ಕಲ್ಲಡ್ಕ ಅನುಗ್ರಹ ಮಹಿಳಾ ಪದವಿ ಕಾಲೇಜು ವಿದ್ಯಾರ್ಥಿನಿಯರಿಂದ ನ್ಯಾಯಾಲಯ ಭೇಟಿ
ಬಿ.ಸಿ.ರೋಡ್: ನ್ಯಾಯಾಂಗ ವ್ಯವಸ್ಥೆಯ ಕುರಿತು ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ರಕ್ಷಣಾ ಕ್ಲಬ್ ವತಿಯಿಂದ ದ್ವಿತೀಯ ಬಿ.ಎ.ಮತ್ತು ತೃತೀಯ ಬಿ.ಎ. ವಿದ್ಯಾರ್ಥಿನಿಯರಿಗೆ ಬಿ.ಸಿ.ರೋಡ್ ನಲ್ಲಿರುವ ಬಂಟ್ವಾಳದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯಕ್ಕೆ ಭೇಟಿ ಆಯೋಜಿಸಲಾಗಿತ್ತು. ನ್ಯಾಯಾಲಯಕ್ಕೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿನಿಯರು ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಗಳ ಕಾರ್ಯವಿಧಾನ, ವಿಚಾರ ನಡೆಯುವ ರೀತಿ ಹಾಗೂ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸುಮಾರು 20 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ವಕೀಲರಾದ ಶಿವಯ್ಯರಲ್ಲಿ ವಿದ್ಯಾರ್ಥಿನಿಯರು ಸಂವಾದ ನಡೆಸಿದರು. ವಕೀಲರಾದ ಉಮರ್ ಫಾರೂಕ್ ಹಾಗೂ ದಿಲ್ ನಾಝ್ ರಲ್ಲಿ ವಕೀಲ ವೃತ್ತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ವಕೀಲ ತುಳಸಿದಾಸ್ ವಿಟ್ಲ ಅವರ ಮಾರ್ಗದರ್ಶನದಲ್ಲಿ ಈ ಭೇಟಿ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರೊಂದಿಗೆ ಮಾರ್ಗದರ್ಶಕರಾಗಿ ಕಾಲೇಜಿನ ಉಪನ್ಯಾಸಕಿಯರಾದ ತಾರಾಕ್ಷಿ, ಬಬಿತಾ ಭಾಗವಹಿಸಿದ್ದರು.
ರಾಜ್ಯಾದ್ಯಂತ ನಾಳೆಯಿಂದ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಸಹಜವಾಗಿಯೇ ಸ್ವಲ್ಪ ಮಟ್ಟಿನ ಆತಂಕ, ಕಾತರ ಮನೆಮಾಡಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಜೀವನದಲ್ಲಿ ಎಸ್ಎಸ್ಎಲ್ಸಿ ಒಂದು ಪ್ರಮುಖ ಘಟ್ಟ. ವರ್ಷಪೂರ್ತಿ ಓದಿದ ಶ್ರಮ ಒಂದೆಡೆಯಾದರೆ, ಪರೀಕ್ಷೆಯ ಹಿಂದಿನ ದಿನ ಹಾಗೂ ಪರೀಕ್ಷಾ ದಿನದಂದು ನಾವು ನಮ್ಮ ಮನಸ್ಸು ಮತ್ತು ದೇಹವನ್ನು ಹೇಗೆ ಇರಿಸಿಕೊಳ್ಳುತ್ತೇವೆ ಎಂಬುದು
ಮೂಡುಬಿದಿರೆ ಠಾಣೆ ಇನ್ ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ
ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಸೂಚನೆ
ಬಾಗ್ದಾದ್ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ನಿಂದ ಕ್ಷಿಪಣಿ ದಾಳಿ : ವರದಿ
ಟೆಹರಾನ್: ಇರಾಕ್ನ ರಾಜಧಾನಿ ಬಾಗ್ದಾದ್ ವಿಮಾನ ನಿಲ್ದಾಣದ ಬಳಿ ಇರುವ ಅಮೆರಿಕದ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿಯನ್ನು ನಡೆಸಿರುವ ಬಗ್ಗೆ ವರದಿಯಾಗಿದೆ. ದಾಳಿಯ ಬಳಿಕ ಈ ಪ್ರದೇಶದಲ್ಲಿ ಸೈರನ್ಗಳು ಮೊಳಗುತ್ತಿವೆ ಎಂದು ಭದ್ರತಾ ಮೂಲಗಳು ತಿಳಿಸಿವೆ ಎಂದು Reuters ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದಕ್ಕೂ ಮೊದಲು, ಬಾಗ್ದಾದ್ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಮತ್ತು ಡ್ರೋನ್ ಗಳ ಮೂಲಕ ದಾಳಿ ನಡೆಸಲಾಗಿತ್ತು.
\ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ\: ಆರ್ ಅಶೋಕ್
ಬೆಂಗಳೂರು: ಸಭಾಧ್ಯಕ್ಷ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಆರಂಭವಾದ ವಿಧಾನಸಭೆ ಅಧಿವೇಶನವು ತೀವ್ರ ಗದ್ದಲ ಹಾಗೂ ಗೊಂದಲಕ್ಕೆ ಸಾಕ್ಷಿಯಾಗಿದ್ದು, ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಂಬಂಧಪಟ್ಟ ಸಚಿವರಿಂದ ಸಮರ್ಪಕವಾದ ಉತ್ತರ ಸಿಗದ ಹಿನ್ನೆಲೆಯಲ್ಲಿ ಸದನದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಈ ಬೆಳವಣಿಗೆಯಿಂದಾಗಿ ಸಭಾಧ್ಯಕ್ಷರು ಸದನದಿಂದ ಹೊರನಡೆದು ಕಲಾಪವನ್ನು ಮುಂದೂಡಿದ್ದು, ಇದು
ಮಧ್ಯಪ್ರಾಚ್ಯದಲ್ಲಿ ಇರಾನ್ ಹಾಗೂ ಅಮೆರಿಕಾ ನಡುವಿನ ಯುದ್ದ ಉಲ್ಬಣಗೊಳ್ಳುತ್ತಿದ್ದು, ಹೊರ್ಮುಜ್ ಜಲಸಂಧಿಯಲ್ಲಿನ ನಿರ್ಬಂಧ ತೆರವಿಗೆ ಸಹಾಯ ಮಾಡಲು ನ್ಯಾಟೋ ರಾಷ್ಟ್ರಗಳಿಗೆ ಟ್ರಂಪ್ ಒತ್ತಾಯ ಮಾಡುತ್ತಿದ್ದಾರೆ. ಆದರೆ, ನ್ಯಾಟೋದ ಹಲವು ರಾಷ್ಟ್ರಗಳು ಟ್ರಂಪ್ ಒತ್ತಡಕ್ಕೆ ಮಣಿಯದೆ ನಾವು ಈ ಯುದ್ದದಲ್ಲಿ ಬೆಂಬಲಿಸುವುದಿಲ್ಲ ಎಂದು ನೇರಾನೇರವಾಗಿ ಹೇಳಿವೆ. ಆದರೆ, US ಸಹ ನ್ಯಾಟೋ ಭಾಗವಾಗಿದ್ದು, ಮಿತ್ರರಾಷ್ಟ್ರದ ಯುದ್ದದಲ್ಲಿ ನ್ಯಾಟೋ ಸಹಾಯಕ್ಕೆ ಬಾರದೆ ಇರಲು ಕಾರಣವೇನು? ಎಂಬುದರ ಕುರಿತ ಮಾಹಿತಿ ಇಲ್ಲಿದೆ..
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು
ಭಾರತೀಯ ಸಂಸ್ಕೃತಿ, ಬಾಲಿವುಡ್ ಹಾಡುಗಳು ಮತ್ತು ಇಲ್ಲಿನ ವಿಶಿಷ್ಟ ಕಲೆಗಳು ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ ಎನ್ನುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೋವೊಂದು ಅತ್ಯುತ್ತಮ ಮತ್ತು ತಾಜಾ ಉದಾಹರಣೆಯಾಗಿದೆ. ಬ್ರೆಜಿಲ್ ಮೂಲದ ಯುವತಿಯೊಬ್ಬಳು ತನ್ನ ಭಾರತೀಯ ಗೆಳೆಯನನ್ನು ಮಹಾರಾಷ್ಟ್ರದ ಪ್ರಸಿದ್ಧ ಕರಾವಳಿ ತಾಣವಾದ ಅಲಿಬಾಗ್ನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾಳೆ. ಈ ಅದ್ಧೂರಿ ಮದುವೆ ಸಮಾರಂಭದಲ್ಲಿ ವಧುವಿನ
Belthangady: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ
ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ. ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡುವುದಕ್ಕಾಗಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೋಮವಾರ ಮಧ್ಯರಾತ್ರಿಯೇ ತೆರಳಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯ ಮನೆಯ ಗೋಡೆಗೆ ನೋಟಿಸ್ ಅಂಟಿಸಿರುವುದಾಗಿ ತಿಳಿದು ಬಂದಿದೆ
ದಳಪತಿ ವಿಜಯ್ NDAಗೆ ಎಂಟ್ರಿ - ಡಿಸಿಎಂ ಹುದ್ದೆಯ ಆಫರ್ - ಪವನ್ ಕಲ್ಯಾಣ್ ಮಧ್ಯಸ್ಥಿಕೆಯ ಸುದ್ದಿ : ಟಿವಿಕೆ ಸ್ಪಷ್ಟನೆ
Vijay Joining NDA Alliance : ಕರೂರು ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದಳಪತಿ ವಿಜಯ್ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಇನ್ನೊಂದು ಕಡೆ, ತಮಿಳುನಾಡು ವಿಧಾನಸಭೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಈ ನಡುವೆ, ದಳಪತಿ ವಿಜಯ್ NDAಗೆ ಎಂಟ್ರಿ ಕೊಡಲಿದ್ದಾರೆ. ಪವನ್ ಕಲ್ಯಾಣ್ ಮಧ್ಯಸ್ಥಿಕೆಯನ್ನು ಮಾಡಿದ್ದಾರೆ ಎನ್ನುವ ಸುದ್ದಿ ಬಲವಾಗಿ ಹರಿದಾಡುತ್ತಿದೆ. ಇದಕ್ಕೆ ಟಿವಿಕೆ ಸ್ಪಷ್ಟನೆಯನ್ನು ನೀಡಿದೆ.
ಇತಿಹಾಸದಲ್ಲೇ ಮೊದಲು ಇಂತಹ ಘಟನೆ, ಸಭಾಧ್ಯಕ್ಷರಿಂದಲೇ ದಿಢೀರ್ ಸಭಾತ್ಯಾಗ | Karnataka Assembly Speaker
ಕರ್ನಾಟಕ ನಮ್ಮ ದೇಶದಲ್ಲೇ ಅತ್ಯಂತ ಶ್ರೀಮಂತ ರಾಜ್ಯಗಳ ಪೈಕಿ ಒಂದಾಗಿದ್ದು, ಲಕ್ಷಾಂತರ ಕೋಟಿ ರೂಪಾಯಿ ಆದಾಯ ಸೃಷ್ಟಿಸುವ ರಾಜ್ಯವಾಗಿದೆ. ಇದೇ ಕಾರಣಕ್ಕೆ ಕರ್ನಾಟಕದ ರಾಜಕೀಯ ಹಾಗೂ ವಿಧಾಸಭೆ ಕಲಾಪಗಳ ಬಗ್ಗೆ ಇಡೀ ದೇಶ ಗಮನ ಇಡುತ್ತದೆ. ಹೀಗಿದ್ದಾಗ ಕರ್ನಾಟಕ ವಿಧಾನಸಭೆ ದೊಡ್ಡ ಇತಿಹಾಸ ಹೊಂದಿದ್ದು, ಹೀಗಿದ್ದಾಗ ಕರ್ನಾಟಕದ ವಿಧಾನಸಭೆ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಘಟನೆ ಸಂಭವಿಸಿದೆ.
ಆರ್ಎಸ್ಎಸ್, ರಾ ಮೇಲೆ ನಿರ್ದಿಷ್ಟ ನಿರ್ಬಂಧ ವಿಧಿಸಿ : ಟ್ರಂಪ್ಗೆ ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಶಿಫಾರಸು
ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಗುಪ್ತಚರ ಸಂಸ್ಥೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ನಿರ್ಬಂಧ ವಿಧಿಸಬೇಕು ಎಂದು ಅಂತಾರಾಷ್ಟ್ರೀಯ ಧಾರ್ಮಿಕ ಹಕ್ಕುಗಳ ಕುರಿತ ಅಮೆರಿಕದ ಆಯೋಗ (ಯುಎಸ್ಸಿಐಆರ್ಎಫ್) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರಕಾರಕ್ಕೆ ಶಿಫಾರಸು ಮಾಡಿದೆ. ಇದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಯಾದಗಿರಿ : ಮತ್ತೆ ದಾಳಿಗಿಳಿದ ಚಿರತೆ, ಹೆಚ್ಚಿದ ಭೀತಿ
ಕಾಡಿನಲ್ಲಿ ಇರಬೇಕಾದ ವ್ಯನ್ಯಜೀವಿಗಳು ಗ್ರಾಮೀಣ ಭಾಗದ ಜನವಸತಿ ಪ್ರದೇಶಗಳಲ್ಲೂ ಅಲೆದಾಡುತ್ತಿರುವುರಿಂದ ಕೆಲ ತಿಂಗಳುಗಳಲ್ಲಿ ಯಾದಗಿರಿ ಸುತ್ತಮುತ್ತ ನಡೆದಿರುವ ಚಿರತೆಯ ದಾಳಿಯಲ್ಲಿ ಹೆಚ್ಚಾಗಿ ಆಕಳು, ಎತ್ತು, ಮೇಕೆಗಳನ್ನು ಬಲಿಯಾಗಿವೆ. ಚಿರತೆ ಮಾತ್ರ ಆಗಾಗ ದಾಳಿ ಮಾಡಿ ಜಾನುವಾರುಗಳನ್ನು ಬಲಿ ಪಡೆಯುತ್ತಲೇ ಇದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕಚ್ಚಾತೈಲ ದರ ಬ್ಯಾರಲ್ಗೆ 137 ಡಾಲರ್ : ಮಧ್ಯಪ್ರಾಚ್ಯ ಸಂಘರ್ಷದ ಬಳಿಕ ಶೇ.93ರಷ್ಟು ಏರಿಕೆ
ಹೊಸದಿಲ್ಲಿ : ಕೊಲ್ಲಿ ಸಂಘರ್ಷ ಆರಂಭದ ಬಳಿಕ ಭಾರತೀಯ ಶುದ್ಧೀಕರಣ ಘಟಕಗಳ ಕಚ್ಚಾತೈಲದ ವೆಚ್ಚ ಶೇಕಡ 93ರಷ್ಟು ಏರಿಕೆಯಾಗಿದ್ದು, ಶುಕ್ರವಾರ ಪ್ರತಿ ಬ್ಯಾರಲ್ ದರ 136.56ಕ್ಕೆ ತಲುಪಿದೆ. ಇದರಿಂದಾಗಿ ಇಂಡಿಯನ್ ಆಯಿಲ್, ಎಚ್ಪಿಸಿಲ್ ಮತ್ತು ಬಿಪಿಸಿಎಲ್ನಂಥ ಸರ್ಕಾರಿ ತೈಲ ಮಾರಾಟ ಕಂಪನಿಗಳಿಂದ ಹಿಡಿದು ರಿಲಯನ್ಸ್ ಇಂಡಸ್ಟ್ರೀಸ್ನಂಥ ಖಾಸಗಿ ಕಂಪನಿಗಳವರೆಗೆ ಲಾಭ ಅಳಿಸಿಹೋಗಿದೆ. ಅಮೆರಿಕ ಸೇರಿದಂತೆ ಹಲವು ದೇಶಗಳು ಕಚ್ಚಾ ತೈಲ ಬೆಲೆ ಏರಿಕೆಗೆ ಅನುಗುಣವಾಗಿ ಚಿಲ್ಲರೆ ಬೆಲೆಯನ್ನು ಏರಿಸಿವೆ. ಆದರೆ ಭಾರತದಲ್ಲಿ ತೈಲ ಕಂಪನಿಗಳು ಪಂಪ್ ಬೆಲೆಯನ್ನು ಇದುವರೆಗೆ ಹಾಗೆಯೇ ಉಳಿಸಿಕೊಂಡಿವೆ. ಇದು ಹಲವು ತಿಂಗಳುಗಳಿಂದ ಕಂಪನಿಗಳು ಗಳಿಸುತ್ತಿದ್ದ ಲಾಭಕ್ಕೆ ತೀವ್ರ ಹೊಡೆತ ನೀಡಿದೆ. ಬಜೆಟ್ ಗುರಿಗಳಿಗೆ ಅನುಗುಣವಾಗಿ ತೆರಿಗೆ ಹಾಗೂ ಹಣಕಾಸು ಸಮತೋಲನ ಕಾಪಾಡುವ ಸಲುವಾಗಿ ಮಾ.31ರವರೆಗೆ ಸರ್ಕಾರ ಬೆಲೆಯನ್ನು ಬದಲಿಸುವ ಸಾಧ್ಯತೆ ಇಲ್ಲ. ಯುದ್ಧಪೀಡಿತ ಪ್ರದೇಶಗಳ ಮೂಲಕ ಹಾದುಹೋಗುವ ಹಡಗುಗಳ ಚಲನೆ ಸಹಜ ಸ್ಥಿತಿಗೆ ಬರುವವರೆಗೆ ಕಚ್ಚಾ ತೈಲ ಬೆಲೆಯಲ್ಲಿ ಚಂಚಲತೆ ಮುಂದುವರಿಯಲಿದೆ. ನಾಲ್ಕು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏ.29ರಂದು ಕೊನೆಯ ಹಂತದ ಮತದಾನ ಮುಗಿಯುವವರೆಗೂ ಬೆಲೆ ಏರಿಕೆಗೆ ಹಸಿರು ನಿಶಾನೆ ಸಿಗುವುದು ಕಷ್ಟಸಾಧ್ಯ ಎಂದು ಹೇಳಲಾಗಿದೆ. ಅಮೆರಿಕದಲ್ಲಿ ಗ್ಯಾಲನ್ ಗ್ಯಾಸೋಲಿನ್ ದರ 3.7 ಡಾಲರ್ ಆಗಿದ್ದು, ಯುದ್ಧಾರಂಭದ ಬಳಿಕ ಬ್ರೆಂಟ್ ಕ್ರೂಡ್ ದರ ಶೇಕಡ 40ರಷ್ಟು ಹೆಚ್ಚಿದೆ. ರಷ್ಯನ್ ಉರಲ್ಸ್ ಕಚ್ಚಾತೈಲ ದರ ಈ ಅವಧಿಯಲ್ಲಿ ಶೇಕಡ 50ರಷ್ಟು ಹೆಚ್ಚಿದೆ. ಒಮನ್ ಮತ್ತು ದುಬೈ ಸೇರಿದಂತೆ ಹಲವು ದೇಶಗಳಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತಕ್ಕೆ ಫೆ.26ರಂದು ಇದ್ದ ದರ 70.9 ಡಾಲರ್ ನಿಂದ ಮಾ.12ಕ್ಕೆ 127.2 ಡಾಲರ್ ಗೆ ಹೆಚ್ಚಿತ್ತು. ಶುಕ್ರವಾರ ಮತ್ತೆ ಪ್ರತಿ ಬ್ಯಾರಲ್ ದರ 9.3 ಡಾಲರ್ ಅಥವಾ ಶೇಕಡ 7.3ರಷ್ಟು ಹೆಚ್ಚಿ 136.5 ಡಾಲರ್ ತಲುಪಿದೆ ಎಂದು ಅಧಿಕೃತ ಅಂಕಿ ಅಂಶಗಳಿಂದ ತಿಳಿದುಬರುತ್ತದೆ.
ರಾಜ್ಯಸಭಾ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನ ಎನ್ಡಿಎ ಪಾಲು; ಒಡಿಶಾದಲ್ಲಿ ಮೂರು ಸ್ಥಾನಗಳಲ್ಲಿ ಗೆಲುವು
ಹೊಸದಿಲ್ಲಿ: ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದೆ. ಈ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಹಾರದ ಎಲ್ಲ ಐದು ಸ್ಥಾನಗಳನ್ನು ಗೆದ್ದಿದ್ದು, ಒಡಿಶಾದ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಬಗಲಿಗೆ ಹಾಕಿಕೊಂಡಿದೆ. ಏತನ್ಮಧ್ಯೆ ಮತ ರಹಸ್ಯವನ್ನು ಉಲ್ಲಂಘಿಸಿದ ಆರೋಪದಲ್ಲಿ ಹರ್ಯಾಣದ ಎರಡು ಸ್ಥಾನಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಒಟ್ಟು 37 ಸ್ಥಾನಗಳ ಪೈಕಿ ಉಳಿದೆಲ್ಲ ಸ್ಥಾನಗಳು ಅವಿರೋಧವಾಗಿ ಭರ್ತಿಯಾಗಿದ್ದರಿಂದ ಬಿಹಾರ, ಒಡಿಶಾ ಹಾಗೂ ಹರ್ಯಾಣದ 11 ಸ್ಥಾನಗಳಿಗೆ ಮಾತ್ರವೇ ಮತದಾನ ನಡೆದಿತ್ತು. ಈ ಪೈಕಿ ಎನ್ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸೇರಿದಂತೆ ಎನ್ಡಿಎ ಒಟ್ಟು ಎಂಟು ಸ್ಥಾನಗಳನ್ನು ಗಳಿಸಿದೆ. ಬಿಜೆಡಿ ಒಡಿಶಾದಲ್ಲಿ ಒಂದು ಸ್ಥಾನ ಗೆದ್ದಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಹರ್ಯಾಣದ ಎರಡು ಸ್ಥಾನಗಳ ಮತ ಎಣಿಕೆ ಸ್ಥಗಿತಗೊಳಿಸಲಾಗಿದೆ. ಬಿಹಾರದಲ್ಲಿ ಎನ್ಡಿಎ ಎಲ್ಲ ಐದು ಸ್ಥಾನಗಳನ್ನು ಬಾಚಿಕೊಂಡಿದೆ. ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಬಿಜೆಪಿಯ ಹೊಸ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್, ಕೇಂದ್ರ ಸಚಿವ ರಾಮನಾಥ್ ಠಾಕೂರ್, ರಾಷ್ಟ್ರೀಯ ಲೋಕಮೋರ್ಚಾ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಮತ್ತು ಬಿಜೆಪಿಯ ಶಿವೇಶ್ ಕುಮಾರ್ ಆಯ್ಕೆಯಾಗಿದ್ದಾರೆ. ಈ ಪೈಕಿ ಠಾಕೂರ್ ಹಾಗೂ ಕುಶ್ವಾಹ ಮರು ಆಯ್ಕೆಯಾಗಿದ್ದಾರೆ. ಎಐಎಂಐಎಂನ ಐವರು ಸದಸ್ಯರು ಹಾಗೂ ಬಿಎಸ್ಪಿ ಶಾಸಕನಿಂದ ಬೆಂಬಲ ಪಡೆದಿದ್ದಾರೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆಪಾದಿಸಿರುವ ನಿರ್ಗಮನ ಸಂಸದ ಅಮರೇಂದ್ರ ಧಾರಿ ಸಿಂಗ್ ಸೋಲು ಅನುಭವಿಸಿದ್ದಾರೆ. ಒಡಿಶಾದಲ್ಲಿ ಎನ್ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ ಸೇರಿದಂತೆ ಎನ್ಡಿಎಯ ಮೂವರು ರಾಜ್ಯಸಭೆಗೆ ಅಯ್ಕೆಯಾಗಿದ್ದಾರೆ. ಬಿಜೆಪಿ ರಾಜ್ಯ ಘಕದ ಅಧ್ಯಕ್ಷ ಮನಮೋಹನ ಸಮಾಲ್, ಹಾಲಿ ಸಂಸದ ಸುಜೀತ್ ಕುಮಾರ್ ಮತ್ತು ಬಿಜೆಡಿಯ ಸಂತೃಪ್ತ ಮಿಶ್ರಾ ಗೆದ್ದ ಇತರ ಅಭ್ಯರ್ಥಿಗಳು. ಕಾಂಗ್ರೆಸ್, ಸಿಪಿಎಂ ಹಾಗೂ ಬಿಜೆಡಿ ಬೆಂಬಲಿತ ಅಭ್ಯರ್ಥಿ ಡಾ.ದತ್ತೇಶ್ವರ ಹೋತಾ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ನ ಮೂವರ ಹಾಗೂ ಬಿಜೆಡಿಯ ಇಬ್ಬರು ಸದಸ್ಯರು ಅಡ್ಡ ಮತದಾನ ಮಾಡಿದ ಪರಿಣಾಮ ಬಿಜೆಪಿಯ ಮೂರನೇ ಅಭ್ಯರ್ಥಿಯ ಗೆಲುವು ಸಾಧ್ಯವಾಗಿದೆ.
100 ಶೇ. ಮತದಾನವಾದರೂ ಅಭಿವೃದ್ಧಿ ಕಾಣದ ಬಾಂಜಾರುಮಲೆ
► ಮಾತು ತಪ್ಪಿದ ಅಧಿಕಾರಿಗಳು ► ಮುಂದುವರಿದ ಮಲೆಕುಡಿಯ ಕಾಲನಿಗರ ಸಂಕಷ್ಟ
ದೇವಸ್ಥಾನಗಳಲ್ಲಿ ಬಾಲ್ಯವಿವಾಹ ನಿಷೇಧ ಫಲಕ ಕಡ್ಡಾಯ - ಹೈಕೋರ್ಟ್ ಆದೇಶ
ಬಾಲ್ಯವಿವಾಹ ತಡೆಯಲು ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದ್ದು, ದೇವಸ್ಥಾನಗಳು ಮತ್ತು ಕಲ್ಯಾಣ ಮಂಟಪಗಳಲ್ಲಿ “ಕಾನೂನು ಪ್ರಕಾರ ಬಾಲ್ಯವಿವಾಹ ನಿಷೇಧಿಸಲಾಗಿದೆ” ಎಂಬ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಸೂಚಿಸಿದೆ. ಬಾಲ್ಯವಿವಾಹ ನಿರ್ಮೂಲನೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ನ್ಯಾಯಪೀಠ ತಿಳಿಸಿದೆ. ಬಾಲ್ಯವಿವಾಹ ನಡೆಸುವ ಪುರೋಹಿತರು, ಆಯೋಜಕರು ಹಾಗೂ ಸಂಬಂಧಿಕರೂ ಕಾನೂನು ಪ್ರಕಾರ ಶಿಕ್ಷಾರ್ಹರು ಎಂದು ನ್ಯಾಯಾಲಯ ಎಚ್ಚರಿಸಿದೆ.
ಕೋಲಾರ | ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ : ಗ್ಯಾಸ್ ದರ ಏರಿಕೆ, ರೈತರ ಬೆಳೆಗಳಿಗೆ ಕುಸಿದ ಬೆಲೆ
ಕೋಲಾರ, ಮಾ.16 : ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪ್ರಭಾವದಿಂದ ಗ್ಯಾಸ್ ದರ ಏರಿಕೆಯಾದರೆ, ಮಾತೊಂದು ಕಡೆ ರೈತರು ಬೆಳೆದ ತರಕಾರಿಗಳು ಹರಾಜು ಆಗದ ಸಂಕಷ್ಟ ಎದುರಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್ ಉದ್ಯಮ ಕುಗ್ಗಿರುವ ಕಾರಣ ಸೋಮವಾರ ಮುಂಜಾನೆ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಯುವ ತರಕಾರಿಗಳು ಹರಾಜು ಕರೆಯಲೂ ಸಹ ಗ್ರಾಹಕರಿಲ್ಲದೆ ಬಿಕರಿಯಾಗಿದೆ. ಯುದ್ದದ ಕಾರ್ಮೋಡ ಹಾಗೂ ಗ್ಯಾಸ್ ಪೂರೈಕೆಯಲ್ಲಾದ ವ್ಯತ್ಯಯದ ಹಿನ್ನೆಲೆ ಹಣ್ಣು, ತರಕಾರಿಗಳ ಬೆಲೆ ತೀವ್ರ ಕುಸಿತ ಕಂಡಿದೆ. ಹೋಟೆಲ್ ಉದ್ಯಮಕ್ಕೆ ಗ್ಯಾಸ್ ಹೊಡೆತ ಬೀಳುತ್ತಿದ್ದಂತೆ ತರಕಾರಿಗಳ ಬೆಲೆ ಕೂಡ ತೀವ್ರ ಕುಸಿತ ಕಂಡಿದೆ. ಹೊಟೆಲ್ ಮಾಲೀಕರು ತರಕಾರಿ ಖರೀದಿ ಮಾಡದ ಹಿನ್ನೆಲೆ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿದೆ, ಇಲ್ಲಿಂದ ದೇಶದ ಹಲವು ರಾಜ್ಯಗಳು ಸೇರಿದಂತೆ ರಾಜ್ಯದ ರಾಜಧಾನಿ ಬೆಂಗಳೂರಿಗೂ ಇಲ್ಲಿಂದ ತರಕಾರಿ ಹಾಗೂ ಟೊಮ್ಯಾಟೋ ಸರಬರಾಜಾಗುತ್ತದೆ. ತೀವ್ರ ಕುಸಿತ ಕಂಡ ತರಕಾರಿಗಳನ್ನ ಕೇಳುವವರೆ ಇಲ್ಲದಂತ್ತಾಗಿ ಬೆಲೆ ಇಲ್ಲದೆ ರೈತರು, ಮಾರುಕಟ್ಟೆ ವರ್ತಕರು ಆತಂಕಕ್ಕೆ ಒಳಗಾಗಿದ್ದಾರೆ. ಒಂದು ವಾರದಿಂದ ಹೊಟೆಲ್ಗೆ ಹೋಗುತ್ತಿದ್ದ ತರಕಾರಿ ಸಂಪೂರ್ಣ ಕುಸಿತವಾಗುತ್ತಿದ್ದಂತೆ ತರಕಾರಿಗಳ ಬೆಲೆ ತೀವ್ರ ಕುಸಿತ ಕಂಡಿದೆ. ಗ್ಯಾಸ್ ಇಲ್ಲದೆ ಹೊಟೆಲ್ ಇಲ್ಲ, ಇದು ತರಕಾರಿಗಳಿಗೆ ಬೆಲೆಯ ಮೇಲೆಪರಿಣಾಮ ಬೀರಿದೆ. ಯುದ್ಧವೇ ಆಗಲಿ, ಅತಿವೃಷ್ಟಿ, ಅನಾವೃಷ್ಟಿ ಯಾವುದೆ ಸಂಭವಿಸಿದರೂ ರೈತನ ಮೇಲೆ ನೇರ ಪರಿಣಾಮ ಬೀರುತ್ತದೆ ಎನ್ನುವುದಕ್ಕೆ ಈ ಬೆಳೆವಣಿಗೆ ತಾಜಾ ಉದಾಹರಣೆಯಾಗಿದೆ. ಮತ್ತೊಂದು ಕಡೆ ಗೃಹ ಬಳಕೆಯ ಸಿಲಿಂಡರ್ಗಳು ಕಾಳು ಸಂತೆಯಲ್ಲಿ ಮಾರಾಟ ಮಾಡುತ್ತಿದ್ದು, ಕೆಲವು ಹೋಟೆಲ್ ಗಳಲ್ಲಿ ದಾಸ್ತಾನು ಮಾಡಲಾಗಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದವು ಈ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳಾ, ತಹಶೀಲ್ದಾರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು ನಗರದ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
West Bengal Opinion Poll : ದೀದಿಗೆ ಅಲ್ಪ ಮುನ್ನಡೆ, ಬೆನ್ನಟ್ಟಿ ಬರುತ್ತಿದೆ ಬಿಜೆಪಿ - ರೋಚಕ ಹಣಾಹಣಿ
West Bengal Assembly Election Opinion Poll : ಮುಂಬರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ, ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಪ್ರಕಟಿಸಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೆಟ್ರಿಜ್ - ಐಎಎನ್ಎಸ್ ನಡೆಸಿದ ಸಮೀಕ್ಷೆಯಲ್ಲಿ ಮಮತಾ ಬ್ಯಾನರ್ಜಿಗೆ ಲೀಡ್ ಸಿಗಲಿದೆ ಮತ್ತು ಬಿಜೆಪಿ ತನ್ನ ಬಲವನ್ನು ಇನ್ನಷ್ಟು ವೃದ್ದಿಸಿ ಕೊಳ್ಳಲಿದೆ.
ದೇವದುರ್ಗ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಇಲ್ಲವೇ?
ಪೊಲೀಸರ ವಿರುದ್ಧ ಸಾರ್ವಜನಿಕರ ಆರೋಪ
ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಅಕ್ರಮ ಗಣಿಗಾರಿಕೆ
ಬೆಂಗಳೂರು, ಮಾ.16: ಕಲಬುರಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಅಕ್ರಮವಾಗಿ ಗಣಿಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಭೂ ವಿಜ್ಞಾನ ಇಲಾಖೆ ನಿರ್ದೇಶಕರು ಸೇರಿದಂತೆ ಅಕ್ರಮ ಗಣಿಗಾರಿಕೆ ತಡೆಗಟ್ಟಲು ವಿಫಲರಾದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿ) ಯು ಮಾಡಿರುವ ಶಿಫಾರಸಿನ ಕಡತವು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಕಚೇರಿಯಲ್ಲಿ ಧೂಳಿಡಿದು ಕೂತಿದೆ. ಕಲಬುರಗಿಯ ವಾಡಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ಗೆ ದಂಡ ಮತ್ತು ರಾಯಧನ ಸೇರಿ ಒಟ್ಟಾರೆ 850 ಕೋಟಿ ರೂ.ಗೂ ಅಧಿಕ ಮೊತ್ತವನ್ನು ವಸೂಲು ಮಾಡಬೇಕು. ಈ ಸಂಬಂಧ ಎಂಎಂಡಿಆರ್ ಕಾಯ್ದೆಯ ಸೆಕ್ಷನ್ 221(1) ಮತ್ತು 21(2) ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಶಿಫಾರಸು ಮಾಡಿದ್ದರು. ಈ ಶಿಫಾರಸನ್ನು ಪರಿಶೀಲಿಸಿದ್ದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿಶಾಖೆಯು) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು ಸೇರಿದಂತೆ ಇದಕ್ಕೆ ಹೊಣೆಗಾರರಾದ ಅಧಿಕಾರಿ, ನೌಕರರ ವಿರುದ್ಧ ಇಲಾಖೆ ತನಿಖೆ ಅಥವಾ ಲೋಕಾಯುಕ್ತ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯಿಸಿತ್ತು. ಈ ಅಭಿಪ್ರಾಯವಿದ್ದ ಕಡತವನ್ನು ಇಲಾಖೆಯು, ಗಣಿ ಸಚಿವ ಎಸ್.ಎಸ್ .ಮಲ್ಲಿಕಾರ್ಜುನ್ ಅವರ ಅನುಮೋದನೆಗೆ ಕಳಿಸಿತ್ತು. ಆದರೆ ಇದುವರೆಗೂ ಸಚಿವ ಎಸ್.ಎಸ್ .ಮಲ್ಲಿಕಾರ್ಜುನ್ ಅವರು ಈ ಶಿಫಾರಸಿಗೆ ಅನುಮೋದನೆ ನೀಡಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಕಡತದ ಟಿಪ್ಪಣಿ ಹಾಳೆಗಳು he-file.inಗೆ ಲಭ್ಯವಾಗಿವೆ. ‘ಕಾನೂನು ಇಲಾಖೆಯ ಅಭಿಪ್ರಾಯದ ಪ್ರಕಾರ ಆಡಳಿತಾತ್ಮಕ ಇಲಾಖೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಬಹುದು. ಜೊತೆಗೆ ಇಲಾಖಾ ತನಿಖೆ ಆರಂಭಿಸುವುದು ಅಥವಾ ಪ್ರಕರಣವನ್ನು ಲೋಕಾ ಯುಕ್ತಕ್ಕೆ ತನಿಖೆಗೆ ಒಪ್ಪಿಸಲು ಪರಿಗಣಿಸಬಹುದು,’ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಟಿಪ್ಪಣಿ ಹಾಳೆಯಲ್ಲಿ ವಿವರಿಸಿದೆ ಎಂದು ತಿಳಿದು ಬಂದಿದೆ. ಅಲ್ಲದೇ 2023ರ ಫೆ.18ರಿಂದ 2024ರ ಆಗಸ್ಟ್ 18ರವರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿರ್ದೇಶಕರು, ಉಪ ನಿರ್ದೇಶಕರು, ಹಿರಿಯ ಭೂವಿಜ್ಞಾನಿಗಳು ಹಾಗೂ ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ವಿಫಲವಾಗಿರುವ ಮತ್ತು ನಡೆದಿರುವ ಗಂಭೀರ ಲೋಪಗಳ ಕುರಿತು ತನಿಖೆ ನಡೆಸಬೇಕು. ಹಾಗೆಯೇ ಕಾನೂನುಬದ್ಧ ಕರ್ತವ್ಯಗಳನ್ನು ನಿರ್ವಹಿಸದಿದ್ದಕ್ಕಾಗಿ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಮತ್ತು ರಾಜ್ಯ ಖಜಾನೆಗೆ ಉಂಟಾಗಿರುವ ಭಾರೀ ನಷ್ಟ / ಹಾನಿಗೆ ಉತ್ತರದಾಯಕರನ್ನಾಗಿ ಮಾಡಬಹುದು ಎಂದು ಇಲಾಖೆಯು ಕಡತದ ಟಿಪ್ಪಣಿ ಹಾಳೆಯಲ್ಲಿ ವಿವರಿಸಿದೆ ಎಂದು ಗೊತ್ತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಅಡ್ವೋಕೇಟ್ ಜನರಲ್ ಮತ್ತು ಕಾನೂನು ಇಲಾಖೆಯು ಅಭಿಪ್ರಾಯ ನೀಡಿದೆ. ಈ ಪ್ರಕರಣದಲ್ಲಿ ಹಣಕಾಸು ಸಂಬಂಧಿತ ವಿಷಯಗಳ ಕುರಿತು ಅಭಿಪ್ರಾಯ ನೀಡಲು ಕಡತವನ್ನು ಹಣಕಾಸು ಇಲಾಖೆಗೆ ಕಳಿಸಿದೆ. ಕಾನೂನು ಇಲಾಖೆಯ ಅಭಿಪ್ರಾಯದ ಪ್ರಕಾರ ಕಾನೂನುಬದ್ಧ ಬಾಕಿಗಳು ಒಟ್ಟು 850.21 ಕೋಟಿ ರೂ. ಇದೆ. ಇದರಲ್ಲಿ ರಾಯಲ್ಟಿ / ಬಡ್ಡಿ 492.51 ಕೋಟಿ ರೂ.ಯಷ್ಟು ಇದೆ. ಕಂಪೆನಿಯು ಈಗಾಗಲೇ 125 ಕೋಟಿ ರೂ.ಪಾವತಿಸಿದೆ. ಇನ್ನೂ 367.51 ಕೋಟಿ ರೂ.ಬಾಕಿ ಉಳಿಸಿಕೊಂಡಿದೆ. ಎಂಎಂಡಿಆರ್ ಕಾಯ್ದೆ 1957 ರ ಸೆಕ್ಷನ್ 21(5) ಅಡಿಯಲ್ಲಿ, ಲೀಸ್ ಅವಧಿ ಮುಗಿದ ನಂತರ 2023ರ ಫೆ.18ರಿಂದ 2024ರ ಆಗಸ್ಟ್ 18ರವರೆಗೆ ಗುತ್ತಿಗೆಯ ಮಾನ್ಯತೆ ಇಲ್ಲದೆ ನಡೆಸಿದ ಅಕ್ರಮ ಗಣಿಗಾರಿಕೆ ನಡೆಸಿರುವ ಕಾರಣಕ್ಕೆ 482.59 ಕೋಟಿ ರೂ.ದಂಡ ವಿಧಿಸಲಾಗಿದೆ. ಟೆಂಡರ್ ದಾಖಲೆಗಳ ವಿಧಿ 10 ಉಲ್ಲಂಘಿಸಿ ದೊಡ್ಡ ಪ್ರಮಾಣದ ಕಾನೂನುಬದ್ಧ ಬಾಕಿಗಳನ್ನು ಪಾವತಿಸದಿರುವುದರಿಂದ ಯೋಜನೆ ಪ್ರಸ್ತಾಪಕರನ್ನು ಡೀಫಾಲ್ಟರ್ ಎಂದು ಪರಿಗಣಿಸಲಾಗಿದೆ. ಕಾನೂನು ಸ್ಥಿತಿ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಚರ್ಚಿಸಲಾಗಿದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಟಿಪ್ಪಣಿ ಹಾಳೆಯಲ್ಲಿ ವಿವರಿಸಿದೆ. ರಾಯಲ್ಟಿ ಪಾವತಿಗೆ ಸಂಬಂಧಿಸಿದಂತೆ ರಿಟ್ ಅರ್ಜಿ25298/2024, 36850/2025, ರಿವಿಷನಲ್ ಆದೇಶವನ್ನು ಪ್ರಶ್ನಿಸಿರುವ ಮತ್ತು ದಂಡಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿ (W.P. No. 18655/2025 ಈ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್ ಮುಂದೆ ಬಾಕಿಯಿವೆ. ಎಸಿಸಿ ಲಿಮಿಟೆಡ್, ಗಣಿಗಾರಿಕೆ ಕಂಪನಿಯು ಎಂಎಂಡಿಆರ್ ಕಾಯ್ದೆ 1957 ಅಡಿಯಲ್ಲಿ ಪಾವತಿಸಬೇಕಾದ ಕಾನೂನುಬದ್ಧ ಬಾಕಿಗಳನ್ನು ಪಾವತಿಸದಿರುವ ಬಗ್ಗೆಯೂ ಉಲ್ಲೇಖಿಸಲಾಗಿದೆ. ಎಂಎಂಡಿಆರ್ ಕಾಯ್ದೆ ಸೆಕ್ಷನ್ 9 ಪ್ರಕಾರ, ಖನಿಜಗಳನ್ನು ತೆಗೆದುಕೊಳ್ಳುವಾಗ ಅಥವಾ ಉಪಯೋಗಿಸುವಾಗ ಕಡ್ಡಾಯವಾಗಿದೆ ರಾಯಲ್ಟಿ ಪಾವತಿಸಬೇಕು. ಇದು ಕಾನೂನುಬದ್ಧ ತೆರಿಗೆ ಆಗಿದ್ದು ಮಾತುಕತೆಯಿಂದ ಬದಲಾಯಿಸಲಾಗುವುದಿಲ್ಲ. ರಾಯಲ್ಟಿ ಪಾವತಿಸದಿದ್ದರೆ ಕಾನೂನುಬದ್ಧ ಬಡ್ಡಿ ಹಾಗೂ ದಂಡ ವಿಧಿಸಲಾಗುತ್ತದೆ ಮತ್ತು ಅವುಗಳನ್ನು ಭೂಮಿ ಹಣ ಬಾಕಿಗಳಂತೆ ವಸೂಲಿ ಮಾಡಬಹುದು ಎಂದೂ ಟಿಪ್ಪಣಿಯಲ್ಲಿ ವಿವರಿಸಿದೆ. ಎಂಎಂಡಿಆರ್ ಕಾಯ್ದೆ ಸೆಕ್ಷನ್ 21 (5) ಪ್ರಕಾರ, ರಾಜ್ಯ ಸರಕಾರಕ್ಕೆ ಅಕ್ರಮವಾಗಿ ತೆಗೆಯಲಾದ ಖನಿಜಗಳ ಮೌಲ್ಯದ ಶೇ.100ರಷ್ಟು ವಸೂಲಿ ಮಾಡುವ ಅಧಿಕಾರ ಇದೆ. ಇದು ರಾಯಲ್ಟಿ, ಬಾಡಿಗೆ ಹಾಗೂ ದಂಡದಿಂದ ಪ್ರತ್ಯೇಕವಾಗಿದ್ದು, ಕ್ರಿಮಿನಲ್ ಪ್ರಕರಣಗಳಿಂದ Common Cause vs Union of India, (2017) 9 SCC 499)ಸ್ವತಂತ್ರವಾಗಿದೆ ಎಂದು ಹೇಳಿರುವುದು ಗೊತ್ತಾಗಿದೆ. ’ಅಪರಾಧಗಳನ್ನು ಮನ್ನಿಸುವುದು ಅಥವಾ ದಂಡ ಪಾವತಿಸುವುದರಿಂದ ಕ್ರಿಮಿನಲ್ ಕ್ರಮವನ್ನು ತಡೆಯಲು ಸಾಧ್ಯವಿಲ್ಲ. ಆಡಳಿತಾತ್ಮಕ ದಂಡ ಮತ್ತು ಕ್ರಿಮಿನಲ್ ಕ್ರಮಗಳು ವಿಭಿನ್ನ ಕಾನೂನು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತವೆ. (Citation: Jayant vs State of Madhya Pradesh (2020) 18 SCC 401) ಪುನರಾವರ್ತಿತ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಹಣದ ದಂಡ ಸೇರಿದಂತೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಾಗಿದೆ,’ ಇಲಾಖೆಯು ಶಿಫಾರಸು ಮಾಡಿರುವುದು ತಿಳಿದು ಬಂದಿದೆ. ಆಡಳಿತಾತ್ಮಕ ಇಲಾಖೆಯು ತಕ್ಷಣವೇ ಅಕ್ರಮವಾಗಿ ತೆಗೆಯಲಾದ ಖನಿಜಗಳ ಮೌಲ್ಯದ 100% ವಸೂಲಿ ಮಾಡುವಂತೆ ಬೇಡಿಕೆ ಎತ್ತಿ ಜಾರಿಗೊಳಿಸಬೇಕು, ಹಾಗೂ ಕಾನೂನು ಪ್ರಕಾರ ರಾಯಲ್ಟಿ, ಬಡ್ಡಿ ಮತ್ತು ದಂಡ ವಸೂಲಿ ಮಾಡಬೇಕು. ಜೊತೆಗೆ ಎಂಎಂಡಿಆರ್ ಕಾಯ್ದೆ ಸೆಕ್ಷನ್ 221(1) ಮತ್ತು 21(2) ಅಡಿಯಲ್ಲಿ ಅಕ್ರಮ ಗಣಿಗಾರಿಕೆಗೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ಹೇಳಿದೆ. ‘ಈ ಮೇಲಿನ ವಿಚಾರಗಳನ್ನು ಪರಿಗಣಿಸಿದಾಗ, ಡೀಫಾಲ್ಟರ್ ಕಂಪೆನಿಯು ಅಕ್ರಮ ಗಣಿಗಾರಿಕೆ ಮತ್ತು ಇತರ ಕಾನೂನುಬದ್ಧ ಬಾಕಿಗಳ ಹಿನ್ನೆಲೆಯಲ್ಲಿ ರಾಜ್ಯ ಖಜಾನೆಗೆ ರಾಯಲ್ಟಿ / ಬಡ್ಡಿ / ದಂಡ ರೂಪದಲ್ಲಿ ದೊಡ್ಡ ಮೊತ್ತವನ್ನು ಪಾವತಿಸಬೇಕಾಗಿದೆ. ಕಾನೂನು ವಿಧಿಗಳ ಪುನರಾವರ್ತಿತ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ,’ ಎಂದು ವಿವರಿಸಿದೆ. ರಾಜ್ಯದ ಹಣಕಾಸು ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ, ವರ್ಷಗಳಿಂದ ಆದಾಯ ಸಂಗ್ರಹಣೆಯಲ್ಲಿ ಉಂಟಾದ ಗಂಭೀರ ಲೋಪಗಳನ್ನು ಗಮನಿಸಬೇಕು. ಹಾಗೂ ಆಡಳಿತಾತ್ಮಕ ಇಲಾಖೆಯ ಈ ಗಂಭೀರ ತಪ್ಪುಗಳನ್ನು ಗಂಭೀರವಾಗಿ ಪರಿಗಣಿಸಿ, ಕಾನೂನುಬದ್ಧ ಬಾಕಿಗಳನ್ನು ವಸೂಲಿ ಮಾಡಲು ಅತ್ಯಂತ ಆದ್ಯತೆಯೊಂದಿಗೆ ಕ್ರಮ ಕೈಗೊಳ್ಳಬೇಕು ಎಂದು ವಿವರಿಸಿರುವುದು ತಿಳಿದು ಬಂದಿದೆ. 850.21 ಕೋಟಿ ರೂ.ಗಳಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ಗೆ ಲೆಟರ್ ಆಫ್ ಇಂಟೆಂಟ್ ವಿಸ್ತರಿಸಲು ನೇರವಾಗಿ ಕೇಂದ್ರ ಸರಕಾರದ ಮಾರ್ಗದರ್ಶನ ಕೋರಿ ಮುಜುಗರಕ್ಕೀಡಾಗಿದ್ದ ಬೆಳವಣಿಗೆ ನಡುವೆಯೇ ಇದೀಗ ರಾಜ್ಯಸರಕಾರವು ಗಣಿ ವಿಭಾಗದದಿಂದ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಿರುವುದನ್ನು ಸ್ಮರಿಸಬಹುದು.
ಚಾಮರಾಜನಗರ: ಬಗೆಹರಿಯದ ವಾಣಿಜ್ಯ ಸಿಲಿಂಡರ್ ಸಮಸ್ಯೆ, ಕೆಲ ಹೋಟೆಲ್ ಗಳು ಬಂದ್
ವಾಣಿಜ್ಯ ಸಿಲಿಂಡರ್ ಬಂದ್ ಆಗಿರುವುದರಿಂದ ಕೆಲ ಹೋಟೆಲ್ನವರು ತಿಂಡಿ ಬೆಲೆ ಏರಿಕೆ ಮಾಡಿದ್ದಾರೆ. ಇನ್ನು ಕೆಲವರು ಇಡ್ಲಿ, ಪೂರಿಯಂತ ಐಟಮ್ ಬಿಟ್ಟು ಉಪ್ಪಿಟ್ಟು, ಒಗ್ಗರಣೆ, ಅವಲಕ್ಕಿ, ರೈಸ್ ಐಟಂಗಷ್ಟೇ ಸಿಮೀತ ಮಾಡಿದ್ದಾರೆ. ಕೆಲವು ಹೋಟೆಲ್ಗಳು ವಹಿವಾಟು ಬಂದ್ ಮಾಡುವ ಮೂಲಕ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ ಮುಖ್ಯ ಘಟ್ಟವಾದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಇದೇ ಮಾರ್ಚ್ 18ರಿಂದ ರಾಜ್ಯಾದ್ಯಂತ ಆರಂಭವಾಗಲಿವೆ. ವರ್ಷವಿಡೀ ಓದಿದರೂ ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಸಹಜವಾಗಿ ಆತಂಕ, ಭಯ ಮತ್ತು ಒತ್ತಡ ಮನೆಮಾಡುತ್ತದೆ. ಆದರೆ, ಈ ಕೊನೆಯ ಕ್ಷಣದ ಸಿದ್ಧತೆ ನಿಮ್ಮ ಒಟ್ಟು ಅಂಕಗಳ ಮೇಲೆ ಭಾರೀ ಪ್ರಭಾವ ಬೀರುತ್ತದೆ. ಪರೀಕ್ಷಾ
ಕಾಬೂಲ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ಭೀಕರ ವೈಮಾನಿಕ ದಾಳಿ; 400 ಕ್ಕೂ ಹೆಚ್ಚು ಮಂದಿ ಸಾವು
ಪಾಕಿಸ್ತಾನವು ಕಾಬೂಲ್ನಲ್ಲಿರುವ ಮಾದಕ ವ್ಯಸನಿಗಳ ಚಿಕಿತ್ಸಾ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ದಾಳಿಯಲ್ಲಿ 400 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ದಾಳಿಯನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ನಾವು ಯಾವುದೇ ದಾಳಿ ನಡೆಸಿಲ್ಲ ಎಂದಿದೆ.
ಕೊಟ್ಟೂರು | ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಸ್ಥೆ: ರೈತರ ಪರದಾಟ
ಕೊಟ್ಟೂರು: ಪಟ್ಟಣದ ಎಪಿಎಂಸಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಆರಂಭಗೊಂಡಿರುವ ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಸ್ಥೆ ತಲೆದೋರಿದ್ದು, ರಾಗಿ ಮಾರಾಟಕ್ಕೆ ಬಂದಿರುವ ರೈತರು ಹಲವು ದಿನಗಳಿಂದ ಪರದಾಡುವಂತಾಗಿದೆ. ಈ ವರ್ಷ ಸರಕಾರ ರಾಗಿಗೆ ಉತ್ತಮ ಬೆಂಬಲ ಬೆಲೆ ಘೋಷಿಸಿರುವ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರಾಗಿ ಬೆಳೆದು ಮಾರಾಟಕ್ಕೆ ತರುತ್ತಿದ್ದಾರೆ. ಆದರೆ ಖರೀದಿ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ಒಂದೇ ದಿನದಲ್ಲಿ ರಾಗಿ ನೋಂದಣಿ ಹಾಗೂ ಖರೀದಿ ಆಗದೆ ರೈತರು ಮೂರ್ನಾಲ್ಕು ದಿನಗಳವರೆಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಪಿಎಂಸಿ ಆವರಣದಲ್ಲಿ ಸಾಲು ಸಾಲಾಗಿ ಟ್ರ್ಯಾಕ್ಟರ್ ಗಳು ನಿಂತಿದ್ದು, ಕೆಲ ರೈತರು ರಾತ್ರಿ ವೇಳೆ ಅಲ್ಲಿಯೇ ತಂಗುವಂತಾಗಿದೆ. ಟ್ರ್ಯಾಕ್ಟರ್ ಬಾಡಿಗೆ ದಿನಕ್ಕೆ ಸುಮಾರು ಸಾವಿರ ರೂ. ಆಗುತ್ತಿರುವುದರಿಂದ ರೈತರಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಖರೀದಿ ಮಾಡಿದ ರಾಗಿಯನ್ನು ಸಂಗ್ರಹಿಸಲು ಸೂಕ್ತ ಗೋಡೌನ್ ವ್ಯವಸ್ಥೆ ಇಲ್ಲದಿರುವುದು ಮತ್ತೊಂದು ಸಮಸ್ಯೆಯಾಗಿದೆ. ಖರೀದಿಯಾದ ರಾಗಿಯನ್ನು ಕೊಪ್ಪಳದ ಏಜೆನ್ಸಿಗೆ ಒಪ್ಪಿಸಲಾಗಿದ್ದರೂ ಸಮರ್ಪಕವಾಗಿ ವಿಲೇವಾರಿ ಮಾಡದ ಕಾರಣ ದಾಸ್ತಾನು ಹೆಚ್ಚಾಗಿ ಸ್ಥಳಾವಕಾಶದ ಕೊರತೆ ಉಂಟಾಗಿದೆ ಎಂದು ತಿಳಿದುಬಂದಿದೆ. ರೈತರಿಗೆ ಅನುಕೂಲವಾಗಲೆಂದು ಟೋಕನ್ ವ್ಯವಸ್ಥೆ ಜಾರಿಗೆ ತಂದಿದ್ದರೂ ಮಾಹಿತಿ ಕೊರತೆ ಹಾಗೂ ಸಿಬ್ಬಂದಿಯ ಅವ್ಯವಸ್ಥೆಯಿಂದ ರೈತರು ಒಂದೇ ಬಾರಿ ಖರೀದಿ ಕೇಂದ್ರದತ್ತ ಧಾವಿಸುತ್ತಿದ್ದಾರೆ. ಇದರಿಂದ ಎಪಿಎಂಸಿಯ ವಿವಿಧ ಬ್ಲಾಕ್ಗಳಲ್ಲಿ ಟ್ರ್ಯಾಕ್ಟರ್ಗಳ ಉದ್ದವಾದ ಸಾಲುಗಳು ಕಂಡುಬರುತ್ತಿವೆ. ತಾಲೂಕಿನ ಪ್ರಮುಖ ಮಾರುಕಟ್ಟೆಯಾದ ಕೊಟ್ಟೂರು ಎಪಿಎಂಸಿಯಲ್ಲಿ ರೈತರಿಗೆ ಕನಿಷ್ಠ ಸೌಲಭ್ಯಗಳೇ ಇಲ್ಲದಿರುವುದು ವಿಷಾದನೀಯ. ವಾರದ ಕಾಲ ಟ್ರ್ಯಾಕ್ಟರ್ಗಳಲ್ಲಿ ರೈತರು ರಾತ್ರಿ ಕಳೆಯಬೇಕಾದ ಪರಿಸ್ಥಿತಿ ಉಂಟಾಗಿದೆ. ಸರಕಾರ ಕೂಡಲೇ ಎಚ್ಚೆತ್ತುಕೊಂಡು ರಾಗಿ ಖರೀದಿ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. - ಕೆ.ಎಸ್.ಜಯಪ್ರಕಾಶ್ ನಾಯ್ಕ, ರೈತ ಸಂಘ ಮುಖಂಡ
ಸುರಪುರ | ದೇವಿಕೇರಾ ಗ್ರಾಮದಲ್ಲಿ ಚರಂಡಿ ಸಮಸ್ಯೆ: ಗ್ರಾಮಸ್ಥರ ಆಕ್ರೋಶ
ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿ, ಗ್ರಾಮದಲ್ಲಿನ ಚರಂಡಿಗಳು ದುರ್ನಾತ ಬೀರುತ್ತಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಈ ಕುರಿತು ಗ್ರಾಮದ ಮುಖಂಡ ಗಣೇಶ ಹೊಸಮನಿ ಮಾತನಾಡಿ, ಗ್ರಾಮದಲ್ಲಿ ಜಾನುವಾರುಗಳು ಕುಡಿಯುವ ನೀರಿನ ತೊಟ್ಟಿ ದುರಸ್ತಿ ಅಗತ್ಯವಿದ್ದು, ಬೇಸಿಗೆ ಕಾಲವಾಗಿರುವುದರಿಂದ ಜಾನುವಾರುಗಳಿಗೆ ಸಮರ್ಪಕವಾಗಿ ನೀರು ಕುಡಿಯುವ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಇದಲ್ಲದೆ, ಗ್ರಾಮದಲ್ಲಿನ ಚರಂಡಿಗಳನ್ನು ಕಾಟಚಾರಕ್ಕಾಗಿ ಒಮ್ಮೆ ಸ್ವಚ್ಛಗೊಳಿಸಿದ್ದರೂ ಈಗ ಮತ್ತೆ ಚರಂಡಿಗಳು ತುಂಬಿ ನಿಂತು ದುರ್ನಾತ ಬೀರುತ್ತಿದ್ದು, ಸೊಳ್ಳೆಗಳ ಕಾಟದಿಂದ ಗ್ರಾಮಸ್ಥರು ಕಾಯಿಲೆಗಳ ಭಯದಲ್ಲಿ ದಿನ ಕಳೆಯುವಂತಾಗಿದೆ ಎಂದು ದೂರಿದರು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಜನರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ವೇಳಾಪಟ್ಟಿಗೆ ಕಾಂಗ್ರೆಸ್ ಕಿಡಿ; EC ನಡೆ ಪ್ರಶ್ನಿಸಿದ ಕೆ.ಸಿ.ವೇಣುಗೋಪಾಲ್
ಹೊಸದಿಲ್ಲಿ, ಮಾ.17: ಐದು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ದಿನಾಂಕಗಳ ಘೋಷಣೆ ಕುರಿತು ಕಾಂಗ್ರೆಸ್ ಸಂಸದ, AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾರೆ. “ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವೂ ನಮ್ಮಲ್ಲಿದೆ. ಆದರೆ ಚುನಾವಣಾ ಆಯೋಗವು ದಿನಾಂಕಗಳನ್ನು ನಿಗದಿಪಡಿಸಿರುವ ವಿಧಾನ ಗಮನಿಸಿದರೆ ಹಲವು ಅನುಮಾನಗಳು ಉದ್ಭವಿಸುತ್ತವೆ,” ಎಂದು ಅವರು ಹೇಳಿದ್ದಾರೆ. ಮೊದಲ ಹಂತದ ಮತದಾನ 9ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ 23 ಅಂತಿಮ ದಿನಾಂಕವಾಗಿದೆ. 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 26ರವರೆಗೆ ಹಿಂಪಡೆಯಲು ಅವಕಾಶವಿದೆ. ಇದರ ನಂತರ ಕೇವಲ 11 ದಿನಗಳ ಪ್ರಚಾರ ಅವಧಿ ಮಾತ್ರ ಉಳಿಯುತ್ತದೆ ಎಂದು ವೇಣುಗೋಪಾಲ್ ವಿವರಿಸಿದರು. ಕೇರಳದ ಬಗ್ಗೆ ಮಾತನಾಡಿದ ಅವರು, “ಮೊದಲ ವಾರದಲ್ಲೇ ಈಸ್ಟರ್ ಹಾಗೂ ಗುಡ್ ಫ್ರೈಡೇ ಇರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ದಿನಾಂಕಗಳನ್ನು ಇನ್ನಷ್ಟು ಮುಂಚಿತವಾಗಿ ಪ್ರಕಟಿಸಬಹುದಿತ್ತು. ಮೇ 4ರಂದು ಮತ ಎಣಿಕೆ ನಡೆಯಲಿರುವಾಗ ಕೇರಳದಲ್ಲಿ ಇಷ್ಟು ಬೇಗ ಮತದಾನ ನಡೆಸುವ ಉದ್ದೇಶವೇನು?” ಎಂದು ಅವರು ಪ್ರಶ್ನಿಸಿದರು. ಕೇರಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಒಂದೇ ದಿನ ಚುನಾವಣೆಯನ್ನು ನಡೆಸಲಿರುವ ಹಿಂದಿನ ಉದ್ದೇಶವೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ. “ನಾವು ಗೆಲುವಿನ ಬಗ್ಗೆ ಆತ್ಮವಿಶ್ವಾಸ ಹೊಂದಿದ್ದೇವೆ. ಆದರೆ ದೇಶದ ಜನರು ಚುನಾವಣಾ ಆಯೋಗದ ಪಕ್ಷಪಾತದ ಮನೋಭಾವವನ್ನು ಗಮನಿಸುತ್ತಿದ್ದಾರೆ,” ಎಂದು ವೇಣುಗೋಪಾಲ್ ಆರೋಪಿಸಿದರು. #WATCH | Delhi | On the announcement of dates of polls in 5 states/UTs, Congress MP KC Venugopal says, We are fully prepared, we are going to win the elections... You can see how the Election Commission has set the dates. The first phase of elections is on the 9th, nominations… pic.twitter.com/WwgJraKpbW — ANI (@ANI) March 16, 2026
ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಕನಿಷ್ಠ 400 ಮಂದಿ ಮೃತ್ಯು : ವರದಿ
ಕಾಬೂಲ್: ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಗರದ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ಪಡೆಗಳು ನಡೆಸಿದ ಮಿಂಚಿನ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟು ಇತರ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಪ್ರಕಟಿಸಿದೆ. ಆದರೆ ಪಾಕಿಸ್ತಾನ ಈ ಆರೋಪವನ್ನು ನಿರಾಕರಿಸಿದ್ದು, ಪೂರ್ವ ಅಫ್ಘಾನಿಸ್ತಾನದಲ್ಲಿ ಸೇನೆ ಮತ್ತು ಭಯೋತ್ಪಾದನಾ ಕೇಂದ್ರಗಳನ್ನು ಗುರಿ ಮಾಡಿ ಮಾತ್ರವೇ ವಾಯುದಾಳಿ ನಡೆದಿದೆ ಎಂದು ಹೇಳಿಕೊಂಡಿದೆ. ಸ್ಥಳೀಯ ಮಾಧ್ಯಮದ ಜತೆಗಿನ ಟಿವಿ ಸಂದರ್ಶನದಲ್ಲಿ ಸಾವುನೋವಿನ ವಿವರ ನೀಡಿದ ಆರೋಗ್ಯ ಸಚಿವಾಲಯ ವಕ್ತಾರ ಶರಾಫತ್ ಝಮಾನ್, ಮಾದಕವ್ಯಸನಿಗಳ ಚಿಕಿತ್ಸಾ ಆಸ್ಪತ್ರೆ ಸಂಪೂರ್ಣ ಧ್ವಂಸವಾಗಿದೆ ಎಂದು ಹೇಳಿದ್ದಾರೆ. ಉಪ ಸರ್ಕಾರಿ ವಕ್ತಾರ ಹಮಾದುಲ್ ಫಿತ್ರಾತ್ ಅವರ ಪ್ರಕಾರ, ಸಾವಿನ ಸಂಖ್ಯೆ 400ನ್ನು ದಾಟಿದೆ ಹಾಗೂ 250 ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ 9.00 ಗಂಟೆಯ ವೇಳೆಗೆ ಅಫ್ಘಾನ್ ರಾಜಧಾನಿಯಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ ಹಾಗೂ ಶರ್ಹ್ ಇ-ನವ್ ಮತ್ತು ವಾಜೀರ್ ಅಕ್ಬರ್ ಖಾನ್ ಪ್ರದೇಶಗಳಿಂದ ದಟ್ಟ ಹೊಗೆ ಕಂಡುಬಂದಿದೆ. ಇಡೀ ಕಟ್ಟಡವನ್ನು ವ್ಯಾಪಿಸಿರುವ ಬೆಂಕಿ ಆರಿಸಲು ಅಗ್ನಿಶಾಮಕ ಸಿಬ್ಬಂದಿ ಹೆಣಗಾಡುತ್ತಿರುವ ದೃಶ್ಯಗಳು ಸ್ಥಳೀಯ ಟಿವಿ ಚಾನಲ್ಗಳಲ್ಲಿ ಪ್ರಸಾರವಾಗಿವೆ. ಪಾಕಿಸ್ತಾನ ಸೇನೆ ಮತ್ತೊಮ್ಮೆ ಅಫ್ಘಾನ್ ಪ್ರದೇಶವನ್ನು ಉಲ್ಲಂಘಿಸಿದೆ. ಇದು ಅಪರಾಧ ಕೃತ್ಯ ಹಾಗೂ ಅಮಾನವೀಯ ಕೃತ್ಯ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಝಬೀದುಲ್ಲಾ ಮುಜಾಹಿದ್ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ. ಮೃತಪಟ್ಟ ಮತ್ತು ಗಾಯಗೊಂಡ ಬಹುತೇಕ ಮಂದಿ ಚಿಕಿತ್ಸೆ ಪಡೆಯುತ್ತಿದ್ದ ಮಾದಕವಸ್ತು ವ್ಯಸನಿಗಳು ಎಂದು ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದ ಮಾಹಿತಿ ಸಚಿವಾಲಯ ಈ ಆರೋಪವನ್ನು ನಿರಾಕರಿಸಿದ್ದು, ಅಫ್ಘಾನ್ ತಾಲಿಬಾನ್ನ ತಾಂತ್ರಿಕ ಸಲಕರಣೆಗಳು ಮತ್ತು ಶಸ್ತ್ರಾಸ್ತ್ರಗಳ ದಾಸ್ತಾನು ವ್ಯವಸ್ಥೆಯೂ ಸೇರಿದಂತೆ ನಿಖರವಾಗಿ ಸೇನಾ ನೆಲೆಗಳು ಮತ್ತು ಭಯೋತ್ಪಾದನೆಗೆ ಬೆಂಬಲಿಸುವ ಮೂಲಸೌಕರ್ಯಗಳನ್ನು ಹಾಗೂ ಕಾಬಲ್ ಮತ್ತು ನಂಗ್ರಹಾರ್ ನಲ್ಲಿ ನೆಲೆ ನಿಂತಿರುವ ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನ ಉಗ್ರರನ್ನು ಗುರಿ ಮಾಡಿ ದಾಳಿ ನಡೆಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಬಸವಣ್ಣನ ಬದುಕಿನ ದರ್ಶನ ಭಾಗ್ಯ ಕರುಣಿಸುವ ಜನ್ಮ ಸ್ಮಾರಕ
ಕಲಾಕೃತಿಗಳಲ್ಲಿ ಅರಳಿದ ಸಾಂಸ್ಕೃತಿಕ ನಾಯಕನ ಜೀವನಯಾತ್ರೆ
ಇರಾನ್ ಗೆ ಅಪಾರ ಶಕ್ತಿಯಿದೆ, ಅವರು ಮಣಿಯಲಿಲ್ಲ ಎಂದ ಅಮೆರಿಕ ಅಧ್ಯಕ್ಷ
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್ 17 ಹಾಗೂ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕಳೆದ 24
ಮಧ್ಯಪ್ರಾಚ್ಯದಲ್ಲಿ ಅರಾಜಕತೆ ಸೃಷ್ಟಿಸಿದ ಟ್ರಂಪ್: ಅಮೆರಿಕದ ಸೆನೆಟರ್ ಆಕ್ರೋಶ
ವಾಷಿಂಗ್ಟನ್, ಮಾ. 17: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧದ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಹಡಗುಗಳ ಭದ್ರತೆ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಗೆ ಯುಎಸ್ ಸೆನೆಟ್ ಡೆಮೋಕ್ರಾಟ್ ನಾಯಕ ಚಕ್ ಶುಮರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾರ್ಮುಝ್ ಜಲಸಂಧಿಯಲ್ಲಿ ಹಡಗು ಸಂಚಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಚೀನಾ ಸಹಾಯ ಮಾಡಬೇಕು ಎಂದು ಟ್ರಂಪ್ ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶುಮರ್, “ಹಾರ್ಮುಝ್ ಜಲಸಂಧಿಯನ್ನು ತೆರವುಗೊಳಿಸಲು ಚೀನಾ ನಮಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳುತ್ತಾರೆ. ಟ್ರಂಪ್ ತಮಾಷೆ ಮಾಡುತ್ತಿದ್ದೀರಾ?” ಎಂದು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಡೆಮೋಕ್ರಾಟ್ ಪಕ್ಷದ ಸೆನೆಟರ್ ಆಗಿರುವ ಅವರು, ಟ್ರಂಪ್ ಮಧ್ಯಪ್ರಾಚ್ಯದಲ್ಲಿ ‘ಅವ್ಯವಸ್ಥೆ’ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು. “ಈ ಪರಿಸ್ಥಿತಿಯನ್ನು ಹೇಗೆ ಅಂತ್ಯಗೊಳಿಸಬೇಕು ಎಂಬುದರ ಕುರಿತು ಅವರಿಗೆ ಯಾವುದೇ ಸ್ಪಷ್ಟ ಯೋಜನೆ ಇಲ್ಲ” ಎಂದು ಅವರು ಕಿಡಿಕಾರಿದ್ದಾರೆ.
ಇರಾನಿನಿಂದ ದಾಳಿ | ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿದ UAE; ವಿಮಾನ ಹಾರಾಟ ಬಂದ್
ಅಬುಧಾಬಿ, ಮಾ. 17: ಇರಾನಿನಿಂದ ಉಂಟಾದ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳ ಹಿನ್ನೆಲೆ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಮುಚ್ಚಿದೆ ಎಂದು ಯುಎಇಯ ಸಾಮಾನ್ಯ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ ಎಂದು Aljazeera ವರದಿ ಮಾಡಿದೆ. ವಿಮಾನಗಳ ಸಂಚಾರ ಮತ್ತು ವಾಯು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಜೊತೆಗೆ ದೇಶದ ವಾಯುಪ್ರದೇಶದ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರಿ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೂ ಮೊದಲು, ಇರಾನಿನ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಿಗೆ ಪ್ರತಿಕ್ರಿಯಿಸುತ್ತಿರುವುದಾಗಿ ಯುಎಇ ರಕ್ಷಣಾ ಸಚಿವಾಲಯ ತಿಳಿಸಿತ್ತು. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ.
ಯುಗಾದಿಗೆ ಬೆಲೆ ಏರಿಕೆ ಬಿಸಿಯಿಲ್ಲ, ದಿನಸಿ, ತರಕಾರಿ ಅಗ್ಗ
ಯುಗಾದಿಗೆ ಬಹುತೇಕರು ಒಬ್ಬಟ್ಟು ಮಾಡುತ್ತಾರೆ. ಒಬ್ಬಟ್ಟಿಗೆ ಬೇಕಾದ ತೊಗರಿಬೇಳೆ, ಕಡಲೆಬೇಳೆ, ಬೆಲ್ಲದ ಬೆಲೆ ಯಥಾಸ್ಥಿತಿಯಲ್ಲಿದೆ. ಕಡಲೆಕಾಳು, ಹೆಸರುಕಾಳು, ಉದ್ದಿನ ಬೇಳೆ ಸೇರಿದಂತೆ ಬಹುತೇಕ ಬೇಳೆ, ಕಾಳುಗಳ ಬೆಲೆಯಲ್ಲಿ ಕೂಡ ಏರಿಕೆಯಾಗಿಲ್ಲ. ಅಡುಗೆ ಎಣ್ಣೆ ದರ ಮಾತ್ರ ಸ್ವಲ್ಪ ಏರಿಕೆಯಾಗಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ಪಿಟಿಸಿಎಲ್) ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಮಂಜೂರಾದ ಭೂಮಿಯ ಮೂಲ ಮಂಜೂರಾತಿ ಷರತ್ತುಗಳನ್ನು ಉಲ್ಲಂಘಿಸಿ ಮಾಡಿದ ಮೊದಲ ಮಾರಾಟವೇ ಅಸಿಂಧುಗೊಂಡ ಬಳಿಕ ನಡೆಯುವ ಎಲ್ಲ ಮಾರಾಟ ಪ್ರಕ್ರಿಯೆಗಳೂ ರದ್ದುಗೊಳ್ಳುತ್ತವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಎಸ್ಸಿ-ಎಸ್ಟಿ ಸಮುದಾಯದವರಿವೆ ಮಂಜೂರಾಗಿದ್ದ ಜಮೀನನ್ನು ಹಲವು ಸುತ್ತಿನ ಮಾರಾಟಗಳ ಬಳಿಕ ಖರೀದಿಸಿದ್ದ ಎಸ್.ಕೆ. ಜಯರಾಮ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಯಾರೂ ಸಹ ತಮಗಿಲ್ಲದ ಹಕ್ಕು ಅಥವಾ ಮಾಲೀಕತ್ವವನ್ನು ಮತ್ತೊಬ್ಬರಿಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂಬ ಕಾನೂನು ತತ್ವವನ್ನು ಉಲ್ಲೇಖಿಸಿರುವ ನ್ಯಾಯಪೀಠ, ವಿವಾದಿತ ಜಮೀನಿನ 1956ರ ಮಾರಾಟ ಪ್ರಕ್ರಿಯೆಯ ಅನಧಿಕೃತ ಎಂದು ಘೋಷಿಸಲಾಗಿದೆ. ಇದರ ಆಧಾರದಲ್ಲಿ, ನಂತರ ನಡೆದ ಎಲ್ಲ ಮಾರಾಟ ಪ್ರಕ್ರಿಯೆಗಳೂ ಶೂನ್ಯವಾಗಲಿದೆ. ಆದ್ದರಿಂದ, ಜಮೀನು ಮಂಜೂರುದಾರರಿಂದ ಹಲವು ಮಾರಾಟಗಳ ಬಳಿಕ ಅರ್ಜಿದಾರ ಜಯರಾಮ್ 1988ರ ಖರೀದಿಸಿರುವ ಪ್ರಕ್ರಿಯೆಯೂ ಕಾನೂನಿನ ಪ್ರಕಾರ ರದ್ದಾಗಲಿದೆ ಎಂದು ಸ್ಪಷ್ಟಪಡಿಸಿದೆ. ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 4(1) ಪ್ರಕಾರ, ಅನುದಾನಿತ ಭೂಮಿಯ ಮಂಜೂರಾತಿ ಷರತ್ತು ಉಲ್ಲಂಘಿಸಿ ವರ್ಗಾವಣೆ ಮಾಡಿದರೆ ಅದು ಸ್ವಯಂ ಅಮಾನ್ಯವಾಗುತ್ತದೆ. ಮೊದಲ ಮಾರಾಟ ರದ್ದಾದ ಕೂಡಲೇ, ಆ ಜಮೀನಿಗೆ ಸಂಬಂಧಿಸಿದ ಎಲ್ಲ ಮುಂದಿನ ವ್ಯವಹಾರಗಳೂ ಕಾನೂನಿನ ದೃಷ್ಟಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಆ ವ್ಯವಹಾರದಿಂದ ಯಾವುದೇ ಹಕ್ಕು ಅಥವಾ ಮಾಲೀಕತ್ವ ಉಂಟಾಗುವುದಿಲ್ಲ ಎಂದಿರುವ ನ್ಯಾಯಪೀಠ, ಅರ್ಜಿದಾರರ ಜಮೀನು ಮಾರಾಟ ಪ್ರಕ್ರಿಯೆ ರದ್ದುಪಡಿಸಿ ಉಪ ವಿಭಾಗಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ಯಾವುದೇ ಕಾನೂನುಲೋಪ ಕಂಡುಬರುತ್ತಿಲ್ಲ ಎಂದು ತಿಳಿಸಿ, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಪ್ರಕರಣವೇನು? ಪರಿಶಿಷ್ಟ ಜಾತಿಗೆ ಸೇರಿದ ಟಿ. ಪೂಜಪ್ಪ ಎಂಬುವರಿಗೆ ಬೆಂಗಳೂರು ಪೂರ್ವ ತಾಲೂಕಿನ ಖಾಜಿ ಸೋನ್ನೆನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 143ರಲ್ಲಿ 6 ಎಕರೆ 15 ಗುಂಟೆ ಭೂಮಿಯನ್ನು ಸರ್ಕಾರ 1947ರಲ್ಲಿ ಮಂಜೂರು ಮಾಡಿತ್ತು. ಪೂಜಪ್ಪ ನಿಧನದ ನಂತರ ಆತನ ಪತ್ನಿ ಹಾಗೂ ಅಪ್ರಾಪ್ತ ಪುತ್ರರು 1956ರ ಅಕ್ಟೋಬರ್ 25ರಂದು ಪೂಜಪ್ಪನಿಗೆ ಮಂಜೂರಾಗಿದ್ದ ಜಮೀನಿನಲ್ಲಿ 3 ಎಕರೆ 26 ಗುಂಟೆ ಜಮೀನನ್ನು ಬಸಮ್ಮ ಎಂಬವರಿಗೆ ಮಾರಾಟ ಮಾಡಿದ್ದರು. ಈ ನಡುವೆ ಹಲವು ಸುತ್ತಿನ ಮಾರಾಟದ ಬಳಿಕ ಇದೇ ಜಮೀನನ್ನು ಪದ್ಮಾವತಿ ಎಂಬುವರು ಖರೀದಿಸಿದ್ದು, ಅದನ್ನು ಅರ್ಜಿದಾರ ಜಯರಾಮ್ 1988ರ ಸೆಪ್ಟೆಂಬರ್ 22ರಂದು ಪದ್ಮಾವತಿ ಅವರಿಂದ ಖರೀದಿಸಿದ್ದರು. ಆದರೆ, ಈ ಮಾರಾಟ ಪ್ರಕ್ರಿಯೆಯು (ಬಸಮ್ಮ ಎಂಬುವರಿಗೆ ಮಾರಾಟ) ಪಿಟಿಸಿಎಲ್ ಕಾಯ್ದೆಯ ಪ್ರಕಾರ ಜಮೀನು ಮಂಜೂರಾತಿ ಸಂದರ್ಭದಲ್ಲಿ ಸರ್ಕಾರ ವಿಧಿಸಿದ್ದ ಷರತ್ತುಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು, ಜಮೀನನ್ನು ಪೂಜಪ್ಪ ಅವರ ವಾರಸುದಾರರಿಗೆ ಹಿಂದಿರುಗಿಸುವಂತೆ ಆದೇಶಿಸಿದ್ದರು. ಈ ಸಂಬಂಧ ಉಪ ವಿಭಾಗಾಧಿಕಾರಿ, ವಿಶೇಷ ಜಿಲ್ಲಾಧಿಕಾರಿಗಳು ಹಾಗೂ ಹೈಕೋರ್ಟ್ನಲ್ಲಿ ಹಲವು ವರ್ಷಗಳ ವ್ಯಾಜ್ಯ ನಡೆದು ಅಂತಿಮವಾಗಿ ಮತ್ತೆ ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ಹೈಕೋರ್ಟ್, ಉಪ ವಿಭಾಗಾಧಿಕಾರಿಗಳಿಗೆ ವರ್ಗಾಯಿಸಿತ್ತು. ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಿದ್ದ ಉಪ ವಿಭಾಗಾಧಿಕಾರಿಗಳು, ಜಮೀನನ್ನು ಪೂಜಪ್ಪ ಅವರ ವಾರಸುದಾರರ ಹೆಸರಿಗೆ ಹಿಂದಿರುಗಿಸುವಂತೆ 1998ರ ಆದೇಶವನ್ನು 2024ರಲ್ಲಿ ಎತ್ತಿ ಹಿಡಿದಿದ್ದರಲ್ಲದೆ, 1988ರಲ್ಲಿ ಜಯರಾಮ್ ಅವರು ಮಾಡಿಕೊಂಡಿದ್ದ ಮಾರಾಟ ಕ್ರಯಪತ್ರವನ್ನೂ ರದ್ದುಪಡಿಸಿದ್ದರು. ಇದನ್ನು ಪ್ರಶ್ನಿಸಿ ಜಯರಾಮ್ ಸಲ್ಲಿಸಿದ ಮೇಲ್ಮನವಿಯನ್ನು ಜಿಲ್ಲಾಧಿಕಾರಿಗಳು 2025ರಲ್ಲಿ ತಿರಸ್ಕರಿಸಿದ್ದರು. ಇದರಿಂದ, ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಆದೇಶ ರದ್ದುಕೋರಿ ಜಯರಾಮ್ ಹೈಕೋರ್ಟ್ ಮೆಟ್ಟಿಲೇರಿದ್ದರು.
Hanur | ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲೆಯ ಸಮುದಾಯಕ್ಕೆ ಅನ್ಯಾಯ : ಪ್ರತಿಭಟನೆ
ಹನೂರು : ಒಳಮೀಸಲಾತಿ ಕುರಿತಾಗಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲೆಯ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಹನೂರು ಪಟ್ಟಣದಲ್ಲಿ ಬಲಗೈ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಹನೂರು ತಾಲೂಕು ಹಾಗೂ ಚಾಮರಾಜನಗರ ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹನೂರು ಮತ್ತು ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಸಮುದಾಯದ ಸಂಘಟನೆಗಳ ಮುಖಂಡರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನಾಕಾರರು ಮೊದಲು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಜಮಾಯಿಸಿ ಬಳಿಕ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಮೆರವಣಿಗೆ ಆರಂಭಿಸಿದರು. ಬೃಹತ್ ಪ್ರತಿಭಟನಾ ಮೆರವಣಿಗೆ ಮಹದೇಶ್ವರ ಕ್ರೀಡಾಂಗಣದಿಂದ ಆರಂಭವಾಗಿ ಪಟ್ಟಣದ ಕೆಂಪೇಗೌಡ ವೃತ್ತ, ಖಾಸಗಿ ಬಸ್ ನಿಲ್ದಾಣ, ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ಸಾಗಿತು. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಚೈತ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರರು, ನಾಗಮೋಹನ್ ದಾಸ್ ಸಮಿತಿ ನೀಡಿರುವ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ಸರಕಾರ ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳ ನಡುವೆ ಭಿನ್ನತೆ ಉಂಟಾಗುವಂತೆ ತರಾತುರಿಯಲ್ಲಿ ಒಳಮೀಸಲಾತಿ ಜಾರಿಗೆ ಮುಂದಾಗಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಇದೇ ತಿಂಗಳ 25ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಪ್ರತಿಭಟನೆಯಲ್ಲಿ ಹನೂರು ಪಟ್ಟಣದ ಯಜಮಾನರು, ಉಪನ್ಯಾಸಕ ಮಹದೇವಸ್ವಾಮಿ, ಮಲ್ಲಿಕಾರ್ಜುನ, ಪಟ್ಟಣ ಪಂಚಾಯತ್ ಮಾಜಿ ಉಪಾದ್ಯಕ್ಷ, ಬಸವರಾಜು, ಮಾಜಿ ಸದಸ್ಯ ಮಹೇಶ್ ಸಿದ್ದರಾಜು ಮತ್ತಿತರರು ಭಾಗವಹಿಸಿದ್ದರು. ಹಕ್ಕೊತ್ತಾಯಗಳು ನ್ಯಾ.ನಾಗಮೋಹನ್ ದಾಸ್ ಸಮಿತಿ ನೀಡಿರುವ ಒಳಮೀಸಲಾತಿ ವರದಿಯನ್ನು ತಕ್ಷಣವೇ ರದ್ದುಪಡಿಸಬೇಕು. ಶೈಕ್ಷಣಿಕ ಪ್ರವೇಶ ಸಂದರ್ಭಗಳಲ್ಲಿ ಮೂರುಕ್ಕಿಂತ ಕಡಿಮೆ ಪ್ರವೇಶಾತಿಗಳು ಇದ್ದರೆ ಅವನ್ನು ಎಸ್.ಸಿ. ಸಾಮಾನ್ಯವೆಂದು ಪರಿಗಣಿಸಿ ಪರಿಶಿಷ್ಟ ಜಾತಿಯ ಎಲ್ಲಾ ವರ್ಗದವರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಸರಕಾರಿಉದ್ಯೋಗ ನೇಮಕಾತಿಯಲ್ಲಿ ಮೂರಕ್ಕಿಂತ ಕಡಿಮೆ ಹುದ್ದೆಗಳು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರೆ ಅವನ್ನು ಎಸ್ಸಿ ಸಾಮಾನ್ಯವೆಂದು ಪರಿಗಣಿಸಿ ಪರಿಶಿಷ್ಟ ಜಾತಿಯ ಎಲ್ಲಾ 101 ಸಮುದಾಯಗಳಿಗೂ ಅರ್ಜಿ ಸಲ್ಲಿಸುವ ಅವಕಾಶ ನೀಡಬೇಕು. ಒಳಮೀಸಲಾತಿಯಲ್ಲಿ ಕಂಡುಬರುವ ವ್ಯತ್ಯಾಸಗಳನ್ನು ಸರಿಪಡಿಸುವ ತನಕ ಯಾವುದೇ ಸರಕಾರಿ ಹುದ್ದೆಗಳ ನೇಮಕಾತಿ ನಡೆಸಬಾರದು. ಪರಿಶಿಷ್ಟ ಜಾತಿಯಜಾತಿ ಪ್ರಮಾಣಪತ್ರವನ್ನು ಹಿಂದಿನಂತೆ ನೀಡುವ ವ್ಯವಸ್ಥೆ ಮುಂದುವರಿಸಬೇಕು.
Belagavi | ಹಣ ಡಬಲ್ ಮಾಡುವ ಆಮಿಷ; ಅಂತರ್ರಾಜ್ಯ ವಂಚಕರ ಜಾಲ: ಇಬ್ಬರು ಪೊಲೀಸ್ ಸಿಬ್ಬಂದಿ ಸಹಿತ 7 ಮಂದಿ ಬಂಧನ
ಬೆಳಗಾವಿ : ಸಾರ್ವಜನಿಕರಿಗೆ ಹಣವನ್ನು ಡಬಲ್ ಅಥವಾ ನಾಲ್ಕು ಪಟ್ಟು ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರ್ರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ಕೆ.ರಾಮರಾಜನ್ ತಿಳಿಸಿದ್ದಾರೆ. ಗೋಕಾಕ ತಾಲೂಕಿನ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚನೆ ನಡೆಸುತ್ತಿದ್ದ ಜಾಲದ ಮೇಲೆ ಗೋಕಾಕ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಬಂಧಿತರನ್ನು ಪರಶುರಾಮ ಭೀಮಶಿ ಬಡಕರಿ, ಇಮ್ರಾನ್ ಬಾಬಾಜಾನ್ ಜುನೇದಿ, ಜಯಶ್ರೀ ಬಾಬು ಕಾಂಬಳೆ, ಮನೀಷಾ ರಾಜು ಗಾಯಕವಾಡ (ಮಾರ್ಗರೆಟ್ ಡೇವಿಡ್ ಗಾಯಕವಾಡ), ಉಜ್ವಲಾ ತುಳಸಿರಾಮ ಬಿಲಾನೆ, ಹಾಗೂ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಸಿಬ್ಬಂದಿಯಾದ ಅನಂತ ಪ್ರಕಾಶ ನರವಾಡೆ ಮತ್ತು ದಿಲ್ದಾರ್ ರಬ್ಬಾನಿ ಶೇಖ ಎಂದು ಗುರುತಿಸಲಾಗಿದೆ. ವಂಚಕರು ಬಿಳಿ ಕಾಗದದ ಹಾಳೆಗಳಿಗೆ ಕಪ್ಪು ಬಣ್ಣ ಹಚ್ಚಿ, ಅದನ್ನು ವಿಶೇಷ ರಾಸಾಯನಿಕ ಬಳಸಿ ಅಸಲಿ ನೋಟುಗಳಾಗಿ ಪರಿವರ್ತಿಸಬಹುದು ಎಂದು ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಂತರರಾಜ್ಯ ವಂಚನೆ ಜಾಲದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಗೋಕಾಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ತಮಿಳು ಕವಿ, ಗೀತರಚನೆಕಾರ ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ ನೀಡಿದ್ದಕ್ಕೆ ಆಕ್ರೋಶ ಯಾಕೆ? ಏನಿದು ವಿವಾದ?
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಜನಪ್ರಿಯ ಸಂಗೀತ ಮತ್ತು ಆಧುನಿಕ ತಮಿಳು ಕಾವ್ಯದ ಭಾಷೆಯನ್ನು ರೂಪಿಸಿದ ತಮಿಳು ಕವಿ ಮತ್ತು ಗೀತರಚನೆಕಾರ ರಾಮಸ್ವಾಮಿ ವೈರಮುತ್ತು 2025ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಭಾರತದ ಅತ್ಯುನ್ನತ ಸಾಹಿತ್ಯ ಗೌರವವಾಗಿದೆ. 60ನೇ ಜ್ಞಾನಪೀಠ ಪ್ರಶಸ್ತಿಯು ವೈರಮುತ್ತು ಅವರ ತಮಿಳು ಸಾಹಿತ್ಯಕ್ಕೆ ನೀಡಿದ ಕೊಡುಗೆಗಳನ್ನು ಮತ್ತು ಕವಿ ಹಾಗೂ ಗೀತರಚನೆಕಾರರಾಗಿ ಅವರ ಸಾಧನೆಯನ್ನು ಗುರುತಿಸಿದೆ ಎಂದು ಭಾರತೀಯ ಜ್ಞಾನಪೀಠ ಸಾಹಿತ್ಯ ಸಂಸ್ಥೆ ಹೇಳಿದೆ. 1964ರಿಂದ ಈ ಪ್ರಶಸ್ತಿಯನ್ನು ಭಾರತೀಯ ಭಾಷೆಗಳಲ್ಲಿನ ಬರಹಗಾರರಿಗೆ ಪ್ರತೀ ವರ್ಷ ನೀಡಲಾಗುತ್ತಿದೆ. ಇದು 11 ಲಕ್ಷ ರೂ. ನಗದು ಬಹುಮಾನ, ಸರಸ್ವತಿಯ ಕಂಚಿನ ಪ್ರತಿಮೆ ಮತ್ತು ಭಾರತದ ರಾಷ್ಟ್ರಪತಿಗಳು ನೀಡುವ ಪ್ರಶಸ್ತಿಯನ್ನು ಒಳಗೊಂಡಿದೆ. 1975ರಲ್ಲಿ ಅಕಿಲನ್ ಮತ್ತು 2002ರಲ್ಲಿ ಜಯಕಾಂತನ್ ನಂತರ ಈ ಪ್ರಶಸ್ತಿಯನ್ನು ಪಡೆದ ಮೂರನೇ ತಮಿಳು ಸಾಹಿತಿಯಾಗಿದ್ದಾರೆ 72 ವರ್ಷದ ವೈರಮುತ್ತು. ಇವರು ತಮಿಳು ಕಾವ್ಯಕ್ಕಾಗಿ ಗೌರವ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಆಯ್ಕೆ ಮಂಡಳಿಯ ಪ್ರಕಾರ, ಈ ಪ್ರಶಸ್ತಿಯು ತಮಿಳು ಸಾಹಿತ್ಯ, ಸೃಜನಶೀಲ ಬರವಣಿಗೆ ಮತ್ತು ವಿಶಿಷ್ಟ ಕಾವ್ಯಾತ್ಮಕ ಅಭಿವ್ಯಕ್ತಿಗೆ ಅವರ ಮಹತ್ವದ ಕೊಡುಗೆಯನ್ನು ಗುರುತಿಸುತ್ತದೆ. ಸಂಸ್ಥೆಯ ಆಯ್ಕೆ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ಜ್ಞಾನಪೀಠ ನಿರ್ದೇಶಕ ಡಾ. ಆರ್.ಎನ್. ತಿವಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನನಗೆ ಸಾಹಿತ್ಯವು ಮಾನವಕುಲವನ್ನು ಉನ್ನತೀಕರಿಸಬೇಕು. ನಾನು ಅವರ ಕನಸುಗಳು ಮತ್ತು ಭಾವನೆಗಳ ನಡುವೆ ಪ್ರಯಾಣಿಸುತ್ತೇನೆ. ನನಗೆ ಎರಡು ರೆಕ್ಕೆಗಳಿದ್ದವು. ಈ ಪ್ರಶಸ್ತಿಯೊಂದಿಗೆ ನನಗೆ ಇನ್ನೂ ಎರಡು ರೆಕ್ಕೆಗಳಿವೆ ಎಂದು ಭಾವಿಸುತ್ತೇನೆ. ನಾನು ಈ ಪ್ರಶಸ್ತಿಯನ್ನು ತಮಿಳು ಸಮಾಜ ಮತ್ತು ಅದರ ಜನರಿಗೆ ಕೃತಜ್ಞತೆಯಿಂದ ಅರ್ಪಿಸುತ್ತೇನೆ,” ಎಂದು ಪ್ರಶಸ್ತಿ ಘೋಷಣೆಯಾದ ಬಳಿಕ ವೈರಮುತ್ತು ಹೇಳಿದ್ದಾರೆ. 1953ರಲ್ಲಿ ಥೇಣಿ ಜಿಲ್ಲೆಯಲ್ಲಿ ಜನಿಸಿದ ವೈರಮುತ್ತು ತಮ್ಮ 18ನೇ ವಯಸ್ಸಿನಲ್ಲಿ ತಮ್ಮ ಮೊದಲ ಕವನ ಸಂಕಲನ ‘ವೈಗರೈ ಮೀಂಗಲ್’ ಅನ್ನು ಪ್ರಕಟಿಸಿದರು. 1980ರಲ್ಲಿ ‘ನಿಝಳ್ಗಳ್’ ಚಲನಚಿತ್ರದ ಮೂಲಕ ಗೀತರಚನೆಕಾರರಾಗಿ ತಮಿಳು ಚಲನಚಿತ್ರೋದ್ಯಮಕ್ಕೆ ಪ್ರವೇಶಿಸಿದರು. ನಿರ್ದೇಶಕ ಭಾರತಿರಾಜ ಮತ್ತು ಸಂಗೀತ ಸಂಯೋಜಕ ಇಳಯರಾಜ ಅವರೊಂದಿಗೆ ಕೆಲಸ ಮಾಡಿದ್ದಾರೆ. ನಾಲ್ಕು ದಶಕಗಳಲ್ಲಿ ಅವರು 8,000ಕ್ಕೂ ಹೆಚ್ಚು ಹಾಡುಗಳನ್ನು ಬರೆದಿದ್ದಾರೆ. ಸಿನಿಮಾ ಸಾಹಿತ್ಯಕ್ಕಾಗಿ ಏಳು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. “ಕವಿಪೆರರಸು” ಎಂಬ ಬಿರುದೂ ಇವರಿಗಿದೆ. ಚಲನಚಿತ್ರ ಗೀತೆಗಳು ಮಾತ್ರವಲ್ಲದೆ ಕಾವ್ಯ, ಕಾದಂಬರಿಗಳು ಮತ್ತು ಸಾಂಸ್ಕೃತಿಕ ಪ್ರಬಂಧಗಳನ್ನೂ ವೈರಮುತ್ತು ರಚಿಸಿದ್ದಾರೆ. ಸಮಕಾಲೀನ ತಮಿಳು ಸಾಹಿತ್ಯದ ಪ್ರಮುಖ ಸಾಹಿತಿ ಎಂದು ಇವರನ್ನು ಪರಿಗಣಿಸಲಾಗಿದೆ. ಅವರ ಕಾದಂಬರಿಗಳು ಹೆಚ್ಚಾಗಿ ಗ್ರಾಮೀಣ ಜೀವನ, ವಲಸೆ ಮತ್ತು ಜೀವನೋಪಾಯಗಳನ್ನು ಚಿತ್ರಿಸುತ್ತವೆ. ಕಾವ್ಯ ಮತ್ತು ಕಾದಂಬರಿಯಿಂದ ಹಿಡಿದು ವಿಜ್ಞಾನ, ಸಾಮಾಜಿಕ ಬದಲಾವಣೆ ಹಾಗೂ ಭೂಮಿ, ಜನರು ಮತ್ತು ತಮಿಳು ಗುರುತಿನ ನಡುವಿನ ಸಂಬಂಧದ ಕುರಿತ ಪ್ರಬಂಧಗಳವರೆಗೆ ಅವರು ಹಲವಾರು ಪ್ರಕಾರಗಳಲ್ಲಿ ಸುಮಾರು 39 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ವೈರಮುತ್ತು ಅವರ ಬೆಂಬಲಿಗರು ಅವರ ಪುಸ್ತಕಗಳು ಸುಮಾರು ಮೂರು ಮಿಲಿಯನ್ ಪ್ರತಿಗಳು ಮಾರಾಟವಾಗಿವೆ ಎಂದು ಹೇಳುತ್ತಾರೆ. ಆದಾಗ್ಯೂ, ಈ ಪ್ರಶಸ್ತಿಯು ಕೆಲವು ಬರಹಗಾರರು, ಕಲಾವಿದರು ಮತ್ತು ಕಾರ್ಯಕರ್ತರಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಭಾರತದಲ್ಲಿ #MeToo ಚಳವಳಿಯ ಸಮಯದಲ್ಲಿ ವೈರಮುತ್ತು ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬಂದಿದ್ದವು. #MeToo ಆರೋಪ ಈ ಪ್ರಶಸ್ತಿಯು ಕವಿಯ ಸುತ್ತಲಿನ ವಿವಾದಗಳನ್ನು ಮತ್ತೆ ಮುಂದಕ್ಕೆ ತಂದಿದೆ. 2018ರಲ್ಲಿ #MeToo ಆಂದೋಲನದ ಸಮಯದಲ್ಲಿ ಹಿನ್ನೆಲೆ ಗಾಯಕಿ ಚಿನ್ಮಯಿ ಶ್ರೀಪಾದ ಅವರು ವೈರಮುತ್ತು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದರು. 2005ರಲ್ಲಿ ಅವರು ತನ್ನಲ್ಲಿ ಸಹಕರಿಸಲು ಕೇಳಿಕೊಂಡರು ಎಂದು ಗಾಯಕಿ ಆರೋಪಿಸಿದ್ದಾರೆ. ಅದೇ ಸಮಯದಲ್ಲಿ ಇನ್ನೂ ಹಲವಾರು ಮಹಿಳೆಯರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಗಳನ್ನು ಹಂಚಿಕೊಂಡಿದ್ದರು. ವೈರಮುತ್ತು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ತಮಿಳು ಚಲನಚಿತ್ರೋದ್ಯಮದಲ್ಲಿನ ಈ ಸಮಸ್ಯೆ ಬಗ್ಗೆ ಮಾತನಾಡಿದ್ದ ಚಿನ್ಮಯಿ ವಿರುದ್ಧ ವೈರಮುತ್ತು ಬೆಂಬಲಿಗರು ಟೀಕೆ ಮತ್ತು ಟ್ರೋಲ್ ನಡೆಸಿದ್ದರು. ಇದಕ್ಕೆ ಹಿಂಜರಿಯದ ಚಿನ್ಮಯಿ, #MeToo ಆರೋಪವನ್ನು ಈಗ ಮತ್ತೆ ಚರ್ಚೆಗೆ ತಂದು, ವಿವಾದಿತ ವ್ಯಕ್ತಿಗೆ ಪ್ರಶಸ್ತಿ ಘೋಷಿಸಿರುವುದನ್ನು ಪ್ರಶ್ನಿಸಿದ್ದಾರೆ. ಹಿರಿಯ ಸಂಗೀತ ಸಂಯೋಜಕ ಗಂಗೈ ಅಮರನ್ ಇತ್ತೀಚೆಗೆ ಚಿನ್ಮಯಿಗೆ ಬೆಂಬಲ ವ್ಯಕ್ತಪಡಿಸಿ, ಜನರು ಇಂತಹ ದೂರುಗಳನ್ನು ನೀಡುವ ಮಹಿಳೆಯರ ಪರವಾಗಿ ನಿಲ್ಲಬೇಕು ಎಂದು ಹೇಳಿದ್ದಾರೆ. ವೈರಮುತ್ತು ಅವರನ್ನು ಉಲ್ಲೇಖಿಸಿ, “ಅವರು ಒಳ್ಳೆಯ ಕವಿ ಆದರೆ ಒಳ್ಳೆಯ ಮನುಷ್ಯನಲ್ಲ. ವೈರಮುತ್ತು ನನ್ನ ಸ್ನೇಹಿತ, ಆದರೆ ಚಿನ್ಮಯಿಯನ್ನು ಅವರ ಬಗ್ಗೆ ಮಾತನಾಡದಂತೆ ನಾನು ಕೇಳಲು ಸಾಧ್ಯವಿಲ್ಲ” ಎಂದಿದ್ದಾರೆ. ಖ್ಯಾತ ಬರಹಗಾರ ಬಿ. ಜಯಮೋಹನ್ ವೈರಮುತ್ತು ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ವೈರಮುತ್ತು ಪ್ರಶಸ್ತಿಗಳಿಗಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ಯಾರ ಬೂಟುಗಳನ್ನು ಬೇಕಾದರೂ ನೆಕ್ಕುತ್ತಾರೆ. ಅವರು ಕರುಣಾನಿಧಿಯವರ ಸ್ನೇಹಿತರಾಗಿದ್ದರು. ಅವರು ಮೋದಿಯವರ ಕವಿತೆಗಳನ್ನು ಅನುವಾದಿಸುತ್ತಾರೆ. ಅವರು ಡಿಎಂಕೆಗೆ ಹತ್ತಿರವಾಗಿದ್ದಾರೆ ಮತ್ತು ಬಿಜೆಪಿಯೊಂದಿಗೆ ಇರುತ್ತಾರೆ. ಅವರಿಗೆ ಯಾವುದೇ ಹಿಂಜರಿಕೆ ಮತ್ತು ನಾಚಿಕೆ ಇಲ್ಲ” ಎಂದು ಆರೋಪಿಸಿದ್ದಾರೆ. ಘೋಷಣೆಯ ನಂತರ ಚಲನಚಿತ್ರ ಮತ್ತು ಸಾಹಿತ್ಯ ಜಗತ್ತಿನ ಹಲವಾರು ರಾಜಕೀಯ ನಾಯಕರು ಮತ್ತು ವ್ಯಕ್ತಿಗಳು ವೈರಮುತ್ತು ಅವರನ್ನು ಅಭಿನಂದಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ರಜನಿಕಾಂತ್ ಮತ್ತು ನಟ-ರಾಜಕಾರಣಿ ಕಮಲ್ ಹಾಸನ್ ಅವರು ಪ್ರಕಟಣೆಯನ್ನು ಸ್ವಾಗತಿಸಿ ತಮಿಳು ಸಾಹಿತ್ಯ ಮತ್ತು ಕಾವ್ಯಕ್ಕೆ ವೈರಮುತ್ತು ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಆದಾಗ್ಯೂ, ಈ ಘೋಷಣೆಯು ಹಲವಾರು ಸ್ತ್ರೀವಾದಿ ಕಾರ್ಯಕರ್ತರಿಂದ ಟೀಕೆಗೆ ಗುರಿಯಾಗಿದೆ. ಗಾಯಕಿ ಚಿನ್ಮಯಿ ಶ್ರೀಪಾದ ಮತ್ತು ಇತರರು ಈ ನಿರ್ಧಾರವನ್ನು ಪ್ರಶ್ನಿಸಿದ್ದು, 2018ರಲ್ಲಿ #MeToo ಚಳವಳಿಯ ಸಮಯದಲ್ಲಿ ಹಲವಾರು ಮಹಿಳೆಯರು ವೈರಮುತ್ತು ವಿರುದ್ಧ ಮಾಡಿದ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಉಲ್ಲೇಖಿಸಿದ್ದಾರೆ. ವೈರಮುತ್ತುಗೆ ಅಭಿನಂದನೆ ಸಲ್ಲಿಸಿದವರ ವಿರುದ್ಧ ಚಿನ್ಮಯಿ ಟೀಕೆ 2018ರಲ್ಲಿ ವಿವಿಧ ವಯೋಮಾನದ ಅನೇಕ ಮಹಿಳೆಯರಿಗೆ ಒಬ್ಬ ಕವಿ-ಗೀತರಚನೆಕಾರ ಕಿರುಕುಳ ನೀಡಿದ್ದರು. ಇಂದು ಜ್ಞಾನಪೀಠ ಪ್ರಶಸ್ತಿಯನ್ನು ಆ ವ್ಯಕ್ತಿಗೆ ನೀಡಲಾಗಿದೆ. ಅವರ ಮೇಲೆ ಆರೋಪ ಮಾಡಿದ ಮಹಿಳೆಯರ ಸಾಮೂಹಿಕ ಧ್ವನಿಯನ್ನು ಮೌನಗೊಳಿಸಲಾಗಿದೆ ಎಂದು ಚಿನ್ಮಯಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಘೋಷಣೆಯಾದ ಕೂಡಲೇ ವೈರಮುತ್ತುಗೆ ಅಭಿನಂದನೆ ಸಲ್ಲಿಸಿದವರನ್ನೂ ಚಿನ್ಮಯಿ ಪ್ರಶ್ನಿಸಿದ್ದಾರೆ. ನಟ ಕಮಲ್ ಹಾಸನ್ ಎಕ್ಸ್ ಪೋಸ್ಟ್ನಲ್ಲಿ ವೈರಮುತ್ತು ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಚಿನ್ಮಯಿ, “For God’s sake… ಅವರ ವಲಯಗಳಲ್ಲಿ ನಡೆದ ಲೈಂಗಿಕ ದೌರ್ಜನ್ಯದ ದಾಖಲೆಗಳನ್ನು ನಿರ್ಲಕ್ಷಿಸುತ್ತಾ, ಪ್ರಭಾವಿ ಸಿನಿಮಾ ಕಲಾವಿದರು ರಾಜಕೀಯಕ್ಕೆ ಬರುತ್ತಿರುವುದು ಮಹಿಳಾ ಮತದಾರರಿಗೆ ಒಂದು ಎಚ್ಚರಿಕೆಯಾಗಿದೆ. ಪುರುಷರು ಎಂದಿಗೂ ನಮ್ಮ ಪರವಾಗಿರುವುದಿಲ್ಲ. ವಿಚಿತ್ರವಾದ ಸಂಗತಿ—ತಮ್ಮದೇ ಪಕ್ಷದ ಮಹಿಳೆಯರಲ್ಲಿ ಒಬ್ಬರು ಸಾರ್ವಜನಿಕವಾಗಿ ಕವಿಯನ್ನು ಹೆಸರಿಸಿದ್ದಾರೆ. ಅಂತೂ ಕೊನೆಗೂ ಪುರುಷರು ತಮ್ಮ ಸಹೋದರರು, ಮಾವ, ಅಪ್ಪ, ಸ್ನೇಹಿತರು, ಮಾರ್ಗದರ್ಶಕರ ಪರವಾಗಿ ನಿಲ್ಲುತ್ತಾರೆ. ಹೆಚ್ಚಿನ ಮಹಿಳೆಯರು ಆಘಾತಕ್ಕೊಳಗಾಗಿದ್ದರೆ ಯಾರು ಕಾಳಜಿ ವಹಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ವೈರಮುತ್ತು ಬಗ್ಗೆ ರಜನಿಕಾಂತ್ ಬರೆದ ಪೋಸ್ಟ್ಗೆ ಚಿನ್ಮಯಿ “ಅಯ್ಯೋ, ಇದೂ ಅರ್ಥವಾಗುತ್ತಿಲ್ಲವೇ?” ಎಂದು ಪ್ರತಿಕ್ರಿಯಿಸಿದ್ದಾರೆ. “ನಮ್ಮ ರಾಷ್ಟ್ರದ ಶ್ರೇಷ್ಠ ಜ್ಞಾನಪೀಠ ಪ್ರಶಸ್ತಿ ಪಡೆದ ನನ್ನ ಆತ್ಮೀಯ ಸ್ನೇಹಿತ, ಗೌರವಾನ್ವಿತ ಕವಿ ವೈರಮುತ್ತು ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ರಜನಿಕಾಂತ್ ಹೇಳಿದ್ದಾರೆ. ವೈರಮುತ್ತು ಅವರನ್ನು ಟೀಕಿಸಿ ಮೇಲಿಂದ ಮೇಲೆ ಪೋಸ್ಟ್ ಮಾಡಿರುವ ಚಿನ್ಮಯಿ, ಜಯಕಾಂತನ್ ಅವರಂತಹ ಮಹನೀಯರ ನಂತರ ಈ ಗೌರವ ಸಿಗುತ್ತಿದೆ ಎಂದು ಹೇಳಲಾಗುತ್ತದೆ. ಆದರೆ ಜಯಕಾಂತನ್ ಅವರ ಪುತ್ರಿಯೇ ವೈರಮುತ್ತು ವಿರುದ್ಧ ಧ್ವನಿ ಎತ್ತಿದ್ದರು. ಜಯಕಾಂತನ್ ತಮ್ಮನ್ನು ಹೊಗಳಿದ್ದಾರೆ ಎಂಬಂತೆ ನಕಲಿ ಪತ್ರವೊಂದನ್ನು ವೈರಮುತ್ತು ಸೃಷ್ಟಿಸಿದ್ದರು ಎಂದು ಅವರು ಆರೋಪಿಸಿದ್ದಾರೆ. ಮತ್ತೊಂದು ಪೋಸ್ಟ್ನಲ್ಲಿ #MeToo ಆಂದೋಲನದ ಸಮಯದಲ್ಲಿ ಸಾರ್ವಜನಿಕವಾಗಿ ಮಾತನಾಡಿದ ನಂತರ ತಾನು ಎದುರಿಸಬೇಕಾದ ಪರಿಣಾಮಗಳ ಬಗ್ಗೆ ಚಿನ್ಮಯಿ ಹೇಳಿದ್ದಾರೆ. ಅವರ ವಿರುದ್ಧ ಆರೋಪ ಮಾಡಿದ ಮಹಿಳೆಯರ ಸಾಮೂಹಿಕ ಧ್ವನಿಯನ್ನು ಮೌನಗೊಳಿಸಲಾಯಿತು. ನಾನು ಭಾರೀ ಬೆಲೆ ತೆರಬೇಕಾಯಿತು. ತಮ್ಮ ಕನಸುಗಳನ್ನು ತ್ಯಜಿಸಿದ ಉಳಿದ ಮಹಿಳೆಯರು ನನ್ನಷ್ಟು ಅದೃಷ್ಟವಂತರಾಗಿರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಹಿಂದಿನ ವಿವಾದ ಜ್ಞಾನಪೀಠ ಪ್ರಶಸ್ತಿಯ ಸುತ್ತಲಿನ ಚರ್ಚೆಯಂತೆ, 2021ರಲ್ಲಿ ಕೇರಳದಲ್ಲಿ ONV ಸಾಹಿತ್ಯ ಪ್ರಶಸ್ತಿಯ ಸಂದರ್ಭದಲ್ಲೂ ವಿವಾದ ಉಂಟಾಗಿತ್ತು. ಆ ವರ್ಷ ವೈರಮುತ್ತು ಅವರಿಗೆ ಪ್ರಶಸ್ತಿ ಘೋಷಿಸಿದಾಗ, ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಉಲ್ಲೇಖಿಸಿ ಸಾಂಸ್ಕೃತಿಕ ಸಮುದಾಯದ ಕೆಲವು ಭಾಗಗಳಿಂದ ಟೀಕೆ ವ್ಯಕ್ತವಾಯಿತು. ಪ್ರಸಿದ್ಧ ಮಲಯಾಳಂ ಕವಿ ONV ಕುರುಪ್ ಅವರ ಸ್ಮರಣಾರ್ಥ ಸ್ಥಾಪಿಸಲಾದ ಈ ಪ್ರಶಸ್ತಿಯು ಮಲಯಾಳಂ ಮತ್ತು ಇತರ ಭಾರತೀಯ ಭಾಷೆಗಳ ಕವಿಗಳನ್ನು ಗುರುತಿಸುತ್ತದೆ. ಕೇರಳದ ಪ್ರಮುಖ ಸಾಹಿತ್ಯ ವ್ಯಕ್ತಿಗಳಲ್ಲಿ ಒಬ್ಬರಾದ ONV 2016ರಲ್ಲಿ ನಿಧನರಾದರು. ವೈರಮುತ್ತು ಅವರನ್ನು ಆಯ್ಕೆ ಮಾಡಿದ ತೀರ್ಪುಗಾರರಲ್ಲಿ ತುಂಜತ್ತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಅನಿಲ್ ವಲ್ಲತ್ತೋಳ್, ಕವಿಗಳಾದ ಆಲಂಕೋಡ್ ಲೀಲಾಕೃಷ್ಣನ್ ಮತ್ತು ಪ್ರಭಾ ವರ್ಮಾ ಇದ್ದರು. ಈ ಘೋಷಣೆಯು ಮಲಯಾಳಂ ಸಾಂಸ್ಕೃತಿಕ ಕ್ಷೇತ್ರದೊಳಗಿನಿಂದಲೇ ಟೀಕೆಗೆ ಗುರಿಯಾಯಿತು. ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಕುರುಪ್ ಅವರ ಹೆಸರಿನಲ್ಲಿ ಗೌರವ ನೀಡುವುದು ಕವಿಯ ಪರಂಪರೆಗೆ ಅವಮಾನವಾಗಿದೆ ಎಂದು ನಟಿ ಪಾರ್ವತಿ ತಿರುವೋತ್ತು ಹೇಳಿದ್ದಾರೆ. ಮಲಯಾಳಂ ಚಲನಚಿತ್ರೋದ್ಯಮದ ಮಹಿಳಾ ವೃತ್ತಿಪರರ ವೇದಿಕೆಯಾದ Women in Cinema Collective (WCC) ಕೂಡ ಈ ನಿರ್ಧಾರವನ್ನು ಖಂಡಿಸಿತು. ಕೆ.ಆರ್. ಮೀರಾ, ಗೀತು ಮೋಹನ್ ದಾಸ್ ಮತ್ತು ಅಂಜಲಿ ಮೆನನ್ ಸೇರಿದಂತೆ ಹಲವಾರು ಬರಹಗಾರರು ಮತ್ತು ಚಲನಚಿತ್ರ ನಿರ್ಮಾಪಕರು ಸಹ ಈ ಆಯ್ಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಹೆಚ್ಚುತ್ತಿರುವ ಟೀಕೆಗಳ ನಡುವೆ ONV ಸಾಂಸ್ಕೃತಿಕ ಅಕಾಡೆಮಿ ತನ್ನ ನಿರ್ಧಾರವನ್ನು ಪರಿಶೀಲಿಸುವುದಾಗಿ ಹೇಳಿತು. ಇದಾದ ಬಳಿಕ ವೈರಮುತ್ತು ವಿವಾದದ ಮಧ್ಯೆ ಪ್ರಶಸ್ತಿಯನ್ನು ಸ್ವೀಕರಿಸಲು ಇಚ್ಛಿಸಿಲ್ಲ ಎಂದು ತಿಳಿಸಿದ್ದರು. 3 ಲಕ್ಷ ರೂ. ಬಹುಮಾನವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಾಗೂ ತಮ್ಮ ವೈಯಕ್ತಿಕ ನಿಧಿಯಿಂದ ಹೆಚ್ಚುವರಿಯಾಗಿ 2 ಲಕ್ಷ ರೂ. ನೀಡುವುದಾಗಿ ಹೇಳಿದ್ದರು.
ರೈಲ್ವೆ ಇಲಾಖೆ ಪದೋನ್ನತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಕೊಕ್; ಇಂಗ್ಲಿಷ್- ಹಿಂದಿಗೆ ಮಾತ್ರ ಅವಕಾಶ! ಕರವೇ ಆಕ್ರೋಶ
Railway Department Exams- ನೈಋುತ್ಯ ರೈಲ್ವೆಯ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡವನ್ನು ಹೊರಗಿಟ್ಟು, ಕೇವಲ ಹಿಂದಿ ಮತ್ತು ಇಂಗ್ಲಿಷ್ಗೆ ಮಾತ್ರ ಅವಕಾಶ ನೀಡಿರುವುದಕ್ಕೆ ಇದೀಗ ಕನ್ನಡ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಕ್ರಮವನ್ನು ಖಂಡಿಸಿರುವ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಮಾರ್ಚ್ 17ರಂದು ನಡೆಯುವ ಪರೀಕ್ಷೆಗಳನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಮೊದಲು ಕನ್ನಡಕ್ಕೆ ಅವಕಾಶ ನೀಡಿ ಈಗ ಕೈಬಿಟ್ಟಿರುವುದು ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಕಂಪ್ಯೂಟರ್ ಆಧರಿತ ಪರೀಕ್ಷೆಯಲ್ಲಿ ಹಿಂದಿ, ಇಂಗ್ಲಿಷ್ಗೆ ಮಾತ್ರ ಅವಕಾಶವಿರುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
Viral Video : ವೃದ್ಧೆಯನ್ನು ಬೆಚ್ಚಿಬೀಳಿಸಿದ ಯಂತ್ರ; ರಸ್ತೆಯಲ್ಲಿದ್ದ ರೋಬೋಟ್ ಅನ್ನು ವಶಕ್ಕೆ ಪಡೆದ ಪೊಲೀಸರು
ಮಕಾವು: ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ಅಥವಾ ಬೇರೆಯವರಿಗೆ ತೊಂದರೆ ನೀಡಿದರೆ ಪೊಲೀಸರು ಅವರನ್ನು ವಶಕ್ಕೆ ಪಡೆಯುವುದನ್ನು ನಾವು ನೋಡಿದ್ದೇವೆ. ಆದರೆ, ಚೀನಾದ ಮಕಾವು (Macau) ನಗರದಲ್ಲಿ ನಡೆದಿರುವ ಘಟನೆ ಮಾತ್ರ ಕೊಂಚ ವಿಭಿನ್ನವಾಗಿದೆ. ಇಲ್ಲಿ ಪೊಲೀಸರು ಯಾವುದೇ ಮನುಷ್ಯನನ್ನು ಬಂಧಿಸಿಲ್ಲ, ಬದಲಾಗಿ ವೃದ್ಧೆಯೊಬ್ಬರನ್ನು ಬೆಚ್ಚಿಬೀಳಿಸಿದ ಕಾರಣಕ್ಕಾಗಿ 'ಹ್ಯೂಮನಾಯ್ಡ್ ರೋಬೋಟ್' (Humanoid robot) ಒಂದನ್ನು ವಶಕ್ಕೆ
ವಿಜಯನಗರ | ಸಿಡಿಲು ಬಡಿದು ಹೊತ್ತಿ ಉರಿದ ಪವನ ವಿದ್ಯುತ್ ಯಂತ್ರ : ಸ್ಥಳೀಯರಲ್ಲಿ ಆತಂಕ
ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಪವನ ವಿದ್ಯುತ್ ಉತ್ಪಾದನಾ ಯಂತ್ರ (ವಿಂಡ್ ಫ್ಯಾನ್) ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಯಂತ್ರಕ್ಕೆ ಬೆಂಕಿ ಹೊತ್ತಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಸೋಮವಾರ ಸಂಜೆ ವೇಳೆಯಲ್ಲಿ ಕೂಡ್ಲಿಗಿ ತಾಲೂಕಿನಾದ್ಯಂತ ಸಿಡಿಲು-ಗುಡುಗು ಸಹಿತ ಸಾಧಾರಣ ಮಳೆಯಾಗಿತ್ತು. ಇದೇ ವೇಳೆ ಯಂಬಳ್ಳಿ ಗ್ರಾಮದ ಸಮೀಪದಲ್ಲಿರುವ ಪವನ ವಿದ್ಯುತ್ ಉತ್ಪಾದನಾ ಯಂತ್ರಕ್ಕೆ ಸಿಡಿಲು ಬಡಿದ ಪರಿಣಾಮ ಯಂತ್ರದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಜ್ವಾಲೆಗಳು ಮೇಲಕ್ಕೆ ಎದ್ದಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನೊಂದೆಡೆ ಅಕಸ್ಮಾತ್ ಸುರಿದ ಮಳೆಯ ಪರಿಣಾಮ ರೈತಾಪಿ ವರ್ಗವೂ ಸಂಕಷ್ಟ ಅನುಭವಿಸಬೇಕಾಯಿತು. ಹೊಲಗಳಲ್ಲಿ ಕಟಾವು ಮಾಡಿ ಒಣಗಲು ಹಾಕಿದ್ದ ರಾಗಿ ಬೆಳೆ ಹಾಗೂ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವು ತೋಯದಂತೆ ಕಾಪಾಡಿಕೊಳ್ಳಲು ರೈತರು ಪರದಾಡಿದ ಘಟನೆಗಳು ಹಲವು ಕಡೆ ಕಂಡುಬಂದಿವೆ. ಈ ಘಟನೆ ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯರಿಂದ ಮಾಹಿತಿ ಪಡೆದ ನಂತರ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ. ಸಿಡಿಲು ಬಡಿದ ಪರಿಣಾಮ ಪವನ ವಿದ್ಯುತ್ ಯಂತ್ರಕ್ಕೆ ಹಾನಿಯಾಗಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಮಳೆ ಮತ್ತು ಸಿಡಿಲಿನ ಪರಿಣಾಮ ಒಂದು ಕಡೆ ರೈತರಿಗೆ ಆತಂಕ ಉಂಟಾಗಿದ್ದರೆ, ಮತ್ತೊಂದು ಕಡೆ ಪವನ ವಿದ್ಯುತ್ ಯಂತ್ರ ಹೊತ್ತಿ ಉರಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಜನರ ಗಮನ ಸೆಳೆಯುತ್ತಿವೆ.
ದಿನಕ್ಕೆ ಕನಿಷ್ಟ 5 ಸಾವಿರ ಎಲ್ಪಿಜಿ ಸಿಲಿಂಡರ್ಗಳನ್ನಾದರೂ ಪೂರೈಕೆ ಮಾಡಿ: ಹೋಟೆಲ್ ಮಾಲಕರ ಸಂಘ ಆಗ್ರಹ
ಬೆಂಗಳೂರು : ಸರಕಾರವು ರಾಜ್ಯದ ಎಲ್ಲ ಹೋಟೆಲ್ಗಳಿಗೆ ಕೇವಲ ಒಂದು ಸಾವಿರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ಮಾತ್ರ ಪೂರೈಕೆ ಮಾಡಲಾಗುವುದು ಹೇಳಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಮತ್ತಷ್ಟ ಸಂಕಷ್ಟ ಉಂಟಾಗುತ್ತದೆ. ಹೀಗಾಗಿ ದಿನಕ್ಕೆ ಕನಿಷ್ಟ 5 ಸಾವಿರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನಾದರೂ ಪೂರೈಕೆ ಮಾಡಬೇಕು ಎಂದು ಹೋಟೆಲ್ ಮಾಲಕರ ಸಂಘ ಆಗ್ರಹಿಸಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಸುಬ್ರಮಣ್ಯ ಹೊಳ್ಳ, ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಕೊರತೆಯಿಂದ ರಾಜ್ಯದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕೇವಲ ಐದು ದಿನಗಳಲ್ಲಿ 100 ಕೋಟಿ ರೂ.ಗೂ ಅಧಿಕ ನಷ್ಟವನ್ನು ಅನುಭವಿಸಿದೆ ಎಂದು ಹೇಳಿದರು. ರಾಜ್ಯದಲ್ಲಿರುವ ಎಲ್ಲ ಹೋಟೆಲ್ಗಳಿಗೆ ಪ್ರತಿನಿತ್ಯ ಸುಮಾರು 40 ಸಾವಿರಕ್ಕೂ ಅಧಿಕ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಈಗ ಕೇವಲ ಒಂದು ಸಾವಿರ ಸಿಲಿಂಡರ್ ಗಳನ್ನು ಪೂರೈಕೆ ಮಾಡಲಾಗುತ್ತದೆ ಎಂದು ಸರಕಾರ ಹೇಳಿದ್ದು, ಇದರಿಂದ ಉದ್ಯಮಕ್ಕೆ ನಷ್ಟವಾಗುತ್ತದೆ. ಈಗಾಗಲೇ ಎಲ್ಪಿಜಿ ಗ್ಯಾಸ್ ಕೊರತೆಯಿಂದ ಅನೇಕ ಹೋಟೆಲ್ಗಳಲ್ಲಿ ಅಡುಗೆ ಕಾರ್ಯಕ್ಕೆ ತೊಂದರೆ ಉಂಟಾಗಿದೆ. ಹೀಗಾಗಿ ಸರಕಾರವು ಹೋಟೆಲ್ ಉದ್ಯಮಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಅವರು ಒತ್ತಾಯಿಸಿದರು. ನಮ್ಮ ಸಂಘಟನೆಯ ವ್ಯಾಪ್ತಿಯಲ್ಲಿರುವ ಹೋಟೆಲ್ಗಳನ್ನು ಇದುವರೆಗೆ ಬಂದ್ ಮಾಡಿಲ್ಲ. ಸಾಧ್ಯವಾಗುವ ಮಟ್ಟಿಗೆ ವಿದ್ಯುತ್ ಒಲೆ, ಸೌದೆಯನ್ನು ಬಳಕೆ ಮಾಡಿ, ಅಡುಗೆಯನ್ನು ಮಾಡಲಾಗುತ್ತಿದೆ. ಇನ್ನು ಮುಂದೆಯೂ ಹೋಟೆಲ್ಗಳನ್ನು ಬಂದ್ ಮಾಡುವ ಉದ್ದೇಶವಿಲ್ಲ. ಆದರೆ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆ ಕಡಿಮೆಯಾದರೆ ಬಹುತೇಕ ಹೋಟಲ್ಗಳನ್ನು ಬಂದ್ ಮಾಡುವ ಪರಿಸ್ಥಿತಿ ಬರಬಹುದು ಎಂದು ಅವರು ಹೇಳಿದರು. ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇವೆ. ಒಟ್ಟು ಸಿಲಿಂಡರ್ ಪೂರೈಕೆಯಲ್ಲಿ ಹೋಟೆಲ್ ಉದ್ಯಮಕ್ಕೆ ಕನಿಷ್ಠ ಕೋಟಾ ನೀಡಬೇಕು ಎಂದು ಮನವಿ ಮಾಡುತ್ತೇವೆ. ಅವರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇದಕ್ಕಾಗಿ ದಿಲ್ಲಿಗೆ ಹೋಗಲು ಸಿದ್ಧತೆಯನ್ನೂ ಮಾಡಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. ‘ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಡುಗೆ ಅನಿಲ, ವಾಣಿಜ್ಯ ಸಿಲಿಂಡರ್ಗಳ ಕೊರತೆ ಸೃಷ್ಟಿಯಾಗಿದೆ. ಆಟೋರಿಕ್ಷಾ, ಹೊಟೇಲ್ ಉದ್ಯಮಕ್ಕೆ ಭೀತಿ ಆವರಿಸಿದ್ದು, ಹೊಟೇಲ್ನ ಊಟದ ಮೆನು ಕಡಿತ ಮಾಡಲಾಗಿದೆ. ರಾಜ್ಯದಲ್ಲಿನ ಹೋಟೆಲ್ಗಳಿಗೆ ಪ್ರತಿನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ಗಳ ಅಗತ್ಯವಿದೆ. ರಾಜ್ಯದಲ್ಲಿ 4ಲಕ್ಷಕ್ಕೂ ಅಧಿಕ ಆಟೋರಿಕ್ಷಾಗಳಿದ್ದು, ಆ ಪೈಕಿ ಬೆಂಗಳೂರು ನಗರದಲ್ಲಿ 1.75ಲಕ್ಷ ರಿಕ್ಷಾಗಳಿದ್ದು, ಎಲ್ಪಿಜಿ ಸಿಲಿಂಡರ್ಗಳ ಸಮಸ್ಯೆ ಹಿನ್ನೆಲೆಯಲ್ಲಿ ರಿಕ್ಷಾಗಳನ್ನು ಸ್ಥಗಿತಗೊಳಿಸಲಾಗುತ್ತಿದೆ’
ಮಹಿಳಾ ನೌಕರರಿಗೆ ಋತುಚಕ್ರ ರಜೆ: ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡದಂತೆ ಸರ್ಕಾರಕ್ಕೆ ಹೈಕೋರ್ಟ್ ತಾಕೀತು
Menstrual Leave- ಮಹಿಳಾ ನೌಕರರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ನೀಡುವಂತೆ ರಾಜ್ಯ ಸರ್ಕಾರದ ನೀಡಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಉದ್ಯೋಗದಾತರ ಸಂಘಗಳು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಉಚ್ಚನ್ಯಾಯಾಲಯದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ಯೋಗದಾತರ ಮೇಲೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.
ಮಹಿಳಾ ಶಿಕ್ಷಕರಿಗೆ ಶಿಶುಪಾಲನೆ ರಜೆ ಮಂಜೂರಾತಿಗೆ ಕ್ರಮ : ಸಚಿವ ಮಧುಬಂಗಾರಪ್ಪ
ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಮಹಿಳಾ ಶಿಕ್ಷಕರಿಗೆ ಇನ್ನು ಮುಂದೆ ಶಿಶುಪಾಲನಾ ರಜೆ ಮಂಜೂರಾತಿಯನ್ನು ಸುಗಮಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು. ಸೋಮವಾರ ವಿಧಾನಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವೈ.ಎಂ.ಸತೀಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಹಿಳಾ ಶಿಕ್ಷಕರಿಗೆ ಮಾತೃತ್ವ ರಜಾ ಮನವಿ ಸ್ವೀಕೃತಗೊಂಡ 15 ದಿನಗಳೊಳಗಾಗಿ ಸಕ್ಷಮ ಪ್ರಾಧಿಕಾರದಿಂದ ಮಾತೃತ್ವ ರಜೆಯನ್ನು ಮಂಜೂರು ಮಾಡುವುದು. ಅಲ್ಲದೆ, ಮಹಿಳಾ ಶಿಕ್ಷಕರು ಮಾತೃತ್ವ ರಜೆಯೊಂದಿಗೆ ಶಿಶುಪಾಲನಾ ರಜೆಯನ್ನು ಸಂಯೋಜಿಸಿ ಉಪಯೋಗಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ಅಥವಾ ಶಿಶುಪಾಲನಾ ರಜೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ರಜಾ ಮನವಿ ಸ್ವೀಕೃತವಾದ 15 ದಿನಗಳೊಳಗಾಗಿ ರಜೆಯನ್ನು ಮಂಜೂರು ಮಾಡಬೇಕು ಎಂದರು. ಮಾತೃತ್ವ ರಜೆಯ ನಂತರ ಮರಳಿ ಕರ್ತವ್ಯಕ್ಕೆ ಹಾಜರಾಗುವ ಮಹಿಳಾ ಶಿಕ್ಷಕರಿಗೆ ಮಗುವಿನ ವಯಸ್ಸು 5 ವರ್ಷ ಪೂರ್ಣಗೊಳ್ಳುವವರೆಗೂ ಮಗುವಿನ ಆರೈಕೆಗೆ ಅನುಕೂಲವಾಗುವ ರೀತಿಯಲ್ಲಿ ಸದರಿ ಮಹಿಳಾ ನೌಕರರು ಇಚ್ಛಿಸುವ ಸ್ಥಳಕ್ಕೆ ನಿಯುಕ್ತಿಗೊಳಿಸಲಾಗುವುದು. ಮಾತೃತ್ವ ರಜೆ ಹಾಗೂ ಶಿಶುಪಾಲನಾ ರಜೆಯ ಮೇಲೆ ತೆರಳುವ ಮಹಿಳಾ ಶಿಕ್ಷಕರ ರಜೆಯ ಅವಧಿಗೆ ಅತಿಥಿ ಶಿಕ್ಷಕರನ್ನು ನಿಯುಕ್ತಿಗೊಳಿಸಲಾಗುವುದು ಎಂದು ಮಧುಬಂಗಾರಪ್ಪ ತಿಳಿಸಿದರು.
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊ ಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ನಡೆಸುವ ಡಿಸಿಇಟಿ-2026ಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಎ.3 ಕೊನೆ ದಿನವಾಗಿದೆ. ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ಶುಲ್ಕ ಪಾವತಿಗೆ ಎ.4ರವರೆಗೆ ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಿದವರಿಗೆ ಮೇ 23ರಂದು ಲಿಖಿತ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 39.37ಲಕ್ಷ ರೂ.ಮೌಲ್ಯದ ಗಾಂಜಾ ವಶ: ಪ್ರಯಾಣಿಕನ ಬಂಧನ
ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 39.37 ಲಕ್ಷ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹೊಂದಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮಾ.14ರಂದು ಬ್ಯಾಂಕಾಕ್ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದ ಕಸ್ಟಮ್ಸ್ ಅಧಿಕಾರಿಗಳು, ಚೆಕ್-ಇನ್ ಮಾಡಿದ ಬ್ಯಾಗೇಜ್ನಲ್ಲಿ ಫೋಟೋ ಫ್ರೇಮ್ನೊಳಗೆ ಮರೆಮಾಚಲಾಗಿದ್ದ 1.125 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಅಂದಾಜು ಮೌಲ್ಯ 39.37 ಲಕ್ಷ ರೂ. ಆಗಿದ್ದು, ಪ್ರಯಾಣಿಕನನ್ನು ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Bengaluru | 50 ಸಾವಿರ ರೂ.ಹಫ್ತಾ ನೀಡದಿದ್ದಕ್ಕೆ ಮಕ್ಕಳ ಎದುರೇ ತಂದೆಯ ಹತ್ಯೆ: ಪ್ರಕರಣ ದಾಖಲು
ಬೆಂಗಳೂರು : 50 ಸಾವಿರ ರೂಪಾಯಿ ಹಫ್ತಾ ನೀಡದಿದ್ದಕ್ಕೆ ಮಕ್ಕಳ ಕಣ್ಣೆದುರೇ ತಂದೆಯನ್ನು ಹೊಡೆದು ಭೀಕರವಾಗಿ ಕೊಲೆಗೈದಿರುವ ಘಟನೆ ಇಲ್ಲಿನ ವಿಲ್ಸನ್ ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ. ಮಾ.15ರ ರವಿವಾರ ತಡರಾತ್ರಿ ಬಡಾ ಮಖಾನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೆಕ್ಯಾನಿಕ್ ಆಗಿದ್ದ ರಶೀದ್ ಪಾಷಾ(45) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಗಡಿಗೆ ಹೊಸ ಮೋಲ್ಡ್ ಹಾಕಿಸಿದ್ದ ರಶೀದ್ ಬಳಿ ಸ್ಥಳೀಯ ಕೆಲ ಆರೋಪಿಗಳು ಮಾ.15ರ ರವಿವಾರ ಬೆಳಗ್ಗೆ ಬಂದು 50 ಸಾವಿರ ರೂಪಾಯಿ ಹಫ್ತಾ ಕೊಡುವಂತೆ ಪೀಡಿಸಿದ್ದರು. ಆದರೆ, ಹಣ ನೀಡಲು ರಶೀದ್ ನಿರಾಕರಿಸಿದಾಗ ಮಾತಿನ ಚಕಮಕಿ ನಡೆದಿದೆ. ಅದೇ ಜಿದ್ದಿನಲ್ಲಿ ರಾತ್ರಿ 8.30ರ ಸುಮಾರಿಗೆ ಮತ್ತೆ ಬಂದ ಮೂವರು ಆರೋಪಿಗಳ ಗುಂಪು, ರಶೀದ್ ಅವರ ಇಬ್ಬರು ಮಕ್ಕಳ ಮುಂದೆಯೇ ಬ್ಯಾಟ್ನಿಂದ ಹಲ್ಲೆ ನಡೆಸಿದ್ದಾರೆ. ಈ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರಶೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಎಂ. ಹಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳದಂತೆ ಒಂದು ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದೆ.
ಉಪ್ಪಿನಂಗಡಿ: ರಸ್ತೆ ಅಪಘಾತ; 5 ವರ್ಷದ ಬಾಲಕಿ ಮೃತ್ಯು, ಇಬ್ಬರಿಗೆ ಗಾಯ
ಉಪ್ಪಿನಂಗಡಿ: ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಳನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡಿದ್ದ ಕಾರು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುಹೈರಾ ಮತ್ತಾಕೆಯ ತಾಯಿ ಸಾಜಿರಾ (33) , ದ್ವಿಚಕ್ರ ವಾಹನ ಸವಾರ ಬಾಲಕಿಯ ಅಜ್ಜ ಇಸ್ಮಾಯಿಲ್ (60) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಈ ಪೈಕಿ ಗಂಭೀರವಾಗಿ ಗಾಯಗೊಂಡ ಸುಹೈರಾ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾಳೆಂದು ಪೊಲೀಸ್ ಮೂಲಗಳು ತಿಳಿಸಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಕೇಂದ್ರ ಸಚಿವರ ರಾಜೀನಾಮೆಗೆ ಟಿ.ಎ.ನಾರಾಯಣಗೌಡ ಆಗ್ರಹ
ಬೆಂಗಳೂರು : ‘ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ಸಂಪೂರ್ಣ ಮಾಹಿತಿ ಇದ್ದರೂ ಏನೂ ಮಾಡಲಾಗದ ಅಸಹಾಯಕತೆಗೆ ಸಿಲುಕಿರುವ ರಾಜ್ಯದಿಂದ ಆಯ್ಕೆಯಾದ ಕೇಂದ್ರ ಸಚಿವರು ಕೂಡಲೇ ರಾಜೀನಾಮೆ ನೀಡಿ ಹೊರಬರಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಸೋಮವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಪ್ರಹ್ಲಾದ್ ಜೋಶಿ, ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ದೊಡ್ಡ-ದೊಡ್ಡ ಹುದ್ದೆಗಳನ್ನು ನಿಭಾಯಿಸಿದ ಹಿರಿಯರು. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಆ ಸ್ಥಾನದಲ್ಲಿ ಇರುವುದು ಒಳಿತಲ್ಲ. ನಿಮಗೆ ಅಧಿಕಾರ ಕೊಟ್ಟಿದ್ದು ಕನ್ನಡಿಗರು, ಅವರ ಋಣವನ್ನು ತೀರಿಸಿ ಎಂದು ಸಲಹೆ ನೀಡಿದರು. ಗಟ್ಟಿಯಾದ ತೀರ್ಮಾನ ತೆಗೆದುಕೊಂಡು ಸಾಮೂಹಿಕ ರಾಜೀನಾಮೆ ಕೊಟ್ಟು ಹೊರಬನ್ನಿ, ಆಗ ನಿಮ್ಮ ಮಾತುಗಳನ್ನು ಕೇಂದ್ರ ಸರಕಾರದ ಆಯಕಟ್ಟಿನ ಸ್ಥಳಗಳಲ್ಲಿ ಕುಳಿತುಕೊಂಡಿರುವ ಹಿಂದಿವಾಲಾಗಳು ಆಲಿಸುತ್ತಾರೆ. ಇಲ್ಲವಾದಲ್ಲಿ ನಿಮ್ಮ ಅಸಹಾಯಕತೆ ಮುಂದುವರಿಯುತ್ತದೆ. ಇದೇ ಅನ್ಯಾಯ ತಮಿಳುನಾಡಿನ ಜನರಿಗೆ ಆಗಿದ್ದರೆ ಅಲ್ಲಿನ ಸಂಸದರು ಸುಮ್ಮನೆ ಇರುತ್ತಿದ್ದರೇ ಎಂದು ಅವರು ಪ್ರಶ್ನಿಸಿದರು. ಮಾ.17ರಂದು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ನಡೆಯಬೇಕಿರುವ ಪದೋನ್ನತಿ ಪರೀಕ್ಷೆಗಳನ್ನು ಯಾವುದೇ ಕಾರಣಕ್ಕೂ ನಡೆಯಲು ಬಿಡುವುದಿಲ್ಲ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ವಿಭಾಗೀಯ ಕಚೇರಿ ಮುಂದೆ ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ನಿಗದಿಯಂತೆ ನಡೆಯುತ್ತದೆ. ಪ್ರತಿಭಟನೆ ನಡೆಸದಂತೆ ಕಾಟನ್ಪೇಟೆ ಪೊಲೀಸರು ನೀಡಿರುವ ನೋಟಿಸ್ಗೆ ನಾವು ಹೆದರುವುದಿಲ್ಲ ಎಂದು ತಿಳಿಸಿದರು. ಇನ್ನೂ ನೂರು ನೋಟೀಸ್ ಕೊಟ್ಟರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕನ್ನಡದ ಮಕ್ಕಳ ಭವಿಷ್ಯ ಆತಂಕದಲ್ಲಿರುವಾಗ ನಾವು ಸುಮ್ಮನೆ ಕೂರುವುದಿಲ್ಲ. ನಮ್ಮನ್ನು ಜೈಲಿಗೆ ಕಳುಹಿಸಿದರೂ ಚಿಂತೆಯಿಲ್ಲ. ಈ ಬಾರಿ ಜೈಲಿನಲ್ಲೇ ಯುಗಾದಿ ಆಚರಿಸುತ್ತೇವೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಮಾಡಿ ಎನ್ನುತ್ತಾರೆ. ಅಲ್ಲಿ ಪ್ರತಿಭಟನೆ ಮಾಡಿದರೆ, ಪೊಲೀಸರ ಮುಖವನ್ನು ನಾವು, ನಮ್ಮ ಮುಖವನ್ನು ಪೊಲೀಸರು ನೋಡಿಕೊಂಡು ಕುಳಿತಿರಬೇಕು. ದಪ್ಪ ಚರ್ಮದ ರೈಲ್ವೆ ಅಧಿಕಾರಿಗಳಿಗೆ ನಮ್ಮ ಕೂಗು ತಲುಪುತ್ತದೆಯೇ? ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲೇ ನಾವು ಹುಡುಕಬೇಕು. ಎಲ್ಲಿ ಅನ್ಯಾಯವಾಗಿದೆಯೋ ಅಲ್ಲೇ ಮಾತನಾಡಬೇಕು. ಹೀಗಾಗಿ ಅಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು. 2008ರಲ್ಲಿ 4000ಕ್ಕೂ ‘ಡಿ’ ದರ್ಜೆ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಎಲ್ಲ ಹುದ್ದೆಗಳಿಗೆ ಬಿಹಾರಿಗಳನ್ನು ತುಂಬುವ ಹುನ್ನಾರ ನಡೆದಿತ್ತು. ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿ ಈ ಹುನ್ನಾರವನ್ನು ತಡೆದಿತ್ತು. ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ದೊರೆತಿತ್ತು. ಆದರೆ ಮತ್ತೆ ಪರೀಕ್ಷೆಗಳಿಂದ ಕನ್ನಡವನ್ನು ಕೈಬಿಟ್ಟು ಹಿಂದಿ, ಇಂಗ್ಲಿಷ್ ನಲ್ಲಿ ನಡೆಸಲಾಗುತ್ತಿದೆ. ಹಿಂದಿವಾಲಾಗಳಿಗೆ, ಉತ್ತರ ಭಾರತೀಯರಿಗೆ ಅನುಕೂಲ ಮಾಡಿಕೊಡಲು ಯತ್ನಿಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು. ಮಾ.17ರಂದು ನಿಗದಿಯಾಗಿರುವ ಪರೀಕ್ಷೆಯ ಹುಬ್ಬಳ್ಳಿ ಮತ್ತು ಬೆಂಗಳೂರು ಪರೀಕ್ಷಾ ಕೇಂದ್ರಗಳ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ನಂತರ ಆಗುವ ಎಲ್ಲ ಅನಾಹುತಗಳಿಗೆ ರೈಲ್ವೆ ಇಲಾಖೆಯೇ ಹೊಣೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ನಮ್ಮನ್ನು ದೂರಬೇಡಿ ಎಂದು ಅವರು ಹೇಳಿದರು.
SC - ST ಸೇರಿದವರಿಗೆ ಮಂಜೂರಾಗಿದ್ದ ಭೂಮಿ ಮಾರಾಟ ಅಸಿಂಧು; ಆ ಬಳಿಕ ಖರೀದಿ ಪ್ರಕ್ರಿಯೆಗಳೂ ರದ್ದು - ಹೈಕೋರ್ಟ್ ಆದೇಶ
ಎಸ್ಟಿ ಎಸ್ಟಿ ಸೇರಿದವರಿಗೆ ಮಂಜೂರಾಗಿದ್ದ ಭೂಮಿ ಮಾರಾಟ ಅಸಿಂಧುಗೊಂಡ ಬಳಿಕ ನಡೆದ ಖರೀದಿ ಪ್ರಕ್ರಿಯೆಗಳೆಲ್ಲವೂ ರದ್ದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಹಲವು ಸುತ್ತಿನ ಮಾರಾಟದ ಬಳಿಕ ಖರೀದಿಸಿದ್ದ ಅರ್ಜಿದಾರರು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ. ನ್ಯಾಯಮೂರ್ತಿ ಆರ್ ದೇವದಾಸ್ ಅವರಿದ್ದ ಏಕಸದಸ್ಯ ಪೀಠವು ಈ ಬಗ್ಗೆ ಆದೇಶ ನೀಡಿದೆ.
Rajya Sabha Elections- ಮೇಲ್ಮನೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸ್ಪಷ್ಟ ಮೇಲುಗೈ; ನಿತೀಶ್ ಸೇರಿ ಹಲವರ ಗೆಲುವು
NDA Vs INDI Alliance- ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ದೊಡ್ಡ ಗೆಲುವು ಸಾಧಿಸಿದ್ದು, ಮೇಲ್ಮನೆಯಲ್ಲಿ ಅದರ ಬಲ 141ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಶೀಘ್ರವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಹಾರ ಮತ್ತು ಒಡಿಶಾದಲ್ಲಿ ಕಾಂಗ್ರೆಸ್ ಶಾಸಕರ ಗೈರು ಹಾಗೂ ಅಡ್ಡ ಮತದಾನದಿಂದ ಎನ್ಡಿಎ ಅಭ್ಯರ್ಥಿಗಳು ಸುಲಭ ಜಯ ದಾಖಲಿಸಿದರು. ಒಟ್ಟು 37 ಸ್ಥಾನಗಳ ಪೈಕಿ 26 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ವಿರೋಧ ಪಕ್ಷಗಳ ಬಲ ಕುಸಿದಿದೆ.
ಋತುಚಕ್ರದ ರಜೆ ಸಂಬಂಧ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುವುದು ಸರಿಯಲ್ಲ: ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ಹೊರಡಿಸಿರುವ ಅಧಿಸೂಚನೆ ಭಾಗವಾಗಿ ಸರಕಾರವು ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರು, ಅಧಿಸೂಚನೆಯ ಮುಂದುವರಿದ ಭಾಗವಾಗಿ ಸರ್ಕಾರವು ಶೋಕಾಸ್ ನೋಟಿಸ್ ನೀಡುತ್ತಿದೆ. ಇದರಿಂದ, ಉದ್ಯೋಗದಾತ ಸಂಸ್ಥೆಗಳಿಗೆ ಸಮಸ್ಯೆಯಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಹೀಗಿರುವಾಗ, ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ನೀಡುತ್ತಿರುವುದೇಕೆ? ಶೋಕಾಸ್ ನೋಟಿಸ್ಗಳಿಗೆ ತಡೆ ನೀಡಬೇಕಾಗುತ್ತದೆ. ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳಬಾರದು. ಒಂದೆಡೆ ಅರ್ಜಿ ಕುರಿತು ವಾದ ಮಂಡಿಸದೆ ಸರಕಾರ ವಿಚಾರಣೆ ಮುಂದೂಡಿಕೆ ಕೋರುತ್ತದೆ. ಮತ್ತೊಂದೆಡೆ ಶೋಕಾಸ್ ನೋಟಿಸ್ ಜಾರಿಗೊಳಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿತು. ಬೆಂಗಳೂರು ಮಹಿಳಾ ವಕೀಲರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು, ಸರಕಾರದ ಅಧಿಸೂಚನೆಯಲ್ಲಿ ಉದ್ಯೋಗದಾತರಿಗೆ ಸಮಸ್ಯೆಯಾಗುವಂಥ ಯಾವುದೇ ಅಂಶಗಳಿಲ್ಲ. ನಮಗೆ ಇರುವ ಮಾಹಿತಿಯ ಪ್ರಕಾರ ಯಾವುದೇ ಉದ್ಯೋಗದಾತರಿಗೆ ಶೋಕಾಸ್ ನೋಟಿಸ್ ಜಾರಿಯಾಗಿಲ್ಲ. ಒಂದೊಮ್ಮೆ ಅಂಥ ಯಾವುದೇ ದಾಖಲೆ ಇದ್ದರೆ ಅರ್ಜಿದಾರರು ನ್ಯಾಯಾಲಯದ ಮುಂದೆ ಇಡಬಹುದು. ಆನಂತರ, ನ್ಯಾಯಾಲಯ ನಿರ್ಧರಿಸಬಹುದು ಎಂದರು. ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲ ಬಿ.ಕೆ. ಪ್ರಶಾಂತ್ ವಾದ ಮಂಡಿಸಿ, ಋತುಚಕ್ರ ರಜೆಗೆ ಸಂಬಂಧಿಸಿದಂತೆ ಸರಕಾರ ಹೊರಡಿಸಿರುವ ಅಧಿಸೂಚನೆಯು ಹೋಟೆಲ್ ಉದ್ಯಮದಾತರನ್ನು ನಿರ್ಬಂಧಿಸುವಂತಿದೆ. ಇದರಿಂದ, ಗಂಭೀರವಾದ ಆರ್ಥಿಕ ಸಮಸ್ಯೆಗಳು ಎದುರಾಗುತ್ತಿರುವುದಲ್ಲದೆ, ಸರಕಾರದ ಆದೇಶದಿಂದ ನಾಗರಿಕ ಪರಿಣಾಮಗಳೂ ಉಂಟಾಗಿವೆ ಎಂದರು. ಮಹಿಳೆಯರಿಗೆ ರಕ್ಷಣೆ ನೀಡುವುದಕ್ಕೆ ಆಕ್ಷೇಪವಿಲ್ಲ. ಆದರೆ, ಉದ್ಯಮದ ಹಿತಾಸಕ್ತಿಯನ್ನು ಸರಕಾರ ಗಮನದಲ್ಲಿಟ್ಟುಕೊಳ್ಳದೇ ಅಧಿಸೂಚನೆ ಜಾರಿಗೊಳಿಸಲು ಮುಂದಾಗಿದೆ. ಕೆಲಸಗಾರರು ಮತ್ತು ಉದ್ಯೋಗದಾತರ ನಡುವೆ ಸಮಾನತೆ ಕಾಪಾಡುವಲ್ಲಿ ಸರಕಾರ ವಿಫಲವಾಗಿದೆ. ಪ್ರಾಥಮಿಕ ಅಧಿಸೂಚನೆ ಹೊರಡಿಸದೇ, ಮಾಧ್ಯಮ ಹೇಳಿಕೆ ಬಿಡುಗಡೆ ಮಾಡದೇ ನೇರವಾಗಿ ಅಧಿಸೂಚನೆ ಹೊರಡಿಸುವ ಮೂಲಕ ಉದ್ಯೋಗದಾತರ ವಿರುದ್ಧ ನಡೆದುಕೊಳ್ಳಲಾಗಿದೆ. ಹಲವು ರೀತಿಯಲ್ಲಿ ಋತುಚಕ್ರದ ರಜೆ ನೀತಿಯು ಹೋಟೆಲ್ ಉದ್ಯಮದಾರರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿತು.
ವಕ್ಫ್ ಆಸ್ತಿ ಒತ್ತುವರಿಯಲ್ಲಿ ಮುಸ್ಲಿಮರೇ ಹೆಚ್ಚು : ಝಮೀರ್ ಅಹ್ಮದ್ ಖಾನ್
ಬೆಂಗಳೂರು : ರಾಜ್ಯದಾದ್ಯಂತ ಒತ್ತುವರಿಯಾಗಿರುವ 17,965 ಎಕರೆ ಜಮೀನನ್ನು ಯಾವುದೇ ದೇವಸ್ಥಾನ ಮಂಡಳಿ, ಶಾಲೆಗಳು ಒತ್ತುವರಿ ಮಾಡಿಕೊಂಡಿಲ್ಲ. ಬದಲಿಗೆ ಒತ್ತುವರಿ ಮಾಡಿಕೊಂಡಿರುವವರೆಲ್ಲರೂ ಹೆಚ್ಚಾಗಿ ಮುಸ್ಲಿಮ್ ಸಮುದಾಯದವರೇ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಸದಸ್ಯ ಪಾಟೀಲ್ ಎಂ.ವೈ ಪ್ರಸ್ತಾಪಿಸಿ, ತಮ್ಮ ಕ್ಷೇತ್ರದಲ್ಲಿ ವಕ್ಫ್ ಆಸ್ತಿಗಳು ವಕ್ಫ್ ಮಂಡಳಿ ಅಥವಾ ಸರಕಾರದ ನಿಯಂತ್ರಣದಲ್ಲಿ ಇಲ್ಲದ ಕಾರಣ ವಕ್ಫ್ ಆಸ್ತಿಗಳನ್ನು ಖಾಸಗಿಯವರು ಅತಿಕ್ರಮಣ ಮಾಡುತ್ತಿದ್ದಾರೆ ಎಂದರು. ಇದಕ್ಕೆ ಉತ್ತರಿಸಿದ ಸಚಿವರು, ವಿವಿಧ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಇವರ ಕ್ಷೇತ್ರದಲ್ಲಿ ವಕ್ಫ್ ಆಸ್ತಿ ಒತ್ತುವರಿ ಪ್ರಕರಣ ಕಡಿಮೆ ಇದೆ. ಇವರ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ 30 ಆಸ್ತಿಗಳನ್ನು ಕೂಡ ಮುಸ್ಲಿಮ್ ಅವರೇ ಒತ್ತುವರಿ ಮಾಡಿಕೊಂಡಿದ್ದಾರೆ. ಇದರಲ್ಲಿ 23 ಪ್ರಕರಣಗಳನ್ನು ಬಗೆಹರಿಸಲಾಗಿದ್ದು, ಇನ್ನು 7 ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಸಾಧ್ಯವಾದಷ್ಟು ಬೇಗ ಎಲ್ಲ ಪ್ರಕರಣಗಳನ್ನು ನಮ್ಮ ಪರವಾಗಿ ಮಾಡಿಕೊಳ್ಳಲಾಗುವುದು ಎಂದು ಉಲ್ಲೇಖಿಸಿದರು. ರಾಜ್ಯಾದಾದ್ಯಂತ 1,12,860 ಎಕರೆಯಷ್ಟು ವಕ್ಫ್ ಆಸ್ತಿಗಳಿವೆ. ಇದನ್ನು ಸರಕಾರ ನೀಡಿರುವುದಲ್ಲ. ಖಾಸಗಿ ಜನರು ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ದಾನ ಮಾಡಿರುವುದು. ಸದ್ಯ ಅದರಲ್ಲಿ 20,054 ಎಕರೆ ಮಾತ್ರ ನಮ್ಮ ಬಳಿ ಇದ್ದು, ಉಳಿದ ಜಮೀನುಗಳು ಒತ್ತುವರಿಯಾಗಿದೆ. ಆದ್ದರಿಂದಲೇ ನಮ್ಮ ಸರಕಾರ ಬಂದ ಮೇಲೆ ವಕ್ಫ್ ಆಸ್ತಿಗಳ ತೆರವು ಮಾಡುವ ಸಲುವಾಗಿ ವಕ್ಫ್ ಅದಾಲತ್ ಅನ್ನು ಜಾರಿಗೆ ಮಾಡಿತು. ಆದರೆ, ಇದಕ್ಕೆ ವಿರೋಧ ಪಕ್ಷ ಟೀಕೆ ಮಾಡಿತ್ತು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು, ಈ ವಕ್ಫ್ ಜಮೀನನ್ನು ಒತ್ತುವರಿ ಮಾಡಿಕೊಂಡು ಬಹಳಷ್ಟು ವರ್ಷಗಳಿಂದ ರೈತರು ವ್ಯವಸಾಯ ಮಾಡುತ್ತಿದ್ದಾರೆ. ಹೀಗಾಗಿ, ರೈತ ಯಾವುದೇ ಸಮುದಾಯದರಾವಗಲಿ ಆತನಿಗೇ ಜಮೀನನ್ನು ನೀಡಿ. ಪಾಪ ಬಡ ರೈತನಿಗಾದರೂ ಅನುಕೂಲವಾಗಲಿದೆ ಎಂದರು. ನಾವು ವಕ್ಫ್ ಆಸ್ತಿ ವಿಚಾರವಾಗಿ ನಾವು ಯಾವುದೇ ದೇವಸ್ಥಾನ ಅಥವಾ ಶಾಲೆಗಳಿಗೆ ತೊಂದರೆ ನೀಡುತ್ತಿಲ್ಲ. ಅದು ಖಾಸಗೀ ವ್ಯಕ್ತಿಯಿಂದ ಒತ್ತುವರಿಯಾಗಿದ್ದರೆ ಮಾತ್ರವೇ ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಇರಾನ್ ನಿಂದ 550ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಅರ್ಮೇನಿಯಾ ಮೂಲಕ ಸ್ಥಳಾಂತರ
ಹೊಸದಿಲ್ಲಿ, ಮಾ. 16: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಭಾರತ ತನ್ನ ಪ್ರಜೆಗಳಿಗೆ ನೆರವು ನೀಡುವ ಪ್ರಯತ್ನವನ್ನು ತೀವ್ರಗೊಳಿಸಿರುವುದರಿಂದ ಇರಾನ್ ನಿಂದ 550ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಅರ್ಮೇನಿಯಾ ಮೂಲಕ ಸ್ಥಳಾಂತರಿಸಲಾಗಿದೆ. ಭೂ ಗಡಿಯ ಮೂಲಕ ಹಾದು ಹೋಗಲು ನೆರವು ನೀಡಿದ ಅರ್ಮೇನಿಯಾದ ಸರ್ಕಾರ ಹಾಗೂ ಅಲ್ಲಿನ ಜನರಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ಕೃತಜ್ಞತೆ ಸಲ್ಲಿಸಿದ್ದಾರೆ. ‘‘ಇದುವರೆಗೆ ಇರಾನ್ನಿಂದ 550ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟಿರುವುದಕ್ಕೆ ಅರ್ಮೇನಿಯಾ ಸರ್ಕಾರ ಹಾಗೂ ಅಲ್ಲಿನ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸವಾಲಿನ ಸಂದರ್ಭದಲ್ಲಿ ಅವರ ಬೆಂಬಲವನ್ನು ಪ್ರಶಂಸಿಸುತ್ತೇನೆ’’ ಎಂದು ಜೈಶಂಕರ್ ಸಾಮಾಜಿಕ ಮಾಧ್ಯಮದ ಪೋಸ್ಟ್ ನಲ್ಲಿ ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರ ಪ್ರಕಾರ, ಟೆಹ್ರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರಿಸುವ ಕಾರ್ಯವನ್ನು ಸಂಘಟಿಸಿದೆ. ಅದು ಭೂಗಡಿಗಳಲ್ಲಿ ವೀಸಾ ಹಾಗೂ ವಲಸೆ ವಿಧಿವಿಧಾನಗಳನ್ನು ಪೂರೈಸಲು ಭಾರತೀಯ ಪ್ರಜೆಗಳಿಗೆ ನೆರವು ನೀಡಿದೆ. ಅರ್ಮೇನಿಯಾಕ್ಕೆ ಪ್ರವೇಶಿಸಿದವರಲ್ಲದೆ, ಸುಮಾರು 90 ಭಾರತೀಯ ಪ್ರಜೆಗಳು ಕೂಡ ರಾಯಭಾರಿ ಕಚೇರಿಯ ನೆರವಿನಿಂದ ಇರಾನ್ನಿಂದ ಅಝರ್ ಬೈಜಾನ್ ಪ್ರವೇಶಿಸಿದ್ದಾರೆ. ಅರ್ಮೇನಿಯಾಗೆ ದಾಟಿದ 550 ಸ್ಥಳಾಂತರಿತರಲ್ಲಿ 284 ಮಂದಿ ಧಾರ್ಮಿಕ ಉದ್ದೇಶಕ್ಕಾಗಿ ಇರಾನ್ಗೆ ಪ್ರಯಾಣಿಸಿದ್ದ ಯಾತ್ರಿಕರು ಎಂದು ಜೈಸ್ವಾಲ್ ತಿಳಿಸಿದ್ದಾರೆ. ಅವರಲ್ಲಿ ಕೆಲವರು ಈಗಾಗಲೇ ಭಾರತಕ್ಕೆ ಮರಳಿದ್ದಾರೆ. ಇನ್ನು ಕೆಲವರು ಮುಂದಿನ ದಿನಗಳಲ್ಲಿ ವಾಪಾಸ್ ಬರುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ. ಕಠಿಣ ಪರಿಸ್ಥಿತಿಯ ನಡುವೆಯೂ ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕಾರ್ಯನಿರ್ವಹಿಸುತ್ತಿದೆ ಹಾಗೂ ರಾಜಧಾನಿಯ ಹೊರಗಿನ ಪ್ರದೇಶಗಳಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಇರಾನ್ ನ ಸುರಕ್ಷಿತ ನಗರಗಳಿಗೆ ಸ್ಥಳಾಂತರಿಸಲು ನೆರವು ನೀಡುತ್ತಿದೆ ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಗುಜರಾತ್ ಬಂದರಿಗೆ ಆಗಮಿಸಿದ ಶಿವಾಲಿಕ್ LPG ಟ್ಯಾಂಕರ್
ಹೊಸದಿಲ್ಲಿ, ಮಾ.16: ಸಂಘರ್ಷ ಪೀಡಿತ ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ ಶಿವಾಲಿಕ್ LPG ಟ್ಯಾಂಕರ್ ಸೋಮವಾರ ಗುಜರಾತಿನ ಮುಂದ್ರಾ ಬಂದರಿಗೆ ಆಗಮಿಸಿದೆ. ಇನ್ನೊಂದು ಟ್ಯಾಂಕರ್ ಮಂಗಳವಾರ ಕಾಂಡ್ಲಾ ಬಂದರು ತಲುಪುವ ನಿರೀಕ್ಷೆಯಿದೆ. LPG ಸಾಗಾಟದ ಭಾರತೀಯ ಧ್ವಜಗಳನ್ನು ಹೊತ್ತ ಶಿವಾಲಿಕ್ ಮತ್ತು ನಂದಾದೇವಿ ಟ್ಯಾಂಕರ್ಗಳು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಲು ಇರಾನ್ ಅಧಿಕಾರಿಗಳು ಅನುಮತಿ ನೀಡಿದ್ದರು. ಶಿವಾಲಿಕ್ ಮತ್ತು ನಂದಾದೇವಿ ಹಡಗುಗಳು ಅನುಕ್ರಮವಾಗಿ ಮಾ.16 ಮತ್ತು ಮಾ.17ರಂದು ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ನೌಕಾ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಅವರು ಶನಿವಾರ ತಿಳಿಸಿದ್ದರು. ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿರುವ ಎಲ್ಲ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ. ಹಾರ್ಮುಝ್ ಜಲಸಂಧಿಯ ಪಶ್ಚಿಮದ ಪರ್ಷಿಯನ್ ಕೊಲ್ಲಿಯಲ್ಲಿ ಭಾರತದ ಧ್ವಜವನ್ನು ಹೊತ್ತ 24 ಹಡಗುಗಳಿದ್ದವು. ಈ ಪೈಕಿ ಒಟ್ಟು 92,700 ಮೆ.ಟನ್ LPG ಹೊತ್ತಿರುವ ಶಿವಾಲಿಕ್ ಮತ್ತು ನಂದಾದೇವಿ ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ್ದು, ಭಾರತದತ್ತ ಪ್ರಯಾಣಿಸುತ್ತಿವೆ ಎಂದೂ ಅವರು ಮಾಹಿತಿ ನೀಡಿದ್ದರು.
‘ನೀವು ಯಾವ ಕಡೆ ಇದ್ದೀರಿ?’: ಮುಸ್ಲಿಂ ರಾಷ್ಟ್ರಗಳಿಗೆ ಲಾರಿಜಾನಿ ಪ್ರಶ್ನೆ
ಟೆಹ್ರಾನ್, ಮಾ.16: ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ಇರಾನ್ ಸ್ಥಿರವಾಗಿದೆ ಎಂದು ಇರಾನ್ ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ತಿಳಿಸಿದ್ದಾರೆ. ಇರಾನ್ ಮೇಲೆ ದಾಳಿ ನಡೆದ ಸಂದರ್ಭಗಳಲ್ಲಿ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರಗಳಿಂದ ನಿರೀಕ್ಷಿತ ಮಟ್ಟದ ಬೆಂಬಲ ದೊರಕಿಲ್ಲವೆಂದು ಅವರು ನಿರಾಶೆ ವ್ಯಕ್ತಪಡಿಸಿದರು. “ಕೆಲವು ರಾಷ್ಟ್ರಗಳು ಇನ್ನೂ ಮುಂದೆ ಹೋಗಿ, ತಮ್ಮ ಪ್ರದೇಶದೊಳಗಿನ ಅಮೆರಿಕದ ಸೈನಿಕ ನೆಲೆಗಳು ಹಾಗೂ ಅಮೆರಿಕ ಮತ್ತು ಇಸ್ರೇಲ್ ಹಿತಾಸಕ್ತಿಗಳನ್ನು ಗುರಿಯಾಗಿಸಿಕೊಂಡಿರುವುದರಿಂದ ಇರಾನ್ ಅನ್ನು ತಮ್ಮ ಎದುರಾಳಿಯಾಗಿ ಘೋಷಿಸಿವೆ” ಎಂದು ಹೇಳಿದರು. ಇರಾನ್ ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಹಿತಾಸಕ್ತಿಗಳನ್ನು ಮಾತ್ರ ಗುರಿಯಾಗಿಸಿಕೊಂಡಿದೆ ಎಂದು ಹೇಳುತ್ತಿದ್ದರೂ, ಅದರ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳು ಗಲ್ಫ್ ಪ್ರದೇಶದ ಹೋಟೆಲ್ಗಳು ಮತ್ತು ಇಂಧನ ಸೌಲಭ್ಯಗಳು ಸೇರಿದಂತೆ ನಾಗರಿಕ ತಾಣಗಳಿಗೂ ತಾಕಿರುವುದಾಗಿ ವರದಿಯಾಗಿದೆ. ನೆರೆಯ ರಾಷ್ಟ್ರಗಳಲ್ಲಿ ಅಮೆರಿಕದ ಸೈನಿಕ ನೆಲೆಗಳು ಇರುವ ಸಂದರ್ಭದಲ್ಲಿ ಇರಾನ್ “ತನ್ನ ಕೈಗಳನ್ನು ಕಟ್ಟಿ ಸುಮ್ಮನಿರುತ್ತದೆ ಎಂದು ನಿರೀಕ್ಷಿಸಲಾಗುವುದಿಲ್ಲ” ಎಂದು ಲಾರಿಜಾನಿ ಹೇಳಿದರು. “ಇಂದಿನ ದಾಳಿಯು ವಾಸ್ತವದಲ್ಲಿ ಒಂದು ಕಡೆ ಅಮೆರಿಕ ಮತ್ತು ಇಸ್ರೇಲ್, ಮತ್ತೊಂದು ಕಡೆ ಮುಸ್ಲಿಂ ರಾಷ್ಟ್ರ ಇರಾನ್ ಮತ್ತು ಪ್ರತಿರೋಧ ಶಕ್ತಿಗಳ ನಡುವೆ ಇದೆ. ಹಾಗಾದರೆ ನೀವು ಯಾವ ಕಡೆ ಇದ್ದೀರಿ?” ಎಂದು ಅವರು ಮುಸ್ಲಿಂ ರಾಷ್ಟ್ರಗಳನ್ನು ಪ್ರಶ್ನಿಸಿದರು. ಮುಸ್ಲಿಂ ರಾಷ್ಟ್ರಗಳ ಏಕತೆಗೆ ಕರೆ ನೀಡಿದ ಲಾರಿಜಾನಿ, ಇರಾನ್ ಈ ಪ್ರದೇಶದ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಅಮೆರಿಕಕ್ಕೆ ಯಾವುದೇ ನಿಷ್ಠೆ ಇಲ್ಲ ಮತ್ತು ಇಸ್ರೇಲ್ ವಾಸ್ತವವಾಗಿ ನಿಮ್ಮ ಶತ್ರು ಎಂಬುದು ನಿಮಗೆ ತಿಳಿದಿದೆ” ಎಂದು ಅವರು ಹೇಳಿದರು.
ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ; ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ ಮೊಕದ್ದಮೆ
ಜೈಪುರ, ಮಾ. 16: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ ಮೊಕದ್ದಮೆಯೊಂದು ದಾಖಲಾಗಿದೆ. ಅಯ್ಯರ್ ಶನಿವಾರ ಜೈಪುರದ ಕಾಲೇಜೊಂದರಲ್ಲಿ ‘ಭಾರತದ ಭವಿಷ್ಯ: ನಕಲಿ-ಹಿಂದುತ್ವ ಅಥವಾ ಜಾತ್ಯತೀತ ಭಾರತ?’ ಎಂಬ ವಿಷಯದ ಕುರಿತು ಸಾರ್ವಜನಿಕ ಉಪನ್ಯಾಸ ನೀಡಿದ್ದರು. ಭಾಷಣದ ವೇಳೆ, ತಾನು 2017ರಲ್ಲಿ ಮೋದಿ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟೀಕರಣ ನೀಡಲು ಪ್ರಯತ್ನಿಸಿದರು. ತನ್ನ ಆ ಹೇಳಿಕೆ ಮೋದಿಯ ಗುಣದ ಬಗ್ಗೆ ಆಗಿತ್ತೇ ಹೊರತು, ಅವರ ಜಾತಿ ಬಗ್ಗೆ ಆಗಿರಲಿಲ್ಲ ಎಂದು ಹೇಳಿದ ಅವರು, ಹೇಳಿಕೆಯನ್ನು ತಿರುಚಲಾಗಿತ್ತು ಎಂದರು. ಈ ವೀಡಿಯೊ ಆನ್ಲೈನ್ನಲ್ಲಿ ಪ್ರಸಾರಗೊಂಡ ಬಳಿಕ, ಹಳೆಯ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಅದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಅಯ್ಯರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಧಾನಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸುವುದು ರಾಷ್ಟ್ರದ ಘನತೆಗೆ ಮಾಡುವ ಅವಮಾನ ಎಂದು ಬಿಜೆಪಿ ನಾಯಕರು ಹೇಳಿ, ಸಾರ್ವಜನಿಕ ಕ್ಷಮಾಪಣೆ ನೀಡುವಂತೆ ಅಯ್ಯರ್ ಅವರನ್ನು ಒತ್ತಾಯಿಸಿದರು. ಈ ನಡುವೆ, ಬಾಬುಲಾಲ್ ತನ್ವರ್ ಎಂಬ ಸ್ಥಳೀಯ ನಿವಾಸಿಯೊಬ್ಬರು, ಅಯ್ಯರ್ ಪ್ರಧಾನಿ ಬಗ್ಗೆ ಮಾತನಾಡುವಾಗ ಅಸಭ್ಯ ಮತ್ತು ನಿಂದನಾತ್ಮಕ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪೊಲೀಸರು ಅಯ್ಯರ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆ ಕೈಬಿಡಲು ಒತ್ತಾಯಿಸಿ ಡಿಕೆ ಶಿವಕುಮಾರ್ಗೆ ಮನವಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಹಿರೇವಡ್ಡಟ್ಟಿ (ಬೇಡ್ತಿ-ವರದಾ) ನದಿ ಜೋಡಣೆ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಪರಿಸರ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿ ಉನ್ನತ ಮಟ್ಟದ ನಿಯೋಗವೊಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಸೋಮವಾರ ವಿಧಾನಸೌಧದಲ್ಲಿ ಉತ್ತರ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ನೇತೃತ್ವದಲ್ಲಿ, ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ
ಮಾದಕ ವಸ್ತು ಸೇವನೆ ಆರೋಪ: 6 ಮಂದಿಯ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಿರಣ ಪ್ರಸಾದ್ (22), ಸಲ್ಮಾನ್ (18), ಪ್ರಜ್ವಲ್ (23), ಕಾರ್ತಿಕ್ (24), ಪ್ರಜ್ವಲ್ ಅಶ್ವತ್ಥ್ ವೇಗಸ್ (25) ಮತ್ತು ಅನ್ಸಿಲ್ ಗ್ರಿಪ್ಥ್ ಅಲ್ಪ್ರೇಡ್ (24) ಬಂಧಿತ ಆರೋಪಿಗಳಾಗಿದ್ದಾರೆ. *ಅಡ್ಯಾರ್ ಪದವಿನ ಅಂಬೇಡ್ಕರ್ ಭವನದ ಮುಂದಿನ ಮೈದಾನದಲ್ಲಿ ಗಾಂಜಾ ಸೇವನೆ ಮಾಡಿ ಅನುಮಾನಾಸ್ಪದ ವಾಗಿ ವರ್ತಿಸುತ್ತಿದ್ದ ಕಿರಣ ಪ್ರಸಾದ್ ಹಾಗೂ ಮುಹಮ್ಮದ್ ಸಲ್ಮಾನ್ರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. *ಮಾದಕ ವಸ್ತು ಸೇವಿಸಿ ಅಡ್ಯಾರ್ ಕಟ್ಟೆ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಕಾರ್ತಿಕ್ ಮತ್ತು ಪ್ರಜ್ವಲ್ರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. *ಪಡುಶೆಡ್ಡೆ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ಪ್ರಜ್ವಲ್ ಅಶ್ವತ್ಥ್ ವೇಗಸ್ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. *ಬೊಂದೇಲ್ ಜಂಕ್ಷನ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಅನ್ಸಿಲ್ ಗ್ರಿಪ್ಥ್ ಅಲ್ಪ್ರೇಡ್ ಎಂಬಾತನ್ನು ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನೂತನ ಸುಂಕ ವ್ಯವಸ್ಥೆಯ ಬಳಿಕ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ: ವಾಣಿಜ್ಯ ಕಾರ್ಯದರ್ಶಿ
ಹೊಸದಿಲ್ಲಿ, ಮಾ. 16: ನೂತನ ಜಾಗತಿಕ ಸುಂಕ ವ್ಯವಸ್ಥೆ ಜಾರಿಗೆ ಬಂದ ಬಳಿಕ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಔಪಚಾರಿಕವಾಗಿ ಸಹಿ ಹಾಕಲಾಗುವುದು ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗ್ರವಾಲ್ ಸೋಮವಾರ ತಿಳಿಸಿದ್ದಾರೆ. ‘‘ಈಗ ನಾವು ಒಪ್ಪಂದದ ವಿವರಗಳ ಬಗ್ಗೆ ಅಮೆರಿಕದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ’’ ಎಂದು ಅವರು ಹೇಳಿದರು. ಕಳೆದ ತಿಂಗಳು ವ್ಯಾಪಾರ ಒಪ್ಪಂದದ ಚೌಕಟ್ಟಿಗೆ ಅಮೆರಿಕ ಮತ್ತು ಭಾರತ ಒಪ್ಪಿಗೆ ನೀಡಿದ್ದವು. ಈ ನಡುವೆ ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಸರ್ಕಾರದ ಜಾಗತಿಕ ಸುಂಕಗಳನ್ನು ರದ್ದುಗೊಳಿಸಿದೆ. ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಅಮೆರಿಕವು ತನ್ನ ಜಾಗತಿಕ ಸುಂಕ ದರಗಳನ್ನು ಪ್ರಕಟಿಸಿದ ಬಳಿಕ ಅದರೊಂದಿಗೆ ಇರುವ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗುವುದು ಎಂದು ಅಗ್ರವಾಲ್ ತಿಳಿಸಿದರು. ತನ್ನ ವ್ಯಾಪಾರ ಭಾಗೀದಾರಿಕೆಗಳನ್ನು ವಿಸ್ತರಿಸುವ ಪ್ರಯತ್ನವಾಗಿ ಭಾರತವು ಅಮೆರಿಕವಲ್ಲದೆ ಇತರ ದೇಶಗಳು ಹಾಗೂ ಪ್ರಾದೇಶಿಕ ಗುಂಪುಗಳೊಂದಿಗೆ ಆರು ಮುಕ್ತ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆಗಳನ್ನು ನಡೆಸುತ್ತಿದೆ ಎಂದು ಅವರು ಹೇಳಿದರು.
ದ.ಕ.ಜಿಲ್ಲಾ ಜೈಲು ಅಧೀಕ್ಷಕರಿಗೆ ಕೈದಿಗಳಿಂದ ಹಲ್ಲೆಗೆ ಯತ್ನ, ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು
ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಜೈಲು ಅಧೀಕ್ಷಕರು ಮತ್ತು ಸಿಬ್ಬಂದಿಗಳಿಗೆ ಮೂವರು ವಿಚಾರಣಾಧೀನ ಕೈದಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಾದ ಇಕ್ಬಾಲ್, ಶೆಹರಾಜ್ ಯಾನೆ ಶಾರೂಕ್, ಅಫ್ರೀದ್ ಹಲ್ಲೆಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಮಾ.13ರ ರಾತ್ರಿ ವಿಚಾರಣಾ ಕೈದಿ ಇಕ್ಬಾಲ್ ಎಂಬಾತ ಕಚೇರಿಗೆ ಬಂದು ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಕೈದಿಗಳನ್ನು ತನ್ನ ಕೊಠಡಿಗೆ ಸೇರಿಸಬೇಕು ಎಂದು ಜೋರಾಗಿ ಕೂಗಾಡಿ ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ್ದಾನೆ. ಆವಾಗ ತಾನು ಸಮಾಧಾನ ಪಡಿಸಿದರೂ ಸುಮ್ಮನಾಗದೆ ಹಲ್ಲೆಗೈದ. ಈ ಸಂದರ್ಭ ಆಫ್ರೀದ್ ಎಂಬ ಇನ್ನೊಬ್ಬ ವಿಚಾರಣಾಧೀನ ಕೈದಿ ಕೂಡ ತನಗೆ ಬೈದು ಪ್ಲಾಸ್ಟಿಕ್ ಕುರ್ಚಿಯಿಂದ ಹಲ್ಲೆಗೆ ಯತ್ನಿಸಿದ ಎಂದು ಜೈಲು ಅಧೀಕ್ಷಕ ಶರಣಪ್ಪದೂರು ನೀಡಿದ್ದಾರೆ. ಈ ಆರೋಪಿಗಳು ಜೈಲಿನೊಳಗೆ ಅಳವಡಿಸಿರುವ ನೀರು ಶುದ್ಧೀಕರಣ ಯಂತ್ರ ಮತ್ತು ಪೈಪ್ ಹಾಳು ಮಾಡಿದ್ದಾರೆ. ಇದರ ಮೌಲ್ಯ ಸುಮಾರು 12 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನೋರ್ವ ಕೈದಿ ಶೆಹರಾಜ್ ತಾನಿದ್ದ ಕೊಠಡಿಯೊಳಗಿನ ವಸ್ತುಗಳಿಗೆ ಹಾನಿ ಮಾಡಿದ್ದಾನೆ. ಕೇರಂ ಬೋರ್ಡ್ ಮುರಿದು ಅದರ ರೀಪುಗಳನ್ನು ಇಕ್ಬಾಲ್ ಮತ್ತು ಆಪ್ರೀದ್ಗೆ ನೀಡಿ ಹಲ್ಲೆ ಮಾಡಲು ಪ್ರಚೋದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟ್ರೇಡಿಂಗ್ ಹೆಸರಿನಲ್ಲಿ ವಂಚನೆ: ಪ್ರಕರಣ ದಾಖಲು
ಮಂಗಳೂರು, ಮಾ.16: ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಆಮಿಷವೊಡ್ಡಿ 25.85 ಲಕ್ಷ ರೂ. ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತಿ ಜೀವನ ನಡೆಸುತ್ತಿದ್ದ 64 ವರ್ಷ ಪ್ರಾಯದ ವ್ಯಕ್ತಿ ವಾಟ್ಸ್ಆ್ಯಪ್ನಲ್ಲಿ ಬಂದ ಸಂದೇಶವನ್ನು ಪರಿಶೀಲಿಸಿದಾಗ ಟ್ರೇಡಿಂಗ್ ಬಗ್ಗೆ ಮಾಹಿತಿ ಇತ್ತು. ಟ್ರೇಡಿಂಗ್ನಲ್ಲಿ ಆಸಕ್ತಿ ಹೊಂದಿದ್ದ ವ್ಯಕ್ತಿ ಸಂದೇಶ ಕಳುಹಿಸಿದವರೊಂದಿಗೆ ವಾಟ್ಸ್ಆ್ಯಪ್ ನಲ್ಲಿ ಚಾಟಿಂಗ್ ನಡೆಸಿದ್ದರು. ಬಳಿಕ ಆರೋಪಿಗಳು ವಿವಿಧ ವಾಟ್ಸ್ಆ್ಯಪ್ ಗ್ರೂಪ್ಗಳಿಗೆ ಅವರನ್ನು ಸೇರಿಸಿ ಶೇ.25 ಲಾಭಾಂಶ ನೀಡಲಾಗುವುದು ಎಂದು ತಿಳಿಸಿ ಜ.21ರಿಂದ ಫೆ.12ರವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ 25,85,312 ರೂ. ವರ್ಗಾವಣೆ ಮಾಡಿರುವುದಾಗಿ ದೂರಲಾಗಿದೆ. ಆರೋಪಿಗಳು ಹೂಡಿಕೆ ಮಾಡಿದ ಹಣ ನೀಡದೆ ವಂಚಿಸಿರುವ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
Afghanistan | ಪಾಕಿಸ್ತಾನದ ದಾಳಿಯಲ್ಲಿ ಮೂರು ಮಕ್ಕಳ ಸಹಿತ 4 ಮಂದಿ ಮೃತ್ಯು
ಕಾಬೂಲ್, ಮಾ.16: ಪೂರ್ವ ಅಫ್ಘಾನಿಸ್ತಾನದಲ್ಲಿ ರವಿವಾರ ತಡರಾತ್ರಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಮೂವರು ಮಕ್ಕಳು ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ರವಿವಾರ ತಡರಾತ್ರಿ ಗುರ್ಬಝ್ ಜಿಲ್ಲೆಯ ನಾರಿ ಗ್ರಾಮದ ಮೇಲೆ ಪಾಕಿಸ್ತಾನದ ಪಡೆಗಳು ಮೋರ್ಟಾರ್ ಶೆಲ್ ಪ್ರಯೋಗಿಸಿದ್ದು, ಒಂದು ಮಗು ಮತ್ತು ಮಹಿಳೆ ಮೃತಪಟ್ಟಿದ್ದಾರೆ. ಖೋಸ್ಟ್ ಪ್ರಾಂತದಲ್ಲಿ ನಡೆದ ಮತ್ತೊಂದು ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಸಮೀಪದ ಮತ್ತೊಂದು ಗ್ರಾಮದ ಮಾರುಕಟ್ಟೆ ಹಾಗೂ ವೈದ್ಯಕೀಯ ಕ್ಲಿನಿಕ್ ಮೇಲೆಯೂ ಶೆಲ್ ದಾಳಿ ನಡೆದಿದ್ದು, ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೂರ್ವ ಖೋಸ್ಟ್ ಪ್ರಾಂತದ ಗವರ್ನರ್ ಕಚೇರಿಯನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಜಗಳ, ಹಲ್ಲೆ ಬಳಿಕ ಪತ್ನಿ ಸಾವಿಗೆ ಶರಣು: ಪತಿ ಮೇಲಿನ ಕೇಸ್ ರದ್ದು ಮಾಡಲ್ಲವೆಂದ ಕರ್ನಾಟಕ ಹೈಕೋರ್ಟ್!
ಪತಿಯ ಜತೆಗೆ ಜಗಳ ಮಾಡಿ ಹಲ್ಲೆ ನಡೆಸಿದ ಬಳಿಕ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಪತಿಯ ಮೇಲೆ ಆತ್ಮಹತ್ಯೆ ಪ್ರಚೋದನೆ ಕೇಸ್ ದಾಖಲಾಗಿದೆ. ಸದ್ಯ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದು, ತನ್ನ ಮೇಲಿನ ಕೇಸ್ ರದ್ದಿಗೆ ಮನವಿ ಮಾಡಿದ್ದಾರೆ. ಹೈಕೋರ್ಟ್ ನಿರಾಕರಣೆ ಮಾಡಿದ್ದು, ವಿಚಾರಣೆ ಎದುರಿಸಬೇಕಿದೆ.
Middle East Conflict- ಭಾರತದ ಪಾಲುದಾರಿಕೆ ಇರುವ ಇರಾನ್ ನ `ಚಾಬಹಾರ್' ಬಂದರಿಗೂ ಅಮೆರಿಕ ದಾಳಿಯ ಬಿಸಿ!
USA - Iran War- ಮಧ್ಯಪ್ರಾಚ್ಯ ಸಂಘರ್ಷವು ಇದೀಗ 17ನೇ ದಿನಕ್ಕೆ ಕಾಲಿಟ್ಟಿದ್ದು ಅಮೆರಿಕ ಸೋಮವಾರದಂದು ಭಾರತದ ಪಾಲುದಾರಿಕೆಯ 'ಚಾಬಹಾರ್' ಬಂದರಿನ ಮೇಲೆ ದಾಳಿ ನಡೆಸಿದೆ. ಇತ್ತ ಇರಾನ್ ನಡೆಸಿದ ಡ್ರೋನ್ ದಾಳಿಯಿಂದಾಗಿ ದುಬೈ ಏರ್ ಪೋರ್ಟ್ ನಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಇಸ್ರೇಲ್ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಖಮೇನಿ ಬಳಸುತ್ತಿದ್ದ ವಿಮಾನ ಸೇರಿದಂತೆ ಒಟ್ಟು 16 ಯುದ್ಧ ವಿಮಾನಗಳು ನಾಶವಾಗಿವೆ. ಏತನ್ಮಧ್ಯೆ ಯುದ್ಧ ಕೊನೆಗಾಣಿಸಿ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಫ್ರಾನ್ಸ್ ಅಧ್ಯಕ್ಷರು ಇರಾನ್ಗೆ ಮನವಿ ಮಾಡಿದ್ದಾರೆ.
2025ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ; ಒಟ್ಟು 24 ಲೇಖಕರಿಗೆ ಪ್ರಶಸ್ತಿ
ಹೊಸದಿಲ್ಲಿ, ಮಾ. 16: 2025ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸೋಮವಾರ ಘೋಷಿಸಲಾಗಿದ್ದು, ಕನ್ನಡದಲ್ಲಿ ಅಮರೇಶ್ ನುಗಡೋಣಿ, ತಮಿಳಿನಲ್ಲಿ ಸಾ. ತಮಿಳ್ ಸೆಲ್ವನ್, ತೆಲುಗಿನಲ್ಲಿ ನಂದಿನಿ ಸಿಧಾ ರೆಡ್ಡಿ, ಮಲಯಾಳಂನಲ್ಲಿ ಎನ್. ಪ್ರಭಾಕರನ್ ಸೇರಿದಂತೆ ಹಲವು ಲೇಖಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಒಟ್ಟು 24 ಭಾಷೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದ್ದು, ಅದರಲ್ಲಿ 8 ಕವನ ಸಂಕಲನ, 4 ಕಾದಂಬರಿ, 6 ಸಣ್ಣಕಥಾ ಪುಸ್ತಕಗಳು, 2 ಪ್ರಬಂಧ ಸಂಕಲನ, 1 ಸಾಹಿತ್ಯ ವಿಮರ್ಶೆ ಪುಸ್ತಕ, 1 ಆತ್ಮಚರಿತ್ರೆ ಹಾಗೂ 2 ಜೀವನಚರಿತ್ರೆಗಳು ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಬಾಜನವಾಗಿವೆ. ತಮಿಳ್ಸೆಲ್ವನ್ ಅವರ ಸಾಹಿತ್ಯ ವಿಮರ್ಶೆ ಕೃತಿ ‘ತಮಿಳ್ ಸಿರುಕಥೈಯಿನ್ ತಡಂಗಲ್’, ನಂದಿನಿ ಸಿಧಾ ರೆಡ್ಡಿ ಅವರ ಕಾವ್ಯಕೃತಿ ‘ಅನಿಮೇಶ್’, ಪ್ರಭಾಕರನ್ ಅವರ ಕಾದಂಬರಿ ‘ಮಾಯಾಮನುಷ್ಯರ್’ ಹಾಗೂ ಅಮರೇಶ್ ನುಗಡೋಣಿ ಅವರ ಸಣ್ಣಕಥೆ ‘ದಡೆ ಸೇರಿಸು ತಂದೆ’ ಪ್ರಶಸ್ತಿಗೆ ಆಯ್ಕೆಯಾದ ಕೆಲವು ಕೃತಿಗಳು. ಇಂಗ್ಲೀಷ್ ಲೇಖಕ ಹಾಗೂ ಮಾಜಿ ರಾಯಭಾರಿ ನವತೇಜ್ ಸರ್ನಾ ಅವರ ಕಾದಂಬರಿ ‘ಕ್ರಿಮ್ಸನ್ ಸ್ಪ್ರಿಂಗ್’ ಹಾಗೂ ಹಿಂದಿ ಲೇಖಕಿ ಮಮ್ತಾ ಕಾಲಿಯಾ ಅವರ ‘ಜೀತೇ ಜೀತ್ ಅಲಹಾಬಾದ್’ ಸ್ಮರಣ ಸಂಪುಟ ಕೂಡ ಈ ಬಾರಿಯ ಪ್ರಶಸ್ತಿಗೆ ಬಾಜನವಾಗಿದೆ. ಮಾರ್ಚ್ 31ರಂದು ಈ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ನೀಡಲಾಗುವುದು. ಈ ವೇಳೆ ತಾಮ್ರ ಫಲಕ, ಶಾಲು ಹಾಗೂ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಮಾಹಿತಿ ತಿಳಿಸಿದೆ.
ಬೆಂಗಳೂರು : ಎಸ್ಐಆರ್ ಮತದಾರರ ಪಟ್ಟಿ ಸ್ವಚ್ಛ ಮಾಡಲು ನಡೆಯುತ್ತಿರುವ ಪ್ರಕ್ರಿಯೆ ಅಲ್ಲ, ಇದು ರಕ್ತರಹಿತವಾದ, ರಾಜಕೀಯ ಕಗ್ಗೊಲೆ. ಹಿಂದೂಗಳ ದೇಶ ಮಾತ್ರವಾಗಿಸುವ ರಾಜಕೀಯ ಷಡ್ಯಂತ್ರ ಎಂದು ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಶಾಸಕರ ಭವನದಲ್ಲಿ ಎಸ್ಐಆರ್ ಷಡ್ಯಂತ್ರವನ್ನು ವಿಫಲಗೊಳಿಸುವ ಕ್ರಿಯಾ ಯೋಜನೆ ರೂಪಿಸಲು ನಡೆದ ‘ಸರ್ವ ಪಕ್ಷ, ಸರ್ವ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲ, ಬದಲಿಗೆ ಆಯ್ದ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಅಳಿಸುವ ಪ್ರಕ್ರಿಯೆಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಕೆಂಪುಕೋಟೆಯ ಮೇಲೆ ಹಾರುವ ಧ್ವಜವೇ ಬದಲಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಎಸ್ಐಆರ್ ಮೂಲಕ ದೇಶದ ಸುಮಾರು 16.5 ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಹಾಕುವ ಸಂಚು ನಡೆದಿದೆ. ಮತದಾರರ ಆಯ್ಕೆಯ ಹಕ್ಕು ಕಸಿಯಲ್ಪಟ್ಟಿದೆ. ಈ ಹಿಂದೆ ಜನರು ಸರಕಾರವನ್ನು ಆರಿಸುತ್ತಿದ್ದರು, ಆದರೆ ಈಗ ಸರಕಾರವೇ ತನಗೆ ಬೇಕಾದ ಮತದಾರರನ್ನು ಆರಿಸಿಕೊಳ್ಳುತ್ತಿದೆ ಎಂದು ತಿಳಿಸಿದರು. ಭವಿಷ್ಯದಲ್ಲಿ ನಡೆಯಲಿರುವ ‘ಡಿಲಿಮಿಟೇಶನ್’ ಪ್ರಕ್ರಿಯೆಯ ನಂತರ, ದಕ್ಷಿಣದ ರಾಜ್ಯಗಳ ರಾಜಕೀಯ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ. ಉತ್ತರ ಭಾರತದ ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರದ ಅರ್ಧಭಾಗ- ಈ ಎರಡೂವರೆ ರಾಜ್ಯಗಳ ಲೋಕಸಭಾ ಸದಸ್ಯರ ಸಂಖ್ಯೆ ಇಡೀ ದಕ್ಷಿಣ ಭಾರತದ ಸದಸ್ಯರ ಸಂಖ್ಯೆಗಿಂತ ಹೆಚ್ಚಿರಲಿದೆ ಎಂದು ಹೇಳಿದರು. ತಮಿಳುನಾಡಿನ ಮತದಾರರ ಹಕ್ಕು ವೇದಿಕೆಯ ಸಮನ್ವಯಕ ಥಾಮಸ್ ಫ್ರಾಂಕೋ ಮಾತನಾಡಿ, ಚುನಾವಣಾ ಆಯೋಗವು 2002-3ರ ದಾಖಲೆಗಳನ್ನು ಕೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ. ಅಸ್ಸಾಂನಲ್ಲಿ ಎಸ್ಐಆರ್ ಮಾಡದೆ ಕೇವಲ ಪರಿಷ್ಕರಣೆ ಮಾಡಿರುವುದನ್ನು ಗಮನಿಸಿದರೆ, ಇದರ ಹಿಂದೆ ನಿರ್ದಿಷ್ಟ ರಾಜಕೀಯ ಹಿತಾಸಕ್ತಿ ಇರುವುದು ಸ್ಪಷ್ಟವಾಗುತ್ತದೆ ಎಂದರು. ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಬಿಹಾರದಲ್ಲಿ ಈ ಪ್ರಕ್ರಿಯೆಯ ನಂತರ ಲಕ್ಷಾಂತರ ಮತದಾರರನ್ನು ಅಳಿಸಿಹಾಕಲಾಗಿದೆ. ಕರ್ನಾಟಕವು ಈ ಹೋರಾಟದಲ್ಲಿ ದೇಶಕ್ಕೆ ಮಾದರಿಯಾಗಬೇಕು. ಮತದಾರರು ಕೇವಲ 2 ದಾಖಲೆಗಳನ್ನು (ಜನ್ಮ ದಿನಾಂಕ ಮತ್ತು ವಾಸಸ್ಥಳದ ದೃಢೀಕರಣ) ಮಾತ್ರ ನೀಡುವಂತೆ ಸರಕಾರ ಚುನಾವಣಾ ಆಯೋಗದ ಮೇಲೆ ಒತ್ತಡಹೇರಬೇಕು ಎಂದು ತಿಳಿಸಿದರು. ಸಭೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ರಿಝ್ವಾನ್ ಅರ್ಷದ್, ದಲಿತ ಮುಖಂಡ ಎನ್.ವೆಂಕಟೇಶ್, ರೈತ ಮುಖಂಡ ವೀರಸಂಗಯ್ಯ, ನೂರ್ ಶ್ರೀಧರ್, ಎಸ್ಡಿಪಿಐನ ಅಬ್ದುಲ್ ಮಜೀದ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು. ಸಭೆಯ ಪ್ರಮುಖ ನಿರ್ಣಯಗಳು: ಎಸ್ಐಆರ್ ಪ್ರಕ್ರಿಯೆಯನ್ನು ಯಥಾರೂಪದಲ್ಲಿಯೇ ಒಪ್ಪಿಕೊಳ್ಳುವುದಿಲ್ಲ. ಜನಸ್ನೇಹಿಯಾದ ರೀತಿಯಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ಇರುವಂತೆ ‘ಸಾಮಾಜಿಕ ಆಡಿಟ್’ನ್ನು ಕಡ್ಡಾಯ ಕ್ರಮವಾಗಿ ಅನುಸರಿಸಬೇಕು. ಗ್ರಾಮೀಣಭಾಗದಲ್ಲಿ ‘ಗ್ರಾಮಸಭೆ’ಗಳನ್ನು ಹಾಗೂ ನಗರ ಪ್ರದೇಶಗಳಲ್ಲಿ ‘ಬೂತ್ ಸಭೆಗಳನ್ನು ನಡೆಸಿ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಾರ್ವಜನಿಕವಾಗಿ ನಡೆಸಬೇಕು. ಆಧಾರ್ ಕಾರ್ಡನ್ನು 12ನೇ ಸಾಕ್ಷ್ಯವಾಗಿಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿರುವಾಗ ಚುನಾವಣಾ ಆಯೋಗ ಅದನ್ನು ಉಲ್ಲಂಘಿಸಬಾರದು. ಆಧಾರ್ ಕಾರ್ಡ್ ಇದ್ದವರನ್ನು ಮತದಾರರ ಪಟ್ಟಿಯಿಂದ ತೆಗೆಯಬಾರದು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ನೌಕಾಪಡೆಯಲ್ಲಿ ಅಗ್ನಿವೀರ್ ಯೋಜನೆಯಡಿ ನೇಮಕಾತಿ
ಅಗ್ನಿವೀರ್ MR ಹುದ್ದೆಗೆ 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ನೌಕಾಪಡೆಯು 2027ನೇ ಅಗ್ನಿವೀರ್ ಯೋಜನೆಯಡಿ ಅಗ್ನಿವೀರ್ SSR, ಅಗ್ನಿವೀರ್ MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾರ್ಚ್ 14ರಿಂದ ಅಧಿಕೃತವಾಗಿ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6ರೊಳಗೆ ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಏಪ್ರಿಲ್ 10 ಮತ್ತು 11ರಂದು ಅರ್ಜಿ ತಿದ್ದುಪಡಿ ವಿಂಡೋವನ್ನು ತೆರೆಯಲಾಗುತ್ತಿದ್ದು, ದೋಷಗಳಿದ್ದಲ್ಲಿ ಸರಿಪಡಿಸಬಹುದು. ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: https://sailors.navydmpr.in/ssrmedcycle2/login ಪ್ರಮುಖ ದಿನಾಂಕಗಳು ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 14 ಮಾರ್ಚ್ 2026 ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಏಪ್ರಿಲ್ 2026 ಶುಲ್ಕ ಪಾವತಿಗೆ ಕೊನೆಯ ದಿನಾಂಕ: 06 ಏಪ್ರಿಲ್ 2026 ತಿದ್ದುಪಡಿ ದಿನಾಂಕ: 10–11 ಏಪ್ರಿಲ್ 2026 ಪರೀಕ್ಷಾ ದಿನಾಂಕ: ಮೇ 2026 ಅಡ್ಮಿಟ್ ಕಾರ್ಡ್: ಪರೀಕ್ಷೆಗೆ ಮೊದಲು ಫಲಿತಾಂಶ ದಿನಾಂಕ: ಶೀಘ್ರವೇ ಅಪ್ಡೇಟ್ ಮಾಡಲಾಗುವುದು ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು 550 ರೂಪಾಯಿ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜನರಲ್/ಒಬಿಸಿ/ಇಡಬ್ಲ್ಯುಎಸ್: 550 ರೂಪಾಯಿ + 18% ಜಿಎಸ್ಟಿ ಎಸ್ಸಿ/ಎಸ್ಟಿ: 550 ರೂಪಾಯಿ + 18% ಜಿಎಸ್ಟಿ ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವಾಲೆಟ್ ಮೂಲಕ ಪಾವತಿಸಬಹುದು. ಶೈಕ್ಷಣಿಕ ಅರ್ಹತೆಗಳು ► ಹುದ್ದೆಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಬದಲಾಗುತ್ತದೆ. ► ಅಗ್ನಿವೀರ್ MR ಹುದ್ದೆಗೆ 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ► ಅಗ್ನಿವೀರ್ SSR ಹುದ್ದೆಗೆ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳೊಂದಿಗೆ 12ನೇ ತರಗತಿ ಪೂರ್ಣಗೊಳಿಸಿರಬೇಕು ಅಥವಾ ಡಿಪ್ಲೊಮಾ ಹೊಂದಿರಬೇಕು. ► SSR (ವೈದ್ಯಕೀಯ) ಹುದ್ದೆಗೆ 12ನೇ ತರಗತಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳನ್ನು ಕಡ್ಡಾಯವಾಗಿ ಓದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆಯು ತಾತ್ಕಾಲಿಕವಾಗಿ ಮೇ 2026ರಲ್ಲಿ ನಡೆಯಲಿದ್ದು, ಇದರ ಫಲಿತಾಂಶಗಳನ್ನು ಜೂನ್ 2026ರಲ್ಲಿ ನಿರೀಕ್ಷಿಸಲಾಗಿದೆ. ಲಿಖಿತ ಪರೀಕ್ಷೆಯ ನಂತರ ದೈಹಿಕ ದಕ್ಷತೆ ಪರೀಕ್ಷೆ (PFT) ನಡೆಯಲಿದ್ದು, ಇದರಲ್ಲಿ ಓಟ, ಪುಷ್-ಅಪ್ಗಳು, ಸ್ಕ್ವಾಟ್ಗಳು ಮತ್ತು ಸಿಟ್-ಅಪ್ಗಳನ್ನು ಒಳಗೊಂಡಿರುವ ದೈಹಿಕ ವ್ಯಾಯಾಮಗಳನ್ನು ಪರೀಕ್ಷಿಸಲಾಗುತ್ತದೆ. ವಿಶೇಷ ಸೂಚನೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಬ್ಬರೂ ಈ ಹುದ್ದೆಗಳಿಗೆ ಅರ್ಹರಾಗಿದ್ದು, ವಯಸ್ಸಿನ ಮಿತಿ ಹಾಗೂ ಇತರ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳುವುದು ಉತ್ತಮ.
ಉಡುಪಿ: ಮಾ.17ರಂದು ಬೃಹತ್ ಉದ್ಯೋಗ ಮತ್ತು ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ
ಉಡುಪಿ, ಮಾ.16: ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ನ ಅಂಗಸಂಸ್ಥೆಯಾದ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಮಾನ್ಯ ಬಿಲ್ಲಾಡಿ ಇದರ ವತಿಯಿಂದ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗೀಯ ಕಚೇರಿ ಮೈಸೂರು ಇದರ ಸಹಯೋಗದಲ್ಲಿ ನಾಳೆ ಮಾ.17ರಂದು ಅಂಬಾಗಿಲಿನ ಅಮೃತ ಗಾರ್ಡನ್ನಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಕಾರ್ಯಕ್ರಮ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಕೆ.ರಘುಪತಿ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಳೆ ಬೆಳಗ್ಗೆ 10:30ಕ್ಕೆ ಉದ್ಯೋಗ ಮೇಳ ಹಾಗೂ ಅಪ್ರೆಂಟಿಶಿಪ್ ಪ್ರಾರಂಭಗೊಳ್ಳಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈಗಾಗಲೇ 1200ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಆನ್ಲೈನ್ನಲ್ಲಿ ಹೆಸರು ನೊಂದಾಯಿಸಿಕೊಂಡಿದ್ದು, ನಾಳೆ 3000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಅದೇ ರೀತಿ 90ಕ್ಕೂ ಅಧಿಕ ಉದ್ಯೋಗದಾತ ಕಂಪೆನಿಗಳು ಭಾಗವಹಿಸಲು ನೊಂದಣಿಗೊಂಡಿದ್ದು, 100ಕ್ಕೂ ಅಧಿಕ ಪ್ರಮುಖ ಕಂಪೆನಿಗಳು ಭಾಗವಹಿಸುವ ಸಾಧ್ಯತೆ ಇದೆ. ಇಲ್ಲಿ ವಿದ್ಯಾರ್ಥಿಗಳು ಉದ್ಯೋಗ ಮೇಳ ಅಥವಾ ಅಪ್ರೆಂಟಿಶಿಪ್ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ರಘುಪತಿ ಭಟ್ ನುಡಿದರು. ಉದ್ಯೋಗ ಮೇಳಗಳು ಅಲ್ಲಲ್ಲಿ ನಡೆಯುತ್ತಿರುವುದಾದರೂ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಮೊದಲ ಬಾರಿ ನಡೆಯತ್ತಿದೆ. ಯೋಜನೆಯಂತೆ 30ಕ್ಕಿಂತ ಅಧಿಕ ಉದ್ಯೋಗಿಗಳನ್ನು ಹೊಂದಿರುವ ಕಂಪೆನಿಗಳು ಅಪ್ರೆಂಟೀಸ್ಗಳನ್ನು ನೇಮಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಸ್ಥಳೀಯ ಸುಜ್ಲಾನ್, ಕೊಚ್ಚಿನ್ ಶಿಪ್ಯಾರ್ಡ್ ಹಾಗೂ ಇನ್ಫೋಸಿಸ್ನಂಥ ಕಂಪೆನಿಗಳು ಅಪ್ರೆಂಟೀಸ್ಗಳನ್ನು ನೇಮಕಮಾಡಿಕೊಳ್ಳಲಿವೆ ಎಂದು ಅವರು ವಿವರಿಸಿದರು. ನಿಯಮದಂತೆ ಅಪ್ರೆಂಟಿಶಿಪ್ ಅವಧಿಯಲ್ಲಿ ಪದವೀಧರರಿಗೆ 4500ರೂ. ಹಾಗೂ ಡಿಪ್ಲೋಮ ಪದವಿ ಹೊಂದಿದವರಿಗೆ 4000ರೂ. ಗೌರವಧನ ಸಿಗುತ್ತದೆ. ಬಳಿಕ ಪ್ರತಿಭಾನ್ವಿತರಿಗೆ ಅಲ್ಲೇ ಅಥವಾ ಉತ್ತಮ ಕಂಪೆನಿಯಲ್ಲಿ ಕೆಲಸವೂ ದೊರೆಯುವ ಸಾಧ್ಯತೆ ಇರುತ್ತದೆ ಎಂದು ರಘುಪತಿ ಭಟ್ ತಿಳಿಸಿದರು. ನಾಳಿನ ಉದ್ಯೋಗ ಮೇಳ ಹಾಗೂ ರಾಷ್ಟ್ರೀಯ ಅಪ್ರೆಂಟಿಷಿಪ್ ಮೇಳವನ್ನು ಮೂಡಬಿದರೆ ಆಳ್ವಾಸ್ ಎಜುಕೇಷನ್ ಫೌಂಡೇಷನ್ನ ಅಧ್ಯಕ್ಷ ಡಾ.ಮೋಹನ ಆಳ್ವ ಉದ್ಘಾಟಿಸಲಿದ್ದಾರೆ. ಕನ್ಯಾಡಿ- ಧರ್ಮಸ್ಥಳ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಲ್ಕಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ ಜೆ.ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಪ್ರಾಂಶುಪಾಲರಾದ ಡಾ.ಗಣನಾಥ ಎಕ್ಕಾರು ಮಾಹಿತಿಗಳನ್ನು ನೀಡಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಪ್ರವೀಣ ಪೂಜಾರಿ, ಕೋಶಾಧಿಕಾರಿ ಭಾಸ್ಕರ ಸುವರ್ಣ, ಟ್ರಸ್ಟ್ನ ಕಾರ್ಯಾಧ್ಯಕ್ಷ ಓಬು ಪೂಜಾರಿ, ಗೌರವ ಸಲಹೆಗಾರ ಡಾ.ಗಣನಾಥ ಎಕ್ಕಾರು ಉಪಸ್ಥಿತರಿದ್ದರು.
Kalaburagi | ಎಸೆಸೆಲ್ಸಿ ಪರೀಕ್ಷೆ-1: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಕಲಬುರಗಿ : ಜಿಲ್ಲೆಯಾದ್ಯಂತ ಮಾ.18 ರಿಂದ ಎ.2ರವರೆಗೆ 2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23, ಜೇವರ್ಗಿ-17, ಸೇಡಂ-10 ಹೀಗೆ ಜಿಲ್ಲೆಯ ಒಟ್ಟು 141 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಎಸೆಸೆಲ್ಸಿ ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಬಿ.ಎನ್.ಎಸ್.ಎಸ್. ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಿಬ್ಬಂದಿ ವರ್ಗದವರನ್ನು ಹೊರತುಪಡಿಸಿ, ಯಾವುದೇ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೆಸ್ ಸೆಟ್ಗಳು ಹಾಗೂ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲಾ ಜೆರಾಕ್ಸ್ ಮತ್ತು ಪುಸ್ತಕ ಅಂಗಡಿ, ಸೈಬರ್ ಹಾಗೂ ಕಂಪ್ಯೂಟರ್ ಸೆಂಟರ್ಗಳನ್ನು ಸಹ ಮುಚ್ಚುವಂತೆಯೂ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಆದೇಶಿಸಿದ್ದಾರೆ.
ಹೊಸದಿಲ್ಲಿ, ಮಾ. 16: ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಹಾಗೂ ಶಿಶುಕಾಮಿ ಜೆಫ್ರಿ ಎಪ್ ಸ್ಟೀನ್ ಹಾಗೂ ತನ್ನ ನಡುವೆ ಸಂಬಂಧ ಕಲ್ಪಿಸುವ ವಿಷಯಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದು ಹಾಕಲು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ನೀಡುವಂತೆ ಹಾಗೂ ಹಲವು ಸಾಮಾಜಿಕ ಮಾಧ್ಯಮ ಸಂಸ್ಥೆಗಳ ವಿರುದ್ಧ ಶಾಶ್ವತ ತಡೆಯಾಜ್ಞೆ ನೀಡುವಂತೆ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ಹಿಮಾಯನಿ ಪುರಿ ನ್ಯಾಯಾಲಯವನ್ನು ಕೋರಿದ್ದಾರೆ. ಎಪ್ ಸ್ಟೀನ್ ಅಥವಾ ಆತನ ಕ್ರಿಮಿನಲ್ ಚಟುವಟಿಕೆಗಳೊಂದಿಗೆ ತಾನು ಹಣಕಾಸು ಸಂಬಂಧ ಹೊಂದಿದ್ದೇನೆ ಅಥವಾ ಆತನ ಸಂಪರ್ಕ ಗುಂಪಿನಲ್ಲಿ ತಾನಿದ್ದೇನೆ ಎಂದು ಹಲವು ಸಾಮಾಜಿಕ ಮಾಧ್ಯಮ ಪೋಸ್ಟ್ ಗಳು ತಪ್ಪಾಗಿ ಪ್ರತಿಪಾದಿಸಿವೆ ಎಂದು ಹಿಮಾಯನಿ ಪುರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಿಂದ ಇಂತಹ ವಿಷಯಗಳನ್ನು ತೆಗೆದು ಹಾಕುವಂತೆ ನ್ಯಾಯಾಲಯವನ್ನು ಆಗ್ರಹಿಸಿರುವ ಅವರು, ಗೂಗಲ್, ಎಕ್ಸ್, ಮೆಟಾ ಹಾಗೂ ಲಿಂಕ್ಡ್ಇನ್ನಂತಹ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳಿಗೆ ಇದೇ ರೀತಿಯ ಮಾನಹಾನಿಕರ ಹೇಳಿಕೆಗಳನ್ನು ತೆಗೆದು ಹಾಕುವಂತೆ ನ್ಯಾಯಾಲಯದಿಂದ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ. ಈ ಮಾನನಷ್ಟ ಮೊಕದ್ದಮೆ ಮಂಗಳವಾರ ವಿಚಾರಣೆಗೆ ಬರಲಿದೆ. ಹಿಮಾಯನಿ ಪುರಿ ಅವರ ಮಾನನಷ್ಟ ಮೊಕದ್ದಮೆಯ ಪ್ರಕಾರ, 2026 ಫೆಬ್ರವರಿ 22ರಿಂದ ಮಾನಹಾನಿಕರ ವಿಷಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲು ಆರಂಭವಾಗಿದೆ. ಎಪ್ ಸ್ಟೀನ್ ಅಥವಾ ಆತನ ಕ್ರಿಮಿನಲ್ ಚಟುವಟಿಕೆಗಳೊಂದಿಗೆ ನೇರ ಅಥವಾ ಪರೋಕ್ಷ ವ್ಯವಹಾರ, ಹಣಕಾಸು, ವೈಯಕ್ತಿಕ ಅಥವಾ ಆತನ ಸಂಪರ್ಕ ಗುಂಪಿನೊಂದಿಗೆ ಸಂಬಂಧ ಹೊಂದಿರುವುದಾಗಿ ಈ ಪೋಸ್ಟ್ ಗಳಲ್ಲಿ ಆರೋಪಿಸಲಾಗಿದೆ.
Madhya Pradesh | 1,025 ಸ್ಥಳಗಳ ಮೇಲೆ ದಾಳಿ; 1,357 LPG ಸಿಲಿಂಡರ್ ಗಳ ವಶ
ಬೋಪಾಲ್, ಮಾ. 16: ಮಧ್ಯಪ್ರದೇಶದಾದ್ಯಂತ LPG ಸಿಲಿಂಡರ್ ಗಳ ಕಾಳಸಂತೆ ಹಾಗೂ ಸಂಗ್ರಹಣೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 1,357 ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ ನಿರ್ದೇಶನಗಳಿಗೆ ಅನುಗುಣವಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಜಿಲ್ಲಾಡಳಿತ ಹಾಗೂ ಪೊಲೀಸರ ತಂಡಗಳು ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ 1,025 ಸ್ಥಳಗಳ ಮೇಲೆ ದಾಳಿ ನಡೆಸಿ 1,357 LPG ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿವೆ. LPG ಸಿಲಿಂಡರ್ ಗಳ ಕಾಳಸಂತೆಯಲ್ಲಿ ತೊಡಗಿದ ಹಾಗೂ ಸಂಗ್ರಹಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದ ವ್ಯಕ್ತಿಗಳ ವಿರುದ್ಧ ಇದುವರೆಗೆ ಒಟ್ಟು 8 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಪೆಟ್ರೋಲ್, ಡೀಸೆಲ್, ಸಿಎನ್ಜಿ, ಪಿಎನ್ಜಿ ಹಾಗೂ ಗೃಹಬಳಕೆಯ LPG ಲಭ್ಯತೆಗೆ ಸಂಬಂಧಿಸಿ ತೈಲ ಕಂಪೆನಿಗಳೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ಮಟ್ಟದಲ್ಲಿ 6 ಮಂದಿ ಸದಸ್ಯರ ಸಮಿತಿಯನ್ನು ರೂಪಿಸಲಾಗಿದೆ. ಈ ಸಮಿತಿ ರಾಜ್ಯಾದ್ಯಂತ ವಾಣಿಜ್ಯ ಹಾಗೂ ಗೃಹಬಳಕೆಯ ಅನಿಲ ಸಿಲಿಂಡರ್ ಗಳ ನಿಯಮಿತ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಮೇಲ್ವಿಚಾರಣೆ ನಡೆಸಲಿದೆ.
ಯುಎಇಯಲ್ಲಿ ಯಾವುದೇ ಸಂಕಷ್ಟ ಬಂದರೂ ಎಲ್ಲರೂ ಒಗ್ಗಟ್ಟಾಗಿ ಎದುರಿಸೋಣ: ಡಾ.ರೊನಾಲ್ಡ್ ಕೊಲಾಸೊ
ದುಬೈನ ಕೊಲಾಸೊ ನಿವಾಸದಲ್ಲಿ 'ಸೌಹಾರ್ದ ಇಫ್ತಾರ್' ಕೂಟ
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 27 ನೇ ಕಂತಿನ ಹಣ ಬಿಡುಗಡೆಯಾಗಿದೆ. ಈಗಾಗಲೇ 15 ಕ್ಕೂ ಅಧಿಕ ಜಿಲ್ಲೆಗಳ ಮಹಿಳೆಯರಿಗೆ ಹಣ ಖಾತೆಗೆ ಜಮೆಯಾಗಿದೆ. ಬಾಕಿ ಉಳಿದವರಿಗೆ ಶೀಘ್ರ ಜಮೆ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕ್ರಮ ಕೈಗೊಂಡಿದೆ. ಇನ್ನು ಎಷ್ಟು ಕಂತಿನ ಹಣ ಬಾಕಿ ಇದೆ? ಯಾವೆಲ್ಲಾ ಕಂತು? ಈ ಬಗ್ಗೆ ವಿವರ ಇಲ್ಲಿದೆ.
ರಾಯಚೂರು | ಶಿಕ್ಷಕರ ಖಾಲಿ ಹುದ್ದೆ ಭರ್ತಿ ಮಾಡಿ, ಕನ್ನಡ ಮಾಧ್ಯಮ ಶಾಲೆ ಉಳಿಸಲು ಕನ್ನಡ ಸೇನೆ ಮನವಿ
ರಾಯಚೂರು: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಜಿಲ್ಲೆಯಲ್ಲಿ ಸುಮಾರು 1,454 ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 239 ಸರ್ಕಾರಿ ಪ್ರೌಢಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಪ್ರಮುಖ ಕೇಂದ್ರಗಳಾಗಿವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಅನೇಕ ಶಿಕ್ಷಕರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಹೊಸ ನೇಮಕಾತಿ ಮಾಡದ ಕಾರಣ ಪ್ರಸ್ತುತ ಸುಮಾರು ಶೇ.50ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕುವುದರಲ್ಲಿ ಅಡಚಣೆ ಉಂಟಾಗುತ್ತಿದೆ. ಇದರಿಂದ ಹಲವಾರು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕನ್ನಡ ಮಾಧ್ಯಮ ಶಾಲೆಗಳ ಅಸ್ತಿತ್ವಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ಕನ್ನಡ ಸೇನೆ ಆತಂಕ ವ್ಯಕ್ತಪಡಿಸಿದೆ. “ಕನ್ನಡ ಉಳಿಸಿ – ಕನ್ನಡ ಬೆಳೆಸಿ” ಎಂಬ ಘೋಷಣೆಯಡಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಸ್ಮಾರ್ಟ್ ಕ್ಲಾಸ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದರ ಜೊತೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಬೇಸಿಗೆ ಕಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸಹ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ವಿಷಯದಲ್ಲಿ ಜಿಲ್ಲಾಧಿಕಾರಿಗಳು ವೈಯಕ್ತಿಕ ಆಸಕ್ತಿ ವಹಿಸಿ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾ ಅಧ್ಯಕ್ಷ ಎಂ.ಬಸವರಾಜ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗೋವಿಂದಪ್ಪ ಚವಾಣ್, ನಾಗಪ್ಪ, ಅಮರೇಶ ನಾಯಕ, ಮಂಜುನಾಥ್, ಶಿವರಾಜ್ ಬಡಿಗೇರ್, ವೀರನಗೌಡ ರಾಮಪ್ಪ ನಾಯಕ, ಪರಶುರಾಮ ಹಾಗೂ ಸಂಘಟನೆ ಕಾರ್ಯಕರ್ತರು ಇದ್ದರು.
Budget Session 2026 | ವಿನಾಕಾರಣ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸದ ಅಧಿಕಾರಿಗಳ ಅಮಾನತು : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಸದನದಲ್ಲಿ ಉತ್ತರಿಸುವಂತೆ ಕೋರಿ ಸದಸ್ಯರು ಕೇಳಿರುವಂತಹ ಪ್ರಶ್ನೆಗಳಿಗೆ ವಿನಾಕಾರಣ ಉತ್ತರ ನೀಡದ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿ ಅಮಾನತು ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಸದನ ಸೇರುತ್ತಿದ್ದಂತೆ ಸರಕಾರದ ಪರವಾಗಿ ಉತ್ತರ ನೀಡಿದ ಅವರು, ಸದನದಲ್ಲಿ ಸದಸ್ಯರು ಕೇಳುವಂತಹ ಪ್ರಶ್ನೆಗಳಿಗೆ ಶೇ.50ಕ್ಕಿಂತ ಕಡಿಮೆ ಉತ್ತರಗಳು ಬರುತ್ತಿರುವುದು ಸರಕಾರಕ್ಕೆ ಮಜುಗರ ಉಂಟು ಮಾಡುವಂತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು. ಈ ಸಂಬಂಧ ನೀವು(ಸ್ಪೀಕರ್) ಎರಡು, ಮೂರು ಬಾರಿ ಸರಕಾರಕ್ಕೆ ತಿಳಿಸಿದ್ದೀರಾ. 230 ಪ್ರಶ್ನೆಗಳ ಪೈಕಿ ಕೇವಲ 84 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿರುವುದರಿಂದ ಸಹಜವಾಗಿಯೆ ವಿಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೀವು ಬೇಸರ ವ್ಯಕ್ತಪಡಿಸಿ, ಸದನ ಮುಂದೂಡಿದ್ದೀರಾ. ಇಂತಹ ಸನ್ನಿವೇಶ ಬಂದಾಗ ಸದನ ಮುಂದೂಡುವುದು ಬಹಳ ವಿರಳ ಎಂದು ಪರಮೇಶ್ವರ್ ತಿಳಿಸಿದರು. ತಾವು ಮುಖ್ಯಮಂತ್ರಿ, ವಿಪಕ್ಷ ನಾಯಕರನ್ನು ಕರೆಸಿ ಮಾತನಾಡಿದ್ದೀರಾ. ಮುಖ್ಯಮಂತ್ರಿಯು, ಮುಖ್ಯ ಕಾರ್ಯದರ್ಶಿಯನ್ನು ಕರೆಸಿ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಸಂಬಂಧ ನೋಟಿಸ್ ನೀಡಬೇಕು. ಯಾರಾದರೂ ವಿನಾಕಾರಣ ತುಂಬಾ ಪ್ರಶ್ನೆಗಳಿಗೆ ಉತ್ತರ ನೀಡದೆ ಉಳಿಸಿಕೊಂಡಿದ್ದರೆ ಅವರನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು. ನಿಮ್ಮ ಬೇಸರವನ್ನು ಸರಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಮುಂದಿನ ದಿನಗಳಲ್ಲಿ ಇಂತಹ ಬೆಳವಣಿಗೆ ಆಗದಂತೆ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಪರಮೇಶ್ವರ್ ತಿಳಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಒಂದು ವಾರದಿಂದ ಇಂತಹ ಘಟನೆಗಳು ಆಗುತ್ತಿರುವ ಕುರಿತು ನಿಮ್ಮ ಗಮನಕ್ಕೆ ತರುತ್ತಿದ್ದೇವೆ. ಇವತ್ತು ಐದನೆ ಬಾರಿ ನೀವು ಸರಕಾರಕ್ಕೆ ಸೂಚನೆ ನೀಡಿ, ಸದನದ ಗೌರವ, ಘನತೆ ಕಾಪಾಡಲು ನೀವು ತೆಗೆದುಕೊಂಡ ತೀರ್ಮಾನ ಅಭಿನಂದನೀಯ ಎಂದರು. ಕಂದಾಯ ಇಲಾಖೆಗೆ ಸಂಬಂಧಿಸಿದ 90 ಪ್ರಶ್ನೆಗಳ ಪೈಕಿ 20 ಪ್ರಶ್ನೆಗಳಿಗೆ ಉತ್ತರ, ವಸತಿ ಇಲಾಖೆಯಲ್ಲಿ 31 ಪ್ರಶ್ನೆಗಳ ಪೈಕಿ 4 ಪ್ರಶ್ನೆಗಳಿಗೆ ಉತ್ತರ ಬಂದಿದೆ. ಸ್ಪೀಕರ್ ಸೂಚನೆಯ ನಂತರವೂ ಪರಿಸ್ಥಿತಿ ಸುಧಾರಿಸಲಿಲ್ಲ. ಮುಖ್ಯ ಕಾರ್ಯದರ್ಶಿ ಕೈ ಚೆಲ್ಲಿ ಕೂತಿದ್ದಾರೆ. ಆದರೆ, ನೀವು ಜನ ಮೆಚ್ಚುವಂತ ನಿರ್ಧಾರ ತೆಗೆದುಕೊಂಡಿದ್ದೀರಾ. ಗೃಹ ಸಚಿವರು ಮೂವರು ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಹೇಳಿದ್ದಾರೆ. ಆ ಕೆಲಸ ಮೊದಲು ಆಗಬೇಕು ಎಂದು ಅವರು ತಿಳಿಸಿದರು. ಕೆಲವು ಐಎಎಸ್ ಅಧಿಕಾರಿಗಳು 8-9 ತಿಂಗಳಿನಿಂದ ಕಚೇರಿಗೆ ಬಂದಿಲ್ಲ. ಗಾಲ್ಫ್ ಆಡೋಕೆ, ಬೇರೆ ಕೆಲಸ ಮಾಡಲು ಸಮಯ ಇರುತ್ತದೆ. ಆದರೆ, ಸದನಕ್ಕೆ ಬಂದು ಉತ್ತರಗಳನ್ನು ಕೊಡಲು ಸಾಧ್ಯವಿಲ್ಲವೇ? ಐಎಎಸ್ ಅಂದರೆ ‘ಐಯಾಮ್ ಸಾರಿ’ ಆಗಿದೆ. ಅದಕ್ಕೆ ‘ವಿ’ ಸೇರಿಸಿ ಐಯಾಮ್ ವೆರಿ ಸಾರಿ ಮಾಡಲಿ. ಸ್ಪೀಕರ್ ಇಂದು ಸದನದಲ್ಲಿ ನಡೆದುಕೊಂಡ ರೀತಿ ಒಂದು ದಾಖಲೆಯಾಗಿದೆ ಎಂದು ಅಶೋಕ್ ಹೇಳಿದರು. ಯಾರು ತಪ್ಪು ಮಾಡಿದ್ದಾರೋ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೊತೆಗೆ, ಅಧಿಕಾರಿಗಳನ್ನು ನಿಯಂತ್ರಿಸುವ ಸಚಿವರಿಗೂ ಜವಾಬ್ದಾರಿ ಇರಬೇಕು. ಸಚಿವರು ಐಎಎಸ್ ಅಧಿಕಾರಿಗಳನ್ನು ನಿಯಂತ್ರಿಸಿದರೆ, ಕೆಳ ಹಂತದ ಅಧಿಕಾರಿಗಳು ಸರಿಯಾಗುತ್ತಾರೆ ಎಂದು ಅವರು ತಿಳಿಸಿದರು. ಬಿಜೆಪಿ ಸದಸ್ಯ ವಿ.ಸುನಿಲ್ ಕುಮಾರ್ ಮಾತನಾಡಿ, ಅಧಿಕಾರಿಗಳಿಗೆ ನೋಟಿಸ್ ನೀಡುವುದು, ಅಮಾನತ್ತು ಮಾಡುವುದು ಒಂದು ಭಾಗ. ಆದರೆ, ಈ ಹಿಂದೆ ರಾಜ್ಯಪಾಲರ ಭಾಷಣದ ಅಧಿವೇಶನದ ವೇಳೆ ಸ್ವತಃ ಮುಖ್ಯಮಂತ್ರಿ, ಎಲ್ಲ ಸಚಿವರಿಗೆ ಪತ್ರ ಬರೆದು ಸದನದಲ್ಲಿ ಇರುವಂತೆ ಹೇಳಿದ್ದರು. ಆದರೂ, ಹೇಗೆ ನಡೆಯಿತು ಎಂದು ಗೊತ್ತಿದೆ. ನಿನ್ನೆ ನೀವು ನನ್ನ ನಮ್ರತೆಯನ್ನು ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಸೂಕ್ಷ್ಮವಾಗಿ ಹೇಳಿದ್ರಿ ಎಂದು ಹೇಳಿದರು. ಸರಕಾರಕ್ಕೆ ಗಂಭೀರತೆ ಇಲ್ಲದಿರಬಹುದು, ಅಧಿಕಾರಿಗಳು ಅಸಹಾಯಕರಾಗಿರಬಹುದು. ಆದರೆ, ಸದನ ಅಸಹಾಯಕವಾಗಬಾರದು. ಈ ನಿಟ್ಟಿನಲ್ಲಿ ನೀವು ಸರಿಯಾದ ನಿರ್ಧಾರ ಕೈಗೊಂಡಿದ್ದೀರಾ. ಇಡೀ ಸದನ ಇದನ್ನು ಮೆಚ್ಚುತ್ತದೆ. ಸಂವೇದನೆ ಇರುವ ಸರಕಾರ, ಅಧಿಕಾರಿಗಳು ಇದ್ದರೆ ಎಚ್ಚೆತ್ತುಕೊಳ್ಳಬೇಕು ಎಂದು ಸುನಿಲ್ ಕುಮಾರ್ ತಿಳಿಸಿದರು. ಬೇಸರ-ಕೋಪದ ನರ ಕಟ್ ಮಾಡಿ ರಾಜಕೀಯಕ್ಕೆ ಬಂದದ್ದು: ಸ್ಪೀಕರ್ ‘ಸರಕಾರದ ನಡವಳಿಕೆಗೆ ಬೇಸರಗೊಂಡು ನೀವು ಸದನ ಮುಂದೂಡಿ ಹೊರಗೆ ಹೋದ್ರಿ’ ಎಂದ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ಯು.ಟಿ.ಖಾದರ್, ‘ಬೇಸರ-ಕೋಪದ ನರವನ್ನು ಕಟ್ ಮಾಡಿಯೆ ನಾನು ರಾಜಕೀಯಕ್ಕೆ ಬಂದದ್ದು. ಸದನದ ಗೌರವ ಕಾಪಾಡಲು ನಾನು ಸದನ ಮುಂದೂಡಿ ಹೊರಗೆ ಹೋಗಬೇಕಾಯಿತು’ ಎಂದು ಸ್ಪಷ್ಟಣೆ ನೀಡಿದರು.
ಬಳ್ಳಾರಿ | ಬೇಸಿಗೆಯಲ್ಲಿ ನವಜಾತ ಶಿಶುಗಳಿಗೆ ಪದೇ ಪದೇ ಎದೆ ಹಾಲುಣಿಸಿ : ಡಿಎಚ್ಒ ಯಲ್ಲಾ ರಮೇಶ್ಬಾಬು
ಬಳ್ಳಾರಿ : ಹೆರಿಗೆ ನಂತರ ತಾಯಂದಿರು ನವಜಾತ ಶಿಶುಗಳಿಗೆ ಪದೇ ಪದೇ ಎದೆಹಾಲುಣಿಸುವ ಮೂಲಕ ಬೇಸಿಗೆಯ ತೀವ್ರ ಬಿಸಿಲಿನಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ಬಾಬು ತಿಳಿಸಿದ್ದಾರೆ. ಜಿಲ್ಲೆಯ ತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಅವರು, ಸಾಮಾನ್ಯವಾಗಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗುತ್ತದೆ ಎಂದು ಹೇಳಿದರು. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೇಸಿಗೆ ಕಾಲದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲಾ ಆಸ್ಪತ್ರೆಗಳ ಸಿಬ್ಬಂದಿಗೆ ಮಾಹಿತಿ ನೀಡಿ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುತ್ತಿದೆ ಎಂದರು. ವಯಸ್ಕರಿಗಿಂತ ಮಕ್ಕಳಲ್ಲಿ ನಿರ್ಜಲೀಕರಣದ ಪ್ರಮಾಣ ಹೆಚ್ಚು ಕಂಡುಬರುವ ಸಾಧ್ಯತೆ ಇರುವುದರಿಂದ ತಾಯಂದಿರು ಮಕ್ಕಳಿಗೆ ಪದೇ ಪದೇ ಎದೆಹಾಲುಣಿಸುವುದು ಅತ್ಯವಶ್ಯಕವಾಗಿದೆ. ವಿಶೇಷವಾಗಿ ಮೊದಲ ಮಗುವಿಗೆ ಜನ್ಮ ನೀಡುವ ತಾಯಂದಿರಿಗೆ ಹೆರಿಗೆ ನಂತರ ನಿಯಮಿತವಾಗಿ ಹಾಲುಣಿಸುವ ಅಭ್ಯಾಸ ತಿಳಿದಿರದೆ ಕೆಲವು ನವಜಾತ ಶಿಶುಗಳಲ್ಲಿ ನಿರ್ಜಲೀಕರಣ ಉಂಟಾಗುವ ಸಾಧ್ಯತೆ ಇದೆ. ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾದಲ್ಲಿ ಈ ಸಾಧ್ಯತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹೇಳಿದರು. ಅಂತಹ ಸಂದರ್ಭಗಳಲ್ಲಿ ಕುಟುಂಬದ ಸದಸ್ಯರು ಬಾಣಂತಿಯರಿಗೆ ನೆರವಾಗಿ ಪ್ರತಿ ಒಂದು ರಿಂದ ಎರಡು ಗಂಟೆಗಳೊಳಗೆ ಮಗುವಿಗೆ ತಪ್ಪದೇ ಎದೆಹಾಲುಣಿಸುವಂತೆ ಗಮನಹರಿಸಬೇಕು. ತಾಯಿಯ ಎದೆಹಾಲಿನಲ್ಲಿ ಸುಮಾರು ಶೇ.70ರಷ್ಟು ನೀರಿನ ಅಂಶವಿರುವುದರಿಂದ ಅದು ಮಗುವಿನ ದೇಹದಲ್ಲಿ ನೀರಿನ ಕೊರತೆಯನ್ನು ತಡೆಯಲು ಸಹಕಾರಿಯಾಗುತ್ತದೆ. ಆರು ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನು ಮಾತ್ರ ನೀಡಬೇಕು ಎಂದು ಸಲಹೆ ನೀಡಿದರು. ಇದಲ್ಲದೆ ಬೇಸಿಗೆ ತಾಪಮಾನದಿಂದ ಮಕ್ಕಳನ್ನು ರಕ್ಷಿಸಲು ತೆಳುವಾದ ಹತ್ತಿ ಬಟ್ಟೆಗಳನ್ನು ಮಾತ್ರ ಹಾಕಬೇಕು. ಮಕ್ಕಳಿಗೆ ಎರಡು ಅಥವಾ ಮೂರು ಬಟ್ಟೆಗಳನ್ನು ಹಾಕುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಕೂಡ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಮಧ್ಯಾಹ್ನ 1ರಿಂದ ಸಂಜೆ 4 ಗಂಟೆಯವರೆಗೆ ಸಾಧ್ಯವಾದಷ್ಟು ಮನೆಯಲ್ಲೇ ಇರಬೇಕು. ಹೊರಗೆ ಹೋಗಬೇಕಾದರೆ ಛತ್ರಿ ಮತ್ತು ನೀರಿನ ಬಾಟಲಿಯೊಂದಿಗೆ ತೆರಳುವಂತೆ ಡಿಎಚ್ಒ ಮನವಿ ಮಾಡಿದ್ದಾರೆ.
IPL RCB Virat Kohli: ಐಪಿಎಲ್ 2026ರ ಕಹಳೆ ಮೊಳಗಿದ್ದು, ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ. ಇದಕ್ಕೂ ಮುನ್ನ ಆರ್ಸಿಬಿ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ತಮ್ಮ 18 ವರ್ಷಗಳ ಸುದೀರ್ಘ ಐಪಿಎಲ್ ಪ್ರಯಾಣದ ನೆನಪುಗಳನ್ನು ಮೆಲುಕು
ಮಧ್ಯಪ್ರಾಚ್ಯ ಸಂಘರ್ಷ | ಭಾರತೀಯ ವಿಮಾನಯಾನ ಸಂಸ್ಥೆಗಳಿಂದ 4,335 ವಿಮಾನ ಸಂಚಾರ ರದ್ದು: ಕೇಂದ್ರ ಸರ್ಕಾರ
“ವಿದೇಶಿ ವಿಮಾನಯಾನ ಸಂಸ್ಥೆಗಳಿಂದ 1,187 ವಿಮಾನಗಳ ಸಂಚಾರ ರದ್ದು”
ಹರಪನಹಳ್ಳಿ | ಬುದ್ದ, ಬಸವ, ಅಂಬೇಡ್ಕರ್, ಪೈಗಂಬರರ ಚಿಂತನೆಗಳು ಒಂದೇ : ಶಾಸಕಿ ಲತಾ ಮಲ್ಲಿಕಾರ್ಜುನ
ರಮಝಾನ್ ಕಿಟ್ ವಿತರಣೆ ಕಾರ್ಯಕ್ರಮ
ಬೆಂಗಳೂರಿನಲ್ಲಿ 2026ರ IPL ಪಂದ್ಯಗಳ ಆತಿಥ್ಯಕ್ಕೆ RCBಗೆ ರಾಜ್ಯ ಸರ್ಕಾರದ ಅನುಮತಿ
ಬೆಂಗಳೂರು, ಮಾ.16: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಮವಾರ ಕರ್ನಾಟಕ ಸರ್ಕಾರದಿಂದ ಅಧಿಕೃತ ಅನುಮತಿ ಪಡೆದ ಹಿನ್ನೆಲೆ, 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಗಳು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವುದು ದೃಢಪಟ್ಟಿದೆ. ಈ ವರ್ಷಾರಂಭದಲ್ಲಿ RCB ತಂಡವು ಮೊದಲ ಬಾರಿಗೆ IPL ಪ್ರಶಸ್ತಿ ಗೆದ್ದ ನಂತರ ನಡೆದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದ ದುರಂತ ನಡೆದ ಹಿನ್ನೆಲೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳು ನಡೆಯುವ ಕುರಿತಂತೆ ಆವರಿಸಿದ್ದ ಅನಿಶ್ಚಿತತೆಗಳು ರಾಜ್ಯ ಸರ್ಕಾರದ ಈ ನಿರ್ಧಾರದಿಂದ ದೂರವಾಗಿವೆ. ►ತಜ್ಞರ ಸಮಿತಿಯ ಪರಿಶೀಲನೆಯ ನಂತರ ಸರ್ಕಾರದ ಅನುಮತಿ ರಾಜ್ಯ ಸರ್ಕಾರ ನೇಮಿಸಿದ್ದ ತಜ್ಞರ ಸಮಿತಿಯೊಂದಿಗೆ ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಈ ಅನುಮತಿ ದೊರೆತಿದೆ. KSCA, RCB ಹಾಗೂ ಈವೆಂಟ್ ಮ್ಯಾನೇಜ್ಮೆಂಟ್ ಕಂಪೆನಿ ಡಿಎನ್ಎ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಹಾಜರಿದ್ದರು. ಮುಂಬರುವ IPL ಋತುವಿಗೆ ಮೊದಲು ಸ್ಟೇಡಿಯಂನಲ್ಲಿ ನಡೆಸಲಾಗಿರುವ ಸಿದ್ಧತೆಗಳು ಹಾಗೂ ಅನುಷ್ಠಾನಗೊಂಡಿರುವ ಸುರಕ್ಷತಾ ವ್ಯವಸ್ಥೆಗಳ ಕುರಿತ ವಿವರವಾದ ವರದಿಯನ್ನು ಚರ್ಚೆಯ ವೇಳೆ ತಜ್ಞರ ಸಮಿತಿಯು ಸಲ್ಲಿಸಿದೆ. KSCA ವಕ್ತಾರ ವಿನಯ್ ಮೃತ್ಯುಂಜಯ ಅವರ ಪ್ರಕಾರ, ಸಮಿತಿಯ ಶಿಫಾರಸುಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಸರ್ಕಾರದ ಪರಿಶೀಲನೆಯ ನಂತರ ಅಧಿಕೃತವಾಗಿ ಅನುಮತಿ ನೀಡಲಾಗಿದೆ. ►ಪಂದ್ಯಾವಳಿಯ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಆತಿಥ್ಯ ಉದ್ಯಾನನಗರಿಯಲ್ಲಿ ಮಾರ್ಚ್ 28ರಂದು ಹಾಲಿ ಚಾಂಪಿಯನ್ RCB ತಂಡ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲ ಪಂದ್ಯದಲ್ಲಿ ಎದುರಿಸುವ ಮೂಲಕ 19ನೇ ಆವೃತ್ತಿಯ ಐಪಿಎಲ್ಗೆ ಚಾಲನೆ ಸಿಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯವಲ್ಲದೆ, ಉದ್ಘಾಟನಾ ಸಮಾರಂಭ ಹಾಗೂ ಜನಪ್ರಿಯ RCB ಅನ್ಬಾಕ್ಸಿಂಗ್ ಕಾರ್ಯಕ್ರಮವೂ ನಡೆಯಲಿದೆ. ಇದು RCB ಫ್ರಾಂಚೈಸಿಯ ಹೊಸ ಋತುವಿನ ಆರಂಭವನ್ನು ಸೂಚಿಸುತ್ತದೆ. ►RCBಯ ತವರು ಪಂದ್ಯಗಳ ವೇಳಾಪಟ್ಟಿ 2026ರ ಆವೃತ್ತಿಯ IPL ಟೂರ್ನಿಯಲ್ಲಿ RCB ತನ್ನ ಏಳು ತವರು ಪಂದ್ಯಗಳ ಪೈಕಿ ಐದನ್ನು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಫ್ರಾಂಚೈಸಿಯು ತನ್ನ ಉಳಿದ ಎರಡು ಪಂದ್ಯಗಳನ್ನು ರಾಯ್ಪುರದ ವೀರ ನಾರಾಯಣ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಲು ಯೋಜಿಸಿದೆ. ಈ ವ್ಯವಸ್ಥೆಯು ಬೆಂಗಳೂರು RCBಯ ಪ್ರಮುಖ ತವರು ನೆಲೆಯನ್ನಾಗಿಸಿದೆ. ►ಸರ್ಕಾರ ಹಾಗೂ ಸಮಿತಿಗೆ ಧನ್ಯವಾದಗಳು ಎಂದ KSCA ಅನುಮತಿಯ ಪ್ರಕ್ರಿಯೆಗಳನ್ನು ನೆರವೇರಿಸಿದ ರಾಜ್ಯ ಸರ್ಕಾರ ಹಾಗೂ ತಜ್ಞರ ಸಮಿತಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಧನ್ಯವಾದಗಳನ್ನು ತಿಳಿಸಿದೆ. ‘ಎಲ್ಲ ಪೂರ್ವಭಾವಿ ಸಮನ್ವಯ ಹಾಗೂ ಸುರಕ್ಷತೆ, ಭದ್ರತೆಯ ಅಂಶಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡಲಾಗಿದೆ ಎಂದು ಖಚಿತಪಡಿಸಿಕೊಂಡಿರುವ ತಜ್ಞ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಬೆಂಗಳೂರಿನ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರಿಗೆ ನಮ್ಮ ವಿಶೇಷ ಧನ್ಯವಾದಗಳು’ ಎಂದು KSCA ಪ್ರಕಟಣೆ ತಿಳಿಸಿದೆ. ‘ಈ ಪ್ರಮುಖ ನಿರ್ಧಾರವನ್ನು ಸಕ್ರಿಯಗೊಳಿಸುವಲ್ಲಿ ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿ, ರಚನಾತ್ಮಕ ಶಿಫಾರಸುಗಳನ್ನು ಮಾಡಲು ಪ್ರಮುಖ ಪಾತ್ರವಹಿಸಿರುವ ತಜ್ಞ ಸಮಿತಿಯ ಎಲ್ಲ ಗೌರವಾನ್ವಿತ ಸದಸ್ಯರು ಹಾಗೂ ಉಪಸಮಿತಿಗಳೊಂದಿಗೆ ಸಂಬಂಧಿಸಿದ ಅಧಿಕಾರಿಗಳಿಗೆ KSCA ತನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಸಲ್ಲಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC
ಬೆಂಗಳೂರು: ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂಭ್ರಮವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸಲು ಊರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ. ಸಾಲು ಸಾಲು ರಜೆಗಳ ಕಾರಣದಿಂದಾಗಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ನಿರೀಕ್ಷೆ ಇದ್ದು, ಇದನ್ನು ಸುಗಮವಾಗಿ ನಿಭಾಯಿಸಲು ಹಾಗೂ ಖಾಸಗಿ ಬಸ್ಗಳ ಸುಲಿಗೆಯಿಂದ ಜನಸಾಮಾನ್ಯರನ್ನು ಪಾರು ಮಾಡಲು
ಬಳ್ಳಾರಿ | ಡಾ.ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್, ಕೋಚಿಂಗ್ ಸೆಂಟರ್ ಉದ್ಘಾಟನೆ
ಬಳ್ಳಾರಿ/ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದ ಕೆನರಾ ಬ್ಯಾಂಕ್ ಸಮೀಪದಲ್ಲಿ ಡಾ. ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್ ಲೋಕಾರ್ಪಣೆಗೊಂಡು, ಕೋಚಿಂಗ್ ಸೆಂಟರ್ ಅನ್ನು ಹಂಪಿ ಸಾವಿರ ದೇವರ ಮಹಾಂತ ಮಠದ ಶ್ರೀ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಅವರ ದಿವ್ಯ ಸಾನಿಧ್ಯದಲ್ಲಿ ರವಿವಾರ ಸಂಜೆ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ, ಮನುಷ್ಯನು ಬದುಕಿಗೆ ಘನತೆ ನೀಡಬೇಕು. ಘನತೆ ನೀಡಿದಾಗ ಮಾತ್ರ ಘನಕಾರ್ಯ ಸಾಧ್ಯವಾಗುತ್ತದೆ. ಡಾ. ಅಬ್ದುಲ್ ಕಲಾಂ ಅವರನ್ನು ಜಗತ್ತು ಪ್ರೀತಿಸಿದೆ. ಜ್ಞಾನಕ್ಕೆ ಅವರು ನೀಡಿದ ಮಹತ್ವವೇ ಅವರನ್ನು ವಿಶ್ವಮಟ್ಟದಲ್ಲಿ ಗುರುತಿಸಲಾಯಿತು. ಶಿಕ್ಷಣದ ಮೂಲಕ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ. ಅದೃಷ್ಟದ ಮೇಲೆ ನಂಬಿಕೆ ಇಡುವುದಕ್ಕಿಂತ ಕಠಿಣ ಪರಿಶ್ರಮದಿಂದ ಮುಂದುವರಿದರೆ ಜಗತ್ತು ಗುರುತಿಸುತ್ತದೆ ಎಂದು ಹೇಳಿದರು. ಯುವಕರು ದೇಶದ ಸಂಪತ್ತು. ಚಾರಿಟೇಬಲ್ ಸಂಸ್ಥೆ ಬಡವರು, ಅನಾಥರು ಹಾಗೂ ದೀನದಲಿತರಿಗಾಗಿ ತರಗತಿಗಳನ್ನು ನಡೆಸುತ್ತಿರುವುದು ಶ್ಲಾಘನೀಯ. ಈ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ ಎಂದು ಹಾರೈಸಿದರು. ಪಿಎಸ್ಐ ಸುಪ್ರೀತ್ ವಿರುಪಾಕ್ಷಪ್ಪ ಮಾತನಾಡಿ, ಸಮಾಜ ಸೇವೆಯೇ ಈ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಡಾ. ಅಬ್ದುಲ್ ಕಲಾಂ ಅವರ ಚಿಂತನೆ ಮತ್ತು ತತ್ವದರ್ಶಗಳನ್ನು ಆಧಾರವಾಗಿಸಿಕೊಂಡು ಸಂಸ್ಥೆ ರೂಪುಗೊಂಡಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಲಿದೆ. ಜ್ಞಾನದ ಮಹತ್ವ ಅರಿತುಕೊಂಡು ಬದುಕಿದರೆ ಜೀವನ ಉತ್ತಮವಾಗುತ್ತದೆ ಎಂದು ಹೇಳಿದರು. ಡಾ. ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್ ಸಂಸ್ಥಾಪಕ ಹೆಚ್. ಪೀರಾವಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜೊತೆಗೆ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಕಲಿಸುವಲ್ಲಿ ಪೋಷಕರು ಹೆಚ್ಚಿನ ಜಾಗೃತಿ ವಹಿಸಬೇಕು. ಬೌದ್ಧಿಕ ಬೆಳವಣಿಗೆಯ ಜೊತೆಗೆ ಶಿಕ್ಷಣವೂ ಪ್ರತಿಯೊಬ್ಬರ ಜೀವನದಲ್ಲಿ ಅತ್ಯವಶ್ಯಕವಾಗಿದ್ದು, ಅನುಭವಿ ಶಿಕ್ಷಕರ ತಂಡದ ಮೂಲಕ ಉತ್ತಮ ಶಿಕ್ಷಣ ನೀಡಲು ಸಂಸ್ಥೆ ಸಿದ್ಧವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹೆಚ್. ವೀರಾಪುರದ ಜ್ಞಾನಜ್ಯೋತಿ ಶಿವಲಿಂಗ ಮಠದ ಜಡೇಶತಾತ, ಧರ್ಮಗುರುಗಳಾದ ಸೈಯದ್ ಶಬ್ಬಿರ್ ಖಾದಿ, ಹಫೀಜ್ ಮೊಹ್ಮದ್ ಆಜಂ ಷಹಾದ್ ಸಾನಿಧ್ಯವಹಿಸಿದ್ದರು. ಡಾ. ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್ ಅಧ್ಯಕ್ಷೆ ಹಂಚಿನಾಳ್ ಜಿ. ಜಬೀನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕರಾಟೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಕ್ಕಳನ್ನು ಹಾಗೂ ವೇದಿಕೆಯ ಮೇಲಿನ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಸೆಳೆದವು. ಕಾರ್ಯಕ್ರಮದಲ್ಲಿ ಪಾಸ್ಟರ್ ತೀಮೋತಿ, ಉಪಾಧ್ಯಕ್ಷ ರಾಜಣ್ಣ, ಸಮಾಜ ಸೇವಕ ಕನಕಪ್ಪ ಸುಣಗಾರ, ಮುಖಂಡರಾದ ಸದಾಶಿವಪ್ಪ, ಗಾದಲಿ ನಾಗರೆಡ್ಡಿ, ಗಾದಿಲಿಂಗಪ್ಪ, ಕೋನೆಮನೆ, ಶರಣಬಸವ, ಸಾಧಕಲಿ ಹುಸೇನಬಾಷಾ, ಕಡೆಮನೆ ಪೀರಾಸಾಬ್, ಎಂ. ಎಸ್. ಮೂಗಪ್ಪ, ಟಿ.ರಾಮು, ರಾಜಸಾಬ್, ವಿ.ವಿರೇಶ, ಪದ್ಮಾವತಮ್ಮ, ಹಂಪಾಪತಿ, ಬಸವರಾಜ್, ಮಲ್ಲೇಶ, ಪತ್ತಾರ ಮೌಲಾಸಬ್, ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು. ಜಡೆಮ್ಮ ಹಾಗೂ ಭಾನುಬಿ ಪ್ರಾರ್ಥಿಸಿದರು, ಎಸ್.ರಾಮಪ್ಪ ಕಾರ್ಯಕ್ರಮ ನಿರೂಪಿಸಿದರು.
ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಾಲಕ ಮೃತ್ಯು
ಗಂಗೊಳ್ಳಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಜಾರ್ಖಂಡ್ ಮೂಲದ ಬಾಲಕನೋರ್ವ ಅಕಸ್ಮಿಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾ.15ರಂದು ಮಧ್ಯಾಹ್ನ ವೇಳೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂಡ್ ರಾಜ್ಯದ ರಂಗಬಾಜ್ ಅನ್ಸಾರಿ(16) ಎಂದು ಗುರುತಿಸಲಾಗಿದೆ. ಜಾರ್ಖಂಡ್ನಿಂದ ಮಂಗಳೂರಿಗೆ ಹೋಗುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಕ್ಕೆ ಕೊನೆಗೂ ರಾಜ್ಯ ಸರ್ಕಾರ ಹಸಿರು ನಿಶಾನೆ; ಈಗ RCB ಅಭಿಮಾನಿಗಳು ನಿರಾಳ
IPL Matches At Chinnaswamy Stadium- ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮತ್ತೆ ರಂಗೇರಲಿದೆ. ಇದೀಗ 2026ರ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ನಿರ್ಬಂಧಗಳು ತೆರವುಗೊಳಿಸಲಾಗಿದೆ. ಮಾರ್ಚ್ 28ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಳಿಕ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಪಿಕ್ಅಪ್ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
ಮಲ್ಪೆ, ಮಾ.16: ಪಿಕ್ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಪ್ಪಲತೋಟ ಬಬ್ಬುಸ್ವಾಮಿ ದೇವಸ್ಥಾನದ ಎದುರಿನಲ್ಲಿರುವ ನಡೆದಿದೆ. ಮೃತರನ್ನು ವಿಠ್ಠಲ್ ಕೋಟ್ಯಾನ(77) ಎಂದು ಗುರುತಿಸಲಾಗಿದೆ. ಕೊಪ್ಪಲತೋಟ ಸಿಎಸ್ಐ ಚರ್ಚ್ ಕಡೆಯಿಂದ ಬಾಪುತೋಟದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿಠಲ್ ಕೋಟ್ಯಾನ್ ಅವರಿಗೆ ಹಿಂದಿನಿಂದ ಬಂದ ಪಿಕ್ಅಪ್ ವಾಹನ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಉಡುಪಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿರುಗುಪ್ಪ | ಗ್ರಾಹಕರ ವಿಶ್ವಾಸ ಕಾಪಾಡುವುದು ಅಂಗಡಿ ಮಾಲಕರ ಕರ್ತವ್ಯ: ನ್ಯಾ.ಅಶೋಕ್
ಸಿರುಗುಪ್ಪ: ಪ್ರತಿಯೊಬ್ಬ ಅಂಗಡಿ ಮಾಲಕರು ಗ್ರಾಹಕರಲ್ಲಿ ವಿಶ್ವಾಸ ಹೆಚ್ಚಿಸಬೇಕು. ಗ್ರಾಹಕರು ನೀಡುವ ಮೌಲ್ಯಕ್ಕೆ ಅನುಗುಣವಾಗಿ ವಸ್ತು ಹಾಗೂ ರಶೀದಿ ನೀಡುವ ಮೂಲಕ ಅವರ ಹಿತವನ್ನು ಕಾಪಾಡಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ರೀತಿ ಅಪರಾಧವಾಗುತ್ತದೆ ಎಂದು ಜೆಎಂಎಫ್ಸಿ ನ್ಯಾಯಾಧೀಶ ಆರ್.ಎಚ್. ಅಶೋಕ್ ಹೇಳಿದರು. ನಗರದ ಅಭಯಾಂಜನೇಯ ಸ್ವಾಮಿ ದೇವಾಲಯದ ಸಭಾಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ, ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಸಿರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರು ಖರೀದಿಸಿದ ವಸ್ತುಗಳು ಕಳಪೆಯಾಗಿದ್ದರೆ ಗ್ರಾಹಕರ ಹಿತರಕ್ಷಣಾ ಕಾಯ್ದೆಯ ಸದುಪಯೋಗ ಪಡೆದು ಅಂಗಡಿ ಮಾಲೀಕರ ವಿರುದ್ಧ ಜಿಲ್ಲಾ ಗ್ರಾಹಕರ ಹಕ್ಕುಗಳ ಹಿತರಕ್ಷಣಾ ವೇದಿಕೆ ಮೂಲಕ ನ್ಯಾಯ ಪಡೆಯಬಹುದಾಗಿದೆ ಎಂದು ಹೇಳಿದರು. ಪ್ರತಿಯೊಂದು ವಸ್ತುವಿನ ಗುಣಮಟ್ಟದ ಬಗ್ಗೆ ಗ್ರಾಹಕರಿಗೆ ತಿಳಿಸುವುದು ಮಾಲೀಕರ ಜವಾಬ್ದಾರಿಯಾಗಿದೆ. ವ್ಯಾಪಾರದ ಪರವಾನಿಗೆ ಪಡೆಯುವುದು ಸೇರಿದಂತೆ ಇತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಂಗಡಿಗಳಲ್ಲಿ ಚಿಕ್ಕ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವುದು ಅಪರಾಧವಾಗಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ತಾಲೂಕು ಅಧ್ಯಕ್ಷ ಉಪ್ಪಾರು ವೆಂಕೋಬ, ಉಪಾಧ್ಯಕ್ಷ ಶರೀಫ್ ಸಾಬ್, ಕಾರ್ಯದರ್ಶಿ ಎಂ. ಶಿವಕುಮಾರ್, ಜಂಟಿ ಕಾರ್ಯದರ್ಶಿ ಮಂಜುಳಾ, ಅಬಕಾರಿ ನಿರೀಕ್ಷಕ ಎ.ಜಿ. ಅಂಬಣ್ಣ, ಪಿಎಸ್ಐ ಮಲ್ಲಯ್ಯ, ರಾಷ್ಟ್ರೀಯ ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ರೆಡ್ಡಿ, ವಕೀಲರಾದ ಮಲ್ಲಿಗೌಡರು, ವೆಂಕಟೇಶ ನಾಯಕ್, ನೆಲಗುಂಟಯ್ಯ, ರುದ್ರಮುನಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಉಡುಪಿ, ಮಾ.16: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಸಿಜೆಎಂ ನ್ಯಾಯಾಲಯಕ್ಕೆ ಸುಮಾರು 13 ವರ್ಷ ಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಉಪ್ಪಿನಂಗಡಿ ಗಂಡಿಬಾಗಿಲು ನಿವಾಸಿ ಆರಿಫ್ ಬಂಧಿತ ಆರೋಪಿ. ಈತನನ್ನು ಪೊಲೀಸ್ ಸಿಬ್ಬಂದಿ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಮಾ.16ರಂದು ಉಪ್ಪಿನಂಗಡಿಯ ಕೊಯ್ಲಾದಲ್ಲಿ ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಮಾ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪಶ್ಚಿಮ ಬಂಗಾಳ ಚುನಾವಣೆ 2026 | ಭಬಾನಿಪುರದಲ್ಲಿ ಮಮತಾ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ
144 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ
ವಿಜಯನಗರ | ಸರಕಾರಿ ಶಾಲಾ ಮಕ್ಕಳಿಗೆ ಮೆಟ್ರಿಕ್ ಮೇಳ, ವ್ಯಾಪಾರ ಸಂತೆ ಅರಿವು ಕಾರ್ಯಕ್ರಮ
ವಿಜಯನಗರ/ಹೊಸಪೇಟೆ: ತಾಲೂಕಿನ ಕಡ್ಡಿರಾಂಪುರ ಗ್ರಾಮದ ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ವ್ಯಾಪಾರ ಸಂತೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್ಯ ಪ್ರಶಾಂತ್ ಕಡ್ಡಿರಾಂಪುರ ಮಾತನಾಡಿ, ಮಕ್ಕಳಲ್ಲಿ ಸಂತೆ ಹಾಗೂ ವ್ಯಾಪಾರದ ಅರಿವು ಮೂಡಿಸುವುದು ಅವಶ್ಯಕ. ಇದರಿಂದ ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ ಬೆಳೆಯುತ್ತದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಸದಸ್ಯ ಷಣ್ಮುಖಪ್ಪ ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಮತ್ತು ನಾಯಕರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವುನಾಯ್ಕ್, ದೊಡ್ಡಬಸಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕ ವೃಂದವೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಮಕ್ಕಳು ನಾನಾ ಬಗೆಯ ವ್ಯಾಪಾರ ಹಾಗೂ ವ್ಯವಹಾರದ ಕುರಿತು ಜ್ಞಾನ ಪಡೆದರು.
‘ಅಮಾನಿಕೆರೆ ತೋಟಿ ಏತ ನೀರಾವರಿ ಯೋಜನೆ’ ರೈತರಿಗೆ ಶೀಘ್ರ ಪರಿಹಾರ : ಡಿ.ಕೆ.ಶಿವಕುಮಾರ್
ಬೆಂಗಳೂರು : ಅಮಾನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರದ ಬಗ್ಗೆ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರವನ್ನು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಸೋಮವಾರ ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ಸಿ.ಎನ್.ಬಾಲಕೃಷ್ಣ ಗಮನ ಸೆಳೆದ ಸೂಚನೆಗೆ ಉತ್ತರಿಸಿದ ಅವರು, ಈ ಯೋಜನೆಯಲ್ಲಿ ಪಂಪ್, ಮೋಟಾರ್ ಎಲ್ಲವನ್ನು ಅಳವಡಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಸ್ವಾಧೀನಗೊಂಡ ಭೂಮಿಗೆ ಪರಿಹಾರ ಬಾಕಿ ಇದೆ ಎಂದು ಕಾಣುತ್ತದೆ. ಈ ಬಗ್ಗೆ ನಾನು ಪರಿಶೀಲನೆ ಮಾಡಿಸಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು. ಕೆಲಸ ಮಾಡಲು ಅವಕಾಶ ಕೊಟ್ಟ ರೈತರು ನೀರನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿಲ್ಲ ಯಾಕೆ?. 100 ಮೀಟರ್ ಕೆಲಸ ಬಾಕಿ ಇದೆಯೋ, 500 ಮೀಟರ್ ಕೆಲಸ ಬಾಕಿ ಇದೆಯೋ ಆಕ್ಷೇಪ ವ್ಯಕ್ತಪಡಿಸುತ್ತಿರುವ ರೈತರ ಮನವೊಲಿಸಿ ಕೆಲಸ ಪೂರ್ಣಗೊಳಿಸಲು ಅವಕಾಶ ಕೊಡಿಸಿ. ಇಲ್ಲವಾದರೆ ಇದುವರೆಗೂ ಆಗಿರುವ ಕೆಲಸಗಳು ವ್ಯರ್ಥವಾಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು. ಕಾಮಗಾರಿ ಮಾಡಿ ಭೂಮಿಯಲ್ಲಿ ಪೈಪ್ ಗಳನ್ನು ಅಳವಡಿಸಿದ ಮೇಲೆ ಆ ಭೂ ಮಾಲಕರಿಗೆ ಪರಿಹಾರ ನೀಡಲೇಬೇಕು. ಆ ಕೆಲಸ ನಾವು ಮಾಡುತ್ತೇವೆ. ನೀವು ರೈತರಿಗೆ ಮನವೊಲಿಸಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಸಹಕರಿಸಿ, ನೀವೇ ಉದ್ಘಾಟನೆ ಮಾಡಿ. ನಂತರ ನಾನು ಬಂದು ಉದ್ಘಾಟನೆ ಮಾಡುವೆ ಎಂದು ಶಿವಕುಮಾರ್ ಹೇಳಿದರು.

25 C