'ಸ್ಕಾಲರ್ಶಿಪ್ ಮಾಸ್ಟರ್' ನಾರಾಯಣ ನಾಯಕ್: 83ರ ಇಳಿವಯಸ್ಸಿನಲ್ಲೂ ಬೈಕ್ ಏರಿ ಹೊರಡುವ ಈ 'ಮಾಸ್ಟರ್' ನಿಜವಾದ ಹೀರೋ
ಉಡುಪಿ: ಸಾಮಾನ್ಯವಾಗಿ ನಿವೃತ್ತಿಯ ನಂತರದ ಜೀವನವನ್ನು ಜನರು ವಿಶ್ರಾಂತಿಯಲ್ಲಿ ಕಳೆಯಲು ಬಯಸುತ್ತಾರೆ. ಆದರೆ, ಕರ್ನಾಟಕದ ಕರಾವಳಿ ಭಾಗದ 83 ವರ್ಷದ ಹಿರಿಯರೊಬ್ಬರು, ತಮ್ಮ ಇಳಿವಯಸ್ಸಿನಲ್ಲೂ ಬೈಕ್ ಏರಿ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರೇ ಕೆ. ನಾರಾಯಣ ನಾಯಕ್ (K Narayana Naik) ವಿದ್ಯಾರ್ಥಿ ವಲಯದಲ್ಲಿ 'ಸ್ಕಾಲರ್ಶಿಪ್ ಮಾಸ್ಟರ್' ಎಂದೇ ಖ್ಯಾತರಾಗಿರುವ ಇವರು, ದಕ್ಷಿಣ
ಬಾರಾಮತಿಯಲ್ಲಿ ವಿಮಾನ ದುರಂತ | ಸ್ವಗ್ರಾಮದಲ್ಲಿ PSO ವಿದಿಪ್ ಜಾಧವ್ ಅಂತ್ಯಕ್ರಿಯೆ
ಸತಾರಾ/ಬಾರಾಮತಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಖಾಸಗಿ ಭದ್ರತಾ ಅಧಿಕಾರಿ (ಪಿಎಸ್ಒ) ವಿದಿಪ್ ದಿಲೀಪ್ ಜಾಧವ್ ಅವರ ಅಂತ್ಯಕ್ರಿಯೆಯನ್ನು ಬುಧವಾರ ರಾತ್ರಿ ಸತಾರಾ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಕುಟುಂಬದವರು ನೆರವೇರಿಸಿದರು. ಜಾಧವ್ ಅವರ ಪುಟ್ಟ ಮಗ ಅಂತ್ಯಕ್ರಿಯೆಯ ವಿಧಿಗಳನ್ನು ಪೂರೈಸಿದರು. ಬಾರಾಮತಿಯಲ್ಲಿ ಮಂಗಳವಾರ ಸಂಭವಿಸಿದ ಚಾರ್ಟರ್ ವಿಮಾನ ಅಪಘಾತದಲ್ಲಿ ಜಾಧವ್ ಪ್ರಯಾಣಿಸುತ್ತಿದ್ದು, ವಿಮಾನದಲ್ಲಿದ್ದ ಎಲ್ಲ ಐವರು ಮೃತಪಟ್ಟಿದ್ದರು. ಜಾಧವ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಎಂದು ಸ್ಥಳೀಯರು ಇದೆ ವೇಳೆ ಆಗ್ರಹಿಸಿದ್ದಾರೆ.
ಅಜಿತ್ ಪವಾರ್ಗೆ ವಿದಾಯ | ಬಾರಾಮತಿಯಲ್ಲಿ ಅಂತಿಮ ನಮನ
ಬಾರಾಮತಿ/ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಯ ಮುಖ್ಯಸ್ಥ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಕೊಂಡೊಯ್ಯಲಾಯಿತು. ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು. ಬುಧವಾರ (ಜ.28) ವಿಮಾನ ಅಪಘಾತದಲ್ಲಿ ನಿಧನರಾದ ಅಜಿತ್ ಪವಾರ್ ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ಆಳವಾದ ಶೋಕ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಅವರು ಅಜಿತ್ ಪವಾರ್ ಅವರನ್ನು ಸ್ಮರಿಸಿ, ಅವರನ್ನು ‘ದೂರದೃಷ್ಟಿಯ ನಾಯಕ’ ಎಂದರು. “ಮಹಾರಾಷ್ಟ್ರ ತನ್ನ ಒಬ್ಬ ತಾರೆಯನ್ನು ಕಳೆದುಕೊಂಡಿದೆ. ಈ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಸಾರ್ವಜನಿಕ ಸೇವೆಗೆ ಸಂಪೂರ್ಣವಾಗಿ ಬದ್ಧರಾಗಿದ್ದ ಅವರು ಮಾತಿಗಿಂತ ಕೆಲಸಕ್ಕೆ ಆದ್ಯತೆ ನೀಡಿದವರು. ಕಳೆದ 25 ವರ್ಷಗಳಲ್ಲಿ ರಾಜ್ಯ ಸಚಿವರಾಗಿ ಅವರೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ಲಭಿಸಿತ್ತು. ಮಹಾರಾಷ್ಟ್ರದ ಅಭಿವೃದ್ಧಿಗೆ ಅವರ ಕೊಡುಗೆ ಮಹತ್ತರ,” ಎಂದು ವಡೆಟ್ಟಿವಾರ್ ಹೇಳಿದರು.
ಇರಾನ್ನಲ್ಲಿನ ಆಂತರಿಕ ಸಂಘರ್ಷ ಈಗ ಅಮೆರಿಕಾ-ಇರಾನ್ ಬಿಕ್ಕಟ್ಟಾಗಿ ಮಾರ್ಪಟ್ಟಿದೆ. ಅಮೆರಿಕಾ ಕಾಲಮಿಂಚುತ್ತಿದ್ದು, ಮಾತುಕತೆಗೆ ಬರದಿದ್ದರೆ ಮಿಲಿಟರಿ ದಾಳಿಯ ನಡೆಸುತ್ತೇವೆಂದು ಇರಾನ್ ಗೆ ಎಚ್ಚರಿಕೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಇರಾನ್, ಯಾವುದೇ ದಾಳಿಗೆ ತಕ್ಕ ಉತ್ತರ ನೀಡುವುದಾಗಿ ಹೇಳಿದೆ. ಆದಾಗ್ಯೂ, ಅಮೆರಿಕಾದೊಂದಿಗೆ ಮಾತುಕತೆಗೆ ಸಿದ್ಧವಿರುವುದಾಗಿ ತಿಳಿಸಿದ್ದು, ಇರಾನ್ನ ಪರಮಾಣು ಕಾರ್ಯಕ್ರಮ ನಾಗರಿಕ ಉದ್ದೇಶದಿಂದ ಕೂಡಿದೆ ಎಂದು ಪುನರುಚ್ಚರಿಸಿದೆ. ಈ ಬೆಳವಣಿಗೆಗಳು ಉಭಯ ದೇಶಗಳ ನಡುವೆ ಶಾಂತಿ ಮಾತುಕತೆ ನಡೆಯುವ ನಿರೀಕ್ಷೆಯನ್ನು ಮೂಡಿಸಿವೆ.
Bank Holidays February 2026 : ಫೆಬ್ರವರಿ ತಿಂಗಳಲ್ಲಿ ಬ್ಯಾಂಕುಗಳಿಗೆ ಎಷ್ಟು ದಿನ ರಜೆ? ಸಂಪೂರ್ಣ ಪಟ್ಟಿ ಇಲ್ಲಿದೆ
Bank Holidays: 2026 ರ ಫೆಬ್ರವರಿ ತಿಂಗಳು ಆರಂಭವಾಗಲಿದೆ. ಫೆಬ್ರವರಿ ತಿಂಗಳು ವರ್ಷದ ಅತ್ಯಂತ ಕಡಿಮೆ ದಿನಗಳಿರುವ ತಿಂಗಳು, ಮತ್ತು ಇದರರ್ಥ ಇತರ ತಿಂಗಳುಗಳಿಗೆ ಹೋಲಿಸಿದರೆ ರಜಾದಿನಗಳು ಕಡಿಮೆ. ಪರಿಣಾಮವಾಗಿ, ಫೆಬ್ರವರಿಯಲ್ಲಿ ಬ್ಯಾಂಕ್ ರಜಾದಿನಗಳ ಸಂಖ್ಯೆಯೂ ಕಡಿಮೆಯಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರಾಜ್ಯ-ನಿರ್ದಿಷ್ಟ ಬ್ಯಾಂಕ್ ರಜಾದಿನಗಳನ್ನು ತಿಂಗಳಾನುಕ್ರಮವಾಗಿ ನೀಡುತ್ತದೆ. ಮುಂದಿನ ತಿಂಗಳು ದೇಶಾದ್ಯಂತ ಬ್ಯಾಂಕುಗಳಿಗೆ ಸುಮಾರು ಒಂಬತ್ತರಿಂದ
ಏರಿಕೆ ಸಂಭ್ರಮ ಒಂದೇ ದಿನಕ್ಕೆ ಮಾಯ, ಮತ್ತೆ ಷೇರುಪೇಟೆ ಭಾರೀ ಇಳಿಕೆ; ಇಲ್ಲಿವೆ ಕುಸಿತಕ್ಕೆ 6 ಕಾರಣಗಳು
ಸತತ ಎರಡು ದಿನಗಳ ಏರಿಕೆಯ ನಂತರ ಭಾರತೀಯ ಷೇರುಪೇಟೆ ಗುರುವಾರ ಕುಸಿತ ಕಂಡಿದೆ. ಸೆನ್ಸೆಕ್ಸ್ 483 ಅಂಕ ಮತ್ತು ನಿಫ್ಟಿ 132 ಅಂಕಗಳಷ್ಟು ಇಳಿಕೆಯಾಗಿದೆ. ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಕ್ಕೆ ವಿರಾಮ ನೀಡಿರುವುದು ಮತ್ತು ಮಾರುತಿ ಸುಜುಕಿ ಸೇರಿದಂತೆ ಆಟೋ ವಲಯದ ಷೇರುಗಳಲ್ಲಿನ ಮಾರಾಟದ ಒತ್ತಡ ಇದಕ್ಕೆ ಪ್ರಮುಖ ಕಾರಣ. ಹೂಡಿಕೆದಾರರು ಲಾಭದ ನಗದೀಕರಣಕ್ಕೆ ಮುಂದಾಗಿದ್ದು, ಇಂಡಿಯಾ ವಿಐಎಕ್ಸ್ ಏರಿಕೆಯಾಗಿರುವುದು ಮಾರುಕಟ್ಟೆಯ ಅನಿಶ್ಚಿತತೆಯನ್ನು ತೋರಿಸುತ್ತಿದೆ.
ಆರಿಕ್ಕಾಡಿ ಟೋಲ್ ಗೇಟ್ ಮತ್ತೆ ಕಾರ್ಯಾರಂಭ: ಟೋಲ್ ಪ್ರಶ್ನಿಸಿದ ವ್ಯಕ್ತಿಯನ್ನು ಬಲವಂತವಾಗಿ ಹೊತ್ತೊಯ್ದ ಪೊಲೀಸರು
ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ಯುಡಿಎಫ್ ನಿಂದ ಕುಂಬಳೆ ಠಾಣೆಗೆ ಮುತ್ತಿಗೆ
Gold Rate Rise : ಚಿನ್ನದ ದರ ಗಗನಕ್ಕೆ: ಒಂದೇ ದಿನಕ್ಕೆ 11,770 ರೂ. ಹೆಚ್ಚಳ: ಬೆಳ್ಳಿಯೂ 30 ಸಾವಿರ ಜಂಪ್!
ಚಿನ್ನ- ಬೆಳ್ಳಿ ದರ ರಾಕೆಟ್ ವೇಗದಲ್ಲಿ ಏರಿ ಹೊಸ ದಾಖಲೆ ಬರೆದಿದೆ.
Plane Crash: ವಿಮಾನ ಅಪಘಾತಕ್ಕೆ 15 ಪ್ರಯಾಣಿಕರು ಬಲಿ, ದಕ್ಷಿಣ ಅಮೆರಿಕದಲ್ಲಿ ಘೋರ ದುರಂತ
ವಿಮಾನ ಪ್ರಯಾಣ ಸೇಫ್ ಅಂತಾ ಹೇಳುತ್ತಿದ್ದ ದಿನಗಳು ಇದೀಗ ಮಾಯ ಆಗುತ್ತಿದ್ದು, ಒಂದಾದ ನಂತರ ಒಂದು ವಿಮಾನ ಅಪಘಾತಗಳು ಸಂಭವಿಸುತ್ತಿರುವ ಕಾರಣ ಪ್ರಯಾಣಿಕರು ಭಯಪಡುವ ವಾತಾವರಣ ನಿರ್ಮಾಣ ಆಗಿದೆ. ಭಾರತದ ಪ್ರಮುಖ ರಾಜ್ಯ ಮಹಾರಾಷ್ಟ್ರದಲ್ಲಿ ನಿನ್ನೆ ಭೀಕರ ವಿಮಾನ ದುರಂತ ಅಲ್ಲಿನ ಡಿಸಿಎಂ ಅಜಿತ್ ಪವಾರ್ ಸೇರಿದಂತೆ 5 ಜನರನ್ನು ಬಲಿ ಪಡೆದಿತ್ತು. ಈ ಕಹಿ ಘಟನೆ
ಹಲ್ಲಿಲ್ಲದ ಹಾವಾದ ಜೈಲಿನ ಮೊಬೈಲ್ ಜಾಮರ್ ಗಳು: ತಂತ್ರಜ್ಞಾನದ ಅಪ್ಡೇಟ್ ಇಲ್ಲದೆ ಕೈದಿಗಳಿಗೆ ಹಬ್ಬ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೊಬೈಲ್ ಬಳಕೆ ವೈರಲ್ ಆಗಿತ್ತು. ಈ ಬಳಿಕ ರಾಜ್ಯದ ಜೈಲು ಸುಧಾರಣೆ ಕುರಿತಾಗಿ ನೀಡಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್ ಹಿತೇಂದ್ರ ನೇತೃತ್ವದದಲ್ಲಿ ಸಮಿತಿ ರಚಿಸಿ ವರದಿ ನೀಡಲು ಆದೇಶಿಸಲಾಗಿತ್ತು. ಸದ್ಯ ಈ ವರದಿ ಬಂದಿದ್ದು, ಇದರಲ್ಲಿ ಹಲವು ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಅಲ್ಲದೆ, ಜೈಲು ಸುಧಾರಣೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು, ಕೈದಿಗಳು ಬಿಡುಗಡೆಯಾದ ನಂತರ ಅವರ ಕುರಿತಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ವಿಚಾರಗಳನ್ನು ತಿಳಿಸಿದ್ದಾರೆ. ಈ ಕುರಿತ ಮಾಹಿತಿ ತಿಳಿಯಿರಿ..
ವಿಮಾನ ದುರಂತದಲ್ಲಿ ಅಜಿತ್ ಪವಾರ್ ನಿಧನ: ಶೋಕ ವ್ಯಕ್ತಪಡಿಸಿದ 'ಸಾಮ್ನಾ'
ಮುಂಬೈ, ಜ.29: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾ ಗುರುವಾರ ಶೋಕ ವ್ಯಕ್ತಪಡಿಸಿದೆ. ರಾಜ್ಯ ರಾಜಕೀಯಕ್ಕೆ ಅವರು ನೀಡಿದ ಕೊಡುಗೆ ಮತ್ತು ಅವರ ನಾಯಕತ್ವದ ಗುಣಗಳನ್ನು ಸಂಪಾದಕೀಯದಲ್ಲಿ ಸ್ಮರಿಸಲಾಗಿದೆ. ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ನೆರಳಿನಲ್ಲಿ ರಾಜಕೀಯ ಜೀವನ ಆರಂಭಿಸಿದರೂ, ಕ್ರಮೇಣ ಸ್ವತಂತ್ರ ನಾಯಕತ್ವವನ್ನು ರೂಪಿಸಿಕೊಂಡ ನಾಯಕನಾಗಿದ್ದರು ಎಂದು ಸಾಮ್ನಾ ಹೇಳಿದೆ. ಅವರ ಅಕಾಲಿಕ ಮಣವು ಮಹಾರಾಷ್ಟ್ರಕ್ಕೆ ಭಾರೀ ನಷ್ಟವಾಗಿದ್ದು, ರಾಜ್ಯವು ಬಲಿಷ್ಠ ಹಾಗೂ ವಿಶಾಲ ಹೃದಯದ ನಾಯಕನನ್ನು ಕಳೆದುಕೊಂಡಿದೆ ಎಂದು ಪತ್ರಿಕೆ ಅಭಿಪ್ರಾಯಪಟ್ಟಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಚುರುಕಿನಿಂದ ತೊಡಗಿಸಿಕೊಂಡಿದ್ದ ಅವರು ನಿರಂತರ ಚಲನಶೀಲ ನಾಯಕನಾಗಿದ್ದರು ಎಂದು ʼಸಾಮ್ನಾʼ ಸಂಪಾದಕೀಯ ಉಲ್ಲೇಖಿಸಿದೆ. ಶರದ್ ಪವಾರ್ ಅವರ ಮಾರ್ಗದರ್ಶನದಲ್ಲಿ ರಾಜಕೀಯವಾಗಿ ಬೆಳೆದರೂ, ಅಜಿತ್ ಪವಾರ್ ಅವರು ತಮ್ಮ ಕಾರ್ಯಕ್ಷಮತೆ ಮತ್ತು ಸಾಧನೆಗಳ ಮೂಲಕ ವಿಭಿನ್ನ ರಾಜಕೀಯ ಗುರುತನ್ನು ನಿರ್ಮಿಸಿಕೊಂಡಿದ್ದರು ಎಂದು ಅದು ತಿಳಿಸಿದೆ. ಸಮಯಪಾಲನೆ, ಶಿಸ್ತಿಗೆ ಆದ್ಯತೆ ನೀಡುತ್ತಿದ್ದ ನೇರ ಹಾಗೂ ದಕ್ಷ ಆಡಳಿತಗಾರರಾಗಿದ್ದ ಅಜಿತ್ ಪವಾರ್, ಪೊಳ್ಳು ಭರವಸೆಗಳಿಗಿಂತ ಕಾರ್ಯದ ಮೂಲಕ ಮಾತುಗಳನ್ನು ಸಾಬೀತುಪಡಿಸುವ ರಾಜಕೀಯ ಶೈಲಿಯನ್ನು ಹೊಂದಿದ್ದರು ಎಂದು ಸಾಮ್ನಾ ಪ್ರಶಂಸಿಸಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬೇಸಿಗೆಗೂ ಮುನ್ನ ಚಾಮರಾಜನಗರ ಜಿಲ್ಲೆಯಲ್ಲಿ ಜೀವಜಲ ಅಭಾವ ಶುರು
ಮಳೆ ಕೊರತೆ ಹಿನ್ನೆಲೆಯಲ್ಲಿಬೇಸಿಗೆಗೆ ಮುನ್ನವೇ ಕುಡಿಯುವ ನೀರಿಗೆ ಸಮಸ್ಯೆ ಆರಂಭವಾಗಿದೆ. ಜಿಲ್ಲೆಯ 35 ರಿಂದ 40 ಹಳ್ಳಿಗಳಲ್ಲಿಈಗಾಗಲೇ ನೀರಿನ ಅಭಾವ ಏರ್ಪಟ್ಟಿದೆ. ಹನೂರು ಭಾಗದಲ್ಲಿಅಂತರ್ಜಲ ಕುಸಿತದ ಪರಿಣಾಮ ಕೊಳವೆಬಾವಿಗಳು ಬತ್ತಲಾರಂಭಿಸಿವೆ. ಈ ಕುರಿತು ಬೆಳಕು ಚೆಲ್ಲುವ ಸರಣಿ ‘ನೀರಿನ ಬವಣೆ’ ಇಂದಿನಿಂದ ಆರಂಭ.
ಕೊಪ್ಪಳ: ಕುಡಿಯುವ ನೀರಿನಲ್ಲಿ ಹುಳುಗಳು; ಕಲಕೇರಿ ಗ್ರಾಮಸ್ಥರಲ್ಲಿ ಆತಂಕ
ಕೊಪ್ಪಳ/ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಲಕೇರಿ ಗ್ರಾಮದಲ್ಲಿ ಸಾರ್ವಜನಿಕರು ನಳದಿಂದ ನೀರು ತುಂಬುವ ವೇಳೆ ನೀರಿನೊಂದಿಗೆ ಹುಳುಗಳು ಬರುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿದ್ದು, ಈ ನೀರನ್ನು ಸೇವಿಸಿದರೆ ಜನರಿಗೆ ರೋಗಗಳು ಹರಡುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ನೀರು ಸರಬರಾಜು ಮಾಡುವ ಟ್ಯಾಂಕ್ಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದೇ ನೀರಿನಲ್ಲಿ ಹುಳುಗಳು ಕಾಣಿಸಿಕೊಳ್ಳಲು ಪ್ರಮುಖ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಈ ಸಮಸ್ಯೆಯಿಂದ ಜೀವಕ್ಕೆ ಯಾವುದೇ ಅಪಾಯ ಉಂಟಾದರೆ ಗ್ರಾಮ ಪಂಚಾಯಿತಿಯೇ ಸಂಪೂರ್ಣ ಹೊಣೆಗಾರಿಕೆ ವಹಿಸಬೇಕೆಂದು ಎಚ್ಚರಿಕೆ ನೀಡಿದ್ದಾರೆ.
ಮೇಕಪ್ ಮಾಡಿಕೊಂಡು ಗ್ಲಾಮರಸ್ ಲುಕ್; ಜಾತ್ರೆ, ದೇವಸ್ಥಾನದಲ್ಲಿ ಮಿಂಚುತ್ತಾ ಚಿನ್ನ ಕದಿಯುತ್ತಿದ್ದ ಕಳ್ಳಿ ಲಾಕ್
ಮೇಕಪ್ ಮಾಡಿಕೊಂಡು ಕೆಆರ್ಪುರದ ದೇವಸ್ಥಾನ, ಜಾತ್ರೆಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿಂಗಳಿಗೆ ನಾಲ್ಕು ಲಕ್ಷ ಖರ್ಚು ಮಾಡಿ ಮೇಕಪ್ ಖರೀದಿ ಮಾಡುತ್ತಿದ್ದ ಈಕೆ ಒಳ್ಳೆಯ ಬಣ್ಣ ಬಣ್ಣದ ಬಟ್ಟೆ ಹಾಜಿಕೊಂಡು ಕಳ್ಳತನ ಮಾಡುತ್ತಿದ್ದರು ಈಕೆಯ ಜೊತೆ ಆಕೆಯ ಪತಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕೋರ್ಟ್ ಖರ್ಚಿಗಾಗಿ ಹುಂಡಿ ಕದ್ದವರು ಜೈಲಿಗೆ!
ಚಿತ್ತಾಪುರ ಪೊಲೀಸರು ದೇವಸ್ಥಾನಗಳ ಹುಂಡಿ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯದ ವಿಚಾರಣೆಗೆ ಬಂದಿದ್ದಾಗ ದೇವಸ್ಥಾನಗಳ ಹುಂಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಇವರನ್ನು ವಶಕ್ಕೆ ಪಡೆದು 8,700 ರೂ. ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು, ಸುರಕ್ಷತೆ ಇಲ್ಲದ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದರು.
ಜನನಾಯಗನ್ ರಿಲೀಸ್ ವಿಳಂಬ; ʻಸಿನಿಮಾ ಬಳಸಿ ಮಗನಿಗೆ ಬ್ಲಾಕ್ಮೇಲ್ ಮಾಡ್ಬೇಡಿ, ಅವನು ಹೆದರಲ್ಲʼ: ನಟ ವಿಜಯ್ ತಂದೆ
ಜನನಾಯಗನ್ ಸಿನಿಮಾ ರಿಲೀಸ್ಗೆ ಉಂಟಾಗುತ್ತಿರುವ ತೊಡಕಿನ ಬಗ್ಗೆ ನಟ ವಿಜಯ್ ತಂದೆ ಚಂದ್ರಶೇಖರ್ ಮೊದಲ ಬಾರಿ ಮೌನ ಮುರಿದಿದ್ದಾರೆ. ನನ್ನ ಮಗ ಯಾವುದಕ್ಕೂ ಹೆದರಲ್ಲ. ರಾಜಕೀಯ ಸವಾಲುಗಳನ್ನು ಎದುರಿಸಲು ಬದ್ಧನಾಗಿದ್ದಾನೆ. ಆದರೆ, ಸಿನಿಮಾ ಮುಂದಿಟ್ಟುಕೊಂಡು ಬ್ಲಾಕ್ ಮೇಲ್ ಮಾಡಬೇಡಿ. ದ್ರಾವಿಡ ಪಕ್ಷಗಳಿಗೆ ಅವನ ಬೆಳವಣಿಗೆ ನಡುಕ ಹುಟ್ಟಿಸುವಂತೆ ಮಾಡಿದೆ. ಮಹಿಳೆಯರು, ಯುವಜನತೆಯ ವೋಟ್ ವಿಜಯ್ಗೆ ಹಾಕೋದು ಪಕ್ಕ ಎಂದು ಹೇಳಿದರು.
ಟೆಲಿಫೋನ್ ಕದ್ದಾಲಿಕೆ; ನಮ್ಮ ಸರ್ಕಾರ ಯಾರ ಫೋನ್ ಟ್ಯಾಪ್ ಮಾಡುವುದಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಸರ್ಕಾರದ ಹೈಕಮಾಂಡ್ ನಿಂದ ರಾಜ್ಯಪಾಲರಿಗೆ ಫೋನ್ ಬಂದಿರಬಹುದು ಎಂದು ಹೆಚ್.ಕೆ. ಪಾಟೀಲ್ ಅವರು ಊಹೆ ಮೇಲೆ ತಿಳಿಸಿದ್ದಾರೆ ಅಷ್ಟೆ. ನಮ್ಮ ಸರ್ಕಾರ ಯಾರ ಪೋನ್ ಅನ್ನು ಟ್ಯಾಪ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಸ್ಪಷ್ಟ ಪಡಿಸಿದರು. ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಉಪ ನಾಯಕರಾದ ಅರವಿಂದ್ ಬೆಲ್ಲದ್ ಹಾಗೂ
ರಷ್ಯಾ ತೀವ್ರ ಕಾರ್ಮಿಕರ ಕೊರತೆ ಎದುರಿಸುತ್ತಿದ್ದು, ಇದನ್ನು ನಿವಾರಿಸಲು ರಷ್ಯಾ ಸದ್ಯ ಭಾರತೀಯರ ಕಾರ್ಮಿಕರ ಮೇಲೆ ಕಣ್ಣು ಹಾಕಿದೆ.ಈ ಹಿನ್ನಲೆಯಲ್ಲಿ, ಈ ವರ್ಷ ಭಾರತದಿಂದ 40,000 ಕಾರ್ಮಿಕರನ್ನು ಆಹ್ವಾನಿಸಲು ಸಿದ್ಧತೆ ನಡೆಸಿದೆ. ಕಳೆದ ವರ್ಷ 80,000 ಭಾರತೀಯರು ಉದ್ಯೋಗ ಪಡೆದಿದ್ದಾರೆ. ಅರೆಕುಶಲ ಮತ್ತು ಕುಶಲ ಕಾರ್ಮಿಕರ ವಲಸೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ರಸ್ತೆ ನಿರ್ವಹಣೆ ಕೆಲಸಕ್ಕೆ ಹೆಚ್ಚಿನ ಸಂಬಳ ನೀಡಲಾಗುತ್ತಿದ್ದು, ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ರಷ್ಯಾಗೆ ತೆರಳಲು ಆಸಕ್ತಿ ತೋರಿದ್ದಾರೆ. ಈ ಕುರಿತ ವರದಿ ಇಲ್ಲಿದೆ..
Raichur : ಗರ್ಭಿಣಿ ಸೊಸೆಯನ್ನು ಕತ್ತು ಸೀಳಿ ಕೊಂದ ಮಾವ
ರಾಯಚೂರು: ನಾಲ್ಕು ತಿಂಗಳ ಗರ್ಭಿಣಿ ಸೊಸೆಯನ್ನು ಮಾವನೇ ಕತ್ತು ಸೀಳಿ ಕೊಂದ ಭೀಕರ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವ ಸಿದ್ದಪ್ಪ ಎಂಬಾತ ತನ್ನ ನಾಲ್ಕು ತಿಂಗಳ ಗರ್ಭಿಣಿ ಸೊಸೆ ರೇಖಾ (25) ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಖಾ ಮನೆಯಿಂದ ಹೊರಬಂದು ನರಳಾಡಿ, ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯ ನಡೆಸಿದ ಬಳಿಕ ಆರೋಪಿ ಸಿದ್ದಪ್ಪ ಪರಾರಿಯಾಗಿದ್ದರೂ, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
Karnataka Weather: ಕರ್ನಾಟಕದಲ್ಲಿ ಚಳಿ ಪ್ರಮಾಣ ಇಳಿಕೆ, ಜನವರಿ 29ರ ಹವಾಮಾನ ವರದಿ ಇಲ್ಲಿದೆ
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳ ಅವಧಿಗೆ ಕರ್ನಾಟಕದಲ್ಲಿ ಸಾಮಾನ್ಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದುರ್ಬಲವಾದ ವಾಯುಭಾರ ಕುಸಿತವು ಆಗ್ನೇಯ ಉತ್ತರ ಪ್ರದೇಶದಿಂದ ಕರ್ನಾಟಕದ ಉತ್ತರ ಒಳನಾಡಿನವರೆಗೆ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರಕ್ಕೆ ಸಾಗುತ್ತಿದೆ
ಹೊಸ ಬಿಪಿಎಲ್ ಪಡಿತರ ಚೀಟಿಗೆ ಈ ಷರತ್ತೇ ಅಡ್ಡಿ; ಏನದು?
ಯಾದಗಿರಿ ಜಿಲ್ಲೆಯಲ್ಲಿ 8,500ಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿ ಅರ್ಜಿಗಳು ಬಾಕಿ ಉಳಿದಿದ್ದು, ಕೇವಲ 2,600 ಅರ್ಜಿಗಳಿಗೆ ಮಾತ್ರ ಷರತ್ತು ವಿಧಿಸಿ ಅನುಮೋದನೆ ನೀಡಲಾಗಿದೆ. ಇದರಿಂದ ಸಾವಿರಾರು ಅರ್ಹ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ. ಅಲ್ಲದೆ, ಅರ್ಜಿಗಳ ಅನುಮೋದನೆಗೆ ಹಣಕ್ಕೆ ಬೇಡಿಕೆ ಇಡುತ್ತಿರುವ ಆರೋಪಗಳು ಕೇಳಿಬರುತ್ತಿವೆ.
ಆಗಸ್ಟ್ 2026ರವರೆಗೆ ಆಕಾಶದಲ್ಲಿ ಅವಘಡ ತಪ್ಪಿದ್ದಲ್ಲ, ಪ್ರವಾಸ ಮುಂದೂಡಿ : ಭವಿಷ್ಯವಾಣಿ ಎಚ್ಚರಿಕೆ
Flight Accidents : ಕಳೆದ ವರ್ಷ ಹೇಳಿದ ಭವಿಷ್ಯಗಳು ಈಗ ಮುನ್ನಲೆಗೆ ಬರುತ್ತಿದೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ದುರ್ಮರಣದ ನಂತರ, ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ನುಡಿಯಲಾಗಿದ್ದ ಜ್ಯೋತಿಷ್ಯ ಭವಿಷ್ಯವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಆ ಟ್ವೀಟ್ ನಲ್ಲಿ ಆಗಸ್ಟ್ ವರೆಗೆ ಗಂಢಾಂತರವಿದೆ ಎಂದು ಜ್ಯೋತಿಷಿ ಶರ್ಮಿಷ್ಠೆ ಸ್ಪಷ್ಟವಾಗಿ ಉಲ್ಲೇಖಿಸಿದ್ದರು.
ಕೇಂದ್ರ ಬಜೆಟ್ಗೆ ದಿನಗಣನೆ ; ಬಾಗಲಕೋಟೆಗೆ ಬಂದೀತೆ ವಂದೇ ಭಾರತ್ ?
ಕೇಂದ್ರ ಬಜೆಟ್ ಸಮೀಪಿಸುತ್ತಿರುವಾಗ, ಬಾಗಲಕೋಟೆ ಜಿಲ್ಲೆಯ ಜನರು ವಂದೇ ಭಾರತ್ ರೈಲು ತಮ್ಮ ಜಿಲ್ಲೆಗೂ ಬರಬೇಕೆಂದು ನಿರೀಕ್ಷಿಸುತ್ತಿದ್ದಾರೆ. ಬೆಳಗಾವಿ, ಹುಬ್ಬಳ್ಳಿ ಜಿಲ್ಲೆಗಳಿಗೆ ಸಂಚರಿಸುತ್ತಿರುವ ಈ ಹೈಟೆಕ್ ರೈಲು ಜಿಲ್ಲೆಗೆ ಬಾರದ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಗದಗ-ಹುಟಗಿ ಮಾರ್ಗದ ಡಬ್ಲಿಂಗ್ ಪೂರ್ಣಗೊಂಡಿರುವುದರಿಂದ, ಈ ಬಾರಿ ರೈಲು ಜಿಲ್ಲೆಗೆ ಪ್ರವೇಶಿಸುವ ವಿಶ್ವಾಸ ಜನರದ್ದು.
ಉತ್ತರ ಭಾರತದಲ್ಲಿ ಮತ್ತೆ ಹಿಮಪಾತ, ಭಾರೀ ಮಳೆ ನಿರೀಕ್ಷೆ
ಹೊಸದಿಲ್ಲಿ: ಹಿಮಾಲಯನ್ ಪ್ರದೇಶದಲ್ಲಿ ಶನಿವಾರ ಹೊಸದಾಗಿ ಸಂಭವಿಸಿರುವ ಪಶ್ಚಿಮ ಪ್ರಕ್ಷುಬ್ಧತೆಯ ಪರಿಣಾಮ ಫೆಬ್ರವರಿ 1ರಂದು ಭಾರಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಗಳಿವೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯವ್ಯ ಭಾರತ ಮತ್ತು ಈ ಭಾಗಕ್ಕೆ ಹೊಂದಿಕೊಂಡಿರುವ ಕೇಂದ್ರ ಭಾರತ ಪ್ರದೇಶಗಳಲ್ಲಿ ಶನಿವಾರದಿಂದ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಏತನ್ಮಧ್ಯೆ ವಾಯವ್ಯ ಭಾರತದಲ್ಲಿ ಮತ್ತು ಹೊಂದಿಕೊಂಡಿರುವ ಕೇಂದ್ರೀಯ ಭಾರತದಲ್ಲಿ ಮತ್ತು ಪೂರ್ವಭಾರತದಲ್ಲಿ ಫೆಬ್ರವರಿ 2ರವರೆಗೆದಟ್ಟ ಮಂಜು ಮುಸುಕಿದ ವಾತಾವರಣದ ಸಾಧ್ಯತೆ ಇದೆ ಎಂದೂ ಹೇಳಿದೆ. ಹೊಸದಾಗಿ ಸಂಭವಿಸಿರುವ ಪಶ್ಚಿಮಮುಖಿ ಪ್ರಕ್ಷುಬ್ಧತೆಯು ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಜನವರಿ 31ರಿಂದ ಫೆಬ್ರವರಿ 2ರವರೆಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಫೆಬ್ರವರಿ 1ರಂದು ಭಾರಿ ಮಳೆ/ ಹಿಮಪಾತವಾಗುವ ನಿರೀಕ್ಷೆ ಇದೆ. ವಾಯವ್ಯ ಭಾರತ ಮತ್ತು ಸುತ್ತಮುತ್ತಲಿನ ಕೇಂದ್ರ ಭಾರತದಲ್ಲಿ ಜನವರಿ 31ರಿಂದ ಫೆಬ್ರುವರಿ 2ರವರೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆ ಹೇಳಿದೆ. ದೆಹಲಿಯಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದೆ. ಹಲವು ಪ್ರದೇಶಗಳಲ್ಲಿ ಮಂಜು ಕವಿಯಲಿದೆ. ಗರಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ನಿಂದ 19 ಡಿಗ್ರಿ ಹಾಗೂ ಕನಿಷ್ಠ ತಾಪಮಾನ 6 ಡಿಗ್ರಿ ಸೆಲ್ಷಿಯಸ್ ನಿಂದ 8 ಡಿಗ್ರಿ ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಕೆ ಶಿವಕುಮಾರ್ ಸೋಲಿಸಲು ದಳಪತಿಗಳು ಬಿಗ್ ಪ್ಲಾನ್, ಕನಕಪುರ ಕ್ಷೇತ್ರದಿಂದ ದೇವೇಗೌಡರ ಕುಡಿ ಕಣಕ್ಕೆ?
ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಅನುಭವಿಸಿದ್ರೆ, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬಂದಿದೆ. ಅಲ್ಲದೇ 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿತ್ತು. ಅಲ್ಲದೇ ಮುಂಬರುವ ಚುನಾವಣೆಗಳು ದಳಪತಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿ
ಕೊಲಂಬಿಯಾ | ವಿಮಾನ ದುರಂತ: ಸಂಸದ ಸೇರಿ 15 ಮಂದಿ ಮೃತ್ಯು
ಕುಕುಟಾ, ಕೊಲಂಬಿಯಾ: ಸಂಸತ್ ಸದಸ್ಯ ಸೇರಿದಂತೆ 15 ಮಂದಿ ಪ್ರಮಾಣಿಸುತ್ತಿದ್ದ ವಿಮಾನ ಕೊಲಂಬಿಯಾ- ವೆನೆಝುವೆಲಾ ಗಡಿಯಲ್ಲಿ ಬುಧವಾರ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ. ವಿಮಾನದಲ್ಲಿ 13 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಇದ್ದರು. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾಗೆ ಸೇರಿದ ಈ ವಿಮಾನ ಗಡಿಭಾಗದ ಕುಕುಟಾದಿಂದ ಟೇಕಾಫ್ ಆಗಿತ್ತು. ಪಕ್ಕದ ಒಕಾನೊ ಬಳಿ ಸಂಜೆ ಇಳಿಯಬೇಕಿದ್ದ ವಿಮಾನ ಲ್ಯಾಂಡಿಂಗ್ಗಿಂತ ಮೊದಲು ನಿಯಂತ್ರಣ ಗೋಪುರದ ಜತೆ ಸಂಪರ್ಕ ಕಡಿದುಕೊಂಡಿದೆ ಎಂದು ತಿಳಿದು ಬಂದಿದೆ. ವಿಮಾನದಲ್ಲಿದ್ದ ಯಾರೂ ಉಳಿದುಕೊಂಡಿಲ್ಲ ಎಂದು ವಿಮಾನಯಾನ ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕುಕುಟಾ ಪರ್ವತ ಪ್ರದೇಶವಾಗಿದ್ದು, ಸವಾಲುದಾಯಕ ಹವಾಮಾನವಿದೆ. ಜತೆಗೆ ಕಾಂಬೋಡಿಯಾದ ಅತಿದೊಡ್ಡ ಗೆರಿಲ್ಲಾ ಗುಂಪು ಎನಿಸಿದ ನ್ಯಾಷನಲ್ ಲಿಬರೇಶನ್ ಆರ್ಮಿಯ ನಿಯಂತ್ರಣದಲ್ಲಿದೆ. ವಿಮಾನದ ಅವಶೇಷಗಳನ್ನು ಪತ್ತೆ ಮಾಡಲು ಮತ್ತು ದೇಹಗಳ ಪತ್ತೆಗೆ ಸರ್ಕಾರ ವಾಯುಪಡೆಯನ್ನು ನಿಯೋಜಿಸಿದೆ. ಒಬ್ಬರು ಸಂಸತ್ ಸದಸ್ಯರು ಹಾಗೂ ಒಬ್ಬರು ಶಾಸನಸಭೆ ಅಭ್ಯರ್ಥಿ ಈ ವಿಮಾನದಲ್ಲಿದ್ದರು ಎಂದು ಹೇಳಲಾಗಿದೆ. ವಿಮಾನ ಅಪಘಾತದ ಬಗೆಗಿನ ಆತಂಕಕಾರಿ ಮಾಹಿತಿ ನಮಗೆ ಬಂದಿದೆ. ಇದರಲ್ಲಿ ನಮ್ಮ ಸಹೋದ್ಯೋಗಿ ಡಯಾಗೊನೆಸ್ ಕ್ವಿಂಟೆರೊ, ಕಾರ್ಲೋಸ್ ಸೆಲ್ಸೆಡೊ ಮತ್ತು ಅವರ ತಂಡದವರು ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಸಂಸದ ವಿಲ್ಮರ್ ಕರಿಲೊ ಹೇಳಿದ್ದಾರೆ.
ಆಲಮಟ್ಟಿ ವಾಟರ್ ಪಾರ್ಕ್ ಉದ್ಘಾಟನೆಗೆ ಮುಹೂರ್ತ ನಿಗದಿ; ಎಂದಿನಿಂದ ಆರಂಭ, ಏನೆಲ್ಲ ಇದೆ?
ಆಲಮಟ್ಟಿ ಜಲಾಶಯದ ಬಳಿ ನಿರ್ಮಾಣಗೊಂಡಿರುವ ವಾಟರ್ ಅಮ್ಯೂಸ್ಮೆಂಟ್ ಪಾರ್ಕ್ ಫೆಬ್ರವರಿಯಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ. 9.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಪಾರ್ಕ್ನಲ್ಲಿ ವಿವಿಧ ಬಗೆಯ ಸ್ಲೈಡ್ಗಳು, ಜಲಕ್ರೀಡಾ ಮೈದಾನ, ವೇವ್ ಪಾಂಡ್, ಲೇಜಿ ರಿವರ್ ಸೇರಿದಂತೆ ಹಲವು ಸೌಲಭ್ಯಗಳಿವೆ. ಇದು ಪ್ರವಾಸಿಗರ ಆಕರ್ಷಣೆಯನ್ನು ಹೆಚ್ಚಿಸಲಿದೆ.
ಪುತ್ತೂರು ತಾಲೂಕಿನಲ್ಲಿ ಧಾರ್ಮಿಕ ಕೇಂದ್ರಗಳ ಜಾಗವನ್ನು ಆಯಾ ಕೇಂದ್ರಗಳ ಹೆಸರಿಗೆ ನೋಂದಣಿ ಮಾಡುವ ಮಹತ್ವದ ಆಂದೋಲನ ಆರಂಭವಾಗಿದೆ. ಈ ಬಗ್ಗೆ ಶಾಸಕ ಅಶೋಕ್ ರೈ ಸ್ಪಷ್ಟಪಡಿಸಿದ್ದಾರೆ. ಅವರ ಪ್ರಯತ್ನದಿಂದ ಇದು ಸಾಧ್ಯವಾಗುತ್ತಿದೆ. ಈಗಾಗಲೇ 9 ಕೇಂದ್ರಗಳ ಜಾಗ ನೋಂದಣಿಯಾಗಿದೆ. 50 ಅರ್ಜಿಗಳು ಸರತಿ ಯಲ್ಲಿವೆ. ಇದು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹಾಗೂ ಅತಿಕ್ರಮಣದ ಭಯ ನಿವಾರಣೆಗೆ ಸಹಕಾರಿಯಾಗಲಿದೆ.
ಬೆಳ್ಳಿ ಬೆಲೆ ಹೆಚ್ಚಳ: ಎಡ - ಬಲ - ಮಧ್ಯ ಎಲ್ಲರ ಆದ್ಯತೆಯ ಕಾಳಜಿ ಆಗಬೇಕಿದೆ: ರಾಜಾರಾಂ ತಲ್ಲೂರು ಬರಹ
Silver Price: ಬೆಳ್ಳಿ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಈ ನಡುವೆ ಬೆಳ್ಳಿ ಬೆಲೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳ ಪ್ರಚಾರವೂ ಹೆಚ್ಚಾಗಿದೆ. ಬೆಳ್ಳಿ ಬೆಲೆ ಹೆಚ್ಚಳ: ಎಡ - ಬಲ - ಮಧ್ಯ ಎಲ್ಲರ ಆದ್ಯತೆಯ ಕಾಳಜಿ ಆಗಬೇಕಿದೆ. ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಆಡಳಿತ ಪಕ್ಷದ ಸಮರ್ಥಕರ ಕೆಲವೊಂದು ಸೋಷಿಯಲ್ ಮೀಡಿಯಾ ಪುಟಗಳಲ್ಲಿ
ಪ್ರತಿಷ್ಠೆಯೇ ಅನಾಹುತಕ್ಕೆ ದಾರಿಯಾದಾಗ! ತಪ್ಪಿಸಬಹುದಾಗಿದ್ದ ಅಜಿತ್ ಪವಾರ್ ನಿಧನ
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ಪತನದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಈ ದುರಂತ ತಪ್ಪಿಸಬಹುದಾಗಿತ್ತು. ಹೆಲಿಕಾಪ್ಟರ್ ಬದಲಿಗೆ ಜೆಟ್ ವಿಮಾನದ ಆಯ್ಕೆ, ಮಂಜು ಮುಸುಕಿದ ವಾತಾವರಣ, ಮತ್ತು ಸಣ್ಣ ವಿಮಾನ ನಿಲ್ದಾಣದ ವ್ಯವಸ್ಥೆಗಳು ದುರಂತಕ್ಕೆ ಕಾರಣವಾಗಿವೆ. ವಿಐಪಿಗಳ ಪ್ರಯಾಣದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ಈ ದುರಂತಕ್ಕೆ ಕಾರಣವಾಗಿದೆ. ಪ್ರತಿಷ್ಠೆಗಿಂತ ನಿಯಮಗಳಿಗೆ ಹೆಚ್ಚಿನ ಮಹತ್ವ ನೀಡಬೇಕು.
ಕರ್ನಾಟಕ ಗೃಹ ಮಂಡಳಿಯು ಬೆಂಗಳೂರಿನಲ್ಲಿ ಶ್ರಮಿಕ ವರ್ಗದವರಿಗಾಗಿ ಸ್ವಂತ ಸೂರು ಒದಗಿಸಲು ಮುಂದಾಗಿದೆ. ರಿಯಾಯಿತಿ ದರದಲ್ಲಿ ನಿವೇಶನ ಹಾಗೂ ಮನೆ ನಿರ್ಮಿಸಲು 230 ಎಕರೆ ಭೂಮಿ ಕಾಯ್ದಿರಿಸಿದ್ದು, ಸುಮಾರು 4ರಿಂದ 5 ಸಾವಿರ ಫ್ಲ್ಯಾಟ್ಗಳನ್ನು ನಿರ್ಮಿಸುವ ಗುರಿ ಹೊಂದಿದೆ. ಮುಖ್ಯಮಂತ್ರಿಗಳ 'ನಮ್ಮ ಮನೆ ಯೋಜನೆ'ಯಡಿ ಶೇ.50ರ ರಿಯಾಯಿತಿ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸಲಿದೆ.
ಖ್ಯಾತ ಗಾಯಕ ಅರಿಜಿತ್ ಸಿಂಗ್ ಬಾಲಿವುಡ್ಗೆ ಗುಡ್ಬೈ ಹೇಳಿದ್ದಾರೆ. ಇದಕ್ಕೆ ನಟ ಸಲ್ಮಾನ್ ಖಾನ್ ಅವರೇ ಕಾರಣ ಎಂಬ ಮಾತು ಕೇಳಿಬರುತ್ತಿದೆ. 2014ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಡೆದ ಘಟನೆಯಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಸಲ್ಮಾನ್ ಖಾನ್ ತಮ್ಮ ಪ್ರಭಾವ ಬಳಸಿ ಅರಿಜಿತ್ ಸಿಂಗ್ಗೆ ಅವಕಾಶಗಳನ್ನು ತಪ್ಪಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಅರಿಜಿತ್ ಸಿಂಗ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿಕ್ಕಮಗಳೂರು| ಮಹಿಳೆ ಜೊತೆ ಖಾಸಗಿ ಹೋಮ್ಸ್ಟೇಯಲ್ಲಿದ್ದ ಬಿಜೆಪಿ ಮುಖಂಡನ ಮೇಲೆ ಗ್ರಾಮಸ್ಥರಿಂದ ಹಲ್ಲೆ
ಚಿಕ್ಕಮಗಳೂರು: ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪ್ತ ಆನಂದ್ ಮೇಲೆ ಮತ್ತಾವರ ಗ್ರಾಮದ ಗ್ರಾಮಸ್ಥರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಧವೆ ಮಹಿಳೆ ಜತೆ ಖಾಸಗಿ ಹೋಮ್ಸ್ಟೇಯಲ್ಲಿ ತಂಗಿದ್ದ ವೇಳೆ ಆನಂದ್ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಚಿಕ್ಕಮಗಳೂರು-ಕಡೂರು ಮಾರ್ಗದ ಖಾಸಗಿ ಹೋಮ್ಸ್ಟೇ ಮೇಲೆ ಗ್ರಾಮಸ್ಥರು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪೆನ್ ಪಾಯಿಂಟ್ ಕ್ರಿಕೆಟ್: ಎಮಾರ್ ಸ್ಟ್ರೈಕರ್ಸ್ ಚಾಂಪಿಯನ್, ಅಟ್ಯಾಕರ್ಸ್ ರನ್ನರ್-ಅಪ್
ಕಾಸರಗೋಡು: ಸಾಮಾಜಿಕ ಹೋರಾಟ, ಕಾರ್ಯಾಗಾರ, ಬಡವರಿಗೆ ವೈದ್ಯಕೀಯ ಹಾಗೂ ಶೈಕ್ಷಣಿಕ ಕ್ಷೇತ್ರದ ಆರ್ಥಿಕ ಸಹಾಯ ಸೇರಿದಂತೆ ವಿವಿಧ ಸಮಾಜ ಸೇವೆಗಳ ಮೂಲಕ ಗುರುತಿಸಿಕೊಳ್ಳುತ್ತಿರುವ ‘ಪೆನ್ ಪಾಯಿಂಟ್ ಸ್ನೇಹ ವೇದಿಕೆ’ ಆಯೋಜಿಸಿದ 5ನೇ ಆವೃತ್ತಿಯ ಕ್ರಿಕೆಟ್ ಫೆಸ್ಟ್ನಲ್ಲಿ ಎಮಾರ್ ಸ್ಟ್ರೈಕರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಟ್ಯಾಕರ್ಸ್ ತಂಡ ರನ್ನರ್-ಅಪ್ ಸ್ಥಾನ ಪಡೆದುಕೊಂಡಿತು. ಕೇರಳದ ಕಾಸರಗೋಡು ಜಿಲ್ಲೆಯ ಲಾರ್ಡ್ಸ್ ಮೈದಾನದಲ್ಲಿ ಈ ಬಾರಿ ಟೂರ್ನಿ ನಡೆಯಿತು. ನ್ಯಾಯವಾದಿ ಅಶ್ರಫ್ ಕನ್ಯಾರಕೋಡಿ ಮಾಲಕತ್ವದ, ಸಾಬಿತ್ ಕುಂಬ್ರ ನಾಯಕತ್ವದ ಎಮಾರ್ ಸ್ಟ್ರೈಕರ್ಸ್ ತಂಡ ಟೂರ್ನಿಯುದ್ದಕ್ಕೂ ಪ್ರಾಬಲ್ಯ ಸಾಧಿಸಿ, ಅಧಿಕಾರಯುತವಾಗಿ ಕಿರೀಟ ಮುಡಿಗೇರಿಸಿಕೊಂಡಿತು. ಈ ಹಿಂದಿನ ಆವೃತ್ತಿಗಳಲ್ಲಿ ತೀರಾ ಕಳಪೆ ಪ್ರದರ್ಶನ ತೋರಿದ್ದ ಹಕೀಮ್ ಪದಡ್ಕ ಮಾಲಕತ್ವದ, ರಾಝಿಕ್ ಬಿ.ಎಂ. ನಾಯಕತ್ವದ ಅಟ್ಯಾಕರ್ಸ್ ತಂಡ ಈ ಬಾರಿ ಅತ್ಯಾಕರ್ಷಕ ಆಟದ ಮೂಲಕ ಗಮನ ಸೆಳೆಯುವುದರ ಜೊತೆಗೆ, ಫೈನಲ್ ಕೂಡಾ ಪ್ರವೇಶಿಸಿತು. ಆದರೆ ಫೈನಲ್ನಲ್ಲಿ ಎಮಾರ್ ತಂಡದ ವಿರುದ್ಧ ವೀರೋಚಿತ ಸೋಲು ಕಂಡು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಟೂರ್ನಿಯಲ್ಲಿ ಈ ಬಾರಿ ಒಟ್ಟು 6 ತಂಡಗಳು ಪಾಲ್ಗೊಂಡವು. ಎಮಾರ್ ಸ್ಟ್ರೈಕರ್ಸ್, ಅಟ್ಯಾಕರ್ಸ್ ಜೊತೆಗೆ ಅಶ್ರಫ್ ನಟ್ಟಿಬೈಲ್ ಮಾಲಿಕತ್ವದ ಗೋಲ್ಡನ್ ಯಾರ್ಕರ್ಸ್, ಕಳೆದೆರಡು ಬಾರಿ ಚಾಂಪಿಯನ್ ಆಗಿದ್ದ ಉದ್ಯಮಿ ಇರ್ಫಾನ್ ಕನ್ಯಾರಕೋಡಿ ಮಾಲಿಕತ್ವದ ಬ್ಲೂ ಹಂಟರ್ಸ್, ಅಶ್ರಫ್ ಕಟ್ಟದಪಡ್ಪು ಮಾಲಕತ್ವದ ಚಾಲೆಂಜರ್ಸ್, ನೂರುದ್ದೀನ್ ಬಪ್ಪಳಿಗೆ ಒಡೆತನದ ಸ್ಪೋರ್ಟ್ಸ್ವರ್ಲ್ಡ್ ಕಿಂಗ್ಸ್ ತಂಡಗಳ ನಡುವೆ ರೋಚಕ ಪೈಪೋಟಿ ಏರ್ಪಟ್ಟಿತು. ಲೀಗ್ ಹಂತದಲ್ಲಿ ಎಮಾರ್ ಅಗ್ರಸ್ಥಾನಿಯಾದರೆ, ಅಟ್ಯಾಕರ್ಸ್ 2ನೇ ಸ್ಥಾನ ಪಡೆದುಕೊಂಡಿತು. ಚಾಲೆಂಜರ್ಸ್, ಬ್ಲೂ ಹಂಟರ್ಸ್ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದುಕೊಂಡಿತು. ಯಾರ್ಕರ್ಸ್ ತಂಡ 5ನೇ, ಸ್ಪೋರ್ಟ್ಸ್ವರ್ಲ್ಡ್ ಕಿಂಗ್ಸ್ 6ನೇ ಸ್ಥಾನಕ್ಕೆ ತೃಪ್ತಿಪಟ್ಟು ಗುಂಪು ಹಂತದಲ್ಲೇ ಹೊರಬಿದ್ದವು. ಎಮಾರ್ ಸ್ಟ್ರೈಕರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಲು ಪ್ರಮುಖ ಪಾತ್ರ ವಹಿಸಿದ ಸ್ಟಾರ್ ಆಟಗಾರ ಶಬೀರ್ ರೆಂಜ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಫೈನಲ್ನ ಪಂದ್ಯಶ್ರೇಷ್ಠ ಪ್ರಶಸ್ತಿ ಸಾಬಿತ್ ಕುಂಬ್ರ ಪಾಲಾಯಿತು. ವೈಯಕ್ತಿಕ ಪ್ರಶಸ್ತಿಗಳ ಪಟ್ಟಿ: ಸರಣಿ ಶ್ರೇಷ್ಠ: ಶಬೀರ್ ರೆಂಜ ಶ್ರೇಷ್ಠ ಆಲ್ರೌಂಡರ್: ಶಿಹಾಬ್ ಉಬಾರ್ ಶ್ರೇಷ್ಠ ಬ್ಯಾಟ್ಸ್ಮನ್: ಜಮಾಲ್ ಕಲ್ಲಡ್ಕ ಆರೆಂಜ್ ಕ್ಯಾಪ್: ಸಿಯಾಬ್ ಪಟ್ನ ಶ್ರೇಷ್ಠ ಬೌಲರ್: ಸಾಬಿತ್ ಕುಂಬ್ರ ಪರ್ಪಲ್ ಕ್ಯಾಪ್: ಅಲ್ಫಾನ್ ಅಹ್ಮದ್ ಶ್ರೇಷ್ಠ ಕ್ಯಾಚ್: ಸರ್ಫು ವಳಾಲ್ ಶ್ರೇಷ್ಠ ಫೀಲ್ಡರ್: ಶರೀಫ್ ಕಡಬ ಶ್ರೇಷ್ಠ ವಿಕೆಟ್ ಕೀಪರ್: ತನ್ಸೀಫ್ ಬಿ.ಎಂ. ಫೈನಲ್ನ ಪಂದ್ಯಶ್ರೇಷ್ಠ: ಸಾಬಿತ್ ಕುಂಬ್ರ.
ಬೆಂಗಳೂರು ವಿಮಾನ ನಿಲ್ದಾಣದಿಂದ ನೈಸ್ ರಸ್ತೆಗೆ ಶೀಘ್ರವೇ ನೇರ ಸಂಪರ್ಕ - ಡಿಪಿಆರ್ ರೆಡಿ, ಭೂಸ್ವಾಧೀನಕ್ಕೆ ಚಾಲನೆ
ಬೆಂಗಳೂರು ಫೆರಿಫೆರಲ್ ರಿಂಗ್ ರಸ್ತೆಯನ್ನು ಈಗ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂದು ಕರೆಯಲಾಗುತ್ತಿದೆ. ಇದರ ಪ್ರಮುಖ ಭಾಗದ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕೆಂಪೇಗೌಡ ವಿಮಾನ ನಿಲ್ದಾಣ ಮತ್ತು ನೈಸ್ ರಸ್ತೆಯನ್ನು ಸಂಪರ್ಕಿಸುವ 23 ಕಿಲೋಮೀಟರ್ ವಿಭಾಗದ ಸಿವಿಲ್ ಕಾಮಗಾರಿಗಳಿಗೆ ಆದ್ಯತೆ ನೀಡಿದೆ. ಮೊದಲ ಹಂತದ ಟೆಂಡರ್ಗಳನ್ನು ಫೆಬ್ರವರಿ ಅಥವಾ ಮಾರ್ಚ್ ತಿಂಗಳೊಳಗೆ ಕರೆಯಲಾಗುತ್ತದೆ.
ಇರಾನ್ ವಿರುದ್ಧ ಅಮೆರಿಕ ಯುದ್ಧ ಘೋಷಣೆ ಮಾಡಿದರೆ ರಷ್ಯಾ ಮತ್ತು ಚೀನಾ ಎಂಟ್ರಿ?
ಇರಾನ್ ವಿರುದ್ಧ ಅಮೆರಿಕ ನೇರವಾಗಿ ದಾಳಿ ಮಾಡಿ, ಸೇನಾ ಕಾರ್ಯಾಚರಣೆ ನಡೆಸಲು ಎಲ್ಲಾ ರೀತಿ ಸಿದ್ಧತೆ ಮಾಡಿಕೊಂಡಿದೆ. ಪರಿಸ್ಥಿತಿ ಭೀಕರವಾಗಿದ್ದು ಘೋರ ಯುದ್ಧ ಆರಂಭವಾಗಿ ಇಡೀ ಮಧ್ಯಪ್ರಾಚ್ಯ ಭಾಗದಲ್ಲಿ ದೊಡ್ಡ ತಲೆನೋವು ಎದುರಾಗುವ ಆತಂಕ ಕೂಡ ಕಾಡುತ್ತಿದೆ. ಹೀಗಿದ್ದಾಗ ಇರಾನ್ ಕೂಡ ನಾವು ಯುದ್ಧ ಮಾಡಲು ಸಿದ್ಧ ಎಂದು ಮೊಂಡುತನದ ಹೇಳಿಕೆ ಕೊಡುತ್ತಿದೆ. ಕ್ಷಣಕ್ಷಣಕ್ಕೂ ಪರಿಸ್ಥಿತಿ ಕೈಮೀರಿ
ಫೆ.3ರವರೆಗೆ ರಾಜ್ಯ ವಿಧಾನ ಮಂಡಲದ ಅಧಿವೇಶನ ವಿಸ್ತರಣೆ?
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನ ಫೆ.3ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ. ಬುಧವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸರಕಾರ ಮನರೇಗಾ ಕಾಯ್ದೆ ಬದಲಾಗಿ ಜಾರಿಗೆ ತಂದಿರುವ ವಿಬಿ: ಜಿ ರಾಮ್ ಜಿ ಕಾಯ್ದೆಯ ಕುರಿತು ವಿವರಣೆ ನೀಡಿದ ಸಿದ್ದರಾಮಯ್ಯ, ಈ ಕಾಯ್ದೆ ಕುರಿತು ಸಮಗ್ರ ಚರ್ಚೆ ನಡೆಸಲು ಅಧಿವೇಶನವನ್ನು ಎರಡು ದಿನ ವಿಸ್ತರಣೆ ಮಾಡಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ ನರೇಗಾ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಸೋಮವಾರ ಮಂಗಳವಾರ ನರೇಗಾ ಚರ್ಚೆಗಾಗಿಯೇ ಅಧಿವೇಶನ ವಿಸ್ತರಿಸೋಣ. ಸದನ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಅಧಿವೇಶನ ವಿಸ್ತರಣೆಯಾದರೆ ಕಡ್ಡಾಯವಾಗಿ ಭಾಗಿಯಾಗಬೇಕು ಎಂದು ಶಾಸಕರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸಮಯ ಮೀರುತ್ತಿದೆ, ಮಾತುಕತೆ ಮೇಜಿಗೆ ಬರದಿದ್ದರೆ ಗಂಭೀರ ಪರಿಣಾಮ; ಇರಾನ್ಗೆ ಶ್ವೇತಭವನದ ಎಚ್ಚರಿಕೆ!
ಇರಾನ್ ಆಂತರಿಕ ಸಂಘರ್ಷಗಳನ್ನು ಇರಾನ್ ಮರೆತರೂ ಅಮೆರಿಕ ಮರೆಯುತ್ತಿಲ್ಲ. ಖಮೇನಿ ಆಡಳಿತವನ್ನು ಬೆದರಿಸಲು ತನ್ನ ಬೃಹತ್ ನೌಕಾಪಡೆಯನ್ನು ಮಧ್ಯಪ್ರಾಚ್ಯಕ್ಕೆ ರವಾನಿಸಿರುವ ಟ್ರಂಪ್ ಆಡಳಿತ, ಶಾಂತಿ ಮಾತುಕತೆಗೆ ಮುಂದಾಗುವಂತೆ ಇರಾನ್ ಮೇಲೆ ಒತ್ತಡ ಹೇರುತ್ತಿದೆ. ಈ ಕುರಿತು ತನ್ನ ಅಧಿಕೃತ ಎಕ್ಸ್ ಪೋಸ್ಟ್ನಲ್ಲಿ ಟ್ವೀಟ್ ಮಾಡಿರುವ ಶ್ವೇತಭವನ, ಇರಾನ್ ಆದಷ್ಟು ಬೇಗ ಶಾಂತಿ ಮಾತುಕತೆ ಮೇಜಿಗೆ ಬರುವುದು ಒಳಿತು ಎಂದು ಸೂಚ್ಯವಾಗಿ ಎಚ್ಚರಿಕೆ ನೀಡಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ.
ಬೆಂಗಳೂರಿನ ಈ 9 ಮೆಟ್ರೋ ರೈಲು ನಿಲ್ದಾಣಗಳಲ್ಲಿ ಉಚಿತ ಪಾರ್ಕಿಂಗ್! ಆದರೆ ಈ ವಾಹನಕ್ಕೆ ಮಾತ್ರ!
ಬೆಂಗಳೂರು ಮೆಟ್ರೋ ಒಂಬತ್ತು ಪ್ರಮುಖ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯವನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಪರಿಸರ ಸ್ನೇಹಿ ಸಂಚಾರ ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಉತ್ತೇಜಿಸುವ ಗುರಿಯೊಂದಿಗೆ, ಈ ಯೋಜನೆಯು ಐಟಿ ಉದ್ಯೋಗಿಗಳು ಮತ್ತು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಆದಾಗ್ಯೂ, ಸುರಕ್ಷತೆ ಮತ್ತು ಮೂಲಭೂತ ಸೌಕರ್ಯಗಳ ಸುಧಾರಣೆಯೂ ಅಗತ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು| ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕಳ್ಳತನ: ಆರೋಪಿಯ ಬಂಧನ
ಬೆಂಗಳೂರು, ಜ.28: ಅಮೆರಿಕಾ ಮೂಲದ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಕಳ್ಳತನದ ಆರೋಪದಲ್ಲಿ ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ಅಂದಾಜು ಒಂದು ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಶ್ಚಿಮ ಬಂಗಾಳದ ಚಂದನ್ ರೌಲ್ ಬಂಧಿತ ಆರೋಪಿ. ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದ ಅಮೆರಿಕದ ಮೆರಿಯಲ್ ಮೊರೆನೋ ದಂಪತಿ ನಗರದಲ್ಲಿರುವ ಕೋಡಿಹಳ್ಳಿಯ ರುಸ್ತುಂಭಾಗ್ ಮುಖ್ಯರಸ್ತೆಯ ವಿಲ್ಲಾವೊಂದರಲ್ಲಿ ಬಾಡಿಗೆಗೆ ವಾಸವಿದ್ದರು. ಅದೇ ಮನೆಯಲ್ಲಿ ಚಂದನ್ ರೌಲ್ ಕೆಲಸ ಮಾಡುತ್ತಿದ್ದ. ಜ.21ರಂದು ಮೆರಿಯಲ್ ಕೆಲಸಕ್ಕೆ ಹೋಗಿದ್ದಾಗ ಆರೋಪಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದನು. ಕಳ್ಳತನವಾಗಿರುವುದನ್ನು ತಿಳಿದ ಮೆರಿಯಲ್ ಆ ಸಂದರ್ಭದಲ್ಲಿ ಅಮೆರಿಕಕ್ಕೆ ತೆರಳಿದ್ದ ತಮ್ಮ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತಕ್ಷಣ ಪತಿ ಭಾರತದಲ್ಲಿರುವ ಅಮೆರಿಕದ ಎಂಬೆಸ್ಸಿಯ ನೆರವಿನೊಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ನೀಡಿದ್ದರು. ಮೆರಿಯಲ್ ಅವರಿಂದ ದೂರು ಪಡೆದ ಜೀವನ್ ಭೀಮಾನಗರ ಠಾಣೆ ಪೊಲೀಸರು ಆರೋಪಿ ಚಂದನ್ ರೌಲ್ನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂಗೆ ಅನುದಾನ, ಹೊಸ ರೇಷನ್ ಕಾರ್ಡ್ ಸೇರಿ 5 ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ ಶಾಸಕರು
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಶಾಸಕರು ಕ್ಷೇತ್ರಕ್ಕೆ ಅನುದಾನ, ಹೊಸ ರೇಷನ್ ಕಾರ್ಡ್ ಸೇರಿದಂತೆ 5 ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಮನರೇಗಾ ಯೋಜನೆ ಬಗ್ಗೆ ಸುದೀರ್ಘ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನವನ್ನು ಫೆಬ್ರವರಿ 3ರವರೆಗೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಸಿಎಂ ತಿಳಿಸಿದ್ದಾರೆ.
ವಿಜಯನಗರ | ಮಾನವ ಅಭಿವೃದ್ಧಿಗೆ ನಿಖರ ದತ್ತಾಂಶ ಅಗತ್ಯ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ) : ಮಾನವ ಸಂಪನ್ಮೂಲ ಅಭಿವೃದ್ಧಿ ನಗರ ಹಾಗೂ ಗ್ರಾಮೀಣ ಹಂತದಿಂದ ಆರಂಭವಾದಾಗ ಮಾತ್ರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಸಂಬಂಧಿಸಿದ ಸಮಗ್ರ ಮಾನವ ಅಭಿವೃದ್ಧಿ ವರದಿಯನ್ನು ಫೆ.10ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 2025ರ ಮಾನವ ಅಭಿವೃದ್ಧಿ ವರದಿ ಮತ್ತು 2031ರವರೆಗೆ ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ತಯಾರಿಕೆ ಕುರಿತು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯದ ಯೋಜನೆ ರೂಪಿಸುವ ಸಂದರ್ಭದಲ್ಲಿ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿ ತಪ್ಪು ಮಾಹಿತಿ ನೀಡದೇ ನಿಖರ, ಸ್ಪಷ್ಟ ಹಾಗೂ ವಾಸ್ತವಾಧಾರಿತ ದತ್ತಾಂಶವನ್ನು ಒದಗಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಶಿಕ್ಷಣ, ಮಾನವ ಅಭಿವೃದ್ಧಿ ಸೂಚ್ಯಂಕ, ತಲಾ ಆದಾಯ ಸೇರಿದಂತೆ ಎಲ್ಲಾ ಅಂಶಗಳ ಸಮಗ್ರ ಮಾಹಿತಿ ಅತ್ಯಂತ ಮಹತ್ವದ್ದು ಎಂದು ಅವರು ಹೇಳಿದರು. ಅಧಿಕಾರಿಗಳು ನೀಡುವ ದತ್ತಾಂಶದ ಆಧಾರದಲ್ಲಿಯೇ ಮುಂದಿನ ಯೋಜನೆಗಳು ರೂಪುಗೊಳ್ಳುವುದರಿಂದ, ಯಾವುದೇ ರೀತಿಯ ಗೊಂದಲ ಅಥವಾ ಸಮಸ್ಯೆಗಳು ಉಂಟಾಗದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪೂರಕ ವರದಿ ತಯಾರಿಸಿ ಜೂನ್ ಅಂತ್ಯದೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ನೊಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯ ಡೀನ್ ಹೆಚ್.ಡಿ. ಪ್ರಶಾಂತ, ಡಾ. ಜಿ.ಎಸ್. ಗಣೇಶ್ ಪ್ರಸಾದ್, ಟೆಕ್ ಏಜೆನ್ಸಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ನಾರಾಯಣ ಶಾಸ್ತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು| ನಾಲ್ಕು ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: 10 ಮಂದಿ ಆರೋಪಿಗಳ ಬಂಧನ
ಬೆಂಗಳೂರು, ಜ.28: ಇಲ್ಲಿನ ಅಮೃತಹಳ್ಳಿ ಪೊಲೀಸರು 4 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದು, ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಇಂಜಿನಿಯರ್ಗಳು, ಕಾನೂನು ವಿದ್ಯಾರ್ಥಿ, ಬೌನ್ಸರ್ ಸೇರಿ ಹತ್ತು ಮಂದಿ ಡ್ರಗ್ ಫೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 36 ಸಾವಿರ ರೂ. ನಗದು, 3 ಕೆ.ಜಿ ಹೈಡೋ ಗಾಂಜಾ, 50 ಗ್ರಾಂ ಎಂಡಿಎಂಎ, 500 ಗ್ರಾಂ ಚರಸ್, 500 ಎಲ್ಎಸ್ ಡಿ ಸ್ಟ್ರಿಪ್ಸ್ ಗಳು, 10 ಕೆಜಿ ಗಾಂಜಾ, 2 ಕಾರುಗಳು, 14 ಮೊಬೈಲ್ ಗಳು ಸೇರಿ 4 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಗಿಲು ಲೇಔಟ್ನ ಎರೋನಾಟಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕುಶಾಲ್ಗೌಡ(23), ರಾಜಾನುಕುಂಟೆಯ ಕಾನೂನು ವಿದ್ಯಾರ್ಥಿ ಶಶಾಂಕ್(28), ಮರಳವಾಡಿಯ ಬೌನ್ಸರ್ ಸಾಗರ್(29), ದೊಡ್ಡಕಮ್ಮನಹಳ್ಳಿಯ ಕ್ಯಾಬ್ ಚಾಲಕ ವಿಲ್ಸನ್.ಎಸ್(48), ಅಕ್ಷಯನಗರದ ಆಶಿರ್ ಅಲಿ(36), ರಿಯಾಸ್(38), ಬೇಗೂರಿನ ಸಜಾದ್(34) ಎಲೆಕ್ಟ್ರಾನಿಕ್ ಸಿಟಿಯ ಶಿಹಾಬ್.ಕೆ.ಪಿ(30), ದೊಡ್ಡಗಮ್ಮನಹಳ್ಳಿಯ ಅಬ್ದುಲ್ ನಾಸಿರ್(28) ದೇವರಾಜ ಅರಸು ನಗರದ ಸಾಫ್ಟ್ವೇರ್ ಇಂಜಿನಿಯರ್ ಅಭಿನವ್ ಡಿ.(21) ಬಂಧಿತ ಆರೋಪಿಗಳಾಗಿದ್ದಾರೆ.
Ukraine: ಉಕ್ರೇನ್ ಪ್ರಯಾಣಿಕ ರೈಲಿನ ಮೇಲೆ ಭೀಕರ ದಾಳಿ, 12 ಜನ ಬಲಿ ಆರೋಪ
ರಷ್ಯಾ ಮತ್ತು ಉಕ್ರೇನ್ ಯುದ್ಧ ನಿಲ್ಲುವ ಬದಲು ಮತ್ತಷ್ಟು ಹೆಚ್ಚಾಗುತ್ತಿದ್ದು, ಇಬ್ಬರ ನಡುವೆ ಈಗ ಮತ್ತೆ ಬೆಂಕಿ ಹೊತ್ತಿಕೊಂಡಿದೆ. ಅದರಲ್ಲೂ ಉಕ್ರೇನ್ ಪ್ರಯಾಣಿಕ ರೈಲಿನ ಮೇಲೆ ಭೀಕರ ದಾಳಿ ನಡೆದ ಆರೋಪ ಕೇಳಿಬಂದಿದೆ. ಈ ದಾಳಿಯಲ್ಲಿ ಬರೋಬ್ಬರಿ 12 ಜನ ಬಲಿಯಾಗಿ, ಹತ್ತಾರು ಮಂದಿ ಭಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈಗ ಅವರಿಗೆ
ವಿಜಯನಗರ (ಹೊಸಪೇಟೆ) : ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಹಾಗೂ ಇತರ ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯುತ್ತಿರುವುದು ಬಡವರ್ಗದ ಜನರಿಗೆ ಅತ್ಯಂತ ಅನುಕೂಲಕರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಲ್.ಆರ್.ಶಂಕರ ನಾಯ್ಕ ಹೇಳಿದರು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಬಿಎಂಎಸ್ಎಸ್ ಫೌಂಡೇಶನ್ ಸಹಯೋಗದಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಏರ್ಪಡಿಸಿದ್ದ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಸೇವೆಗಳ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸೀಳು ತುಟಿ, ಸೀಳು ಅಂಗುಳ ಮತ್ತು ಮುಖದ ವಿರೂಪಗಳಿಗೆ ಉಚಿತ ಶಸ್ತ್ರಚಿಕಿತ್ಸೆ ಸೇವೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇದಕ್ಕಾಗಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಾರ್ವಜನಿಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸೀಳು ತುಟಿ ಹಾಗೂ ಸೀಳು ಅಂಗುಳ ಸಮಸ್ಯೆಗಳು ಭ್ರೂಣದ ಬೆಳವಣಿಗೆಯ ವೇಳೆ ಉಂಟಾಗುವ ಅಸಹಜತೆಯಿಂದ ಸಂಭವಿಸುತ್ತವೆ. ಇವುಗಳನ್ನು ಸೂಕ್ಷ್ಮ ಹಾಗೂ ಸಣ್ಣ ಶಸ್ತ್ರಚಿಕಿತ್ಸೆಯ ಮೂಲಕ ಸುಲಭವಾಗಿ ಸರಿಪಡಿಸಬಹುದಾಗಿದೆ. ಆದ್ದರಿಂದ ಯಾವುದೇ ರೀತಿಯ ಆತಂಕ ಬೇಡದೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
25 ಶಾಸಕರು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ಮುಂದುವರಿಕೆ: ರಾಜ್ಯ ಸರಕಾರ ಮಹತ್ವದ ಆದೇಶ
ಬೆಂಗಳೂರು, ಜ.28: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಅಪ್ಪಾಜಿ ಸಿ.ಎಸ್ ನಾಡಗೌಡ ಸೇರಿದಂತೆ ಒಟ್ಟು 25 ಜನ ಶಾಸಕರನ್ನು ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ಮುಂದುವರಿಸಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ. ವಾಯುವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾಗಿ ಭರಮಗೌಡ(ರಾಜು) ಅಲಗೌಡ ಕಾಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಎಸ್.ಆರ್.ಶ್ರೀನಿವಾಸ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಬಸವರಾಜ್ ನೀಲಪ್ಪ ಶಿವಣ್ಣನವರ್, ಆಹಾರ ಮತ್ತು ನಾಗರೀಕ ಸರಬರಾಜು ನಿಗಮಕ್ಕೆ ಬಿ.ಜಿ.ಗೋವಿಂದಪ್ಪ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ ಎಚ್.ಸಿ.ಬಾಲಕೃಷ್ಣ, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಜಿ.ಎಸ್.ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಎನ್.ಎ.ಹ್ಯಾರಿಸ್, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ಗೆ ಸಿ.ಪುಟ್ಟರಂಗಶೆಟ್ಟೆ, ಹಟ್ಟಿ ಚಿನ್ನದ ಗಣಿ ನಿಯಮಿತಕ್ಕೆ ಜಿ.ಟಿ.ಪಾಟೀಲ್, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮಕ್ಕೆ ಬಿ.ಕೆ.ಸಂಗಮೇಶ್ವರ್, ಕರ್ನಾಟಕ ಗೃಹ ಮಂಡಳಿಗೆ ಕೆ.ಎಂ.ಶಿವಲಿಂಗೇಗೌಡ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಗೆ ಅಬ್ಬಯ್ಯ ಪ್ರಸಾದ್, ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಬಿ.ಕೆ.ಗೋಪಾಲಕೃಷ್ಣ ಬೇಳೂರು, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಕ್ಕೆ ಎಸ್.ಎನ್.ನಾರಾಯಣಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ ಟಿ.ರಘುಮೂರ್ತಿ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಗಮಿತಕ್ಕೆ ಎ.ಬಿ.ರಮೇಶ್ ಬಂಡಿ ಸಿದ್ದೇಗೌಡ, ಜಂಗಲ್ ಲಾಡ್ಜ್ಸ್ಗೆ ಅನಿಲ್ ಚಿಕ್ಕಮಾದು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಬಸವನಗೌಡ ದದ್ದಲ್, ಕರ್ನಾಟಕ ರೇಷ್ಮೇ ಉದ್ದಿಮೆಗಳ ನಿಗಮ ನಿಯಮಿತಕ್ಕೆ ಖನೀಜ್ ಫಾತಿಮಾ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಡಿ.ಟಿ.ರಾಜೇಗೌಡ, ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತಕ್ಕೆ ರೂಪಕಲಾ ಎಂ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲೆಂಟ್ ಆಂಡ್ ಏಜೆನ್ಸಿಸ್ಗೆ ಸತೀಶ್ ಕೃಷ್ಣ ಸೈಲ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಶರತ್ ಕುಮಾರ್ ಬಚ್ಚೇಗೌಡ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಬಸವನಗೌಡ ತುರುವಿಹಾಳ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಮುಂದಿನ ಆದೇಶದವರೆಗೂ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಂದುರಿಸುವಂತೆ ಸರಕಾರದ ಆದೇಶದಲ್ಲಿ ತಿಳಿಸಿದೆ.
8th Pay Commission: ನೌಕರರ ಅಸಲಿ ಸಂಬಳ ಎಷ್ಟು ಹೆಚ್ಚಾಗಲಿದೆ?, ಶೇ.13ರಷ್ಟು 'ರಿಯಲ್ ಪೇ ಹೈಕ್' ನಿರೀಕ್ಷೆ.
ನವದೆಹಲಿ: 8ನೇ ವೇತನ ಆಯೋಗ (CPC) ಜಾರಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರ ಪ್ರತಿನಿಧಿ ಸಂಘಟನೆಗಳ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಅದರಲ್ಲಿ ಫಿಟ್ಮೆಂಟ್ ಅಂಶ ಹಾಗೂ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳ ವರದಿ ಸಿದ್ಧಪಡಿಸುವ ಚರ್ಚೆಗಳು ಆಗಿವೆ. ಇದರ ಬೆನ್ನಲ್ಲೆ ವೇತನ ಎಷ್ಟು ಹೆಚ್ಚಾಗಬಹುದು. ಕೆಲವು ಅಂಶಗಳು ಕಾಗದದ ಮೇಲೆ ನಮೂದಿಸಿದರೂ ಸಹಿತ
ಏಳು ಸಾವಿರ ಶಾಲಾ ಕೊಠಡಿಗಳ ದುರಸ್ತಿಗೆ 96.88 ಕೋಟಿ ರೂ. ಮಂಜೂರು ಮಾಡಿದ ರಾಜ್ಯ ಸರಕಾರ
ಬೆಂಗಳೂರು, ಜ.28: ರಾಜ್ಯ ಸರಕಾರವು 2,819 ಸರಕಾರಿ ಶಾಲೆಗಳ ಒಟ್ಟು 7,293 ತರಗತಿ ಕೊಠಡಿಗಳ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು 96.88 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. 2,819 ಸರಕಾರಿ ಶಾಲೆಗಳ 4,163 ತರಗತಿ ಕೊಠಡಿಗಳ ಸಣ್ಣ ಪ್ರಮಾಣದ ದುರಸ್ತಿ ಕಾಮಗಾರಿಗಳಿಗೆ 44.30 ಕೋಟಿ ರೂ.ಗಳನ್ನು ಮತ್ತು 3,130 ತರಗತಿ ಕೊಠಡಿಗಳ ದೊಡ್ಡ ಪ್ರಮಾಣ ದುರಸ್ತಿಯ ಕಾಮಗಾರಿಗಳಿಗೆ 52.58 ಕೋಟಿ ರೂ.ಗಳು ಸೇರಿ ಒಟ್ಟು 7,293 ತರಗತಿ ಕೊಠಡಿಗಳ ದುರಸ್ತಿಗೆ 96.88 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಉದ್ದೇಶಿತ ಎಲ್ಲಾ ದುರಸ್ತಿ ಕಾಮಗಾರಿಗಳನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆ ಮೂಲಕ ಕೆ.ಟಿ.ಪಿ.ಪಿ-1999 ಕಾಯ್ದೆ ಮತ್ತು ನಿಯಮಗಳ ಪ್ರಕಾರ ಪಾರದರ್ಶಕ ಜಿಲ್ಲಾ ಹಂತದ ಟೆಂಡರ್ ಮೂಲಕ ಜಿಲ್ಲಾ ಪಂಚಾಯತ್ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕು ಎಂದು ತಿಳಿಸಿದೆ.
ಬಳ್ಳಾರಿ | ಬಾದನಹಟ್ಟಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ / ಕುರುಗೋಡು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಾರ್ಯಾಲಯ ಕುರುಗೋಡು, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಬಾದನಹಟ್ಟಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಾದನಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ “ಆರೋಗ್ಯದ ನಡಿಗೆ–ಜನರ ಬಳಿಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ಬುಧವಾರ ಬಾದನಹಟ್ಟಿ ಉಪಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಮಂಜುನಾಥ ಜವಳಿ ಅವರು ಉದ್ಘಾಟಿಸಿ ಮಾತನಾಡಿ, ಆಸಾಂಕ್ರಾಮಿಕ ರೋಗಗಳು, ಅವುಗಳಿಂದ ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗಗಳ ಕುರಿತು ಜನರಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಹದಿಹರೆಯದವರು, ಗರ್ಭಿಣಿಯರು, ಚಿಕ್ಕ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ವೃದ್ಧರು ಸೇರಿದಂತೆ 75ಕ್ಕೂ ಹೆಚ್ಚು ಜನರಿಗೆ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ನ ವೈದ್ಯಾಧಿಕಾರಿ ಡಾ. ಸುನಿಲ್, ನೇತ್ರಾಧಿಕಾರಿ ಪಲ್ಲವಿ, ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಜಯಶ್ರೀ, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಊರಿನ ಹಿರಿಯ ಮುಖಂಡರು, ಎನ್ಸಿಡಿ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದು ಶಿಬಿರಕ್ಕೆ ಸಹಕಾರ ನೀಡಿದರು.
ಐದು ಆಸ್ಪತ್ರೆಗಳಿಗೆ ಇಸ್ಕಾನ್ನಿಂದ ಆಹಾರ ಪೂರೈಸಲು 2.83 ಕೋಟಿ ರೂ. ಅನುಮೋದನೆ ನೀಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು, ಜ.28: ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ ಸೇರಿ ಐದು ಸಾರ್ವಜನಿಕ ಆಸ್ಪತ್ರೆಗಳಲ್ಲಿನ ರೋಗಿಗಳಿಗೆ ಉಪಾಹಾರ, ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ಇಸ್ಕಾನ್ ಸಂಸ್ಥೆಯಿಂದ ಪಡೆಯಲು 2.83ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಬುಧವಾರ ಈ ಸಂಬಂಧ ರಾಜ್ಯ ಸರಕಾರವು ಆದೇಶ ಹೊರಡಿಸಿದ್ದು, ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ, ಧಾರವಾಡ ಜಿಲ್ಲಾಸ್ಪತ್ರೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಯಲಹಂಕ ಸಾರ್ವಜನಿಕ ಆಸ್ಪತ್ರೆ, ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪರಿಷ್ಕೃತ ಆಹಾರ ಪದ್ದತಿಯನ್ವಯ ಉಪಾಹಾರ ಹಾಗೂ ಸಿದ್ದಪಡಿಸಿದ ಉತ್ತಮ ದರ್ಜೆಯ ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದೆ. ನಾಲ್ಕು ತಿಂಗಳ ಅವಧಿಗೆ ಇಸ್ಕಾನ್ ಸಂಸ್ಥೆಯಿಂದ ಉಪಾಹಾರ, ಸಿದ್ಧಪಡಿಸಿದ ಉತ್ತಮ ಉತ್ತಮ ದರ್ಜೆಯ ಆಹಾರ ಹಾಗೂ ಇನ್ನಿತರೆ ಪದಾರ್ಥಗಳನ್ನು ಪೂರೈಕೆ ಮಾಡಲು ಒಟ್ಟು ರೂ. 2,83,47,000 ರೂ.ಗಳ ಅನುದಾನವನ್ನು ಭರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕುಳಾಯಿ: ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು, ಜ.28: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ್ತು ಜೋಕಟ್ಟೆಯ ಸಯ್ಯದ್ ಆಲಿ (40) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಳಾಯಿ ಗ್ರಾಮದ ಯಶೋಧ ಕ್ಲಿನಿಕ್ ಬಳಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧ ಪಟ್ಟ ಪೂಜಾ ಪರಿಕರಗಳು ಮತ್ತು ಟಿವಿ ಮತ್ತಿತರ ಸೊತ್ತುಗಳನ್ನು ಕಳ್ಳರು 2025 ಡಿಸೆಂಬರ್26 ರಂದು ರಾತ್ರಿ ಸಮಯ ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಕಳವು ಮಾಡಿದ್ದರು. ಈ ಸಂಬಂಧ ಅಮಿತಾ, ಎಂಬರು ಪೊಲೀಸರಿಗೆ ದೂರು ನೀಡಿದ್ದರು. ಸುಮಾರು 1 ಲಕ್ಷ ರೂ. ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ-1, ಮಂತ್ರದೇವತೆಯ ಬೆಳ್ಳಿಯ ಮೂರ್ತಿ-1, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ-1, ಬೆಳ್ಳಿಯ ಕಡ್ಸಲೆ (ಖಡ್ಗ)-1, ತಾಮ್ರದ ಘಂಟೆ-2, ತಾಮ್ರದ ಚೆಂಬು-4, ಹಾಗೂ ಎಲ್ಇಡಿ ಟಿ.ವಿ-1 ಕಳವಾಗಿರುವ ಬಗ್ಗೆ ಡಿ.27ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ವಾಜೀದ್ ಜೆ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದಾಗ ತಾನು ಕಳವುಗೈದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜ.27ರಂದು ಸಯ್ಯದ್ ಆಲಿ ಎಂಬಾತನನ್ನು ವಶಕ್ಕೆ ಪಡೆದು ಆತನ ಮನೆಯಿಂದ ಸುಮಾರು 1,95,000 ರೂ ಮೌಲ್ಯದ ಬೆಳ್ಳಿಯ ಮಂತ್ರದೇವತೆಯ ಮೂರ್ತಿ, ಕೊಡೆ, ಕಡ್ಸಲೆ, ಸುಮಾರು ರೂ 2,750 ಮೌಲ್ಯದ ಹಿತ್ತಾಳೆ ಪೂಜಾ ಸಾಮಾಗ್ರಿ, ಸುಮಾರು ರೂ. 300 ಮೌಲ್ಯದ ತಾಮ್ರದ ಪೂಜಾ ಸಾಮಾಗ್ರಿ, ಟಿ.ವಿ ಮತ್ತು ಸೆಟ್ಆಪ್ ಬಾಕ್ಸ್, ಆರೋಪಿಗಳ 2 ಮೊಬೈಲ್ ಹಾಗೂ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಸುಮಾರು ರೂ. 30,000 ಮೌಲ್ಯದ ಸ್ಕೂಟರ್-1 ಪೊಲೀಸರು ವಶಪಡಿಸಿಕೊಂಡಿದ್ದರು. ಕಳವು ಆರೋಪಿ ವಾಜೀದ್ ಮೇಲೆ ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಶೀಟ್ ಹಾಗೂ ಎಂಒಬಿ ತೆರೆಯಲಾಗಿದ್ದು ಈತನ ಮೇಲೆ ಮಂಗಳೂರು ನಗರ, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಾದ್ಯಂತ 1 ಕೊಲೆಯತ್ನ, 2 ದರೋಡೆ, 3 ದನ ಕಳ್ಳತನ, 6 ಮನೆಕಳ್ಳತನ, 3 ವಾಹನ ಕಳ್ಳತನ, 1 ಇತರ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಹೀಗಾಗಿ ನ್ಯಾಯಾಲಯವು ಆರೋಪಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಆರೋಪಿಗಳನ್ನು ಜ.28 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ,ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಚೀನಾ ಪ್ರವಾಸದಿಂದ ಬ್ರಿಟನ್ ಗೆ ಪ್ರಯೋಜನ: ಸ್ಟಾರ್ಮರ್
ಬೀಜಿಂಗ್, ಜ.28: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಮೂರು ದಿನಗಳ ಭೇಟಿಗಾಗಿ ಬುಧವಾರ ಚೀನಾಕ್ಕೆ ಆಗಮಿಸಿದ್ದು, ಈ ಪ್ರವಾಸವು ಬ್ರಿಟನ್ಗೆ ಪ್ರಯೋಜನಗಳನ್ನು ತರುತ್ತದೆ ಎಂದು ಹೇಳಿದ್ದಾರೆ. ಸುಮಾರು ಎಂಟು ವರ್ಷಗಳ ಬಳಿಕ ಬ್ರಿಟನ್ ಪ್ರಧಾನಿಯೊಬ್ಬರು ಚೀನಾಕ್ಕೆ ಭೇಟಿ ನೀಡಿದ್ದು, ಎರಡು ರಾಷ್ಟ್ರಗಳ ನಡುವಿನ ವ್ಯಾಪಾರ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಸ್ಟಾರ್ಮರ್ ಬಯಸಿದ್ದಾರೆ. ಈ ನಡುವೆ, ಮಂಗಳವಾರ ಬೀಜಿಂಗ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿನ್ಪಿಂಗ್, ‘ವಿಶ್ವಸಂಸ್ಥೆ ಕೇಂದ್ರಸ್ಥಾನದಲ್ಲಿರುವ ಜಾಗತಿಕ ವ್ಯವಸ್ಥೆಯನ್ನು ದೃಢವಾಗಿ ಎತ್ತಿಹಿಡಿಯಲು ಇತರ ಸಮಾನ ಮನಸ್ಕ ರಾಷ್ಟ್ರಗಳೊಂದಿಗೆ ಕಾರ್ಯನಿರ್ವಹಿಸಲು ಸಿದ್ಧವಾಗಿದೆ’ ಎಂದು ಹೇಳಿರುವುದಾಗಿ ಸರ್ಕಾರಿ ಸ್ವಾಮ್ಯದ ಸಿಸಿಟಿವಿ ವರದಿ ಮಾಡಿದೆ. ಕಳೆದ ವಾರ ಟ್ರಂಪ್ ಘೋಷಿಸಿರುವ ‘ಶಾಂತಿ ಮಂಡಳಿ’ ಮೂಲಕ ಅಮೆರಿಕಾ ಅಧ್ಯಕ್ಷರು ವಿಶ್ವಸಂಸ್ಥೆಗೆ ಪರ್ಯಾಯ ಜಾಗತಿಕ ವ್ಯವಸ್ಥೆಯನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಕಳವಳದ ನಡುವೆ ಜಿನ್ಪಿಂಗ್ ಈ ಹೇಳಿಕೆ ನೀಡಿದ್ದಾರೆ. ಶಾಂತಿ ಮಂಡಳಿಗೆ ಸೇರುವಂತೆ ಟ್ರಂಪ್ ನೀಡಿರುವ ಆಹ್ವಾನಕ್ಕೆ ಚೀನಾ ಇದುವರೆಗೆ ಪ್ರತಿಕ್ರಿಯಿಸಿಲ್ಲ.
ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ
ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ನಗರವು ಸುಂದರ ಹಾಗೂ ಸ್ವಚ್ಛವಾಗಿ ಕಾಣಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ಹೇಳಿದರು. ನಗರದ ಜೈಲ್ಖಾನ್ ಸಮೀಪದ ಮಹಿಳಾ ಸಮಾಜ ಮೈದಾನದಲ್ಲಿ ಜ.28ರಂದು ಆಯೋಜಿಸಿದ್ದ ಪೌರ ಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು. ಶುಚಿತ್ವ ಇದ್ದಲ್ಲಿ ಶಿಸ್ತು, ಶಿಸ್ತು ಇದ್ದಲ್ಲಿ ಶಾಂತಿ ಇರುತ್ತದೆ. ಈ ದೃಷ್ಟಿಕೋನದಿಂದ ಉತ್ಸವದ ಸಂದರ್ಭದಲ್ಲಿ ನಮ್ಮ ಮನೆ, ಮನೆಯ ಸುತ್ತಮುತ್ತಲಿನ ಪರಿಸರ, ರಸ್ತೆ, ಗಟಾರು, ಸಾರ್ವಜನಿಕ ಸ್ಥಳಗಳು ಸೇರಿದಂತೆ ಎಲ್ಲೆಡೆ ಶುಚಿತ್ವಕ್ಕೆ ಒತ್ತು ನೀಡಬೇಕು. ಜಿಲ್ಲಾ ಉತ್ಸವಕ್ಕೆ ಆಗಮಿಸುವ ಅತಿಥಿಗಳಿಗೆ ರಾಯಚೂರು ನಗರವು ಸ್ವಚ್ಛ ಹಾಗೂ ಆಕರ್ಷಕವಾಗಿ ಕಾಣಬೇಕು. ಜನರಿಗೆ ಸ್ವಚ್ಛತೆಯ ಸಂದೇಶ ರವಾನೆಯಾಗಬೇಕು. ರಾಯಚೂರನ್ನು ಸ್ವಚ್ಛ ನಗರವೆಂದು ಜನರು ಮೆಚ್ಚುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೌರ ಕಾರ್ಮಿಕರಿಗೆ ತಿಳಿಸಿದರು. ಜಿಲ್ಲಾ ಉತ್ಸವಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಇರುವುದರಿಂದ ಈಗಾಗಲೇ ನಗರದಲ್ಲಿ ಕಸ ಸಂಗ್ರಹ ಸ್ಥಳಗಳಲ್ಲಿ ನಿತ್ಯ ಕಸ ವಿಲೇವಾರಿ, ಮನೆಮನೆ ಕಸ ಸಂಗ್ರಹ, ಕಾರ್ಖಾನೆಗಳು, ಆಸ್ಪತ್ರೆಗಳಲ್ಲಿ ಕಸ ವಿಲೇವಾರಿ ಕಾರ್ಯ ನಡೆಯುತ್ತಿದೆ. ಈ ಕಾರ್ಯ ನಿರಂತರವಾಗಿ ಮುಂದುವರಿಯಬೇಕು ಎಂದು ಸೂಚಿಸಿದರು. ಉತ್ಸವಕ್ಕೂ ಮುಂಚಿತವಾಗಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ಕಲಾವಿದರು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಲಿರುವುದರಿಂದ ರಾಯಚೂರು ನಗರವನ್ನು ಸ್ವಚ್ಛ ನಗರವೆಂದು ಪರಿಚಯಿಸುವ ಅವಕಾಶ ಇದು ಎಂದರು. ಪ್ರಮುಖವಾಗಿ ಮುಖ್ಯ ರಸ್ತೆಗಳು ಹಾಗೂ ರಾಜ ಕಾಲುವೆಗಳಲ್ಲಿ ದುರ್ವಾಸನೆ ಬರದಂತೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಎಲ್ಲಿಯೂ ಕಸ ಕಾಣದಂತೆ ನೋಡಿಕೊಳ್ಳಬೇಕು. ಉತ್ಸವ ನಡೆಯಲಿರುವ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರ, ಜೈಲ್ಖಾನ್ ಬಳಿಯ ಮಹಿಳಾ ಸಮಾಜ ಆವರಣ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ವಾಲ್ಕಟ್ ಮೈದಾನ, ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಈಗಿನಿಂದಲೇ ಪ್ರತಿದಿನ ಶುಚಿತ್ವ ಕಾರ್ಯ ನಡೆಸಬೇಕು ಎಂದು ಆಯುಕ್ತರು ಸೂಚಿಸಿದರು. ಜೊತೆಗೆ ವಿವಿಧೆಡೆ ಫಾಗಿಂಗ್ ಕಾರ್ಯ ಕೈಗೊಳ್ಳಬೇಕು ಮತ್ತು ಸಾರ್ವಜನಿಕರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಬೇಕು ಎಂದರು. ಮೈಸೂರು, ಮಂಗಳೂರು ಸೇರಿದಂತೆ ಕೆಲವು ನಗರಗಳು ಸ್ವಚ್ಛತೆಗೆ ಹೆಸರುವಾಸಿಯಾಗಿವೆ. ಅವುಗಳ ಸಾಲಿನಲ್ಲಿ ರಾಯಚೂರು ಕೂಡ ಸೇರುವಂತೆ ಮಾಡಲು ಜಿಲ್ಲಾ ಉತ್ಸವ ಒಂದು ಉತ್ತಮ ಅವಕಾಶವಾಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಸ್ವಚ್ಛತೆಯನ್ನು ತಮ್ಮ ಮನೆಯ ಕೆಲಸವೆಂದು ಭಾವಿಸಿ ಜವಾಬ್ದಾರಿ ಹೊತ್ತರೆ ಮಾತ್ರ ರಾಯಚೂರು ಸ್ವಚ್ಛ ನಗರವಾಗಿ ಗುರುತಿಸಿಕೊಳ್ಳುತ್ತದೆ ಎಂದು ಹೇಳಿದರು. ಪೌರ ಕಾರ್ಮಿಕರ ಕಾರ್ಯದಲ್ಲಿ ಸಮರ್ಪಕ ಮೇಲ್ವಿಚಾರಣೆ ವಹಿಸುವಂತೆ ಪಾಲಿಕೆಯ ಪರಿಸರ ಅಭಿಯಂತರರು ಹಾಗೂ ಪರಿಸರ ನಿರೀಕ್ಷಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪರಿಸರ ವಿಭಾಗದ ಅಭಿಯಂತರ ಜೈಪಾಲ್ ರೆಡ್ಡಿ, ಉಪ ಆಯುಕ್ತ ಮಲ್ಲಿಕಾರ್ಜುನ, ಪೌರ ಕಾರ್ಮಿಕರು ಹಾಗೂ ಮಹಾನಗರ ಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಅಮೆರಿಕಾದೊಂದಿಗೆ ಮಾತುಕತೆಗೆ ಮನವಿ ಮಾಡಿಲ್ಲ: Iran
ಟೆಹ್ರಾನ್, ಜ.28: ಇತ್ತೀಚಿನ ದಿನಗಳಲ್ಲಿ ಅಮೆರಿಕಾದ ವಿಶೇಷ ಪ್ರತಿನಿಧಿ ಸ್ಟೀವ್ ವಿಟ್ಕಾಫ್ ಅವರೊಂದಿಗೆ ಸಂಪರ್ಕದಲ್ಲಿಲ್ಲ ಮತ್ತು ಮಾತುಕತೆಗೆ ಮನವಿ ಮಾಡಿಲ್ಲ ಎಂದು ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ಬುಧವಾರ ವರದಿ ಮಾಡಿದೆ. ಹಲವು ಮಧ್ಯವರ್ತಿಗಳು ಸಮಾಲೋಚನೆಗಳನ್ನು ನಡೆಸುತ್ತಿದ್ದಾರೆ ಮತ್ತು ಇರಾನಿನೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ನನ್ನ ಮತ್ತು ವಿಟ್ಕಾಫ್ ನಡುವೆ ಇತ್ತೀಚಿನ ದಿನಗಳಲ್ಲಿ ಯಾವುದೇ ಸಂಪರ್ಕ ಇರಲಿಲ್ಲ. ನಮ್ಮ ನಿಲುವು ಸ್ಪಷ್ಟವಾಗಿದೆ. ಬೆದರಿಕೆ ಮತ್ತು ಮಾತುಕತೆ ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ. ಬೆದರಿಕೆ ಅಥವಾ ಅತಿಯಾದ ಒತ್ತಡಗಳು, ಬೇಡಿಕೆಗಳು ಇದ್ದಾಗ ಮಾತುಕತೆಗಳು ನಡೆಯುವುದಿಲ್ಲ ಎಂದು ಅರಾಘ್ಚಿ ಹೇಳಿದ್ದಾರೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕಾನೂನಿನ ಚೌಕಟ್ಟಿನಡಿ ಯುದ್ಧವನ್ನು ತಡೆಯುವ ಯಾವುದೇ ಪ್ರಕ್ರಿಯೆಯನ್ನು ಇರಾನ್ ಸ್ವಾಗತಿಸುತ್ತದೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಝೆಷ್ಕಿಯಾನ್ ಹೇಳಿದ್ದಾರೆ.
IND Vs NZ | ನಾಲ್ಕನೇ T20: ಭಾರತಕ್ಕೆ ಸೋಲುಣಿಸಿದ ಕಿವೀಸ್
ಸೀಫರ್ಟ್ ಅರ್ಧಶತಕ, ಸ್ಯಾಂಟ್ನರ್ಗೆ ಮೂರು ವಿಕೆಟ್
IND Vs NZ- ವಿಶಾಖಪಟ್ಟಣದಲ್ಲಿ ಟಿಂ ಸೈಫರ್ಟ್ ಭರ್ಜರಿ ಆಟ; ಟೀಂ ಇಂಡಿಯಾ ಲೆಕ್ಕಾಚಾರವೆಲ್ಲಾ ಉಲ್ಟಾಪಲ್ಟಾ!
ಭಾರತದ ವಿರುದ್ಧ ಸತತ 3 ಪಂದ್ಯಗಳಲ್ಲಿ ಸೋಲನುಭವಿಸಿ ಟಿ20 ಸರಣಿಯನ್ನು ಕಳೆದುಕೊಂಡಿರುವ ನ್ಯೂಜಿಲೆಂಡ್ ಇದೀಗ ಮೊದಲ ಜಯದ ಸವಿ ಕಂಡಿದೆ. ಟಿಂ ಸೈಫರ್ಟ್ ಅವರ ಬಿರುಸಿನ ಅರ್ಧಶತಕ ಮತ್ತು ನಾಯಕ ಮಿಚೆಲ್ ಸ್ಯಾಂಟ್ನರ್ ಅವರ ಬಿಗು ದಾಳಿಯ ನೆರವಿನಿಂದ ಭಾರತದ ವಿರುದ್ಧ 50 ರನ್ ಗಳ ಜಯ ಸಾಧಿಸಿದೆ. ಹೀಗಾಗಿ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೋಲಿನ ಅಂತರವನ್ನು 3-1ಕ್ಕೆ ಇಳಿಸಿಕೊಂಡಿದೆ. 5ನೇ ಮತ್ತು ಅಂತಿಮ ಪಂದ್ಯ ತಿರುವನಂತಪುರದಲ್ಲಿ ಜನವರಿ 31 ಶನಿವಾರದಂದು ನಡೆಯಲಿದೆ. ವಿಶಾಖಪಟ್ಟಣದಲ್ಲಿ ಬುಧವಾರ ನಡೆದ ದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿತು. ಇದಕ್ಕುತ್ತರವಾಗಿ ಭಾರತ ತಂಡ 18.4 ಓವರ್ ಗಳಲ್ಲಿ ಕೇವಲ 165 ರನ್ ಗಳಿಸುವಷ್ಟರೊಳಗೆ ಆಲೌಟ್ ಆಯಿತು.
ರಾಯಚೂರು ಜಿಲ್ಲಾ ಉತ್ಸವದ ಯಶಸ್ಸಿಗೆ ಮನೆಮನೆಗೆ ಆಹ್ವಾನ ನೀಡಬೇಕು : ಸಿಇಓ ಈಶ್ವರ್ ಕಾಂದೂ ಸೂಚನೆ
ರಾಯಚೂರು : ಫೆ.5ರಿಂದ ಆರಂಭವಾಗಲಿರುವ ರಾಯಚೂರು ಜಿಲ್ಲಾ ಉತ್ಸವವನ್ನು ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ಗಳು ಮನೆಮನೆಗೆ ಆಹ್ವಾನ ನೀಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಸೂಚಿಸಿದರು. ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಪಿಡಿಓಗಳೊಂದಿಗೆ ಸಭೆ ನಡೆಸಿ ಉತ್ಸವದ ಪೂರ್ವಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಜಿಲ್ಲಾ ಉತ್ಸವದ ಡಂಗುರ ಸಾರಬೇಕು. ಜಿಲ್ಲಾಡಳಿತದಿಂದ ಸಿದ್ಧಪಡಿಸಲಾದ ಆಹ್ವಾನ ಪತ್ರಿಕೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಗುಂಪುಗಳ ಮೂಲಕ ಮನೆಮನೆಗೆ ತಲುಪಿಸಬೇಕು. ಗ್ರಾಮ ಮಟ್ಟದಲ್ಲಿಯೂ ಉತ್ಸವವನ್ನು ಮನೆಯ ಉತ್ಸವದಂತೆ ಸಂಭ್ರಮಿಸುವಂತೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಸೂಚಿಸಿದರು. ಪಂಚಾಯತ್ ಮಟ್ಟದಲ್ಲಿ ಜಾಥಾ ಹಾಗೂ ಪ್ರಚಾರ ಸಭೆಗಳನ್ನು ಆಯೋಜಿಸಬೇಕು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ವಿವರಗಳನ್ನು ಪಂಚಾಯತ್ ಸಿಬ್ಬಂದಿಗಳು ಸಂಗ್ರಹಿಸಿ, ಅವರನ್ನು ಉತ್ಸವಕ್ಕೆ ಕರೆದುಕೊಂಡು ಬರುವ ವ್ಯವಸ್ಥೆ ಮಾಡಬೇಕು. ಈ ಕಾರ್ಯದಲ್ಲಿ ತಾಲೂಕು ಪಂಚಾಯತ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದರು. ಉತ್ಸವದ ಅಂಗವಾಗಿ ಮಕ್ಕಳ ಉತ್ಸವ, ಆಹಾರ ಮೇಳಗಳು ನಡೆಯುತ್ತಿರುವುದರಿಂದ ಸ್ವಸಹಾಯ ಗುಂಪುಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗಮನಹರಿಸಬೇಕು. ನೆರೆ ಆಂಧ್ರಪ್ರದೇಶದ ಎರಡು ಜಿಲ್ಲೆಗಳು ಸೇರಿದಂತೆ ರಾಜ್ಯದ 10 ಜಿಲ್ಲೆಗಳ ಆಹಾರ ಮಳಿಗೆಗಳು ಉತ್ಸವದಲ್ಲಿ ಭಾಗವಹಿಸಲಿದ್ದು, ಜನರಿಗೆ ಹೊಸ ಅನುಭವ ಮತ್ತು ಪರಿಚಯ ದೊರಕುವಂತಾಗಬೇಕು ಎಂದು ಹೇಳಿದರು. ಸರ್ಕಾರದ ವಿವಿಧ ಯೋಜನೆಗಳ ಪ್ರಚಾರದೊಂದಿಗೆ ಉತ್ಸವವನ್ನು ಯಶಸ್ವಿಗೊಳಿಸುವ ಹೊಣೆಗಾರಿಕೆಯನ್ನು ಎಲ್ಲರೂ ಹೊತ್ತುಕೊಳ್ಳಬೇಕು. ಉತ್ಸವದಲ್ಲಿ ಭಾಗವಹಿಸುವ ಎಲ್ಲಾ ಫಲಾನುಭವಿಗಳ ನೊಂದಣಿ ಕಡ್ಡಾಯವಾಗಿದೆ ಎಂದು ಸಿಇಓ ಸ್ಪಷ್ಟಪಡಿಸಿದರು. ಸಭೆಯಲ್ಲಿ ಯೋಜನಾ ನಿರ್ದೇಶಕ ಡಾ. ಟಿ. ರೋಣಿ, ಲೆಕ್ಕಾಧಿಕಾರಿ ವಿಜಯಶಂಕರ್, ಹಿರಿಯ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಪಿಡಿಓಗಳು ಉಪಸ್ಥಿತರಿದ್ದರು.
ರನ್ ವೇ ಕಾಣಿಸುತ್ತಿಲ್ಲ ಎಂದು ಸಂದೇಶ ರವಾನಿಸಿದ್ದ ಪೈಲಟ್!
►ಲ್ಯಾಂಡಿಂಗ್ ಅನುಮತಿಯ ರೀಡ್ಬ್ಯಾಕ್ ಇರಲಿಲ್ಲ►ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನದ ಅಂತಿಮ ಕ್ಷಣಗಳು
ಮಹಾರಾಷ್ಟ್ರ ತನ್ನ ಜನನಾಯಕನನ್ನು ಕಳೆದುಕೊಂಡಿದೆ; ಅಜಿತ್ ಪವಾರ್ ನಿಧನಕ್ಕೆ ಕಂಬನಿ ಮಿಡಿದ ನರೇಂದ್ರ ಮೋದಿ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಅಜಿತ್ ಪವಾರ್ ಅವರ ಅಕಾಲಿಕ ನಿಧನ ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಜಿತ್ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಜಿತ್ ಪವಾರ್ ಅವರನ್ನು ಜನನಾಯಕ ಎಂದು ಕರೆದಿದ್ದಾರೆ. ಅಜಿತ್ ಪವಾರ್ ಅವರ ಎನ್ಸಿಪಿ ಪಕ್ಷ ಬಿಜೆಪಿ ನೇತೃತ್ವದ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿತ್ತು.
ವಿಧಾನಸಭಾ ಅಧಿವೇಶನ| ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚಿಸುವಂತಿಲ್ಲ: ಶಾಸಕರಿಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ
ಬೆಂಗಳೂರು, ಜ.28: ‘ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆಯುವ ಚರ್ಚೆ ವೇಳೆ ಸದನದ ಯಾವೊಬ್ಬ ಸದಸ್ಯರು ರಾಜ್ಯಪಾಲರ ಬಗ್ಗೆಯಾಗಲಿ, ಅವರ ನಡವಳಿಕೆ ಬಗ್ಗೆಯಾಗಲಿ ಚರ್ಚಿಸುವಂತಿಲ್ಲ’ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ರೂಲಿಂಗ್ ನೀಡಿದರು. ರಾಜ್ಯಪಾಲರಿಗೆ ಅಗೌರವ ತೋರಿರುವ ಸರಕಾರ ಕ್ಷಮೆ ಕೋರಬೇಕು ಇಲ್ಲವೇ ವಿಷಾದ ವ್ಯಕ್ತಪಡಿಸಬೇಕು ಎಂದು ಬುಧವಾರ ವಿಧಾನಸಭೆಯಲ್ಲಿ ವಿಪಕ್ಷ ಸದಸ್ಯರು ಪಟ್ಟು ಹಿಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ಷಮೆ ಕೋರಲು ಸದನ ಏನು ತಪ್ಪು ಮಾಡಿದೆ? ರಾಜ್ಯಪಾಲರು ರಾಷ್ಟ್ರಗೀತೆಗೆ ಅಗೌರವ ತೋರಿ ಸದನದಿಂದ ಹೊರ ನಡೆದದ್ದು ಯಾಕೆ ಎಂದು ಪ್ರಶ್ನಿಸಿದರು. ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರ ಹೆಚ್ಚಾದ ಹಿನ್ನೆಲೆಯಲ್ಲಿ ಸದನವನ್ನು 10 ನಿಮಿಷ ಮುಂದೂಡಿದ ಸ್ಪೀಕರ್, ಸಂಧಾನ ಸಭೆಯನ್ನು ನಡೆಸಿ, ಒಮ್ಮತದ ತೀರ್ಮಾನವನ್ನು ಸದನದಲ್ಲಿ ಪ್ರಕಟಿಸಿದರು. ರಾಜ್ಯಪಾಲರು ಜ.22ರಂದು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ ಸದನದಲ್ಲಿ ನಡೆದಿರುವ ಘಟನೆಗಳು ಮತ್ತು ಚರ್ಚೆಯು ಸಾರ್ವಜನಿಕರಲ್ಲಿ ತಪ್ಪು ಸಂದೇಶ ಮೂಡಲು ಕಾರಣವಾಗಿದೆ ಎಂದು ಸ್ಪೀಕರ್ ತಿಳಿಸಿದರು. ಈ ಸದನದ ಸದಸ್ಯರಾಗಿರುವ ನಮ್ಮ ನಡತೆ, ವ್ಯಕ್ತಪಡಿಸುವ ಅಭಿಪ್ರಾಯಗಳು ಸದಾಭಿರುಚಿ ಹಾಗೂ ಸಂವಿಧಾನದತ್ತವಾಗಿರಬೇಕು. ಅಲ್ಲದೇ, ಈ ಸದನದ ಘನತೆ ಹಾಗೂ ಗೌರವ ಎತ್ತಿ ಹಿಡಿಯುವಂತಾಗಿರಬೇಕು. ಈ ನಿಟ್ಟಿನಲ್ಲಿ ಸದನ ಸದಸ್ಯರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಖಾದರ್ ಹೇಳಿದರು. ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಈ ವಿಷಯವನ್ನು ಮುಕ್ತಾಯಗೊಳಿಸಿ, ವಂದನಾ ನಿರ್ಣಯದ ಮೇಲಿನ ಚರ್ಚೆ ಮುಂದುವರೆಸುವುದು. ಚರ್ಚೆಯ ಸಂದರ್ಭದಲ್ಲಿ ರಾಜ್ಯಪಾಲರ ಬಗ್ಗೆಯಾಗಲಿ, ಅವರ ನಡವಳಿಕೆ ಬಗ್ಗೆಯಾಗಲಿ ಮಾತನಾಡಬಾರದು ಎಂದು ಸ್ಪೀಕರ್ ರೂಲಿಂಗ್ ನೀಡಿದರು.
ಕದ್ರಿ ಜೋಗಿ ಮಠದ ಕಚೇರಿಯಿಂದ ನಗ ನಗದು ಕಳವು: ಪ್ರಕರಣ ದಾಖಲು
ಮಂಗಳೂರು, ಜ.28: ಕದ್ರಿ ಜೋಗಿ ಮಠ ಆವರಣದಲ್ಲಿರುವ ಜೋಗಿ ಮಠ ಜೀರ್ಣೋದ್ದಾರ ಮತ್ತು ಕಾರ್ಯ ನಿರ್ವಹಣಾ ಸಮಿತಿ ಕಚೇರಿಯ ಬಾಗಿಲ ಬೀಗ ಮುರಿದು ಕವಾಟಿನಲ್ಲಿದ್ದ ಧೂಮಾವತಿ ದೈವ, ಗಣಪತಿ ದೇವರ ಚಿನ್ನಾಭರಣ ಮತ್ತು ನಗದು ಕಳವಾದ ಘಟನೆ ವರದಿಯಾಗಿದೆ. ಕವಾಟಿನಲ್ಲಿದ್ದ ಧೂಮಾವತಿ ದೈವದ ಆಭರಣಗಳಿದ್ದ ಬ್ಯಾಗ್ ನಲ್ಲಿದ್ದ 8 ಬೆಳ್ಳಿಯ ಗುಬ್ಬೆಗಳ ಪೈಕಿ 07 ಗುಬ್ಬೆಗಳನ್ನು, ಎರಡು ಬೆಳ್ಳಿಯ ಅರ್ಧ ಚಂದ್ರಾಕೃತಿಯ ಆಭರಣಗಳ ಪೈಕಿ ಒಂದು ಬೆಳ್ಳಿಯ ಅರ್ಧ ಚಂದ್ರಾಕೃತಿಯ ಆಭರಣ, ಎರಡು ಬೆಳ್ಳಿಯ ದೊಡ್ಡ ಹೂವುಗಳ ಪೈಕಿ ಒಂದು ದೊಡ್ಡ ಬೆಳ್ಳಿಯ ಹೂವು, ಎರಡು ಬೆಳ್ಳಿಯ ಸಣ್ಣ ಹೂವುಗಳ ಪೈಕಿ ಒಂದು ಬೆಳ್ಳಿಯ ಸಣ್ಣ ಹೂವು, ಒಂದು ಗಂಧದ ಗಿಂಡಿ ಬಟ್ಟಲು ಕಳವಾಗಿದೆ. ಗಣಪತಿಯ ಎರಡು ಬೆಳ್ಳಿಯ ಸೊಂಡಿಲುಗಳ ಕಟ್ಟಗಳ ಪೈಕಿ ಒಂದು ಸೊಂಡಿಲು ಕಟ್ಟ, ನಾಲ್ಕು ಬೆಳ್ಳಿಯ ಕೈಕಡಗ ಗಳ ಪೈಕಿ ಮೂರು ಕೈಕಡಗಗಳು, ಬೆಳ್ಳಿಯ ಕಿವಿಯ ಒಂದು ಕುಂಡಲಗ, ಬೆಳ್ಳಿಯ ಎರಡು ಕಾಲ್ಗಡಗಳನ್ನು ಕಳ್ಳರು ಕಳವು ಮಾಡಿರುವುದು ಜ.27ರಂದು ಬೆಳಕಿಗೆ ಬಂದಿದೆ. ಸುಮಾರು ರೂ. 90,000 ರೂ. ಮೌಲ್ಯದ 511 ಗ್ರಾಂ ತೂಕದ ಬೆಳ್ಳಿಯ ಆಭರಣಗಳನ್ನು ಹಾಗೂ ನಗದು ರೂ. 40,000ನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತಿನ ಮೌಲ್ಯ ರೂ.1,30,000 ಆಗಿರುತ್ತದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕದ್ರಿ ಜೋಗಿ ಮಠದ ಜೀರ್ಣೋದ್ದಾರ ಮತ್ತು ಕಾರ್ಯನಿರ್ವಹಣಾ ಸಮಿತಿ ಅಧ್ಯಕ್ಷ ಹರಿನಾಥ ಎಂ ಅವರು ನೀಡಿರುವ ದೂರಿನಂತೆ ಮಂಗಳೂರು ಪೂರ್ವ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜಯನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ: BJP ಶಾಸಕ ಸಿಕೆ ರಾಮಮೂರ್ತಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆ!
ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯಾ ರೆಡ್ಡಿ ಅವರ ಗೆಲುವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಮಮೂರ್ತಿ ಅವರು ವಿಚಾರಣೆಗೆ ತಡೆ ಕೋರಿದ್ದರು. ತ್ರಿಸದಸ್ಯ ಪೀಠವು ಈ ಅರ್ಜಿಯನ್ನು ತಿರಸ್ಕರಿಸಿದೆ.
ವೆನ್ಲಾಕ್ ಆಸ್ಪತ್ರೆಗೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಶೀಘ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು, ಜ.28: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ವಾಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ , ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ. ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ ಒಪಿಡಿ ಕಟ್ಟಡ ನಿರ್ಮಾಣಕ್ಕೆ ಸದ್ಯದಲ್ಲಿಯೇ ಟೆಂಡರ್ ಆಹ್ವಾನಿಸಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು, ಸಿಸಿ ಟಿವಿ ಅಳವಡಿಸಲಾಗು ವುದು ಎಂದು ಮಾಹಿತಿ ನೀಡಿದರು. ವೆನ್ಲಾಕ್ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲು ಕಾರಣವೇನು?: ಪ್ರಾಸಿಕ್ಯೂಷನ್ನಿಂದ ಮಾಹಿತಿ ಕೇಳಿದ ಹೈಕೋರ್ಟ್
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆಯನ್ನು ಭಾರತಿನಗರ ಠಾಣೆ ಪೊಲೀಸರಿಂದ ಸಿಐಡಿಗೆ ವಹಿಸುವಲ್ಲಿ ಗಂಭೀರ ಕಾರಣ ಏನು? ಎನ್ನುವುದನ್ನು ತಿಳಿಸುವಂತೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಿಗೆ ಹೈಕೋರ್ಟ್ ಸೂಚಿಸಿದೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿತು. ನ್ಯಾಯಾಲಯದ ಸೂಚನೆಗೆ ಪ್ರತಿಕ್ರಿಯಿಸಿದ ವಿಶೇಷ ಸರಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಸಿಐಡಿ ತನಿಖೆಗೆ ವಹಿಸಿ ಸರಕಾರ ಹೊರಡಿಸಿದ ಆದೇಶ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಕಡತವನ್ನು ಗುರುವಾರ ಒದಗಿಸಲಾಗುವುದು ಎಂದು ತಿಳಿಸಿದರು. ಅದಕ್ಕೆ ನ್ಯಾಯಪೀಠ, ಕಡತ ಸಲ್ಲಿಸಿದ ನಂತರ ಅದನ್ನು ದಾಖಲಿಸಿಕೊಂಡು ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಲಾಗುವುದು ಎಂದು ತಿಳಿಸಿತು. ಇದಕ್ಕೂ ಮುನ್ನ ವಿಚಾರಣೆ ವೇಳೆ ಬೈರತಿ ಬಸವರಾಜ್ ಪರ ವಕೀಲರು ವಾದ ಮಂಡಿಸಿ, ಪೈ ಲೇಔಟ್ ಭೂಮಿ ಸಂಬಂಧ ಬಿಕ್ಲು ಶಿವು ಹಾಗೂ ಜಗದೀಶ್ ನಡುವೆ ವಿವಾದವಿತ್ತು. ಈ ವೇಳೆ ಜಗದೀಶ್, ಮೃತ ಬಿಕ್ಲು ಶಿವುಗೆ ಜೀವ ಬೆದರಿಕೆ ಹಾಕಿದ್ದರು. ಆ ಕುರಿತು ಶಿವು ದೂರು ದಾಖಲಿಸಿದ್ದರು. ಆರೋಪಿಗಳ ಬಂಧನವಾಗದಂತೆ ಪೊಲೀಸರೊಂದಿಗೆ ಮಾತನಾಡಿ ಅರ್ಜಿದಾರರು ರಕ್ಷಣೆ ಒದಗಿಸಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳುತ್ತಿದೆ. 2025ರ ಫೆಬ್ರವರಿ 10ರಿಂದ 13ರವರೆಗೆ ಪೈ ಲೇಔಟ್ ವ್ಯಾಜ್ಯ ನಡೆದಿದೆ. ಆ ನಡುವೆ ಶಿವು ಮತ್ತು ಜಗದೀಶ್ ಸಾಕಷ್ಟು ಭಾರಿ ಪೋನ್ನಲ್ಲಿ ಸಂಭಾಷಣೆ ನಡೆಸಿದ್ಧಾರೆ. ಪೈ ಲೇಔಟ್ ಹಾಗೂ ಕಿತ್ತಗನೂರು ಭೂ ವ್ಯಾಜ್ಯಕ್ಕೂ ಅರ್ಜಿದಾರರಿಗೆ ಯಾವುದೇ ಸಂಬಂಧವಿಲ್ಲ ಎಂದರು. ಪ್ರಯಾಗ್ ರಾಜ್ ಪ್ರಯಾಣಕ್ಕೆ 2025ರ ಜಮವರಿ 18ರಂದು ಅರ್ಜಿದಾರರು ಟಿಕೆಟ್ ಕಾಯ್ದಿರಿಸಿದ್ದು, ಫೆಬ್ರವರಿ 11ರಂದು ಪ್ರಯಾಣಿಸಿದ್ದಾರೆ. ಜನವರಿ 18ರಂದು ಟಿಕೆಟ್ ಕಾಯ್ದಿಸಿರಬೇಕಾದರೆ ಕೊಲೆಗೆ ಸಂಬಂಧವಿದೆ ಎಂದು ಹೇಗೆ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂಬುದು ಗೊತ್ತಿಲ್ಲ. ಪ್ರಯಾಗ್ ರಾಜ್ಗೆ ಅರ್ಜಿದಾರರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪ್ರಯಾಣಿಸಿದ್ದಾರೆ. ಅವರ ಪಿಎನ್ಆರ್ ಸಂಖ್ಯೆಗೂ ಜಗದೀಶ್ ಪಿಎನ್ಆರ್ ಸಂಖ್ಯೆಗೂ ವ್ಯತ್ಯಾಸವಿದೆ. ಆದ್ದರಿಂದ, ಒಂದೇ ಪಿಎನ್ಆರ್ ಸಂಖ್ಯೆಯಲ್ಲಿ ಜಗದೀಶ್ ಮತ್ತು ಅರ್ಜಿದಾರರು ಪ್ರಯಾಣಿಸಿದ್ದಾರೆ ಎಂಬ ವಾದ ಸುಳ್ಳು ಎಂದು ಪ್ರತಿಪಾದಿಸಿದರು. ಬಿಕ್ಲು ಶಿವು ಮೇಲೆ ಅಪರಿಚಿತ ದಾಳಿಕೋರರು ದಾಳಿ ನಡೆಸಿದ್ದಾರೆ ಎಂದು ಮೃತನ ತಾಯಿ ಮೊದಲಿಗೆ ಹೇಳುತ್ತಾರೆ. ನಂತರ ಯಾರದೋ ಮಾತಿಗೂ ಕಿವಿಗೊಟ್ಟು ಬಸವರಾಜ್ ಹೆಸರು ಹೇಳಿದ್ದಾರೆ. ನಂತರ ತಮ್ಮ ಹೇಳಿಕೆ ಹಿಂಪಡೆದುಕೊಂಡಿದ್ದಾರೆ. ಅವರ ಹೇಳಿಕೆಯೇ ಅನುಮಾನಸ್ಪದವಾಗಿದೆ. ಅಂತಹವರನ್ನು ಸಿಐಡಿ ಪ್ರಧಾನ ಸಾಕ್ಷ್ಯ ಎಂದು ಹೇಳುತ್ತಿದೆ. ಇನ್ನು ಅರ್ಜಿದಾರರು ತನಿಖೆಗೆ ಸಹಕರಿಸಿಲ್ಲ ಎಂದು ಆರೋಪಿಸಲಾಗುತ್ತಿದೆ. ಭಾರತಿನಗರ ಠಾಣೆ ಪೊಲೀಸರ ತನಿಖೆ ನಡೆಸುವಾಗ ಎಸಿಪಿಯೇ ಬಸವರಾಜ್ ಅವರನ್ನು ವಿಚಾರಣೆ ನಡೆಸಿದ್ದರು. ಎಸಿಪಿ ಕೇಳಿದ್ದ 150 ಪ್ರಶ್ನೆಗಳಿಗೆ ಬಸವರಾಜ್ ಉತ್ತರಿಸಿದ್ದಾರೆ. ಸಿಐಡಿಗೆ ವರ್ಗಾವಣೆಯಾದ ನಂತರ ತನಿಖಾಧಿಕಾರಿಗಳು ಒಮ್ಮೆಯೂ ಅರ್ಜಿದಾರರನ್ನು ವಿಚಾರಣೆಗೆ ಕರೆದಿಲ್ಲ ಎಂದರು. ಪ್ರಕರಣದ 18 ಆರೋಪಿಗಳ ದೋಷಾರೋಷ ಪಟ್ಟಿ ಸಲ್ಲಿಸಿದ್ದರೂ ಅರ್ಜಿದಾರ ವಿರುದ್ಧದ ಮಾತ್ರ ತನಿಖೆ ನಡೆಸಬೇಕಿದೆ. ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ ಎಂದು ಸಿಐಡಿ ಪೊಲಿಸರು ಹೇಳುತ್ತಿದ್ದಾರೆ. ಅರ್ಜಿದಾರರು ಪ್ರಕರಣದಲ್ಲಿ ಭಾಗವಹಿಸಿಲ್ಲ. ಹಾಗೊಂದು ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾದರೆ, ನ್ಯಾಯಾಲಯ ಅಗತ್ಯ ಷರತ್ತುಗಳನ್ನು ವಿಧಿಸಬಹುದು. ಆ ಷರತ್ತುಗಳನ್ನು ಅರ್ಜಿದಾರರು ಪಾಲಿಸಲಿದ್ದಾರೆ ಎಂದು ಭರವಸೆ ನೀಡಿದರು.
ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ: ಸುನಿಲ್ ಕುಮಾರ್ ಬಜಾಲ್
ಮಂಗಳೂರು, ಜ.28: ಕೇಂದ್ರ ಸರಕಾರವು ಬಂಡವಾಳ ಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣ ದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ. ಇದು ಕೇವಲ ಲೇಬರ್ ಕೋಡ್ ಅಲ್ಲ ಬದಲಾಗಿ ಕಾರ್ಪೊರೇಟ್ ಕೋಡ್ ಆಗಿದೆ ಎಂದು ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ಸಂಹಿತೆಗಳ ವಿರುದ್ದ ಫೆ.12 ರಂದು ನಡೆಯಲಿರುವ ಆಖಿಲ ಭಾರತ ಮಹಾಮುಷ್ಕರದ ಪ್ರಚಾರಾರ್ಥ ವಾಗಿ ಮುಲ್ಕಿಯಿಂದ ಪ್ರಾರಂಭಗೊಂಡ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ರೈತ ವಿರೋಧಿ ಬೀಜ ಮಸೂದೆ ಹಾಗೂ ವಿದ್ಯುತ್ ಮಸೂದೆಯನ್ನು ಜಾರಿಗೊಳಿಸಲು ಹುನ್ನಾರ ನಡೆಸುತ್ತಿರುವ ಕೇಂದ್ರ ಸರಕಾರವು ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕಾರ್ಪೊರೇಟ್ ಕಂಪೆನಿಗಳ ಪಾದತಲಕ್ಕೆ ಒಪ್ಪಿಸಲು ಸನ್ನದ್ದವಾಗಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಿಐಟಿಯು ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು ಮಾತನಾಡಿ ಗ್ರಾಮೀಣ ಜನತೆಯ ಬದುಕಿಗೆ ಪೂರಕವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಿದ್ದುಪಡಿ ತರುವ ಮೂಲಕ ಸರ್ವನಾಶ ಮಾಡಲು ಹೊರಟಿದೆ ಎಂದು ದೂರಿದರು ಪಾದಯಾತ್ರೆಯ ಉದ್ಘಾಟಕ ಸುನಿಲ್ ಕುಮಾರ್ ಬಜಾಲ್ ಕೆಂಬಾವುಟವನ್ನು ಜಾಥಾ ತಂಡದ ನಾಯಕರಾದ ಬಿ.ಕೆ ಇಮ್ತಿಯಾಜ್ ಹಾಗೂ ಉಪನಾಯಕರಾದ ಜಯಲಕ್ಷ್ಮಿ , ರವಿಚಂದ್ರ ಕೊಂಚಾಡಿ, ಶ್ರೀನಾಥ ಕಾಟಿಪಳ್ಳ, ತಯ್ಯುಬ್ ಬೆಂಗರೆ, ಪ್ರಮೀಳಾ ಶಕ್ತಿನಗರ, ಸಾಧಿಕ್ ಮುಲ್ಕಿಯವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ಜನಪರ ಹೋರಾಟಗಾರರಾದ ಮುನೀರ್ ಕಾಟಿಪಳ್ಳ, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ, ವಿಮಾ ಪ್ರತಿನಿಧಿ ಸಂಘಟನೆಯ ಜಿಲ್ಲಾ ನಾಯಕರಾದ ರಾಜನ್ ಡಿ ಕೋಸ್ತಾ, ಸಿಐಟಿಯು ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ದಿನೇಶ್ ಶೆಟ್ಟಿ,ಸಂತೋಷ್ ಆರ್.ಎಸ್, ಅಶೋಕ್ ಶ್ರೀಯಾನ್,ನಾಗೇಶ್ ಕೋಟ್ಯಾನ್,ಯುವಜನ ನಾಯಕರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಆದಿವಾಸಿ ಸಂಘಟನೆಯ ಜಿಲ್ಲಾ ನಾಯಕರಾದ ಕರಿಯ ಕೆ, ಶೇಖರ್ ವಾಮಂಜೂರು, ಕೃಷ್ಣ ಇನ್ನಾ,ದಲಿತ ಸಂಘಟನೆಯ ಮುಖಂಡರಾದ ಕೃಷ್ಣ ತಣ್ಣೀರುಬಾವಿ, ಮಹಿಳಾ ಮುಖಂಡರಾದ ಅಸುಂತ ಡಿ ಸೋಜ, ಯೋಗಿತಾ,ರೋಹಿಣಿ, ಮುಂತಾದವರು ಉಪಸ್ಥಿತರಿದ್ದರು. ನೂರಕ್ಕೂ ಮಿಕ್ಕಿದ ಕಾರ್ಯಕರ್ತರು ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ: ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆ
ಮಂಗಳೂರು , ಜ.28: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ ಇದರ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಮೇಘರಾಜ್ ಜೈನ್ ಅವರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಮೆನೇಜಿಂಗ್ ಟ್ರಸ್ಟಿಯೂ ಆಗಿರುತ್ತಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರತ್ನಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಇವರು ಮೊದಲ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೆೇರಿಯ ಅಧೀಕ್ಷಕರಾದ ಬಿ.ನಾಗೇಂದ್ರ ನಡೆಸಿಕೊಟ್ಟರು. ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿ., ಇದರ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಎಂ.ಎನ್.ರಾಜೇಂದ್ರ ಕುಮಾರ್, ವಿನಯ ಕುಮಾರ್ ಸೂರಿಂಜೆ , ರತ್ನಾಕರ ಶೆಟ್ಟಿ , ರಾಘವ ಶೆಟ್ಟಿ , ಮೋನಪ್ಪ ಶೆಟ್ಟಿ , ಸುನೀಲ್ ಕುಮಾರ್ , ನಜೀರ್ ಹುಸೈನ್ , ಎಂ. ಮಹೇಶ್ ಹೆಗ್ಡೆ , ಎಸ್.ರಾಜು ಪೂಜಾರಿ , ಎಂ. ವಾದಿರಾಜ ಶೆಟ್ಟಿ , ಮೇಘರಾಜ್ ಜೈನ್ , ಹಿಂದುಳಿದ ‘ಅ’ ವರ್ಗದಿಂದ ಭಾಸ್ಕರ್ ಎಸ್.ಕೋಟ್ಯಾನ್ , ಪರಿಶಿಷ್ಟ ಜಾತಿ ವರ್ಗದಿಂದ ಜಗದೀಶ್ಚಂದ್ರ ಎಸ್, ಹಿಂದುಳಿದ ‘ ಬ’ ವರ್ಗದಿಂದ ಗುಲ್ಜರ್ ಹುಸೈನ್ , ಮಹಿಳಾ ಮೀಸಲು ಕ್ಷೇತ್ರದಿಂದ ಸಾವಿತ್ರಿ ರೈ , ಪೂರ್ಣಿಮಾ ಶೆಟ್ಟಿ, ಅವಿರೋಧವಾಗಿ ಆಯ್ಕೆಗೊಂಡರು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಸರಕಾರಕ್ಕೆ ನೋಟಿಸ್
ಬೆಂಗಳೂರು: ಜನವರಿ 29ರಿಂದ ಆರಂಭವಾಗಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ. ಹೊಸದಾಗಿ ಆಯ್ಕೆ ಸಮಿತಿ ರಚಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಪಕರಾದ ಸಂವಿಧಾನ ಸಿನಿ ಕಂಬೈನ್ಸ್ನ ಎ.ವಿ. ನಾಗರಾಜು ಮತ್ತು ಎ.ಆರ್. ಪ್ರೊಡಕ್ಷನ್ಸ್ನ ಅರುಣ್ ರೈ ತೋಡರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ಈ ಕುರಿತು ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಚಿತ್ರೋತ್ಸವ ಆರಂಭವಾಗುವ ಕೊನೇ ಕ್ಷಣದಲ್ಲಿ ಅರ್ಜಿ ಸಲ್ಲಿಸಿರುವುದರಿಂದ ಈ ಹಂತದಲ್ಲಿ ತಡೆ ನೀಡಲಾಗದು ಎಂದು ತಿಳಿಸಿದ್ದಲ್ಲದೆ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು, ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಹಾಗೂ ಸಹಕಾರ ಸಂಘಗಳ ಡೆಪ್ಯೂಟಿ ರಿಜಿಸ್ಟ್ರಾರ್ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿ, ಚಲನಚಿತ್ರೋತ್ಸವಕ್ಕೆ ಚಿತ್ರಗಳನ್ನು ಆಯ್ಕೆ ಮಾಡಲು ರಚಿಸಿದ್ದ ಸಮಿತಿಯ ವಿರುದ್ಧವೇ ಆಕ್ಷೇಪ ಎತ್ತಿ ದೂರು ನೀಡಲಾಗಿದ್ದು, ಅದನ್ನು ಪರಿಹರಿಸಿಲ್ಲ. ಆಯ್ಕೆ ಸಮಿತಿಯು ಪಾರದರ್ಶಕ ರೀತಿಯಲ್ಲಿ ಚಿತ್ರಗಳನ್ನು ಆಯ್ಕೆ ಮಾಡಿಲ್ಲ. ಆದ್ದರಿಂದ ಹೊಸ ಸಮಿತಿ ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು. ಮುಂದುವರಿದು, ಚಲನಚಿತ್ರೋತ್ಸವದ ಹೆಸರಿನಲ್ಲಿ ಸಾಕಷ್ಟು ಹಣಕಾಸು ಅವ್ಯವಹಾರ ನಡೆದಿದೆ. ಆ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಲ್ಲಿ ದೂರು ನೀಡಲಾಗಿದೆ. ಚಿತ್ರೋತ್ಸವವನ್ನು ಒರಾಯನ್ ಮಾಲ್ನಿಂದ ಲುಲು ಮಾಲ್ಗೆ ಸ್ಥಳಾಂತರ ಮಾಡಲಾಗಿದೆ. ಚಿತ್ರೋತ್ಸವಕ್ಕೆ ಚಿತ್ರಗಳ ಆಯ್ಕೆಯಲ್ಲಿ ಪ್ರತಿವರ್ಷ ಗೋಲ್ಮಾಲ್ ನಡೆಯುತ್ತಿದೆ. ಆದ್ದರಿಂದ, ಆ ಬಗ್ಗೆ ತನಿಖೆಗೆ ಆದೇಶಿಸಬೇಕೆಂದು ಕೋರಿದರು. ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೂಬೆನ್ ಜಾಕೋಬ್, ಗುರುವಾರದಿಂದಲೇ ಚಲನಚಿತ್ರೋತ್ಸವ ಆರಂಭವಾಗುತ್ತಿದ್ದು, ಈ ಹಂತದಲ್ಲಿ ಯಾವುದೇ ತಡೆ ನೀಡಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಕರಾವಳಿ ಕಾವಲು ಪೊಲೀಸರಿಂದ ಬೋಟು ಮಾಲಕರ ಸಭೆ
ಮಲ್ಪೆ, ಜ.28: ಕೋಡಿಬೆಂಗ್ರೆ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಪ್ರವಾಸಿ ದೋಣಿ ದುರಂತದ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪೊಲೀಸ್ ಮಲ್ಪೆ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಾಟರ್ ಸ್ಪೋರ್ಟ್ಸ್ ಮತ್ತು ಟೂರಿಸ್ಟ್ ಬೊಟುಗಳ ಮಾಲಕರ ಸಭೆಯನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆಸಲಾಯಿತು. ಕರಾವಳಿ ಕಾವಲು ಪೊಲೀಸ್ ಡಿವೈಎಸ್ಪಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಟ್ಟು 40 ಬೋಟುಗಳ ಮಾಲಕರು ಹಾಜರಿದ್ದರು. ಬೋಟ್ ಮಾಲಕರಿಗೆ ಉಡುಪಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದ ಸೂಚನೆಗಳನ್ನು ತಿಳಿಸಲಾ ಯಿತು ಹಾಗೂ ಮುಂದಿನ ದಿನಗಳಲ್ಲಿ ಸರಿಯಾದ ದಾಖಲೆಗಳನ್ನು ಕಡ್ದಾಯವಾಗಿ ಸಿದ್ಧಪಡಿಸಿಕೊಂಡು ಬೋಟ್/ಕಯಾಕಿಂಗ್ ಹಾಗೂ ಇನ್ನಿತರ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ನಡೆಸುವಂತೆ ತಿಳಿಸಲಾಯಿತು.
ಪಾಕಿಸ್ತಾನ ಟಿ20 ವಿಶ್ವಕಪ್ ಬಹಿಷ್ಕರಿಸಿದರೆ ಮುಂಬೈನವರಿಗೇಕೆ ಹಾಲು ಕುಡಿದಷ್ಟು ಖುಷಿ? ಗಮ್ಮತ್ತೇ ಗಮ್ಮತ್ತು!
ICC T20 World Cup 2026- ಬಾಂಗ್ಲಾದೇಶದ ಕಾರಣ ಮುಂದಿಟ್ಟು ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಟಿ20 ವಿಶ್ವಕಪ್ ನಿಂದ ಹಿಂದೆ ಸರಿಯುವ ಬೆದರಿಕೆ ಹಾಕುತ್ತಿದೆ. ಇಡೀ ಕ್ರಿಕೆಟ್ ಜಗತ್ತು ಈ ಬೆಳವಣಿಗೆಯನ್ನು ಕುತೂಹಲದಿಂದ ನೋಡುತ್ತಿದ್ದರೆ, ಭಾರತದ ಅಹ್ಮದಾಬಾದ್, ಕೋಲ್ಕತಾ ಮುತ್ತು ಮುಂಬೈ ನಗರದ ಕ್ರಿಕೆಟ್ ಪ್ರೇಮಿಗಳು ಮಾತ್ರ ಖುಷಿಯಲ್ಲಿದ್ದಾರೆ. ಏನಾದ್ರೂ ಆಗ್ಲಿ ಒಮ್ಮೆ ಪಾಕಿಸ್ತಾನ ಈ ಟೂರ್ನಿಯನ್ನು ಬಹಿಷ್ಕರಿಸಲಿ ಎಂದು ಮನಸಾರೆ ಆಶಿಸುತ್ತಿದ್ದಾರೆ. ಇದರ ಹಿಂದಿದೆ ಮಹತ್ವದ ಕಾರಣ.
ಸ್ಪೀಡ್ ಗವರ್ನರ್, ಬಾಗಿಲು ಅಳವಡಿಸದ ಲಾರಿ, ಬಸ್ಗಳ ವಿರುದ್ಧ ಕ್ರಮ: ಉಡುಪಿ ಪೊಲೀಸರಿಂದ ವಿಶೇಷ ಕಾರ್ಯಾಚರಣೆ
ಉಡುಪಿ, ಜ.28: ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಬಾಗಿಲು ಅಳವಡಿಸದ ಬಸ್ಗಳು ಹಾಗೂ ವೇಗನಿಯಂತ್ರಕ ಅಳವಡಿಸಲಾದ ಲಾರಿಗಳ ವಿರುದ್ಧ ಪೊಲೀಸರು ಕಾರ್ಯಾ ಚರಣೆ ಆರಂಭಿಸಿದ್ದು, ಈ ಸಂಬಂಧ ಹಲವು ವಾಹನಗಳಿಗೆ ದಂಡ ವಿಧಿಸಲಾಗಿದೆ. ಬಸ್ಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಮರಳು ಸಾಗಾಟದ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿ ಸುವ ಬಗ್ಗೆ ಗಡುವು ನೀಡಲಾಗಿತ್ತು. ಇದೀಗ ಈ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ವಿಶೇಷ ಕಾರ್ಯಾ ಚರಣೆಗೆ ಮುಂದಾಗಿದ್ದಾರೆ. ಅದರಂತೆ ಬುಧವಾರ ಜಿಲ್ಲೆಯ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ, ಒಟ್ಟು 1100 ಬಸ್ಗಳನ್ನು ಪರಿಶೀಲನೆ ನಡೆಸಿದರು. ಇದರಲ್ಲಿ ಬಾಗಿಲು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 108 ಬಸ್ಗಳಿಗೆ ದಂಡ ವಿಧಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಅದೇ ರೀತಿ ಮರಳು, ಕಲ್ಲು, ಮಣ್ಣು ಸಾಗಾಟ ಮಾಡುವ ಒಟ್ಟು 1352 ವಾಹನಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ ಓವರ್ ಲೋಡ್, ವೇಗ ನಿಯಂತ್ರಕಗಳನ್ನು ಅಳವಡಿಸದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡಿರುವ ಸುಮಾರು 56 ವಾಹನಗಳಿಗೆ ದಂಡ ವಿಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಜ.29ರಂದು ಮಧ್ಯಾಹ್ನ 3 ಗಂಟೆಗೆ ನಗರ ಬಸ್ ಮಾಲೀಕರೊಂದಿಗೆ ಬಸ್ ಸಮಯದ ವಿಚಾರ ಹಾಗೂ ಇತರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ರಸ್ತೆ ಸಾರಿಗೆ ಪ್ರಾಧಿಕಾರ ಹಾಗೂ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಯಿಂದ ತೆಗೆದುಕೊಳ್ಳಲಾದ ತೀರ್ಮಾನ ಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಬಸ್ ಹಾಗೂ ಲಾರಿಗಳ ವಿರುದ್ಧ ಈ ರೀತಿಯ ಕಾರ್ಯಾಚರಣೆಗಳನ್ನು ಹಂತ ಹಂತವಾಗಿ ಮುಂದುವರಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಬೆಂಗಳೂರಿನ ಪ್ರಮುಖ ಟೆಕ್ ಕಂಪನಿಯಿಂದ ಸುಮಾರು 8 ಮಿಲಿಯನ್ ಯೂರೋ ಮೌಲ್ಯದ ಸೋರ್ಸ್ ಕೋಡ್ ಕಳ್ಳತನವಾಗಿದೆ. ಒಬ್ಬ ಹಿರಿಯ ಉದ್ಯೋಗಿ ತನ್ನ ವೈಯಕ್ತಿಕ ಇಮೇಲ್ಗೆ ಕೋಡ್ ವರ್ಗಾಯಿಸಿರುವುದಾಗಿ ಒಪ್ಪಿಕೊಂಡಿದ್ದು, ಕಂಪನಿ ಆತನನ್ನು ವಜಾಗೊಳಿಸಿ ಪೊಲೀಸರಿಗೆ ದೂರು ನೀಡಿದೆ. ಈ ಘಟನೆ ಟೆಕ್ ಉದ್ಯಮದಲ್ಲಿ ಭದ್ರತಾ ಲೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.
ದರ್ಸ್ ರಂಗವನ್ನು ಹೆಚ್ಚಿಸಲು ಉಲಮಾಗಳ ಪಾತ್ರ ಮುಖ್ಯ: ಕುಂಬೋಳ್ ತಂಙಳ್
ಉಡುಪಿ, ಜ.28: ರಾಜ್ಯ ಉಲಮಾ ಒಕ್ಕೂಟದ ನಿರ್ದೇಶನದಂತೆ ಉಡುಪಿ ಜಿಲ್ಲಾ ಉಲಮಾ ಕ್ಯಾಂಪ್ ಮೂಳೂರು ಸುನ್ನೀ ಸೆಂಟರ್ ಸಂಸ್ಥೆಯಲ್ಲಿ ನಡೆಯಿತು ಉಲಮಾ ಕ್ಯಾಂಪ್ನ್ನು ಉದ್ಘಾಟಿಸಿದ ಕೇಂದ್ರ ಮುಶಾವರ ಉಪಾಧ್ಯಕ್ಷ, ಡಿಕೆಎಸ್ಸಿ ಸಂಸ್ಥೆಯ ಅಧ್ಯಕ್ಷ ಖುದುವತು ಸ್ಸಾದಾತ್ ಅಸ್ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಮಾತನಾಡಿ, ಆಧುನಿಕತೆಯ ಈ ಕಲುಷಿತ ವಾತಾವರಣದಲ್ಲಿ ನಮ್ಮ ಸಮೂಹ ಅದಕ್ಕೆ ಹೊಂದಿಕೊಂಡು ಬೆಳೆಯುತ್ತಿದೆ. ನಾವು ಧಾರ್ಮಿಕ ವಿದ್ಯೆಗೆ ಒತ್ತು ಕೊಡದಿದ್ದರೆ ನಮ್ಮ ಸಮೂಹ ಕೈ ತಪ್ಪುವ ಸಾಧ್ಯತೆಗಳು ಬಹಳ ಹೆಚ್ಚಿದೆ. ಹಳೆಯ ಕಾಲದ ಪಳ್ಳಿ ದರ್ಸುಗಳನ್ನು ಹೆಚ್ಚಿಸಬೇಕು. ತಮ್ಮ ತಮ್ಮ ಮೊಹಲ್ಲಾ ಗಳಲ್ಲಿ ಪಳ್ಳಿ ದರ್ಸ್ ಆರಂಭಿಸಬೇಕು. ಇದು ಉಲಮಾಗಳ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ ಉಸ್ತಾದ್ ದುವಾದೊಂದಿಗೆ ಚಾಲನೆ ನೀಡಲಾ ಯಿತು. ಅಧ್ಯಕ್ಷತೆಯನ್ನು ನಿರ್ವಹಣಾ ಸಮಿತಿಯ ಅಧ್ಯಕ್ಷ ಯು.ಕೆ.ಮುಸ್ತಫಾ ಸಅದಿ ಉಸ್ತಾದ್ ವಹಿಸಿದ್ದರು. ದೀನೀ ಪ್ರಭೋದನೆ ಹೇಗಿರಬೇಕೆಂಬ ವಿಷಯದಲ್ಲಿ ಇಬ್ರಾಹಿಂ ಸಖಾಫಿ ಪುಝಕ್ಕಾಟೀರಿ, ಸುನ್ನತ್ ಮತ್ತು ಬಿದ್ ಅತ್ ಎಂಬ ವಿಷಯದಲ್ಲಿ ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ ಹಾಗೂ ತ್ವರೀಖತ್ ಎಂಬ ವಿಷಯದಲ್ಲಿ ಸ್ವಾಬಿರ್ ಸಅದಿ ಮೂಳೂರು ವಿಷಯ ಮಂಡಿಸಿದರು ಸುನ್ನೀ ಸೆಂಟರ್ ಕೇಂದ್ರ ಸಮಿತಿ ನಾಯಕರಾದ ಅಸ್ಸಯ್ಯಿದ್ ಮುಹಮ್ಮದ್ ತಂಙಳ್ ಉಚ್ಚಿಲ, ಅಸ್ಸಯ್ಯಿದ್ ಅಲವಿ ತಂಙಳ್ ಕರ್ಕಿ, ಕಾಪು ಖಾಝಿ ಅಹ್ಮದ್ ಖಾಸಿಮಿ, ರಾಜ್ಯ ಮುಶಾವರ ಸದಸ್ಯರಾದ ಅಶ್ರಫ್ ಸಖಾಫಿ ಕನ್ನಂಗಾರು, ಜಿಲ್ಲಾ ಸುನ್ನೀ ಕೋ-ಓಡಿನೇಶ್ ಅಧ್ಯಕ್ಷ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಎಸ್ಜೆಎಂ ಜಿಲ್ಲಾಧ್ಯಕ್ಷ ಅಬ್ದುರ್ರಝಾಖ್ ಖಾಸಿಮಿ ಕಾಪು, ಹಂಝ ಮದನಿ ಮಿತ್ತೂರು ಮೊದಲಾದವರು ಉಪಸ್ಥಿತರಿದ್ದರು ಜಿಲ್ಲಾ ನಾಯಿಬ್ ಖಾಝಿ ಬಿ.ಕೆ.ಅಬ್ದುರ್ರಹ್ಮಾನ್ ಮದನಿ ಮೂಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಸಅದಿ ಅಫ್ಲಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಫುರ್ಖಾನಿ ಉಚ್ಚಿಲ ವಂದಿಸಿದರು.
ಗ್ರಾಹಕನ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯಲ್ಲಿ ಕಳವು
ಕುಂದಾಪುರ, ಜ.28: ಚಿನ್ನಾಭರಣ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಹೋಗಿವು ಘಟನೆ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಜ.27ರಂದು ಸಂಜೆ ವೇಳೆ ನಡೆದಿದೆ. ಶಿರೂರಿನ ಮುಹಮ್ಮದ್ ಕಾಸಿಮ್ ಎಂಬವರ ಎಸ್ಪಿಜಿ ಗೋಲ್ಡ್ ಆ್ಯಂಡ್ ಡೈಮಂಡ್ ಅಂಗಡಿಗೆ 40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದು, ಆತ ಅಂಗಡಿಯ ಕೆಲಸದವರಿಂದ ಚಿನ್ನದ ಸರವನ್ನು ನೋಡಿ ಅವರ ಕಣ್ಣು ತಪ್ಪಿಸಿ 1,25,000 ರೂ. ಮೌಲ್ಯದ ಸುಮಾರು 9 ಗ್ರಾಮ್ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿರುವು ದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರೆ: ಮನೆಗೆ ನುಗ್ಗಿ 48ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಪಡುಬಿದ್ರಿ, ಜ.28: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ. ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ಮಂಗಳ ವಾರ ಸಂಜೆಯ ಹೋಗಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಇವರ ಸೊಸೆ ತನ್ನ ತಾಯಿ ಮನೆಗೆ ಹೋಗಿದ್ದು, ಅವರ ಮಗ ದುಬೈಯಲ್ಲಿ ಇರುವುದಾಗಿ ತಿಳಿದುಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲೆಸ್, 5 ಪವನ್ ತೂಕದ ಚಿನ್ನದ ನೆಕ್ಲೆಸ್, ಸುಮಾರು 3 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲೆಸ್, ಸುಮಾರು 2.5 ಪವನ್ ತೂಕದ ಚಿನ್ನದ ಸಣ್ಣ ಚೌಕರ್ ನೆಕ್ಲೆಸ್, 15 ಪವನ್ ತೂಕದ ಬಂಗಾರದ ಬಳೆಗಳು, 3 ಪವನ್ ತೂಕದ ಬಂಗಾರದ ಬ್ರೇಸ್ಲೇಟ್, 1 ಪವನ್ ತೂಕದ ಚಿನ್ನದ ಉಂಗುರ, 3 ಪವನ್ ತೂಕದ ಚಿನ್ನದ ಉಂಗುರಗಳು ಸಹಿತ ಮುತ್ತಿನ ಮಣಿಯ ಚಿನ್ನದ ಸರ, ಸಣ್ಣ ಚಿನ್ನದ ಸರಗಳು, ಕಿವಿಯೋಲೆ ಸೇರಿದಂತೆ ಒಟ್ಟು 70 ಪವನ್ ತೂಕದ 48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 50000 ರೂ. ಮೌಲ್ಯದ ರಾಡೋ ವಾಚನ್ನು ಕಳವುಗೈದಿದ್ದಾರೆ. ಮನೆಯಲ್ಲಿ ಸಿಮ್ ಸಹಿತವಾದ ಸಿಸಿಟಿವಿ ಇದ್ದು ಅದನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ ಅದರ ಸಿಮ್ ಸಂದೇಶವು ಮಗನ ಸಿಮ್ನಲ್ಲಿ ದಾಖಲಾಗಿದೆ ಎನ್ನಲಾಗಿದೆ. ಸುತ್ತಮುತ್ತ ಹಲವು ಮನೆಗಳಿದ್ದು, ಇಂತಹ ವಸತಿ ಪ್ರದೇಶಕ್ಕೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಡಿವೈಎಸ್ಪಿ ಪ್ರಭು ಡಿ.ಟಿ., ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ, ಪಡುಬಿದ್ರಿ ಠಾಣಾಧಿಕಾರಿ ಶಕ್ತಿವೇಲು ಸಹಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನ ದಳ, ವೈಜ್ಞಾನಿಕವಾಗಿ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KSRTC ನೌಕರರ ಫೆಡರೇಷನ್ ಅಧ್ಯಕ್ಷ ಅನಂತ ಸುಬ್ಬರಾವ್ ನಿಧನ! ಆಸ್ಪತ್ರೆಗೆ ದೇಹದಾನ; ಸ್ಪೂರ್ತಿಯಾದ ಕಾರ್ಮಿಕ ಮುಖಂಡ
ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ಅವರು ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಲ್ಕು ದಶಕಗಳ ಕಾಲ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಅವರು, ಸಾರಿಗೆ ನೌಕರರ ಬೇಡಿಕೆಗಳಿಗಾಗಿ ಧ್ವನಿ ಎತ್ತಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಲಾಗಿದೆ. ಮೃತರ ದೇಹವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಉಡುಪಿ| ಇಡಿ ತನಿಖೆ ಹೆಸರಿನಲ್ಲಿ 40 ಲಕ್ಷ ರೂ. ಆನ್ಲೈನ್ ವಂಚನೆ: ಪ್ರಕರಣ ದಾಖಲು
ಉಡುಪಿ, ಜ.28: ಇಡಿ ತನಿಖೆ ಹೆಸರಿನಲ್ಲಿ ಕಟಪಾಡಿಯ ವ್ಯಕ್ತಿಯೊಬ್ಬರಿಗೆ 40ಲಕ್ಷ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಟಪಾಡಿ ಕಲ್ತಟ್ಟ ನಿವಾಸಿ ಕೆ.ರಾಘವೇಂದ್ರ ರಾವ್(45) ಎಂಬವರ ಮೊಬೈಲ್ಗೆ ಜ.11ರಂದು ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರದಿಂದ ಮಾತನಾಡುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ‘ನಿಮ್ಮ ಹೆಸರಿನಲ್ಲಿರುವ ಮೊಬೈಲ್ ಸಂಖ್ಯೆಯಿಂದ ಕಾನೂನುಬಾಹಿರ ಚಟುವಟಿಕೆ ಗಳು ಹಾಗೂ ಬೆದರಿಕೆ ಕರೆಗಳನ್ನು ಮಾಡುತ್ತಿರುವುದಾಗಿ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ನೀವು ಕೂಡಲೇ ಠಾಣೆಯನ್ನು ಸಂಪರ್ಕಿಸಿ ಎನ್ಓಸಿ ಪಡೆದು ಕಳುಹಿಸಿ, ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು 2 ಗಂಟೆಯ ಒಳಗೆ ನಿಷ್ಕ್ರೀಯಗೊಳಿಸಲಾಗುವುದು’ ಎಂದು ಆತ ತಿಳಿಸಿದ್ದನು. ಅಲ್ಲದೇ ಕರೆಯನ್ನು ಕೊಲಾಬಾ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿ ಕರೆಯನ್ನು ಇನ್ನೊಂದು ನಂಬರ್ಗೆ ವರ್ಗಾಯಿಸಿದನು.ಅದರಲ್ಲಿ ಕೊಲಾಬಾ ಪೊಲೀಸ್ ಠಾಣೆಯ ಪೊಲೀಸ್ ಎಂದು ಹೇಳಿಕೊಂಡು ಮಾತನಾಡಿದ ವ್ಯಕ್ತಿ, ನಿಮ್ಮ ಮೊಬೈಲ್ ಸಂಖ್ಯೆಯನ್ನು ಉಪಯೋಗಿಸಿ ಮುಂಬೈಯಲ್ಲಿ ಬ್ಯಾಂಕ್ ಖಾತೆ ತೆರೆದು 4.90 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದನು. ಈ ಸಂಬಂಧ ಹೈಕೋರ್ಟ್ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿ ಆಡಿಯೋ ಕರೆಯನ್ನು ವೀಡಿಯೋ ಕರೆಗೆ ವರ್ಗಾಯಿಸಿದನು. ಆಗ ವಿಕ್ರಮ್ ರಾಥೋಡ್ ಎಂಬ ಹೆಸರಿನ ವ್ಯಕ್ತಿಯು ಪೊಲೀಸ್ ಸಮವಸ್ತ್ರದಲ್ಲಿದ್ದು, ತಾನು ತನಿಖಾಧಿಕಾರಿಯೆಂದು ತನ್ನ ಗುರುತು ಸಂಖ್ಯೆ ಹಾಗೂ ಹೆಸರನ್ನು ಹೇಳಿಕೊಂಡು ತನಿಖೆಗೆ ಸಹಕರಿಸದಿದ್ದಲ್ಲಿ ಕೂಡಲೇ ಬಂಧಿಸಬೇಕಾಗುತ್ತದೆ ಎಂದು ಹೇಳಿದನು. ನಂತರ ಅದೇ ರೀತಿ ಪ್ರತಿದಿನ ಕರೆ ಮಾಡಿ ವಿಚಾರಣೆ ಎಂದು ವಿವಿಧ ದಾಖಲೆಗಳನ್ನು ಪಡೆದು ಕೊಳ್ಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಪ್ರಕರಣವನ್ನು ಇಡಿಗೆ ವರ್ಗಾಯಿಸಲಾಗಿದ್ದು, ಇಡಿ ನಿರ್ದೇಶಕ ಹೇಳಿ ಕರೆ ಮಾಡಿ, ಹಣ ವರ್ಗಾಯಿಸುವಂತೆ ತಿಳಿಸಿದನು. ಇದನ್ನು ನಂಬಿದ ರಾಘವೇಂದ್ರ ರಾವ್ ಜ.16 ಮತ್ತು 19ರಂದು ತನ್ನ ಪತ್ನಿಯ ಖಾತೆಯಿಂದ ಒಟ್ಟು 25,00,000ರೂ. ಹಾಗೂ ಜ.23ರಂದು ತನ್ನ ಖಾತೆಯಿಂದ 15,00,000ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ, ಒಟ್ಟು 40,00,000ರೂ. ಮೋಸ ಹೋಗಿದ್ದರು ಎಂದು ದೂರಲಾಗಿದೆ.
ಸವಳು-ಜವಳು ಭೂಮಿಗೆ ಶೀಘ್ರದಲ್ಲಿ ಅನುದಾನ ಬಿಡುಗಡೆ: ಸಚಿವ ಚೆಲುವರಾಯಸ್ವಾಮಿ
ಬೆಂಗಳೂರು, ಜ.28: ಸವಳು-ಜವಳು ಬಾಧಿತ ಭೂಪ್ರದೇಶ ಅಭಿವೃದ್ಧಿಗೆ ಶೀಘ್ರದಲ್ಲಿಯೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಭರಮಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿತ ಕೇಂದ್ರದಲ್ಲಿರುವ ದತ್ತಾಂಶದನ್ವಯ ಸುಮಾರು 77646.6 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವು ಸವಳು-ಜವಳು ಬಾದಿತವಾಗಿದೆ. ಇದರಲ್ಲಿ ಉತ್ತರ ಕರ್ನಾಟಕದ ಒಟ್ಟು 13 ಜಿಲ್ಲೆಗಳಲ್ಲಿ ಸವಳು-ಜವಳು ಬಾಧಿತ ಪ್ರದೇಶ 56621.34 ಹೆಕ್ಟೇರ್ಗಳಿದೆ ಎಂದರು. ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಮಳೆಯಾಶ್ರಿತ ಪ್ರದೇಶದಲ್ಲಿ(ಅಚ್ಚುಕಟ್ಟು ಪ್ರದೇಶವನ್ನು ಹೊರತುಪಡಿಸಿ) ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮದಡಿ 2016-17ನೆ ಸಾಲಿನಿಂದ 2025-26ನೆ ಸಾಲಿನವರೆಗೆ ಒಟ್ಟು 31.43 ಕೋಟಿ ರೂ.,ಗಳ ವೆಚ್ಚದಲ್ಲಿ ಸವಳು-ಜವಳು ಬಾಧಿತ ಪ್ರದೇಶಗಳಲ್ಲಿ ಬಸಿ ಕಾಲುವೆ ನಿರ್ಮಾಣ ಮೂಲಕ ಮಣ್ಣಿನ ಸುಧಾರಣೆಗೆ ಒಟ್ಟು 4208.19 ಹೆಕ್ಟೇರ್ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 2024-25ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದ್ದಂತೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಒಟ್ಟು 53.98 ಹೆಕ್ಟೇರ್ ಸವಳು-ಜವಳು ಪ್ರದೇಶವನ್ನು 20.03 ಲಕ್ಷ ರೂ., ವೆಚ್ಚದೊಂದಿಗೆ ಉಪಚರಿಸಿದ್ದು, 5,992 ಮಾನವ ದಿನಗಳನ್ನು ಸೃಜಿಸಲಾಗಿರುತ್ತದೆ ಎಂದು ಉಲ್ಲೇಖಿಸಿದರು. 2025-26ನೆ ಸಾಲಿನಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆ ಕಾರ್ಯಕ್ರಮಕ್ಕೆ ಈಗಾಗಲೇ ಕೇಂದ್ರ ಸಚಿವರನ್ನು ಸಹ ಭೇಟಿ ಮಾಡಿ ಅನುದಾನ ಕೋರಲಾಗಿದೆ. 4.18 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಅನುಮೋದನೆ ದೊರೆತಿದ್ದು, ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳೆಯರ T20 ವಿಶ್ವಕಪ್ | ಮೊದಲ ಬಾರಿ ಅರ್ಹತೆ ಪಡೆದ ನೆದರ್ಲ್ಯಾಂಡ್ಸ್
ಕಠ್ಮಂಡು, ಜ.28: ಗ್ಲೋಬಲ್ ಕ್ವಾಲಿಫೈಯರ್ಸ್ನಲ್ಲಿ ಡಿಎಲ್ಎಸ್ ನಿಯಮದ ಮೂಲಕ ಅಮೆರಿಕ ತಂಡವನ್ನು 21 ರನ್ಗಳಿಂದ ಮಣಿಸಿದ ನೆದರ್ಲ್ಯಾಂಡ್ಸ್, ಇದೇ ಮೊದಲ ಬಾರಿ ಮಹಿಳೆಯರ ಟಿ–20 ಕ್ರಿಕೆಟ್ ವಿಶ್ವಕಪ್ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ನೇಪಾಳದ ಕೀರ್ತಿಪುರದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗೆಲ್ಲಲು 130 ರನ್ಗಳ ಗುರಿ ಚೇಸ್ ಮಾಡುತ್ತಿದ್ದ ನೆದರ್ಲ್ಯಾಂಡ್ಸ್ ತಂಡವು, ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಾಗ 12 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿತ್ತು. ಈ ಹಂತದಲ್ಲಿ ಅಗತ್ಯ ಸ್ಕೋರ್ಗಿಂತ ಮುನ್ನಡೆಯಲ್ಲಿದ್ದ ಕಾರಣ ನೆದರ್ಲ್ಯಾಂಡ್ಸ್ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಗ್ರೂಪ್ ಹಂತದಲ್ಲಿ ಅಜೇಯವಾಗುಳಿದ ನೆದರ್ಲ್ಯಾಂಡ್ಸ್ ತಂಡವು ಝಿಂಬಾಬ್ವೆ, ಸ್ಕಾಟ್ಲ್ಯಾಂಡ್, ನೇಪಾಳ ಹಾಗೂ ಥಾಯ್ಲೆಂಡ್ ವಿರುದ್ಧ ಜಯ ಸಾಧಿಸಿ ‘ಬಿ’ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿತ್ತು. ನಂತರ ತನ್ನ ಮೊದಲ ಸೂಪರ್ ಸಿಕ್ಸ್ ಪಂದ್ಯದಲ್ಲಿ ಅಮೆರಿಕ ತಂಡವನ್ನು ಮಣಿಸಿ, ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ವಿಶ್ವಕಪ್ ಅರ್ಹತೆಯನ್ನು ಖಚಿತಪಡಿಸಿಕೊಂಡಿತು. ಮೊದಲ ಸೂಪರ್ ಸಿಕ್ಸ್ ಪಂದ್ಯದಲ್ಲಿ ಥಾಯ್ಲೆಂಡ್ ತಂಡವನ್ನು 39 ರನ್ಗಳಿಂದ ಮಣಿಸಿದ್ದ ಬಾಂಗ್ಲಾದೇಶ ಕೂಡ ಈ ವರ್ಷದ ಟಿ–20 ವಿಶ್ವಕಪ್ಗೆ ನೇರ ಪ್ರವೇಶ ಪಡೆದಿದೆ. ನೆದರ್ಲ್ಯಾಂಡ್ಸ್ ಹಾಗೂ ಬಾಂಗ್ಲಾದೇಶ ತಂಡಗಳು ಈ ವರ್ಷಾಂತ್ಯದಲ್ಲಿ ನಡೆಯಲಿರುವ 12 ತಂಡಗಳ ಟೂರ್ನಿಗೆ ಅರ್ಹತೆ ಪಡೆದಿವೆ. ಗ್ಲೋಬಲ್ ಕ್ವಾಲಿಫೈಯರ್ಸ್ನಲ್ಲಿ ಉಳಿದ ಎರಡು ಸ್ಥಾನಗಳಿಗಾಗಿ ಸ್ಕಾಟ್ಲ್ಯಾಂಡ್, ಐರ್ಲ್ಯಾಂಡ್, ಅಮೆರಿಕ ಹಾಗೂ ಥಾಯ್ಲೆಂಡ್ ತಂಡಗಳು ಸ್ಪರ್ಧೆ ನಡೆಸಿದ್ದವು. ಐಸಿಸಿ ಮಹಿಳೆಯರ ಟಿ–20 ವಿಶ್ವಕಪ್ ಟೂರ್ನಿ ಜೂನ್ 12ರಂದು ಇಂಗ್ಲೆಂಡ್ನಲ್ಲಿ ಆರಂಭವಾಗಲಿದೆ.
Ukraine | ರಷ್ಯಾದ ವೈಮಾನಿಕ ದಾಳಿಯಲ್ಲಿ 12 ಮಂದಿ ಮೃತ್ಯು
ಕೀವ್, ಜ.28: ಮಂಗಳವಾರ ತಡರಾತ್ರಿ ಉಕ್ರೇನ್ ನ ಇಂಧನ ಮೂಲಸೌಕರ್ಯ ಮತ್ತು ಪ್ರಯಾಣಿಕರ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈಶಾನ್ಯ ಖಾರ್ಕಿವ್ ಪ್ರದೇಶದಲ್ಲಿ ಸುಮಾರು 200 ಪ್ರಯಾಣಿಕರಿದ್ದ ರೈಲಿನ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ ಕನಿಷ್ಠ 5 ಪ್ರಯಾಣಿಕರು ಮೃತಪಟ್ಟಿದ್ದಾರೆ. ರೈಲಿನ ಕೆಲವು ಬೋಗಿಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ ಎಂದು ಉಕ್ರೇನ್ ಪ್ರಧಾನಿ ಯೂಲಿಯಾ ಸ್ವೈರಿಡೆಂಕೋ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ದಕ್ಷಿಣದ ಒಡೆಸಾ ನಗರದ ಮೇಲೆ ರಷ್ಯಾ 50ಕ್ಕೂ ಹೆಚ್ಚು ಡ್ರೋನ್ಗಳನ್ನು ಪ್ರಯೋಗಿಸಿದ್ದು, ಮೂವರು ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹತ್ತುಕ್ಕೂ ಹೆಚ್ಚು ಕಟ್ಟಡಗಳು, ಚರ್ಚ್, ಶಿಶುವಿಹಾರ ಮತ್ತು ಶಾಲೆಗಳಿಗೆ ಹಾನಿಯಾಗಿದೆ. ಇಂಧನ ಮೂಲಸೌಕರ್ಯವನ್ನೂ ಗುರಿಯಾಗಿಸಿಕೊಂಡು ದಾಳಿ ನಡೆದಿರುವುದರಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತಗೊಂಡಿದೆ ಎಂದು ಪ್ರಾದೇಶಿಕ ಅಧಿಕಾರಿಗಳು ತಿಳಿಸಿದ್ದಾರೆ. ಸ್ಲೊವಿಯಾಂಸ್ಕ್ ನಗರದಲ್ಲಿ ದಂಪತಿ, ಝಪೋರಿಝಿಯಾ ಪ್ರದೇಶದಲ್ಲಿ ವೃದ್ಧೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್ಗೆ 12 ಲಕ್ಷ ರೂ ದಂಡ
ಹೊಸದಿಲ್ಲಿ, ಜ.28: ಗುಜರಾತ್ ಜಯಂಟ್ಸ್ ವಿರುದ್ಧ ಬುಧವಾರ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರೊಡ್ರಿಗ್ಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಮಂಗಳವಾರ ಬರೋಡಾ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಡೆಲ್ಲಿ ತಂಡವು ಮೂರು ರನ್ ಅಂತರದಿಂದ ವೀರೋಚಿತ ಸೋಲು ಕಂಡಿತ್ತು. ವಡೋದರದ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ಗಳಿಗೆ ಸಂಬಂಧಿಸಿದಂತೆ ಡಬ್ಲ್ಯುಪಿಎಲ್ ನೀತಿ ಸಂಹಿತೆಯಡಿಯಲ್ಲಿ ಇದು ಮೊದಲ ಪ್ರಮಾದವಾಗಿದ್ದು, ಜೆಮಿಮಾ ರೊಡ್ರಿಗ್ಸ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಡಬ್ಲ್ಯುಪಿಎಲ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಸೋಲು ಡೆಲ್ಲಿ ತಂಡಕ್ಕೆ ದುಬಾರಿಯಾಗಿದ್ದು, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಾರಿದೆ. ಆರು ಅಂಕ ಹಾಗೂ –0.164 ನೆಟ್ ರನ್ ರೇಟ್ ಹೊಂದಿರುವ ಡೆಲ್ಲಿ ತಂಡ ಅಗ್ರ ಮೂರು ಸ್ಥಾನ ಪಡೆದು ಪ್ಲೇ–ಆಫ್ ಪ್ರವೇಶಿಸಲು ತೀವ್ರ ಪೈಪೋಟಿ ಎದುರಿಸುತ್ತಿದೆ. ಡೆಲ್ಲಿ ತಂಡವು ಫೆ.1ರಂದು ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೆಳ ಸ್ಥಾನದಲ್ಲಿರುವ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಇದು ಡೆಲ್ಲಿ ಪಾಲಿಗೆ ನಾಕೌಟ್ ಪಂದ್ಯವಾಗಿದೆ.
Indore ಸಾವುಗಳ ತನಿಖೆಗೆ ಆಯೋಗ ನೇಮಿಸಿದ ಹೈಕೋರ್ಟ್
ಇಂದೋರ್, ಜ. 28: ಇಂದೋರ್ ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿ ಜನರು ಮೃತಪಟ್ಟಿರುವ ಘಟನೆಯ ಕುರಿತು ತನಿಖೆ ನಡೆಸಲು ಮಧ್ಯಪ್ರದೇಶ ಹೈಕೋರ್ಟ್ ಮಂಗಳವಾರ ಏಕ ಸದಸ್ಯ ಆಯೋಗವೊಂದನ್ನು ನೇಮಿಸಿದೆ. ಹೈಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಸುಶೀಲ್ ಕುಮಾರ್ ಗುಪ್ತರನ್ನು ಈ ಆಯೋಗದ ಮುಖ್ಯಸ್ಥರಾಗಿ ನ್ಯಾಯಾಲಯ ನೇಮಿಸಿದೆ. ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಸುಮಾರು 30 ಮಂದಿ ಮೃತಪಟ್ಟಿದ್ದು, 1,400ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಲ್ಲಿನ ನೀರನ್ನು ಪ್ರತಿದಿನ ಪರೀಕ್ಷಿಸಬೇಕು ಹಾಗೂ ಸಂತ್ರಸ್ತ ಪ್ರದೇಶಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ನಡೆಸಬೇಕು ಎಂದು ನ್ಯಾಯಾಲಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಭಗೀರಥಪುರದಲ್ಲಿ 23 ಸಾವುಗಳು ವರದಿಯಾಗಿವೆ ಎಂದು ರಾಜ್ಯ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ, ಈ ಪೈಕಿ ಕಲುಷಿತ ನೀರು ಸೇವನೆಯಿಂದ ಸಂಭವಿಸಿದ ಸಾವುಗಳ ಸಂಖ್ಯೆ 16 ಮಾತ್ರ ಎಂದು ಅದು ಹೇಳಿದೆ. ಆದರೆ, ಕಲುಷಿತ ನೀರು ಸೇವನೆಯಿಂದ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
Australian Open | ಜೊಕೊವಿಕ್, ಸಿನ್ನರ್ ಸೆಮಿ ಫೈನಲ್ ಗೆ
ಹೊಸದಿಲ್ಲಿ, ಜ.28: ಸರ್ಬಿಯಾದ ಸೂಪರ್ಸ್ಟಾರ್ ನೊವಾಕ್ ಜೊಕೊವಿಕ್ ಹಾಗೂ ವಿಶ್ವದ ನಂ.2 ಆಟಗಾರ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಥಳೀಯ ಫೇವರಿಟ್ ಬೆನ್ ಶೆಲ್ಟನ್ ಅವರನ್ನು 6–3, 6–4, 6–4 ನೇರ ಸೆಟ್ಗಳ ಅಂತರದಿಂದ ಮಣಿಸಿದ ಇಟಲಿ ಆಟಗಾರ ಸಿನ್ನರ್ ಸತತ ಮೂರನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆಲ್ಲುವ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದಾರೆ. ಮೆಲ್ಬರ್ನ್ ಪಾರ್ಕ್ನಲ್ಲಿ ಸತತ 19ನೇ ಪಂದ್ಯವನ್ನು ಗೆದ್ದುಕೊಂಡಿರುವ ಸಿನ್ನರ್ ಶುಕ್ರವಾರ ನಡೆಯಲಿರುವ ಸೆಮಿ ಫೈನಲ್ನಲ್ಲಿ ನೊವಾಕ್ ಜೊಕೊವಿಕ್ ಅವರನ್ನು ಎದುರಿಸಲಿದ್ದಾರೆ. ಗ್ರ್ಯಾನ್ಸ್ಲಾಮ್ ಟೂರ್ನಿಯಲ್ಲಿ 9ನೇ ಬಾರಿ ಹಾಗೂ ಆಸ್ಟ್ರೇಲಿಯನ್ ಓಪನ್ನಲ್ಲಿ ಮೂರನೇ ಬಾರಿ ಸೆಮಿ ಫೈನಲ್ಗೆ ಪ್ರವೇಶಿಸಿರುವ ಸಿನ್ನರ್ ಮುಂದಿನ ಸುತ್ತಿನಲ್ಲಿ ಹಿರಿಯ ಆಟಗಾರ ಜೊಕೊವಿಕ್ನಿಂದ ಕಠಿಣ ಸವಾಲು ಎದುರಿಸಲಿದ್ದಾರೆ. ಸಿನ್ನರ್ ಅವರು ಆಸ್ಟ್ರೇಲಿಯನ್ ಓಪನ್ (2024), ಫ್ರೆಂಚ್ ಓಪನ್ (2025) ಹಾಗೂ ವಿಂಬಲ್ಡನ್ (2025) ಚಾಂಪಿಯನ್ಶಿಪ್ಗಳ ಸೆಮಿ ಫೈನಲ್ನಲ್ಲಿ ಜೊಕೊವಿಕ್ ಅವರನ್ನು ಸೋಲಿಸಿದ್ದರು. ಮೂರನೇ ಬಾರಿ ಆಸ್ಟ್ರೇಲಿಯನ್ ಓಪನ್ ಕ್ವಾರ್ಟರ್ ಫೈನಲ್ಗೆ ತಲುಪಿದ್ದ ಶೆಲ್ಟನ್ ಈ ಹಿಂದಿನ ಪಂದ್ಯಗಳಂತೆಯೇ ಸಿನ್ನರ್ ವಿರುದ್ಧ ತಮ್ಮ ಶ್ರೇಷ್ಠ ಪ್ರದರ್ಶನ ನೀಡಲು ಪರದಾಡಿದರು. ಪ್ರಮುಖ ಟೂರ್ನಿಯಲ್ಲಿ ಸಿನ್ನರ್–ಶೆಲ್ಟನ್ ನಾಲ್ಕನೇ ಬಾರಿ ಮುಖಾಮುಖಿಯಾಗಿದ್ದು, ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್ನಲ್ಲಿ ತಲಾ ಎರಡು ಬಾರಿ ಸೇರಿ ಪ್ರತಿಬಾರಿಯೂ ಸಿನ್ನರ್ ಜಯ ಸಾಧಿಸಿದ್ದಾರೆ. ಇಟಲಿಯ ಲೊರೆನ್ಜೋ ಮುಸೆಟ್ಟಿ ಗಾಯದ ಸಮಸ್ಯೆಯ ಕಾರಣದಿಂದ ಆಸ್ಟ್ರೇಲಿಯನ್ ಓಪನ್ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಎದುರಾಳಿ ಜೊಕೊವಿಕ್ ಮುಂದಿನ ಸುತ್ತಿಗೆ ಅರ್ಹತೆ ಪಡೆದರು. ಮುಸೆಟ್ಟಿ ಗಾಯಗೊಂಡು ನಿವೃತ್ತಿಯಾದಾಗ 24 ಬಾರಿ ಗ್ರ್ಯಾನ್ಸ್ಲಾಮ್ ಚಾಂಪಿಯನ್ ಜೊಕೊವಿಕ್ ವಿರುದ್ಧ ಮೊದಲ ಎರಡು ಸೆಟ್ಗಳನ್ನು 6–4, 6–3 ಅಂತರದಿಂದ ಗೆದ್ದಿದ್ದರು. ಮೂರನೇ ಸೆಟ್ ವೇಳೆ ಮುಸೆಟ್ಟಿಗೆ ಗಾಯ ತೀವ್ರವಾಗಿದ್ದು, ಬಲಗಾಲಿಗೆ ದೀರ್ಘಕಾಲ ವೈದ್ಯಕೀಯ ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗಲಿಲ್ಲ. ಜೊಕೊವಿಕ್ ತಮ್ಮ ಅದೃಷ್ಟದ ಮೈದಾನದಲ್ಲಿ ಸಂಭಾವ್ಯ ಸೋಲಿನಿಂದ ಪಾರಾಗಿದ್ದಾರೆ. 10 ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದಿರುವ ಜೊಕೊವಿಕ್ 25ನೇ ಗ್ರ್ಯಾನ್ಸ್ಲಾಮ್ ಟ್ರೋಫಿ ಜಯಿಸಿ ಮಾರ್ಗರೆಟ್ ಕೋರ್ಟ್ ಅವರ ದಾಖಲೆಯನ್ನು ಮುರಿಯುವ ವಿಶ್ವಾಸದಲ್ಲಿದ್ದಾರೆ. ಇದಕ್ಕೂ ಮೊದಲು ನಾಲ್ಕನೇ ಸುತ್ತಿನ ಎದುರಾಳಿ ಜಾಕಬ್ ಮೆನ್ಸಿಕ್ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಜೊಕೊವಿಕ್ ಒಂದೂ ಎಸೆತವನ್ನಾಡದೆ ಕ್ವಾರ್ಟರ್ ಫೈನಲ್ಗೆ ತಲುಪಿದ್ದರು. ► ಜೆಸ್ಸಿಕಾ, ರೈಬಾಕಿನಾ ಸೆಮಿ ಫೈನಲ್ ಗೆ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ ಜೆಸ್ಸಿಕಾ ಪೆಗುಲಾ ಹಾಗೂ ಕಝಕ್ಸ್ತಾನದ ಎಲೆನಾ ರೈಬಾಕಿನಾ ಸೆಮಿ ಫೈನಲ್ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಅಮೆರಿಕ ಆಟಗಾರ್ತಿಯರ ನಡುವಿನ ಕ್ವಾರ್ಟರ್ ಫೈನಲ್ನಲ್ಲಿ ಪೆಗುಲಾ ತಮ್ಮದೇ ದೇಶದ ಅಮಂಡಾ ಅನಿಸಿಮೋವಾವರನ್ನು 6–2, 7–6 (7/1) ಸೆಟ್ಗಳ ಅಂತರದಿಂದ ಮಣಿಸಿದರು. ಮೆಲ್ಬರ್ನ್ನಲ್ಲಿ ಅಜೇಯವಾಗಿ ಮುಂದುವರೆದಿರುವ ಪೆಗುಲಾ ತಮ್ಮ ಚೊಚ್ಚಲ ಗ್ರ್ಯಾನ್ಸ್ಲಾಮ್ ಪ್ರಶಸ್ತಿ ಗೆಲ್ಲುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. 2024ರ ಯು.ಎಸ್. ಓಪನ್ ಫೈನಲ್ನಲ್ಲಿ ಆರ್ಯನಾ ಸಬಲೆಂಕಾ ವಿರುದ್ಧ ಸೋಲು ಅನುಭವಿಸಿದ್ದ ಪೆಗುಲಾ ಈ ಬಾರಿ ಪ್ರಶಸ್ತಿ ಕನಸು ಕಟ್ಟಿದ್ದಾರೆ. ಹಾಲಿ ಚಾಂಪಿಯನ್ ಮ್ಯಾಡಿಸನ್ ಕೀಸ್ ಅವರನ್ನು ಮಣಿಸಿದ ಬಳಿಕ ಇದೇ ಮೊದಲ ಬಾರಿ ಪೆಗುಲಾ ಆಸ್ಟ್ರೇಲಿಯನ್ ಓಪನ್ ಸೆಮಿ ಫೈನಲ್ಗೆ ತಲುಪಿದ್ದಾರೆ. ಅನಿಸಿಮೋವಾ ವಿರುದ್ಧ ಆಡಿದ ಹಿಂದಿನ ಮೂರೂ ಪಂದ್ಯಗಳಲ್ಲೂ ಪೆಗುಲಾ ಜಯ ಸಾಧಿಸಿದ್ದರು. 31 ವರ್ಷದ ಪೆಗುಲಾ ಸೆಮಿ ಫೈನಲ್ನಲ್ಲಿ ಐದನೇ ಶ್ರೇಯಾಂಕದ ಎಲೆನಾ ರೈಬಾಕಿನಾ ಅವರನ್ನು ಎದುರಿಸಲಿದ್ದಾರೆ. ಮತ್ತೊಂದು ಸೆಮಿ ಫೈನಲ್ನಲ್ಲಿ ವಿಶ್ವದ ನಂ.1 ಆಟಗಾರ್ತಿ ಆರ್ಯನಾ ಸಬಲೆಂಕಾ 12ನೇ ಶ್ರೇಯಾಂಕದ ಎಲಿನಾ ಸ್ವಿಟೋಲಿನಾರೊಂದಿಗೆ ಸೆಣಸಾಡಲಿದ್ದಾರೆ.
ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ ಘೋರ ಪರಿಣಾಮ ಎದುರಿಸಬೇಕು: ಇರಾನ್ಗೆ ಟ್ರಂಪ್ ಎಚ್ಚರಿಕೆ
ವಾಷಿಂಗ್ಟನ್, ಜ.28: ಪರಮಾಣು ಶಸ್ತ್ರಾಸ್ತ್ರ ತ್ಯಜಿಸುವ ಒಪ್ಪಂದದ ಬಗ್ಗೆ ತಕ್ಷಣ ಮಾತುಕತೆಗೆ ಮುಂದಾಗದಿದ್ದರೆ, ಇರಾನ್ ಮೇಲೆ ಮುಂದಿನ ದಾಳಿ ಅತ್ಯಂತ ಮಾರಕವಾಗಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ವಿಮಾನವಾಹಕ ಯುದ್ಧನೌಕೆಗಳ ಮತ್ತೊಂದು ತಂಡ ಇರಾನ್ ಕಡೆಗೆ ಮುಂದುವರಿದಿದ್ದು, ‘ಅಗತ್ಯವಿದ್ದರೆ ವೇಗವಾಗಿ ಮಾರಕ ಹೊಡೆತ ನೀಡಲು ಸಿದ್ಧವಾಗಿದೆ’ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಪರಮಾಣು ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದಂತೆ ನ್ಯಾಯಯುತ ಮತ್ತು ಸಮಾನ ಒಪ್ಪಂದಕ್ಕಾಗಿ ಇರಾನ್ ಮಾತುಕತೆಗೆ ಮುಂದಾಗಬೇಕು. ಸಮಯ ಅಮೂಲ್ಯವಾಗಿದೆ’ ಎಂದು ಅವರು ಆಗ್ರಹಿಸಿದ್ದಾರೆ. ‘ಪರಮಾಣು ಅಸ್ತ್ರ ಹೊಂದುವುದಿಲ್ಲ’ ಎಂಬ ನ್ಯಾಯಯುತ ಒಪ್ಪಂದಕ್ಕೆ ಇರಾನ್ ಸಹಿ ಹಾಕುವುದು ಎಲ್ಲರಿಗೂ ಒಳ್ಳೆಯದು. ಇರಾನ್ ಹಿಂದಿನ ತಪ್ಪುಗಳನ್ನು ಪುನರಾವರ್ತಿಸುವುದಿಲ್ಲ ಎಂಬ ನಿರೀಕ್ಷೆಯಿದೆ ಎಂದು ಟ್ರಂಪ್ ಹೇಳಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಪ್ರಕರಣ | ಬಾಂಗ್ಲಾ ಮೂಲದ ತಮೀಮ್ ರೆಹಮಾನ್ಗೆ ಜೈಲು ಶಿಕ್ಷೆ ವಿಧಿಸಿದ ಶ್ರೀಲಂಕಾ ನ್ಯಾಯಾಲಯ
ಕೊಲಂಬೊ, ಜ.28: ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ಶ್ರೀಲಂಕಾ ನ್ಯಾಯಾಲಯವು ದೇಶೀಯ ಟಿ–20 ಲೀಗ್ ತಂಡದ ಮಾಲಿಕನಿಗೆ ಬುಧವಾರ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸುದ್ದಿಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಬಾಂಗ್ಲಾದೇಶ ಮೂಲದ, ಬ್ರಿಟನ್ ಪ್ರಜೆ ಹಾಗೂ ಡಾಂಬುಲ್ಲಾ ಥಂಡರ್ಸ್ ಫ್ರಾಂಚೈಸಿಯ ಮಾಲಿಕ ತಮೀಮ್ ರೆಹಮಾನ್ ಪಂದ್ಯಾವಳಿಯ ಸಮಯದಲ್ಲಿ ಆಟಗಾರನ ಮೇಲೆ ಪ್ರಭಾವ ಬೀರುವ ಹಾಗೂ ಬೆಟ್ಟಿಂಗ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದ ಆರೋಪವನ್ನು ಒಪ್ಪಿಕೊಂಡಿದ್ದಾರೆ. ರೆಹಮಾನ್ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಕೊಲಂಬೊ ಹೈಕೋರ್ಟ್ 24 ಮಿಲಿಯನ್ ಶ್ರೀಲಂಕಾ ರೂಪಾಯಿ (80,000 ಯುಎಸ್ ಡಾಲರ್) ದಂಡವನ್ನೂ ವಿಧಿಸಿದೆ. ಶ್ರೀಲಂಕಾದಲ್ಲಿ ಕ್ರೀಡಾ ಭ್ರಷ್ಟಾಚಾರ ತಡೆಯಲು 2019ರಲ್ಲಿ ಜಾರಿಗೆ ತಂದ ಕಠಿಣ ಕಾನೂನಿನ ಅಡಿಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ಆಟಗಾರನೊಬ್ಬ ನೀಡಿದ ದೂರಿನ ಮೇರೆಗೆ 2024ರಲ್ಲಿ ದುಬೈಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ರೆಹಮಾನ್ ಅವರನ್ನು ಕೊಲಂಬೊ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗುವ ಮುನ್ನ ಅವರು ಹಲವು ವಾರಗಳ ಕಾಲ ಕಸ್ಟಡಿಯಲ್ಲಿ ಇದ್ದರು.
ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಪತ್ನಿಗೆ ಜೈಲುಶಿಕ್ಷೆ
ಸಿಯೋಲ್, ಜ.28: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ಯೂನ್ ಸುಕ್ ಯೆಯೋಲ್ ಅವರ ಪತ್ನಿ, ಮಾಜಿ ಪ್ರಥಮ ಮಹಿಳೆ ಕಿಮ್ ಕಿಯೊನ್ ಹೀ ಅವರಿಗೆ ಸ್ಥಳೀಯ ನ್ಯಾಯಾಲಯ ಬುಧವಾರ 1 ವರ್ಷ 8 ತಿಂಗಳ ಜೈಲುಶಿಕ್ಷೆ ವಿಧಿಸಿದೆ. 8,990 ಡಾಲರ್ ದಂಡ ಪಾವತಿಸುವ ಜೊತೆಗೆ, ಲಂಚದ ರೂಪದಲ್ಲಿ ಸ್ವೀಕರಿಸಿದ್ದ ವಜ್ರದ ನೆಕ್ಲೇಸ್ ಅನ್ನು ಸರಕಾರಿ ಖಜಾನೆಗೆ ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ. ಆದರೆ ಷೇರು ಮಾರುಕಟ್ಟೆಯಲ್ಲಿ ಪ್ರಭಾವ ಬೀರಿ ಲಾಭ ಗಳಿಸಿರುವುದು ಹಾಗೂ ರಾಜಕೀಯ ನಿಧಿ ಕಾಯ್ದೆ ಉಲ್ಲಂಘನೆಯ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ವರದಿಯಾಗಿದೆ.
ತಿಂಗಳಲ್ಲಿ ಇ-ಸ್ವತ್ತು ತಂತ್ರಾಂಶದ ಸಮಸ್ಯೆ ಇತ್ಯರ್ಥ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜ.28: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ಇನ್ನೊಂದು ತಿಂಗಳಲ್ಲಿ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕಿರಣ್ಕುಮಾರ್ ಕೂಡ್ಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಹೊಸ ತಂತ್ರಾಂಶ ಅಳವಡಿಸಿದ ಹಿನ್ನೆಲೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿವೆ. ಅಲ್ಲದೆ, ಸಮಸ್ಯೆಗಳನ್ನು ಪರಿಹರಿಸಿ ಉನ್ನತ್ತಿಕರಿಸುವ ನಿಟ್ಟಿನಲ್ಲಿ ಇಲಾಖೆ ಎಲ್ಲ ಪ್ರಯತ್ನಗಳನ್ನು ನಡೆಸಿದೆ. ಆದರೆ, ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್ಐಸಿ) ಕೇಂದ್ರ ಐಟಿ ಇಲಾಖೆ ಅಡಿಯಲ್ಲಿ ಬರುತ್ತಿದ್ದು, ಅವರಿಗೆ ಪತ್ರವನ್ನು ಬರೆಯಲಾಗಿದೆ ಎಂದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಇ-ಸ್ವತ್ತಿನಲ್ಲಿ ಸುಧಾರಣೆ, ಸಬಲೀಕರಣ ಮತ್ತು ಸರಳೀಕರಣವನ್ನು ಗಮನದಲ್ಲಿಟ್ಟುಕೊಂಡು ಇ-ಸ್ವತ್ತು 2.0 ತಂತ್ರಾಂಶವನ್ನು ಅಳವಡಿಸಲಾಗಿದೆ. ಇದರಲ್ಲಿ ಕೆಲ ಸಮಸ್ಯೆಗಳಿದ್ದು ಅದನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ವಹಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಸಾರ್ವಜನಿಕರು ಮತ್ತು ಬಳಕೆದಾರರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಭಾರತ ವಿರೋಧಿ ನಖ್ವಿ ವಿರುದ್ಧ ಸಿಡಿದೆದ್ದ ಪಾಕ್ ಕ್ರಿಕೆಟ್ ಲೆಜೆಂಡ್ಸ್! ಇಂಜಮಾಮ್, ರಶೀದ್ ಸೇರಿ ಹಲವರು ಕಿಡಿ
ಟಿ20 ವಿಶ್ವಕಪ್ ವಿವಾದ ಒಂದು ಹಂತಕ್ಕೆ ಬಂದಿದೆ. ಬಾಂಗ್ಲಾದೇಶವನ್ನು ಟೂರ್ನಿಯಿಂದ ಆಚೆಗಟ್ಟಲಾಗಿದೆ. ಇದರಿಂದ ಕ್ಷುದ್ಧಗೊಂಡಿರುವ ಪಾಕಿಸ್ತಾನ, ತಾನೂ ಟಿ20 ವಿಶ್ವಕಪ್ ನಲ್ಲಿ ಆಡುವುದು ಅನುಮಾನ ಎಂತಲೂ, ಒಂದೊಮ್ಮೆ ಆಡಿದರೆ, ತಾನು ಭಾರತದ ವಿರುದ್ಧ ಆಡುವುದಿಲ್ಲ ಎಂತಲೂ ಕ್ಯಾತೆ ತಗೆದಿದೆ. ಈ ಬಗ್ಗೆ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷರಾದ ಮೊಹ್ಸಿನ್ ನಖ್ವಿ ವಿರುದ್ಧ ಈಗ ಪಾಕಿಸ್ತಾನದ ಸ್ಟಾರ್ ಆಟಗಾರರು ಒಗ್ಗಟ್ಟಾಗಿದ್ದಾರೆ.
ಕಲಬುರಗಿ | ಹೃದಯಾಘಾತದಿಂದ ಎಇಇ ನಾಗಮೂರ್ತಿ ಶೀಲವಂತ್ ಮೃತ್ಯು
ಕಲಬುರಗಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಜೇವರ್ಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಬ್ಬರು(ಎಇಇ) ಬುಧವಾರ ಹೃದಯಾಘಾತದಿಂದಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಜೇವರ್ಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾಗಿ ಹಾಗೂ ಕಾಳಗಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಾಗಮೂರ್ತಿ ಶೀಲವಂತ್ (45) ಮೃತಪಟ್ಟ ಅಧಿಕಾರಿಯಾಗಿದ್ದಾರೆ. ಅವರು ಕಲಬುರಗಿ ನಗರದ ಹೌಸಿಂಗ್ ರ್ಬೋಡ್ ಕಾಲನಿಯಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಆಳಂದ ತಾಲೂಕಿನ ಲಾಡಚಿಂಚೋಳಿ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಗುರುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಐಸಿಸಿ T20 ರ್ಯಾಂಕಿಂಗ್ | 5 ಸ್ಥಾನ ಭಡ್ತಿ ಪಡೆದ ಸೂರ್ಯಕುಮಾರ್
ದುಬೈ, ಜ.28: ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ನ್ಯೂಝಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಬಿಡುಗಡೆಯಾದ ಪುರುಷರ ಐಸಿಸಿ ಟಿ–20 ರ್ಯಾಂಕಿಂಗ್ನಲ್ಲಿ ಐದು ಸ್ಥಾನಗಳ ಭಡ್ತಿ ಪಡೆದು ಏಳನೇ ಸ್ಥಾನಕ್ಕೇರಿದ್ದಾರೆ. ವಿಶ್ವದ ಮಾಜಿ ನಂ.1 ಬ್ಯಾಟರ್ ಸೂರ್ಯಕುಮಾರ್ ಟಿ–20 ಸರಣಿಯಲ್ಲಿ 32, ಔಟಾಗದೆ 82 ಹಾಗೂ ಔಟಾಗದೆ 57 ರನ್ಗಳನ್ನು ಗಳಿಸಿದ್ದರು. ಟಿ–20 ವಿಶ್ವಕಪ್ ಆರಂಭಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಅಭಿಷೇಕ್ ಶರ್ಮಾ ಹಾಗೂ ತಿಲಕ್ ವರ್ಮಾ ಅವರು ಕ್ರಮವಾಗಿ ಮೊದಲನೇ ಹಾಗೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ರಾಯ್ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ 32 ಎಸೆತಗಳಲ್ಲಿ 76 ರನ್ ಗಳಿಸಿದ್ದ ಇಶಾನ್ ಕಿಶನ್ 64ನೇ ಸ್ಥಾನಕ್ಕೇರಿದ್ದಾರೆ. ಶಿವಂ ದುಬೆ (9 ಸ್ಥಾನಗಳ ಭಡ್ತಿ, 58ನೇ ಸ್ಥಾನ) ಹಾಗೂ ರಿಂಕು ಸಿಂಗ್ (13 ಸ್ಥಾನಗಳ ಭಡ್ತಿ, 68ನೇ ಸ್ಥಾನ) ಕೂಡ ರ್ಯಾಂಕಿಂಗ್ನಲ್ಲಿ ಏರಿಕೆ ಕಂಡಿದ್ದಾರೆ. ಟಿ–20 ಬೌಲಿಂಗ್ ರ್ಯಾಂಕಿಂಗ್ನಲ್ಲಿ ಅಫ್ಘಾನಿಸ್ತಾನದ ಸ್ಪಿನ್ನರ್ ಮುಜೀಬುರ್ರಹ್ಮಾನ್ ಐದು ಸ್ಥಾನಗಳ ಭಡ್ತಿ ಪಡೆದು 9ನೇ ಸ್ಥಾನಕ್ಕೇರಿದ್ದಾರೆ. ಭಾರತದ ಜಸ್ಪ್ರೀತ್ ಬುಮ್ರಾ (4 ಸ್ಥಾನಗಳ ಭಡ್ತಿ, 13ನೇ ಸ್ಥಾನ) ಹಾಗೂ ರವಿ ಬಿಷ್ಣೋಯಿ (13 ಸ್ಥಾನಗಳ ಭಡ್ತಿ, 19ನೇ ಸ್ಥಾನ) ಕೂಡ ರ್ಯಾಂಕಿಂಗ್ನಲ್ಲಿ ಮೇಲೇರಿದ್ದಾರೆ. ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದಿರುವ ಭಾರತದ ಹಾರ್ದಿಕ್ ಪಾಂಡ್ಯ 18 ಸ್ಥಾನಗಳ ಭಡ್ತಿ ಪಡೆದು 59ನೇ ಸ್ಥಾನ ತಲುಪಿದ್ದಾರೆ.
ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ: ಟ್ರಂಪ್
ವಾಷಿಂಗ್ಟನ್, ಜ.28: ಕ್ಯೂಬಾ ಪತನದ ಅಂಚಿನಲ್ಲಿದೆ. ಈ ಹಿಂದಿನಂತೆ ಇನ್ನು ಮುಂದೆ ಆ ರಾಷ್ಟ್ರಕ್ಕೆ ವೆನೆಝುವೆಲಾದಿಂದ ತೈಲ ಅಥವಾ ಆರ್ಥಿಕ ನೆರವು ದೊರಕುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ದೀರ್ಘಕಾಲದ ಬೆಂಬಲಿಗ ವೆನೆಝುವೆಲಾದಿಂದ ತೈಲ ಮತ್ತು ಹಣ ಕ್ಯೂಬಾಗೆ ತಲುಪದಂತೆ ತಡೆಯುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ವೆನೆಝುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾ ಸೆರೆಹಿಡಿದ ಬಳಿಕ, ಮಾಜಿ ಉಪಾಧ್ಯಕ್ಷೆ ಡೆಲ್ಸಿ ರೋಡ್ರಿಗಸ್ ಅವರನ್ನು ಮಧ್ಯಂತರ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದ್ದು, ಅವರು ಅಮೆರಿಕಾದ ಮೇಲ್ವಿಚಾರಣೆಯಲ್ಲಿ ದೇಶದ ಆಡಳಿತವನ್ನು ನಿರ್ವಹಿಸುತ್ತಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ. ಕ್ಯೂಬಾವು ಅಮೆರಿಕಾದೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಟ್ರಂಪ್ ಈ ತಿಂಗಳ ಆರಂಭದಲ್ಲಿ ನೀಡಿದ್ದ ಸಲಹೆಯನ್ನು ಕ್ಯೂಬಾ ಅಧ್ಯಕ್ಷರು ತಿರಸ್ಕರಿಸಿದ್ದು, ಒಪ್ಪಂದಕ್ಕೆ ಒತ್ತಾಯಿಸುವ ನೈತಿಕ ಅಧಿಕಾರ ಅಮೆರಿಕಾಕ್ಕೆ ಇಲ್ಲ ಎಂದು ಅವರು ಹೇಳಿದ್ದಾರೆ.

24 C