ಶಹಾಪುರ | ಗ್ರಾಮದ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ : ಲವೀಶ್ ಒರಡಿಯಾ
ಶಹಾಪುರ: ಗ್ರಾಮದ ಸ್ವಚ್ಛತೆ, ನೈರ್ಮಲ್ಯ, ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಜನರಿಗೆ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು. ಜ.30ರಂದು ಶಹಾಪುರ ತಾಲೂಕಿನ ಬೀರನೂರು ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿ, ಗ್ರಾಮದ ಸಾರ್ವಜನಿಕರ ಕುಂದು-ಕೊರತೆಗಳ ಅಹ್ವಾಲುಗಳನ್ನು ಪರಿಶೀಲಿಸಿದ ಅವರು, ಗ್ರಾಮದಲ್ಲಿ ಸ್ವಚ್ಛ ನೈರ್ಮಲ್ಯ ಕಾಪಾಡಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮವಹಿಸಿ ಎಂದರು. ಚರಂಡಿಗಳಲ್ಲಿ ನೀರು ನಿಲ್ಲಂದತೆ ತುಂಬಿದ ಹೂಳನ್ನು ತೆಗೆದು ಸ್ವಚ್ಛಗೊಳಿಸಿ, ನಳಗಳ ಮೂಲಕ ಪೂರೈಕೆ ಮಾಡುವ ಕುಡಿಯುವ ನೀರು, ಟ್ಯಾಪ್ ಇಲ್ಲದ ನಳಗಳಿಂದ ಸೂರಿಕೆಯಾಗುವುದನ್ನು ತಡೆಯಲು ನಳದ ಮಾಲಕರಿಗೆ ಟ್ಯಾಪ್ ಅಳವಡಿಕೆ ಮಾಡಿ, ನೀರು ಪೊಲಾಗದಂತೆ ನೀಗಾವಹಿಸಿ ಎಂದು ತಿಳಿಸಲು ಸೂಚಿಸಿದರು. ಬಳಿಕ, ಬೀರನೂರು ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ, ಶಾಲಾ ಕಟ್ಟಡದ ಭೌತಿಕ ಸ್ಥಿತಿ ವೀಕ್ಷಿಸಿದರು. ಈ ವೇಳೆ ಶಹಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ಸಹಾಯಕ ನಿರ್ದೇಶಕರಾದ ಶಾರದಮ್ಮ ನಾಗ್ಲೋಟ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಶಂಕರ, ಬೀರನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ ಮೌರ್ಯ, ನರೇಗಾ ಸಹಾಯಕ ಇಂಜಿನಿಯರ್ ವೆಂಕಟರಡ್ಡಿ, ಗ್ರಾಮ ಪಂಚಾಯಿತಿ ಸದಸ್ಯ ಮರೆಪ್ಪ ಬೇಗಾರ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.
ಬೀದರ್ | ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಿ : ಮಾಣಿಕರಾವ್ ಪಾಟೀಲ್
ಬೀದರ್, ಜ.30: ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದ್ದಾರೆ. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಸಾರ್ವಜನಿಕರ ಮೇಲಿನ ನಾಯಿಗಳ ದಾಳಿಯನ್ನು ತಡೆಯಬೇಕು. ಸಾರ್ವಜನಿಕ ಶೌಚಾಲಯಗಳು ಮುಕ್ತ ಉಪಯೋಗಕ್ಕೆ ಅನುವುಮಾಡಿಕೊಡಬೇಕು. ಕರ ವಸೂಲಾತಿಗೆ ಹೆಚ್ಚು ಒತ್ತು ನೀಡಬೇಕು ಎಂದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಸಂಜುಕುಮಾರ್ ಹಾಗೂ ಸುದೇಶ್ ಕೊಡೆ, ಅಧಿಕಾರಿಗಳು ಉಪಸ್ಥಿತರಿದ್ದರು.
ಬೀದರ್ | ವಿಬಿ ಜಿ ರಾಮ್ ಜಿ ಮಸೂದೆ ಹಿಂಪಡೆದು ಮನರೇಗಾ ಪುನರ್ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ
ಬೀದರ್ : ವಿಬಿ ಜಿ ರಾಮ್ ಜಿ ಮಸೂದೆಯನ್ನು ಹಿಂಪಡೆದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನು (ಮನರೇಗಾ)ಯನ್ನು ಪುನರ್ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನರೇಗಾ ಉಳಿಸಿ ಆಂದೋಲನದ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಮನರೇಗಾ ಕಾರ್ಮಿಕರು, ವಿಬಿ ಜಿ ರಾಮ್ ಜಿ ಮಸೂದೆ ವಿರೋಧಿಸಿ ಘೋಷಣೆಗಳನ್ನು ಕೂಗಿದರು. ನಂತರ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರದಲ್ಲಿ, ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕಾಗಿದ್ದ ಮನರೇಗಾ ಕಾನೂನನ್ನು ರದ್ದುಗೊಳಿಸಿ, ಉದ್ಯೋಗವನ್ನು ಕೇಂದ್ರ ಸರ್ಕಾರದ ಮರ್ಜಿಗೆ ಒಳಪಡಿಸುವ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿಸುವ ವಿಬಿ ಜಿ ರಾಮ್ ಜಿ ಕಾನೂನಿಗೆ ನಮ್ಮ ಸಂಪೂರ್ಣ ವಿರೋಧವಿದೆ ಎಂದು ತಿಳಿಸಲಾಗಿದೆ. ಕನಿಷ್ಠ ವೇತನದ ಹಕ್ಕನ್ನು ಬದಿಗೊತ್ತಿ, ಕೇಂದ್ರ ಸರ್ಕಾರವೇ ನಿರ್ಧರಿಸುವ ವೇತನ ಹಾಗೂ ಕೆಲಸ ಕಾಮಗಾರಿಗಳ ಮೂಲಕ ವಲಸೆಯನ್ನು ಉತ್ತೇಜಿಸಿ, ಕಾರ್ಮಿಕರನ್ನು ಗುತ್ತಿಗೆದಾರರಿಗೆ ಅಗ್ಗದ ಕೂಲಿಗೆ ಪೂರೈಸುವ ಈ ಕಾನೂನನ್ನು ತಿರಸ್ಕರಿಸುತ್ತೇವೆ ಎಂದು ಅವರು ಹೇಳಿದರು. ಇದೇ ವೇಳೆ, ಜ.26ರಂದು ನಡೆದ ಗ್ರಾಮಸಭೆಯಲ್ಲಿ ಹೊಸ ಕಾನೂನು ವಿರೋಧಿಸಿ ಸರ್ವಾನುಮತದಿಂದ ಠರಾವು ಅಂಗೀಕರಿಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಬೇಡಿಕೆ ಆಧಾರಿತ, ಸಾರ್ವತ್ರಿಕ ಹಾಗೂ ಉದ್ಯೋಗದ ಹಕ್ಕು ಒದಗಿಸುವ ಮನರೇಗಾ ಕಾನೂನನ್ನು ಮರುಸ್ಥಾಪಿಸಬೇಕು ಹಾಗೂ ವಿಬಿ ಜಿ ರಾಮ್ ಜಿ ಕಾನೂನನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಪ್ನದೀಪಾ, ಗೀತಾ, ಸುಶೀಲಾ, ಸುರೇಖಾ, ರೇಷ್ಮಾ, ಲೋಕೇಶ್ ಸೇರಿದಂತೆ ನೂರಾರು ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ‘ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ಮಾಡಲು ನಮ್ಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕರೇ ಸಾಕು. ತಾವು ಬಂದು ವಾಸ್ತವಾಂಶಗಳನ್ನು ನೇರವಾಗಿ ಅವರೊಂದಿಗೆ ಚರ್ಚಿಸಿ. ಅದನ್ನು ಬಿಟ್ಟು ನಿರಂತರವಾಗಿ ಟ್ವೀಟ್ ಮಾಡುತ್ತಲೇ ಇರುತ್ತೀರಾ?’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಉದ್ಯಮಿ ಮೋಹನ್ ದಾಸ್ ಪೈ ಅವರನ್ನು ಪ್ರಶ್ನಿಸಿದ್ದಾರೆ. ಶುಕ್ರವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ರಾಮಲಿಂಗಾರೆಡ್ಡಿ, ‘ನಿಮ್ಮ(ಮೋಹನ್ದಾಸ್ ಪೈ) ದೃಷ್ಟಿಕೋನವು ಕೇವಲ ಪಕ್ಷಪಾತವಲ್ಲ, ಅದು ಮೂಲಭೂತವಾಗಿ ಹಠಮಾರಿ ಧೋರಣೆಯನ್ನು ಹೊಂದಿದೆ. ನೀವು ಬ್ಯಾಲೆನ್ಸ್ ಶೀಟ್ ಅನ್ನು ನೋಡುತ್ತೀರಿ. ಆದರೆ ನಾನು 1.5 ಕೋಟಿ ನಾಗರಿಕರನ್ನು ನೋಡುತ್ತೇನೆ ಎಂದು ಉಲ್ಲೇಖಿಸಿದ್ದಾರೆ. ‘ನಾವು ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ಯ ಮೂಲಕ ಮಹಿಳೆಯರಿಗೆ 650 ಕೋಟಿಗೂ ಅಧಿಕ ಉಚಿತ ಪ್ರಯಾಣವನ್ನು ನೀಡಿದ್ದೇವೆ. ಇದು ಕೇವಲ ‘ಯೋಜನೆ’ ಅಲ್ಲ, ಬದಲಾಗಿ ಭಾರತದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಚಲನಶೀಲತೆಯ ನೇತೃತ್ವದ ಆರ್ಥಿಕ ಸಬಲೀಕರಣವಾಗಿದೆ’ ಎಂದು ಅವರು ಗಮನ ಸೆಳೆದಿದ್ದಾರೆ. ‘ರಾಜ್ಯದಲ್ಲಿ ಶೇ.98 ಹಳ್ಳಿಗಳು ಬಸ್ ಸಂಪರ್ಕವನ್ನು ಹೊಂದಿವೆ. ದೂರದ ಹಳ್ಳಿಯ ವಿದ್ಯಾರ್ಥಿ ಮತ್ತು ಗ್ರಾಮೀಣ ನಾಗರಿಕರಿಗೆ ಬಸ್ ಸೇವೆಯನ್ನು ಕಲ್ಪಿಸುತ್ತಿರುವುದರಿಂದ ಶೇ.30ರಷ್ಟು ಮಾರ್ಗಗಳಲ್ಲಿ ನಷ್ಟವಾಗುತ್ತಿವೆ. ಶೇ.30ರಷ್ಟು ಲಾಭವೂ ಇಲ್ಲ ನಷ್ಟವೂ ಇಲ್ಲದಂತಾಗಿದೆ. ಉಳಿದ ಶೇ.40ರಷ್ಟು ಪ್ರಯಾಣದ ಮಾರ್ಗಗಳು ಲಾಭವನ್ನು ನೀಡುತ್ತಿವೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ 26,054 ಸರಕಾರಿ ಬಸ್ಗಳನ್ನು ಕಾರ್ಯಚರಣೆ ನಡೆಸುತ್ತಿವೆ. ಬೆಂಗಳೂರಿನಲ್ಲಿಯೇ ನಾವು ಪ್ರತಿದಿನ ಸುಮಾರು 45 ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದೇವೆ. ನಗರದಲ್ಲಿ 1,686 ಎಲೆಕ್ಟ್ರಿಕ್ ಬಸ್ಗಳನ್ನು ಒಳಗೊಂಡಂತೆ 7,108 ಬಸ್ಗಳಲ್ಲಿ ಪ್ರಯಾಣಿಕರು ಪ್ರಯಾಣಿಸಲಿದ್ದು, ಇದು ಭಾರತದಲ್ಲಿಯೇ ದಾಖಲೆಯನ್ನು ಸೃಷ್ಟಿಸಿದೆ. ಈ ಪ್ರಮಾಣ ಮತ್ತು ದಕ್ಷತೆಗೆ ಹೊಂದಿಕೆಯಾಗುವ ಪ್ರಧಾನಿ ಮೋದಿಯವರ ತವರು ರಾಜ್ಯ ಗುಜರಾತ್ ಸೇರಿದಂತೆ ಬಿಜೆಪಿ ಆಡಳಿತವಿರುವ ಒಂದೇ ಒಂದು ನಗರ ಅಥವಾ ರಾಜ್ಯವನ್ನು ನನಗೆ ತೋರಿಸಿ ಎಂದು ಅವರು ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ. ಖಾಸಗಿ ಮಾಲತ್ವದಲ್ಲಿ ನಡೆಯುವ ಉದ್ಯಮಗಳು ಲಾಭದ ಕುಸಿತ ಕಂಡ ತಕ್ಷಣ ಮುಚ್ಚುತ್ತವೆ. ಆದರೆ ದಿನಗೂಲಿ ಪಡೆಯುವ ಬೆಂಗಳೂರಿನ ಸಾಮಾನ್ಯ ವ್ಯಕ್ತಿಗೆ ಅದು ಹೇಗೆ ಸಹಾಯ ಮಾಡುತ್ತದೆ? ಖಾಸಗಿ ಏಕಸ್ವಾಮ್ಯವು ಬಡವರ ಮೇಲೆ ಹೊರೆ ಹಾಕಲಿದೆ. ಸಾರ್ವಜನಿಕ ಸಾರಿಗೆ ಒಂದು ಹಕ್ಕು, ಐಷಾರಾಮಿ ಅಲ್ಲ ಅವರು ಹೇಳಿದ್ದಾರೆ. Mr. @TVMohandasPai , Our BMTC MD is enough to handle a face-to-face debate with you on any platform. Kindly come and discuss the facts with them directly. Are you ready to step up, or will you just keep tweeting? Your view is not just biased—it is fundamentally dogmatic. You… https://t.co/F2nR7Tk1yN — Ramalinga Reddy (@RLR_BTM) January 29, 2026 ‘ಬಿಜೆಪಿ ಅಧಿಕಾರಾವಧಿಯಲ್ಲಿ (2019-2023), ಸಾರಿಗೆ ನಿಗಮಗಳು ಶೋಚನೀಯ ಸ್ಥಿತಿಯಲ್ಲಿದ್ದಾಗ, ನೀವು ಒಂದೇ ಒಂದು ಪ್ರಶ್ನೆಯನ್ನು ಏಕೆ ಎತ್ತಲಿಲ್ಲ? ಜನಪರ ಸರಕಾರ ಕಾರ್ಯನಿರ್ವಹಿಸುತ್ತಿರುವಾಗ ಮಾತ್ರ ನಿಮ್ಮ ‘ಕಾರ್ಪೊ ರೇಟ್ ಕಾಳಜಿ’ ಏಕೆ ಎಚ್ಚೆತ್ತುಕೊಳ್ಳುತ್ತದೆ?’ -ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ ‘ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಬಸ್ಗಳ ಕೊರತೆ ಮತ್ತು ಸಾರ್ವಜನಿಕ ಸಾರಿಗೆಯ ಕೊರತೆ ಇದೆ. ಸಾರ್ವಜನಿಕ ವಲಯದ ಉದ್ಯಮಗಳು(ಪಿಎಸ್ಯು)ಮಾತ್ರ ಕೆಲಸ ಮಾಡುತ್ತವೆ ಎಂಬ ಮೂಢನಂಬಿಕೆಯ ಮನೋಭಾವದಿಂದಾಗಿ ವೈಫಲ್ಯ ಉಂಟಾಗಿದೆ. ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಅತ್ಯಗತ್ಯವಾಗಿದ್ದು, ಈ ಕೊರತೆಯನ್ನು ನಿವಾರಿಸಲು ಖಾಸಗಿ ಬಸ್ ಸೇವೆಗಳಿಗೆ ಅವಕಾಶ ನೀಡಬೇಕು’ ಎಂದು ಉದ್ಯಮಿ ಮೋಹನ್ ದಾಸ್ ಪೈ ಅವರ ಟ್ವೀಟ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.
ಕೊಪ್ಪಳ : ರಸ್ತೆ ಅಪಘಾತ; 15ಕ್ಕೂ ಹೆಚ್ಚು ಕುರಿಗಳ ಸಾವು
ಕೊಪ್ಪಳ, ಜ.30: ಲಾರಿ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಸಂಭವಿಸಿದೆ. ಕೊಪ್ಪಳ ತಾಲೂಕಿನ ಶಾಪುರ ಗ್ರಾಮದ ಸಮೀಪ ನಿರ್ಮಾಣ ಹಂತದಲ್ಲಿರುವ ಕೆಳಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಲಾರಿ ವೇಗವಾಗಿ ಬಂದ ಪರಿಣಾಮ ಕುರಿಗಳ ಗುಂಪಿನ ಮೇಲೆ ಹಾದಿದೆ ಎನ್ನಲಾಗಿದೆ. ಘಟನೆಯಲ್ಲಿ ಸುಮಾರು 10 ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸಿದ್ದಾರೆ. ಶಾಪುರ ಗ್ರಾಮದ ಚಂದ್ರು ಎಂಬ ಕುರಿಗಾಹಿಗೆ ಸೇರಿದ ಕುರಿಗಳು ಮೃತಪಟ್ಟಿದ್ದು, ಕುರಿಗಾಹಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಯಾದಗಿರಿ | ಎಂಎಸ್ಪಿ ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ
ಯಾದಗಿರಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೆಹಲಿ ಗಡಿಯಲ್ಲಿ ರೈತರು ದೀರ್ಘಕಾಲ ಚಳುವಳಿ ನಡೆಸಿ ಸರ್ಕಾರದ ಗಮನ ಸೆಳೆದರೂ, ಎಂಎಸ್ಪಿ ಖಾತರಿ ಕುರಿತು ಸ್ಪಷ್ಟ ಕಾನೂನು ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲಾ ಅವರು 131 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದು, ಬಳಿಕ ಸರ್ವೋಚ್ಚ ನ್ಯಾಯಾಲಯದ ಸೂಚನೆಯ ಮೇರೆಗೆ ನಿವೃತ್ತ ನ್ಯಾಯಾಧೀಶ ನವಾಬ್ ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿ ವರದಿ ಸಲ್ಲಿಸಲಾಗಿದೆ. ಆ ಸಮಿತಿಯು ಎಂಎಸ್ಪಿ ಖಾತರಿ ಕಾಯ್ದೆ ಅಗತ್ಯ ಎಂದು ಶಿಫಾರಸು ಮಾಡಿದೆ ಎಂದು ಹೇಳಿದರು. ಇದಲ್ಲದೆ, ಕೃಷಿ ವಿಷಯಕ್ಕೆ ಸಂಬಂಧಿಸಿದ 31 ಸದಸ್ಯರ ಸಂಸದೀಯ ಸ್ಥಾಯಿ ಸಮಿತಿಯೂ ರೈತರ ಪರವಾಗಿ ವರದಿ ನೀಡಿ ಎಂಎಸ್ಪಿ ಖಾತರಿ ಕಾನೂನು ಜಾರಿಗೆ ಬೆಂಬಲ ಸೂಚಿಸಿದೆ. ಆದರೂ ಕೇಂದ್ರ ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಎಂಎಸ್ಪಿ ಖಾತರಿ ಕಾನೂನು ಇಲ್ಲದಿರುವುದರಿಂದ ದೇಶದ ರೈತರಿಗೆ ವರ್ಷಕ್ಕೆ ಸುಮಾರು 15 ಲಕ್ಷ ಕೋಟಿ ರೂ. ನಷ್ಟವಾಗುತ್ತಿದೆ ಎಂದು ಅವರು ಆರೋಪಿಸಿದರು. ರೈತರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಫೆಬ್ರವರಿ 7ರಿಂದ ಕನ್ಯಾಕುಮಾರಿಯಿಂದ ರೈತ ಜಾಗೃತಿ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆ ಕೇರಳ, ಪುದುಚೇರಿ, ತಮಿಳುನಾಡು ಮೂಲಕ ಕರ್ನಾಟಕ ಪ್ರವೇಶಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದೆ. ಮಾರ್ಗ ಮಧ್ಯೆ ಗ್ರಾಮಾಂತರ ಪ್ರದೇಶಗಳಲ್ಲಿ ರೈತರಿಂದ ಸಹಿ ಸಂಗ್ರಹಿಸಲಾಗುವುದು. ಸುಮಾರು 40 ದಿನಗಳ ಕಾಲ ನಡೆಯುವ ಈ ಯಾತ್ರೆ ಕಾಶ್ಮೀರ ತಲುಪಲಿದೆ ಎಂದು ವಿವರಿಸಿದರು. ಮಾ.19ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶವ್ಯಾಪಿ ರೈತ ಮಹಾಸಭೆ ನಡೆಯಲಿದ್ದು, ಸಂಗ್ರಹಿಸಿದ ಸಹಿಗಳ ಮನವಿ ಪತ್ರವನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು. ಯಾತ್ರೆಯು ಫೆ.10ರಂದು ಚಾಮರಾಜನಗರ, 11ರಂದು ಮೈಸೂರು–ಮಂಡ್ಯ–ರಾಮನಗರ ಹಾಗೂ 12ರಂದು ಬೆಂಗಳೂರು–ಚಿಕ್ಕಬಳ್ಳಾಪುರ ಮಾರ್ಗವಾಗಿ ಆಂಧ್ರ ಪ್ರದೇಶಕ್ಕೆ ತೆರಳಲಿದೆ. ರಾಜ್ಯದ ಎಲ್ಲಾ ರೈತ ಸಂಘಟನೆಗಳ ಮುಖಂಡರು ಸ್ವಯಂಪ್ರೇರಿತವಾಗಿ ಬೆಂಬಲ ನೀಡಿ ತಮ್ಮ ತಮ್ಮ ಭಾಗದ ರೈತರಿಂದ ಸಹಿ ಸಂಗ್ರಹಿಸಿ ಯಾತ್ರಾ ಮುಖಂಡರಿಗೆ ಒಪ್ಪಿಸಬೇಕು ಎಂದು ಅವರು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕ ಶಿವಶರಣಪ್ಪ, ಯಲ್ಲಪ್ಪ ಮಲ್ಲಿಬಾವಿ, ಕೊಟ್ರೇಶ್ ಚೌದರಿ, ಬಸವರೆಡ್ಡಿ ಪಾಟೀಲ್, ಬಸವರಾಜ ದಳಪತಿ, ವೆಂಕಟರಾಮರೆಡ್ಡಿ, ಚಂದ್ರಶೇಖರ್ ಸಾಹುಕಾರ್, ದೇವೇಂದ್ರಪ್ಪ ಚಂದಲಾಪುರ, ಅಶೋಕ್ ಚೌದರಿ, ಚಾಂದ್ ಹುಸೇನ್, ಶ್ಯಾಮಪ್ಪ ಚಂಡಿಕೆರಿ, ಹನುಮಂತ ವೆಂಕಟಾಪುರ, ಕೊಟ್ರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಳೆದ ವರ್ಷ ಭುಗಿಲೆದ್ದಿದ್ದ ತಿರುಪತಿ ಲಡ್ಡು ಕಲಬೆರೆಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ, ನೆಲ್ಲೂರು ನ್ಯಾಯಾಲಯಕ್ಕೆ ಜ. 30ರಂದು ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ. ಅದರಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಸಿಲ್ಲ. ಆದರೆ, ಸಸ್ಯಜನ್ಯ ಎಣ್ಣೆ ಬಳಸಿ ಕಲಬೆರಕೆ ತುಪ್ಪ ಪೂರೈಕೆ ಮಾಡಲಾಗಿದೆ ಎಂದು ಆರೋಪಿಸಿದೆ.
ಟಿ20 ವಿಶ್ವಕಪ್ ಗೆ ಮ್ಯಾಚ್ ರೆಫ್ರಿ- ಅಂಪೈರ್ ಗಳ ಪ್ರಕಟಿಸಿದ ಐಸಿಸಿ; ಜಾವಗಲ್ ಶ್ರೀನಾಥ್ ತಂಡದಲ್ಲಿರುವ ಏಕೈಕ ಕನ್ನಡಿಗ
ಟಿ20 ವಿಶ್ವಕಪ್ ಟೂರ್ನಿಗೆ ಇದೀಗ ತೀರ್ಪುಗಾರರ ಪಟ್ಟಿಯನ್ನು ಐಸಿಸಿ ಇದೀಗ ಪ್ರಕಟಿಸಿದೆ. ಕರ್ನಾಟಕದ ಹೆಮ್ಮೆಯ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರು ಆರು ಮಂದಿ ಮ್ಯಾಚ್ ರೆಫರಿಗಳ ತಂಡದಲ್ಲಿ ಆಯ್ಕೆಯಾಗಿದ್ದಾರೆ. ನಿತಿನ್ ಮೆನನ್, ಜಯರಾಮನ್ ಮದನಗೋಪಾಲ್, ಕೆಎನ್ ಅನಂತಪದ್ಮನಾಭನ್ ಅವರು ಆನ್-ಫೀಲ್ಡ್ ಅಂಪೈರ್ಗಳಾಗಿ ಕಾರ್ಯನಿರ್ವಹಿಸಲಿರುವ ಭಾರತೀಯರು. ಉದ್ಘಾಟನಾ ಪಂದ್ಯಕ್ಕೆ ಕುಮಾರ ಧರ್ಮಸೇನ ಮತ್ತು ವೇಯ್ನ್ ನೈಟ್ಸ್ ಅವರು ಕಾರ್ಯ ನಿರ್ವಹಿಸಲಿದ್ದಾರೆ. ಇನ್ನು ಫೆಬ್ರವರಿ 15ರಂದು ನಡೆಯಲಿರುವ ಭಾರತ Vs ಪಾಕಿಸ್ತಾನ ಪಂದ್ಯಕ್ಕೆ ಕುಮಾರ ಧರ್ಮಸೇನ ಮತ್ತು ಇಲ್ಲಿಂಗ್ ವರ್ಥ್ ಅಂಪೈರ್ ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ರಾಯಚೂರು | ಎಸ್ಟಿ ಹಕ್ಕು ರಕ್ಷಣೆಗೆ ಆಗ್ರಹ: ಫೆ.2 ರಿಂದ ಎಸ್ಟಿ ಶಾಸಕರ ಮನೆ ಮುಂದೆ ಪ್ರತಿಭಟನೆ
ರಾಯಚೂರು : ಪರಿಶಿಷ್ಟ ಪಂಗಡದ ಜನರ ಸಂವಿಧಾನಿಕ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಫೆ.2ರಿಂದ 6ರವರೆಗೆ ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಪರಿಶಿಷ್ಟ ಪಂಗಡದ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಮಾರೆಪ್ಪ ನಾಯಕ ಮಗದಂಪೂರು ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದಲ್ಲಿ ಸಮಾನತೆ ಹಕ್ಕಿನಡಿ ಪರಿಶಿಷ್ಟ ಪಂಗಡದ 51 ಉಪಜಾತಿಗಳಿಗೆ ಮೀಸಲಾತಿ ನೀಡಲಾಗಿದ್ದರೂ, ಮೀಸಲಾತಿಯಿಂದ ಗೆದ್ದು ಶಾಸಕರಾದವರು ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸದೇನದಲ್ಲೂ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿದರು. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆದು ಮೀಸಲಾತಿಯ ದುರ್ಬಳಕೆ ನಡೆಯುತ್ತಿದ್ದು, ಇದ್ರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಹಿಂದುಳಿದ ವರ್ಗಗಳಲ್ಲಿರುವ ಕೆಲ ಜಾತಿಗಳಿಂದ ಸుమಾರು 2.5 ಲಕ್ಷಕ್ಕೂ ಹೆಚ್ಚು ಮಂದಿ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಾವತಿ ಸ್ಥಗಿತಗೊಂಡಿದೆ. ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಪ್ರೋತ್ಸಾಹ ಧನ ಹಾಗೂ ಸಹಾಯಧನ ನೀಡಲಾಗುತ್ತಿಲ್ಲ. ಪಿಎಚ್ಡಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾಸಿಕ ವೇತನ ಹಾಗೂ ವಸತಿ ಭತ್ಯೆ ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು. ಫೆ.2 ರಂದು ದೇವದುರ್ಗ ಶಾಸಕರ ಮನೆ ಮುಂದೆ, ಫೆ.3 ರಂದು ಸುರುಪುರ ಶಾಸಕರ ಮನೆ ಮುಂದೆ, 4 ರಂದು ರಾಯಚೂರು ಗ್ರಾಮೀಣ ಶಾಸಕರ ಮನೆ ಮುಂದೆ, 5 ರಂದು ಮಾನ್ವಿ, 6 ರಂದು ಮಸ್ಕಿ ಶಾಸಕ ಮನೆ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ, ಎಸ್ಟಿ ನಿಗಮದಲ್ಲಿ ಹಣವಿಲ್ಲದ ಸ್ಥಿತಿ ನಿರ್ಮಿಸಿದೆ ಎಂದು ಆರೋಪಿಸಿದ ಅವರು, ಸಮಾಜದ ಕೆಲ ಶಾಸಕರೇ ಅನುದಾನದ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದರು. ಪ್ರತ್ಯೇಕ ಸಚಿವಾಲಯ ಇದ್ದರೂ ಸಚಿವರಾಗಿದ್ದ ನಾಗೇಂದ್ರ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಬಾರದು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಡಾ. ಪ್ರಭು ಹುಲಿನಾಯಕ, ರಾಚಣ್ಣ ನಾಯಕ, ಮಾನಸಯ್ಯ ನಾಯಕ, ದೊಡ್ಡಯ್ಯ ನಾಯಕ, ಶರಣಪ್ಪ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಯಚೂರು ಜಿಲ್ಲಾ ಉತ್ಸವ–2026 : ಫೆ.6ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
ರಾಯಚೂರು :ರಾಯಚೂರು ಜಿಲ್ಲಾ ಉತ್ಸವ–2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಹಾಗೂ ಡಿಡಿಯು–ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದ ಒಂದು ದಿನದ ಉದ್ಯೋಗ ಮೇಳವನ್ನು ಫೆ.6ರಂದು ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದ ಯಶಸ್ಸಿಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶರಣಬಸವರಾಜ ಅವರು ಸೂಚಿಸಿದರು. ಜ.30ರಂದು ನಗರದ ಜಿಲ್ಲಾ ಪಂಚಾಯತ್ನ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಳವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ. ಮೇಳದ ವೇದಿಕೆ ಹಾಗೂ ಸುತ್ತಮುತ್ತ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಸಾಮಾನ್ಯ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್, ನರ್ಸಿಂಗ್ ಸೇರಿದಂತೆ ವಿವಿಧ ಅರೆವೈದ್ಯಕೀಯ ಕೋರ್ಸ್ಗಳನ್ನು ಪೂರ್ಣಗೊಳಿಸಿದವರಿಗೆ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ನೂರಾರು ಉದ್ಯೋಗದಾತರು/ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ. ಇನ್ನೂ ಹೆಚ್ಚಿನ ಕಂಪನಿಗಳು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು. ಜನವರಿ 30ರ ಬೆಳಿಗ್ಗೆ 10 ಗಂಟೆಯ ವೇಳೆಗೆ 4,967 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ನೋಂದಣಿ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ. ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಆಫರ್ ಲೆಟರ್ ನೀಡಲಾಗುವುದು ಎಂದು ಹೇಳಿದರು. ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com ಜಾಲತಾಣದ ಮೂಲಕ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡು ಮೇಳದಲ್ಲಿ ಭಾಗವಹಿಸಬಹುದು. ಅದೇ ರೀತಿ ಉದ್ಯೋಗದಾತರು/ಕಂಪನಿಗಳು ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ಮಾಹಿತಿಯೊಂದಿಗೆ https://employer.ksdckarnataka.com/login ಜಾಲತಾಣದಲ್ಲಿ ನೋಂದಣಿ ಮಾಡಿಕೊಂಡು ಮೇಳದಲ್ಲಿ ಭಾಗವಹಿಸಬಹುದು. ಈ ಕುರಿತು ಹೆಚ್ಚಿನ ಪ್ರಚಾರ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಉಪ ನಿರ್ದೇಶಕ ರಾಜಕುಮಾರ್ ಪಾಟೀಲ್, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವ್ಯವಸ್ಥಾಪಕ ಸಂತೋಷ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ಕಾರ್ಯದರ್ಶಿ ಜಂಬಣ್ಣ, ಎಸ್ಬಿಐ ಆರ್ಸೆಟ್ ನಿರ್ದೇಶಕ ವಿಜಯಕುಮಾರ್, ಜಿಲ್ಲೆಯ ವಿವಿಧ ಐಟಿಐ ಕಾಲೇಜುಗಳ ಮುಖ್ಯಸ್ಥರಾದ ಶಿವರಾಜ ಕುಮಾರ್, ರುದ್ರಗೌಡ, ಹೈದರಾಸಾಬ್, ತೋಮಸಪ್ಪ, ರಾಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಯಚೂರು | ಬಿಸಿಯೂಟ ನೌಕರರಿಂದ ಪ್ರತಿಭಟನೆ
ರಾಯಚೂರು: ಸರಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ತರಕಾರಿ, ಬಾಳೆಹಣ್ಣು ಹಾಗೂ ಮೊಟ್ಟೆಗಳ ಸರಬರಾಜನ್ನು ಸ್ವ-ಸಹಾಯ ಗುಂಪುಗಳಿಗೆ ನೀಡಲು ಜಿಲ್ಲಾ ಪಂಚಾಯತ್ ಮುಂದಾಗಿರುವ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಜಿಲ್ಲಾ ಸಮಿತಿಯಿಂದ ಶುಕ್ರವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಳೆದ 24 ವರ್ಷಗಳಿಂದ ಅತಿ ಕಡಿಮೆ ಸಂಬಳಕ್ಕೆ ಹೆಚ್ಚುವರಿ ಹೊಣೆಗಾರಿಕೆಯನ್ನು ಹೊತ್ತು ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರ ಶ್ರಮವನ್ನು ಕಡೆಗಣಿಸಿ, ಯಾವುದೇ ಪೂರ್ವ ಚರ್ಚೆ ನಡೆಸದೇ ಸ್ವ-ಸಹಾಯ ಗುಂಪುಗಳಿಗೆ ಸರಬರಾಜು ವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದು ಸಂಪೂರ್ಣವಾಗಿ ನೌಕರ ವಿರೋಧಿ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈವರೆಗೆ ಶಾಲಾ ಮುಖ್ಯೋಪಾಧ್ಯಾಯರ ಸಹಕಾರದೊಂದಿಗೆ ಬಿಸಿಯೂಟ ನೌಕರರೇ ತರಕಾರಿ, ಹಣ್ಣು ಹಾಗೂ ಮೊಟ್ಟೆಗಳನ್ನು ಖರೀದಿಸಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುತ್ತಿದ್ದರು. ಈ ವ್ಯವಸ್ಥೆ ಸುಗಮವಾಗಿ ನಡೆಯುತ್ತಿರುವಾಗಲೇ ಹೊಸದಾಗಿ ಸ್ವ-ಸಹಾಯ ಗುಂಪುಗಳನ್ನು ತರುವ ಮೂಲಕ ಯೋಜನೆಯನ್ನು ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಮರಿಯಮ್ಮ ಮಾತನಾಡಿ, ಮಹಿಳಾ ಸಬಲೀಕರಣದ ಹೆಸರಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಆದರೆ ಬಿಸಿಯೂಟ ನೌಕರರಲ್ಲಿ ಬಹುಪಾಲು ಮಹಿಳೆಯರೇ ಇರುವುದನ್ನು ಅಧಿಕಾರಿಗಳು ಮರೆತಿದ್ದಾರೆ. ಈ ನಿರ್ಧಾರದಿಂದ ನಮ್ಮ ಉದ್ಯೋಗ ಭದ್ರತೆಗೆ ಧಕ್ಕೆಯಾಗುವ ಆತಂಕ ಎದುರಾಗಿದೆ ಎಂದು ಹೇಳಿದರು. ಹೀಗಾಗಿ ಸ್ವ-ಸಹಾಯ ಗುಂಪುಗಳಿಗೆ ತರಕಾರಿ, ಬಾಳೆಹಣ್ಣು ಹಾಗೂ ಮೊಟ್ಟೆಗಳ ಸರಬರಾಜು ನೀಡುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಸಂಘಟನೆ ಒತ್ತಾಯಿಸಿತು. ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತಾ, ಪ್ರಧಾನ ಕಾರ್ಯದರ್ಶಿ ಮರಿಯಮ್ಮ, ಜಿಲ್ಲಾ ಅಧ್ಯಕ್ಷೆ ರೆಣುಕಮ್ಮ, ಸಿಐಟಿಯು ಜಿಲ್ಲಾ ಅಧ್ಯಕ್ಷ ಹೆಚ್. ಪದ್ಮ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಖಜಾಂಚಿ ಮುಹಮ್ಮದ್ ಹನೀಫ್ ಸೇರಿದಂತೆ ಅನೇಕ ಬಿಸಿಯೂಟ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ : ಜ್ಯೋತಿ ರಥಯಾತ್ರೆಗೆ ಸಿದ್ಧತೆ
ರಾಯಚೂರು :ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರ.5, 6 ಮತ್ತು 7 ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಡೆಯುವ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಜ್ಯೋತಿ ರಥಯಾತ್ರೆಯು ಮಾನವಿ, ಸಿಂಧನೂರು, ಮಸ್ಕಿ, ಲಿಂಗಸೂರು, ಕವಿತಾಳ, ದೇವದುರ್ಗ, ಗಬ್ಬೂರು, ಅರಕೇರಾ, ಸಿರವಾರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ರಾಯಚೂರು ಉತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ನಾನಾ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ಈ ರಥಯಾತ್ರೆ ಆಯೋಜಿಸಲಾಗಿದೆ. ಫೆ.1 ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರು ನಗರದ ಕರ್ನಾಟಕ ಸಂಘದಿಂದ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಜೊತೆಗೆ ಶಾಲಾ–ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜ್ಯೋತಿ ರಥಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಮನವಿ ಮಾಡಿದ್ದಾರೆ.
Delhi ಗಲಭೆ ಪ್ರಕರಣ | ಖಾಲಿದ್ ಸೈಫಿಗೆ ಮಧ್ಯಂತರ ಜಾಮೀನು
ಹೊಸದಿಲ್ಲಿ, ಜ. 30: 2020ರ ಈಶಾನ್ಯ ದಿಲ್ಲಿ ಗಲಭೆ ಪ್ರಕರಣದ ಆರೋಪಿಯಾಗಿರುವ ಖಾಲಿದ್ ಸೈಫಿಗೆ ದಿಲ್ಲಿ ನ್ಯಾಯಾಲಯ 13 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಸಾಮಾಜಿಕ ಮಾಧ್ಯಮಗಳಿಂದ ದೂರವಿರುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಸೋದರಳಿಯನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಾಗೂ ಕುಟುಂಬದೊಂದಿಗೆ ರಮಝಾನ್ ಆಚರಿಸಲು ‘ಯುನೈಟೆಡ್ ಎಗೈನ್ಸ್ಟ್ ಹೇಟ್’ನ ಸ್ಥಾಪಕ ಸೈಫಿ ಅವರು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ನಡೆಸಿದರು. ನ್ಯಾಯಾಲಯವು ಅವರಿಗೆ 2026ರ ಫೆಬ್ರವರಿ 6ರಿಂದ ಫೆಬ್ರವರಿ 13ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೊತೆಗೆ 20,000 ರೂ. ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಎರಡು ಶ್ಯೂರಿಟಿಗಳನ್ನು ಸಲ್ಲಿಸಲು ಸೂಚಿಸಿದೆ.
ಕಳವಳ ಹೆಚ್ಚಿಸಿದ ನಿಫಾ ವೈರಸ್ ಸೋಂಕು: ಏನಿದು? ರೋಗ ಲಕ್ಷಣಗಳೇನು?
ಪಶ್ಚಿಮ ಬಂಗಾಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಸೋಂಕು ಚೀನಾ ಹಾಗೂ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕಳವಳ ಹೆಚ್ಚಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ಕಾರ್ಯಾಚರಣೆಗಳನ್ನು ಬಿಗಿಗೊಳಿಸಲು ಪ್ರೇರೇಪಿಸಿದೆ. 2025 ಡಿಸೆಂಬರ್ ನಿಂದ ಪಶ್ಚಿಮ ಬಂಗಾಳದಲ್ಲಿ ಎರಡು ದೃಢಪಟ್ಟ ನಿಫಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಭಾರತದ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಸಚಿವಾಲಯವು ಸೋಂಕಿತ ವ್ಯಕ್ತಿಗಳ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಆದರೆ ದೃಢಪಟ್ಟ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 196 ಸಂಪರ್ಕಿತರಲ್ಲಿ ಯಾರಿಗೂ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ ಮತ್ತು ಎಲ್ಲರೂ ವೈರಸ್ ಗೆ ನಕಾರಾತ್ಮಕ ಫಲಿತಾಂಶ ಪಡೆದಿದ್ದಾರೆ. ಪರಿಸ್ಥಿತಿ ನಿರಂತರ ಮೇಲ್ವಿಚಾರಣೆಯಲ್ಲಿದ್ದು, ಅಗತ್ಯವಿರುವ ಎಲ್ಲಾ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ►ಏನಿದು ನಿಫಾ ವೈರಸ್? ನಿಫಾ ವೈರಸ್ (NiV) ಒಂದು ಪ್ರಾಣಿಜನ್ಯ ವೈರಸ್ ಆಗಿದ್ದು, ಇದು ಮುಖ್ಯವಾಗಿ ಬಾವಲಿಗಳ ಮೂಲಕ ಮನುಷ್ಯರಿಗೆ ಹರಡುತ್ತದೆ. ಸೋಂಕಿತ ಬಾವಲಿಗಳ ಲಾಲಾರಸ, ಮೂತ್ರ ಅಥವಾ ಮಲದ ಮೂಲಕ ವೈರಸ್ ಹರಡಬಹುದು. ಕಲುಷಿತ ಆಹಾರ ಉತ್ಪನ್ನಗಳ ಸೇವನೆಯಿಂದ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸಹ ಸೋಂಕು ಹರಡುವ ಸಾಧ್ಯತೆ ಇದೆ. ನಿಫಾ ವೈರಸ್ ಮಾರಕವಾಗಬಹುದಾದದು. ವೈರಸ್ ಸಾಮಾನ್ಯವಾಗಿ ಮಾನವ ದೇಹದಲ್ಲಿ ಐದು ರಿಂದ 14 ದಿನಗಳವರೆಗೆ ಇಂಕ್ಯುಬೇಷನ್ ಅವಧಿಯಲ್ಲಿದ್ದು, ಮೂರರಿಂದ ನಾಲ್ಕು ದಿನಗಳಲ್ಲಿ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಇದು ಮಾನವರಲ್ಲಿ ತೀವ್ರ ಉಸಿರಾಟದ ತೊಂದರೆಗಳು ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಕಾರಣವಾಗುತ್ತದೆ. ತೀವ್ರ ಪ್ರಕರಣಗಳಲ್ಲಿ ಜ್ವರ ಮತ್ತು ತಲೆನೋವಿನಿಂದ ಆರಂಭವಾಗಿ ಎನ್ಸೆಫಾಲಿಟಿಸ್ (ಮೆದುಳಿನ ಉರಿಯೂತ) ಉಂಟಾಗಬಹುದು ಎಂದು ಲಂಡನ್ ಸ್ಕೂಲ್ ಆಫ್ ಹೈಜೀನ್ ಅಂಡ್ ಟ್ರಾಪಿಕಲ್ ಮೆಡಿಸಿನ್ ಹಾಗೂ ನಾಗಾಸಾಕಿ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಖ್ವಾಝಾ ಅಬ್ಬಾಸ್ ತಿಳಿಸಿದ್ದಾರೆ. ಸೆಳವು ಮತ್ತು ಮಾನಸಿಕ ಗೊಂದಲವೂ ರೋಗ ಲಕ್ಷಣಗಳಾಗಿದ್ದು, ತೀವ್ರ ಪ್ರಕರಣಗಳಲ್ಲಿ ರೋಗಿಗಳು 24 ರಿಂದ 48 ಗಂಟೆಗಳೊಳಗೆ ಕೋಮಾ ಸ್ಥಿತಿಗೆ ತಲುಪುವ ಸಾಧ್ಯತೆ ಇದೆ. ನಿಫಾ ವೈರಸ್ ಸೋಂಕಿನ ಪ್ರಕರಣ ಮರಣ ಪ್ರಮಾಣ ಶೇಕಡಾ 40 ರಿಂದ 75ರ ನಡುವೆ ಇದೆ ಎಂದು ಅಬ್ಬಾಸ್ ಹೇಳಿದ್ದಾರೆ. ಆದಾಗ್ಯೂ, ವೈರಸ್ ನ ಮೂಲ ಸಂತಾನೋತ್ಪತ್ತಿ ಸಂಖ್ಯೆ (R₀) ಸಾಮಾನ್ಯವಾಗಿ ಒಂದಕ್ಕಿಂತ ಕಡಿಮೆ ಇರುವುದರಿಂದ, ಮಾನವನಿಂದ ಮಾನವನಿಗೆ ಸೀಮಿತವಾಗಿ ಮಾತ್ರ ಹರಡುತ್ತದೆ. ಇದರಿಂದ ವೈರಸ್ ವ್ಯಾಪಕ ಸಾಂಕ್ರಾಮಿಕವಾಗಿ ಹರಡುವ ಸಾಧ್ಯತೆ ಕಡಿಮೆ ಎಂದು ತಜ್ಞರು ಹೇಳುತ್ತಾರೆ. ►ಹಿಂದಿನ ಪ್ರಕರಣಗಳು 1998ರಲ್ಲಿ ಮಲೇಷ್ಯಾ ಮತ್ತು ಸಿಂಗಾಪುರದಲ್ಲಿ ಹಂದಿ ಸಾಕಾಣಿಕೆದಾರರು ಮತ್ತು ಕಟುಕರು ಸೋಂಕಿತ ಹಂದಿಗಳಿಂದ ನಿಫಾ ವೈರಸ್ ಗೆ ತುತ್ತಾಗಿದ್ದರು. ಕನಿಷ್ಠ 250 ಮಂದಿ ಸೋಂಕಿಗೆ ಒಳಗಾಗಿದ್ದು, ಅವರಲ್ಲಿ 100ಕ್ಕಿಂತ ಹೆಚ್ಚು ಮಂದಿ ಸಾವಿಗೀಡಾಗಿದ್ದರು. 2014ರಲ್ಲಿ ಫಿಲಿಪೈನ್ಸ್ನಲ್ಲಿ ಕುದುರೆಗಳನ್ನು ಕೊಲ್ಲುವುದು ಹಾಗೂ ಸೋಂಕಿತ ಕುದುರೆ ಮಾಂಸ ಸೇವನೆಯೊಂದಿಗೆ ಸಂಬಂಧಿಸಿದ ನಿಫಾ ವೈರಸ್ ಪ್ರಕರಣಗಳು ವರದಿಯಾಗಿದ್ದವು. 2001ರಿಂದ ದಕ್ಷಿಣ ಏಷ್ಯಾದಲ್ಲಿ, ವಿಶೇಷವಾಗಿ ಬಾಂಗ್ಲಾದೇಶ ಮತ್ತು ಭಾರತದಲ್ಲಿ ವಿರಳವಾದರೂ ಪುನರಾವರ್ತಿತ ನಿಫಾ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಬಾಂಗ್ಲಾದೇಶದಲ್ಲಿ ಕಲುಷಿತ ಕಚ್ಚಾ ತಾಳೆ ರಸ ಸೇವನೆ, ಸೋಂಕಿತ ವ್ಯಕ್ತಿಗಳ ಸ್ರವಿಸುವಿಕೆ ಹಾಗೂ ವಿಸರ್ಜನೆಗಳೊಂದಿಗೆ ನಿಕಟ ಸಂಪರ್ಕ, ಮತ್ತು ರೋಗಿಗಳನ್ನು ಆರೈಕೆ ಮಾಡುವ ಸಂದರ್ಭಗಳಲ್ಲಿ ಸೋಂಕು ಹರಡಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. WHO ಪ್ರಕಾರ, ಭಾರತದಲ್ಲಿ ಮೊದಲ ನಿಫಾ ಪ್ರಕರಣಗಳು 2007ರಲ್ಲಿ ಪಶ್ಚಿಮ ಬಂಗಾಳದಲ್ಲಿ ದಾಖಲಾಗಿದ್ದವು. 2001ರಲ್ಲಿ ರಾಜ್ಯದ ಸಿಲಿಗುರಿ ನಗರದಲ್ಲಿ ಆರೋಗ್ಯ ಕಾರ್ಯಕರ್ತರಲ್ಲಿ ಸೋಂಕು ಹರಡಿದ್ದು, ಅಲ್ಲಿ ಪತ್ತೆಯಾದ ಪ್ರಕರಣಗಳ ಪೈಕಿ ಶೇಕಡಾ 75ರಷ್ಟು ಆಸ್ಪತ್ರೆ ಸಿಬ್ಬಂದಿ ಅಥವಾ ಸಂದರ್ಶಕರಲ್ಲೇ ಕಂಡುಬಂದಿತ್ತು. 2018ರಲ್ಲಿ ಕೇರಳದಲ್ಲಿ ನಿಫಾ ಸೋಂಕಿನಿಂದ ಡಝನ್ ಗಟ್ಟಲೆ ಸಾವುಗಳು ವರದಿಯಾಗಿದ್ದು, ಈ ಪ್ರದೇಶವನ್ನು ಈಗ ವೈರಸ್ ಗೆ ಜಗತ್ತಿನ ಅತ್ಯಧಿಕ ಅಪಾಯ ಪ್ರದೇಶವೆಂದು ಪರಿಗಣಿಸಲಾಗಿದೆ. ಭಾರತದಲ್ಲಿ ಸೋಂಕು ಹರಡುವ ನಿಖರ ಕಾರಣಗಳು ಇನ್ನೂ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ. ಕೆಲ ವೈದ್ಯಕೀಯ ತಜ್ಞರು ಬಾವಲಿಗಳ ಲಾಲಾರಸ ಅಥವಾ ಮೂತ್ರದಿಂದ ಕಲುಷಿತಗೊಂಡ ಹಣ್ಣುಗಳ ಸೇವನೆಯಿಂದ ಸೋಂಕು ಉಂಟಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಪ್ರಕಾರ, ವೈರಸ್ ಪ್ರಾಥಮಿಕವಾಗಿ ದೈಹಿಕ ಸಂಪರ್ಕದ ಮೂಲಕ ಹರಡುತ್ತದೆ; ಕೆಲ ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಹರಡುವ ಸಾಧ್ಯತೆ ಇದೆ. ಅಬ್ಬಾಸ್ ಅವರ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಕಂಡುಬಂದ ಸೋಂಕಿನ ಮೂಲ ಕುರಿತು ಯಾವುದೇ ಸ್ಪಷ್ಟ ಪುರಾವೆಗಳಿಲ್ಲ. ದೃಢಪಟ್ಟ ಎರಡು ಪ್ರಕರಣಗಳೂ ಒಂದೇ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರಲ್ಲಿ ಕಂಡುಬಂದಿರುವುದರಿಂದ, ಸೋಂಕಿತ ಆದರೆ ರೋಗನಿರ್ಣಯವಾಗದ ರೋಗಿಯಿಂದ ಆಸ್ಪತ್ರೆಯೊಳಗಿನ ಹರಡುವಿಕೆಯ ಸಾಧ್ಯತೆಯನ್ನು ಇದು ಸೂಚಿಸುತ್ತದೆ. ►ಇತ್ತೀಚಿನ ಸಾಂಕ್ರಾಮಿಕವನ್ನು ಹೇಗೆ ನಿರ್ವಹಿಸಲಾಗುತ್ತಿದೆ? 2007ರ ನಂತರ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾದ ಮೊದಲ ನಿಫಾ ಪ್ರಕರಣಗಳಾಗಿರುವುದರಿಂದ ಇತ್ತೀಚಿನ ಸಾಂಕ್ರಾಮಿಕ ಮಹತ್ವ ಪಡೆದಿದೆ. ವರ್ಧಿತ ಕಣ್ಗಾವಲು, ಪ್ರಯೋಗಾಲಯ ಪರೀಕ್ಷೆಗಳು ಹಾಗೂ ಕ್ಷೇತ್ರ ತನಿಖೆಗಳನ್ನು ಕೈಗೊಳ್ಳಲಾಗಿದ್ದು, ಸಕಾಲಿಕ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ. ಡಿಸೆಂಬರ್ನಿಂದ ಇದುವರೆಗೆ ಎರಡಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ►ವೈರಸ್ ಗೆ ಲಸಿಕೆ ಇದೆಯೇ? ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ನಿಫಾ ವೈರಸ್ ಸೋಂಕಿಗೆ ಪ್ರಸ್ತುತ ಯಾವುದೇ ಅನುಮೋದಿತ ಚಿಕಿತ್ಸೆ ಅಥವಾ ಲಸಿಕೆ ಲಭ್ಯವಿಲ್ಲ. ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ಬಾಂಗ್ಲಾದೇಶದಲ್ಲಿ ನಿಫಾ ವೈರಸ್ ಲಸಿಕೆಯ ಕ್ಲಿನಿಕಲ್ ಪರೀಕ್ಷೆಗಳನ್ನು ನಡೆಸುತ್ತಿದ್ದು, 2025 ಡಿಸೆಂಬರ್ನಲ್ಲಿ ಎರಡನೇ ಹಂತದ ಪ್ರಯೋಗಗಳನ್ನು ಆರಂಭಿಸಿದೆ. ಅನುಮೋದಿತ ಲಸಿಕೆಗಳಿಲ್ಲದ ಹಿನ್ನೆಲೆಯಲ್ಲಿ, ವೈದ್ಯರು ರಿಬಾವಿರಿನ್ನಂತಹ ಆಂಟಿವೈರಲ್ ಔಷಧಗಳೊಂದಿಗೆ ಚಿಕಿತ್ಸೆ ನೀಡುತ್ತಿದ್ದಾರೆ. 1999ರಲ್ಲಿ ಮಲೇಷ್ಯಾದಲ್ಲಿ ಸಂಭವಿಸಿದ ನಿಫಾ ಸಾಂಕ್ರಾಮಿಕದ ವೇಳೆ ರಿಬಾವಿರಿನ್ ಅನ್ನು ಕಡಿಮೆ ಸಂಖ್ಯೆಯ ರೋಗಿಗಳಲ್ಲಿ ಬಳಸಲಾಗಿತ್ತು; ಆದರೆ ಅದರ ಪರಿಣಾಮಕಾರಿತ್ವ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (CDC) ಹೇಳಿವೆ. ಪ್ರಾಣಿಗಳ ಮೇಲೆ ನಡೆದ ಪ್ರಯೋಗಗಳಲ್ಲಿ ರೆಮ್ಡೆಸಿವಿರ್ ಔಷಧವು ನಿಫಾ ವೈರಸ್ ತಡೆಗೆ ಸಹಾಯಕವಾಗಿರುವುದು ಕಂಡುಬಂದಿದೆ. 2023ರಲ್ಲಿ ಕೇರಳದಲ್ಲಿ ನಿಫಾ ಸೋಂಕಿಗೆ ರೆಮ್ಡೆಸಿವಿರ್ ಬಳಸಲಾಗಿದ್ದು, ಪ್ರಕರಣ ಮರಣ ಪ್ರಮಾಣದಲ್ಲಿ ಸುಧಾರಣೆ ಕಂಡುಬಂದಿದೆ. ►ನಿಫಾ ವೈರಸ್ಗಾಗಿ ತಪಾಸಣೆ ಕ್ರಮಗಳು ಥೈಲ್ಯಾಂಡ್, ಇಂಡೋನೇಷ್ಯಾ, ನೇಪಾಳ ಮತ್ತು ಮಲೇಷ್ಯಾ ದೇಶಗಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿವೆ. ನಿಫಾ ಪೀಡಿತ ದೇಶಗಳಿಂದ ಬರುವ ವಿಮಾನಗಳಿಗೆ ವಿಶೇಷ ಪಾರ್ಕಿಂಗ್ ಬೇಗಳನ್ನು ನಿಗದಿಪಡಿಸಲಾಗಿದ್ದು, ಪ್ರಯಾಣಿಕರು ವಲಸೆಗೆ ಮುನ್ನ ಆರೋಗ್ಯ ಘೋಷಣೆ ನಮೂನೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಥೈಲ್ಯಾಂಡ್ ಆರೋಗ್ಯ ಸಚಿವಾಲಯ ತಿಳಿಸಿದೆ. ಬ್ಯಾಂಕಾಕ್ನ ಸುವರ್ಣಭೂಮಿ ವಿಮಾನ ನಿಲ್ದಾಣದಲ್ಲಿ ಜ್ವರ ಹಾಗೂ ಇತರ ಲಕ್ಷಣಗಳ ಪತ್ತೆಗೆ ಥರ್ಮಲ್ ಸ್ಕ್ಯಾನರ್ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮಗಳನ್ನು ಮಲೇಷ್ಯಾ, ಇಂಡೋನೇಷ್ಯಾ ಮತ್ತು ನೇಪಾಳವೂ ಜಾರಿಗೊಳಿಸಿವೆ. ಪಶ್ಚಿಮ ಬಂಗಾಳಕ್ಕೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮ್ಯಾನ್ಮಾರ್ ಸಲಹೆ ನೀಡಿದ್ದು, ಚೀನಾ ತನ್ನ ಗಡಿ ಪ್ರದೇಶಗಳಲ್ಲಿ ರೋಗ ತಡೆಗಟ್ಟುವ ಕ್ರಮಗಳನ್ನು ಬಲಪಡಿಸಿದೆ. ►ವೈರಸ್ ಹರಡುವಿಕೆಯನ್ನು ತಡೆಯುವ ಮಾರ್ಗಗಳು ವಿಮಾನ ನಿಲ್ದಾಣಗಳ ತಪಾಸಣೆಯ ಜೊತೆಗೆ, ಉತ್ತಮ ನೈರ್ಮಲ್ಯ, ಸರಿಯಾದ ಗಾಳಿಚಲನೆ, ಜನಸಂದಣಿಯನ್ನು ತಪ್ಪಿಸುವುದು, ಅನಾರೋಗ್ಯದಲ್ಲಿದ್ದಾಗ ಮನೆಯಲ್ಲಿಯೇ ಇರುವುದು, ಸಮಯಕ್ಕೆ ಸರಿಯಾಗಿ ವೈದ್ಯಕೀಯ ಸಲಹೆ ಪಡೆಯುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಅಗತ್ಯವೆಂದು ತಜ್ಞರು ಸಲಹೆ ನೀಡಿದ್ದಾರೆ. WHO ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಖರ್ಜೂರದ ರಸ ಮತ್ತು ಇತರ ತಾಜಾ ಆಹಾರಗಳಿಗೆ ಬಾವಲಿಗಳ ಪ್ರವೇಶವನ್ನು ಕಡಿಮೆ ಮಾಡುವ ಅಗತ್ಯವಿದೆ ಎಂದು ತಿಳಿಸಿದೆ. ರಸ ಸಂಗ್ರಹಣಾ ಸ್ಥಳಗಳಲ್ಲಿ ರಕ್ಷಣಾತ್ಮಕ ಹೊದಿಕೆಗಳನ್ನು ಬಳಸುವುದು, ಹೊಸದಾಗಿ ಸಂಗ್ರಹಿಸಿದ ಖರ್ಜೂರದ ರಸವನ್ನು ಕುದಿಸುವುದು, ಹಣ್ಣುಗಳನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯುವುದು, ಬಾವಲಿಗಳು ಕಚ್ಚಿದ ಗುರುತು ಇರುವ ಹಣ್ಣುಗಳನ್ನು ಸೇವಿಸದಿರುವುದು ಅಗತ್ಯ ಎಂದು WHO ಸಲಹೆ ನೀಡಿದೆ. ಅನಾರೋಗ್ಯ ಪೀಡಿತ ಪ್ರಾಣಿಗಳನ್ನು ಕೊಲ್ಲುವ ಸಂದರ್ಭದಲ್ಲಿ ಕೈಗವಸುಗಳು ಹಾಗೂ ರಕ್ಷಣಾತ್ಮಕ ಬಟ್ಟೆಗಳನ್ನು ಧರಿಸಬೇಕು. ಆರೋಗ್ಯ ವ್ಯವಸ್ಥೆಗಳಲ್ಲಿ ವೈರಸ್ ಹರಡುವಿಕೆಯನ್ನು ತಡೆಯಲು ಪ್ರಮಾಣಿತ ಮುನ್ನೆಚ್ಚರಿಕೆಗಳ ಜೊತೆಗೆ ಸಂಪರ್ಕ ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಫಾ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಅಸುರಕ್ಷಿತ ದೈಹಿಕ ಸಂಪರ್ಕವನ್ನು ತಪ್ಪಿಸಬೇಕು ಹಾಗೂ ರೋಗಿಗಳನ್ನು ಭೇಟಿ ಮಾಡಿದ ನಂತರ ಅಥವಾ ಆರೈಕೆ ಮಾಡಿದ ಬಳಿಕ ನಿಯಮಿತವಾಗಿ ಕೈ ತೊಳೆಯಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.
ಕಲಬುರಗಿ | ಆರೆಸ್ಸೆಸ್ ಇಡೀ ಮಾನವಕುಲದ ವಿರೋಧಿ : ಚಿಂತಕ ಆರ್.ಕೆ.ಹುಡಗಿ
ʼಸಹಬಾಳ್ವೆಯ ಸಂಚುಗಾರಕ್ಕೆ 100 ವರ್ಷʼ ವಿಚಾರ ಸಂಕಿರಣ
ವೆನೆಝುವೆಲಾ ಮೇಲಿನ ನಿರ್ಬಂಧ ಸಡಿಲಿಸಿದ ಟ್ರಂಪ್: ಅಮೆರಿಕಾ ಸಂಸ್ಥೆಗಳಿಗೆ ತೈಲ ಖರೀದಿಗೆ ಅವಕಾಶ
ವಾಷಿಂಗ್ಟನ್, ಜ.30: ವೆನೆಝುವೆಲಾ ತೈಲ ಉದ್ಯಮದ ಮೇಲಿನ ಪ್ರಮುಖ ನಿರ್ಬಂಧವನ್ನು ಅಮೆರಿಕಾದ ಡೊನಾಲ್ಡ್ ಟ್ರಂಪ್ ಆಡಳಿತ ಸಡಿಲಿಸಿದ್ದು ಅಮೆರಿಕನ್ ಸಂಸ್ಥೆಗಳು ವೆನೆಝುವೆಲಾದ ಕಚ್ಛಾ ತೈಲವನ್ನು ಖರೀದಿಸಲು, ಮಾರಾಟ ಮಾಡಲು ಮತ್ತು ಸಂಸ್ಕರಿಸಲು ಅವಕಾಶ ನೀಡಿದೆ. ಖಜಾನೆ ಇಲಾಖೆಯ ವಿದೇಶಿ ಆಸ್ತಿ ನಿಯಂತ್ರಣದ ಕಚೇರಿಯು ನೀಡುವ ಲೈಸೆನ್ಸ್ನಲ್ಲಿ ಹೊಸ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿಲ್ಲ. ಇದಕ್ಕೆ ಪ್ರತ್ಯೇಕ ಅನುಮೋದನೆ ಬೇಕಾಗುತ್ತದೆ. ಚೀನಾ, ಇರಾನ್, ಉತ್ತರ ಕೊರಿಯಾ, ಕ್ಯೂಬಾ ಮತ್ತು ರಶ್ಯ ರಾಷ್ಟ್ರಗಳ ವ್ಯಕ್ತಿಗಳು ಮತ್ತು ಸಂಸ್ಥೆಗಳ ಒಳಗೊಳ್ಳುವಿಕೆಯನ್ನು ನಿರ್ಬಂಧಿಸಲಾಗಿದೆ. 2019ರಲ್ಲಿ ವೆನೆಝುವೆಲಾದ ಇಂಧನ ಕ್ಷೇತ್ರದ ಮೇಲೆ ಅಮೆರಿಕಾ ಕಠಿಣ ನಿರ್ಬಂಧ ವಿಧಿಸಿದ ನಂತರ ನಿರ್ಬಂಧ ಸಡಿಲಿಕೆಗೆ ಸಂಬಂಧಿಸಿದ ಪ್ರಮುಖ ಕ್ರಮ ಇದಾಗಿದೆ. ಜನವರಿ 3ರಂದು ಅಮೆರಿಕಾ ನಡೆಸಿದ ಮಿಲಿಟರಿ ಕಾರ್ಯಾಚರಣೆಯಲ್ಲಿ ವೆನೆಝುವೆಲಾ ಅಧ್ಯಕ್ಷರನ್ನು ಸೆರೆ ಹಿಡಿದ ನಂತರ ವೆನೆಝುವೆಲಾದ ತೈಲ ಆದಾಯವನ್ನು ಅಮೆರಿಕಾ ನಿಯಂತ್ರಿಸುತ್ತದೆ ಎಂದು ಟ್ರಂಪ್ ಘೋಷಿಸಿದ್ದರು.
ಲಕ್ನೋ, ಜ. 30: ನಿರ್ದಿಷ್ಟ ಆದೇಶಗಳನ್ನು ಜಾರಿಗೊಳಿಸುವಂತೆ ನ್ಯಾಯಾಧೀಶರ ಮೇಲೆ, ನಿರ್ದಿಷ್ಟವಾಗಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ಸಿಜೆಎಂ) ಮೇಲೆ ಉತ್ತರಪ್ರದೇಶ ಪೊಲೀಸರು ನಿರಂತರ ಒತ್ತಡ ಹೇರುತ್ತಿದ್ದಾರೆ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಶುಕ್ರವಾರ ಅಭಿಪ್ರಾಯಿಸಿದೆ. ನ್ಯಾಯಮೂರ್ತಿ ಅರುಣ್ ಕುಮಾರ್ ಸಿಂಗ್ ದೇಶ್ವಾಲ್ ಅವರ ಏಕಸದಸ್ಯ ಪೀಠ, ಉತ್ತರಪ್ರದೇಶವನ್ನು ಪೊಲೀಸ್ ರಾಜ್ಯವನ್ನಾಗಿ ಮಾಡಲು ನ್ಯಾಯಾಲಯ ಅನುಮತಿ ನೀಡುವುದಿಲ್ಲ ಎಂದು ರಾಜ್ಯದ ಪರವಾಗಿ ಹಾಜರಾದ ವಕೀಲರಿಗೆ ತಿಳಿಸಿದರು. ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಅವರ ವಿಚಾರಣೆ ಸಂದರ್ಭ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶದ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಹಾಗೂ ಅಂತಹ ಘಟನೆಯನ್ನು ಗುಂಡಿನ ಚಕಮಕಿ ಎಂದು ಬಿಂಬಿಸುವ ಪ್ರವೃತ್ತಿಯನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಕ್ರಮವನ್ನು ವಿವರಿಸಲು ವೀಡಿಯೊ ಕಾನ್ಪರೆನ್ಸ್ ಮೂಲಕ ಹಾಜರಾಗಲು ಈ ಅಧಿಕಾರಿಗಳಿಗೆ ಸೂಚಿಸಿದ್ದರು. ವಿಚಾರಣೆ ಸಂದರ್ಭ ಪೊಲೀಸ್ ಅಧಿಕಾರಿಗಳು, ಮುಖ್ಯವಾಗಿ ಸೇವೆಗೆ ಹೊಸದಾಗಿ ಸೇರ್ಪಡೆಯಾದ ಪೊಲೀಸ್ ಅಧಿಕಾರಿಗಳು ನ್ಯಾಯಾಧೀಶರ ಮೇಲೆ ಒತ್ತಡ ಹೇರುತ್ತಾರೆ. ಜಿಲ್ಲಾ ಮಟ್ಟದ ವಿಚಾರಣಾ ನ್ಯಾಯಾಲಯಗಳಲ್ಲಿ ಪೊಲೀಸ್ ಅಧಿಕಾರಿಗಳು ಒತ್ತಡ ಹೇರುವುದು ಹೆಚ್ಚಾಗಿ ಕಂಡು ಬರುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ. ಕೆಲವೊಮ್ಮೆ ಹಿರಿಯ ಪೊಲೀಸ್ ಅಧಿಕಾರಿಗಳು ನ್ಯಾಯಾಲಯದ ಕೊಠಡಿಗೆ ಪ್ರವೇಶಿಸಿ ನ್ಯಾಯಾಧೀಶರಿಗೆ ಒತ್ತಡ ಹೇರುವ ಬಗ್ಗೆ ಬಾರ್ ಅಸೋಸಿಯೇಷನ್ಗಳ ಮುಖ್ಯಸ್ಥರಿಂದ ಮಾಹಿತಿ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಅಮೆರಿಕನ್ ದಾಳಿ ಭೀತಿ| ಸಾವಿರ ಡ್ರೋನ್ಗಳನ್ನು ನಿಯೋಜಿಸಿದ ಇರಾನ್: ವರದಿ
ಟೆಹ್ರಾನ್, ಜ.30: ಸಂಭಾವ್ಯ ಅಮೆರಿಕನ್ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ಇರಾನ್ ತನ್ನ ಸಶಸ್ತ್ರ ಪಡೆಗಳಾದ್ಯಂತ ಸರಿಸುಮಾರು 1000 ಹೊಸ ಕಾರ್ಯತಂತ್ರದ ಡ್ರೋನ್ಗಳನ್ನು ನಿಯೋಜಿಸಿದೆ. ಮಿಲಿಟರಿ ರಹಸ್ಯಗಳನ್ನು ಕಾಪಾಡುವ ಸಲುವಾಗಿ ಡ್ರೋನ್ ನಿಯೋಜನೆಯ ಯಾವುದೇ ಛಾಯಾಚಿತ್ರಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಇರಾನ್ನ ಸರ್ಕಾರಿ ಸ್ವಾಮ್ಯದ `ತಸ್ನಿಮ್' ಸುದ್ದಿಸಂಸ್ಥೆ ವರದಿ ಮಾಡಿದೆ. ವಿಮಾನವಾಹಕ ಯುದ್ದನೌಕೆ ಅಬ್ರಹಾಂ ಲಿಂಕನ್ ನೇತೃತ್ವದ ಸಮರ ನೌಕೆಗಳ ಪಡೆಯು ಇರಾನಿನ ಮೇಲೆ ಕಳೆದ ಜೂನ್ನಲ್ಲಿ ನಡೆಸಿದ ಕಾರ್ಯಾಚರಣೆಗಿಂತಲೂ ಭೀಕರ ದಾಳಿ ನಡೆಸಲು ಸಜ್ಜಾಗಿವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಹಿನ್ನೆಲೆಯಲ್ಲಿ ಇರಾನ್ ಈ ಕ್ರಮ ಕೈಗೊಂಡಿದೆ ಎಂದು ವರದಿ ಹೇಳಿದೆ.
ಗುಡ್ನ್ಯೂಸ್: 2 ಸಾವಿರ ಹುದ್ದೆ ಭರ್ತಿಗೆ ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ; ಯಾವೆಲ್ಲಾ ಹುದ್ದೆ?
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. 2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜು ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಗುವಾಹಟಿ: ಬಾಂಗ್ಲಾದೇಶದ ನುಸುಳುಕೋರರನ್ನು ಒಬ್ಬೊಬ್ಬರಂತೆ ಗುರುತಿಸಲು ಸತತ ಮೂರನೇ ಅವಧಿಗೆ ಬಿಜೆಪಿಗೆ ಮತ ನೀಡಿ ಎಂದು ಚುನಾವಣಾ ರಾಜ್ಯವಾದ ಅಸ್ಸಾಂನ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. 2014ರಿಂದ ಹಾಗೂ ಅದಕ್ಕೂ ಮುಂಚಿನಿಂದಲೂ ಅಮಿತ್ ಶಾ ಅವರು ಅಸ್ಸಾಂ ಜನತೆಗೆ ನೀಡುತ್ತಾ ಬಂದಿರುವ ಚುನಾವಣಾ ಭರವಸೆಯಿದು. ಪೂರ್ವ ಅಸ್ಸಾಂನಲ್ಲಿರುವ ದಿಬ್ರುಗಢ ಹಾಗೂ ನಂತರ ಉತ್ತರ ಅಸ್ಸಾಂನ ಧೇಮಜಿಯಲ್ಲಿ ಆಯೋಜನೆಗೊಂಡಿದ್ದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಮಾತನಾಡಿದ ಅಮಿತ್ ಶಾ, “ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನುಸುಳುವಿಕೆಯನ್ನು ತಡೆಗಟ್ಟಿದೆ. ಆದರೆ ಕಾಂಗ್ರೆಸ್ ಆಡಳಿತದಲ್ಲಿ ಈಗಾಗಲೇ ರಾಜ್ಯದೊಳಗೆ ನುಸುಳಿರುವ ಮತ್ತು ಭೌಗೋಳಿಕ ಬೆದರಿಕೆ ಒಡ್ಡುತ್ತಿರುವ ನುಸುಳುಕೋರರನ್ನು ನಾವು ಗುರುತಿಸುತ್ತೇವೆ. ಬಿಜೆಪಿ ಸರಕಾರವನ್ನು ಮೂರನೇ ಬಾರಿಗೆ ಚುನಾಯಿಸಿ. ಈಗಾಗಲೇ ರಾಜ್ಯದಲ್ಲಿ ನೆಲೆಸಿರುವ ಯಾವುದೇ ನುಸುಳುಕೋರನನ್ನೂ ನಾವು ಬಿಡುವುದಿಲ್ಲ. ಒಬ್ಬೊಬ್ಬರನ್ನೇ ಗುರುತಿಸಿ, ರಾಜ್ಯದಿಂದ ಗಡೀಪಾರು ಮಾಡಲಾಗುತ್ತದೆ. ಈ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ” ಎಂದು ಘೋಷಿಸಿದರು. ದಿಬ್ರುಗಢದಲ್ಲಿ ಎರಡನೇ ವಿಧಾನಸಭೆ ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಅಮಿತ್ ಶಾ, ಧೇಮಜಿಯಲ್ಲಿ ಆಯೋಜನೆಗೊಂಡಿದ್ದ ಅಸ್ಸಾಂನ ಪ್ರಮುಖ ಆದಿವಾಸಿ ಸಮುದಾಯವಾದ ಮಿಸಿಂಗ್ ಸಮುದಾಯದ 10ನೇ ಮಿಸಿಂಗ್ ಯುವ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು. “ಹಲವು ದಶಕಗಳ ಕಾಲ ಕಾಂಗ್ರೆಸ್ ಪಕ್ಷವು ಅಸ್ಸಾಂನಲ್ಲಿ ನುಸುಳುವಿಕೆಗೆ ಅವಕಾಶ ನೀಡಿತು ಮತ್ತು ಅಧಿಕಾರದಲ್ಲಿರಲು ಅವರನ್ನು ಮತಬ್ಯಾಂಕ್ ಆಗಿ ಬಳಸಿಕೊಂಡಿತು. ಆದರೆ ಇಂದು ನಮ್ಮ ಸರಕಾರವು 1.26 ಲಕ್ಷ ಹೆಕ್ಟೇರ್ ಅರಣ್ಯ ಭೂಮಿ ಹಾಗೂ ಸರಕಾರಿ ಭೂಮಿಯನ್ನು ಬಾಂಗ್ಲಾದೇಶದ ನುಸುಳುಕೋರರಿಂದ ಮುಕ್ತಗೊಳಿಸಿದೆ” ಎಂದು, ಬಂಗಾಳಿ ಭಾಷಿಕ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ತೆರವು ಕಾರ್ಯಾಚರಣೆಯನ್ನು ಉಲ್ಲೇಖಿಸಿ ಹೇಳಿದರು. ಅವರನ್ನು ಬಿಜೆಪಿ ನುಸುಳುಕೋರರು ಎಂದು ಪರಿಗಣಿಸಿದೆ. “ನುಸುಳುಕೋರರು ಶ್ರೀಮಂತ ಸಂಕರ್ ದೇವ್ ಅವರ ಜನ್ಮಭೂಮಿ ಹಾಗೂ ಕಾಝಿರಂಗ ರಾಷ್ಟ್ರೀಯ ಉದ್ಯಾನವನವನ್ನೂ ಬಿಟ್ಟಿಲ್ಲ. ಅವರು ಘೇಂಡಾಮೃಗಗಳನ್ನೂ ಗುರಿಯಾಗಿಸಿಕೊಂಡು ಅವುಗಳನ್ನು ಹತ್ಯೆಗೈದಿದ್ದಾರೆ. ಭೌಗೋಳಿಕ ಬೆದರಿಕೆ ನಿಲ್ಲಲೇಬೇಕು. ಇಲ್ಲದಿದ್ದರೆ ಭವಿಷ್ಯದ ದಿನಗಳಲ್ಲಿ ಅಸ್ಸಾಂ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ” ಎಂದು ಅವರು ಹೇಳಿದರು.
ಕಲಬುರಗಿ | ಫೆ.1ರಂದು ಸಂಕ್ರಮಣ ಕಲಾ ಸಂವಾದ : ಬಸವರಾಜ ಜಾನೆ
ಕಲಬುರಗಿ : ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಆಶ್ರಯದಲ್ಲಿ ನಗರದ ಕನ್ನಡ ಭವನ ಸುವರ್ಣ ಸಭಾ ಭವನದಲ್ಲಿ ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಸಂಕ್ರಮಣ ಕಲಾ ಸಂವಾದ ಏರ್ಪಡಿಸಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕ ಬಸವರಾಜ ಜಾನೆ ತಿಳಿಸಿದ್ದಾರೆ. ಗುಲ್ಬರ್ಗಾ ವಿವಿಯ ಸಿಂಡಿಕೇಟ್ ಸದಸ್ಯ ಎಸ್.ಪಿ.ಸುಳ್ಳದ ಉದ್ಘಾಟಿಸಲಿದ್ದು, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ದಿ ಆರ್ಟ ಇಂಟಿಗ್ರೇಷನ್ ಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಎಂ.ಎಚ್.ಬೆಳಮಗಿ, ಪತ್ರಕರ್ತ ಸಂಗಮನಾಥ ರೇವತಗಾಂವ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸಿಯುಕೆ ಸಂಗೀತ ಮತ್ತು ಲಲಿತಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಾನಂದ ಬಂಟನೂರ ಅವರು ವಚನಗಳಲ್ಲಿ ದೃಶ್ಯಕಲೆಯ ಪರಿಕಲ್ಪನೆ ಹಾಗೂ ಬಾಗಲಕೋಟೆ ಚಿತ್ರಕಲಾಶಿಕ್ಷಕ ಲಕ್ಷ್ಮಣ ಲಕ್ಷ್ಮಣ ಬದಾಮಿ ಅವರು ಸಮಕಾಲಿನ ಕಲೆ ಮತ್ತು ಕಾವ್ಯ ವಿಷಯ ಕುರಿತು ಮಾತನಾಡಲಿದ್ದಾರೆ ಎಂದು ತಿಳಿಸಿದರು. ಅಕಾಡೆಮಿ ರಿಜಿಸ್ಟ್ರಾರ್ ಎನ್.ನಮ್ರತ, ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಗೌರವ ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಉಪಸ್ಥಿತರಿರಲಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಸಂವಾದ ಕಾರ್ಯಕ್ರಮ ನಂತರ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ.ಸ.ಕುಮಾರ ಅವರು ಕಲಾವಿದರೊಂದಿಗೆ ಕಲಾಕ್ಷೇತ್ರ ಹಾಗೂ ವಿಭಾಗ ಮಟ್ಟದ ಕಲಾಮೇಳ ಆಯೋಜಿಸುವ ಕುರಿತು ಚರ್ಚೆ ಮಾಡಲಿದ್ದಾರೆ. ನಗರದ ಸಮಸ್ತ ಕಲಾವಿದರು ಚಿತ್ರಕಲಾ ಶಿಕ್ಷಕ-ಶಿಕ್ಷಕಿಯರು, ಕಲಾಸಕ್ತರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾರ್ಯಕ್ರಮದ ಸಂಚಾಲಕ ಬಸವರಾಜ ಜಾನೆ ತಿಳಿಸಿದ್ದಾರೆ.
ಟಿ-20 ವಿಶ್ವಕಪ್| ಅಮೆರಿಕದ ಕ್ರಿಕೆಟ್ ತಂಡ ಪ್ರಕಟ: ಮೊನಂಕ್ ಪಟೇಲ್ ನಾಯಕ
ವಾಶಿಂಗ್ಟನ್, ಜ.30: ಮುಂಬರುವ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ಗಾಗಿ ಅಮೆರಿಕ ಕ್ರಿಕೆಟ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಮೊನಂಕ್ ಪಟೇಲ್ ಅಮೆರಿಕ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. 2024ರಲ್ಲಿ ಚೊಚ್ಚಲ ವಿಶ್ವಕಪ್ ಪಂದ್ಯವನ್ನಾಡಿದ 10 ಪ್ರಮುಖ ಆಟಗಾರರು ಈಗಿನ ತಂಡದಲ್ಲಿದ್ದಾರೆ. 2024ರ ಆವೃತ್ತಿಯ ಟಿ-20 ವಿಶ್ವಕಪ್ನಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಗೆಲುವು ಸೇರಿದಂತೆ ಸೂಪರ್-8 ಹಂತದಲ್ಲಿ ನೀಡಿದ್ದ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವಕಪ್ಗೆ ಅಮೆರಿಕ ತಂಡ ನೇರ ಅರ್ಹತೆ ಪಡೆದಿತ್ತು. ಎರಡನೇ ಬಾರಿ ಟಿ-20 ವಿಶ್ವಕಪ್ನಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದೆ. ನಾಯಕ ಪಟೇಲ್ರಲ್ಲದೆ, ಜೆಸ್ಸಿ ಸಿಂಗ್, ಆಂಡ್ರೀಸ್ ಗೌಸ್, ಮಿಲಿಂದ ಕುಮಾರ್, ಶಯನ್ ಜಹಾಂಗೀರ್, ಹರ್ಮೀತ್ ಸಿಂಗ್, ನೋಸ್ತುಶ್ ಕೆಂಜಿಗೆ, , ಶಾಡ್ಲಿ ವ್ಯಾನ್ ಶಾಲ್ಕ್ವಿಕ್,, ಸೌರಭ್ ನೇತ್ರಾವಲ್ಕರ್ ಹಾಗೂ ಅಲಿ ಖಾನ್ ಕಳೆದ ಆವೃತ್ತಿಯ ವಿಶ್ವಕಪ್ನಲ್ಲೂ ಭಾಗವಹಿಸಿದ್ದರು. ಹರ್ಮೀತ್, ಮಿಲಿಂದ್ ಹಾಗೂ ಸೌರಭ್ಗೆ ಭಾರತದಲ್ಲಿ ವಯೋಮಿತಿ ಹಾಗೂ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಗಳನ್ನು ಆಡಿರುವ ಅನುಭವವಿದೆ. ಇದರಿಂದ ಅಮೆರಿಕ ತಂಡಕ್ಕೆ ಲಾಭವಾಗಬಹುದು. 2024ರ ಆವೃತ್ತಿಯ ವಿಶ್ವಕಪ್ನಲ್ಲಿ ವಿಕೆಟ್ಕೀಪರ್-ಬ್ಯಾಟರ್ ಗೌಸ್ ಆರು ಇನಿಂಗ್ಸ್ಗಳಲ್ಲಿ 219 ರನ್ ಗಳಿಸಿ ಅಮೆರಿಕದ ಪರ ಸರ್ವಾಧಿಕ ಸ್ಕೋರ್ ಗಳಿಸಿದ್ದರು. ಸೌರಭ್ ನೇತ್ರಾವಲ್ಕರ್ ಆರು ವಿಕೆಟ್ಗಳನ್ನು ಉರುಳಿಸಿದ್ದರು. ಶುಭಮನ್ ರಂಜನೆ ಐಸಿಸಿ ಟೂರ್ನಿಯಲ್ಲಿ ತನ್ನ ಚೊಚ್ಚಲ ಟಿ-20 ಪಂದ್ಯವನ್ನಾಡಲಿದ್ದಾರೆ. ಮುಹಮ್ಮದ್ ಮುಹ್ಸಿನ್ ಹಾಗೂ ಶೆಹಾನ್ ಜಯಸೂರ್ಯ ಅಮೆರಿಕದ ಪರ ಮೊದಲ ಅಂತರ್ರಾಷ್ಟ್ರೀಯ ಪಂದ್ಯ ಆಡುವ ಅವಕಾಶ ಪಡೆದಿದ್ದಾರೆ. ಪುಣೆ ಮೂಲದ ಶುಭಮ್ ಅಮೆರಿಕದ ಪರ ನಾಲ್ಕು ಏಕದಿನ ಪಂದ್ಯಗಳಲ್ಲಿ ಆಡಿದ್ದರು. ಅಮೆರಿಕ ತಂಡವು ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಭಾರತ, ಪಾಕಿಸ್ತಾನ, ನೆದರ್ಲ್ಯಾಂಡ್ಸ್ ಹಾಗೂ ನಮೀಬಿಯಾ ತಂಡಗಳನ್ನು ಎದುರಿಸಲಿದೆ. ಅಮೆರಿಕ ತಂಡವು ಫೆ.7ರಂದು ಮುಂಬೈನಲ್ಲಿ ಭಾರತ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಅಮೆರಿಕದ ವಿಶ್ವಕಪ್ ತಂಡ: ಮೊನಂಕ್ ಪಟೇಲ್(ನಾಯಕ), ಜೆಸ್ಸಿ ಸಿಂಗ್,ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೇಜ ಮುಕ್ಕಮಲಾ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತುಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್ವಿಕ್, ಸೌರಭ್ ನೇತ್ರಾವಲ್ಕರ್, ಅಲಿ ಖಾನ್, ಮುಹಮ್ಮದ್ ಮುಹ್ಸಿನ್, ಶುಭಮ್ ರಂಜನೆ.
ರಣಜಿ| ಪಂಜಾಬ್ ವಿರುದ್ಧ ಕರ್ನಾಟಕಕ್ಕೆ 255/6: ಕೆ.ಎಲ್.ರಾಹುಲ್ ಅರ್ಧಶತಕ
ಮೊಹಾಲಿ, ಜ.30: ಆರಂಭಿಕ ಆಟಗಾರರಾದ ಕೆ.ಎಲ್.ರಾಹುಲ್ (59 ರನ್, 87 ಎಸೆತ, 9 ಬೌಂಡರಿ)ಹಾಗೂ ಮಯಾಂಕ್ ಅಗರ್ವಾಲ್(46 ರನ್, 64 ಎಸೆತ, 6 ಬೌಂಡರಿ)ಮೊದಲ ವಿಕೆಟ್ಗೆ 102 ರನ್ ಜೊತೆಯಾಟ ನಡೆಸಿದ ಹೊರತಾಗಿಯೂ ಕರ್ನಾಟಕ ಕ್ರಿಕೆಟ್ ತಂಡವು ಆತಿಥೇಯ ಪಂಜಾಬ್ ತಂಡದ ವಿರುದ್ಧ ರಣಜಿ ಟ್ರೋಫಿ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಬ್ಯಾಟಿಂಗ್ ಕುಸಿತಕ್ಕೆ ಒಳಗಾಗಿದೆ. ಶುಕ್ರವಾರ ಎರಡನೇ ದಿನದಾಟದಂತ್ಯಕ್ಕೆ ಕರ್ನಾಟಕ ತಂಡ ತನ್ನ ಮೊದಲ ಇನಿಂಗ್ಸ್ನಲ್ಲಿ 255 ರನ್ಗೆ ಆರು ವಿಕೆಟ್ಗಳನ್ನು ಕಳೆದುಕೊಂಡಿದೆ. ಆಲ್ರೌಂಡರ್ ಶ್ರೇಯಸ್ ಗೋಪಾಲ್(ಔಟಾಗದೆ 42 ರನ್, 124 ಎಸೆತ, 3 ಬೌಂಡರಿ)ಹಾಗೂ ಬೌಲರ್ ವಿದ್ಯಾಧರ ಪಾಟೀಲ್(ಔಟಾಗದೆ 23, 56 ಎಸೆತ, 4 ಬೌಂಡರಿ)ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಜೋಡಿ ಏಳನೇ ವಿಕೆಟ್ಗೆ 42 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿತು. 9 ವಿಕೆಟ್ಗಳ ನಷ್ಟಕ್ಕೆ 303 ರನ್ನಿಂದ ತನ್ನ ಮೊದಲ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡವು ನಿನ್ನೆಯ ಮೊತ್ತಕ್ಕೆ ಕೇವಲ ಆರು ರನ್ ಸೇರಿಸಿ ಆಲೌಟಾಯಿತು. ಔಟಾಗದೆ 77 ರನ್ನಿಂದ ಬ್ಯಾಟಿಂಗ್ ಮುಂದುವರಿಸಿದ ಎಮನ್ಜೋತ್ ಸಿಂಗ್ 83 ರನ್ ಗಳಿಸಿ ಕರ್ನಾಟಕದ ಯಶಸ್ವಿ ಬೌಲರ್ ವಿದ್ಯಾಧರ ಪಾಟೀಲ್ಗೆ(4-52) ವಿಕೆಟ್ ಒಪ್ಪಿಸಿದರು. ಶ್ರೇಯಸ್ ಗೋಪಾಲ್ (3-48)ಹಾಗೂ ಮುಹ್ಸಿನ್ ಖಾನ್(2-85)ಐದು ವಿಕೆಟ್ಗಳನ್ನು ಹಂಚಿಕೊಂಡರು. ಮೊದಲ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡದ ಪರ 21.3 ಓವರ್ಗಳಲ್ಲಿ 102 ರನ್ ಕಲೆ ಹಾಕಿದ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಉತ್ತಮ ಆರಂಭ ಒದಗಿಸಿದರು. ಅಗರ್ವಾಲ್, ರಾಹುಲ್ ಹಾಗೂ ನಾಯಕ ದೇವದತ್ತ ಪಡಿಕ್ಕಲ್(9 ರನ್)ಔಟಾದಾಗ ಕರ್ನಾಟಕ 137 ರನ್ಗೆ ಮೂರು ವಿಕೆಟ್ಗಳನ್ನು ಕಳೆದುಕೊಂಡಿತು. ಆರ್. ಸ್ಮರಣ್(9 ರನ್),ಕೆ.ವಿ. ಅನೀಶ್(32 ರನ್, 75 ಎಸೆತ)ಹಾಗೂ ಕೃತಿಕ್ ಕೃಷ್ಣ(28 ರನ್, 83 ಎಸೆತ)ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಪಂಜಾಬ್ ತಂಡದ ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್ ಹರ್ಪ್ರೀತ್ ಬ್ರಾರ್(4-101)ಯಶಸ್ವಿ ಪ್ರದರ್ಶನ ನೀಡಿದರು. ಸುಖದೀಪ್ ಸಿಂಗ್(1-22)ಹಾಗೂ ಎಮನ್ಜೋತ್ ಸಿಂಗ್(1-55)ತಲಾ ಒಂದು ವಿಕೆಟ್ಗಳನ್ನು ಕಬಳಿಸಿದರು.
ಉಡುಪಿ ಜಿಲ್ಲಾ ಸರಕಾರಿ ವಕೀಲರಿಂದ ಕರ್ತವ್ಯಲೋಪ; ವಿಚಾರಣೆಯ ಬಳಿಕ ಸೂಕ್ತ ಕ್ರಮ: ಸರಕಾರದ ಹೇಳಿಕೆ
ಉಡುಪಿ, ಜ.30: 2021-23ನೇ ಸಾಲಿನಲ್ಲಿ ಉಡುಪಿಯ ಜಿಲ್ಲಾ ಸರಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತಿದ್ದ ಅವಧಿಯಲ್ಲಿ ನ್ಯಾಯಾಲಯದ ತನಿಖೆಯಲ್ಲಿರುವ ವಿವಿಧ ಪ್ರಕರಮಗಳಲ್ಲಿ ಲಿಖಿತ ಹೇಳಿಕೆ ಸಲ್ಲಿಸದಿರುವುದ ರಿಂದ ಸರಕಾರಕ್ಕೆ ಹಿನ್ನಡೆಯಾಗಿ ಕರ್ತವ್ಯಲೋಪ ಎಸಗಿರುವ ಕುರಿತು ಸ್ವೀಕೃತ ವಾದ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಯುತಿದ್ದು, ವರದಿ ಸ್ವೀಕೃತವಾದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ. ಈ ಕುರಿತು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ಗುರುವಾರ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರ ನೀಡಿದ ಕಾನೂನು ಸಚಿವರು, ಈ ಬಗ್ಗೆ ಉಡುಪಿ ವಕೀಲರ ಸಂಘದ ಅಧ್ಯಕ್ಷರು ಸರಕಾರಕ್ಕೆ ದೂರು ಸಲ್ಲಿಸಿದ್ದಾರೆ ಎಂದರು. ದೂರಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿಗಳು, ಜಿಲ್ಲಾ ಸರಕಾರಿ ವಕೀಲರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ವಿಚಾರಣೆ ನಡೆಯುತ್ತಿದೆ. ವಿಚಾರಣಾ ವರದಿ ಸ್ವೀಕೃತವಾದ ಬಳಿಕ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಉತ್ತರಿಸಿದರು. ಎ.ಸಂತೋಷ್ ಹೆಬ್ಬಾರ್ ಅವರು 2021-23ರ ಅವಧಿಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಲ್ಲಿ ಜಿಲ್ಲಾ ಸರಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸಿದ್ದು, ಈ ಅವಧಿಯಲ್ಲಿ ನ್ಯಾಯಾಲಯಗಳಲ್ಲಿ ತನಿಖಾ ಹಂತದಲ್ಲಿ ಇದ್ದ ಪ್ರಕರಣಗಳಲ್ಲಿ ಸರಕಾರದ ಪರವಾಗಿ ಲಿಖಿತ ಹೇಳಿಕೆ ಸಲ್ಲಿಸದೇ ಇರುವ ಕುರಿತು ಉಡುಪಿ ವಕೀಲರ ಸಂಘದ ಅಧ್ಯಕ್ಷರು ಸರಕಾರಕ್ಕೆ ದೂರು ಸಲ್ಲಿಸಿ ಗಮನ ಸೆಳೆದಿದ್ದರು ಎಂದು ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಂತೋಷ್ ಹೆಬ್ಬಾರ್ ಅವರು ಎಷ್ಟು ಪ್ರಕರಣಗಳಲ್ಲಿ ಲಿಖಿತ ಹೇಳಿಕೆ ಸಲ್ಲಿಸಿಲ್ಲ ಎಂಬುದನ್ನು ಹಾಗೂ ಇದರಿಂದ ಸರಕಾರಕ್ಕೆ ಉಂಟಾಗಿರುವ ನಷ್ಟದ ಕುರಿತು ವಿಚಾರಣೆ ನಡೆಸಿ ವಿಚಾರಣಾ ವರದಿಯಲ್ಲಿ ಸಲ್ಲಿಸುವಂತೆ ಇದೇ ಜ.22ರಂದು ಉಡುಪಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ವಕೀಲರ ಸಂಘದ ಅಧ್ಯಕ್ಷರು ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸುವಂತೆ ಜಿಲ್ಲಾ ಸರಕಾರಿ ವಕೀಲರು ಹಾಗೂ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಜ.22ರಂದೇ ಬರೆದ ಪತ್ರದಲ್ಲಿ ಕೋರಲಾಗಿದೆ. ದೂರಿಗೆ ಸಂಬಂಧಿಸಿದಂತೆ ವಿಚಾರಣಾ ವರದಿ, ಮಾಹಿತಿ ಸ್ವೀಕೃತವಾದ ಬಳಿಕ ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಿ, ಹಿಂದಿನ ಸರಕಾರಿ ವಕೀಲರಿಂದ ಕರ್ತವ್ಯಲೋಪದ ಕುರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವರು, ಐವನ್ ಡಿಸೋಜರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.
ಐಟಿ ದಾಳಿ ಸಂದರ್ಭದಲ್ಲಿ ಕಾನ್ಫಿಡೆನ್ಸ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿರುವುದು ಇದೀಗ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಘಟನೆಗೆ ಕೇಂದ್ರ ಸರ್ಕಾರದ ತೆರಿಗೆ ಭಯೋತ್ಪಾದನೆ ಕಾರಣ ಎಂದಿರುವ ಯೂತ್ ಕಾಂಗ್ರೆಸ್, ಕರ್ನಾಟಕದ ಉದ್ಯಮಿಗಳಿಗೆ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಐಟಿ-ಇಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದೆ. ಅಲ್ಲದೇ ಗುಜರಾತ್ ಉದ್ಯಮಗಳಿಗೆ ಕೋಟಿ ಕೋಟಿ ಹಣ ಲೂಟಿ ಹೊಡೆಯಲು ಅವಕಾಶ ಮಾಡಿಕೊಡಲಾಗಿದೆ ಎಂದೂ ಯೂತ್ ಕಾಂಗ್ರೆಸ್ ಹರಿಹಾಯ್ದಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.
ವೆಸ್ಟ್ಇಂಡೀಸ್ ವಿರುದ್ಧ 43 ಎಸೆತಗಳಲ್ಲಿ ಟಿ-20 ಶತಕ| ಹಲವು ದಾಖಲೆಗಳನ್ನು ಮುರಿದ ಕ್ವಿಂಟನ್ ಡಿಕಾಕ್
ಕೇಪ್ಟೌನ್, ಜ.30: ಸೆಂಚೂರಿಯನ್ನಲ್ಲಿ ನಡೆದ ವೆಸ್ಟ್ಇಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಮಿಂಚಿನ ಶತಕ ಗಳಿಸಿದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ತನ್ನ ದೇಶದ ಸಾರ್ವಕಾಲಿಕ ಟಿ-20 ರನ್ ದಾಖಲೆಯನ್ನು ಮುರಿದರು. ಟ್ವೆಂಟಿ-20 ವಿಶ್ವಕಪ್ಗೆ ದಿನಗಣನೆ ಆರಂಭವಾಗಿರುವಾಗಲೇ ಐತಿಹಾಸಿಕ ಸಾಧನೆ ಮಾಡಿದರು. ಗುರುವಾರ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ನಡೆದ ವಿಂಡೀಸ್ ವಿರುದ್ಧದ ಎರಡನೇ ಟಿ-20 ಪಂದ್ಯದ ವೇಳೆ ಡಿಕಾಕ್ ಈ ಮಹತ್ವದ ಮೈಲಿಗಲ್ಲು ತಲುಪಿದರು.ಡಿಕಾಕ್ ಅವರ ಈ ಶತಕವು ದಕ್ಷಿಣ ಆಫ್ರಿಕಾ ತಂಡಕ್ಕೆ ಏಳು ವಿಕೆಟ್ಗಳ ಗೆಲುವು ತಂದುಕೊಟ್ಟಿದೆ. ಡಿಕಾಕ್ ಜಾಗತಿಕ ಪಂದ್ಯಾವಳಿಗಿಂತ ಮೊದಲು ಎದುರಾಳಿ ತಂಡಗಳಿಗೆ ಸ್ಪಷ್ಟ ಸಂದೇಶ ರವಾನಿಸಿದರು. 430 ಪಂದ್ಯಗಳಲ್ಲಿ 31.46ರ ಸರಾಸರಿಯಲ್ಲಿ 139.10ರ ಸ್ಟ್ರೈಕ್ರೇಟ್ನಲ್ಲಿ 12,113 ರನ್ ಗಳಿಸಿರುವ ಡಿಕಾಕ್ ಸದ್ಯ ದಕ್ಷಿಣ ಆಫ್ರಿಕಾದ ಟಿ-20 ರನ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ. ಚುಟುಕು ಮಾದರಿಯಲ್ಲಿ ಡಿಕಾಕ್ ಅವರ ದಾಖಲೆ ಸ್ಥಿರತೆಯನ್ನು ವ್ಯಾಖ್ಯಾನಿಸುತ್ತದೆ. ಅವರ ಎಂಟು ಟಿ-20 ಶತಕಗಳು ಹಾಗೂ 81 ಅರ್ಧಶತಕಗಳು ವರ್ಷಗಳ ನಿರಂತರ ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ. ದಕ್ಷಿಣ ಆಫ್ರಿಕಾ ತಂಡದ ಬ್ಯಾಟರ್ಗಳ ಪೈಕಿ ಡೇವಿಡ್ ಮಿಲ್ಲರ್ ಮಾತ್ರ 2017ರಲ್ಲಿ ಬಾಂಗ್ಲಾದೇಶದ ವಿರುದ್ಧ 35 ಎಸೆತಗಳಲ್ಲಿ ಶತಕ ಗಳಿಸಿದ್ದರು. ಡೆವಾಲ್ಡ್ ಬ್ರೆವಿಸ್ ಕಳೆದ ವರ್ಷ ಆಸ್ಟ್ರೇಲಿಯದ ವಿರುದ್ಧ 41 ಎಸೆತಗಳಲ್ಲಿ ಶತಕ ಗಳಿಸಿದ್ದರು. ಇದು ವೆಸ್ಟ್ಇಂಡೀಸ್ ವಿರುದ್ಧ ಡಿಕಾಕ್ ಗಳಿಸಿದ ಶತಕಕ್ಕಿಂತ ವೇಗವಾಗಿದೆ. ಟಿ-20 ಕ್ರಿಕೆಟ್ನಲ್ಲಿ ದಕ್ಷಿಣ ಆಫ್ರಿಕಾ ಎರಡು ಬಾರಿ 200ಕ್ಕೂ ಅಧಿಕ ರನ್ ಚೇಸ್ ಮಾಡುವಾಗ ಡಿಕಾಕ್ ಶತಕ ಗಳಿಸಿದ್ದಾರೆ. ಇದರಲ್ಲಿ 250 ಪ್ಲಸ್ ಚೇಸ್ ಕೂಡ ಸೇರಿದೆ. ಟಿ-20 ಇನಿಂಗ್ಸ್ನಲ್ಲಿ ಅತ್ಯಂತ ಹೆಚ್ಚು ಸಿಕ್ಸರ್ಗಳನ್ನು ಸಿಡಿಸಿದ ದಕ್ಷಿಣ ಆಫ್ರಿಕಾ ಆಟಗಾರರ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನ ಪಡೆದಿದ್ದಾರೆ. 10 ಸಿಕ್ಸರ್ಗಳನ್ನು ಸಿಡಿಸಿ ರೀಝಾ ಹೆಂಡ್ರಿಕ್ಸ್ ದಾಖಲೆಯನ್ನು ಸರಿಗಟ್ಟಿದ್ದಾರೆ. ರಿಚರ್ಡ್ ಲೇವಿ 2012ರಲ್ಲಿ 13 ಸಿಕ್ಸರ್ಗಳನ್ನು ಸಿಡಿಸಿದ್ದು, ಈಗಲೂ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಡೇವಿಡ್ ಮಿಲ್ಲರ್ ಹಾಗೂ ರಿಲೀ ರೊಸ್ಸೌ ನಂತರ ಟಿ-20 ಕ್ರಿಕೆಟ್ನಲ್ಲಿ ಹಲವು ಶತಕಗಳನ್ನು ಗಳಿಸಿದ ದಕ್ಷಿಣ ಆಫ್ರಿಕಾದ ಮೂರನೇ ಆಟಗಾರನಾಗಿದ್ದಾರೆ. ಡಿಕಾಕ್ ಪುರುಷರ ಟಿ-20 ಕ್ರಿಕೆಟ್ನಲ್ಲಿ ಅತ್ಯಂತ ಹೆಚ್ಚು ಶತಕಗಳನ್ನು(8)ಗಳಿಸಿದ ನಿಯೋಜಿತ ವಿಕೆಟ್ಕೀಪರ್ ಆಗಿದ್ದಾರೆ. ಒಂದೇ ಮೈದಾನದಲ್ಲಿ ಎರಡು ಬಾರಿ ಟಿ-20 ಶತಕ ಗಳಿಸಿದ ದಕ್ಷಿಣ ಆಫ್ರಿಕಾದ ಮೊದಲ ಆಟಗಾರ ಹಾಗೂ ಕಾಲಿನ್ ಮುನ್ರೊ ನಂತರ ವಿಶ್ವದ ಎರಡನೇ ಆಟಗಾರನಾಗಿದ್ದಾರೆ. ಟಿ-20 ಮಾದರಿಯ ಕ್ರಿಕೆಟ್ನಲ್ಲಿ ಪ್ರತ್ಯೇಕ ನಾಲ್ಕು ಬಾರಿ ದಕ್ಷಿಣ ಆಫ್ರಿಕಾದ ಪರ 150ಕ್ಕೂ ಅಧಿಕ ಜೊತೆಯಾಟದಲ್ಲಿ ಭಾಗಿಯಾಗಿದ್ದರು. ವೆಸ್ಟ್ಇಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ 49 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ ಆರು ಬೌಂಡರಿಗಳ ಸಹಿತ 115 ರನ್ ಗಳಿಸಿರುವ ಡಿಕಾಕ್ ದಕ್ಷಿಣ ಆಫ್ರಿಕಾ ತಂಡವು ಕೇವಲ 17.3 ಓವರ್ಗಳಲ್ಲಿ 222 ರನ್ ಚೇಸ್ ಮಾಡುವಲ್ಲಿ ನೆರವಾಗಿದ್ದರು. ಈ ಗೆಲುವಿನ ಮೂಲಕ ಇನ್ನೂ ಪಂದ್ಯ ಬಾಕಿ ಇರುವಾಗಲೇ ದಕ್ಷಿಣ ಆಫ್ರಿಕಾ ತಂಡವು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ| ಮಿಕ್ಸೆಡ್ ಡಬಲ್ಸ್ ಪ್ರಶಸ್ತಿ ಉಳಿಸಿಕೊಂಡ ಒಲಿವಿಯಾ, ಜಾನ್ ಪೀರ್ಸ್
ಮೆಲ್ಬರ್ನ್, ಜ.30: ಫ್ರೆಂಚ್ ಜೋಡಿ ಕ್ರಿಸ್ಟಿನಾ ಮ್ಲಾಡೆನೋವಿಕ್ ಹಾಗೂ ಮ್ಯಾನುಯೆಲ್ ಗಿನಾರ್ಡ್ರನ್ನು ಮಣಿಸಿದ ಆಸ್ಟ್ರೇಲಿಯದ ಒಲಿವಿಯಾ ಗಾಡೆಕಿ ಹಾಗೂ ಜಾನ್ ಪೀರ್ಸ್ 37 ವರ್ಷಗಳ ನಂತರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಮಿಕ್ಸೆಡ್ ಡಬಲ್ಸ್ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡ ಮೊದಲ ಜೋಡಿ ಎನಿಸಿಕೊಂಡರು. ವೈಲ್ಡ್ಕಾರ್ಡ್ ಮೂಲಕ ಟೂರ್ನಿಗೆ ಪ್ರವೇಶಿಸಿದ್ದ ಒಲಿವಿಯಾ ಹಾಗೂ ಜಾನ್ ಪೀರ್ಸ್ ಫ್ರೆಂಚ್ ಜೋಡಿಯನ್ನು 4-6, 6-3(10-8) ಅಂತರದಿಂದ ಮಣಿಸಿದರು. 1989ರ ನಂತರ ಈ ಸಾಧನೆ ಮಾಡಿದ ಮೊದಲ ಮಿಕ್ಸೆಡ್ ಟೀಮ್ ಎನಿಸಿಕೊಂಡರು. 37 ವರ್ಷಗಳ ಹಿಂದೆ ಜಾನಾ ನೊವೊಟ್ನಾ ಹಾಗೂ ಜಿಮ್ ಪುಗ್ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡಿದ್ದರು. ಒಲಿವಿಯಾ ಹಾಗೂ ಜಾನ್ ಪೀರ್ಸ್ 62 ವರ್ಷಗಳ ನಂತರ ಮಿಕ್ಸೆಡ್ ಡಬಲ್ಸ್ ಟ್ರೋಫಿಯನ್ನು ಉಳಿಸಿಕೊಂಡ ಆಸ್ಟ್ರೇಲಿಯದ ಮೊದಲ ಜೋಡಿ ಎನಿಸಿಕೊಂಡರು. 62 ವರ್ಷಗಳ ಹಿಂದೆ ಮಾರ್ಗರೆಟ್ ಕೋರ್ಟ್ ಹಾಗೂ ಕೆನ್ ಫ್ಲೆಚರ್ ಈ ಸಾಧನೆ ಮಾಡಿದ್ದರು. ‘‘ಈಗ ನಾವು ಈ ಸ್ಥಾನದಲ್ಲಿರುವುದನ್ನು ನಂಬಲಾಗುತ್ತಿಲ್ಲ. ಈ ವರ್ಷ ಮತ್ತೊಮ್ಮೆ ಟ್ರೋಫಿಯನ್ನು ಗೆದ್ದಿರುವುದು ಅದ್ಭುತ ಸಾಧನೆ. ನಾವು ಈ ಸಾಧನೆ ಮಾಡಬಲ್ಲೆವು ಎಂದು ಗೊತ್ತಿತ್ತು’’ ಎಂದು ಪೀರ್ಸ್ ಜೊತೆ ಎರಡನೇ ಬಾರಿ ಗ್ರ್ಯಾನ್ಸ್ಲಾಮ್ ಪ್ರಶಸ್ತಿ ಜಯಿಸಿರುವ ಗಾಡೆಕಿ ಹೇಳಿದ್ದಾರೆ. ಗಾಡೆಕಿ ಪಾಲಿಗೆ ಇದು ನಾಲ್ಕನೇ ಪ್ರಶಸ್ತಿಯಾಗಿದೆ. ‘‘ಒಮ್ಮೆ ಗ್ರ್ಯಾನ್ಸ್ಲಾಮ್ ಗೆಲ್ಲುವುದು ತುಂಬಾ ಕಷ್ಟಕರ. ಆದರೆ ಅದನ್ನು ಉಳಿಸಿಕೊಳ್ಳುವುದು ಅತ್ಯಂತ ದೊಡ್ಡ ಗುರಿಯಾಗಿದೆ. ಕೆಲವು ತಿಂಗಳ ಹಿಂದೆ ನಾನು ಕಷ್ಟಪಟ್ಟು ನಡೆಯುತ್ತಿದ್ದೆ. ನಾನು ಊರುಗೋಲುಗಳನ್ನು ಬಳಸುತ್ತಿದ್ದೆ. ಗಿನಾರ್ಡ್ ನನ್ನ ಮೇಲೆ ನಂಬಿಕೆ ಇಟ್ಟು ಯೋಜನೆ ರೂಪಿಸಿದರು.ಅವರು ನನ್ನಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ತುಂಬಾ ಧನ್ಯವಾದಗಳು’’ಎಂದು ಡಬಲ್ಸ್ ಹಾಗೂ ಮಿಕ್ಸೆಡ್ ಡಬಲ್ಸ್ನಲ್ಲಿ 9 ಬಾರಿ ಗ್ರ್ಯಾನ್ಸ್ಲಾಮ್ ಗೆದ್ದಿರುವ ಮ್ಲಾಡೆನೋವಿಕ್ ಹೇಳಿದ್ದಾರೆ.
2026 ಇಂಡಿಯಾ ಎನರ್ಜಿ ವೀಕ್: ಎಂಆರ್ಪಿಎಲ್ ಗೆ ಎರಡು ಎಫ್ಐಪಿಐ ಪ್ರಶಸ್ತಿ
ಮಂಗಳೂರು: ಭಾರತದ ತೈಲ ಮತ್ತು ಅನಿಲ ವಲಯವನ್ನು ಪ್ರತಿನಿಧಿಸುವ ಉನ್ನತ ಕೈಗಾರಿಕಾ ಸಂಸ್ಥೆಯಾಗಿರುವ ಭಾರತೀಯ ಪೆಟ್ರೋಲಿಯಂ ಉದ್ಯಮದ ಒಕ್ಕೂಟದ ಸಿಪಿಎಸ್ ಇ ' ಎ 'ವಿಭಾಗದ ಮತ್ತು ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ ಅಂಗಸಂಸ್ಥೆ ಯಾದ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆ ಮಿಕಲ್ಸ್ ಲಿಮಿಟೆಡ್ (ಎಂಆರ್ ಪಿಎಲ್), 2026 ರ ಇಂಡಿಯಾ ಎನರ್ಜಿ ವೀಕ್ (ಐಇಡಬ್ಲ್ಯು) ಸಂದರ್ಭದಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಪೆಟ್ರೋಲಿಯಂ ಇಂಡಸ್ಟ್ರಿ (ಎಫ್ಐಪಿಐ) ಪ್ರಶಸ್ತಿಗಳಲ್ಲಿ ಎರಡು ಪ್ರಮುಖ ಪ್ರಶಸ್ತಿಗಳಿಸಿದೆ. ಸಂಸ್ಕರಣಾ ನಾವೀನ್ಯತೆ ಮತ್ತು ಸ್ಥಳೀಯ ತಾಂತ್ರಿಕ ಪ್ರಗತಿಯಲ್ಲಿ ಸಂಸ್ಥೆಯ ನಿರಂತರ ಶ್ರೇಷ್ಠತೆಯನ್ನು ಗುರುತಿಸಿ, (ಎಂಆರ್ ಪಿಎಲ್) ಗೆ 2025 ರ (ಎಫ್ ಐ ಪಿಐ) ಇನ್ನೋವೇಟರ್ ಆಫ್ ದಿ ಇಯರ್ (ತಂಡ) ಪ್ರಶಸ್ತಿಯನ್ನು ನೀಡಲಾಯಿತು. ಇದರ ಜೊತೆಗೆ, ಎಂಆರ್ ಪಿಎಲ್ ನ ಆರ್. ಕಾರ್ತಿಕ್ ಅವರಿಗೆ ತೈಲ ಉದ್ಯಮದಲ್ಲಿ ವರ್ಷದ ಯುವ ಸಾಧಕ (ಪುರುಷ) ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು, ಇದು ಕೆಳಮಟ್ಟದ ತೈಲ ಮತ್ತು ಅನಿಲ ವಲಯ ದಲ್ಲಿ ನಾವೀನ್ಯತೆಗಾಗಿ ಅವರ ಅತ್ಯುತ್ತಮ ವೈಯಕ್ತಿಕ ಕೊಡುಗೆಯನ್ನು ಗುರುತಿಸುತ್ತದೆ.ಎಫ್ ಐ ಪಿಐ ವರ್ಷದ ನವೋದ್ಯಮಿ (ತಂಡ) ಪ್ರಶಸ್ತಿಯನ್ನು ಎಂಆರ್ ಪಿಎಲ್ ನ ನ ವ್ಯವಸ್ಥಾಪಕ ನಿರ್ದೇಶಕ ಮುಂಡ್ಕೂರ್ ಶ್ಯಾಮ ಪ್ರಸಾದ್ ಕಾಮತ್ ಮತ್ತು ನಿರ್ದೇಶಕ (ಸಂಸ್ಕರಣಾಗಾರ) ನಂದಕುಮಾರ್ ವೇಲಾಯುಧನ್ ಪಿಳ್ಳೈ ಅವರು ಸ್ವೀಕರಿಸಿದರು. ಈ ಪ್ರಶಸ್ತಿಯನ್ನು ಭಾರತ ಸರ್ಕಾರದ ಗೌರವಾನ್ವಿತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್ ಅವರ ಸಮ್ಮುಖದಲ್ಲಿ ಪ್ರದಾನ ಮಾಡಿದರು. ಇದುಭಾರತೀಯ ಇಂಧನ ವಾರ (ಐಇಡಬ್ಲ್ಯು) ಭಾರತದ ಪ್ರಮುಖ ಜಾಗತಿಕ ಇಂಧನ ಕಾರ್ಯಕ್ರ ಮವಾಗಿದ್ದು, ಇಂಧನ ಭದ್ರತೆ ಮತ್ತು ಇಂಧನ ಪರಿವರ್ತನೆಯ ಭವಿಷ್ಯವನ್ನು ರೂಪಿಸಲು ನೀತಿ ನಿರೂಪಕರು, ಉದ್ಯಮ ನಾಯಕರು ಮತ್ತು ತಂತ್ರಜ್ಞಾನ ಪೂರೈಕೆದಾರರ ಒಕ್ಕೂಟದ ಕಾರ್ಯಕ್ರಮ,ಮತ್ತು ಈ ಒಕ್ಕೂಟ ಭಾರತೀಯ ಪೆಟ್ರೋಲಿಯಂ ಉದ್ಯಮದ ಒಕ್ಕೂಟ.ಭಾರತದ ತೈಲ ಮತ್ತು ಅನಿಲ ವಲಯವನ್ನು ಪ್ರತಿನಿಧಿಸುವ ಉನ್ನತ ಕೈಗಾರಿಕಾ ಸಂಸ್ಥೆಯಾಗಿದ್ದು, ನೀತಿ ವಕಾಲತ್ತು, ನಾವೀನ್ಯತೆ ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಸಂಘಟನೆಯಾಗಿದೆ. ಇದರೊಂದಿಗೆ ಎಂಆರ್ ಪಿಎಲ್ ಕಳೆದ ನಾಲ್ಕು ವರ್ಷಗಳಲ್ಲಿ ಐದನೇ ಬಾರಿಗೆ ಭಾರತ ಸರ್ಕಾರದಿಂದ ಪರಿಷ್ಕರಣೆಯಲ್ಲಿ ನಾವೀನ್ಯತೆ ಪ್ರಶಸ್ತಿಗಳನ್ನು ಗೆದ್ದಂತಾಗಿದೆ.ಇದು ಪ್ರಕ್ರಿಯೆಯ ಶ್ರೇಷ್ಠತೆ, ಕಾರ್ಯಾಚರಣೆಯ ದಕ್ಷತೆ ಮತ್ತು ತಂತ್ರಜ್ಞಾನ-ಚಾಲಿತ ಬೆಳವಣಿಗೆಯ ಮೇಲೆ ಅದರ ಸ್ಥಿರ ಗಮನವನ್ನು ಒತ್ತಿಹೇಳುತ್ತದೆ. ಈ ಸಾಧನೆಯ ಕುರಿತು ಪ್ರತಿಕ್ರಿಯಿಸುತ್ತಾ, ಎಂಆರ್ ಪಿಎಲ್ ನ ಉನ್ನತ ಆಡಳಿತ ಮಂಡಳಿ ಹೀಗೆ ಹೇಳಿದೆ:ಈ ಪ್ರಶಸ್ತಿಗಳು ಎಂಆರ್ ಪಿಎಲ್ ನ ಆಳವಾಗಿ ಬೇರೂರಿ ರುವ ನಾವೀನ್ಯತೆ ಮತ್ತು ತಂಡದ ಕೆಲಸ ಕಾರ್ಯ ಕ್ಷಮತೆಗೆ ಸಾಕ್ಷಿಯಾಗಿದೆ. ನಮ್ಮ ಜನರು ಸ್ಥಳೀಯ ಪರಿಹಾರಗಳು, ಡಿಜಿಟಲೀಕರಣ ಮತ್ತು ಸುಸ್ಥಿರ ಸಂಸ್ಕರಣಾ ಅಭ್ಯಾಸಗಳ ಮೂಲಕ ಗಡಿಗಳನ್ನು ದಾಟುತ್ತಲೇ ಇದ್ದಾರೆ. ಎಫ್ ಐ ಪಿಐ ಮತ್ತು ಇಂಡಿಯಾ ಎನರ್ಜಿ ವೀಕ್ನಂತಹ ರಾಷ್ಟ್ರೀಯ ವೇದಿಕೆಯಲ್ಲಿ ಗುರುತಿಸುವಿಕೆಯು ಭಾರತದ ಇಂಧನ ಭದ್ರತೆಯನ್ನು ಬೆಂಬಲಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ಸ್ವಚ್ಛ ಮತ್ತು ಹೆಚ್ಚು ಸ್ಥಿತಿಸ್ಥಾಪಕ ಇಂಧನ ಭವಿಷ್ಯದತ್ತ ಪರಿವರ್ತನೆಯನ್ನು ಮುನ್ನಡೆಸುತ್ತದೆ ಭಾರತದ ಕೆಳಮಟ್ಟದ ಇಂಧನ ಪರಿಸರ ವ್ಯವಸ್ಥೆಯಲ್ಲಿಎಂಆರ್ ಪಿಎಲ್ ಪ್ರಮುಖ ಪಾತ್ರವನ್ನು ವಹಿಸುವುದನ್ನು ಮುಂದುವರೆಸಿದೆ, ರಾಷ್ಟ್ರೀಯ ಆದ್ಯತೆಗಳೊಂದಿಗೆ ಜೋಡಣೆಯಲ್ಲಿ ವಿಶ್ವ ದರ್ಜೆಯ ಇಂಧನಗಳು ಮತ್ತು ಪೆಟ್ರೋಕೆ ಮಿಕಲ್ಗಳನ್ನು ತಲುಪಿಸಲು ನಾವೀನ್ಯತೆ, ಪ್ರಮಾಣ ಮತ್ತು ಸುಸ್ಥಿರತೆಯನ್ನು ಬಳಸಿಕೊಳ್ಳುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ: ಮೊದಲ ಬಾರಿ ಫೈನಲ್ಗೆ ತಲುಪಿದ ಅಲ್ಕರಾಝ್
ಮೆಲ್ಬರ್ನ್, ಜ.30: ಐದು ಸೆಟ್ಗಳ ಸೆಮಿ ಫೈನಲ್ ಪಂದ್ಯದಲ್ಲಿ ಅಲೆಕ್ಸಾಂಡರ್ ಝ್ವೆರೆವ್ರನ್ನು ಮಣಿಸಿದ ಕಾರ್ಲೊಸ್ ಅಲ್ಕರಾಝ್ ಇದೇ ಮೊದಲ ಬಾರಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 22ರ ವಯಸ್ಸಿನ ಸ್ಪೇನ್ ಆಟಗಾರ ಅಲ್ಕರಾಝ್ ಮುಕ್ತ ಟೆನಿಸ್ ಯುಗದಲ್ಲಿ ಎಲ್ಲ ನಾಲ್ಕು ಗ್ರ್ಯಾನ್ಸ್ಲಾಮ್ ಪಂದ್ಯಾವಳಿಗಳಲ್ಲಿ ಫೈನಲ್ಗೆ ತಲುಪಿದ ಕಿರಿಯ ವಯಸ್ಸಿನ ಆಟಗಾರನಾಗಿ ಹೊರಹೊಮ್ಮಿದ್ದಾರೆ. ವೃತ್ತಿಜೀವನದಲ್ಲಿ ಎಲ್ಲ ನಾಲ್ಕು ಗ್ರ್ಯಾನ್ಸ್ಲಾಮ್ ಪ್ರಶಸ್ತಿಯನ್ನು ಜಯಿಸಿದ ಕಿರಿಯ ಆಟಗಾರ ಎನಿಸಿಕೊಳ್ಳಲು ಅಲ್ಕರಾಝ್ ಇನ್ನೊಂದು ಪಂದ್ಯದಲ್ಲಿ ಗೆಲ್ಲುವ ಅಗತ್ಯವಿದೆ. ಶುಕ್ರವಾರ ಐದು ಗಂಟೆ ಹಾಗೂ 27 ನಿಮಿಷಗಳ ಕಾಲ ನಡೆದ ಮ್ಯಾರಥಾನ್ ಪಂದ್ಯದಲ್ಲಿ ಅಲ್ಕರಾಝ್ ಅವರು ಜರ್ಮನಿ ಆಟಗಾರ ಝ್ವೆರೆವ್ರನ್ನು 6-4, 7-6(5), 6-7(3), 6-7(4), 7-5 ಸೆಟ್ಗಳ ಅಂತರದಿಂದ ಮಣಿಸಿದರು. ಆರಂಭದಲ್ಲಿ ಪ್ರಾಬಲ್ಯ ಮೆರೆದ ಅಲ್ಕರಾಝ್, ಪಂದ್ಯವು ನಾಟಕೀಯ ತಿರುವು ಪಡೆಯುವ ಮೊದಲು ಬೇಗನೆ ಗೆಲುವು ದಾಖಲಿಸುವ ವಿಶ್ವಾಸ ಮೂಡಿಸಿದ್ದರು. ಮೂರನೇ ಸೆಟ್ನ 9ನೇ ಗೇಮ್ನಲ್ಲಿ ಬಲಗಾಲಿನಲ್ಲಿ ನೋವು ಕಾಣಿಸಿಕೊಂಡು ಕುಂಟ ತೊಡಗಿದರು. ಆಗ ಟ್ರೈನರ್ರಿಂದ ವೈದ್ಯಕೀಯ ಉಪಚಾರ ಪಡೆದು ಚೇತರಿಸಿಕೊಂಡರು. ಝ್ವೆರೆವ್ ಅವರು ಪಂದ್ಯಕ್ಕೆ ಅಡಚಣೆ ಆಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪಂದ್ಯಾವಳಿಯ ಅಧಿಕಾರಿಯ ಬಳಿ ತನ್ನ ಹತಾಶೆ ತೋಡಿಕೊಂಡರು. ನಾಲ್ಕು ಗಂಟೆಗೂ ಅಧಿಕ ಸಮಯ ಸಾಗಿದ ಪಂದ್ಯದಲ್ಲಿ ವಿಶ್ವದ ನಂ.3ನೇ ಆಟಗಾರ ಹಾಗೂ 2025ರ ಆಸ್ಟ್ರೇಲಿಯನ್ ಓಪನ್ನಲ್ಲಿ ರನ್ನರ್ ಅಪ್ ಆಗಿದ್ದ ಝ್ವೆರೆವ್ ನಾಲ್ಕನೇ ಸೆಟ್ನಲ್ಲಿ ಹಿಡಿತ ಸಾಧಿಸಿದರು. ಟೈಬ್ರೇಕರ್ನ ಮೂಲಕ 7-6(4)ಅಂತರದಿಂದ ಜಯಶಾಲಿಯಾಗಿ ಪಂದ್ಯವನ್ನು ಐದನೇ ಹಾಗೂ ನಿರ್ಣಾಯಕ ಸೆಟ್ಗೆ ವಿಸ್ತರಿಸಿದರು. 2026ರ ಪಂದ್ಯಾವಳಿಯಲ್ಲಿ ಸೆಂಟರ್ ಕೋರ್ಟ್ನಲ್ಲಿ ಇದೇ ಮೊದಲ ಬಾರಿ ಐದು ಸೆಟ್ಗಳ ಪಂದ್ಯವನ್ನು ಆಡಲಾಯಿತು. ಐದನೇ ಗೇಮ್ ಅನ್ನು 7-5ರಿಂದ ರೋಚಕವಾಗಿ ಗೆದ್ದುಕೊಂಡ ಅಲ್ಕರಾಝ್ ಅವರು ಫೈನಲ್ಗೆ ಟಿಕೆಟ್ ಗಿಟ್ಟಿಸಿಕೊಂಡರು. ಅಲ್ಕರಾಝ್ ಮುಂದಿನ ಸುತ್ತಿನಲ್ಲಿ ಎರಡು ಬಾರಿಯ ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಅಥವಾ10 ಬಾರಿಯ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ನೊವಾಕ್ ಜೊಕೊವಿಕ್ರನ್ನು ಎದುರಿಸಲಿದ್ದಾರೆ.
ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ನಗನಗದು ಸಹಿತ ಸೊತ್ತು ಕಳವು
ಕಾಪು, ಜ.30: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆ ಸಮೀಪದ ಮನೆಗೆ ಜ.29ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ದಿವಾಕರ ಶೆಟ್ಟಿ ಕುಟುಂಬ ಸಮೇತರಾಗಿ ಶುಭ ಕಾರ್ಯಕ್ಕಾಗಿ ಮುಂಬಯಿಗೆ ತೆರಳಿದ್ದರು. ಮಧ್ಯರಾತ್ರಿಯ ನಂತರ ಮನೆಯ ಮುಖ್ಯ ದ್ವಾರದ ದಾರಂದ ಮುರಿದು ಒಳ ನುಗ್ಗಿದ ಕಳ್ಳರು, ಮನೆಯನ್ನು ಜಾಲಾಡಿದ್ದಾರೆ. ಮನೆಯ ಸಿಸಿ ಕೆಮೆರಾದ ದಿಕ್ಕನ್ನು ಬದಲಿಸಿ, ಕೃತ್ಯ ಎಸಗಿರುವ ಕಳ್ಳರು ಡಿವಿಆರ್ ಅನ್ನು ಕೊಂಡೊಯ್ದಿದ್ದಾರೆ. ಕಪಾಟಿನಲ್ಲಿದ್ದ ಸುಮಾರು 30ಗ್ರಾಂ ಚಿನ್ನಾಭರಣ, ಸುಮಾರು 9 ಲಕ್ಷ ರೂ ನಗದು, ಬೆಳ್ಳಿಯ ತಂಬಿಗೆಗಳು, 3 ಲಕ್ಷ ರೂ. ಮೌಲ್ಯದ 3 ವಾಚ್ ಗಳು, ಸುಮಾರು 300 ಗ್ರಾಂ ತೂಕದ ಬೆಳ್ಳಿಯ ಹರಿವಾಣಗಳು ಸಹಿತ 19.05 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆಂದು ದೂರಲಾಗಿದೆ. ಮನೆಯ ಮೇಲಿನ ಮಹಡಿಯಲ್ಲಿ ದಿವಾಕರ ಶೆಟ್ಟಿ ಅವರ ನಿಕಟ ವ್ಯಕ್ತಿ ಮಲಗಿದ್ದು, ಅವರಿಗೆ ಈ ಯಾವುದೇ ಕೃತ್ಯ ಗಮನಕ್ಕೆ ಬಂದಿರಲಿಲ್ಲ. ಆ ವ್ಯಕ್ತಿ ಮಲಗಿದ್ದ ಕೋಣೆಗೂ ಕಳ್ಳರು ಬಂದು ಜಾಲಾಡಿದ್ದರೆನ್ನಲಾಗಿದೆ. ಅಲ್ಲದೆ ವರ ಮೊಬೈಲ್ನ್ನು ಕಳ್ಳರು ಕೊಂಡೊಯ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದಿರುವುದು ಕಂಡುಬಂದಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಡಿವೈಎಸ್ಪಿ ಡಿ.ಟಿ. ಪ್ರಭು, ವೃತ್ತ ನಿರೀಕ್ಷಕ ಅಜ್ಜತ್ ಅಲಿ, ಎಸೈ ತೇಜಸ್ವಿ, ಬೆರಳಚ್ಚು ವಿಭಾಗದ ನಿರೀಕ್ಷಕಿ ಮೋಹಿನಿ ಸಹಿತ ಕಾಪು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪಡುಬಿದ್ರಿಯ ಪಾದೆಬೆಟ್ಟು ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಡರಾತ್ರಿ ನುಗ್ಗಿದ ಕಳ್ಳರು 1500ರೂ. ನಗದನ್ನು ಕಳವುಗೈದಿರುವ ಬಗ್ಗೆ ವರದಿಯಾಗಿದೆ. ಕಳ್ಳರು ಎರಡು ಕಾಣಿಕೆ ಡಬ್ಬಿಗಳು, ಒಂದು ಕಾಲು ದೀಪ ಹಾಗೂ ಒಂದು ಮುಟ್ಟುಕತ್ತಿಗಳನ್ನು ಹೊರಗೆ ತಂದು, ಕಾಲು ದೀಪ, ಮುಟ್ಟುಕತ್ತಿಗಳನ್ನು ಬಳಸಿ ಡಬ್ಬಿಗಳನ್ನು ಒಡೆದು ನಗದು ಕಳವು ಮಾಡಿದ್ದಾರೆಂದು ದೂರಲಾಗಿದೆ.
ಕೇಂದ್ರದಿಂದ ಗಾಂಧಿ ಹೆಸರು ಅಳಿಸುವ ಹುನ್ನಾರ: ಜಯಪ್ರಕಾಶ್ ಹೆಗ್ಡೆ
ಬ್ರಹ್ಮಾವರ, ಜ.30: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾ ವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು. ಉಡುಪಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಮನ್ ರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಪ್ರತಿಯೊಬ್ಬ ವ್ಯಕ್ತಿಗೆ ನೂರು ದಿನಗಳ ಉದ್ಯೋಗ ಲಭಿಸಬೇಕು ಎನ್ನುವ ಉದ್ಧೇಶದಿಂದ ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ ಇದನ್ನು ಹಂತಹಂತವಾಗಿ ಯೋಜನೆಯನ್ನು ನಿಲ್ಲಿಸುವ ಹುನ್ನಾರವನ್ನು ಕೇಂದ್ರ ಸರಕಾರ ಹೊಂದಿದೆ. ಇಷ್ಟೊಂದು ಒಳ್ಳೆಯ ಯೋಜನೆಯನ್ನು ಮಹಾತ್ಮಗಾಂಧಿ ಯೋಜನೆಗೆ ರಾಮ ಹೆಸರು ಇಡುವ ಬದಲು ರಾಮನ ಹೆಸರಿನಲ್ಲೆ ಹೊಸತಾದ ಯೋಜನೆಯನ್ನು ಪ್ರತಿಯೊಬ್ಬರೂ ಒಪ್ಪುತ್ತಿದ್ದೇವು ಎಂದರು. ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ಕಾಂಚನ್ ಮಾತನಾಡಿ, ದೇಶದ ಕಟ್ಟ ಕಡೆಯ ವ್ಯಕ್ತಿಯೂ ಕೂಡ ಉತ್ತಮ ವಾಗಿ ಬದುಕಬೇಕು ಎನ್ನುವ ಉದ್ದೇಶದಿಂದ 2005ರಲ್ಲಿ ಮನಮೋಹನ್ ಸಿಂಗ್, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತಂದರು. ದೇಶದ ಬಡ ಜನರ ಹಸಿವು ನೀಗಿಸಲು ಈ ಯೋಜನೆ ಸಹಕಾರಿ ಯಾಗಿತ್ತು. ದೇಶದಲ್ಲಿ ಬಡಜನರು ಉದ್ದಾರವಾಗದೆ ಶ್ರೀಮಂತರೇ ಬೆಳೆಯಬೇಕು ಎನ್ನುವ ಆರ್ಎಸ್ಎಸ್ ತತ್ವವನ್ನು ಬಿಜೆಪಿ ಸರಕಾರ ಕಾರ್ಯರೂಪಕ್ಕೆ ತರಲು ಹೊರಟಿದೆ. ಬಡವರನ್ನು ತುಳಿಯಲು ಪ್ರತಯ್ನಿಸಿದರೆ ಕಾಂಗ್ರೆಸ್ ಪಕ್ಷ ಸುಮ್ಮನೆ ಕೂತು ನೋಡಲ್ಲ, ಬದಲಾಗಿ ಉಗ್ರ ಪ್ರತಿಭಟನೆ ನಡಸಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳಕೆಬೈಲ್, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮುಖಂಡರಾದ ವೆರೋನಿಕಾ ಕರ್ನೆಲಿಯೋ, ರಾಘವೇಂದ್ರ ಶೆಟ್ಟಿ, ಭುಜಂಗ ಶೆಟ್ಟಿ, ರೋಶನ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಪ್ರಶಾಂತ್ ಪೂಜಾರಿ, ಸಜ್ಜನ್ ಶೆಟ್ಟಿ, ಅಮೃತ್ ಶೆಣೈ, ದಿನಕರ ಹೇರೂರು, ಮುರಳಿ ಶೆಟ್ಟಿ, ಯತೀಶ್ ಕರ್ಕೇರಾ, ಕೀರ್ತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಟನೆಗೆ ಮುನ್ನ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಆಕಾಶವಾಣಿ ಸರ್ಕಲ್ ಮಾರ್ಗವಾಗಿ ಹೊರಟು ರಥಬೀದಿ ರಸ್ತೆಯ ಮೂಲಕ ಬಸ್ ನಿಲ್ದಾಣದ ತನಕ ಪಾದಯಾತ್ರೆಯನ್ನು ನಡೆಸಲಾಯಿತು. ‘ಕೇವಲ ಭಾಷಣಗಳನ್ನು ಮಾಡುವ ಬದಲು ಈ ಯೋಜನೆಯನ್ನು ಅಳಿಸಿ ಹಾಕುತ್ತಿರುವ ಕುರಿತು ಹಳ್ಳಿ ಹಳ್ಳಿಗಳಲ್ಲಿ ಚರ್ಚೆ ನಡೆಯಬೇಕು. ಬಿಜೆಪಿಗರು ಮಹಾತ್ಮಗಾಂಧಿಯವರ ಹೆಸರನ್ನಷ್ಟೇ ಬದಲಾಯಿಸಬಹುದು ಆದರೆ ಜನರ ಮನಸ್ಸಿನಿಂದ ಅವರನ್ನು ಅಳಿಸಲು ಸಾಧ್ಯವಿಲ್ಲ. ವಿಶೇಷ ವ್ಯಕ್ತಿತ್ವವನ್ನು ಹೊಂದಿದ ವ್ಯಕ್ತಿಯ ಹೆಸರನ್ನು ಬದಲಿಸಲು ಹೊರಟಿರುವ ಬಿಜೆಪಿಗರ ನಿರ್ಧಾರ ಖಂಡನೀಯ’ -ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವರು
ನಿಟ್ಟೆ: ‘ಎಐ ಫಾರ್ ಸಸ್ಟೇನಬಿಲಿಟಿ’ ಕುರಿತ ಅಂ.ರಾಷ್ಟ್ರೀಯ ಸಮ್ಮೇಳನ
ನಿಟ್ಟೆ, ಜ.30: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯ ದಲ್ಲಿ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್ನಲ್ಲಿ ಎಐ (ಕೃತಕ ಬುದ್ಧಿಮತ್ತೆ)’ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಕಾಲೇಜಿನ ವಿದ್ಯಾರ್ಥಿ ಸಂಶೋಧನಾ ವೇದಿಕೆ (ಎನ್ಎಫ್ಆರ್ಎಫ್) ವತಿಯಿಂದ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳೇ ಮುನ್ನಡೆಸಿದ ಮೊದಲ ಪ್ರಯತ್ನ ಇದಾಗಿತ್ತು. ಹೊಸದಿಲ್ಲಿಯ ತೈಪೆ ಎಕನಾಮಿಕ್ ಅಂಡ್ ಕಲ್ಚರಲ್ ಸೆಂಟರ್ (ಟಿಇಸಿಸಿ) ಇದರ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಕೌನ್ಸಿಲರ್ ಹಾಗೂ ನಿರ್ದೇಶಕ ಡಾ. ಲಂಗ್-ಜೀ ಯಾಂಗ್ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೆಮಿಕಂಡಕ್ಟರ್ ತಂತ್ರಜ್ಞಾನ ಕ್ಷೇತ್ರದಲ್ಲಿ ಆದ ಇತ್ತೀಚಿನ ಪ್ರಗತಿಗಳನ್ನು, ವಿಶೇಷವಾಗಿ ಸಿಎಂಓಎಸ್-ಎಂಇಎಂಎಸ್ ಏಕೀಕರಣವನ್ನು ವಿವರಿಸಿ, ಬಯೋಇನ್ಪಾಯರ್ಡ್ ಇಂಟಲಿಜೆಂಟ್ ಸಿಸ್ಟಮ್ಸ್ನ ಸ್ಥಿರ ಹಾಗೂ ಸಮರ್ಥ ಪರಿಹಾರಗಳನ್ನು ಒದಗಿಸುವಲ್ಲಿ ವಹಿಸುವ ಮಹತ್ವದ ಪಾತ್ರವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೇರಾಯ, ಎಐ ಎಂಬುದು ಸಸ್ಟೇನೆಬಲ್ ಅಭಿವೃದ್ಧಿ ಮತ್ತು ನವೀನತೆಯ ಪ್ರಮುಖ ಚಾಲಕಶಕ್ತಿಯೆಂದು ತಿಳಿಸಿದರು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶಕ ಡಾ.ಪ್ರವೀಣಕುಮಾರ್ ಶೆಟ್ಟಿ ತಮ್ಮ ಭಾಷಣದಲ್ಲಿ ನಿಟ್ಟೆ ವಿದ್ಯಾರ್ಥಿ ಸಂಶೋಧನಾ ವೇದಿಕೆಯನ್ನು ಕಾಲೇಜಿನಲ್ಲಿ ಸ್ಥಾಪಿಸುವುದರ ಹಿನ್ನೆಲೆ ಹಾಗೂ ಮಹತ್ವವನ್ನು ವಿವರಿಸಿದರು. ಎನ್ಎಂಎಎಂಐಟಿ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಸಂಸ್ಥೆಯ ಶೈಕ್ಷಣಿಕ ಶ್ರೇಷ್ಠತೆ ಮತ್ತು ಜಾಗತಿಕ ಸಂಶೋಧನೆಯಲ್ಲಿ ಇರುವ ಬದ್ಧತೆಯನ್ನು ಪುನರುಚ್ಚರಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ನಿಟ್ಟೆ ಡಿಮ್ಡ್ ವಿವಿಯ ಕುಲಪತಿ ಪ್ರೊ. (ಡಾ.) ಎಂ. ಎಸ್. ಮೂಡಿತ್ತಾಯ ಮಾತನಾಡಿ ಜಾಗತಿಕ ಸವಾಲುಗಳಿಗೆ ಕೃತಕ ಬುದ್ಧಿಮತ್ತೆಯ ಮೂಲಕ ಪರಿಹಾರ ಕಂಡುಕೊಳ್ಳಲು ವಿದ್ಯಾರ್ಥಿ ನೇತೃತ್ವದ ಸಂಶೋಧನೆ ಮತ್ತು ಅಂತರಶಾಸ್ತ್ರೀಯ ಸಹಕಾರ ಅತ್ಯವಶ್ಯಕವೆಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಎನ್ಎಂಎಎಂಐಟಿ ವಿದ್ಯಾರ್ಥಿ ಸಂಶೋಧನಾ ವೇದಿಕೆಯ ಅಧಿಕೃತ ಉದ್ಘಾಟನೆ ಹಾಗೂ ಸಮ್ಮೇಳನದ ಕಾರ್ಯಸೂಚಿಯ ಬಿಡುಗಡೆ ನಡೆಯಿತು. ಸಮ್ಮೇಳನದಲ್ಲಿ ಐದು ಪ್ರಮುಖ ವಿಭಾಗಗಳಲ್ಲಿ ತಾಂತ್ರಿಕ ಸಂಶೋಧನಾ ಪ್ರಬಂಧಗಳ ಪ್ರಸ್ತುತಿ ನಡೆದವು. ವಿದ್ಯಾರ್ಥಿ ಅಧ್ಯಕ್ಷ ನಂದನ್ ಪೈ ಅತಿಥಿಗಳನ್ನು ಸ್ವಾಗತಿಸಿದರೆ, ಎಂಸಿಎ ವಿಭಾಗದ ಸಹಪ್ರಾಧ್ಯಾಪಕಿ ಡಾ. ಮಂಗಳಾ ಶೆಟ್ಟಿ ಸಮ್ಮೇಳನದ ಕುರಿತು ಪರಿಚಯ ನೀಡಿದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎನ್. ಎಸ್. ಎಸ್. ರಾಮಕೃಷ್ಣ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ. ಶಶಾಂಕ್ ಶೆಟ್ಟಿ ವಂದಿಸಿದರು.
ಹೋಂ ವರ್ಕ್ ಮಾಡದ 4ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಶಾಲೆಯ ಎಚ್ಆರ್ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಆತಂಕಗೊಂಡ ಮಗ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾನೆ. ಶಿಕ್ಷಕಿ ಹಾಗೂ ಎಚ್ಆರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.
Assam ಸಿಎಂ ಹಿಮಂತ ಶರ್ಮರ ‘ಮಿಯಾ’ ಹೇಳಿಕೆ | ನಾಚಿಕೆಗೇಡು, ಅಪ್ರಾಮಾಣಿಕ : ಗೌರವ್ ಗೊಗೊಯಿ
ಗುವಾಹಟಿ: ಬಾಂಗ್ಲಾದೇಶದಿಂದ ಅಕ್ರಮವಾಗಿ ಗಡಿ ನುಸುಳಿ ಬಂದವರನ್ನು ಉಲ್ಲೇಖಿಸಿ ‘ಮಿಯಾ’ ಎಂಬ ಪದ ಬಳಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಹೇಳಿಕೆಯನ್ನು ನಾಚಿಕೆಗೇಡಾದದ್ದು ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯಿ ಶುಕ್ರವಾರ ಎಕ್ಸ್ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎಪ್ರಿಲ್ನಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ ಈ ಹೇಳಿಕೆಯನ್ನು ಹಿಮಂತ ಬಿಸ್ವ ಶರ್ಮ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಹೆಸರನ್ನು ಹಿಮಂತ ಬಿಸ್ವ ಶರ್ಮ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಸಂಸದರೂ ಆದ ಗೌರವ್ ಗೊಗೊಯಿ, ಅವರು ಅಪ್ರಾಮಾಣಿಕರಾಗಿದ್ದಾರೆ ಎಂದಿದ್ದಾರೆ. “ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ ಮಾತುಗಳನ್ನೇ ನಾನು ಹೇಳಿದ್ದೇನೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ಅದು ನಿರ್ಲಜ್ಜ ಸುಳ್ಳು” ಎಂದು ಅವರು ಟೀಕಿಸಿದ್ದಾರೆ. “ಮಾನ್ಯ ನ್ಯಾಯಾಲಯವು ಆ ಶಬ್ದವನ್ನು ಬಳಸಿಲ್ಲ ಅಥವಾ ಅಂತಹ ಯಾವುದೇ ಕಾರ್ಯಕಾರಿ ವರದಿಯನ್ನು ಅನುಮೋದಿಸಿಲ್ಲ. ಈ ನ್ಯಾಯಾಂಗ ತೀರ್ಪನ್ನು ಬಳಸಿಕೊಳ್ಳುವುದು ಉದ್ದೇಶಪೂರ್ವಕ ನ್ಯಾಯಾಂಗ ನಿಂದನೆಯಾಗಿದೆ” ಎಂದು ಗೌರವ್ ಗೊಗೊಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮುಖ್ಯಮಂತ್ರಿಯೊಬ್ಬರು ನ್ಯಾಯಾಲಯದ ಪದಗಳು ಎಂದು ತಪ್ಪಾಗಿ ಹೇಳಿಕೆ ನೀಡುವುದು ನ್ಯಾಯಾಂಗ ನಿಂದನೆ ಮಾತ್ರವಲ್ಲ; ಅದು ಸಾಂವಿಧಾನಿಕ ಸಂಸ್ಥೆಗಳು ಹಾಗೂ ಸಾಂಸ್ಥಿಕ ಸಮಗ್ರತೆ ಮೇಲಿನ ದಾಳಿಯೂ ಹೌದು” ಎಂದು ಅವರು ಟೀಕಾಪ್ರಹಾರ ನಡೆಸಿದ್ದಾರೆ. ಈ ವಾರದ ಆರಂಭದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಗೌರವ್ ಗೊಗೊಯಿ ಈ ತಿರುಗೇಟು ನೀಡಿದ್ದಾರೆ.
ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ
ಉಡುಪಿ, ಜ.30: ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತ ವಾದ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸ ಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಮಾರ್ಚ್ 15 ಕೊನೆಯ ದಿನವಾಗಿರುತ್ತದೆ. ಕಾವ್ಯಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ 10,000ರೂ.ಗಳ ಒಂದು ವಾರ್ಷಿಕ ಬಹುಮಾನ ವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ, 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವಿತೆಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ - https://govindapairesearch.blogspot.com - ಬ್ಲಾಗ್ ಅಥವಾ ದೂರವಾಣಿ ಸಂಖ್ಯೆ/ ಮೊಬೈಲ್ ನಂ. 9448868868/ 9449471449, ಕಛೇರಿ: 0820-2521159 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಕವನ ಸಂಕಲನಗಳನ್ನು ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ- 576102.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡಲು ಅನಗತ್ಯ ವಿಳಂಬ, ಕಿರಿಕಿರಿ ಆರೋಪ: ಸರಕಾರಿ ಯೋಜನೆಗಳ ಫಲಾನುಭವಿಗಳಿಂದ ದೂರು
ಉಡುಪಿ, ಜ.30: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಯೋಜನೆಗಳು ಹಾಗೂ ಬಡವರ ಕಲ್ಯಾಣ ಯೋಜನೆಗೆ ಸಂಬಂಧ ಪಟ್ಟಂತೆ ಸಾಲ ನೀಡಲು ಅಧಿಕಾರಿಗಳು ಅನಗತ್ಯ ವಿಳಂಬದ ಮೂಲಕ ಸತಾಯಿಸುವುದಲ್ಲದೇ, ಕಿರಿಕಿರಿಯನ್ನು ಉಂಟು ಮಾಡುತಿದ್ದಾರೆ ಎಂದು ಯೋಜನೆಗಳ ಫಲಾನುಭವಿಗಳು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆದ ಸಭೆಯಲ್ಲಿ ದೂರುಗಳ ಸರಮಾಲೆಯನ್ನೇ ಮುಂದಿಟ್ಟರು. ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಾಬ್ರಕಟ್ಟೆ ಬ್ಯಾಂಕ್ ಆಫ್ ಬರೋಡಾ ಶಾಖೆಯ ಗ್ರಾಹಕರು ಮತ್ತು ಅಧಿಕಾರಿಗಳ ಜೊತೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಹಕರು ಹಾಗೂ ಫಲಾನುಭವಿಗಳಿಂದ ದೂರು ಕೇಳಿಬಂದವು. ತನಗೆ ದೇವರಾಜ ಅರಸು ನಿಗಮದಿಂದ ಸಬ್ಸಿಡಿ ಹಣ ಬ್ಯಾಂಕಿಗೆ ಬಂದಿದ್ದರೂ ಸಕಾಲದಲ್ಲಿ ಸಾಲ ನೀಡಲಿಲ್ಲ ಎಂದು ಸ್ಥಳೀಯ ಗ್ರಾಹಕಿ ರೂಪಾ ಎಂಬವರು ಸಭೆಯಲ್ಲಿ ದೂರಿದರು. ಸರಕಾರದ ಯೋಜನೆಯನ್ನು ಅನುಷ್ಠಾನ ಗೊಳಿಸಲು ಯಾವುದೇ ರೀತಿಯಲ್ಲೂ ವಿಳಂಬ ಮಾಡಬಾರದು ಎಂದು ಸಂಸದ ಕೋಟ ಅಧಿಕಾರಿಗಳಿಗೆ ತಿಳಿಸಿದರು. ಕನ್ನಡ ಬಾರದ ಅಧಿಕಾರಿಗಳಿಂದ ನಮಗೆ ವ್ಯವಹರಿಸಲು ಕಷ್ಟವಾಗುತ್ತಿದೆ. ಕನ್ನಡ ಬಾರದ ಅಧಿಕಾರಿಗಳು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ವಿನಾಃ ಕಾರಣ ಮಾಹಿತಿಗಳನ್ನೇ ನೀಡದೇ ಸತಾಯಿಸುತಿದ್ದಾರೆ. ಇದರಿಂದ ತಾನು ಅನಗತ್ಯವಾಗಿ ಬೆಂಗಳೂರಿಗೆ ಹೋಗಿ ಬರಬೇಕಾಯಿತು ಎಂದು ಬ್ಯಾಂಕಿನ ಗ್ರಾಹಕರಾದ ರಾಮ ಪೂಜಾರಿ ದೂರಿಕೊಂಡರು. ನಮ್ಮ ಸ್ತ್ರೀಶಕ್ತಿ ಸಂಘಕ್ಕೆ ಸಾಲ ನೀಡಲು ವಿನಾಃ ಕಾರಣ ವಿಳಂಬ ಧೋರಣೆ ಅನುಸರಿಸುತಿದ್ದಾರೆ ಎಂದು ಗ್ರಾಹಕರು ತಿಳಿಸಿದಾಗ, ಈ ಬಗ್ಗೆ ಗಮನ ಹರಿಸುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು. ಒಂದು ವಾರದೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ. ಇನ್ನೆರಡು ದಿನದೊಳಗೆ ಬ್ಯಾಂಕಿನ ಹಿರಿಯ ಅಧಿಕಾರಿ ಗಳು ಸಂಬಂಧಪಟ್ಟ ಶಾಖೆಗೆ ಭೇಟಿ ನೀಡಿ ಇಂದು ಸ್ವೀಕರಿಸಿದ ಎಲ್ಲಾ ದೂರು, ಅಹವಾಲುಗಳನ್ನು ನ್ಯಾಯ ಯುತ ವಾಗಿ ಈಡೇರಿಸಬೇಕು ಎಂದು ಸಂಸದ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಕಾರಗಳ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ, ನಿರಕ್ಷೇಪಣಾ ಪತ್ರ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಸಾಲ ಸೌಲಭ್ಯ, ಪಿ.ಎಂ.ಇ.ಜಿ.ಪಿ ಯೋಜನೆ, ಸ್ವ-ನಿಧಿ ಯೋಜನೆ, ಮುದ್ರಾ ಯೋಜನೆಗೆ ಸಂಬಂಧಿಸಿದಂತೆ ಜನಸಾಮಾನ್ಯ ರಿಗೆ ಸೂಕ್ತವಾಗಿ ಸ್ಪಂದಿಸಬೇಕು ಹಾಗೂ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಕಂಡುಬಂದಲ್ಲಿ ನ್ಯಾಯ ಯುತವಾಗಿ ಸ್ಪಂದಿಸಬೇಕು ಎಂದು ಸಂಸದ ಕೋಟ ಬ್ಯಾಂಕ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ರಾಷ್ಟ್ರೀಕೃತ ಬ್ಯಾಂಕುಗಳು ಬಡವರ ಕಲ್ಯಾಣ ಕಾರ್ಯಕ್ರಮದ ಅನುಷ್ಠಾನ ಮತ್ತು ಸರಕಾರದ ಜನಪರ ಯೋಜನೆ ಯನ್ನು ಅನುಷ್ಠಾನ ಮಾಡುವಲ್ಲಿ ಪ್ರಾಮಾಣಿಕವಾಗಿ ಸಹಕರಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಲ್ಲಿ ಮನವಿ ಮಾಡಿದರಲ್ಲದೇ, ಬಡಜನರ ವಾಸ್ತಾವಿಕ ಸ್ಥಿತಿಯನ್ನು ಅರಿತು ಅವರಿಗೆ ಬ್ಯಾಂಕಿನ ಸೌಲಭ್ಯವನ್ನು ಪ್ರಾಮಾಣಿಕವಾಗಿ ಮುಟ್ಟಿಸಬೇಕು ಎಂದರು. ಸಭೆಯಲ್ಲಿ ಶಿರಿಯಾರ ಗ್ರಾಮಪಂಚಾಯತ್ ಅಧ್ಯಕ್ಷ ಸುದೀಂದ್ರ ಶೆಟ್ಟಿ, ಶಿರಿಯಾರ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಪ್ರದೀಪ್ ಬಲ್ಲಾಳ್ ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಪ್ರಬಂಧಕರಾದ ಶಜೀಲಾ ಬೀವಿ ಜೆ, ಉಪಪ್ರಬಂಧಕ ವಿದ್ಯಾಧರ ಶೆಟ್ಟಿ, ಲೀಡ್ ಬ್ಯಾಂಕಿನ ಪ್ರಬಂಧಕರಾದ ಹರೀಶ್ ಮತ್ತು ಸಾಬ್ರಕಟ್ಟೆ ಬ್ಯಾಂಕ್ ಆಫ್ ಬರೋಡಾದ ಪ್ರಬಂಧಕ ಎಸ್.ಕೆ ಮನು ಉಪಸ್ಥಿತರಿದ್ದರು.
ಕಲಬುರಗಿ | ಹಗಲು ಕಬ್ಬು ಕಟಾವು, ರಾತ್ರಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ
ಕಲಬುರಗಿ : ಹಗಲು ವೇಳೆಯಲ್ಲಿ ಕಬ್ಬು ಕಟಾವು ಕೆಲಸ ಮಾಡಿಕೊಂಡು, ರಾತ್ರಿ ಸಮಯದಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ನಗರ ಪೊಲೀಸರು ವಶಕ್ಕೆ ಪಡೆದು, 67 ಗ್ರಾಂ ಬಂಗಾರದ ಆಭರಣಗಳು, 1.02 ಲಕ್ಷ ರೂ. ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಸೇರಿ ಒಟ್ಟು 12.14 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಳಂದ ತಾಲೂಕಿನ ಕಮಸರ ನಾಯಕ ತಾಂಡಾದ ನಿವಾಸಿ ಅಪ್ಪಾಜಿ ಅಲಿಯಾಸ್ ಅಪ್ಪು ಗಂಗಾರಾಮ ಚವ್ಹಾಣ (22) ಹಾಗೂ ಆಳಂದ ತಾಲೂಕಿನ ಶಕಾಪುರ ತಾಂಡಾದ ನಿವಾಸಿ ಸಂತೋಷ್ ಅಲಿಯಾಸ್ ಅಂತ್ಯಾ ಗೋವಿಂದ ಚವ್ಹಾಣ (30) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು. ವೀರೇಂದ್ರ ಪಾಟೀಲ್ ಬಡಾವಣೆಯ ನಿವಾಸಿ ವೀರಭದ್ರಯ್ಯ ಸ್ವಾಮಿ ಅವರು, ತಮ್ಮ ಮನೆಯಿಂದ 4.35 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ನಗದು ಹಣ ಕಳ್ಳತನವಾಗಿದೆ ಎಂದು ಕಳೆದ ವರ್ಷ ಜೂ.3 ರಂದು ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದ್ದರು. ಡಿಸಿಪಿ ಪ್ರವೀಣ್ ನಾಯಕ, ಎಸಿಪಿ ಶಿವನಗೌಡ ಪಾಟೀಲ್ ಹಾಗೂ ಪಿಐ ಖಾಜಾ ಹುಸೇನ್ ಅವರ ನೇತೃತ್ವದಲ್ಲಿ ಕ್ಷಿಪ್ರ ತನಿಖೆ ನಡೆಸಿದ ತಂಡವು ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ 12.14 ಲಕ್ಷ ರೂ. ಮೌಲ್ಯದ ಕಳವು ಸ್ವತ್ತನ್ನು ವಶಪಡಿಸಿಕೊಂಡಿದೆ ಎಂದು ಆಯುಕ್ತರು ವಿವರಿಸಿದರು. ಬಂಧಿತ ಆರೋಪಿಗಳು ಪರಸ್ಪರ ಸಂಬಂಧಿಕರಾಗಿದ್ದು, ಹಗಲು ವೇಳೆಯಲ್ಲಿ ಕಬ್ಬು ಕಟಾವು ಕೆಲಸಕ್ಕೆ ತೆರಳಿ, ರಾತ್ರಿ ಸಮಯದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಬಡಾವಣೆಗಳನ್ನು ಗುರಿಯಾಗಿಸಿಕೊಂಡು, ಕಳೆದ ಎರಡು ತಿಂಗಳ ಅವಧಿಯಲ್ಲಿ ತಮ್ಮ ದುಂದು ವೆಚ್ಚಕ್ಕಾಗಿ ಮನೆಗಳ್ಳತನ ನಡೆಸುತ್ತಿದ್ದರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ, ಎಸಿಪಿ ಶಿವನಗೌಡ ಪಾಟೀಲ್, ಪಿಐ ಖಾಜಾ ಹುಸೇನ್ ಉಪಸ್ಥಿತರಿದ್ದರು. ಫೆ.1 ರಿಂದ ಹೆಲ್ಮೆಟ್ ಕಡ್ಡಾಯ : ಕೆಲವು ವರ್ಷಗಳ ಮಾಹಿತಿ ಪ್ರಕಾರ ಬೈಕ್ ಅಪಘಾತಗಳಿಂದ ಸಾವನ್ನಪ್ಪಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟಲು ನಗರದಾದ್ಯಂತ ಹೆಲ್ಮೆಟ್ ಧರಿಸುವುದು ಕಡ್ಡಾಯ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಫೆ.1ರಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಮಾಡಿದ ಬಳಿಕ ಸಾರ್ವಜನಿಕರಿಗೂ ಈ ನಿಯಮ ಅನ್ವಯಿಸಲಿದೆ. -ಡಾ.ಶರಣಪ್ಪ ಎಸ್.ಡಿ (ನಗರ ಪೊಲೀಸ್ ಆಯುಕ್ತರು)
Sunetra Pawar: ಅಜಿತ್ ಪವಾರ್ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ; ಉಪಮುಖ್ಯಮಂತ್ರಿಯಾಗಿ ನಾಳೆಯೇ ಪ್ರಮಾಣವಚನ
ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ನಿಧನದ ಹಿನ್ನೆಲೆ ಪತ್ನಿ ಸುನೇತ್ರಾ ಪವಾರ್ ಅವರು ಶನಿವಾರ ಬೆಳಿಗ್ಗೆ 11 ಗಂಟೆಗೆ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಅವರು ಮಹಾರಾಷ್ಟ್ರದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಸ್ಥಾನ ಪಡೆಯಲಿದ್ದಾರೆ. ಅಜಿತ್ ಪವಾರ್ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಅವರು ಮಹಾರಾಷ್ಟ್ರ
ಕಲಬುರಗಿ | ಅಂಬಲಗಾ ಗ್ರಾ.ಪಂಗೆ ಪಿಡಿಓ ನೇಮಕಕ್ಕೆ ಒತ್ತಾಯಿಸಿ ಫೆ.3ರಂದು ಪ್ರತಿಭಟನೆ
ಕಲಬುರಗಿ : ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮ ಪಂಚಾಯತ್ಗೆ ಕಳೆದ ಆರು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ನೇಮಕವಾಗದೆ, ರೈತರು ಹಾಗೂ ಗ್ರಾಮಸ್ಥರು ಶುದ್ಧ ಕುಡಿಯುವ ನೀರು, ಶೌಚಾಲಯ, ಚರಂಡಿ ನಿರ್ಮಾಣ, ದಾಖಲೆ ಸೇರಿದಂತೆ ಮೂಲಭೂತ ಸೌಲಭ್ಯಗಳಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಪಿಡಿಓ ನೇಮಕ ಮಾಡಬೇಕೆಂದು ಆಗ್ರಹಿಸಿ ಫೆ.3ರಂದು ಕಲಬುರಗಿ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಅಂಬಲಗಾ ಗ್ರಾ.ಪಂ ಅಧ್ಯಕ್ಷ ತಾಜೋದ್ದಿನ್ ಪಟೇಲ್ ತಿಳಿಸಿದ್ದಾರೆ. ಈ ಹಿಂದೆ ಕುರಿಕೋಟಾ ಪಂಚಾಯಿತಿಯ ಪಿಡಿಓ ಅಭಿಜಿತ್ ಅವರಿಗೆ ಹೆಚ್ಚುವರಿ ಪ್ರಭಾರ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಓ ಆದೇಶಿಸಿದ್ದರು. ಆದರೆ ಅಭಿಜಿತ್ ಅವರು ಕೇವಲ ಎರಡು ಬಾರಿ ಪಂಚಾಯಿತಿಗೆ ಹಾಜರಾಗಿ, ನಂತರ ಯಾವುದೇ ಕಾರಣ ನೀಡದೇ ಪಂಚಾಯಿತಿಗೆ ಬರುವುದನ್ನು ನಿಲ್ಲಿಸಿದ್ದಾರೆ. ಈ ಹಿನ್ನೆಲೆ ಆ.8ರಂದು ಅಂಬಲಗಾ ಗ್ರಾ.ಪಂ ವತಿಯಿಂದ ಹೆಚ್ಚುವರಿ ಪ್ರಭಾರ ಕೈಬಿಡುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ತಾಜೋದ್ದಿನ್ ಪಟೇಲ್ ತಿಳಿಸಿದ್ದಾರೆ. ಅಂಬಲಗಾ, ಅಂಬಲಗಾ ತಾಂಡಾ, ಕುದಮೂಡ, ಕುದಮೂಡ ತಾಂಡಾ, ಕಲಕುಟಗಾ ಸೇರಿದಂತೆ ಮೂರು ಗ್ರಾಮಗಳು ಹಾಗೂ ಎರಡು ತಾಂಡಾಗಳು ಅಂಬಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿವೆ. ಪಂಚಾಯಿತಿಗೆ ಸಂಬಂಧಿಸಿದಂತೆ ನರೇಗಾ ಕಾಮಗಾರಿಗಳ ಸಾಮಗ್ರಿ ಮೊತ್ತ ಬಿಡುಗಡೆ, ಸ್ವಚ್ಛ ಭಾರತ ಯೋಜನೆಯ ವೈಯಕ್ತಿಕ ಶೌಚಾಲಯಗಳ ಪ್ರೋತ್ಸಾಹ ಧನ ಪಾವತಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣ ಬಿಡುಗಡೆ, ಕೆಲವು ದೇವಾಲಯ ಕಟ್ಟಡಗಳಿಗೆ ಮಂಜೂರಾದ ಅನುದಾನ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಪಿಡಿಓ ಕೊರತೆಯಿಂದ ಸ್ಥಗಿತಗೊಂಡಿವೆ. ಕಾಮಗಾರಿಗಳನ್ನು ಪ್ರಾರಂಭಿಸಲು ಅಗತ್ಯವಿರುವ 9/11ಬಿ ಫಾರ್ಮ್ಗಾಗಿ ಜನರು ಅಲೆಯುವಂತಾಗಿದೆ ಎಂದು ಅವರು ದೂರಿದರು. ಉತ್ತಮ ಕಾರ್ಯನಿರ್ವಹಣೆಗೆ ಅಂಬಲಗಾ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದ್ದರೂ, ಕಳೆದ ಆರು ತಿಂಗಳಿಂದ ಮನೆ ನಿರ್ಮಾಣ ಸಂಬಂಧಿತ ದಾಖಲೆಗಳು, ನಿವೇಶನಗಳ ಮ್ಯೂಟೇಷನ್, ಸಾರ್ವಜನಿಕರಿಗೆ ಸಂಬಂಧಿಸಿದ ಎಲ್ಲ ಪಂಚಾಯಿತಿ ಕೆಲಸ ಕಾರ್ಯಗಳು ಸಂಪೂರ್ಣವಾಗಿ ನಿಂತಿವೆ. ಗಾಂಧಿ ಗ್ರಾಮ ಪುರಸ್ಕಾರ ದೊರೆತ ನಂತರವೂ ಜಿಲ್ಲಾ ಪಂಚಾಯಿತಿ ಸಿಇಓ ಅವರು ಉದ್ದೇಶಪೂರ್ವಕವಾಗಿ ಪಿಡಿಓ ನೇಮಕ ಮಾಡದೆ ಪಂಚಾಯಿತಿಯ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜ.3 ರಂದು ಜಿಪಂ ಕಚೇರಿ ಮುತ್ತಿಗೆ: ಅಂಬಲಗಾ ಗ್ರಾಮ ಪಂಚಾಯಿತಿಗೆ ಪಿ.ಡಿ.ಓ ನಿಯೋಜನೆ ಮಾಡುವಂತೆ ಆಗ್ರಹಿಸಿ ಫೆ.3ರಂದು ಬೆಳಗ್ಗೆ 11 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಸರ್ವ ಸದಸ್ಯರ ನೇತೃತ್ವದಲ್ಲಿ ವಿನೂತನ ರೀತಿಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಾಂಧಿ ಗ್ರಾಮ ಪುರಸ್ಕಾರ ಪಡೆದ ನಮ್ಮ ಗ್ರಾಮ ಪಂಚಾಯಿತಿಗೆ 6 ತಿಂಗಳಿಂದ ಪಿಡಿಒ ಇಲ್ಲ. ತಾ.ಪಂ ಇಓ ನಿರ್ದೇಶನದ ಮೇರೆಗೆ ನೀರು ನಿರ್ವಹಣೆ ಸೇರಿದಂತೆ ಅನೇಕ ಕೆಲಸಗಳಿಗೆ ಕೈಯಿಂದ ದುಡ್ಡು ಸುರಿದಿದ್ದೇನೆ. ಫೆ.5ರಂದು ಅಧಿಕಾರವಧಿ ಮುಗಿಯುತ್ತದೆ. ಸಚಿವರು ಸೂಚಿಸಿದರೂ ಪಿಡಿಓ ಒದಗಿಸದೆ ಜಿ.ಪಂ ಸಿಇಓ ಚೆಲ್ಲಾಟ ಆಡುತ್ತಿದ್ದಾರೆ. -ತಾಜೋದ್ದೀನ್ ಪಟೇಲ್, ಅಧ್ಯಕ್ಷ. ಗ್ರಾ.ಪಂ ಅಂಬಲಗಾ.
ಮೋದಿಯವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ, ಹೊಟ್ಟೆಯೂ ತುಂಬುವುದಿಲ್ಲ : ಯತ್ನಾಳ್
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್ದಾಳಿ ನಡೆಸಿದರು. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಮಾತನಾಡಿದ ಅವರು, ಬಿಜೆಪಿ ಮಿತ್ರರು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದೇ, ಹೊಗಳಿದ್ದು. ಆದರೆ, ಅಧಿಕಾರ ಸಿಕ್ಕ ಸಂದರ್ಭದಲ್ಲಿ ಅವರ ನಡೆಯನ್ನು ತಮ್ಮ ಆಡಳಿತದಲ್ಲಿ ಅಳವಡಿಕೊಳ್ಳಲಿಲ್ಲ. ಜತೆಗೆ, ಭ್ರಷ್ಟಾಚಾರವೂ ಹೆಚ್ಚಾಗಿತ್ತು. ಇದೇ ಕಾರಣಕ್ಕೆ ಈ ಹಿಂದೆ ಬಿಜೆಪಿ ಪಕ್ಷವು ಚುನಾವಣೆಯಲ್ಲಿ ಸೋಲು ಕಂಡಿತು ಎಂದರು. ಇತ್ತ ಈಗಿನ ಸರಕಾರದಲ್ಲಿ ನಾಯಕತ್ವ ಗೊಂದಲದಿಂದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಸಿಎಲ್ಪಿ ಸಭೆಯಲ್ಲಿಯೂ ಕೂಡ ಇದೆ ಚರ್ಚೆ ಆಗಿದೆ. ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿ ಹೊಂದಿದ್ದಾರೆ. ಆದರೆ, ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಅಪಕೀರ್ತಿ ಪಡೆದುಕೊಂಡು ಹೋಗಬೇಡಿ ಎಂದರು. ಕೇಂದ್ರ ಮತ್ತು ರಾಜ್ಯ ಸರಕಾರದ ನಡುವೆ ಸಂಘರ್ಷ ಆಗಬಾರದು. ಸಂಘರ್ಷ ಸದನದ ಹೊರೆಗೆ ಇರಬೇಕು. ರಾಜ್ಯ ಸರಕಾರ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರಕಾರವನ್ನು ಟೀಕಿಸುವ ಭಾಷಣ ಮಾಡಿಸಿದೆ. ಗ್ಯಾರಂಟಿಗಳ ಬಗ್ಗೆ ಹೊಗಳುವುದನ್ನು ಮಾಡಿದೆ. ಅಭಿವೃದ್ಧಿ ಯೋಜನೆ ಸರಿಯಾಗಿ ಬಳಕೆ ಮಾಡದಿದ್ದರೆ ಮತ ಹಾಕಿದ ಜನರಿಗೆ ಅನ್ಯಾಯ ಮಾಡಿದಂತೆ ಎಂದು ಯತ್ನಾಳ್ ನುಡಿದರು.
ಏಕಾಏಕಿ ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷವಾದ ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಖಾತೆ: ಏನಿದರ ಹಕೀಕತ್ತು?
ಭಾರತ ಕ್ರಿಕೆಟ್ ನ ದಿಗ್ಗಜ ಬ್ಯಾಟರ್ ವಿರಾಟ್ ಕೊಹ್ಲಿ ಅಭಿಮಾನಿಗಳ ಬಳಗ ಸಣ್ಣದಲ್ಲ. ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿ ಬೇಕಾದರೂ ಆಡಿದರೂ ಅಭಿಮಾನಿಗಳ ದೊಡ್ಡ ಬಳಗವೇ ಕ್ರೀಡಾಂಗಣದಲ್ಲಿ ನೆರೆದಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲೂ ಅಷ್ಟೇ. ಭಾರತದಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋವಿಂಗ್ ಇರುವ ಖಾತೆ ಅವರದ್ದು. ಜಗತ್ತಿನಲ್ಲಿ ಹೆಚ್ಚು ಫಾಲೋವರ್ಸ್ ಗಳಿರವ ಕ್ರೀಡಾಪಟುಗಳಲ್ಲಿ ಇವರೂ ಒಬ್ಬರು. ಹೀಗಿರುವಾಗ ಅವರ ಇನ್ ಸ್ಟಾಗ್ರಾಂ ಖಾತೆ ಇದ್ದಕ್ಕಿದ್ದಂತೆ ಕಣ್ಮರೆಯಾಗಿ ಎಲ್ಲರನ್ನೂ ಆತಂಕಕ್ಕೀಡು ಮಾಡಿದ್ದ ಸಂಗತಿಯೊಂದು ನಡೆದಿತ್ತು. ಆದರೆ ಕೆಲ ಸಮಯದ ನಂತರ ಎಲ್ಲವೂ ಸರಿ ಹೋಗಿದೆ. ಇದು ನಡೆದದ್ದು ಜನವರಿ 29 ಮತ್ತು 30 ಗುರುವಾರ ಮತ್ತು ಶುಕ್ರವಾರಗಳಂದು. ವಿರಾಟ್ ಕೊಹ್ಲಿ ಮತ್ತು ಅವರ ಸಹೋದರ ವಿಕಾಸ್ ಕೊಹ್ಲಿ ಅವರ ಇನ್ ಸ್ಟಾಗ್ರಾಂ ಖಾತೆಗಳು ಗುರುವಾರ ರಾತ್ರೋರಾತ್ರಿ ಕಣ್ಮರೆಯಾಗಿದ್ದವು. ಓಪನ್ ಮಾಡಿದರೆ ಯೂಸರ್ ನಾಟ್ ಫೌಂಡ್ ಎಂಬ ಸಂದೇಶ ಕಾಣಿಸುತ್ತಿತ್ತು. ಈ ಸಂದರ್ಭದಲ್ಲಿ ಅವರ ಖಾತೆ ಹ್ಯಾಕ್ ಆಗಿರಬಹುದೇ ಎಂಬ ಅನುಮಾನ ಮೂಡಿತ್ತು. ಆದರೆ ಶುಕ್ರವಾರ ಬೆಳಗ್ಗೆ ಸುಮಾರು 8:30ಕ್ಕೆ ಕೊಹ್ಲಿ ಅವರ ಖಾತೆ ಮತ್ತೆ ಕಾಣಿಸಿಕೊಂಡಿತು. ಸಹೋದರನ ಖಾತೆ ಇನ್ನೂ ನಿಷ್ಕ್ರಿಯ ಆದರೆ ಅವರ ಸಹೋದರ ವಿಕಾಸ್ ಕೊಹ್ಲಿ ಅವರ ಖಾತೆ ಮಾತ್ರ ಇನ್ನೂ ನಿಷ್ಕ್ರಿಯವಾಗಿದೆ. ಇದಕ್ಕೆ ಏನು ಕಾರಣ? ಯಾಕೆ ಹೀಗಾಯ್ತು ಎಂಬ ಬಗ್ಗೆ ವಿರಾಟ್ ಕೊಹ್ಲಿ ಅವರಾಗಲಿ, ಅವರ ತಂಡದ ಸದಸ್ಯರಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಹಾಗಾಗಿ ಇದನ್ನು ಅವರೇ ಉದ್ದೇಶಪೂರ್ವಕವಾಗಿ ಮಾಡಿದ್ದಾರೆಯೋ ಅಥವಾ ಬೇರೇನಾದರೂ ತಾಂತ್ರಿಕ ಸಮಸ್ಯೆಯೋ ಎಂಬುದು ಸಹ ಈವರೆಗೂ ಸ್ಪಷ್ಟವಾಗಿಲ್ಲ.ವಿರಾಟ್ ಕೊಹ್ಲಿ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಪರಿಶೀಲಿಸಿದಾಗ ಮೇಲ್ನೋಟಕ್ಕೆ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅವರ ಪ್ರೊಫೈಲ್ ಚಿತ್ರ ಇದ್ದ ಹಾಗೆಯೇ ಇದೆ. ಜೊತೆಗೆ ಯಾವುದೇ ಹೊಸ ಪೋಸ್ಟ್ ಸಹ ಇಲ್ಲ. ಹಳೆಯ ಎಲ್ಲಾ ಪೋಸ್ಟ್ಗಳು ಸಹ ಯಥಾಸ್ಥಿತಿಯಲ್ಲಿವೆ. ಈ ಅನಿರೀಕ್ಷಿತ ಘಟನೆ ಅಭಿಮಾನಿಗಳಲ್ ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಈಗ ಕೊಹ್ಲಿ ಅವರ ಖಾತೆ ಮತ್ತೆ ಲಭ್ಯವಾಗಿರುವುದರಿಂದ ಅಭಿಮಾನಿಗಳು ದೊಡ್ಡ ನಿಟ್ಟುಸಿರು ಬಿಟ್ಟಿದ್ದಾರೆ. ಭಾರತದಲ್ಲಿ ಕೊಹ್ಲಿಯೇ ನಂ 1 ವಿರಾಟ್ ಕೊಹ್ಲಿ ಅವರು 250 ದಶಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಮೊದಲ ಭಾರತೀಯರಾಗಿದ್ದಾರೆ. ಇದರೊಂದಿಗೆ ಅವರು ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಜನಪ್ರಿಯತೆ ಗಳಿಸಿದ ಭಾರತೀಯ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಅವರು ಭಾರತದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಮೀರಿಸಿದ್ದಾರೆ. ವಿರಾಟ್ ಕೊಹ್ಲಿ ಅವರು 27.5 ಕೋಟಿ ಫಾಲೋವರ್ ಗಳನ್ನು ಹೊಂದಿದ್ದರೆ, ನರೇಂದ್ರ ಮೋದಿ ಅವರು ಅದರ ಅರ್ಧಕ್ಕೂ ಕಡಿಮೆ ಅಂದರೆ 10 ಕೋಟಿ ಅಲ್ಲದೆ, ವಿಶ್ವದಾದ್ಯಂತ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕ್ರಿಕೆಟಿಗ ಮತ್ತು ಏಷ್ಯನ್ ಕೂಡ ಅವರೇ. ವಿರಾಟ್ ಕೊಹ್ಲಿ ಅವರ 2023ರಲ್ಲೇ ಸಂದಾಯ ಆಗುತ್ತಿತ್ತು. ಪ್ರಸ್ತುತ ಅವರು ಭಾರತದಲ್ಲೇ ವಾಗಿದ್ದಾರೆ. ವಿಶ್ವ ಕ್ರೀಡಾಪಟುಗಳಲ್ಲಿ ನಂ 3 ಫುಟ್ಬಾಲ್ ಸ್ಟಾರ್ಗಳಾದ ಲಿಯೋನೆಲ್ ಮೆಸ್ಸಿ(67 ಕೋಟಿ ಪಾಲೋವರ್ಸ್) ಮತ್ತು ಕ್ರಿಸ್ಟಿಯಾನೊ ರೊನಾಲ್ಡೊ(51 ಕೋಟಿ ಪಾಲೋವರ್ಸ್) ಅವರ ನಂತರ ವಿರಾಟ್ ಕೊಹ್ಲಿ ಅವರು ವಿಶ್ವದ ಅಗ್ರ ಮೂರು ಕ್ರೀಡಾಪಟುಗಳಲ್ಲಿ ಸ್ಥಾನ ಪಡೆದಿದ್ದಾರೆ. ಬಾಸ್ಕೆಟ್ ಬಾಲ್ ತಾರೆ ಲೆಬ್ರಾನ್ ಜೇಮ್ಸ್ ಮತ್ತು ಫುಟ್ಬಾಲ್ ತಾರೆ ನೇಮಾರ್ ಅವರಂತಹ ದಿಗ್ಗಜರಿಗಿಂತಲೂ ವಿರಾಟ್ ಕೊಹ್ಲಿ ಅವರಿಗೆ ಹೆಚ್ಚು ಫ್ಯಾನ್ ಫಾಲೋವರ್ಸ್ ಇದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಅವರ ಒಂದು ಪೋಸ್ಟ್ ಗಾಗಿ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. 2024ರ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಗೆದ್ದ ಬಳಿಕ ವಿರಾಟ್ ಕೊಹ್ಲಿ ಅವರು ಮಾಡಿದ್ದ ಸಂಭ್ರಮಾಚರಣೆಯ ಪೋಸ್ಟ್ 2 ಕೋಟಿ ರೂಪಾಯಿಗೂ ಹೆಚ್ಚು ಲೈಕ್ಸ್ ಪಡೆದಿತ್ತು. ಇದು ಭಾರತೀಯನೊಬ್ಬನ ಪೋಸ್ಟ್ ಗೆ ಸಿಕ್ಕ ಹೆಚ್ಚು ಲೈಕ್ ಆಗಿದೆ.
ಮಂಗಳೂರು, ಜ.30: ಕರಾವಳಿ ಉತ್ಸವದ ಅಂಗವಾಗಿ ನಗರದ ಕದ್ರಿ ಪಾಕ್ ಮುಖ್ಯ ರಸ್ತೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಆಹಾರ ಮೇಳಕ್ಕೆ ಶುಕ್ರವಾರ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ತುಂಬಾ ವಿಶಿಷ್ಟವಾಗಿದೆ. ತಿಂಡಿ ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದು ಹೇಳಿದರು. ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ ಈ ವರ್ಷದ ಕರಾವಳಿ ಉತ್ಸವದ ಅಂಗವಾಗಿ ನಡೆದ ಎಲ್ಲ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ರಾಜೇಂದ್ರ ಕುಮಾರ್, ಡಿಜಿಎಂ ತೇಜಸ್ವಿನಿ, ಮಂಗಳೂರು ಕಂದಾಯ ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಯತೀಶ್ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು. *ರವಿವಾರದವರೆಗೆ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯಲಿರುವ ಆಹಾರ ಮೇಳದಲ್ಲಿ ಆಕರ್ಷಕ ತಿಂಡಿ ತಿನಿಸುಗಳು, ಚಾಟ್ಸ್, ಪಾನೀಯಗಳು, ಸಸ್ಯಹಾರ ಮತ್ತು ಮಾಂಸಾಹಾರ ಖಾದ್ಯಗಳ ಸ್ಟಾಲ್ಗಳನ್ನು ಒಳಗೊಂಡಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.
Maharashtra | ಮೊದಲ ಮಹಿಳಾ DCM ಆಗಿ ಸುನೇತ್ರಾ ಪವಾರ್ ಜ.31ರಂದು ಪ್ರಮಾಣ ವಚನ ಸಾಧ್ಯತೆ: ವರದಿ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಎರಡು ದಿನಗಳ ಬಳಿಕ, ಅವರ ಪತ್ನಿ ಹಾಗೂ ಎನ್ಸಿಪಿ ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರಿಂದ ಮಹಾರಾಷ್ಟ್ರಕ್ಕೆ ಮೊದಲ ಮಹಿಳಾ ಉಪಮುಖ್ಯಮಂತ್ರಿ ದೊರಕುವ ಸಾಧ್ಯತೆ ಇದೆ ಎಂದು hindustantimes.com ವರದಿ ಮಾಡಿದೆ. ಶನಿವಾರ ಎನ್ಸಿಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ. ಸಭೆಯ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಹಾರಾಷ್ಟ್ರದ ಸಚಿವರೊಬ್ಬರು, “ಶನಿವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹಲವಾರು ನಾಯಕರು ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಿಮ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಗುತ್ತದೆ,” ಎಂದರು. ಮೂಲಗಳ ಪ್ರಕಾರ, ಸುನೇತ್ರಾ ಪವಾರ್ ಅವರಿಗೆ ಅಬಕಾರಿ ಹಾಗೂ ಕ್ರೀಡಾ ಖಾತೆಗಳನ್ನು ನೀಡುವ ಸಾಧ್ಯತೆ ಇದ್ದು, ಹಣಕಾಸು ಖಾತೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಸುನೇತ್ರಾ ಪವಾರ್ ಅವರು ರಾಜ್ಯಸಭಾ ಸದಸ್ಯೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಯಾವುದೇ ಸದನದ ಸದಸ್ಯರಾಗಿಲ್ಲ. ಅಜಿತ್ ಪವಾರ್ ಅವರ ನಿಧನದಿಂದಾಗಿ ಅವರ ವಿಧಾನಸಭಾ ಕ್ಷೇತ್ರ ಖಾಲಿಯಾಗಿದ್ದು, ಮುಂದಿನ ದಿನಗಳಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ನಡೆದರೂ ಯಾವುದೇ ಅಡಚಣೆ ಇಲ್ಲ ಎಂದು ಮುಖ್ಯಮಂತ್ರಿ ಫಡ್ನವೀಸ್ ಅವರು ತಿಳಿಸಿದ್ದಾರೆ ಎಂಬುದಾಗಿ ಮೂಲಗಳು ಹೇಳಿವೆ.
ಸಾಮೂಹಿಕ ಅತ್ಯಾಚಾರ ಪ್ರಕರಣ| ಎಸ್ಪಿ ನಾಯಕ ಮೊಯಿದ್ ಖಾನ್ ಖುಲಾಸೆ
ಲಕ್ನೋ,ಜ.30: ಬಹುಚರ್ಚಿತ ಅಯೋಧ್ಯೆಯ ಭದರಸಾ ಪ್ರಕರಣದಲ್ಲಿ ಎಸ್ಪಿ ನಾಯಕ ಮೊಯಿದ್ ಖಾನ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದ್ದು, ಡಿಎನ್ಎ ಪರೀಕ್ಷೆಯ ಆಧಾರದಲ್ಲಿ ಅವರ ಮನೆಗೆಲಸದಾಳು ರಾಜು ಖಾನ್ನನ್ನು ದೋಷಿಯೆಂದು ಘೋಷಿಸಿದೆ. ನ್ಯಾಯಾಲಯದ ತೀರ್ಪು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಖಾನ್ ಮತ್ತು ರಾಜು ತನ್ನ 12ರ ಹರೆಯದ ಪುತ್ರಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವಳು 2024, ಜು.29ರಂದು ಭದರಸಾ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. 2024, ಜು.30ರಂದು ಪೋಲಿಸರು ಖಾನ್ ಮತ್ತು ರಾಜು ಅವರನ್ನು ಬಂಧಿಸಿದ್ದರು. ಖಾನ್ ಸಮಾಜವಾದಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರಿಂದ ಪ್ರಕರಣವು ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿತ್ತು ಮತ್ತು ಖಾನ್ ಅಯೋಧ್ಯೆಯ ಎಸ್ಪಿ ಸಂಸದ ಅವಧೇಶ್ ಪ್ರಸಾದರ ಆಪ್ತರಾಗಿದ್ದರಿಂದ ಈ ವಿಷಯದಲ್ಲಿ ಪ್ರಸಾದ್ ಅವರನ್ನು ಎಳೆದುತರಲು ಮತ್ತು ಎಸ್ಪಿಗೆ ಕಳಂಕವನ್ನುಂಟು ಮಾಡಲು ಪ್ರಯತ್ನಗಳೂ ನಡೆದಿದ್ದವು. 2024, ಆ.1ರಂದು ರಾಜ್ಯ ವಿಧಾನಸಭೆಯಲ್ಲಿಯೂ ಈ ಪ್ರಕರಣವು ಪ್ರಸ್ತಾವಗೊಂಡಿತ್ತು. ಉತ್ತರ ಪ್ರದೇಶ ಸರಕಾರದ ಸೂಚನೆಯ ಮೇರೆಗೆ ಅಯೋಧ್ಯೆ ಆಡಳಿತವು 2024, ಆ.3ರಂದು ಖಾನ್ ಅವರಿಗೆ ಸೇರಿದ ಬೇಕರಿ ಮತ್ತು ಬಹು ಅಂತಸ್ತುಗಳ ಮನೆಯನ್ನು ನೆಲಸಮಗೊಳಿಸಿತ್ತು. ಆ.6ರಂದು ಸಂತ್ರಸ್ತ ಬಾಲಕಿಗೆ ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿವಿಯಲ್ಲಿ ವೈದ್ಯಕೀಯ ಗರ್ಭಪಾತ ಮಾಡಿಸಲಾಗಿತ್ತು ಮತ್ತು ಭ್ರೂಣದ ಡಿಎನ್ಎ ಸ್ಯಾಂಪಲ್ಗಳನ್ನು ಸಂಗ್ರಹಿಸಲಾಗಿತ್ತು. ಆ.7ರಂದು ಆರೋಪಿಗಳ ಡಿಎನ್ಎ ಮಾದರಿಗಳನ್ನು ಪಡೆದುಕೊಳ್ಳಲಾಗಿತ್ತು. ಸೆ.30, 2024ರಂದು ಮುಚ್ಚಿದ ಲಕೋಟೆಯಲ್ಲಿ ಡಿಎನ್ಎ ಪರೀಕ್ಷಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ರಾಜುವಿನ ಡಿಎನ್ಎ ಸ್ಯಾಂಪಲ್ ತಾಳೆಯಾಗಿದ್ದರೆ, ಖಾನ್ ಅವರ ಸ್ಯಾಂಪಲ್ ತಾಳೆಯಾಗಿರಲಿಲ್ಲ. ಬಳಿಕ ಪ್ರಕರಣವನ್ನು ಅಯೋಧ್ಯೆಯಲ್ಲಿನ ಪೊಕ್ಸೊ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ವಿಚಾರಣೆ ನಡೆಯುತ್ತಿರುವಾಗಲೇ ಯೋಗಿ ಸರಕಾರವು ಖಾನ್ ವಿರುದ್ಧ ಗ್ಯಾಂಗ್ಸ್ಟರ್ ಕಾಯ್ದೆಯನ್ನು ಹೇರಿತ್ತು. ಘಟನೆಯ ವೀಡಿಯೊ ಇದೆ ಎಂದು ಹೇಳಲಾಗಿತ್ತಾದರೂ ನ್ಯಾಯಾಲದಲ್ಲಿ ಪುರಾವೆಯಾಗಿ ಅಂತಹ ಯಾವುದೇ ವೀಡಿಯೊವನ್ನು ಹಾಜರುಪಡಿಸಿರಲಿಲ್ಲ. ಘಟನೆ ನಡೆದಿದ್ದ ಸ್ಥಳದ ಕುರಿತು ಹಲವಾರು ವಿರೋಧಾಭಾಸಗಳನ್ನು ಪೋಲಿಸರ ತನಿಖೆಯು ಬಹಿರಂಗಗೊಳಿಸಿತ್ತು. ತಾನು ರಾಜಕೀಯ ಒತ್ತಡದಡಿ ಪ್ರಕರಣವನ್ನು ದಾಖಲಿಸಿದ್ದಾಗಿ ಸಂತ್ರಸ್ತೆಯ ತಾಯಿ ಸ್ವತಃ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಳು. 2026, ಜ.28ರಂದು ವಿಶೇಷ ನ್ಯಾಯಾಧೀಶೆ ನಿರುಪಮಾ ವಿಕ್ರಮ ಅವರು ಖಾನ್ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದು, ರಾಜುವನ್ನು ದೋಷಿಯೆಂದು ಹೇಳಿದ್ದಾರೆ. 2025, ಅ.16ರಂದು ಉಚ್ಚ ನ್ಯಾಯಾಲಯವು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖಾನ್ಗೆ ಜಾಮೀನು ಮಂಜೂರು ಮಾಡಿದ್ದು, ಈಗ ಪೊಕ್ಸೊ ನ್ಯಾಯಾಲಯವು ಖುಲಾಸೆಗೊಳಿಸಿದೆ. ಆದಾಗ್ಯೂ ಗ್ಯಾಂಗ್ಸ್ಟರ್ ಕಾಯ್ದೆಯಡಿ ಪ್ರಕರಣವು ಬಾಕಿಯಿರುವುದರಿಂದ ಖಾನ್ ಅವರ ಜೈಲುವಾಸ ಮುಂದುವರಿಯಲಿದೆ. ಈ ಪ್ರಕರಣದಲ್ಲಿಯೂ ಅವರು ಶೀಘ್ರವೇ ಖುಲಾಸೆಗೊಳ್ಳುವ ನಿರೀಕ್ಷೆಯಿದೆ. ಅಯೋಧ್ಯೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಸ್ಪಿ ಎದುರು ಬಿಜೆಪಿ ಸೋತಿದ್ದರಿಂದ ಸಂಸದ ಅವಧೇಶ ಪ್ರಸಾದರನ್ನು ಬಲೆಗೆ ಸಿಲುಕಿಸಲು ಮತ್ತು ಪಕ್ಷದ ಹೆಸರಿಗೆ ಕಳಂಕವನ್ನುಂಟು ಮಾಡಲು ಬಿಜೆಪಿ ನಾಯಕರು ಪ್ರಯತ್ನಿಸಿದ್ದರಾದರೂ ಅದು ವಿಫಲಗೊಂಡಿದೆ ಎನ್ನಲಾಗಿದೆ. ಈಗ ನ್ಯಾಯಾಲಯದ ತೀರ್ಪಿನ ಬಳಿಕ ಬಿಜೆಪಿ ಮೌನವಾಗಿದೆ ಮತ್ತು ಯೋಗಿ ಸರಕಾರವು ಹಿನ್ನಡೆಯನ್ನು ಅನುಭವಿಸಿದೆ. ಖಾನ್ ಅವರ ಆಸ್ತಿಗಳನ್ನು ನೆಲಸಮಗೊಳಿಸಲಾಗಿದ್ದು, ಅದಕ್ಕೆ ಪರಿಹಾರವನ್ನು ಯಾರು ನೀಡುತ್ತಾರೆ ಎನ್ನುವುದು ಉತ್ತರಕ್ಕಾಗಿ ಕಾಯಲಾಗುತ್ತಿರುವ ಈಗಿನ ದೊಡ್ಡ ಪ್ರಶ್ನೆಯಾಗಿದೆ.
ಕಲಬುರಗಿಯ ಬಹಮನಿ ಕೋಟೆಯ ಬೃಹತ್ ತೋಪ್ಗೆ ಗಿನ್ನಿಸ್ ದಾಖಲೆ ಅಗತ್ಯ : ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ
ಶೂನ್ಯ ವೇಳೆಯಲ್ಲಿ ʼವಾರ್ತಾ ಭಾರತಿʼ ವರದಿ ಉಲ್ಲೇಖಿಸಿ, ರಾಜ್ಯ ಸರಕಾರಕ್ಕೆ ಒತ್ತಾಯ
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತ್ಯು: ಸಿಐಡಿಯಿಂದ ತನಿಖೆ ಪ್ರಾರಂಭ
ಬಾರಾಮತಿ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ ಬಾರಾಮತಿ ವಿಮಾನ ಅಪಘಾತದ ತನಿಖೆಯನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಜನವರಿ 28ರಂದು ಸಂಭವಿಸಿದ ಅಪಘಾತದ ಬಳಿಕ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ದಾಖಲಾಗಿದ್ದ ಆಕಸ್ಮಿಕ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸುವಂತೆ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪುಣೆ ಗ್ರಾಮೀಣ ಪೊಲೀಸರು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್ಎಸ್ಎಸ್) ಸೆಕ್ಷನ್ 194 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮುಂಬೈನಿಂದ ಹೊರಟಿದ್ದ ಲಿಯರ್ಜೆಟ್–45 ವಿಮಾನವು ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿರುವ ಟೇಬಲ್ಟಾಪ್ ಏರ್ಸ್ಟ್ರಿಪ್ ನ ಅಂಚಿನಿಂದ ಸುಮಾರು 200 ಮೀಟರ್ ದೂರದಲ್ಲಿ ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ 66 ವರ್ಷದ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15,000 ಗಂಟೆಗಳ ಹಾರಾಟ ಅನುಭವ ಹೊಂದಿದ್ದ ಕ್ಯಾಪ್ಟನ್ ಸುಮಿತ್ ಕಪೂರ್, 1,500 ಗಂಟೆಗಳ ಹಾರಾಟ ಅನುಭವ ಹೊಂದಿದ್ದ ಸಹ ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್, ಪವಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ ವಿದೀಪ್ ಜಾಧವ್ ಹಾಗೂ ಗಗನಸಖಿ ಪಿಂಕಿ ಮಾಲಿ ಮೃತಪಟ್ಟಿದ್ದಾರೆ. ಸಿಐಡಿ ತಂಡವು ತನಿಖಾ ಕಾರ್ಯವನ್ನು ಆರಂಭಿಸಿದ್ದು, ಪುಣೆ ಗ್ರಾಮೀಣ ಪೊಲೀಸರಿಂದ ಅಪಘಾತಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಲಿದೆ. ಅಲ್ಲದೆ, ಬಾರಾಮತಿ ವಾಯುನೆಲೆಯ ಸಮೀಪದ ಅಪಘಾತ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ಪ್ರಯಾಣ ಆರಂಭಿಸುವ ಮೊದಲು ವಿಮಾನದಲ್ಲಿ ಯಾವುದೇ ವಿಧ್ವಂಸಕ ಕೃತ್ಯ ನಡೆದಿತ್ತೇ ಎಂಬ ಅಂಶವನ್ನೂ ತನಿಖೆಯ ಭಾಗವಾಗಿ ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ ನಾಗರಿಕ ವಿಮಾನಯಾನ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿಮಾನ ಅಪಘಾತ ತನಿಖಾ ಬ್ಯೂರೋ ಕೂಡ ಅಪಘಾತದ ಕುರಿತು ಪ್ರತ್ಯೇಕ ಔಪಚಾರಿಕ ತನಿಖೆಯನ್ನು ಆರಂಭಿಸಿದೆ.
ಶಾಂತಿ ಮಾತುಕತೆಗೆ ಉಕ್ರೇನ್ ಅಧ್ಯಕ್ಷರನ್ನು ಮಾಸ್ಕೋಗೆ ಆಹ್ವಾನಿಸಿದ ರಶ್ಯ
ಮಾಸ್ಕೋ, ಜ.30: ರಶ್ಯ ಮತ್ತು ಉಕ್ರೇನ್ ಪರಸ್ಪರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎಂಬ ವರದಿಯ ನಡುವೆ, ಶಾಂತಿ ಮಾತುಕತೆಗೆ ಮಾಸ್ಕೋಗೆ ಬರುವಂತೆ ಉಕ್ರೇನ್ ಅಧ್ಯಕ್ಷರಿಗೆ ಆಮಂತ್ರಣ ಕಳುಹಿಸಿರುವುದಾಗಿ ರಶ್ಯ ಹೇಳಿದೆ. ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಯಿಂದ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ ಎಂದು ರಶ್ಯ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದು ಮಾತುಕತೆಗೆ ಸೂಕ್ತ ಪರಿಸ್ಥಿತಿ ನಿರ್ಮಿಸಲು ಫೆಬ್ರವರಿ 1ರವರೆಗೆ ಉಕ್ರೇನ್ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಅಮೆರಿಕಾ ಅಧ್ಯಕ್ಷ ಟ್ರಂಪ್ ಮಾಡಿದ ವೈಯಕ್ತಿಕ ಮನವಿಗೆ ರಶ್ಯ ಅಧ್ಯಕ್ಷರು ಒಪ್ಪಿದ್ದಾರೆ ಎಂದಿದ್ದಾರೆ. ಈ ಮಧ್ಯೆ, ರಶ್ಯ ಮತ್ತು ಉಕ್ರೇನ್ ನಡುವಿನ ಹೊಸ ಸುತ್ತಿನ ಮತುಕತೆ ರವಿವಾರ(ಫೆಬ್ರವರಿ 1) ಅಬುಧಾಬಿಯಲ್ಲಿ ನಿಗದಿಯಾಗಿದೆ. ಧೈರ್ಯವಿದ್ದರೆ ನೀವು ಉಕ್ರೇನ್ಗೆ ಬನ್ನಿ: ಪುಟಿನ್ಗೆ ಝೆಲೆನ್ಸ್ಕಿ ಉತ್ತರ ಶಾಂತಿ ಮಾತುಕತೆಗೆ ಮಾಸ್ಕೋಗೆ ಬರುವಂತೆ ರಶ್ಯ ನೀಡಿರುವ ಆಹ್ವಾನಕ್ಕೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ `ನಾನು ಅವರನ್ನು (ಪುಟಿನ್) ಕೀವ್ಗೆ ಆಹ್ವಾನಿಸುತ್ತೇನೆ. ಧೈರ್ಯವಿದ್ದರೆ ಅವರು ಬರಲಿ' ಎಂದು ಪ್ರತಿಕ್ರಿಯಿಸಿರುವುದಾಗಿ ವರದಿಯಾಗಿದೆ. ರಶ್ಯವು ನಮ್ಮ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸುವುದನ್ನು ನಿಲ್ಲಿಸಿದರೆ ಉಕ್ರೇನ್ ಕೂಡಾ ದಾಳಿಯನ್ನು ನಿಲ್ಲಿಸುತ್ತದೆ. ನಾವು ಯುದ್ದವನ್ನು ಕೊನೆಗೊಳಿಸಲು ಬಯಸಿದ್ದೇವೆ ಮತ್ತು ಉದ್ವಿಗ್ನತೆ ಕಡಿಮೆಗೊಳಿಸುವ ಕ್ರಮಗಳಿಗೆ ಸಿದ್ಧವಿದ್ದೇವೆ. ಶಾಂತಿ ಮಾತುಕತೆಗೆ ಅಮೆರಿಕಾ ಅಧ್ಯಕ್ಷ ಟ್ರಂಪ್ ಹಾಗೂ ರಶ್ಯ ಅಧ್ಯಕ್ಷರನ್ನು ಭೇಟಿಯಾಗಲು ಸಿದ್ಧ. ಮಾತುಕತೆಗಾಗಿ ರಶ್ಯ ಹೊರತುಪಡಿಸಿ ಬೇರೆ ಯಾವುದೇ ದೇಶಕ್ಕೂ ಹೋಗಲು ಸಿದ್ಧ ' ಎಂದು ಝೆಲೆನ್ಸ್ಕಿ ಹೇಳಿರುವುದಾಗಿ ವರದಿಯಾಗಿದೆ.
ಬೆಂಗಳೂರು: ನಾಲ್ಕು ದಶಕಗಳ ಕಾಲ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಅವರು, ಸಾರಿಗೆ ನೌಕರರ ಬೇಡಿಕೆಗಳಿಗಾಗಿ ಧ್ವನಿ ಎತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತ ಸುಬ್ಬರಾವ್ ಅವರು ಜನವರಿ 28 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರ್ಕಾರದ ಮುಂದೆ ಹಲವು ಬಾರೀ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧ್ವನಿ ಎತ್ತಿದ್ದ ಅನಂತ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಜನವರಿ 29
ಮೂಡುಬಿದಿರೆ: ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ಆರಂಭ
ಮೂಡುಬಿದಿರೆ : ಫೆಬ್ರವರಿ 9ರವರೆಗೆ ನಡೆಯಲಿರುವ ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನಾ ನೇಮಕಾತಿ ರ್ಯಾಲಿಯು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ಶುಭಾರಂಭಗೊಂಡಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹಸಿರು ನಿಶಾನೆ ತೋರುವ ಮೂಲಕ ರ್ಯಾಲಿಗೆ ಚಾಲನೆ ನೀಡಿದರು. ಮಂಗಳೂರು ವಿಭಾಗದ ಬ್ರಿಗೇಡಿಯರ್ ಎಸ್.ಕೆ ಸಿಂಗ್, ನೇಮಕಾತಿ ವಿಭಾಗದ ಮುಖ್ಯಸ್ಥ ಜಿ.ಸೋಮು ಮಹಾರಾಜನ್ ಹಾಗೂ ಇತರ ಸೇನಾಧಿಕಾರಿಗಳು ಉಪಸ್ಥಿತರಿದ್ದರು. ಮೊದಲ ದಿನ ಆಯ್ಕೆ ಪ್ರಕ್ರಿಯೆಲ್ಲಿ ವಿಜಯಪುರ ಜಿಲ್ಲೆಯ 650 ಮಂದಿ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. ಮೊದಲ ದಿನ ಒಂದುವರೆ ಕಿ.ಮೀ ನಡಿಗೆ, ಅಡೆತಡೆ ಓಟ, ಎತ್ತರ ಜಿಗಿತ, ದೈಹಿಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಗಳು ನಡೆದವು.
ನಿಫಾ ಸೋಂಕು ದೇಶದ ಹೊರಗೆ ಹರಡುವ ಅಪಾಯ ಕಡಿಮೆ: ಭಾರತದಲ್ಲಿ ಸೋಂಕು ಪತ್ತೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಪ್ರತಿಕ್ರಿಯೆ
ಜಿನೆವಾ, ಜ.30: ಭಾರತದಲ್ಲಿ ಮಾರಣಾಂತಿಕ ನಿಫಾ ವೈರಸ್ನ ಎರಡು ಪ್ರಕರಣಗಳು ವರದಿಯಾದ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಇದು ದೇಶದ ಹೊರಗೆ ಹರಡುವ ಅಪಾಯ ಕಡಿಮೆ ಎಂದು ಹೇಳಿದ್ದು ಈ ಸಮಯದಲ್ಲಿ ಯಾವುದೇ ಪ್ರಯಾಣ ಅಥವಾ ವ್ಯಾಪಾರ ನಿರ್ಬಂಧಗಳನ್ನು ಶಿಫಾರಸು ಮಾಡಿಲ್ಲ. ಭಾರತದಲ್ಲಿ ವರದಿಯಾದ ಪ್ರಕರಣಗಳಿಗೆ ಪ್ರತಿಕ್ರಿಯೆಯಾಗಿ ಹಾಂಕಾಂಗ್, ಮಲೇಶ್ಯಾ, ಸಿಂಗಾಪುರ, ಥೈಲ್ಯಾಂಡ್ ಮತ್ತು ವಿಯೆಟ್ನಾಮ್ ಸೇರಿದಂತೆ ಏಶ್ಯಾದ ಹಲವು ರಾಷ್ಟ್ರಗಳು ಯಾವುದೇ ಸಂಭಾವ್ಯ ಹರಡುವಿಕೆಯನ್ನು ತಡೆಗಟ್ಟಲು ವಿಮಾನ ನಿಲ್ದಾಣದ ಸ್ಕ್ರೀನಿಂಗ್ ಕಾರ್ಯವಿಧಾನಗಳನ್ನು ಹೆಚ್ಚಿಸಿವೆ. ಈ ಎರಡು ಪ್ರಕರಣಗಳಿಂದ ಸೋಂಕು ಮತ್ತಷ್ಟು ಹರಡುವ ಅಪಾಯ ಕಡಿಮೆ ಎಂದು ಪರಿಗಣಿಸಿದ್ದೇವೆ. ಸೋಂಕು ಮಾನವನಿಂದ ಮಾನವರಿಗೆ ಹರಡುವ ಹೆಚ್ಚಿನ ಅಪಾಯವಿಲ್ಲ. ಭಾರತವು ಇಂತಹ ಉಲ್ಬಣವನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮೂಲಗಳು ಹೇಳಿದ್ದು ಭಾರತೀಯ ಆರೋಗ್ಯ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿರುವುದಾಗಿ ದೃಢಪಡಿಸಿದೆ. ಬಾವಲಿಗಳು ಮತ್ತು ಹಂದಿ ಮುಂತಾದ ಪ್ರಾಣಿಗಳಿಂದ ಹರಡುವ ನಿಫಾ ವೈರಸ್ ಭಾರತ ಮತ್ತು ನೆರೆಯ ಬಾಂಗ್ಲಾದೇಶದ ಕೆಲವು ಭಾಗಗಳಲ್ಲಿ ಹರಡುತ್ತಿದೆ. ಇದು ಜ್ವರ ಮತ್ತು ಮೆದುಳಿನ ಉರಿಯೂತವನ್ನು ಉಂಟು ಮಾಡಬಹುದು. ಸಾವಿನ ಪ್ರಮಾಣವು 45%ದಿಂದ 75%ದವರೆಗೆ ಇರುತ್ತದೆ. ಲಸಿಕೆಗಳು ಪರೀಕ್ಷೆ ಮತ್ತು ಅಭಿವೃದ್ಧಿಯ ಹಂತದಲ್ಲಿದೆ. ಸೋಂಕು ಪ್ರಾಥಮಿಕವಾಗಿ ಸೋಂಕಿತ ಬಾವಲಿಗಳು ಮತ್ತು ಕಲುಷಿತ ಹಣ್ಣುಗಳಿಂದ ಮನುಷ್ಯರಿಗೆ ಹರಡುತ್ತದೆ. ನಿಫಾ ವೈರಸ್ ವಿರುದ್ಧ ಔಷಧ ಅಭಿವೃದ್ಧಿ: ಚೀನಾದ ವುಹಾನ್ ಲ್ಯಾಬ್ ಪ್ರತಿಪಾದನೆ ಚೀನಾದ ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ರೋಗ ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಸಂಸ್ಥೆ)ಯ ವಿಜ್ಞಾನಿಗಳ ನೇತೃತ್ವದಲ್ಲಿ ನಡೆಸಿದ ಸಂಶೋಧನೆಯಲ್ಲಿ ವಿವಿ116 ಎಂದು ಹೆಸರಿಸಲಾದ ಬಾಯಿಯ ಮೂಲಕ ಸೇವಿಸುವ ರೋಗ ನಿರೋಧಕ ಔಷಧವು ಪ್ರಯೋಗಾಲಯ ಪರೀಕ್ಷೆ ಮತ್ತು ಪ್ರಾಣಿಗಳ ಅಧ್ಯಯನಗಳಲ್ಲಿ ನಿಫಾ ವೈರಸ್ ವಿರುದ್ಧ ಪ್ರಬಲ ಸಾಮರ್ಥ್ಯವನ್ನು ತೋರಿಸಿದೆ ಎಂದು ವರದಿಯಾಗಿದೆ. ಸಂಶೋಧನೆಯ ವರದಿಯನ್ನು ಅಂತರಾಷ್ಟ್ರೀಯ ವೈದ್ಯಕೀಯ ಮ್ಯಾಗಝಿನ್ `ಎಮರ್ಜಿಂಗ್ ಮೈಕ್ರೋಬ್ಸ್ ಆ್ಯಂಡ್ ಇನ್ಫೆಕ್ಷನ್ಸ್'ನಲ್ಲಿ ಪ್ರಕಟಿಸಲಾಗಿದೆ. ಕೋವಿಡ್-19 ಚಿಕಿತ್ಸೆಗಾಗಿ ಈಗಾಗಲೇ ಚೀನಾ ಮತ್ತು ಉಜ್ಬೇಕಿಸ್ತಾನದಲ್ಲಿ ಅನುಮೋದಿಸಲಾಗಿರುವ ವಿವಿ116 ಔಷಧಿ ಪ್ರಾಯೋಗಿಕ ಪರೀಕ್ಷೆಯಲ್ಲಿ ನಿಫಾ ವೈರಸ್ ತಳಿಗಳ ವಿರುದ್ಧ ಗಮನಾರ್ಹವಾದ ವೈರಸ್ ವಿರೋಧಿ ಚಟುವಟಿಕೆಯನ್ನು ಪ್ರದರ್ಶಿಸಿದೆ ಎಂದು `ಸೌತ್ ಚೀನಾ ಮಾರ್ನಿಂಗ್ ಪೋಸ್ಟ್' ವರದಿ ಮಾಡಿದೆ. ಪೂರ್ವಭಾವಿ ಪರೀಕ್ಷೆಯಲ್ಲಿ ವಿವಿ116 ಔಷಧಿಯ ಮೌಖಿಕ ಡೋಸ್ಗಳು ನಿಫಾ ವೈರಸ್ ಪುನರಾವರ್ತನೆಯನ್ನು ನಿರ್ಬಂಧಿಸಲು ಮತ್ತು ಪ್ರಾಣಿಗಳ ಮಾದರಿಯಲ್ಲಿ ಬದುಕುಳಿಯುವಿಕೆಯ ಪ್ರಮಾಣವನ್ನು ಗಣನೀಯವಾಗಿ ಸುಧಾರಿಸಲು ಸಮರ್ಥವಾಗಿದೆ ಎಂದು ಸಂಶೋಧಕರು ಪ್ರತಿಪಾದಿಸಿದ್ದಾರೆ.
’5ವರ್ಷ ನೀವೇ ಸಿಎಂ ಆಗಿರಿ, ಡಿಕೆಶಿ ಆಗದಂತೆ ನೋಡಿಕೊಳ್ಳಿ’ : ಸದನದಲ್ಲೇ ಸಿದ್ದರಾಮಯ್ಯಗೆ ಬಿಜೆಪಿ ಶಾಸಕರೊಬ್ಬರ ಮನವಿ!
BJP MLA Janardhana Reddy : ವಿಧಾನ ಮಂಡಲದ ಅಧಿವೇಶನದಲ್ಲೇ ಬಿಜೆಪಿಯ ಶಾಸಕ ಜನಾರ್ದನ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭ ಕೋರಿದ್ದಾರೆ. ಇನ್ನೂ ಎರಡೂವರೆ ವರ್ಷ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯಿರಿ, ಡಿಕೆ ಶಿವಕುಮಾರ್ ಆಗದಂತೆ ನೋಡಿಕೊಳ್ಳಿ ಎಂದು ಶುಭ ಕೋರಿದ್ದಾರೆ. ಇತ್ತೀಚೆಗೆ, ಬಳ್ಳಾರಿಯಲ್ಲಿ ನಡೆದ ವಿದ್ಯಮಾನದ ಬಗ್ಗೆ ಸದನದಲ್ಲಿ ಮಾತನಾಡುತ್ತಿದ್ದ ವೇಳೆ, ಈ ಮಾತನ್ನು ರೆಡ್ಡಿ ಆಡಿದ್ದಾರೆ.
ನೂತನ ನಿಯಮ ಜಾರಿಯಲ್ಲಿ ವಿನಾಯಿತಿ ಏಕೆ? ಡಿಜಿಸಿಎಗೆ ದಿಲ್ಲಿ ಹೈಕೋರ್ಟ್ ಪ್ರಶ್ನೆ
ಹೊಸದಿಲ್ಲಿ, ಜ. 30: ಪೈಲಟ್ಗಳ ವಾರದ ವಿಶ್ರಾಂತಿ ಮತ್ತು ರಜೆಗಳಿಗೆ ಸಂಬಂಧಿಸಿದ ನೂತನ ನಿಯಮಾವಳಿಗಳ ಜಾರಿಯಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಯಾಕೆ ಅನಿರ್ದಿಷ್ಟ ವಿನಾಯಿತಿ ನೀಡಲಾಗಿದೆ ಎಂದು ದಿಲ್ಲಿ ಹೈಕೋರ್ಟ್ ಶುಕ್ರವಾರ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ)ವನ್ನು ಪ್ರಶ್ನಿಸಿದೆ. ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ವಿಚಾರಣೆಗೆ ಎತ್ತಿಕೊಂಡ ಮುಖ್ಯ ನ್ಯಾಯಾಧೀಶ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕಾರಿಯ ಅವರನ್ನೊಳಗೊಂಡ ಹೈಕೋರ್ಟ್ ನ್ಯಾಯಪೀಠವೊಂದು ಡಿಜಿಸಿಎಗೆ ನೋಟಿಸ್ ಜಾರಿಗೊಳಿಸಿತು. ನೂತನ ನಿಯಮಾವಳಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆದುಕೊಳ್ಳುವ ನಿರ್ಧಾರದ ಹಿಂದಿನ ‘‘ತರ್ಕ’’ವನ್ನು ವಿವರಿಸುವಂತೆ ನ್ಯಾಯಾಲಯವು ಅದಕ್ಕೆ ಸೂಚಿಸಿತು. ಕಳೆದ ವರ್ಷದ ಡಿಸೆಂಬರ್ 5ರಂದು ಡಿಜಿಸಿಎ ಪೈಲಟ್ಗಳ ನೂತನ ವಿಶ್ರಾಂತಿ ನಿಯಮಗಳ ಪಾಲನೆಗೆ ವಿನಾಯಿತಿ ಘೋಷಿಸಿದೆ. ವಿಮಾನ ಸಂಚಾರ ಅವ್ಯವಸ್ಥೆಯನ್ನು ನಿಭಾಯಿಸುವುದಕ್ಕಾಗಿ ಹೆಚ್ಚಿನ ಪೈಲಟ್ಗಳನ್ನು ಕರ್ತವ್ಯಕ್ಕೆ ನಿಯೋಜಿಸಲು ಇಂಡಿಗೊ ವಿಮಾನಯಾನ ಸಂಸ್ಥೆಗೆ ಸಾಧ್ಯವಾಗುವಂತೆ ಮಾಡಲು ವಿನಾಯಿತಿಯನ್ನು ಘೋಷಿಸಲಾಗಿತ್ತು. ಪೈಲಟ್ಗಳ ಕರ್ತವ್ಯಕ್ಕೆ ಸಂಬಂಧಿಸಿದ ನೂತನ ನಿಯಮಗಳಿಗೆ ಇಂಡಿಗೊ ಸಿದ್ಧತೆ ಮಾಡಿಕೊಳ್ಳದ ಹಿನ್ನೆಲೆಯಲ್ಲಿ, ಕಳೆದ ವರ್ಷದ ಡಿಸೆಂಬರ್ ಮೊದಲ ವಾರದಲ್ಲಿ ವಿಮಾನಗಳ ಹಾರಾಟಕ್ಕೆ ಪೈಲಟ್ಗಳು ಸಿಗದೆ ಸಾವಿರಾರು ವಿಮಾಯಾನಗಳು ರದ್ದುಗೊಂಡಿದ್ದವು. ಪ್ರಕರಣದ ಮುಂದಿನ ವಿಚಾರಣೆ ಎಪ್ರಿಲ್ನಲ್ಲಿ ನಡೆಯಲಿದೆ.
ಚಿಲಿ, ಕೆನಡ, ಅಮೆರಿಕ ಜೊತೆ ವ್ಯಾಪಾರ ಮಾತುಕತೆ ಚಾಲ್ತಿಯಲ್ಲಿದೆ: ಸಚಿವ ಪಿಯೂಷ್ ಗೋಯಲ್
ಹೊಸದಿಲ್ಲಿ, ಜ. 30: ಭಾರತವು ಚಿಲಿ, ಕೆನಡ ಮತ್ತು ಅಮೆರಿಕ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆಗಳನ್ನು ನಡೆಸುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಹೇಳಿದ್ದಾರೆ. ಚಿಲಿ ಜೊತೆಗಿನ ಮಾತುಕತೆ ಮುಂದುವರಿದ ಹಂತದಲ್ಲಿದ್ದರೆ, ಉಳಿದ ಎರಡು ದೇಶಗಳ ಜೊತೆಗಿನ ಮಾತುಕತೆ ವಿವಿಧ ಹಂತಗಳಲ್ಲಿದೆ ಎಂದು ಅವರು ತಿಳಿಸಿದರು. ಭಾರತದೊಂದಿಗಿನ ಪ್ರತಿಯೊಂದು ಮುಕ್ತ ವ್ಯಾಪಾರ ಒಪ್ಪಂದವು ಅರ್ಹತೆಯನ್ನಾಧರಿಸಿದೆ ಎಂದು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸಚಿವರು ಹೇಳಿದರು. ‘‘ಅನುಕೂಲಗಳು ಮತ್ತು ಅನನುಕೂಲಗಳನ್ನು ವಿಶ್ಲೇಷಿಸಿದ ಬಳಿಕವಷ್ಟೇ ಭಾರತವು ತನ್ನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’’ ಎಂದರು. ‘‘ಚಿಲಿಯೊಂದಿಗೆ ನಾವು ಮುಂದುವರಿದ ಹಂತಗಳ ಮಾತುಕತೆಗಳಲ್ಲಿ ತೊಡಗಿದ್ದೇವೆ. ಕೆನಡ ಮತ್ತು ಅಮೆರಿಕ ಜೊತೆಗೂ ನಾವು ಮಾತುಕತೆಗಳನ್ನು ನಡೆಸುತ್ತಿದ್ದೇವೆ. ಕೊಲ್ಲಿ ಸಹಕಾರ ಮಂಡಳಿ(ಜಿಸಿಸಿ)ಯ ಆರು ದೇಶಗಳೊಂದಿಗೆ ಶೀಘ್ರದಲ್ಲೇ ಮಾತುಕತೆಗಳು ಆರಂಭಗೊಳ್ಳುವುದು ಎಂಬ ಮಾಹಿತಿಯನ್ನೂ ಪಿಯೂಷ್ ಗೋಯಲ್ ನೀಡಿದರು.
ಸರಕಾರಿ ಬಸ್, ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ನಿರ್ಬಂಧ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಜಾಹೀರಾತನ್ನು ನಿರ್ಬಂಧ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಶುಕ್ರವಾರ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ, ಈ ಕೂಡಲೇ ಜಾರಿಗೆ ಬರುವಂತೆ, ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಇನ್ನು ಮುಂದೆ ಪ್ರಚಾರ ಮಾಡಬಾರದು ಎಂದು ಸೂಚಿಸಿದ್ದಾರೆ. ಈಗಾಗಲೇ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವಂತಹ ಜಾಹೀರಾತುಗಳನ್ನು ಬಸ್ಗಳಲ್ಲಿ/ ಬಸ್ ನಿಲ್ದಾಣಗಳಲ್ಲಿ ಅಳವಡಿಸಿದ್ದರೆ, ಅದನ್ನು ತೆಗೆಯಲು ಒಂದು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು. ನಿಗದಿತ ಸಮಯದೊಳಗೆ ಇಂತಹ ಜಾಹೀರಾತುಗಳನ್ನು ತೆಗೆದು ಹಾಕುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಾಗಿ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
ಬಿಹಾರ| ಸ್ಮಶಾನಕ್ಕೆ ಸಾಗುವ ರಸ್ತೆಗೆ ತಡೆ: ರಸ್ತೆ ಮಧ್ಯೆಯೇ ದಲಿತ ಮಹಿಳೆಯ ಅಂತ್ಯಕ್ರಿಯೆ
ಪಾಟ್ನಾ, ಜ. 30: ಸ್ಮಶಾನಕ್ಕೆ ಹೋಗುವ ರಸ್ತೆಯನ್ನು ಅತಿಕ್ರಮಿಸಿರುವುದರಿಂದ ಸ್ಮಶಾನಕ್ಕೆ ಹೋಗಲು ಸಾಧ್ಯವಾಗದೆ 91 ವರ್ಷದ ದಲಿತ ಮಹಿಳೆಯ ಅಂತ್ಯ ಕ್ರಿಯೆಯನ್ನು ಕುಟುಂಬದವರು ರಸ್ತೆ ಮಧ್ಯೆಯೇ ನಡೆಸಿದ ಆಘಾತಕಾರಿ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬವು ಸ್ಮಶಾನದ ರಸ್ತೆಯಲ್ಲಿ ತೆರಳದಂತೆ ಅತಿಕ್ರಮಣಕಾರರು ತಡೆದರು. ಇದರಿಂದಾಗಿ ಅವರು ಅನಿವಾರ್ಯವಾಗಿ ಮಾರ್ಗ ಮಧ್ಯದಲ್ಲೇ ಮೃತದೇಹದ ಅಂತ್ಯ ಕ್ರಿಯೆ ನಡೆಸಬೇಕಾಯಿತು ಎಂದು ಮೂಲಗಳು ತಿಳಿಸಿವೆ. ಈ ಘಟನೆ ವೈಶಾಲಿ ಜಿಲ್ಲೆಯ ಗೊರೌಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊಂಧೊ ಅಂಧಾರಿ ಗಾಛಿ ಚೌಕ್ನಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ದಲಿತ ಮಹಿಳೆಯನ್ನು ಸೊಂಧೊ ವಾಸುದೇವ್ ಗ್ರಾಮದ ನಿವಾಸಿ ಝಾಪಿ ದೇವಿ ಎಂದು ಗುರುತಿಸಲಾಗಿದೆ. ಸ್ಮಶಾನಕ್ಕೆ ಹೋಗುವ ದಾರಿಯನ್ನು ಅತಿಕ್ರಮಿಸಿರುವುದರಿಂದ ನಮಗೆ ಝಾಪಿ ದೇವಿಯ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ ಎಂದು ಕುಟುಂಬ ತಿಳಿಸಿದೆ. ಸ್ಮಶಾನಕ್ಕೆ ಹೋಗುವ ರಸ್ತೆಯನ್ನು ಸ್ಥಳೀಯ ಅಂಗಡಿಯವರು ದೀರ್ಘ ಕಾಲದಿಂದ ಅತಿಕ್ರಮಿಸಿಕೊಂಡಿದ್ದಾರೆ. ಕುಟುಂಬ ಮೃತದೇಹದೊಂದಿಗೆ ಈ ದಾರಿಯಲ್ಲಿ ಸಾಗಿದಾಗ ಅಂಗಡಿಯವರು ತಡೆದಿದ್ದಾರೆ. ಕುಟುಂಬ ಪದೇ ಪದೇ ಪ್ರಯತ್ನಿಸಿದರೂ ಅವರಿಗೆ ಸ್ಮಶಾನಕ್ಕೆ ತೆರಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅವರು ರಸ್ತೆ ಮಧ್ಯೆ ಮೃತದೇಹಕ್ಕೆ ಬೆಂಕಿ ಹಚ್ಚಿ ಅಂತಿಮ ವಿಧಿ ವಿಧಾನ ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿ ಸ್ವೀಕರಿಸಿದ ಬಳಿಕ ಗೊರೌಲ್ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತು. ಆದರೆ, ಗಂಟೆಗಳ ಕಾಲ ಮೂಕ ಪ್ರೇಕ್ಷಕವಾಗಿ ನಿಂತುಕೊಂಡಿತು. ಸ್ಮಶಾನಕ್ಕೆ ತೆರಳುವ ದಾರಿಯನ್ನು ದೀರ್ಘ ಕಾಲದಿಂದ ಮುಚ್ಚಲಾಗಿದೆ. ಇದರಿಂದ ಜನರಿಗೆ ತೊಂದರೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಪ್ರತಿಪಾದಿಸಿದ್ದಾರೆ. ಮತ್ತೆ ಮತ್ತೆ ದೂರು ಸಲ್ಲಿಸಿದ ಹೊರತಾಗಿಯೂ ಸೂಕ್ತ ಕೈಗೊಳ್ಳಲು ಆಡಳಿತ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಸುದ್ದಿ ಕೇಳಿ ಸಮೀಪದ ಗ್ರಾಮದ ಜನರು ಧಾವಿಸಿದರು. ರಸ್ತೆಯಲ್ಲೇ ಅಂತ್ಯ ಕ್ರಿಯೆ ನಡೆಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ವೈಶಾಲಿಯ ಜಿಲ್ಲಾ ದಂಡಾಧಿಕಾರಿ ವರ್ಷಾ ಸಿಂಗ್ ಘಟನೆಯ ವಿಚಾರಣೆ ನಡೆಸಲು ಮಹುವಾ ಉಪ ವಿಭಾಗೀಯ ಅಧಿಕಾರಿ, ಡಿಎಸ್ಪಿ, ಗೊರೌಲ್ನ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಅವರನ್ನು ಒಳಗೊಂಡ ಸಮಿತಿ ರೂಪಿಸಿದ್ದಾರೆ. ತನಿಖೆಯ ಬಳಿಕ ತಪ್ಪೆಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಮಿತಿ ಹೇಳಿದೆ.
ರೆನೀ ಗುಡ್ ಮತ್ತು ಅಲೆಕ್ಸ್ ಪ್ರೆಟ್ಟಿ ಅವರ ಹತ್ಯೆಗಳು ಸೇರಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ದಮನಕ್ಕೆ ಪ್ರತಿಕ್ರಿಯೆಯಾಗಿ ಇಂದು (ಜನವರಿ 30) “no school, no work and no shopping” ಎಂಬ ಘೋಷಣೆಯೊಂದಿಗೆ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಯಕರ್ತರು ಕರೆ ನೀಡಿದ್ದಾರೆ. ಈ ವರ್ಷ ಇಲ್ಲಿಯವರೆಗೆ, ICE ಒಳಗೊಂಡ ಘಟನೆಗಳಲ್ಲಿ ಎಂಟು ಜನರು ಸಾವಿಗೀಡಾಗಿದ್ದಾರೆ. ಯುನೈಟೆಡ್ ಸ್ಟೇಟ್ಸ್ನಾದ್ಯಂತ ಪಟ್ಟಣಗಳು ಮತ್ತು ನಗರಗಳಿಂದ ವಲಸೆ ಮತ್ತು ಕಸ್ಟಮ್ಸ್ ಜಾರಿ ಹಾಗೂ ಕಸ್ಟಮ್ಸ್ ಮತ್ತು ಗಡಿ ರಕ್ಷಣೆಯನ್ನು ಹಿಂತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಸಂಘಟಕರು ‘ICE ಔಟ್’ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದೇಕೆ? ವಲಸೆ ಮತ್ತು ಕಸ್ಟಮ್ಸ್ ಜಾರಿ (ICE)ಯಿಂದ ಬಂಧಿಸಲ್ಪಟ್ಟ ಅಥವಾ ICE ಏಜೆಂಟ್ಗಳಿಂದ ಕೊಲ್ಲಲ್ಪಟ್ಟ ಜನರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ದೇಶಾದ್ಯಂತ ಪ್ರತಿಭಟನೆಗಳಿಗೆ ಸಂಘಟನೆಗಳು ಕರೆ ನೀಡಿವೆ. ಇದರಲ್ಲಿ ಜನವರಿ 3ರಂದು ಟೆಕ್ಸಾಸ್ನ ಎಲ್ ಪಾಸೊದ ಕ್ಯಾಂಪ್ ಈಸ್ಟ್ ಮೊಂಟಾನಾದಲ್ಲಿ ಬಂಧನದಲ್ಲಿದ್ದಾಗ ಮೃತಪಟ್ಟ 55 ವರ್ಷದ ಕ್ಯೂಬನ್ ವಲಸಿಗ ಜೆರಾಲ್ಡೊ ಲುನಾಸ್ ಕ್ಯಾಂಪೋಸ್ ಪ್ರಕರಣವೂ ಸೇರಿದೆ. ಮತ್ತೊಂದು ಪ್ರಕರಣದಲ್ಲಿ, ಮಿನ್ನೇಸೋಟದಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಐದು ವರ್ಷದ ಲಿಯಾಮ್ ರಾಮೋಸ್ ಬಂಧನಕ್ಕೊಳಗಾದ ಘಟನೆ ಕೂಡ ಸೇರಿದೆ. ಆದರೆ ಪ್ರತಿಭಟನೆಗಳ ಹಿಂದಿನ ಪ್ರಮುಖ ಕಾರಣ ಜನವರಿ 7ರಂದು ICE ಏಜೆಂಟ್ ಜೋನಾಥನ್ ರಾಸ್ನಿಂದ ಗುಂಡೇಟಿಗೆ ಬಲಿಯಾದ 37 ವರ್ಷದ, ಮೂವರು ಮಕ್ಕಳ ತಾಯಿ ರೆನೀ ನಿಕೋಲ್ ಗುಡ್ ಪ್ರಕರಣ ಮತ್ತು ಜನವರಿ 24ರಂದು ICU ನರ್ಸ್ ಅಲೆಕ್ಸ್ ಜೆಫ್ರಿ ಪ್ರೆಟ್ಟಿ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಗಳು. ಎರಡೂ ಘಟನೆಗಳು ಮಿನ್ನಿಯಾಪೋಲಿಸ್ನಲ್ಲಿ ನಡೆದಿವೆ. ಎರಡೂ ಸಂದರ್ಭಗಳಲ್ಲಿ, ಟ್ರಂಪ್ ಆಡಳಿತ ICE ಏಜೆಂಟ್ಗಳು ಆತ್ಮರಕ್ಷಣೆಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದೆ. ಗುಡ್ ತನ್ನ ಕಾರನ್ನು ಏಜೆಂಟ್ಗಳ ಮೇಲೆ ಹತ್ತಿಸಲು ಪ್ರಯತ್ನಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಮಿನ್ನಿಯಾಪೋಲಿಸ್ ಎನ್ಕೌಂಟರ್ ವೇಳೆ ಪ್ರೆಟ್ಟಿ ಗಡಿ ಗಸ್ತು ಏಜೆಂಟ್ಗಳತ್ತ ಹ್ಯಾಂಡ್ಗನ್ ತೋರಿಸಿದ್ದರು; ಅವರನ್ನು ನಿಶ್ಯಸ್ತ್ರಗೊಳಿಸಲು ಮಾಡಿದ ಪ್ರಯತ್ನಗಳ ಬಳಿಕ ಗುಂಡು ಹಾರಿಸಬೇಕಾಯಿತು ಎಂದು ಸ್ಪಷ್ಟಪಡಿಸಿದೆ. ಬಂದ್ಗೆ ಕರೆ ನೀಡಿದವರು ಯಾರು? ಮಿನ್ನಿಯಾಪೋಲಿಸ್ನಿಂದ ಕ್ಲೀವ್ಲ್ಯಾಂಡ್ವರೆಗೆ ಹಲವಾರು ದೊಡ್ಡ ನಗರಗಳಲ್ಲಿ ನಡೆದ ವಿಕೇಂದ್ರೀಕೃತ ಚಳವಳಿಯಿಂದ ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ಬಂದಿದೆ. ವಲಸೆ ಜಾರಿ ಕ್ರಮಗಳು ಮತ್ತು ಇತ್ತೀಚಿನ ಗುಂಡಿನ ದಾಳಿಗಳನ್ನು ವಿರೋಧಿಸಿ, ಜನರು ಕೆಲಸ, ಶಾಲೆ ಹಾಗೂ ವ್ಯಾಪಾರಗಳಿಂದ ದೂರವಿರಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ. ನ್ಯಾಷನಲ್ ಶಟ್ಡೌನ್ ವೆಬ್ಸೈಟ್ ಪ್ರಕಾರ, ಡಿಫೆಂಡ್ ಇಮ್ಮಿಗ್ರಂಟ್ ಫ್ಯಾಮಿಲೀಸ್ ಕ್ಯಾಂಪೇನ್, ಕೌನ್ಸಿಲ್ ಆನ್ ಅಮೆರಿಕನ್–ಇಸ್ಲಾಮಿಕ್ ರಿಲೇಶನ್ಸ್ (CAIR), ನಾರ್ತ್ ಕೆರೊಲಿನಾ ಪೂರ್ ಪೀಪಲ್ಸ್ ಕ್ಯಾಂಪೇನ್, LA ಟೆನೆಂಟ್ಸ್ ಯೂನಿಯನ್ ಮತ್ತು ಮಿನ್ನೇಸೋಟ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಸ್ಥಳೀಯ ಹಾಗೂ ರಾಷ್ಟ್ರೀಯ ಸಂಘಟನೆಗಳು ಮುಷ್ಕರದಲ್ಲಿ ಭಾಗವಹಿಸಿವೆ. ಇದರ ಜೊತೆಗೆ ಕೋಡ್ಪಿಂಕ್ನಂತಹ ದೊಡ್ಡ ಕಾರ್ಯಕರ್ತ ಗುಂಪುಗಳೂ ಸೇರಿವೆ. ‘ದಿ ಲಾಸ್ಟ್ ಆಫ್ ಅಸ್’ ನಟ ಪೆಡ್ರೊ ಪ್ಯಾಸ್ಕಲ್, ‘ಹ್ಯಾಕ್ಸ್’ ನಟಿ ಹನ್ನಾ ಐನ್ಬೈಂಡರ್, ಎಡ್ವರ್ಡ್ ನಾರ್ಟನ್ ಹಾಗೂ ಆಸ್ಕರ್ ವಿಜೇತೆ ಜೇಮೀ ಲೀ ಕರ್ಟಿಸ್ ಸೇರಿದಂತೆ ಹಲವಾರು ನಟರು ಮತ್ತು ಸೆಲೆಬ್ರಿಟಿಗಳು ಸಾರ್ವಜನಿಕರು ಮುಷ್ಕರದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ. ಈ ನಟರಲ್ಲಿ ಅನೇಕರು ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮುಷ್ಕರದ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಶನಿವಾರದ ಜನಾಂದೋಲನದ ಹಿಂದಿನ ಪ್ರಮುಖ ಶಕ್ತಿಯಾಗಿರುವ ರಾಷ್ಟ್ರೀಯ ವಕಾಲತ್ತು ಗುಂಪು 50501, ಸಾರ್ವಜನಿಕ ಭಾವನೆಗಳು ಈಗ ನಿರ್ಣಾಯಕ ಹಂತವನ್ನು ತಲುಪಿವೆ ಎಂದು ಹೇಳಿದೆ. ಆಕ್ರೋಶವು ಇನ್ನು ಮುಂದೆ ಕೇವಲ ಕಾರ್ಯಕರ್ತರ ವಲಯಗಳಿಗೆ ಸೀಮಿತವಾಗಿಲ್ಲ. ಹಿಂದೆ ರಾಜಕೀಯ ಭಾಗವಹಿಸುವಿಕೆಯನ್ನು ತಪ್ಪಿಸುತ್ತಿದ್ದ ಜನರೂ ಈಗ ವ್ಯಾಪಕ ಸುಧಾರಣೆಯ ಕರೆಗಳಿಗೆ ಸೇರುತ್ತಿದ್ದಾರೆ ಎಂದು ಸಂಯೋಜಕರು ಅಭಿಪ್ರಾಯಪಟ್ಟಿದ್ದಾರೆ. ಮಿನ್ನೇಸೋಟ ಪ್ರತಿಭಟನೆಗಳು ರಾಷ್ಟ್ರವ್ಯಾಪಿ ಬಂದ್ಗೆ ಕಾರಣವಾಗಿದ್ದೇಕೆ? ಮಿನ್ನೇಸೋಟದ ‘ICE ಔಟ್’ ಪ್ರತಿಭಟನೆಗಳು ರಾಷ್ಟ್ರವ್ಯಾಪಿ ಪ್ರದರ್ಶನಗಳ ಮೇಲೆ ಮಹತ್ವದ ಪ್ರಭಾವ ಬೀರಿವೆ ಎಂದು ಪರಿಗಣಿಸಲಾಗಿದೆ. ಮಿನ್ನಿಯಾಪೋಲಿಸ್ನಲ್ಲಿ ಕಳೆದ ಶುಕ್ರವಾರ (ಜನವರಿ 23) ರೆನೀ ನಿಕೋಲ್ ಗುಡ್ ಅವರ ಗುಂಡಿನ ದಾಳಿಗೆ ವಿರೋಧವಾಗಿ ಜನರು ಪ್ರತಿಭಟನೆ ನಡೆಸಿದರು. ಶೂನ್ಯಕ್ಕಿಂತ ಕಡಿಮೆ ತಾಪಮಾನದಲ್ಲಿಯೇ, ಟ್ರಂಪ್ ಅವರ ವಲಸಿಗರ ದಮನ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ಜನರು ಒಗ್ಗೂಡಿದರು. ಪ್ರತಿಭಟನೆಗಳ ಪರಿಣಾಮವಾಗಿ ವ್ಯಾಪಾರಗಳು ಮುಚ್ಚಲ್ಪಟ್ಟವು ಮತ್ತು ದೈನಂದಿನ ಜೀವನ ಅಸ್ತವ್ಯಸ್ತವಾಯಿತು. ಫೆಡರಲ್ ಸರ್ಕಾರವು ತಮ್ಮ ಸಮುದಾಯಗಳಿಂದ ICE ಏಜೆಂಟ್ಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಲು ಆರ್ಥಿಕ ಚಟುವಟಿಕೆ ಸ್ಥಗಿತಗೊಳಿಸುವ ಪ್ರಯತ್ನ ನಡೆಯಿತು. ಮಿನ್ನೇಸೋಟದ ವಾಕ್ಔಟ್ ಮೈನಸ್ 20 ಡಿಗ್ರಿ ತಾಪಮಾನ ಮತ್ತು ಮುಂಬರುವ ಹಿಮಬಿರುಗಾಳಿಗೆ ಸಿದ್ಧತೆಗಳ ನಡುವೆಯೂ, ಜನವರಿ 23ರಂದು ಮಿನ್ನೇಸೋಟದಲ್ಲಿ ಹತ್ತಾರು ಸಾವಿರ ಜನರು ಸಾಮೂಹಿಕವಾಗಿ ಮೆರವಣಿಗೆ ನಡೆಸಿದರು. ರಾಜ್ಯಾದ್ಯಂತ ಡಝನ್ಗಟ್ಟಲೆ ಕಾರ್ಮಿಕ ಸಂಘಗಳ ಬೆಂಬಲದೊಂದಿಗೆ ನಡೆದ ದಿನವಿಡೀ ಪ್ರತಿಭಟನೆಗಳಲ್ಲಿ 700ಕ್ಕೂ ಹೆಚ್ಚು ವ್ಯವಹಾರಗಳು ಮುಚ್ಚಲ್ಪಟ್ಟವು. “ಆಪರೇಷನ್ ಮೆಟ್ರೋ ಸರ್ಜ್” ಭಾಗವಾಗಿ ಆ ಪ್ರದೇಶಕ್ಕೆ ನಿಯೋಜಿಸಲಾದ 3,000 ಫೆಡರಲ್ ಕಾನೂನು ಜಾರಿ ಅಧಿಕಾರಿಗಳನ್ನು ಟ್ರಂಪ್ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಧಾರ್ಮಿಕ ಗುಂಪುಗಳ ಸದಸ್ಯರು ಮಿನ್ನೇಸೋಟ–ಸೇಂಟ್ ಪಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ರಸ್ತೆಯಲ್ಲಿ ಮಂಡಿಯೂರಿ ಸ್ತೋತ್ರಗಳು ಮತ್ತು ಪ್ರಾರ್ಥನೆಗಳನ್ನು ಹಾಡಿದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 100 ಜನರನ್ನು ಬಂಧಿಸಲಾಯಿತು. ವ್ಯವಹಾರಗಳ ಜೊತೆಗೆ, ವಾಕರ್ ಆರ್ಟ್ ಸೆಂಟರ್, ಮಿನ್ನೇಸೋಟ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಮಿನ್ನೇಸೋಟದ ವಿಜ್ಞಾನ ವಸ್ತುಸಂಗ್ರಹಾಲಯ ಹಾಗೂ ಮಿನ್ನೇಸೋಟ ಮಕ್ಕಳ ವಸ್ತುಸಂಗ್ರಹಾಲಯ ಸೇರಿದಂತೆ ಅವಳಿ ನಗರಗಳಲ್ಲಿನ ಹಲವು ಸಾಂಸ್ಕೃತಿಕ ಸಂಸ್ಥೆಗಳನ್ನೂ ಮುಚ್ಚಲಾಯಿತು. No Housing for ICE ಬೀದಿ ಪ್ರತಿಭಟನೆಗಳ ಹೊರತಾಗಿ, “No Housing for ICE” ಎಂಬ ಅಭಿಯಾನವು ICE, CBP ಅಥವಾ DHS ಸಿಬ್ಬಂದಿಗೆ ವಸತಿ ನೀಡುವುದನ್ನು ನಿಲ್ಲಿಸುವಂತೆ ಹೋಟೆಲ್ಗಳ ಮೇಲೆ ಒತ್ತಡ ಹೇರುತ್ತಿದೆ. ಫೋನ್ ಕರೆಗಳು, ಆನ್ಲೈನ್ ವಿಮರ್ಶೆಗಳು, ಪ್ರತಿಭಟನೆಗಳು ಮತ್ತು ಸಾಮೂಹಿಕ ಮೀಸಲಾತಿ ರದ್ದತಿಗಳ ಮೂಲಕ ಆಸ್ತಿಗಳ ಮೇಲೆ ಒತ್ತಡ ತರುವಂತೆ ಬೆಂಬಲಿಗರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ತಂತ್ರವು ಲಾಸ್ ಏಂಜಲೀಸ್ ಮತ್ತು ಮಿನ್ನಿಯಾಪೋಲಿಸ್ನಲ್ಲಿನ ವಲಸೆ ಜಾರಿ ಕ್ರಮಗಳಿಗೆ ಪ್ರತಿಕಾರವಾಗಿ ಮೂಡಿಬಂದಿದೆ. ಮತ್ತೊಂದು ಉಪಕ್ರಮವಾದ #DontServeICE, ರೆಸ್ಟೋರೆಂಟ್ಗಳಿಂದ ಪೆಟ್ರೋಲ್ ಬಂಕ್ಗಳವರೆಗೆ ಸ್ಥಳೀಯ ವ್ಯವಹಾರಗಳು ICE ಅಧಿಕಾರಿಗಳಿಗೆ ಸೇವೆ ನಿರಾಕರಿಸುವಂತೆ ಕರೆ ನೀಡುತ್ತದೆ. ವಾಣಿಜ್ಯ ಮಂಡಳಿಗಳು ಅಸಹಕಾರ ಪ್ರತಿಜ್ಞೆಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ವಲಸೆ ಜಾರಿ ಕಾರ್ಯಾಚರಣೆಗಳನ್ನು ಬೆಂಬಲಿಸುವ ಕಂಪೆನಿಗಳನ್ನು ಬಹಿಷ್ಕರಿಸಬೇಕು ಎಂದು ಸಂಘಟಕರು ಒತ್ತಾಯಿಸುತ್ತಿದ್ದಾರೆ.
ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಬಗ್ಗೆ ಚಿಂತನೆ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ರಾಜ್ಯದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆ ವೇಳೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಪ್ರಸ್ತಾಪಿಸಿದ ವಿಚಾರವಾಗಿ ಪ್ರತಿಕ್ರಿಯಿದ ಅವರು, ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಸಂಬಂಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಈಗಾಗಲೇ ಚರ್ಚೆ ನಡೆಸುತ್ತಿದೆ. ನಾವು ರಾಜ್ಯದಲ್ಲೂ ಜವಾಬ್ದಾರಿಯುತ ಬಳಕೆದಾರರು ಎಐ ಹಾಗೂ ಸಾಮಾಜಿಕ ಜಾಲತಾಣಗಳ ಬಗ್ಗೆ ಏನು ಮಾಡಬೇಕು ಎಂದು ಈಗಾಗಲೇ ಸಮಾಲೋಚನೆ ಮಾಡುತ್ತಿದ್ದೇವೆ ಎಂದರು. ಇದು ಗಭೀರವಾದ ವಿಚಾರವಾಗಿದೆ. ಈ ಬಗ್ಗೆ ಫಿನ್ಲ್ಯಾಂಡ್ ಕ್ರಮ ತೆಗೆದುಕೊಂಡಿದೆ. ಇಂಗ್ಲೆಂಡ್ ಕೂಡ ಈ ಬಗ್ಗೆ ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತಿದೆ. ಇತ್ತೀಚಿಗೆ ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ 16 ವರ್ಷದ ವರೆಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದಕ್ಕೆ ನಿರ್ಬಂಧ ಹೇರಿದೆ. ನಾವೂ ರಾಜ್ಯದಲ್ಲಿ ಎಐ ವಿಚಾರವಾಗಿ ಹಾಗೂ ಸೋಷಿಯಲ್ ಮೀಡಿಯಾದ ಮೇಲೆ ಏನೆಲ್ಲ ಕ್ರಮ ತಗೊಳಬಹುದು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಅವರು ಉಲ್ಲೇಖಿಸಿದರು.
ಯಾದಗಿರಿ | ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಾಯ
ಯಾದಗಿರಿ : ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ವಾಹನದಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಸಾಗುತ್ತಿದ್ದ ಎಟಿಎಂ ಹಣ ತುಂಬಿಸುವ ವಾಹನವು ಎರಡು ಬೈಕ್ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಶಾಹದತ್ ಹುಸೇನ್ (28) ಎಂದು ಗುರುತಿಸಲಾಗಿದೆ. ಇದೇ ರಾಜ್ಯದ ಇನ್ನೂ ಮೂವರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದು, ಅವರನ್ನು ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಉತ್ತರ ಪ್ರದೇಶದಿಂದ ಬಟ್ಟೆ ವ್ಯಾಪಾರದ ಉದ್ದೇಶದಿಂದ ಯಾದಗಿರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿದು ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಮೃತ ಸ್ಥಿತಿಯಲ್ಲಿ ಪತ್ತೆಯಾದ ಕಾನ್ಫಿಡೆಂಟ್ ಗ್ರೂಪ್ ಮಾಲಕ ಸಿ.ಜೆ. ರಾಯ್ ಯಾರು?
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಕಾನ್ಫಿಡೆಂಟ್ ಗ್ರೂಪ್ ಮಾಲಕ ಸಿ.ಜೆ. ರಾಯ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಿರುವ ತಮ್ಮ ಕಚೇರಿಯಲ್ಲಿ ತಮಗೆ ತಾವೇ ಗುಂಡು ಹೊಡೆದುಕೊಂಡು ಅವರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಗಳು ಶಂಕೆ ವ್ಯಕ್ತಪಡಿಸಿವೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ತಮ್ಮ ಸಂಸ್ಥೆಗಳಿಗೆ ಸಂಬಂಧಿಸಿದ ಕಂಪೆನಿಗಳ ಮೇಲೆ ಇಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು HSR ಲೇಔಟ್ನಲ್ಲಿರುವ ನಾರಾಯಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯು ಉದ್ಯಮ ಹಾಗೂ ರಿಯಲ್ ಎಸ್ಟೇಟ್ ವಲಯದಲ್ಲಿ ಆಘಾತಕ್ಕೆ ಕಾರಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನಷ್ಟು ಮಾಹಿತಿಗಳು ಲಭ್ಯವಾಗುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿಯಿಂದ ಸಿ.ಜೆ. ರಾಯ್ ಖಿನ್ನತೆಗೊಳಗಾಗಿದ್ದರು ಎಂದು ಪಿಟಿಐ ಸುದ್ದಿ ಸಂಸ್ಥೆಯ ವರದಿಗಾರ್ತಿ ಎಲಿಝಬೆತ್ ಕುರಿಯನ್ ವರದಿ ಮಾಡಿದ್ದಾರೆ. ಸಿ.ಜೆ. ರಾಯ್ ಯಾರು? ಸಿ.ಜೆ. ರಾಯ್ ಅವರ ರಿಯಲ್ ಎಸ್ಟೇಟ್ ಸಮೂಹವು ಕೇರಳ ಹಾಗೂ ಕರ್ನಾಟಕದಲ್ಲಿ ಪ್ರಮುಖವಾಗಿ ಕಾರ್ಯಾಚರಿಸುತ್ತಿದ್ದು, ದುಬೈ ಸೇರಿದಂತೆ ಯುಎಇಯಲ್ಲಿಯೂ ಅವರ ಪ್ರಾಜೆಕ್ಟ್ ಗಳು ನಡೆಯುತ್ತಿವೆ. ಅವರು 2000ರ ಮಧ್ಯಭಾಗದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಪ್ರವೇಶಿಸುವುದಕ್ಕೂ ಮುನ್ನ, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ನಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದು, ಕಾರ್ಪೊರೇಟ್ ವಲಯದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ್ದರು. ಅವರ ನಾಯಕತ್ವದಲ್ಲಿ ಕಾನ್ಫಿಡೆಂಟ್ ಗ್ರೂಪ್ ಕೇರಳದಲ್ಲಿನ ಒಂದು ಯೋಜನೆಯ ಮೂಲಕ ತನ್ನ ಉದ್ಯಮವನ್ನು ವಿಸ್ತರಿಸಿಕೊಂಡು, ಇಂದು ವಸತಿ ಮತ್ತು ವಾಣಿಜ್ಯ ರಿಯಲ್ ಎಸ್ಟೇಟ್, ಆತಿಥ್ಯ ಹಾಗೂ ಸಂಬಂಧಿತ ವ್ಯವಹಾರಗಳಲ್ಲಿ 100–160ಕ್ಕೂ ಹೆಚ್ಚು ಯೋಜನೆಗಳನ್ನು ಹೊಂದಿರುವ ಬಹುವಲಯದ ಬೃಹತ್ ಡೆವಲಪರ್ ಆಗಿ ಬೆಳೆದಿದೆ. ಅವರ ನಿವ್ವಳ ಆಸ್ತಿಯ ಮೌಲ್ಯವು 300 ಕೋಟಿ ರೂ.ಗಳಿಂದ 500 ಕೋಟಿ ರೂ.ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. ►ಕಾನ್ಫಿಡೆಂಟ್ ಗ್ರೂಪ್ ಬೆಂಗಳೂರಿನಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಕಾನ್ಫಿಡೆಂಟ್ ಗ್ರೂಪ್ ಕೇರಳದಲ್ಲಿ ಬಲಿಷ್ಠ ನೆಲೆ ಹೊಂದಿದ್ದು, ನಂತರ ವಿದೇಶಗಳಲ್ಲಿಯೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಐಷಾರಾಮಿ ಅಪಾರ್ಟ್ಮೆಂಟ್ಗಳು, ನಿವೇಶನ ಅಭಿವೃದ್ಧಿ, ಟೌನ್ಶಿಪ್ಗಳು ಹಾಗೂ ಆತಿಥ್ಯ, ವೈಮಾನಿಕ ಸೇವೆ, ಮನರಂಜನೆ, ಶಿಕ್ಷಣ, ಗಾಲ್ಫ್ ಯೋಜನೆಗಳು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳ ವ್ಯವಹಾರ ಸೇರಿದಂತೆ ವಸತಿ ಹಾಗೂ ವಾಣಿಜ್ಯ ರಿಯಲ್ ಎಸ್ಟೇಟ್ ಮೇಲೆ ಕಂಪೆನಿ ತನ್ನ ಗಮನ ಕೇಂದ್ರೀಕರಿಸಿದೆ. ಅತ್ಯಂತ ಕಡಿಮೆ ಸಾಲ ಅಥವಾ ಶೂನ್ಯ ಸಾಲದ ಡೆವಲಪರ್ ಎಂಬ ಹೆಗ್ಗಳಿಕೆಯನ್ನು ಈ ಸಂಸ್ಥೆ ಕಾಯ್ದುಕೊಂಡಿತ್ತು. ಆ ಮೂಲಕ ವ್ಯಾಜ್ಯರಹಿತ ಭೂ ಹಕ್ಕುಗಳು, ಕಾನೂನು ಪಾರದರ್ಶಕತೆ ಮತ್ತು ಖರೀದಿದಾರರ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಸಂಸ್ಥೆ ಯಶಸ್ವಿಯಾಗಿತ್ತು. ತನ್ನ ಉದ್ಯಮದ ಉತ್ತುಂಗದ ಅವಧಿಯಲ್ಲಿ ಕಾನ್ಫಿಡೆಂಟ್ ಗ್ರೂಪ್ ಸುಮಾರು 140–165 ಯೋಜನೆಗಳನ್ನು ಪೂರ್ಣಗೊಳಿಸಿತ್ತು ಅಥವಾ ಆರಂಭಿಸಿತ್ತು. ಸುಮಾರು 4 ಕೋಟಿ ಚದರ ಅಡಿ ವಿಸ್ತೀರ್ಣದ ಭೂ ಅಭಿವೃದ್ಧಿ ಮೂಲಕ, ಭಾರತ ಮತ್ತು ಗಲ್ಫ್ ಪ್ರದೇಶದಾದ್ಯಂತ 15,000ಕ್ಕೂ ಹೆಚ್ಚು ಗ್ರಾಹಕರಿಗೆ ಸೇವೆ ಸಲ್ಲಿಸಿದೆ. ದಕ್ಷಿಣ ಭಾರತದಲ್ಲಿ ಮುಂಚೂಣಿ ರಿಯಲ್ ಎಸ್ಟೇಟ್ ಕಂಪೆನಿಯಾಗಿ ಗುರುತಿಸಿಕೊಂಡಿರುವ ಕಾನ್ಫಿಡೆಂಟ್ ಗ್ರೂಪ್, ವಿಶೇಷವಾಗಿ ಕೇರಳ ಮತ್ತು ಬೆಂಗಳೂರಿನಲ್ಲಿ ಉನ್ನತ CRISIL ಶ್ರೇಯಾಂಕ ಹಾಗೂ ಬಲಿಷ್ಠ ಬ್ರ್ಯಾಂಡ್ ಗುರುತನ್ನು ಹೊಂದಿದೆ. ಸೌಜನ್ಯ: financialexpress.com
Vijayanagara | ಮಗನಿಂದಲೇ ತಂದೆ-ತಾಯಿ, ಸಹೋದರಿಯ ಹತ್ಯೆ
ಹತ್ಯೆಗೈದ ಬಳಿಕ ಬೆಂಗಳೂರಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಳಗ್ಗೆ ಖಾಲಿ ಹೊಟ್ಟೆಗೆ ಟೀ ಒಳ್ಳೆಯದೋ ಅಥವಾ ಕಾಫಿ?
ದೇಹದಲ್ಲಿನ ಕೊಬ್ಬು ಕರಗಲು ಇಲ್ಲಿದೆ ಟಿಪ್ಸ್!
‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ, ಸಮಾನ ಹಂಚಿಕೆ-ಸದೃಢ ಒಕ್ಕೂಟ’
ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ
ಉಡುಪಿ, ಜ.30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬವರು ಡಿ.20ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲಿಸ್ ಠಾಣೆಗೆ ಮಾಹಿತಿ ನೀಡುವಂತೆ ಬ್ರಹ್ಮಾವರ ಪೊಲಿಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಸಿಎನ್ಜಿ ಗ್ಯಾಸ್ ಕೊರತೆಯಾಗದಂತೆ ನೋಡಿಕೊಳ್ಳಿ: ಉಡುಪಿ ಡಿಸಿ ಸ್ವರೂಪಾ ಟಿ.ಕೆ. ಸೂಚನೆ
ವಿತರಣಾ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಕರೆ
ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ : ಕೆ.ವಿ.ಪ್ರಭಾಕರ್
ಕೋಲಾರ : ಓದಿನ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ. ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಜೀವನ ಪಾಠ ಕೂಡ ಬಹಳ ಮುಖ್ಯ. ಮೊದಲೆಲ್ಲಾ ಮದುವೆ ಅಂದ್ರೆ ಊರಿಗೆ ಊರೇ ಆ ಸಂಭ್ರಮದಲ್ಲಿ ಭಾಗಿ ಆಗುತ್ತಿದ್ದರು. ಪರಸ್ಪರ ಬಾಂಧವ್ಯ ಬೆಳೆಯುತ್ತಿತ್ತು. ಈಗ ಬಾಂಧವ್ಯ ಬೆಸೆಯುವುದಿರಲಿ, ಓದಿ ಬೆಳೆದ ಮಕ್ಕಳಿಗೆ ತಂದೆ ತಾಯಿಯೇ ಹೊರೆ ಆಗ್ತಿದ್ದಾರೆ. ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಈ ಕಾರಣಕ್ಕೇ ಎಂದು ಬೇಸರ ವ್ಯಕ್ತಪಡಿಸಿದರು. ಮಕ್ಕಳು ಬೀದಿ ಪಾಲು ಆಗದ ಹಾಗೆ ಪೋಷಕರು ಹೊಟ್ಟೆ ಬಟ್ಟೆ ಕಟ್ಟಿ ಸಾಕ್ತಾರೆ. ಆದರೆ ಬೆಳೆದ ಮಕ್ಕಳು ವಯಸ್ಸಾದ ಪೋಷಕರನ್ನು ಮರೆತು ಬೀದಿಪಾಲು ಮಾಡುತ್ತಿದ್ದಾರೆ. ಒಂದೇ ಮನೆಯಲ್ಲಿದ್ದರೂ ಅಕ್ಕ ಪಕ್ಕದ ಕೋಣೆಗಳಲ್ಲಿ ಬಂದ್ ಆಗುವ ಮಕ್ಕಳು ಊಟ, ತಿಂಡಿ, ಸುಖ, ದುಃಖ ಎಲ್ಲವನ್ನೂ ವಾಟ್ಸಾಪ್ ಮೂಲಕವೇ ಮೆಸ್ಸೇಜ್ ಹಾಕಿ ಮಲಗುತ್ತಾರೆ. ಇರಿಂದ ಬಾಂಧವ್ಯ ಮತ್ತು ಪರಸ್ಪರತೆ ಬೆಳೆಯುವುದಿಲ್ಲ ಎಂದರು. ಇಂದು ತಂತ್ರಜ್ಞಾನ ವಿಪರೀತ ಬೆಳೆದಿದೆ. ಕೃತಕ ಬುದ್ದಿಮತ್ತೆಯ ಅನಾಹುತಗಳನ್ನು ನಾವು ನೋಡುತ್ತಿದ್ದೇವೆ. ಇದಕ್ಕೆ ಆಸ್ಪದ ಕೊಡದೆ ತಳ ಮಟ್ಟದ ನೈತಿಕ ಶಿಕ್ಷಣ ಆದ್ಯತೆ ಆಗಲಿ ಎಂದು ಹಾರೈಸಿದರು. ಮಹಿಳಾ ಸೇವಾ ಶೈಕ್ಷಣಿಕ ಟ್ರಸ್ಟ್ ನ ಮುಖ್ಯಸ್ಥರಾದ ರೂಪ ಪಿಳ್ಳಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಕ್ ವ್ಯಾಲಿ ಶಾಲೆಯ ಮುಖ್ಯಸ್ಥರಾದ ಪಿಳ್ಳಪ್ಪ, ನಾಲೆಡ್ಜ್ ಅಕಾಡೆಮಿಯ ಡಾ.ಲೋಕೇಶ್ ಪೂಲ, ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್ ಅವರು ಮುಖ್ಯ ಅತಿಥಿಗಳಾಗಿದ್ದರು.
ಮೀಫ್ನಿಂದ ಸರಕಾರಿ ಪ.ಪೂ. ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಮೀಫ್ ವತಿಯಿಂದ ವಿಶೇಷವಾಗಿ ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ 45 ದಿನಗಳ ಕಾಲ ಉಚಿತ ನೀಟ್ ಮತ್ತು ಸಿಇಟಿ ತರಬೇತಿಯನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. 225 ಉಚಿತ ಸೀಟುಗಳು ಮೀಫ್ಗೆ ದೊರೆತಿದ್ದು, ಅದರಲ್ಲಿ ಕೆಲವು ಸೀಟುಗಳನ್ನು ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಕಲಿಯುವ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಎರಡನೇ ಪಿಯು ಮಧ್ಯಾವಧಿ ಪರೀಕ್ಷೆಯಲ್ಲಿ ಅಥವಾ ತಯಾರಿ ಪರೀಕ್ಷೆಯಲ್ಲಿ ಶೇ.80 ಮತ್ತು ಅದಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಈ ಉಚಿತ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಮೀಫ್ ವ್ಯಾಪ್ತಿಗೆ ಒಳಪಡುವ ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಉಚಿತ ಸೀಟುಗಳನ್ನು ಮಂಗಳೂರಿನ ಯೆನೆಪೊಯ ಪ.ಪೂ. ಕಾಲೇಜು ಮತ್ತು ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಒದಗಿಸಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮೀಫ್ ಕೇಂದ್ರ ಕಚೇರಿಗೆ ಫೆ.10ರೊಳಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: 8792115666ನ್ನು ಸಂಪರ್ಕಿಸಬಹುದು ಎಂದು ಮೀಫ್ ಕೇಂದ್ರ ಸಮಿತಿಯ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಜೋಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಡಾ. ಅಕ್ಷತಾ ಆದರ್ಶ್
ಮಂಗಳೂರು: ಮಕ್ಕಳ ರಕ್ಷಣೆಗೆ ಅನೇಕ ಕಾಯ್ದೆಗಳನ್ನು ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯವನ್ನು ಹೋಗಲಾಡಿಸಿ ರಕ್ಷಣೆಯ ಅಗತ್ಯವಿದ್ದರೆ ಅವರಿಗೆ ಸಹಕರಿಸಬೇಕು ಎಂದು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಡಾ. ಅಕ್ಷತಾ ಆದರ್ಶ್ ಹೇಳಿದರು. ಮಕ್ಕಳ ರಕ್ಷಣಾ ನಿರ್ದೇಶನಾಲಯ, ದ.ಕ. ಜಿಲ್ಲಾಡಳಿತ, ಜಿಪಂ, ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ. ಮಕ್ಕಳ ಸಹಾಯವಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಪ್ರಕರಣಗಳ ನಿರ್ವಹಣೆ ಹಾಗೂ ಮಕ್ಕಳ ವಿವಿಧ ಕಾನೂನುಗಳ ಅನುಷ್ಠಾನದಲ್ಲಿ ಪೊಲೀಸ್ ಇಲಾಖೆಯ ಪಾತ್ರದ ಕುರಿತು ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸರು ನೊಂದ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕು. ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು. ಮಕ್ಕಳ ಕಾಯ್ದೆಗಳ ಬಗ್ಗೆ ಸಾರ್ವಜನಿಕರು ಮತ್ತು ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮಾಡಬ ಹುದು ಎಂದು ಡಾ. ಅಕ್ಷತಾ ಆದರ್ಶ್ ಅಭಿಪ್ರಾಯಪಟ್ಟರು. ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸಬೇಕು. ಮಕ್ಕಳ ಜೊತೆ ಸಂಪರ್ಕ ಸಾಧಿಸಿ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯದ ವಾತಾವರಣವನ್ನು ದೂರ ಮಾಡಿ ನೊಂದ ಮಕ್ಕಳಿಗೆ ಭರವಸೆ ಮತ್ತು ಆತ್ಮ ವಿಶ್ವಾಸವನ್ನು ಮೂಡಿಸಬೇಕು ಎಂದು ಡಾ. ಅಕ್ಷತಾ ಆದರ್ಶ್ ಹೇಳಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಎಸ್ಜೆಪಿಯು ಸಿಐಡಿ ಪೊಲೀಸ್ ತರಬೇತುದಾರ ರೋಹಿತ್ ಸಿಜಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್, ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಮತ್ತಿತರರು ಉಪಸ್ಥಿತರಿದ್ದರು.
ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್ ಅವರು ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ತಮ್ಮ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಟಿ ದಾಳಿ ನಡೆದಾಗ ಸ್ವತಃ ತಾವೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಸುದ್ದಿ ಈಗ ಉದ್ಯಮ ವಲಯಕ್ಕೆ ಬರ ಸಿಡಿಲಿನಂತೆ ಎರಗಿ ಬಂದಿದೆ. ಹಾಗಾದರೆ, ಅಷ್ಟಕ್ಕೂ ಏನಿದು ಘಟನೆ? ಮಾರುತಿ 800 ಕಾರಿನಿಂದ ಲೈಫ್ ಜರ್ನಿ ಶುರು ಮಾಡಿ, ಸಾವಿರಾರು ಕೋಟಿ ಒಡೆಯನಾದ ರಾಯ್ ಅವರ ರೋಚಕ ಕಥೆ ಏನು? ಐಷಾರಾಮಿ ಕಾರ್ಗಳ ಸಾಮ್ರಾಜ್ಯ ಹೇಗಿದೆ? ಇಲ್ಲಿದೆ ವಿವರ.
ದೇಶದಲ್ಲಿಯೇ ಪ್ರಥಮ ಬಾರಿಗೆ ಕೇರಳದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಜೆಟ್!
ತಿರುವನಂತಪುರಂ: ದೇಶದಲ್ಲಿಯೇ ಮೊದಲ ಬಾರಿಗೆ ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ಕೀರ್ತಿಗೆ ಕೇರಳ ರಾಜ್ಯ ಭಾಜನವಾಗಿದೆ. ನಿನ್ನೆ ಕೇರಳ ರಾಜ್ಯ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು 2026–27ನೇ ಸಾಲಿನ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಕೇರಳದಲ್ಲಿ ಹಿರಿಯ ನಾಗರಿಕರ (60 ವರ್ಷ ಮೇಲ್ಪಟ್ಟವರು) ಸಂಖ್ಯೆ ಗಮನಾರ್ಹವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಹಿರಿಯ ನಾಗರಿಕರಿಗಾಗಿಯೇ ಪ್ರತ್ಯೇಕ ಬಜೆಟ್ ಮಂಡಿಸಿದೆ. ಹಿರಿಯ ನಾಗರಿಕರಿಗೆ ಅಗತ್ಯವಾದ ವಿಶೇಷ ಗಮನ ನೀಡಬೇಕಾದ ಸಮಯ ಇದೀಗ ಬಂದಿದೆ ಎಂದು ಬಜೆಟ್ ಪ್ರಸ್ತಾಪದಲ್ಲಿ ಉಲ್ಲೇಖಿಸಲಾಗಿದೆ. ಹಿರಿಯ ನಾಗರಿಕರಿಗಾಗಿ ಹಿರಿಯ ನಾಗರಿಕರ ಆಯೋಗ ಸ್ಥಾಪನೆ, ಅದಕ್ಕಾಗಿ ವಾರ್ಷಿಕ 30 ಕೋಟಿ ರೂ. ಅನುದಾನ ಮೀಸಲು, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸ್ವಯಂಸೇವಕ ಪಡೆಗಳ ಸ್ಥಾಪನೆ, ಅವರ ಮೂಲಕ 24x7 ಸಹಾಯ ವ್ಯವಸ್ಥೆ ಕಲ್ಪಿಸುವುದು, ಡಿಜಿಟಲ್ ಪೋರ್ಟಲ್ ಮೂಲಕ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಕಲ್ಯಾಣ ಯೋಜನೆಗಳು ಮತ್ತು ಕುಂದುಕೊರತೆಗಳ ಪರಿಹಾರ, ವೈದ್ಯಕೀಯ ನೆರವು, ಕಾನೂನು ಸೇವೆ ಹಾಗೂ ಸುರಕ್ಷತೆ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಸಚಿವ ಕೆ.ಎನ್. ಬಾಲಗೋಪಾಲ್ ಘೋಷಿಸಿದ್ದಾರೆ. ಹಿರಿಯ ನಾಗರಿಕರ ಸಹಾಯಕ್ಕಾಗಿ ಸ್ಥಾಪಿಸಲಾಗುವ ಸ್ವಯಂಸೇವಕ ಪಡೆಗಳಿಗೆ ಸುಮಾರು 10 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೇರಳದ ಒಟ್ಟು ಜನಸಂಖ್ಯೆ (ಅಂದಾಜು 3.5 ಕೋಟಿ)ಯಲ್ಲಿ ಶೇ.18.7ರಷ್ಟು ಮಂದಿ ಹಿರಿಯ ನಾಗರಿಕರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರಮಾಣ ನಿರಂತರವಾಗಿ ಹೆಚ್ಚುತ್ತಿದೆ. ಹೀಗಾಗಿ, ಆರ್ಥಿಕ ದೃಷ್ಟಿಯಿಂದಲೂ ಹಿರಿಯ ನಾಗರಿಕರು ರಾಜ್ಯಕ್ಕೆ ಅತ್ಯಂತ ಮಹತ್ವದವರು. ಅವರನ್ನು ಕೇಂದ್ರವಾಗಿಟ್ಟುಕೊಂಡು ಪ್ರತ್ಯೇಕ ಬಜೆಟ್ ಮಂಡಿಸುವುದು ಆ ಕ್ಷೇತ್ರದಲ್ಲಿನ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೇರಳದಲ್ಲಿ ಯುವಜನಸಂಖ್ಯೆಯ ಪ್ರಮಾಣಕ್ಕೆ ಹೋಲಿಸಿದರೆ ಹಿರಿಯ ನಾಗರಿಕರ ಸಂಖ್ಯೆ ವೇಗವಾಗಿ ಏರಿಕೆಯಾಗುತ್ತಿದೆ. ಶೀಘ್ರದಲ್ಲೇ ಈ ಪ್ರಮಾಣ ಶೇ.25ನ್ನೂ ಮೀರಲಿದೆ ಎಂದು ಅವರು ತಿಳಿಸಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಹಿರಿಯ ನಾಗರಿಕರನ್ನು ಹೊಂದಿರುವ ರಾಜ್ಯವಾಗಿ ಕೇರಳ ಹೊರಹೊಮ್ಮುತ್ತಿದೆ.
ನಾಗಾಲೋಟದಲ್ಲಿದ್ದ ಮೆಟಲ್ ಷೇರುಗಳು ಏಕಾಏಕಿ ಕುಸಿತ, 12% ಇಳಿಕೆ, ಹೂಡಿಕೆದಾರರು ಕಂಗಾಲು; ಕಾರಣ ಏನು?
ಶುಕ್ರವಾರ ಚಿನ್ನ, ಬೆಳ್ಳಿ, ತಾಮ್ರ, ಅಲ್ಯುಮಿನಿಯಂ ದರಗಳು ಇಳಿಕೆ ಕಾಣುತ್ತಿದ್ದಂತೆ ಇತ್ತ, ಷೇರುಗಳೂ ನೆಲಕಚ್ಚಿವೆ. ಲೋಹದ ಕಂಪನಿಗಳ ಷೇರುಗಳು ಇಳಿಕೆ ಕಂಡಿದ್ದರೆ, ನಿಫ್ಟಿ ಮೆಟಲ್ ಸೂಚ್ಯಂಕ ಶೇಕಡಾ 5ಕ್ಕಿಂತ ಹೆಚ್ಚು ಕುಸಿತ ಕಂಡಿದೆ. ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಫ್ಯೂಚರ್ಸ್ ದರ ಶೇಕಡಾ 11ರಷ್ಟು, ಬೆಳ್ಳಿ ಫ್ಯೂಚರ್ಸ್ ದರ ಶೇಕಡಾ 15ರಷ್ಟು ಇಳಿಕೆ ಕಂಡಿದೆ. ಇತ್ತ ತಾಮ್ರ ಹಾಗೂ ಅಲ್ಯುಮಿನಿಯಂ ಫ್ಯೂಚರ್ಸ್ ದರಗಳು ಶೇಕಡಾ 5 ಮತ್ತು ಶೇಕಡಾ 7ರಷ್ಟು ಇಳಿಕೆಯಾಗಿವೆ. ಪರಿಣಾಮ ಇದಕ್ಕೆ ಸಂಬಂಧಿಸಿದ ಷೇರುಗಳೂ ಕುಸಿದಿವೆ.
“ಆದಿತ್ಯನಾಥ್ ‘ಹಿಂದುತ್ವ’ ಸಾಬೀತುಪಡಿಸಲಿ”
ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳ ಟಾರ್ಗೆಟ್: ನನ್ನ ಮೇಲೆ 15 ಕೇಸ್ ಹಾಕಿದ್ದಾರೆ! ವೇದವ್ಯಾಸ ಕಾಮತ್ ಆಕ್ರೋಶ
ವಿಧಾನಸಭೆಯಲ್ಲಿ ಇಂದು (ಜ.30-ಗುರುವಾರ) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಮೇಲೆ ಹಾಕಿರುವ 15 ಕೇಸ್ಗಳ ಬಗ್ಗೆ ಪ್ರಸ್ತಾಪಿಸಿ, ರಾಜ್ಯಪಾಲರನ್ನು ಓಡಿಸಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಹೇಳಿದ್ದರೂ ಕೇಸ್ ಹಾಕಿಲ್ಲ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹರಿಹಾಯ್ದರು. ಇಲ್ಲಿದೆ ಮಾಹಿತಿ.
ಕೋಮುವಾದದ ವಿರುದ್ಧ ಬಲವಾದ ಧ್ವನಿ: ರಾಹುಲ್ ಗಾಂಧಿಗೆ ಶಶಿ ತರೂರ್ ಪ್ರಶಂಸೆ
ಹೊಸದಿಲ್ಲಿ, ಜ.30: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಮತ್ತು ದೇಶದಲ್ಲಿ ಕೋಮುವಾದಗಳಂತಹ ವಿಷಯಗಳ ವಿರುದ್ಧ ಬಲವಾದ ಧ್ವನಿಯಾಗಿದ್ದಾರೆ ಎಂದು ಶುಕ್ರವಾರ ಪ್ರಶಂಸಿಸಿದರು. ತನ್ನ ಮತ್ತು ಪಕ್ಷದ ನಡುವೆ ಬಿರುಕು ಉಂಟಾಗಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ಶಶಿ ತರೂರ್, ತಾನು ಪಕ್ಷದ ಹೈಕಮಾಂಡ್ ಜೊತೆ ಉತ್ತಮ ಸಂಬಂಧವನ್ನು ಹೊಂದಿದ್ದೇನೆ ಎಂದು ಹೇಳಿದರು. ಬುಧವಾರ ಸಂಸತ್ತಿನಲ್ಲಿ ರಾಹುಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತನ್ನ ಭೇಟಿಯ ಚಿತ್ರವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ತರೂರ್,‘ಎಲ್ಲವೂ ಚೆನ್ನಾಗಿದೆ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ’ ಎಂದು ಬರೆದಿದ್ದರು. ರಾಹುಲ್ ಮತ್ತು ಖರ್ಗೆ ಅವರನ್ನು ತನ್ನ ಇಬ್ಬರು ನಾಯಕರು ಎಂದು ಬಣ್ಣಿಸಿದ ತಿರುವನಂತಪುರ ಸಂಸದ ತರೂರ್ ತಾನು ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇತ್ತೀಚಿನ ‘ಕೊಚ್ಚಿ ಮಹಾಪಂಚಾಯತ್’ ನಂತರದ ವಿವಾದಕ್ಕೆ ಅವರು ಮಹತ್ವ ನೀಡಲಿಲ್ಲ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 140 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ಗಾಗಿ ವ್ಯಾಪಕ ಪ್ರಚಾರವನ್ನು ನಡೆಸಲು ತಾನು ಯೋಜಿಸಿರುವುದಾಗಿ ತರೂರ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಶಿ ತರೂರ್ ಕೆಲವು ವಿಷಯಗಳಲ್ಲಿ ತನ್ನ ನಿಲುವಿಗೆ ಟೀಕೆಗಳ ಕುರಿತಂತೆ, ಕೆಲವರು ತನ್ನ ಅಭಿಪ್ರಾಯಗಳನ್ನು ಬಿಜೆಪಿ ಪರ ಎಂದು ಪರಿಗಣಿಸಿರಬಹುದು. ಆದರೆ ಅವು ‘ಭಾರತ ಪರ’ವಾಗಿದ್ದವು ಎಂದು ಹೇಳಿದರು. ಕೆಲವು ಅಂತರರಾಷ್ಟ್ರೀಯ ವಿಷಯಗಳಲ್ಲಿ ರಾಜಕೀಯದ ಕುರಿತು ಮಾತನಾಡಲು ನಾನು ಇಷ್ಟಪಡುವುದಿಲ್ಲ. ಬದಲಿಗೆ ದೇಶದ ಕುರಿತು ಮಾತನಾಡಲು ಆದ್ಯತೆ ನೀಡುತ್ತೇನೆ ಎಂದು ತಾನು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು. ಪಕ್ಷದ ಸದಸ್ಯರು ಪಕ್ಷದ ನಿಲುವಿಗೆ ವಿರುದ್ಧವಾಗಿ ಹೋಗಬಾರದು ಎನ್ನುವುದನ್ನು ಒಪ್ಪಿಕೊಂಡ ಶಶಿ ತರೂರ್, ಸಂಸತ್ತಿನಲ್ಲಿ ತಾನು ಯಾವಾಗಲೂ ಪಕ್ಷದ ಜೊತೆಯಲ್ಲಿ ನಿಂತಿದ್ದೇನೆ. ಹೀಗಾಗಿ ಕಳವಳಗೊಳ್ಳುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್ ತೊರೆಯುವುದಿಲ್ಲ ಎಂದು ನೀವು ಸ್ಪಷ್ಟವಾಗಿ ಹೇಳಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು,‘ನಾನು ಕಾಂಗ್ರೆಸ್ನಲ್ಲಿಯೇ ಇರುತ್ತೇನೆ ಮತ್ತು ಬೇರೆಲ್ಲಿಗೂ ಹೋಗುವುದಿಲ್ಲ ಎಂದು ನಾನು ಹೇಳಬಲ್ಲೆ. ಕೇರಳದಲ್ಲಿ ಚುನಾವಣಾ ಪ್ರಚಾರದ ಭಾಗವಾಗಿರುತ್ತೇನೆ ಮತ್ತು ಯುಡಿಎಫ್ ಗೆಲುವಿಗೆ ಶ್ರಮಿಸುತ್ತೇನೆ’ಎಂದು ಉತ್ತರಿಸಿದರು. ‘ಆದರೆ, ಇಂತಹ ಹೇಳಿಕೆಗಳನ್ನು ನೀಡುವಂತೆ ನನ್ನನ್ನೇಕೆ ಕೇಳಲಾಗುತ್ತಿದೆ ’ ಎಂದು ಅವರು ಪ್ರಶ್ನಿಸಿದರು. ಇತ್ತೀಚಿಗೆ ಕೊಚ್ಚಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ತನ್ನನ್ನು ನಡೆಸಿಕೊಂಡಿದ್ದ ರೀತಿ ಮತ್ತು ಕೇರಳದಲ್ಲಿ ತನ್ನನ್ನು ಬದಿಗೊತ್ತಲು ಕೆಲವು ನಾಯಕರು ಪ್ರಯತ್ನಿಸುತ್ತಿರುವ ವರದಿಗಳ ಬಗ್ಗೆ ತರೂರ್ ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಶುಕ್ರವಾರದ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.
ಕೆಳ ನ್ಯಾಯಾಲಯಗಳಲ್ಲಿ ದಲಿತ, ಆದಿವಾಸಿ ಮತ್ತು ಒಬಿಸಿ ನ್ಯಾಯಾಧೀಶರ ಪಟ್ಟಿಯಲ್ಲಿ ತಮಿಳುನಾಡು, ಕರ್ನಾಟಕಕ್ಕೆ ಅಗ್ರಸ್ಥಾನ
ಹೊಸದಿಲ್ಲಿ,ಜ.30: ದೇಶದಲ್ಲಿಯ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶೇ.14.15ರಷ್ಟು ದಲಿತ, ಶೇ.5.12ರಷ್ಟು ಬುಡಕಟ್ಟು ಜನಾಂಗ ಮತ್ತು ಶೇ26.64ರಷ್ಟು ಒಬಿಸಿಗಳಿಗೆ ಸೇರಿದ ನ್ಯಾಯಾಧೀಶರಿದ್ದಾರೆ. ದೇಶದ ಇತರ ಭಾಗಗಳಿಗೆ ಹೋಲಿಸಿದರೆ ತಮಿಳುನಾಡು ಮತ್ತು ಕರ್ನಾಟಕಗಳಲ್ಲಿ ಈ ವರ್ಗಗಳ ನ್ಯಾಯಾಧೀಶರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನುವುದನ್ನು ಅಂಕಿಅಂಶಗಳು ತೋರಿಸಿವೆ. ಉಚ್ಚ ನ್ಯಾಯಾಲಯಗಳಿಗೆ ಹೋಲಿಸಿದರೆ ಕೆಳ ನ್ಯಾಯಾಂಗವು ಈ ವರ್ಗಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿದೆ. 2018ರಿಂದ ಉಚ್ಚ ನ್ಯಾಯಾಲಯಗಳಿಗೆ ನೇಮಕಗೊಂಡ 847 ನ್ಯಾಯಾಧೀಶರಲ್ಲಿ ಕೇವಲ 3.89 ರಷ್ಟು ದಲಿತರು, ಶೇ.2ರಷ್ಟು ಬುಡಕಟ್ಟು ಪಂಗಡಗಳು ಮತ್ತು ಶೇ.12.27ರಷ್ಟು ಒಬಿಸಿ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಕಾನೂನು ಮತ್ತು ಸಚಿವ ಅರ್ಜುನ್ ಮೇಘ್ವಾಲ್ ಅವರು ಸಂಸತ್ತಿನಲ್ಲಿ ಹಿರಿಯ ಆರ್ಜೆಡಿ ಸಂಸದ ಮನೋಜ ಕೆ.ಝಾ ಅವರಿಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಅಂಕಿ ಅಂಶಗಳನ್ನು ಒದಗಿಸಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿಯ ಕೆಳ ನ್ಯಾಯಾಲಯಗಳಲ್ಲಿ ಈ ಸಮುದಾಯಗಳು ಗಮನಾರ್ಹ ಪ್ರಾತಿನಿಧ್ಯವನ್ನು ಹೊಂದಿದ್ದರೆ, ಪಶ್ಚಿಮ ಬಂಗಾಳ ಹಾಗೂ ಅಂಡಮಾನ ನಿಕೋಬಾರ್ ದ್ವೀಪ ಸಮೂಹದ ಕೆಳ ನ್ಯಾಯಾಲಯಗಳಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸೇರಿದ ಒಬ್ಬರೂ ನ್ಯಾಯಾಧೀಶರಿಲ್ಲ. ಅಂಕಿಅಂಶಗಳ ಪ್ರಕಾರ ಜ.21ಕ್ಕೆ ಇದ್ದಂತೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಒಟ್ಟು 20,833 ನ್ಯಾಯಾಧೀಶರಲ್ಲಿ 9,534 (ಶೇ.45.76) ನ್ಯಾಯಾಧೀಶರು ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳಿಗೆ ಸೇರಿದ್ದಾರೆ. ತಮಿಳುನಾಡಿನಲ್ಲಿ 1,234 ನ್ಯಾಯಾಧೀಶರ ಪೈಕಿ 1,205(ಶೇ.97.65) ಮತ್ತು ಕರ್ನಾಟಕದಲ್ಲಿ 1,129 ನ್ಯಾಯಾಧೀಶರ ಪೈಕಿ 996(ಶೇ.88.82) ನ್ಯಾಯಾಧೀಶರು ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸೇರಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಶಿಫಾರಸು ಮಾಡಿದ ನ್ಯಾಯಾಧೀಶರನ್ನು ಮಾತ್ರ ಸುಪೀಂ ಕೋರ್ಟ್ ಮತ್ತು ಹೈಕೋರ್ಟ್ಗಳಿಗೆ ನೇಮಕ ಮಾಡಲಾಗುತ್ತದೆ. ರಾಜ್ಯ ಸರಕಾರಗಳು ಆಯಾ ಹೈಕೋರ್ಟ್ಗಳೊಂದಿಗೆ ಸಮಾಲೋಚಿಸಿ ರಾಜ್ಯ ನ್ಯಾಯಾಂಗ ಸೇವೆಯಲ್ಲಿ ನ್ಯಾಯಾಧೀಶರ ನೇಮಕಾತಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸುತ್ತವೆ.
ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್
ಶಾಲಾಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಲು ಆದೇಶಿಸಿದ ನ್ಯಾಯಾಲಯ
Karnataka Vs Punjab- ರಣಜಿ ಟ್ರೋಫಿಯ ನಾಕೌಟ್ ಹಂತಕ್ಕೆ ಅರ್ಹತೆ ಪಡೆಯಲು ಗೆಲ್ಲಲೇಬೇಕಾಗಿರುವ ಪಂದ್ಯದಲ್ಲಿ ಕರ್ನಾಟಕ ಇದೀಗ ಪ್ರಥಮ ಇನ್ನಿಂಗ್ಸ್ ಮುನ್ನಡೆ ಗಳಿಸಲು ಹರಸಾಹಸ ಮಾಡುತ್ತಿದೆ. ಪಂಜಾಬ್ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ವಾಟಕ ಪ್ರಥಮ ಇನ್ನಿಂಗ್ಸ್ ಹಿನ್ನಡೆಯಿಂದ ಪಾರಾಗಲು 54 ರನ್ ಗಳಿಸಬೇಕಿದೆ. ಕೆಎಲ್ ರಾಹುಲ್(59) ಮತ್ತು ಮಾಯಾಂಕ್ ಅಗರ್ವಾಲ್(44) ವಿಕೆಟ್ ಪತನದ ಬಳಿಕ ಕುಸಿದ ಕರ್ನಾಟಕಕ್ಕೆ ಶ್ರೇಯಸ್ ಗೋಪಾಲ್ (ಅಜೇಯ 42) ಆಸರೆಯಾಗಿದ್ದಾರೆ. ಶುಕ್ರವಾರ ಅವರು ಮತ್ತು ವಿದ್ಯಾಧರ್ ಪಾಟೀಲ್ ಅವರಿಂದ ಉತ್ತಮ ಜೊತೆಯಾಟ ಬಂದಲ್ಲಿ ಕರ್ನಾಟಕಕ್ಕೆ ಪ್ರಥಮ ಇನ್ನಿಂಗ್ಸ್ ಮುನ್ನಡೆ ಸಿಗುವುದು ಖಚಿತ.
ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಆರೋಪಿ ಸೆರೆ
ಮಂಗಳೂರು: ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಮುಹಮ್ಮದ್ ಇಮ್ರಾನ್ (44) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜ.23ರಂದು ಸಂಜೆ 7 ಗಂಟೆಗೆ ಬೆಂಗಳೂರಿಗೆ ತೆರಳಲು ಬಸ್ಸಿನಲ್ಲಿ ಕುಳಿತಿದ್ದ ಇಬ್ಬರು ಮಹಿಳೆಯರು ಹಾಗೂ ಹಿರಿಯ ನಾಗರಿಕರು ಚಿನ್ನಾಭರಣ ಮತ್ತು ನಗದು ಹೊಂದಿದ್ದ ಟ್ರಾಲಿ ಬ್ಯಾಗ್ ಕಳವಾಗಿರುವ ಬಗ್ಗೆ ಬರ್ಕೆ ಠಾಣೆಗೆ ದೂರು ನೀಡಿದ್ದರು. ಆರೋಪಿಯ ಪತ್ತೆಗಾಗಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಎಸ್ಸೈ ವಿನಾಯಕ ತೊರಗಲ್ ನೇತೃತ್ವದ ವಿಶೇಷ ತಂಡವನ್ನು ರಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಈ ತಂಡವು ಜ.28ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದೆ. ಈತನು ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸರಣಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ. ಅಂತರ್ಜಿಲ್ಲಾ ಕಳವು ಆರೋಪಿಯಾಗಿರುವ ಈತನ ಮೇಲೆ 11 ಬ್ಯಾಗ್ ಕಳ್ಳತನ ಪ್ರಕರಣ ದಾಖಲಿಸಲಾಗಿತ್ತು. ಈತನಿಂದ 6,47,920 ರೂ. ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ 5,000 ರೂ.ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರಣೆಯಲ್ಲಿ ಬರ್ಕೆ ಠಾಣೆಯ ಸಿಬ್ಬಂದಿಗಳಾದ ಸುಜನ್, ವಾಸುದೇವ, ರವಿ ಲಮಾಣಿ, ಸಿದ್ದು, ಹರೀಶ್, ನಿತಿಶ್, ಗಾಲಿಬ್ ಪಾಲ್ಗೊಂಡಿದ್ದರು.
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಪುಣ್ಯಸ್ಮರಣೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡು ತ್ತಾರೆ. ಆದರೆ ಅವರು ನಮ್ಮ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಗಾಂಧೀಜಿ ಅಹಿಂಸಾ ಮಾರ್ಗದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆ ಯಿತು. ಪ್ರಪಂಚದಾದ್ಯಂತ ಬಾಪು ಅವರ ಜೀವನ ಮಾದರಿಯಾಗಿದೆ. ವಿವಿಧ ದೇಶಗಳು ಮಹಾತ್ಮ ಗಾಂಧಿಯ ಸ್ಮರಣಾರ್ಥವಾಗಿ ಪ್ರತಿಮೆಗಳನ್ನು ನಿರ್ಮಿಸಿ ಅವರನ್ನು ಶಾಂತಿ, ಮಾನವೀಯತೆ ಮತ್ತು ಅಹಿಂಸೆಯ ಸಂಕೇತ ವೆಂದು ಗೌರವಿಸುತ್ತಿವೆ. ಆದರೆ ಇಲ್ಲಿ ಮೋದೀಜಿಯ ಶಿಷ್ಯರು ಗಾಂಧಿ ಪ್ರತಿಮೆಗೆ ಬೆಂಕಿ, ಗುಂಡು ಹಾರಿಸಿ ಅವಮಾನಿಸುತ್ತಿರುವುದು ಖಂಡನೀಯ ಎಂದರು. ಕೇಂದ್ರ ಬಿಜೆಪಿ ಸರಕಾರದ ಹೊಸ ಕಾಯ್ದೆಯು ಮನರೇಗಾ ಯೋಜನೆಯಲ್ಲಿದ್ದ ಗಾಂಧೀಜಿಯ ಪ್ರಧಾನ ಆಶಯವಾದ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ದುರ್ಬಲಗೊಳಿಸಿದೆ. ಬಿಜೆಪಿ ನಿತ್ಯವೂ ಗಾಂಧಿ ಚಿಂತನೆಗಳನ್ನು ಕೊಲ್ಲುತ್ತಿದೆ ಎಂದು ರಮಾನಾಥ ರೈ ಹೇಳಿದರು. ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಪಕ್ಷದ ಮುಖಂಡರಾದ ಪದ್ಮರಾಜ್ ಆರ್.ಪೂಜಾರಿ, ಎಸ್. ಅಪ್ಪಿ, ದಿನೇಶ್ ಮುಳೂರು, ಕೆ.ಹರಿನಾಥ್, ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಟಿ.ಕೆ. ಸುಧೀರ್, ಶಬ್ಬೀರ್ ಸಿದ್ದಕಟ್ಟೆ, ಹುಸೈನ್, ಯೋಗೀಶ್ ಕುಮಾರ್, ಸಾರಿಕ ಪೂಜಾರಿ, ಇಬ್ರಾಹೀಂ ನವಾಝ್, ಜೋಕಿಂ ಡಿಸೋಜ, ಅಬ್ಬಾಸ್ ಅಲಿ, ಶೈಲಜಾ ಬಂಟ್ವಾಳ, ಸ್ಟ್ಯಾನಿ ತಾವ್ರೊ, ಸುಹಾನ್ ಆಳ್ವ, ಸೌಹಾನ್ ಎಸ್.ಕೆ., ಸೀತಾರಾಮ ಶೆಟ್ಟಿ, ಬಿ.ಎಸ್. ಇಸ್ಮಾಯೀಲ್ ತಲಪಾಡಿ, ಲಕ್ಷ್ಮಿ ನಾಯರ್, ಸತೀಶ್ ಪೆಂಗಲ್, ಬಶೀರ್, ಜಾರ್ಜ್, ಸಬಿತಾ ಮಿಸ್ಕಿತ್, ಶಾಂತಲಾ ಗಟ್ಟಿ, ಅವಿತಾ, ಕ್ಲೆಟಾ, ಆಲ್ವಿನ್ ಪ್ರಕಾಶ್, ಕೃಷ್ಣ ಶೆಟ್ಟಿ, ಮೋಹನ್ದಾಸ್ ಕೊಟ್ಟಾರಿ, ಟಿ.ಸಿ.ಗಣೇಶ್, ಸಮರ್ಥ ಭಟ್, ಫಯಾಝ್ ಅಮ್ಮೆಮ್ಮಾರ್, ಸನೋಬರ್ ಫಾತಿಮಾ ಮತ್ತಿತರರು ಉಪಸ್ಥಿತರಿದ್ದರು.
Government Employees: ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ: ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆ ಕಲ್ಪಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ 2025 ರ ಅಕ್ಟೋಬರ್ 1ರಿಂದ ಜಾರಿಯಾಗಿದ್ದು, ಲಕ್ಷಾಂತರ ನೌಕರ, ಸಿಬ್ಬಂದಿ ಸರಕಾರಿ ಹಾಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಇನ್ನೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ
ಶಿಡ್ಲಘಟ್ಟ ಪೌರಾಯುಕ್ತೆಗೆ ಜೀವ ಬೆದರಿಕೆ ಹಾಕಿದ್ದ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು
ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್ ಮತ್ತು ಪೊಲೀಸರ ತನಿಖೆಗೆ ಸಹಕರಿಸುವ ಷರತ್ತು ವಿಧಿಸಲಾಗಿದೆ. ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ ಸಂಭ್ರಮಾಚರಣೆ ಮಾಡಬಾರದೆಂದು ನ್ಯಾಯಾಲಯ ಕಟ್ಟುನಿಟ್ಟಾಗಿ ಸೂಚಿಸಿದೆ. ತನಿಖೆ ಮುಂದುವರೆಯಲಿದೆ.
ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ : ಎಚ್.ವಿಶ್ವನಾಥ್
ಬೆಂಗಳೂರು : ಕೇಂದ್ರ ಸರಕಾರದಿಂದ ಜಿಎಸ್ಟಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸದನದಲ್ಲಿ ಕಾಂಗ್ರೆಸ್ನವರು ಬೊಬ್ಬೆ ಹೊಡೆದುಕೊಂಡರೆ ನ್ಯಾಯ ಸಿಗುತ್ತದೆಯೇ?, ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಎಷ್ಟು ಬಾರಿ ದಿಲ್ಲಿಯ ಜಿಎಸ್ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ ಎಂದು ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ತರಾಟೆಗೆ ತೆಗೆದುಕೊಂಡ ಪ್ರಸಂಗ ಮೇಲ್ಮನೆಯಲ್ಲಿ ನಡೆಯಿತು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾತನಾಡುತ್ತಾ, ಜಿಎಸ್ಟಿ ವಿಷಯದಲ್ಲಿ ಕರ್ನಾಟಕದ ಪಾಲು ಬಂದಿಲ್ಲ. ಕಾಂಗ್ರೆಸ್ ಜಾರಿಗೆ ತಂದ ಯೋಜನೆಗಳ ಹೆಸರು ಬದಲಿಸುವುದೇ ಮೋದಿಯವರ ಸಾಧನೆ. ಜಿಎಸ್ಟಿ, ತೆರಿಗೆ ಪಾಲು ಸೇರಿದಂತೆ ಎಲ್ಲದರಲ್ಲೂ ಪ್ರಧಾನಿ ಮೋದಿ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಎಚ್.ವಿಶ್ವನಾಥ್, ಕೇಂದ್ರದಿಂದ ಜಿಎಸ್ಟಿ ಅನ್ಯಾಯ ಆಗಿದೆ ಎಂದು ಇಲ್ಲಿ ಬೊಬ್ಬೆ ಹೊಡೆದುಕೊಂಡರೆ ನ್ಯಾಯ ಸಿಗುತ್ತದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ಬಾರಿ ಜಿಎಸ್ಟಿ ಕೌನ್ಸಿಲಿಂಗ್ ಸಭೆಗೆ ಹೋಗಿದ್ದಾರೆ ಎಂದು ಪ್ರಶ್ನೆ ಮಾಡಿದರು. ಎಚ್.ವಿಶ್ವನಾಥ್ ಅವರ ಈ ಹೇಳಿಕೆಗೆ ಆಡಳಿತ ಪಕ್ಷದ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಆಗ ಪ್ರತಿಪಕ್ಷದ ಸದಸ್ಯರೂ ಕೂಡ ಪ್ರತಿದಾಳಿ ನಡೆಸಿದರು. ನಾನು ಯಾವುದೇ ಸರಕಾರವನ್ನು ಗುರಿಯಾಗಿಟ್ಟುಕೊಂಡು ಟೀಕೆ ಮಾಡಿಲ್ಲ. ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಎಸ್ಟಿ ಕೌನ್ಸಿಲಿಂಗ್ ಸಭೆಗೆ ಹೋಗಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಸ್ತಾಪಿಸಬೇಕಿತ್ತು. ಸಭೆಗೆ ಹೋಗದೇ ಇಲ್ಲಿ ನೀವು ಮಾತನಾಡಿದರೆ ಏನು ಪ್ರಯೋಜನ? ಎಂದು ಎಚ್.ವಿಶ್ವನಾಥ್ ಪ್ರಶ್ನಿಸಿದರು. ಜಿಎಸ್ಟಿ ಸಭೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಬಂದು ತಮ್ಮ ರಾಜ್ಯದ ಬೇಡಿಕೆಯನ್ನು ಸಲ್ಲಿಸುತ್ತಾರೆ. ಅಲ್ಲಿ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಆಗ ಇದನ್ನು ಪರಿಶೀಲಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುತ್ತಾರೆ. ಸುಮ್ಮನೆ ಇಲ್ಲಿ ಮಾತನಾಡಿದರೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಎಚ್.ವಿಶ್ವನಾಥ್ ಹೇಳಿದರು. ಈ ಹಂತದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ದಿಲ್ಲಿಯಲ್ಲಿ ನಡೆಯುವ ಜಿಎಸ್ಟಿ ಕೌನ್ಸಿಲಿಂಗ್ ಸಭೆಗೆ ಮುಖ್ಯಮಂತ್ರಿಗಳು ಹಾಜರಾಗಲೇಬೇಕೆಂಬ ಕಡ್ಡಾಯವಿಲ್ಲ. ರಾಜ್ಯದ ಪರವಾಗಿ ಯಾರನ್ನಾದರೂ ಕಳುಹಿಸಬಹುದು. ಕಂದಾಯ ಸಚಿವ ಕೃಷ್ಣಭೈರೇಗೌಡರು ರಾಜ್ಯ ಸರಕಾರದ ಪರವಾಗಿ ಪ್ರತಿನಿಧಿಸಿದ್ದಾರೆ. ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯವಾಗಿದೆ ಎಂಬುದನ್ನು ಹೇಳಿದ್ದಾರೆ. ಆದರೂ ಕೇಂದ್ರದಿಂದ ನಮಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅಂದು ಬಸವರಾಜ ಬೊಮ್ಮಾಯಿ ಅವರನ್ನು ಜಿಎಸ್ಟಿ ಕೌನ್ಸಿಲಿಂಗ್ ಸಭೆಗೆ ಕಳುಹಿಸಿಕೊಟ್ಟಿದ್ದರು. ಇದರಲ್ಲಿ ಯಾವುದೇ ಪ್ರಮಾದವಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸರಕಾರದ ನಡೆಯನ್ನು ಸಮರ್ಥಿಸಿಕೊಂಡರು.
ಬೆಂಗಳೂರು : ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಸಂಬಂಧ ಕಾಂಗ್ರೆಸ್ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರು ರೂಲಿಂಗ್ ನೀಡುವ ಮೂಲಕ ವಿಧಾನ ಪರಿಷತ್ನಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಕೋಲಾಹಲಕ್ಕೆ ತೆರೆ ಎಳೆದರು. ಶುಕ್ರವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ನಮ್ಮನ್ನು ನಿಂದಿಸಿರುವ ಬಿ.ಕೆ.ಹರಿಪ್ರಸಾದ್ ಕ್ಷಮೆಯಾಚಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಅವರನ್ನು ಸದನದಿಂದ ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಸಭಾಪತಿ ಹೊರಟ್ಟಿ, ಸದನದಲ್ಲಿ ಹಿಂದೆಯೂ ಈ ರೀತಿಯ ಅನೇಕ ಘಟನೆಗಳು ನಡೆದಿದೆ. ಇದು ಹಿರಿಯ ಸದನ. ನಾವೆಲ್ಲ ಒಂದು ಕುಟುಂಬದಂತೆ. ಒಂದು ಮನೆಯಲ್ಲಿ ಎಲ್ಲರೂ ಒಂದೇ ರೀತಿಯ ಇರಲು ಸಾಧ್ಯವಿಲ್ಲ. ತಪ್ಪುಗಳನ್ನು ತಿದ್ದಿಕೊಂಡು ಮುಂದೆ ನಡೆಯಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಇದರ ಬಗ್ಗೆ ಸರಕಾರ ವಿಷಾದ ವ್ಯಕ್ತಪಡಿಸಿದೆ. ಈ ಬಗ್ಗೆ ಇನ್ನು ಯಾರೂ ಮಾತನಾಡಬಾರದು ಎಂದು ರೂಲಿಂಗ್ ನೀಡಿದರು. ಆಗ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸದನದ ಸಮಯವನ್ನು ಹಾಳು ಮಾಡಬೇಕೆಂಬ ಉದ್ದೇಶ ನಮಗಿಲ್ಲ. ಕಲಾಪವು ಸುಗಮವಾಗಿ ನಡೆಯಲಿ ಎಂಬ ಆಶಯ ನಮಗೂ ಇದೆ. ಆದರೆ, ರಾಜ್ಯಪಾಲರ ಕುರಿತು ಸದಸ್ಯರು ಬಳಸಿರುವ ಪದ ಯಾರಿಗೂ ಶೋಭೆ ತರುವುದಿಲ್ಲ. ಸಾರ್ವಜನಿಕ ಜೀವನದಲ್ಲಿರುವವರಿಗೆ ಇದು ಸರಿ ಕಾಣುತ್ತದೆಯೇ? ಎಂದು ಪ್ರಶ್ನಿಸಿದರು. ಈ ವೇಳೆ ಬಿಜೆಪಿ ಹಿರಿಯ ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ, ಹಿಂದೆ ಆರ್.ಗುಂಡೂರಾವ್ ಅವರು ಮುಖ್ಯಮಂತ್ರಿಯಾಗಿದ್ದಾಗ ದೇವರಾಜ ಅರಸು ಪ್ರತಿಪಕ್ಷದ ನಾಯಕರಾಗಿದ್ದರು. ಆಗ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಬಳಸಿದ ಪದವೊಂದಕ್ಕೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಪಕ್ಷಾತೀತವಾಗಿ ಖಂಡಿಸಿದರು. ಇದರಿಂದ ಇಬ್ರಾಹಿಂ ಸದನದಿಂದ ಎದ್ದು ದಿಢೀರನೆ ಹೊರ ನಡೆದಿದ್ದರು ಎಂದು ನೆನಪಿಸಿಕೊಂಡರು. ಸದನದಲ್ಲಿ ಘಟನೆ ನಡೆದುಹೋಗಿದೆ. ಮಾತಿನ ಭರದಲ್ಲಿ ಶಬ್ದಗಳು ಬಂದಿವೆ. ಅದನ್ನು ಮುಂದುವರೆಸುವ ಅಗತ್ಯವಿಲ್ಲ ಎಂದು ಸಲಹೆಕೊಟ್ಟರು. ಅಂತಿಮವಾಗಿ ಸಭಾಪತಿ ಹೊರಟ್ಟಿ ಮಾತನಾಡಿ, ಸುದ್ದಿ ಮಾಧ್ಯಮಗಳಲ್ಲಿ ನಮ್ಮ ಬಗ್ಗೆ ಏನು ಬರುತ್ತಿದೆ ಎಂಬುದನ್ನು ಎಲ್ಲರೂ ಗಮನಿಸಿ, ಸದನ ಸರಿಯಾಗಿ ನಡೆಯಬೇಕು. ಇನ್ನು ಮುಂದೆ ಸದನದಲ್ಲಿ ಯಾರಾದರೂ ನಿಯಮಬಾಹಿರವಾಗಿ ನಡೆದುಕೊಂಡರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿ, ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಬಗ್ಗೆ ಚರ್ಚೆಗೆ ಸದಸ್ಯರಿಗೆ ಅವಕಾಶ ಕಲ್ಪಿಸಿದರು.
ಯಾದಗಿರಿ | ಲುಂಬಿನಿ ಉದ್ಯಾನವನದಲ್ಲಿ 101 ಅಡಿ ಎತ್ತರದ ಬುದ್ಧ ಮೂರ್ತಿ ಸ್ಥಾಪನೆಗೆ ಮನವಿ
ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಬೀದರ್ | ಪಂಚ ಜಗದ್ಗುರುಗಳು ಸುಳ್ಳು ಇತಿಹಾಸ ಸೃಷ್ಠಿಸಿ ಬಸವಣ್ಣನವರನ್ನು ನಿರ್ಲಕ್ಷಿಸಿದ್ದರು : ಡಾ.ಬಸವರಾಜ್ ಸಬರದ್
24ನೇ ವಚನ ವಿಜಯೋತ್ಸವ ಕಾರ್ಯಕ್ರಮ
Channarayapatna | ಬೈಕ್ಗೆ ಬಸ್ ಢಿಕ್ಕಿ; ಹೆಡ್ ಕಾನ್ಸ್ಟೇಬಲ್ ಮೃತ್ಯು
ಹಾಸನ : ಊಟಕ್ಕೆ ಮನೆಗೆ ತೆರಳುತ್ತಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಅವರ ಬೈಕ್ಗೆ ನಗರ ಸಾರಿಗೆ ಬಸ್ ಢಿಕ್ಕಿಯಾಗಿ, ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತರನ್ನು ಬೀರಲಿಂಗ (41) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಧ್ಯಾಹ್ನ ಊಟಕ್ಕಾಗಿ ಪೊಲೀಸ್ ಕ್ವಾಟರ್ಸ್ನಲ್ಲಿರುವ ತಮ್ಮ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಕ್ವಾಟರ್ಸ್ಗೆ ತಿರುವು ತೆಗೆದುಕೊಳ್ಳುವ ವೇಳೆ ನಗರ ಸಾರಿಗೆ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಬೀರಲಿಂಗ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ | ಫೆ.1ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ.1ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕುರಿಕೋಟ ಹಾಗೂ ತಾಜ್ ಸುಲ್ತಾನಪುರ ಶ್ರೀನಿವಾಸ ಸರಡಗಿಯ ಶ್ರೀ ಷ.ಬ್ರ.ಡಾ.ರೇವಣಸಿದ್ಧ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಖನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರಾದ ಶಶೀಲ ಜಿ.ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ಕಲಬುರಗಿ ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷರಾದ ರವಿಕುಮಾರ ಶಹಾಪೂರಕರ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಕಲಬುರಗಿ ಪಿ.ಡಿ.ಎ. ಇಂಜನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಸಂಜಯ ಮಾಕಲ್ ಅವರು ಅವರು ವಿಶೇಷ ಉಪನ್ಯಾಸ ನೀಡುವರು.
ಸೇಡಂನಲ್ಲಿ ರಮಾಬಾಯಿ ಅಂಬೇಡ್ಕರ್ 128ನೇ ಜಯಂತ್ಯೋತ್ಸವ : ವಿಲಾಸ್ ಗೌತಮ
‘ಚಾಂಡಾಲಿನಿ, ರಮಾಬಾಯಿ ಅಂಬೇಡ್ಕರ್ ನಾಟಕ ಪ್ರದರ್ಶನ
ಗಣರಾಜ್ಯೋತ್ಸವ: ಮುಸ್ಲಿಮ್ ಒಕ್ಕೂಟದಿಂದ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ, ಜ.30: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಗಂಗೊಳ್ಳಿಯ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಅಧ್ಯಕ್ಷ ಎಸ್.ದಸ್ತಗೀರ್ ಕಂಡ್ಲೂರು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಸಾಹಿತಿಗಳು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮುಷ್ತಾಕ್ ಹೆನ್ನಾಬೈಲ್, ಭಾರತದ ಸಂವಿಧಾನ - ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಶಾಲೆಯ ಗೌರವಾಧ್ಯಕ್ಷ ಮೌಲಾನಾ ಇಬ್ರಾಹಿಂ ಗಂಗೊಳ್ಳಿ ಹಾಗೂ ಶಾಲೆಯ ಅಧ್ಯಕ್ಷ ಮುಜಾಹಿದ್ ನಾಖುದಾ ಗಂಗೊಳ್ಳಿ ಮಾತನಾಡಿದರು. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪ್ರತಿಜ್ಞೆ ಬೋಧಿಸಿದರು. ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಶಾಲೆಯ ವಿದ್ಯಾರ್ಥಿನಿಯನ್ನು ಗೌರವಿಸಲಾಯಿತು. ಜಿಲ್ಲಾ ಹಿರಿಯ ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಿಲ್ಲಾ ಕಾರ್ಯದರ್ಶಿ ಝಫ್ರುಲ್ಲಾ ಹೊಡೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿ, ತಾಲೂಕು ಕಾರ್ಯದರ್ಶಿ ರಿಯಾಝ್ ಕೋಡಿ, ಜಿಲ್ಲಾ ಸಮಿತಿ ಸದಸ್ಯರಾದ ಮುಜಾವರ್ ಅಬು ಮೊಹಮ್ಮದ್ ಕುಂದಾಪುರ, ರೆಹಾನ್ ತ್ರಾಸಿ, ಮುನೀರ್ ಕಂಡ್ಲೂರು, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಝ್, ಶಾಲೆಯ ಪದಾಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಲೀನಕ್ಕೆ NCP ಬಣಗಳ ಸಿದ್ಧತೆ; ಅಜಿತ್ ಪವಾರ್ ನಿಧನದಿಂದ ಪ್ರಕ್ರಿಯೆ ಮುಂದುವರಿಕೆ
ʼಮಹಾಯುತಿ ಸರ್ಕಾರʼ ಸೇರಲಿರುವ ಶರದ್ ಬಣ?

21 C