SENSEX
NIFTY
GOLD
USD/INR

Weather

33    C
... ...View News by News Source

BSNL: BSNL ನ ಈ ಒಂದು ರಿಚಾರ್ಜ್ ಮಾಡಿ! 425 ದಿನಗಳ ಕಾಲ ನಿಶ್ಚಿಂತೆಯಿಂದ ಇರಿ! ಬಂಪರ್ ಆಫರ್

ಬಿಎಸ್ಎನ್ಎಲ್ (BSNL) ಸಂಸ್ಥೆ ಕೇವಲ ದೀರ್ಘಕಾಲಿಕ ವ್ಯಾಲಿಡಿಟಿ ಮಾತ್ರವಲ್ಲದೆ ಗ್ರಾಹಕರು ತಾವು ಮಾಡುವಂತಹ ರಿಚಾರ್ಜ್ ಮೂಲಕ ತಮಗೆ ಬೇಕಾಗಿರುವಂತಹ ಸೌಲಭ್ಯಗಳನ್ನು ಕೂಡ ಪಡೆದುಕೊಳ್ಳಲಿ ಎನ್ನುವ ನಿಟ್ಟಿನಲ್ಲಿ ಯೋಜನೆಗಳನ್ನು ಪರಿಚಯಿಸುವಂತಹ ಕೆಲಸವನ್ನು ಮಾಡುತ್ತಿದೆ. ಇಂತಹ ಯೋಜನೆಗಳ ಮೂಲಕ ಕೇವಲ ಹಳೆಯ ಗ್ರಾಹಕರನ್ನು ಮೆಚ್ಚಿಸುವುದು ಮಾತ್ರವಲ್ಲದೆ ಬಿಎಸ್ಎನ್ಎಲ್ ಸಂಸ್ಥೆ ಹೊಸ ಗ್ರಾಹಕರನ್ನು ಸೆಳೆದುಕೊಳ್ಳುವಂತಹ ಕೆಲಸಕ್ಕೆ ಕೂಡ ಮುಂದಾಗುತ್ತಿದೆ. The post BSNL: BSNL ನ ಈ ಒಂದು ರಿಚಾರ್ಜ್ ಮಾಡಿ! 425 ದಿನಗಳ ಕಾಲ ನಿಶ್ಚಿಂತೆಯಿಂದ ಇರಿ! ಬಂಪರ್ ಆಫರ್ appeared first on Karnataka Times .

ಕರ್ನಾಟಕ ಟೈಮ್ಸ್ 28 Apr 2024 10:02 am

ದ್ವೇಷ ರಾಜಕಾರಣವೂ ಸಮಾನತೆಯ ಆಶಯವೂ

ಪಕ್ಷ ರಾಜಕಾರಣದಲ್ಲಿ ವಿರೋಧಿ ಬಣ ಅಥವಾ ಪಕ್ಷದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನವನ್ನು ಹೆಚ್ಚಿಸಲು ಅಗತ್ಯವಾದ ಪ್ರಚಾರ ಸಾಮಗ್ರಿಗಳು ಹೇರಳವಾಗಿ ಸಿಗುತ್ತವೆ. ಇವುಗಳನ್ನು ಬಳಸುವ ಬದಲು, ಒಂದು ಸಮುದಾಯದ ಜನರನ್ನೇ ದುಷ್ಟರನ್ನಾಗಿ ಬಿಂಬಿಸುವ ಪ್ರಚೋದನಕಾರಿ ಸಂದೇಶ ರವಾನಿಸುವುದು ಪ್ರಜಾಸತ್ತೆಯನ್ನು ದುರ್ಬಲಗೊಳಿಸುತ್ತದೆ. ಸಮಾಜಘಾತುಕ ಘಟನೆಗಳನ್ನು ಸಮುದಾಯಗಳ ನೆಲೆಯಲ್ಲಿ ಗುರುತಿಸುವ ಅಥವಾ ನಿರ್ದಿಷ್ಟ ಸಮುದಾಯಗಳ ನಡುವೆ ಮಾತ್ರ ವಿಧ್ವಂಸಕ ಘಟನೆಗಳನ್ನು ಗುರುತಿಸುವ ವಿಧಾನವು ಇಡೀ ಸಮಾಜವನ್ನು ಮತ್ತಷ್ಟು ವಿಘಟನೆಗೊಳಪಡಿಸುತ್ತದೆ.

ವಾರ್ತಾ ಭಾರತಿ 28 Apr 2024 9:55 am

ಅಮೇಥಿ, ರಾಯ್ ಬರೇಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಹೊಣೆ ಖರ್ಗೆ, ಸೋನಿಯಾ ಗಾಂಧಿ ಹೆಗಲಿಗೆ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಶನಿವಾರ ನಡೆದಿದ್ದು, ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಹೊಣೆಯನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ನೀಡಿದೆ. ರಾಹುಲ್ ಗಾಂಧಿಯವರು ಅಮೇಥಿಯಿಂದ ಹಾಗೂ ಪ್ರಿಯಾಂಕಾಗಾಂಧಿ ವಾದ್ರಾ ರಾಯ್ ಬರೇಲಿಯಿಂದ ಸ್ಪಧಿಸಬೇಕು ಎಂಬ ವಿಚಾರದಲ್ಲಿ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವಂತೆ ಸಭೆ ಕೋರಿದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ಪಕ್ಷಾಧ್ಯಕ್ಷರು ಕೈಗೊಳ್ಳುವ ಸಾಧ್ಯತೆ ಇದೆ. 2019ರ ವರೆಗೂ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ವಿರುದ್ಧ ಗೆಲುವು ಸಾಧಿಸಿ ಕಾಂಗ್ರೆಸ್ ಕೋಟೆ ವಶಪಡಿಸಿಕೊಂಡಿದ್ದರು. ರಾಯ್ ಬರೇಲಿಯನ್ನು ಪ್ರತಿನಿಧಿಸುತ್ತಿದ್ದ ಸೋನಿಯಾಗಾಂಧಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಈ ಕ್ಷೇತ್ರದಿಂದ ಗಾಂಧಿ ಕುಟಂಬಕ್ಕೆ ಸೇರಿದ ಪ್ರಿಯಾಂಕಾ ಸ್ಪರ್ಧಿಸುತ್ತಾರೆ ಎಂಬ ವದಂತಿ ದಟ್ಟವಾಗಿದೆ. ಆದರೆ ಈ ಎರಡು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಯನ್ನು ಪಕ್ಷ ಇನ್ನೂ ಘೋಷಿಸಿಲ್ಲ. ಪಕ್ಷ ಬಯಸಿದರೆ ಅಮೇಥಿಯಿಂದ ಸ್ಪರ್ಧಿಸುವುದಾಗಿ ರಾಹುಲ್ ಈ ಹಿಂದೆ ಹೇಳಿದ್ದರು. ಏಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದ ಮತದಾನ ಮುಗಿದಿದ್ದು, ಇದೀಗ ಎರಡನೇ ಕ್ಷೇತ್ರದ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಇಸಿ ಸಭೆಗೆ ಮುನ್ನ ಅಸ್ಸಾಂನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಪ್ರಸ್ತಾಪಿಸಿ, ಈ ಸಸ್ಪೆನ್ಸ್ ಇನ್ನೂ ಕೆಲ ದಿನಗಳ ಕಾಲ ಉಳಿಯಲಿದೆ. ಜನರಿಂದ ಅಭ್ಯರ್ಥಿಗಳ ಹೆಸರು ಬಂದಾಗ ನಾನು ಅಧಿಸೂಚನೆಗೆ ಸಹಿ ಮಾಡಿ ಘೋಷಿಸುತ್ತೇನೆ ಎಂದು ಖರ್ಗೆ ಸ್ಪಷ್ಟಪಡಿಸಿದ್ದರು.

ವಾರ್ತಾ ಭಾರತಿ 28 Apr 2024 9:28 am

ಭಾರತೀಯ ವೃಕ್ಷ ಪ್ರಭೇದದಲ್ಲೊಂದು ಅಚ್ಚರಿ: ಕಾಂಡದಿಂದ ನೀರು ಚಿಮ್ಮುವ ಮರ

ಸಂಪೂರ್ಣವಾಗಿ ಬೆಳೆದ ಮರದಿಂದ ಕನಿಷ್ಠ ನಾಲ್ಕರಿಂದ ಆರು ಲೀಟರ್ ನೀರು ಸಂಗ್ರಹಿಸಬಹುದು. ಕುಡುಗೋಲು ಅಥವಾ ಇನ್ನಾವುದೇ ಹರಿತ ಸಾಧನದಿಂದ ಕಾಂಡದಲ್ಲಿನ ಲ್ಯಾಟರಲ್ ರಿಡ್ಜ್‌ಗೆ ಒಂದು ಸಣ್ಣ ರಂಧ್ರವನ್ನು ಮಾಡಿದರೆ ಸಾಕು ನೀರು ವೇಗವಾಗಿ ಚಿಮ್ಮುತ್ತದೆ. ಕರಗಿದ ಫೈಟೊಕೆಮಿಕಲ್‌ಗಳಿಂದಾಗಿ ಸ್ವಲ್ಪ ಸುವಾಸನೆ ಮತ್ತು ಕಿತ್ತಳೆ-ಹಳದಿ ಬಣ್ಣ ಇರುವುದನ್ನು ಹೊರತುಪಡಿಸಿದರೆ ಈ ನೀರು ಕುಡಿಯಲು ಯೋಗ್ಯವಾಗಿದೆ. ಹಾಗಾಗಿ ಬುಡಕಟ್ಟು ಜನರು ಬೇಸಿಗೆಯಲ್ಲಿ ಈ ಮರದ ತೊಗಟೆಯನ್ನು ಕತ್ತರಿಸಿ ತಮ್ಮ ಬಾಯಾರಿಕೆಯನ್ನು ನೀಗಿಸಿಕೊಳ್ಳುತ್ತಾರೆ.

ವಾರ್ತಾ ಭಾರತಿ 28 Apr 2024 9:24 am

Top Sell Car: ಮೂರು ವರ್ಷಗಳಲ್ಲಿ 1 ಲಕ್ಷ ಮೀರಿದ ಸೇಲ್! ಅತಿಹೆಚ್ಚು ಜನ ಖರೀದಿಸಿದ್ದಾರೆ ಈ ಅದ್ಭುತ ಕಾರನ್ನು.

ನಿಸ್ಸಾನ್ ಮೋಟಾರ್ ಇಂಡಿಯಾ ಕಂಪನಿಯು ತಯಾರು ಮಾಡಿ ಡಿಸೆಂಬರ್ 2020 ರ ವೇಳೆ ಮಾರುಕಟ್ಟೆಗೆ ಪರಿಚಯಿಸಿದಂತಹ ನಿಸ್ಸಾನ್ ಮ್ಯಾಗ್ನೈಟ್ ಕಾರು, ಭಾರತೀಯ ಕಾರ್ ಪ್ರಿಯರ(Car Lovers) ಮನಸ್ಸನ್ನು ಗೆದ್ದಿದ್ದು, ನಮ್ಮ ಭಾರತದಲ್ಲೇ ಬರೋಬ್ಬರಿ ಒಂದು ಲಕ್ಷ ಕಾರುಗಳು ಮಾರಾಟವಾಗಿದೆ. The post Top Sell Car: ಮೂರು ವರ್ಷಗಳಲ್ಲಿ 1 ಲಕ್ಷ ಮೀರಿದ ಸೇಲ್! ಅತಿಹೆಚ್ಚು ಜನ ಖರೀದಿಸಿದ್ದಾರೆ ಈ ಅದ್ಭುತ ಕಾರನ್ನು. appeared first on Karnataka Times .

ಕರ್ನಾಟಕ ಟೈಮ್ಸ್ 28 Apr 2024 9:21 am

Tesla: ಭಾರತೀಯರಿಗೆ ಸಿಹಿಸುದ್ದಿ ಕೊಟ್ಟ ಎಲನ್ ಮಸ್ಕ್ ಹಾಗೂ ಮುಕೇಶ್ ಅಂಬಾನಿ! ಏನದು ಗೊತ್ತಾ?

ಈಗಾಗಲೇ ಅಬ್ರೋಡ್ನಲ್ಲಿ ಟೆಸ್ಲಾ ಕಂಪನಿ(Tesla company)ಯಿಂದ ಆಟೋಮೊಬೈಲ್ ಮಾರುಕಟ್ಟೆಯನ್ನು ಪ್ರವೇಶ ಮಾಡಿರುವಂತಹ ಎಲನ್ ಮಾಸ್ಕ್(Elon Musk), ಮುಕೇಶ್ ಅಂಬಾನಿ ಅವರೊಂದಿಗೆ ಸೇರಿ ನಮ್ಮ ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ವಾಹನಗಳನ್ನು ಗ್ರಾಹಕರಿಗೆ ಒದಗಿಸುವ ಯೋಜನೆಯನ್ನು ಹೂಡಿದ್ದಾರೆ. The post Tesla: ಭಾರತೀಯರಿಗೆ ಸಿಹಿಸುದ್ದಿ ಕೊಟ್ಟ ಎಲನ್ ಮಸ್ಕ್ ಹಾಗೂ ಮುಕೇಶ್ ಅಂಬಾನಿ! ಏನದು ಗೊತ್ತಾ? appeared first on Karnataka Times .

ಕರ್ನಾಟಕ ಟೈಮ್ಸ್ 28 Apr 2024 9:04 am

ಪತ್ನಿ ಕೊಲೆಯ ಕಥೆ ಕಟ್ಟಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಕೂಡ್ಲಿಗಿಯ ಮದ್ಯವ್ಯಸನಿ!

Man Dupes Police With Fake Murder: ನಡೆದ ಘಟನೆಯನ್ನು ನಡೆದಿಲ್ಲ ಎಂಬಂತೆ ಪೊಲೀಸರ ಮುಂದೆ ಕಟ್ಟು ಕಥೆ ಹೇಳಿ ಅವರ ದಿಕ್ಕು ತಪ್ಪಿಸುವ ಚಾಲಾಕಿಗಳಿದ್ದಾರೆ. ಆದರೆ ನಡೆಯದ ಅಪರಾಧದ ಬಗ್ಗೆ ಪೊಲೀಸರಿಗೆ ಕಥೆ ಹೇಳಿ ಅವರನ್ನೇ ಬೇಸ್ತುಬೀಳಿಸಿದ ಘಟನೆ ವಿಜಯ ನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದಿದೆ. ಈ ಚಾಲಾಕಿ ಕುಡುಕನ ಕಥೆ ಇಲ್ಲಿದೆ

ವಿಜಯ ಕರ್ನಾಟಕ 28 Apr 2024 8:44 am

ಮತದಾನ ಮುಗಿದ ಬಳಿಕ ರಿಲ್ಯಾಕ್ಸ್‌ ಮೂಡ್‌ನಲ್ಲಿ ಅಭ್ಯರ್ಥಿಗಳು; ಓದಿನಲ್ಲಿ ತಲ್ಲೀನರಾದ ಎಚ್‌ಡಿಕೆ

‘ಜನಮತ ಹಬ್ಬ’ ಯಶಸ್ವಿ ಬೆನ್ನಲ್ಲೇ ‘ಮತ ಭವಿಷ್ಯ’ ದ ಲೆಕ್ಕಾಚಾರ ಶುರುವಾಗಿದೆ. ಅಭ್ಯರ್ಥಿಗಳು, ನಾಯಕರು ತುಸು ರಿಲ್ಯಾಕ್ಸ್‌ ಮೂಡಿಗೆ ಜಾರಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಮಂಡ್ಯ ಜೆಡಿಎಸ್ ಅಭ್ಯರ್ಥಿ ಎಚ್‌ಡಿಕೆ ಓದಿನಲ್ಲಿ ತಲ್ಲೀನರಾಗಿದ್ದಾರೆ. ಆದರೆ, ತಳಮಟ್ಟದಲ್ಲಿಸ್ಥಳೀಯ ನಾಯಕರು, ಕಾರ್ಯಕರ್ತರು ತಮ್ಮ ತಮ್ಮ ಬೂತ್‌ ಮಟ್ಟದಲ್ಲಿಯಾರಿಗೆ ಎಷ್ಟು ಮತ ಬಿದ್ದಿವೆ ಎಂಬ ಮುನ್ನೋಟದ ಚರ್ಚೆಯಲ್ಲಿ ತೊಡಗಿದ್ದಾರೆ.

ವಿಜಯ ಕರ್ನಾಟಕ 28 Apr 2024 8:02 am

ಲವ್‌ ಜಿಹಾದಿ ಮಾನಸಿಕತೆ ಕಿತ್ತೊಗೆಯಬೇಕು: ಹುಬ್ಬಳ್ಳಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆ

Neha Hiremath Murder Case: ನಾಡಿನ ಹಿಂದೂ ಹೆಣ್ಣಮಕ್ಕಳನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು ಜಿಹಾದಿ ನಡೆಸುವ ಮಾನಸಿಕತೆಯ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಅಗತ್ಯವಿದೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ನಮ್ಮದು ಇಸ್ಲಾಂ ಅಥವಾ ಯಾವುದೇ ಜಾತಿ ಪಂಥಗಳ ವಿರುದ್ಧ ನಡೆಯುವ ಹೋರಾಟವಲ್ಲ. ಇದು ಲವ್ ಜಿಹಾದಿ ಮಾನಸಿಕರೆ ವಿರುದ್ಧದ ಹೋರಾಟ ಎಂದು ತಿಳಿಸಿದ್ದಾರೆ.

ವಿಜಯ ಕರ್ನಾಟಕ 28 Apr 2024 7:53 am

ಬೆಂಗಳೂರು ಗ್ರಾಮಾಂತರದತ್ತ ಈಗ ಎಲ್ಲರ ಚಿತ್ತ; ಸೋಲು ಗೆಲುವಿನ ಲೆಕ್ಕಾಚಾರದತ್ತ !

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್‌, ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ಇವರಿಬ್ಬರಲ್ಲಿ ಗೆಲ್ಲೋರ್ಯಾರು? ಸೋಲೋರ್ಯಾರು? ಯಾವ ಊರಿನ ಮತಗಟ್ಟೆಯಲ್ಲಿ ಯಾರಿಗೆ ಎಷ್ಟು ಮತ ಬಂದಿದೆ ಎಂಬ ಚರ್ಚೆಗಳು ಜಿಲ್ಲೆಯ ಹೋಟೆಲ್‌, ಅರಳಿಕಟ್ಟೆ, ಟೀ ಅಂಗಡಿಗಳ ಬಳಿ ಬಿಸಿ ಬಿಸಿ ಚರ್ಚೆಗೀಡಾಗುತ್ತಿವೆ. ಆಯಾ ಪಕ್ಷದ ಕಾರ‍್ಯಕರ್ತರು, ಅಭಿಮಾನಿಗಳು ಅವರವರ ಪಕ್ಷದ ಪರವಾಗಿ ಗೆಲುವು ನಮ್ಮದೇ ಎಂಬ ದಾಟಿಯಲ್ಲಿ ಬ್ಯಾಟಿಂಗ್‌ ಮಾಡುತ್ತಿರುವುದು ಕಂಡು ಬರುತ್ತಿದೆ.

ವಿಜಯ ಕರ್ನಾಟಕ 28 Apr 2024 7:26 am

ಲೋಕಸಭೆಯ 2ನೇ ಹಂತದ ಚುನಾವಣೆ: 13 ಹಿರಿಯ ಸಚಿವರಿಗೆ ಹೆಚ್ಚುವರಿ ಟಾಸ್ಕ್‌ ನೀಡಿದ ಕಾಂಗ್ರೆಸ್

Lok Sabha Elections 2024: ಲೋಕಸಭೆ ಚುನಾವಣೆಯ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಮುಗಿದ ಬಳಿಕ ರಾಜ್ಯದ ಉತ್ತರ ಭಾಗದಲ್ಲಿನ ಉಳಿದ 14 ಲೋಕಸಭೆ ಕ್ಷೇತ್ರಗಳತ್ತ ಎಲ್ಲರ ಗಮನ ನೆಟ್ಟಿದೆ. ಮೇ 7ರಂದು ನಡೆಯಲಿರುವ ಚುನಾವಣೆಗೆ ತೀವ್ರ ಸ್ವರೂಪದ ಪ್ರಚಾರ ನಡೆಸಲು ಆಡಳಿತಾರೂಢ ಕಾಂಗ್ರೆಸ್ ತೀರ್ಮಾನಿಸಿದೆ. ಇದಕ್ಕಾಗಿ 13 ಹಿರಿಯ ಸಚಿವರಿಗೆ ಹೆಚ್ಚುವರಿ ಹೊಣೆ ನೀಡಿದೆ.

ವಿಜಯ ಕರ್ನಾಟಕ 28 Apr 2024 6:42 am

ಚುನಾವಣೆ ದಿನವೇ ಸಂಚಾರ ದಟ್ಟಣೆ: ಪ್ರವಾಸಿಗರ ಪ್ರವಾಹಕ್ಕೆ ಗೋಕರ್ಣ ತತ್ತರ

Tourists in Gokarna on Election Day: ಚುನಾವಣೆ ಬಂದರೆ ಅದೊಂದು ರಜೆ ಎಂದೇ ಭಾವಿಸಿ ಪ್ರವಾಸಕ್ಕೆ ತೆರಳುವ ಜನರ ಸಂಖ್ಯೆ ಅಧಿಕ. ಶುಕ್ರವಾರ ನಡೆದ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಗೋಕರ್ಣ, ಶೃಂಗೇರಿಯಂತಹ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳು ಜನ ದಟ್ಟಣೆಯಿಂದ ತುಂಬಿ ತುಳುಕುತ್ತಿದ್ದದ್ದು ಇದಕ್ಕೆ ಸಾಕ್ಷಿ.

ವಿಜಯ ಕರ್ನಾಟಕ 28 Apr 2024 6:10 am

ಉತ್ತರ ಕನ್ನಡದಲ್ಲಿ ಈಗ ನರೇಂದ್ರ ಮೋದಿ ವರ್ಸಸ್‌ ಸಿದ್ದರಾಮಯ್ಯ

Lok Sabha Elections 2024: ಕರ್ನಾಟಕದ ದಕ್ಷಿಣ ಭಾಗದಲ್ಲಿನ ಚುನಾವಣಾ ಕಾವು ತಣ್ಣಗಾಗಿದೆ. ಈಗ ನಾಯಕರ ಗಮನ ಉತ್ತರ ಭಾಗದತ್ತ ವರ್ಗಾವಣೆಯಾಗಿದೆ. ಮೇ 7ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬೃಹತ್ ಸಮಾವೇಶಗಳ ಮೂಲಕ ಪ್ರಚಾರರ ಅಬ್ಬರ ಹೆಚ್ಚಿಸಲು ಮುಂದಾಗಿವೆ. ಉತ್ತರ ಕನ್ನಡದಲ್ಲಿ ಬಿಜೆಪಿಗೆ ಮೋದಿ ಶಕ್ತಿಯಾಗಿದ್ದರೆ, ಸಿಎಂ ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ ನೆಚ್ಚಿಕೊಂಡಿದೆ.

ವಿಜಯ ಕರ್ನಾಟಕ 28 Apr 2024 5:50 am

ಚಾಮರಾಜನಗರದ ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ: 36 ಮಂದಿ ಬಂಧನ, ಸೋಮವಾರ ಮರು ಮತದಾನ

Lok Sabha Elections 2024: ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿನ ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಶುಕ್ರವಾರ ನಡೆದ ಚುನಾವಣೆಯನ್ನು ಗ್ರಾಮಸ್ಥರು ಬಹಿಷ್ಕರಿಸಿದ್ದರು. ಆದರೆ ಅಧಿಕಾರಿಗಳ ಮನವೊಲಿಕೆ ಬಳಿಕ ಮತಗಟ್ಟೆಯತ್ತ ಹೆಜ್ಜೆ ಹಾಕಿದ್ದರೂ, ಅಲ್ಲಿ ಮತಯಂತ್ರಗಳನ್ನು ಧ್ವಂಸಗೊಳಿಸಿ ಘರ್ಷಣೆ ನಡೆಸಿದ್ದರು. ಈ ಘಟನೆ ಸಂಬಂಧ 36 ಮಂದಿಯನ್ನು ಬಂಧಿಸಲಾಗಿದೆ.

ವಿಜಯ ಕರ್ನಾಟಕ 28 Apr 2024 5:33 am

ಹಾಸನ ಎನ್ ಡಿಎ ಅಭ್ಯರ್ಥಿಯ ಹಗರಣ ತನಿಖೆಗಾಗಿ ವಿಶೇಷ ತನಿಖಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ

ಹಾಸನದಲ್ಲಿ ಇತ್ತೀಚೆಗೆ ಬಹಿರಂಗವಾಗಿದ್ದ ಲೈಂಗಿಕ ಹಗರಣದ ತನಿಖೆಯನ್ನು ವಿಸೇಶ ತನಿಖಾ ತಂಡದಿಂದ (ಎಸ್ಐಟಿ) ನಡೆಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆಯೋಗದ ಅಧ್ಯಕ್ಷೆಯಾದ ಡಾ. ನಾಗಲಕ್ಷ್ಮೇ ಚೌಧರಿಯವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಈ ಕುರಿತಾಗಿ ಮನವಿ ಸಲ್ಲಿಸಿದ್ದರು. ಆಯೋಗದ ಮನವಿಯನ್ನು ಪುರಸ್ಕರಿಸಿರುವ ರಾಜ್ಯ ಸರ್ಕಾರ, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವುದಾಗಿ ಹೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ.

ವಿಜಯ ಕರ್ನಾಟಕ 27 Apr 2024 11:31 pm

ಸಂಜು-ಜುರೆಲ್‌ ಜುಗಲ್‌ಬಂದಿ, ಲಖನೌಗೆ ಸೋಲಿನ ಬರೆ ಎಳೆದ ರಾಜಸ್ಥಾನ್‌!

Rajasthan Royals vs Lucknow Super Giants Match Highlights: ಲಖನೌದ ಏಕನಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 44ನೇ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ವಿರುದ್ದ ರಾಜಸ್ಥಾನ್‌ ರಾಯಲ್ಸ್‌ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಟೂರ್ನಿಯಲ್ಲಿ 8ನೇ ಗೆಲುವು ಪಡೆಯುವ ಮೂಲಕ ಸಂಜು ಸ್ಯಾಮ್ಸನ್ ಪಡೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿತು. ಲಖನೌ ನೀಡಿದ್ದ 197 ರನ್‌ಗಳನ್ನು ಆರ್‌ಆರ್‌, 19 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ 199 ರನ್ ಗಳಿಸಿ ಗೆಲುವಿನ ದಡ ಸೇರಿತು.

ವಿಜಯ ಕರ್ನಾಟಕ 27 Apr 2024 11:19 pm

ನರೇಂದ್ರ ಮೋದಿಯದ್ದು ಅಭಿವೃದ್ಧಿ ಪರ ರಾಜಕೀಯ, ಓಲೈಕೆ- ತುಷ್ಟೀಕರಣ ಇಲ್ಲದ ಆಡಳಿತ : ಜೆ.ಪಿ.ನಡ್ಡಾ

ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಪರ ರಾಜಕೀಯ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಬೀದರ್ ಜಿಲ್ಲೆಯ ಹುಮ್ನಾಬಾದ್‍ನಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಾತಿ, ಪ್ರಾದೇಶಿಕತೆಯ ಚಿಂತನೆ ಅಲ್ಲಿಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಶೋಷಿತರು, ಬಡವರು, ವಂಚಿತರು, ದಲಿತರು, ಮಹಿಳೆಯರು, ಯುವಜನತೆಗೆ ಹಾಗೂ ರೈತರ ಸಶಕ್ತೀಕರಣವೇ ನಮ್ಮ ಧ್ಯೇಯ ಎಂದರು. ಅಮೆರಿಕ, ಯುರೋಪ್, ಜಪಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಆರ್ಥಿಕ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಆದರೆ, ಕಳೆದ 10 ವರ್ಷಗಳಲ್ಲಿ ಭಾರತದ ಅರ್ಥವ್ಯವಸ್ಥೆ ಬಲಶಾಲಿಯಾಗಿ ಹೊರಹೊಮ್ಮಿದೆ ಎಂದರು.

ವಿಜಯ ಕರ್ನಾಟಕ 27 Apr 2024 10:58 pm

ಆಗದು..ಆಗದು.. ಇವರಿಬ್ಬರನ್ನು ತೃಪ್ತಿ ಪಡಿಸಲು ಮೋದಿಯಿಂದಲೂ ಸಾಧ್ಯವಾಗದು : ಎಚ್‌ಡಿಕೆ

Modi Cannot Satisfy Siddaramaiah And DK Shivakumar : ಮೊದಲ ಹಂತದ ಚುನಾವಣೆ ಮುಗಿದ ನಂತರವೂ ಕುಮಾರಸ್ವಾಮಿ ಮತ್ತು ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಅನುದಾನದ ವಿಚಾರದಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಸಮಾಧಾನ ಪಡಿಸಲು ಸಾಧ್ಯವಿಲ್ಲ ಎಂದು ಎಚ್‌ಡಿಕೆ ಲೇವಡಿ ಮಾಡಿದ್ದಾರೆ.

ವಿಜಯ ಕರ್ನಾಟಕ 27 Apr 2024 10:04 pm

ರಾಜಸ್ಥಾನ ರಾಯಲ್ಸ್ ಗೆಲುವಿಗೆ 197 ರನ್ ಗುರಿ ನೀಡಿದ ಲಕ್ನೊ

ಲಕ್ನೊ : ನಾಯಕ ಕೆ.ಎಲ್.ರಾಹುಲ್ (75 ರನ್, 48 ಎಸೆತ, 8 ಬೌಂಡರಿ, 2 ಸಿಕ್ಸರ್)ಹಾಗೂ ಆಲ್‌ರೌಂಡರ್ ದೀಪಕ್ ಹೂಡಾ(50 ರನ್, 31 ಎಸೆತ)ಅರ್ಧಶತಕಗಳ ನೆರವಿನಿಂದ ಲಕ್ನೊ ಸೂಪರ್ ಜಯಂಟ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ಗೆಲುವಿಗೆ 197 ರನ್ ಗುರಿ ನಿಗದಿಪಡಿಸಿದೆ. ಶನಿವಾರ ನಡೆದ ಐಪಿಎಲ್‌ನ 44ನೇ ಪಂದ್ಯದಲ್ಲಿ ಟಾಸ್ ಜಯಿಸಿದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್ ಲಕ್ನೊ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. ಇನಿಂಗ್ಸ್‌ನ 3ನೇ ಎಸೆತದಲ್ಲಿ ಆರಂಭಿಕ ಬ್ಯಾಟರ್ ಕ್ವಿಂಟನ್ ಡಿಕಾಕ್(8 ರನ್)ವಿಕೆಟನ್ನು ಕಳೆದುಕೊಂಡ ಲಕ್ನೊ ಕಳಪೆ ಆರಂಭ ಪಡೆದಿತ್ತು. ಮಾರ್ಕಸ್ ಸ್ಟೋಯಿನಿಸ್ ರನ್ ಖಾತೆ ತೆರೆಯುವ ಮೊದಲೇ ಸಂದೀಪ್ ಶರ್ಮಾಗೆ ಕ್ಲೀನ್‌ ಬೌಲ್ಡಾದರು. ಆಗ ಲಕ್ನೊದ ಸ್ಕೋರ್ 2ಕ್ಕೆ11. ಸಂಕಷ್ಟದ ಸಮಯದಲ್ಲಿ ಜೊತೆಯಾದ ರಾಹುಲ್ ಹಾಗೂ ದೀಪಕ್ 3ನೇ ವಿಕೆಟ್‌ಗೆ 115 ರನ್ ಸೇರಿಸಿ ತಂಡವನ್ನು ಆಧರಿಸಿದರು. ಹೂಡಾ ವಿಕೆಟನ್ನು ಉರುಳಿಸಿದ ಆರ್.ಅಶ್ವಿನ್ (1-39) ಶತಕದ ಜೊತೆಯಾಟವನ್ನು ಮುರಿದರು. ಈ ಇಬ್ಬರು ಬೇರ್ಪಟ್ಟ ನಂತರ ಲಕ್ನೊ ತಂಡ ಉತ್ತಮ ಜೊತೆಯಾಟ ನಡೆಸಲಿಲ್ಲ. ನಿಕೊಲಸ್ ಪೂರನ್(11 ರನ್, 11 ಎಸೆತ) ಬೇಗನೆ ಔಟಾದರು. ಅವೇಶ್ ಖಾನ್ 18ನೇ ಓವರ್‌ನಲ್ಲಿ ರಾಹುಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಆಯುಷ್ ಬದೋನಿ(ಔಟಾಗದೆ 18, 13 ಎಸೆತ)ಹಾಗೂ ಕೃನಾಲ್ ಪಾಂಡ್ಯ(ಔಟಾಗದೆ 15, 11 ಎಸೆತ) ಲಕ್ನೊದ ಸ್ಕೋರನ್ನು 200ರ ಗಡಿ ತಲುಪಿಸಿದರು. ರಾಜಸ್ಥಾನದ ಪರ ಸಂದೀಪ್ ಶರ್ಮಾ(2-31) ಯಶಸ್ವಿ ಪ್ರದರ್ಶನ ನೀಡಿದರು. ಆರ್.ಅಶ್ವಿನ್, ಟ್ರೆಂಟ್ ಬೌಲ್ಟ್(1-41) ಹಾಗೂ ಅವೇಶ್ ಖಾನ್(1-42) ತಲಾ ಒಂದು ವಿಕೆಟ್ ಪಡೆದರು. 14 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ ತನ್ನ ಪ್ರಾಬಲ್ಯ ಮುಂದುವರಿಸಲು ಬಯಸಿದ್ದು ತನ್ನ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸಂಕ್ಷಿಪ್ತ ಸ್ಕೋರ್ ಲಕ್ನೊ ಸೂಪರ್ ಜಯಂಟ್ಸ್: 20 ಓವರ್‌ಗಳಲ್ಲಿ 196/5 (ಕೆ.ಎಲ್.ರಾಹುಲ್ 76, ದೀಪಕ್ ಹೂಡಾ 50, ಆಯುಷ್ ಬದೋನಿ ಔಟಾಗದೆ 18, ಸಂದೀಪ್ ಶರ್ಮಾ 2-31)

ವಾರ್ತಾ ಭಾರತಿ 27 Apr 2024 10:04 pm

ಉಬೆರ್ ಕಪ್ | ಕೆನಡಾವನ್ನು ಕೆಡವಿದ ಭಾರತದ ಮಹಿಳಾ ಟೆನಿಸ್ ತಂಡ

ಹೊಸದಿಲ್ಲಿ : ಸ್ಪೂರ್ತಿಯುತ ಪ್ರದರ್ಶನ ನೀಡಿ ಅಗ್ರ ರ‍್ಯಾಂಕಿನ ಮಿಚೆಲ್ ಅಲಿ ಅವರನ್ನು ಸೋಲಿಸಿದ ಅಶ್ಮಿತಾ ಚಲಿಹಾ ಚೀನಾದ ಚೆಂಗ್ಡುವಿನಲ್ಲಿ ಶನಿವಾರ ನಡೆದ ಉಬೆರ್ ಕಪ್ ಟೂರ್ನಮೆಂಟ್‌ನಲ್ಲಿ ಭಾರತೀಯ ಮಹಿಳಾ ತಂಡಕ್ಕೆ ಸಕಾರಾತ್ಮಕ ಆರಂಭ ಒದಗಿಸಿದರು. ಭಾರತ ತಂಡ ಕೆನಡಾ ತಂಡವನ್ನು 4-1 ಅಂತರದಿಂದ ಮಣಿಸಿತು. ಎಡಗೈ ಆಟಗಾರ್ತಿ ಚಲಿಹಾ 42 ನಿಮಿಷಗಳ ಕಾಲ ನಡೆದ ಆರಂಭಿಕ ಸಿಂಗಲ್ಸ್ ಪಂದ್ಯದಲ್ಲಿ ವಿಶ್ವದ ನಂ.25ನೇ ಆಟಗಾರ್ತಿ ಲೀ ಅವರನ್ನು 26-24 24-22 ಸೆಟ್‌ಗಳ ಅಂತರದಿಂದ ಮಣಿಸಿದರು. 2014 ಹಾಗೂ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಜಯಿಸಿದ್ದ ಲೀ ವಿರುದ್ಧ ಚಲಿಹಾ ಮಹತ್ವದ ಗೆಲುವು ದಾಖಲಿಸಿದರು. ಫೆಬ್ರವರಿಯಲ್ಲಿ ಭಾರತ ಚೊಚ್ಚಲ ಏಶ್ಯನ್ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಜಯಶಾಲಿಯಾದಾಗ ತಂಡದ ಭಾಗವಾಗಿದ್ದ ಚಲಿಹಾ ಅವರು ಪ್ರಮುಖ ಆಟಗಾರ್ತಿಯಾದ ಪಿ.ವಿ.ಸಿಂಧು ಅನುಪಸ್ಥಿತಿಯಲ್ಲಿ ನಾಯಕತ್ವವಹಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಸೀನಿಯರ್ ನ್ಯಾಶನಲ್ ಚಾಂಪಿಯನ್‌ಶಿಪ್ ಪ್ರಶಸ್ತಿ ಜಯಿಸಿದ್ದ ಯುವ ಮಹಿಳೆಯರ ಡಬಲ್ಸ್ ಜೋಡಿ ಪ್ರಿಯಾ ಹಾಗೂ ಶ್ರುತಿ ಮಿಶ್ರಾ ಅವರು ಕ್ಯಾಥರಿನ್ ಚೊಯ್ ಹಾಗೂ ಜೆಸ್ಲಿನ್ ಚೌರನ್ನು 21-12, 21-10 ಅಂತರದಿಂದ ಸೋಲಿಸಿ ಭಾರತಕ್ಕೆ 2-0 ಮುನ್ನಡೆ ಒದಗಿಸಿಕೊಟ್ಟರು. ಇಶಾರಾಣಿ ಅವರು ವೆನ್ ಯು ಝಾಂಗ್‌ರನ್ನು 21-13, 21-12 ಅಂತರದಿಂದ ಸೋಲಿಸಿ ಭಾರತಕ್ಕೆ 3-0 ಮುನ್ನಡೆ ಒದಗಿಸಿಕೊಟ್ಟರು. 2ನೇ ಮಹಿಳೆಯರ ಡಬಲ್ಸ್ ಪಂದ್ಯದಲ್ಲಿ ಸಿಮ್ರಾನ್ ಸಿಂಘಿ ಹಾಗೂ ರಿತಿಕಾ ಥಾಕೆರ್ ಕೆನಡಾದ ಜಾಕೀ ಡೆಂಟ್ ಹಾಗೂ ಕ್ರಿಸ್ಟಾಲ್ ವಿರುದ್ಧ 19-21, 15-21 ಅಂತರದಿಂದ ಸೋತಿದ್ದಾರೆ. ರಾಷ್ಟ್ರೀಯ ಚಾಂಪಿಯನ್ ಅನ್ಮೋಲ್ ಖರ್ಬ್ ಅವರು ಎಲಿಯಾನಾ ಝಾಂಗ್‌ರನ್ನು ಐದನೇ ಹಾಗೂ ಅಂತಿಮ ಪಂದ್ಯದಲ್ಲಿ 21-15, 21-11 ಅಂತರದಿಂದ ಸೋಲಿಸಿ ಭಾರತ 4-1 ಅಂತರದಿಂದ ಜಯ ಸಾಧಿಸಲು ನೆರವಾದರು.

ವಾರ್ತಾ ಭಾರತಿ 27 Apr 2024 10:01 pm

ನಾವು ಬ್ರಿಟನ್ ಸೇರಿ ಅನೇಕ ದೇಶಗಳನ್ನು ಹಿಂದಿಕ್ಕಿ 5ನೇ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ : ಜೆ.ಪಿ.ನಡ್ಡಾ

ಬೀದರ್: ನಾವು ಬ್ರಿಟನ್ ಸೇರಿ ಅನೇಕ ದೇಶಗಳನ್ನು ಹಿಂದಿಕ್ಕಿ 5ನೆ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ. ಶನಿವಾರ ಬೀದರ್ ಜಿಲ್ಲೆಯ ಹುಮ್ನಾಬಾದ್‍ನಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಾತಿ, ಪ್ರಾದೇಶಿಕತೆಯ ಚಿಂತನೆ ಅಲ್ಲಿಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರಧಾನಿ ಮೋದಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಶೋಷಿತರು, ಬಡವರು, ವಂಚಿತರು, ದಲಿತರು, ಮಹಿಳೆಯರು, ಯುವಜನತೆಗೆ ಹಾಗೂ ರೈತರ ಸಶಕ್ತೀಕರಣವೇ ನಮ್ಮ ಧ್ಯೇಯ ಎಂದು ತಿಳಿಸಿದರು. ಅಮೆರಿಕ, ಯುರೋಪ್, ಜಪಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಆರ್ಥಿಕ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಆದರೆ, ಕಳೆದ 10 ವರ್ಷಗಳಲ್ಲಿ ಭಾರತದ ಅರ್ಥವ್ಯವಸ್ಥೆ ಬಲಶಾಲಿಯಾಗಿ ಹೊರಹೊಮ್ಮಿದೆ ಎಂದ ಅವರು, 11ನೆ ಸ್ಥಾನದಲ್ಲಿದ್ದ ಭಾರತವು ಬ್ರಿಟನ್ ಸೇರಿ ಅನೇಕ ದೇಶಗಳನ್ನು ಹಿಂದಿಕ್ಕಿ 5ನೆ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ವಾರ್ತಾ ಭಾರತಿ 27 Apr 2024 9:59 pm

IPL 2024: 8 ರನ್‌ಗೆ ಔಟಾದರೂ ವಿರಾಟ್ ಕೊಹ್ಲಿ ದಾಖಲೆ ಮುರಿದ ರೋಹಿತ್ ಶರ್ಮಾ!

Rohit Sharma Breaks Virat Kohli's IPL Record: ಹೊಸದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಹೈಸ್ಕೋರಿಂಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 10 ರನ್‌ಗಳ ಸೋಲು ಅನುಭವಿಸಿತು. ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ್ದ 258 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಮುಂಬೈ 20 ಓವರ್‌ಗಳಿಗೆ 247 ರನ್‌ಗಳಿಗೆ ಸೀಮಿತವಾಯಿತು. ಅಂದ ಹಾಗೆ ಮಾಜಿ ನಾಯಕ ರೋಹಿತ್‌ ಶರ್ಮಾ ಕೇವಲ 8 ರನ್‌ಗೆ ವಿಕೆಟ್‌ ಒಪ್ಪಿಸುವ ಮೂಲಕ ನಿರಾಶೆ ಮೂಡಿಸಿದರು. ಆದರೂ ವಿರಾಟ್‌ ಕೊಹ್ಲಿಯ ದಾಖಲೆಯೊಂದನ್ನು ರೋಹಿತ್ ಶರ್ಮಾ ಮುರಿದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಆಗಿ ರೋಹಿತ್‌ ಹೊರಹೊಮ್ಮಿದ್ದಾರೆ.

ವಿಜಯ ಕರ್ನಾಟಕ 27 Apr 2024 9:53 pm

ಹಾಸನ ಪೆನ್ ಡ್ರೈವ್ ಪ್ರಕರಣ | ತನಿಖೆಗೆ ಎಸ್.ಐ.ಟಿ ರಚಿಸಲು ರಾಜ್ಯ ಸರಕಾರ ತೀರ್ಮಾನ

ಬೆಂಗಳೂರು : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಲು‌ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ.

ವಾರ್ತಾ ಭಾರತಿ 27 Apr 2024 9:45 pm

ಮಿಸ್ ಯುನಿವರ್ಸ್ ಬ್ಯೂನಸ್‍ಐರಿಸ್ ಕಿರೀಟ ಗೆದ್ದ 60 ವರ್ಷದ ಮಹಿಳೆ

ಬ್ಯೂನಸ್‍ಐರಿಸ್: ಅರ್ಜೆಂಟೀನಾದಲ್ಲಿ ನಡೆದ ಮಿಸ್ ಯುನಿವರ್ಸ್ ಬ್ಯೂನಸ್‍ಐರಿಸ್ ಸ್ಪರ್ಧೆಯಲ್ಲಿ 60 ವರ್ಷದ ಅಲೆಕ್ಸಾಂಡ್ರಾ ಮರೀಸಾ ರಾಡ್ರಿಗಸ್ ಪ್ರಶಸ್ತಿ ಗೆದ್ದಿದ್ದು ದಾಖಲೆ ಬರೆದಿದ್ದಾರೆ. 60 ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟ ಗೆದ್ದ ಪ್ರಥಮ ಮಹಿಳೆ ಎಂಬ ಇತಿಹಾಸವನ್ನು ವೃತ್ತಿಯಲ್ಲಿ ನ್ಯಾಯವಾದಿಯಾಗಿರುವ ಅಲೆಕ್ಸಾಂಡ್ರಾ ಬರೆದಿದ್ದಾರೆ. ಸ್ಪರ್ಧೆಯಲ್ಲಿ 18ರಿಂದ 73 ವರ್ಷದವರೆಗಿನ 34 ಸ್ಪರ್ಧಿಗಳು ಭಾಗವಹಿಸಿದ್ದರು.

ವಾರ್ತಾ ಭಾರತಿ 27 Apr 2024 9:36 pm

ವಾಣಿಜ್ಯ ಚಟುವಟಿಕೆ ಪರಿಸರವನ್ನು ಕಾಯ್ದುಕೊಳ್ಳಬೇಕು: ಡಾ.ರಾಜೀವ್ ಶಾ

ಮಣಿಪಾಲ, ಎ.27: ಯಾವುದೇ ವಾಣಿಜ್ಯ ಚಟುವಟಿಕೆ ತನ್ನ ಸುತ್ತಲಿನ ಪರಿಸರವನ್ನು ಹಾಳುಮಾಡದೆ ಕಾಯ್ದಿಟ್ಟುಕೊ ಳ್ಳಬೇಕು ಹಾಗೂ ಸುಸ್ಥಿರತೆ, ಸಾಮಾಜಿಕ ಜವಾಬ್ದಾರಿ ಮತ್ತು ನೀತಿ ಸಂಹಿತೆಯನ್ನು ಆಧರಿಸಿರಬೇಕು ಎಂದು ಮಣಿಪಾಲದ ಟಿ.ಎ.ಪೈ ಮ್ಯಾನೇಜ್ಮೆಂಟ್ ಇನ್‌ಸ್ಟಿಟ್ಯೂಟ್(ಟ್ಯಾಪ್ಮಿ)ನ ವಿದ್ವಾಂಸ ಡಾ.ರಾಜೀವ್ ಶಾ ಹೇಳಿದ್ದಾರೆ. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್(ಜಿಸಿಪಿಎಎಸ್) ಆಶ್ರಯದಲ್ಲಿ ಪರಿಸರ ನಿರ್ವಹಣಾ ಶಾಸ್ತ್ರದ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಡಾ. ರಾಜೀವ್ ಶಾ, ಹವಾಮಾನ ಬದಲಾವಣೆ ಮತ್ತು ಭೂ ತಾಪಮಾನದ ಏರಿಕೆಯ ಈ ದಿನಗಳಲ್ಲಿ ಎಲ್ಲಾ ವಾಣಿಜ್ಯ ಚಟುವಟಿಕೆಗಳು ತಮ್ಮ ಪರಿಸರವನ್ನು ಚೆನ್ನಾಗಿ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಸುಸ್ಥಿರತೆ-ಜೀವವೈವಿಧ್ಯತೆಯ ರಕ್ಷಣೆಯನ್ನು, ಸಾಮಾಜಿಕ ಜವಾಬ್ದಾರಿ- ಕಾರ್ಮಿಕ ಮತ್ತು ಬಳಕೆದಾರರ ಹಕ್ಕುಗಳನ್ನು, ನೀತಿ ಸಂಹಿತೆ-ಮಾನವ ಹಕ್ಕುಗಳು ಮತ್ತು ಆರ್ಥಿಕ ಸಮಾನತೆಯ ವಿಷಯಗಳನ್ನು ಎತ್ತಿ ಹಿಡಿಯುವುದೇ ಪರಿಸರ ನಿರ್ವಹಣಾ ಶಾಸ್ತ್ರದ ಮೂಲ ತತ್ವಗಳಾಗಿವೆ ಎಂದು ವಿವರಿಸಿದರು. ನಾವು ಮಾಡುವ ಪ್ರತೀ ಚಟುವಟಿಕೆಯನ್ನು ಪರಿಸರ ದೃಷ್ಟಿಕೋನದಿಂದ ನಿರ್ವಹಿಸಬಹುದು. ನಮ್ಮ ವಸ್ತು ಮತ್ತು ವಿಧಾನ ಗಳ ಆಯ್ಕೆಯಲ್ಲಿ ವೆಚ್ಚ ಮತ್ತು ಪ್ರಯೋಜನದ ವಿಶ್ಲೇಷಣೆಯೊಂದಿಗೆ ಹೆಚ್ಚು ಹೆಚ್ಚು ಪರಿಸರ ಸ್ನೇಹಿ ಆಯ್ಕೆಗಳನ್ನು ಮಾಡಬ ಹುದು. ಎಲ್ಲಾ ಚಟುವಟಿಕೆಗಳಲ್ಲಿ ಸಂಬಂಧ ಪಡುವ ಎಲ್ಲಾ ಜನರ ಹಿತವನ್ನು ಕಾಯ್ದುಕೊಳ್ಳುವದು ಮುಖ್ಯ ಎಂದರು. ಕೇವಲ ಲಾಭಕ್ಕೋಸ್ಕರ ವಾಣಿಜ್ಯ ಎನ್ನುವ, ಅರ್ಥಶಾಸ್ತ್ರಜ್ಞ ಫ್ರೀಡ್ಮನ್‌ನ ವಾದವನ್ನು ಶಾ ತಳ್ಳಿಹಾಕಿದರು. ಹೆಚ್ಚು ಹೆಚ್ಚು ಪರಿಸರ ಸ್ನೇಹಿ ವಸ್ತು ಮತ್ತು ಸಾಮಾಜಿಕ ಕಳಕಳಿಯನ್ನು ಅಳವಡಿಸಿಕೊಳ್ಳುವುದರಲ್ಲಿಯೇ ಹೆಚ್ಚಿನ ಪ್ರಯೋಜನವೂ ಇದೆ ಎಂದು ಪ್ರತಿಪಾದಿಸಿದರು. ಜವಾಬ್ದಾರಿಯುತ ಮೈಕ್ರೋ ಫೈನಾನ್ಸಿಂಗ್ ಬಾಂಗ್ಲಾದೇಶದಲ್ಲಿ ಹೆಚ್ಚು ಉಪಯುಕ್ತ ವಾಗುತ್ತಿರು ವುದನ್ನು ಅವರು ಉದಾಹರಣೆಯಾಗಿ ನೀಡಿದರು. ಜಿಸಿಪಿಎಎಸ್ ಮುಖ್ಯಸ್ಥ ಪ್ರೊ. ವರದೇಶ್ ಹಿರೇಗಂಗೆ ಈ ಸಂದರ್ಭದಲ್ಲಿ ಪರಿಸರ ತತ್ವಶಾಸ್ತ್ರವನ್ನು ವಾಸ್ತವಕ್ಕಿಳಿಸಲು ಪರಿಸರ ನಿರ್ವಹಣಾ ಶಾಸ್ತ್ರದ ಸ್ಪರ್ಶದ ಅಗತ್ಯವನ್ನು ಎತ್ತಿ ಹೇಳಿದರು. ಅಧ್ಯಾಪಕಿ ತನಿಷ್ಕಾ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

ವಾರ್ತಾ ಭಾರತಿ 27 Apr 2024 9:36 pm

ನೇಣು ಬಿಗಿದು ಆತ್ಮಹತ್ಯೆ

ಕುಂದಾಪುರ, ಎ.27: ಕುಂದಾಪುರ ಕಸಬಾ ಗ್ರಾಮದ ಕೇಶವ (60) ಎಂಬವರು ಮನೆಯ ಮಹಡಿಯ ಪಕಾಸಿಗೆ ಚೂಡಿದಾರರ ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಗರಾಗಿದ್ದ ಕೇಶವ ಅವರು ಅನಾರೋಗ್ಯದಿಂದ ಬಳಲುತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 27 Apr 2024 9:34 pm

ಮಿನಿ ಗೂಡ್ಸ್ ಢಿಕ್ಕಿ: ವೃದ್ಧೆ ಮೃತ್ಯು

ಕುಂದಾಪುರ, ಎ.27: ಅತಿವೇಗವಾಗಿ ಬಂದ ಮಹೇಂದ್ರ ಬೊಲೆರೋ ಮಿನಿ ಗೂಡ್ಸ್ ಒಂದು ರಸ್ತೆ ದಾಟಲು ನಿಂತಿದ್ದ ವೃದ್ಧೆಗೆ ಢಿಕ್ಕಿ ಹೊಡೆದ ಪರಿಣಾಮ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಅರಾಹ್ನ  ಹಂಗಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಶೋಭಾ ಜಿ.ಬಿಲ್ಲವ (65) ಎಂದು ಗುರುತಿಸಲಾಗಿದೆ. ಹಂಗಳೂರಿನ ನಗು ಪ್ಯಾಲೇಸ್ ಎದುರಿನ ರಾ.ಹೆದ್ದಾರಿ ಯಲ್ಲಿ ರಸ್ತೆ ದಾಟಲು ಬದಿಯಲ್ಲಿ ನಿಂತಿದ್ದ ಶೋಭಾರಿಗೆ ಕುಂದಾಪುರದಿಂದ ಉಡುಪಿಯತ್ತ ಸಾಗುತಿದ್ದ ಮಿನಿ ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದಿತ್ತು. ಪರಿಣಾಮ ರಸ್ತೆಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾದ ಶೋಭಾರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾರ್ತಾ ಭಾರತಿ 27 Apr 2024 9:33 pm

ಉಡುಪಿ: ಕ್ಯಾನ್ಸರ್‌ಗೆ ವಿಶೇಷ ಆಯುರ್ವೇದ ಚಿಕಿತ್ಸಾ ಕ್ರಮದ ಶಿಬಿರ

ಉಡುಪಿ, ಎ.27: ಮಣಿಪಾಲದ ಶಿವಳ್ಳಿ ಇಂಡಸ್ಟ್ರೀಯಲ್ ಪ್ರದೇಶಷದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ತನ್ನ ರಜತ ಮಹೋತ್ಸವದ ಭಾಗವಾಗಿ ಎ.29ರಿಂದ ಮೇ 4ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕ್ಯಾನ್ಸರ್‌ಗೆ ವಿಶೇಷ ಆಯುರ್ವೇದ ಚಿಕಿತ್ಸಾ ಶಿಬಿರ ‘ಮಹೋಷಧಕಲ್ಪ’ವನ್ನುಆಯೋಜಿಸಿದೆ. ಈ ಶಿಬಿರದಲ್ಲಿ ಉಚಿತ ತಪಾಸಣಾ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಿದೆ.ದೈಹಿಕವಾಗಿ ಮತ್ತು ಮಾನಸಿಕವಾಗಿ ರೋಗಿಯನ್ನು ಪುನರುಜ್ಜೀವನ ಗೊಳಿಸಲು ಮತ್ತು ಪುನಶ್ಚೇತನಗೊಳಿಸಲು ಮಹೋಷಧಕಲ್ಪ ಸಹಾಯ ಮಾಡುತ್ತದೆ. ದೀರ್ಘಾವಧಿಯಿಂದ ತೀವ್ರವಾದ ಕ್ಯಾನ್ಸರ್‌ನಿಂದ ಬಳಲುತ್ತಿ ರುವ ಮತ್ತು ಚಿಕಿತ್ಸೆಗೆ ಪಡೆಯುತ್ತಿರುವ ರೋಗಿಗಳಿಗೆ ಇದು ಪ್ರಯೋಜನಕಾರಿ. ಎಲ್ಲಾ ರೀತಿಯ ಕ್ಯಾನ್ಸರ್ ಮತ್ತು ಅದರ ಚಿಕಿತ್ಸೆಯ ಅಡ್ಡಪರಿಣಾಮಗಳಿಂದ ಬಳಲುತ್ತಿರುವ ಕ್ಯಾನ್ಸರ್ ರೋಗಿಗಳು ಈ ಶಿಬಿರದ ಪ್ರಯೋಜನವನ್ನು ಪಡೆಯಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಶಿಬಿರದ ಕುರಿತು ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ. 8123403233ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಾರ್ತಾ ಭಾರತಿ 27 Apr 2024 9:31 pm

ಸಂಯುಕ್ತ ಪಾಟೀಲ್ ಸಂಸತ್ತಿನಲ್ಲಿ ನಿಮ್ಮ ಧ್ವನಿ ಆಗಿರುತ್ತಾರೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇ ಬೇಕು. ಕಾಂಗ್ರೆಸ್ಸಿನ ಸಂಯುಕ್ತ ಪಾಟೀಲ್ ಸಂಸತ್ತಿನಲ್ಲಿ ನಿಮ್ಮ ಧ್ವನಿ ಆಗಿರುತ್ತಾರೆ. ಆದುದರಿಂದ, ಅವರನ್ನು ಗೆಲ್ಲಿಸಿ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದರು. ಶನಿವಾರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಪರವಾಗಿ ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗದ್ದಿಗೌಡರ್ ಅವರು ಇಷ್ಟು ವರ್ಷ ನೀವು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಬಾಯಿಯನ್ನೆ ಬಿಟ್ಟಿಲ್ಲ ಎಂದು ಟೀಕಿಸಿದರು. ರಾಜ್ಯಕ್ಕೆ ಬರ ಬಂದಾಗಲೂ ಬಾಯಿ ಬಿಡಲಿಲ್ಲ. ಪ್ರವಾಹ ಬಂದಾಗಲೂ ಬಾಯಿ ಬಿಡಲಿಲ್ಲ. ಬಾಗಲಕೋಟೆ ಜಿಲ್ಲೆಯ ಜನರ ಪರವಾಗಿ, ಜಿಲ್ಲೆಯ ಅಭಿವೃದ್ಧಿ ಪರವಾಗಿಯೂ ಬಾಯಿ ಬಿಡಲಿಲ್ಲ. ಇದು ನಿಮಗೆ ಬಂದ ಮತಗಳಿಗೆ ನೀವು ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. 20 ವರ್ಷ ನಿಮ್ಮ ಪರವಾಗಿ ಒಂದೂ ಮಾತಾಡದ ಗದ್ದಿಗೌಡರನ್ನು ಮನೆಗೆ ಕಳುಹಿಸಿ. ಅವರು ಸ್ವಲ್ಪ ವಿಶ್ರಾಂತಿ ಪಡೆಯಲಿ. ಈ ಬಾರಿ ಸಂಯುಕ್ತ ಪಾಟೀಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ. ಸಂಯುಕ್ತ ಸಂಸತ್ತಿನಲ್ಲಿ ಬಾಗಲಕೋಟೆ ಹಾಗೂ ರಾಜ್ಯದ ಜನರ ಧ್ವನಿ ಆಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು. ಮೋದಿಯ ಸುಳ್ಳಿನ ಮಾಲೆ: ರಾಜ್ಯಕ್ಕೆ ಭೀಕರ ಬಿಸಿಲು ಬರಗಾಲ ಬಂದಿದೆ. ರಾಜ್ಯದ ಪಾಲಿನ ಬರ ಪರಿಹಾರ ಕೊಡಿ ಕೊಡಿ ಅಂತ ಕೇಳಿ ಕೇಳಿ ಸಾಕಾಯ್ತು. ದಿಲ್ಲಿಗೆ ಬಂದು ಪ್ರತಿಭಟನೆ ಮಾಡಿದ್ವಿ. ಆದ್ರೂ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆವು. ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ ಮೋದಿಯವರೇ?. ಇಂಥಾ ದ್ರೋಹ ಏಕೆ ಮಾಡಿದ್ರಿ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಮೋದಿಯವರೇ ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದ್ರು. ಪ್ರತಿಭಟನೆ ಮಾಡಿ ನೂರಾರು ರೈತರು ಮೃತಪಟ್ಟರೂ ಈ ರೈತರ ಸಾವಿನ ಬಗ್ಗೆ ನಿಮಗೆ ಸಣ್ಣ ಕರುಣೆಯೂ ಬರಲಿಲ್ಲ. ಡಾಲರ್ ಎದುರು ರೂಪಾಯಿ ಮೌಲ್ಯ ಕಡಿಮೆ ಮಾಡುತ್ತೇವೆ ಎಂದ್ರು. ಆದರೆ ಈಗ ಡಾಲರ್ ಎದುರು ರೂಪಾಯಿ ಮೌಲ್ಯ ಯಾವ ಮಟ್ಟಕ್ಕೆ ಏರಿಕೆ ಆಗಿದೆ ನೋಡಿ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದ್ರು. ಕೆಲಸ ಕೇಳಿದ್ರೆ ಪಕೋಡ ಮಾರಾಟ ಮಾಡಿ ಅಂದ್ರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆಗೆ ತಡೆ ಹಾಕುತ್ತೇವೆ ಎಂದು ಭಾರತೀಯರನ್ನು ನಂಬಿಸಿ ಮೋಸ ಮಾಡಿದ್ದೀರಿ, ಡೀಸೆಲ್, ಪೆಟ್ರೋಲ್, ಗೊಬ್ಬರ, ಗ್ಯಾಸ್ ಬೆಲೆ ಗಗನಕ್ಕೆ ಏರಿಸಿದ್ರಲ್ಲಾ ಸ್ವಾಮಿ. ಇಂಥಾ ನಂಬಿಕೆ ದ್ರೋಹನಾ ಸ್ವಾಮಿ ಮಾಡೋದು? ನಾವು ದುಡ್ಡು ಕೊಡ್ತೀವಿ ಅಂದ್ರೂ ರಾಜ್ಯದ ಜನರಿಗೆ ಅಕ್ಕಿ ಕೊಡಲಿಲ್ಲವಲ್ಲಾ? ಇದು ನನ್ನ ಜನರ ಹೊಟ್ಟೆ ಮೇಲೆ ಹೊಡೆದ ಹಾಗಲ್ವಾ ಮಿಸ್ಟರ್ ಮೋದಿ ಎಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇಡೀ ದೇಶದ ರೈತರ ಸಾಲ ಮನ್ನಾ ಆಗುತ್ತದೆ. ಪ್ರತಿ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದೂ ಕಾಲು ಲಕ್ಷ ರೂಪಾಯಿ ಖಾತೆಗೆ ಬಂದು ಬೀಳುತ್ತೆ. ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ. ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಚಿತ ಎಂದು ಅವರು ಹೇಳಿದರು. ಈ ರೀತಿಯ 25 ಗ್ಯಾರಂಟಿಗಳು ಜಾರಿಯಾಗಲಿದ್ದು, ಈ ಗ್ಯಾರಂಟಿ ಪತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ. ಎಲ್ಲ ಗ್ಯಾರಂಟಿಗಳ ಲಕ್ಷ ರೂ. ಹಣ ಮಧ್ಯವರ್ತಿಗಳ ಹಾವಳಿ ಇಲ್ಲದೆ ನಿಮ್ಮ ಖಾತೆಗೆ ನೇರವಾಗಿ ಬಂದು ಬೀಳುತ್ತದೆ. ನೇಕಾರರ ಸಾಲ ಮನ್ನಾ ಮಾಡಿದೆ, ಮಗ್ಗಗಳಿಗೆ ಉಚಿತ ವಿದ್ಯುತ್ ಕೊಟ್ಟೆ. ಇನ್ನೂ ಹಲವು ಅನುಕೂಲ ನೇಕಾರರಿಗೆ ಮಾಡಿದ್ದು ನಾವೇ. ಬಿಜೆಪಿಯವರು ಏನೇನೂ ಮಾಡಲಿಲ್ಲ ಎಂದು ಅವರು ಟೀಕಿಸಿದರು. ನಾವು ಕೆಲಸ ಮಾಡಿದ್ದೇವೆ. ನಮಗೆ ಕೂಲಿ ಕೊಡಿ. ದಯಮಾಡಿ ಸಂಯುಕ್ತ ಪಾಟೀಲ್ ಗೆಲ್ಲಿಸಿ. ಇವರು ನಿಮ್ಮ ಧ್ವನಿಯಾಗಿ ದಿಲ್ಲಿಯಲ್ಲಿ ಘರ್ಜಿಸುತ್ತಾರೆ ಎಂದು ಮುಖ್ಯಮಂತ್ರಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್.ಬಿ.ತಿಮ್ಮಾಪುರ್, ಶಿವಾನಂದ ಪಾಟೀಲ್, ಮಾಜಿ ಸಚಿವ ಎಸ್.ಆರ್.ಪಾಟೀಲ್, ಶಾಸಕರಾದ ಲಕ್ಷ್ಮಣ ಸವದಿ, ವಿನಯ್ ಕುಲಕರ್ಣಿ, ಉಮಾಶ್ರೀ, ವಿಜಯಾನಂದ ಕಾಶಪ್ಪನವರ್, ಜೆ.ಟಿ.ಪಾಟೀಲ್, ಸುನಿತಾ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ, ರಾಜು ಚಿಮ್ಮನಕಟ್ಟಿ, ಬಿ.ಆರ್.ಯಾವಗಲ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Apr 2024 9:29 pm

ಭಾರತದತ್ತ ಸಾಗುತ್ತಿದ್ದ ಹಡಗಿನ ಮೇಲೆ ಹೌದಿಗಳ ಕ್ಷಿಪಣಿ ದಾಳಿ

ಸನಾ : ಕೆಂಪು ಸಮುದ್ರದಲ್ಲಿ ಪ್ರಯಾಣಿಸುತ್ತಿದ್ದ `ಅಂಡ್ರೊಮೆಡ ಸ್ಟಾರ್' ಟ್ಯಾಂಕರ್ ಹಡಗಿನ ಮೇಲೆ ಮೂರು ಕ್ಷಿಪಣಿ ದಾಳಿ ನಡೆಸಿರುವುದಾಗಿ ಯೆಮನ್‍ನ ಹೌದಿಗಳು ಶನಿವಾರ ಹೇಳಿದ್ದಾರೆ. ಪನಾಮಾದ ಧ್ವಜ ಹೊಂದಿರುವ `ಅಂಡ್ರೊಮೆಡ ಸ್ಟಾರ್' ಟ್ಯಾಂಕರ್(ತೈಲ ಸಾಗಿಸುವ ಹಡಗು) ಬ್ರಿಟನ್ ಸಂಸ್ಥೆಯ ಮಾಲಕತ್ವ ಹೊಂದಿದೆ ಎಂದು ಹೌದಿಗಳ ಹೇಳಿಕೆ ತಿಳಿಸಿದೆ. ಆದರೆ ಹಡಗಿನ ಈಗಿನ ಮಾಲಕ ಸೀಶೆಲ್ಸ್‍ನಲ್ಲಿ ನೋಂದಾವಣೆ ಮಾಡಿಕೊಂಡಿದ್ದು ರಶ್ಯಕ್ಕೆ ಸಂಬಂಧಿಸಿದ ತೈಲವನ್ನು ರಶ್ಯದಿಂದ ಗುಜರಾತ್‍ನ ವದಿನಾರ್ ಬಂದರಿಗೆ ಸಾಗಿಸುತ್ತಿತ್ತು ಎಂದು ವರದಿಯಾಗಿದೆ. ದಾಳಿಯಲ್ಲಿ ಯಾರಿಗೂ ಗಾಯವಾಗಿಲ್ಲ. ಆದರೆ ಹಡಗಿಗೆ ಹಾನಿಯಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಮಾಹಿತಿ ನೀಡಿದೆ.

ವಾರ್ತಾ ಭಾರತಿ 27 Apr 2024 9:29 pm

ಅಮೆರಿಕದ ಚುನಾವಣೆಯ ಮೇಲೆ ಪ್ರಭಾವ ಬೀರಲು ಚೀನಾ ಪ್ರಯತ್ನ: ಬ್ಲಿಂಕೆನ್

ವಾಷಿಂಗ್ಟನ್: ಅಮೆರಿಕದಲ್ಲಿ ಈ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಲು ಮತ್ತು ಪ್ರಭಾವ ಬೀರಲು ಚೀನಾ ಪ್ರಯತ್ನಿಸಿರುವುದಕ್ಕೆ ಪುರಾವೆಗಳಿವೆ ಎಂದು ಅಮೆರಿಕದ ವಿದೇಶಾಂಗ ಸಚಿವ ಆಂಟೊನಿ ಬ್ಲಿಂಕನ್ ಹೇಳಿದ್ದಾರೆ. ಕಳೆದ ನವೆಂಬರ್ ನಲ್ಲಿ ಸ್ಯಾನ್‍ಫ್ರಾನ್ಸಿಸ್ಕೋದಲ್ಲಿ ನಡೆದ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್‍ರನ್ನು ಭೇಟಿಯಾಗಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್ 20244 ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸದಂತೆ ಸಂದೇಶ ನೀಡಿದ್ದರು. ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕ್ಸಿಜಿಂಪಿಂಗ್ ವಾಗ್ದಾನ ನೀಡಿದ್ದರು. ಆದರೆ ಚುನಾವಣೆಯ ಮೇಲೆ ಪ್ರಭಾವ ಬೀರುವ ಮತ್ತು ಮಧ್ಯಪ್ರವೇಶಿಸುವ ಪ್ರಯತ್ನಗಳ ಪುರಾವೆಗಳು ಲಭಿಸಿವೆ. ಈ ಪ್ರಯತ್ನಗಳು ಸ್ಥಗಿತಗೊಂಡಿರುವುದನ್ನು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತಿದ್ದೇವೆ. ನಮ್ಮ ಚುನಾವಣೆಯಲ್ಲಿ ಚೀನಾದ ಯಾವುದೇ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ಬ್ಲಿಂಕೆನ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 

ವಾರ್ತಾ ಭಾರತಿ 27 Apr 2024 9:26 pm

ಅಮೆರಿಕ ಪೊಲೀಸರಿಂದ ಕಪ್ಪುವರ್ಣೀಯ ವ್ಯಕ್ತಿಯ ಹತ್ಯೆ : ವರದಿ

ವಾಷಿಂಗ್ಟನ್: ನಾಲ್ಕು ವರ್ಷದ ಹಿಂದೆ ಅಮೆರಿಕದ ಮಿನೆಪೊಲಿಸ್‍ನಲ್ಲಿ ಕಪ್ಪುವರ್ಣೀಯ ಜಾರ್ಜ್‍ಫ್ಲಾಯ್ಡ್‍ನನ್ನು ಪೊಲೀಸರು ಹತ್ಯೆ ಮಾಡಿದ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣದ ವೀಡಿಯೊವನ್ನು ಅಮೆರಿಕದ ಕ್ಯಾಂಟನ್ ನಗರದ ಪೊಲೀಸ್ ಇಲಾಖೆ ಬಿಡುಡಗೆಗೊಳಿಸಿದೆ. ಅಮೆರಿಕದ ಕ್ಯಾಂಟನ್ ನಗರದಲ್ಲಿ ಅಪಘಾತ ಪ್ರಕರಣವೊಂದರ ಶಂಕಿತ ಆರೋಪಿಯನ್ನು ಬಂಧಿಸುವ ಸಂದರ್ಭ ಪೊಲೀಸರು ಆತನನ್ನು ನೆಲಕ್ಕೆ ಒತ್ತಿಹಿಡಿದಿದ್ದು ಉಸಿರಾಡಲು ಕಷ್ಟವಾಗುತ್ತಿದೆ ಎಂದು ಆರೋಪಿ ಚೀರುತ್ತಿದ್ದರೂ ಪೊಲೀಸರು ಕಿವಿಗೊಟ್ಟಿಲ್ಲ. ಪರಿಣಾಮ ಆರೋಪಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ. ಪೊಲೀಸರ ಹೆಲ್ಮೆಟ್‍ನಲ್ಲಿ ಇರುವ ಸಿಸಿ ಕ್ಯಾಮೆರಾದಲ್ಲಿ ಈ ದುರಂತದ ವಿಡಿಯೋ ಸೆರೆಯಾಗಿದೆ. ಕ್ಯಾಂಟನ್ ನಗರದಲ್ಲಿ ವಿದ್ಯುತ್ ಕಂಬವೊಂದಕ್ಕೆ ಕಾರು ಡಿಕ್ಕಿಯಾಗಿದ್ದು ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಕಾರನ್ನು ಬೆನ್ನಟ್ಟಿದ ಪೊಲೀಸರು ಅಪಾರ್ಟ್‍ಮೆಂಟ್ ಒಂದರ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ಪತ್ತೆಹಚ್ಚಿದ್ದು ಅಲ್ಲೇ ಬಳಿಯಿದ್ದ 53 ವರ್ಷದ ಫ್ರಾಂಕ್ ಟೈಸನ್ ಎಂಬಾತನನ್ನು ಬಂಧಿಸಲು ಮುಂದಾಗಿದ್ದಾರೆ. ಆತ ವಿರೋಧಿಸಿದಾಗ ಆತನ ಕೈಯನ್ನು ಹಿಂದಕ್ಕೆ ಕಟ್ಟಿ ನೆಲಕ್ಕೆ ಒತ್ತಿಹಿಡಿದಿದ್ದಾರೆ. ಉಸಿರಾಡಲು ಆಗುತ್ತಿಲ್ಲ ಎಂದು ಚೀರಿದರೂ ಕಿವಿಗೊಡದೆ ನೆಲಕ್ಕೆ ಒತ್ತಿಹಿಡಿದಿದ್ದರಿಂದ ಟೈಸನ್ ಅಸ್ವಸ್ಥಗೊಂಡಿದ್ದು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಪ್ರಕರಣದಲ್ಲಿ ಒಳಗೊಂಡಿರುವ ಪೊಲೀಸರನ್ನು ಬ್ಯೂ ಸ್ಕೋನೆಗ್ಗೆ ಮತ್ತು ಕ್ಯಾಮ್ಡೆನ್ ಬರ್ಚ್ ಎಂದು ಗುರುತಿಸಲಾಗಿದ್ದು ಅವರನ್ನು ಆಡಳಿತಾತ್ಮಕ ರಜೆಯ ಮೇಲೆ ಕಳುಹಿಸಲಾಗಿದ್ದು ಕ್ರಿಮಿನಲ್ ತನಿಖೆಗೆ ಆದೇಶಿಸಲಾಗಿದೆ ಎಂದು ಕ್ಯಾಂಟನ್ ಪೊಲೀಸ್ ಇಲಾಖೆ ಹೇಳಿದೆ.  

ವಾರ್ತಾ ಭಾರತಿ 27 Apr 2024 9:23 pm

ರಿಷಿಕಾ ಕುಂದೇಶ್ವರಗೆ ಡ್ರಾಮಾ ಜೂನಿಯರ್ಸ್ ಪಟ್ಟ: ಸ್ಪೀಕರ್ ಯು.ಟಿ.ಖಾದರ್, ಶಾಸಕರು, ಸಂಸದರಿಂದ ಅಭಿನಂದನೆ

ಮಂಗಳೂರು: ಝೀ ಕನ್ನಡದ ಡ್ರಾಮಾ ಜೂನಿಯರ್ಸ್ ಸೀಸನ್ 5ರ ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಇತ್ತೀಚೆಗೆ ಟ್ರೋಫಿ ಗೆದ್ದುಕೊಂಡಿದ್ದು ಅವರನ್ನು ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಿ.ಸುನಿಲ್ ಕುಮಾರ್, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮಾಜಿ ಶಾಸಕ ರಘುಪತಿ ಭಟ್ ಮತ್ತು ಸಿನಿ, ರಂಗಭೂಮಿ ಕಲಾವಿದರು ಜಾಲತಾಣದಲ್ಲಿ ಅಭಿನಂದಿಸಿ ಪೋಸ್ಟ್ ಗಳನ್ನು ಹಾಕಿದ್ದಾರೆ. ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿ ನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ ದಂಪತಿಯ ಪುತ್ರಿ. ಮೂಲತಃ ಕಾರ್ಕಳ ಕುಂದೇಶ್ವರದ ರಿಷಿಕಾ, ಮಂಗಳೂರು ಅಶೋಕನಗರ ಎಸ್ಡಿಎಂ ಸ್ಕೂಲ್ ವಿದ್ಯಾರ್ಥಿನಿ. ಬಾಲಯಕ್ಷಕೂಟ, ಯಕ್ಷಮಾಧ್ಯಮ ತಂಡದ ಸದಸ್ಯೆ. 31 ಜಿಲ್ಲೆಗಳಿಂದ ಸಹಸ್ರಾರು ಬಾಲ ಪ್ರತಿಭೆಗಳ ಶೋಧ ನಡೆಸಿ ಮೇಗಾ ಅಡಿಶನ್‌ನಲ್ಲಿ 24 ಮಕ್ಕಳನ್ನು ಆಯ್ಕೆ ಮಾಡಲಾ ಗಿತ್ತು. 22 ವಾರದಲ್ಲಿ 24 ಮಕ್ಕಳು ಬರೋಬ್ಬರಿ 200ಕ್ಕೂ ಅಧಿಕ ಸ್ಕಿಟ್‌ಗಳನ್ನು ಮಾಡಿ ಮುಗಿಸಿದ್ದರು. ಮೊದಲ ವಿಜೇತರಾದ ರಿಷಿಕಾ ಮತ್ತು ವಿಷ್ಣು ಕುಣಿಗಲ್‌ಗೆ 30X40 ಸೈಟ್ ಬಹುಮಾನವಾಗಿ ಬಂದರೆ, ಮೊದಲ ರನ್ನರ್ ಅಪ್ ಶಿವಮೊಗ್ಗದ ಮಹಾಲಕ್ಷ್ಮೀ ಗೆ 3 ಲಕ್ಷ ರೂ. ನಗದು, ಎರಡನೇ ರನ್ನರ್ ಅಪ್ ಭದ್ರಾವತಿಯ ಇಂಚರಗೆ 1 ಲಕ್ಷ ರೂ. ಬಹುಮಾನ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಹಿರಿಯ ನಟಿ ಲಕ್ಷ್ಮೀ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ತೀರ್ಪುಗಾರರಾಗಿ ವೇದಿಕೆ ಮೇಲಿದ್ದರು. ಯಕ್ಷಗಾನ, ಯಕ್ಷರೂಪಕ, ನಾಟಕಗಳಲ್ಲಿ ಅಭಿನಯಿಸುವ ರಿಷಿಕಾ, ಕೃಷ್ಣರಾಜ ನಂದಳಿಕೆ ಅವರಿಂದ ಕರ್ನಾಟಕ್ ಸಂಗೀತ, ಎಲ್ಲೂರು ರಾಮಚಂದ್ರ ಭಟ್ ಅವರಲ್ಲಿ ತೆಂಕುತಿಟ್ಟು ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾಳೆ.

ವಾರ್ತಾ ಭಾರತಿ 27 Apr 2024 9:20 pm

ಕಸಬ್ ಗಲ್ಲಿಗೇಸಿರಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್ ಈಗ ಉತ್ತರ ಮುಂಬೈನ ಬಿಜೆಪಿ ಅಭ್ಯರ್ಥಿ!

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಬದಲಾಯಿಸಿದೆ. ಅಲ್ಲಿ ಹಾಲಿ ಸಂಸದರಾದ ಪೂನಂ ಮಹಾಜನ್ ಅವರನ್ನು ಕೈ ಬಿಟ್ಟು ಅವರ ಬದಲಿಗೆ ಹಿರಿಯ ವಕೀಲರ ಉಜ್ವಲ್ ನಿಕಂ ಅವರನ್ನು ಬಿಜೆಪಿ ಕಣಕ್ಕಿಳಿಸಲು ನಿರ್ಧರಿಸಿದೆ. 2008ರ ಮುಂಬೈ ದಾಳಿಯ ಉಗ್ರ ಕಸಬ್ ಗೆ ಗಲ್ಲು ಶಿಕ್ಷೆ ಕೊಡಿಸುವುದು ಸೇರಿದಂತೆ, ಹಲವಾರು ಉಗ್ರರ ವಿರುದ್ದ ಪರಿಣಾಮಕಾರಿ ವಾದ ಮಂಡಿಸುವ ಮೂಲಕ ಖ್ಯಾತಿ ಗಳಿಸಿರುವ ನಿಕಂ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ವಿಜಯ ಕರ್ನಾಟಕ 27 Apr 2024 9:15 pm

ರಫಾ ಕಾರ್ಯಾಚರಣೆಗೂ ಮುನ್ನ ಒತ್ತೆಯಾಳು ಒಪ್ಪಂದಕ್ಕೆ ಅಂತಿಮ ಅವಕಾಶ : ಇಸ್ರೇಲ್

ಟೆಲ್ ಅವೀವ್: ಗಾಝಾ ಪಟ್ಟಿಯ ರಫಾ ನಗರದ ಮೇಲೆ ದೀರ್ಘ ಯೋಜಿತ ಪದಾತಿ ದಳದ ಕಾರ್ಯಾಚರಣೆ ಆರಂಭಕ್ಕೂ ಮುನ್ನ ಕದನ ವಿರಾಮ ಮಾತುಕತೆ ಹಾಗೂ ಒತ್ತೆಯಾಳು ಬಿಡುಗಡೆಯ ಕುರಿತ ಒಪ್ಪಂದಕ್ಕೆ ಬರಲು ಅಂತಿಮ ಅವಕಾಶವನ್ನು ನೀಡುತ್ತಿದ್ದೇವೆ ಎಂದು ಇಸ್ರೇಲ್ ಈಜಿಪ್ಟ್ ಗೆ ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದೆ. ಒತ್ತೆಯಾಳು ಒಪ್ಪಂದವನ್ನು ಮುಂದಿಟ್ಟುಕೊಂಡು ಹಮಾಸ್, ವಿಶೇಷವಾಗಿ ಗಾಝಾದಲ್ಲಿ ಅದರ ಮುಖಂಡ ಯಾಹ್ಯಾ ಸಿನ್ವರ್ ವಿಳಂಬ ತಂತ್ರ ಅನುಸರಿಸುವುದಕ್ಕೂ ನಮ್ಮ ಒಪ್ಪಿಗೆಯಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇಸ್ರೇಲ್‍ನ ಕದನ ವಿರಾಮ ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಪ್ರತಿಕ್ರಿಯಿಸುವುದಾಗಿ ಹಮಾಸ್ ಶನಿವಾರ ಹೇಳಿದೆ. ` ಎಪ್ರಿಲ್ 13ರಂದು ಈಜಿಪ್ಟ್ ಮತ್ತು ಖತರ್ ಮಧ್ಯಸ್ಥಿಕೆದಾರರಿಗೆ ಸಲ್ಲಿಸಿರುವ ಪ್ರಸ್ತಾವನೆಗೆ ಯಹೂದಿ ಆಕ್ರಮಣಕಾರರು ನೀಡಿರುವ ಅಧಿಕೃತ ಪ್ರತಿಕ್ರಿಯೆ ಇಂದು(ಎಪ್ರಿಲ್ 27) ನಮ್ಮ ಕೈಸೇರಿದೆ. ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ನಮ್ಮ ಪ್ರತಿಕ್ರಿಯೆ ನೀಡಲಿದ್ದೇವೆ' ಎಂದು ಹಮಾಸ್‍ನ ಗಾಝಾ ವಿಭಾಗದ ಸಹಾಯಕ ಮುಖ್ಯಸ್ಥ ಖಲೀಲ್ ಅಲ್-ಹಯಾ ಹೇಳಿದ್ದಾರೆ. ರಫಾದ ಮೇಲೆ ಇಸ್ರೇಲ್‍ನ ನಿರೀಕ್ಷಿತ ಆಕ್ರಮಣ ಮತ್ತು ಹಮಾಸ್-ಇಸ್ರೇಲ್ ನಡುವೆ ಒತ್ತೆಯಾಳು ಒಪ್ಪಂದಕ್ಕೆ ಪ್ರಯತ್ನಿಸುವ ಸಲುವಾಗಿ ಇಸ್ರೇಲ್‍ನ ಉನ್ನತ ಅಧಿಕಾರಿಗಳು ಹಾಗೂ ಈಜಿಪ್ಟ್ ನ ಉನ್ನತ ಮಟ್ಟದ ನಿಯೋಗದ ನಡುವೆ ನಡೆಯುತ್ತಿದ್ದ ಮಾತುಕತೆ ಶುಕ್ರವಾರ ಅಂತ್ಯಗೊಂಡ ಬಳಿಕ ಇಸ್ರೇಲ್ ಈ ಎಚ್ಚರಿಕೆ ಸಂದೇಶ ರವಾನಿಸಿದೆ. `ಮಾತುಕತೆ ಉತ್ತಮವಾಗಿತ್ತು, ಕೇಂದ್ರೀಕೃತವಾಗಿತ್ತು ಮತ್ತು ಉತ್ತಮ ಪ್ರಬುದ್ಧತೆಯಿಂದ ಕೂಡಿತ್ತು. ಒಪ್ಪಂದದ ಬಗ್ಗೆ ಹಮಾಸ್ ಮೇಲೆ ಒತ್ತಡ ಹೇರಲು ಈಜಿಪ್ಟ್ ಸಿದ್ಧವಿದೆ. ಇದೇ ಸಂದರ್ಭ, ಒಪ್ಪಂದ ಸಾಧ್ಯವಾಗದಿದ್ದರೆ ರಫಾ ಕಾರ್ಯಾಚರಣೆ ಗೆ ಚಾಲನೆ ನೀಡಲು ಇಸ್ರೇಲ್ ಸನ್ನದ್ಧವಾಗಿದೆ' ಎಂದು ಇಸ್ರೇಲ್ ಮೂಲಗಳನ್ನು ಉಲ್ಲೇಖಿಸಿ `ಟೈಮ್ಸ್ ಆಫ್ ಇಸ್ರೇಲ್' ವರದಿ ಮಾಡಿದೆ. ಒತ್ತೆಯಾಳು ಒಪ್ಪಂದದ ಬಗ್ಗೆ ಹಮಾಸ್, ವಿಶೇಷವಾಗಿ ಗಾಝಾದಲ್ಲಿ ಅದರ ಮುಖಂಡ ಯಾಹ್ಯಾ ಸಿನ್ವರ್ ವಿಳಂಬ ತಂತ್ರ ಅನುಸರಿಸುವುದನ್ನು ಇಸ್ರೇಲ್ ಒಪ್ಪುವುದಿಲ್ಲ. ರಫಾ ಕಾರ್ಯಾಚರಣೆಗೂ ಮುನ್ನ ಇದು ಅಂತಿಮ ಅವಕಾಶವಾಗಿದೆ. ಒಪ್ಪಂದ ಅಥವಾ ರಫಾ ಕಾರ್ಯಾಚರಣೆ. ಆಯ್ಕೆ ಅವರ (ಹಮಾಸ್) ಎದುರಿಗಿದೆ' ಎಂದು ಇಸ್ರೇಲ್ ಅಧಿಕಾರಿ ಹೇಳಿದ್ದಾರೆ. ಗಾಝಾ ಬಿಕ್ಕಟ್ಟನ್ನು ಅಂತ್ಯಗೊಳಿಸುವ , ಹಮಾಸ್‍ನ ಒತ್ತೆಸೆರೆಯಲ್ಲಿರುವ ಒತ್ತೆಯಾಳುಗಳ ಬಿಡುಗಡೆ ಕುರಿತು ಸಂಧಾನ ಮಾತುಕತೆಯನ್ನು ಪುನರಾರಂಭಿಸುವ ಕುರಿತು ಚರ್ಚಿಸಲು ಈಜಿಪ್ಟ್ ನ ನಿಯೋಗ ಶುಕ್ರವಾರ ಇಸ್ರೇಲ್‍ಗೆ ಭೇಟಿ ನೀಡಿ ಚರ್ಚೆ ನಡೆಸಿದೆ. ಇನ್ನೂ 129 ಒತ್ತೆಯಾಳುಗಳು ಹಮಾಸ್‍ನ ವಶದಲ್ಲಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಯುದ್ಧ ಅಂತ್ಯಗೊಳ್ಳುವ ಮತ್ತು ಉಳಿದ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ನಡೆದ ಮಾತುಕತೆ ಹೊಸ ಸಾಧ್ಯತೆಯನ್ನು ತೆರೆದಿಟ್ಟಿದೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲಿವಾನ್ ಹೇಳಿದ್ದಾರೆ. ಗಾಝಾದಿಂದ ಇಸ್ರೇಲ್ ಸೇನೆ ವಾಪಾಸಾತಿಗೆ ಹಮಾಸ್ ಪಟ್ಟು ಬಿಕ್ಕಟ್ಟು ಅಂತ್ಯಕ್ಕೆ ಮಾರ್ಗವಾಗಿ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸುವಂತೆ ಅಮೆರಿಕ ಹಾಗೂ ಇತರ 17 ದೇಶಗಳು ಹಮಾಸ್ ಅನ್ನು ಒತ್ತಾಯಿಸಿವೆ. ಆದರೆ ಅಂತರಾಷ್ಟ್ರೀಯ ಒತ್ತಡಕ್ಕೆ ಬಗ್ಗುವುದಿಲ್ಲ ಎಂದು ಹಮಾಸ್ ಪ್ರತಿಕ್ರಿಯಿಸಿದೆ. ಶುಕ್ರವಾರ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ `ನಮ್ಮ ಜನರ ಹಕ್ಕುಗಳು ಮತ್ತು ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಳ್ಳುವ ಯಾವುದೇ ಆಲೋಚನೆಗಳು ಅಥವಾ ಪ್ರಸ್ತಾವನೆಗಳಿಗೆ ತಾನು ಮುಕ್ತನಾಗಿರುವುದಾಗಿ' ಹಮಾಸ್ ಹೇಳಿದೆ. ಆದರೆ, ಗಾಝಾದಲ್ಲಿ ಶಾಶ್ವತ ಕದನ ವಿರಾಮ ಮತ್ತು ಅಲ್ಲಿಂದ ಇಸ್ರೇಲ್‍ನ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಹಮಾಸ್ ಪಟ್ಟುಹಿಡಿದಿದ್ದು ಇದನ್ನು ಇಸ್ರೇಲ್ ಮತ್ತು ಅಮೆರಿಕದ ಜಂಟಿ ಹೇಳಿಕೆ ತಿರಸ್ಕರಿಸಿದೆ.

ವಾರ್ತಾ ಭಾರತಿ 27 Apr 2024 9:14 pm

ಲೈಂಗಿಕ ಕಿರುಕುಳ ಪ್ರಕರಣ | ಅರ್ಜುನ ಪ್ರಶಸ್ತಿ ಪುರಸ್ಕೃತ ಸಿಆರ್‌ಪಿಎಫ್ ಅಧಿಕಾರಿ ತಪ್ಪಿತಸ್ಥ, ವಜಾ ನೋಟಿಸ್ ಜಾರಿ

ಹೊಸದಿಲ್ಲಿ : ಕೇಂದ್ರೀಯ ಮೀಸಲು ಪೋಲಿಸ್ ಪಡೆ (ಸಿಆರ್‌ಪಿಎಫ್)ಯ ಉನ್ನತ ಶ್ರೇಣಿಯ ಅಧಿಕಾರಿಯೋರ್ವರು ಲೈಂಗಿಕ ಕಿರುಕುಳದ ತಪ್ಪಿತಸ್ಥರೆನ್ನುವುದು ಸಾಬೀತಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲು ನೋಟಿಸನ್ನು ಜಾರಿಗೊಳಿಸಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಸಿಆರ್‌ಪಿಎಫ್‌ನ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ದರ್ಜೆಯ ಮುಖ್ಯ ಕ್ರೀಡಾಧಿಕಾರಿ ಖಜನ್ ಸಿಂಗ್ ಅವರು ಅರೆಸೇನಾ ಪಡೆಯಲ್ಲಿನ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಈ ಮೂಲಗಳು ಹೇಳಿವೆ. ಮಹಿಳೆಯರ ಆರೋಪಗಳ ಹಿನ್ನೆಲೆಯಲ್ಲಿ ಸಿಆರ್‌ಪಿಎಫ್ ಈ ಬಗ್ಗೆ ನಡೆಸಿದ ತನಿಖೆಯಲ್ಲಿ ಸಿಂಗ್ ತಪ್ಪಿತಸ್ಥ ಎನ್ನುವುದು ಸಾಬೀತಾಗಿದೆ. ಬಳಿಕ ಸಿಆರ್‌ಪಿಎಫ್ ಲೋಕಸೇವಾ ಆಯೋಗ (ಯುಪಿಎಸ್‌ಸಿ)ಕ್ಕೆ ವರದಿ ಸಲ್ಲಿಸಿದ್ದು, ಸಿಂಗ್ ಅವರನ್ನು ವಜಾಗೊಳಿಸುವಂತೆ ಅದು ಗೃಹಸಚಿವಾಲಯವನ್ನು ಕೇಳಿಕೊಂಡಿತ್ತು. ಸಚಿವಾಲಯವು ಈ ಪ್ರಸ್ತಾವವನ್ನು ಅನುಮೋದಿಸಿದ್ದು, ಸಿಆರ್‌ಪಿಎಫ್ ಸಿಂಗ್‌ಗೆ ವಜಾ ನೋಟಿಸ್ ಜಾರಿಗೊಳಿಸಿದೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು. ಸಿಆರ್‌ಪಿಎಫ್‌ನ ಮುಖ್ಯ ಕ್ರೀಡಾಧಿಕಾರಿಯಾಗುವ ಮುನ್ನ ಸೀಂಗ್ 1986ರ ಸಿಯೋಲ್ ಏಷ್ಯನ್ ಗೇಮ್ಸ್‌ನಲ್ಲಿ 200 ಮೀ. ಬಟರ್‌ಫ್ಲೈ ವಿಭಾಗದಲ್ಲಿ ರಜತ ಪದಕವನ್ನು ಗೆದ್ದಿದ್ದು, ಇದು 1951ರ ಬಳಿಕ ಈಜು ಸ್ಪರ್ಧೆಯಲ್ಲಿ ಭಾರತದ ಮೊದಲ ಪದಕವಾಗಿತ್ತು. ಮುಂಬೈನಲ್ಲಿ ನಿಯೋಜಿತರಾಗಿರುವ ಸಿಂಗ್ ಇನ್ನೂ ಯಾವುದೇ ಹೇಳಿಕೆಯನ್ನು ನೀಡಿಲ್ಲ. ವಜಾ ನೋಟಿಸ್‌ಗೆ ಉತ್ತರಿಸಲು ಅವರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಸಿಂಗ್ ಎರಡು ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದರಲ್ಲಿ ವಜಾ ನೋಟಿಸ್ ಹೊರಡಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ತನಿಖೆಯು ಪ್ರಗತಿಯಲ್ಲಿದೆ.ಈ ಹಿಂದೆ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದ ಸಿಂಗ್, ಇದು ಸಂಪೂರ್ಣ ಸುಳ್ಳು ಮತ್ತು ತನ್ನ ವ್ಯಕ್ತಿತ್ವಕ್ಕೆ ಕಳಂಕ ತರಲು ಕುತಂತ್ರವಾಗಿದೆ ಎಂದು ಹೇಳಿದ್ದರು.

ವಾರ್ತಾ ಭಾರತಿ 27 Apr 2024 9:14 pm

ಕುಮಾರಣ್ಣನ ಜೇಬಲ್ಲಿದ್ದ ಪೆನ್‌ಡ್ರೈವ್‌ ರಹಸ್ಯ ಈಗ ಬಯಲಾಯಿತು : ಡಿ.ಕೆ. ಶಿವಕುಮಾರ್

HD Kumaraswamy's Pen Drive : ಪ್ರತೀ ಬಾರಿ ಸತ್ಯ ಬಯಲು ಮಾಡುತ್ತೇನೆ ಎಂದು ಮಾಧ್ಯಮಗಳ ಮುಂದೆ ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟು ಕೊಳ್ಳುತ್ತಿದ್ದರು. ಅದರಲ್ಲಿ ಏನಿರಬಹುದು ಎಂದು ನನಗೆ ಮೊದಲು ಗೊತ್ತಿರಲಿಲ್ಲ ಈಗ ಗೊತ್ತಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ವಿಜಯ ಕರ್ನಾಟಕ 27 Apr 2024 9:13 pm

ಇಸ್ರೇಲ್ ವಿರೋಧಿ ಪ್ರತಿಭಟನೆ | ಪ್ರಚೋದನಕಾರಿ ಹೇಳಿಕೆ ನೀಡಿದ ಕೊಲಂಬಿಯಾ ವಿವಿ ವಿದ್ಯಾರ್ಥಿಗೆ ನಿಷೇಧ

ವಾಷಿಂಗ್ಟನ್: ಅಮೆರಿಕದ ವಿವಿಗಳಲ್ಲಿ ಭುಗಿಲೆದ್ದಿರುವ ಇಸ್ರೇಲ್ ವಿರೋಧಿ ಪ್ರತಿಭಟನೆಯ ನಡುವೆ, “ಯಹೂದಿಗಳು ಬದುಕಲು ಅರ್ಹರಲ್ಲ” ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿಯನ್ನು ಕೊಲಂಬಿಯಾ ವಿವಿ ಕ್ಯಾಂಪಸ್ ಪ್ರವೇಶಿಸದಂತೆ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೊಲಂಬಿಯಾ ವಿವಿಯಲ್ಲಿ ನಡೆಯುತ್ತಿರುವ ಇಸ್ರೇಲ್ ವಿರೋಧಿ ಪ್ರತಿಭಟನೆಯ ಮುಖಂಡ ಖೈಮಾನಿ ಜೇಮ್ಸ್ ` ಯಹೂದಿಗಳು ಬದುಕಲು ಅರ್ಹರಲ್ಲ. ಅವರನ್ನು ಕೊಲ್ಲಬೇಕು. ಅವರ ಅಸ್ತಿತ್ವ ಮತ್ತು ಅವರು ನಿರ್ಮಿಸಿದ ಯೋಜನೆ(ಇಸ್ರೇಲ್) ಶಾಂತಿಗೆ ವಿರುದ್ಧವಾಗಿದೆ. ಆದ್ದರಿಂದ ಅಂತಹ ಜನರು ಸಾಯಬೇಕೆಂದು ಕರೆ ನೀಡಲು ನನಗೆ ಖುಷಿಯಾಗುತ್ತದೆ' ಎಂದು ಹೇಳಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಯಹೂದಿಗಳು ದುಷ್ಟರು ಮತ್ತು ಅವರನ್ನು ನಾಝಿಗಳಿಗೆ ಹೋಲಿಸಬಹುದು. ಯಹೂದಿಗಳು ಜಗತ್ತಿನ ಪ್ರಗತಿಗೆ ಅಡ್ಡಿಯಾಗಿದ್ದಾರೆ. ಯಹೂದಿಗಳು ಹಾಗೂ ಬಿಳಿಯ ಪ್ರಾಬಲ್ಯವಾದಿಗಳು ಅಸ್ತಿತ್ವದಲ್ಲಿ ಇರಬಾರದು. ಯಾಕೆಂದರೆ ಅವರು ದುರ್ಬಲ ಜನರನ್ನು ಕೊಲ್ಲುತ್ತಾರೆ ಮತ್ತು ಹಾನಿ ಮಾಡುತ್ತಾರೆ' ಎಂದು ವೀಡಿಯೊದಲ್ಲಿ ಉಲ್ಲೇಖಿಸಿದ್ದಾರೆ. ಪ್ರಚೋದನಕಾರೀ ಹೇಳಿಕೆ ನೀಡಿರುವ ಜೇಮ್ಸ್‍ನನ್ನು ವಿವಿ ಕ್ಯಾಂಪಸ್‍ನಿಂದ ನಿಷೇಧಿಸಲಾಗಿದೆ ಎಂದು ವಿವಿಯ ಆಡಳಿತ ವರ್ಗ ಹೇಳಿದೆ. ಧಾರ್ಮಿಕ, ಜನಾಂಗೀಯ ಅಥವಾ ರಾಷ್ಟ್ರೀಯ ಗುರುತಿನ ಆಧಾರದ ಮೇಲೆ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಹಿಂಸೆಯ ಕರೆಗಳು ಮತ್ತು ಹೇಳಿಕೆಗಳು ಸ್ವೀಕಾರಾರ್ಹವಲ್ಲ ಮತ್ತು ವಿಶ್ವವಿದ್ಯಾಲಯದ ನೀತಿಯನ್ನು ಉಲ್ಲಂಘಿಸುತ್ತವೆ ಎಂದು ವಿವಿಯ ವಕ್ತಾರರು ಹೇಳಿಕೆ ನೀಡಿದ್ದಾರೆ.

ವಾರ್ತಾ ಭಾರತಿ 27 Apr 2024 9:03 pm

DC vs MI: 5 ಬಾರಿ ಚಾಂಪಿಯನ್ಸ್‌ ಮುಂಬೈಗೆ ಶಾಕ್‌ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌!

Delhi capitals vs Mumbai Indians Match Highlights: ದಿಲ್ಲಿಯ ಅರುಣ್‌ ಜೆಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದದ್ದ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 43ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 10 ರನ್‌ಗಳ ರೋಚಜಕ ಗೆಲುವು ಪಡೆದಿದೆ. ಡೆಲ್ಲಿ ನೀಡಿದ್ದ 258 ರನ್ ಗುರಿ ಹಿಂಬಾಲಿಸಿದ್ದ 5 ಬಾರಿ ಚಾಮಪಿಯನ್ಸ್‌ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 9 ವಿಕೆಟ್‌ ನಷ್ಟಕ್ಕೆ 247 ರನ್‌ಗಳಿಗೆ ಸೀಮಿತವಾಯಿತು. ಡೆಲ್ಲಿ ತಂಡದ ಜೇಕ್‌ ಮಗರ್ಕ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ವಿಜಯ ಕರ್ನಾಟಕ 27 Apr 2024 8:55 pm

ಬೈಂದೂರು ಕ್ಷೇತ್ರ ಸಾಕಷ್ಟು ಅಭಿವೃದ್ಧಿ: ಕಿರಣ್ ಕೊಡ್ಗಿ

ಬೈಂದೂರು, ಎ.27: ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣ ರಸ್ತೆ ಅಭಿವೃದ್ಧಿ, ಅಗತ್ಯ ಸೇತುವೆ, ಕಿಂಡಿ ಅಣೆಕಟ್ಟು ಹಾಗೂ ಬಂದರು ನಿರ್ಮಾಣ ಕಾಮಗಾರಿಗಳಿಗೆ ಕೋಟ್ಯಾಂತರ ರೂಪಾಯಿ ಅನುದಾನ ಒದಗಿಸಿದ್ದಾರೆ ಎಂದು ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಹೇಳಿದ್ದಾರೆ. ಬೈಂದೂರು ವಿಧಾನಸಭಾ ವ್ಯಾಪ್ತಿಯ ವಂಡ್ಸೆ ಮಹಾಶಕ್ತಿ ಕೇಂದ್ರದ ಬಿಜೆಪಿ ಪೇಜ್ ಪ್ರಮುಖರ ಸಭೆಯನ್ನು ವಂಡ್ಸೆ ಸಕಲ ಸಭಾಭವನದಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಹೀಗಾಗಿ ಅವರನ್ನು ಮತ್ತೊಮ್ಮೆ ಬೈಂದೂರು ಕ್ಷೇತ್ರ ದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಮೂಲಕ ಗೆಲ್ಲಿಸುವಂತೆ ಕರೆ ನೀಡಿದರು. ಬಿ.ವೈ.ರಾಘವೇಂದ್ರ ಅವರಿಗೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆಯಿದೆ. ವಾರಾಹಿ ಯೋಜನೆಯ ಮೂಲಕ ಮನೆ ಮನೆ ಕುಡಿಯುವ ನೀರು ಕಲ್ಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಸಂಸದರಾಗಿ ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಸರ್ವಾಂಗೀಣ ಉನ್ನತಿಗೆ ಪೂರಕವಾಗಿದೆ ಎಂದು ಹೇಳಿದರು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಬೂತ್ ಕಡೆಗೆ ಸಮೃದ್ಧ ನಡಿಗೆ ಮೂಲಕ ಕ್ಷೇತ್ರದಲ್ಲಿ ವಿಶೇಷ ಸಂಚಲನ ಮೂಡಿಸಿದ್ದಾರೆ. ಕ್ಷೇತ್ರವು ಅಭಿವೃದ್ಧಿಯಲ್ಲಿ ಮಾದರಿಯಾಗಬೇಕು ಎನ್ನುವ ನೆಲೆಯಲ್ಲಿ ಬೂತ್ ನಡಿಗೆಯನ್ನು ಯಶಸ್ವಿ ಗೊಳಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಮೂಕಾಂಬಿಕಾ ಕಾರಿಡಾರ್ ಮೂಲಕ ಸಮೃದ್ಧ ಬೈಂದೂರು ಸಾಕಾರ ಮಾಡಲು ಪ್ರಯತ್ನ ನಡೆಸುತ್ತಿದ್ದೇವೆ. ಈ ಬಾರಿ ಬೂತ್ ಕಡೆಗೆ ಸಮೃದ್ಧ ನಡಿಗೆ ಯಶಸ್ವಿಯಾಗಿ ಪೂರೈಸಿದ್ದೇವೆ. ಪೇಜ್ ಪ್ರಮುಖರು ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು ಎಂದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಘವೇಂದ್ರ ಉಪ್ಪುಂದ ಮೊದಲಾದವರು ಪೇಜ್ ಪ್ರಮುಖರ ನಿರ್ದಿಷ್ಟ ಜವಾಬ್ದಾರಿಯ ಬಗ್ಗೆ ಮಾರ್ಗದರ್ಶನ ನೀಡಿದರು. ಮುಖಂಡರು, ಕಾರ್ಯ ಕರ್ತರು, ಪೇಜ್ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Apr 2024 8:28 pm

ಉಡುಪಿ: ಡಾ.ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ ವಿಶ್ವ ಸ್ವಲೀನತೆ ಜಾಗೃತಿ ಮಾಸದ ಚಿತ್ರೋತ್ಸವ

ಉಡುಪಿ, ಎ.27: ಕಮಲ್ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಆಟಿಸಂ ಸೊಸೈಟಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ವಲೀನತೆ ಜಾಗೃತಿ ಮಾಸದ ಪ್ರಯುಕ್ತ ಮಕ್ಕಳಿಗಾಗಿ ಚಿತ್ರೋತ್ಸವ ಚಟುವಟಿಕೆ, ಪೋಷಕರಿಗಾಗಿ -ಸ್ವಲಿನತೆ, ಮಾತಿನ ತೊಂದರೆ, ಅತಿಚಟುವಟಿಕೆ, ಕಲಿಕಾ ತೊಂದರೆಗಳ ಕುರಿತು ಮಾಹಿತಿ ಕಾರ್ಯಕ್ರಮ ಆಸ್ಪತ್ರೆಯಲ್ಲಿ ಇಂದು ಉದ್ಘಾಟನೆಗೊಂಡಿತು. ಅಲ್ಲದೇ ದೊಡ್ಡಣಗುಡ್ಡೆಯಲ್ಲಿರುವ ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯು 20 ವರ್ಷಗಳನ್ನು ಪೂರೈಸಿದ ಅಂಗವಾಗಿ ಡಾ.ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಮತ್ತು ರೇಡಿಯೋ ಮಣಿಪಾಲ್ ಜಂಟಿಯಾಗಿ ಆಯೋಜಿಸಿದ ಮನದ ಮಾತು -ವಿವಿಧ ಮಾನಸಿಕ ಆರೋಗ್ಯ ವಿಷಯಗಳ ಮಾಹಿತಿ ಸರಣಿ ಕಾರ್ಯಕ್ರಮದ ಉದ್ಘಾಟನೆಯು ಕಮಲ್ ಎ ಬಾಳಿಗ ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ಎಂಐಸಿಯ ಸಹಾಯಕ ಪ್ರಾಧ್ಯಾಪಕಿ ಹಾಗೂ ಎಂಐಸಿ ರೇಡಿಯೋ ಮಣಿಪಾಲ ಕಮ್ಯುನಿಟಿ ಸ್ಟೇಷನ್‌ನ ಸಂಯೋಜಕಿ ಡಾ. ರಶ್ಮಿ ಅಮ್ಮೆಂಬಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋ ವೈದ್ಯರುಗಳಾದ ಡಾ.ವಿರೂಪಾಕ್ಷ ದೇವರಮನೆ, ಡಾ. ದೀಪಕ್ ಮಲ್ಯ, ಡಾ. ಮಾನಸ್ ಇ.ಆರ್ ಹಾಗೂ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ಮನೋವೈದ್ಯ ಹಾಗೂ ಡಾ ಎ ವಿ ಬಾಳಿಗ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ ವಹಿಸಿದ್ದರು. ಡಾ.ವಿರೂಪಾಕ್ಷ ದೇವರಮನೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರೆ ಸ್ಪೀಚ್ ಥೆರಪಿಸ್ಟ್ ರೂತ್ ಶೈನಿ ವಂದಿಸಿದರು. ವೃತ್ತಿಪರ ಚಿಕಿತ್ಸಕರಾದ ಪೂರ್ಣಿಮಾ ಎಸ್, ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಕ್ಕಳಿಗೆ ಚಿತ್ರೋತ್ಸವ ಮತ್ತು ಪೋಷಕರಿಗಾಗಿ ಸ್ವಲಿನತೆ, ಕಲಿಕಾ ತೊಂದರೆ, ಅತಿಚಟುವಟಿಕೆ ಹಾಗೂ ಮಾತಿನ ತೊಂದರೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾದ ಡಾ.ಪ್ರಿಯದರ್ಶಿನಿ, ದೀಪಶ್ರೀ, ಪೂರ್ಣಿಮ ಎಸ್, ರೂತ್ ಶೈನಿ ಹಾಗೂ ಶ್ವೇತಾ ನಾಯಕ ಇವರಿಂದ ಮಾಹಿತಿ ಕಾರ್ಯಗಾರ ನಡೆಯಿತು. ಮಕ್ಕಳಿಗಾಗಿ ವಿವಿಧ ಮನರಂಜನಾ ಹಾಗೂ ಆಟೋಟ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.  ಈ ಕಾರ್ಯಕ್ರಮದ ಪ್ರಯೋಜನವನ್ನು 85ಕ್ಕಿಂತಲೂ ಹೆಚ್ಚು ಮಂದಿ ಮಕ್ಕಳು ಹಾಗೂ ಹೆತ್ತವರು ಪಡೆದುಕೊಂಡರು.

ವಾರ್ತಾ ಭಾರತಿ 27 Apr 2024 8:27 pm

ಆರ್ಚರಿ ವಿಶ್ವಕಪ್: ಮೂರು ಚಿನ್ನ ಬಾಚಿಕೊಂಡ ಭಾರತ

ಶಾಂಘೈ : ಈಗ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತದ ಪ್ರಾಬಲ್ಯದ ನೇತೃತ್ವವಹಿಸಿದ ಏಶ್ಯನ್ ಗೇಮ್ಸ್ ಚಾಂಪಿಯನ್ ಜ್ಯೋತಿ ಸುರೇಖಾ ಭಾರತವು ಹ್ಯಾಟ್ರಿಕ್ ಚಿನ್ನದ ಪದಕಗಳನ್ನು ಜಯಿಸುವಲ್ಲಿ ನೆರವಾಗಿದ್ದಾರೆ. ವಿಶ್ವದ ನಂ.3ನೇ ಆಟಗಾರ್ತಿ ಜ್ಯೋತಿ ಅಗ್ರ ಶ್ರೇಯಾಂಕದ ಮೆಕ್ಸಿಕೊದ ಆ್ಯಂಡ್ರಿಯ ಬೆಸೆರಾರನ್ನು ಶೂಟ್‌ಆಫ್‌ನಲ್ಲಿ 146-146 ಅಂತರದಿಂದ ಮಣಿಸಿ ಅಪರೂಪದ ಸಾಧನೆ ಮಾಡಿದರು. ವಿಜಯವಾಡದ 27ರ ಹರೆಯದ ಬಿಲ್ಗಾರ್ತಿ ಸುರೇಖಾ ಕಳೆದ ವರ್ಷದ ಹಾಂಗ್‌ಝೌ ಏಶ್ಯನ್ ಗೇಮ್ಸ್‌ನಲ್ಲಿ ವೈಯಕ್ತಿಕ, ಮಹಿಳೆಯರ ಟೀಮ್ ಹಾಗೂ ಮಿಕ್ಸೆಡ್ ಟೀಮ್ ಇವೆಂಟ್‌ಗಳಲ್ಲಿ ಚಿನ್ನದ ಪದಕ ಜಯಿಸಿ ಹ್ಯಾಟ್ರಿಕ್ ದಾಖಲಿಸಿದ್ದರು. ಶನಿವಾರ ಬೆಳಗ್ಗಿನ ಅವಧಿಯಲ್ಲಿ ಭಾರತವು ಕಾಂಪೌಂಡ್ ವಿಭಾಗದಲ್ಲಿ ಟೀಮ್ ಇವೆಂಟ್‌ಗಳಲ್ಲಿ ಕ್ಲೀನ್‌ಸ್ವೀಪ್ ಸಾಧಿಸಿದೆ. ಪುರುಷರ ಟೀಮ್, ಮಹಿಳೆಯರ ಟೀಮ್ ಹಾಗೂ ಮಿಕ್ಸೆಡ್ ಟೀಮ್ ಸ್ಪರ್ಧೆಗಳಲ್ಲಿ ಜಯ ಸಾಧಿಸಿದ್ದು, ಎರಡು ಸ್ಪರ್ಧೆಗಳಲ್ಲಿ ಜ್ಯೋತಿ ಭಾಗವಹಿಸಿದ್ದರು. ಮಹಿಳೆಯರ ಕಾಂಪೌಂಡ್ ಟೀಮ್ ಸ್ಪರ್ಧೆಯಲ್ಲಿ ಜ್ಯೋತಿ, ಅದಿತಿ ಸ್ವಾಮಿ ಹಾಗೂ ಪರಿಣಿತಿ ಕೌರ್ ಇಟಲಿ ತಂಡವನ್ನು 236-225 ಅಂತರದಿಂದ ಮಣಿಸಿ ಚಿನ್ನದ ಪದಕದ ಖಾತೆ ತೆರೆದಿದ್ದಾರೆ. ಪುರುಷರ ಟೀಮ್ ಸ್ಪರ್ಧೆಯಲ್ಲಿ ಅಭಿಷೇಕ್ ವರ್ಮಾ, ಪ್ರಿಯಾಂಶ್ ಹಾಗೂ ಪ್ರಥಮೇಶ್ ನೆದರ್‌ಲ್ಯಾಂಡ್ಸ್‌ನ ಮೈಕ್ ಸ್ಕ್ಲೊಸರ್, ಸಿಲ್ ಪ್ಯಾಟರ್ ಹಾಗೂ ಸ್ಟೆಫ್ ವಿಲಿಯಮ್ಸ್‌ರನ್ನು 238-231 ಅಂತರದಿಂದ ಮಣಿಸಿದರು. 2ನೇ ಶ್ರೇಯಾಂಕದ ಜ್ಯೋತಿ ಹಾಗೂ ಅಭಿಷೇಕ್ ಒಳಗೊಂಡ ಮಿಕ್ಸೆಡ್ ಟೀಮ್ ಎಸ್ಟೋನಿಯದ ಎದುರಾಳಿ ಲಿಸೆಲ್ ಜಾಟ್ಮಾ ಹಾಗೂ ರಾಬಿನ್ ಜಾಟ್ಮಾರನ್ನು 158-157 ಅಂತರದಿಂದ ರೋಚಕವಾಗಿ ಮಣಿಸಿ ಕ್ಲೀನ್‌ಸ್ವೀಪ್ ಸಾಧಿಸಿದರು. ರಿಕರ್ವ್ ವಿಭಾಗದಲ್ಲಿ ಪದಕ ಸುತ್ತು ರವಿವಾರ ನಡೆಯಲಿದ್ದು, ಭಾರತವು ಎರಡು ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದೆ. ಭಾರತೀಯ ಪುರುಷರ ತಂಡವು ಚಿನ್ನದ ಪದಕ ಸುತ್ತಿನಲ್ಲಿ ಒಲಿಂಪಿಕ್ಸ್ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಎದುರಿಸಲಿದೆ. ವೈಯಕ್ತಿಕ ವಿಭಾಗದಲ್ಲಿ ಸೆಣಸಾಡಲಿರುವ ದೀಪಿಕಾ ಕುಮಾರಿ ಮಹಿಳೆಯರ ರಿಕರ್ವ್ ವಿಭಾಗದ ಸೆಮಿ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಎದುರಾಳಿಯನ್ನು ಎದುರಿಸಲಿದ್ದಾರೆ.

ವಾರ್ತಾ ಭಾರತಿ 27 Apr 2024 8:26 pm

ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ. ಬರ ಪರಿಹಾರ ನೀಡಿ ಕಣ್ಣೊರೆಸುವ ತಂತ್ರ ಮಾಡಿದೆ : ದಿನೇಶ್ ಗುಂಡೂರಾವ್‌

ಬೆಂಗಳೂರು : ಬರದ ವೈಜ್ಞಾನಿಕ ಸಮೀಕ್ಷೆ ಮಾಡಿ ಎನ್‍ಡಿಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯ ಸರಕಾರದಿಂದ 18,172 ಕೋಟಿ ರೂ.ಕೇಂದ್ರದ ಪರಿಹಾರ ಕೇಳಿದ್ದೆವು. ಆದರೆ ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ.ಬರ ಪರಿಹಾರ ನೀಡಿ ಕಣ್ಣೊರೆಸುವ ತಂತ್ರ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶನಿವಾರ ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಬರದಿಂದ ಈ ಬಾರಿ 48 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಬೆಳೆ ನಷ್ಟವಾಗಿದೆ. ಇದರ ಒಟ್ಟಾರೆ ಬೆಳೆ ನಷ್ಟದ 35 ಸಾವಿರ ಕೋಟಿ ರೂ. ಆಗಿದೆ. ಕೇಂದ್ರ ಸರಕಾರ ಪರಿಹಾರ ನೀಡಲು 9 ತಿಂಗಳಿಂದ ಸತಾಯಿಸಿ, ಈಗ ಕಾಟಾಚಾರಕ್ಕೆ 3,454 ಕೋಟಿ ರೂ. ಇಡುಗಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರಕಾರ ಯಾವ ಮಾನದಂಡದ ಆಧಾರದಲ್ಲಿ ಬರ ಪರಿಹಾರದ ಮೊತ್ತ ನಿರ್ಧರಿಸಿದೆ.? ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಕೊಟ್ಟಂತೆ ಬರ ಪರಿಹಾರ ನೀಡಿದರೆ ರಾಜ್ಯದ ರೈತರ ಕಷ್ಟ ನೀಗುವುದೆ.? ಇದೇನು ಭಿಕ್ಷೆಯೇ ಎಂದು ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರ ಸರಕಾರ ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವುದಾಗಿ ವಾಗ್ಧಾನ ನೀಡಿತ್ತು. ಆದರೆ ಎಷ್ಟು ಹಣ ನೀಡುವುದಾಗಿ ಮೌಕಿಕವಾಗಿ ಹಾಗೂ ಲಿಖಿತವಾಗಿ ಹೇಳಿರಲಿಲ್ಲ. ಈಗ ಕೇವಲ 3,454 ಕೋಟಿ ರೂ. ಪರಿಹಾರ ಕೊಟ್ಟಿದೆ. ಇದು ನ್ಯಾಯಾಲಯದ ಆದೇಶವನ್ನೂ ಪಾಲಿಸಿದ್ದೇವೆ. ಹಾಗೂ ಬರ ಪರಿಹಾರವನ್ನೂ ಕೊಟ್ಟಿದ್ದೇವೆ ಎಂದು ಬಿಂಬಿಸುವ ಕೇಂದ್ರ ಸರಕಾರದ ತಂತ್ರವಷ್ಟೇ ಎಂದು ಹೇಳಿದ್ದಾರೆ. 1 ಬರದಿಂದ ಈ ಬಾರಿ 48 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಬೆಳೆ ನಷ್ಟಕ್ಕೆ ಒಳಗಾಗಿದೆ. ಇದರ ಒಟ್ಟಾರೆ ಬೆಳೆ ನಷ್ಟದ ಮೊತ್ತವೇ 35 ಸಾವಿರ ಕೋಟಿ. ನಾವು ವೈಜ್ಞಾನಿಕ ಸಮೀಕ್ಷೆ ಮಾಡಿ NDRF ಮಾರ್ಗಸೂಚಿಯಂತೆ 18,172 ಕೋಟಿ ಪರಿಹಾರ ಕೇಳಿದ್ದೆವು. ಆದರೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಕಳೆದ‌ 9 ತಿಂಗಳಿಂದ ಸತಾಯಿಸಿ,ಸತಾಯಿಸಿ ಈಗ ಕಾಟಾಚಾರಕ್ಕೆ 3454… — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 27, 2024 2 ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ವಾರದೊಳಗೆ ಕರ್ನಾಟಕಕ್ಕೆ ಬರ ಪರಿಹಾರ ನೀಡುವುದಾಗಿ ವಾಗ್ಧಾನ ನೀಡಿತ್ತು. ಆದರೆ ಎಷ್ಟು ಮೊತ್ತ ನೀಡುವುದಾಗಿ ಮೌಕಿಕವಾಗಿ ಹಾಗೂ ಲಿಖಿತವಾಗಿ ಹೇಳಿರಲಿಲ್ಲ. ಈಗ ಕೇವಲ 3454 ಕೋಟಿ ಪರಿಹಾರ ಕೊಟ್ಟಿದೆ. ಇದು ನ್ಯಾಯಾಲಯದ ಆದೇಶವನ್ನೂ ಪಾಲಿಸಿದ್ದೇವೆ ಹಾಗೂ ಬರ ಪರಿಹಾರವನ್ನೂ ಕೊಟ್ಟಿದ್ದೇವೆ ಎಂದು… — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 27, 2024

ವಾರ್ತಾ ಭಾರತಿ 27 Apr 2024 8:23 pm

ಉಪ್ಪಿನಂಗಡಿ: ಮನೆಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಉಪ್ಪಿನಂಗಡಿ: ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ಶನಿವಾರ ನಡೆದಿದೆ. ಇಲ್ಲಿನ ಅಸ್ಲಂ ಎಂಬವರ ಮನೆಯಲ್ಲಿ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಮನೆಯ ಮಾಲಕ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆ ಬೆಂಕಿ ಕಾಣಿಸಿಕೊಳ್ಳುವ ಸಂದರ್ಭ ಅವರ ಪತ್ನಿ ಖೌಸರ್ ಮನೆಗೆ ಬೀಗ ಹಾಕಿ ತನ್ನ ಮಕ್ಕಳೊಂದಿಗೆ ಪೇಟೆಗೆ ಹೋಗಿದ್ದರು. ಮನೆಯೊಳಗಿನಿಂದ ಹೊಗೆ ಹೊರಬರುತ್ತಿರುವುದನ್ನು ಕಂಡ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಮನೆಯೊಳಗೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ಈ ಸಂದರ್ಭ ಸ್ಥಳೀಯರಾದ ಸಿದ್ಧೀಕ್, ಅನಿಫ್, ಯು.ಟಿ. ಪಯಾಝ್, ಗ್ರಾ.ಪಂ.ಸದಸ್ಯ ಅಬ್ದುಲ್ ರಶೀದ್ ಮತ್ತಿತರರು ಬೆಂಕಿ ನಂದಿಸಲು ಯತ್ನಿಸಿದರೂ, ಅದು ಸಾಧ್ಯವಾಗದಿದ್ದಾಗ ಪುತ್ತೂರು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು. ಸುಮಾರು ಒಂದು ಗಂಟೆಯ ಕಾಲ ಸತತ ಪರಿಶ್ರಮದಿಂದ ಬೆಂಕಿಯನ್ನು ನಂದಿಸಲಾಯಿತು. ಆಕಸ್ಮಿಕ ಬೆಂಕಿಗೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಕಾರಣವೆನ್ನಲಾಗಿದೆ. ಅಷ್ಟರಲ್ಲಾಗಲೇ ಮನೆಯೊಳಗಿದ್ದ ಫ್ರಿಡ್ಜ್, ವಾಷಿಂಗ್ ಮೆಷಿನ್, ಪೀಠೋಪಕರಣಗಳ, ಬಟ್ಟೆಬರೆ, ಹಾಸಿಗೆ ಸಹಿತ ಬೆಲೆ ಬಾಳುವ ವಸ್ತುಗಳು ಸುಟ್ಟು‌ ಹೋಗಿವೆ ಎಂದು ಅಗ್ನಿಶಾಮಕದಳದ ಠಾಣಾಧಿಕಾರಿ ಶಂಕರ ತಿಳಿಸಿದ್ದಾರೆ. ಕೆಲ ವರ್ಷಗಳ ಹಿಂದೆಯಷ್ಟೇ ಈ ಮನೆಯನ್ನು ನಿರ್ಮಿಸಲಾಗಿತ್ತು.

ವಾರ್ತಾ ಭಾರತಿ 27 Apr 2024 8:22 pm

ಕೇಜ್ರಿವಾಲ್ ರಾಷ್ಟ್ರೀಯ ಹಿತಾಸಕ್ತಿಗಿಂತ ತನ್ನ ವೈಯಕ್ತಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ : ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ : ದಿಲ್ಲಿ ಮಹಾನಗರ ಪಾಲಿಕೆ (ಎಂಸಿಡಿ)ಯ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸುವಲ್ಲಿ ವೈಫಲ್ಯಕ್ಕಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿರುವ ದಿಲ್ಲಿ ಉಚ್ಛ ನ್ಯಾಯಾಲಯವು, ಕೇಜ್ರಿವಾಲ್ ಜೈಲಿನಲ್ಲಿದ್ದರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡದೇ ರಾಷ್ಟ್ರೀಯ ಹಿತಾಸಕ್ತಿಗಿಂತ ಹೆಚ್ಚಾಗಿ ತನ್ನ ವೈಯಕ್ತಿಕ ಹಿತಾಸಕ್ತಿಯನ್ನು ಮೆರೆದಿದ್ದಾರೆ ಎಂದು ಕಿಡಿಕಾರಿದೆ. ಎಂಸಿಡಿಯಲ್ಲಿನ ತಿಕ್ಕಾಟದಿಂದಾಗಿ ಅದು ನಡೆಸುತ್ತಿರುವ ಶಾಲೆಗಳ ದುಃಸ್ಥಿತಿಯನ್ನು ಪ್ರಸ್ತಾವಿಸಿ ಎನ್‌ಜಿಒ ಸೋಷಿಯಲ್ ಜ್ಯೂರಿಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ಹಂಗಾಮಿ ಮುಖ್ಯ ನ್ಯಾಯಾಧೀಶ (ಎಸಿಜೆ) ಮನ್ ಮೋಹನ್ ಮತ್ತು ನ್ಯಾ.ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಪೀಠವು ಈ ಚಾಟಿಯೇಟನ್ನು ನೀಡಿತು. ದಿಲ್ಲಿ ಸರಕಾರವು ಅಧಿಕಾರದ ಮೇಲೆ ಹಿಡಿತ ಸಾಧಿಸಲು ಮಾತ್ರ ಆಸಕ್ತಿ ಹೊಂದಿದೆ ಎಂದು ಹೇಳಿದ ನ್ಯಾಯಾಲಯವು,ರಾಷ್ಟ್ರೀಯ ಹಿತಾಸಕ್ತಿಯು ಪರಮೋಚ್ಛ ಎಂದು ತಾನು ಈವರೆಗೆ ನಯವಾಗಿ ಒತ್ತಿ ಹೇಳಿದ್ದೇನೆ, ಆದರೆ ಎಲ್ಲಿ ತಪ್ಪಾಗಿದೆ ಎನ್ನುವುದನ್ನು ಸದ್ರಿ ಪ್ರಕರಣವು ಎತ್ತಿ ತೋರಿಸಿದೆ. ಸೋಮವಾರ ಈ ವಿಷಯದಲ್ಲಿ ತಾನು ಆದೇಶವನ್ನು ಹೊರಡಿಸಲಿದ್ದೇನೆ ಎಂದು ತಿಳಿಸಿತು. ‘ನೀವು ವಿದ್ಯಾರ್ಥಿಗಳ ಹಿತಾಸಕ್ತಿಗಿಂತ ನಿಮ್ಮ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಿದ್ದೀರಿ ಎಂದು ಹೇಳಲು ನಮಗೆ ವಿಷಾದವೆನಿಸುತ್ತದೆ. ಅದು ಅತ್ಯಂತ ಸ್ಪಷ್ಟವಾಗಿದೆ. ನೀವು ರಾಜಕೀಯ ಹಿತಾಸಕ್ತಿಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಿದ್ದೀರಿ ’ ಎಂದು ಹೇಳಿದ ಪೀಠವು,‘ನಿಮಗೆ ಎಷ್ಟು ಅಧಿಕಾರ ಬೇಕು ಎನ್ನುವುದು ನಮಗೆ ಗೊತ್ತಿಲ್ಲ. ಸಮಸ್ಯೆಯೇನೆಂದರೆ ನೀವು ಅಧಿಕಾರದ ಮೇಲೆ ಹಿಡಿತಕ್ಕೆ ಪ್ರಯತ್ನಿಸುತ್ತಿದ್ದೀರಿ ಮತ್ತು ಅದೇ ಕಾರಣಕ್ಕೆ ಅದು ನಿಮಗೆ ಸಾಧ್ಯವಾಗುತ್ತಿಲ್ಲ’ ಎಂದು ತಿಳಿಸಿತು. ಆಡಳಿತವು ನಿಷ್ಕ್ರಿಯಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಬಯಸಿದರೆ ಅದು ಅವರ ವೈಯಕ್ತಿಕ ನಿರ್ಧಾರ ಎಂದು ಹೇಳಿದ ಪೀಠವು, ನಾಯಕತ್ವ ವಹಿಸುವ ವ್ಯಕ್ತಿಗಳು ಎಲ್ಲರನ್ನು ಜೊತೆಯಲ್ಲಿ ಕೊಂಡೊಯ್ಯಬೇಕು. ಏಕೆಂದರೆ ಇದು ಓರ್ವ ವ್ಯಕ್ತಿಯ ಉನ್ನತಿಯ ವಿಷಯವಲ್ಲ ಎಂದಿತು. ತಾನು ಮುಖ್ಯಮಂತ್ರಿಗಳ ಪರವಾಗಿ ಹಾಜರಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ದಿಲ್ಲಿ ಸರಕಾರದ ಪರ ವಕೀಲರು, ಸ್ಥಾಯಿ ಸಮಿತಿಯ ಅನುಪಸ್ಥಿತಿಯಲ್ಲಿಯೂ ಎಂಸಿಡಿ ಆಯುಕ್ತರು ಹಣಕಾಸು ಅನುಮೋದನೆಗಳಿಗಾಗಿ ವಿಧ್ಯುಕ್ತ ಮನವಿಯನ್ನು ಸಲ್ಲಿಸಿದರೆ ಶಿಕ್ಷಣ ಸಾಮಗ್ರಿಗಳ ಪೂರೈಕೆ ಸಮಸ್ಯೆಯು ಬಗೆಹರಿಯಲಿದೆ ಎಂದು ಭರವಸೆ ನೀಡಿದರು. ದಿಲ್ಲಿಯ ನಗರಾಭಿವೃದ್ಧಿ ಸಚಿವ ಸೌರಭ್ ಭಾರಧ್ವಾಜ್ ಅವರನ್ನೂ ಟೀಕಿಸಿದ ನ್ಯಾ.ಮನ್ ಮೋಹನ್, ವಿದ್ಯಾರ್ಥಿಗಳ ಕಷ್ಟಗಳ ಬಗ್ಗೆ ಅವರು ಕಣ್ಣಿದ್ದೂ ಕುರುಡರಾಗಿದ್ದಾರೆ ಮತ್ತು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕುಟುಕಿದರು. ಭಾರಧ್ವಾಜ್ ನಿರ್ದೇಶನದ ಮೇರೆಗೆ ದಿಲ್ಲಿ ಸರಕಾರದ ವಕೀಲರು ಹಾಜರಾಗಿದ್ದಾರೆ ಎನ್ನುವುದನ್ನು ಗಮನಿಸಿದ ನ್ಯಾಯಾಲಯವು, ‘ಮುಖ್ಯಮಂತ್ರಿಗಳು ಬಂಧನದಲ್ಲಿರುವುದರಿಂದ ನಾವೇನೂ ಮಾಡಲು ಸಾಧ್ಯವಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ದಾಖಲಿಸಿಕೊಳ್ಳುತ್ತೇವೆ. ಅದು ಅವರ ವೈಯಕ್ತಿಕ ನಿರ್ಧಾರವಾಗಿದ್ದರೆ ಅವರಿಗೆ ಶುಭವಾಗಲಿ. ಮುಖ್ಯಮಂತ್ರಿ ಜೈಲಿನಲ್ಲಿದ್ದರೂ ಮುಂದುವರಿಯುತ್ತಾರೆ ಎಂದು ಹೇಳುವುದು ನಿಮ್ಮ ಆಯ್ಕೆಯಾಗಿದೆ. ನಾವಿದನ್ನು ಹೇಳಲೇಬೇಕು. ಇದು ನಿಮ್ಮ ಆಡಳಿತದ ಇಚ್ಛೆಯಾಗಿದೆ. ನಾವು ಇಷ್ಟ ಪಡದ ದಾರಿಯಲ್ಲಿ ಸಾಗಲು ನೀವು ನಮ್ಮನ್ನು ಒತ್ತಾಯಿಸುತ್ತಿದ್ದೀರಿ ಮತ್ತು ನಾವು ಪೂರ್ಣ ಕಠಿಣತೆಯೊಂದಿಗೆ ಪ್ರತಿಕ್ರಿಯಿಸಬೇಕಾಗುತ್ತದೆ’ ಎಂದು ಹೇಳಿತು. ‘ಒಂದು ನ್ಯಾಯಾಲಯವಾಗಿ ಪಠ್ಯಪುಸ್ತಕಗಳು, ಸಮವಸ್ತ್ರಗಳು ಇತ್ಯಾದಿಗಳ ವಿತರಣೆ ನಮ್ಮ ಕೆಲಸವಲ್ಲ. ಯಾರೋ ಒಬ್ಬರು ತಮ್ಮ ಕೆಲಸವನ್ನು ಮಾಡಲು ವಿಫಲಗೊಂಡಿರುವುದರಿಂದ ನಾವಿದನ್ನು ಮಾಡುತ್ತಿದ್ದೇವೆ. ನಿಮ್ಮ ಕಕ್ಷಿದಾರರು ಅಧಿಕಾರದಲ್ಲಿ ಮಾತ್ರ ಆಸಕ್ತಿ ಹೊಂದಿದ್ದಾರೆ ’ ಎಂದೂ ಪೀಠವು ಹೇಳಿತು. ಕೇಜ್ರಿವಾಲ್ ರಾಷ್ಟ್ರೀಯ ಹಿತಾಸಕ್ತಿಗಿಂತ ತನ್ನ ವೈಯಕ್ತಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ : ದಿಲ್ಲಿ ಹೈಕೋರ್ಟ್ ಸ್ಥಾಯಿ ಸಮಿತಿಯ ರಚನೆಯಾಗದಿರುವುದರಿಂದ ಎಂಸಿಡಿಯ ಕಾರ್ಯವು ಸ್ಥಗಿತಗೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ಆಪ್, ಈ ವಿಷಯವು ಈಗ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿಯಾಗಿದೆ. ಲೆಫ್ಟಿನಂಟ್ ಗವರ್ನರ್ ನಾಮ ನಿರ್ದೇಶಿತ ಕೌನ್ಸಿಲರ್‌ಗಳನ್ನು ನೇಮಿಸಿದ್ದಾರೆ. ಪರಿಣಾಮವಾಗಿ ಸ್ಥಾಯಿ ಸಮಿತಿ ರಚನೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

ವಾರ್ತಾ ಭಾರತಿ 27 Apr 2024 8:21 pm

ಉಡುಪಿ: ಸೈಂಟ್ ಸಿಸಿಲೀಸ್ ಮತ ಎಣಿಕಾ ಕೇಂದ್ರಕ್ಕೆ 3 ಹಂತದ ಭದ್ರತೆ

ಉಡುಪಿ: ಶುಕ್ರವಾರ ಮತದಾನ ನಡೆದ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಲ್ಲಾ ವಿದ್ಯುನ್ಮಾನ ಮತ ಯಂತ್ರಗಳನ್ನು ವಿವಿಪ್ಯಾಟ್ ಸಮೇತ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಪದವಿ ಪೂರ್ವ ಕಾಲೇಜಿನ ಮತ ಎಣಿಕಾ ಕೇಂದ್ರದಲ್ಲಿ ಇರಿಸಲಾಗಿದ್ದು, ಇದರ ಸುತ್ತ ಮೂರು ಹಂತದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಉಡುಪಿ ಜಿಲ್ಲೆಯ ಉಡುಪಿ, ಕಾಪು, ಕುಂದಾಪುರ, ಕಾರ್ಕಳ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಯಂತ್ರಗಳನ್ನು ನಿನ್ನೆ ಸಂಜೆ ಆಯಾ ಡಿಮಸ್ಟರಿಂಗ್ ಕೇಂದ್ರಗಳಿಗೆ ತಂದು ನಂತರ ಅಲ್ಲಿಂದ ಮತ ಎಣಿಕೆ ಕೇಂದ್ರವಾದ ಉಡುಪಿಗೆ ಜಿಪಿಎಸ್ ಅಳವಡಿಸಿದ ಕಂಟೈನರ್‌ನಲ್ಲಿ ಬಿಗಿ ಭದ್ರತೆಯೊಂದಿಗೆ ತರಲಾಯಿತು. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಯಂತ್ರಗಳನ್ನು ಇಂದು 11ಗಂಟೆಯ ಸುಮಾರಿಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಮತ ಎಣಿಕಾ ಕೇಂದ್ರಕ್ಕೆ ತರಲಾಯಿತು. ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾ ಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಚುನಾವಣಾ ವೀಕ್ಷಕ ಹಿತೇಶ್ ಕೋಯಾ, ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಹಾಗೂ ಎಡಿಸಿ ಮಮತಾ ದೇವಿ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ, ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನಗಳನ್ನು ನೀಡಿದರು. ಕೇಂದ್ರದ ಒಳ ಆವರಣದಲ್ಲಿರುವ ಕೆಳ ಅಂತಸ್ತು ಹಾಗೂ ಒಂದನೆ ಮಹಡಿಯಲ್ಲಿನ ಎಲ್ಲಾ ಮತಯಂತ್ರಗಳ ಭದ್ರತಾ ಕೊಠಡಿಗಳಿಗೆ ಸಿಆರ್‌ಪಿಎಫ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಉಡುಪಿಯ ನಾಲ್ಕು ಹಾಗೂ ಚಿಕ್ಕಮಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳಿಂದ ತರಲಾದ ಎಲ್ಲಾ ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್‌ಗಳಲ್ಲಿ ಇರಿಸಿ ಸೀಲ್ ಮಾಡಿ ಸಂಜೆ 5:30ರ ಸುಮಾರಿಗೆ ಮತಗಳ ಎಣಿಕೆ ನಡೆಯುವ ಜೂ.4ರವರೆಗೆ ಭದ್ರತೆ ಒದಗಿಸಲು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಎರಡರಂತೆ ಕಾಲೇಜಿನ ಒಟ್ಟು 18 ರೂಮ್‌ಗಳಲ್ಲಿ ಮತಯಂತ್ರಗಳನ್ನು ಇರಿಸಿ ಸೀಲ್ ಮಾಡಲಾಗಿದೆ. ಅಲ್ಲದೇ ಮತ ಎಣಿಕೆ ಕೇಂದ್ರದ ಆಯಕಟ್ಟಿನ ಸ್ಥಳಗಳಲ್ಲಿ ಒಟ್ಟು 160 ಸಿಸಿ ಕೆಮರಾಗಳನ್ನು ಅಳವಡಿಸಲಾಗಿದೆ. ಮತಗಟ್ಟೆಗಳಿಂದ ತರಲಾಗಿರುವ 17ಸಿ ಫಾರ್ಮ್, ಡಿಕ್ಲರೇಷನ್ ಫಾರ್ಮ್ ಹಾಗೂ ಅಣಕ ಮತಗಳನ್ನು ಹಾಕಲಾದ ಕವರ್‌ಗಳನ್ನು ಸಹ ಪ್ರತಿಯೊಂದು ರೂಮಿನಲ್ಲಿ ಆಯಾ ಮತಯಂತ್ರಗಳ ಮೇಲೆ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಮತಯಂತ್ರಗಳನ್ನು ಇರಿಸಿದ ರೂಮಿನಲ್ಲಿ ಯಾವುದೇ ಕಾರಣಕ್ಕಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗದಂತೆ ಆ ಕೋಣೆ ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಬಲ್ಲಮೂಲವೊಂದು ತಿಳಿಸಿದೆ. ಪಾಸ್ ಇದ್ದವರನ್ನು ಹೊರತು ಪಡಿಸಿ ಉಳಿದಂತೆ ಯಾರಿಗೂ ಕೇಂದ್ರದ ಒಳಗೆ ಪ್ರವೇಶ ನೀಡಲಾಗುತ್ತಿಲ್ಲ. ಶಾಲಾ ಆವರಣದಲ್ಲಿ ಅಗ್ನಿಶಾಮಕ ವಾಹನವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಸ್ಟ್ರಾಂಗ್ ರೂಮ್‌ಗಳ ಉಸ್ತುವಾರಿಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆಗೆ ವಹಿಸಲಾಗಿದೆ. ಒಟ್ಟು ಮೂರು ಹಂತದ ಭದ್ರತೆ ಇಡೀ ಕೇಂದ್ರಕ್ಕೆ ಇರಲಿದೆ. ಸಿಆರ್‌ಪಿಎಫ್ ಸಿಬ್ಬಂದಿಗಳು ಸ್ಟ್ರಾಂಗ್ ರೂಮಿಗೆ ಭದ್ರತೆ ಒದಗಿಸಿದರೆ, ಎರಡನೇ ಹಂತದಲ್ಲಿ ಮಧ್ಯಭಾಗದಲ್ಲಿ ಕೆಎಸ್‌ಆರ್‌ಪಿಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮೂರನೇ ಹಂತದಲ್ಲಿ ಕೇಂದ್ರದ ಹೊರ ಆವರಣದಲ್ಲಿ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳು ಮತಎಣಿಕೆ ಕೇಂದ್ರಕ್ಕೆ ಸಂಪೂರ್ಣ ಭದ್ರತೆ ಒದಗಿಸಲಿದ್ದಾರೆ. ನಿಯೋಜಿತ ಸಿಬ್ಬಂದಿಗಳು ನಿರಂತರವಾಗಿ ಸರದಿ ಪ್ರಕಾರ ಭದ್ರತಾ ಕಾರ್ಯದಲ್ಲಿ ನಿರತರಾಗಲಿದ್ದಾರೆ. ಇವರು ಮತ ಎಣಿಕೆ ನಡೆಯುವ ಜೂ.4ರವರೆಗೆ ನಿರಂತರವಾಗಿ ಕೇಂದ್ರದ ಭದ್ರತಾ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಬೈಂದೂರಿನಲ್ಲಿ ಡಿಮಸ್ಟರಿಂಗ್ ಬಳಿಕ ಎಲ್ಲಾ ಮತಯಂತ್ರಗಳನ್ನು ವಿವಿಪ್ಯಾಟ್ ಸಮೇತ ಅದೇ ದಿನ ರಾತ್ರಿ ಶಿವಮೊಗ್ಗಕ್ಕೆ ಕಳುಹಿಸಲಾಗುತ್ತದೆ. ಡಿಮಸ್ಟರಿಂಗ್ ಕೇಂದ್ರದಲ್ಲಿ ಮತಯಂತ್ರಗಳು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ದಾನ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿನ ಮತಯಂತ್ರಗಳನ್ನು ಬಿಗಿ ಭದ್ರತೆಯಲ್ಲಿ ಕಳೆದ ರಾತ್ರಿಯೇ ಉಡುಪಿ ಸೈಂಟ್ ಸಿಸಿಲೀಸ್ ಶಾಲೆಯಲ್ಲಿರುವ ಡಿಮಸ್ಟರಿಂಗ್ ಕೇಂದ್ರಕ್ಕೆ ತರಲಾಯಿತು. ತಡರಾತ್ರಿಯವರೆಗೂ ಜಿಲ್ಲೆಯ ಮೂಲೆಮೂಲೆಗಳಿಂದ ಮತಯಂತ್ರಗಳು ಕೇಂದ್ರಕ್ಕೆ ಬರುತ್ತಿದ್ದು, ಕೇಂದ್ರದ ಸುತ್ತ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸ ಲಾಗಿತ್ತು. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳು ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಇಲ್ಲಿಗೆ ಆಗಮಿಸಿದವು ಎಂದು ಮೂಲಗಳು ತಿಳಿಸಿವೆ.

ವಾರ್ತಾ ಭಾರತಿ 27 Apr 2024 8:14 pm

ಚಾಮರಾಜನಗರ | ಮತಗಟ್ಟೆ ಧ್ವಂಸ ಪ್ರಕರಣ : 36ಕ್ಕೂ ಹೆಚ್ಚು ಮಂದಿಯ ಬಂಧನ

ಹನೂರು : ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸ ಪ್ರಕರಣರಕ್ಕೆ ಸಂಬಂದಿಸಿದಂತೆ ಮಹಿಳೆಯರು ಸೇರಿದಂತೆ ಒಟ್ಟು 36ಕ್ಕೂ ಹೆಚ್ಚು ಮಂದಿಯನ್ನು ಮಹದೇಶ್ವರಬೆಟ್ಟ ಪೋಲಿಸರು ಬಂಧಿಸಿರುವುದಾಗಿ ವರದಿಯಾಗಿದೆ. ಲೋಕಸಭಾ ಚುನಾವಣೆಯ ಮತದಾನದ ದಿನದಂದು ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ ಮತದಾರರು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದರು. ಈ ನಡುವೆ ಅಧಿಕಾರಿಗಳು ಮತಚಲಾಯಿಸುವಂತೆ ಮನವೊಲಿಕೆ ಮಾಡಿಲು ಮುಂದಾಗಿ ಕೆಲವರು ಮತಚಲಾಯಿಸಲು ತೆರಳುತ್ತಿದ್ದಂತೆ, ಗ್ರಾಮಸ್ಥರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆಗೆ ನುಗ್ಗಿದ ಕೆಲವರು ಕಲ್ಲು ತೂರಾಟ ನೆಡೆಸಿ ಮತಯಂತ್ರ ಧ್ವಂಸ ಮಾಡಿದ್ದಲ್ಲದೆ, ಈ ಘಟನೆಯಲ್ಲಿ ತಹಸೀಲ್ದಾರ್ ಸೇರಿದಂತೆ ಕೆಲ ಅಧಿಕಾರಿಗಳಿಗೆ ಪೆಟ್ಟಾಗಿದೆ. ಈ ಹಿನ್ನಲೆ ಗ್ರಾಮಸ್ಥರ ಮೇಲೆ ಮಹದೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೆ ಸುಮಾರು 36 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಮತಗಟ್ಟೆ ಮೇಲೆ ದಾಳಿ ಧ್ವಂಸ ಪ್ರಕರಣದಲ್ಲಿ ತಹಸೀಲ್ದಾರ್ ಗುರುಪ್ರಸಾದ್, ಪೊಲೀಸ್ ಇನ್ಸ್ ಪೆಕ್ಟರ್ ಜಗದೀಶ್, ಮತಗಟ್ಟೆ ಅಧಿಕಾರಿ ಬಸವಣ್ಣ, ಗ್ರಾಮ ಆಡಳಿತಾಧಿಕಾರಿ ವಿನೋದ್ ಪಿಡಿಒ ಕಿರಣ್ ಕುಮಾರ್ ಸೇರಿದಂತೆ 15 ಮಂದಿ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆದಿದ್ದು, ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿಗಳು ಪ್ರತ್ಯೇಕ ದೂರು ದಾಖಲಿಸಿ, ಸುಮಾರು 300 ಮಂದಿಯ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ವಾರ್ತಾ ಭಾರತಿ 27 Apr 2024 7:59 pm

Rohit Sharma: ರೋಹಿತ್ ಶರ್ಮಾ ಅವರನ್ನ ಕೇವಲ ನಾಯಕತ್ವದಿಂದ ಮಾತ್ರ ಅಲ್ಲ T20 ತಂಡದಿಂದಲೇ ಹೊರಹಾಕಿ ಎಂದ ಮಾಜಿ ಕ್ರಿಕೆಟಿಗ!

ಹೌದು ನಾವು ಮಾತಾಡ್ತಿರೋದು ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಮಾಜಿ ಡೈರೆಕ್ಟರ್ ಆಗಿರುವಂತಹ ಜೈ ಭಟ್ಟಾಚಾರ್ಯ ಅವರ ಬಗ್ಗೆ. ರೋಹಿತ್ ಶರ್ಮಾ ಅವರ ಬಗ್ಗೆ ಮಾತನಾಡುತ್ತಾ ಇವ್ರು ಕೇವಲ ನಾಯಕತ್ವ ಮಾತ್ರವಲ್ಲದೆ ಟಿ ಟ್ವೆಂಟಿ ನಲ್ಲಿ ಆಡೋದಕ್ಕೆ ಕೂಡ ರೋಹಿತ್ ಶರ್ಮ (Rohit Sharma) ಸರಿಯಾದ ಆಟಗಾರನಲ್ಲ ಎನ್ನುವ ರೀತಿಯಲ್ಲಿ ಇವರು ಕ್ರಿಕ್ ಬಝ್ ಗೆ ನೀಡಿರುವಂತಹ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. The post Rohit Sharma: ರೋಹಿತ್ ಶರ್ಮಾ ಅವರನ್ನ ಕೇವಲ ನಾಯಕತ್ವದಿಂದ ಮಾತ್ರ ಅಲ್ಲ T20 ತಂಡದಿಂದಲೇ ಹೊರಹಾಕಿ ಎಂದ ಮಾಜಿ ಕ್ರಿಕೆಟಿಗ! appeared first on Karnataka Times .

ಕರ್ನಾಟಕ ಟೈಮ್ಸ್ 27 Apr 2024 7:50 pm

ʼಗ್ಯಾರಂಟಿʼ ಯೋಜನೆಗಳನ್ನು ಸ್ಥಗಿತಗೊಳಿಸಲು ಬಿಜೆಪಿಯಿಂದ ಹುನ್ನಾರ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆದರೆ, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಹುನ್ನಾರ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಶನಿವಾರ ಚಿತ್ತಾಪುರ ಮತಕ್ಷೇತ್ರದ ಭೀಮನಹಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿ ಅವರು ಮಾತನಾಡಿದರು. ರಾಜ್ಯದ ಜನರ ಕುಟುಂಬದ ನಿರ್ವಹಣೆ ಹಾಗೂ ಆರ್ಥಿಕ ಸ್ಥಿರತೆ ರೂಪಿಸುವ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿಸಲು ಬಿಜೆಪಿ ಹುನ್ನಾರ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಕೋರಿದ್ದಾರೆ ಎಂದು ಅವರು ಹೇಳಿದರು. ಬಿಜೆಪಿ ನಾಯಕರೇ, ಕಾಂಗ್ರೆಸ್ ಸರಕಾರದ ಬಡವರ ಪರ ಕಾರ್ಯಕ್ರಮಗಳನ್ನು ನಿಲ್ಲಿಸುವ ಯತ್ನ ಮಾಡಿದ್ದೀರಲ್ಲ. ಬಡವರು ಕಂಡರೆ ಯಾಕೆ ನಿಮಗೆ ಅಸಮಾಧಾನ? ನಾವು ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಾರ್ತಾ ಭಾರತಿ 27 Apr 2024 7:49 pm

ಕಾಂಗ್ರೆಸ್ ಸರಕಾರ ಬರದಿಂದ ನೊಂದ ಜನರಿಗೆ ಏನು ಮಾಡಿದೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಬರ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಯ ಬಗ್ಗೆ ಕೇಂದ್ರ ಸರಕಾರದ ಕಡೆ ಕೈ ತೋರಿಸುವ ಕಾಂಗ್ರೆಸ್ ಸರಕಾರ ಬರದಿಂದ ನೊಂದಿರುವ ಜನರಿಗೆ ಏನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ 3,454 ಕೋಟಿ ಪರಿಹಾರ ನೀಡಿದೆ. ಕಡಿಮೆ ಬಂದಿದೆ ಎಂದರೆ ಕೇಳಲಿ, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಉಪಯೋಗವೇನು? ಎಂದರು. ಹಣ ಬಿಡುಗಡೆ ಮಾಡುವಾಗ ಎಲ್ಲ ಅಂಶಗಳನ್ನು ಕೇಂದ್ರ ಸರಕಾರ ಪರಿಗಣನೆಗೆ ತೆಗೆದುಕೊಂಡಿರುತ್ತದೆ. ಹಣ ಸಾಕಾಗಲಿಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ? ಒಕ್ಕೂಟ ವ್ಯವಸ್ಥೆ ಎನ್ನುವುದು ಇದೆಯಲ್ಲ. 15ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನಲೆಯಲ್ಲಿ ಹಣ ಬರುತ್ತದೆ. ರಾಜ್ಯದಲ್ಲಿ ತೀವ್ರ ಬರವಿದೆ, ಅದಕ್ಕೆ ರಾಜ್ಯ ಸರಕಾರ ಏನು ಮಾಡಿದೆ ಎಂದು ಕೇಳಿದರು. ಹಣ ಬಿಡುಗಡೆ ಮಾಡುವಾಗ ಎಲ್ಲಾ ಅಂಶಗಳನ್ನು ಕೇಂದ್ರ ಸರ್ಕಾರ ಪರಿಗಣನೆಗೆ ತೆಗೆದುಕೊಂಡಿರುತ್ತದೆ. ಹಣ ಸಾಕಾಗಲಿಲ್ಲ ಎಂದರೆ ಇವರು ಕೇಳಿದಷ್ಟು ಹಣ ಕೊಡಲು ಸಾಧ್ಯವೇ?. ಒಕ್ಕೂಟ ವ್ಯವಸ್ಥೆ ಎನ್ನುವುದು ಇದೆಯಲ್ಲ. 15ನೇ ಹಣಕಾಸಿನ ಆಯೋಗದ ಶಿಫಾರಸಿನ ಹಿನ್ನಲೆಯಲ್ಲಿ ಹಣ ಬರುತ್ತದೆ. ರಾಜ್ಯದಲ್ಲಿ ತೀವ್ರ ಬರವಿದೆ, ಅದಕ್ಕೆ ರಾಜ್ಯ ಸರ್ಕಾರ ಏನು ಮಾಡಿದೆ? 2 ಸಾವಿರ ರೂ. ಕೊಡುತ್ತೇವೆ ಎಂದರು, ಯಾರಿಗೆ ಹೋಗಿದೆ? ಎಷ್ಟು ಜನಕ್ಕೆ ಹಣ ತಲುಪಿದೆ? ಆ 2 ಸಾವಿರ ರೂ. ನಲ್ಲಿ ಕೇಂದ್ರ ಸರಕಾರದ ಹಣ ಸೇರಿದೆ. ಅದನ್ನೂ ಈ ಸರ್ಕಾರ ಹೇಳಬೇಕಲ್ಲವೇ? ಎಂದು ಪ್ರಶ್ನಿಸಿದರು.

ವಾರ್ತಾ ಭಾರತಿ 27 Apr 2024 7:43 pm

RCB vs GT: ಗುಜರಾತ್‌ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್‌ XI ವಿವರ!

RCB vs GT Match Preview: ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಕಳೆದ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟನ್ಸ್ ವಿರುದ್ದ ಸೆಣಸಲು ಸಜ್ಜಾಗುತ್ತಿದೆ. ಆಡಿರುವ 9 ಪಂದ್ಯಗಳಲ್ಲಿ ಪೈಕಿ ಆರ್‌ಸಿಬಿ ಗೆದ್ದಿರುವುದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ, ಪ್ಲೇಆಫ್‌ ಹಾದಿಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ, ಭಾನುವಾರ ಗುಜರಾತ್‌ ವಿರುದ್ದ ಬೆಂಗಳೂರು ತಂಡ ಗೆಲ್ಲಲೇಬೇಕಾಗಿದೆ. ಇನ್ನು ಗುಜರಾತ್‌ ಟೈಟನ್ಸ್ ತಂಡ ಆಡಿದ 9 ಪಂದ್ಯಗಳಿಂದ 4ರಲ್ಲಿ ಗೆದ್ದು ಇನ್ನುಳಿದ 5ರಲ್ಲಿ ಸೋತಿದೆ.

ವಿಜಯ ಕರ್ನಾಟಕ 27 Apr 2024 7:37 pm

Ration Shop: ನ್ಯಾಯ ಬೆಲೆ ಅಂಗಡಿ ಇಡಲು ಅರ್ಹತೆ ಏನು? ದಾಖಲೆ ಏನೆಲ್ಲಾ ಬೇಕು, ಇಲ್ಲಿದೆ ಸಿಹಿಸುದ್ದಿ

ಸರ್ಕಾರವು ಹೊಸ ನ್ಯಾಯಬೆಲೆ ಅಂಗಡಿ (New Ration Shop) ಗಳನ್ನು ತೆರೆಯಲು ಅರ್ಜಿ ಆಹ್ವಾನ ಮಾಡುತ್ತದೆ. ನೀವು ಆ ಸ್ಥಳದ ಸ್ಥಳೀಯರಾಗಿದ್ದರೆ ಅರ್ಜಿ ಸಲ್ಲಿಸಿ ನ್ಯಾಯಬೆಲೆ ಅಂಗಡಿಯನ್ನು ಆರಂಭಿಸಬಹುದು, ಇದಕ್ಕೆ ಬೇಕಾದ ಆರಂಭಿಕ ಮೊತ್ತವನ್ನು ನೀವು ವ್ಯಯ ಮಾಡಿದರೆ ತದನಂತರ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯ ಸಿಗಲಿದೆ. The post Ration Shop: ನ್ಯಾಯ ಬೆಲೆ ಅಂಗಡಿ ಇಡಲು ಅರ್ಹತೆ ಏನು? ದಾಖಲೆ ಏನೆಲ್ಲಾ ಬೇಕು, ಇಲ್ಲಿದೆ ಸಿಹಿಸುದ್ದಿ appeared first on Karnataka Times .

ಕರ್ನಾಟಕ ಟೈಮ್ಸ್ 27 Apr 2024 7:35 pm

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ದಾಖಲೆಯ ಶೇ.77.15 ಮತದಾನ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಸ್ಥಾನಕ್ಕಾಗಿ ಶುಕ್ರವಾರ ನಡೆದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.77.15ರಷ್ಟು ಮತದಾನವಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಕ್ಷೇತ್ರದ ಮಟ್ಟಿಗೆ ಇದೊಂದು ದಾಖಲೆಯ ಮತದಾನವಾಗಿದೆ. ಜಿಲ್ಲಾವಾರು ಸಾಧನೆ ಗಮನಿಸಿದರೆ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.78.94ರಷ್ಟು ಮತದಾನವಾಗಿದೆ. ಅದೇ ರೀತಿ ಚಿಕ್ಕಮಗಳೂರಿನ ನಾಲ್ಕು ವಿಧಾನಸಭಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಮತದಾನ ಶೇ.75.7 ಆಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೇ.76.06ರಷ್ಟು ಮತದಾನವಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.1.1ರಷ್ಟು ಅಧಿಕ ಮತದಾನವಾಗಿದೆ. ಚುನಾವಣಾ ಆಯೋಗ ಪ್ರಕಟಿಸಿರುವ ಅಧಿಕೃತ ಮಾಹಿತಿಯಂತೆ ಕ್ಷೇತ್ರದ ಒಟ್ಟು 15,85,162 ಮತದಾರರಲ್ಲಿ 12,22,888 ಮಂದಿ ನಿನ್ನೆ ಮತ ಚಲಾಯಿಸಿದ್ದಾರೆ. ಕ್ಷೇತ್ರದ 7,68,215 ಪುರುಷ ಮತದಾರರಲ್ಲಿ 5,94,565 ಮಂದಿ ಹಾಗೂ 8,16,910 ಮಹಿಳಾ ಮತದಾರರಲ್ಲಿ 6,28,316 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಶೇ.77.39ರಷ್ಟು ಪುರುಷರು ಮತ ಚಲಾಯಿಸಿದ್ದರೆ, ಶೇ.76.95ರಷ್ಟು ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಕ್ಷೇತ್ರದಲ್ಲಿರುವ 37 ತೃತೀಯ ಲಿಂಗಿ ಮತದಾರರಲ್ಲಿ ಕೇವಲ ಏಳು ಮಂದಿ ಮಾತ್ರ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ ಎಂದು ಈ ಮಾಹಿತಿ ತಿಳಿಸುತ್ತದೆ. ಕುಂದಾಪುರ ಮತ್ತು ತರೀಕೆರೆಯಲ್ಲಿ ತಲಾ ಒಬ್ಬರು, ಕಾಪು, ಶೃಂಗೇರಿ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಬ್ಬರು ತಮ್ಮ ಮತ ಚಲಾಯಿಸಿದ್ದಾರೆ. ಇವರ ಮತದಾನದ ಪ್ರಮಾಣ ಶೇ.18.91ಆಗಿದೆ. ಈ ಬಾರಿ ಗರಿಷ್ಠ ಮತದಾನದ ದಾಖಲೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಲ್ಲಿ ಶೇ 80.31ರಷ್ಟು ಮತದಾನ ದಾಖಲಾಗಿದ್ದರೆ, ಕನಿಷ್ಠ ಮತದಾನದ ದಾಖಲೆ ಚಿಕ್ಕಮಗಳೂರು ಕ್ಷೇತ್ರಕ್ಕೆ ಸಲ್ಲುತ್ತದೆ. ಅಲ್ಲಿ ಶೇ.70.73ರಷ್ಟು ಮಂದಿ ಮಾತ್ರ ಮತ ಚಲಾಯಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿಯ ಕನಿಷ್ಠ ಉಡುಪಿ ಕ್ಷೇತ್ರದಲ್ಲಿ -ಶೇ.77.84- ದಾಖಲಾಗಿದೆ. ಉಳಿದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.79.66, ಕುಂದಾಪುರದಲ್ಲಿ 79.12, ಕಾಪುವಿನಲ್ಲಿ ಶೇ.79.17ರಷ್ಟು ಮತದಾನ ವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಯಲ್ಲಿ ಶೇ.77.47, ತರೀಕೆರೆಯಲ್ಲಿ 74.29ರಷ್ಟು ಮತದಾನವಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಎಲ್ಲಾ ಕ್ಷೇತ್ರಗಳಲ್ಲೂ ಅಧಿಕ ಮತದಾನವಾಗಿದೆ. ಕುಂದಾಪುರ ವಿಧಾನಸಭಾ ವ್ಯಾಪ್ತಿಯ ಒಟ್ಟು 2,11,838 ಮತದಾರರ ಪೈಕಿ 1,67,612 ಮಂದಿ ಮತದಾನ ಮಾಡಿದ್ದರೆ, ಉಡುಪಿ ಕ್ಷೇತ್ರದ 2,21,285 ಮತದಾರರಲ್ಲಿ 1,72,257 ಮಂದಿ ಮತ ಚಲಾಯಿಸಿದ್ದಾರೆ. ಕಾಪು ಕ್ಷೇತ್ರದ 1,92,599 ಮಂದಿಯಲ್ಲಿ 1,52,477 ಮಂದಿ, ಕಾರ್ಕಳ ಕ್ಷೇತ್ರದ 1,93,512 ಮಂದಿಯಲ್ಲಿ 1,54,1545 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿದ್ದ 1,65,498 ಮಂದಿ ಮತದಾರರಲ್ಲಿ 1,30,509 ಮಂದಿ, ಮೂಡಿಗೆರೆಯ 1,71,642 ಮಂದಿಯಲ್ಲಿ 1,32,975 ಮಂದಿ, ಚಿಕ್ಕಮಗಳೂರು ಕ್ಷೇತ್ರದ 2,32,210 ಮಂದಿ ಮತದಾರರ ಪೈಕಿ 1,64,253ಮಂದಿ ಹಾಗೂ ತರೀಕೆರೆ ಕ್ಷೇತ್ರದ 1,93,125 ಮಂದಿ ಮತದಾರ ರಲ್ಲಿ 1,43,482 ಮಂದಿ ತಮ್ಮ ಮತವನ್ನು ಚಲಾಯಿಸಿದ್ದಾರೆ. ಪ್ರತಿ ಕ್ಷೇತ್ರದಲ್ಲಿ ಪುರುಷ ಮತ್ತು ಮಹಿಳೆಯರು ಮತದಾನ ಮಾಡಿದ ಪ್ರಮಾಣ ಕುಂದಾಪುರ: ಪುರುಷರು: 101,904(ಮತ ಚಲಾಯಿಸಿದವರು 79,132) ಮಹಿಳೆಯರು: 1,09,932(88,478), ಇತರೇ: 02(02), ಒಟ್ಟು: 2,11,838 (1,67,612),ಶೇ. 79.12. ಉಡುಪಿ: ಪುರುಷರು:1,06,680(82,602),ಮಹಿಳೆಯರು: 1,14,603 (89,655), ಇತರೇ: 02(0), ಒಟ್ಟು: 2,21,285 (1,72,257), ಶೇ.77.84. ಕಾಪು: ಪುರುಷರು: 92,290(71,586), ಮಹಿಳೆಯರು: 1,00,304 (80,890), ಇತರೇ: 5(1), ಒಟ್ಟು: 1,92,599 (1,52,477), ಶೇ. 79.17. ಕಾರ್ಕಳ: ಪುರುಷರು: 92,864 (73,352), ಮಹಿಳೆಯರು: 1,00,648 (80,802), ಇತರೇ: 0(0), ಒಟ್ಟು: 1,93,512(1,54,154), ಶೇ. 79.66. ಶೃಂಗೇರಿ: ಪುರುಷರು: 82,260(67,146), ಮಹಿಳೆಯರು: 86,690 (68,531), ಇತರೇ: 01(1), ಒಟ್ಟು: 1,68,951(1,35,678), ಶೇ. 80.31. ಮೂಡಿಗೆರೆ: ಪುರುಷರು: 83,298 (66,251), ಮಹಿಳೆಯರು: 88,339 (66,724), ಇತರೇ: 05(0), ಒಟ್ಟು: 1,71,642 (1,32,975), ಶೇ. 77.47. ಚಿಕ್ಕಮಗಳೂರು: ಪುರುಷರು: 1,13,854(81,895), ಮಹಿಳೆಯರು: 1,18,336(82,357), ಇತರೇ: 20(1), ಒಟ್ಟು: 2,32,210 (1,64,253), ಶೇ.70.73. ತರೀಕೆರೆ: ಪುರುಷರು: 95,065 (72,601), ಮಹಿಳೆಯರು: 98,058 (70,879), ಇತರೇ: 2(2), ಒಟ್ಟು:1,93,125 (1,43,482), ಶೇ. 74.29. ಕ್ಷೇತ್ರದ ಸಾಧನೆ: ಪುರುಷರು:7,68,215 (5,94,565 ಶೇ.77.39), ಮಹಿಳೆಯರು: 8,16,910 (6,28,316-76.95), ಇತರೇ: 37 (07), ಒಟ್ಟು: 15,85,162 (12,2,888), ಸರಾಸರಿ ಮತದಾನ: ಶೇ. 77.15.

ವಾರ್ತಾ ಭಾರತಿ 27 Apr 2024 7:34 pm

ಮುಂಬೈ ಉತ್ತರ ಸೆಂಟ್ರಲ್ ಅಭ್ಯರ್ಥಿಯಾಗಿ ವಕೀಲ ಉಜ್ವಲ್ ನಿಕಮ್ ಆಯ್ಕೆ ಮಾಡಿದ ಬಿಜೆಪಿ

ಮುಂಬೈ : ಮುಂಬೈ ಉತ್ತರ ಸೆಂಟ್ರಲ್ ಲೋಕಸಭಾ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವ ದಿವಂಗತ ಪ್ರಮೋದ್ ಮಹಾಜನ್ ಅವರ ಪುತ್ರಿ, ಹಾಲಿ ಲೋಕಸಭಾ ಸಂಸದೆ ಪೂನಂ ಮಹಾಜನ್ ಬದಲಿಗೆ ವಕೀಲ ಉಜ್ವಲ್ ದೇವರಾಯ್ ನಿಕಮ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. 2014ರಿಂದ ಈ ಕ್ಷೇತ್ರದಲ್ಲಿ ಪೂನಂ ಮಹಾಜನ್ ಸಂಸದೆಯಾಗಿದ್ದರು. 2014ರಲ್ಲಿ ಕಾಂಗ್ರೆಸ್‌ ನ ಪ್ರಿಯಾ ದತ್ ಸೋಲಿಸಿದ್ದ ಅವರು 2019ರಲ್ಲೂ ಜಯಭೇರಿ ಬಾರಿಸಿದ್ದರು. ಮುಂಬೈ ದಾಳಿ ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಉಜ್ವಲ್ ನಿಕಮ್ ಅವರನ್ನು ಈ ಬಾರಿ ಬಿಜೆಪಿ ಆಯ್ಕೆ ಮಾಡಿದೆ. ದಾಳಿಯಲ್ಲಿ ಉಗ್ರರಿಗೆ ಕಠಿಣ ಶಿಕ್ಷೆ ವಿಧಿಸಿದ ನಂತರ, ನಿಕಮ್ ಅವರು ಹೆಚ್ಚು ಪ್ರಖ್ಯಾತಿ ಪಡೆದಿದ್ದರು. ಈ ಹಿಂದೆ ಅವರು ಬಿಜೆಪಿ ಯುವ ಘಟಕದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಬದಲಾಯಿಸುವ ಕುರಿತು ಊಹಾಪೋಹಗಳು ಹರಿದಾಡುತ್ತಿತ್ತು ಎನ್ನಲಾಗಿದೆ. ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಪಕ್ಷವು ನಿಕಮ್ ಅವರನ್ನು ಆಯ್ಕೆ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷವು ತನ್ನ ಮುಂಬೈ ಘಟಕದ ಮುಖ್ಯಸ್ಥೆ ಮತ್ತು ಧಾರವಿ ಶಾಸಕಿ ವರ್ಷಾ ಗಾಯಕ್ವಾಡ್ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದ ಎರಡು ದಿನಗಳ ನಂತರ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಮಹಾರಾಷ್ಟ್ರವು 48 ಸಂಸದರನ್ನು ಲೋಕಸಭೆಗೆ ಕಳುಹಿಸುತ್ತದೆ. 80 ಸಂಸದನ್ನು ಲೋಕಸಭೆಗೆ ಕಳುಹಿಸುವ ಉತ್ತರ ಪ್ರದೇಶದ ನಂತರ ಇದು ಅತಿ ದೊಡ್ಡ ಸಂಖ್ಯೆಯಾಗಿದೆ. ಮಹಾರಾಷ್ಟ್ರಕ್ಕೆ ಮೊದಲ ಮತ್ತು ಎರಡನೇ ಹಂತದ ಲೋಕಸಭಾ ಚುನಾವಣೆಗಳಲ್ಲಿ 13 ಸ್ಥಾನಗಳಿಗೆ ಮತದಾನ ಈಗಾಗಲೇ ನಡೆದಿದೆ. ಮೇ 7 ಮತ್ತು ಮೇ 20 ರ ನಡುವೆ ರಾಜ್ಯದಲ್ಲಿ ಇನ್ನೂ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮುಂಬೈನಲ್ಲಿ ಮತದಾನವು ಮೇ 20 ಕ್ಕೆ ನಿಗದಿಯಾಗಿದೆ. #WATCH | Mumbai | BJP fields Special Public Prosecutor during 26/11 Mumbai Terror attack case, Ujjwal Nikam as its candidate from Mumbai North Central. He says, For years, you saw me fighting against the accused in court. But today, BJP has given me the responsibility for which… pic.twitter.com/kjY78xvRmT — ANI (@ANI) April 27, 2024 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 25 ಸ್ಥಾನಗಳಲ್ಲಿ ಬಿಜೆಪಿ 23 ಸ್ಥಾನಗಳನ್ನು ಗೆದ್ದಿದ್ದರೆ, ಅವಿಭಜಿತ ಶಿವಸೇನೆ 23ರಲ್ಲಿ 18 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಸೌಜನ್ಯ : thehindu.com

ವಾರ್ತಾ ಭಾರತಿ 27 Apr 2024 7:28 pm

ಕುಮಾರಸ್ವಾಮಿ ಜೇಬಿನಲ್ಲಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು : ಡಿ.ಕೆ.ಶಿವಕುಮಾರ್

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಹಾಸನ ಸಂಸದರ ಪೆನ್ ಡ್ರೈವ್ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕನ ವಿರುದ್ಧ ಲೈಂಗಿಕ ಹಗರಣ ಆರೋಪ ಬರುತ್ತಿದ್ದು, ಈ ಬಗ್ಗೆ ಎಸ್ಐಟಿ ತನಿಖೆ ಮಾಡಬೇಕು ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , “ಕುಮಾರಸ್ವಾಮಿ ಅವರು ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತು. ಅವರ ಜೇಬಿನಲ್ಲೇ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನು ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದರು. ಮಾಧ್ಯಮಗಳು ಈ ಹಗರಣದ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ ಅವರು ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ?. ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ” ಎಂದರು. ಎಸ್ಐಟಿ ತನಿಖೆ ಬಗ್ಗೆ ಸರ್ಕಾರದ ನಿಲುವೇನು ಎಂದು ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗಳನ್ನು ಕೇಳಬೇಕು. ನಾನು ಸರ್ಕಾರದ ಭಾಗವಾಗಿದ್ದರೂ, ಇನ್ನೂ ಈ ಬಗ್ಗೆ ಸಂಬಂಧಪಟ್ಟ ಸಚಿವರು ಹಾಗೂ ಸಿಎಂ ಜತೆ ಚರ್ಚೆ ಮಾಡಲು ಆಗಿಲ್ಲ” ಎಂದರು. ಕುಮಾರಸ್ವಾಮಿ ಈ ಪ್ರಕರಣದಲ್ಲಿ ನನ್ನ ಹೆಸರು ಹೇಳಲಿ : ಡಿಸಿಎಂ ಸವಾಲು ಮಹಿಳೆಯರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ, ಅವರಿಗೆ ಒಳ್ಳೆಯದಾಗುತ್ತಾ ಎಂದು ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ ಎಂದು ಮಾಧ್ಯಮಗಳ ಕೇಳಿದಾಗ, “ಅವರು ನನ್ನ ಹೆಸರು ಹೇಳಿ ಮಾತನಾಡಲಿ. ಆಮೇಲೆ ನನ್ನ ಪುರಾಣ, ನನ್ನ ಕಥೆ, ನನ್ನ ನುಡಿಮುತ್ತುಗಳನ್ನು ಹೇಳುತ್ತೇನೆ. ಹಾಗಾದರೆ ಆ ಹೆಣ್ಣು ಮಕ್ಕಳ ಮಾನ ಹರಣವಾಗಿರುವುದನ್ನು ಕುಮಾರಸ್ವಾಮಿ ಅವರು ಈ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರಾ?” ಎಂದು ಮರುಪ್ರಶ್ನಿಸಿದರು.

ವಾರ್ತಾ ಭಾರತಿ 27 Apr 2024 7:18 pm

ಛೂ ಬಾಣ | ಪಿ. ಮಹಮ್ಮದ್ ಕಾರ್ಟೂನ್

ವಾರ್ತಾ ಭಾರತಿ 27 Apr 2024 7:11 pm

ರಾಜ್ಯದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಒಣಹವೆ ಮುಂದುವರೆಯಲಿದೆ. ಒಂದು ವಾರದೊಳಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎ.28 ಮತ್ತು ಎ.29ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎ.30ರಂದು ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮೇ 1ರಂದು ರಾಯಚೂರು, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳು ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಮೇ 2 ಮತ್ತು ಮೇ 3ರಂದು ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಶಾಖದ ಅಲೆ: ಎ.28ರಿಂದ ಮೇ 1ರವರೆಗೆ ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿ ಮತ್ತು ಆದ್ರ್ರತೆ: ಎ.27 ರಿಂದ ಮೇ 1 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಶಾಖದ ಅಲೆಯಿಂದ ಎಚ್ಚರಿಕೆ ವಹಿಸಲು ಸೂಚನೆ: ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡುವ ಜನರಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದ ಕಾಯಿಲೆಯ ಲಕ್ಷಣಗಳು ಸಂಭವಿಸಬಹುದು. ಮಕ್ಕಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿರುವ ಜನರಂತಹ ದುರ್ಬಲ ಜನರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 3ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲ್‍ಗಳನ್ನು ಬಳಸಬೇಕು. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಬೇಕು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ಓಆರ್ ಎಸ್, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ(ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 27 Apr 2024 7:10 pm

Arecanut Plantation: ಮಳೆಗಾಲ ಆರಂಭ ಆದ ಮೇಲೆ ಅಡಿಕೆ ತೋಟ ಇದ್ದವರು ಕೂಡಲೇ ಈ ಕೆಲಸ ಮಾಡಿ

ರೈತರು ಮಳೆಗಾಲದಲ್ಲಿಯು ಅಡಿಕೆ ಗಿಡಗಳ (Arecanut Plantation) ಪೋಷಣೆ ‌ಯನ್ನು ಸರಿಯಾಗಿ ಮಾಡಬೇಕು. ಮಳೆಗಾಲದ ಆರಂಭದಲ್ಲಿ ಮಳೆ ಬಂತು ಎಂದು ನೀವು ಗಿಡಗಳಿಗೆ ನೀರು ಬಿಡದೇ ಇರಬಾರದು.ಈ ಸಂದರ್ಭದಲ್ಲಿಯು ತೋಟಕ್ಕೆ ಸರಿಯಾದ ಪ್ರಮಾಣದಲ್ಲಿ ‌ನೀರು ಬೀಡಬೇಕು. ಇದು‌ ಮಳೆಗಾಲದ ಆರಂಭ ವಾಗಿರುವುದರಿಂದ ನೀರಿನ‌ ಅವಶ್ಯಕ ತೋಟಗಳಿಗೆ ಹೆಚ್ಚು ಇರಲಿದೆ. The post Arecanut Plantation: ಮಳೆಗಾಲ ಆರಂಭ ಆದ ಮೇಲೆ ಅಡಿಕೆ ತೋಟ ಇದ್ದವರು ಕೂಡಲೇ ಈ ಕೆಲಸ ಮಾಡಿ appeared first on Karnataka Times .

ಕರ್ನಾಟಕ ಟೈಮ್ಸ್ 27 Apr 2024 7:06 pm

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ : ಸರಣಿ ಅಪಘಾತ

ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ ಕಾರಣದಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಎ.26ರ ಶುಕ್ರವಾರ ರಾತ್ರಿ ಇಲ್ಲಿನ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ವರದಿಯಾಗಿದೆ. ಬೆಂಗಳೂರಿನ ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ. ಈ ವೇಳೆ, ಗಾಬರಿಯಲ್ಲಿ ಬ್ರೇಕ್ ಬದಲು ಎಕ್ಸಲರೇಟರ್ ತುಳಿದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಕಾರಿಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಅದೃಷ್ಟವಶಾತ್ ಪಾರಾಗಿದ್ದು, ದ್ವಿಚಕ್ರ ವಾಹನ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಚಾಲಕ ಸುಮಂತ್ ಎಂಬುವನನ್ನು ನಗರದ ಬ್ಯಾಟರಾಯನಪುರ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ವಾರ್ತಾ ಭಾರತಿ 27 Apr 2024 7:03 pm

ಬೆಂಗಳೂರು | ಮತದಾರರ ಮೇಲೆ ಪ್ರಭಾವ ಆರೋಪ : ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ವಿರುದ್ಧ ಎನ್‍ಸಿಆರ್ ದಾಖಲು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮತಗಟ್ಟೆ ಬಳಿ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದಡಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಇಲ್ಲಿನ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‍ಸಿಆರ್ ದಾಖಲಾಗಿದೆ. ಎ.26ರ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ನಗರದ ಸುದ್ದಗುಂಟೆ ಪಾಳ್ಯದ ಮತಗಟ್ಟೆ ಸಂಖ್ಯೆ-91ರಿಂದ 94ರವರೆಗೂ ಎರಡೂ ಪಕ್ಷಗಳ ಕಾರ್ಯಕರ್ತರು ನೀತಿ ಸಂಹಿತೆ ಉಲ್ಲಂಘಿಸಿ ಜಗಳವಾಡಿಕೊಂಡಿದ್ದರು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ಸ್ಥಳದಲ್ಲಿದ್ದ ಬಿಬಿಎಂಪಿ ಅಧಿಕಾರಿ ಶ್ರೀನಿವಾಸ್ ಹಾಗೂ ಪೆಪೊಲೀಸ್ ಸಿಬ್ಬಂದಿ ಚಂದ್ರಶೇಖರ್ ನೀಡಿರುವ ದೂರಿನನ್ವಯ ಸದ್ಯ ಎರಡೂ ಪಕ್ಷಗಳ ಕಾರ್ಯಕರ್ತರ ವಿರುದ್ಧ ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಎನ್‍ಸಿಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಕೇಸರಿ ಬಣ್ಣದ ಟೀ ಶರ್ಟ್ ಧರಿಸಿಕೊಂಡು ಕುಟುಂಬಸ್ಥರೊಂದಿಗೆ ಮತ ಚಲಾಯಿಸಲು ಬಂದಿದ್ದ ಯುವಕನೋರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಕೇಂದ್ರ ಕ್ಷೇತ್ರದ ಸಿ.ವಿ.ರಾಮನ್ ನಗರದ ಸುದ್ದಗುಂಟೆಪಾಳ್ಯ ಶುಕ್ರವಾರ ನಡೆದಿತ್ತು. ಮೋಹನ್ ಎಂಬ ಯುವಕ ಕೇಸರಿ ಬಣ್ಣದ ಶರ್ಟ್ ಧರಿಸಿ ವೋಟ್ ಹಾಕಲು ಕುಟುಂಬಸ್ಥರೊಂದಿಗೆ ಬಂದಿದ್ದನು. ಈ ವೇಳೆ ಕೆಲವರು ಕೇಸರಿ ಶರ್ಟ್ ಧರಿಸಿದ ಯುವಕ ಮತಗಟ್ಟೆ ಪ್ರವೇಶಿಸಲು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಂತರ ಈ ವಿಚಾರವಾಗಿ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಬೈಯ್ಯಪ್ಪನಹಳ್ಳಿ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದರು.

ವಾರ್ತಾ ಭಾರತಿ 27 Apr 2024 6:59 pm

1.20 ಲಕ್ಷ ಮತಗಳ ಅಂತರದಿಂದ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿಶ್ವಾಸ

ಮಂಗಳೂರು: ದ.ಕ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರ ಕಾರ್ಯದಲ್ಲಿ ಸಹಕರಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ಚುನಾವಣೆಯ ದಿನದಂದು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಮತದಾರರ ಉತ್ಸಾಹ, ಸ್ಪಂದನೆ ಕಂಡು ಆತ್ಮವಿಶ್ವಾಸ ಹೆಚ್ಚಿದೆ. ಮತದಾನ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕಿತ್ತು. ಆದರೆ ದ.ಕ. ಜಿಲ್ಲೆಯಲ್ಲಿ ಉತ್ತಮ ಮತದಾನ ಆಗಿದೆ. ಕಾರ್ಯಕರ್ತರ ಆಶಯ, ಮತದಾರರು ಬದಲಾವಣೆ ಬಯಸಿರುವುದು ಜೂ. 4ರಂದು ಫಲಿತಾಂಶದ ದಿನ ತಿಳಿಯಲಿದೆ ಎಂದವರು ಹೇಳಿದರು. ಜಿಲ್ಲೆಯ ಅಭಿವೃದ್ಧಿ, ನೈಜ ವಿಚಾರವನ್ನು ಜನತೆಯ ಮುಂದಿಟ್ಟು ಪ್ರಚಾರ ಕಾರ್ಯ ನಡೆಸಿದ್ದು, ಪಕ್ಷದ ನಾಯಕರು, ಕಾರ್ಯಕರ್ತರು ಕುಟುಂಬವಾಗಿ ಚುನಾವಣೆ ಎದುರಿಸಿದ್ದೇವೆ. ಪ್ರತಿಯೊಬ್ಬರೂ ನನ್ನ ಜತೆ ಸಹಕರಿಸಿದ್ದು, ಎದುರಾಳಿಗಳ ದ್ವೇಷಕ್ಕೆ ಪ್ರತಿಯಾಗಿ ಪ್ರೀತಿಯಿಂದ ಮತದಾರರ ಮನವೊಲಿಸುವ ಕಾರ್ಯ ಮಾಡಲಾಗಿದೆ. ಕಾಂಗ್ರೆಸ್ ಈ ಹಿಂದೆ ಮಾಡಿರುವ ಅಭಿವೃದ್ಧಿ ಯೋಜನೆ, ಗ್ಯಾರಂಟಿ ಯೋಜನೆಗಳ ಮಾಹಿತಿ ಮನೆ ಮನೆಗೆ ತಲುಪಿಸುವ ಮೂಲಕ ಪ್ರೀತಿ ಹಂಚಲಾಗಿದೆ ಎಂದು ಅವರು ಹೇಳಿದರು. ಬಿಜೆಪಿಯವರು ಒಂದೂವರೆ ಲಕ್ಷದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಯಾರೂ ಸೋಲಲು ಸಿದ್ಧ ಇರುವುದಿಲ್ಲ. ಗೆಲ್ಲುವುದಕ್ಕಾಗಿಯೇ ಸ್ಪರ್ಧೆ ಮಾಡಿರುವುದು. ಆದರೆ ಬಿಜೆಪಿಯವರು ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ನಾವು ಇಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎಂದು ಈ ಹಿಂದೆ ಎಲ್ಲಿಯೂ ಹೇಳಿಲ್ಲ. ಜೂ. 4ರವರೆಗೆ ಎಲ್ಲರೂ ಸಂತೋಷದಿಂದ ಫಲಿತಾಂಶವನ್ನು ಎದುರು ನೋಡೋಣ ಎಂದರು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಮನೆ ಬೆಳಗುವ ಜತೆಗೆ, ಕುಟುಂಬಗಳಲ್ಲಿ ಆತ್ಮಸ್ಥೈರ್ಯ ತುಂಬಲಿದೆ. ಇದು ನಮ್ಮ ಗೆಲುವಿಗೆ ಮುಖ್ಯ ಕಾರಣವಾಗಲಿದೆ ಎಂದು ಹೇಳಿದ ಪದ್ಮರಾಜ್, ಕಳೆದ 35 ವರ್ಷಗಳಿಂದೀಚಿಗಿನ ಅಭಿವೃದ್ಧಿ ಹಾಗೂ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಜಿಲ್ಲೆಯಲ್ಲಾದ ಅಭಿವೃದ್ಧಿ ಬಗ್ಗೆ ಮತದಾರರಿಂದ ತುಲನೆಯೂ ಕಾಂಗ್ರೆಸ್ ಗೆಲುವಿಗೆ ಪೂರಕವಾಗಲಿದೆ ಎಂದರು. ಕಾಂಗ್ರೆಸ್ ಈ ಹಿಂದೆಯಾಗಲಿ ಈ ಬಾರಿಯಾಗಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರಗಳು ಈ ಬಾರಿ ಚರ್ಚೆಯಾಗಿವೆ. ನಾನು ಯಾವತ್ತೂ ಜಾತಿ ಹೆಸರಿನಲ್ಲಿ ಮತ ಕೇಳಿಲ್ಲ. ಬದಲಾಗಿ ಆರ್ಥಿಕವಾಗಿ ಹಿಂದುಳಿ ವರ್ಗಗಳ ಶಕ್ತಿಯಾಗಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ಮತದಾರರನ್ನು ಮನವಿ ಮಾಡಿದ್ದೇನೆ. ಅದಕ್ಕವರು ಸ್ಪಂದಿಸಿರುವ ವಿಶ್ವಾಸವಿದೆ ಎಂದವರು ಹೇಳಿದರು. ಮುಂದಿನ ದಿನಗಳಲ್ಲಿ ಪಕ್ಷವನ್ನು ಯಾವ ರೀತಿ ಸಂಘಟಿಸಲಿದ್ದೀರಿ ಎಂಬ ಪ್ರಶ್ನೆಗೆ, ನಾನು ನಿನ್ನೆ ಮತದಾನದ ವೇಳೆ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲೂ ಕಾರ್ಯಕರ್ತರಲ್ಲಿ ಇದು ಅಂತ್ಯ ಅಲ್ಲ, ಆರಂಭ ಎಂದು ಧೈರ್ಯ ತುಂಬಿದ್ದೇನೆ. ಚುನಾವಣೆಯ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಲ್ಲಿ ಪ್ರಚಾರ ಕಾರ್ಯ ನಡೆಸಿದ್ದು, ಇದೀಗ ಆರೇಳು ದಿನಗಳ ವಿಶ್ರಾಂತಿಯ ಅಗತ್ಯವಿದೆ. ಬಳಿಕ ನಮ್ಮ ನಾಯಕರ ನೇತೃತ್ವದಲ್ಲಿ ಬ್ಲಾಕ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡುವ ಕೆಲಸವನ್ನು ಮಾಡಲಿದ್ದೇನೆ. ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಸಾಮರಸ್ಯದ ಎಂದು ಪದ್ಮರಾಜ್ ಉತ್ತರಿಸಿದರು. ಗೋಷ್ಟಿಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ ಜೈನ್, ಶಶಿಧರ ಹೆಗ್ಡೆ, ಶುಭೋದಯ ಆಳ್ವ, ಮುಹಮ್ಮದ್ ಉಪಸ್ಥಿತರಿದ್ದರು. ಪದ್ಮರಾಜ್ ಯಾವತ್ತೂ ಕಾಂಗ್ರೆಸ್‌ನ ಹಿರಿಯ ನಾಯಕರಾದ ಜನಾರ್ದನ ಪೂಜಾರಿ ಅವರನ್ನು ಪಕ್ಷದ ಟಿಕೆಟ್‌ಗಾಗಿ ಅಥವಾ ತನ್ನ ಸ್ವಾರ್ಥಕ್ಕಾಗಿ ಬಳಸಿಲ್ಲ. ಅವರು ಕೇಂದ್ರ ಸಚಿವರಾಗಿ ದೇಶ, ಜನತೆಗೆ ನೀಡಿರುವ ಕೊಡುಗೆಯ ಬಗ್ಗೆ ಗೌರವ, ಕಾಳಜಿ ಯೊಂದಿಗೆ ನಾನು ಸ್ಪಂದಿಸುತ್ತಾ ಬಂದಿದ್ದೇನೆ. ಅವರು ತಮ್ಮ ಮನೆಗೆ, ತಮ್ಮ ಬಳಿಗೆ ಬಂದ ಎಲ್ಲರನ್ನೂ ತುಳುನಾಡಿನ ಸಂಸ್ಕೃತಿಯಂತೆ ಗೌರವಿಸಿದ್ದಾರೆ, ಆಶೀರ್ವದಿಸಿದ್ದಾರೆ. ಇದಲ್ಲೇನು ಬೇರೆ ಅರ್ಥ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ವಾರ್ತಾ ಭಾರತಿ 27 Apr 2024 6:55 pm

'ಸಂಜು ಔಟ್‌, ಪಂತ್ ಇನ್‌': ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಕಟ್ಟಿದ ಜಹೀರ್ ಖಾನ್!

Zaheer Khan on T20 world Cup Selection: 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಗಿದ ಕೆಲವೇ ದಿನಗಳಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೇರಿಕ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯ ನಿಮಿತ್ತ ವಿಶ್ವಕಪ್ ವಿಜೇತ ಬೌಲರ್ ಜಹೀರ್ ಖಾನ್ ತಮ್ಮ ನೆಚ್ಚಿನ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ಕೆಲ ಅಚ್ಚರಿ ಹೆಸರನ್ನು ಸೂಚಿಸಿರುವ ಜಹೀರ್ ಖಾನ್, ತಂಡದ ಏಕೈಕ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ರನ್ನು ಆಯ್ಕೆ ಮಾಡಿದ್ದಾರೆ. ಇನ್‌ಫಾರ್ಮ್‌ ಬ್ಯಾಟರ್‌ ಸಂಜು ಸ್ಯಾಮ್ಸನ್‌ ಅವರನ್ನು ಕೈ ಬಿಟ್ಟಿದ್ದಾರೆ.

ವಿಜಯ ಕರ್ನಾಟಕ 27 Apr 2024 6:44 pm

ಅಲ್ಪ ಬರ ಪರಿಹಾರ ಮೊತ್ತ ಘೋಷಿಸಿದ ಕೇಂದ್ರ ಸರಕಾರದ ವಿರುದ್ಧ ನಾಳೆ(ಎ.28) ಪ್ರತಿಭಟನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : “ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಮಧ್ಯೆ, ಈಗ ಬಿಡುಗಡೆ ಮಾಡಿರುವ ಪರಿಹಾರ ಮೊತ್ತ ಸಾಕು ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾಡ ವಿರೋಧಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಘೋಷಿಸಿರುವ ಬಗ್ಗೆ ಮಾತನಾಡಿದರು.  “ಕೇಂದ್ರ ಸರ್ಕಾರದ ಹಣ ರಾಜ್ಯಕ್ಕೆ ಇನ್ನು ಬಂದಿಲ್ಲ. ಆದರೂ ಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಅವರು ಈ ಮೊತ್ತ ಸಾಕು ಎಂದಿದ್ದಾರೆ. ಇದು ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತವೇ ಹೊರತು, ಇಷ್ಟು ಸಾಕು ಎನ್ನಲು ಇದು ಅವರ ಮನೆ ಆಸ್ತಿಯಲ್ಲ. ಇಂತಹ ಹೇಳಿಕೆ ಕೊಟ್ಟಿರುವ ಕುಮಾರಸ್ವಾಮಿ ನಾಡದ್ರೋಹಿ ಎಂದು ಆಕ್ರೋಶ ಹೊರಹಾಕಿದರು. ನೀವು ಜನಪ್ರತಿನಿಧಿಯಾಗಿ ನಿಮ್ಮ ಮೈತ್ರಿ ಸರ್ಕಾರಕ್ಕೆ ಹೇಳಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡಬೇಕು. ಆದರೆ ಅವರು ಇಷ್ಟು ಪರಿಹಾರ ಸಾಕು ಎಂದು ಹೇಳಿದ್ದಾರೆ. ಇದು ಪಕ್ಷ ಅಥವಾ ರಾಜಕೀಯ ವಿಚಾರವಲ್ಲ. ರಾಜ್ಯಕ್ಕೆ ಆಗುತ್ತಿರುವ ದ್ರೋಹ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಮ್ಮ ರಾಜ್ಯದಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಸೆಪ್ಟೆಂಬರ್ 13, 2023ರಂದು ಸರ್ಕಾರ ಘೋಷಣೆ ಮಾಡಿತ್ತು. ಬರಗಾಲದ ಹಿನ್ನೆಲೆಯಲ್ಲಿ 46 ಲಕ್ಷ ಹೆಕ್ಟೇರ್ ಕೃಷಿ ಭೂಮಿ, 2.06 ಲಕ್ಷ ಹೆಕ್ಟೇರ್ ತೋಟಗಾರಿಕ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಒಟ್ಟಾರೆಯಾಗಿ 35 ಸಾವಿರ ಕೋಟಿಯಷ್ಟು ನಷ್ಟವಾಗಿದ್ದು, ಎನ್ ಡಿಆರ್ ಎಫ್ ಮಾರ್ಗಸೂಚಿ ಅನುಸಾರ ಕರ್ನಾಟಕ ರಾಜ್ಯ ಸರ್ಕಾರ 2024ರ ಸೆಪ್ಟೆಂಬರ್ 22ರಂದು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ಬರ ಪರಿಹಾರ ನೀಡುವಂತೆ ಮನವಿ ಮಾಡಿತ್ತು ಎಂದರು. ಅಕ್ಟೋಬರ್ 25ರಂದು ನಮ್ಮ ಸರ್ಕಾರದ ಸಚಿವರುಗಳು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದರು. ನವೆಂಬರ್ 25ರಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕೇಂದರ ಹಣಕಾಸು ಸಚಿವರನ್ನು ಭೇಟಿ ಮಾಡಿ ತಕ್ಷಣವೇ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು. 19, 20 ಡಿಸೆಂಬರ್ ರಂದು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಪ್ರಧಾನಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು. 2024 ಜನವರಿ 20ರಂದು ಮುಖ್ಯಮಂತ್ರಿಗಳು ಮೋದಿ ಅವರಿಗೆ ಬರ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಿದ್ದಾರೆ ಎಂದು ವಿವರಿಸಿದರು. ಈ ಮಧ್ಯೆ ನರೆಗಾ ಯೋಜನೆಯಲ್ಲಿ 100 ದಿನಗಳ ಕೂಲಿ ದಿನಗಳನ್ನು 150ಕ್ಕೆ ಏರಿಕೆ ಮಾಡಬೇಕು ಎಂಬ ಅವಕಾಶವಿದ್ದರೂ ಕೇಂದ್ರ ಸರ್ಕಾರ ಮಾಡಿಲ್ಲ. ಇದು ಬೇಸರದ ವಿಚಾರ. ಇದರಿಂದ ನಮ್ಮ ರಾಜ್ಯಕ್ಕೆ ಬರಬೇಕಾಗಿದ್ದ ಅವಕಾಶವನ್ನು ಕೇಂದ್ರ ಸರ್ಕಾರ ಕಿತ್ತುಕೊಂಡಿದೆ. ಇದನ್ನು ಮಾಡಿದ್ದರೆ ರಾಜ್ಯದ ಅನೇಕ ಕಾಮಗಾರಿಗಳಿಗೆ ಅವಕಾಶ ಇರುತ್ತಿತ್ತು ಎಂದು ಹೇಳಿದರು. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದ ನೀಡದ ಕಾರಣ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೆವು. ನಂತರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಒಪ್ಪಿಗೆ ನೀಡಿತು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಕೇಂದ್ರ 3,454 ಕೋಟಿ ನೀಡಿದ್ದಾರೆ. ಇದು ಯಾವಾಗ ನಮ್ಮ ಖಾತೆಗೆ ಬರುತ್ತದೆಯೋ ಗೊತ್ತಿಲ್ಲ ಎಂದು ತಿಳಿಸಿದರು. ಬಜೆಟ್ ನಲ್ಲಿ ಘೋಷಿಸಿದ ಹಣ ಯಾಕೆ ಬರಲಿಲ್ಲ? ಕೇಂದ್ರ ಸರ್ಕಾರ ಎಲ್ಲಾ ವಿಚಾರದಲ್ಲೂ ರಾಜ್ಯಕ್ಕೆ ಚೊಂಬು ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ 5400 ಕೋಟಿ ಘೋಷಣೆ ಮಾಡಿದರೂ ರಾಜ್ಯಕ್ಕೆ ಹಣ ಯಾಕೆ ನೀಡಲಿಲ್ಲ. ಮಹಾದಾಯಿ, ಎತ್ತಿನಹೊಳೆ ಯೋಜನೆ ರಾಷ್ಟ್ರೀಯ ಯೋಜನೆ ಮಾಡಲಿಲ್ಲ ಯಾಕೆ?. ಗೆದ್ದರೆ ಒಂದೇ ತಿಂಗಳಲ್ಲಿ ಮೋಕೇದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎನ್ನುತ್ತಾರೆ. ನೀವು ಅವರ ಜತೆ ಕೈಜೋಡಿಸಿದ ದಿನವೇ ಮೇಕೆದಾಟು ಯೋಜನೆಗೆ ಸಹಿ ಹಾಕಿಸಬೇಕಿತ್ತು. ನಮ್ಮ ಹೇರಾಟದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ಅಧಿಕಾರ ಕೊಟ್ಟರೆ ಮಾತ್ರ ರಾಜ್ಯದ ಹಿತದ ಬಗ್ಗೆ ಯೋಚಿಸುತ್ತಾರೆ, ಇಲ್ಲದಿದ್ದರೆ ಯೋಚಿಸುವುದಿಲ್ಲವೇ? ಎಂದು ಪ್ರಶ್ನಿಸಿದರು. ಕೇಂದ್ರದ ವಿರುದ್ಧ ನಾಳೆ ಪ್ರತಿಭಟನೆ: ಕೇಂದ್ರ ಸರ್ಕಾರ ಕರ್ನಾಟಕ ಕೇಳಿರುವ ಪರಿಹಾರ ಮೊತ್ತದಲ್ಲಿ ಅತ್ಯಂತ ಕಡಿಮೆ ಪ್ರಮಾಣವನ್ನು ಪರಿಹಾರವಾಗಿ ಘೋಷಿಸಿದೆ. ಇದು ಆನೆಗೆ ಮೂರು ಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ. ಹೀಗಾಗಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಮ್ಮ ನಾಯಕರೊಂದಿಗೆ ಪ್ರತಿಭಟನೆ ಮಾಡಲಾಗುವುದು. ಇನ್ನು ನಮ್ಮ ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತ ಪಡೆಯಲು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂಧು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು, ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಕೆಪಿಸಿಸಿ ರಾಜಕೀಯ ಹಾಗೂ ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ ಉಪಸ್ಥಿತರಿದ್ದರು.

ವಾರ್ತಾ ಭಾರತಿ 27 Apr 2024 6:36 pm

ಎ.30: ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು: ಪ್ರೆಸ್ ಕ್ಲಬ್ ವತಿಯಿಂದ ಎ.30ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಅಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 27 Apr 2024 6:36 pm

ಬರ ಪರಿಹಾರದಲ್ಲಿ ಕೊರತೆ - ಭಾನುವಾರದಂದು ಕಾಂಗ್ರೆಸ್ ಪುನಃ ಪ್ರತಿಭಟನೆ: ಸಿದ್ದರಾಮಯ್ಯ

ಕೇಂದ್ರದಿಂದ ಬರ ಪರಿಹಾರ ತಡವಾಗಿರುವ ಹಿನ್ನೆಲೆಯಲ್ಲಿ, ಏಪ್ರಿಲ್ 23ರಂದು ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಇದೀಗ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ. ಒಟ್ಟು 18,172 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕೆಂದು ಆಗರ್ಹಿಸಿದ್ದರು. ಏ. 26ರಂದು ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಾಗಿದೆ. ಆದರೆ, 3,454 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಾಗಿದೆ.

ವಿಜಯ ಕರ್ನಾಟಕ 27 Apr 2024 6:28 pm

ಬರ ಪರಿಹಾರಕ್ಕೆ ಮೋದಿಗೆ ಧನ್ಯವಾದ ಹೇಳಿದ ಬಿಜೆಪಿ : ನೆಟ್ಟಿಗರ ಒಂದೊಂದು ರಿಪ್ಲೈಗೆ ಬಿಜೆಪಿ ಬೇಸ್ತು !

Drought Relief To Karnataka : ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರದ ಒಂದು ಭಾಗವನ್ನು ಬಿಡುಗಡೆ ಮಾಡಿದೆ. ಇದಕ್ಕೆ ಕರ್ನಾಟಕ ಬಿಜೆಪಿಯು ಮೋದಿಗೆ ಧನ್ಯವಾದ ಹೇಳಿ ಸಾಮಾಜಿಕ ತಾಣದಲ್ಲಿ ಪೋಸ್ಟ್ ಹಾಕಿತ್ತು, ಅದಕ್ಕೆ ಸಾಕಷ್ಟು ಕಾಮೆಂಟುಗಳು ಬಂದಿವೆ.

ವಿಜಯ ಕರ್ನಾಟಕ 27 Apr 2024 6:15 pm

ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನದ್ದು ನೀಡಲಿ: ಆರ್.ಅಶೋಕ ಆಗ್ರಹ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನದ್ದು ನೀಡಲಿ ಎಂದು ಕಂದಾಯ ಸಚಿವ ಆರ್.ಅಶೋಕ ಆಗ್ರಹಿಸಿದರು. ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ ಎಂದು ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಈ ಕುರಿತಾಗಿ ಏನು ಹೇಳಿದರು ಎಂಬ ವಿವರ ಇಲ್ಲಿದೆ.

ವಿಜಯ ಕರ್ನಾಟಕ 27 Apr 2024 5:47 pm

ಬೆಂಗಳೂರಲ್ಲಿ ಕಡಿಮೆ ಮತದಾನಕ್ಕೆ ಕಾರಣ ಪಟ್ಟಿ ಮಾಡಿದ ಸುರೇಶ್‌ ಕುಮಾರ್‌; ತಮಾಷೆ ಏನಂದ್ರೆ? ನೀವೇ ನೋಡಿ

Suresh Kumar On Low Voter Turnout In Bengaluru : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದಿದೆ. ರಾಜ್ಯಾದ್ಯಂತ ಶೇ.69ರಷ್ಟು ಮತದಾನವಾಗಿದ್ದು, ಬೆಂಗಳೂರು ನಗರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಈ ಬಗ್ಗೆ ರಾಜಾಜಿನಗರದ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್‌ ಕುಮಾರ್‌ ಬೇಸರ ವ್ಯಕ್ತಪಡಿಸಿದ್ದು, ಮತದಾನ ಕಡಿಮೆಯಾಗಲು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ, ಜೊತೆಗೆ ಪರಿಹಾರಗಳನ್ನು ಕೂಡ ಸೂಚಿಸಿದ್ದಾರೆ. ಅವುಗಳಲ್ಲಿ ಒಂದಿಷ್ಟು ಕಾರಣ ಬಹಳ ತಮಾಷೆಯಿಂದ ಕೂಡಿದ್ದು, ನಮ್ಮ ಚುನಾವಣಾ ವ್ಯವಸ್ಥೆಯನ್ನು ಅಣಕಿಸುವಂತೆ ಇವೆ. ಅವುಗಳ ವಿವರ ಇಲ್ಲಿದೆ.

ವಿಜಯ ಕರ್ನಾಟಕ 27 Apr 2024 5:19 pm

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮೈಸೂರಿನ ಲೋಕಸಭಾ ಅಭ್ಯರ್ಥಿಗಳ ಭವಿಷ್ಯ ‘ಭದ್ರ’

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏ. 26ರಂದು ಕರ್ನಾಟಕದ 14 ರಾಜ್ಯಗಳಲ್ಲಿ ಮತದಾನ ನಡೆದಿದೆ. ಅದರಲ್ಲಿ ಮೈಸೂರು ಕೂಡ ಒಂದು. ಮೈಸೂರು ಜಿಲ್ಲೆಯಲ್ಲಿ ಮತದಾನಕ್ಕಾಗಿ ಬಳಸಿದ ಎಲ್ಲಾ ಮತಯಂತ್ರಗಳನ್ನು ಮೈಸೂರಿನ ಮಹಾರಾಣಿ ಕಾಲೇಜಿನ ಕೊಠಡಿಯೊಂದರಲ್ಲಿ ಇರಿಸಲಾಗಿದೆ. ಈ ಸ್ಟ್ರಾಂಗ್ ರೂಮ್ ಗೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಮತಯಂತ್ರಗಳ ಕೊಠಡಿಗೆ ಸೀಲ್ ಹಾಕಲಾಗಿದೆ.

ವಿಜಯ ಕರ್ನಾಟಕ 27 Apr 2024 5:18 pm

ಹುಬ್ಬಳ್ಳಿ - ರಿಷಿಕೇಶ ರೈಲು ಸೇರಿ ನೈರುತ್ಯ ರೈಲ್ವೆಯಿಂದ ಎರಡು ವಿಶೇಷ ರೈಲುಗಳ ಸೇವೆ

ನೈರುತ್ಯ ರೈಲ್ವೆ ವಲಯವು ಹುಬ್ಬಳ್ಳಿಯಿಂದ ಎರಡು ಬೇಸಿಗೆ ರೈಲುಗಳ ಸೇವೆಯನ್ನು ಆರಂಭಿಸಿದೆ. ಏಪ್ರಿಲ್ ಅಂತ್ಯದಿಂದ ಮೇ ಅಂತ್ಯದವರೆಗೆ ಈ ರೈಲುಗಳು ಸೇವೆ ಸಲ್ಲಿಸಲಿವೆ. ಇವುಗಳಲ್ಲಿ ಒಂದು ರೈಲು ಹುಬ್ಬಳ್ಳಿ ಹಾಗೂ ಬಿಹಾರದ ಮುಜಫ್ಫುರ್ ಪುರ್ ನಡುವೆ ಸಂಚರಿಸಿದರೆ, ಮತ್ತೊಂದು ರೈಲು ಹುಬ್ಬಳ್ಳಿ ಹಾಗೂ ಉತ್ತರಾಖಾಂಡದ ರಿಷಿಕೇಶಕ್ಕೆ ಪ್ರಯಾಣ ಬೆಳೆಸಲಿದೆ. ಈ ಎರಡೂ ರೈಲುಗಳು ಹುಬ್ಬಳ್ಳಿಯ ಎಸ್ ಎಸ್ ಎಸ್ ರೈಲು ನಿಲ್ದಾಣದಿಂದ ಪ್ರಯಾಣ ಬೆಳೆಸುತ್ತವೆ.

ವಿಜಯ ಕರ್ನಾಟಕ 27 Apr 2024 5:00 pm

ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಮತ್ತೆ ರಾಜ್ಯದ ರೈತರಿಗೆ ಅನ್ಯಾಯ : ಕೃಷ್ಣ ಬೈರೇಗೌಡ

ಬೆಂಗಳೂರು: ಕೇಂದ್ರದ ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ 18,172 ಕೋಟಿ ರೂ. ಬರ ಪರಿಹಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಕೇವಲ 3498 ಕೋಟಿ ರೂ. ಮಾತ್ರ ಬಿಡುಗಡೆ ಮಾಡುವ ಮೂಲಕ ಮತ್ತೊಮ್ಮೆ ರಾಜ್ಯದ ರೈತರಿಗೆ ಅನ್ಯಾಯ ಎಸಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು. ಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು. “ಪ್ರಸ್ತುತ ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳು ಭೀಕರ ಬರ ಎದುರಿಸುತ್ತಿವೆ. ರೈತರಿಗೆ ಮುಂಗಾರು ಬೆಳೆ ಸಂಪೂರ್ಣ ಕೈಕೊಟ್ಟಿದೆ. ಇನ್ನೂ ಹಿಂಗಾರು ಬೆಳೆಯ ಬಗ್ಗೆಯೂ ನಿರೀಕ್ಷೆ ಇಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯದ ರೈತರ ಬೆನ್ನಿಗೆ ನಿಲ್ಲಬೇಕಾದ ಕೇಂದ್ರ ಸರ್ಕಾರ ನಿಯಮದಂತೆ ನೀಡಬೇಕಾದ ಹಣದ ಶೇ.20 ರಷ್ಟನ್ನು ಮಾತ್ರ ಬಿಡುಗಡೆ ಮಾಡುವ ಮೂಲಕ ರಾಜ್ಯದ ರೈತರ ವಿರುದ್ಧದ ತನ್ನ ಮಲತಾಯಿ ಧೋರಣೆಯನ್ನು ಮುಂದುವರೆಸಿದೆ ಎಂದು ಅಸಮಾಧಾನ ಹೊರಹಾಕಿದರು. ಬರ ಪರಿಹಾರ ನಮ್ಮ ಹಕ್ಕು. ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ನಿಯಮದ ಅನ್ವಯವೇ ನಾವು ಮನವಿ ಸಿದ್ದಪಡಿಸಿ ಸಲ್ಲಿಸಿದ್ದೆವು. ಇದರ ಅನ್ವಯ ರಾಜ್ಯಕ್ಕೆ ಕನಿಷ್ಠ 18,172 ಕೋಟಿ ರೂ. ಬರ ಪರಿಹಾರ ಬಿಡುಗಡೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಕೇವಲ 3498 ಕೋಟಿ ರೂ. ಮಾತ್ರ ಬಿಡುಗಡೆಗೊಳಿಸಿದೆ. ಈ ಮೂಲಕ ಕರ್ನಾಟಕದ ಹಕ್ಕಿಗೆ ಕೇಂದ್ರ ಸರ್ಕಾರ ಕಿಂಚಿತ್ತೂ ಬೆಲೆ ನೀಡದಿರುವುದು ಸ್ಪಷ್ಟವಾಗಿದ್ದು, ಉಳಿದ ಹಣವನ್ನು ಕೇಂದ್ರ ಬಿಡುಗಡೆ ಮಾಡುವ ವರೆಗೆ ರಾಜ್ಯದ ಹೋರಾಟ ಮುಂದುವರೆಯಲಿದೆ ಎಂದು ಅವರು ತಿಳಿಸಿದರು. ಪರಿಹಾರ ನೀಡಿದ್ದು ಕೇಂದ್ರವಲ್ಲ, ಕೋರ್ಟ್! ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿರುವುದು ಸುಪ್ರೀಂ ಕೋರ್ಟ್ ವಿನಃ ಕೇಂದ್ರ ಸರ್ಕಾರವಲ್ಲ. ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಯಾವುದೇ ಉದ್ದೇಶವೂ ಅವರಿಗೆ ಇದ್ದಂತಿರಲಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. “ರಾಜ್ಯ ಸರ್ಕಾರ ಬರ ಘೋಷಿಸಿ ಸೆ.22 ರಂದೇ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿತ್ತು. ಕೇಂದ್ರದಿಂದ ತಂಡ ರಾಜ್ಯಕ್ಕೆ ಆಗಮಿಸಿ ಅ.4 ರಿಂದ 9ರ ವರೆಗೆ 13 ಜಿಲ್ಲೆ ಪ್ರವಾಸ ಮಾಡಿ, ಕೇಂದ್ರ ಕೃಷಿ- ಗೃಹ ಸಚಿವಾಲಯಕ್ಕೆ ಒಂದೇ ವಾರದಲ್ಲಿ ವರದಿ ಸಲ್ಲಿಸಿತ್ತು. ನ.13ಕ್ಕೆ ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ಶಿಫಾರಸುಗಳೂ ಗೃಹ ಸಚಿವರ ಕಚೇರಿಗೆ ತಲುಪಿವೆ. ಆದರೆ, ಗೃಹ ಕಚೇರಿಯಲ್ಲಿ ಉದ್ದೇಶಪೂರ್ವಕವಾಗಿ ರಾಜ್ಯದ ಮನವಿ ಪರಿಗಣಿಸದೆ ವಿಳಂಭ ಧೋರಣೆ ಅನುಸರಿಸಲಾಗಿತ್ತು ಎಂದು ಅವರು ಆರೋಪಿಸಿದರು. ರಾಜ್ಯದ ರೈತರಿಗೆ ಅನ್ಯಾಯವಾದಾಗ ಕೈಕಟ್ಟಿ ಕೂರಬಾರದು ಎಂಬ ಕಾರಣಕ್ಕೆ ಸರ್ಕಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ನ್ಯಾಯಾಲಯದ ಎರಡು ಹಿಯರಿಂಗ್‌ನಲ್ಲೂ ನಮ್ಮ ಬರ ಪರಿಹಾರದ ಮನವಿಯ ಬಗ್ಗೆ ನ್ಯಾಯಾಧೀಶರಾಗಲಿ ಅಥವಾ ಕೇಂದ್ರ ಸರ್ಕಾರದ ಪರ ವಕೀಲರಾಗಲಿ ಪ್ರಶ್ನೆ ಮಾಡಿಲ್ಲ. ಇದರ ಅರ್ಥ ನಾವು ಕೊಟ್ಟ ಮನವಿ ಕರಾರುವಕ್ಕಾಗಿತ್ತು, ಕಾನೂನು ಬದ್ಧವಾಗಿತ್ತು ಎಂಬುದನ್ನು ಸೂಚಿಸುತ್ತದೆ ಎಂದರು. ಅಲ್ಲದೆ, ಸ್ವತಃ ಕೇಂದ್ರ ಸರ್ಕಾರದ ವಕೀಲರು ಕೋರ್ಟ್‌ನಲ್ಲಿ ಕೈಮುಗಿದು, ನಮಗೆ ಈ ವಾದವೇ ಬೇಡ ನಾವು ಶೀಘ್ರದಲ್ಲಿ ಕರ್ನಾಟಕದ ಬರ ಮನವಿ ಮೇಲೆ ನಿರ್ಧಾರ ತೆಗೆದುಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ಅದರ ಅನ್ವಯ ಇಂದು ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ಇದು ಸರ್ವೋಚ್ಚ ನ್ಯಾಯಾಲಯದಿಂದ ರಾಜ್ಯಕ್ಕೆ ಕಲ್ಪಿಸಲ್ಪಟ್ಟ ನ್ಯಾಯವೇ ವಿನಃ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವುದಲ್ಲ ಎಂದು ಅವರು ಪುನರುಚ್ಚರಿಸಿದರು. ಕೇಂದ್ರದಿಂದಲೇ ನಿಯಮ ಉಲ್ಲಂಘನೆ ಕೇಂದ್ರ ಸರ್ಕಾರ ಇಂದು ರಾಜ್ಯಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಈ ಬಗ್ಗೆ ರಾಜ್ಯಕ್ಕೆ ಮಾಹಿತಿ ಇಲ್ಲ. ನಿಯಮದಂತೆ ಮೊದಲು ರಾಜ್ಯಕ್ಕೆ ಕೇಂದ್ರ ಹಣಕಾಸು ಇಲಾಖೆಯಿಂದ ಪತ್ರ ಬರಬೇಕು. ಆದರೆ, ಈ ನಿಯಮವನ್ನು ಪಾಲಿಸದೆ ಬರ ಪರಿಹಾರ ಬಿಡುಗಡೆ ಅಧಿಸೂಚನೆಯನ್ನು ಮೊದಲು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ. ನಮಗೂ ಸಾಮಾಜಿಕ ಮಾಧ್ಯಮಗಳ ಮೂಲಕವೇ ವಿಷಯ ತಿಳಿದಿದ್ದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ವಾರದಲ್ಲಿ ರೈತರಿಗೆ ಪರಿಹಾರ, ಕಾನೂನು ಕ್ರಮ ಮುಂದುವರಿಕೆ ಬರ ಪರಿಹಾರ ಹಣ ರಾಜ್ಯದ ಖಾತೆಗೆ ವರ್ಗಾಯಿಸುತ್ತಿದ್ದಂತೆ ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರಿಗೂ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಅಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಕಾನೂನು ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಿದ್ದು, ಶೇ.20 ರಷ್ಟು ಹಣ ಮಾತ್ರ ಬರ ಪರಿಹಾರದ ರೂಪದಲ್ಲಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಬಾಕಿ ಹಣದ ಬಗ್ಗೆ ಯಾವುದೇ ಉಲ್ಲೇಖಗಳಿಲ್ಲ. ಹೀಗಾಗಿ ಕೇಂದ್ರದಿಂದ ಬಾಕಿ ಹಣ ಪಡೆಯುವವರೆಗೆ ರಾಜ್ಯ ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಾರ್ತಾ ಭಾರತಿ 27 Apr 2024 4:46 pm

ಸಂದೇಶಖಾಲಿ ಸಿಬಿಐ ದಾಳಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಕೊಲ್ಕತ್ತಾ: ಸಂದೇಶಖಾಲಿಯಲ್ಲಿ ಖಾಲಿ ಸ್ಥಳವೊಂದರಲ್ಲಿ ಸಿಬಿಐ ಚುನಾವಣಾ ದಿನವಾದ ಎಪ್ರಿಲ್‌ 26ರಂದು ದಾಳಿ ನಡೆಸಿದೆ ಎಂದು ಆರೋಪಿಸಿ ಸಿಬಿಐ ಹಾಗೂ ಎನ್‌ಎಸ್‌ಜಿ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಸರ್ಕಾರವು ಚುನಾವಣಾ ಆಯೋಗಕ್ಕೆ ದೂರಿದೆ. ಈ ದಾಳಿಯ ವೇಳೆ ವಶಪಡಿಸಿಕೊಳ್ಳಲಾಗಿದೆಯೆನ್ನಲಾದ ಶಸ್ತ್ರಾಸ್ತ್ರಗಳು ಅಲ್ಲಿಯೇ ಇದ್ದವೇ ಅಥವಾ ಅವುಗಳನ್ನು ಅಲ್ಲಿ ಉದ್ದೇಶಪೂರ್ವಕವಾಗಿ ಇರಿಸಿ ನಂತರ ವಶಪಡಿಸಿಕೊಳ್ಳಲಾಗಿತ್ತೇ ಎಂದು ನಿಶ್ಚಿತವಾಗಿ ತಿಳಿಯುವ ಹಾದಿಯಿಲ್ಲ ಎಂದು ದೂರಿನಲ್ಲಿ ಸರ್ಕಾರ ಹೇಳಿದೆ. “ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದರೂ ರಾಜ್ಯ ಸರ್ಕಾರ ಅಥವಾ ಪೊಲೀಸರಿಗೆ ಯಾವುದೇ ಪೂರ್ವ ಸೂಚನೆ ನೀಡಿದೆ ಸಿಬಿಐ ದಾಳಿ ನಡೆದಿದೆ. ಸಿಬಿಐಗೆ ಅಗತ್ಯವಿದ್ದಿದ್ದರೆ ರಾಜ್ಯ ಪೊಲೀಸ್‌ ಪಡೆ ಬಳಿ ಬಾಂಬ್‌ ನಿಷ್ಕ್ರಿಯ ದಳವಿರುವುದರಿಂದ ಈ ಕಾರ್ಯಾಚರಣೆಗೆ ಅದು ಸಹಕರಿಸಬಹುದಿತ್ತು,” ಎಂದು ದೂರಿನಲ್ಲಿ ಹೇಳಲಾಗಿದೆ. ಉಚ್ಚಾಟಿತ ಟಿಎಂಸಿ ನಾಯಕ ಶೇಖ್‌ ಶಹಜಹಾನ್‌ ಅವರ ಸಮೀಪವರ್ತಿಗೆ ಸಂದೇಶಖಾಲಿಯಲ್ಲಿ ಸೇರಿದ ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಪೊಲೀಸ್‌ ಸರ್ವಿಸ್‌ ರಿವಾಲ್ವರ್‌ ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಶುಕ್ರವಾರ ಹೇಳಿದ ನಂತರದ ಬೆಳವಣಿಗೆ ಇದಾಗಿದೆ. ಶೇಖ್‌ ಅವರು ನೀಡಿದ್ದಾರೆನ್ನಲಾದ ಪ್ರಚೋದನೆಯಿಂದ ಗುಂಪೊಂದು ಜನವರಿಯಲ್ಲಿ ಇಡಿ ತಂಡದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಶುಕ್ರವಾರದ ಕಾರ್ಯಾಚರಣೆ ನಡೆದಿತ್ತು. ಶೋಧ ನಡೆದ ಮನೆಯ ಮಾಲೀಕ ಅಬು ತಾಲಿಬ್‌ ಮೊಲ್ಲಾಹ್‌, ಮನೆಯಲ್ಲಿ ಇಷ್ಟೊಂದು ಪ್ರಮಾಣದ ಶಸ್ತ್ರಾಸ್ತ್ರ ಏಕೆ ಸಂಗ್ರಹಿಸಲಾಗಿತ್ತೆಂದು ತಿಳಿದು ಬಂದಿಲ್ಲ ಎಂದಿದ್ದರು. ಈ ಕುರಿತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿ, ಟಿಎಂಸಿಯನ್ನು ಉಗ್ರ ಸಂಘಟನೆ ಎಂದು ಘೋಷಿಸಬೇಕು ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದರು.

ವಾರ್ತಾ ಭಾರತಿ 27 Apr 2024 4:42 pm

ಸೋನಿಯಾ ಗಾಂಧಿಯಿಂದಲೇ ನನ್ನನ್ನು ಏನು ಮಾಡೋಕೆ ಆಗ್ಲಿಲ್ಲ, ನಿಂಗೇನ್‌ ಮಾಡೋಕಾಗುತ್ತೆ : ತಂಗಡಗಿಗೆ ಜನಾರ್ದನ ರೆಡ್ಡಿ ಟಾಂಗ್‌

Janardhan Reddy On Shivaraj Tangadagi : ಕೊಪ್ಪಳ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಕಣ ರಂಗೇರಿದೆ. ಇದರ ನಡುವೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ ತಂಗಡಗಿ ನಡುವೆ ವಾಕ್ಸಮರವೂ ಜೋರಾಗಿದೆ. ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೋ? ಕಂತ್ರಿ ಎನ್ನಬೇಕೋ? ಎಂದು ಜನಾರ್ನದ ರೆಡ್ಡಿ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ತಂಗಡಗಿ, ಜನಾರ್ದನ ರೆಡ್ಡಿಯನ್ನು ಬೆತ್ತಲೆಯಾಗಿ ನಿಲ್ಲಿಸುತ್ತೇನೆ ಎಂದಿದ್ದರು. ಇದಕ್ಕೆ ಕಿಡಿಕಾರಿರುವ ಜನಾರ್ದನ ರೆಡ್ಡಿ, ಸೋನಿಯಾ ಗಾಂಧಿಯಿಂದಲೇ ಏನು ಮಾಡೋಕೆ ಆಗ್ಲಿಲ್ಲ, ನಿನಗೇನು ಮಾಡೋಕಾಗುತ್ತದೆ ಎಂದು ತಂಗಡಗಿಗೆ ಟಾಂಗ್‌ ನೀಡಿದ್ದಾರೆ.

ವಿಜಯ ಕರ್ನಾಟಕ 27 Apr 2024 4:33 pm

ಮತಗಟ್ಟೆ ಧ್ವಂಸ ಪ್ರಕರಣ | ಚಾಮರಾಜನಗರದ ಒಂದು ಮತಗಟ್ಟೆಗೆ ಎ.29ರಂದು ಮರುಮತದಾನ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಒಂದು ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ. ಚುನಾವಣೆ ಬಹಿಷ್ಕರಿಸಿ ಗ್ರಾಮಸ್ಥರು ಮತಗಟ್ಟೆಯ ಮೇಲೆ ದಾಳಿ ಮಾಡಿ ಮತಗಟ್ಟೆಯನ್ನು ಪುಡಿಗುಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮತದಾನ ಸ್ಥಗಿತಗೊಂಡಿತ್ತು. ಈ ಮತಗಟ್ಟೆಗೆ ಎ.29 ರಂದು(ಸೋಮವಾರ) ಬೆಳಗ್ಗೆ 7.00 ರಿಂದ ಸಂಜೆ 6.00 ರವರೆಗೆ ಮರುಮತದಾನ ನಡೆಯಲಿದೆ. ಹನೂರಿನ ಮತಗಟ್ಟೆ ಸಂಖ್ಯೆ 146 ರಲ್ಲಿ ಈ ಘಟನೆ ಸಂಭವಿಸಿತ್ತು.  

ವಾರ್ತಾ ಭಾರತಿ 27 Apr 2024 4:31 pm

Profitable Crop: ಅಳಿವಿನಂಚಿನಲ್ಲಿರುವ ಈ ಸಸಿಯ ಕೃಷಿ ನೀವು ಮಾಡಿದರೆ ಎಕರೆಗೆ 10-12 ಲಕ್ಷ ರೂಪಾಯಿ ಲಾಭ ಗ್ಯಾರೆಂಟಿ

ಮಾಕಳಿ ಬೇರಿನ (Decalepis Hamiltonii Root) ಸಸ್ಯವನ್ನು ಕೆಂಪು ಮಿಶ್ರಿತ ಮರಳು ಮಣ್ಣಿನಲ್ಲಿ ಕೃಷಿ ಮಾಡಬೇಕು. ಭೂಮಿ ಹದಮಾಡಿ ಬಳಿಕ ಅದಕ್ಕೆ ಕೊಟ್ಟಿಗೆ ಗೊಬ್ಬರ ಹಾಗೂ ಮಜ್ಜಿಗೆ ಹಾಕಿ ಫಲವತ್ತತೆ ಕಾಯುವಂತೆ ನೋಡಿಕೊಳ್ಳಬೇಕು. 4-6ಅಡಿ ಅಂತರದಲ್ಲಿ ಏರು ಮಡಿ ಮಾಡಿ ಗಿಡ ಬೆಳೆಯಬೇಕು. ಒಂದು ಎಕರೆಗೆ 10-15 ಸಾವಿರ ಸಸಿ ನಾಟಿ ಮಾಡಬಹುದು. The post Profitable Crop: ಅಳಿವಿನಂಚಿನಲ್ಲಿರುವ ಈ ಸಸಿಯ ಕೃಷಿ ನೀವು ಮಾಡಿದರೆ ಎಕರೆಗೆ 10-12 ಲಕ್ಷ ರೂಪಾಯಿ ಲಾಭ ಗ್ಯಾರೆಂಟಿ appeared first on Karnataka Times .

ಕರ್ನಾಟಕ ಟೈಮ್ಸ್ 27 Apr 2024 4:29 pm

ಎ. 28ರಂದು ಬಜ್ಪೆಯ ‘ಫಾರ್ಚೂನ್ ಗ್ಯಾಲಕ್ಸಿ’ ವಸತಿ- ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ

ಮಂಗಳೂರು, ಎ. 27: ಮೂಡುಬಿದಿರೆಯ ಪ್ರತಿಷ್ಠಿತ ಫಾರ್ಚೂನ್ ಪ್ರಮೋಟರ್ಸ್‌ ಬಜ್ಪೆಯಲ್ಲಿ ನಿರ್ಮಿಸಲಿರುವ ‘ಫಾರ್ಚೂನ್ ಗ್ಯಾಲಕ್ಸಿ ’ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ ಎ. 28ರಂದು ಸಂಜೆ 5.30ಕ್ಕೆ ನಡೆಯಲಿದೆ. ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸಲಿದ್ದು, ಮುಖ್ಯ ಅತಿಥಿಯಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಭಾಗವಹಿಸಲಿದ್ದಾರೆ. ಶಾಸಕರಾದ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೋ, ಮೂಡಬಿದಿರೆಯ ಎಂಸಿಎಸ್ ಬ್ಯಾಂಕ್‌ನ ಸಿಇಒ ಎಂ. ಚಂದ್ರಶೇಖರ್, ಬಜ್ಪೆ ಪಂಚಾಯತ್‌ನ ಮಾಜಿ ಅಧ್ಯಕ್ಷ ಸಾಹುಲ್ ಹಮೀದ್ ಮೊದಲಾದವರು ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವ್ಯಾಪ್ತಿಯ ಬಜ್ಪೆ ನಗರದಲ್ಲಿ ನಿರ್ಮಾಣವಾಗಿರುವ ಈ ಫಾರ್ಚೂನ್ ಗ್ಯಾಲಕ್ಸಿ ವಸತಿ ಸಮುಚ್ಚಯ ಎಲ್ಲ ವರ್ಗದ ಜನರಿಗೆ ಸೂಕ್ತವಾದ ವಸತಿ ಸೌಲಭ್ಯವನ್ನು ಹೊಂದಿದೆ. ನಿರ್ಮಾಣ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಇರುವ ಫಾರ್ಚೂನ್ ಪ್ರಮೋಟರ್ಸ್ ಮೂಡುಬಿದಿರೆ, ಕಾರ್ಕಳ ಹಾಗು ಬಜಗೋಳಿಗಳಲ್ಲಿ ಉತ್ತಮ ಗುಣಮಟ್ಟದ ವಾಣಿಜ್ಯ ಮತ್ತು ವಸತಿ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಈಗಾಗಲೇ ಐದು ಯೋಜನೆಗಳನ್ನು ಪೂರ್ಣಗೊಳಿಸಿ ಇನ್ನೂ ಮೂರು ಯೋಜನೆಗಳು ಮಂಗಳೂರು, ಬಜ್ಪೆ ಹಾಗು ಕಾರ್ಕಳಗಳಲ್ಲಿ ಪ್ರಗತಿಯಲ್ಲಿವೆ. ಪ್ರೀಮಿಯಂ ವಸತಿ ಮತ್ತು ವಾಣಿಜ್ಯ ಯೋಜನೆಯ ಗ್ಯಾಲಕ್ಸಿ ಸಂಕೀರ್ಣವು ಒಟ್ಟು ನಾಲ್ಕು ಮಹಡಿಗಳಲ್ಲಿ ಆಕರ್ಷಕ ವಿನ್ಯಾಸದಲ್ಲಿ 2 ಮತ್ತು 3 ಬೆಡ್‌ರೂಮ್ ಅಪಾರ್ಟ್‌ಮೆಂಟ್‌ ಗಳು, ವಾಣಿಜ್ಯ ಸ್ಥಳ, ಅತ್ಯಾಧುನಿಕ ಸೌಕರ್ಯಗಳು, ಅತ್ಯುತ್ತಮ ಫಿನಿಶಿಂಗ್ ಜೊತೆ ನಿರ್ಮಾಣವಾಗಲಿದೆ. ಫಾರ್ಚೂನ್ ಗ್ಯಾಲಕ್ಸಿಯಲ್ಲಿ ನೀಡಲಾಗುವ ವಾಣಿಜ್ಯ ಸ್ಥಳವು ಅತ್ಯಾಧುನಿಕವಾಗಿದ್ದು, ವಿಶಾಲವಾದ ಪಾರ್ಕಿಂಗ್ ಸೌಲಭ್ಯವನ್ನೂ ಹೊಂದಿದೆ. ಫಾರ್ಚೂನ್ ಗ್ಯಾಲಕ್ಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯಂತ ಸಮೀಪದಲ್ಲಿದ್ದು , ಸುತ್ತಮುತ್ತ ವಿಶೇಷ ಶ್ರೇಣಿಯ ಶಾಪಿಂಗ್ ಮಳಿಗೆಗಳು , ರೆಸ್ಟೋರೆಂಟ್, ಶಾಲೆಗಳು, ಆರೋಗ್ಯ ಹಾಗೂ ಧಾರ್ಮಿಕ ಕೇಂದ್ರಗಳು ಮತ್ತು ಸಾಂಸ್ಕೃತಿಕ ಆಕರ್ಷಣೆಗಳಿಂದ ಕೂಡಿದೆ ಎಂದು ಫಾರ್ಚೂನ್ ಪ್ರಮೋಟರ್ಸ್‌ನ ಪಾಲುದಾರರಾದ ಅಬುಲ್ ಅಲಾ ಪುತ್ತಿಗೆ, ರೋನಿ ಫೆರ್ನಾಂಡಿಸ್, ಮಹೇಂದ್ರ ವರ್ಮಾ, ಡೆನಿಸ್ ಪಿರೇರಾ ಹಾಗು ‘ಫಾರ್ಚೂನ್ ಗ್ಯಾಲಕ್ಸಿ ’ ಯೋಜನೆಯ ಕೋ ಪ್ರಮೋಟರ್ ಹಸನ್ ಅಬ್ಬಾಸ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಭಾರತಿ 27 Apr 2024 4:24 pm

ಕೆಕೆಆರ್‌ ವಿರುದ್ದ ದಾಖಲೆಯ ಚೇಸ್‌ ಮಾಡಿ ಹಲವು ದಾಖಲೆ ಬರೆದ ಪಂಜಾಬ್‌ ಕಿಂಗ್ಸ್‌!

Kolkata Knight Riders vs Punjab Kings: ಶುಕ್ರವಾರ ಕೋಲ್ಕತಾದ ಈಡನ್‌ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 42ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್ ನಡುವಣ ಹೈಸ್ಕೋರಿಂಗ್ ಪಂದ್ಯ ಭರ್ಜರಿ ರಸದೌತಣ ಉಣಬಿಡಿಸಿತ್ತು. ಕೆಕೆಆರ್‌ ನೀಡಿದ್ದ 262 ರನ್‌ಗಳ ಗುರಿಯನ್ನು ಪಂಜಾಬ್‌ ಇನ್ನೂ 8 ಎಸೆತಗಳು ಬಾಕಿ ಇರುವಂತೆಯೇ ಚೇಸ್‌ ಮಾಡಿ ದಾಖಲೆ ಬರೆದಿತ್ತು. ಈ ಪಂದ್ಯದಲ್ಲಿ ಮೂಡಿಬಂದ ಹಲವು ದಾಖಲೆಗಳನ್ನು ಇಲ್ಲಿ ವಿವರಿಸಲಾಗಿದೆ.

ವಿಜಯ ಕರ್ನಾಟಕ 27 Apr 2024 4:13 pm

Electric Car: ಭಾರತದಲ್ಲಿ ಅತ್ಯಂತ ಶೀಘ್ರದಲ್ಲಿ ಬರಲಿದೆ 1200Km ಮೈಲೇಜ್ ನೀಡುವ ಎಲೆಕ್ಟ್ರಿಕ್ ಕಾರು! ಅತೀ ಕಡಿಮೆ ಬೆಲೆ

ಈ Bestune Shaoma Electric Car ನ ಒಳ ವಿನ್ಯಾಸ ಕೂಡ ಸಾಕಷ್ಟು ಆಕರ್ಷಕವಾಗಿದೆ. ಸ್ವಲ್ಪ ಚಿಕ್ಕದಾಗಿದ್ದರೂ ಕೂಡ ಈ ಕಾರು ಸಾಕಷ್ಟು ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತದೆ. FME ಪ್ಲಾಟ್ ಫಾರ್ಮ್ ಬೇಸ್ ಮೇಲೆ ಈ ವಾಹನವನ್ನು ನಿರ್ಮಾಣ ಮಾಡಲಾಗಿದ್ದು 1200 ಕಿಲೋಮೀಟರ್ಗಳ ಭರ್ಜರಿ ರೇಂಜ್ ನೀಡುತ್ತದೆ. ಪವರ್ಫುಲ್ 20 ಕಿಲೋ ವ್ಯಾಟ್ ಬ್ಯಾಟರಿ ಅಳವಡಿಸಲಾಗಿದೆ. ಡ್ರೈವರ್ ಸೀಟ್ ನಲ್ಲಿ ಏರ್ ಬ್ಯಾಗ್ ಅಳವಡಿಸಲಾಗಿದೆ. The post Electric Car: ಭಾರತದಲ್ಲಿ ಅತ್ಯಂತ ಶೀಘ್ರದಲ್ಲಿ ಬರಲಿದೆ 1200Km ಮೈಲೇಜ್ ನೀಡುವ ಎಲೆಕ್ಟ್ರಿಕ್ ಕಾರು! ಅತೀ ಕಡಿಮೆ ಬೆಲೆ appeared first on Karnataka Times .

ಕರ್ನಾಟಕ ಟೈಮ್ಸ್ 27 Apr 2024 4:08 pm

ಚುನಾವಣಾ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪರವಾನಿಗೆ ಕಳೆದುಕೊಂಡ ಪಡಿತರ ಅಂಗಡಿ ಮಾಲಿಕ; ವರದಿ

ಜಮ್ಮು: ಜಮ್ಮು ವಿಭಾಗದ ರಂಬಾನ್‌ನ ಪಡಿತರ ಅಂಗಡಿಯ ಮಾಲಿಕರೋರ್ವರು ಕೇವಲ ಚುನಾವಣಾ ರ್‍ಯಾಲಿಯೊಂದರಲ್ಲಿ ಪಾಲ್ಗೊಂಡಿದ್ದಕ್ಕಾಗಿ ತನ್ನ ಅಂಗಡಿಯ ಪರವಾನಿಗೆಯನ್ನೇ ಕಳೆದುಕೊಂಡಿದ್ದಾರೆ. ಘಟನೆ ಈ ತಿಂಗಳ ಆರಂಭದಲ್ಲಿ ನಡೆದಿದ್ದು, ರಂಬಾನ್‌ನಲ್ಲಿ ನ್ಯಾಯಬೆಲೆ ಅಂಗಡಿಯನ್ನು ನಡೆಸುತ್ತಿರುವ ಬಶೀರ್ ಅಹ್ಮದ್ ಉಧಮಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬನಿಹಾಲ್‌ನಲ್ಲಿ ನಡೆದಿದ್ದ ಚುನಾವಣಾ ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಅವರ ಅಂಗಡಿಯ ಪರವಾನಿಗೆಯನ್ನು ಅಮಾನತುಗೊಳಿಸಿದ್ದು ಮಾತ್ರವಲ್ಲ,ಅವರ ವಿರುದ್ಧ ವಿಚಾರಣೆಗೂ ಆದೇಶಿಸಲಾಗಿದ್ದು 10 ದಿನಗಳಲ್ಲ ವರದಿಯನ್ನು ಸಲ್ಲಿಸುವಂತೆ ರಂಬಾನ್‌ನ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಸೂಚಿಸಲಾಗಿದೆ. ಅವರು ರ್‍ಯಾಲಿಯಲ್ಲಿ ಭಾಗವಹಿಸಿದ್ದನ್ನು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ ಎಂದು telegraphindia.com ವರದಿ ಮಾಡಿದೆ. ಸರಕಾರಿ ನ್ಯಾಯಬೆಲೆ ಅಂಗಡಿ ಮಾಲಿಕರು ನಿರ್ದಿಷ್ಟ ಪ್ರಾದೇಶಿಕ ವ್ಯಾಪ್ತಿಯಲ್ಲಿನ ಜನರಿಗೆ ವಿತರಿಸಲು ತಮಗೆ ನೀಡಲಾಗಿರುವ ಆಹಾರ ಧಾನ್ಯಗಳ ಪಾಲಕರಾಗಿರುವುದರಿಂದ ನಿರ್ದಿಷ್ಟ ಅಭ್ಯರ್ಥಿ ಅಥವಾ ಪಕ್ಷದ ಪರ ಒಲವು ತೋರಿಸುವ ಆತಂಕವಿದೆ. ಚುನಾವಣಾ ನೀತಿಸಂಹಿತೆಯು ಜಾರಿಯಲ್ಲಿರುವಾಗ ಇಂತಹ ಕೃತ್ಯವು ಭಾರತೀಯ ಚುನಾವಣಾ ಆಯೋಗವು ಪ್ರಕಟಿಸಿರುವ ಮಾರ್ಗಸೂಚಿಗಳ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಜನ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆಗಾಗಿ ಅಹ್ಮದ್ ಅವರ ಪರವಾನಿಗೆಯನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಎ.೧೩ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ಗುರುವಾರ ದಿಲ್ಲಿಯಲ್ಲಿ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿರುವ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಮಾಲಿಕರ ಒಕ್ಕೂಟವು, ಈ ವಿಷಯದಲ್ಲಿ ಅವರ ಹಸ್ತಕ್ಷೇಪವನ್ನು ಕೋರಿದೆ. ಅಹ್ಮದ್ ಕೇವಲ ರ್‍ಯಾಲಿಯಲ್ಲಿ ಭಾಗವಹಿಸಿದ್ದರು,ಅವರು ಯಾವುದೇ ರಾಜಕೀಯ ಚಟುವಟಕೆಯಲ್ಲಿ ತೊಡಗಿರಲಿಲ್ಲ ಎಂದು ಒಕ್ಕೂಟವು ವಾದಿಸಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಜಮ್ಮು-ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿಯಿಂದ ಈ ವಿಷಯದಲ್ಲಿ ಇತ್ತೀಚಿನ ಮಾಹಿತಿಯನ್ನು ಕೋರಿದ್ದಾರೆ ಎಂದು ಒಕ್ಕೂಟವು ತಿಳಿಸಿದೆ.

ವಾರ್ತಾ ಭಾರತಿ 27 Apr 2024 4:03 pm

ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ಕೊಡುವವರೆಗೂ ಏಕೆ ರಾಜ್ಯಕ್ಕೆ ಒಂದು ಪೈಸೆಯನ್ನೂ ಕೊಡಲಿಲ್ಲ? ಸಿದ್ದರಾಮಯ್ಯ ಪ್ರಶ್ನೆ

ಮೋದಿಯವರೇ ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದಿದ್ದರು. ಪ್ರತಿಭಟನೆ ಮಾಡಿ ನೂರಾರು ರೈತರು ಮೃತಪಟ್ಟರೂ ಈ ರೈತರ ಸಾವಿನ ಬಗ್ಗೆ ನಿಮಗೆ ಸಣ್ಣ ಕರುಣೆಯೂ ಬರಲಿಲ್ಲ.ಪ್ರಧಾನಿ ನರೇಂದ್ರ ಮೋದಿಯವರೇ, ಡಾಲರ್ ಎದುರು ರೂಪಾಯಿ ಮೌಲ್ಯ ಕಡಿಮೆ ಮಾಡ್ತೀವಿ ಅಂದಿದ್ದರು. ಆದರೆ ಈಗ ಡಾಲರ್ ಎದುರು ರೂಪಾಯಿ ಮೌಲ್ಯ ಯಾವ ಮಟ್ಟಕ್ಕೆ ಏರಿಕೆ ಆಗಿದೆ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಚಿತ. ಈ ರೀತಿಯ 25 ಗ್ಯಾರಂಟಿಗಳು ಜಾರಿಯಾಗಲಿದ್ದು ಈ ಗ್ಯಾರಂಟಿ ಪತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಸಹಿ ಹಾಕಿದ್ದಾರೆ ಎಂದು ಹೇಳಿದರು.

ವಿಜಯ ಕರ್ನಾಟಕ 27 Apr 2024 3:55 pm

ಬರ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ : ಆರ್.ಅಶೋಕ ಆಗ್ರಹ

ಬೆಂಗಳೂರು : ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ‌ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌‌. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ ಎಂದರು. ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳಿವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು‌‌. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ‌‌. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ ಎಂದು ದೂರಿದರು. ಓಲೈಕೆ ರಾಜಕಾರಣ ಮಾಡಿದೆ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿ ಓಲೈಕೆ ರಾಜಕಾರಣ ಮಾಡಿದೆ. ಮುಸ್ಲಿಮರು ಹಲ್ಲೆ ಮಾಡಿದರೆ, ಪಾಕಿಸ್ತಾನ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುವುದಿಲ್ಲ. ದೇಶದ ಸಂಪತ್ತಿನ ಹಕ್ಕು ಮುಸ್ಲಿಮರಿಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು. ಆದ್ದರಿಂದ ಹಿಂದುಳಿದ ವರ್ಗಗಳ ಮತ ಕೇಳುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ನೀಡಬಾರದು ಎಂದು ಹೇಳಲಾಗಿದೆ. ಆದರೆ ಇದನ್ನು ಮೀರಿ ಕಾಂಗ್ರೆಸ್ ಮೀಸಲು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಹಲ್ಲೆ ಸರ್ಜಾಪುರ ನಿವಾಸಿ ಪ್ರಕಾಶ್ ಅವರ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವನು ರೌಡಿ ಶೀಟರ್ ಆಗಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ್ ಅವರ ಮೇಲೂ ಹಲ್ಲೆಯಾಗಿದೆ. ಪೊಲೀಸರು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ವರ್ತಿಸುವುದನ್ನು ಖಂಡಿಸುತ್ತೇನೆ ಎಂದರು. ಸಹೋದರ ಸೋತಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕನಸು ಬಿದ್ದಿದ್ದು, ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ. ಡಿ.ಕೆ.ಸುರೇಶ್ ಅವರನ್ನು ಹೇಗೆ ಎಂಎಲ್ಸಿ ಮಾಡಬೇಕೆಂದು ಅವರು ಚಿಂತಿಸಿದ್ದಾರೆ. ಅವರಿಗೆ ಸೋಲಿನ ಭೀತಿ ಉಂಟಾಗಿರುವುದರಿಂದಲೇ ಪ್ರಚಾರಕ್ಕೆ ಪದೇ ಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಬಿಜೆಪಿಗೆ ಯಾವುದೇ ಭಯವಿಲ್ಲ. ನಮಗೆ 400 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಮೈತ್ರಿಕೂಟದ ಬಹುತೇಕರು ಜೈಲಲ್ಲಿ, ಬೇಲ್ ನಲ್ಲಿ ಇದ್ದಾರೆ. ಫಲಿತಾಂಶದ ಮೊದಲೇ ನಾವು ಒಂದು ಸ್ಥಾನ ಗೆದ್ದಾಗಿದೆ ಎಂದರು. ಡಿಬಿಟಿ ಮೂಲಕವೇ ನೀಡಿ ರಾಜ್ಯ ಸರ್ಕಾರ ದುಡ್ಡು ಹೊಡೆಯಲು ಚೆಕ್ ಮೂಲಕ ಪರಿಹಾರ ನೀಡಬಾರದು‌. ಡಿಬಿಟಿ ಮೂಲಕವೇ ನೇರವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಾರ್ತಾ ಭಾರತಿ 27 Apr 2024 3:53 pm

ವೀರಶೈವ ಲಿಂಗಾಯತರ ಅವನತಿಗೆ ಹುಟ್ಟಿರುವ ಪ್ರಹ್ಲಾದ್ ಜೋಶಿಯನ್ನು ಸೋಲಿಸುವುದೇ ನನ್ನ ಗುರಿ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ:  ಧಾರವಾಡ ಲೋಕಸಭಾ ಚುನಾವಣಾ ಕಾವು ಏರುತ್ತಿರುವ ಮಧ್ಯೆಯೇ ಲೋಕಸಭೆ ಸ್ಪರ್ಧೆಯಿಂದ ಹಿಂದೆ ಸರಿದು ನಾಮಪತ್ರ ವಾಪಸ್ಸು ಪಡೆದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ. ವೀರಶೈವ ಲಿಂಗಾಯತರ ಅವನತಿಗೆ ಹುಟ್ಟಿರುವ ಶಕ್ತಿಯಾದ ಪ್ರಹ್ಲಾದ್ ಜೋಶಿಯನ್ನು ಸೋಲಿಸುವುದೇ ನಮ್ಮ ಧರ್ಮ ಯುದ್ಧ ಎಂದು ಶಿರಹಟ್ಟಿಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಶಿ ಅವರು ಬೆಳೆಸಿದ ನಾಯಕರನ್ನು ತುಳಿಯುವ ಕೆಲಸ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ. ಇಪ್ಪತ್ತು ವರ್ಷಗಳ ಕಾಲ ಇವರು ಏನು ಕೆಲಸ ಮಾಡಿದ್ದಾರೆ ಎಂದು‌ ವಾಗ್ದಾಳಿ ನಡೆಸಿದರು. ಕೇಂದ್ರದಲ್ಲಿ ನಾಮನಿರ್ದೇಶನವನ್ನ ಎಷ್ಟು ಜನರಿಗೆ ಕೊಡಿಸಿದ್ದಾರೆಂಬುದು ಜೋಶಿ ಹಿಂಬಾಲಕರು ಹೇಳಲಿ. ಜೋಶಿಯವರು ತಂದಿರುವ ಅನುದಾನವನ್ನ ಎಲ್ಲಿ ಹಂಚಿಕೆ ಮಾಡಿದ್ದಾರೆಂಬುದು ಸರ್ವೇ ಮಾಡಲಿ. ಕಳೆದ 15 ವರ್ಷಗಳಿಂದ ಒಂದೇ ಒಂದು ಮಠ ಮಂದಿರಗಳಿಗೆ ಅನುದಾನ ಕೊಟ್ಟಿಲ್ಲ. ಜೋಶಿ ಅವರಿಗೆ ಮಾನ ಮರ್ಯಾದೆ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಹಣೆಯ ಮೇಲೆ ಭಸ್ಮ ಹಚ್ಚೋ ಕೆಲಸ ನಾವು ಸಹಿಸಲ್ಲ. ಜೋಶಿ ಅವರು ಸಂಸದರಾದ ನಂತರ ಮಠಗಳು, ನಮ್ಮ ಸಮುದಾಯದವರು ಅದಃಫತನವಾಗಿದ್ದಾರೆ. ಮಠಗಳ ನಡುವೆ ಜೋಶಿ ಒಡೆದಾಳೋ ನೀತಿ ಅನುಸರಿಸುತ್ತಿದ್ದಾರೆ. ಮಠಗಳನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದಾರೆ. ಜೋಶಿ ಅವರ ಸೋಲು ಖಚಿತ. ಸರ್ವೆಯಲ್ಲಿ ಇದು ಬಹಿರಂಗವಾಗಿದೆ ಎಂದರು. ಭದ್ರಾಪುರದಲ್ಲಿ ನಮ್ಮ ಹಿರಿಯ ಸ್ವಾಮೀಜಿ ಶಿರಹಟ್ಟಿ ಮಠದ ಫಕೀರ ಸಿದ್ದರಾಮ ಸ್ವಾಮೀಜಿಯವರನ್ನು ಭೇಟಿ ಮಾಡಿದ ಜೋಶಿ, ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ನಮ್ಮ ಹಿರಿಯ ಸ್ವಾಮೀಜಿಗಳಿಂದ ನನ್ನ ಮೇಲೆ ಒತ್ತಡ ಹಾಕಿದ್ದಾರೆ. ನಮ್ಮ ಹಿರಿಯ ಸ್ವಾಮೀಜಿ ಶಿವಯೋಗಿ ಸಿದ್ದರಾಮ ಮಹಾಸ್ವಾಮಿಗಳನ್ನು ಪದೆ ಪದೇ ಭೇಟಿ ಮಾಡುತ್ತಿದ್ದಾರೆ. ಗುರು ಶಿಷ್ಯರಾದ ನಮ್ಮನ್ನು ಅಗಲಿಸೋ ಕೆಲಸ ಮಾಡುತ್ತಿದ್ದಾರೆ. ಗುರು ಶಿಷ್ಯರಾದ ನಮ್ಮನ್ನು ನೀವು ಅಗಲಿಸಿದ್ರೆ, ದಂಪತಿಗಳಾಗಿರುವ ನಿಮ್ಮನ್ನು ಅಗಲಿಸುವ ಕಾಲ ಬಂದೀತು ಎಂದು ಎಚ್ಚರಿಕೆ ನೀಡಿದರು. ಅನೇಕ ಸ್ವಾಮೀಜಿಗಳನ್ನು ಭೇಟಿ ಮಾಡಿ ಸ್ವಾಮೀಜಿಗಳಿಗೆ ಆಮಿಷ ಒಡ್ಡುವ ಕೆಲಸವನ್ನ ಜೋಶಿ ಮಾಡ್ತಾ ಇದ್ದಾರೆ. ನನ್ನ ಕಡೆ ವಿಡಿಯೋ ಇದೆ.‌ ಅವರಿಗೆ ಜನ ಹಾಕಿರೋ ಶಾಲು ಸ್ವಾಮೀಗಳಿಗೆ ಹಾಕುತ್ತಿದ್ದಾರೆ. ‌ ಚುನಾವಣೆ ಬಂದಾಗ ಮಾತ್ರ ಸ್ವಾಮೀಜಿಗಳು ಬೇಕು. ನಿಮಗೆ ಆತ್ಮಸಾಕ್ಷಿ, ಮಾನ ಮರ್ಯಾದೆ ಇದ್ರೆ, ಯಾಕೆ ನಮ್ಮ ಹಿರಿಯ ಸ್ವಾಮೀಜಿಗಳ ಬಳಿ ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದರು. ಜೋಶಿಯವರು ನೇಹಾ ರಕ್ತದ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಜೋಶಿ ಸ್ವಾರ್ಥಿ. ಇದನ್ನು ಜನರು ಗಮನಿಸಬೇಕು. ಜೋಶಿ ಅವರು ಲಿಂಗಾಯತರ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಲಿಂಗಾಯತರು, ಹಿಂದುಳಿದವರುನ್ನು ತುಳಿದಿರುವುದೇ ಪ್ರಹ್ಲಾದ್ ಜೋಶಿ 20 ವರ್ಷದಲ್ಲಿ ಮಾಡಿದ ದೊಡ್ಡ ಸಾಧನೆ. ತಮ್ಮ ಅಧಿಕಾರದ ಅವಧಿಯಲ್ಲಿ ಜೋಶಿ ಅವರು ಸಮಾಜದ ಎಷ್ಟು ಜನರನ್ನು ಕೆಲಸಕ್ಕೆ ಸೇರಿಸಿದ್ದಾರೆ. ಇದನ್ನು ಬಹಿರಂಗ ಮಾಡಲಿ ಎಂದು ಸವಾಲೆಸೆದರು. ಹುಚ್ಚು ಸಾಹಸ ಕೈ ಬಿಡಬೇಕು. ಜೋಶಿ ಸಂಸದರಾದ ಮೇಲೆ‌ ನಮ್ಮ‌ ಸಂಸ್ಕೃತಿ, ಪರಂಪರೆ ನಾಶ ಆಗಿದೆ. ಮಠಗಳ ಪರಂಪರೆಯ ನಾಶ ಆಗಿದೆ. ನಾನು ಯಾವ ಪಕ್ಷದ ಪರ ಇಲ್ಲ. ನನ್ನ ಗುರಿ ಜೋಶಿಯನ್ನು ಸೋಲಿಸೋದು ಮಾತ್ರ ಎಂದು ಹೇಳಿದರು.  

ವಾರ್ತಾ ಭಾರತಿ 27 Apr 2024 3:43 pm

Fact Check : ಲೋಕಸಭಾ ಎಲೆಕ್ಷನ್‌ ವೇಳೆ ಕರ್ನಾಟಕದಲ್ಲಿ ಇವಿಎಂ ಧ್ವಂಸ! ಈ ಸುದ್ದಿ ನಿಜವಾ? ಇಲ್ಲಿದೆ ಸತ್ಯಾಂಶ

Fact Check On Voter Destroys EVM During Lok Sabha Elections : ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕರ್ನಾಟಕದಲ್ಲಿ ಶುಕ್ರವಾರ ಮತದಾನ ನಡೆದಿದೆ. ಇದರ ಬೆನ್ನಲ್ಲಿಯೇ ವಿಡಿಯೋವೊಂದು ವೈರಲ್‌ ಆಗಿದ್ದು, ಮತದಾರನೊಬ್ಬ ಕರ್ನಾಟಕದಲ್ಲಿ ಇವಿಎಂ ನಾಶಪಡಿಸಿದ್ದಾನೆ ಎಂದು ಹೇಳಲಾಗಿತ್ತು. ಆದರೆ, ನ್ಯೂಸ್‌ ಚೆಕ್ಕರ್‌ ಅದನ್ನು ಪರಿಶೀಲಿಸಿದಾಗ ಅದು ಕಳೆದ ವರ್ಷದ ವಿಡಿಯೋ ಎಂದು ಗೊತ್ತಾಗಿದೆ. ಅದನ್ನು ಈಗ ವೈರಲ್‌ ಮಾಡಲಾಗುತ್ತಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಅದರ ಬಗ್ಗೆ ಮಾಹಿತಿ ಇಲ್ಲಿದೆ.

ವಿಜಯ ಕರ್ನಾಟಕ 27 Apr 2024 3:30 pm

5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ : ಸಿದ್ದರಾಮಯ್ಯ

5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿಂದುಳಿದವರಿಗೆ ನೀಡಲಾದ ಮೀಸಲಾತಿಯ್ನು ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ ಎಂಬುದು ಅಪ್ಪಟ ಸುಳ್ಳು. ರಾಜಕೀಯವಾಗಿ ಬಿಜೆಪಿಯವರು ಈ ರೀತಿ ಮಾಡಲಾಗುತ್ತಿದೆ. ಮತಗಳನ್ನು ಧ್ರುವೀಕರಣ ಮಾಡುವ ಉದ್ದೇಶದಿಂದ ಮೋದಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ. ಎಲ್ಲ ಭಾರತೀಯರ ರಕ್ಷಣೆ ಮಾಡುವುದು ಪ್ರಧಾನಮಂತ್ರಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಹೇಳಿದ್ದಿಷ್ಟು.

ವಿಜಯ ಕರ್ನಾಟಕ 27 Apr 2024 3:01 pm

ನೈನಿತಾಲ್‌ ಪ್ರದೇಶದಲ್ಲಿ ವ್ಯಾಪಿಸುತ್ತಿರುವ ಕಾಡ್ಗಿಚ್ಚು; ಸೇನೆಗೆ ಬುಲಾವ್

ನೈನಿತಾಲ್: ಉತ್ತರಾಖಂಡದ ನೈನಿತಾಲ್‌ ಪ್ರಾಂತ್ಯದಲ್ಲಿ ಕಾಡ್ಗಿಚ್ಚು ಕಳೆದ 36 ಗಂಟೆಗಳಿಗೂ ಹೆಚ್ಚು ಕಾಲದಿಂದ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಭಾರತೀಯ ವಾಯು ಸೇನೆ ಮತ್ತು ಸೇನೆಯನ್ನು ಕರೆಸಲಾಗಿದೆ. ಶುಕ್ರವಾರ ಕಾಡ್ಗಿಚ್ಚು ನೈನಿತಾಲದ ಪೈನ್ಸ್‌ ಪ್ರದೇಶದಲ್ಲಿರುವ ಹೈಕೋರ್ಟ್‌ ಕಾಲನಿಯ ಸಮೀಪವೂ ಹರಡಿದೆ. ಇದರಿಂದ ಈ ಪ್ರದೇಶದಲ್ಲಿ ವಾಹನ ಸಂಚಾರವೂ ಬಾಧಿತವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ವಿವಿಧೆಡೆ 31 ಕಾಡ್ಗಿಚ್ಚು ಪ್ರಕರಣಗಳು ವರದಿಯಾಗಿದ್ದು 33.34 ಹೆಕ್ಟೇರ್‌ ಅರಣ್ಯ ಪ್ರದೇಶ ನಾಶವಾಗಿದೆ. ಭಾರತೀಯ ವಾಯು ಸೇನೆಯ ಎಂಐ-17 ಹೆಲಿಕಾಪ್ಟರ್‌ ಒಂದು ಭೀಮ್ತಲ್‌ ಸರೋವರದಿಂದ ಬಂಬಿ ಬಕೆಟಿನಲ್ಲಿ ನೀರು ಸಂಗ್ರಹಿಸಿ ಪೈನ್ಸ್‌, ಭೂಮಿಯಧರ್‌, ಜ್ಯೋಲಿಕೋಟ್‌, ನಾರಾಯಣ ನಗರ್‌, ಭವಾಲಿ, ರಾಮಘರ್‌ ಮತ್ತು ಮುಕ್ತೇಶ್ವರ ಪ್ರದೇಶಗಳ ಹೊತ್ತಿ ಉರಿಯುವ ಅರಣ್ಯ ಪ್ರದೇಶಗಳ ಮೇಲೆ ಸುರಿದಿದೆ. ಹೈಕೋರ್ಟ್‌ ಕಾಲನಿ ಸಮೀಪದಲ್ಲಿ ಕಾಡ್ಗಿಚ್ಚು ಒಂದು ಹಳೆಯ ಮೆನಯನ್ನು ಆವರಿಸಿದೆ ಆದರೆ ಇತರ ಯಾವುದೇ ಕಟ್ಟಡಗಳಿಗೆ ಹಾನಿಯಾಗದೇ ಇದ್ದರೂ ಕಟ್ಟಡಗಳ ಸಮೀಪವೇ ಬೆಂಕಿ ಹರಡಿದೆ ಎಂದು ಹೈಕೋರ್ಟ್‌ನ ಸಹಾಯಕ ರಿಜಿಸ್ಟ್ರಾರ್‌ ಹೇಳಿದ್ದಾರೆ. ನೈನಿ ಸರೋವರದಲ್ಲಿ ಬೋಟಿಂಗ್‌ ಅನ್ನೂ ನಿಷೇಧಿಸಲಾಗಿದೆ. ಕಳೆದ ವರ್ಷದ ನವೆಂಬರ್‌ 1ರಿಂದ ರಾಜ್ಯದಲ್ಲಿ 575 ಕಾಡ್ಗಿಚ್ಚು ಪ್ರಕರಣಗಳು ವರದಿಯಾಗಿದ್ದು 689.89 ಹೆಕ್ಟೇರ್‌ ಅರಣ್ಯ ಭೂಮಿ ನಾಶಗೊಂಡಿದೆ. ಜಖೋಲಿ ಮತ್ತು ರುದ್ರಪ್ರಯಾಗ್‌ ಎಂಬಲ್ಲಿ ಅರಣ್ಯ ಪ್ರದೇಶಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.

ವಾರ್ತಾ ಭಾರತಿ 27 Apr 2024 2:51 pm

3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಬೀದರ್, ಏ.27: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ, ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ  ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ಎಫ್. ನಿಯಮಾವಳಿಗಳ ರೀತ್ಯ 18,171 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು. ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ 3454 ಕೋಟಿ ರೂ. ಪರಿಹಾರ ಮಾತ್ರ ಘೋಷಿಸಿದೆ. ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಾರ್ತಾ ಭಾರತಿ 27 Apr 2024 2:46 pm

ಮಾರ್ಚ್‌ ತ್ರೈಮಾಸಿಕದಲ್ಲಿ ಮಾರುತಿ ಸುಜುಕಿಗೆ ₹3,877 ಕೋಟಿ ಬಂಪರ್‌ ಲಾಭ, ₹125 ಲಾಭಾಂಶ ಘೋಷಣೆ

ದೇಶದ ಅತಿ ದೊಡ್ಡ ಪ್ರಯಾಣಿಕ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಮಾರ್ಚ್ ತ್ರೈಮಾಸಿಕದಲ್ಲಿ ಅತ್ಯುತ್ತಮ ಫಲಿತಾಂಶವನ್ನು ಪ್ರಕಟಿಸಿದೆ. 2023-24ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ ಶೇಕಡಾ 47.8ರಷ್ಟು ಹೆಚ್ಚಾಗಿದ್ದು 3,877.8 ಕೋಟಿ ರೂಪಾಯಿಗೆ ತಲುಪಿದೆ. ಮಾರಾಟದಲ್ಲಿ ಭಾರೀ ಏರಿಕೆ ಕಂಪನಿಯ ಲಾಭ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಪ್ರತಿ ಷೇರಿಗೆ 125 ರೂಪಾಯಿ ಲಾಭಾಂಶವನ್ನೂ ಘೋಷಿಸಿದೆ.

ವಿಜಯ ಕರ್ನಾಟಕ 27 Apr 2024 2:39 pm

IPL 2024: 'ಬೌಲರ್‌ಗಳನ್ನು ಉಳಿಸಿ'-ಪಂಜಾಬ್‌ ದಾಖಲೆಯ ಚೇಸಿಂಗ್‌ ಬಳಿಕ ಅಶ್ವಿನ್ ಪ್ರತಿಕ್ರಿಯೆ!

R Ashwin on PBKS Record Chasing against KRR: ಶುಕ್ರವಾರ ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ನೀಡಿದ್ದ 262 ರನ್‌ಗಳ ಗುರಿಯನ್ನು ಪಂಜಾಬ್‌ ಕಿಂಗ್ಸ್‌ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಮುಟ್ಟಿತ್ತು. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌ ಐಪಿಎಲ್‌ ಟೂರ್ನಿಯ ಇತಿಹಾಸದಲ್ಲಿ ದಾಖಲೆ ಮೊತ್ತವನ್ನು ಯಶಸ್ವಿಯಾಗಿ ಚೇಸ್‌ ಮಾಡಿರು. ಇದರ ಬೆನ್ನಲ್ಲೆ ರಾಜಸ್ಥಾನ್‌ ರಾಯಲ್ಸ್ ಸ್ಪಿನ್ನರ್‌ ಆರ್‌ ಅಶ್ವಿನ್‌ ಹಾಗೂ ಭಾರತದ ಮಾಜಿ ಆಟಗಾರ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯ ಕರ್ನಾಟಕ 27 Apr 2024 2:36 pm

ಕಲಬುರಗಿ | ಮಾಜಿ ಮೇಯರ್ ಕಾರಿನಲ್ಲಿದ್ದ 2 ಕೋಟಿ ರೂ. ಜಪ್ತಿ

ಕಲಬುರಗಿ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ. ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ವಾರ್ತಾ ಭಾರತಿ 27 Apr 2024 2:20 pm

ಅಮೆರಿಕದಲ್ಲಿ 20 ಅಡಿ ಗಾಳಿಯಲ್ಲಿ ಹಾರಿ ಮರಗಳ ಮೇಲೆ ಬಿದ್ದ ಕಾರು: ಭಾರತ ಮೂಲದ 3 ಮಹಿಳೆಯರ ಸಾವು

US Car Accident Kills Gujarat Women: ಗುಜರಾತ್ ಮೂಲದ ಮೂವರು ಮಹಿಳೆಯರು ಅಮೆರಿಕದ ಸೌತ್ ಕೆರೊಲಿನಾದಲ್ಲಿ ಸಂಭವಿಸಿದ ಭೀಕರ ಎಸ್‌ಯುವಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಕಾರು ಅತಿ ವೇಗದೊಂದಿಗೆ ಮೂರು ನಾಲ್ಕು ಲೇನ್‌ಗಳನ್ನು ಕ್ರಮಿಸಿ, ಸೇತುವೆಯಿಂದ ಸುಮಾರು 20 ಅಡಿ ಎತ್ತರ ಹಾರಿ ಮರಗಳ ಮೇಲೆ ಬಿದ್ದಿದೆ.

ವಿಜಯ ಕರ್ನಾಟಕ 27 Apr 2024 2:14 pm