ಬಾಲಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಂಧಿತ ಬೇಕಲ ಉಪ ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಅಮಾನತು
ಕಾಸರಗೋಡು: 16ರ ಹರೆಯದ ಬಾಲಕನನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬೇಕಲ ಉಪ ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಬೇಕಲ ಉಪ ಜಿಲ್ಲಾ ಎಇಒ ಆಗಿದ್ದ ವಿ.ಕೆ.ಝೈನುದ್ದೀನ್ ಅಮಾನತುಗೊಂಡವರು. ಈತನನ್ನು ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಆದೇಶದಂತೆ ಅಮಾನತು ಮಾಡಲಾಗಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶಾಲಾ ವಿದ್ಯಾರ್ಥಿಯಾಗಿರುವ ಬಾಲಕನನ್ನು ಡೇಟಿಂಗ್ ಆ್ಯಪ್ ಮೂಲಕ ಪರಿಚಯ ಮಾಡಿಕೊಂಡ ವಿವಿಧ ಸರಕಾರಿ ಇಲಾಖೆ, ರಾಜಕೀಯ ವ್ಯಕ್ತಿಗಳು ಸೇರಿದಂತೆ 16 ಮಂದಿ ಆತನ ಮೇಲೆ ಸಲಿಂಗರತಿಯ ದೌರ್ಜನ್ಯ ಎಸಗಿದ್ದು, ಆರೋಪಿಗಳ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪೈಕಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಸಹಾಯಕ ಶಿಕ್ಷಣಾಧಿಕಾರಿ, ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿಯೂ ಸೇರಿದ್ದಾರೆ. 16ರ ಹರೆಯದ ಬಾಲಕ ವಿದ್ಯಾರ್ಥಿಯನ್ನು ಹುಡುಕಿಕೊಂಡು ಮನೆಗೆ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ನೀಡಿದ ಮಾಹಿತಿಯ ಆಧಾರದಲ್ಲಿ ಬಾಲಕನ ತಾಯಿ ನೀಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅದರಂತೆ ಬಾಲಕನನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳೆದೆರಡು ವರ್ಷಗಳಿಂದ ಹುಡುಗ ಸಲಿಂಗ ರತಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಒಟ್ಟು 14 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 8 ಪ್ರಕರಣಗಳೂ ಕಾಸರಗೋಡು ಜಿಲ್ಲೆಯನ್ನು ಕೇಂದ್ರೀಕರಿಸಿವೆ. ಪ್ರಕರಣದ ಆರೋಪಿಗಳಲ್ಲಿ ಕಾಸರಗೋಡು, ಕಣ್ಣೂರು, ಕೋಝಿಕ್ಕೋಡು ಜಿಲ್ಲೆಯವರೂ ಇದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ತನಿಖೆಗಾಗಿ ನಾಲ್ವರು ಪೊಲೀಸ್ ಇನ್ ಸ್ಪೆಕ್ಟರ್ ನೇತೃತ್ವದಲ್ಲಿ ತಂಡ ರಚಿಸಿದೆ.
ಹೊಸದಿಲ್ಲಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್, ಧ್ರುವ ರಾಠೀ, ನ್ಯೂಸ್ ಲಾಂಡ್ರಿ, ದಿ ವೈರ್, ಎಚ್ಡಬ್ಲ್ಯು ನ್ಯೂಸ್ ಮತ್ತು ಆಕಾಶ್ ಬ್ಯಾನರ್ಜಿಯವರ ದೇಶಭಕ್ತ್ ಸೇರಿದಂತೆ ಹಲವು ಮಂದಿ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೋಟಿಸ್ ನೀಡಿ ಜಾಲತಾಣ ಪೋಸ್ಟ್ ಗಳನ್ನು ಕಿತ್ತುಹಾಕುವಂತೆ ಸೂಚಿಸಿದೆ. ಅದಾನಿ ಎಂಟರ್ ಪ್ರೈಸಸ್ ಲಿಮಿಟೆಡ್ ಸಲ್ಲಿಸಿರುವ ಮಾನಹಾನಿ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ಅದೇಶವನ್ನು ಉಲ್ಲೇಖಿಸಿ ಈ ಸೂಚನೆ ನೀಡಲಾಗಿದೆ. ಒಟ್ಟು 138 ಯೂಟ್ಯೂಬ್ ಲಿಂಕ್ ಗಳು ಮತ್ತು 83 ಇನ್ಸ್ಟ್ರಾಗ್ರಾಂ ಪೋಸ್ಟ್ ಗಳನ್ನು ಕಿತ್ತುಹಾಕುವಂತೆ ಸೂಚಿಸಲಾಗಿದೆ. ನ್ಯೂಸ್ ಲಾಂಡ್ರಿಯ ಯೂಟ್ಯೂಬ್ ಚಾನಲ್ ನಿಂದ 42 ವಿಡಿಯೊಗಳನ್ನು ಕಿತ್ತುಹಾಕುವಂತೆ ನಿರ್ದೇಶನ ನೀಡಲಾಗಿದೆ. ಸೆಪ್ಟೆಂಬರ್ 6ರಂದು ನ್ಯಾಯಾಲಯ ನೀಡಿದ ಆದೇಶದ ಅನ್ವಯ ಈ ಪೋಸ್ಟ್ ಕಿತ್ತುಹಾಕಬೇಕು ಎಂದು ಸೂಚಿಸಲಾಗಿದೆ. ನ್ಯಾಯಾಲಯ ಆದೇಶದ ಹೊರತಾಗಿಯೂ ಮಾಧ್ಯಮಸಂಸ್ಥೆಗಳು ಇವುಗಳನ್ನು ಕಿತ್ತುಹಾಕಿಲ್ಲ ಎಂದು ನೋಟಿಸ್ ನಲ್ಲಿ ಹೇಳಲಾಗಿದೆ. ಪಟ್ಟಿ ಮಾಡಲಾದ ಈ ತುಣುಕುಗಳು ಕೇವಲ ತನಿಖಾ ವರದಿಗಳಿಗೆ ಸೀಮಿತವಾಗಿರದೇ, ವಿಡಂಬನೆ ಮತ್ತು ಸಾಂದರ್ಭೀಕ ಉಲ್ಲೇಖಗಳೂ ಸೇರಿವೆ. ಉದಾಹರಣೆಗೆ ಅದಾನಿ ಕುರಿತ ವರದಿಯ ಸ್ಕ್ರೀನ್ ಶಾಟ್ ಹೊಂದಿರುವ ಎನ್ಎಲ್ ಸಬ್ಸ್ಕ್ರಿಪ್ಷನ್ ಮನವಿಯ ವಿಡಿಯೊವನ್ನೂ ಕಿತ್ತುಹಾಕಲು ಸೂಚಿಸಲಾಗಿದೆ. ಸೆನ್ಸಾರ್ಶಿಪ್ ಬಗ್ಗೆ ವಿಂಡಬನಾತ್ಮಕ ಹೇಳಿಕೆಯನ್ನು ನೀಡಿದ ಕುನಾಲ್ ಕಾಮ್ರಾ ಸಂದರ್ಶನ ವರದಿಯನ್ನೂ ಪಟ್ಟಿ ಮಾಡಲಾಗಿದೆ.
ಐಸಿಸಿ ಯೂ-ಟರ್ನ್; ಮ್ಯಾಚ್ ರೆಫರಿ ಬದಲಾವಣೆಯ ಪಾಕಿಸ್ತಾನದ ಬೇಡಿಕೆಗೆ ಒಪ್ಪಿಗೆ, ಆದರೆ ಒಂದು ಟ್ವಿಸ್ಟ್..!
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ಹಸ್ತಲಾಘವ ನಿರಾಕರಣೆ ವಿವಾದಕ್ಕೆ ಸಂಬಂಧಿಸಿದಂತೆ, ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರ ತಲೆದಂಡಕ್ಕೆ ಆಗ್ರಹಿಸಿದ ಪಿಸಿಬಿಗೆ, ಐಸಿಸಿ ಕೊಂಚ ಸಮಾಧಾನ ನೀಡಿದೆ. ಇಂದು (ಸೆ.17-ಬುಧವಾರ) ನಡೆಯಲಿರುವ ಪಾಕಿಸ್ತಾನ-ಯುಎಇ ಪಂದ್ಯದಲ್ಲಿ ಮ್ಯಾಚ್ ರೆಫರಿಯಾಗಿ ಆ್ಯಂಡಿ ಪೈಕ್ರಾಫ್ಟ್ ಬದಲಿಗೆ ರಿಚಿ ರಿಚರ್ಡ್ಸನ್ ಅವರನ್ನು ನೇಮಿಸಲು ಐಸಿಸಿ ಒಪ್ಪಿಕೊಂಡಿದೆ. ಆದರೆ ಆ್ಯಂಡಿ ಪೈಕ್ರಾಫ್ಟ್ ಅವರನ್ನು ಸಂಪೂರ್ಣ ಪಂದ್ಯಾವಳಿಯಿಂದ ಹೊರಗಿಡಬೇಕೆಂಬ ಪಿಸಿಬಿ ಬೇಡಿಕೆಯನ್ನು ಐಸಿಸಿ ತಿರಸ್ಕರಿಸಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.
ಈ ಭಾಗದಲ್ಲಿ ಭೂಮಿ ಬೆಲೆ ಏರಿಕೆ; ಎಕರೆ ಭೂಮಿಗೆ 30-40 ಲಕ್ಷ : ಬಿಗ್ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 16: ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.25 ಲಕ್ಷ ಪರಿಹಾರ ನೀಡಲು
ಕಾಸರಗೋಡು | ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ಪಿಎಫ್ ಅಧಿಕಾರಿ ಸಹಿತ 9 ಮಂದಿಯ ಬಂಧನ
ಕಾಸರಗೋಡು: ಕಾಸರಗೋಡಿನಲ್ಲಿ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಹಾಯಕ ಶಿಕ್ಷಣಾಧಿಕಾರಿ(ಎಇಒ), ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಅಧಿಕಾರಿ ಸೇರಿದಂತೆ ಒಂಭತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಒಟ್ಟು 16 ಪ್ರಕರಣಗಳಲ್ಲಿ 16 ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ ಎಂದು ಚಂದೇರಾ ಪೊಲೀಸರು ತಿಳಿಸಿದ್ದಾರೆ. ಬೇಕಲ ಶೈಕ್ಷಣಿಕ ಉಪ ಜಿಲ್ಲೆಯ ಸಹಾಯಕ ಶಿಕ್ಷಣಾಧಿಕಾರಿ ಝೈನುದ್ದೀನ್ ವಿ.ಕೆ. (52), ಚಿತ್ರರಾಜ್ ಎರವಿಲ್ (48), ಆರ್ಪಿಎಫ್ ಅಧಿಕಾರಿ ಅಬ್ದುಲ್ ರಹ್ಮಾನ್ ಹಾಜಿ (55), ತ್ರಿಕ್ಕರಿಪುರದ ವಳವಕ್ಕಾಡ್ ನಿವಾಸಿ ಪಿಲಿಕೋಡ್ ಪಂಚಾಯತ್ ವ್ಯಾಪ್ತಿಯ ವೆಳ್ಳಕ್ಕಲ್ ನ ಸುಕೇಶ್ (30), ಚಂದೇರದ ಅಫ್ಝಲ್ (23), ಚೀಮೇನಿಯ ಶಿಜಿತ್ (36), ತ್ರಿಕ್ಕರಿಪುರ ಸಮೀಪದ ವಡಕರ ಕೋವಲ್ನ ರಯೀಸ್ (30), ಕಾಞಂಗಾಡ್ನ ಪಡನ್ನಕ್ಕಾಡ್ನ ರಂಝಾನ್ (64) ಮತ್ತು ಚೀಮೇನಿಯ ನಾರಾಯಣನ್ (60) ಬಂಧಿತ ಆರೋಪಿಗಳು. ಈ ನಡುವೆ ಸಾಮಾನ್ಯ ಶಿಕ್ಷಣ ಇಲಾಖೆಯು ಝೈನುದ್ದೀನ್ ನನ್ನು ಸೇವೆಯಿಂದ ಅಮಾನತು ಮಾಡಿದೆ. ಯೂತ್ ಲೀಗ್ ತ್ರಿಕ್ಕರಿಪುರ ಪಂಚಾಯತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ವಡಕ್ಕುಂಪಡ್ (46) ಸೇರಿದಂತೆ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಒಟ್ಟು 16 ಪ್ರಕರಣಗಳಲ್ಲಿ 10 ಪ್ರಕರಣಗಳು ಚಂದೇರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಉಳಿದ ಆರು ಪ್ರಕರಣಗಳು ಕಣ್ಣೂರಿನ ಪಯ್ಯನೂರು ಠಾಣೆ, ಕೋಝಿಕ್ಕೋಡ್ನ ಕಸಬಾ ಠಾಣೆ ಮತ್ತು ಎರ್ನಾಕುಲಂನ ಎಲಮಕ್ಕರ ಠಾಣೆಯಲ್ಲಿ ದಾಖಲಾಗಿವೆ ಎಂದು ಕಾಸರಗೋಡು ಎಸ್ಪಿ ವಿ.ವಿ.ವಿಜಯ ರೆಡ್ಡಿ ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ಬಾಲಕನನ್ನು ಫೋನ್ ಮೂಲಕ ಸಂಪರ್ಕಿಸಿ ಭೇಟಿ ನೀಡುತ್ತಿರುವುದನ್ನು ಅವನ ತಾಯಿ ಗಮನಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪೊಲೀಸರನ್ನು ಸಂಪರ್ಕಿಸಿದರು, ಅವರು ಚೈಲ್ಡ್ಲೈನ್ಗೆ ಮಾಹಿತಿ ನೀಡಿದರು. ಇದರ ನಂತರ, ಚೈಲ್ಡ್ ಲೈನ್ ಅಧಿಕಾರಿಗಳು ಬಾಲಕನನ್ನು ಕೌನ್ಸೆಲಿಂಗ್ ಗೆ ಒಳಪಡಿಸಿದಾಗ ಆತ ಎದುರಿಸಿದ ದೌರ್ಜನ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 377 ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 3, 4, 5, 6, 7 ಮತ್ತು 8 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Road Accident: ಆಕ್ಸಿಡೆಂಟ್ ಆದವರ ಚಿಕಿತ್ಸೆಗೆ ಸಿಗಲಿದೆ ₹2.5 ಲಕ್ಷ ನೆರವು, ಪಡೆಯುವುದು ಹೇಗೆ?
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗುವುದಿಲ್ಲ. ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಹಣಕಾಸಿನ ಸಮಸ್ಯೆಯಿಂದಾಗಿ ಚಿಕಿತ್ಸೆ ದೊರೆಯುವುದಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮೋಟಾರು ವಾಹನಗಳಿಂದ ಉಂಟಾಗುವ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆಗೆ ವಿಶೇಷ ಸೌಲಭ್ಯ ಕಲ್ಪಿಸಿದೆ. ಈ ವಿಶೇಷ ಯೋಜನೆಯಡಿ ₹1.5 ಲಕ್ಷ ಆರ್ಥಿಕ ನೆರವು ಅಪಘಾತ ಸಂತ್ರಸ್ತರಿಗೆ ಸಿಗಲಿದೆ. ಇದರೊಂದಿಗೆ
ಕೊಳ್ಳೇಗಾಲ : ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ : 4 ವರ್ಷದ ಮಗು ಮೃತ್ಯು
ಚಾಮರಾಜನಗರ : ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬಳಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದ ನಂಜುಂಡಸ್ವಾಮಿ,ಕಾವ್ಯ ದಂಪತಿಯ ಪುತ್ರಿ ಹರ್ಷಿತಾ ಮೃತಪಟ್ಟ ಮಗು. ಮಗಳ ಜೊತೆಗೆ ಮೈಸೂರಿಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಇದ್ದ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಮತ್ತು ಮಗು ಗಾಯಗೊಂಡಿದ್ದಾರೆ. ಹರ್ಷಿತಾಳಿಗೆ ತೀವ್ರತರ ಪೆಟ್ಟಾಗಿದ್ದು, ಆಸ್ಪತ್ರೆಗೆ ಸೇರಿಸಲು ತರಳುತ್ತಿರುವಾಗಲೇ ಹರ್ಷಿತ ಮೃತಪಟ್ಟಿದ್ದಾಳೆ. ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Agriculture Success Story: ಜಿಐ ಟ್ಯಾಗ್ ದೊರೆತ ಪರಿಣಾಮ: ಇಂಡಿ ನಿಂಬೆ ಸಸಿ ಈಗ ದೇಶವ್ಯಾಪಿ !
ಇಂಡಿ ಕಾಗ್ಜಿ ನಿಂಬೆಗೆ ಜಿಐ ಟ್ಯಾಗ್ ದೊರೆತ ನಂತರ, ಬೇಡಿಕೆ ಹೆಚ್ಚಾಗಿದ್ದು, ರೈತರು ಸಸಿಗಳನ್ನು ತಯಾರಿಸಿ ರಾಜ್ಯ ಹಾಗೂ ಹೊರರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದಾರೆ. ಕಾಗ್ಜಿ ತಳಿಯ ನಿಂಬೆ ವರ್ಷಪೂರ್ತಿ ಫಸಲು ನೀಡುವ ಕಾರಣ, ರೈತರು ಆಸಕ್ತಿ ತೋರುತ್ತಿದ್ದಾರೆ. ಸಸಿ ಮಾರಾಟದಿಂದ ರೈತರು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.
Explained: 75ರಲ್ಲೂ ಪಾದರಸದಂತ ವ್ಯಕ್ತಿತ್ವ; ನರೇಂದ್ರ ಮೋದಿ ಆರ್ಎಸ್ಎಸ್ನಲ್ಲಿ ಕಲಿತ ಪಾಠ ಮಾನವ ಬಂಧುತ್ವ
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ.17-ಬುಧವಾರ) 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಡೂನ್ ಕಣಿವೆಯಲ್ಲಿ ಮೇಘಸ್ಫೋಟ; ಪ್ರವಾಹದಿಂದ 13 ಮಂದಿ ಮೃತ್ಯು
ಡೆಹ್ರಾಡೂನ್/ಮಿಸ್ಸೋರಿ: ಡೂನ್ ಕಣಿವೆ ಪ್ರದೇಶದಲ್ಲಿ ಇತ್ತೀಚಿಗೆ ಸಂಭವಿಸಿದ ವಿಕೋಪಗಳಲ್ಲೇ ಅತ್ಯಂತ ಭೀಕರ ಎನ್ನಲಾದ ಮೇಘಸ್ಫೋಟ ಮತ್ತು ಪ್ರವಾಹದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಇತರ 16 ಮಂದಿ ನಾಪತ್ತೆಯಾಗಿದ್ದಾರೆ. ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಮತ್ತು ಮಂಗಳವಾರ ಬಿದ್ದ ವ್ಯಾಪಕ ಮಳೆಗೆ ಸೇತುವೆಗಳು ಮತ್ತು ಮಾರುಕಟ್ಟೆಗಳು ಕೊಚ್ಚಿಕೊಂಡು ಹೋಗಿದ್ದು, ಪ್ರಮುಖ ರಸ್ತೆಗಳು ಹಾನಿಗೀಡಾಗಿವೆ. ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿದ್ದ ವ್ಯಾಪಕ ಮಳೆಯಿಂದ ದಿಢೀರ್ ಪ್ರವಾಹ ಪರಿಸ್ಥಿತಿ ಹಾಗೂ ಭೂಕುಸಿತದ ಪ್ರಕರಣಗಳು ವರದಿಯಾಗಿದ್ದು, ಎರಡು ರಾಜ್ಯಗಳಲ್ಲಿ ಒಂದೇ ದಿನ 18 ಮಂದಿ ಜೀವ ಕಳೆದುಕೊಂಡಿದ್ದಾರೆ. ಡೆಹ್ರಾಡೂನ್ ಹೊರವಲಯದ ಸಹಸ್ರಧಾರಾ ಮತ್ತು ಮಾಲದೇವತಾ ಪ್ರೆದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಸಹಸ್ರಧಾರಾದಲ್ಲಿ ಕನಿಷ್ಠ 70 ಮಂದಿ ಗ್ರಾಮಸ್ಥರನ್ನು ರಾಜ್ಯ ವಿಪತ್ತು ಸ್ಪಂದನಾ ಪಡೆ ರಕ್ಷಿಸಿದೆ. ಈ ಭಾಗದ ಪ್ರಮುಖ ಮಾರುಕಟ್ಟೆ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಪ್ರವಾಸಿಗರಿಗಾಗಿ ನಿರ್ಮಿಸಲಾಗಿದ್ದ ಹಲವು ಅಂಗಡಿ ಮಳಿಗೆಗಳು ಮತ್ತು ಅಡುಗೆಮನೆಗಳು ನಾಶವಾಗಿವೆ. ಸಹಸ್ರಧಾರಾ-ಕಾರ್ಲಿಗಡ್ ರಸ್ತೆಯಲ್ಲಿ ಒಂಬತ್ತಕ್ಕೂ ಹೆಚ್ಚು ಕಡೆಗಳಲ್ಲಿ ಭೂಕುಸಿತದಿಂದಾಗಿ ರಸ್ತೆಗೆ ಹಾನಿಯಾಗಿದ್ದು, ಸಾಂಗ್ ನದಿಯ ಪ್ರವಾಹವು ಮಾಲದೇವತಾ ಪ್ರದೇಶದಲ್ಲಿ ರಸ್ತೆಯನ್ನು ಕೊಚ್ಚಿಕೊಂಡು ಹೋಗಿದೆ. ಈ ಪ್ರದೇಶ ರಾಜ್ಯದ ಇತರೆಡೆಗಳ ಜತೆ ಸಂಪರ್ಕ ಕಡಿದುಕೊಂಡಿದೆ. ಮಂಗಳವಾರ ಬೆಳಿಗ್ಗೆ 8.30ರವರೆಗೆ ಕಳೆದ 24 ಗಂಟೆಗಳಲ್ಲಿ 264 ಮಿಲಿಮೀಟರ್ ಮಳೆಬಿದ್ದಿದ್ದು, ಮಧ್ಯರಾತ್ರಿ ವೇಳೆಗೆ ಮೇಘಸ್ಫೋಟದ ಅನುಭವವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಾಮರಾಜನಗರ : ನಿಂತಿದ್ದ ಲಾರಿಗೆ ಗೂಡ್ಸ್ ಆಟೋ ಢಿಕ್ಕಿ; ಇಬ್ಬರು ಮೃತ್ಯು
ಚಾಮರಾಜನಗರ : ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಳ್ಳೇಗಾಲ-ಯಳಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮದ್ದೂರು ಸಮೀಪಿದ ಎಳೆಪಿಳ್ಳಾರಿ ಬಳಿ ಕಬ್ಬು ತುಂಬಿಕೊಂಡು ಕಾರ್ಖಾನೆಗೆ ತೆರಳಲು ನಿಂತಿದ್ದ ಲಾರಿಗೆ ಉಮ್ಮತೂರು ಕಡೆಯಿಂದ ಬಂದಂತಹ ಟೊಮೊಟೊ ತುಂಬಿದಂತಹ ಗೂಡ್ಸ್ ಆಟೋ ನಿಯಂತ್ರಣ ತಪ್ಪಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಮೃತರನ್ನು ಉಮ್ಮತ್ತೂರು ಗ್ರಾಮದ ಸುಮಂತ್ (22) ನಿತಿನ್ ಕುಮಾರ್ (16) ಎಂದುಗುರುತಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಯಳಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮೃತ ದೇಹಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ
ಮಲೆಮಹದೇಶ್ವರ ಬೆಟ್ಟ ಹುಲಿಧಾಮಕ್ಕೆ ಮತ್ತೊಂದು ಬಲ, ಸಿಇಸಿಯಿಂದಲೂ ಶಿಫಾರಸು, ಘೋಷಣೆ ಸಾಧ್ಯತೆ
ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಯೋಜನೆ ವ್ಯಾಪ್ತಿಗೆ ಸೇರಿಸಲು ಉನ್ನತಾಧಿಕಾರ ಸಮಿತಿ ಶಿಫಾರಸು ಮಾಡಿದೆ, ಇದು ಹುಲಿಧಾಮ ಘೋಷಣೆಗೆ ಬಲ ನೀಡಿದೆ. ಧಾರ್ಮಿಕ ಕಾರ್ಯಗಳಿಗೆ ಧಕ್ಕೆಯಾಗದಂತೆ ಮತ್ತು ಸ್ಥಳೀಯರ ಜೀವನ ಕ್ರಮಕ್ಕೆ ಸಮಸ್ಯೆಯಾಗದಂತೆ ನಿಯಮ ರೂಪಿಸಿ ಹುಲಿಧಾಮ ಘೋಷಿಸಬೇಕೆಂದು ಒತ್ತಾಯಿಸಲಾಗಿದೆ. ಹುಲಿಗಳ ಸಂರಕ್ಷಣೆ ಮತ್ತು ಭಕ್ತರ ಹಿತ ಕಾಪಾಡುವುದು ಮುಖ್ಯವಾಗಿದೆ.
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಕಲಬುರಗಿ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಅಲ್ಲದೆ, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಾಕಥಾನ್ ಆಯೋಜಿಸಲಾಗಿದ್ದು, ಅನೇಕ ಗಣ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ವಿಘ್ನನಿವಾರಕನ ಹಬ್ಬ ಮನುಷ್ಯನ ಸ್ವಯಂಕೃತಾಪರಾಧದಿಂದ ಹತ್ತು ಹಲವು ವಿಘ್ನಗಳಿಗೆ ಕಾರಣವಾಗಿರುವುದು ನಿಜಕ್ಕೂ ವಿಷಾದನೀಯವಾಗಿದೆ. ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದ ದುರಂತದಿಂದ ರಾಜ್ಯ ಇನ್ನೂ ಚೇತರಿಸಿಲ್ಲ. ಗಣಪತಿ ವಿಸರ್ಜನಾ ಮೆರವಣಿಗೆಯ ಮೇಲೆ ಟ್ರಕ್ಕೊಂದು ಹರಿದ ಈ ಅವಘಡದಲ್ಲಿ 10 ಜನರು ಸಾವಿಗೀಡಾಗಿದ್ದು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದ ಬೆನ್ನಿಗೇ ರಾಜಕಾರಣಿಗಳು ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಾ ತಮ್ಮ ರಾಜಕೀಯ ದುರುದ್ದೇಶಗಳನ್ನು ಸಾಧಿಸಲು ಪ್ರಯತ್ನಿಸಿದರು. ಆದರೆ ಈ ದುರಂತದಿಂದ ತಮ್ಮ ಮನೆಮಕ್ಕಳನ್ನು ಕಳೆದುಕೊಂಡವರ ಸ್ಥಿತಿ ಹೃದಯವಿದ್ರಾವಕವಾಗಿದೆ. ಸರಕಾರವೂ ಸೇರಿದಂತೆ ಕೆಲವು ರಾಜಕೀಯ ಪಕ್ಷಗಳು ಪರಿಹಾರವನ್ನು ಘೋಷಿಸಿವೆಯಾದರೂ, ತಾಯಂದಿರ ಹೃದಯಕ್ಕಾದ ಗಾಯಗಳನ್ನು ಶಮನ ಪಡಿಸುವ ಔಷಧೀಯ ಶಕ್ತಿ ಆ ಪರಿಹಾರ ಧನಕ್ಕಿಲ್ಲ. ಆರೋಪಿ ಟ್ರಕ್ ಚಾಲಕನನ್ನು ಬಂಧಿಸಲಾಗಿದೆಯಾದರೂ, ಅಷ್ಟರಿಂದ ಸಂತ್ರಸ್ತರಿಗೆ ನ್ಯಾಯ ಸಿಗುತ್ತದೆ ಎಂದು ಸಮಾಧಾನ ಪಡುವಂತಿಲ್ಲ. ಮೃತಪಟ್ಟವರಲ್ಲಿ ಹೆಚ್ಚಿನವರು ಯುವಕರೇ ಆಗಿದ್ದಾರೆ. ಮೂವರು ಅಪ್ರಾಪ್ತ ವಯಸ್ಸಿನವರು. ಇದೇ ಸಂದರ್ಭದಲ್ಲಿ ಎಲ್ಲರೂ ಬಡ ಹಿಂದುಳಿದ ಕುಟುಂಬಕ್ಕೆ ಸೇರಿದವರಾಗಿರುವುದು ಕಾಕತಾಳೀಯವಲ್ಲ. ಇಂತಹ ಸಮೂಹಸನ್ನಿ ಮೆರವಣಿಗೆಯಲ್ಲಿ ಮೇಲ್ಜಾತಿಯ, ಶ್ರೀಮಂತ ವರ್ಗಕ್ಕೆ ಸೇರಿದ ಯುವಕರು ಯಾಕೆ ಗುರುತಿಸಲ್ಪಡುವುದಿಲ್ಲ, ಕೇವಲ ಬಡ, ಹಿಂದುಳಿದವರ್ಗಕ್ಕೆ ಸೇರಿದ ಯುವಕರೇ ನೇರ ಬಲಿಪಶುಗಳಾಗುತ್ತಿರುವುದು ಯಾಕೆ ಎನ್ನುವುದು ಅಧ್ಯಯನಕ್ಕೆ ಯೋಗ್ಯವಾಗಿದೆ. ಮದ್ದೂರಿನಲ್ಲಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ದಾಂಧಲೆಗಳಲ್ಲಿ ಗುರುತಿಸಿಕೊಂಡವರೂ ಹಿಂದುಳಿದ, ಬಡವರ್ಗಕ್ಕೆ ಸೇರಿದ ಜನರೇ ಆಗಿರುವುದನ್ನು ಇಲ್ಲಿ ಗಮನಿಸಬಹುದು. ಹಾಸನದ ಅವಘಡದಲ್ಲಿ ಮೃತಪಟ್ಟ ಗೋಕುಲ್ ಎಂಬಾತ ಇಂಜಿನಿಯರ್ ಕಲಿಯುವ ಗುರಿಯನ್ನು ಹೊಂದಿದ್ದ. ಈತನ ತಾಯಿ ಕಸಗುಡಿಸುವ ಕೆಲಸವನ್ನು ಮಾಡಿ ಮಗನನ್ನು ಓದಿಸುತ್ತಿದ್ದರು. ಆತನ ಸಾವಿನೊಂದಿಗೆ ಆ ತಾಯಿಯ ಬದುಕೇ ಮುಗಿದಂತಾಗಿದೆ. ಮೃತರಲ್ಲಿ ಇಬ್ಬರು ಬಿಳಿ ಕಲಿಯುತ್ತಿದ್ದ ವಿದ್ಯಾರ್ಥಿಗಳು, ಒಂದೆರಡು ವರ್ಷಗಳಲ್ಲಿ ವಿದ್ಯಾಭ್ಯಾಸ ಮುಗಿಸಿ ಇಡೀ ಕುಟುಂಬಕ್ಕೆ ಆಸರೆಯಾಗಬೇಕಾದವರು ಈ ದುರಂತದಲ್ಲಿ ಏಕಾಏಕಿ ಇಲ್ಲವಾಗಿದ್ದಾರೆ. ಅವರನ್ನು ಕಳೆದುಕೊಂಡ ಕುಟುಂಬಗಳ ನೋವು, ಸಂಕಟಗಳನ್ನು ಯಾವ ಪರಿಹಾರವೂ ತುಂಬಿಸಿ ಕೊಡಲಾರವು. ಬಲಿಯಾದ ಯುವಕರ ತಾಯಂದಿರು ಮಾಧ್ಯಮಗಳ ಜೊತೆಗೆ ಮಾತನಾಡುವಾಗ, ಇಂತಹ ಮೆರವಣಿಗೆಗಳು ಯಾಕೆ ಬೇಕು? ಎಂದು ಆಕ್ರೋಶ ಭರಿತವಾಗಿ ಕೇಳಿದ್ದಾರೆ. ಅವರ ಈ ಪ್ರಶ್ನೆಯೂ ನಮ್ಮೆಲ್ಲರ ಆತ್ಮವಿಮರ್ಶೆಗೆ ಕಾರಣವಾಗಬೇಕಾಗಿದೆ. ಮುಖ್ಯವಾಗಿ ಈ ದುರಂತಕ್ಕೆ ಯಾರು ಹೊಣೆ ಎನ್ನುವುದರ ಬಗ್ಗೆ ರಾಜಕೀಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸರಕಾರ ಸೂಕ್ತ ಭದ್ರತೆಯನ್ನು ನೀಡದೆ ಇರುವುದೇ ದುರಂತಕ್ಕೆ ಕಾರಣ'' ಎಂದು ಬಿಜೆಪಿ ಆರೋಪಿಸುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘಟಕರಿಗೂ ಹೊಣೆಗಾರಿಕೆಗಳು ಇರುತ್ತವೆ. ಅವರು ತಮ್ಮ ಹೊಣೆಗಾರಿಕೆಯನ್ನು ಎಷ್ಟರ ಮಟ್ಟಿಗೆ ನಿರ್ವಹಿಸಿದ್ದಾರೆ ಎನ್ನುವುದೂ ಮುಖ್ಯವಾಗುತ್ತದೆ. ಗಣೇಶೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಗಲ್ಲಿಗಲ್ಲಿಗಳಲ್ಲಿ ಗಣೇಶನನ್ನು ಕೂರಿಸುವ ಕಾರ್ಯಕ್ರಮಗಳು ನಡೆಯುತ್ತವೆ. ಆದುದರಿಂದ ಸರಕಾರ ಮಾಡುವ ಬಿಗಿ ಬಂದೋಬಸ್ತಿಗೆ ಮಿತಿಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಸಂಘಟಕರ ಹೊಣೆಗಾರಿಕೆ ಹೆಚ್ಚಿ ರುತ್ತದೆ. ಭಾರೀ ಅನಾಹುತಗಳನ್ನು ತಡೆಯಲು ಈ ಬಾರಿ ಡಿಜೆಯ ಬಳಕೆಯನ್ನು ಸರಕಾರ ತಡೆದಿದೆ. ಆದರೆ ಇದಕ್ಕೆ ಬಿಜೆಪಿ ಮತ್ತು ಸಂಘಪರಿವಾರದ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದುರಂತಗಳನ್ನು ತಡೆಯಲು ಕಾನೂನುಗಳನ್ನು ಬಿಗಿ ಮಾಡಿದಾಗಲೆಲ್ಲ 'ಹಿಂದೂಗಳ ಹಬ್ಬ ಆಚರಣೆಗೆ ಸರಕಾರದಿಂದ ಅಡ್ಡಿ' ಎಂದು ಇದೇ ಬಿಜೆಪಿಯ ನಾಯಕರು ಬೀದಿಯಲ್ಲಿ ಅರಚಾಡತೊಡಗುತ್ತಾರೆ. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಗಳನ್ನು ಉಂಟು ಮಾಡುವ ಪಟಾಕಿಗಳನ್ನು ನಿಷೇಧಿಸಿದರೆ ಅದಕ್ಕೂ ತಕರಾರು ತೆಗೆಯುತ್ತಾರೆ. ಕಂಡಕಂಡ ಕೆರೆ, ನದಿಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸುವುದರ ವಿರುದ್ದ ಕಾನೂನುಗಳನ್ನು ತಂದರೆ ಅದರಲ್ಲೂ ರಾಜಕೀಯ ನಡೆಸುತ್ತಾರೆ. ಹಬ್ಬದ ಹೆಸರಿನಲ್ಲಿ ಪರಿಸರವನ್ನು ಕೆಡಿಸುವುದರ ವಿರುದ್ದ, ಮೆರವಣಿಗೆಯ ನೆಪದಲ್ಲಿ ರಸ್ತೆಗಳಲ್ಲಿ ಇಡೀ ದಿನ ಸಂಚಾರಕ್ಕೆ ಅಡ್ಡಿಯುಂಟು ಮಾಡುವುದರ ವಿರುದ್ದ ಕ್ರಮ ತೆಗೆದುಕೊಳ್ಳಲು ಮುಂದಾದರೆ ಬಿಜೆಪಿ ನಾಯಕರೇ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಒಂದು ರೀತಿಯಲ್ಲಿ ಹಾಸನದ ದುರಂತಕ್ಕೆ ಇಂತಹ ರಾಜಕೀಯ ನಾಯಕರ ಕೊಡುಗೆಯೂ ಬಹುದೊಡ್ಡದಿದೆ. ಪಟಾಕಿ ನಿಷೇಧದ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ ಮಾತನಾಡಿದೆ. ದಿಲ್ಲಿಯಲ್ಲಿ ಅನ್ವಯವಾದ ನಿಷೇಧ ಯಾಕೆ ಇಡೀ ದೇಶಕ್ಕೆ ಅನ್ವಯವಾಗಬಾರದು ಎಂದು ಅದು ಕೇಳಿದೆ. ಹಾಗೆಯೇ ಹಬ್ಬದ ಹೆಸರಿನಲ್ಲಿ ತಡ ರಾತ್ರಿಯವರೆಗೆ ರಸ್ತೆಯುದ್ದಕ್ಕೂ ಮೆರವಣಿಗೆ ನಡೆಸುವುದರ ಬಗ್ಗೆಯೂ ಸರಕಾರ ಕಠಿಣ ಕಾನೂನು ಜಾರಿಗೊಳಿಸುವ ಅಗತ್ಯವಿದೆ. ಈ ಕಾನೂನು ಎಲ್ಲ ಧರ್ಮೀಯರಿಗೂ ಅನ್ವಯವಾಗಬೇಕು. ಮುಸ್ಲಿಮರು, ಹಿಂದೂಗಳು, ಕ್ರಿಶ್ಚಿಯನ್ನರು ತಮ್ಮ ತಮ್ಮ ಹಬ್ಬಗಳನ್ನು ಸಾರ್ವಜನಿಕ ಮೈದಾನಗಳಲ್ಲಿ, ದೇವಸ್ಥಾನ, ಮಸೀದಿ, ಚರ್ಚುಗಳ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಅವಕಾಶವಿದೆ. ಹಬ್ಬದ ಹೆಸರಿನಲ್ಲಿ ಇಡೀ ದಿನ ರಸ್ತೆ ತಡೆಗಳನ್ನು ಮಾಡಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುವುದರಿಂದ ಹಬ್ಬಗಳ ಮೌಲ್ಯಗಳಿಗೆ ಧಕ್ಕೆಯುಂಟು ಮಾಡುತ್ತದೆ. ಗಣಪತಿಯನ್ನು ವಿದ್ಯಾಧಿದೇವತೆ, ವಿಘ್ನನಿವಾರಕನೆಂದು ಕರೆಯುತ್ತಾರೆ. ಆದರೆ ಹಾಸನದಲ್ಲಿ ವಿದ್ಯೆ ಕಲಿಯುವ ವಿದ್ಯಾರ್ಥಿಗಳೇ ಭೀಕರದುರಂತಕ್ಕೆ ಬಲಿಯಾಗುವಂತಾಯಿತು. ಯಾವ ಹಬ್ಬ ನಮ್ಮ ಬದುಕಿನ ವಿಘ್ನಗಳನ್ನೆಲ್ಲ ದೂರ ಮಾಡಿ ಹೊಸ ಬೆಳಕನ್ನು ನೀಡಬೇಕಾಗಿತ್ತೋ ಅದೇ ಹಬ್ಬದ ಹೆಸರಿನಲ್ಲಿ ವಿಘ್ನಗಳನ್ನು ನಾವಾಗಿಯೇ ಆಹ್ವಾನಿಸಿಕೊಂಡಿದ್ದೇವೆ. ಹಾಸನದ ಅವಘಡದಲ್ಲಿ ಟ್ರಕ್ಚಾಲಕನ ತಪ್ಪು ಇದೆ ನಿಜ. ಇದೇ ಸಂದರ್ಭದಲ್ಲಿ ಚಾಲಕ ರಸ್ತೆಯಲ್ಲಿ ಸಾಗುತ್ತಿದ್ದ. ರಸ್ತೆಗಳಿರುವುದು ವಾಹನ ಚಲಾಯಿಸುವುದಕ್ಕೆ ಮತ್ತು ಜನರು ಸಂಚರಿಸುವುದಕ್ಕೆ, ಅನೇಕ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡಗಳು ಸಂಭವಿಸುವ ಸಾಧ್ಯತೆಗಳನ್ನು ನಿರಾಕರಿಸಲು ಸಾಧ್ಯವಾಗುವುದಿಲ್ಲ. ಇದೇ ಸಂದರ್ಭದಲ್ಲಿ ಚಾಲಕ ಮದ್ಯ ಸೇವಿಸಿ ಚಲಾವನೆ ಮಾಡಿರಬಹುದು. ಹಾಗೆಯೇ ಮೆರವಣಿಗೆಯಲ್ಲಿ ಸೇರಿದವರೂ ಮದ್ಯ ಸೇವನೆ ಮಾಡಿರುವ ಸಾಧ್ಯತೆಗಳಿರುತ್ತವೆ. ಅಂದರೆ ತಪ್ಪಿನಲ್ಲಿ ಎಲ್ಲರೂ ಸಮಭಾಗಿಗಳಾಗಿದ್ದಾರೆ ಎನ್ನುವ ಕಹಿ ವಾಸ್ತವವನ್ನು ನಾವು ಒಪ್ಪಲೇ ಬೇಕಾಗುತ್ತದೆ. ಈ ನಿಟ್ಟಿನಲ್ಲಿ, ಹಬ್ಬದ ಹೆಸರಿನಲ್ಲಿ ಯಾವುದೇ ಧರ್ಮಗಳು ನಡೆಸುವ ಸಾರ್ವಜನಿಕ ಮೆರವಣಿಗೆಗಳು, ಆಚರಣೆಗಳು ವಾಹನಗಳು ಓಡಾಡುವ ಜನನಿಬಿಡ ರಸ್ತೆಗಳಲ್ಲಿ ನಡೆಯದಂತೆ ಕಠಿಣ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ. ಗಣೇಶ ಹಬ್ಬವನ್ನು ಹಲವೆಡೆ ಕೃಷಿಫಲಗಳ ಸಂಕೇತವಾಗಿ ಆಚರಿಸುತ್ತಾರೆ. ಆತ ವಿದ್ಯಾಧಿದೇವತೆ ಎಂಬ ನಂಬಿಕೆಯೂ ಇದೆ. ಗಣೇಶೋತ್ಸವವನ್ನು ರಾಜಕೀಯ ಉದ್ದೇಶಗಳಿಗೆ ದುರ್ಬಳಕೆಯಾಗಲು ಅವಕಾಶ ನೀಡದೆ, ನಾಡಿನ ಸಕಲ ವಿಘ್ನಗಳನ್ನು ದೂರೀಕರಿಸುವ ಹಬ್ಬವಾಗಿ ಅರ್ಥಪೂರ್ಣವಾಗಿ ಆಚರಿಸಲು ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು, ಸಮಾಜದ ಸಜ್ಜನರು ನೇತೃತ್ವವನ್ನು ನೀಡಬೇಕಾಗಿದೆ. ಹಾಸನದ ದುರಂತ ಇನ್ನೆಂದೂ ಯಾವ ಹಬ್ಬಗಳಲ್ಲೂ ಮರುಕಳಿಸದಂತೆ ನೋಡಿಕೊಳ್ಳುವುದು ನಾಗರಿಕರೆಂದು ಕರೆಸಿಕೊಳ್ಳುವ ಎಲ್ಲರ ಹೊಣೆಗಾರಿಕೆಯಾಗಿದೆ.
Karnataka Rain: ಈ ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆ, ಅಲರ್ಟ್ ಘೋಷಣೆ
ರಾಜ್ಯದಾದ್ಯಂತ ನೈಋತ್ಯ ಮಾನ್ಸೂನ್ ಬಿರುಸಾಗಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರದಿಂದ ವ್ಯಾಪಕವಾಗಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಸೆಪ್ಟೆಂಬರ್ 17ರಿಂದ 22ರವರೆಗೆ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ
ಓ ಗೆಳೆಯಾ, ಜೀವದ ಗೆಳೆಯಾ! ನರೇಂದ್ರ ಮೋದಿ ಅವರಿಗೆ ಬರ್ತ್ಡೇ ವಿಶ್ ಮಾಡಿದ ಡೊನಾಲ್ಡ್ ಟ್ರಂಪ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 75 ವಸಂತಗಳನ್ನು ಪೂರೈಸಿದ್ದು, ಜಾಗತಿಕ ನಾಯಕರು ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ. ಅದರಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಪ್ರಧಾನಿ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಭಾರತ-ಅಮೆರಿಕ ಸಂಬಂಧ ಮತ್ತು ಜಾಗತಿಕ ಸಹಭಾಗಿತ್ವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಜಂಟಿ ಸಹಕಾರದ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಂಗಳೂರಿನ ಶುದ್ಧ ನೀರಿನ ಘಟಕಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಮುಂಬರುವ ದಿನಗಳಲ್ಲಿ ಜಾರಿಯಾಗಲಿದೆ. ಹೀಗಾಗಿ 5 ರೂ ನಾಣ್ಯಗಳ ಬದಲಿಗೆ ಯುಪಿಐ ಮತ್ತು ಪ್ರಿಪೇಯ್ಡ್ ಕಾರ್ಡ್ ಬಳಕೆಗೆ ಚಿಂತನೆ ನಡೆದಿದೆ. ಜಲಮಂಡಳಿಯು ಘಟಕಗಳ ನಿರ್ವಹಣೆಯನ್ನು ಗುತ್ತಿಗೆದಾರರಿಗೆ ವಹಿಸಲಿದ್ದು, ಆದಾಯವನ್ನು 60:40 ಅನುಪಾತದಲ್ಲಿ ಹಂಚಿಕೊಳ್ಳಲಾಗುವುದು. ಶೀಘ್ರದಲ್ಲೇ ಎಲ್ಲ ಘಟಕಗಳಲ್ಲಿ ಏಕರೂಪದ ದರ ನಿಗದಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. .
ಆಗುಂಬೆ ಘಾಟಿ ತಿರುವುಗಳಲ್ಲಿ ಹೊಂಡ ಅಪಘಾತಕ್ಕೆ ಆಹ್ವಾನ : ಸಂಚಾರ ಸಂಕಷ್ಟ, ಟ್ರಾಫಿಕ್ ಜಾಮ್
ಆಗುಂಬೆ ಘಾಟಿಯ ತಿರುವುಗಳಲ್ಲಿ ದೊಡ್ಡ ಹೊಂಡಗಳು ಸಂಚಾರಕ್ಕೆ ತೀವ್ರ ಸಮಸ್ಯೆ ಸೃಷ್ಟಿಸಿವೆ. ಮಳೆಗಾಲದಲ್ಲಿ ಗುಡ್ಡ ಕುಸಿತದಿಂದ ಹಾಗೂ ರಸ್ತೆ ಗುಂಡಿಗಳಿಂದ ವಾಹನ ಸಂಚಾರಕ್ಕೆ ಅಪಾಯ ಉಂಟಾಗಿದೆ/. ಮಲ್ಪೆ-ತೀರ್ಥಹಳ್ಳಿ ಎನ್ಎಚ್ 169ಎ ರಸ್ತೆಯ ದುರಸ್ತಿ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ, ಇಲ್ಲದಿದ್ದರೆ ಅಪಾಯವು ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ.
ಧಾರವಾಡ| ಗಲಾಟೆ ಪ್ರಕರಣ : ಇಬ್ಬರು ಪೊಲೀಸ್ ಪೇದೆಗಳ ಅಮಾನತು
ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದ ಲಾಠಿ ಚಾರ್ಜ್ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿ ವಿಸರ್ಜನೆ ವೇಳೆ ನಡೆದ ಲಾಠಿ ಚಾರ್ಜ್ ಪ್ರಕರಣ ರಾಜಕೀಯ ತಿರುವುಗಳನ್ನ ಪಡೆದುಕೊಂಡು ಸಾಕಷ್ಟು ಸದ್ದು ಮಾಡಿತ್ತು. ಸಿಪಿಐ ಕಮತಗಿ ಹಾಗೂ ಪೊಲೀಸ್ ಪೇದೆ ಸೈಯದ್ ಎಂಬವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೂರಾರು ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ನಂತರ ನರೇಂದ್ರ ಗ್ರಾಮಕ್ಕೆ ಕಳೆದ ಎರಡು ದಿನಗಳ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಗ್ರಾಮಕ್ಕೆ ತೆರಳಿ ಲಾಠಿ ಚಾರ್ಜ್ಗೆ ಕಾರಣರಾದ ಸಿಪಿಐ ಹಾಗೂ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಬೇಕು ಎಂದು ಎಸ್ಪಿ ಅವರಿಗೆ ಆಗ್ರಹಿಸಿದ್ದರು. ಸಾಕಷ್ಟು ರಾಜಕೀಯ ಚರ್ಚೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರು ಪೊಲೀಸ್ ಪೇದೆಗಳಾದ ಸೈಯದ್ ಹಾಗೂ ಕೃಷ್ಣಾ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಭಕ್ತರು ದೇವಾಲಯಗಳಿಗೆ ಕಾಣಿಕೆ ನೀಡುವುದು ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಲ್ಲ: ಸುಪ್ರೀಂ ಕೋರ್ಟ್
ಹೊಸದಿಲ್ಲಿ: ದೇವಸ್ಥಾನಗಳಿಗೆ ಭಕ್ತರು ನೀಡುವ ಕಾಣಿಕೆಗಳನ್ನು ಕಲ್ಯಾಣ ಮಂಟಪಗಳ ನಿರ್ಮಾಣಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ದೇಗುಲಗಳಿಗೆ ಕಾಣಿಕೆ ನೀಡುವ ಭಕ್ತರ ಉದ್ದೇಶವೇ ದೇವಾಲಯದ ಅಭಿವೃದ್ಧಿ ಹಾಗೂ ಧಾರ್ಮಿಕ ಸೌಲಭ್ಯಗಳ ಸುಧಾರಣೆ ಎಂಬುದಾಗಿ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಹಾಗೂ ಸಂದೀಪ್ ಮೆಹ್ರಾ ಅವರನ್ನೊಳಗೊಂಡ ಪೀಠವು, “ಭಕ್ತರು ದೇಗುಲಗಳಿಗೆ ಕಾಣಿಕೆ ನೀಡುವಾಗ ಮದುವೆ ಮಂಟಪ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಕಟ್ಟಡಗಳನ್ನು ನಿರ್ಮಿಸಬೇಕು ಎಂಬ ಆಲೋಚನೆಯಿಂದ ನೀಡುವುದಿಲ್ಲ. ಈ ಕಾಣಿಕೆ ಸಂಪೂರ್ಣವಾಗಿ ದೇಗುಲದ ಆವರಣದ ಸೌಕರ್ಯ, ಪೂಜೆ-ಪರಂಪರೆ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಾಗಿರಬೇಕು” ಎಂದು ಅಭಿಪ್ರಾಯಪಟ್ಟಿತು. ತಮಿಳುನಾಡಿನ ಐದು ಪ್ರಮುಖ ದೇವಸ್ಥಾನಗಳ ನಿಧಿಯನ್ನು ಬಳಸಿ ಕಲ್ಯಾಣ ಮಂಟಪಗಳನ್ನು ನಿರ್ಮಿಸಲು ಸರ್ಕಾರ ಅನುಮತಿ ನೀಡಿದ್ದುದನ್ನು ಮದ್ರಾಸ್ ಹೈಕೋರ್ಟ್ ಮದುರೈ ಪೀಠವು ಆಗಸ್ಟ್ 19ರಂದು ವಜಾಗೊಳಿಸಿತ್ತು. ಸರ್ಕಾರದ ಈ ನಿರ್ಧಾರವು ಧಾರ್ಮಿಕ ಉದ್ದೇಶಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿತ್ತು. ಅದರ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಮದುರೈ ಪೀಠದ ಆದೇಶಕ್ಕೆ ತಡೆ ನೀಡಲು ಸಲ್ಲಿಸಿದ್ದ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. “ದೇವಾಲಯದ ಆವರಣದಲ್ಲಿ ನಿರ್ಮಿಸಲಾದ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯುತ್ತದೆ ಎಂದು ಭಾವಿಸಿದರೆ, ಅಲ್ಲಿ ಅಶ್ಲೀಲ ಹಾಡುಗಳು, ಅಸಭ್ಯ ನೃತ್ಯಗಳು ನಡೆದರೆ, ಅದು ದೇವಾಲಯದ ಧಾರ್ಮಿಕ ಸನ್ಮಾನ್ಯತೆಯನ್ನು ಹಾಳು ಮಾಡುವುದಲ್ಲವೇ?” ಎಂದು ವಿಚಾರಣೆ ವೇಳೆ ನ್ಯಾಯಪೀಠವು ತೀವ್ರವಾಗಿ ಪ್ರಶ್ನಿಸಿತು. ಹೈಕೋರ್ಟ್ನ ಅಭಿಪ್ರಾಯವನ್ನು ಮರುಉಲ್ಲೇಖಿಸಿದ ಸುಪ್ರೀಂ, “ದೇವಾಲಯದ ಕಾಣಿಕೆಗಳನ್ನು ಸರ್ಕಾರದ ನಿಧಿಯಂತೆ ಪರಿಗಣಿಸಲಾಗುವುದಿಲ್ಲ. ಇವು ಶುದ್ಧ ಧಾರ್ಮಿಕ ಉದ್ದೇಶಕ್ಕೆ ಮಾತ್ರ ಮೀಸಲಾಗಿರಬೇಕು. ಕಲ್ಯಾಣ ಮಂಟಪ ನಿರ್ಮಿಸಿ ಬಾಡಿಗೆಗೆ ಕೊಡುವುದು ಭಕ್ತರ ಕಾಣಿಕೆಯ ಧಾರ್ಮಿಕ ಉದ್ದೇಶಕ್ಕೆ ವಿರುದ್ಧ” ಎಂದು ಸ್ಪಷ್ಟಪಡಿಸಿತು. ಈ ಹಂತದಲ್ಲಿ ಯಾವುದೇ ತಡೆಯಾಜ್ಞೆ ನೀಡುವುದಿಲ್ಲವೆಂದು ತಿಳಿಸಿದ ಸುಪ್ರೀಂ, “ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರದ ಅನುಮತಿ ಸರಿಯೇ ತಪ್ಪೇ ಎಂಬುದರ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ” ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿದೆ.
ಸನಾತನ ಹಿಂದೂ ಧರ್ಮ ಉಳಿಯುವ ಗ್ಯಾರಂಟಿ ಮೇಲೆ ಮುಂದಿನ ಚುನಾವಣೆ ನಡೆಯಲಿ: ಶಾಸಕ ಬಸನಗೌಡ ಯತ್ನಾಳ್
ʼʼಈ ದೇಶದಲ್ಲಿರಬೇಕಾದರೆ ವಂದೇ ಮಾತರಂ ಎನ್ನಬೇಕು, ಇಲ್ಲವಾದರೆ ಗಾಂಧಿ ಮಾಡಿಕೊಟ್ಟ ದೇಶಕ್ಕೆ ಹೋಗಿʼʼ
ಮಾಲೇಗಾಂವ್ ಸ್ಫೋಟ ಪ್ರಕರಣ | ಮೃತರ ಕುಟುಂಬದವರನ್ನು ಸಾಕ್ಷಿಗಳನ್ನಾಗಿ ಮಾಡಲಾಗಿತ್ತೇ?: ವಿವರ ಕೇಳಿದ ಬಾಂಬೆ ಹೈಕೋರ್ಟ್
ಮುಂಬೈ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿರುವ ತೀರ್ಪಿನ ವಿರುದ್ಧ ಸಂತ್ರಸ್ತರ ಕುಟುಂಬದವರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. “ಸಂತ್ರಸ್ತರ ಕುಟುಂಬದವರನ್ನು ಸಾಕ್ಷಿಗಳನ್ನಾಗಿ ಮಾಡಲಾಗಿತ್ತೇ? ಅವರನ್ನು ವಿಚಾರಣೆಗೆ ಒಳಪಡಿಸಿದ್ದರ ವಿವರಗಳನ್ನು ಸಲ್ಲಿಸಬೇಕು” ಎಂದು ನ್ಯಾಯಪೀಠವು ಮಂಗಳವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ ಹಾಗೂ ನ್ಯಾಯಮೂರ್ತಿ ಗೌತಮ ಅಂಖಡ ಅವರಿದ್ದ ಪೀಠವು ಈ ವಿಚಾರಣೆ ನಡೆಸಿತು. ಸ್ಫೋಟದಲ್ಲಿ ಮೃತಪಟ್ಟ ಆರು ಜನರ ಕುಟುಂಬದ ಸದಸ್ಯರು ಜಮಿಯಾತ್ ಉಲೇಮಾ ಮಹಾರಾಷ್ಟ್ರ (ಅರ್ಷದ್ ಮದನಿ) ಕಾನೂನು ನೆರವು ಸಮಿತಿ ಮೂಲಕ ಮೇಲ್ಮನವಿ ಸಲ್ಲಿಸಿದ್ದರು. ನಿಸಾರ್ ಅಹ್ಮದ್ ಎಂಬವರ ಪುತ್ರ ಸ್ಫೋಟದಲ್ಲಿ ಮೃತಪಟ್ಟಿದ್ದರೂ, ವಿಚಾರಣೆ ವೇಳೆ ಅವರನ್ನು ಸಾಕ್ಷಿಯನ್ನಾಗಿ ಮಾಡಲಾಗಿಲ್ಲ ಎಂದು ವಕೀಲರು ಹೈಕೋರ್ಟ್ ಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಮೃತರ ಕುಟುಂಬದವರು ಸಾಕ್ಷಿಗಳಾಗಬೇಕಾಗಿತ್ತು. ಅವರನ್ನು ಸಾಕ್ಷಿಗಳನ್ನಾಗಿ ಮಾಡಲಾಗಿತ್ತೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಮೇಲ್ಮನವಿದಾರರು ಸ್ಪಷ್ಟನೆ ನೀಡಬೇಕು” ಎಂದು ಸೂಚಿಸಿತು. 2008ರ ಸೆಪ್ಟೆಂಬರ್ 29ರಂದು ಮಾಲೇಗಾಂವ್ ನ ಮಸೀದಿಯ ಬಳಿ ನಿಲ್ಲಿಸಿದ್ದ ಬೈಕ್ ನಲ್ಲಿ ಅಳವಡಿಸಿದ್ದ ಸ್ಫೋಟಕ ಸ್ಫೋಟಗೊಂಡಿತ್ತು. ಈ ದಾಳಿಯಲ್ಲಿ ಆರು ಮಂದಿ ಮೃತಪಟ್ಟರೆ, 101 ಮಂದಿ ಗಾಯಗೊಂಡಿದ್ದರು. ದೀರ್ಘ ವಿಚಾರಣೆಯ ಬಳಿಕ, ಎನ್ಐಎ ವಿಶೇಷ ನ್ಯಾಯಾಲಯವು ಜುಲೈ 31ರಂದು, ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ ಸೇರಿ ಏಳು ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು. ತಪ್ಪಾದ ತನಿಖೆ ಅಥವಾ ತನಿಖೆಯಲ್ಲಿನ ನ್ಯೂನತೆಗಳನ್ನು ಆಧಾರ ಮಾಡಿಕೊಂಡು ಆರೋಪಿಗಳನ್ನು ಖುಲಾಸೆಗೊಳಿಸಲು ಸಾಧ್ಯವಿಲ್ಲ ಎಂದು ಮೇಲ್ಮನವಿದಾರರ ವಾದ ಮಂಡಿಸಿದರು. ಈ ಸ್ಫೋಟ ಪೂರ್ವನಿಯೋಜಿತ ಸಂಚು ಆಗಿದ್ದು, ನೇರ ಸಾಕ್ಷ್ಯಗಳಿರಲು ಸಾಧ್ಯವಿಲ್ಲ. ವಿಚಾರಣಾ ನ್ಯಾಯಾಲಯವು ಪ್ರಾಸಿಕ್ಯೂಷನ್ ನ ನ್ಯೂನತೆಗಳನ್ನು ಬಳಸಿಕೊಂಡು ಆರೋಪಿಗಳಿಗೆ ಲಾಭವಾಗುವಂತೆ ಮಾಡಿದೆ. ಎನ್ಐಎ ತನಿಖೆ ಕೈಗೆತ್ತಿಕೊಂಡ ಬಳಿಕ ಆರೋಪಿಗಳ ವಿರುದ್ಧದ ಆಪಾದನೆಗಳನ್ನು ದುರ್ಬಲಗೊಳಿಸಲಾಯಿತು ಎಂದು ಅವರು ಉಲ್ಲೇಖಿಸಿದರು. ಹೈಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಕೆಎಸ್ಎಲ್ಎಸ್ಎ ದಾಖಲೆ; 1.11 ಕೋಟಿ ಪ್ರಕರಣಗಳು ಇತ್ಯರ್ಥ, 3,997 ಕೋಟಿ ರೂ. ಪರಿಹಾರ
ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ವತಿಯಿಂದ ರಾಜ್ಯದಾದ್ಯಂತ ಸೆಪ್ಟೆಂಬರ್ 13ರಂದು ಆಯೋಜಿಸಲಾಗಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳೂ ಸೇರಿ ದಾಖಲೆಯ 1,11,05,960 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದ್ದು, ಸಂಬಂಧಪಟ್ಟವರಿಗೆ 3,997 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ. ಹೈಕೋರ್ಟ್ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕೆಎಸ್ಎಲ್ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹಿರಿಯ ನ್ಯಾಯಮೂರ್ತಿ ಅನು ಸಿವರಾಮನ್ ಅವರು ಅದಾಲತ್ನಲ್ಲಿ ರಾಜಿಯಾದ ಪ್ರಕರಣಗಳು ಹಾಗೂ ಪರಿಹಾರದ ಅಂಕಿ-ಅಂಶಗಳ ಕುರಿತು ಮಾಹಿತಿ ನೀಡಿದರು. ಲೋಕ ಅದಾಲತ್ಗಾಗಿ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರಗಿಯ ಪೀಠಗಳು ಹಾಗೂ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳೂ ಸೇರಿ ಒಟ್ಟು 989 ಪೀಠಗಳನ್ನು ಸ್ಥಾಪಿಸಲಾಗಿತ್ತು. ಹೈಕೋರ್ಟ್ನ ಮೂರೂ ಪೀಠಗಳಲ್ಲಿ ಬಾಕಿ ಇದ್ದ ಒಟ್ಟು 1,042 ಪ್ರಕರಣಗಳು ಹಾಗೂ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿದ್ದ 2,41,251 ಪ್ರಕರಣಗಳು ಸೇರಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಒಟ್ಟು 2,42,293 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೆ, 1,08,63,667 ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಅದಾಲತ್ನಲ್ಲಿ ವಿಲೇವಾರಿ ಮಾಡಲಾಗಿದ್ದು, ಒಟ್ಟಾರೆ 1,11,05,960 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ನ್ಯಾಯಮೂರ್ತಿ ಅನು ಸಿವರಾಮನ್ ತಿಳಿಸಿದರು. ಸಂಚಾರ ನಿಯಮ ಉಲ್ಲಂಘನೆ ಕೇಸ್ ಇತ್ಯರ್ಥದಲ್ಲಿ ಪ್ರಾಧಿಕಾರದ ಐತಿಹಾಸಿಕ ಸಾಧನೆ: ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳನ್ನೂ ಲೋಕ ಅದಾಲತ್ನಲ್ಲಿ ರಾಜಿ ಸಂಧಾನಕ್ಕೆ ನಿಗದಿಪಡಿಸಲಾಗಿತ್ತು. ಅದರಂತೆ, 53,11,589 ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳಾಗಿ ವಿಲೇವಾರಿ ಮಾಡಲಾಗಿದ್ದು, 144 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ದಂಡ ಸಂಗ್ರಹಿಸಲಾಗಿದೆ. ಈ ರೀತಿಯ ಟ್ರಾಫಿಕ್ ಚಲನ್ ಪ್ರಕರಣಗಳ ಇತ್ಯರ್ಥವು ಪ್ರಾಧಿಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರಿಂದ, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ದಾಖಲೆ ಮೊತ್ತದ ಆದಾಯ ಸಂದಾಯವಾಗುವ ಜತೆಗೆ, ಸಾರ್ವಜನಿಕರಲ್ಲಿ ಸಂಚಾರ ಜಾಗೃತಿಯನ್ನೂ ಸೃಷ್ಟಿಸಿದೆ ಎಂದು ನ್ಯಾಯಮೂರ್ತಿಗಳು ಅನು ಸಿವರಾಮನ್ ಹರ್ಷ ವ್ಯಕ್ತಪಡಿಸಿದರು. ರಾಷ್ಟ್ರೀಯ ಲೋಕ ಅದಾಲತ್ ಮುಖ್ಯಾಂಶಗಳು: ► ರಾಜ್ಯದಾದ್ಯಂತ ಒಟ್ಟು 1,446 ವೈವಾಹಿಕ ಪ್ರಕರಣಗಳ ಇತ್ಯರ್ಥ ಒಟ್ಟು 304 ದಂಪತಿ ರಾಜಿ ಸಂಧಾನದ ಮೂಲಕ ಒಂದಾಗಿ, ಸಹಜೀವನ ನಡೆಸಲು ನಿರ್ಧಾರ. ►2,876 ವಿಭಾಗ ದಾವೆ (ಪಾರ್ಟಿಷನ್ ಸೂಟ್) ಇತ್ಯರ್ಥ; 3,708 ಮೋಟಾರು ವಾಹನ ಅಪಘಾತ ಪರಿಹಾರ (ಎಂವಿಸಿ) ಪ್ರಕರಣಗಳು 265 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥ ► 1,148 ಎಂವಿಸಿ. ಅಮಲ್ಜಾರಿ ಪ್ರಕರಣಗಳು 70 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥ; 10,273 ಚೆಕ್ ಬೌನ್ಸ್ ಪ್ರಕರಣಗಳ ವಿಲೇವಾರಿ, 1,863 ಕೋಟಿ ರೂ. ಪರಿಹಾರ. ► 355 ಭೂಸ್ವಾಧೀನ (ಎಲ್ಎಸಿ) ಅಮಲ್ಜಾರಿ ಪ್ರಕರಣಗಳ ವಿಲೇವಾರಿ, 275 ಕೋಟಿ ರೂ. ಪರಿಹಾರ; 2,864 ಇತರ ಅಮಲ್ಜಾರಿ ಪ್ರಕರಣಗಳು 128 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥ. ► 21 ರೇರಾ ಪ್ರಕರಣಗಳು 2.63 ಕೋಟಿ ರೂ. ಪರಿಹಾರ ಮೊತ್ತಕ್ಕೆ ವಿಲೇವಾರಿ ► ಸಾಲ ವಸೂಲಾತಿ ನ್ಯಾಯಮಂಡಳಿಯ ಒಟ್ಟು 23 ಪ್ರಕರಣಗಳು 14 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥ; 185 ಗ್ರಾಹಕ ವ್ಯಾಜ್ಯ ಪ್ರಕರಗಳು 4 ಕೋಟಿ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥ ವಿಶೇಷ ಪ್ರಕರಣಗಳು: ► 5 ವರ್ಷಕ್ಕೂ ಹಳೆಯ 1,460 ಪ್ರಕರಣಗಳು, 10 ವರ್ಷಕ್ಕೂ ಹಳೆಯ 198 ಹಾಗೂ 15 ವರ್ಷಕ್ಕೂ ಹಳೆಯ 22 ಪ್ರಕರಣಗಳೂ ಸೇರಿ ಒಟ್ಟು 1,680 ಹಳೆಯ ಪ್ರಕರಣಗಳ ಇತ್ಯರ್ಥ. ► ಹಿರಿಯ ನಾಗರಿಕರಿಗೆ ಸಂಬಂಧಿಸಿದ 1,499 ಪ್ರಕರಣಗಳ ವಿಲೇವಾರಿ. ► ನ್ಯಾಯಮೂರ್ತಿ ಅನು ಸಿವರಾಮನ್ ಅವರ ಹೈಕೋರ್ಟ್ನ ಲೋಕ ಅದಾಲತ್ ಪೀಠದಲ್ಲಿ ಎಂಎಫ್ಎ (ಅಪಘಾತದಿಂದ ಸಾವು ಸಂಭವಿಸಿದ್ದ) ಪ್ರಕರಣವೊಂದು 1 ಕೋಟಿ 5 ಲಕ್ಷ ರೂ. ಪರಿಹಾರ ಮೊತ್ತಕ್ಕೆ ಇತ್ಯರ್ಥ. ► ಬೆಳಗಾವಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಪೀಠದಲ್ಲಿದ್ದ ಭೂಸ್ವಾಧೀನ ಪ್ರಕರಣ 57,57,82,023 ರೂ. ಗಳಿಗೆ ವಿಲೇವಾರಿ. ►ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿನ ನ್ಯಾಯಾಲಯದಿಂದ ಕರ್ನಾಟಕದ ಕೊಡಗು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದ ಮಹಿಳೆಯೊಬ್ಬರ ವೈವಾಹಿಕ ಪ್ರಕರಣ ಇತ್ಯರ್ಥ. ಪರಸ್ಪರ ಒಪ್ಪಿಗೆಯ ಮೇರೆಗೆ ದಂಪತಿ ಒಟ್ಟಾಗಿ ಬಾಳಲು ನಿರ್ಧಾರ. ► ಶಿವಮೊಗ್ಗ ಜಿಲ್ಲೆಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಇದ್ದ ಅಮಲ್ಜಾರಿ ಪ್ರಕರಣ 5,90,11,509 ರೂ. ಮೊತ್ತಕ್ಕೆ ಇತ್ಯರ್ಥ. ಡಿಸೆಂಬರ್ 13ರಂದು 4ನೇ ಅದಾಲತ್: 2025ನೇ ಸಾಲಿನ ನಾಲ್ಕನೇ ರಾಷ್ಟ್ರೀಯ ಲೋಕ ಅದಾಲತ್ ಡಿಸೆಂಬರ್ 13ರಂದು ನಡೆಯಲಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಅದಾಲತ್ನಲ್ಲಿ ಪಾಲ್ಗೊಂಡು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ತಮ್ಮ ಹಣ ಹಾಗೂ ಸಮಯ ಉಳಿತಾಯ ಮಾಡಿಕೊಳ್ಳಬಹುದು ಎಂದು ನ್ಯಾಯಮೂರ್ತಿ ಅನು ಸಿವರಾಮನ್ ತಿಳಿಸಿದರು. ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಎಸ್.ಜಿ. ಪಂಡಿತ್, ಕೆಎಸ್ಎಲ್ಎಸ್ಎ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಉಪಸ್ಥಿತರಿದ್ದರು.
ಚಡಚಣದಲ್ಲಿ ಎಸ್ಬಿಐ ಬ್ಯಾಂಕ್ ದರೋಡೆ, 50 ಕೆಜಿ ಚಿನ್ನ, ₹8 ಕೋಟಿ ನಗದು ಲೂಟಿ! ಬೆಚ್ಚಿಬೀಳಿಸಿದ ಕೃತ್ಯ
ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್ಬಿಐ ಶಾಖೆಗೆ ಸಂಜೆ ಮುಸುಕುಧಾರಿಗಳು ನುಗ್ಗಿ ಸಿಬ್ಬಂದಿಯನ್ನು ಕಟ್ಟಿಹಾಕಿ ಪಿಸ್ತೂಲ್ ತೋರಿಸಿ ಸುಮಾರು 50 ಕೆಜಿ ಚಿನ್ನ ಮತ್ತು 8 ಕೋಟಿ ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರು ಮಹಾರಾಷ್ಟ್ರದ ಹುಲಜಂತಿ ಬಳಿ ವಾಹನ ಅಪಘಾತಕ್ಕೀಡಾಗಿದ್ದರಿಂದ ಚಿನ್ನಾಭರಣ ಬಿಟ್ಟು ಓಡಿಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರು ತನಿಖೆಯನ್ನು ಕೈಗೊಂಡಿದ್ದು, ಮಹಾರಾಷ್ಟ್ರಕ್ಕೆ ತೆರಳಿದ್ದಾರೆ.
ಕನ್ನಡ ವಿರೋಧಿ ಸಿಂಧಿ ಪ್ರೌಢಶಾಲೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರಕಾರಕ್ಕೆ ಡಾ.ಬಿಳಿಮಲೆ ಪತ್ರ
ಬೆಂಗಳೂರು: ನಗರದ ಕುಮಾರ ಪಾರ್ಕ್ನಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡುವ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಆಘಾತಕಾರಿ ಕ್ರಮವನ್ನು ಅನುಸರಿಸಲಾಗುತ್ತಿದ್ದು, ಸರಕಾರ ಕೂಡಲೇ ಈ ಶಾಲೆಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಮಂಗಳವಾರ ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ಗೆ ಪತ್ರ ಬರೆದಿರುವ ಅವರು, ಬೆಂಗಳೂರು ಉತ್ತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಮಗೆ ಸಲ್ಲಿಸಿರುವ ವರದಿಯಲ್ಲಿ ಸಿಂಧಿ ಪ್ರೌಢಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿರುವುದಕ್ಕೆ ದಂಡ ವಿಧಿಸಿರುವುದನ್ನು ಶಾಲೆಯ ಪ್ರಾಂಶುಪಾಲರೇ ಒಪ್ಪಿಕೊಂಡಿರುವ ಬಗ್ಗೆ ಖಚಿತ ದಾಖಲೆಗಳಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳೇ ಕನ್ನಡದಲ್ಲಿ ಮಾತನಾಡಿದಕ್ಕೆ ತಮ್ಮಿಂದ ದಂಡ ವಸೂಲಿ ಮಾಡಲಾಗಿದೆ ಎಂಬ ಅಂಶವನ್ನು ಉಪ ನಿರ್ದೇಶಕರ ಭೇಟಿಯ ಸಂದರ್ಭದಲ್ಲಿ ಬಹಿರಂಗಪಡಿಸಿದ್ದು, ರಾಜಧಾನಿಯ ಪ್ರತಿಷ್ಠಿತ ಶಾಲೆಯೊಂದು ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಈ ರೀತಿ ಕಸಿಯುತ್ತಿರುವುದು, ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿರುವುದು ಹಾಗೂ ಕನ್ನಡದ ಕುರಿತಂತೆ ಲಘು ಧೋರಣೆಯನ್ನು ಅನುಸರಿಸುತ್ತಿರುವುದು, ಕನ್ನಡದ ಹಿತದೃಷ್ಠಿಯಿಂದ ಅತ್ಯಂತ ನಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕನ್ನಡ ವಿರೋಧಿ ಧೋರಣೆ ತೋರುವ ಇಂತಹ ಶಾಲೆಗಳ ವಿರುದ್ಧ ಯಾವುದೇ ಕಠಿಣ ಕ್ರಮವಾಗದಿದ್ದರೆ, ಸಮಾಜಕ್ಕೆ ಉತ್ತಮ ಸಂದೇಶ ಹೋಗುವುದಿಲ್ಲ. ಹಾಗೂ ಕನ್ನಡ ತನ್ನ ನೆಲದಲ್ಲಿಯೇ ಪರಕೀಯ ಸ್ಥಾನಕ್ಕೆ ತೃಪ್ತಿಪಡಬೇಕಾದ ಅನಿವಾರ್ಯತೆಗೆ ಸಾಕ್ಷಿಯಾಗುತ್ತದೆ ಎಂದು ತಿಳಿಸಿದ್ದಾರೆ. ಶಾಲೆಯ ಮಾನ್ಯತೆ ರದ್ದುಗೊಳಿಸಿ: ‘ಸರಕಾರದ ಕನ್ನಡ ಪರ ನಿಲುವು ಸಾಬೀತು ಮಾಡಲು ಶಾಲಾ ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ. ನೆಲದ ಭಾμÉಯನ್ನು ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆಯನ್ನು ರದ್ದುಪಡಿಸಿ, ಎನ್ಒಸಿ ಹಿಂಪಡೆಯಬೇಕು. ಶಿಕ್ಷಣ ಸಚಿವರ ಈ ಕ್ರಮವು ಇಡೀ ರಾಜ್ಯವನ್ನು ತಲುಪಿದಲ್ಲಿ ಬೇರೆ ಶಿಕ್ಷಣ ಸಂಸ್ಥೆಗಳಿಗೂ ಇದು ಪಾಠವಾಗಲಿದೆ. ಕನ್ನಡದ ಹಿತದೃಷ್ಠಿಯಿಂದ ಈ ಕಠಿಣ ಕ್ರಮ ಅನಿವಾರ್ಯ’ -ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ತಾಯಿ ಅಪ್ಪನ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಪಾಲಿದೆಯಾ? ಕೋರ್ಟ್ ಹೇಳೋದೇನು?
ದೇಶದಲ್ಲಿ ಬಹುತೇಕ ಕುಟುಂಬಗಳ ಅಣ್ಣ-ತಮ್ಮಂದಿರು, ತಂಗಿ, ಅಕ್ಕ, ಅಪ್ಪನ ಆಸ್ತಿಗೆ ಕಿತ್ತಾಡುವುದನ್ನು ನಾವು ನೋಡಿರುತ್ತೇವೆ. ಆದರೆ, ಇದೀಗ ತಾಯಿ ಅಪ್ಪನ ಆಸ್ತಿ ಕೇಳಿ ಕೋರ್ಟ್ ಮೊರೆ ಹೋಗಿರುವ ಘಟನೆ ನಡೆದಿದೆ. ಹಾಗಾದ್ರೆ, ಇದು ನಡೆದಿದ್ದು ಎಲ್ಲಿ? ಕೋರ್ಟ್ ಹೇಳುವುದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಮಕ್ಕಳು ತಂದೆಯ ಆಸ್ತಿಯಲ್ಲಿ ಪಾಲು
ಮಂಗಳೂರು| ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ 4 ತಿಂಗಳ ಸಜೆ, ದಂಡ
ಮಂಗಳೂರು, ಸೆ.16: ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿಯು ದಂಡ ತೆರಳು ತಪ್ಪಿದಲ್ಲಿ ಒಂದು ತಿಂಗಳ ಕಾಲ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ನ್ಯಾಯಾಧೀಶರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ. 2022ರ ಎ.25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿ ಸಿ ಬಸ್ನಲ್ಲಿ ಆರೋಪಿ ಮಾಡ್ನೂರು ಗ್ರಾಮದ ನಿವಾಸಿ ಸತ್ತಾರ್ ಎಂಬಾತನು ತನ್ನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ಕೆ ವಿ ರವರು ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ವೇಳೆ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕರಾದ ಕವಿತಾ ಕೆ ವಾದಿಸಿದ್ದರು.
ರಸ್ತೆ ಅಪಘಾತ ಸಂತಸ್ಥರಿಗೆ ರಾಜ್ಯ ಸರಕಾರದಿಂದ ಹೆಚ್ಚುವರಿ 1ಲಕ್ಷ ರೂ.ನೆರವು
ಬೆಂಗಳೂರು: ರಾಜ್ಯ ಸರಕಾರವು ಅನುಷ್ಟಾನ ಮಾಡಿದ ರಸ್ತೆ ಅಪಘಾತ ಸಂತ್ರಸ್ತರ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಮಾರ್ಪಡಿಸಿದ್ದು, ಪ್ರತಿ ಅಪಘಾತ ಸಂತ್ರಸ್ತರಿಗೆ ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಆದೇಶ ಹೊರಡಿಸಿದೆ. ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯವು 1988ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 162 ರಡಿಯಲ್ಲಿ ಈ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಪ್ರತಿ ವ್ಯಕ್ತಿಗೆ ವರ್ಷಕ್ಕೆ 1.5 ಲಕ್ಷ ರೂ. ಮಿತಿಗೊಳಪಟ್ಟು ಗೋಲ್ಡನ್ ಅವರ್ (ಮೊದಲ ಒಂದು ಗಂಟೆ) ಅವಧಿಯಲ್ಲಿ ಮತ್ತು ಅಪಘಾತದ ನಂತರದ 7 ದಿನಗಳವರೆಗೆ ಉಚಿತ ತುರ್ತು ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಾಮಾಜಿಕ-ಆರ್ಥಿಕ ಸ್ಥಿತಿ ಅಥವಾ ರಾಷ್ಟ್ರೀಯತೆಯನ್ನು ಲೆಕ್ಕಿಸದೆ ಎಲ್ಲ ವ್ಯಕ್ತಿಗಳಿಗೆ ಅನ್ವಯಿಸುತ್ತದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಈ ಯೋಜನೆಯಡಿಯಲ್ಲಿ ನೋಂದಾವಣೆಯಾಗಿಲ್ಲದ ಆಸ್ಪತ್ರೆಗಳೂ ಕಡ್ಡಾಯವಾಗಿ ಸಂತ್ರಸ್ಥರಿಗೆ ಚಿಕಿತ್ಸೆ ನೀಡಬೇಕು. ಆದರೆ ನೋಂದಾವಣೆಯಾಗಿಲ್ಲದ ಆಸ್ಪತ್ರೆಗಳು ಸ್ಥಿರೀಕರಣ ಪ್ಯಾಕೇಜ್ಗಳಿಗೆ ಮಾತ್ರ ಅರ್ಹವಾಗಿರುತ್ತವೆ. ರಾಜ್ಯ ಸರಕಾರವು ರಾಜ್ಯದಲ್ಲಿಯೂ ಈ ಯೋಜನೆಯನ್ನು ಅನುಷ್ಟಾನ ಮಾಡಿದ್ದು, ಯೋಜನೆಯ ಮಾರ್ಗಸೂಚಿಗಳಂತೆ 1.5 ಲಕ್ಷ ರೂ. ಮೀರಿದ ಚಿಕಿತ್ಸಾ ವಿಧಾನಗಳಿಗೆ ವೈದ್ಯಕೀಯ ತಜ್ಞರ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಹೆಚ್ಚುವರಿಯಾಗಿ ಒಂದು ಲಕ್ಷ ರೂ. ಸಹಾಯಧನವನ್ನು ನೀಡಲಿದೆ. ಅಪಘಾತದಿಂದಾಗಿ ವೆಂಟಿಲೇಟರ್ ನಲ್ಲಿ ಇರುವ ರೋಗಿಗಳು ಹಾಗೂ ಮಲ್ಟಿ ಆರ್ಗನ್ ವೈಫಲ್ಯ ಅಥವಾ ಇತರ ಗಂಭೀರ ಚಿಕಿತ್ಸೆಗೆ ಒಳಪಟ್ಟವರು, 7 ದಿನಗಳ ಚಿಕಿತ್ಸೆ ನಂತರವೂ ವಿಸ್ತ್ರತ ಚಿಕಿತ್ಸೆಗೆ ಒಳಗಾದಲ್ಲಿ ರಾಜ್ಯವು ಅವರಿಗೆ ಹೆಚ್ಚುವರಿ ಆರ್ಥಿಕ ನೆರವು ನೀಡಲಿದೆ. ಆರಂಭಿಕ ಚಿಕಿತ್ಸೆಯ ನಂತರ ರೋಗಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದರೆ, ಆ ಆಸ್ಪತ್ರೆಯು ರಾಷ್ಟ್ರೀಯ ಮಂಡಳಿಗಳಲ್ಲಿ ಮಾನ್ಯತೆ ಪಡೆದಿರಬೇಕು ಅಥವಾ ರಾಜ್ಯದ ನೊಂದಾವಣೆ ಮಾನದಂಡಗಳನ್ನು ಪೂರೈಸಿರಬೇಕು. ಈ ಸಂದರ್ಭದಲ್ಲಿ ರೋಗಿಯ ಚಿಕಿತ್ಸೆಯು ಎಸ್ಎಎಸ್ಟಿ ಪ್ಯಾಕೇಜ್ ದರಗಳಲ್ಲಿ 1 ಲಕ್ಷ ರೂ.ಗಳ ಮಿತಿಗೆ ಒಳಪಟ್ಟಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಅಫಜಲಪುರ | ಮಳೆ ಹಾನಿಗೊಳಗಾದ ಜಮೀನಿಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಭೇಟಿ : ಪರಿಹಾರಕ್ಕೆ ಆಗ್ರಹ
ಕಲಬುರಗಿ: ಅಫಜಲಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ರೈತರ ಬೆಳೆಗಳಿಗೆ ಗಂಭೀರ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರು ಮಂಗಳವಾರ ದಿಕ್ಸಂಗ (ಕೆ), ಜೇವರ್ಗಿ (ಬಿ) ಹಾಗೂ ಸುತ್ತಮುತ್ತಲಿನ ಹಾನಿಗೊಳಗಾದ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಭೇಟಿಯ ವೇಳೆ ರೈತರೊಂದಿಗೆ ಮಾತನಾಡಿದ ಅವರು, ಬೆಳೆ ಹಾನಿಯಿಂದ ಸಾಲ ತೀರಿಸಲು ಸಾಧ್ಯವಾಗದೆ ರೈತರು ಸಂಕಷ್ಟದಲ್ಲಿದ್ದಾರೆ ಎಂಬ ಆತಂಕವನ್ನು ಆಲಿಸಿದರು. ರೈತರು, “ಬೇಸಿಗೆಯಲ್ಲಿ ಬಿತ್ತನೆಗೆ ಸಾಲ ಮಾಡಿದ್ದೇವೆ. ಈಗ ಬೆಳೆ ನಾಶವಾದ ಪರಿಣಾಮ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ” ಎಂದು ದೂರು ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರು ಅಧಿಕಾರಿಗಳಿಗೆ ತಕ್ಷಣ ಹಾನಿ ಅಂದಾಜು ನಡೆಸಿ ಪರಿಹಾರ ಧನ ವಿತರಣೆ ಮಾಡಲು ಶಿಫಾರಸು ಮಾಡುವಂತೆ ಸೂಚಿಸಿದರು. “ರೈತರ ಬೆನ್ನಿಗೆ ನಿಂತು ನೆರವು ಒದಗಿಸುವುದು ಸರ್ಕಾರದ ಹೊಣೆಗಾರಿಕೆ. ಯಾವುದೇ ರೀತಿಯ ವಿಳಂಬವಾಗಬಾರದು, ಪ್ರತಿ ಕುಟುಂಬಕ್ಕೂ ನ್ಯಾಯ ದೊರೆಯಬೇಕು” ಎಂದು ಹೇಳಿದರು. ಸ್ಥಳೀಯ ನಾಯಕರಾದ ಬಾಬುಗೌಡ ಪಾಟೀಲ, ಹಣಮಂತ ಕಟ್ಟಿಮನಿ, ಪ್ರಶಾಂತ ಮ್ಯಾಕೇರಿ, ಅಶೋಕ್ ಕುದುರೆ, ಗಂಗಾಧರ್ ಪಾಟೀಲ್, ವಸಂತರಾಯ ಚಿತ್ಪುರ, ಕುಪೇಂದ್ರ ಸಿಂಗೆ, ಚಂದ್ರಕಾಂತ್ ಬನಸೋಡೆ, ಚನ್ನು ಪಾಟೀಲ್, ಗೌತಮ ದೊಡ್ಡಮನಿ ಸೇರಿದಂತೆ ಗ್ರಾಮಸ್ಥರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಚೀನಾದೊಂದಿಗೆ ಮಹತ್ವದ ಒಪ್ಪಂದಕ್ಕೆ ಮುಂದಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ಭಾರತ ಹಾಗೂ ಚೀನಾ ಒಂದಾಗುತ್ತಿರುವಾಗಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ಸರ್ಕಸ್ ಶುರು ಮಾಡಿದ್ದಾರೆ. ಹೌದು ಅಮೆರಿಕಾದ ದುಬಾರಿ ಸುಂಕದಿಂದ ಭಾರತ ಮತ್ತು ಅಮೆರಿಕಾದ ನಡುವಿನ ಸಂಬಂಧ ಹಳಸಿದೆ. ಈ ರೀತಿ ಇರುವಾಗಲೇ ಭಾರತ - ರಷ್ಯಾ ಹಾಗೂ ಚೀನಾ ದೇಶಗಳು ಒಂದಾಗಿದ್ದು ಹೊಸ ಆರ್ಥಿಕ ಇತಿಹಾಸ ಸೃಷ್ಟಿ ಮಾಡುವುದಕ್ಕೆ ಮುಂದಾಗಿವೆ. ಆದರೆ, ನಾವು
ಹೊಸದಿಲ್ಲಿ: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂಳಲಾಗಿದೆ ಎನ್ನಲಾದ ಗಂಭೀರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸುಮೋಟೋ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ವಕೀಲರಾದ ರೋಹಿತ್ ಪಾಂಡೆ ಅವರು ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ, ಈ ಬಗ್ಗೆ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸುತ್ತಿರುವ ತನಿಖೆಯು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರೊಬ್ಬರ ಮೇಲ್ವಿಚಾರಣೆಯಲ್ಲಿ ನಡೆಯಬೇಕು ಎಂದೂ ಅವರು ವಿನಂತಿಸಿದ್ದಾರೆ. ಸೆಪ್ಟೆಂಬರ್ 16 ರಂದು ಬರೆದ ಪತ್ರದಲ್ಲಿ, ಈ ಪ್ರಕರಣದ ಸುತ್ತ ಆಘಾತಕಾರಿ ಸಂಗತಿಗಳು ಹೊರಬರುತ್ತಿವೆ. ಭೂಮಿಯಿಂದ ಮನುಷ್ಯರ ಅವಶೇಷಗಳನ್ನು ಹೊರತೆಗೆಯಲಾಗಿದೆ, ಸಾರ್ವಜನಿಕರು ಸಾಕ್ಷ್ಯ ನುಡಿದಿದ್ದಾರೆ ಮತ್ತು ಗ್ರಾಮಸ್ಥರು ಅದನ್ನು ದೃಢಪಡಿಸಿದ್ದಾರೆ. ಆದ್ದರಿಂದ, ಈ ತನಿಖೆಯು ಸ್ವತಂತ್ರವಾಗಿ, ಪಾರದರ್ಶಕವಾಗಿ (ಯಾವುದೇ ಮುಚ್ಚುಮರೆ ಇಲ್ಲದೆ) ಮತ್ತು ಜವಾಬ್ದಾರಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ತಕ್ಷಣವೇ ಮಧ್ಯ ಪ್ರವೇಶಿಸುವುದು ಬಹಳ ಅಗತ್ಯವಾಗಿದೆ ಎಂದು ಪಾಂಡೆ ಹೇಳಿದ್ದಾರೆ. ಪತ್ರದಲ್ಲಿ ಹಳೆಯ ಘಟನೆಗಳನ್ನು ನೆನಪಿಸಲಾಗಿದೆ. 2025ರ ಜುಲೈನಲ್ಲಿ, ಸಿ.ಎನ್. ಚಿನ್ನಯ್ಯ ಎಂಬ ಸ್ವಚ್ಛತಾ ಕಾರ್ಮಿಕರೊಬ್ಬರು ನ್ಯಾಯಾಲಯಕ್ಕೆ ಪ್ರಮಾಣಪತ್ರ (ಅಫಿಡವಿಟ್) ಸಲ್ಲಿಸಿ, ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದ ಘೋರ ಅಪರಾಧಗಳು ಮತ್ತು ಅತ್ಯಾಚಾರಗಳ ಸಂತ್ರಸ್ತರ ಶವಗಳನ್ನು ರಹಸ್ಯವಾಗಿ ಹೂಳಲು ತನ್ನನ್ನು ಬಲವಂತಪಡಿಸಲಾಗಿತ್ತು ಎಂದು ಅವರು ಆರೋಪಿಸಿದ್ದರು. ಅವರ ಈ ಹೇಳಿಕೆಗಳ ಆಧಾರದ ಮೇಲೆ, ಕರ್ನಾಟಕ ಸರ್ಕಾರವು ಜುಲೈ 20 ರಂದು ಎಸ್ಐಟಿಯನ್ನು ರಚಿಸಿತ್ತು. ಅಂದಿನಿಂದ ಎಸ್ಐಟಿ ತಂಡವು ಹಲವು ಸ್ಥಳಗಳಿಂದ ಅಸ್ಥಿಪಂಜರದ ಅವಶೇಷಗಳು, ತಲೆಬುರುಡೆಗಳು ಮತ್ತು ಬಟ್ಟೆಗಳನ್ನು ಹೊರತೆಗೆದಿದೆ. 2012 ರಲ್ಲಿ ಅತ್ಯಾಚಾರ ಮತ್ತು ಕೊಲೆಗೀಡಾದ 17 ವರ್ಷದ ಸೌಜನ್ಯ ಅವರ ಚಿಕ್ಕಪ್ಪ ವಿಠಲ್ ಗೌಡ ಸೇರಿದಂತೆ ಅನೇಕ ಗ್ರಾಮಸ್ಥರು, ಹಿಂದೆ ಚಿನ್ನಯ್ಯ ಶವಗಳನ್ನು ಹೂಳುವುದನ್ನು ತಾವು ಕಣ್ಣಾರೆ ಕಂಡಿರುವುದಾಗಿ ಸಾಕ್ಷ್ಯ ನುಡಿದಿದ್ದಾರೆ. ಚಿನ್ನಯ್ಯ ಈ ಹಿಂದೆ ನೀಡಿದ ಮಾಹಿತಿಯ ಆಧಾರದ ಮೇಲೆ, ಗ್ರಾಮಸ್ಥರು ಎಸ್ಐಟಿಯನ್ನು ಬಂಗ್ಲೆಗುಡ್ಡೆ ಎಂಬ ಸ್ಥಳಕ್ಕೆ ಕರೆದೊಯ್ದಿದ್ದು, ಅಲ್ಲಿ ಇನ್ನೂ ಹಲವಾರು ಶವಗಳು ಕಣ್ಣಿಗೆ ಕಾಣಿಸುವಂತಿವೆ ಎಂದು ವರದಿಯಾಗಿದೆ. ಸೆಪ್ಟೆಂಬರ್ 13 ರಂದು, ಕರ್ನಾಟಕದ ಹಿರಿಯ ಸಚಿವರೊಬ್ಬರು ಈ ವಿಷಯವನ್ನು ಸಾರ್ವಜನಿಕವಾಗಿ ದೃಢಪಡಿಸಿದ್ದರು. ಧರ್ಮಸ್ಥಳದಲ್ಲಿ ಎಸ್ಐಟಿ ತಂಡವು ಹೆಚ್ಚಿನ ಸಂಖ್ಯೆಯ ಶವಗಳನ್ನು ಹೊರತೆಗೆದಿದೆ ಮತ್ತು ಆ ಸ್ಥಳವು ಯುದ್ಧಭೂಮಿಯಂತೆ ಕಾಣುತ್ತಿದೆ ಎಂದು ಅವರು ಬಣ್ಣಿಸಿದ್ದರು. ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ಸಿಕ್ಕರೂ, ಎಸ್ಐಟಿ ತಂಡವು ಇನ್ನೂ ಹೆಚ್ಚಿನ ಶವಗಳನ್ನು ಹೊರತೆಗೆಯದಂತೆ ಒತ್ತಡವನ್ನು ಎದುರಿಸುತ್ತಿದೆ ಎಂದು ಪಾಂಡೆ ತಮ್ಮ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಸಂತ್ರಸ್ತರಿಗೆ ಸಹಾಯ ಮಾಡಲು ಮತ್ತು ಎಸ್ಐಟಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿರುವ ವಕೀಲರಿಗೆ (ಎಸ್ಐಟಿ ಹೊರಗಿನ) ರಾಜ್ಯ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಇದು ವಕೀಲರ ಸ್ವತಂತ್ರ ಕಾರ್ಯನಿರ್ವಹಣೆಯ ಮೇಲಿನ ದಾಳಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇದೆಲ್ಲ ಗಮನದಲ್ಲಿಟ್ಟುಕೊಂಡು, ಮುಖ್ಯ ನ್ಯಾಯಾಧೀಶರು ಮಧ್ಯಪ್ರವೇಶಿಸಬೇಕು ಮತ್ತು ನ್ಯಾಯಾಂಗದ ಮೇಲ್ವಿಚಾರಣೆಯನ್ನು ಖಚಿತಪಡಿಸಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ. ಪತ್ರದಲ್ಲಿ ಈ ಕೆಳಗಿನ ನಿರ್ದಿಷ್ಟ ವಿನಂತಿಗಳನ್ನು ಮಾಡಲಾಗಿದೆ. ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ತಾನಾಗಿಯೇ (ಸುಮೋಟೋ) ವಿಚಾರಣೆಗೆ ತೆಗೆದುಕೊಳ್ಳಬೇಕು. ಎಸ್ಐಟಿ ತನಿಖೆಯನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಗೆ ವಹಿಸಬೇಕು. ಕಣ್ಣಿಗೆ ಕಾಣಿಸುತ್ತಿರುವ ಎಲ್ಲಾ ಶವಗಳನ್ನೂ ತಕ್ಷಣವೇ ಹೊರತೆಗೆದು, ನ್ಯಾಯಾಲಯದ ನಿಗಾದಲ್ಲಿ ವಿಧಿವಿಜ್ಞಾನ (ಫೊರೆನ್ಸಿಕ್) ಪರೀಕ್ಷೆ ನಡೆಸಲು ಆದೇಶಿಸಬೇಕು. ಸಾಕ್ಷಿಗಳಿಗೆ, ಸಂತ್ರಸ್ತರ ಕುಟುಂಬಗಳಿಗೆ ಮತ್ತು ಅವರಿಗೆ ಸಹಾಯ ಮಾಡುತ್ತಿರುವ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ. ಒತ್ತಡದಿಂದಾಗಿ ಮನುಷ್ಯರ ಅವಶೇಷಗಳನ್ನು ಭೂಮಿಯಿಂದ ಹೊರತೆಗೆಯದೆ ಬಿಟ್ಟರೆ ಮತ್ತು ಸಾಕ್ಷಿಗಳನ್ನು ಮೌನವಾಗಿಸಿದರೆ, ನ್ಯಾಯಕ್ಕೇ ಅಪಾಯ ಬಂದಂತೆ (justice itself is imperilled) ಎಂದು ಪಾಂಡೆ ಎಚ್ಚರಿಸಿದ್ದಾರೆ. ಸತ್ಯವನ್ನು ಸಮಾಧಿಯಾಗದಂತೆ ತಡೆಯಲು ಮತ್ತು ಕಾನೂನಿನ ಘನತೆಯನ್ನು ಎತ್ತಿಹಿಡಿಯಲು ಸುಪ್ರೀಂ ಕೋರ್ಟ್ನ ಮಧ್ಯಪ್ರವೇಶವೊಂದೇ ಈಗಿರುವ ಏಕೈಕ ಮಾರ್ಗವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ಆರೋಪದಲ್ಲಿ ಮೂವರ ಬಂಧನ
ಮಂಗಳೂರು, ಸೆ.16: ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಟ್ಲದ ಮಂಗಳಪದವು ನಿವಾಸಿ ಸನತ್ ಕುಮಾರ್, (23) , ವಿಟ್ಲ ಕಸಬಾ ಗ್ರಾಮದ ರಾಝಿಕ್ (23)ಮತ್ತು ಮಂಗಳಪದವು ನಿವಾಸಿ ಚೇತನ್ (23) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 6.27 ಗ್ರಾಂ ಗಾಂಜಾ, 3 ಮೊಬೈಲ್ ಗಳು ಸಣ್ಣ ಚೂರಿ, ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ರಸ್ತೆ ಬದಿಯಲ್ಲಿ ಅನುಮಾನಸ್ಪಾದವಾಗಿ ರಸ್ತೆ ಬದಿಯಲ್ಲಿ ನಿಂತಿದ್ದಾಗ ಅವರನ್ನು ವಿಟ್ಲ ಪಿಎಸ್ಐ ರಾಮಕೃಷ್ಣ ಅವರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿಗಳು ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟಕ್ಕೆ ಯತ್ನ ನಡೆಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯಾದ ಎರ್ಮೆಮಜಲು ನಿವಾಸಿ ಧ್ಯಾನ್ ಕರ್ಕೆರ (23) ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿದೇಶದಲ್ಲಿ ಕೆಲಸ ಮಾಡುವ ಕನಸ್ಸು ಹೊತ್ತವರಿಗೆ ವೀಸಾ ಆಮಿಷ; 22ಮಂದಿಗೆ 56ಲಕ್ಷಕ್ಕೂ ಹೆಚ್ಚು ಹಣ ವಂಚನೆ
ವಿದೇಶದಲ್ಲಿ ಕೆಲಸ ಮಾಡಿ ಒಳ್ಳೆ ಸಂಪಾದನೆ ಮಾಡಬೇಕು ಎಂದು ಕನಸ್ಸು ಕಂಡವರನ್ನು ಗುರಿಯಾಗಿಸಿಕೊಂಡು, ಉಡುಪಿಯ ಕಟಪಾಡಿಯಲ್ಲಿ ವೀಸಾ ಕೊಡಿಸುವುದಾಗಿ ವಂಚಿಸಿದ ಘಟನೆ ನಡೆದಿದೆ. ಸದ್ಯ ವಸಂತ್ ಡಿ.ಪೂಜಾರಿ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ನಕಲಿ ಕಂಪನಿಯ ಮೂಲಕ 22 ಜನರಿಂದ 56,91,824 ರೂ. ವಂಚಿಸಿದ್ದಾರೆ. ಚಂಡೀಗಢದ ಕಂಪನಿಯೊಂದು ವೀಸಾ ಕೊಡಿಸುವುದಾಗಿ ಹೇಳಿ ಹಣ ಪಡೆದು ಟಿಕೆಟ್ ಕ್ಯಾನ್ಸಲ್ ಮಾಡಿ ಮೋಸ ಮಾಡಿರುವುದು ತಿಳಿದುಬಂದಿದೆ.
ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಡಾ. ವಿಷ್ಣುವರ್ಧನ್ ಜನ್ಮ ದಿನಾಚರಣೆಗೆ ನಕಾರ; ಕೋರ್ಟ್ ಹೇಳಿದ್ದೇನು?
ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮ ದಿನಾಚರಣೆಯನ್ನು ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಆಚರಿಸಲು ನ್ಯಾಯಾಲಯವು ಅನುಮತಿ ನಿರಾಕರಿಸಿದೆ. ಮಾಲೀಕತ್ವ ವಿವಾದ ಕಾರಣಕ್ಕಾಗಿ ಹಿಂದಿನ ಆದೇಶವನ್ನು ಉಲ್ಲೇಖಿಸಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ತಿಳಿಸಿದೆ. ಹೆಚ್ಚಿನ ವಿವರ ಇಲ್ಲಿದೆ ನೋಡಿ.
ನಮ್ಮೂರಿಗೆ ಯೋಜನೆ ಬೇಡ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಭಾರೀ ವಿರೋಧ; ಸಲ್ಲಿಕೆಯಾದ ದೂರು ಎಷ್ಟು?
ಶಿವಮೊಗ್ಗದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಪರಿಸರ ಪರಿಣಾಮ ಮೌಲ್ಯಮಾಪನ ಸಭೆಯು ಮಂಗಳವಾರ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ಯೋಜನೆಯನ್ನು ಒಕ್ಕೊರಲಿನಿಂದ ವಿರೋಧಿಸಿದರು. ಯೋಜನೆಯ ಬಗ್ಗೆ ಸಮಗ್ರ ಮಾಹಿತಿ ನೀಡದ ಕೆಪಿಸಿಎಲ್ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು. ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುವ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದರು. ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿಯನ್ನೂ ಸಲ್ಲಿಸಿದರು.
ಚಿಕ್ಕಮಗಳೂರು: ನಮ್ಮ ದೇವರ ಮೆರವಣಿಗೆ ಮೇಲೆ ಕಲ್ಲು ಹೊಡೆದರೆ ಸುಮ್ಮನಿರಬೇಕಾ, ಪೆಟ್ರೋಲ್ ಬಾಂಬ್ ಹಾಕಿದರೇ ಸುಮ್ಮನಿರಬೇಕಾ, ನಮ್ಮ ದೇವರಿಗೆ ಉಗಿದರೆ ಸುಮ್ಮನಿರಬೇಕಾ? ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದರೇ ಸುಮ್ಮನಿರಬೇಕಾ?, ಶುದ್ಧ ರಕ್ತದವರು ನನ್ನೊಂದಿಗಿದ್ದಾರೆ. ಬೆರಕೆ ರಕ್ತದವರು ಅವರೊಂದೊಗಿದ್ದಾರೆ. ಬೆರಕೆ ರಕ್ತದವರು ಸುಮ್ಮನಿರುತ್ತಾರೆ, ನಾವು ಸುಮ್ಮನಿರಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಅವಹೇಳಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮದ್ದೂರು ವಿವಾದ ಸಂಬಂಧ ಸಿ.ಟಿ.ರವಿ ಹೇಳಿಕೆ ಸಂಬಂಧ, ತಮ್ಮ ಮಕ್ಕಳಿಗೆ ತಲೆ ಕಡಿಯಿರಿ, ತೊಡೆ ಮುರಿಯಿರಿ ಎಂದು ಸಿ.ಟಿ.ರವಿ ಅವರು ತಮ್ಮ ಮಕ್ಕಳಿಗೆ ಹೇಳುತ್ತಾರ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಸಂಬಂಧ ಸೋಮವಾರ ಸಂಜೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನುದ್ದೇಶಿಸಿ ಸಿ.ಟಿ.ರವಿ ಬೆರಕೆ ರಕ್ತದವರು ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ನಾನು ಅವರ ಪೂರ್ವಾರ್ಧ ತೆಗೆದುಕೊಳ್ಳದೇ ಉತ್ತರಾರ್ಧ ತಗೊಂಡು ಮಾತನಾಡಿದರೆ ಮಾತ್ರ ಅದು ತಪ್ಪಾಗುತ್ತದೆ. ಪೂರ್ವಾರ್ಧ ತಗೊಂಡೇ ಮಾತನಾಡಿದ್ದೇನೆ ಎಂದು ಸಿ.ಟಿ.ರವಿ ಹೇಳಿದರು.
TV ಲೈವ್ ಶೋನಲ್ಲಿಯೇ ಸೂರ್ಯಕುಮಾರ್ ಯಾದವ್ಗೆ 'ಸುವ್ವರ್' ಎಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಮೊಹಮ್ಮದ್ ಯೂಸುಫ್!
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಯೂಸುಫ್, ಭಾರತದ ಕ್ರಿಕೆಟ್ ನಾಯಕ ಸೂರ್ಯ ಕುಮಾರ್ ಯಾದವ್ ಅವರನ್ನು ಟಿವಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸೂರ್ಯ ಕುಮಾರ್ ಯಾದವ್ ಅವರನ್ನು 'ಸುವ್ವರ್' ಎಂದು ಕರೆದಿದ್ದಾರೆ, ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಈ ಹಿಂದೆ ಕೂಡ ವಿವಾದಗಳನ್ನು ಸೃಷ್ಟಿಸಿದ್ದ ಯೂಸುಫ್ ಅವರ ಹೇಳಿಕೆಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'2028ರಲ್ಲಿ ನಾನು ಸಿಎಂ ಆದರೆ, ಎಲ್ಲ ಅಕ್ರಮ ಮಸೀದಿ ಧ್ವಂಸ': ಶಾಸಕ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗಂಗಾವತಿಯಲ್ಲಿ 2028ರ ಚುನಾವಣೆಯಲ್ಲಿ 150 ಅಭ್ಯರ್ಥಿಗಳನ್ನು ಗೆಲ್ಲಿಸಿ, ಸಿಎಂ ಆಗುವುದಾಗಿ ಹೇಳಿದ್ದಾರೆ. ಅಕ್ರಮ ಮಸೀದಿಗಳನ್ನು ಧ್ವಂಸ ಮಾಡುವ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡುವ ಭರದಲ್ಲಿ ದಲಿತ ಮಹಿಳೆಗೆ, ಸಮುದಾಯಕ್ಕೆ ಅವಮಾನಿಸಿದ್ದಕ್ಕಾಗಿ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ತುಮಕೂರಿನಲ್ಲೂ ಗಣಪತಿ ವಿಸರ್ಜನೆ ಪ್ರಚೋದನಾಕಾರಿ ಹೇಳಿಕೆ ವಿರೋಧಿಸಿ ಎಫ್ಐಆರ್ ದಾಖಲಾಗಿದೆ.
Karnataka Dam Water Level: 13 ಪ್ರಮುಖ ಜಲಾಶಯದ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ!
Karnataka Dam Water Level: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಸುಧಾರಿಸಿದೆ. ಮಂಗಳವಾರ (ಸೆಪ್ಟೆಂಬರ್ 16)ದಿಂದ ಮಳೆ ಶುರುವಾಗಿದ್ದು, ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ
ವಿಜಯನಗರ | ಸೆ.17 ರಿಂದ ಆ.2 ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್ ಅಭಿಯಾನ ಆರಂಭ : ಮುಹಮ್ಮದ್ ಅಲಿ ಅಕ್ರಮ್ ಶಾ
ವಿಜಯನಗರ (ಹೊಸಪೇಟೆ), ಸೆ.16: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ಸೆ.17ರಿಂದ ಅ.2ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಯಾ ಮುಹಮ್ಮದ್ ಅಲಿ ಅಕ್ರಮ್ ಶಾ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಮಂತ್ರಾಲಯ ಹಾಗೂ ನಗರ ವಸತಿ ವ್ಯವಹಾರಗಳ ಸಚಿವಾಲಯದ ನೇತೃತ್ವದಲ್ಲಿ ಅಭಿಯಾನ ಜರುಗಲಿದೆ. ಇದರ ಉದ್ದೇಶ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯ ಸುಧಾರಣೆ ಮತ್ತು ಸಂಪೂರ್ಣ ನೈರ್ಮಲ್ಯ ಸಾಧಿಸುವುದಾಗಿದೆ ಎಂದರು. ಅಭಿಯಾನದ ಅಂಗವಾಗಿ: • ಸೆ.17ರಂದು ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯಕ್ರಮಗಳಿಗೆ ಚಾಲನೆ. • ಕಸದ ರಾಶಿ ತೆರವು, ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳ ಶುಚಿತ್ವಕ್ಕೆ ಶ್ರಮದಾನ. • ಸ್ವಚ್ಛತಾ ಕಾರ್ಯಕರ್ತರ ಆರೋಗ್ಯ ಶಿಬಿರ, ಕಲ್ಯಾಣ ಯೋಜನೆಗಳ ಮಾಹಿತಿ. • ತ್ಯಾಜ್ಯದಿಂದ ಕಲಾಕೃತಿ, ಸ್ವಚ್ಛ ಬೀದಿ–ಸ್ವಚ್ಛ ಆಹಾರ ಕುರಿತು ಜಾಗೃತಿ. • “ಒಂದು ದಿನ–ಒಂದು ಗಂಟೆ–ಎಲ್ಲರೂ ಒಟ್ಟಿಗೆ” ಎಂಬ ಘೋಷವಾಕ್ಯದಡಿ ಶ್ರಮದಾನ. ಅಭಿಯಾನದಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸಿಇಒ ಕರೆ ನೀಡಿದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಸಹಾಯಕ ಯೋಜನಾಧಿಕಾರಿ ಎಂ.ಉಮೇಶ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿಗಳು ಹಾಜರಿದ್ದರು.
ಪೂಜಾ ಖೇಡ್ಕರ್ ಸಂಬಂಧಿಕರು ಭಾಗಿಯಾಗಿದ್ದ ಅಪಘಾತ-ಅಪಹರಣ ಪ್ರಕರಣ: ಪೋಷಕರಿಗೆ ಪೊಲೀಸರ ಹುಡುಕಾಟ ತೀವ್ರ
ಮುಂಬೈ: ನವಿ ಮುಂಬೈನಿಂದ ಟ್ರಕ್ ಚಾಲಕನ ಸಹಾಯಕನನ್ನು ಅಪಹರಿಸಿದ ತಮ್ಮ ಅಂಗರಕ್ಷಕನೊಂದಿಗೆ ಆರೋಪಕ್ಕೆ ಗುರಿಯಾಗಿರುವ ವಜಾಗೊಂಡಿರುವ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಂದೆ ದಿಲೀಪ್ ಖೇಡ್ಕರ್ ಗಾಗಿ ಪೊಲೀಸರು ತಮ್ಮ ಹುಡುಕಾಟ ತೀವ್ರಗೊಳಿಸಿದ್ದಾರೆ. ಇದರೊಂದಿಗೆ, ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದು, ಅವರಿಗಾಗಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ದಿಲೀಪ್ ಖೇಡ್ಕರ್ ಅವರು ತಮ್ಮ ಅಂಗರಕ್ಷಕ ಪ್ರಫುಲ್ ಸಾಲುಂಖೆಯೊಂಗೆ ಪ್ರಯಾಣಿಸುತ್ತಿದ್ದ ಕಾರು ಸಿಮೆಂಟ್ ಮಿಕ್ಸರ್ ಟ್ರಕ್ ಒಂದರೊಂದಿಗೆ ಡಿಕ್ಕಿಯಾಗಿತ್ತು. ಈ ಟ್ರಕ್ ಅನ್ನು ಚಂದ್ರಕುಮಾರ್ ಚವಾಣ್ ಎಂಬುವವರು ಚಲಾಯಿಸುತ್ತಿದ್ದರು ಹಾಗೂ ಅವರ ಪಕ್ಕದ ಆಸನದಲ್ಲಿ ಸಹಾಯಕ ಪ್ರಹ್ಲಾದ್ ಕುಮಾರ್ ಕುಳಿತಿದ್ದರು. ಈ ಅಪಘಾತದ ಕುರಿತು ಪೊಲೀಸರಿಗೆ ಮಾಹಿತಿ ನೀಡುವ ಹಾಗೂ ಪೊಲೀಸ್ ಠಾಣೆಗೆ ಕರೆದೊಯ್ಯುವ ಸೋಗಿನಲ್ಲಿ ಅವರಿಬ್ಬರೂ ಪ್ರಹ್ಲಾದ್ ಕುಮಾರ್ ನನ್ನು ಅಪಹರಿಸಿತ್ತು. ರವಿವಾರ ಪುಣೆಯ ಚತುರ್ ಶ್ರಿಂ ಗಿ ಪ್ರದೇಶದಲ್ಲಿರುವ ಖೇಡ್ಕರ್ ಕುಟುಂಬದ ನಿವಾಸದಿಂದ ನವಿ ಮುಂಬೈ ಪೊಲೀಸರು ಅಪಹೃತ ಪ್ರಹ್ಲಾದ್ ಕುಮಾರ್ ನನ್ನು ರಕ್ಷಿಸಿದ್ದರು. ಈ ವೇಳೆ, ಪೊಲೀಸರು ಮನೆಯೊಳಗೆ ಪ್ರವೇಶಿಸದಂತೆ ತಡೆ ಹಿಡಿದಿದ್ದ ಮನೋರಮಾ ಖೇಡ್ಕರ್, ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಇದಲ್ಲದೆ, ಪೊಲೀಸ್ ಸಿಬ್ಬಂದಿಗಳನ್ನು ಹೆದರಿಸಲು ಆಕೆ ನಾಯಿಗಳನ್ನೂ ಛೂ ಬಿಟ್ಟಿದ್ದರು ಎಂದು ಆರೋಪಿಸಲಾಗಿದೆ. ಬಳಿಕ, ಕಾರಿನಲ್ಲಿದ್ದವರು ದಿಲೀಪ್ ಖೇಡ್ಕರ್ ಹಾಗೂ ಅವರ ಅಂಗರಕ್ಷಕ ಎಂದು ಪ್ರಹ್ಲಾದ್ ಕುಮಾರ್ ಗುರುತಿಸಿದ್ದ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುಣೆ ಪೊಲೀಸರು ಮನೋರಮಾ ಖೇಡ್ಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನೋಟಿಸ್ ಜಾರಿಗೊಳಿಸಿದ್ದರೆ, ದಿಲೀಪ್ ಕುಮಾರ್ ಹಾಗೂ ಅವರ ಅಂಗರಕ್ಷಕನ ವಿರುದ್ಧ ನವಿ ಮುಂಬೈ ಪೊಲೀಸರು ಪ್ರಕರಣವೊಂದನ್ನು ದಾಖಲಿಸಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ವೇಳೆ 4.8 ಕೋಟಿ ರೂ. ಪತ್ತೆ; ಸಂಸದ ಕೆ. ಸುಧಾಕರ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ರೂ. ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ. ಸುಧಾಕರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಡಾ.ಕೆ. ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರಕರಣವೇನು? ಲೋಕಸಭೆ ಚುನಾವಣೆ ವೇಳೆ 2024ರ ಏಪ್ರಿಲ್ 25ರಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ಅಧಿಕಾರಿ ಮೌನಿಶ್ ಮುದ್ಗಿಲ್ ಅವರ ಮೊಬೈಲ್ಗೆ ಒಂದು ಕಡೆ 10 ಕೋಟಿ ರೂ.ಗಳನ್ನು ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಇಡಲಾಗಿದೆ ಎಂಬ ಮಾಹಿತಿ ಬಂದಿತ್ತು. ಅದರಂತೆ, ಮಾದಾವರ ಗ್ರಾಮದ ಗೋವಿಂದಪ್ಪ ಎಂಬವರ ಮನೆ ಮೇಲೆ ಚುನಾವಣಾಧಿಕಾರಿಗಳು ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾಗ 4.8 ಕೋಟಿ ಹಣ ಜಪ್ತಿ ಮಾಡಲಾಗಿತ್ತು ಎಂದು ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡದ ಸದಸ್ಯ ದಶರಥ್ ವಿ.ಕುಂಬಾರ್ ದೂರು ನೀಡಿದ್ದರು. ಈ ವೇಳೆ ಅಧಿಕಾರಿ ಮುನೀಶ್ ಮೌದ್ಗಿಲ್ಗೆ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುಧಾಕರ್ ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿ ಸಹಾಯ ಮಾಡುವಂತೆ ವಾಟ್ಸ್ಆ್ಯಪ್ ಕರೆ, ಮೆಸೇಜ್ ಮಾಡಿದ ಆರೋಪ ಎದುರಾಗಿತ್ತು. ಪತ್ತೆಯಾಗಿದ್ದ ಹಣವನ್ನು ಮತದಾರರಿಗೆ ನೀಡಲು ಮುಂದಾಗಿದ್ದರು ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರು ಆಧರಿಸಿ ಪೊಲೀಸರು ಕೆ.ಸುಧಾಕರ್, ಗೋವಿಂದಪ್ಪ ಮತ್ತಿತರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 171ಇ, (ಚುನಾವಣೆಯಲ್ಲಿ ಲಂಚ) 171ಎಫ್ (ಚುನಾವಣೆಯಲ್ಲಿ ಅನುಚಿತ ಪ್ರಭಾವ ಬೀರಿದ), 171 ಬಿ (ಚುನಾವಣೆಯಲ್ಲಿ ಲಂಚ, ಉಡುಗೊರೆ ನೀಡಿ ಮತದಾರರ ಮೇಲೆ ಪ್ರಭಾವ ಬೀರಿದ), 171ಸಿ (ಮತ ಚಲಾವಣೆ ಹಕ್ಕಿನಲ್ಲಿ ಮಧ್ಯಪ್ರವೇಶ ಮಾಡಿದ) ಮತ್ತು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123ರಡಿ (ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಸಿದ) ಆರೋಪದ ಮೇಲೆ ಎಫ್ಐಆರ್ ದಾಖಲು ಮಾಡಿದ್ದರು. ನಂತರ ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ, ತಮ್ಮ ವಿರುದ್ಧ ಎಫ್ಐಆರ್ ಮತ್ತು ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದು ಕೋರಿ ಸಂಸದ ಕೆ.ಸುಧಾಕರ್ ಹೈಕೋರ್ಟ್ ಮೊರೆ ಹೋಗಿದ್ದರು.
ಹೊಸಪೇಟೆ | ಮಾತಂಗ ಋಷಿ ಕಲ್ಯಾಣ ಮಂಟಪ, ಅನಾಥಾಶ್ರಮ ಕಾಮಗಾರಿ ಪರಿಶೀಲಿಸಿದ ಮುಹಮ್ಮದ್ ಇಮಾಮ್
ಹೊಸಪೇಟೆ, ಸೆ.16: ನಗರದ ಹಂಪಿ ರಸ್ತೆಯ ಅನಂತಶಯನಗುಡಿಯ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಮಾತಂಗ ಋಷಿ ಕಲ್ಯಾಣ ಮಂಟಪ ಮತ್ತು ಅನಾಥಾಶ್ರಮ ಕಟ್ಟಡ ಕಾಮಗಾರಿಯನ್ನು ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಮುಹಮ್ಮದ್ ಇಮಾಮ್ ನಿಯಾಜಿ ಅವರು ಮಂಗಳವಾರ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡ ರಾಮಕೃಷ್ಣ, ಮಾಜಿ ನಗರಸಭಾ ಸದಸ್ಯ ಬಸವರಾಜು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಸುರಪುರ | ನಗರಸಭೆ ಮುಂದೆ ಬಿ.ಬಸವಲಿಂಗಪ್ಪನವರ ಮೂರ್ತಿ ನಿರ್ಮಿಸಲು ಕ್ರಾಂತಿ ಆಗ್ರಹ
ಸುರಪುರ, ಸೆ.17: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧಿಸಿರುವ ಬಿ. ಬಸವಲಿಂಗಪ್ಪನವರ ಮೂರ್ತಿಯನ್ನು ನಗರದ ನಗರಸಭೆ ಮುಂಭಾಗದಲ್ಲಿ ನಿರ್ಮಿಸಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಪತ್ರಿಕಾ ಪ್ರಕಟಣೆ ನೀಡಿದ್ದು, ಇತ್ತೀಚೆಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಉದ್ಯಾನವನಕ್ಕೆ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಅವರ ಹೆಸರಿಡಲು ಹಾಗೂ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಮತ್ತು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಮೂರ್ತಿಗಳನ್ನು ನಿರ್ಮಿಸಲು ಅನುಮೋದಿಸಿರುವುದು ಶ್ಲಾಘನೀಯ ಎಂದರು. ಅದರಂತೆ, ನಗರದ ಬುದ್ಧ ವಿಹಾರಕ್ಕೆ ಹೋಗುವ ಎಡಭಾಗದ ಬಡಾವಣೆಗೆ ಅಂಬೇಡ್ಕರ್ ನಗರ ಅಥವಾ ಬುದ್ಧ ನಗರ ಎಂದು ಹೆಸರಿಡಲು ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಹಿಂದೆ ಶಾಸಕನಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಬಸವಲಿಂಗಪ್ಪನವರ ಮೂರ್ತಿ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದನ್ನು ಸ್ಮರಿಸಿದ ಅವರು, ಈಗ ಶಾಸಕರಾಗಿರುವ ರಾಜಾ ವೇಣುಗೋಪಾಲ ನಾಯಕರು ಆ ಕೆಲಸವನ್ನು ನೆರವೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಯುಪಿಸಿಎಲ್ನಿಂದ 47.2 ಕೋಟಿ ರೂ. ಪರಿಹಾರ ವಸೂಲಿಗೆ ನಿರ್ದೇಶನ ಕೋರಿದ್ದ ಪಿಐಎಲ್ ವಜಾ
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಮಾಡಿರುವ ಹಾನಿಗೆ ಪರಿಹಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕಾರಣ (ಎನ್ಜಿಟಿ) ಚೆನ್ನೈ ಪ್ರಾದೇಶಿಕ ಪೀಠದ ಆದೇಶದಂತೆ ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಯುಪಿಸಿಎಲ್) ವತಿಯಿಂದ 47.2 ಕೋಟಿ ರೂ. ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರು ಪ್ರಸ್ತಾಪಿಸಿರುವ ವಿಷಯಗಳು ಗಂಭೀರವಾಗಿರಬಹುದು. ಈ ವಿಚಾರ ಈಗಾಗಲೇ ಸುಪ್ರೀಂಕೋರ್ಟ್ನಲ್ಲಿ ಬಾಕಿಯಿದೆ. ಎನ್ಜಿಟಿ ಆದೇಶ ಪಾಲಿಸಲು ನಿರ್ದೇಶನ ನೀಡುವಂತೆ ಕೋರಿದ ಮನವಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು. ಅರ್ಜಿದಾರರ ಮನವಿ: ಅದಾನಿ ಪವರ್ ಲಿಮಿಟೆಡ್ ಜತೆಗೆ ವಿಲೀನಗೊಂಡಿರುವ ಯುಪಿಸಿಎಲ್ ನಿಯಮ ಹಾಗೂ ಪರವಾನಗಿಗಳನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಯಲ್ಲಿ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಹಾನಿಯುಂಟು ಮಾಡಿದೆ. ಅದಕ್ಕೆ ಪರಿಹಾರವಾಗಿ ಕಂಪನಿಯಿಂದ 47.2 ಕೋಟಿ ರೂ. ವಸೂಲಿ ಮಾಡಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಾಧೀಕಾರಣ ನಿರ್ದೇಶಿಸಿದೆ. ಆದರೆ, ಮೂರು ವರ್ಷ ಕಳೆದರೂ, ಆದೇಶ ಪಾಲನೆಯಾಗಿಲ್ಲ. ಗ್ರಾಮಸ್ಥರು ಸಂಕಷ್ಟದಲ್ಲಿದ್ದು, ಸರ್ಕಾರ ಹಾಗೂ ಇತರ ಪ್ರಾಧಿಕಾರಗಳು ಮೌನವಹಿಸಿವೆ. ಆದ್ದರಿಂದ, ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.
ಹೊಸಪೇಟೆ | ಯುವಕ ಕಾಣೆ : ಪ್ರಕರಣ ದಾಖಲು
ವಿಜಯನಗರ (ಹೊಸಪೇಟೆ), ಸೆ.16: ಹೊಸಪೇಟೆ ನಗರದ ದೇವಾಂಗಪೇಟೆ ನಿವಾಸಿ ರಘುನಂದನ್ (28) ಎಂಬ ವ್ಯಕ್ತಿ ಬೈಕ್ನಲ್ಲಿ ಕೆಲಸಕ್ಕೆ ಹೋಗಿ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ : ಕಾಣೆಯಾದ ರಘುನಂದನ್ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು ಕನ್ನಡ ಮಾತನಾಡುತ್ತಾನೆ. ಮನೆಯಿಂದ ಹೊರಡುವಾಗ ಹಸಿರು ಬಣ್ಣದ ತುಂಬತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾನೆ. ಬಲಗೈಯಲ್ಲಿ ಸಂಸ್ಕೃತದಲ್ಲಿ “ಓಂ ಗಣೇಶ” ಟ್ಯಾಟೂ ಇದೆ. ಈ ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ಪಟ್ಟಣ ಪೊಲೀಸ್ ಠಾಣೆ ಪಿಐ 08394-224033, 948080574, ಡಿಎಸ್ಪಿ 08394-224204, 9480805720 ಹಾಗೂ ಎಸ್ಪಿ 9480805700 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನ ಐದು ಪಾಲಿಕೆಗಳಿಂದ ಪ್ರತ್ಯೇಕ ಬಜೆಟ್ ಮಂಡನೆಗೆ ಸಿದ್ಧತೆ, ಯಾವ ಪಾಲಿಕೆ ಆಯವ್ಯಯ ಹೆಚ್ಚು?
ಬೆಂಗಳೂರಿನ ಐದು ಹೊಸ ನಗರ ಪಾಲಿಕೆಗಳು ಇದೇ ಅಕ್ಟೋಬರ್ 10ರೊಳಗೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿವೆ. ಬಿಬಿಎಂಪಿ ಹಂಚಿಕೆ ಮಾಡಿದ ಅನುದಾನವನ್ನು ಮರುಹೊಂದಾಣಿಕೆ ಮಾಡಲಾಗಿದ್ದು, ಸಿಬ್ಬಂದಿ ವೇತನ, ಅಭಿವೃದ್ಧಿ ಕೆಲಸಗಳಿಗೆ ಅನುದಾನ ಮೀಸಲಿಡಲಾಗುತ್ತಿದೆ. ಪಶ್ಚಿಮ ನಗರ ಪಾಲಿಕೆ ಅತಿ ಹೆಚ್ಚು ಅಂದರೆ 555.37 ಕೋಟಿ ರೂಪಾಯಿಯ ಬಜೆಟ್ ಮಂಡಿಸಲಿದೆ. ಇದೇ ವೇಳೆ ಸರಕಾರವು ಪ್ರತಿ ಪಾಲಿಕೆಗೂ 25 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಆಡಳಿತಾತ್ಮಕ ವೆಚ್ಚಗಳಿಗೆ ಈ ಹಣವನ್ನು ಬಳಸಲಾಗುತ್ತಿದೆ.
ಬೀದರ್ | ಸ್ಥಳೀಯ ಕಲಾವಿದರು ಸಂಸ್ಕೃತಿ ಪರಂಪರೆಯ ಜೀವಂತ ಕೊಂಡಿ: ಡಿಸಿ ಶಿಲ್ಪಾ ಶರ್ಮಾ
ಬೀದರ್ : ಸ್ಥಳೀಯ ಕಲಾವಿದರು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸದ ಜೀವಂತ ಕೊಂಡಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಶ್ವವಿದ್ಯಾಲಯ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಸ್ಥಳೀಯ ಕಲಾವಿದರು ತಮ್ಮ ವಿಶಿಷ್ಟ ವೇಷಭೂಷಣ, ಕಲೆ ಪ್ರದರ್ಶನ ಹಾಗೂ ಜನಮನ ಸೆಳೆಯುವ ಸಾಮರ್ಥ್ಯದಿಂದ ಗುರುತಿಸಿಕೊಳ್ಳುತ್ತಾರೆ. ಅವರ ಕಲೆಯು ಸಮಾಜಕ್ಕೆ ಚೈತನ್ಯ, ಮನರಂಜನೆ ಹಾಗೂ ಸಂಸ್ಕಾರ ನೀಡುತ್ತದೆ ಎಂದು ಅವರು ಹೇಳಿದರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಕನ್ನಡವು ಸಾವಿರಾರು ವರ್ಷಗಳ ಐತಿಹಾಸಿಕ ಪರಂಪರೆ ಹೊಂದಿದೆ. ಪಂಪ, ರನ್ನ, ಕುವೆಂಪು ಸೇರಿದಂತೆ ಅನೇಕ ವಿದ್ವಾಂಸರು ಕನ್ನಡವನ್ನು ವಿಶ್ವಮಟ್ಟಕ್ಕೆ ತಲುಪಿಸಿದ್ದಾರೆ. ಆ ಪರಂಪರೆಯನ್ನು ಮುಂದುವರಿಸುವ ಹೊಣೆಗಾರಿಕೆ ನಮ್ಮದಾಗಿದೆ ಎಂದರು. ಪಶು ವೈದ್ಯಕೀಯ ವಿಶ್ವವಿದ್ಯಾನಿಲಯದ ಆಡಳಿತ ಸದಸ್ಯ ಬಸರಾಜ ಪಿ.ಭತಮುರ್ಗೆ ಅವರು, “ಕನ್ನಡವನ್ನು ಕೇವಲ ಮಾತಿನ ಮಟ್ಟದಲ್ಲಿ ಉಳಿಸದೆ, ದೈನಂದಿನ ಜೀವನ, ಅಧ್ಯಯನ ಹಾಗೂ ಆಡಳಿತದಲ್ಲೂ ಬಳಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದಲೇ ಕನ್ನಡ ಸಂಘವನ್ನು ಕಟ್ಟಿರುವುದು ಹೆಮ್ಮೆ” ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ಬೀದರ್ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ, ಜಂಟಿ ನಿರ್ದೇಶಕ ಬಸವರಾಜ್ ಹೂಗಾರ್, ಪಶು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಎಂ.ಕೆ.ತಾಂಡ್ಲೆ, ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ್ ಚನ್ನಶೆಟ್ಟಿ ಸೇರಿದಂತೆ ಹಲವು ಗಣ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಕಲಾವಿದರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಆಗಸ್ಟ್ 9ರಂದು ಗುಜರಾತ್ ನ ಅಹಮದಾಬಾದ್ ನಲ್ಲಿ ಮುಸ್ಲಿಂ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬಳಿಕ ಗುಜರಾತ್ ನ ವಿವಾದಾತ್ಮಕ ‘ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ' ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಆಗಸ್ಟ್ 9ರಂದು ರಿಫಾತ್ ಎಂಬುವವರ ಸಹೋದರಿ ಸಾನಿಯಾ ಅನ್ಸಾರಿ(15) ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಮೊದಲು ಆಕೆ ಬರೆದಿಟ್ಟ ಡೆತ್ ನೋಟ್ ಗುಜರಾತ್ ನ ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ ಕುರಿತು ಚರ್ಚೆಗೆ ಕಾರಣವಾಗಿದೆ. ಅನ್ಸಾರಿ ಕುಟುಂಬವು ತಮ್ಮದೇ ನೆರೆಹೊರೆಯವರಿಂದ ಮನೆಯೊಂದನ್ನು ಖರೀದಿಸಿದ್ದರು. ಆದರೆ ಆ ಬಳಿಕ ಅವರು ʼಗುಜರಾತ್ ನ ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆಯಡಿ ತಿಂಗಳುಗಳ ಕಾಲ ಕಿರುಕುಳ, ಹಿಂಸೆ ಮತ್ತು ಬೆದರಿಕೆ ಅನುಭವಿಸಿದರು. ಈ ಕಾಯ್ದೆಯ ಕಾರಣಕ್ಕೆ ಮುಸ್ಲಿಂ ಖರೀದಿದಾರರು ಹಾಗೂ ಹಿಂದೂ ಮಾರಾಟಗಾರರ ನಡುವೆ ಜಟಾಪಟಿ ನಡೆದಿದೆ. ಈ ಜಟಾಪಟಿ ಕಳೆದ ತಿಂಗಳು ದುರಂತವಾಗಿ ಅಂತ್ಯಗೊಂಡಿದೆ. ಮುಸ್ಲಿಂ ಖರೀದಿದಾರರ ಅಪ್ರಾಪ್ತ ಪುತ್ರಿ ಮಾರಾಟಗಾರರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ವರ್ಷಗಳಷ್ಟು ಹಳೆಯದಾದ ಕಾನೂನು ಮತ್ತು ಹಾಗೂ ಸ್ಥಳೀಯ ಪೊಲೀಸರ ನಿಷ್ಕ್ರಿಯತೆಯನ್ನು ಮುಸ್ಲಿಂ ಖರೀದಿದಾರರ ಕುಟುಂಬ ಆರೋಪಿಸಿದೆ. ದಾಖಲೆಗಳು ಮತ್ತು ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ ಕಳೆದ ಒಂದು ವರ್ಷದಿಂದ ನಮ್ಮ ಪಾಲಿಗೆ ಬದುಕು ನರಕ ಯಾತನೆಯಾಗಿ ಮಾರ್ಪಟ್ಟಿದೆ. ನಾವು 15.5 ಲಕ್ಷ ರೂ. ಪಾವತಿಸಿ ಮನೆಯೊಂದನ್ನು ಖರೀದಿಸಿದ್ದೆವು.ನಾವು ಡಿಸೆಂಬರ್ 2024ರ ವೇಳೆಗಾಗಲೇ ಎಲ್ಲ ಬಾಕಿ ಪಾವತಿಗಳನ್ನು ತೀರಿಸಿದ್ದೆವು. ಆದರೆ, ಮನೆಯು ಅಧಿಕೃತ ಹಸ್ತಾಂತರವಾಗುವುದಕ್ಕೂ ಮುನ್ನ, ಹಿಂದೂ ಮಾರಾಟಗಾರರ ಪತಿ ಮೃತಪಟ್ಟರು. ಶೋಕದ ಅವಧಿ ಮುಗಿದ ನಂತರ ಅವರ ಪುತ್ರ ಮನೆಗೆ ಸ್ಥಳಾಂತರಗೊಂಡರು. ಇದರಿಂದ ಅವರವರ ನಡುವೆಯೇ ಜಗಳ ನಡೆಯತೊಡಗಿತು. ಸದ್ಯ ನಾವು ವಾಸಿಸುತ್ತಿರುವ ಮನೆಯ ಎದುರಿಗಿರುವ ಮನೆಯು ನಮ್ಮ ಪಾಲಿಗೆ ನೋವು, ಬೇಗುದಿ ಹಾಗೂ ಸ್ಥಳೀಯ ಹಿಂದುತ್ವ ಗುಂಪುಗಳಿಂದ ಬಯಸಿರದ ದ್ವೇಷದ ಕೇಂದ್ರ ಬಿಂದುವಾಗಿ ರೂಪಾಂತರಗೊಂಡಿದೆ ಎಂದು ಅನ್ಸಾರಿ ಕುಟುಂಬ ಅಳಲು ತೋಡಿಕೊಂಡಿದೆ. ಅವರು ಸಾನಿಯಾಳ ಕೂದಲನ್ನು ಎಳೆದುಕೊಂಡು ಹೋದರು, ಥಳಿಸಿದರು. ಯಾರಾದರೂ ನಮಗೆ ಸಹಾಯ ಮಾಡುತ್ತಾರಾಎಂದು ಕಾಯುತ್ತಲೇ ಅವಳು ಆತ್ಮಹತ್ಯೆ ಮಾಡಿಕೊಂಡಳು, ಎಂದು ರಿಫತ್ ಹೇಳಿದರು. ಆಗಸ್ಟ್ 7ರಂದು ಸ್ಥಳೀಯ ಬಲಪಂಥೀಯ ವ್ಯಕ್ತಿಗಳ ಗುಂಪು ಅವರ ಮನೆಗೆ ನುಗ್ಗಿ ದಾಳಿ ನಡೆಸಿದರು. ಎರಡು ದಿನಗಳ ನಂತರ ಸಾನಿಯಾ ನಾಲ್ವರು ವ್ಯಕ್ತಿಗಳ ಹೆಸರನ್ನು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಅವರು ಮನೆ ನೀಡದೆ ತಮ್ಮ ಕುಟುಂಬದ ಹಣವನ್ನು ತೆಗೆದುಕೊಂಡಿದ್ದಾರೆ ಮತ್ತು ತಿಂಗಳುಗಟ್ಟಲೆ ಹಿಂಸಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಾರಾಟಗಾರರಾದ ಸುಮನ್ ಸೋನಾವಾಡೆಯನ್ನು ಮನೆಯ ಹಸ್ತಾಂತರದ ಕುರಿತು ಪ್ರಶ್ನಿಸಿದಾಗಲೆಲ್ಲ, ಅವರು ಸಂಪೂರ್ಣ ಮೊತ್ತವನ್ನು ಸ್ವೀಕರಿಸಿದ್ದರೂ, ಅನ್ಸಾರಿ ಕುಟುಂಬಕ್ಕೆ ಸಬೂಬುಗಳನ್ನು ಹೇಳತೊಡಗಿದ್ದಾರೆ. ಅಲ್ಲದೆ, ಸೋನಾವಾಡೆಯ ಪುತ್ರ ದಿನೇಶ್ ನಿಮ್ಮ ಒಪ್ಪಂದವನ್ನು ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆಯಡಿ ಅನೂರ್ಜಿತಗೊಳಿಸುತ್ತೇನೆ ಎಂದು ಅವರಿಗೆ ಬೆದರಿಕೆ ಒಡ್ಡಲು ಪ್ರಾರಂಭಿಸಿದ್ದಾನೆ. ಈ ಎಲ್ಲ ವ್ಯಾಜ್ಯಕ್ಕೆ ಕೇಂದ್ರಬಿಂದುವಾಗಿರುವುದು 1991ರಲ್ಲಿ ಗುಜರಾತ್ ನಲ್ಲಿ ಜಾರಿಗೆ ಬಂದಿರುವ ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ. ಈ ಕಾಯ್ದೆಯಡಿ, ಕೋಮು ಸೂಕ್ಷ್ಮತೆಯ ಪ್ರದೇಶಗಳಲ್ಲಿ ಹತಾಶೆಯಿಂದ ಆಸ್ತಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಈ ಕಾಯ್ದೆಯ ಅನುಸಾರ, ಪರಸ್ಪರ ವಿರುದ್ಧ ಸಮುದಾಯಗಳ ನಡುವೆ ಆಸ್ತಿ ಮಾರಾಟ ನಡೆಯಬೇಕಿದ್ದರೆ, ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಇದೀಗ ಈ ಕಾಯ್ದೆಯು ಮುಸ್ಲಿಂ ಕುಟುಂಬಗಳು ಹಿಂದೂ ಬಾಹುಳ್ಯದ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವುದನ್ನು ತಡೆಯುವ ಸಾಧನವಾಗಿ ಬಳಕೆಯಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಸಾನಿಯಾ ಪ್ರಕರಣದಲ್ಲಿ ಈಗಾಗಲೇ ಅವರ ನೆರೆಯವರು ಈ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಅವರ ಕುಟುಂಬಕ್ಕೆ ಬೆದರಿಕೆ ಒಡ್ಡಿದ್ದಾರೆ. ಆ ಮೂಲಕ ಒಪ್ಪಂದವನ್ನು ಅನೂರ್ಜಿತಗೊಳಿಸುವುದಾಗಿ ಹೆದರಿಸಿದ್ದಾರೆ. ಇದರಿಂದಾಗಿ ನಾವು ಪೊಲೀಸ್ ಕ್ರಮಕ್ಕೆ ಒತ್ತಾಯ ಹೇರಲು ಹಿಂಜರಿಯುವಂತಾಯಿತು ಎಂದು ಅನ್ಸಾರಿ ಕುಟುಂಬ ಹೇಳುತ್ತದೆ. ಈ ಕುರಿತು ಪ್ರತಿಕ್ರಿಯಿಸಿದ ಕಲೀಮ್ ಸಿದ್ದಿಕಿ, “ಈ ಕಾಯ್ದೆಯು ದುರ್ಬಲರನ್ನು ರಕ್ಷಿಸುವುದಕ್ಕಿಂತಲೂ, ಅವರು ಆಸ್ತಿ ಖರೀದಿಸದಂತೆ ಮಾಡುವ ಸಾಧನವಾಗಿ ಬದಲಾಗಿದೆ.“ಮುಸ್ಲಿಮರೇ ನಿಮ್ಮ ಬಳಿ ಹಣವಿರಬಹುದು; ಆದರೆ, ನೀವೆಲ್ಲಿ ವಾಸಿಸಬೇಕು ಎಂದು ನೀವು ಆಯ್ಕೆ ಮಾಡಿಕೊಳ್ಳುವಂತಿಲ್ಲ” ಎಂದು ಈ ಕಾಯ್ದೆ ಹೇಳುತ್ತಿದೆ ಎಂದು ಆರೋಪಿಸುತ್ತಾರೆ. ಗುಜರಾತ್ ನ ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆಯು ಮುಸ್ಲಿಮರನ್ನು ಕೆಲವು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸುತ್ತದೆ ಹಾಗೂ ಅವರನ್ನು ವ್ಯವಸ್ಥಿತವಾಗಿ ಮೂಲೆಗುಂಪು ಮಾಡುತ್ತದೆ ಎಂದು ಗುಜರಾತ್ ನ ಅಲ್ಪಸಂಖ್ಯಾತ ಸಮನ್ವಯ ಸಮಿತಿ (ಎಂಸಿಸಿ) ಆರೋಪಿಸಿದೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಅವರಿಗೆ ಮುಸ್ಲಿಮರನ್ನು ಹಿಂದೂಗಳಿಂದ ದೂರ ಇಡುವುದು ಬೇಕಿತ್ತು. ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆಯು ಅವರಿಗೆ ಬಹು ದೊಡ್ಡ ಅಸ್ತ್ರವಾಯಿತು. ಅಹಮದಾಬಾದ್ ನಲ್ಲಿ ನಡೆದ ಘಟನೆಯು ಈ ಕಾಯ್ದೆಯ ಒಂದು ಕರಾಳ ಚಿತ್ರಣವಾಗಿದೆ” ಎಂದು ಅಲ್ಪಸಂಖ್ಯಾತರ ಸಮನ್ವಯ ಸಮಿತಿಯ ಸಂಚಾಲಕ ಮಜಾಹಿದ್ ನಫೀಸ್ ವಿಷಾದ ವ್ಯಕ್ತಪಡಿಸಿದ್ದಾರೆ. ಅನ್ಸಾರಿ ಕುಟುಂಬ ಈಗಲೂ ತಾವು ಖರೀದಿಸಲು ಬಯಸಿದ್ದ ಮನೆಯ ಎದುರಿನ ಮನೆಯಲ್ಲೇ ವಾಸಿಸುತ್ತಿದೆ. ಈ ಹತ್ತು ತಿಂಗಳ ಅವಧಿಯಲ್ಲಿ ಅನ್ಸಾರಿ ಕುಟುಂಬವು 15.5 ಲಕ್ಷ ರೂ., ಅವರ ಘನತೆ, ಕಾನೂನಿನ ಬಗ್ಗೆ ಇದ್ದ ನಂಬಿಕೆ ಹಾಗೂ ತಮ್ಮ ಪುತ್ರಿ ಸಾನಿಯಾಳನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಗುಜರಾತ್ ನ ಪ್ರಕ್ಷುಬ್ಧ ಪ್ರದೇಶಗಳ ಕಾಯ್ದೆ ವ್ಯಾಪಕ ಸಾರ್ವತ್ರಿಕ ಚರ್ಚೆಗೆ ಗುರಿಯಾಗಿದೆ. ಸೌಜನ್ಯ: thewire.in
ಕೊಪ್ಪಳ | ದಲಿತ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
ಕೊಪ್ಪಳ, ಸೆ.17: ದಲಿತ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಮಲ್ಲಿಕಾರ್ಜುನ ಪೂಜಾರ್ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಶಾಸಕ ಬಸನಗೌಡ ಯತ್ನಾಳ್ ಅವರು ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ಮಾತನಾಡುವ ವೇಳೆ, “ಮೈಸೂರು ದಸರಾದಲ್ಲಿ ಸನಾತನ ಧರ್ಮದವರೇ ಚಾಮುಂಡೇಶ್ವರಿ ದೇವಿಗೆ ಹೂ ಮುಡಿಸಬೇಕು, ಹೊರತು ಒಬ್ಬ ಸಾಮಾನ್ಯ ದಲಿತ ಮಹಿಳೆಗೆ ಕೂಡಾ ಅವಕಾಶ ಇಲ್ಲ” ಎಂಬ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವಿಡಿಯೋ ಆಧಾರದ ಮೇಲೆ ಮಲ್ಲಿಕಾರ್ಜುನ ಪೂಜಾರ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ? : ಶಾಸಕ ಬಸನಗೌಡ ಯತ್ನಾಳ್ ಅವರು, ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ಮಾತನಾಡುವಾಗ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಹಿಂದುಗಳ ನಾಡ ಹಬ್ಬ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ದಸರಾ ಹಬ್ಬದಲ್ಲಿ ನಾಡಿನ ಚಾಮುಂಡಿ ದೇವಿಗೆ ಹೂ ಮುಡಿಸಬೇಕು, ಹೊರತು ಒಬ್ಬ ಸಾಮಾನ್ಯ ದಲಿತ ಮಹಿಳೆಗೆ ಕೂಡಾ ಅವಕಾಶ ಇಲ್ಲ ಎಂದು ಬಹಿರಂಗವಾಗಿ ದಲಿತ ಹೆಣ್ಣು ಮಕ್ಕಳಿಗೆ ಹಾಗೂ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಅಲ್ಲದೇ, ತನ್ನ ವಿಕೃತ ಮನಸ್ಥಿತಿಯನ್ನು ಮೆರೆದಿದ್ದಾರೆ. ಹಿಂದುಗಳ ಧರ್ಮದಲ್ಲೇ ಬರುವ ದಲಿತ ಹೆಣ್ಣು ಮಕ್ಕಳನ್ನು ಅತ್ಯಂತ ಕೀಳುಮಟ್ಟದಲ್ಲಿ ಸಾರ್ವಜನಿವಾಗಿ ನಿಂದಿಸುವುದು, ಅವಮಾನ ಮಾಡಿದ್ದಾರೆ. ಇಂತಹ ಕೊಳಕು ಮನಸ್ಥಿತಿಯ ಮತ್ತು ಯಾವಾಗಲೂ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಕೋಮು ಸಂಘರ್ಷದ ಹೇಳಿಕೆ, ಪ್ರಚೋದನಕಾರಿ ಹೇಳಿ ನೀಡಿಕೆ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದಲಿತರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುವುದು ಇವರ ದಿನ ನಿತ್ಯದ ಅಭ್ಯಾಸವಾಗಿದ್ದು, ಕೂಡಲೇ ಈ ಹೇಳಿಕೆ ನೀಡಿದ ವಿಡಿಯೋ ಆಧಾರದ ಮೇಲೆ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಇವರನ್ನು ಜೈಲಿಗೆ ಕಳುಹಿಸುವ ಕೆಲಸವನ್ನು ಮಾಡಬೇಕು ಎಂದು ಮಲ್ಲಿಕಾರ್ಜುನ ಪೂಜಾರ್ ಅವರು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಉತ್ತರ ಪ್ರದೇಶ: ಒಂದೇ ಮನೆಯಲ್ಲಿ 4,271 ಮತದಾರರ ನೋಂದಣಿ: ಸಂಜಯ್ ಸಿಂಗ್ ಆರೋಪ
ಮತಪಟ್ಟಿ ಅಕ್ರಮ | ಮಹಾದೇವಪುರದ ನಂತರ ಮಹೋಬಾ?
ಭಟ್ಕಳ ಹಳೆ ಮೀನು ಮಾರುಕಟ್ಟೆಯಲ್ಲಿ ತ್ಯಾಜ್ಯ ಎಸೆತ ವಿವಾದ: ವ್ಯಾಪಾರಿಗಳ ಪ್ರತಿಭಟನೆ, ಕ್ರಮಕ್ಕೆ ಆಗ್ರಹ
ಭಟ್ಕಳ: ನಗರದ ಹಳೆಯ ಬಸ್ ನಿಲ್ದಾಣದ ಸಮೀಪದ ಹಳೆ ಮೀನು ಮಾರುಕಟ್ಟೆಯ ರಸ್ತೆ ಬಳಿ ಮನೆಮಾಲೀಕರು ತಮ್ಮ ಮನೆಯ ಕಸವನ್ನು ಹಾಕುತ್ತಿರುವುದು ಹಾಗೂ ನಂತರ ಕೆಲವರು ಹಳೆಯ ಮೀನು ಮಾರುಕಟ್ಟೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಇದರ ವಿರುದ್ಧ ಮೀನು ಮಾರಾಟಗಾರ ಮಹಿಳೆಯರು ಮತ್ತು ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ಬೆಳಗ್ಗೆ ಕಸದ ಫೋಟೋಗಳು ಹಾಗೂ ಮಾರುಕಟ್ಟೆಯ ಅಶುಚಿತ್ವದ ಆಧಾರದ ಮೇಲೆ ಅಲ್ಲಿ ಮೀನು ಖರೀದಿ ಮಾಡಬೇಡಿ ಎಂಬ ಸಂದೇಶಗಳು ಸೋಷಿಯಲ್ ಮೀಡಿಯಾದಲ್ಲಿ ಹರಡಿದ ಸುದ್ದಿ ತಿಳಿದ ತಕ್ಷಣ, ಮೀನು ಮಾರಾಟಗಾರರು ತಕ್ಷಣವೇ ಪ್ರತಿಭಟನೆಯಲ್ಲಿ ತೊಡಗಿದರು. ಸ್ಥಳಕ್ಕೆ ಧಾವಿಸಿದ ಪುರಸಭೆ (ಟಿಎಂಸಿ) ಮುಖ್ಯಾಧಿಕಾರಿ ಹಾಗೂ ಇತರ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕಸ ಹಾಕುವ ಹೆಸರಿನಲ್ಲಿ ಹಳೆಯ ಮಾರುಕಟ್ಟೆಯ ಮೀನು ವ್ಯಾಪಾರಿಗಳ ಹೆಸರು ಹಾಳು ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೀನು ಮಾರಾಟಗಾರರ ಪ್ರಕಾರ, ಸುಲ್ತಾನ್ ಸ್ಟ್ರೀಟ್ನಿಂದ ಮಾರುಕಟ್ಟೆಗೆ ಪ್ರವೇಶಿಸುವ ದಾರಿಯನ್ನು ತಮ್ಮ ವೆಚ್ಚದಲ್ಲಿ ಗ್ರಿಲ್ ಹಾಕಿ ಸ್ವಚ್ಛವಾಗಿರಿಸಲು ಪ್ರಯತ್ನಿಸಿದ್ದಾರೆ. ಆದರೆ ಹತ್ತಿರದ ಕೆಲ ಮನೆಗಳಿಂದ ಕಸ ತಂದು ಹಾಕಲಾಗುತ್ತಿದೆ. ನಂತರ ಕೆಲವರು ಅದರ ಫೋಟೋ-ವೀಡಿಯೊಗಳನ್ನು ವೈರಲ್ ಮಾಡುತ್ತಿದ್ದಾರೆ. ಇದಕ್ಕೆ ಟಿಎಂಸಿ ತಕ್ಷಣವೇ ತಡೆ ಹಾಕದಿದ್ದರೆ, ರಸ್ತೆಗಿಳಿದು ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸ್ಥಳಕ್ಕೆ ಬಂದಿದ್ದ ಆರೋಗ್ಯಾಧಿಕಾರಿ ಸುಜಯ ಸೋಮನ್ ಅವರು ಕಸದ ಚೀಲಗಳನ್ನು ತೆರೆಯಿಸಿ ಪರಿಶೀಲಿಸಿದಾಗ, ಅದರಲ್ಲಿ ಖಾಸಗಿ ಆಸ್ಪತ್ರೆಗೆ ಸೇರಿದ ಬಿಲ್ಗಳು, ಉರ್ದು ಶಾಲೆಯ ಕಾಗದಗಳು ಹಾಗೂ ಒಂದು ಹೇರ್ ಕಟಿಂಗ್ ಅಂಗಡಿಯ ರಸೀದೆಗಳು ಪತ್ತೆಯಾದವು. ಇದರ ಆಧಾರವಾಗಿ, ಸಂಬಂಧಪಟ್ಟವರ ಮೇಲೆ ದಂಡ ವಿಧಿಸುವುದಾಗಿ ತಿಳಿಸಿದ್ದಾರೆ. ಬಳಿಕ ಎಲ್ಲಾ ಕಸದನ್ನೂ ಟಿಎಂಸಿಯ ವಾಹನಗಳಲ್ಲಿ ಡಂಪಿಂಗ್ ಶೆಡ್ಗೆ ಸಾಗಿಸಲಾಯಿತು. ಮುಖ್ಯಾಧಿಕಾರಿಗೆ ಮನವಿ: ಈ ಹಿನ್ನೆಲೆಯಲ್ಲಿ ಮಂಗಳವಾರ ಮೀನು ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಮಹಿಳಾ ಮಾರಾಟಗಾರರು ಹಾಗೂ ವ್ಯಾಪಾರಿಗಳು ಟಿಎಂಸಿ ಕಚೇರಿಗೆ ತೆರಳಿ ಮುಖ್ಯಾಧಿಕಾರಿಗೆ ಮೆಮೊರಾಂಡಂ ಸಲ್ಲಿಸಿದರು. ಹೊಸ ಮೀನು ಮಾರುಕಟ್ಟೆ ನಿರ್ಮಾಣವಾದ ಬಳಿಕ ಹಳೆಯ ಮಾರುಕಟ್ಟೆಯ ಸ್ವಚ್ಛತೆ ವಿಷಯವನ್ನು ಕಾರಣವನ್ನಾಗಿ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ದುಷ್ಪ್ರಚಾರ ನಡೆಯುತ್ತಿರುವುದನ್ನು ಅವರು ಗಮನಕ್ಕೆ ತಂದರು. ಸೋಮವಾರ ಬೆಳಗ್ಗೆ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಬಳಿ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪುರಸಭೆಯವರು ಕ್ರಮ ಕೈಗೊಳ್ಳದಿದ್ದರೆ, ನಾವು ಸ್ವತಃ ಪೊಲೀಸರ ಬಳಿ ದೂರು ಸಲ್ಲಿಸುತ್ತೇವೆ ಎಂದು ಮನವಿಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಖ್ವಾಜಾ ಕಲಾಯಿವಾಲಾ, ಉಪಾಧ್ಯಕ್ಷೆ ಕಲ್ಯಾಣಿ ಮೋಗೇರ, ಮೊಹಮ್ಮದ್ ಆಯೂಬ್, ಪಾಂಡು ನಾಯ್ಕ್, ನಜೀರ್ ಅಹ್ಮದ್ ಸೇರಿದಂತೆ ಅನೇಕ ಮೀನು ಮಾರಾಟಗಾರರು ಉಪಸ್ಥಿತರಿದ್ದರು.
ಮಲ್ಪಿಪ್ಲೆಕ್ಸ್ ಟಿಕೆಟ್ ದರ ನಿಗದಿ ವಿರುದ್ಧ ಅರ್ಜಿ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್; ವಾದ-ಪ್ರತಿವಾದ ಹೇಗಿತ್ತು?
ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ಗಳು ಮತ್ತು ಚಿತ್ರಮಂದಿರಗಳಲ್ಲಿ 200 ರೂಪಾಯಿ ಏಕರೂಪದ ಸಿನಿಮಾ ಟಿಕೆಟ್ ದರವನ್ನು ನಿಗದಿಪಡಿಸುವ ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಮಂಗಳವಾರ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನಡೆಸಿ, ತೀರ್ಪುನ್ನು ಕಾಯ್ದಿರಿಸಿದೆ. ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಹೊಂಬಾಳೆ ಫಿಲ್ಮ್ಸ್ ಮತ್ತು ಇತರ ನಿರ್ಮಾಣ ಸಂಸ್ಥೆಗಳು ಸಲ್ಲಿಸಿದ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಗಿತ್ತು.
ಗಾಝಾದಲ್ಲಿ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ಇಸ್ರೇಲ್ ಘೋಷಣೆ
ಗಾಝಾ,ಸೆ.16: ಹಮಾಸ್ ನ ಮಿಲಿಟರಿ ಮೂಲಸೌಕರ್ಯಗಳನ್ನು ನಾಶಪಡಿಸಲು ಗಾಝಾ ನಗರದಲ್ಲಿ ತಾನು ನಡೆಸುತ್ತಿರುವ ಕಾರ್ಯಾಚರಣೆಯನ್ನು ವಿಸ್ತರಿಸಿರುವುದಾಗಿ ಇಸ್ರೇಲ್ ಸೇನೆ ಮಂಗಳವಾರ ಘೋಷಿಸಿದೆ. ಸೋಮವಾರ ರಾತ್ರಿ ಗಾಝಾ ನಗರದ ವಿವಿಧೆಡೆ ಭಾರೀ ವಾಯುದಾಳಿಗಳನ್ನು ನಡೆಸಿದ ಬಳಿಕ ಇಸ್ರೇಲ್ ಈ ಹೇಳಿಕೆ ನೀಡಿದೆ. ‘ಗಾಝಾ ಹೊತ್ತಿ ಉರಿಯುತ್ತಿದೆ’ ಎಂದು ಇಸ್ರೇಲ್ ನ ರಕ್ಷಣಾ ಸಚಿವ ಇಸ್ರಾಯೇಲ್ ಕಾಟ್ಜ್ ಹೇಳಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಮಿಲಿಟರಿ ವಕ್ತಾರ ಅೃಚಾರ್ ಆದ್ರಾಯಿ ಅವರು ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆಯನ್ನು ವಿಸ್ತರಿಸುವ ಘೋಷಣೆ ಮಾಡಿದ್ದಾರೆ. ಇಸ್ರಾಯೇಲ್ ಕಾಟ್ಝ್ ಅವರು ಮಂಗಳವಾರ ಬೆಳಗ್ಗೆ ಹೇಳಿಕೆಯೊಂದನ್ನು ನೀಡಿ, ‘‘ಇಸ್ರೇಲ್ ಸೇನೆಯು ಹಮಾಸ್ ನೆಲೆಗಳ ಮೇಲೆ ಕಬ್ಬಿಣದ ಮುಷ್ಟಿಯೊಂದಿಗೆ ಪ್ರಹಾರವನ್ನು ನಡೆಸುತ್ತಿದೆ. ಒತ್ತೆಯಾಳುಗಳ ಬಿಡುಗಡೆಗೆ ಪೂರಕವಾಗುವಂತಹ ಸನ್ನಿವೇಶವನ್ನು ಸೃಷ್ಟಿಸಲು ಸೈನಿಕರು ಧೀರೋದಾತ್ತವಾಗಿ ಹೋರಾಡುತ್ತಿದ್ದಾರೆ. ನಮ್ಮ ದೌತ್ಯ ಪೂರ್ಣಗೊಳ್ಳುವವರೆಗೆ ನಾವು ಪಟ್ಟುಬಿಡೆವು ಹಾಗೂ ಹಿಮ್ಮೆಟ್ಟಲಾರೆವು’’ ಎಂದು ಘೋಷಿಸಿದ್ದರು. ಮಂಗಳವಾರ ಮುಂಜಾನೆ ಗಾಝಾ ನಗರದ ವಿವಿಎಧೆಡೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 20 ಫೆಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಗಾಝಾದಲ್ಲಿ ಇಸ್ರೇಲ್ನಿಂದ ಜನಾಂಗೀಯ ನರಮೇಧ: ವಿಶ್ವಸಂಸ್ಥೆಯ ತನಿಖಾ ಆಯೋಗ ವರದಿ
ಆರೋಪ ತಳ್ಳಿಹಾಕಿದ ಇಸ್ರೇಲ್ ಆಡಳಿತ
ನೆಲಮಂಗಲದಲ್ಲಿ ಬಸ್ ಚಲಾಯಿಸುವಾಗಲೇ ಹೃದಯಾಘಾತ, ಸಾವಿಗೂ ಮೊದಲು ಪ್ರಯಾಣಿಕರನ್ನು ಕಾಪಾಡಿದ ರಾಜಹಂಸ ಚಾಲಕ
ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ರಾಜಹಂಸ ಬಸ್ ಚಾಲಕ ರಾಜೀವ್ ಬಿರಾದಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತವಾದರೂ, ಅವರು ಬಸ್ಸನ್ನು ಸುರಕ್ಷಿತವಾಗಿ ನಿಲ್ಲಿಸಿ 45ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ ಬೆಳಗಾವಿಯಲ್ಲಿ ಚಲಿಸುತ್ತಿದ್ದ ಬಸ್ನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಯುಎಇ ವಿರುದ್ದ ಪಂದ್ಯದ ಮುನ್ನಾದಿನ ಪತ್ರಿಕಾಗೋಷ್ಠಿ ರದ್ದುಪಡಿಸಿದ ಪಾಕಿಸ್ತಾನ!
ದುಬೈ, ಸೆ.16: ದುಬೈ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆಯಲಿರುವ ಯುಎಇ ತಂಡದ ವಿರುದ್ಧದ ತನ್ನ ನಿರ್ಣಾಯಕ ಪಂದ್ಯಕ್ಕಿಂತ ಮುನ್ನ ಮಂಗಳವಾರ ನಿಗದಿಯಾಗಿರುವ ಪತ್ರಿಕಾಗೋಷ್ಠಿಯನ್ನು ಪಾಕಿಸ್ತಾನ ಕ್ರಿಕೆಟ್ ತಂಡ ರದ್ದುಪಡಿಸಿದೆ. ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ರನ್ನು ಏಶ್ಯಕಪ್ ಅಧಿಕಾರಿಗಳ ಸಮಿತಿಯಿಂದ ತೆಗೆದು ಹಾಕದೇ ಇದ್ದರೆ ಪಂದ್ಯಾವಳಿಯಿಂದ ಹೊರಗುಳಿಯುವುದಾಗಿ ಹೇಳಿಕೆ ನೀಡಿದ ಮರು ದಿನ ಪಾಕಿಸ್ತಾನ ತಂಡ ಈ ಹೆಜ್ಜೆ ಇಟ್ಟಿದೆ. ದುಬೈನಲ್ಲಿ ರವಿವಾರ ನಡೆದ ತನ್ನ ಪಂದ್ಯದ ನಂತರ ಭಾರತೀಯ ಆಟಗಾರರು ಸಾಂಪ್ರದಾಯಿಕ ಹ್ಯಾಂಡ್ಶೇಕ್ ಮಾಡಿರಲಿಲ್ಲ. ಆ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಮ್ಯಾಚ್ ರೆಫರಿ ಪೈಕ್ರಾಫ್ಟ್ ಮೇಲೆ ಮುನಿಸಿಕೊಂಡಿತ್ತು. ಟಾಸ್ ವೇಳೆ ಪೈಕ್ರಾಫ್ಟ್ ಅವರು ಉಭಯ ತಂಡದ ನಾಯಕರಿಗೆ ಹ್ಯಾಂಡ್ ಶೇಕ್ ಮಾಡದಂತೆ ತಿಳಿಸಿದ್ದರು ಎಂದು ಪಿಸಿಬಿ ಆರೋಪಿಸಿದೆ.
ಮಿಝೋರಾಂ | ಉದ್ಯೋಗ ಖಾಯಂಗೊಳಿಸುವಂತೆ ಆಗ್ರಹಿಸಿ 15 ಸಾವಿರಕ್ಕೂ ಅಧಿಕ ಸಿಎಸ್ಎಸ್ ಉದ್ಯೋಗಿಗಳಿಂದ ಪ್ರತಿಭಟನೆ
ಐರೆಲ, ಸೆ. 17: ತಮ್ಮ ಉದ್ಯೋಗವನ್ನು ಖಾಯಂಗೊಳಿಸಬೇಕೆಂಬ ಬಹು ಕಾಲದ ಬೇಡಿಕೆಯನ್ನು ಈಡೇರಿಸುವಂತೆ ಮಿಝೋರಾಂ ಸರಕಾರವನ್ನು ಆಗ್ರಹಿಸಿ ಮಿಝೋರಾಂನ ‘ಸೆಂಟ್ರಲಿ ಸ್ಪಾನ್ಸರ್ಡ್ ಸ್ಕೀಮ್’ (ಸಿಎಸ್ಎಸ್) ಅಡಿಯಲ್ಲಿ ಕೆಲಸ ಮಾಡುತ್ತಿರುವ 15 ಸಾವಿರಕ್ಕೂ ಅಧಿಕ ಉದ್ಯೋಗಿಗಳು ಮಂಗಳವಾರ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಿದರು. ರಾಜ್ಯ ವ್ಯಾಪಿ ಆಯೋಜಿಸಲಾಗಿದ್ದ ಪ್ರತಿಭಟನೆಯ ನೇತೃತ್ವವನ್ನು ಆಲ್ ಮಿಝೋರಾಂ ಸಿಎಸ್ಎಸ್ ಎಂಪ್ಲಾಯ್ಸ್ ಕೋ-ಆರ್ಡಿನೇಷನ್ ಕಮಿಟಿ (ಎಎಂಸಿಇಸಿಸಿ) ವಹಿಸಿತ್ತು. ಉದ್ಯೋಗಿಗಳು ಐರೆಲ ಹಾಗೂ ಕೆಲವು ಪ್ರಮುಖ ಪಟ್ಟಣಗಳು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರ ಕಚೇರಿಗಳಲ್ಲಿ ಪ್ರತಿಭಟನೆ ನಡೆಸಿದರು ಎಂದು ಎಎಂಸಿಇಸಿಸಿಯ ಪ್ರಧಾನ ಕಾರ್ಯದರ್ಶಿ ವನಲಾಲ್ ಪೆಕಾ ತಿಳಿಸಿದ್ದಾರೆ. ಕಳೆದ ವರ್ಷ ಜೂನ್ 18ರಂದು ಹೊರಡಿಸಲಾದ ಅಧಿಸೂಚನೆ ‘‘ಮಿಝೋರಾಂ ರೈಗ್ಯುಲರೈಸೇಷನ್ ಆಫ್ ಸಿಎಸ್ಎಸ್ ಎಂಪ್ಲಾಯಿಸ್ ಸ್ಕೀಮ್’’ ಅನ್ನು ಅನುಷ್ಠಾನಗೊಳಿಸುವಂತೆ ಹಾಗೂ ಸಿಎಸ್ಎಸ್ ಯೋಜನೆ ಆಧಾರದಲ್ಲಿ ರಾಜ್ಯದ ಆರೋಗ್ಯ ಇಲಾಖೆ ಅಡಿಯಲ್ಲಿ ಮಾಡಲಾದ ಸುಮಾರು 31 ಮಂದಿ ಉದ್ಯೋಗಿಗಳ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸುವಂತೆ ಸಿಎಸ್ಎಸ್ ಉದ್ಯೋಗಿಗಳು ಆಗ್ರಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ‘‘ನಾವು ಖಾಯಂಗೊಳಿಸುವ ಯೋಜನೆಯ ಅನುಷ್ಠಾನಕ್ಕೆ ಕಾಯುತ್ತಿರುವಾಗ, ರಾಜ್ಯ ಸರಕಾರ ಕಳೆದ ವರ್ಷ ಅಕ್ಟೋಬರ್ ನಲ್ಲಿ ಜ್ಞಾಪನಾ ಪತ್ರ ಹೊರಡಿಸಿ ನಾವು ಪೂರೈಸಲಾಗದ ಹಲವು ನಿಬಂಧನೆಗಳು ವಿಧಿಸಿದೆ. ಈ ನಿಯಮಗಳು ನಮ್ಮ ಖಾಯಮಾತಿಗೆ ಅಡ್ಡಿ ಆಗುತ್ತಿದೆ’’ ಎಂದು ವನಲಾಲ್ಪೆಕಾ ಅವರು ತಿಳಿಸಿದ್ದಾರೆ. ಹಲವು ಉದ್ಯೋಗಿಗಳು ಕಳೆದ 25 ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಅರ್ಹ ಉದ್ಯೋಗಿಗಳನ್ನು ಖಾಯಂಗೊಳಿಸುವಂತೆ ಅವರು ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದಾರೆ. ಆದರೆ, ಸರಕಾರ ಅವರತ್ತ ಗಮನ ಹರಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶ | ಮಾನವರಿಗೆ 2 ಸಲ ಕಚ್ಚುವ ನಾಯಿಗಳಿಗೆ ‘ಜೀವಾವಧಿ’!
ಲಕ್ನೋ, ಸೆ. 16: ಉತ್ತರಪ್ರದೇಶ ಸರಕಾರವು ಅಭೂತಪೂರ್ವ ಆದೇಶವೊಂದರಲ್ಲಿ, ಒಮ್ಮೆ ಮಾನವರಿಗೆ ಕಚ್ಚುವ ನಾಯಿಗಳನ್ನು 10 ದಿನಗಳ ಕಾಲ ಪ್ರಾಣಿ ಸಂರಕ್ಷಣಾ ಕೇಂದ್ರದಲ್ಲಿ ಇಡಬೇಕು ಹಾಗೂ ಆ ನಾಯಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಿದರೆ ಅವುಗಳನ್ನು ಜೀವನಪರ್ಯಂತ ಆ ಕೇಂದ್ರದಲ್ಲೇ ಇಡಬೇಕು ಎಂದು ಹೇಳಿದೆ. ಇಂಥ ಪ್ರಕರಣಗಳಲ್ಲಿ, ಆ ನಾಯಿಗಳಿಗೆ ಇರುವ ಏಕೈಕ ಪರಿಹಾರ ಎಂದರೆ ಯಾರಾದರೂ ಅವುಗಳನ್ನು ದತ್ತು ತೆಗೆದುಕೊಳ್ಳಬೇಕು. ದತ್ತು ತೆಗೆದುಕೊಳ್ಳುವಾಗ, ನಾಯಿಗಳನ್ನು ಯಾವತ್ತೂ ರಸ್ತೆಗಳಿಗೆ ಬಿಡುವುದಿಲ್ಲ ಎಂಬ ಅಫಿದಾವಿತ್ ಸಲ್ಲಿಸಬೇಕು. ಈ ಆದೇಶವನ್ನು ಉತ್ತರಪ್ರದೇಶ ಸರಕಾರದ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜಾತ್ ಸೆಪ್ಟಂಬರ್ 10ರಂದು ಎಲ್ಲಾ ಗ್ರಾಮೀಣ ಮತ್ತು ನಗರ ಪೌರ ಸಂಸ್ಥೆಗಳಿಗೆ ಹೊರಡಿಸಲಾಗಿದೆ. ಬೀದಿ ನಾಯಿ ಕಚ್ಚಿದ ಬಳಿಕ ಯಾರಾದರೂ ರೇಬೀಸ್ ಲಸಿಕೆ ತೆಗೆದುಕೊಂಡರೆ ಆ ಘಟನೆಯ ಬಗ್ಗೆ ತನಿಖೆ ಮಾಡಲಾಗುವುದು ಮತ್ತು ಸಂಬಂಧಪಟ್ಟ ನಾಯಿಯನ್ನು ಸಮೀಪದ ಪ್ರಾಣಿ ಜನನ ನಿಯಂತ್ರಣ ಕೇಂದ್ರಕ್ಕೆ ಒಯ್ಯಲಾಗುವುದು ಎಂದು ಆದೇಶ ತಿಳಿಸಿದೆ.
ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ ಕ್ರೈಸ್ತ ಉಲ್ಲೇಖ ಕೈಬಿಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಮನವಿ
ಉಡುಪಿ, ಸೆ.16: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಮಾಡುತ್ತಿರುವ ಜಾತಿ ಮತ್ತು ಆರ್ಥಿಕ-ಸಾಮಾಜಿಕ ಸಮೀಕ್ಷೆಯಲ್ಲಿ ಹಿಂದೂ ಧರ್ಮದ ವಿವಿಧ ಜಾತಿ ಗುರುತಿಸುವಿಕೆಯಲ್ಲಿ ಕ್ರಿಶ್ಚನ್ ಪದ ಬಳಕೆಗೆ ಅವಕಾಶ ಕೊಟ್ಟು ಮತಾಂತರಕ್ಕೆ ಕಾಂಗ್ರೆಸ್ ಸರಕಾರ ಬೆಂಬಲ ನೀಡುತ್ತಿರುವುದನ್ನು ಖಂಡಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಇಂದು ಪತ್ರ ಬರೆದಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಕೋರಿದ್ದಾರೆ. ಆಯೋಗದ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಗೆ ಜಾತಿಗಣತಿಯೂ ನಡೆಯುತ್ತಿದೆ. ಇದರಲ್ಲಿ ಹಿಂದೂ ಧರ್ಮವೆಂದು ಪರಿಗಣಿಸಲ್ಪಟ್ಟ ಬಹುತೇಕ ಜಾತಿಗಳನ್ನು ಆಯಾಯ ಜಾತಿಗಳೊಂದಿಗೆ ಕ್ರೈಸ್ತರೆಂದು ಗುರುತಿಸಲು ಸರಕಾರ ಅವಕಾಶ ಮಾಡಿದೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ. ತಮ್ಮ ಆಡಳಿತದಲ್ಲಿ ಲಿಂಗಾಯಿತ ಕ್ರೈಸ್ತ, ಒಕ್ಕಲಿಗ ಕ್ರೈಸ್ತ, ಕುರುಬ ಕ್ರೈಸ್ತ, ನೇಕಾರ ಕ್ರೈಸ್ತ, ಮಡಿವಾಳ ಕ್ರೈಸ್ತ, ಬಿಲ್ಲವ ಕ್ರೈಸ್ತ, ಕುಂಬಾರ ಕ್ರೈಸ್ತ, ಬಂಜಾರ ಕ್ರೈಸ್ತ ಎಂದು ಗುರುತಿಸುವ ಹಿಂದಿರುವ ಉದ್ದೇಶ ಇಡೀ ಹಿಂದೂ ಧರ್ಮ ವನ್ನು ವಿವಿಧ ಜಾತಿಗಳನ್ನು ಉಲ್ಲೇಖಿಸಿ ಕ್ರೈಸ್ತರೆಂದು ಗುರುತಿಸುವ ಮೂಲಕ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ ಆಯೋಗದ ಮೂಲಕ ಸರಕಾರ ಕೈಹಾಕಿದೆ ಎಂದು ಅವರು ಆರೋಪಿಸಿದ್ದಾರೆ. ಈ ಮೂಲಕ ವಂಚನೆಯಿಂದ ಮತಾಂತರಗೊಂಡ ಸಣ್ಣ ಸಣ್ಣ ಸಮುದಾಯಗಳಲ್ಲಿರುವ ಅಮಾಯಕರ ಮತಾಂತ ರಕ್ಕೆ ಸಂಚು ರೂಪಿಸಲು ಇನ್ನಷ್ಟು ಅವಕಾಶವನ್ನು ಸರಕಾರ ನೀಡಿದೆ ಎಂದವರು ಹೇಳಿದ್ದಾರೆ. ಇದರಿಂದ ಮೂಲ ಸಮುದಾಯದ ಮೀಸಲಾತಿ ಸೌಲಭ್ಯಗಳನ್ನು ಅವರು ಪಡೆದು ದುರ್ಬಲ ಜಾತಿಗಳನ್ನು ವಂಚಿಸಲು ಅವಕಾಶವಾ ಗಲಿದೆ ಎಂದು ದೂರಿದ್ದಾರೆ. ಒಂದು ಜಾತಿಯಿಂದ ಬೇರ್ಪಟ್ಟ ನಂತರ ಮೂಲ ಜಾತಿಯೊಂದಿಗೆ ಕ್ರೈಸ್ತ ಹೆಸರಿನ ನಮೂದಿಸುವಿಕೆ ವಿವಿಧ ಜಾತಿ ಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಇದು ಹಿಂದೂ ಧರ್ಮವನ್ನು ಒಡೆಯುವ ಹುನ್ನಾರ ಎಂದವರು ಪತ್ರದಲ್ಲಿ ಆರೋಪಿಸಿದ್ದಾರೆ. ಆದ್ದರಿಂದ ಸುಮಾರು 50ಕ್ಕೂ ಅಧಿಕ ವಿವಿಧ ಜಾತಿಗಳ ಮುಂದೆ ನಮೂದಿಸಿರುವ ಕ್ರೈಸ್ತ ಎಂಬ ಉಲ್ಲೇಖ ಕೈಬಿಡುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ವಿಜಯಪುರ: ಸಿಬ್ಬಂದಿಯನ್ನು ಕಟ್ಟಿ ಹಾಕಿ ಬ್ಯಾಂಕ್ ದರೋಡೆ
ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಮಾಸುವ ಮುನ್ನವೇ ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಮುಸುಕುದಾರಿಗಳು ದರೋಡೆ ನಡೆಸಿ ಪರಾರಿಯಾಗಿರುವ ಘಟನೆ ಮಂಗಳವಾರ ನಡೆದಿದೆ. ಚಡಚಣ ಪಟ್ಟಣದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಮಿಲಿಟರಿ ಡ್ರೆಸ್ ನಲ್ಲಿ ಬ್ಯಾಂಕ್ ಪ್ರವೇಶ ಮಾಡಿರುವ ದರೋಡೆಕೋರರು ಮುಖಕ್ಕೆ ಮಾಸ್ಕ್ ಧರಿಸಿ ಕಂಟ್ರಿ ಪಿಸ್ತೂಲು, ಮಾರಕಾಸ್ತ್ರಗಳನ್ನು ತೋರಿಸಿ ಸಿಬ್ಬಂದಿಗಳನ್ನು ಹೆದರಿಸಿದ್ದಾರೆ. ನಂತರ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಸಿಬ್ಬಂದಿಗಳ ಕೈಕಾಲು ಕಟ್ಟಿಹಾಕಿ ಬ್ಯಾಂಕ್ ನಲ್ಲಿನ ಚಿನ್ನಭಾರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಎಷ್ಟು ಚಿನ್ನ ಹಾಗೂ ನಗದು ದರೋಡೆಯಾಗಿದೆ ಎನ್ನುವ ಮಾಹಿತಿ ಸಿಕ್ಕಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದು, ಬ್ಯಾಂಕ್ ಎದುರಿಗೆ ಸ್ಥಳೀಯರು ಜಮಾಯಿಸಿದ್ದಾರೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ: ಅಧಿಕಾರಿಗಳಿಗೆ ಸಂಸದ ಕೋಟ ಸಲಹೆ
ಉಡುಪಿ, ಸೆ.16: ಹಂಗಾರಕಟ್ಟೆ, ಕೋಡಿ ಬೆಂಗ್ರೆಗಳ ಮೀನುಗಾರಿಕಾ ಕಿರು ಬಂದರು ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ತಯಾರಿಸುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಂಗಾರಕಟ್ಟೆ ಬಂದರಿನ ಇಕ್ಕೆಲಗಳಲ್ಲಿ ಸುಮಾರು 1 ಕಿ.ಮೀ. ವಿಸ್ತೀರ್ಣದ ಬ್ರೇಕ್ವಾಟರ್ ಕಾಮಗಾರಿ ನೆನೆಗುದಿಗೆ ಬಿದ್ದ ಬಗ್ಗೆ ಚರ್ಚೆ ನಡೆದು ಕೋಡಿ-ಕನ್ಯಾಣದಿಂದ ಬೆಂಗ್ರೆಯವರೆಗೆ 3 ಕಿ.ಮೀ. ಹೂಳೆತ್ತಲು 11 ಕೋಟಿ ರೂ. ವೆಚ್ಚದ ಕಾಮಗಾರಿಯ ಪ್ರಸ್ತಾಪ ಸರಕಾರಕ್ಕೆ ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಸಂಸದರು ಮತ್ತು ಶಾಸಕರಿಗೆ ತಿಳಿಸಿದರು. ಸಭೆಯಲ್ಲಿದ್ದ ಮೀನುಗಾರಿಕಾ ಮುಖಂಡರು ಮಾತನಾಡಿ,ಮಲ್ಪೆ ಬಂದರಿನ ನಂತರ ಅತಿಹೆಚ್ಚು ಒತ್ತಡವಿರುವ ಹಂಗಾರಕಟ್ಟೆ ಬಂದರು ಅಭಿವೃದ್ಧಿಯಾದರೆ ಮೀನುಗಾರಿಕಾ ದೋಣಿ ನಿಲುಗಡೆಗೆ ಸಹಾಯವಾಗುತ್ತದೆ. ಮಲ್ಪೆ ಬಂದರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದರು. ಅಲ್ಲದೇ ಹಂಗಾರಕಟ್ಟೆಯಲ್ಲಿ ಕೊಚ್ಚಿನ್ ಶಿಪ್ ಯಾರ್ಡ್ ಬಳಿ ಇರುವ ಖಾಸಗಿ ಜಾಗದ ಮಾಲಕರೊಡನೆ ಚರ್ಚಿಸಿ ಸರಕಾರ ಭೂಸ್ವಾಧೀನ ಮಾಡಿ ಕೊಂಡರೆ ಹೊಸ ಜಟ್ಟಿ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಮೀನುಗಾರರು ವಿವರಿಸಿದರು. ಹೊಸ ಪ್ರಾಂಗಣ ಮೀನು ಏಲಂ ಮಾರುಕಟ್ಟೆ, ಶೌಚಾಲಯ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿ ಸಲು ಶೇ.60-40ರ ಧನಸಹಾಯದ ಯೋಜನೆಯೊಂದಿಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಸಂಸದ ಕೋಟ ಸಲಹೆ ನೀಡಿದರು. ಅಲ್ಲದೇ ಕೇಂದ್ರ ಸರಕಾರದ ಮತ್ಸ್ಯ ಸಂಪದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಉಡುಪಿ ಜಿಲ್ಲೆಯ ಶಾಸಕರೊಂದಿಗೆ ಕೂಡಲೇ ಸಭೆ ಕರೆಯಲು ಮೀನುಗಾರಿಕಾ ಅಧಿಕಾರಿ ಗಳಿಗೆ ಸೂಚನೆಯಿತ್ತರು. ಸಭೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕೊಚ್ಚಿನ್ ಶಿಪ್ ಯಾರ್ಡ್ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಹರಿಕುಮಾರ್, ಜಂಟಿ ಮೀನುಗಾರಿಕಾ ನಿರ್ದೇಶಕ ವಿವೇಕ್ ಮೀನುಗಾರಿಕಾ ಉಪನಿರ್ದೇಶಕ ಕುಮಾರಸ್ವಾಮಿ, ಬಂದರು ಇಲಾಖೆಯ ಪ್ರಸನ್ನ ಮತ್ತು ಶೋಭಾ, ತಾಲೂಕಿನ ಮೀನುಗಾರಿಕಾ ಉಪನಿರ್ದೇಶಕರು ಹಾಗೂ ಮೀನುಗಾರಿಕಾ ಮುಖಂಡರಾದ ರಾಜೇಂದ್ರ ಸುವರ್ಣ, ನಾಗರಾಜ್ ಬೆಂಗ್ರೆ, ಸುದಿನ ಬೆಂಗ್ರೆ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ ಉಪಸ್ಥಿತರಿದ್ದರು.
ಕಲಬುರಗಿ | ವಾಕ್ ಥಾನ್ಗೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ
ಕಲಬುರಗಿ, ಸೆ.17: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕೆ.ಕೆ.ಆರ್.ಡಿ.ಬಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಜಂಟಿಯಾಗಿ ಮಂಗಳವಾರ ಆಯೋಜಿಸಿದ್ದ ವಾಕ್ ಥಾನ್ಗೆ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ ನೀಡಿದರು. ಜಗತ್ ವೃತ್ತದಿಂದ ಆರಂಭವಾದ ವಾಕ್ ಥಾನ್, ಡಿ.ಸಿ. ಕಚೇರಿ ಹಾಗೂ ಕೆ.ಕೆ.ಆರ್.ಡಿ.ಬಿ ಕಚೇರಿ ಮಾರ್ಗವಾಗಿ ಪಿ.ಡಿ.ಎ. ಕಾಲೇಜಿನಲ್ಲಿ ಸಂಪನ್ನವಾಯಿತು. ನೂರಾರು ವಿದ್ಯಾರ್ಥಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ.ಅಜಯ್ ಸಿಂಗ್, ದೇಶ ಸ್ವಾತಂತ್ರ್ಯವನ್ನು 1947ರ ಆಗಸ್ಟ್ 15ರಂದು ಪಡೆದರೆ, ಹೈದರಾಬಾದ್ ಕರ್ನಾಟಕದ ಜನರು 1948ರ ಸೆಪ್ಟೆಂಬರ್ 17ರಂದು ನಿಜವಾದ ಸ್ವಾತಂತ್ರ್ಯ ಉಸಿರಾಡಿದರು. ಈ ದಿನವೂ ಸ್ವಾತಂತ್ರ್ಯದ ದಿನದಷ್ಟೇ ಮಹತ್ವದ್ದಾಗಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು: ಬಿ.ಕೆ.ಹರಿಪ್ರಸಾದ್
ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಸೆ.22ರಿಂದ 400 ಉತ್ಪನ್ನಗಳ ಬೆಲೆ ಇಳಿಕೆ; GST ಲಾಭ ತಿಳಿಸಲು ಮಳಿಗೆ ಮುಂದೆ ದರ ಕಡಿತ ಬೋರ್ಡ್ ಕಡ್ಡಾಯ!
ಕೇಂದ್ರ ಸರ್ಕಾರವು ಜಿಎಸ್ಟಿ ದರಗಳ ಪರಿಷ್ಕರಣೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಮುಂದಾಗಿದೆ. ಸೆಪ್ಟೆಂಬರ್ 22 ರಿಂದ ಜಾರಿಗೆ ಬರುವ ಹೊಸ ದರಗಳ ಕುರಿತು ಚಿಲ್ಲರೆ ಮಳಿಗೆಗಳು ಮಾಹಿತಿ ಪ್ರದರ್ಶಿಸಬೇಕು. ಔಷಧಗಳು, ಮದರ್ ಡೈರಿ ಉತ್ಪನ್ನಗಳು ಸೇರಿದಂತೆ 400 ವಸ್ತುಗಳ ಬೆಲೆ ಇಳಿಕೆಯಾಗಲಿದ್ದು, ಗ್ರಾಹಕರಿಗೆ ಇದರ ಬಗ್ಗೆ ಅರಿವು ಮೂಡಿಸಲು ಸೂಚಿಸಲಾಗಿದೆ.
ಬೀದರ್ | ಸರಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಬಸವೇಶ್ವರ ಎಂಟರ್ಪ್ರೈಸಸ್ ಕಪ್ಪುಪಟ್ಟಿಗೆ ಸೇರಿಸಿ : ಝರೆಪ್ಪ ಬೆಲ್ಲಾಳೆ
ಬೀದರ್, ಸೆ.16: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳಿಗೆ ಆಹಾರ ಸರಬರಾಜು ಮಾಡುತ್ತಿದ್ದ ಬಸವೇಶ್ವರ ಎಂಟರಪ್ರೈಸಸ್ ಅನ್ನು ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಬೇಕೆಂದು ಝರೆಪ್ಪ ಬೆಲ್ಲಾಳೆ ಆಗ್ರಹಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2021–22ರಲ್ಲಿ ಟೆಂಡರ್ ದರಕ್ಕಿಂತ ಹೆಚ್ಚಿನ ಮೊತ್ತ ಬಿಲ್ಲಿನಲ್ಲಿ ನಮೂದಿಸಿ 13,81,383 ಲಕ್ಷ ರೂ. ಲೂಟಿ ಮಾಡಿರುವುದು ದಾಖಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗಿದ್ದರೂ, ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳದೆ ಇರುವುದನ್ನು ಅವರು ಖಂಡಿಸಿದರು. 2024ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸೂಚನೆ ನೀಡಿದರೂ, ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ ಎಂದರು. ಹಿರಿಯ ದಲಿತ ಮುಖಂಡ ವೈಜಿನಾಥ್ ಸೂರ್ಯವಂಶಿ ಮಾತನಾಡಿ, ಸಂಘಟನೆಗಳು ಸಮಾಜ ಪರವಾಗಿ ಕೆಲಸ ಮಾಡುವ ಬದಲು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗವಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದಯಾನಂದ್ ನವಲೆ, ವಿಜಯಕುಮಾರ್ ಜಂಜಿರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
’ತಾವೂ ಹಾರ್ಡ್ ವರ್ಕ್ ಮಾಡಿ, ಸಂಪುಟ ಸಹದ್ಯೋಗಿಗಳಿಗೂ ಸವಾಲಿನ ಟಾರ್ಗೆಟ್ ನೀಡುವ ಪ್ರಧಾನಿ ಮೋದಿ’
Union Minister Joshi On PM Modi : ದೇಶದ ಹಣದುಬ್ಬರವು 11 ವರ್ಷಗಳಲ್ಲಿ ಅತ್ಯಂತ ಕನಿಷ್ಠ ಮಟ್ಟಕ್ಕೆ ತಲುಪಿದೆ. ಪ್ರಸ್ತುತ ಹಣದುಬ್ಬರ ಸನ್ನಿವೇಶದಲ್ಲಿ ದೇಶಾದ್ಯಂತ ಒಟ್ಟು 474 ಕೇಂದ್ರಗಳ ಮೂಲಕ ಅಗತ್ಯ ವಸ್ತುಗಳ ಬೆಲೆಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ. ಇದೀಗ GST ಕಡಿತಗೊಳಿಸುವ ಮೂಲಕ ಇನ್ನಷ್ಟು ಬೆಲೆ ಅಗ್ಗಗೊಳಿಸಿ ಜನಜೀವನ ಸುಗಮ, ಸುಸ್ಥಿರಗೊಳಿಸಲಾಗಿದೆ. ಮೋದಿ ಅವರೂ ಹಾರ್ಡ್ ವರ್ಕ್ ಮಾಡುತ್ತಾರೆ, ಸಂಪುಟ ಸಹದ್ಯೋಗಿಗಳಿಂದಲೂ ಮಾಡಿಸುತ್ತಾರೆ ಎಂದು ಜೋಶಿ ಹೇಳಿದರು.
ಮತಾಂತರ ನಿಷೇಧ ಕಾನೂನುಗಳಿಗೆ ತಡೆಯಾಜ್ಞೆ ಕೋರುವ ಅರ್ಜಿ | ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್
ಹೊಸದಿಲ್ಲಿ, ಸೆ. 16: ರಾಜ್ಯಗಳ ಮತಾಂತರ ನಿಷೇಧ ಕಾನೂನುಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಮಂಗಳವಾರ, ಈ ವಿಷಯದಲ್ಲಿ ಸಂಬಂಧಪಟ್ಟ ರಾಜ್ಯಗಳ ನಿಲುವುಗಳನ್ನು ಕೋರಿ ನೋಟಿಸ್ ಜಾರಿಗೊಳಿಸಿದೆ. ರಾಜ್ಯಗಳು ತಮ್ಮ ನಿಲುವುಗಳನ್ನು ತಿಳಿಸಿದ ಬಳಿಕ, ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಾಧೀಶ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠವೊಂದು ಹೇಳಿತು. ಉತ್ತರಗಳನ್ನು ಸಲ್ಲಿಸಲು ರಾಜ್ಯಗಳಿಗೆ ನ್ಯಾಯಾಲಯವು ನಾಲ್ಕು ವಾರಗಳ ಸಮಯಾವಕಾಶವನ್ನು ನೀಡಿತು ಮತ್ತು ಆ ಉತ್ತರಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಅರ್ಜಿದಾರರಿಗೆ ಎರಡು ವಾರಗಳ ಸಮಯಾವಕಾಶವನ್ನು ನೀಡಿತು. ಮುಂದಿನ ವಿಚಾರಣೆಯನ್ನು ಆರು ವಾರಗಳ ಅವಧಿಗೆ ಮುಂದೂಡಿತು. ಈ ನಡುವೆ, ಉತ್ತರಪ್ರದೇಶ ಮುಂತಾದ ರಾಜ್ಯಗಳು ಹಾಲಿ ಮತಾಂತರ ನಿಷೇಧ ಕಾನೂನುಗಳಿಗೆ ‘‘ಮತ್ತಷ್ಟು ಕಠೋರ’’ ಬದಲಾವಣೆಗಳನ್ನು ತಂದಿರುವುದನ್ನು ಗಮನದಲ್ಲಿರಿಸಿಕೊಂಡು, ಅರ್ಜಿಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಅರ್ಜಿದಾರರೊಬ್ಬರ ಪರವಾಗಿ ಹಾಜರಾಗಿರುವ ಹಿರಿಯ ವಕೀಲ ಸಿ.ಯು. ಸಿಂಗ್ ರಿಗೆ ನ್ಯಾಯಾಲಯ ಅನುಮತಿ ನೀಡಿತು. ಉತ್ತರಪ್ರದೇಶ, ಮಧ್ಯಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡ, ಛತ್ತೀಸ್ಗಢ, ಗುಜರಾತ್, ಹರ್ಯಾಣ, ಜಾರ್ಖಂಡ್ ಮತ್ತು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮತಾಂತರ ನಿಷೇಧ ಕಾನೂನುಗಳನ್ನು ಜಾರಿಗೆ ತಂದಿವೆ. ಈ ಕಾನೂನುಗಳ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಪ್ರಕರಣದ ತುರ್ತು ವಿಚಾರಣೆಗೆ ಒತ್ತು ನೀಡಿದ ವಕೀಲ ಸಿಂಗ್, ಯಾರಾದರೂ ಅಂತರ್ ಧರ್ಮೀಯ ವಿವಾಹವಾದರೆ ಅವರಿಗೆ ಜಾಮೀನು ಸಿಗುವುದು ಅಸಂಭವ ಎಂದು ಹೇಳಿದರು.
ಟೀಮ್ ಇಂಡಿಯಾಗೆ ಅಪೊಲೊ ಟಯರ್ಸ್ ಪ್ರಾಯೋಜಕತ್ವ
ಹೊಸದಿಲ್ಲಿ, ಸೆ.16: ಭಾರತೀಯ ಕ್ರಿಕೆಟ್ ತಂಡದ ಹೊಸ ಪ್ರಾಯೋಜಕರಾಗಿರುವ ಅಪೊಲೊ ಟಯರ್ಸ್ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಜೊತೆ ಎರಡೂವರೆ ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಡ್ರೀಮ್ 11ರ ಬದಲಿಗೆ ಗುರುಗ್ರಾಮ್ ಮೂಲದ ಟಯರ್ ಕಂಪೆನಿಯು 579 ಕೋ.ರೂ. ಬಿಡ್ ನೊಂದಿಗೆ ಕ್ಯಾನ್ವಾ ಹಾಗೂ ಜೆಕೆ ಸಿಮೆಂಟ್ ಕಂಪೆನಿಗಳನ್ನು ಸ್ಪರ್ಧೆಯಲ್ಲಿ ಹಿಂದಿಕ್ಕಿದೆ. ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ)ಹಾಗೂ ಬಹು ರಾಷ್ಟ್ರೀಯ ಸ್ಪರ್ಧೆಗಳ ಸಂದರ್ಭದಲ್ಲಿ ಪ್ರತೀ ಪಂದ್ಯದ ಮೌಲ್ಯದಲ್ಲಿ ವ್ಯತ್ಯಾಸವಾಗಲಿದೆ. ಮಾರ್ಚ್ 2028ರ ತನಕ ಎಲ್ಲ ಮಾದರಿಯ ಕ್ರಿಕೆಟ್ ನಲ್ಲಿ ಭಾರತೀಯ ಪುರುಷರ ಹಾಗೂ ಮಹಿಳಾ ತಂಡಗಳ ಜೆರ್ಸಿಗಳಲ್ಲಿ ಅಪೊಲೊ ಟಯರ್ಸ್ ಲೋಗೊ ಕಾಣಿಸಿಕೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದೆ. ಪ್ರಾಯೋಜಕತ್ವದ ಒಪ್ಪಂದವು 121 ದ್ವಿಪಕ್ಷೀಯ ಪಂದ್ಯಗಳು ಹಾಗೂ ಸುಮಾರು 21 ಐಸಿಸಿ ಪಂದ್ಯಗಳನ್ನು ಒಳಗೊಂಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ‘‘ಭಾರತ ಹಾಗೂ ವಿಶ್ವದಾದ್ಯಂತ ಅಪಾರ ಜನಪ್ರಿಯತೆಯನ್ನು ಹೊಂದಿರುವ ಟೀಮ್ ಇಂಡಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದ ಪ್ರಮುಖ ಪ್ರಾಯೋಜಕರಾಗಲು ನಮಗೆ ಹೆಮ್ಮೆಯಾಗುತ್ತಿದೆ. ಈ ಪಾಲುದಾರಿಕೆಯು ರಾಷ್ಟ್ರೀಯ ಹೆಮ್ಮೆ, ಗ್ರಾಹಕರ ನಂಬಿಕೆಯನ್ನು ಬಲಪಡಿಸುತ್ತದೆ. ಭಾರತೀಯ ಕ್ರೀಡೆಯನ್ನು ಉನ್ನತ ಮಟ್ಟದಲ್ಲಿ ಬೆಂಬಲಿಸುವುದು ಹಾಗೂ ವಿಶ್ವದಾದ್ಯಂತ ಅಭಿಮಾನಿಗಳಿಗೆ ಮರೆಯಲಾಗದ ಕ್ಷಣ ಸೃಷ್ಟಿಸುವುದು ನಮ್ಮ ಗುರಿಯಾಗಿದೆ’’ ಎಂದು ಅಪೊಲೊ ಟಯರ್ಸ್ ಲಿಮಿಟೆಡ್ನ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ನೀರಜ್ ಕನ್ವರ್ ಹೇಳಿದ್ದಾರೆ. ಹಣ ಆಧಾರಿತ ಆನ್ ಲೈನ್ ಗೇಮ್ ಗಳನ್ನು ಅಪರಾಧೀಕರಿಸುವ ಕಾನೂನನ್ನು ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಿದ ನಂತರ ಡ್ರೀಮ್-11 ಶೀರ್ಷಿಕೆ ಪ್ರಾಯೋಜಕತ್ವದ ಒಪ್ಪಂದವನ್ನು ರದ್ದುಪಡಿಸಲಾಯಿತು. ಹೊಸ ಪ್ರಾಯೋಜಕರಿಗಾಗಿ ಬಿಸಿಸಿಐ ಟೆಂಡರ್ ಗಳನ್ನು ಕರೆದಿತ್ತು. ಡ್ರೀಮ್ 11 ಪ್ರಾಯೋಜಕತ್ವ ರದ್ದಾದ ಕಾರಣ ಭಾರತೀಯ ತಂಡವು ಯುಎಇನಲ್ಲಿ ನಡೆಯುತ್ತಿರುವ ಏಶ್ಯ ಕಪ್ನಲ್ಲಿ ಜೆರ್ಸಿ ಪ್ರಾಯೋಜಕರಿಲ್ಲದೆ ಭಾಗವಹಿಸಬೇಕಾಯಿತು. ಮೂಲಗಳ ಪ್ರಕಾರ ಅಕ್ಟೋಬರ್ 2ರಿಂದ ವೆಸ್ಟ್ಇಂಡೀಸ್ ವಿರುದ್ಧ ಸ್ವದೇಶದಲ್ಲಿ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಪೊಲೊ ಟಯರ್ಸ್ ಹೊಸ ಪ್ರಾಯೋಜಕರಾಗಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದೆ.
ಹ್ಯಾಂಡ್ಶೇಕ್ ವಿವಾದ | ಪಾಕಿಸ್ತಾನ ತಂಡ ಏಶ್ಯ ಕಪ್ ನಿಂದ ಹೊರಗುಳಿಯವ ಸಾಧ್ಯತೆ ಇಲ್ಲ: ವರದಿ
ದುಬೈ, ಸೆ.16: ದುಬೈ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ಏಶ್ಯ ಕಪ್ ಪಂದ್ಯದ ನಂತರ ಭಾರತೀಯ ಕ್ರಿಕೆಟಿಗರು ಎದುರಾಳಿ ಪಾಕಿಸ್ತಾನದ ಆಟಗಾರರ ಕೈಕುಲುಕಲು ನಿರಾಕರಿಸಿದ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದ್ದರೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(ಪಿಸಿಬಿ)ಈಗ ನಡೆಯುತ್ತಿರುವ ಏಶ್ಯ ಕಪ್ ಟೂರ್ನಿಯಿಂದ ಪಾಕಿಸ್ತಾನ ತಂಡವನ್ನು ಹಿಂದಕ್ಕೆ ಕರೆಸಿಕೊಳ್ಳುವ ಸಾಧ್ಯತೆ ಇಲ್ಲ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಪಾಕಿಸ್ತಾನ ಕ್ರಿಕೆಟ್ ತಂಡವು ಏಶ್ಯ ಕಪ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯು ತುಂಬಾ ಕಡಿಮೆ ಎಂದು ಪಿಸಿಬಿ ಮೂಲಗಳು ‘ಟೈಮ್ಸ್ ಆಫ್ ಇಂಡಿಯಾ’ಗೆ ತಿಳಿಸಿದೆ. ‘‘ನಾವು ಹಾಗೆ ಮಾಡಿದರೆ ಜಯ್ ಶಾ ಅಧ್ಯಕ್ಷತೆಯ ಐಸಿಸಿ, ಪಿಸಿಬಿ ಮೇಲೆ ಭಾರೀ ನಿರ್ಬಂಧಗಳನ್ನು ವಿಧಿಸುತ್ತದೆ. ಇದು ನಮ್ಮ ಮಂಡಳಿಗೆ ಭರಿಸಲಾಗದ ವಿಷಯ. ಚಾಂಪಿಯನ್ಸ್ ಟ್ರೋಫಿಯ ನಂತರ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ, ಚಾಂಪಿಯನ್ಸ್ ಟೋಫಿಗಾಗಿ ಪಾಕಿಸ್ತಾನದ ಎಲ್ಲ ಸ್ಟೇಡಿಯಂಗಳನ್ನು ನವೀಕರಿಸಲಾಗಿದ್ದು, ಸಾಕಷ್ಟು ಹಣ ಖರ್ಚಾಗಿದೆ’’ ಎಂದು ಪಿಸಿಬಿ ಮೂಲಗಳು ತಿಳಿಸಿವೆ. ‘‘ನನ್ನ ದೇಶದ ಗೌರವ ಹಾಗೂ ಪ್ರತಿಷ್ಠೆಗಿಂತ ನನಗೆ ಮುಖ್ಯವಾದುದು ಯಾವುದೂ ಇಲ್ಲ’’ ಎಂದು ಪಿಸಿಬಿ ಅಧ್ಯಕ್ಷ ಹಾಗೂ ಪ್ರಸ್ತುತ ಏಶ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮುಹ್ಸಿನ್ ನಖ್ವಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಮರುದಿನ ಈ ಬೆಳವಣಿಗೆ ನಡೆದಿದೆ. ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಹಾಗೂ ಭಾರತದ ನಾಯಕ ಸೂರ್ಯಕುಮಾರ್ ಗೆ ಟಾಸ್ ಸಮಯದಲ್ಲಿ ಸಾಂಪ್ರದಾಯಿಕ ಹ್ಯಾಂಡ್ ಶೇಕ್ ಮಾಡಬಾರದು ಎಂದು ಹೇಳಿದ್ದ ಮ್ಯಾಚ್ ರೆಫರಿ ಆ್ಯಂಡ್ರೂ ಪೈಕ್ರಾಫ್ಟ್ ವಿರುದ್ಧ ಐಸಿಸಿಗೆ ಪಿಸಿಬಿ ದೂರು ನೀಡಿತ್ತು. ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮಂಗಳವಾರ ಐಸಿಸಿ ಅಕಾಡೆಮಿಯಲ್ಲಿ ತರಬೇತಿ ನಡೆಸಲಿವೆ. ಬೇರೆ ಬೇರೆ ಸಮಯದಲ್ಲಿ ಅಭ್ಯಾಸ ನಡೆಸಲಿರುವ ಉಭಯ ತಂಡಗಳು ತಮ್ಮ ಮುಂದಿನ ಪಂದ್ಯಗಳಿಗೆ ತಯಾರಿ ನಡೆಸಲು ಒಂದೇ ಸ್ಥಳದಲ್ಲಿರುತ್ತವೆ. ಭಾರತ ತಂಡವು ಸಂಜೆ 6ರಿಂದ ರಾತ್ರಿ 9ರ ತನಕ(ಸ್ಥಳೀಯ ಸಮಯ)ಅಭ್ಯಾಸ ನಡೆಸಿದರೆ, ಪಾಕಿಸ್ತಾನ ತಂಡ ರಾತ್ರಿ 8ರಿಂದ 11ರ ತನಕ (ಸ್ಥಳೀಯ ಸಮಯ)ತರಬೇತಿ ನಡೆಸಲಿದೆ. ಸೋಮವಾರ ಯುಎಇ ತಂಡವು ಒಮಾನ್ ತಂಡದ ವಿರುದ್ದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭಾರತ ತಂಡವು ಸೂಪರ್-4 ಹಂತಕ್ಕೆ ತೇರ್ಗಡೆಯಾಗಿದೆ. ಇದೇ ವೇಳೆ, ಪಾಕಿಸ್ತಾನ ತಂಡವು ಬುಧವಾರ ಆತಿಥೇಯ ಯುಎಇ ತಂಡದ ವಿರುದ್ಧ ಮಾಡು-ಇಲ್ಲವೇ ಮಡಿ ಪಂದ್ಯವನ್ನು ಆಡಲಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಯುಎಇ ತಂಡವನ್ನು ಮಣಿಸಿದರೆ, ರವಿವಾರ ಮತ್ತೊಮ್ಮೆ ಭಾರತ ತಂಡವನ್ನು ಎದುರಿಸಲಿದೆ.
ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ನಿಷ್ಪಕ್ಷವಾಗಿ ಕಾರ್ಯನಿರ್ವಹಿಸಲು ಅಧಿಕಾರ ನೀಡಬೇಕೆಂದು ಒತ್ತಾಯ
ಬೆಂಗಳೂರು: ಧರ್ಮಸ್ಥಳ ಸಮೀಪದ ಗ್ರಾಮಗಳಲ್ಲಿ ವರದಿಯಾಗಿರುವ ನೂರಾರು ಮಹಿಳೆಯರ ಅತ್ಯಾಚಾರ, ಕೊಲೆ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಯಾಗಿದ್ದು, ಯಾವ ಒತ್ತಡಗಳಿಲ್ಲದೆ, ನಿಷ್ಪಕ್ಷವಾಗಿ ಕಾರ್ಯನಿರ್ವಹಿಸಲು ಅಗತ್ಯ ಅಧಿಕಾರವನ್ನು ಎಸ್ಐಟಿಗೆ ನೀಡಬೇಕು ಎಂದು ‘ಕೊಂದವರು ಯಾರು’ ಆಂದೋಲನವು ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಮಂಗಳವಾರ ಇಲ್ಲಿನ ಗಾಂಧಿ ಭವನದಲ್ಲಿ ‘ಕೊಂದವರು ಯಾರು’ ಆಂದೋಲನವು ಆಯೋಜಿಸಿದ್ದ ‘ನೊಂದವರೊಂದಿಗೆ ನಾವು-ನೀವು’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಪ್ರಗತಿಪರ ಸಾಹಿತಿಗಳು, ಮಹಿಳಾ ಹೋರಾಟಗಾರರು ಭಾಗವಹಿಸಿ, ‘ಧರ್ಮಸ್ಥಳ ಪ್ರಕರಣಗಳ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ತನಿಖೆಯನ್ನು ಸರಿಯಾಗಿ ನಡೆಸದೆ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳು, ವೈದ್ಯರು, ತನಿಖಾಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನೂ ಅಪರಾಧಿಗಳೆಂದು ಪರಿಗಣಿಸಿ ಕಾನೂನು ಪ್ರಕಾರ ಶಿಕ್ಷೆಗೆ ವಿಧಿಸಬೇಕು’ ಎಂದು ಆಗ್ರಹಿಸಿದರು. ಮಾನಸ ಬಳಗದ ಮುಖ್ಯಸ್ಥೆ ಚಂಪಾವತಿ ಮಾತನಾಡಿ, ಮಹಿಳಾ ಚಳುವಳಿಯು ಸದಾಕಾಲ ನೊಂದವರ ಜೊತೆ ನಿಂತಿದೆ. ಆದ್ದರಿಂದಲೇ ಧರ್ಮಸ್ಥಳದ ನೊಂದ ಕುಟುಂಬಗಳನ್ನು ಭೇಟಿ ಮಾಡುವುದು ನಮಗೆ ಅತ್ಯಗತ್ಯವಾಗಿತ್ತು ಎಂದರು. ಮಹಿಳಾ ಮುನ್ನಡೆಯ ಮಲ್ಲಿಗೆ ಮಾತನಾಡಿ, ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣುಮಕ್ಕಳ ಅಪಹರಣ, ಅತ್ಯಾಚಾರ, ಕೊಲೆಗಳ ವಿರುದ್ದ ಹೋರಾಟ ಸುಧೀರ್ಘ ಕಾಲದಿಂದ ನಡೆದುಬಂದಿದೆ. ನಿರಂತರವಾಗಿ, ಸ್ಥಳೀಯರು ಈ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ. ಇವರೊಂದಿಗೆ ‘ಕೊಂದವರು ಯಾರು?’ ವೇದಿಕೆಯೂ ಜೊತೆ ನಿಂತಿದ್ದು, ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಮುಂದುವರೆಯಲಿದೆ ಎಂದರು. ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ ಮಾತನಾಡಿ, ಧರ್ಮಸ್ಥಳದಲ್ಲಿ ಹಲವಾರು ಹೆಣ್ಣುಮಕ್ಕಳ ಕೊಲೆಯಾಗಿದ್ದರೂ, ಇನ್ನೂ ತಪ್ಪಿಸ್ಥರಿಗೆ ಶಿಕ್ಷೆಕೊಡಿಸುವಲ್ಲಿ ವಿಳಂಬವಾಗುತ್ತಿದೆ. ಧರ್ಮಸ್ಥಳದಲ್ಲಿ ನಡೆದಿರುವ ಹಲವು ಪ್ರಕರಣಗಳಲ್ಲಿ ಸೂಕ್ತ ತನಿಖೆ ಮಾಡಬೇಕಿದ್ದ ಪೊಲೀಸರೇ ಖಾಸಗಿ ಸಂಸ್ಥೆಯ ವಾಹನದಲ್ಲಿ ಬಂದು ಜನರಿಗೆ ಬೆದರಿಕೆ ನೀಡಿದ ಪ್ರಸಂಗಳಿವೆ ಎಂದು ಆರೋಪಿಸಿದರು. ಹೋರಾಟಗಾರ್ತಿ ಮಧು ಭೂಷಣ್ ಮಾತನಾಡಿ, ಧರ್ಮಸ್ಥಳ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ಎಸ್ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ. ಆದರೆ, ಧರ್ಮಸ್ಥಳದ ಹೆಣ್ಣುಮಕ್ಕಳನ್ನು ಕೊಂದವರಾರು? ಎಂಬ ಮೂಲ ಪ್ರಶ್ನೆಯನ್ನೇ ಕಡೆಗಣಿಸಲಾಗಿದೆ ಎಂದು ಹೇಳಿದರು. ವಕೀಲ ಮೋಹಿತ್ ಕುಮಾರ್ ಮಾತನಾಡಿ, ಸೌಜನ್ಯ, ವೇದವಲ್ಲಿ, ಪದ್ಮಲತಾ, ಯಮುನಾ- ನಾರಾಯಣ ಕೇಸ್ಗಳಲ್ಲಿ ತಪ್ಪಿತಸ್ಥರು ಏಕೆ ಪತ್ತೆಯಾಗಲಿಲ್ಲ? ಎಲ್ಲ ಕೇಸ್ನಲ್ಲೂ ಬೆಳ್ತಂಗಡಿ ಪೊಲೀಸರ ತನಿಖೆಯಲ್ಲಿ ಒಂದೇ ರೀತಿಯ ವಿಧಾನ ಕಾಣುತ್ತಿದೆ. ಯಾರೋ ಒಬ್ಬನನ್ನು ಆರೋಪಿ ಎಂದು ಕರೆತರುತ್ತಾರೆ ಎಂದು ಹೇಳಿದರು. ವೇದವಲ್ಲಿ ಪ್ರಕರಣದಲ್ಲಿ ಆಕೆಯ ಗಂಡನನ್ನೇ ಆರೋಪಿಯನ್ನಾಗಿ ಮಾಡಿದ್ದರು. ಪದ್ಮಲತಾ ಪ್ರಕರಣದಲ್ಲಿ ಯಾರೂ ಪತ್ತೆಯಾಗಲಿಲ್ಲ. ನಾರಾಯಣ-ಯಮುನಾ ಕೇಸ್ಗೂ ಸೌಜನ್ಯ ಕೇಸ್ಗೂ 20 ದಿನ ಮಾತ್ರ ಅಂತರವಿದ್ದು, ನಾರಾಯಣ- ಯಮುನಾ ಪ್ರಕರಣದಲ್ಲಿಯೂ ಅಪರಾಧಿಗಳು ಸಿಗಲಿಲ್ಲ. ಒಟ್ಟಾರೆಯಾಗಿ ಯಾವ ಪ್ರಕರಣಗಳಲ್ಲಿಯೂ ಅಪರಾಧಿಗಳು ಪತ್ತೆಯಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಸುತ್ತಲಿನ ಕೊಲೆ-ಅತ್ಯಾಚಾರ ಪ್ರಕರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸುವ ಹಾಡುಗಳನ್ನು ಮತ್ತು ಕಿರು ನಾಟಕಗಳನ್ನು ಪ್ರಸ್ತುತ ಪಡಿಸಲಾಯಿತು. ಇದೇ ವೇಳೆ ಐದು ಅಂಶಗಳ ಬೇಡಿಕೆಗಳನ್ನು ‘ಕೊಂದವರು ಯಾರು’ ಆಂದೋಲನವು ಮಂಡಿಸಿತು. ‘ಕೊಂದವರು ಯಾರು’ ಆಂದೋಲನದ ಐದು ಅಂಶಗಳ ಬೇಡಿಕೆ: 1.ವಿಶೇಷ ತನಿಖಾ ತಂಡವು ಸ್ವತಂತ್ರವಾಗಿ, ಮುಕ್ತವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಬೇಕು. ದಶಕಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು. 2.ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಆದೇಶದಂತೆ ತನಿಖೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು. 3.ಲಿಂಗತ್ವ ನ್ಯಾಯ ಮತ್ತು ಹೊಣೆಗಾರಿಕೆಯನ್ನು ಖಾತ್ರಿಪಡಿಸಲು ಎಸ್ಐಟಿಯನ್ನು ಬೆಂಬಲಿಸುವ, ಮಹಿಳಾ ಹಕ್ಕುಗಳ ಪರಿಣತರಿರುವ ಸ್ವತಂತ್ರ ಬೆಂಬಲ ತಂಡವನ್ನು ರಚಿಸಬೇಕು. 4.ಧಾರ್ಮಿಕ ಕೇಂದ್ರಗಳನ್ನೂ ಒಳಗೊಂಡಂತೆ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ನಿಯಮಗಳನ್ನು ರೂಪಿಸಬೇಕು. 5.ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸೆಯನ್ನು ತಡೆಗಟ್ಟಲು ಶಿಫಾರಸ್ಸುಗಳನ್ನು ಮಾಡಿರುವ ಉಗ್ರಪ್ಪ ಸಮಿತಿ ವರದಿ ಮತ್ತು ನ್ಯಾಯಮೂರ್ತಿ ವರ್ಮಾ ಸಮಿತಿ ವರದಿಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಪರಿಣತರ ಸಮಿತಿಯೊಂದನ್ನು ರಚಿಸಬೇಕು.
ಸ್ಥಳೀಯ ಸಂಸ್ಥೆಗಳ ಚುನಾವಣೆ ತಡವಾಗಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ; 2026 ಜನವರಿಯೊಳಗೆ ಮುಗಿಸಲು ಗಡುವು!
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ವಿಳಂಬ ಮಾಡಿದ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 2026ರ ಜನವರಿ 31ರೊಳಗೆ ಚುನಾವಣೆ ನಡೆಸಲು ನಿರ್ದೇಶನ ನೀಡಿದೆ. ಇದರ ಬೆನ್ನಲ್ಲೇ, ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ವಾರ್ಡ್ಗಳ ಮರುವಿಂಗಡನೆ ಕಾರ್ಯಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ.
ಬಿಜೆಪಿಯಿಂದ ‘ರಸ್ತೆ ಗುಂಡಿಗಳೊಂದಿಗೆ ಸೆಲ್ಫಿ’ ಅಭಿಯಾನಕ್ಕೆ ಚಾಲನೆ
ಉಡುಪಿ, ಸೆ.16: ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸು ವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ’ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಫೋಟೋ ಹಂಚಿಕೊಳ್ಳುವ ಮೂಲಕ ಚಾಲನೆ ನೀಡಿದರು. ಕೇವಲ ಸ್ವಯಂ ಘೋಷಿತ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಸ್ತೆಗಳ ಗುಂಡಿ ಮುಚ್ಚಲೂ ಹಣವಿಲ್ಲದೇ ನೈಜ ದಿವಾಳಿತನ ಪ್ರದರ್ಶಿಸಿದೆ. ಉಡುಪಿ ಜಿಲ್ಲೆಯಾದ್ಯಂತ ರಾಜ್ಯ ಸರಕಾರದ ಸುಪರ್ದಿಯಲ್ಲಿರುವ ಎಲ್ಲಾ ರಸ್ತೆಗಳು ಗುಂಡಿಗಳಿಂದ ತುಂಬಿ ತುಳುಕುತ್ತಿದ್ದರೂ ಮುಖ್ಯಮಂತ್ರಿಗಳ ಸಹಿತ ರಾಜ್ಯ ಸರಕಾರ ಈ ಬಗ್ಗೆ ತೀವ್ರ ನಿರ್ಲಕ್ಷ್ಯ ಧೋರಣೆ ಅನುಸರಿಸಿರುವುದು ಖಂಡನೀಯ ಎಂದು ಕುತ್ಯಾರು ತಿಳಿಸಿದ್ದಾರೆ. ಸಾರ್ವಜನಿಕ ಹಿತದೃಷ್ಠಿಯಿಂದ ಸೆ.16ರಂದು ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಈ ಅಭಿಯಾನದಲ್ಲಿ ಭಾಗವಹಿಸಿ, ರಾಜ್ಯ ಸರಕಾರದ ಪರಿಮಿತಿಗೆ ಒಳಪಟ್ಟಿರುವ ರಸ್ತೆಗಳಲ್ಲಿ ರುವ ಗುಂಡಿಗಳ ಜೊತೆಗೆ ಸೆಲ್ಫಿ ಫೋಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕಣ್ಣು ತೆರೆಸಿ ಎಚ್ಚರಿಸುವ ಸತ್ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದು ಶ್ಲಾಘನೀಯ. ರಾಜ್ಯ ಸರಕಾರ ಎಚ್ಚೆತ್ತುಕೊಂಡು ತಕ್ಷಣ ಉಡುಪಿ ಜಿಲ್ಲೆಯಾದ್ಯಂತ ರಾಜ್ಯ ಸರಕಾರದ ಪರಿಮಿತಿಗೆ ಸಂಬಂಧಿಸಿ ರುವ ವಿವಿಧ ರಸ್ತೆಗಳಲ್ಲಿರುವ ಹೊಂಡಗಳನ್ನು ಮುಚ್ಚಲು ತುರ್ತು ಕ್ರಮವನ್ನು ವಹಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಅಗ್ರಹಿಸಿದ್ದಾರೆ.
ಸೆ.21: ಕೇಂದ್ರ ಸಚಿವ ವಿ.ಸೋಮಣ್ಣರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ
ಉಡುಪಿ, ಸೆ.16: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಹತ್ತಾರು ಅಪಘಾತ, ಹಲವು ಜೀವಬಲಿ, ವಿವಿಧ ಸಂಘಟನೆಗಳ ಪ್ರತಿಭಟನೆಗೆ ಕಾರಣವಾದ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169ಎಯ ಇಂದ್ರಾಳಿ ರೈಲ್ವೆ ಓವರ್ ಬ್ರಿಡ್ಜ್ಗೆ ಕೊನೆಗೂ ಉದ್ಘಾಟನೆಯ ಮುಹೂರ್ತ ಫಿಕ್ಸ್ ಆಗಿದೆ. ಸೆ.21ರ ಬೆಳಗ್ಗೆ 11:15ಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಈ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿ, ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಿದ್ದಾರೆ ಎಂದು ಸಚಿವರ ಅಧಿಕೃತ ಪ್ರವಾಸ ಕಾರ್ಯಕ್ರಮದಲ್ಲಿ ಪ್ರಕಟಿಸಲಾಗಿದೆ. ಸೆ.21ರಂದು ಬೆಳಗ್ಗೆ 9ಗಂಟೆಗೆ ಬೆಂಗಳೂರಿನಿಂದ ಹೊರಟು 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಅಲ್ಲಿಂದ 11:15ಕ್ಕೆ ಉಡುಪಿಗೆ ಆಗಮಿಸಿ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆಯುವ ಸಚಿವರು ಅಪರಾಹ್ನ 2:45ಕ್ಕೆ ಕುಂದಾಪುರಕ್ಕೆ ತೆರಳಲಿದ್ದಾರೆ. ಅಪರಾಹ್ನ 3:30ಕ್ಕೆ ಕುಂದಾಪುರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸುವ ಸಚಿವ ವಿ.ಸೋಮಣ್ಣ, ಸಂಜೆ 4:15ಕ್ಕೆ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೌಲಭ್ಯ ಕೋಡಲು ಆಗದಿದ್ದರೆ ನ್ಯಾಯಮಂಡಳಿಗಳನ್ನು ರದ್ದುಗೊಳಿಸಿ: ಸುಪ್ರೀಂ ಕೋರ್ಟ್
ಹೊಸದಿಲ್ಲಿ, ಸೆ. 16: ಹೈಕೋರ್ಟ್ ಗಳ ಮಾಜಿ ನ್ಯಾಯಾಧೀಶರು ನಿವೃತ್ತಿಯ ಬಳಿಕ ನ್ಯಾಯಮಂಡಳಿಗಳಲ್ಲಿ ಕೆಲಸ ಮಾಡಲು ಹಿಂಜರಿಯುತ್ತಿರುವುದಕ್ಕೆ ಅಲ್ಲಿರುವ ಸೌಕರ್ಯಗಳ ಕೊರತೆಯೇ ಕಾರಣ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರಕ್ಕೆ ಸಾಧ್ಯವಾಗದಿದ್ದರೆ ಈ ನ್ಯಾಯಮಂಡಳಿಗಳನ್ನು ರದ್ದುಗೊಳಿಸಬೇಕು ಎಂಬುದಾಗಿಯೂ ಅದು ಹೇಳಿತು. ಇಂಥ ನ್ಯಾಯಮಂಡಳಿಗಳಿಗೆ ಸೌಕರ್ಯಗಳನ್ನು ಕೊಡಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗದಿದ್ದರೆ, ಅವುಗಳನ್ನು ರದ್ದುಪಡಿಸಬೇಕು ಹಾಗೂ ಎಲ್ಲಾ ಪ್ರಕರಣಗಳನ್ನು ಹೈಕೋರ್ಟ್ ಗಳಿಗೆ ಕಳುಹಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರನ್ನೊಳಗೊಂಡ ನ್ಯಾಯಪೀಠವೊಂದು ಹೇಳಿತು. ‘‘ಅವರು ಯಾಕೆ ಅರ್ಜಿ ಹಾಕುತ್ತಾರೆ ಮತ್ತು ಸಂದರ್ಶನಕ್ಕೆ ಹಾಜರಾಗುತ್ತಾರೆ ಹಾಗೂ ಬಳಿಕ ಯಾಕೆ ಹುದ್ದೆಯನ್ನು ಸ್ವೀಕರಿಸುವುದಿಲ್ಲ? ಅದಕ್ಕೆ ಒಂದು ಕಾರಣವೆಂದರೆ, ನ್ಯಾಯಮಂಡಳಿಯ ಸದಸ್ಯನಾಗುವುದು ಎಂದರೆ ಏನು ಎಂಬ ವಾಸ್ತವ ಅವರಿಗೆ ಅರ್ಥವಾಗಿರುತ್ತದೆ. ಅವರ ಪೈಕಿ ಕೆಲವರು ಹೈಕೋರ್ಟ್ಗಳ ಮಾಜಿ ಮುಖ್ಯ ನ್ಯಾಯಾಧೀಶರು ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಅವರನ್ನು ನ್ಯಾಯಮಂಡಳಿಗಳ ಅಧ್ಯಕ್ಷರಾಗಿ ನೇಮಿಸಲಾಗುತ್ತದೆ. ಆದರೆ, ಅವರಿಗೆ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ. ಲೇಖನ ಸಾಮಗ್ರಿಗಳಿಗೂ ಅವರು ವಿನಂತಿ ಮಾಡುತ್ತಲೇ ಇರಬೇಕಾಗುತ್ತದೆ. ಇದು, ಸರಕಾರವು ನ್ಯಾಯಮಂಡಳಿಗಳನ್ನು ಹೇಗೆ ನಡೆಸಿಕೊಳ್ಳುತ್ತದೆ ಎನ್ನವುದನ್ನು ತೋರಿಸುತ್ತದೆ. ತಪ್ಪು ನಿಮ್ಮಲ್ಲಿದೆ. ನೀವು ನ್ಯಾಯಮಂಡಳಿಗಳನ್ನು ರಚಿಸಿದ್ದೀರಿ’’ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಹೇಳಿತು.
ಕಾಪು| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ವಂಚನೆ ಆರೋಪ: ಪ್ರಕರಣ ದಾಖಲು
ಕಾಪು, ಸೆ.16: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 22 ಮಂದಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ವಿದೇಶದಲ್ಲಿದ್ದ ಕಾಪುವಿನ ವಸಂತ್ ಡಿ.ಪೂಜಾರಿ ಪರಿಚಯದ ಕೆಲವರಿಗೆ ವಿದೇಶಕ್ಕೆ ತೆರಳಲು ವಿಸಾ ಮಾಡಿಸಿ ಕೊಡಲು ಸುರತ್ಕಲ್ ನಿವಾಸಿ ಜೋಬಿ ಅರಂಗಸ್ಸೆರಿ ದೆವಸ್ಸಿ ಎಂಬವರನ್ನು ಸಂಪರ್ಕಿಸಿದ್ದು, ಅವರು ಚಂಡಿಗಢದಲ್ಲಿರುವ ಕಂಪನಿಯಲ್ಲಿ ವಿದೇಶಕ್ಕೆ ತೆರಳುವ ವ್ಯಕ್ತಿಗಳಿಗೆ ಕೆಲಸದ ವಿಸಾ ಕೊಡಿಸುತ್ತಾರೆ ಎಂಬುದಾಗಿ ತಿಳಿಸಿದ್ದರು. ವಸಂತ್ 2024ರ ಎ.6ರಂದು ವಿಸಾದ ಬಗ್ಗೆ ತಿಳಿದುಕೊಳ್ಳಲು ಚಂಡಿಗಢಗೆ ಹೋಗಿದ್ದು, ಅಲ್ಲಿ ಜೋಬಿ, ವಿಜಯ್ ಸಿಂಗ್, ರಮನ್, ನಿರ್ವೈರ್ ಸಿಂಗ್ ಎಂಬವರನ್ನು ಪರಿಚಯಿಸಿದ್ದರು. ಬಳಿಕ ವಸಂತ್ ಪೂಜಾರಿ ಊರಿಗೆ ಬಂದು ಸೂರಜ್ ಹಾಗೂ ಮನೀಶ್ ಎಂಬವರನ್ನು ಅಜರಬೈಜಾನ್ಗೆ ಕಳುಹಿಸಿ ಕೊಡಲು ಕಂಪನಿಗೆ ತಿಳಿಸಿದ್ದು, ಕಂಪೆನಿಯವರು ಒಪ್ಪಿಕೊಂಡ ಮೇರೆಗೆ 2024ರ ಜುಲೈಯಲ್ಲಿ ಒಟ್ಟು 7,00,000ರೂ. ಹಣ ಪಾವತಿಸಿದ್ದರು. ಬಳಿಕ ಕಂಪನಿಯವರು ಸೆ.22ರಂದು ಸೂರಜ್ ಮತ್ತು ಮನಿಶ್ಗೆ ಅಜರ ಬೈಜಾನ್ಗೆ ಕೆಲಸದ ಆಫರ್ ಮಾಡಿ ವಿಮಾನ ಟಿಕೆಟ್ನ್ನು ಮಾಡಿದ್ದು ಸ್ವಲ್ಪ ದಿನದ ಬಳಿಕ ಅದನ್ನು ಕ್ಯಾನ್ಸಲ್ ಮಾಡಿದ್ದರು. ಈ ಮಧ್ಯೆ 20 ಜನ ಪರಿಚಯದವರಿಗೂ ಕೆಲಸ ಕೊಡಿಸಲು ಒಟ್ಟು 56,91,824ರೂ. ಹಣವನ್ನು ಪಾವತಿಸಿದ್ದರು. 2025ರ ಜನವರಿ ಬಳಿಕ ಇವರೆಲ್ಲ ಹಲವು ಬಾರಿ ಚಂಡಿಗಡಕ್ಕೆ ಹೋಗಿ ಹಣ ವಾಪಾಸ್ಸು ನೀಡುವಂತೆ ಕೇಳಿದ್ದು, ಅದಕ್ಕೆ ಆರೋಪಿಗಳು 2025ರ ಜು.10 ಹಾಗೂ ಜು.30ಕ್ಕೆ ತಲಾ 6,00,000ರೂ. ಗಳ ಚೆಕ್ಗಳನ್ನು ನೀಡಿದ್ದು ಅವುಗಳನ್ನು ಬ್ಯಾಂಕಿನಲ್ಲಿ ಪರಿಶೀಲಿಸಿದಾಗ ಅವು ಕ್ಲೋಸ್ಡ್ ಅಕೌಂಟ್ನ ಚೆಕ್ಗಳು ಎಂಬುದು ತಿಳಿದುಬಂತು. ಹೀಗೆ ಆರೋಪಿಗಳು 22 ಮಂದಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಒಟ್ಟು 63,91,824ರೂ. ಹಣವನ್ನು ಪಡೆದು ಕೊಂಡು ಕೆಲಸವನ್ನು ಕೋಡಿಸದೆ ಹಣವನ್ನು ವಾಪಾಸ್ಸು ನೀಡದೇ ಮೋಸ ಹಾಗೂ ವಂಚನೆ ಮಾಡಿರುವುದಾಗಿ ದೂರಲಾಗಿದೆ.
ವಿವಿಧ ಹೈಕೋರ್ಟ್ ಗಳಿಗೆ ನ್ಯಾಯಾಧೀಶರನ್ನು ನೇಮಿಸಿದ ಕೊಲೀಜಿಯಮ್
ಕರ್ನಾಟಕ ಹೈಕೋರ್ಟ್ ಗೆ ನ್ಯಾಯಾಧೀಶರಾಗಿ ಗೀತಾ ಕಡಬ ಭರತರಾಜ ಸೆಟ್ಟಿ, ಮುರಳೀಧರ ಪೈ ಬೋರ್ಕಟ್ಟೆ, ತ್ಯಾಗರಾಜ ನಾರಾಯಣ್ ಇನವಳ್ಳಿ
ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈಬಿಡಿ: ಆರ್. ಅಶೋಕ್
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ರಾಜ್ಯ ಸರಕಾರ ಕೂಡಲೇ ಕೈಬಿಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಮಂಗಳವಾರ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹೆಸರಲ್ಲಿ ಕಾಂಗ್ರೆಸ್ ಸರಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿ ಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ ಎಂದರು. ಪ್ರತಿದಿನ 6 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗಿ ಕೆಎಂಎಫ್ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ನಿವೇಶನಗಳನ್ನು ನೀಡಲಾಗುತ್ತಿದೆ. ಹೌಸಿಂಗ್ ಬೋರ್ಡ್ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು ನಿರ್ಮಿಸಿಲ್ಲ ಎಂದರು. ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆಗಳಲ್ಲೇ ಖಾಲಿ ಇದೆ. ಇಷ್ಟು ಖಾಲಿ ಇರುವಾಗ ಫಲವತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಂಡರೆ ಅದು ರೈತರಿಗೆ ಮಾಡುವ ವಂಚನೆ. ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸ್ವಾಧೀನ ಬೇಡವೆಂದು ರೈತರಿಗೆ ಜಮೀನು ಬಿಟ್ಟಿದ್ದರು. ಈಗ ಕಾಂಗ್ರೆಸ್ ಸರಕಾರ ಕುತಂತ್ರ ಮಾಡಿ ಜಮೀನು ಲೂಟಿ ಮಾಡಿ ರಿಯಲ್ ಎಸ್ಟೇಟ್ನಿಂದ ಹಣ ಹೊಡೆಯಲು ಪ್ಲಾನ್ ಮಾಡಿದೆ. ರಾಮನಗರದಲ್ಲಿ ಸೈಟು ಬೇಕೆಂದು ಯಾರು ಕೇಳಿದ್ದಾರೆ? ಮಾಡಿರುವ ಸೈಟುಗಳೇ ಖಾಲಿ ಇದೆ. ಇದು ಅಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿ.ಕೆ.ಶಿವಕುಮಾರ್ ಡಿನೋಟಿಫಿಕೇಶನ್ ಮಾಡದೆಯೇ ಹಾಗೆಯೇ ಬಿಟ್ಟುಬಿಡಬೇಕು. ಯಾವುದೇ ಸವಲತ್ತು ಬೇಡವೆಂದು ರೈತರು ಹೇಳಿದ್ದಾರೆ. ಬಹುತೇಕ ರೈತರು ಹೀಗೆಯೇ ಇರಲಿ ಎಂದು ಹೇಳಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೈತರ ಮಾತಿಗೆ ಬೆಲೆ ನೀಡಬೇಕು. ಮುಂದೆ ನಮ್ಮ ಸರಕಾರ ಬಂದಾಗ ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ ಎಂದರು.
ಮಹಾರಾಷ್ಟ್ರದಲ್ಲಿ ಭಾರೀ ಮಳೆ | ಮೂವರು ಮೃತ್ಯು, 120 ಮಂದಿಯ ರಕ್ಷಣೆ
ಮುಂಬೈ, ಸೆ. 17: ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳ ಕಾಲ ಸುರಿದ ಭಾರೀ ಮಳೆಯ ಸಂದರ್ಭ ಮೂವರು ಸಾವನ್ನಪ್ಪಿದ್ದಾರೆ ಹಾಗೂ 120ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಂಗಳವಾರ ತಿಳಿಸಿದೆ. ನೆರೆ ಪೀಡಿತ ಜಿಲ್ಲೆಗಳಿಂದ ಜನರ ತೆರವು ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಹಾಗೂ ಇತರ ರಕ್ಷಣಾ ತಂಡಗಳು ಭಾಗಿಯಾಗಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ. ಮರಾಠವಾಡದ 8 ಜಿಲ್ಲೆಗಳ ಪೈಕಿ 5 ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆ ಸುರಿದಿದೆ. ಮಂಗಳವಾರ ಬೆಳಗ್ಗಿನ ವರೆಗೆ 24 ಗಂಟೆಗಳಲ್ಲಿ ಬೀಡ್ ನಲ್ಲಿ ಅತ್ಯಧಿಕ 143.7 ಎಂಎ ಮಳೆ ಸುರಿದಿದೆ. ನಾಂದೇಡ್ನಲ್ಲಿ 131.6 ಎಂಎಂ ಹಾಗೂ ಜಲ್ನಾದಲ್ಲಿ 121.4 ಎಂಎಂ ಮಳೆ ಸುರಿದಿದೆ ಎಂದು ಅದು ತಿಳಿಸಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಬೀಡ್ ಹಾಗೂ ಅಹಿಲ್ಯಾನಗರ್ ತೀವ್ರ ಪೀಡಿತವಾಗಿವೆ. ಈ ಪ್ರದೇಶಗಳಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ನಡೆಸಲಾಗಿದೆ. 120ಕ್ಕೂ ಅಧಿಕ ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆರವು ಹಾಗೂ ತುರ್ತು ಪರಿಹಾರ ಕಾರ್ಯಾಚರಣೆಗೆ ಸ್ಥಳೀಯಾಡಳಿತಕ್ಕೆ ನೆರವು ನೀಡಲು ಎನ್ಡಿಆರ್ಎಫ್ ರಾಜ್ಯಾದ್ಯಂತ 12 ತಂಡಗಳನ್ನು ನಿಯೋಜಿಸಿದೆ. ರಾಜ್ಯ ಸಂಸ್ಥೆಗಳು ಹಾಗೂ ಜಿಲ್ಲಾಡಳಿತಗಳು ಅಗ್ನಿ ಶಾಮಕ ದಳಗಳು, ಪೊಲೀಸ್ ಘಟಕಗಳು ಹಾಗೂ ಸ್ಥಳೀಯ ಸ್ವಯಂಸೇವಕರನ್ನು ಕಳುಹಿಸಿ ಕೊಟ್ಟಿದೆ. ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿ ಘಟನೆಗಳಲ್ಲಿ ಬೀಡ್ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಗಪುರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.
ಹೊಸದಿಲ್ಲಿ, ಸೆ. 17: ಅಂಬಾನಿ ಕುಟುಂಬದ ಒಡೆತನದ ಪ್ರಾಣಿ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವನತಾರ ವಿರುದ್ಧದ ಪ್ರಕರಣದಲ್ಲಿ ಎಸ್ಐಟಿ ಕ್ಲೀನ್ ಚಿಟ್ ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಇದಾದ ಒಂದು ದಿನದ ಬಳಿಕ ಮಂಗಳವಾರ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಎಲ್ಲಾ ಪ್ರಕರಣಗಳನ್ನು ಇಷ್ಟೇ ಶೀಘ್ರವಾಗಿ ಹಾಗೂ ಸ್ಪಷ್ಟವಾಗಿ ಇತ್ಯರ್ಥಪಡಿಸಲಾಗುವುದೇ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಪರಿಸರ ಖಾತೆ ಸಚಿವರೂ ಆಗಿರುವ ಜೈರಾಮ್ ರಮೇಶ್, ಭಾರತದ ನ್ಯಾಯಾಂಗ ವ್ಯವಸ್ಥೆ ಅತ್ಯಂತ ವಿಳಂಬ ಎಂದು ಹೇಳಲಾಗುತ್ತಿದೆ. ಆದರೆ, ಈ ಒಂದು ಪ್ರಕರಣವನ್ನು ಅತ್ಯಧಿಕ ತ್ವರಿತವಾಗಿ ಇತ್ಯರ್ಥಪಡಿಸಿದೆ ಎಂದಿದ್ದಾರೆ. ರಿಲಾಯನ್ಸ್ ಪ್ರತಿಷ್ಠಾನ ಜಾಮ್ ನಗರದಲ್ಲಿ ಸ್ಥಾಪಿಸಿದ ವನ್ಯಜೀವಿ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವನತಾರದ ವ್ಯವಹಾರಗಳ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ 2025 ಆಗಸ್ಟ್ 25ರಂದು ಆದೇಶಿಸಿತ್ತು ಎಂದಿದ್ದಾರೆ. ನಾಲ್ವರು ಸದಸ್ಯರನ್ನು ಒಳಗೊಂಡ ಎಸ್ಐಟಿಗೆ ತನ್ನ ವರದಿಯನ್ನು 2025 ಸೆಪ್ಟಂಬರ್ 12ರಂದು ಸಲ್ಲಿಸಲು ಅದು ನಿರ್ದೇಶಿಸಿತ್ತು ಎಂದು ಅವರು ಹೇಳಿದ್ದಾರೆ. ಎಸ್ಐಟಿ ತನ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ 2025 ಸೆಪ್ಟಂಬರ್ 15ರಂದು ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ಎಸ್ಐಟಿಯ ಶಿಫಾರಸನ್ನು ಅಂಗೀಕರಿಸಿತು. ಅಲ್ಲದೆ, 2025 ಆಗಸ್ಟ್ 7ರಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯ ವಿಚಾರಣೆಯನ್ನು ಮುಕ್ತಾಯಗೊಳಿಸಿತು ಎಂದು ಅವರು ಗಮನ ಸೆಳೆದಿದ್ದಾರೆ. ‘‘ಖಂಡಿತ, ಈ ನಿಗೂಢ ಮುಚ್ಚಿದ ಲಕೋಟೆಯ ವ್ಯವಹಾರವಿಲ್ಲದೆ, ಎಲ್ಲಾ ಪ್ರಕರಣಗಳನ್ನು ಇಷ್ಟೇ ಶೀಘ್ರವಾಗಿ ಹಾಗೂ ಇಷ್ಟೇ ಸ್ಪಷ್ಟವಾಗಿ ಇತ್ಯರ್ಥವಾದರೆ, ಇನ್ನೇನು ಬೇಕು’’ ಎಂದು ಜೈ ರಾಮ್ ರಮೇಶ್ ಹೇಳಿದ್ದಾರೆ.
ಕೇರಳ | ಪದ್ಮಶ್ರೀ ಪುರಸ್ಕೃತ ಚೆರುವಯಲ್ ರಾಮನ್ ಮನೆಗೆ ಪ್ರಿಯಾಂಕಾ ಗಾಂಧಿ ಭೇಟಿ
ವಯನಾಡ್, ಸೆ. 17: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ ಕೇರಳದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಯಲ್ ರಾಮನ್ ಅವರ ನಿವಾಸದಲ್ಲಿ ಸುಮಾರು ಎರಡೂವರೆ ಗಂಟೆಗಳನ್ನು ಕಳೆದಿದ್ದಾರೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಮನ್ ಅವರು ಭತ್ತ ಬೆಳೆಯುವ ರೈತ. ರಾಮನ್ ಅವರಿಗೆ ಭತ್ತದ ಕುರಿತು ಇರುವ ಜ್ಞಾನದಿಂದ ಅವರನ್ನು ‘ಬೀಜಗಳ ರಕ್ಷಕ’ ಎಂದು ಕರೆಯಲಾಗುತ್ತದೆ. ಇವರು 60 ಬಗೆಯ ಭತ್ತದ ಬೀಜಗಳನ್ನು ಸಂರಕ್ಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ರಾಮನ್ ಅವರ ಭತ್ತದ ಗದ್ದೆಗಳಲ್ಲಿ ಒಡಾಡಿದ್ದಾರೆ. ಅವರ ಅನನ್ಯ ಕೃಷಿ ವಿಧಾನದ ಕುರಿತು ತಿಳಿದುಕೊಂಡಿದ್ದಾರೆ. ವಿವಿಧ ತಳಿಯ ಭತ್ತದ ಬೀಜಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ರಾಮನ್ ಅವರು ಪ್ರಿಯಾಂಕಾ ಗಾಂಧಿ ಅವರಿಗೆ ಸಾಂಪ್ರದಾಯಿಕ ಜಾನಪದ ಹಾಡುಗಳನ್ನು ಕೇಳಿಸಿದರು. ಅನಂತರ ತಾನೇ ಒಂದು ಹಾಡು ಹಾಡಿದರು. ಪ್ರಿಯಾಂಕಾ ಅವರು ರಾಮನ್ ಮಾರ್ಗದರ್ಶನಲ್ಲಿ ಬುಡಕಟ್ಟಿನ ಸಾಂಪ್ರದಾಯಿಕ ಬಿಲ್ಲು ಬಾಣವನ್ನು ಪ್ರಯೋಗಿಸಲು ಪ್ರಯತ್ನಿಸಿದರು. ಬಳಿಕ ಹಿಂದಿರುಗಿದರು. ಜೈವಿಕ ಹಾಗೂ ಸುಸ್ಥಿರ ಕೃಷಿ ವಿಧಾನಗಳ ಮೂಲಕ ವಿವಿಧ ಭತ್ತದ ತಳಿಗಳನ್ನು ಸಂರಕ್ಷಿಸುತ್ತಿರುವುದು ಹಾಗೂ ಬೆಳೆಸುತ್ತಿರುವುದಕ್ಕಾಗಿ ರಾಮನ್ ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
‘ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3’| 1.33 ಲಕ್ಷ ಎಕರೆ ಭೂಮಿ ಸ್ವಾಧೀನ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಈ ಯೋಜನೆಗೆ 1,33,867 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ಈ ಪೈಕಿ 75,563 ಎಕರೆ ಮುಳುಗಡೆ ಯಾಗಲಿದ್ದು, ಕಾಲುವೆಗಾಗಿ 51,837 ಎಕರೆ, ಪುನಶ್ಚೇತನ ಕಾರ್ಯಕ್ಕೆ 6,467 ಎಕರೆ ಜಮೀನು ಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಗಳವಾರ ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ಯೋಜನೆಗೆ ಅಗತ್ಯವಿರುವ ಭೂಮಿಯನ್ನು 2013ರ ಭೂಸ್ವಾಧೀನ ಕಾಯ್ದೆ ಅನ್ವಯ ಸ್ವಾಧೀನಪಡಿಸಿಕೊಳ್ಳಲಾಗುವುದು. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಅನೇಕ ಪ್ರಕರಣಗಳು ವಿಚಾರಣೆ ನಡೆಯುತ್ತಿದೆ. ಸುಮಾರು 20 ಸಾವಿರ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಿವೆ ಎಂದು ಅವರು ಹೇಳಿದರು. ಈ ಕಾಯ್ದೆಯಲ್ಲಿ ನೀಡಲಾಗಿರುವ ಅವಕಾಶದ ಪ್ರಕಾರ ಈ ಪ್ರಕರಣಗಳನ್ನು ರಾಜಿ ಸಂಧಾನ ಕಾನೂನು ಪ್ರಕಾರ ಇತ್ಯರ್ಥ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣವಿಲ್ಲದ ಜಮೀನುಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲಾಗುವುದು ಎಂದು ಶಿವಕುಮಾರ್ ಮಾಹಿತಿ ನೀಡಿದರು. ಪುನಶ್ಚೇತನ ಕಾರ್ಯಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಕರಣಗಳಿರುವ ಕಾರಣ, ನಾವು ಈ ವಿಚಾರದಲ್ಲಿ ಹೊಸ ನೀತಿ ರೂಪಿಸಲು ತೀರ್ಮಾನಿಸಿದ್ದೇವೆ. ಈ ವಿಚಾರವಾಗಿ ಸ್ಥಳೀಯ ನಾಯಕರು, ರೈತರ ಅಭಿಪ್ರಾಯ ಪಡೆಯಲಾಗುವುದು. ನ್ಯಾಯಯುತ ಪರಿಹಾರ, ಭೂಸ್ವಾಧೀನ ಪಾರದರ್ಶಕತೆ ಹಕ್ಕು ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ಅವಕಾಶವಿದೆ ಎಂದು ಅವರು ನುಡಿದರು. ಹೀಗಾಗಿ ರಾಜ್ಯ ಸರಕಾರ ಮೊದಲ ಬಾರಿಗೆ ಈ ಪ್ರಾಧಿಕಾರವನ್ನು ರಚಿಸಲಿದೆ. ಮುಖ್ಯ ನ್ಯಾಯಮೂರ್ತಿಗಳು ನೇಮಕ ಮಾಡುವ ನ್ಯಾಯಾಧೀಶರ ನೇತೃತ್ವದಲ್ಲಿ ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. ರೈತರ ಬದುಕಿಗೆ ಹೊಸ ರೂಪ ನೀಡಿ, ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ನಮ್ಮ ಸರಕಾರದ ಸಂಕಲ್ಪ. ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಇತಿಹಾಸದಲ್ಲೇ ಮಹತ್ತರ ತೀರ್ಮಾನ ಕೈಗೊಂಡಿದೆ ಎಂದು ಅವರು ಹೇಳಿದರು. 2020ರ ಡಿ.30ರಂದು ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣದಲ್ಲಿ ಕರ್ನಾಟಕ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆಯಾಗಿದ್ದು, ಇದರ ಅಂತಿಮ ವರದಿ 2013ರ ನ.29ರಂದು ನೀಡಲಾಗಿತ್ತು. ಆದರೂ ಇವತ್ತಿನವರೆಗೂ ಕೇಂದ್ರ ಸರಕಾರ ಈ ವಿಚಾರವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ ಎಂದು ಶಿವಕುಮಾರ್ ತಿಳಿಸಿದರು. ರಾಜಕೀಯ ಒತ್ತಡಗಳಿಂದ 2 ಬಾರಿ ಸಭೆ ಮುಂದೂಡಿಕೆ: ಕರ್ನಾಟಕ ತನ್ನ ಪಾಲಿನ ನೀರನ್ನು ಪಡೆಯಲು ನಾನು ಹಾಗೂ ಮುಖ್ಯಮಂತ್ರಿ ಹಲವು ಬಾರಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಈ ವಿಚಾರವಾಗಿ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಅಧಿಸೂಚನೆ ಹೊರಡಿಸಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅವರು ಹೇಳಿದರು. ಕೇಂದ್ರ ಸಚಿವರು ಈ ವಿಚಾರವಾಗಿ ಎರಡು ಬಾರಿ ಸಭೆ ನಿಗದಿ ಮಾಡಿದ್ದರು. ರಾಜಕೀಯ ಒತ್ತಡಗಳಿಂದಾಗಿ ಈ ಸಭೆ ಮುಂದೂಡಲಾಗಿತ್ತು. ಒಂದು ಬಾರಿ ಮಹಾರಾಷ್ಟ್ರ ಹಾಗೂ ಮತ್ತೊಂದು ಬಾರಿ ಆಂಧ್ರ ಪ್ರದೇಶದ ಒತ್ತಡದಿಂದ ಸಭೆ ಮುಂದೂಡಲಾಗಿದೆ. ಈ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಮತ್ತೊಂದು ದಿನಾಂಕ ನಿಗದಿ ಮಾಡಿ ಸಭೆ ಮಾಡೋಣ ಎಂದು ಕೇಂದ್ರ ಸಚಿವರು ಪತ್ರ ಬರೆದಿದ್ದಾರೆ. ಹೀಗಾಗಿ ನಾವು ಯೋಜನೆ ಜಾರಿಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು. ಮಹಾರಾಷ್ಟ್ರ ವಿರುದ್ಧ ಪ್ರತ್ಯೇಕ ಹೋರಾಟ: ಮಹಾರಾಷ್ಟ್ರ ಮುಖ್ಯಮಂತ್ರಿ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳವನ್ನು ವಿರೋಧಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ಅದರ ಬಗ್ಗೆ ಸಧ್ಯಕ್ಕೆ ಚರ್ಚೆ ಮಾಡುವುದಿಲ್ಲ. ಈಗ ಬಂದಿರುವ ತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರನ್ನು ಪಡೆಯುವುದು ನಮ್ಮ ಹಕ್ಕು. ನಮ್ಮ ರಾಜ್ಯದ ರೈತರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ ನ್ಯಾಯಾಧೀಕರಣದ ತೀರ್ಪು ಹೊರಬಂದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗೆ ಬೇರೆ ಆಯ್ಕೆ ಇಲ್ಲ. ಈ ಹಿಂದೆ ಮಹಾರಾಷ್ಟ್ರ ಈ ಯೋಜನೆಗೆ ಒಪ್ಪಿಗೆ ನೀಡಿತ್ತು. ತೆಲಂಗಾಣ ಹಾಗೂ ಆಂಧ್ರಪ್ರದೇಶ ಈ ವಿಚಾರದಲ್ಲಿ ಒಪ್ಪಿಗೆ ನೀಡುವ ವಿಶ್ವಾಸವಿದೆ. ಈ ಯೋಜನೆಯಿಂದ ಎಲ್ಲ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸುವುದೊಂದೇ ಬಾಕಿ ಇದೆ ಎಂದು ಶಿವಕುಮಾರ್ ತಿಳಿಸಿದರು.
ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ನಾಲ್ವರ ವಿರುದ್ಧ ಪ್ರಕರಣ
ಹಿರಿಯಡ್ಕ, ಸೆ.16: ಪೆರ್ಡೂರು ಗ್ರಾಮದ ಪಕ್ಕಾಲು ಎಂಬಲ್ಲಿ ಸೆ.15ರಂದು ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ನಾಲ್ವರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರ್ಡೂರು ಕೆನಟ್ಟಿಬೈಲುವಿನ ಕುಶಾಲ್ ನಾಯ್ಕ್(54), ಕಟಪಾಡಿಯ ಮಹಾನ್ ರಾವ್(31), ಪೆರ್ಡೂರು ಪಕ್ಕಾಲಿನ ಯುವರಾಜ್(35), ಪೆರ್ಡೂರು ರಥಬೀದಿಯ ಅಭಿಲಾಷ್(35) ಎಂಬವರು ಸಾರ್ವಜನಿಕ ಸ್ಥಳದಲ್ಲಿ ಕೈ ಕೈ ಮಿಲಾಯಿಸಿ ಅವಾಚ್ಯ ಶಬ್ಧಗಳಿಂದ ಬೈದು ಗಲಾಟೆ ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿರುವುದಾಗಿ ದೂರಲಾಗಿದೆ.
ಬೆಂಗಳೂರು | ಪ್ರತಿಷ್ಠಿತ ವಾಚ್ ಕಂಪೆನಿಯಲ್ಲಿ ಕಳುವಾಗಿದ್ದ 70 ಕೈಗಡಿಯಾರಗಳ ಜಪ್ತಿ; ಮಾಜಿ ಉದ್ಯೋಗಿ ಸೆರೆ
ಬೆಂಗಳೂರು: ಪ್ರತಿಷ್ಠಿತ ವಾಚ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡು ಪ್ರತಿನಿತ್ಯ ಕೈಗಡಿಯಾರಗಳನ್ನು ಕಳವು ಮಾಡುತ್ತಿದ್ದ ಪ್ರಕರಣದಡಿ ಕಂಪೆನಿಯ ಮಾಜಿ ಉದ್ಯೋಗಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿ 10ಲಕ್ಷ ರೂ.ಮೌಲ್ಯದ 70 ಕೈ ಗಡಿಯಾರಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶೇಷಾದ್ರಿ ರೆಡ್ಡಿ(27) ಬಂಧಿತ ಆರೋಪಿ. ಈತ ನಗರದ ಹೊಂಗಸಂದ್ರದಲ್ಲಿ ವಾಸಿಸುತ್ತಿದ್ದ. ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ವಾಚ್ ಕಂಪೆನಿಯಿದ್ದು, ಈ ಕಂಪೆನಿಯಲ್ಲೇ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುವ ಸಮಯದಲ್ಲಿ ಇತರೆ ಉದ್ಯೋಗಿಗಳಿಗೆ ಗೊತ್ತಾಗದಂತೆ ಒಂದೊಂದು ಕೈ ಗಡಿಯಾರಗಳನ್ನು ಆಗಿಂದಾಗ್ಗೆ ಕಳವು ಮಾಡಿಕೊಂಡು ಹೋಗುತ್ತಿದ್ದ. ನಂತರ ದಿನಗಳಲ್ಲಿ ತಾನು ಸಿಕ್ಕಿಹಾಕಿಕೊಳ್ಳುವ ಭಯದಿಂದ ಕಂಪೆನಿಯಲ್ಲಿ ಕೆಲಸ ತೊರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಂಪೆನಿಯಲ್ಲಿ ಕೈ ಗಡಿಯಾರಗಳು ನಾಪತ್ತೆಯಾಗಿರುವ ಬಗ್ಗೆ ಡೆಪ್ಯೂಟಿ ಮ್ಯಾನೇಜರ್ ಗಮನಕ್ಕೆ ಬಂದ ತಕ್ಷಣ, ಅವರು ಡೆಲಿವರಿ ಬಾಯ್ ಮೇಲೆ ಅನುಮಾನಗೊಂಡು ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ವಾಚ್ಗಳನ್ನು ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಬಳಿ ಇದ್ದ ಬ್ಯಾಗ್ ಪರಿಶೀಲಿಸಿ ಅದರಲ್ಲಿದ್ದ 10 ಲಕ್ಷ ರೂ. ಮೌಲ್ಯದ 70 ಕೈ ಗಡಿಯಾರಗಳನ್ನು ಇನ್ಸ್ಪೆಕ್ಟರ್ ಸತೀಶ್ ನೇತೃತ್ವದ ತಂಡವು ವಶಪಡಿಸಿಕೊಂಡಿದ್ದು, ಈ ಪ್ರಕರಣದಲ್ಲಿ ಇನ್ನೂ ಹಲವು ಕೈ ಗಡಿಯಾರಗಳನ್ನು ವಶಕ್ಕೆ ಪಡೆಯಲು ಪೊಲೀಸರು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.
ಕೈಬರಹದಲ್ಲಿ ಕುರ್ಆನ್ ಬರೆದ ಸಾಧಕಿಯರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಸನ್ಮಾನ
ಮಂಗಳೂರು, ಸೆ.19: ಕೈಯಲ್ಲೇ ಸಂಪೂರ್ಣ ಕುರ್ಆನ್ನ್ನು ಬರೆದು ಸಾಧನೆಗೈದ ಕುಂಬ್ರ ಮರ್ಕಝುಲ್ ಹುದಾ ವುಮನ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಜ್ಲಾ ಹಾಗೂ ಮಿತ್ತ್ ಬೈಲ್ ಕಾಲೇಜು ವಿದ್ಯಾರ್ಥಿನಿ ಫಾತಿಮತ್ ಅಬೀರಾ ಅವರನ್ನು ದ.ಕ. ಮತ್ತು ಉಡುಪಿ ಜಿಲ್ಲಾಧಿಕಾರಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲ್ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ರ ಸೊಸೆ ಗುಲ್ಸನ್ ಫರ್ವಿನ್ ಅವರು ಸಾಧಕಿಯರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ವಹಿಸಿದ್ದರು. ಈ ಸಭೆಯಲ್ಲಿ ಉಪಾಧ್ಯಕ್ಷರುಗಳಾದ ಹಾಜಿ ಸಿ ಮಹಮೂದ್, ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಾಜಿ ಮೂಸ ಮೊಯ್ದೀನ್, ಕಾರ್ಯದರ್ಶಿಗಳಾದ ಹಾಜಿ ಅಹ್ಮದ್ ಬಾವ ಪಡೀಲ್, ಡಿ.ಎಂ. ಅಸ್ಲಾಂ, ಡಾ. ಮುಹಮ್ಮದ್ ಆರಿಫ್ ಮಸೂದ್, ಸಿ.ಎಂ. ಹನೀಫ್, ಎಂ.ಎ. ಅಶ್ರಫ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹಾಜಿ ಬಿ ಅಬೂಬಕರ್, ಹಾಜಿ ರಿಯಾಝುದ್ದೀನ್, ಎನ್.ಕೆ. ಅಬೂಬಕರ್, ಯು.ಬಿ. ಸಲೀಂ, ಅಬ್ದುಲ್ ಖಾದರ್ ವಿಟ್ಲ, ಶಂಸುದ್ದೀನ್ ಎಚ್.ಬಿ.ಟಿ, ಅಬ್ಬಾಸ್ ಉಚ್ಚಿಲ್, ಶಂಸುದ್ದೀನ್ ಬಂದರ್, ಅಬೀದ್ ಜಲಿಹಾಲ್, ಹಾಜಿ ಎಸ್.ಎ. ಖಲೀಲ್ ಅಹ್ಮದ್, ನಾಸೀರ್ ಯಾದ್ಗಾರ್, ರಫೀಕ್ ಕೊಡಾಜೆ, ಶಾಕೀರ್ ಫರಂಗಿಪೇಟೆ,ಮುಹಮ್ಮದ್ ಸಲೀಂ ಮನ್ನತ್, ಅಬ್ದುಲ್ ರಹಿಮಾನ್ ಅಝಾದ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಬಸವ ಸಂಸ್ಕೃತಿ ಅಭಿಯಾನ ಸೆ.18ಕ್ಕೆ ಉಡುಪಿಗೆ ಆಗಮನ
► ವಿದ್ಯಾರ್ಥಿ-ಸಾರ್ವಜನಿಕರೊಂದಿಗೆ ವಚನ ಸಂವಾದ, ಸಮಾವೇಶ► ಸಾಣೇಹಳ್ಳಿ ಸ್ವಾಮಿಗಳು ಸೇರಿ ಹಲವು ಮಠಾಧೀಶರ ಉಪಸ್ಥಿತಿ
ನಾಳೆ (ಸೆ.17) ರಾಜ್ಯಾದ್ಯಂತ ಹೊಸದಾಗಿ 500 ನಂದಿನಿ ಮಾರಾಟ ಮಳಿಗೆಗಳ ಉದ್ಘಾಟನೆ
ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ 500 ನಂದಿನಿ ಮಾರಾಟ ಮಳಿಗೆ, ಪಾರ್ಲರ್ಗಳನ್ನು ಸ್ಥಾಪನೆ ಮಾಡಲಾಗಿದ್ದು, ಇಂದು(ಸೆ.17) ಕಲಬುರಗಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಳಿಗೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕರ್ನಾಟಕ ಹಾಲು ಮಹಾ ಮಂಡಳಿಯ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 2,598 ನಂದಿನಿ ಮಳಿಗೆ, ಪಾರ್ಲರ್ಗಳು ಈಗಾಗಲೇ ಕಾರ್ಯಾಚರಿಸುತ್ತಿದೆ. ಈ ಎಲ್ಲ ಮಳಿಗೆಗಳ ಮುಖಾಂತರ ಗ್ರಾಹಕರಿಗೆ ಕೈಗೆಟುಕುವ ಬೆಲೆಗಳಲ್ಲಿ ಸಕಾಲದಲ್ಲಿ ದೊರೆಯುವಂತೆ ಮಾಡಲಾಗಿದೆ. ಇದಕ್ಕೆ ಹೊಸದಾಗಿ 500 ಸಂಖ್ಯೆ ನಂದಿನಿ ಪಾರ್ಲರ್ ಗಳು ಸೇರ್ಪಡೆಯಾಗಲಿದೆ ಎಂದು ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ, ಕಲಬುರಗಿ, ಬೀದರ್ ಮತ್ತು ಯಾದಗಿರಿ ಪ್ರದೇಶಗಳಲ್ಲಿ ಒಟ್ಟು 68 ಹೊಸ ನಂದಿನಿ ಪಾರ್ಲರ್ ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಕೆಎಂಎಫ್ ಐದು ದಶಕಗಳಿಂದ ನಂದಿನಿ ಬ್ರ್ಯಾಂಡ್ನಲ್ಲಿ ಪರಿಶುದ್ಧ ಹಾಗೂ ರುಚಿಕರ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ದೇಶದಾದ್ಯಂತ ಮಾರಾಟ ಮಾಡುತ್ತಿದೆ. 2024-25ನೆ ಸಾಲಿನಲ್ಲಿ ಕೆಎಂಎಫ್ನ ವಹಿವಾಟು 24,928 ಕೋಟಿ ರೂ.ಗೆ ತಲುಪಿದ್ದು, ಶೇ.16.5ರಷ್ಟು ವಾರ್ಷಿಕ ಪ್ರಗತಿಯನ್ನು ಸಾಧಿಸಿದೆ. 2025-26ನೆ ಸಾಲಿಗೆ ರೂ. 28,444 ಕೋಟಿ ತಲುಪುವ ಗುರಿಯನ್ನು ಸಂಸ್ಥೆಯು ಹೊಂದಿದೆ ಎಂದು ಬಿ. ಶಿವಸ್ವಾಮಿ ತಿಳಿಸಿದರು.
ಕಾನ್ಪುರ | ನಾಮಫಲಕ ವಿವಾದ : ಉದ್ವಿಗ್ನತೆ ಬಳಿಕ 24 ಮಂದಿ ವಿರುದ್ಧ ಎಫ್ಐಆರ್
ಕಾನ್ಪುರ : ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಾರ್ಷಿಕ ʼಬರಾವಫತ್ʼ(ಮೀಲಾದ್) ಮೆರವಣಿಗೆಗೆ ಅಲಂಕಾರದ ಭಾಗವಾಗಿ ಕಾನ್ಪುರ ಪ್ರದೇಶದಲ್ಲಿ ಅಳವಡಿಸಿದ ಐ ಲವ್ ಮುಹಮ್ಮದ್ ಎಂದು ಬರೆದಿರುವ ನಾಮಫಲಕ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ. ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಕೆಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೊಹಲ್ಲಾ ಸಯ್ಯದ್ ನಗರದ ಜಾಫರ್ ವಾಲಿ ಗಾಲಿಯ ಮುಂದೆ ಬಾರಾವಫತ್ ಮೆರವಣಿಗೆಯ ಭಾಗವಾಗಿ ನಾಮಫಲಕ ಹಾಕಲಾಗಿದೆ. ಇದು ಹೊಸ ಸಂಪ್ರದಾಯವನ್ನು ಪರಿಚಯಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಬ್ಇನ್ಸ್ಪೆಕ್ಟರ್ ಪಂಕಜ್ ಶರ್ಮಾ ಅವರು ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 4ರಂದು ಸ್ಥಳೀಯ ಹಿಂದೂ ಸಮುದಾಯದ ಸದಸ್ಯರು ನಾಮಫಲಕಕ್ಕೆ ವಿರೋಧಿಸಿದ್ದಾರೆ. ಮುಸ್ಲಿಂ ಸಮುದಾಯದವರು ನಾಮಫಲಕವನ್ನು ತೆರವುಗೊಳಿಸದಂತೆ ಒತ್ತಾಯಿಸಿದ್ದಾರೆ. ಇದು ಚರ್ಚೆ ಮತ್ತು ಉದ್ವಿಗ್ನತೆಗೆ ಕಾರಣವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆ ಬಳಿಕವೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಫಲಕವನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು ಮತ್ತು ವಿರೋಧಿ ಗುಂಪುಗಳನ್ನು ಚದುರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 5ರಂದು ರಾವತ್ಪುರ ಗ್ರಾಮದಲ್ಲಿ “ಬಾರಾವಾಫತ್” ಮೆರವಣಿಗೆಯ ಸಮಯದಲ್ಲಿ, ಮುಸ್ಲಿಂ ಯುವಕರು ಹಿಂದೂ ಸಮುದಾಯಕ್ಕೆ ಸೇರಿದ ಪೋಸ್ಟರ್ಗಳನ್ನು ಹರಿದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಐದು ದಿನಗಳ ನಂತರ, ಸೆಪ್ಟೆಂಬರ್ 10 ರಂದು, ಎರಡೂ ಘಟನೆಗಳ ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೀಡಿಯೊ ರೆಕಾರ್ಡಿಂಗ್ಗಳನ್ನು ಪರಿಶೀಲಿಸಿ ರಾವತ್ಪುರ ಪೊಲೀಸ್ ಠಾಣೆಯಲ್ಲಿ 24 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಧರ್ಮಸ್ಥಳ ಪ್ರಕರಣದಲ್ಲಿ 'ಮಾಸ್ಕ್ ಮ್ಯಾನ್' ಚಿನ್ನಯ್ಯನಿಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಿ ಸಂಚಲನ ಮೂಡಿಸಿದ್ದ 'ಮಾಸ್ಕ್ ಮ್ಯಾನ್' ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ನ್ಯಾಯಾಲಯವು ವಜಾಗೊಳಿಸಿದೆ. ವಿಶೇಷ ತನಿಖಾ ತಂಡವು (ಎಸ್ಐಟಿ) ನಡೆಸಿದ ಉತ್ಖನನದಲ್ಲಿ ಬಹುತೇಕ ಸ್ಥಳಗಳಲ್ಲಿ ಮಾನವ ಕಳೇಬರಗಳು ಪತ್ತೆಯಾಗಿರಲಿಲ್ಲ. ಬಳಿಕ ಚಿನ್ನಯನನ್ನೇ ಎಸ್ಐಟಿ ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿತ್ತು. ಸದ್ಯ ಸಾಕ್ಷಿ-ದೂರುದಾರ ನ್ಯಾಯಾಂಗ ಬಂಧನದಲ್ಲಿದ್ದು, ಇದೇ ಮುಂದುವರಿಯಲಿದೆ.
ಬೀದರ್ | 8 ಕೆಜಿ 120 ಗ್ರಾಂ ಗಾಂಜಾ ಗಿಡಗಳು ಜಪ್ತಿ : ಆರೋಪಿಯ ಬಂಧನ
ಬೀದರ್, ಸೆ.16: ಔರಾದ್ ತಾಲೂಕಿನ ಕರಂಜಿ (ಬಿ) ಗ್ರಾಮದ ಹೊಲವೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಡ್ರೋಣ್ ಕ್ಯಾಮೆರಾ ಸಹಾಯದಿಂದ ಪತ್ತೆ ಹಚ್ಚಿ, 8 ಕೆಜಿ 120 ಗ್ರಾಂ ತೂಕದ ಗಾಂಜಾ (8.12 ಲಕ್ಷ ರೂ. ಮೌಲ್ಯ) ವಶಪಡಿಸಿಕೊಂಡಿದ್ದು, ಒರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಸೆ.16ರ ಬೆಳಿಗ್ಗೆ ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ 8,12,000 ರೂ. ಮೌಲ್ಯದ 46 ಗಾಂಜಾ ಗಿಡಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆಯಲ್ಲಿ ಪಿಎಸ್ಐ ಆಂಬ್ರಿಶ್ ವಾಘಮೋರೆ, ಡಿಸಿಆರ್ಬಿ ಘಟಕ ಹಾಗೂ ಚಿಂತಾಕಿ ಠಾಣೆಯ ಪಿಎಸ್ಐ ಚಂದ್ರಶೇಖರ್ ನಿರ್ಣೆ ಅವರ ತಂಡ ಪಾಲ್ಗೊಂಡಿತ್ತು. ಘಟನೆಯ ಕುರಿತು ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.