SENSEX
NIFTY
GOLD
USD/INR

Weather

25    C
...

ಧಾರವಾಡ ಪೇಡಕ್ಕೆ ಸ್ವಾದ ತಂದ ಧನಗಾರ್ ಗೌಳಿಗಳು

ಸರಕಾರದ ಅರಿವಿಗೇ ಭಾರದಿರುವ ಧನಗಾರ್ ಗೌಳಿಗಳು ಸರಕಾರದಿಂದ ಮೂರು ಕಾಸಿನ ಪ್ರಯೋಜನ ಪಡೆದಿಲ್ಲ! ಇವರಿಗೆ ಶಾಲೆಯ ಮುಖವನ್ನೇ ಸರಕಾರ ತೋರಿಸಿಲ್ಲ ಎಂದ ಮೇಲೆ ಇನ್ನು ಸರಕಾರದ ಸವಲತ್ತು, ಅನುದಾನ, ಸಾಲಸೋಲ, ಉದ್ಯೋಗಗಳು ಎಲ್ಲಿಂದ ಬರಬೇಕು? ಧಾರವಾಡದ ಪೇಡ ಎಲ್ಲರಿಗೂ ಗೊತ್ತು ಆದರೆ ಆ ಪೇಡ ಮಾಡಲು ಬಳಸುವ ಹಾಲು ‘ಧನಗಾರ್ ಗೌಳಿ’ಗಳದು ಎಂಬುದು ಯಾರಿಗೂ ಗೊತ್ತಿಲ್ಲ! ಧನಗಾರ್ ಗೌಳಿಗಳ ಸಮುದಾಯ ಧಾರವಾಡ, ಕಾರವಾರ, ಬೆಳಗಾವಿಯ ಕಾಡಂಚಲ್ಲಿ ಜೀವಿಸುತ್ತಿದ್ದು, ಅವರ ಎಮ್ಮೆಗಳು ಕಾಡಿನ ಒಂದು ನಿರ್ದಿಷ್ಟ ಪ್ರದೇಶದಲ್ಲಿ ಮೇಯ್ದು ಧನಗಾರ್ ಗೌಳಿಗಳಿಗೆ ಹಾಲು ನೀಡುವುದರಿಂದ ಆ ಹಾಲಿಗೆ ಒಂದು ವಿಶೇಷವಾದ ಸ್ವಾದ ಇರುತ್ತದೆ, ಆ ಹಾಲಿನಲ್ಲಿ ತಯಾರಿಸಿದ ಪೇಡಕ್ಕೂ ಈ ಸ್ವಾದ ಬಂದು ಧಾರವಾಡದ ಪೇಡ ವಿಶೇಷ ರುಚಿಯಿಂದ ಕೂಡಿರುತ್ತದೆ ಎಂಬುದು ಧನಗಾರ್ ಗೌಳಿಗಳ ಕುರಿತು ಅಧ್ಯಯನ ಮಾಡಿರುವ ಅನೇಕರ ಅಭಿಪ್ರಾಯ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನಾಗಿದ್ದ ನನ್ನ ಅವಧಿ ಮುಗಿಯುತ್ತಿತ್ತು, ಸರಕಾರವನ್ನು ವಿರೋಧ ಮಾಡಿಕೊಂಡು, ಎಲ್ಲಾ ರೀತಿಯ ಅಸಹಕಾರವನ್ನು ಅನುಭವಿಸಿ, ಕಡೆಗೆ ಎಷ್ಟಾದರೂ ನೋವು ಅನುಭವಿಸಿ ವರದಿ ಕೊಟ್ಟೇ ಹೋಗುವ ಧಾವಂತದಲ್ಲಿದ್ದೆ. ಈ ಸಂದರ್ಭದಲ್ಲಿ ಪ್ರೊ. ಕೆ.ಎಂ. ಮೇತ್ರಿ ಅವರು ಧನಗಾರ್ ಗೌಳಿಗಳ ದೊಡ್ಡ ಗುಂಪನ್ನು ಆಯೋಗದ ಕಚೇರಿಗೆ ಕರೆತಂದರು. ದೊಡ್ಡ ದೊಡ್ಡ ವಿವಿಧ ಬಣ್ಣಗಳ ಪೇಟಾಗಳನ್ನು ಕಟ್ಟಿಕೊಂಡು ಕಚ್ಚೆ ಹಾಕಿದ್ದ ಪಂಚೆ ಉಟ್ಟು ಉತ್ತರ ಕನ್ನಡದಿಂದ ಬಂದ ಧನಗಾರ್ ಗೌಳಿಗಳು ನನ್ನ ಮುಂದೆ ಕುಳಿತಿದ್ದರು. ಆಯೋಗದ ಕಟ್ಟಕಡೆಯ ಸಾರ್ವಜನಿಕ ವಿಚಾರಣೆಯಲ್ಲಿ ಧನಗಾರ್ ಗೌಳಿಗಳ ಪ್ರಕರಣವನ್ನು ಕೇಳಿಸಿಕೊಳ್ಳಲು ತಯಾರಾಗಿದ್ದೆವು. ಧನಗಾರ್ ಗೌಳಿಗಳ ಪ್ರತಿನಿಧಿಯಾಗಿ ಜಾನಪ್ಪ ಬಿನ್ ಭೈರು ಎಂಬವರು ಬಂದಿದ್ದರು. ಇವರಿಗೆ ಕನ್ನಡ, ಇಂಗ್ಲಿಷ್ ಬರುತ್ತಿರಲಿಲ್ಲ, ಇವರೊಂದಿಗೆ ಜೂಲಿಯಾನ ಎಂಬ ಸಿದ್ದಿ ಸಮುದಾಯದ ಹೆಣ್ಣುಮಗಳು ಧನಗಾರ್ ಗೌಳಿಗಳಿಗೆ ಧ್ವನಿಯಾಗಿ ಬಂದು ಧನಗಾರ್ ಗೌಳಿಗಳ ಜೀವನಕ್ರಮ, ಅವರ ಹಿಂದುಳಿದಿರುವಿಕೆ ಕಾರಣಗಳೇ ಮುಂತಾದ ವಿಷಯಗಳನ್ನು ಆಯೋಗದ ಮುಂದೆ ಮಂಡಿಸಿದರು. ಹಿಂದುಳಿದ ವರ್ಗದ ಪಟ್ಟಿಯ ಪ್ರವರ್ಗ-1 ರಲ್ಲಿ ಕ್ರಮಸಂಖ್ಯೆ ಗೊಲ್ಲ ಜನಾಂಗದ ಪರ್ಯಾಯ ಪದವಾಗಿ ‘ಗೌಳಿ’ ಇದೆ. ಅದೇ ರೀತಿ ಪ್ರವರ್ಗ 2(ಎ)ರಲ್ಲಿನ ಕ್ರಮ ಸಂಖ್ಯೆ 7ರ ಕುರುಬ ಜನಾಂಗದ ಪರ್ಯಾಯ ಪದವಾಗಿ ‘ಧನಗಾರ್’ ಎಂಬ ಹೆಸರಿದೆ. ಆದರೆ ಧನಗಾರ್ ಮತ್ತು ಗೌಳಿ ಎರಡನ್ನೂ ಸೇರಿಸಿದಂತೆ ‘ಧನಗಾರ್ ಗೌಳಿ’ ಎಂಬ ಹೆಸರು ಜಾತಿ ಪಟ್ಟಿಯ ಯಾವ ಪ್ರವರ್ಗದಲ್ಲೂ ಇಲ್ಲ. ಹೀಗಾಗಿ ಈ ಸಮುದಾಯ ತನ್ನ ಅಸ್ಮಿತೆ(identity)ಗಾಗಿ ಪರದಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಮಾನಾಯಿ, ಹಳಿಯಾಳ, ಕಳಕಿವಾಡ ಮುಂತಾದೆಡೆ ಈ ಸಮುದಾಯ ವಾಸಿಸುತ್ತದೆ. ಆಯೋಗ ಕಾರವಾರದ ಜಿಲ್ಲೆಯ ಹಳಿಯಾಳ ತಾಲೂಕಿನ ಕಳಕಿವಾಡಕ್ಕೆ ಭೇಟಿ ನೀಡಿದಾಗ, ಹುಲ್ಲಿನಿಂದ ಛಾವಣಿ ಹಾಕಿ ಬಿದಿರಿನ ತಡಿಕೆ ಎಣೆದು ಗೋಡೆಯಂತೆ ಬಳಸಲಾದ ಮನೆಗಳಿಗೆ ಬಾಗಿಲೇ ಇರಲಿಲ್ಲ! ಎಂಟರಿಂದ ಹತ್ತು ಅಡಿ ವಿಸ್ತಾರದಲ್ಲಿ ಈ ಮನೆಗಳೆಂಬ ಗುಡಿಸಲುಗಳನ್ನು ಹಾಕಿಕೊಂಡಿದ್ದಾರೆ. ಈ ಗುಡಿಸಲ ಮುಂದೆ ಎಮ್ಮೆಗಳು ಕೂಡಿಕೊಳ್ಳುವ ಒಂದು ಸಣ್ಣ ಜಾಗವಿದೆ. ಇಲ್ಲಿ ಎಮ್ಮೆಗಳನ್ನು ಕಟ್ಟಿಹಾಕುವುದಿಲ್ಲ. ಅವು ದಿನವೆಲ್ಲ ಕಾಡಲ್ಲಿ ಮೇಯ್ದು ಸಂಜೆ ಬಂದು ಧನಗಾರ್ ಗೌಳಿಗಳಿಗೆ ಹಾಲು ಕೊಟ್ಟು ರಾತ್ರಿಯಿಡೀ ಧನಗಾರ್ ಗೌಳಿಗಳ ಗುಡಿಸಲುಗಳ ಮುಂದೆಯೇ ಇದ್ದು, ಮುಂಜಾನೆ ಕಾಡಿಗೆ ಹೋಗುತ್ತವೆ! ಧನಗಾರ್ ಗೌಳಿಗಳು ಈ ಎಮ್ಮೆಗಳ ಹಾಲು ಮಾರಿ ಜೀವನ ಸಾಗಿಸುತ್ತಾರೆ. ಮನುಷ್ಯ ಪ್ರಾಣಿಗಳ ನಡುವಿನ ಬಾಂಧವ್ಯಕ್ಕೆ ಇದು ಅತ್ಯುತ್ತಮ ಉದಾಹರಣೆ. ಇವರ ಗುಡಿಸಲುಗಳಲ್ಲಿ ಹಾಲು, ಮೊಸರು, ಬೆಣ್ಣೆ ಇಡಲಿಕ್ಕೆ ‘ಸಿಖಾ’(ನಲ್ಲಿ) ಮಾಡಿ ಬೊಂಬಿಗೆ ಮೇಲಿಂದ ಕೆಳಕ್ಕೆ ನೇತು ಹಾಕಿರುತ್ತಾರೆ. ನಾಯಿ, ಬೆಕ್ಕುಗಳಿಂದ ರಕ್ಷಿಸಲು ಈ ರೀತಿ ಮಾಡಿರುತ್ತಾರೆ. ಇವರ ಗುಡಿಸಲ ಸುತ್ತಲೂ ಬೇಟಿ, ರೋಜಾ, ನಂದಿ, ತೇಗಾ, ಮತ್ತಿ, ಹೊನ್ನೆ, ಕೊಳೆಮತ್ತಿ, ಬಿಳಿಮತ್ತಿ, ಎದ್ದಾಲೆ, ಕಿಂದಲ್ ಮುಂತಾದ ಬೆಲೆಬಾಳುವ ದಟ್ಟವಾದ ಕಾಡಿರುತ್ತದೆ. ಇವೆಲ್ಲಾ ಕಾಡಿನ ಸ್ವತ್ತಾಗಿರುವುದರಿಂದ ಧನಗಾರ್ ಗೌಳಿಗಳು ಈ ಬೆಲೆಬಾಳುವ ಮರಗಳನ್ನು ರಕ್ಷಿಸುತ್ತಾರೆಯೇ ಹೊರತು ಎಂದೂ ಕಡಿಯುವುದಿಲ್ಲ. ಇದು ಇವರು ತಮಗೆ ನೆಲೆ ಕೊಟ್ಟ ಕಾಡಿಗೆ ತೋರುವ ನಿಯತ್ತು. ಸರಕಾರದ ಅರಿವಿಗೇ ಭಾರದಿರುವ ಧನಗಾರ್ ಗೌಳಿಗಳು ಸರಕಾರದಿಂದ ಮೂರು ಕಾಸಿನ ಪ್ರಯೋಜನ ಪಡೆದಿಲ್ಲ! ಇವರಿಗೆ ಶಾಲೆಯ ಮುಖವನ್ನೇ ಸರಕಾರ ತೋರಿಸಿಲ್ಲ! ಎಂದ ಮೇಲೆ ಇನ್ನು ಸರಕಾರದ ಸವಲತ್ತು, ಅನುದಾನ, ಸಾಲಸೋಲ, ಉದ್ಯೋಗಗಳು ಎಲ್ಲಿಂದ ಬರಬೇಕು? ಕರ್ನಾಟಕದ ಧಾರವಾಡ, ಬೆಳಗಾವಿ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧನಗಾರ್ ಗೌಳಿಗಳು ಕಾಣಿಸಿಕೊಳ್ಳುತ್ತಾರೆ. ಇವರ ಪೂರ್ವಜರು ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದ ನೂರಾರು ವರ್ಷಗಳ ಹಿಂದೆ ಅಲೆಮಾರಿಗಳಾಗಿ ಬಂದವರು. ಪಶುಪಾಲನೆ ಇವರ ಕುಲಕಸುಬು, ಪಶುಗಳ ಮೇವು ಮತ್ತು ನೀರು ಸಿಗುವ ಕಡೆ ಅಲೆಮಾರಿಗಳಾಗಿ ಹೋಗುತ್ತಾ ಬದುಕು ಸಾಗಿಸಿದವರು. ಮುಂಬೈ ಗೆಜೆಟಿಯರ್ ನಲ್ಲಿ ಇವರ ಸಮುದಾಯದ ದಾಖಲೆಯಿದ್ದು ‘ಇವರು ಕಾನಡಾ ಜಿಲ್ಲೆ ಯಲ್ಲಾಪುರ ಅಡವಿಯಲ್ಲಿ ಇರುತ್ತಾರೆ’ ಎಂದು ದಾಖಲಿಸಿದ್ದಾರೆ. ಧನಗಾರ ಗೌಳಿಯರು ಪ್ರಧಾನವಾಗಿ ವಿಠೋಬನನ್ನು ತಮ್ಮ ಕುಲದೈವವಾಗಿ ಆರಾಧಿಸುತ್ತಾರೆ. ಛತ್ರಪತಿ ಶಿವಾಜಿಯ ಮೂಲ ಧನಗಾರ ಗೌಳಿಗಳಲ್ಲಿದೆ ಎಂದು ಕೆಲ ಸಂಶೋಧಕರು ಅಭಿಪ್ರಾಯ ಪಡುತ್ತಾರೆ. ಎಮ್ಮೆಗಳೇ ಇವರಿಗೆ ಅನ್ನದಾತ ದೈವಗಳು. ‘‘ಎಮ್ಮೆಗಳ ನಾಡನ್ನು ಮೈಸೂರು ರಾಜ್ಯ, ದನಗಳ ನಾಡನ್ನು ಮಹಾರಾಷ್ಟ್ರ ರಾಜ್ಯ..’’ ಎಂದು ಕರೆಯುವುದರೊಂದಿಗೆ ತಮ್ಮ ಮೂಲಸ್ಥಾನ ಕರ್ನಾಟಕವೇ ಎಂದು ತಮ್ಮ ನೆಲೆಯನ್ನು ಧನಗಾರ್ ಗೌಳಿಗಳು ಸಮರ್ಥಿಸಿಕೊಳ್ಳುತ್ತಾರೆ. ಧಾರವಾಡ, ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿರುವ ಗೌಳಿಗಳು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಮಾಗವಾಡಿ, ಕುಮ್ಮಾಕಾನ ಹಟ್ಟಿ, ಜತಗಾ ಗೌಳಿವಾಡ, ರಹೀಮನ್ ಶೇತ್, ತಟ್ಟಿಗೇರಾ, ಅಡಿಕೆ ಹೊಸೂರು, ಬಸ್ಸೊಳ್ಳಿ ಉತ್ತಾರ, ಭಿಮಾಹಳ್ಳಿ, ಭಾಗವತಿ ಮುಂತಾಗಿ ಐವತ್ತಕ್ಕಿಂತಲೂ ಹೆಚ್ಚು ಗ್ರಾಮಗಳಲ್ಲಿ ಇದ್ದಾರೆ. ಇವರಲ್ಲಿ ಯಡಗೆ, ಲಾಂಬೋರೆ, ಪಿಂಗಳ, ಬರಾಗಡೆ, ಕೊಳಕರ ಮುಂತಾಗಿ ಸುಮಾರು ಮೂವತ್ತಕ್ಕಿಂತಲೂ ಹೆಚ್ಚು ಬೆಡಗುಗಳಿವೆ. ಈ ಎಲ್ಲದರ ಕುರಿತು ನಮ್ಮ ಆಯೋಗ ವಿಸ್ತೃತವಾಗಿ ಅಧ್ಯಯನ ಮಾಡಿ. ಧನಗಾರರು ಗೌಳಿಗಳು ಮೂಲತಃ ಕುರುಬರ ಉಪಪಂಗಡದವರೂ ಅಲ್ಲ, ಗೊಲ್ಲರ ಉಪಪಂಗಡದವರೂ ಅಲ್ಲ, ಇವರಿಗೆ ತಮ್ಮದೇ ಆದ ವಿಶಿಷ್ಟವಾದ ಅಸ್ಮಿತೆ ಇದೆ ಎಂದು ಸುದೀರ್ಘ ವರದಿ ನೀಡಿ ಈ ಸಮುದಾಯವನ್ನು ಅತಿಹಿಂದುಳಿದ (most backward) ಪಟ್ಟಿಗೆ ಸೇರಿಸಬೇಕೆಂದು ನಮ್ಮ ಆಯೋಗ 2010ರಲ್ಲೇ ಸರಕಾರಕ್ಕೆ ಸಲಹೆ ನೀಡಿದೆ. ದುರಂತವೆಂದರೆ ಯಾವುದೇ ಸರಕಾರ ಇದನ್ನು ತೆರೆದು ಕೂಡ ನೋಡಿಲ್ಲ. ಇನ್ನೂ ವಿಪರ್ಯಾಸವೆಂದರೆ ಸಾಮಾಜಿಕ ನ್ಯಾಯ ಮತ್ತು ಅಹಿಂದ ಎಂಬ ಶಬ್ದಗಳನ್ನು ತಮ್ಮ ಕನಸಿನಲ್ಲೂ ಪಠಿಸುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಈ ನಾಡಿಗೆ ಬಂದರೆ ಇಂತಹ ಸಣ್ಣಸಣ್ಣ ಸಮುದಾಯಗಳ ಉದ್ಧಾರವಾಗುತ್ತವೆ ಎಂದು ಸಿದ್ದರಾಮಯ್ಯನವರ ಭಾಷಣಗಳನ್ನು ಕೇಳಿಸಿಕೊಂಡಿದ್ದ ಇಂತಹ ಸಮುದಾಯಗಳು ಬಲವಾಗಿ ನಂಬಿದ್ದವು. ಆದರೆ ‘ಹಿಂದುಳಿದ ಸಮುದಾಯಗಳ ನಾಯಕ’ ಸಿದ್ದರಾಮಯ್ಯನವರು ಹಿಂದಿನ ಯಾವುದೇ ಆಯೋಗದ ವರದಿಗಳನ್ನು ಮುಟ್ಟಿಕೂಡ ನೋಡಲಿಲ್ಲ. ಇಂತಹ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಕುರಿತು ಕನಿಷ್ಠ ಕಾಳಜಿ ತೋರಲಿಲ್ಲ! ಬದಲಿಗೆ ಇಂತಹ ಅಲೆಮಾರಿ ಸಮುದಾಯಗಳಿಗೆ ಇದ್ದ ಒಂದು ಪರ್ಸೆಂಟ್ ಮೀಸಲಾತಿಯನ್ನೂ ಕಸಿದುಕೊಂಡು ಇಂತಹ ಕಡುಬಡವ, ನಿರ್ಗತಿಕ, ತಬ್ಬಲಿ ಸಮುದಾಯಗಳಿಗೆ ಚಾರಿತ್ರಿಕ ದ್ರೋಹ ಬಗೆದರು. ಇಂತಹ ಅಸಹಾಯಕ ಸಮುದಾಯಗಳಿಗೆ ಕನಿಷ್ಠ ಅಸ್ಮಿತೆ, ಅಸ್ತಿತ್ವ ನೀಡಲು ದೇವರಾಜ ಅರಸು ರಂತಹ ಪುಣ್ಯಾತ್ಮರು ಮತ್ತೆ ಹುಟ್ಟಿ ಬರಬೇಕಷ್ಟೇ.

ವಾರ್ತಾ ಭಾರತಿ 11 Mar 2026 10:10 am

ಗ್ಯಾಸ್ ಬೇಕಾ.. ಗ್ಯಾಸ್, ಓನ್ಲಿ 3 ಸಾವಿರ : ಕಾಳಸಂತೆಯಲ್ಲಿ LPG ಮಾರಾಟ - ಕಂಗೆಟ್ಟ ಹೋಟೆಲ್ ಮಾಲೀಕರು

LPG Shortage in Bengaluru : ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಿಸಿ, ದಿನದಿಂದ ದಿನಕ್ಕೆ ಮನೆಬಾಗಿಲಿಗೆ ತಟ್ಟುತ್ತಿದೆ. ವಾಣಿಜ್ಯ ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು ಹೆಚ್ಚಿಸಿದ ನಂತರ, ಏಕಾಏಕಿ, ಸಿಲಿಂಡರ್ ಅಭಾವ ಎದುರಾಗಿದೆ. ಪ್ರಮುಖವಾಗಿ, ವಾಣಿಜ್ಯ ಬಳಕೆಯ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿರುವುದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತವನ್ನು ನೀಡುತ್ತಿದೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಕಾಳಸಂತೆ ಮಾರಾಟಗಾರರು ದುಪ್ಪಟ್ಟು ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ.

ವಿಜಯ ಕರ್ನಾಟಕ 11 Mar 2026 9:48 am

ಭಾರತಕ್ಕೆ ಬಂಪರ್, ರಷ್ಯಾ ಮೂಲಕ 30 ಮಿಲಿಯನ್ ಬ್ಯಾರಲ್ ತೈಲ ಖರೀದಿ | Operation Roaring Lion

ಇರಾನ್ ಮೇಲೆ ಮುಗಿಬಿದ್ದು ದಾಳಿ ಮಾಡುತ್ತಿರುವ ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಭಾರಿ ದೊಡ್ಡ ಹಾನಿ ಮಾಡುತ್ತಿದ್ದು, ನೋಡ ನೋಡುತ್ತಲೇ ಇಬ್ಬರ ನಡುವಿನ ವಾರ್ ಇಡೀ ಜಗತ್ತನ್ನು ಆರ್ಥಿಕವಾಗಿ ಬೀದಿಗೆ ಬೀಳುವಂತೆ ಮಾಡುತ್ತಿದೆ. ಈಗಾಗಲೇ, ಭಾರತ ಸೇರಿದಂತೆ ದೊಡ್ಡ ದೊಡ್ಡ ದೇಶಗಳ ಷೇರು ಮಾರುಕಟ್ಟೆಗಳು ಪರದಾಡಿ ಹೋಗಿದ್ದು ಹೂಡಿಕೆದಾರರಿಗೆ ಭಯ ಶುರುವಾಗಿದೆ. ಇಂತಹ ಸಮಯದಲ್ಲೇ ತೈಲ ಎಂದರೆ

ಒನ್ ಇ೦ಡಿಯ 11 Mar 2026 9:43 am

ಮಾ.12: ಕೆ.ಸಿ.ರೋಡ್ ಜುಮಾ ಮಸೀದಿಯಲ್ಲಿ ದ್ಸಿಕ್ರ್ ಹಲ್ಕಾ ಮಜ್ಲಿಸ್

ಉಳ್ಳಾಲ: ಕೋಟೆಕಾರ್ ಕೆ.ಸಿ.ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ನಲ್ಲಿ ಮಾ.12ರಂದು ರಾತ್ರಿ ತರಾವೀಹ್ ನಮಾಝ್ ಬಳಿಕ ದ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್ ಕೆ.ಪಿ.ಹುಸ್ಸೈನ್ ಸಅದಿ ಕೆ.ಸಿ.ರೋಡ್ ನೇತೃತ್ವದಲ್ಲಿ ಜರುಗಲಿದೆ. ಮುನೀರ್ ಸಖಾಫಿ ಅಲ್ ಫುರ್ಖಾನಿ ಉಪಸ್ಥಿತರಿರುವರು ಎಂದು ಮಸೀದಿ ಕಮಿಟಿ ಪ್ರಕಟನೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 11 Mar 2026 9:31 am

Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ

Gold: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಉತ್ಖನನದಲ್ಲಿ ವಿಜಯನಗರ ಕಾಲದ ಆಭರಣಗಳು, 500-600 ವರ್ಷಗಳಷ್ಟು ಹಳೆಯ ಚಿನ್ನದ ನಾಣ್ಯಗಳು, ಕಲ್ಲಿನ ಮುಕುಟಮಣಿ, ತ್ರಿಮುಖ ನಾಗಶಿಲೆ, ಮತ್ತು ಪುರಾತನ ದೇವಾಲಯಗಳ ಅವಶೇಷಗಳು ಪತ್ತೆ ಆಗಿವೆ. ಇದರ ಮೌಲ್ಯವು ಕೋಟ್ಯಾಂತರ ರೂಪಾಯಿ ಎಂದು ಈಗ ಖಚಿತವಾಗಿದೆ. ಇಲ್ಲಿನ ಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಉತ್ಖನನ ಕಾರ್ಯ ನಡೆದಿತ್ತು.

ಒನ್ ಇ೦ಡಿಯ 11 Mar 2026 9:29 am

ಹಾರ್ಮುಜ್ ಜಲಸಂಧಿಯ ಬಳಿ ಇರಾನ್‌ನ 16 ಯುದ್ಧನೌಕೆಗಳನ್ನು ನಾಶಪಡಿಸಿದ ಅಮೆರಿಕ

ವಿಶ್ವದ ಸುಮಾರು 20% ತೈಲ ಸಾಗಣೆ ನಡೆಯುವ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹಾರ್ಮುಜ್ ಜಲಸಂಧಿ ಸಮೀಪವೇ ಇರಾನ್‌ನ 16 ಮೈನ್‌ಲೇಯರ್‌ ನೌಕೆಗಳನ್ನ ಎಲಿಮಿನೇಟ್ ಮಾಡಿದ್ದಾಗಿ ಅಮೆರಿಕದ ಸೈನ್ಯ ತಿಳಿಸಿದೆ. ಇದರಿಂದ ಯುದ್ಧ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ವಿಜಯ ಕರ್ನಾಟಕ 11 Mar 2026 9:23 am

ಬೆಂಗಳೂರು : ಗ್ರಾಹಕರ ಮೇಲೆ ಬ್ಲಿಂಕಿಟ್ ಡಿಲವರಿ ಏಜೆಂಟ್‌ನಿಂದ ಹಲ್ಲೆ, ಮೂಗು ಮುರಿತ

ಫುಡ್ ಡಿಲವರಿ ವಿಚಾರಕ್ಕೆ ಜಗಳ ಶುರುವಾಗಿ, ಮಾತಿಗೆ ಮಾತು ಬೆಳೆದು, ಡಿಲವರಿ ಏಜೆಂಟ್‌ ಗ್ರಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ 8 ನೇ ಬ್ಲಾಕ್‌ನಲ್ಲಿರುವ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿರುವ ಗ್ರಾಹಕರ ಮೇಲೆ ಬ್ಲಿಂಕಿಟ್ ಡಿಲವರಿ ಏಜೆಂಟ್ ಹಲ್ಲೆ ನಡೆಸಿದ್ದಾನೆ. ಮೂಗು, ತುಟಿಗೆ ಗಾಯಗಳಾಗಿವೆ.

ವಿಜಯ ಕರ್ನಾಟಕ 11 Mar 2026 9:16 am

ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಎರಡು ದಿನಗಳ ಕಾಲ 'ವಿಕಸಿತ ಭಾರತದಲ್ಲಿ ಕಾರ್ಪೊರೇಟ್ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಪಾತ್ರ' ವಿಷಯದ ಕುರಿತು ರಾಷ್ಟೀಯ ಸಮಾವೇಶ ನಡೆಯಿತು. ದೇಶದ ಅಭಿವೃದ್ದಿಯಲ್ಲಿ ಕಾರ್ಪೊರೇಟ್ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಪ್ರಮುಖ ಪಾತ್ರವಹಿಸುತ್ತದೆ ಎಂದು 'ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್' ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಅಭಿಪ್ರಾಯಪಟ್ಟರು. ಸಮಾವೇಶದಲ್ಲಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳನ್ನು ಆಧಾರವಾಗಿರಿಸಿಕೊಂಡು ದೇಶವನ್ನು ವಿಕಸಿತಗೊಳಿಸಬಹುದು

ಒನ್ ಇ೦ಡಿಯ 11 Mar 2026 9:00 am

ನೇತ್ರಾವತಿ ಒಡಲು ಕಲುಷಿತ ; ಮೌನಕ್ಕೆ ಜಾರಿದ ಆಡಳಿತ

ಬಂಟ್ವಾಳ ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರು ಪೂರೈಸಲು ನೀರೆತ್ತುವ ಜಾಗಗಳಲ್ಲೇ ಕೊಳಚೆ ನದಿಗೆ ಸೇರುತ್ತಿದೆ. ವಿಜಯ ಕರ್ನಾಟಕ ಪ್ರತಿನಿಧಿ, ಈ ಕುರಿತು ಪ್ರತ್ಯಕ್ಷ ವರದಿಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಕುಡಿಯುವ ನೀರು ಎಂದೇ ಪರಿಗಣಿಸಲಾದ ಜಕ್ರಿಬೆಟ್ಟು ಡ್ಯಾಂನಲ್ಲಿದ್ದ ನೀರು ಸಂಗ್ರಹದಲ್ಲೇ ಸ್ನಾನ, ಶೌಚಾದಿಗಳನ್ನು ವಲಸೆ ಕಾರ್ಮಿಕರ ತಂಡ ಮಾಡುತ್ತಿದ್ದರೆ, ಅಲ್ಲೇ ಪಕ್ಕದಲ್ಲಿ ಕಾಲುವೆಯಿಂದ ಹೆಪ್ಪುಗಟ್ಟಿದ ಕೊಳಚೆ ನೀರು ಕಾಣಿಸುತ್ತಿತ್ತು.

ವಿಜಯ ಕರ್ನಾಟಕ 11 Mar 2026 8:24 am

Vehicle Loan: ವಾಹನ ಮಾಲೀಕರಿಗೆ ಗುಡ್‌ನ್ಯೂಸ್: ಸಾಲ ಪ್ರಕ್ರಿಯೆ, ಆರ್‌ಸಿ ಅಪ್ಡೇಟ್‌ಗೆ ಇನ್ಮುಂದೆ ಆನ್‌ಲೈನ್ ವ್ಯವಸ್ಥೆ

Vehicle Loan: ವಾಹನಗಳನ್ನು ಸಾಲದ ಮೇಲೆ / ಇಎಂಐ ಮೂಲಕ ಖರೀದಿ ಮಾಡುವ ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ವಾಹನ ಸಾಲ ತೀರಿಸಿದ ನಂತರ ಆರ್‌ಸಿ ಯಿಂದ ಹೈಪೋಥೆಕೇಶನ್ ಎನ್ನುವ ಅಂಶವನ್ನು ತೆಗೆದುಹಾಕುವ ಪ್ರಕ್ರಿಯೆ ಈಗ ಸ್ವಯಂಚಾಲಿತ ಆನ್‌ಲೈನ್ ವ್ಯವಸ್ಥೆಯ ಮೂಲಕ ನಡೆಯಲಿದೆ. ಇದರಿಂದ ವಾಹನದ ಮಾಲೀಕರು ಬ್ಯಾಂಕ್ ಹಾಗೂ ಆರ್‌ಟಿಒ ಕಚೇರಿಗಳಿಗೆ

ಒನ್ ಇ೦ಡಿಯ 11 Mar 2026 8:19 am

ವಿಶ್ವವಿದ್ಯಾನಿಲಯವನ್ನು ಘಟಕವನ್ನಾಗಿ ಪರಿಗಣಿಸಿ ಬೋಧಕ ಸಿಬ್ಬಂದಿ ನೇಮಕಾತಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಅನ್ಯಾಯ ಸಾಧ್ಯತೆ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ವಿಶ್ವವಿದ್ಯಾನಿಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಲಭ್ಯವಾಗುತ್ತಿರುವ ಒಟ್ಟು ಹುದ್ದೆಗಳಲ್ಲಿ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಅಲ್ಲದೇ ಸಾಮಾಜಿಕ ನ್ಯಾಯಕ್ಕೆ ಪೆಟ್ಟು ಬೀಳುತ್ತದೆ ಎಂದು ಡಾ.ಮನಮೋಹನ್ ಸಿಂಗ್ ಬೆಂಗಳೂರು ವಿಶ್ವವಿದ್ಯಾನಿಲಯವು ಸರಕಾರಕ್ಕೆ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ. ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ವಿಷಯವಾರು ಮೀಸಲಾತಿ ಅಥವಾ ವಿಶ್ವವಿದ್ಯಾನಿಲಯ, ಶೈಕ್ಷಣಿಕ ಸಂಸ್ಥೆಗಳನ್ನು ಒಂದು ಘಟಕ ಎಂದು ಪರಿಗಣಿಸಿ ಮೀಸಲಾತಿ ಅನ್ವಯಿಸುವ ಸಂಬಂಧ ಡಾ.ಮನಮೋಹನ್ ಸಿಂಗ್ ಬೆಂಗಳೂರು ವಿವಿ ನೀಡಿರುವ ಅಭಿಪ್ರಾಯದಲ್ಲಿ ಈ ಆತಂಕವನ್ನು ವ್ಯಕ್ತಪಡಿಸಿದೆ. ಮೈಸೂರು, ಕೊಡಗು, ಕರ್ನಾಟಕ ಸಂಸ್ಕೃತ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ, ತುಮಕೂರು ವಿಶ್ವವಿದ್ಯಾನಿಲಯವು ತನ್ನ ಅಭಿಪ್ರಾಯ ನೀಡಿವೆ. ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಕಾರ್ಯದರ್ಶಿಗೆ ಈ ವಿಶ್ವವಿದ್ಯಾನಿಲಯಗಳು 2026ರ ಮಾರ್ಚ್ 2, 3, 4ರಂದು ನೀಡಿರುವ ಅಭಿಪ್ರಾಯಗಳ ಪ್ರತಿಗಳು he-file.inಗೆ ಲಭ್ಯವಾಗಿವೆ. ವಿಶ್ವವಿದ್ಯಾನಿಲಯದ ಬೋಧಕ ಸಿಬ್ಬಂದಿ ನೇಮಕಾತಿಯಲ್ಲಿ ವಿಶ್ವವಿದ್ಯಾನಿಲಯವನ್ನು ಒಂದು ಘಟಕ ಎಂದು ಪರಿಗಣಿಸಿ ಮೀಸಲಾತಿ ಅನ್ವಯಿಸಬೇಕೇ ಅಥವಾ ವಿಷಯವಾರು ಮೀಸಲಾತಿ ಅನ್ವಯಿಸಬೇಕೇ ಎಂಬ ಬಗ್ಗೆ ಸಾಧಕ-ಬಾಧಕಗಳ ಸಲಹೆ, ಶಿಫಾರಸುಗಳನ್ನು ಸಲ್ಲಿಸಲು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ 2026ರ ಫೆ.26ರಂದು ಸಭೆ ನಡೆದಿತ್ತು. ಈ ಸಭೆಯ ನಂತರ ಈ ಸಂಬಂಧ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಾಮರ್ಶಿಸಿ ವಿಶ್ವವಿದ್ಯಾನಿಲಯದ ಸೂಕ್ತವಾದ ಸಲಹೆ, ಶಿಫಾರಸುಗಳನ್ನು ಕೋರಿ ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾನಿಲಯಗಳಿಗೆ ಪತ್ರ ಬರೆದಿತ್ತು. ಮನಮೋಹನ್ ಸಿಂಗ್ ಬೆಂ.ನಗರ ವಿವಿ ಅಭಿಪ್ರಾಯವೇನು?: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ವಿಶ್ವವಿದ್ಯಾನಿಲಯವನ್ನು ಘಟಕವಾಗಿ ಪರಿಗಣಿಸಿದ್ದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗ ಲಭ್ಯವಾಗುತ್ತಿರುವ ಒಟ್ಟು ಹುದ್ದೆಗಳಲ್ಲಿ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದ್ದು ಸಾಮಾಜಿಕ ನ್ಯಾಯಕ್ಕೆ ಪೆಟ್ಟು ಬೀಳುತ್ತದೆ ಎಂದು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯವು ಆತಂಕ ವ್ಯಕ್ತಪಡಿಸಿರುವುದು ಅಭಿಪ್ರಾಯದಿಂದ ಗೊತ್ತಾಗಿದೆ. ಕೊಡಗು ವಿವಿಯ ನಿಲುವಿನಲ್ಲೇನಿದೆ?: ಒಂದು ವಿಶ್ವವಿದ್ಯಾನಿಲಯವನ್ನು ಒಂದು ಘಟಕವಾಗಿ ಪರಿಗಣಿಸಿ ರೋಸ್ಟರ್ ಬಿಂದುಗಳನ್ನು ಅಳವಡಿಸುವ ಅಥವಾ ವಿಷಯವಾರು ರೋಸ್ಟರ್‌ಗಳನ್ನು ಅಳವಡಿಸುವ ಬಗ್ಗೆ ಕೊಡಗು ವಿವಿ ಆಂತರಿಕವಾಗಿ ಚರ್ಚಿಸಿದೆ. ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿನ ಸಭೆಯು ನೀಡಿದ್ದ ಸೂಚನೆಯನ್ನು ಕೊಡಗು ವಿಶ್ವವಿದ್ಯಾಲಯವೂ ಸಮ್ಮತಿಸಿದೆ. ಮೈಸೂರು ವಿವಿಯ ಅಭಿಪ್ರಾಯದಲ್ಲೇನಿದೆ?: ಒಂದು ವಿಶ್ವವಿದ್ಯಾನಿಲಯವನ್ನು ಒಂದು ಘಟಕವಾಗಿ ಪರಿಗಣಿಸುವ ಕುರಿತು ಮೈಸೂರು ವಿವಿಯು ಚರ್ಚಿಸಿದೆ. ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ ಎ, ಪ್ರವರ್ಗ ಬಿ ಮತ್ತು ಪ್ರವರ್ಗ ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಲಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇ.17ರಷ್ಟು ಮೀಸಲಾತಿ, ಪ್ರವರ್ಗ ಎ ರಲ್ಲಿ ಸಮುದಾಯಗಳಿಗೆ ಶೇ.6, ಪ್ರವರ್ಗ ಬಿಯಲ್ಲಿನ ಸಮುದಾಯಗಳಿಗೆ ಶೆ. 6 ಮತ್ತು ಪ್ರವರ್ಗ ಸಿ ಯಲ್ಲಿನ ಸಮುದಾಯಗಳಿಗೆ ಶೇ.5ರಷ್ಟು ಮೀಸಲಾತಿ ನೀಡಿ ಸರಕಾರವು 2025ರ ಆಗಸ್ಟ್ 25ರಲ್ಲಿ ಆದೇಶ ಹೊರಡಿಸಿದೆ ಎಂದು ಸರಕಾರದ ಗಮನ ಸೆಳೆದಿದೆ. ಅದೇ ರೀತಿ 2022ರ ಡಿಸೆಂಬರ್ 28ರಂದು ಹೊರಡಿಸಿರುವ ಸರಕಾರದ ಆದೇಶದ ಅನುಬಂಧದಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಮಾತ್ರ ಅನುಬಂಧದ ಪ್ರಕಾರ ಪುನರ್ ವರ್ಗೀಕರಿಸಿ ಆದೇಶಿಸಿದೆ. ಸರಕಾರದ ಆದೇಶದಂತೆಯೇ ಮೈಸೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರ ವೃಂದದ ಹುದ್ದೆಗಳನ್ನು ವಿಷಯವಾರು ಮೀಸಲಾತಿ ಅನ್ವಯಿಸಿ ಭರ್ತಿ ಮಾಡಬೇಕಾಗುತ್ತದೆ ಎಂದು ತನ್ನ ಅಭಿಪ್ರಾಯದಲ್ಲಿ ವಿವರಿಸಿರುವುದು ಗೊತ್ತಾಗಿದೆ. ಕನ್ನಡ ವಿಭಾಗದಲ್ಲಿ ಪ.ಜಾತಿ, ಪ್ರವರ್ಗ ಎ (ಸಾಮಾನ್ಯ), ಸಾಮಾನ್ಯ ಅಭ್ಯರ್ಥಿ, ಪ.ಪಂಗಡ (ಸಾಮಾನ್ಯ, ಸಾಮಾನ್ಯ ಆಭ್ಯರ್ಥಿ (ಮಹಿಳೆ), ಪ್ರವರ್ಗ 1 (ಸಾಮಾನ್ಯ ಅಭ್ಯರ್ಥಿ), ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಅರ್ಥ ಶಾಸ್ತ್ರ ವಿಭಾಗದಲ್ಲಿಯೂ ಇದೇ ಮಾದರಿ ಅನುಸಾರವೇ ಭರ್ತಿ ಮಾಡಬೇಕು ಎಂದು ವಿವರಿಸಿರುವುದು ಗೊತ್ತಾಗಿದೆ. ಮಹಿಳಾ ವಿವಿ ಅಭಿಪ್ರಾಯವೇನು?: ಸಹ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳ ನೇರ ನೇಮಕಾತಿಯಲ್ಲಿ ಪ್ರಸ್ತುತ ವಿವಿಯನ್ನು ಒಂದು ಘಟಕವಾಗಿ ಪರಿಗಣಿಸಲಾಗುತ್ತಿದೆ. ಇದೇ ನಿಯಮಗಳನ್ನು ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇರ ನೇಮಕಾತಿಯಲ್ಲಿ ಅನುಸರಿಸಬೇಕಾದ ವಿಧಾನಗಳ ಸಾಧಕ ಬಾಧಕಗಳನ್ನು ಸರಕಾರದ ಗಮನ ಸೆಳೆದಿದೆ. ವಿಷಯವಾರು ಮೀಸಲಾತಿ ಅನ್ವಯಿಸುವ ಕುರಿತು ಚರ್ಚಿಸಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಈ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿದೆ ಎಂದು ಹೇಳಿದೆ. ಅಲ್ಲದೇ ಬಾಧಕಗಳ ಕುರಿತು ವಿವಿ ವಿವರಿಸಿದೆ. ಇದರ ಪ್ರಕಾರ 100 ಬಿಂದು ರೋಸ್ಟರ್ ಅನುಸರಿಸಿ ಮೀಸಲಾತಿ ಸೌಕರ್ಯವನ್ನು ನೀಡಲಾಗುತ್ತಿದೆ. ಆದರೆ ಶೈಕ್ಷಣಿಕ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳಲ್ಲಿ ವಿಷಯವಾರು ಎರಡು ಅಥವಾ ಮೂರು ಹುದ್ದೆಗಳು ಮಾತ್ರ ಇವೆ. ಬಿಂದು 1- ಎಸ್‌ಸಿ, ಬಿಂದು 2-ಸಾಮಾನ್ಯ ಹಾಗೂ ಬಿಂದು 3- ಎಸ್‌ಟಿ ಮಾತ್ರ ತುಂಬಲ್ಪಡುವ ಸಾಧ್ಯತೆಗಳೇ ಹೆಚ್ಚಿವೆ. ಹೀಗೆ ಒಮ್ಮೆ ಭರ್ತಿಯಾದ ಹುದ್ದೆಗಳು ಆ ವ್ಯಕ್ತಿ ನಿವೃತ್ತವಾಗುವವರೆಗೂ ಖಾಲಿ ಆಗುವುದಿಲ್ಲ. ಅಂದರೆ ಸುಮಾರು 30ರಿಂದ 33 ವರ್ಷದವರೆಗೆ ರೋಸ್ಟರ್-3 ಅಥವಾ ರೋಸ್ಟರ್ 4ನೇ ಬಿಂದುವನ್ನು ಕಾರ್ಯಗತಗೊಳಿಸುವುದಿಲ್ಲ. ಹೀಗಾಗಿ ರೋಸ್ಟರ್ ಬಿಂದು 100 ತಲುಪಿ ಮೀಸಲಾತಿ ಸೌಲಭ್ಯವು ಎಲ್ಲರಿಗೂ ತಲುಪುವುದು ಅಸಾಧ್ಯ ಎಂದು ವಿವರಿಸಿದೆ. ತುಮಕೂರು ವಿವಿ ಅಭಿಪ್ರಾಯ: ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಮೀಸಲಾತಿ ಬಿಂದು ಅಳವಡಿಸುವ ಮೂಲಕ ವಿಶ್ವವಿದ್ಯಾನಿಲಯವನ್ನು ಒಂದು ಘಟಕವನ್ನಾಗಿ ಪರಿಗಣಿಸಬಹುದು ಎಂದು ತುಮಕೂರು ವಿವಿ ಅಭಿಪ್ರಾಯಿಸಿದೆ. ವಿವಿಯಲ್ಲಿ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹುದ್ದೆಗಳನ್ನು ವೃಂದವಾರು ಒಟ್ಟುಗೂಡಿಸಿ ವಿವಿಯನ್ನು ಒಂದು ಘಟಕವನ್ನಾಗಿ ಪರಿಗಣಿಸಿ ಮೀಸಲಾತಿ ಬಿಂದುಗಳನ್ನು ಗುರುತಿಸಬಹುದು ಎಂದು ವಿವರಿಸಿದೆ. ಪ್ರವರ್ಗಗಳಿಗೆ ನ್ಯಾಯ ಕಷ್ಟಸಾಧ್ಯವೆಂದ ಬೆಂಗಳೂರು ಉತ್ತರ ವಿವಿ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯವು ಸಹ ಒಂದು ವಿಶ್ವವಿದ್ಯಾನಿಲಯವನ್ನು ಒಂದು ಘಟಕವನ್ನಾಗಿ ಪರಿಗಣಿಸಿ ರೋಷ್ಟರ್ ಬಿಂದುಗಳನ್ನು ಅಳವಡಿಸುವ ಅಥವಾ ವಿಷಯವಾರು ರೋಸ್ಟರ್‌ಗಳನ್ನು ಅಳವಡಿಸಲು ಅಭಿಪ್ರಾಯ ನೀಡಿದೆ. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಪ್ರವರ್ಗಗಳಿಗೆ ಮೀಸಲಾತಿ ಅನ್ವಯವಾಗುವಂತೆ ರೋಸ್ಟರ್ ಹೆಚ್ಚಿಸಿ ಖಾಲಿ ಇರುವ ಸಂಬಂಧದಲ್ಲಿ ಎಲ್ಲ ಪ್ರವರ್ಗಗಳಿಗೂ ಮೀಸಲಾತಿ ಜಾರಿಗೊಳಿಸುವ ಸಂಬಂಧ ಯಾವುದೇ ಪ್ರವರ್ಗಕ್ಕೆ ಸೇರಿದ ಅಭ್ಯರ್ಥಿಗಳನ್ನು ಕಡೆಗಣಿಸುವಂತಿಲ್ಲ ಎಂದು ತನ್ನ ಅಭಿಪ್ರಾಯದಲ್ಲಿ ವಿವರಿಸಿದೆ. ವಿಭಾಗವಾರು ಅಧ್ಯಾಪಕರ ಸಂಖ್ಯೆ ಕಡಿಮೆ: ವಿಶ್ವವಿದ್ಯಾನಿಲಯದಲ್ಲಿ ಪ್ರತಿ ವಿಭಾಗಗಳಲ್ಲೂ ಕೇವಲ ಒಂದು ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು ಮಾತ್ರ ಇರುವುದರ ಕುರಿತು ಚರ್ಚೆ ನಡೆಯುತ್ತಿದೆ. ಆದರೆ ವಿಭಾಗವಾರು ಅಧ್ಯಾಪಕರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ರೋಸ್ಟರ್ ಬಿಂದುಗಳನ್ನು ಅಳವಡಿಸಲು ತುಂಬಾ ಕಠಿಣ ಹಾಗೂ ಎಲ್ಲಾ ಪ್ರವರ್ಗಗಳಿಗೂ ನ್ಯಾಯ ದೊರಕಿಸಿಕೊಡುವುದು ಕಷ್ಟ ಸಾಧ್ಯ ಎಂದಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಖಾಲಿ ಇರುವ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದ ಹುದ್ದೆಗಳಿಗೆ ವಿವಿಯನ್ನು ಒಂದ ಘಟಕವನ್ನಾಗಿ ಪರಿಗಣಿಸಿ ಮೀಸಲಾತಿಯನ್ನು ಅಳವಡಿಸುವುದು ಸರಿಯಾದ ಮಾರ್ಗ ಹಾಗೂ ಹೀಗೆ ಮಾಡುವ ಮೂಲಕ ಎಲ್ಲ ವರ್ಗಗಳಿಗೂ ನ್ಯಾಯ ದೊರಕಿಸಿದಂತಾಗುತ್ತದೆ ಎಂದು ವಿವಿಯ ಕುಲಪತಿ ಪ್ರೊ.ಬಿ.ಕೆ ರವಿ ಅವರು ತಮ್ಮ ಅಭಿಪ್ರಾಯವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ವಿವರಿಸಿದ್ದಾರೆ.

ವಾರ್ತಾ ಭಾರತಿ 11 Mar 2026 8:00 am

ಫಕ್ರುದ್ದೀನ್ ಅಲಿ ಅಹ್ಮದ್ ಮೆಡಿಕಲ್ ಕಾಲೇಜು ಹೆಸರು ಬದಲಿಸಿದ ಅಸ್ಸಾಂ ಸರ್ಕಾರ

ಗುವಾಹತಿ: ಅಸ್ಸಾಂನ ಫಕ್ರುದ್ದೀನ್ ಅಲಿ ಅಹ್ಮದ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯನ್ನು ಬರ್ಪೇಟಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಎಂದು ಮರುನಾಮಕರಣ ಮಾಡುವ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿದೆ. ಮಾಜಿ ರಾಷ್ಟ್ರಪತಿಗಳ ಗೌರವಾರ್ಥ ಬರ್ಪೇಟಾದಲ್ಲಿದ್ದ ಕಾಲೇಜಿಗೆ ಅವರ ಹೆಸರನ್ನು ಇಡಲಾಗಿತ್ತು. ಆದರೆ ರಾಜ್ಯದ ಇಂಥ ಸಂಸ್ಥೆಗಳಿಗೆ ಈ ಹೆಸರು ಹೊಂದಿಕೆಯಾಗುವುದಿಲ್ಲ ಎಂಬ ಕಾರಣಕ್ಕೆ ಹೆಸರನ್ನು ಬದಲಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಆರಂಭಿಸಿದ ಎಲ್ಲ 15 ವೈದ್ಯಕೀಯ ವಿಜ್ಞಾನ ಕಾಲೇಜುಗಳಿಗೆ ಆಯಾ ಕಾಲೇಜುಗಳು ಇರುವ ಸ್ಥಳದ ಹೆಸರನ್ನು ಇಡಲಾಗಿದೆ. ಆದರೆ ಬರ್ಪೇಟಾ ಕಾಲೇಜಿಗೆ ಮಾತ್ರ ಫಕ್ರುದ್ದೀನ್ ಅಲಿ ಅಹ್ಮದ್ ಹೆಸರು ಇದೆ. ಇದು ಇತರ ಹೆಸರುಗಳಿಗಿಂತ ಭಿನ್ನವಾಗಿದ್ದು, ಇದು ಖಾಸಗಿ ಕಾಲೇಜೇ ಎಂಬ ಸಂದೇಹದ ಹಲವು ಪ್ರಶ್ನೆಗಳು ಕೇಳಿ ಬರುತ್ತಿದ್ದವು ಎಂದು ಶರ್ಮಾ ಸ್ಪಷ್ಟಪಡಿಸಿದರು. ಆದ್ದರಿಂದ ಸಂಸ್ಥೆಗೆ ಬರ್ಪೇಟಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಆದಾಗ್ಯೂ ಫಕ್ರುದ್ದೀನ್ ಅಲಿ ಅಹ್ಮದ್ ಅವರು ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ರಾಜ್ಯದ ಏಕೈಕ ನಾಯಕರಾಗಿರುವ ಹಿನ್ನೆಲೆಯಲ್ಲಿ, ಇನ್ನೊಂದು ಶೈಕ್ಷಣಿಕ ಅಥವಾ ಸಾಂಸ್ಕೃತಿಕ ಸಂಸ್ಥೆಗೆ ಅವರ ಹೆಸರನ್ನು ಇಡಲಾಗುವುದು. ಈ ಸಂಬಂಧ ನಂತರದ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಬರ್ಪೇಟಾದಲ್ಲಿ 2011ರಲ್ಲಿ ಆರಂಭವಾದ ಎಫ್ಎಎಎಂಸಿಎಚ್ (ಫಕ್ರುದ್ದೀನ್ ಅಲಿ ಅಹ್ಮದ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ) ರಾಜ್ಯದ ಐದನೇ ವೈದ್ಯಕೀಯ ವಿಜ್ಞಾನ ಕಾಲೇಜು ಆಗಿದ್ದು, ಪದವಿ ಹಾಗೂ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್ ಗಳನ್ನು ನೀಡುತ್ತಿದೆ. 500 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು ಹೊಂದಿದ್ದು, ಎಂಬಿಬಿಎಸ್ ಕೋರ್ಸ್ ಗೆ 125 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ. ಫಕ್ರುದ್ದೀನ್ ಅಲಿ ಅಹ್ಮದ್ ಅವರು ಭಾರತದ ಐದನೇ ರಾಷ್ಟ್ರಪತಿಗಳಾಗಿದ್ದು, 1974ರಿಂದ 77ರ ವರೆಗೆ ದೇಶದ ಅತ್ಯುನ್ನತ ಹುದ್ದೆಯಲ್ಲಿದ್ದರು. ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರ ಸಲಹೆಯಂತೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು.

ವಾರ್ತಾ ಭಾರತಿ 11 Mar 2026 7:45 am

ಮನೆ ಬಾಗಿಲಿಗೇ ಇ-ಖಾತೆ ; ಮಾರ್ಚ್ 13 ರಿಂದ ಮೆಗಾ ಅಭಿಯಾನ ಶುರು

ನಾಗರಿಕರಿಗೆ ಸುಲಭವಾಗಿ ಸೇವೆ ತಲುಪಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಇ-ಖಾತಾ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ಈ ಯೋಜನೆಯಡಿ ಪಾಲಿಕೆಯ ಸಿಬ್ಬಂದಿ ಮತ್ತು ತಾಂತ್ರಿಕ ತಂಡಗಳು ವಾರ್ಡ್‌ ಮಟ್ಟದಲ್ಲಿ ಮನೆಮನೆಗೆ ಭೇಟಿ ನೀಡಿ ನಾಗರಿಕರ ಆಸ್ತಿ ದಾಖಲೆಗಳನ್ನು ಪರಿಶೀಲಿಸಿ ಇ-ಖಾತಾ ಪ್ರಕ್ರಿಯೆಯನ್ನು ಸ್ಥಳದಲ್ಲೇ ನಡೆಸುತ್ತಿದ್ದಾರೆ.

ವಿಜಯ ಕರ್ನಾಟಕ 11 Mar 2026 7:43 am

ISI ಪರವಾಗಿ ಬೇಹುಗಾರಿಕೆ ಆರೋಪ: ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಲಕ್ನೋ, ಮಾ. 11: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸಿ ಭಾರತೀಯ ನೌಕಾಪಡೆಯ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನೌಕಾಪಡೆ ಸಿಬ್ಬಂದಿಗೆ ಸಂಬಂಧಿಸಿದ ಶಂಕಿತ ಬೇಹುಗಾರಿಕೆ ಚಟುವಟಿಕೆಗಳ ಕುರಿತು ಗುಪ್ತಚರ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧನ ಕ್ರಮ ಕೈಗೊಂಡಿದೆ. ಬಂಧಿತ ಆದರ್ಶ್ ಕುಮಾರ್ (ಲಕ್ಕಿ) ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಕಗರೋಲ್ ನಿವಾಸಿ. ಆತ ಕೇರಳದ ಕೊಚ್ಚಿಯಲ್ಲಿರುವ ಭಾರತೀಯ ನೌಕಾಪಡೆಯ ದಕ್ಷಿಣ ಕಮಾಂಡ್ ನೆಲೆಯಲ್ಲಿ ನಿಯೋಜಿಸಲ್ಪಟ್ಟಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಆದರ್ಶ್ ಕುಮಾರ್ ಪಾಕಿಸ್ತಾನದ ಇಂಟರ್–ಸರ್ವೀಸಸ್ ಇಂಟೆಲಿಜೆನ್ಸ್ (ISI) ಗೆ ಸಂಪರ್ಕ ಹೊಂದಿರುವ ಹ್ಯಾಂಡ್ಲರ್‌ ಗಳಿಗೆ ನೌಕಾಪಡೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ರವಾನಿಸುತ್ತಿದ್ದನೆಂದು ಆರೋಪಿಸಲಾಗಿದೆ. ಡಿಜಿಟಲ್ ಸಂವಹನದ ಮೂಲಕ ಆತ ಪ್ರಮುಖ ನೌಕಾ ಮಾಹಿತಿಯ ಛಾಯಾಚಿತ್ರಗಳು ಮತ್ತು ವಿವರಗಳನ್ನು ಹಂಚಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಆತ ಸಂಪರ್ಕದಲ್ಲಿದ್ದ ಹ್ಯಾಂಡ್ಲರ್‌ ಗೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾಯಿಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ನೌಕಾಪಡೆ ಸಿಬ್ಬಂದಿಯನ್ನು ಒಳಗೊಂಡ ಬೇಹುಗಾರಿಕೆ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಮಾಹಿತಿ ದೊರೆತ ನಂತರ ಉತ್ತರ ಪ್ರದೇಶ ಎಟಿಎಸ್ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪರಿಶೀಲನೆಯ ಬಳಿಕ ಸಂಸ್ಥೆಯು ಆದರ್ಶ್ ಕುಮಾರ್ ನನ್ನು ಬಂಧಿಸಿ, ಆತನ ಸಂಪರ್ಕಗಳು ಹಾಗೂ ಹಂಚಿಕೊಳ್ಳಲ್ಪಟ್ಟಿರಬಹುದಾದ ಮಾಹಿತಿಯ ಕುರಿತು ವಿಚಾರಣೆ ಆರಂಭಿಸಿದೆ. ಆಪಾದಿತ ಬೇಹುಗಾರಿಕೆ ಚಟುವಟಿಕೆಯ ಅವಧಿಯಲ್ಲಿ ಆದರ್ಶ್ ಕುಮಾರ್ ಕೊಚ್ಚಿಯಲ್ಲಿರುವ ಭಾರತೀಯ ನೌಕಾಪಡೆಯ ದಕ್ಷಿಣ ಕಮಾಂಡ್ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎಂದು ತಿಳಿದುಬಂದಿದೆ. ಬೇರೆ ಯಾರಾದರೂ ಈ ಬೇಹುಗಾರಿಕೆ ಜಾಲದಲ್ಲಿ ಭಾಗಿಯಾಗಿರಬಹುದೇ ಎಂಬುದನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರ್ಶ್ ಕುಮಾರ್ ನ ಸಂರ್ಕು, ಹಣಕಾಸಿನ ವಹಿವಾಟುಗಳು ಹಾಗೂ ಪಾಕಿಸ್ತಾನದ ಗುಪ್ತಚರ ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಹ್ಯಾಂಡ್ಲರ್‌ ಗಳೊಂದಿಗಿನ ಸಂಪರ್ಕಗಳನ್ನು ಭದ್ರತಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 11 Mar 2026 7:37 am

Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್

Rain In Karnataka: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ವಲಯಗಳಲ್ಲಿ ಇನ್ನೊಂದು ವಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ಶ್ರೀಲಂಕಾದ

ಒನ್ ಇ೦ಡಿಯ 11 Mar 2026 7:18 am

ರೈಲ್ವೆ ಇಲಾಖೆ ಅನುಮತಿಗೆ ಕಾಯುತ್ತಿದೆ ಹುಡಾ ; ವಿಳಂಬಕ್ಕೆ ಆಕಾಂಕ್ಷಿಗಳ ಆಕ್ರೋಶ

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಶೇ.50ರ ಅನುಪಾತದಲ್ಲಿ ನಿವೇಶನ ದೊರೆಯುತ್ತದೆ ಎಂದು ಜಮೀನು ಕಳೆದುಕೊಂಡಿರುವ ರೈತರು ಮಕ್ಕಳ ವ್ಯಾಸಂಗ, ಮದುವೆ ಮತ್ತಿತರ ಶುಭಕಾರ್ಯಕ್ಕೆ ಸಾಲ ಮಾಡಿಕೊಂಡು ಕುಳಿತಿದ್ದಾರೆ. ನಮ್ಮ ನಿವೇಶನ ಕೊಡಿ ಮಾರಿಯಾದರೂ ಸಾಲ ತೀರಿಸಿಕೊಳ್ಳುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

ವಿಜಯ ಕರ್ನಾಟಕ 11 Mar 2026 6:52 am

Iran-America Conflict: ತುಸು ಇಳಿದ ಕಚ್ಚಾತೈಲ ಬೆಲೆ : ಸಂಘರ್ಷ ಉಲ್ಬಣಗೊಂಡರೆ ಮತ್ತೆ ದರಗಳ ಏರಿಕೆ ಆತಂಕ

ಇರಾನ್- ಅಮೆರಿಕಾ ಹಾಗೂ ಇಸ್ರೇಲ್ ಸಂಘರ್ಷದಿಂದಾಗಿ ಇರಾನ್‌ನಲ್ಲಿ ವಾಯುನೆಲೆ, ನೌಕಾನೆಲೆಗಳು ಧ್ವಂಸಗೊಂಡಿವೆ. ತೈಲಾಗಾರಗಳ ಮೇಲೂ ದಾಳಿಯಾಗಿವೆ. ಆದರೆ ಹರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿರುವ ಹಿನ್ನೆಲೆ ಇಡೀ ಜಗತ್ತಿಗೆ ತೈಲ ಸಮಸ್ಯೆಗಳು ಎದುರಾಗಿವೆ. ಇನ್ನು ಮುಂದೆಯೂ ಯಾವುದೇ ಬೆದರಿಕೆಗೂ 1 ಲೀಟರ್ ತೈಲ ಕೂಡಾ ರಫ್ತು ಮಾಡಲು ಬಿಡುವುದಿಲ್ಲವೆಂದು ಇರಾನ್ ಗುಡುಗಿದೆ.

ವಿಜಯ ಕರ್ನಾಟಕ 11 Mar 2026 6:04 am

ಮೈಸೂರಿನ ಹಲವೆಡೆ ಮಾ.11 ಹಾಗೂ 12ಕ್ಕೆ ವಿದ್ಯುತ್‌ ವ್ಯತ್ಯಯ: 10 ಕ್ಕೂ ಹೆಚ್ಚು ಕಡೆಗಳಲ್ಲಿ ಕರೆಂಟ್ ಕಟ್ ಅಲರ್ಟ್ ಕೊಟ್ಟ ಸೆಸ್ಕ್

ವಾರದ ದಿನಗಳಾದ ಬುಧವಾರ ಹಾಗೂ ಗುರುವಾರ ಮೈಸೂರಿನ ವಿವಿಧ ಬಡಾವಣೆಗಳಲ್ಲಿ ಸಾಂದರ್ಭಿಕವಾಗಿ ವಿದ್ಯುತ್ ವ್ಯತ್ಯಾಸ ಆಗಲಿದೆ.

ವಿಜಯ ಕರ್ನಾಟಕ 11 Mar 2026 5:35 am

ಟ್ರಂಪ್ ಬಗ್ಗೆ ಮೋದಿಗೇಕೆ ಇಷ್ಟೊಂದು ಭಯ ಎಂದು ಕೇಳಿದ ಸುಬ್ರಹ್ಮಣ್ಯನ್ ಸ್ವಾಮಿ

ಟ್ರಂಪ್ ಜೊತೆ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ನಾಯಕ

ವಾರ್ತಾ ಭಾರತಿ 11 Mar 2026 1:09 am

ಅಬುಧಾಬಿ ಕೈಗಾರಿಕಾ ಪ್ರದೇಶದ ಮೇಲೆ ಡ್ರೋನ್ ದಾಳಿ: ವರದಿ

ಅಬುಧಾಬಿ: ಮಂಗಳವಾರ ಅಬುಧಾಬಿಯ ರುವೈಸ್ ಕೈಗಾರಿಕಾ ವಲಯದ ಮೇಲೆ ಮಂಗಳವಾರ ಡ್ರೋನ್ ದಾಳಿ ನಡೆದ ಬಳಿಕ ಬೆಂಕಿ ಕಾಣಿಸಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಪ್ರದೇಶದಲ್ಲಿ `ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ(ಎಡಿಎನ್ಒಸಿ) ಸೌಲಭ್ಯಗಳಿದ್ದು ಇಲ್ಲಿ ದಿನಕ್ಕೆ 9,22,000 ಬ್ಯಾರೆಲ್ಗಳಷ್ಟು ತೈಲವನ್ನು ಸಂಸ್ಕರಿಸಬಹುದು. ಜೊತೆಗೆ ಹಲವಾರು ರಾಸಾಯನಿಕ, ರಸಗೊಬ್ಬರ ಮತ್ತು ಕೈಗಾರಿಕಾ ಅನಿಲ ಸ್ಥಾವರಗಳಿವೆ. ಈ ಮಧ್ಯೆ, ಮಂಗಳವಾರ ತನ್ನ ವಾಯುರಕ್ಷಣಾ ವ್ಯವಸ್ಥೆಯು 9 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪತ್ತೆಹಚ್ಚಿದ್ದು ಇದರಲ್ಲಿ 8ನ್ನು ಹೊಡೆದುರುಳಿಸಲಾಗಿದೆ. ಒಂದು ಕ್ಷಿಪಣಿ ಸಮುದ್ರದಲ್ಲಿ ಪತನಗೊಂಡಿದೆ ಎಂದು ಯುಎಇ ರಕ್ಷಣಾ ಇಲಾಖೆ ಹೇಳಿದೆ.

ವಾರ್ತಾ ಭಾರತಿ 11 Mar 2026 12:18 am

ಅಫ್ಘಾನ್ ಮೇಲಿನ ಪಾಕಿಸ್ತಾನದ ಗಡಿಯಾಚೆಗಿನ ದಾಳಿಗೆ ಭದ್ರತಾ ಮಂಡಳಿಯಲ್ಲಿ ಭಾರತದ ಖಂಡನೆ

ವಿಶ್ವಸಂಸ್ಥೆ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಬಲವಾಗಿ ಖಂಡಿಸಿದ್ದು ಪಾಕಿಸ್ತಾನ `ನಕಲಿ ಮುಸ್ಲಿಮ್ ಸಹೋದರತ್ವ'ದ ಬೂಟಾಟಿಕೆ ಪ್ರದರ್ಶಿಸಿದೆ ಎಂದು ಟೀಕಿಸಿದೆ. ಅಫ್ಘಾನಿಸ್ತಾನ ಕುರಿತು ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ` ಪವಿತ್ರ ರಮಝಾನ್ ತಿಂಗಳಿನಲ್ಲಿ ನಿರ್ದಯವಾಗಿ ವಾಯುದಾಳಿಗಳನ್ನು ನಡೆಸುತ್ತಿರುವಾಗ, ಒಂದು ಕಡೆ ಅಂತಾರಾಷ್ಟ್ರೀಯ ಕಾನೂನು ಮತ್ತು ಇಸ್ಲಾಮಿಕ್ ಒಗ್ಗಟ್ಟಿನ ಉನ್ನತ ತತ್ವಗಳನ್ನು ಪ್ರತಿಪಾದಿಸುವುದು ಬೂಟಾಟಿಕೆಯಾಗಿದೆ' ಎಂದು ಟೀಕಿಸಿದರು. ಗಡಿಯಾಚೆಗಿನ ಹಿಂಸಾಚಾರದಿಂದ ಉಂಟಾದ ನಾಗರಿಕ ಸಾವು-ನೋವುಗಳ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯವರ ಕಳವಳವನ್ನು ಪುನರುಚ್ಚರಿಸಿದ ಹರೀಶ್, ಅಂತರರಾಷ್ಟ್ರೀಯ ಕಾನೂನು, ವಿಶ್ವಸಂಸ್ಥೆ ಚಾರ್ಟರ್(ಸನದು) ಮತ್ತು ದೇಶದ ಸಾರ್ವಭೌಮತ್ವದ ಸ್ಪಷ್ಟ ಉಲ್ಲಂಘನೆಯಾಗಿರುವ ವಾಯುದಾಳಿಯನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದರು. ಭಯೋತ್ಪಾದಕ ಸಂಘಟನೆಗಳ ವಿರುದ್ಧ ಸಾಮೂಹಿಕ ಜಾಗತಿಕ ಕ್ರಮಕ್ಕೆ ಕರೆ ನೀಡಿದ ಅವರು, ಅಂತರರಾಷ್ಟ್ರೀಯ ಸಮುದಾಯದ ಸಂಘಟಿತ ಪ್ರಯತ್ನಗಳು ಮಾತ್ರ ಭಯೋತ್ಪಾದಕ ಸಂಘಟನೆಗಳು ಮತ್ತು ಅವರ ಕಾರ್ಯಾಚರಣೆಗಳನ್ನು ಸುಗಮಗೊಳಿಸುವವರು ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ತೊಡಗುವುದಿಲ್ಲ ಎಂದು ಖಚಿತಪಡಿಸುತ್ತದೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 11 Mar 2026 12:16 am

ದುಬೈಯಲ್ಲಿ ಸಿಲುಕಿರುವ ಭಾರತೀಯರಿಗೆ ತನ್ನ ಅಪಾಟ್ರ್ಮೆಂಟ್ ನಲ್ಲಿ ಆಶ್ರಯ ಕಲ್ಪಿಸಿದ ಭಾರತೀಯ ಉದ್ಯಮಿ

ದುಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಪ್ರದೇಶದಲ್ಲಿನ ಅನಿಶ್ಚಿತತೆಯ ಮಧ್ಯೆ, ದುಬೈ ಮೂಲದ ಭಾರತೀಯ ಉದ್ಯಮಿಯೊಬ್ಬರು, ಪ್ರಯಾಣಿಸಲು ಅಸಾಧ್ಯವಾಗಿ ಅತಂತ್ರ ಸ್ಥಿತಿಯಲ್ಲಿರುವ ಭಾರತೀಯ ಪ್ರಜೆಗಳಿಗೆ ತನ್ನ ವಸತಿ ಕಟ್ಟಡದಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಿದ್ದಾರೆ. ಅಲ್ ಮಿಝಾನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯೋಗೇಶ್ ದೋಷಿ 64 ಅಪಾರ್ಟ್ಮೆಂಟ್ ಗಳನ್ನು ಒಳಗೊಂಡಿರುವ ತನ್ನ ಸಂಪೂರ್ಣ ವಸತಿ ಕಟ್ಟಡವನ್ನು ನಗರದಲ್ಲಿ ಸಿಲುಕಿರುವ ಭಾರತೀಯರಿಗೆ ಲಭ್ಯವಾಗುವಂತೆ ಮಾಡಿದ್ದಾರೆ. ವಸತಿ ಸೌಕರ್ಯವನ್ನು ಉಚಿತವಾಗಿ ನೀಡಲಾಗುತ್ತದೆ ಮತ್ತು ಆಹಾರದಂತಹ ಮೂಲಭೂತ ಸೌಲಭ್ಯವನ್ನು ಒಳಗೊಂಡಿದೆ. ಯುಎಇಯಲ್ಲಿನ ʼಇಂಡಿಯನ್ ಪೀಪಲ್ಸ್ ಫೋರಂ' ಮತ್ತು ದುಬೈನಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾದ ಸಮನ್ವಯದಲ್ಲಿ ಈ ಉಪಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ದೋಷಿಯವರನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

ವಾರ್ತಾ ಭಾರತಿ 11 Mar 2026 12:11 am

ಇಸ್ರೇಲ್ ನ ಹೈಫಾ ತೈಲ ಸಂಸ್ಕರಣಾಗಾರ, ಟೆಲ್ ಅವೀವ್ ಸಮೀಪದ ಸಂವಹನ ಕೇಂದ್ರದ ಮೇಲೆ ದಾಳಿ: ಇರಾನ್

ಟೆಹ್ರಾನ್: ಇಸ್ರೇಲ್‌ ನಲ್ಲಿನ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಲಾಗಿದೆ ಎಂದು ಇರಾನ್ ಹೇಳಿದೆ. ಈ ಕುರಿತು ಇರಾನ್‌ ನ ಖತಮ್ ಅಲ್-ಅನ್ಬಿಯಾ ಸಶಸ್ತ್ರ ಪಡೆಗಳ ಪ್ರಧಾನ ಕಚೇರಿಯ ವಕ್ತಾರರು ಮಂಗಳವಾರ ಹೇಳಿದ್ದಾರೆ. ಉತ್ತರ ಇಸ್ರೇಲ್‌ ನ ಹೈಫಾದಲ್ಲಿರುವ ತೈಲ ಮತ್ತು ಅನಿಲ ಸಂಸ್ಕರಣಾಗಾರ ಹಾಗೂ ಇಂಧನ ಸಂಗ್ರಹ ಟ್ಯಾಂಕ್‌ ಗಳನ್ನು ಗುರಿಯಾಗಿಸಿ ಡ್ರೋನ್ ಗಳನ್ನು ಬಳಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಟೆಲ್ ಅವೀವ್ ಸಮೀಪದಲ್ಲಿರುವ ಉಪಗ್ರಹ ಸಂವಹನ ಕೇಂದ್ರವನ್ನೂ ಇರಾನ್ ಪಡೆಗಳು ನಾಶಪಡಿಸಿದ್ದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇರಾನ್‌ ನ ತೈಲ ಡಿಪೋಗಳನ್ನು ಗುರಿಯಾಗಿಸಿಕೊಂಡಿದ್ದ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ. ಇರಾನ್ ನಡೆಸಿದ ದಾಳಿಗಳ ‘33ನೇ ಅಲೆ’ ಸಮಯದಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ. ಇದಲ್ಲದೆ, ಉತ್ತರ ಇರಾಕ್‌ ನ ಕುರ್ದಿಶ್ ಪ್ರದೇಶದ ಹರಿರ್ ನೆಲೆಯಲ್ಲಿರುವ ಅಮೆರಿಕ ಸೇನೆಯ ಪ್ರಧಾನ ಕಚೇರಿಯ ಮೇಲೂ ಇರಾನ್ ಐದು ಕ್ಷಿಪಣಿಗಳನ್ನು ಹಾರಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ವಾರ್ತಾ ಭಾರತಿ 11 Mar 2026 12:05 am

ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ವಿರೋಧಿಸಿ ಧರಣಿ

ಬೆಂಗಳೂರು, ಮಾ.10: ಅಮೆರಿಕ, ಇಸ್ರೇಲ್ ಇರಾನ್ ಮೇಲಿನ ಆಕ್ರಮಣಕಾರಿ ಯುದ್ಧ ವಿರೋಧಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜನಪರ ಸಂಘಟನೆಗಳ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಾಂತಿಯುತ ಧರಣಿ ನಡೆಸಲಾಯಿತು. ಅಮೆರಿಕ, ಇಸ್ರೇಲ್ ಇರಾನ್ ಮೇಲಿನ ಕೂಡಲೇ ನಿಲ್ಲಿಸಬೇಕು. ಅಮಾಯಕ ಜೀವಗಳು ಉಳಿಯಲಿ, ಜಗತ್ತಿನಲ್ಲಿ ಸಂಕಟ ತಪ್ಪಲಿ, ಜಗತ್ತಿನಲ್ಲಿ ಶಾಂತಿಯನ್ನು ಮರು ಸ್ಥಾಪಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಭಾರತ ಸಾರ್ವಭೌಮ ದೇಶ ಯಾರದೇ ಒತ್ತಡಕ್ಕೆ ಪ್ರಧಾನಿ ನರೇಂದ್ರ ಮೋದಿ ಮಣಿಯಬಾರದು. ಇರಾನ್ ಮೇಲಿನ ಯುದ್ಧವನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು ಎಂದು ಒತ್ತಾಯಿಸಬಾರದು. ಇದೇ ವೇಳೆ ಪ್ರತಿಭಟನಾನಿರತರು ಮೇಣದ ಬತ್ತಿ ಹಚ್ಚಿ, ಯುದ್ಧದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಹೋರಾಟಗಾರರಾದ ಪ್ರೊ.ನಗರಗೆರೆ ರಮೇಶ್, ಸಿರಿಮನೆ ನಾಗರಾಜ್, ನಾಗೇಶ್, ಹನುಮೇಗೌಡ, ಶರತ್, ರವಿ ಮತ್ತಿತರರು ಹಾಜರಿದ್ದರು.

ವಾರ್ತಾ ಭಾರತಿ 11 Mar 2026 12:02 am

ಇರಾನ್ ಶಾಲೆಯ ದಾಳಿಯಲ್ಲಿ ಅಮೆರಿಕದ ಪಾತ್ರವನ್ನು ಒಪ್ಪಿಕೊಂಡ ರಿಪಬ್ಲಿಕನ್ ಸೆನೆಟರ್

ವಾಷಿಂಗ್ಟನ್: ಫೆಬ್ರವರಿ 28ರಂದು ಇರಾನ್ ನ ಮಿನಾಬ್ ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ಅಮೆರಿಕದ ಪಾತ್ರವನ್ನು ರಿಪಬ್ಲಿಕನ್ ಸೆನೆಟರ್ ಜಾನ್ ಕೆನಡಿ ಒಪ್ಪಿಕೊಂಡಿದ್ದು ಇದೊಂದು ದೊಡ್ಡ ಪ್ರಮಾದ ಎಂದು ಹೇಳಿರುವುದಾಗಿ ವರದಿಯಾಗಿದೆ. ಇರಾನ್ ನ ಶಾಲೆಯ ಮೇಲಿನ ದಾಳಿಗೆ ಅಮೆರಿಕದ ಪಡೆಗಳು ಕಾರಣವೆಂದು ಅಮೆರಿಕದ ಮಿಲಿಟರಿ ತನಿಖಾಧಿಕಾರಿಗಳು ನಂಬಿದ್ದಾರೆ ಎಂದು ವರದಿಯಾಗಿತ್ತು. ʼಇದು ಭಯಾನಕವಾಗಿತ್ತು. ನಾವು ತಪ್ಪು ಮಾಡಿದೆವು. ರಶ್ಯದಂತಹ ಇತರ ರಾಷ್ಟ್ರಗಳು ಇಂತಹ ವಿಷಯಗಳನ್ನು ಉದ್ದೇಶಪೂರ್ವಕವಾಗಿ ಮಾಡುತ್ತವೆ. ನಾವೆಂದೂ ಅದನ್ನು ಉದ್ದೇಶಪೂರ್ವಕವಾಗಿ ಮಾಡುವುದಿಲ್ಲ. ರಕ್ಷಣಾ ಸಚಿವಾಲಯ ಇದನ್ನು ತನಿಖೆ ನಡೆಸುತ್ತಿದೆ. ಕ್ಷಮಿಸಿ, ಅದು ಸಂಭವಿಸಿದೆ. ಇದಕ್ಕಾಗಿ ನಾನು ವಿಷಾದಿಸುತ್ತೇನೆ. ಇದು ತಪ್ಪು' ಎಂದು ಕೆನಡಿ ಹೇಳಿದ್ದಾರೆ.

ವಾರ್ತಾ ಭಾರತಿ 10 Mar 2026 11:58 pm

ಹೊಸಪೇಟೆ | ಡಾನ್ ಬಾಸ್ಕೋ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಹೊಸಪೇಟೆ : ಉದಾರವಾಗಿ ನೀಡಿ – ಮಹಿಳೆಯರಿಗೆ ಲಾಭ, ಸಮಾಜಕ್ಕೆ Give to Gain” ಎಂಬ ಆಶಯದೊಂದಿಗೆ ಡಾನ್ ಬಾಸ್ಕೋ ಸಂಸ್ಥೆ ಹಾಗೂ ತರುಣಿ ಮಹಿಳಾ ಅಭಿವೃದ್ದಿ ಸಂಸ್ಥೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ನಗರದ ಡಾನ್ ಬಾಸ್ಕೋ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ತ್ರಿವೇಣಿ ಆರ್ ಪತ್ತಾರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾನ್ ಬಾಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾ.ರೋಶನ್ ವಹಿಸಿದ್ದರು. ಉದ್ಘಾಟನಾ ಭಾಷಣದಲ್ಲಿ ತ್ರಿವೇಣಿ ಆರ್ ಪತ್ತಾರ್ ಅವರು ಮಾತನಾಡಿ, ಮಹಿಳೆಯರು ಸಬಲೀಕರಣ ಹೊಂದಿ ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದರು. ಹೆಣ್ಣುಮಕ್ಕಳಿಗೂ ಸಮಾನ ಹಕ್ಕುಗಳಿದ್ದು ಅವರಿಗೆ ಉತ್ತಮ ಶಿಕ್ಷಣ ನೀಡುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಚಟ್ಲ ವೆಂಕಟೇಶ್ ಮಾತನಾಡಿ, ಮಹಿಳೆಯರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಬೆಳೆಯಲು ಹೆಚ್ಚಿನ ಅವಕಾಶಗಳನ್ನು ಒದಗಿಸಬೇಕು. ಉಳಿತಾಯದ ಮೂಲಕ ಕುಟುಂಬದ ಆರ್ಥಿಕ ಸ್ಥಿತಿಯನ್ನು ಬಲಪಡಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು. ಮುಖ್ಯ ಭಾಷಣಕಾರರಾದ ವಕೀಲರು ಹಾಗೂ ಸಮಾಜಸೇವಕಿ ಭಾಗ್ಯಲಕ್ಷ್ಮಿ ಭರದೆ ಮಾತನಾಡಿ, ಡಾನ್ ಬಾಸ್ಕೋ ಸಂಸ್ಥೆ ಕಳೆದ 30 ವರ್ಷಗಳಿಂದ ಮಹಿಳಾ ದಿನಾಚರಣೆ ಆಚರಿಸುತ್ತಾ ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು. ಸಮಾಜಸೇವಕಿ ರಶ್ಮಿ ರಾಜಶೇಖರ್ ಹಿಟ್ನಾಲ್ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರು ಆಟೋ ಚಾಲನೆಯಿಂದ ವಿಮಾನ ಚಾಲನೆವರೆಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು. ಮಹಿಳೆಯರಿಗೆ ಶಿಕ್ಷಣ ಬಹುಮುಖ್ಯವಾಗಿದ್ದು ಮಕ್ಕಳಿಗೆ ಹಬ್ಬ-ಹರಿದಿನಗಳ ಮಹತ್ವ ತಿಳಿಸಬೇಕು ಎಂದು ಹೇಳಿದರು. ಸಮಾಜಸೇವಕಿ ರೂಪಾ ಲಾಡ್ ಮಾತನಾಡಿ, ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಸಮಾಜದಲ್ಲಿ ಹೊರಗೆ ಬರಲು ಅವಕಾಶ ಕಡಿಮೆ ಇತ್ತು. ಆದರೆ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮ ಸಾಧನೆಯ ಮೂಲಕ ಉನ್ನತ ಸ್ಥಾನಗಳನ್ನು ಗಳಿಸುತ್ತಿದ್ದಾರೆ ಎಂದು ಹೇಳಿದರು. ವಿಜಯನಗರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಕವಿತಾ ಈಶ್ವರ್ ಸಿಂಗ್ ಮಾತನಾಡಿ, ಮಹಿಳೆ ಆಬಲೆಯಲ್ಲ ಸಬಲೆ ಎಂದು ಹೇಳಿದರು. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮೊಬೈಲ್ ನೀಡುವುದು ತಪ್ಪು ಎಂದು ತಿಳಿಸಿ, ಮಕ್ಕಳ ಬೆಳವಣಿಗೆಯ ಬಗ್ಗೆ ಪೋಷಕರು ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಾರ್ಯ ವಿಭಾಗದ ನಿರ್ದೇಶಕರಾದ ಫಾದರ್ ಫ್ರಾನ್ಸಿಸ್, ಡಾನ್ ಬಾಸ್ಕೋ ಐಸಿಐಸಿ ಶಾಲೆಯ ಪ್ರಿನ್ಸಿಪಲ್ ಫಾದರ್ ಸಜಿ ಜಾರ್ಜ್, ಸಂಸ್ಥೆಯ ಆಡಳಿತಾಧಿಕಾರಿ ಮೈಕಲ್ ಫಾದರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 10 Mar 2026 11:55 pm

ಬಳ್ಳಾರಿ | ವಡ್ಡರಬಂಡೆ ಶಾದಿ ಮಹಲ್ ಕಾಮಗಾರಿ ಶೀಘ್ರ ಆರಂಭ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ವಡ್ಡರಬಂಡೆ ಪ್ರದೇಶದಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮಂಗಳವಾರ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಸೈಯದ್ ನಾಸಿರ್ ಹುಸೇನ್ ಅವರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ನೆರವಿನಿಂದ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣಕ್ಕೆ ಈಗಾಗಲೇ ತೀರ್ಮಾನಿಸಲಾಗಿದೆ. ಇದರಿಂದ ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ನಗರದ ಮುಸ್ಲಿಂ ಸಮುದಾಯದ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂಬುದು ನಮ್ಮ ಆಶಯವಾಗಿತ್ತು. ಅದೇ ರೀತಿ ಈಗ ನಗರದ ಈದ್ಗಾ ಹಾಗೂ ಖಬರಸ್ತಾನದ ಸ್ವಚ್ಛತೆ, ರಕ್ಷಣೆ ಮತ್ತು ಹಸೀರೀಕರಣ ಕಾರ್ಯವನ್ನು ಯುವಕರು ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು. ಇದೇ ರೀತಿಯಲ್ಲಿ ನಗರದಲ್ಲಿನ ಜನವಸತಿ ಬಡಾವಣೆಗಳಲ್ಲೂ ಹಸೀರೀಕರಣ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಭೂಮಿ ಪೂಜೆಯ ನಂತರ “ಯೂತ್ ರೆವಲ್ಯೂಷನ್” ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಪಾಲಿಕೆಯ ಸದಸ್ಯರಾದ ಎಂ.ಪ್ರಭಂಜನಕುಮಾರ್, ನಾಜು, ಆಸಿಫ್, ಕಾಂಗ್ರೆಸ್ ಮುಖಂಡರಾದ ಆಯಾಜ್ ಅಹ್ಮದ್, ದಾದಾಭಾಯ್, ಕಣೇಕಲ್ ಮೆಹಬೂಬಸಾಬ, ಹುಸೇನ್ ಪೀರಾ, ಯೂನುಸ್ ಭಾಯ್, ಮಹಮ್ಮದ್ ಭಾಯ್, ಉಸ್ಮಾನ್, ಅನ್ವರ್, ಅರ್ಷದ್, ಅತೀಕ್, ತೌಸೀಫ್, ಸಮೀರ್, ಅಫಾಕ್, ನೂರ್, ಫರಾಜ್, ತಬರೇಜ್ ಮತ್ತಿತರರು ಹಾಜರಿದ್ದರು.

ವಾರ್ತಾ ಭಾರತಿ 10 Mar 2026 11:48 pm

ಇರಾನ್ ಪರಿಸ್ಥಿತಿ ತಿಳಿಗೊಳ್ಳುವವರೆಗೆ ಕೆಲವು ದೇಶಗಳ ಮೇಲಿನ ತೈಲ ನಿರ್ಬಂಧ ತೆರವು: ಟ್ರಂಪ್

ವಾಷಿಂಗ್ಟನ್: ಇರಾನ್ನೊಂದಿಗಿನ ಯುದ್ದ ಕೊನೆಗೊಳ್ಳುವ ತನಕ ಅಮೆರಿಕವು ಕೆಲವು ರಾಷ್ಟ್ರಗಳ ತೈಲ ಮಾರಾಟದ ಮೇಲಿನ ನಿಷೇಧವನ್ನು ತೆರವುಗೊಳಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬೆಲೆಗಳನ್ನು ಕಡಿಮೆ ಮಾಡಲು ನಾವು ಕೆಲವು ತೈಲ ಸಂಬಂಧಿತ ನಿರ್ಬಂಧಗಳನ್ನು ಸಹ ಮನ್ನಾ ಮಾಡುತ್ತೇವೆ. ಕೆಲವು ದೇಶಗಳ ಮೇಲೆ ನಾವು ನಿರ್ಬಂಧ ಹೇರಿದ್ದೇವೆ. ಆದರೆ ಪರಿಸ್ಥಿತಿ ಸುಧಾರಿಸುವವರೆಗೆ ಈ ನಿರ್ಬಂಧವನ್ನು ತೆರವುಗೊಳಿಸುತ್ತೇವೆ. ಅಗತ್ಯ ಬಿದ್ದರೆ ಅಮೆರಿಕದ ನೌಕಾಪಡೆ ಮತ್ತು ಅದರ ಪಾಲುದಾರರು ಜಲಸಂಧಿಯ ಮೂಲಕ ಟ್ಯಾಂಕರ್ಗಳನ್ನು ಬೆಂಗಾವಲು ಮಾಡುತ್ತಾರೆ. ನಾವು ಇದನ್ನು ಮಾಡಿದರೆ ತೈಲ ಬೆಲೆಗಳು ಕಡಿಮೆಯಾಗುತ್ತದೆ ಎಂದು ನನಗೆ ತಿಳಿದಿದೆ. ಇರಾನ್ ಪರಮಾಣು ಕ್ಷಿಪಣಿ ಪಡೆಯಬಾರದು ಎಂಬ ಏಕೈಕ ಉದ್ದೇಶ ನಮ್ಮದಾಗಿದೆ. ದೀರ್ಘಾವಧಿಯಲ್ಲಿ ಇರಾನ್ ನ ಬೆದರಿಕೆಯಿಲ್ಲದೆ ತೈಲ ಸರಬರಾಜು ಸುರಕ್ಷಿತವಾಗಿರುತ್ತದೆ. ಈ ಬೆದರಿಕೆಯನ್ನು ಶಾಶ್ವತವಾಗಿ ಕೊನೆಗೊಳಿಸುತ್ತೇವೆ' ಎಂದು ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಟ್ರಂಪ್ ಹೇಳಿರುವುದಾಗಿ ವರದಿಯಾಗಿದೆ.

ವಾರ್ತಾ ಭಾರತಿ 10 Mar 2026 11:46 pm

Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್‌ಸ್ಟಾ ಪೋಸ್ಟರ್ ಭಾರೀ ವೈರಲ್‌

Shivam Dube: ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತ ತಂಡದ ಐತಿಹಾಸಿಕ ಜಯದ ನಂತರ, ಕ್ರೀಡಾಂಗಣದಲ್ಲಿ ಕಂಡುಬಂದ ದೃಶ್ಯಗಳು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳು ಅಭಿಮಾನಿಗಳ ಮನಗೆದ್ದಿವೆ. ಈ ಪೈಕಿ, ಟೀಂ ಇಂಡಿಯಾ ಆಲ್‌ರೌಂಡರ್ ಶಿವಂ ದುಬೆ ಅವರ ಪತ್ನಿ ಅಂಜುಮ್ ಖಾನ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಪೋಸ್ಟ್ ವೈರಲ್ ಆಗಿದೆ. ನ್ಯೂಜಿಲೆಂಡ್ ವಿರುದ್ಧದ

ಒನ್ ಇ೦ಡಿಯ 10 Mar 2026 11:45 pm

ವಿಜಯನಗರ | ಪ್ರವಾಸಿ ಮಾರ್ಗದರ್ಶಿಗಳು ಜಿಲ್ಲೆಯ ಸಂಸ್ಕೃತಿಯ ರಾಯಭಾರಿಗಳು: ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಪ್ರವಾಸಿ ಮಾರ್ಗದರ್ಶಿಗಳು ಕೇವಲ ಮಾಹಿತಿ ನೀಡುವವರಲ್ಲ, ಅವರು ಜಿಲ್ಲೆಯ ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ರಾಯಭಾರಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 87 ಪ್ರವಾಸಿ ಮಾರ್ಗದರ್ಶಿಗಳಿಗೆ ಶೂ ಮತ್ತು ಜಾಕೆಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಇಂದು ವಿತರಿಸಲಾದ ಸಮವಸ್ತ್ರಗಳು ಕೇವಲ ಸೌಲಭ್ಯವಲ್ಲ, ಮಾರ್ಗದರ್ಶಿಗಳ ವೃತ್ತಿಪರತೆಯ ಗುರುತಾಗಿದೆ. ಸಮವಸ್ತ್ರ ಧರಿಸುವುದರಿಂದ ಪ್ರವಾಸಿಗರಲ್ಲಿ ವಿಶ್ವಾಸ ಮೂಡುತ್ತದೆ ಹಾಗೂ ಸುರಕ್ಷಿತ ಭಾವನೆ ಉಂಟಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಎಂದು ಅವರು ಸಲಹೆ ನೀಡಿದರು. ಪ್ರವಾಸೋದ್ಯಮ ಕ್ಷೇತ್ರ ದಿನೇ ದಿನೇ ಬೆಳೆಯುತ್ತಿದ್ದು, ಮಾರ್ಗದರ್ಶಿಗಳು ಕೇವಲ ಹಳೆಯ ಇತಿಹಾಸಕ್ಕೆ ಸೀಮಿತವಾಗದೆ ಜಿಲ್ಲೆಯ ಹೊಸ ಪ್ರವಾಸಿ ತಾಣಗಳ ಬಗ್ಗೆಯೂ ನಿಖರ ಮತ್ತು ಆಸಕ್ತಿದಾಯಕ ಮಾಹಿತಿಯನ್ನು ಹೊಂದಿರಬೇಕು. ಅವರ ಉತ್ತಮ ಮಾರ್ಗದರ್ಶನ ಹಾಗೂ ಜಿಲ್ಲೆಯ ಆತಿಥ್ಯದಿಂದ ಪ್ರಭಾವಿತರಾದ ಪ್ರವಾಸಿಗರು ಮತ್ತೆ ಭೇಟಿ ನೀಡುವಂತಾಗಬೇಕು. ಆಗ ಮಾತ್ರ ಜಿಲ್ಲೆಯ ಪ್ರವಾಸೋದ್ಯಮದ ನೈಜ ಅಭಿವೃದ್ಧಿ ಸಾಧ್ಯ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಸೇರಿದಂತೆ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾರ್ತಾ ಭಾರತಿ 10 Mar 2026 11:44 pm

ಐಪಿಎಲ್ 2026: ಮಾ.12ರಂದು ಮೊದಲ 20 ದಿನಗಳ ವೇಳಾಪಟ್ಟಿ ಪ್ರಕಟ

ಹೊಸದಿಲ್ಲಿ: ಮುಂಬರುವ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾರ್ಚ್ 12ರಂದು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ. 19ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 28ರಿಂದ ಮೇ 31ರ ತನಕ ನಡೆಯಲಿದೆ. ಈ ಹಿಂದೆ ಪಂದ್ಯಾವಳಿಯನ್ನು ಮಾರ್ಚ್ 26ರಿಂದ ಮೇ 30ರ ತನಕ ಆಯೋಜಿಸಲು ಯೋಜಿಸಲಾಗಿತ್ತು. ಇದೀಗ ದಿನಾಂಕದಲ್ಲಿ ಸ್ವಲ್ಪಮಟ್ಟಿನ ಬದಲಾವಣೆ ಮಾಡಲಾಗಿದೆ. ‘‘ನಾವು ಮಾರ್ಚ್ 12ರಂದು 2026ರ ಆವೃತ್ತಿಯ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸುವ ಯೋಜನೆ ಹಾಕಿಕೊಂಡಿದ್ದೆವು. ಇದೀಗ ನಾವು ಮೊದಲ 20 ದಿನಗಳ ಐಪಿಎಲ್ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಿದ್ದೇವೆ’’ ಎಂದು ಸೈಕಿಯಾ ಮಂಗಳವಾರ ಸುದ್ದಿಸಂಸ್ಥೆಗೆ ತಿಳಿಸಿದರು. ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತಮಿಳುನಾಡು ವಿಧಾನಸಭೆ ಚುನಾವಣೆಯ ದಿನಾಂಕದೊಂದಿಗಿನ ಘರ್ಷಣೆಯನ್ನು ತಪ್ಪಿಸಲು ಉದ್ದೇಶಿಸಿರುವ ಬಿಸಿಸಿಐ, ಪಂದ್ಯಾವಳಿಯ ಉಳಿದ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲು ನಿರ್ಧರಿಸಿದೆ. ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲೇ ಐಪಿಎಲ್ ತಂಡಗಳು ಈಗಾಗಲೇ ಹೊಸ ಋತುವಿಗೆ ತಮ್ಮ ಸಿದ್ಧತೆಯನ್ನು ಆರಂಭಿಸಿವೆ. ಚೆನ್ನೈ ಸೂಪರ್ ಕಿಂಗ್ಸ್ ಮಾರ್ಚ್ 1ರಂದು ನವಲೂರ್ನ ಉನ್ನತ-ಪ್ರದರ್ಶನ ಕೇಂದ್ರದಲ್ಲಿ ತರಬೇತಿ ಆರಂಭಿಸಿದೆ. ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಎಂ.ಎಸ್. ಧೋನಿ ಇದರಲ್ಲಿ ಭಾಗಿಯಾಗಿದ್ದಾರೆ. ಹಾಲಿ ಚಾಂಪಿಯನ್ RCB ಫೆ.10ರಂದು ನವಿ ಮುಂಬೈನ ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ಕಿರು ತರಬೇತಿ ಶಿಬಿರವನ್ನು ಆಯೋಜಿಸಿದೆ. ಇದೇ ವೇಳೆ, 2022ರ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮಿರಾಜ್ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ಎರಡು ಬಾರಿ ಅಭ್ಯಾಸ ನಡೆಸಿದೆ. ಪಂಜಾಬ್ ಕಿಂಗ್ಸ್ ತಂಡವು ಅಬುಧಾಬಿಯಲ್ಲಿ ಫೆಬ್ರವರಿಯಲ್ಲಿ ತರಬೇತಿ ನಡೆಸಿದೆ. ಇದೀಗ ಧರ್ಮಶಾಲಾದಲ್ಲಿ ಶಿಬಿರ ಆಯೋಜಿಸಿದೆ. ಸನ್ರೈಸರ್ಸ್ ಹೈದರಾಬಾದ್ ತಂಡ ದೇಶೀಯ ಅಟಗಾರರೊಂದಿಗೆ ಮಾರ್ಚ್ 1ರಂದು ತನ್ನ ಶಿಬಿರವನ್ನು ಆರಂಭಿಸಿದೆ. ಮುಂಬೈ ಇಂಡಿಯನ್ಸ್ ತಂಡ ಕೂಡ ತನ್ನ ತಯಾರಿ ಆರಂಭಿಸಿದೆ. ರಾಜಸ್ಥಾನ ರಾಯಲ್ಸ್ ತಂಡವು ಮಾ.15ರಂದು ಜೈಪುರದಲ್ಲಿ ತನ್ನ ತರಬೇತಿ ಶಿಬಿರ ಆರಂಭಿಸುವ ನಿರೀಕ್ಷೆ ಇದೆ. ಕೋಲ್ಕತಾ ತಂಡವು ಮಾ.18ರಂದು ತನ್ನ ಪೂರ್ವತಯಾರಿ ಶಿಬಿರ ಆರಂಭಿಸಲಿದೆ.

ವಾರ್ತಾ ಭಾರತಿ 10 Mar 2026 11:41 pm

ಐಸಿಸಿ ನೀತಿ ಸಂಹಿತೆ ಉಲ್ಲಂಘನೆ: ಅರ್ಷದೀಪ್ ಸಿಂಗ್ ಗೆ ದಂಡ

ಹೊಸದಿಲ್ಲಿ: ಅಹ್ಮದಾಬಾದ್ ನಲ್ಲಿ ರವಿವಾರ ನಡೆದ ಐಸಿಸಿ ಪುರುಷರ ಟಿ-20 ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಅಂತರ್ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ನೀತಿ ಸಂಹಿತೆಯ ಲೆವೆಲ್-1ನ್ನು ಉಲ್ಲಂಘಿಸಿರುವ ಭಾರತದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಗೆ ಪಂದ್ಯದ ಶುಲ್ಕದಲ್ಲಿ ಶೇ.15ರಷ್ಟು ದಂಡ ವಿಧಿಸಲಾಗಿದೆ. ಅಂತರ್ರಾಷ್ಟ್ರೀಯ ಪಂದ್ಯದ ವೇಳೆ ಆಟಗಾರನ ಸನಿಹಕ್ಕೆ ಚೆಂಡನ್ನು( ಅಥವಾ ಇತರ ಯಾವುದೆ ಕ್ರಿಕೆಟ್ ಸಲಕರಣೆಯನ್ನು)ಅಸಮರ್ಪಕವಾಗಿ ಅಥವಾ ಅಪಾಯಕಾರಿ ರೀತಿಯಲ್ಲಿ ಎಸೆದಿರುವುದಕ್ಕೆ ಸಂಬಂಧಿಸಿದ ಆಟಗಾರರ ಹಾಗೂ ಆಟಗಾರರ ಸಹಾಯಕ ಸಿಬ್ಬಂದಿಯ ಐಸಿಸಿ ನೀತಿ ಸಂಹಿತೆ ಆರ್ಟಿಕಲ್ 2.9 ಅನ್ನು ಅರ್ಷದೀಪ್ ಸಿಂಗ್ ಉಲ್ಲಂಘಿಸಿರುವುದು ಕಂಡುಬಂದಿದೆ. ಅರ್ಷದೀಪ್ ಗೆ ದಂಡ ವಿಧಿಸಿದ್ದಲ್ಲದೆ, ಅವರ ಅಶಿಸ್ತಿನ ದಾಖಲೆಗೆ ಒಂದು ಡಿಮೆರಿಟ್ ಸೇರಿಸಲಾಗಿದೆ. ಇದು 24 ತಿಂಗಳ ಅವಧಿಯಲ್ಲಿನ ಮೊದಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನ್ಯೂಝಿಲ್ಯಾಂಡ್ ತಂಡದ ಇನಿಂಗ್ಸ್ ನ 11ನೇ ಓವರ್ ನಲ್ಲಿ ಈ ಘಟನೆ ನಡೆದಿದೆ. ಅರ್ಷದೀಪ್ ಅವರು ಫೀಲ್ಡಿಂಗ್ ವೇಳೆ ಚೆಂಡನ್ನು ಸ್ಟ್ರೈಕ್ನಲ್ಲಿದ್ದ ಡ್ಯಾರಿಲ್ ಮಿಚೆಲ್ ಪ್ಯಾಡ್ಗೆ ಸಿಟ್ಟಿನಿಂದ ಜೋರಾಗಿ ಎಸೆದಿದ್ದರು. ಅರ್ಷದೀಪ್ ಅವರು ಮ್ಯಾಚ್ ರೆಫರಿ ಆ್ಯಂಡಿ ಪೈಕ್ರಾಫ್ಟ್ ಪ್ರಸ್ತಾವಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದು, ಯಾವುದೇ ಅಧಿಕೃತ ವಿಚಾರಣೆ ಇರುವುದಿಲ್ಲ.

ವಾರ್ತಾ ಭಾರತಿ 10 Mar 2026 11:38 pm

ಯಾದಗಿರಿ | ಯುಪಿಎಸ್ಸಿ ಸಾಧಕ ಸಂದೀಪ್ ಬಾಡದ್‌ಗೆ ಸನ್ಮಾನ

ಯಾದಗಿರಿ: ನಾಗರಿಕ ಸೇವಾ ಪರೀಕ್ಷೆಯಾದ UPSC ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ ಸಂದೀಪ್ ಬಡಾದ್ ಅವರನ್ನು ಬಿಜೆಪಿ ಹಿರಿಯ ಮುಖಂಡ ರಾಚನ್ನಗೌಡ ಮುದ್ನಾಳ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಚಣ್ಣಗೌಡ ಮುದ್ನಾಳ ಅವರು, ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಂದೀಪ್ ಬಾಡದ್ ಅಪಾರ ಪರಿಶ್ರಮದಿಂದ ಅಧ್ಯಯನ ಮಾಡಿದ್ದಾರೆ. ಅವರ ಸಾಧನೆಯಿಂದ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಇಂತಹ ಸಾಧಕರನ್ನು ನೋಡಿ ಜಿಲ್ಲೆಯ ಯುವಕರು ಪ್ರೇರಣೆ ಪಡೆದು ಮುಂದಕ್ಕೆ ಬರಬೇಕು ಎಂದು ಹೇಳಿದರು. ಯಾದಗಿರಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು ಹೇಳಲಾಗುತ್ತದೆ. ಆದರೆ ಸಂದೀಪ್ ಬಾಡದ್ ಅವರಂತಹ ಪ್ರತಿಭೆಗಳು ಆ ಮಾತು ತಪ್ಪು ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಜಿಲ್ಲೆಯ ಯುವಕರಿಗೆ ಅವರು ಮಾದರಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಭೀಮಣ್ಣಗೌಡ ಕ್ಯಾತನಾಳ, ಡಾ.ಸುಪುತ್ರರೆಡ್ಡಿ, ವೆಂಕಟರಡ್ಡಿ ತಂಗಡಗಿ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 10 Mar 2026 11:32 pm

ಸುರಪುರ | ಕ್ಷೇತ್ರದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಗಮನ ಸೆಳೆದ ಶಾಸಕ ರಾಜಾ ವೇಣುಗೋಪಾಲ ನಾಯಕ

ಸುರಪುರ: ಬಜೆಟ್ ಅಧಿವೇಶನದಲ್ಲಿ ಕ್ಷೇತ್ರದ ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಪ್ರಶ್ನೆ ಕೇಳುವ ಮೂಲಕ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಅವರು ಮುಖ್ಯವಾಗಿ ಸುರಪುರ ವಿಧಾನಸಭಾ ಕ್ಷೇತ್ರದ ರಸ್ತೆಗಳ ಸಮಸ್ಯೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಚುಕ್ಕಿ ಗುರುತಿನ ಪ್ರಶ್ನೆ ಕೇಳಿದರು. ಅಂತರ ಜಿಲ್ಲಾ ಸಂಪರ್ಕ ರಸ್ತೆಗಳ ಸ್ಥಿತಿ ಹಾಗೂ ಅವುಗಳ ದುರಸ್ತಿ ಕಾರ್ಯದ ಕುರಿತು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಸಚಿವರು ಲಿಖಿತ ಉತ್ತರ ನೀಡಿ, ವಿವಿಧ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕಿಲೋಮೀಟರ್‌ಗಳ ಅಂಕಿ–ಅಂಶಗಳೊಂದಿಗೆ ವಿವರ ನೀಡಿದ್ದಾರೆ. ಇದಲ್ಲದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಕೂಡ ಪ್ರಶ್ನೆ ಕೇಳಿದ ಶಾಸಕರು, ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳ ಕೊರತೆ ಇರುವುದನ್ನು ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಿರುವ ಎರಡು ವಸತಿ ನಿಲಯಗಳ ಜೊತೆಗೆ ಹೊಸ ವಸತಿ ನಿಲಯ ಆರಂಭಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ವಿಷಯಕ್ಕೂ ಸಂಬಂಧಿಸಿ ಉಪನ್ಯಾಯಾಧಿಕಾರಿಗಳ ಕಚೇರಿಯ ಸಮಸ್ಯೆಗಳ ಕುರಿತು ಶಾಸಕರು ಗಮನ ಸೆಳೆದಿದ್ದಾರೆ. ಒಟ್ಟಾರೆಯಾಗಿ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಿತ ಸಚಿವರ ಗಮನ ಸೆಳೆಯಲು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ನಿರಂತರವಾಗಿ ಪ್ರಯತ್ನಿಸುತ್ತಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 10 Mar 2026 11:28 pm

ಉಚ್ಚಿಲ: ಅಬ್ದುಲ್ ರಝಾಕ್ YS​ಗೆ 'ಪರ್ಸನಾಲಿಟಿ ಆಫ್ ದಿ ಈಯರ್-2026' ಪ್ರಶಸ್ತಿ ಪ್ರದಾನ

ಉಚ್ಚಿಲ: ತವಕ್ಕಲ್ ಓವರ್ಸಿಸ್ ಹಾಗು ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಪ್ರತಿ ವರ್ಷ ರಮಝಾನ್ ಸಂದರ್ಭ ನೀಡಲಾಗುವ 'ಪರ್ಸನಾಲಿಟಿ ಆಫ್ ದಿ ಈಯರ್-2026 (ವರ್ಷದ ಶ್ರೇಷ್ಠ ವ್ಯಕ್ತಿ)' ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಉಚ್ಚಿಲದ ಅಬ್ದುಲ್ ರಝಾಕ್ YS ಅವರಿಗೆ ನೀಡಿ ಗೌರವಿಸಲಾಯಿತು. ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ, ಜನರ ಕಷ್ಟಕ್ಕೆ ತಕ್ಷಣ ಸ್ಪಂದನೆ ಮಾಡುವಂತ ವ್ಯಕ್ತಿತ್ವದ ವರಾಗಿರುವ ಅಬ್ದುಲ್ ರಝಾಕ್, ತವಕ್ಕಲ್ ಓವರ್ಸಿಸ್ ನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ. ದುಬೈಯಲ್ಲಿ ಹಲವಾರು ವರ್ಷಗಳ ಕಾಲ 'ತವಕ್ಕಲ್ ಓವರ್ಸಿಸ್ ದುಬೈ'ನಲ್ಲಿ ಸೇವೆ ಸಲ್ಲಿಸಿ, ಬಳಿಕ ತಾಯಿನಾಡಿಗೆ ತೆರಳಿ, ಅಲ್ಲಿಯೂ ಸಮುದಾಯ ಹಾಗು ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿರುವ ಅಬ್ದುಲ್ ರಝಾಕ್ ಅವರ ಸೇವೆಯನ್ನು ಗುರುತಿಸಿ ಸೋಮವಾರ ಉಚ್ಚಿಲದ ತವಕ್ಕಲ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 'ಪರ್ಸನಾಲಿಟಿ ಆಫ್ ದಿ ಈಯರ್-2026' ಪ್ರಶಸ್ತಿ ನೀಡಲಾಯಿತು. 'Personality of the Year ' ಪ್ರಶಸ್ತಿಯನ್ನು ಬೇರೆ ಬೇರೆ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧಕರಿಗೆ ನೀಡಲಾಗು ತ್ತಿದ್ದು, ಪ್ರಶಸ್ತಿ ಘೋಷಣೆಗೂ ಮೊದಲು ವಯಸ್ಸನ್ನು(ಪುರುಷ ಅಥವಾ ಮಹಿಳೆ) ಪರಿಗಣಿಸದೆ ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ನಾಮನಿರ್ದೇಶನ ಮಾಡಿ, ಬಳಿಕ ಸದಸ್ಯರ ಸಭೆಯಲ್ಲಿ ಮತದಾನದ ಮೂಲಕ ಆಯ್ಕೆ ಮಾಡಲಾಗು ತ್ತದೆ. ಪ್ರಶಸ್ತಿ ವಿಜೇತರಿಗೆ ಸನ್ಮಾನ ಜೊತೆಗೆ 25,000 ರೂ. ನಗದು ಬಹುಮಾನ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನದ ವೇಳೆ ಉಚ್ಚಿಲ ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಹರ್ಷ್ ಇಬ್ರಾಹಿಂ, ಗೌರವಾಧ್ಯಕ್ಷ ಉಸ್ಮಾನ್ ಕಟ್ಟಿಂಗೇರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕುಚ್ಚಿಕಾಡ್, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್, ಶಾಬಾನ್ ಮೊಯಿದಿನ್, ಕೋಶಾಧಿಕಾರಿ ಅಹ್ಮದ್ ಗುಲಾಮ್, ತವಕ್ಕಲ್ ಓವರ್ಸಿಸ್ ಗೌರವಾಧ್ಯಕ್ಷ ಮೊಹಮ್ಮದ್ ದಾವೂದ್, ಸದಸ್ಯ ಇಬ್ರಾಹಿಂ ದಾವೂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.    

ವಾರ್ತಾ ಭಾರತಿ 10 Mar 2026 11:26 pm

ಪಶ್ಚಿಮ ಏಶ್ಯ ಬಿಕ್ಕಟ್ಟು | ವಿಮಾನ ಪ್ರಯಾಣ ದರಕ್ಕೆ ಸರ್ಚಾರ್ಜ್ ವಿಧಿಸಲು ಏರ್ ಇಂಡಿಯಾ ನಿರ್ಧಾರ

ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವೈಮಾನಿಕ ಇಂಧನ (ಎಟಿಎಫ್)ದ ದರದಲ್ಲಿ ಭಾರೀ ಏರಿಕೆಯಾಗಿರುವುದರಿಂದ ತನ್ನ ದೇಶಿಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಪ್ರಯಾಣದ ಮೇಲೆ ಇಂಧನ ಮೇಲ್ತೆರಿಗೆ (ಸರ್ಚಾರ್ಜ್)ಯನ್ನು ವಿಧಿಸುವುದಾಗಿ ಏರ್ ಇಂಡಿಯಾ ಮಂಗಳವಾರ ತಿಳಿಸಿದೆ. ಮಾರ್ಚ್ 2026ರ ಆರಂಭದಲ್ಲಿ ಪಶ್ಚಿಮ ಏಶ್ಯದಲ್ಲಿ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಆರಂಭಿಸಿದ ಬಳಿಕ ತೈಲ ಪೂರೈಕೆಗೆ ಅಡಚಣೆಯಾಗುತ್ತಿದ್ದು, ತೈಲ ದರ ಭಾರೀ ಏರಿಕೆ ಕಂಡಿದೆ. ಪರಿಷ್ಕೃತ ಮೇಲ್ತೆರಿಗೆಯನ್ನು ತನ್ನ ವಿವಿಧ ವಿಮಾನಯಾನ ಮಾರ್ಗ ಜಾಲಗಳಿಗೆ ಮೂರು ಹಂತಗಳಲ್ಲಿ ಜಾರಿಗೆ ತರುವುದಾಗಿ ಏರ್ ಇಂಡಿಯಾ ತಿಳಿಸಿದೆ.

ವಾರ್ತಾ ಭಾರತಿ 10 Mar 2026 11:26 pm

ಯಾದಗಿರಿ | ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ : ಮುದ್ನಾಳ್

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ

ವಾರ್ತಾ ಭಾರತಿ 10 Mar 2026 11:23 pm

ಪ್ರಯಾಣಿಕನ ಫೋನ್ ನಲ್ಲಿ ಆಝಾನ್ ಅಲರಾಂ; ‘ಬಾಂಬ್ ಬೆದರಿಕೆ’ ಎಂದು ತಪ್ಪಾಗಿ ಗ್ರಹಿಸಿ ವಿಮಾನದಿಂದ ಕೆಳಗಿಳಿಸಿದ ಸೌತ್‌ವೆಸ್ಟ್ ಏರ್‌ಲೈನ್ಸ್‌!

ವಾಷಿಂಗ್ಟನ್: ಸೌತ್‌ವೆಸ್ಟ್ ಏರ್‌ಲೈನ್ಸ್‌ನ ವಿಮಾನದಲ್ಲಿದ್ದ ಪ್ರಯಾಣಿಕನ ಫೋನ್ ನಲ್ಲಿ ಆಝಾನ್ ಅಲರಾಂ ಆಗಿದ್ದನ್ನು ‘ಬಾಂಬ್ ಬೆದರಿಕೆ’ ಎಂದು ತಪ್ಪಾಗಿ ಅರ್ಥೈಸಿದ ಪರಿಣಾಮ, ಆತನನ್ನು ವಿಮಾನದಿಂದ ಕೆಳಗಿಳಿಸಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಫ್ಲೋರಿಡಾಕ್ಕೆ ತೆರಳುತ್ತಿದ್ದ ವಿಮಾನವನ್ನು ಈ ಘಟನೆಯ ಬಳಿಕ ಜಾರ್ಜಿಯಾ ರಾಜ್ಯದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ವಿಮಾನದಲ್ಲಿದ್ದ ಕೆಲ ಪ್ರಯಾಣಿಕರು ಆ ವ್ಯಕ್ತಿಯ ಫೋನ್ ಅಲರಾಂ ಅನ್ನು ತಪ್ಪಾಗಿ ಗ್ರಹಿಸಿ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡರು. ವಿಮಾನವನ್ನು ಭೂಸ್ಪರ್ಶ ಮಾಡಿಸಿದ ಬಳಿಕ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಯಾವುದೇ ರೀತಿಯ ಬೆದರಿಕೆ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ಈ ಘಟನೆ ಸಂಪೂರ್ಣವಾಗಿ ‘ತಪ್ಪು ಗ್ರಹಿಕೆ’ಯಿಂದ ಸಂಭವಿಸಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. A passenger on a Southwest Airlines flight was removed after their call to prayer was mistaken for a bomb threat. Officials later called it a “misunderstanding” after the Florida-bound plane made an emergency landing in Georgia. pic.twitter.com/VdDqLM1GfU — Al Jazeera English (@AJEnglish) March 10, 2026

ವಾರ್ತಾ ಭಾರತಿ 10 Mar 2026 11:22 pm

ಅಂಗಾಂಗ ಕಸಿ | 2025ರಲ್ಲಿ 217 ನೋಂದಾಯಿತ ಆಸ್ಪತ್ರೆಗಳು ಎನ್ಆರ್‌ಪಿಗೆ ದತ್ತಾಂಶ ವರದಿ ಮಾಡಲು ವಿಫಲ

ಹೊಸದಿಲ್ಲಿ: ಅಂಗಾಂಗ ಕಸಿ ಮಾಡುತ್ತಿರುವ ಒಟ್ಟು 804 ನೋಂದಾಯಿತ ಆಸ್ಪತ್ರೆಗಳಲ್ಲಿ 217 ಆಸ್ಪತ್ರೆಗಳು 2025ರಲ್ಲಿ ರಾಷ್ಟ್ರೀಯ ನೋಂದಣಿ ಪೋರ್ಟಲ್ (ಎನ್ಆರ್ಪಿ)ನಲ್ಲಿ ದತ್ತಾಂಶವನ್ನು ವರದಿ ಮಾಡಲು ವಿಫಲವಾಗಿವೆ. ಈ ಆಸ್ಪತ್ರೆಗಳ ವಿರುದ್ಧ ಆಯಾ ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳಲಿವೆ ಎಂದು ಕೇಂದ್ರ ಆರೋಗ್ಯ ಖಾತೆಯ ಸಹಾಯಕ ಸಚಿವ ಪ್ರತಾಪ್ರಾವ್ ಜಾಧವ್ ರಾಜ್ಯಸಭೆಗೆ ಮಂಗಳವಾರ ತಿಳಿಸಿದ್ದಾರೆ. ಅಂಗಾಂಗ ಕಸಿ ನಡೆಸಲು ಆಸ್ಪತ್ರೆಗಳ ನೋಂದಣಿಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸೂಕ್ತ ಪ್ರಾಧಿಕಾರ ಮಾಡುತ್ತದೆ ಎಂದು ಜಾಧವ್ ಅವರು ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದರು. ಮಾನವ ಅಂಗಾಂಗ ಹಾಗೂ ಅಂಗಾಂಶ ಕಸಿ ಕಾಯ್ದೆ, 1984 ಹಾಗೂ ಅದರ ಅಡಿಯಲ್ಲಿ ರೂಪಿಸಲಾದ ನಿಯಮಗಳ ಪ್ರಕಾರ ಅಂತಹ ಆಸ್ಪತ್ರೆಗಳ ವಿರುದ್ಧ ನಿಯಂತ್ರಣ ಕ್ರಮಗಳನ್ನು ರಾಜ್ಯ ಸರಕಾರಗಳು ತೆಗೆದುಕೊಳ್ಳುತ್ತದೆ ಎಂದು ಜಾಧವ್ ಹೇಳಿದ್ದಾರೆ. ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ನೋಂದಣಿ ಪೋರ್ಟಲ್ 2015ರಿಂದ ಕಾರ್ಯನಿರ್ವಹಿಸುತ್ತಿದೆ. ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ಸಂಸ್ಥೆಯ ವೆಬ್ಸೈಟ್ ಮೂಲಕ ಆಸ್ಪತ್ರೆಗಳು ಹಾಗೂ ಸಂಸ್ಥೆಗಳು ಸೇರಿದಂತೆ ಅಧಿಕೃತ ಬಳಕೆದಾರರಿಗೆ ಇದು ಲಭ್ಯವಾಗುತ್ತದೆ. 2026 ಮಾರ್ಚ್ 3ರ ವರೆಗೆ ಆಸ್ಪತ್ರೆಗಳು ಹಾಗೂ ಕಸಿ ಕೇಂದ್ರಗಳು ರಾಷ್ಟ್ರೀಯ ಅಂಗಾಂಗ ಹಾಗೂ ಅಂಗಾಂಶ ಕಸಿ ಸಂಸ್ಥೆಯ ರಾಷ್ಟ್ರೀಯ ನೋಂದಣಿ ಪೋರ್ಟಲ್ ನಲ್ಲಿ ವರದಿ ಮಾಡಿದ ದತ್ತಾಂಶದ ಪ್ರಕಾರ ದೇಶದಲ್ಲಿ 89,839 ಜನರು ಪ್ರಮುಖ ಅಂಗಾಂಶ ಕೃಷಿಗಾಗಿ ಕಾಯುವವರ ಪಟ್ಟಿಯಲ್ಲಿ ಇದ್ದಾರೆ. 2025ರಲ್ಲಿ ದೇಶದಲ್ಲಿ 20,019 ಅಂಗಾಂಶ ಕಸಿ ಮಾಡಲಾಗಿದೆ ಎಂದು ಅವರು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದರು.

ವಾರ್ತಾ ಭಾರತಿ 10 Mar 2026 11:11 pm

ಗುರುಮಠಕಲ್ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದ ಬೃಹತ್ ಪ್ರತಿಭಟನೆ

ಗುರುಮಠಕಲ್: ನ್ಯಾಯಬದ್ಧ ಹಾಗೂ ಸಂವಿಧಾನಾತ್ಮಕ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲೂಕಿನ ಮಾದಿಗ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚನ್ನಮಲ್ಲಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಾದಿಗ ಸಮುದಾಯದ ಮುಖಂಡರು ಮತ್ತು ಸದಸ್ಯರು ಸೇರಿ ಘೋಷಣೆಗಳೊಂದಿಗೆ ಜಾಥಾ ನಡೆಸಿದರು. ಬಳಿಕ ಬಸವೇಶ್ವರ ವೃತ್ತದ ಬಳಿ ರಸ್ತೆ ಹಾಗೂ ಹೈದರಾಬಾದ್ ಮುಖ್ಯ ರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕೆ. ಬಿ. ವಾಸು, ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ದೇವದಾಸ್ ಮಾತನಾಡಿ, ರಾಜ್ಯ ಸರ್ಕಾರ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಆದರೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಮತ್ತು ಬಡ್ತಿ ಮೀಸಲಾತಿಯನ್ನು ಸರ್ಕಾರಿ ನೌಕರರಿಗೂ ಅನ್ವಯಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೂವತ್ತು ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಸರ್ಕಾರ ನಮ್ಮ ಸಮುದಾಯದ ಬೇಡಿಕೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು. ಒಳಮೀಸಲಾತಿ ಜಾರಿಗೆ ತರದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರುಗಳು ಆಶಾನ್ನ ಬುದ್ಧ ಪುರಸಭೆ ಮಾಜಿ ಸದಸ್ಯರು. ಭೀಮಶಪ್ಪ ಗುಡಸೆ ಪುರಸಭೆ ಮಾಜಿ ಅಧ್ಯಕ್ಷ ಹನುಮಂತು ಶನಿವಾರಮ್ ಅಶೋಕ್ ಶನಿವಾರಮ್ kdss ಅಧ್ಯಕ್ಷ. ರವಿ ಬುರನೋಳ್ ಮಾದಿಗ ದಂಡೋರ ತಾಲೂಕು ಅಧ್ಯಕ್ಷ. ಭೀಮಶಪ್ಪ ಕೆಳಮನಿ ಮಾಣಿಕ್ ಮುಕ್ಕಿಡಿ ಡಾ. ಕೃಷ್ಣ ಚೇಪೆಟ್ಲಾ ಕಿಷ್ಟಪ್ಪ ಸೈಪೋಳ ಮಲ್ಲಿಕಾರ್ಜುನ ಸೈದಪೋಳ ಕರಣಪ್ಪ ಎಂ ಟಿ ಪಲ್ಲಿ ನಾಗೇಶ್ ಚಂಡರಿಕಿ ಗುಂಡೆಸ ಗಜಾರಕೋಟ ಇನ್ನು ಅನೇಕ ಮಾದಿಗ ಸಮಾಜದ ಮುಖಂಡರು ಮತ್ತು ಹೋರಾಟಗಾರರು ಭಾಗಿಯಾಗಿದ್ದರು

ವಾರ್ತಾ ಭಾರತಿ 10 Mar 2026 11:04 pm

LPG ಪೂರೈಕೆ, ವಿತರಣೆಗೆ ಕೇಂದ್ರ ಸರಕಾರದ ನಿಯಂತ್ರಣ; ಮನೆ,ವಾಹನಗಳಿಗೆ LPG ಪೂರೈಕೆ ಶೇ.100ರಷ್ಟು ಗ್ಯಾರಂಟಿ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಭುಗಿಲೆದ್ದ ಬಳಿಕ ಜಾಗತಿಕ ಮಟ್ಟದಲ್ಲಿ ತೈಲ ಹಾಗೂ ನೈಸರ್ಗಿಕ ಅನಿಲ ಸಾಗಾಟದಲ್ಲಿ ವ್ಯತ್ಯಯವುಂಟಾಗಿರುವ ಹಿನ್ನೆಲೆಯಲ್ಲಿ ಅವುಗಳ ಪೂರೈಕೆ ಹಾಗೂ ವಿತರಣೆಯನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಆದ್ಯತಾ ವಲಯಗಳಿಗೆ ನೈಸರ್ಗಿಕ ಅನಿಲವು ಅಬಾಧಿತವಾಗಿ ದೊರೆಯುವುದನ್ನು ಖಾತರಿಪಡಿಸಲು ಅತ್ಯವಶ್ಯಕ ಸಾಮಾಗ್ರಿಗಳ ಕಾಯ್ದೆಯ ನಿಯಮಗಳನ್ನು ಬಳಸಿಕೊಂಡಿರುವುದಾಗಿ ಹೇಳಿದೆ. ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯವು ಈ ಬಗ್ಗೆ ಆದೇಶವೊಂದನ್ನು ಹೊರಡಿಸಿದ್ದು, ಹಾರ್ಮುಝ್ ಜಲಸಂಧಿಯ ಮೂಲಕ ಹಾದುಹೋಗುವ ದ್ರವೀಕೃತ ನೈಸರ್ಗಿಕ ಇಂಧನದ ಸಾಗಾಟದ ಮೇಲೆ ಪರಿಣಾಮವುಂಟಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ನೈಸರ್ಗಿಕ ಅನಿಲವನ್ನು ಮನೆ, ಆಸ್ಪತ್ರೆ ಮತ್ತಿತರ ಅತ್ಯವಶ್ಯಕ ವಲಯಗಳಿಗೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದೆ. ನೂತನ ರಾಷ್ಟ್ರೀಯ ನೈಸರ್ಗಿಕ ಅನಿಲ (ಪೂರೈಕೆ ನಿಯಂತ್ರಣ) ಆದೇಶ 2026ರ ಪ್ರಕಾರ ಮನೆಬಳಕೆಯ ಅಡುಗೆ ಅನಿಲ, ಸಾರಿಗೆಗೆ ಬಳಸಲಾಗುವ ಸಿಎನ್ಜಿ, ಎಲ್ಪಿಜಿ ಉತ್ಪಾದನೆ ಹಾಗೂ ಅತ್ಯಗತ್ಯ ಕೊಳವೆಮಾರ್ಗಗಳ ನಿರ್ವಹಣೆಗಾಗಿ ನೈಸರ್ಗಿಕ ಅನಿಲದ ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ಆದ್ಯತಾ ವಲಯಗಳಿಗೆ ಅವುಗಳ ಅವಶ್ಯಕತೆಯ ಶೇ.100ರಷ್ಟು ಅಡುಗೆ ಅನಿಲವನ್ನು ಪೂರೈಕೆ ಮಾಡಲಾಗುತ್ತದೆ. ರಸಗೊಬ್ಬರ ಕಾರ್ಖಾನೆಗಳನ್ನು ದ್ವಿತೀಯ ಆದ್ಯತಾ ವಲಯವಾಗಿ ಪರಿಗಣಿಸಲಾಗಿದ್ದು, ಅವುಗಳಿಗೆ ಸರಾಸರಿ ಅಗತ್ಯದ ಶೇ.70ರಷ್ಟು ಅಡುಗೆ ಅನಿಲವನ್ನು ಪೂರೈಕೆ ಮಾಡಲಾಗುವುದು. ಕೈಗಾರಿಕಾ ವಲಯದ ಗ್ರಾಹಕರು ಸರಾಸರಿ ಅವಶ್ಯಕತೆಯ ಶೇ.80ರಷ್ಟು ಅಡುಗೆ ಅನಿಲವನ್ನು ಪಡೆಯಲಿದ್ದಾರೆ. ಈ ಆದ್ಯತಾ ವಲಯಗಳಿಗೆ ನೈಸರ್ಗಿಕ ಅನಿಲವು ನಿಯಮಿತ ಪೂರೈಕೆಯನ್ನು ಕಾಪಾಡಿಕೊಳ್ಳಲು, ಪೆಟ್ರೋಕೆಮಿಕಲ್ ಕಾರ್ಖಾನೆಗಳು ಹಾಗೂ ನಿರ್ದಿಷ್ಟ ವಿದ್ಯುತ್ ಸ್ಥಾವರಗಳು ಸೇರಿದಂತೆ ಕೆಳ ಆದ್ಯತಾ ವಲಯದ ಬಳಕೆದಾರರಿಗೆ ಪೂರೈಕೆಯಾಗುವ ನೈಸರ್ಗಿಕ ಅನಿಲವನ್ನು ತಿರುಗಿಸಲಾಗುವುದು.

ವಾರ್ತಾ ಭಾರತಿ 10 Mar 2026 11:00 pm

ಬೆಂಗಳೂರಿನಲ್ಲಿ ಕಂಬಳ ಪ್ರದರ್ಶನಕ್ಕೆ ಹಸಿರು ನಿಶಾನೆ: ಪೇಟಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

Supreme Court On Bengaluru Kambala- ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕ್ರೀಡೆ ನಡೆಸುವುದನ್ನು ಪ್ರಶ್ನಿಸಿ 'ಪೇಟಾ' ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಕರಾವಳಿಯ ಈ ಸಾಂಪ್ರದಾಯಿಕ ಸಂಸ್ಕೃತಿಯನ್ನು ರಾಜ್ಯದ ಇತರ ಭಾಗದ ಜನರಿಗೂ ಪರಿಚಯಿಸುವುದರಲ್ಲಿ ತಪ್ಪೇನಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ತೀರ್ಪಿನಿಂದಾಗಿ ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಇದ್ದ ಕಾನೂನು ಅಡ್ಡಿ ಇದೀಗ ನಿವಾರಣೆಯಾದಂತಾಗಿದೆ. ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ಕಾಯಿದೆಯ ಮೂಲಕ ತಡೆಗಟ್ಟಬಹುದೇ ಹೊರತು, ಕ್ರೀಡೆಯನ್ನು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತಗೊಳಿಸಲಾಗದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ವಿಜಯ ಕರ್ನಾಟಕ 10 Mar 2026 10:58 pm

ಅಡುಗೆ ಅನಿಲ ಪೂರೈಕೆಯಲ್ಲಿ ಅಡಚಣೆ: ಐಪಿಎಲ್ ಮೇಲೂ ಪರಿಣಾಮ!

ಮುಂಬೈ: ಇನ್ನೆರಡು ವಾರಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಗೊಳ್ಳಲಿದ್ದು, ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಗಳ ಪೂರೈಕೆಯಲ್ಲಿ ಆಗಿರುವ ಅಡಚಣೆಯು ದೊಡ್ಡ ಸವಾಲಾಗಿದೆ. ಅಡುಗೆ ಅನಿಲ ಸಿಲಿಂಡರ್ಗಳ ಅನುಪಸ್ಥಿತಿಯಲ್ಲಿ ರೆಸ್ಟೋರೆಂಟ್ ಗಳು, ಹೊಟೇಲ್ ಗಳು ಮತ್ತು ಆಹಾರ ಉದ್ಯಮಗಳು ಮುಚ್ಚುವುದರಿಂದ ಐಪಿಎಲ್ ನಡೆಸುವುದು ಕಷ್ಟಕರವಾಗುತ್ತದೆ. ಹಾಗಾಗಿ, ಈ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಅಗತ್ಯ ಬಿದ್ದರೆ ಪರ್ಯಾಯ ಕ್ರಮಗಳನ್ನು ಅನ್ವೇಷಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ. ಐಪಿಎಲ್ ಮಾರ್ಚ್ 28ರಂದು ಆರಂಭಗೊಳ್ಳಲು ನಿಗದಿಯಾಗಿದೆ. ಫೈನಲ್ ಪಂದ್ಯವು ಮೇ 31ರಂದು ನಡೆಯಲಿದೆ. ‘‘ಪರಿಸ್ಥಿತಿಯು ನಿರಂತರವಾಗಿ ಬದಲಾಗುತ್ತಿದೆ. ಮಾರ್ಚ್ 28ರ ವೇಳೆಗೆ ಪರಿಸ್ಥಿತಿಯು ನಿಯಂತ್ರಣಕ್ಕೆ ಬರಲಿದೆ ಎಂದು ನಾವು ಆಶಿಸುತ್ತೇವೆ. ಆದರೆ, ಇದು ಹೀಗೆಯೇ ಮುಂದುವರಿದರೆ ಬೇರೆ ಆಯ್ಕೆಗಳತ್ತ ನೋಡಬೇಕಾಗುತ್ತದೆ. ಯಾಕೆಂದರೆ ಇದು ತಂಡಗಳು ಮತ್ತು ಆಟಗಾರರ ಮೇಲೆ ಮಾತ್ರವಲ್ಲ, ಪ್ರೇಕ್ಷಕರ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ, ಈ ವಿಷಯದ ಮೇಲೆ ನಾವು ನಿಕಟ ಗಮನ ಇಟ್ಟಿದ್ದೇವೆ’’ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ‘ಸ್ಪೋರ್ಟ್ಸ್ ಸ್ಟಾರ್’ಗೆ ತಿಳಿಸಿದರು. ತಮ್ಮಲ್ಲಿ ಒಂದು ಅಥವಾ ಎರಡು ದಿನಗಳಿಗೆ ಮಾತ್ರ ಸಾಕಾಗುವಷ್ಟು ಅಡುಗೆ ಅನಿಲವಿದೆ ಎಂದು ಬೆಂಗಳೂರಿನಲ್ಲಿ ಹೊಟೇಲ್ ಮಾಲೀಕರ ಸಂಘ ಹೇಳಿದೆ. ಮುಂಬೈಯಲ್ಲಿ, ಅಡುಗೆ ಅನಿಲ ಕೊರತೆಯಿಂದಾಗಿ ಈಗಾಗಲೇ 20 ಶೇಕಡ ಹೊಟೇಲ್ ಗಳು ಮತ್ತು ರೆಸ್ಟೋರೆಂಟ್ ಗಳು ಮುಚ್ಚಿವೆ. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ನಡೆಸುತ್ತಿರುವ ಜಂಟಿ ದಾಳಿಯಿಂದಾಗಿ ಪಶ್ಚಿಮ ಏಶ್ಯದಿಂದ ಬರುವ ತೈಲ ನಿಂತುಹೋಗಿದೆ.

ವಾರ್ತಾ ಭಾರತಿ 10 Mar 2026 10:57 pm

Hubballi | ವಿಶ್ವ ಶಾಂತಿಗಾಗಿ ತಕ್ಷಣವೇ ಯುದ್ಧ ನಿಲ್ಲಿಸಲು ಆಗ್ರಹ; ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರಿಂದ ಧರಣಿ

ಹುಬ್ಬಳ್ಳಿ : ಇರಾನ್ ಮತ್ತು ಜಗತ್ತಿನ ಇತರ ಭಾಗಗಳ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರಕಾರ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳವಾರ ಹುಬ್ಬಳ್ಳಿಯ ಡಾ. ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ನೇತೃತ್ವದಲ್ಲಿ ‘ವಿಶ್ವ ಶಾಂತಿಗಾಗಿ ಯುದ್ಧ ವಿರೋಧಿಸಿ’ ಕಾರ್ಮಿಕರ ಪ್ರದರ್ಶನ ನಡೆಯಿತು. ಈ ವೇಳೆ ಮಾತನಾಡಿದ ಸಿಐಟಿಯು ಅಖಿಲ ಭಾರತ ಕಾರ್ಯದರ್ಶಿ ಕೆ.ಎನ್.ಉಮೇಶ್, ಇರಾನ್ ಮೇಲಿನ ಯುಎಸ್-ಇಸ್ರೇಲ್ ಮಿಲಿಟರಿ ಆಕ್ರಮಣವನ್ನು ಬಲವಾಗಿ ಖಂಡಿಸಿದರು. ಜಾಗತಿಕವಾಗಿ ತೈಲೋತ್ಪನ್ನಗಳ ಮೇಲೆ ಅಧಿಪತ್ಯ ಸಾಧಿಸಲು ಸಲುವಾಗಿ ಅಮೆರಿಕ ಹೀನ ಕೃತ್ಯಕ್ಕೆ ಇಳಿದಿದ್ದು, ವೆನಿಝುವೆಲಾ, ಲಿಬಿಯಾ, ಇರಾನ್ ಮೇಲೆ ದಾಳಿ ನಡೆಸಿದೆ. ಇದರಿಂದ ಭಾರತದ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ. ಹೀಗಾಗಿ ಈ ಸಾಮ್ರಾಜ್ಯಶಾಹಿ ಯುದ್ಧವನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಮಾತನಾಡಿ, ಅಮೆರಿಕ ಏಕಪಕ್ಷೀಯ ಅಸಮಂಜಸ ಸುಂಕ ಯುದ್ಧದ ನಂತರ, ಈಗ ಇರಾನ್ ಮೇಲೆ ಏಕಪಕ್ಷೀಯ ಬಾಂಬ್ ದಾಳಿಯು ಇಡೀ ಮಧ್ಯಪ್ರಾಚ್ಯವನ್ನು ಯುದ್ಧದ ಸ್ಥಿತಿಗೆ ಮತ್ತು ಇಡೀ ಜಗತ್ತನ್ನು ಆರ್ಥಿಕ ಪ್ರಕ್ಷುಬ್ಧತೆಯ ಸ್ಥಿತಿಗೆ ತಳ್ಳಿದೆ. ನಾಗರಿಕ ಮೂಲಸೌಕರ್ಯ, ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಮತ್ತು ನಗರ ಪ್ರದೇಶಗಳನ್ನು ಹೇಡಿತನದಿಂದ ಗುರಿಯಾಗಿಸಿಕೊಂಡಿರುವುದು ಜಿನೇವಾ ಸಮಾವೇಶಗಳು ಸೇರಿದಂತೆ ಅಂತರ್‌ರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸುತ್ತದೆ. ಇರಾನ್‌ನ ಸರ್ವೋಚ್ಚ ನಾಯಕರಾಗಿದ್ದ ಆಯತುಲ್ಲಾ ಖಾಮಿನೈ ಮತ್ತು ಅನೇಕ ನಾಯಕರು ಕೊಲ್ಲಲ್ಪಟ್ಟಿದ್ದಾರೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ಗುರಿಯಾಗಿಟ್ಟುಕೊಂಡು ನಡೆಸಿದ ಬಾಂಬ್ ದಾಳಿಯಲ್ಲಿ 165 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಇದು ಅಪರಾಧಿ ಆಡಳಿತಗಳ ಕ್ರೌರ್ಯ ಮತ್ತು ಅನಾಗರಿಕತೆಯ ವಿಸ್ತರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಮಹೇಶ ಪತ್ತಾರ, ಬಿ.ಐ.ಈಳಿಗೇರ, ತಿಲಕ ಗೌಡ, ಯಮುನಾ ಗಾಂವಕರ, ಗುರುಸಿದ್ದಪ್ಪ ಅಂಬಿಗೇರ, ಬಾಬಾಜಾನ ಮುಧೋಳ, ಚಿದಾನಂದ ಸವದತ್ತಿ, ಮಂಜುಳಾ ಪವಾರ, ಬಸೀರ ಮುಧೋಳ, ದೊಡ್ಡವ್ವ ಪೂಜಾರಿ, ಮಹೇಶ ಹುಲಗೋಡ, ಜಯಶ್ರೀ, ದೊಡ್ಡವ್ವ ಪೂಜಾರಿ, ಮಂಜುನಾಥ ಹುಜರಾತಿ, ಮಂಜುಳಾ ಪವಾರ ಹಾಗು ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು. ಎರಡು ವರ್ಷಗಳ ಹಿಂದೆ ಫೆಲೆಸ್ತೀನ್ ಜನರ ಮೇಲೆ ಇಸ್ರೇಲ್ ನಡೆಸಿದ ದಾಳಿಯಿಂದಾಗಿ 70 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದು ಅಮೆರಿಕ ಮತ್ತು ಇಸ್ರೇಲ್ ಯುದ್ಧ ದಾಹಕ್ಕೆ ಉದಾಹರಣೆ ಆಗಿದೆ. ಸಮಾಜವಾದಿ ದೇಶಗಳ ಅನುಪಸ್ಥಿತಿಯಿಂದಾಗಿ ಅಮೆರಿಕನ್ ಸಾಮ್ರಾಜ್ಯಶಾಹಿ ಏಕಚಕ್ರಾಧಿಪತ್ಯದಿಂದಾಗಿ ಜಗತ್ತು ನಲುಗಿ ಹೋಗಿದೆ. ಇದರ ವಿರುದ್ಧ ಜಾಗತಿವಾಗಿ ಪ್ರತಿರೋಧ ಬೆಳೆದು ಬರಬೇಕು. ಸನತ್ ಕುಮಾರ್ ಬೆಳಗಲಿ, ಹಿರಿಯ ಪತ್ರಕರ್ತ

ವಾರ್ತಾ ಭಾರತಿ 10 Mar 2026 10:57 pm

ಶಹಾಬಾದ್ | ರೈಲು ಹಳಿ ದಾಟಲು ಸಂಕಷ್ಟ: ಮೇಲ್ಸೇತುವೆ ನಿರ್ಮಾಣಕ್ಕೆ ಯಲ್ಲಾಲಿಂಗ ಹೈಯ್ಯಳಕರ್ ಆಗ್ರಹ

ಶಹಾಬಾದ್: ನಗರಸಭೆ ವ್ಯಾಪ್ತಿಯ ಕೊಳಸಾ ಫೈಲ್, ದಕ್ಕಾ ತಾಂಡಾ, ಚುನ್ನಾ ಭಟ್ಟಿ, ಬಂಜಾರಾ ನಗರ, ಸಿದ್ಧಾರ್ಥ ನಗರ, ಬಾರಿ ನಗರ ಹಾಗೂ ರಾಂಭೋಫೈಲ್ ಬಡಾವಣೆಯ ನಿವಾಸಿಗಳು ದಿನನಿತ್ಯ ರೈಲು ಹಳಿಯನ್ನು ದಾಟಿ ಸಂಚರಿಸಲು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಇಲ್ಲಿ ರೈಲ್ವೆ ಲೆವೆಲ್ ಕ್ರಾಸಿಂಗ್ ಅಥವಾ ಮೇಲ್ಸೇತುವೆ ನಿರ್ಮಾಣ ಮಾಡಬೇಕೆಂದು ಕರವೇ ತಾಲೂಕು ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಳಕರ್ ಆಗ್ರಹಿಸಿದ್ದಾರೆ. ಈ ಬಡಾವಣೆಗಳಲ್ಲಿ ಹಿರಿಯರು ಹಾಗೂ ಮಕ್ಕಳು ಸೇರಿ ಸಾವಿರಾರು ಜನರು ವಾಸಿಸುತ್ತಿದ್ದರೂ ಇಲ್ಲಿಯವರೆಗೆ ಯಾವುದೇ ಮೂಲ ಸೌಲಭ್ಯ ಕಲ್ಪಿಸಲಾಗಿಲ್ಲ. ರೈಲ್ವೆ ಮೇಲ್ಸೇತುವೆ ಇಲ್ಲದ ಕಾರಣ ಸ್ಥಳೀಯರು ಹಾಗೂ ಶಾಲೆಗೆ ಹೋಗುವ ನೂರಾರು ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ರೈಲು ಹಳಿ ದಾಟಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಲ್ಲಿಂದ ನಗರಕ್ಕೆ ವಾಹನ ಸಂಚಾರಕ್ಕೂ ಸರಿಯಾದ ವ್ಯವಸ್ಥೆ ಇಲ್ಲ. ತುರ್ತು ಸಂದರ್ಭಗಳಲ್ಲಿ ಗರ್ಭಿಣಿಯರು, ರೋಗಿಗಳು ಹಾಗೂ ವೃದ್ಧರಿಗೆ ಭಾರೀ ತೊಂದರೆ ಉಂಟಾಗುತ್ತಿದೆ ಎಂದು ಅವರು ತಿಳಿಸಿದರು. ಶಾಲೆಗೆ ತೆರಳಿದ ಮಕ್ಕಳು ಸುರಕ್ಷಿತವಾಗಿ ಮನೆಗೆ ಮರಳುವವರೆಗೂ ಪೋಷಕರು ಆತಂಕದಲ್ಲೇ ಕಾಲ ಕಳೆಯಬೇಕಾಗಿದೆ. ಈ ಸಮಸ್ಯೆ ಪರಿಹರಿಸಲು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಆದ್ದರಿಂದ ತಕ್ಷಣ ರೈಲು ಹಳಿ ದಾಟುವ ಸಮಸ್ಯೆಯನ್ನು ತಪ್ಪಿಸಲು ಮೇಲ್ಸೇತುವೆ ನಿರ್ಮಿಸಿ ಸ್ಥಳೀಯರ ಜೀವ ಭದ್ರತೆ ಕಾಪಾಡುವಂತೆ ರೈಲ್ವೆ ಅಧಿಕಾರಿಗಳಿಗೆ ಅವರು ಆಗ್ರಹಿಸಿದರು.

ವಾರ್ತಾ ಭಾರತಿ 10 Mar 2026 10:52 pm

ಪಶ್ಚಿಮ ಏಶ್ಯ ಸಂಘರ್ಷದ ನಡುವೆ ಭಾರತದಿಂದ ಬಾಂಗ್ಲಾಕ್ಕೆ 5 ಸಾವಿರ ಟನ್ ಡೀಸೆಲ್ ಪೂರೈಕೆ

ಹೊಸದಿಲ್ಲಿ: ಪಶ್ಚಿಮ ಏಶ್ಯ ಸಂಘರ್ಷವು ಜಾಗತಿಕ ಇಂಧನ ಭದ್ರತೆಯ ಮೇಲೆ ಪರಿಣಾಮವನ್ನು ಬೀರಿರುವ ನಡುವೆಯೇ ಭಾರತವು ಅಸ್ಸಾಂನ ನುಮಾಲಿಗಢ ತೈಲ ಸಂಸ್ಕರಣಾಗಾರದಿಂದ ಕೊಳವೆಮಾರ್ಗವಾಗಿ ಬಾಂಗ್ಲಾದೇಶಕ್ಕೆ ಡೀಸೆಲ್ ಪೂರೈಕೆಯನ್ನು ಆರಂಭಿಸಿದೆ. ಕನಿಷ್ಠ 5 ಸಾವಿರ ಟನ್ ಡೀಸೆಲ್ ಕೊಳವೆಮಾರ್ಗದ ಮೂಲಕ ಗಡಿದಾಟಿ ಮಂಗಳವಾರ ಬಾಂಗ್ಲಾವನ್ನು ತಲುಪಲಿದೆಯೆಂದು ಬಾಂಗ್ಲಾದೇಶ ಪೆಟ್ರೋಲಿಯಂ ನಿಗಮದ ಅದ್ಯಕ್ಷ (ಬಿಪಿಸಿ) ಮುಹಮ್ಮದ್ ರೆಝಾನುರ್ ರಹ್ಮಾನ್ ತಿಳಿಸಿದ್ದಾರೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಜಂಟಿದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ತೈಲ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ವ್ಯತ್ಯಯದಿಂದಾಗಿ ಬಾಂಗ್ಲಾವು ತೈಲದ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಈ ಡೀಸೆಲ್ ಪೂರೈಕೆಯು, ಉಭಯ ನೆರೆಹೊರೆಯ ದೇಶಗಳ ನಡುವೆ ಏರ್ಪಟ್ಟ ಬೃಹತ್ ವಾರ್ಷಿಕ ತೈಲ ಪೂರೈಕೆ ಒಪ್ಪಂದದ ಭಾಗವಾಗಿದೆ. ಈ ಡೀಸೆಲ್ ಅಸ್ಸಾಂನ ನುಮಾಲಿಗಡ ತೈಲಸಂಸ್ಕರಣಾಗಾರದಿಂದ ಬಾಂಗ್ಲಾದೇಶ- ಭಾರತ ಮಿತ್ರತ್ವ ಪೈಪ್ಲೈನ್ ಮೂಲಕ ಬಾಂಗ್ಲಾದೇಶದ ದಿನಾಜ್ಪುರವನ್ನು ತಲುಪಲಿದೆ. ಬಾಂಗ್ಲಾದೇಶ-ಭಾರತ ಮಿತ್ರತ್ವ ಪೈಪ್ಲೈನ್ ಅನ್ನು 2023ರ ಮಾರ್ಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಗಿನ ಬಾಂಗ್ಲಾ ಪ್ರಧಾನಿ ಹಸೀನಾ ಶೇಖ್ ಉದ್ಘಾಟಿಸಿದ್ದರು.

ವಾರ್ತಾ ಭಾರತಿ 10 Mar 2026 10:51 pm

ಹೊಸಪೇಟೆ | ತಾಲೂಕು ಪಂಚಾಯತ್‌ ಕಟ್ಟಡದ ಮೇಲ್ಚಾವಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ ಅವಘಡ

ವಿಜಯನಗರ / ಹೊಸಪೇಟೆ: ನಗರದ ತಾಲೂಕು ಪಂಚಾಯಿತಿ ಕಟ್ಟಡದ ಮೇಲ್ಚಾವಣಿಯಲ್ಲಿ ಮಂಗಳವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಶ್ರುತಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಬಾಷಾ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.        

ವಾರ್ತಾ ಭಾರತಿ 10 Mar 2026 10:47 pm

ಕೋವಿಡ್-19 ಲಸಿಕೆಯ ಅಡ್ಡ ಪರಿಣಾಮಗಳಿಂದ ಬಾಧಿತರಾದವರಿಗೆ ಪರಿಹಾರ ನೀಡಬೇಕು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ

ಹೊಸದಿಲ್ಲಿ: ಕೋವಿಡ್-19 ಲಸಿಕೆಯ ಅಡ್ಡಪರಿಣಾಮಗಳಿಂದ ಬಾಧಿತರಾದವರಿಗೆ ನ್ಯಾಯಯುತವಾದ ಪರಿಹಾರವನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ಆದೇಶಿಸಿದೆ. ಲೋಪರಾಹಿತ್ಯತೆಯ ಆಧಾರದಲ್ಲಿ ಈ ನೀತಿಯನ್ನು ಜಾರಿಗೆ ತರಬೇಕೆಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಆದೇಶದಲ್ಲಿ ತಿಳಿಸಿದೆ. ಈ ಕಾನೂನು ನಿಯಮದ ಪ್ರಕಾರ ಯಾರಿಂದಲೂ ಗಾಯಗಳು, ನಷ್ಟಗಳು ಅಥವಾ ಹಾನಿಗಳು ಯಾರಿಂದಲೇ ಆಗಿರಲಿ ಬಾಧಿತರಿಗೆ ಪರಿಹಾರ ದೊರೆಯಬೇಕಾಗಿದೆ ಎಂದು ವರದಿ ಹೇಳಿದೆ. ಕೋವಿಡ್19 ನಿರೋಧಕ ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತಮ್ಮ ಪುತ್ರಿಯರು ಸಾವನ್ನಪ್ಪಿದ್ದಾರೆಂದು ಆರೋಪಿಸಿ ದಂಪತಿಯೊಂದು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ತಮ್ಮ ಪುತ್ರಿಯರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸ್ವತಂತ್ರ ತನಿಖಾ ಸಮಿತಿಯಿಂದ ನಡೆಸಬೇಕೆಂದು ದಂಪತಿ ಅರ್ಜಿಯಲ್ಲಿ ಕೋರಿದ್ದರು. ಮೃತರ ಶವಪರೀಕ್ಷೆ (ಅಟಾಪ್ಸಿ) ಮತ್ತು ತನಿಖೆಯ ವರದಿಗಳನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕೆಂದು ಅವರು ಆಗ್ರಹಿಸಿದ್ದರು. ತಮ್ಮ ಪುತ್ರಿಯರ ಸಾವಿಗಾಗಿ ತಮಗೆ ಸೂಕ್ತವಾದ ಆರ್ಥಿಕ ಪರಿಹಾರ ನೀಡಬೇಕೆಂದು ಪಾಲಕರು ಅರ್ಜಿಯಲ್ಲಿ ಕೋರಿದ್ದರು. ಲಸಿಕೆಗಳ ವ್ಯತಿರಿಕ್ತ ಅಡ್ಡಪರಿಣಾಮಗಳಿಂದ ಬಳಲುತ್ತಿರುವವರನ್ನು ತ್ವರಿತವಾಗಿ ಗುರುತಿಸಲು ಹಾಗೂ ಅವರಿಗೆ ಚಿಕಿತ್ಸೆ ನೀಡಲು ಮಾರ್ಗದರ್ಶಿಸೂತ್ರಗಳನ್ನು ರೂಪಿಸುವಂತೆ ಅರ್ಜಿಯಲ್ಲಿ ಆಗ್ರಹಿಸಲಾಗಿದೆ. ಪ್ರಕರಣದ ಆಲಿಕೆ ನಡೆಸಿದ ನ್ಯಾಯಪೀಠವು ಕೋವಿಡ್19 ಬಾಧಿತರಿಗೆ ಪರಿಹಾರ ನೀಡುವ ಯೋಜನೆಯಿಂದಾಗಿ, ಕೇಂದ್ರ ಸರಕಾರವು ಅದರ ಬಾಧ್ಯತೆಯನ್ನು ಒಪ್ಪಿಕೊಂಡಂತಾಗುತ್ತದೆ ಎಂದು ಪರಿಗಣಿಸಬಾರದು ಎಂದು ನ್ಯಾಯಪೀಠ ಕಿವಿಮಾತು ಹೇಳಿದೆ. ಆದಾಗ್ಯೂ, ಕೋವಿಡ್-19 ಲಸಿಕೆಗಳ ಅಡ್ಡಪರಿಣಾಮಗಳ ಪರಿಶೀಲನೆಗೆ ನೂತನ ತಜ್ಞರ ಸಮಿತಿಯನ್ನು ಸ್ಥಾಪಿಸುವ ಅಗತ್ಯವಿಲ್ಲವೆಂದು ನ್ಯಾಯಪೀಠ ತಿಳಿಸಿದೆ.

ವಾರ್ತಾ ಭಾರತಿ 10 Mar 2026 10:45 pm

ನೇರ ನೇಮಕಾತಿಯಲ್ಲಿ ಒಬಿಸಿಗೆ 27 ಶೇ. ಮೀಸಲಾತಿ: ಲೋಕಸಭೆಗೆ ಮಾಹಿತಿ

ಹೊಸದಿಲ್ಲಿ: ಕೇಂದ್ರ ಸರಕಾರದ ಅಡಿಯಲ್ಲಿ ಬರುವ ಸಿವಿಲ್ ಹುದ್ದೆಗಳು ಮತ್ತು ಸೇವೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಾಗ ಸರಕಾರವು ಇತರ ಹಿಂದುಳಿದ ವರ್ಗ (ಒಬಿಸಿ)ಗಳಿಗೆ 27 ಶೇಕಡ ಮೀಸಲಾತಿ ನೀಡುವುದು ಎಂದು ಲೋಕಸಭೆಗೆ ಮಂಗಳವಾರ ತಿಳಿಸಲಾಯಿತು. ಮೀಸಲಾತಿ ನೀತಿಯನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಜಾರಿಗೊಳಿಸುತ್ತಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ಬಿ.ಎಲ್. ವರ್ಮಾ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು. ‘‘ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ 8-9-1993ರ ಕಚೇರಿ ತಿಳುವಳಿಕೆ ಪತ್ರ ಮತ್ತು ಕಾಲ ಕಾಲಕ್ಕೆ ಹೊರಡಿಸಲಾಗಿರುವ ಇತರ ಸೂಚನೆಗಳ ಆಧಾರದಲ್ಲಿ ಸರಕಾರವು ಮೀಸಲಾತಿ ನೀತಿಯೊಂದನ್ನು ಹೊಂದಿದೆ. ಇದರ ಪ್ರಕಾರ, ಸರಕಾರದ ಅಡಿಯಲ್ಲಿ ಬರುವ ಸಿವಿಲ್ ಹುದ್ದೆಗಳು ಮತ್ತು ಸೇವೆಗಳಿಗೆ ಸರಕಾರ ಮಾಡುವ ನೇರ ನೇಮಕಾತಿಗಳಲ್ಲಿ 27 ಶೇಕಡ ಹುದ್ದೆಗಳನ್ನು ಇತರ ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗುತ್ತದೆ’’ ಎಂದು ಸಚಿವರ ತನ್ನ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 10 Mar 2026 10:42 pm

ಕಲಬುರಗಿ | ಛಲ ಇದ್ದರೆ ಗುರಿ ಸಾಧನೆ ಸಾಧ್ಯ: ವಿಜಯಕುಮಾರ ಪಾಟೀಲ

ಕಲಬುರಗಿ: ಪ್ರತಿಯೊಬ್ಬರೂ ಯಶಸ್ವಿ ಜೀವನ ನಡೆಸಬೇಕಾದರೆ ಸಾಧಿಸುವ ಛಲ ಹೊಂದಿರಬೇಕು. ಅಂಥ ದೃಢಸಂಕಲ್ಪ ಇದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ವಿಜಯಕುಮಾರ ತೇಗಲತಿಪ್ಪಿ ಹೇಳಿದರು. ರಾಜ್ಯಮಟ್ಟದ ವಿಶ್ವ ಕನ್ನಡಿಗ ಪ್ರಶಸ್ತಿ ಪಡೆದ ಹಿನ್ನೆಲೆ ರಾಜೇಶ್ವರಿ ಸಾಹು ಅವರಿಗೆ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಆದರೆ ಅವಕಾಶಗಳ ಕೊರತೆಯಿಂದ ಅವರು ಹೊರಹೊಮ್ಮಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅವಕಾಶಗಳನ್ನು ಸ್ವತಃ ಸೃಷ್ಟಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವವರಲ್ಲಿ ರಾಜೇಶ್ವರಿ ಸಾಹು ಮುಂಚೂಣಿಯಲ್ಲಿದ್ದಾರೆ. ಅವರ ಸಾಮಾಜಿಕ ಕಳಕಳಿ, ವೃತ್ತಿ ಬದ್ಧತೆ ಹಾಗೂ ಸೇವಾ ಮನೋಭಾವದಿಂದ ರಾಜ್ಯದಾದ್ಯಂತ ಹೆಸರು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಸೇವೆ ದೇಶದಾದ್ಯಂತ ಪಸರಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಮಾಜಿ ಸದಸ್ಯ ಶರಣಗೌಡ ಪಾಟೀಲ್, ಪಂಚಾಯತ್ ರಾಜ್ ಇಲಾಖೆಯಲ್ಲಿ ಜನಪರ ಸೇವೆ ಸಲ್ಲಿಸುವ ಮೂಲಕ ರಾಜೇಶ್ವರಿ ಸಾಹು ಉತ್ತಮ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದಾರೆ. ಚಿಕ್ಕ ಹಳ್ಳಿಯಲ್ಲಿ ಹುಟ್ಟಿ ಬೆಳೆದು ಪರಿಶ್ರಮದ ಮೂಲಕ ಸಾಧನೆ ಮಾಡಿರುವುದು ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೇಣುಕಾ ಡಾಂಗೆ ಮಾತನಾಡಿದರು. ಮುಖಂಡರಾದ ಸುಭಾಶ ಮುರುಡ, ಬಸವರಾಜ ಬಿರಬಿಟ್ಟೆ ಸೇರಿದಂತೆ ಹಲವರು ಭಾಗವಹಿಸಿದ್ದರು. ನಂತರ ರಾಜೇಶ್ವರಿ ಸಾಹು ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿದ ರಾಜೇಶ್ವರಿ ಸಾಹು ಮಾತನಾಡಿ, ಬಡತನದಲ್ಲಿದ್ದರೂ ಓದನ್ನು ನಿಲ್ಲಿಸದೆ ಪಿಎಸ್‌ಐ ಆಗಬೇಕೆಂಬ ಕನಸು ಕಂಡಿದ್ದೆ. ಆ ಕನಸು ನನಸಾಗದಿದ್ದರೂ ಛಲದಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಇದಕ್ಕೆ ಪಾಲಕರು ಹಾಗೂ ಹಿರಿಯರ ಪ್ರೋತ್ಸಾಹ ಕಾರಣವಾಗಿದೆ ಎಂದು ಸ್ಮರಿಸಿದರು. ಪ್ರಮುಖರಾದ ಶಿವರಾಜ ಅಂಡಗಿ, ಶರಣರಾಜ ಚಪ್ಪರಬಂದಿ, ಧರ್ಮಣ್ಣ ಎಚ್ ಧನ್ನಿ, ರಾಜೇಂದ್ರ ಮಾಡಬೂಳ ಇತರರಿದ್ದರು.

ವಾರ್ತಾ ಭಾರತಿ 10 Mar 2026 10:39 pm

ಅನಿಲ ದರ ಏರಿಕೆ: ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ: ಬಿ.ಕೆ.ಹರಿಪ್ರಸಾದ್

ಬೆಂಗಳೂರು : ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಿಂದ ಸಾಮಾನ್ಯ ಜನ, ರೈತರು, ಕಾರ್ಮಿಕರ ಕುಟುಂಬಗಳು ಭಾರೀ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ನೋವನ್ನು ಅರ್ಥಮಾಡಿಕೊಳ್ಳುವ ಬದಲು ತೆರಿಗೆಗಳ ಮೂಲಕ ಅವರ ಜೇಬಿಗೆ ಕೈಹಾಕುವ ನೀತಿಯನ್ನು ಕೇಂದ್ರ ಸರಕಾರ ತಕ್ಷಣವೇ ನಿಲ್ಲಿಸಬೇಕು. ಜನರ ಬದುಕನ್ನು ದುಬಾರಿಯ ಸಂಕಷ್ಟಕ್ಕೆ ತಳ್ಳುತ್ತಿರುವುದಕ್ಕೆ ಕೇಂದ್ರದ ಅಸಮರ್ಥ ನಾಯಕತ್ವವೇ ಕಾರಣ’ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಪ್ರಧಾನಿ ಮೋದಿಯ ಸ್ವಯಂ ಘೋಷಿತ ಅಮೃತಕಾಲದಲ್ಲಿ ಕಪಲೋಕಲ್ಪಿತ ಗಟಾರ್ ಗ್ಯಾಸ್ ಕತೆಗಳು ಭಾರತವನ್ನು ಆಪತ್ತಿನ ಕಾಲಕ್ಕೆ ತಳ್ಳಿದೆ. ಸಾರ್ವಜನಿಕ ವೇದಿಕೆಯಲ್ಲಿ ವಿಜ್ಞಾನಿಗಳ ಎದುರೇ ಕಲ್ಪನೆಯನ್ನು ಮಾಡಲು ಸಾಧ್ಯವಾಗದ ಗಟಾರ್ ಗ್ಯಾಸ್ ಕತೆಗಳನ್ನು ಯಾವುದೇ ಲಜ್ಜೆ ಇಲ್ಲದೆ ಹೇಳಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಹುದೇ ಹೊರತು, ಭಾರತದ ಗ್ಯಾಸ್ ಅನಿಲ ಸಮಸ್ಯೆಯನ್ನು ಪರಿಹರಿಸಲು ಪ್ರಧಾನಿಯಿಂದ ಸಾಧ್ಯವಿಲ್ಲ ಎಂಬುದಕ್ಕೆ ವರ್ತಮಾನದಲ್ಲಿ ಆಗುತ್ತಿರುವ ಗ್ಯಾಸ್ ಅಡುಗೆ ಅನಿಲ ಬಿಕ್ಕಟ್ಟೆ ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ. ‘ಮಧ್ಯಪ್ರಾಚ್ಯದಲ್ಲಿನ ಯುದ್ಧದ ಉದ್ವಿಗ್ನತೆಯು ಭಾರತದ ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರಿದೆ, ಇದರಿಂದ ಎಲ್‍ಪಿಜಿ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮನೆ-ವಾಣಿಜ್ಯ ಬಳಕೆಯ ಸಿಲಿಂಡರ್‍ಗಳ ಬೆಲೆಗಳು ಹೆಚ್ಚಾಗಿದ್ದು, ಯುದ್ಧದ ವಾತಾವರಣವು ಆರ್ಥಿಕತೆಯ ಮೇಲೆ ಆತಂಕ ಮೂಡಿಸಿದೆ. ನಗರಗಳಲ್ಲಿ ಗ್ಯಾಸ್ ಸಿಲೆಂಡರ್ ಅಭಾವದಿಂದ ಹೋಟೆಲ್, ರೆಸ್ಟೋರೆಂಟ್‍ಗಳು ಬಂದ್ ಆಗುತ್ತಿದ್ದರೆ ಗ್ರಾಮೀಣ ಭಾಗದ ಜನರ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ‘ಮಧ್ಯಪ್ರಾಚ್ಯ ದೇಶಗಳ ಯುದ್ಧದ ಕುರಿತು ಪ್ರಧಾನಿಗಳ ಮೌನಕ್ಕೆ ದೇಶ ಭಾರಿ ಬೆಲೆ ತೆರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ‘ಭಾರತದ ಜನತೆಗೆ ಗ್ಯಾಸ್ ಮತ್ತು ಪೆಟ್ರೋಲ್ ಸಮಸ್ಯೆ ಬರದಂತೆ ಪರಿಹಾರ ಕಂಡುಹಿಡಿಯಿರಿ’ ಎಂದು ಭಾಷಣೆ ಬಿಗಿಯುತ್ತಿದ್ದ ಅಂದಿನ ಗುಜರಾತಿನ ಮುಖ್ಯಮಂತ್ರಿ, ಇಂದಿನ ಪ್ರಧಾನಿ ಮೋದಿ ಸರಕಾರ ಮೌನವಹಿಸಿರುವುದು ಯಾಕೆ?’ ಎಂದು ಅವರು ಪ್ರಶ್ನಿಸಿದ್ದಾರೆ. ಪ್ರಧಾನಿ @narendramodi ಯ ಸ್ವಯಂ ಘೋಷಿತ ಅಮೃತಕಾಲದಲ್ಲಿ ಕಪಲೋಕಲ್ಪಿತ ಗಟಾರ್ ಗ್ಯಾಸ್ ಕತೆಗಳು ಭಾರತವನ್ನು ಆಪತ್ತಿನ ಕಾಲಕ್ಕೆ ತಳ್ಳಿದೆ. ಸಾರ್ವಜನಿಕ ವೇದಿಕೆಯಲ್ಲಿ ವಿಜ್ಞಾನಿಗಳ ಎದುರೇ ಕಲ್ಪನೆಯನ್ನು ಕೂಡ ಮಾಡಲು ಸಾಧ್ಯವಾಗದ ಗಟಾರ್ ಗ್ಯಾಸ್ ಕತೆಗಳನ್ನು ಯಾವುದೇ ಲಜ್ಜೆ ಇಲ್ಲದೆ ಹೇಳಿ ಚಪ್ಪಾಳೆ ಗಿಟ್ಟಿಸಿಕೊಳ್ಳಬಹುದೇ ಹೊರತು, ಭಾರತದ… pic.twitter.com/K7hvygKJmJ — Hariprasad.B.K. (@HariprasadBK2) March 10, 2026

ವಾರ್ತಾ ಭಾರತಿ 10 Mar 2026 10:38 pm

GHADC ನಾಮಪತ್ರ ಪ್ರಕ್ರಿಯೆ ನಡುವೆ ಉದ್ವಿಗ್ನತೆ | ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಪೊಲೀಸ್ ಗುಂಡಿನ ದಾಳಿ: ಇಬ್ಬರು ಮೃತ್ಯು, ಕರ್ಫ್ಯೂ

ಶಿಲ್ಲಾಂಗ್: ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳ ಜಿಲ್ಲೆಯಲ್ಲಿ ಗಾರೊ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (GHADC) ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಸಂದರ್ಭ ಉಂಟಾದ ಉದ್ವಿಗ್ನತೆಯಲ್ಲಿ ಮಂಗಳವಾರ ಮುಂಜಾನೆ ಭದ್ರತಾ ಪಡೆಗಳು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಬಿನಾಂಗ್ ಪ್ರದೇಶದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟು ಅಲ್ಲದ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು, ಹಿಂಸಾತ್ಮಕ ಗುಂಪುಗಳನ್ನು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಪಶ್ಚಿಮ ಗಾರೋ ಬೆಟ್ಟಗಳ ಪೊಲೀಸ್ ವರಿಷ್ಠಾಧಿಕಾರಿ ಅಬ್ರಹಾಂ ಟಿ. ಸಂಗ್ಮಾ ತಿಳಿಸಿದ್ದಾರೆ. ‘ಮೃತಪಟ್ಟ ಇಬ್ಬರೂ ಚಿಬಿನಾಂಗ್ ನಿವಾಸಿಗಳೇ. GHADC ಚುನಾವಣೆಗೆ ಸಂಬಂಧಿಸಿ ಬುಡಕಟ್ಟು ಜನರು ಮತ್ತು ಬುಡಕಟ್ಟು ಅಲ್ಲದವರ ನಡುವೆ ಘರ್ಷಣೆ ನಡೆದಿದೆ. ಕಾನೂನುಬಾಹಿರವಾಗಿ ಸೇರಿದ್ದ ಗುಂಪನ್ನು ಚದುರಿಸುವ ವೇಳೆ ಗುಂಡು ಹಾರಿಸಲಾಗಿದೆ’ ಎಂದು ಅವರು ಹೇಳಿದರು. ಪ್ರದೇಶದಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿ ಇದೆ ಎಂದು ಸಂಗ್ಮಾ ತಿಳಿಸಿದ್ದಾರೆ. ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಪಶ್ಚಿಮ ಗಾರೋ ಬೆಟ್ಟಗಳಾದ್ಯಂತ ಮಂಗಳವಾರ ಇಡೀ ದಿನ ಕರ್ಫ್ಯೂ ಜಾರಿಗೊಳಿಸಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ಕೋರಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಗುಂಪುಗಾರಿಕೆ, ಹಲ್ಲೆ ಮತ್ತು ತಪ್ಪು ಮಾಹಿತಿಯ ಪ್ರಸರಣದ ವರದಿಗಳ ಹಿನ್ನೆಲೆ ಮೇಘಾಲಯ ಸರ್ಕಾರ ಮಂಗಳವಾರದಿಂದ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಆದರೆ ಕರೆಗಳು ಮತ್ತು ಎಸ್‌ಎಂಎಸ್ ಸೇವೆಗಳು ಮುಂದುವರಿಯಲಿವೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಉಪ ಆಯುಕ್ತ ವಿಭೋರ್ ಅಗರ್ವಾಲ್ ಅವರು ಮಂಗಳವಾರ ತುರಾದ ಸರ್ಕ್ಯೂಟ್ ಹೌಸ್‌ನಲ್ಲಿ ಚರ್ಚ್ ಮುಖಂಡರು, ಎನ್‌ಜಿಒ ಪ್ರತಿನಿಧಿಗಳು ಹಾಗೂ ಸ್ಥಳೀಯ ಅಭಿವೃದ್ಧಿ ಸಮಿತಿಗಳೊಂದಿಗೆ ಶಾಂತಿ ಸಮಿತಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಗಾರೊ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 16ರವರೆಗೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಕೇಂದ್ರಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎಪ್ರಿಲ್ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ತುರಾದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಫುಲ್ಬರಿಯ ಮಾಜಿ ಶಾಸಕ ಎಸ್ತಮುರ್ ಮೋಮಿನ್ ಅವರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿದ ಬಳಿಕ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಬುಡಕಟ್ಟು ಜನಾಂಗದವರಲ್ಲದವರು ಜಿಎಚ್‌ಎಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅಥವಾ ಭಾಗವಹಿಸುವುದನ್ನು ತಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದರು. ಫೆಬ್ರವರಿ 17ರಂದು ಜಿಎಚ್‌ಎಡಿಸಿ ಕಾರ್ಯಕಾರಿ ಸಮಿತಿಯು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಮಾನ್ಯ ಪರಿಶಿಷ್ಟ ಪಂಗಡ (ಎಸ್‌ಟಿ) ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿರ್ಣಯವನ್ನು ಅಂಗೀಕರಿಸಿತ್ತು.

ವಾರ್ತಾ ಭಾರತಿ 10 Mar 2026 10:36 pm

ಕಲಬುರಗಿ | ಪಿಡಿಒಗೆ ಜೀವ ಬೆದರಿಕೆ: ಆರೋಪಿಯ ಬಂಧನಕ್ಕೆ ರಾಜೇಶ್ವರಿ ಸಾಹು ಆಗ್ರಹ

ಕಲಬುರಗಿ: ಜೇವರ್ಗಿ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಮಮದಾಪುರ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ರಾಜ್ಯ ನಿರ್ದೇಶಕಿ ರಾಜೇಶ್ವರಿ ಸಾಹು ಆಗ್ರಹಿಸಿದ್ದಾರೆ. ಈ ಕುರಿತು ಅವರು ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನಿಂಗಣ್ಣ ಎಂಬ ವ್ಯಕ್ತಿ ಮಹಿಳಾ ಅಧಿಕಾರಿ ಇಮ್ತಾಜ್ ಮಮದಾಪುರ ಅವರಿಗೆ ಅಸಭ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ರೌಡಿಶೀಟ್ ತೆರೆಯಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ಮೇಲಿನ ಹಲ್ಲೆ ಹಾಗೂ ಅಸಹಜ ಸಾವುಗಳ ಕುರಿತು ರಚಿಸಲಾದ ಮೀನಾಕ್ಷಿ ಸುಂದರಂ ಅಧ್ಯಯನ ಸಮಿತಿಯ ವರದಿ ಪಡೆದು ನೌಕರರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದಲ್ಲದೆ ಬಡ್ತಿ, ವೇತನ ತಾರತಮ್ಯ ಹಾಗೂ ಹುದ್ದೆ ಉನ್ನತೀಕರಣ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳನ್ನು ಗ್ರೂಪ್-ಬಿ ದರ್ಜೆಗೆ ಏರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವಾರ್ತಾ ಭಾರತಿ 10 Mar 2026 10:34 pm

ಪುಟಿನ್ ಗೆ ಟ್ರಂಪ್ ದೂರವಾಣಿ ಕರೆ; ಇರಾನ್ ಯುದ್ಧ ಶೀಘ್ರ ಕೊನೆಗೊಳಿಸುವ ಬಗ್ಗೆ ಪ್ರಸ್ತಾಪ

ಮಾಸ್ಕೋ: ಅಮೆರಿಕ ಅಧ್ಯಕ್ಷ ಟ್ರಂಪ್ ಸೋಮವಾರ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ದೂರವಾಣಿ ಕರೆ ಮಾಡಿದ್ದು ಇರಾನ್ ನಲ್ಲಿ ಈಗ ನಡೆಯುತ್ತಿರುವ ಯುದ್ದವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವ ಉದ್ದೇಶದ ಹಲವು ಸಲಹೆಗಳನ್ನು ಹಂಚಿಕೊಂಡರು ಎಂದು ರಶ್ಯ ಅಧ್ಯಕ್ಷರ ಕಚೇರಿ ಹೇಳಿದೆ. ಜಾಗತಿಕ ತೈಲ ಮಾರುಕಟ್ಟೆ ಪರಿಸ್ಥಿತಿಯ ಸಂದರ್ಭದಲ್ಲಿ ಉಕ್ರೇನ್ ನ ಸಂಘರ್ಷ ಮತ್ತು ವೆನೆಝುವೆಲಾದ ಪರಿಸ್ಥಿತಿಯ ಬಗ್ಗೆಯೂ ಟ್ರಂಪ್ ಮತ್ತು ಪುಟಿನ್ ಚರ್ಚೆ ನಡೆಸಿದರು ಎಂದು ರಶ್ಯ ಅಧ್ಯಕ್ಷರ ವಿದೇಶಾಂಗ ನೀತಿ ಸಹಾಯಕ ಯೂರಿ ಉಶಕೋವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮಾತುಕತೆ ಉತ್ಪಾದಕ ಮತ್ತು ಪ್ರಾಮಾಣಿಕವಾಗಿತ್ತು. ಇರಾನ್ನೊಂದಿಗಿನ ಸಂಘರ್ಷದ ಸುತ್ತಮುತ್ತಲಿನ ಪರಿಸ್ಥಿತಿ, ಉಕ್ರೇನ್ ಶಾಂತಿ ಮಾತುಕತೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ದಕ್ಕೆ ತ್ವರಿತ ರಾಜಕೀಯ ಮತ್ತು ರಾಜತಾಂತ್ರಿಕ ಇತ್ಯರ್ಥಕ್ಕೆ ಪುಟಿನ್ ಕರೆ ನೀಡಿದರು ಎಂದು ಯೂರಿ ಉಶಕೋವ್ ಹೇಳಿದ್ದಾರೆ.

ವಾರ್ತಾ ಭಾರತಿ 10 Mar 2026 10:31 pm

ರಾಜ್ಯದಲ್ಲಿ 6,70,560 ಕೋಟಿ ಬಂಡವಾಳ ಹೂಡಿಕೆ : ಎಂ.ಬಿ.ಪಾಟೀಲ್

ಬೆಂಗಳೂರು, ಮಾ.10: ರಾಜ್ಯದಲ್ಲಿ ಹಿಂದಿನ ಮೂರು ವರ್ಷಗಳಿಂದ 6,70,560 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 2,47,571 ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳು ಆಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಪರಿಷತ್ತಿನ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಡಂಬಡಿಕೆ ಮಾಡಿಕೊಂಡಿರುವ ಯೋಜನೆಗಳ ಪೈಕಿ ಒಟ್ಟು 57 ಯೋಜನೆಗಳು ರಾಜ್ಯ ಉನ್ನತಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಹಾಗೂ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಗಳಲ್ಲಿ ಅನುಮೋದನೆ ಪಡೆದಿರುತ್ತಾರೆ. ಇವುಗಳಿಂದ 79,907.94 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು 55,729 ಉದ್ಯೋಗ ಸೃಜನೆ ನಿರೀಕ್ಷಿಸಲಾಗಿದೆ ಎಂದರು. ಅನುಮೋದನೆಯಾಗಿರುವ 57 ಯೋಜನೆಗಳ ಪೈಕಿ 6 ಯೋಜನೆಗಳು ಅನುಷ್ಠಾನಗೊಂಡಿದ್ದು, ಇವುಗಳಿಂದ 6,900.14 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದೆ. 6,654 ಉದ್ಯೋಗ ಸೃಜನೆಯಾಗಿದೆ. ಬಾಕಿ ಯೋಜನೆಗಳು ಅನುಷ್ಠಾನದ ಹಂತದಲ್ಲಿರುತ್ತವೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ವಾರ್ತಾ ಭಾರತಿ 10 Mar 2026 10:25 pm

ಬಾಹುಬಲಿ ಮಹಾಮಸ್ತಕಾಭಿಷೇಕ ಪೂರ್ವ ಸಿದ್ಧತೆಗಾಗಿ ಸಮಿತಿ ರಚನೆಗೆ ಕ್ರಮ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಮಾ.10: ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಕಾರ್ಕಳದಲ್ಲಿ ಜರುಗಲಿರುವ ಬಾಹುಬಾಲಿಯ ಮಹಾಮಸ್ತಕಾಭಿಷೇಕ ಧಾರ್ಮಿಕ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿನ ಸದಸ್ಯ ಸುನಿಲ್ ಕುಮಾರ್ ಗಮನ ಸೆಳೆದ ಸೂಚನೆಗೆ ಮುಖ್ಯಮಂತ್ರಿ ಪರವಾಗಿ ಉತ್ತರ ನೀಡಿದ ಅವರು, ಸರಕಾರವು ಈ ಪ್ರಮುಖ ಧಾರ್ಮಿಕ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸಮಿತಿಯನ್ನು ರಚಿಸಲಿದೆ. ಶಾಸಕರು ಹೇಳಿದಂತೆ ಮುಖ್ಯಮಂತ್ರಿ ಗಮನಕ್ಕೆ ತಂದು ಜಿಲ್ಲಾ ಮಟ್ಟದಲ್ಲಿ ಸಹಾಯಕ ಆಯುಕ್ತರ ನೇತೃತ್ವದಲ್ಲಿಯೇ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುವುದು ಎಂದರು. ಈಗಾಗಲೇ ಇದರ ಸಿದ್ಧತೆಗೆ ಅಂದಾಜು 7 ಕೋಟಿ ರೂಗಳ ಅನುದಾನ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹನ್ನೆರಡು ವರ್ಷಗಳಿಗೆ ಒಮ್ಮೆ ಜರುಗುವ ಈ ಧಾರ್ಮಿಕ ಆಚರಣೆಯನ್ನು ಅಚ್ಚುಕಟ್ಟಾಗಿ ನಡೆಸಲು ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಸರಕಾರ ಮಾಡಿಕೊಳ್ಳಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಾರ್ತಾ ಭಾರತಿ 10 Mar 2026 10:23 pm

ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ವತಿಯಿಂದ ಮಹಿಳಾ ದಿನಾಚರಣೆ; ಸಾಧಕಿಯರಿಗೆ ಸನ್ಮಾನ

ಉಳ್ಳಾಲ: ಸಮರ್ಪಣಾ ಪರಿವಾರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮಹಿಳಾ ದಿನಾಚರಣೆ 2026 ಸಾಧಕಿಯರಿಗೆ ಸನ್ಮಾನ ಹಾಗೂ ಪರಿವಾರ ಕುಟುಂಬ ಮಿಲನ ಕಾರ್ಯಕ್ರಮ ಕೊಲ್ಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಮಾತನಾಡಿ, ಹಿಂದೆ ಅಡುಗೆ ಕೋಣೆಗೆ ಸೀಮಿತಳಾಗಿದ್ದ ಮಹಿಳೆಯರು ಪ್ರಸ್ತುತ ಅಂತರೀಕ್ಷಕ್ಕೆ ಏರುವ ಮೂಲಕ ಎಲ್ಲಾ ರಂಗದಲ್ಲೂ ಛಾಪು ಮೂಡಿಸಿದ್ದಾರೆ. ಮಹಿಳೆ ಸಕಾರಾತ್ಮಕವಾಗಿ ಇರುವ ಮನೆ ಬೆಳಗುತ್ತದೆ ಎಂದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಮೈಮೂನ ಎಂ.ಎ.ಹರೇಕಳ, ಚಂದ್ರಕಲಾ ಎಸ್, ಲಿಜಿ ನೊರೋನ್ಹ, ಸುಮಂಗಲಿ ರಾವ್, ವಜ್ರ ಗುಜರನ್ ಇವರನ್ನು ಸನ್ಮಾನಿಸಲಾಯಿತು. ಸಮರ್ಪಣಾ ಪರಿವಾರ್ ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ ಪ್ರಶಾಂತ್ ಉಡುಪ ಅಧ್ಯಕ್ಷತೆ ವಹಿಸಿದ್ದರು. ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್.ಶೆಟ್ಟಿ, ತೀಯಾ ಸಮಾಜದ ಅಧ್ಯಕ್ಷ ಜಯಂತ್ ಕೊಂಡಾಣ, ಲಯನ್ಸ್ ಕ್ಲಬ್ ಪೆರ್ಮನ್ನೂರು ವಲಯಾಧ್ಯಕ್ಷೆ ಜೆಸಿಂತಾ ಮೆಂಡೋನ್ಸ, ಛೋಟಾ ಮಂಗಳೂರು ಘಟಕಾಧ್ಯಕ್ಷೆ ಹರಿಣಾಕ್ಷಿ, ಮುಡಿಪು ವಿಶ್ವಕರ್ಮ ಸಂಘದ ಅಧ್ಯಕ್ಷ ಸುರೇಶ್ ಆಚಾರ್ಯ, ರೈಲ್ವೇ ಸಲಹಾ ಮಂಡಳಿ ಸದಸ್ಯೆ ಸುಷ್ಮಾ ಕೋಟ್ಯಾನ್, ಸರ್ವಜ್ಞಾ ಅಕಾಡೆಮಿ ಆಡಳಿತ ವ್ಯವಸ್ಥಾಪಕ ಸುರೇಶ್ ಎಂ.ಎಸ್, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ದಿನೇಶ್ ನಾಯಕ್, ಸಮಾಜ ಸೇವಕಿ ಗಾಯತ್ರಿ ಕಿಶೋರ್ ಕುತ್ತಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಲಿಲ್ಲಿ ಪಾಯ್ಸ್ ಮತ್ತಿತರರು ಉಪಸ್ಥಿತರಿದ್ದರು. ಸಮರ್ಪಣಾ ಪರಿವಾರ್ ಅಧ್ಯಕ್ಷ ಮೋಹನ್ ಶಿರ್ಲಾಲ್ ಸ್ವಾಗತಿಸಿದರು. ಶಿಕ್ಷಕರಾದ ಜಯಲಕ್ಷ್ಮಿ, ಚಂದ್ರಶೇಖರ ಹಾಗೂ ವಸಂತ ರೈ ಸನ್ಮಾನ ಪತ್ರ ವಾಚಿಸಿದರು. ವಸಂತ ಕೋಡಿ ವಂದಿಸಿದರು. ಜಗನ್ನಾಥ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 10 Mar 2026 10:23 pm

ಶರಾವತಿ ಪಂಪ್ಡ್‌ ಸ್ಟೋರೇಜ್‌ ಜಲವಿದ್ಯುತ್‌ ಯೋಜನೆಗೆ ಕರ್ನಾಟಕ ಹೈಕೋರ್ಟ್‌ ತಡೆ; ಪರಿಣಾಮಗಳ ಬಗ್ಗೆ ಕೋರ್ಟ್‌ ಆತಂಕ

ಶರಾವತಿ ಪಂಪ್ಡ್‌ ಸ್ಟೋರೇಜ್‌ ಜಲವಿದ್ಯುತ್‌ ಯೋಜನೆಗೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಇನ್ನು ಕಾಮಗಾರಿಯನ್ನ ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಹಾಗೂ ಯೋಜನೆಗಳ ಪರಿಣಾಮಗಳ ಬಗ್ಗೆ ಕೋರ್ಟ್‌ ಆತಂಕ ವ್ಯಕ್ತಪಡಿಸಿದೆ. ಇನ್ನು ಕೋರ್ಟ್‌ ತಡೆಯು ಪರಿಸರವಾದಿಗಳ ಹೋರಾಟಕ್ಕೆ ಸಿಕ್ಕ ಜಯ ಎನ್ನಲಾಗಿದೆ. ಇನ್ನು ಯೋಜನೆ ಸ್ಥಗಿತಕ್ಕೆ ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಪ್ರತಿಭಟನೆಗಳು ಮುಂದುವರೆದಿದೆ.

ವಿಜಯ ಕರ್ನಾಟಕ 10 Mar 2026 10:23 pm

Bengaluru | ಅಡುಗೆ ಅನಿಲ್ ದರ ಏರಿಕೆಗೆ ಯುವ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ಕೇಂದ್ರ ಸರಕಾರ ಏಕಾಏಕಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಮಂಗಳವಾರ ಇಲ್ಲಿನ ಆನಂದರಾವ್ ವೃತ್ತದ ಕಾಂಗ್ರೆಸ್ ಭವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ಯುವ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು, ಪ್ರಧಾನಿ ಮೋದಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಚ್.ಎಸ್.ಮಂಜುನಾಥ್ ಗೌಡ, ಕೇಂದ್ರ ಬಿಜೆಪಿ ಸರಕಾರ ಕಳೆದ 11ವರ್ಷಕ್ಕೂ ಹೆಚ್ಚು ಅವಧಿಯ ಆಡಳಿತದಲ್ಲಿ ಬೆಲೆ ಏರಿಕೆಯನ್ನು ಮಾಡಿರುವುದನ್ನ ಬಿಟ್ಟರೆ ಬೇರೆ ಏನು ಸಾಧನೆ ಮಾಡಿಲ್ಲ. ಅಡುಗೆ ಅನಿಲ ಬೆಲೆ ಏರಿಕೆಯಿಂದ ಬಡವರು, ಮಾಧ್ಯಮವರ್ಗದವರಿಗೆ ಬಹಳ ಸಂಕಷ್ಟವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತವಿದ್ದಾಗ 400 ರೂ., ಸಿಲಿಂಡರ್ ಬೆಲೆ ಇತ್ತು. ಇಂದಿನ ಬಿಜೆಪಿ ಕೇಂದ್ರ ಸರಕಾರದ ಆಡಳಿತದಲ್ಲಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ ಎಂದರು. ದೇಶದ ಆರ್ಥಿಕ ಪರಿಸ್ಥಿತಿ ಶೋಚನೀಯ, ಉದ್ಯೋಗ ಸೃಷ್ಟಿಯಿಲ್ಲ ನಿರುದ್ಯೋಗ ತಾಂಡವವಾಡುತ್ತಿದೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಭರವಸೆಯಾಗಿ ಉಳಿದಿದೆ. ವಿದೇಶದಿಂದ ಕಪ್ಪು ಹಣ ಒಂದು ನಯಾಪೈಸೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.  

ವಾರ್ತಾ ಭಾರತಿ 10 Mar 2026 10:21 pm

ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಯು.ಟಿ.ಖಾದರ್

ಬೆಂಗಳೂರು  : ಸದನದಲ್ಲಿ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸರಕಾರಕ್ಕೆ ಸೂಚನೆ ನೀಡಿದರು. ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಸಂದರ್ಭದಲ್ಲಿ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಲ್ಲಿ ಅರ್ಧಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಸಿಗದ ಬಗ್ಗೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಆಕ್ಷೇಪ ಎತ್ತಿದ್ದನ್ನು ಸಮರ್ಥಿಸಿ ಯು.ಟಿ.ಖಾದರ್ ಮಾತನಾಡಿದರು. ನಿನ್ನೆ ಸಹ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳಿಗೆ ಉತ್ತರಗಳ ಸಂಖ್ಯೆ ಕಡಿಮೆ ಇತ್ತು. ಇಂದು ಸಹ ಅದೇ ಆಗಿದೆ. ಈ ರೀತಿ ಆಗುವುದು ಸರಿಯಲ್ಲ. ಸಚಿವರುಗಳು ತಮ್ಮ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಬೇಕು. ಸದನದಲ್ಲಿ ಶಾಸಕರು ಕೇಳುವ ಎಲ್ಲ ಪ್ರಶ್ನೆಗಳಿಗೆ ತಡ ಮಾಡದೆ ಉತ್ತರಗಳು ಸದನಕ್ಕೆ ಬರಬೇಕು. ಉತ್ತರಗಳು ಸಿದ್ದಪಡಿಸಿ ಕೊಡುವುದಕ್ಕೆ ಐಎಎಸ್-ಐಪಿಎಸ್ ಆಗಬೇಕಾ, ಸದನಕ್ಕೆ ಉತ್ತರ ಕೊಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಸಭಾಧ್ಯಕ್ಷರ ಮಾತಿಗೆ ಸ್ಪಂದಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸದನದಲ್ಲಿ ಶಾಸಕರು ಕೇಳುವ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲೇಬೇಕು. ಉತ್ತರವನ್ನು ವಿಳಂಬ ಮಾಡದೇ ನೀಡುವಂತೆ ಎಲ್ಲ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಸದನಕ್ಕೆ ಉತ್ತರ ಕೊಡಲು ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ವಾರ್ತಾ ಭಾರತಿ 10 Mar 2026 10:17 pm

ವಿದ್ಯಾರ್ಥಿಗಳಲ್ಲಿ ಓದುವಿಕೆ ಕಡಿಮೆಯಾಗಿದೆ: ವಿವೇಕ್ ಆಳ್ವ

ಮಂಗಳೂರು, ಮಾ.10: ಜಾಗತೀಕರಣದಿಂದ ಆರಂಭಗೊಂಡು ಪ್ರಸ್ತುತ ಎಐ ವರೆಗೆ ಜಗತ್ತು ಸಾಗಿ ಬಂದರೂ, ತುಳುವರ ನಂಬಿಕೆ, ಆಚರಣೆ, ಸಂಸ್ಕೃತಿಗಳು ಇಂದಿಗೂ ಉಳಿದುಕೊಂಡು ಬಂದಿದೆ. ಇದನ್ನು ಮುಂದಿನ ತಲೆಮಾರುಗಳಿಗೂ ಉಳಿಸಿಕೊಂಡು ಹೋಗುವ ಜವಾಬ್ದಾರಿ ಯುವ ಜನಾಂಗದ ಮೇಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳು ಪರಿಷತ್ ವತಿಯಿಂದ 3ನೇ ವಿದ್ಯಾರ್ಥಿ ತುಳು ಸಮ್ಮೇಳನದ ಪೂರ್ವ ಭಾವಿಯಾಗಿ ಆಯೋಜಿಸಲಾದ ‘ವಿದ್ಯಾರ್ಥಿ ಕಲಾ ಸಿರಿ’ ಕಾರ್ಯಕ್ರಮವನ್ನು ಮಂಗಳವಾರ ಉರ್ವಸ್ಟೋರ್ ನ ತುಳು ಸಾಹಿತ್ಯ ಅಕಾಡೆಮಿಯ ತುಳು ಚಾವಡಿಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ವಿದ್ಯಾರ್ಥಿಗಳಲ್ಲಿ ಓದುವಿಕೆ ಕಡಿಮೆಯಾಗಿ, ನಮ್ಮ ಸಂಸ್ಕೃತಿ- ಆಚರಣೆಗಳ ವಿಚಾರವಾಗಿ ಮಾಹಿತಿ ಕೊರತೆ ಇರುವುದು ಹಲವಾರು ಸಂದರ್ಭಗಳಲ್ಲಿ ದೃಢಪಟ್ಟಿದೆ. ಮೊಬೈಲ್ ನಲ್ಲಿ ದೊರೆಯುವ ಮಾಹಿತಿಗಳು ಮಾತ್ರ ಅವರ ಬಳಿಯಿದೆ. ಆದ್ದರಿಂದ ಈ ಕಾಲದ ನವ ಮಾಧ್ಯಮಗಳನ್ನು ಸರಿಯಾಗಿ ಬಳಸಿಕೊಂಡು ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ತುಳು ಭಾಷೆ- ಸಂಸ್ಕೃತಿ ವಿಚಾರಗಳನ್ನು ಎಲ್ಲೆಡೆ ಪಸರಿಸುವ ಅಗತ್ಯವಿದೆ.ಅಕಾಡೆಮಿಯಿಂದ ವಿದ್ಯಾರ್ಥಿ ಕೇಂದ್ರಿತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಚಲಚಚಿತ್ರ ನಟ ಸ್ವರಾಜ್ ಶೆಟ್ಟಿ ಮಾತನಾಡಿ, ಬೇರೆ ಊರಿಗೆ ಹೋದಾಗ ಅಲ್ಲಿ ತುಳು ಭಾಷೆ ಮಾತನಾಡುವವರು ಸಿಕ್ಕಾಗ ನಮಗೆ ತುಳು ಭಾಷೆಯ ಮಹತ್ವ ತಿಳಿಯುತ್ತದೆ. ನಾವು ಎಂದಿಗೂ ತುಳು ಭಾಷೆಯನ್ನು ಬಿಟ್ಟುಕೊಡ ಬಾರದು. ತುಳು ಪರಂಪರೆ ಅಳಿಯದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. 8ನೇ ಪರಿಚ್ಛೇದಕ್ಕೆ ಸೇರಿಸುವ ಕೆಲಸದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸುವ ಅಗತ್ಯವಿದೆ ಎಂದರು. ನಿರೂಪಕಿ, ನಟಿ ಸೌಜನ್ಯ ಹೆಗ್ಡೆ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಜಾಣ್ಮೆಯಿಂದ ಕೆಲಸ ಮಾಡುವವರು, ಹಿಂದಿನ ಮಕ್ಕಳಂತೆ ಕಷ್ಟ ಪಟ್ಟು ಕೆಲಸ ಮಾಡುವವರಲ್ಲ. ಹಾಗಾಗಿ ತಮ್ಮ ಜಾಣ್ಮೆಯ ಮೂಲಕ ತುಳು ಭಾಷೆ ಸಂಸ್ಕೃತಿಯನ್ನು ಎಲ್ಲರಿಗೂ ಪರಿಚಯಿಸುವ ಕೆಲಸ ಮಾಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಅಕಾಡೆಮಿಗೆ ವಿದ್ಯಾರ್ಥಿ ಗಳು ಬರಬೇಕು . ಅಕಾಡೆಮಿಯಿಂದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ತುಳುವಿನ ವ್ಯಾಪ್ತಿ ವಿಸ್ತಾರವಾಗಿದ್ದು, ವಿದ್ಯಾರ್ಥಿಗಳು ತುಳುವಿನ ಬಗ್ಗೆ ಆಸಕ್ತಿ ಹೊಂದಿ ಭಾಷೆ, ಸಂಸ್ಕೃತಿಯ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ನುಡಿದರು. ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಮಂಗಳೂರು ವಿವಿ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಶೇಷಪ್ಪ ಅಮೀನ್, ಮನಪಾ ಮಾಜಿ ಸದಸ್ಯ ಗಣೇಶ್ ಕುಲಾಲ್, ತುಳು ಪರಿಷತ್ ಗೌರವ ಸಲಹೆಗಾರ ಸ್ವರ್ಣ ಸುಂದರ್, ಗೌರವಾಧ್ಯಕ್ಷ ಡಾ. ಪ್ರಭಾಕರ ನೀರುಮಾರ್ಗ, ಕೋಶಾಧಿಕಾರಿ ಸುಮತಿ ಹೆಗ್ಡೆ, ಕಲಾ ಸಿರಿ ಸಂಚಾಲಕ ದುರ್ಗಾ ಪ್ರಸಾದ್, ಸಮ್ಮೇಳನ ಸಂಚಾಲಕಿ ಅಮಿತಾ ಅಶ್ವಿನ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಸಂಚಾಲಕ ಸಂತೋಷ್ ಶೆಟ್ಟಿ ಹಿರಿಯಡ್ಕ, ಬಾಬು ಕೊರಗ ಉಪಸ್ಥಿತರಿದ್ದರು. ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಸ್ವಾಗತಿಸಿ, ಕಲಾ ಸಿರಿ ಸಂಚಾಲಕಿ ಚಂದ್ರ ಕಲಾ ರಾವ್ ವಂದಿಸಿದರು. ಭಾವಗೀತೆ, ಕಿರುನಾಟಕ, ಜಾನಪದ ನೃತ್ಯ, ಚಿತ್ರ ಕಲಾ ಸ್ಪರ್ಧೆ, ತುಳು ಬದುಕು ವಿಚಾರ ಮಂಥನ, ತುಳು ಬದುಕು ಸಾಕ್ಷ್ಯ ಚಿತ್ರ, ತುಳು ತುತ್ತೈತ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿವಿಧ ಕಾಲೇಜುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.   

ವಾರ್ತಾ ಭಾರತಿ 10 Mar 2026 10:11 pm

ಉಡುಪಿ| ಮಾ.11ರಿಂದ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳಿಂದ ಮುಷ್ಕರ

ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ

ವಾರ್ತಾ ಭಾರತಿ 10 Mar 2026 10:09 pm

ವಿಶ್ವಾಸ, ಪ್ರೀತಿ, ಗೌರವ ಇದ್ದಲ್ಲಿ ಸಮಸ್ಯೆ ಇಲ್ಲ: ಅಬ್ದುಲ್ ಅಝೀಝ್ ದಾರಿಮಿ

ಸಂತ ಅಲೋಶಿಯಸ್ ಕಾಲೇಜಿನಲ್ಲಿ ಸೌಹಾರ್ದ ಇಫ್ತಾರ್ ಕೂಟ

ವಾರ್ತಾ ಭಾರತಿ 10 Mar 2026 10:05 pm

ವೈದ್ಯರ ಮುಷ್ಕರಕ್ಕೆ ಬ್ರೇಕ್‌; ರಾಜ್ಯಾದ್ಯಂತ ಎಂದಿನಂತೆ ಆಸ್ಪತ್ರೆಗಳ ಒಪಿಡಿ ಸೇವೆ; ಬೇಡಿಕೆ ಈಡೇರಿಕೆಗೆ ಸರ್ಕಾರ ಒಪ್ಪಿಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ, ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾ.11ರಿಂದ 15ರ ತನಕ ಕರೆಕೊಟ್ಟಿದ್ದ ಬಂದ್‌ ಅನ್ನು ಹಿಂಪಡೆಯಲಾಗಿದೆ. ಮಂಗಳವಾರ ಆರೋಗ್ಯ ಸಚಿವರು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಬೇಡಿಕೆ ಈಡೇರಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಿಜಯ ಕರ್ನಾಟಕ 10 Mar 2026 9:58 pm

ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಗಳ ಅವಧಿಯಲ್ಲಿ ಆರೋಪಿಯ ಪತ್ತೆ

ಮಂಗಳೂರು, ಮಾ.10: ಕಾವೂರು ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ಕಾರ್ಯಚರಣೆ ನಡೆಸಿ 24 ಗಂಟೆಯಲ್ಲಿ ಆರೋಪಿಯನ್ನು  ಬಂಧಿಸಿದ್ದಾರೆ. ಆರೋಪಿ ಕಳವು ಮಾಡಿದ ಎಲ್ಲಾ ಸ್ವತ್ತುಗಳ ವಶಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ನಗರ ಪೊಲೀಸರ ಪ್ರಕಟನೆ ತಿಳಿಸಿದೆ. ಕಾವೂರು ಉಲ್ಲಾಸ್ ನಗರ ಮನೆಯೊಂದಕ್ಕೆ ಮಾ.7ರಂದು ಮದ್ಯಾಹ್ನ 12-00 ಗಂಟೆ ಅವಧಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು ಕಳ್ಳರು ಒಳಪ್ರವೇಶಿಸಿ ಸುಮಾರು ರೂ 4,80,000 ಬೆಲೆಯ 39 ಗ್ರಾಂ ಚಿನ್ನಭಾರಣ, 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಕಾವೂರು ಪೊಲೀಸರಿಗೆ ದೂರು ನೀಡಲಾಗಿದೆ. ಬಗ್ಗೆ ನೀಡಿದ ದೂರಿನಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸಜಿಪನಡು ದೇರಾಜೆಯ ಆರೋಪಿ ಅಶೋಕ್ (41) ಎಂಬಾತನನ್ನು ಕಳ್ಳತನ ನಡೆದ 24 ಗಂಟೆಯಲ್ಲಿ ಅಂದರೆ ಮಾ.8 ರಂದು ಬಂಧಿಸಿ ಆಪಾದಿತನಿಂದ ಕಳವು ಮಾಡಿರುವ ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಈ ಪತ್ತೆ ಕಾರ್ಯಚಾರಣೆಯಲ್ಲಿ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ-ನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ದಿನೇಶ್, ಮಾಲತೇಶ್, ನಾಗರಾಜ್ ಹಾಗೂ ರಿಯಾಜ್ ರವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.  

ವಾರ್ತಾ ಭಾರತಿ 10 Mar 2026 9:56 pm

ಬೇಡಿಕೆಗಳ ಈಡೇರಿಕೆ ಭರವಸೆ: ಮುಷ್ಕರ ಹಿಂಪಡೆದ ಸರಕಾರಿ ವೈದ್ಯರು

ಬೆಂಗಳೂರು : ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಸರಕಾರಿ ವೈದ್ಯಾಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ ಎಂ.ಮೇಟಿ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ನೌಕರರು ಕರ್ತವ್ಯ ಬಹಿಷ್ಕರಿಸಿ ಮಾ.11ರಿಂದ ಮುಷ್ಕರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಸರಕಾರವು ಸಕಾರತ್ಮಕವಾಗಿ ಪ್ರತಿಕ್ರಿಯಿಸಿದೆ. ಹೀಗಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದರು.  

ವಾರ್ತಾ ಭಾರತಿ 10 Mar 2026 9:48 pm

Budget Session 2026 | ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಐವನ್ ಡಿಸೋಜಾ ಆಗ್ರಹ

ಬೆಂಗಳೂರು : ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್ತಿನಲ್ಲಿ ‘2026-27ನೇ ಸಾಲಿನ ಆಯವ್ಯಯ ಅಂದಾಜುಗಳ’ ಕುರಿತಾಗಿ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಕರಾವಳಿಯ ಜನರು ಹೈಕೋರ್ಟ್ ವಿಚಾರಣೆಗಳಿಗಾಗಿ ಸುಮಾರು 350 ಕಿ.ಮೀ. ದೂರ ಇರುವ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ವಿಚಾರಣೆ ನಡೆಯುವ ಒಂದು ದಿನ ಮುಂಚಿತವಾಗಿ ಬರಬೇಕಾಗಿದೆ. ಸರಿಯಾದ ವಸತಿಯೂ ಇಲ್ಲದೆ, ವಕೀರನ್ನು ಭೇಟಿ ಮಾಡಿ ವಿಚಾರ ಮಾಡಲು ಸಮಯವೂ ದೊರೆಯುತ್ತಿಲ್ಲ. ಹೀಗಾಗಿ ಕರಾವಳಿ ಭಾಗಕ್ಕೆ ಒಂದು ಹೈಕೋರ್ಟ್ ವಿಭಾಗೀಯ ಪೀಠ ಬೇಕಾಗಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜನರಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸರಕಾರ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈಗಾಗಲೇ ಕಲಬುರಗಿ ಮತ್ತು ಧಾರವಾಡದಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಿ, ಅಲ್ಲಿನ ಜನರಿಗೆ ಅನುಕೂಲ ಮಾಡಲಾಗಿದೆ. ಕಾನೂನನ್ನು ಮನೆ ಬಾಗಿಲಿಗೆ ತಲುಪಿಸುವುದು ಸರಕಾರ ಉದ್ದೇಶವೂ ಆಗಿದ್ದು, ಅದರ ಭಾಗವಾಗಿ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಅವರು ಹೇಳಿದರು. ಇನ್ನು ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 200 ಕೋಟಿ ರೂ.ಗಳ ಅನುದಾನವನ್ನು ನೀಡಬೇಕು. ಇದರಿಂದ ನಗರದ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭವೃದ್ಧಿಯನ್ನು ಮಾಡಬೇಕು. ಹಾಗೆಯೇ ಕರಾವಳಿಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರಕಾರವು ಯೋಜನೆಗಳನ್ನು ಸಿದ್ದಪಡಿಸಿ ಅನುಷ್ಟಾನ ಮಾಡಬೇಕು ಎಂದು ಅವರು ಒತ್ತಾಯಿಸಿದರು.  

ವಾರ್ತಾ ಭಾರತಿ 10 Mar 2026 9:44 pm

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಳೆಯ ಮೊಬೈಲ್ ಗಳ ವಶ

 ಮಂಗಳೂರು, ಮಾ.10: ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 201 ಹಳೆಯ ಮೊಬೈಲ್‌ಗಳನ್ನು ರೈಲ್ವೆ ರಕ್ಷಣಾ ದಳದವರು (ಆರ್ ಪಿ ಎಫ್) ಮಂಗಳೂರು ಜಂಕ್ಷನ್ ನಲ್ಲಿ ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಣ್ಗಾವಲು ತೀವ್ರಗೊಳಿಸಿರುವ ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್ ಪಿ ಎಫ್ ರೈಲುಗಳ ಮೂಲಕ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯ ವೇಳೆ ಸುಮಾರು 10.05 ಲಕ್ಷ ರೂ. ಮೌಲ್ಯದ 201 ಹಳೆಯ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ಮಾ.9 ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 3ರಲ್ಲಿ ಜಾಮ್ನನಗರ ಗರ - ತಿರುನಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್‌ನಲ್ಲಿ ತಪಾಸಣೆ ನಡೆಸಲಾಯಿತು. ರೈಲಿನ ಜನರಲ್ ಕೋಚ್ ಅನ್ನು ಪರಿಶೀಲಿಸುವಾಗ ಮೇಲಿನ ಲಗೇಜ್ ರಾಕ್‌ನಲ್ಲಿ ಯಾರೂ ಇಲ್ಲದ ಮೂರು ಬ್ಯಾಗ್‌ ಗಳಿರುವುದು ಕಂಡು ಬಂತು. ಅನುಮಾನದ ಮೇಲೆ ಬ್ಯಾಗ್‌ಗಳನ್ನು ಪರೀಕ್ಷಿಸಿದಾಗ ವಿವಿಧ ಬ್ರ್ಯಾಂಡ್‌ಗಳ 201 ಹಳೆಯ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ. ಆರ್‌ಪಿ ಎಫ್ ಹೆಡ್ ಕಾನ್‌ಸ್ಟೇಬಲ್ ಸುಜೀಶ್ ಮತ್ತು ಕಾನ್‌ಸ್ಟೇಬಲ್ ರಾಮಕೃಷ್ಣ ಅವರು ತಪಾಸಣೆ ನಡೆಸಿದರು. ಇಬ್ಬರು ಶಂಕಿತ ವ್ಯಕ್ತಿಗಳು: ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿ-ವೋರ್ನ್ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿ ಸಿದಾಗ, ಬ್ಯಾಗ್‌ಗಳು ಪತ್ತೆಯಾದ ಸಮಯದಲ್ಲಿ ಕೋಚ್‌ನಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳಿರುವುದು ಕಂಡುಬಂದಿದೆ. ಶಂಕಿತರನ್ನು ಪತ್ತೆಹಚ್ಚಲು ಕ್ರೈಮ್ ಇಂಟೆಲಿಜೆನ್ಸ್ ಬ್ರಾಂಚ್ ಮತ್ತು ವಿಭಾಗೀಯ ಅಪರಾಧ ತಡೆ ಮತ್ತು ಪತ್ತೆ ದಳದ ಸಮನ್ವಯದೊಂದಿಗೆ ಪ್ರಯತ್ನಗಳು ನಡೆಯುತ್ತಿದೆ. ಮುಂದಿನ ತನಿಖೆಗಾಗಿ ಮತ್ತು ವಶಪಡಿಸಿಕೊಂಡ ವಸ್ತುಗಳ ಕುರಿತು ಸೂಕ್ತ ಕಾನೂನು ಕ್ರಮಕ್ಕಾಗಿ ರೈಲ್ವೆ ಪೊಲೀಸ್ ಗೆ ಹಸ್ತಾಂತರಿಸಲಾಗಿದೆ ಎಂದು ಆರ್ ಪಿ ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಕಳವು ಮಾಡಿದ ಮೊಬೈಲ್‌ಗಳು: ವಶಪಡಿಸಿಕೊಳ್ಳಲಾದ 201 ಮೊಬೈಲ್ ಗಳನ್ನು ಆರೋಪಿಗಳು ರೈಲ್ವೆ ಪ್ರಯಾಣಿಕರಿಂದ ಕಳವು ಮಾಡಿರುವ ಸಾಧ್ಯತೆ ಇದೆ. ಇವು ತುಂಬಾ ಹಳೆಯ ಮೊಬೈಲ್‌ಗಳಲ್ಲ. ಇವುಗಳನ್ನು ಮಾರಾಟ ಮಾಡಲು ಕೊಂಡೊಯ್ಯುತ್ತಿ ದ್ದರೆಂಬ ಸಂದೇಹವಿದೆ. ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಆರ್‌ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 10 Mar 2026 9:44 pm

ಉಳ್ಳಾಲ ದರ್ಗಾ‌ ಅಧ್ಯಕ್ಷರಿಂದ‌ ಸಿ.ಎಂ.ಸಿದ್ದರಾಮಯ್ಯ ಭೇಟಿ; ಗಲ್ಫ್ ಕನ್ನಡಿಗರ ರಕ್ಷಣೆಗೆ ಮನವಿ

ಉಳ್ಳಾಲ: ದರ್ಗಾ ‌ಅಧ್ಯಕ್ಷದಾದ ಬಿ.ಜಿ ಹನೀಫ್ ಹಾಜಿ‌ ಮುಖ್ಯಮಂತ್ರಿ ‌ಸಿ.ಎಮ್ ಸಿದ್ದರಾಮಯ್ಯನವರನ್ನು‌ ಭೇಟಿ‌ ಮಾಡಿ ಗಲ್ಫ್ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು . ಅಮೇರಿಕ‌ ಮತ್ತು‌ ಇಸ್ರೇಲ್ ಇರಾನ್ ವಿರುದ್ದ ಪ್ರಾರಂಭ ವಾಗಿರುವ ಯುದ್ಧದ ಬೀತಿಯಿಂದ ಗಲ್ಫ್ ನಲ್ಲಿರವ ಲಕ್ಷಾಂತರ ಕನ್ನಡಿಗರ ಕುಟುಂಬವು ಭೀತಿಯಿಂದ ಜೀವನ‌ ನಡೆಸುವ ಪರಿಸ್ಥಿತಿ ಎದುರಾಗಿದೆ. ಗಲ್ಫ್ ನಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಬಗ್ಗೆ ಖಾತರಿಪಡಿಸಲು ಸಂಬಂದಪಟ್ಟವರೊಂದಿಗೆ ಮಾತುಕತೆ ನಡೆಸಿ‌ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಹಾಗೂ ಪವಿತ್ರ ಉಮ್ರಾ ಕೈಗೊಳ್ಳಲು ತೆರಳಿ ಹಿಂದಿರುಗಳು ವಿಮಾನದ ವ್ಯವಸ್ಥೆ ಇಲ್ಲದ ಬಗ್ಗೆ‌ ಕ್ರಮ ಕೈಗೊಳ್ಳಲು ಕೋರಲಾಯಿತು. ಈ ಸಂದರ್ಭ 17ನೇ ಬಜೆಟ್ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡ ದೂರದೃಷ್ಟಿ ಹಾಗೂ ಜನಪರ ಬಜೆಟ್ ಆಗಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯುತೆ‌ ನೀಡಿರುವ ಬಗ್ಗೆ ಮುಖ್ಯಮಂತ್ರಿ ಅವರನ್ನು ಅಭಿನಂದಿಸಿದರು. ಕೋಶಾಧಿಕಾರಿ ನಾಝಿಮ್ ರಹ್ಮಾನ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 10 Mar 2026 9:41 pm

ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಉದ್ಯೋಗ ಪುನರ್ವಸತಿ ಯೋಜನೆ ಯಾಕಿಲ್ಲ?: ರಾಜ್ಯ ಸರಕಾರಗಳನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸರಕಾರಿ ಇಲಾಖೆಗಳು ಅಥವಾ ಸಂಸ್ಥೆಗಳಲ್ಲಿ ಉದ್ಯೋಗ ನೀಡುವ ಮೂಲಕ ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಯಾಕೆ ರೂಪಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರಶ್ನಿಸಿದೆ. ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಸರಕಾರಿ ಉದ್ಯೋಗ ನೀಡುವಲ್ಲಿ ಸಮಸ್ಯೆಗಳಿದ್ದರೆ, ರಾಜ್ಯ ಸರಕಾರಗಳು ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಜೀವನಾಧಾರ ಭತ್ಯೆ ನೀಡಲು ಒಂದು ನೀತಿಯನ್ನು ರೂಪಿಸಬಹುದು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ. ಆ್ಯಸಿಡ್ ದಾಳಿ ಸಂತ್ರಸ್ತೆ ಶಹೀನ್ ಮಲಿಕ್ ಸಲ್ಲಿಸದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ಪೀಠ ವಿಚಾರಣೆ ನಡೆಸಿತು. ಆ್ಯಸಿಡ್ ದಾಳಿ ಸಂತ್ರಸ್ತರ ಯೋಗಕ್ಷೇಮ, ಸೂಕ್ತ ಪುನರ್ವಸತಿ ಹಾಗೂ ಇತರ ಕ್ರಮಗಳಿಗಾಗಿ ರಾಜ್ಯಗಳು ಹಾಗೂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಶಹೀನ್ ಮಲಿಕ್ ಅರ್ಜಿಯಲ್ಲಿ ಕೋರಿದ್ದರು.

ವಾರ್ತಾ ಭಾರತಿ 10 Mar 2026 9:40 pm

ದ.ಕ., ಉಡುಪಿ ಜಿಲ್ಲೆ ಹೊರಗೆ ಕಂಬಳ ವಿರೋಧಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ರಾಜ್ಯದ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಯಾಕೆ ಸೀಮಿತಗೊಳಿಸಬೇಕು ಎಂದು ಪ್ರಶ್ನಿಸಿದ ನ್ಯಾಯಾಲಯ

ವಾರ್ತಾ ಭಾರತಿ 10 Mar 2026 9:38 pm

ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ; ಕೋರ್ಟ್‌ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ ನಟಿ ರಮ್ಯಾ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಅತ್ಯಾಚಾರ ಹಾಗೂ ಜೀವ ಬೆದರಿಕೆಯೊಡ್ಡಿದವರ ವಿರುದ್ಧ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ನಟಿ ರಮ್ಯಾ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ದಾಖಲಿಸಿದರು. ನಟಿ, ಮಾಜಿ ಸಂಸದೆ ರಮ್ಯಾ ದಾಖಲಿಸಿರುವ ಪ್ರಕರಣ ಕುರಿತು ಮಂಗಳವಾರ ನಗರದ 46ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ರಾಜೀವ್ ಗೌಡ ಅವರು ವಿಚಾರಣೆ ನಡೆಸಿದರು. ಪ್ರಕರಣ ಸಂಬಂಧ ಸಾಕ್ಷ್ಯ ನುಡಿಯಲು ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ನಟಿ ರಮ್ಯಾ ಕೋರ್ಟ್‌ಗೆ ಹಾಜರಾಗಿದ್ದರು. ಜತೆಗೆ ಪ್ರಕರಣದ 12 ಆರೋಪಿಗಳು ಸಹ ವಿಚಾರಣೆಗೆ ಹಾಜರಾಗಿದ್ದರು. ಆರೋಪಿಗಳು ಅತ್ಯಾಚಾರ ಮತ್ತು ಜೀವ ಬೆದರಿಕೆ ಒಡ್ಡಿರುವ ಹಿನ್ನೆಲೆಯಲ್ಲಿ ಇನ್‌-ಕ್ಯಾಮರಾ ಪ್ರೊಸಿಡಿಂಗ್ಸ್‌ (ಗೌಪ್ಯ ವಿಚಾರಣೆ) ನಡೆಸಲು ನ್ಯಾಯಾಧೀಶರು ನಿರ್ಧರಿಸಿದರು. ಅದರಂತೆ, ರಮ್ಯಾ ಹಾಗೂ ಆರೋಪಿಗಳು ಮತ್ತು ಅವರ ವಕೀಲರನ್ನು ಹೊರತುಪಡಿಸಿ ಉಳಿದವರನ್ನು ಕೋರ್ಟ್‌ನಿಂದ ಹೊರಗೆ ಕಳುಹಿಸಿ, ರಮ್ಯಾ ಅವರ ಸಾಕ್ಷ್ಯ ದಾಖಲಿಸಿಕೊಳ್ಳಲಾಯಿತು. ರಮ್ಯಾ ಅವರ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಧೀಶರು, ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಿತು. ಕೇಸ್ ಮುಂದುವರಿಸುತ್ತೇನೆ: ವಿಚಾರಣೆ ನಂತರ ಕೋರ್ಟ್‌ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮ್ಯಾ, ಇಂದು ನನ್ನ ಸಾಕ್ಷ್ಯ ದಾಖಲಿಸಬೇಕಿತ್ತು. ಅದಕ್ಕಾಗಿ ಕೋರ್ಟ್‌ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದೆ. ಆರೋಪಿಗಳನ್ನು ನೋಡಿದರೆ ಬೇಸರ ಆಗುತ್ತದೆ. ಹೆಣ್ಣು ಮಕ್ಕಳ ವಿಚಾರದಲ್ಲಿ ಎಲ್ಲರೂ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಬೆದರಿಕೆ ಹಾಕುವವರಿಗೆ ಭಯ ಬರಬೇಕು ಎಂಬ ಕಾರಣಕ್ಕೆ ದೂರು ದಾಖಲಿಸಿದೆ. ಇಂಥ ವಿಚಾರ ಸುಮ್ಮನೆ ಬಿಟ್ಟರೆ ಮುಂದೆ ಅದೇ ಚಾಳಿ ಮುಂದುವರಿಸುತ್ತಾರೆ. ಇಂಥ ಬೆಳವಣಿಗೆ ತಡೆಯಲು ನಾನು ಎಲ್ಲ ಹೆಣ್ಣು ಮಕ್ಕಳ ಪರವಾಗಿ ಕೇಸ್‌ ಮುಂದುವರಿಸುತ್ತೇನೆ ಎಂದರು. ಪ್ರಕರಣದ ಹಿನ್ನೆಲೆ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಮತ್ತು ಬೆದರಿಕೆ ಹಾಕಿದ ಆರೋಪ ಸಂಬಂಧ ಸೈಬರ್‌ ಪೊಲೀಸ್ ಠಾಣೆಯಲ್ಲಿ ರಮ್ಯಾ 2025ರಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಬೆಂಗಳೂರಿನ ಸೈಬರ್ ಪೊಲೀಸರು 11 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆ ಎಲ್ಲ ಆರೋಪಿಗಳ ವಿರುದ್ಧ ಆರೋಪ ರಚಿಸಿದ್ದ ನ್ಯಾಯಾಲಯ, ಪ್ರಕರಣ ಕುರಿತು ಸಾಕ್ಷ್ಯ ದಾಖಲಿಸಲು ಸೂಚಿಸಿ ರಮ್ಯಾಗೆ ಸಮನ್ಸ್‌ ಜಾರಿ ಮಾಡಿತ್ತು. ಇದರಿಂದ, ರಮ್ಯಾ ಮಂಗಳವಾರ ಕೋರ್ಟ್‌ಗೆ ಹಾಜರಾಗಿ ಸಾಕ್ಷ್ಯ ದಾಖಲಿಸಿದ್ದಾರೆ.

ವಾರ್ತಾ ಭಾರತಿ 10 Mar 2026 9:38 pm

ಮಂಗಳೂರು ವಿವಿ ಫಲಿತಾಂಶ ಪ್ರಕಟ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ರ‍್ಯಾಂಕ್‌

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯವು 2025ನೇ ಸಾಲಿನಲ್ಲಿ ನಡೆಸಿದ್ದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಆಳ್ವಾಸ್‌ನ ವಿದ್ಯಾರ್ಥಿಗಳು ಒಟ್ಟು 15 ರ‍್ಯಾಂಕ್‌ಗಳಿಸಿ ಗಮನಾಹ೯ ಸಾಧನೆ ಮಾಡಿದ್ದಾರೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸ್ನಾತಕೋತ್ತರ ರ‍್ಯಾಂಕ್ : ಎಂಎ ಇಂಗ್ಲೀಷ್ ವಿಭಾಗದ ಪವಿತ್ರ ತೇಜ್, ಎಂಕಾಂ ಎಚ್‌ಆರ್‌ಡಿ ವಿಭಾಗದ ಹರ್ಷಿತಾ, ಆಹಾರ ವಿಜ್ಞಾನ ಹಾಗೂ ಪೋಷಣೆ ವಿಭಾಗದ ವಿಭಾಶ್ರೀ ಜಿಆರ್, ಸಾವಯವ ರಸಾಯನಶಾಸ್ತ್ರ ವಿಭಾಗದ ಪ್ರತೀಕ್ಷಾ, ರಸಾಯನಶಾಸ್ತ್ರ ವಿಭಾಗದ ಮೆಲಿಸಾ ವಿಡಿ, ಹಾಗೂ ಮನಶಾಸ್ತ್ರ ವಿಭಾಗದ ಸಾಮ್ನ ಜಾರ್ಜ ಪ್ರಥಮ ರ‍್ಯಾಂಕ್‌ನೊಂದಿಗೆ ಆರು ಪ್ರಥಮ ರ‍್ಯಾಂಕ್‌ಗಳು ಆಳ್ವಾಸ್ ಸ್ನಾತಕೋತ್ತರ ವಿದ್ಯಾರ್ಥಿಗಳು ಗಳಿಸಿದ್ದಾರೆ. ಪದವಿ ರ‍್ಯಾಂಕ್‌ಗಳು: ಬಿಎ ವಿಭಾಗದ ನಂದಿನಿ ಶೆಣೈ ನಾಲ್ಕನೇ ರ‍್ಯಾಂಕ್ ಗಳಿಸಿದರೆ, ಬಿಕಾಂ ವಿಭಾಗದಲ್ಲಿ ಪ್ರಜ್ಞಾ ನಾಲ್ಕನೇ ರ‍್ಯಾಂಕ್ ಹಾಗೂ ಸುರಕ್ಷಾ ಜೈನ್ ಆರನೇ ರ‍್ಯಾಂಕ್ ಹಾಗೂ ಶ್ರದ್ಧಾ ಮೀರಾ 8ನೇ ರ‍್ಯಾಂಕ್ ಗಳಿಸಿದ್ದಾರೆ. ಬಿಬಿಎ ವಿಭಾಗದಲ್ಲಿ ರಿತುನಂದ ಆರ್ ಏಳನೇ ರ‍್ಯಾಂಕ್ ಪಡೆದು ಒಟ್ಟು ಪದವಿ ವಿಭಾಗದಲ್ಲಿ ಒಟ್ಟು 5 ರ‍್ಯಾಂಕ್‌ಗಳು ಆಳ್ವಾಸ್ ಕಾಲೇಜಿಗೆ ಲಭಿಸಿದೆ. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ (ಬಿಎಡ್) ಮಾನಸ ಪ್ರಥಮ ರ‍್ಯಾಂಕ್ ಗಳಿಸಿದರೆ, ಕೆ ಶಿವಾನಿ ದ್ವಿತೀಯ ಹಾಗೂ ಪ್ರಧ್ವಿ ನಾಯಕ್ ಎಂಟನೇ ರ‍್ಯಾಂಕ್ ಗಳಿಸಿದ್ದಾರೆ. ಈ ವಿಭಾಗದಲ್ಲಿ ಒಟ್ಟು ಹತ್ತರ ಒಳಗೆ ಮೂರು ರ‍್ಯಾಂಕ್‌ಗಳು ಆಳ್ವಾಸ್‌ಗೆ ಲಭಿಸಿದೆ. ದೈಹಿಕ ಶಿಕ್ಷಣ ಕಾಲೇಜಿನ ಕಾಲೇಜಿನ ಚೈತ್ರಾ ಪಿ ಪ್ರಥಮ ರ‍್ಯಾಂಕ್‌ಗಳಿಸಿದ್ದಾರೆ. ಈ ಮೂಲಕ ಆಳ್ವಾಸ್ ವಿದ್ಯಾರ್ಥಿಗಳು ಒಟ್ಟು 8 ಪ್ರಥಮ ರ‍್ಯಾಂಕ್, 1 ದ್ವಿತೀಯ, 2 ಚತುರ್ಥ, 1 ಆರನೇ ರ‍್ಯಾಂಕ್, 1 ಏಳನೇ ರ‍್ಯಾಂಕ್, 2 ಎಂಟನೇ ರ‍್ಯಾಂಕ್ ಗಳಿಸಿ ಒಟ್ಟು 15 ರ‍್ಯಾಂಕ್‌ಗಳೊಂದಿಗೆ ಮಂಗಳೂರು ವಿವಿ ಕಾಲೇಜುಗಳಲ್ಲಿ ಅತೀ ಹೆಚ್ಚು ರ‍್ಯಾಂಕ್ ಗಳಿಸಿದ ಕಾಲೇಜುಗಳ ಪೈಕಿ ಅಗ್ರಸ್ಥಾನಿಯಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ರ‍್ಯಾಂಕ್ ಪಟ್ಟಿಯಲ್ಲಿ 2009ರಿಂದಲೂ ಮುಂಚೂಣಿಯಲ್ಲಿರುವ ಆಳ್ವಾಸ್ ಕಾಲೇಜು, ಇಲ್ಲಿಯವರೆಗೆ ಒಟ್ಟು 447 ರ‍್ಯಾಂಕ್‌ಗಳನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ರ‍್ಯಾಂಕ್‌ ಪುರಸ್ಕೃತರಿಗೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿನಂದಿಸಿದ್ದಾರೆ.

ವಾರ್ತಾ ಭಾರತಿ 10 Mar 2026 9:37 pm

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರು ತೆಗೆಯುವುದಿಲ್ಲ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರನ್ನು ತೆಗೆದು ಹಾಕುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಂಗಳವಾರ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಯುತ ಹಾಗೂ ಶಾಂತಿಯುತ ಚುನಾವಣೆಗಳನ್ನು ನಡೆಸುವುದು ತನ್ನ ಆದ್ಯತೆಯಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ರಾಜಕೀಯ ಪಕ್ಷಗಳು ಹಾಗೂ ಹಿರಿಯ ಆಡಳಿತಾಧಿಕಾರಿಗಳೊಂದಿಗೆ ಸರಣಿ ಸಭೆಗಳ ಬಳಿಕ ಇಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜ್ಞಾನೇಶ್ ಕುಮಾರ್ ಅವರು, ಪಶ್ಚಿಮಬಂಗಾಳದ ಜನತೆ ಯಾವತ್ತೂ ಶಾಂತಿಯುತ ಹಾಗೂ ಎಲ್ಲರಿಗೂ ಪಾಲ್ಗೊಳ್ಳಲು ಅವಕಾಶ ಇರುವ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂದರು. ‘‘ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಯುತ ಹಾಗೂ ಶಾಂತಿಯುತ ಚುನಾವಣೆಗಳನ್ನು ನಡೆಸುವುದು ನಮ್ಮ ಗುರಿ’’ ಎಂದು ಅವರು ತಿಳಿಸಿದರು. ಪ್ರತಿಯೊಬ್ಬ ಅರ್ಹ ಮತದಾರನೂ ಮತ ಚಲಾಯಿಸಲು ಮುಕ್ತ ಅವಕಾಶ ಹೊಂದಿರುತ್ತಾರೆ ಎಂದು ಅವರು ಒತ್ತಿ ಹೇಳಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಮಾತನಾಡಿದ ಜ್ಞಾನೇಶ್ ಕುಮಾರ್, ಸಾಂವಿಧಾನಿಕ ನಿಯಮಗಳಿಗೆ ಅನುಸಾರವಾಗಿ ದೇಶಾದ್ಯಂತ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದರು. ಎಲ್ಲಾ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಹೊಂದಿರುವುದನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಮತದಾನಕ್ಕೆ ಅರ್ಹರಲ್ಲದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಮಾತ್ರ ತಾರ್ಕಿಕ ವ್ಯತ್ಯಾಸ ನಿಯಮವನ್ನು ತರಲಾಗಿದೆ ಎಂಬ ಪ್ರತಿಪಾದನೆಯನ್ನು ತಿರಸ್ಕರಿಸಿದ ಜ್ಞಾನೇಶ್ ಕುಮಾರ್ ಅವರು, ಎಲ್ಲಾ 12 ರಾಜ್ಯಗಳಲ್ಲಿಯೂ ಅಂತಹ ತಾರ್ಕಿಕ ವ್ಯತ್ಯಾಸ ನಿಯಮಗಳನ್ನು ತರಲಾಗಿದೆ. ಇತರ ರಾಜ್ಯಗಳಲ್ಲಿ ಅನುಸರಿಸಿದ ಪ್ರಕ್ರಿಯೆಯನ್ನೇ ಪಶ್ಚಿಮ ಬಂಗಾಳದಲ್ಲಿ ಕೂಡ ಅನುಸರಿಸಲಾಗಿದೆ ಎಂದರು.

ವಾರ್ತಾ ಭಾರತಿ 10 Mar 2026 9:33 pm

ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರ: ಯಶ್‌ಪಾಲ್ ಸುವರ್ಣ

ಉಡುಪಿ, ಮಾ.10: ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಉಡುಪಿ ಜಿಲ್ಲೆಯ ಲಿಂಗಾನುಪಾತ ಪ್ರಮಾಣದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಹಲವಾರು ಮಂದಿ ಮಹಿಳಾ ಉಸ್ತುವಾರಿ ಸಚಿವರು, ಮಹಿಳಾ ಜಿಲ್ಲಾಧಿಕಾರಿ, ಸಂಸದರೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಹಾಗೂ ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯ ಪ್ರಗತಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ಉಡುಪಿ ನಗರ ಬಿಜೆಪಿ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಮುಖ್ಯ ಅತಿಥಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಮಹಿಳೆಯರಾದ ಶಕುಂತಲಾ ಶೆಟ್ಟಿ(ಹೈನುಗಾರಿಕೆ), ವಿಮಲ (ಸಂಜೀವಿನಿ ಗ್ರೂಪ್), ಅನುಷಾ (ವಕೀಲರು), ಸುಶೀಲ ಸಾಲಿಯಾನ್(ಮಹಿಳಾ ಹೋಮ್ ಗಾರ್ಡ್), ಗೀತಾ ಕೃಷ್ಣರಾಜ್(ಆಟೋ ಚಾಲಕಿ), ಲಲಿತ(ಪೌರ ಕಾರ್ಮಿಕರು) ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ಸತೀಶ್ ಸಾಲ್ಯಾನ್ ಮಣಿಪಾಲ ಹಾಗೂ ಪರ್ಕಳದ ಮನೆ ಊಟ ಹೋಟೆಲ್‌ನ ಹಿರಿಯ ದಂಪತಿ ಗೋಪಾಲಕೃಷ್ಣ ಮತ್ತು ವಸಂತಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪಕ್ಷದ ಮುಖಂಡ ರಾದ ಕಿದಿಯೂರು ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಮಂಡಲದ ಅಧ್ಯಕ್ಷ ದಿನೇಶ್ ಅಮಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ಸಂಧ್ಯಾ ರಮೇಶ್, ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಮೊದಲಾದವರು ಉಪಸ್ಥಿತರಿದ್ದರು. ಸಂತೆಕಟ್ಟೆ ವಾತ್ಸಲ್ಯ ಕ್ಲಿನಿಕ್‌ನನ ಡಾ.ರಾಜಲಕ್ಷ್ಮಿ ಮಹಿಳೆಯರಿಗಾಗಿ ವಿಶೇಷ ಉಪಯುಕ್ತ ಆರೋಗ್ಯ ಮಾಹಿತಿ ನೀಡಿದರು. ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾಪ್ರಭು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಬಳಿಕ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ವಾರ್ತಾ ಭಾರತಿ 10 Mar 2026 9:32 pm

ವಿಶ್ವ ಮಹಿಳಾ ದಿನಾಚರಣೆ: ಆಶಾ ಕಾರ್ಯಕರ್ತೆಗೆ ಸನ್ಮಾನ

ಮಂಗಳೂರು, ಮಾ.10: ನಗರದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾ.9ರಂದು ವಿಶ್ವ ಮಹಿಳಾ ದಿನನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಗಳೂರು ಸಹಾಯಕ ಪೊಲೀಸ್ ಕಮಿಷನರ್ ಗೀತಾ ಡಿ.ಕುಲಕರ್ಣಿ ಮಾತನಾಡಿ, ಇಂದಿನ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು. ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಂಚೂಣಿ ಆರೋಗ್ಯ ಹೀರೋ ಆಗಿರುವ ಆಶಾ ಕಾರ್ಯಕರ್ತೆಯನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು. ಪ್ರಸಾದ್ ನೇತ್ರಾಲಯ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ರಶ್ಮಿ ಕೃಷ್ಣ ಪ್ರಸಾದ್, ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣ ಪ್ರಸಾದ್, ನಿರ್ದೇಶಕರುಗಳಾದ ಡಾ.ವಿಕ್ರಮ್ ಜೈನ್, ಡಾ.ಹರೀಶ್ ಶೆಟ್ಟಿ, ಡಾ.ಜೇಕಬ್, ಹಿರಿಯ ಸಲಹೆಗಾರರಾದ ಡಾ.ಶಿಬಿನ್, ಡಾ.ತೇಜಸ್ವಿನಿ ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 10 Mar 2026 9:31 pm

ಅಮೆರಿಕಾ ಜಗತ್ತಿನ ಸಾಮ್ರಾಜ್ಯಶಾಹಿ ಕೊಲೆಗಡುಕ: ಸುರೇಶ್ ಕಲ್ಲಾಗರ್

ಉಡುಪಿ ಸಮಾನ ಮನಸ್ಕ ಸಂಘಟನೆಗಳ ಯುದ್ಧ ವಿರೋಧಿ ದಿನಾಚರಣೆ

ವಾರ್ತಾ ಭಾರತಿ 10 Mar 2026 9:29 pm

ನೇತ್ರಜ್ಯೋತಿ ಕಾಲೇಜಿನಲ್ಲಿ ಅಂ.ರಾ.ಮಹಿಳಾ ದಿನಾಚರಣೆ

ಉಡುಪಿ, ಮಾ.10: ಉಡುಪಿಯ ನೇತ್ರಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಜಂಟಿ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಲತಾ ಭಂಡಾರಿ ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಡಾ.ಕೃಷ್ಣಪ್ರಸಾದ್ ಕೂಡ್ಲು, ಮಹಿಳೆಯರು ಈಗ ಅಬಲೆ ಅಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವಳ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್, ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು. ಕಾಲೇಜಿನ ಸಿಓಓ ಡಾ. ಗೌರಿ ಪ್ರಭು ಉಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಅಮೃತ ಕೃಷ್ಣಮೂರ್ತಿ, ಅರುಣಾಕಲಾ, ಅನಿತಾ ಬಾಳಿಗ, ಡಾ.ಕಾಂತಿ ಹರೀಶ್, ಡಾ.ಅರ್ಚನಾ ಎಂ.ವಿ., ಡಾ.ಶ್ರುತಿ ಬಲ್ಲಾಳ್ ಇವರನ್ನು ಸನ್ಮಾನಿಸಲಾಯಿತು. ಮಾಧವ ಪೂಜಾರಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ, ವಿದ್ಯಾರ್ಥಿ ಚರಣರಾಜ್ ವಂದಿಸಿದರು.

ವಾರ್ತಾ ಭಾರತಿ 10 Mar 2026 9:27 pm

ಮಹಿಳೆಯರಲ್ಲಿ ಮೂಳೆ ಸವೆತದ ಸಮಸ್ಯೆ ಹೆಚ್ಚಿರುತ್ತದೆಯೆ? ವೈದ್ಯರು ಹೇಳುವುದೇನು?

ಆರ್ತೊಪೆಡಿಕ್ ತಜ್ಞರಾದ ಡಾ ಭವಿಷ್ಯ ಹಂಡ ಅವರು ಮಹಿಳೆಯರಲ್ಲಿ ಸ್ವಾಭಾವಿಕವಾಗಿ ಮೂಳೆ ಸವೆತವಾಗಲು ಕಾರಣಗಳನ್ನು ವಿವರಿಸಿದ್ದಾರೆ. ವಯಸ್ಸಾಗುತ್ತಿದ್ದಂತೆಯೇ ಮೂಳೆಗಳ ಬಲವೂ ಸವೆಯುತ್ತದೆ. ಹೀಗೆ ಮೌನವಾಗಿ ಬರುವ ಆತಂಕಕ್ಕೆ ಮಹಿಳೆಯರು ಬೇಗನೇ ಎರವಾಗುತ್ತಿದ್ದಾರೆ. ನಾವು ಮಾಡುವ ಪ್ರತಿ ಚಲನೆಗೂ ಮೂಳೆಗಳ ಆರೋಗ್ಯ ಮುಖ್ಯವಾಗುತ್ತದೆ. ಒಟ್ಟು ಆರೋಗ್ಯಕ್ಕೆ ಮೂಳೆಗಳ ಆರೋಗ್ಯ ನಿರ್ಣಾಯಕವಾಗಿರುತ್ತದೆ. ಆದರೆ ಮಹಿಳೆಯರ ದೇಹದಲ್ಲಿನ ವಿವಿಧ ಬದಲಾವಣೆಗಳಿಂದಾಗಿ ಕಾಲ ಕ್ರಮೇಣ ಮೂಳೆ ಹೆಚ್ಚು ವೇಗವಾಗಿ ಸವೆಯುತ್ತದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಆರ್ತೊಪೆಡಿಕ್ ತಜ್ಞರಾದ ಡಾ ಭವಿಷ್ಯ ಹಂಡ ಅವರು ಮಹಿಳೆಯರಲ್ಲಿ ಸ್ವಾಭಾವಿಕವಾಗಿ ಮೂಳೆ ಸವೆತವಾಗಲು ಕಾರಣಗಳನ್ನು ವಿವರಿಸಿದ್ದಾರೆ. ಅಲ್ಲದೆ, ಮೂಳೆ ಆರೋಗ್ಯವನ್ನು ರಕ್ಷಿಸಲು ಯಾವ ಹೆಜ್ಜೆಗಳನ್ನು ಇಡಬಹುದು ಎಂದು ತಿಳಿಸಿದ್ದಾರೆ. ಹಾರ್ಮೋನ್ ಬದಲಾವಣೆಗಳು ಮಹಿಳೆಯರು ಮೂಳೆ ಸವೆತದ ಹೆಚ್ಚಿನ ಅಪಾಯವನ್ನು ಎದುರಿಸಲು ಪ್ರಮುಖ ಕಾರಣವೆಂದರೆ ಋತುಬಂಧ ಸಮೀಪಿಸುತ್ತಿದ್ದಂತೆ ಈಸ್ಟ್ರೋಜೆನ್ ಮಟ್ಟದಲ್ಲಿನ ಕುಸಿತ. ಮೂಳೆಯ ಸಾಂದ್ರತೆಯನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ದೇಹದ ಸ್ವಾಭಾವಿಕ ಮೂಳೆ ರಚನೆ ಪ್ರಕ್ರಿಯೆಯಲ್ಲಿ ಈಸ್ಟ್ರೋಜೆನ್ ಪ್ರಮುಖ ಪಾತ್ರ ವಹಿಸುತ್ತದೆ. ಋತುಬಂಧದ ನಂತರದ ಅವಧಿಯು ಮೂಳೆ ಸಾಂದ್ರತೆಯು ಗಮನಾರ್ಹವಾಗಿ ಕಡಿಮೆಯಾಗುವ ನಿರ್ಣಾಯಕ ಅವಧಿಯಾಗಿರುತ್ತದೆ. ವಿಶೇಷವಾಗಿ ಮಹಿಳೆಯರಲ್ಲಿ ಮೂಳೆ ಮುರಿತದ ಅವಧಿಯಾಗಿರುತ್ತದೆ. ಪೌಷ್ಠಿಕಾಂಶದ ಅಂತರಗಳು ನೀವು ಏನು ತಿನ್ನುತ್ತೀರಿ ಎನ್ನುವುದು ಒಟ್ಟು ಆರೋಗ್ಯದ ಮೇಲೆ ಪ್ರಮುಖ ಪಾತ್ರ ವಹಿಸುತ್ತದೆ. ಪೌಷ್ಠಿಕಾಂಶದ ಅಂತರವು ಕಾಲಾನಂತರದಲ್ಲಿ ಮೂಳೆಯ ಬಲದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಮೂಳೆ ಆರೋಗ್ಯಕ್ಕೆ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅತ್ಯಗತ್ಯ ಎಂದು ವ್ಯಾಪಕವಾಗಿ ಗುರುತಿಸಲಾಗಿದ್ದರೂ, ನಿಜವಾದ ಮೂಳೆಯ ಬಲವು ವಿಟಮಿನ್ D₃, ವಿಟಮಿನ್ K₂ ಮತ್ತು ಮೆಗ್ನೀಸಿಯಂನಂತಹ ಸೂಕ್ಷ್ಮ ಪೋಷಕಾಂಶಗಳ ವಿಶಾಲ ಜಾಲವನ್ನು ಅವಲಂಬಿಸಿದೆ. ಈ ಪೋಷಕಾಂಶಗಳು ಮೂಳೆಗಳ ಖನಿಜೀಕರಣಕ್ಕೆ ಬೆಂಬಲಿಸುವುದು, ಕ್ಯಾಲ್ಸಿಯಂ ಹೀರಿಕೊಳ್ಳುವುದನ್ನು ಸುಧಾರಿಸುವುದು ಮತ್ತು ಮೂಳೆಯ ರಚನೆಯನ್ನು ರಕ್ಷಿಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡುತ್ತವೆ. ಮೂರನೆಯದಾಗಿ ಜೀವನಶೈಲಿಯು ಮೂಳೆಯ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ದೈನಂದಿನ ಸ್ವಯಂ-ಆರೈಕೆ ಮುಖ್ಯವಾಗುತ್ತದೆ ಮತ್ತು ಸರಿಯಾದ ಜೀವನಶೈಲಿಯ ಆಯ್ಕೆಗಳು ದೀರ್ಘಕಾಲೀನ ಸಂಕೋಚನ-ವಿಕಸನಕ್ಕೆ ಕೊಡುಗೆ ನೀಡುತ್ತವೆ. ಈ ಕೆಳಗಿನ ಅಭ್ಯಾಸಗಳು ಮತ್ತು ನಿತ್ಯದ ಮಾದರಿಗಳು ಮೂಳೆ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು: • ಸಾಕಷ್ಟು ದೈಹಿಕ ಚಟುವಟಿಕೆ ಇಲ್ಲದಿರುವುದು ಅಥವಾ ದೀರ್ಘಕಾಲ ಕುಳಿತುಕೊಳ್ಳುವುದು • ನಡಿಗೆ, ನೃತ್ಯ ಅಥವಾ ಯೋಗ ತರಬೇತಿಯಂತಹ ತೂಕ ಏರಿಸುವ ವ್ಯಾಯಾಮಗಳ ಕೊರತೆ • ಧೂಮಪಾನ ಮತ್ತು ಅತಿಯಾದ ಮದ್ಯಪಾನ • ಒಟ್ಟು ಚಯಾಪಚಯ ಆರೋಗ್ಯದ ಮೇಲೆ ಪರಿಣಾಮ ಬೀರುವ ದೀರ್ಘಕಾಲೀನ ಒತ್ತಡ ಮೂಳೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರೆ ವೈವಿಧ್ಯಮಯ ಕ್ಯಾಲ್ಸಿಯಂ ಸಮೃದ್ಧ ಆಹಾರವನ್ನು ಸೇವಿಸಬೇಕು. ನಿತ್ಯವೂ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸೂಕ್ತ ಪ್ರಮಾಣದಲ್ಲಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಒತ್ತಡ ನಿರ್ವಹಣೆಯನ್ನು ಅಭ್ಯಾಸ ಮಾಡಬೇಕು. ಕೃಪೆ: hindustantimes.com

ವಾರ್ತಾ ಭಾರತಿ 10 Mar 2026 9:18 pm

ಬಾಷ್ ಕಂಪೆನಿಯ ನೂತನ ರೆಫ್ರಿಜನರೇಟರ್‌ಗಳ ಅನಾವರಣ

ಉಡುಪಿ, ಮಾ.10: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ಹರ್ಷ ಮಳಿಗೆಯಲ್ಲಿ ಹರ್ಷೋತ್ಸವದ ಪ್ರಯುಕ್ತ ಬಾಷ್ ಅಂತಾರಾಷ್ಟ್ರೀಯ ಕಂಪೆನಿಯ ಜರ್ಮನ್ ಉತ್ಪನ್ನ ನೂತನ ರೆಫ್ರಿಜನರೇಟರ್‌ಗಳ ಅನಾವರಣ ಕಾರ್ಯಕ್ರಮ ಮಂಗಳವಾರ ಜರಗಿತು. ನೂತನ ಬಾಷ್ ಉತ್ಪನ್ನಗಳನ್ನು ಅನಾವರಣಗೊಳಿಸಿದ ಡೈಜಿ ವರ್ಲ್ಡ್ ಮಿಡಿಯಾ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಹರ್ಷ ಸಂಸ್ಥೆಯ ಬೆಳವಣಿಗೆ ಹಾಗೂ ಯಶಸ್ವಿ ಇಂದಿನ ಯುವಜನತೆಗೆ ರೋಲ್ ಮಾಡೆಲ್ ಆಗಿದೆ. ಯಾವುದೇ ಸಂಸ್ಥೆಯ ಯಶಸ್ವಿಯಲ್ಲಿ ಅಲ್ಲಿನ ಸಿಬ್ಬಂದಿಗಳ ಪಾತ್ರ ಬಹಳ ಮುಖ್ಯವಾಗಿದೆ. ಹರ್ಷ ಸಂಸ್ಥೆಯ ಕಸ್ಟಮರ್ ಕೇರ್ ತುಂಬಾ ಉತ್ತಮವಾಗಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಬಾಷ್ ನ್ಯಾಷನಲ್ ಚಾನೆಲ್ ಹೆಡ್ ರಾಬಿ ದೇವಸಿಯಾ, ಬಾಷ್ ಕ್ಲಸ್ಟರ್ ಮುಖ್ಯಸ್ಥ ಆದಿತ್ಯ, ಹರ್ಷ ಎಚ್‌ಆರ್ ನಿರ್ದೇಶಕ ಸುರೇಶ್ ಎಂ., ಕ್ಲಸ್ಟರ್ ಮೆನೇಜರ್ ರೋನ್ಸನ್ ಡಿಸೋಜ, ಸ್ಟೋರ್ ಮೆನೇಜರ್ ಅಭಿನ್ ಪೂಜಾರಿ ಉಪಸ್ಥಿತರಿದ್ದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 10 Mar 2026 9:14 pm

ಜಿಸಿಸಿಯಲ್ಲಿ ವಾಸಿಸುವ 3.5 ಕೋಟಿ ವಿದೇಶಿಯರು ಎಲ್ಲಿಯವರು? ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯರು ಎಷ್ಟಿದ್ದಾರೆ?

ಆರು ಗಲ್ಫ್ ಸಹಕಾರ ಮಂಡಳಿ (GCC) ದೇಶಗಳಲ್ಲಿ ವಾಸಿಸುವ ಸುಮಾರು 6.2 ಕೋಟಿ ಜನರು ಈಗ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ. ಆರ್ಥಿಕ ಅವಕಾಶಗಳಿಗೆ ಹೆಸರುವಾಸಿಯಾದ ಬಹರೈನ್, ಕುವೈತ್, ಒಮಾನ್, ಖತರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಪ್ರಪಂಚದಾದ್ಯಂತದ ಸುಮಾರು 3.5 ಕೋಟಿ ವಿದೇಶಿ ಕಾರ್ಮಿಕರಿಗೆ ನೆಲೆಯಾಗಿದ್ದು, ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದಕ್ಷಿಣ ಏಷ್ಯಾದ ದೇಶಗಳಿಂದ ಕಾರ್ಮಿಕರ ಸಂಖ್ಯೆ ಇಲ್ಲಿ ಹೆಚ್ಚಿದೆ. ಸೌದಿ ಅರೇಬಿಯಾ ಮತ್ತು ಒಮಾನ್ ಹೊರತುಪಡಿಸಿ, ಉಳಿದ ನಾಲ್ಕು ಜಿಸಿಸಿ ದೇಶಗಳಲ್ಲಿ ವಾಸಿಸುವ ಜನರ ಜನಸಂಖ್ಯೆಯಲ್ಲಿ ವಿದೇಶಿ ಕಾರ್ಮಿಕರು ಹೆಚ್ಚಿನ ಪಾಲನ್ನು ಹೊಂದಿದ್ದಾರೆ. ► ವಿದೇಶಿ ಕಾರ್ಮಿಕರು ಎಲ್ಲಿಂದ ಬರುತ್ತಾರೆ? ಜಿಸಿಸಿ ದೇಶಗಳಲ್ಲಿನ ವಿದೇಶಿ ಕಾರ್ಮಿಕರ ಪೀಳಿಗೆಯು ಕಾರ್ಮಿಕಶಕ್ತಿಗೆ ಗಣನೀಯ ಕೊಡುಗೆ ನೀಡಿದೆ. ಇದರಲ್ಲಿ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಮನೆ ಕೆಲಸದವರು, ಭದ್ರತಾ ಸಿಬ್ಬಂದಿ ಮತ್ತು ಕ್ಲೀನರ್‌ಗಳು ಸೇರಿದ್ದಾರೆ, ಇವರೆಲ್ಲರೂ ಗಲ್ಫ್ ರಾಷ್ಟ್ರಗಳು ಹೆಸರುವಾಸಿಯಾಗಿರುವ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ. ಇತರ ದೇಶಗಳ ರಾಷ್ಟ್ರೀಯತೆಗಳನ್ನು ಹೊಂದಿದ್ದರೂ ಲಕ್ಷಾಂತರ ಜನರು ಗಲ್ಫ್ ಅನ್ನು ತಮ್ಮ ಮನೆ ಎಂದು ಪರಿಗಣಿಸುತ್ತಾರೆ. ಹೆಚ್ಚುವರಿಯಾಗಿ, ಬ್ಯಾಂಕಿಂಗ್, ಹಣಕಾಸು, ತಂತ್ರಜ್ಞಾನ, ಇಂಜಿನಿಯರಿಂಗ್, ವಾಯುಯಾನ, ವೈದ್ಯಕೀಯ ಮತ್ತು ಮಾಧ್ಯಮದಂತಹ ಕೈಗಾರಿಕೆಗಳಲ್ಲಿ ಹೆಚ್ಚು ಕೌಶಲ್ಯಪೂರ್ಣ ವಿದೇಶಿ ಕಾರ್ಮಿಕರು ದೀರ್ಘ ಇತಿಹಾಸವನ್ನು ಹೊಂದಿದ್ದಾರೆ. ಯುಎಇ ಮೂಲದ ಡಿಜಿಟಲ್ ಮಾರ್ಕೆಟಿಂಗ್ ಏಜೆನ್ಸಿಯಾದ ಗ್ಲೋಬಲ್ ಮೀಡಿಯಾ ಇನ್‌ಸೈಟ್ ಪ್ರಕಾರ, ಆರು ಜಿಸಿಸಿ ದೇಶಗಳಲ್ಲಿ ವಾಸಿಸುವ ಅನ್ಯ ದೇಶದವರ ಸಂಖ್ಯೆ ಈ ರೀತಿ ಇದೆ. ಭಾರತ: 9.1 ಮಿಲಿಯನ್ ಬಾಂಗ್ಲಾದೇಶ: 5 ಮಿಲಿಯನ್ ಪಾಕಿಸ್ತಾನ: 4.9 ಮಿಲಿಯನ್ ಈಜಿಪ್ಟ್: 3.3 ಮಿಲಿಯನ್ ಫಿಲಿಪೈನ್ಸ್: 2.2 ಮಿಲಿಯನ್ ಯೆಮೆನ್: 2.2 ಮಿಲಿಯನ್ ಸುಡಾನ್: 1.1 ಮಿಲಿಯನ್ ನೇಪಾಳ: 1.2 ಮಿಲಿಯನ್ ಸಿರಿಯಾ: 694,000 ಶ್ರೀಲಂಕಾ: 650,000 ►ಸೌದಿ ಅರೇಬಿಯಾ ಸೌದಿ ಅರೇಬಿಯಾ ಆರು GCC ದೇಶಗಳಲ್ಲಿ ಅತಿ ದೊಡ್ಡದಾಗಿದ್ದು, ಸುಮಾರು 3.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ತೈಲ-ಸಮೃದ್ಧ ದೇಶವು ಸುಮಾರು 20.5 ಮಿಲಿಯನ್ ಸ್ಥಳೀಯ ಜನಸಂಖ್ಯೆಯನ್ನು ಮತ್ತು ಹೆಚ್ಚುವರಿಯಾಗಿ 16.4 ಮಿಲಿಯನ್ ವಿದೇಶಿ ನಿವಾಸಿಗಳನ್ನು ಹೊಂದಿದೆ. ಸೌದಿ ಅರೇಬಿಯಾದಲ್ಲಿ ವಾಸಿಸುವ ಇತರ ದೇಶದ ಜನರ ಸಂಖ್ಯೆ ಈ ರೀತಿ ಇದೆ: ಬಾಂಗ್ಲಾದೇಶ: 2,590,000 ಭಾರತ: 2,310,000 ಪಾಕಿಸ್ತಾನ: 2,230,000 ಯೆಮೆನ್: 2,210,000 ಈಜಿಪ್ಟ್: 1,800,000 ಸುಡಾನ್: 1,000,000 ►ಯುಎಇ ಜಿಸಿಸಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಎರಡನೇ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿ ಸುಮಾರು 11.5 ಮಿಲಿಯನ್ ಜನರು ವಾಸಿಸುತ್ತಿದ್ದಾರೆ. ಇದು ರಾಜಧಾನಿ ಅಬುಧಾಬಿ, ದುಬೈ, ಶಾರ್ಜಾ, ಅಜ್ಮಾನ್, ಉಮ್ ಅಲ್ ಕುವೈನ್, ರಾಸ್ ಅಲ್ ಖೈಮಾ ಮತ್ತು ಫುಜೈರಾ ಸೇರಿದಂತೆ ಏಳು ಎಮಿರೇಟ್‌ಗಳನ್ನು ಒಳಗೊಂಡಿದೆ. ಜನಸಂಖ್ಯೆಯ ಸುಮಾರು 12 ಪ್ರತಿಶತ ಎಮಿರಾಟಿಗಳಾಗಿದ್ದು, ಸುಮಾರು 88 ಪ್ರತಿಶತ ವಿದೇಶಿಯರು ಇದ್ದಾರೆ. ಯುಎಇಯಲ್ಲಿ ವಾಸಿಸುವ ವಿದೇಶಿಯರು: ಭಾರತ: 4,360,000 ಪಾಕಿಸ್ತಾನ: 1,900,000 ಬಾಂಗ್ಲಾದೇಶ: 840,000 ಫಿಲಿಪೈನ್ಸ್: 780,000 ಇರಾನ್: 540,000 ಈಜಿಪ್ಟ್: 480,000 ►ಕುವೈತ್ 4.8 ಮಿಲಿಯನ್ ಜನಸಂಖ್ಯೆಯೊಂದಿಗೆ, ಕುವೈತ್ GCC ಯಲ್ಲಿ ಮೂರನೇ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿ ಸರಿಸುಮಾರು 1.56 ಮಿಲಿಯನ್ ಕುವೈತ್ ನಾಗರಿಕರು ಮತ್ತು 3.3 ಮಿಲಿಯನ್ ವಿದೇಶಿ ಕಾರ್ಮಿಕರು ಇದ್ದಾರೆ ಕುವೈತ್‌ನಲ್ಲಿ ವಾಸಿಸುವ ಇತರ ದೇಶಗಳ ಜನರು: ಭಾರತ: 1,152,000 ಈಜಿಪ್ಟ್: 666,000 ಬಾಂಗ್ಲಾದೇಶ: 350,000 ಪಾಕಿಸ್ತಾನ: 339,000 ಫಿಲಿಪೈನ್ಸ್: 241,000 ನೇಪಾಳ: 101,000 ► ಒಮಾನ್ ಸರಿಸುಮಾರು 4.7 ಮಿಲಿಯನ್ ಜನರು ಒಮಾನ್ ನಲ್ಲಿದ್ದಾರೆ. ಒಮಾನ್‌ನ ನಾಗರಿಕರು ಜನಸಂಖ್ಯೆಯ ಸುಮಾರು 59 ಪ್ರತಿಶತದಷ್ಟಿದ್ದಾರೆ, ಉಳಿದ 2.05 ಮಿಲಿಯನ್ (ಅಥವಾ 41 ಪ್ರತಿಶತ) ವಿದೇಶಿ ಕಾರ್ಮಿಕರಾಗಿದ್ದಾರೆ. ► ಖತರ್‌ ಖತರ್‌ನಲ್ಲಿ ಸುಮಾರು 3.2 ಮಿಲಿಯನ್ ಜನಸಂಖ್ಯೆಯಿದ್ದು, 2.87 ಮಿಲಿಯನ್ ವಿದೇಶಿ ಕಾರ್ಮಿಕರಿದ್ದಾರೆ. ಖತರ್ ನಾಗರಿಕರು ಸುಮಾರು 330,000 ಆಗಿದ್ದು, ಇದು ಶೇಕಡಾ 12 ರಷ್ಟಿದೆ. ಖತರ್‌ನಲ್ಲಿ ವಾಸಿಸುವ ವಿದೇಶಿಯರು: ಭಾರತ: 700,000 ಬಾಂಗ್ಲಾದೇಶ: 400,000 ನೇಪಾಳ: 400,000 ಈಜಿಪ್ಟ್: 300,000 ಫಿಲಿಪೈನ್ಸ್: 236,000 ಪಾಕಿಸ್ತಾನ: 180,000 ►ಬಹರೈನ್ ಒಟ್ಟು 1.58 ಮಿಲಿಯನ್ ಜನಸಂಖ್ಯೆಯೊಂದಿಗೆ, ಬಹರೇನ್ ಜಿಸಿಸಿಯಲ್ಲಿ ಅತಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ಬಹರೇನ್ ನಾಗರಿಕರು ಜನಸಂಖ್ಯೆಯ ಅರ್ಧಕ್ಕಿಂತ ಸ್ವಲ್ಪ ಕಡಿಮೆ ಇದ್ದಾರೆ. ಬಹರೈನ್ ನಲ್ಲಿ ವಾಸಿಸುವ ಇತರ ರಾಷ್ಟ್ರದ ಜನಸಂಖ್ಯೆ: ಭಾರತ: 350,000 ಬಾಂಗ್ಲಾದೇಶ: 110,000 ಪಾಕಿಸ್ತಾನ: 100,000 ಫಿಲಿಪೈನ್ಸ್: 60,000 ಈಜಿಪ್ಟ್: 22,000 ನೇಪಾಳ: 20,000 ►ಭಾರತೀಯರು ಗಲ್ಫ್ ಗೆ ಹೋಗುತ್ತಿರುವುದೇಕೆ? ಭಾರತ ಮತ್ತು ಗಲ್ಫ್ ಶತಮಾನಗಳಿಂದ ಪರಸ್ಪರ ವ್ಯಾಪಾರ ಮಾಡಿವೆ. ತೈಲದ ಆವಿಷ್ಕಾರವು ಎಲ್ಲವನ್ನೂ ಬದಲಾಯಿಸುವ ಬಹಳ ಹಿಂದೆಯೇ ವ್ಯವಹಾರವು ಹೆಚ್ಚಾಗಿ ಖರ್ಜೂರ, ಮುತ್ತುಗಳು ಮತ್ತು ಮೀನಿನಂತಹ ಉತ್ಪನ್ನಗಳನ್ನು ಆಧರಿಸಿತ್ತು. ಅರೆ-ನಿರ್ಮಿತ ಕಟ್ಟಡಗಳು ಅಥವಾ ಕಾರ್ಮಿಕ ಶಿಬಿರಗಳಂತಹ ಕಠಿಣ, ಇಕ್ಕಟ್ಟಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿರುವ ಅನೇಕರು ಇನ್ನೂ ಗಲ್ಫ್ ದೇಶಗಳನ್ನು ಆಯ್ಕೆ ಮಾಡುತ್ತಾರೆ. ಏಕೆಂದರೆ ಕಾರ್ಯಪಡೆಗೆ ಹೆಚ್ಚಿನ ಬೇಡಿಕೆಯಿದೆ. ಸ್ವದೇಶಕ್ಕೆ ಹೋಲಿಸಿದರೆ ಗಳಿಕೆಯು ಗಮನಾರ್ಹವಾಗಿ ಹೆಚ್ಚಾಗಿರುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯ (ILO) ನಿಯಮಗಳ ಪ್ರಕಾರ, ವಿದೇಶಗಳಿಗೆ ತೆರಳುವ ಭಾರತೀಯ ಕಾರ್ಮಿಕರಿಗೆ ನ್ಯಾಯಯುತವಾಗಿ ವೇತನ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ ವೇತನವನ್ನು ನಿಗದಿಪಡಿಸಬೇಕು. ಗಲ್ಫ್ ರಾಷ್ಟ್ರಗಳು ಈ ವ್ಯವಸ್ಥೆಯಡಿಯಲ್ಲಿ ನಿರಂತರವಾಗಿ ಅತ್ಯಧಿಕ ವೇತನವನ್ನು ನೀಡುತ್ತವೆ. ಉದಾಹರಣೆಗೆ, ಕುವೈತ್‌ನಲ್ಲಿ, ಭಾರತೀಯ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕೆಲಸದ ಪ್ರಕಾರವನ್ನು ಅವಲಂಬಿಸಿ 300 ರಿಂದ 1,050 ಡಾಲರ್ ರವರೆಗೆ ನಿಗದಿಪಡಿಸಲಾಗಿದೆ . ಇದಕ್ಕೆ ಹೋಲಿಸಿದರೆ, ಪೂರ್ವ ಏಷ್ಯಾದ ದೇಶಗಳಲ್ಲಿ ಕನಿಷ್ಠ ವೇತನವು ಕಡಿಮೆ ಇರುತ್ತದೆ. ಉದಾಹರಣೆಗೆ ಇಂಡೋನೇಷ್ಯಾದಲ್ಲಿ ಸುಮಾರು 324 ಡಾಲರ್ ಮತ್ತು ಮಲೇಷ್ಯಾದಲ್ಲಿ 415 ಡಾಲರ್ . ಭಾರತ ಮತ್ತು ಯುಎಇ ನಡುವಿನ ದ್ವಿಪಕ್ಷೀಯ ವ್ಯಾಪಾರ ಗಮನಾರ್ಹವಾಗಿ ಬೆಳೆದಿದೆ. 1970 ರ ದಶಕದಲ್ಲಿ, ವಾರ್ಷಿಕ ವ್ಯಾಪಾರ ಕೇವಲ 180 ಮಿಲಿಯನ್ ಅಮೆರಿಕನ್ ಡಾಲರ್ ಆಗಿತ್ತು. ಆದರೆ 2024-25 ರ ಹಣಕಾಸು ವರ್ಷದ ವೇಳೆಗೆ, ಇದು ದಾಖಲೆಯ ಗರಿಷ್ಠ 100.06 ಬಿಲಿಯನ್ ಅಮೆರಿಕನ್ ಡಾಲರ್‌ಗಳನ್ನು ತಲುಪಿತು. ಪ್ರಸ್ತುತ, ಯುಎಇ ಭಾರತದ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರ ಮತ್ತು ಅದರ ಎರಡನೇ ಅತಿದೊಡ್ಡ ರಫ್ತು ತಾಣವಾಗಿದ್ದು, 2024-25 ರಲ್ಲಿ ರಫ್ತುಗಳು 36.63 ಬಿಲಿಯನ್ ಅಮೆರಿಕನ್ ಡಾಲರ್‌ಗಳನ್ನು ತಲುಪಿವೆ. ಅದೇ ರೀತಿ, ಭಾರತವು ಯುಎಇಯ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರ ಆಗಿದೆ. ಅಬುಧಾಬಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಪ್ರಕಾರ, ಅನೇಕ ಭಾರತೀಯ ಕಂಪನಿಗಳು ಜಂಟಿ ಉದ್ಯಮಗಳಾಗಿ ಅಥವಾ ವಿಶೇಷ ಆರ್ಥಿಕ ವಲಯಗಳಲ್ಲಿ ಸಿಮೆಂಟ್, ಕಟ್ಟಡ ಸಾಮಗ್ರಿಗಳು, ಜವಳಿ, ಇಂಜಿನಿಯರಿಂಗ್ ಉತ್ಪನ್ನಗಳು, ಗ್ರಾಹಕ ಎಲೆಕ್ಟ್ರಾನಿಕ್ಸ್ ಉತ್ಪಾದಿಸುವ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿವೆ. ಹೆಚ್ಚುವರಿಯಾಗಿ, ಭಾರತೀಯ ಕಂಪನಿಗಳು ಯುಎಇಯ ಪ್ರವಾಸೋದ್ಯಮ, ಆತಿಥ್ಯ, ಅಡುಗೆ, ಆರೋಗ್ಯ ರಕ್ಷಣೆ, ಚಿಲ್ಲರೆ ವ್ಯಾಪಾರ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ. ಅವುಗಳಲ್ಲಿ ತಾಜ್ ಗ್ರೂಪ್, ಬಿಟ್ಸ್ ಪಿಲಾನಿ, ಜೀ ಎಂಟರ್‌ಟೈನ್‌ಮೆಂಟ್, ಅಶೋಕ್ ಲೇಲ್ಯಾಂಡ್, ಮಹೀಂದ್ರಾ ಮತ್ತು ಡಾಬರ್‌ನಂತಹ ಪ್ರಮುಖ ಕಂಪನಿಗಳೂ ಇವೆ. ಎಲ್ & ಟಿ, ಎಸ್ಎಸ್ಎಆರ್, ಪುಂಜ್ ಲಾಯ್ಡ್, ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಂತಹ ಪ್ರಮುಖ ಭಾರತೀಯ ಕಂಪನಿಗಳು ಯುಎಇಯಲ್ಲಿ ಗಮನಾರ್ಹ ಸಂಖ್ಯೆಯ ಒಪ್ಪಂದಗಳನ್ನು ಪಡೆದಿವೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಹಲವಾರು ಬ್ಯಾಂಕುಗಳು ಸಹ ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಕೃಪೆ: aljazeera.com

ವಾರ್ತಾ ಭಾರತಿ 10 Mar 2026 9:13 pm

ಶರಾವತಿ ಜಲವಿದ್ಯುತ್‌ ಯೋಜನೆ ಪ್ರಶ್ನಿಸಿದ ಪಿಐಎಲ್; ಅರಣ್ಯ ಪ್ರದೇಶದಲ್ಲಿ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 10 ಸಾವಿರ ಕೋಟಿ ರೂ. ವೆಚ್ಚದ ಉದ್ದೇಶಿತ 'ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ' ಸಂಬಂಧ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್‌ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜಲವಿದ್ಯುತ್ ಯೋಜನೆಗೆ ರಾಜ್ಯ ವನ್ಯಜೀವಿ ಮಂಡಳಿ ನೀಡಿರುವ ಅನುಮೋದನೆ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ನೀಡಿರುವ ತಾತ್ವಿಕ ಅನುಮೋದನೆ ಪ್ರಶ್ನಿಸಿ ಸಾಗರದ ಅಖಿಲೇಶ್ ಚಿಪ್ಲಿ, ಉಡುಪಿಯ ಡಾ. ರವೀಂದ್ರನಾಥ ಶಾನಭಾಗ್‌ ಹಾಗೂ ಶಿವಮೊಗ್ಗದ ಸಿ.ಬಿ. ಮನೋಹರ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆ ಸಂಬಂಧ ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ. ಇದರಿಂದ, ಅರಣ್ಯ ಹಾಗೂ ವನ್ಯಜೀವಿಗಳ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರಲ್ಲದೆ, ಯೋಜನೆಯ ಕಾಮಗಾರಿಗೆ ತಡೆ ನೀಡಬೇಕು ಎಂದು ಕೋರಿದರು. ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ. ಅರವಿಂದ್ ಕಾಮತ್‌ ಅವರು, ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಇನ್ನೂ ದೊರೆತಿಲ್ಲ. ಯೋಜನೆ ಬಗೆಗಿನ ಆತಂಕಗಳ ಪರಿಶೀಲಿಸಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್ ಶೆಟ್ಟಿ ಅವರು, ಮಧ್ಯಂತರ ತಡೆ ನೀಡದಂತೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಯೋಜನೆಯಿಂದ ಅರಣ್ಯ ಹಾಗೂ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಆತಂಕವಿದ್ದು, ಈ ಕುರಿತು ಪರಿಶೀಲನೆ ನಡೆಸಬೇಕಿದೆ. ಆದ್ದರಿಂದ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ನಡೆಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿತು. ಅರ್ಜಿದಾರರ ಮನವಿ ಏನು? ಉದ್ದೇಶಿತ ಯೋಜನೆಗೆ ಒಟ್ಟು 142.763 ಹೆಕ್ಟೇರ್ ಭೂಮಿಯ ಅಗತ್ಯವಿದ್ದು, ಅದರಲ್ಲಿ 102 ಹೆಕ್ಟೇರ್ ಪ್ರದೇಶವು ಭೌಗೋಳಿಕವಾಗಿ ಅಭಯಾರಣ್ಯದೊಳಗೆ ಮತ್ತು 39.715 ಹೆಕ್ಟೇರ್ ಪರಿಸರ ಸೂಕ್ಷ್ಮ ವಲಯದಲ್ಲಿ ಇದೆ. ಇಂತಹ ಬೃಹತ್‌ ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದೊಳಗೆ ಜಲವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ ನೀಡುವುದರಿಂದ ಬೃಹತ್ ಕಂಬಗಳನ್ನು ನೆಡುವುದು, ಕಂಬಗಳ ನಡುವೆ ಹೆಚ್ಚಿನ ವೋಲ್ಟೇಜ್ ತಂತಿಗಳನ್ನು ಎಳೆಯುವುದೂ ಸೇರಿದಂತೆ ಉತ್ಪಾದಿಸುವ ಜಲವಿದ್ಯುತ್ ರವಾನಿಸಲು ಪ್ರಸರಣ ಮಾರ್ಗಗಳ ನಿರ್ಮಾಣದಿಂದ ಅಮೂಲ್ಯ ವೃಕ್ಷ ಸಂಪತ್ತು ನಾಶವಾಗುವ ಜತೆಗೆ, ವನ್ಯಜೀವಿಗಳ ಆವಾಸಸ್ಥಾನಕ್ಕೆ ಧಕ್ಕೆಯಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ವನ್ಯಜೀವಿ ರಕ್ಷಣಾ ಕಾಯ್ದೆ–1972ರ ಸೆಕ್ಷನ್ 29ರ ಅಡಿಯಲ್ಲಿ ವಿಧಿಸಲಾದ ನಿರ್ಬಂಧವನ್ನು ಗಮನದಲ್ಲಿ ಇರಿಸಿಕೊಂಡು ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ ಯೋಜನೆಗೆ ಯಾವುದೇ ಅನುಮೋದನೆ ನೀಡದಂತೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ವಾರ್ತಾ ಭಾರತಿ 10 Mar 2026 9:12 pm

ಎಲ್‌ಪಿಜಿ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಸ್ತೆಯಲ್ಲೇ ಒಲೆ ಹಾಕಿ ಚಹಾ ತಯಾರಿಸಿ ಕೇಂದ್ರದ ವಿರುದ್ಧ ಆಕ್ರೋಶ

ಉಡುಪಿ, ಮಾ.10: ಎಲ್‌ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬ್ರಹ್ಮಗಿರಿ ಸರ್ಕಲ್‌ಗೆ ಸಾಗಿದ ಮುಖಂಡರು ಹಾಗೂ ಕಾರ್ಯಕರ್ತರು, ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತೆಯರು ರಸ್ತೆಯಲ್ಲೇ ಒಲೆ ಹಾಕಿ ಚಹಾ ತಯಾರಿಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಡವರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ. ನಮ್ಮ ದೇಶವು ಅಮೆರಿಕದ ಮುಂದೆ ಮಂಡಿಯೂರಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಬದುಕಿನ ಜೊತೆ ಚೆಲ್ಲಾಟವಾಡುವ ಕೇಂದ್ರ ಬಿಜೆಪಿ ಸರಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡೆಯುವೆಯೂ ಭಾರತದಲ್ಲಿ ಇಂಧನ ಕೊರತೆ ಇಲ್ಲ, ಆದ್ದರಿಂದ ನಮ್ಮ ಇಂಧನ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೆಂದ್ರ ಪೆಟ್ರೋಲಿಂ ಸಚಿವರು ಹೇಳಿದರು. ಆದರೆ ಕೇಂದ್ರ ಸರಕಾರವು ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ಏಕಾ ಏಕಿ ಹೆಚ್ಚಳ ಮಾಡಿದೆ. ಇದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ ಎಂದು ದೂರಿದರು. ಇರಾಕ್ ಮೇಲೆ ನಡೆಯುತ್ತಿರುವ ದಾಳಿ ಬಗ್ಗೆ ವಿಶ್ವಗುರು ಎಂದು ಹೇಳುತ್ತಿರುವವರು ಒಂದೇ ಒಂದು ಮಾತುಗಳನ್ನು ಆಡುತ್ತಿಲ್ಲ. ಕೂಡಲೇ ಯುದ್ಧ ನಿಲ್ಲಬೇಕು ಮತ್ತು ದೇಶದಲ್ಲಿ ಬೆಲೆ ಏರಿಕೆಯನ್ನು ತಡೆಯಬೇಕು. ಆದರೆ ಬಿಜೆಪಿ ಇಂದು ಜನರ ಮಧ್ಯೆ ಧರ್ಮದ ಹೆಸರಿನಲ್ಲಿ ಒಡಕು ಮೂಡಿಸುವ ಕಾರ್ಯ ಮಾಡುತ್ತಿದೆ. ಈ ಮೂಲಕ ಮತ ಪಡೆದು ರಾಜ ಕೀಯ ಲಾಭ ಗಳಿಸುವ ಹುನ್ನಾರ ನಡೆಸುತ್ತಿದೆ ಎಂದು ಅವರು ಟೀಕಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ, ಶಂಕರ್ ಕುಂದರ್, ಗೋಪಿನಾಥ್ ಭಟ್, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ, ಶಬ್ಬಿರ್ ಅಹ್ಮದ್, ಕೀರ್ತಿ ಶೆಟ್ಟಿ, ಪ್ರಶಾಂತ ಜತ್ತನ್ನ, ಮಹಾಬಲ ಕುಂದರ್, ಕಿರಣ್ ಹೆಗ್ಡೆ, ಜಯ ಕುಮಾರ್, ಮಮತಾ ಶೆಟ್ಟಿ, ಸುಖಾನ್ಯ, ಮೀನಾಕ್ಷಿ ಮಾಧವ ಬನ್ನಂಜೆ, ಪ್ರಭಾ ಶೆಟ್ಟಿ, ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಫಾ,ವಿಲಿಯಂ ಮಾರ್ಟಿಸ್, ಸರ್ಪುದ್ದೀನ್ ಶೇಖ್, ಶಶಿಧರ ಶೆಟ್ಟಿ ಎಲ್ಲೂರು, ಶೇಖ್ ವಾಹಿದ್ ಮೊದಲಾದವರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 10 Mar 2026 9:11 pm

ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಮಾ.10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕ ಎನ್.ಸಿ.ಡಿ, ಜಿಲ್ಲಾ ಆಸ್ಪತ್ರೆ ಉಡುಪಿ ಎನ್.ಸಿ.ಡಿ ವಿಭಾಗ ಹಾಗೂ ವಾಮನ ವಿಠ್ಠಲ ಟ್ರಸ್ಟ್ ಶಿರೂರು ಮಠ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಆಮ್ನಾ ಹೆಗ್ಡೆ ಮಾತನಾಡಿ, ಈ ಹಿಂದೆ ಅಬಲೆಯೆಂದು ಕರೆಸಿಕೊಳ್ಳುತ್ತಿದ್ದ ಮಹಿಳೆ ಇಂದು ಸಬಲೆಯಾಗಿ, ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆ ಗಳನ್ನು ಚಿತ್ರರಂಗ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸರಿಸಮಾನರಾಗಿ ಪಡೆಯುತಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸರ್ಜನ್ ಡಾ.ಹೆಚ್ ಅಶೋಕ ಮಾತನಾಡಿ, ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗೌರವಿಸಲು ಹಾಗೂ ಲಿಂಗ ಸಮಾನತೆಗಾಗಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಉಷಾ ಹಾಗೂ ನಸಿರ್ಂಗ್ ಅಧಿಕಾರಿ ಅರುಣ ಮಹಿಳಾ ದಿನಾಚರಣೆಯ ಕುರಿತಂತೆ ಮತಾನಾಡಿದರು. ವೈದ್ಯಕೀಯ ತಜ್ಞರಾದ ಡಾ.ದಯಾಮಣಿ, ಡಾ. ದಿವ್ಯ, ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ. ವೀಣಾ ಕುಮಾರಿ, ಎಂ.ಸಿ.ಕೆ.ಎಸ್ ಫುಡ್ ಫಾರ್ ದಿಹಂಗ್ರೀ ಫೌಂಡೇಶನ್‌ನ ನಿಧಿ, ಆಸ್ಪತ್ರೆಯ ನಸಿರ್ಂಗ್ ಸೂಪರಿಂಟೆಂಡೆಂಟ್ ರತ್ನವತಿ ಮತ್ತಿತರರು ಉಪಸ್ಥಿತರಿದ್ದರು. ಎನ್‌ಸಿಡಿಯ ಜಿಲ್ಲಾ ಸಮಾಲೋಚಕಿ ಡಾ.ಅಂಜಲಿ ಹಾಗೂ ಆಪ್ತ ಸಮಾಲೋಚಕ ಮನು ಎಸ್. ಕಾರ್ಯಕ್ರಮ ನಿರೂಪಿಸಿದರು.

ವಾರ್ತಾ ಭಾರತಿ 10 Mar 2026 9:08 pm

ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ಸೇರಿದಂತೆ ಮೂರು ವಿಧೇಯಕಗಳ ಮಂಡನೆ

ಬೆಂಗಳೂರು : ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡನೆ ಮಾಡಲಾಯಿತು. ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, 2026ನೆ ಸಾಲಿನ ಕರ್ನಾಟಕ ಲೋಕಾಯುಕ್ತ(ತಿದ್ದುಪಡಿ) ವಿಧೇಯಕ ಮಂಡನೆ ಮಾಡಿದರು. ಬಳಿಕ ತಮ್ಮದೇ ಇಲಾಖೆಯ 2026ನೆ ಸಾಲಿನ ಕರ್ನಾಟಕ ಜ್ಞಾನಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಲೀಕರಣ ವಿಧೇಯಕ ಮಂಡಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು 2026ನೆ ಸಾಲಿನ ಕರ್ನಾಟಕ ಪೊಲೀಸು ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರು.

ವಾರ್ತಾ ಭಾರತಿ 10 Mar 2026 9:07 pm

ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಲ್ಪೆ, ಮಾ.10: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಒಂದು ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಡುತೋನ್ಸೆ ಗ್ರಾಮ ಹೂಡೆಯ ಮಹಮ್ಮದ್ ಅಕ್ರಂ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಆದರ್ಶ, ಮಹಾಲಕ್ಷ್ಮಿ ಮತ್ತು ಎಸ್ಸೈ ಹುಸೇನ್ ಸಾಬ್ ಮಾ.10ರಂದು ಹೂಡೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು ಮಾ.27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಾರ್ತಾ ಭಾರತಿ 10 Mar 2026 9:07 pm

ಅಪಘಾತ: ಗಾಯಾಳು ಬೈಕ್ ಸವಾರ ಮೃತ್ಯು

ಉಡುಪಿ, ಮಾ.10: ಸಂತೆಕಟ್ಟೆ ಲಕ್ಷ್ಮೀನಗರ ಎಂಬಲ್ಲಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮಹಮ್ಮದ್ ಝೈದ್(19) ಎಂದು ಗುರುತಿಸಲಾಗಿದೆ. ಸರಕಾರಿ ಬಸ್, ಬೈಕ್‌ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಝೈದ್ ಉಡುಪಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರು ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರು ಓರ್ವ ಸಹೋದರ ಮತ್ತು ತಂದೆ ತಾಯಿಯನ್ನು ಅಗಲಿದ್ದಾರೆ.

ವಾರ್ತಾ ಭಾರತಿ 10 Mar 2026 9:06 pm

ಆಟೋ ಎಲ್‌ಪಿಜಿ ದರ ಏರಿಕೆ ಖಂಡಿಸಿ ಧರಣಿ

ಉಡುಪಿ, ಮಾ.10: ಆಟೋ ರಿಕ್ಷಾಗಳಲ್ಲಿ ಬಳಸುವ ಎಲ್‌ಪಿಜಿ ಇಂಧನದ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಹಾಗೂ ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಲ್‌ಡಿಟಿಯು) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಧರಣಿ ನಡೆಸಲಾಯಿತು. ಧರಣಿಯಲ್ಲಿ ಮಾತನಾಡಿದ ಎಸ್‌ಡಿಟಿಯು ರಾಜ್ಯ ಸಹ ಸಂಚಾಲಕ ಖಾದರ್ ಫರಂಗಿಪೇಟೆ, ಇತ್ತೀಚಿನ ದಿನಗಳಲ್ಲಿ ಆಟೋ ಎಲ್‌ಪಿಜಿ ದರವನ್ನು ಹೆಚ್ಚಿಸಿರುವುದು ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತವಾಗಿದ್ದು, ಬಹುತೇಕ ಆಟೋ ಚಾಲಕರು ದಿನನಿತ್ಯದ ಆದಾಯದ ಮೇಲೆ ಅವಲಂಬಿತರಾಗಿದೆ. ಇಂಧನದ ದರ ಏರಿಕೆಯಿಂದ ಕುಟುಂಬ ನಿರ್ವಹಣೆ, ವಾಹನದ ಬಾಡಿಗೆ, ಬ್ಯಾಂಕ್ ಸಾಲ ಹಾಗೂ ವಾಹನ ನಿರ್ವಹಣೆ ಮುಂತಾದ ಖರ್ಚುಗಳನ್ನು ಭರಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಎಸ್‌ಡಿಟಿಯು ರಾಜ್ಯ ನಾಯಕ ಶಾಹಿದ್ ಮಾತನಾಡಿದರು. ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಖಾದರ್ ಮಲ್ಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌ಡಿಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ರಫೀಕ್ ಪೊಲಿಪು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನೀಫ್ ಕಂಡ್ಲೂರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು ಇಸ್ಮಾಯಿಲ್ ಉಸ್ತಾದ್ ಸ್ವಾಗತಿಸಿ, ನಿರೂಪಿಸಿದರು.

ವಾರ್ತಾ ಭಾರತಿ 10 Mar 2026 9:05 pm

ಬೆಂಗಳೂರಿನಲ್ಲಿ ಉದ್ಯೋಗವಕಾಶ | ಕಾಯಿರ್ ಬೋರ್ಡ್ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Coir Board ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಾಯಿರ್ ಬೋರ್ಡ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ 07 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Coir Board ಇದೀಗ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17 ಫೆಬ್ರವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಮಾರ್ಚ್ 2026 ಹುದ್ದೆಗಳ ವಿವರ ಒಟ್ಟು ಹುದ್ದೆಗಳ ಸಂಖ್ಯೆ- 07 ಉದ್ಯೋಗ ಸ್ಥಳ - ಬೆಂಗಳೂರು ಹುದ್ದೆಯ ಹೆಸರು- ಪ್ರಾಜೆಕ್ಟ್ ಅಸಿಸ್ಟೆಂಟ್, ಎಲೆಕ್ಟ್ರಿಷಿಯನ್ ವಿದ್ಯಾರ್ಹತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೆಳಗಿನ ವಿದ್ಯಾರ್ಹತೆಗಳಲ್ಲಿ ಯಾವುದಾದರೂ ಒಂದನ್ನು ಪೂರ್ಣಗೊಳಿಸಿರಬೇಕು. • ಐಟಿಐ (ITI) • ಬಿಇ / ಬಿ.ಟೆಕ್ • ಎಂ.ಎಸ್ಸಿ • ಎಂಇ / ಎಂ.ಟೆಕ್ ಸಂಬಂಧಿತ ಕ್ಷೇತ್ರದಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿ ಕಾಯಿರ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷಗಳು ಆಗಿರಬೇಕು. ವಯೋಮಿತಿಗೆ ಸಂಬಂಧಿಸಿದ ಸಡಿಲಿಕೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸುವುದು ಉತ್ತಮ. ಅರ್ಜಿ ಶುಲ್ಕ ಈ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯುತ್ತದೆ. ಶಾರ್ಟ್‌ಲಿಸ್ಟಿಂಗ್: ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂದರ್ಶನ: ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ಅಂತಿಮವಾಗಿ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸುವ ವಿಧಾನ • ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಬಹುದು. • ಮೊದಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://coirboard.gov.in/?page_id=129 • ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. • ನೀವು ಅರ್ಹರಾಗಿದ್ದರೆ https://forms.gle/S6B5q63aDJfRY44U6 ಲಿಂಕ್ ಮೇಲೆ ಕ್ಲಿಕ್ ಮಾಡಿ. • ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಅಗತ್ಯ ದಾಖಲೆಗಳು (Resume, ಶಿಕ್ಷಣ ಪ್ರಮಾಣಪತ್ರಗಳು) ಸಿದ್ಧವಾಗಿಟ್ಟುಕೊಳ್ಳಿ. • ಅಗತ್ಯವಿರುವ ಫೋಟೋ ಹಾಗೂ ಸಹಿಯನ್ನು ಅಪ್‌ಲೋಡ್ ಮಾಡಿ. • ಕೊನೆಗೆ ಅರ್ಜಿಯನ್ನು ಪರಿಶೀಲಿಸಿ ಸಬ್ಮಿಟ್ ಮಾಡಿ.

ವಾರ್ತಾ ಭಾರತಿ 10 Mar 2026 9:04 pm

Budget Session 2026 | ಬೆಂಗಳೂರು ಪೊಲೀಸ್ ವ್ಯವಸ್ಥೆಯ ಪುನರ್ ರಚನೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆಯ ಹೆಚ್ಚಳ, ಸಂಚಾರ ದಟ್ಟಣೆ ಹಾಗೂ ಕಾನೂನು ಸುವ್ಯವಸ್ಥೆಯ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನರ್ ರಚಿಸುವ ಕುರಿತು ಸರಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳವಾರ ವಿಧಾನ ಪರಿಷತ್ತಿನ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ನಿಯಮ-330ರಡಿ ಮಂಡಿಸಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆಯನ್ನು ಒಬ್ಬ ಅಪರ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು (ಕಾನೂನು ಸುವ್ಯವಸ್ಥೆ ಮತ್ತು ಸಂಚಾರ) ಹಾಗೂ 11 ಡಿಸಿಪಿಗಳು (ಕಾನೂನು ಸುವ್ಯವಸ್ಥೆ), 4 ಡಿಸಿಪಿಗಳು (ಸಂಚಾರ) ಮತ್ತು 2 ಡಿಸಿಪಿಗಳು (ಅಪರಾಧ) ಅವರ ಮೇಲ್ವಿಚಾರಣೆಯಲ್ಲಿ ನಿರ್ವಹಿಸಲಾಗುತ್ತಿದೆ ಎಂದರು. ನಗರದ ಬೆಳೆಯುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ, ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಗತ್ಯ ಎಂಬ ಅಂಶವನ್ನು ಸರಕಾರ ಮನಗಂಡಿದೆ. ಈ ಸಂಬಂಧವಾಗಿ 2025ರ ಡಿ.24ರಂದು ಸಭೆ ನಡೆದು ಚರ್ಚಿಸಲಾಗಿದೆ. ಪೊಲೀಸ್ ಆಯುಕ್ತಾಲಯದ ಪುನರ್ರಚನೆಯ ಪ್ರಸ್ತಾವನೆಯು ಸದ್ಯ ಸರಕಾರದ ಪರಿಶೀಲನೆಯಲ್ಲಿದೆ. ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಸರಕಾರವು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದರು.

ವಾರ್ತಾ ಭಾರತಿ 10 Mar 2026 9:04 pm