SENSEX
NIFTY
GOLD
USD/INR

Weather

22    C
... ...View News by News Source

ಸಚಿವ ರಾಜಣ್ಣ ವಿರುದ್ಧ ಹನಿಟ್ರ್ಯಾಪ್ ಆರೋಪ | ಡಿಜಿಪಿಗೆ ತನಿಖಾ ವರದಿ ಸಲ್ಲಿಸಿದ ಎಸ್‌ಐಟಿ?

ಬೆಂಗಳೂರು : ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಕೇಳಿಬಂದ ಹನಿಟ್ರ್ಯಾಪ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ಡಿಜಿಪಿಗೆ ಅಂತಿಮ ವರದಿ ಸಲ್ಲಿಸಿರುವುದಾಗಿ ವರದಿಯಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ಪೂರ್ಣಗೊಳಿಸಿ ಅಂತಿಮ ವರದಿಯನ್ನು ಡಿಜಿ-ಐಜಿಪಿಗೆ ಸಲ್ಲಿಸಿದ್ದು, ಪರಿಶೀಲನೆ ನಂತರ ಗೃಹಮಂತ್ರಿ, ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗೆ ಸಲ್ಲಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. 2025ರ ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಸಚಿವ ಕೆ.ಎನ್.ರಾಜಣ್ಣ ಕೆಲವು ರಾಜಕಾರಣಿಗಳ ವಿರುದ್ಧ ಹನಿಟ್ರ್ಯಾಪ್ ಅಸ್ತ್ರವನ್ನು ಬಳಸಲಾಗುತ್ತಿದೆ. ನನ್ನ ಮೇಲೆ ಕೂಡ ಪ್ರಯೋಗ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸರ್ವಪಕ್ಷದ ಹಲವು ನಾಯಕರು ಸರಕಾರವನ್ನು ಒತ್ತಾಯಿಸಿದ್ದರು. ಬಳಿಕ ಇದನ್ನು ಗಂಭೀರವಾಗಿ ಪರಗಣಿಸಿದ ಸರಕಾರ, ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸುವಂತೆ ಆದೇಶಿಸಿತ್ತು

ವಾರ್ತಾ ಭಾರತಿ 31 May 2025 12:09 am

ಉಪ್ಪಿನಂಗಡಿ | ಬಿಳಿಯೂರು ಅಣೆಕಟ್ಟು: ಎಲ್ಲಾ ಗೇಟು ತೆರವು

ಉಪ್ಪಿನಂಗಡಿ: ಅಕಾಲಿಕ ಮಳೆಯಿಂದಾಗಿ ನದಿ ನೀರಿನ ಹರಿಯುವಿಕೆಯಲ್ಲಿ ಗಣನೀಯ ಹೆಚ್ಚಳವುಂಟಾಗಿ ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ನಿರ್ಮಿಸಲಾದ ಅಣೆಕಟ್ಟಿನ ಗೇಟು ತೆರವು ಕಾರ್ಯಾಚರಣೆಯಲ್ಲಿ ಆಗಿದ್ದ ತೊಡಕನ್ನು ನಿವಾರಿಸಲಾಗಿದ್ದು, ಎಲ್ಲಾ 42 ಗೇಟುಗಳನ್ನು ತೆರವುಗೊಳಿಸಿ ನದಿಯನ್ನು ಸಹಜ ಹರಿಯುವಿಕೆಗೆ ಒಳಪಡಿಸಲಾಗಿದೆ. ಪರಿಸರದಾದ್ಯಂತ ಮಳೆ ಸುರಿದು ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ ಕಂಡು ಬಂದ ಹಿನ್ನೆಲೆಯಲ್ಲಿ ಅಣೆಕಟ್ಟಿನ ಗೇಟು ತೆರವು ಮಾಡಲು ಕಾರ್ಯಾಚರಣೆ ಪ್ರಾರಂಭವಾಗುತ್ತಿದ್ದಂತೆಯೇ ಬಿರುಸು ಪಡೆದ ಮಳೆ ಎಲ್ಲೆಡೆ ಭಾರೀ ಪ್ರಮಾಣದಲ್ಲಿ ಸುರಿದು ನದಿ ಮೈ ತುಂಬಿ ಹರಿಯಲಾರಂಭಿಸಿತ್ತು. ಆ ವೇಳೆ 9 ಗೇಟುಗಳನ್ನು ಪೂರ್ಣ ಪ್ರಮಾಣದಲ್ಲಿ ಮತ್ತು ಆರು ಗೇಟುಗಳನ್ನು ಅಲ್ಪ ಪ್ರಮಾಣದಲ್ಲಿ ತೆರವು ಮಾಡಲಾಗಿತ್ತಾದರೂ, ನದಿಯ ನೀರಿನ ಪ್ರವಾಹಕ್ಕೆ ಉಳಿದ ಗೇಟುಗಳ ತೆರವು ಕಾರ್ಯಾಚರಣೆಗೆ ಅಡೆತಡೆಯುಂಟಾಗಿತ್ತು. ನದಿಯಲ್ಲಿ ಮರದ ದಿಮ್ಮಿಗಳು ಮತ್ತು ಕಸಕಡ್ಡಿಗಳು ಯಥೇಚ್ಚಾ ಪ್ರಮಾಣದಲ್ಲಿ ಹರಿದು ಬಂದು ಅಣೆಕಟ್ಟಿನ ಗೇಟುಗಳಲ್ಲಿ ಸಿಲುಕಿಕೊಂಡಿತ್ತು. ಈ ಎಲ್ಲಾ ಸೂಕ್ಷ್ಮತೆಯ ನಡುವೆ ಗೇಟು ತೆರವು ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಶುಕ್ರವಾರ ಸಂಜೆಯ ವೇಳೆಗೆ ಎಲ್ಲಾ ಗೇಟುಗಳನ್ನು ಸುರಕ್ಷಿತವಾಗಿ ತೆರವುಗೊಳಿಸುವಲ್ಲಿ ಸಫಲರಾದರು. ತನ್ಮೂಲಕ ಮಳೆಗಾಲದ ಸಮಯದಲ್ಲಿ ನದಿ ಸಹಜವಾಗಿ ಹರಿಯುವಂತಾಗಲು ಕ್ರಮ ಕೈಗೊಂಡರು.

ವಾರ್ತಾ ಭಾರತಿ 31 May 2025 12:07 am

ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ಗೆ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ

ಹಾಸನ : ಅಂತರ್‌ರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಗೆ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ಭೇಟಿ ನೀಡಿದ್ದಾರೆ. ಹಾಸನದ ಪೊಲೀಸ್ ಕ್ವಾಟ್ರಸ್ ಸಮೀಪ ಇರುವ ಬಾನು ಮುಷ್ತಾಕ್ ಅವರ ನಿವಾಸಕ್ಕೆ ತೆರಳಿದ ಸಚಿವರು, ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಬಾನು ಮುಷ್ತಾಕ್ ಅವರಿಗೆ ಶಾಲು ಹೊದಿಸಿ ಗೌರವಿಸಲಾಯಿತು. ತಮ್ಮ ಖಾಸಗಿ ಭೇಟಿಯ ಸಂದರ್ಭದಲ್ಲಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ‘ಈ ಸಾಧನೆ ಕರ್ನಾಟಕದ ಹೆಮ್ಮೆ’ ಎಂದು ಹೇಳಿದರು. ಸಚಿವರಿಗೆ ‘ಹಸೀನಾ’ ಎಂಬ ತಮ್ಮ ಸಂಕಲನದ ಕೃತಿಗೆ ಸಹಿ ಮಾಡಿ ಬಾನು ಮುಷ್ತಾಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಶ್ರೇಯಸ್ ಪಟೇಲ್, ಜನಪರ ಹೋರಾಟ ಸಂಘಟನೆಯ ಧರ್ಮೇಶ್, ಪೃಥ್ವಿ , ಹನ್ಶದ್ ಪಾಳ್ಯ, ಹೆತ್ತೂರು ನಾಗರಾಜ್, ತೌಫಿಕ್ ಅಹ್ಮದ್, ರಾಜು ಗೊರೂರು, ಜನೆಕೆರೆ ಯೋಗೇಂದ್ರ, ಧರ್ಮಪ್ಪ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 31 May 2025 12:04 am

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರಕಾರವು ರೂಪಿಸಿದ್ದ, ‘ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ-2024’ಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಇಪ್ಪತ್ತೊಂದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ-ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ಈ ಕಾಯ್ದೆ ನಿಷೇಧಿಸುತ್ತದೆ. ಉಲ್ಲಂಘಿಸಿದವರಿಗೆ 1 ಸಾವಿರ ರೂ. ದಂಡ ವಿಧಿಸಬಹುದಾಗಿದೆ. ಉಪಹಾರ ಗೃಹ, ಪಬ್, ಬಾರ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆನೆಗೆ ಅವಕಾಶ ನೀಡುವುದನ್ನೂ ಈ ಕಾಯ್ದೆ ನಿಷೇಧಿಸುತ್ತದೆ. ಈ ನಿಷೇಧವನ್ನು ಉಲ್ಲಂಘಿಸಿದವರಿಗೆ 50 ಸಾವಿರ ರೂ.ನಿಂದ 1 ಲಕ್ಷ ರೂ.ಗಳವರೆಗೆ ದಂಡ ಮತ್ತು 1 ವರ್ಷದಿಂದ ಮೂರು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಾರ್ತಾ ಭಾರತಿ 31 May 2025 12:03 am

ಕುಂದಾಪುರ: ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಧರಣಿ 5ನೇ ದಿನಕ್ಕೆ

ಕುಂದಾಪುರ: ಇಲ್ಲಿನ ಪುರಸಭೆ ಎದುರು ಪೌರಕಾರ್ಮಿಕರು, ಪೌರ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಶುಕ್ರವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ಪ್ರತಿಭಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ, ಪೌರಾಡಳಿತ ಸಚಿವರನ್ನು ಸಂಪರ್ಕಿಸಲು ಮಾಡಿದ ಯತ್ನ ವಿಫಲವಾಗಿದೆ. ಇನ್ನೊಮ್ಮೆ ಪ್ರಯತ್ನಿಸಿ ಮಾತಾಡುವೆ. ಕೇಳಿದ ಅನೇಕ ಬೇಡಿಕೆಗಳು ಈಡೇರಿಸಲು ಸಾಧ್ಯವಿರು ವಂತದ್ದೇ ಆಗಿದೆ. ಕೆಲವನ್ನು ನಿಧಾನಕ್ಕೆ ಈಡೇರಿಸಬಹುದು. ಆದ್ದರಿಂದ ಸರಕಾರ ವಿಳಂಬ ಮಾಡುವುದು ಸರಿಯಲ್ಲ ಎಂದರು. ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ನಿವೃತ್ತ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸದಸ್ಯರಾದ ಶ್ರೀಧರ ಶೇರೆಗಾರ್, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಮೊದಲಾದವರು ಇದ್ದರು. ಪುರಸಭೆಯ ಸೂರ್ಯಕಾಂತ್, ಗುರುಪ್ರಸಾದ್ ಶೆಟ್ಟಿ, ರಾಘವೇಂದ್ರ, ಗಣೇಶ್ ಜನ್ನಾಡಿ ಮೊದಲಾದವರು ಮನವಿ ನೀಡಿದರು. ಉಡುಪಿಯಲ್ಲೂ ಧರಣಿ:ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಕರೆಯಂತೆ ಕಳೆದ ಮೇ 27ರಿಂದ ಉಡುಪಿ ನಗರಸಭೆಯ ಪೌರ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರಸಭೆ ಎದುರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಇಂದು ನಾಲ್ಕು ದಿನಗಳನ್ನು ಪೂರ್ಣ ಗೊಳಿಸಿದೆ. ಧರಣಿ ಸ್ಥಳಕ್ಕೆ ಇಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಭೇಟಿ ನೀಡಿ ಧರಣಿ ನಿರತರನ್ನುದ್ದೇಶಿಸಿ ಮಾತನಾಡಿ ತಮ್ಮ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ನಗರಸಭಾ ಸದಸ್ಯ ರಮೇಶ್ ಕಾಂಚನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 31 May 2025 12:01 am

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದುತ್ತೀರಾ? ಗುಟ್ಕಾ ತಿಂದು ಉಗುಳ್ತೀರಾ? ಹಾಗಿದ್ದರೆ ದಂಡಕ್ಕೆ ಸಿದ್ಧರಾಗಿ!

ರಾಜ್ಯ ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಗುಟ್ಕಾ ಉಗುಳುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಉಲ್ಲಂಘಿಸಿದರೆ 1000 ರೂ. ದಂಡ ವಿಧಿಸಲಾಗುವುದು. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವಂತಿಲ್ಲ. ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆ ನಿಷೇಧಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದೆ.

ವಿಜಯ ಕರ್ನಾಟಕ 31 May 2025 12:00 am

‘ಈ ಸಲ ಆರ್‌ಸಿಬಿ ಕಪ್ ಗೆದ್ದರೆ’ ಒಂದು ದಿನ ರಜೆ ಘೋಷಿಸಿ: ಸಿಎಂಗೆ ಅಭಿಮಾನಿ ಪತ್ರ

ಬೆಂಗಳೂರು : ಐಪಿಎಲ್‍ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್‍ಗೆ ಸೋಲುಣಿಸಿದ ಆರ್‌ಸಿಬಿ ಫೈನಲ್ ಪ್ರವೇಶಿಸಿದ್ದು, ಜೂನ್ 3ರಂದು ಫೈನಲ್‍ನಲ್ಲಿ ಆರ್‌ಸಿಬಿ ಕಪ್ ಗೆದ್ದರೆ ಆ ದಿನವನ್ನು ‘ಆರ್‌ಸಿಬಿ ಫ್ಯಾನ್ಸ್ ಹಬ್ಬ’ ಎಂದು ಘೋಷಿಸಿ ಒಂದು ದಿನ ಸಾರ್ವತ್ರಿಕ ರಜೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆರ್‌ಸಿಬಿ ಅಭಿಮಾನಿಯೊಬ್ಬ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ. ಗೋಕಾಕ್ ಮೂಲದ ಶಿವಾನಂದ ಮಲ್ಲನ್ನವರ್ ಎನ್ನುವ ಆರ್‌ಸಿಬಿ ಅಭಿಮಾನಿ ಪತ್ರ ಬರೆದಿದ್ದು, ಸದ್ಯ ಅಭಿಮಾನಿಯ ಮನವಿ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಬಾರಿಯ ಐಪಿಎಲ್‍ನಲ್ಲಿ ಆರ್‌ಸಿಬಿ ಫೈನಲ್‍ಗೆ ಹೋಗಿ ಕಪ್ ಗೆದ್ದರೆ ಕರ್ನಾಟಕ ಸರಕಾರರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ದಿನವನ್ನು ‘ಕರ್ನಾಟಕ ರಾಜ್ಯ ಆರ್‌ಸಿಬಿ ಫ್ಯಾನ್ಸ್ ಹಬ್ಬ’ವೆಂದು ಅಧಿಕೃತವಾಗಿ ಘೋಷಣೆ ಮಾಡಬೇಕು. ಪ್ರತಿ ವರ್ಷ ಸರಕಾರಿ ರಜೆಯನ್ನು ನೀಡಬೇಕು ಎಂದು ಪತ್ರದಲ್ಲಿ ಅಭಿಮಾನಿ ಒತ್ತಾಯಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿ ಜಿಲ್ಲೆಯಲ್ಲಿ ಯಾವ ರೀತಿ ಆಚರಿಸಲಾಗುತ್ತದೋ, ಅದೇ ರೀತಿ ಆರ್‌ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ಸರಕಾರ ಅನುವು ಮಾಡಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಮನವಿಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಸರಕಾರಿ ರಜೆ ಹಾಗೂ ಆರ್‌ಸಿಬಿ ಫ್ಯಾನ್ಸ್ ಹಬ್ಬ ಆಚರಿಸಲು ಅವಕಾಶ ನೀಡಬೇಕು ಎಂದು ರಾಜ್ಯದ ಪ್ರತಿ ಜಿಲ್ಲೆಯ ವತಿಯಿಂದ ಆರ್‌ಸಿಬಿ ಪರವಾಗಿ ಪತ್ರ ಬರೆದಿರುವುದಾಗಿ ಶಿವಾನಂದ ಹೇಳಿದ್ದಾರೆ.

ವಾರ್ತಾ ಭಾರತಿ 30 May 2025 11:47 pm

ರಾಜ್ಯದಲ್ಲಿ ಸ್ಕೌಟ್ಸ್-ಗೈಡ್ಸ್‌ಗೆ 10 ಲಕ್ಷ ಮಕ್ಕಳ ನೊಂದಣಿ ಗುರಿ: ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ರಾಜ್ಯದಲ್ಲಿ ಎಂಟು ಲಕ್ಷ ವಿದ್ಯಾರ್ಥಿಗಳು ನೊಂದಣಿಗೊಂಡಿದ್ದು, ಈ ವರ್ಷ ಇದನ್ನು 10 ಲಕ್ಷ ವಿದ್ಯಾರ್ಥಿಗಳ ನೊಂದಣಿಯ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ರಾಜ್ಯದ ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧಿಯಾ ಹೇಳಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಇಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದ್ದ 2024-25ನೇ ಸಾಲಿನ ರಾಜ್ಯ ಮಟ್ಟದ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು. ಸ್ಕೌಟ್ ಮತ್ತು ಗೈಡ್ಸ್ ಮೂಲಕ ವಿದ್ಯಾರ್ಥಿಗಳು ಉತ್ತಮ ನಾಯಕರಾಗಿ ಬೆಳೆಯಲು ಅವಕಾಶಗಳಿವೆ. ಇದಕ್ಕೆ ನಿಮಗೆ ಸ್ಕೌಟ್ ಮತ್ತು ಗೈಡ್ ಸ್ಪೂರ್ತಿಯನ್ನು ನೀಡುತ್ತದೆ. ಸೇವೆ ಸ್ಕೌಟ್ ಮತ್ತು ಗೈಡ್ಸ್‌ನ ಮುಖ್ಯ ಉದ್ದೇಶವಾಗಿರುತ್ತದೆ. ಇದರೊಂದಿಗೆ ಪರಿಸರ ರಕ್ಷಣೆ, ವನ್ಯಜೀವಿಗಳ ರಕ್ಷಣೆಯೂ ನಮ್ಮ ಉದ್ದೇಶವಾಗಿರುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಅವರು ಮಾತನಾಡಿ, ಸೇವೆಯೇ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜೀವಾಳ. ಅಲ್ಲದೇ ಸ್ಕೌಟ್ ಮತ್ತು ಗೈಡ್ಸ್ ಮೂಲಕ ನೀವು ಸಹಜೀವಿಗಳನ್ನು ಪ್ರೀತಿಸಲು ಕಲಿಯುತ್ತೀರಿ. ಪ್ರೀತಿ ಎಲ್ಲರಿಗೂ ಅರ್ಥವಾಗುವ ಭಾಷೆಯಾಗಿದೆ. ನೀವು ಒಳ್ಳೆಯ ವ್ಯಕ್ತಿಯಾಗಿ ಪ್ರೀತಿಯನ್ನು ಹಂಚುವವರಾಗಿ ಎಂದು ಹಾರೈಸಿದರು. ಗೈಡ್ಸ್‌ನ ರಾಜ್ಯ ಸಂಘಟನಾ ಆಯುಕ್ತೆ ಮಂಜುಳ ಸಿ. ಅವರು ಮಾತನಾಡಿ, ರಾಜ್ಯದಲ್ಲಿ 2000ಕ್ಕೂ ಅಧಿಕ ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್‌ಗಳು ಶೇ.90ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ಅದೇ ರೀತಿ 100ಕ್ಕೂ ಅಧಿಕ ಮಂದಿ ರ್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಈ ಬಾರಿಯ ಎಸೆಸೆಲ್ಸಿಯಲ್ಲಿ 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಗೈಡ್ ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಸಾನಿಧ್ಯ ರಾವ್ ಅವರನ್ನು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಸನ್ಮಾನಿಸಿದರು. ಪಿ.ಜಿ.ಆರ್.ಸಿಂದಿಯಾ ಅವರು ಪದಕ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರತೀರ್ಥ ಸ್ವಾಮೀಜಿ, ಡಿಡಿಪಿಯು ಮಾರುತಿ, ಡಿಡಿಪಿಐ ಗಣಪತಿ, ಸ್ಕೌಟ್‌ನ ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ ಭಟ್, ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಜಿಲ್ಲಾ ಕಾರ್ಯದರ್ಶಿ ಆನಂದ್ ಸಿ.ಅಡಿಗ, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜಿ.ಪೈ ಮುಂತಾದವರು ಉಪಸ್ಥಿತರಿದ್ದರು.  

ವಾರ್ತಾ ಭಾರತಿ 30 May 2025 11:43 pm

ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ ಬದಲಾವಣೆ: ಮರು ಟೆಂಡರ್‌ ಕರೆದರೂ ಮುಂದೆ ಬಾರದ ರಾಜ್ಯದ ಕಂಪನಿಗಳು!

ತುಂಗಭದ್ರಾ ಜಲಾಶಯದ 32 ಕ್ರಸ್ಟ್‌ ಗೇಟ್‌ಗಳ ಬದಲಾವಣೆಗೆ ಮರು ಟೆಂಡರ್ ಕರೆದರೂ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಕಂಪನಿಗಳು ಅರ್ಜಿ ಸಲ್ಲಿಸಿಲ್ಲ. ಗುಜರಾತ್ ಮತ್ತು ತೆಲಂಗಾಣದ ಕಂಪನಿಗಳು ಮಾತ್ರ ಆಸಕ್ತಿ ತೋರಿವೆ. ಹೀಗಾಗಿ ಈ ಕಂಪನಿಗಳಿಗೇ ಟೆಂಡರ್‌ ಆಗುವ ಸಾಧ್ಯತೆ ಇದೆ. ಇನ್ನು 19ನೇ ಗೇಟ್ ದುರಸ್ತಿ ಕಾರ್ಯ ಪ್ರಗತಿಯಲ್ಲಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪರಿಶೀಲನೆ ನಡೆಸಿದ್ದಾರೆ.

ವಿಜಯ ಕರ್ನಾಟಕ 30 May 2025 11:42 pm

ಮೈಸೂರು ಅರಮನೆ ಮಾದರಿ ಬಸ್‌ ನಿಲ್ದಾಣ - ಯಾವ ಊರಿನಲ್ಲಿ ಗೊತ್ತಾ?

ಬಿಡದಿ ಪುರಸಭೆಯು ಮೈಸೂರು ಅರಮನೆ ಮಾದರಿಯಲ್ಲಿ ಬಸ್ ನಿಲ್ದಾಣ ಮತ್ತು ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲು ನಿರ್ಣಯ ಕೈಗೊಂಡಿದೆ. ಇದಲ್ಲದೆ, ಪ್ರತಿ ವಾರ್ಡ್‌ಗೆ 20 ಲಕ್ಷ ರೂ.ಗಳನ್ನು ಮೀಸಲಿಡಲು ಮತ್ತು ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ ಹೊಸ ಅಂಗಡಿಗಳನ್ನು ನಿರ್ಮಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಲ್ಲಿಗುಡ್ಡೆ ಕೆರೆಯ ಬಳಿ ಹೈಟೆಕ್ ಪಾರ್ಕ್ ನಿರ್ಮಾಣಕ್ಕೂ ಅನುಮೋದನೆ ನೀಡಲಾಗಿದೆ.

ವಿಜಯ ಕರ್ನಾಟಕ 30 May 2025 11:42 pm

MI vs GT: ಮುಂಬೈ ಇಂಡಿಯನ್ಸ್‌ಗೆ ಅಹಮದಾಬಾದ್ ಟಿಕೆಟ್! ಐಪಿಎಲ್‌ನಿಂದ ಹೊರಬಿದ್ದ ಗುಜರಾತ್ ಟೈಟಾನ್ಸ್

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ 2025ರ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 20 ರನ್‌ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.

ಒನ್ ಇ೦ಡಿಯ 30 May 2025 11:42 pm

IPL 2025 | ರೋಚಕ ಪಂದ್ಯದಲ್ಲಿ ಮುಂಬೈ ವಿರುದ್ಧ ಎಲಿಮಿನೇಟ್ ಆದ ಗುಜರಾತ್

ಚಂಡೀಗಡ: ಪಂಜಾಬ್ ನ ಮುಲ್ಲನ್ ಪುರದ ಮಹರಾಜ ಯದುವೀರ್ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಎಲಿಮಿನೇಟರ್ ನ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಗುಜರಾತ್‌ ಟೈಟನ್ಸ್‌ ವಿರುದ್ಧ ಜಯಗಳಿಸಿ ಕ್ವಾಲಿಫೈಯರ್‌ ಗೆ ಪ್ರವೇಶ ಪಡೆಯಿತು.

ವಾರ್ತಾ ಭಾರತಿ 30 May 2025 11:39 pm

ಬೆಂಗಳೂರು | ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ

ಬೆಂಗಳೂರು0: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರದಲ್ಲಿ ಕಮಲ್ ಹಾಸನ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ನಟ ಕಮಲ್ ಹಾಸನ್ ಅವರ ಕನ್ನಡದ ಕುರಿತು ನೀಡಿರುವ ಹೇಳಿಕೆಯಿಂದ ಕನ್ನಡಿಗರ ಭಾವನೆಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಕೂಡಲೇ ಕನ್ನಡಿಗರನ್ನು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ವಾರ್ತಾ ಭಾರತಿ 30 May 2025 11:24 pm

ಕನ್ನಡ ಸಂಸ್ಕೃತ, ಪ್ರಾಕೃತದಿಂದ ಹುಟ್ಟಿದೆ ಎಂದ ಯದುವೀರ್‌ ಒಡೆಯರ್ ಕ್ಷಮೆ ಯಾಚಿಸಲಿ : ನಾರಾಯಣಗೌಡ

ಬೆಂಗಳೂರು : ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಸಂಸದ ಯದುವೀರ ಒಡೆಯರ್ ಅತ್ಯಂತ ಬೇಜವಾಬ್ದಾರಿಯ ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಕನ್ನಡ ಹುಟ್ಟಿದ್ದು ಸಂಸ್ಕೃತ ಮತ್ತು ಪಾಕೃತ ಭಾಷೆಗಳಿಂದ ಎಂದು ಅವರು ಹೇಳಿದ್ದನ್ನು ಗಮನಿಸಿದ್ದೇನೆ. ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ. ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾಷೆಗಳ ಉಗಮದ ಬಗ್ಗೆ ಕನಿಷ್ಠ ತಿಳಿವಳಿಕೆ ಇರುವವರು ಇಂಥ ಮೂರ್ಖ ಹೇಳಿಕೆಯನ್ನು ನೀಡಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕೆಲವು ಸಂಸ್ಕೃತ ಪ್ರಿಯರು ಆಗಾಗ ಇಂಥ ಮತಿಗೆಟ್ಟ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಸಂಸ್ಕೃತ ಎಲ್ಲ ಭಾರತೀಯ ಭಾಷೆಗಳ ತಾಯಿ ಎಂದು ಕೆಲವರು ಆಗಾಗ ಹೇಳಿ ತಮ್ಮ ಬಾಯಿಚಪಲ ತೀರಿಸಿಕೊಳ್ಳುತ್ತಾರೆ. ಅಂತವರಿಗೆ ಮಾನಸಿಕ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮಿಳು ನಟ ಕಮಲ್ ಹಾಸನ್ ತಮ್ಮ ಥಗ್‍ಲೈಫ್ ಸಿನೆಮಾಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ, ಕನ್ನಡವು ತಮಿಳಿನಿಂದ ಹುಟ್ಟಿದ ಭಾಷೆ ಎಂದು ಹಿರಿಯ ನಟ ಡಾ.ಶಿವರಾಜ್ ಕುಮಾರ್ ಅವರ ಮುಂದೆಯೇ, ಅವರನ್ನು ಉದ್ದೇಶಿಸಿಯೇ ಹೇಳಿದ್ದರು. ತಕ್ಷಣ ಖಂಡಿಸಲು ಸಾಧ್ಯವಾಗದೇ ಇರಬಹುದು. ಆದರೆ ಶಿವರಾಜ ಕುಮಾರ್ ಅವರು ನಂತರವೂ ಕಮಲ್ ಹಾಸನ್ ಅವರನ್ನು ಸಮರ್ಥಿಸುವಂತೆಯೇ ಮಾತನಾಡಿರುವುದು ಆಘಾತ ತಂದಿದೆ ಎಂದರು. ಕಮಲ್ ಹಾಸನ್ ತಮ್ಮ ಮಾತಿಗೆ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂಬ ಒಂದು ಮಾತು ಕೂಡ ಶಿವರಾಜ್ ಕುಮಾರ್ ಅವರಿಂದ ಬಂದಿಲ್ಲ. ಅವರು ಕಮಲ್ ಹಾಸನ್ ಅವರ ದೊಡ್ಡ ಅಭಿಮಾನಿಯಂತೆ. ಬಹಳ ಹಿಂದೆ ಅವರನ್ನು ಮೊದಲು ಭೇಟಿಯಾಗಿ ಸ್ಪರ್ಶಿಸಿದ ನಂತರ ಮೂರು ದಿನ ಸ್ನಾನವನ್ನೇ ಮಾಡಿರಲಿಲ್ಲವಂತೆ. ಇದೆಲ್ಲವನ್ನೂ ಕೇಳಿದಾಗ ಒಬ್ಬ ನಟನ ಮೇಲಿನ ಅಭಿಮಾನಕ್ಕಾಗಿ ಶಿವರಾಜ್ ಕುಮಾರ್ ಅವರು ಕನ್ನಡದ ಮೇಲಿನ ಅಭಿಮಾನವನ್ನು ಅಡವಿಟ್ಟುಬಿಟ್ಟರಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ ಎಂದು ಹೇಳಿದರು. ಕನ್ನಡ ಚಳವಳಿಯ ಜ್ವಾಲೆಯನ್ನು ಇಡೀ ಕರ್ನಾಟಕದಾದ್ಯಂತ ಹೊತ್ತಿಸಿ, ಕನ್ನಡಿಗರಲ್ಲಿ ಸ್ವಾಭಿಮಾನವನ್ನು ಬಡಿದೆಬ್ಬಿಸಿದ ಡಾ. ರಾಜಕುಮಾರ್ ಅವರು ನಮ್ಮ ಆದರ್ಶ. ಅವರ ಮಕ್ಕಳಿಂದಲೂ, ಕುಟುಂಬಸ್ಥರಿಂದಲೂ ನಾವು ಅದೇ ಬಯಸುತ್ತೇವೆ. ಅಣ್ಣಾವ್ರನ್ನು ನಾವು ಕೇವಲ ಮೇರು ನಟ ಎಂದು ಗುರುತಿಸುವುದಿಲ್ಲ. ಅವರು ಕನ್ನಡದ ಮಹಾನ್ ಸಂಕೇತ. ಅಂಥವರ ಹಿರಿಯ ಮಗನಾಗಿ ಶಿವರಾಜಕುಮಾರ್ ಅವರಿಂದ ನಮ್ಮ ನಿರೀಕ್ಷೆಗಳು ಬಹಳ ಇದ್ದೇ ಇರುತ್ತವೆ. ಆದರೆ ಕನ್ನಡವು ತಮಿಳಿನಿಂದ ಹುಟ್ಟಿತು ಎಂಬ ಕಪೋಲಕಲ್ಪಿತ,  ವಿಕೃತ ಸುಳ್ಳನ್ನು ಕೇಳಿಯೂ ಅವರಲ್ಲಿ ಸ್ವಾಭಿಮಾನದ ಮಾತುಗಳು ಬರುತ್ತಿಲ್ಲ ಎಂದರೆ ಆಶ್ಚರ್ಯವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಡಾ.ರಾಜಕುಮಾರ್ ಅವರನ್ನು ಪ್ರೀತಿಸಿದಂತೆಯೇ ನಾವು ಡಾ.ಶಿವರಾಜ್ ಕುಮಾರ್ ಅವರನ್ನೂ ಪ್ರೀತಿಸುತ್ತೇವೆ. ಅವರು ಅನಾರೋಗ್ಯದಿಂದ ಇದ್ದಾಗ ಇಡೀ ಕರ್ನಾಟಕ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿತ್ತು. ಕನ್ನಡ, ಕನ್ನಡಿಗ, ಕರ್ನಾಟಕ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಕನ್ನಡದಿಂದ ನಾವೇ ಹೊರತು ನಮ್ಮಿಂದ ಕನ್ನಡವಲ್ಲ. ಇದು ಶಿವರಾಜ ಕುಮಾರ್ ಅವರಿಗೆ ಅರ್ಥವಾಗಲಿ ಎಂದು ಅಭಿಪ್ರಾಯಪಟ್ಟರು. ಕನ್ನಡ ತಮಿಳಿನಿಂದ ಹುಟ್ಟಿತು, ಕನ್ನಡ ಸಂಸ್ಕೃತದಿಂದ ಹುಟ್ಟಿತು ಎನ್ನುವವರು ಇನ್ನು ಮುಂದೆ ಎಚ್ಚರಿಕೆಯಿಂದ ಮಾತನಾಡಬೇಕು. ಇಂಥ ಕನ್ನಡ ವಿರೋಧಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು. ಚಿತ್ರ ಬಿಡುಗಡೆಯಾದರೆ ಬೆಂಕಿ ಹಚ್ಚುತ್ತೇವೆ: ಕಮಲ್ ಹಾಸನ್ ಅವರ ಥಗ್‍ಲೈಫ್ ಸಿನೆಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಯಾವುದಾದರೂ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದರೆ ಬೆಂಕಿ ಹಚ್ಚುತ್ತೇವೆ. ಕಮಲ್ ಹಾಸನ್ ಅವರು ಕ್ಷಮೆ ಕೇಳದೇ ಇದ್ದರೆ ಅವರ ಯಾವ ಸಿನೆಮಾಗಳೂ ಸಹ ಕರ್ನಾಟಕದಲ್ಲಿ ಬಿಡುಗಡೆ ಆಗಲು ಬಿಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ವಾರ್ತಾ ಭಾರತಿ 30 May 2025 11:22 pm

ಗುಜರಾತ್ | ತಂದೆ-ಪುತ್ರನನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆಗೈದ ಆರೋಪ: 7 ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಎಫ್ಐಆರ್

ಅಹಮದಾಬಾದ್: ನಾಲ್ಕು ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಗುಜರಾತ್ ನ ಸುರೇಂದ್ರನಗರ್ ಜಿಲ್ಲೆಯಲ್ಲಿ ತಂದೆ-ಮಗನನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಆರೋಪದ ಮೇಲೆ ಏಳು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿರೇಂದ್ರ ಸಿನ್ಹ್ ಎನ್. ಜಡೇಜಾ ಹಾಗೂ ಅವರ ಸಹೋದ್ಯೋಗಿಗಳಾದ ರಾಜೇಶ್ ಸವಿಭಾಯಿ, ಕಿರೀಟ್ ಭಾಯಿ ಗಣೇಶ್ ಭಾಯಿ, ದಿಗ್ವಿಜಯ್ ಸಿನ್ಹ್ ಹರ್ದೀಪ್ ಸಿನ್ಹ್, ಪ್ರಹ್ಲಾದ್ ಭಾಯಿ ಪ್ರಭು ಭಾಯಿ ಹಾಗೂ ಮನುಭಾಯಿ ಗೋವಿಂದ್ ಭಾಯಿ ಸೇರಿದಂತೆ ಒಟ್ಟು ಏಳು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಶುಕ್ರವಾರ ಪಟ್ಡಿ ತಾಲ್ಲೂಕಿನ ಬಜಾನಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆ ಆರೋಪ ಹಾಗೂ ಇನ್ನಿತರ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ದೃಢಪಡಿಸಿದ್ದಾರೆ. 2021ರಲ್ಲಿ ಪಟ್ಡಿ ತಾಲ್ಲೂಕಿನಲ್ಲಿ ನಡೆದಿತ್ತೆನ್ನಲಾದ ಈ ನಕಲಿ ಎನ್ ಕೌಂಟರ್ ಪ್ರಕರಣದ ತನಿಖೆ ನಡೆಸಲು ಪುರೋಹಿತ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಇದಕ್ಕೂ ಮುನ್ನ, ಪೊಲೀಸ್ ಕಾರ್ಯಾಚರಣೆಯ ವೇಳೆ ರೌಡಿ ಶೀಟರ್ ಹನೀಫ್ ಜಾಟ್ ಮಲಿಕ್ (44) ಹಾಗೂ ಪುತ್ರ ಮದೀನ್ (14) ಅನ್ನು ಆರೋಪಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿರೇಂದ್ರ ಸಿನ್ಹ್ ಎನ್. ಜಡೇಜಾ ನೇತೃತ್ವದ ತಂಡವು ಗುಂಡು ಹಾರಿಸಿ ಹತ್ಯೆಗೈದಿತ್ತು. ಇದರ ಬೆನ್ನಿಗೇ, ನವೆಂಬರ್ 6, 2021ರಂದು ಬಜಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆಡಿಯಾ ಗ್ರಾಮದಲ್ಲಿ ನನ್ನ ತಂದೆ ಹಾಗೂ ನನ್ನ ಸಹೋದರನನ್ನು ನಕಲಿ ಎನ್ ಕೌಂಟರ್ ನಲ್ಲಿ ಅಮಾನುಷವಾಗಿ ಹತ್ಯೆಗೈಯ್ಯಲಾಗಿದೆ ಎಂದು ಆರೋಪಿಸಿ ಮೃತ ಹನೀಫ್ ಜಾಟ್ ಮಲಿಕ್ ಅವರ ಪುತ್ರಿ ಸೊಹಾನಾ ಮಲಿಕ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.

ವಾರ್ತಾ ಭಾರತಿ 30 May 2025 11:20 pm

‘ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು’; ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು. ಅರ್ಜಿಗಳನ್ನು ಕಾಟಾಚಾರಕ್ಕೆ ವಿಲೇವಾರಿ ಮಾಡದೆ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಶುಕ್ರವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ಸೂಚನೆಯನ್ನು ನೀಡಿದ ಅವರು, ಕಾನೂನು ಬದ್ಧವಾಗಿ ಅರ್ಜಿಯನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲದಿದ್ದರೆ ಮೊದಲೇ ಅರ್ಜಿದಾರರಿಗೆ ತಿಳಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಹಶೀಲ್ದಾರ್ ಗಳು ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ನಡೆಸಬೇಕು. ಸಕಾಲ ಯೋಜನೆಯಡಿ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಜಲಜೀವನ್ ಮಿಷನ್ ಯೋಜನೆ ಅಡಿ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅನುಷ್ಠಾನ ಆಗಿಲ್ಲ. ಅದೇ ರೀತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರಕಾರದಿಂದ 1400 ಕೋಟಿ ರೂ. ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳ ಕೂಲಿ ಹಣ ಪಾವತಿಗೆ ಬಾಕಿಯಿದೆ. ಕೇಂದ್ರದಿಂದ ಹಣ ಬಿಡುಗಡೆಗೆ ಒತ್ತಡ ಹಾಕಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ 1.50 ಕೋಟಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಕಿಯಿರುವ 1352 ಇ-ಸ್ವತ್ತು ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು. ಇಂದಿರಾ ಕ್ಯಾಂಟೀನ್: ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್‍ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್‍ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಒಂದು ವಾರದ ಒಳಗಾಗಿ ಇನ್ನುಳಿದ ಎಲ್ಲ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಇನ್ನೂ 5 ಕಡೆ ಇಂದಿರಾ ಕ್ಯಾಂಟೀನ್ ಗಳಿಗೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ತೆರಿಗೆ ವ್ಯಾಪ್ತಿಗೆ ತನ್ನಿ: ನಗರಾಭಿವೃದ್ಧಿ ಇಲಾಖೆಯಡಿ ಒಟ್ಟು 46,85,107 ಎ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, 21,18,459 ಸ್ವತ್ತುಗಳಿಗೆ ಇ-ಖಾತಾ ನೀಡಲಾಗಿದೆ. 9,93,342 ಅನಧಿಕೃತ ಬಿ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, ಇದುವರೆಗೆ 2,21,691 ಬಿ-ಖಾತಾ ನೀಡಲಾಗಿದೆ. ಎಲ್ಲ ಸ್ವತ್ತುಗಳಿಗೆ ನಿಯಮಾನುಸಾರ ಖಾತಾ ಒದಗಿಸಿ ತೆರಿಗೆ ವ್ಯಾಪ್ತಿಗೆ ಬರಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಎಲ್ಲ ತಾಲೂಕುಗಳಲ್ಲಿ ಡಯಾಲಿಸಿಸ್ ಘಟಕ ಪ್ರಾರಂಭಿಸಲು ಈಗಾಗಲೇ ಆದೇಶ ನೀಡಲಾಗಿದೆ. ಇವು ಪ್ರಾರಂಭವಾಗಿದೆಯೇ? ಪ್ರಾರಂಭವಾಗಿದ್ದರೆ ಕಾರ್ಯ ನಿರ್ವಹಿಸುತ್ತಿವೆಯೇ? ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುವುದು ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿಯಾಗಿದೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ನಿರಂತರವಾಗಿ ಭೇಟಿ ನೀಡಬೇಕು. ಜಿಲ್ಲಾ ಮಟ್ಟದಲ್ಲಿ ವೈದ್ಯಾಧಿಕಾರಿಗಳನ್ನು ಅನಗತ್ಯವಾಗಿ ಸಭೆಗಳಿಗೆ ಆಹ್ವಾನಿಸಬಾರದು ಎಂದು ಅವರು ಸೂಚಿಸಿದರು. ಬಾಣಂತಿಯರ ಮರಣ ಪ್ರಮಾಣಕ್ಕೆ ಕಡಿವಾಣ ಹಾಕಿ : ಬಾಣಂತಿಯರ ಮರಣ ಪ್ರಮಾಣ ಕೇರಳಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30 ರಷ್ಟು ಕಡಿಮೆಯಾಗಿದ್ದರೂ, ಇದನ್ನು ಇನ್ನಷ್ಟು ಕಡಿಮೆಗೊಳಿಸಲು ಸಾಂಸ್ಥಿಕ ಹೆರಿಗೆಯನ್ನು ಹೆಚ್ಚಿಸುವುದು, ಅಗತ್ಯ ಉಪಕರಣಗಳ ಖರೀದಿ ಸೇರಿದಂತೆ ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆದೇಶಿಸಿದರು. ಊರಿಗೆ ಹತ್ತಿರವಿರುವ ಸ್ಥಳಗಳನ್ನು ಗುರುತಿಸಿ : ಸ್ಮಶಾನ ಮತ್ತು ಖಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು. ಸರಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು. ಹಾಸ್ಟೆಲ್‍ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು. ನಿವೃತ್ತ ಸೈನಿಕರಿಗೆ ನಿವೇಶನ ತ್ವರಿತವಾಗಿ ನೀಡಿ : ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು. ಮುಂದಿನ ಸಭೆಯ ವೇಳೆ ನಿವೇಶನ ಲಭ್ಯವಿಲ್ಲದ ಬಗ್ಗೆ ಯಾವುದೇ ದೂರು ಬರಬಾರದು ಎಂದು ಅವರು ಸೂಚಿಸಿದರು. ಸೈನಿಕರ ಕಲ್ಯಾಣ ನಿಗಮ: ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು. ಕ್ರೀಡಾಂಗಣ: ಒಟ್ಟು 59 ತಾಲೂಕುಗಳಲ್ಲಿ ಕ್ರೀಡಾಂಗಣಗಳು ಲಭ್ಯವಿಲ್ಲ. ಎಲ್ಲ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಗುರುತಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು. ಯುವನಿಧಿ: ಯುವನಿಧಿ ಯೋಜನೆಯಡಿ ಫಲಾನುಭವಿಗೆ ಎರಡು ವರ್ಷಗಳ ಅವಧಿಗೆ ನೆರವು ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಫಲಾನುಭವಿಗಳಿಗೆ ಉದ್ಯೋಗ ದೊರೆತರೆ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಿದರೆ ನೆರವು ಸ್ಥಗಿತಗೊಳ್ಳುತ್ತದೆ. ಪ್ರತಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ವಾರ್ತಾ ಭಾರತಿ 30 May 2025 11:17 pm

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27), ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23)ನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ತನಿಖೆ ಮುಂದುವರಿದಿದೆ ಎಂದು ‌ಪೊಲೀಸರು ತಿಳಿಸಿದ್ದಾರೆ.

ವಾರ್ತಾ ಭಾರತಿ 30 May 2025 11:06 pm

ಮಂಡ್ಯ | ಜಯಕುಮಾರ್ ನಿಗೂಢ ಸಾವು ಪ್ರಕರಣ; ಪೊಲೀಸರ ಅಮಾನತಿಗೆ ಒತ್ತಾಯಿಸಿ ಧರಣಿ

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ವ್ಯಕ್ತಿ ಜಯಕುಮಾರ ನಿಗೂಢ ಸಾವಿನ ಪ್ರಕರಣದ ಸಂಬಂಧ ಪೊಲೀಸರ ಅಮಾನತಿಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು. ದಲಿತ ಸಮುದಾಯದ ಜಯಕುಮಾರ ಎಂಬ ಯುವಕನನ್ನು ಅದೇ ಗ್ರಾಮದ ಅನಿಲಕುಮಾರ ಎಂಬ ರೌಡಿಶೀಟರ್ ಕೊಲೆಮಾಡಿ ಹುಲ್ಲಿನ ಮೆದೆಗೆ ಹಾಕಿ ಸುಟ್ಟುಹಾಕಿದ್ದ ವಿಚಾರ ಅಲ್ಲಿನ ಗ್ರಾಮದ ಜನ ಮಾತನಾಡುತ್ತಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು. ಈ ಸಂಬಂಧ ದೂರು ನೀಡಲು ಬಂದ ಜಯಕುಮಾರ ಪತ್ನಿ ಲಕ್ಷ್ಮಿ ಅವರ ದಿಕ್ಕು ತಪ್ಪಿಸಿ ಆತ್ಮಹತ್ಯೆ ಎಂದು ಕಂಪ್ಲೇಂಟ್ ಬರೆಸಿ ಇಡೀ ಪ್ರಕರಣವನ್ನು ಮುಚ್ಚಿಹಾಕಲು ಕೆ.ಆರ್.ಪೇಟೆ ಡಿವೈಎಸ್ಪಿ, ಎಸ್ಸೈ ಮತ್ತು ಪೊಲೀಸರು ಯತ್ನ ನಡೆಸಿದ್ದಾರೆ ಎಂದು ಅವರು ದೂರಿದರು. ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಡಿವೈಎಸ್ಪಿ ಚಲುವರಾಜು, ಇನ್ಸ್ಪೆಕ್ಟರ್ ಆನಂದೇಗೌಡ, ಸಬ್‍ಇನ್ಸ್ಪೆಕ್ಟರ್ ಸುಬ್ಬಯ್ಯ ಮತ್ತು ಪೇದೆ ವ್ಯರಮುಡಿಗೌಡ ಅವರನ್ನು ಅಮಾನತುಪಡಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಗೆ ಶಿಕ್ಷೆ ಕೊಡಿಸಬೇಕು ಎಂದು ಅವರು ಒತ್ತಾಯಿಸಿದರು. ಕರ್ನಾಟಕ ಸ್ವಾಭಿಮಾನಿ ಸಮಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ನರಸಿಂಹಮೂರ್ತಿ, ಅಂಬೇಡ್ಕರ್ ವಾರಿಯರ್ಸ್ ಸಂಘಟನೆ ರಾಜ್ಯಾಧ್ಯಕ್ಷ ಹನಕೆರೆ ಗಂಗರಾಜು, ನಾವು ದ್ರಾವಿಡರು ಸಂಘಟನೆಯ ಅಭಿಗೌಡ, ದಲಿತ ಸಂಘರ್ಷ ಸಮಿತಿಯ ಎಂ.ವಿ.ಕೃಷ್ಣ, ಸೋಮನಹಳ್ಳಿ ಅಂದಾನಿ, ನಾಗರಾಜು, ಬುದ್ಧ ಭಾರತ ಫೌಂಡೇಷನ್ ಅಧ್ಯಕ್ಷ, ವಕೀಲ ಜೆ.ರಾಮಯ್ಯ, ಟಿ.ಡಿ.ನಾಗರಾಜು, ಚಿಕ್ಕಮಂಡ್ಯ ಮೋಹನ್‍ಕುಮಾರ್, ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

ವಾರ್ತಾ ಭಾರತಿ 30 May 2025 11:05 pm

ನಾಳೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ

ಬೆಂಗಳೂರು : ಎಂ.ಟೆಕ್, ಡಿಸಿಇಟಿ ಪ್ರವೇಶ ಮತ್ತು ಐಎಎಸ್, ಕೆಎಎಸ್ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಾಳೆ(ಮೇ 31) ರಾಜ್ಯದ 113 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಪರೀಕ್ಷೆಗಳಿಗೂ ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡುವುದರ ಜತೆಗೆ ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕವೇ ಅಭ್ಯರ್ಥಿಗಳ ಗುರುತು ಪತ್ತೆಹಚ್ಚಲಾಗುತ್ತದೆ. ನಕಲಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಈ ಪರೀಕ್ಷೆಗಳನ್ನು 52,352 ಮಂದಿ ತೆಗೆದುಕೊಂಡಿದ್ದಾರೆ. ಡಿಪ್ಲೊಮಾ ಮುಗಿಸಿ, ಎಂಜಿನಿಯರಿಂಗ್ ಪದವಿಯ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸುವುದಕ್ಕೆ ರಾಜ್ಯದ 46 ಕೇಂದ್ರಗಳಲ್ಲಿ ಡಿಸಿಇಟಿ ನಡೆಸುತ್ತಿದ್ದು, 21,201 ಮಂದಿ ಪರೀಕ್ಷೆ ತೆಗೆದುಕೊಳ್ಳಲು ನೋಂದಣಿ ಮಾಡಿಕೊಂಡಿದ್ದಾರೆ. ಎಂ.ಟೆಕ್‍ನ ಮ್ಯಾಕಾನಿಕಲ್, ಸಿವಿಲ್ ಮತ್ತು ಎಲೆಕ್ಟ್ರಿಕಲ್ ಸೈನ್ಸ್ ಕೋರ್ಸ್‍ಗಳ ಪ್ರವೇಶಕ್ಕೆ 13 ಕೇಂದ್ರಗಳಲ್ಲಿ ಪಿಜಿಸಿಇಟಿ ನಡೆಯುತ್ತಿದ್ದು, 3,756 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಕೆಎಎಸ್ ಪರೀಕ್ಷೆಯ ತರಬೇತಿಗೆ ನಡೆಸುವ ಪರೀಕ್ಷೆಯನ್ನು 19,992 ಮಂದಿ ತೆಗೆದುಕೊಂಡಿದ್ದು, 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಸಲುವಾಗಿ ಐಎಎಸ್ ಮತ್ತು ಕೆಎಎಸ್ ತರಬೇತಿಗಾಗಿ ಪರೀಕ್ಷೆ ನಡೆಯಲಿದ್ದು, ಅದನ್ನು 7,403 ಮಂದಿ ತೆಗೆದುಕೊಂಡಿದ್ದಾರೆ.

ವಾರ್ತಾ ಭಾರತಿ 30 May 2025 11:00 pm

ಅಡಿಕೆ ಹಾಳೆ ರಪ್ತಿಗೆ ನಿರ್ಬಂಧ ; ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯ

ಬೆಂಗಳೂರು : ಭಾರತದಿಂದ ರಪ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ, ಕ್ಯಾನ್ಸರ್ ಕಾರಕ ಎಂದು ಅಮೆರಿಕಾ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನಿ ಮೋದಿ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು.ಬಸವರಾಜ ಆಗ್ರಹಿಸಿದ್ದಾರೆ. ಶುಕ್ರವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಅಮೆರಿಕಾದ ಈ ನಿರ್ಬಂಧವು ಅಮೆರಿಕಾ ಮಾತ್ರವಲ್ಲದೇ ಇಡೀ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು 3.50ಸಾವಿರ ಕೋಟಿ ರೂ.ವಹಿವಾಟು ಇದ್ದು, ಇದರಲ್ಲಿ ಕರ್ನಾಟಕದ ಕೊಡುಗೆಯೇ 2.50ಸಾವಿರ ಕೋಟಿ ರೂ. ನಷ್ಟಿದೆ. ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಬಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಅನೇಕ ಜನರ ಉದ್ಯೋಗದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ. ರಬ್ಬರ್ ಬೆಳೆಗೂ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ. ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ಅಮೆರಿಕಾ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕಾದ ಕ್ರಮಗಳನ್ನು ಪ್ರಧಾನಿ ಮೋದಿ ನೇತೃತ್ವದ ಸರಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾರ್ತಾ ಭಾರತಿ 30 May 2025 10:57 pm

ಜಮ್ಮು ಕಾಶ್ಮೀರದ ಭದ್ರತೆಯ ಹೊಣೆ ಯಾರದ್ದು?

ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಯಾರು ನಿಯಂತ್ರಿಸುತ್ತಾರೆ ಎನ್ನುವ ಪ್ರಶ್ನೆ ಎದ್ದಿದೆ. ಪಹಲ್ಗಾಮ್ ದಾಳಿ ಹೊತ್ತಿನ ಭದ್ರತಾ ವೈಫಲ್ಯದ ಬಗ್ಗೆ ಮೋದಿ ಸರ್ಕಾರ ಉತ್ತರಿಸದೇ ಇರುವ ಹಿನ್ನೆಲೆಯಲ್ಲಿ ಈ ಪ್ರಶ್ನೆ ಬಹು ಮುಖ್ಯವಾಗಿದೆ. ಪಹಲ್ಗಾಮ್ ಹತ್ಯಾಕಾಂಡದ ನೆರಳಿನಲ್ಲಿ ಜುಲೈ 3 ರಿಂದ ಕಾಶ್ಮೀರದಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲೇ ಸಭೆ ನಡೆದಿದೆ. ಅಂದರೆ, ಜಮ್ಮು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹೊಣೆ ಸಂಪೂರ್ಣ ಕೆಂದ್ರದ ಮೋದಿ ಸರಕಾರದ್ದೇ ಆಗಿದೆ. ಚುನಾಯಿತ ಮುಖ್ಯಮಂತ್ರಿಯನ್ನು ಅವರ ಸ್ವಂತ ಕೇಂದ್ರಾಡಳಿತ ಪ್ರದೇಶದಲ್ಲಿ ಕೇಂದ್ರ ನೇತೃತ್ವದ ಭದ್ರತೆಗೆ ಸಂಬಂಧಿಸಿದ ಚರ್ಚೆಗಳಿಂದ ಹೊರಗಿಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯ ವಿಷಯಗಳಲ್ಲಿ ಜಮ್ಮು ಕಾಶ್ಮೀರದ ಚುನಾಯಿತ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಒತ್ತಾಯಗಳ ಹೊರತಾಗಿಯೂ, ಮೇ 29 ರಂದು ಅಮಿತ್ ಶಾ ಅವರು ಜಮ್ಮುವಿನಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು. 2019 ರಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಬಳಸಿದ ಜಮ್ಮು ಕಾಶ್ಮೀರ ಮರುಸಂಘಟನಾ ಕಾಯ್ದೆ, 2019 ರ ಅಡಿಯಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಲೆಫ್ಟಿನೆಂಟ್ ಗವರ್ನರ್‌ ವ್ಯಾಪ್ತಿಗೆ ಬರುತ್ತದೆ. ಲೆಫ್ಟಿನೆಂಟ್ ಗವರ್ನರ್ ಕೇಂದ್ರ ಸರಕಾರದಿಂದ ನೇಮಿಸಲ್ಪಟ್ಟು ಕೇಂದ್ರ ಸರಕಾರಕ್ಕೆ ಉತ್ತರಿಸುವವರು. ಹಾಗಾಗಿ ಕಾನೂನು ಸುವ್ಯವಸ್ಥೆ ಅಂದ್ರೆ ಕಾಶ್ಮೀರದ ಪೊಲೀಸ್ ವ್ಯವಸ್ಥೆ ಲೆಫ್ಟಿನೆಂಟ್ ಗವರ್ನರ್ ಅಧೀನದಲ್ಲೇ ಬರುತ್ತದೆ. ಅಲ್ಲಿ ನಿಯೋಜಿತ ಸೇನೆ ಹೇಗೂ ಕೇಂದ್ರ ಸರಕಾರದ ಅಧೀನದಲ್ಲೇ ಇದೆ. ಜಮ್ಮು ಕಾಶ್ಮೀರದ ಚುನಾಯಿತ ಸರ್ಕಾರಕ್ಕೆ ಈ ವಿಷಯದ ಮೇಲೆ ಯಾವುದೇ ನಿಯಂತ್ರಣವಿಲ್ಲ. ಆದರೆ ಕಾಶ್ಮೀರಕ್ಕೆ ಬಂದು ಭದ್ರತಾ ವ್ಯವಸ್ಥೆ ಕುರಿತ ಮಹತ್ವದ ಸಭೆ ಮಾಡುವಾಗಲೂ ಕಾಶ್ಮೀರ ಸರಕಾರವನ್ನು ಲೆಕ್ಕಕ್ಕೇ ತೆಗೆದುಕೊಂಡಿಲ್ಲ. ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವನ್ನು ಕಡೆಗಣಿಸಲಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ಉಮರ್ ಅಬ್ದುಲ್ಲಾ ನೇತೃತ್ವದ ಸರ್ಕಾರವನ್ನು ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿತ್ತು. ಮೇ 28 ರಂದು ಉಮರ್ ಅಬ್ದುಲ್ಲಾ ಸ್ಥಳೀಯರು ಮತ್ತು ದೇಶೀಯ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುವಂತೆ ಪ್ರೋತ್ಸಾಹಿಸಲು ಪಹಲ್ಗಾಮ್‌ನಲ್ಲಿ ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯ ನಂತರ, ಅಬ್ದುಲ್ಲಾ ಉದ್ಯಮದ ಪಾಲುದಾರರು ಮತ್ತು ಸ್ಥಳೀಯರೊಂದಿಗೆ ಪ್ರವಾಸೋದ್ಯಮ ವಲಯ ಪುನರುಜ್ಜೀವನಗೊಳಿಸುವ ಕ್ರಮಗಳ ಕುರಿತು ಚರ್ಚಿಸಿದರು. ಪತ್ರಿಕಾ ಸಂವಾದದ ಸಮಯದಲ್ಲಿ ಅವರು ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಕೇಂದ್ರ ಸರ್ಕಾರದೊಂದಿಗೆ ಜಮ್ಮು ಕಾಶ್ಮೀರದಲ್ಲಿನ ಭದ್ರತೆಯ ವಿಷಯ ಎತ್ತಲು ಅವರ ಸರ್ಕಾರ ಉದ್ದೇಶಿಸಿದೆಯೇ ಎಂದು ಕೇಳಿದಾಗ, ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿನ ಬಹುಸಂಖ್ಯೆಯ ಶಕ್ತಿ ಕೇಂದ್ರಗಳ ಕಡೆ ಗಮನ ಸೆಳೆದರು. ನಾವು ವಿಚಿತ್ರವಾದ ವ್ಯವಸ್ಥೆ ಹೊಂದಿದ್ದೇವೆ. ಪ್ರವಾಸಿಗರು ನನ್ನ ಜವಾಬ್ದಾರಿ. ಆದರೆ ಪ್ರವಾಸಿಗರ ಭದ್ರತೆ ನನ್ನ ಜವಾಬ್ದಾರಿಯಲ್ಲ ಎಂದರು. ಇಲ್ಲಿ ಮೂರು ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ. ಜಮ್ಮು ಕಾಶ್ಮೀರದ ಚುನಾಯಿತ ಸರ್ಕಾರ, ಜಮ್ಮು ಕಾಶ್ಮೀರದ ಚುನಾಯಿತವಲ್ಲದ ಸರ್ಕಾರ ಮತ್ತು ಭಾರತ ಸರ್ಕಾರ ಎಂದು ಅವರು ಹೇಳಿದರು. 2019 ರಲ್ಲಿ ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮೋದಿ ಸರಕಾರ ಕಿತ್ತು ಹಾಕಿದ ಬಳಿಕ ಅಲ್ಲಿನ ಸರಕಾರಕ್ಕೆ ಸುರಕ್ಷತಾ ವ್ಯವಸ್ಥೆಯ ಮೇಲೆ ಯಾವುದೇ ನಿಯಂತ್ರಣವಿಲ್ಲ ಎಂಬುದು ಸಾಮಾನ್ಯ ಜ್ಞಾನದ ವಿಷಯ. ಆದರೂ ಕೆಲವು ಬಿಜೆಪಿ ನಾಯಕರು ಅಥವಾ ಅವರ ಬೆಂಬಲಿಗರು ಗೊತ್ತಿಲ್ಲದೆಯೋ ಅಥವಾ ಗೊತ್ತಿದ್ದರೂ ಬೇಕು ಬೇಕೆಂದೇ ಕಾಶ್ಮೀರದ ಸರಕಾರ ಇರುವಾಗ ಅಲ್ಲಿನ ಭದ್ರತಾ ಹೊಣೆ ಅಲ್ಲಿನ ಸರಕಾರದ್ದು ಎಂಬ ಮೂರ್ಖ ಹೇಳಿಕೆಗಳನ್ನು ಕೊಡುತ್ತಾ ಬಂದಿದ್ದಾರೆ. ಆದರೆ ಕಾಶ್ಮೀರದ ಸರಕಾರಕ್ಕೆ ಮೋದಿ ಸರಕಾರ ಎಷ್ಟು ಕಿಮ್ಮತ್ತು ಕೊಡುತ್ತದೆ ಎಂಬುದು ಅಮಿತ್ ಶಾ ಮಾಡಿರುವ ಭದ್ರತಾ ಸಭೆಯ ಫೋಟೋ ನೋಡಿದವರಿಗೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ವರದಿಗಳ ಪ್ರಕಾರ, ಅಮರನಾಥ ಗುಹೆಗೆ ಹೋಗುವ ಅವಳಿ ಮಾರ್ಗಗಳನ್ನು ಸುರಕ್ಷಿತಗೊಳಿಸಲು ಕೇಂದ್ರ ಅರೆಸೈನಿಕ ಪಡೆಗಳ ಹೆಚ್ಚುವರಿ ಕಂಪನಿಗಳನ್ನು ನಿಯೋಜಿಸಲಾಗುತ್ತಿದೆ. ಅಮರನಾಥ ಗುಹೆಗೆ ಹೋಗುವ ಎರಡು ಮಾರ್ಗಗಳಲ್ಲಿ ಒಂದು ಪಹಲ್ಗಾಮ್ ಮೂಲಕ ಹಾದುಹೋಗುತ್ತದೆ. ಅಲ್ಲಿಯೇ ಏಪ್ರಿಲ್ ತಿಂಗಳಿನಲ್ಲಿ ಭಯೋತ್ಪಾದಕ ದಾಳಿ ನಡೆಯಿತು. ಪಹಲ್ಗಾಮ್ ದಾಳಿಯ ನಂತರ ಭದ್ರತಾ ಕ್ರಮವಾಗಿ ಪ್ರವಾಸಿಗರಿಗೆ ಮುಚ್ಚಲಾಗಿದ್ದ ಕಾಶ್ಮೀರದಲ್ಲಿನ ಪ್ರವಾಸಿ ತಾಣಗಳನ್ನು ಕ್ರಮೇಣ ಪುನಃ ತೆರೆಯುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡದ ನಂತರ 48 ಪ್ರವಾಸಿ ತಾಣಗಳನ್ನು ಮುಚ್ಚಲಾಯಿತು. ಕಳೆದ ಮೂರು ವರ್ಷಗಳಲ್ಲಿ ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿದ್ದ ಜಮ್ಮು ಕಾಶ್ಮೀರದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ನಾಲ್ಕು ದಿನಗಳ ಸಂಘರ್ಷ ಭಾರಿ ಕುಸಿತಕ್ಕೆ ಕಾರಣವಾಗಿದೆ.

ವಾರ್ತಾ ಭಾರತಿ 30 May 2025 10:56 pm

ಬೆಂಗಳೂರು | ದಲಿತರ ಮೇಲಿನ ದೌರ್ಜನ್ಯದ ತಡೆಯಲು ಆಗ್ರಹಿಸಿ ಧರಣಿ

ಬೆಂಗಳೂರು : ದಲಿತರ ಮೇಲೆ ಹೆಚ್ಚಾಗುತ್ತಿರುವ ಕೊಲೆ, ದೌರ್ಜನ್ಯ, ಅಸ್ಪೃಶ್ಯತೆ, ಮರ್ಯಾದೆ ಹತ್ಯೆ ತಡೆಯಲು ರಾಜ್ಯ ಸರಕಾರ ಕ್ರಮ ವಹಿಸಲು ಆಗ್ರಹಿಸಿ, ದಲಿತ ಹಕ್ಕುಗಳ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲಾಯಿತು. ರಾಜ್ಯದಲ್ಲಿ ದಲಿತರ ಮೇಲೆ ಜಾತಿ ತಾರತಮ್ಯ, ದೌರ್ಜನ್ಯ, ಸಾಮಾಜಿಕ ಬಹಿಷ್ಕಾರಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೇಸ್ ಸರಕಾರ ದಲಿತರಿಗೆ ಕಾನೂನು ರಕ್ಷಣೆ ಒದಗಿಸಲು 33 ವಿಶೇಷ ಪೋಲಿಸ್ ಠಾಣೆ ಸ್ಥಾಪಿಸಿದ್ದಾರೆ. ಆದರೆ ಇದೆ ಸಂದರ್ಭದಲ್ಲಿ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ. ಈ ಠಾಣೆಗಳು ಏನು ಮಾಡುತ್ತಿವೆ? ಎಂದು ಧರಣಿನಿರತರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಹರಳಹಳ್ಳಿ, ದಲಿತರು ಪೋಲಿಸ್ ಠಾಣೆಗಳಿಗೆ ದೂರು ನೀಡಲು ಹೋದರೆ ಎಫ್‍ಐಆರ್ ಹಾಕುದಿಲ್ಲ. ಆರೋಪಿಗಳನ್ನು ಬಂಧಿಸದೇ ಮೇಲ್ಜಾತಿಯ ಪಟಭದ್ರ ಹಿತಾಶಕ್ತಿಗಳ ಪರ ಪೊಲೀಸರು ನಿಂತಿದ್ದಾರೆ. ದಲಿತರಿಗೆ ರಕ್ಷಣೆ ಸಿಗುತ್ತಿಲ್ಲ. ಕಾಂಗ್ರೇಸ್ ಸರಕಾರದ ಪೊಲೀಸ್ ವೈಫಲ್ಯ ಕಣ್ಣಿಗೆ ರಾಚ್ಚುವಂತಿದೆ ಎಂದು ಆರೋಪಿಸಿದರು. ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರನ್ನು ಅದೇ ಗ್ರಾಮದ ಸವರ್ಣೀಯ ರೌಡಿಶೀಟರ್ ಅನಿಲ್ ಕುಮಾರ್ ಎಂಬವನು ಕೊಲೆಮಾಡಿ. ಹುಲ್ಲು ಮೆದೆಯಲ್ಲಿ ಸುಟ್ಟು ಹಾಕಿದ ಘೋರ ಘಟನೆ ಸಂಭವಿಸಿದೆ. ಜಯಕುಮಾರ್ ಪತ್ನಿ ಲಕ್ಷ್ಮಿ ತನ್ನ ಗಂಡನ ಕೋಲೆಯ ಬಗ್ಗೆ ದೂರು ನೀಡಿದ್ದರು. ಪೊಲೀಸರು ನಿರ್ಲಕ್ಷ ವಹಿಸಿ ಆತನು ಆತ್ಮಹತ್ಯೆ ಮಾಡಿಕೊಂಡಿರುವುದ್ದಾಗಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಕೂಡಲೇ ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಕವಣಗಾಲ ಗ್ರಾಮದಲ್ಲಿ ದಲಿತ ಯುವಕ ಸ್ವಾಮಿನಾಥ ದೇವಾಲಯ ಪ್ರವೇಶವನ್ನು ಅದೇ ಗ್ರಾಮದ ಸವರ್ಣೀಯರ ಗುಂಪು ತಡೆದು ಜಾತಿನಿಂದನೆ ಅವಮಾನ ಮಾಡಿದ ಘಟನೆ ಸಂಭವಿಸಿದೆ. ಈ ಕುರಿತು ದೊಡ್ಡೇರಿ ಪೊಲೀಸ ಠಾಣೆಗೆ ದೂರು ನೀಡಿ 7 ದಿನಗಳು ಕಳೆದರೂ ಯಾವುದೇ ಕ್ರಮ ಜರುಗಿಸಿಲ್ಲ. ಬಲಾಡ್ಯರ, ಪ್ರಭಾವದಿಂದ ಪೊಲೀಸರು ದೂರು ದಾಖಲಿಸಿ ವಿಳಂಬ ಮಾಡಿ ಎಫ್‍ಐಆರ್ ಹಾಕಿದ್ದಾರೆ ಆದರೆ ಇದುವರೆವಿಗೂ ಯಾರನ್ನೂ ಬಂಧಿಸಿಲ್ಲ ಎಂದು ಆರೋಪಿಸಿದರು. ಧರಣಿಯಲ್ಲಿ ದಲಿತ ಹಕ್ಕುಗಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ರಾಜಣ್ಣ, ಕರ್ನಾಟಕ ರಾಜ್ಯ ಎಸ್ಸಿ,ಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷ ಡಿ.ಶಿವಶಂಕರ್, ದಲಿತ್ ಶೋಷಣ್ ಮುಕ್ತಿ ಮಂಚ್‍ನ ರಾಜ್ಯ ಸದಸ್ಯ ಎನ್.ನಾಗರಾಜ ಮತ್ತಿತರರು ಹಾಜರಿದ್ದರು.

ವಾರ್ತಾ ಭಾರತಿ 30 May 2025 10:47 pm

ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌: ಒಂದೇ ದಿನ 3 ಸ್ವರ್ಣ ಬೇಟೆಯಾಡಿದ ಭಾರತ! ಗುಲ್ವೀರ್‌ ಡಬಲ್ ಸಾಧನೆ!

India in Asian Athletics Championship: ಗುಮಿಯಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವು ಅದ್ಭುತ ಪ್ರದರ್ಶನ ನೀಡಿದ್ದು, ಗುಲ್ವೀರ್ ಸಿಂಗ್ ಎರಡು ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು ಹೈಜಂಪ್ ನಲ್ಲಿ ಪೂಜಾ ಸಿಂಗ್ ವೈಯಕ್ತಿಕ ಶ್ರೇಷ್ಠ ಸಾಧನೆ ಮೆರೆದು ಸ್ವರ್ಣ ಗೆದ್ದಿದ್ದಾರೆ. ಅದೇ ರೀತಿ ಹೆಪ್ಟಾಥ್ಲಾನ್‌ನಲ್ಲಿ ನಂದಿನಿ ಅಗಸರ ಚಿನ್ನ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಈವರೆಗೆ ಭಾರತವು ಒಟ್ಟು 18 ಪದಕಗಳನ್ನು ಗೆದ್ದು 2023ರ ಸಾಧನೆಯನ್ನು ಮೀರುವ ಹಾದಿಯಲ್ಲಿದೆ.

ವಿಜಯ ಕರ್ನಾಟಕ 30 May 2025 10:42 pm

ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ : ನಿಷೇಧಾಜ್ಞೆ ಜಾರಿ

ತುಮಕೂರು : ಜಿಲ್ಲೆಯ ಗುಬ್ಬಿ ತಾಲ್ಲೂಕು ಸಂಕಾಪುರ ಗ್ರಾಮ, ಡಿ.ರಾಂಪುರ ಗ್ರಾಮದಲ್ಲಿ ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳದ 10 ಕಿ.ಮೀ. ಸುತ್ತಳತೆಯ ಪ್ರದೇಶಕ್ಕೆ ಅನ್ವಯವಾಗುವಂತೆ ಮೇ 31ರ ಬೆಳಗ್ಗೆ 6 ರಿಂದ ಜೂನ್ 1ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಗುಬ್ಬಿ ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಿ.ಆರತಿ ಆದೇಶ ಹೊರಡಿಸಿದ್ದಾರೆ. ಹೇಮಾವತಿ ಎಕ್ಸ್‌ ಪ್ರೆಸ್ ಪೈಪ್‍ಲೈನ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯವರು ಮೇ 31ರಂದು ಬೃಹತ್ ಪ್ರತಿಭಟನೆ ಚಳುವಳಿಯನ್ನು ಹಮ್ಮಿಕೊಂಡಿರುವುದರಿಂದ ಕಾಮಗಾರಿ ನಿರ್ವಹಣೆಗೆ ಅಡಚಣೆಯುಂಟಾಗಿ ಕಾಮಗಾರಿ ಸ್ಥಳದಲ್ಲಿರುವ ಮಿಷನರಿ ವಸ್ತುಗಳ ನಾಶಪಡಿಸುವ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟ ಉಂಟಾಗುವ ಸಾಧ್ಯತೆಯಿರುವುದರಿಂದ ಈ ನಿಷೇಧಾದೇಶವನ್ನು ಹೊರಡಿಸಲಾಗಿದೆ. ಈ ಆದೇಶದನ್ವಯ ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪು ಸೇರಿ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವಂತಿಲ್ಲ. ನಿಷೇಧಾಜ್ಞೆ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲೀ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ರೀತಿಯ ಜನಸಾಮಾನ್ಯರ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದಾಗಲಿ, ಘೋಷಣೆ ಕೂಗುವುದಾಗಲಿ ಮಾಡುವಂತಿಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕ ಪ್ರಾಣ ಮತ್ತು ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸಬಾರದು. ಈ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ-ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.

ವಾರ್ತಾ ಭಾರತಿ 30 May 2025 10:41 pm

ದ.ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ

ಮಂಗಳೂರು: ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ನೂತನ ಎಸ್ಪಿಯಾಗಿ ಡಾ. ಅರುಣ್ ಅವರು ಅಧಿಕಾರ ಸ್ವೀಕರಿಸಿದ ದಿನವೇ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈ ತಿಂಗಳ 31ಕ್ಕೆ (ಶನಿವಾರ) 4 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಒಂದೇ ಠಾಣೆ ಅಥವಾ ಪೊಲೀಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಸೈ, ಎಚ್‌ಸಿ ಮತ್ತು ಪಿಸಿಗಳ ಮಾಹಿತಿಯನ್ನು ಮೇ 31ರ ಸಂಜೆ 4 ಗಂಟೆಯೊಳಗೆ ಎಸ್ಪಿ ಕಚೇರಿಗೆ ನೀಡುವಂತೆ ಸೂಚಿಸಲಾಗಿದೆ. ತಪ್ಪುಮಾಹಿತಿಯನ್ನು ನೀಡಿದರೆ ಸಂಬಂಧಿಸಿದ ಠಾಣಾಧಿಕಾರಿ/ಠಾಣಾ ಬರಹಗಾರರ ಮೇಲೆ ಸೂಕ್ತ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಪದೋನ್ನತಿ ಹೊಂದಿ/ವರ್ಗಾವಣೆಗೊಂಡು ಬಳಿಕ 6 ತಿಂಗಳೊಳಗೆ ಮತ್ತದೇ ಠಾಣೆಯಲ್ಲಿ ಮುಂದುವರಿದಿರುವುದು ಅಥವಾ ಕೋರಿಕೆ ಮೇರೆಗೆ ಅದೇ ಠಾಣೆಯಲ್ಲಿ ಕರ್ತವ್ಯದಲ್ಲಿ ಮುಂದುವರಿಯುತ್ತಿರುವವರ ವಿವರವನ್ನು ಕೂಡಾ ನೀಡಬೇಕು ಎಂದು ಸೂಚಿಸಲಾಗಿದೆ. ಪದೋನ್ನತಿ ಹೊಂದಿದ ಹಾಗೂ ಕೋರಿಕೆ ಮೇರೆಗೆ ಮುಂದುವರಿದ ದಿನಾಂಕವನ್ನು ಕೂಡ ನಮೂದಿಸಲು ಸೂಚಿಸಲಾಗಿದೆ. ಎರಡು ವರ್ಷದೊಳಗೆ ವಯೋನಿವೃತ್ತಿ ಹೊಂದುವವರ ಹಾಗೂ ಪತಿ-ಪತ್ನಿ ಸರಕಾರಿ ನೌಕರರಾಗಿದ್ದಲ್ಲಿ ಆ ಬಗ್ಗೆಯೂ ಮಾಹಿತಿಯನ್ನು ನಮೂದಿಸಬೇಕು ಎಂದು ತಿಳಿಸಲಾಗಿದೆ

ವಾರ್ತಾ ಭಾರತಿ 30 May 2025 10:34 pm

ಬೀದರ್ | ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನ್ನು ಅಮಾನತುಗೊಳಿಸುವಂತೆ ಕರವೇಯಿಂದ ಜಿಲ್ಲಾಧಿಕಾರಿಗೆ ಮನವಿ

ಬೀದರ್ :  ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಶಿವಶಂಕರ ಕಾಮಶೆಟ್ಟಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿದೆ.  ʼಬಾಲಕಿಯರ ಪ್ರೌಢ ಶಾಲೆಯ ಹೊಸ ಕಟ್ಟಡ ನಿರ್ಮಾಣದ ಟೆಂಡರ್‌ನಲ್ಲಿ ಸಾಕಷ್ಟು ಲೋಪದೋಶಗಳಿದೆ. ಲೋಕೊಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಶಿವಶಂಕರ ಕಾಮಶೆಟ್ಟಿ ತಮಗೆ ಬೇಕಾದ ಗುತ್ತಿಗೆದಾರರಿಗೆ ಕಾಮಗಾರಿ ನೀಡಲು ಸಹಾಯವಾಗುವಂತೆ ಸರಕಾರದ ಆದೇಶ ಗಾಳಿಗೆ ತೂರಿ ಟೆಂಡರ್‌ ಕರೆದಿದ್ದಾರೆ. ಇಲ್ಲಿವರೆಗೆ ಕರೆದ ಟೆಂಡರ್‌ಗಳು ಮತ್ತು ಕಾಮಗಾರಿಗಳ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಬೇಕು. ಶಿವಕುಮಾರ್ ಕಾಮಶೆಟ್ಟಿ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.   ಈ ವೇಳೆ ಜಿಲ್ಲಾಧ್ಯಕ್ಷ ವಿ.ಎಲ್.ಮಾರ್ಟಿನ್, ಉಪಾದ್ಯಾಕ್ಷ ಸತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣಪತಿ ಕಮಠಾಣ, ಆಸ್ಕರ್ ಫರ್ನಾಂಡಿಸ್, ಜಾನ್ ವೇಸ್ಲೀ, ಮೋಜಸ್ ನಿರ್ಣಾಕರ್, ಹರೀಶ್ ಖಂಡೆ, ವಿನೋದ್ ಚಿಟ್ಟಾ, ಕೃಷ್ಣಾ ವಾರೀಕ್ ಹಾಗೂ ಅಬ್ರಾಹಂ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 10:33 pm

ಭಾರೀ ಮಳೆ | ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ: ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ ಕೆಲವು ದಿನದಿಂದ ಆಗುತ್ತಿರುವ ಭಾರೀ ಮಳೆಯಿಂದಾಗಿ ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಠಿ ನಿರ್ವಹಣೆ ಕುರಿತು ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು. ನಗರದ ಪಂಪ್‌ವೆಲ್, ಕೊಟ್ಟಾರ ಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನ ಬಳಿಸ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ವಾರ್ತಾ ಭಾರತಿ 30 May 2025 10:28 pm

Karun Nair: ಇಂಗ್ಲೆಂಡ್‌ನಲ್ಲಿ ಕನ್ನಡಿಗ ಕರುಣ್ ನಾಯರ್ ಅಮೋಘ ಶತಕ

ಡಿಯರ್ ಕ್ರಿಕೆಟ್ ನನಗೆ ಇನ್ನೊಂದು ಅವಕಾಶ ಕೊಡು ಎಂದು ಕೇಳಿದ್ದ ಕನ್ನಡಿಗ ಕರುಣ್ ನಾಯರ್ ಅವರಿಗೆ ಕ್ರಿಕೆಟ್ ಮತ್ತೊಂದು ಅವಕಾಶ ಕೊಟ್ಟಿದೆ. ದೇಶೀಯ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕಣಕ್ಕಿಳಿದ ಕರುಣ್ ನಾಯರ್ ಮೊದಲ ಪಂದ್ಯದಲ್ಲೇ ಅಬ್ಬರಿಸುವ ಮೂಲಕ ಭಾರತ ತಂಡದ ಆಯ್ಕೆದಾರರ ಗಮನ ಸೆಳೆದಿದ್ದರು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ

ಒನ್ ಇ೦ಡಿಯ 30 May 2025 10:25 pm

ಕೊಳತ್ತಮಜಲು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಗಾಯಾಳುವನ್ನು ಭೇಟಿಯಾದ ದ.ಕ.ಖಾಝಿ

ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಳತ್ತಮಜಲು ಖಲಂದರ್ ಶಾಫಿಯನ್ನು ದ.ಕ.ಖಾಝಿ ಶೈಖುನಾ ತ್ವಾಕ ಅಹ್ಮದ್ ಮುಸ್ಲಿಯಾರ್ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಎಸ್.ಎಂ. ರಶೀದ್ ಹಾಜಿ, ಮಾಜಿ ಮೇಯರ್ ಕೆ.ಅಶ್ರಫ್, ಸೆಂಟ್ರಲ್ ಮುಸ್ಲಿಮ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 10:19 pm

ಮಂಗಳೂರು: ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಮೇ 31 ರಂದು ಎಸ್ಕೆಎಸೆಸ್ಸೆಫ್ ಪ್ರತಿಭಟನೆ

ಮಂಗಳೂರು: ಎಸ್ಕೆಎಸೆಸ್ಸೆಫ್ ಸಕ್ರಿಯ ಕಾರ್ಯಕರ್ತ ಮತ್ತು ಕೊಳತ್ತಮಜಲು ಮಸೀದಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮತ್ತು ಕುಡುಪುವಿನಲ್ಲಿ ಅಶ್ರಫ್‌ರನ್ನು ಹತ್ಯೆಗೈದ ಕೃತ್ಯವನ್ನು ಖಂಡಿಸಿ ಮತ್ತು ಕೋಮುಪ್ರಚೋದನಾ ಭಾಷಣಗಾರರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್ಕೆಎಸೆಸ್ಸೆಫ್ ವೆಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ಮೇ 31ರಂದು ಅಪರಾಹ್ನ 3ಕ್ಕೆ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಜಂ ಇಯ್ಯತ್ತುಲ್ ಖುತಬಾ ದ.ಕ.ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ರಹ್ಮಾನಿ ಪರ್ಲಡ್ಕ ಕರೆ ನೀಡಿದ್ದಾರೆ.

ವಾರ್ತಾ ಭಾರತಿ 30 May 2025 10:11 pm

ಕೊಣಾಜೆ: ಭಾರೀ ಮಳೆ, ನಿಲ್ಲದ ಹಾನಿ

ಕೊಣಾಜೆ: ಭಾರೀ ಮಳೆಗೆ ಕೊಣಾಜೆ ವ್ಯಾಪ್ತಿಯ ಹಲೆವೆಡೆ ಮನೆಗಳಿಗೆ ಹಾನಿ ಸಂಭವಿಸಿದ ಘಟನೆ ನಡೆದಿದೆ. ಕಲ್ಲುಗುಡ್ಡೆ ಹಕೀಮ್ ಅವರ ಮನೆಯ ಆವರಣ ಗೋಡೆ ಕುಸಿದು ಹಾನಿಯಾಗಿದೆ. ನಾಸಿರ್ ಕೆಎಂ ಕೋಡಿಜಾಲ್ ಅವರ ಮನೆಯ ಬಳಿ ಗುಡ್ಡ ಕುಸಿತಗೊಂಡಿತು.ಹಾಗೂ ಅಶ್ರಫ್ ಕೋಡಿಜಾಲ್ ಅವರ ಮನೆಯ ಕಾಂಪೌಂಡ್ ಕುಸಿದು ಹಾನಿಯಾಗಿದೆ. ಕೋಡಿಜಾಲ್ ಮಸೀದಿಯ ಎದುರುಭಾಗದಲ್ಲಿರುವ ರಿಯಾಝ್ ಅವರ ಹೊಸ ಮನೆಯ ಆವರಣಗೋಡೆ ಕುಸಿದು ಬಿದ್ದಿದೆ. ಮೊಂಟೆಪದವು ಬಳಿ ರೇವತಿ ಎಂಬವರ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಹಾನಿಯಾಗಿದೆ. ಹಾಗೂ ಮೊಂಟೆಪದವಿನಿಂದ ಪಟ್ಟೋರಿಗೆ ಹೋಗುವ ದಾರಿಯ ನಡುವಿನ ಗುಡ್ಡ ಕುಸಿದು ರಸ್ತೆ ಸಂಪರ್ಕಕ್ಕೆ ತೊಂದರೆಯಾಗಿದೆ.

ವಾರ್ತಾ ಭಾರತಿ 30 May 2025 9:58 pm

ಕಲಬುರಗಿ : ಆಸ್ತಿ ವಿಚಾರಕ್ಕೆ ಸಹೋದರರ ಮಧ್ಯೆ ಜಗಳ; ಕೊಲೆಯಲ್ಲಿ ಅಂತ್ಯ

ಕಲಬುರಗಿ: ಆಸ್ತಿ ವಿಚಾರಕ್ಕೆ ಸಹೋದರರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ನಡೆದಿದೆ. ರಮೇಶ್ ಕೊಲೆಯಾದ ವ್ಯಕ್ತಿ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಗಮೇಶ ಹಾಗೂ ಅವರ ಮಕ್ಕಳು ರಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ರಮೇಶ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾರ್ತಾ ಭಾರತಿ 30 May 2025 9:55 pm

ಕ್ರಿಸ್ಟಿಯಾನೊ ರೊನಾಲ್ಡೊರೊಂದಿಗಿನ ಗುತ್ತಿಗೆ ನವೀಕರಣಕ್ಕೆ ಪ್ರಯತ್ನ: ಅಲ್ ನಸರ್ ಕ್ಲಬ್ ಮುಖ್ಯಸ್ಥ

ರಿಯಾದ್: ಫುಟ್ ಬಾಲ್ ಮಾಂತ್ರಿಕ ಕ್ರಿಸ್ಟಿಯಾನೊ ರೊನಾಲ್ಡೊರೊಂದಿಗಿನ ಗುತ್ತಿಗೆಯ ವಿಸ್ತರಣೆಗೆ ಅಲ್-ನಸರ್ ಕ್ಲಬ್ ಮಾತುಕತೆ ನಡೆಸುತ್ತಿದ್ದು, ಐದು ಬಾರಿಯ ಬ್ಯಾಲನ್ ಡಿ’ಓರ್ ವಿಜೇತ ಫುಟ್ ಬಾಲ್ ತಾರೆಯೊಂದಿಗೆ ಗುತ್ತಿಗೆಗೆ ಸಹಿ ಹಾಕಲು ಆಸಕ್ತಿ ಹೊಂದಿರುವ ಇನ್ನಿತರ ಆತಿಥೇಯ ತಂಡಗಳಿಂದ ಸ್ಪರ್ಧೆ ಎದುರಿಸುತ್ತಿದೆ ಎಂದು ಗುರುವಾರ ಸೌದಿ ಅರೇಬಿಯಾ ಫುಟ್ ಬಾಲ್ ಕ್ಲಬ್ ಆದ ಅಲ್-ನಸರ್ ತಂಡದ ಕ್ರೀಡಾ ನಿರ್ದೇಶಕ ಫರ್ನಾಂಡೊ ಹಿಯೆರೊ ಹೇಳಿದ್ದಾರೆ. ಸೋಮವಾರ ಅಲ್-ಫತೇಹ್ ನಲ್ಲಿ ನಡೆದ ಪಂದ್ಯದೊಂದಿಗೆ ಅಲ್-ನಸರ್ ಕ್ಲಬ್ ನ ಋತು ಮುಕ್ತಾಯವಾಗುತ್ತಿದ್ದಂತೆಯೆ, “ಈ ಅಧ್ಯಾಯ ಮುಕ್ತಾಯಗೊಂಡಿದೆ. ಕತೆ? ಇನ್ನೂ ಬರೆಯಬೇಕಿದೆ” ಎಂದು ಕ್ರಿಸ್ಟಿಯಾನೊ ರೊನಾಲ್ಡೊ ನಿಗೂಢ ಪೋಸ್ಟ್ ಮಾಡಿದ್ದರು. ಇದರ ಬೆನ್ನಿಗೇ, 40 ವರ್ಷ ವಯಸ್ಸಿನ ಪೋರ್ಚುಗೀಸ್ ಫುಟ್ ಬಾಲ್ ತಾರೆಯ ಭವಿಷ್ಯದ ಕುರಿತ ಊಹಾಪೋಹಗಳು ತೀವ್ರಗೊಂಡಿದ್ದವು. ಈ ಕುರಿತು ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫರ್ನಾಂಡೊ ಹಿಯೆರೊ, “ಕ್ರಿಸ್ಟಿಯಾನೊ ರೊನಾಲ್ಡೊರ ಗುತ್ತಿಗೆ ಜೂನ್ 30ರವರೆಗೂ ಚಾಲ್ತಿಯಲ್ಲಿದೆ. ಅವರು ನಮ್ಮೊಂದಿಗೆ ಮುಂದುವರಿಯುವಂತೆ ಮಾಡಲು ನಾವು ಅವರ ಗುತ್ತಿಗೆಯನ್ನು ನವೀಕರಿಸಲು ಪ್ರಯತ್ನಿಸಲಿದ್ದೇವೆ. ಆದರೆ, ಅವರೊಂದಿಗೆ ಗುತ್ತಿಗೆಗೆ ಸಹಿ ಮಾಡಲು ಅನೇಕ ಕ್ಲಬ್ ಗಳು ಆಸಕ್ತಿ ತಳೆದಿವೆ” ಎಂದು ತಿಳಿಸಿದರು. ಕ್ಲಬ್ ವಿಶ್ವಕಪ್ ಕ್ರೀಡಾಕೂಟಕ್ಕೆ ಅಲ್-ನಸರ್ ಫುಟ್ ಬಾಲ್ ಕ್ಲಬ್ ಅರ್ಹತೆ ಪಡೆಯಲು ವಿಫಲಗೊಂಡಿದ್ದರೂ, ಜೂನ್ 14ರಿಂದ ಜುಲೈ 13ರವರೆಗೆ ಅಮೆರಿಕದಲ್ಲಿ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಕ್ರಿಸ್ಟಿಯಾನೊ ರೊನಾಲ್ಡ್ ಆಡುವಂತೆ ಮಾಡಲು ಮಾತುಕತೆಗಳು ಪ್ರಗತಿಯಲ್ಲಿವೆ ಎಂದು ಕಳೆದ ವಾರ ಫೀಫಾ ಅಧ್ಯಕ್ಷ ಗಿಯಾನಿ ಇನ್ಫ್ಯಾಂಟಿನೊ ಹೇಳಿದ್ದರು.

ವಾರ್ತಾ ಭಾರತಿ 30 May 2025 9:47 pm

ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ಕಡ್ಡಾಯ ಭೇಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಳೆ ಹಾನಿ ಪ್ರದೇಶಗಳಿಗೆ ಆಯಾ ಜಿಲ್ಲಾಧಿಕಾರಿಗಳು, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನದಲ್ಲಿ ರಾಜ್ಯದ ಪ್ರಗತಿ ಪರಿಶೀಲನೆ ಕುರಿತಂತೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜತೆ ಸಭೆ ನಡೆಸಿದ ಅವರು, ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದರು. ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ ಎಸ್‍ಡಿಆರ್‌ಎಫ್ ಅಡಿ ಒಟ್ಟಾರೆಯಾಗಿ ಒಂದು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ. ಜತೆಗೆ, ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರ ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚಿಸಿದರು. ಅದರಲ್ಲೂ, ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು. ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ 1.20 ಲಕ್ಷ ರೂ., ಮನೆ ಹಾನಿ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು. ಜತೆಗೆ, ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು. ಪ್ರಮುಖವಾಗಿ ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಗ್ರಾಮ ಮಟ್ಟದಲ್ಲಿ ಎಲ್ಲ ಸರಕಾರಿ ಜಮೀನು ಗುರುತಿಸಿ, ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ.95ರಷ್ಟು ಪೂರ್ಣಗೊಂಡಿದೆ. 14,15,492 ಎಕರೆ ಸರಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದೆ. ಬಗರ್ ಹುಕುಂ ಒಟ್ಟು 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದ್ದು, ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದೂ ಅವರು ಸಭೆಯಲ್ಲಿ ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ವಾರ್ತಾ ಭಾರತಿ 30 May 2025 9:46 pm

2026ರಲ್ಲಿ ಇತರ ರಾಜ್ಯಗಳೊಂದಿಗೆ ಪಶ್ಚಿಮ ಬಂಗಾಳ ಚುನಾವಣೆಯನ್ನು ಸೇರಿಸಬೇಡಿ: ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಗ್ರಹ

ಕೋಲ್ಕತ್ತಾ: 2026ರಲ್ಲಿ ನಡೆಯಬೇಕಿರುವ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಇತರ ರಾಜ್ಯಗಳೊಂದಿಗೆ ಪಶ್ಚಿಮ ಬಂಗಾಳ ಚುನಾವಣೆಯನ್ನು ಸೇರ್ಪಡೆ ಮಾಡಕೂಡದು ಎಂದು ಶುಕ್ರವಾರ ಚುನಾವಣಾ ಆಯೋಗವನ್ನು ಆಗ್ರಹಿಸಿರುವ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಸುವೇಂದು ಅಧಿಕಾರಿ, “ಗುರುವಾರ ಆಲಿಪುರ್ದೂರ್ ನಲ್ಲಿ ಆಯೋಜನೆಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರ ಮೇಲೆ ಟಿಎಂಸಿ ಬೆಂಬಲಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ” ಎಂದು ದೂರಿದರು. ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರಧಾನಿ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳದಂತೆ ತಡೆಯಲು ಟಿಎಂಸಿ ಬೆಂಬಲಿತ ಗೂಂಡಾಗಳು 34 ವಾಹನಗಳನ್ನು ಧ್ವಂಸಗೊಳಿಸಿದ್ದು, 22 ಮಂದಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದೂ ಅವರು ಆಪಾದಿಸಿದರು. “ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಟಿಎಂಸಿ ನಾಯಕರು ಬಳಸುತ್ತಿರುವ ಭಾಷೆ ಬೆದರಿಕೆ ಹಾಗೂ ಅಪ್ರಜಾಸತ್ತಾತ್ಮಕ ಧಾಟಿಯದ್ದಾಗಿದೆ. ಇಂತಹ ಸನ್ನಿವೇಶಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯಲು ಸಾಧ್ಯವಿಲ್ಲ” ಎಂದು ಹೇಳಿದ ಸುವೇಂದು ಅಧಿಕಾರಿ, 2026ರಲ್ಲಿ ನಡೆಯಬೇಕಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಮುಂದೆ ಚುನಾವಣೆ ನಡೆಯಬೇಕಿರುವ ಇನ್ನಿತರ ರಾಜ್ಯಗಳಾದ ಅಸ್ಸಾಂ, ಬಿಹಾರ ಅಥವಾ ಕೇರಳ ರಾಜ್ಯಗಳೊಂದಿಗೆ ಸೇರ್ಪಡೆ ಮಾಡಬಾರದು ಎಂದು ಚುನಾವಣಾ ಆಯೋಗವನ್ನು ಆಗ್ರಹಿಸಿದರು.

ವಾರ್ತಾ ಭಾರತಿ 30 May 2025 9:43 pm

ಝೆರೋದಾ ಕಂಪನಿಗೆ 12 ಕೋಟಿ ರೂ. ನಿವ್ವಳ ಲಾಭ

ಷೇರು ಮಾರುಕಟ್ಟೆ ಹೂಡಿಕೆ ವೇದಿಕೆ ಝೆರೋದಾ 2024-25ನೇ ಸಾಲಿನಲ್ಲಿ 12.5 ಕೋಟಿ ರೂ. ಲಾಭ ಗಳಿಸಿದೆ, ಹಿಂದಿನ ವರ್ಷದ 7.2 ಕೋಟಿ ರೂ.ಗೆ ಹೋಲಿಸಿದರೆ ಇದು ಗಮನಾರ್ಹ ಏರಿಕೆ. ಆದಾಯವನ್ನು ದ್ವಿಗುಣಗೊಳಿಸಿ 36 ಕೋಟಿ ರೂ.ಗೆ ತಲುಪಿದೆ. ಹೂಡಿಕೆದಾರರಿಗೆ ಸಾಲ ಸೌಲಭ್ಯವನ್ನೂ ಒದಗಿಸುತ್ತಿದ್ದು, 81 ಲಕ್ಷ ಬಳಕೆದಾರರನ್ನು ಹೊಂದಿದೆ, ಇದು ಒಟ್ಟು ಷೇರು ಬಳಕೆದಾರರ ಶೇ. 26ರಷ್ಟಿದೆ.

ವಿಜಯ ಕರ್ನಾಟಕ 30 May 2025 9:38 pm

ಮಂಗಳೂರು ನಗರ ಪೊಲೀಸ್ ನೂತನ ಆಯುಕ್ತ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

ವಾರ್ತಾ ಭಾರತಿ 30 May 2025 9:38 pm

ಇಂಗ್ಲೆಂಡ್ ನಲ್ಲೂ ಮುಂದುವರಿದ ಕರುಣ್ ನಾಯರ್ ರನ್ ಆರ್ಭಟ; ಸರ್ಫರಾಜ್ ಖಾನ್ ಜೊತೆ ಅತ್ಯುದ್ಭುತ ಆಟ!

Karun Nair And Sarfaraj Khan Partnership- ಕರ್ನಾಟಕದ ಈ ಯುವಕನಿಗೆ ಪಿಚ್ ಯಾವುದು? ಬೌಲರ್ ಯಾರು ಎಂಬುದು ಮುಖ್ಯವೇ ಅಲ್ಲ. ರನ್ ಗಳಿಸುವುದಷ್ಟೇ ಗುರಿ. ಆತನ ಪ್ರತಿಯೊಂದು ಇನ್ನಿಂಗ್ಸ್ ನನ್ನನ್ನು ರಾಷ್ಟ್ರೀಯ ತಂಡದಿಂದ ಹೇಗೆ ಕೈಬಿಟ್ಟಿರಿ ಎಂದು ಕೇಳುವ ರೀತಿ ಇರುತ್ತದೆ. ಇದೀಗ ಇಂಗ್ಲೆಂಡ್ ನೆಲಕ್ಕೆ ಕಾಲಿಟ್ಟು ವಾರ ಕಳೆದಿಲ್ಲ. ಅದಾಗಲೇ ಕರುಣ್ ನಾಯರ್ ಬ್ಯಾಟ್ ನಿಂದ ಸೊಗಸಾದ ಶತಕ ಹರಿದು ಬಂದಿದೆ. ಹೌದು ಇಂಗ್ಲೆಂಡ್ ಲಯನ್ಸ್ ವಿರುದ್ಧ ಆರಂಭಿಕ ನಾಗಿ ಕಣಕ್ಕಿಳಿದಿರುವ ಕರುಣ್ ನಾಯರ್ ಸರ್ಫರಾಜ್ ಖಾನ್ ಅವರ ಜೊತೆ ಸೇರಿ ಭರ್ಜರಿ ಆಟವಾಡಿದ್ದಾರೆ.

ವಿಜಯ ಕರ್ನಾಟಕ 30 May 2025 9:37 pm

ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ನಟ, ನಟಿಯರ ಆಗ್ರಹ

ಬೆಂಗಳೂರು : ಇತ್ತೀಚಿಗೆ ಕಮಲ್ ಹಾಸನ್ ಕಾರ್ಯಕ್ರಮವೊಂದರಲ್ಲಿ ʼಕನ್ನಡ ಹುಟ್ಟಿದ್ದು ತಮಿಳಿʼನಿಂದ ಎಂಬ ಹೇಳಿಕೆಗೆ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡದ ನಟ-ನಟಿಯರು ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸಾಧು ಕೋಕಿಲಾ, ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ. ಅವರ ಚಲನಚಿತ್ರಗಳು ತಮಿಳುನಾಡಿನಲ್ಲಿ ಯಶಸ್ವಿಯಾಗದಿದ್ದರೂ ಕರ್ನಾಟಕದಲ್ಲಿ ಯಶಸ್ವಿಯಾಗಿವೆ. ಕನ್ನಡಿಗರು ಅವರ ಕೈಬಿಟ್ಟಿಲ್ಲ. ಕಮಲ್ ಅವರನ್ನು ಕನ್ನಡದ ಜನ ಪ್ರೀತಿಸುತ್ತಾರೆ. ಈಗ ಅವರ ಮಾತಿನಿಂದ ಕನ್ನಡಿಗರಿಗೆ ಬೇಸರವಾಗಿದೆ. ಅವರು ಕ್ಷಮೆ ಕೇಳಲೇ ಬೇಕು, ಅವರಿಗೆ ಬೇರೆ ದಾರಿಯಿಲ್ಲ ಎಂದು ತಿಳಿಸಿದರು. ಕನ್ನಡ, ಕರ್ನಾಟಕ ನಮ್ಮ ಭಾವನೆ, ಅದರ ಬಗ್ಗೆ ಯಾರಾದರೂ ಟೀಕೆ ಮಾಡಿದರೆ ಸುಮ್ಮನೆ ಕೂರಲಾಗದು, ನಾವು ವಿಶಾಲ ಹೃದಯದವರು. ಪ್ರತಿ ಭಾಷೆಯ ಸಿನೆಮಾ ನೋಡುತ್ತೇವೆ. ನಮ್ಮ ಭಾಷೆಯ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ, ನಾವು ಯಾಕೆ ಧ್ವನಿ ಎತ್ತಬಾರದು. ತಪ್ಪು ಮಾಡಿದ ಮೇಲೆ ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ. ಕನ್ನಡ ಸರಿಯಾಗಿ ಮಾತಾಡದವರಿಗೆ ಕನ್ನಡ ಕಲಿಸುತ್ತೇವೆ. ಭಾಷೆಯ ಬಗ್ಗೆ ತಪ್ಪಾಗಿ ಮಾತಾಡುವವರಿಗೆ ಏನು ಹೇಳುವುದು. -ರಚಿತಾ ರಾಮ್, ನಟಿ ಭಾಷಾ ವಿವಾದಗಳು ನಟರ ಮೇಲೆ ಬಾರೀ ಪರಿಣಾಮ ಬೀರುತ್ತದೆ. ನನ್ನ ಸಿನೆಮಾ ತಮಿಳುನಾಡಿನಲ್ಲಿ ಬಿಡುಗಡೆಯಾಗುವಾಗ ನನ್ನನ್ನು ಕೆಣಕಬಹುದು. ಒಬ್ಬರ ವಿವೇಚನೆ ಇಲ್ಲದ ಮಾತು ಹಲವರ ಮೇಲೆ ಪ್ರಭಾವ ಬೀರುತ್ತದೆ. ಪ್ರತಿಯೊಬ್ಬರೂ ಜಾಗರೂಕತೆಯಿಂದ ಮಾತಾಡಬೇಕು. ಬೆಳೆದ ಮೇಲೆ ಏನು ಮಾಡಿದರೂ ನಡೆಯುತ್ತದೆ ಎಂದಲ್ಲ. ಬೆಳೆದ ಮೇಲೆಯೇ ತಗ್ಗಿಬಗ್ಗಿ ನಡೆಯಬೇಕು. -ವಶಿಷ್ಠ ಸಿಂಹ, ನಟ

ವಾರ್ತಾ ಭಾರತಿ 30 May 2025 9:33 pm

ಏಶ್ಯನ್ ಅತ್ಲೆಟಿಕ್ಸ್ ಚಾಂಪಿಯನ್‌ ಶಿಪ್ | ಗುಲ್ವೀರ್ ಸಿಂಗ್, ಪೂಜಾ, ನಂದಿನಿಗೆ ಒಲಿದ ಬಂಗಾರ

ಗುಮಿ(ದಕ್ಷಿಣ ಕೊರಿಯಾ): ಗುಲ್ವೀರ್ ಸಿಂಗ್, ಪೂಜಾ ಹಾಗೂ ನಂದಿನಿ ಅಗಸರ ಏಶ್ಯನ್ ಅತ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ಬಂಗಾರ ಪದಕವನ್ನು ಗೆದ್ದುಕೊಂಡಿದ್ದಾರೆ. ಪಾರುಲ್ ಚೌಧರಿ ರಾಷ್ಟ್ರೀಯ ದಾಖಲೆಯೊಂದಿಗೆ ಬೆಳ್ಳಿ ಪದಕ ಬಾಚಿಕೊಂಡಿದ್ದಾರೆ. ಚಾಂಪಿಯನ್‌ ಶಿಪ್‌ ನ 4ನೇ ದಿನವಾದ ಶುಕ್ರವಾರ ಪದಕಪಟ್ಟಿಯಲ್ಲಿ ಭಾರತ ತಂಡವು 2ನೇ ಸ್ಥಾನದಲ್ಲಿ ಮುಂದುವರಿದಿದೆ. ಭಾರತ ಗೆದ್ದಿರುವ ಒಟ್ಟು ಚಿನ್ನದ ಪದಕದ ಸಂಖ್ಯೆಯು 8ಕ್ಕೇರಿದೆ. ಪುರುಷರ 5,000 ಮೀ. ಓಟದಲ್ಲಿ 13:24.78 ಸೆಕೆಂಡ್ ನಲ್ಲಿ ಗುರಿ ತಲುಪಿ ನೂತನ ಚಾಂಪಿಯನ್‌ ಶಿಪ್ ದಾಖಲೆ ನಿರ್ಮಿಸಿದ ಗುಲ್ವೀರ್ ಮೊದಲ ಸ್ಥಾನ ಪಡೆದರು. 2015ರಲ್ಲಿ ಮುಹಮ್ಮದ್ ಅಲ್-ಗರ್ನಿ ನಿರ್ಮಿಸಿದ್ದ ದಾಖಲೆ(13:34.47 ಸೆ.)ಯನ್ನು ಮುರಿದರು. ಗುಲ್ವೀರ್ ಏಶ್ಯನ್ ಚಾಂಪಿಯನ್‌ ಶಿಪ್‌ ನಲ್ಲಿ ಪುರುಷರ 5,000 ಮೀ. ಓಟದಲ್ಲಿ ಚಿನ್ನದ ಪದಕ ಜಯಿಸಿರುವ ಭಾರತದ 3ನೇ ಅತ್ಲೀಟ್ ಆಗಿದ್ದಾರೆ. ಈ ಮೊದಲು ಗೋಪಾಲ್ ಸೈನಿ(1981)ಹಾಗೂ ಜಿ. ಲಕ್ಷ್ಮಣನ್(2017) ಈ ಸಾಧನೆ ಮಾಡಿದ್ದರು. ಉತ್ತರಪ್ರದೇಶದ 26ರ ಹರೆಯದ ಗುಲ್ವೀರ್ ಬ್ಯಾಂಕಾಕ್‌ನಲ್ಲಿ ನಡೆದಿದ್ದ ಕಳೆದ ಆವೃತ್ತಿಯ ಚಾಂಪಿಯನ್‌ ಶಿಪ್‌ ನಲ್ಲಿ ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದರು. ಗುಲ್ವೀರ್ ಈ ವಾರಾರಂಭದಲ್ಲಿ ಪುರುಷರ 10,000 ಮೀ.ಓಟದಲ್ಲಿ ಭಾರತಕ್ಕೆ ಕ್ರೀಡಾಕೂಟದಲ್ಲಿ ಮೊದಲ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಇದೀಗ 5 ಸಾವಿರ ಮೀ. ಓಟದಲ್ಲೂ ಚಿನ್ನ ಜಯಿಸಿ ಡಬಲ್ ಸಾಧನೆ ಮಾಡಿದ್ದಾರೆ. ಮಾರ್ಚ್‌ನಲ್ಲಿ ನಡೆದಿದ್ದ ದಿ ಟೆನ್ ಸ್ಪರ್ಧಾವಳಿಯಲ್ಲಿ 10,000 ಮೀ.ಓಟದಲ್ಲಿ ತನ್ನ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದರು. ಅಮೆರಿಕದಲ್ಲಿ ನಡೆದಿದ್ದ ವರ್ಲ್ಡ್ ಅತ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್‌ ನ ಭಾಗವಾಗಿರುವ ಈ ಸ್ಪರ್ಧಾವಳಿಯಲ್ಲಿ 27:00.22 ಸೆಕೆಂಡ್ ನಲ್ಲಿ ಗುರಿ ತಲುಪಿದ್ದರು. 

ವಾರ್ತಾ ಭಾರತಿ 30 May 2025 9:32 pm

ಕೋವಿಡ್ ಸೋಂಕು ಪತ್ತೆ ಮಾಡಲು 12 ಪ್ರಯೋಗಾಲಯ ನಿಗಧಿಪಡಿಸಿದ ಸರಕಾರ

ಬೆಂಗಳೂರು : ಕೋವಿಡ್ -19ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ತೀವ್ರ ಉಸಿರಾಟದ ಪ್ರಕರಣಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸೋಂಕು ಪತ್ತೆ ಮಾಡಲು ರಾಜ್ಯಾದ್ಯಂತ 12 ಪ್ರಯೋಗಾಲಯಗಳಿಗೆ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟನೆ ಹೊರಡಿಸಿದೆ. ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು ಆರ್‍ಟಿಪಿಸಿಆರ್ ಪರೀಕ್ಷೆಗಾಗಿ ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸಬೇಕು. ಎಲ್ಲ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರಕಾರಿ ಪ್ರಯೋಗಾಲಯಗಳಲ್ಲಿಯೇ ನಡೆಸಬೇಕು. ಪರೀಕ್ಷಾ ಮಾದರಿಯನ್ನು ಪ್ರಯೋಗಾಲಯಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸಬೇಕು ಎಂದು ಸರಕಾರ ಆದೇಶಿಸಿದೆ.

ವಾರ್ತಾ ಭಾರತಿ 30 May 2025 9:29 pm

ಈ ಬಾರಿ ಆರ್‌ಸಿಬಿ ಐಪಿಎಲ್ ಪ್ರಶಸ್ತಿ ಬರ ನೀಗಿಸಿಕೊಳ್ಳುವುದೇ?

ಹೊಸದಿಲ್ಲಿ: ಮುಲ್ಲನ್‌ಪುರದಲ್ಲಿ ಗುರುವಾರ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರ ಆವೃತ್ತಿಯ ಐಪಿಎಲ್ ನಲ್ಲಿ ಫೈನಲ್‌ ಗೆ ಲಗ್ಗೆ ಇಟ್ಟಿದೆ. ದೀರ್ಘಕಾಲದಿಂದ ಕಾಯುತ್ತಿದ್ದ ಪ್ರಶಸ್ತಿಯನ್ನು ಎತ್ತಿಹಿಡಿಯುವ ಅದಮ್ಯ ವಿಶ್ವಾಸದಲ್ಲಿದೆ. ಈ ಗೆಲುವಿನ ಮೂಲಕ ಆರ್‌ಸಿಬಿ ತಂಡವು 4ನೇ ಬಾರಿ ಐಪಿಎಲ್ ಟಿ20 ಟೂರ್ನಿಯಲ್ಲಿ ಫೈನಲ್‌ ಗೆ ಪ್ರವೇಶಿಸಿದೆ. ಈ ಹಿಂದೆ 2009, 2011 ಹಾಗೂ 2016ರಲ್ಲಿ ಫೈನಲ್‌ ಗೆ ತಲುಪಿದ್ದಾಗ ರನ್ನರ್ಸ್ ಅಪ್‌ ಗೆ ತೃಪ್ತಿಪಟ್ಟುಕೊಂಡಿತ್ತು. ಆದರೆ ಈ ಬಾರಿ ರಜತ್ ಪಾಟಿದಾರ್ ಪಡೆ ಪ್ರಶಸ್ತಿ ಗೆಲ್ಲುವ ಫೇವರಿಟ್ ಆಗಿ ಗುರುತಿಸಿಕೊಂಡಿದೆ. ಐಪಿಎಲ್ ನ ಪ್ರಸಕ್ತ ಪ್ಲೇ ಆಫ್ ಮಾದರಿಯನ್ನು 2011ರಲ್ಲಿ ಪರಿಚಯಿಸಲಾಗಿದೆ. ಲೀಗ್ ಹಂತದ ನಂತರ ಅಗ್ರ-2ರಲ್ಲಿ ಸ್ಥಾನ ಪಡೆಯುವ ತಂಡಗಳು ಫೈನಲ್‌ ಗೆ ತಲುಪಲು ಎರಡು ಅವಕಾಶ ಪಡೆಯುತ್ತವೆ. 2011ರ ನಂತರ 14 ಪ್ರಶಸ್ತಿಗಳ ಪೈಕಿ 11 ಪ್ರಶಸ್ತಿಗಳನ್ನು ಮೊದಲ ಕ್ವಾಲಿಫೈಯರ್‌ ನಲ್ಲಿ ಜಯ ಸಾಧಿಸಿ ನೇರವಾಗಿ ಫೈನಲ್‌ ಗೆ ಪ್ರವೇಶಿಸಿರುವ ತಂಡಗಳೇ ಗೆದ್ದಿವೆ. ಈ ಐತಿಹಾಸಿಕ ಟ್ರೆಂಡ್ ಆರ್‌ಸಿಬಿ ತಂಡದ ಪರವಾಗಿದೆ. 2018ರಿಂದ 2024ರ ತನಕ ಎಲ್ಲ 7 ಚಾಂಪಿಯನ್ಸ್‌ಗಳಾದ ಸಿಎಸ್‌ಕೆ(2018, 2021, 2023), ಮುಂಬೈ ಇಂಡಿಯನ್ಸ್(2019,2020), ಗುಜರಾತ್ ಟೈಟಾನ್ಸ್(2022) ಹಾಗೂ ಕೋಲ್ಕತಾ ನೈಟ್ ರೈಡರ್ಸ್(2024)ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಜಯ ಸಾಧಿಸಿದ್ದವು. ಈ ಟ್ರೆಂಡ್ ಜೂನ್ 3ರಂದು ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನಾಗಿಸಿದೆ. ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಪ್ರದರ್ಶನ ಹಾಗೂ ರಜತ್ ಪಾಟಿದಾರ್ ಅವರ ದಕ್ಷ ನಾಯಕತ್ವದ ಬಲದಿಂದ ಆರ್‌ಸಿಬಿ ಟೂರ್ನಿಯಲ್ಲಿ ಈ ತನಕ ಅಮೋಘ ಪ್ರದರ್ಶನ ನೀಡಿದೆ. ಫೈನಲ್ ಪಂದ್ಯಕ್ಕಿಂತ ಮೊದಲಿನ ಸಾಕಷ್ಟು ವಿರಾಮವು ಆರ್‌ಸಿಬಿಗೆ ರಣತಂತ್ರವನ್ನು ಹೆಣೆದು, ಪ್ರಶಸ್ತಿ ಗೆಲ್ಲುವ ನಿಟ್ಟಿನಲ್ಲಿ ಎಲ್ಲ ತಯಾರಿಗೆ ಪೂರಕವಾಗಿದೆ.

ವಾರ್ತಾ ಭಾರತಿ 30 May 2025 9:28 pm

ಉಪ್ಪಳ | ಕಾರು - ಲಾರಿ ಮುಖಾಮುಖಿ ಢಿಕ್ಕಿ; ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ. ಮಂಗಳೂರು ನಿವಾಸಿ ಪದ್ಮನಾಭ ರವರ ಪತ್ನಿ ನವ್ಯಾ ( 30) ಮೃತಪಟ್ಟವರು. ಪದ್ಮನಾಭ ಹಾಗೂ ಜೊತೆಗಿದ್ದ ಪುತ್ರ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ . ಉಪ್ಪಳದ ಸಂಬಂಧಿಕರ ಮನೆಗೆ ಬಂದು ಮಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ವಾರ್ತಾ ಭಾರತಿ 30 May 2025 9:27 pm

ಇಂಗ್ಲೆಂಡ್‌ ಗೆ ಬೇಗನೆ ತೆರಳಲು ಕೆ.ಎಲ್.ರಾಹುಲ್ ಸಿದ್ಧತೆ

ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧ ಜೂನ್ 20ರಂದು ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಸಿದ್ಧತೆ ಆರಂಭಿಸಲು ಭಾರತದ ಬ್ಯಾಟರ್ ಕೆ.ಎಲ್.ರಾಹುಲ್ ಆಂಗ್ಲರ ನಾಡಿಗೆ ಬೇಗನೆ ತೆರಳಲು ಸಜ್ಜಾಗಿದ್ದಾರೆ. ರಾಹುಲ್ ಜೂನ್ 6ರಂದು ತಂಡದ ಉಳಿದ ಸದಸ್ಯರೊಂದಿಗೆ ಇಂಗ್ಲೆಂಡ್‌ ಗೆ ಹೊರಡಬೇಕಿತ್ತು. ಬಿಸಿಸಿಐಯನ್ನು ಸಂಪರ್ಕಿಸಿರುವ ರಾಹುಲ್ ಅವರು ಇಂಗ್ಲೆಂಡ್ ಲಯನ್ಸ್ ವಿರುದ್ಧದ 2ನೇ ಪಂದ್ಯವನ್ನು ಆಡಲು ಅವಕಾಶ ನೀಡಲು ವಿನಂತಿಸಿದ್ದಾರೆ. ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡಿದ್ದು, ಬಲಗೈ ಬ್ಯಾಟರ್ ರಾಹುಲ್ ನಿನ್ನೆ ರಾತ್ರಿ ಅಗತ್ಯ ಅನುಮತಿ ಪಡೆದಿದ್ದಾರೆ. ರಾಹುಲ್ ಸ್ವದೇಶದಲ್ಲಿ ತನ್ನ ಸಿದ್ಧತೆಯನ್ನು ಆರಂಭಿಸಲು ಬಯಸಿದ್ದರು. ಆದರೆ ಮುಂಬೈ ಹಾಗೂ ಬೆಂಗಳೂರಿನ ಹವಾಮಾನವು ಅವರನ್ನು ಬೇಗನೆ ಇಂಗ್ಲೆಂಡ್‌ ಗೆ ತೆರಳುವಂತೆ ಪ್ರೇರೇಪಿಸಿದೆ. ಆಸ್ಟ್ರೇಲಿಯ ಸರಣಿಗೂ ಮೊದಲು ರಾಹುಲ್ ಭಾರತದ ಟೆಸ್ಟ್ ತಂಡದ ಆಟಗಾರರು ಆಸ್ಟ್ರೇಲಿಯಕ್ಕೆ ಆಗಮಿಸುವ ಮೊದಲೇ ಅಲ್ಲಿಗೆ ತೆರಳಿ, ಇಂಡಿಯಾ ‘ಎ’ ತಂಡದ ಪರ ಪಂದ್ಯವನ್ನು ಆಡಿದ್ದರು. ಭಾರತ ‘ಎ’ ತಂಡದ ಅನಧಿಕೃತ ಇಂಗ್ಲೆಂಡ್ ಟೆಸ್ಟ್ ಪ್ರವಾಸವು ಶುಕ್ರವಾರ ಇಂಗ್ಲೆಂಡ್ ಲಯನ್ಸ್ ವಿರುದ್ಧ್ದದ 2 ಚತುರ್ದಿನ ಪಂದ್ಯಗಳ ಮೂಲಕ ಆರಂಭವಾಗಿದೆ. ಇದು ಇಂಗ್ಲೆಂಡ್ ವಿರುದ್ಧದ ಮುಂಬರುವ 5 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತದ ಸಿದ್ಧತೆಗಳ ಪ್ರಮುಖ ಭಾಗವಾಗಿದೆ.

ವಾರ್ತಾ ಭಾರತಿ 30 May 2025 9:19 pm

ಮಂಗಳೂರು: ಮಹಾ ಮಳೆಗೆ 68 ಆಡು, ಕುರಿಗಳ ಸಾವು

ಉಳ್ಳಾಲ : ನಿನ್ನೆ ರಾತ್ರಿ ಸುರಿದ ಮಹಾಮಳೆಯಿಂದ ತಲಪಾಡಿ ಸಮೀಪದ ಕೆಸಿ ರೋಡ್ ಮಟನ್ ಯಾಕೂಬ್ ರವರ 68 ಆಡು, ಕುರಿಗಳು ಸಾವಿಗೀಡಾಗಿದೆ. ಆಡಿನ ಶೆಡ್ಡಿನೊಳಗೆ ನಿರಂತರ ಸುರಿದ ಮಳೆಯಿಂದ ನೆರೆ ನೀರು ನುಗ್ಗಿದ್ದು, ಆಡು, ಕುರಿಗಳೆಲ್ಲವೂ ನೀರಿನಲ್ಲಿ ಕೊಚ್ಚಿಹೋಗಿದೆ. 23 ಆಡು, ಕುರಿಗಳು ಪತ್ತೆಯಾಗಿದ್ದು, ಹೊಂಡ ತೆಗೆದು ಹೂಳಲಾಗಿದೆ.

ವಾರ್ತಾ ಭಾರತಿ 30 May 2025 9:18 pm

ಬೆಂಗಳೂರಿನಲ್ಲಿ ಎಂಆರ್‌ಒ ಕೇಂದ್ರ ಆರಂಭಿಸಲಿದೆ ಇಂಡಿಗೊ, ₹1,100 ಕೋಟಿ ಹೂಡಿಕೆ, ಎಷ್ಟು ಉದ್ಯೋಗ ಸೃಷ್ಟಿ?

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೊ 1,100 ಕೋಟಿ ರೂ.ಗಳ ಬಂಡವಾಳ ಹೂಡಿಕೆಯೊಂದಿಗೆ ವಿಮಾನ ನಿರ್ವಹಣೆ ಮತ್ತು ದುರಸ್ತಿ ಸೌಲಭ್ಯವನ್ನು ಸ್ಥಾಪಿಸಲಿದೆ. ಈ ಉಪಕ್ರಮವು ಕರ್ನಾಟಕವನ್ನು ಏಷ್ಯಾದ 'ಎಂಆರ್‌ಒ' ರಾಜಧಾನಿಯನ್ನಾಗಿ ಮಾಡುವ ಗುರಿಯನ್ನು ಬಲಪಡಿಸುತ್ತದೆ. ಅಲ್ಲದೆ, ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ವಿಮಾನಯಾನ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತದೆ ಎಂದು ಸಚಿವ ಎಂಬಿ ಪಾಟೀಲ್‌ ಹೇಳಿದ್ದಾರೆ.

ವಿಜಯ ಕರ್ನಾಟಕ 30 May 2025 9:10 pm

ಇ-ಕಾಮರ್ಸ್ ವೇದಿಕೆಗಳಲ್ಲಿ ವಾಕಿ-ಟಾಕಿಗಳ ಮಾರಾಟಕ್ಕೆ ಸಿಸಿಪಿಎ ಮಾರ್ಗಸೂಚಿ

ಹೊಸದಿಲ್ಲಿ: ಇ-ಕಾಮರ್ಸ್ ವೇದಿಕೆಗಳಲ್ಲಿ ವಾಕಿ-ಟಾಕಿಗಳು ಸೇರಿದಂತೆ ರೇಡಿಯೊ ಸಾಧನಗಳ ಅನಧಿಕೃತ ಪ್ರದರ್ಶನ ಮತ್ತು ಮಾರಾಟವನ್ನು ತಡೆಯಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(ಸಿಸಿಪಿಎ)ವು ಸಮಗ್ರ ಮಾರ್ಗಸೂಚಿಯೊಂದನ್ನು ಶುಕ್ರವಾರ ಬಿಡುಗಡೆಗೊಳಿಸಿದೆ. ಸೂಕ್ತ ಫ್ರೀಕ್ವೆನ್ಸಿ ಮಾಹಿತಿ,ಪರವಾನಿಗೆ ಮಾಹಿತಿ ಮತ್ತು ಸಾಧನದ ವಿಧಕ್ಕೆ ಅನುಮೋದನೆ ಇಲ್ಲದೆ ವಾಕಿ-ಟಾಕಿಗಳ ಮಾರಾಟ ಗ್ರಾಹಕ ರಕ್ಷಣಾ ಕಾಯ್ದೆ,2019ರ ಉಲ್ಲಂಘನೆಯಾಗಿದ್ದು,ಇದನ್ನು ತಡೆಯುವುದು ನೂತನ ಮಾರ್ಗಸೂಚಿಯ ಉದ್ದೇಶವಾಗಿದೆ. ದೂರಸಂಪರ್ಕ ಇಲಾಖೆ ಮತ್ತು ಗೃಹ ವ್ಯವಹಾರಗಳ ಸಚಿವಾಲಯದ ಜೊತೆ ವ್ಯಾಪಕ ಅಂತರ-ಸಚಿವಾಲಯ ಸಮಾಲೋಚನೆಗಳ ಬಳಿಕ ನೂತನ ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಎರಡೂ ಇಲಾಖೆಗಳಿಂದ ಪ್ರಮುಖ ನಿಯಂತ್ರಕ ಮತ್ತು ಭದ್ರತಾ ಪರಿಗಣನೆಗಳನ್ನು ಮಾರ್ಗಸೂಚಿಯಲ್ಲಿ ಸೇರಿಸಲಾಗಿದೆ. ವೈರ್‌ಲೆಸ್ ಆಪರೇಟಿಂಗ್ ಪರವಾನಿಗೆಯ ಅಗತ್ಯಕ್ಕೆ ಸಂಬಂಧಿಸಿದಂತೆ ಕಡ್ಡಾಯ ಮತ್ತು ಬಹಿರಂಗ ಮಾಹಿತಿಗಳನ್ನು ಬಹಿರಂಗಗೊಳಿಸದೆ ಮತ್ತು ಅನ್ವಯವಾಗುವ ಕಾನೂನುಗಳನ್ನು ಅನುಸರಿಸದೆ ಇ-ಕಾಮರ್ಸ್ ವೇದಿಕೆಗಳಲ್ಲಿ ವಾಕಿ-ಟಾಕಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಸಿಸಿಪಿಎ ಹೇಳಿಕೆಯಲ್ಲಿ ತಿಳಿಸಿದೆ.

ವಾರ್ತಾ ಭಾರತಿ 30 May 2025 9:03 pm

ಡಾ.ಕಾರಂತರು ಯಕ್ಷಗಾನದ ಮೂಲಕ ವಿಶ್ವದ ಗಮನ ಸೆಳೆದರು: ಡಾ.ಬಾಲಾಜಿ ಎಸ್.

ಉಡುಪಿ: ಜಾನಪದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಇತಿಮಿತಿಗಳಿಲ್ಲ. ಜಾನಪದವನ್ನು ಉಳಿಸಿ ಬೆಳೆಸುವುದು ಯುವ ಜನತೆಯ ಜವಾಬ್ದಾರಿ. ಡಾ. ಶಿವರಾಮ ಕಾರಂತರು ಸ್ವತಃ ಯಕ್ಷಗಾನವನ್ನು ಪ್ರದರ್ಶನ ಮಾಡುವ ಮೂಲಕ ವಿಶ್ವದ ಗಮನ ಸೆಳೆದರು ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಎಸ್ ಹೇಳಿದ್ದಾರೆ. ಕುಂದಾಪುರದ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಕಾಲೇಜಿನ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-೫ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ.ಶಿವರಾಮ ಕಾರಂತರು ತಮ್ಮ ಬರಹಗಳ ಮೂಲಕ ಕರಾವಳಿಯ ಸಂಸ್ಕೃತಿ ಮಾತ್ರವಲ್ಲದೇ ಅದರೊಂದಿಗೆ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ಮೂಡಿಸುವ ಕಾರ್ಯದಲ್ಲಿ ತೊಡಗಿದವರು. ಕಾರಂತರ ಕುರಿತ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದೇ ಡಾ. ಶಿವರಾಮ ಕಾರಂತ ಟ್ರಸ್ಟಿನ ಮುಖ್ಯ ಉದ್ದೇಶವಾಗಿದೆ ಎಂದರು. ಚಿಂತಕ ಮುಷ್ತಾಕ್ ಹೆನ್ನಾಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಡಾ. ಶಿವರಾಮ ಕಾರಂತರ ಬದುಕು, ಕೃತಿಗಳು ಮತ್ತು ಪರಿಸರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಡಾ.ಶಿವರಾಮ ಕಾರಂತರು ತಮ್ಮ ಇಳಿ ವಯಸ್ಸಿನಲ್ಲಿಯೂ ಪರಿಸರದ ಕುರಿತು ವಿಶೇಷ ಕಾಳಜಿ ಹೊಂದಿದ್ದರು. ಸಮಾಜವನ್ನು ಜಾಗೃತಿಗೊಳಿಸುವಲ್ಲಿ ಕಾರಂತರ ಪಾತ್ರ ಮಹತ್ವದ್ದಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಖ್ಯಾತ ಜಾನಪದ ವಿದ್ವಾಂಸ ಪ್ರೊ.ಕನರಾಡಿ ವಾದಿರಾಜ್ ಭಟ್ ಜಲ ಜಾನಪದ ಪುಸ್ತಕ ಬಿಡುಗಡೆಗೊಳಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಡಾ. ಭಾರತಿ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಪ್ರಸಾದ್ ರಾವ್, ಜಲ ಜಾನಪದ ಕೃತಿಯ ಸಂಪಾದಕ ಮಂಡಳಿಯ ಸದಸ್ಯರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ.ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರೇಷ್ಮಾ ಶೆಟ್ಟಿ ವಂದಿಸಿದರು.  

ವಾರ್ತಾ ಭಾರತಿ 30 May 2025 9:01 pm

ಆಪರೇಷನ್ ಸಿಂಧೂರ್‌ | ಭಾರತವು ಆತ್ಮರಕ್ಷಣೆಯ ಹಕ್ಕು ಚಲಾಯಿಸಿದೆ: ಶಶಿ ತರೂರ್

ಹೊಸದಿಲ್ಲಿ: ಭಯೋತ್ಪಾದನೆಯೊಂದಿಗೆ ಪಾಕಿಸ್ತಾನದ ಸಂಬಂಧಗಳನ್ನು ಬಯಲಿಗೆಳೆಯಲು ಐದು ದೇಶಗಳಿಗೆ ಸರ್ವಪಕ್ಷ ನಿಯೋಗದ ನೇತೃತ್ವವನ್ನು ವಹಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ‘ಆಪರೇಷನ್ ಸಿಂಧೂರ್‌’ ನ ಬಳಿಕ ಕೊಲಂಬಿಯಾ ಸರಕಾರದ ಹೇಳಿಕೆಗಳ ಬಗ್ಗೆ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ‘ಆಪರೇಷನ್ ಸಿಂಧೂರ್‌’ದಲ್ಲಿ ಪಾಕಿಸ್ತಾನದಲ್ಲಿ ಜೀವಹಾನಿಗೆ ಕೊಲಂಬಿಯಾ ಸರಕಾರ ಸಂತಾಪವನ್ನು ವ್ಯಕ್ತಪಡಿಸಿತ್ತು. ಕೊಲಂಬಿಯಾದ ರಾಜಧಾನಿ ಬೊಗೋಟಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್,‘ದೇಶವು ಭಯೋತ್ಪಾದನೆಯ ಸಂತ್ರಸ್ತರ ಬಗ್ಗೆ ಸಹಾನುಭೂತಿಯನ್ನು ವ್ಯಕ್ತಪಡಿಸಬೇಕಿತ್ತು. ತಿಳುವಳಿಕೆಯನ್ನು ಮೂಡಿಸಲು ನಾವು ಇಲ್ಲಿದ್ದೇವೆ. ಕೊಲಂಬಿಯಾ ಆ ಹೇಳಿಕೆಯನ್ನು ನೀಡಿದ್ದಾಗ ಅದು ಬಹುಶಃ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿರಲಿಲ್ಲ ಎಂದು ನಾವು ಭಾವಿಸಿದ್ದೇವೆ. ತಿಳುವಳಿಕೆಯು ನಮಗೆ ಅತ್ಯಂತ ಮುಖ್ಯವಾಗಿದೆ’ ಎಂದು ಹೇಳಿದರು. ‘ಭಯೋತ್ಪಾದಕರನ್ನು ಕಳುಹಿಸುವವರು ಮತ್ತು ಅವರನ್ನು ಪ್ರತಿರೋಧಿಸುವವರ ನಡುವೆ ಯಾವುದೇ ಸಮಾನತೆ ಸಾಧ್ಯವಿಲ್ಲ ಎಂದು ನಾವು ಕೊಲಂಬಿಯಾದಲ್ಲಿಯ ನಮ್ಮ ಸ್ನೇಹಿತರಿಗೆ ಹೇಳುತ್ತಿದ್ದೇವೆ. ದಾಳಿಯನ್ನು ನಡೆಸುವವರು ಮತ್ತು ತಮ್ಮ ದೇಶವನ್ನು ರಕ್ಷಿಸುವವರ ನಡುವೆ ಯಾವುದೇ ಸಮಾನತೆಯಿರಲು ಸಾಧ್ಯವಿಲ್ಲ. ನಾವು ಆತ್ಮರಕ್ಷಣೆಯ ನಮ್ಮ ಹಕ್ಕನ್ನು ಮಾತ್ರ ಚಲಾಯಿಸುತ್ತಿದ್ದೇವೆ’ ಎಂದು ಹೇಳಿದ ತರೂರ್,‘ಆಪರೇಷನ್ ಸಿಂಧೂರ್‌’ ಮತ್ತು ಮಿಲಿಟರಿ ಪ್ರತಿಕ್ರಿಯೆಯನ್ನು ಅಗತ್ಯವಾಗಿಸಿದ ಸಂದರ್ಭಗಳ ಕುರಿತು ಯಾವುದೇ ತಪ್ಪುತಿಳುವಳಿಕೆಯನ್ನು ಹೋಗಲಾಡಿಸಲು ಸರ್ವಪಕ್ಷ ನಿಯೋಗವಿಲ್ಲಿದೆ ಎಂದರು. ತರೂರ್ ನೇತೃತ್ವದ ನಿಯೋಗವು ಗುರುವಾರ ಕೊಲಂಬಿಯಾ ತಲುಪಿದ್ದು, ಆ ದೇಶಕ್ಕೆ ಭಾರತದ ರಾಯಭಾರಿಯಾಗಿರುವ ವನಲಾಲ್‌ಹುಮಾ ಅದನ್ನು ಬರಮಾಡಿಕೊಂಡರು. ನಿಯೋಗವು ಅಲ್ಲಿಯ ಸಂಸತ್ ಸದಸ್ಯರು, ಸಚಿವರು ಹಾಗೂ ಚಿಂತನ ಚಾವಡಿಗಳು ಮತ್ತು ಮಾಧ್ಯಮ ಪ್ರಮುಖರೊಂದಿಗೆ ಸಂವಾದಗಳನ್ನು ಆರಂಭಿಸಿದೆ. ತರೂರ್ ತಂಡವು ಸಂಸದರಾದ ಸರ್ಫಾಜ್ ಅಹ್ಮದ್(ಜೆಎಂಎಂ), ಜಿ.ಎಂ.ಹರೀಶ್ ಬಾಲಯೋಗಿ(ಟಿಡಿಪಿ),ಶಶಾಂಕ್ ಮಣಿ ತ್ರಿಪಾಠಿ(ಬಿಜೆಪಿ),ಭುವನೇಶ್ವರ್ ಕಲಿಟಾ(ಬಿಜೆಪಿ),ಮಿಲಿಂದ್ ದೇವರಾ(ಶಿವಸೇನೆ),ತೇಜಸ್ವಿ ಸೂರ್ಯ(ಬಿಜೆಪಿ) ಮತ್ತು ಅಮೆರಿಕಕ್ಕೆ ಭಾರತದ ಮಾಜಿ ರಾಯಭಾರಿ ತರಣಜಿತ ಸಿಂಗ್ ಸಂಧು ಅವರನ್ನು ಒಳಗೊಂಡಿದೆ.

ವಾರ್ತಾ ಭಾರತಿ 30 May 2025 9:01 pm

ʼಕುಡಿಯುವ ನೀರು ಯೋಜನೆಗಳಿಗೆ ಭೂಮಿ ಸ್ವಾಧೀನʼ | ಡಿಸಿ, ಸಿಇಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು: ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಕುಡಿಯುವ ನೀರಿಗೆ ಸಂಬಂಧಿಸಿದ ಹಾಗೂ ಇನ್ನಿತರ ಸರಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಭೂಮಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿಇಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಲಜೀವನ್ ಮಿಷನ್ ಕಾರ್ಯಕ್ರಮದಡಿ ರಾಜ್ಯದಾದ್ಯಂತ ಮನೆ ಮನೆಗೆ ನೀರು ಕೊಡುವ ಕಾಮಗಾರಿಗಳು ಭರದಿಂದ ಸಾಗಿದ್ದು, ಈ ಯೋಜನೆಗಾಗಿ ಮಂಜೂರು ಮಾಡಲಾದ ಅನುದಾನವನ್ನು ಪೂರ್ಣವಾಗಿ ಬಳಸಿಕೊಳ್ಳಲಾಗಿದೆ, ರಾಜ್ಯದಾದ್ಯಂತ ಈ ಯೋಜನೆಯನ್ನು ಇನ್ನು ಎರಡರಿಂದ ಮೂರು ವರ್ಷಗಳ ಕಾಲಮಿತಿಯಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು. ಸುಸ್ಥಿರ ನೀರಿನ ಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಇದು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತಿದೆ, ಹಿಂದಿನ ಸರಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳು ನಡೆದಿದ್ದು, ಅದನ್ನು ಸರಿಪಡಿಸಲು ಹೆಚ್ಚು ಸಮಯ ಹಿಡಿಯುತ್ತಿದೆ. ನೀರು ಸಂಪರ್ಕ ನೀಡಲು ಕೆಲವೆಡೆ ರಸ್ತೆ ಅಗೆಯಲಾಗಿದ್ದು, ಹಾಳಾಗಿರುವ ರಸ್ತೆಗಳನ್ನು ಟೆಂಡರುದಾರರನ್ನೇ ಹೊಣೆಗಾರರನ್ನಾಗಿಸಿ ಅವುಗಳನ್ನು ಸುಸ್ಥಿತಿಗೆ ತರಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಕಾಮಗಾರಿಗಳ ಲೋಪ ಕುರಿತಂತೆ ಪತ್ರಿಕೆಗಳಲ್ಲಿ ಪ್ರಕಟವಾಗುವ ಸುದ್ದಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಈಗಾಗಲೇ ಈ ಬಗ್ಗೆ ನಿರ್ದೇಶನ ನೀಡಲಾಗಿದ್ದು, ಪರ್ತಿ ನಿತ್ಯ ಪ್ರಕಟವಾಗುವ ದೂರುಗಳನ್ನು ಗಮನಿಸಿ ವಾರ್ತಾ ಇಲಾಖೆಯ ಮೂಲಕ ಸ್ಪಷ್ಟನೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ವಾರ್ತಾ ಭಾರತಿ 30 May 2025 8:59 pm

ಪಹಲ್ಗಾಮ್ ದಾಳಿಯಲ್ಲಿ ಮೃತ ಶುಭಂ ದ್ವಿವೇದಿ ಕುಟುಂಬವನ್ನು ಭೇಟಿಯಾದ ಪ್ರಧಾನಿ ಮೋದಿ

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಎ.22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಶುಭಂ ದ್ವಿವೇದಿಯವರ ಕುಟುಂಬವನ್ನು ಶುಕ್ರವಾರ ಇಲ್ಲಿಯ ಚಕೇರಿ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು. ‘ಅದೊಂದು ಅತ್ಯಂತ ಭಾವನಾತ್ಮಕ ಭೇಟಿಯಾಗಿತ್ತು. ಮೋದಿಯವರನ್ನು ಭೇಟಿಯಾದಾಗ ಕುಟುಂಬದ ಎಲ್ಲ ಸದಸ್ಯರು ರೋದಿಸತೊಡಗಿದ್ದರು’ ಎಂದು ದ್ವಿವೇದಿಯವರ ಸೋದರ ಸಂಬಂಧಿ ಸೌರಭ್ ದ್ವಿವೇದಿಯವರನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ. ದ್ವಿವೇದಿ(31) ಭಯೋತ್ಪಾದಕ ದಾಳಿಗೆ ಕೆಲವೇ ವಾರಗಳ ಮುನ್ನ, ಫೆ.12ರಂದು ವಿವಾಹವಾಗಿದ್ದರು. ಈ ಹಿಂದೆ,ಮೇ 14ರಂದು ದ್ವಿವೇದಿಯವರ ಬಂಧುಗಳು ಸಂಸದ ರಮೇಶ್ ಅವಸ್ಥಿಯವರ ನೆರವಿನೊಂದಿಗೆ ಕಾನ್ಪುರದಲ್ಲಿ ಮೋದಿಯವರನ್ನು ಭೇಟಿಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ‘ಮೇ 30ರಂದು ಕಾನ್ಪುರಕ್ಕೆ ನಿಗದಿತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ನಮಗೆ ಅವಕಾಶ ನೀಡುವಂತೆ ನಾವು ಅವಸ್ಥಿಯವರನ್ನು ಕೋರಿಕೊಂಡಿದ್ದೆವು. ಅವರು ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಲ್ಲದೆ, ನಮ್ಮನ್ನು ಭೇಟಿಯಾಗುವಂತೆ ಕೋರಿ ಮೋದಿಯವರಿಗೆ ತಕ್ಷಣ ಪತ್ರವನ್ನೂ ಬರೆದಿದ್ದರು. ಮೋದಿ ತನ್ನ ಕಾನ್ಪುರ ಭೇಟಿ ಸಂದರ್ಭದಲ್ಲಿ ನಮ್ಮನ್ನು ನಿಜಕ್ಕೂ ಭೇಟಿಯಾಗಲಿದ್ದಾರೆ ಎನ್ನುವುದು ನಿನ್ನೆ ನಮಗೆ ಮಾಧ್ಯಮಗಳಿಂದ ಗೊತ್ತಾಗಿತ್ತು. ಈ ಸುದ್ದಿಯು ನಮಗೆ ಭಾರೀ ನೆಮ್ಮದಿ ಮತ್ತು ಭರವಸೆಯನ್ನು ನೀಡಿತ್ತು. ದೇಶಕ್ಕಾಗಿ ಮಾಡಲಾದ ತ್ಯಾಗಗಳನ್ನು ಅಪಾರವಾಗಿ ಗೌರವಿಸುವ ಪ್ರಧಾನಿ ನಮ್ಮ ಮನವಿಯನ್ನು ಒಪ್ಪಿಕೊಳ್ಳುತ್ತಾರೆ ಎಂಬ ನಂಬಿಕೆ ನಮಗಿತ್ತು’ಎಂದು ಸೌರಭ್ ದ್ವಿವೇದಿ ತಿಳಿಸಿದರು. ದ್ವಿವೇದಿ ತನ್ನ ಪತ್ನಿ ಮತ್ತು ನಾದಿನಿಯೊಂದಿಗೆ ಪಹಲ್ಗಾಮ್‌ಗೆ ಭೇಟಿ ನೀಡಿದ್ದರು. ಭಯೋತ್ಪಾದಕರು ಅವರ ತಲೆಗೆ ಗುಂಡಿಕ್ಕಿದ್ದು, ಸ್ಥಳದಲ್ಲಿಯೇ ಅವರು ಮೃತಪಟ್ಟಿದ್ದರು. ತನ್ನ ಪತಿಯ ತ್ಯಾಗಕ್ಕಾಗಿ ರಾಷ್ಟ್ರೀಯ ಮನ್ನಣೆಗಾಗಿ ದ್ವಿವೇದಿಯವರ ಪತ್ನಿ ಅಶ್ನಯಾ ಮನವಿ ಮಾಡಿಕೊಂಡಿದ್ದರು. ‘ಶುಭಂ ಅವರಿಗೆ ಹುತಾತ್ಮ ಸ್ಥಾನಮಾನವನ್ನು ನೀಡಬೇಕು ಎನ್ನುವುದು ನನ್ನ ಏಕೈಕ ಬಯಕೆಯಾಗಿದೆ’ ಎಂದು ಅವರು ಹೇಳಿದ್ದರು.

ವಾರ್ತಾ ಭಾರತಿ 30 May 2025 8:58 pm

ಉಡುಪಿ: ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆ

ಮಣಿಪಾಲ: ಕರ್ನಾಟಕ ದಲಿತ ಹಕ್ಕುಗಳ ಸಮಿತಿಯ ಉಡುಪಿ ಜಿಲ್ಲಾ ಸಂಚಾಲನ ಸಮಿತಿ ನೇತೃತ್ವದಲ್ಲಿ ರಾಜ್ಯ ಸಮಿತಿ ಕರೆಯ ಮೇರೆಗೆ ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಲಿತರ ಹತ್ಯೆ, ದೇವಾಲಯ ಪ್ರವೇಶ ನಿರಾಕರಣೆ, ದಲಿತ ಮಹಿಳೆಯರ ಅತ್ಯಾಚಾರ, ದಲಿತರಿಗೆ ನೀಡುತ್ತಿರುವ ಕಿರುಕುಳ ಖಂಡಿಸಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು. ಪ್ರತಿಭಟನಕಾರರನ್ನುದ್ದೇಶಿಸಿ ಉದ್ದೇಶಿಸಿ ಮಾತಾನಾಡಿದ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು, ಮಂಡ್ಯದ ಕೆ.ಆರ್.ಪೇಟೆಯಲ್ಲಿ ದಲಿತ ಜಯಕುಮಾರ್ ಜಮೀನು ಅಕ್ರಮಣ ಮಾಡಲು ಮುಂದಾದ ರೌಡಿ ಶೀಟರ್ ಅನಿಲ್ ಕುಮಾರ್, ಜಯಕುಮಾರ್‌ನ್ನು ಕೊಲೆ ಮಾಡಿದ್ದು ಪತ್ನಿ ಲಕ್ಷೀ ಪೋಲಿಸ್ ಠಾಣೆ ಮೆಟ್ಟಿಲು ಏರಿ ಕೇಸು ದಾಖಲಿಸಲು ಮುಂದಾದಾಗ ಪೋಲೀಸರು ಕೇಸ್ ಪಡೆಯದೆ ಸತಾಯಿಸಿ ವಾಪಾಸು ಕಳುಹಿಸಿದ್ದು ಎಲ್ಲರ ಗಮನಕ್ಕೆ ಬಂದಿದೆ ಎಂದರು. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಬನವಾಸಿ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಮತ್ತು ದೇವಸ್ಥಾನ ಪ್ರವೇಶ ನಿರಾಕಾರಿಸಿದ್ದು ಜನತೆ ನಾಚಿಕೆ ಪಡುವಂತಾಗಿದೆ.ಬಿಡದಿ ಹೋಬಳಿ, ಭದ್ದರಾಪುರ ಗ್ರಾಮದ ಬಡಾ ಕೂಲಿಕಾರ ಕುಟುಂಬದ ದಲಿತ ಬಾಲಕಿಯನ್ನು ಆತ್ಯಾಚಾರ ಮಾಡಿ ಕೊಲೆ ಗೈದಿರುತ್ತಾರೆ. ಇದನ್ನು ಪೋಲಿಸ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮುಚ್ಚಿ ಹಾಕಲು ಪ್ರಭಾವಿ ವ್ಯಕ್ತಿಗಳು ಪ್ರಯತ್ನಿಸಿದ್ದರು. ಅದೇ ರೀತಿ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕವಣಗಾಲಿ ದೇವಾಲಯದಲ್ಲಿ ದಲಿತರಿಗೆ ಪ್ರವೇಶ ನಿರಾಕರಣೆ ಮತ್ತು ಕೊಲ್ಲೂರು ಪ್ರದೇಶದಲ್ಲಿ ದಲಿತ ಮಹಿಳೆಯ ಮನೆಯನ್ನು ಯಾರೂ ಇಲ್ಲದ ಸಮಯದಲ್ಲಿ ಕೆಡವಿ ಜಾಗ ಆಕ್ರಮಣ ಮಾಡಲು ಮುಂದಾದ ಬಲಾಡ್ಯ ಶಕ್ತಿಗಳನ್ನು ಬಂಧಿಸಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು. ಪ್ರತಿಭಟನಾ ಸಭೆಯಲ್ಲಿ ಸಮಿತಿಯ ಉಡುಪಿ ಸಹ ಸಂಚಾಲಕ ರವಿ ವಿ.ಎಂ., ಪದಾಧಿಕಾರಿಗಳಾದ ರಾಮ ಕಾರ್ಕಡ, ನಾಗರತ್ನ ನಾಡ, ಶಾರದ, ನಾಗರತ್ನ ಆರ್, ರಂಗನಾಥ ಸುವರ್ಣ, ಮನೋಜ್, ಸುಶೀಲ, ಪೂರ್ಣಿಮಾ ಬಳ್ಕೂರು, ಅಣಪ್ಪ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಹಂಚು ಕಾರ್ಮಿಕ ಸಂಘದ ಕಾರ್ಯದರ್ಶಿ ಎಚ್.ನರಸಿಂಹ, ಸಿಐಟಿಯು ಕುಂದಾಪುರ ತಾಲೂಕು ಸಂಚಾಲಕ ಚಂದ್ರಶೇಖರ, ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್ ಎಸ್. ಕಾಂಚನ್ ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 8:58 pm

ನೀಟ್-ಪಿಜಿ 2025 | ನ್ಯಾಯಸಮ್ಮತೆ ಮತ್ತು ಪಾರದರ್ಶಕತೆಗಾಗಿ ಒಂದೇ ಪಾಳಿಯಲ್ಲಿ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ಹೊಸದಿಲ್ಲಿ: ಶುಕ್ರವಾರ ಮಹತ್ವದ ಆದೇಶವೊಂದರಲ್ಲಿ ಸರ್ವೋಚ್ಚ ನ್ಯಾಯಾಲಯವು ಜೂ.15ರಂದು ನಿಗದಿಯಾಗಿರುವ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸುವಂತೆ ನಿರ್ದೇಶನಗಳನ್ನು ಹೊರಡಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಅದು ಎತ್ತಿ ತೋರಿಸಿದೆ. ಪರೀಕ್ಷೆಯನ್ನು ಎರಡು ಪಾಳಿಗಳಲ್ಲಿ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಸರ್ವೋಚ್ಚ ನ್ಯಾಯಾಲಯವು,ಎರಡು ಪಾಳಿಗಳಲ್ಲಿ ಪರೀಕ್ಷೆಯನ್ನು ನಡೆಸುವುದು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಅಸಂಗತತೆಗಳು ಮತ್ತು ಅಕ್ರಮಗಳಿಗೆ ಕಾರಣವಾಗಬಹುದು ಎಂದು ಹೇಳಿದೆ. ಎರಡು ವಿಭಿನ್ನ ಪ್ರಶ್ನೆಪತ್ರಿಕೆಗಳಲ್ಲಿ ಒಂದೇ ಬಗೆಯ ಕಠಿಣತೆಯನ್ನು ಖಚಿತಪಡಿಸುವುದು ಅಸಾಧ್ಯಮತ್ತು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎನ್ನುವುದನ್ನು ಗಮನಕ್ಕೆ ತೆಗೆದುಕೊಂಡ ನ್ಯಾ.ವಿಕ್ರಮನಾಥ ನೇತೃತ್ವದ ಪೀಠವು,ಯಾವುದೇ ಎರಡು ಪ್ರಶ್ನೆಪತ್ರಿಕೆಗಳು ಒಂದೇ ಮಟ್ಟದ ಕಠಿಣತೆ ಅಥವಾ ಸುಲಭತೆಯನ್ನು ಹೊಂದಿರುತ್ತವೆ ಎಂದು ಹೇಳಲು ಎಂದಿಗೂ ಸಾಧ್ಯವಿಲ್ಲ ಮತ್ತು ಈ ವ್ಯತ್ಯಾಸವು ಪರೀಕ್ಷಾ ಪ್ರಕ್ರಿಯೆಯ ಸಮಗ್ರತೆಯನ್ನೇ ದುರ್ಬಲಗೊಳಿಸುತ್ತದೆ ಎಂದು ಎತ್ತಿ ತೋರಿಸಿತು. ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ಎಲ್ಲ ಅಗತ್ಯ ಲಾಜಿಸ್ಟಿಕ್ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳನ್ನು ಮಾಡುವಂತೆ ನ್ಯಾಯಾಲಯವು ತನ್ನ ಆದೇಶದಲ್ಲಿ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಪರೀಕ್ಷಾ ಪ್ರಕ್ರಿಯೆಯುದ್ದಕ್ಕೂ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು ಎಂದು ಅದು ಒತ್ತಿ ಹೇಳಿದೆ. ಎರಡು ಪಾಳಿಗಳಲ್ಲಿ ಪರೀಕ್ಷೆಗಳು ನಡೆದಾಗ ಪ್ರಶ್ನೆಪತ್ರಿಕೆಗಳಲ್ಲಿಯ ಕಠಿಣತೆಗಳ ವ್ಯತ್ಯಾಸಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಕಳವಳಗಳನ್ನು ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಈ ತೀರ್ಪು ನೆಮ್ಮದಿಯನ್ನು ನೀಡುವ ನಿರೀಕ್ಷೆಯಿದೆ. ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ಮತ್ತು ಸಂಜಯ ಕುಮಾರ ಅವರನ್ನೂ ಒಳಗೊಂಡಿದ್ದ ಪೀಠವು,ಎರಡು ಪ್ರತ್ಯೇಕ ಅವಧಿಗಳಲ್ಲಿ ಪರೀಕ್ಷೆಯನ್ನು ನಡೆಸುವುದು ‘ಅನಿಯಂತ್ರತೆ’ಗೆ ಕಾರಣವಾಗುತ್ತದೆ ಎಂದೂ ಬೆಟ್ಟು ಮಾಡಿತು.

ವಾರ್ತಾ ಭಾರತಿ 30 May 2025 8:55 pm

ಬಿಹಾರ ಸಿಎಂ ನಿತೀಶ್ ಕುಮಾರ್ ಆರೋಗ್ಯದಲ್ಲಿ ಸಮಸ್ಯೆಯೇ : ಮೋದಿ ಇದ್ದ ಕಾರ್ಯಕ್ರಮದಲ್ಲಿ ಎಡವಟ್ಟುಗಳು ಎಂದ RJD

ಬಿಹಾರದಲ್ಲಿ ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಆರೋಗ್ಯದ ಬಗ್ಗೆ ಪ್ರಶ್ನೆಯನ್ನು ಎತ್ತಿದ್ದಾರೆ. ಅವರು ಸರಣಿ ಎಡವಟ್ಟುಗಳನ್ನು ಮಾಡುತ್ತಿರುವುದರಿಂದ ಅವರ ಆರೋಗ್ಯದ ಬಗ್ಗೆ ಶಂಕೆ ಬರುವಂತೆ ಮಾಡಿದೆ ಎಂದು ಯಾದವ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ. ಪ್ರಧಾನಿ ಮೋದಿ ಇದ್ದ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಎಡವಟ್ಟು ಮಾಡಿಕೊಂಡಿದ್ದರು.

ವಿಜಯ ಕರ್ನಾಟಕ 30 May 2025 8:48 pm

ಮಂಗಳೂರು | ದುರಂತ ನಡೆದ ಎರಡೂ ಸ್ಥಳಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಮಂಗಳೂರು: ಎಡೆಬಿಡದೆ ಸುರಿದ ಭಾರೀ ಮಳೆಗೆ ಗುಡ್ಡ ಜರಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ನಡೆದ ಮಂಜನಾಡಿ ಗ್ರಾಮದ ಮೊಂಟೆಪದವು ಮತ್ತು ಬೆಳ್ಮ ಗ್ರಾಮದ ಕಾನಕೆರೆಗೆ ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲಿಸಿದರು. ಕಾಂತಪ್ಪ ಪೂಜಾರಿಯ ಮನೆಯಲ್ಲಿ ಮೂವರು ಹಾಗೂ ನೌಶಾದ್‌ರ ಮನೆಯಲ್ಲಿ ಒಬ್ಬ ಬಾಲಕಿ ಮೃತಪಟ್ಟಿದ್ದು, ಈ ಸಂದರ್ಭ ಕುಟುಂಬಕ್ಕೆ ತಲಾ 5 ಲಕ್ಷ ರೂ.ನ ಚೆಕ್ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ವಿಪರೀತ ಮಳೆಯಿಂದ ಗುಡ್ಡ ಜರಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು ಮತ್ತು ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ತೀವ್ರ ಹಾಗೂ ಭಾಗಶಃ ಹಾನಿಯಾದ, ನೀರು ನುಗ್ಗಿದ ಮನೆಗಳಿಗೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು. ಪುನರ್ವಸತಿ ಕಲ್ಪಿಸುವ ಯೋಜನೆಯೂ ಸರಕಾರದ ಮುಂದಿದೆ ಎಂದರು.  

ವಾರ್ತಾ ಭಾರತಿ 30 May 2025 8:42 pm

ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ಸರಕಾರ ಬದ್ಧ : ಡಿ.ಕೆ.ಶಿವಕುಮಾರ್

ಬೆಂಗಳೂರು : ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಶುಕ್ರವಾರ ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ‘ಇಂಡಿಯಾ ಎಂಎಸ್‍ಎಂಇ ಸಮಾವೇಶ-2025’ರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ಕೈಗಾರಿಕೆಗಳಿಗೆ ಅಗತ್ಯವಾಗಿರುವ ವಿದ್ಯುತ್ ಹಾಗೂ ನೀರಿನ ಸೌಲಭ್ಯ ಒದಗಿಸಲು ಸರಕಾರ ಬದ್ಧವಾಗಿದೆ ಎಂದರು. ಬೆಂಗಳೂರಿನಲ್ಲಿ ಜನಸಂಖ್ಯೆ ಈಗ 1.50 ಕೋಟಿಗೆ ಏರಿಕೆಯಾಗಿದೆ. ಆದರೆ, ರಸ್ತೆಗಳ ಸಾಮರ್ಥ್ಯ ಹಾಗೇ ಇದೆ. ಇದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಬದಲಾವಣೆ ತರಲು ಹಿಂದಿನ ಎರಡು ವರ್ಷಗಳಿಂದ ಯೋಜನೆ ರೂಪಿಸುತ್ತಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಮೆಟ್ರೋ ಯೋಜನೆಗೆ 44 ಸಾವಿರ ಕೋಟಿ, ಟನಲ್ ರಸ್ತೆಗೆ 37 ಸಾವಿರ ಕೋಟಿ ಅದರಲ್ಲಿ ಮೊದಲನೇ ಹಂತಕ್ಕೆ 17 ಸಾವಿರ ಕೋಟಿ ಹಾಗೂ ಎಲಿವೇಟೆಡ್ ಕಾರಿಡಾರ್‍ಗಳಿಗೆ 14 ಸಾವಿರ ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಒಟ್ಟಾರೆಯಾಗಿ ಮುಂದಿನ ನಾಲ್ಕೈದು ವರ್ಷಗಳಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 1 ಲಕ್ಷ ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ನಾನು ಹಳ್ಳಿಯಲ್ಲಿ ಹುಟ್ಟಿದರೂ ವಿದ್ಯಾಭ್ಯಾಸ ಮಾಡಿದ್ದು ಬೆಂಗಳೂರಿನಲ್ಲಿ. ಮತ್ತೆ ರಾಜಕಾರಣವನ್ನು ಹಳ್ಳಿಯಿಂದ ಮಾಡಿದೆ. ಕೈಗಾರಿಕೆಗಳ ಹಿಂದೆ ಶ್ರಮ, ಅದರ ಫಲದ ಬಗ್ಗೆ ನನಗೆ ಅರಿವಿದೆ. ನಾನು ಯಾವುದೇ ಶಾಲಾ, ಕಾಲೇಜು ಕಾರ್ಯಕ್ರಮಕ್ಕೆ ಹೋದರೂ ಉದ್ಯೋಗ ಪಡೆಯುವುದಷ್ಟೇ ನಿಮ್ಮ ಗುರಿಯಾಗಬಾರದು, ನೀವುಗಳು ಉದ್ಯೋಗ ಸೃಷ್ಟಿಸುವಂತೆ ಬೆಳೆಯುವುದು ನಿಮ್ಮ ಕನಸಾಗಬೇಕು ಎಂದು ಹೇಳುತ್ತಿರುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಪೀಣ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕಾ ಪ್ರದೇಶಗಳು ಮೊದಲಿನಿಂದಲೂ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸ್ಥಾನ ಪಡೆದಿವೆ. ಮೂರು ಸಂಸ್ಥೆಗಳು ಇಂದು ಜತೆಗೂಡಿ ದೇಶದ ಪ್ರಗತಿಗೆ ಒಟ್ಟಾಗಿ ಶ್ರಮಿಸುವ ಸಂದೇಶವನ್ನು ದೇಶಕ್ಕೆ ರವಾನಿಸಿದ್ದೀರಿ. ಎಂಎಸ್‍ಎಂಇಗಳು ಸರಕಾರ ಮಾಡಲಾಗದ ಕೆಲಸವನ್ನು ಮಾಡಿ ಜನರಿಗೆ ಉದ್ಯೋಗ ನೀಡುತ್ತಿವೆ. ಆ ಮೂಲಕ ನಿಮ್ಮ ಬದುಕಿನ ಜತೆಗೆ ಕೋಟ್ಯಂತರ ಕುಟುಂಬಗಳಿಗೆ ಆಧಾರವಾಗಿದ್ದೀರಿ ಎಂದು ಡಿ.ಕೆ.ಶಿವಕುಮಾರ್ ಶ್ಲಾಘಿಸಿದರು. ಕೇಂದ್ರ ಸರಕಾರದ ನೀತಿಯಂತೆ ರಾಷ್ಟ್ರೀಕೃತ ಬ್ಯಾಂಕುಗಳ ಸಹಕಾರ ಅಗತ್ಯವಿದೆ. ಆಸಕ್ತಿಯಿಂದ ಪ್ರಾಮಾಣಿಕತೆಯಿಂದ ದುಡಿಯುವವರಿಗೆ ಕೇಂದ್ರ ಹಾಗೂ ರಾಜ್ಯಗಳು ಪ್ರೋತ್ಸಾಹ ನೀಡಿದರೆ ಇಡೀ ದೇಶಕ್ಕೆ ನೆರವಾಗುತ್ತದೆ. ಮೇಕ್ ಇನ್ ಇಂಡಿಯಾ ಚಿಂತನೆಗೆ ಹೆಚ್ಚು ಒತ್ತು ನೀಡಿದಾಗ ನಮ್ಮ ಪ್ರತಿಭೆಗಳು ನಮ್ಮಲ್ಲಿಯೇ ಉಳಿದುಕೊಳ್ಳುತ್ತವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಎಂ.ಬಿ.ಪಾಟೀಲ್, ಶರಣಬಸಪ್ಪ ದರ್ಶನಾಪುರ, ಎಂಎಸ್‍ಎಂಇ ನಿರ್ದೇಶಕ ನಿತೇಶ್ ಪಾಟೀಲ್, ಎಫ್‍ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ, ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ಪೀಣ್ಯ ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಈ ಸಮಾವೇಶದಲ್ಲಿ 300ಕ್ಕೂ ಮಳಿಗೆಗಳಲ್ಲಿ ಉದ್ಯಮಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ನಡೆಸಲಾಯಿತು. ನನ್ನ ಸಹೋದರನ ಕಂಪೆನಿಯ ತಂತ್ರಜ್ಞಾನ ಪೂರೈಕೆಗೆ ವೀಸಾ ಸಮಸ್ಯೆ..! ನನ್ನ ಸಹೋದರ ಕನಕಪುರದಲ್ಲಿ ರೇಷ್ಮೆಗೆ ಸಂಬಂಧಿಸಿದಂತೆ ಒಂದು ಸಣ್ಣ ಕೈಗಾರಿಕೆ ಆರಂಭಿಸಿದ್ದು, ಆತ ಚೀನಾ ಕಂಪೆನಿ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಅವರು ಬಂದು ತಂತ್ರಜ್ಞಾನ ಪೂರೈಕೆ ಮಾಡಬೇಕು. ಆದರೆ, ವೀಸಾ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಅವರು ಬಂದು ತರಬೇತಿ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಅದು ಅರ್ಧಕ್ಕೆ ನಿಂತಿದೆ. ಆದರೂ ನನ್ನ ಸಹೋದರ ಏನಾದರೂ ಮಾಡಬೇಕು ಎಂದು ಪ್ರಯತ್ನಿಸುತ್ತಿದ್ದಾನೆ. ನಾವು ಬೇರೆಯವರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ವಾರ್ತಾ ಭಾರತಿ 30 May 2025 8:41 pm

ಕಲಬುರಗಿ | ಎನ್. ರವಿಕುಮಾರ್, ಛಲವಾದಿ ನಾರಾಯಣ್ ಸ್ವಾಮಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವಂತೆ ದೀಪಕನಾಗ್ ಪುಣ್ಯಶೆಟ್ಟಿ ಆಗ್ರಹ

ಕಲಬುರಗಿ: ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಆಗ್ರಹಿಸಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ. ನಿಮ್ಮ ಚಪ್ಪಾಳೆ ನೋಡಿದರೆ, ಜಿಲ್ಲಾಧಿಕಾರಿ ನಿಜಕ್ಕೂ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇನೆ ಎಂದು ದೀಪಕನಾಗ ಪುಣ್ಯಶೆಟ್ಟಿ ಹೇಳಿದರು.  ಛಲವಾದಿ ನಾರಾಯಣ್ ಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಕೇಳಿರುವ ರವಿಕುಮಾರ್ ಅವರನ್ನು ಅಮಾನತ್ತುಗೊಳಿಸಬೇಕು. ಇವರಿಬ್ಬರೂ ಸಮಾಜಕ್ಕೆ ತಪ್ಪು ಸಂದೇಶ ಕೊಡುತ್ತಿದ್ದಾರೆ ಎಂದು ಆರೋಪಿಸಿದರು. ಇದಲ್ಲದೆ ಅಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಮುಂದಾಳತ್ವ ವಹಿಸಿದ ಸೋಫಿಯಾ ಖುರೇಷಿ ಅವರಿಗೆ ಬಿಜೆಪಿಗರು ಅವಮಾನ ಮಾಡಿದ್ದಾರೆ. ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧರಿರುವ ಸೈನಿಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ಇಬ್ರಾಹಿಂ ಸಾಬ ದೇಗಲಮಡಿ, ಅಲ್ಲಾವುದ್ದಿನ್ ಅನ್ಸಾರಿ, ರಾಜಕುಮಾರ ಮಂದಾ, ಚಂದ್ರಕಾಂತ ತಳವಾರ, ಶರಣು ಪಪ್ಪ, ಶಿವಕುಮಾರ್ ಮುಲ್ಗೆ, ಆಸೀಫ ಹುಡಾ, ಖಾಜಾ ಪಾಟೇಲ, ನಂದಕುಮಾರ ಆವುಂಟಿ ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 8:41 pm

ದೈತ್ಯ ಮೈಕ್ರೋಸಾಫ್ಟ್‌ನಿಂದ 6,000 ಉದ್ಯೋಗಿಗಳಿಗೆ ಪಿಂಕ್‌ ಸ್ಲಿಪ್‌, ಕಾರಣ ಬಿಚ್ಚಿಟ್ಟ ಸಿಇಒ ಸತ್ಯ ನಾಡೆಲ್ಲಾ

ಮೈಕ್ರೋಸಾಫ್ಟ್ ಸಿಇಒ ಸತ್ಯಾ ನಾಡೆಲ್ಲಾ, 6,000 ಉದ್ಯೋಗಿಗಳ ವಜಾಕ್ಕೆ 'ಪುನರ್‌ರಚನೆ' ಕಾರಣವೆಂದು ಸ್ಪಷ್ಟಪಡಿಸಿದ್ದಾರೆ. ಕಂಪನಿಯು ಕೋಪೈಲಟ್ ಎಐ ಅಸಿಸ್ಟೆಂಟ್ ಅನ್ನು ಗ್ರಾಹಕರ ಕಾರ್ಯಪಡೆಗಳಲ್ಲಿ ಅಳವಡಿಸಲು ಗಮನಹರಿಸಿದೆ ಎಂದೂ ಅವರು ತಿಳಿಸಿದ್ದಾರೆ. ಬಾರ್ಕ್ಲೇಸ್ ಪಿಎಲ್‌ಸಿಯೊಂದಿಗೆ ಮೈಕ್ರೋಸಾಫ್ಟ್ ಹೊಸ ಎಐ ಒಪ್ಪಂದ ಮಾಡಿಕೊಂಡಿದ್ದು, ಇತರ ಹಲವು ಕಂಪನಿಗಳು ಕೂಡ ಕೋಪೈಲಟ್ ಬಳಕೆದಾರರನ್ನು ಹೊಂದಿವೆ. ಎಐ ವಲಯದಲ್ಲಿ ಕಂಪನಿ ಮುಂಚೂಣಿಯಲ್ಲಿದ್ದು, ಉತ್ತಮ ಆದಾಯದ ನಿರೀಕ್ಷೆಯಲ್ಲಿದೆ.

ವಿಜಯ ಕರ್ನಾಟಕ 30 May 2025 8:36 pm

ಚತ್ತೀಸ್‌ಗಢ: ಐಇಡಿ ಸ್ಫೋಟ; ಮೂವರಿಗೆ ಗಾಯ

ಬಿಜಾಪುರ: ಚತ್ತೀಸ್‌ ಗಢದ ಬಿಜಾಪುರ ಜಿಲ್ಲೆಯಲ್ಲಿ ಶಂಕಿತ ನಕ್ಸಲೀಯರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಶುಕ್ರವಾರ ಸ್ಫೋಟಗೊಂಡು ಓರ್ವ ಬಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಮಡ್ಡೆಡ್ ಪೊಲೀಸ್ ಠಾಣಾ ವ್ಯಾಪ್ತಿಯ ಬಂದೆಪಾರಾ ಗ್ರಾಮದ ಸಮೀಪ ಬೆಳಗ್ಗೆ ಸುಮಾರು 9 ಗಂಟೆಗೆ ಸಂಭವಿಸಿದೆ. ದಂಪಾಯ ಗ್ರಾಮದ ನಿವಾಸಿಗಳಾದ ಗೋಟೆ ಜೋಗ (45), ಬಡ್ಡೆ ಸುನೀಲ್ (20) ಹಾಗೂ ವಿವೇಕ್ ದೋಧಿ (17) ಬಂದೆಪಾರಕ್ಕೆ ನಡೆದುಕೊಂಡು ಹೋಗುತ್ತಿರುವ ಸಂದರ್ಭ ಐಇಡಿ ಮೇಲೆ ಕಾಲಿರಿಸಿದ್ದಾರೆ. ಇದರಿಂದ ಐಇಡಿ ಸ್ಫೋಟಗೊಂಡು ಮೂವರು ಗಾಯಗೊಂಡರು ಎಂದು ಅವರು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಸ್ಥಳಕ್ಕೆ ಆ್ಯಂಬುಲೆನ್ಸ್ ಕಳುಹಿಸಿದೆ. ಗಾಯಗೊಂಡ ಮೂವರನ್ನು ಕರೆ ತಂದು ಆಸ್ಪತ್ರೆಗೆ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾರ್ತಾ ಭಾರತಿ 30 May 2025 8:34 pm

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ಪ್ರತಿಕೃತಿ ದಹನ: ಇಬ್ಬರು ಕನ್ನಡಪರ ಹೋರಾಟಗಾರರ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರ ಪ್ರತಿಕೃತಿ ದಹಿಸಿದ ಆರೋಪದಡಿ ಇಬ್ಬರು ಕನ್ನಡಪರ ಹೋರಾಟಗಾರರ ವಿರುದ್ಧ ಇಲ್ಲಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರ ದೂರಿನ ಆಧಾರದ ಮೇಲೆ ಕರುನಾಡ ಯುವ ಸೇನೆಯ ಅಧ್ಯಕ್ಷ ರವಿಕುಮಾರ್ ಹಾಗೂ ಬಸವೇಶ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇ 28ರಂದು ರಾತ್ರಿ 11.45ರ ಸುಮಾರಿಗೆ ಬಸವೇಶ್ವರನಗರದ ಪವಿತ್ರ ಪ್ಯಾರಡೈಸ್ ವೃತ್ತದ ಬಳಿ ರವಿಕುಮಾರ್ ಹಾಗೂ ಬಸವೇಶ್ ಅವರು ನಟ ಕಮಲ್ ಹಾಸನ್ ಅವರ ಪ್ರತಿಕೃತಿಯನ್ನು ದಹಿಸಿದ್ದಾರೆ. ಅವರ ಈ ಕೃತ್ಯವು ಸಾರ್ವಜನಿಕ ಶಾಂತಿಯನ್ನು ಕದಡಿದ್ದಲ್ಲದೆ, ಮಧ್ಯರಾತ್ರಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದ್ದಾರೆ. ಏನಿದು ವಿವಾದ?: ಮೇ 27ರಂದು `ಥಗ್ ಲೈಫ್’ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಸಿನಿಮಾದ ನಾಯಕ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ವಾರ್ತಾ ಭಾರತಿ 30 May 2025 8:33 pm

ಉಡುಪಿ: ಅಪರಾಹ್ನದ ಬಳಿಕ ಬಿಡುವು ಪಡೆದ ಮಳೆ; ಹೆಚ್ಚಿದ ಹಾನಿ

ಉಡುಪಿ: ನಿರಂತರವಾಗಿ ಸುರಿಯುತಿದ್ದ ಮಳೆ, ಶುಕ್ರವಾರ ಅಪರಾಹ್ನದ ಬಳಿಕ ಬಿಡುವು ಪಡೆದ ಕಾರಣ ಉಡುಪಿ ಜಿಲ್ಲೆಯ ಜನತೆ ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಯಿತು. ನಿನ್ನೆ ಸಂಜೆಯಿಂದ ಇಂದು ಮುಂಜಾನೆಯವರೆಗೆ ನಿರಂತರವಾಗಿ ಸುರಿದ ಮಳೆ, ನೆರೆಯ ಭೀತಿಯನ್ನು ಉಂಟುಮಾಡಿತ್ತಲ್ಲದೇ, ಇಂದು ಪುನರಾರಂಭಗೊಳ್ಳಬೇಕಿದ್ದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಆರಂಭವನ್ನು ಒಂದು ದಿನ ಮುಂದೂಡುವಂತೆ ಮಾಡಿತ್ತು. ನಿರಂತರವಾಗಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಮುಂಜಾನೆಯೇ ಜಿಲ್ಲಾದಿಕಾರಿಯವರು ಜಿಲ್ಲೆಯ ಎಲ್ಲಾ ಶಾಲೆಗಳಿಗೂ ರಜೆ ಘೋಷಿಸಿದ್ದರು. ಇದರಿಂದ ಬೇಸಿಗೆ ರಜೆಯ ಕಳೆದು ಇಂದು ಶಾಲೆಗೆ ಬರಲು ಸಿದ್ಧರಾಗಿದ್ದ ಮಕ್ಕಳು ನಾಳೆಯವರೆಗೆ ಕಾಯುವಂತಾಯಿತು. ಬೆಳಗ್ಗೆ 11ಗಂಟೆಯ ಬಳಿಕ ಮಳೆಯ ಬಿರುಸು ಕಡಿಮೆಯಾಯಿತು. 12 ಗಂಟೆಯ ಬಳಿಕ ಒಂದೆರಡು ಬಾರಿ ಬಿಸಿಲು ಸಹ ಆಕಾಶದಲ್ಲಿ ಕಾಣಿಸಿ ಕೊಂಡಿತ್ತು. ಆದರೆ ನಿರಂತರ ಮಳೆ ಹಾಗೂ ಗಾಳಿಯಿಂದ ಜಿಲ್ಲೆಯಲ್ಲಿ ಹಾನಿಯ ಪ್ರಕರಣಗಳು ಮಾತ್ರ  ಹೆಚ್ಚಾಗಿವೆ. ಮನೆಗೆ ನುಗ್ಗಿದ ನೀರು: ನಿರಂತರ ಮಳೆಯಿಂದ ಉಡುಪಿ ತಾಲೂಕು ಕೊಡವೂರು ಗ್ರಾಮದ ಕೊಳ ಪ್ರದೇಶದಲ್ಲಿ ಮಳೆ ನೀರು ಮನೆಯೊಂದಕ್ಕೆ ನುಗ್ಗಿ ಗೃಹಪಯೋಗಿ ವಸ್ತು ಹಾಗೂ ದಿನಸಿ ಸಾಮಗ್ರಿಗಳಿಗೆ ಹಾನಿಯಾಗಿದೆ ಎಂದು ಉಡುಪಿ ತಹಶೀಲ್ದಾರ್ ಕಚೇರಿಯ ಮಾಹಿತಿ ತಿಳಿಸಿದೆ. ಬಾವಿಯ ಆವರಣಗೋಡೆ ಕುಸಿತ: ಕುಂದಾಪುರ ತಾಲೂಕಿನ ಕೆದೂರು ಗ್ರಾಮದ ನಡಿಬೆಟ್ಟಿನ ಕರುಣಾಕರ ಶೆಟ್ಟಿ ಎಂಬವರ ತೋಟದ ಬಾವಿಯ ಆವರಣ ಗೋಡೆ ಪೂರ್ಣವಾಗಿ ಕುಸಿದು ಭೂಮಿಯೊಳಗೆ ಸೇರಿದೆ. ಇದರಿಂದ ಈಗ ಆಳವಾದ ನೀರಿನ ಹೊಂಡ ಮಾತ್ರ ಕಂಡುಬರುತ್ತಿದೆ. ಅದೇ ತಾಲೂಕಿನ ಮೊಳಹಳ್ಳಿ ಗ್ರಾಮದ ರಾಮ ಕುಲಾಲ ಎಂಬವರ ಮನೆಯ ಆವರಣ ಗೋಡೆ ಭಾರೀ ಮಳೆಗೆ ಕುಸಿದು ಬಿದ್ದಿದ್ದು ಒಂದು ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ. ಗಾಳಿ-ಮಳೆಯಿಂದ ತೋಟಗಾರಿಕಾ ಬೆಳೆಗಳಿಗೂ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಹಕ್ಲಾಡಿಯ ಶಶಿಕಾಂತ ದಾಸ್ ಎಂಬವರ ಅಡಿಕೆ ತೋಟದಲ್ಲಿದ್ದ ಮರಗಳು ಧರಾಶಾಹಿಯಾಗಿವೆ. ಅದೇ ರೀತಿ ಗುಡಿಬೆಟ್ಟು ಮೇಲಬೆಟ್ಟು ಗಿರಿಜಮ್ಮ ಶೆಟ್ಟಿಯವರ ಮನೆಯ ಅಡಿಕೆ ತೋಟದ ಮೇಲೆ ದೊಡ್ಡ ಗಾತ್ರದ ಹುಣಸೆ ಮರ ಬಿದ್ದು ಅಡಿಕೆ ತೋಟಕ್ಕೆ ಭಾರೀ ಹಾನಿಯುಂಟಾಗಿದೆ. ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿಯಲ್ಲಿ ಮಂಜುಳಾ ಖಾರ್ವಿ ಹಾಗೂ ಸುರೇಶ್ ಖಾರ್ವಿ ಅವರ ಮನೆ ಮೇಲೆ ಮರ ಬಿದ್ದು ತಲಾ 50ಸಾವಿರ ರೂ.ಗಳಿಗೂ ಅಧಿಕ ಹಾನಿಯ ಅಂದಾಜು ಮಾಡಲಾಗಿದೆ. 11 ಮನೆಗಳಿಗೆ ಹಾನಿ, 8ಲಕ್ಷ ರೂ.ನಷ್ಟ: ಉಳಿದಂತೆ ಜಿಲ್ಲೆಯ ವಿವಿದೆಡೆಗಳಲ್ಲಿ 11ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು, ಎಂಟು ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಬೈಂದೂರು ತಾಲೂಕು ಶಿರೂರು ಗ್ರಾಮದ ರಾಘು ಹಾಗೂ ರಫೀಕ್ ಎಂಬವರ ಮನೆ ಗಾಳಿ-ಮಳೆಯಿಂದ ಭಾಗಶ: ಹಾನಿಯಾಗಿದ್ದು, ತಲಾ ಎರಡು ಲಕ್ಷ ರೂ.ನಷ್ಟ ಉಂಟಾಗಿರುವುದಾಗಿ ತಹಶೀಲ್ದಾರ್‌ರ ಮಾಹಿತಿ ತಿಳಿಸಿದೆ. ಅದೇ ರೀತಿ ಕಾಪ್ಸಿ ಎಂಬವರ ಮನೆಗೆ ಒಂದು ಲಕ್ಷ ರೂ.ನಷ್ಟವಾಗಿದೆ. ಇನ್ನು ಕುಂದಾಪುರ ತಾಲೂಕು ಕರ್ಕುಂಜೆಯ ಸಂಜೀವ ಮೊಗವೀರ ಹಾಗೂ ಕಾಪು ತಾಲೂಕು ಪಲಿಮಾರು ಗ್ರಾಮದ ಗೋಪಾಲಕೃಷ್ಣ ಎಂಬವರ ಮನೆಗಳಿಗೂ ತಲಾ ಒಂದು ಲಕ್ಷ ರೂ.ನಷ್ಟ ಉಂಟಾಗಿದೆ. ಉಡುಪಿ ತಾಲೂಕಿನ ಆತ್ರಾಡಿಯ ದೂಮ ಪೂಜಾರಿ, ಪೆರ್ಡೂರಿನ ಗುಲಾಬಿ ಆಚಾರ್ಯ, ಪಡುತೋನ್ಸೆಯ ಸುಂದರ ಕೋಟ್ಯಾನ್, ಮೀನಾ ಬಂಗೇರ, ಕುಂದಾಪುರ ಕಸಬಾದ ದಿನೇಶ್ ಎಂಬವರ ಮನೆಗಳಿಗೂ ಮಳೆಯಿಂದ ಭಾರೀ ಹಾನಿ ಉಂಟಾಗಿದೆ. ಹವಾಮಾನ ಇಲಾಖೆಯು ನಾಳೆಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಾವುದೇ ಮಳೆಯ ಎಚ್ಚರಿಕೆಯನ್ನು ನೀಡಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಇನ್ನು ಮೂರು ದಿನಗಳ ಎಲ್ಲೋ ಅಲರ್ಟ್ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬಿಸಿಲಿನ ವಾತಾವರಣವನ್ನು ನಿರೀಕ್ಷಿಸಬಹುದಾಗಿದೆ. ಜಿಲ್ಲೆಯಲ್ಲಿ ಮಳೆ ವಿವರ ಶುಕ್ರವಾರ ಬೆಳಗ್ಗೆ 8:30ರವರೆಗೆ ಹಿಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 96.1ಮಿ.ಮೀ. ಮಳೆಯಾಗಿದೆ. ಬೈಂದೂರು 89.7ಮಿ.ಮೀ. ಬ್ರಹ್ಮಾವರ 108.0ಮಿ.ಮೀ. ಹೆಬ್ರಿ 58.9ಮಿ.ಮೀ. ಕುಂದಾಪುರ 92.1ಮಿ.ಮೀ. ಉಡುಪಿ 137.5ಮಿ.ಮೀ. ಕಾಪು 182.1ಮಿ.ಮೀ. ಕಾರ್ಕಳ 78.5ಮಿ.ಮೀ.    

ವಾರ್ತಾ ಭಾರತಿ 30 May 2025 8:28 pm

ಬೆಂಗಳೂರು | ನಕಲಿ ದಾಖಲಾತಿಗಳ ಸೃಷ್ಟಿಸುತ್ತಿದ್ದ ಪ್ರಕರಣ: ಮೂವರ ಬಂಧನ

ಬೆಂಗಳೂರು: ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್‍ಗೆ ಅಗತ್ಯವಿರುವ ಕೆಲ ದಾಖಲಾತಿಗಳ ನಕಲು ಸೃಷ್ಟಿಸುತ್ತಿದ್ದ ಪ್ರಕರಣದಡಿಯಲ್ಲಿ ಮೂವರು ಆರೋಪಿಗಳನ್ನು ಸಿಸಿಬಿಯ ವಿಶೇಷ ವಿಚಾರಣಾ ದಳದ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ದೀಪಕ್, ಉದಯ್ ಕುಮಾರ್ ಹಾಗೂ ರಾಮಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ನಕಲಿ ದಾಖಲೆಗಳ ಸೃಷ್ಟಿಗೆ ಬಳಸುತ್ತಿದ್ದ ಕಂಪ್ಯೂಟರ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ವಿವರಿಸಿದ್ದಾರೆ. ವಿವಿಧ ಕಾರಣಗಳಿಗಾಗಿ ಅಗತ್ಯವಿರುವ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಪಡೆಯಲು ಸೇವಾಸಿಂಧು ಪೋರ್ಟಲ್‍ನ ಮೂಲಕ ಅರ್ಜಿ ಸಲ್ಲಿಸಲಾಗುತ್ತದೆ. ಇತ್ತೀಚೆಗೆ ಕರ್ನಾಟಕ ಮಾತ್ರವಲ್ಲದೆ ಅನ್ಯ ರಾಜ್ಯದ ಕೆಲವರು ಬೆಂಗಳೂರಿನಲ್ಲಿ ವಾಸವಾಗಿರುವುದಾಗಿ ನಕಲಿ ಬಾಡಿಗೆ ಒಪ್ಪಂದ ಪತ್ರ (ರೆಂಟಲ್ ಅಗ್ರಿಮೆಂಟ್ ಪೇಪರ್) ಸಲ್ಲಿಸಿರುವುದು ಕಂಡುಬಂದಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ಆರೋಪಿಗಳೆಲ್ಲರೂ ಸ್ಥಳಿಯರಾಗಿದ್ದು, ಸೆಕ್ಯುರಿಟಿ ಏಜೆನ್ಸಿ ನಡೆಸುತ್ತಿದ್ದರು. ನಗರದ ವಿವಿಧ ಠಾಣೆಗಳ ವ್ಯಾಪ್ತಿಗಳಲ್ಲಿ ಬೇರೆ ಬೇರೆಯವರಿಗೆ ನಕಲಿ ದಾಖಲೆಗಳನ್ನು ತಯಾರಿಸಿ ಕೊಟ್ಟಿರುವುದು ಕಂಡುಬಂದಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 30 May 2025 8:27 pm

ಲಂಚದ ಆಮಿಷ ಆರೋಪ: ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಕ್ರಮ

ಮಂಗಳೂರು: ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಲಂಚದ ಆಮಿಷ ಒಡ್ಡಿದ ಆರೋಪದ ಮೇರೆಗೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿರುದ್ಧ ಲೋಕಾಯುಕ್ತ ಪೊಲೀಸರು ಕ್ರಮಕೈಗೊಂಡಿದ್ದಾರೆ. ತಾನು ಠಾಣೆಯಲ್ಲಿ ಕರ್ತವ್ಯದಲ್ಲಿರುವಾಗ ಕೋಟೆಕಣಿಯ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್‌ನ ಮಾಲಕ ಪ್ರವೀಣ್ ನಾಯ್ಕ್ ಮತ್ತು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ತನ್ನ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು, ದಾಳಿ ಮಾಡಬಾರದು ಎಂದು ತಿಳಿಸಿದ್ದಲ್ಲದೆ ತಾನು 3 ತಿಂಗಳಿಗೊಮ್ಮೆ 25,000 ರೂ.ವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಆಮಿಷ ಒಡ್ಡಿದ್ದರು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅದರಂತೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಉಪಾಧೀಕ್ಷಕರಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್.ಪಾಲ್ಗೊಂಡಿದ್ದರು.

ವಾರ್ತಾ ಭಾರತಿ 30 May 2025 8:21 pm

Jasprit Bumrah- `ದೇಹ ಸಹಕರಿಸದಿದ್ದಾಗ ನಿವೃತ್ತಿ': ಟೀಂ ಇಂಡಿಯಾ ಸ್ಟಾರ್ ವೇಗಿಯಿಂದ ಈಗೇಕೆ ಈ ಹೇಳಿಕೆ!

ಗಾಯ ಎಂಬುದು ವೇಗದ ಬೌಲರ್ ಗಳ ಅವಿಭಾಜ್ಯ ಅಂಗ. ಬಹುಷಃ ಕಪಿಲ್ ದೇವ್ ಅವರನ್ನು ಹೊರತುಪಡಿಸಿದರೆ ಟೀಂ ಇಂಡಿಯಾದಲ್ಲಿ ಕಪಿಲ್ ದೇವ್ ಅವರನ್ನು ಹೊರತುಪಡಿಸಿದರೆ ಯಾವುದೇ ಗಾಯವಿಲ್ಲದೆ ಸುದೀರ್ಘ ಕಾಲ ಆಡಿದ ಮತ್ತೊಬ್ಬ ವೇಗದ ಬೌಲರ್ ಇಲ್ಲ. ಕರ್ನಾಟಕದ ಅಪ್ರತಿಮ ವೇಗಿ ಜಾವಗಲ್ ಶ್ರೀನಾಥ್ ಅವರನ್ನು ಸಹ ಗಾಯದ ಸಮಸ್ಯೆ ಕಾಡಿತ್ತು. ಇದೀಗ ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರೂ ಪದೇ ಪದೇ ಗಾಯದ ಸಮಸ್ಯೆಗೊಳಗಾಗಿದ್ದಾರೆ. ಇದೇ ಹೊತ್ತಲ್ಲಿ ಜಸ್ಪ್ರೀತ್ ಬುಮ್ರಾ ಅವರು ನಿವೃತ್ತಿಯ ಬಗ್ಗೆ ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ವಿಜಯ ಕರ್ನಾಟಕ 30 May 2025 8:12 pm

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ ವರದಿ ನೀಡಲು ನಮ್ಮ ಪಕ್ಷದವರಿಗೆ ತಿಳಿಸಿದ್ದೇನೆ. ಕರಾವಳಿ ಭಾಗದಲ್ಲಿ ಶಾಂತಿ ನೆಲೆಸಬೇಕು. ಇದು ಒಂದು ಸಾವು, ಎರಡು ಸಾವಿನ ವಿಚಾರ ಮಾತ್ರವಲ್ಲ. ಇದು ಇಡೀ ಕರಾವಳಿ ಭಾಗಕ್ಕೆ ಬಿದ್ದಿರುವ ಕೊಡಲಿಪೆಟ್ಟು. ಜನರು ಆಂತಕಕ್ಕೆ ಒಳಗಾಗುವುದು, ಬಂಡವಾಳ ಹೂಡಿಕೆದಾರರು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿರುವುದನ್ನು ಎಲ್ಲರೂ ಅರಿತುಕೊಳ್ಳಬೇಕು. ಈ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು ಎಂದು ಬಿಜೆಪಿ ಸ್ನೇಹಿತರು ಹಾಗೂ ಬೇರೆ ಬೇರೆ ಸಂಘಟನೆಗಳಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು. ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜೆಡಿಎಸ್ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, “ಅವರ ಪಕ್ಷದವರು ಯಾಕೆ ಗಾಬರಿಯಾಗಬೇಕು? ಅವರು ಒಂದೇ ಪಕ್ಷ ಅಲ್ಲವಲ್ಲ. ಅವರು ಎರಡು ಪಕ್ಷ ಸೇರಿ ಒಟ್ಟಿಗೆ ಇದ್ದಾರಲ್ಲಾ? ಅವರು ಯಾರ ಜತೆ ಬೇಕಾದರೂ ಬೇರೆಯಬಹುದು. ಜನ, ಕಾರ್ಯಕರ್ತರು, ಮುಖಂಡರು ನಮ್ಮ ಜತೆ ಸೇರಲು ಆಸೆ ಪಡುತ್ತಿದ್ದಾರೆ. ಅವರನ್ನು ಬೇಡ ಎನ್ನಲು ಸಾಧ್ಯವೇ?” ಎಂದು ತಿಳಿಸಿದರು.

ವಾರ್ತಾ ಭಾರತಿ 30 May 2025 8:11 pm

ತುರ್ಕಿಯಾ ಏರ್ಲೈನ್ಸ್ ಜೊತೆಗೆ ವಿಮಾನದ ಗುತ್ತಿಗೆ ಒಪ್ಪಂದವನ್ನು ಕೊನೆಗೊಳಿಸುವಂತೆ ಇಂಡಿಗೋಗೆ ಸೂಚನೆ

ಹೊಸದಿಲ್ಲಿ : ತುರ್ಕಿಯಾ ಏರ್ಲೈನ್ಸ್ ಜೊತೆಗೆ ವಿಮಾನದ ಗುತ್ತಿಗೆ ಒಪ್ಪಂದವನ್ನು ಕೊನೆಗೊಳಿಸುವಂತೆ ಇಂಡಿಗೋ ಏರ್ಲೈನ್ಸ್ ಗೆ ಭಾರತ ಸರಕಾರ ಸೂಚನೆ ನೀಡಿದೆ. ಇತ್ತೀಚಿಗಷ್ಟೇ ತುರ್ಕಿಯಾ ಮೂಲದ CELEBI ವಿರುದ್ಧ ಕ್ರಮ ಕೈಗೊಂಡ ಬಳಿಕ ಸರಕಾರ ಈ ಸೂಚನೆ ನೀಡಿದೆ.

ವಾರ್ತಾ ಭಾರತಿ 30 May 2025 8:10 pm

ಭಾರೀ ಮಳೆ: ಶನಿವಾರ (ಮೇ 31) ದ.ಕ.ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶನಿವಾರ (ಮೇ 31) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ವಾರ್ತಾ ಭಾರತಿ 30 May 2025 8:09 pm

ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಎಂಎಸ್‍ಎಂಇ ಬೆನ್ನೆಲುಬು : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : 2032ರ ವೇಳೆಗೆ ರಾಜ್ಯವು 1 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಯಬೇಕು. ಇದು ಸಾಧ್ಯವಾಗಬೇಕೆಂದರೆ, ಎಂಎಸ್‍ಎಂಇ ವಲಯ ಶಕ್ತವಾಗಿರಬೇಕು. ಇದಕ್ಕಾಗಿ ಸಾಲ ಸೌಲಭ್ಯ, ಕೌಶಲ್ಯಪೂರ್ಣ ಉದ್ಯೋಗಿಗಳು ಮತ್ತು ಟೆಸ್ಟಿಂಗ್ ಸೌಲಭ್ಯಗಳಿಗೆ ಆದ್ಯತೆ ಕೊಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಕಾಸಿಯಾ, ಎಫ್.ಕೆ.ಸಿ.ಸಿ.ಐ ಮತ್ತು ಪೀಣ್ಯ ಕೈಗಾರಿಕೆಗಳ ಒಕ್ಕೂಟ ಸಂಯುಕ್ತವಾಗಿ ಏರ್ಪಡಿಸಿದ್ದ ʼಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಾವೇಶ-2025’ರಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು `ಎಂಎಸ್‍ಎಂಇ ಕನೆಕ್ಟ್’ ಮತ್ತು `ವೆಂಚುರೈಸ್’ ತರಹದ ರಚನಾತ್ಮಕ ಉಪಕ್ರಮಗಳನ್ನು ಕೈಗೊಂಡಿದೆ. ತಯಾರಿಕೆ ವಲಯದಲ್ಲಿ ಶೇ.12ರಷ್ಟು ಬೆಳವಣಿಗೆ ಸಾಧಿಸುವ ಮೂಲಕ 2029ರ ಹೊತ್ತಿಗೆ 20 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು. ಜತೆಗೆ 2 ಮತ್ತು 3ನೆ ಹಂತದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು. ರಾಜ್ಯದಲ್ಲಿ 38 ಲಕ್ಷ ಎಂಎಸ್‍ಎಂಇ ಉದ್ಯಮಗಳಿದ್ದು, ಇವು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಜತೆಗೆ ಸಾವಿರಾರು ಕೋಟಿ ರೂ. ವಹಿವಾಟು ನಡೆಸುತ್ತಿವೆ. ಭಾರತದ ಜಿಡಿಪಿ ಬೆಳವಣಿಗೆಗೆ ಎಂಎಸ್‍ಎಂಇ ವಲಯವು ಶೇ.30ರಷ್ಟು ಕೊಡುಗೆ ನೀಡುತ್ತಿದ್ದು, 15 ಕೋಟಿ ಜನರಿಗೆ ಬದುಕು ನೀಡಿವೆ. ಅದರಲ್ಲೂ ಮಹಿಳೆಯರು ಮತ್ತು ಎಸ್ಸಿ-ಎಸ್ಟಿ ಸಮುದಾಯಗಳಿಂದ ಬಂದ ಉದ್ಯಮಿಗಳು ಇಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ರಾಜ್ಯದಲ್ಲಿರುವ ಈ ಉದ್ದಿಮೆಗಳಲ್ಲಿ ಸಾಂಪ್ರದಾಯಿಕ ಉತ್ಪಾದನೆಯಿಂದ ಹಿಡಿದು ಅತ್ಯಾಧುನಿಕ ತಂತ್ರಜ್ಞಾನವನ್ನು ಆಧರಿಸಿದ ಉತ್ಪಾದನೆಯವರೆಗೆ ವ್ಯವಸ್ಥೆ ಇದೆ. ಇಲ್ಲಿ ಗುಂಡುಸೂಜಿಯಿಂದ ಹಿಡಿದು ವಿಮಾನದವರೆಗೆ ಎಲ್ಲವೂ ತಯಾರಾಗುತ್ತಿದೆ. ನಮ್ಮಲ್ಲಿ ಇಂಜಿನಿಯರಿಂಗ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಎರಡೂ ಆಧಾರಸ್ತಂಭಗಳಾಗಿವೆ. ಇದರಿಂದಾಗಿ ಜಾಗತಿಕ ಗುಣಮಟ್ಟದ ತಯಾರಿಕೆ, ರಫ್ತು ವಹಿವಾಟು ಮತ್ತು ಉದ್ಯೋಗಸೃಷ್ಟಿ ಮೂರೂ ಸ್ಥಿರವಾಗಿ ನಡೆಯುತ್ತಿದೆ ಎಂದು ಎಂ.ಬಿ.ಪಾಟೀಲ್ ನುಡಿದರು. ರಾಜ್ಯದ ಹೊಸ ಕೈಗಾರಿಕಾ ನೀತಿಯಲ್ಲಿ ಹಿಂದುಳಿದಿರುವ ಪ್ರದೇಶಗಳಲ್ಲಿ ಉದ್ದಿಮೆಗಳನ್ನು ಬೆಳೆಸಲು ಹಲವು ಸೌಕರ್ಯಗಳನ್ನು ಕೊಡಲಾಗುತ್ತಿದೆ. ಎಂಎಸ್‍ಎಂಇ ಕನೆಕ್ಟ್ ಅಡಿಯಲ್ಲಿ 1,800 ಉದ್ದಿಮೆಗಳಿಗೆ ನೆರವು ಒದಗಿಸುತ್ತಿದ್ದು, ಇವುಗಳ ಪೈಕಿ 60 ಉದ್ದಿಮೆಗಳು ಈಗಾಗಲೇ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ವೆಂಚುರೈಸ್ ಉಪಕ್ರಮದ ಮೂಲಕ ನವೋದ್ಯಮಗಳು ಮತ್ತು ಸಣ್ಣ ಕೈಗಾರಿಕೆಗಳಿಗೆ ಮಾರ್ಗದರ್ಶನ ಮತ್ತು ಆರ್ಥಿಕ ನಿಧಿಯನ್ನು ಕೊಡಲಾಗುತ್ತಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಎಫ್‍ಕೆಸಿಸಿಐ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ಪಿಐಎ ಅಧ್ಯಕ್ಷ ಶಿವಕುಮಾರ್, ಕೆಎಸ್‍ಎಸ್‍ಐಡಿಸಿ ಅಧ್ಯಕ್ಷ ಟಿ.ರಘುಮೂರ್ತಿ, ಎಂಎಸ್‍ಎಂಇ ಇಲಾಖೆಯ ನಿರ್ದೇಶಕ ನಿತೀಶ್ ಪಾಟೀಲ್ ಮುಂತಾದವರು ಭಾಗವಹಿಸಿದ್ದರು.

ವಾರ್ತಾ ಭಾರತಿ 30 May 2025 8:06 pm

ಮಸೂದ್ ಅಝರ್, ಹಫೀಝ್ ಸಯೀದ್‌ ರನ್ನು ಹಸ್ತಾಂತರಿಸಿ ಪಾಕ್‌ ಗೆ ಭಾರತ ಒತ್ತಾಯ

ಹೊಸದಿಲ್ಲಿ: ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಮುಂದುವರಿಸುತ್ತಿರುವ ವಿರುದ್ಧ ಪಾಕಿಸ್ತಾನಕ್ಕೆ ಕಟು ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ಭಯೋತ್ಪಾದಕರಾದ ಮಸೂದ್ ಅಝರ್ ಮತ್ತು ಹಫೀಝ್ ಸಯೀದ್‌ ರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ. ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಲ್ಲಿ ನೌಕಾ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘‘ಸ್ವಾತಂತ್ರ್ಯ ಸಿಕ್ಕಿದಂದಿನಿಂದಲೂ ಪಾಕಿಸ್ತಾನ ಆಡಿಕೊಂಡು ಬರುತ್ತಿರುವ ಅಪಾಯಕಾರಿ ಭಯೋತ್ಪಾದನೆಯ ಆಟ ಈಗ ಮುಕ್ತಾಯಗೊಂಡಿದೆ ಎನ್ನುವುದನ್ನು ಪಾಕಿಸ್ತಾನ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕಾಗಿದೆ’’ ಎಂದು ಹೇಳಿದರು. ಭಯೋತ್ಪಾದನೆಗೆ ಭಾರತದ ಶೂನ್ಯ ಸಹನೆ ನೀತಿಯನ್ನು ಪುನರುಚ್ಚರಿಸಿದ ಅವರು, ಈ ಬೆದರಿಕೆಯನ್ನು ಎದುರಿಸಲು ದೇಶವು ಲಭ್ಯವಿರುವ ಸರ್ವ ಸಂಪನ್ಮೂಲಗಳನ್ನು ಬಳಸುತ್ತದೆ ಎಂದರು. ► ಉಗ್ರರ ವಿರುದ್ಧ ಕ್ರಮ ತೆಗೆದುಕೊಂಡಾಗ ಮಾತ್ರ ಪಾಕ್ ಜೊತೆ ಮಾತುಕತೆ: ಭಾರತ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಕಟು ಎಚ್ಚರಿಕೆಯನ್ನು ನೀಡಿರುವ ಭಾರತ, ಗಡಿಯಾಚೆಯ ಭಯೋತ್ಪಾದನೆಯನ್ನು ನಿಲ್ಲಿಸಲು ಪಾಕಿಸ್ತಾನವು ಸದೃಢ ಕ್ರಮಗಳನ್ನು ತೆಗೆದುಕೊಂಡಾಗ ಮಾತ್ರ ಆ ದೇಶದೊಂದಿಗೆ ಮಾತುಕತೆ ಸಾಧ್ಯವಾಗುತ್ತದೆ ಎಂದು ಹೇಳಿದೆ. ಕಾಶ್ಮೀರ, ಭಯೋತ್ಪಾದನೆ, ನೀರು ಮತ್ತು ವ್ಯಾಪಾರ ಸೇರಿದಂತೆ ಎಲ್ಲಾ ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸುವ ಬಯಕೆಯನ್ನು ಪಾಕಿಸ್ತಾನಿ ಪ್ರಧಾನಿ ಶೆಹ್ಬಾಝ್ ಶರೀಫ್ ವ್ಯಕ್ತಪಡಿಸಿದ ಬಳಿಕ ಭಾರತ ಈ ಪ್ರತಿಕ್ರಿಯೆ ನೀಡಿದೆ. ‘‘ಭಯೋತ್ಪಾದನೆ ಮತ್ತು ಮಾತುಕತೆ ಜೊತೆಯಾಗಿ ಸಾಗಲು ಸಾಧ್ಯವಿಲ್ಲ ಎನ್ನುವುದನ್ನು ನಾವು ಪುನರುಚ್ಚರಿಸುತ್ತೇವೆ’’ ಎಂದು ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಗುರುವಾರ ತನ್ನ ವಾರದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು. ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಹಸ್ತಾಂತರಿಸುವುದು ಮತ್ತು ಭಯೋತ್ಪಾದನೆ ವಿಷಯಗಳ ಬಗ್ಗೆ ಮಾತ್ರ ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದು ಎಂದು ಜೈಸ್ವಾಲ್ ನುಡಿದರು.

ವಾರ್ತಾ ಭಾರತಿ 30 May 2025 8:06 pm

ಕಲಬುರಗಿ| ಜನೌಷಧಿ ಕೇಂದ್ರ ಬಂದ್ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿಯಿಂದ ಮೌನ ಪ್ರತಿಭಟನೆ

ಕಲಬುರಗಿ:  ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯದಲ್ಲಿ ಬಂದ್ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಜಿಲ್ಲಾಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಯಿತು. ದೇಶದಲ್ಲಿ 15,000ಕ್ಕೂ ಅಧಿಕ ಮತ್ತು ರಾಜ್ಯದಲ್ಲಿ 1,541 ಜನೌಷಧಿ ಕೇಂದ್ರಗಳಿದೆ. ಈ ಕೇಂದ್ರಗಳಿಂದ 12 ಲಕ್ಷ ಜನರು ಲಾಭ ಪಡೆಯುತ್ತಿದ್ದಾರೆ. ಇದರಿಂದ ಕಳೆದ 10 ವರ್ಷಗಳಲ್ಲಿ 30 ಸಾವಿರ ಕೋಟಿ ರೂ.ಉಳಿತಾಯವಾಗಿದೆ. ಕರ್ನಾಟಕದಲ್ಲಿ ವಾರ್ಷಿಕವಾಗಿ 40 ಕೋಟಿ ರೂ. ಉಳಿತಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಡವರಿಗೆ ವರದಾನವಾಗಿರುವ ಈ ಕೇಂದ್ರಗಳನ್ನು ರಾಜ್ಯ ಸರಕಾರ ಬಂದ್‌ ಮಾಡುತ್ತಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರಕಾರ ಆರೋಗ್ಯ ಸೇವೆ ನೀಡುವಲ್ಲಿ ವಿಫಲವಾಗಿರುವುದನ್ನು ಮರೆಮಾಚಲು ಜನೌಷಧಿ ಕೇಂದ್ರಗಳನ್ನು ಮುಚ್ಚುಬೇಕೆಂದು ಆದೇಶ ಹೊರಡಿಸಿದೆ. ಸರಕಾರದ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಎಂಎಲ್‌ಸಿ ಶಶೀಲ್ ನಮೋಶಿ, ಕೇಂದ್ರ ಸರಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳನ್ನು ಯಾವ ಕಾರಣಕ್ಕೆ ಬಂದ್‌ ಮಾಡಲಾಗುತ್ತದೆ ಎಂಬುದನ್ನು ಸರಕಾರ ಬಹಿರಂಗ ಪಡಿಸಬೇಕು. ಮೋದಿ ಸರಕಾರ ತಂದಿರುವ ಒಂದೇ ಕಾರಣಕ್ಕೆ ಈ ಯೋಜನೆಯನ್ನು ವಿರೋಧಿಸುತ್ತಿದ್ದೀರಾ? ಸರಕಾರಿ ಆಸ್ಪತ್ರೆಯಲ್ಲಿ ಸಿಗದಿರುವ ಔಷಧಿಗಳನ್ನು ಬಡವರು ಈ ಕೇಂದ್ರಗಳಲ್ಲಿ ಪಡೆದುಕೊಳ್ಳುತ್ತಾರೆ. ಇದೀಗ ಇವುಗಳನ್ನೇ ಮುಚ್ಚಿದರೆ ಬಡ ರೋಗಿಗಳ ಪಾಡು ಏನಾಗಬಹುದು? ಸಿದ್ದರಾಮಯ್ಯನವರು ಉಚಿತ ಔಷಧಿಗಳನ್ನು ಕೊಡುವುದಾದರೆ ಜನೌಷಧಿ ಕೇಂದ್ರಗಳನ್ನು ಮುಚ್ಚಿ ಎಂದು ಹೇಳಿದ್ದಾರೆ.   ಪ್ರತಿಭಟನೆಯಲ್ಲಿ ಶಾಸಕ ಅವಿನಾಶ್ ಜಾಧವ್, ಅಶೋಕ್ ಬಗಲಿ, ಚಂದು ಪಾಟೀಲ್, ಶರಣಪ್ಪ ತಳವಾರ, ಸುಧಾ ಹಾಲಕೈ, ಅವ್ವಣ್ಣಾ ಮ್ಯಾಕೆರಿ, ಶಶಿಕಲಾ ತೆಂಗಳಿ, ಆನಂದ್ ಪಾಟೀಲ್, ಮಹಾದೇವ ಬೆಳಮಗಿ, ಸಂತೋಷ್ ಹಾದಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 8:03 pm

ಯುಪಿಐ ಪಾವತಿ, ಇಪಿಎಫ್, ಆಧಾರ್ ಅಪ್ಡೇಟ್ ಸೇರಿ ಅನೇಕ ವಲಯಗಳಲ್ಲಿ ಜೂ. 1ರಿಂದ ಹೊಸ ರೂಲ್ಸ್

ಜೂನ್ ತಿಂಗಳಲ್ಲಿ ಯುಪಿಐ ಪಾವತಿಗಳಲ್ಲಿ ನಿಖರತೆ ಹೆಚ್ಚಳ, ಇಪಿಎಫ್ ಹಣವನ್ನು ಯುಪಿಐ ಮತ್ತು ಎಟಿಎಂ ಮೂಲಕ ಪಡೆಯುವ ಸೌಲಭ್ಯಕ್ಕೆ ಅನುಕೂಲ ಕಲ್ಪಿಸುವ ಇಪಿಎಫ್ 3.0 ನಿಯಮಗಳು ಜಾರಿಯಾಗಲಿವೆ. ಇನ್ನು, ಆಧಾರ್ ಕಾರ್ಡ್ ಉಚಿತ ನವೀಕರಣಕ್ಕೆ ಜೂನ್ 14 ಕೊನೆಯ ದಿನಾಂಕವಾಗಿರಲಿದೆ. ಯುಪಿಐ ಪಾವತಿಗಳಡಿ, ಗ್ರಾಹಕರು ಯಾರಿಗೆ ಹಣ ಕಳುಹಿಸುತ್ತಾರೋ, ಯಾರು ಅಂತಿಮ ಫಲಾನುಭವಿಗಳೋ ಅವರ ವಿವರಗಳನ್ನು ಕಡ್ಡಾಯವಾಗಿ ತೋರಿಸುವಂತೆ ಎಲ್ಲಾ ಯುಪಿಐ ಪಾವತಿದಾರ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ.

ವಿಜಯ ಕರ್ನಾಟಕ 30 May 2025 7:55 pm

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಮಾವು, ಹಲಸು, ಹುಣಸೆ ಮೇಳ ಆರಂಭ; ಏನೆಲ್ಲಾ ಇದೆ? ಸಮಯ, ಕೊನೆಯ ದಿನ ಯಾವತ್ತು?

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಮಾವು, ಹಲಸು ಮತ್ತು ಹುಣಸೆ ಹಣ್ಣುಗಳ ಮೇಳಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಆಗಮಿಸಿದ್ದು, ಅಪರೂಪದ ತಳಿಗಳ ಪ್ರದರ್ಶನವಿದೆ. ರಿಯಾಯಿತಿ ದರದಲ್ಲಿ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದ್ದು, ರೈತರಿಂದ ನೇರವಾಗಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 24ರವರೆಗೆ ಮೇಳ ನಡೆಯಲಿದ್ದು, ವ್ಯಾಪಾರ ಹೆಚ್ಚಾಗುವ ನಿರೀಕ್ಷೆಯಿದೆ.

ವಿಜಯ ಕರ್ನಾಟಕ 30 May 2025 7:51 pm

ಬೆಂಗಳೂರು | ಸ್ಪಾ ಮಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಮೂವರ ಬಂಧನ

ಬೆಂಗಳೂರು : ಸಲೂನ್ ಆ್ಯಂಡ್ ಸ್ಪಾ ಮಾಲಕನನ್ನು ಅಪಹರಿಸಿ ಹಲ್ಲೆಗೈದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ರಾಯಲ್ ಚಾಯ್ಸ್ ಸಲೂನ್ ಆ್ಯಂಡ್ ಸ್ಪಾ ಮಾಲಕ ಸಂಜು(40) ಎಂಬಾತ ಹಲ್ಲೆಗೊಳಗಾಗಿದ್ದು, ಆತ ನೀಡಿದ್ದ ದೂರಿನನ್ವಯ ಆರೋಪಿಗಳಾದ ಸ್ಮಿತಾ(32), ಕಾವ್ಯಾ(25) ಹಾಗೂ ಮೊಹಮ್ಮದ್(40) ಎಂಬವರನ್ನು ಬಂಧಿಸಲಾಗಿದೆ ಎಂದು ಅಮೃತಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಆರೋಪಿ ಸ್ಮಿತಾ ಮಾಲಕತ್ವದ ಸಲೂನ್‍ನಲ್ಲಿ ಮ್ಯಾನೇಜರ್ ಆಗಿದ್ದ ಸಂಜು, ಇತ್ತೀಚೆಗೆ ಕೆಲಸ ಬಿಟ್ಟು ಸ್ನೇಹಿತನೊಂದಿಗೆ ಸೇರಿ ತಾನೇ ಹೊಸ ಸಲೂನ್ ಮತ್ತು ಸ್ಪಾ ಆರಂಭಿಸಿದ್ದ. ಇದರಿಂದ ಆರೋಪಿಗಳು ಕೋಪಗೊಂಡಿದ್ದರು. ಮೇ 29ರ ಗುರುವಾರ ರಾತ್ರಿ 8 ಗಂಟೆಯ ಸುಮಾರಿಗೆ ಬೆಂಗಳೂರಿನ ಭುವನೇಶ್ವರಿ ನಗರ ಮುಖ್ಯರಸ್ತೆಯಲ್ಲಿರುವ ರಾಯಲ್ ಚಾಯ್ಸ್ ಸಲೂನ್ ಆ್ಯಂಡ್ ಸ್ಪಾನಲ್ಲಿದ್ದ ಸಂಜುಗೆ ಆರೋಪಿಗಳು ಹಲ್ಲೆಗೈದಿದ್ದು, ಆ ಬಳಿಕ ಬಲವಂತವಾಗಿ ಸಂಜುನನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡ ಆರೋಪಿಗಳು, ದಾಸರಹಳ್ಳಿ ಮುಖ್ಯರಸ್ತೆ ಮುಖಾಂತರ ಜಕ್ಕೂರು ಕಡೆ ಕರೆದೊಯ್ದು, ಡ್ಯಾಗರ್, ಬಿಯರ್ ಬಾಟಲ್‍ನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ, ಸಂಜುಗೆ ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇವೆ ಎಂದು ಆರೋಪಿಗಳು ಜೀವ ಬೆದರಿಕೆ ಹಾಕಿ, ಅಮೃತ ನಗರದ ಶಾರದಾ ಸ್ಕೂಲ್ ಬಳಿ ಬಿಟ್ಟು ಹೋಗಿದ್ದಾರೆ. ಅನಂತರದಲ್ಲಿ ಚಿಕಿತ್ಸೆ ಪಡೆದುಕೊಂಡು ಅಮೃತಹಳ್ಳಿ ಪೊಲೀಸ್ ಠಾಣೆಗೆ ಸಂಜು ದೂರು ನೀಡಿದ್ದು, ಈ ಬಗ್ಗೆ ಎಫ್‍ಐಆರ್ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ 30 May 2025 7:47 pm

ನಮ್ಮ ಶಿಕ್ಷಣ ಸಂಸ್ಥೆ ನರಮೇಧಕ್ಕೆ ಸಹಾಯ ಮಾಡುತ್ತಿದೆ: ಇಸ್ರೇಲ್ ಜೊತೆ ಸಂಬಂಧ ಖಂಡಿಸಿ ಎಂಐಟಿ ತರಗತಿ ಅಧ್ಯಕ್ಷೆ ಮೇಘಾ ವೇಮುರಿ ದಿಟ್ಟ ಭಾಷಣ

ಕೇಂಬ್ರಿಜ್ , ಮೆಸಾಚುಸೆಟ್ಸ್: ಅಮೇರಿಕಾದ ಪ್ರತಿಷ್ಠಿತ ಮೆಸಾಚುಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ 2025ರ ಆರಂಭ ಸಮಾರಂಭದಲ್ಲಿ, ಭಾರತೀಯ-ಅಮೆರಿಕನ್ ವಿದ್ಯಾರ್ಥಿನಿ ಮತ್ತು ತನ್ನ ತರಗತಿಯ ಅಧ್ಯಕ್ಷೆ ಮೇಘಾ ವೇಮುರಿ ಅವರು ಮಾಡಿದ ಪ್ರಭಾವೀ , ದಿಟ್ಟ ಹಾಗು ರಾಜಕೀಯ ಸಂದೇಶ ರವಾನಿಸಿದ ಭಾಷಣವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಫೆಲೆಸ್ತೀನ್ ನ ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣಗಳನ್ನು ಖಂಡಿಸಿ ಮತ್ತು ಇಸ್ರೇಲಿ ಮಿಲಿಟರಿಯೊಂದಿಗಿನ ಎಂಐಟಿಯ ಸಾಂಸ್ಥಿಕ ಸಂಬಂಧಗಳನ್ನು ಟೀಕಿಸಿ ಅವರು ಬಹಳ ಗಟ್ಟಿ ಧ್ವನಿಯಲ್ಲಿ ಮಾತಾಡಿದ್ದಾರೆ. ಫೆಲೆಸ್ತೀನ್‌ಗೆ ಬೆಂಬಲ ಸೂಚಕವಾದ ಕೆಂಪು ಕೆಫಿಯೆಹ್ ಧರಿಸಿ, ಸಾವಿರಾರು ಪದವೀಧರರು, ಅಧ್ಯಾಪಕರು ಮತ್ತು ಅತಿಥಿಗಳ ಮುಂದೆ ಮಾತನಾಡಿದ ಮೇಘಾ ವೇಮುರಿ, ಎಂಐಟಿ ಸ್ವತಂತ್ರ ಫೆಲೆಸ್ತೀನ್ ಪರವಾಗಿದೆ ಎಂಬುದನ್ನು ನೀವು ಜಗತ್ತಿಗೆ ತೋರಿಸಿದ್ದೀರಿ ಎಂದು ಘೋಷಿಸಿದರು. ಅವರು ಹೀಗೆ ಹೇಳುವಾಗ ನೆರೆದಿದ್ದ ಬಹಳಷ್ಟು ಮಂದಿ ಫ್ರೀ ಫೆಲೆಸ್ತೀನ್ ಎಂದು ಘೋಷಣೆ ಕೂಗಿ, ಫೆಲೆಸ್ತೀನ್ ಧ್ವಜ ತೋರಿಸಿ ಅವರನ್ನು ಬೆಂಬಲಿಸಿದರು. ಗಾಝಾ ಸಂಘರ್ಷ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಯುದ್ಧದಲ್ಲಿ ತೊಡಗಿರುವ ಮಿಲಿಟರಿ ಮತ್ತು ರಕ್ಷಣಾ ಹಿತಾಸಕ್ತಿಗಳೊಂದಿಗೆ ಹೊಂದಿರುವ ಸಂಪರ್ಕಗಳ ಕುರಿತು ಅಮೇರಿಕದಾದ್ಯಂತ ವ್ಯಾಪಕವಾದ ಕ್ಯಾಂಪಸ್ ಪ್ರತಿಭಟನೆಗಳ ನಡುವೆ ಅವರ ಈ ದಿಟ್ಟ ಹೇಳಿಕೆಗಳು ಬಂದಿವೆ. ದೇಶಾದ್ಯಂತ ಶೈಕ್ಷಣಿಕ ಸಂಸ್ಥೆಗಳು ಅನಿಶ್ಚಿತತೆಯ ಕಾರ್ಮೋದಲ್ಲಿ ಮುಳುಗಿವೆ ಎಂದು ಮೇಘಾ ವೇಮುರಿ ವಿದ್ಯಾರ್ಥಿ ಕಾರ್ಯಕರ್ತರು ಎದುರಿಸುತ್ತಿರುವ ಭಯ ಮತ್ತು ಒತ್ತಡವನ್ನು ಒಪ್ಪಿಕೊಂಡರು. ಇಸ್ರೇಲಿ ಆಕ್ರಮಣಕಾರಿ ಪಡೆಗಳು ಎಂಐಟಿಯೊಂದಿಗೆ ಸಂಶೋಧನಾ ಸಂಬಂಧಗಳನ್ನು ಹೊಂದಿರುವ ಏಕೈಕ ವಿದೇಶಿ ಮಿಲಿಟರಿಯಾಗಿದೆ... ನಮ್ಮ ಶಿಕ್ಷಣ ಸಂಸ್ಥೆ ನರಮೇಧಕ್ಕೆ ಸಹಾಯ ಮಾಡುತ್ತಿದೆ ಮತ್ತು ಕುಮ್ಮಕ್ಕು ನೀಡುತ್ತಿದೆ ಎಂದು ಅವರು ತಾನು ಕಲಿಯುತ್ತಿರುವ ವಿದ್ಯಾ ಸಂಸ್ಥೆ ಎಂಐಟಿಯನ್ನು ನೇರವಾಗಿ ದೂಷಿಸಿದರು. ಇಸ್ರೇಲ್‌ನ ಮಿಲಿಟರಿಯೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವಂತೆ ಆಡಳಿತವನ್ನು ಒತ್ತಾಯಿಸಿ ಎಂಐಟಿಯಲ್ಲಿ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿ ಸಂಸ್ಥೆಗಳು ಇತ್ತೀಚೆಗೆ ನಡೆಸಿದ ವಿದ್ಯಾರ್ಥಿ-ನೇತೃತ್ವದ ಪ್ರದರ್ಶನಗಳನ್ನು ವೇಮುರಿ ಉಲ್ಲೇಖಿಸಿದರು. ನೀವು ಬೆದರಿಕೆ, ದಬ್ಬಾಳಿಕೆ ಮತ್ತು ನಿಗ್ರಹವನ್ನು ಎದುರಿಸಿದ್ದೀರಿ - ವಿಶೇಷವಾಗಿ ನಿಮ್ಮ ಸ್ವಂತ ವಿಶ್ವವಿದ್ಯಾಲಯದ ಅಧಿಕಾರಿಗಳಿಂದ - ಆದರೆ ನೀವು ಗೆದ್ದಿದ್ದೀರಿ ಎಂದು ಅವರು ತಮ್ಮ ಸಹಪಾಠಿಗಳಿಗೆ ಹೇಳಿದರು. ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಾ, ವೇಮುರಿ ತಮ್ಮ ಸಹ ಪದವೀಧರರನ್ನು ತಮ್ಮ ಬೆರಳಿನಲ್ಲಿದ್ದ ಎಂಐಟಿ ಲೋಗೊ ಇರುವ ತರಗತಿಯ ಉಂಗುರಗಳನ್ನು ಹೊರಕ್ಕೆ ತೆಗೆದು ತೋರಿಸಿ ಮತ್ತೊಮ್ಮೆ ಧರಿಸುವಂತೆ ಕೇಳಿಕೊಂಡರು - ಇದು ಜಗತ್ತನ್ನು ಎದುರಿಸಲು ಸಿದ್ಧತೆಯನ್ನು ಸಂಕೇತಿಸುವ ಸಾಂಪ್ರದಾಯಿಕ ಎಂಐಟಿ ಆಚರಣೆಯಾಗಿದೆ. ಈ ಬಾರಿ, ಇದು ರಾಜಕೀಯ ಮಹತ್ವವನ್ನು ಪಡೆದುಕೊಂಡಿತ್ತು. ಅದನ್ನು ( ಗಾಝಾ ಮೇಲಿನ ಆಕ್ರಮಣ) ತಡೆಯಲು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವ ಜವಾಬ್ದಾರಿಯನ್ನು ನಾವು ಹೊತ್ತಿದ್ದೇವೆ. ಫೆಲೆಸ್ತೀನ್ ಜನರ ಮೇಲೆ ನಡೆಯುತ್ತಿರುವ ನರಮೇಧದಲ್ಲಿ ಎಂಐಟಿ ನೇರವಾಗಿ ಭಾಗಿಯಾಗಿದೆ ಎಂದು ಅವರು ಹೇಳಿದರು, ಹೊಣೆಗಾರಿಕೆ ಮತ್ತು ಕ್ರಮಕ್ಕೆ ಕರೆ ನೀಡುವ ಮೂಲಕ ತಮ್ಮ ಭಾಷಣವನ್ನು ಕೊನೆಗೊಳಿಸಿದರು. ಗಾಝಾದಲ್ಲಿನ ವಿಶ್ವವಿದ್ಯಾಲಯಗಳ ಸಂಪೂರ್ಣ ನಾಶವನ್ನು ವ್ಯವಸ್ಥಿತ ಅಳಿಸುವಿಕೆಯ ಪುರಾವೆಯಾಗಿ ಮೇಘಾ ವೇಮುರಿ ಎತ್ತಿ ತೋರಿಸಿದರು. ಗಾಝಾದಲ್ಲಿ ಯಾವುದೇ ವಿಶ್ವವಿದ್ಯಾಲಯಗಳು ಉಳಿದಿಲ್ಲ. ಇಸ್ರೇಲ್ ಫೆಲೆಸ್ತೀನ್ ಅನ್ನು ಭೂಮಿಯ ಮೇಲಿಂದ ಅಳಿಸಲು ಪ್ರಯತ್ನಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ, ಮತ್ತು ಎಂಐಟಿ ಅದರ ಭಾಗವಾಗಿರುವುದು ನಾಚಿಕೆಗೇಡಿನ ಸಂಗತಿ” ಎಂದು ಅವರು ಹೇಳಿದರು. ಜಾರ್ಜಿಯಾದ ಆಲ್ಫರೆಟ್ಟಾದಲ್ಲಿ ಜನಿಸಿ ಬೆಳೆದ ಮೇಘಾ ವೇಮುರಿ ಎಂಐಟಿಯ ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ತರಗತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದರ ಜೊತೆಗೆ, ಅವರು ತರಗತಿ ಕೌನ್ಸಿಲ್ ಮತ್ತು ಹಲವಾರು ಸಂಶೋಧನಾ ಉಪಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ವೇಮುರಿ ಮೆಕ್‌ಗವರ್ನ್ ಇನ್‌ಸ್ಟಿಟ್ಯೂಟ್ ಫಾರ್ ಬ್ರೈನ್ ರಿಸರ್ಚ್‌ನಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿದ್ದಾರೆ ಮತ್ತು ಈ ಹಿಂದೆ ದಕ್ಷಿಣ ಆಫ್ರಿಕಾದ ಯುಸಿಟಿ ನ್ಯೂರೋಸೈನ್ಸ್ ಇನ್‌ಸ್ಟಿಟ್ಯೂಟ್‌ನಲ್ಲಿ ಇಂಟರ್ನ್‌ಶಿಪ್ ಮಾಡಿದ್ದರು. ಅವರು ಜೋರ್ಡಾನ್‌ನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನರವಿಜ್ಞಾನ ಪಠ್ಯಕ್ರಮವನ್ನು ರಚಿಸುವುದು ಸೇರಿದಂತೆ ಸಮುದಾಯ-ಆಧರಿತ ಶೈಕ್ಷಣಿಕ ಯೋಜನೆಗಳಲ್ಲಿ ಭಾಗವಹಿಸಿದ್ದರು. ಎಂಐಟಿಯಲ್ಲಿ, ಅವರು ಕೃತಕ ಬುದ್ಧಿಮತ್ತೆ ಕೋರ್ಸ್‌ಗಳನ್ನು ಬೋಧಿಸಿದ್ದಾರೆ ಮತ್ತು ಸಾಮಾಜಿಕ ಪ್ರಜ್ಞೆಯ ಕಲ್ಪನೆಗಳನ್ನು ಉತ್ತೇಜಿಸುವ ವಿದ್ಯಾರ್ಥಿ ಗುಂಪು ರಿಟನ್ ರೆವಲ್ಯೂಷನ್ (ಲಿಖಿತ ಕ್ರಾಂತಿ) ನ ಸದಸ್ಯರಾಗಿದ್ದರು. 2021 ರಲ್ಲಿ ನ್ಯಾಷನಲ್ ಮೆರಿಟ್ ಸ್ಕಾಲರ್ ಆಗಿದ್ದ ಮೇಘಾ ವೇಮುರಿ, ಪಕ್ಷಿಗಳ ಸಾಮಾಜಿಕ ನಡವಳಿಕೆಯ ಕುರಿತು ಎರಡು ಶೈಕ್ಷಣಿಕ ಲೇಖನಗಳನ್ನು ಸಹ-ಬರೆದಿದ್ದಾರೆ.

ವಾರ್ತಾ ಭಾರತಿ 30 May 2025 7:46 pm

RCB IPL Final: ಆತ ಆಡಿದ ಯಾವ ತಂಡವೂ ಫೈನಲ್‌ನಲ್ಲಿ ಸೋತಿಲ್ಲ!

2025ರ ಐಪಿಎಲ್ ಆವೃತ್ತಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸುವ ಮೂಲಕ 9 ವರ್ಷಗಳ ನಂತರ ಫೈನಲ್‌ಗೆ ಲಗ್ಗೆಯಿಟ್ಟಿದೆ. ಬ್ಯಾಟಿಂಗ್, ಬೌಲಿಂಗ್ ಎಲ್ಲಾ ವಿಭಾಗದಲ್ಲೂ ಅಮೋಘ ಪ್ರದರ್ಶನ ನೀಡಿರುವ ಆರ್ ಸಿಬಿ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ

ಒನ್ ಇ೦ಡಿಯ 30 May 2025 7:40 pm

ಬೀದರ್‌ | ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಅಬ್ದುಲ್ ಮನ್ನಾನ್ ಸೇಠ್ ಖಂಡನೆ

ಬೀದರ್ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನಾನ್ ಸೇಠ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಕ್ಕೆ ಖರ್ಗೆ ಅವರ ಕುಟುಂಬದ ಕೊಡುಗೆ ಅಪಾರವಾಗಿದೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿರುವುದು ಕೀಳುಮಟ್ಟದ ರಾಜಕೀಯವಾಗಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನದಲ್ಲಿರುವವರಿಗೆ ಇದು ಶೋಭೆ ತರುವಂತಹದ್ದಲ್ಲ. ಖರ್ಗೆ ಅವರ ಬೆಳವಣಿಗೆ ಸಹಿಸದೆ ಅವರ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಲು ನಾರಾಯಣಸ್ವಾಮಿ ಅವರು ತಲೆ ಬುಡವಿಲ್ಲದ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಮಾತಿನ ಮೇಲೆ ಹಿಡಿತವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಖರ್ಗೆ ಕುಟುಂಬವನ್ನು ಟೀಕಿಸುವುದೇ ಛಲವಾದಿ ನಾರಾಯಣಸ್ವಾಮಿ ಅವರ ಕಾಯಕವಾಗಿದೆ. ಖರ್ಗೆ ಅವರು ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಿಯಾಂಕ್ ಖರ್ಗೆ ಅವರು ಅಭಿವೃದ್ಧಿಪರ ದೃಷ್ಟಿಕೋನವನ್ನು ಹೊಂದಿದ್ದಾರೆ. ಎಲ್ಲಾ ಸಮುದಾಯವನ್ನು ಜೊತೆಯಾಗಿ ಕರೆದೊಯ್ಯುವ ಗುಣ ಅವರಲ್ಲಿದೆ. ಹೀಗಾಗಿ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಯಾರೂ ಕಿವಿಗೊಡಬಾರದು. ಅವರು ಕೂಡಲೇ ಪ್ರಿಯಾಂಕ್ ಖರ್ಗೆ ಅವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ವಾರ್ತಾ ಭಾರತಿ 30 May 2025 7:38 pm

ಬೆಂಗಳೂರು | ʼವಿಶೇಷ ಚೇತನರ ಸಬಲೀಕರಣಕ್ಕಾಗಿ ಕೃತಕ ಬುದ್ಧಿಮತ್ತೆʼಯ ಕುರಿತು ರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ವಿಶೇಷ ಚೇತನ ವ್ಯಕ್ತಿಗಳ ಸಬಲೀಕರಣ ಇಲಾಖೆಯು(ಡಿಇಪಿಡಬ್ಲೂಡಿ), ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ಎಎಲ್ ಐಎಂಸಿಒ) ಸಹಯೋಗದೊಂದಿಗೆ ʼವಿಶೇಷ ಚೇತನರ ಸಬಲೀಕರಣಕ್ಕಾಗಿ ಕೃತಕ ಬುದ್ಧಿಮತ್ತೆʼ ಎಂಬ ಶೀರ್ಷಿಕೆಯಡಿ ಮಹತ್ವದ ಸಮ್ಮೇಳನ ಇಂದು (ಮೇ 30) ಬೆಂಗಳೂರಿನಲ್ಲಿ ನಡೆಯಿತು. ಕೃತಕ ಬುದ್ಧಿಮತ್ತೆ (ಎ.ಐ.) ಜೀವನವನ್ನು ಪರಿವರ್ತಿಸುತ್ತಿದೆ ಮತ್ತು ಪ್ರಪಂಚದಾದ್ಯಂತ ಸಮಗ್ರ ಅಭಿವೃದ್ಧಿಗೆ ಕಾರಣವಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ನಡೆದ ವಿಶೇಷಚೇತನರ ಸಬಲೀಕರಣಕ್ಕಾಗಿ ಎಐ ಕುರಿತಾದ ರಾಷ್ಟ್ರೀಯ ಸಮ್ಮೇಳನದ ಪ್ರಮುಖ ಸಂದೇಶ ಇದಾಗಿತ್ತು. ಈ ಕಾರ್ಯಕ್ರಮವು ಪ್ರಮುಖ ತಜ್ಞರು, ಸರಕಾರಿ ಅಧಿಕಾರಿಗಳು, ತಂತ್ರಜ್ಞರು ಮತ್ತು ವಕೀಲರನ್ನು ಒಟ್ಟುಗೂಡಿಸಿ ಎಐ ವಿಶೇಷ ಚೇತನರಿಗೆ ಸುಲಭ ಲಭ್ಯತೆ ಮತ್ತು ಅವಕಾಶಗಳನ್ನು ಹೇಗೆ ಹೆಚ್ಚಿಸುತ್ತಿದೆ ಎನ್ನುವುದನ್ನು ಪ್ರದರ್ಶಿಸಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಇ.ಪಿ.ಡಬ್ಲ್ಯೂ.ಡಿ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು, ಕೃತಕ ಬುದ್ಧಿಮತ್ತೆಯಿಂದ ಎಲ್ಲರನ್ನೂ ಒಳಗೊಳ್ಳುವ ಹೊಸ ಯುಗ ಪ್ರಾರಂಭವಾಗಿದೆ ಎಂದು ಹೇಳಿದರು. ಸಮ್ಮೇಳನದಲ್ಲಿ ರಾಜೇಶ್ ಅಗರ್ವಾಲ್ ಅವರು ಎಐ ಮತ್ತು ಸುಲಭಲಭ್ಯತೆಯ ಮೇಲೆ ಕೇಂದ್ರೀಕರಿಸಿದ ನಾಲ್ಕು ಪ್ರಮುಖ ಉಪಕ್ರಮಗಳಿಗೆ ಚಾಲನೆ ನೀಡಿದರು. 1.ಮಿಷನ್ ಎಐ ಪ್ರವೇಶ ಸಾಧ್ಯತೆ (ಸುಲಭ ಲಭ್ಯತೆ) 2. ಮಿಷನ್ ಎಐ: ವಿಶೇಷಚೇತನರನ್ನು ಸಬಲೀಕರಣಗೊಳಿಸಲು ಸಹಾಯಕ ತಂತ್ರಜ್ಞಾನಗಳು ಮತ್ತು ಪರಿಕರಗಳಲ್ಲಿ ಎಐ ಅನುಷ್ಠಾನ 3.ರಾಷ್ಟ್ರೀಯ ವಿಶೇಷಚೇತರಿಗೆ ಬೆಂಬಲ ಎಐ ಚಾಟ್ ಬಾಟ್ 4. ಯುನೈಟೆಡ್ ಬೆನಿಫಿಟ್ಸ್ ಇಂಟರ್ಫೇಸ್ (ಯು.ಬಿ.ಐ.) ಸಹಾಯಕ ತಂತ್ರಜ್ಞಾನದಲ್ಲಿ ಅಗತ್ಯಕ್ಕೆ ತಕ್ಕಂತೆ ಅಭಿವೃದ್ಧಿಯಾಗುವ ಪರಿಹಾರಗಳನ್ನು ನೀಡುವ ಮೂಲಕ, ಅಂತರ್ಗತ ಡಿಜಿಟಲ್ ಪರಿಸರ ವ್ಯವಸ್ಥೆಗಳ ಸೃಷ್ಟಿಗೆ ಎಐ ಅನ್ನು ಬಳಸಿಕೊಳ್ಳುವ ಗುರಿಯನ್ನು ಈ ಧ್ಯೇಯಗಳು ಹೊಂದಿವೆ. ಸಮ್ಮೇಳನವು ಕೃತಕ ಬುದ್ಧಿಮತ್ತೆಯು ಹೆಚ್ಚು ಅಂತರ್ಗತ ಮತ್ತು ಸುಲಭಲಭ್ಯವಾಗುವ ಭಾರತವನ್ನು ರಚಿಸುವಲ್ಲಿ ಹೇಗೆ ಸಾಮರ್ಥ್ಯವನ್ನು ಹೆಚ್ಚಿಸಲು ಕಾರಣವಾಗಬಹುದು ಎಂಬುದನ್ನು ಪ್ರದರ್ಶಿಸಿತು. ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ಎಎಲ್ ಐಎಂಸಿಒ) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಕುಮಾರ್, ಐಐಟಿ ದೆಹಲಿಯ ಪ್ರಾಧ್ಯಾಪಕ ಪ್ರೊ. ಪಿ.ವಿ.ಎಂ. ರಾವ್ ಮತ್ತು ಪ್ರೊ. ರೋಹನ್ ಪಾಲ್, ಅನುವಾಧಿನಿ ಸಿಇಒ ಡಾ.ಬುದ್ಧ ಚಂದ್ರಶೇಖರ್, ಓಪನ್ ಎಐ ಸಂಸ್ಥೆಯ ಪ್ರಜ್ಞಾ ಮಿಶ್ರಾ, ಎಂಟರ್ಪ್ರೈಸ್ ಎಐ ಮತ್ತು ಸ್ಟ್ರಾಟಜಿ-ಸರ್ವಮ್ ಎಐ ಮುಖ್ಯಸ್ಥ ಆಲೇಖ್ ಶರಣ್, ಕಾರ್ಯ ಇಂಕ್‌ ನ ಸಿಇಒ ಮನು ಚೋಪ್ರಾ, ಮೈಕ್ರೋಸಾಫ್ಟ್ ಇನ್ನೋವೇಶನ್ ಹಬ್ ನ ಸಿಟಿಒ ಸಂದೀಪ್ ಆಲೂರ್, ಲೆನೊವೊ ನ ಮಾರ್ಕೆಟಿಂಗ್ ನಿರ್ದೇಶಕ ಚಂದ್ರಿಕಾ ಜೈನ್, ಸ್ಟ್ಯಾಕ್-ಜೆನ್ ಸಹ-ಸ್ಥಾಪಕ ಮತ್ತು ಚೀಫ್ ಬ್ಯುಸಿನೆಸ್ ಆಫೀಸರ್ ಅರ್ಷದ್ ಸಯ್ಯದ್, ಇಕ್ವಿಬೀಯಿಂಗ್ ಫೌಂಡೇಶನ್ ನ ಸಿಇಒ ಡಾ. ಅನಂತಲಕ್ಷ್ಮಿ ವೆಂಕಟರಾಮನ್, ಅಸಿಸ್-ಟೆಕ್ ಫೌಂಡೇಶನ್ ನ ಸಹ-ಸಂಸ್ಥಾಪಕ ಮತ್ತು ಸಿಇಒ ಶೇಖರ್ ನಾಯ್ಕ್, ಐಐಐಟಿ ಬೆಂಗಳೂರಿನ ಮಾನವ-ಕೇಂದ್ರಿತ ಕಂಪ್ಯೂಟಿಂಗ್ ವಿಭಾಗ ಮುಖ್ಯಸ್ಥರು ಅಮಿತ್ ಪ್ರಕಾಶ್, ಗೂಗಲ್ ಇಂಡಿಯಾ ಪ್ರತಿನಿಧಿ ಅಮೃತಾ ಕಾಮತ್, ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಏಕ್ ರೂಪ್ ಕೌರ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಮಹಾನಿರ್ದೇಶಕ ಅಭಿಷೇಕ್ ಸಿಂಗ್, ಇನ್ಕಲೂಷನ್ ಅಡ್ವೋಕೇಟ್ ಶೇಖರ್ ನಾಯ್ಕ್ ಭಾಗವಹಿಸಿದ್ದರು. ಅಮೆರಿಕದ ಬಫಲೋ ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ವೇಣು ಗೋವಿಂದರಾಜು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.    

ವಾರ್ತಾ ಭಾರತಿ 30 May 2025 7:29 pm

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು ತಣಿಸಲು ಪೊಲೀಸ್‌ ಸರ್ಪಗಾವಲು! 10 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ವಿವಾದ ಭುಗಿಲೆದ್ದಿದೆ. ಕುಣಿಗಲ್ ಹೊರತುಪಡಿಸಿ ಜಿಲ್ಲೆಯ ಉಳಿದ ಭಾಗಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರವು ವಿವಾದ ಬಗೆಹರಿಸದೆ ಕಾಮಗಾರಿ ಮುಂದುವರೆಸಲು ಮುಂದಾಗಿದ್ದು, ಪ್ರತಿಭಟನೆಗೆ ಅವಕಾಶವಿಲ್ಲದಂತೆ ನಿಷೇಧಾಜ್ಞೆ ಹೇರಲಾಗಿದೆ. ಡಿ.ರಾಂಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಜಯ ಕರ್ನಾಟಕ 30 May 2025 7:29 pm

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ಸೌಲಭ್ಯ : ಸರಕಾರ ಆದೇಶ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಇಡುಗಂಟು ಯೋಜನೆಯು 2024 ಜನವರಿ 1ರಿಂದ ಜಾರಿಗೆ ಬರಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆಗೆ ಒಳಪಡಲಿದ್ದಾರೆ. ಈ ಯೋಜನೆಗೆ ಒಟ್ಟಾರೆ 44.15 ಕೋಟಿ ರೂಪಾಯಿಗಳನ್ನು ಸರಕಾರ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇಡುಗಂಟು ಸೌಲಭ್ಯವನ್ನು ಕ್ಲೇಮ್‌ ಮಾಡುವ ಅತಿಥಿ ಉಪನ್ಯಾಸಕರು ಸರಕಾರ ಅಥವಾ ಸರಕಾರದ ಅನುದಾನಕ್ಕೊಳಪಟ್ಟ ಸಂಸ್ಥೆಗಳಲ್ಲಿ ನೇಮಕಾತಿ ಹೊಂದಿ ಸೇವೆ ಸಲ್ಲಿಸಿದ್ದಲ್ಲಿ ಅಂತಹ ಅತಿಥಿ ಉಪನ್ಯಾಸಕರಿಗೆ ಈ ಇಡಿಗಂಟು ಯೋಜನೆಯು ಅನ್ವಯವಾಗುವುದಿಲ್ಲ. ಇಡುಗಂಟು ಯೋಜನೆಗೆ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಆಯಾ ಕಾಲೇಜು ಪ್ರಾಂಶುಪಾಲರು ನಿಗದಿತ ನಮೂನೆಯಲ್ಲಿ ನೀಡಿದ ಸೇವಾ ಪ್ರಮಾಣ ಪತ್ರಗಳ ಆಧಾರದಲ್ಲಿ ಲೆಕ್ಕ ಹಾಕಲಾಗುವುದು. ಇಡುಗಂಟು ಯೋಜನೆಯು ಪ್ರತಿ ವರ್ಷಕ್ಕೆ 50 ಸಾವಿರ ರೂ. ದರದಲ್ಲಿದ್ದು, ಅತಿಥಿ ಉಪನ್ಯಾಸಕರ ಸೇವೆಯ ವರ್ಷಗಳ ಸಂಖ್ಯೆಗೆ ಅನುಗುಣವಾಗಿದೆ. ಇಡುಗಂಟಿನ ಗರಿಷ್ಠ ಮೌಲ್ಯ 5 ಲಕ್ಷ ರೂ. ಆಗಿರುತ್ತದೆ.

ವಾರ್ತಾ ಭಾರತಿ 30 May 2025 7:24 pm

ಕಳೆದ 6 ವರ್ಷಗಳ ಪೈಕಿ 24-25ರಲ್ಲಿ ಅತ್ಯಧಿಕ 500 ರೂ.ವಿನ ನಕಲಿ ನೋಟುಗಳು: ಆರ್‌ಬಿಐ ವರದಿ

ಹೊಸದಿಲ್ಲಿ: ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪತ್ತೆಯಾಗಿರುವ 500 ರೂ.ಗಳ ನಕಲಿ ನೋಟುಗಳ ಸಂಖ್ಯೆ 2024-25ರಲ್ಲಿ ಶೇ.37.5ಕ್ಕೆ ಹೆಚ್ಚಳವಾಗಿದೆ. ಇದು ವಿತ್ತವರ್ಷ 2020ರಿಂದ ಆರು ವರ್ಷಗಳ ಅವಧಿಯಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣವಾಗಿದೆ ಎಂದು ಆರ್‌ಬಿಐ ವಾರ್ಷಿಕ ವರದಿಯು ತೋರಿಸಿದೆ. 200 ರೂ.ಗಿಂತ ಕಡಿಮೆ ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.13.9ರಷ್ಟು ಏರಿಕೆಯನ್ನು ದಾಖಲಿಸಿದ್ದು, ವಿತ್ತವರ್ಷ 2025ರಲ್ಲಿ 32,600ನ್ನು ತಲುಪಿದೆ. ಇನ್ನೊಂದಡೆ ವಿತ್ತವರ್ಷ 25ರಲ್ಲಿ ಪತ್ತೆಯಾಗಿರುವ 100 ರೂ.ಗಳ ನಕಲಿ ನೋಟುಗಳ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.23ರಷ್ಟು ಇಳಿಕೆಯಾಗಿದ್ದು, 51,069ರಷ್ಟಿದೆ. ವಿತ್ತವರ್ಷ 24ರಲ್ಲಿ 26,035ರಷ್ಟು ಐದು ವರ್ಷಗಳ ಗರಿಷ್ಠ ಪ್ರಮಾಣದಲ್ಲಿದ್ದ ನಕಲಿ 2,000 ರೂ.ನೋಟುಗಳ ಸಂಖ್ಯೆ ವಿತ್ತವರ್ಷ 25ರಲ್ಲಿ ಶೇ.86.5ರಷ್ಟು ಕುಸಿತವನ್ನು ಕಂಡು 3,508ಕ್ಕೆ ಇಳಿದಿದೆ. ಕಳೆದ ವರ್ಷದ ಈ ಏರಿಕೆಗೆ 2,000 ನೋಟುಗಳನ್ನು ಚಲಾವಣೆಯಿಂದ ಹಿಂದೆಗೆದುಕೊಂಡಿದ್ದು ಮತ್ತು ಬ್ಯಾಂಕುಗಳಿಂದ ಈ ನೋಟುಗಳ ದೊಡ್ಡ ಪ್ರಮಾಣದ ಸಂಸ್ಕರಣೆ ಕಾರಣವೆನ್ನಲಾಗಿದೆ. 2,000 ರೂ.ಗಳ ನೋಟುಗಳನ್ನು ಚಲಾವಣೆಯಿಂದ ಹಿಂದೆಗೆದುಕೊಳ್ಳುವುದಾಗಿ ಆರ್‌ಬಿಐ 19 ಮೇ 2023ರಂದು ಪ್ರಕಟಿಸಿತ್ತು. ಮೇ 19ರಂದು ವ್ಯವಹಾರದ ಅಂತ್ಯಕ್ಕೆ ಈ ನೋಟುಗಳ ಮೌಲ್ಯ 3.56 ಲ.ಕೋ.ರೂ.ಗಳಿದ್ದು,2025,ಎಪ್ರಿಲ್ 30ಕ್ಕೆ 6,266 ಕೋ.ರೂ.ಗೆ ಇಳಿದಿದೆ. ಅಂದರೆ,ಪ್ರಕಟಣೆಯ ಸಂದರ್ಭ ಚಲಾವಣೆಯಲ್ಲಿದ್ದ 2,000 ನೋಟುಗಳ ಪೈಕಿ ಶೇ.98.24ರಷ್ಟು ಬ್ಯಾಂಕುಗಳಿಗೆ ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. 500 ರೂ.ಗಳ ನಕಲಿ ನೋಟುಗಳಲ್ಲಿ ಏರಿಕೆಯಾಗಿದ್ದರೂ ಪತ್ತೆಯಾಗಿರುವ ನಕಲಿ ನೋಟುಗಳ ಒಟ್ಟು ಸಂಖ್ಯೆ ವಿತ್ತವರ್ಷ 24ರ 2,22,638ರಿಂದ ವಿತ್ತವರ್ಷ 25ರಲ್ಲಿ 2,17,396ಕ್ಕೆ ಇಳಿದಿದೆ. ಇತ್ತೀಚಿನ ವರ್ಷಗಳಲ್ಲಿ ನಕಲಿ ನೋಟುಗಳ ಪತ್ತೆಯಲ್ಲಿ ನಿರಂತರ ಇಳಿಮುಖ ಪ್ರವೃತ್ತಿಯನ್ನು ಆರ್‌ಬಿಐ ವರದಿ ಎತ್ತಿ ತೋರಿಸಿದೆ.

ವಾರ್ತಾ ಭಾರತಿ 30 May 2025 7:22 pm

ಬೀದರ್‌ | ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರನ್ನು ಅಮಾನತುಗೊಳಿಸುವಂತೆ ಜೆಡಿಎಸ್‌ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ಧರಣಿ

ಬೀದರ್ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಂ.ಎಸ್ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ಧರಣಿ ನಡೆಯಿತು.   ಧರಣಿ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಪತ್ರದಲ್ಲಿ, ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯ ಉಪನಿರ್ದೇಶಕರಾಗಿ ಶ್ರೀಧರ್ ಎಂ.ಎಸ್ ಅಧಿಕಾರ ವಹಿಸಿಕೊಂಡ ಬಳಿಕ  ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಈ ಇಲಾಖೆಯು ಯಾರ ಹಿಡಿತದಲ್ಲಿಯೂ ಇಲ್ಲದಂತಾಗಿದೆ ಎಂದು ಉಲ್ಲೇಖಿಲಾಗಿದೆ. 2024ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯಲ್ಲಿ ಮಿಷನ್ ಶಕ್ತಿ ಹಾಗೂ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯಲ್ಲಿ ಸರಕಾರದ ನಿಯಮಗಳು ಗಾಳಿಗೆ ತೂರಿ ರಾಜಾರೋಷವಾಗಿ ಮನಬಂದಂತೆ ಅನರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿ, ಅರ್ಹ ಅಭ್ಯರ್ಥಿಗಳನ್ನು ಕೈಬಿಟ್ಟಿರುತ್ತಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಈ ಅವ್ಯವಹಾರದ ಬಗ್ಗೆ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಲವು ಬಾರಿ ದೂರು ನೀಡಲಾಗಿದೆ. ಅವರು  ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಇದರಿಂದಾಗಿ ಈ ಭ್ರಷ್ಟಾಚಾರದಲ್ಲಿ ಡಿಸಿ ಶಿಲ್ಪಾ ಶರ್ಮಾ ಅವರ ಕುಮ್ಮಕ್ಕು ಇದ್ದಂತೆ ಕಂಡುಬರುತ್ತದೆ ಎಂದು ಆರೋಪಿಸಿದರು. ನೇಮಕಾತಿಯಲ್ಲಿ ನಡೆದಿರುವ ಹಗರಣ, ಭ್ರಷ್ಟಚಾರದ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಸಚಿವ ಈಶ್ವರ್ ಖಂಡ್ರೆ ಅವರಿಗೆ ಕೂಡ ವರದಿ ಸಲ್ಲಿಸಲಾಗಿದೆ. ಇದನ್ನು ನೋಡಿ ಅವರು ಉಪನಿರ್ದೇಶಕ ಶ್ರೀಧರ ಅವರನ್ನು ಅಮಾನತ್ತು ಮಾಡುವ ಭರವಸೆ ನೀಡಿದ್ದರು. ಆದರೂ ಕೂಡ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮುಂದಿನ 15 ದಿನದ ಒಳಗೆ ಶ್ರೀಧರ್ ಅವರನ್ನು ಅಮಾನತ್ತು ಮಾಡಬೇಕು. ಈ ನೇಮಕಾತಿಯ ಹಗರಣಕ್ಕೆ ಕುಮ್ಮಕ್ಕು ನೀಡಿರುವ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರನ್ನು ವರ್ಗಾವಣೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಆದೇಶ ರದ್ದುಪಡಿಸಬೇಕು. ಮತ್ತೊಮ್ಮೆ ಅರ್ಜಿ ಆಹ್ವಾನಿಸಬೇಕು.  ಕಂಪ್ಯೂಟರ್ ಪರೀಕ್ಷೆ, ಮೌಖಿಕ ಸಂದರ್ಶನ, ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಪಾರದರ್ಶಕತೆಯಿಂದ ನಡೆಸಬೇಕು. ಸರಕಾರ ನಿಗದಿ ಪಡಿಸಿದ ನಿಯಮಾನುಸಾರವಾಗಿ ಕಾನೂನಾತ್ಮಕವಾಗಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಅಭಿ ಕಾಳೆ, ಜನತಾ ದಳದ ಎಸ್ಸಿ ಘಟಕದ ಅಧ್ಯಕ್ಷ ದೇವೇಂದ್ರ ಸೋನಿ, ಮುಹಮ್ಮದ್ ಸಲೀಮ್, ರಾಜಕುಮಾರ್ ಭಟಾರೆ, ಲಾಲಪ್ಪ ನಿರ್ಣಾ, ಬೋಮಗೊಂಡ ಚಿಟ್ಟಾ, ಶಿವರಾಜ್, ರಾಜಕುಮಾರ್ ಕಮಠಾಣಾ ಹಾಗೂ ಮಲ್ಲಿಕಾರ್ಜುನ್ ನೇಳಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 7:11 pm

ಅನರ್ಹ ಪಡಿತರ ಚೀಟಿ ರದ್ದುಗೊಳಿಸಲು ವಿಳಂಬವೇಕೆ? : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದರೂ ಇದರಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೆ ವಿಳಂಬವೇಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನದಲ್ಲಿ ರಾಜ್ಯದ ಪ್ರಗತಿ ಪರಿಶೀಲನೆ ಕುರಿತಂತೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜತೆ ಸಭೆ ನಡೆಸಿದ ಅವರು,ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚನೆ ನೀಡಿಯಾಗಿತ್ತು. ಆದರೂ ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಆಗಿಲ್ಲ ಏಕೆ ಎಂದು ಕೇಳಿದರು. ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ. ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ತಾಕೀತು ಮಾಡಿದರು. ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರೆ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಎಂದು ಖಾರವಾಗಿ ಪ್ರಶ್ನೆ ಮಾಡಿದರು. ಅಲ್ಲದೆ, ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು?. ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು. ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ತಪಾಸಣಾ ವರದಿ, ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್‍ಗಳು, ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು ಎಂದು ಖಾರವಾಗಿ ಪ್ರಶ್ನಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು. ಕೆರೆ ಒತ್ತುವರಿ : ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲನೆ ನಡೆಸಿದರು. ಆಗ ಎರಡ್ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು. ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿದ್ದು, ಇದುವರೆಗೆ 6,065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ರೈತರ ಆತ್ಮಹತ್ಯೆ ಸಿಎಂ ಗರಂ : ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿಗಳು, ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆಗಿ ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು. ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಆದಷ್ಟು ಬೇಗ ಬಗೆಹರಿಸಿ ಪರಿಹಾರ ಒದಗಿಸಿ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಎಚ್.ಕೆ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆಜೆ ಜಾರ್ಜ್, ಕೃಷ್ಣ ಭೈರೇಗೌಡ, ಕೆಎಚ್ ಮುನಿಯಪ್ಪ, ಚಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಝಮೀರ್ ಅಹ್ಮದ್ ಖಾನ್, ಶಿವಾನಂದ ಪಾಟೀಲ್, ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಪ್ರಮುಖರಿದ್ದರು. ಕರಾವಳಿಗೆ ಶೀಘ್ರ ತೆರಳಲು ಸಿಎಂ ಸೂಚನೆ : ಧಾರಕಾರ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿದರು.

ವಾರ್ತಾ ಭಾರತಿ 30 May 2025 7:00 pm

ಕಲಬುರಗಿ | ಸಚಿವ ಖರ್ಗೆ, ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ನಾಳೆ ಪ್ರತಿಭಟನೆ : ಬೆಂಬಲ ವ್ಯಕ್ತಪಡಿಸಿದ ಬೀದಿ ವ್ಯಾಪಾರಿಗಳ ಸಂಘ

ಕಲಬುರಗಿ: ಸಚಿವ ಖರ್ಗೆ ಅವರನ್ನು ನಿಂದಿಸಿದ ಛಲವಾದಿ ನಾರಾಯಣಸ್ವಾಮಿ ಹಾಗೂ ಜಿಲ್ಲಾಧಿಕಾರಿಗಳನ್ನು ಅವಮಾನಿಸಿದ ಎನ್.ರವಿಕುಮಾರ್ ಹೇಳಿಕೆ ಖಂಡಿಸಿ ನಾಳೆ(ಮೇ.31ರಂದು) ನಡೆಯಲಿರುವ ಬೃಹತ್ ಪ್ರತಿಭಟನೆಗೆ ಅಖಿಲ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘ ಬೆಂಬಲಿಸುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಜಗನ್ನಾಥ್ ಸೂರ್ಯವಂಶಿ ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಗನ್ನಾಥ್ ಸೂರ್ಯವಂಶಿ, ಛಲವಾದಿ ನಾರಾಯಣಸ್ವಾಮಿ ಇತ್ತೀಚೆಗೆ ಕಲಬುರಗಿ ನಗರಕ್ಕೆ ಬಂದ ವೇಳೆ ಸುದ್ದಿಗೋಷ್ಠಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿ ಎಂದು ಕರೆದಿದ್ದಾರೆ. ಓರ್ವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನಾಗಿ ಸಚಿವರ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡುವುದು ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ಇದಲ್ಲದೆ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಅವರನ್ನು ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾಧ. ಇಂತಹ ಹೇಳಿಕೆಗಳನ್ನು ಬೀದಿ ವ್ಯಾಪಾರಿಗಳ ಸಂಘ ಖಂಡಿಸುತ್ತದೆ ಎಂದು ಹೇಳಿದರು.   ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ಧ ದಲಿತಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳ ಆಶ್ರಯದಲ್ಲಿ ಮೇ.31ರಂದು ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುರಾಜ್ ತಿಳಗೋಳ, ಚಂದ್ರಶೇಖರ್ ಪಾಟೀಲ್, ದತ್ತು ಭಾಸಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಾರ್ತಾ ಭಾರತಿ 30 May 2025 6:55 pm

ನಟ ದರ್ಶನ್‌ಗೆ ವಿದೇಶಕ್ಕೆ ತೆರಲು ಕೋರ್ಟ್‌ ಅನುಮತಿ! ಆದ್ರೆ ಒಂದು ಷರತ್ತು ಅನ್ವಯ; ಏನದು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಸಿಸಿಹೆಚ್ 57ನೇ ನ್ಯಾಯಾಲಯವು ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. 'ದಿ ಡೆವಿಲ್' ಸಿನಿಮಾದ ಚಿತ್ರೀಕರಣಕ್ಕಾಗಿ ಜೂನ್ 1 ರಿಂದ ಜೂನ್ 25 ರವರೆಗೆ ವಿದೇಶಕ್ಕೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಜುಲೈ 10 ರಂದು ನಡೆಯುವ ವಿಚಾರಣೆಗೆ ತಪ್ಪದೇ ಹಾಜರಾಗಬೇಕೆಂದು ನ್ಯಾಯಾಲಯವು ಷರತ್ತು ವಿಧಿಸಿದೆ.

ವಿಜಯ ಕರ್ನಾಟಕ 30 May 2025 6:35 pm

7 ಮಂದಿ ಹೆಡ್‌ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆ ಮಾಡಿದ ನಿರ್ಗಮನ ಮಂಗಳೂರು ಪೊಲೀಸ್ ಕಮಿಷನರ್ ಅಗ್ರವಾಲ್

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 7 ಮಂದಿ ಹೆಡ್ ಕಾನ್‌ಸ್ಟೇಬಲ್‌ಗಳನ್ನು ನಿರ್ಗಮನ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಗುರುವಾರ ರಾತ್ರಿ ವರ್ಗಾವಣೆಗೊಳಿಸಿರುವುದಾಗಿ ವರದಿಯಾಗಿದೆ. ಕಂಕನಾಡಿ ನಗರ ಠಾಣೆಯ ಪ್ರೀತೇಶ್‌ರನ್ನು ಸಂಚಾರ ದಕ್ಷಿಣ ಠಾಣೆಗೆ, ಕೊಣಾಜೆ ಠಾಣೆಯ ರಾಜೇಶ್ ಕೆ.ಎನ್.ರನ್ನು ಕಂಕನಾಡಿ ನಗರ ಠಾಣೆಗೆ, ಸೆನ್ ಠಾಣೆಯ ಸತೀಶ್ ಎಂ ಮತ್ತು ರಾಜಾರಾಂ ಅವರನ್ನು ಸಿಸಿಬಿ ಠಾಣೆಗೆ, ಸಂಚಾರ ದಕ್ಷಿಣ ಠಾಣೆಯ ನಾಗರಾಜ ಮಲ್ಲಿಕಟ್ಟ ಅವರನ್ನು ಸಂಚಾರ ಪೂರ್ವ ಠಾಣೆಗೆ, ಸಿಸಿಬಿ ಠಾಣೆಯಲ್ಲಿದ್ದ ಸುಧೀರ್ ಕುಮಾರ್ ಮತ್ತು ಭೀಮಪ್ಪ ಸಿದ್ದಪ್ಪ ಉಪ್ಪರ್ ಅವರನ್ನು ಸೆನ್ ಠಾಣೆಗೆ ವರ್ಗಾಯಿಸಲಾಗಿದೆ. ಪೊಲೀಸ್ ಕಮಿಷನರ ಅನುಪಮ್ ಅಗರ್‌ವಾಲ್ ಅವರು ಗುರುವಾರ ತನ್ನ ವರ್ಗಾವಣೆ ಆದೇಶ ಬಂದ ಬಳಿಕ ಈ 7 ಮಂದಿ ಹೆಡ್‌ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ವಾರ್ತಾ ಭಾರತಿ 30 May 2025 6:29 pm

ಎಚ್‍ಎಂಟಿ ಡಿನೋಟಿಫಿಕೇಷನ್ ಪ್ರಕರಣ : ಐಎಫ್‍ಎಸ್ ಅಧಿಕಾರಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಎಚ್‍ಎಂಟಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐಎಎಸ್, ಐಎಫ್‍ಎಸ್ ಮತ್ತು ಇಬ್ಬರು ಹಾಲಿ ಐಎಫ್‍ಎಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಬಿ. ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಚ್‍ಎಂಟಿ ವಶದಲ್ಲಿರುವ ಭೂಮಿ ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡಿರುವ ಹಲವು ತೀರ್ಪು ಮತ್ತು ಅರಣ್ಯ ಸಂರಕ್ಷಣಾ ಕಾಯಿದೆ 1980ರ ಪ್ರಕಾರ ಇಂದಿಗೂ ಇದು ಅರಣ್ಯವೇ ಆಗಿರುತ್ತದೆ. ಆದಾಗ್ಯೂ ಈ ಭೂಮಿ ಪರಭಾರೆ ಆಗಿದೆ. ರಿಯಲ್ ಎಸ್ಟೇಟ್ ಸಂಸ್ಥೆಗಳು ನೂರಾರು ಫ್ಲಾಟ್ ಕಟ್ಟಿದ್ದಾರೆ. ಧಾರಾವಾಹಿ, ಚಲನಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗುತ್ತಿದೆ. ಇದಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂಬುದೇ ಪ್ರಶ್ನಾರ್ಥಕವಾಗಿದೆ ಎಂದರು. ಎಚ್‍ಎಂಟಿ ವಶದಲ್ಲಿರುವ ಅರಣ್ಯಭೂಮಿ 7 ಕೋಟಿ ಕನ್ನಡಿಗರ ಆಸ್ತಿ. ಇದನ್ನು ಕೆಲವೇ ಕೆಲವು ಅಧಿಕಾರಿಗಳು ಅಂದಿನ ಅರಣ್ಯ ಸಚಿವರ ಗಮನಕ್ಕೂ ತಾರದೆ, ಸಂಪುಟದ ಪೂರ್ವಾನುಮತಿ ಪಡೆಯದೆ ಡಿನೋಟಿಫಿಕೇಷನ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ನಿವೃತ್ತ ಮತ್ತು ಇಬ್ಬರು ಹಾಲಿ ಸೇರಿ 4 ಅಧಿಕಾರಿಗಳಿಗೆ ನೋಟಿಸ್ ನೀಡಿದ್ದು, ಕ್ರಮಕ್ಕೆ ತಾವು ಮುಖ್ಯಮಂತ್ರಿಗೆ ಶಿಫಾರಸು ಮಾಡಿದ್ದೇನೆ ಎಂದು ಅವರು ತಿಳಿಸಿದರು. 2024ರ ಸೆಪ್ಟೆಂಬರ್ 24ರಂದು ತಾವು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಟಿಪ್ಪಣಿ ಕಳಿಸಿ, ಸಂಪುಟದ ಪೂರ್ವಾನುಮತಿ ಇಲ್ಲದೆ ಐಎ ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ಸೂಚನೆ ನೀಡಿದ ತಿಂಗಳ ನಂತರ ಅಕ್ಟೋಬರ್ 2024ರಲ್ಲಿ ಬೇಲಿಕೇರಿ ತೀರ್ಪು ಬಂದಿದೆ. ಆರ್.ಗೋಕುಲ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಸರಕಾರದ ವಿರುದ್ಧ ಸಿಬಿಐಗೆ ಸುಳ್ಳು ಆರೋಪ ಮಾಡಿ ಪತ್ರ ಬರೆದಿದ್ದಾರೆ ಇದು ಅಧಿಕಾರಿಯ ದುರ್ವರ್ತನೆ ಆಗುತ್ತದೆ ಅಥವಾ ಬೆದರಿಕೆಯ ತಂತ್ರ ಎಂದು ಭಾವಿಸಬಹುದಾಗಿದೆ ಎಂದರು. ಎಚ್‍ಎಂಟಿ ಅರಣ್ಯ ಭೂಮಿ ಪ್ರದೇಶಕ್ಕೆ ತಾವೇ ಖುದ್ದು ಭೇಟಿ ನೀಡಿದ್ದು, ಅಲ್ಲಿ ಇಂದಿಗೂ 280 ಎಕರೆಯಷ್ಟು ನೆಡುತೋಪು ಇದೆ. ಆದಾಗ್ಯೂ, ಸದರಿ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್‍ಗೆ ಸುಳ್ಳು ಮಾಹಿತಿ ನೀಡಿ ಐಎ ಸಲ್ಲಿಸಲಾಗಿದೆ. ತಮ್ಮ ರಕ್ಷಣೆಗೆ ಸಿಬಿಐಗೆ ಪತ್ರ ಬರೆಯುವ ಅಧಿಕಾರಿ, ಎಚ್‍ಎಂಟಿ ಭೂಮಿಯಲ್ಲಿ ಅರಣ್ಯವಿದೆ. ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಐಎ ಸಲ್ಲಿಸಲು ಬರುವುದಿಲ್ಲ ಎಂದು ಸಿಎಂಗೆ ಏಕೆ ಪತ್ರ ಬರೆಯಲಿಲ್ಲ ಎಂದು ಅವರು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಇತರ ಸಂಸ್ಥೆಗಳ ವಶದಲ್ಲಿರುವ ಅರಣ್ಯಭೂಮಿ ಕುರಿತಂತೆ ಚರ್ಚಿಸಿ ಸರಕಾರಕ್ಕೆ ಶಿಫಾರಸು ಮಾಡಲು 2015ರಲ್ಲೇ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಆ ಸಮಿತಿಯ ಗಮನಕ್ಕೆ ಸಹ ತಾರದೆ, ಸಂಪುಟದ ಅನುಮತಿ ಇಲ್ಲದೆ ಸುಪ್ರೀಂ ಕೋರ್ಟ್‍ನಲ್ಲಿ ಡಿನೋಟಿಫಿಕೇಷನ್ ಅನುಮತಿ ಕೋರಿ 2020ರ ಜೂನ್ 20ರಂದು ಅರ್ಜಿ ಸಲ್ಲಿಸಲಾಗಿದೆ. ಕೇವಲ 25 ದಿನಗಳ ಅಂತರದಲ್ಲಿ ಅಂದರೆ 2020ರ ಜುಲೈ 15ರಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ‘1980ರ ಪೂರ್ವದಲ್ಲಿ ವಿವಿಧ /ಸರಕಾರಿ ಸಂಸ್ಥೆಗಳಿಗೆ ಆದ ಪ್ರದೇಶಗಳ ಮಂಜೂರಾತಿಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯಪಡೆದು ಅಂತಹ ಅರಣ್ಯಪ್ರದೇಶಗಳ ಡಿನೋಟಿಫಿಕೇಶನ್‍ನ ಪ್ರಸ್ತಾವವನ್ನು ಸಂಪುಟದ ನಿರ್ಧಾರಕ್ಕಾಗಿ ಸಲ್ಲಿಸಲು ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆರವರಿಗೆ ಸೂಚಿಸಿದೆ’ ಎಂಬ ನಿರ್ಣಯ ಮಾಡಲಾಗಿದೆ. ಆದಾಗ್ಯೂ ಈ ಬಗ್ಗೆ ಘಟನೋತ್ತರ ಅನುಮತಿ ಪಡೆದಿಲ್ಲ. ಹೀಗಾಗಿ ನಾಲ್ಕು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು ಎಂದರು. ಇದೀಗ ಗೋಕುಲ್ ಅವರನ್ನು ಅಮಾನತು ಮಾಡಿ ವಿಚಾರಣೆ ನಡೆಸಲು, ಮತ್ತೊಬ್ಬ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹಾಗೂ ನಿವೃತ್ತಿ ಐಎಎಸ್ ಅಧಿಕಾರಿ ಮತ್ತು ಐಎಫ್‍ಎಸ್ ಅಧಿಕಾರಿ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ತಾವು ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಐಎ ಹಿಂಪಡೆಯಲು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಐ.ಎ. ಹಿಂಪಡೆಯಲು ಸಚಿವ ಸಂಪುಟದ ಅನುಮತಿಯನ್ನೂ ಪಡೆಯಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. ಉದ್ಯಾನ ನಿರ್ಮಾಣ: ಎಚ್‍ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಉತ್ತರ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣ ಮಾಡುವುದು ಸರಕಾರದ ಉದ್ದೇಶ. ಮುಂದಿನ ಪೀಳಿಗೆಗೆ ಶ್ವಾಸತಾಣ ಉಳಿಸುವುದು ತಮ್ಮ ಗುರಿಯಾಗಿದೆ. ಈ ಅಂಶವನ್ನು ಐಎ ಹಿಂಪಡೆಯಲು ಸುಪ್ರೀಂಕೋರ್ಟ್‍ಗೆ ಅರ್ಜಿ ಹಾಕುವ ಪೂರ್ವದಲ್ಲೇ ತಾವು ಸ್ಪಷ್ಟಪಡಿಸಿರುವೆ ಎಂದು ಅವರು ಹೇಳಿದರು.

ವಾರ್ತಾ ಭಾರತಿ 30 May 2025 6:19 pm

ಟಿಕೆಟ್ ಇಲ್ಲದೆ ಪ್ರಯಾಣಿಸಲು ಅವಕಾಶ ನೀಡದಿದ್ದಕ್ಕೆ ರೈಲು ಹಳಿಗಳಿಗೆ ಹಾನಿ ಮಾಡಿದ್ದ ಸ್ವಘೋಷಿತ ದೇವಮಾನವ ವಿಜಯ್ ಕುಮಾರ್ !

ಚೆನ್ನೈ: ದೇಶಾದ್ಯಂತ ಕಳವಳಕ್ಕೆ ಕಾರಣವಾಗಿದ್ದ ತಮಿಳುನಾಡು, ತೆಲಂಗಾಣದಲ್ಲಿ ನಡೆದಿದ್ದ ಸರಣಿ ರೈಲು ಹಳಿ ವಿಧ್ವಂಸ ಕೃತ್ಯದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದು, ನನಗೆ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಲು ಅವಕಾಶ ನೀಡದೆ, ನನ್ನನ್ನು ರೈಲಿನಿಂದ ಹೊರ ಹಾಕಿದ್ದ ಕ್ರಮದಿಂದ ಆಕ್ರೋಶಗೊಂಡು ನಾನು ಈ ಕೃತ್ಯವೆಸಗಿದೆ ಎಂದು ಆರೋಪಿ ಸ್ವಘೋಷಿತ ದೇವಮಾನವನೊಬ್ಬ ತಪ್ಪೊಪ್ಪಿಕೊಂಡಿದ್ದಾನೆ ಎಂದು TOI ಸುದ್ದಿ ಸಂಸ್ಥೆ ವರದಿ ಮಾಡಿದೆ. ಎಪ್ರಿಲ್ 26ರಿಂದ ಎಪ್ರಿಲ್ 29ರ ನಡುವೆ ಅವಡಿ, ಅಂಬತ್ತೂರ್ ಹಾಗೂ ಅರಕ್ಕೋಣಂನಲ್ಲಿ ಸಂಭವಿಸಿದ್ದ ಸರಣಿ ರೈಲು ಹಳಿ ವಿಧ್ವಂಸಕ ಕೃತ್ಯವು ದೇಶಾದ್ಯಂತ ಕಳವಳವಕ್ಕೆ ಕಾರಣವಾಗಿತ್ತು. ಇದರ ಬೆನ್ನಿಗೇ ಪ್ರಾರಂಭಗೊಂಡಿದ್ದ ತನಿಖೆಯಲ್ಲಿ ರಾಷ್ಡ್ರೀಯ ತನಿಖಾ ದಳ (NIA) ಕೂಡಾ ಕೈಜೋಡಿಸಿತ್ತು. ಅದರೆ, ತನಿಖೆಯ ವೇಳೆ ಪತ್ತೆಯಾದ ಆರೋಪಿಯು ಒಡಿಶಾದ 43 ವರ್ಷದ ವ್ಯಕ್ತಿಯಾಗಿದ್ದು, ಆತ ತನ್ನನ್ನು ತಾನು ದೇವಮಾನವನೆಂದು ಸ್ವಯಂ ಘೋಷಿಸಿಕೊಂಡಿದ್ದಾನೆ. ತನ್ನ ಮೈಮೇಲೆ ʼOm from Haridwar on a spiritual journey' ಎಂದು ಬರೆದುಕೊಂಡಿರುವ ಈ ಸ್ವಘೋಷಿತ ದೇವಮಾನವ, ದೇವಮಾನವರು ಟಿಕೆಟ್ ಖರೀದಿಸಬೇಕು ಎಂಬ ನಿಯಮಗಳನ್ನು ಮೀರಿದವರಾಗಿರುವುದರಿಂದ, ಅವರಿಗೆ ಇಂತಹ ನಿಯಮಗಳು ಅನ್ವಯಿಸುವುದಿಲ್ಲ ಎಂದು ಹೇಳಿದ್ದಾನೆ. ತಮಿಳುನಾಡಿನ ಅಂಬತ್ತೂರ್ ಹಾಗೂ ಅರಕ್ಕೋಣಂನಲ್ಲಿ ಸಂಭವಿಸಿದ್ದ ಸರಣಿ ರೈಲು ಹಳಿ ವಿಧ್ವಂಸ ಕೃತ್ಯದ ಬೆನ್ನಿಗೇ, ಆರೋಪಿಯ ಜಾಡನ್ನಿಡಿದು ತಮಿಳುನಾಡು ಪೊಲೀಸರು ಹರಿದ್ವಾರಕ್ಕೆ ತೆರಳಿದ್ದರು. ಆದರೆ, ಈ 'ಓಂ' ಎಂಬ ಈ ವ್ಯಕ್ತಿಯ ಕುರಿತು ಅವರಿಗೆ ಯಾವುದೇ ದಾಖಲೆ ದೊರೆಯದಿದ್ದರೂ, ಆತನ ಹೆಸರು ವಿಜಯ್ ಕುಮಾರ್ ಆಗಿದ್ದು, ಅಲೆಮಾರಿಯಾದ ಆತ, ತುರುತ್ತನಿಯ ಮಠವೊಂದರಲ್ಲಿ ತಂಗುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸಿದ್ದ ಎಂಬ ಸಂಗತಿ ಪತ್ತೆಯಾಗಿತ್ತು. ಕಾಚಿಗುಡ ಹಾಗೂ ಬುದ್ವೇಲ್ ನಡುವಿನ ರೈಲು ಹಳಿಗಳನ್ನು ವಿಧ್ವಂಸಗೊಳಿಸಿದ ಎರಡು ವಾರಗಳ ನಂತರ, ಪೊಲೀಸರು ಆರೋಪಿಯನ್ನು ಹೈದರಾಬಾದ್‌ನಲ್ಲಿ ಸೆರೆ ಹಿಡಿಯುವ ಮೂಲಕ, ಆತನ ಆಟಕ್ಕೆ ತೆರೆ ಎಳೆದಿದ್ದಾರೆ. ಹೈದರಾಬಾದ್‌ನಿಂದ ಆರೋಪಿ ದೇವಮಾನವನನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ತಮಿಳುನಾಡಿಗೆ ಕರೆ ತಂದ ತಮಿಳುನಾಡು ಪೊಲೀಸರು, ಆತನನ್ನು ನ್ಯಾಯಾಲಯದೆದುರು ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಆತನನ್ನು ಇದೀಗ ಪುಳಲ್ ಬಂದೀಖಾನೆಯಲ್ಲಿಡಲಾಗಿದೆ.

ವಾರ್ತಾ ಭಾರತಿ 30 May 2025 6:03 pm

Josh Hazlewood: ಎದುರಾಳಿ ಯಾರೇ ಇರಲಿ, ಫೈನಲ್ ನಲ್ಲಿ ಈ ವೇಗಿಯೇ RCBಯ ಟ್ರಂಪ್ ಕಾರ್ಡ್!

ರಾಯಲ್ ಚಾಲೆಂಜರ್ಸ್ ತಂಡ ನಾಲ್ಕನೇ ಬಾರಿಗೆ ಐಪಿಎಲ್ ಫೈನಲ್ ಗೆ ದಾಂಗುಡಿಯಿಟ್ಟಿದೆ. ಕಳೆದ 18 ವರ್ಷಗಳಿಂದ ಕಪ್ ಗಾಗಿ ಹಂಬಲಿಸುತ್ತಿರುವ ತಂಡ ಇನ್ನು ಗೆಲ್ಲಬೇಕಿರುವುದು ಇನ್ನು ಒಂದೇ ಪಂದ್ಯ. ಪ್ಲೇ ಆಫ್ ನ ಎರಡು ಪಂದ್ಯಗಳು ಬಾಕಿ ಇರುವುದರಿಂದ ಫೈನಲ್ ನಲ್ಲಿ ಆರ್ ಸಿಬಿ ಎದುರು ಆಡಬೇಕಿರುವ ತಂಡ ಯಾವುದು ಎಂಬುದು ಇನ್ನು ನಿರ್ಧಾರವಾಗಬೇಕಷ್ಟೇ. ಪ್ಲೇ ಆಫ್ ನಲ್ಲಿರುವ ಇನ್ನುಳಿದ ಮೂರು ತಂಡಗಳಲ್ಲಿ ಯಾರು ಸಿಕ್ಕರೂ ಆರ್ ಸಿಬಿಯೇ ಬಲಿಷ್ಠವಾಗಿ ಗೋಚರಿಸುತ್ತಿದೆ. ಅದ್ಭುತ ಫಾರ್ಮ್ ನಲ್ಲಿರುವ ವೇಗಿ ಜೋಶ್ ಹೇಜಲ್‌ವುಡ್ ಅವರು ತಂಡವನ್ನು ಮತ್ತೆ ಸೇರಿಕೊಂಡಿರುವುದು ಸಹ ಇದಕ್ಕೆ ಮತ್ತೊಂದು ಕಾರಣ. ಹಾಗಿದ್ದರೆ ಫೈನಲ್ ಪಂದ್ಯದಲ್ಲಿ ಯಾಕೆ ಅವರು ಆರ್ ಸಿಬಿಯ ಟ್ರಂಪ್ ಕಾರ್ಡ್ ಬೌಲರ್ ಆಗುತ್ತಾರೆ? ಇಲ್ಲಿದೆ ವಿಶ್ಲೇಷಣೆ

ವಿಜಯ ಕರ್ನಾಟಕ 30 May 2025 6:01 pm

ಭಾರತದ ಬ್ರಹ್ಮೋಸ್‌ ಪಾಕಿಸ್ತಾನದ ನಿದ್ದೆ ಉಡೀಸ್‌ ಮಾಡಿದೆ; ಆಪರೇಷನ್‌ ಸಿಂಧೂರ ಮುಗಿದಿಲ್ಲ ಎಂದ ನರೇಂದ್ರ ಮೋದಿ!

ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಮುಗಿದಿದೆ ಎಂದು ಪಾಕಿಸ್ತಾನ ತಿಳಿದಿದ್ದರೆ, ಅದು ಮೂರ್ಖತನ. ಇದು ಉತ್ತರ ಪ್ರದೇಶದ ಕಾನ್ಪುರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೆರೆರಾಷ್ಟ್ರಕ್ಕೆ ನೀಡಿದ ಗಂಭೀರ ಎಚ್ಚರಿಕೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ವಿರುದ್ಧದ ಭಾರತೀಯರ ಆಕ್ರೋಶ ಇಷ್ಟು ಬೇಗ ತಣ್ಣಗಾಗುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ, ಪಾಕಿಸ್ತಾನದ ನಿದ್ದೆ ಹಾರಿಹೋಗುವಂತೆ ಮಾಡಿದೆ. ಪ್ರಧಾನಿ ಮೋದ ಅವರು ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಗಳ ಸಾಮರ್ಥ್ಯವನ್ನು ಇದೇ ವೇಳೆ ಕೊಂಡಾಡಿದರು.

ವಿಜಯ ಕರ್ನಾಟಕ 30 May 2025 6:00 pm

ಕಲಬುರಗಿ | ಮಗನ ನಾಪತ್ತೆ ಬಗ್ಗೆ ದೂರು ನೀಡಿ 1 ವರ್ಷ ಕಳೆದರೂ ಪತ್ತೆಯಾಗಿಲ್ಲ : ಅಳಲು ತೋಡಿಕೊಂಡ ತಂದೆ

ಕಲಬುರಗಿ: ಮಗನ ನಾಪತ್ತೆ ಬಗ್ಗೆ ದೂರು ದಾಖಲಿಸಿ ಒಂದು ವರ್ಷ ಕಳೆದರೂ ಆತನನ್ನು ಪತ್ತೆ ಹಚ್ಚದೆ ಪೊಲೀಸರು ಕಾಲಹರಣ ಮಾಡುತ್ತಿದ್ದಾರೆ ಎಂದು ನಾಪತ್ತೆಯಾದ ಬಾಲಕನ ಪೋಷಕರು ಆರೋಪಿಸಿದ್ದಾರೆ.   ವಿನಾಯಕ ಫೀನಿಕ್ಸ್(17) ನಾಪತ್ತೆಯಾದ ಅಪ್ರಾಪ್ತ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣಪ್ಪ ಹಂದಿಗನೂರು, ಕ್ರಿಕೆಟ್‌ ಆಡಲು ಹೋಗುವುದಾಗಿ ಹೇಳಿ ಹೋದ ಮಗನ ನಾಪತ್ತೆ ಬಗ್ಗೆ 2024ರ ಮೇ 29ರಂದು ಚೌಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ನಾನೂ ಕೂಡ ಮಗನ ಪತ್ತೆಗಾಗಿ ಹಲವು ಕಡೆ 6 ತಿಂಗಳು ಹುಡುಕಾಟ ನಡೆಸಿದ್ದೇನೆ.  ಮಗನ ಬಗ್ಗೆ  ಮಾಹಿತಿಗಾಗಿ ಪೊಲೀಸ್ ಠಾಣೆಗೆ ಹೋದರೆ ಪಿಎಸ್ಐ, ಸಿಬ್ಬಂದಿಯವರು ನಿರ್ಲಕ್ಷ ಮಾಡಿರುವುದು ಕಂಡು ಬಂದಿದೆ ಎಂದು ಹೇಳಿದರು.   ಇದಲ್ಲದೆ ಪದೇ ಪದೇ ಪೊಲೀಸ್‌ ಠಾಣೆಗೆ ತೆರಳಿದ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಗರದಲ್ಲಿ ಹೇಗೆ ಜೀವನ ಮಾಡುತ್ತಿ? ನಿನಗೆ ಸುಮ್ಮನೆ ಬಿಡುವುದಿಲ್ಲ, ನಿನ್ನ ಮೇಲೆಯೇ ಪ್ರಕರಣ ದಾಖಲಿಸಿ ಜೈಲಿಗಟ್ಟುತ್ತೇನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್‌ ಬೆದರಿಕೆ ಹಾಕಿದ್ದಾರೆ.  ಆದ್ದರಿಂದ ಅವರ ವಿರುದ್ಧ ಕಲಬುರಗಿ ಪೀಠದ ಹೈಕೋರ್ಟ್‌ ನಲ್ಲಿ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿ ಹಾಕಿದ್ದೇನೆ. ಮನವಿ ಪುರಸ್ಕರಿಸಿದ ಕೋರ್ಟ್, ನನ್ನ ಮಗನನ್ನು ಹುಡುಕಿ ಕೊಡಬೇಕೆಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಆದರೆ ಪೊಲೀಸರು ನ್ಯಾಯಾಂಗ ನಿಂದನೆ ಮಾಡಿದ್ದಲ್ಲದೆ ನನ್ನ ಮಗನನ್ನು ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ನನ್ನ ಮಗನನ್ನು ತಕ್ಷಣ  ಹುಡುಕಿ ಕೊಡಬೇಕೆಂದು ಆಗ್ರಹಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಸಂಜೀವ್ ಕುಮಾರ್ ಡೋಂಗರಗಾವ್, ವಿನೋದಕುಮಾರ್ ಜನೆವರಿ, ಶಿವರಾಯ ಅವರು ಉಪಸ್ಥಿತರಿದ್ದರು. 

ವಾರ್ತಾ ಭಾರತಿ 30 May 2025 5:50 pm