SENSEX
NIFTY
GOLD
USD/INR

Weather

35    C
... ...View News by News Source

ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಪ್ರಕರಣ | ತನಿಖೆಗೆ ಎಸ್‌ಐಟಿ ರಚನೆ

Photo : NDTV ಬೆಂಗಳೂರು : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಿ ಅಧಿಕಾರಿಗಳನ್ನು ನೇಮಿಸಿದೆ. ಇಂದು (ಎ.28) ಸರ್ಕಾರವು ಹೊರಡಿಸಿರುವ ವಿಶೇಷ ನಡಾವಳಿಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಬಿಜಯ್‌ ಕುಮಾರ್‌ ಸಿಂಗ್‌,ಸುಮನ್‌ ಡಿ. ಪನ್ಸೇಕರ್‌ ಮತ್ತು ಸೀಮಾ ಲಾಟ್ಕರ್‌ ಅವರನ್ನು ತನಿಖೆಗೆ ನೇಮಿಸಿರುವುದಾಗಿ ತಿಳಿಸಿದೆ. ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆ ಆರಂಭಿಸುವ ಮೊದಲೇ ಪ್ರಕರಣದಲ್ಲಿ ಹೆಸರು ಕೇಳಿಬಂದಿದೆ ಎನ್ನಲಾದ� ಹಾಲಿ ಸಂಸದ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯೂ ಆಗಿದ್ದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದು, ಇದು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. � �

ವಾರ್ತಾ ಭಾರತಿ 28 Apr 2024 7:13 pm

ಬರ ಪರಿಹಾರ ನೀಡುವಲ್ಲಿ ಕೇಂದ್ರದಿಂದ ಅನ್ಯಾಯ; ರಾಜ್ಯ ಸರ್ಕಾರದಿಂದ ಪ್ರತಿಭಟನೆ

ಬೆಂಗಳೂರು : ‘ಕೇಂದ್ರ ಸರಕಾರ ಅಲ್ಪ ಪ್ರಮಾಣದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರವಿವಾರ ನಗರದ ವಿಧಾನಸೌಧದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ‘ಖಾಲಿ ಚೊಂಬು’ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ‘ಬರ ಪರಿಹಾರ ವಿಚಾರದಲ್ಲಿ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರಕಾರ ಕಾನೂನು ಪ್ರಕಾರವೂ ನಡೆದುಕೊಂಡಿಲ್ಲ. ಅನಿವಾರ್ಯವಾಗಿ ನಾವು ಕೋರ್ಟ್‍ಗೆ ಹೋಗಬೇಕಾಯಿತು. ನಾವೇನೂ ಭಿಕ್ಷೆ ಕೇಳುತ್ತಿಲ್ಲ. ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಮೇಲೆ ಈಗ 3 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಇದು ಬಹಳ ಕಡಿಮೆ ಪರಿಹಾರ ಮೊತ್ತ. ಬರ ಪರಿಹಾರ ವಿಚಾರದಲ್ಲಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ. ಇದರ ಜೊತೆಗೆ ಈಗ ಜೆಡಿಎಸ್ ಸಹ ಸೇರಿಕೊಂಡಿದೆ. ಈಗ ಶೇ.19ಕ್ಕಿಂತ ಕಡಿಮೆ ಹಣ ಕೊಟ್ಟಿದ್ದಾರೆ. ಇದಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದೇವೆಂದು ವಿವರಣೆ ನೀಡಿದರು. ಇನ್ನೂ 14,718 ಕೋಟಿ ಬಾಕಿ ಇದೆ. ನಾವು ರೈತರಿಗಾಗಿ ಹಣ ಕೇಳಿದ್ದೇವೆಯೇ ಹೊರತು ಗ್ಯಾರಂಟಿಗೆ ಅಲ್ಲ. ನಾವು ಸಂಗ್ರಹಿಸಿಕೊಟ್ಟ ತೆರಿಗೆಯಲ್ಲಿ ನಮಗೆ ಸರಿಯಾದ ಪಾಲು ನೀಡುವುದು ಮತ್ತು ರೈತರಿಗೆ ಪರಿಹಾರ ನೀಡುವುದು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರದ ಜವಾಬ್ದಾರಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ಪ್ರಧಾನಿ ಮೋದಿ, ಅಮಿತ್ ಶಾರನ್ನು ಸಿದ್ದರಾಮಯ್ಯ ಭೇಟಿ ಮಾಡಿದ್ದರು. ಆದರೆ, ರೈತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ. ನಮ್ಮ ಸಂಪುಟ ಸಚಿವರು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿದೆವು. ಕೊನೆಗೆ ಅನ್ಯಮಾರ್ಗ ಇಲ್ಲದೆ ಸುಪ್ರೀಂ ಕೋರ್ಟ್‍ಗೆ ಹೋದೆವು. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಮೇಲೆ ಈಗ ಕೇಳಿದ ಪರಿಹಾರದ ಪೈಕಿ ಶೇ.20ರಷ್ಟು ಮಾತ್ರ ಕೊಟ್ಟಿದ್ದಾರೆ. ಈ ಲಾಲಿಪಾಪ್ ಅನ್ನು ಮೋದಿ ಕೊಟ್ಟಿದ್ದಾರೆ. ಎನ್‍ಡಿಆrf ಎಫ್ ಹಣ ರಾಜ್ಯದ ಜನರ ಹಣ. ನಮಗೆ 18,172 ಕೋಟಿ ರೂ.ಕೊಡಬೇಕು. ಹಾಗಾದರೆ ಮಾತ್ರ ಬರಕ್ಕೆ ಪರಿಹಾರ ನೀಡಿದಂತಾಗುತ್ತದೆ ಎಂದರು. ಪ್ರತಿಭಟನೆಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಕೃಷ್ಣ ಬೈರೇಗೌಡ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಡಾ.ಎಂ.ಸಿ.ಸುಧಾಕರ್, ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಕೇಂದ್ರದ ವಿರುದ್ಧ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಪ್ರಧಾನಿ ಮೋದಿ ವಿರುದ್ಧ ‘ಖಾಲಿ ಚೊಂಬು ಕೊಟ್ಟ ಪಾರ್ಟಿ ಬಿಜೆಪಿ, ಚೊಂಬೇಶ್ವರ ಮೋದಿ’, ‘ಗೋ ಬ್ಯಾಕ್� ಮೋದಿ ’ ಎಂದು ಧಿಕ್ಕಾರ ಕೂಗಲಾಯಿತು. �

ವಾರ್ತಾ ಭಾರತಿ 28 Apr 2024 7:09 pm

ಹಾಸನ ಪೆನ್‌ ಡ್ರೈವ್‌ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು : ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣದ ಕುರಿತು ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಾಗಲಿ, ಹೆಚ್ ಡಿ ದೇವೇಗೌಡ ಅವರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಹಾಸನ ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ಈಗಾಗಲೆ ಸಿಎಂ ಎಸ್ ಐಟಿ ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ. ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆಯ ವರದಿ ಬಂದ ಮೇಲೆ ಮಾತನಾಡುತ್ತೇನೆ ಎಂದರು. ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ. ವಿದೇಶಕ್ಕೆ ಹೋಗಿದ್ದರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು,ನಾನು ಉತ್ತರಿಸಕ್ಕಾಗೋದಿಲ್ಲ. ಅವರೇ ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ. ಎಸ್ ಐಟಿ ಅಧಿಕಾರಿಗಳನ್ನು ನೇಮಿಸಿದ್ದಾರೆ. ಅವರೇ ಕರ್ಕೊಂಡು ಬರ್ತಾರೆ ಎಂದು ಹೇಳಿದರು.� �ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆ : ಜಿ.ಟಿ. ದೇವೇಗೌಡ ʼಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆʼಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು. ʼಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಸಿಐಡಿ, ಎಸ್‌ಐಟಿ ಎಲ್ಲವೂ ಸರ್ಕಾರದ ಕೈಯಲ್ಲಿ ಇದೆ. ತನಿಖೆಯಿಂದ ಸತ್ಯ ಹೊರಬರಲಿ. ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ನಾವು ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವ ಹೊಂದಿದ್ದೇವೆʼ ಎಂದು ಹೇಳಿದರು. �

ವಾರ್ತಾ ಭಾರತಿ 28 Apr 2024 5:49 pm

ನಗರಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಚಾರ ಮತ್ತು ಜಿಲ್ಲಾ ಕಾಂಗ್ರೆಸ್ ನ ಉನ್ನತ ಮಟ್ಟದ ಸಭೆಯನ್ನು ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12-30 ಕ್ಕೆ ಕರೆಯಲಾಗಿದೆ.

ಜನತಾ ವಾಣಿ 27 Apr 2024 1:56 pm

ಸದೃಢ ಸರ್ಕಾರದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಿ

ಲೋಕಸಭಾ ಚುನಾವಣೆಯ ಅಂಗವಾಗಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಇಂದು ತಮ್ಮ ಮತ ಚಲಾಯಿಸಿದರು.

ಜನತಾ ವಾಣಿ 27 Apr 2024 1:54 pm

ಧಾರ್ಮಿಕ ಪರಂಪರೆಗೆ ಶರಣಾಗಲು ಯುವಕರಿಗೆ ಕರೆ

ಯುವಕರು ತಪ್ಪು ದಾರಿ ತುಳಿಯದೇ ಧಾರ್ಮಿಕ ಪರಂಪರೆ, ಸಂಸ್ಕೃತಿ-ಸಂಸ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಜವಳಿ ಉದ್ಯಮಿ ಬಿ.ಸಿ. ಉಮಾಪತಿ ವಿಶ್ವಕರ್ಮ ಸಮಾಜಕ್ಕೆ ಕರೆ ನೀಡಿದರು.

ಜನತಾ ವಾಣಿ 27 Apr 2024 1:54 pm

ವಕೀಲರ ಭವನದಲ್ಲಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಸಂಸದ ಸಿದ್ದೇಶ್ವರ ಮತಯಾಚನೆ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಪತಿ, ಸಂಸದ ಜಿ.ಎಂ.ಸಿದ್ದೇಶ್ವರ ನ್ಯಾಯಾಲಯದ ವಕೀಲರ ಭವನದಲ್ಲಿ ಮತಯಾಚನೆ ಮಾಡಿದರು.

ಜನತಾ ವಾಣಿ 27 Apr 2024 1:50 pm

ಪಂ. ಪುಟ್ಟರಾಜ ಭಕ್ತರ ಸಮಾವೇಶ : ಕಲಾ ತಂಡಗಳಿಗೆ ಆಹ್ವಾನ

ಬಾಡ ಕ್ರಾಸ್‌ನಲ್ಲಿನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಮೇ 12ರಂದು ಪಂ.ಪುಟ್ಟರಾಜ ಗುರು ಅಭಿಮಾನಿಗಳು ಹಾಗೂ ಭಕ್ತರ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ.

ಜನತಾ ವಾಣಿ 27 Apr 2024 1:48 pm

ನಾಳೆ ಕಣ್ಣಿನ ಪರೀಕ್ಷೆ

ನಗರದ ನೇತ್ರಾಲಯ ಐ ಕೇರ್ ಸೆಂಟರ್‌ನಲ್ಲಿ ನಾಡಿದ್ದು ದಿನಾಂಕ 28ರ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಸಕ್ಕರೆ ಕಾಯಿಲೆ ಇರುವ ವರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆ ನಡೆಯಲಿದೆ.

ಜನತಾ ವಾಣಿ 27 Apr 2024 1:47 pm

ನಗರದಲ್ಲಿ ಇಂದು ಶಿವಸಿಂಪಿ ಸ್ಟಾರ್ಸ

ಶಿವಸಿಂಪಿ ಸಮಾಜದಿಂದ ‘ಶಿವಸಿಂಪಿ ಸ್ಟಾರ್ 2024’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದು ಸಂಜೆ 5 ಗಂಟೆಗೆ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಜನತಾ ವಾಣಿ 27 Apr 2024 1:47 pm

ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ ಮತದಾನ ಜಾಗೃತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಗಳ ವತಿಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯ ಮತದಾನ ಜಾಗೃತಿ ಕಾರ್ಯ ಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಅವರು ಉದ್ಘಾಟಿಸಿ ಚಿತ್ರಗಳನ್ನು ವೀಕ್ಷಿಸಿದರು.

ಜನತಾ ವಾಣಿ 27 Apr 2024 1:46 pm

ಚುನಾವಣೆ: ಸ್ಲಂ ಜನರಲ್ಲಿ ಇಂದು ಮತ ಜಾಗೃತಿ ಕಾರ್ಯಕ್ರಮ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯಿಂದ ದೇಶದ ಭದ್ರತೆ ಹಾಗೂ ಸಂವಿಧಾನ ರಕ್ಷಣೆಗಾಗಿ `ಸ್ಲಂ ಜನರ ಮತ' ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸ್ಲಂ ಜನರ ಪ್ರಣಾಳಿಕೆ ಸಹ ಬಿಡುಗಡೆ ಮಾಡಲಾಗಿದೆ

ಜನತಾ ವಾಣಿ 27 Apr 2024 1:45 pm

ರಾಜ್ಯಕ್ಕೆ ಅನ್ಯಾಯ : ಕಾಂಗ್ರೆಸ್‌ ಚೊಂಬು ಹಿಡಿದು ನಗರದಲ್ಲಿ ಇಂದು ಪ್ರತಿಭಟನೆ

ಕೇಂದ್ರದಲ್ಲಿನ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೊಂಬು ಹಿಡಿದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜನತಾ ವಾಣಿ 27 Apr 2024 1:45 pm

ನಗರಕ್ಕೆ ನಾಳೆ ಪ್ರಧಾನಿ : ಸಂಚಾರ ಮಾರ್ಗ ಬದಲು

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 28ರಂದು ನಗರಕ್ಕೆ ಆಗಮಿಸಿ, ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆ ದಿನಾಂಕ 27, 28 ರಂದು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರೀ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ಜನತಾ ವಾಣಿ 27 Apr 2024 1:08 pm

ಮತದಾನ ಜಾಗೃತಿಗೆ ಫ್ಯಾಷನ್ ಶೋ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾ ಖೆಯ ವತಿಯಿಂದ ಲೋಕಸಭಾ ಚುನಾವಣಾ ಮತದಾರರ ಜಾಗೃತಿಗೆ ಗ್ಲಾಸ್‍ಹೌಸ್‍ನಲ್ಲಿ ಮಹಿಳೆಯರಿಂದ ಫ್ಯಾಷನ್‌ ಶೋ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಜನತಾ ವಾಣಿ 27 Apr 2024 1:03 pm

16ನೇ ವಾರ್ಡ್‌ನಲ್ಲಿ ಬಿಜೆಪಿ ಗೆಲುವಿಗೆ ಸಭೆ

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನಗರ ಪಾಲಿಕೆಯ 16ನೇ ವಾರ್ಡ್‌ನಲ್ಲಿ ಬೂತ್ ಪ್ರಮುಖರ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಮನೆ - ಮನೆಗೆ ತೆರಳಿ ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಸಾಧನೆಗಳ ಕರಪತ್ರ ನೀಡಿ ಮತಯಾಚನೆ ಮಾಡಲಾಯಿತು.

ಜನತಾ ವಾಣಿ 27 Apr 2024 1:02 pm

ಸೋತರು, ಗೆದ್ದರು ನಿಮ್ಮ ಜೊತೆ ಇರುತ್ತೇನೆ

ಹೊನ್ನಾಳಿ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರ ಅಭಿಮಾನಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶುಕ್ರವಾರ ಬೃಹತ್ ಬೈಕ್ ರ‍್ಯಾಲಿ ನಡೆಸಿದರು.

ಜನತಾ ವಾಣಿ 27 Apr 2024 1:00 pm

ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಪದವಿ ದಿನ

ಎಂಬಿಎ ಕಾರ್ಯಕ್ರಮ ಮತ್ತು ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಹಾಗೂ ಬಾಪೂಜಿ ಅಕಾಡೆಮಿ ಆಫ್ ಮ್ಯಾನೇಜ್‌ಮೆಂಟ್ ಆಫ್ ರಿಸರ್ಚ್ ವತಿಯಿಂದ ಕಾಲೇಜಿನ 2021-23ರ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಪದವಿ ದಿನವನ್ನು ಇಂದು ಸಂಜೆ 4.30ಕ್ಕೆ ಕಾಲೇಜಿನ ಇನ್‌ಸ್ಟಿಟ್ಯೂಟ್ ಆಡಿಟೋರಿ ಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

ಜನತಾ ವಾಣಿ 27 Apr 2024 12:51 pm

ಭಾನುವಳ್ಳಿಯಲ್ಲಿ ವಾಲ್ಮೀಕಿ ನಾಯಕ ಸಮಾಜದಿಂದ ಚುನಾವಣೆ ಬಹಿಷ್ಕಾರದ ಪತ್ರ

ಮಲೇಬೆನ್ನೂರು : ಭಾನುವಳ್ಳಿ ಗ್ರಾಮದಲ್ಲಿ ಕಳೆದ 25 ವರ್ಷಗಳಿಂದ ಇದ್ದ ರಾಜವೀರ ಮದಕರಿ ನಾಯಕ ವೃತ್ತವನ್ನು ಜಿಲ್ಲಾಡಳಿತ ಏಕಾಏಕಿ ತೆರವು ಮಾಡಿರುವ ಕ್ರಮವನ್ನು ಖಂಡಿಸಿ, ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮದ ವಾಲ್ಮೀಕಿ ನಾಯಕ ಸಮಾಜ ತಿಳಿಸಿದೆ.

ಜನತಾ ವಾಣಿ 27 Apr 2024 12:25 pm

ಹರಪನಹಳ್ಳಿ : ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನಕ್ಕೆ ಚಾಲನೆ

ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುರುವಾರ ಮತದಾನಕ್ಕೆ ಚಾಲನೆ ನೀಡಲಾಯಿತು.

ಜನತಾ ವಾಣಿ 27 Apr 2024 12:24 pm

ನಾಳಿನ ಮೋದಿ ಸಮಾವೇಶಕ್ಕೆ ಅನುಮತಿ ನೀಡಬಾರದು : ಡಿ. ಬಸವರಾಜ್ ಆಗ್ರಹ

ನಗರದಲ್ಲಿ ಏ.28ರಂದು ಹಮ್ಮಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶಕ್ಕೆ ಅನುಮತಿ ನೀಡ ಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಿ. ಬಸವರಾಜ್ ಒತ್ತಾಯಿಸಿದರು.

ಜನತಾ ವಾಣಿ 27 Apr 2024 12:23 pm

ನಾಳೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮ

ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ನಾಡಿದ್ದು ದಿನಾಂಕ 28 ರಂದು ಬೆಳಿಗ್ಗೆ 8 ಗಂಟೆಗೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವು ಗುಂಡಿ ಸರ್ಕಲ್‍ನಿಂದ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಬಂದು ನಂತರ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ

ಜನತಾ ವಾಣಿ 27 Apr 2024 12:23 pm

ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಚುಡಾಯಿಸಿದವರ ಮೇಲೆ ಕ್ರಮ

ರಾಣೇಬೆನ್ನೂರು : ಕಾಲೇಜಿನಿಂದ ದೇವರಾಜ ಅರಸ್‌ ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಸ್ಟೆಲ್‌ಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಉಮೇಶ ಅಜ್ಜೋಡಿಮಠ ಮತ್ತು ಕಿರಣ ಡೊಂಬರ ಎನ್ನುವ ಇಬ್ಬರು ಯುವಕರನ್ನು ದೂರು ಬಂದ 24 ಗಂಟೆ ಒಳಗಾಗಿ ಪತ್ತೆ ಹಚ್ಚಿ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ

ಜನತಾ ವಾಣಿ 27 Apr 2024 12:22 pm

ಕಾಂಗ್ರೆಸ್ ಸೇರಲು ಹಣ ಪಡೆದಿಲ್ಲ : ಸೋಗಿ

ನಾನು ಹಣ ಪಡೆದು ಕಾಂಗ್ರೆಸ್ ಸೇರಿದ್ದೇನೆ ಎಂದು ಆರೋಪಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನಕ್ಕೆ ಬಂದು ಗಂಟೆ ಭಾರಿಸಿ ಪ್ರಮಾಣ ಮಾಡಲಿ ಎಂದು ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್ ಸವಾಲು ಹಾಕಿದರು.

ಜನತಾ ವಾಣಿ 27 Apr 2024 12:21 pm

ರಾಮೋತ್ಸವದಲ್ಲಿ ಪ್ರಸಾದ ವಿತರಣೆ

ನಗರದ ಚಾಮರಾಜಪೇಟೆಯ ಕಾಸಲ್‌ರವರ ಶ್ರೀ ಕೋದಂಡರಾಮ ದೇವಸ್ಥಾನದ ಬಳಿ ಈಚೆಗೆ ರಾಮೋತ್ಸವದ ಅಂಗವಾಗಿ ದೇವಸ್ಥಾನ ಸಮಿತಿಯ ಕಾಸಲ್ ನಾಗರಾಜ್, ಕಾಸಲ್ ಅಮರನಾಥ್, ಮಂಜುನಾಥ್ ಅವರು ಸಾರ್ವಜನಿಕರಿಗೆ ಪ್ರಸಾದ ವಿತರಿಸಿದರು.

ಜನತಾ ವಾಣಿ 27 Apr 2024 12:21 pm

ಶಿಕ್ಷಣ, ಆರೋಗ್ಯ, ನೀರಾವರಿಗೆ ಮೊದಲ ಆದ್ಯತೆ

ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಮೊದಲು ಆದ್ಯತೆ ನೀಡುವುದರ ಮೂಲಕ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಜನತಾ ವಾಣಿ 27 Apr 2024 12:20 pm

ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ಹರಿಹರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ಮಲೇಬೆನ್ನೂರು : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಹೆಚ್.ಎಸ್.ನಾಗರಾಜ್, ಬಿ.ಎಂ.ವಾಗೀಶ್ ಸ್ವಾಮಿ ಅವರು ಶುಕ್ರವಾರ ಕೊಂಡಜ್ಜಿ ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಜನತಾ ವಾಣಿ 27 Apr 2024 12:20 pm

ಹರಪನಹಳ್ಳಿ ತಾಲ್ಲೂಕಿನಲ್ಲಿ ಮತದಾನ ಜಾಗೃತಿ ಜಾಥಾ

ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಾಲ್ಲೂ ಕಿನ ಮೈದೂರು ಗ್ರಾಮದಲ್ಲಿ ಗುರುವಾರ ಗ್ರಾಮ ಪಂಚಾಯ್ತಿ ವತಿಯಿಂದ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಜನತಾ ವಾಣಿ 27 Apr 2024 12:20 pm

ಸಾಕು ಪ್ರಾಣಿಗಳ ರ‍್ಯಾಂಪ್ ವಾಕ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬರುವ ಮೇ 1 ರಂದು ಸಂಜೆ 5 ಗಂಟೆಗೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಬಾಸ್ಕೆಟ್ ಬಾಲ್ ಗ್ರೌಂಡ್‍ನಲ್ಲಿ ಸಾಕು ಪ್ರಾಣಿಗಳ ರ‍್ಯಾಂಪ್ ವಾಕ್ ಆಯೋಜಿಸಲಾಗಿದೆ.

ಜನತಾ ವಾಣಿ 27 Apr 2024 12:19 pm

27.04.2024

This content is restricted.

ಜನತಾ ವಾಣಿ 27 Apr 2024 3:42 am

ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ? : ಡಿಸಿಎಂ ಡಿ‌.ಕೆ.ಶಿವಕುಮಾರ್

ಬೆಂಗಳೂರು : “ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಲೆ. ಅವರು ಸತ್ಯ ಹರಿಶ್ಚಂದ್ರನ ಮೊಮ್ಮಗ. ನಾನೇನು ಎನ್ನುವುದು ಜನಕ್ಕೆ ಗೊತ್ತಿದೆ. ನಾನು ಖಂಡಿತವಾಗಿಯೂ ಸತ್ಯ ಹರಿಶ್ಚಂದ್ರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾರ್ಡ್ ಗಳನ್ನು ಹಂಚುತ್ತಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್” ಎಂದು ಹೇಳಿದರು. 10 ಸಾವಿರ ಮೌಲ್ಯದ ಕೂಪನ್ ಕಾರ್ಡ್ ನೀಡಲಾಗುತ್ತಿದೆ ಎಂದು ಪ್ರಶ್ನಿಸಿದಾಗ “ಇಷ್ಟಾದರೂ ಭಯ ಬಂದಿದೆಯಲ್ಲ. ಹೆದರಿಕೊಂಡು ರಣಹೇಡಿಗಳಂತೆ ಬೇರೆ ಕಡೆ ಹೋಗಿದ್ದಾರೆ‌. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ‌. ಸಿನಿಮಾ ಸ್ಟೈಲ್ ಅಲ್ಲಿ ಮಾಡಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ. ಹರಿಶ್ಚಂದ್ರನ ಮೊಮ್ಮಗ ಏನು ಹಂಚಿದ್ದಾನೆ ಎಂದು ಪ್ರಶ್ನಿಸಿದರು. ಸಂಸದರೊಬ್ಬರು ಹೆಣ್ಣುಮಕ್ಕಳ ಜೊತೆ ಅಗೌರವದಿಂದ ನಡೆದುಕೊಂಡಿರುವ ಆರೋಪದ ಕುರಿತು ಕೇಳಿದಾಗ “ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನಾನು ಉತ್ತರ ಕೊಡಲು ಆಗುವುದಿಲ್ಲ. ಅವರ ಆಚಾರ ವಿಚಾರ ಎಲ್ಲವೂ ಅವರೇ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ” ಎಂದರು ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಐಟಿ ದಾಳಿ: �“ಕೇವಲ ಕಾಂಗ್ರೆಸ್ ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಐಟಿ ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಒಬ್ಬ ಬಿಜೆಪಿಯವರನ್ನು ಹಿಡಿದಿಲ್ಲ. ಐಟಿ ಅಧಿಕಾರಿಗಳಿಂದ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಮ್ಮ ಬ್ಲಾಕ್ ಅಧ್ಯಕ್ಷನಿಗೆ ಐಟಿ ಅಧಿಕಾರಿಯೊಬ್ಬ ಕಾಂಗ್ರೆಸ್ ಅಲ್ಲಿ ಯಾಕೆ ಇದ್ದಿಯಾ, ಬಿಜೆಪಿಗೆ ಹೋಗು ಎಂದು ಹೇಳುತ್ತಾರೆ. ಸುರೇಶ್ ಕಾರು ಚಾಲಕ ರಘು ಎಂಬಾತನ ಮಗ, ಹೆಂಡತಿಗೆ ಚಿತ್ರಹಿಂಸೆ ನೀಡಿದ್ದಾರೆ. ಎಲ್ಲರಿಗೂ ಕಿರುಕುಳ ನೀಡುತ್ತಿದ್ದು, ಏನೇನು ಕಿರುಕುಳ ನೀಡಿದರು ಎಂದು ಚುನಾವಣೆ ಮುಗಿದ ನಂತರ ಎಲ್ಲರಿಂದಲೂ ಅಫಿಡವಿಟ್ ಸಲ್ಲಿಸಲಿದ್ದೇನೆ. ಕಿರುಕುಳದ ವಿರುದ್ದ ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಲಿದ್ದೇನೆ” ಎಂದರು. ಎಲ್ಲಾ ವರ್ಗದ ಜನ ಕಾಂಗ್ರೆಸ್ ಪರ ನಿಲ್ಲುತ್ತಾರೆ: ಕರ್ನಾಟಕದ ಜನರು ಉತ್ತಮ ತೀರ್ಪು ನೀಡಲಿದ್ದಾರೆ. ಅದರಲ್ಲೂ ಮಹಿಳೆಯರು ಕಾಂಗ್ರೆಸ್ ಪಕ್ಷದ ಪರವಾಗಿ ನಿಲ್ಲಲಿದ್ದಾರೆ. ಯುವಕರಿಗೆ, ಮಹಿಳೆಯರಿಗೆ 1 ಲಕ್ಷ ಹಣ, 25 ಲಕ್ಷ ಆರೋಗ್ಯ ವಿಮೆ ಸೇರಿದಂತೆ ಅನೇಕ ಭರವಸೆಗಳನ್ನು ನೀಡಿದ್ದೇವೆ. ಕಾಂಗ್ರೆಸ್ ಪಕ್ಷ ಉತ್ತಮ ಪ್ರಣಾಳಿಕೆ ನೀಡಿದೆ. ಗ್ಯಾರಂಟಿ ಮೂಲಕ ನುಡಿದಂತೆ ನಡೆದಿದ್ದೇವೆ, ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಯುವಕರ ಬಾಳಿನಲ್ಲಿ ಕಾಂಗ್ರೆಸ್ ಬದಲಾವಣೆ ತರಲಿದೆ. ಆದ ಕಾರಣ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನರು ಜವಾಬ್ದಾರಿಯಿಂದ ಮತ ಚಲಾಯಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳು ಜನರ ಕಷ್ಟ ನಿವಾರಣೆ ಮಾಡಿವೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗಿದೆ. ಮಹಿಳೆಯರು ಬಹಳ ಸಂತೋಷದಿಂದ ಮತದಾನದಲ್ಲಿ ಭಾಗವಹಿಸುತ್ತಿದ್ದಾರೆ. ನಾವು ಸುಮಾರು 20 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಸೂಚನೆ ಇದೆ. ಮೊದಲ ಹಂತದ 14 ಕ್ಷೇತ್ರದಲ್ಲಿ 10 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಒಟ್ಟು 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಇದು ಜ್ಯೋತಿಷ್ಯವಲ್ಲ, ರಾಜಕೀಯ ಪಾಂಡಿತ್ಯ. ಗೌಡರ ಕುಟುಂಬ ಸೇರಿದಂತೆ 4 ಸ್ಥಾನವೂ ಬರವುದಿಲ್ಲ ಎಂದರು.

ವಾರ್ತಾ ಭಾರತಿ 26 Apr 2024 4:21 pm

ಚುನಾವಣಾ ರಜೆ ಮತದಾನಕ್ಕೆ ಬಳಸಿ : ರಾಜೇಶ್ವರಿ ಎನ್‌. ಹೆಗಡೆ

ದಾವಣಗೆರೆ, ಏ.25- ಮತದಾನಕ್ಕೆ ಮೀಸಲಾದ ರಜೆ ಮೋಜು ಮಸ್ತಿಗೆ ಬಳಸಿಕೊಳ್ಳದೇ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್‌. ಹೆಗಡೆ ತಿಳಿಸಿದರು.

ಜನತಾ ವಾಣಿ 26 Apr 2024 2:24 pm

275 ರಷ್ಟು ಅಭ್ಯರ್ಥಿಗಳೇ ಇಲ್ಲದ ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುವುದು ಹೇಗೆ ?

ರಾಣೇಬೆನ್ನೂರು : ಕೇಂದ್ರದಲ್ಲಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ 275 ರಷ್ಟು ಲೋಕಸಭಾ ಸದಸ್ಯರ ಅವಶ್ಯಕತೆ ಇದೆ. ಆದರೆ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದು ಕೇವಲ 250 ಕ್ಷೇತ್ರಗಳಲ್ಲಿ ಮಾತ್ರ ಹೀಗಿದ್ದು ಅದ್ಹೇಗೆ ರಾಹುಲ್‌ಗಾಂಧಿ ಪ್ರಧಾನಿ ಆಗ್ತಾರೆ ? ಎಂದು ಪ್ರಶ್ನೆ ಮಾಡುವುದರ ಜೊತೆ ಸುಳ್ಳು ಹೇಳುವವರು ಬಿಜೆಪಿ ನಾಯಕರಲ್ಲ, ಕಾಂಗ್ರೆಸ್ ನಾಯಕರು ಎಂದು ಹಿರಿಯ ಚಿತ್ರ ನಟಿ ತಾರಾ ಸ್ಪಷ್ಟೀಕರಿಸಿದರು.

ಜನತಾ ವಾಣಿ 26 Apr 2024 2:23 pm

ಡಾ. ಪ್ರಭಾ ದಾವಣಗೆರೆಯ ಘನತೆ ಹೆಚ್ಚಿಸುವರು

ದಾವಣಗೆರೆ ಇನ್ನಷ್ಟು ಅಭಿವೃದ್ಧಿಯಾಗಬೇಕೆಂದರೆ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.

ಜನತಾ ವಾಣಿ 26 Apr 2024 2:21 pm

ಕರುಣಾ ಟ್ರಸ್ಟಿನ ಒಂದು ತಿಂಗಳ ಮಜ್ಜಿಗೆ ವಿತರಣೆಯ ಮುಕ್ತಾಯ ಸಮಾರಂಭ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ಕಳೆದ 1 ತಿಂಗಳಿಂದ ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮದ ಮುಕ್ತಾಯ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮುಂಭಾಗದ ಸಿಟಿ ಬಸ್ ನಿಲ್ದಾಣದ ಎದುರು ನಡೆಯಲಿದೆ.

ಜನತಾ ವಾಣಿ 26 Apr 2024 2:20 pm

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು. ಆ

ಜನತಾ ವಾಣಿ 26 Apr 2024 2:20 pm

ಮೇ 10 ರಿಂದ ವಿಪ್ರ ವಟು ಶಿಕ್ಷಣ ಶಿಬಿರ

ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಮೇ 10 ರಿಂದ ಮೇ 19 ರವರೆಗೆ ಪ್ರತಿದಿನ ಬೆಳಿಗ್ಗೆ 7.30 ರಿಂದ ಸಂಜೆ 5.30 ರವರೆಗೆ ಆಯೋಜಿಸಲಾಗಿದೆ

ಜನತಾ ವಾಣಿ 26 Apr 2024 2:19 pm

ನವಭಾರತ ಸೇನಾದ ಶ್ರೀಕಾಂತ್ ಪ್ರಚಾರ

ನವಭಾರತ‌ ಸೇನಾ ಪಕ್ಷದ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಜಗಳೂರು ವಿಧಾನಸಭಾ ಕ್ಷೇತ್ರದ ಬಿಳಿಚೋಡು ಗ್ರಾಮದಲ್ಲಿ ಮತಯಾಚನೆ ಮಾಡಿದರು.

ಜನತಾ ವಾಣಿ 26 Apr 2024 2:16 pm