸಮಿತಿಯಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ರೋಹಿತ್ ಶರ್ಮಾ ಪ್ರಾಬಲ್ಯ ಅಂತ್ಯ! | ಡ್ಯಾರಿಲ್ ಮಿಚೆಲ್ ವಿಶ್ವದ ನಂ.1 ಏಕದಿನ ಬ್ಯಾಟರ್
ಈ ಸಾಧನೆ ಮಾಡಿದ ನ್ಯೂಝಿಲ್ಯಾಂಡ್ ನ ಎರಡನೇ ಆಟಗಾರ
ಜೆಡಿಎಸ್ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ : ಡಿ.ಕೆ.ಶಿವಕುಮಾರ್
ಬೆಂಗಳೂರು : ಜೆಡಿಎಸ್ನವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ನಮ್ಮ ಸರಕಾರ ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಿದೆ. ಆದರೆ ಜೆಡಿಎಸ್ಗೆ ಏನೂ ಮಾಡಲು ಆಗಿಲ್ಲ. ಹೀಗಾಗಿ ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಬೆಳೆಗೆ ತುಂಗಭದ್ರಾ ನೀರು ಹರಿಸುವ ವಿಚಾರವಾಗಿ ರೈತರ ಜೊತೆ ಸೇರಿ ಜೆಡಿಎಸ್ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಪಾಲಿನ 30 ಟಿಎಂಸಿ ತುಂಗಭದ್ರಾ ನೀರು ಆಂದ್ರಕ್ಕೆ ಸೇರುತ್ತಿದೆ. ಚಂದ್ರಬಾಬು ನಾಯ್ಡು ಅವರು ಸಭೆಗೆ ಬರುತ್ತಿಲ್ಲ. ಮೊದಲು ಅವರಿಂದ ಒಪ್ಪಿಗೆ ಕೊಡಿಸಲಿ ಎಂದು ಹೇಳಿದರು. ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಬಿಜೆಪಿ ಆರೋಪದ ವಿಚಾರವಾಗಿ, ಭ್ರಷ್ಟಾಚಾರ ನಡೆದಿದ್ದರೆ ಶೋಭಾ ಕರಂದ್ಲಾಜೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ಆತನಿಗಲ್ಲ. ಕಸ ಗುಡಿಸುವ ಯಂತ್ರಗಳ ಬಗ್ಗೆ ಅಧ್ಯಯನ ನಡೆಸಿಯೇ ಮುಂದುವರೆದಿರುವುದು. ಇದು ಕೇವಲ ಒಂದು ವರ್ಷದ ಯೋಜನೆಯಲ್ಲ, ಏಳು ವರ್ಷಗಳ ಯೋಜನೆ ಎಂದು ಅವರು ವಿವರಿಸಿದರು. ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಾವು ತನಿಖೆ ನಡೆಸಲು ಸಿದ್ಧರಿದ್ದೇವೆ. ಶೋಭಾ ಕರಂದ್ಲಾಜೆ ಅವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ. ಅವರ ಪ್ರಶ್ನೆಗಳಿಗೆ ಉತ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ವಿಚಾರದಲ್ಲಿ ನಾವು ಪಾರದರ್ಶಕವಾಗಿದ್ದೇವೆ. ಈ ಮೊತ್ತ ದೊಡ್ಡದಾಗಿ ಕಾಣುತ್ತಿರಬಹುದು. ಇದು ಕೇವಲ ವಾಹನದ ವಿಚಾರವೊಂದೇ ಇಲ್ಲ. ಚಾಲಕ, ಸಹಾಯಕ, ಸ್ವಚ್ಛ ಮಾಡುವವರು ಸೇರಿದಂತೆ ಅನೇಕ ವಿಚಾರಗಳಿವೆ. ಎಲ್ಲ ಆಯಾಮಗಳಿಂದ ಆಲೋಚಿಸಿ ಸರಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಅವರು ತಿಳಿಸಿದರು.
ಹಿಂದುಳಿದವರು &ದಲಿತರು ಬಿಜೆಪಿ - ಆರ್.ಎಸ್.ಎಸ್ - ಎಬಿವಿಪಿ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು: ಸಿಎಂ ಪ್ರಶ್ನೆ
ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ - ಆರ್.ಎಸ್.ಎಸ್ - ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು ? ಬಿಜೆಪಿ - ಆರ್.ಎಸ್.ಎಸ್ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರುತ್ತಾರಲ್ಲಾ ಇದಕ್ಕೇನು ಮಾಡೋದು?ದೇವರು, ಧರ್ಮದ ಹೆಸರಲ್ಲಿ ಸಾಯುತ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ - ಆರ್.ಎಸ್.ಎಸ್
ರೈತ ಮತ್ತು ಅಲ್ಪಸಂಖ್ಯಾತರ ವಿರೋಧಿ ಕಾನೂನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿಗೆ ಮನವಿ
ಮಂಗಳೂರು: ಬಿಜೆಪಿ ಸರಕಾರ ಜಾರಿಗೆ ತಂದಿದ್ದ ರೈತ ಹಾಗೂ ಅಲ್ಪಸಂಖ್ಯಾತರ ವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಮನವಿ ಸಲ್ಲಿಸಿತು. ಕಳೆದ ಬಿಜೆಪಿ ಸರಕಾರವು ವಿವಾದಿತ ಹಾಗೂ ಕೋಮು ಪ್ರಚೋದಿತ, ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ 2021 ಹಾಗೂ ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ 2021ನ್ನು ಜಾರಿಗೆ ತಂದಿದೆ. ಈ ಕರಾಳ ಸಂವಿಧಾನ ವಿರೋಧಿ ಕಾನೂನುಗಳನ್ನು ಬಿಜೆಪಿ ಸರಕಾರ ಜಾರಿಗೆ ತಂದಾಗ ರಾಜ್ಯದ ಬಹುಪಾಲು ಜನರು ತೀವ್ರವಾಗಿ ವಿರೋಧಿಸಿದ್ದರು. 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಇಂತಹ ಕರಾಳ ಹಾಗೂ ಜನವಿರೋಧಿ ಕಾನೂನುಗಳನ್ನು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಹಿಂದಕ್ಕೆ ಪಡೆಯುವ ಬಗ್ಗೆ ಆಶ್ವಾಸನೆಯನ್ನು ನೀಡಿತ್ತು. ಪ್ರಸಕ್ತ ಈ ಕಾನೂನುಗಳ ಅನುಷ್ಠಾನದಿಂದ, ಅದರಲ್ಲೂ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆಯಿಂದಾಗಿ ದ.ಕ. ಜಿಲ್ಲೆಯಲ್ಲಿ ಭಯದ ವಾತಾವರಣ ಉಂಟಾಗಿದೆ. ಗೋ ಸಾಗಾಣಿಕದಾರರ ಮೇಲೆ ಪೊಲೀಸರು ಶೂಟೌಟ್ ಮಾಡುವುದು, ಅವರ ಮನೆಗಳನ್ನು ಜಪ್ತಿ ಮಾಡುವುದು ಮುಂತಾದ ಕಳವಳಕಾರಿ ಘಟನೆಗಳು ನಡೆದಿದೆ. ಇದರಿಂದ ರೈತರು ತಮ್ಮ ಜಾನುವಾರಗಳನ್ನು ಮಾರಾಟ ಮಾಡಲಾಗದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ ಕರ್ನಾಟಕ ಧರ್ಮ ಸಂರಕ್ಷಣಾ ಕಾಯ್ದೆಯ ನೆಪವನ್ನು ಹೋರಿಸಿ ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರ ದೌಜನ್ಯವನ್ನು ನಡೆಸುತ್ತಿದ್ದಾರೆ. ಸಂವಿಧಾನ ಬದ್ಧವಾಗಿ ಪ್ರತಿಯೊಬ್ಬರಿಗೂ ಅವರಿಗೆ ಬೇಕಾದ ಧರ್ಮವನ್ನು ಯಾವುದೇ ಒತ್ತಡವಿಲ್ಲದೆ, ಒಪ್ಪಿ, ಆ ಪ್ರಕಾರ ನಡೆದುಕೊಂಡು ಹೋಗಲು ಅವಕಾಶಗಳು ಇರುವಾಗ, ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾನೂನು ಚಾಲ್ತಿಯಲ್ಲಿರುವುದು ಸಂವಿಧಾನ ವಿರೋಧಿಯಾಗಿದೆ. ಈ ಕಾನೂನು ಸಂಘ ಪರಿವಾರದ ಕೋಮು ಅಜೆಂಡದಲ್ಲಿ ಒಂದಾಗಿದೆ. ಇದರಿಂದ ಸಂವಿಧಾನದ ಮೂಲ ಆಶಯಕ್ಕೆ ಕೊಡಲಿ ಏಟು ನೀಡಿದೆ ಎಂಬುದನ್ನು ಮನವಿ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಅಲ್ಲದೆ ಈ ಕರಾಳ ಕಾನೂನುಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ರಮನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಪೂಜಾರಿ, ಇನಾಯತ್ ಅಲಿ ಮುಲ್ಕ್ಕಿ, ರಕ್ಷಿತ್ ಶಿವರಾಂ, ಎಂ.ಎಸ್.ಮುಹಮ್ಮದ್, ಕೆಪಿಸಿಸಿ ಸಂಯೋಜಕ, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಕೆ.ಕೆ., ಮಾಜಿ ಮೇಯರ್ ಕೆ. ಅಶ್ರಫ್, ಪಕ್ಷದ ಮುಖಂಡರಾದ ಅಲ್ವಿನ್ ಪ್ರಕಾಶ್, ಶಾಲೆಟ್ ಪಿಂಟೋ, ಚಾರ್ಮಾಡಿ ಹಸನಬ್ಬ, ಜಲೀಲ್ ಕೃಷ್ಣಾಪುರ, ಹೈದರಾಲಿ, ಹಬಿಬುಲ್ಲ ಕಣ್ಣೂರ್, ಸಮದ್ ಸೋಂಪಾಡಿ, ಮುಸ್ತಫ ಸುಳ್ಯ, ಶಂಸುದ್ದೀನ್ ಸುಳ್ಯ, ಟಿ.ಎಚ್. ಮೊಯ್ದಿನ್, ರಫೀಕ್ ಕಣ್ಣೂರ್, ಅಶ್ರಫ್ ಬಜಾಲ್, ವಿಕ್ಕಿ ಸಿಂಗ್, ಶಬೀರ್ ಸಿದ್ದಕಟ್ಟೆ, ಕರೀಮ್ ಗೇರು ಕಟ್ಟೆ, ಇಬ್ರಾಹಿಂ ಕಾಜೂರ್, ಸಿದ್ದೀಕ್ ಕಾಜೂರ್ ಮತ್ತಿತರರಿದ್ದರು.
ಎಲ್ಲ 12 ಟೆಸ್ಟ್ ಆಡುವ ದೇಶಗಳ ವಿರುದ್ಧ ಶತಕ ಗಳಿಸಿದ ಮೊದಲ ಬ್ಯಾಟರ್ ಹೋಪ್
ನೇಪಿಯರ್, ನ.19: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ಹೋಪ್ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ ಪ್ರಯತ್ನ ವಿಂಡೀಸ್ ಗೆ ಗೆಲುವು ತಂದುಕೊಡಲಿಲ್ಲ. ಆತಿಥೇಯರು 248 ರನ್ ಗುರಿಯನ್ನು ಇನ್ನೂ ಮೂರು ಎಸೆತಗಳು ಬಾಕಿ ಇರುವಾಗಲೇ ಐದು ವಿಕೆಟ್ ಗಳ ಅಂತರದಿಂದ ಗೆದ್ದುಕೊಂಡಿದ್ದಾರೆ. ಮಳೆಯಿಂದಾಗಿ 34 ಓವರ್ಗಳಿಗೆ ಕಡಿತಗೊಂಡಿರುವ ಪಂದ್ಯದಲ್ಲಿ ಹೋಪ್ ಅವರು 69 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್ಗಳ ಸಹಿತ ಔಟಾಗದೆ 109 ರನ್ ಗಳಿಸಿದರು. ಹೋಪ್ ಶತಕದ ಸಹಾಯದಿಂದ ವೆಸ್ಟ್ಇಂಡೀಸ್ 9 ವಿಕೆಟ್ ಗಳ ನಷ್ಟಕ್ಕೆ 247 ರನ್ ಗಳಿಸಿತು. ತನ್ನ ಏಕಾಂಗಿ ಹೋರಾಟದ ವೇಳೆ ಹೋಪ್ ಅವರು ಹಲವು ದಾಖಲೆಗಳನ್ನು ಮುರಿದರು. ನ್ಯೂಝಿಲ್ಯಾಂಡ್ ವಿರುದ್ಧ ತನ್ನ ಮೊದಲ ಶತಕವನ್ನು ಗಳಿಸಿರುವ ಹೋಪ್ ವೆಸ್ಟ್ಇಂಡೀಸ್ನ ಸಾರ್ವಕಾಲಿಕ ಶ್ರೇಷ್ಠ ಏಕದಿನ ಶತಕವೀರರ ಪಟ್ಟಿಯಲ್ಲಿ ಬ್ರಿಯಾನ್ ಲಾರಾ(19 ಶತಕ)ಅವರೊಂದಿಗೆ ಎರಡನೇ ಸ್ಥಾನ ಹಂಚಿಕೊಂಡರು. ಒಟ್ಟು 25 ಶತಕಗಳನ್ನು ಗಳಿಸಿರುವ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಹೋಪ್ ಅವರು ಎಲ್ಲ 12 ಟೆಸ್ಟ್ ಆಡುವ ದೇಶಗಳ ವಿರುದ್ಧ ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ ಶತಕ ದಾಖಲಿಸಿರುವ ವಿಶ್ವದ ಮೊದಲ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಅಪರೂಪದ ಸಾಧನೆ ಮಾಡಿದರು. ಭಾರತದ ಮಾಜಿ ಬ್ಯಾಟರ್ ರಾಹುಲ್ ದ್ರಾವಿಡ್ ಆ ಕಾಲದಲ್ಲಿ ಎಲ್ಲ 10 ಟೆಸ್ಟ್ ಆಡುವ ದೇಶಗಳ ವಿರುದ್ಧ ಶತಕ ಗಳಿಸಿದ ಮೊದಲ ಆಟಗಾರನಾಗಿದ್ದರು. ದ್ರಾವಿಡ್ ನಿವೃತ್ತಿಯಾದ ನಂತರ 2017ರಲ್ಲಿ ಅಫ್ಘಾನಿಸ್ತಾನ ಹಾಗೂ ಐರ್ಲ್ಯಾಂಡ್ ತಂಡಗಳು ಟೆಸ್ಟ್ ಸ್ಥಾನಮಾನ ಪಡೆದಿದ್ದವು. ಸಚಿನ್ ತೆಂಡುಲ್ಕರ್ ಕೂಡ ನಿವೃತ್ತಿಯಾಗುವ ವೇಳೆಗೆ ಆಡುತ್ತಿದ್ದ ಎಲ್ಲ 9 ತಂಡಗಳ ವಿರುದ್ಧ ಟೆಸ್ಟ್ ಶತಕ ಗಳಿಸಿದ್ದರು. ವಿರಾಟ್ ಕೊಹ್ಲಿ ಅವರು ಐರ್ಲ್ಯಾಂಡ್ ತಂಡದ ವಿರುದ್ಧ ಶತಕ ಗಳಿಸಿಲ್ಲ. ಹೋಪ್ ಅವರು ಏಕದಿನ ಕ್ರಿಕೆಟ್ನಲ್ಲಿ 6,000 ರನ್ ಪೂರೈಸಿದ್ದು ಈ ಸಾಧನೆ ಮಾಡಿದ ವೆಸ್ಟ್ಇಂಡೀಸ್ನ ಏಳನೇ ಆಟಗಾರ ಎನಿಸಿಕೊಂಡಿದ್ದರು. ವಿವಿ ರಿಚರ್ಡ್ಸ್ ನಂತರ ಅತ್ಯಂತ ವೇಗವಾಗಿ(147 ಪಂದ್ಯಗಳು)ಈ ಸಾಧನೆ ಮಾಡಿದ ಕೆರಿಬಿಯನ್ ಕ್ರಿಕೆಟಿಗನೆಂಬ ಕೀರ್ತಿಗೆ ಭಾಜನರಾಗಿದ್ದಾರೆ.
ನೀರಿನ ಅಕ್ರಮ ಸಂಪರ್ಕಕ್ಕೆ ರೋಬೋಟಿಕ್ ತಂತ್ರಜ್ಞಾನದ ಮೂಲಕ ತಡೆ : ಡಿ.ಕೆ.ಶಿವಕುಮಾರ್
ಬೆಂಗಳೂರು, ನ.19: ಬೆಂಗಳೂರಿನಲ್ಲಿ ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕಲು ಮತ್ತು ಕಲುಷಿತ ನೀರು ಪತ್ತೆ ಹಚ್ಚಿ ಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯು ರೋಬೋಟಿಕ್ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬುಧವಾರ ಇಲ್ಲಿನ ಅಲಿ ಆಸ್ಕರ್ ರಸ್ತೆಯಲ್ಲಿರುವ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್ಬಿ ವತಿಯಿಂದ ಅಕ್ರಮ ಸಂಪರ್ಕ ಪತ್ತೆ ಮತ್ತು ನೀರಿನ ಸೋರಿಕೆ ತಡೆಗೆ ನೂತನವಾಗಿ ರಚಿಸಿರುವ ‘ನೀಲಿ ಪಡೆ ಮತ್ತು ರೊಬ್ಯಾಟಿಕ್ ತಂತ್ರಜ್ಞಾನ ಅಳವಡಿಕೆ ಯೋಜನೆ’ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಕ್ರಮವಾಗಿ ನೀರಿನ ಸಂಪರ್ಕ ಪಡೆದಿರುವ ಎಲ್ಲರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಬಡವ, ಶ್ರೀಮಂತ, ಉದ್ಯಮಿ ಯಾರೇ ಇರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ ಎಂಬುದು ಎಲ್ಲರಿಗೂ ತಿಳಿಯಬೇಕು. ಮಂಡಳಿ ನೀರಿನ ಜತೆಗೆ ಕೊಳಚೆ ನೀರು ಸೇರುವುದು ಪತ್ತೆ ಹಚ್ಚಿ ಅದನ್ನು ಕ್ಷಿಪ್ರವಾಗಿ ಸರಿಪಡಿಸಬೇಕು. ನಗರದ ಜನರು ನೀರಿನ ಕ್ಯಾನ್ಗಳ ಮೇಲೆ ಅವಲಂಬಿತರಾಗುವುದನ್ನು ನಿಲ್ಲಿಸಬೇಕು ಎಂದು ಅವರು ಹೇಳಿದರು. ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಜನರಿಗೆ ಪರಿಶುದ್ಧ ನೀರು ಕೊಡಬೇಕು ಎಂಬುದು ಮಂಡಳಿಯ ಧ್ಯೇಯ ಅದಕ್ಕಾಗಿ ಈ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ನೀರು ಕಲುಷಿತಗೊಂಡ ತಕ್ಷಣ ನಾವು ಪರಿಶೀಲಿಸಲು ಹತ್ತಾರು ಕಡೆ ರಸ್ತೆ ಅಗೆಯಬೇಕಿತ್ತು. ಇನ್ನು ಮುಂದೆ ಈ ಸಮಸ್ಯೆ ಇರುವುದಿಲ್ಲ. ನೂತನ ರೋಬೋಟಿಕ್ ತಂತ್ರಜ್ಞಾನದ ಮೂಲಕ ಸ್ಕ್ಯಾನ್ ಮಾಡಿ ಕೇವಲ ರಿಪೇರಿ ಅವಶ್ಯಕತೆ ಇದ್ದ ಕಡೆ ಮಾತ್ರ ರಸ್ತೆ ಅಗೆಯಲಾಗುತ್ತದೆ. ಅಲ್ಲದೆ ಕೇವಲ 24 ಗಂಟೆಗಳ ಅವಧಿಯೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದರು. ನಮ್ಮ ನೀಲಿ ಪಡೆ 16 ವಿಭಾಗದಲ್ಲೂ ಒಂದೊಂದು ಪಡೆ ಕಾರ್ಯ ನಿರ್ವಹಿಸಲಿದೆ. ಒಂದು ತಂಡದಲ್ಲಿ ಮೂರು ಸಿಬ್ಬಂದಿ ಇರಲಿದ್ದಾರೆ. ಈ ವಿಶೇಷ ದಳವು ಈ ವಾರದಿಂದಲೇ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಇವರು ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರುವುದನ್ನು ಪತ್ತೆ ಮಾಡಲಿದ್ದಾರೆ. ಕೆಲವು ಪ್ರಕರಣಗಳಿಗೆ ದಂಡ ಹಾಕಲಾಗುತ್ತದೆ. ಇನ್ನು ಕೆಲವು ಪ್ರಕರಣಗಳನ್ನು ಸಕ್ರಮಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ರಿಝ್ವಾನ್ ಅರ್ಶದ್, ಮಂಡಳಿಯ ಆಡಳಿತಧಿಕಾರಿ ಮದನ್ ಮೋಹನ್, ಪ್ರಧಾನ ಮುಖ್ಯ ಎಂಜನಿಯರ್ ಬಿ.ಎಸ್. ದಲಾಯತ್ ಸೇರಿದಂತೆ ಮತ್ತಿತರರು ಇದ್ದರು.
Bengaluru | ಮಗಳ ಮೇಲೆಯೇ ಮಾರಕಾಸ್ತ್ರ ಬೀಸಿದ ಆರೋಪ: ತಾಯಿಯ ಬಂಧನ
ಬೆಂಗಳೂರು : ದೇವಾಲಯದಲ್ಲೇ ತಾಯಿಯೊಬ್ಬಳು ತನ್ನ ಮಗಳ ಮೇಲೆ ಮಾರಕಾಸ್ತ್ರ ಬೀಸಿ ಹತ್ಯೆಗೆ ಯತ್ನಿಸಿದ ಆರೋಪದಡಿ ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್ನ ಹರಿಹರೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ರಮ್ಯಾ(22) ತೀವ್ರವಾಗಿ ಗಾಯಗೊಂಡಿದ್ದಾಳೆ. ಆಕೆಯ ತಾಯಿ ಸುಜಾತ ಎಂಬುವರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ನಲ್ಲಿ ಪತಿಯೊಂದಿಗೆ ವಾಸವಿದ್ದ ರಮ್ಯಾ ಆಗಾಗ್ಗೆ ತವರು ಮನೆಗೆ ಬರುತ್ತಿದ್ದಳು. ತಾಯಿ-ಮಗಳು ಇಬ್ಬರೂ ಸದಾ ಹರಿಹರೇಶ್ವರ ದೇವಾಲಯಕ್ಕೆ ಪೂಜೆಗೆಂದು ಬರುತ್ತಿದ್ದರು. ಅದೇ ರೀತಿ ನ.19ರಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ದೇವಸ್ಥಾನದ ಬಳಿ ತಾಯಿ ಮಗಳು ಬಂದಿದ್ದರು ಎನ್ನಲಾಗಿದೆ. ದೇವರಿಗೆ ತಲೆಭಾಗಿ ನಮಸ್ಕರಿಸುತ್ತಿದ್ದ ವೇಳೆ ಮಗಳು ರಮ್ಯಾಳ ಮೇಲೆ ಸುಜಾತಾ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ರಮ್ಯಾಳನ್ನು ಸ್ಥಳೀಯರು ಗಮನಿಸಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ-ಮಗಳು ದೇವಸ್ಥಾನಕ್ಕೆ ಬರುವಾಗಲೇ ಮಚ್ಚು ತಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಸದ್ಯ ಸುಜಾತಾ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಸಜೀತ್ ವಿ.ಜೆ. ತಿಳಿಸಿದ್ದಾರೆ.
ಸುರತ್ಕಲ್: ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ಬಂಧನ
ಸುರತ್ಕಲ್: ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಅಡ್ಡೂರು ಟಿಬೆಟ್ ಕಾಲನಿ ನಿವಾಸಿ ಪ್ರಸಕ್ತ ಬಜ್ಪೆ ಕಿನ್ನಿಪದವಿನಲ್ಲಿ ನೆಲೆಸಿರುವ ಅಬ್ದುಲ್ ಸಲಾಂ ಅಡ್ಡೂರು (47) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳ ಪೈಕಿ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಯಾನೆ ಅಡ್ಡೂರು ಲತೀಫ್ ಹಾಗೂ ಅಬ್ದುಲ್ ಸಲಾಂ ಅಡ್ಡೂರು ಸಹೋದರರು ಅಡ್ಡೂರು ಟಿಬೇಟ್ ಕಾಲನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿ 2 ದಿನ ಮನೆಯಲ್ಲಿರಿಸಿಕೊಂಡು ಪೊಲೀಸರಿಂದ ತಪ್ಪಿಸಿ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದರು. ನಂತರ ಕಬೀರ್ನನ್ನು ವಾಹನದಲ್ಲಿ ಕೇರಳದ ಕಾಸರಗೋಡು ಬಳಿ ಬಿಟ್ಟು ನಂತರ ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿ ಅಬ್ದುಲ್ ಸಲಾಂ ವಿರುದ್ಧ ಸುರತ್ಕಲ್ ಪೊಲೀಸರು ರೌಡಿಶೀಟ್ ತೆರೆದಿದ್ದರು. ಆರೋಪಿಯು ಸುಮಾರು 19ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದುದರಿಂದ ಈತನ ವಿರುದ್ಧ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಅರಿತ ಪೊಲೀಸರು ಆತನ ಮನೆಗೆ ದಾಳಿ ಮಾಡಿ ಆತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್, ಪೋಲೆಂಡ್ ನಿಯೋಗದ ಜತೆ ಹೂಡಿಕೆ, ಸಹಭಾಗಿತ್ವ ಚರ್ಚೆ : ಎಂ.ಬಿ.ಪಾಟೀಲ್
ಬೆಂಗಳೂರು : ಭಾರತದಲ್ಲಿನ ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್ ಹಾಡ್ಜಸ್ ಮತ್ತು ಪೋಲೆಂಡ್ ದೇಶದ ಡಿಜಿಟಲೀಕರಣ ಖಾತೆ ಸಹಾಯಕ ಸಚಿವ ರಫಾಲ್ ರೊಸಿನ್ಕ್ಸಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಬುಧವಾರ ಪ್ರತ್ಯೇಕವಾಗಿ ಭೇಟಿಯಾಗಿ, ಬಂಡವಾಳ ಹೂಡಿಕೆ ಮತ್ತು ನಾನಾ ವಲಯಗಳಲ್ಲಿ ಸಹಭಾಗಿತ್ವ ವರ್ಧನೆ ಕುರಿತು ಮಾತುಕತೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಈ ಭೇಟಿಗಳಲ್ಲಿ ಮೊದಲಿಗೆ ಕ್ರಿಸ್ ಅವರೊಂದಿಗೆ ಮಾತುಕತೆ ನಡೆಸಿದ ಸಚಿವರು, ಅಮೆರಿಕದ ವಿಶ್ವವಿದ್ಯಾಲಯಗಳು, ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಮೆಡ್-ಟೆಕ್ ಕಂಪನಿಗಳಿಗೆ ರಾಜ್ಯದಲ್ಲಿ ಹೆಚ್ಚಿನ ಅವಕಾಶವಿರುವ ಸಂಗತಿಯನ್ನು ಮನದಟ್ಟು ಮಾಡಿಕೊಟ್ಟಿರುವುದಾಗಿ ತಿಳಿಸಿದರು. ಪೋಲೆಂಡ್ ನಿಯೋಗದ ಭೇಟಿ: ಪೋಲೆಂಡ್ ಸರಕಾರದಲ್ಲಿ ಡಿಜಿಟಲೀಕರಣ ಖಾತೆಯ ಉಪಮಂತ್ರಿಯಾಗಿರುವ ರಫಾಲ್ ರೊಸಿನ್ಕ್ಸಿ ನೇತೃತ್ವದ ಉನ್ನತ ಮಟ್ಟದ ನಿಯೋಗವು ಉನ್ನತ ಶಿಕ್ಷಣ, ಸಂಶೋಧನೆ, ಆಧುನಿಕ ತಯಾರಿಕೆ. ವಾಣಿಜ್ಯ, ತಂತ್ರಜ್ಞಾನ ಮತ್ತು ರಕ್ಷಣಾ ಉದ್ಯಮಗಳಲ್ಲಿ ಕರ್ನಾಟಕದೊಂದಿಗೆ ಸಹಭಾಗಿತ್ವ ಹೊಂದಲು ಇರುವ ಅವಕಾಶಗಳ ಬಗ್ಗೆ ಎಂ.ಬಿ.ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿತು. ಭಾರತ ಮತ್ತು ಪೋಲೆಂಡ್ 2023ರಿಂದ 2028ರವರೆಗೆ ಚಾಲ್ತಿಯಲ್ಲಿರುವ ಐದು ವರ್ಷಗಳ ಕ್ರಿಯಾ ಯೋಜನೆಯನ್ನು ಹೊಂದಿವೆ. ಇದರಡಿಯಲ್ಲಿ ಗಣಿಗಾರಿಕೆ, ಸೈಬರ್ ಭದ್ರತೆ, ಆರೋಗ್ಯ, ಇಂಧನ ಮತ್ತು ಸುಸ್ಥಿರತೆ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಹೊಂದಿವೆ. ಇದನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲುಪೋಲೆಂಡ್ ಒಲವನ್ನು ವ್ಯಕ್ತಪಡಿಸಿದೆ. ಅವರಿಗೆ ರಾಜ್ಯದಲ್ಲಿರುವ ಕೈಗಾರಿಕಾ ಕಾರ್ಯಪರಿಸರ, ನೀತಿ, ರಿಯಾಯಿತಿ ಇತ್ಯಾದಿಗಳ ಬಗ್ಗೆ ವಿವರಿಸಲಾಯಿತು ಎಂದು ಎಂ.ಬಿ.ಪಾಟೀಲ್ ತಿಳಿಸಿದರು. ಈ ನಿಯೋಗದಲ್ಲಿ ದಿಲ್ಲಿಯಲ್ಲಿರುವ ಪೋಲೆಂಡ್ ರಾಯಭಾರಿ ಕಚೇರಿಯ ಮುಖ್ಯಸ್ಥ ಪಿಯೋಟರ್ ಸ್ವಿಟೈಸ್ಕಿ, ಮುಂಬೈನಲ್ಲಿರುವ ಪೋಲೆಂಡ್ ರಾಯಭಾರಿ ಮುಖ್ಯಸ್ಥ ಟೋಮಾಸ್ ವೆಲ್ಗೋಮಾಸ್ ಇದ್ದರು. ಸಭೆಯಲ್ಲಿ ಬೃಹತ್ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಉಡುಪಿ: ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಕರಾವಳಿಯ ಯಕ್ಷಗಾನ ಕಲಾವಿದರ ಕುರಿತು ಆಡಿದ ಮಾತು ವಿವಾದ ಅಲೆ ಎಬ್ಬಿಸಿದೆ. ‘ಯಕ್ಷಗಾನದ ಒಳಗೆ ಎಷ್ಟೋ ಬಾರಿ ಹೋಮೊಸೆಕ್ಸ್ (ಸಲಿಂಗಕಾಮ) ಬೆಳೀತದೆ’ ಎನ್ನುತ್ತಾ ಅವರು ನೀಡಿದ ವಿವರಣೆ ಇದೀಗ ಯಕ್ಷಗಾನದ ತವರೂರಿನ ಕರಾವಳಿ ಜಿಲ್ಲೆಗಳಲ್ಲಿ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು, ಹಿರಿಯ ವಿದ್ವಾಂಸರಾದ ಪ್ರೊ. ಬಿಳಿಮಲೆ ಅವರು ಇಂಥ ಹೇಳಿಕೆ ನೀಡಿರುವುದು ತಪ್ಪು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಕ್ಷಗಾನದಲ್ಲಿ ಒಳ್ಳೆಯವರೂ ಇರುತ್ತಾರೆ. ಕೆಟ್ಟವರೂ ಇದ್ದಾರೆ. ಆದರೆ ಬಿಳಿಮಲೆಯಂತಹ ಮೇಧಾವಿ ವಿದ್ವಾಂಸರು ಈ ರೀತಿ ಹೇಳಬಾರದಿತ್ತು ಎಂದು ಡಾ.ತಲ್ಲೂರು ಹೇಳಿದರು. ಯಕ್ಷಗಾನ ನಮ್ಮ ಮಣ್ಣಿನ ಕಲೆ. ಬಹಳ ಶ್ರೀಮಂತವಾದದ್ದು. ಯಕ್ಷಗಾನದ ಶ್ರೀಮಂತಿಕೆಯನ್ನು ಹೆಚ್ಚಿಸುವ ಕಡೆಗೆ ಗಮನ ಕೊಡೋಣ. ಪುರುಷೋತ್ತಮ ಬಿಳಿಮಲೆ ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಕಲೆಗೆ- ಕಲಾವಿದರಿಗೆ ಸಮಸ್ಯೆ ಆಗದಂತೆ ಗೊಂದಲ ಬಗೆಹರಿಯಲಿ ಎಂದರು. ಬಿಳಿಮಲೆ ಹಿರಿಯ ವಿದ್ವಾಂಸರು ಸಾಹಿತಿಗಳು. ಬಿಳಿಮಲೆಯವರನ್ನು ಸಂಪರ್ಕ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ. ಅವರ ಫೋನ್ ಸ್ವಿಚ್ ಆಫ್ ಇದೆ. ಸಂಪರ್ಕವಾದರೆ ಮಾತನಾಡುತ್ತೇನೆ. ಸಾರಾಸಗಟಾಗಿ ಅವರು ಎಲ್ಲಾ ಕಲಾವಿದರಿಗೆ ಆರೋಪಿಸಿದ್ದು ಸರಿಯಲ್ಲ. ಪ್ರಪಂಚದಲ್ಲಿ ಸರಿ ತಪ್ಪು , ಕೆಟ್ಟದ್ದು ಒಳ್ಳೆದು ಸಹಜ. ಸಾಮಾನ್ಯ ವ್ಯಕ್ತಿಗಳು ಹೇಳಿದ್ದರೆ ಖಂಡಿಸಬಹುದಿತ್ತು. ಪುರುಷೋತ್ತಮ ಬಿಳಿಮಲೆ ರಾಷ್ಟ್ರ ಮಟ್ಟದ ಮೇಧಾವಿ ಸಾಹಿತಿ, ಕಲಾವಿದರು. ಚರ್ಚೆಯನ್ನು ಸೌಹಾರ್ದಯುತವಾಗಿ ಬಗೆಹರಿಸೋಣ ಎಂದು ಅವರು ಮಾಧ್ಯಮಗಳಿಗೆ ಪತ್ರಿಕ್ರಿಯಿಸಿದರು.
ಅಂಕೋಲಾ: ಉರುಳಿಬಿದ್ದ ಟ್ಯಾಂಕರ್ ನಿಂದ ಮಿಥೇನ್ ಸೋರಿಕೆ ತಡೆಗಟ್ಟಿದ ತಜ್ಞರ ತಂಡ
ಸಂಚಾರಕ್ಕೆ ಮುಕ್ತವಾದ ಹೆದ್ದಾರಿ
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಳಿ ಹೆಚ್ಚಾಗಿದ್ದು, ಸೂಕ್ತ ಹೊದಿಕೆಯಿಲ್ಲದ ಕಾರಣ ರಾತ್ರಿ ವೇಳೆ ನಿದ್ರೆ ಮಾಡಲಾಗುತ್ತಿಲ್ಲ. ಚಿಕ್ಕ ಹೊದಿಕೆಯನ್ನೇ ಸುತ್ತಿಕೊಂಡು ಜೈಲು ಕೋಣೆಯ ಮೂಲೆಯಲ್ಲಿ ಕುಳಿತುಕೊಳ್ಳುತ್ತಿದ್ದೇನೆ ಎಂದು ನಟ ದರ್ಶನ್ ನ್ಯಾಯಾಲಯದ ಮುಂದೆ ಅಳಲು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮುಂದೆ ನಟ ದರ್ಶನ್, ಪವಿತ್ರಾ ಗೌಡ ಸೇರಿ ಆರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಬುಧವಾರ ಹಾಜರುಪಡಿಸಲಾಯಿತು. ಉಳಿದಂತೆ ಜಾಮೀನು ಪಡೆದಿರುವ ಎಲ್ಲ 11 ಆರೋಪಿಗಳು ವಿಚಾರಣೆಗೆ ಖುದ್ದು ಹಾಜರಾಗಿದ್ದರು. ಆರೋಪಿಗಳ ಹಾಜರಾತಿಯನ್ನು ನ್ಯಾಯಮೂರ್ತಿ ಐ.ಪಿ. ನಾಯ್ಕ್ ಅವರು ದಾಖಲಿಸಿಕೊಂಡರು. ಈ ವೇಳೆ ಆರೋಪಿ ನಾಗರಾಜು ಮಾತನಾಡಿ, ಸ್ವಾಮಿ.. ಒಂದು ವಿಷಯನ್ನು ನಿಮಗೆ ವಿನಂತಿ ಮಾಡಿಕೊಳ್ಳಬೇಕಿದೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದರು. ನ್ಯಾಯಮೂರ್ತಿಗಳು ಏನು ಎಂದು ಕೇಳಿದಾಗ ಉತ್ತರಿಸಿದ ನಾಗರಾಜು, ಜೈಲಿನ ಆವರಣದಲ್ಲಿ ತುಂಬ ಚಳಿ ಇದೆ. ಜೈಲಿನ ಅಧಿಕಾರಿಗಳು ನೀಡಿರುವ ಹೊದಿಕೆ ಚಳಿ ತಡೆಯುತ್ತಿಲ್ಲ. ಮನೆಯಿಂದ ತಂದ ಹೊದಿಕೆಯನ್ನೂ ಪಡೆಯುವುದಕ್ಕೂ ಅನುಮತಿ ನೀಡುತ್ತಿಲ್ಲ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಆಗ ನಟ ದರ್ಶನ್, ಸ್ವಾಮಿ.. ಜೈಲಿನಲ್ಲಿ ತುಂಬಾ ಚಳಿಯಿದೆ. ಜೈಲು ಅಧಿಕಾರಿಗಳು ನೀಡಿರುವ ಹೊದಿಕೆಗಳು ಚಳಿಯನ್ನು ತಡೆಯುತ್ತಿಲ್ಲ. ಇದರಿಂದ, ರಾತ್ರಿ ವೇಳೆ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಚಿಕ್ಕ ಹೊದಿಕೆಯನ್ನೇ ಸುತ್ತಿಕೊಂಡು ಜೈಲು ಕೋಣೆಯ ಮೂಲೆಯಲ್ಲಿ ಕುಳಿತುಕೊಳ್ಳುತ್ತಿದ್ದೇನೆ. ದಯವಿಟ್ಟು ಚಳಿ ತಡೆಯುವಂತಹ ಉತ್ತಮ ಹೊದಿಕೆಗಳನ್ನು ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೋರಿದರು. ಆಗ ನ್ಯಾಯಾಧೀಶರು, ಆರೋಪಿಗಳೇನು ರತ್ನಗಂಬಳಿ ಕೇಳುತ್ತಿದ್ದಾರೆಯೇ? ಜೈಲಿನ ಕೈಪಿಡಿಯಲ್ಲಿ ಅವಕಾಶವಿರುವ ಸೌಲಭ್ಯಗಳನ್ನು ಆರೋಪಿಗಳಿಗೆ ಕೊಡಿ. ಈ ವಿಚಾರದಲ್ಲಿ ನ್ಯಾಯಾಲಯ ಪದೇಪದೆ ಸೂಚನೆ ನೀಡಬೇಕಾ? ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದ ಜೈಲು ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಪ್ರಕರಣದ ವಿಚಾರಣೆಯನ್ನು ಡಿ.3ಕ್ಕೆ ಮುಂದೂಡಿದ ನ್ಯಾಯಾಧೀಶರು, ಅಂದು ಪ್ರಕರಣದ ಎಲ್ಲ ಆರೋಪಿಗಳು ವಿಚಾರಣೆಗೆ ಹಾಜರಿರಬೇಕು ಎಂದು ಸೂಚಿಸಿದರು. ಹಣ ಸುಪರ್ದಿಗೆ ಕೋರಿದ ಐಟಿ ಇಲಾಖೆ: ಈ ವೇಳೆ ಆದಾಯ ತೆರಿಗೆ ಇಲಾಖೆಯ ಪರ ವಕೀಲರು, ಪ್ರಕರಣ ಸಂಬಂಧ ಆರೋಪಿಗಳಿಂದ ವಶಕ್ಕೆ ಪಡೆದಿರುವ ಹಣವನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಕೋರಿದರು. ತನಿಖಾಧಿಕಾರಿಗಳ ಪರ ಹಾಜರಿದ್ದ ವಿಶೇಷ ಸರ್ಕಾರಿ ಅಭಿಯೋಜುಕ ಪಿ. ಪ್ರಸನ್ನ ಕುಮಾರ್ ಅವರು, ಆದಾಯ ತೆರಿಗೆ ಇಲಾಖೆಯ ಅರ್ಜಿಗೆ ತಮ್ಮದೇನೂ ತಕರಾರು ಇಲ್ಲ ಎಂದರು. ಅದಕ್ಕೆ ಆಕ್ಷೇಪಿಸಿದ ದರ್ಶನ್ ಪರ ವಕೀಲ ಸುನೀಲ್ ಅವರು, ಆದಾಯ ತೆರಿಗೆ ಇಲಾಖೆಗೂ ಈ ಪ್ರಕರಣದಲ್ಲಿ ಜಪ್ತಿ ಮಾಡಲಾಗಿರುವ ಹಣಕ್ಕೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಆರೋಪಿಗಳಿಂದ ವಶಕ್ಕೆ ಪಡೆದಿರುವ ಹಣವನ್ನು ಅದರ ಸುಪರ್ದಿಗೆ ನೀಡಬಾರದು ಎಂದು ಕೋರಿದರು.
ಕರಾವಳಿ ಜಿಲ್ಲೆಗಳ ಹೊರಗೆ ಕಂಬಳ ಆಯೋಜಿಸದಂತೆ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಕಾರ
ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಜಿಲ್ಲೆ ಅಥವಾ ಭಾಗಗಳಲ್ಲಿ ಕಂಬಳ ಕ್ರೀಡೆ ಆಯೋಜನೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಪಿಲಿಕುಳ ಜೈವಿಕ ಉದ್ಯಾನವನದ (ನಿಸರ್ಗಧಾಮ) ಬಳಿ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ 'ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್' (ಪೆಟಾ) 2024ರಲ್ಲಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಸಾಂಪ್ರದಾಯಿಕ ಕ್ರೀಡೆಗಳು ವಹಿಸುವ ಮಹತ್ವದ ಪಾತ್ರವನ್ನು ಪರಿಗಣಿಸಿ ರಾಜ್ಯದಲ್ಲಿ ಕಂಬಳ ಅಥವಾ ಎತ್ತಿನಗಾಡಿ ಓಟದ ಸ್ಪರ್ಧೆಗೆ ವಿನಾಯಿತಿ ನೀಡುವುದು ಸೂಕ್ತವೆಂದು ಪರಿಗಣಿಸಿ ಶಾಸಕಾಂಗವು 'ಪ್ರಾಣಿಗಳ ಮೇಲಿನ ಹಿಂಸೆ ತಡೆ ಕಾಯ್ದೆ'ಗೆ ಎರಡನೇ ತಿದ್ದುಪಡಿ ತಂದಿದೆ ಎಂದು ಅಭಿಪ್ರಾಯಪಟ್ಟಿದೆ. ಕರ್ನಾಟಕ ರಾಜ್ಯದಲ್ಲಿ ಜನರ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ 'ಕಂಬಳ' ಅಥವಾ 'ಎತ್ತುಗಳ ಓಟ' ಅಥವಾ 'ಎತ್ತಿನ ಬಂಡಿ ಓಟ' ವಹಿಸಿದ ಮಹತ್ವದ ಪಾತ್ರವನ್ನು ಪರಿಗಣಿಸಿ ಹಾಗೂ ಸ್ಥಳೀಯ ತಳಿಗಳ ಜಾನುವಾರುಗಳ ಉಳಿವು ಮತ್ತು ಸಂರಕ್ಷಣೆ ಖಚಿತಪಡಿಸಿಕೊಳ್ಳುವಲ್ಲಿ ಕರ್ನಾಟಕ ಸರಕಾರವು ರಾಜ್ಯದಲ್ಲಿ ಕಂಬಳ ಅಥವಾ ಎತ್ತುಗಳ ಓಟ ಅಥವಾ ಎತ್ತಿನ ಬಂಡಿ ಓಟ ಆಯೋಜನೆಗೆ ಕಾಯ್ದೆಯಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಕಾರಣದಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರಗಿನ ಯಾವುದೇ ಸ್ಥಳದಲ್ಲಿ ಕಂಬಳ ಕ್ರೀಡೆ ಆಯೋಜಿಸದಂತೆ ಸರಕಾರವನ್ನು ನಿರ್ಬಂಧಿಸಬೇಕೆಂಬ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ ನೋಟಿಸ್: ಇದಲ್ಲದೆ, ಪಿಲಿಕುಳ ಜೈವಿಕ ಉದ್ಯಾನದಲ್ಲಿ ಕಂಬಳ ಆಯೋಜಿಸಲು ಅನುಮತಿಸಬಹುದೇ ಎನ್ನುವುದು ಅರ್ಜಿಯಲ್ಲಿನ ಎರಡನೇ ಪ್ರಶ್ನೆಯಾಗಿದೆ. ದಕ್ಷಿಣ ಕನ್ನಡ ಪ್ರದೇಶಕ್ಕೆ ಸೇರಿದ ಪಿಲಿಕುಳದಲ್ಲಿ ಕಂಬಳವು ಜನರ ಸಂಪ್ರದಾಯ ಮತ್ತು ಸಂಸ್ಕೃತಿಯ ಭಾಗವಾಗಿದೆ ಎಂಬ ಬಗ್ಗೆ ಯಾವುದೇ ಸಂದೇಹವಿಲ್ಲ. ಕಂಬಳವು ಗದ್ದಲದಿಂದ ಕೂಡಿದ ಕಾರ್ಯಕ್ರಮವಾಗಿದ್ದು, ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಂಬಳ ಆಯೋಜಿಸುವುದರಿಂದ ಅಲ್ಲಿನ ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಅಲ್ಲಿ ಕಂಬಳ ನಡೆಸುವುದು ವನ್ಯಜೀವಿ (ರಕ್ಷಣೆ) ಕಾಯ್ದೆ 1972ರ ಉಲ್ಲಂಘನೆಯಾಗುತ್ತದೆ ಎನ್ನುವುದು ಅರ್ಜಿದಾರರ ವಾದವಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ. ಪಿಲಿಕುಳ ನಿಸರ್ಗಧಾಮವು 80 ಹೆಕ್ಟೇರ್ ವ್ಯಾಪ್ತಿಯಲ್ಲಿದೆ ಎಂದು ಹೇಳಲಾಗಿದ್ದು, ಕಂಬಳ ಕಾರ್ಯಕ್ರಮ ನಡೆಯಬೇಕಿರುವ ಸ್ಥಳವು 80 ಹೆಕ್ಟೇರ್ಗಳ ವ್ಯಾಪ್ತಿಯಲ್ಲಿ ಬರುತ್ತದೆಯೇ ಎಂಬುದು ಸದ್ಯದ ವಿವಾದವಾಗಿದೆ. ಮೃಗಾಲಯ ಮಾನ್ಯತೆ ನಿಯಮಗಳು-2009ರ ಪ್ರಕಾರ, ಪ್ರತಿ ಮೃಗಾಲಯವು ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಅನುಮೋದನೆ ಪಡೆದ ಮಾಸ್ಟರ್ ಪ್ಲಾನ್ ಹೊಂದಿರಬೇಕು. ಈ ಹಿನ್ನೆಲೆಯಲ್ಲಿ ಪಿಲಿಕುಳ ಉದ್ಯಾನದ ಮಾಸ್ಟರ್ ಪ್ಲಾನ್ ಕೇಂದ್ರ ಮೃಗಾಲಯ ಪ್ರಾಧಿಕಾರದಲ್ಲಿ ಲಭ್ಯವಿರುತ್ತದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಕೇಂದ್ರ ಮೃಗಾಲಯ ಪ್ರಾಧಿಕಾರವನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಿ ನೋಟಿಸ್ ಜಾರಿಗೊಳಿಸಿತಲ್ಲದೆ, ಪಿಲಿಕುಳ ಉದ್ಯಾನದ ಮಾಸ್ಟರ್ ಪ್ಲಾನ್ ಅನುಮೋದಿಸಿರುವ ಕುರಿತ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ಮುಂದೂಡಿದೆ.
ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಮಠಾಧೀಶರಾಗಿದ್ದು ಪ್ರವಚನ (ಪಾಂಟಿಫಿಕೇಟ್) ನೀಡಬೇಕೇ ಹೊರತು ರಾಜಕೀಯಗೊಳಿಸಬಾರದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ. ಜತೆಗೆ, ಧಾರವಾಡ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ಕುರಿತ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿದೆ. 2026ರ ಜನವರಿವರೆಗೆ ಧಾರವಾಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಕಾಡಸಿದ್ದೇಶ್ವರ ಸ್ವಾಮೀಜಿ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಧಾರವಾಡದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ನವೆಂಬರ್ 7ರಂದು ಮುಗಿದಿದೆ. ಬೀದರ್ನಲ್ಲಿ ನಡೆದಿದ್ದ ಬಸವ ಸಮಿತಿ ಕಾರ್ಯಕ್ರಮದಲ್ಲಿ ಹಿಂದುತ್ವ ಮತ್ತು ಬಸವತತ್ವ ಬೇರೆ ಬೇರೆ ಎಂದು ಹೇಳಲಾಗಿದ್ದು, ಲಕ್ಷ್ಮೀದೇವಿಯನ್ನು ಜೂಯಿ ಲಕ್ಷ್ಮೀ ಇತ್ಯಾದಿ ಎಂದು ಕರೆದಿದ್ದರು. ಇದಕ್ಕೆ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಖಂಡಿತವಾಗಿಯೂ ಅವಹೇಳನಕಾರಿ ಪದ ಬಳಸುವುದಿಲ್ಲ. ನವೆಂಬರ್ 7ರಂದೇ ಕಾರ್ಯಕ್ರಮ ಮುಗಿದಿದ್ದು, ಅರ್ಜಿದಾರರನ್ನು ಯಾವ ಕಾರಣಕ್ಕಾಗಿ 2026ರ ಜನವರಿ ತಿಂಗಳವರೆಗೆ ನಿರ್ಬಂಧಿಸುತ್ತಿದ್ದಾರೆ ತಿಳಿದಿಲ್ಲ. ನಿರ್ಬಂಧಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರದ ಪರ ವಕೀಲರು, ಪೊಲೀಸ್ ವರಿಷ್ಠಾಧಿಕಾರಿಯ ವರದಿ ಪಡೆದು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಕಾಡಸಿದ್ದೇಶ್ವರ ಸ್ವಾಮೀಜಿಗೆ ಭಾಷೆಯ ಮೇಲೆ ಹಿಡಿತವಿಲ್ಲ. ಮುನ್ನೆಚ್ಚರಿಕೆಯ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಸುಪ್ರೀಂಕೋರ್ಟ್ ಸಹ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಜನರ ಭಾವನೆಗಳ ಜತೆ ಆಟವಾಡಲು ಸ್ವಾಮೀಜಿ ಯತ್ನಿಸುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಆಗ ನ್ಯಾಯಪೀಠ ವಕೀಲರನ್ನು ಕುರಿತು, ಎಚ್ಚರಿಕೆಯಿಂದ ಮಾತನಾಡುವಂತೆ ಕಾಡಸಿದ್ದೇಶ್ವರ ಸ್ವಾಮೀಜಿಗೆ ನೀವು ಏಕೆ ಹೇಳುವುದಿಲ್ಲ. ಮಠಾಧೀಶರಾಗಿರುವುದರಿಂದ ಪ್ರವಚನ್ನಷ್ಟೇ ನೀಡಬೇಕು. ಅದನ್ನು ರಾಜಕೀಯಗೊಳಿಸಬಾರದು. ನಿಮ್ಮ ಹೆಸರು ಅದೃಶ್ಯವಾ? ಎಂದಿತು. ಅದಕ್ಕೆ ಪ್ರತಿಕ್ರಿಯಿಸಿದ ವೆಂಕಟೇಶ್ ದಳವಾಯಿ ಅವರು, ಅದೃಶ್ಯ ಕಾಡೇಶ್ವರ ಮಠ. 600 ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಅವಹೇಳನ ಪದ ಬಳಸದಂತೆ ಅವರಿಗೆ ಸೂಚನೆ ನೀಡುತ್ತೇನೆ. ನ್ಯಾಯಾಲಯದ ಭಾವನೆಯನ್ನು ತಲುಪಿಸುತ್ತೇನೆ ಎಂದರು. ಅಂತಿಮವಾಗಿ ನ್ಯಾಯಪೀಠ, ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿತು. ಈ ಹಿಂದೆ ವಿಜಯಪುರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಕಲಬುರಗಿ ಪೀಠ ಎತ್ತಿ ಹಿಡಿದಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ ಸಹ ಕಾಯಂಗೊಳಿಸಿದ್ದರಿಂದ ಸ್ವಾಮೀಜಿಗೆ ತೀವ್ರ ಹಿನ್ನಡೆಯಾಗಿತ್ತು.
ಜಾತಿ ನಿಂದನೆ ಆರೋಪ : ನಟಿ ನಯನಾ ವಿರುದ್ಧ ಪ್ರಕರಣ ದಾಖಲು
ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭಂಡಾರಿ ಅವರ ದೂರಿನ ಮೇರೆಗೆ ಸಬ್ ಅರ್ಬನ್ ಠಾಣೆಯ ಪೊಲೀಸರು, ನಟಿ ನಯನಾ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಹೊಲೆಯ ಜಾತಿಗೆ ಉದ್ದೇಶಪೂರ್ವಕವಾಗಿ ಅವಹೇಳನ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಂಜುನಾಥ್ ದೂರಿನಲ್ಲಿ ಆಗ್ರಹಿಸಿದ್ದರು.
ರೋಶನಿ ಶೆಟ್ಟಿಗೆ ‘ಇಂದಿರಾ ಪ್ರಿಯದರ್ಶಿನಿ’ ಪ್ರಶಸ್ತಿ ಪ್ರದಾನ
ಉಡುಪಿ: ಇಂದಿರಾಗಾಂಧಿ 108ನೇ ಜನ್ಮದಿನಾಚರಣೆ
ಪತ್ರಕರ್ತ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರನಿಗೆ ತಿಳಿದಿರಲಿಲ್ಲ: ಟ್ರಂಪ್
ವಾಷಿಂಗ್ಟನ್, ನ.19: ವಾಷಿಂಗ್ಟನ್ ಪೋಸ್ಟ್ ನ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಗೆ ಏನೂ ತಿಳಿದಿರಲಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಏಳು ವರ್ಷಗಳ ಬಳಿಕ ಅಮೆರಿಕಾಕ್ಕೆ ಭೇಟಿ ನೀಡಿರುವ ಸೌದಿ ರಾಜಕುಮಾರರೊಂದಿಗೆ ಶ್ವೇತಭವನದಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಎದುರಾದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್ ` ಮುಹಮ್ಮದ್ ಬಿನ್ ಸಲ್ಮಾನ್ ಅದ್ಭುತ ಮಾನವ ಹಕ್ಕುಗಳ ದಾಖಲೆಯನ್ನು ಹೊಂದಿದ್ದಾರೆ. 2018ರಲ್ಲಿ ನಡೆದ ಖಶ್ಶೋಗಿ ಹತ್ಯೆಯ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಘಟನೆ ನಡೆದು ಹೋಯಿತು. ಮೃತ ಪತ್ರಕರ್ತ `ಅತ್ಯಂತ ವಿವಾದಾತ್ಮಕ'ವಾಗಿದ್ದರು' ಎಂದು ಪ್ರತಿಕ್ರಿಯಿಸಿದರು. ಹತ್ಯೆಯ ಬಗ್ಗೆ ಸೌದಿ ರಾಜಕುಮಾರನಿಗೆ ಪ್ರಶ್ನಿಸಿ ಮುಜುಗುರಕ್ಕೀಡು ಮಾಡಬೇಡಿ' ಎಂದು ಪತ್ರಕರ್ತೆಯ ಮೇಲೆ ರೇಗಿದರು. ಟರ್ಕಿಯಲ್ಲಿ ಸೌದಿ ಕಾನ್ಸುಲೇಟ್ ಕಚೇರಿಯೊಳಗಡೆ ನಡೆದ ಖಶ್ಶೋಗಿ ಹತ್ಯೆ ಒಂದು ದೊಡ್ಡ ಪ್ರಮಾದವಾಗಿದೆ. ಇದನ್ನು ಸಂಪೂರ್ಣವಾಗಿ ತನಿಖೆ ನಡೆಸಲಾಗಿದೆ ಎಂದು ಮುಹಮ್ಮದ್ ಬಿನ್ ಸಲ್ಮಾನ್ ಪ್ರತಿಕ್ರಿಯಿಸಿದ್ದಾರೆ. ಹತ್ಯೆಯ ಬಗ್ಗೆ ತನಿಖೆ ನಡೆಸಿದ್ದ ಅಮೆರಿಕಾದ ಸಿಐಎ `ಹತ್ಯೆ ಕಾರ್ಯಾಚರಣೆಯನ್ನು ರಾಜಕುಮಾರ ಅನುಮೋದಿಸಿದ್ದರು' ಎಂದು ತೀರ್ಮಾನಿಸಿದೆ. ಆದರೆ ದಾಳಿಯ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಸಲ್ಮಾನ್ ಪ್ರತಿಪಾದಿಸಿದ್ದಾರೆ.
ಉಕ್ರೇನ್: ರಶ್ಯದ ವೈಮಾನಿಕ ದಾಳಿಯಲ್ಲಿ 19 ಮಂದಿ ಮೃತ್ಯು
ಕೀವ್, ನ.19: ಮಂಗಳವಾರ ತಡರಾತ್ರಿಯಿಂದ ಉಕ್ರೇನನ್ನು ಗುರಿಯಾಗಿಸಿ ರಶ್ಯ 476 ಡ್ರೋನ್ ಗಳು ಹಾಗೂ 48 ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಶ್ಚಿಮ ಉಕ್ರೇನ್ನ ಟರ್ನೋಪಿಲ್ನಲ್ಲಿ ಎರಡು ಬಹುಮಹಡಿ ಅಪಾರ್ಟ್ಮೆಂಟ್ ಗಳಿಗೆ ಹಾನಿಯಾಗಿದ್ದು 12 ಮಕ್ಕಳು ಸೇರಿದಂತೆ ಕನಿಷ್ಠ 37 ಮಂದಿ ಗಾಯಗೊಂಡಿದ್ದಾರೆ. ಖಾರ್ಕಿವ್ ಹಾಗೂ ಇತರ ಎರಡು ಪ್ರಾಂತಗಳಲ್ಲಿ ಕನಿಷ್ಠ 16 ಜನವಸತಿ ಕಟ್ಟಡಗಳಿ, ಆಂಬ್ಯುಲೆನ್ಸ್ ಕಟ್ಟಡ, ಶಾಲೆ ಹಾಗೂ ಇತರ ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿಯಂತೆ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.
ನಾವು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ಭಾರತವನ್ನು ಹೊಡೆದಿದ್ದೇವೆ: ಪಾಕ್ ರಾಜಕಾರಣಿಯ ಹೇಳಿಕೆ ವೈರಲ್
ಇಸ್ಲಾಮಾಬಾದ್, ನ.19: ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪಗಳ ಮಧ್ಯೆ, ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ `ಭಯೋತ್ಪಾದಕ ಗುಂಪು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ' ಭಾರತವನ್ನು ಹೊಡೆದಿದೆ' ಎಂದು ಹೇಳಿಕೆ ನೀಡಿದ್ದು ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. `ನೀವು ಬಲೂಚಿಸ್ತಾನದಲ್ಲಿ ರಕ್ತ ಹರಿಸುತ್ತಿದ್ದರೆ ನಾವು ಭಾರತವನ್ನು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ಹೊಡೆಯುತ್ತೇವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅಲ್ಲಾಹನ ದಯೆಯಿಂದ ನಾವು ಅದನ್ನು ಮಾಡಿದ್ದೇವೆ ಮತ್ತು ಅವರಿಗೆ ಇನ್ನೂ ಮೃತದೇಹಗಳನ್ನು ಎಣಿಸಲು ಆಗುತ್ತಿಲ್ಲ. ಕೆಲ ದಿನಗಳ ಬಳಿಕ ಶಸ್ತ್ರಸಜ್ಜಿತ ವ್ಯಕ್ತಿಗಳು ದಿಲ್ಲಿಯನ್ನು ಪ್ರವೇಶಿಸಿ ದಾಳಿ ಮಾಡಿದ್ದಾರೆ ಮತ್ತು ಬಹುಷಃ ಅವರಿಗೆ ಇಲ್ಲಿಯವರೆಗೆ ಎಲ್ಲಾ ಮೃತದೇಹಗಳನ್ನು ಎಣಿಕೆ ಮಾಡಲು ಸಾಧ್ಯವಾಗಿಲ್ಲ ' ಎಂದು ಹಕ್ ಹೇಳಿದ್ದಾರೆ. ಎಪ್ರಿಲ್ ನಲ್ಲಿ ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಮತ್ತು ನವೆಂಬರ್ 10ರಂದು ದಿಲ್ಲಿಯ ಕೆಂಪು ಕೋಟೆಯ ಬಳಿ ನಡೆದ ದಾಳಿಯನ್ನು ಉಲ್ಲೇಖಿಸಿ ಹಕ್ ಹೇಳಿಕೆ ನೀಡಿರುವುದಾಗಿ ಮಾಧ್ಯಮಗಳು ವಿಶ್ಲೇಷಿಸಿವೆ.
ಯಾದಗಿರಿ | ತೃತೀಯ ಲಿಂಗಿ ಸುಕನ್ಯಾ ಅಪಹರಣ, ಹಲ್ಲೆ ಪ್ರಕರಣ : ಪಾರದರ್ಶಕ ತನಿಖೆಗೆ ಒತ್ತಾಯ
ಯಾದಗಿರಿ : ಬೆಂಗಳೂರಿನ ಕೃಷ್ಣರಾಜಪುರಂನಿಂದ ತೃತೀಯ ಲಿಂಗಿ ಸುಕನ್ಯಾ ಅವರನ್ನು ಅಪಹರಿಸಿ ಕ್ರೂರವಾಗಿ ಹಲ್ಲೆಗೈದು ಹಿಂಸೆ ನೀಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯ ಕುರಿತು ಪಾರದರ್ಶಕವಾಗಿ ತನಿಖೆ ನಡೆಸಿ ಎಲ್ಲಾ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ಅಧ್ಯಕ್ಷೆ ವೈಶಾಲಿ ಎನ್.ಬ್ಯಾಳಿ, ಸದಸ್ಯರಾದ ಸಹನಾ ಹಾಗೂ ದೀಪಾ ಒತ್ತಾಯಿಸಿದರು. ಜಿಲ್ಲಾ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈಶಾಲಿ ಎನ್.ಬ್ಯಾಳಿ, ಹಲ್ಲೆಗೊಳಗಾಗಿರುವ ಸುಕನ್ಯಾ ಸುರಕ್ಷತೆಯನ್ನು ಖಾತ್ರಿಪಡಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಸರಕಾರಿ ಉದ್ಯೋಗಗಳಲ್ಲಿ ವಿಶೇಷ ನೇಮಕಾತಿ, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜೀವನೋಪಾಯದ ಅವಕಾಶಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು. ಈ ಹಿಂದೆ ಕಲಬುರಗಿ, ಮೈಸೂರು, ವಿಜಯಪುರ, ದೊಡ್ಡಬಳ್ಳಾಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ಅಮಾನವೀಯ ಹಲ್ಲೆಗಳು ನಡೆದಿದೆ. ಹಿಂಸೆ ಹಾಗೂ ಅನ್ಯಾಯದ ವಿರುದ್ಧ ಧ್ವನಿಯೆತ್ತಲು ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಮುಂದಾಗಬೇಕಿದೆ ಎಂದರು. ಈ ವೇಳೆ ತೃತೀಯ ಲಿಂಗಿ ಸಪ್ನಾ, ಮಹಿಳಾ ಹೋರಾಟಗಾರ್ತಿ ಭಾಗ್ಯ, ದಲಿತ ಮುಖಂಡರಾದ ಮರೆಪ್ಪ ಚಟ್ಟೇರಕರ್, ಸೈದಪ್ಪ, ನಿಂಗಪ್ಪ ಉಪಸ್ಥಿತರಿದ್ದರು.
ಎಂಟು ದಿನಗಳ ರಜೆ ಕೇಳಿದ್ದಕ್ಕೆ ಕಂಪನಿಯಿಂದ ವಜಾ!
ತಾನು ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಎಂಟು ದಿನಗಳ ರಜೆ ಕೇಳಿದ್ದ ಮಹಿಳೆಯೊಬ್ಬರನ್ನು ದಕ್ಷಿಣ ಕೊರಿಯಾದ ಕಂಪನಿಯೊಂದು ಕೆಲಸದಿಂದ ವಜಾಗೊಳಿಸಿದೆ. ಅಸಲಿಗೆ, ಅಲ್ಲಿನ ಕಾರ್ಪೊರೇಟ್ ನಿಯಮಗಳ ಪ್ರಕಾರ, ಒಂದು ಸಲಕ್ಕೆ ಐದು ದಿನಗಳವರೆಗೆ ರಜೆ ಪಡೆಯಬಹುದು. ಒಂದು ವರ್ಷದ ಕಚೇರಿ ದಿನಗಳಲ್ಲಿ ಶೇ. 80ರಷ್ಟು ದಿನ ರಜೆ ಪಡೆಯದೇ ಕೆಲಸ ಮಾಡಿದ ಉದ್ಯೋಗಿಗಳಿಗೆ 15 ದಿನಗಳ ವೇತನ ಸಹಿತ ರಜೆ ಸಿಗುತ್ತದೆ. ಆದರೂ, ಆ ಕಂಪನಿಯು ಈ ಮಹಿಳೆಯ ಬಗ್ಗೆ ಕೈಗೊಂಡಿರುವ ನಿರ್ಧಾರ ಇಂಟರ್ನೆಟ್ ನಲ್ಲಿ ಚರ್ಚೆಗೆ ನಾಂದಿ ಹಾಡಿದೆ.
ಇಸ್ಲಾಮಿನಲ್ಲಿ ಆತ್ಮಹತ್ಯೆ ಹರಾಮ್, ಅಮಾಯಕರ ಹತ್ಯೆ ಘೋರ ಪಾಪ: ಸಂಸದ ಉವೈಸಿ
ದಿಲ್ಲಿ ಸ್ಫೋಟದ ಬಾಂಬರ್ ನ ವೀಡಿಯೊಗೆ ಎಐಎಂಐಎಂ ವರಿಷ್ಠ ಪ್ರತಿಕ್ರಿಯೆ
ಕಲಬುರಗಿ: ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದಲ್ಲಿ ಒಂಭತ್ತು ಮಂದಿ ಪುರಸಭೆ ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶಿಸಿದ್ದಾರೆ. ಸಂಗಣ್ಣ ಗೌಡ ಪಾಟೀಲ್, ಶ್ರೀ ಗುರುಶಾಂತಯ್ಯ ಸಿದ್ರಾಮಯ್ಯ ಹಿರೇಮಠ, ಕಸ್ತೂರಿಬಾಯಿ ಸಾಹೇಬಗೌಡ ಕಲ್ಲಾ, ಮಲ್ಲಿಕಾರ್ಜುನ ಭಾಗಪ್ಪ ಭಜಂತ್ರಿ, ಗಂಗೂಬಾಯಿ ಜಟ್ಟಿಂಗರಾಯ, ಸಿದ್ದರಾಮ ಯಳಸಂಗಿ, ಗುರುಲಿಂಗಪ್ಪ ಎಸ್ ಮಾಲೀಪಾಟೀಲ್, ಶರಣಮ್ಮ ತಳವಾರ ಹಾಗೂ ಚಂದ್ರಕಾಂತ ಮಹೇಂದ್ರಕರ್ ಅನರ್ಹಗೊಂಡ ಬಿಜೆಪಿ ಸದಸ್ಯರಾಗಿದ್ದಾರೆ. ಬಿಜೆಪಿ ಪಕ್ಷದ ಮುಖಂಡರು ವಿಪ್ ಉಲ್ಲಂಘನೆ ಮಾಡಿದ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳು 9 ಮಂದಿಯನ್ನು ಜೇವರ್ಗಿ ಪುರಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಜೇವರ್ಗಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಳೆದ ಫೆಬ್ರವರಿ 12ರಂದು ಚುನಾವಣೆ ನಡೆದಿತ್ತು.17 ಸದಸ್ಯ ಬಲದೊಂದಿಗೆ ಬಿಜೆಪಿ ದೊಡ್ಡ ಪಕ್ಷವಾಗಿದ್ದರೂ, ಪಕ್ಷದ ಸದಸ್ಯರು ಬೇರೆ ಪಕ್ಷಕ್ಕೆ ತೆರಳದಂತೆ ಮುಂಜಾಗೃತೆಯಿಂದ ಬಿಜೆಪಿ ವಿಪ್ ಜಾರಿಗೊಳಿಸಿತ್ತು. ಆದರೆ, ಬಿಜೆಪಿಯ ಒಂಭತ್ತು ಸದಸ್ಯರು ಪಕ್ಷದ ವಿಪ್ ಅನ್ನು ಧಿಕ್ಕರಿಸಿ ಜೆಡಿಎಸ್ ಅಭ್ಯರ್ಥಿ ಪರ ಮತ ಚಲಾಯಿಸಿದ್ದರು. ವಿಪ್ ಉಲ್ಲಂಘಿಸಿದವರ ವಿರುದ್ಧ ಬಿಜೆಪಿ ಜಿಲ್ಲಾಧಿಕಾರಿಗೆ ದೂರು ನೀಡಿತ್ತು.
BJP ಸರ್ಕಾರ ಜಾರಿ ಮಾಡಿದ್ದ SC, ST ಮೀಸಲಾತಿ ಹೆಚ್ಚಳಕ್ಕೆ ಕರ್ನಾಟಕ ಹೈಕೋರ್ಟ್ ನಿರ್ಬಂಧ! ಸರ್ಕಾರಕ್ಕೆ ನಿರ್ದೇಶನ
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಶೇ.50 ರಿಂದ 56ಕ್ಕೆ ಹೆಚ್ಚಿಸಿ 2023ರಲ್ಲಿ ಬಿಜೆಪಿ ಸರಕಾರ ಜಾರಿಗೊಳಿಸಿದ್ದ ಕಾಯಿದೆಗೆ ಸಂಬಂಧಿಸಿದಂತೆ, ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸರಕಾರಕ್ಕೆ ನಿರ್ದೇಶನ ನೀಡಿದೆ. ಮೀಸಲಾತಿ ಹೆಚ್ಚಳವು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿದೆ ಮತ್ತು ರಾಷ್ಟ್ರೀಯ ಆಯೋಗಗಳ ಒಪ್ಪಿಗೆ ಪಡೆದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಲೆಬನಾನ್: ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 13 ಮಂದಿ ಮೃತ್ಯು
ಬೈರೂತ್, ನ.19: ದಕ್ಷಿಣ ಲೆಬನಾನ್ ನಲ್ಲಿ ಫೆಲೆಸ್ತೀನಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಸ್ವಾಮ್ಯದ `ನ್ಯಾಷನಲ್ ನ್ಯೂಸ್ ಏಜೆನ್ಸಿ' ವರದಿ ಮಾಡಿದೆ. ಕರಾವಳಿ ನಗರ ಸಿಡಾನ್ ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆಯ ಮಸೀದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಇಸ್ರೇಲ್ ನ ವಿರುದ್ಧದ ದಾಳಿಗೆ ಸಿದ್ಧತೆ ನಡೆಸಲು ಬಳಸಲಾಗುತ್ತಿದ್ದ ಹಮಾಸ್ ತರಬೇತಿ ಸ್ಥಳ ದಾಳಿಯ ಗುರಿಯಾಗಿತ್ತು. ಇಸ್ರೇಲ್ ಸೈನ್ಯವು ಹಮಾಸ್ ಗುಂಪಿನ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸುತ್ತದೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ. ಈ ಹೇಳಿಕೆಯನ್ನು ಹಮಾಸ್ ನಿರಾಕರಿಸಿದ್ದು , ತರಬೇತಿ ಸ್ಥಳದ ಮೇಲೆ ಅಲ್ಲ, ಆಟದ ಮೈದಾನದ ಮೇಲೆ ವೈಮಾನಿಕ ದಾಳಿ ನಡೆದಿರುವುದಾಗಿ ಪ್ರತಿಪಾದಿಸಿದೆ.
ಆತ್ಮಹತ್ಯೆಗೈದ ಬಾಲಕಿ 40 ನಿಮಿಷ ತರಗತಿಯಲ್ಲಿ ತೀವ್ರ ಕಿರುಕುಳ ಅನುಭವಿಸಿದ್ದಳು: ತನಿಖಾ ಸಮಿತಿ ವರದಿ
ಜೈಪುರ, ನ. 19: ಅಕ್ಟೋಬರ್ ಒಂದರಂದು ಜೈಪುರದ ತನ್ನ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಒಂಭತ್ತು ವರ್ಷದ ಬಾಲಕಿಯು ತನ್ನ ಅಂತಿಮ ತರಗತಿಯಲ್ಲಿ 40 ನಿಮಿಷಗಳ ಕಾಲ ತೀವ್ರ ಕಿರುಕುಳಕ್ಕೆ ಒಳಗಾಗಿದ್ದಳು ಎಂದು ತನಿಖಾ ಸಮಿತಿಯೊಂದು ಹೇಳಿದೆ. ತನ್ನ 5-7 ಸಹಪಾಠಿಗಳು ನೀಡುತ್ತಿದ್ದ ಕಿರುಕುಳದ ಬಗ್ಗೆ ಬಾಲಕಿಯು ಶಿಕ್ಷಕರಿಗೆ ಪದೇ ಪದೇ ದೂರು ನೀಡಿದ್ದರೂ, ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಅದು ತಿಳಿಸಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿನಿಯು ಶಾಲಾ ಕಟ್ಟಡದಿಂದ ಹಾರುವುದು ಸಿಸಿಟಿವಿ ಕ್ಯಾಮರದಲ್ಲಿ ದಾಖಲಾಗಿದೆ. ಐದರಿಂದ ಏಳು ಸಹಪಾಠಿಗಳು ಬಾಲಕಿಗೆ ನಿರಂತರವಾಗಿ ಕಿರುಕುಳ ನೀಡುತ್ತಿರುವುದನ್ನು ತರಗತಿಯಲ್ಲಿರುವ ಸಿಸಿಟಿವಿ ದೃಶ್ಯಗಳು ತೋರಿಸಿವೆ ಎಂದು ಐವರು ಸದಸ್ಯರ ತನಿಖಾ ಸಮಿತಿಯ ಮುಖ್ಯಸ್ಥ, ಜಿಲ್ಲಾ ಶಿಕ್ಷಣಾಧಿಕಾರಿ ರಾಮ್ನಿವಾಸ್ ಶರ್ಮಾ ಹೇಳಿದ್ದಾರೆ. ‘‘ನಲ್ವತ್ತು ನಿಮಿಷಗಳಲ್ಲಿ, ಬಾಲಕಿಯು ಕನಿಷ್ಠ ಮೂರು ಬಾರಿ ಶಿಕ್ಷಕರಿಗೆ ದೂರು ನೀಡಿದ್ದಾರೆ. ಆದರೆ ಅದನ್ನು ನಿರ್ಲಕ್ಷಿಸಲಾಗಿತ್ತು. ತನ್ನ ಸ್ಥಾನಕ್ಕೆ ಹೋಗುವಂತೆ ಬಾಲಕಿಗೆ ಶಿಕ್ಷಕರು ಸೂಚಿಸುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ’’ ಎಂದು ಅವರು ತಿಳಿಸಿದರು. ಶೌಚಾಲಯಕ್ಕೆ ಹೋಗುವುದಾಗಿ ತಿಳಿಸಿ ತರಗತಿಯಿಂದ ಹೊರಗೆ ಹೋದ ಬಾಲಕಿಯು ಮೇಲಿನ ಮಹಡಿಗೆ ಹೋದಳು. ನಾಲ್ಕನೇ ಮಹಡಿಯ ಬಾಲ್ಕನಿಯ ತಡೆಗೋಡೆಯನ್ನು ಏರಿ ಕೆಳಗೆ ಹಾರಿದಳು ಎಂದು ಶರ್ಮಾ ಹೇಳಿದರು.
ವಿಧಾನಸೌಧದ ಮುಂದೆ ನೇಪಾಳಿಗಳ ಹೊಡೆದಾಟ; ʻಕರ್ನಾಟಕದಲ್ಲಿ ವಲಸಿಗರಿಗೆ ಯಾರ ಭಯವಿಲ್ಲʼ ಎಂದ ಬಿಜೆಪಿ
ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ 'ನಮ್ಮ ಮೆಟ್ರೋ' ನಿಲ್ದಾಣದ ಬಳಿ ಸುಮಾರು 30 ಯುವಕರು ಹೊಡೆದಾಡಿಕೊಂಡಿರುವುದು ಕಂಡುಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. ಸದ್ಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಗಲಾಟೆ ಮಾಡಿದವರು ನೇಪಾಳ ಮೂಲದ ಯುವಕರು ಎನ್ನಲಾಗಿದೆ. ತನಿಖೆ ಮುಂದುವರೆದಿದೆ.
ಚೈತನ್ಯಾನಂದ ಸುರಕ್ಷಿತ ಕಸ್ಟಡಿಯಲ್ಲಿದ್ದಾರೆ: ದಿಲ್ಲಿ ನ್ಯಾಯಾಲಯಕ್ಕೆ ತಿಹಾರ್ ಅಧಿಕಾರಿಗಳಿಂದ ವರದಿ
ಹೊಸದಿಲ್ಲಿ, ನ. 19: ದಿಲ್ಲಿಯ ಖಾಸಗಿ ಮ್ಯಾನೇಜ್ಮೆಂಟ್ ಕಾಲೇಜೊಂದರ 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ‘‘ಸುಭದ್ರ ಮತ್ತು ಸುರಕ್ಷಿತ ಕಸ್ಟಡಿಯಲ್ಲಿದ್ದಾರೆ’’ ಎಂದು ತಿಹಾರ್ ಜೈಲಿನ ಅಧಿಕಾರಿಗಳು ದಿಲ್ಲಿಯ ನ್ಯಾಯಾಲಯವೊಂದಕ್ಕೆ ತಿಳಿಸಿದ್ದಾರೆ. ತಿಹಾರ್ ಜೈಲಿನಲ್ಲಿ ತನ್ನ ಜೀವಕ್ಕೆ ಬೆದರಿಕೆಯಿದೆ ಎಂಬುದಾಗಿ ಚೈತನ್ಯಾನಂದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅನಿಮೇಶ್ ಕುಮಾರ್ಗೆ ದೂರು ನೀಡಿದ್ದರು. ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿರುವ ಅವರು ಸಂಸ್ಥೆಯ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದಲ್ಲಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚೈತನ್ಯಾನಂದ ಮಾಡಿರುವ ಆರೋಪಗಳ ಬಗ್ಗೆ ನಾವು ಅವರೊಂದಿಗೆ ಮಾತನಾಡಿದೆವು, ಆದರೆ ಅವರು ಯಾರ ಹೆಸರನ್ನೂ ಹೇಳಲಿಲ್ಲ ಎಂದು ಜೈಲಿನ ಅಧಿಕಾರಿಗಳು ಮಂಗಳವಾರ ಮ್ಯಾಜಿಸ್ಟ್ರೇಟರಿಗೆ ಸಲ್ಲಿಸಿದ ಸ್ಥಿತಿಗತಿ ವರದಿಯಲ್ಲಿ ಹೇಳಿದ್ದಾರೆ. ‘‘ಕೈದಿ ಈಗ ಸುರಕ್ಷಿತ ಮತ್ತು ಸುಭದ್ರ ಕಸ್ಟಡಿಯಲ್ಲಿ ಇದ್ದಾರೆ. ನಿಮಗೆ ಯಾರಾದರೂ ಕಿರುಕುಳ ನೀಡುತ್ತಿದ್ದಾರೆ ಅಥವಾ ಬೆದರಿಕೆ ಹಾಕುತ್ತಿದ್ದಾರೆ ಅನಿಸಿದಾಗ, ನೀವು ಆ ವಿಷಯವನ್ನು ತಕ್ಷಣ ಯಾವುದೇ ಜೈಲು ಅಧಿಕಾರಿ ಅಥವಾ ಈ ವರದಿಗೆ ಸಹಿ ಹಾಕಿದವರ ಗಮನಕ್ಕೆ ನೇರವಾಗಿ ತರಬಹುದು ಎಂಬುದಾಗಿ ಅವರಿಗೆ ತಿಳಿಸಲಾಗಿದೆ’’ ಎಂದು ವರದಿ ಹೇಳಿದೆ. ಈರುಳ್ಳಿ, ಬೆಳ್ಳುಳ್ಳಿ ಇಲ್ಲದ ಊಟಕ್ಕೆ ಅನುಮತಿ ತನಗೆ ಖಾವಿ ಬಟ್ಟೆ ತೊಡಲು ಅವಕಾಶ ನೀಡಲಾಗುತ್ತಿಲ್ಲ ಎಂಬುದಾಗಿ ಚೈತನ್ಯಾನಂದ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಧಿಕಾರಿಗಳು, ‘‘ಅವರು ಖಾವಿ ಬಟ್ಟೆ ತೊಡುವುದಕ್ಕೆ ಜೈಲಿನ ಆಕ್ಷೇಪವಿಲ್ಲ’’ ಎಂದಿದ್ದಾರೆ. ಅವರ ಬೇಡಿಕೆಯಂತೆ, ನೀರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದ ಊಟವನ್ನು ನೀಡುವಂತೆ ಜೈಲಿನ ಅಡುಗೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ವರದಿಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ
ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ವೇಳೆ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್ ಟೈಲ್ಸ್ ಮಳಿಗೆಗೆ ಬುರ್ಖಾ ಧರಿಸಿ ಬಂದ ಪತ್ನಿ ಜ್ಯೋತಿ ಸೋಮಯಾಜಿ ಅವರು ಅಂಗಡಿಯ ಕ್ಯಾಶ್ ಕೌಂಟರಿನಲ್ಲಿದ್ದ ಪತಿಗೆ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಧಾವಿಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ತಕ್ಷಣ ಆರೋಪಿ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದ್ದು ಹೆಚ್ಚಿನ ವಿವರ ತಿಳಿದುಬಂದಿಲ್ಲ.
ಹಸೀನಾ ಗಡೀಪಾರು: ನೆರವಿವಾಗಿ ಇಂಟರ್ಪೋಲ್ ಮೊರೆ ಹೋಗಲು ಬಾಂಗ್ಲಾದೇಶ ನಿರ್ಧಾರ
ಢಾಕಾ, ನ. 19: ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಝಮನ್ ಖಾನ್ ಕಮಲ್ ರನ್ನು ಭಾರತದಿಂದ ಗಡೀಪಾರುಗೊಳಿಸುವಲ್ಲಿ ಇಂಟರ್ಪೋಲ್ ನೆರವು ಪಡೆಯಲು ಬಾಂಗ್ಲಾದೇಶ ಸರಕಾರ ಮುಂದಾಗಿದೆ. ಬಾಂಗ್ಲಾದೇಶದಲ್ಲಿ ಕಳೆದ ವರ್ಷ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಹತ್ತಿಕ್ಕುವ ಮೂಲಕ ಅಂದಿನ ಪ್ರಧಾನಿ ಹಸೀನಾ ಮಾನವತೆಯ ವಿರುದ್ಧ ಅಪರಾಧ ಎಸಗಿದ್ದಾರೆ ಎಂಬುದಾಗಿ ಆರೋಪಿಸಲಾಗಿತ್ತು. ಈ ಆರೋಪಗಳ ಬಗ್ಗೆ ತನಿಖೆ ನಡೆಸಿರುವ ಬಾಂಗ್ಲಾದೇಶದ ಅಂತರ್ರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯೊಂದು, ಸೋಮವಾರ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಕಮಲ್ರಿಗೆ ಮರಣ ದಂಡನೆ ವಿಧಿಸಿದೆ. ಅದರ ಬೆನ್ನಿಗೇ, ಮುಹಮ್ಮದ್ ಯೂನುಸ್ ನೇತೃತ್ವದ ಆ ದೇಶದ ಮಧ್ಯಂತರ ಸರಕಾರವು, ಹಸೀನಾ ಮತ್ತು ಕಮಲ್ರನ್ನು ದೇಶಕ್ಕೆ ಗಡೀಪಾರು ಮಾಡುವಂತೆ ಭಾರತ ಸರಕಾರಕ್ಕೆ ಮನವಿ ಮಾಡಿತ್ತು. ಮಾಜಿ ಪ್ರಧಾನಿ ಮತ್ತು ಮಾಜಿ ಗೃಹ ಸಚಿವರನ್ನು ಗಡೀಪಾರುಗೊಳಿಸುವಲ್ಲಿ ನೆರವು ನೀಡುವಂತೆ ಇಂಟರ್ಪೋಲನ್ನು ಕೋರುವ ಅರ್ಜಿಯನ್ನು ಬಾಂಗ್ಲಾದೇಶದ ಅಂತರ್ರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ ಮುಖ್ಯ ಪ್ರಾಸಿಕ್ಯೂಟರ್ ಕಚೇರಿಯು ಸಿದ್ಧಪಡಿಸುತ್ತಿದೆ ಎಂದು ಬಾಂಗ್ಲಾದೇಶದ ‘ದ ಡೇಲಿ ಸ್ಟಾರ್’ ವರದಿ ಮಾಡಿದೆ. ಬೃಹತ್ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, 2024 ಆಗಸ್ಟ್ 5ರಂದು ಶೇಖ್ ಹಸೀನಾ ಭಾರತಕ್ಕೆ ಪಲಾಯನಗೈದಿದ್ದಾರೆ. ಅಂದಿನಿಂದ ಅವರು ಭಾರತದಲ್ಲೇ ಅಜ್ಞಾತ ಸ್ಥಳವೊಂದರಲ್ಲಿ ವಾಸಿಸುತ್ತಿದ್ದಾರೆ.
ಜೈಲು ವಿಡಿಯೋ ವೈರಲ್ ಕೇಸ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಂಕಷ್ಟ! ವಿಚಾರಣೆ ವೇಳೆ ಧನ್ವೀರ್ ಮಹತ್ವದ ಹೇಳಿಕೆ
ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೊಬೈಲ್ ಬಳಕೆ ವಿಡಿಯೋ ಸೋರಿಕೆ ಪ್ರಕರಣದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಂಕಷ್ಟ ಎದುರಾಗಿದೆ. ವಿಡಿಯೋ ಹಂಚಿಕೊಂಡಿದ್ದಾಗಿ ಧನ್ವೀರ್ ಹೇಳಿಕೆ ನೀಡಿದ್ದು, ವಿಜಯಲಕ್ಷ್ಮಿ ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಮೆಟಾ ಸಂಸ್ಥೆಗೆ ಪತ್ರ ಬರೆದು ಬಳಕೆದಾರರ ಮಾಹಿತಿ ಕೋರಲಾಗಿದೆ.
ಬಾಂಗ್ಲಾದ ಗಲಭೆಗೆ ಬೈಡನ್ ಸರಕಾರದಿಂದ ಫಂಡಿಂಗ್: ಹಸೀನಾ ಪುತ್ರ ಆರೋಪ
ವರ್ಜೀನಿಯಾ, ನ.19: ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಗೆ ಅಮೆರಿಕಾದ ಬೈಡನ್ ಸರಕಾರ ಕೋಟ್ಯಾಂತರ ಡಾಲರ್ ಖರ್ಚು ಮಾಡಿದೆ. ಆದರೆ ಅಧ್ಯಕ್ಷ ಟ್ರಂಪ್ ಆಡಳಿತದಡಿ ಅಮೆರಿಕಾದ ನಿಲುವು ಖಂಡಿತವಾಗಿಯೂ ಬದಲಾಗಿದೆ ಎಂದು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾರ ಪುತ್ರ ಸಜೀಬ್ ವಾಝೇದ್ ಆರೋಪಿಸಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್ನ್ಯಾಷನಲ್ ಡೆವಲಪ್ಮೆಂಟ್(ಯುಎಸ್ಎಐಡಿ)ನ ಮೂಲಕ ಬೈಡನ್ ಆಡಳಿತವು ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಗೆ ಕೋಟ್ಯಾಂತರ ಡಾಲರ್ ಖರ್ಚು ಮಾಡಿದೆ ಎಂದು ಸ್ವತಃ ಅಧ್ಯಕ್ಷ ಟ್ರಂಪ್ ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದರು ಎಂದು ಈಗ ಅಮೆರಿಕಾದಲ್ಲಿ ನೆಲೆಸಿರುವ ವಾಝೇದ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ. ಹಸೀನಾ ಸರಕಾರಕ್ಕೆ ಅಮೆರಿಕಾ ಸರಕಾರದಿಂದ ಬೆದರಿಕೆ ಇತ್ತೇ ಎಂಬ ಪ್ರಶ್ನೆಗೆ ವಾಝೇದ್ `ಬೆದರಿಕೆ ಇರಲಿಲ್ಲ. ಆದರೆ ಅಮೆರಿಕಾ 2024ರ ಚುನಾವಣೆಯ ಬಗ್ಗೆ ನಕಾರಾತ್ಮಕ ಹೇಳಿಕೆ ನೀಡಿದ ಏಕೈಕ ರಾಷ್ಟ್ರವಾಗಿತ್ತು' ಎಂದುತ್ತರಿಸಿದ್ದಾರೆ. ಆದರೆ ಈಗ ಟ್ರಂಪ್ ಆಡಳಿತದ ನಿಲುವು ಸಂಪೂರ್ಣ ಬದಲಾಗಿದ್ದು ಹೊಸ ಆಡಳಿತದಡಿ ಬಾಂಗ್ಲಾದಲ್ಲಿ ಭಯೋತ್ಪಾದನೆಯ ಬೆದರಿಕೆ ಹೆಚ್ಚಿರುವ ಬಗ್ಗೆ ಟ್ರಂಪ್ ಕಳವಳ ವ್ಯಕ್ತಪಡಿಸಿದ್ದಾರೆ ಎಂದ ವಾಝೇದ್, ಬಾಂಗ್ಲಾದ ರಾಜಕೀಯ ಬಿಕ್ಕಟ್ಟಿನ ಸಂದರ್ಭ ಭಾರತದ ಪಾತ್ರವನ್ನು ಶ್ಲಾಘಿಸಿದರು. ಹಸೀನಾರನ್ನು ಬಾಂಗ್ಲಾಕ್ಕೆ ಗಡೀಪಾರು ಮಾಡಬೇಕೆಂಬ ಆಗ್ರಹದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ` ಚುನಾಯಿತವಲ್ಲದ, ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಬಾಂಗ್ಲಾ ಸರಕಾರವು ಹಸೀನಾಗೆ ಮರಣದಂಡನೆ ವಿಧಿಸುವ ಸಂದರ್ಭ ನ್ಯಾಯಾಂಗ ಪ್ರಕ್ರಿಯೆಯನ್ನು ಅನುಸರಿಸಲಿಲ್ಲ' ಎಂದು ಹೇಳಿರುವುದಾಗಿ ವರದಿಯಾಗಿದೆ.
ಭಾರತದ ವಿರುದ್ಧ ಚೀನಾದ ಎಐ ಚಾಲಿತ ಸುಳ್ಳು ಮಾಹಿತಿ ಪ್ರಚಾರ: ಅಮೆರಿಕಾ ವರದಿ
ಆಪರೇಷನ್ ಸಿಂಧೂರ್ ನಂತರ ರಾಫೆಲ್ ಗುರಿಯಾಗಿಸಿ ಅಭಿಯಾನ
ಬೀದರ್ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ. ಪವನ್ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿಟ್ಟು ಕೃಷಿಗಾಗಿ ಸಾಲವನ್ನು ಪಡೆದುಕೊಂಡಿದ್ದ ಪವನ್ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಸಾಲ ತೀರಿಸುವ ಬಗ್ಗೆ ಚಿಂತಿತನಾಗಿದ್ದ. ಇದೇ ಕಾರಣಕ್ಕೆ ನ.10ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿದ್ದ ಪವನ್ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂತಪುರ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಬೆಂಗಳೂರು ಹೊರಗೆ ಉದ್ಯಮಕ್ಕೆ 6 ಸಂಸ್ಥೆ ಮುಂದಡಿ! 5 ವರ್ಷಗಳಲ್ಲಿ1000 ಕೋಟಿ ರೂ. ಅನುದಾನ ನಿಗದಿ
ಬೆಂಗಳೂರು ಟೆಕ್ ಸಮ್ಮಿಟ್ನಲ್ಲಿ 'ಬಿಯಾಂಡ್ ಬೆಂಗಳೂರು' ನೀತಿಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಂಗಳೂರಿನ ಹೊರಗಿನ ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪಿಸಲು ಆರು ಸಂಸ್ಥೆಗಳು ಆಸಕ್ತಿ ತೋರಿವೆ. ಸುಮಾರು 2,600 ಕೋಟಿ ರೂ. ಹೂಡಿಕೆ ಮತ್ತು 4,000 ಉದ್ಯೋಗ ಸೃಷ್ಟಿಯಾಗಲಿದೆ. ಚಿಕ್ಕಬಳ್ಳಾಪುರ, ತುಮಕೂರು, ಧಾರವಾಡ, ಗೌರಿಬಿದನೂರುಗಳಲ್ಲಿ ಹೊಸ ಘಟಕಗಳು ಆರಂಭವಾಗಲಿವೆ. ಮಹಿಳೆಯರಿಗೂ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ತರಬೇತಿ ನೀಡಲಾಗುವುದು.
ಉಡುಪಿ | ನ.21ರಿಂದ ಮಾಹೆ ಘಟಿಕೋತ್ಸವ; 8450 ಮಂದಿಗೆ ಪದವಿ ಪ್ರದಾನ
ಉಡುಪಿ, ನ.19: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಲನ್ನು ಪ್ರದಾನ ಮಾಡಲಾಗುವುದು ಎಂದು ಮಾಹೆಯ ಕುಲಪತಿ ಲೆ.ಜ.(ಡಾ) ಎಂ.ಡಿ.ವೆಂಕಟೇಶ್ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಮಾಹೆಯ ಬೆಂಗಳೂರು ಕ್ಯಾಂಪಸ್ನಲ್ಲಿ ನವೆಂಬರ್ 29 ಮತ್ತು 30ರಂದು ಎರಡನೇ ಘಟಿಕೋತ್ಸವ ನಡೆಯಲಿದ್ದು, ಇದರಲ್ಲಿ 902 ಮಂದಿ ಪದವಿ ಸ್ವೀಕರಿಸಲಿದ್ದು, 900 ಮಂದಿ ಆನ್ಲೈನ್ ಡಿಗ್ರಿಯನ್ನೂ ಸ್ವೀಕರಿಸಲಿದ್ದಾರೆ. ಈ ಮೂಲಕ ಎರಡು ಕ್ಯಾಂಪಸ್ಗಳಲ್ಲಿ ಒಟ್ಟಾರೆಯಾಗಿ 8450 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ ಎಂದು ಅವರು ವಿವರಿಸಿದರು. ಮಣಿಪಾಲ ಮತ್ತು ಬೆಂಗಳೂರು ಕ್ಯಾಂಪಸ್ಗಳಲ್ಲಿ ನಡೆಯುವ ಈ ಘಟಿಕೋತ್ಸವದಲ್ಲಿ ಶೈಕ್ಷಣಿಕ ದಿಗ್ಗಜರು, ಕ್ಷೇತ್ರಪರಿಣತರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಮಣಿಪಾಲದಲ್ಲಿ ನಡೆಯುವ 3 ದಿನಗಳ ಸಮಾರಂಭದಲ್ಲಿ ಹೊಸದಿಲ್ಲಿ ಎನ್ಸಿಆರ್ನ ಶಿವನಾಡಾರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅನನ್ಯಾ ಮುಖರ್ಜಿ, ಹೊಸದಿಲ್ಲಿಯ ಗೂಗಲ್ ಕ್ಲೌಡ್ ಏಷ್ಯಾ ಪೆಸಿಫಿಕ್ ಸ್ಟ್ರಾಟಜೀಸ್ ಇನಿಶಿಯೇಟಿವ್ಸ್ನ ಉಪಾಧ್ಯಕ್ಷ ಬಿಕ್ರಮ್ ಸಿಂಗ್ ಬೇಡಿ ಹಾಗೂ ಗ್ಲಾಸ್ಗೊದ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಆ್ಯಂಡ್ ಸರ್ಜನ್ಸ್ನ ಅಧ್ಯಕ್ಷ ಪ್ರೊ. ಡಾ.ಹ್ಯಾನಿ ಎಟೀಬಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು. ಬೆಂಗಳೂರು ಕ್ಯಾಂಪಸ್ನಲ್ಲಿ ನಡೆಯುವ ಎರಡು ದಿನಗಳ ಘಟಿಕೋತ್ಸವ ದಲ್ಲಿ ಆಕ್ಸಿಸ್ ಬ್ಯಾಂಕ್ನ ಸಮೂಹ ಕಾರ್ಯನಿರ್ವಾಹಕಿ ಹಾಗೂ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ರಾಜ್ಕಮಲ್ ವೆಂಪತಿ ಹಾಗೂ ರೆವೊಲ್ಯೂಟ್ ಇಂಡಿಯಾದ ಸಿಇಒ ಪರೋಮಾ ಚಟರ್ಜಿ ಮುಖ್ಯ ಅತಿಥಿಗಳಾಗಿರುವರು ಎಂದರು. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಮಣಿಪಾಲದಲ್ಲಿ ನಡೆಯುವ ಮೂರು ದಿನಗಳ ಘಟಿಕೋತ್ಸವದಲ್ಲಿ 4,950 ಮಂದಿ ವಿದ್ಯಾರ್ಥಿಗಳು ಸ್ವತಹ ಹಾಜರಿದ್ದು ಪದವಿ ಸ್ವೀಕರಿಸಿದರೆ, 1,198 ಮಂದಿ ಅಂಚೆಮೂಲಕ ಪದವಿ ಸ್ವೀಕರಿಸಲಿದ್ದಾರೆ. ಬೆಂಗಳೂರು ಕ್ಯಾಂಪಸ್ನಲ್ಲಿ 728 ಮಂದಿ ನೇರವಾಗಿ ಹಾಗೂ 189 ಮಂದಿ ಅಂಚೆ ಮೂಲಕ ಪದವಿ ಸ್ವೀಕರಿಸುವರು ಎಂದರು. ಇದರೊಂದಿಗೆ ಮಾಹೆ ಆನ್ಲೈನ್ನ 625 ಮಂದಿ ಸಮಾರಂಭದಲ್ಲಿ ಭಾಗಿಯಾಗಿ ಹಾಗೂ 760 ಮಂದಿ ಅಂಚೆಯ ಮೂಲಕ ಪಡೆಯಲಿದ್ದಾರೆ. ಒಟ್ಟಾರೆಯಾಗಿ ಮಾಹೆ ಆನ್ಲೈನ್ನ 1,385 ಮಂದಿಗೆ ಈ ಬಾರಿ ಪದವಿ ಪ್ರದಾನ ನಡೆಯಲಿದೆ. ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಮ್ಯಾನೇಜ್ಮೆಂಟ್, ಸಮಾಜಶಾಸ್ತ್ರ ಸೇರಿದಂತೆ ವಿವಿಧ ಶೈಕ್ಷಣಿಕ ವಿಭಾಗ ವಿದ್ಯಾರ್ಥಿಗಳು ಪದವಿ ಪಡೆಯುವವರಲ್ಲಿ ಸೇರಿದ್ದಾರೆ. ಮಣಿಪಾಲದಲ್ಲಿ ಮೊದಲ ದಿನ 60 ಮಂದಿ ಪಿಎಚ್ಡಿ, ನಾಲ್ವರು ಚಿನ್ನದ ಪದಕ, ಎರಡನೇ ದಿನ 45 ಮಂದಿ ಪಿಎಚ್ಡಿ, ಮೂವರು ಚಿನ್ನದ ಪದಕ ಹಾಗೂ ಮೂರನೇ ದಿನ 50 ಮಂದಿ ಪಿಎಚ್ಡಿ, ಇಬ್ಬರು ಚಿನ್ನದ ಪದಕ ಸ್ವೀಕರಿಸಲಿದ್ದಾರೆ. ಬೆಂಗಳೂರು ಕ್ಯಾಂಪಸ್ನಲ್ಲಿ 12 ಮಂದಿ ಪಿಎಚ್ಡಿ ಹಾಗೂ ಒಬ್ಬರಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು ಡಾ.ವೆಂಕಟೇಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಹೆ ವಿವಿಯ ಡಾನಾರಾಯಣ ಸಭಾಹಿತ್, ಡಾ.ಶರತ್ ಕೆ.ರಾವ್, ಡಾ.ಗಿರಿಧರ್ ಕಿಣಿ ಹಾಗೂ ಇತರರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣದ ಎಫ್ಐಆರ್ ರದ್ದು ಕೋರಿ ಮತ್ತೊಂದು ಅರ್ಜಿ; ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಬೇಕೆಂಬ ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್ ನಿರಾಕರಿಸಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ (ಎಫ್ಐಆರ್ ಸಂಖ್ಯೆ- 39/2025) ಹಾಗೂ ಎಸ್ಐಟಿ ತನಿಖೆ ರದ್ದು ಕೋರಿ ಉಜಿರೆ ನಿವಾಸಿ ಗಣೇಶ್ ಶೆಟ್ಟಿ (29) ಎಂಬುವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಮತ್ತು ಎಸ್ಐಟಿ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಎಸ್ಐಟಿ ಪರ ಹಾಜರಿದ್ದ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ನಲ್ಲಿ ಅರ್ಜಿದಾರ ಗಣೇಶ್ ಶೆಟ್ಟಿ ಅವರ ಹೆಸರು ಇಲ್ಲ. ಅವರನ್ನು ವಿಚಾರಣೆಗೆ ಹಾಜರಾಗಲು ಎಸ್ಐಟಿ ಅಧಿಕಾರಿಗಳು ನೋಟಿಸ್ ಸಹ ನೀಡಿಲ್ಲ. ಆದರೂ ಅರ್ಜಿದಾರರು ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂಲತಃ ಎಫ್ಐಆರ್ ರದ್ದತಿಗೆ ಕೋರಲು ಅರ್ಜಿದಾರರಿಗೆ ಯಾವುದೇ ಹಕ್ಕು ಹಾಗೂ ಅವಕಾಶ ಇಲ್ಲ. ಆದ್ದರಿಂದ, ಅರ್ಜಿದಾರರ ಮಧ್ಯಂತರ ಮನವಿ ಪರಿಗಣಿಸಿ ಎಫ್ಐಆರ್ಗೆ ತಡೆಯಾಜ್ಞೆ ನೀಡಬಾರದು ಎಂದು ಕೋರಿದರು. ಈ ಮನವಿ ಪರಿಗಣಿಸಿದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಲು ನಿರಾಕರಿಸಿತು. ಜತೆಗೆ, ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ : ಕೆ.ವಿ.ಪ್ರಭಾಕರ್
ಬೆಂಗಳೂರು : ಮಗುವಿನ ಜನನದ ಜೊತೆಗೇ ಕಲಾವಿದ/ಕಲಾವಿದೆಯ ಜನನವೂ ಆಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಬಾಲಭವನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಮಾತನಾಡಿದರು. ಮಕ್ಕಳು ಹುಟ್ಟುತ್ತಲೇ ಅವರೊಳಗೆ ಕಲೆಯೂ ಹುಟ್ಟುತ್ತದೆ. ಆದ್ದರಿಂದ ಒಂದು ಮಗುವಿನ ಜನನ ಆಗಿದೆ ಎಂದರೆ ಕಲಾವಿದ/ ಕಲಾವಿದೆಯೊಬ್ಬರ ಜನನವೂ ಆಗಿದೆ ಅಂತಲೇ ಅರ್ಥ. ಕಲೆ ಮಕ್ಕಳ ಕೈಗಳಲ್ಲಿ, ನಾಲಗೆಯಲ್ಲಿ, ಬಾಯಿಯಲ್ಲಿ ಅರಳುವುದಿಲ್ಲ. ಕಲೆ ಮೊದಲು ಅರಳುವುದು ಮಕ್ಕಳ ಕಲ್ಪನಾ ಲೋಕದಲ್ಲಿ, ಮಕ್ಕಳ ಆಲೋಚನೆಯಲ್ಲಿ, ಮಕ್ಕಳ ಹೃದಯದಲ್ಲಿ ಮತ್ತು ಮಕ್ಕಳ ಮನಸ್ಸಿನಲ್ಲಿ. ಮಕ್ಕಳ ಆಲೋಚನೆಗಳ ಒಳಗೆ ಮೊಳಕೆಯೊಡೆಯುವ ಕಲೆ, ಅವರ ಕೈಗಳ ಮೂಲಕ, ಕಂಠದ ಮೂಲಕ ವ್ಯಕ್ತ ಆಗುತ್ತವೆ. ಆದ್ದರಿಂದ ಮಕ್ಕಳ ಮನೋಲೋಕವನ್ನು ನಾವು ಮೊದಲಿಗೆ ಅರಳಿಸಬೇಕು ಎಂದು ಕರೆ ನೀಡಿದರು. ಹೀಗೆ ಅರಳಬೇಕಾದರೆ ಮಕ್ಕಳಿಗೆ ಮಣ್ಣಿನ, ಪುಸ್ತಕಗಳ ಒಡನಾಟ ಬೇಕು. ಮೊಬೈಲ್ ಗಳ ಸಹವಾಸ ಮಕ್ಕಳಲ್ಲಿನ ಸೃಜನಶೀಲತೆಯನ್ನು ಮುದುಡುವಂತೆ ಮಾಡುತ್ತವೆ. ಉದಾಹರಣೆಗೆ ದೆವ್ವ ಮತ್ತು ಭೂತಗಳು ಹೇಗೆ ಇರುತ್ತವೆ, ಹೇಗೆ ಕಾಣುತ್ತವೆ ಎನ್ನುವುದನ್ನು ಪುಸ್ತಕಗಳ ಒಡನಾಟದಲ್ಲಿರುವ ಮಕ್ಕಳಿಗೆ, ಮೊಬೈಲ್ ಗಳ ಸಹವಾಸದಲ್ಲಿರುವ ಮಕ್ಕಳಿಗೆ ಕೇಳಿ ನೋಡಿ. ಓದುವ ಮಕ್ಕಳು ವಿವರಿಸುವ ರೀತಿ ವಿಶಾಲವಾಗಿರುತ್ತದೆ. ಅವರ ಕಲ್ಪನಾ ಲೋಕದಲ್ಲಿ ಹುಟ್ಟುವ ದೆವ್ವ, ಭೂತಗಳು ವೈವಿದ್ಯಮಯವಾಗಿರುತ್ತವೆ. ಮೊಬೈಲ್ ಮಕ್ಕಳು ಕೇವಲ ನೋಡಿದ್ದನ್ನು ವಿವರಿಸುತ್ತವೆ. ಇಲ್ಲಿ ಕಲ್ಪನಾಲೋಕ ಇರುವುದಿಲ್ಲ. ಕೇವಲ ನೋಡಿದ್ದರ ನೆನಪಿನಲೋಕ ಇರುತ್ತದೆ. ಈ ಕಾರಣಕ್ಕೇ ಮೊಬೈಲ್ ಬಿಡಿ, ಪುಸ್ತಕ ಹಿಡಿ ಎನ್ನುವ ಕಾರ್ಯಕ್ರಮವನ್ನು ಸರಕಾರ ರೂಪಿಸಿದೆ ಎಂದರು. ಆದ್ದರಿಂದ ನಾವೆಲ್ಲಾ ಸಾಧ್ಯವಾದಷ್ಟೂ ಮಕ್ಕಳ ಮನೋಲೋಕ ಅರಳಿಸುವ ಕಾರ್ಯಕ್ಕೆ ಹೆಚ್ಚೆಚ್ಚು ಪ್ರೋತ್ಸಾಹ ನೀಡೋಣ. ಈ ಕಾರ್ಯವನ್ನು ಜವಾಹರ್ ಲಾಲ್ ಅವರು ಸ್ಥಾಪಿಸಿದ ಬಾಲ ಭವನ ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ
ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರಿಗೆ ಸಲ್ಲಬೇಕು ಎಂದು ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹೇಳಿದರು. ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಡವರ ಪರವಾಗಿ, ಜನ ಸಾಮಾನ್ಯರ ಪರವಾಗಿ ಇಂದಿರಾ ಅವರ ನಿಲುವು, ಅಭಿವೃದ್ಧಿ ಪರವಾದ ಚಿಂತನೆಗಳು ವಿವಿಧ ರೂಪದಲ್ಲಿ ಇಂದಿಗೂ ಜಾರಿಯಲ್ಲಿದೆ. ಇಂತಹ ಮಹಾನ್ ವ್ಯಕ್ತಿತ್ವವನ್ನು ನೆನೆಯುವುದು ಸ್ತುತ್ಯರ್ಹ ಎಂದು ಅವರು ಹೇಳಿದರು. ಹಿರಿಯ ಕಾಂಗ್ರೆಸಿಗರಾದ ಸುಂದರ ಸಮಗಾರ ಸಾಣೂರು ಅವರು ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆಗೈದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಅತಿಥಿಗಳನ್ನು ಸ್ವಾಗತಿಸಿ ಇಂದಿರಾ ಗಾಂಧಿ ಜಯಂತಿ ಆಚರಣೆಯ ಕುರಿತು ಪ್ರಸ್ತಾವಿಕ ಮಾತನಾಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರಪಾಲ್ ನಕ್ರೆ ಅವರು ಮಾತನಾಡಿ, ಮಹಿಳಾ ಸಬಲೀಕರಣದ ಚಿಂತನೆ ಹುಟ್ಟಿದ್ದೇ ಇಂದಿರಾ ಗಾಂಧಿ ಪ್ರಧಾನಿಯಾದ ನಂತರ. ಇಂದಿರಾ ಗಾಂಧಿಯವರು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿ ಸರ್ವರಿಗೂ ಸಮಬಾಳು ಸಮಪಾಲು ದ್ಯೇಯದೊಂದಿಗೆ ಬಡವರಿಗೂ ಹಕ್ಕುಗಳನ್ನು ನೀಡಿದರು ಎಂದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಬಾಸ್ಕರ ಪೂಜಾರಿಯವರು ಸಂದರ್ಭೋಚಿತವಾಗಿ ಮಾತನಾಡಿದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಕುಕ್ಕುಂದೂರು ಗ್ರಾಮ ಪಪಂಚಾಯತ್ ಅಧ್ಯಕ್ಷೆ ಉಷಾ, ಜಿಲ್ಲಾ ಕೆ.ಡಿ.ಪಿ ಸದಸ್ಯರಾದ ವೀಣಾ ವಾಸು ಶೆಟ್ಟಿ, ಭ್ಯೂನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಮುಸ್ಲಿಂ ಜಮಾತ್ ಅದ್ಯಕ್ಷ ಅಶ್ಪಾಕ್ ಅಹಮ್ಮದ್, ಪುರಸಭಾ ಮಾಜಿ ಅದ್ಯಕ್ಷರುಗಳಾದ ಸೀತಾರಾಮ ದೇವಾಡಿಗ, ರೆಹಮತ್, ಸುಭಿತ್.ಎನ್.ಆರ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಯುವ ಕಾಂಗ್ರೆಸಿನ ಮಂಜುನಾಥ ಜೋಗಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಮೇಶ್ ಬಜಕಳ ಧನ್ಯವಾದವಿತ್ತರು. ಮಹಿಳಾ ಪಧಾದಿಕಾರಿಗಳಾದ ಡಿಂಪಲ್, ಶೋಭಾ, ಕಾಂತಿ ಶೆಟ್ಟಿ ಮತ್ತು ಮಹಿಳಾ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಕಾವಳಕಟ್ಟೆ|ಸ್ಕೂಟರಿಗೆ ಕಾರು ಢಿಕ್ಕಿ: ವಿದ್ಯಾರ್ಥಿನಿ ಮೃತ್ಯು
ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನದಿಗೆ ಕೊಳಚೆ ನೀರು; ಕ್ರಮ ಕೈಗೊಳ್ಳುವಂತೆ ಸಿಎಂಗೆ ಪಿ.ಎಂ.ನರೇಂದ್ರಸ್ವಾಮಿ ಮನವಿ
ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮನವಿ ಮಾಡಿದ್ದಾರೆ. ಬುಧವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜಲ ಮಾಲಿನ್ಯ ತಡೆಯಲು ಮಂಡಳಿಯು ರಾಜ್ಯದಲ್ಲಿರುವ ನದಿ-ನೀರು ಮಾಪನ ಕೇಂದ್ರಗಳನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತ್ಯಾಜ್ಯದಿಂದ ರಸ್ತೆ ನಿರ್ಮಾಣ ಮಾಡುವ ಆವಿಷ್ಠಾರವನ್ನು ಮಾಡಲಾಗಿದೆ. ಇದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ತ್ಯಾಜ್ಯವನ್ನು ಸಮರ್ಪಕವಾಗಿ ಮರುಬಳಕೆ ಆಗುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ನರೇಂದ್ರಸ್ವಾಮಿ ಮನವಿ ಮಾಡಿದರು. ದಾವಣಗೆರೆ ಜಿಲ್ಲೆಯಲ್ಲಿ ಗೃಹ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಸಂಸ್ಕರಿಸಲಾಗುತ್ತಿದೆ. ಇದು ರಾಜ್ಯಕ್ಕೆ ಮಾದರಿಯಾಗಬೇಕು. ಎಲ್ಲಾ ಜಿಲ್ಲೆಗಳೂ ಇದೇ ರೀತಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ನರೇಂದ್ರಸ್ವಾಮಿ ಸಿಎಂಗೆ ಕೇಳಿಕೊಂಡರು. ಅಲ್ಲದೆ ತ್ಯಾಜ್ಯ ಕಡಿಮೆ ಮಾಡಿ, ಪುನರ್ ಬಳಕೆ ಹೆಚ್ಚಿಸುವುದಕ್ಕೆ ಪೂರಕವಾಗಿ ವರ್ತುಲ ಅರ್ಥವ್ಯವಸ್ಥೆ ಮತ್ತು ಸುಸ್ಥಿರತೆ ಎಂಬ ವಿಚಾರ ಸಂಕಿರಣದಲ್ಲಿ ತಜ್ಞರು ನೀಡಿದ ಸಲಹೆಯನ್ನು ಆಧರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು. ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹಳ್ಳಿ, ಹಳ್ಳಿಗೆ ಕೊಂಡೊಯ್ಯುವುದು ಮತ್ತು ಮಂಡಳಿ ಸ್ಥಾಪನೆಯಾಗಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಸುವರ್ಣ ಮಹೋತ್ಸವದ ಉದ್ದೇಶ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಮಾತ್ರವೇ ಸುವರ್ಣ ಮಹೋತ್ಸವ ಮಾಡದೆ ರಾಜ್ಯದ 25 ಜಿಲ್ಲೆಗಳನ್ನು ಒಳಗೊಂಡು 14 ಕಡೆ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು. ಇಂದಿರಾ ಗಾಂಧಿಯವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯ್ದೆಗಳನ್ನು ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದಗಳನ್ನು ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972 ಅನ್ನು ಜಾರಿಗೆ ತಂದರು ಎಂದು ನರೇಂದ್ರಸ್ವಾಮಿ ಸ್ಮರಿಸಿದರು. 1973ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆಯನ್ನು ಇಂದಿರಾ ಗಾಂಧಿ ರೂಪಿಸಿದರು. 1974ರಲ್ಲಿ ಜಲ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದರು. ಅದೇ ವರ್ಷ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. 1981ರಲ್ಲಿ ವಾಯು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ ಜಾರಿಗೆ ತಂದರು. ಸುವರ್ಣ ಮಹೋತ್ಸವದ ವೇಳೆ ಈ ಕಾಯ್ದೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ ಎಂದು ನರೇಂದ್ರಸ್ವಾಮಿ ಹೇಳಿದರು. ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ಪ್ರದಾನ : ಇದೇ ವೇಳೆಯಲ್ಲಿ ಪರಿಸರ ಜಾಗೃತಿ, ಪರಿಸರ ಸಂರಕ್ಷಣೆ ಮೂಲಕ ಮಾಲಿನ್ಯ ಮುಕ್ತ ಕರ್ನಾಟಕದ ನಿರ್ಮಾಣಕ್ಕೆ ಕೈಜೋಡಿಸಿ ಪರಿಸರ ಕಾಳಜಿಯಲ್ಲಿ ಸಾಧನೆಗೈದ ಪರಿಸರವಾದಿಗಳಿಗೆ ಮಂಡಳಿ ವತಿಯಿಂದ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು. ಕೆರೆ ಸಂರಕ್ಷಣೆ, ಅರಣ್ಯ ವೃದ್ಧಿ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದಲ್ಲಿ ಸಾಧನೆಗೈದ ವ್ಯಕ್ತಿಗಳು, ಸಂಸ್ಥೆ ಮತ್ತು ಜಿಲ್ಲಾಡಳಿತಕ್ಕೆ ರಾಜ್ಯ ಮಟ್ಟದ ಐದು ಪ್ರಶಸ್ತಿ ಜೊತೆಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯಿತು.
ಸೊಸೈಟಿ ಬಲವರ್ಧನೆಗೆ ಕೇಂದ್ರದ ಮಹತ್ವದ ಕ್ರಮ : 3 ಬೆಳೆಗಳ ಕಮಿಷನ್ ಹೆಚ್ಚಳ - ಯಾವ ಬೆಳೆಗಳಿಗೆ?
ಭಾರತ ಮೋದಿ ಅವರ ನಾಯಕತ್ವದಲ್ಲಿ ಇಂಧನ ಸುಸ್ಥಿರತೆ ಮಾತ್ರವಲ್ಲ ಭವಿಷ್ಯದ ಪೀಳಿಗೆಗೆ ಮಾದರಿ ಹೆಜ್ಜೆಯಿಡುತ್ತಿದೆ. ದೇಶದ ಸೊಸೈಟಿಗಳು ಇನ್ನೂ ಉತ್ಸಾಹದಿಂದ ಕೆಲಸ ಮಾಡುವಂತಾಗಲು, ಮೂರು ಬೆಳೆಗಳ ಕಮಿಷನ್ ಅನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಹಿರಿಯಡ್ಕ | ಚರಂಡಿಗೆ ಬಿದ್ದ ಬಸ್: ಹೊಟೇಲ್ ಜಖಂ
ಹಿರಿಯಡ್ಕ: ಬಸ್ಸೊಂದು ಚರಂಡಿಗೆ ಬಿದ್ದು ಅಲ್ಲೇ ಸಮೀಪದ ಹೊಟೇಲ್ ಜಖಂಗೊಳಿಸಿದ ಘಟನೆ ಓಂತಿಬೆಟ್ಟು ಎಂಬಲ್ಲಿ ನ.18ರಂದು ರಾತ್ರಿ ವೇಳೆ ನಡೆದಿದೆ. ಚಾಲಕ ವಿಪರೀತ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಚಾಲಕ ವಿಜಯಪುರದ ಮಹಾಂತೇಶ ಆನಂದಗೌಡ ಪಾಟೀಲ(34) ಎಂಬಾತ ವಿಪರೀತ ಮದ್ಯ ಸೇವಿಸಿ ಪ್ರಯಾಣಿಕರಿರುವ ಬಸ್ಸನ್ನು ಮಣಿಪಾಲ ಕಡೆಯಿಂದ ಹಿರಿಯಡಕ ಕಡೆಗೆ ಚಲಾಯಿಸಿಕೊಂಡು ಬಂದು ಬಸ್ ನಿಯಂತ್ರಿಸದೇ ಚರಂಡಿಗೆ ನುಗ್ಗಿಸಿ ಹೋಟೆಲೊಂದರ ಬೋರ್ಡ್ ಮತ್ತು ಬಸ್ಸನ್ನು ಜಖಂಗೊಳಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರ ನರ ಹತ್ಯೆಗೆ ಪ್ರಯತ್ನಿಸಿ ಘೋರ ಅಪರಾಧ ಎಸಗಿರುವುದಾಗಿ ದೂರಲಾಗಿದೆ. ಈ ಬಸ್ ಕುಂದಾಪುರದಿಂದ ಬೆಂಗಳೂರಿಗೆ ಹೆಬ್ರಿ-ಶಿವಮೊಗ್ಗ ರಸ್ತೆ ಘಾಟಿ ಪ್ರದೇಶದಲ್ಲಿ ಹೋಗಬೇಕಿದ್ದು, ರಸ್ತೆಯು ತುಂಬಾ ತಿರುವುಗಳಿಂದ ಕೂಡಿರುವುದರಿಂದ ಬಸ್, ನಿಯಂತ್ರಣ ತಪ್ಪಿ ರಸ್ತೆ ಬದಿ ಪ್ರಪಾತಕ್ಕೆ ಬಿದ್ದಿದ್ದರೆ ದೊಡ್ಡ ದುರಂತ ಸಂಭವಿಸುತ್ತಿತ್ತು ಎಂದು ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ | ಚೂರಿ ಇರಿತ ಪ್ರಕರಣ: ಆರೋಪಿಗಳ ಬಂಧನ
ಹಿರಿಯಡ್ಕ: ಮನೆ ಕಂಪೌಂಡು ಕಟ್ಟುವ ವಿಚಾರದಲ್ಲಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ನ.15ರಂದು ಬಂಧಿಸಿದ್ದಾರೆ. ಹಿರಿಯಡ್ಕ ನಿವಾಸಿ ಹುಸೇನ್ ಶೇಖ್ ಅಹಮ್ಮದ್(74), ಮುಂಬೈಯ ತಮೀಮ್ ಹುಸೇನ್ ಶೇಖ್(34) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಕಬ್ಬಿಣದ ಕಟ್ಟರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಫೀಕ್ ಮತ್ತು ಅವರ ಮಗ ಶಾರೀಕ್ ನ.11ರಂದು ಮನೆಯ ಸುತ್ತಲೂ ಕಂಪೌಂಡ್ ಕಟ್ಟಿಸುತ್ತಿರುವಾಗ ಆರೋಪಿಗಳಾದ ಹುಸೇನ್ ಮತ್ತು ಅವರ ಮಗ ತಮೀಮ್ ಕಾರಿನಲ್ಲಿ ಬಂದು ಕಂಪೌಂಡ್ ಕಟ್ಟುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆಯೊಡ್ಡಿ, ಶಾರೀಕ್ ಅವರನ್ನು ಕೊಲ್ಲುವ ಉದ್ದೇಶದಿಂದ ಬೆನ್ನಿನ ಭಾಗಕ್ಕೆ ಹಲವು ಬಾರಿ ಚಾಕುವಿನಿಂದ ಚುಚ್ಚಿರುವುದಾಗಿ ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಗೆ 11 ದಿನಗಳ ಎನ್ಐಎ ಕಸ್ಟಡಿ
ಹೊಸದಿಲ್ಲಿ,ನ.19:ಅಮೆರಿಕದಿಂದ ಗಡಿಪಾರುಗೊಂಡಿರುವ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯಿಯ ಸಹೋದರನಾದ ಅನ್ಮೋಲ್ನನ್ನು ಮಂಗಳವಾರ ಅಮೆರಿಕವು ಭಾರತಕ್ಕೆ ಗಡಿಪಾರು ಮಾಡಿತ್ತು. ಅನ್ಮೋಲ್ ಬಿಷ್ಣೋಯಿಯನ್ನು ದಿಲ್ಲಿ ವಿಮಾನನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡ ಬಳಿಕ ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ಆತನನ್ನು 11 ದಿನಗಳ ಎನ್ಐಎ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 2022ರಿಂದಲೂ ಅನ್ಮೋಲ್ ತಲೆಮರೆಸಿಕೊಂಡಿದ್ದನು. ಭಯೋತ್ಪಾದಕರು ಹಾಗೂ ಗ್ಯಾಂಗ್ಸ್ಟರ್ ಗಳ ಸಂಚಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಈತ 19ನೇಯವನಾಗಿದ್ದಾನೆ. 2020 ಹಾಗೂ 2023ರ ನಡುವೆ ಭಯೋತ್ಪಾದಕನೆಂದು ಗುರುತಿಸಲಾದ ಗೋಲ್ಡ್ ಬ್ರಾರ್ ಗೆ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ನೆರವಾದ ಆರೋಪವನ್ನು ಆತ ಆಮೆರಿಕದಲ್ಲಿ ಎದುರಿಸುತ್ತಿದ್ದಾನೆ. ಎನ್ಐಎ ಪ್ರಕಾರ, ಲಾರೆನ್ಸ್ ಬಿಷ್ಣೋಯಿ ಬಂಧನದ ಬಳಿಕ ಆತನ ಜಾಲವನ್ನು ಅನ್ಮೋಲ್ ಅಮೆರಿಕದಿಂದಲೇ ನಿರ್ವಹಿಸುತ್ತಿದ್ದನು. ವಿದೇಶದಿಂದಲೇ ಇದ್ದುಕೊಂಡು ಭಾರತದಲ್ಲಿರುವ ಗ್ಯಾಂಗ್ ನ ಸದಸ್ಯರ ಜೊತೆ ಸಮನ್ವಯ ಸಾಧಿಸುವುದು, ಶೂಟರ್ಗಳಿಗೆ ಆಶ್ರಯ ಹಾಗೂ ಸಾಗಾಟದ ಏರ್ಪಾಡುಗಳನ್ನು ಮಾಡುತ್ತಿದ್ದ ಮತ್ತು ವಿದೇಶದಲ್ಲೇ ಇದ್ದುಕೊಂಡು ಸುಲಿಗೆ ಜಾಲವನ್ನು ನಡೆಸುತ್ತಿದ್ದ ಕಳೆದ ವರ್ಷ ಮುಂಬೈಯಲ್ಲಿ ಮಹಾರಾಷ್ಟ್ರದ ಎನ್ಸಿಪಿ ನಾಯಕ, ಮಾಜಿ ಸಚಿವ ಬಾಬಾ ಸಿದ್ದೀಕಿ ಅವರ ಹತ್ಯೆಪ್ರಕರಣದಲ್ಲೂ ಶಾಮೀಲಾಗಿರುವ ಆರೋಪವನ್ನು ಅನ್ಮೋಲ್ ಎದುರಿಸುತ್ತಿದ್ದಾನೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಾಟ ನಡೆಸಿದ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದಾನೆ. ಪಂಜಾಬಿ ಗಾಯಕ ಸಿದ್ಧು ಮೂಸೆವಾಲಾ ಕೊಲೆ ಪ್ರಕರಣದಲ್ಲೂ ಆತನ ಕೈವಾಡವಿರುವುದಾಗಿ ಆರೋಪಿಸಲಾಗಿದೆ.
ಜಿಲ್ಲಾ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ: ಟಿಕೆಟ್ ಬಗ್ಗೆ ಅಪ್ಡೇಟ್ ಕೊಟ್ಟ ಡಿಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 19: ಸದ್ಯದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಯ ವಾರ್ಡ್ ಮೀಸಲಾತಿ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಸ್ಥಳೀಯ
ಕೇರಳದಲ್ಲಿ ಎಸ್ಐಆರ್ ಮುಂದೂಡಿಕೆ ಕೋರುವ ಅರ್ಜಿಗಳ ವಿಚಾರಣೆ ನ.21ಕ್ಕೆ ನಿಗದಿ
ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರಕಾರ, ಐಯುಎಂಎಲ್
ಬೆಂಗಳೂರು ತಂತ್ರಜ್ಞಾನ ಶೃಂಗಸಭೆ : ‘ನಿಪುಣ ಕರ್ನಾಟಕ’ ಯೋಜನೆ ಪ್ರಕಟ
ಬೆಂಗಳೂರು ನಾವೀನ್ಯತಾ ವರದಿ ಬಿಡುಗಡೆ
ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ
ಸುಳ್ಯ: ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬವರ ಮನೆಯಲ್ಲಿ ಬುಧವಾರ ಮುಂಜಾನೆ ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದಿದೆ. ಪರಿಣಾಮ ಅಡುಗೆ ಮನೆಯ ಗೋಡೆ, ಟೈಲ್ಸ್, ಮೇಲ್ಟಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್ ಯಾವುದೇ ರೀತಿಯ ಗಾಯ ಅಥವಾ ಅಪಾಯ ಸಂಭವಿಸದೇ ಪಾರಾಗಿದ್ದಾರೆ.
ನಾಗ್ಪುರ: ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಯಂತ್ರಗಳು ಕಡ್ಡಾಯವಲ್ಲ ಹಾಗೂ ಅವು ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬುಧವಾರ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ವಿವಿಪ್ಯಾಟ್ ಯಂತ್ರಗಳನ್ನು ಬಳಸದಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ನ ನಾಗ್ಪುರ್ ನ್ಯಾಯಪೀಠದೆದುರು ಕಾಂಗ್ರೆಸ್ ನಾಯಕ ಪ್ರಫುಲ್ಲ ಗುಡಾಢೆ ಸಲ್ಲಿಸಿದ್ದ ಅರ್ಜಿಗೆ ಪ್ರತಿಯಾಗಿ ಚುನಾವಣಾ ಆಯೋಗ ಈ ಪ್ರಮಾಣ ಪತ್ರವನ್ನು ಸಲ್ಲಿಸಿದೆ. ಪಾರದರ್ಶಕ ಚುನಾವಣಾ ಪ್ರಕ್ರಿಯೆಗೆ ವಿವಿಪ್ಯಾಟ್ ವ್ಯವಸ್ಥೆ ಅತ್ಯಗತ್ಯವಾಗಿದೆ ಎಂದು ಪ್ರಫುಲ್ಲ ಗುಡಾಢೆ ತಮ್ಮ ಅರ್ಜಿಯಲ್ಲಿ ವಾದಿಸಿದ್ದರು. ಈ ಸಂಬಂಧ ಬುಧವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ಚುನಾವಣಾ ಪ್ರಕ್ರಿಯೆಯಲ್ಲಿ ವಿವಿಪ್ಯಾಟ್ ಯಂತ್ರಗಳನ್ನು ಬಳಸುವುದು ಕಡ್ಡಾಯವೆಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿರುವಾಗ, ವಿವಿಪ್ಯಾಟ್ ಯಂತ್ರಗಳನ್ನು ಯಾಕೆ ಬಳಸಲು ಸಾಧ್ಯವಿಲ್ಲ ಎಂಬ ಕಾರಣ ನೀಡುವಂತೆ ಚುನಾವಣಾ ಆಯೋಗಕ್ಕೆ ನ್ಯಾ. ಅನಿಲ್ ಕಿಲೋರ್ ನೇತೃತ್ವದ ನ್ಯಾಯಪೀಠ ಸೂಚಿಸಿತು. ಈ ವೇಳೆ, ಸುಪ್ರೀಂ ಕೋರ್ಟ್ ತೀರ್ಪು ಕೇವಲ ಸಾರ್ವತ್ರಿಕ ಚುನಾವಣೆಗಳಿಗೆ ಅನ್ವಯವಾಗುತ್ತದೆಯೇ ಹೊರತು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗಲ್ಲ ಎಂದು ಚುನಾವಣಾ ಆಯೋಗದ ಪರ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ಪ್ರತಿ ವಾದ ಮಂಡಿಸಿದರು. 2017ರ ನಗರ ಪಾಲಿಕೆ ಚುನಾವಣೆಗಳಲ್ಲೂ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗಿರಲಿಲ್ಲ ಎಂಬುದತ್ತ ಅವರು ಬೊಟ್ಟು ಮಾಡಿದರು. ಬಳಿಕ, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ರಾಜ್ಯದ ಬಿಜೆಪಿ ನಾಯಕರು ಒಂದಾಗಿ, ಒಟ್ಟಾಗಬೇಕು: ಬಿ.ವೈ.ವಿಜಯೇಂದ್ರ
ಉಡುಪಿ: ಬಿಜೆಪಿ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಾಗಿ ಒಂದಾಗಿ ಹೋಗಬೇಕು ಎಂಬುದು ನಮ್ಮ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ರಾಜ್ಯದ ನಾಯಕರು ಒಂದಾಗಿ ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನ.28ರ ’ಉಡುಪಿ ಶ್ರೀಕೃಷ್ಣ ಮಠ ಭೇಟಿ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದಪ್ರದಾನ ಸಮಾರಂಭವನ್ನು ಬುಧವಾರ ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು. ನಮ್ಮ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆಯುವ ಮೊದಲು ನಮ್ಮ ಪಕ್ಷದ ಕಾರ್ಯಕರ್ತರ ವಿಶ್ವಾಸವನ್ನು ಮುಖಂಡರು ಪಡೆದುಕೊಳ್ಳಬೇಕು. ಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾಗಿ ಪಕ್ಷ ಆಯ್ಕೆ ಮಾಡಿದರೂ ಅವರ ಪರ ದುಡಿಯುವುದಕ್ಕೆ ನಮ್ಮ ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಸರಕಾರದ ಕಳೆದ ಎರಡೂವರೆ ವರ್ಷಗಳ ಕಾರ್ಯವೈಖರಿ ನೋಡುವಾಗ ಬೇಸರ ಆಗುತ್ತದೆ. ಗ್ರಾಮೀಣ ಪ್ರದೇಶದ ಒಂದು ರಸ್ತೆಗಳ ಗುಂಡಿ ಮುಚ್ಚಲು ಕೂಡ ಇವರಿಗೆ ಸಾಧ್ಯವಾಗುತ್ತಿಲ್ಲ. ಯಾವುದೇ ಹೊಸ ಅಭಿವೃದ್ಧಿ ಕಾರ್ಯಕ್ರಮಗಳ ಘೋಷಣೆ ಮಾಡಲು ಇವರಿಂದ ಆಗಿಲ್ಲ. ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿಯಾಗಿದೆ ಎಂದು ಅವರು ಟೀಕಿಸಿದರು. ಬಡವರು, ರೈತರ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಇವರಿಗೆ ಇಂದು ತಮ್ಮ ಗ್ಯಾರಂಟಿ ಯೋಜನೆ ಬಗ್ಗೆ ವಿಶ್ವಾಸ ಇಲ್ಲವಾಗಿದೆ. ಇದಿದ್ದರೆ ಇಷ್ಟು ಹೊತ್ತಿಗೆ ಅವರು ಜಿಪಂ ತಾಪಂ ಚುನಾವಣೆ ಘೋಷಿಸುತ್ತಿದ್ದರು. ಈ ಸರಕಾರ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕಾರ್ಯ ಮಾಡುತ್ತಿದೆಯೇ ಹೊರತು ರಾಜ್ಯದ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಅವರು ಆರೋಪಿಸಿದರು. ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ವಹಿಸಿದ್ದರು. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಎಲ್ಗಾರ್ ಪರಿಷದ್ ಪ್ರಕರಣ: ಹೋರಾಟಗಾರ್ತಿ ಜ್ಯೋತಿ ಜಗತಾಪ್ ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ಹೊಸದಿಲ್ಲಿ,ನ.19: ಎಲ್ಗಾರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಿಂದಲೂ ಬಂಧನದಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ಜ್ಯೋತಿ ಜಗತಾಪ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಕಕ್ಷಿದಾರರು ಐದು ವರ್ಷಗಳಿಂದಲೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ ಎಂದು ಜಗತಾಪ್ ಪರ ಹಿರಿಯ ನ್ಯಾಯವಾದಿ ಅಪರ್ಣಾ ಭಟ್ ತಿಳಿಸಿದ ಬಳಿಕ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ ಮತ್ತು ಸತೀಶಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಜಾಮೀನು ಆದೇಶವನ್ನು ಹೊರಡಿಸಿತು. ಈ ಹಿಂದೆ ಮುಂಬೈ ಉಚ್ಚ ನ್ಯಾಯಾಲಯವು,ಜಗತಾಪ್ 2017, ಜ.31ರಂದು ಪುಣೆಯಲ್ಲಿ ನಡೆದಿದ್ದ ಎಲ್ಗಾರ್ ಪರಿಷದ್ ನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಪ್ರದರ್ಶನದ ಸಮಯ ಆಕ್ರಮಣಕಾರಿ ಮತ್ತು ಅತ್ಯಂತ ಪ್ರಚೋದನಾಕಾರಿ ಎಂದು ಹೇಳಲಾದ ಘೋಷಣೆಗಳನ್ನು ಕೂಗಿದ್ದ ಕಬೀರ್ ಕಲಾ ಮಂಚ್ ನ (ಕೆಕೆಎಂ)ಸಕ್ರಿಯ ಸದಸ್ಯೆಯಾಗಿದ್ದಾರೆ ಎಂದು ಎತ್ತಿ ಹಿಡಿದಿತ್ತು. ಕೆಕೆಎಂ ಸಿಪಿಐ (ಮಾವೋವಾದಿ) ನಿಯಂತ್ರಣದಲ್ಲಿರುವ ಸಂಘಟನೆಯಾಗಿದೆ ಎಂದು ಎನ್ಐಎ ಪ್ರತಿಪಾದಿಸಿದೆ. ತನಗೆ ಜಾಮೀನು ನಿರಾಕರಿಸಿದ್ದ ವಿಶೇಷ ನ್ಯಾಯಾಲಯದ ಫೆಬ್ರವರಿ 2022ರ ಆದೇಶವನ್ನು ಪ್ರಶ್ನಿಸಿ ಜಗತಾಪ್ ಸಲ್ಲಿಸಿದ್ದ ಮೇಲ್ಮನವಿಯನ್ನು ಉಚ್ಚ ನ್ಯಾಯಾಲಯವು ವಜಾಗೊಳಿಸಿತ್ತು. ಜಗತಾಪ್ ಅವರನ್ನು ಸೆಪ್ಟಂಬರ್ 2020ರಲ್ಲಿ ಬಂಧಿಸಲಾಗಿತ್ತು. ಎಲ್ಗಾರ್ ಪರಿಷದ್ ನ ಕಾರ್ಯಕ್ರಮದಲ್ಲಿ ಮಾಡಲಾಗಿದ್ದ ಪ್ರಚೋದನಾಕಾರಿ ಭಾಷಣಗಳು 2018,ಜ.1ರಂದು ಪುಣೆ ಹೊರವಲಯದ ಭೀಮಾ-ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರ ಭುಗಿಲೇಳಲು ಕಾರಣವಾಗಿದ್ದವು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

21 C