Kalaburagi | ಸಾಹಿತ್ಯ ಸೌರಭ ಕೃತಿಯ ಪರಿಚಯ ಕಾರ್ಯಕ್ರಮ
ಕಲಬುರಗಿ : ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ನಗರದಲ್ಲಿ ನಡೆದ ಪುಸ್ತಕ ಪರಿಚಯ ಮಾಲಿಕೆಯ ಕಾರ್ಯಕ್ರಮದಲ್ಲಿ ಡಾ. ಸುರೇಂದ್ರಕುಮಾರ ಕೆರಮಗಿ ರಚಿಸಿದ ಸಾಹಿತ್ಯ ಸೌರಭ ಕೃತಿಯನ್ನು ಪರಿಚಯಿಸಲಾಯಿತು. ಸಾಹಿತಿ ಹಾಗೂ ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಸ್ತರಣಾ ಕೇಂದ್ರ ದೇವದುರ್ಗದ ನಿರ್ದೇಶಕರಾದ ಡಾ.ಶಾಂತಪ್ಪ ಡಂಬಳ ಅವರು ಕೃತಿಯನ್ನು ಪರಿಚಯಿಸಿ ಮಾತನಾಡಿ, ಈ ಕೃತಿ ಮಾನವ ಸಂಬಂಧಗಳ ಬೆಸುಗೆಯ ಪ್ರತೀಕವಾಗಿದ್ದು, ಸಂವೇದನಾಶೀಲ ಲೇಖನಗಳ ಸಂಕಲನವಾಗಿದೆ ಎಂದು ಹೇಳಿದರು. ಕೃತಿಯಲ್ಲಿರುವ ಲೇಖನಗಳು ಸಾಂದರ್ಭಿಕವಾಗಿ ರಚಿಸಲ್ಪಟ್ಟಿದ್ದು, ಈಗಾಗಲೇ ವಿವಿಧ ಸಾಹಿತ್ಯ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವುದರ ಜೊತೆಗೆ ಅನೇಕ ಸಾಹಿತ್ಯ ಸಮ್ಮೇಳನಗಳಲ್ಲಿ ಪ್ರಬಂಧ ರೂಪದಲ್ಲಿ ಮಂಡನೆಯಾಗಿವೆ ಎಂದು ತಿಳಿಸಿದರು. ಮುಂದುವರೆದು ಮಾತನಾಡಿದ ಅವರು, ಕೃತಿಯಲ್ಲಿ ವರ್ತಮಾನದ ತಲ್ಲಣಗಳು, ಮಹಿಳಾ ಸಂವೇದನೆಗಳು, ದಲಿತಪರ ಚಳುವಳಿಗಳು ಹಾಗೂ ಕನ್ನಡಪರ ಹೋರಾಟಗಳ ಬಗ್ಗೆ ಚರ್ಚಿಸಲಾಗಿದೆ. ಈ ಕೃತಿ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರಿಗೆ ಪೂರಕವಾದ ಗ್ರಂಥವಾಗಿದೆ ಎಂದರು. ಕೃತಿಯ ಲೇಖಕರಾದ ಡಾ.ಸುರೇಂದ್ರಕುಮಾರ ಕೆರಮಗಿ ಅವರು ತಮ್ಮ ಸಾಹಿತ್ಯಿಕ ಅನುಭವಗಳನ್ನು ಹಂಚಿಕೊಂಡರು. ಶರಣಬಸವ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಶ್ರೀಶೈಲ ಮದಾನೆ ಹಾಗೂ ಸಾಹಿತಿ ರೇವಣಸಿದ್ಧಪ್ಪ ದುಕಾನ ಅವರು ಕೃತಿಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅಪ್ಪಾರಾವ ಅಕ್ಕೋಣೆ ವಹಿಸಿದ್ದರು. ಡಾ.ವಿಜಯಕುಮಾರ ಪರುತೆಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಡಾ.ಗವಿಸಿದ್ಧಪ್ಪ ಪಾಟೀಲ್ ಸ್ವಾಗತಿಸಿ, ಡಾ.ಮಲ್ಲಿನಾಥ ತಳವಾರ ವಂದಿಸಿದರು. ಈ ಸಂದರ್ಭದಲ್ಲಿ ಪ್ರೊ.ರವೀಂದ್ರ ಪಾಟೀಲ್, ಡಾ.ಎಸ್.ಶಿವಪುತ್ರ, ಡಾ. ರಾಜಕುಮಾರ ಮಾಳಗೆ, ವಿಶ್ವನಾಥ ಭಕರೆ, ಎಸ್.ಎಸ್. ಪಾಟೀಲ್, ರಾಜೇಂದ್ರ ಝಳಕಿ, ಪ್ರೊ. ಎಸ್.ಎಲ್. ಪಾಟೀಲ್, ಸಿದ್ಧರಾಮ ಸರಸಂಬಿ ಹಾಗೂ ಎಸ್.ಎಸ್.ಹೂಗಾರ ಸೇರಿದಂತೆ ಹಲವರು ಇದ್ದರು.
ಟ್ರೆಡಿಂಗ್ಗೆ ಹೂಡಿಕೆ: ಮಹಿಳೆಗೆ 11.75ಲಕ್ಷ ರೂ. ಆನ್ಲೈನ್ ವಂಚನೆ
ಉಡುಪಿ: ಟ್ರೆಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿ ಮಹಿಳೆಯೊಬ್ಬರು 11.75ಲಕ್ಷ ರೂ. ಆನ್ಲೈನ್ ವಂಚನೆಗೆ ಒಳಗಾದ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹನ ಎಂಬವರು ಟ್ರೆಡಿಂಗ್ ಬಗ್ಗೆ ತಿಳಿದುಕೊಳ್ಳಲು ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿದ್ದು, ಮುಂದೆ 15 ದಿನ ಗಳ ನಂತರ ಅಪರಿಚಿತ ಕರೆ ಮಾಡಿ, ವಾಟ್ಸಾಪ್ ಗ್ರೂಪ್ಗೆ ಸೇರಿಸಿದ್ದನು. ಅದರಲ್ಲಿ ಲಿಂಕ್ ನ್ನು ಕಳುಹಿಸಿ ಕೆವೈಸಿ ಡಿಟೈಲ್ ಫಿಲ್ ಮಾಡುವಂತೆ ತಿಳಿಸಲಾಗಿತ್ತು. ನಂತರ ಟ್ರೆಡಿಂಗ್ ಬಗ್ಗೆ ಆರೋಪಿಗಳು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಸಹನ ಮಾ.6ರಿಂದ ಮಾ.14ರವರೆಗೆ ಹಂತ ಹಂತವಾಗಿ ಒಟ್ಟು 11,75,000ರೂ. ಹಣವನ್ನು ವರ್ಗಾವಣೆ ಮಾಡಿದ್ದ ರೆನ್ನಲಾಗಿದೆ. ಆದರೆ ಆರೋಪಿಗಳು ಈವರೆಗೆ ವರ್ಗಾವಣೆ ಮಾಡಿದ ಹಣವನ್ನಾಗಲೀ ಅಥವಾ ಲಾಭಾಂಶನ್ನಾಗಲೀ ನೀಡದೇ ಸಹನ ಅವರಿಗೆ ಮೋಸ ಮಾಡಿರುವುದಾಗಿ ದೂರಲಾಗಿದೆ.
ಉಡುಪಿ| ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ: ಹಿಂಜಾವೇ ಮುಖಂಡರು ಸಹಿತ 38 ಮಂದಿಯ ವಿರುದ್ಧ ಎಫ್ಐಆರ್
ಉಡುಪಿ, ಮಾ.21: ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಫೇಲೋಶಿಫ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಹಮ್ಮಿಕೊಳ್ಳಲಾದ ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಮಾ.20ರಂದು ಪ್ರತಿಭಟನೆ ನಡೆಸಿದ ಹಿಂದು ಜಾಗರಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಸಮಾಧಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮೋಹನ್ ಸಿ.ಲಾಜರಸ್ ಅವರನ್ನು ಆಹ್ವಾನಿಸಿರುವುದಕ್ಕೆ ಹಿಂದೂ ಜಾಗರಣಾ ವೇದಿಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದುದರಿಂದ ಕಾರ್ಯಕ್ರಮಕ್ಕೆ ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಪೊಲೀಸರು ಸೂಕ್ತ ಬಂದೋಬಸ್ತ್ ನೀಡಿದ್ದರು. ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ ಶೆಟ್ಟಿ ಹಾಗೂ 38 ಮಂದಿ ಕಾರ್ಯಕರ್ತರು ಅಕ್ರಮ ಕೂಟ ಸೇರಿಕೊಂಡು ಉಡುಪಿ ಗೋವಿಂದ ಕಲ್ಯಾಣಮಂಟಪದಿಂದ ಸಮಾಧಾನ ಮಹೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಘೋಷಣೆಯನ್ನು ಕೂಗುತ್ತ ಪ್ರತಿಭಟನೆ ಹೊರಟರು. ಈ ಸಂದರ್ಭದಲ್ಲಿ ತಡೆದ ಪೊಲೀಸರು, ಪ್ರತಿಭಟನಕ ರರಾದ ಮಹೇಶ್ ಶೆಣೈ(43), ಶ್ರೀಕಾಂತ್ ಶೆಟ್ಟಿ, ಸಂತೋಷ(27), ಉಮೇಶ್ ನಾಯ್ಕ್(51), ಉಮೇಶ್(35), ರಮೇಶ್ ಶೆಟ್ಟಿ(43), ರಾಜೇಶ್ ಉಚ್ಚಿಲ (41), ದರ್ಶನ್(23), ಉದಯ ಕುಮಾರ್(44), ಪ್ರಶಾಂತ್(40), ಗುರುರಾಜ್(37), ಅಜೀತ್ ಗೋಳಿಕಟ್ಟೆ(39), ರಾಧಕೃಷ್ಣ(55), ರೀತೇಶ್ ಪೂಜಾರಿ(25), ಜಗದೀಶ ಪೂಜಾರಿ (31), ಮಹೇಶ್ ಪೂಜಾರಿ(33), ಸುನೀಲ್ ಪೂಜಾರಿ(26), ಚಿರಾಗ್ ಎಚ್.ಎಸ್.(22), ಸುದೀಪ್ ಕಡಿಯಾಳಿ(23), ನಿಖಿಲ್(28), ಸುಜೀತ್(28), ಸಾಜನ್ ಎಂ.ಶೆಟ್ಟಿ(34), ರಾಜೇಶ್ ಪೈಯಾರ್(43), ಲಕ್ಷ್ಮಣ್ ಕರ್ಕೇರ(49), ಶರತ್ ಕುಮಾರ್ ಬೈಲಕೆರೆ(42), ಶೈಲೇಂದ್ರ ಶೆಟ್ಟಿ(50), ವಿಕೇಶ್ ಎಸ್.(29), ನಿತೇಶ್(32), ಸರೋಜಾ ಶೆಣೈ(52), ತಾರಾ ಎಸ್., ತಾರಾ ಆಚಾರ್ಯ(55), ಸಿಂಚನ್ (21), ಧನುಷ್ ಶೆಟ್ಟಿ(21), ವಿಶೇಕ್ ಶೆಟ್ಟಿ(20), ಸಾತ್ವೀಕ್(20), ಮನೀಷ್ (21), ಅಶ್ವತ್ ಅಚಾರ್ಯ(37), ದಿನೇಶ್ ಸಾವಂತ(47) ಎಂಬವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇವದುರ್ಗ | ಚಿರತೆ ದಾಳಿಗೆ ಕರು ಬಲಿ : ಗ್ರಾಮಸ್ಥರಲ್ಲಿ ಆತಂಕ
ದೇವದುರ್ಗ: ತಾಲೂಕಿನ ಅರಕೇರಾ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಸಮೀಪ ಸಿದ್ದಮ್ಮ ಜಾಟಗಲ್ ಅವರ ಮನೆಯ ಹಿಂಭಾಗದಲ್ಲಿ ಗಿಡಕ್ಕೆ ಕಟ್ಟಿದ್ದ ಆಕಳ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಳಗಿನ ಜಾವ ಸುಮಾರು 4 ಗಂಟೆಗೆ ಚಿರತೆ ಬಂದು ಕರುವಿನ ಮೇಲೆ ದಾಳಿ ನಡೆಸಿದ್ದು, ಕರು ಒದ್ದಾಡುತ್ತಿರುವ ಶಬ್ದ ಕೇಳಿದ ಸಿದ್ದಮ್ಮ ಅವರು ಹೊರಗೆ ನೋಡಿದಾಗ ಘಟನೆ ಗಮನಕ್ಕೆ ಬಂದಿದೆ. ಭಯದಿಂದ ಕೂಗುತ್ತಾ ಮನೆಯೊಳಗೆ ತೆರಳಿದ ಬಳಿಕ, ನೆರೆಯವರು ಆಗಮಿಸುವಷ್ಟರಲ್ಲಿ ಚಿರತೆ ಕರುವಿನ ಮೇಲೆ ದಾಳಿ ನಡೆಸಿ ತಿಂದು ಓಡಿಹೋಗಿದೆ. ಘಟನಾ ಸ್ಥಳದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದೆ. ಮನೆಯ ಬಳಿ ಇನ್ನೂ ಎರಡು-ಮೂರು ಜಾನುವಾರುಗಳನ್ನು ಕಟ್ಟಿದ್ದರೂ, ಅವುಗಳು ಅದೃಷ್ಟವಶಾತ್ ಪಾರಾಗಿವೆ. ಇತ್ತೀಚೆಗೆ ಈ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಮೂರು-ನಾಲ್ಕು ಜಾನುವಾರುಗಳನ್ನು ಈಗಾಗಲೇ ಬಲಿ ಪಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಿಂಗನದೊಡ್ಡಿ, ಬಂಡೆಗುಡ್ಡ, ಗೊಲುಗುಡ್ಡ ಪ್ರದೇಶಗಳಲ್ಲಿರುವ ಗುಹೆಗಳಲ್ಲಿ ಚಿರತೆ ವಾಸಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ರೈತರು ಹಾಗೂ ಕೃಷಿ ಕಾರ್ಮಿಕರು ಜಮೀನಿಗೆ ತೆರಳಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಸಾಕುಪ್ರಾಣಿಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಿವಗೇನಿ ನಾಯಕ ಗುಜುಪು ಮನವಿ ಮಾಡಿದ್ದಾರೆ.
Strait of Hormuz tension: ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಯುನೈಟೆಡ್ ಕಿಂಗ್ಡಮ್ (ಯುಕೆ), ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಕೆನಡಾ ಸೇರಿದಂತೆ ಒಟ್ಟು 22 ದೇಶಗಳ ನಾಯಕರು ಸಂಯುಕ್ತ ಹೇಳಿಕೆ ಬಿಡುಗಡೆ ಮಾಡಿ ಇರಾನ್ ಕ್ರಮಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಜಂಟಿ ಹೇಳಿಕೆಯಲ್ಲಿ, ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ ನಿರಾಯುಧ
ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಳ
ಹೊಸದಿಲ್ಲಿ: ಸರಕಾರವು ದೇಶೀಯ ಉತ್ಪಾದನೆಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಾಣಿಜ್ಯ ಬಳಕೆಯ ಎಲ್ಪಿಜಿ ಹಂಚಿಕೆಯನ್ನು ಶೇ.20ರಷ್ಟು ಹೆಚ್ಚಿಸಿದ್ದು, ಇದರೊಂದಿಗೆ ಒಟ್ಟು ಹಂಚಿಕೆ ಪ್ರಮಾಣ ಶೇ.50ಕ್ಕೇರಿದೆ. ಕಳೆದ ಮೂರು ವಾರಗಳಿಂದ ಪಶ್ಚಿಮ ಏಶ್ಯಾದಲ್ಲಿ ನಡೆಯುತ್ತಿರುವ ಯುದ್ಧವು ಭಾರತಕ್ಕೆ ಇಂಧನ ಪೂರೈಕೆಗೆ ಅಡ್ಡಿಯನ್ನುಂಟು ಮಾಡಿದ್ದರಿಂದ ಸರಕಾರವು ಮನೆಗಳಿಗೆ ಪೂರೈಕೆಗೆ ಆದ್ಯತೆ ನೀಡಲು ಹೋಟೆಲ್ ಮತ್ತು ರೆಸ್ಟೋರಂಟ್ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್ಪಿಜಿ ಪೂರೈಕೆಯನ್ನು ಮೊಟಕುಗೊಳಿಸಿತ್ತು. ನಂತರ ವಾಣಿಜ್ಯ ಬಳಕೆಯ ಸಿಲಿಂಡರ್ಗಳ ಪೂರೈಕೆ ಕೊಂಚ ಚೇತರಿಕೆ ಕಂಡಿದ್ದು, ರಾಜ್ಯಗಳು ಕೊಳವೆಗಳ ಮೂಲಕ ಅನಿಲ ಪೂರೈಕೆ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂಬ ಷರತ್ತಿನೊಂದಿಗೆ ಪೂರೈಕೆಯನ್ನು ಹಂತಹಂತವಾಗಿ ಶೇ.30ಕ್ಕೆ ಹೆಚ್ಚಿಸಲಾಗಿತ್ತು. ಶನಿವಾರ ಸರಕಾರವು ರೆಸ್ಟೋರಂಟ್ಗಳು, ಹೋಟೆಲ್ಗಳು, ಕೈಗಾರಿಕಾ ಕ್ಯಾಂಟೀನ್ಗಳು, ಆಹಾರ ಸಂಸ್ಕರಣಾ ಘಟಕಗಳು, ಸಮುದಾಯ ಪಾಕಶಾಲೆಗಳು ಮತ್ತು ಸಬ್ಸಿಡಿ ಆಹಾರ ಮಳಿಗೆಗಳಂತಹ ಪ್ರಮುಖ ಕ್ಷೇತ್ರಗಳಿಗೆ ಶೇ.20ರಷ್ಟು ಹೆಚ್ಚುವರಿ ಹಂಚಿಕೆಯನ್ನು ಪ್ರಕಟಿಸಿದೆ. ಹೆಚ್ಚುವರಿ ಹಂಚಿಕೆಯು ವಾಣಿಜ್ಯ ಸಂಸ್ಥೆಗಳು ತೈಲ ಕಂಪನಿಗಳಲ್ಲಿ ನೋಂದಾಯಿಸಿಕೊಂಡು ಕೊಳವೆಗಳ ಮೂಲಕ ನೈಸರ್ಗಿಕ ಅನಿಲ (ಪಿಎನ್ಜಿ) ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸುವ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ತೈಲ ಕಾರ್ಯದರ್ಶಿಗಳು ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಗೃಹಬಳಕೆ ಎಲ್ಪಿಜಿ ಪೂರೈಕೆ ಸ್ಥಿರವಾಗಿದ್ದು,ವಿತರಕರಲ್ಲಿ ಯಾವುದೇ ಕೊರತೆ ವರದಿಯಾಗಿಲ್ಲ ಮತ್ತು ಸಾಮಾನ್ಯ ವಿತರಣೆ ಕಾರ್ಯಾಚರಣೆಗಳು ಮುಂದುವರಿದಿವೆ ಎಂದು ಅಧಿಕೃತ ಹೇಳಿಕೆಯು ತಿಳಿಸಿದೆ. ಪ್ಯಾನಿಕ್ ಬುಕಿಂಗ್ಗಳು ಕಡಿಮೆಯಾಗಿವೆ,ನಾಗರಿಕರು ವಿತರಣಾ ಕೇಂದ್ರಗಳ ಮುಂದೆ ಜಮಾಯಿಸಬಾರದು ಮತ್ತು ಮನೆಬಾಗಿಲಿಗೆ ವಿತರಣೆಯನ್ನು ನೆಚ್ಚಿಕೊಳ್ಳುವಂತೆ ಅದು ಸೂಚಿಸಿದೆ. ಪೂರೈಕೆ ಮೇಲಿನ ಒತ್ತಡವನ್ನು ತಗ್ಗಿಸಲು,ವಿಶೇಷವಾಗಿ ವಾಣಿಜ್ಯ ಸಂಸ್ಥೆಗಳಿಗೆ ಪಿಎನ್ಜಿ ಸರಬರಾಜನ್ನು ಸರಕಾರವು ಉತ್ತೇಜಿಸುತ್ತಿದೆ ಎಂದು ತಿಳಿಸಿರುವ ಹೇಳಿಕೆಯು,ನಗರ ಅನಿಲ ವಿತರಣೆ ಜಾಲಗಳಿಗೆ ಅನುಮೋದನೆಗಳನ್ನು ತ್ವರಿತಗೊಳಿಸುವಂತೆ ರಾಜ್ಯಗಳನ್ನು ಆಗ್ರಹಿಸಿದೆ. ಪೆಟ್ರೋಲ್ ಮತ್ತು ಡೀಸಿಲ್ನ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಲು ಎಲ್ಲ ಸಂಸ್ಕರಣಾಗಾರಗಳು ಸಾಕಷ್ಟು ಕಚ್ಚಾ ತೈಲ ದಾಸ್ತಾನಿನೊಂದಿಗೆ ಗರಿಷ್ಠ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಇಂಧನದ ಕೊರತೆಯಿಲ್ಲ ಎಂದು ತಿಳಿಸಿರುವ ಹೇಳಿಕೆಯು ಆತಂಕಕ್ಕೊಳಗಾಗಿ ಖರೀದಿಗೆ ಮುಂದಾಗದಂತೆ ಸಾರ್ವಜನಿಕರಿಗೆ ಸೂಚಿಸಿದೆ. ದೇಶೀಯ ಪಿಎನ್ಜಿ ಮತ್ತು ಸಿಎನ್ಜಿ ಸಾಗಣೆ ಸೇರಿದಂತೆ ಆದ್ಯತಾ ಕ್ಷೇತ್ರಗಳಿಗೆ ಪೂರ್ಣ ಪ್ರಮಾಣದಲ್ಲಿ ನೈಸರ್ಗಿಕ ಅನಿಲ ಪೂರೈಕೆಯಾಗುತ್ತಿದೆ,ಕೈಗಾರಿಕಾ ಬಳಕೆದಾರರು ತಮ್ಮ ಸಾಮಾನ್ಯ ಪೂರೈಕೆಯ ಶೇ.80ರಷ್ಟನ್ನು ಸ್ವೀಕರಿಸುತ್ತಿದ್ದಾರೆ ಎಂದು ಹೇಳಿಕೆಯು ತಿಳಿಸಿದೆ. ದೇಶೀಯ ಎಲ್ಪಿಜಿ ಉತ್ಪಾದನೆ,ಬುಕಿಂಗ್ ಅವಧಿ ವಿಸ್ತರಣೆ ಮತ್ತು ಪರ್ಯಾಯ ಇಂಧನ ಆಯ್ಕೆಗಳನ್ನು ಒದಗಿಸಲು ರಾಜ್ಯಗಳಿಗೆ ಹೆಚ್ಚುವರಿ ಸೀಮೆಎಣ್ಣೆ ಪೂರೈಕೆ ಹೆಚ್ಚುವರಿ ಕ್ರಮಗಳಲ್ಲಿ ಸೇರಿವೆ. ಅನಧಿಕೃತ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ.
ಅಸ್ಸೋಚಾಮ್ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಿಶೋರ್ ಅಳ್ವ ನೇಮಕ
ಉಡುಪಿ, ಮಾ.21: ದಿ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ ಸಂಸ್ಥೆಯು 2026-27ನೇ ಸಾಲಿಗೆ ತನ್ನ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಕಿಶೋರ್ ಅಳ್ವ ಅವರನ್ನು ನೇಮಕ ಮಾಡಿದೆ. ಕಿಶೋರ್ ಅಳ್ವ ಅವರು ಬಹುರಾಷ್ಟ್ರೀಯ ಕಂಪನಿಗಳು, ಇಂಧನ, ಮೂಲಸೌಕರ್ಯ ಮತ್ತು ಅಂತಾರಾಷ್ಟ್ರೀಯ ವ್ಯಾಪಾರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮೂರು ದಶಕಗಳಿಗಿಂತ ಹೆಚ್ಚು ವ್ಯಾಪಕ ಅನುಭವವನ್ನು ಹೊಂದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಜಾಗತಿಕ ಖ್ಯಾತಿಯ ಸಂಸ್ಥೆಗಳಲ್ಲಿ ಪ್ರಮುಖ ನಾಯಕತ್ವ ಮತ್ತು ತಂತ್ರಾತ್ಮಕ ಹುದ್ದೆಗಳನ್ನು ವಹಿಸಿಕೊಂಡಿದ್ದು, ವ್ಯವಹಾರ ಅಭಿವೃದ್ಧಿ, ನೀತಿ ವಕಾಲತ್ತು ಮತ್ತು ಸಂಸ್ಥಾಪನಾ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇವರು 2018-19ರಲ್ಲಿ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಅದಾನಿ ಗ್ರೂಪ್ನ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿ ದ್ದಾರೆ. 1920ರಲ್ಲಿ ಸ್ಥಾಪಿತವಾದ ಅಸ್ಸೋಚಾಮ್ 4.5 ಲಕ್ಷಕ್ಕೂ ಹೆಚ್ಚು ಕಂಪನಿಗಳನ್ನು ಒಳಗೊಂಡ ಬಲಿಷ್ಠ ಸದಸ್ಯತ್ವ ದೊಂದಿಗೆ ಭಾರತ ದೇಶದ ಪ್ರಮುಖ ಶೃಂಗ ಮಟ್ಟದ ಉದ್ಯಮ ಸಂಸ್ಥೆಗಳಲ್ಲಿ ಒಂದಾಗಿದೆ.
4000 ಕಿ.ಮೀ ದೂರದ ಡೀಗೊ ಗಾರ್ಶಿಯಾ ಸೇನಾ ನೆಲೆಯತ್ತ ಇರಾನ್ ಕ್ಷಿಪಣಿ ದಾಳಿ
ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧವು ಎರಡು ಪ್ರತ್ಯೇಕ ಮತ್ತು ಮಹತ್ವದ ದಾಳಿಗಳಲ್ಲಿ ಹಿಂದೂ ಮಹಾಸಾಗರಕ್ಕೆ ನಿರ್ಣಾಯಕವಾಗಿ ಚಲಿಸಿದ್ದು ಯುದ್ಧದ ಭೌಗೋಳಿಕ ವ್ಯಾಪ್ತಿ ವಿಸ್ತರಿಸಿರುವುದನ್ನು ಸೂಚಿಸಿದೆ. ಚಾಗೋಸ್ ದ್ವೀಪಗಳಲ್ಲಿರುವ ಅಮೆರಿಕ-ಬ್ರಿಟನ್ ಜಂಟಿ ಸೇನಾನೆಲೆ ಡೀಗೊ ಗಾರ್ಶಿಯಾದ ಕಡೆಗೆ ಇರಾನ್ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪ್ರಯೋಗಿಸಿದೆ. ಎರಡೂ ಕ್ಷಿಪಣಿಗಳು ಗುರಿ ತಲುಪಿಲ್ಲ. ಒಂದು ಮಧ್ಯಧಾರಿಯಲ್ಲಿಯೇ ವಿಫಲವಾದರೆ ಮತ್ತೊಂದನ್ನು ಅಮೆರಿಕದ ಸಮರನೌಕೆಯಿಂದ ಉಡಾಯಿಸಲಾದ ಪ್ರತಿಬಂಧಕ ತುಂಡರಿಸಿದೆ ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ವಾಲ್ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ. ವಾಯುನೆಲೆಯು ಇರಾನ್ ಭೂಪ್ರದೇಶದಿಂದ ಸುಮಾರು 4,000 ಕಿ.ಮೀ ದೂರದಲ್ಲಿದ್ದು ಇಲ್ಲಿ ಅಮೆರಿಕದ ಪಡೆಗಳು ಬಾಂಬರ್ ಗಳು ಹಾಗೂ ಇತರ ಸಾಧನಗಳನ್ನು ನೆಲೆಗೊಳಿಸಿವೆ. ಇದೀಗ ಇರಾನ್ ಯುರೋಪ್ನಲ್ಲಿರುವ ನೆಲೆಗಳನ್ನು ಗುರಿಯಾಗಿಸುವ ಸಾಮರ್ಥ್ಯ ಹೊಂದಿರುವುದನ್ನು ಈ ಬೆಳವಣಿಗೆ ಸೂಚಿಸಿದೆ.
ದೇವದುರ್ಗದಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ
ದೇವದುರ್ಗ: ಕಳೆದ 30 ದಿನಗಳ ಉಪವಾಸ ಪೂರ್ಣಗೊಳಿಸಿದ ಬಳಿಕ ಮುಸ್ಲಿಂ ಬಾಂಧವರು ಶನಿವಾರ ಹೊಸ ಉಡುಪುಗಳನ್ನು ಧರಿಸಿ ಈದುಲ್ ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಪಟ್ಟಣದ ಈದ್ಗಾ ಮೈದಾನದಲ್ಲಿ ಶ್ರದ್ಧಾ-ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಇದೇ ವೇಳೆ ಪಟ್ಟಣದ ಜಾಮಿಯಾ ಮಸೀದಿಯಲ್ಲಿಯೂ ಹಾಫೀಜ್ ಜಹೀರ ಅಬ್ಬಾಸ್ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಈದ್ಗಾ ಮೈದಾನದಲ್ಲಿ ಮಾತನಾಡಿದ ಮುಸ್ಲಿಂ ಧರ್ಮಗುರು ಹಾಫೀಜ್ ಜುನೇದ್ ಅವರು, ಈದುಲ್ ಫಿತ್ರ್ ಹಬ್ಬವು ಕೇವಲ ಒಂದು ದಿನಕ್ಕೆ ಸೀಮಿತವಾಗಿರಬಾರದು. ಪ್ರತಿದಿನ ನಮಾಝ್, ಕುರಾನ್ ಪಠಣ ಮಾಡುತ್ತಾ, ತಂದೆ-ತಾಯಿಗೆ ಗೌರವ ನೀಡುವುದು ಅತ್ಯಂತ ಮುಖ್ಯ ಎಂದು ಧಾರ್ಮಿಕ ಸಂದೇಶ ನೀಡಿದರು. ಮಕ್ಕಳಿಗೆ ಮೊದಲಿನಿಂದಲೇ ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಕಲಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಾರ್ಥನೆಗೆ ಆಗಮಿಸಿದ ಮುಸ್ಲಿಂ ಸಮುದಾಯದವರಿಗೆ ಶಾಸಕಿ ಕರೆಮ್ಮ ಜಿ.ನಾಯಕ ಅವರು ಭೇಟಿ ನೀಡಿ ಈದುಲ್ ಫಿತ್ರ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಮುಖಂಡರಾದ ರಂಗಪ್ಪ ಗೋಸಲ್, ಶರಣಗೌಡ ಗೌರಂಪೇಟ್, ಬಾಪೂಗೌಡ ಚಿಕ್ಕಹೊನ್ನಕುಣಿ, ಬಸನಗೌಡ, ವಿನೋದ ಕುಮಾರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಶತ್ರುಗಳನ್ನು ಸೋಲಿಸಲಾಗುತ್ತಿದೆ” : ನೌರುಝ್ ಸಂದೇಶದಲ್ಲಿ ಇರಾನ್ನ ಪರಮೋಚ್ಚ ನಾಯಕ ಮೊಜ್ತಬಾ ಖಾಮಿನೈ
ಟೆಹ್ರಾನ್ : ಇರಾನ್ನ ಶತ್ರುಗಳನ್ನು ಸೋಲಿಸಲಾಗುತ್ತಿದೆ ಎಂದು ಇರಾನ್ನ ಪರಮೋಚ್ಚ ನಾಯಕ ಮೊಜ್ತಬಾ ಖಾಮಿನೈ ಪರ್ಷಿಯನ್ ಹೊಸ ವರ್ಷ ನೌರುಝ್ ಅಂಗವಾಗಿ ಬಿಡುಗಡೆ ಮಾಡಿದ ಲಿಖಿತ ಸಂದೇಶದಲ್ಲಿ ಹೇಳಿದ್ದಾರೆ. ಇರಾನ್ ದೂರದರ್ಶನದಲ್ಲಿ ಪ್ರಸಾರವಾದ ಈ ಹೇಳಿಕೆಯಲ್ಲಿ ಇರಾನ್ ಜನರ ಬದ್ಧತೆಯನ್ನು ಅವರು ಶ್ಲಾಘಿಸಿದ್ದಾರೆ. ಹೊಸ ವರ್ಷವನ್ನು “ರಾಷ್ಟ್ರೀಯ ಏಕತೆ ಮತ್ತು ರಾಷ್ಟ್ರೀಯ ಭದ್ರತೆಯಡಿ ಪ್ರತಿರೋಧ ಆರ್ಥಿಕತೆಯ ವರ್ಷ” ಎಂದು ಹೇಳಿದ್ದಾರೆ. ಧಾರ್ಮಿಕ, ಬೌದ್ಧಿಕ, ಸಾಂಸ್ಕೃತಿಕ ಮತ್ತು ರಾಜಕೀಯ ವ್ಯತ್ಯಾಸಗಳ ಹೊರತಾಗಿಯೂ ನಮ್ಮ ದೇಶದ ಜನರಾದ ನಿಮ್ಮ ನಡುವಿನ ನಿರ್ದಿಷ್ಟ ಒಗ್ಗಟ್ಟಿನ ಮೂಲಕ ಶತ್ರುವನ್ನು ಸೋಲಿಸಲಾಗಿದೆ ಎಂದು ಮೊಜ್ತಬಾ ಖಾಮಿನೈ ಹೇಳಿದ್ದಾರೆ.
ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಸುರ್ಜೆವಾಲ, ಸಿಎಂ, ಡಿಸಿಎಂ ಸಭೆ
ಬೆಂಗಳೂರು : ದಾವಣಗೆರೆ ದಕ್ಷಿಣ ಕೇತ್ರಗಳ ಉಪಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿದೆ. ಆ ಹಿನ್ನೆಲೆಯಲ್ಲಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಕೇತ್ರದಲ್ಲಿ ಮುಸ್ಲಿಮ್ ಮುಖಂಡರಿಗೆ ಟಿಕೆಟ್ ನೀಡಬೇಕೆಂಬ ಒತ್ತಡದ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿದೆ. ಈ ಬೆಳವಣಿಗೆಗಳ ಮಧ್ಯೆ ಶುಕ್ರವಾರ(ಮಾ.20) ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಪಕ್ಷದ ‘ಬಿ ಫಾರಂ’ ಇಲ್ಲದೆ ನಾಮಪತ್ರ ಸಲ್ಲಿಕೆ ಮಾಡಿದ್ದು, ಯಾರಿಗೆ ಟಿಕೆಟ್ ನೀಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಶನಿವಾರ ನಗರದಲ್ಲಿ ಸಭೆ ನಡೆಸಿದ ಮುಖಂಡರು ಮನವೋಲಿಕೆ ಪ್ರಯತ್ನ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಸಭೆಯಲ್ಲಿ ಸಚಿವರಾದ ಮಲ್ಲಿಕಾರ್ಜುನ, ಝಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ಸಂಸದ ನಾಸೀರ್ ಹುಸೇನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಹಾರಿಸ್, ರಿಝ್ವಾನ್ ಅರ್ಷದ್, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಗೋಪಿನಾಥನ್ ಭಾಗವಹಿಸಿದ್ದರು. ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಾ.23ರಂದು ಕೊನೆಯ ದಿನವಾಗಿದ್ದು, ನಾಳೆ(ಮಾ.22) ಸಂಜೆಯೊಳಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಬೇಕಿದೆ. ಮಾ.24ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.26ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಎಪ್ರಿಲ್ 9ಕ್ಕೆ ಉಪಚುನಾವಣೆ ಮತದಾನ ನಡೆಯಲಿದೆ.
ಇತರ ದೇಶಗಳು ಬೆಲೆಗಳನ್ನು ಹೆಚ್ಚಿಸಿವೆಯೇ?; ಇಲ್ಲಿದೆ ಮಾಹಿತಿ...
Uttar Pradesh | ಟ್ರಕ್ ಬಡಿದು ಸಂಘಪರಿವಾರ ಕಾರ್ಯಕರ್ತ ಮೃತ್ಯು; ಹೆದ್ದಾರಿ ತಡೆದು ಪ್ರತಿಭಟನೆ
ಪೋಲಿಸರ ಜೊತೆ ಪ್ರತಿಭಟನಾಕಾರರ ಘರ್ಷಣೆ
ಕೋಲ್ಕತಾ: ಆಸ್ಪತ್ರೆಯ ಲಿಫ್ಟ್ನಲ್ಲಿ ಸಿಲುಕಿ ವ್ಯಕ್ತಿ ಸಾವು, ಐವರ ಬಂಧನ
ಕೋಲ್ಕತಾ: ಆಘಾತಕಾರಿ ಘಟನೆಯೊಂದರಲ್ಲಿ ಶುಕ್ರವಾರ ಕೋಲ್ಕತಾದ ಸರಕಾರಿ ಸ್ವಾಮ್ಯದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಲಿಫ್ಟ್ನಲ್ಲಿ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಅಧಿಕಾರಿಗಳ ನಿರ್ಲಕ್ಷ್ಯಈ ದುರಂತಕ್ಕೆ ಕಾರಣವೆಂದು ಮೃತರ ಕುಟುಂಬವು ಆರೋಪಿಸಿದೆ. ಮೃತರ ಸಂಬಂಧಿಕರು ಮತ್ತು ಸ್ನೇಹಿತರು ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆಯನ್ನು ನಡೆಸಿದರು. ಡಂ ಡಂ ನಿವಾಸಿ ಅರೂಪ್ ಬಂಡೋಪಾಧ್ಯಾಯ ಅವರ ಪುತ್ರನನ್ನು ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಐದನೇ ಮಹಡಿಯಲ್ಲಿರುವ ಟ್ರಾಮಾ ಕೇರ್ ಸೆಂಟರ್ಗೆ ತೆರಳಲು ಅವರು ಲಿಫ್ಟ್ ಅನ್ನು ಬಳಸಿದ್ದು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದರು ಎಂದು ಸಂಬಂಧಿಯೋರ್ವರು ತಿಳಿಸಿದರು. ಮರಣೋತ್ತರ ಪರೀಕ್ಷೆ ವರದಿಯ ಪ್ರಕಾರ ಪಾಲಿಟ್ರಾಮಾ ಅಥವಾ ಬಹುಘಾತದಿಂದ (ಎದೆಯ ಭಿತ್ತಿಗಳ ಸಂಕುಚನ,ಹೃದಯ, ಶ್ವಾಸಕೋಶಗಳು ಮತ್ತು ಯಕೃತ್ತಿನಲ್ಲಿ ಛಿದ್ರತೆ,ಕೈಕಾಲುಗಳು ಮತ್ತು ಪಕ್ಕೆಲಬುಗಳ ಮುರಿತ) ಸಾವು ಸಂಭವಿಸಿದೆ ಎಂದು ಅಧಿಕಾರಿಯೋರ್ವರು ತಿಳಿಸಿದರು. ದುರ್ಘಟನೆ ಸಂಭವಿಸಿದಾಗ ಲಿಫ್ಟ್ನಲ್ಲಿ ನಿರ್ವಾಹಕನಿರಲಿಲ್ಲ. ಬಂಡೋಪಾಧ್ಯಾಯ ಮಧ್ಯದಲ್ಲಿ ಒಂದು ಗಂಟೆಗೂ ಅಧಿಕ ಸಮಯ ಲಿಫ್ಟ್ನಲ್ಲಿ ಸಿಕ್ಕಿಕೊಂಡಿದ್ದು ಈ ವೇಳೆ ಲಿಫ್ಟ್ನ್ನು ಪುನಃ ಸಕ್ರಿಯಗೊಳಿಸಲು ಆಸ್ಪತ್ರೆ ಸಿಬ್ಬಂದಿ ಅಥವಾ ನಿರ್ವಾಹಕ ಲಭ್ಯರಿರಲಿಲ್ಲ ಎಂದು ಸಂಬಂಧಿ ಹೇಳಿದರು. ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು,ಮೂವರು ಲಿಫ್ಟ್ ನಿರ್ವಾಹಕರು ಮತ್ತು ಇಬ್ಬರು ಭದ್ರತಾ ಸಿಬ್ಬಂದಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೋಲಿಸ್ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದರು. ಆಗಸ್ಟ್ 2024ರಲ್ಲಿ ಆವರಣದಲ್ಲಿ ವೈದ್ಯೆಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆಯಿಂದಾಗಿ ಆರ್ಜಿ ಕರ್ ಆಸ್ಪತ್ರೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಮಾ. 22ರಂದು ಪತ್ರಕರ್ತ ರೇಮಂಡ್ ಡಿಕುನ್ಹಾ ತಾಕೊಡೆ ಅವರ ‘ಬೊಳ್ಳಿಲು’ ತುಳು ಕೃತಿ ಬಿಡುಗಡೆ
ಮೂಡುಬಿದಿರೆ: ಪತ್ರಕರ್ತ ರೇಮಂಡ್ ಡಿಕುನ್ಹಾ ತಾಕೊಡೆ ಅವರ ‘ಬೊಳ್ಳಿಲು’ ತುಳು ಕೃತಿ ಬಿಡುಗಡೆ ಮಾ. 22ರಂದು ಬೆಳಿಗ್ಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಹಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಮ್. ಮೋಹನ್ ಆಳ್ವ ಕೃತಿ ಬಿಡುಗಡೆ ಮಾಡಲಿದ್ದಾರೆ. ಗೀತಾ ಲಕ್ಷ್ಮೀಶ್ ಶೆಟ್ಟಿ ಕೃತಿ ಪರಿಚಯ ನಡೆಸಲಿದ್ದಾರೆ. ಅಂದು ಬೆಳಿಗ್ಗೆ 10:00ರಿಂದ 11:00 ರವರೆಗೆ ಕವಿಗೋಷ್ಠಿ ಉದಯೋನ್ಮುಖ ಕವಿಗಳಿಂದ ನಡೆಯಲಿದೆ. ಗೋಷ್ಠಿಯ ಅಧ್ಯಕ್ಷತೆಯನ್ನು ಸದಾನಂದ ನಾರಾವಿ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಭಾಷಾ ವೈವಿಧ್ಯತೆಯನ್ನು ಹೆಮ್ಮೆಯಿಂದ ಸ್ವೀಕರಿಸಬೇಕು: ಡಾ. ಪರಮಶಿವಮೂರ್ತಿ
ಮೂಡುಬಿದಿರೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ ‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಎಂಬ ಶೀರ್ಷಿಕೆಯಡಿ ನಡೆಯುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವು ಶುಕ್ರವಾರ ಆರಂಭಗೊಂಡಿತು. ಹಂಪಿ ಕನ್ನಡ ವಿವಿಯ ಕುಲಪತಿಗಳಾದ ಡಾ ಡಿ. ವಿ ಪರಮಶಿವಮೂರ್ತಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ ಭಾಷೆ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬಂಧಗಳನ್ನು ಬೆಸೆಯುವ ಪ್ರಮುಖ ಸಾಧನವಾಗಿದ್ದು, ಅದು ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಭಾಷೆಗಳು ಒಗ್ಗೂಡಿಸುವ ಬದಲು ಹಲವಾರು ಸಂದರ್ಭಗಳಲ್ಲಿ ಸಂಘರ್ಷಗಳಿಗೆ ಕಾರಣವಾಗುತ್ತಿರುವುದರ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿ, “ಭಾಷಾ ವೈವಿಧ್ಯತೆಯನ್ನು ಹೆಮ್ಮೆ ಯಿಂದ ಸ್ವೀಕರಿಸಬೇಕು; ಇರ್ಷ್ಯೆಯಿಂದಲ್ಲ,” ಎಂದು ಅಭಿಪ್ರಾಯಪಟ್ಟರು. ಭಾಷೆಯು ಜ್ಞಾನ ಮತ್ತು ಅರಿವಿನ ವಿಸ್ತರಣೆಗೆ ಪರಿಣಾಮಕಾರಿ ಸಾಧನವಾಗಿದ್ದು, ಮನುಷ್ಯತ್ವವನ್ನು ಉದ್ದೀಪನಗೊಳಿಸಿ, ಮಾನವ ಸಂಬಂಧಗಳನ್ನು ಬಲಪಡಿಸಬೇಕು. ನಮ್ಮ ಭಾಷೆಗೆ ನೀಡುವ ಗೌರವವನ್ನು ಇತರ ಭಾಷೆಗಳಿಗೂ ಹಾಗೂ ಭಾಷಿಕರಿಗೂ ಸಮಾನವಾಗಿ ನೀಡಬೇಕೆಂದು ಅವರು ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ನಿರಂತರ ಪ್ರಯತ್ನಗಳ ಅಗತ್ಯವಿದೆ ಎಂದು ತಿಳಿಸಿದರು. ವಿಚಾರ ಸಂಕಿರಣದ ಸಂಚಾಲಕರು ಹಾಗೂ ಹಂಪಿ ಕನ್ನಡ ವಿವಿಯ ಹಿರಿಯ ಪ್ರಾಧ್ಯಾಪಕ ಡಾ ಮಾಧವ ಪೆರಾಜೆ ವಿಚಾರ ಸಂಕಿರಣದ ಉದ್ದೇಶಗಳು ಹಾಗೂ ಸಮಕಾಲೀನ ಮಹತ್ವವನ್ನು ವಿವರಿಸಿದರು. ದಿಕ್ಸೂಚಿ ಭಾಷಣ ಮಾಡಿದ ಕನ್ನಡ ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ, ಭಾಷೆಗಳ ಕುರಿತು ನಡೆಯುವ ಚರ್ಚೆಗಳು ಇಂದಿಗೂ ಹಳೆಯ ಅಂಕಿಅಂಶಗಳ ಮೇಲೆ ಅವಲಂಬಿತವಾಗಿರುವುದು ದುರಾದೃಷ್ಟಕರ. 2011ರ ಜನಗಣತಿಯ ಪ್ರಕಾರ, ಭಾರತದಲ್ಲಿ 19,569 ಮಾತೃಭಾಷೆಗಳಿದ್ದರೂ, ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಕೇವಲ 22 ಭಾಷೆಗಳಿವೆ. ಅವುಗಳಲ್ಲಿ 18 ಭಾಷೆಗಳು ಉತ್ತರ ಭಾರತದಾಗಿದ್ದು, ದಕ್ಷಿಣ ಭಾರತದ ದ್ರಾವಿಡ ಭಾಷೆಗಳು ಕೇವಲ ನಾಲ್ಕು ಮಾತ್ರವಿರುವುದು ಭಾಷಾ ಅಸಮಾನತೆಯನ್ನು ಎತ್ತಿ ತೋರಿಸುತ್ತದೆ ಎಂದರು. ಕರ್ನಾಟಕದಲ್ಲಿ ಜನನ ಪ್ರಮಾಣ 1.6ರಷ್ಟಿದ್ದರೆ, ಬಿಹಾರ ಹಾಗೂ ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಅದು 2.9ರಷ್ಟಿದೆ. ಈ ವ್ಯತ್ಯಾಸವು ಕೇವಲ ಜನಸಂಖ್ಯಾ ಅಂಕಿ ಅಂಶಗಳಲ್ಲದೆ, ಭವಿಷ್ಯದ ರಾಜಕೀಯ ಪ್ರತಿನಿಧಿತ್ವದ ಮೇಲೂ ಮಹತ್ವದ ಪರಿಣಾಮ ಬೀರುತ್ತವೆ. ಈ ನೆಲೆಯಲ್ಲಿ ಸೆಂಟರ್ ಫಾರ್ ಪಾಲಿಸಿ ರಿಸರ್ಚ ಸೇರಿದಂತೆ ಹಲವು ಸಂಸ್ಥೆಗಳು ನಡೆಸಿದ ಅಧ್ಯಯದ ಪ್ರಕಾರ, ಒಂದು ವೇಳೆ 2028ರ ಲೋಕಸಭಾ ಚುನಾಚಣೆಗೆ ಕ್ಷೇತ್ರ ಪುನರ್ವಿಂಗಡಣೆಯಾದಲ್ಲಿ ಉತ್ತರ ಪ್ರದೇಶದ ಸ್ಥಾನಗಳು 80ರಿಂದ 128ಕ್ಕೆ, ಬಿಹಾರದಲ್ಲಿ 40ರಿಂದ 70ಕ್ಕೆ, ಮದ್ಯಪ್ರದೇಶದಲ್ಲಿ 29 ರಿಂದ 47, ಮಹಾರಾಷ್ಟç 48ರಿಂದ 68, ರಾಜಸ್ಥಾನ 25ರಿಂದ 44, ಪಶ್ಚಿಮ ಬಂಗಾಳ 42ರಿಂದ 60 ಸ್ಥಾನಗಳಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕೆ ವಿರುದ್ಧವಾಗಿ ದಕ್ಷಿಣದ ರಾಜ್ಯಗಳಲ್ಲಿ ಅಲ್ಪ ಪ್ರಮಾಣದ ಏರಿಕೆ ಮಾತ್ರವಾಗುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ 28ರಿಂದ 36ಕ್ಕೆ, ತಮಿಳುನಾಡಿನಲ್ಲಿ 39ರಿಂದ 42ಕ್ಕೆ, ತೆಲಂಗಾಣದಲ್ಲಿ 17ರಿಂದ 20ಕ್ಕೆ, ಆಂಧ್ರ ಪ್ರದೇಶದಲ್ಲಿ 25ರಿಂದ 28ಕ್ಕೆ ಏರಿಕೆಯಾಗುವ ಸಾಧ್ಯತೆ ಇದ್ದು, ಕೇರಳದಲ್ಲಿ 20ರಿಂದ 19ಕ್ಕೆ ಇಳಿಯುವ ಸಾಧ್ಯತೆ ಇದೆ ಎಂದರು. ಮೊದಲ ದಿನದ ಪ್ರಥಮ ಗೋಷ್ಠಿಯಲ್ಲಿ ಕೇರಳದ ಖ್ಯಾತ ಬರಹಗಾರ ಹಾಗೂ ಭಾಷಾಂತಕಾರಾದ ಡಾ ಸುಧಾಕರ್ ರಾಮಂತಳಿ ಬಹುಭಾಷೆಗಳು ಹಾಗೂ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಅನನ್ಯತೆ ಕುರಿತು, ಡಾ ವಿ ಬಿ ತಾರಕೇಶ್ವರ, ದಕ್ಷಿಣ ಭಾರತದ ಭಾಷಾರಾಷ್ಟ್ರೀಯತೆಯ ಪರಿಕಲ್ಪನೆ, ಡಾ ಡಿ ಪಾಂಡುರಂಗ ಬಾಬು – ಜಾತಿ ವ್ಯವಸ್ಥೆ ಮತ್ತು ಭಾಷೆ: ಸಮಜೋ ಭಾಷಾ ವೈಜ್ಞಾನಿಕ ಚಿಂತನೆಗಳು, ಎರಡನೇ ಗೋಷ್ಠಿಯಲ್ಲಿ ಶ್ರೀಕೃಷ್ಣದೇವರಾಯ ವಿವಿ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ ರಾಬರ್ಟ ಜೋಶ್- ಜಾಗತಿಕ ಮತ್ತು ಗ್ಲೊಕಲ್ ರಾಜಕರಣದ ನೆಲೆಗಳು, ಡಾ ರೇಖಾ ದತ್ತ, ದಕ್ಷಿಣ ಭಾರತದ ಸ್ತ್ರಿವಾದಿ ಬರಹಗಳು ವಿಷಯದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಪಾಂಗಾಳ ಬಾಬು ಕೊರಗ, ಆಳ್ವಾಸ್ ಕಾಲೇಜಿನ ಪ್ರಾಚರ್ಯ ಡಾ ಕುರಿಯನ್ ಇದ್ದರು. ಆಳ್ವಾಸ್ ಕನ್ನಡ ವಿಭಾಗದ ಮುಖ್ಯಸ್ಥ ಡಾ ಯೋಗೀಶ್ ಕೈರೋಡಿ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು.
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ವಾಯುದಾಳಿಗಳನ್ನು ಮತ್ತು ಅಲ್ಲಿಯ ಆಡಳಿತವನ್ನು ಬದಲಿಸಲು ಒತ್ತಡ ಹೇರಲು ಕ್ರೂರ ಪಯತ್ನಗಳನ್ನು ಖಂಡಿಸುವಲ್ಲಿ ಮೋದಿ ಸರಕಾರದ ವೈಫಲ್ಯವು ನೈತಿಕ ಹೇಡಿತನ ಮತ್ತು ಭಾರತದ ನಾಗರಿಕತೆಯ ಮೌಲ್ಯಗಳಿಗೆ ರಾಜಕೀಯ ದ್ರೋಹವನ್ನು ಪ್ರತಿಬಿಂಬಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ತಮ್ಮ ಸ್ನೇಹದ ಕುರಿತು ಕೊಚ್ಚಿಕೊಳ್ಳುತ್ತಾರೆ, ಆದರೆ ಅವರು ಅದನ್ನು ಕದನವನ್ನು ನಿಲ್ಲಿಸಲು ಬಳಸಲಿಲ್ಲ ಎಂದೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಶನಿವಾರ ಎಕ್ಸ್ ಪೋಸ್ಟ್ನಲ್ಲಿ ಕುಟುಕಿದ್ದಾರೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ವಾಯುದಾಳಿಗಳು ಆರಂಭಗೊಂಡು ಸರಿಯಾಗಿ 21 ದಿನಗಳು ಕಳೆದಿವೆ. ಪ್ರಧಾನಿಯವರೂ ಭಾರೀ ಪ್ರಚಾರದ ಇಸ್ರೇಲ್ ಭೇಟಿಯಿಂದ ಮರಳಿ 23 ದಿನಗಳು ಕಳೆದಿವೆ ಎಂದು ಹೇಳಿರುವ ರಮೇಶ್, ಭಾರತ ಸೇರಿದಂತೆ ಎಲ್ಲೆಡೆ ತೀವ್ರ ಆರ್ಥಿಕ ಕುಸಿತಕ್ಕೆ ಕಾರಣವಾಗಿರುವ ಇರಾನ್ ಮೇಲಿನ ಭಾರೀ ವೈಮಾನಿಕ ದಾಳಿಗಳನ್ನು ಮೋದಿ ಸರಕಾರವು ಖಂಡಿಸಿಲ್ಲ, ಟೀಕಿಸಿಯೂ ಇಲ್ಲ. ಇರಾನಿನ ಉನ್ನತ ನಾಯಕರ ಉದ್ದೇಶಿತ ಹತ್ಯೆಗಳ ಕುರಿತು ಅದು ಮೌನವಾಗಿದೆ. ಇರಾನಿನಲ್ಲಿ ಅಂತರ್ಯುದ್ಧಕ್ಕೆ ಕಾರಣವಾಗಬಹುದಾದ ಆಡಳಿತ ಬದಲಾವಣೆ ಮತ್ತು ಸರಕಾರದ ಪತನಕ್ಕಾಗಿ ಒತ್ತಡ ಹೇರಲು ಕ್ರೂರ ಪ್ರಯತ್ನಗಳ ಬಗ್ಗೆಯೂ ಅದು ಬಾಯಿಬಿಟ್ಟಿಲ್ಲ ಎಂದಿದ್ದಾರೆ. ಇರಾನ್ ಮೇಲೆ ಬಾಂಬ್ ದಾಳಿಗಳು ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿಯ ಇಂಧನ ಮತ್ತು ಇತರ ಮೂಲಸೌಕರ್ಯಗಳ ಮೇಲೆ ಇರಾನಿನ ದಾಳಿಗಳನ್ನು ತಕ್ಷಣವೇ ನಿಲ್ಲಿಸಲು ಮೋದಿ ಸರಕಾರವು ಗಂಭೀರ ರಾಜತಾಂತ್ರಿಕ ಪ್ರಯತ್ನಗಳನ್ನು ನಡೆಸಿದೆಯೇ? ಉತ್ತರ ಇಲ್ಲ ಎಂದು ರಮೇಶ ಹೇಳಿದ್ದಾರೆ. ಇವು ಮೋದಿ ಸರಕಾರದ ನೈತಿಕ ಹೇಡಿತನ ಮತ್ತು ಭಾರತದ ನಾಗರಿಕತೆಯ ಮೌಲ್ಯಗಳಿಗೆ ರಾಜಕೀಯ ದ್ರೋಹವನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಆರೋಪಿಸಿದ್ದಾರೆ.
ಡಿವಿಜಿ ಆದರ್ಶದಲ್ಲಿ ಬೆಳೆದ ಪತ್ರಕರ್ತರ ಸಂಘ: ಶಿವಾನಂದ ತಗಡೂರು
ಮಂಗಳೂರು: ಖ್ಯಾತ ಕವಿ, ಪತ್ರಕರ್ತ ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಮಂಕುತಿಮ್ಮನ ಕಗ್ಗದಲ್ಲಿ ಎಲ್ಲ ಧರ್ಮಗಳ ಸಾರ ಅಡಗಿದೆ. ಪತ್ರಕರ್ತರಾಗಿದ್ದ ಡಿವಿಜಿ ಅವರು 1932ರಲ್ಲಿ ಸ್ಥಾಪಿಸಿದ ಮೈಸೂರು ರಾಜ್ಯ ಪತ್ರಕರ್ತರ ಸಂಘ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಂಸ್ಥಾಪಕ ಡಿವಿಜಿ ಅವರ ಆದರ್ಶ ಹಾಗೂ ಚಿಂತನೆಗಳಲ್ಲಿ ಬೆಳೆದು ಬಂದಿರುವ ಪತ್ರಕರ್ತರ ಸಂಘ ಹಂತಹಂತವಾಗಿ ಬೆಳದು ಈಗ 10 ಸಾವಿರ ಸದಸ್ಯರನ್ನು ಒಳಗೊಂಡಿರುವ ದೇಶದ ಬೃಹತ್ ಸಂಘಟನೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಘಟಕಗಳ ಆಶ್ರಯಯದಲ್ಲಿ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುರೇಶ್. ಡಿ.ಪಳ್ಳಿ, ಸಿದ್ದಿಕ್ ನೀರಾಜೆ, ಸಮಿತಿ ಸದಸ್ಯರಾದ ದಿವಾಕರ ಪದ್ಮುಂಜ, ಭುವನೇಶ್ವರ.ಜಿ. ಹರೀಶ್ ಆದೂರು, ತಾಲೂಕು ಘಟಕಗಳ ಅಧ್ಯಕ್ಷರಾದ ತುಕಾರಾಮ, ನವೀನ್ ಸಾಲ್ಯಾನ್, ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್. ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರಾಜೇಶ್. ಕೆ.ಪೂಜಾರಿ ವಂದಿಸಿದರು.
ಕ್ಯಾನ್ಸರ್ ತಪಾಸಣೆಗೆ ಜನರ ಹಿಂಜರಿಕೆ: ಡಾ.ಸುರೇಶ್ ರಾವ್
ಎಂಐಒ ತಂಡದ ʼಸಮೀಕ್ಷೆ-ನಿರೀಕ್ಷೆʼ ವರದಿ ಬಿಡುಗಡೆ
ರಾಜ್ಯದಲ್ಲಿ ಮಹಿಳೆಯರಿಗಿದ್ಯಾ ಸುರಕ್ಷತೆ: 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಪ್ರಕರಣ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 2072 ಅತ್ಯಾಚಾರ ಹಾಗೂ 18,834 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಕೆಲವೊಂದು ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯ ಇದೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಸರ ಕಳ್ಳತನ, ಮಾದಕ ವಸ್ತುಗಳು ಮಾರಾಟ, ಸೇವನೆ ಪ್ರಕರಣಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿ ವರದಿಯಾಗಿದೆ. ಈ ಕುರಿತಾಗಿ ಗೃಹ ಇಲಾಖೆ ನೀಡಿರುವ ಒಂದಿಷ್ಟು ಮಾಹಿತಿಗಳು ಇಲ್ಲಿವೆ ಓದಿ.
ಬೇಸಿಗೆ ಅವಧಿಯಲ್ಲಿ ಜಾನುವಾರು ಮತ್ತು ಕೋಳಿಗಳ ನಿರ್ವಹಣೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
ಮಂಗಳೂರು, ಮಾ.21: ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ವಾತಾವರಣದ ಉಷ್ಣಾಂಶ ಏರಿಕೆ ಯಾಗಿರುವುದು ಕಂಡು ಬಂದಿದೆ. ಉಷ್ಣಾಂಶದ ಏರಿಕೆಯೊಂದಿಗೆ ವಾತಾವರಣದ ಆದ್ರತೆಯು ಎಲ್ಲಾ ಪ್ರಾಣಿ ಪಕ್ಷಿ ಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸ ಕೋಳಿಗಳ ಮೇಲೆ ತುಂಬಾ ಒತ್ತಡವ ನ್ನುಂಟು ಮಾಡುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಬೇಸಿಗೆ ಅವಧಿಯಲ್ಲಿ ದನಗಳಲ್ಲಿ ಉಷ್ಣಾಂಶದ ಒತ್ತಡದಿಂದ ಆಹಾರ ತಿನ್ನುವ ಪ್ರಮಾಣ ಕಡಿಮೆಯಾಗಿ ಹಾಲಿನ ಇಳುವರಿ ಕಡಿಮೆಯಾಗುತ್ತದೆ ಅಥವಾ ಇನ್ನೂ ಹೆಚ್ಚಿನ ಬಿಸಿಲಿನ ತಾಪಮಾನದಿಂದಾಗಿ ಸಾಯುವ ಸಾಧ್ಯತೆ ಇರು ತ್ತದೆ. ಮಾಂಸ ಕೋಳಿಗಳು ಆಹಾರ ತಿನ್ನುವ ಪ್ರಮಾಣ ಗಣನೀಯ ಕಡಿಮೆಯಾಗಿ ಮಾಂಸ ಕೋಳಿಗಳ ತೂಕ ಬಾರದೆ ಇರಬಹುದು ಮತ್ತು ಉಷ್ಣಾಂಶದ ಪ್ರಮಾಣ 360ಇಗಿಂತ ಹೆಚ್ಚಾದಾಗ ಕೋಳಿಗಳು ಸಾಯಲು ಪ್ರಾರಂಭಿ ಸುತ್ತವೆ. ಉಷ್ಣಾಂಶದ ಒತ್ತಡದಲ್ಲಿ ಬಳಲಿದ ಪ್ರಾಣಿ ಪಕ್ಷಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಸಾಂಕ್ರಾಮಿಕ ರೋಗಗಳು ಕಂಡುಬರಬಹುದು. ಹಾಗಾಗಿ ರೈತರು ಮತ್ತು ಕೋಳಿ ಸಾಕಾಣಿಕೆದಾರರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ಆಗಬಹುದಾದ ಆರ್ಥಿಕ ನಷ್ಟ್ಟವನ್ನು ತಪ್ಪಿಸಬಹುದಾಗಿದೆ. *ಜಾನುವಾರುಗಳ ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು: ಬೇಸಿಗೆಯಲ್ಲಿ ಉಷ್ಣ್ಣತೆ ಹೆಚ್ಚಾಗುವುದರಿಂದ ದನ ಗಳನ್ನು ಬೆಳಗ್ಗೆ ಅಥವಾ ಸಂಜೆ ಮೇಯಲು ಹೊರಗಡೆ ಬಿಡಬೇಕು. ಯಾವುದೇ ಕಾರಣಕ್ಕೂ ಪೂ.11ರಿಂದ 4 ಗಂಟೆ ಅವಧಿಯಲ್ಲಿ ಜಾನುವಾರುಗಳನ್ನು ಹೊರಗಡೆ ಬಿಡಬಾರದು. ದಿನದ 24 ಗಂಟೆಯೂ ತಂಪಾದ ನೀರು ನೀಡಬೇಕು. ನೀರಿನ ಕೊರತೆ ಕಂಡುಬಂದರೆ ಸ್ಥಳೀಯ ಸಂಸ್ಥೆಗಳ ಮೂಲಕ ಪಡೆದುಕೊಳ್ಳಬೇಕು. ಜಾನುವಾರುಗಳನ್ನು ನೆರಳಿ ನಲ್ಲಿ ಮಾತ್ರ ಹೊರಗಡೆ ಕಟ್ಟಬೇಕು. ಜಾನುವಾರು ಶೆಡ್ ಮೇಲೆ ತೆಂಗಿನ ಅಥವಾ ಅಡಿಕೆ ಗರಿ ಹಾಕಿ ಸ್ಪಿಂಕ್ಲರ್ನಲ್ಲಿ ನೀರು ಚಿಮ್ಮಿಸಬಹುದು ಅಥವಾ ಬಿಳಿ ಬಣ್ಣದ ಪೇಂಟ್ ಹಾಕಬಹುದು. ಶೆಡ್ ಒಳಗಡೆ ಫ್ಯಾನ್ಗಳನ್ನು ಅಳವಡಿಸಿದ್ದಲ್ಲಿ ಉಷ್ಣತೆ ಪ್ರಮಾಣ ತಗ್ಗಿಸಬಹುದಾಗಿದೆ. ಒದ್ದೆಯಾದ ಗೋಣಿ ಚೀಲಗಳನ್ನು ಶೆಡ್ ಸುತ್ತಲೂ ಕಟ್ಟಬಹುದು. ಪ್ರತಿ ಗಂಟೆಗೊಮ್ಮೆ ಜಾನುವಾರುಗಳ ಮೈ ಮೇಲೆ 1-2 ನಿಮಿಷ ನೀರು ಚಿಮುಕಿಸುತ್ತಿರಬೇಕು. ಜಾನುವಾರುಗಳಿಗೆ ಹೆಚ್ಚಿನ ಆಹಾರವನ್ನು ಬೆಳಗ್ಗೆ ಬೇಗನೆ ಮತ್ತು ರಾತ್ರಿ ಹೊತ್ತಿನಲ್ಲಿ ತಿನ್ನಿಸುವುದು ಉತ್ತಮ. ಜಾನುವಾರುಗಳಿಗೆ ಅವುಗಳ ಹಾಲಿನ ಇಳುವರಿಗೆ ಅನುಗುಣವಾಗಿ 20-100 ಗ್ರಾಂ ನಷ್ಟು ಲವಣ ಮಿಶ್ರಣವನ್ನು ಪ್ರತಿ ದಿನ ನೀಡಬೇಕು. ಜಾನುವಾರುಗಳಿಗೆ ಪ್ರಜ್ಞೆ ತಪ್ಪುವುದು, ತುಂಬಾ ಹಾಲಿನ ಇಳುವರಿ ಕಡಿತವಾಗುವುದು ಕಂಡುಬಂದಲ್ಲಿ ತಕ್ಷಣ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಭೇಟಿ ಮಾಡಬೇಕು. *ಮಾಂಸದ ಕೋಳಿಗಳ ಸಾಕಾಣಿಕೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು: ಕೋಳಿಗಳಿಗೆ ದಿನದ 24 ಗಂಟೆಗಳ ಕಾಲ ತಂಪಾದ ಮತ್ತು ಶುಚಿಯಾದ ನೀರನ್ನು ಒದಗಿಸಬೇಕು. ಒಂದು ಗಂಟೆ ನೀರು ಇಲ್ಲದಿದ್ದರೆ ಕೋಳಿಗಳು ಸಾವನ್ನಪ್ಪ ಬಹುದು. ಚೆನ್ನಾಗಿ ಗಾಳಿಯಾಡಲು ಅನುಕೂಲವಾಗುವಂತೆ ಎಲ್ಲಾ ತಡೆಗಳನ್ನು ತೆಗೆಯಬೇಕು. ಕೋಳಿಗೂಡಿನ ಮೇಲ್ಭಾಗಕ್ಕೆ ಸುಣ್ಣ ಬಳಿಯಬೇಕು ಆಥವಾ ಹುಲ್ಲು ಅಡಿಕೆ ಗರಿ, ತೆಂಗಿನ ಗರಿಗಳಿಂದ ಹೊದಿಸಬೇಕು. ಅನುಕೂಲ ವಿದ್ದರೆ ಕೋಳಿಗೂಡಿನ ಮೇಲೆ ಸ್ಪಿಂಕ್ಲರ್ನಲ್ಲಿ ನೀರು ಸಿಂಪಡಿಸಬೇಕು. ಕೋಳಿ ಮನೆಯ ಒಳಗೆ ಫ್ಯಾನ್ ಅಥವಾ ಫಾಗಸ್ಗಳನ್ನು ಅಳವಡಿಸಬೇಕು. ವಿಟಮಿನ್ ಸಿ ಮತ್ತು ಇತರೆ ಇಲೆಕ್ಟ್ರೋಲೈಟ್ಗಳನ್ನು ಉಪಯೋಗಿಸುವುದರಿಂದ ಕೋಳಿಗಳ ಮೇಲೆ ಆಗುವ ಬಿಸಿಲಿನ ಒತ್ತಡವನ್ನು ಕಡಿಮೆ ಮಾಡಬಹುದು ಅಥವಾ ಅಡುಗೆ ಸೋಡ 1 ಗ್ರಾಂನ್ನು 5 ಲೀಟರ್ ನೀರಿಗೆ ಬೆರೆಸಿ ಕೋಳಿಗಳಿಗೆ ಕುಡಿಯಲು ನೀಡಬೇಕು. ಕೋಳಿಗೂಡಿನ ನೀರಿನ ಟ್ಯಾಂಕಿನ ಹೊರಮೈಗೆ ಬಿಳಿಬಣ್ಣ ಬಳಿಯಬೇಕು ಅಥವಾ ಗೋಣಿಯನ್ನು ಸುತ್ತಲೂ ಕಟ್ಟಿ ದಿನಕ್ಕೆರಡು ಬಾರಿ ನೀರಿನಿಂದ ಒದ್ದೆ ಮಾಡಬೇಕು ಅಥವಾ ಚಪ್ಪರ ಹಾಕಬೇಕು. ಬೇಸಿಗೆ ಅವಧಿಯಲ್ಲಿ ನೀರಿನಲ್ಲಿ ಹಾನಿಕಾರಕ ಸೂಕ್ಷ್ಮ ಜೀವಿಗಳು ಹೆಚ್ಚಿರುವುದರಿಂದ ಸೋಂಕು ನಿವಾರಕಗಳನ್ನು ಉಪಯೋಗಿಸಬೇಕು. ಅತೀ ಉಷ್ಣ ಹಾಗೂ ಮೋಡ ಕವಿದ ವಾತಾವರಣ ಇದ್ದಾಗ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆ ತನಕ ಕೋಳಿಗಳ ಮೇಲೆ ನಿಗಾ ವಹಿಸಬೇಕು. ಯಾವುದೇ ಕಾರಣಕ್ಕೂ ಕೋಳಿ ಮನೆಗಳ ಒಳಗೆ ಬಿಸಿಲು ಬೀಳದಂತೆ ಎಚ್ಚರವಸಬೇಕು. ಬೇಸಿಗೆಯಲ್ಲಿ ಕೋಳಿಗಳು 20 ದಿನದ ನಂತರ, ಆ ದಿನಕ್ಕೆ ನಿಗದಿಪಡಿಸಿದ ಕೋಳಿ ಆಹಾರ ತಿನ್ನುವ ಸಾಧ್ಯತೆ ಕಡಿಮೆ. ಹಾಗಾಗಿ ರೈತರು ದಿನದ ತಂಪಾದ ಸಮಯ ಅಂದರೆ ರಾತ್ರಿ 12 ಗಂಟೆ ತನಕ ಅಥವಾ ಬೆಳಗ್ಗೆ 4 ರಿಂದ 8 ಗಂಟೆ ಅವಧಿಯಲ್ಲಿ ಕೋಳಿಗಳಿಗೆ ಅಹಾರ ಒದಗಿಸಬೇಕು. ಕೋಳಿ ಮನೆಗಳ ಸುತ್ತಲಿನ ಪ್ರದೇಶವನ್ನು ಶುಚಿಯಾಗಿಟ್ಟುಕೊಳ್ಳುವುದು ಹಾಗೂ ನಿಯಮಿತವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಮಾನವೀಯತೆ ದೃಷ್ಟಿಯಿಂದ ಇತರೆ ಪ್ರಾಣಿ ಪಕ್ಷಿಗಳಿಗೆ ಕೂಡ ತಮ್ಮ ಮನೆ ಅಥವಾ ತೋಟದ ಆಸುಪಾಸು ಸ್ವಚ್ಛ ನೀರು ಸಿಗುವಂತೆ ವ್ಯವಸ್ಥೆ ಮಾಡಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೈಗಾರಿಕಾ ಹೈಡ್ರೋಜನ್ ಉತ್ಪಾದನಾ ಸ್ಕಿಡ್ ಗಳ ಉದ್ಘಾಟನೆ
ಮಂಗಳೂರು: ಮಂಗಳೂರಿನಲ್ಲಿ ವಿಶ್ವ ದರ್ಜೆಯ ಹೈಡ್ರೋಜನ್ ಉತ್ಪಾದನಾ ಘಟಕ ಕಾರ್ಯನಿರ್ವಹಿಸುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ. ಹೈಡ್ಜೆನ್ ಸಂಸ್ಥೆ ನೀರಿನಿಂದ ಹೈಡ್ರೋಜನ್ ತಯಾರಿಸುವ ಮೂಲಕ ಗಮನ ಸೆಳೆದಿದ್ದು, ಈ ಸಾಧನೆ ಮತ್ತಷ್ಟು ಜನರನ್ನು ಊರಿಗೆ ಕರೆ ತಂದು ಸಂಶೋಧನೆಯೊಂದಿಗೆ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ವಿವಿಧ ಕಂಪೆನಿಗಳಿಗೆ ರವಾನಿಸಲು ಮಂಗಳೂರಿನ ಹೈಡ್ಜೆನ್ ಸಂಸ್ಥೆ ಸಹ್ಯಾದ್ರಿ ಕಾಲೇಜಿನಲ್ಲಿ ಅಭಿವೃದ್ಧಿಪಡಿಸಲಾದ 8 ಮಾಡ್ಯುಲರ್ ಕೈಗಾರಿಕಾ ಹೈಡ್ರೋಜನ್ ಉತ್ಪಾದನಾ ಸ್ಕಿಡ್ ಗಳನ್ನು ಕಾಲೇಜಿನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಹೈಡ್ಜೆನ್ ಸಂಸ್ಥೆ ನಮ್ಮದೇ ಊರಿನವರಿಂದ ನಿರ್ಮಾಣವಾಗಿದ್ದು, ನಮ್ಮದೇ ಮಣ್ಣಿನ ನೀರಿನಿಂದ ಹೈಡ್ರೋಜನ್ ತಯಾರಿಸಿ ವಿಶ್ವವೇ ಒಪ್ಪುವಂತಹ ವಸ್ತುವನ್ನು ಮಂಗಳೂರಿನಲ್ಲಿ ತಯಾರಿಸಿ, ಮಾರುಕಟ್ಟೆಯಲ್ಲಿ ತನ್ನ ಸ್ಥಾನ ಭದ್ರಪಡಿಸುತ್ತಿದೆ. ಸಂಸ್ಥೆ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜೀ ಮಾಡಬಾರದು. ಜಪಾನ್ ದೇಶ ಮುಂದು ವರೆಯಲು ಅಲ್ಲಿ ತಯಾರಾಗುವ ವಸ್ತುಗಳ ಗುಣಮಟ್ಟವೇ ಕಾರಣ. ನಮ್ಮ ಜನರೂ ಕೂಡ ಗುಣಮಟ್ಟಕ್ಕೆ ಆಧ್ಯತೆ ನೀಡುತ್ತಾರೆ. ಮಂಗಳೂರಿನಲ್ಲಿ ಹೊಟೇಲ್, ಆಸ್ಪತ್ರೆ ಸೇರಿದಂತೆ ವಿವಿಧ ಉದ್ಯಮಗಳು ಬೆಳೆಯಲು ಗುಣಮಟ್ಟದ ಸೇವೆಯೇ ಕಾರಣ. ಕಂಪೆನಿಗಳು ತಾವು ತಯಾರಿಸುವ ಉತ್ಪನ್ನಗಳ ಗುಣಮಟ್ಟದತ್ತ ಹೆಚ್ಚನ ಒತ್ತು ನೀಡಿದ್ದಲ್ಲಿ ಯಶಸ್ಸು ಸಾಧ್ಯ ಎಂದರು. ಹೈಡ್ಜೆನ್ ಸಂಸ್ಥೆಯ ಸಿಒಒ ಡಾ. ಮಾಣಿಪ್ಪಾಡ್ಡಿ ಕೃಷ್ಣ ಕುಮಾರ್ ಅವರು ಮಾತನಾಡಿ, ಮಂಗಳೂರಿನಲ್ಲಿ ಸ್ಥಳೀಯ ವಾಗಿ ತಯಾರಿಸಲಾದ ಮಾಡ್ಯುಲರ್ ಕೈಗಾರಿಕಾ ಹೈಡ್ರೋಜನ್ ಉತ್ಪಾದನಾ ಸ್ಕಿಡ್ಗಳು ಭಾರತದಲ್ಲಿ ಮೊದಲ ತಂತ್ರಜ್ಞಾನ ವೇದಿಕೆಯನ್ನು ಪ್ರತಿನಿಧಿಸುತ್ತವೆ. ಈ ಸಾಧನೆಯು ಪ್ರಧಾನ ಮಂತ್ರಿಯವರ ದೃಷ್ಟಿಕೋನಕ್ಕೆ ಹೊಂದಿಕೆ ಯಾಗುತ್ತದೆ ಮತ್ತು ಭಾರತದ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು ಬೆಂಬಲಿಸುತ್ತದೆ. ಮೇಕ್ ಇನ್ ಇಂಡಿಯಾ ಮತ್ತು ಲೋಕಲ್ ಫಾರ್ ಗ್ಲೋಬಲ್ ಕನಸನ್ನು ಸಾಕಾರಗೊಳಿಸುತ್ತದೆ ಎಂದರು. ಸಂಸ್ಥೆಯ ಸಿಟಿಒ ಡಾ. ಗೌತಮ್ ದಳಪತಿ ಮತ್ತು ಸಿಬಂದಿ ಇದ್ದರು. ನಿರ್ದೇಶಕರಾದ ರಮ್ಯಶ್ರೀ ದೊಡ್ಡಮಣಿ ಶ್ರೀವಾಸ್ತವ ಸ್ವಾಗತಿಸಿದರು.
ಮಾ.22: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಮಂಗಳೂರು: ನಗರದ ಬೆಂದೂರ್ ಸಂತ ಸೆಬಾಸ್ಟಿಯನ್ ಚರ್ಚ್ನ ಕ್ಯಾಥೋಲಿಕ್ ಆಕ್ಷನ್ ಲೀಗ್, ಆರೋಗ್ಯ ಆಯೋಗ, ಕುಟುಂಬ ಆಯೋಗ, ರಕ್ತದಾನಿಗಳ ಸಂಘ ಮಂಗಳೂರು ಮತ್ತು ಲಯನ್ಸ್ ಕ್ಲಬ್ ಬಿಜೈ ಇವುಗಳ ಸಂಯುಕ್ತ ಆಶ್ರಯದಲ್ಲಿ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಹಯೋಗದೊಂದಿಗೆ ಮಾ.22ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಂದೂರ್ ಶತಮಾನೋತ್ಸವ ಭವನದಲ್ಲಿ ಬೆಳಗ್ಗೆ 9ರಿಂದ ನಡೆಯುವ ಶಿಬಿರದಲ್ಲಿ 18 ವರ್ಷ ಪ್ರಾಯ ಮೇಲ್ಪಟ್ಟ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆಯಲ್ಲದೆ ಎಲುಬು ಮತ್ತು ಕೀಲು, ಕಿವಿ-ಮೂಗು-ಗಂಟಲು, ಚರ್ಮರೋಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಸಾಮಾನ್ಯ ಆರೋಗ್ಯ ತಪಾಸಣೆಗಳು ಲಭ್ಯವಿದೆ. ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದ್ದು, 18 ರಿಂದ 55 ವರ್ಷ ವಯಸ್ಸಿನ ಆರೋಗ್ಯವಂತ ನಾಗರಿಕರು ರಕ್ತದಾನ ಮಾಡಿ ಸಹಕರಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಪಿಜಿ ಸಿಇಟಿ-2026 ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೆ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ಪಿಜಿ ಸಿಇಟಿ-2026 ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾ.23ರಿಂದ ಎ.8ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕ ಪಾವತಿಗೆ ಎ.10 ಕೊನೆ ದಿನವಾಗಿದೆ. ರವಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಎಂಇ, ಎಂಟೆಕ್ ಪ್ರವೇಶ ಪರೀಕ್ಷೆಯನ್ನು ಸಿವಿಲ್ ಇಂಜಿನಿಯರಿಂಗ್, ಕಂಪ್ಯೂಟರ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿಷಯಗಳಿಗೆ ಮಾತ್ರ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಬಯೋ ಟೆಕ್ನೋಲಾಜಿ, ಕೆಮಿಕಲ್ ಇಂಜಿನಿಯರಿಂಗ್, ಎನ್ವಿರಾನ್ಮೆಂಟ್ ಇಂಜಿನಿಯರಿಂಗ್, ಪಾಲಿಮರ್ ಸೈನ್ಸ್ ಮತ್ತು ಟೆಕ್ಟ್ಟೈಲ್ ಟೆಕ್ನಾಲಾಜಿಗೆ ಪರೀಕ್ಷೆಯನ್ನು ನಡೆಸುವುದಿಲ್ಲ. ಈ ವಿಷಯಗಳಿಗೆ ಪ್ರವೇಶಾತಿಯನ್ನು ಆಯಾ ಪದವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೀಡಲಾಗುತ್ತದೆ. ಅಭ್ಯರ್ಥಿಗಳ ಮಾಹಿತಿಗಾಗಿ ಪರೀಕ್ಷೆ ನಡೆಸುವ ವಿಷಯಗಳ ಪಠ್ಯಕ್ರಮವನ್ನು ಪ್ರಾಧಿಕಾರದ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಾತಿಗೆ ಅಭ್ಯರ್ಥಿಗಳು ಕೌನ್ಸಿಲ್ ಆಫ್ ಆಕಿಟೆಕ್ಟರ್, ನವದೆಹಲಿ ರವರು ನಡೆಸುವ ಪಿಜಿಇಟಿಎ-2026 ರಲ್ಲಿ ಅರ್ಹತೆ ಪಡೆದಿರಬೇಕು. ಆದರೆ ಅಭ್ಯರ್ಥಿಗಳು ಕರ್ನಾಟಕದ ಪಿಜಿಸಿಇಟಿ-2026ಕ್ಕೆ ಆನ್ಲೈನ್ ಮೂಲಕ ನೊಂದಾಯಿಸಿ ಕೊಂಡು, ಆನ್ಲೈನ್ ಅರ್ಜಿ ಸಲ್ಲಿಸಿ, ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ಇಂಜಿನಿಯರಿಂಗ್ ಹಾಗು ಟೆಕ್ನಾಲಜಿ ವಿಭಾಗದಲ್ಲಿ ಗೇಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮಾತ್ರ ವಿಟಿಯು, ಬೆಳಗಾವಿ ಅಡಿಯಲ್ಲಿನ ವಿವಿಧ ಎಂ.ಟೆಕ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹರಾಗುತ್ತಾರೆ. ಗೇಟ್ ಪರೀಕ್ಷೆಯಲ್ಲಿ ಮಾನ್ಯತೆ ಅಂಕಗಳನ್ನು ಹೊಂದಿರುವವರು ಎಂಇ / ಎಂ.ಟೆಕ್ / ಎಂ. ಆರ್ಕ್ ಕೋರ್ಸ್ಗಳ ಪ್ರವೇಶಕ್ಕಾಗಿ, ಪಿಜಿಸಿಇಟಿ-2026ಕ್ಕೆ ಹಾಜರಾಗಬೇಕಾಗಿರುವುದಿಲ್ಲ. ಆದರೆ ಅಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಶುಲ್ಕವನ್ನು ಪಾವತಿಸಿ ಪ್ರವೇಶಕ್ಕೆ ಅರ್ಹರಾಗಬಹುದು ಎಂದು ಎಚ್.ಪ್ರಸನ್ನ ಹೇಳಿದ್ದಾರೆ. ಪಿಜಿಸಿಇಟಿ-2026 ಇ-ಮಾಹಿತಿ ಬುಲೆಟಿನ್ ನಲ್ಲಿ ನಿರ್ದಿಷ್ಟಪಡಿಸಿರುವ ಯಾವುದೇ ಅರ್ಹತಾ ಷರತ್ತುಗಳನ್ನು ಪೂರೈಸದ ಅಭ್ಯರ್ಥಿಗಳನ್ನು ಅನ್ಯರಾಜ್ಯದ ಅಭ್ಯರ್ಥಿಗಳು ಎಂದು ಪರಿಗಣಿಸಲಾಗುತ್ತದೆ. ಇಂತಹ ಅಭ್ಯರ್ಥಿಗಳು ಎಂಬಿಎ, ಎಂಸಿಎ ಕೋರ್ಸುಗಳಿಗೆ ಆಡಳಿತ ಮಂಡಳಿಯವರು ಸರಕಾರಕ್ಕೆ ಬಿಟ್ಟು ಕೊಡುವ ಸೀಟುಗಳಿಗೆ ಮಾತ್ರ ಪ್ರವೇಶ ಪಡೆಯಬಹುದು. ಎಸ್ಸಿ,ಎಸ್ಟಿ,ಒಬಿಸಿ ಅರ್ಹತಾ ಮಾನದಂಡಗಳು ಕರ್ನಾಟಕದ ಎಸ್ಸಿ,ಎಸ್ಟಿ,ಒಬಿಸಿ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ https://cetonline.karnataka.gov.in/kea/ ಗೆ ಸಂಪರ್ಕಿಸಬಹುದಾಗಿದೆ. ಪರೀಕ್ಷೆಯ ವೇಳಾಪಟ್ಟಿ: ಮೇ 23 ಮತ್ತು 24ಕ್ಕೆ ಪರೀಕ್ಷೆ: ಮೇ 23ರ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಎಂ.ಇ. ಮತ್ತು ಎಂ.ಟೆಕ್. ಪರೀಕ್ಷೆಗಳು, ಮೇ 24ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಎಂಸಿಎ ಪರೀಕ್ಷೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಎಂಬಿಎ ಪರೀಕ್ಷೆಯನ್ನು ನಡೆಸಲಾಗುತ್ತದೆ. 100 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳು ವಸ್ತುನಿಷ್ಟ ಬಹು ಆಯ್ಕೆ ಮಾದರಿಯಾಗಿರುತ್ತದೆ.
ಕಲಬುರಗಿ | ಮಹಿಳಾಪರ ಚಿಂತನೆಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ : ಸಂತೋಷಿರಾಣಿ
ಕಲಬುರಗಿ: ಮಹಿಳಾಪರ ಚಿಂತನೆಗಳಿಂದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಸಂತೋಷಿರಾಣಿ ಪಾಟೀಲ ತೆಲ್ಕೂರ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಸಾಪ ದಕ್ಷಿಣ ವಲಯದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ʼಮಹಿಳೆ ನಿನ್ನಿಂದಲೇ ಈ ಇಳೆʼ ಎಂಬ ಮಹಾಘೋಷವಾಕ್ಯದೊಂದಿಗೆ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಮುಖ ಮಹಿಳಾ ಸಾಧಕರಿಗೆ ಜಗದ ಕಣ್ಣು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಶಿಕ್ಷಣದ ಮೂಲಕ ಸಂಸ್ಕಾರ ನೀಡುವವಳು ಹೆಣ್ಣು. ಅವಳು ತಾಯಿಯಾಗಿ, ಮಗಳಾಗಿ ಹಾಗೂ ಸೊಸೆಯಾಗಿ ಸಮಾಜ ಜವಾಬ್ದಾರಿ ನಿರ್ವಹಿಸಿರುತ್ತಾಳೆ. ಸೊಸೆಯನ್ನು ಮಗಳಂತೆ ಹಾಗೂ ಅತ್ತೆಯನ್ನು ತಾಯಿಯಂತೆ ಕಾಣುವ ನೋಟ ಅಳವಡಿಸಿಕೊಳ್ಳಬೇಕು. ನಿಜವಾಗಿಯೂ ಮಹಿಳೆ ಜಗದ ಕಣ್ಣು ಇದ್ದಂತೆ. ಆದರೆ ಕಣ್ತೆರೆಸುವ ವ್ಯವಸ್ಥೆ ಬದಲಾಗಬೇಕಾಗಿದೆ ಎಂದರು. ಪ್ರಶಸ್ತಿ ಪ್ರದಾನ ಮಾಡಿದ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಪ್ರಮೀಳಾ ಪೆರ್ಲ, ಪ್ರತಿ ಕ್ಷೇತ್ರಗಳಲ್ಲಿ ಪ್ರಗತಿ ಹೊಂದುತ್ತಿರುವ ಮಹಿಳೆಯರಿಂದ ಸಮ ಸಮಾಜ ಕಟ್ಟಲು ಸಾಧ್ಯ. ಮಹಿಳೆಯು ಇಂದು ಹೊಸ ಸಂವೇದನಾಶೀಲ ಬದುಕನ್ನು ಕಟ್ಟಿಕೊಂಡು ಅದನ್ನು ಸಮರ್ಥವಾಗಿ ನಿಭಾಯಿಸಬಲ್ಲಳು. ಪುರುಷರಷ್ಟೇ ಸಮಾನಳಾಗಿ ಮೇಲುಗೈ ಸಾಧಿಸುತ್ತಿದ್ದಾಳೆ ಎಂದರು. ಶರಣ ಲೇಖಕಿ ಡಾ. ಶಿವಲೀಲಾ ಚಟ್ನಳ್ಳಿ, ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಅನ್ನಪೂರ್ಣ ಸಂಗೋಳಗಿ, ಸಾಮಾಜಿಕ ಚಿಂತಕಿ ಕು. ಮಾಲಾ ದಣ್ಣೂರ, ವಾಪಿ ಕನ್ನಡ ಸಂಘದ ಕಾರ್ಯದರ್ಶಿ ಪರಮೇಶ್ವರ ಬೆಳಮಗಿ, ಕಸಾಪ ದಕ್ಷಿಣ ವಲಯ ಅಧ್ಯಕ್ಷ ರವಿಕುಮಾರ ಶಹಾಪೂರಕರ್, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ, ಧರ್ಮರಾಜ ಜವಳಿ, ಮಲ್ಲಿನಾಥ ಸಂಗಶೆಟ್ಟಿ, ಮಂಜುನಾಥ ಕಂಬಾಳಿಮಠ, ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ಹಣಮಂತರಾವ ಪೆಂಚನಪಳ್ಳಿ, ವೆಂಕುಬಾಯಿ ರಜಪೂತ, ಮಾಣಿಕಮ್ಮಾ ಜಮಾದಾರ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಮಹಿಳೆಯು ತ್ಯಾಗ ಜೀವಿಯಾಗಿದ್ದು, ಯಾವ ಕುಟುಂಬದಲ್ಲಿ ಮಹಿಳೆ ಪೂಜಿಸುತ್ತಾಳವೋ ಅಂತಹ ಮನೆಯಲ್ಲಿ ದೇವರು ಸದಾ ನೆಲೆಸಿರುತ್ತಾನೆ. ಆದ್ದರಿಂದ ಮಹಿಳೆಯರನ್ನು ಗೌರವಿಸುವ ಕಾರ್ಯವಾಗಬೇಕು ಎಂದರು. ಮಹಿಳಾ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಮಹನೀಯರಾದ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಮಾಜಿ ಮೇಯರ್ ಮಲ್ಲಮ್ಮ ವಳಕೇರಿ, ಶೀಲಾವತಿ ಭೀಮರಾವ ಟಿ.ಟಿ., ಆದರ್ಶ ಶಿಕ್ಷಕಿ ಆರತಿ ಬಳಗಾರ, ಚಿಂಚೋಳಿ ಪುರಸಭೆ ಮಾಜಿ ಅಧ್ಯಕ್ಷೆ ಜಗದೇವಿ ಗಡಂತಿ, ಮನೋಶಾಸ್ತçಜ್ಞೆ ಡಾ. ರೇಣುಕಾ ಬಗಾಲೆ, ಜಿಪಂ ನ ಮಾಜಿ ಸದಸ್ಯೆ ಸುನಂದಾ ರವಿರಾಜ ಕೊರವಿ, ಸಾಂಸ್ಕೃತಿಕ ಸಂಘಟಕಿ ಶ್ವೇತಾ ಪಾಟೀಲ ಅವರನ್ನು ಜಗದ ಕಣ್ಣು ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕವಿ ಕಂಡ ಯುಗಾದಿ ವಿಶೇಷ ಕವಿಗೋಷ್ಠಿ : ಕವಿ ಕಂಡ ಯುಗಾಗಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಕಥೆಗಾರ ಸಿ.ಎಸ್.ಆನಂದ, ಕವಿಗಳು, ಸಾಹಿತಿಗಳು ಸುಮ್ಮನೆ ಕಾವ್ಯ ರಚಿಸದೆ ಸಾಮಾಜಿಕ ಜವಾಬ್ದಾರಿಯೊಂದಿಗೆ ಕಾಲದ ದನಿಯಾಗಬೇಕಾಗಿದೆ. ಕವಿತೆ ರಚಿಸುವುದು ಕೇವಲ ಕವಿಯ ಭಾವನೆಗಳ ಅಭಿವ್ಯಕ್ತಿಯಲ್ಲ. ಅದೊಂದು ಕ್ಲಿಷ್ಟಕರವಾದ ಸೃಜನಾತ್ಮಕ ಪ್ರಕ್ರಿಯೆ. ಕವಿ ಸಮಾಜದ ಒಂದು ಭಾಗವಾಗಿರುವುದರಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಸಂರಕ್ಷಿಸುವ ಹೊಣೆಗಾರಿಕೆಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಳ್ಳಬೇಕು ಎಂದರು. ಕವಿಗಳಾದ ಪ್ರಭು ನಿಷ್ಠಿ ನಿಡಗುಂದಾ, ಶಕುಂತಲಾ ಪಾಟೀಲ ಜಾವಳಿ, ಜಯಶ್ರೀ ಜಮಾದಾರ, ಅಶ್ವಿನಿ ಎಂ ಪಾಟೀಲ, ವಿದ್ಯಾಧರ ಕಾಂಬಳೆ, ಶರಣು ಅತನೂರ, ಭೀಮರಾಯ ಹೇಮನೂರ, ಜ್ಯೋತಿ ಪಾಟೀಲ, ಶ್ರೀದೇವಿ ಪೊಲೀಸ್ ಪಾಟಖೀಲ, ಕವಿತಾ ಪಿ ಮೋರಾ ಅವರು ವರ್ತಮಾನಕ್ಕೆ ಸ್ಪಂದಿಸುವ ಕವಿತೆಗಳು ವಾಚಿಸಿ ಪ್ರೇಕ್ಷಕರ ಗಮನ ಸೆಳೆದರು.
ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲು ಹೋಟೆಲ್ಗಳ ಸಂಘ ಆಗ್ರಹ
ಬೆಂಗಳೂರು : ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿನ ಸಮಸ್ಯೆಯಿಂದಾಗಿ ಹೋಟೆಲ್ ಉದ್ಯಮ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟು ಬಗೆಹರಿಸಿ ಕೂಡಲೇ ಅಗತ್ಯ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ದಕ್ಷಿಣ ಭಾರತ ಹೋಟೆಲ್ಗಳು, ರೆಸ್ಟೋರೆಂಟ್ಗಳ ಸಂಘ ಹಾಗೂ ರಾಜ್ಯ ಹೋಟೆಲುಗಳ ಸಂಘ ಮನವಿ ಮಾಡಿದೆ. ಈ ಕುರಿತು ದಕ್ಷಿಣ ಭಾರತ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳ ಸಂಘದ ಅಧ್ಯಕ್ಷ ಕೆ.ಶ್ಯಾಮರಾಜು ಹಾಗೂ ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಜಿ.ಕೆ.ಶೆಟ್ಟಿ ಇತ್ತೀಚಿಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಜಾಗತಿಕ ಸಂಘರ್ಷದಿಂದಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದೆ. ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿ ರೆಸ್ಟೋರೆಂಟ್ ಹಾಗೂ ಹೋಟೆಲ್ಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ದೇಶದ ಆರ್ಥಿಕತೆಯಲ್ಲಿ ಹೋಟೆಲ್ ಉದ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿಕೇಂದ್ರ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಉಂಟಾಗಿರುವ ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಬಿಕ್ಕಟ್ಟಿನ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ʼಯುದ್ಧದ ಪರಿಣಾಮ ದೇಶವ್ಯಾಪಿ ಅಡುಗೆ ಅನಿಲ ಪೂರೈಕೆಯಲ್ಲಿ ಬಿಕ್ಕಟ್ಟು ಎದುರಾಗಿದೆ. ಸದ್ಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ಹೋಟೆಲ್, ಪ್ರವಾಸೋದ್ಯಮ ಇತರೆ ಉದ್ದಿಮೆಗಳ ಸಮಸ್ಯೆಗಳನ್ನು ಆದ್ಯತೆಯಾಗಿ ಪರಿಗಣಿಸಲಾಗುವುದು. ಅವಶ್ಯಕತೆಗೆ ಅನುಗುಣವಾಗಿ ಮಾಸಿಕ ಶೇ.20 ರಷ್ಟು ವಾಣಿಜ್ಯ ಸಿಲಿಂಡರ್ ತುರ್ತು ಉದ್ದಿಮೆಗಳಿಗೆ ಪೂರೈಸಲಾಗುವುದು. ಹೋಟೆಲ್, ರೆಸ್ಟೋರೆಂಟ್ಗಳನ್ನು ಆದ್ಯತೆಯಾಗಿ ಪರಿಗಣಿಸಿ ಹೆಚ್ಚುವರಿ ಪೂರೈಕೆಗೆ ಕ್ರಮವಹಿಸಲಾಗುವುದು. ಉಂಟಾಗಿರುವ ಬಿಕ್ಕಟ್ಟನ್ನು ಬಗೆಹರಿಸಲು ಕೇಂದ್ರ ಸರಕಾರ ಬದ್ಧವಾಗಿದ್ದು ಸಮನ್ವಯದಿಂದ ಎದುರಿಸಲಿದೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆʼ ಎಂದು ಕೆ.ಶ್ಯಾಮರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ಮಾ.21: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುತ್ತಾರ್ ಸಮೀಪದ ನಿವಾಸಿ ಫರಾಝ್ ಯಾನೆ ಮುಹಮ್ಮದ್ ಫರಾಝ್ (32) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ, ಕಳವು ಸಹಿತ 4, ಕೊಣಾಜೆ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಕಳವು ಸಹಿತ 2, ಬಂದರ್ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ, ದರೋಡೆಗೆ ಸಹಿತ 2, ಬರ್ಕೆ ಠಾಣೆ ಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ಸಹಿತ 1, ಉರ್ವ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ 1 ಸಹಿತ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ವಿಚಾರಣೆಗೆ ಹಾಜರಾಗದೆ ಈತ ತಲೆಮರೆಸಿಕೊಂಡಿದ್ದ. ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಈತನ ವಿರುದ್ಧ 6 ವಾರಂಟ್ಗಳು ಮತ್ತು 1 ಪ್ರೊಕ್ಲಮೇಶನ್ ಜಾರಿಯಲ್ಲಿದೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿ ಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿತ್ತು.
ಇರಾನ್ ನಿಷ್ಠಾವಂತ ಸ್ನೇಹಿತ; ವಿಶ್ವಾಸಾರ್ಹ ಪಾಲುದಾರ: ಬೆಂಬಲ ದೃಢೀಕರಿಸಿದ ರಷ್ಯ
ಮಾಸ್ಕೊ: ಅಮೆರಿಕದೊಂದಿಗಿನ ಯುದ್ಧದಲ್ಲಿ ಇರಾನ್ಗೆ ರಷ್ಯದ ಬೆಂಬಲವನ್ನು ರಷ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶನಿವಾರ ಸಾರ್ವಜನಿಕವಾಗಿ ದೃಢಪಡಿಸಿದ್ದಾರೆ. ಇರಾನ್ನ ಹೊಸ ವರ್ಷ ನೌರುಜ್ನ ಸಂದರ್ಭ ಸರ್ವೋಚ್ಛ ನಾಯಕ ಮೊಜ್ತಬಾ ಖಾಮಿನೈ ಹಾಗೂ ಅಧ್ಯಕ್ಷ ಮಸೂದ್ ಪೆಝೆಷ್ಕಿಯಾನ್ಗೆ ಶುಭಾಶಯ ಸಲ್ಲಿಸಿರುವ ಪುಟಿನ್ `ಕಠಿಣ ಪರೀಕ್ಷೆಯನ್ನು' ಸಹಿಸಿಕೊಳ್ಳುವಲ್ಲಿ ಇರಾನ್ನ ಜನತೆಗೆ ಶಕ್ತಿಯನ್ನು ಬಯಸುವುದಾಗಿ ಹೇಳಿದ್ದಾರೆ. ಈ ಕಠಿಣ ಸಮಯದಲ್ಲಿ ರಷ್ಯವು ಇರಾನ್ನ ನಿಷ್ಠಾವಂತ ಸ್ನೇಹಿತ ಮತ್ತು ಪ್ರಾಮಾಣಿಕ ಪಾಲುದಾರನಾಗಿ ಉಳಿಯುತ್ತದೆ ಎಂದು ಪುಟಿನ್ರನ್ನು ಉಲ್ಲೇಖಿಸಿ ರಷ್ಯದ ಮಾಧ್ಯಮಗಳು ವರದಿ ಮಾಡಿವೆ. ಇರಾನ್ಗೆ ರಷ್ಯದ ಪ್ರಾಯೋಗಿಕ ಬೆಂಬಲದ ವ್ಯಾಪ್ತಿಯ ಬಗ್ಗೆ ಚರ್ಚೆಯು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಪುಟಿನ್ ಅವರ ಹೇಳಿಕೆ ಹೊರಬಿದ್ದಿದೆ. ಇರಾನ್ನ ಮೇಲಿನ ಇತ್ತೀಚಿನ ಇಸ್ರೇಲ್ ಮತ್ತು ಅಮೆರಿಕದ ದಾಳಿಯು ವಿಶಾಲ ಮಧ್ಯಪ್ರಾಚ್ಯವನ್ನು ಪ್ರಪಾತದ ಅಂಚಿಗೆ ತಳ್ಳುತ್ತಿದೆ ಮತ್ತು ವ್ಯಾಪಕ ಜಾಗತಿಕ ಇಂಧನ ಬಿಕ್ಕಟ್ಟಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ರಷ್ಯ ಆರೋಪಿಸಿದೆ. ಈ ಮಧ್ಯೆ, ಅಮೆರಿಕವು ರಷ್ಯದ ಕುರಿತ ಗುಪ್ತಚರ ಮಾಹಿತಿಯನ್ನು ಉಕ್ರೇನ್ಗೆ ಒದಗಿಸುವುದನ್ನು ನಿಲ್ಲಿಸಿದರೆ, ಅಮೆರಿಕ ಕುರಿತ ಗುಪ್ತಚರ ಮಾಹಿತಿಯನ್ನು ಇರಾನ್ಗೆ ಒದಗಿಸುವುದನ್ನು ನಿಲ್ಲಿಸುವುದಾಗಿ ರಷ್ಯ ಪ್ರಸ್ತಾಪಿಸಿದೆ ಎಂದು `ಪೊಲಿಟಿಕೊ' ವರದಿ ಮಾಡಿದೆ.
ಸಾರಿಗೆ ಬಸ್ ದರ ಏರಿಕೆ ಮಾಡುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ. ಬಸ್ ಪ್ರಯಾಣ ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣವಾಗಿದೆ ಎಂದರು. ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಸ್ಥಗಿತಗೊಂಡರೆ ತೈಲೋತ್ಪನ್ನಗಳ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದಾಗಲೂ ಕೇಂದ್ರ ಸರಕಾರ ಜನರಿಗೆ ಯಾವುದೇ ನೆರವು ನೀಡಲಿಲ್ಲ ಎಂದು ಅವರು ಟೀಕಿಸಿದರು.
ಮತದಾರರು ಎಸ್ಐಆರ್ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯ: ವಿನಯ್ ಕುಮಾರ್ ಸೊರಕೆ
ಉಡುಪಿ, ಮಾ.21: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಶೀಘ್ರ ಬರುವುದರಿಂದ ಕೇಂದ್ರ ಸರಕಾರ ತಂದ ಎಸ್ಐಆರ್ ಕಾಯ್ದೆ ಬಗ್ಗೆ ಜಾಗೃತರಾಗಿರಬೇಕು. ಪ್ರಜಾಪ್ರಭುತ್ವ ಉಳಿಯ ಬೇಕಾದರೆ ಪ್ರತಿಯೊಬ್ಬ ನಾಗರಿಕನು ತನ್ನ ಹೆಸರು ಮತದಾರರ ಪಟ್ಟಿಯಲ್ಲಿದೆ ಎಂದು ಪರಿಶೀಲಿಸಿಕೊಳ್ಳುವ ಕಾಲ ಬಂದಿದೆ. ಈಗ ದಾಖಲೆ ಪರಿಶೀಲನೆ ಎಂಬ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರನ್ನು ಅಳಿಸುವ ಕೆಲಸ ನಡೆಯುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡುತಿದ್ದರು. ಸರಕಾರದ ಅನುದಾನದಿಂದ ನಡೆಯುವ ಯೋಜನೆಗಳನ್ನು ಬಿಜೆಪಿ ಮುಖಂಡರು ತಮ್ಮದೇ ನೇತೃತ್ವದ ನಡೆಯುವ ಕಾರ್ಯಕ್ರಮ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಈ ಕುರಿತು ಜನತೆ ಎಚ್ಚರವಾಗಿರಬೇಕು ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುರ್ಮಾ ಕೊಡವೂರು ಮಾತನಾಡುತ್ತಾ ನೊಂದಾಯಿತರಾದವರಿಗೆ ತಿಳುವಳಿಕೆ ಮೂಡಿಸಲು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದ್ದು ಕಾಯಿದೆಯನ್ನು ಸಂಪೂರ್ಣವಾಗಿ ಅರಿತುಕೊಂಡು ನಮ್ಮ ಮತದಾರರ ಹಕ್ಕನ್ನು ಉಳಿಸುವಂತೆ ಮಾಡಬೇಕು ಎಂದರು. ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ ಕೆಂದ್ರ ಸರಕಾರವು ಮತದಾನದ ಹಕ್ಕನ್ನು ಕಸಿಯುವ ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಇದೆಯೇ ಎಂಬುವುದನ್ನು ಪರಿಶೀಲಿಸುವುದು ಅಗತ್ಯ ಎಂದರು. ಸಭೆಯಲ್ಲಿ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಮಲ್ಯಾಡಿ ಶಿವರಾಂ ಶೆಟ್ಟಿ, ರಾಜು ಪೂಜಾರಿ, ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ನೀರೆ ಕೃಷ್ಣಶೆಟ್ಟಿ, ಹಿರಿಯಣ್ಣ, ನವೀನ್ಚಂದ್ರ ಶೆಟ್ಟಿ, ಹರೀಶ್ ಕಿಣಿ, ದೇವಕಿ ಸಣ್ಣಯ್ಯ, ಭುಜಂಗ ಶೆಟ್ಟಿ, ಗೋಪಿನಾಥ್ ಭಟ್, ಹರಿಪ್ರಸಾದ್ ಶೆಟ್ಟಿ, ಅರವಿಂದ್ ಪೂಜಾರಿ, ವೈ.ಸುಕುಮಾರ್, ಹರಿಪ್ರಸಾದ್ ರೈ, ಮಹಾಬಲ ಕುಂದರ್, ಶಬೀರ್ ಅಹ್ಮದ್, ಹರೀಶ್ ಶೆಟ್ಟಿ ಪಾಂಗಳ, ಜಯರಾಮ್ ನಾಯ್ಕ, ಕೀರ್ತಿ ಶೆಟ್ಟಿ ಅಂಬಲಪಾಡಿ, ಯತೀಶ್ ಕರ್ಕೆರ, ಡಾ.ಸುನಿತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ರೇವತಿ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಶೇಕ್ ವಹೀದ್ ಮೊದಲಾದವರು ಉಪಸ್ಥಿತರಿದ್ದರು. ಇತ್ತಿಚೆಗೆ ಅಗಲಿದ ಮುಖಂಡರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ನುಡಿನಮನ ಸಲ್ಲಿಸಿದರು. ಉಪಾಧ್ಯಕ್ಷ ಪ್ರಖ್ಯಾತ ಶೆಟ್ಟಿ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ವಂದಿಸಿದರು.
ಇರಾನ್ನ ನತಾಂಝ್ ಪರಮಾಣು ಸ್ಥಾವರದ ಮೇಲೆ ದಾಳಿ; ವಿಕಿರಣ ಸೋರಿಕೆಯಾಗಿಲ್ಲ ಎಂದ ಇರಾನ್
ಟೆಹ್ರಾನ್: ಇರಾನ್ನ ನತಾಂಝ್ ಪರಮಾಣು ಸಂವರ್ಧನೆ ಸೌಲಭ್ಯದ ಮೇಲೆ ಶನಿವಾರ ವೈಮಾನಿಕ ದಾಳಿ ನಡೆದಿದೆ. ಆದರೆ ಯಾವುದೇ ವಿಕಿರಣ ಸೋರಿಕೆಯಾಗಿಲ್ಲ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಮಿಝಾನ್ ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್ನ ಪ್ರಾಥಮಿಕ ಅಣುಶಕ್ತಿ ಸಂವರ್ಧನಾ ಸೌಲಭ್ಯವಾಗಿರುವ ನತಾಂಝ್ ಮೇಲೆ ಯುದ್ಧದ ಆರಂಭದಲ್ಲೇ ದಾಳಿ ನಡೆದಿತ್ತು ಮತ್ತು ಹಲವು ಕಟ್ಟಡಗಳು ಹಾನಿಗೊಂಡಿರುವುದು ಉಪಗ್ರಹ ಚಿತ್ರಗಳಿಂದ ದೃಢಪಟ್ಟಿತ್ತು. ದಾಳಿಯಿಂದ ಯಾವುದೇ ವಿಕಿರಣ ಸಮಸ್ಯೆ ಕಂಡುಬಂದಿಲ್ಲ ಎಂದು ಆಗ ವಿಶ್ವಸಂಸ್ಥೆಯ ಪರಮಾಣು ನಿಗಾ ಸಂಸ್ಥೆ ಹೇಳಿತ್ತು. ಟೆಹ್ರಾನ್ನ ಆಗ್ನೇಯಕ್ಕೆ ಸುಮಾರು 220 ಕಿ.ಮೀ ದೂರವಿರುವ ಸೌಲಭ್ಯದ ಮೇಲೆ ಈ ಹಿಂದೆಯೂ ಹಲವು ಬಾರಿ ದಾಳಿ ನಡೆದಿತ್ತು. 2015ರ ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ದಾಳಿ ನಡೆದಿರುವುದನ್ನು ಇರಾನ್ನ ಪರಮಾಣು ಸಂಸ್ಥೆ ದೃಢೀಕರಿಸಿದೆ. ಆದರೆ ಯಾವುದೇ ವಿಕಿರಣ ಸೋರಿಕೆಯಾಗಿಲ್ಲ ಮತ್ತು ಸೌಲಭ್ಯದ ಸುತ್ತಮುತ್ತಲಿನ ನಾಗರಿಕರಿಗೆ ಯಾವುದೇ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದೆ. ನತಾಂಝ್ ಸೌಲಭ್ಯದ ವಿರುದ್ಧ ಅಮೆರಿಕ ಬಂಕರ್ ಬಸ್ಟರ್ ಬಾಂಬ್ಗಳನ್ನು ಪ್ರಯೋಗಿಸಿರುವುದಾಗಿ ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ಮಧ್ಯೆ, ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ಮುಕ್ತಾಯಗೊಳಿಸಲು ಪರಿಗಣಿಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶನಿವಾರ ಬೆಳಿಗ್ಗೆ ಇರಾನ್ ಸರಣಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಹೇಳಿದೆ. ಪೂರ್ವ ವಲಯದಲ್ಲಿ ಪ್ರಮುಖ ತೈಲ ಮೂಲಸೌಕರ್ಯವನ್ನು ಗುರಿಯಾಗಿಸಿ ಇರಾನ್ ಪ್ರಯೋಗಿಸಿದ ಸುಮಾರು 20 ಡ್ರೋನ್ಗಳನ್ನು ಹೊಡೆದುರುಳಿಸಿರುವುದಾಗಿ ಸೌದಿ ಅರೆಬಿಯಾ ಶನಿವಾರ ಹೇಳಿದೆ. ಪಶ್ಚಿಮ ಇರಾನ್: ಕ್ಷಿಪಣಿ ದಾಳಿಯಲ್ಲಿ ಮಗು ಮೃತ್ಯು ನೈಋತ್ಯ ಖಜೆಸ್ತಾನ್ ಪ್ರಾಂತದ ಅಹ್ವಾಜ್ ನಗರದ ಮೇಲೆ ಇಸ್ರೇಲ್, ಅಮೆರಿಕ ಪಡೆಗಳ ವೈಮಾನಿಕ ದಾಳಿಯಲ್ಲಿ ಮಗುವೊಂದು ಸಾವನ್ನಪ್ಪಿದ್ದು ಮಗುವಿನ ಪೋಷಕರು ಗಾಯಗೊಂಡಿರುವುದಾಗಿ ಇರಾನ್ನ ಮೆಹರ್ ಸುದ್ದಿಸಂಸ್ಥೆ ವರದಿ ಮಾಡಿದೆ. ಪೂರ್ವ ಇರಾನ್ನ ಅಘಾಜರಿ ನಗರದ ವಸತಿ ಗೃಹವನ್ನು ಗುರಿಯಾಗಿಸಿ ಮತ್ತೊಂದು ದಾಳಿ ನಡೆದಿದ್ದು ಸಾವು-ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಿಲಿಟರಿ ಸಂಯಮಕ್ಕೆ ವಿಶ್ವಸಂಸ್ಥೆ ಕರೆ: ಅಮೆರಿಕ ಮತ್ತು ಇಸ್ರೇಲ್ನೊಂದಿಗಿನ ಯುದ್ಧದಲ್ಲಿ ನತಾಂಝ್ ಪರಮಾಣು ಸ್ಥಳದ ಮೇಲೆ ದಾಳಿ ನಡೆದಿರುವುದಾಗಿ ಇರಾನ್ ಸಲ್ಲಿಸಿದ ವರದಿಯನ್ನು ಪರಿಶೀಲಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪರಮಾಣು ನಿಗಾ ಏಜೆನ್ಸಿ `ಅಂತರರಾಷ್ಟ್ರೀಯ ಪರಮಾಣು ಶಕ್ತಿ ಏಜೆನ್ಸಿ( ಐಎಇಎ) ಶನಿವಾರ ಹೇಳಿದೆ. ಪರಮಾಣು ದುರಂತದ ಯಾವುದೇ ಅಪಾಯವನ್ನು ತಪ್ಪಿಸಲು ಮಿಲಿಟರಿ ಸಂಯಮದ ಕರೆಯನ್ನು ಐಎಇಎ ಮುಖ್ಯಸ್ಥ ರಾಫೆಲ್ ಗ್ರಾಸ್ಸಿ ಪುನರುಚ್ಚರಿಸಿದ್ದಾರೆ ಎಂದು ಐಎಇಎ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ. ಪರಮಾಣು ಸ್ಥಳದ ಮೇಲಿನ ದಾಳಿಯು ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ರಷ್ಯದ ವಿದೇಶಾಂಗ ಇಲಾಖೆಯ ವಕ್ತಾರೆ ಮರಿಯಾ ಝಕರೋವ ಖಂಡಿಸಿದ್ದಾರೆ.
ಉಡುಪಿ: ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಚಾಲನೆ
ಉಡುಪಿ, ಮಾ.21: ಉಡುಪಿ ಜಿಲ್ಲೆಯ ಫೆಲೋಶಿಪ್ ಚರ್ಚಸ್ ವತಿಯಿಂದ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾದ ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬೈಬಲ್ ಗ್ರಂಥ ಪ್ರತಿಯೊಬ್ಬರಿಗೂ ಶಾಂತಿಯ ಆಳವಾದ ಅರ್ಥವನ್ನು ಭೋಧಿಸು ತ್ತದೆ. ಯೇಸು ಸ್ವಾಮಿಯ ಜನನದ ಸಂದರ್ಭದಲ್ಲಿ ಕೂಡ ಶಾಂತಿ ಸಮಾಧಾನದ ಉಲ್ಲೇಖವಿದ್ದು ಇದರು ದೇವರು ಮಾನವ ಕುಲದ ಮೇಲೆ ತೋರಿದ ಪ್ರೀತಿಯ ಸಂಕೇತವಾಗಿದೆ. ಲೋಕದ ಶಾಂತಿ ತಾತ್ಕಾಲಿಕವಾದರೆ ಕ್ರಿಸ್ತನ ಶಾಂತಿ ಶಾಶ್ವತವಾದುದಾಗಿದೆ. ಆದ್ದರಿಂದ ಶಾಂತಿಗಾಗಿ ಶ್ರಮಿಸವವರು ಸದಾ ಧನ್ಯರು ಎಂದು ಯೇಸು ಸ್ವಾಮಿ ಹೇಳಿದ್ದು ಅವರ ಸಂದೇಶವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಪಾಲಿಸೋಣ ಎಂದರು. ಮುಖ್ಯ ಅತಿಥಿಯಾಗಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಪ್ರತಿಯೊಂದು ಧರ್ಮಗಳಿಗೂ ತಮ್ಮ ತಮ್ಮ ಆಚರಣೆಗಳಿಗೆ ದೇಶದಲ್ಲಿ ಮುಕ್ತ ಅವಕಾಶವಿದ್ದು ನಮ್ಮ ಧರ್ಮವನ್ನು ಪ್ರೀತಿಸುವುದರೊಂದಿಗೆ ಇತರ ಧರ್ಮಗಳನ್ನು ಗೌರವಿಸಿದಾಗ ಶಾಂತಿಯ ಸಂದೇಶ ಸಾರ್ಥಕತೆಯನ್ನು ಪಡೆಯುತ್ತದೆ ಎಂದರು. ಸಿಎಸ್ಐ ಕರ್ನಾಟಕ ಸದರ್ನ್ ಡಯಾಸಿಸ್ ಧರ್ಮಾಧ್ಯಕ್ಷ ಅತಿ ವಂ.ಹೇಮಚಂದ್ರ ಕುಮಾರ್ ಮಾತನಾಡಿ, ಮೂರು ದಿನಗಳ ಸಮಾಧಾನ ಮಹೋತ್ಸವ ನಮ್ಮಲ್ಲಿನ ಆಧ್ಯಾತ್ಮಿಕ ಶಕ್ತಿಯನ್ನು ಬಲಗೊಳಿಸಲು ಸಹಕಾರಿ ಯಾಗಲಿ ಎಂದು ಶುಭ ಹಾರೈಸಿದರು. ಭಕ್ತಿ ಸಂಜೀವನ ಕೂಟಗಳನ್ನು ನಡೆಸಿಕೊಡಲಿರುವ ಘನ ಮೋಹನ್ ಸಿ.ಲಾಝರಸ್, ಪಾಸ್ಟರ್ ಟಿ.ವಿ. ಗೋಪಿನಾ ಥನ್, ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಸುಶೀಲ್ ಜತ್ತನ್ನ, ಕರ್ನಾಟಕ ರಾಜ್ಯ ಕ್ರೈಸ್ತ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಸುಮಾರು 200ಕ್ಕೂ ಅಧಿಕ ಮಂದಿ ಗಾಯನ ತಂಡದ ನೇತೃತ್ವದಲ್ಲಿ ಸ್ತುತಿಗೀತೆಗಳ ಗಾಯನ ಜರಗಿತು.
ಇರಾನ್ ಮೇಲೆ ಒತ್ತಡ ಹೇರುವುದಕ್ಕಾಗಿ ಖಾರ್ಗ್ ದ್ವೀಪ ಆಕ್ರಮಿಸಿಕೊಳ್ಳಲು ಅಮೆರಿಕ ಚಿಂತನೆ; ಇದು ಅಪಾಯಕಾರಿ ಏಕೆ?
ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಸೇನಾ ಕಾರ್ಯಾಚರಣೆಗಳನ್ನು ವಿಸ್ತರಿಸುವ ಕುರಿತು ಪರ್ಯಾಯ ಮಾರ್ಗಗಳನ್ನು ಪರಿಶೀಲಿಸುತ್ತಿದ್ದಾರೆ.ಇರಾನ್ನ ಪ್ರಮುಖ ತೈಲ ರಫ್ತು ಕೇಂದ್ರವಾಗಿರುವ ಖಾರ್ಗ್ ದ್ವೀಪಕ್ಕೆ ಭೂಸೇನೆಯನ್ನು ಕಳುಹಿಸುವ ಆಯ್ಕೆಗಳ ಬಗ್ಗೆಯೂ ಟ್ರಂಪ್ ಚಿಂತಿಸುತ್ತಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವಂತೆ ಇರಾನ್ ಮೇಲೆ ಒತ್ತಡ ಹೇರಲು ದ್ವೀಪವನ್ನು ಆಕ್ರಮಿಸಿಕೊಳ್ಳುವ ಅಥವಾ ದಿಗ್ಬಂಧನ ಮಾಡುವ ಯೋಜನೆಗಳನ್ನು ಅಮೆರಿಕ ಆಡಳಿತ ಪರಿಗಣಿಸುತ್ತಿದೆ ಎಂದು ಅಮೆರಿಕದ ಸುದ್ದಿ ಸಂಸ್ಥೆ ಆಕ್ಸಿಯೋಸ್ ಶುಕ್ರವಾರ ವರದಿ ಮಾಡಿದೆ. ವಿಶ್ವದ ಇಂಧನ ಪೂರೈಕೆಯ ಐದನೇ ಒಂದು ಭಾಗವನ್ನು ಹೊಂದಿರುವ ಕಿರಿದಾದ ಸಮುದ್ರ ಮಾರ್ಗವನ್ನು ಇರಾನ್ ಪರಿಣಾಮಕಾರಿಯಾಗಿ ನಿರ್ಬಂಧಿಸಿದ ನಂತರ ಇಂಧನ ಬೆಲೆಗಳು ಗಗನಕ್ಕೇರಿವೆ. ಇರಾನಿನ ಕರಾವಳಿಯಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಪರ್ಷಿಯನ್ ಕೊಲ್ಲಿಯಲ್ಲಿ ಆಳದಲ್ಲಿರುವ ಖಾರ್ಗ್ ದ್ವೀಪವು ಕಿರಿದಾದ, 8 ಕಿ.ಮೀ ಉದ್ದದ ಕಾರ್ಯತಂತ್ರದ ಭೂಪ್ರದೇಶವಾಗಿದೆ. ಮಾರ್ಚ್ 13 ರಂದು ಅಮೆರಿಕವು ದ್ವೀಪದಲ್ಲಿನ ಮಿಲಿಟರಿ ಗುರಿಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು. ಇರಾನ್ನ ತೈಲ ರಫ್ತಿನ ಸುಮಾರು 90% ಈ ದ್ವೀಪದ ಮೂಲಕವೇ ಹರಿಯುತ್ತದೆ. ಅಂದು ಅಮೆರಿಕ ತೈಲ ಸೌಲಭ್ಯಗಳ ಮೇಲೆ ದಾಳಿ ಮಾಡಿರಲಿಲ್ಲ. ಆ ಸಮಯದಲ್ಲಿ, ಅಮೆರಿಕವು ಇರಾನ್ಗೆ ಕೇವಲ ಎಚ್ಚರಿಕೆ ನೀಡುತ್ತಿದ್ದಂತೆ ತೋರುತ್ತಿತ್ತು. ಬಾಂಬ್ ದಾಳಿಯು ಈಗ ಈ ಆಯಕಟ್ಟಿನ ಸ್ಥಳದಲ್ಲಿ ಸಂಭಾವ್ಯ ನೆಲದ ಕಾರ್ಯಾಚರಣೆಗೆ ಅಡಿಪಾಯ ಹಾಕುವ ಕ್ರಮವಾಗಿದೆ ಎಂದು ತೋರುತ್ತದೆ. ಪಶ್ಚಿಮ ಏಷ್ಯಾದ ಯುದ್ಧದಲ್ಲಿ ಖಾರ್ಗ್ ದ್ವೀಪವು ನಿರ್ಣಾಯಕ ಪಾತ್ರ ವಹಿಸುತ್ತದೆ. ಆದರೆ ದ್ವೀಪವನ್ನು ಸ್ವಾಧೀನಪಡಿಸಿಕೊಳ್ಳುವ ಯಾವುದೇ ಕಾರ್ಯಾಚರಣೆಯು ಅಪಾಯದಿಂದ ಕೂಡಿದ್ದಾಗಿದೆ. ►ಖಾರ್ಗ್ ದ್ವೀಪದ ಮಹತ್ವ ಖಾರ್ಗ್ ದ್ವೀಪವು ಇರಾನ್ನ ಅತ್ಯಂತ ಸೂಕ್ಷ್ಮ ಆರ್ಥಿಕ ಗುರಿಯಾಗಿದೆ. ಈಗ, ಟ್ರಂಪ್ ಭೂಸೇನೆ ಮೂಲಕ ದ್ವೀಪವನ್ನು ಸ್ವಾಧೀನಪಡಿಸಿಕೊಳ್ಳಲು ಯೋಜಿಸುತ್ತಿದ್ದಾರೆ. ಮೂರು ವಿಭಿನ್ನ ಸಾಗರ ಘಟಕಗಳು ಈ ಪ್ರದೇಶಕ್ಕೆ ಬರುತ್ತಿವೆ. ಶ್ವೇತಭವನ ಮತ್ತು ಪೆಂಟಗನ್ ಶೀಘ್ರದಲ್ಲೇ ಇನ್ನೂ ಹೆಚ್ಚಿನ ಪಡೆಗಳನ್ನು ಕಳುಹಿಸುವುದನ್ನು ಪರಿಗಣಿಸುತ್ತಿವೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದನ್ನು ಆಕ್ಸಿಯಾಸ್ ವರದಿ ಉಲ್ಲೇಖಿಸಿದೆ. ಆದರೆ ಖಾರ್ಗ್ ದ್ವೀಪವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಯಾವುದೇ ಕ್ರಮವು ಅಮೆರಿಕದ ಪಡೆಗಳನ್ನು ನೇರವಾಗಿ ಸಂಕಷ್ಟಕ್ಕೆ ಸಿಲುಕಿಸಬಹುದು. ಅಮೆರಿಕದ ಶಾಶ್ವತ ಯುದ್ಧಗಳನ್ನು ಕೊನೆಗೊಳಿಸುವ ಚುನಾವಣಾ ಪೂರ್ವದ ಭರವಸೆ ಮತ್ತು ಅವರ MAGA (ಮೇಕ್ ಅಮೆರಿಕ ಗ್ರೇಟ್ ಅಗೇನ್) ನೆಲೆಯಲ್ಲಿ ಅಂತಹ ಯಾವುದೇ ಕ್ರಮಕ್ಕೆ ಸಾಮಾನ್ಯ ವಿರೋಧ ಇರುವುದರಿಂದ ಟ್ರಂಪ್ ಇದನ್ನು ಮಾಡಲು ಹಿಂಜರಿಯುತ್ತಾರೆ. ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹೊಂದಿರುವ ಹಿಡಿತವು ಜಾಗತಿಕ ತೈಲ ಮತ್ತು ಅನಿಲ ಬೆಲೆಗಳನ್ನು ಹೆಚ್ಚಿಸಿದೆ. ಈ ಸಂಘರ್ಷದಲ್ಲಿ ಇರಾನಿನ ಆಡಳಿತವು ಹೊಂದಿರುವ ಬಲವಾದ ಹತೋಟಿ ಎಂದು ಇದನ್ನು ನೋಡಲಾಗುತ್ತದೆ. ಖಾರ್ಗ್ ಮೂಲಕ ಅದರ ರಫ್ತುಗಳು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ಗೆ (IRGC) ಪ್ರಮುಖ ಆರ್ಥಿಕ ಜೀವನಾಡಿಯಾಗಿದ್ದು, ಸಂಘರ್ಷಕ್ಕೆ ಅಗತ್ಯವಾದ ಆದಾಯವನ್ನು ಒದಗಿಸುತ್ತವೆ. ಅಮೆರಿಕದ ಸೇನೆಯು ಹಾರ್ಮುಜ್ ಜಲಸಂಧಿಯ ಸುತ್ತ ಇರಾನ್ನ ಮಿಲಿಟರಿ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸಿದ ನಂತರವೇ ಅಂತಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು ಎಂದು ಆಕ್ಸಿಯೋಸ್ ವರದಿ ಉಲ್ಲೇಖಿಸಿದೆ. ಆದರೆ ಆಕ್ರಮಣದಲ್ಲಿ ರಫ್ತು ಟರ್ಮಿನಲ್ನಲ್ಲಿರುವ ತೈಲ ಸೌಲಭ್ಯಗಳಿಗೆ ಹಾನಿಯಾಗುವ ಅಪಾಯವಿದೆ. ಮಾರ್ಚ್ 13 ರ ಬಾಂಬ್ ದಾಳಿಯ ನಡುವೆಯೂ ಸಹ, ಅಮೆರಿಕ ಮತ್ತು ಇಸ್ರೇಲ್ ಖಾರ್ಗ್ ದ್ವೀಪದ ತೈಲ ಮೂಲಸೌಕರ್ಯವನ್ನು ಇಲ್ಲಿಯವರೆಗೆ ಮುಟ್ಟದೇ ಇರುವುದಕ್ಕೂ ಕಾರಣವಿದೆ. ಇರಾನಿನ ಮುಖ್ಯ ಭೂಭಾಗಕ್ಕೆ ತುಂಬಾ ಹತ್ತಿರದಲ್ಲಿರುವ ಕಾರಣ ಇದು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಇಂಥಾ ಕಾರ್ಯಾಚರಣೆಯು ಅಪಾಯಕಾರಿಯಾಗಿದ್ದು, ಕ್ಷಿಪಣಿಗಳು ಮತ್ತು ಡ್ರೋನ್ಗಳ ಮೂಲಕ ಈ ದ್ವೀಪವನ್ನು ತಲುಪುವ ಸಾಮರ್ಥ್ಯವನ್ನು ಇರಾನ್ ಹೊಂದಿದೆ. ಅದನ್ನು ನಾಶಮಾಡುವುದರಿಂದ ಇರಾನ್ನ ಬಹುತೇಕ ಎಲ್ಲಾ ದೈನಂದಿನ ಕಚ್ಚಾ ತೈಲ ರಫ್ತುಗಳನ್ನು ತಟಸ್ಥಗೊಳಿಸಿದಂತಾಗುತ್ತದೆ. ಇದು ಈಗಾಗಲೇ ಏರುತ್ತಿರುವ ತೈಲ ಬೆಲೆಗಳಲ್ಲಿ ನಿರಂತರ ಏರಿಕೆಗೆ ಕಾರಣವಾಗುತ್ತದೆ. ದ್ವೀಪದ ಮೇಲೆ ಭೂಸೇನೆ ಆಕ್ರಮಣವು ಅಂತಹ ಯಾವುದೇ ಹಾನಿಯನ್ನು ಪರಿಣಾಮಕಾರಿಯಾಗಿ ತಪ್ಪಿಸಲು ಸಾಧ್ಯವೇ ಎಂಬುದು ಸ್ಪಷ್ಟವಾಗಿಲ್ಲ. ►ಹಾರ್ಮುಜ್ ಜಲಸಂಧಿಯ ನಿಯಂತ್ರಣ ಖಾರ್ಗ್ ಹೊರತುಪಡಿಸಿ, ಈ ಪ್ರದೇಶದಲ್ಲಿ ಇರಾನಿನ ನಿಯಂತ್ರಣದಲ್ಲಿ ಕನಿಷ್ಠ ಮೂರು ಪ್ರಮುಖ ದ್ವೀಪಗಳಿವೆ - ಅಬು ಮೂಸಾ, ಗ್ರೇಟರ್ ಟನ್ಬ್ ಮತ್ತು ಲೆಸ್ಸರ್ ಟನ್ಬ್. 1971 ರಿಂದ ಇರಾನ್ ನಿಯಂತ್ರಿಸುತ್ತಿರುವ ಲೆಸ್ಸರ್ ಟನ್ಬ್, ನೆರೆಯ ಯುಎಇ ಜೊತೆ ದಶಕಗಳ ಕಾಲದ ವಿವಾದದ ಕೇಂದ್ರಬಿಂದುವಾಗಿದೆ.ಈ ದ್ವೀಪಗಳ ಉಸ್ತುವಾರಿ ಯಾರು ಎಂಬುದು ಜಲಸಂಧಿಯನ್ನು ಯಾರು ನಿಯಂತ್ರಿಸುತ್ತಾರೆ ಎಂಬುದರ ಮೇಲೆ ಬಲವಾದ ಪ್ರಭಾವ ಬೀರುತ್ತದೆ. ಇದು ತೈಲ ಟ್ಯಾಂಕರ್ಗಳು ಮತ್ತು ಯುದ್ಧನೌಕೆಗಳ ಸಾಗಣೆಗೆ ಪ್ರಮುಖವೆಂದು ಪರಿಗಣಿಸಲಾಗಿದೆ. ತಜ್ಞರ ಪ್ರಕಾರ, ಇರಾನಿನ ಮುಖ್ಯ ಭೂಭಾಗಕ್ಕಿಂತ ಈ ದ್ವೀಪಗಳಿಂದ ಜಲಮಾರ್ಗವನ್ನು ಉತ್ತಮವಾಗಿ ನಿಯಂತ್ರಿಸಬಹುದು. ಕಾರ್ಯತಂತ್ರದ ದೃಷ್ಟಿಕೋನದಿಂದ, ಪರ್ಷಿಯನ್ ಕೊಲ್ಲಿ ದ್ವೀಪಗಳು ಇರಾನಿನ ಮುಖ್ಯ ಭೂಭಾಗಕ್ಕಿಂತ ಅಮೆರಿಕದ ಭೂ ನಿಯೋಜನೆಗೆ ಹೆಚ್ಚು ಕಾರ್ಯಸಾಧ್ಯವಾದ ಸ್ಥಳವನ್ನು ಪ್ರತಿನಿಧಿಸುತ್ತವೆ. ಈ ಕಡಲಾಚೆಯ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುವುದರಿಂದ ಮಿಲಿಟರಿಗೆ ಬಫರ್ ವಲಯವನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತದೆ. ಕರಾವಳಿಯ ಬದಲು ಖಾರ್ಗ್ ದ್ವೀಪದಲ್ಲಿ ಭೌತಿಕ ಉಪಸ್ಥಿತಿಯನ್ನು ಕೇಂದ್ರೀಕರಿಸುವ ಮೂಲಕ, ಅಮೆರಿಕವು ಇರಾನ್ನ ಆರ್ಥಿಕ ಉತ್ಪಾದನೆಯನ್ನು ಪರಿಣಾಮಕಾರಿಯಾಗಿ ಅಡ್ಡಿಪಡಿಸಬಹುದು ಮತ್ತು ದೀರ್ಘಕಾಲದ, ಹೆಚ್ಚಿನ ಸಾವುನೋವುಗಳ ಅಪಾಯವನ್ನು ಕಡಿಮೆ ಮಾಡಬಹುದು. ►ಖಾರ್ಗ್ ಮೂಲಕ ತೈಲ ಹರಿವು ಪ್ರತಿದಿನ ಸರಾಸರಿ 1.5 ಮಿಲಿಯನ್ ಬ್ಯಾರೆಲ್ ತೈಲ ಖಾರ್ಗ್ ಮೂಲಕ ಹಾದು ಹೋಗುತ್ತದೆ, ಆದರೂ ಫೆಬ್ರವರಿ ಮಧ್ಯದಲ್ಲಿ ಇರಾನ್ ದಿನಕ್ಕೆ 3 ಮಿಲಿಯನ್ ಬ್ಯಾರೆಲ್ಗಳಿಗೆ ತೈಲದ ಪ್ರಮಾಣವನ್ನು ತೀವ್ರವಾಗಿ ಹೆಚ್ಚಿಸಿದೆ ಎಂದು ಹೂಡಿಕೆ ಬ್ಯಾಂಕ್ ಜೆಪಿ ಮೋರ್ಗನ್ ತಿಳಿಸಿದೆ. ಅಮೆರಿಕ ನೇತೃತ್ವದ ಸಂಭಾವ್ಯ ದಾಳಿಗೆ ಸಿದ್ಧತೆಯಾಗಿ ಈ ಕ್ರಮ ಕೈಗೊಳ್ಳಲಾಗಿತ್ತು. ಹೆಚ್ಚುವರಿ 18 ಮಿಲಿಯನ್ ಬ್ಯಾರೆಲ್ಗಳನ್ನು ಖಾರ್ಗ್ನಲ್ಲಿ ಬ್ಯಾಕಪ್ ಆಗಿ ಸಂಗ್ರಹಿಸಲಾಗಿದೆ ಎಂದು ಜೆಪಿ ಮೋರ್ಗನ್ ತಿಳಿಸಿದೆ. 2025 ರ ಅಂತ್ಯ ಮತ್ತು 2026 ರ ಆರಂಭದಲ್ಲಿ, ಕಚ್ಚಾ ತೈಲ ಮತ್ತು ಕಂಡೆನ್ಸೇಟ್ ಸೇರಿದಂತೆ ಇರಾನ್ನ ಒಟ್ಟು ತೈಲ ರಫ್ತು ದಿನಕ್ಕೆ ಸುಮಾರು 1.8 ಮಿಲಿಯನ್ ಬ್ಯಾರೆಲ್ಗಳಷ್ಟಿತ್ತು ಎಂದು ಅಂದಾಜಿಸಲಾಗಿದೆ, ಇದರಲ್ಲಿ ಹೆಚ್ಚಿನವು ಚೀನಾಕ್ಕೆ ಹೋಗುತ್ತಿದ್ದವು. 2026 ರ ಆರಂಭದಲ್ಲಿ ಉತ್ಪಾದನೆಯು ದಿನಕ್ಕೆ 3.1 ಮಿಲಿಯನ್ ಬ್ಯಾರೆಲ್ಗಳ ಹತ್ತಿರ ವರದಿಯಾಗಿದೆ. ಇದರಲ್ಲಿ ಹೆಚ್ಚಿನದನ್ನು ಖಾರ್ಗ್ ಮೂಲಕ ರವಾನಿಸಲಾಗಿದೆ. ದೇಶದ ಮಧ್ಯ ಮತ್ತು ಪಶ್ಚಿಮದಲ್ಲಿರುವ ಇರಾನ್ನ ತೈಲ ನಿಕ್ಷೇಪಗಳಿಂದ ಬರುವ ಪೈಪ್ಲೈನ್ಗಳು ಖಾರ್ಗ್ನಲ್ಲಿ ಕೊನೆಗೊಳ್ಳುತ್ತವೆ. ಅಮೆರಿಕದ ತೈಲ ಸಮೂಹವಾದ ಅಮೇರಿಕನ್ ಆಯಿಲ್ ಕಂಪನಿ ಅಥವಾ ಅಮೋಕೊ ಸ್ಥಾಪಿಸಿದ ಇದನ್ನು 1979 ರ ಕ್ರಾಂತಿಯ ಸಮಯದಲ್ಲಿ ಇರಾನ್ ವಶಪಡಿಸಿಕೊಂಡಿತು. ಅಮೋಕೊ ಬಿಪಿ ಮಾಲಕತ್ವದ ಅಡಿಯಲ್ಲಿ ಇಂಧನ ಬ್ರಾಂಡ್ಗಳನ್ನು ಚಿಲ್ಲರೆ ಮಾರಾಟ ಮಾಡುವುದನ್ನು ಮುಂದುವರೆಸಿದೆ. ಅಮೆರಿಕನ್ನರು ಇದನ್ನೆಲ್ಲ ಸ್ಥಾಪಿಸಲು ಸಹಾಯ ಮಾಡಿದ್ದರಿಂದ, ಖಾರ್ಗ್ ದ್ವೀಪ ಸೇರಿದಂತೆ ಇರಾನ್ನಲ್ಲಿನ ತೈಲ ಮೂಲಸೌಕರ್ಯದಲ್ಲಿ ಅವರಿಗೆ ಸರಿಯಾದ ಪಾಲು ಇದೆ ಎಂಬ ಅಭಿಪ್ರಾಯವಿದೆ. ಇದು ವೆನೆಜುವೆಲಾದ ತೈಲ ಮೂಲಸೌಕರ್ಯದ ಬಗ್ಗೆ ಅಮೆರಿಕನ್ ಆಡಳಿತದ ದೃಷ್ಟಿಕೋನದೊಂದಿಗೆ ಪ್ರತಿಧ್ವನಿಸುತ್ತದೆ, ಇದನ್ನು ಅಮೆರಿಕನ್ನರು ಸಹ ಸುಮಾರು ಅರ್ಧ ಶತಮಾನದ ಹಿಂದೆ ಸ್ಥಾಪಿಸಲು ಸಹಾಯ ಮಾಡಿದರು.
ಕಲಬುರಗಿಯಲ್ಲಿ ಯುಗಾದಿ–ಈದುಲ್ ಫಿತ್ರ್ ಆಚರಣೆ
ಕಲಬುರಗಿ: ಸೌಹಾರ್ದ ಕರ್ನಾಟಕ ವೇದಿಕೆ ಹಾಗೂ ಸಮುದಾಯ ಸಂಘಟನೆಯ ಸಹಯೋಗದಲ್ಲಿ ನಗರದ ಜಗತ್ ವೃತ್ತದಲ್ಲಿ ಗುರುವಾರ ಸಂಜೆ ಸೌಹಾರ್ದ ಯುಗಾದಿ–ಈದುಲ್ ಫಿತ್ರ್ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ್ತಿ ಕೆ.ನೀಲಾ, “ಕರ್ನಾಟಕವು ಸೌಹಾರ್ದತೆಯ ನೆಲವಾಗಿದೆ. ಯುದ್ಧ ಹಾಗೂ ಕೋಮುದ್ವೇಷದ ಪರಿಣಾಮವಾಗಿ ಇಂದಿನ ಜಗತ್ತಿನಲ್ಲಿ ಜನರ ಮನಸುಗಳು ಭಯವಿಹ್ವಲತೆಯಿಂದ ನಲುಗುತ್ತಿವೆ. ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಬಿಡದಂತಹ ಜಾಗತಿಕ ಬೆಳವಣಿಗೆಗಳು ಅಹಿತಕರವಾಗಿವೆ. ಬಲಾಢ್ಯರ ಸಂಪತ್ತಿನ ದಾಹದಿಂದ ಹೆಚ್ಚುತ್ತಿರುವ ಕ್ರೌರ್ಯದಿಂದ ಸಾಮಾನ್ಯ ಜನರ ಬದುಕು ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಹೇಳಿದರು. ಲೇಖಕಿ ಡಾ. ಮೀನಾಕ್ಷಿ ಬಾಳಿ ಮಾತನಾಡಿ, ನಮ್ಮ ನಾಡು ಶರಣ–ಸೂಫಿ ಸಂತರ ನಾಡಾಗಿದ್ದು, ಈ ಬಾರಿ ಯುಗಾದಿ ಮತ್ತು ಈದುಲ್ ಫಿತ್ರ್ ಹಬ್ಬಗಳು ಪರಸ್ಪರ ಕೈಹಿಡಿದು ಬಂದಿರುವುದು ಸೌಹಾರ್ದತೆಗೆ ಸಂಕೇತವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನೂರಾರು ಜನರಿಗೆ ಬೇವು–ಬೆಲ್ಲದ ಪಾನಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಶೈಲ ಘೂಳಿ, ಅಶೋಕ ಶಟಕಾರ, ಡಾ. ಪ್ರಭು ಖಾನಾಪುರೆ, ದತ್ತಾತ್ರೇಯ ಇಕ್ಕಳಕಿ, ಮೊಹಮ್ಮದ್ ಮುಖದಮ್, ಸಾಜಿದ್ ಅಹ್ಮದ್, ಲವಿತ್ರ, ರತ್ನಾ, ಪದ್ಮಿನಿ ಕಿರಣಗಿ, ಸುಜಾತಾ ವೈ, ನಾಗೇಂದ್ರಪ್ಪ ಔರಾದಿ, ಆಲಿಯಾ ಪಟೇಲ್, ರವೀಂದ್ರ ಶಾಬಾದಿ, ಡಾ. ಜಯದೇವಿ ಗಾಯಕವಾಡ, ಡಾ. ಸಿದ್ದಪ್ಪ, ಖೈಸರ್ ಬೇಗಂ, ಡಾ. ಪರವಿನ್ ಸುಲ್ತಾನ, ಡಾ. ಸಮೀನಾ, ಕೋದಂಡರಾಮಪ್ಪ, ಶಿವಲೀಲಾ, ಡಾ. ಜಮುನಾ, ಸರ್ವೇಶ, ಮೆಹಬೂಬ್ ಬಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಜೀವಾವಧಿ ಶಿಕ್ಷೆಗೆ ಗುರಿಯಾದವರಿಗೆ 20 ವರ್ಷ ಸೆರೆವಾಸದ ಬಳಿಕ ಬಿಡುಗಡೆ ಹೊಂದುವ ಕಾನೂನಾತ್ಮಕ ಹಕ್ಕಿಲ್ಲ : ಹೈಕೋರ್ಟ್
ಬೆಂಗಳೂರು : ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದವರು 20 ವರ್ಷ ಸೆರೆವಾಸ ಪೂರೈಸಿದ ಬಳಿಕ ಸ್ವಯಂಚಾಲಿತವಾಗಿ ಬಿಡುಗಡೆಗೆ ಕೋರುವ ಯಾವುದೇ ರೀತಿಯ ಕಾನೂನಾತ್ಮಕ ಹಕ್ಕು ಹೊಂದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಮೈಸೂರು ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಬೆಂಗಳೂರಿನ ಕೋರಮಂಗಲದ ಕಿಶನ್ ಎಂಬಾತ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಹೈಕೋರ್ಟ್ ಆದೇಶವೇನು? ಕ್ಷಮಾದಾನ ಅಥವಾ ಅವಧಿಗೂ ಮುನ್ನ ಅಪರಾಧಿಯನ್ನು ಬಿಡುಗಡೆ ಮಾಡುವ ಪ್ರಶ್ನೆಯು ಶಾಸನಬದ್ಧ ನಿಬಂಧನೆ ಮತ್ತು ನೀತಿಯಡಿ ಸೂಕ್ತ ಸರಕಾರಕ್ಕೆ ಮಾತ್ರ ಇದೆ. ಅಪರಾಧಿಯು 20 ವರ್ಷ ಶಿಕ್ಷೆ ಪೂರೈಸಿದ ಬಳಿಕ ಜೀವಾವಧಿ ಶಿಕ್ಷೆಗೆ ಗುರಿಯಾದವನನ್ನು ಬಿಡುಗಡೆ ಮಾಡಬಹುದು ಎಂದು ಐಪಿಸಿ ಸೆಕ್ಷನ್ 57 ಹೇಳುವುದಿಲ್ಲ. ಕಾನೂನಿನ ಅಡಿ ಪರಿವರ್ತನೆ ಅಥವಾ ಕ್ಷಮಾದಾನ ಸಿಗದ ಹೊರತು ಜೈಲು ಶಿಕ್ಷೆಯನ್ನು ಸೀಮಿತಗೊಳಿಸುವ ನಿರ್ದಿಷ್ಟ ನ್ಯಾಯಾಂಗ ನಿರ್ದೇಶನದ ಗೈರಿನ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಬದುಕಿರುವವರೆಗಿನ ಶಿಕ್ಷೆ ಎಂದು ಪರಿಗಣಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹಾಲಿ ಪ್ರಕರಣದಲ್ಲಿ ಅರ್ಜಿದಾರರು 20 ವರ್ಷ ಸೆರೆಮನೆಯಲ್ಲಿ ಕಳೆದಿರುವುದರಿಂದ ಸರಕಾರಕ್ಕೆ ಕ್ಷಮಾದಾನ ಕೋರಿಕೆ ಸಲ್ಲಿಸಲು ಅರ್ಹರಾಗಿದ್ದಾರೆ. ರಾಜ್ಯ ಸರಕಾರದ ಕ್ಷಮಾದಾನ ನೀತಿ ಮತ್ತು ಸೂಕ್ತ ಶಾಸನಬದ್ಧ ನಿಬಂಧನೆಗಳ ಅಡಿ ಕ್ಷಮಾದಾನ ಕೋರಬಹುದಾಗಿದೆ. ಇಂಥ ಅರ್ಜಿಯನ್ನು ಸಲ್ಲಿಸಿದರೆ ಸೂಕ್ತ ಸರಕಾರ/ಶಿಕ್ಷೆ ಪರಿಶೀಲನಾ ಮಂಡಳಿಯು ಪ್ರಕರಣದ ಆಧಾರದ ಮೇಲೆ ಅಪರಾಧಿಯು ಶಿಕ್ಷೆ ಅನುಭವಿಸಿರುವ ಅವಧಿ, ಅರ್ಜಿದಾರನ ನಡತೆ, ಅಪರಾಧದ ಸ್ವರೂಪ, ಸಂತ್ರಸ್ತರ ಹಿತಾಸಕ್ತಿ ಮತ್ತು ಅನ್ವಯಿಸುವ ನೀತಿಯನ್ನು ಪರಿಗಣಿಸಿ ನಿರ್ಧರಿಸಬಹುದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ. ಪ್ರಕರಣವೇನು? ಇಬ್ಬರು ಮಕ್ಕಳನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಅರ್ಜಿದಾರ ಕಿಶನ್ ಸೇರಿ ಮೂವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಈ ಪ್ರಕರಣದ ಮೇಲ್ಮನವಿ ಪ್ರಕ್ರಿಯೆಯು 2013ರಲ್ಲಿ ಪೂರ್ಣಗೊಂಡಿದ್ದು, ಮರಣದಂಡನೆ ಶಿಕ್ಷೆಯನ್ನು ಹೈಕೋರ್ಟ್ ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಿತ್ತು. ಐಪಿಸಿ ಸೆಕ್ಷನ್ 57ರ ಅಡಿ 14 ವರ್ಷ ಜೈಲು ಶಿಕ್ಷೆ ಪೂರ್ಣಗೊಂಡ ಬಳಿಕ ಶಿಕ್ಷೆಯ ಅವಧಿಯಲ್ಲಿ ಯಾವುದೇ ಕಡಿತ ಇರುವುದಿಲ್ಲ ಎಂಬ ಸ್ಪಷ್ಟ ನಿರ್ದೇಶನವನ್ನೂ ನ್ಯಾಯಾಲಯ ನೀಡಿತ್ತು. 2025ರ ಜನವರಿ 15ರಂದು 20 ವರ್ಷ ಜೈಲು ಶಿಕ್ಷೆ ಪೂರೈಸಿದ್ದ ಕಿಶನ್, ಐಪಿಸಿ ಸೆಕ್ಷನ್ 57ರ ಅಡಿ ಕ್ಷಮಾದಾನಕ್ಕೆ ಅರ್ಹವಾಗಿರುವುದರಿಂದ ಬಿಡುಗಡೆ ಮಾಡುವಂತೆ ಕೋರಿದ್ದರು.
ನೈಸಿಯಾ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯ: ಬಿಷಪ್ ಜೆರಾಲ್ಡ್ ಲೋಬೊ
ಉಡುಪಿ, ಮಾ.21: ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯವಾಗಿದೆ. ಯಾವುದೇ ಸಭೆಗಳಿಗೂ ಸೇರಿದ್ದರೂ ಕೂಡ ಒಂದೇ ವಿಶ್ವಾಸದ ಘೋಷಣೆ ಮಾಡುವಾಗ ಐಕ್ಯತೆಯನ್ನು ಪ್ರಚುರ ಪಡಿಸಿದಂತಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತದಾರ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ. ಉಡುಪಿ ಯುಬಿಎಂ ಜುಬಿಲಿ ಮೆಮೋರಿಯಲ್ ಸಭಾಂಗಣದಲ್ಲಿ ಯುನಾಯ್ಟೆಡ್ ಬಾಸೆಲ್ ಮಿಷನ್ ಚರ್ಚ್, ಉಡುಪಿ ಧರ್ಮಪ್ರಾಂತ್ಯದ ಐಕ್ಯತಾ ಆಯೋಗ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಹ್ಯೂಮನ್ ರೈಟ್ಸ್ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ನೈಸಿಯಾ ವಿಶ್ವಾಸದ ಘೋಷಣೆ ಒಡಬಂಡಿಕೆಯ 1700ನೇ ವರ್ಷಾಚರಣೆಯ ಪ್ರಯುಕ್ತ ಗುರುವಾರ ಆಯೋಜಿಸಲಾದ ಐಕ್ಯತಾ ಪ್ರಾರ್ಥನಾ ಕೂಟದಲ್ಲಿ ಅವರು ಮಾತನಾಡುತಿದ್ದರು. ಧರ್ಮಸಭೆ ಯಾವಾಗಲೂ ಸರ್ವ ಕ್ರೈಸ್ತ ಏಕತೆಯ ಮಹತ್ವವನ್ನು ಒತ್ತಿ ಹೇಳುತ್ತದೆ. ಎರಡನೇ ವ್ಯಾಟಿಕನ್ ಮಹಾಸಭೆಯಲ್ಲಿ ಎಲ್ಲಾ ಕ್ರೈಸ್ತರ ಏಕತೆಯನ್ನು ಪುನರ್ ಸ್ಥಾಪಿಸುವುದು ಧರ್ಮಸಭೆಯ ಪ್ರಮುಖ ಕಾಳಜಿಗಳಲ್ಲಿ ಒಂದಾಗಿದೆ ಎಂದು ಹೇಳಿದೆ. ನಿಜವಾದ ಏಕತೆ ಆತ್ಮೀಕ ಪರಿವರ್ತನೆಯಿಂದ ಆರಂಭವಾಗುತ್ತದೆ. ವಿನಯ, ಪರಸ್ಪರ ಕ್ಷಮೆ ಮತ್ತು ಒಟ್ಟಾಗಿ ಪ್ರಾರ್ಥಿಸಿದಾಗ ಮಾತ್ರ ನಿಜವಾದ ಐಕ್ಯತೆ ಕಾಣಲು ಸಾಧ್ಯವಿದೆ. ಚರ್ಚ್ ಆಫ್ ಸೌತ್ ಇಂಡಿಯಾ ಕರ್ನಾಟಕ ಸದರ್ನ್ ಡಯಾಸಿಸ್ ಧರ್ಮಾಧ್ಯಕ್ಷ ಅತಿ ವಂ.ಹೇಮಚಂದ್ರ ಕುಮಾರ್ ಮಾತನಾಡಿ, ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತರು ದೇವರಲ್ಲಿ ಇಟ್ಟಿರುವ ವಿಶ್ವಾಸ ಭದ್ರ ಬುನಾದಿಯಾಗಿದ್ದು 1700 ವರ್ಷಗಳ ಬಳಿಕವೂ ಕ್ರೈಸ್ತರು ಒಟ್ಟಾಗಿ ಒಂದಾಗಿ ಬದಕಲು ಪ್ರೇರೆಪಿಸುತ್ತಿದೆ. ಬೈಬಲ್ ಗ್ರಂಥದಲ್ಲಿ ಕ್ರೈಸ್ತ ಸಭೆಯನ್ನು ಯಾವ ರೀತಿಯಲ್ಲಿ ಬಲಪಡಿಸಲು ಸಾಧ್ಯ ಎನ್ನುವುದು ವಿವಿಧ ಕಡೆಯಲ್ಲಿ ಉಲ್ಲೇಖಿಸ ಲಾಗಿದೆ. ನಮ್ಮ ಸಭೆಗಳಲ್ಲಿ ವಿಶ್ವಾಸದ ಸ್ತ್ರೋತ್ರವನ್ನು ಪ್ರತಿನಿತ್ಯ ಪಠಿಸುವು ರಿಂದ ನಮ್ಮಲ್ಲಿನ ಐಕ್ಯತೆಯನ್ನು ಭದ್ರಪಡಿಸಲು ಸಹಕಾರಿಯಾಗುತ್ತದೆ ಎಂದರು. ಗೋವಾ ಡಿವೈನ್ ಸ್ಪ್ರಿಂಗ್ ಧ್ಯಾನ ಮಂದಿರದ ಮುಖ್ಯಸ್ಥ ವಂ.ರೊವಲ್ ಶುಭದೀಪ್ ಡಿಸೋಜ ಮತ್ತು ಕರ್ನಾಟಕ ಥಿಯೋಲೋಜಿಕಲ್ ಕಾಲೇಜು ಬಲ್ಮಠ ಮಂಗಳೂರು ಇದರ ಪ್ರಾಂಶುಪಾಲರು ವಿಶ್ವಾಸದ ಘೋಷಣೆಯ ಐತಿಹಾಸಿಕ ಚರಿತ್ರೆ ಮತ್ತು ಆಧ್ಯಾತ್ಮಿಕ ಮಹತ್ವದ ಕುರಿತು ಉಪನ್ಯಾಸ ನೀಡಿದರು. ವಂ.ಲಿಯೋ ಪ್ರವೀಣ್, ವಂ.ಪ್ರವೀಣ್ ಮಾಬೆನ್, ವಂ.ನೊಯೆಲ್ ಲೂವಿಸ್, ಪ್ರಶಾಂತ್ ಜತ್ತನ್ನ, ಸಹಿತ ರೋಮನ್ ಕ್ಯಾಥೊಲಿಕ್, ಓರ್ಥೋಡಕ್ಸ್, ಸಿಎಸ್ಐ, ಯುಬಿಎಂ ಸಭೆಗಳ ಧರ್ಮಗುರುಗಳು, ಪಾಸ್ಟರ್ಸ್, ಧರ್ಮಭಗಿನಿಯರು ಹಾಗೂ ಭಕ್ತವೃಂದದವರು ಉಪಸ್ಥಿತರಿದ್ದರು. ವಂ.ಸಂತೋಷ್ ಸ್ವಾಗತಿಸಿದರು. ಎಬನೇಜರ್ ಕ್ರಿಸ್ಟೋಫರ್ ಕರ್ಕಡ ವಂದಿಸಿದರು. ವಂ.ವಿಜಯ್ ಹಾರ್ವಿನ್ ಪ್ರಾರ್ಥಸಿದರು. ವಂ.ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು.
ಹೆಬ್ರಿ, ಮಾ.21: ರಾಜ್ಯದ ಶ್ರೀನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ತಾಯಿ ಕಮಲ ಪೂಜಾರಿ(88) ಶುಕ್ರವಾರ ರಾತ್ರಿ ಅಲ್ಪಕಾಲದ ಅಸೌಖ್ಯದ ಸ್ವಗೃಹದಲ್ಲಿ ನಿಧನರಾದರು. ಮಂಡಲ ಪಂಚಾಯಿತಿ ಸದಸ್ಯರಾಗಿದ್ದ ದಿವಂಗತ ಚಂದು ಪೂಜಾರಿ ಯವರ ಧರ್ಮಪತ್ನಿಯಾಗಿದ್ದ ಕಮಲ ಪೂಜಾರಿ ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯೆಯಾಗಿಯು ಸೇವೆ ಸಲ್ಲಿಸಿದ್ದರು. ಕಮಲ ಪೂಜಾರಿ ಮುದ್ರಾಡಿ ಮಂಜುನಾಥ ಪೂಜಾರಿ ಸಹಿತ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ದೋರನಹಳ್ಳಿ | ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಯಾದಗಿರಿ/ ದೋರನಹಳ್ಳಿ : ಪಟ್ಟಣದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಅತ್ಯಂತ ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಒಂದು ತಿಂಗಳ ಉಪವಾಸದ ಬಳಿಕ ಬಂದ ಈ ಹಬ್ಬವು ಪರಸ್ಪರ ಸೌಹಾರ್ದತೆ, ದಾನಧರ್ಮ ಮತ್ತು ಸಹೋದರತ್ವದ ಸಂದೇಶವನ್ನು ಸಾರಿತು. ಹಬ್ಬದ ಅಂಗವಾಗಿ ಮುಂಜಾನೆ ಮಸೀದಿಗಳಲ್ಲಿ ವಿಶೇಷ ನಮಾಝ್ ಸಲ್ಲಿಸಲಾಯಿತು. ನಂತರ ಪರಸ್ಪರ “ಈದ್ ಮುಬಾರಕ್” ಎಂದು ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಮನೆಗಳಲ್ಲಿ ವಿಶೇಷ ಆಹಾರ ಪದಾರ್ಥಗಳನ್ನು ತಯಾರಿಸಲಾಗಿತ್ತು. ಶೀರ್ ಖುರ್ಮಾ, ಬಿರಿಯಾನಿ ಸೇರಿದಂತೆ ವಿವಿಧ ಸಿಹಿ ಮತ್ತು ಖಾರದ ವಾಂಛಿತ ತಿನಿಸುಗಳನ್ನು ಸವಿದರು. ಸ್ನೇಹಿತರು, ಬಂಧುಗಳು ಮನೆಗಳಿಗೆ ಭೇಟಿ ನೀಡಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಪಟ್ಟಣದ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಈದುಲ್ ಫಿತ್ರ್ ಹಬ್ಬದ ಶುಭಾಶಯಗಳನ್ನು ಕೋರಿದರು. ಕೆಲವರು ಮಸೀದಿಗಳಿಗೆ ಭೇಟಿ ನೀಡಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು. ಒಟ್ಟಾರೆ, ದೋರನಹಳ್ಳಿ ಪಟ್ಟಣದಲ್ಲಿ ಈದುಲ್ ಫಿತ್ರ್ ಹಬ್ಬವು ಧರ್ಮಭೇದವಿಲ್ಲದೆ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಸೇರಿಸಿ, ಸೌಹಾರ್ದತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರಿದ ಹಬ್ಬವಾಗಿ ಅರ್ಥಪೂರ್ಣವಾಗಿ ಆಚರಿಸಲ್ಪಟ್ಟಿತು.
ಯುದ್ಧ ಸಾಮ್ರಾಜ್ಯಶಾಹಿ ವ್ಯಾಪಾರ: ಸುರೇಶ್ ಕಲ್ಲಾಗರ ಆರೋಪ
ಅಡುಗೆ ಅನಿಲ ಬೆಲೆ ಏರಿಕೆ, ಕೊರತೆ ವಿರುದ್ಧ ಸಿಪಿಎಂ ಪ್ರತಿಭಟನೆ
ಕೆಂಭಾವಿ | ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಕೆಂಭಾವಿ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ವಲಯದಲ್ಲಿ ಶನಿವಾರ ಈದುಲ್ ಫಿತ್ರ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಕಠಿಣ ಉಪವಾಸ ಆಚರಣೆಯಲ್ಲಿ ನಿರತರಾಗಿದ್ದ ಮುಸ್ಲಿಂ ಬಾಂಧವರು, ವೃತದ ಕೊನೆಯ ದಿನವಾದ ಶನಿವಾರ ಮುಂಜಾನೆಯೇ ಉತ್ಸಾಹದಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು. ಮಕ್ಕಳು, ಯುವಕರು ಹಾಗೂ ಹಿರಿಯರು ಹೊಸ ಬಟ್ಟೆಗಳನ್ನು ಧರಿಸಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆಯಲ್ಲಿ ಸಾಗಿ ಈದ್ಗಾ ಮೈದಾನ ತಲುಪಿದರು. ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬಾಂಧವರು ಸಾಮೂಹಿಕ ನಮಾಝ್ ಸಲ್ಲಿಸಿದರು. ನಂತರ ಒಬ್ಬರಿಗೊಬ್ಬರು ಆಲಿಂಗಿಸಿಕೊಳ್ಳುವ ಮೂಲಕ ‘ಈದ್ ಮುಬಾರಕ್’ ಎಂದು ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಮಹತ್ವದ ಕುರಿತು ಮಾತನಾಡಿದ ಖಾಜಿ ಮುಹಮ್ಮದ್ ಆದಮ್ ಫಾರೂಕಿ, ಈದುಲ್ ಫಿತ್ರ್ ಹಬ್ಬವು ಕೇವಲ ಆಚರಣೆಗೆ ಸೀಮಿತವಾಗದೆ, ಮನುಷ್ಯನಲ್ಲಿ ಶ್ರದ್ಧೆ, ಭಕ್ತಿ ಮತ್ತು ಸಹನೆಯನ್ನು ಮೈಗೂಡಿಸುತ್ತದೆ. ಅತಿಯಾದ ಸಂಪತ್ತಿನ ಸಂಗ್ರಹವನ್ನು ತ್ಯಜಿಸಿ, ಬಡವ-ಬಲ್ಲಿದ ಎಂಬ ಭೇದವಿಲ್ಲದೆ ದಾನ (ಝಕಾತ್) ಮಾಡಲು ಇದು ಪ್ರೇರೇಪಿಸುತ್ತದೆ. ಬಡತನದ ನೋವು ಮತ್ತು ಹಸಿವಿನ ಅರಿವು ಪ್ರತಿಯೊಬ್ಬರಿಗೂ ಉಂಟಾಗಲಿ ಎಂಬುದು ಈ ವೃತದ ಮೂಲ ಉದ್ದೇಶ. ಈ ಹಬ್ಬವು ಸಮಾಜದಲ್ಲಿ ಪರಸ್ಪರ ಭರವಸೆ, ಸಾಮರಸ್ಯ ಹಾಗೂ ಭಾವೈಕ್ಯತೆಯ ಮನೋಭಾವವನ್ನು ಇನ್ನಷ್ಟು ಗಟ್ಟಿಗೊಳಿಸಲಿ ಎಂದು ಶುಭ ಹಾರೈಸಿದರು.
ಲವಿಟಾಗೆ ಬಿಎಸ್ಡಬ್ಲ್ಯೂ ಪ್ರಥಮ ರ್ಯಾಂಕ್
ಉಡುಪಿ, ಮಾ.21: ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾಲಯದ ರ್ಯಾಂಕ್ ಪಟ್ಟಿಯಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಲವಿಟಾ ಮಥಾಯಸ್ ಅವರು ಬಿಎಸ್ಡಬ್ಲ್ಯೂ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು ಹಾಗೂ ಕಾಲೇಜಿನ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.
ಬೆಳಗಾವಿಯಲ್ಲಿ ಭಾರೀ ಸೈಬರ್ ವಂಚನೆ; 15 ಕೋಟಿ ರೂ. ಕಳೆದುಕೊಂಡು ವೃದ್ಧ ಉದ್ಯಮಿ!
ಬೆಳಗಾವಿ : ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಮತ್ತೊಂದು ಸೈಬರ್ ವಂಚನೆ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. 81 ವರ್ಷದ ವೃದ್ಧ ಉದ್ಯಮಿಯನ್ನು ಬೆದರಿಸಿ ಸೈಬರ್ ವಂಚಕರು 15 ಕೋಟಿ ರೂ. ದೋಚಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಡಾರ್ಕ್ ವೆಬ್ ಮೂಲಕ ವೃದ್ಧನ ಸಂಪರ್ಕಕ್ಕೆ ಬಂದು, ಅವರ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾರೆ. ಬಳಿಕ ವಿಡಿಯೋ ಕಾಲ್ ಮಾಡಿ ತಾವು ಈಡಿ ಅಧಿಕಾರಿಗಳೆಂದು ನಂಬಿಸಿ, ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. “ತನಿಖೆ ಪೂರ್ಣಗೊಳ್ಳುವವರೆಗೂ ನಿಮ್ಮ ಹಣವನ್ನು ನಾವು ಸೂಚಿಸುವ ಖಾತೆಗೆ ವರ್ಗಾಯಿಸಿ. ಅದು ಸುರಕ್ಷಿತವಾಗಿರುತ್ತದೆ. ನಂತರ ನಿಮ್ಮ ಖಾತೆಗೆ ಹಿಂದಿರುಗಿಸಲಾಗುತ್ತದೆ” ಎಂದು ನಂಬಿಸಿದ್ದಾರೆ ಎನ್ನಲಾಗಿದೆ. ಬಳಿಕ ವೃದ್ಧ ಉದ್ಯಮಿ ತಮ್ಮ ಖಾತೆಯಲ್ಲಿದ್ದ 15 ಕೋಟಿ ರೂ. ಹಣವನ್ನು ಅವರ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ತಿಳಿದು ಬಂದಿದೆ. ಸೈಬರ್ ವಂಚಕರು ಅನುಮಾನ ಬಾರದಂತೆ ಕೆಲವು ದಿನಗಳ ಕಾಲ ಸಂಪರ್ಕದಲ್ಲಿದ್ದರು. ಬಳಿಕ ಸಂಪರ್ಕ ಕಡಿತವಾದಾಗ ಉದ್ಯಮಿ ಪೊಲೀಸರನ್ನು ಸಂಪರ್ಕಿಸಿ, ಬೆಳಗಾವಿ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿಸಿದ್ದಾರೆ. ಈಗಾಗಲೇ 90 ಲಕ್ಷ ಹಣವನ್ನು ಮರುಪಡೆಯಲಾಗಿದೆ. ಉಳಿದ ಹಣದ ಪತ್ತೆಗಾಗಿ ಪೊಲೀಸರು ಪರಿಶೀಲನೆ ಮುಂದುವರೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ಆರೋಪಿಗಳ ಬೆನ್ನಟ್ಟಿದ್ದು, ಇಂತಹ ವಂಚನೆಗಳಿಂದ ಎಚ್ಚರಿಕೆಯಿಂದ ಇರಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಕುಣಿಗಲ್ ನಿಲುಗಡೆ ಮುಂದುವರಿಕೆ
ಉಡುಪಿ, ಮಾ.21: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಹಾಗೂ ಕಾರವಾರ ನಡುವೆ ಸಂಚರಿಸುವ ದೈನಂದಿನ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಕುಣಿಗಲ್ ನಿಲ್ದಾಣದಲ್ಲಿ ಪ್ರಾಯೋಗಿಕ ನೆಲೆಯಲ್ಲಿ ನಿಲುಗಡೆಯನ್ನು ಜೂನ್ 30ರವರೆಗೆ ಮುಂದುವರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಯಾದಗಿರಿ ಜಿಲ್ಲೆಯಾದ್ಯಾಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಯಾದಗಿರಿ: ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಿದರು. ಕಳೆದ ಒಂದು ತಿಂಗಳ ಕಾಲ ಮುಂಜಾನೆಗಳಿಂದಲೇ ಆಹಾರ-ನೀರು ಸೇವಿಸದೆ ರೋಜಾ ಆಚರಿಸಿದ್ದ ಜನರು, ಉಪವಾಸ ಮುಗಿಸಿ ಹೊಸ ಬಟ್ಟೆಗಳನ್ನು ಧರಿಸಿ ಸಾವಿರಾರು ಸಂಖ್ಯೆಯಲ್ಲಿ ಈದ್ಗಾ ಮೈದಾನಗಳಲ್ಲಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಆಲಿಂಗನ ಮಾಡಿಕೊಂಡು ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹಬ್ಬದ ಅಂಗವಾಗಿ ಬಂಧು-ಬಳಗ ಹಾಗೂ ಸ್ನೇಹಿತರ ಮನೆಗಳಿಗೆ ತೆರಳಿ ಸಿಹಿ ತಿಂಡಿಗಳನ್ನು ಹಂಚಿಕೊಂಡು ಸಂಭ್ರಮಿಸಿದರು. ನಗರದ ಎರಡು ಈದ್ಗಾ ಮೈದಾನಗಳಲ್ಲಿ ಬೆಳಗ್ಗೆಯಿಂದಲೇ ಭಕ್ತರ ದೊಡ್ಡ ಸಂಖ್ಯೆಯ ಸಮಾಗಮ ಕಂಡುಬಂದಿತು. ಜಿಲ್ಲೆಯ ಶಹಾಪುರ, ಸುರಪುರ, ಗುರುಮಠಕಲ್, ವಡಗೇರಾ, ಸೈದಾಪುರ, ಹುಣಸಗಿ, ಕೆಂಭಾವಿ, ನಾರಾಯಣಪುರ, ಕೊಡೆಕಲ್, ಭೀಮಗುಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿಯೂ ರಂಜಾನ್ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಮಹಾಡ್ ಚಳುವಳಿ ದಲಿತರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ: ಶ್ಯಾಮರಾಜ್ ಬಿರ್ತಿ
ಹೆಬ್ರಿ, ಮಾ.21: ಮಹಾಡ್ ಚಳುವಳಿಯು ಚೌದಾರ ಕೆರೆಯ ನೀರನ್ನು ಮುಟ್ಟಿ ಕುಡಿದಿರುವುದು ದಲಿತರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ. ಹಿಂದೂಗಳು ನಾವೆಲ್ಲಾ ಒಂದು ಎಂದು ಹೇಳುವವರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಮತ್ತು ಹೆಬ್ರಿ ತಾಲೂಕು ಸಮಿತಿ ವತಿ ಯಿಂದ ಮಹಾಡ್ ಚಳುವಳಿಯ ನೆನಪಿನಲ್ಲಿ ಹೆಬ್ರಿಯ ದೋರಿಯಾಲ್ನಲ್ಲಿ ಶುಕ್ರವಾರ ನಡೆದ ಮಹಾಡ್ ಕೆರೆ ಚಳುವಳಿ ಕಥಾ ಕಥನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ್ದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರ್ ಮಾತನಾಡಿ, 1927ರ ಮಾ.20ರಂದು ಮಹಾರಾಷ್ಟ್ರದ ಮಹಾಡ್ನ ಸಾರ್ವಜನಿಕ ಚೌದಾರ್ ಕೆರೆಯ ನೀರನ್ನು, ಹಂದಿ, ನಾಯಿ, ಹಸು ಗಳೆಲ್ಲಾ ಸ್ವೇಚ್ಛಾನುಸಾರವಾಗಿ ಕುಡಿದರೂ ದಲಿತರಿಗೆ, ಅಸ್ಪೃಶ್ಯರಿಗೆ ನೀರನ್ನು ಮುಟ್ಟಲು ಅವಕಾಶ ಇರಲಿಲ್ಲ. ಬಾಬಾಸಾಹೇಬರು ಸಾವಿರಾರು ದಲಿತ ರೊಂದಿಗೆ ಹೋಗಿ ಚೌದಾರ್ ಕೆರೆಯ ನೀರನ್ನು ಬೊಗಸೆಯಲ್ಲಿ ತೆಗೆದು ಕುಡಿದು ಪ್ರತಿಭಟಿಸಿರುವುದೇ ಈ ಮಹಾಡ್ ಚಳುವಳಿ. ಇದು ಐತಿಹಾಸಿಕ ದಿನವಾಗಿದ್ದು, ಈ ಚಳುವಳಿಯು ಅಸ್ಪೃಶ್ಯತೆ ವಿರುದ್ಧದ ಸ್ವಾಭಿಮಾನದ ಸಂಕೇತದ ಚಳುವಳಿಯಾಗಿದೆ. ಈ ಮಹಾನ್ ಮಹಾಡ್ ಚಳುವಳಿಯನ್ನು ಮತ್ತೆ ಮತ್ತೆ ನೆನೆಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಮಖ್ಯ ಅತಿಥಿಗಳಾಗಿ ದಸಂಸ ಬ್ರಹ್ಮಾವರ ತಾಲೂಕು ಸಂಚಾಲಕ ಶ್ಯಾಮಸುಂದರ ತೆಕ್ಕಟ್ಟೆ, ಕುಂದಾಪುರ ತಾಲೂಕು ಸಂಚಾಲಕರ ರಾಜು ಬೆಟ್ಟಿನಮನೆ, ಜಿಲ್ಲಾ ಸಂಘಟನಾ ಸಂಚಾಲಕ ದೇವು ಹೆಬ್ರಿ ಮಾತನಾಡಿದರು. ಕುಮಾರ್ ಕೋಟಾ, ಬಿರ್ತಿ ಸುರೇಶ, ಕೆ.ಡಿ.ಹರೀಶ್ಚಂದ್ರ, ವಿಜಯ ಗಿಳಿಯಾರು, ಪ್ರಶಾಂತ್ ಬಿರ್ತಿ, ಬೋಜರಾಜ್ ಕಾವ್ರಾಡಿ ಉಪಸ್ಥಿತರಿದ್ದರು. ಸಂತೋಷ ಮಾಸ್ಟರ್ ಮುದ್ರಾಡಿ ಸ್ವಾಗತಿಸಿದರು. ಹೆಬ್ರಿ ತಾಲೂಕು ಸಂಚಾಲಕ ಅಣ್ಣಪ್ಪ ಮಾಸ್ಟರ್ ಮುದ್ರಾಡಿ ವಂದಿಸಿದರು.
ಶಹಾಪುರ | ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಶಹಾಪುರ: ನಗರದ ಗುಲ್ಬರ್ಗ ರಸ್ತೆ ಹತ್ತಿರದ ಹಳೆ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಬೆಳಿಗ್ಗೆ ಮಕ್ಕಳು, ಹಿರಿಯರು, ಸ್ನೇಹಿತರು ಹಾಗೂ ಬಂಧು-ಬಳಗದವರು ಮಸ್ಜಿದ್ ಮತ್ತು ಈದ್ಗಾಗಳಿಗೆ ತೆರಳಿ ಭಕ್ತಿಭಾವದಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಹಸ್ತಲಾಘವ ಮತ್ತು ಅಪ್ಪಿಕೊಂಡು ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈದ್ ಹಬ್ಬವು ಪರಸ್ಪರ ಸ್ನೇಹ, ಸೌಹಾರ್ದತೆ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುವ ಹಬ್ಬವಾಗಿದ್ದು, ಎಲ್ಲರೂ ಸಂತೋಷದಿಂದ ಆಚರಿಸಿದರು.
RCB: ಒಂದೊಂದು ನಿಮಿಷವೂ ಮುಖ್ಯ; ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಸಹ ಆಟಗಾರರಿಗೆ ಕೊಹ್ಲಿ ಖಡಕ್ ವಾರ್ನ್
RCB Virat Kohli: ಐಪಿಎಲ್ 19ನೇ ಆವೃತ್ತಿ ಮಾರ್ಚ್ 28ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣಸಲಿದೆ. ಸೀಸನ್ನ ಮೊದಲ ಪಂದ್ಯಕ್ಕೂ ಮುನ್ನವೇ ವಿರಾಟ್ ಕೊಹ್ಲಿ ತಮ್ಮ ಸಿದ್ಧತೆಗಳನ್ನು ಆರಂಭಿಸಿದ್ದು, ಈ ವೇಳೆ ಸಹ ಆಟಗಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅವರ ಈ
BTS ಸುಮಾರು 4 ವರ್ಷಗಳ ಕಾಯುವಿಕೆಯ ಬಳಿಕ ಮಾ.21ರಂದು ಗ್ವಾಂಗ್ವಾಮುನ್ ಸ್ಕ್ವೇರ್ ನಲ್ಲಿ ಮೊದಲ ಬಾರಿಗೆ ಕಾನ್ಸರ್ಟ್ ಆಯೋಜಿಸುವ ಮೂಲಕ ಕಂಬ್ಯಾಕ್ ಮಾಡಿದ್ದು, ಸ್ಥಳದಲ್ಲಿ ಸುಮಾರು 2.4 ಲಕ್ಷ ಆರ್ಮಿಗಳು ಭಾಗಿಯಾಗಿದ್ದು, ನೆಟ್ ಫ್ಲಿಕ್ಸ್ ಲೈವ್ ನಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಆರ್ಮಿಗಳು ಭಾಗಿಯಾಗುವ ಮೂಲಕ ರೆಕಾರ್ಡ್ ಬ್ರೇಕ್ ಮಾಡಿದೆ. ಇನ್ನು, ಈ ಕಾನ್ಸರ್ಟ್ ನಲ್ಲಿ ಹಳೆಯ ಹಾಗೂ ಹೊಸ ಹಾಡುಗಳ ಮೂಲಕ ಪ್ರದರ್ಶನ ನೀಡಿದ BTS ತಮ್ಮ ಕಂಬ್ಯಾಕ್ ಕುರಿತಾಗಿ ಭಾವನೆಗಳನ್ನು ಸಹ ಹಂಚಿಕೊಂಡಿದ್ದಾರೆ. ಇವೆಲ್ಲದರ ಕುರಿತ ಮಾಹಿತಿ ಇಲ್ಲಿದೆ..
ಮದರ್ ತೆರೇಸಾರ ಹೆಸರಿನ ಅನಧಿಕೃತ ಬಳಕೆಯು ಸ್ವೀಕಾರಾರ್ಹವಲ್ಲ: ಮಿಷನರೀಸ್ ಆಫ್ ಚ್ಯಾರಿಟಿ
ಕೋಲ್ಕತಾ: ನಿಧಿ ಸಂಗ್ರಹ ಮತ್ತು ಪ್ರಚಾರ ಅಭಿಯಾನಗಳು ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಸಂಸ್ಥೆಗಳು ಮತ್ತು ವ್ಯಕ್ತಿಗಳು ತನ್ನ ಮತ್ತು ಮದರ್ ತೆರೇಸಾ ಅವರ ಹೆಸರನ್ನು ಅನಧಿಕೃತವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ಮಿಷನರೀಸ್ ಆಫ್ ಚ್ಯಾರಿಟಿ ಎಚ್ಚರಿಕೆ ನೀಡಿದೆ. ಕೆಲವು ಸಂಸ್ಥೆಗಳು ಮತ್ತು ವ್ಯಕ್ತಿಗಳು ನಿಧಿಸಂಗ್ರಹ ಚಟುವಟಿಕೆಗಳಿಗಾಗಿ ಮದರ್ ತೆರೇಸಾ ಅವರ ಹೆಸರು ಮತ್ತು ಚಿತ್ರವನ್ನು ಅನುಮತಿಯಿಲ್ಲದೆ ಬಳಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳ ನಡುವೆ ಈ ಎಚ್ಚರಿಕೆ ಹೊರಬಿದ್ದಿದೆ. ತನ್ನ ಸಂಸ್ಥಾಪಕಿ ಎತ್ತಿ ಹಿಡಿದಿದ್ದ ತತ್ವಗಳನ್ನು ತನ್ನ ಮಾ.19ರ ಪ್ರಕಟಣೆಯಲ್ಲಿ ಒತ್ತಿ ಹೇಳಿರುವ ಮಿಷನರೀಸ್ ಆಫ ಚ್ಯಾರಿಟಿ, ದತ್ತಿ ಉದ್ದೇಶಗಳಿಗಾಗಿಯೂ ಸಹ ತನ್ನ ಹೆಸರು ಅಥವಾ ಚಿತ್ರ ನಿಧಿ ಸಂಗ್ರಹ ಅಥವಾ ವಿಜ್ಞಾಪನೆ ಉದ್ದೇಶಗಳಿಗಾಗಿ ಬಳಕೆಯಾಗುವುದನ್ನು ಮದರ್ ತೆರೇಸಾ ಎಂದಿಗೂ ಬಯಸಿರಲಿಲ್ಲ ಎಂದು ಹೇಳಿದೆ. ಸರಳತೆಗೆ ಮತ್ತು ಸ್ವಯಂಪ್ರೇರಿತ ಸದ್ಭಾವನೆಯ ದೇಣಿಗೆಗೆ ಅವರು ಬದ್ಧರಾಗಿದ್ದರು ಎಂದು ಅದು ಎತ್ತಿ ತೋರಿಸಿದೆ. ‘ಪೂರ್ವಾನುಮತಿಯಿಲ್ಲದೆ ಮದರ್ ತೆರೇಸಾ ಅಥವಾ ಮಿಷನರೀಸ್ ಆಫ್ ಚ್ಯಾರಿಟಿಯ ಹೆಸರನ್ನು ಯಾವುದೇ ರೂಪದಲ್ಲಿ ಬಳಸಿಕೊಳ್ಳದಂತೆ ನಾವು ಸಂಬಂಧಿಸಿದ ಎಲ್ಲರಿಗೂ ವಿನಂತಿಸಿಕೊಳ್ಳುತ್ತೇವೆ. ಇಂತಹ ಯಾವುದೇ ಅನಧಿಕೃತ ಬಳಕೆಯು ನಮ್ಮ ಹೆಸರು ಮತ್ತು ಅನನ್ಯತೆಯನ್ನು ರಕ್ಷಿಸಲು ಕಾನೂನು ಕ್ರಮ ಸೇರಿದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ನಮ್ಮನ್ನು ಅನಿವಾರ್ಯಗೊಳಿಸಬಹುದುʼ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 1950ರಲ್ಲಿ ಕೋಲ್ಕತಾದಲ್ಲಿ ಸ್ಥಾಪನೆಯಾದ ಮಿಷನರೀಸ್ ಆಫ್ ಚ್ಯಾರಿಟಿ ಕಡುಬಡವರ ಸೇವೆಗಾಗಿ ಮೀಸಲಾಗಿರುವ ಕೆಥೋಲಿಕ್ ಧಾರ್ಮಿಕ ಸಂಘಟನೆಯಾಗಿದೆ. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ನಂತರ ‘ಸೈಂಟ್ ತೆರೇಸಾ’ ಎಂದು ಘೋಷಿಸಲ್ಪಟ್ಟ ಮದರ್ ತೆರೇಸಾ ಪ್ರಚಾರ ಅಥವಾ ನಿಧಿ ಸಂಗ್ರಹಕ್ಕಾಗಿ ತನ್ನ ಹೆಸರನ್ನು ಬಳಸುವುದನ್ನು ನಿರಂತರವಾಗಿ ವಿರೋಧಿಸಿದ್ದರು. ಹೇಳಿಕೆಯ ಪ್ರಕಾರ ಮಿಷನರೀಸ್ ಆಫ್ ಚ್ಯಾರಿಟಿ ಮಾತ್ರ ತನ್ನ ಕಾರ್ಯಗಳು ಮತ್ತು ಗುರುತನ್ನು ಪ್ರತಿನಿಧಿಸುವ ಅಧಿಕಾರವನ್ನು ಹೊಂದಿದೆ. ಯಾವುದೇ ಸಂಸ್ಥೆ ಅಥವಾ ಉಪಕ್ರಮ ಮಿಷನರೀಸ್ ಆಫ್ ಚ್ಯಾರಿಟಿ ಜೊತೆ ಸಂಬಂಧ ಹೊಂದಿದ್ದೇನೆ ಎಂದು ಹೇಳಿಕೊಂಡರೆ ಅದಕ್ಕೆ ಬೆಂಬಲವನ್ನು ನೀಡುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಅದು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ.
ದಾವಣಗೆರೆ ದಕ್ಷಿಣ ಟಿಕೆಟ್ ಕಿತ್ತಾಟ: ಜಮೀರ್ ರಾಜೀನಾಮೆ ಬೆದರಿಕೆಗೆ ಸೊಪ್ಪು ಹಾಕದ ಕಾಂಗ್ರೆಸ್! ಛಲವಾದಿ ವ್ಯಾಖ್ಯಾನ
ಬಿಜೆಪಿ ಬಗ್ಗೆ ಅವರಿಗೆ ಬೇಸರ ಇರಬಹುದು. ನಾವು ಮುಸಲ್ಮಾನರ ವಿರೋಧಿಗಳಲ್ಲ; ಕಾಂಗ್ರೆಸ್ ಅವರ ತಲೆಯಲ್ಲಿ ಬಿಟ್ಟ ಹುಳಗಳು ಇನ್ನೂ ಸತ್ತಿಲ್ಲ ಎಂದ ಅವರು, ಅವರು ನಮಗೆ ಮತ ಕೊಡುವುದು ಬೇಕಿಲ್ಲ. ಅದು ಅವರಿಗೆ ಬಿಟ್ಟ ವಿಷಯ. ನಾವು ಇಡೀ ದೇಶದಲ್ಲಿ ಅಧಿಕಾರದಲ್ಲಿದ್ದೇವೆ. ದೇಶವನ್ನಾಳುವ ಮೋದಿಜೀ ಅವರು ದೊಡ್ಡ ಸಮುದಾಯದವರಲ್ಲ; ಅವರು ಕೂಡ ಹಿಂದುಳಿದವರೇ. ಯಾವ ರೀತಿ ಸಿದ್ದರಾಮಯ್ಯನವರು ನಾನು ಅಹಿಂದ ಎಂದು ಅಂದುಕೊಳ್ಳುತ್ತಾರೋ ಅದೇ ರೀತಿ ಮೋದಿ ಅವರು ಅಹಿಂದವೇ ಎಂದು ಛಲವಾದಿ ನಾರಾಯಣ ಸ್ವಾಮಿ ವಿವರಿಸಿದರು.
ಯಾದಗಿರಿ | ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಶಾಸಕ ಕಂದಕೂರರಿಂದ ಕಟ್ಟುನಿಟ್ಟಿನ ಸೂಚನೆ
ಟಾಸ್ಕ್ ಫೋರ್ಸ್ ಸಭೆ
ಐಪಿಎಲ್ 2026 ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್ಸಿಬಿಯಿಂದ ಸ್ಟಾರ್ ಆಟಗಾರ ಔಟ್
RCB Yash Dayal: ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಎಸ್ಆರ್ಎಚ್ ಎದುರಿಸಲು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಭ್ಯಾಸ ಶಿಬಿರವನ್ನು ಆರಂಭಿಸಿದೆ. ಆದರೆ, ಕಳೆದ ಬಾರಿ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಡಗೈ ವೇಗಿ ಯಶ್ ದಯಾಳ್ ಅವರ ಗೈರುಹಾಜರಿ ಈಗ ದೊಡ್ಡ ಮಟ್ಟದ ಚರ್ಚೆಗೆ
ಸುರಪುರ | ಸಂಭ್ರಮದ ಈದುಲ್ ಫಿತ್ರ್ ಆಚರಣೆ
ಸುರಪುರ : ಪಟ್ಟಣದ ಝಂಡದಕೇರಾ ದಲ್ಲಿನ ಈದ್ಗಾ ಮೈದಾನದಲ್ಲಿ ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಭಾಗವಹಿಸಲು ವಿವಿಧ ಮಸೀದಿಗಳಿಂದ ಹಾಗೂ ಸುತ್ತಲಿನ ಗ್ರಾಮಗಳಿಂದ ಭಾಗವಹಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೌಲ್ವಿ ಹಾಫೀಸ್ ಅಕ್ಬರ್ ಅಲಿ ಗೋಗಿ ಅವರು ಪ್ರಾರ್ಥನೆಯನ್ನು ನೆರವೇರಿಸಿ ಮಾತನಾಡಿ, ರಮಝಾನ್ ಮಾಸವು ಉಪವಾಸದ ಮೂಲಕ ಮನುಷ್ಯನಲ್ಲಿ ತಾಳ್ಮೆ ಹಾಗೂ ಸಂಯಮ ಕಲಿಸಿಕೊಡುತ್ತದೆ. ಉಪವಾಸ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಗೆ ಪ್ರೇರಣೆಯಾಗುತ್ತದೆ ಎಂದರು. ನಂತರ ಎಲ್ಲರು ಪರಸ್ಪರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡು ಧನ ದಾನ ಮಾಡುವ ಮೂಲಕ ರಮಝಾನ್ ಆಚರಿಸಿದರು. ಪ್ರಾರ್ಥನೆಯಲ್ಲಿ ಪ್ರಮುಖರಾದ, ಸೈಯದ್ ಅಹ್ಮದ್ ಪಾಷಾ ಖಾದ್ರಿ, ಈದ್ಗಾ ಕಮಿಟಿ ಅಧ್ಯಕ್ಷರಾದ ಎ.ಆರ್ ಪಾಷಾ, ಅಹಮದ್ ಪಠಾಣ್, ಖಾಜಾ ಖಲೀಲ ಅಹ್ಮದ್ ಅರಕೇರಿ,ಉಸ್ತಾದ್ ವಜಾಹತ್ ಹುಸೇನ್,ಲಿಯಾಖತ್ ಹುಸೇನ್, ಉಸ್ತಾದ್ ಅಬ್ದುಲ್ ಮುಲ್ಲಾ ,ತೌಫಿಕ್ ಅಹಮದ್ ಅರಕೇರಿ, ಮೆಹಬೂಬ್ ಸಾಬ್ ಜಮಾದಾರ್,ಅನ್ವರ್ ಜಮಾದಾರ್,ಆರ್. ಕೆ.ಕೋಡಿಹಾಳ, ಖಾದರ್ ಪಟೇಲ್, ಇಮ್ತಿಯಾಜ್ ಹುಸೇನ್, ಕಲ್ಲಿಮುದ್ದೀನ್ ಫರೀದಿ, ಅಬೂಬಕರ್ ಬೇಗ್, ಖಾಜಾ ನಿಜಾಮುದ್ದೀನ್ ,ಮೊಹಮ್ಮದ್ ಆರಿಫ್, ಅರ್ಷದ್ ಎಂ.ಡಿ ಗೌಸ್, ಇರ್ಫಾನ್ ಮೌಲಾಲಿ ಸೌದಾಗರ್, ಖಾಜಾ ಹುಸೇನ್ ಗುಡುಗುಂಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಪಟ್ಟಣದ ಹಸನಾಪುರದ ಈದ್ಗಾ ಮೈದಾನದಲ್ಲಿ ರಂಗಂಪೇಟೆಯ ಸಾವಿರಾರು ಜನ ಮುಸ್ಲಿಂ ಬಾಂಧವರು ಭಾಗವಹಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಈದುಲ್ ಫಿತ್ರ್ ಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ಮೌಲ್ವಿ ಖದೀರ್ ಸಾಬ್ ಅವರು ಎಲ್ಲರಿಗೂ ಖುರಾನ್ ಬೋಧಿಸಿ ನಂತರ ರಂಜಾನ್ ಹಬ್ಬದ ಮಹತ್ವ ತಿಳಿಸಿದರು. ಸಾವಿರಾರು ಜನ ಭಾಗವಹಿಸಿದ್ದರು.
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಉಂಟಾಗಿದ್ದ ಎಲ್ಪಿಜಿ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಡಾ.ನೀರಜ್ ಮಿತ್ತಲ್ ಅವರು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಮಾರ್ಚ್ 23ರಿಂದ ಜಾರಿಗೆ ಬರುವಂತೆ ಅನಿಲ ಹಂಚಿಕೆಯನ್ನು ಶೇ 20ರಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಮಾರ್ಚ್ 23ರಿಂದ
ಕಲಬುರಗಿ | ಮಹಾಡ್ ಸತ್ಯಾಗ್ರಹ ದಮನಿತ ಸಮುದಾಯಕ್ಕೆ ಸ್ಪೂರ್ತಿ : ಡಾ.ನಿರ್ಮಲಾ ಸಿರಗಾಪುರ
ಕಲಬುರಗಿ: 1927ರ ಮಾರ್ಚ್ 20ರಂದು ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಅಸ್ಪೃಶ್ಯ ಜನರ ಕುಡಿಯುವ ನೀರಿನ ಹಕ್ಕಿಗಾಗಿ ನಡೆಸಿದ ಮಹಾಡ್ ಸತ್ಯಾಗ್ರಹವು ಅಹಿಂಸಾತ್ಮಕ ಹೋರಾಟವಾಗಿದ್ದು, ದೇಶದ ದಮನಿತ ಸಮುದಾಯಗಳಿಗೆ ಸ್ಪೂರ್ತಿಯಾಗಿದೆ ಎಂದು ಅರ್ಥಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕಿ ಡಾ.ನಿರ್ಮಲಾ ಸಿರಗಾಪುರ ಹೇಳಿದರು. ನಗರದ ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯ ಡಾ. ಅಂಬೇಡ್ಕರ್ ಕಲಾ ವಾಣಿಜ್ಯ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ‘ನೂರರ ಹೊಸ್ತಿಲಲ್ಲಿ ಮಹಾಡ್ ಸತ್ಯಾಗ್ರಹ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಹಾಡ್ ಸತ್ಯಾಗ್ರಹದ ಹಿನ್ನೆಲೆ ಹಾಗೂ ಮಹತ್ವವನ್ನು ವಿವರಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಮತ್ತು ಚಿಂತಕರಾದ ಡಾ. ಅರುಣ್ ಜೋಳದಕೂಡ್ಲಿಗಿ ಮಾತನಾಡಿ, ಮಹಾರಾಷ್ಟ್ರದ ಕೊಲಾಬಾ ಜಿಲ್ಲೆಯ ಮಹಾಡ್ನಲ್ಲಿ ನಡೆದ ಚವ್ದಾರ್ ಕೆರೆ ಸತ್ಯಾಗ್ರಹವು ದಮನಿತ ಚಳವಳಿಗಳಲ್ಲಿ ಮೈಲುಗಲ್ಲಾಗಿದೆ. ಡಾ. ಅಂಬೇಡ್ಕರ್ ಅವರು ಸ್ವತಃ ಮುನ್ನಡೆಸಿದ ಈ ಚಳವಳಿ, ಅಸ್ಪೃಶ್ಯ ಸಮುದಾಯದ ಮೂಲಭೂತ ಹಕ್ಕುಗಳಿಗಾಗಿ ನಡೆದ ಐತಿಹಾಸಿಕ ಹೋರಾಟವಾಗಿತ್ತು ಎಂದು ಹೇಳಿದರು. ಇತಿಹಾಸದ ಪ್ರಾಧ್ಯಾಪಕ ಡಾ. ಗಾಂಧೀಜಿ ಮೋಳೆಕರ್ ಮಾತನಾಡಿ, ಚವ್ದಾರ್ ಕೆರೆ ಸತ್ಯಾಗ್ರಹವು ರಕ್ತರಹಿತ ಅಹಿಂಸಾ ಚಳವಳಿಯಾಗಿದ್ದು, ಬುದ್ಧನ ಕರುಣೆ ಮತ್ತು ಶಾಂತಿಯ ಮೌಲ್ಯಗಳ ಆಧಾರದಲ್ಲಿ ಡಾ. ಅಂಬೇಡ್ಕರ್ ಅವರು ಹೋರಾಟ ನಡೆಸಿದರು ಎಂದು ವಿವರಿಸಿದರು. ಕಾಲೇಜಿನ ಸಮಾಜಶಾಸ್ತ್ರದ ಪ್ರಾಧ್ಯಾಪಕರಾದ ಡಾ.ಸುದರ್ಶನ ಮದನಕರ್ ಅವರು ನಿರೂಪಿಸಿದರು. ಡಾ.ಹರ್ಷವರ್ಧನ್ ಅವರು ಸ್ವಾಗತಿಸಿದರು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಡಾ.ಸಿದ್ದಾರ್ಥ ಮದನಕರ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಸಿದ್ದಂಪ್ಪ ಎಸ್.ಕಾಂತ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ.ದತ್ತುರಾಯ, ಡಾ.ಅರುಣ್ ಕುಮಾರ್, ಡಾ.ಶಿಲ್ಪ, ಗ್ರಂಥಪಾಲಕರಾದ ಡಾ. ರಮೇಶ ಜಾಬನೂರು ಉಪಸ್ಥಿತರಿದ್ದರು. ಡಾ.ಶಿವಕುಮಾರ್ ಅವರು ವಂದಿಸಿದರು.
ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ: ನೌರುಜ್ ಶುಭಾಶಯದ ನಡುವೆಯೇ ಇಂಧನ ಸೌಲಭ್ಯಗಳ ಮೇಲಿನ ದಾಳಿಗೆ ಖಂಡನೆ!
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಚ್ಚಳವಾಗುತ್ತಿದ್ದು, ಈ ನಡುವೆ ನೌರುಜ್ ಹಬ್ಬಕ್ಕೆ ಶುಭ ಕೋರಲು ಇರಾನ್ ನ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಫೋನ್ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ವೇಳೆ, ಈ ಹಬ್ಬದ ಸಮಯ ಶಾಂತಿಯನ್ನು ತರಲಿ ಎಂದು ಹರಸಿದ್ದು, ಇದೇ ವೇಳೆ ಪ್ರಾದೇಶಿಕ ಉದ್ವಿಗ್ನತೆಯಲ್ಲಿ ಇಂಧನ ಮೂಲಕ ಸೌಕರ್ಯಗಳ ಮೇಲಿನ ದಾಳಿಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ..
ಚಿಂಚೋಳಿ | ರಮಝಾನ್ ಅಂಗವಾಗಿ ಡಾ.ಫಾರೂಕ್ ಮಣ್ಣೂರರಿಂದ ದಿನಸಿ ಕಿಟ್ ವಿತರಣೆ
ಚಿಂಚೋಳಿ: ರಮಝಾನ್ ಮಾಸವು ಉಪವಾಸ, ಪ್ರಾರ್ಥನೆ ಹಾಗೂ ದಾನಧರ್ಮದ ಸಾರವನ್ನು ಸಾರುವ ಪವಿತ್ರ ಹಬ್ಬವಾಗಿದ್ದು, ಅದೇ ಆತ್ಮೀಯತೆಯೊಂದಿಗೆ ವಿವಿಧ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಸೇವಾ ಕಾರ್ಯ ನೆರವೇರಿಸಲಾಗಿದೆ ಎಂದು ಮಣ್ಣೂರು ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರೂಕ್ ಮಣ್ಣೂರ ಹೇಳಿದರು. ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ, ದಸ್ತಾಪೂರ, ಹಾಗೂ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು. ಯಾವುದೇ ಹಬ್ಬ ಹರಿದಿನಗಳಿಗೂ ಅದರದ್ದೇ ಆದ ಮಹತ್ವ ಸಂಪ್ರದಾಯವಿದ್ದು, ಎಲ್ಲರೂ ಸೌಹಾರ್ಧತೆಯಿಂದ ಹಬ್ಬಗಳನ್ನು ಆಚರಿಸಬೇಕೆಂದು ಕರೆ ನೀಡಿದರು. ಸಾಲೆಬೀರನಳ್ಳಿ ಗ್ರಾಮದ ಮುಸ್ಲಿಂ ಸಮಾಜದ ಅಧ್ಯಕ್ಷ ಜಮೀರೊದ್ದಿನ ಪಟೇಲ್ ಅವರು ಮಾತನಾಡಿ, ಡಾ. ಫಾರುಕ್ ಮಣ್ಣೂರ ಅವರು ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಸಹಾಯ ಮಾಡಲು ದವಸ ಧಾನ್ಯಗಳನ್ನೊಳಗೊಂಡ ಆಹಾರ ಕಿಟ್ಗಳನ್ನು ವಿತರಿಸಲಾಗುತ್ತದೆ, ಹಬ್ಬದ ಆಚರಣೆಗೆ ಬೆಂಬಲ ನೀಡುತ್ತಿರುವದು ಸಂತೋಷವಾಗುತ್ತಿದೆ ಎಂದರು. ಸಾಲೇಬೀರನಳ್ಳಿ ಗ್ರಾಮದ ಮಸ್ಜಿದ್ ನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು. ಈ ಸಂದರ್ಭದಲ್ಲಿ ಕೆ.ಎಂ .ಡಿ.ಸಿ ನಿಗಮದ ಮಾಜಿ ನಿರ್ದೆಶಕರು ಸದ್ದಾಂ ವಜೀರಗಾಂವ, ಬುರಾನ ಪಟೇಲ್, ಶೇಕ ಅಹ್ಮದ ಪಟೇಲ್, ನವಾಜ್ ಮೌಜನ್, ಯಾಸೀನ್ ನಾಗೂರ, ಇಮಾಮ ಸಾಬ ,ಸಂಜೀವಕುಮಾರ ಪಾಟೀಲ್ ಸೇರಿಂದತೆ ಅನೇಕರು ಉಪಸ್ಥಿತರಿದ್ದರು. ಸಮಾಜದಲ್ಲಿ ಎಲ್ಲರೂ ಸಮಾನತೆಯಿಂದ ಬದುಕಬೇಕು. ಇರುವವರು ಇಲ್ಲದವರಿಗೆ ಸಹಾಯ ಮಾಡಬೇಕು. ಸಮಾನತೆಯಿಂದ ಎಲ್ಲರೂ ಹಬ್ಬ ಆಚರಣೆ ಮಾಡೋಣ. -ಡಾ.ಫಾರೂಕು ಮಣ್ಣೂರ, ಸಮಾಜ ಸೇವಕರು ಕಲಬುರಗಿ
ಗಾಢ ನಿದ್ರೆಗೆ ಜಾರಲು ಇಲ್ಲಿವೆ ಸುಲಭ ಉಪಾಯಗಳು: ಇಂದೇ ಪ್ರಯತ್ನಿಸಿ
ಇಂದಿನ ವೇಗವಾದ ಜೀವನಶೈಲಿಯಲ್ಲಿ ಅನೇಕರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಒತ್ತಡ, ಅತಿಯಾದ ಮೊಬೈಲ್ ಬಳಕೆ ಮತ್ತು ದೈಹಿಕ ವ್ಯಾಯಾಮದ ಕೊರತೆ ಇದರ ಪ್ರಮುಖ ಕಾರಣಗಳಾಗಿವೆ ಎಂದು ತಜ್ಞರು ಹೇಳುತ್ತಾರೆ. ಇದರ ಜೊತೆಗೆ ನಾವು ತೆಗೆದುಕೊಳ್ಳುವ ಆಹಾರವೂ ಕೂಡ ನಿದ್ರೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ತಜ್ಞರ ಪ್ರಕಾರ ಕೆಲವು ಆಹಾರ ಪದಾರ್ಥಗಳು ಉತ್ತಮ
ವಿಜಯನಗರ | ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ
ವಿಜಯನಗರ/ಹೊಸಪೇಟೆ : ನಗರದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ, ಸಂಭ್ರಮ ಮತ್ತು ಸಹೋದರತೆಯ ವಾತಾವರಣದಲ್ಲಿ ಆಚರಿಸಿದರು. ಒಂದು ತಿಂಗಳ ಉಪವಾಸ ಪೂರ್ಣಗೊಳಿಸಿದ ನಂತರ ಚಂದ್ರದರ್ಶನದೊಂದಿಗೆ ಮಸೀದಿಗಳಲ್ಲಿ ಹಾಗೂ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ನಮಾಝ್ ಸಲ್ಲಿಸಿ, ವಿಶೇಷ ಪ್ರಾರ್ಥನೆಗಳನ್ನು ನೆರವೇರಿಸಿದರು. ನಗರದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಮುಸ್ಲಿಂ ಬಾಂಧವರು ಅಂಬೇಡ್ಕರ್ ಸರ್ಕಲ್ ಸಮೀಪದ ಈದ್ಗಾ ಮೈದಾನದಲ್ಲಿ ಕೂಡಿಕೊಂಡು, ಝಕಾತ್ (ದಾನ) ನೀಡುವ ಮೂಲಕ ಧಾರ್ಮಿಕ ಆಚರಣೆಗಳಲ್ಲಿ ತೊಡಗಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ ಪರಸ್ಪರ ಅಲಿಂಗಿಸಿಕೊಂಡು “ಈದ್ ಮುಬಾರಕ್” ಎಂದು ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬದ ಸಂತಸ ಹಂಚಿಕೊಂಡರು. ಈದ್ಗಾ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಅಂಜುಮನ್ ಖಿದ್ಮತೆ ಇಸ್ಲಾಂ ಸಮಿತಿಯ ಅಧ್ಯಕ್ಷರಾದ ಎಚ್.ಎನ್.ಮುಹಮ್ಮದ್ ಇಮಾಮ್ ನಿಯಾಜಿ ಅವರು ಮಾತನಾಡಿದರು. ನಗರದ ಆರ್.ಟಿ.ಓ. ಕಚೇರಿ ಹಿಂಭಾಗದ ಈದ್ಗಾ ಮೈದಾನ, ಬಸ್ ಡಿಪೋ ಸಮೀಪದ ಮೈದಾನ, ಗುಲಾಬ್ ಷಾ ವಲಿ ದರ್ಗಾ ಈದ್ಗಾ, ಚಿತ್ತವಾಡ್ಗಿ, ಕಾರಿಗನೂರು, ನಾಗೇನಹಳ್ಳಿ ಹಾಗೂ ಟಿ.ಬಿ. ಡ್ಯಾಮ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಹ ಭಕ್ತರು ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನಾ ಕಾರ್ಯಕ್ರಮದಲ್ಲಿ ಅಂಜುಮನ್ ಸಮಿತಿಯ ಉಪಾಧ್ಯಕ್ಷ ಎಮ್.ಎಮ್. ಫೈರೋಜ್ ಖಾನ್, ಕಾರ್ಯದರ್ಶಿ ಅಬೂಬಕ್ಕರ್ ಅಶ್ರಫಿ, ಖಜಾಂಚಿ ಅನ್ಸರ್ ಭಾಷಾ, ಜಂಟಿ ಕಾರ್ಯದರ್ಶಿ ಡಾ. ದುರ್ವೇಶ್ ಮೈನುದ್ದೀನ್ ಸೇರಿದಂತೆ ಸಮಿತಿಯ ಸದಸ್ಯರು, ಸಮಾಜದ ಮುಖಂಡರು ಹಾಗೂ ಸಾವಿರಾರು ಮಂದಿ ಭಾಗವಹಿಸಿದ್ದರು.
ಕಲಬುರಗಿಯ ಎಲ್ಲೆಡೆ ಶಾಂತಿ- ಸಹಬಾಳ್ವೆಯ 'ಈದುಲ್ ಫಿತ್ರ್' ಆಚರಣೆ
ಕಲಬುರಗಿ: ಮುಸ್ಲಿಂ ಭಾಂದವರು ಶಾಂತಿ ಸಹಬಾಳ್ವೆಯ ಸಂಕೇತವಾದ 'ಈದುಲ್ ಫಿತ್ರ್' (ರಂಝಾನ್) ಹಬ್ಬವನ್ನು ಶನಿವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು. ತಿಂಗಳ ಪೂರ್ತಿ ಉಪವಾಸ ವೃತ ಆಚರಿಸಿದ ಮುಸಲ್ಮಾನರು ಶನಿವಾರ ಸಮೀಪದ ಈದ್ಗಾ ಮೈದಾನಗಳಲ್ಲಿ ಸೇರಿಕೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಶ್ವಶಾಂತಿ, ಭಾತೃತ್ವ, ಸಹಬಾಳ್ವೆ ಹಾಗೂ ಯುದ್ಧ ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ, ಮಾನವೀಯತೆ ಕೊಲ್ಲುವ ಯುದ್ಧವನ್ನು ಕೊನೆಗಾಣಿಸಬೇಕು ಎಂದು ವಿಶೇಷವಾಗಿ ಪ್ರಾರ್ಥಿಸಿದರು. ನಮಾಝ್ ನೆರವೇರಿಸಿದ ಬಳಿಕ ಬಡವ-ನಿರ್ಗತಿಕರಿಗೆ ದಿನಸಿ ವಿತರಣೆ ಮಾಡಿ ಗಮನ ಸೆಳೆದರೆ, ಝಕಾತ್ (ದಾನ) ಮಾಡಿದರು. ಪುರುಷರು, ಮಹಿಳೆಯರು ವಿಶೇಷ ಉಡುಗೆಗಳಲ್ಲಿ ಗಮನ ಸೆಳೆದರು. ಮಕ್ಕಳು ಸಹ ಆಕರ್ಷಕ ಉಡುಗೆ ತೊಡುಗೆಗಳಿಂದ ಆಕರ್ಷಿಸಿದರು. ಪ್ರಾರ್ಥನೆ ಬಳಿಕ ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸೇಡಂನಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಆಳಂದದಲ್ಲಿ ಶಾಸಕ ಬಿ.ಆರ್ ಪಾಟೀಲ್, ಜೇವರ್ಗಿಯಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯ್ ಸಿಂಗ್, ಅಫಜಲಪುರದಲ್ಲಿ ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್, ಕಲಬುರಗಿ ನಗರದಲ್ಲಿ ಕಾಂಗ್ರೆಸ್ ಮುಖಂಡ ಫರಾಜ್ ಉಲ್ ಇಸ್ಲಾಂ ಅವರು ಮುಸ್ಲಿಂ ಬಾಂಧವರಿಗೆ ಶುಭಾಶಯಗಳನ್ನು ತಿಳಿಸಿದರು. ಬಳಿಕ ಶಿರ್ ಕುರ್ಮಾ, ಖಾದ್ಯಗಳು, ಸಿಹಿ ತಿನಿಸುಗಳು, ನಾನಾ ರೀತಿಯ ವಿಶೇಷ ಮಾಂಸಾಹಾರ ಪದಾರ್ಥಗಳು ಸವಿದು ಸಂಭ್ರಮದಿಂದ ಹಬ್ಬ ಆಚರಿಸಿದರು. ಕಲಬುರಗಿ ನಗರದಲ್ಲಿ ಆಳಂದ ಚೆಕ್ ಪೋಸ್ಟ್ ಸಮೀಪದ ಈದ್ಗಾ, ರಾಜಾಪುರ ಈದ್ಗಾ ಮೈದಾನ, ದರ್ಗಾ ಮೈದಾನ, ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ, ವೈದ್ಯ ಡಾ.ಫಾರುಕ್ ಮಣೂರ, ಡಾ. ಅಜಗರ್ ಚುಲಬುಲ್, ಶಕೀಲ್ ಸರಡಗಿ, ಮೌಲಾನಾ ವಿಖಾರ್ ಆಸರ್ಫಿ, ಸೇರಿದಂತೆ ಹಲವು ಮುಖಂಡರು ಇದ್ದರು.
ಕೇರಳದಲ್ಲಿ ಕಾಂಗ್ರೆಸ್, ರಾಹುಲ್ ಗಾಂಧಿ ’ಬಿಜೆಪಿಯ ಬಿ-ಟೀಂ’ : ಚುನಾವಣೆ ಹೊಸ್ತಿಲಲ್ಲಿ ಸಿಎಂ ಪಿಣರಾಯಿ ಗಂಭೀರ ಆರೋಪ
Congress BJP B Team : ಕೇರಳದ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗಂಭೀರ ಆರೋಪವನ್ನು ಮಾಡಿದ್ದಾರೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ, ಬಿಜೆಪಿಯ ಬಿ-ಟೀಮ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅಲ್ಲಿ ಚುನಾವಣೆ ನಡೆಯಲಿದೆ.
`ಈ ಬಾರಿ ಸುಲಭವಿಲ್ಲ': ಆರ್ ಸಿಬಿ ಸಹ ಆಟಗಾರರಿಗೆ ವಿರಾಟ್ ಕೊಹ್ಲಿ ಈ ಮಾತು ಹೇಳಿದ್ದು ಯಾಕೆ?
Virat Kohli Statement- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ತಂಡದ ಹಿರಿಯ ಮತ್ತು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ತಮ್ಮ ತಂಡದ ಆಟಗಾರರನ್ನು ಉದ್ದೇಶಿಸಿಕಳೆದ ಬಾರಿ ಪ್ರಶಸ್ತಿ ಗೆದ್ದಿರುವುದರಿಂದ ಈ ಬಾರಿ ಪೈಪೋಟಿ ಮತ್ತಷ್ಟು ಕಠಿಣವಾಗಲಿದೆ, ಆದ್ದರಿಂದ ಪ್ರತಿಯೊಬ್ಬರೂ 120% ಶ್ರಮ ಹಾಕಬೇಕು ಎಂದು ಕರೆ ನೀಡಿದ್ದಾರೆ.
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ
ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇರಾನ್ ಅಧ್ಯಕ್ಷರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಪ್ರಮುಖ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಈ ಪ್ರದೇಶದ
ಚಿಂಚೋಳಿಯಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ
ಚಿಂಚೋಳಿ: ಒಂದು ತಿಂಗಳ ಕಾಲ ಶ್ರದ್ಧಾಭಕ್ತಿ ಹಾಗೂ ಕಠಿಣ ಉಪವಾಸ ವೃತವನ್ನು ಪೂರೈಸಿದ ಮುಸ್ಲಿಂ ಬಾಂಧವರು ಇಂದು ಸಡಗರ-ಸಂಭ್ರಮದಿಂದ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು. ತಾಲೂಕಿನ ದಸ್ತಾಪುರ, ಸುಲೇಪೇಟ, ಚಿಮನಚೋಡ್, ಚಂದಾಪುರ ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮಗಳಲ್ಲಿ ಬೆಳ್ಳಂಬೆಳಗ್ಗೆ ಹೊಸ ಬಟ್ಟೆ ಧರಿಸಿ, ಸುಗಂಧ ದ್ರವ್ಯಗಳನ್ನು ಹಚ್ಚಿಕೊಂಡು ಮಸೀದಿ ಹಾಗೂ ಈದ್ಗಾ ಮೈದಾನಗಳತ್ತ ಸಾಗಿದ ಸಹಸ್ರಾರು ಬಾಂಧವರು, ಸಾಮೂಹಿಕವಾಗಿ ಈದ್ ನಮಾಜ್ ಮಾಡಿದರು. ನಮಾಝ್ ಮುಗಿದ ನಂತರ ಒಬ್ಬರಿಗೊಬ್ಬರು ಅಪ್ಪಿಕೊಂಡು 'ಈದ್ ಮುಬಾರಕ್' ಎಂದು ಶುಭಾಶಯ ವಿನಿಮಯ ಮಾಡಿಕೊಂಡ ದೃಶ್ಯಗಳು ಮನಮೋಹಕವಾಗಿದ್ದವು. ಬಡವರಿಗೆ ದಾನ ಧರ್ಮಗಳನ್ನು ಮಾಡುವ ಮೂಲಕ ಹಸಿವಿಲ್ಲದ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದು, ಈ ಬಾರಿಯ ಹಬ್ಬದ ವಿಶೇಷವಾಗಿತ್ತು. ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಅವರು ಶುಭಕೋರಿದರು. ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಮ್.ಬಾರಿ, ಅಬ್ದುಲ್ ಬಾಸಿದ್, ಅನ್ವರ್ ಖತಿಬ್, ಅನಿಲ್ ಜಮಾದಾರ್, ಲಕ್ಷ್ಮಣ್ ಅವುಂಟಿ, ಬಾಬುರಾವ ಪಾಟೀಲ್, ಶರಣು ಪಾಟೀಲ್, ಶೈಲೇಶ್ ಬೆಲದಾಳೆ, ನಾಗೇಶ್ ಗುಣಾಜಿ, ಅಜಿತ್ ಪಾಟೀಲ್, ಸಂತೋಷ್ ಗುತೆದಾರ, ಸಂತೋಷ, ತುಕಾರಾಮ ಪವಾರ, ರಾಮ್ಶೆಟ್ಟಿ ಪವಾರ, ಅಯೂಬ್ ಖಾನ್, ಮೆಹಮೂದ ಅಲಿ, ಹಸನ ಹಾಶ್ಮಿ, ಆದಿಲ್ ಖಾಜಿ, ಮಖಬುಲ್ ಖಾನ್ ಸೇರಿದಂತೆ ಇತರರು ಇದ್ದರು.
ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು
ಬೆಳ್ತಂಗಡಿ : ನದಿಯಲ್ಲಿ ಈಜಲು ಹೋದ ಯುವಕನೋರ್ವ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಕುವೆಟ್ಟು ಗ್ರಾಮದ ಸುನ್ನತ್ಕೆರೆ ನಿವಾಸಿ ಇರ್ಫಾನ್ (19) ಮೃತ ಯುವಕ ಎಂದು ಗುರುತಿಸಲಾಗಿದೆ. ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಇರುವ ನದಿಗೆ ಇಂದು ಸಂಜೆ 4 ಗಂಟೆಯ ಸುಮಾರಿಗೆ ಈಜಲು ಹೋಗಿದ್ದ ಇರ್ಫಾನ್ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ವೇಳೆ ಸ್ಥಳೀಯ ಯುವಕರು ನೀರಿನಲ್ಲಿ ಮುಳುಗಿದ್ದ ಇರ್ಫಾನ್ ನನ್ನು ರಕ್ಷಿಸಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹ್ಯಾಂಡ್ಬಾಲ್ ಕ್ರೀಡಾಕೂಟಕ್ಕೆ ಕಲಬುರಗಿಯ ಇಬ್ಬರು ಆಯ್ಕೆ
ಕಲಬುರಗಿ: ಹ್ಯಾಂಡ್ಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ 54ನೇ ಸೀನಿಯರ್ ಪುರುಷರ ರಾಷ್ಟ್ರೀಯ ಹ್ಯಾಂಡ್ಬಾಲ್ ಕ್ರೀಡಾಕೂಟಕ್ಕೆ ಕಲಬುರಗಿ ಜಿಲ್ಲೆಯ ಇಬ್ಬರು ಪ್ರತಿಭಾವಂತ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಶಶಾಂಕ್ ಎಸ್. ಪಾಟೀಲ್ ಮತ್ತು ಅಂಕುಶ್ ಬಿ. ಯು. ಅವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದು, ಇವರ ಆಯ್ಕೆಯಿಂದ ಜಿಲ್ಲೆಯ ಕ್ರೀಡಾ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಕ್ರೀಡಾಪಟುಗಳ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ್ವರ, ಜಿಲ್ಲಾ ಹ್ಯಾಂಡ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಈರಣ್ಣ ಪಾಟೀಲ್ ಜಳಕಿ, ಕಾರ್ಯದರ್ಶಿ ದತ್ತಾತ್ರೆಯ ಕೆ. ಜೇವರಗಿ, ಹಾಕಿ ತರಬೇತಿದಾರ ಸಂಜಯ ಬಾಣದ್ ಹಾಗೂ ಬಾಸ್ಕೆಟ್ಬಾಲ್ ತರಬೇತಿದಾರ ಪ್ರವೀಣ್ ಕುಮಾರ್ ಪುಣೆ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಯಚೂರಿನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ
ರಾಯಚೂರು : ಈದುಲ್ ಫಿತ್ರ್ ಹಬ್ಬದ ಅಂಗವಾಗಿ ನಗರದ ಅರಬ್ ಮೊಹಲ್ಲಾ ಹಾಗೂ ಯಕ್ಲಾಸಪೂರು ಬಡಾವಣೆಯಲ್ಲಿನ ಹೊಸ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ನಮಾಝ್ ಮಾಡಿ ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅರಬ್ ಮೊಹಲ್ಲಾ ಬಡಾವಣೆಯ ಈದ್ಗಾ ಮೈದಾನದಲ್ಲಿ 9 ಗಂಟೆಗೆ ಹಾಗೂ ಯಕ್ಲಾಸಪೂರ ಈದ್ಗಾ ಮೈದಾನದಲ್ಲಿ 8:30ರಿಂದ 9;30 ಗಂಟೆಯ ವರೆಗೆ ಪ್ರಾರ್ಥನೆ ಸಲ್ಲಿಸಿದರು. ಇಸ್ಲಾಮಿಕ್ ಕ್ಯಾಂಲಡರ್ ನ ರಮಝಾನ್ ತಿಂಗಳ ಪೂರ್ತಿ ಉಪವಾಸ ಆಚರಿಸಿದ ಬಳಿಕ ಶವ್ವಾಲ್ ತಿಂಗಳ ಮೊದಲನೇ ದಿನ ಈ ಹಬ್ಬ ಆವರಿಸಲಾಗುತ್ತಿದ್ದು ಸಾಮೂಹಿಕ ಪ್ರಾರ್ಥನೆಯಲ್ಲಿ ನಮಾಝ್ ಮಾಡಿ ರಮಝಾನ್ ಹಬ್ಬಕ್ಕೆ ತೆರೆ ಎಳೆದರು. ಮೌಲ್ವಿಗಳು ಕುರಾನ್ ಪಠಣ ಮಾಡಿದರು. ಸಾಮೂಹಿಕ ಪ್ರಾರ್ಥನೆ ನಂತರ ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಕುಡಿಯುವ ನೀರು ಹಾಗೂ ಕೆಲವರು ತಂಪು ಪಾನೀಯ ವ್ಯವಸ್ಥೆ ಮಾಡಿದ್ದರು. ಗಣ್ಯರಿಂದ ಶುಭಾಶಯ : ಈದ್ಗಾ ಮೈದಾನದ ಬಳಿ ಹಾಕಿದ ಶಾಮಿಯಾನದಲ್ಲಿ ಸಚಿವ ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ ನಾಯಕ ಸೇರಿದಂತೆ ಗಣ್ಯರು ನಮಾಝ್ ಕಾರ್ಯಕ್ರಮ ಆಲಿಸುತ್ತಾ ನಂತರ ನೆರೆದ ಮುಸ್ಲಿಂ ಬಾಂಧವರ ಜೊತೆಗೆ ಆಲಿಂಗನ ಮಾಡಿ ಈದ್ ಮುಬಾರಕ್ ಎನ್ನುತ್ತಾ ಶುಭ ಕೋರಿದರು. ಅರಬ್ ಮೊಹಲ್ಲಾ ಬಳಿಕ ಈದ್ಗಾ ಮೈದಾನ ಚಿಕ್ಕದಾಗಿರುವ ಕಾರಣ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯ ಮೇಲೆ ನಮಾಝ್ ಮಾಡಲಾಗುತ್ತಿತ್ತು ಇದರಿಂದ ಕೆಲಕಾಲ ಸಂಚಾರಕ್ಕೆ ಸಮಸ್ಯೆಯಾಗಿತ್ತು ಹೀಗಾಗಿ ಮತ್ತೊಂದು ಈದ್ಗಾ ಮೈದಾನದ ಬೇಡಿಕೆಯಂತೆ ನಗರದ ಹೊರವಲಯದ ಯಕ್ಲಾಸಪೂರನಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಕಳೆದ ವರ್ಷ ಅರೆಬರೆ ಕಾಮಗಾರಿ ಮಾಡಿದ್ದರೂ ನಮಾಝ್ ಮಾಡಲಾಗಿತ್ತು. ಈ ಬಾರಿ ಸಂಪೂರ್ಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು ಹೀಗಾಗಿ ವಾಹನ ನಿಲುಗಡೆಗಾಗಿ ಜಾಲಿ ಗಿಡಗಳನ್ನು ಸ್ವಚ್ಛಗೊಳಿಸಿ ಬೃಹತ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ
ರಾಜ್ಯದಲ್ಲಿ ಖಾಸಗಿ ಬಸ್ಸುಗಳ ಪ್ರಯಾಣ ದಿನೇ ದಿನೇ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್ಗಳ ಅಪಘಾತಗಳ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ಅಧಿಕಾರಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕರ್ನಾಟಕದಲ್ಲಿ ರಸ್ತೆ ಸುರಕ್ಷತೆಯ ನಿಯಮಗಳ ಜಾರಿ, ವಾಹನಗಳ ನಿರ್ವಹಣೆ ಹಾಗೂ ಬಸ್ ಮಾಲೀಕರ ಹೊಣೆಗಾರಿಕೆಯ ಬಗ್ಗೆ ಈಗ ಗಂಭೀರವಾದ ಪ್ರಶ್ನೆಗಳು ಎದ್ದಿವೆ. ದಿ ನ್ಯೂ
ಕೋಮು ಪ್ರಚೋದನಾಕಾರಿ ಭಾಷಣ:ಕರಾವಳಿಯಲ್ಲಿ 4 ವರ್ಷಗಳಲ್ಲಿ 38 ಮಂದಿ ವಿರುದ್ಧ ಪ್ರಕರಣ
ಕೋಮು ಗಲಭೆಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ಸ್ಥಾಪನೆ ಮಾಡಲಾಗಿದೆ. ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 3 ಘಟಕಗಳನ್ನು ಹೊಂದಿದೆ. ವಿಶೇಷ ಕಾರ್ಯಪಡೆ ದ್ವೇಷ ಭಾಷಣ, ಉದ್ರೇಕಕಾರಿ ಘಟನೆಗಳು ಮತ್ತು ಕೋಮು ಸಂಬಂಧಿತ ಘಟನೆಗಳಿಗಾಗಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಮತ್ತು ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಮೇಲ್ವಿಚಾರಣೆ ಮಾಡಲು ತಾಂತ್ರಿಕ ಕೋಶವನ್ನು ಒಳಗೊಂಡ ಗುಪ್ತಚರ ಘಟಕವನ್ನು ಹೊಂದಿವೆ.
ಮಾ.23ರಿಂದ ಮಡವೂರು ಸಿಎಂ ವಲಿಯುಲ್ಲಾಹಿ ಮಖಾಂ ಉರೂಸ್
ಕಲ್ಲಿಕೋಟೆ: ವಲಿಯುಲ್ಲಾಹಿ ಖುತುಬುಝ್ಝಮಾನ್ ಸಿ ಎಂ ಅಬೂಬಕರ್ ಮುಸ್ಲಿಯಾರ್ ಮಡವೂರು ಇವರ 36 ನೇ ಉರೂಸ್ ಮಾ.23ರಿಂದ ಎ. 2 ರತನಕ ವಿಜೃಂಬಣೆಯಿಂದ ನಡೆಯಲಿದೆ. ಮಾ. 23ರಂದು ಬೆಳಿಗ್ಗೆ 9:30 ಕ್ಕೆ ಸಮಸ್ತದ ಅಧ್ಯಕ್ಷ ಸೈಯದ್ ಜಿಪ್ರಿ ಮುತ್ತು ಕೋಯ ತಂಙಳ್ ನೇತೃತ್ವದಲ್ಲಿ ಮಖಾಂ ಝಿಯಾರತ್ ನೊಂದಿಗೆ ಉರೂಸ್ ಗೆ ಚಾಲನೆ ದೊರಕಲಿದೆ. ಸೈಯದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ದ್ವಜಾರೋಹಣ ಮಾಡಲಿದ್ದಾರೆ. ಅತಾವುಲ್ಲಾ ತಂಙಳ್ ಉದ್ಯಾವರ ನೇತೃತ್ವದಲ್ಲಿ ಕುರ್ಆನ್ ಪಾರಾಯಣ ನಡೆಯಲಿದೆ. ಮಾ. 25ರ ರಾತ್ರಿ 7ಕ್ಕೆ ಮಡವೂರ್ ಮೌಲಿದ್ ಪಾರಾಯಣ ನಡೆಯಲಿದೆ. ಮಾ.26ರ ರಾತ್ರಿ ಸ್ವಲಾತ್ ಮಜ್ಲಿಸ್ ಗೆ ಪಿಕೆ ಮುಹಮ್ಮದ್ ಬಾಖವಿ ವಾವಾಡ್ ನೇತೃತ್ವ ನೀಡಲಿದ್ದಾರೆ. ಮಾ.27ರ ರಾತ್ರಿ ಬುರ್ದಾ ಮಜ್ಲಿಸ್ ನಡೆಯಲಿದೆ. ಮಾ.28ರ ರಾತ್ರಿ ಅಬ್ದುಲ್ ಮಜೀದ್ ಬಾಖವಿ ತಲಂಗರ ಅನುಸ್ಮರಣಾ ಭಾಷಣ ಮಾಡಲಿದ್ದಾರೆ. ಮಾ.29ರ ರಾತ್ರಿ 7 ಘಂಟೆಗೆ ಸೈಯದ್ ಮುಹಮ್ಮದ್ ಕೋಯ ಜಮಲುಲ್ಲೈಲಿ ತಂಙಳ್ ನೇತೃತ್ವದಲ್ಲಿ ಮಜ್ಲಿಸ್ ನ್ನೂರು ನಡೆಯಲಿದೆ. ಮಾ.30ರ ರಾತ್ರಿ 7 ಘಂಟೆಗೆ ಬಶೀರ್ ಪೈಝಿ ದೇಶಮಂಗಳಂ ನೇತೃತ್ವದಲ್ಲಿ ಇಷ್ಕ್ ಮಜ್ಲಿಸ್ ನಡೆಯಲಿದೆ. ಮಾ.31ರಂದು ಸಿ ಎಂ ಮಖಾಂ ಶರೀಫ್ ಅಧೀನದ ಜಾಮಿಅ ಅಶ್ಹರಿಯ್ಯ ದಲ್ಲಿ ಕಲಿತ ಉಲಮಾಗಳಿಗೆ ಅಬ್ಬಾಸ್ ಅಲಿ ತಂಙಳ್ ಪಾಣಕ್ಕಾಡ್ ಅಶ್ಹರಿಯ್ಯ ಸನದು ಪ್ರದಾನಿಸಲಿದ್ದಾರೆ. ಎ.1ರ ರಾತ್ರಿ 7ಕ್ಕೆ ಧಿಕ್ರ್ ದುಹಾ ಸಮ್ಮೇಳನವು ಸೈಯದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನಾಸಿರ್ ಹಯ್ಯ್ ತಂಙಳ್ ಪಾಣಕ್ಕಾಡ್ ರವರ ದುಹಾದೊಂದಿಗೆ ಪಾಣಕ್ಕಾಡ್ ಸೈಯದ್ ಸ್ವಾದಿಕಲಿ ತಂಙಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಸಮಸ್ತ ಕಾರ್ಯದರ್ಶಿ ಆಲಿಕುಟ್ಟಿ ಉಸ್ತಾದ್ ಹಾಗೂ ಮುಖ್ಯ ಭಾಷಣಗಾರರಾಗಿ ಮೂಡಿಗೆರೆ ಖಾಝಿ ಕೊಯ್ಯೋಡು ಉಮರ್ ಮುಸ್ಲಿಯಾರ್ ಆಗಮಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕದಿಂದ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ , ಕುಕ್ಕಾಜೆ ತಂಙಳ್, ಬೆಳ್ತಂಗಡಿ ತಂಙಳ್ , ಉಸ್ಮಾನ್ ಪೈಝಿ ತೋಡಾರು, ಎಸ್ ಬಿ ಮುಹಮ್ಮದ್ ದಾರಿಮಿ ಉಪ್ಪಿನಂಗಡಿ, ಅಬ್ದುಲ್ ರಹ್ಮಾನ್ ಪೈಝಿ ಪರ್ತಿಪಾಡಿ, ಹುಸೈನ್ ದಾರಿಮಿ ರೆಂಜಲಾಡಿ, ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ, ಖಾಸಿಂ ದಾರಿಮಿ ನಂದಾವರ, ಎಂ ಎಸ್ ಮುಹಮ್ಮದ್ ಮೊದಲಾದ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ. ಅಲ್ಲದೇ ಕೇರಳದ ಹಲವಾರು ಸಾದಾತ್ ಗಳು ಸೂಫಿವರ್ಯರು, ಖ್ಯಾತ ಭಾಷಣಗಾರರು, ಸಮಸ್ತದ ಕೇಂದ್ರ ಮುಶಾವರ ಸದಸ್ಯರು, ಖಾಝಿಗಳು, ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮುಖಂಡರು ಭಾಗವಹಿಸಲಿದ್ದಾರೆ. ಎ.2ರ ಬೆಳಗ್ಗೆ 6 ರಿಂದ ಸಂಜೆ 4 ತನಕ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸರಕಾರಿ ಶಾಲೆಗಳಲ್ಲಿ ‘ದಾಖಲಾತಿ ಆಂದೋಲನ’ ಕೈಗೊಳ್ಳಲು ಸಚಿವ ಮಧುಬಂಗಾರಪ್ಪ ನಿರ್ದೇಶನ
ಬೆಂಗಳೂರು : 2026-27ನೆ ಸಾಲಿನಲ್ಲಿ ಜಿಲ್ಲೆಯ ಎಲ್ಲ ಸರಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ‘ದಾಖಲಾತಿ ಆಂದೋಲನ’ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ನಿರ್ದೇಶನ ನೀಡಿದ್ದಾರೆ. ಶನಿವಾರ ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಯವರಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಯಾವ ಮಗುವು ಶಿಕ್ಷಣದಿಂದ ವಂಚಿತವಾಗದಂತೆ ಜಿಲ್ಲಾದ್ಯಂತ ವ್ಯವಸ್ಥಿತವಾಗಿ ದಾಖಲಾತಿ ಆಂದೋಲನವನ್ನು ಹಮ್ಮಿಕೊಳ್ಳಬೇಕು. ಪ್ರತಿ ಗ್ರಾಮದಲ್ಲಿ ಎಸ್ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಿಸಲು ಮನವೊಲಿಸಬೇಕು ಎಂದು ಹೇಳಿದ್ದಾರೆ. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ಗಳ ಮೂಲಕ ಶಾಲಾ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಅವರ ನೆರವು ಪಡೆಯಬೇಕು. ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಯಾವುದೇ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳಬೇಕು. ಶೈಕ್ಷಣಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ತಮ್ಮ ಸಲಹೆ ಮತ್ತು ಸೂಚನೆಗಳನ್ನು ಇಲಾಖೆಯು ಬಯಸುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ, ಮೂಲಭೂತ ಸೌಕರ್ಯಗಳ ವಿಸ್ತರಣೆ, ಶಿಕ್ಷಕರ ನೇಮಕಾತಿ, ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆಯಂತಹ ಕಾರ್ಯಕ್ರಮಗಳಿಂದ ಸರಕಾರಿ ಶಾಲೆಗಳ ಬಗ್ಗೆ ಪೋಷಕರಿಗೆ ಸಕರಾತ್ಮಕ ಮನೋಭಾವ ಮೂಡಿ ಬರುತ್ತಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಬಿಸಿಯೂಟ, ಹಾಲು ಮತ್ತು ಮೊಟ್ಟೆ ಒದಗಿಸಲಾಗುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಪೋಷಕರು ಮತ್ತು ಮಕ್ಕಳು ಬಳಸಿಕೊಂಡಲ್ಲಿ ಮಾತ್ರ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಪ್ರಗತಿಹೊಂದಲು ಸಾಧ್ಯ. ಹೀಗಾಗಿ ಸರಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಜಿಲ್ಲೆಗಳಲ್ಲಿ ‘ದಾಖಲಾತಿ ಆಂದೋಲನ’ವನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
2021ರಿಂದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಮತ್ತು ಪತ್ನಿಯ ಸಂಪತ್ತು ದ್ವಿಗುಣ
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಶುಕ್ರವಾರ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, 2021ರಲ್ಲಿ 17.27 ಕೋಟಿ ರೂ.ಗಳಷ್ಟಿದ್ದ ಅವರ ಮತ್ತು ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರ ಒಟ್ಟು ಸಂಪತ್ತು 2026ಲ್ಲಿ 35.16 ಕೋಟಿ ರೂ.ಗೆ ಏರಿಕೆಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಲುಕ್ಬಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶರ್ಮಾ ಶುಕ್ರವಾರ ತನ್ನ ನಾಮಪತ್ರದೊಂದಿಗೆ ತನ್ನ ಸಂಪತ್ತನ್ನು ಘೋಷಿಸಿ ಅಫಿಡವಿಟ್ ಸಲ್ಲಿಸಿದ್ದಾರೆ. ಅಸ್ಸಾಮಿನಲ್ಲಿ ಎ.9ರಂದು ಮತದಾನ ನಡೆಯಲಿದ್ದು,ಮೇ 4ರಂದು ಮತ ಎಣಿಕೆ ನಡೆಯಲಿದೆ. 2016ರಲ್ಲಿ ಶರ್ಮಾ ಕುಟುಂಬವು ಸುಮಾರು 6.4 ಕೋಟಿ ರೂ.ಗಳಷ್ಟು ಸಂಪತ್ತು ಹೊಂದಿತ್ತು. ಪ್ರಸ್ತುತ ಅಫಿಡವಿಟ್ನಲ್ಲಿ ಶರ್ಮಾ ತನ್ನ ಬಳಿ 2.36 ಕೋಟಿ ರೂ. ಮೌಲ್ಯದ ಚರಾಸ್ತಿಗಳು ಮಾತ್ರ ಇವೆ ಎಂದು ತಿಳಿಸಿದ್ದಾರೆ. 2021ರಲ್ಲಿ ಅವರು 1.72 ಕೋಟಿ ರೂ.ಮೌಲ್ಯದ ಚರಾಸ್ತಿಗಳನ್ನು ಹೊಂದಿದ್ದರು. ರಿನಿಕಿ ಭುಯಾನ್ ಶರ್ಮಾ ಚರ ಮತ್ತು ಸ್ಥಿರ ಆಸ್ತಿ ಎರಡನ್ನೂ ಹೊಂದಿದ್ದು, 2021ರಲ್ಲಿ 16.19 ಕೋಟಿ ರೂ.ಗಳಷ್ಟಿದ್ದ ಅದು 2026ರಲ್ಲಿ 32.79 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ವಿತ್ತವರ್ಷ 2024-25ಲ್ಲಿ ಮುಖ್ಯಮಂತ್ರಿಗಳ ಆದಾಯ 29,62,920 ರೂ.ಗಳಾಗಿದ್ದರೆ ಅವರ ಪತ್ನಿಯ ಆದಾಯ 4,19,25,000 ರೂ.ಆಗಿದೆ. ತಾನು ಬಾಂಡ್ಗಳು,ಡಿಬೆಂಚರ್ಗಳು,ಶೇರುಗಳು,ಮ್ಯೂಚ್ಯುವಲ್ ಫಂಡ್ಗಳು ಇತ್ಯಾದಿಗಳಲ್ಲಿ ಯಾವುದೇ ಹೂಡಿಕಗಳನ್ನು ಹೊಂದಿಲ್ಲ ಎಂದು ಶರ್ಮಾ ಅಫಿಡವಿಟ್ನಲ್ಲಿ ತಿಳಿಸಿದ್ದಾರೆ. ಅವರ ಪತ್ನಿ 5.10 ಕೋಟಿ ರೂ.ಗಳ ಹೂಡಿಕೆಗಳೊಂದಿಗೆ 1.77 ಕೋಟಿ ರೂ.ಗಳ ಜೀವವಿಮಾ ಪಾಲಿಸಿಯನ್ನೂ ಹೊಂದಿದ್ದಾರೆ. ಶರ್ಮಾರ ಬಳಿ 2.28 ಲಕ್ಷ ರೂ.ನಗದು ಹಣವಿದ್ದು, ನಾಲ್ಕು ಬ್ಯಾಂಕ್ ಖಾತೆಗಳಲ್ಲಿ ಒಟ್ಟು 68,01,943 ರೂ.ಗಳಿವೆ. ಪತ್ನಿಯ ಬಳಿ 3.16 ಲಕ್ಷ ನಗದು ಹಣ ಮತ್ತು ಒಟ್ಟು 74,85,248 ರೂ.ಗಳ ಬ್ಯಾಂಕ್ ಠೇವಣಿಗಳಿವೆ. ಶರ್ಮಾ 95 ಲಕ್ಷ ರೂ.ಗಳ ಬ್ಯಾಂಕ್ ಮತ್ತು ಸಾಂಸ್ಥಿಕ ಸಾಲಗಳನ್ನು ಘೋಷಿಸಿದ್ದರೆ ಅವರ ಪತ್ನಿ 15.91 ಕೋಟಿ ರೂ.ಗಳ ಸಾಲಗಳನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ ಶರ್ಮಾ ಅಥವಾ ಅವರ ಪತ್ನಿ ಯಾವುದೇ ಕೃಷಿಭೂಮಿಯನ್ನು ಹೊಂದಿಲ್ಲ. ಆದಾಗ್ಯೂ ರಿನಿಕಿ ಭುಯಾನ್ ಶರ್ಮಾ ಮೂರು ಕೃಷಿಯೇತರ ಆಸ್ತಿಗಳನ್ನು ಹೊಂದಿದ್ದಾರೆ. ಈ ಪೈಕಿ ಎರಡನ್ನು ಅವರು ಖರೀದಿಸಿದ್ದರೆ ಒಂದು ಆನುವಂಶಿಕವಾಗಿ ಬಂದಿದೆ. ಈ ಆಸ್ತಿಗಳು ಒಟ್ಟು 19.25 ಕೋಟಿ ರೂ.ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ.
ಕೃತಕ ಬುದ್ಧಿಮತ್ತೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸವಾರಿ ಮಾಡಬಾರದು : ಸಿಜೆಐ ಸೂರ್ಯಕಾಂತ್
ಬೆಂಗಳೂರು : ನ್ಯಾಯಾಂಗ ವ್ಯವಸ್ಥೆಗೆ ಕೃತಕ ಬುದ್ಧಿಮತ್ತೆ(ಎಐ) ತಾಂತ್ರಿಕತೆಯನ್ನು ಸಂಯೋಜನೆಗೊಳಿಸುವಾಗ ನ್ಯಾಯಾಂಗವನ್ನು ಮತ್ತಷ್ಟು ಸದೃಢಗೊಳಿಸುವ ರೀತಿಯಲ್ಲಿ ಇರಬೇಕೇ ಹೊರತು, ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಸವಾರಿ ಮಾಡುವಂತಿರಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ರವಿವಾರ ಇಲ್ಲಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಸಭಾಂಗಣದಲ್ಲಿ ಬಾರ್ ಅಸೋಸಿಯೇಷನ್ ಆಫ್ ಇಂಡಿಯಾ, ಕರ್ನಾಟಕ ನ್ಯಾಯಾಂಗ ಅಕಾಡೆಮಿ ಮತ್ತು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ‘ಕೃತಕ ಬುದ್ಧಿಮತ್ತೆ- ವ್ಯಾಜ್ಯಗಳ ತಡೆಗಟ್ಟುವಿಕೆ ಮತ್ತು ಇತ್ಯರ್ಥ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಗಾಧ ಪ್ರಮಾಣದ ದತ್ತಾಂಶ-ದಾಖಲಾತಿಗಳನ್ನು ನಿರ್ವಹಿಸಲು, ಮಾದರಿಗಳನ್ನು ಗುರುತಿಸಲು, ಪ್ರಕ್ರಿಯೆಗಳ ವಿಳಂಬವನ್ನು ತಗ್ಗಿಸಲು ಎಐ ಸಹಾಯಕವಾಗಬೇಕು. ಆದರೆ ಪ್ರಧಾನ ಕಾರ್ಯವಾದ ತೀರ್ಪು ಪ್ರಕಟಿಸುವಿಕೆಯನ್ನೇ ಅದು ಅತಿಕ್ರಮಿಸಬಾರದು. ತೀರ್ಪು ಪ್ರಕಟಿಸುವಿಕೆಯ ಹಂತದ ಮೇಲೆ ಎಐ ಸಾಧನಗಳಿಗೆ ಹಿಡಿತ ಸಾಧಿಸಲು ಆಸ್ಪದ ಮಾಡಿಕೊಟ್ಟರೆ ಪಾರದರ್ಶಕವಲ್ಲದ ಹಾಗೂ ಉತ್ತರದಾಯಿಯಲ್ಲದ ವ್ಯವಸ್ಥೆ ನಿರ್ಮಾಣವಾಗಲು ನಾವು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ನ್ಯಾಯಾಂಗ ಪ್ರಕ್ರಿಯೆಯ ಅಂತಿಮ ಘಟ್ಟವಾದ ತೀರ್ಪು ಪ್ರಕಟಿಸುವಿಕೆಯಲ್ಲಿ ಮನುಷ್ಯರೇ ನಿರ್ಣಾಯಕ ಪಾತ್ರ ವಹಿಸುವಂತಿರಬೇಕು. ಅಂದರೆ, ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರುಗಳೇ ತರ್ಕ ಶಕ್ತಿ ಹಾಗೂ ಅನುಭವಗಳ ವಿಶ್ಲೇಷಣೆಯ ಬೆಳಕಿನಲ್ಲಿ ತೀರ್ಪುಗಳನ್ನು ಪ್ರಕಟಿಸಬೇಕು. ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ತರುವ ಪ್ರಯೋಜನಗಳು ಮಾರ್ಗಗಳಾಗಿ ಮಾತ್ರವೇ ಬಳಕೆಯಾಗಬೇಕು. ಆದರೆ, ಯಾವ ದಿಕ್ಕಿನತ್ತ ಸಾಗಬೇಕು ಎಂಬ ದಿಕ್ಸೂಚಿಯ ಪಾತ್ರವನ್ನು ಮನುಷ್ಯನ ಬುದ್ಧಿಯೇ ನಿರ್ಧರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮಾತನಾಡಿ, ಎಐ ತಾಂತ್ರಿಕತೆಯಿಂದ ಕೆಲವು ಕ್ರಾಂತಿಕಾರಿ ಪ್ರಯೋಜನಗಳು ಆಗುತ್ತಿವೆ. ಮಾದರಿಗಳ ವಿಶ್ಲೇಷಣೆಯನ್ನು ಸಾಧ್ಯವಾಗಿಸುವ ಮೂಲಕ ಭವಿಷ್ಯದಲ್ಲಿ ತಲೆದೋರಬಹುದಾದ ವ್ಯಾಜ್ಯಗಳನ್ನು ಎಐ ನೆರವಿನಿಂದ ಮುಂಚಿತವಾಗಿಯೇ ಊಹಿಸುವುದು ಸಾಧ್ಯವಾಗಿದೆ. ಇದರಿಂದ ನ್ಯಾಯಾಂಗ ವ್ಯವಸ್ಥೆಯ ದಕ್ಷತೆ ಹೆಚ್ಚಲಿದೆ. ಎಐ ಬೆಂಬಲಿತ ವೇದಿಕೆಯಿಂದಾಗಿ ಕಡಿಮೆ ಖರ್ಚಿನಲ್ಲಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಅನುಕೂಲವಾಗಲಿದೆ. ರಾಜಿ ಸಂಧಾನಗಳ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸುವುದಕ್ಕೂ ಇದು ಸಹಾಯಕವಾಗಲಿದೆ ಎಂದು ಹೇಳಿದರು. ನ್ಯಾಯಾಂಗ ಸ್ವಾತಂತ್ರ್ಯ, ಪಾರದರ್ಶಕತೆ ಹಾಗೂ ಕಾನೂನುಬದ್ಧತೆಯ ಅಂಶಗಳು ಈಗ ಅತ್ಯಂತ ಪ್ರಮುಖವಾಗಿ ಪರಿಣಮಿಸಿವೆ. ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಎಐ ಬಳಕೆಯು ಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ತತ್ತ್ವಗಳು ಹಾಗೂ ಸೂಕ್ತ ರಕ್ಷಣೆಗಳೊಂದಿಗೆ ನಿರ್ದೇಶಿತವಾಗಬೇಕು. ವಕೀಲರೂ ಎಐ ಟೂಲ್ಗಳ ಮಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಂಗ ವ್ಯವಸ್ಥೆಯ ಪ್ರಧಾನ ಘಟಕಗಳಾದ ಪ್ರಾಮಾಣಿಕತೆ ಮತ್ತು ಜವಾಬ್ದಾರಿಗಳು ಅಬಾಧಿತವಾಗಿ ಮುಂದುವರಿಯಬೇಕು ಎಂದು ಅವರು ತಿಳಿಸಿದರು. ಬಾರ್ ಅಸೋಸಿಯೇಷನ್ ಆಫ್ ಇಂಡಿಯಾ ಅಧ್ಯಕ್ಷ ಪ್ರಶಾಂತ್ ಕುಮಾರ್ ಮಾತನಾಡಿ, ಎಐ ತಂತ್ರಜ್ಞಾನದಿಂದಾಗಿ ನ್ಯಾಯಾಲಯದ ತೀರ್ಪುಗಳನ್ನು ತ್ವರಿತವಾಗಿ ಸ್ಥಳೀಯ ಭಾಷೆಗಳಿಗೆ ಅನುವಾದ ಮಾಡುವುದು ಸಾಧ್ಯವಾಗುತ್ತಿದ್ದು, ಇದರಿಂದಾಗಿ ಸುಪ್ರೀಂ ಕೋರ್ಟಿನ ತೀರ್ಪುಗಳನ್ನು ಆಸಕ್ತಿಯಿರುವ ಹಳ್ಳಿಯ ಜನರೂ ಓದಬಹುದಾಗಿದೆ. ಇದು ವಕೀಲರಿಗೆ ತಮ್ಮ ಕಕ್ಷಿದಾರರೊಂದಿಗೆ ವ್ಯವಹರಿಸಲು ಅನುಕೂಲ ಕಲ್ಪಿಸಲಿದೆ ಎಂದರು. ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ಕೆ.ಕೆ.ವೇಣುಗೋಪಾಲ್, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕರ್ನಾಟಕದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ, ವಕೀಲರು ಸೇರಿದಂತೆ ಕಾನೂನು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರಾಮನಗರಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಾಹನದಟ್ಟಣೆಯಿಂದ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುತ್ತಾ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಪಾರ್ಕಿಂಗ್ ನಿಯಮಗಳು ಬಿಗಿಗೊಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಹಾಗೂ ನೋ ಪಾರ್ಕಿಂಗ್ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಜಾರಿಗೊಳಿಸಿದ್ದಾರೆ. ಅಲ್ಲದೆ, ಈ ನಿಯಮಗಳನ್ನು ಉಲ್ಲಂಘನೆ ಮಾಡುವವರಿಗೆ 500ರೂ ದಂಡ ವಿಧಿಸಲು ಮುಂದಾಗಿದ್ದಾರೆ.
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವಮಾತೆ ಕುರಿತು ಮಾತನಾಡುತ್ತಾ ಕನ್ನಡದ ಪ್ರಸಿದ್ಧ ಭಕ್ತಿಗೀತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಡಾ. ರಾಜ್ಕುಮಾರ್ ಅಭಿನಯದ ಶ್ರೀಕೃಷ್ಣದೇವರಾಯ ಸಿನಿಮಾದ ಶ್ರೀ ಚಾಮುಂಡೇಶ್ವರಿ ಹಾಡನ್ನು ಹಂಚಿಕೊಂಡಿರುವ ಅವರು, ವಿಶ್ವಮಾತೆಯ ಮೇಲಿನ ಅಚಲ ನಂಬಿಕೆಯು ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಚೈತನ್ಯವನ್ನು ತುಂಬುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಶ್ವಮಾತೆಯ ಮೇಲಿನ ಅಚಲ ಭಕ್ತಿ ಎಕ್ಸ್ ಖಾತೆಯಲ್ಲಿ
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ಭಾರತದ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು (Vande Bharat Express Train) ಕರ್ನಾಟಕದಲ್ಲೂ ಸೇವೆ ನೀಡುತ್ತಿವೆ. ದೇಶದ ಅನೇಕ ನಗರಗಳ ಮಧ್ಯ ವೇಗದ ಸಾರಿಗೆ ಸಂಪರ್ಕ ಕೊಂಡಿಯಾಗಿವೆ. ಈ ರೈಲು ಸಾರಿಗೆ ಸೇವೆ ಪ್ರಯಾಣಿಕರಲ್ಲಿ ತ್ವರಿತವಾಗಿ ಜನಪ್ರಿಯತೆ ಪಡೆದಿವೆ. ಇದೀಗ ಕರ್ನಾಟಕದ ವಂದೇ ಭಾರತ್ ಪ್ರಯಾಣಿಕರಿಗೆ ಮಹತ್ವದ
ಕಾಸರಗೋಡು : ಚುನಾವಣೆ ಕರ್ತವ್ಯದ ಒತ್ತಡದಿಂದ ಸರ್ಕಾರಿ ಶಿಕ್ಷಕ ಆತ್ಮಹತ್ಯೆ
ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಅನುಭವಿಸುವ ವಿಪರೀತ ಕೆಲಸದ ಒತ್ತಡಕ್ಕೆ ಕೇರಳದ ಶಿಕ್ಷಕ ಅನೀಶ್ ಜಾರ್ಜ್ ಅವರ ಆತ್ಮಹತ್ಯೆ ಸಾಕ್ಷಿಯಾಗಿದೆ. ಮತಗಟ್ಟೆ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ಅವರು, ಚುನಾವಣಾ ಪ್ರಕ್ರಿಯೆಯ ತೀವ್ರ ಒತ್ತಡದ ನಡುವೆಯೇ ಸಾವನ್ನಪ್ಪಿರುವುದು ಈಗ ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ದೇರಳಕಟ್ಟೆ| ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಅಂಡಾಶಯ ಕೋಶದ ಸವಾಲಿನ ಶಸ್ತ್ರಚಿಕಿತ್ಸೆ
ದೇರಳಕಟ್ಟೆ: ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆಯಲ್ಲಿ ಈಗಾಗಲೇ ಎರಡು ಹೆರಿಗೆ ಶಸ್ತ್ರಚಿಕಿತ್ಸೆ (LSCS) ಮಾಡಿಸಿಕೊಂಡಿರುವ ರೋಗಿಯೊಬ್ಬರಲ್ಲಿ ಪತ್ತೆ ಹಚ್ಚಿರುವ ದೊಡ್ಡ ಅಂಡಾಶಯದ ಸಿಸ್ಟ್ ಅನ್ನು ಯಶಸ್ವಿಯಾಗಿ ತೆಗೆದು ಹಾಕಲು ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು. ಲಾಪರೋಟಮಿ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಸುಮಾರು 8 ಕಿಲೋಗ್ರಾಂ 300 ಗ್ರಾಂ ತೂಕದ ದೊಡ್ಡ ಎಡ ಅಂಡಾಶಯ ಸಿಸ್ಟ್ ಅನ್ನು ತೆಗೆದು ಹಾಕುವುದರ ಜೊತೆಗೆ ಸಂಪೂರ್ಣ ಗರ್ಭಾಶಯ (ಟೋಟಲ್ ಹಿಸ್ಟೆರಕ್ಷಮಿ) ಮತ್ತು ಬಲ ಅಂಡಾಶಯ (ಊಫರೆಕ್ಟಮಿ ಮತ್ತು ಸಲ್ಟಿಂಜೆಕ್ಟಮಿ) ವನ್ನು ತೆಗೆದುಹಾಕಲಾಯಿತು. ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಪ್ರೊ. ಡಾ. ವಿಜಯಾ ಎಂ. ರೇವಣಕರ್ ಅವರ ಮಾರ್ಗದರ್ಶನದಲ್ಲಿ ಡಾ. ಪೂರ್ವಿಕಾ ಆಚಾರ್ಯರ ಸಹಕಾರದೊಂದಿಗೆ, ಈ ಕ್ಲಿಷ್ಟಕರವಾದ ಸವಾಲಿನ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಅರಿವಳಿಕೆ ತಜ್ಞ ವಿಭಾಗದ ಡಾ. ಆತ್ಮಿಕ ಮತ್ತು ಆಪರೇಷನ್ ಥಿಯೇಟರ್ ಸಿಬ್ಬಂದಿ ನರ್ಸ್ ಮಿಸ್ ದಿಲ್ಲಾ ಶಸ್ತ್ರಚಿಕಿತ್ಸೆಯ ಯಶಸ್ಸಿಗೆ ಸಹಕರಿಸಿರುತ್ತಾರೆ. ಈ ಕಠಿಣ ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯು ಯಾವುದೇ ತೊಡಕುಗಳಿಲ್ಲದೆ ಸರಾಗವಾಗಿ ಚೇತರಿಸಿಕೊಂಡಿರುತ್ತಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರು ಪ್ರೊ. ಡಾ. ಪ್ರಸನ್ನ ಕುಮಾರ್ ಶೆಟ್ಟಿ ಕೆ., ಡಾ. ಪೂಜಿತ ಮೂರ್ತಿ, ಸಹಾಯಕ ಪ್ರಾಧ್ಯಾಪಕರು, ಅನಸ್ತೇಶಿಯಾ ವಿಭಾಗದ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥರಾದ ಡಾ. ಅವನೀಶ್ ಭಂಡಾರಿ ಉಪಸ್ಥಿತರಿದ್ದರು. ಕ್ಷೇಮ ಮೆಡಿಕಲ್ ಅಕಾಡೆಮಿಯ ಡೀನ್ ಡಾ. ಬಿ. ಸಂದೀಪ್ ರೈ ಮತ್ತು ಕೆ. ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿರುವ ಡಾ. ಸುಮಲತಾ ಆರ್ ಶೆಟ್ಟಿ ಇವರು ಈ ವೈದ್ಯಕೀಯ ತಂಡವನ್ನು ಅಭಿನಂದಿಸಿದರು.
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು
ಲಂಡನ್ ನಗರದ ಅತ್ಯಂತ ಸುಂದರ ಮತ್ತು ಜನನಿಬಿಡ ರಸ್ತೆಗಳಲ್ಲಿ ಐಷಾರಾಮಿ ಕಾರುಗಳ ನಡುವೆ ನಮ್ಮ ಭಾರತದ 'ಆಟೋ ರಿಕ್ಷಾ' ಸಂಚರಿಸಿದರೆ ಹೇಗಿರುತ್ತದೆ? ಹೌದು, ಕಲ್ಪನೆ ಮಾಡಿಕೊಳ್ಳಲೂ ಸ್ವಲ್ಪ ಅಚ್ಚರಿ ಎನಿಸುವ ಈ ದೃಶ್ಯ ಈಗ ನಿಜವಾಗಿದೆ. ಬ್ರಿಟನ್ ರಾಜಧಾನಿ ಲಂಡನ್ (London) ಬೀದಿಯಲ್ಲಿ ಆಟೋ ರಿಕ್ಷಾವೊಂದು ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರ
ಹೊಸದಿಲ್ಲಿ: ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ನೆಲೆಸಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಈದ್ ಮತ್ತು ನೌರುಝ್ ಹಬ್ಬದ ಶುಭಾಶಯವನ್ನು ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಮಾತುಕತೆ ವೇಳೆ ಇರಾನ್ ನ ಪ್ರಮುಖ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಲಾಗಿದೆ. ಜಲ ಮಾರ್ಗಗಳ ಮೂಲಕ ಸಂಚಾರದ ಸ್ವಾತಂತ್ರ್ಯವನ್ನು ರಕ್ಷಿಸುವುದು ಮತ್ತು ಜಲಮಾರ್ಗಗಳು ಸುರಕ್ಷಿತವಾಗಿ ತೆರೆದಿರುವುದನ್ನು ಖಚಿತಪಡಿಸುವ ಅಗತ್ಯವನ್ನು ಪುನರುಚ್ಚರಿಸಿರುವುದಾಗಿ ಮೋದಿ ಹೇಳಿದ್ದಾರೆ. ಇರಾನ್ನಲ್ಲಿ ಇರುವ ಭಾರತೀಯರ ಸುರಕ್ಷತೆಗಾಗಿ ಇರಾನ್ ನೀಡುತ್ತಿರುವ ಸಹಕಾರವನ್ನು ಇದೇ ವೇಳೆ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. Spoke with President Dr. Masoud Pezeshkian and conveyed Eid and Nowruz greetings. We expressed hope that this festive season brings peace, stability and prosperity to West Asia. Condemned attacks on critical infrastructure in the region, which threaten regional stability and… — Narendra Modi (@narendramodi) March 21, 2026
IPL 2026 RCB Vs SRH: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಎಸ್ಆರ್ಎಚ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಟಿಕೆಟ್ ಅಧಿಕೃತ ಮಾರಾಟ ಪ್ರಕ್ರಿಯೆ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ ನೀಡಿದೆ. ಮಾರ್ಚ್ 28
ಚಂಡೀಗಢ: ಗುರುವಾರ ರಾತ್ರಿ ಮಾಲ್ಡೀವ್ಸ್ನಲ್ಲಿ ಸ್ಪೀಡ್ಬೋಟ್ ಪಲ್ಟಿಯಾಗಿ ಭಾರತದ ರ್ಯಾಲಿ ರೇಸ್ ದಿಗ್ಗಜ ಹರಿ ಸಿಂಗ್ (59) ನಾಪತ್ತೆಯಾಗಿದ್ದಾರೆ. ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹರಿ ಸಿಂಗ್ ಅವರ ಸ್ನೇಹಿತ, ಚಂಡೀಗಢ ಮೋಟಾರ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಶಶಿ ಪಾಲ್ ಸಿಂಗ್ ಗಾರ್ಚಾ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಹರಿ ಮತ್ತು ಇನ್ನೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಅವರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಶುಕ್ರವಾರ ಕತ್ತಲಾದ ಕಾರಣ ಶೋಧ ಕಾರ್ಯಚರಣೆ ಸ್ಥಗಿತಗೊಳಿಸಲಾಗಿತ್ತು ಎಂದು ಹೇಳಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಫೆಲಿಧೂ ಬಳಿ ಸ್ಪೀಡ್ಬೋಟ್ ಪಲ್ಟಿಯಾದಾಗ ಅದರಲ್ಲಿದ್ದ 7 ಜನರ ಗುಂಪಿನಲ್ಲಿ ಸಿಂಘಾನಿಯಾ ಮತ್ತು ಹರಿ ಸಿಂಗ್ ಇದ್ದರು. ಸಿಂಘಾನಿಯಾ ಮತ್ತು ಇತರರನ್ನು ರಕ್ಷಿಸಲಾಗಿದೆ. ಹರಿ ಸಿಂಗ್ ಮತ್ತು ನಾಪತ್ತೆಯಾದ ಇನ್ನೊಬ್ಬ ವ್ಯಕ್ತಿಗಾಗಿ ಹುಡುಕಾಟ ಮುಂದುವರಿದಿದೆ. ಘಟನೆಯಲ್ಲಿ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಂಬೈನಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ನಿಮ್ಮ ಹಾರೈಕೆಗಳಿಗೆ ಧನ್ಯವಾದಗಳು ಹಾಗೂ ನಾಪತ್ತೆಯಾಗಿರುವ ಮತ್ತು ಗಾಯಗೊಂಡಿರುವ ಇತರ ಸ್ನೇಹಿತರ ಕ್ಷೇಮಕ್ಕಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಸಿಂಘಾನಿಯಾ ಅವರ ಆಪ್ತ ಮೂಲಗಳು ತಿಳಿಸಿದೆ.
ಕೌಟುಂಬಿಕ ಕಲಹ: ಹಬ್ಬಕ್ಕೆಂದು ಊರಿಗೆ ಬಂದಿದ್ದ ಪತ್ನಿ, ಮಗಳು ಸೇರಿ 5ಜನರ ಮೇಲೆ ಪತಿರಾಯನಿಂದ ಆಸಿಡ್ ದಾಳಿ
ಕೌಟುಂಬಿಕ ಕಲಹದಿಂದಾಗಿ ಕೆಲ ತಿಂಗಳಿನಿಂದ ದೂರವಾಗಿದ್ದ ಪತ್ನಿ ಆಕೆಯ ಸಹೋದರಿಯ ಮನೆಗೆ ಹಬ್ಬಕ್ಕೆಂದು ಊರಿಗೆ ಬಂದಿರುವ ವಿಷಯ ತಿಳಿದ ಪತಿರಾಯ ಪತ್ನಿ, ಮಗಳು ಸೇರಿ 5 ಜನರ ಮೇಲೆ ಆಸಿಡ್ ಎರಚಿ, ಮಚ್ಚಿನಿಂದಲೂ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಘಟನೆ ಬಳಿಕ ಆರೋಪಿ ಸುಹೇಲ್ ಸ್ಥಳದಿಂದ ಪರಾರಿಯಾಗಿದ್ದು, ಗಾಯಾಳುಗಳನ್ನು ದಾವಣಗೆರೆಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಪರಾರಿಯಾಗಿರುವ ಆರೋಪಿಗಾಗಿ ಶೋಧಕಾರ್ಯ ನಡೆಯುತ್ತಿದೆ.
RCBಯ 4 ಕೋಟಿ ರೂಪಾಯಿ ಸ್ಟಾರ್ ಯಶ್ ದಯಾಳ್ ನಾಪತ್ತೆ! ಫೋನ್ ಕರೆಗೆ ಸಿಗುತ್ತಿಲ್ಲ; ತಂಡದ ಬಸ್ ನಲ್ಲೂ ಫೋಟೋವಿಲ್ಲ!
Yash Dayal Missing- ಪೋಕ್ಸೋ ಸೇರಿದಂತೆ ಗಂಭೀರ ದೌರ್ಜನ್ಯದ ಆರೋಪ ಎದುರಿಸುತ್ತಿರುವ RCBಯ ಭರವಸೆಯ ಮಧ್ಯಮ ವೇಗಿ ಯಶ್ ದಯಾಳ್ ಅವರು ಪ್ರಸ್ತುತ ನಾಪತ್ತೆಯಾಗಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಕಾನೂನು ಸಂಕಷ್ಟದಿಂದಾಗಿ ಅವರನ್ನು ಉತ್ತರ ಪ್ರದೇಶದ ದೇಶೀಯ ತಂಡದಿಂದ ಕೈಬಿಡಲಾಗಿತ್ತು. ಇದೀಗ ಮಾರ್ಚ್ 28 ರಿಂದ ಆರ್ಸಿಬಿ ಪಂದ್ಯಗಳು ಆರಂಭವಾಗಲಿದ್ದರೂ, ದಯಾಳ್ ಅಭ್ಯಾಸಕ್ಕೆ ಹಾಜರಾಗಿಲ್ಲ. ಮಾತ್ರವಲ್ಲದೆ ಫ್ರಾಂಚೈಸಿಯೊಂದಿಗೆ ಸಂಪರ್ಕದಲ್ಲಿಲ್ಲ. ತಂಡದ ಬಸ್ನಲ್ಲಿ ಅವರ ಫೋಟೋ ಇಲ್ಲದಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಮಧ್ಯಪ್ರಾಚ್ಯ ಸಂಘರ್ಷ | ಇರಾನ್ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಮತ್ತೆ ದಾಳಿ; ವರದಿ
ಟೆಹ್ರಾನ್ : ಇರಾನ್ನ ನತಾಂಝ್ ಪರಮಾಣು ಸ್ಥಾವರದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮತ್ತೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಇರಾನ್ನ ತಸ್ನಿಮ್ ಸುದ್ದಿ ಸಂಸ್ಥೆ ವರದಿ ಪ್ರಕಾರ, ಶನಿವಾರ ಬೆಳಿಗ್ಗೆ ನತಾಂಝ್ ಪರಮಾಣು ಸ್ಥಾವರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ದಾಳಿಯಿಂದ ಪರಮಾಣು ಸ್ಥಾವರದ ಸಂಕೀರ್ಣದಲ್ಲಿ ಯಾವುದೇ ಸೋರಿಕೆ ವರದಿಯಾಗಿಲ್ಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಯಾವುದೇ ಅಪಾಯವಿಲ್ಲ ಎಂದು ವರದಿಯು ತಿಳಿಸಿದೆ.
ʼದೇಶೀಯ ವಿಮಾನಗಳಲ್ಲಿ ಶೇ.60 ಉಚಿತ ಸೀಟ್ ಆಯ್ಕೆʼ: ಸರಕಾರದ ಕ್ರಮಕ್ಕೆ ವಾಯುಯಾನ ಸಂಸ್ಥೆಗಳ ವಿರೋಧ
ಹೊಸದಿಲ್ಲಿ: ದೇಶೀಯ ವಿಮಾನಗಳಲ್ಲಿ ಕನಿಷ್ಠ ಶೇ.60ರಷ್ಟು ಸೀಟ್ಗಳಿಗೆ ಹೆಚ್ಚುವರಿ ಶುಲ್ಕಗಳನ್ನು ವಿಧಿಸದಂತೆ ಸರಕಾರದ ಮಾ.18ರ ನಿರ್ದೇಶನವನ್ನು ಇಂಡಿಗೋ,ಏರ್ಇಂಡಿಯಾ ಮತ್ತು ಸ್ಪೈಸ್ಜೆಟ್ ಬಲವಾಗಿ ವಿರೋಧಿಸಿವೆ. ಈ ಕ್ರಮವು ತಮ್ಮ ಆದಾಯ ನಷ್ಟವನ್ನು ತುಂಬಿಕೊಳ್ಳಲು ವಿಮಾನಯಾನ ದರಗಳನ್ನು ಹೆಚ್ಚಿಸುವುದನ್ನು ಅನಿವಾರ್ಯವಾಗಿಸಲಿದೆ ಎಂದು ಅವು ಪ್ರತಿಪಾದಿಸಿವೆ. ಮೂರು ವಿಮಾನಯಾನ ಸಂಸ್ಥೆಗಳನ್ನು ಪ್ರತಿನಿಧಿಸುವ ಭಾರತೀಯ ವಿಮಾನಯಾನ ಸಂಸ್ಥೆಗಳ ಒಕ್ಕೂಟವು (ಎಫ್ಐಎ) ಕೂಡ ಈ ನಿರ್ಧಾರವನ್ನು ಹಿಂದೆಗೆದುಕೊಳ್ಳುವಂತೆ ನಾಗರಿಕ ವಾಯುಯಾನ ಸಚಿವಾಲಯವನ್ನು ಒತ್ತಾಯಿಸಿದೆ. ಸರಕಾರದ ಈ ನಿರ್ದೇಶನವು ವಿಮಾನಯಾನ ಕ್ಷೇತ್ರದ ಮೇಲೆ ಅನುದ್ದೇಶಿತ ಮತ್ತು ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂದು ಎಫ್ಐಎ ಗುರುವಾರ ನಾಗರಿಕ ವಾಯುಯಾನ ಕಾರ್ಯದರ್ಶಿ ಸಮೀರಕುಮಾರ ಸಿನ್ಹಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದೆ. ಈ ನಿರ್ದೇಶನವು ವಿಮಾನಯಾನ ಸಂಸ್ಥೆಗಳ ಮೇಲೆ ಆರ್ಥಿಕ ಪರಿಣಾಮಗಳನ್ನು ಬೀರಲಿದ್ದು,ಅವು ಆದಾಯ ನಷ್ಟವನ್ನು ತುಂಬಿಕೊಳ್ಳಲು ಪ್ರಯಾಣ ದರಗಳನ್ನು ಹೆಚ್ಚಿಸುವುದನ್ನು ಅನಿವಾರ್ಯವಾಗಿಸುತ್ತದೆ. ಪರಿಣಾಮವಾಗಿ ಸೀಟುಗಳನ್ನು ಮೊದಲೇ ಆಯ್ಕೆ ಮಾಡಲು ಬಯಸದವರು ಸೇರಿದಂತೆ ಎಲ್ಲ ಪ್ರಯಾಣಿಕರು ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ಎಫ್ಐಎ ಬೆಟ್ಟು ಮಾಡಿದೆ. ಸೀಟು ಆಯ್ಕೆ ಶುಲ್ಕವು ವಿಮಾನಯಾನ ಆದಾಯದ ಕಾನೂನುಬದ್ಧ ಭಾಗವಾಗಿದೆ ಎಂದು ಪ್ರತಿಪಾದಿಸಿರುವ ಎಫ್ಐಎ,ವಿಮಾನಯಾನ ಸಂಸ್ಥೆಗಳು ಕಡಿಮೆ ಲಾಭದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಹಾಗೂ ಇಂಧನ,ನಿರ್ವಹಣೆ,ವಿಮಾನ ನಿಲ್ದಾಣ ಶುಲ್ಕ ಇತ್ಯಾದಿಗಳು ಸೇರಿದಂತೆ ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳನ್ನು ಸರಿದೂಗಿಸಲು ಪೂರಕ ಆದಾಯಗಳನ್ನು ಅವಲಂಬಿಸಿವೆ. ಪೂರಕ ಆದಾಯದ ಮೇಲೆ ಏಕರೂಪ ನಿರ್ಬಂಧವನ್ನು ಹೇರುವುದು ಮಾರುಕಟ್ಟೆ-ಚಾಲಿತ ಬೆಲೆ ನಿಗದಿ ಕಾರ್ಯವಿಧಾನದಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಹೇಳಿದೆ. ವಿಮಾನಯಾನ ಸಂಸ್ಥೆಗಳು ಸೀಟುಗಳ ಆಯ್ಕೆ ಸೇರಿದಂತೆ ವಿವಿಧ ಸೇವೆಗಳಿಗೆ ಹೆಚ್ಚಿನ ಶುಲ್ಕಗಳನ್ನು ವಿಧಿಸುತ್ತಿವೆ ಎಂಬ ಕಳವಳಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯದ ಮಾ.18ರ ನಿರ್ದೇಶನ ಹೊರಬಿದ್ದಿತ್ತು. ಸಾಮಾನ್ಯವಾಗಿ ವಿಮಾನಯಾನ ಸಂಸ್ಥೆಗಳು ಮುಂದಿನ ಸಾಲುಗಳು ಮತ್ತು ಕಾಲು ಚಾಚಲು ಹೆಚ್ಚಿನ ಸ್ಥಳಾವಕಾಶ ಸೇರಿದಂತೆ ವಿವಿಧ ಅಂಶಗಳನ್ನು ಅವಲಂಬಿಸಿ ಆಯ್ದ ಸೀಟುಗಳಿಗೆ 200 ರೂ.ಗಳಿಂದ 2,100 ರೂ.ಗಳವರೆಗೂ ಶುಲ್ಕವನ್ನು ವಿಧಿಸುತ್ತಿವೆ. ಸರಕಾರವು ತನ್ನ ನಿರ್ಧಾರವನ್ನು ಘೋಷಿಸುವ ಮುನ್ನ ವಿಮಾನಯಾನ ಸಂಸ್ಥೆಗಳೊಂದಿಗೆ ಸಮಾಲೋಚಿಸಿರಲಿಲ್ಲ ಎಂದೂ ಎಫ್ಐಎ ಪತ್ರದಲ್ಲಿ ಉಲ್ಲೇಖಿಸಿದೆ. ಈ ಕ್ರಮವು ಭವಿಷ್ಯದಲ್ಲಿ ನಿಯಂತ್ರಕ ನಿರ್ಬಂಧಗಳ ಕುರಿತು ವಿಮಾನಯಾನ ಸಂಸ್ಥೆಗಳಿಗೆ ಅನಿಶ್ಚಿತತೆಯನ್ನು ಸೃಷ್ಟಿಸುವ ಜೊತೆಗೆ ಪೂರಕ ಬೆಲೆ ನಿಗದಿಯಲ್ಲಿ ಅತಿಯಾದ ಹಸ್ತಕ್ಷೇಪಕ್ಕೆ ನಾಂದಿ ಹಾಡುತ್ತದೆ ಎಂದು ಹೇಳಿರುವ ಎಫ್ಐಎ,ಈ ನಿರ್ದೇಶನವನ್ನು ಹಿಂದೆಗೆದುಕೊಳ್ಳುವಂತೆ ಆಗ್ರಹಿಸಿದೆ. ಈ ನಡುವೆ ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ವಿಮಾನ ಇಂಧನ ಬೆಲೆಗಳು ಸೇರಿದಂತೆ ವಿವಿಧ ಕಾರ್ಯಾಚರಣೆ ಸಮಸ್ಯೆಗಳನ್ನು ವಿಮಾನಯಾನ ಸಂಸ್ಥೆಗಳು ಸಚಿವಾಲಯದ ಗಮನಕ್ಕೆ ತಂದಿವೆ ಎಂದು ಬಲ್ಲ ಮೂಲಗಳು ತಿಳಿಸಿವೆ.
9 ದಿನ ಈ ಊರಿಗೆ ಯಾರೂ ಬರುವ ಹಾಗೂ ಇಲ್ಲ, ಹೊರ ಹೋಗುವ ಹಾಗೂ ಇಲ್ಲ! ಇದೊಂದು ವಿಶೇಷ ಜಾತ್ರೆ!
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಶ್ರೀ ಮಹಾಕಾಳಿ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ವೈಭವ ಹಾಗೂ ಸಡಗರದಿಂದ ನೆರವೇರಿತು. ನಗರದ ಪ್ರಮುಖ ಆಕರ್ಷಣೆಯಾಗಿರುವ ಈ ಸಾಂಪ್ರದಾಯಿಕ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ದೇವಸ್ಥಾನದ ಆವರಣದಲ್ಲಿ ನಡೆದ ವಿಶೇಷ ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರಲ್ಲಿ ಚೈತನ್ಯವನ್ನು ತುಂಬಿದವು.
ಏಪ್ರಿಲ್ 1 ರಿಂದ ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಅರ್ಜಿ ಸಲ್ಲಿಸುವ ಮುನ್ನ ಈ ಅಂಶಗಳನ್ನು ಗಮನಿಸಿ
ಆರ್ಥಿಕ ವಹಿವಾಟುಗಳಿಗೆ ಅತ್ಯಂತ ಪ್ರಮುಖ ದಾಖಲೆಯಾಗಿರುವ ಪ್ಯಾನ್ (PAN) ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ. ಪ್ರತಿಯೊಬ್ಬ ನಾಗರಿಕನೂ ತಿಳಿದುಕೊಳ್ಳಲೇಬೇಕಾದ ಕೆಲವು ಅತಿ ಮುಖ್ಯ ಮಾಹಿತಿಯನ್ನು ಸಿಎಸ್ಸಿ ಇ-ಗವರ್ನೆನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್ ಇತ್ತೀಚೆಗೆ ಹಂಚಿಕೊಂಡಿದೆ. ನೀವು ಹೊಸ ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿದ್ದರೆ ಅಥವಾ ನಿಮ್ಮ ಕಾರ್ಡ್ನಲ್ಲಿ ತಿದ್ದುಪಡಿ ಮಾಡಲು ಬಯಸಿದರೆ, ಈ ಕೆಳಗಿನ
ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ಉದ್ಘಾಟನೆ : ಯು.ಟಿ.ಖಾದರ್
ಮಂಗಳೂರು : ವಿಧಾನಸೌಧದ ಮುಖ್ಯ ದ್ವಾರವನ್ನು ಮಾರ್ಚ್ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಪ್ರವೇಶ ದ್ವಾರವು ಅತ್ಯಂತ ಸುಂದರವಾದ ಕೆತ್ತನೆಗಳೊಂದಿಗೆ ಕರ್ನಾಟಕ ಶೈಲಿಯನ್ನು ಹೊಂದಿದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ ಎಂದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಮತ್ತು ಹೈಕೋರ್ಟ್ ಕಡೆಯಿಂದ ಪ್ರವೇಶ ದ್ವಾರಗಳನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ವಿಧಾನಸೌಧಕ್ಕೆ ಭಾಗಶಃ ವಿದ್ಯುತ್ ಪೂರೈಸುವ ಸೌರ ಫಲಕಗಳನ್ನು (ಸೋಲಾರ್ ಪ್ಯಾನೆಲ್) ಸಹ ಮಾರ್ಚ್ 25 ರಂದು ಉದ್ಘಾಟಿಸಲಾಗುವುದು ಎಂದು ಹೇಳಿದರು. ವಿಧಾನಸೌಧದ ಆವರಣದಲ್ಲಿರುವ ಬೀದಿ ನಾಯಿಗಳಿಗೆ ಶ್ವಾನ ಆಶ್ರಯ ತಾಣ ನಿರ್ಮಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸಭಾಪತಿಯವರು, ನಾವು ನಮ್ಮ ಅಭಿಪ್ರಾಯ ಮತ್ತು ಯೋಜನೆಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಈ ಬಗ್ಗೆ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ
ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು ಎಲ್ಲರು ತಂಪಾದ ನೀರನ್ನು ಕುಡಿಯಲು ಬಯಸುತ್ತಾರೆ. ಕಚೇರಿಯಲ್ಲಾಗಲಿ, ಮನೆಯಲ್ಲಾಗಲಿ ಅಥವಾ ಹೊರಗಡೆ ಇಂದಾ ಬಂದ ತಕ್ಷಣ ಪ್ರಿಜ್ ತೆಗೆದು ತಣ್ಣಗಿನ ನೀರನ್ನು ಕುಡಿಯುವುದು ಸಾಮಾನ್ಯ ದೃಶ್ಯವಾಗಿದೆ. ಆದರೆ ಅತಿ ಹೆಚ್ಚು ತಣ್ಣಗಿನ ನೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಕೆಲವು ದುಷ್ಪರಿಣಾಮಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ತಣ್ಣಗಿನ ನೀರು ಜೀರ್ಣಕ್ರಿಯೆಗೆ

29 C