ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾಟಕ್ಕೆ ಅನುಮತಿ ನೀಡಲಾಗಿದ್ದರೂ, ಪ್ರತಿನಿತ್ಯ ಪರಿಶೀಲನೆ ನಡೆಸುವುದರ ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾ.ಕುನ್ಹಾ ಅವರ ವರದಿ ಆಧಾರದ ಮೇಲೆ ಒಂದಷ್ಟು ಸೂಚನೆ ನೀಡಲಾಗಿತ್ತು. ಜತೆಗೆ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಅವರು ಕೆಎಸ್ಸಿಎ ಜೊತೆ ಚರ್ಚೆ ನಡೆಸಿ ಷರತ್ತುಗಳನ್ನು ವಿಧಿಸಿದ್ದಾರೆ ಎಂದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ. ಜಿಎಸ್ಟಿ ಹಣದ ಪಾಲು ನೀಡಲಾಗುತ್ತಿಲ್ಲ. ಸೂಕ್ತ ಕೇಂದ್ರ ಯೋಜನೆಗಳನ್ನು ಕೂಡ ನೀಡಲಾಗುತ್ತಿಲ್ಲ. ಇದು ದಕ್ಷಿಣ ಭಾರತದಲ್ಲಿ ಬಹಳ ದೊಡ್ಡ ಮಟ್ಟದ ಕೂಗಿದೆ. ಹೀಗಾಗಿ ನಾವೆಲ್ಲ ಒಗ್ಗಟ್ಟಾಗಿ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಹೇಳಿದರು.
ಡಿಜಿಟಲ್ ಸುದ್ದಿ ಮೂಲಗಳು
ವಾರ್ತಾ ಭಾರತಿ
4 Mar 2026 8:02 pm

24 C